CoolCoder44 commited on
Commit
03367e1
·
verified ·
1 Parent(s): 8a4ae11

9e549e3dcf633044a5e869d14d7440dc283b5cd7682bc02e28af9b5cabd25692

Browse files
Files changed (50) hide show
  1. eesanje/url_46_127_11.txt +15 -0
  2. eesanje/url_46_127_12.txt +11 -0
  3. eesanje/url_46_127_2.txt +5 -0
  4. eesanje/url_46_127_3.txt +12 -0
  5. eesanje/url_46_127_4.txt +5 -0
  6. eesanje/url_46_127_5.txt +4 -0
  7. eesanje/url_46_127_6.txt +6 -0
  8. eesanje/url_46_127_7.txt +9 -0
  9. eesanje/url_46_127_8.txt +5 -0
  10. eesanje/url_46_127_9.txt +9 -0
  11. eesanje/url_46_128_1.txt +4 -0
  12. eesanje/url_46_128_10.txt +10 -0
  13. eesanje/url_46_128_11.txt +5 -0
  14. eesanje/url_46_128_12.txt +6 -0
  15. eesanje/url_46_128_2.txt +9 -0
  16. eesanje/url_46_128_3.txt +7 -0
  17. eesanje/url_46_128_4.txt +5 -0
  18. eesanje/url_46_128_5.txt +3 -0
  19. eesanje/url_46_128_6.txt +10 -0
  20. eesanje/url_46_128_7.txt +5 -0
  21. eesanje/url_46_128_8.txt +5 -0
  22. eesanje/url_46_128_9.txt +8 -0
  23. eesanje/url_46_129_1.txt +9 -0
  24. eesanje/url_46_129_10.txt +4 -0
  25. eesanje/url_46_129_11.txt +6 -0
  26. eesanje/url_46_129_12.txt +6 -0
  27. eesanje/url_46_129_2.txt +6 -0
  28. eesanje/url_46_129_3.txt +9 -0
  29. eesanje/url_46_129_4.txt +11 -0
  30. eesanje/url_46_129_5.txt +16 -0
  31. eesanje/url_46_129_6.txt +10 -0
  32. eesanje/url_46_129_7.txt +15 -0
  33. eesanje/url_46_129_8.txt +4 -0
  34. eesanje/url_46_129_9.txt +7 -0
  35. eesanje/url_46_12_1.txt +8 -0
  36. eesanje/url_46_12_10.txt +6 -0
  37. eesanje/url_46_12_11.txt +6 -0
  38. eesanje/url_46_12_12.txt +6 -0
  39. eesanje/url_46_12_2.txt +13 -0
  40. eesanje/url_46_12_3.txt +13 -0
  41. eesanje/url_46_12_4.txt +7 -0
  42. eesanje/url_46_12_5.txt +11 -0
  43. eesanje/url_46_12_6.txt +10 -0
  44. eesanje/url_46_12_7.txt +10 -0
  45. eesanje/url_46_12_8.txt +7 -0
  46. eesanje/url_46_12_9.txt +10 -0
  47. eesanje/url_46_130_1.txt +3 -0
  48. eesanje/url_46_130_10.txt +5 -0
  49. eesanje/url_46_130_11.txt +5 -0
  50. eesanje/url_46_130_12.txt +5 -0
eesanje/url_46_127_11.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಡೆಡ್‌ಲೈನ್ ನೀಡಿದ ಬಿಜೆಪಿ
2
+ ಬೆಂಗಳೂರು, ಮೇ 30-ವಾಲ್ಮೀಕಿ ಅಭಿವೃದ್ಧಿ ನಿಗಮದ ನಿದೇರ್ಶಕ ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಬಿ. ನಾಗೇಂದ್ರ ಅವರ ನೇರ ಪಾತ್ರ ಇರುವ ಹಿನ್ನಲೆಯಲ್ಲಿ ಜೂನ್‌ ತಿಂಗಳ 6 ರೊಳಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಸರ್ಕಾರಕ್ಕೆ ಗಡವು ನೀಡಿದೆ.
3
+ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌. ಆಶೋಕ್‌, ಮಾಜಿ ಸಚಿವರಾದ ಸಿಟಿ ರವಿ, ಗೋವಿಂದ ಕಾರಜೋಳ, ರಾಜ್ಯಸಭೆ ಸದಸ್ಯ ಲೆಹರ್‌ ಸಿಂಗ್‌, ಶಾಸಕರಾದ ಸಿಕೆ ರಾಮಮೂರ್ತಿ ಅವರುಗಳು ಸಚಿವ ನಾಗೇಂದ್ರ ಜೂನ್‌ 6 ರೊಳಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೆ, ರಾಜ್ಯದ್ಯಾಂತ ಬೀದಿಗಿಳಿದು ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಲಾಗಿದೆ.
4
+ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಮಾತನಾಡಿ, ಪ್ರರಕಣದಲ್ಲಿ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನೈತಿಕ ಹೊಣೆಹೊತ್ತು ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಆಮೇಲೆ ಸಚಿವ ನಾಗೇಂದ್ರ ರಾಜೀನಾಮೆ ಕೊಡಲೇಬೇಕು. ಜೂನ್‌ 6 ರೊಳಗೆ ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ಇಡೀ ರಾಜ್ಯಾದ್ಯಂತ ದಲಿತರ ಹಣವನ್ನು ನುಂಗಿದ ಕಾಂಗ್ರೆಸ್‌‍ ಎಂದು ಹೋರಾಟ ಮಾಡುತ್ತೇವೆ. ಈ ವಿಷಯ ವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯವ ತನಕ ಬಿಡುವುದಿಲ್ಲ.ಎಂದು ಎಚ್ಚರಿಕೆ ಕೊಟ್ಟರು.
5
+ ಅಧಿಕಾರಿಯ ಸಾವಿಗೆ ಬೆಲೆ ಇಲ್ಲವಾ…? ಈ ಪ್ರಕರಣದ ಹಿಂದೆ ದೊಡ್ಡ ಜಾಲವೇ ಇದೆ, ಇದು ಆಂಧ್ರಪ್ರದೇಶ ಹಾಗೂ ತಮಿಳುನಾಡಿಗೆ ಹೋಗಿದೆ.ಅದಕ್ಕಾಗಿ ಇದನ್ನು ಸಿಬಿಐ ಗೆ ವಹಿಸಬೇಕು ಎಂಬುದು ನಮ್ಮ ಆಗ್ರಹವಾಗಿದೆ. ಈ ವಿಷಯ ವನ್ನು ಸುಮ್ಮನೆ ಬಿಡಬಾರದು ಎಂದು ಪಕ್ಷದಲ್ಲಿ ತೀರ್ಮಾನ ಆಗಿದೆ.ದಲಿತರ ಹಣವನ್ನು ಲೂಟಿ ಆಗಿರುವುದನ್ನು ಸುಮನೆ ಬಿಡುವುದಿಲ್ಲ ಎಂದು ಗುಡುಗಿದರು.
6
+ ಡೆತ್‌ ನೋಟ್‌ ನಲ್ಲಿ ಸಚಿವರ ಮೌಖಿಕ ಆದೇಶದಿಂದ ಹಣ ವರ್ಗಾವಣೆ ಬಗ್ಗೆ ಅವರು ಬರೆದಿದ್ದಾರೆ. ಇಷ್ಟು ಸ್ಪಷ್ಟವಾಗಿ ಆಗಿ ಡೆತ್‌ ನೋಟ್‌ ಬರೆದಿರುವ ಅಧಿಕಾರಿಯನ್ನು ನಾನು ನನ್ನ ರಾಜಕೀಯ ಜೀವನದಲ್ಲೇ ನೋಡಿಲ್ಲ. ಅವರು ಸಂಪೂರ್ಣವಾಗಿ ವಿವರವುಳ್ಳ ಮಾಹಿತಿಯನ್ನು ಡೀಟೈಲ್‌್ಸ ಬರೆದಿದ್ದಾರೆ.ಲೂಟಿ ಮಾಡಿರುವುದು ಕಂಡು ಬಂದಿದೆ, ಇದರಲ್ಲಿ ನನ್ನ ತಪ್ಪೇನು ಇಲ್ಲ, ಮತ್ತೊಮ್ಮೆ ನನ್ನ ಪರಿಸ್ಥಿತಿ ಕಾರಣ ಎಂದರೆ, ಮತ್ತೊಮ್ಮೆ ಎಲ್ಲರೂ ಕಾರಣ. ಈ ನಿಗಮಕ್ಕೆ ನಾನು ಏನು ವಂಚನೆ ಮಾಡಿರುವುದಿಲ್ಲ ಎಂದು ಬರೆದಿದ್ದಾರೆ. ಇದಕ್ಕೀಂತ ಬೇರೆ ದಾಖಲೆ ಇನ್ನೇನು ಬೇಕು ಎಂದು ಪ್ರಶ್ನೆಸಿದರು.
7
+ ಎಫ್‌ಐಆರ್‌ ನಲ್ಲಿ ಸಚಿವರ ಹೆಸರು ಯಾಕಿಲ್ಲ..? ಹಣ ಗುಳುಮ್‌ ಮಾಡಿದ್ದ ಅಧಿಕಾರಿಗಳನ್ನು ಇದುವರೆಗೂ ಏಕೆ ಬಂಧಿಸಿಲ್ಲ.? ಅವರನ್ನು ಬಂಧಿಸಿದರೆ, ನಿಮ್ಮ ಬಂಡವಾಳ ಬಯಲಿಗೆ ಬರುತ್ತದೆಯೇ ಎಂಬ ಭಯ ಕಾಡುತ್ತಿದಿಯೇ? ಪ್ರಕರಣವನ್ನು ಸಿಐಡಿಗೆ ಯಾಕೆ ಕೊಟ್ಟಿದ್ದಾರೆ ಎಂದರೆ, ಇದು ಕಾಂಗ್ರೆಸ್‌‍ ಇನ್ವಿಸ್ಡೇಷನ್‌ ಟೀಮ್‌ ಎಂದು ಟೀಕಾ ಪ್ರಹಾರ ನಡೆಸಿದರು.
8
+ ನಾನು ವರ್ಗಾವಣೆ ಯಲ್ಲಿ ಹಣ ಹೊಡೆದರೆ, ರಾಜೀನಾಮೆ ಕೊಡುತ್ತೇನೆ ಎಂದು ಸಿದ್ದರಾಮಯ್ಯನವರೇ ಅನೇಕ ಬಾರಿ ಹೇಳಿದ್ದಾರೆ. ನುಡಿದಂತೆ ನಡೆದುಕೊಳ್ಳುವುದಾದರೆ, ಇವಾಗ ತಾವು ಯಾವಾಗ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೀರಾ.?ಮೃತನ ಮನೆಯಲ್ಲಿದ್ದ ಪೆನ್‌ ಡ್ರೈವ್‌ ಅನ್ನು ಏಕೆ ತೆಗೆದುಕೊಂಡು ಹೋದರು. ಅದನ್ನು ಸಾರ್ವಜನಿಕರ ಮುಂದೆ ಬಹಿರಂಗ ಪಡಿಸಿ ಎಂದು ಒತ್ತಾಯಿಸಿದರು.
9
+ ಅಂದು ನಮ್ಮ ಸರ್ಕಾರದಲ್ಲಿ ಸಚಿವರಾಗಿದ್ದ ಕೆ.ಎಸ್‌‍. ಈಶ್ವರಪ್ಪ ಪ್ರಕರಣದಲ್ಲಿ ಕಾಂಗ್ರೆಸ್‌‍ ಉಸ್ತುವಾಗಿ ರಣಜಿತ್‌ ಸಿಂಗ್‌ ಸುರ್ಜೇವಾಲ ಅವರು , ಕರ್ನಾಟಕಕ್ಕೆ ಕೆಟ್ಟ ದಿನ ಅಂದಿದ್ದರು.ಅಂದು ಕಾಂಗ್ರೆಸ್‌‍ ಲೂಟಿ ಯನ್ನು ಸಹಿಸೋದಿಲ್ಲ, ಈಶ್ವರಪ್ಪ ರನ್ನು ಬಂಧಿಸಿ ಎಂದು ಒತ್ತಾಯ ಮಾಡಿದ್ದರು. ನಮ್ಮ ದಲಿತ ಉದ್ಧಾರ ನಾಯಕ ಸಿದ್ದರಾಮಯ್ಯ ನವರನ್ನು ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು ಎಂದು ಅಗ್ರಹಿಸಿದರು.
10
+ ಪ್ರಧಾನಿ ನರೇಂದ್ರ ಮೋದಿಗೆ ನಾಚಿಕೆ ಆಗಬೇಕು ಅಂದಿದ್ದರು. ಇವಾಗ ನಾಚಿಗೆ ನಿಮಗೆ ಆಗಬೇಕಾ..? ಅವರಿಗೆ ಆಗಬೇಕಾ..? ನಿಮಗೆ ಏನಾದರೂ ಮಾನ ಮರ್ಯಾದೆ ಇದೆಯಾ..? ಪರಿಶಿಷ್ಟ ವರ್ಗಗಕ್ಕೆ ಸೇರಿದ 187 ಕೋಟಿ ಹಣ ಗುಳುಂ ಸರ್ಕಾರದ ಸಾಧನೆ ಎಂದು ಕುಹಕವಾಡಿದ ಆಶೋಕ್‌ ಅಧಿಕಾರ ಸಿಕ್ಕಿದ ಮೇಲೆ ದಲಿತರ ಉದ್ದಾರ ಅಗಿಲ್ಲ. ಕಾಂಗ್ರೆಸ್‌‍ಗೆ ರಾಮ ಕಂಡರೆ ಆಗಲ್ಲ ಗೊತ್ತಿದೆ. ಆದರೆ ವಾಲೀಕಿ ಮಹರ್ಷಿಗಳ ಕಂಡರೆ ಆಗಲ್ಲ ಎಂಬುದು ಇವಾಗ ಗೊತ್ತಾಯಿತು.ಈ ಸರ್ಕಾರ ಕೊಲೆಗಡುಕರ ಸರ್ಕಾರ ಎಂದು ಸಾಬೀತಾಗಿದೆ ಎಂದು ಹೇಳಿದರು.
11
+ ಹೆಣ್ಣು ಮಕ್ಕಳಿಗೆ ಗ್ಯಾರಂಟಿ ಇರಲಿಲ್ಲ ಇವಾಗ ಅಧಿಕಾರಿಗಳಿಗೂ ಗ್ಯಾರಂಟಿ ಇಲ್ಲ. ಮಹಿಳಾ ಬ್ಯಾಂಕ್‌ ಅಕೌಂಟ್‌ ಗೆ ನಮ್ಮ ಸರ್ಕಾರ ಬಂದರೆ ಟಕಾ ಟಕಾ ಅಂತಾ ಹಣ ಹಾಕ್ತೀವಿ ಅಂತ ರಾಹುಲ್‌ ಗಾಂಧಿ ಹೇಳಿದ್ದಾರೆ. ಅದೇ ರೀತಿ ಸರ್ಕಾರದಿಂದ ಈ ಹಣವನ್ನು ಕಾಂಗ್ರೆಸ್‌‍ ನ ಲೂಟಿ ಅಕೌಂಟ್‌ ವೆ ಟಕಾ ಟಕಾ ಎಂದು ವರ್ಗಾವಣೆ ಮಾಡಿದ್ದಾರೆ.180 ಕೋಟಿ ನುಂಗಬೇಕು ಅಂದರೆ ಒಬ್ಬ ಮಂತ್ರಿ ಭಾಗಿಯಾಗಿರುವುದಿಲ್ಲ. ಇಡೀ ಸಚಿವ ಸಂಪುಟದ ಸಚಿವರು ಸೇರಿ ಸರ್ಕಾರವೇ ಭಾಗಿಯಾಗಿದೆ ಎಂದು ಆರೋಪಿಸಿದರು.
12
+ ಮಾಜಿ ಸಚಿವ ಸಿ ಟಿ ರವಿ ಮಾತನಾಡಿ, ಡೆಡ್‌ ನೋಟ್‌ ನಲ್ಲಿ ನಾಗರಾಜ್‌ ಎಂಬವವರು ಹೆಸರು ಇದೆ.ನಾಗರಾಜ್‌ ಅವರು ನಾಗೇಂದ್ರ ಅವರ ಬಿಜೆನೆಸ್‌‍ ಪಾರ್ಟರ್‌. ಸಿಎಂ, ಡಿಸಿಎಂ ,ನಾಗೇಂದ್ರ ಜೊತೆ ವಿಶೇಷ ವಿಮಾನದಲ್ಲಿ ನವದೆಹಲಿಗೆ ಹೋಗಿದ್ದಾರೆ. ಇಂತಹವರು ಹೋಗಲು ಸಾಧ್ಯವೇ..?ಬೇರೆಯವರ ಜೊತೆ ಸ್ಪೆಷಲ್‌ ಫ್ಲೈಟ್‌ ನಲ್ಲಿ ಹೋಗಲು ಸಾಧ್ಯವೇ ಎಂದು ಪ್ರಶ್ನೆ ಮಾಡಿದರು.ಇದು ದೊಡ್ಡ ಹಗರಣವಾಗಿದ್ದು, ನಾಗೇಂದ್ರ ಸಚಿವರ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಬೇಕು.��ರ್ಕಾರ ವಜಾ ಆಗೋವರೆಗೂ ನಮ್ಮ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
13
+ ಮುಖ್ಯಮಂತ್ರಿಗಳ ಮನೆಗೆ ಬಿಜೆಪಿ ಎಸ್‌ಟಿ ಮೋರ್ಚಾ ಮುತ್ತಿಗೆವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ 187 ಕೋಟಿ ರೂ. ಅವ್ಯವಹಾರದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಎಸ್‌ಟಿ ಮೋರ್ಚಾ ವತಿಯಿಂದ ಇಂದು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
14
+ ಧಿಕ್ಕಾರ ಧಿಕ್ಕಾರ, ಸಚಿವರಿಗೆ ಧಿ ಕ್ಕಾರ, ಸರಕಾರಕ್ಕೆ ಧಿಕ್ಕಾರ ಎಂಬ ಘೋಷಣೆಗಳನ್ನು ಕೂಗಲಾಯಿತು. ಪೊಲೀಸರು ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ಬಂಧಿಸಿದರು. ಅಕ್ರಮವಾಗಿ ಅಮಾಯಕರಾದ ತಮ್ಮನ್ನು ಬಂಧಿಸಲಾಗುತ್ತಿದೆ ಎಂದು ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು.
15
+ ದಲಿತ ವಿರೋಧಿ ಕಾಂಗ್ರೆಸ್‌ ಸರಕಾರಕ್ಕೆ ಧಿ ಕ್ಕಾರೞ ಕೂಗಿದ ಕಾರ್ಯಕರ್ತರು, ಅಯ್ಯಯ್ಯೋ ಅನ್ಯಾಯ, ಅನ್ಯಾಯೞ ಎಂದು ಘೋಷಣೆ ಕೂಗಿದರು. ಸುಮಾರು 187 ಕೋಟಿ ರೂ. ಅವ್ಯವಹಾರದ ಹಿನ್ನೆಲೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿ ಕಾರಿ ಚಂದ್ರಶೇಖರ್‌ ಅವರು ಡೆತ್‌ ನೋಟ್‌ನಲ್ಲಿ ಸಚಿವರ ಹೆಸರನ್ನು ಉಲ್ಲೇಖಿಸಿದ್ದು, ಸಚಿವರು ಕೂಡಲೇ ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿದ್ದಾರೆ.
eesanje/url_46_127_12.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ವಿಧಾನಪರಿಷತ್‌ ಚುನಾವಣೆ : ಕಾಂಗ್ರೆಸ್ ಆಕಾಂಕ್ಷಿಗಳ ಎದೆಬಡಿತ ಹೆಚ್ಚಿಸಿದ ದೆಹಲಿ ಮೀಟಿಂಗ್
2
+ ಬೆಂಗಳೂರು, ಮೇ 30-ವಿಧಾನಸಭೆಯಿಂದ ವಿಧಾನಪರಿಷತ್‌ನ ಸದಸ್ಯರ ಆಯ್ಕೆಗೆ ಸಂಬಂಧಪಟ್ಟಂತೆ ವಾತಾವರಣ ಸಂಪೂರ್ಣ ಬದಲಾಗಿದ್ದು, ದೆಹಲಿಯಲ್ಲಿ ನಿನ್ನೆ ಸಂಜೆ ನಡೆದ ಮಹತ್ವದ ಸಭೆ ಆಕಾಂಕ್ಷಿಗಳ ಎದೆಬಡಿತವನ್ನು ಹೆಚ್ಚಿಸಿದೆ. ಸಚಿವ ಬೋಸ್‌‍ರಾಜ್‌ ಅವರಿಗೆ ಎಂಎಲ್‌ಸಿ ಸ್ಥಾನ ಸಿಗುವುದು ಬಹುತೇಕ ಖಚಿತ ಎಂದು ಹೇಳಲಾಗಿತ್ತು. ಆದರೆ ಕಳೆದೆರಡು ದಿನಗಳಿಂದ ದೆಹಲಿಯಲ್ಲಿ ನಡೆದ ಕಸರತ್ತುಗಳು ವಾತಾವರಣವನ್ನು ಬದಲಾವಣೆ ಮಾಡಿದೆ.
3
+ ವಿಧಾನಪರಿಷತ್‌ನಲ್ಲಿ ಆಡಳಿತ ಪಕ್ಷದ ನಾಯಕ ಸ್ಥಾನಕ್ಕೆ ಪ್ರಬಲ ವ್ಯಕ್ತಿಯ ಅಗತ್ಯವಿದೆ ಎಂಬ ಚರ್ಚೆಯ ಹಿನ್ನೆಲೆಯಲ್ಲಿ ಎನ್‌.ಎಸ್‌‍.ಬೋಸರಾಜ್‌ ಅವರನ್ನು ವಿಧಾನಪರಿಷತ್‌ಗೆ ಮರು ಆಯ್ಕೆ ಮಾಡುವ ಬಗ್ಗೆ ಅರ್ಧಚಂದ್ರ ಸ್ಥಿತಿ ನಿರ್ಮಾಣವಾಗಿದೆ.
4
+ ಕಾಂಗ್ರೆಸ್‌‍ನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್‌ ಅವರನ್ನು ಆಡಳಿತ ಪಕ್ಷದ ನಾಯಕರನ್ನಾಗಿ ಮಾಡಬೇಕು ಮತ್ತು ಸಂಪುಟಕ್ಕೆ ತೆಗೆದುಕೊಳ್ಳಬೇಕೆಂಬ ಒತ್ತಡ ಹೈಕಮಾಂಡ್‌ನಿಂದ ಬಂದಿದೆ. ಹೀಗಾಗಿ ಎನ್‌.ಎಸ್‌‍.ಬೋಸರಾಜ್‌ ಅವರನ್ನು ವಿಧಾನಪರಿಷತ್‌ಗೆ ಆಯ್ಕೆ ಮಾಡದೆ ಕೈಬಿಡುವ ಅಥವಾ ಮುಂದಿನ ತಿಂಗಳಲ್ಲಿ ನಡೆಯುವ ನಾಮನಿರ್ದೇಶನದಲ್ಲಿ ಪರಿಗಣಿಸುವ ಚರ್ಚೆಗಳು ನಡೆದಿವೆ.
5
+ 11 ಸ್ಥಾನಗಳ ಪೈಕಿ ಕಾಂಗ್ರೆಸ್‌‍ಗೆ 7 ಸ್ಥಾನಗಳು ಲಭ್ಯವಾಗಲಿದ್ದು, 8ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿ ವಿಪಕ್ಷಗಳಿಗೆ ಎದುರೇಟು ನೀಡುವ ರಣತಂತ್ರವು ನಡೆಯುತ್ತಿದೆ. ನಿನ್ನೆ ತಡರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್‌, ರಣದೀಪ್‌ ಸಿಂಗ್‌ ಸುರ್ಜೆವಾಲ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನಡೆಸಿದ ಚರ್ಚೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರ ಹೆಸರು ಮಾತ್ರ ಅಖೈರುಗೊಂಡಿದೆ.
6
+ ಉಳಿದಂತೆ ಬಹುತೇಕ ಖಚಿತ ಎಂದು ಭಾವಿಸಲಾಗಿದ್ದ ಎನ್‌.ಎಸ್‌‍.ಬೋಸರಾಜ್‌ ಹಾಗೂ ಡಾ.ಕೆ.ಗೋವಿಂದರಾಜು ಅವರ ಹೆಸರುಗಳು ತ್ರಿಶಂಕು ಸ್ಥಿತಿಯಲ್ಲಿವೆ.ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಲಾ 2 ಸ್ಥಾನಗಳನ್ನು ಹಂಚಿಕೊಂಡಿದ್ದು, ಉಳಿದ 3 ಸ್ಥಾನಗಳಿಗೆ ಆಯ್ಕೆ ಮಾಡಲು ಹೈಕಮಾಂಡ್‌ ನಿರ್ದೇಶನ ಪಾಲಿಸುವ ಒಪ್ಪಂದವಾಗಿದೆ ಎಂದು ತಿಳಿದುಬಂದಿದೆ.
7
+ ಲಾಬಿ ತೀವ್ರಗೊಂಡ ಹಿನ್ನೆಲೆಯಲ್ಲಿ ಮಹಿಳಾ ಕೋಟಾ ಕೈಬಿಡುವ ಕುರಿತು ವದಂತಿಗಳಿವೆ. ಕೆಪಿಸಿಸಿಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ಹಾಗೂ ಕಮಲಾಕ್ಷಿ ರಾಜಣ್ಣ ಅವರ ಹೆಸರುಗಳು ಪ್ರಬಲವಾಗಿ ಕೇಳಿಬಂದಿದ್ದವು. ಜೊತೆಗೆ ರಾಣಿ ಸತೀಶ್‌, ಭವ್ಯಾ ನರಸಿಂಹಮೂರ್ತಿ, ಕುಸುಮಾ, ಪದಾವತಿ ಅವರು ಲಾಬಿ ನಡೆಸಿದ್ದರು.
8
+ ಈಗಾಗಲೇ ವಿಧಾ��ಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಪಡೆದವರು, ಸೋಲು ಕಂಡವರು, 2 ಕ್ಕಿಂತ ಹೆಚ್ಚು ಬಾರಿ ಅಧಿಕಾರ ಅನುಭವಿಸಿದವರಿಗೆ ಈ ಹಂತದಲ್ಲಿ ಅವಕಾಶ ನೀಡದಿರುವ ನಿರ್ಣಯಗಳಾಗಿವೆ ಎಂದು ತಿಳಿದುಬಂದಿದೆ.ಪ್ರಾಥಮಿಕ ಚರ್ಚೆಯು ಬಹುತೇಕ ಮುಕ್ತಾಯಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮರಳಿ ಬರುತ್ತಿದ್ದಾರೆ.
9
+ ರಾಹುಲ್‌ಗಾಂಧಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಇಂದು ಅವರೊಂದಿಗೆ ದೂರವಾಣಿಯಲ್ಲಿ ಚರ್ಚೆ ನಡೆಸಿದ ಬಳಿಕ ಪಟ್ಟಿಯನ್ನು ಅಖೈರುಗೊಳಿಸಲಾಗುವುದು ಎಂದು ಮೂಲಗಳು ತಿಳಿಸಿವೆ.ಮೇಲ್ನೋಟಕ್ಕೆ ಈ ಬಾರಿ ಪಕ್ಷದ ಪ್ರಾಮಾಣಿಕ ಕಾರ್ಯಕರ್ತರಿಗೂ ಅವಕಾಶ ನೀಡುವ ಸಾಧ್ಯತೆಗಳಿವೆ. ಕುಟುಂಬ ಹಾಗೂ ಪ್ರಭಾವಿಗಳ ಲಾಬಿಯ ಹೊರತಾಗಿಯೂ ಕಾರ್ಯಕರ್ತರನ್ನು ಕಡೆಗಣಿಸಲಾಗುವುದಿಲ್ಲ ಎಂಬ ಸಂದೇಶವನ್ನು ಡಿ.ಕೆ.ಶಿವಕುಮಾರ್‌ ಪ್ರತಿಪಾದಿಸಿದ್ದಾರೆ ಎನ್ನಲಾಗಿದೆ.
10
+ ಕೆಪಿಸಿಸಿಯ ಕಾರ್ಯಾಧ್ಯಕ್ಷ ವಸಂತಕುಮಾರ್‌, ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್‌ಬಾಬು, ಪ್ರಧಾನ ಕಾರ್ಯದರ್ಶಿ ನಟರಾಜೇಗೌಡ, ವಾರ್‌ ರೂಂನ ಉಸ್ತುವಾರಿ ಬಿ.ಆರ್‌.ನಾಯ್ಡು, ಬಾಗಲಕೋಟೆಯ ಸೌದಾಗರ್‌ ಸೇರಿದಂತೆ ಹಲವರ ಹೆಸರುಗಳು ಪ್ರಮುಖವಾಗಿ ಕೇಳಿಬಂದಿವೆ.
11
+ ಬಿಜೆಪಿಯಿಂದ ಕಾಂಗ್ರೆಸ್‌‍ಗೆ ವಲಸೆ ಬಂದು ವಿಧಾನಪರಿಷತ್‌ ಸದಸ್ಯರಾಗಿ, ಅದಕ್ಕೆ ರಾಜೀನಾಮೆ ನೀಡಿ ಮತ್ತೆ ಬಿಜೆಪಿಗೆ ಮರಳಿದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರಿಂದ ತೆರವಾಗಿರುವ ಒಂದು ಸ್ಥಾನಕ್ಕೆ ನಡೆಯುವ ಉಪ ಚುನಾವಣೆಗೂ ಈ ಕಂತಿನಲ್ಲೇ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಚರ್ಚೆಗಳಾಗಿವೆ.
eesanje/url_46_127_2.txt ADDED
@@ -0,0 +1,5 @@
 
 
 
 
 
 
1
+ ಒಂದು ಸಮುದಾಯದ ಓಲೈಕೆಗಾಗಿ ಜಿಹಾದಿ ಸರ್ಕಾರ ‘ತಾಲೀಬಾನ್‌ ಗಿರಿ’ ನಡೆಸುತ್ತಿದೆ : ಸುನಿಲ್‌ ಕುಮಾರ್‌
2
+ ಬೆಂಗಳೂರು, ಮೇ 31-ಒಂದು ಸಮುದಾಯದ ಓಲೈಕೆಗಾಗಿ ಇಡಿ ರಾಜ್ಯದ ಹಿತ ಕಡೆಗಣಿಸಲಾಗುತ್ತಿದೆ ಎಂದರೆ ಅದು ಜಿಹಾದಿ ಸರ್ಕಾರದಿಂದ ಮಾತ್ರ ಸಾಧ್ಯ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌‍ ಸರ್ಕಾರ ರಾಜ್ಯದಲ್ಲಿ ಈಗ ನಡೆಸುತ್ತಿರುವುದು ಸರ್ಕಾರವಲ್ಲ, ತಾಲೀಬಾನ್‌ ಗಿರಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್‌ ಕುಮಾರ್‌ ಸರ್ಕಾರದ ವಿರುದ್ದ ವಾಗ್ದಳಿ ನಡೆಸಿದ್ದಾರೆ.
3
+ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಪರಾಧ ಕೃತ್ಯ ಅಥವಾ ಕಾನೂನು ಬಾಹಿರ ವರ್ತನೆ ನಡೆಸುವುದು ತಪ್ಪಲ್ಲ ! ಆದರೆ ಕಾನೂನು ಉಲ್ಲಂಘನೆಯಾಗಿದೆ ಎಂದು ಹೇಳುವುದು ತಪ್ಪು ಎಂದು ವ್ಯಂಗ್ಯವಾಡಿದ್ದಾರೆ.ರಾಜ್ಯದಲ್ಲಿ ಜಿಹಾದಿ ಸರ್ಕಾರ ಅಧಿಕಾರದಲ್ಲಿ ಇದೆ ಎಂಬುದು ಮತ್ತೊಮೆ ಸಾಬೀತಾಗಿದೆ.
4
+ ಚನ್ನಗಿರಿಯಲ್ಲಿ ಪೊಲೀಸ್‌‍ ಠಾಣೆಯ ಮೇಲೆ ದಾಳಿ ನಡೆಸಿದವರಿಗೆ ಕ್ಲೀನ್‌ ಚಿಟ್‌ ಕೊಟ್ಟ ಬೆನ್ನಲ್ಲೇ ಮಂಗಳೂರಿನ ಪಂಪ್‌ ವೆಲ್‌ ವೃತ್ತದ ಬಳಿ ರಸ್ತೆಯಲ್ಲಿ ನಮಾಜ್‌ ನಡೆಸಿದ ಪ್ರಕರಣಕ್ಕೆ ರಾಜ್ಯ ಸರ್ಕಾರ ಒತ್ತಾಯಪೂರ್ವಕವಾಗಿ ಬಿ ರಿಪೋರ್ಟ್‌ ಸಲ್ಲಿಸಿದೆ ಎಂದು ಆಪಾದಿಸಿದ್ದಾರೆ.
5
+ ಪಂಪ್‌ ವೆಲ್‌ ಪ್ರಕರಣದಲ್ಲೂ ಹಾಗೇ ಆಗಿದೆ. ರಸ್ತೆಯಲ್ಲಿ ನಮಾಜ್‌ ಮಾಡಿ ಸಮಾಜದ ಸ್ವಾಸ್ಥ್ಯ ಹಾಗೂ ಸಾರ್ವಜನಿಕ ಅನಾನುಕೂಲತೆ ಸೃಷ್ಟಿಸಿದವರನ್ನು ಬಂಽಸುವುದು ಬಿಟ್ಟು, ಪ್ರಕರಣವನ್ನು ಬೆಳಕಿಗೆ ತಂದ ಶರಣ್‌ ಪಂಪ್‌ ವೆಲ್‌ ವಿರುದ್ಧ ಕ್ರಮ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಮಾತ್ರವಲ್ಲ ಪ್ರಕರಣ ದಾಖಲಿಸಿಕೊಂಡ ಪೊಲೀಸ್‌‍ ಅಧಿಕಾರಿಯನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದೆ ಎಂದು ಆರೋಪ ಮಾಡಿದ್ದಾರೆ.
eesanje/url_46_127_3.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಎಸ್‌‍ಐಟಿ ಅಧಿಕಾರಿಗಳು ಪ್ರಜ್ವಲ್‌ ಹೇಳಿಕೆ ಪಡೆಯುತ್ತಿದ್ದಾರೆ : ಗೃಹ ಸಚಿವ ಪರಮೇಶ್ವರ್‌
2
+ ಬೆಂಗಳೂರು, ಮೇ 31– ವಿದೇಶದಿಂದ ಸ್ವದೇಶಕ್ಕೆ ಮರಳಿದ ಪ್ರಜ್ವಲ್‌ ರೇವಣ್ಣ ಅವರನ್ನು ಎಸ್‌‍ಐಟಿ ಅಧಿಕಾರಿಗಳು ಬಂಧಿಸಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ ನಿನ್ನೆ ತಡರಾತ್ರಿ 12.40 ಕ್ಕೆ ಬೆಂಗಳೂರಿನ ವಿಮಾನನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಅವರನ್ನು ಬಂಧಿಸಿ ಮುಂದಿನ ಪ್ರಕ್ರಿಯೆಗಳನ್ನು ಆರಂಭಿಸಲಾಗಿದೆ. ಪ್ರಜ್ವಲ್‌ ರೇವಣ್ಣ ಅವರನ್ನು ಬಂಧಿಸಲಾಗಿದ್ದು, ಎಸ್‌‍ಐಟಿ ಅಧಿಕಾರಿಗಳು ಹೇಳಿಕೆ ಪಡೆಯುವುದು ಸೇರಿದಂತೆ ವಿವಿಧ ಕ್ರಮಗಳನ್ನು ಮುಂದುವರೆಸಿದ್ದಾರೆ ಎಂದರು.
4
+ ಆತಹತ್ಯೆ ಮಾಡಿಕೊಂಡ ವಾಲೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್‌ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವಾನ ಹೇಳಲು ನಿನ್ನೆ ತಾವು ಶಿವಮೊಗ್ಗಕ್ಕೆ ಭೇಟಿ ನೀಡಿದ್ದು, ತಡವಾಗಿ ಬಂದಿದ್ದೇನೆ, ಅಧಿಕಾರಿಗಳ ಜೊತೆ ಇನ್ನೂ ಚರ್ಚೆ ನಡೆದಿಲ್ಲ. ಸದ್ಯದ ಮಾಹಿತಿ ಪ್ರಕಾರ ಅವರನ್ನು ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ ಎಂದು ಹೇಳಿದರು.
5
+ ಮೊಬೈಲ್‌ ನಾಶವಾಗಿರುವ ಬಗ್ಗೆ ಬೇರೆ ಮೂಲಗಳಿಂದ ಬರುವ ಮಾಹಿತಿಯನ್ನು ನಂಬಲಾಗುವುದಿಲ್ಲ. ಎಸ್‌‍ಐಟಿ ಅಧಿಕಾರಿಗಳು ಹೇಳಿದರೆ ಅದು ಅಧಿಕೃತ. ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ಪ್ರಕರಣದ ಬಗ್ಗೆ ಸಂತ್ರಸ್ತರು ದೂರು ನೀಡುವಂತೆ ಈಗಾಗಲೇ ಕರೆ ನೀಡಲಾಗಿತ್ತು. ಯಾರೇ ದೂರು ನೀಡಿದರೂ ಅವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು, ಮುಂದಿನ ದಿನಗಳಲ್ಲಿ ಈ ಪ್ರಕರಣ ಯಾವ ರೀತಿ ಬೆಳವಣಿಗೆಯಾಗುತ್ತದೆ ಎಂದು ಕಾದುನೋಡಬೇಕಿದೆ ಎಂದರು.
6
+ ಪ್ರಜ್ವಲ್‌ ರೇವಣ್ಣ ಅವರಿಗೆ ಈಗಾಗಲೇ ಬ್ಲೂ ಕಾರ್ನರ್‌ ನೋಟೀಸ್‌‍ ನೀಡಲಾಗಿತ್ತು. ಸಿಬಿಐ ಮೂಲಕ ಇಂಟರ್‌ಪೂಲ್‌ ಅನ್ನು ಸಂಪರ್ಕಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಲೋಕಸಭಾ ಚುನಾವಣಾ ಫಲಿತಾಂಶ ಜೂನ್‌ 4 ರಂದು ಪ್ರಕಟವಾಗಲಿದ್ದು, ಹೆಚ್ಚೂ ಕಡಿಮೆಯಾದರೆ ಪ್ರಜ್ವಲ್‌ ರೇವಣ್ಣ ಅವರಿಗಿದ್ದ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಗೊಳ್ಳುತ್ತಿತ್ತು.
7
+ ಇವೆಲ್ಲವನ್ನೂ ಅರಿತುಕೊಂಡು ಪ್ರಜ್ವಲ್‌ ರೇವಣ್ಣ ಭಾರತಕ್ಕೆ ವಾಪಸ್‌‍ ಬಂದಿದ್ದಾರೆ. ಅವರು ದೇಶದಲ್ಲೇ ಇದ್ದರೆ, ನಾಲ್ಕು ಜನ ಇನ್‌್ಸಪೆಕ್ಟರ್‌ಗಳನ್ನು ಅಥವಾ ಹಿರಿಯ ಅಧಿಕಾರಿಗಳನ್ನು ಕಳುಹಿಸಿ ಬಂಧಿಸಿ ಕರೆತರಬಹುದಿತ್ತು. ವಿದೇಶದಲ್ಲಿದ್ದಾಗ ಅಂತಾರಾಷ್ಟ್ರೀಯ ನಿಯಮಗಳಿರುತ್ತವೆ, ಅವುಗಳನ್ನು ಪಾಲನೆ ಮಾಡುವುದು ಅನಿವಾರ್ಯ ಎಂದು ಹೇಳಿದರು.ಕೆ.ಆರ್‌.ಪೇಟೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್‌‍ನ ಮಾಜಿ ಸಚಿವ ಸಾ.ರಾ.ಮಹೇಶ್‌ ಅವರ ಹೆಸರು ಕೇಳಿಬಂದಿರುವ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ವಿವರ ತಿಳಿದುಕೊಂಡ ನಂತರ ಪ್ರತಿಕ್ರಿಯಿಸುತ್ತೇನೆ.
8
+ ಸ್ವಯಂ ಪ್ರೇರಿತ ಸಿಬಿಐ ತನಿಖೆ ಇಲ್ಲ:ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆ ನಡೆಯುತ್ತಿದೆ. ನೂರು ಕೋಟಿ ರೂ.ಗಳಿಗೂ ಮೇಲ್ಪಟ್ಟ ವಹಿವಾಟುಗಳಿದ್ದರೆ ಅದು ಸಹಜವಾಗಿಯೇ ಸಿಬಿಐ ತನಿಖೆಗೊಳಪಡುತ್ತದೆ ಎಂಬ ಚರ್ಚೆಗಳಿವೆ. ಇನ್ನು ಮುಂದೆ ಯಾವ ರೀತಿ ತಿರುವು ಪಡೆಯುತ್ತದೆ ಎಂದು ನೋಡಬೇಕಿದೆ ಎಂದರು.
9
+ ಆತಹತ್ಯೆ ಮಾಡಿಕೊಂಡ ಚಂದ್ರಶೇಖರನ್‌ ಅವರ ಮರಣಪತ್ರದಲ್ಲಿರುವ ಮಾಹಿತಿಗಳು ಹಾಗೂ ಹಣ ವರ್ಗಾವಣೆ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ಸಿಬಿಐ ಮಧ್ಯಪ್ರವೇಶ ಮಾಡಿದರೆ ಸಿಐಡಿಯಿಂದ ಪ್ರಕರಣ ವರ್ಗಾವಣೆಗೊಳ್ಳುತ್ತದೆ. ನಾವಾಗಿಯೇ ಸಿಬಿಐ ತನಿಖೆ ಕೇಳುವುದಿಲ್ಲ. ಎರಡೆರಡೂ ತನಿಖೆಯೂ ನಡೆಯುವುದಿಲ್ಲ ಎಂದರು.
10
+ ಸಚಿವರ ರಾಜೀನಾಮೆಗೆ ಬಿಜೆಪಿ ಗಡುವು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್‌, ವಿರೋಧಪಕ್ಷವಾಗಿ ಅವರು ಗಡುವು ನೀಡುವುದು, ರಾಜೀನಾಮೆಗೆ ಒತ್ತಾಯಿಸುವುದು, ಪ್ರತಿಭಟಿಸುವುದು ಸಾಮಾನ್ಯ. ಆದರೆ ಸರ್ಕಾರಕ್ಕೂ ಜವಾಬ್ದಾರಿಯಿದೆ. ಅದರಂತೆ ನಾವು ನಡೆದುಕೊಳ್ಳುತ್ತೇವೆ ಎಂದರು.
11
+ 187 ಕೋಟಿ ಸಾರ್ವಜನಿಕರ ಹಣ ಆಗಿರುವುದರಿಂದ ಮುಖ್ಯಮಂತ್ರಿಯವರು ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡಿದ್ದಾರೆ. ನಿನ್ನೆ ನಾನು ಶಿವಮೊಗ್ಗದಲ್ಲಿದ್ದಾಗ ಕರೆ ಮಾಡಿ ಸಭೆ ನಡೆಸೋಣ ಎಂದು ಹೇಳಿದ್ದರು. ನಾನು ದೂರ ಇದ್ದಿದ್ದರಿಂದಾಗಿ ಅವರೇ ಸಭೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದಾರೆ ಎಂದು ಹೇಳಿದರು.
12
+ ಯಾಗದಿಂದ ಸರ್ಕಾರ ಬೀಳಿಸಲಾಗುವುದಿಲ್ಲ:ರಾಜ್ಯಸರ್ಕಾರವನ್ನು ಪತನಗೊಳಿಸಲು ಕೇರಳದಲ್ಲಿ ಯಾಗ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಅವರಿಗೆ ಮಾಹಿತಿ ಇದೆ. ನನಗೆ ವಿವರಗಳು ಗೊತ್ತಿಲ್ಲ. ಅವರ ಹೇಳಿಕೆಯನ್ನು ಗೌರವಿಸುತ್ತೇನೆ. ಆದರೆ ಯಾಗ ಮಾಡುವುದರಿಂದ ಸರ್ಕಾರ ಬೀಳಿಸಬಹುದು ಅಥವಾ ರಚಿಸಬಹುದು ಎಂದಾಗಿದ್ದರೆ ಎಲ್ಲರೂ ಯಾಗ ಮಾಡುತ್ತಲೇ ಇರುತ್ತಿದ್ದರು ಎಂದರು.
eesanje/url_46_127_4.txt ADDED
@@ -0,0 +1,5 @@
 
 
 
 
 
 
1
+ ಅಸಹಾಯಕ ಅಧಿಕಾರಿಗಳು-ಗುತ್ತಿಗೆದಾರರಿಗೆ ಆತ್ಮಹತ್ಯೆ ಭಾಗ್ಯ : ವಿಜಯೇಂದ್ರ ವಾಗ್ದಾಳಿ
2
+ ಬೆಂಗಳೂರು, ಮೇ 31– ಅಸಹಾಯಕ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಲಾಗುತ್ತಿದೆ. ಬರಿದಾಗಿರುವ ಸರ್ಕಾರಿ ಖಜಾನೆ ಗುತ್ತಿಗೆದಾರರ ಪಾಲಿಗೆ ಆತಹತ್ಯೆಯ ಬಾವಿಯಾಗುತ್ತಿದೆ. ಈ ಸರ್ಕಾರಕ್ಕೆ ಮಾನವ ಜೀವಗಳೆಂದರೆ ಅದು ಕೇವಲದ ಸಂಕೇತವಾಗಿದೆ ಎಂದು ರಾಜ್ಯ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ದ ತೀವ್ರ ವಾಗ್ದಳಿ ನಡೆಸಿದ್ದಾರೆ.
3
+ ಈ ಕುರಿತು ತಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ವಿಜಯೇಂದ್ರ ಅವರು, ಕಾಂಗ್ರೆಸ್‌‍ ಸರ್ಕಾರದ ಭ್ರಷ್ಟವ್ಯೂಹಕ್ಕೆ ಸಿಲುಕಿದ ಅಧಿಕಾರಿಯೊಬ್ಬರ ಆತ್ಮಹತ್ಯೆಯ ಕರಿನೆರಳು ಅಚ್ಚೊತ್ತಿರುವ ಬೆನ್ನಲೇ ………….. ನಿಂದ ಬಿಲ್‌ ಪಾವತಿಯಾಗದೇ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್‌‍.ಗೌಡರ್‌ ಆತಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ, ಈ ಸರ್ಕಾರದಲ್ಲಿ ಏನಾಗುತ್ತಿದೆ ಎಂಬ ಆತಂಕ ಜನರಲ್ಲಿ ಮೂಡುತ್ತಿದೆ ಎಂದು ಕಿಡಿಕಾರಿದ್ದಾರೆ.
4
+ ಭಾಗ್ಯಗಳ ಸರ್ಕಾರ ಎಂದು ಬೊಬ್ಬೆ ಹೊಡೆಯುವ ಕಾಂಗ್ರೆಸ್‌‍ ಸರ್ಕಾರದಲ್ಲಿ ಆಡಳಿತದಲ್ಲಿ ಅಮಾಯಕ ಹೆಣ್ಣು ಮಕ್ಕಳಿಗೆ- ಕೊಲೆ ಭಾಗ್ಯ, ಪ್ರಮಾಣಿಕ ಅಧಿಕಾರಿಗಳಿಗೆ- ವರ್ಗಾವಣೆ ಭಾಗ್ಯ, ಕಾಂಗ್ರೆಸ್‌‍ ಸರ್ಕಾರ ಅಧಿಕಾರದಲ್ಲಿದ್ದಷ್ಟೂ ಕಾಲ ರಾಜ್ಯದ ಜನತೆ ನಿತ್ಯ ದುರಂತ ಸುದ್ದಿಯನ್ನಷ್ಟೇ ತಿಳಿಯಬೇಕಿದೆ.
5
+ ಇದು ಕರ್ನಾಟಕದ ಪರಮ ದೌರ್ಭಾಗ್ಯವಲ್ಲದೇ ಇನ್ನೇನೂ ಅಲ್ಲ. ಎರಡು ಅಮೂಲ್ಯ ಜೀವಗಳ ಆತಹತ್ಯೆಯ ಹಿನ್ನಲೆಯಲ್ಲಿ ಸತ್ಯ ಏನೆಂಬುದು ಬಹಿರಂಗವಾಗಲೇ ಬೇಕಿದೆ, ಇದಕ್ಕೆ ಸಿಬಿಐ ತನಿಖೆಯೊಂದೇ ಉಳಿದಿರುವ ಮಾರ್ಗವಾಗಿದೆ ಎಂದು ವಿಜಯೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
eesanje/url_46_127_5.txt ADDED
@@ -0,0 +1,4 @@
 
 
 
 
 
1
+ ಬಂಧನಕ್ಕೊಳಗಾದ ಪ್ರಜ್ವಲ್‌ಗೆ ಎಸ್‌‍ಐಟಿಯಿಂದ ಪ್ರಶ್ನೆಗಳ ಸುರಿಮಳೆ
2
+ ಬೆಂಗಳೂರು, ಮೇ 31-ಲೈಂಗಿಕ ದೌರ್ಜನ್ಯದ ಪ್ರಮುಖ ಆರೋಪಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಇಂದು ಮುಂಜಾನೆ ಬಂಧಿಸಿರುವ ಎಸ್‌‍ಐಟಿ ತೀವ್ರ ವಿಚಾರಣೆಗೊಳಪಡಿಸಿದೆ.ಕಳೆದ 34 ದಿನಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಸಂಸದ ಪ್ರಜ್ವಲ್‌ರವರು ನಿನ್ನೆ ಜರ್ಮನಿಯ ಮ್ಯೂನಿಚ್‌ನಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಎಸ್‌‍ಐಟಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡರು.
3
+ ಇಂದು ಬೆಳಿಗ್ಗೆ ಪ್ರಜ್ವಲ್‌ ತಿಂಡಿ ಸೇವಿಸಿದ ನಂತರ ತೀವ್ರ ವಿಚಾರಣೆಗೊಳಪಡಿಸಿದ ಎಸ್‌‍ಐಟಿ ಅಧಿಕಾರಿಗಳು ಪ್ರಜ್ವಲ್‌ಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.
4
+ * ಪೆನ್‌ಡ್ರೈವ್‌ನಲ್ಲಿರುವ ಫೋಟೊ, ವಿಡಿಯೋ ನಿಮದೇ?* ಹಾಗಾದರೆ ಮೊಬೈಲ್‌ನಲ್ಲಿ ಸೆರೆಹಿಡಿದು ಅವುಗಳನ್ನು ಏಕೆ ಮೊಬೈಲ್‌ನಲ್ಲಿ ಏಕೆ ಇಟ್ಟುಕೊಂಡಿದ್ದೀರಿ?* ಎಷ್ಟು ಮಹಿಳೆಯರ ವಿಡಿಯೋಗಳಿವೆ?* ಅವರೆಲ್ಲಾ ನಿಮಗೆ ಹೇಗೆ ಗೊತ್ತು?* ನಿಮ್ಮ ಮೊಬೈಲ್‌ನಲ್ಲಿ ಇರುವ ಅಶ್ಲೀಲ ಚಿತ್ರಗಳು ಹೇಗೆ ಹೊರಗೆ ಬಂದವು?* ನಿಮ್ಮ ಮಾಜಿ ಕಾರು ಚಾಲಕ ಕಾರ್ತಿಕ್‌ಗೆ ನೀವೇನಾದರೂ ಅವುಗಳನ್ನು ಕೊಟ್ಟಿದ್ದೀರ?* ಪೆನ್‌ಡ್ರೈವ್‌ಗಳು ಹೊರಗೆ ಬಂತು ಎಂದು ನಿಮಗೆ ಗೊತ್ತಾಗಿದ್ದು ಯಾವಾಗ?* ಮುಂದೆ ನೀವೇನು ಮಾಡಿದಿರಿ?* ಹೊಳೆನರಸೀಪುರ, ಹಾಸನದಲ್ಲಿ ನಿಮಗೆ ಮನೆಗಳಿದ್ದರೂ ಹಾಸನ ಸಂಸದರ ನಿವಾಸದಲ್ಲಿ ನೀವು ಮಲಗುತ್ತಿದ್ದುದು ಏಕೆ?* ವಿದೇಶಕ್ಕೆ ಹೋಗಿದ್ದು ಏಕೆ?* ನಾವು ನೋಟೀಸ್‌‍ ಕೊಟ್ಟರೂ ವಿಚಾರಣೆಗೆ ಹಾಜರಾಗಲಿಲ್ಲ ಏಕೆ?* ಜರ್ಮನಿಯಿಂದ ಟಿಕೆಟ್‌ ಬುಕ್‌ ಮಾಡಿ ಪದೇಪದೇ ಕ್ಯಾನ್ಸಲ್‌ ಮಾಡಿದ್ದು ಏಕೆ?* ವಿದೇಶಕ್ಕೆ ಯಾರೊಂದಿಗೆ ಹೋಗಿದ್ದಿರಿ?* ಅಲ್ಲಿ ಎಲ್ಲಿದ್ದಿರಿ?* ನಿಮೊಂದಿಗೆ ಯಾರ್ಯಾರಿದ್ದರು? ಎಂದು ಸರಣಿ ಪ್ರಶ್ನೆಗಳನ್ನು ಎಸ್‌‍ಐಟಿ ಅಧಿಕಾರಿಗಳು ಕೇಳಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.* ಪ್ರಜ್ವಲ್‌ ರೇವಣ್ಣ ಅವರನ್ನು ಬಂಧಿಸಿರುವ ಎಸ್‌‍ಐಟಿ ಇಂದು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ.* ಪ್ರಜ್ವಲ್‌ ರೇವಣ್ಣ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ಹಾಗೂ ಸಿಐಡಿಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.
eesanje/url_46_127_6.txt ADDED
@@ -0,0 +1,6 @@
 
 
 
 
 
 
 
1
+ ಪ್ರಜ್ವಲ್‌ ಆಗಮನದ ನಿರೀಕ್ಷೆ : ವಿಮಾನ ನಿಲ್ದಾಣದಲ್ಲಿ ಭಾರಿ ಭದ್ರತೆ
2
+ ಬೆಂಗಳೂರು, ಮೇ 30– ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆನ್ನಲಾದ ಅತ್ಯಾಚಾರ ಆರೋಪ ಪ್ರಕರಣದ ಪ್ರಮುಖ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಇಂದು ಮಧ್ಯರಾತ್ರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ನಿಲ್ದಾಣದ ಸುತ್ತಮುತ್ತ ಭಾರಿ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದೆ.
3
+ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಜ್ವಲ್‌ ಅವರನ್ನು ಕರೆತರುವ ಏರ್‌ಪೋರ್ಟ್‌ ರಸ್ತೆ ಉದ್ದಕ್ಕೂ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದೆ.ಎಸ್‌‍ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್‌ ಅವರು ಇಂದು ಬೆಳಗ್ಗೆ ಬೆಂಗಳೂರು ನಗರ ಪೊಲೀಸ್‌‍ ಆಯುಕ್ತ ದಯಾನಂದ್‌ ಅವರನ್ನು ಭೇಟಿ ಮಾಡಿ ಬಂದೋಬಸ್ತ್‌ ಬಗ್ಗೆ ಚರ್ಚೆ ನಡೆಸಿದ್ದಾರೆ.
4
+ ಪ್ರಜ್ವಲ್‌ ಅವರನ್ನು ಬಂಧಿಸಲು ಎಸ್‌‍ಐಟಿ ತಂಡ ಸಜ್ಜಾಗಿದೆ. ಹಿರಿಯ ಅಧಿಕಾರಿ ನೇತೃತ್ವದ ಎಸ್‌‍ಐಟಿಯ ಒಂದು ತಂಡ ವಿಮಾನ ನಿಲ್ದಾಣದಲ್ಲಿ ಬೀಡು ಬಿಟ್ಟಿದೆ. ಬಂಧನದ ನಂತರ ಯಾವ ರೀತಿ ವಿಚಾರಣೆ ನಡೆಸಬೇಕೆಂಬ ತನಿಖಾಧಿಕಾರಿ ತಯಾರಿ ನಡೆಸಿದ್ದಾರೆ.
5
+ ಈಗಾಗಲೇ ಹಲವು ಬಾರಿ ಟಿಕೇಟ್‌ ಬುಕ್‌ ಮಾಡಿ ಪ್ರಜ್ವಲ್‌ ಅವರು ಕೊನೆ ಕ್ಷಣದಲ್ಲಿ ಕ್ಯಾನ್ಸಲ್‌ ಮಾಡಿದ್ದರು. ಪ್ರಜ್ವಲ್‌ ಅವರು ಈಗ ಬರುತ್ತಾರೆ, ಆಗ ಬರುತ್ತಾರೆ ಎಂದು ಎಸ್‌‍ಐಟಿ ಅಧಿಕಾರಿ ವಿಮಾನ ನಿಲ್ದಾಣದಲ್ಲಿ ಕಾಯ್ದು ಕಾಯ್ದು ಸುಸ್ತಾಗಿದ್ದರು.
6
+ ಕಳೆದ ಮೂರು ದಿನಗಳ ಹಿಂದೆ ವಿಡಿಯೋ ಹರಿ ಬಿಟ್ಟ ಪ್ರಜ್ವಲ್‌ ಅವರು ಮೇ 31ರಂದು ಎಸ್‌‍ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು. ಜರ್ಮನಿಯ ಮೂನಿಚ್‌ ಯಿಂದ ಬೆಂಗಳೂರಿಗೆ ಪ್ರಜ್ವಲ್‌ ಹೆಸರಿನಲ್ಲಿ ಟಿಕೇಟ್‌ ಬುಕ್‌ ಆಗಿದೆ. ಇಂದು ಮಧ್ಯರಾತ್ರಿ ಅವರು ಆಗಮಿಸುವ ನಿರೀಕ್ಷೆ ಇದೆ.
eesanje/url_46_127_7.txt ADDED
@@ -0,0 +1,9 @@
 
 
 
 
 
 
 
 
 
 
1
+ ಶಾಲೆಗಳು ಶುರುವಾಗುತ್ತಿದ್ದಂತೆ ಮಹಿಳೆಯರಿಗೆ ಫುಲ್ ಟೆನ್ಶನ್
2
+ ಬೆಂಗಳೂರು, ಮೇ 30-ತರಕಾರಿಗಳ ಬೆಲೆ ಇಳಿತಾ ಇಲ್ಲ… ಶಾಲೆಗಳು ಪ್ರಾರಂಭವಾಗಿವೆ. ಮಕ್ಕಳಿಗೆ ದಿನನಿತ್ಯ ಏನ್‌ ತಿಂಡಿ ಮಾಡಿ ಕಳ್ಸೋದು ಎಂದು ಮಹಿಳೆಯರಲ್ಲಿ ಚಿಂತೆ ಶುರುವಾಗಿದೆ. ಕಳೆದ ಎರಡು ತಿಂಗಳಿನಿಂದ ಶಾಲಾ-ಕಾಲೇಜುಗಳಿಗೆ ರಜೆ ಇದ್ದು, ಮಕ್ಕಳು ಮನೆಯಲ್ಲೆ ಇದ್ದರು, ಕೆಲ ಮಕ್ಕಳ ಊರು ಸೇರಿದ್ದರು. ಈ ವೇಳೆ ತಿಂಡಿಯ ಚಿಂತೆ ಇರಲಿಲ್ಲ. ಮನೆಯಲ್ಲೆ ಇರೋ ತರಕಾರಿ ಹಾಕಿ ಅಡುಗೆ ಮಾಡಿ ದಿನ ಕಳೆಯುತ್ತಿದ್ದೆವು. ಆದರೆ ಇನ್ನು ಮುಂದೆ ಹಾಗಾಗುವುದಿಲ್ಲ. ದಿನನಿತ್ಯ ತಿಂಡಿ ಮಾಡಲೇಬೇಕು. ತರಕಾರಿ ಇಲ್ಲದೆ ಯಾವ ತಿಂಡಿ ಮಾಡೋದು, ಬ್ಯಾಗು ಇಡಿದು ತರಕಾರಿ ಅಂಗಡಿಗಳಿಗೆ ಹೋದರೆ ಬೆಲೆ ನೋಡಿ ತಲೆ ತಿರುಗುತ್ತೆ ಎಂದು ಸಾಮಾನ್ಯವರ್ಗದ ಮಹಿಳೆಯರ ಸಾಮಾನ್ಯ ಮಾತುಗಳಿವು.
3
+ ಕಳೆದ ಸುಮಾರು ಒಂದು ತಿಂಗಳಿನಿಂದಲೂ ತರಕಾರಿಗಳ ಬೇಲೆ ಷೇರು ಮಾರುಕಟ್ಟೆಯಂತೆ ಏರುತ್ತಲೆ ಇದೆ. ಸದ್ಯಕ್ಕೆ ಕಡಿಮೆಯಾಗುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಅಪರೂಪಕ್ಕೆ ಬಳಸುತ್ತಿದ್ದ ತರಕಾರಿಗಳ ಬೆಲೆಯೂ ಸಹ ಏರಿಕೆಯಾಗಿದ್ದು, ಮಾಹಿಳೆಯರ ಸಾಸಿವೆ ಡಬ್ಬಿ ಹಣ ಖಾಲಿಯಾಗುವಂತೆ ಮಾಡುತ್ತಿದೆ.
4
+ ಮಕ್ಕಳಿಗೆ ಶುಚಿ-ರುಚಿಯಾದ ತಾಜಾ ತಿಂಡಿ-ಊಟ ಕೊಡಬೇಕು ಎಂದು ಕೆಲ ಖಾಸಗಿ ಶಾಲೆಗಳ ನಿಯಮ ಇದೆ. ಅದರಲ್ಲಿ ಚಿಕ್ಕಮಕ್ಕಳಿಗೆ ಮೆನೂ ಕೂಡ ಇದೆ. ಒಂದು ಕಡೆ ಶಾಲೆ ಫೀಸ್‌ ಕಟ್ಟಿ ಕೈ ಖಾಲಿ… ದಿನನಿತ್ಯ ತರಕಾರಿ ತರಬೇಕು ಅಂದ್ರೆ ಕನಿಷ್ಟ 150 ರೂ.ಬೇಕು ಎಂಬುದು ಪೊಷಕರ ನೋವಿನ ಮಾತಾಗಿದೆ.
5
+ ಬೀನ್‌್ಸ ಬರೋಬ್ಬರಿ ದ್ವಿಶತಕ ಬಾರಿಸಿ ಮುನ್ನುಗ್ಗುತ್ತಿದೆ. ಕ್ಯಾರೆಟ್‌ ಕೆಜಿಗೆ 100, ನವಿಲುಕೋಸು, 60, ಆಲೂಗೆಡ್ಡೆ 50, ಹಸಿ ಬಟಾಣಿ 200. ಕ್ಯಾಪ್ಸಿಕಂ 80, ಬದನೆಕಾಯಿ 60, ಮೂಲಂಗಿ 60, ಹಾಗಲಕಾಯಿ 60, ಈರೇಕಾಯಿ, 80. ಗೋರಿಕಾಯಿ 60, ಪಡವಲಕಾಯಿ 50, ಹಸಿಮೆಣಸಿನಕಾಯಿ 120ರೂ.ಗೆ ಮರಾಟವಾಗುತ್ತಿದೆ.
6
+ ಇನ್ನು ಇದೇ ಮೊದಲ ಬಾರಿಗೆ ಸೌತೆಕಾಯಿ ಬೆಲೆ ಕೆಜಿಗೆ 80 ರೂ.ಗೆ ಮಾರಾಟ ವಾಗುತ್ತಿರುವುದನ್ನು ಗಮನಿಸಬಹುದಾಗಿದೆ. ಇತ್ತೀಚೆಗೆ ರಾಜ್ಯದ ವಿವಿಧೆಡೆ ಮಳೆಯಾಗಿದ್ದು, ಇರುವ ಟೊಮ್ಯಾಟೋ ಬೆಳೆಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ನಿಧಾನವಾಗಿ ಬೆಲೆ ಏರಿಕೆಯಾಗುತ್ತಿದ್ದು, ಕೆಜಿಗೆ 60 ರೂ. ತಲುಪಿದೆ. ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.
7
+ ಹಿಂದೆಂದೂ ಕಂಡುಕೇಳರಿಯದ ರಣ ಬೇಸಿಗೆಯಿಂದ ರೈತರು ನೀರಿಲ್ಲದೆ ಸಂಕಷ್ಟಕ್ಕೆ ಸಿಲುಕಿ ತರಕಾರಿ ಬೆಳೆ ಬೆಳೆಯಲು ಮುಂದಾಗದ ಕಾರಣ ಉತ್ಪಾದನೆ ಕುಂಠಿತವಾಗಿ ಬೆಲೆ ಏರಿಕೆಯಾಗಿದೆ. ಇನ್ನೇನು ಮಳೆ ಬಂದಿದೆ ತರಕಾರಿ ಬೆಲೆ ಕಡಿಮೆಯಾಗಲಿದೆ ಎಂಬ ನಿರೀಕ್ಷೆ ನಗರದ ಬಹಳ ಜನರಲ್ಲಿತ್ತು. ಆದರೆ ಅದು ಹಾಗಗಲ್ಲ, ಸೊಪ್ಪನ್ನು ಹೊರತುಪಡಿಸಿ ಯಾವುದೆ ತರಕಾರಿ ನಾಟಿ ಅಥವಾ ಬಿತ್ತನೆ ಮಾಡಿ ಎರಡರಿಂದ ಮೂರು ತಿಂಗಳಿಗೆ ಫಸಲಿಗೆ ಬರುತ್ತವೆ. ಒಂದು ವೇಳೆ ನೀರಿನ ಲಭ್ಯತೆ ಇರುವ ರೈತರು ಬೆಳೆದ ಬೆಳೆ ಮಾರುಕಟ್ಟೆಗೆ ಬಂದರೆ ಬೆಲೆ ಕಡಿಮೆಯಾಗಬಹುದು ಅಷ್ಟೆ.
8
+ ಈರುಳ್ಳಿ ಬೆಲೆಯಲ್ಲಿ ತುಸು ಏರಿಕೆ: ಕಳೆದ ಕೆಲ ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದ್ದ ಈರುಳ್ಳಿ ನಿಧಾನವಾಗಿ ಏರಿಕೆಯಾಗುತ್ತಿದೆ. ಈರುಳ್ಳಿ ಹೆಚ್ಚಾಗಿ ಬೆಳೆಯುವ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗೆ ತೊಂದರೆಯಾಗಿದೆ. ಜತೆಗೆ ಕೆಲವು ಕಡೆ ಬೆಳೆ ನಾಶವಾಗಿರುವುದರಿಂದ ಉತ್ಪಾದನೆಯಲ್ಲಿ ಇಳಿಮುಖವಾಗಿ ಬೆಲೆ ಹೆಚ್ಚಾಗಲಿದೆ ಎಂದು ವರ್ತಕರು ತಿಳಿಸಿದ್ದಾರೆ.
9
+ ಏನೇ ಆಗಲಿ ಬೆಂಗಳೂರಿನಂತಹ ನಗರಗಳಲ್ಲಿ ಅಡುಗೆ ಮನೆಯಲ್ಲಿ ಒಂದೇ ಒಂದು ವಸ್ತು ಇಲ್ಲದಿದ್ದರೂ ತೊಂದರೆಯೇ. ಆದರೆ ಗ್ರಾಮಾಂತರ ಪ್ರದೇಶದಲ್ಲಿ ಹಾಗಾಗುವುದಿಲ್ಲ. ಪಕ್ಕದ ಮನೆಯವರ ಬಳಿ ಎರಡು ಟೊಮ್ಯಾಟೋಪಡೆದು ಅಡುಗೆ ಮಾಡಿ ಅಂದಿನ ದಿನ ತಳ್ಳಬಹುದು ಅಲ್ಲವೆ..?
eesanje/url_46_127_8.txt ADDED
@@ -0,0 +1,5 @@
 
 
 
 
 
 
1
+ ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳ ಬೃಹತ್‌ ಪ್ರತಿಭಟನೆ
2
+ ಹಾಸನ, ಮೇ 30-ಸಂಸದ ಪ್ರಜ್ವಲ್‌ ರೇವಣ್ಣ ಅವರ ಬಂಧನಕ್ಕೆ ಆಗ್ರಹಿಸಿ ನಗರದಲ್ಲಿಂದು ಕರ್ನಾಟಕ ಜನಪರ ಚಳವಳಿಗಳ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
3
+ ಹಣಬಲ ಮತ್ತು ಅಧಿಕಾರದಿಂದ ಮಹಿಳೆಯರನ್ನು ಬಳಸಿಕೊಂಡು ಹಿಂಸಾಚಾರಕ್ಕೆ ಗುರಿಪಡಿಸಿ ಅದನ್ನು ಚಿತ್ರೀಕರಣ ಮಾಡಿಕೊಂಡಿರುವುದು ಖಂಡನೀಯ. ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿ ಮಹಿಳಾ ಹೋರಾಟಗಾರ್ತಿ ಸುಭಾಷಿಣಿ ಅಲಿ ಸೇರಿದಂತೆ ವಿವಿಧ ಮುಖಂಡರ ನೇತೃತ್ವದಲ್ಲಿ ಎನ್‌ಆರ್‌ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಎದುರಿನ ಚತುಷ್ಪಥ ರಸ್ತೆವರೆಗೂ ಬೃಹತ್‌ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.
4
+ ವಿವಿಧ ಮಹಿಳಾ, ಕಾರ್ಮಿಕ, ರೈತ, ಯುವಜನ, ದಲಿತ ವಿದ್ಯಾರ್ಥಿಗಳ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ನೀಡಿದ್ದು, ಪ್ರಜ್ವಲ್‌ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದವು.
5
+ ಪ್ರಜ್ವಲ್‌ ವಿರುದ್ಧ ಈಗ ನಡೆದಿರುವ ತನಿಖೆಗಳು ಏನೂ ಇಲ್ಲ. ಇನ್ನೂ ಉನ್ನತ ಮಟ್ಟದಲ್ಲಿ ತನಿಖೆಯಾಗಬೇಕು. ದೂರುದಾರ ಮಹಿಳೆಯರ ಗೌಪ್ಯತೆ ಕಾಪಾಡಿ ಅವರಿಗೆ ಆಪ್ತ ಸಮಾಲೋಚನೆ, ಕಾನೂನು ಸಲಹೆ, ರಕ್ಷಣೆ, ಪುನರ್ವಸತಿ ಮತ್ತು ಪರಿಹಾರ ಒದಗಿಸಬೇಕು. ನೊಂದ ಮಹಿಳೆಯರಿಗೆ ನ್ಯಾಯ ದೊರೆಯಬೇಕು ಎಂದು ಒತ್ತಾಯಿಸಿದರು.
eesanje/url_46_127_9.txt ADDED
@@ -0,0 +1,9 @@
 
 
 
 
 
 
 
 
 
 
1
+ ಚಂದ್ರಶೇಖರನ್‌ ಮನೆಗೆ ವಿಜಯೇಂದ್ರ ಭೇಟಿ, ನಾಗೇಂದ್ರ ರಾಜೀನಾಮೆಗೆ ಆಗ್ರಹ
2
+ ಶಿವಮೊಗ್ಗ, ಮೇ 30-ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣದ ತನಿಖೆನ್ನು ಸಿಬಿಐಗೆ ವಹಿಸಬೇಕು. ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
3
+ ಚಂದ್ರಶೇಖರನ್‌ ಮನೆಗೆ ಭೇಟಿ ನೀಡಿದ ನಂತರ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮ ಈ ಎರಡು ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಒಂದು ವಾರ ಗಡುವು ನೀಡುತ್ತೇವೆ. ಬೇಡಿಕೆ ಈಡೇರಿಸದಿದ್ದರೆ ಮುಂದಿನ ವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
4
+ ಸಚಿವ ನಾಗೇಂದ್ರ ಗಮನಕ್ಕೆ ಬಾರದೇ ಈ ಅಕ್ರಮ ನಡೆದಿಲ್ಲ. ತೆಲಂಗಾಣ ರಾಜ್ಯದಲ್ಲಿ ಹಣಕಾಸಿನ ವರ್ಗಾವಣೆ ನಡೆದಿದೆ. ಲೋಕಸಭೆ ಚುನಾವಣೆ ಸಮಯದಲ್ಲಿ ಈ ಅವ್ಯವಹಾರ ನಡೆದಿದೆ. ಕಾಂಗ್ರೆಸ್‌ ಹೈಕಮಾಂಡ್‌ ರಾಜ್ಯ ಸರ್ಕಾರವನ್ನು ಎಟಿಎಂ ರೀತಿಯಲ್ಲಿ ಬಳಕೆ ಮಾಡಿಕೊಂಡಿದೆ. ನಾವು ಆರೋಪ ಮಾಡಿದಾಗ ದಾಖಲೆ ಎಲ್ಲಿ ಎನ್ನುತ್ತಿದ್ದರು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನಮ್ಮ ಬಳಿ ದಾಖಲೆಗಳನ್ನು ಕೇಳುತ್ತಿದ್ದರು. ಈಗ ಸರ್ಕಾರ ಈ ಹಗರಣಕ್ಕೆ ಉತ್ತರವನ್ನು ನೀಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.
5
+ ಇದು ರಾಜ್ಯದ ದೊಡ್ಡ ಅವ್ಯವಹಾರ. ಇದರಲ್ಲಿ ಕಾಂಗ್ರೆಸ್‌ ನಾಯಕರ ಕೈವಾಡ ಇರುವುದು ಸ್ಪಷ್ಟವಾಗಿದೆ. ತಕ್ಷಣ ಸಚಿವ ನಾಗೇಂದ್ರ ರಾಜಿನಾಮೆ ಪಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಆಗ್ರಹಿಸಿದರು.
6
+ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಮಾತ್ರ ಅವ್ಯವಹಾರ ನಡೆದಿಲ್ಲ. ಬೇರೆ ಇಲಾಖೆಗಳಲ್ಲೂ ಇದೇ ರೀತಿ ಅಕ್ರಮ ನಡೆದಿರುವ ಶಂಕೆ ಇದೆ. ಈ ರೀತಿ ಅವ್ಯವಹಾರ ನಡೆಸಿದ ಹಣವನ್ನು ಲೋಕಸಭಾ ಚುನಾವಣೆಯಲ್ಲಿ ಬಳಕೆ ಮಾಡಲಾಗಿದೆ. ಅಂತಾರಾಜ್ಯ ಮಟ್ಟದಲ್ಲಿ ಹಣಕಾಸು ವ್ಯವಹಾರ ನಡೆದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಆರೋಪ ಮಾಡಿದರು.ಮೃತ ಚಂದ್ರಶೇಖರನ್‌ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು. ಜತೆಗೆ, ಎಲ್ಲಿಲ್ಲಿ ಹಣಕಾಸು ವ್ಯವಹಾರ ನಡೆದಿದೆ ಎಂಬ ಬಗ್ಗೆ ತನಿಖೆ ಆಗಬೇಕು. ಪ್ರಕರಣವನ್ನು ಸಿಬಿಐಗೆ ನೀಡಿದಾಗ ಮಾತ್ರ ಸತ್ಯ ಹೊರಬರಲಿದೆ ಎಂದರು.
7
+ ಇದಕ್ಕೂ ಮುನ್ನ ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿ ಕಾರಿ ಚಂದ್ರಶೇಖರ್‌ ಅವರ ಮನೆಗೆ ಇಂದು ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಕುಟುಂಬದವರಿಗೆ ಧೈರ್ಯ ತುಂಬಿದರು.
8
+ ಕುಟುಂಬಕ್ಕೆ ಸಾಂತ್ವನ ಹೇಳಿದ ಅವರು, ಮಕ್ಕಳ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟು ಧೈರ್ಯ ವಹಿಸುವಂತೆ ತಿಳಿಸಿದರು. ಲ್ಯಾಪ್‌ಟಾಪ್‌ ಮತ್ತಿತರ ವಸ್ತುಗಳನ್ನು ಒಯ್ದ ಕುರಿತು ಕುಟುಂಬದವರು ಮಾಹಿತಿ ನೀಡಿದರು. ಮನೆಯಲ್ಲಿರುವ ಸಾಕ್ಷವಸ್ತುಗಳನ್ನು ತೆಗೆದುಕೊಂಡು ಹೋಗಲು ಅಧಿ ಕಾರಿಗಳು ತರಾತುರಿಯಲ್ಲಿ ಬಂದಿದ್ದಾರೆ ಎಂದು ವಿಜಯೇಂದ್ರ ಅವರು ಆಕ್ಷೇಪಿಸಿದರು.
9
+ ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್‌ನಲ್ಲಿರುವ ಮನೆಯಲ್ಲಿ ಡೆತ್‌ನೋಟ್‌ ಬರೆದಿಟ್ಟು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ (52) ಆತ್ಮಹತ್ಯೆಗೆ ಶರಣಾಗಿದ್ದರು.
eesanje/url_46_128_1.txt ADDED
@@ -0,0 +1,4 @@
 
 
 
 
 
1
+ ಪಾಲಿಕೆ ಸದಸ್ಯನ ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ ಆರೋಪಿ 8 ವರ್ಷದ ನಂತರ ಸೆರೆ
2
+ ಹುಬ್ಬಳ್ಳಿ,ಮೇ.30-ಪಾಲಿಕೆ ಸದಸ್ಯನ ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ ಆರೋಪಿ 8 ವರ್ಷಗಳ ನಂತರ ಶಹರ ಠಾಣೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಈ ಹಿಂದೆ ಹುಬ್ಬಳ್ಳಿ-ಧಾರವಾಡದ ಪಾಲಿಕೆ ಸದಸ್ಯರಾಗಿದ್ದ ಆರಿಫ್‌ ಭದ್ರಾಪೂರ್‌ ಅವರ ಮೇಲೆ ಹಲ್ಲೆಗೈದು ಕೊಲೆಗೆ ಯ್ನಿಸಿ ಪರಾರಿಯಾದ ಸೈಫ್‌ ಅಲಿ ಬಾಂಬೆ ಬಂಧಿತ ಆರೋಪಿ.
3
+ ಕಳೆದ 2016ರಲ್ಲಿ ಗಣೇಶ್‌ ಪೇಟ್‌ ನಿವಾಸಿ ಆರಿಫ್‌ ಬದ್ರಾಪುರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದ ಸೈಫ್‌ ಅಲಿ ಪರಾರಿಯಾಗಿದ್ದ ಅದಷ್ಟವಶಾತ್‌‍, ಆರಿಫ್‌ ಪ್ರಾಣಾಪಾಯದಿಂದ ಪಾರಾಗಿದ್ದರು.
4
+ ಈ ಘಟನೆ ಕುರಿತು ಶಹರ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿ ಸೈಫ್‌‍ನನ್ನು ಎಂಟು ವರ್ಷಗಳ ಬಳಿಕ ಹುಬ್ಬಳ್ಳಿಯ ನವನಗರದಲ್ಲಿ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಶಹರ ಠಾಣೆ ಇನ್ಸ್‌‍ಪೆಕ್ಟರ್‌ ರಫಿಕ್‌ ತಶೀಲ್ದಾರ್‌ ನೇತತ್ವದ ತಂಡ ಬಂಧಿಸಿದ್ದಾರೆ.
eesanje/url_46_128_10.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಚಂದ್ರಶೇಖರನ್‌ ಆತಹತ್ಯೆ ಕುರಿತು ಸಮಗ್ರ ತನಿಖೆಯಾಗಬೇಕು : ಅಶ್ವತ್ಥ ನಾರಾಯಣ
2
+ ಬೆಂಗಳೂರು ಮೇ 29-ವಾಲ್ಮೀಕಿ ಅಭಿವೃದ್ಧಿ ನಿಗಮದ ನಿರ್ದೇಶಕ ಚಂದ್ರಶೇಖರನ್‌ ಪಿ. ಆತಹತ್ಯೆ ಪ್ರಕರಣದಲ್ಲಿ ಹಲವು ಅನುಮಾನಗಳು ವ್ಯಕ್ತವಾಗುತ್ತಿದ್ದು, ಅಧಿಕಾರಿಗಳ ದೂರವಾಣಿ ಕರೆಗಳ ವಿವರವನ್ನು ತನಿಖೆಗೆ ಒಳಪಡಿಸಬೇಕೆಂದು ಮಾಜಿ ಸಚಿವ ಅಶ್ವತ್ಥ ನಾರಾಯಣ ರಾಜ್ಯಸರ್ಕಾರವನ್ನು ಒತ್ತಾಯಿಸಿದ್ದಾರೆ.
3
+ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಂದ್ರಶೇಖರನ್‌ ಬರೆದಿರುವ ಡೆತ್‌ನೋಟ್‌ನಲ್ಲಿ ಕೆಲವು ಆಘಾತಕಾರಿ ಅಂಶಗಳು ಹೊರಬಿದ್ದಿವೆ. ನಿಗಮದ ವ್ಯವಸ್ಥಾಪಕ ನಿರ್ದೇಶಕರ ಗಮನಕ್ಕೂ ಬಾರದೆ 87 ಕೋಟಿ ಹಣವನ್ನು ವರ್ಗಾವಣೆ ಮಾಡಲಾಗಿತ್ತೆಂಬ ಆರೋಪ ಕೇಳಿಬಂದಿದೆ. ಅಧಿಕಾರಿಗಳ ಪಾತ್ರದ ಬಗ್ಗೆ ಅವರ ದೂರವಾಣಿ ಕರೆಗಳ ವಿವರಗಳನ್ನು ತನಿಖೆ ನಡೆಸಿದಾಗ ಮಾತ್ರ ಸತ್ಯಾಂಶ ಹೊರಬರುತ್ತದೆ ಎಂದು ಒತ್ತಾಯಿಸಿದರು.
4
+ ಪ್ರಕರಣದ ಕುರಿತಂತೆ ಸರ್ಕಾರ ಈವರೆಗೂ ಯಾರ ವಿರುದ್ಧವೂ ಎಫ್‌ಐಆರ್‌ ಅನ್ನೇ ದಾಖಲಿಸಿಲ್ಲ. ಅದಕ್ಕೂ ಮೊದಲೇ ಸಿಐಡಿ ತನಿಖೆಗೆ ಆದೇಶಿಸಿದೆ. ಇದು ಸರ್ಕಾರದ ಮೂಗಿನಡಿಯೇ ನಡೆಯುವುದರಿಂದ ನಿಷ್ಪಕ್ಷಪಾತ ತನಿಖೆ ನಡೆಯಲು ಸಾಧ್ಯವೇ? ಎಂದು ಪ್ರಶ್ನಿಸಿದರು.
5
+ ಯಾವುದೇ ಒಂದು ಖಾತೆಯನ್ನು ತೆರೆಯಬೇಕಾದರೆ ಹಣಕಾಸು ಇಲಾಖೆಯ ಅನುಮತಿ ಇರಬೇಕು. ಇಲ್ಲಿ ಅವಕಾಶವನ್ನೇ ಕೊಡದಿದ್ದಾಗ ಹೇಗೆ ಖಾತೆಯನ್ನು ತೆರೆಯಲಾಯಿತು? ಅಷ್ಟು ದೊಡ್ಡ ಮೊತ್ತದ ಹಣ ಎಂಡಿಯವರಿಗೆ ಗೊತ್ತಿಲ್ಲದಂತೆ ವರ್ಗಾವಣೆಯಾಗಿದೆ ಎಂದರೆ ಸಚಿವ ನಾಗೇಂದ್ರ ಅವರ ಗಮನಕ್ಕೆ ಹೋಗಿಲ್ಲವೇ? ಇಲಾಖೆಯಲ್ಲಿ ನಡೆಯುವ ವ್ಯವಹಾರಗಳು ಅವರಿಗೆ ಗೊತ್ತಿಲ್ಲವೆಂದರೆ ಇನ್ನು ಹೇಗೆ ನಿರ್ವಹಣೆ ಮಾಡುತ್ತಾರೆ? ಎಂದು ತರಾಟೆಗೆ ತೆಗೆದುಕೊಂಡರು.
6
+ ಖಾತೆಯನ್ನು ಹೇಗೆ ತೆರೆದರು ಎಂಬುದನ್ನು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೇಳಬೇಕು. ಇಲ್ಲಿ ನೇರವಾಗಿ ಅವರ ಮೇಲೆಯೇ ಆರೋಪ ಇರುವುದರಿಂದ ತಕ್ಷಣವೇ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
7
+ ಮೃತ ಚಂದ್ರಶೇಖರನ್‌ ಅವರ ನಿವಾಸಕ್ಕೆ ನಮ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ನಾಳೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ ಎಂದು ತಿಳಿಸಿದರು.ಬಿಜೆಪಿ ಸರ್ಕಾರವನ್ನು ಶೇ.40 ಕಮಿಷನ್‌ ಸರ್ಕಾರ ಎನ್ನುತ್ತಿದ್ದ ರಾಜ್ಯ ಕಾಂಗ್ರೆಸ್‌‍ ಉಸ್ತುವಾರಿ ರಣಜಿತ್‌ ಸಿಂಗ್‌ ಸುರ್ಜೇವಾಲ ಈಗ ಎಲ್ಲಿಗೆ ಹೋಗಿದ್ದಾರೆ? ಅವರ ಸರ್ಕಾರದಲ್ಲಿ ನಡೆಯುತ್ತಿರುವ ಅವಾಂತರಗಳು ಅವರ ಗಮನಕ್ಕೆ ಬಂದಿಲ್ಲವೇ? ಅವರದೇನಿದ್ದರೂ ತಿಂಗಳಿಗೊಮೆ ವಸೂಲಿ ಮಾಡುವುದಷ್ಟೇ ಕೆಲಸ ಎಂದು ವ್ಯಂಗ್ಯವಾಡಿದರು.
8
+ ರಾಜ್ಯದಲ್ಲಿ ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಪ್ರತೀ ಇಲಾಖೆಯಲ್ಲೂ ಕಮಿಷನ��‌ ಕೊಡದೇ ಯಾವ ಕೆಲಸಗಳೂ ನಡೆಯುತ್ತಿಲ್ಲ. ಎಲ್ಲರೂ ವಸೂಲಿಗೆ ಇಳಿದಿದ್ದಾರೆ. ಈ ಎಲ್ಲಾ ವಿಚಾರ ಗೊತ್ತಿದ್ದರೂ ಮುಖ್ಯಮಂತ್ರಿ ಅಸಹಾಯಕ ಸ್ಥಿತಿಗೆ ಬಂದಿದ್ದಾರೆಂದು ಅಶ್ವತ್ಥ ನಾರಾಯಣ ಕುಹಕವಾಡಿದರು.ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಾಳು ಮಾಡಿದ ಕೀರ್ತಿ ಕಾಂಗ್ರೆಸ್‌‍ ಸರ್ಕಾರಕ್ಕೆ ಸಲ್ಲುತ್ತದೆ. ನಾನಾ ಆಯೋಗವನ್ನು ಸಹ ರದ್ದು ಮಾಡಿತು. ಈಗಾಗಲೇ ಎರಡು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಿವೆ. ಕಾಂಗ್ರೆಸ್‌‍ ಶಿಕ್ಷಣ ವಿರೋಧಿ ಎಂದು ಕಿಡಿಕಾರಿದರು.
9
+ ವಾಗ್ದಾಳಿ:ಕೇಂದ್ರ ಗೃಹಸಚಿವ ಅಮಿತ್‌ ಷಾ ಅವರ ಸೂಚನೆಯಂತೆ ಪ್ರಜ್ವಲ್‌ ರೇವಣ್ಣ ಸ್ವದೇಶಕ್ಕೆ ವಾಪಸ್‌‍ ಆಗುತ್ತಿದ್ದಾರೆ ಎಂಬ ಸಚಿವ ಪ್ರಿಯಾಂಕ ಖರ್ಗೆ ಅವರ ಆರೋಪಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಪ್ರಿಯಾಂಕ ಖರ್ಗೆ ಅವರೊಬ್ಬ ವಿಶೇಷ ವ್ಯಕ್ತಿ, ಇಡೀ ಸಂಪುಟದಲ್ಲಿ ನಾನೊಬ್ಬನೇ ಮಹಾನ್‌ ವಿಚಾರವಂತ ಎಂದು ಭಾವಿಸಿಕೊಂಡು ಎಲ್ಲದಕ್ಕೂ ಮಾತನಾಡುತ್ತಿದ್ದಾರೆ. ಅಂಥವರ ಬಗ್ಗೆ ಮಾತನಾಡದೇ ಇರುವುದೇ ಲೇಸು ಎಂದು ಕಿಡಿಕಾರಿದರು.
10
+ ನಾಲಗೆ ಇದೆ ಎಂದು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇದಕ್ಕೆ ತಕ್ಕ ಪ್ರತಿಫಲವನ್ನು ಅವರು ಈಗಾಗಲೇ ಅನುಭವಿಸಿದ್ದಾರೆ. ಜೂನ್‌ 4 ರಂದು ಇದಕ್ಕೆ ತಕ್ಕ ಉತ್ತರ ಸಿಗಲಿದೆ ಎಂದು ಎಚ್ಚರಿಸಿದರು.
eesanje/url_46_128_11.txt ADDED
@@ -0,0 +1,5 @@
 
 
 
 
 
 
1
+ ಕೆ-ಸೆಟ್‌ ಪರೀಕ್ಷೆಯ ಫಲಿತಾಂಶ ಪ್ರಕಟ
2
+ ಬೆಂಗಳೂರು, ಮೇ 29-ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಹಾಯಕ ಪ್ರಾಧ್ಯಾಪಕರ 2023ರ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಿದೆ. ಶೇ.7.01ರಷ್ಟು ಕೆ-ಸೆಟ್‌ ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದಾರೆ.
3
+ 50262 ಪುರುಷ, 66656 ಮಹಿಳಾ, 385 ತೃತೀಯ ಲಿಂಗದವರು ಸೇರಿದಂತೆ 1,17,303 ಅಭ್ಯರ್ಥಿಗಳು ಕೆಸೆಟ್‌ ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದರು. ಇವರಲ್ಲಿ ಒಟ್ಟು 95,201 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 6675 ಮಂದಿ ಅರ್ಹತೆ ಪಡೆದಿದ್ದಾರೆ.
4
+ ಈ ಪೈಕಿ ಶೇ.8.27 ರಷ್ಟು ಪುರುಷ, ಶೇ.5.90ರಷ್ಟು ಮಹಿಳೆ, ಶೇ.43.89ರಷ್ಟು ತೃತೀಯ ಲಿಂಗದವರು ಅರ್ಹತೆ ಪಡೆದಿದ್ದು, ಒಟ್ಟಾರೆ ಶೇ.7.01ರಷ್ಟು ಸಹಾಯಕ ಪ್ರಾಧ್ಯಾಪಕರ ಅರ್ಹತೆ ಪಡೆದಿದ್ದಾರೆ ಎಂದು ಕೆಇಎ ಪ್ರಕಟಣೆ ತಿಳಿಸಿದೆ.
5
+ ಮೀಸಲಾತಿ ಬಯಸದವರು 797 ಮಂದಿ ಅರ್ಹತೆ ಪಡೆದಿದ್ದು, ಶೇ.6.82ರಷ್ಟು ಮಂದಿ ಪರೀಕ್ಷೆಯಲ್ಲಿ ಅರ್ಹತೆ ಪಡೆದುಕೊಂಡಿದ್ದಾರೆ. ಶೇ.6.06, ಎಸ್ಸಿ, ಶೇ.7.41, ಪ್ರವರ್ಗ -1 ಶೇ.7.42, ಪ್ರವರ್ಗ -2ಎ ಶೇ.9.06, ಪ್ರವರ್ಗ 2ಬಿ ಶೇ.8.59, ಪ್ರವರ್ಗ 3ಎ ಶೇ.6.59, ಪ್ರವರ್ಗ 3ಬಿ ಶೇ. 5.75ರಷ್ಟು ಅರ್ಹತೆ ಹೊಂದಿದ್ದಾರೆ. ವಿಕಲಚೇತನರು 350 ಮಂದಿ ಅರ್ಹತೆ ಪಡೆದಿದ್ದು, ಶೇ.21.94ರಷ್ಟು ಅರ್ಹತೆ ಪಡೆದಿದ್ದಾರೆ.
eesanje/url_46_128_12.txt ADDED
@@ -0,0 +1,6 @@
 
 
 
 
 
 
 
1
+ ಗ್ರಾಮಗಳಲ್ಲಿ ಕುಡಿಯುವ ನೀರು ಕಲುಷಿತಗೊಂಡರೆ ಅಧಿಕಾರಿಗಳೇ ಹೊಣೆ : ಪ್ರಿಯಾಂಕ್‌ ಖರ್ಗೆ
2
+ ಬೆಂಗಳೂರು, ಮೇ 29-ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಸರಬರಾಜಾಗುತ್ತಿರುವ ಕುಡಿಯುವ ನೀರು ಕಲುಷಿತಗೊಳ್ಳುವ ಪ್ರಕರಣಗಳು ಪುನಾರಾವರ್ತನೆಯಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದೇ ಇರುವ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ ನೀಡಿದ್ದಾರೆ.
3
+ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಎಲ್ಲಾ ಕಾರ್ಯಪಾಲಕ ಅಭಿಯಂತರರಿಗೆ ಸಚಿವರು ಪತ್ರ ಬರೆದು ಗ್ರಾಮೀಣ ಜನವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮತ್ತು ಆಯಾ ಗ್ರಾಮ ಪಂಚಾಯತಿಯ ಆದ್ಯ ಜವಾಬ್ದಾರಿಯಾಗಿದ್ದು, ಇತ್ತೀಚಿನ ದಿನಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದಲ್ಲದೇ ಪ್ರಾಣಹಾನಿಗಳು ಕೂಡಾ ಸಂಭವಿಸಿರುತ್ತವೆ.
4
+ ಇಂತಹ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಇಲಾಖೆಯಿಂದ ಕಾಲಕಾಲಕ್ಕೆ ನಿರ್ದೇಶನಗಳನ್ನು ನೀಡಲಾಗಿದ್ದರೂ ಸಹಾ ಕೆಲವು ಗ್ರಾಮ/ಜನವಸತಿ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಪುನರಾವರ್ತನೆಯಾಗುತ್ತಿರುವುದು ಹೆಚ್ಚಾಗಿ ಕಂಡು ಬಂದಿದೆ ಎಂದೂ ಸಚಿವರು ಪತ್ರದಲ್ಲಿ ತಿಳಿಸಿದ್ದಾರೆ.
5
+ ಕುಡಿಯುವ ನೀರಿನ ಸರಬರಾಜಿಗಾಗಿ ಅಳವಡಿಸಿರುವ ಕೊಳವೆಗಳಲ್ಲಿ ಮಳೆ ನೀರು, ಚರಂಡಿ ನೀರು ಮತ್ತು ಇತರ ಕಲುಷಿತ ನೀರು ಸೇರುತ್ತಿರುವುದರಿಂದ ಮತ್ತು ನೀರಿನ ಶೇಖರಣೆ ಮಾಡುವ ಕಿರು ನೀರು ಸರಬರಾಜು ಮಾಡುವ ನೀರಿನ ತೊಟ್ಟಿಗಳು ಹಾಗೂ ಜಲಾಗಾರಗಳನ್ನು ಕಾಲಕಾಲಕ್ಕೆ ಸರಿಯಾಗಿ ಸ್ವಚ್ಛಗೊಳಿಸುವುದು ಹಾಗೂ ಕ್ಲೋರಿನೇಷನ್‌ ಕೈಗೊಳ್ಳುವುದು ಮತ್ತು ನೀರಿನ ಮೂಲಗಳಾದ ಕೊಳವೆ ಬಾವಿಗಳ ಸುತ್ತಮುತ್ತಲೂ ನಿಲ್ಲುವ ಕೊಳಚೆ ನೀರನ್ನು ಸ್ವಚ್ಛಗೊಳಿಸುವುದು ಮುಂತಾದ ಮುಂಜಾಗ್ರತಾ ಕ್ರಮಗಳ ಮೂಲಕ ನೀರಿನ ಮೂಲಗಳಿಗೆ ಕಲುಷಿತ ನೀರು ಸೇರದಂತೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಮ ಪತ್ರದಲ್ಲಿ ತಿಳಿಸಿದ್ದಾರೆ.
6
+ ನೀರು ಸರಬರಾಜು ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಕಾಲ ಕಾಲಕ್ಕೆ ಮೇಲ್ವಿಚಾರಣೆ ನಡೆಸಲು ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲು ಸೂಚಚನೆ ನೀಡಿರುವ ಸಚಿವ ಪ್ರಿಯಾಂಕ ಖರ್ಗೆ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಪ್ರಕರಣಗಳು ಪುನಾರಾವರ್ತನೆ ಆದಲ್ಲಿ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
eesanje/url_46_128_2.txt ADDED
@@ -0,0 +1,9 @@
 
 
 
 
 
 
 
 
 
 
1
+ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಖರೀದಿಗೆ 121 ಕೋಟಿ ರೂ. ಬಿಡುಗಡೆ
2
+ ಬೆಂಗಳೂರು, ಮೇ 30-ಶಿಕ್ಷಣ ಇಲಾಖೆ ವತಿಯಿಂದ ನಡೆಸಲ್ಪಡುತ್ತಿರುವ ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಒಂದನಿಂದ ಹತ್ತನೇ ತರಗತಿವರೆಗೆ 2024-25 ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲು, ಶೂ ಮತ್ತು ಸಾಕ್ಸ್ ಖರೀದಿಸಲು 121 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.
3
+ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ಅರ್ಹ ವಿದ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಖರೀದಿ ಪ್ರಕ್ರಿಯೆಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ. ರಾಜ್ಯದಲ್ಲಿ ಸುಮಾರು 42.65 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಅವರಿಗೆ ಒಂದು ಜೊತೆ ಶೂ, ಎರಡು ಜೊತೆ ಸಾಕ್ಸ್ ಗಳನ್ನು ಅಥವಾ ಪಾದರಕ್ಷೆಗಳನ್ನು ಖರೀದಿಸುವ ಪ್ರಕ್ರಿಯೆ ಆರಂಭಿಸಲು ಸೂಚಿಸಲಾಗಿದೆ.
4
+ ಶೂ ಖರೀದಿಗೆ ಸಂಬಂಧಿಸಿದಂತೆ ಕೆಲವೊಂದು ಷರತ್ತುಗಳನ್ನು ಸುತ್ತೋಲೆಯಲ್ಲಿ ವಿಧಿಸಲಾಗಿದೆ. ಅರ್ಹ ವಿದ್ಯಾರ್ಥಿಗಳ ಪಾದರಕ್ಷೆಗಳ ಅಳತೆ ದಾಖಲಿಸಿ, ಉತ್ತಮ ಗುಣಮಟ್ಟದ ಪಾದರಕ್ಷೆಯನ್ನು ಸ್ಥಳೀಯವಾಗಿ ಖರೀದಿಸಿ ವಿತರಣೆ ಮಾಡುವ ಜವಾಬ್ದಾರಿಯನ್ನು ಶಾಲೆಯ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಗೆ ವಹಿಸಲು ಸೂಚಿಸಿದೆ.
5
+ ಒಂದು ಜೊತೆ ಕಪ್ಪು ಬಣ್ಣದ ಶೂ, ಎರಡು ಜೊತೆ ಬಿಳಿ ಬಣ್ಣದ ಸಾಕ್ಸ್ ಗಳನ್ನು ಖರೀದಿಸಿ, ವಿತರಿಸುವುದು, ಸ್ಥಳೀಯ ವಾತಾವರಣಕ್ಕನುಗುಣವಾಗಿ ಪಾದರಕ್ಷೆಗಳನ್ನು ಖರೀದಿಸಿ ವಿತರಿಸುವಂತೆ ನಿರ್ದೇಶನ ನೀಡಲಾಗಿದೆ.
6
+ ಶೂ ಮತ್ತು ಸಾಕ್ಸ್ ಖರೀದಿಗೆ ಎಸ್‌‍ಡಿಎಂಸಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸುವುದು, ಸಂಬಂಧಿಸಿದ ಶಾಲೆಯ ಮುಖ್ಯೋಪಾಧ್ಯಾಯರು ಸದಸ್ಯ ಕಾರ್ಯದರ್ಶಿಯಾಗಿದ್ದು, ಎಸ್‌‍ಡಿಎಂಸಿ ನಾಮನಿರ್ದೇಶಿತ 3 ಸದಸ್ಯರು ಸಮಿತಿಯ ಸದಸ್ಯರಾಗಿರಬೇಕೆಂದು ನಿರ್ದೇಶಿಸಲಾಗಿದೆ.
7
+ ಪಾರದರ್ಶಕ ಅಧಿನಿಯಮದ ಪ್ರಕಾರ, ಖರೀದಿ ಪ್ರಕ್ರಿಯೆ ಕೈಗೊಳ್ಳಬೇಕು. ಪ್ರತಿಯೊಂದು ತಾಲೂಕಿನಲ್ಲಿ ಶೇ.5 ರಷ್ಟು ಶಾಲೆಗಳಲ್ಲಿನ ಶೂ ಮತ್ತು ಸಾಕ್ಸ್ ಗಳ ಗುಣಮಟ್ಟ ಪರಿಶೀಲನೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಒಂದು ಸಮಿತಿ ರಚಿಸಲು ಕ್ರಮ ಕೈಗೊಳ್ಳಬೇಕು. ಪ್ರತಿಷ್ಠಿತ ಬ್ರಾಂಡ್‌ಗಳ ಅಧಿಕೃತ ಮಾರಾಟಗಾರರಿಂದ ಶೂ ಮತ್ತು ಸಾಕ್ಸ್ ಗಳನ್ನು ಖರೀದಿಸಬೇಕೆಂಬ ಷರತ್ತು ವಿಧಿಸಲಾಗಿದೆ.
8
+ ಯಾವುದೇ ಕಾರಣಕ್ಕೂ ಶೂ ಮತ್ತು ಸಾಕ್ಸ್ ಗಳನ್ನು ವಲಯ, ಕ್ಲಸ್ಟರ್‌ ಅಥವಾ ಜಿಲ್ಲಾ ಮಟ್ಟದಲ್ಲಿ ಕೇಂದ್ರೀಕೃತ ವ್ಯವಸ್ಥೆಯಡಿ ಖರೀದಿಸುವುದನ್ನು ನಿಷೇಧಿಸಲಾಗಿದೆ.ಒಂದರಿಂದ ಐದನೇ ತರಗತಿಗಳ ವಿದ್ಯಾರ್ಥಿಗಳಿಗೆ ತಲಾ 265 ರೂ., ಆರರಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 295 ರೂ. ಹಾಗೂ ಒಂಭತ್ತರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ 325 ರೂ. ನಂತೆ ಖರೀದಿಸಲು ದರ ನಿಗದಿಪಡಿಸಲಾಗಿದೆ.
9
+ ಅಲ್ಲದೆ, ದಾನಿಗಳು, ಖಾಸಗಿ ಸಂಸ್ಥೆಗಳು ಈ ಉದ್ದೇಶಕ್ಕೆ ಹೆಚ್ಚುವರಿ ಹಣ ನೀಡಲು ಮುಂದೆ ಬಂದರೆ ಅದನ್ನೂ ಬಳಸಿಕೊಂಡು ಉತ್ತಮ ಗುಣಮಟ್ಟದ ಶೂ, ಸಾಕ್ಸ್ , ಪಾದರಕ್ಷೆಗಳನ್ನು ಖರೀದಿಸಿ ವಿತರಿಸಬಹುದಾಗಿದೆ.ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಉಪ ನಿರ್ದೇಶಕರು ಈ ಕಾರ್ಯಕ್ರಮದ ಅನುಷ್ಠಾನದ ಮೇಲುಸ್ತುವಾರಿ ನೋಡಿಕೊಳ್ಳುವಂತೆ ಸೂಚಿಸಲಾಗಿದೆ.
eesanje/url_46_128_3.txt ADDED
@@ -0,0 +1,7 @@
 
 
 
 
 
 
 
 
1
+ ಜೂನ್‌ 2ರ ವೇಳೆ ರಾಜ್ಯಕ್ಕೆ ಮುಂಗಾರು ಆಗಮನ ಸಾಧ್ಯತೆ
2
+ ಬೆಂಗಳೂರು, ಮೇ 30-ಕೇರಳ ಕರಾವಳಿಯಲ್ಲಿ ನಿರಂತರ ಭಾರಿ ಮಳೆಯಾಗುತ್ತಿದ್ದರೂ ಪ್ರಸಕ್ತ ಸಾಲಿನ ನೈರುತ್ಯ ಮುಂಗಾರು ಸದ್ಯಕ್ಕೆ ಪ್ರಬಲವಾಗಿಲ್ಲ. ಮುಂಗಾರು ದುರ್ಬಲವಾಗಿರುವುದರಿಂದ ಕೇರಳ ಹಾಗೂ ಕರ್ನಾಟಕದ ಒಳನಾಡಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
3
+ ನಾಳೆ ಮುಂಗಾರು ಕೇರಳ ಪ್ರವೇಶಿಸುವ ಸಾಧ್ಯತೆಗಳಿವೆ. ನಿರೀಕ್ಷೆಯಂತೆ ಮುಂಗಾರು ಆಗಮನವಾದರೆ ಒಂದೆರಡು ದಿನಗಳಲ್ಲಿ ರಾಜ್ಯ ಪ್ರವೇಶಿಸಲಿದೆ. ಅಂದರೆ ಜೂನ್‌ 2ರ ವೇಳೆಗೆ ರಾಜ್ಯದ ಕೆಲವು ಭಾಗದಲ್ಲಿ ಮುಂಗಾರು ಆಗಮನವಾಗುವ ನಿರೀಕ್ಷೆ ಇದೆ. ಕೇರಳ ಕರಾವಳಿಗೆ ಹೊಂದಿಕೊಂಡ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ. ಮುಂಗಾರು ಆರಂಭಕ್ಕೆ ಪೂರಕವಾದ ಸನ್ನಿವೇಶಗಳು ಸೃಷ್ಟಿಯಾಗಿವೆ. ಆದರೂ ಮುಂಗಾರು ಶಕ್ತಿಯುತವಾಗಿ ಒಳನಾಡಿನತ್ತ ಮುನ್ನುಗ್ಗುವ ಲಕ್ಷಣಗಳು ಸದ್ಯಕ್ಕಿಲ್ಲ ಎಂದು ತಜ್ಞರು ಹೇಳಿದ್ದಾರೆ.
4
+ ಮುಂಗಾರು ಆಗಮನ ಯಾವ ರೀತಿ ಆಗಲಿದೆ ಎಂಬುದನ್ನು ನಾಳೆಯವರೆಗೆ ಕಾದು ನೋಡಬೇಕಿದೆ. ಆ ನಂತರ ಸ್ಪಷ್ಟ ಚಿತ್ರಣ ಗೋಚರಿಸಲಿದೆ. ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಒಳನಾಡಿನಲ್ಲಿ ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆ ಮುಂದುವರೆದಿದೆ.ಆದರೆ, ವ್ಯಾಪಕ ಪ್ರಮಾಣದ ಮಳೆಯಾಗುತ್ತಿಲ್ಲ.
5
+ ವ್ಯಾಪಕ ಪ್ರಮಾಣದಲ್ಲಿ ಎಲ್ಲೆಡೆ ಮಳೆಯಾದರೆ ಮುಂಗಾರು ಪ್ರವೇಶವಾಗಿರುವುದು ಖಾತರಿಯಾಗಲಿದೆ. ರಾಜ್ಯದ ಕರಾವಳಿಯಲ್ಲಿ ಮಳೆಯಾಗುತ್ತಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಭಾರಿ ಮಳೆಯಾಗುತ್ತಿಲ್ಲ. ಇದರಿಂದ ಮುಂಗಾರಿನ ಆರಂಭ ದುರ್ಬಲವಾಗಿದೆ. ಅದು ಪ್ರಬಲಗೊಂಡಿಲ್ಲ. ನಾಳೆಯ ವೇಳೆಗೆ ಮುಂಗಾರಿನ ಸ್ಪಷ್ಟ ಚಿತ್ರಣ ಕಂಡುಬರಲಿದೆ ಎಂದು ತಜ್ಞರು ಹೇಳಿದರು.
6
+ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದೆ. ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಸುಮಾರು ಒಂದು ವಾರ ಕಾಲ ರಾಜ್ಯದಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
7
+ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಮಳೆಯಾಗುವ ಮುನ್ಸೂಚನೆಗಳಿವೆ.
eesanje/url_46_128_4.txt ADDED
@@ -0,0 +1,5 @@
 
 
 
 
 
 
1
+ ಮೈಸೂರು : ಲಂಚ ಪಡೆದ ವೈದ್ಯನಿಗೆ 4 ವರ್ಷ ಜೈಲು
2
+ ಮೈಸೂರು, ಮೇ 30– ರೋಗಿಯ ಸಹೋದರನ ಬಳಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಲ್ಲಿನ ಕೃಷ್ಣರಾಜೇಂದ್ರ ಸರ್ಕಾರಿ ಆಸ್ಪತ್ರೆ ವೈದ್ಯರಾದ ಡಾ.ಪುಟ್ಟಸ್ವಾಮಿಗೆ ಮೈಸೂರಿನ 3ನೇ ಅಪರ ಜಿಲ್ಲಾ ಸತ್ರ ಮತ್ತು ಲೋಕಾಯುಕ್ತ ವಿಶೇಷ ನ್ಯಾಯಾಲಯ 4 ವರ್ಷ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
3
+ ಶಿವಕುಮಾರ್‌ ಎಂಬುವವರು 2017 ರಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಕೆ.ಆರ್‌.ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಅವರ ಶಸ್ತ್ರಚಿಕಿತ್ಸೆಗೆ ಮೂಳೆ ಶಸ್ತ್ರತಜ್ಞರಾದ ಡಾ.ಪುಟ್ಟಸ್ವಾಮಿ 40 ಸಾವಿರ ರೂ. ಲಂಚ ನೀಡುವಂತೆ ರೋಗಿಯ ಸಹೋದರ ಸಂಬಂಧಿ ದೇವರಾಜ್‌ ಬಳಿ ಕೇಳಿದ್ದರು. ಹಣ ನೀಡುವ ವಿಚಾರದಲ್ಲಿ ವೈದ್ಯರ ಬಳಿ ಮಾತನಾಡಿರುವುದನ್ನು ಮೊಬೈಲ್‌ನಲ್ಲಿ ಚಿತ್ರಿಸಿಕೊಳ್ಳಲಾಗಿತ್ತು.
4
+ ದೇವರಾಜ್‌ ಆರಂಭದಲ್ಲಿ 2 ಸಾವಿರ ಹಣ ನೀಡಿದ್ದರು. ಬಳಿಕ ಬಾಕಿ ಹಣ ನೀಡುವ ಮುನ್ನ ಎಸಿಪಿ ಪೊಲೀಸರಿಗೆ ದೂರು ನೀಡಿದ್ದರು. ಮತ್ತೆ 26 ಸಾವಿರ ರೂ.ಗಳನ್ನು ಡಾ.ಪುಟ್ಟಸ್ವಾಮಿಗೆ ನೀಡುತ್ತಿರುವಾಗ ಎಸಿಪಿ ಪೊಲೀಸರು ಕಾರ್ಯಾಚರಣೆ ನಡೆಸಿ ವೈದ್ಯರನ್ನು ಬಂಧಿಸಿದ್ದರು.ಎಸಿಪಿ ಇನ್‌್ಸಪೆಕ್ಟರ್‌ ಶೇಖರ್‌ ಅವರು ವೈದ್ಯರ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣ್ಣ ಪಟ್ಟಿ ಸಲ್ಲಿಸಿದ್ದರು.
5
+ ಈ ಪ್ರಕರಣದ ವಿಚಾರಣೆ ನಡೆಸಿದ 3ನೇ ಅಪರ ಜಿಲ್ಲಾ ಸತ್ರ ಮತ್ತು ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಭಾಗ್ಯ ಅವರು ವೈದ್ಯರ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 4 ವರ್ಷ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿದ್ದಾರೆ.
eesanje/url_46_128_5.txt ADDED
@@ -0,0 +1,3 @@
 
 
 
 
1
+ ಎಚ್.ಅನ್ನಪೂರ್ಣಗೆ ಪಿಎಚ್‍ಡಿ
2
+ ಬೆಂಗಳೂರು, ಮೇ 29- ಮೈಸೂರಿನ ಯುವರಾಜ ಕಾಲೇಜಿನ ಸಹ ಪ್ರಾಧ್ಯಾಪಕರು ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರೂ ಆದ ಎಚ್. ಅನ್ನಪೂರ್ಣ ಅವರು ಗಣಕ ವಿಜ್ಞಾನ ವಿಷಯದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯ ಪಿಎಚ್‍ಡಿ ಪದವಿ ಲಭಿಸಿದೆ.
3
+ “ರೈಟರ್ ಡಿಪೆಂಡೆಂಟ್ ಕ್ಯಾರೆಕ್ಟರಿಸ್ಟಿಕ್ಸ್ ಫಾರ್ ವೆರಿಫಿಕೇಷನ್ ಆ್ಯಂಡ್ ಅಪ್‍ಡೇಷನ್ ಆಫ ರೆಫರೆನ್ಸ್ ಆಫಲೈನ್ ಸಿಗ್ನೇಚರ್ಸ್ (ಗಣಕ ವಿಜ್ಞಾನ ವಿಷಯ)” ಕುರಿತು ಪ್ರಾಧ್ಯಾಪಕ ಡಾ.ಡಿ.ಎಸ್.ಗುರು ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ಪ್ರಬಂಧ ಮಂಡಿಸಿದ್ದು, ಪಿಎಚ್‍ಡಿ ಪದವಿ ಮುಂದಿನ ಘಟಿಕೋತ್ಸವದಲ್ಲಿ ಪ್ರದಾನ ಮಾಡಲಾಗುವುದು.
eesanje/url_46_128_6.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಸರ್ಕಾರಿ ಕೋಟಾದ ಎಂಬಿಬಿಎಸ್‌‍ ವಿದ್ಯಾರ್ಥಿಗಳಿಗೆ ಗ್ರಾಮೀಣ ವೈದ್ಯಕೀಯ ಸೇವೆ ಕಡ್ಡಾಯ
2
+ ಬೆಂಗಳೂರು, ಮೇ 29-ಸರ್ಕಾರಿ ಕೋಟಾದ ಅಡಿ 2022ರ ಜುಲೈ 22ರ ನಂತರ ಸರ್ಕಾರಿ ಅಥವಾ ಖಾಸಗಿ ಕಾಲೇಜುಗಳಿಗೆ ಸೇರ್ಪಡೆಯಾಗಿರುವ ಎಂಬಿಬಿಎಸ್‌‍ ವಿದ್ಯಾರ್ಥಿಗಳು ಪದವಿಯ ನಂತರ ಕಡ್ಡಾಯ ಗ್ರಾಮೀಣ ವೈದ್ಯಕೀಯ ಸೇವೆ ಮಾಡುವುದನ್ನು ಅಥವಾ ನಿಯಮಾವಳಿಗಳ ಅನ್ವಯ ತಾವು ನೀಡಿರುವ ಬಾಂಡ್‌ಗಳ ಜಾರಿಯನ್ನು ತಪ್ಪಿಸಿಕೊಳ್ಳಲಾಗದು ಎಂದು ಹೈಕೋರ್ಟ್‌ ಮಹತ್ವದ ಆದೇಶ ಮಾಡಿದೆ.
3
+ ಬೆಂಗಳೂರಿನ ಡಾ.ಶರಣ್ಯಾ ಮೋಹನ್‌ ಸೇರಿದಂತೆ ರಾಜಸ್ಥಾನ, ಹರಿಯಾಣ, ಕೇರಳ, ಗುಜರಾತ್‌, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಚೆನ್ನೈನ ವಿವಿಧ ಭಾಗಗಳ ಒಟ್ಟು 447 ವೈದ್ಯರು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಲೇವಾರಿ ಮಾಡಿದೆ.
4
+ 2012ರ ಜುಲೈ 17ರ ಅಧಿಸೂಚನೆಯಲ್ಲಿ ತಿದ್ದುಪಡಿ ನಿಯಮಗಳು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟವಾದಾಗಿನಿಂದ ಜಾರಿಗೆ ಬರಲಿವೆ ಎಂದು ಹೇಳಲಾಗಿದೆ. ನಿಯಮಗಳು ರೂಪಿಸಿದ ಹತ್ತು ವರ್ಷಗಳ ಬಳಿಕ ಅಂದರೆ 2022ರ ಜುಲೈ 22ರಂದು ಗೆಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಇದನ್ನು ನೋಡಿದರೆ ರಾಜ್ಯ ಸರ್ಕಾರವು ಹತ್ತು ವರ್ಷಗಳಿಂದ ಗಾಢನಿದ್ರೆಯಲ್ಲಿತ್ತು ಎಂದೆನಿಸುತ್ತದೆ ಎಂದು ನ್ಯಾಯಾಲಯ ಕುಟುಕಿದೆ.
5
+ ಈ ಸಂಬಂಧದ ತಿದ್ದುಪಡಿಯಾದ ನಿಯಮಗಳನ್ನು 2022ರ ಜುಲೈ 27ಕ್ಕೆ ಗೆಜೆಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಪೀಠ ಹೇಳಿದ್ದು, ಇದಕ್ಕೂ ಮುಂಚಿನ ವಿದ್ಯಾರ್ಥಿಗಳಿಗೆ ಈ ನಿಯಮ ಅನ್ವಯವಾಗದು ಎಂದು ಸ್ಪಷ್ಟಪಡಿಸಿದೆ. ಆ ಮೂಲಕ ಕೋರ್ಟ್‌ ಕಟಕಟೆ ಏರಿದ್ದ ಗೆಜೆಟ್‌ ಪ್ರಕಟಣೆಯ ಪೂರ್ವದ 447 ವಿದ್ಯಾರ್ಥಿಗಳಿಗೆ ಕಡ್ಡಾಯ ಗ್ರಾಮೀಣ ಸೇವೆಯ ನಿಯಮಾವಳಿ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದು ಅವರಿಗೆ ಪರಿಹಾರ ಕಲ್ಪಿಸಿದೆ.
6
+ ಬುಶ್ರಾ ಅಬ್ದುಲ್‌ ಅಲೀಮ್‌ ಪ್ರಕರಣವನ್ನು ಉಲ್ಲೇಖಿಸಿರುವ ಪೀಠವು ರಾಜ್ಯ ಸರ್ಕಾರಕ್ಕೆ ಶಾಸನಬದ್ಧ ಸಾಮರ್ಥ್ಯವಿಲ್ಲ. ಹೀಗಾಗಿ ನಿಯಮಗಳನ್ನು ಬದಿಗೆ ಸರಿಸಬೇಕು ಎಂಬ ಅರ್ಜಿದಾರರ ವಾದವನ್ನು ತಿರಸ್ಕರಿಸಿದೆ. 2019ರ ಕಾಯಿದೆಯಲ್ಲಿ ಸಂವಿಧಾನದ ಏಳನೇ ಷೆಡ್ಯೂಲ್‌ನ ಲಿಸ್ಟ್‌ ಐಐಐಯ ಎಂಟ್ರಿ 25ರ ಅಡಿ ಶಿಕ್ಷಣವನ್ನು ನಿಯಂತ್ರಿಸಲು ಅಡ್ಡಿ ಮಾಡುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.
7
+ ಜಗತ್ತಿನ ಯಾವುದೇ ಭಾಗದಲ್ಲಿ ಕಡ್ಡಾಯವಾಗಿ ಗ್ರಾಮೀಣ ಸೇವೆ ಮಾಡುವುದು ವೈದ್ಯಕೀಯ ವೃತ್ತಿಯಲ್ಲಿ ಹೊಸದೇನಲ್ಲ; ಹೆಸರು ಬದಲಾಗಬಹುದು ವಿಚಾರ ಒಂದೇ. ವೈದ್ಯರು ಸಮುದಾಯ/ಗ್ರಾಮೀಣ ಸೇವೆ ಮಾಡುವುದಕ್ಕೆ ಸಂಬಂಧಿಸಿದಂತೆ ವಿಶ್ವ ಆರೋಗ್ಯ ಸಂಸ್ಥೆಯು ಒಪ್ಪಂದಕ್ಕೆ ಸಹಿ ಹಾಕಿರುವ ದೇಶಗಳಿಗೆ ಹಲವು ಶಿಾರಸುಗಳನ್ನು ಮಾಡಿದೆ ಎಂದು ನ್ಯಾಯಾಲಯ ಹೇಳಿದೆ.
8
+ ವೈದ್ಯರನ್ನು ತಲುಪಲು ಸಾಧ್ಯವಾಗದ ಸ್ಥಳಗಳಲ್ಲಿ ವಾಸಿಸುವ ಆದಿವಾಸಿಗಳು, ಬಡವರಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸುವ ಉದ್ದೇಶದ��ಂದ ಗ್ರಾಮೀಣ ಸೇವೆ ಕಡ್ಡಾಯಗೊಳಿಸಲಾಗಿದೆ. ವಿದ್ಯಾರ್ಥಿಗಳು ಸಾರ್ವಜನಿಕ ಆರೋಗ್ಯ ಯೋಜನೆಯ ಭಾಗವಾಗಬೇಕು. ವೈದ್ಯಕೀಯ ಪದವೀಧರರು ಸ್ವಯಂಪ್ರೇರಿತವಾಗಿ ಗ್ರಾಮೀಣ ಪ್ರದೇಶದಲ್ಲಿ ಸೇವೆ ನೀಡಲು ತಮನ್ನು ತೊಡಗಿಸಿಕೊಳ್ಳುತ್ತಾರೆ ಎಂಬ ಕನಸು ಒಂದು ದಿನ ಸಾಕಾರವಾಗಬಹುದು. ಈ ಕನಸು ಆದಷ್ಟು ಬೇಗ ಸಾಕಾರಗೊಳ್ಳುವ ಮೂಲಕ ಸಮಸಮಾಜ ನಿರ್ಮಾಣವಾಗಬೇಕು ಎಂದು ನ್ಯಾಯಾಲಯ ಹೇಳಿದೆ.
9
+ 2015ರಲ್ಲಿ ಅರ್ಜಿದಾರರು ಸರ್ಕಾರಿ ಕೋಟಾದಡಿ ಖಾಸಗಿ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್‌‍ ಕೋರ್ಸ್‌ಗೆ ಪ್ರವೇಶ ಪಡೆದಿದ್ದರು. ಈ ಮಧ್ಯೆ, ಭಾರತೀಯ ವೈದ್ಯಕೀಯ ಕೌನ್ಸಿಲ್‌ ಕಾಯಿದೆ 1956 ಅನ್ನು ಹಿಂಪಡೆಯಲಾಗಿದ್ದು, ರಾಷ್ಟ್ರೀಯ ವೈದ್ಯಕೀಯ ಆಯೋಗ ಕಾಯಿದೆ 2019 ಅನ್ನು ಜಾರಿಗೆ ತರಲಾಗಿತ್ತು. ಹೀಗಾಗಿ, ಅರ್ಜಿದಾರರು ರಾಜ್ಯ ಸರ್ಕಾರಕ್ಕೆ ನಿಯಮ 11 ಅನ್ನು ಅಧಿಸೂಚನೆ ಮಾಡುವ ಶಾಸನಬದ್ಧ ಸಾಮರ್ಥ್ಯ ಇಲ್ಲ. ಇದು ಕೇಂದ್ರದ ರಾಷ್ಟ್ರೀಯ ವೈದ್ಯಕೀಯ ಆಯೋಗ ಕಾಯಿದೆಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಿದ್ದರು. ಅಲ್ಲದೇ, ಪದವಿ ಮುಗಿದ ತಕ್ಷಣ ಸ್ನಾತಕೋತ್ತರ ನೀಟ್‌ ಪರೀಕ್ಷೆ ಬರೆಯಲು ರಾಜ್ಯ ಸರ್ಕಾರದ ನಿರ್ಧಾರವು ಕರ್ನಾಟಕದ ವಿದ್ಯಾರ್ಥಿಗಳಿಗೆ ಅವಕಾಶ ಸೀಮಿತಗೊಳಿಸಲಿದೆ ಎಂದು ಆಕ್ಷೇಪಿಸಿದ್ದರು.
10
+ ಕರ್ನಾಟಕ ಶೈಕ್ಷಣಿಕ ಸಂಸ್ಥೆಗಳ (ಕ್ಯಾಪಿಟೇಷನ್‌ ಶುಲ್ಕ ನಿಷೇಧ) ಕಾಯಿದೆಯ ಸೆಕ್ಷನ್‌ 14ರ ಅಡಿ ರಾಜ್ಯ ಸರ್ಕಾರಕ್ಕೆ ನಿಯಮ ರೂಪಿಸುವ ಅಧಿಕಾರವಿದೆ. ಹೀಗಾಗಿ, ಕರ್ನಾಟಕ ವೃತ್ತಿಪರ ಶೈಕ್ಷಣಿಕ ಸಂಸ್ಥೆಗಳಿಗೆ ಸರ್ಕಾರಿ ಸೀಟುಗಳ ಅಡಿ ಅಭ್ಯರ್ಥಿಗಳ ಪ್ರವೇಶಕ್ಕೆ ಆಯ್ಕೆ ನಿಯಮ 2006ರ ನಿಯಮ 11ಕ್ಕೆ 2012ರ ಜುಲೈ 17ರಂದು ತಿದ್ದುಪಡಿ ಮಾಡಲಾಗಿದೆ. ಬಾಂಡ್‌ ಪ್ರಕಾರ ಕೋರ್ಸ್‌ ಪೂರ್ಣಗೊಂಡ ಬಳಿಕ ಒಂದು ವರ್ಷದ ಅವಧಿಗೆ ರಾಜ್ಯದ ಯಾವುದಾದರೂ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ಸರ್ಕಾರಿ ಪ್ರಾಥಮಿಕ ಆರೋಗ್ಯ ಘಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು. ಇದನ್ನು ಮಾಡಲು ವಿಲವಾದಲ್ಲಿ ಅಂಥ ವಿದ್ಯಾರ್ಥಿಗಳು 15-30 ಲಕ್ಷ ರೂಪಾಯಿ ದಂಡವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಹೇಳಲಾಗಿದೆ.
eesanje/url_46_128_7.txt ADDED
@@ -0,0 +1,5 @@
 
 
 
 
 
 
1
+ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ
2
+ ಬೆಂಗಳೂರು ಮೇ.29.ಅತ್ಯಾಚಾರ ಅರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾದ ಸಂಸದ ಪ್ರಜ್ವಲ್ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದು ತೀವ್ರ ಕುತೂಹಲ ಮೂಡಿಸಿದೆ.
3
+ ಕಳೆದ 31 ದಿನಗಳಿಂದ ನಾಪತ್ತೆಯಾಗಿದ್ದ ಸಂಸದ ಪ್ರಜ್ವಲ್ ಅವರು ಮೊನ್ನೆ ಅಷ್ಟೇ ವಿಡಿಯೋ ಬಿಡುಗಡೆ ಮಾಡಿ ಮೇ 31ರಂದು ಎಸ್ಐಟಿ ಎದುರು ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದರು ಈ ಬೆನ್ನಲ್ಲೇ ಇಂದು ಪ್ರಜ್ವಲ್ ಪರವಕೀಲರು ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿರುವುದು ತೀವ್ರ ಕುತೂಹಲ ಮೂಡಿಸಿದೆ.
4
+ ಅರ್ಜಿಯನ್ನು ಇಂದೆ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ವಕೀಲರು ಮಾಡಿದ ಮನವಿಯನ್ನು ನ್ಯಾಯಾಧೀಶರು ಪುರಸ್ಕರಿಸಲಿಲ್ಲ ಮೇ 31ಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸುವುದಾಗಿ ನ್ಯಾಯಾಧೀಶರು ಹೇಳಿದರು ಹೀಗಾಗಿ ಪ್ರಜ್ವಲ್ ಅವರ ಜಾಮೀನು ಅರ್ಜಿ ವಿಚಾರಣೆ ಮೇ 31ಕ್ಕೆ ನಿಗದಿಯಾಗಿದೆ ಪ್ರಜ್ವಲ್ ಅವರು ವಿದೇಶದಿಂದ ಹಿಂದಿರುಗಲು ವಿಮಾನದ ಟಿಕೆಟ್ ಬುಕ್ ಆಗಿದೆ ಅವರನ್ನು ಬಂಧಿಸಲು ಎಸ್ಐಟಿ ಎಲ್ಲಾ ತಯಾರಿ ನಡೆಸಿದೆ.
5
+ ತಮ್ಮ ಮೇಲಿನ ಮೂರು ಪ್ರಕರಣಗಳಲ್ಲಿ ನಿರೀಕ್ಷಣ ಜಾಮೀನು ನೀಡಬೇಕೆಂದು ಕೋರಿ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ
eesanje/url_46_128_8.txt ADDED
@@ -0,0 +1,5 @@
 
 
 
 
 
 
1
+ ಮೇ.31ಕ್ಕೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪು
2
+ ಬೆಂಗಳೂರು. ಮೇ.29.ಮೈಸೂರು ಜಿಲ್ಲೆ ಕೆ ಆರ್ ನಗರ ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ನಿರೀಕ್ಷಣ ಜಾಮೀನು ಕೋರಿ ಭವಾನಿ ರೇವಣ್ಣ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪನ್ನ ಮೇ 31ಕ್ಕೆ ಕಾಯ್ದಿರಿಸಿದೆಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ಟ ಅವರು ವಾದವನ್ನು ಆಲಿಸಿ ತೀರ್ಪನ್ನ ಮೇ 31ಕ್ಕೆ ಕಾಯ್ದಿರಿಸಿದರು.
3
+ ಈ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಇವರಿಗೆ ನೋಟಿಸ್ ನೀಡಿಯೇ ಇಲ್ಲ ಆದರೂ ಅವರು ಡಿಐಜಿಗೆ ಪತ್ರ ಬರೆದು ವಿಚಾರಣೆಗೆ ಸಹಕರಿಸುವುದಾಗಿ ತಿಳಿಸಿದ್ದಾರೆ ಅಲ್ಲದೆ ಪ್ರಕರಣದ ಆರೋಪಿಗಳೊಂದಿಗೆ ಸಂಭಾಷಣೆ ನಡೆಸಿರುವ ಬಗ್ಗೆ ಆಡಿಯೋ ದಾಖಲೆಗಳಿವೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
4
+ ಸಂತ್ರಸ್ತ ಮಹಿಳೆಯನ್ನು ಹೆದರಿಸುವ ಸಂಬಂಧ ಆರೋಪಿಗಳೊಂದಿಗೆ ಚರ್ಚೆ ನಡೆಸಿರುವ ಬಗ್ಗೆ ದಾಖಲೆಗಳಿವೆ ಇವರಿಗೆ ಯಾವುದೇ ಕಾರಣಕ್ಕೂ ನಿರೀಕ್ಷಣಾ ಜಾಮೀನು ನೀಡಬಾರದು ಎಸ್ಐಟಿ ವಶದಲ್ಲಿ ಇಟ್ಟು ವಿಚಾರಣೆ ನಡೆಸಲು ಅವಕಾಶ ನೀಡಬೇಕೆಂದು ಸರ್ಕಾರಿ ಪರವಕೀಲರಾದ ಜಗದೀಶ್ ಅವರು ಮನವಿ ಮಾಡಿದರು.
5
+ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಭವಾನಿ ರೇವಣ್ಣ ಅವರ ಪರ ವಕೀಲರು ಇಷ್ಟು ದಿನಗಳಾದರೂ ಎಸ್ಐಟಿಯವರು ಯಾವುದೇ ನೋಟಿಸ್ ನೀಡಿಲ್ಲ ನಿರೀಕ್ಷಣಾ ಜಾಮಿನಿಗೆ ಅರ್ಜಿ ಸಲ್ಲಿಸಿದ ಮೇಲೆ ಈ ರೀತಿ ಆಕ್ಷೇಪಗಳನ್ನ ಮಾಡುತ್ತಿದ್ದಾರೆ ಆರೋಪಿಗಳೊಂದಿಗೆ ನಡೆಸಿದ್ದಾರೆ ಎನ್ನಲಾದ ಸಂಭಾಷಣೆಗಳು ಸತ್ಯಕ್ಕೆ ದೂರವಾದ ವಿಷಯ ನಮ್ಮ ಕಕ್ಷಿದಾರರಿಗೆ ಜಾಮೀನು ನೀಡಬೇಕೆಂದು ಮನವಿ ಮಾಡಿದರು ಎರಡು ಕಡೆಯ ವಾದಗಳನ್ನ ಆಲಿಸಿದ ನ್ಯಾಯಾಧೀಶರು ತೀರ್ಪನ್ನ ಮೇ 31ಕ್ಕೆ ಕಾಯ್ದಿರಿಸಿದರು.
eesanje/url_46_128_9.txt ADDED
@@ -0,0 +1,8 @@
 
 
 
 
 
 
 
 
 
1
+ ಜೂನ್‌ನಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ
2
+ ಬೆಂಗಳೂರು, ಮೇ 29-ಪ್ರಸಕ್ತ ಸಾಲಿನ ನೈರುತ್ಯ ಮುಂಗಾರು ನಿರೀಕ್ಷೆಯಂತೆ ಸಕಾಲಕ್ಕೆ ಅರಂಭವಾಗಲಿದ್ದು, ಜೂನ್‌ತಿಂಗಳಿನಲ್ಲಿ ವಾಡಿಕೆಗಿಂತಲೂ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ.
3
+ ಕಳೆದ ಮೂರು, ನಾಲ್ಕು ದಿನಗಳಿಂದ ರಾಜ್ಯದಲ್ಲಿ ಒಣಹವೆ ಮುಂದುವರೆದಿದೆ. ಕರಾವಳಿ ಹೊರತುಪಡಿಸಿ ಉಳಿದೆಡೆ ಮಳೆಯಾಗುತ್ತಿಲ್ಲ. ನಿರೀಕ್ಷೆಯಂತೆ ಮಳೆ ಬಿಡುವುಕೊಟ್ಟಿದ್ದು, ಜೂನ್‌ ಮೊದಲ ವಾರದಲ್ಲಿ ಮತ್ತೆ ಮಳೆ ಆರಂಭಗೊಳ್ಳಲಿದೆ.
4
+ ಭಾರತೀಯ ಹವಾಮಾನ ಇಲಾಖೆ ಈಗಾಗಲೇ ನೀಡಿರುವ ಮುನ್ಸೂಚನೆಯಂತೆ ಮೇ 31ರವೇಳೆಗೆ ಮುಂಗಾರು ಮಳೆ ಕೇರಳಕ್ಕೆ ಪ್ರವೇಶಿಸಲಿದೆ. ಮುಂಗಾರು ಪ್ರಾರಂಭಕ್ಕೆ ಪೂರಕವಾದ ವಾತಾವರಣ ಸೃಷ್ಟಿಯಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ರೆಮೆಲ್‌ ಚಂಡಮಾರುತದಿಂದ ಮುಂಗಾರಿನ ಮೇಲೆ ಪ್ರತಿಕೂಲ ಪರಿಣಾಮವಾಗಿಲ್ಲ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
5
+ ಕೇರಳದ ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ನಾಳೆಯಿಂದ ಮಳೆ ಪ್ರಮಾಣ ಹೆಚ್ಚಾಗಲಿದ್ದು, ಶುಕ್ರವಾರ ಮುಂಗಾರಿನ ಆಗಮನವಾಗಲಿದೆ. ಅದಕ್ಕೆ ಅಡ್ಡಿಯಾಗುವಂತಹ ಸನ್ನಿವೇಶಗಳು ಈತನಕ ಕಂಡುಬಂದಿಲ್ಲ ಎಂದು ಹೇಳಿದ್ದಾರೆ.
6
+ ನೈರುತ್ಯ ಮುಂಗಾರು ಕೇರಳ ಪ್ರವೇಶಿಸಿದ ಬಳಿಕ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿಗೆ ವ್ಯಾಪಿಸಲಿದೆ. ಚಾಮರಾಜನಗರದ ಮೂಲಕ ರಾಜ್ಯಕ್ಕೆ ಮುಂಗಾರು ಆಗಮನವಾಗಲಿದೆ. ಜೂನ್‌ ಐದರವೇಳೆಗೆ ದಕ್ಷಿಣ ಕರ್ನಾಟಕವನ್ನು ಮುಂಗಾರು ಆವರಿಸಲಿದ್ದು, ಜೂನ್‌ 10ರ ವೇಳೆಗೆ ರಾಜ್ಯಾದ್ಯಂತ ವ್ಯಾಪಿಸಲಿದ್ದು, ವ್ಯಾಪಕ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ತಿಳಿಸಿದ್ದಾರೆ.
7
+ ಮುಂಗಾರು, ಹಿಂಗಾರು, ಬೇಸಿಗೆ ಮಳೆ ಕೊರತೆಯಿಂದ ತೀವ್ರ ಬರಗಾಲ ಆವರಿಸಿದ್ದ ರಾಜ್ಯದಲ್ಲಿ ಮೇನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಪೂರ್ವ ಮುಂಗಾರು ಮಳೆಯಾದ್ದರಿಂದ ಕೃಷಿ ಚಟುವಟಿಕೆಗಳು ಆರಂಭಗೊಂಡಿದ್ದರೆ, ಜಾನುವಾರುಗಳಿಗೆ ಸಾಕಷ್ಟು ಮೇವು ದೊರೆತು ರೈತರು ನಿಟ್ಟುಸಿರು ಬಿಟ್ಟಿದ್ದಾರೆ.
8
+ ಈ ಬಾರಿಯ ಮುಂಗಾರು ಕಳೆದ ಬಾರಿಯಂತೆ ಕೈಕೊಡದೆ, ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ. ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ನಾಳೆಯ ನಂತರ ಮತ್ತೆ ಮಳೆ ಆರಂಭಗೊಳ್ಳುವ ಸಾಧ್ಯತೆಗಳಿವೆ. ವಾರಾಂತ್ಯಕ್ಕೆ ಮತ್ತೊಂದು ಸುತ್ತಿನ ಮಳೆ ಪ್ರಾರಂಭವಾಗಲಿದೆ.
eesanje/url_46_129_1.txt ADDED
@@ -0,0 +1,9 @@
 
 
 
 
 
 
 
 
 
 
1
+ ಮಹಿಳೆಯರು ಉಚಿತ ಬಸ್‌‍ ಪ್ರಯಾಣದ ಶಕ್ತಿ ಯೋಜನೆಯಿಂದ ಜಿಎಸ್‌‍ಟಿ ಹೆಚ್ಚಳ
2
+ ಬೆಂಗಳೂರು, ಮೇ 29-ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯಾದ್ಯಂತ ಸರ್ಕಾರಿ ಬಸ್‌‍ಗಳಲ್ಲಿ ಉಚಿತವಾಗಿ ಮಹಿಳೆಯರು ಪ್ರಯಾಣಿಸುವ ಶಕ್ತಿ ಯೋಜನೆ ಸರಕು ಸೇವಾ ತೆರಿಗೆ (ಜಿಎಸ್‌‍ಟಿ)ಯನ್ನು ಹೆಚ್ಚಿಸಿದೆ.
3
+ 2023 ರ ಮೇ ತಿಂಗಳಿನಲ್ಲಿ ಜಾರಿಗೆ ಬಂದಿದ್ದ ಶಕ್ತಿ ಯೋಜನೆಗೆ ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಸದುಪಯೋಗಪಡಿಸಿಕೊಳ್ಳುತ್ತಿರುವ ಕಾರಣ ಜಿಎಸ್‌‍ಟಿಯು ಏರಿಕೆಯಾಗಿರುವುದು ಸರ್ಕಾರದ ಹಣಕಾಸು ನೀತಿ ಸಂಸ್ಥೆ ನಡೆಸಿರುವ ಅಧ್ಯಯನದಿಂದ ಬಹಿರಂಗವಾಗಿದೆ. ವಿಶೇಷವಾಗಿ ಮಹಿಳಾ ಕಾರ್ಮಿಕರು ಈ ಯೋಜನೆಯ ಹೆಚ್ಚಿನ ಫಲಾನುಭವಿಗಳಾಗಿರುವುದರಿಂದ ಅವರ ಭಾಗವಹಿಸುವಿಕೆ ಜಿಎಸ್‌‍ಟಿ ಸಂಗ್ರಹವನ್ನು ಹೆಚ್ಚಿಸಿದೆ ಎಂದು ಎಪ್‌ಪಿಐ ನಡೆಸಿರುವ ಅಧ್ಯಯನದಲ್ಲಿ ಬಹಿರಂಗವಾಗಿದೆ.
4
+ ರಾಜ್ಯ ಹಣಕಾಸು ನೀತಿ ಸಂಸ್ಥೆ (ಎಫ್‌ಪಿಐ) ನಡೆಸಿದ ಅಧ್ಯಯನದ ಪ್ರಕಾರ, ಕಳೆದ ವರ್ಷ, ಶಕ್ತಿ ಯೋಜನೆಯನ್ನು ಪ್ರಾರಂಭಿಸಿದಾಗ, ಈ ವರ್ಷದ ಮಾರ್ಚ್‌ವರೆಗೆ, ಜಿಎಸ್‌‍ಟಿ ಸಂಗ್ರಹವು 309.64 ಕೋಟಿ ರೂಪಾಯಿಗಳಷ್ಟು ಹೆಚ್ಚಾಗಿದೆ.ಏಕೆಂದರೆ ಮಹಿಳೆಯರಿಗೆ ಬಸ್‌‍ ಪ್ರಯಾಣ ಉಚಿತವಾಗಿರುವದರಿಂದ ಉಳಿತಾಯ ಯೋಜನೆ ಯಥೇಚ್ಛವಾಗಿ ಹೆಚ್ಚಾಗುತ್ತಿದ್ದು, ಇದು ಸರ್ಕಾರದ ಬೊಕ್ಕಸಕ್ಕೂ ಪರೋಕ್ಷವಾಗಿ ಆದಾಯವನ್ನು ಹೆಚ್ಚಿಸಿದೆ.
5
+ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌‍ ಸರ್ಕಾರದ ಪ್ರಮುಖ ಖಾತರಿ ಯೋಜನೆಯಾದ ಶಕ್ತಿಯ ಆರ್ಥಿಕ ಪರಿಣಾಮವನ್ನು ಅಳೆಯುವ ಮೊದಲ ಅಧ್ಯಯನ ಇದಾಗಿದೆ.ಪ್ರಯಾಣದಲ್ಲಿ ಉಳಿಸಿದ ಮೊತ್ತವು ಪ್ರಯಾಣಿಕರಿಗೆ ಆದಾಯವನ್ನು ಹೆಚ್ಚಿಸುತ್ತದೆ ಮತ್ತು ಅವರು ಇತರ ಅಗತ್ಯ ವಸ್ತುಗಳ ಬಳಕೆಗೆ ಸಂಪೂರ್ಣ ಮೊತ್ತವನ್ನು ಖರ್ಚು ಮಾಡುತ್ತಾರೆ ಎಂದು ಎಫ್‌ಪಿಐ ಸಂಶೋಧನಾ ಅಧ್ಯಯನದಲ್ಲಿ ತಿಳಿದುಬಂದಿದೆ.
6
+ ಇಂತಹ ಹೆಚ್ಚುವರಿ ಖರ್ಚು ಸರ್ಕಾರದಿಂದ ತೆರಿಗೆ ಸಂಗ್ರಹವನ್ನು ಹೆಚ್ಚಿಸುತ್ತದೆ. ವಿವಿಧ ಸರಕುಗಳ ಮೇಲಿನ ಮಾಸಿಕ ತಲಾ ವೆಚ್ಚದ ಅಂಕಿ-ಅಂಶಗಳು, ದರಗಳು ಮತ್ತು ಯೋಜನೆಯ ಒಟ್ಟು ಟಿಕೆಟ್‌ ಮೌಲ್ಯವನ್ನು ಬಳಸಿಕೊಂಡು ಶಕ್ತಿ ಯೋಜನೆಯಿಂದ 2024-25ರಲ್ಲಿ ಶಕ್ತಿಯು 371.57 ಕೋಟಿ ರೂಪಾಯಿಗಳ ಜಿಎಸ್ಟಿ ಆದಾಯವನ್ನು ಗಳಿಸಬಹುದು ಎಂದು ಅಧ್ಯಯನವು ಯೋಜಿಸಿದೆ ಎಂದು ಲೆಕ್ಕ ಹಾಕಿದೆ.
7
+ ಜಸ್ಟ್‌ಜಾಯ್‌್ಸ ನೆಟ್ವರ್ಕ್‌ ಫಿಸ್ಕಲ್‌ ಪಾಲಿಸಿ ಇನ್ಸ್ಟಿಟ್ಯೂಟ್‌ ಸಹಯೋಗದೊಂದಿಗೆ ನಡೆಸಿದ ಮತ್ತೊಂದು ಅಧ್ಯಯನದಲ್ಲಿ, ಶಕ್ತಿ ಯೋಜನೆಯಡಿಯಲ್ಲಿ ಪ್ರಯಾಣ ದರ ರಹಿತ ಪ್ರಯಾಣದ ಸರಾಸರಿ ಉಳಿತಾಯವನ್ನು ಬೆಂಗಳೂರಿನಲ್ಲಿ ರೂ.1,326, ಹಾವೇರಿಯಲ್ಲಿ ರೂ.1,015, ಚಾಮರಾಜನಗರದಲ್ಲಿ ರೂ.779, ರೂ.784 ಎಂದು ತೋರಿಸಲಾಗಿದೆ.
8
+ ಯಾದಗಿರಿ ಹಾಗೂ ಉಡುಪಿಯಲ್ಲಿ 681 ರೂ.ಎಫ್‌ಪಿಐ ಅಧ್ಯಯನದ ಪ್ರಕಾರ, ಶಕ್ತಿ ಯೋಜನೆಯು ಹೆಚ್ಚಿನ ಮಹಿಳೆಯರು ಉದ್ಯೋಗ ಚಟುವಟಿಕ��ಗಳಲ್ಲಿ ಪಾಲ್ಗೊಳ್ಳಲು ಕೊಡುಗೆ ಯನ್ನು ನೀಡುತ್ತದೆ.ಶಕ್ತಿ ಯೋಜನೆಯ ಅನುಷ್ಠಾನದ ಮೊದಲು ಮತ್ತು ನಂತರ ಮಹಿಳಾ ಕಾರ್ಮಿಕ ಭಾಗವಹಿಸುವಿಕೆ ದರ ಮತ್ತು ಕಾರ್ಮಿಕರ ಜನಸಂಖ್ಯೆಯ ದರ ತ್ರೈಮಾಸಿಕ ಹೋಲಿಕೆಯನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ.
9
+ ಅಕ್ಟೋಬರ್‌-ಡಿಸೆಂಬರ್‌ 2022 ರಲ್ಲಿ, ಶೇ. 25.1 ಆಗಿತ್ತು, ಇದು 2023 ರ ಅದೇ ಅವಧಿಯಲ್ಲಿ ಶೇ. 30.2 ಕ್ಕೆ ಏರಿಕೆ ಆಗಿತ್ತು. ಅಕ್ಟೋಬರ್‌-ಡಿಸೆಂಬರ್‌ 2022 ರಲ್ಲಿ ಶೇ. 23.7 ಆಗಿತ್ತು, ಇದು 2023 ರಲ್ಲಿ ಶೇ. 28.8 ಕ್ಕೆ ಏರಿದೆ ಎಂದು ಅಧ್ಯಯನವು ಹೇಳಿದೆ.ಸುರಕ್ಷಿತ ಮತ್ತು ಕೈಗೆಟುಕುವ ಸಾರಿಗೆ ವಿಧಾನಗಳು ಕಾರ್ಮಿಕ ಬಲದಲ್ಲಿ ಮಹಿಳಾ ಭಾಗವಹಿಸುವಿಕೆಯನ್ನು ಹೆಚ್ಚಿಸುವುದಲ್ಲದೆ, ರಾಷ್ಟ್ರದ ಆರ್ಥಿಕತೆಗೆ ಸಕ್ರಿಯವಾಗಿ ಕೊಡುಗೆ ನೀಡುವ ಅವಕಾಶವನ್ನು ಒದಗಿಸುತ್ತವೆ ಎಂದು ಅಧ್ಯಯನವು ಹೇಳುತ್ತದೆ.
eesanje/url_46_129_10.txt ADDED
@@ -0,0 +1,4 @@
 
 
 
 
 
1
+ ಪೆನ್‌ಡ್ರೈವ್‌ ಹಾಗೂ ಅತ್ಯಾಚಾರ ಪ್ರಕರಣ : ಹಾಸನ- ಹೊಳೆನರಸೀಪುರಕ್ಕೆ ಎಸ್‌‍ಐಟಿ ತಂಡ
2
+ ಹಾಸನ, ಮೇ 29-ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ ಹಾಗೂ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಎಸ್‌‍ಐಟಿ ತಂಡ ಮತ್ತೊಮೆ ಹಾಸನ ಹಾಗೂ ಹೊಳೆನರಸೀಪುರಕ್ಕೆ ಭೇಟಿ ನೀಡಿ ಮುಂಜಾನೆಯವರೆಗೂ ಪರಿಶೀಲನೆ ನಡೆಸಿದೆ.ಹಾಸನ ನಗರದ ಸಂಸದರ ನಿವಾಸ ಹಾಗೂ ಹೊಳೆನರಸೀಪುರದ ಎಚ್‌.ಡಿ.ರೇವಣ್ಣ ಅವರ ನಿವಾಸಕ್ಕೆ ಎಸ್‌‍ಐಟಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
3
+ ಈ ಹಿಂದೆ ಕೂಡ ಸ್ಥಳ ಮಹಜರು ನಡೆಸಿದ ಎಸ್‌‍ಐಟಿ ಅಧಿಕಾರಿಗಳು ಎಸಿಪಿ ಸತ್ಯನಾರಾಯಣ ನೇತೃತ್ವದಲ್ಲಿ ಎರಡೂ ನಿವಾಸಗಳಲ್ಲೂ ಮತ್ತೆ ಪರಿಶೀಲನೆ ನಡೆಸಿದ್ದಾರೆ.ಕೆಲದಿನಗಳ ಹಿಂದೆ ಹೊಳೆನರಸೀಪುರದ ರೇವಣ್ಣ ಅವರ ನಿವಾಸ ಮತ್ತು ಹಾಸನದ ಸಂಸದರ ನಿವಾಸದಲ್ಲಿ ರಾತ್ರಿಯೆಲ್ಲಾ ಎಸ್‌‍ಐಟಿ ತಂಡ ಪರಿಶೀಲನೆ ನಡೆಸಿತ್ತು. ಈ ವೇಳೆ ಮನೆಯಲ್ಲಿದ್ದ ಹಾಸಿಗೆ, ದಿಂಬು ಸೇರಿದಂತೆ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು.
4
+ ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ ವಾಪಸ್‌‍ ಬರುತ್ತೇನೆಂದು ವಿಡಿಯೋ ಹರಿಬಿಟ್ಟ ಹಿನ್ನೆಲೆಯಲ್ಲಿ ಮತ್ತೆ ಎಸ್‌‍ಐಟಿ ತಂಡ ಹಾಸನದಲ್ಲಿ ಸಾಕ್ಷ್ಯ ಸಂಗ್ರಹಗಳನ್ನು ತೀವ್ರಗೊಳಿಸಿದೆ.ನಿನ್ನೆ ಮಧ್ಯಾಹ್ನ ಹಾಸನಕ್ಕೆ ಭೇಟಿ ನೀಡಿದ ಎಸ್‌‍ಐಟಿ ಹಾಗೂ ಎಫ್‌ಎಸ್‌‍ಎಲ್‌ ತಂಡ ಪರಿಶೀಲನೆ ನಡೆಸಿ, ಸಾಕ್ಷಿ ಸಂಗ್ರಹಿಸಿ ಇಂದು ಬೆಳಗಿನ ಜಾವ 4 ಗಂಟೆವರೆಗೆ ತಪಾಸಣೆ ನಡೆಸಿದೆ. ಸತತ 10 ಗಂಟೆಗಳ ತನಕ ತಪಾಸಣೆ ನಡೆಸಿದೆ.
eesanje/url_46_129_11.txt ADDED
@@ -0,0 +1,6 @@
 
 
 
 
 
 
 
1
+ ಕಳೆಯಿತು ಬೇಸಿಗೆ, ಹೋಗೋಣ ಸ್ಕೂಲಿಗೆ : ಒಲ್ಲದ ಮನಸ್ಸಿನಿಂಲೇ ಶಾಲೆಯತ್ತ ಹೆಜ್ಜೆಹಾಕಿದ ಮಕ್ಕಳು
2
+ ಬೆಂಗಳೂರು, ಮೇ 29-ಕಳೆಯಿತು ಬೇಸಿಗೆ ರಜೆ, ನಡೆಯಿರಿ ಶಾಲೆಯೆಡೆಗೆ ಎಂದು ಮಕ್ಕಳು ಇಂದು ಒಲ್ಲದ ಮನಸ್ಸಿನಿಂದ ಶಾಲೆಗೆ ತೆರಳಿದರು. ಕಳೆದ ಎರಡು ತಿಂಗಳಿಂದ ಶಾಲೆಗಳಿಗೆ ರಜೆ ಇದ್ದು, ಮಕ್ಕಳು ಖುಷಿಖುಷಿಯಿಂದ ಆಟ, ಊರುಗಳಲ್ಲಿ ಕಾಲ ಕಳೆದಿದ್ದು, ಇಂದಿನಿಂದ ಅದೇ ಪಾಠ, ಓದು, ಬ್ಯಾಗ್‌ಗಳನ್ನು ಹೊತ್ತು ಶಾಲೆಗೆ ಹೋಗಬೇಕಲ್ಲ ಎಂದು ಕೆಲ ಮಕ್ಕಳು ಅತ್ತು ಸುರಿಯುತ್ತ ಶಾಲೆಗೆ ಹೋದ ದೃಶ್ಯಗಳು ಕಂಡುಬಂದವು.
3
+ ಮೊದಲ ದಿನವಾದ ಇಂದು ಪೋಷಕರು ತಮ್ಮತಮ್ಮ ಮಕ್ಕಳನ್ನು ಶಾಲೆಗಳಿಗೆ ಕರೆತಂದು ಬಿಟ್ಟರು. ಶಾಲೆಗಳನ್ನು ಸಹ ಅದ್ಧೂರಿಯಾಗಿ ಸಿಂಗರಿಸಿ ಶಿಕ್ಷಕರು ಮಕ್ಕಳಿಗೆ ಗುಲಾಬಿ ಹೂ, ಸಿಹಿ ಹಂಚಿ ಬರಮಾಡಿಕೊಂಡರು.
4
+ ಹೊಸದಾಗಿ ಶಾಲೆಗಳಿಗೆ ದಾಖಲಾಗಿರುವ ನರ್ಸರಿ, ಎಲ್‌ಕೆಜಿ, ಯುಕೆಜಿ ಪುಟಾಣಿಗಳು ಶಾಲೆಯ ಸಮವಸ್ತ್ರ ಧರಿಸಿ, ಲಂಚ್‌ ಬ್ಯಾಗ್‌ಗಳನ್ನು ಕೈಯಲ್ಲಿಡಿದು ಪುಟ್ಟಪುಟ್ಟ ಹೆಜ್ಜೆಗಳನ್ನು ಹಾಕುತ್ತಾ ಕೆಲ ಮಕ್ಕಳು ಖುಷಿಯಿಂದ ಶಾಲೆಗೆ ತೆರಳುತ್ತಿದ್ದರೆ, ಮತ್ತೆ ಕೆಲ ಮಕ್ಕಳು ಅಳುತ್ತಾ ಹೋಗುತ್ತಿದ್ದ ದೃಶ್ಯಗಳು ನಗರದಲ್ಲಿ ಕಂಡುಬಂದವು.
5
+ ರಸ್ತೆಗಿಳಿದ ಶಾಲಾ ಬಸ್‌‍ಗಳು :ಕಳೆದ ಎರಡು ತಿಂಗಳಿನಿಂದ ನಿಂತಲ್ಲೇ ನಿಂತಿದ್ದ ಶಾಲಾ ಬಸ್‌‍ಗಳು ಇಂದು ಶಾಲೆಗಳು ಪ್ರಾರಂಭವಾಗುತ್ತಿದ್ದಂತೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲು ಕಾರ್ಯಾಚರಣೆಗಿಳಿದಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಬಸ್‌‍ಗಳ ಸಂಚಾರ ಹೆಚ್ಚಿನದಾಗಿ ಕಂಡುಬಂದಿತು.
6
+ ಇನ್ನು ಗ್ರಾಮೀಣ ಪ್ರದೇಶಗಳಲ್ಲೂ ಸಹ ಮಕ್ಕಳು ಖಾಸಗಿ ಹಾಗೂ ಸರ್ಕಾರಿ ಶಾಲೆಯ ಮಕ್ಕಳು ಶಾಲೆಗೆ ತೆರಳುತ್ತಿದ್ದ ದೃಶ್ಯ ಸರ್ವೆಸಾಮಾನ್ಯವಾಗಿತ್ತು.
eesanje/url_46_129_12.txt ADDED
@@ -0,0 +1,6 @@
 
 
 
 
 
 
 
1
+ ಎಲ್ಲ ವರ್ಗಗಳಿಗೂ ಅವಕಾಶ ನೀಡಲು ಸಾಧ್ಯವಿಲ್ಲ : ಡಿಕೆಶಿ
2
+ ಬೆಂಗಳೂರು, ಮೇ 28-ವಿಧಾನಪರಿಷತ್‌ನ ಸದಸ್ಯ ಸ್ಥಾನಕ್ಕೆ 310 ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಎಲ್ಲಾ ವರ್ಗಗಳಿಗೂ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ವರ್ಗಗಳಿಂದಲೂ ಆಕಾಂಕ್ಷಿಗಳಿದ್ದಾರೆ.
3
+ ಅವರಲ್ಲಿ ಪಕ್ಷಕ್ಕಾಗಿ ದುಡಿದವರು, ದುಡಿಯದೇ ಇರುವವರು, ಹಾಲಿ ಸದಸ್ಯರು ಇದ್ದಾರೆ.. ಕೆಲವರಿಗೆ ಬ್ಲಾಕ್‌ ಮಟ್ಟದಲ್ಲಿ, ಇನ್ನೂ ಕೆಲವರಿಗೆ ಜಿಲ್ಲಾಮಟ್ಟದಲ್ಲಿ, ಮತ್ತೆ ಕೆಲವರಿಗೆ ರಾಜ್ಯಮಟ್ಟದಲ್ಲಿ ಅವಕಾಶ ಸಿಕ್ಕಿದೆ ಎಂದರು.
4
+ ಮಲೆನಾಡು, ಕರಾವಳಿ, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಬೆಂಗಳೂರು, ಹಳೆ ಮೈಸೂರು ಭಾಗ ಸೇರಿದಂತೆ ಪ್ರಾದೇಶಿಕವಾಗಿ ಎಲ್ಲಾ ಭಾಗದಿಂದಲೂ ಅವಕಾಶ ಕೇಳುತ್ತಿದ್ದಾರೆ. ಸಮಾನವಾದ ಹಂಚಿಕೆ ಕಷ್ಟವಾದ ಕೆಲಸ ಎಂದು ಹೇಳಿದರು.
5
+ ನಮಂತಹ ಹಿರಿಯರ ಸಲಹೆಗಳನ್ನು ಕೇಳಬೇಕು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ಅಸಮಾಧಾನ ಹೊರಹಾಕಿರುವುದಕ್ಕೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್‌, ಖಂಡಿತ ಅವರ ಸಲಹೆ ಕೇಳುತ್ತೇನೆ ಎಂದರಲ್ಲದೆ, ಮಾನದಂಡಗಳನ್ನು ಹೈಕಮಾಂಡ್‌ ನಾಯಕರು ನಿರ್ಧರಿಸುತ್ತಾರೆ ಎಂದು ತಿಳಿಸಿದರು.
6
+ ವಾಲೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತ್ರಿಕೆಗಳಲ್ಲಿ ಓದಿದ್ದೇನೆ. ವಾಸ್ತವಾಂಶ ಏನು ಎಂಬ ಬಗ್ಗೆ ಮತ್ತಷ್ಟು ಮಾಹಿತಿ ಪಡೆದು ಅನಂತರ ಪ್ರತಿಕ್ರಿಯಿಸುತ್ತೇನೆ ಎಂದರು.ದೆಹಲಿ ಭೇಟಿಯ ವೇಳೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ಚರ್ಚೆಯಾಗುವ ಬಗ್ಗೆ ತಮಗೆ ಗೊತ್ತಿಲ್ಲ ಎಂದು ಹೇಳಿದರು.
eesanje/url_46_129_2.txt ADDED
@@ -0,0 +1,6 @@
 
 
 
 
 
 
 
1
+ ವಿಧಾನಪರಿಷತ್‌ ಚುನಾವಣೆ : ಇಂದು ಫೈನಲ್ ಆಗಲಿದೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ..?
2
+ ಬೆಂಗಳೂರು, ಮೇ 29-ವಿಧಾನಪರಿಷತ್‌ನಿಂದ ವಿಧಾನಸಭೆಗೆ ಸದಸ್ಯರ ಆಯ್ಕೆಗಾಗಿ ನಡೆಯುವ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ನಡೆಯುತ್ತಿರುವ ಕಸರತ್ತು ಇಂದು ಸಂಜೆ ಅಂತಿಮ ಘಟ್ಟ ತಲುಪುವ ಸಾಧ್ಯತೆಯಿದೆ.
3
+ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನಿನ್ನೆಯಿಂದಲೂ ಎಐಸಿಸಿ ಮುಖಂಡರಾದ ರಣಜಿತ್‌ ಸಿಂಗ್‌ ಸುರ್ಜೆವಾಲ, ಕೆ.ಸಿ.ವೇಣುಗೋಪಾಲ್‌ ಅವರೊಂದಿಗೆ ಸರಣಿ ಸಭೆಯನ್ನು ನಡೆಸಿದ್ದಾರೆ. ಇಂದು ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಸಭೆ ನಡೆಯಲಿದೆ. ಅದರ ಬಳಿಕ ಅಭ್ಯರ್ಥಿಗಳ ಆಯ್ಕೆ ಅಖೈರುಗೊಳ್ಳಲಿದೆ ಎಂದು ತಿಳಿದುಬಂದಿದೆ.
4
+ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿಬ್ಬರೂ 70 ಕ್ಕೂ ಹೆಚ್ಚು ಮಂದಿ ಆಕಾಂಕ್ಷಿಗಳ ಪಟ್ಟಿಯೊಂದಿಗೆ ದೆಹಲಿಗೆ ತೆರಳಿದ್ದಾರೆ. ಅದರಲ್ಲಿ ಸಚಿವ ಎನ್‌.ಎಸ್‌‍.ಬೋಸರಾಜ್‌, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹೆಸರು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗಿದೆ.
5
+ ವಿಧಾನಪರಿಷತ್‌ನ ಸದಸ್ಯ ಹಾಗೂ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಅವರ ಆಯ್ಕೆ ವಿಚಾರವಾಗಿ ಖಚಿತತೆ ಇದ್ದರೂ ಕೊನೆ ಕ್ಷಣದಲ್ಲಿ ಗೊಂದಲಗಳು ಏರ್ಪಟ್ಟಿವೆ. ಈಗಾಗಲೇ ಎರಡು ಬಾರಿ ಅವಕಾಶ ಪಡೆದಿರುವ ಗೋವಿಂದ ರಾಜು ಅವರು ಪ್ರಸ್ತುತ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿಯಾಗಿ ಸಂಪುಟ ದರ್ಜೆಯ ಸ್ಥಾನ ಹೊಂದಿದ್ದಾರೆ. ಅದಕ್ಕೆ ಶಾಸನಸಭೆಯ ಸದಸ್ಯತ್ವ ಕಡ್ಡಾಯವಲ್ಲದೇ ಇರುವುದರಿಂದ ಒಬ್ಬರಿಗೆ ಒಂದೇ ಹುದ್ದೆ ಎಂಬ ಸೂತ್ರ ಅನುಸರಿಸುವ ಬಗ್ಗೆಯೂ ಚರ್ಚೆಗಳಾಗುತ್ತಿವೆ ಎಂದು ತಿಳಿದುಬಂದಿದೆ.
6
+ ಉಳಿದಂತೆ ಹತ್ತಾರು ಮಂದಿ ಆಕಾಂಕ್ಷಿಗಳು ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಮುಖಂಡರ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡುತ್ತಿದ್ದಾರೆ.ರಾಜ್ಯ ನಾಯಕರು ಸಂಭವನೀಯರ ಪಟ್ಟಿಯನ್ನು ಹೈಕಮಾಂಡ್‌ಗೆ ಸಲ್ಲಿಸಿದ್ದಾರೆ. ಇದರ ಪರಿಶೀಲನೆಯೂ ನಡೆದಿದೆ ಎಂದು ಮೂಲಗಳು ತಿಳಿಸಿವೆ.
eesanje/url_46_129_3.txt ADDED
@@ -0,0 +1,9 @@
 
 
 
 
 
 
 
 
 
 
1
+ ವಿಜಯೇಂದ್ರ ವಿರುದ್ಧ ಶಾಸಕ ಪ್ರದೀಪ್‌ ಈಶ್ವರ್‌ ಹಿಗ್ಗಾಮುಗ್ಗಾ ವಾಗ್ದಾಳಿ
2
+ ಬೆಂಗಳೂರು, ಮೇ 29-ವಿಷಯಾಧಾರಿತವಾಗಿ ಚರ್ಚೆ ನಡೆಸುವ ಬದಲಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧುಬಂಗಾರಪ್ಪ ಅವರ ವೈಯಕ್ತಿಕ ತೇಜೋವಧೆಗೆ ಇಳಿದಿರುವುದು ಖಂಡನೀಯ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಕಿಡಿಕಾರಿದ್ದಾರೆ.
3
+ ಕಾಂಗ್ರೆಸ್‌‍ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಧುಬಂಗಾರಪ್ಪ ಹಿಂದುಳಿದ ವರ್ಗಗಳ ನಾಯಕ. ವಿಜಯೇಂದ್ರ ಅವರಿಗೆ ಹಿಂದುಳಿದ ವರ್ಗದವರನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಹಾಗಾಗಿಯೇ ಅವರದೇ ಪಕ್ಷದ ಕೆ.ಎಸ್‌‍.ಈಶ್ವರಪ್ಪ ಅವರನ್ನು ಮೂಲೆಗುಂಪು ಮಾಡಿ, ಹೀನಾಯವಾಗಿ ಟೀಕೆ ಮಾಡಿ ಅಪಮಾನ ಮಾಡಿದ್ದಾರೆ ಎಂದರು.
4
+ ಬಿಜೆಪಿ ಕಟ್ಟುವುದರಲ್ಲಿ ಯಡಿಯೂರಪ್ಪ ಅವರಿಗೆ ಸರಿಸಮಾನವಾಗಿ ಈಶ್ವರಪ್ಪ ಕೆಲಸ ಮಾಡಿದರು. ಅವರನ್ನು ಕರ್ನಾಟಕದ ಅಡ್ವಾಣಿ ಎಂದು ಕರೆಯಲಾಗುತ್ತಿತ್ತು. ಅವರು ಸಂಘಟಿಸಿದ ಪಕ್ಷದ ಅಧ್ಯಕ್ಷರಾಗಿ ವಿಜಯೇಂದ್ರ ಮಾಡಿದ್ದೇನು ಎಂದು ಜನ ನೋಡಿದ್ದಾರೆ ಎಂದರು.
5
+ ಮಧುಬಂಗಾರಪ್ಪ ಶಿಕ್ಷಣ ಕ್ಷೇತ್ರದ ಪಾವಿತ್ರ್ಯತೆ ಉಳಿಸುವಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಹೀಗಾಗಿ ಅವರು ಶ್ಲಾಘನಾರ್ಹರು.ಈ ಹಿಂದೆ ಬಹಳಷ್ಟು ಜನ ಸಾಮೂಹಿಕ ನಕಲು ಮಾಡುತ್ತಿದ್ದುದು ಬಹಿರಂಗ ಸತ್ಯ. ಮಧುಬಂಗಾರಪ್ಪ ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೂ ಸಿಸಿ ಟಿವಿ ಹಾಕಿ ಮಾಸ್‌‍ ಕಾಪಿ ತಪ್ಪಿಸಿದ್ದಾರೆ.
6
+ ಇದರಿಂದಾಗಿ ಎಸ್‌‍ಎಸ್‌‍ಎಲ್‌ಸಿ ಫಲಿತಾಂಶ ಕಡಿಮೆಯಾಗಿದೆ. ಆದರೆ ಮುಂದಿನ ಹತ್ತು ವರ್ಷಗಳಲ್ಲಿ ಇದರ ಸಕಾರಾತಕ ಪರಿಣಾಮ ಗೋಚರಿಸಲಿದೆ. ಮೂರು ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳು ಪಾಸಾಗಲು ಅನುಕೂಲ ಮಾಡಿಕೊಡಲಾಗಿದೆ ಎಂದು ಹೇಳಿದರು.
7
+ ವಿಜಯೇಂದ್ರ ಮತ್ತು ಅವರ ಸಲಹೆಗಾರರಿಗೆ ಅಧ್ಯಯನದ ಕೊರತೆ ಇದ್ದಂತೆ ಕಾಣುತ್ತದೆ. ಅದಕ್ಕಾಗಿ ಮಧುಬಂಗಾರಪ್ಪ ಅವರ ಕೇಶಶೈಲಿಯ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಒಂದು ಪಕ್ಷದ ರಾಜ್ಯಾಧ್ಯಕ್ಷರು ಈ ಮಟ್ಟಕ್ಕೆ ಇಳಿಯುವುದು ಶೋಭೆ ತರುವುದಿಲ್ಲ.
8
+ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಅವರ ಕೇಶಶೈಲಿಯ ಬಗ್ಗೆ ಯಾರೂ ಆಕ್ಷೇಪವೆತ್ತಲಿಲ್ಲ. ಮಧು ಬಂಗಾರಪ್ಪ ಅವರಿಗೆ ಅವರದೇ ಆದ ಸ್ವರೂಪವಿದೆ. ಅದನ್ನು ಲೇವಡಿ ಮಾಡುವ ಮೂಲಕ ವಿಜಯೇಂದ್ರ ವೈಯಕ್ತಿಕ ನಿಂದನೆ ಮಾಡುತ್ತಿದ್ದಾರೆ. ವಿಷಯಾಧಾರಿತ ಹಾಗೂ ಸೈದ್ಧಾಂತಿಕವಾಗಿ ಚರ್ಚೆ ಮಾಡುವುದು ಸೂಕ್ತ ಎಂದು ಸಲಹೆ ನೀಡಿದರು.
9
+ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ಗೆಲ್ಲುವುದು ಖಚಿತ. ನಾನು ಪ್ರತಿನಿಧಿಸುವ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌‍ಗಿಂತ ಬಿಜೆಪಿ ಒಂದು ಮತ ಹೆಚ್ಚು ಪಡೆದರೂ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂಬ ಸವಾಲಿಗೆ ಈಗಲೂ ಬದ್ಧನಾಗಿದ್ದೇ���ೆ ಎಂದು ಪ್ರದೀಪ್‌ ಈಶ್ವರ್‌ ಹೇಳಿದರು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
eesanje/url_46_129_4.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ತನಿಖೆ ಕುರಿತು ಗೃಹಸಚಿವ ಪರಮೇಶ್ವರ್‌ ಪ್ರತಿಕ್ರಿಯೆ
2
+ ಬೆಂಗಳೂರು, ಮೇ 29-ಯಾವುದೇ ಘಟನೆ ನಡೆದರೂ ಬಿಜೆಪಿಯವರು ಸಚಿವರ ರಾಜೀನಾಮೆ ಕೇಳುವುದು ಸಾಮಾನ್ಯ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣದಲ್ಲಿ ಸತ್ಯಾಂಶ ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೊಂದು ಘಟನೆಯಾದಾಗಲೂ ಬಿಜೆಪಿಯವರು ಆಯಾ ಸಚಿವರ ರಾಜೀನಾಮೆ ಕೇಳುತ್ತಾರೆ. ಅವರು ರಾಜೀನಾಮೆ ಕೇಳುವುದು ಸರಿ. ಆದರೆ ಸತ್ಯಾಂಶ ತಿಳಿಯಬೇಕಲ್ಲ ಎಂದರು.
4
+ ಹಣ ವರ್ಗಾವಣೆ ಮಾಡುವಂತೆ ಸಚಿವರು ಮೌಖಿಕ ಆದೇಶ ನೀಡಿದ್ದಾರೆ ಎಂದು ಮೃತಪಟ್ಟ ಅಧಿಕಾರಿ ಚಂದ್ರಶೇಖರ್‌ ಮರಣಪತ್ರದಲ್ಲಿ ಬರೆದಿದ್ದಾರೆ. ಅದು ಸತ್ಯ ಅಥವಾ ಸುಳ್ಳು ಎಂಬುದು ತನಿಖೆಯಿಂದ ಗೊತ್ತಾಗಲಿದೆ. ಸಚಿವರಿಗೆ ಗೊತ್ತಿದ್ದೇ ಹಣ ಹೋಗಿದೆಯೇ? ಎಂಬುದನ್ನು ತನಿಖೆ ನಡೆಸಲಾಗುತ್ತಿದೆ.
5
+ ಈ ಹಿಂದೆ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆಗಿನ ಸಚಿವ ಈಶ್ವರಪ್ಪ ಅವರ ಹೆಸರನ್ನು ನೇರವಾಗಿ ಹೇಳಿದ್ದರು. ಇಲ್ಲಿ ಆ ರೀತಿ ಹೆಸರು ಹೇಳಿಲ್ಲ. ಹಾಗಾಗಿ ತನಿಖೆ ವರದಿ ಕಾಯಬೇಕಿದೆ. ವರ್ಗಾವಣೆಯಾಗಿರುವ ಮೊತ್ತದ ಬಗ್ಗೆ ದಿನಕ್ಕೊಂದು ಮಾಹಿತಿ ಕೇಳಿಬರುತ್ತಿದೆ. ಎಂಟ್ಹೆತ್ತು ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ ಎಂಬ ಮಾಹಿತಿಯೂ ಇದೆ. ಸಿಐಡಿ ಅಧಿಕಾರಿಗಳು ಎಲ್ಲವನ್ನೂ ತನಿಖೆ ನಡೆಸುತ್ತಿದ್ದಾರೆ ಎಂದರು.
6
+ ವಿಮಾನನಿಲ್ದಾಣದಲ್ಲೇ ಪ್ರಜ್ವಲ್‌ ರೇವಣ್ಣ ಬಂಧನ :ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ವಿಮಾನನಿಲ್ದಾಣದಲ್ಲೇ ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ನ್ಯಾಯಾಲಯದಿಂದ ಬಂಧನದ ವಾರೆಂಟ್‌ ಇದೆ. ಜೊತೆಗೆ ಬ್ಲೂ ಕಾರ್ನರ್‌ ನೋಟೀಸ್‌‍, ಲುಕ್‌ಔಟ್‌ ನೋಟೀಸ್‌‍ ಸೇರಿದಂತೆ ಹಲವು ಪ್ರಕ್ರಿಯೆಗಳನ್ನು ಚಾಲ್ತಿಯಲ್ಲಿಡಲಾಗಿದೆ. ಪ್ರಜ್ವಲ್‌ ರೇವಣ್ಣ ಬರುವುದನ್ನೇ ಅಧಿಕಾರಿಗಳು ಕಾಯುತ್ತಿದ್ದಾರೆ. ಬಂದ ಬಳಿಕ ಬಂಧಿಸಿ ಹೇಳಿಕೆ ಪಡೆಯುವುದೂ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
7
+ ಪೆನ್‌ಡ್ರೈವ್‌ ಬಹಿರಂಗಗೊಂಡಿರುವುದಕ್ಕೆ ಸಂಬಂಧಪಟ್ಟಂತೆ ಯಾರೇ ಭಾಗಿಯಾಗಿದ್ದರೂ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುವುದು. ಇದರಲ್ಲಿ ಕಾಂಗ್ರೆಸ್‌‍, ಬಿಜೆಪಿ ಎಂಬ ಬೇಧಭಾವವಿಲ್ಲ ಎಂದು ಹೇಳಿದರು.
8
+ ಹೈ ಪವರ್‌ ಕಮಿಟಿ ರಚನೆ :ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಸದಸ್ಯರ ಆಯ್ಕೆ ವಿಚಾರದಲ್ಲಿ ಹಿರಿಯರನ್ನು ಪಕ್ಷಕ್ಕಾಗಿ ಕೆಲಸ ಮಾಡಿದ ಅನುಭವಿಗಳನ್ನು ಸಂಪರ್ಕಿಸುವಂತೆ ನಾನು ನೀಡಿದ್ದ ಸಲಹೆಯನ್ನು ತಪ್ಪಾಗಿ ಅರ್ಥೈಸುವ ಅಗತ್ಯವಿಲ್ಲ. ಪಕ್ಷದೊಂದಿಗೆ ನಿಂತ ಸಮುದಾಯ ಹಾಗೂ ಪ್ರಾಮಾಣಿಕವಾಗಿ ಕೆಲಸ ಮಾಡಿದವರನ್ನು ಪರಿಗಣಿಸಬೇಕು ಎಂಬ ಕಾರಣಕ್ಕೆ ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ. ಅದನ್ನು ಪಾಲಿಸಲೇಬೇಕೆಂದೇನೂ ಇಲ್ಲ ಎಂದರು.
9
+ ಇಂತಹ ಸಂದರ್ಭದಲ್ಲಿ ಹಿರಿಯರನ್ನೊಳಗೊಂಡ ಉನ್ನತಾಧಿಕಾರಿಗಳ ಸಮಿತಿ ರಚಿಸಿ ಸಲಹೆ ಪಡೆದು ಕ್ರಮ ಕೈಗೊಳ್ಳಬೇಕು ಎಂಬುದು ನನ್ನ ನಿಲುವು. ಆದರೆ ವಿಧಾನಪರಿಷತ್‌ನಿಂದ ಆಯ್ಕೆ ಮಾಡಲು ಈಗಾಗಲೇ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ದೆಹಲಿಗೆ ತೆರಳಿದ್ದಾರೆ, ಕಾಲ ಮಿಂಚಿ ಹೋಗಿದೆ. ಮುಂದಿನ ದಿನಗಳಲ್ಲಾದರೂ ಇದನ್ನು ಪರಿಗಣಿಸಬಹುದು ಎಂದರು.
10
+ ನಾನು ಯಾರ ಹೆಸರನ್ನೂ ಶಿಫಾರಸ್ಸು ಮಾಡಿಲ್ಲ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಯಾರೂ ತಮನ್ನು ಸಲಹೆ ಕೇಳಿಲ್ಲ. ಇಲಾಖೆಯಲ್ಲಿ ಕೆಲ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಮುಖ್ಯಮಂತ್ರಿಯವರ ಜೊತೆ ಚರ್ಚಿಸಬೇಕು. ಆ ಕಾರಣಕ್ಕೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದೆ. ಆ ವೇಳೆ ವಿಧಾನಪರಿಷತ್‌ ಸದಸ್ಯರ ಆಯ್ಕೆ ಬಗ್ಗೆ ಚರ್ಚೆಯಾಗಿಲ್ಲ ಎಂದು ಹೇಳಿದರು.
11
+ ಏಳು ಸ್ಥಾನಗಳಿಗೆ 300 ಅರ್ಜಿ ಬಂದಿವೆ. ಅವುಗಳನ್ನು ಪರಿಶೀಲನೆ ನಡೆಸುವುದು ಕಷ್ಟದ ಕೆಲಸ. ಅದಕ್ಕಾಗಿಯೇ ಹೈ ಪವರ್‌ ಕಮಿಟಿ ರಚಿಸುವಂತೆ ಸಲಹೆ ನೀಡುತ್ತೇನೆ ಎಂದರು.
eesanje/url_46_129_5.txt ADDED
@@ -0,0 +1,16 @@
 
 
 
 
 
 
 
 
 
 
 
 
 
 
 
 
 
1
+ ವಾಲೀಕಿ ಅಭಿವೃದ್ಧಿ ನಿಗಮದ 87 ಕೋಟಿ ಲಪಟಾಯಿಸಲು ನಡೆದಿತ್ತೇ ಸಂಚು..?
2
+ ಬೆಂಗಳೂರು, ಮೇ 29-ವಾಲ್ಮೀಕಿ ಅಭಿವೃದ್ದಿ ನಿಗಮದ ಹಣ ವರ್ಗಾವಣೆ ಪ್ರಕರಣದಲ್ಲಿ 87 ಕೋಟಿ ರೂ.ಗಳನ್ನು ಲಪಟಾಯಿಸುವ ಸಂಚು ನಡೆದಿತ್ತೇ ಎಂಬ ಶಂಕೆಯ ಕುರಿತು ಚರ್ಚೆಗಳು ಆರಂಭಗೊಂಡಿವೆ.
3
+ ಆತಹತ್ಯೆಗೆ ಶರಣಾದ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಪಿ. ಅವರ ಮರಣ ಹೇಳಿಕೆಯ ಪತ್ರ ಹಾಗೂ ಸಚಿವರು ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಪ್ರಯಾಸದಿಂದ ಪ್ರಸ್ತಾಪಿಸಿದ ಕೆಲ ವಿಚಾರಗಳು ಹಣಕಾಸಿನ ಅವ್ಯವಹಾರದ ಕುರಿತು ಗುಮಾನಿ ಹೆಚ್ಚಿಸಿವೆ. ಚಂದ್ರಶೇಖರನ್‌ ಅವರ ಆತಹತ್ಯೆಯಾಗದೇ ಇದ್ದರೆ ನಿಗಮದ ಕೋಟ್ಯಂತರ ರೂಪಾಯಿಗಳು ನಿರಾಯಾಸವಾಗಿ ಅನ್ಯರ ಪಾಲಾಗಬಹುದಿತ್ತೇನೋ? ಎಂಬ ಶಂಕೆಗಳು ಕೇಳಿಬರಲಾರಂಭಿಸಿವೆ.
4
+ ಈ ಮೊದಲು ಅಂತಾರಾಷ್ಟ್ರೀಯ ಹ್ಯಾಕರ್‌ ಶ್ರೀಕಿ ರಾಜ್ಯಸರ್ಕಾರದ ಇ-ಪ್ರೊಕ್ಯೂರೆಂಟ್‌ ಖಾತೆಗೆ ಕನ್ನ ಹಾಕಿ ಕೋಟ್ಯಂತರ ರೂ.ಗಳನ್ನು ಲಪಟಾಯಿಸಿದ್ದ. ಆತನನ್ನು ಬಂಧಿಸಿ ವಿಚಾರಣೆ ನಡೆಸಿದರೂ ಪೊಲೀಸರಿಗೆ ಹ್ಯಾಕಿಂಗ್‌ನ ಮೂಲ ಪತ್ತೆ ಮಾಡಲಾಗಿಲ್ಲ. ವಾಲೀಕಿ ಅಭಿವೃದ್ಧಿ ನಿಗಮದ ಹಣವನ್ನು ಅದೇ ರೀತಿ ಲಪಟಾಯಿಸಲು ಷಡ್ಯಂತ್ರವಾಗಿರುವ ಚರ್ಚೆಗಳಿವೆ.
5
+ ಅನ್ಯರ ಪಾಲಾದ ಚೆಕ್‌ಪುಸ್ತಕ :ಇಡೀ ಹಗರಣ ಬೆಳಕಿಗೆ ಬರಲು ಚೆಕ್‌ಪುಸ್ತಕ ಅನ್ಯರ ಪಾಲಾಗಿದ್ದು ಮೂಲ ಕಾರಣ ಎಂದು ತಿಳಿದುಬಂದಿದೆ. ಒಂದು ವೇಳೆ ಎಲ್ಲವೂ ವ್ಯವಸ್ಥಿತವಾಗಿ ನಡೆದಿದ್ದರೆ ಹಗರಣವೇ ಬೆಳಕಿಗೆ ಬರದಂತೆ ಮುಚ್ಚಿ ಹೋಗುವ ಸಾಧ್ಯತೆಯಿತ್ತು. ಜೊತೆಗೆ ಹಂತಹಂತವಾಗಿ ಹಣ ಕಳ್ಳತನವಾಗಬಹುದಿತ್ತು ಅಥವಾ ಬ್ಯಾಂಕ್‌ ಖಾತೆಯಲ್ಲಿ ಕೊಳೆಯುತ್ತಾ ಅನುಪಯುಕ್ತವಾಗಿ ಉಳಿದುಹೋಗಬಹುದಿತ್ತು ಎನ್ನಲಾಗಿದೆ.
6
+ ಈಗಾಗಲೇ ಏಳೆಂಟು ಐಟಿ ಸೇರಿದಂತೆ ವಿವಿಧ ಕಂಪೆನಿಗಳ ಖಾತೆಗೆ ಹಣ ವರ್ಗಾವಣೆಯಾಗಿರುವುದು ಈ ಅನುಮಾನವನ್ನು ದೃಢಪಡಿಸಿದೆ.ಮೃತ ಚಂದ್ರಶೇಖರನ್‌ ಅವರ ಮರಣಪತ್ರದ ಅನುಸಾರ ಸಚಿವರ ಮೌಖಿಕ ಆದೇಶದ ಮೇರೆಗೆ ಎಂ.ಜಿ.ರಸ್ತೆಯ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ನಿಗಮದ ಹೆಸರಿಗೆ ಮತ್ತೊಂದು ಉಪಖಾತೆ ತೆರೆಯಲಾಗಿದೆ.
7
+ ವಸಂತನಗರದ ಯೂನಿಯನ್‌ ಬ್ಯಾಂಕ್‌ ಶಾಖೆಯಲ್ಲಿನ ನಿಗಮದ ಸ್ವೆಪ್ಪಿಂಗ್‌-ಸೆಪ್‌ಔಟ್‌ ಉಳಿತಾಯ ಖಾತೆಯನ್ನು ಎಂ.ಜಿ.ರಸ್ತೆಯ ಶಾಖೆಗೆ ವರ್ಗಾಯಿಸಲು ಬ್ಯಾಂಕ್‌ ಮ್ಯಾನೇಜರ್‌ ಒಪ್ಪಿಕೊಂಡಿಲ್ಲ. ಹೀಗಾಗಿ ಎಂ.ಜಿ.ರಸ್ತೆ ಬ್ಯಾಂಕ್‌ನಲ್ಲಿ ಉಪಖಾತೆ ತೆರೆಯಲಾಗಿದೆ. ಮಾರ್ಚ್‌ 4 ರಂದು 25 ಕೋಟಿ, ಮಾರ್ಚ್‌ 6 ರಂದು 25, ಮಾ.21 ರಂದು 44 ಹಾಗೂ ರಾಜ್ಯ ಹುಜೂರ್‌ ಖಜಾನೆಯಿಂದ 43.33, ಮೇ 21 ರಂದು 50 ಕೋಟಿ ರೂ. ಸೇರಿ 137 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಲಾಗಿದೆ.
8
+ ಉಪಖಾತೆಗೆ ಸಂಬಂಧಪಟ್ಟಂತೆ ಎಂ.ಜಿ.ರಸ್ತೆಯ ಬ್ಯಾಂಕ್‌ನಿಂದ ನಿಗಮದ ಅಧೀಕ್ಷಕರಿಗೆ ಚೆಕ್‌ಪುಸ್ತಕ ಹಾಗೂ ಪಾಸ್‌‍ಪುಸ್ತಕಗಳನ್ನು ಕೊಟ್ಟಿಲ್ಲ. ಚಂದ್ರಶೇಖರನ್‌ ಅವರು ಕೆಲಸದ ಒತ್ತಡದಿಂದಾಗಿ ಇದನ್ನು ತೆಗೆದುಕ��ಳ್ಳಲಾಗಿಲ್ಲ ಎಂದು ಬರೆದುಕೊಂಡಿದ್ದಾರೆ.ಇತ್ತೀಚೆಗೆ ಎಲ್ಲಾ ವ್ಯವಹಾರಗಳು ಆನ್‌ಲೈನ್‌ ಬ್ಯಾಂಕಿಂಗ್‌ನಲ್ಲೇ ನಡೆಯುವುದರಿಂದಾಗಿ ಚೆಕ್‌ ಪುಸ್ತಕದ ಅವಶ್ಯಕತೆಯೂ ಇರಲಿಲ್ಲ ಎಂದು ಹೇಳಿದ್ದಾರೆ.
9
+ ಹಣ ವರ್ಗಾವಣೆಯನ್ನು ಒತ್ತಾಯಪೂರ್ವಕವಾಗಿ ಮಾಡಿಸಲಾಗಿತ್ತು. ಇದರ ಒಳಸಂಚು ತಮಗೆ ಅರಿವಾಗಲೇ ಇಲ್ಲ. ಎಂ.ಜಿ.ರಸ್ತೆಯ ಖಾತೆಯಲ್ಲಿನ ಹಣದ ಲೆಕ್ಕಾಚಾರಗಳನ್ನು ಕೇಳಿದಾಗ ಅದನ್ನು ವ್ಯವಸ್ಥಾಪಕ ನಿರ್ದೇಶಕರಿಗೆ ಕೊಡಲು ಮಾತ್ರ ಅವಕಾಶವಿದೆ ಎಂದು ಬ್ಯಾಂಕ್‌ ಮ್ಯಾನೇಜರ್‌ ತಿಳಿಸಿದ್ದರು.
10
+ ವ್ಯವಸ್ಥಾಪಕ ನಿರ್ದೇಶಕರ ಪತ್ರದೊಂದಿಗೆ ಬರುತ್ತೇನೆ ಎಂದು ತಾವು ಹೇಳಿದಾಗ, ನಾನೇ ನಿಮ ನಿಗಮದ ಕಚೇರಿಗೆ ಬರುತ್ತೇನೆ ಎಂದು ಬ್ಯಾಂಕ್‌ ಮ್ಯಾನೇಜರ್‌ ಹೇಳಿದ್ದರು ಎಂದು ವಿವರಿಸಿದ್ದಾರೆ.
11
+ ನಿಗಮದ ಕಚೇರಿಗೆ ಬಂದ ಬ್ಯಾಂಕ್‌ ಮ್ಯಾನೇಜರ್‌, ಖಾತೆಯ ಚೆಕ್‌ಪುಸ್ತಕ ಹಾಗೂ ಪಾಸ್‌‍ಪುಸ್ತಕಗಳನ್ನು ವಿತರಿಸಲಾಗಿದೆ ಎಂದು ಹೇಳಿದ್ದಾರೆ. ಇದು ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಅಧೀಕ್ಷಕರು ಮತ್ತು ಲೆಕ್ಕಾಧಿಕಾರಿಗಳನ್ನು ದಂಗುಬಡಿಸಿದೆ.ನಾವ್ಯಾರೂ ಪಾಸ್‌‍ಪುಸ್ತಕವನ್ನಾಗಲೀ, ಚೆಕ್‌ಪುಸ್ತಕವನ್ನಾಗಲಿ ತೆಗೆದುಕೊಂಡಿಲ್ಲ ಎಂದು ನಿಗಮದ ಸಿಬ್ಬಂದಿಗಳು ಹಲವು ಸುತ್ತಿನ ಪರಿಶೀಲನೆ ಬಳಿಕ ಖಚಿತಪಡಿಸಿದ್ದಾರೆ. ಯಾವುದೋ ಗೋಲ್‌ಮಾಲ್‌ ನಡೆಯುತ್ತಿದೆ ಎಂದು ಅನುಮಾನಗೊಂಡು ನಿಗಮದ ಮೂವರು ಅಧಿಕಾರಿಗಳು ಮೇ 23 ರಂದು ಯೂನಿಯನ್‌ ಬ್ಯಾಂಕ್‌ನ ಪ್ರಾದೇಶಿಕ ಮುಖ್ಯಸ್ಥರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ.
12
+ ಆಗ ವ್ಯವಸ್ಥಾಪಕ ನಿರ್ದೇಶಕರಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರ ಸಿಬ್ಬಂದಿ ನಾಗರಾಜ್‌ ಕರೆ ಮಾಡಿ, ಎಲ್ಲಾ ಮೊತ್ತ ವಾಪಸ್‌‍ ಬಂದೇ ಬರುತ್ತದೆ. ಆವರೆಗೂ ವಿಷಯವನ್ನು ಗೌಪ್ಯವಾಗಿಡಿ ಎಂದು ಸೂಚನೆ ನೀಡಿದ್ದರಂತೆ. ಅದರಂತೆ ಅಂದು ಸಂಜೆ 5 ಕೋಟಿ ರೂ.ಗಳು ನಿಗಮದ ಬ್ಯಾಂಕ್‌ ಖಾತೆಗೆ ಮರಳಿ ಬಂದಿವೆ.
13
+ ಇಲ್ಲಿ ಮೂಲಪ್ರಶ್ನೆ ಇರುವುದು ನಿಗಮದ ಬ್ಯಾಂಕ್‌ ಉಪಖಾತೆಯ ಪಾಸ್‌‍ಬುಕ್‌ ಮತ್ತು ಚೆಕ್‌ಪುಸ್ತಕಗಳನ್ನು ಅನಾಮಧೇಯ ವ್ಯಕ್ತಿಗಳು ಪಡೆದುಕೊಂಡಿದ್ದು ಹೇಗೆ? ಎಂಬುದು.ಚಂದ್ರಶೇಖರನ್‌ ಅವರು ತಮ ಮರಣಪತ್ರದಲ್ಲಿ ತಾವು ಯಾವುದೇ ತಪ್ಪು ಮಾಡಿಲ್ಲ, ನಿಗಮಕ್ಕೆ ಮೋಸ, ವಂಚನೆ ಮಾಡಿಲ್ಲ. ಈ ಹಗರಣದಲ್ಲಿ ನನ್ನ ಪಾತ್ರ ಇಲ್ಲ. ಕೆಲಸದ ಒತ್ತಡದಿಂದಾಗಿ ಚೆಕ್‌ಪುಸ್ತಕ ಮತ್ತು ಪಾಸ್‌‍ಪುಸ್ತಕಗಳನ್ನು ತೆಗೆದುಕೊಳ್ಳದೇ ಇರುವುದೇ ನನ್ನ ದೊಡ್ಡ ಲೋಪವಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
14
+ ನಾನು ಹೇಡಿ ಅಲ್ಲ, ಆದರೆ ಅವಮಾನ ಸಹಿಸಲಾರೆ, ನನಗೆ ಬೇರೆ ದಾರಿ ತೋಚುತ್ತಿಲ್ಲ ಎಂದು ಉಲ್ಲೇಖಿಸಿದ್ದಾರೆ.ಮೂಲಗಳ ಪ್ರಕಾರ, ಹಣ ವರ್ಗಾವಣೆಯಾಗಿದ್ದರ ಹಿಂದೆ ದೊಡ್ಡ ಸಂಚಿತ್ತು. ಮುಂದಿನ ದಿನಗಳಲ್ಲಿ ಅದನ್ನು ಆನ್‌ಲೈನ್‌ ವಂಚನೆಯ ಹೆಸರಿನಲ್ಲಿ ಕಬಳಿಸುವ ಹುನ್ನಾರ ಅಡಗಿತ್ತು ಎನ್ನಲಾಗಿದೆ.
15
+ ಸದ್ಯದ ಪರಿಸ್ಥಿತಿಯಲ್ಲಿ ಪ್ರಭಾವಿಗಳ ಆಪ್ತರಿಗೆ ಬ್ಯಾಂಕ್‌ನಿಂದ ಸಹಾಯ ಮತ್ತು ಲಾಭವಾಗಲಿದೆ ಎಂಬ ಕಾರಣಕ್ಕೆ ಹಣ ವರ್ಗಾವಣೆಯಾಗಿದೆ ಎಂದು ತಿಳಿದುಬಂದಿದೆ.ವಾಲೀಕಿ ಅಭಿವೃದ್ಧಿ ನಿಗಮದಲ್ಲಷ್ಟೇ ಅಲ್ಲ ಹಲವಾರು ನಿಗಮಗಳಲ್ಲಿ ಇದೇ ರೀತಿ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡು ನಿಶ್ಚಿತ ಠೇವಣಿ ಇರಿಸಿ ಬ್ಯಾಂಕ್‌ಗಳಿಂದ ವೈಯಕ್ತಿಕ ಲಾಭ ಪಡೆದುಕೊಳ್ಳುವುದು ಹಲವಾರು ವರ್ಷಗಳಿಂದ ನಡೆದುಬಂದಿದೆ.
16
+ ಈ ಹಿಂದೆ ಎಚ್‌.ಕೆ.ಪಾಟೀಲ್‌ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾಗಿದ್ದಾಗ ಈ ರೀತಿಯ ಹಗರಣವನ್ನು ಪತ್ತೆ ಹಚ್ಚಿ ಕೆಲವರ ವಿರುದ್ಧ ಕ್ರಮ ಜರುಗಿಸಿದ ಉದಾಹರಣೆಗಳಿವೆ.ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿಗಳನ್ನಷ್ಟೇ ಹೊಣೆ ಮಾಡಿ ಪ್ರಭಾವಿಗಳು ನುಣುಚಿಕೊಳ್ಳುವ ಯತ್ನ ನಡೆಯುತ್ತಿದೆ ಎಂಬ ಟೀಕೆಗಳು ಜೋರಾಗಿವೆ.
eesanje/url_46_129_6.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಸಚಿವ ಬಿ.ನಾಗೇಂದ್ರ ತಲೆದಂಡಕ್ಕೆ ಪ್ರತಿಪಕ್ಷ ಬಿಜೆಪಿ ರಾಜ್ಯಾದ್ಯಂತ ಹೋರಾಟ
2
+ ಬೆಂಗಳೂರು, ಮೇ 29-ಕರ್ನಾಟಕ ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಅಧೀಕ್ಷಕ ಚಂದ್ರಶೇಖರನ್‌ ಅನುಮಾನಸ್ಪದ ಆತಹತ್ಯೆ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ತಲೆದಂಡಕ್ಕೆ ಪ್ರತಿಪಕ್ಷ ಬಿಜೆಪಿ ರಾಜ್ಯಾದ್ಯಂತ ಹೋರಾಟಕ್ಕೆ ಸಜ್ಜಾಗುತ್ತಿದೆ.
3
+ ಆತಹತ್ಯೆ ಮಾಡಿಕೊಳ್ಳುವ ಮುನ್ನ ಚಂದ್ರಶೇಖರನ್‌ ಬರೆದಿದ್ದಾರೆ ಎನ್ನಲಾದ ಡೆತ್‌ನೋಟ್‌ನಲ್ಲಿ ನನಗೆ ಸಾಕಷ್ಟು ಒತ್ತಡ ಮತ್ತು ಬೆದರಿಕೆ ಇತ್ತು ಎಂದು ಉಲ್ಲೇಖ ಮಾಡಿರುವುದನ್ನು ಅಸ್ತ್ರ ಮಾಡಿಕೊಂಡಿರುವ ಬಿಜೆಪಿ, ಹಿಂದುಳಿದ ವರ್ಗಗಳ ಇಲಾಖೆಯ ಸಚಿವರೂ ಆಗಿರುವ ನಾಗೇಂದ್ರ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂಬ ಹೋರಾಟಕ್ಕೆ ಅಣಿಯಾಗುತ್ತಿದೆ.
4
+ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶಿಸಿದ್ದೇವೆ ಎಂದು ಸಚಿವರು ಹೇಳಿಕೊಳ್ಳುತ್ತಿದ್ದಾರೆ. ಈ ತನಿಖಾ ಸಂಸ್ಥೆಯು ಸರ್ಕಾರದ ಅಡಿಯಲ್ಲೇ ಇರುವ ಕಾರಣ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. ಒಂದು ವೇಳೆ ಸಚಿವರ ಪಾತ್ರ ಇರುವುದು ಗೊತ್ತಾದರೆ ಮುಜುಗರದಿಂದ ತಪ್ಪಿಸಿಕೊಳ್ಳಲು ಸರ್ಕಾರ ಸಚಿವರ ರಕ್ಷಣೆಗೆ ನಿಲ್ಲಬಹುದು. ಹೀಗಾಗಿ ನಾಗೇಂದ್ರ ಮೊದಲು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಇಲ್ಲವೇ ಮುಖ್ಯಮಂತ್ರಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂಬುದು ಬಿಜೆಪಿಯ ಒತ್ತಾಸೆಯಾಗಿದೆ.
5
+ ಎರಡು ದಿನಗಳ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿರುವ ಬಿಜೆಪಿ ನಂತರ ಹಂತಹಂತವಾಗಿ ರಾಜ್ಯಾದ್ಯಂತ ಹೋರಾಟ ನಡೆಸಲು ರೂಪುರೇಷೆಗಳನ್ನು ಸಿದ್ಧಪಡಿಸಿದೆ.ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾಗಿದ್ದ ಕೆ.ಎಸ್‌‍.ಈಶ್ವರಪ್ಪ ಅವರ ಪ್ರಕರಣದಲ್ಲಿ ಅಂದು ಪ್ರತಿಪಕ್ಷವಾಗಿದ್ದ ಕಾಂಗ್ರೆಸ್‌‍ ರಾಜೀನಾಮೆ ನೀಡುವವರೆಗೂ ಬಿಟ್ಟಿರಲಿಲ್ಲ.
6
+ ಇದೀಗ ಈ ಅಸ್ತ್ರವನ್ನೇ ಶಸಾ್ತ್ರಸ್ತ್ರವನ್ನಾಗಿ ಮಾಡಿಕೊಳ್ಳಲು ಮುಂದಾಗಿರುವ ಬಿಜೆಪಿ, ನಾಗೇಂದ್ರ ರಾಜೀನಾಮೆ ನೀಡಲೇಬೇಕೆಂದು ಹೋರಾಟಕ್ಕೆ ಆಗ್ರಹಿಸಿದೆ.ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ನೇತೃತ್ವದಲ್ಲಿ ಹೋರಾಟಕ್ಕೆ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲಾ, ತಾಲ್ಲೂಕು ಮಟ್ಟದಿಂದ ಹಿಡಿದು ಜಿಲ್ಲಾ ಮಟ್ಟದವರೆಗೂ ಹೋರಾಟವನ್ನು ಹಂತಹಂತವಾಗಿ ನಡೆಸಬೇಕೆಂದು ಘಟಕಗಳಿಗೆ ಸೂಚನೆ ನೀಡಲಾಗಿದೆ.
7
+ ಚಂದ್ರಶೇಖರನ್‌ ಆತಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. ಪ್ರಕರಣದ ತನಿಖೆ ಸಿಐಡಿಗೆ ನೀಡಿದರೂ, ನೈತಿಕ ಹೊಣೆ ಹೊತ್ತು ಸಚಿವರು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ನ��ಯಕರ ಆಗ್ರಹವಾಗಿದೆ.
8
+ ವಾಲೀಕಿ ನಿಗಮದ ಅಧಿಕಾರಿ ಆತಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಆಕೋಶ ವ್ಯಕ್ತಪಡಿಸಿದ್ದರು. ಚಂದ್ರಶೇಖರನ್‌ ಆತಹತ್ಯೆ ಪ್ರಕರಣ ಒಂದು ಸ್ಯಾಂಪಲ್‌ ಅಷ್ಟೇ. ಇಂತಹ ನೂರಾರು ಅಧಿಕಾರಿಗಳು ಒತ್ತಡದಲ್ಲಿದ್ದಾರೆ. ಪಾರದರ್ಶಕ ಆಡಳಿತ ಅಂದಿದ್ದು ಸಿದ್ದರಾಮಯ್ಯ, ಇದೇನಾ? ಅಧಿಕಾರಿಯಿಂದಲೇ ಚೆಕ್‌ ಬರೆಸಿ ಬಲಿ ಕೊಟ್ಟಿದ್ದಾರೆ ಎಂದರು.
9
+ ಅಧಿಕಾರಿಗಳು ಇಂಥ ಕೆಲಸ ಮಾಡ್ಕೋಬೇಡಿ, ಆತಹತ್ಯೆ ಕೆಲಸಕ್ಕೆ ಮುಂದಾಗಬೇಡಿ. ಅಧಿಕಾರಿಗಳ ಪರ ಬಿಜೆಪಿ ಇದೆ. ಗೂಂಡಾಗಳು ಬೀದಿಗೆ ಬಂದಿದ್ದಾರೆ. ಅಧಿಕಾರಿ ಆತಹತ್ಯೆಗೆ ಸಿಎಂ ಅವರೇ ನೇರ ಜವಾಬ್ದಾರರು ಹಾಗೂ ಇಲಾಖೆ ಸಚಿವರು ಜವಾಬ್ದಾರರು. ಪ್ರಕರಣದ ತನಿಖೆ ಸಿಬಿಐಗೆ ವಹಿಸಲಿ, ಆಗ ಸತ್ಯ ಹೊರಗೆ ಬರುತ್ತೆ ಎಂದು ಆಗ್ರಹಿಸಿದ್ದರು.
10
+ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಎಸ್‌‍.ಈಶ್ವರಪ್ಪ ರಾಜೀನಾಮೆ ಕೊಡಿಸುವಲ್ಲಿ ಕಾಂಗ್ರೆಸ್‌‍ ಯಶಸ್ವಿ ಆಗಿತ್ತು. ವಿಧಾನಸೌಧದಲ್ಲಿ ಕಾಂಗ್ರೆಸ್‌‍ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಹಮಿಕೊಂಡಿತ್ತು. ಕಾಂಗ್ರೆಸ್‌‍ ಪ್ರತಿಭಟನೆಗೆ ಮಣಿದು ಈಶ್ವರಪ್ಪ ಅನಿವಾರ್ಯವಾಗಿ ರಾಜೀನಾಮೆ ಕೊಡಬೇಕಾಗಿ ಬಂತು. ಇದೀಗ ಇದೇ ಮಾದರಿಯಲ್ಲಿ ಬಿಜೆಪಿ ಹೋರಾಟ ರೂಪಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ.
eesanje/url_46_129_7.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ಮ್ಯೂನಿಚ್‌ನಿಂದ ಬೆಂಗಳೂರಿಗೆ ಟಿಕೆಟ್‌ ಬುಕ್ ಮಾಡಿದ ಪ್ರಜ್ವಲ್‌ ರೇವಣ್ಣ
2
+ ಬೆಂಗಳೂರು, ಮೇ 29- ಲೈಂಗಿಕ ಕಿರುಕುಳದ ಆರೋಪಕ್ಕೆ ಸಿಲುಕಿ ಜೆಡಿಎಸ್‌‍ನಿಂದ ಅಮಾನತುಗೊಂಡಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರು ಮೇ 30 ರಂದು ಮಧ್ಯರಾತ್ರಿ ಮ್ಯೂನಿಚ್‌ನಿಂದ ಬೆಂಗಳೂರಿಗೆ ಹಿಂತಿರುಗಲು ವಿಮಾನ ಟಿಕೆಟ್‌ ಕಾಯ್ದಿರಿಸಿದ್ದಾರೆ.
3
+ ನಾಳೆ ಮಧ್ಯರಾತ್ರಿ 12.30 ಕ್ಕೆ ಬೆಂಗಳೂರಿಗೆ ಬರುತ್ತಿದ್ದಂತೆಯೇ ವಿಮಾನ ನಿಲ್ದಾಣದಲ್ಲೇ ಬಂಧನಕ್ಕೆ ಒಳಗಾಗುವ ಸಾಧ್ಯತೆಗಳಿವೆ. ಎಸ್‌‍ಐಟಿ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿಯೇ ಪ್ರಜ್ವಲ್‌ ಬಂಧನಕ್ಕೆ ಸಜ್ಜಾಗಿದ್ದಾರೆ. ಮಧ್ಯರಾತ್ರಿ ಬಂಧಿಸುವ ಕಾರಣ ಜೂನ್‌ 1ಕ್ಕೆ ವಿಚಾರಣೆ ನಡೆಯಬಹುದು.
4
+ ಜೆಡಿಎಸ್‌‍ ವರಿಷ್ಠ ಹೆಚ್‌.ಡಿ.ದೇವೇಗೌಡರ 33 ವರ್ಷದ ಮೊಮಗ ಪ್ರಜ್ವಲ್‌ ರೇವಣ್ಣ ತನ್ನ ಹೇಳಿಕೆ ಬಿಡುಗಡೆ ಮಾಡಿದ ಬೆನ್ನಲ್ಲೇ ಜರ್ಮನಿಯ ಮ್ಯೂನಿಚ್‌ನಿಂದ ಬೆಂಗಳೂರಿಗೆ ವಿಮಾನ ಟಿಕೆಟ್‌ ಬುಕ್‌ ಮಾಡಿದ್ದಾರೆ. ಲ್ತುಾನ್ಸಾ ಏರ್‌ಲೈನ್‌್ಸನಲ್ಲಿ ಬ್ಯುಸಿನೆಸ್‌‍ ಕ್ಲಾಸ್‌‍ ಟಿಕೆಟ್‌ ಬುಕ್‌ ಮಾಡಿಕೊಂಡಿದ್ದು, ಮೇ 30ರಂದು ಜರ್ಮನಿಯ ಮ್ಯೂನಿಚ್‌ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.
5
+ ಹಾಸನ ಲೋಕಸಭೆ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಮರು ಆಯ್ಕೆ ಬಯಸಿರುವ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಸಾರ್ವಜನಿಕವಾಗಿ ಬಹಿರಂಗಗೊಂಡ ನಂತರ ಬಂಧನದ ಭೀತಿಯಿಂದ ತಕ್ಷಣ ವಿದೇಶಕ್ಕೆ ಪಲಾಯನ ಮಾಡಿದ್ದರು.
6
+ ಇದರ ಬಗ್ಗೆ ತನಿಖೆಗೆ ಆದೇಶಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ ಎಂಬ ಸುದ್ದಿ ಹೊರಬಿದ್ದ ತಕ್ಷಣವೇ ಸರ್ಕಾರ ತನಿಖೆಗೆ ಎಸ್‌‍ ಐಟಿ ರಚನೆ ಮಾಡಿತ್ತು. ಇದುವರೆಗೆ ಪ್ರಜ್ವಲ್‌ ವಿರುದ್ಧ ಎರಡು ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ.
7
+ ಇನ್ನು, ಈ ಹಿಂದೆ ಕೂಡ ಸಂಸದ ಪ್ರಜ್ವಲ್‌ ರೇವಣ್ಣ ಜರ್ಮನಿಯಿಂದ ಬೆಂಗಳೂರಿಗೆ ಟಿಕೆಟ್‌ ಬುಕ್‌ ಮಾಡಿದ್ದರು. ಆದರೆ., ಕೊನೆ ಕ್ಷಣದಲ್ಲಿ ಅದು ರದ್ದಾಗಿತ್ತು. ಟಿಕೆಟ್‌ ಕ್ಯಾನ್ಸಲ್‌ ಮಾಡಿಸಿ ನಾಲ್ಕು ದಿನಗಳಾಗಿದ್ದರೂ ಪ್ರಜ್ವಲ್‌ ಬುಕ್ಕಿಂಗ್‌ ಮಾಡಿದ ಹಣ ವಾಪಸ್‌‍ ಪಡೆದಿರಲಿಲ್ಲ.
8
+ ಮರುಬುಕಿಂಗ್‌ಗಾಗಿ ಹಣವನ್ನು ಮುಂಗಡವಾಗಿ ಹಾಗೆಯೇ ಬಿಟ್ಟಿದ್ದರು. ಆದರೆ, ಅವರು ವಿಮಾನ ನಿಲ್ದಾಣಕ್ಕೆ ಬರುತ್ತಾರೆ ಎಂಬ ಮಾಹಿತಿ ಮೇರೆಗೆ ಎಸ್‌‍ಐಟಿ (ವಿಶೇಷ ತನಿಖಾ ತಂಡ) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಮುನ್ನೆಚ್ಚರಿಕೆ ವಹಿಸಿತ್ತು.
9
+ ಈಗಾಗಲೇ ಬೆಂಗಳೂರಿಗೆ ಬರಲು ಎರಡು ಬಾರಿ ವಿಮಾನ ಟಿಕೆಟ್‌ ಬುಕ್‌ ಮಾಡಿ, ಕೊನೆ ಕ್ಷಣದಲ್ಲಿ ಟಿಕೆಟ್‌ ರದ್ದು ಮಾಡಿ, ಎಸ್‌‍ಐಟಿ ಅಧಿಕಾರಿಗಳನ್ನು ಆಟವಾಡಿಸಿದ್ದರು. ಈಗ ತಾವೇ ವಿಶೇಷ ತನಿಖಾ ತಂಡದ ಮುಂದೆ ಹಾಜರಾಗುವುದಾಗಿ ಹೇಳ���ಕೆ ನೀಡಿದ್ದಾರೆ.
10
+
11
+
12
+ ಹೀಗಾಗಿ ಪ್ರಜ್ವಲ್‌ ರೇವಣ್ಣ ಹೇಳಿದಂತೆಯೇ ಮೇ 30ರಂದು ಬೆಂಗಳೂರಿಗೆ ಬರುತ್ತಾರಾ..? ಇಲ್ಲ ಕಳೆದೆರಡು ಬಾರಿಯಂತೆ ಮತ್ತೆ ಏನಾದರೂ ಆಟವಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.ಪ್ರಕರಣದ ಬಳಿಕ ಮೊದಲ ಬಾರಿಗೆ ಜನರ ಎದುರು ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ ಮೊದಲು ನನ್ನ ತಂದೆ ತಾಯಿ, ನನ್ನ ತಾತ, ಕುಮಾರಣ್ಣ, ಕರ್ನಾಟಕದ ಜನತೆ ಮತ್ತು ಎಲ್ಲಾ ಪಕ್ಷದ ಕಾರ್ಯಕರ್ತರಲ್ಲಿ ಕ್ಷಮೆ ಯಾಚಿಸುತ್ತೇನೆ ಎಂದಿದ್ದರು.
13
+ ವಿದೇಶಕ್ಕೆ ಹೋಗುವ ಬಗ್ಗೆ ಮೊದಲೇ ಪ್ಲಾನ್‌ ಆಗಿತ್ತು. ಆಗ ನನ್ನ ಮೇಲೆ ಯಾವುದೇ ಆರೋಪ ಇರಲಿಲ್ಲ. ನಾನು ವಿದೇಶದಲ್ಲಿದ್ದಾಗ ಯೂಟ್ಯೂಬ್‌ ನ್ಯೂಸ್‌‍ ನೋಡಿ ನನ್ನ ಮೇಲೆ ಗಂಭೀರ ಆರೋಪ ಬಂದಿರುವುದು ಕಂಡುಬಂದಿದೆ. ಇದಾದ ನಂತರ ನನ್ನ ಹೆಸರನ್ನು ರಾಜಕೀಯವಾಗಿ ಬಳಸಿಕೊಂಡಿದ್ದಾರೆ. ಎಸ್‌‍ಐಟಿ ನೋಟಿಸ್‌‍ ನೀಡಿದ ವಿಚಾರ ಗೊತ್ತಾಯಿತು.
14
+ ನಾನು ರಾಜಕೀಯವಾಗಿ ಬೆಳೆಯಬಾರದು ಎಂಬ ಕಾರಣಕ್ಕೆ ನನ್ನ ಮೇಲೆ ಪಿತೂರಿ ಮಾಡಿದ್ದಾರೆ. ಒಂದು ದಿನದ ನಂತರ, ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ಮತ್ತು ಇತರ ಹಿರಿಯ ಕಾಂಗ್ರೆಸ್‌‍ ನಾಯಕರು ನನ್ನ ವಿರುದ್ಧ ಬಹಿರಂಗ ವೇದಿಕೆಗಳಲ್ಲಿ ಪ್ರಚಾರ ಮಾಡಲು ಪ್ರಾರಂಭಿಸಿದರು ಮತ್ತು ನನ್ನ ವಿರುದ್ಧ ರಾಜಕೀಯವಾಗಿ ಪಿತೂರಿ ನಡೆಸಿದರು.
15
+ ನಾನು ಖಿನ್ನತೆಗೆ ಜಾರಿದ್ದೆ .ಈ ಖಿನ್ನತೆಯಿಂದ ಹೊರ ಬರಲು ಸಮಯ ಬೇಕಿತ್ತು. ಮೇ 31ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಎಸ್‌‍ಐಟಿ ಮುಂದೆ ಹಾಜರಾಗುತ್ತೇನೆ. ನಾನು ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತೇನೆ. ನ್ಯಾಯಾಲಯದ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ. ನನ್ನ ವಿರುದ್ಧದ ಪ್ರಕರಣಗಳು ಸುಳ್ಳಾಗಿದ್ದು, ಅದರಿಂದ ಹೊರಬರುವ ವಿಶ್ವಾಸವಿದೆ ಎಂದು ಹೇಳಿದ್ದರು.
eesanje/url_46_129_8.txt ADDED
@@ -0,0 +1,4 @@
 
 
 
 
 
1
+ ಪಕ್ಷವಿರೋಧಿ ಚಟುವಟಿಕೆ : ಜೆಡಿಎಸ್‌‍ನಿಂದ ಯಶೋಧಾ ರಾಜಣ್ಣ ಅಮಾನತ್ತು
2
+ ಬೆಂಗಳೂರು, ಮೇ 29-ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಮಹಾಲಕ್ಷ್ಮಿ ಲೇಔಟ್‌ ವಿಧಾನ ಸಭಾ ಕ್ಷೇತ್ರದ ಮುಖಂಡರಾದ ಯಶೋಧಾ ರಾಜಣ್ಣ ಅವರನ್ನು ಜೆಡಿಎಸ್‌‍ ಪ್ರಾಥಮಿಕ ಸದಸ್ಯತ್ವದಿಂದ ಅಮಾನತ್ತು ಮಾಡಲಾಗಿದೆ.
3
+ ಜೆಡಿಎಸ್‌‍ ನಗರ ಘಟಕದ ಅಧ್ಯಕ್ಷ ಹೆಚ್‌.ಎಂ.ರಮೇಶ್‌ಗೌಡ ಅವರು ಅಮಾನತ್ತು ಆದೇಶ ಹೊರಡಿಸಿದ್ದಾರೆ. ಯಶೋಧಾ ರಾಜಣ್ಣ ಅವರು ಕಳೆದ ಹಲವು ದಿನಗಳಿಂದ ನಿರಂತರವಾಗಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿಕೊಂಡು ಬಂದಿದ್ದರು. ಈ ಬಗ್ಗೆ ಹಲವಾರು ಬಾರಿ ಅವರಿಗೆ ಎಚ್ಚರಿಕೆಯನ್ನೂ ನೀಡಲಾಗಿತ್ತು. ಆದರೂ ಅವರು ಪಕ್ಷದ ಆದೇಶವನ್ನು ಧಿಕ್ಕರಿಸಿ ಪಕ್ಷ ವಿರೋಧಿ ಕೃತ್ಯಗಳನ್ನು ಮುಂದುವರಿಸಿದ್ದರು ಎಂದು ರಮೇಶ್‌ಗೌಡ ತಿಳಿಸಿದ್ದಾರೆ.
4
+ ಅಲ್ಲದೆ, ಮಹಾಲಕ್ಷ್ಮಿ ಲೇಔಟ್‌ನ ಜೆಡಿಎಸ್‌‍ ಪಕ್ಷದ ಮುಖಂಡರು ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್‌.ಡಿ.ದೇವೇಗೌಡರು ಹಾಗೂ ರಾಜ್ಯಾಧ್ಯಕ್ಷರಾದ ಹೆಚ್‌.ಡಿ.ಕುಮಾರಸ್ವಾಮಿ ಅವರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಯಶೋಧಾ ರಾಜಣ್ಣ ಅವರನ್ನು ತಕ್ಷಣವೇ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
eesanje/url_46_129_9.txt ADDED
@@ -0,0 +1,7 @@
 
 
 
 
 
 
 
 
1
+ ಪರಿಷತ್‌ ಚುನಾವಣೆ : ಭಾನುವಾರ ಜೆಡಿಎಸ್‌‍ ಸಭೆ, ಜವರಾಯಿಗೌಡರಿಗೆ ಟಿಕೆಟ್‌ ಸಾಧ್ಯತೆ
2
+ ಬೆಂಗಳೂರು, ಮೇ 29-ವಿಧಾನಸಭೆ ಸದಸ್ಯರಿಂದ ವಿಧಾನ ಪರಿಷತ್‌ನ 11 ಸದಸ್ಯ ಸ್ಥಾನಗಳಿಗೆ ನಡೆಯುವ ದ್ವೈವಾರ್ಷಿಕ ಚುನಾಣೆಗೆ ಸಂಬಂಧಿಸಿದ ಜೆಡಿಎಸ್‌‍ ಅಭ್ಯರ್ಥಿ ಆಯ್ಕೆ ಕುರಿತ ಸಭೆ ಮೇ 2ರಂದು ನಡೆಯಲಿದೆ.
3
+ ವಿಧಾನ ಪರಿಷತ್‌ ಚುನಾವಣೆಗೆ ಸ್ಪರ್ಧಿಸಲು ನಾಲ್ವರು ಆಕಾಂಕ್ಷಿಗಳು ಜೆಡಿಎಸ್‌‍ನಲ್ಲಿದ್ದಾರೆ. ಭಾನುವಾರ ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಬಿ ಫಾರಂ ನೀಡಲಾಗುತ್ತದೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ. ಸೋಮವಾರ ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿರುವ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಈಗಾಗಲೇ ವರಿಷ್ಠರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
4
+ ನಾಲ್ವರು ಆಕಾಂಕ್ಷಿಗಳಿದ್ದರೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್‌‍ ಅಭ್ಯರ್ಥಿಯಾಗಿದ್ದ ಟಿ.ಎನ್‌.ಜವರಾಯಿಗೌಡ ಅವರ ಹೆಸರು ಮುಂಚೂಣಿಯಲ್ಲಿದೆ. ಯಶವಂತಪುರ ಕ್ಷೇತ್ರದಲ್ಲಿ ಮೂರು ಸಾರ್ವತ್ರಿಕ ಚುನಾವಣೆ ಹಾಗೂ ಒಂದು ಉಪ ಚುನಾವಣೆಯಲ್ಲಿ ಜೆಡಿಎಸ್‌‍ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಜೆಡಿಎಸ್‌‍ನ ನಿಷ್ಠಾವಂತ ಕಾರ್ಯಕರ್ತರಾಗಿರುವ ಹಿನ್ನೆಲೆಯಲ್ಲಿ ವರಿಷ್ಠರು ಮೇಲನೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ.
5
+ ಲೋಕಸಭೆ ಚುನಾವಣೆಯ ನಂತರ ನಡೆಯುತ್ತಿರುವ ಚುನಾವಣೆಗಳಲ್ಲಿ ಜೆಡಿಎಸ್‌‍ ಪಕ್ಷವು ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುತ್ತಿದೆ. ಹೀಗಾಗಿ ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿರುವುದರಿಂದ ಮುಂದೆ ಆ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಟ್ಟರೆ, ಜವರಾಯಿಗೌಡ ಅವರ ಸ್ಪರ್ಧೆಗೆ ಅವಕಾಶವಿಲ್ಲದಂತಾಗುತ್ತದೆ ಎಂಬ ಆಲೋಚನೆ ವರಿಷ್ಠರಲ್ಲಿರಬಹುದು.
6
+ ಜೂನ್‌ 17ರಂದು ನಿವೃತ್ತರಾಗುವ ವಿಧಾನ ಪರಿಷತ್‌ ಸದಸ್ಯ ಬಿ.ಎಂ.ಫಾರೂಕ್‌ ಅವರು ಮರು ಸ್ಪರ್ಧೆ ಮಾಡಲು ಜೆಡಿಎಸ್‌‍ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ರಾಜ್ಯಸಭೆ ಮಾಜಿ ಸದಸ್ಯ ಕುಪೇಂದ್ರರೆಡ್ಡಿ ಅವರೂ ವಿಧಾನ ಪರಿಷ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಅಲ್ಲದೆ, ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಗೂ ಬೆಂಗಳೂರು ಮಹಾನಗರ ಜೆಡಿಎಸ್‌‍ ಘಟಕದ ಅಧ್ಯಕ್ಷ ಎಚ್‌.ಎಂ.ರಮೇಶ್‌ಗೌಡ ಅವರು ಕೂಡ ಆಕಾಂಕ್ಷಿಯಾಗಿದ್ದಾರೆ.
7
+ ಫಾರೂಕ್‌ ಮತ್ತು ಕುಪೇಂದ್ರರೆಡ್ಡಿ ಅವರು ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್‌‍ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದಾರೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ಸಭೆಯಲ್ಲಿ ವರಿಷ್ಠರು ಯಾವ ನಿರ್ಧಾರ ಕೈಗೊಳ್ಳುವರೋ ಕಾದುನೋಡಬೇಕು. ಕೊನೆ ಕ್ಷಣದಲ್ಲಿ ಯಾರಿಗೆ ಟಿಕೆಟ್‌ ಸಿಗಲಿದೆ ಎಂಬ ಕುತೂಹಲವಿದೆ.
eesanje/url_46_12_1.txt ADDED
@@ -0,0 +1,8 @@
 
 
 
 
 
 
 
 
 
1
+ ಆಪತ್ಕಾಲಯಾನ ಆ್ಯಂಬುಲೆನ್ಸ್ ಸೇವೆಗೆ ಚಾಲನೆ
2
+
3
+ ಬೆಂಗಳೂರು,ಸೆ.23-ಅಪಘಾತದಂತಹ ತುರ್ತು ಸಂದರ್ಭದಲ್ಲಿ ಜೀವ ರಕ್ಷಣೆ ಮಾಡುವ ಮಹದುದ್ದೇಶದಿಂದ ಮುಖ್ಯಮಂತ್ರಿಗಳ ಆಪತ್ಕಾಲಯಾನ ಆ್ಯಂಬುಲೆನ್ಸ್ ಸೇವೆಯನ್ನು ಆರಂಭಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.
4
+ ವಿಧಾನಸೌಧದ ಮೆಟ್ಟಿಲುಗಳ ಮೇಲೆ 65 ನೂತನ ಆ್ಯಂಬುಲೆನ್ಸ್ ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಮೂರ್ನಾಲ್ಕು ವರ್ಷಗಳ ಸರಾಸರಿಯಂತೆ ರಾಜ್ಯದಲ್ಲಿ ಪ್ರತಿವರ್ಷ 40 ಸಾವಿರ ಅಪಘಾತಗಳಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದು ವಿವರಿಸಿದರು.
5
+ ಪ್ರಸ್ತುತ ಚಾಲ್ತಿಯಲ್ಲಿರುವ 108 ಆರೋಗ್ಯ ಕವಚ ಸೇವೆಯಲ್ಲಿ ಇರುವ ಆ್ಯಂಬುಲೆನ್ಸ್ ಗಳು ರೋಗಿಗಳನ್ನು ಅಥವಾ ಗಾಯಾಳುಗಳನ್ನು ಆಸ್ಪತ್ರೆಗೆ ತಲುಪಿಸಲು ಸೀಮಿತವಾಗಿದೆ. ಅವುಗಳಲ್ಲಿ ಜೀವರಕ್ಷಕ ಸಲಕರಣೆಗಳು ಇವೆ. ಅಲ್ಲಿಂದ ಜಿಲ್ಲಾಸ್ಪತ್ರೆಗೆ ಅಥವಾ ಉನ್ನತ ಚಿಕಿತ್ಸೆಗೆ ಕರೆದೊಯ್ಯಬೇಕಾದರೆ ಸಮಸ್ಯೆಗಳು ಎದುರಾಗುತ್ತವೆ.
6
+ ಹೀಗಾಗಿ ಅಪಘಾತದಲ್ಲಿ ತೊಂದರೆಗೊಳಗಾದವರಿಗಾಗಿಯೇ ವಿಶೇಷ ಸೇವೆ ಒದಗಿಸಲು ಆಪತ್ಕಾಲಯಾನ ಆ್ಯಂಬುಲೆನ್ಸ್ ಗಳನ್ನು ಆರಂಭಿಸಲಾಗುತ್ತಿದೆ ಎಂದು ಹೇಳಿದರು. 65 ಆ್ಯಂಬುಲೆನ್ಸ್ ಗಳಲ್ಲಿ 26 ಅಡ್ವಾನ್ಸ್ ಲೈಫ್‌ ಸಪೋರ್ಟ್‌ ಸೌಲಭ್ಯ ಹೊಂದಿವೆ. ವೆಂಟಿಲೇಟರ್‌, ಔಷಧಿ ಹಾಗೂ ತಂತ್ರಜ್ಞರನ್ನು ಒಳಗೊಂಡಿವೆ.
7
+ 39 ಬೇಸಿಕ್‌ ಲೈಫ್‌ ಸಪೋರ್ಟ್‌ ಆ್ಯಂಬುಲೆನ್ಸ್ ಗಳು ತಂತ್ರಜ್ಞರು ಹಾಗೂ ಕನಿಷ್ಟ ಸೌಲಭ್ಯಗಳನ್ನು ಒಳಗೊಂಡಿವೆ. ಅಪಘಾತಗಳ ಪ್ರಕರಣಗಳು ಹೆಚ್ಚಿರುವ ಪ್ರದೇಶಗಳನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ಬ್ಲಾಕ್‌ಸ್ಪಾಟ್‌ಗಳನ್ನು ಗುರುತಿಸಿದ್ದು, ಆ ಸುತ್ತಮುತ್ತಲಿನ ತಾಲ್ಲೂಕು ಅಥವಾ ಜಿಲ್ಲಾಸ್ಪತ್ರೆಗಳಿಗೆ ಟ್ರಾಮಾಕೇರ್‌ ಸೌಲಭ್ಯಗಳನ್ನು ಪೂರೈಸುವುದು ಹಾಗೂ ಅಲ್ಲಿನ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಲು 25 ಕೋಟಿ ರೂ.ಗಳನ್ನು ಬಳಕೆ ಮಾಡಲಾಗುವುದು. ಉಳಿದ 20 ಕೋಟಿ ರೂ.ಗಳಲ್ಲಿ ಆ್ಯಂಬುಲೆನ್‌್ಸಗಳನ್ನು ಖರೀದಿಸಲಾಗಿದೆ ಎಂದರು.
8
+ ಈ ವರ್ಷ ರಸ್ತೆ ಸುರಕ್ಷತಾ ನಿಧಿಯಡಿ 45 ಕೋಟಿ ರೂ.ಗಳನ್ನು ನೀಡಲಾಗಿದೆ. ಮುಂದಿನ ವರ್ಷ ಹೆಚ್ಚಿನ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಆರೋಗ್ಯ ಇಲಾಖೆಗೆ ರಸ್ತೆ ಸುರಕ್ಷತಾ ನಿಧಿಯಡಿ ಹೆಚ್ಚಿನ ಅನುದಾನ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
eesanje/url_46_12_10.txt ADDED
@@ -0,0 +1,6 @@
 
 
 
 
 
 
 
1
+ ಮುನಿರತ್ನ ಹೆಸರಿದ್ದ ಸ್ಲಾಬ್‌ಗಳಿಗೆ ಸಿಮೆಂಟ್‌ ಬಳಿಯುತ್ತಿರುವ ಕಾಂಗ್ರೆಸ್ಸಿಗರು
2
+ '
3
+ ಬೆಂಗಳೂರು,ಸೆ.21-ಕೊಲೆ ಬೆದರಿಕೆ, ಜಾತಿನಿಂದನೆ ಹಾಗೂ ಹನಿಟ್ರಾಪ್ ಮಾಡಿಸಿರುವ ಆರೋಪಕ್ಕೆ ಗುರಿಯಾಗಿರುವ ಶಾಸಕ ಮುನಿರತ್ನ ವಿರುದ್ಧ ರಾಜರಾಜೇಶ್ವರಿ ನಗರದಲ್ಲಿ ಆಕ್ರೋಶ ಭುಗಿಲೆದ್ದಿದೆ.
4
+ ಹೀಗಾಗಿ ಅಲ್ಲಿನ ಜನ ಮುನಿರತ್ನ ಎಂಬ ಹೆಸರು ಕಂಡ ಕಂಡ ಕಡೆಗಳೆಲ್ಲ ಮಸಿ ಬಳಿಯತೊಡಗಿದ್ದಾರೆ. ಮಾತ್ರವಲ್ಲ ಚರಂಡಿ ಸ್ಲಾಬ್ಗಳ ಮೇಲೆ ಹಾಕಿಸಿದ್ದ ಮುನಿರತ್ನ ಎಂಬ ಹೆಸರಿಗೆ ಸಿಮೆಂಟ್ ಬಳಿದು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
5
+ ಲಗ್ಗೆರೆ ಸುತ್ತಮುತ್ತ ಯುವ ಕಾಂಗ್ರೆಸ್ ಕಾರ್ಯಕರ್ತರು ಚರಂಡಿಗಳ ಸ್ಲಾಬ್ಗಳ ಮೇಲೆ ಬರೆಸಲಾಗಿದ್ದ ಮುನಿರತ್ನ ಎಂಬ ಹೆಸರಿಗೆ ಸಿಮೆಂಟ್ ಹಾಕಿ ಮರೆ ಮಾಚುತ್ತಿರುವ ದೃಶ್ಯಗಳು ಕಂಡು ಬಂದಿವೆ.
6
+ ಶಾಸಕರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮುನಿರತ್ನ ಅವರು ಚರಂಡಿ ಕಾಮಗಾರಿ ನಡೆಯುತ್ತಿದ್ದ ಎಲ್ಲ ಸ್ಲಾಬ್ಗಳ ಮೇಲೆ ತಮ್ಮ ಹೆಸರನ್ನು ಬರೆಸಿಕೊಂಡಿದ್ದರು.ಆರ್.ಆರ್.ನಗರ ಕ್ಷೇತ್ರದ ಬಹುತೇಕ ಚರಂಡಿ ಸ್ಲಾಬ್ಗಳ ಮೇಲೆ ಮುನಿರತ್ನ ಅವರ ಹೆಸರು ರಾರಾಜಿಸುತ್ತಿದ್ದವು. ಇದೀಗ ಕಾಂಗ್ರೆಸ್ ಕಾರ್ಯಕರ್ತರು ಎಲ್ಲಾ ಸ್ಲಾಬ್ಗಳಿಗೂ ಸಿಮೆಂಟ್ ಬಳಿಯುತ್ತಿದ್ದಾರೆ.
eesanje/url_46_12_11.txt ADDED
@@ -0,0 +1,6 @@
 
 
 
 
 
 
 
1
+ ದಸರಾ ಆನೆಗಳ ಕಾದಾಟ, ಮಾವುತರಿಗೆ ಪೀಕಲಾಟ
2
+ -
3
+ ಮೈಸೂರು,ಸೆ.21-ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿರುವ ಗಜಪಡೆಗಳು ಕಳೆದ ರಾತ್ರಿ ದಿಢೀರನೇ ಕಾದಾಟಕ್ಕಿಳಿದಿದ್ದು, ಅರಮನೆಯಿಂದ ಹೊರಬಂದ ಪರಿಣಾಮ ಕೆಲಕಾಲ ಪಟ್ಟಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
4
+ ನಿನ್ನೆ ಸಂಜೆ ತುಂತುರು ಮಳೆಯಿದ್ದ ಕಾರಣ ಆನೆಗಳಿಗೆ ಅರಮನೆ ಆವರಣದಲ್ಲಿ ತಾಲೀಮು ನಡೆಸಲಾಗಿತ್ತು. ಈ ವೇಳೆ 7.45 ರ ಸಮಯದಲ್ಲಿ ಧನಂಜಯ ಹಾಗೂ ಕಂಜನ್ ಆನೆಗಳನಡುವೆ ಕಾದಾಟ ನಡೆದಿದೆ.ಮಾವುತರು ಊಟ ಮಾಡುವ ವೇಳೆ ಆನೆಗಳ ನಡುವೆ ಕಾಳಗ ನಡೆದ ಪರಿಣಾಮ ಆನೆಗಳು ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಕಂಜನ್ ಹಾಗೂ ಧನಂಜಯ ಆನೆಗಳು ಹೊರಬಂದಿವೆ.
5
+ ಮಾವುತನಿಲ್ಲದೆ ಕಂಜನ್ ಆನೆಯನ್ನು ಅರಮನೆಯಿಂದ ಧನಂಜಯ ಆನೆ ಹೊರಗೆ ಓಡಿಸಿಕೊಂಡು ಬಂದಿದ್ದು, ಕೆಲಕಾಲ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು.
6
+ ಆನೆಗಳು ದೊಡ್ಡಕೆರೆ ಮೈದಾನದ ಬಳಿ ಬ್ಯಾರಿಕೇಡ್ಗಳನ್ನು ತಳ್ಳಿಕೊಂಡು ರಸ್ತೆಗೆ ಪ್ರವೇಶಿಸಿವೆ. ತಕ್ಷಣ ಮಾವುತರು ಹಾಗೂ ಅರಣ್ಯ ಇಲಾಖಾಽಕಾರಿಗಳು ಸಮಯಪ್ರಜ್ಞೆಯಿಂದ ಸಂಭವಿಸಬಹುದಾದ ಅನಾಹುತ ತಪ್ಪಿದಂತಾಗಿದೆ.ಕೂಡಲೇ ಆನೆಗಳನ್ನು ಅರಮನೆಯೊಳಗೆ ಕರೆದ್ಯೊಯುವಲ್ಲಿ ಮಾವುತರು ಯಶಸ್ವಿಯಾಗಿದ್ದು, ನಾಗರಿಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
eesanje/url_46_12_12.txt ADDED
@@ -0,0 +1,6 @@
 
 
 
 
 
 
 
1
+ ಹೊಸ ಪಡಿತರ ಚೀಟಿ ಅರ್ಜಿ ಕುರಿತು ಸಚಿವ ಮುನಿಯಪ್ಪ ಮಹತ್ವದ ಹೇಳಿಕೆ
2
+
3
+ ಬೆಂಗಳೂರು, ಸೆ.21-ಪಡಿತರ ಚೀಟಿ ವ್ಯವಸ್ಥೆಯಲ್ಲಿ ಅನರ್ಹರನ್ನು ಗುರುತಿಸಲಾಗುತ್ತಿದೆ. ಹೊಸದಾಗಿ ಅರ್ಜಿ ಸಲ್ಲಿಸುವ ಅರ್ಹರನ್ನು ಪರಿಶೀಲಿಸಲಾಗುತ್ತಿದೆ. ಈ ಕಾರ್ಯಕ್ಕೆ ಸುಮಾರು ಒಂದು ತಿಂಗಳ ಕಾಲಾವಕಾಶ ಹಿಡಿಯಲಿದ್ದು, ಬಳಿಕ ಹೊಸ ಪಡಿತರ ಚೀಟಿ ನೀಡುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ.
4
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಡಿತರ ಚೀಟಿಗಳನ್ನು ಸಮೀಕ್ಷೆಗೆ ಒಳಪಡಿಸಲಾಗುತ್ತದೆ. ಬಳಿಕ ಅಂತಿಮವಾಗಿ ಅರ್ಹರನ್ನು ಉಳಿಸಿಕೊಳ್ಳಲಾಗು ವುದು. ಈ ನಡುವೆ ಹೊಸದಾಗಿ ಮತ್ತಷ್ಟು ಜನ ಬಿಪಿಎಲ್ ಕಾರ್ಡ್ ಕೇಳುತ್ತಿದ್ದಾರೆ. ಇನ್ನೊಂದು ತಿಂಗಳಲ್ಲಿ ಇದನ್ನು ಪೂರ್ಣಗೊಳಿಸಿ ನಂತರ ಅನ್ನಭಾಗ್ಯ ಯೋಜನೆಯಡಿ ಆಹಾರ ಕಿಟ್ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.
5
+ ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ನೀಡಲಾಗುವ ಪ್ರಸಾದದ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬು ಬಳಕೆಯಾಗಿದೆ ಎಂಬುದು ಆಘಾತಕಾರಿ. ಇದು ನಡೆಯಬಾರದಿತ್ತು. ಜನರ ಭಾವನಾತ್ಮಕವಾದ ವಿಚಾರದಲ್ಲಿ ಈ ರೀತಿಯ ನಡವಳಿಕೆಗಳು ಸರಿಯಲ್ಲ ಎಂದು ಹೇಳಿದರು. ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.
6
+ ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ಲಡ್ಡು ತಯಾರಿಕೆಗೆ ಅಗತ್ಯದಷ್ಟು ತುಪ್ಪ ಪೂರೈಸಲು ನಮ್ಮಲ್ಲಿ ಸಾಕಷ್ಟು ದಾಸ್ತಾನಿದೆ. ಪರಸ್ಪರ ಒಪ್ಪಂದದೊಂದಿಗೆ ತುಪ್ಪ ಪೂರೈಕೆಯಾಗುತ್ತಿದ್ದು, ವಿವಾದದಿಂದ ಯಾವುದೇ ಧಕ್ಕೆ ಆಗುವುದಿಲ್ಲ ಎಂದು ತಿಳಿಸಿದರು.ರಾಜ್ಯಸರ್ಕಾರ ಯಾವುದೇ ದ್ವೇಷದ ರಾಜಕಾರಣ ಮಾಡುತ್ತಿಲ್ಲ. ವಿರೋಧಪಕ್ಷಗಳ ಟೀಕೆಗಳು ಆಧಾರರಹಿತ ಎಂದರು.
eesanje/url_46_12_2.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ 3 ಕ್ಷೇತ್ರಗಳ ಉಪಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಹೈಕಮಾಂಡ್‌ಗೆ ರವಾನೆ
2
+ - :
3
+ ಬೆಂಗಳೂರು,ಸೆ.23– ಮುಂಬರುವ ಮೂರು ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆ,1 ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಬಿಜೆಪಿ ಸಂಭಾವನೀಯ ಅಭ್ಯರ್ಥಿಗಳ ಪಟ್ಟಿಯನ್ನು ವರಿಷ್ಠರಿಗೆ ಕಳುಹಿಸಿದೆ.
4
+ ಪಕ್ಷದ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಕೋರ್‌ ಕಮಿಟಿ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌, ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌‍. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ನಿಕಟಪೂರ್ವ ರಾಜ್ಯ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥನಾರಾಯಣ್‌, ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ, ಪುದುಚೇರಿ ರಾಜ್ಯ ಉಸ್ತುವಾರಿ ನಿರ್ಮಲ್‌ ಕುಮಾರ್‌ ಸುರಾಣ ಭಾಗವಹಿಸಿದ್ದರು.
5
+ ಸಭೆಯಲ್ಲಿ ಉಪಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡಲು ತೀರ್ಮಾನಿಸಲಾಗಿದ್ದು, ಅಂತಿಮವಾಗಿ ವರಿಷ್ಠರ ನಿರ್ಧಾರಕ್ಕೆ ಬದ್ದರಾಗಬೇಕೆಂಬ ಒಮತದ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣ ಕ್ಷೇತ್ರವನ್ನು ಎನ್‌ಡಿಎ ಮೈತ್ರಿ ಪಕ್ಷವಾದ ಜೆಡಿಎಸ್‌‍ಗೆ ಬಿಟ್ಟುಕೊಡುವುದು ಇಲ್ಲವೇ ಈ ಕ್ಷೇತ್ರಕ್ಕೆ ಸಿ.ಪಿ.ಯೋಗೇಶ್ವರ್‌ ಅವರನ್ನು ಅಭ್ಯರ್ಥಿ ಮಾಡಬೇಕೆಂಬ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.
6
+ ಅದೇ ರೀತಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮಾಯಿ ಅವರ ರಾಜೀನಾಮೆಯಿಂದ ತೆರವಾಗಿರುವ ಹಾವೇರಿ ಜಿಲ್ಲೆ ಶಿಗ್ಗಾವಿಗೆ ಅವರ ಪುತ್ರ ಭರತ್‌ ಬೊಮಾಯಿ ಇಲ್ಲವೇ ಮಾಜಿ ಸಚಿವ ಮುರುಗೇಶ್‌ ನಿರಾಣಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆದಿದೆ.
7
+ ಬಳ್ಳಾರಿ ಜಿಲ್ಲೆ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಬಿ.ಶ್ರೀರಾಮುಲು, ಸಂಸದ ಕೋಟಾ ಶ್ರೀನಿವಾಸ್‌‍ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಹೆಸರು ಮುನ್ನಲೆಗೆ ಬಂದಿದೆ.
8
+ ಪ್ರತಿಷ್ಠೆಯ ಕಣವಾಗಿರುವ ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವನ್ನು ಜೆಡಿಎಸ್‌‍ಗೆ ಬಿಟ್ಟುಕೊಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಕಾಂಗ್ರೆಸ್‌‍ ಎದುರು ಜೆಡಿಎಸ್‌‍ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸದಿದ್ದರೆ ಎನ್‌ಡಿಎ ಅಭ್ಯರ್ಥಿಯಾಗಿ ಮಾಜಿ ಸಚಿವ ಹಾಗೂ ಹಾಲಿ ವಿಧಾನಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ಗೆ ಟಿಕೆಟ್‌ ನೀಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ.
9
+ ಶಿಗ್ಗಾವಿ ಕ್ಷೇತ್ರಕ್ಕೆ ಬೊಮಾಯಿ ಅವರ ಅಭಿಪ್ರಾಯ ಪಡೆದುಕೊಂಡ�� ಅಭ್ಯರ್ಥಿ ಪಟ್ಟಿಯನ್ನು ಅಖೈರು ಮಾಡಬೇಕೆಂಬ ಸಲಹೆ ಕೇಳಿಬಂದಿದೆ. ಈ ಕ್ಷೇತ್ರದ ಮೇಲೆ ಬೊಮಾಯಿ ಅವರ ಪುತ್ರ ಭರತ್‌ ಬೊಮಾಯಿ ಕಣ್ಣಿಟ್ಟಿದ್ದು, ಈಗಾಗಲೇ ಕ್ಷೇತ್ರದಲ್ಲಿ ಒಂದು ಸುತ್ತಿನ ಕೆಲಸವನ್ನು ಆರಂಭಿಸಿದ್ದಾರೆ.
10
+ ಕುಟುಂಬ ರಾಜಕಾರಣವನ್ನು ಪ್ರಬಲವಾಗಿ ವಿರೋಧಿಸುವ ಬಿಜೆಪಿ, ಬೊಮಾಯಿ ಪುತ್ರನಿಗೆ ಟಿಕೆಟ್‌ ಬೇಡ ಎಂಬ ನಿಲುವಿಗೆ ಬಂದರೆ ಮಾಜಿ ಸಚಿವ ಮುರುಗೇಶ್‌ ನಿರಾಣಿ ಅಭ್ಯರ್ಥಿಯಾಗುವ ಸಂಭವವನ್ನು ತಳ್ಳಿ ಹಾಕುವಂತಿಲ್ಲ.
11
+ ಬಳ್ಳಾರಿ ಜಿಲ್ಲೆ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಬಿ.ಶ್ರೀರಾಮುಲು ಹೆಸರು ಕೇಳಿಬಂದಿದೆ ಆದರೂ ಈಗಾಗಲೇ ಒಂದು ಬಾರಿ ವಿಧಾನಸಭೆ ಮತ್ತೊಂದು ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಅವರು ಸ್ಪರ್ಧೆಗೆ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.
12
+ ಶ್ರೀರಾಮುಲು ಕಣಕ್ಕಿಳಿಯಲು ನಿರಾಕರಿಸಿದರೆ ಸ್ಥಳೀಯ ಅಭ್ಯರ್ಥಿಗೆ ಟಿಕೆಟ್‌ ನೀಡುವ ಬಗ್ಗೆಯೂ ಕೋರ್‌ ಕಮಿಟಿಯಲ್ಲಿ ಚರ್ಚೆ ನಡೆಯಲಿದೆ. ಸಂಸದ ಕೋಟಾ ಶ್ರೀನಿವಾಸ್‌‍ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿದ್ದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಳೀನ್‌ಕುಮಾರ್‌ ಕಟೀಲ್‌ ಪ್ರಮೋದ್‌ ಮಧ್ವರಾಜ್‌ ಆಕಾಂಕ್ಷಿಗಳಾಗಿದ್ದಾರೆ.
13
+ ಇನ್ನು ಕೋರ್‌ ಕಮಿಟಿ ಸಭೆಯಲ್ಲಿ ಸದಸ್ಯತ್ವ ನೋಂದಣಿ, ಪಕ್ಷದ ಸಂಘಟನೆ ಕುರಿತು ಸುಧೀರ್ಘ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯಾದ್ಯಂತ ಬರುವ ದಿನಗಳಲ್ಲಿ ಇನ್ನಷ್ಟು ನೋಂದಣಿಯನ್ನು ಪರಿಣಾಮಕಾರಿಯಾಗಿ ಮಾಡಬೇಕು. ಇದರಲ್ಲಿ ಹಾಲಿ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಸೇರಿದಂತೆ ಪದಾಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಂಡು ನಿರೀಕ್ಷಿತ ಗುರಿ ತಲುಪಲು ಎಲ್ಲರೂ ಕೈಜೋಡಿಸುವಂತೆ ಸಭೆ ಸೂಚಿಸಿದೆ.
eesanje/url_46_12_3.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಮಹಾಲಕ್ಷ್ಮಿ ಹಂತಕರು ಒಬ್ಬನೋ ಅಥವಾ ಇಬ್ಬರಿದ್ದಾರೋ ಗೊತ್ತಿಲ್ಲ : ಗೃಹಸಚಿವ
2
+ :
3
+ ಬೆಂಗಳೂರು,ಸೆ.23-ವಯ್ಯಾಲಿಕಾವಲ್ ಬಸಪ್ಪಗಾರ್ಡನ್ನ ಮಹಾಲಕ್ಷ್ಮಿ ಹತ್ಯೆ ಪ್ರಕರಣದಲ್ಲಿ ಮಹತ್ವದ ಮಾಹಿತಿಗಳನ್ನು ಕಲೆ ಹಾಕಲಾಗಿದ್ದು, ಶೀಘ್ರವೇ ಆರೋಪಿ ಗಳನ್ನು ಬಂಧಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
4
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಹಂತದಲ್ಲಿ ಯಾವುದೇ ವಿಚಾರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಹತ್ಯೆಯಲ್ಲಿ ಒಬ್ಬರಿದ್ದಾರೋ, ಇಬ್ಬರಿದ್ದಾರೋ ಗೊತ್ತಿಲ್ಲ. ಆದರೆ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲಿದ್ದೇವೆ ಎಂದು ಹೇಳಿದರು.
5
+ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಅಕ್ರಮ ನಡೆದಿದೆ ಎಂದು ಬಿಜೆಪಿಯವರು ರಾಜ್ಯಪಾಲರಿಗೆ ದೂರು ನೀಡುವುದನ್ನು ಬೇಡ ಎನ್ನಲಾಗುವುದಿಲ್ಲ. ಆದರೆ ಅವರು ಮಾಡಿರುವ ಆರೋಪದ ಬಗ್ಗೆ ತಮಗೆ ಹೆಚ್ಚಿನ ಮಾಹಿತಿ ಇಲ್ಲ ಎಂದರು.
6
+ ಯಾದಗಿರಿ ಪಿಎಸ್ಐ ಪರಶುರಾಮ್ ಅವರ ಕುಟುಂಬಕ್ಕೆ ವಿಮೆ ಆಧರಿಸಿ 25 ಲಕ್ಷ ರೂ.ಗಳ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಅವರ ಪತ್ನಿಗೆ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ ತಮಗೆ ಬೇರೆ ಇಲಾಖೆಯಲ್ಲಿ ಕೆಲಸ ಕೊಡಿಸುವಂತೆ ಮನವಿ ಮಾಡಿದ್ದಾರೆ. ಹೀಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅದರ ಕುರಿತು ಪರಿಶೀಲನೆ ನಡೆಸುತ್ತಿದೆ ಎಂದು ಹೇಳಿದರು.
7
+ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರ ಪ್ರಕರಣ ಮೇಲ್ನೋಟಕ್ಕೆ ಕಂಡುಬಂದಷ್ಟು ಸರಳವಾಗಿಲ್ಲ. ಒಂದು ದೂರು ಬಂದಾಗ ಅದನ್ನು ದಾಖಲಿಸಿ ಮುನಿರತ್ನ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಯಿತು. ಆದರೆ ದಿನನಿತ್ಯ ಅವರ ನಡುವೆ ಒಂದೊಂದು ಪ್ರಕರಣ ಬೆಳಕಿಗೆ ಬರುತ್ತಿದೆ. ಹೀಗಾಗಿ ಹೆಚ್ಚಿನ ತನಿಖೆಗಾಗಿ ಎಸ್ಐಟಿ ರಚನೆ ಮಾಡಿದ್ದೇವೆ, ಶೀಘ್ರವೇ ಎಸ್ಐಟಿ ವಶಕ್ಕೆ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.
8
+ ದಿನಕ್ಕೊಂದು ಆರೋಪಗಳು ಬೆಳಕಿಗೆ ಬರುವ ಹಿನ್ನೆಲೆಯಲ್ಲಿ ಎಸ್ಐಟಿ ರಚನೆ ಮಾಡುವ ಅನಿವಾರ್ಯತೆ ಇದೆ ಎಂದು ನಮಗೆ ಮನವರಿಕೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಯಿತು ಎಂದರು.
9
+ ನಾಗಮಂಗಲದಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಿದ ತಂಡದ ಸದಸ್ಯ ಕಿರಣ್ ಅನಾರೋಗ್ಯದಿಂದ ಮೃತಪಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಾವು ಪ್ರತಿಕ್ರಿಯಿಸುವುದಿಲ್ಲ. ತನಿಖೆ ಪ್ರಗತಿಯಲ್ಲಿದೆ. ಅದರ ವರದಿ ಬಂದ ಬಳಿಕ ಹೇಳಿಕೆ ನೀಡುವುದಾಗಿ ತಿಳಿಸಿದರು.ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಎಲ್ಲರಿಗೂ ಒಂದೇ ರೀತಿಯ ಮಾನದಂಡವನ್ನು ಅನುಸರಿಸಬೇಕು.
10
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ ಮೇಲೆ ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೂ ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ನೋಟಿಸ್ ನೀಡಬೇಕಿತ್ತು. ನಾವು ರಾಜ್ಯಪಾಲರನ್ನು ಭೇಟಿ ಮಾಡಿ ಈ ಬಗ್ಗೆ ಪ್ರಶ್ನಿಸಿದಾಗ ಸ್ಪ��್ಟನೆ ಕೇಳಿ ಕುಮಾರಸ್ವಾಮಿಯವರ ಕಡತವನ್ನು ಲೋಕಾಯುಕ್ತಕ್ಕೆ ವಾಪಸ್ ಕಳುಹಿಸಿದರು ಎಂದು ಹೇಳಿದರು.
11
+ ಮುಖ್ಯಮಂತ್ರಿಯವರಿಗೆ ನೋಟಿಸ್ ನೀಡಿದ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಅದನ್ನು ರಾಜ್ಯಪಾಲರು ತಪ್ಪು ಎಂದು ಹೇಳಲು ಸಾಧ್ಯವಿಲ್ಲ. ರಹಸ್ಯ ದಾಖಲೆ ಎಂಬುದು ಸಂಪುಟದಿಂದ ಹೊರಗೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
12
+ ರಾಜ್ಯಪಾಲರು ದಿನನಿತ್ಯ ಸರ್ಕಾರಕ್ಕೆ ಒಂದೊಂದು ವಿಚಾರಕ್ಕೆ ಪತ್ರ ಬರೆಯುತ್ತಿರುವುದು ಸರಿಯಲ್ಲ. ಸಂವಿಧಾನದಲ್ಲಿ ರಾಜ್ಯಪಾಲರ ನಡವಳಿಕೆ ಹಾಗೂ ಪಾತ್ರದ ಬಗ್ಗೆ ಸ್ಪಷ್ಟ ಮಾಹಿತಿ ಇದೆ. ಅದನ್ನು ಮೀರಿ ವರ್ತಿಸುವುದು ಸಂವಿಧಾನ ಬಾಹಿರವಾಗಲಿದೆ. ಅರ್ಕಾವತಿ ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ರಾಜ್ಯಪಾಲರು ಕೇಳಿರುವ ಮಾಹಿತಿಯನ್ನು ಒದಗಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.
13
+ ರಾಜ್ಯಪಾಲರು ನೀಡಿದ ಎಲ್ಲಾ ನೋಟಿಸ್ಗೂ ಉತ್ತರ ನೀಡಬೇಕು ಎಂಬುದೇನಿಲ್ಲ. ಸಂವಿಧಾನದಲ್ಲಿ ರಾಜ್ಯಸರ್ಕಾರಕ್ಕೆ ಕಾರ್ಯ ನಿರ್ವಹಣಾಧಿಕಾರವನ್ನು ನೀಡಲಾಗಿದೆ. ಇದರಲ್ಲಿ ಎರಡು ಮಾತಿಲ್ಲ. ರಾಜ್ಯಪಾಲರು ಈ ರೀತಿ ವರ್ತಿಸುವುದನ್ನು ಎಂದೂ ನೋಡಿರಲಿಲ್ಲ ಎಂದು ಹೇಳಿದರು.
eesanje/url_46_12_4.txt ADDED
@@ -0,0 +1,7 @@
 
 
 
 
 
 
 
 
1
+ ಮುಂಗಾರು ಮಳೆ ಮತ್ತೆ ಚೇತರಿಕೆ, ರಾಜ್ಯದಲ್ಲಿ ಹಲವೆಡೆ ಯಲ್ಲೋ ಅಲರ್ಟ್ ಘೋಷಣೆ
2
+
3
+ ಬೆಂಗಳೂರು, ಸೆ.23-ನೈರುತ್ಯ ಮುಂಗಾರು ಮತ್ತೆ ಕಳೆದ ಎರಡು ದಿನಗಳಿಂದ ಚೇತರಿಕೆಯಾಗಿದ್ದು, ಕರಾವಳಿಯಲ್ಲಿ ವ್ಯಾಪಕವಾಗಿ ಉಳಿದಂತೆ ರಾಜ್ಯದ ಒಳನಾಡಿದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿದ್ದು, ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.
4
+ ನಿನ್ನೆ ಕರಾವಳಿಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಉತ್ತಮ ಮಳೆಯಾಗಿದೆ. ಒಂದೆರಡು ಕಡೆ ಭಾರಿ ಮಳೆಯಾಗಿದೆ. ಉತ್ತರ ಕರ್ನಾಟಕ ಭಾಗದಲ್ಲೂ ಹಗುರದಿಂದ ವ್ಯಾಪಕ ಪ್ರಮಾಣದ ಮಳೆಯಾಗಿದೆ. ಕಲ್ಯಾಣ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಭಾಗದಲ್ಲಿ ಚದುರಿದಂತೆ ಕೆಲವೆಡೆ ಮಳೆಯಾಗಿದೆ.
5
+ ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ಮೇಲೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಆಗಾಗ್ಗೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
6
+ ಬಂಗಾಳ ಕೊಲ್ಲಿಯಲ್ಲಿ ಲಘು ವಾಯುಭಾರ ಕುಸಿತ ಸೃಷ್ಟಿಯಾಗುತ್ತಿದೆ. ಇದರ ಪರಿಣಾಮದಿಂದ ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆ ನಿರೀಕ್ಷಿಸಬಹುದಾಗಿದೆ. ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
7
+ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಮಿಂಚು, ಬಲವಾದ ಮೇಲೈ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆಗಳಿವೆ. ಅದೇ ರೀತಿ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ವ್ಯಾಪಕ ಪ್ರಮಾಣದ ಮಳೆಯಾಗಲಿದೆ. ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದೆ.
eesanje/url_46_12_5.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಸಂಚಾರಿ ನಿಯಮ ಉಲ್ಲಂಘಿಸುವವರ ಚಾಲನಾ ಪರವಾನಗಿ ರದ್ದು ಮಾಡುವಂತೆ ಸಿಎಂ ಸೂಚನೆ
2
+
3
+ ಬೆಂಗಳೂರು,ಸೆ.23– ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ಇನ್ನು ಮುಂದೆ ನೋಟಿಸ್ ನೀಡುವ ಬದಲು ಚಾಲನಾ ಪರವಾನಗಿಯನ್ನೇ ರದ್ದು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
4
+ ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ ಅಡಿಯಲ್ಲಿ ನೂತನವಾಗಿ 45 ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಸರ್ಕಾರ ಎಷ್ಟೇ ಪ್ರಯತ್ನ ಮಾಡಿದರೂ ಜನಸಾಮಾನ್ಯರು ಹಾಗೂ ವಾಹನ ಸವಾರರು ನಿಯಮಗಳನ್ನು ಪಾಲನೆ ಮಾಡದೇ ಇದ್ದರೆ ಅಪಘಾತಗಳನ್ನು ಕಡಿಮೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
5
+ ಅಪಘಾತದಂತಹ ಸಂದರ್ಭದಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳ ಜೀವಹಾನಿಯಾದರೆ ಮುಂದೆ ಅವರಿಂದ ದೇಶಕ್ಕೆ ದೊರೆಯಬಹುದಾದ ಸೇವೆಗಳು ಇಲ್ಲವಾಗುತ್ತವೆ. ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತವೆ. ಗಾಯಾಳುಗಳಾದಾಗ ಜೀವನವೇ ತೊಂದರೆಗೊಳಗಾಗುತ್ತದೆ ಎಂದು ಹೇಳಿದರು.
6
+ ರಾಜ್ಯದಲ್ಲಿ ಪ್ರತಿವರ್ಷ 40 ಸಾವಿರ ಅಪಘಾತಗಳಾಗುತ್ತಿವೆ. ಅದರಲ್ಲಿ 9 ರಿಂದ 10 ಸಾವಿರ ಜನ ಜೀವ ಕಳೆದುಕೊಳ್ಳುತ್ತಿದ್ದಾರೆ. ಅಪಘಾತಗಳನ್ನು ತಗ್ಗಿಸಲು 2017 ರಲ್ಲಿ ರಸ್ತೆ ಸುರಕ್ಷತಾ ಪ್ರಾಧಿಕಾರ ರಚನೆಯಾಗಿದೆ. ಅದರಲ್ಲಿ ಸಂಗ್ರಹಿಸಲಾಗುವ ನಿಧಿಯಲ್ಲಿ 45 ಕೋಟಿ ರೂ.ಗಳನ್ನು ಆರೋಗ್ಯ ಇಲಾಖೆಗೆ ನೀಡಲಾಗಿದ್ದು, ಇದರಿಂದ 65 ಹೊಸ ಆ್ಯಂಬುಲೆನ್‌್ಸಗಳನ್ನು ಖರೀದಿಸಲಾಗಿದೆ ಎಂದರು.
7
+ ಅಪಘಾತಗಳಾದ ಸಂದರ್ಭದಲ್ಲಿ ಸುವರ್ಣ ಸಮಯ ಎಂದು ಹೇಳಲಾಗುವ ಒಂದು ಗಂಟೆಯಲ್ಲಿ ಚಿಕಿತ್ಸೆ ದೊರೆತರೆ ಜೀವರಕ್ಷಣೆ ಸಾಧ್ಯವಾಗುತ್ತದೆ. ಅದಕ್ಕಾಗಿ ಇಂದು ಲೋಕಾರ್ಪಣೆಗೊಂಡ ಆ್ಯಂಬುಲೆನ್‌್ಸಗಳ ಪೈಕಿ 30 ರಲ್ಲಿ ಜೀವರಕ್ಷಕ ಸಲಕರಣೆಗಳ ಜೊತೆಗೆ ವೆಂಟಿಲೇಟರ್, ಔಷಧಿ ಹಾಗೂ ತಂತ್ರಜ್ಞ ಸಿಬ್ಬಂದಿಗಳು ಇರಲಿದ್ದು, ಜೀವರಕ್ಷಣೆಗೆ ಶ್ರಮಿಸಲಿದ್ದಾರೆ.
8
+ ಹತ್ತಿರದ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಅಗತ್ಯವಿದ್ದರೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದೊಯ್ದು ಜೀವರಕ್ಷಣೆ ಮಾಡುವ ಪ್ರಯತ್ನಗಳಾಗುತ್ತವೆ ಎಂದರು.ಸಂಚಾರ ನಿಯಮಗಳನ್ನು ಪಾಲನೆ ಮಾಡಿದರೆ ಅಪಘಾತಗಳು ಕಡಿಮೆಯಾಗುತ್ತವೆ. ಕುಡಿದು ವಾಹನ ಓಡಿಸಬೇಡಿ ಎಂದರೆ ನಾಮಫಲಕ ನೋಡಿಯೇ ವಾಹನ ಚಲಾಯಿಸುತ್ತಾರೆ.
9
+ ಇಲ್ಲಿ ಮೂತ್ರವಿಸರ್ಜನೆ ಮಾಡಬೇಡಿ ಎಂದು ಬೋರ್ಡ್ ಇದ್ದರೆ ನಿಷೇಧಿತ ಕೆಲಸವನ್ನು ಅಲ್ಲಿಯೇ ಮಾಡಿ ಸಬೂಬು ಹೇಳುತ್ತಾರೆ. ಈ ರೀತಿಯ ಧೋರಣೆಗಳನ್ನು ಜನರು ಬಿಟ್ಟು ಬದಲಾಗಬೇಕು. ನಿಯಮ ಪಾಲನೆ ಪ್ರತಿಯೊಬ್ಬರ ಜವಾಬ್ದಾರಿ. ವಾಹನಗಳನ್ನು ಸುರಕ್ಷತಾ ಸ್ಥಿತಿಯಲ್ಲಿಟ್ಟುಕೊಂಡಿರಬೇಕು. ನನಗೆ ಡ್ರೈವಿಂಗ್ ಬರುವುದಿಲ್ಲ, ತುಂಬಾ ಜನ ಫೋನಿನಲ್ಲಿ ಮಾತನಾಡುತ್ತಲೇ ವಾಹನ ಚಲಾವಣೆ ಮಾಡುವುದನ್ನು ನೋಡಿದ್ದೇನೆ. ವೇಗಮಿತಿ 80 ಕಿ.ಮ���. ಇದ್ದರೆ 120 ಕಿ.ಮೀ. ವೇಗದಲ್ಲಿ ಗಾಡಿ ಓಡಿಸುತ್ತಾರೆ ಎಂದು ಹೇಳಿದರು.
10
+ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ಚಾಲನಾ ಪರವಾನಗಿ ರದ್ದು ಮಾಡುವ ವ್ಯವಸ್ಥೆ ವಿದೇಶದಲ್ಲಿದೆ. ನಮಲ್ಲೂ ಅದೇ ಪದ್ಧತಿಯನ್ನು ಪಾಲನೆ ಮಾಡಿ. ನೋಟಿಸ್ ಕೊಡುವುದು ಬೇಡ. ನೇರವಾಗಿ ಪರವಾನಗಿ ರದ್ದು ಮಾಡಿ, ತಪ್ಪು ಮಾಡಿದವರು ಕೋರ್ಟ್ಗೆ ಹೋಗಲಿ ಎಂದು ಸೂಚನೆ ನೀಡಿದರು.
11
+ ಕೊಲೆ ಮಾಡಿದರೆ ಜೀವಾವಧಿ ಶಿಕ್ಷೆಯಾಗುತ್ತದೆ ಎಂದು ಗೊತ್ತಿದ್ದೂ ಹತ್ಯೆ ಮಾಡುತ್ತಾರೆ. ಜೈಲಿಗೆ ಹೋದರೂ ಪರವಾಗಿಲ್ಲ. ನಿನ್ನನ್ನು ಮುಗಿಸುತ್ತೇನೆ ಎಂದು ಧಮ್ಕಿ ಹಾಕವುದು ಕಂಡುಬರುತ್ತಿದೆ. ಇದು ಸರಿಯಲ್ಲ ಎಂದು ಹೇಳಿದರು.ಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ಗುಂಡೂರಾವ್, ಶಾಸಕರಾದ ರೂಪಕಲಾ, ನಾಗರಾಜ್ ಯಾದವ್ ಮತ್ತಿತರರು ಉಪಸ್ಥಿತರಿದ್ದರು.
eesanje/url_46_12_6.txt ADDED
@@ -0,0 +1,10 @@
 
 
 
 
 
 
 
 
 
 
 
1
+ ವಿಚ್ಛೇದನಕ್ಕೆ ಬಂದಿದ್ದ ದಂಪತಿಗೆ ಗವಿಸಿದ್ದೇಶ್ವರ ಶ್ರೀಗಳ ಬಳಿ ಹೋಗುವಂತೆ ಸಲಹೆ ನೀಡಿದ ನ್ಯಾಯಮೂರ್ತಿಗಳು
2
+
3
+ ಬೆಂಗಳೂರು,ಸೆ.22-ಪರಸ್ಪರ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿಗೆ ಗವಿಸಿದ್ದೇಶ್ವರ ಶ್ರೀಗಳ ಭೇಟಿ ಮಾಡಿ ಸಮಾಲೋಚಿಸಿ ಎಂದು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳು ಸಲಹೆ ನೀಡಿದ್ದಾರೆ.ನಾಲ್ಕು ವರ್ಷದ ಹಿಂದೆ ಗದಗ ಜಿಲ್ಲೆಯ ದಂಪತಿ ವಿಚ್ಛೇದನ ಬೇಕೆಂದು ಧಾರವಾಡ ಹೈಕೋರ್ಟ್‌ ಮೆಟ್ಟಿಲೇರಿದ್ದರು.
4
+ ಸೆಪ್ಟೆಂಬರ್‌ 17ರಂದು ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್‌ ಪೀಠದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರು, ದಂಪತಿಗೆ ಬುದ್ಧಿವಾದ ಹೇಳಿದ್ದಾರೆ. ಗಂಡ-ಹೆಂಡತಿ ಜಗಳ ಸಾಮಾನ್ಯ. ಸಣ್ಣ ವಿಚಾರಕ್ಕೆ ಮುನಿಸಿಕೊಂಡು ದೂರ ಆಗಿ ಜೀವನ ಹಾಳು ಮಾಡಿಕೊಳ್ಳಬೇಡಿ. ಸಮಸ್ಯೆ ಇದ್ದರೆ ಕೂತು ಬಗೆಹರಿಸಿಕೊಳ್ಳಿ. ಏನಾದರೂ ಮಾನಸಿಕವಾಗಿ ಸಮಸ್ಯೆ ಇದ್ದರೆ ಮನೋವೈದ್ಯರ ಬಳಿಗೆ ಹೋಗಿ ಎಂದು ತಿಳಿ ಹೇಳಿದ್ದಾರೆ.
5
+ ಈ ವೇಳೆ ದಂಪತಿ ನಾವು ಮನೋವೈದ್ಯರ ಬಳಿ ಹೋಗಿದ್ದೇವೆ. ಆದರೂ ಸಮಸ್ಯೆ ಬಗೆಹರಿದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆಗ ನ್ಯಾಯಮೂರ್ತಿಗಳು ಯಾವುದಾದರೂ ಮಠಾಧೀಶರ ಬಳಿ ಹೋಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ನ್ಯಾಯಾಧೀಶರ ಮಾತಿಗೆ ಒಪ್ಪಿದ ಪತಿ ಗದಗದ ತೋಂಟದಾರ್ಯ ಮಠದ ಸ್ವಾಮೀಜಿ ಬಳಿ ಹೋಗುತ್ತೇವೆ ಎಂದು ಹೇಳಿದ್ದಾರೆ.
6
+ ಕೋರ್ಟ್‌ನಲ್ಲಿ ಪತಿಯ ಮಾತಿಗೆ ಒಪ್ಪದ ಹೆಂಡತಿ ತೋಂಟದಾರ್ಯ ಮಠ ಬೇಡ ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮೀಜಿ ಬಳಿ ಹೋಗುತ್ತೇವೆ ಎಂದಿದ್ದಾರೆ. ಈ ವೇಳೆ ನ್ಯಾಯಮೂರ್ತಿಗಳು ಒಳ್ಳೆಯದೇ ಆಯ್ತು. ಗವಿಸಿದ್ದೇಶ್ವರ ಸ್ವಾಮೀಜಿ ವಿವೇಕಾನಂದರಂತೆ ಇದ್ದಾರೆ. ಅವರ ಭಾಷಣ ಕೇಳಿದ್ದೇನೆ. ಅವರ ಬಳಿಯೇ ಹೋಗಿ ಎಂದು ಸಲಹೆ ಕೊಟ್ಟಿದ್ದಾರೆ.
7
+ ಪರಸ್ಪರ ದೂರವಾಗಿದ್ದ ಪತಿ-ಪತ್ನಿಗೆ ಗವಿ ಮಠಕ್ಕೆ ಹೋಗಿ, ಶ್ರೀಗಳ ಆಶೀರ್ವಾದ ಪಡೆದು ಹೊಸ ಜೀವನ ನಡೆಸಿ ಅಂತ ನ್ಯಾಯಮೂರ್ತಿಗಳು ಸಲಹೆ ನೀಡಿದ್ದಾರೆ. ನ್ಯಾಯಮೂರ್ತಿಗಳ ಸೂಚನೆ ಮೇರೆಗೆ ದಂಪತಿಗಳು ಗವಿಸಿದ್ದೇಶ್ವರ ಮಠಕ್ಕೆ ಹೋಗುವುದಾಗಿ ಒಪ್ಪಿದ್ದಾರೆ.
8
+ ಶ್ರೀಗಳನ್ನು ಭೇಟಿ ಸರಿಯಾದ ನಿರ್ಧಾರ:ಕೊಪ್ಪಳದ ಗವಿಸಿದ್ದೇಶ್ವರ ಮಠದ ಭಕ್ತ ಶಿವಾನಂದ ಪಾಟೀಲ ಮಾತನಾಡಿ, ತಮ ಸಮಸ್ಯೆಗಳಿಗೆ ಗವಿಸಿದ್ದೇಶ್ವರ ಶ್ರೀಗಳನ್ನು ಭೇಟಿಯಾಗುತ್ತಿರುವುದು ಸರಿಯಾದ ನಿರ್ಧಾರವಾಗಿದ್ದು, ಮಠದ ಸಂಪ್ರದಾಯದಲ್ಲಿ ನ್ಯಾಯಾಲಯದಿಂದ ಇಂತಹ ಪ್ರಕರಣ ನಡೆಯುತ್ತಿರುವುದು ಇದೇ ಮೊದಲು. ಅನೇಕ ದಂಪತಿಗಳು ಈ ಮಾರ್ಗವನ್ನು ಅನುಸರಿಸಿದರೆ, ನ್ಯಾಯಾಲಯಗಳ ಮೇಲೆ ಕಡಿಮೆ ಒತ್ತಡವಿರುತ್ತದೆ ಮತ್ತು ಜನರು ಸಂತೋಷದ ಜೀವನವನ್ನು ನಡೆಸಬಹುದು.
9
+ ಅನೇಕ ಜನರು ತಮ ಸಮಸ್ಯೆಗಳಿಗಾಗಿ ದಾರ್ಶನಿಕರನ್ನು ಭೇಟಿಯಾಗುತ್ತಾರೆ. ಆದರೆ ವೈವಾಹಿಕ ಗೊಂದಲದ ವಿಷಯಕ್ಕೆ ಬಂದಾಗ, ಅವರು ದಾರ್ಶನಿಕರಿಂದ ಸಲಹೆಗಳನ್ನು ಪಡೆಯಲು ಬರುವುದಿಲ್ಲ. ಆದರೆ ಅವರು ನೇರವಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುತ್ತಾರೆ ಮತ್ತು ಈ ಬೆಳವಣಿಗೆಯು ಭವಿಷ್ಯಕ್ಕಾಗಿ ಒಂದು ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.
10
+ 800 ವರ್ಷಗಳಷ್ಟು ಹಳೆಯ ಐತಿಹಾಸಿಕ ಮಠ: ಅಂದಹಾಗೆ ಕರ್ನಾಟಕದ ಅಗ್ರಮಾನ್ಯ ಮಠ ಪರಂಪರೆಯ ಸಂಸ್ಥಾನಗಳಲ್ಲಿ ಒಂದಾಗಿರುವ ಗವಿಸಿದ್ದೇಶ್ವರ ಮಠ ಕೊಪ್ಪಳ ಜಿಲ್ಲೆಯಲ್ಲಿದೆ. ಇದನ್ನು ಗವಿಮಠ ಎಂತಲೂ ಕರೆಯುತ್ತಾರೆ. ಇದು ಉತ್ತರ ಕರ್ನಾಟಕದ ಹಳೆಯ ಮಠಗಳಲ್ಲಿ ಒಂದು. 800 ವರ್ಷಗಳಷ್ಟು ಹಳೆಯದಾಗಿರುವ ಲಿಂಗಾಯತ ಮಠಗಳಲ್ಲಿ ಈ ಮಠ ವೂ ಒಂದಾಗಿದೆ.
eesanje/url_46_12_7.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬಿಜೆಪಿ ಮತ್ತು ಜೆಡಿಎಸ್‌‍ ಪಕ್ಷಗಳ ವರ್ಚಸ್ಸಿಗೆ ‘ಲೈಂಗಿಕ ಹಗರಣಗಳ’ ಹೊಡೆತ
2
+ ' ' '
3
+ ಬೆಂಗಳೂರು,ಸೆ.22-ಬಿಜೆಪಿ ಮತ್ತು ಜೆಡಿಎಸ್‌‍ ನಾಯಕರ ವಿರುದ್ಧದ ಸರಣಿ ಲೈಂಗಿಕ ಹಗರಣಗಳ ಆರೋಪಗಳು ರಾಜ್ಯದಲ್ಲಿ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟು ಮಾಡಿದ್ದು, ಅಲ್ಲದೆ ಕಾರ್ಯಕರ್ತರಲ್ಲೂ ಅಸಮಾಧಾನ ಮತ್ತು ಗೊಂದಲಕ್ಕೆ ಎಡೆಮಾಡಿಕೊಟ್ಟಿದೆ. ಅಲ್ಲದೆ ಈ ಆರೋಪಗಳಿಂದಾಗಿ ವಿರೋಧ ಪಕ್ಷಗಳ ನೈತಿಕ ಬಲವನ್ನು ಕುಗ್ಗಿದ್ದು, ಸರ್ಕಾರದ ವಿರುದ್ಧ ಹೋರಾಟ ರೂಪಿಸಲು ಹಿನ್ನಡೆ ಉಂಟು ಮಾಡಿದೆ.
4
+ ರಮೇಶ ಜಾರಕಿಹೊಳಿ, ಪ್ರಜ್ವಲ್‌ ರೇವಣ್ಣ, ಸೂರಜ್‌ ರೇವಣ್ಣ, ರೇವಣ್ಣ, ಮುನಿರತ್ನ ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ, ಬಂಧನ ಪ್ರಸಂಗ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿದ ಕಾಂಗ್ರೆಸ್‌‍ ತಪ್ಪುಗಳನ್ನು ಜನರ ಮುಂದೆ ತಂದು, ಮುಜುಗರಕ್ಕೀಡು ಮಾಡಬೇಕಾದ ಬಿಜೆಪಿ ಮತ್ತು ಜೆಡಿಎಸ್‌‍ ನಾಯಕರನ್ನು ಮುಖ ಮುಚ್ಚಿಕೊಂಡು ಓಡಾಡಬೇಕಾದ ಸನ್ನಿವೇಶಕ್ಕೆ ತಂದು ನಿಲ್ಲಿಸಿದೆ.
5
+ ಇದರ ಜೊತೆಯಲ್ಲಿ ತಮ ವಿರುದ್ಧದ ಯಾವುದೇ ಅಕ್ಷೇಪಾರ್ಹ ವಿಡಿಯೋಗಳು ಬಿಡುಗಡೆ ಮಾಡಬಾರದು ಎಂದು ಕೋರ್ಟ್‌ ಗೆ ಹೋಗಿ ತಡೆ ತಂದಿರುವ ಅರ್ಧ ಡಜನ್‌ ಗೂ ಹೆಚ್ಚಿನ ನಾಯಕರು ಬಿಜೆಪಿಯಲ್ಲಿದ್ದಾರೆ. ಈ ಪೈಕಿ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಕೂಡಾ ಒಳಗೊಂಡಿದ್ದಾರೆ.
6
+ ಈ ನಡುವೆ ಮಾಜಿ ಸಿಎಂ ಬಿಎಸ್‌‍ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣವೂ ದಾಖಲಾಗಿದೆ. ಮಹಿಳೆಯೊಬ್ಬರು ಈ ರೀತಿಯ ಆರೋಪವನ್ನು ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್‌‍ವೈ ಬಂಧನಕ್ಕೆ ನ್ಯಾಯಾಲಯ ತಡೆ ನೀಡಿದೆ.
7
+ ಪ್ರಜ್ವಲ್‌ ರೇವಣ್ಣ, ಎಚ್‌.ಡಿ.ರೇವಣ್ಣ ಮತ್ತು ಸೂರಜ್‌ ರೇವಣ್ಣ ವಿರುದ್ಧ ಗಂಭೀರ ಸ್ವರೂಪದ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಎಚ್‌.ಡಿ/ರೇವಣ್ಣ ಮತ್ತು ಸೂರಜ್‌ ರೇವಣ್ಣಗೆ ಜಾಮೀನು ಸಿಕ್ಕರೆ, ಪ್ರಜ್ವಲ್‌ ರೇವಣ್ಣ ಜೈಲಿನಲ್ಲಿ ಬಂಧನದಲ್ಲಿದ್ದಾರೆ.ಈ ಪ್ರಕರಣ ಬಿಜೆಪಿ ಮತ್ತು ಜೆಡಿಎಸ್‌‍ಗೆ ಮುಜುಗರ ಉಂಟು ಮಾಡಿದೆ.
8
+ ಹಾಸನದಲ್ಲಿ ಜೆಡಿಎಸ್‌‍ ಸೋಲಿಗೆ ಇದು ಕಾರಣವಾದರೆ, ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿಗೂ ಇದು ಮುಜುಗರ ಉಂಟು ಮಾಡಿತ್ತು. ಇನ್ನು ಈ ಪ್ರಕರಣದಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧವೂ ಆರೋಪ ಕೇಳಿ ಬಂದಿತ್ತು. ಇದು ಒಂದು ಕಡೆಯಾದರೆ ಬಿಜೆಪಿಯಲ್ಲಿ ಇಂತಹ ಆರೋಪ ರಾಮದಾಸ್‌‍, ಅರವಿಂದ ಲಿಂಬಾವಳಿ ವಿರುದ್ಧವೂ ಕೇಳಿಬಂದಿತ್ತು. ಇದೆಲ್ಲವೂ ಅವರ ರಾಜಕೀಯ ಜೀವನದ ಮೇಲೆ ಪರಿಣಾಮ ಬೀರಿದೆ.
9
+ ಕೋಲ್ಕತ್ತಾದಲ್ಲಿ ನಡೆದ ಅತ್ಯಾಚಾರ ಪ್ರಕರಣದ ಹೊಣೆಯನ್ನು ಹೊತ್ತು ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ತುಂಬ ಗಟ್ಟಿ ಧ್ವನಿಯಲ್ಲಿ ಒತ್ತಾಯಿಸುತ್ತಿದೆ. ಇದು ಸರಿ ಕೂಡ. ಆದರೆ ಬಿಜೆಪಿ ಹಾಗೂ ಮೈತ್ರಿ ಪಕ್ಷದ ನಾಯಕರು, ಮುಖಂಡರು, ಶಾಸಕರು, ಮಾಜಿ ಸಂಸ���ರು, ಮಾಜಿ ಮುಖ್ಯಮಂತ್ರಿಗಳ ವಿರುದ್ಧ ಕರ್ನಾಟಕದಲ್ಲಿ ಇಷ್ಟೆಲ್ಲ ಆರೋಪಗಳು ಇವೆಯಲ್ಲಾ ಇದಕ್ಕೆ ಬಿಜೆಪಿ ಹೈ ಕಮಾಂಡ್‌ ಏನು ಮಾಡುತ್ತದೆ? ಎಂಬುದು ಕೂಡ ಪ್ರಶ್ನಾರ್ಹವಾಗಿದೆ.
10
+ ಕಾರ್ಯಕರ್ತರಲ್ಲಿ ಗೊಂದಲ:ಪಕ್ಷದಲ್ಲಿ ನಡೆಯುತ್ತಿರುವ ಈ ಎಲ್ಲಾ ಬೆಳವಣಿಗೆಗಳು ಕಾರ್ಯಕರ್ತರಲ್ಲೂ ಗೊಂದಲ ಸೃಷ್ಟಿಸಿದೆ. ಬಿಜೆಪಿ ಶಿಸ್ತಿನ ಪಕ್ಷ ಎಂದು ಕರೆದುಕೊಳ್ಳುತ್ತಿದೆ. ಆದರೆ, ಪಕ್ಷದ ನಾಯಕರ ವಿರುದ್ಧದ ಆರೋಪಗಳನ್ನು ವಿರೋಧಿಸಲು ಸಾಧ್ಯವಾಗದೆ ಸಮರ್ಥಿಸಲು ಆಗದಂತಹ ಪರಿಸ್ಥಿತಿ ಪಕ್ಷದ ಕಾರ್ಯಕರ್ತರಲ್ಲಿದೆ. ಇದಕ್ಕೆ ಜೆಡಿಎಸ್‌‍ ಪಕ್ಷದ ಕಾರ್ಯಕರ್ತರು ಹೊರತಾಗಿಲ್ಲ. ಒಟ್ಟಿನಲ್ಲಿ ಲೈಂಗಿಕ ದೌರ್ಜನ್ಯದಂತಹ ಗಂಭೀರ ಆರೋಪಗಳು ಕೇಳಿ ಬಂದಾಗ ಪಕ್ಷ ಏನು ಕ್ರಮ ಕೈಗೊಳ್ಳುತ್ತದೆ ಎಂಬುವುದು ಬಹಳ ಮುಖ್ಯವಾಗಿದೆ. ಕ್ರಮದ ಬದಲಾಗಿ ಸಮರ್ಥನೆಗಿಳಿದ್ದರೆ ಅದು ಪಕ್ಷದ ವರ್ಚಸ್ಸಿಗೆ ಮತ್ತಷ್ಟು ಕುಂದು ಉಂಟು ಮಾಡಲಿರುವುದು ಸತ್ಯ.
eesanje/url_46_12_8.txt ADDED
@@ -0,0 +1,7 @@
 
 
 
 
 
 
 
 
1
+ ಹೇಳಿಕೆ ವೈರಲ್ : ವಿಷಾದ ವ್ಯಕ್ತಪಡಿಸಿದ ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ
2
+ -- ,
3
+ ಬೆಂಗಳೂರು, ಸೆ.22-ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರು, ಇತ್ತೀಚೆಗೆ ನ್ಯಾಯಾಂಗ ಪ್ರಕ್ರಿಯೆಯ ಸಂದರ್ಭದಲ್ಲಿ ತಾವು ಮಾಡಿದ ಆಕ್ಷೇಪಾರ್ಹ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿದ್ದಾರೆ.ವಿಚಾರಣೆಯೊಂದರ ವೇಳೆ ಮುಸ್ಲಿಂ ಬಾಹುಳ್ಯ ಪ್ರದೇಶವಾದ (ಬೆಂಗಳೂರಿನ) ಗೋರಿಪಾಳ್ಯದ ಕ್ರಿಮಿನಲ್ಗಳ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಹೆದರುತ್ತಿದ್ದಾರೆ. ಏಕೆಂದರೆ ಅದು ಪಾಕಿಸ್ತಾನದಲ್ಲಿದೆ ಎನ್ನುವ ಅವರ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಅಗಿತ್ತು.
4
+ ಅದೇ ರೀತಿ, ಮಹಿಳಾ ವಕೀಲೆಯೊಬ್ಬರ ಜೊತೆ ಕೀಳು ಅಭಿರುಚಿಯಿಂದ ಮಾತನಾಡಿದ್ದ ವಿಡಿಯೋ ಕೂಡ ವ್ಯಾಪಕವಾಗಿ ಪ್ರಸರಣಗೊಂಡಿತ್ತು. ಇವುಗಳನ್ನು ಗಮನಿಸಿದ್ದ ಸುಪ್ರೀಂಕೋರ್ಟ್ ಸ್ವಯಂಪ್ರೇರಿತವಾಗಿ ಮೊಕದ್ದಮೆ ದಾಖಲಿಸಿಕೊಂಡು ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ಗೆ ಸೂಚಿಸಿತ್ತು. ಈ ಎಲ್ಲ ಬೆಳವಣಿಗೆಗಳ ಬೆನ್ನಿಗೇ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರು ಮುಕ್ತ ನ್ಯಾಯಾಲಯದಲ್ಲಿ ತಮ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿದ್ದಾರೆ.
5
+ ಕಲಾಪ ಆರಂಭವಾಗುತ್ತಿದ್ದಂತೆ ನ್ಯಾಯಮೂರ್ತಿ ಶ್ರೀಶಾನಂದ ಅವರು ಬೆಂಗಳೂರು ವಕೀಲರ ಸಂಘದ ಪದಾಧಿಕಾರಿಗಳು ಹಿರಿಯ ವಕೀಲರ ಸಮುಖದಲ್ಲಿ,ನಾನು ವ್ಯಕ್ತಪಡಿಸಿರುವ ಅಭಿಪ್ರಾಯವು ಯಾವುದೇ ವ್ಯಕ್ತಿ ಸಮುದಾಯದ ಭಾವನೆಗೆ ಧಕ್ಕೆ ಉಂಟು ಮಾಡುವ ಉದ್ದೇಶ ಹೊಂದಿರಲಿಲ್ಲ.
6
+ ನನ್ನ ಹೇಳಿಕೆಯಿಂದ ಯಾವುದೇ ಸಮಾಜ ಅಥವಾ ವ್ಯಕ್ತಿಯ ಮನಸ್ಸಿಗೆ ಧಕ್ಕೆಯಾಗಿದ್ದರೆ ಅಂತರಾಳದಿಂದ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಒಕ್ಕಣೆಯನ್ನು ಓದಿದರು. ನೀವು (ನ್ಯಾ.ಶ್ರೀಶಾನಂದ) ಪ್ರಾಮಾಣಿಕರಾದ ನ್ಯಾಯಮೂರ್ತಿಗಳಾಗಿದ್ದೀರಿ. ಕಿರಿಯ ವಕೀಲರಿಗೆ ತಾವು ಉತ್ತೇಜನ ನೀಡಬೇಕು.
7
+ ನಿಮ ಪೀಠದ ಮುಂದೆ ಕಿರಿಯ ವಕೀಲರು ವಾದಿಸಲು ಹೆದರುವಂತಿರಬಾರದು. ಅನಗತ್ಯ ಮಾತುಗಳನ್ನು ಆಡಬಾರದು ಎಂದು ಸಲಹೆ ನೀಡಿದ್ದೇವೆ. ಇದಕ್ಕೆ ನ್ಯಾಯಮೂರ್ತಿಗಳೂ ಸಹಮತಿಸಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ.
eesanje/url_46_12_9.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಕಾಂಗ್ರೆಸ್‌‍ನಿಂದ ಬಿಪಿಎಲ್‌ ಕಾರ್ಡ್‌ ರದ್ದುಗೊಳಿಸುವ ಹುನ್ನಾರ ನಡೆದಿದೆ : ಕೋಟಾ ಶ್ರೀನಿವಾಸ ಪೂಜಾರಿ
2
+
3
+ ಚಿಕ್ಕಮಗಳೂರು,ಸೆ.22– ಗೃಹಲಕ್ಷಿ ಯೋಜನೆಗೆ ಹಣ ಹೊಂದಿಸಲು ರಾಜ್ಯದ ಕಾಂಗ್ರೆಸ್‌‍ ಸರ್ಕಾರ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಗೊಳಿಸುವ ಹುನ್ನಾರ ನಡೆಸಿದ್ದು, ಬಿಜೆಪಿ ಕಾರ್ಯಕರ್ತರು ಇದನ್ನು ಪ್ರತಿಭಟಿಸಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಕರೆ ನೀಡಿದರು.
4
+ ನಗರದ ಜಿಲ್ಲಾ ಬಿಜೆಪಿ ಕಚೇರಿ ಪಾಂಚಜನ್ಯದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಸಂಬಂಧ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 50,000 ಬಿಪಿಎಲ್‌ ಕಾರ್ಡುಗಳು ರದ್ದಾಗುವ ಸಾಧ್ಯತೆಗಳಿವೆ. ಈ ಸಂಬಂಧ ರಾಜ್ಯ ಸರ್ಕಾರ ಸಮೀಕ್ಷೆ ಸಹ ನಡೆಸುತ್ತಿದೆ ಎಂದರು.
5
+ ಸಾವಿರಾರು ಬಡ ಜನರಿಗೆ ತೊಂದರೆ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಪಕ್ಷದ ಮಹಿಳಾ ಮೋರ್ಚ ಅಥವಾ ಬೇರೆ ಯಾವುದಾದರೂ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ ಬಡವರ ಪಡಿತರ ಚೀಟಿಗಳನ್ನು ರದ್ದುಪಡಿಸಿದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಬೇಕು ಎಂದು ಹೇಳಿದರು.
6
+ ಇದರಿಂದ ಕನಿಷ್ಠಪಕ್ಷ ಬಿಪಿಎಲ್‌ ಕಾರ್ಡುಗಳಿಗೆ ಸ್ವಲ್ಪಮಟ್ಟಿನ ರಿಯಾಯಿತಿಯಾದರೂ ಸಿಗಬಹುದು. ಬಡವರಿಗೆ ಅನುಕೂಲವಾಗಬಹುದು ಎಂದರು. ಇಡೀ ದೇಶದಲ್ಲಿ ಪಕ್ಷದ ಸದಸ್ಯತ್ವ ಅಭಿಯಾನ ನಡೆಯುತ್ತಿದೆ. ನಮ ನಮ ಬೂತ್‌ ಗಳಲ್ಲಿ ಅಭಿಯಾನಕ್ಕೆ ವೇಗ ನೀಡಬೇಕು. ಕೆಲವೆಡೆ ತುಂಬಾ ಚೆನ್ನಾಗಿ ನಡೆದಿದೆ. ಪ್ರಮುಖವಾಗಿ ಮಹಾಶಕ್ತಿ ಕೇಂದ್ರಗಳು, ಮಂಡಲಗಳಲ್ಲಿ ಇನ್ನಷ್ಟು ಚುರುಕಾಗಿ ಸದಸ್ಯತ್ವ ಅಭಿಯಾನ ನಡೆಯಬೇಕಿದೆ ಎಂದು ಕರೆ ನೀಡಿದರು.
7
+ ಮಂಡಲಗಳು ಮತ್ತು ಶಕ್ತಿ ಕೇಂದ್ರದ ನಿಜವಾದ ಶಕ್ತಿಯ ಅರವಿಗೆ ಬರುವುದೇ ಸದಸ್ಯತ್ವ ನೊಂದಣಿಯ ಆಧಾರದ ಮೇಲೆ. ಈ ಹಿನ್ನೆಲೆಯಲ್ಲಿ ಪಕ್ಷದ ಎಲ್ಲಾ ಮೋರ್ಚಾಗಳು ಜವಾಬ್ದಾರಿಯನ್ನು ತೆಗೆದುಕೊಂಡು ಆಯಾ ಬೂತ್‌, ಶಕ್ತಿ ಕೇಂದ್ರ ಹಾಗೂ ಮಂಡಲಗಳ ಪ್ರಮುಖರನ್ನು ಜೋಡಿಸಿಕೊಂಡು ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದೆ.
8
+ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಮಾತನಾಡಿ, ಸದಸ್ಯತ್ವ ಅಭಿಯಾನ ಕೇವಲ ಸಂಖ್ಯಾತಕವಾಗಿ ಆದರೆ ಸಾಲದು. ಅದು ಗುಣಾತಕವಾಗಿರಬೇಕು. ಪಕ್ಷದ ಕಾರ್ಯವು ವಿಸ್ತಾರವಾಗಬೇಕಾದರೆ ಅದಕ್ಕೆ ಸದಸ್ಯತ್ವವು ಒಂದು ಕಾರಣವಾಗುತ್ತದೆ. ಈ ಹಿನ್ನೆಲೆಯಲ್ಲಿ ಕೊಳಗೇರಿಯಿಂದ ಹಿಡಿದು ಮೇಲಟ್ಟದ ಹೊರಗಿನವರನ್ನು ಸದಸ್ಯರನ್ನಾಗಿ ಮಾಡಿಕೊಳ್ಳಬೇಕು ಎಂದರು.
9
+ ಜನರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡಿದ ಪರಿಣಾಮ ನಗರದಲ್ಲಿ ನಾಲ್ಕನೇ ಸ್ಥಾನದಲ್ಲಿದ್ದ ಬಿಜೆಪಿ ಇಂದು ಮೊದಲನೇ ಸ್ಥಾನಕ್ಕೆ ಏರಿದೆ. ಪಕ್ಷದ ಸಕ್ರಿಯ ಸದಸ್ಯರಾಗಲು ಕನಿಷ್ಠ 100 ಜನರನ್ನು ಸದಸ್ಯರನ್ನಾಗಿ ಮಾಡಿಸಬೇಕಾಗುತ್ತದೆ. ಅಂತವರು ಪಕ್ಷದಲ್ಲಿ ಜವಾಬ್ದಾರಿಗಳನ್ನು ಪಡೆದುಕೊಳ್ಳಲು ಅರ್ಹತೆ ಪಡೆಯುತ್ತಾರೆ. ಸದಸ್ಯತ್ವ ಅಭಿಯಾನ ಪ್ರಕ್ರಿಯೆಯ ತಾಂತ್ರಿಕ ವಿಚಾರಗಳು ಇನ್ನೂ ಅರ್ಥವಾಗಿಲ್ಲವಾದರೆ ಪ್ರಮುಖರಾದ ರಾಕೇಶ್‌, ಸಂತೋಷ್‌ ಕೋಟ್ಯಾನ್‌, ಸಮೃದ್ಧ ಪೈ ಅವರನ್ನು ಭೇಟಿ ಮಾಡಿ ಗೊಂದಲಗಳಿದ್ದರೆ ಸರಿಪಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.
10
+ ಬಿಜೆಪಿ ನಗರಾಧ್ಯಕ್ಷ ಕೆಂಪನಹಳ್ಳಿ ಪುಷ್ವರಾಜ್‌ , ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ ಆರ್‌ ದೇವರಾಜ್‌ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಡಾ. ನರೇಂದ್ರ, ಬೆಳವಾಡಿ ರವೀಂದ್ರ, ಮುಖಂಡರುಗಳಾದ ಪ್ರೇಮ್‌ ಕುಮಾರ್‌, ಬಿ.ರಾಜಪ್ಪ, ಜಸಂತಾಅನಿಲ್‌ ಕುಮಾರ್‌, ಪವಿತ್ರ, ಸಂತೋಷ್‌ ಕೋಟ್ಯಾನ್‌, ಬಸವರಾಜ್‌, ಜಿ.ಶಂಕರ ಉಪಸ್ಥಿತರಿದ್ದರು.
eesanje/url_46_130_1.txt ADDED
@@ -0,0 +1,3 @@
 
 
 
 
1
+ ಪೆನ್‌ಡ್ರೈವ್‌ ಹಂಚಿಕೆ ಪ್ರಕರಣ : ಇಬ್ಬರನ್ನು ಬಂಧಿಸಿದ ಎಸ್‌‍ಐಟಿ ಅಧಿಕಾರಿಗಳು
2
+ ಬೆಂಗಳೂರು, ಮೇ 28-ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಪೆನ್‌ಡ್ರೈವ್‌ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರನ್ನು ಎಸ್‌‍ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
3
+ ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ ನವೀನ್‌ ಗೌಡ ಹಾಗೂ ಚೇತನ್‌ ಇಂದು ಹೈಕೋರ್ಟ್‌ಗೆ ಬಂದಿದ್ದ ವೇಳೆ ಎಸ್‌‍ಐಟಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ನವೀನ್‌ನನ್ನು ಬಂಧಿಸದ ಬಗ್ಗೆ ಹಲವಾರು ರಾಜಕೀಯ ಮುಖಂಡರುಗಳಿಂದ ಸಾಕಷ್ಟು ಆಕ್ಷೇಪಗಳು ಬಂದಿತ್ತು.
eesanje/url_46_130_10.txt ADDED
@@ -0,0 +1,5 @@
 
 
 
 
 
 
1
+ ಭಾರೀ ಅನಾಹುತ ತಪ್ಪಿಸಿದ ಕೊಂಕಣ ರೈಲ್ವೆ ಮಾರ್ಗದ ಟ್ರ್ಯಾಕ್‌ ನಿರ್ವಾಹಕ
2
+ ಉಡುಪಿ, ಮೇ 27-ರೈಲ್ವೆ ಹಳಿ ಜಾರಿರುವುದನ್ನು ಪತ್ತೆಹಚ್ಚಿದ ಕೊಂಕಣ ರೈಲ್ವೆ ಮಾರ್ಗದ ಟ್ರ್ಯಾಕ್‌ ನಿರ್ವಾಹಕ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿಸಿದ್ದಾರೆ.ಉಡುಪಿ ಸಮೀಪದ ಇನ್ನಂಜೆ ಮತ್ತು ಪಡುಬಿದ್ರೆ ಮಾರ್ಗದ ನಡುವೆ ರಾತ್ರಿ 2.25ರ ಸುಮಾರಿಗೆ ರೈಲ್ವೆ ಹಳಿ ಜಾರಿರುವುದನ್ನು ಟ್ರ್ಯಾಕ್‌ ನಿರ್ವಾಹಕ ಪ್ರದೀಪ್‌ ಶೆಟ್ಟಿ ಪತ್ತೆ ಮಾಡಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ರೈಲ್ವೆ ಹಳಿ ದೋಷದ ಬಗ್ಗೆ ಮಾಹಿತಿ ನೀಡಿದ್ದಾನೆ.
3
+ ಕೂಡಲೇ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳನ್ನು ತಡೆಹಿಡಿದಿದ್ದಾರೆ. ಕಾರ್ಯಪ್ರವೃತ್ತರಾದ ರೈಲ್ವೆ ಸಿಬ್ಬಂದಿ ಸ್ಥಳಕ್ಕಾಗಮಿಸಿ ದೋಷವನ್ನು ತ್ವರಿತವಾಗಿ ಸರಿಪಡಿಸಿದ್ದು, ಮುಂಜಾನೆ 5.50ರ 20 ಕಿಲೋ ಮೀಟರ್‌ ವೇಗದ ನಿರ್ಬಂಧದೊಂದಿಗೆ ರೈಲು ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
4
+ ರೈಲ್ವೆ ಹಳಿ ನಿರ್ವಾಹಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದ್ದು, ಕೊಂಕಣ ರೈಲ್ವೆ ಕಾರ್ಪೊರೇಷನ್‌ ಲಿಮಿಟೆಡ್‌ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸಂತೋಷ್‌ಕುಮಾರ್‌ ಜಾ ಪ್ರದೀಪ್‌ ಶೆಟ್ಟಿ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ 25 ಸಾವಿರ ರೂ. ನಗದು ಬಹುಮಾನ ಘೋಷಿಸಿದ್ದಾರೆ.
5
+ ನಂತರ ಮರುಸ್ಥಾಪಿತ ಟ್ರ್ಯಾಕ್‌ಸೈಟ್‌ನಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.ರೈಲ್ವೆ ಹಳಿ ದೋಷವನ್ನು ಸರಿಪಡಿಸುವವರೆಗೂ ಪ್ರಯಾಣಿಕರು ಕೆಲ ಗಂಟೆಗಳ ಕಾಲ ಪರದಾಡುವಂತಾಗಿತ್ತು. ಏನೇ ಆದರೂ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿದಂತಾಗಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.
eesanje/url_46_130_11.txt ADDED
@@ -0,0 +1,5 @@
 
 
 
 
 
 
1
+ ರೇವ್‌ ಪಾರ್ಟಿ ಪ್ರಕರಣ : ಸಿಸಿಬಿ ವಿಚಾರಣೆಗೆ ಸಮಯಾವಕಾಶ ಕೇಳಿದ ನಟಿ
2
+ ಬೆಂಗಳೂರು, ಮೇ 27-ಎಲೆಕ್ಟ್ರಾನಿಕ್‌ ಸಿಟಿಯ ಫಾರ್ಮ್‌ಹೌಸ್‌‍ನಲ್ಲಿ ಆಯೋಜಿಸಿದ್ದ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿದ್ದ ತೆಲುಗು ನಟಿ ಹೇಮಾ ಅವರು ಸಿಸಿಬಿ ಪೊಲೀಸರ ಮುಂದೆ ಹಾಜರಾಗಲು ಒಂದು ವಾರ ಕಾಲಾವಕಾಶ ಕೇಳಿದ್ದಾರೆ.
3
+ ರೇವ್‌ ಪಾರ್ಟಿಯಲ್ಲಿ ಪಾಲ್ಗೊಂಡಿದ್ದವರ ಪೈಕಿ 86 ಮಂದಿ ಡ್ರಗ್ಸ್ ಸೇವಿಸಿದ್ದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಂಡಿತ್ತು. ದಾಳಿ ಸಂದರ್ಭದಲ್ಲಿ ಐವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.
4
+ ನಟಿ ಸೇರಿದಂತೆ ಇಂದು 8 ಮಂದಿಗೆ ವಿಚಾರಣೆಗೆ ಹಾಜರಾಗಬೇಕೆಂದು ಸಿಸಿಬಿ ನೋಟಿಸ್‌‍ ನೀಡಿತ್ತು. ಆದರೆ, ಅನಾರೋಗ್ಯ ಹಾಗೂ ಇತರೆ ಕಾರಣ ನೀಡಿ ಒಂದು ವಾರದ ಕಾಲಾವಕಾಶ ನೀಡಬೇಕೆಂದು ನಟಿ ಹೇಮಾ ಮನವಿ ಮಾಡಿದ್ದಾರೆ.
5
+ ಇನ್ನುಳಿದ ಏಳು ಮಂದಿ ಇಂದು ಸಂಜೆ ವೇಳೆಗೆ ಸಿಸಿಬಿ ಮುಂದೆ ಹಾಜರಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.ಮಾದಕ ಜಾಲದ ಬೆನ್ನತ್ತಿರುವ ಸಿಸಿಬಿ ಪೊಲೀಸರು ನಶೆಯಲ್ಲಿ ತೇಲಿದ್ದವರಿಗೆ ನೋಟಿಸ್‌‍ ನೀಡಿ ತನಿಖೆ ಚುರುಕುಗೊಳಿಸುತ್ತಿದ್ದಂತೆ ರೇವ್‌ ಪಾರ್ಟಿಯಲ್ಲಿ ಬೆಟ್ಟಿಂಗ್‌ ದಂಧೆ ಸೇರಿದಂತೆ ಅನೈತಿಕ ಚಟುವಟಿಕೆಗಳು ನಡೆದಿರುವುದು ಗೊತ್ತಾಗಿದ್ದು, ರೇವ್‌ ಪಾರ್ಟಿಯ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.
eesanje/url_46_130_12.txt ADDED
@@ -0,0 +1,5 @@
 
 
 
 
 
 
1
+ ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಡೆಂಟ್‌ ಆತಹತ್ಯೆ
2
+ ಶಿವಮೊಗ್ಗ, ಮೇ 27– ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಡೆಂಟ್‌ ನೇಣು ಹಾಕಿಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಕಳೆದ ರಾತ್ರಿ ಇಲ್ಲಿ ನಡೆದಿದೆ. ಬೆಂಗಳೂರಿನಲ್ಲಿರುವ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ಲೆಕ್ಕಪತ್ರ ವಿಭಾಗದ ಅಧೀಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದ ಚಂದ್ರಶೇಖರ್‌ (52) ಆತಹತ್ಯೆ ಮಾಡಿಕೊಂಡವರು.
3
+ ವಿನೋಬನಗರದ ಕೆಂಚಪ್ಪ ಲೇಔಟ್‌ನಲ್ಲಿರುವ ಮನೆಯಲ್ಲಿ ಅವರು ಕಳೆದ ರಾತ್ರಿ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ನಿಗಮದಲ್ಲಿ ಕೇಳಿ ಬಂದಿದ್ದ ಅವ್ಯವಹಾರದಿಂದ ಮನನೊಂದಿದ್ದ ಅವರು ಡೆತ್‌ನೋಟ್‌ ಬರೆದಿಟ್ಟು ಆತಹತ್ಯೆಗೆ ಶರಣಾಗಿದ್ದಾರೆ.
4
+ ಕಳೆದ ಶುಕ್ರವಾರ ಅವರು ರಜೆ ಹಾಕಿ ತಮ ಸ್ವಂತ ಊರಾದ ಶಿವಮೊಗ್ಗಕ್ಕೆ ಬಂದಿದ್ದರು. ಎಲ್ಲರೊಂದಿಗೆ ಲವಲವಿಕೆಯಿಂದಿದ್ದ ಅವರು ನಿನ್ನೆ ಸಂಜೆ ಬೆಡ್‌ರೂಮ್‌ಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ರಾತ್ರಿ ಊಟಕ್ಕೆ ಕರೆಯಲು ಪತ್ನಿ ಬಾಗಿಲು ತಟ್ಟಿದಾಗ ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡು ಮನೆಯವರು ಬಾಗಿಲು ಒಡೆದು ನೋಡಿದಾಗ ನೇಣು ಹಾಕಿಕೊಂಡಿರುವುದು ಗೊತ್ತಾಗಿದೆ.
5
+ ತಕ್ಷಣ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಡೆತ್‌ನೋಟ್‌ನಲ್ಲಿ ಇಲಾಖೆಯ ಕೆಲ ಅಧಿಕಾರಿಗಳ ಹೆಸರು ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ ಎಂದು ಹಿರಿಯ ಪೊಲೀಸ್‌‍ ಅಧಿಕಾರಿಗಳು ತಿಳಿಸಿದ್ದಾರೆ.