CoolCoder44 commited on
Commit
0dd10d1
·
verified ·
1 Parent(s): 7bfd645

b8955dfe9429996bf3c74dac883f32da1ee53f14036bd10690076fdac61efaab

Browse files
Files changed (50) hide show
  1. eesanje/url_46_297_2.txt +12 -0
  2. eesanje/url_46_297_3.txt +8 -0
  3. eesanje/url_46_297_4.txt +10 -0
  4. eesanje/url_46_297_5.txt +7 -0
  5. eesanje/url_46_297_6.txt +9 -0
  6. eesanje/url_46_297_7.txt +7 -0
  7. eesanje/url_46_297_8.txt +7 -0
  8. eesanje/url_46_297_9.txt +5 -0
  9. eesanje/url_46_298_1.txt +5 -0
  10. eesanje/url_46_298_10.txt +7 -0
  11. eesanje/url_46_298_11.txt +8 -0
  12. eesanje/url_46_298_12.txt +7 -0
  13. eesanje/url_46_298_2.txt +9 -0
  14. eesanje/url_46_298_3.txt +9 -0
  15. eesanje/url_46_298_4.txt +10 -0
  16. eesanje/url_46_298_5.txt +15 -0
  17. eesanje/url_46_298_6.txt +7 -0
  18. eesanje/url_46_298_7.txt +5 -0
  19. eesanje/url_46_298_8.txt +7 -0
  20. eesanje/url_46_298_9.txt +5 -0
  21. eesanje/url_46_299_1.txt +6 -0
  22. eesanje/url_46_299_10.txt +14 -0
  23. eesanje/url_46_299_11.txt +6 -0
  24. eesanje/url_46_299_12.txt +7 -0
  25. eesanje/url_46_299_2.txt +10 -0
  26. eesanje/url_46_299_3.txt +8 -0
  27. eesanje/url_46_299_4.txt +9 -0
  28. eesanje/url_46_299_5.txt +5 -0
  29. eesanje/url_46_299_6.txt +7 -0
  30. eesanje/url_46_299_7.txt +11 -0
  31. eesanje/url_46_299_8.txt +8 -0
  32. eesanje/url_46_299_9.txt +9 -0
  33. eesanje/url_46_29_1.txt +13 -0
  34. eesanje/url_46_29_10.txt +14 -0
  35. eesanje/url_46_29_11.txt +4 -0
  36. eesanje/url_46_29_12.txt +9 -0
  37. eesanje/url_46_29_2.txt +7 -0
  38. eesanje/url_46_29_3.txt +12 -0
  39. eesanje/url_46_29_4.txt +10 -0
  40. eesanje/url_46_29_5.txt +10 -0
  41. eesanje/url_46_29_6.txt +9 -0
  42. eesanje/url_46_29_7.txt +15 -0
  43. eesanje/url_46_29_8.txt +7 -0
  44. eesanje/url_46_29_9.txt +5 -0
  45. eesanje/url_46_2_1.txt +9 -0
  46. eesanje/url_46_2_10.txt +7 -0
  47. eesanje/url_46_2_11.txt +10 -0
  48. eesanje/url_46_2_12.txt +16 -0
  49. eesanje/url_46_2_2.txt +12 -0
  50. eesanje/url_46_2_3.txt +10 -0
eesanje/url_46_297_2.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಬಿಜೆಪಿ-ಜೆಡಿಎಸ್ ಮೋದಿ ನಾಯಕತ್ವದಲ್ಲಿ ಮುನ್ನಡೆಯಲಿದೆ : ದೇವೇಗೌಡರು
2
+ ಹಾಸನ, ಡಿ.5- ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿಯೊಂದಿಗೆ 28 ಕ್ಷೇತ್ರದಲ್ಲಿಯೂ ಸ್ಪರ್ಧೆ ಮಾಡುವ ಮೂಲಕ ಐಕ್ಯತೆ ಪ್ರದರ್ಶನ ಮಾಡಲಿದ್ದೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ತಿಳಿಸಿದರು.
3
+ ನಗರದ ಸಂಸದರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿಯ ನಂತರ ಸೀಟು ಹಂಚಿಕೆ ವಿಚಾರವಾಗಿ ಮುಂದಿನ ವಾರ ಶಾ, ಮೋದಿಯವರು ಮಾತುಕತೆಗೆ ಕರೆಯಬಹುದು, ಮಾತುಕತೆಯ ನಂತರ ಸೀಟು ಹಂಚಿಕೆ ಬಗ್ಗೆ ತೀರ್ಮಾನ ಅಂತಿಮವಾಗಲಿದೆ ಎಂದರು.
4
+ ನಾನು ಕೇವಲ ಅಹಂಕಾರದಲ್ಲಿ ಮಾತನಾಡುತ್ತಿಲ್ಲ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರತ್ಯುತ್ತರ ಕೊಡುವಂತಹ ಸಾಮಥ್ರ್ಯ ಶಕ್ತಿ ಜೆಡಿಎಸ್ ಹಾಗೂ ಬಿಜೆಪಿಗೆ ಇದೆ. ಮೋದಿ ಅವರ ನಾಯಕತ್ವದಲ್ಲಿ ಮುನ್ನಡೆಯಲ್ಲಿದ್ದೇವೆ ಎಂದು ತಿಳಿಸಿದರು.
5
+ ಸರ್ಕಾರಿ ಹುದ್ದೆಗಳ ನೇಮಕಾತಿ ಅಕ್ರಮ ತಡೆಗೆ ಕಠಿಣ ಕಾನೂನು
6
+ ಜನತಾ ಪರಿವಾರ ಪ್ರಾರಂಭವಾದ ದಿನದಿಂದ ರೈತರು, ಹಿಂದುಳಿದ ವರ್ಗದ ಜನರ ಪರವಾಗಿ ಕೆಲಸ ಮಾಡಿದ್ದೇವೆ. ಇದಕ್ಕೆ ಹಲವು ನಿದರ್ಶನಗಳು ಇದೆ. ನಾಯಕ ಸಮಾಜಕ್ಕೆ, ಮಹಿಳೆಯರಿಗೆ, ಮುಸ್ಲಿಮರಿಗೆ ಮೀಸಲಾತಿ ದೊರಕಿಸಿ ಕೊಟ್ಟಿರುವ ಕೀರ್ತಿ ಜೆಡಿಎಸ್‍ಗೆ ಇದೆ ಎಂದು ಅವರು ಹೇಳಿದರು.
7
+ ರೈತರ ಸಂಕಷ್ಟಕ್ಕೆ ಸ್ಪಂದನೆ:ರಾಜ್ಯದ ರೈತರ ಸಂಕಷ್ಟದ ಸಮಯದಲ್ಲಿ ಜೆಡಿಎಸ್ ಹೋರಾಟ ನಡೆಸಿದ್ದು, 3000 ಮಂದಿ ರೈತರೊಂದಿಗೆ ದೆಹಲಿಯಲ್ಲಿ ಪ್ರತಿಭಟನೆ ಮಾಡಿದ ಉದಾಹರಣೆಗಳು ಇದೆ. ಕಾಫಿ ಬೆಳೆಗಾರರ ಸಂಕಷ್ಟಕ್ಕೂ ಸಹ ಜೆಡಿಎಸ್ ಸ್ಪಂದಿಸಿದೆ. ಇಂತಹ ಪಕ್ಷವನ್ನು ಮುಗಿಸಿಬಿಡುತ್ತೇವೆ ಎಂದು ಬಂದಾಗ ಮೋದಿ ಅವರು ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಬರುವ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ನಮ್ಮ ಪಕ್ಷದ ಮುಖಂಡರು ಚರ್ಚೆ ನಡೆಸಲಿದ್ದು ಲೋಕಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೊರಟ ಮಾಡಲಿದ್ದೇವೆ ಎಂದರು.
8
+ ಮುಖಂಡರೊಂದಿಗೆ ಚರ್ಚಿಸಿ ತೀರ್ಮಾನ:ಪ್ರಧಾನ ಮಂತ್ರಿ ಮೋದಿ, ಗೃಹ ಮಂತ್ರಿ ಅಮಿತ್ ಶಾ, ಪಕ್ಷದ ಅಧ್ಯಕ್ಷರಾದ ನಡ್ದಾ, ರಾಜ್ಯ ಘಟಕದ ಅಧ್ಯಕ್ಷರಾದ ವಿಜಯೇಂದ್ರ , ವಿರೋಧ ಪಕ್ಷದ ನಾಯಕರಾದ ಅಶೋಕ್, ಹಿರಿಯ ಮುಖಂಡರಾದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜೆಡಿಎಸ್‍ನ ರಾಜ್ಯ ಘಟಕದ ಅಧ್ಯಕ್ಷ ಕುಮಾರಸ್ವಾಮಿ ಹಾಗೂ ಕೇಂದ್ರದ ಮುಖಂಡರೊಂದಿಗೆ ಸಮಾಲೋಚನೆ ಮಾಡುವ ಮೂಲಕ ಮುಂಬರುವ ಲೋಕಸಭೆ ಚುನಾವಣೆಗೆ ಮೈತ್ರಿ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದರು.
9
+ ನಾವು ರಾಜ್ಯದಲ್ಲಿ 28ಕ್ಕೆ 28 ಸ್ಥಾನವನ್ನು ಗೆಲ್ಲಲಿದ್ದೇವೆ ಈ ವಿಚಾರದಲ್ಲಿ ಐಕ್ಯತೆಯನ್ನು ಪ್ರದರ್ಶನ ಮಾಡಲಿದ್ದು ಯಾವುದೇ ಸಂಕೋಚ ಇಲ್ಲ ,ಲೋಕಾ ಚುನಾವಣೆ ಸಂದರ್ಭದಲ್ಲಿನ ಮೈತ್ರಿ ಸ್ಥಳೀಯ ಚುನಾವಣೆ ಗಳಲ್ಲಿಯೂ ಮುಂದುವರೆಯಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ದೇವೇಗೌಡರು ಸ್ಥಳೀಯ ಸಂಸ್ಥೆಯ ಚುನಾವಣೆ ರಾಷ್ಟ್ರೀಯ ಚುನಾವಣೆಗೆ ಬೆರೆಸುವುದು ಬೇಡ ಎರಡು ಚುನಾವಣೆಗಳಿಗೆ ಅನವಶ್ಯಕ ಹೊಂದಾಣಿಕೆ ಮಾಡುವುದು ಸರಿಯಲ್ಲ ಎಂದರು.
10
+ ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳ ಶೀಘ್ರ ನೇಮಕ
11
+ ರಾಜ್ಯದಲ್ಲಿ ಜೆಡಿಎಸ್ ಪ್ರಾದೇಶಿಕ ಪಕ್ಷ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಮೊನ್ನೆ ಕೂಡ ಕಾಂಗ್ರೆಸ್ ನಾಯಕರು ಲಘುವಾಗಿ ಮಾತನಾಡಿದ್ದಾರೆ. ಇದು ಒಂದೆಡೆಯಾದರೆ ಮೋದಿ ಪ್ರಧಾನಿ ಆಗಿ ನನ್ನ ಬಗ್ಗೆ ವೈಯಕ್ತಿಕ ಗೌರವ ಇಟ್ಟುಕೊಂಡಿದ್ದು, ಕಾಂಗ್ರೆಸ್ ನಡವಳಿಕೆಗೆ ಸೂಕ್ಷ್ಮವಾಗಿ ಗಮನಿಸಿ ಮೋದಿ ಮತ್ತು ಷಾ ಅವರು ನಮ್ಮನ್ನು ಸ್ವಾಗತ ಮಾಡಿದ್ದಾರೆ. ಮುಂದಿನ ರಾಜಕೀಯ ಬೆಳವಣಿಗೆ ಮೋದಿ, ಶಾ ಅವರ ಜೊತೆ ಕರ್ನಾಟಕದಲ್ಲಿ ಕಾಂಗ್ರೆಸ್ ವಿರುದ್ಧ ಹೋರಾಡುವುದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ ಎಂದರು.
12
+ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನ ಗೆದ್ದಿದ್ದೇವೆ ಎಂದು ಬೀಗುತ್ತಿರುವ ಕಾಂಗ್ರೆಸ್ ನಾಯಕರಿಗೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಮ್ಮ ಶಕ್ತಿ ಏನು ಎಂದು ತೋರಿಸಲಿದ್ದೇವೆ ಎಂದು ತಿಳಿಸಿದರು.
eesanje/url_46_297_3.txt ADDED
@@ -0,0 +1,8 @@
 
 
 
 
 
 
 
 
 
1
+ ಮುಸ್ಲಿಮರಿಗೆ ಸಂಪತ್ತು ಹಂಚುತ್ತೇನೆ ಎಂದ ಸಿಎಂಗೆ ತಿರುಗೇಟು ಕೊಟ್ಟ ಅಶೋಕ್
2
+ ಬೆಳಗಾವಿ,ಡಿ.5- ಮುಸ್ಲಿಮರಿಗೆ ದೇಶದ ಸಂಪತ್ತು ಹಂಚುತ್ತೇನೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಆರ್.ಅಶೋಕ್, ಕಾಂಗ್ರೆಸ್ ಪಕ್ಷದ ಸಂಪತ್ತು ಇದ್ದರೆ ಹಂಚಿಕೊಳ್ಳಲಿ ಎಂದು ವ್ಯಂಗ್ಯವಾಡಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪು ಅಂದರೆ ಸಿದ್ದರಾಮಯ್ಯನವರಿಗೆ ಬಹಳ ಪ್ರೀತಿ. ಅವರ ಹೇಳಿಕೆ ದೇಶ ಮತ್ತು ರಾಜ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಟಿಪ್ಪು ಮೇಲೆ ಅತಿಯಾದ ಪ್ರೀತಿ ತೋರಿಸಿ ಹಿಂದೆ ಏನಾಯ್ತು? ಎಂಬುದನ್ನು ಅವರು ಮನಗಾಣಬೇಕು ಎಂದು ಟೀಕಿಸಿದರು.
4
+ ಹಿಂದೂಗಳನ್ನ ಎರಡನೇ ದರ್ಜೆಯ ಪ್ರಜೆಗಳ ರೀತಿ ನೋಡುತ್ತಿದ್ದಾರೆ. ಎಲ್ಲರಿಗೂ ಸಮಾನತೆ ಇರಬೇಕು. ಟಿಪ್ಪು ಜಯಂತಿ, ಶಾದಿ ಭಾಗ್ಯ, ಮುಸ್ಲಿಂ ವಿವಾಹಕ್ಕೆ ಧನ ಸಹಾಯ ಈ ರೀತಿ ಕಾರ್ಯಕ್ರಮಗಳನ್ನ ತಂದರು. ಮುಸ್ಲಿಂಮರನ್ನ ವೋಟಿನ ಗಾಳವಾಗಿ ಕಾಂಗ್ರೆಸ್ ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು.
5
+ ಸರ್ಕಾರಿ ಹುದ್ದೆಗಳ ನೇಮಕಾತಿ ಅಕ್ರಮ ತಡೆಗೆ ಕಠಿಣ ಕಾನೂನು
6
+ ಬಿಜೆಪಿ ಕಾರ್ಯಕರ್ತನ ಮೇಲೆ ಚಾಕು ಇರಿತ ಪ್ರಕರಣ ಕುರಿತು ಮಾತನಾಡಿದ ಅಶೋಕ್, ನಾನು ಸಂಜೆ ಪೃಥ್ವಿರಾಜ್ ಅವರನ್ನು ಭೇಟಿಯಾಗುತ್ತೇನೆ. ಘಟನೆಯ ಹಿಂದೆ ಕಾಂಗ್ರೆಸ್ ಕೈವಾಡ ಇರುವುದು ಪಕ್ಕಾ ಇದೆ ಎಂದು ಆರೋಪಿಸಿದರು.
7
+ ಕಾಂಗ್ರೆಸ್‍ಗೆ ಗೂಂಡಾ ಸಂಸ್ಕೃತಿ ಮೊದಲಿಂದಲೂ ಇದೆ. ಇದೊಂದು ಗೂಂಡಾ ಸರ್ಕಾರ. ಕಳೆದ ಆರು ತಿಂಗಳಿಂದ ಬಿಜೆಪಿ ಕಾರ್ಯಕರ್ತರ ಮೇಲೆ ನಿರಂತರ ಹಲ್ಲೆ ನಡೆಯುತ್ತಿದೆ. ಮಂಗಳೂರು ಉಡುಪಿಯಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಗಡಿಪಾರು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
8
+ ರಾಜ್ಯದಲ್ಲಿ ಭೀಕರವಾದ ಬರ ತಾಂಡವಾಡುತ್ತಿದೆ. ಸರ್ಕಾರಕ್ಕೆ ಅನ್ನದಾತನ ಬಗ್ಗೆ ತಾಯಿ ಹೃದಯ ಇರಬೇಕಿತ್ತು. ಆದರೆ ಸರ್ಕಾರಕ್ಕೆ ಕಟುಕುನ ಹೃದಯ ಇದೆ. ಇಷ್ಟೊತ್ತಿಗೆ ಬರ ನಿರ್ವಹಣೆಗೆ ಹಲವಾರು ಕಾರ್ಯಕ್ರಮ ಕೊಡಬೇಕಿತ್ತು. ಸಬೂಬು ಹೇಳಿಕೊಂಡು ಸುಮ್ಮನೇ ಕೇಂದ್ರದ ಮೇಲೆ ಗೂಬೆ ಕೂರಿಸುವುದಲ್ಲ ಎಂದರು. ಸಚಿವರು, ಶಾಸಕರು ತೆಲಂಗಾಣದಲ್ಲಿದ್ದಾರೆ. ಕಾಂಗ್ರೆಸ್ ತೆಲಂಗಾಣದಲ್ಲಿ ಗ್ಯಾರೆಂಟಿಗಳ ಭರವಸೆ ನೀಡಿ ಸ್ಪಷ್ಟವಾಗಿ ಕಾನೂನು ಉಲ್ಲಂಘನೆ ಮಾಡಿದೆ ಎಂದು ದೂರಿದರು.
eesanje/url_46_297_4.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಎಂಎಲ್‌ಸಿ ಚೆನ್ನರಾಜ್ ಹಟ್ಟಿಹೊಳಿ ಬಂಧನಕ್ಕೆ ವಿಜಯೇಂದ್ರ ಒತ್ತಾಯ
2
+ ಬೆಳಗಾವಿ,ಡಿ.5-ಬಿಜೆಪಿ ಕಾರ್ಯಕಾರಿಣಿ ಸದಸ್ಯ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಚಾಕು ಇರಿತ ಪ್ರಕರಣದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಹೋದರ ಹಾಗೂ ವಿಧಾನಪರಿಷತ್ ಸದಸ್ಯ ಚೆನ್ನರಾಜ್ ಹಟ್ಟಿಹೊಳಿ ಅವರ ಕೈವಾಡ ಇರುವುದರಿಂದ ಕೂಡಲೇ ಪೊಲೀಸರು ಬಂಧಿಸಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲ್ಲೆ ನಡೆದ ಜಾಗದಲ್ಲಿ ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರ ಕಾರು ಪತ್ತೆಯಾಗಿದೆ. ಈ ಪ್ರಕರಣದಲ್ಲಿ ತಮ್ಮ ಕೈವಾಡ ಇಲ್ಲ ಎನ್ನುವುದಾಗಿದ್ದರೆ ಅಲ್ಲಿ ವಾಹನ ಪತ್ತೆಯಾಗಿದ್ದು ಏಕೆ ಎಂದು ಪ್ರಶ್ನಿಸಿದರು. ಪ್ರಕರಣವನ್ನು ಮುಚ್ಚಿ ಹಾಕಲು ಸರ್ಕಾರ ವ್ಯವಸ್ಥಿತ ಪಿತೂರಿ ನಡೆಸಿದೆ. ಇದು ನಿಷ್ಪಕ್ಷಪಾತ ತನಿಖೆಯಾಗಬೇಕೆಂದರೆ ಕೂಡಲೇ ಚನ್ನರಾಜ್ ಹಟ್ಟಿಹೊಳಿ ಅವರನ್ನು ಬಂಧಿಸಬೇಕು ಎಂದು ಹೇಳಿದರು. ಈ ಪ್ರಕರಣದಲ್ಲಿ ಹಟ್ಟಿಹೊಳಿ ಜೊತೆ ಇನ್ನು ಇಬ್ಬರು ಅಂಗರಕ್ಷಕರು(ಗನ್‍ಮ್ಯಾನ್) ಶಾಮೀಲಾಗಿದ್ದಾರೆ.
4
+ ಅವರನ್ನು ಸಹ ಬಂಧಿಸಬೇಕು. ಪೊಲೀಸರು ಪ್ರಕರಣವನ್ನು ಮುಚ್ಚಿ ಹಾಕುವ ಕುತಂತ್ರವನ್ನು ಮಾಡಬಾರದು. ಅವರ ಮೇಲೆ ಕ್ರಮ ಜರುಗಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ಕೊಟ್ಟರು.ಆಸ್ಪತ್ರೆಯಲ್ಲಿ ಪೃಥ್ವಿ ಸಿಂಗ್ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಶಾಸಕರೂ ಆಗಿರುವ ಬಿ.ವೈ ವಿಜಯೇಂದ್ರ ಅವರು, ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರ ಗನ್ ಮ್ಯಾನ್‍ಗಳು ಹಲ್ಲೆ ಮಾಡಿದ್ದಾರೆ.
5
+ ಚಂಡಮಾರುತಕ್ಕೆ ಚೆನ್ನೈ ತತ್ತರ, 8 ಮಂದಿ ಸಾವು
6
+
7
+ ಗನ್ ಮ್ಯಾನ್ ಸುಜೀತ್ ಜಾಧವ್, ಎಂಎಲ್‍ಸಿ ಅವರ ಪಿಎ ಸದ್ದಾಂ ಅವರು ಪೃಥ್ವಿ ಮನೆಗೆ ಹೋಗಿ ಚೂರಿಯಿಂದ ಇರಿದಿದ್ದಾರೆ. ಮೊದಲು ಮನೆಯಲ್ಲಿದ್ದ ಪೃಥ್ವಿ ಸಿಂಗ್ ಅವರನ್ನು ಹೊರಗಡೆ ಕರೆಸಿ ಹಲ್ಲೆ ಮಾಡಲಾಗಿದೆ. ಈ ದೃಶ್ಯವನ್ನು ಪೃಥ್ವಿ ಸಿಂಗ್ ವಿಡಿಯೋ ರೆಕಾರ್ಡ್ ಮಾಡುವ ಪ್ರಯತ್ನ ಮಾಡಿದ್ದಾರೆ. ಬ್ಲಾಕ್ ಕಲರ್ ಕ್ರಿಷ್ಟಾ ಇನ್ನೊವಾ ಕಾರಿನಲ್ಲಿ ಚನ್ನರಾಜ್ ಹಟ್ಟಿಹೊಳಿ ಅವರೂ ಬಂದಿದ್ದಾರೆ ಎಂಬ ಮಾಹಿತಿ ಇದೆ ಎಂದು ಹೇಳಿದರು. ಪೃಥ್ವಿ ಸಿಂಗ್ ಅವರನ್ನು ಹೊರಗೆ ಕರೆದು ಮಾತಿಗೆ ಮಾತು ಬೆಳೆಸಿ ಹಲ್ಲೆ ಮಾಡಲಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
8
+ ಚನ್ನರಾಜ ಹಟ್ಟಿಹೊಳಿ ಅವರು ಸಚಿವರಾಗಿರುವ ಮತ್ತು ಪ್ರಭಾವಿಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ. ಇಷ್ಟು ಪ್ರಭಾವ ಇದ್ದಿದ್ದರಿಂದಲೇ ಹಾಡು ಹಗಲೇ ಹಲ್ಲೆ ಮಾಡಿದ್ದಾರೆ. ಮಾರಣಾಂತಿಕ ಹಲ್ಲೆ ಮಾಡಿದ್ದು ಖಂಡನೀಯ. ರಾಜ್ಯ ಸರ್ಕಾರ ಇಡೀ ವ್ಯವಸ್ಥೆಯೇ ಇಲ್ಲಿದೆ. ಮುಖ್ಯಮಂತ್ರಿಗಳೂ ಇಲ್ಲಿದ್ದಾರೆ. ಈ ಸಂದರ್ಭದಲ್ಲಿ ಆಡಳಿತ ಪಕ್ಷದ ವಿಧಾನ ಪರಿಷತ್ ಸದಸ್ಯರು ದರ್ಪ ತೋರಿದ್ದಾರೆ. ದಲಿತ ���ುಖಂಡನ ಮೇಲೆ ಹಲ್ಲೆ ಮಾಡಿದ್ದಾರೆ ಆರೋಪ ಮಾಡಿದರು.
9
+ ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳ ಶೀಘ್ರ ನೇಮಕ
10
+ ಇಲ್ಲಿರುವ ಪೊಲೀಸ್ ವ್ಯವಸ್ಥೆಯ ಬಗ್ಗೆ ನನಗೆ ನಂಬಿಕೆ ಇಲ್ಲ, ನಮ್ಮ ಮನೆಗೆ ರಾತ್ರೋರಾತ್ರಿ ಮನೆಗೆ ನುಗ್ಗುತಾರೆ, ಕೊಲೆ ಮಾಡುತ್ತಾರೆ ಎಂದು ಪ್ರಥ್ವಿ ಸಿಂಗ್ ಭಯದಲ್ಲಿದ್ದಾರೆ. ಪೊಲೀಸ್ ವ್ಯವಸ್ಥೆಯ ಬಗ್ಗೆ ನಮಗೆ ಎಳ್ಳಷ್ಟೂ ನಂಬಿಕೆಯಿಲ್ಲ, ಅಧಿಕಾರದ ದರ್ಪದಿಂದ ಸಚಿವರ ತಮ್ಮ ಯಾವ ರೀತಿ ನಡೆದುಕೊಂಡಿದ್ದಾನೆ ಎಂದು ಎಲ್ಲರೂ ನೋಡ್ತಿದ್ದಾರೆ. ಅಧಿಕಾರದ ಸೊಕ್ಕಿನಿಂದ ಮೆರೆಯುತ್ತಿರುವವರಿಗೆ ತಕ್ಕ ಪಾಠ ಆಗಬೇಕು. ಸೂಕ್ತ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟಕ್ಕೆ ಚಿಂತನೆ ನಡೆಸಲಾಗುವುದು ಎಂದು ಅವರು ಹೇಳಿದರು,
eesanje/url_46_297_5.txt ADDED
@@ -0,0 +1,7 @@
 
 
 
 
 
 
 
 
1
+ ಪೊಲೀಸರು ಕಾಂಗ್ರೆಸ್ ಏಜೆಂಟ್ ಆಗಿದ್ದಾರೆ : ಯತ್ನಾಳ್ ವಾಗ್ದಾಳಿ
2
+ ಬೆಳಗಾವಿ,ಡಿ.5- ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಪೊಲೀಸರು ಆ ಪಕ್ಷದ ಏಜೆಂಟರ್ ಆಗಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ಪಾಕಿಸ್ತಾನ ಆಗುತ್ತದೆ ಎಂದು ನಾವು ಆಗಲೂ ಹೇಳಿದ್ದೆವು. ಈಗಲೂ ಹೇಳುತ್ತೇವೆ. ಒಂದು ಸಮುದಾಯವನ್ನು ಓಲೈಸಿಕೊಳ್ಳುವ ಭರದಲ್ಲಿ ಇಂತಹ ಘಟನೆಗಳು ನಡೆಯುತ್ತವೆ ಎಂದು ಕಿಡಿಕಾರಿದರು.ಪೊಲೀಸರು ಕಾಂಗ್ರೆಸ್‍ನವರ ಕೈಗೊಂಬೆಯಾಗಿದ್ದಾರೆ. ಕೇವಲ ಬಿಜೆಪಿ ಮತ್ತು ಬೇರೆ ಪಕ್ಷದವರನ್ನು ಗುರಿಯಾಗಿಟ್ಟುಕೊಂಡು ಕೆಲವರು ಹಲ್ಲೆ ಮಾಡುತ್ತಿದ್ದಾರೆ.ಇದಕ್ಕೆ ಸರ್ಕಾರದ ಕುಮ್ಮಕ್ಕು ಕೂಡ ಇದೆ ಎಂದು ಗುಡುಗಿದರು.
3
+ ಸರ್ಕಾರಿ ಹುದ್ದೆಗಳ ನೇಮಕಾತಿ ಅಕ್ರಮ ತಡೆಗೆ ಕಠಿಣ ಕಾನೂನು
4
+ ದೆಹಲಿಯಲ್ಲಿ ಒಬ್ಬರು ಮೇಡಂ ಇದ್ದರೆ, ಬೆಳಗಾವಿಯಲ್ಲಿ ಇನ್ನೊಬ್ಬ ಮೇಡಂ ಇದ್ದಾರೆ. ಅವರನ್ನು ಓಲೈಸಿಕೊಳ್ಳಲು ಚಾಕು ಇರಿತದಂತಹ ಪ್ರಕರಣಗಳನ್ನೇ ಸರ್ಕಾರ ಮುಚ್ಚಿ ಹಾಕಲು ಹೊರಟಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರ ಸಂಬಂಧಿಕರ ಮೇಲೆ ಲೋಕಾ ದಾಳಿ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಯಾರೇ ಭ್ರಷ್ಟಾಚಾರ ಮಾಡಿದರೂ ಅದು ಭ್ರಷ್ಟಾಚಾರವೇ. ಅದರಲ್ಲಿ ಯಡಿಯೂರಪ್ಪ ಅಥವಾ ವಿಜಯೇಂದ್ರ ಎಂದು ಕೇಳಬೇಡಿ. ತಪ್ಪು ತಪ್ಪೇ ಎಂದು ಮಾರ್ಮಿಕವಾಗಿ ನುಡಿದರು.
5
+ ಭ್ರಷ್ಟರು ಭ್ರಷ್ಟರೇ ನಾನು ಭ್ರಷ್ಟಾಚಾರ ಮಾಡಿದರೂ ಭ್ರಷ್ಟನೇ . ಡಿ.ಕೆ.ಶಿವಕುಮಾರ್ ಮಾಡಿದರೂ ಭ್ರಷ್ಟರೇ ಎಂದರು. ಯಾರು ಕರ್ನಾಟಕವನ್ನು ಲೂಟಿ ಹೊಡೆದಿದ್ದಾರೆ, ಕರ್ನಾಟಕವನ್ನು ಲೂಟಿ ಮಾಡಿ ಸಿಂಗಾಪುರ ಮಾರಿಶಸ್ ನಲ್ಲಿ ಹೂಡಿಕೆ ಮಾಡಿದ್ದಾರೆ ಅದರ ಬಗ್ಗೆ ತನಿಖೆ ಆಗಬೇಕು ಹಾಗೂ ಜೈಲಿಗೆ ಹೋಗಬೇಕು.
6
+ ಅಲ್ಪಸಂಖ್ಯಾತರಿಗೆ ಅನುದಾನ ಬಿಡುಗಡೆ ಮಾಡುವ ಸಿದ್ದರಾಮಯ್ಯ ವಿಚಾರ ಕುರಿತು ಮಾತನಾಡಿದ ಅವರು, ಪಾಕಿಸ್ತಾನದವರ ಸರ್ಕಾರ ಬಂದಂತಾಗಿದೆ. ಇಂತಹ ಸರ್ಕಾರ ಇದೇ ಉದ್ಧಟತನ ಮುಂದುವರಿಸಿದರೆ ಅತೀ ಹೆಚ್ಚು ಮತಗಳಿಂದ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
7
+ ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್ ಮೇಲೆ ಹಲ್ಲೆ ಪ್ರಕರಣದಲ್ಲಿ ಇಷ್ಟೆಲ್ಲಾ ದಾಖಲೆ ಇರುವಾಗ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು. ಪೊಲೀಸ್ ಇಲಾಖೆ ಇಲ್ಲಿಯ ಮೇಡಂ ಕೈಗೊಂಬೆಯಾಗಿದ್ದಾರೆ. ಬೆಳಗಾವಿ ಸುಸಂಸ್ಕೃತವಾದ ಜಿಲ್ಲೆ ಗುಂಡಾಗಿರಿ ಯಾರು ಪ್ರಾರಂಭ ಮಾಡಿದ್ದಾರೆ ಅವರ ಅಂತ್ಯ ಕಾಣಲಿದೆ ಎಂದು ಭವಿಷ್ಯ ನುಡಿದರು.
eesanje/url_46_297_6.txt ADDED
@@ -0,0 +1,9 @@
 
 
 
 
 
 
 
 
 
 
1
+ ಸರ್ಕಾರಿ ಹುದ್ದೆಗಳ ನೇಮಕಾತಿ ಅಕ್ರಮ ತಡೆಗೆ ಕಠಿಣ ಕಾನೂನು
2
+ ಬೆಳಗಾವಿ,ಡಿ.4- ಸರ್ಕಾರಿ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಪರೀಕ್ಷೆಗಳ ಅಕ್ರಮಗಳನ್ನು ತಡೆಗಟ್ಟಲು ಗಂಭೀರ ಚಿಂತನೆ ನಡೆಸಿರುವ ರಾಜ್ಯಸರ್ಕಾರ ಈ ನಿಟ್ಟಿನಲ್ಲಿ ಕಠಿಣ ಕಾನೂನು ರೂಪಿಸಲು ಮುಂದಾಗಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ಆರಂಭಗೊಂಡಿರುವ ಚಳಿಗಾಲದ ಅಧಿವೇಶನದಲ್ಲಿ 19 ಕ್ಕೂ ಹೆಚ್ಚು ವಿಧೇಯಕಗಳನ್ನು ಮಂಡಿಸುವ ತಯಾರಿ ನಡೆದಿದೆ.
3
+ ಕಳೆದ ಅಧಿವೇಶನದಿಂದಲೂ ನೆನೆಗುದಿಗೆ ಬಿದ್ದಿರುವ ನಾಲ್ಕು ವಿಧೇಯಕಗಳು, ಸಚಿವ ಸಂಪುಟ ಸಭೆಯಿಂದ ಅಂಗೀಕಾರಗೊಂಡಿರುವ ಎರಡು ವಿಧೇಯಕಗಳು, ಪರಿಶೀಲನಾ ಸಮಿತಿಯಿಂದ ಅನುಮತಿ ಪಡೆಯಲಾದ ಆರು ವಿಧೇಯಕಗಳನ್ನು ಮಂಡಿಸಲು ತಯಾರಿ ನಡೆಸಲಾಗಿದೆ.
4
+ ಜೊತೆಗೆ ಸಂಬಂಧಿಸಿದ ಇಲಾಖೆಗಳಿಂದ ಪೂರ್ವಾನುಮತಿಯಾಗಿ ಕಾಯಿಸಿರುವ ಏಳು ವಿಧೇಯಕಗಳನ್ನು ಮಂಡಿಸುವ ಸಾಧ್ಯತೆ ಇದೆ. ಇದರಲ್ಲಿ ಪ್ರಮುಖವಾಗಿ ಸಚಿವ ಸಂಪುಟ ಸಭೆಯಿಂದ ಅಂಗೀಕಾರಗೊಂಡಿರುವ ಕರ್ನಾಟಕ ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆಯಾಗಲಿದೆ. ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ಅಹಿತಕರವಾದ ಕಾರ್ಯವಿಧಾನಗಳನ್ನು ನಿಯಂತ್ರಿಸಲು 2023 ರ ಮಸೂದೆಯನ್ನು ಗೃಹ ಇಲಾಖೆಯಿಂದ ರೂಪಿಸಲಾಗಿದೆ. ಇದನ್ನು ಮಂಡಿಸುವ ತಯಾರಿಗಳಾಗಿವೆ.
5
+ ಅತಿಥಿ ಉಪನ್ಯಾಸಕರ ಖಾಯಂ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ : ಮಧುಬಂಗಾರಪ್ಪ
6
+ ಒಂದು ವೇಳೆ ಕಾಯ್ದೆ ಅಂಗೀಕಾರಗೊಂಡರೆ ಪರೀಕ್ಷಾ ಅಕ್ರಮಗಳಲ್ಲಿ ತೊಡಗಿದವರಿಗೆ ಕಠಿಣ ಶಿಕ್ಷೆ ವಿಧಿಸುವ ಮತ್ತು ಅಕ್ರಮಗಳಿಗೆ ನೆರವಾಗುವವರನ್ನು ಉಗ್ರವಾಗಿ ದಂಡಿಸುವ ವ್ಯವಸ್ಥೆ ಜಾರಿಗೆ ಬರಲಿದೆ. ಉಳಿದಂತೆ ಕರ್ನಾಟಕ ಕರಾವಳಿ ಅಭಿವೃದ್ಧಿ ನಿಗಮ ತಿದ್ದುಪಡಿ ವಿಧೇಯಕ 2021, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ 2023, ವೈದ್ಯಕೀಯ ಪದವೀಧರ ಕಡ್ಡಾಯ ಗ್ರಾಮೀಣ ಸೇವೆ ತಿದ್ದುಪಡಿ ವಿಧೇಯಕ,
7
+ ಕರ್ನಾಟಕ ಸರಕು ಮತ್ತು ಸೇವೆಗಳ ತಿದ್ದುಪಡಿ ವಿಧೇಯಕ, ಕರ್ನಾಟಕ ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ, ಗದಗ ಬೆಟ್ಟಗೇರಿ ವ್ಯಾಪಾರ ಸಂಸ್ಕøತಿ ಮತ್ತು ವಸ್ತು ಪ್ರದರ್ಶನ ವಿಧೇಯಕ, ಕರ್ನಾಟಕ ಪರಿಶಿಷ್ಟ ಜಾತಿ ಪಂಗಡಗಳ ಉಪ ಮಂಜೂರತಿ ಮಸೂದೆ, ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, ಶ್ರೀ ರೇಣುಕಾ ಎಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ರಚನೆ ವಿಧೇಯಕ,
8
+ ವಿಧಾನಮಂಡಲದ ಉಭಯ ಸದನಗಳಲ್ಲಿ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ
9
+ ಕರ್ನಾಟಕ ಅಭಿವೃದ್ಧಿ ಮಂಡಳಿ ಮೈಸೂರು ನಗರ ಅಭಿವೃದ್ಧಿ ವಿಧೇಯಕ, ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣೆ ಪ್ರಾಧಿಕಾರ, ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ವಿಧೇಯಕ, ಕರ್ನಾಟಕ ಸ್ಟಾಂಪ್ ತಿದ್ದುಪಡಿ ವಿಧೇಯಕ, ಕರ್ನಾಟಕ ನಗರ ಮತ್ತು ಯೋಜನೆ ತಿದ್ದುಪಡಿ ವಿಧೇಯಕ, ಕರ್ನಾಟಕ ಸಿವಿಲ್ ಕೋರ��ಟ್ ತಿದ್ದುಪಡಿ ವಿಧೇಯಕ, ಕರ್ನಾಟಕ ಹೈಕೋರ್ಟ್ ತಿದ್ದುಪಡಿ ವಿಧೇಯಕ, ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್‍ಗಳ ಪರಿಷತ್ ಮಸೂದೆ, ಕರ್ನಾಟಕ ಆಡಳಿತಾತ್ಮಕ ಕಾರ್ಯ ವಿಧಾನ ಮಸೂದೆಗಳನ್ನು ಮಂಡಿಸಲು ತಯಾರಿ ನಡೆಸಲಾಗಿದೆ.
eesanje/url_46_297_7.txt ADDED
@@ -0,0 +1,7 @@
 
 
 
 
 
 
 
 
1
+ ಅರಣ್ಯ ಕಳೆ ಬೆಳೆಗಳ ನಿಯಂತ್ರಣಕ್ಕೆ ಕ್ರಮ : ಈಶ್ವರ್ ಖಂಡ್ರೆ
2
+ ಬೆಳಗಾವಿ,ಡಿ.4- ರಾಜ್ಯದ ಅರಣ್ಯ ಭಾಗಗಳಲ್ಲಿ ಹೆಚ್ಚಾಗಿ ಬೆಳೆಯುತ್ತಿರುವ ಕಳೆ ಬೆಳೆಗಳನ್ನು ಕೇಂದ್ರ ಸರ್ಕಾರದ ನೆರವು ಪಡೆದುಕೊಂಡು ನಿಯಂತ್ರಿಸಲು ಸರ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. ವಿಧಾನಪರಿಷತ್‍ನಲ್ಲಿ ಬಿಜೆಪಿ ಸದಸ್ಯೆ ತೇಜಸ್ವಿನಿ ಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅರಣ್ಯದಲ್ಲಿ ಕಳೆಗಳು ಇರುವುದು ನಿಜ. ಒಂದು ಎಕರೆ ಕಳೆ ತೆಗೆಯಲು 87 ಸಾವಿರ ರೂ. ವೆಚ್ಚವಾಗುತ್ತದೆ. ಪ್ರಸಕ್ತ ವರ್ಷ ನಮಗೆ ಕಳೆ ತೆಗೆಯಲು 8-10 ಕೋಟಿ ಅನುದಾನ ಬೇಕು. ಕೇಂದ್ರದ ನೆರವು ಪಡೆದುಕೊಂಡು ಕಳೆಯನ್ನು ನಿಯಂತ್ರಿಸಲಾಗುವುದು ಎಂದು ಭರವಸೆ ನೀಡಿದರು.
3
+ ಇದಕ್ಕೂ ಮುನ್ನ ಪ್ರಶ್ನೆ ಕೇಳಿದ ತೇಜಸ್ವಿನಿಗೌಡ, ಅತಿ ಹೆಚ್ಚು ಆನೆ ಕರ್ನಾಟಕದಲ್ಲಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಆನೆಗಳು ಹೆಚ್ಚಾಗಿವೆ. ಅರಣ್ಯದಲ್ಲಿ ಕಳೆ ಬೆಳೆಗಳು ಹೆಚ್ಚಾಗುತ್ತಿದೆ. ಪ್ರಾಣಿಗಳ ಅಹಾರ, ಸಂಚಾರಕ್ಕೆ ಕಷ್ಟವಾಗುತ್ತಿದೆ.
4
+ ರಾಜ್ಯದ ರೈತರಿಗೆ 7 ಗಂಟೆ 3 ಫೇಸ್ ವಿದ್ಯುತ್ ಪೂರೈಕೆ : ಸಚಿವ ಖರ್ಗೆ
5
+ ಬಂಡಿಪುರದಲ್ಲಿ 87 ಸಾವಿರ ಹೆಕ್ಟರ್ ಕಳೆ ಆವರಿಸಿದೆ. ನಾಗರಹೊಳೆಯಲ್ಲಿ ಅರಣ್ಯದಲ್ಲಿ 25% ಕಳೆಗಳು ಇದೆ ಎಂಬ ಮಾಹಿತಿಯನ್ನು ನೀಡಿದರು. ಇದರ ತಡೆಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನೆ ಮಾಡಿದರು. ನಾಗರಹೊಳೆ, ಬಂಡೀಪುರ, ಬನ್ನೇರುಘಟ್ಟ ಉದ್ಯಾನಗಳಲ್ಲಿ ದಟ್ಟವಾದ ಕಳೆಗಿಡಗಳು ಆವರಿಸಿವೆ. ದಟ್ಟವಾದ ಕಳೆಗಿಡಗಳಿಂದ ಆನೆಗಳು ಸೇರಿ ವನ್ಯಜೀವಿಗಳಿಗೆ ಆಹಾರ ಲಭ್ಯವಾಗುತ್ತಿಲ್ಲ. ವನ್ಯಪ್ರಾಣಿಗಳ ಮೇವಿಗೂ ಇದರಿಂದ ಕೊರತೆ ಉಂಟಾಗುತ್ತಿದೆ.
6
+ ಶೇ. 40-50ರಷ್ಟು ಕಳೆ ಗಿಡಗಳು ಬಂಡೀಪುರದಲ್ಲಿ ಆವರಿಸಿದೆ. ನಾಗರಹೊಳೆಯಲ್ಲಿ ಶೇ.30-40ರಷ್ಟು, ಬನ್ನೇರುಘಟ್ಟದಲ್ಲಿ ಶೇ.20-25ರಷ್ಟು ಕಳೆ ಗಿಡಗಳಿವೆ ಹಬ್ಬಿವೆ ಎಂದು ತೇಜಸ್ವಿನಿ ಗೌಡ ಸಚಿವರ ಗಮನಕ್ಕೆ ತಂದರು. ಇದಕ್ಕೆ ಉತ್ತರಿಸಿದ ಖಂಡ್ರೆ, ಎಲ್ಲ ಉದ್ಯಾನಗಳಲ್ಲಿ ಕಳೆಗಿಡದ ಸಮಸ್ಯೆ ಗಂಭೀರವಾಗಿ ಇದೆ. ಲಾಂಟಾನಾ, ಮೈಕೇನಿಯಾ ಮೀಕರಾಂಥ, ಸೆನ್ನ ಸ್ಪೆಕ್ಟಾಬಿಲಿಸ್ ಕಳೆಗಿಡಗಳು ಆವರಿಸಿವೆ. ಕಳೆ ತೆಗೆಯುವುದಕ್ಕೆ 1 ಹೆಕ್ಟೇರ್‍ಗೆ ಮೂರು ವರ್ಷಕ್ಕೆ 87000 ರೂ. ಅನುದಾನ ಬೇಕಾಗುತ್ತದೆ. 1200 ಕೋಟಿ ರೂ. ಒಟ್ಟಾರೆ ಅನುದಾನ ಬೇಕಾಗುತ್ತದೆ.
7
+ ಈ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದರೂ ಕೂಡ ಕೇಂದ್ರದಿಂದ ಅನುದಾನ ಲಭ್ಯವಿಲ್ಲ. ಮುಂದೆ ವನ್ಯಜೀವಿಗಳಿಗೆ ಆಹಾರ ಲಭ್ಯತೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಆನೆ ಹಾವಳಿ ತಡೆದು ಆನೆ ಹಿಡಿಯುವುದಕ್ಕೆ 15 ಲಕ್ಷ ಖರ್ಚಾಗುತ್ತದೆ. ಬುಡಕಟ್ಟು ಜನರು ಕಳೆ ತೆಗೆಯುವುದರಲ್ಲಿ ನಿಪುಣರಾಗಿರುತ್ತಾರೆ. ಅವರನ್ನೂ ಬಳಸಿಕೊಂಡು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ತೇಜಸ್ವೀನಿ ಗೌಡ ಸಲಹೆ ಮಾಡಿದರು.
eesanje/url_46_297_8.txt ADDED
@@ -0,0 +1,7 @@
 
 
 
 
 
 
 
 
1
+ ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳ ಶೀಘ್ರ ನೇಮಕ
2
+ ಬೆಳಗಾವಿ,ಡಿ.4- ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಶಿಕ್ಷಣ ಇಲಾಖೆಯ ಹುದ್ದೆಗಳನ್ನು ಹಣಕಾಸಿನ ಲಭ್ಯತೆ ಆಧಾರದ ಮೇಲೆ ಹಂತ ಹಂತವಾಗಿ ತ್ವರಿತವಾಗಿ ನೇಮಕ ಮಾಡುತ್ತೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ವಿಧಾನಪರಿಷತ್‍ನಲ್ಲಿಂದು ತಿಳಿಸಿದರು.
3
+ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಶಶಿಲ್ ನಮೋಶಿ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರು ಮತ್ತು ಸಿಬ್ಬಂದಿಗಳ ನೇಮಕಾತಿ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಭಾಗದಲ್ಲಿ ಹಲವಾರು ಹುದ್ದೆಗಳು ಖಾಲಿ ಇವೆ. ಹಂತ ಹಂತವಾಗಿ ಭರ್ತಿ ಮಾಡುತ್ತೇವೆ ಎಂದು ಹೇಳಿದರು.
4
+ ಕಲ್ಯಾಣ ಕರ್ನಾಟಕ ಭಾಗದ ಪ್ರಾಥಮಿಕ ಶಾಲೆಗಳಲ್ಲಿ 45,535 ಪ್ರಾಥಮಿಕ ಶಿಕ್ಷಕರು, 11,724 ಪ್ರೌಢಶಾಲೆ ಶಿಕ್ಷಕರು, 1369 ಗ್ರೂಪ್ ಡಿ ನೌಕರರು, 3,323 ಬೋಧಕೇತರ ಸಿಬ್ಬಂದಿ ಸೇರಿದಂತೆ 61,891 ಸಿಬ್ಬಂಯವರು ಕಾರ್ಯ ನಿರ್ವಹಿಸುತ್ತಿದ್ದಾರೆ.
5
+ ಲೋಕಸಭೆಯಲ್ಲಿ ಮೊಳಗಿದ ‘ತೀಸ್ರಿ ಬಾರ್ ಮೋದಿ ಸರ್ಕಾರ್’ ಘೋಷಣೆ
6
+ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೆಲವು ಪ್ರಮುಖ ಹುದ್ದೆಗಳು ಭರ್ತಿ ಮಾಡಬೇಕಾಗಿದೆ. ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಪದವಿ ಕಾಲೇಜುಗಳವರೆಗೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಬೇಕಾಗಿದೆ ಎಂದು ಮಾಹಿತಿ ನೀಡಿದರು.ನಮ್ಮ ಸರ್ಕಾರ ಒಟ್ಟು 16 ಸಾವಿರ ಶಿಕ್ಷಕರನ್ನು ಖಾಯಂ ಮಾಡಿದೆ.
7
+ ಇದರಲ್ಲಿ 5 ಸಾವಿರ ಶಿಕ್ಷಕರನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಿದ್ದೇವೆ ಎಂದು ಸಚಿವರು ಹೇಳುತ್ತಿದ್ದಂತೆ ಅಸಮಾಧಾನಗೊಂಡ ಸದಸ್ಯ ಶಶಿಲ್ ನಮೋಶಿ, ಮಂಡ್ಯ, ಮೈಸೂರು ಭಾಗಗಳಲ್ಲಿ 12-13 ವಿದ್ಯಾರ್ಥಿಗಳಿರುವ ಶಾಲೆಗಳಿಗೆ ಒಬ್ಬ ಶಿಕ್ಷಕರನ್ನು ಕೊಡುತ್ತೀರಿ, ಮೈಸೂರು ಭಾಗದ ವ್ಯವಸ್ಥೆಯು ಕಲ್ಯಾಣ ಕರ್ನಾಟಕಕ್ಕೂ ಇರಬೇಕಲ್ಲವೇ ಎಂದು ಪ್ರಶ್ನಿಸಿದರು. ಅಗತ್ಯವಿರುವ ಸಿಬ್ಬಂದಿಯನ್ನು ನೇಮಕ ಮಾಡಲು ಬದ್ದವಾಗಿದೆ ಎಂದು ಸಚಿವ ಕುಮಾರ ಬಂಗಾರಪ್ಪ ಆಶ್ವಾಸನೆ ನೀಡಿದರು.
eesanje/url_46_297_9.txt ADDED
@@ -0,0 +1,5 @@
 
 
 
 
 
 
1
+ ವಿಧಾನಸಭೆಯಲ್ಲಿ ಸಂವಿಧಾನದ ಪ್ರಸ್ತಾವನೆ ಓದುವ ಹೊಸ ಸಂಪ್ರದಾಯ ಪ್ರಾರಂಭ
2
+ ಬೆಳಗಾವಿ,ಡಿ.4- ಇದೇ ಮೊದಲ ಬಾರಿಗೆ ವಿಧಾನಸಭೆಯಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಹೊಸ ಸಂಪ್ರದಾಯವನ್ನು ಆರಂಭಿಸಲಾಯಿತು. ಬೆಳಿಗ್ಗೆ ವಂದೇ ಮಾತರಂನೊಂದಿಗೆ ವಿಧಾನಸಭೆಯ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷ ಯು.ಟಿ.ಖಾದರ್ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಸೂಚನೆ ನೀಡಿದರು.
3
+ ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮೂಲಪ್ರತಿಯನ್ನು ಓದಲಾಗುತ್ತದೆಯೋ ಅಥವಾ ತಿದ್ದುಪಡಿ ಮಾಡಲಾದ ಮಾಹಿತಿಯನ್ನೋ ಎಂದು ಪ್ರಶ್ನೆ ಮಾಡಿದರು. ತಮಗೆ ಪ್ರಸ್ತಾವನೆಯ ಪ್ರತಿಯೇ ತಲುಪಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
4
+ ಲೋಕಸಭೆಯಲ್ಲಿ ಮೊಳಗಿದ ‘ತೀಸ್ರಿ ಬಾರ್ ಮೋದಿ ಸರ್ಕಾರ್’ ಘೋಷಣೆ
5
+ ನಾನು ಓದುತ್ತೇನೆ, ನೀವು ಅದರಂತೆ ಹೇಳಿ ಎಂದು ಸಮಜಾಯಿಷಿ ನೀಡಿದ ಸಭಾಧ್ಯಕ್ಷರು ಬಸನಗೌಡ ಪಾಟೀಲ್ ಯತ್ನಾಳ್‍ರಿಗೆ ಪ್ರತಿಯನ್ನು ತಲುಪಿಸಲು ಸೂಚಿಸಿದರು. ನಂತರ ಭಾರತದ ಜನಗಳಾದ ನಾವು ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಅದರ ಸಮಸ್ತ ನಾಗರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ವಿಚಾರ ಅಭಿವ್ಯಕ್ತಿ ವಿಶ್ವಾಸ ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರ್ಯ, ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿಗೌರವವನ್ನು ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುನಿಶ್ಚಿತಗೊಳಿಸಿ ಅವರಲ್ಲಿ ಭ್ರಾತೃ ಭಾವನೆಯನ್ನು ವೃದ್ಧಿಗೊಳಿಸಲು ಶ್ರದ್ಧಾಪೂರ್ವಕ ಸಂಕಲ್ಪ ಮಾಡಿದವರಾಗಿ ನಮ್ಮ ಸಂವಿಧಾನದ ಸಭೆಯಲ್ಲಿ 1949 ನೆಯ ನವೆಂಬರ್ 26 ರಂದು ಸಂವಿಧಾನವನ್ನು ಅಂಗೀಕರಿಸಿ ಅನಿಯಮಿಸಿ ಅರ್ಪಿಸಿಕೊಂಡಿದ್ದೇವೆ ಎಂದು ಹೇಳಿದರು. ಎಲ್ಲಾ ಸಚಿವರು ಮತ್ತು ಪಕ್ಷಾತೀತವಾಗಿ ಶಾಸಕರು ಎದ್ದುನಿಂತು ಸಂವಿಧಾನದ ಪೀಠಿಕೆಯನ್ನು ಓದಿದರು.
eesanje/url_46_298_1.txt ADDED
@@ -0,0 +1,5 @@
 
 
 
 
 
 
1
+ ಅತಿಥಿ ಉಪನ್ಯಾಸಕರ ಖಾಯಂ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ : ಮಧುಬಂಗಾರಪ್ಪ
2
+ ಬೆಳಗಾವಿ,ಡಿ.4 -ಅತಿಥಿ ಉಪನ್ಯಾಸಕರನ್ನು ಖಾಯಂ ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ವಿಧಾನಪರಿಷತ್‍ಗೆ ತಿಳಿಸಿದರು. ಸದಸ್ಯೆ ಹೇಮಲತಾ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸುಪ್ರೀಂಕೋರ್ಟ್ ನಿರ್ದೇಶನದಂತೆ ಸರ್ಕಾರ ನಡೆದುಕೊಳ್ಳಬೇಕು. ಗೌರವಧನದ ಹೊರತು ಖಾಯಮ್ಮಾತಿ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.
3
+ ನ್ಯಾಯಾಲಯದ ತೀರ್ಪು ನೋಡಿಕೊಂಡು ಕಾನೂನು ತಜ್ಞರ ಜೊತೆ ಚರ್ಚೆ ಮಾಡಲಾಗುವುದು. ಇದರ ಸಾಧಕ-ಬಾಧಕಗಳ ಬಗ್ಗೆ ನೋಡಿಕೊಂಡು ಮುಂದಿನ ತೀರ್ಮಾನ ಮಾಡುತ್ತೇವೆ. ನ್ಯಾಯಾಲಯದ ಆದೇಶಕ್ಕೆ ನಾವು ವಿರುದ್ಧವಾಗಿ ನಡೆದುಕೊಳ್ಳಲು ಆಗುವುದಿಲ್ಲ ಎಂದರು.
4
+ ಅಧಿವೇಶನಕ್ಕೆ ಮಧುವಣಗಿತ್ತಿಯಂತೆ ಸಿಂಗಾರಗೊಂಡ ಕುಂದಾನಗರಿ
5
+ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಆಯಾ ಕಾಲೇಜಿನ ಪ್ರಾಂಶುಪಾಲರು ನೇಮಿಸಿಕೊಳ್ಳುತ್ತಾರೆ. 9 ತಿಂಗಳಿಗೆ ಮಾತ್ರ ಇವರ ಸೇವೆಯನ್ನು ಬಳಸಿಕೊಳ್ಳಲಾಗುತ್ತದೆ. ಪ್ರತಿಯೊಬ್ಬರಿಗೂ ಮಾಸಿಕವಾಗಿ 12 ಸಾವಿರ ಗೌರವಧನವನ್ನು ನೀಡುತ್ತೇವೆ. ತಾತ್ಕಾಲಿಕ ನೌಕರರಾಗಿರುವುದರಿಂದ ಅವರ ಸೇವೆಯನ್ನು ಖಾಯಂಗೊಳಿಸಲು ಬರುವುದಿಲ್ಲ. ಸದಸ್ಯರ ಕೋರಿಕೆಯನ್ನು ಸರ್ಕಾರ ಪರಿಗಣಿಸಲಿದೆ ಎಂದು ಆಶ್ವಾಸನೆ ಕೊಟ್ಟರು.
eesanje/url_46_298_10.txt ADDED
@@ -0,0 +1,7 @@
 
 
 
 
 
 
 
 
1
+ ತೆಲಂಗಾಣ ಗೆದ್ದು ಮತ್ತೆ ಟ್ರಬಲ್ ಶೂಟರ್ ಎಂದು ಸಾಬೀತು ಪಡಿಸಿದ ಡಿಕೆಶಿ
2
+ ಬೆಂಗಳೂರು,ಡಿ.3- ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಗೆಲ್ಲಿಸಿಕೊಳ್ಳಲು ರಣತಂತ್ರ ರೂಪಿಸಿ ಯಶಸ್ವಿಯಾಗುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತೊಮ್ಮೆ ಟ್ರಬಲ್ ಶೂಟರ್ ಎಂದು ಸಾಬೀತು ಪಡಿಸಿದ್ದಾರೆ. ಹೈಕಮಾಂಡ್ ಡಿ.ಕೆ.ಶಿವಕುಮಾರ್ ಅವರಿಗೆ ತೆಲಂಗಾಣ ವಿಧಾನಸಭೆ ಚುನಾವಣೆಯ ಜವಾಬ್ದಾರಿ ವಹಿಸಿತ್ತು.
3
+ ಹೀಗಾಗಿ ಡಿ.ಕೆ.ಶಿವಕುಮಾರ್ ಅವರು ಸುಮಾರು ಒಂದು ವಾರಕ್ಕೂ ಹೆಚ್ಚು ಕಾಲ ತೆಲಂಗಾಣದಲ್ಲಿ ವಾಸ ಮಾಡಿ ಚುನಾವಣಾ ಉಸ್ತುವಾರಿಯನ್ನು ನೋಡಿಕೊಂಡಿದ್ದರು. ರಾಜ್ಯ ಕಾಂಗ್ರೆಸ್‍ನಿಂದ ಸುಮಾರು 70 ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರನ್ನು ಚುನಾವಣಾ ಉಸ್ತುವಾರಿಗಾಗಿ ನಿಯೋಜಿಸಲಾಗಿತ್ತು.
4
+ ಡಿ.6 ರಂದು ಪ್ರತಿಪಕ್ಷಗಳ ನಾಯಕರ ಸಭೆ ಕರೆದ ಮಲ್ಲಿಕಾರ್ಜುನ ಖರ್ಗೆ
5
+ ಶಾಸಕರು, ಸಚಿವರು, ವಿಧಾನಪರಿಷತ್ ಸದಸ್ಯರು, ಪ್ರಧಾನ ಕಾರ್ಯದರ್ಶಿಗಳು ಲೋಕಸಭಾ ಕ್ಷೇತ್ರಗಳ ಉಸ್ತುವಾರಿಯನ್ನು ವಹಿಸಿಕೊಂಡು ಹಗಲಿರುಳು ಶ್ರಮಿಸಿದ್ದರು. ತೆಲಂಗಾಣದಲ್ಲಿ ಸ್ಥಳೀಯ ನಾಯಕತ್ವ ಅಷ್ಟೇನೂ ಪ್ರಭಾವವಾಗಿಲ್ಲದೇ ಇದ್ದರೂ ಕೂಡ ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ನೀಡಿದ ನೆರವು ಮತ್ತು ಬೆಂಬಲ ಪಕ್ಷದ ಗೆಲುವಿಗೆ ಮಹತ್ವದ ಪಾತ್ರ ವಹಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಮೂರ್ನಾಲ್ಕು ದಿನ ತೆಲಂಗಾಣದ ವಿವಿಧ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದರು. ಇದೆಲ್ಲದರ ಪರಿಣಾಮ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿದಿದೆ.
6
+ ಶ್ರೀಲಂಕಾ ಯೋಗಕ್ಷೇಮಕ್ಕೆ ಭಾರತ ಬದ್ಧ
7
+ ಆಂದ್ರಪ್ರದೇಶದಿಂದ ವಿಭಜನೆಗೊಂಡು ಪ್ರತ್ಯೇಕ ರಾಜ್ಯವಾದ ಬಳಿಕ ಟಿಆರ್‍ಎಸ್ ಈಗಿನ ಬಿಆರ್‍ಎಸ್ ಪಕ್ಷವೇ ಗದ್ದುಗೆ ಹಿಡಿದಿತ್ತು. ಕೆ.ಸಿ.ಚಂದ್ರಶೇಖರ್ ಎರಡು ಅವಗೆ ಮುಖ್ಯಮಂತ್ರಿಯಾಗಿದ್ದರು. ರಾಜ್ಯವಿಭಜನೆಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಂಗೀಕಾರ ನೀಡಿದ್ದರೂ ಅದರ ಫಲವನ್ನು ಟಿಆರ್‍ಎಸ್ ಅನುಭವಿಸಿತ್ತು. ಕರ್ನಾಟಕ ಕಾಂಗ್ರೆಸ್ ನಾಯಕರ ಬೆಂಬಲದಿಂದಾಗಿ ತೆಲಂಗಾಣ ಕೈವಶವಾಗಿದೆ.
eesanje/url_46_298_11.txt ADDED
@@ -0,0 +1,8 @@
 
 
 
 
 
 
 
 
 
1
+ ವಿಶೇಷ ಚೇತನರ ಅಭಿವೃದ್ಧಿಗೆ ಹೊಸ ಯೋಜನೆ : ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು,ಡಿ.3- ವಿಶೇಷ ಚೇತನರ ಅಭಿವೃದ್ಧಿಗೆ ತಮ್ಮ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದ್ದು, ಅಗತ್ಯವಾದ ಆರ್ಥಿಕ ನೆರವನ್ನು ಒದಗಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಹಿಳಾ ಮತ್ತು ಮಕ್ಕಳಾಭಿವೃದ್ಧಿ ಇಲಾಖೆಯ ವತಿಯಿಂದ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ವಿಶ್ವಾದ್ಯಂತ ವಿಕಲಚೇತನ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.
3
+ ದೇಶದ ಜಿಡಿಪಿ ಹೊರಸೂಸುವಿಕೆ ಶೇ.33 ಕಡಿಮೆಯಾಗಿದೆಯಂತೆ
4
+ ಅಂಗವೈಕಲ್ಯ ಇರುವವರನ್ನು ಅಂಗವಿಕಲರು ಎಂದು ಕರೆಯುವಂತಿಲ್ಲ. ಏಕೆಂದರೆ ಇತ್ತೀಚೆಗೆ ನಡೆದ ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಅತಿ ಹೆಚ್ಚು ಪದಕಗಳನ್ನು ಗೆಲ್ಲುವ ಮೂಲಕ ತಾವು ಸಬಲರು ಎಂದು ಸಾಬೀತುಪಡಿಸಿದ್ದಾರೆ. ಹೀಗಾಗಿ ಅವರನ್ನು ಕೆಲಸಕ್ಕೆ ಬಾರದವರು, ಸಮಾಜಕ್ಕೆ ಹೊರೆ ಎಂದು ಪರಿಗಣಿಸುವಂತಿಲ್ಲ ಎಂದರು.
5
+ 2011ರ ಜನಗಣತಿಯ ಪ್ರಕಾರ ರಾಜ್ಯದಲ್ಲಿ 13,24,205 ವಿಶೇಷ ಚೇತನರಿದ್ದಾರೆ. ರಾಜ್ಯಸರ್ಕಾರ 2015 ರಲ್ಲಿ ಅಂಗವಿಕಲರ ಹಕ್ಕುಗಳ ಅಧಿನಿಯಮವನ್ನು ರಚಿಸಿದೆ. ಸಮಾಜದಲ್ಲಿ ಎಲ್ಲರ ಜೊತೆ ಬೆರೆತು ಬದುಕುವ ಅವಕಾಶ ಅವರಿಗಿದೆ. ಉದ್ಯೋಗ ಮಾಡಿ ಬದುಕುವ ಹಕ್ಕುಗಳಿವೆ. ಅದನ್ನು ರಕ್ಷಣೆ ಮಾಡಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
6
+ 4,000 ಯಂತ್ರಕಾಲಿಕ ತ್ರೈಸೈಕಲ್‍ಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಬಜೆಟ್‍ನಲ್ಲಿ 384 ಕೋಟಿ ರೂ.ಗಳನ್ನು ಒದಗಿಸಿದ್ದೇವೆ. 2 ಕೋಟಿ ರೂ. ವೆಚ್ಚದಲ್ಲಿ 7 ಜಿಲ್ಲೆಗಳಲ್ಲಿ ಬುದ್ಧಿಮಾಂದ್ಯರ ವಸತಿ ಶಾಲೆಗಳನ್ನು ಸ್ಥಾಪಿಸಲಾಗುತ್ತಿದ್ದು, ಈ ವರ್ಷದಿಂದಲೇ ಆರಂಭಗೊಳ್ಳುತ್ತಿದೆ. ವಿಶೇಷ ಚೇತನರ ಶೈಕ್ಷಣಿಕ, ವೈದ್ಯಕೀಯ, ಪುನರ್‍ವಸತಿಗೆ ಇಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
7
+ ತಾವು ಇತ್ತೀಚೆಗೆ ನಡೆಸಿದ ಜನತಾದರ್ಶನದಲ್ಲಿ ಹೆಚ್ಚು ವಿಕಲಚೇತನರು ಭಾಗವಹಿಸಿದ್ದರು. ಮನೆ, ಕೆಲಸ ಸೇರಿದಂತೆ ಹಲವಾರು ಸೌಲಭ್ಯಗಳಿಗಾಗಿ ಅರ್ಜಿ ಸಲ್ಲಿಸಿದ್ದರು. ವಿಶೇಷ ಚೇತನರು ಮರಣ ಹೊಂದಿದ ಸಂದರ್ಭದಲ್ಲಿ ನೀಡಲಾಗುವ 50 ಸಾವಿರ ರೂ.ಗಳ ಪರಿಹಾರವನ್ನು 1 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ವಿಕಲಚೇತನರ ಶೇ.50 ರಷ್ಟು ಮೀಸಲಾತಿಯನ್ನು ಕಡ್ಡಾಯ ಜಾರಿಗೆ ರಾಜ್ಯಸರ್ಕಾರ ಆದೇಶಿಸಿದೆ ಎಂದು ಹೇಳಿದರು.
8
+ ವಿಶೇಷಚೇತನರಲ್ಲಿ ಬಹುಮುಖ ಪ್ರತಿಭೆಗಳಿರುತ್ತವೆ. ಇಂದಿನ ಕಾರ್ಯಕ್ರಮದಲ್ಲಿ ವಿವಿಧ ಚಿತ್ರಕಲಾ ಸ್ಪರ್ಧೆಗಳನ್ನು ನೋಡಿ ತಮಗೆ ಸಂತೋಷವಾಯಿತು. ತಮ್ಮ ಭಾವಚಿತ್ರವನ್ನೂ ಬರೆದುಕೊಟ್ಟಿದ್ದಾರೆ ಎಂದು ಸ್ಮರಿಸಿಕೊಂಡರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
eesanje/url_46_298_12.txt ADDED
@@ -0,0 +1,7 @@
 
 
 
 
 
 
 
 
1
+ ವಿಧಾನಸಭೆ ಬೇರೆ, ಲೋಕಸಭೆ ಚುನಾವಣೆಗಳೇ ಬೇರೆ : ಪ್ರಿಯಾಂಕ್ ಖರ್ಗೆ
2
+ ಕಲ್ಬುರ್ಗಿ,ಡಿ.3- ವಿಧಾನಸಭೆ ಚುನಾವಣೆಗಳೇ ಬೇರೆ, ಲೋಕಸಭೆ ಚುನಾವಣೆಗಳೇ ಬೇರೆ. ಕಾಂಗ್ರೆಸ್ ಮುಂದಿನ ದಿನಗಳಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಹಾಗೂ ಶ್ರೀಸಾಮಾನ್ಯರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
3
+ ಕಲ್ಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚರಾಜ್ಯಗಳ ಚುನಾವಣೆಗಳ ಪೈಕಿ ನಾಲ್ಕು ರಾಜ್ಯಗಳ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಪ್ರತಿಕ್ರಿಯೆ ನೀಡುವುದು ಆತುರದ ಕ್ರಮವಾಗಲಿದೆ. ಸದ್ಯದ ಪರಿಸ್ಥಿತಿಯಲ್ಲಿ ತೆಲಂಗಾಣದಲ್ಲಿ ನಾವು ಸರ್ಕಾರ ರಚಿಸುತ್ತಿದ್ದೇವೆ. ರಾಜಸ್ಥಾನದಲ್ಲಿ ಕಡಿಮೆ ಅಂತರದಲ್ಲಿ ಪೈಪೋಟಿ ಇದೆ. ಅಂತಿಮ ಫಲಿತಾಂಶ ಏನೇ ಆದರೂ ಜನಾಶೀರ್ವಾದವನ್ನು ಒಪ್ಪಿಕೊಳ್ಳಬೇಕಾಗುತ್ತದೆ ಎಂದರು.
4
+ ಕಾಂಗ್ರೆಸ್ ಪಕ್ಷದ ಪ್ರಭಾವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಪರಿಣಾಮ ಬೀರಿದೆ. ಪ್ರತಿ ಕುಟುಂಬದ ಆರ್ಥಿಕ ಸ್ಥಿತಿಯನ್ನು ಗ್ಯಾರಂಟಿ ಯೋಜನೆಗಳು ಸುಧಾರಿಸುತ್ತಿದೆ. ರಾಜ್ಯದ ಆರ್ಥಿಕಾಭಿವೃದ್ಧಿಗೆ ನೀಲನಕ್ಷೆಯಾಗಿದೆ. ಬಿಜೆಪಿಯವರು ಒಂದೆಡೆ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ದಿವಾಳಿತನವಾಗಲಿದೆ ಎಂದು ಟೀಕೆ ಮಾಡುತ್ತಾರೆ. ಇತ್ತೀಚೆಗೆ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಐದು ವರ್ಷಗಳ ಕಾಲ ವಿಸ್ತರಿಸುವ ನಿರ್ಧಾರ ತೆಗೆದುಕೊಂಡಿದೆ.
5
+ ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಮುಗಿಲು ಮುಟ್ಟಿದ ಬಿಜೆಪಿ ಹರ್ಷೋದ್ಘಾರ
6
+ ವಿಶ್ವಗುರು ದೇಶದ ಅಭಿವೃದ್ಧಿಗಾಗಿ ಯಾವ ಕೊಡುಗೆ ನೀಡಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತಿದೆ. ಒಂದೆಡೆ ಬಡವರು ಬಡವರಾಗಿಯೇ ಉಳಿದಿದ್ದರೆ, ಶ್ರೀಮಂತರು ಮತ್ತಷ್ಟು ಅಭಿವೃದ್ಧಿಯಾಗುತ್ತಿದ್ದಾರೆ. ಕಾಂಗ್ರೆಸ್ ಗ್ಯಾರಂಟಿಗಳನ್ನು ಕೊಟ್ಟರೆ ಆರ್ಥಿಕ ಸ್ಥಿತಿಗೆ ಪೆಟ್ಟಾಗುತ್ತಿದೆ ಎಂದು ಆರೋಪಿಸುವ ಬಿಜೆಪಿಗರು ಅವರ ಪಕ್ಷದ ಸರ್ಕಾರ ಉಚಿತ ಯೋಜನೆಗಳನ್ನು ಘೋಷಿಸಿದರೆ ಜನಕಲ್ಯಾಣ ಯೋಜನೆಗಳು ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಇದು ದ್ವಿಮುಖ ನೀತಿ ಎಂದು ಕಿಡಿಕಾರಿದರು.
7
+ ಬಿಜೆಪಿಯವರು ಐಟಿ, ಸಿಬಿಐ, ಇಡಿಗಳನ್ನು ಬಳಸಿಕೊಂಡು ರಂಗೋಲಿ ಕೆಳಗೆ ನುಸುಳುವ ಪ್ರಯತ್ನ ಮಾಡುತ್ತಿದ್ದಾರೆ. ತೆಲಂಗಾಣದಲ್ಲಿ ಸ್ಪಷ್ಟ ಬಹುಮತ ಪಡೆದಿದ್ದರೂ ಕೂಡ ಬಿಜೆಪಿಯವರು ಬೇರೆಯೇ ತಂತ್ರಗಾರಿಕೆ ಅನುಸರಿಸಬಹುದು. ಹೀಗಾಗಿ ಕಾಂಗ್ರೆಸ್ ನಮ್ಮ ಪಕ್ಷದ ಶಾಸಕರನ್ನು ರಕ್ಷಣೆ ಮಾಡಿಕೊಳ್ಳುವುದು ಅನಿವಾರ್ಯ. ರೆಸಾರ್ಟ್ ರಾಜಕೀಯವನ್ನು ಶುರು ಮಾಡಿದ್ದು ಮತ್ತು ಕಲಿಸಿದ್ದು ಕಾಂಗ್ರೆಸಿಗರಲ್ಲ, ಬಿಜೆಪಿಯವರು ಎಂದು ತಿರುಗೇಟು ನೀಡಿದರು.
eesanje/url_46_298_2.txt ADDED
@@ -0,0 +1,9 @@
 
 
 
 
 
 
 
 
 
 
1
+ ಕೇಂದ್ರ ಸರ್ಕಾರದಿಂದ ‘ಕನ್ನಡ’ ತಿರಸ್ಕಾರ
2
+ ಬೆಳಗಾವಿ,ಡಿ.4- ರಾಜ್ಯದ ಎಲ್ಲಾ ಶಾಲೆಗಳಲ್ಲಿ ಒಂದರಿಂದ 5ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಮಾತೃ ಭಾಷೆ ಅಥವಾ ರಾಜ್ಯ ಭಾಷೆಯನ್ನು ಶಿಕ್ಷಣ ಮಾಧ್ಯಮವಾಗಿ ಕಡ್ಡಾಯಗೊಳಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ತಿರಸ್ಕಾರ ಮಾಡಿದೆ.2015ರಲ್ಲಿ ರಾಜ್ಯ ವಿಧಾನ ಮಂಡಲದ ಉಭಯ ಸದನಗಳಾದ ವಿಧಾನಸಭೆ ಮತ್ತು ವಿಧಾನಪರಿಷತ್‍ನಲ್ಲಿ 1ರಿಂದ 5ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಮಾತೃ ಭಾಷೆ ಅಥವಾ ರಾಜ್ಯ ಭಾಷೆಯನ್ನು ಶಿಕ್ಷಣ ಮಾಧ್ಯಮವಾಗಿ ಕಡ್ಡಾಯಗೊಳಿಸಿ ಅಂಗೀಕರಿಸಿದ ಮಸೂದೆಯನ್ನು ಕೇಂದ್ರ ಸರ್ಕಾರದ ಅಂಕಿತಕ್ಕೆ ಕಳುಹಿಸಿಕೊಡಲಾಗಿತ್ತು.
3
+ ಆದರೆ, ಕೇಂದ್ರ ಸರ್ಕಾರವು ಮಾತೃಭಾಷೆನ್ನು ಕಡ್ಡಾಯಗೊಳಿಸುವುದು, ಶಿಕ್ಷಣದ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಮಸೂದೆಯನ್ನು ತಿರಸ್ಕಾರ ಮಾಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ಬಹಿರಂಗಪಡಿಸಿದ್ದಾರೆ.
4
+ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಯು.ಬಿ.ವೆಂಕಟೇಶ್ ಅವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸುಪ್ರೀಂಕೋರ್ಟ್ ತೀರ್ಪು ಆಧರಿಸಿ ರಾಜ್ಯದ ಈ ವಿಧೇಯಕವನ್ನು ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಕೇಂದ್ರ ಶಿಕ್ಷಣ ಇಲಾಖೆ ತಿರಸ್ಕರಿಸಿದೆ ಎಂದು ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.
5
+ ಆಗ ಯು.ಬಿ.ವೆಂಕಟೇಶ್ ಅವರು, 2015ರಲ್ಲಿ ರಾಜ್ಯ ಸರ್ಕಾರ ಎರಡು ಸದನಗಳಲ್ಲಿ ಬಹುಮತದಿಂದ ಅಂಗೀಕರಿಸಿ ಕೇಂದ್ರ ಸರ್ಕಾರದ ಅಂಕಿತಕ್ಕೆ ಕಳುಹಿಸಿಕೊಟ್ಟಿತ್ತು. 1ರಿಂದ 5ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಶಾಲಾ ಮಕ್ಕಳಿಗೆ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ, ಇಲ್ಲವೇ ಮಾತೃ ಭಾಷೆಯನ್ನಾಗಿ ಕಡ್ಡಾಯಗೊಳಿಸಬೇಕೆಂಬುದು ಈ ಮಸೂದೆಯ ಮೂಲ ಉದ್ದೇಶ. ನಮ್ಮ ಮಕ್ಕಳಿಗೆ ನಾವೇ ಕನ್ನಡ ಕಲಿಸಲು ಆದ್ಯತೆ ನೀಡದಿದ್ದರೆ ಹೇಗೆ? ರಾಜ್ಯ ಸರ್ಕಾರ ಪರ್ಯಾಯ ಮಾರ್ಗವನ್ನು ಹುಡುಕಲಿ ಎಂದು ಸಲಹೆ ಮಾಡಿದರು.
6
+ ಲೋಕಸಭೆಯಲ್ಲಿ ಮೊಳಗಿದ ‘ತೀಸ್ರಿ ಬಾರ್ ಮೋದಿ ಸರ್ಕಾರ್’ ಘೋಷಣೆ
7
+ ಕಳೆದ ಎಂಟು ವರ್ಷಗಳಿಂದ ಈ ವಿಧೇಯಕಕ್ಕೆ ಅನುಮೋದನೆ ಸಿಕ್ಕಿಲ್ಲ. ರಾಜ್ಯವನ್ನು ಪ್ರತಿನಿಧಿಸುವ ಸಂಸದರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲಿ. ನಮ್ಮ ಭಾಷೆಯನ್ನು ನಾವೇ ರಕ್ಷಣೆ ಮಾಡಿಕೊಳ್ಳಲು ಮುಂದಾಗಿರುವುದು ಅತ್ಯಂತ ನೋವಿನ ಸಂಗತಿ ಎಂದು ವಿಷಾದಿಸಿದರು.
8
+ ಆಗ ಸಚಿವ ಮಧುಬಂಗಾರಪ್ಪ, ಪ್ರಥಮ ಭಾಷೆಯಾಗಿ ಕನ್ನಡವನ್ನು ಕಡ್ಡಾಯ ಮಾಡಿದ್ದೇವೆ. ಆದರೆ ಕೇಂದ್ರ ಸರ್ಕಾರ ಮೀಡಿಯಂ ಆಫ್ ಸ್ಟಡೀಸ್‍ಗೆ ಸಂಬಂಸಿದ ಸುಪ್ರೀಂಕೋರ್ಟ್‍ನ ತೀರ್ಪಿನ ಹಿನ್ನಲೆಯಲ್ಲಿ ಕಡ್ಡಾಯ ಮಾಡಲು ಬರುವುದಿಲ್ಲ ಎಂದು ರಾಜ್ಯ ಸರ್ಕಾರ ಕಳುಹಿಸಿದ ಮಸೂದೆಯನ್ನು ತಿರಸ್ಕರಿಸಿದೆ ಎಂದರು. ಆಗ ಯು.ಬಿ.ವೆಂಕಟೇಶ್, ಈ ಮಸೂದೆಯನ್ನು ಕೇಂದ್ರ ತಿರಸ್ಕರಿಸಿದೆ ಎಂದರೆ ಕೇಂದ್ರ ಸರ್ಕಾರ ನಮ್ಮ ಮೇಲೆ ���ಲವಂತವಾಗಿ ಹಿಂದಿ ಹೇರುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದರು.
9
+ ಇದಕ್ಕೆ ಸ್ಪಷ್ಟಪಡಿಸಿದ ಮಧುಬಂಗಾರಪ್ಪ, ಮೂಲಭೂತ ಹಕ್ಕನ್ನು ಉಲ್ಲಂಘನೆ ಮಾಡಲು ಬರುವುದಿಲ್ಲ. ಹಿಂದಿ ಹೇರಿಕೆಯನ್ನು ನಾವು ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದರು.
eesanje/url_46_298_3.txt ADDED
@@ -0,0 +1,9 @@
 
 
 
 
 
 
 
 
 
 
1
+ ಉತ್ತರ ಕರ್ನಾಟಕಕ್ಕೆ ಸಿಗದ ನ್ಯಾಯ : ಯತ್ನಾಳ್ ಬಂಡಾಯ
2
+ ಬೆಳಗಾವಿ,ಡಿ.4- ಉತ್ತರ ಕರ್ನಾಟಕಕ್ಕೆ ನ್ಯಾಯ ಒದಗಿಸುವವರಿಗೂ ನಾನು ಶಾಸಕಾಂಗ ಸಭೆಗೆ ಹಾಜರಾಗುವುದಿಲ್ಲ ಎಂದು ಬಿಜೆಪಿ ಬಂಡಾಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದ ವರಿಷ್ಠರಿಗೆ ಬಹಿರಂಗವಾಗಿಯೇ ಸಡ್ಡು ಹೊಡೆದಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನವನ್ನು ಉಕ ಭಾಗದವರಿಗೆ ನೀಡಬೇಕಿತ್ತು. ಪಕ್ಷದ ವರಿಷ್ಠರು ಈ ಭಾಗಕ್ಕೆ ಯಾವುದೇ ಪ್ರಾಶಸ್ತ್ಯ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
3
+ ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಗುವವರೆಗೂ ನನ್ನ ಹೋರಾಟ ಮುಂದುವರೆಯುತ್ತಲೇ ಇರುತ್ತದೆ. ನಾನು ಯಾರಿಗೂ ಅಂಜುವವನ್ನಲ್ಲ. ಈ ಭಾಗಕ್ಕೆ ನ್ಯಾಯ ಸಿಗಬೇಕು ಎಂಬ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಶಾಸಕಾಂಗ ಸಭೆಗೆ ನಾನು ಹಾಜ ರಾಗುವುದಿಲ್ಲ ಎಂದು ಸವಾಲು ಹಾಕಿದರು.
4
+ ಈ ಭಾಗದಲ್ಲಿ ಅಧಿವೇಶನ ನಡೆಯುವ ವೇಳೆ ಉತ್ತರಕರ್ನಾಟಕದ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಸುಮ್ಮನೆ ಬೇಕಾಬಿಟ್ಟಿ ಚರ್ಚೆ ನಡೆದರೆ ಅಧಿವೇಶನದ ಉದ್ದೇಶ ಈಡೇರುವುದಿಲ್ಲ. ನಾನು ಇಲ್ಲಿನ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿಧಾನಸಭೆಯ ಸ್ಪೀಕರ್ ಅವರಿಗೆ ಮನವಿ ಮಾಡುತ್ತೇನೆ. ಚರ್ಚೆಯನ್ನು ನಾನೇ ಮೊದಲು ಆರಂಭಿಸುತ್ತೇನೆ ಎಂದರು.
5
+ ಲೋಕಸಭೆಯಲ್ಲಿ ಮೊಳಗಿದ ‘ತೀಸ್ರಿ ಬಾರ್ ಮೋದಿ ಸರ್ಕಾರ್’ ಘೋಷಣೆ
6
+ ಸುಮ್ಮನೆ ತವಡು ಕುಟ್ಟಿ ಹೋಗುವುದರಲ್ಲಿ ಅರ್ಥವಿಲ್ಲ. ಕಲಾಪದಲ್ಲಿ ಉತ್ತಮ ಚರ್ಚೆಯಾಗಬೇಕು. ಅದಕ್ಕೆ ಎಲ್ಲ ಪಕ್ಷದ ಶಾಸಕರು ಸಹಕಾರ ಕೊಡಬೇಕು. ಸ್ಪೀಕರ್ ಇದಕ್ಕಾಗಿ ಹೆಚ್ಚಿನ ಆದ್ಯತೆ ನೀಡಲಿ ಎಂದು ಯತ್ನಾಳ್ ಮನವಿ ಮಾಡಿದರು. ದೇಶದಲ್ಲಿ ಬರುವ ದಿನಗಳಲ್ಲಿ ಕುಟುಂಬ ರಾಜಕಾರಣ ಸಂಪೂರ್ಣವಾಗಿ ನಿರ್ಮೂಲನೆಯಾಗಲಿದೆ. ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ಕುಟುಂಬ ರಾಜಕಾರಣ ಮಾಡುವವರಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ.
7
+ ರಾಜಕಾರಣದಲ್ಲಿ ನಾವೇ ಇರಬೇಕೆಂದು ಪ್ರತಿಪಾದಿಸುವವರಿಗೆ ಈ ಫಲಿತಾಂಶ ಎಚ್ಚರಿಕೆಯ ಘಂಟೆ. ಮುಂದಿನ ದಿನಗಳಲ್ಲಿ ಕುಟುಂಬ ರಾಜಕಾರಣ ಸಂಪೂರ್ಣವಾಗಿ ನಿರ್ಮೂಲನೆಯಾಗಲಿದೆ ಎಂದು ಹೇಳಿದರು.ಹಿಂದುತ್ವ ಮತ್ತು ಅಭಿವೃದ್ಧಿ ಪರವಾಗಿ ಇರುವವರಿಗೆ ಮತದಾರರು ಕೈ ಹಿಡಿಯಲಿದ್ದಾರೆ ಎಂಬುದಕ್ಕೆ ಈ ಫಲಿತಾಂಶವೇ ಸಾಕ್ಷಿ. ಭ್ರಷ್ಟಾಚಾರ ಮತ್ತು ಕುಟುಂಬ ರಾಜಕಾರಣ ಸಂಪೂರ್ಣವಾಗಿ ನಿರ್ಮೂಲನೆಯಾಗಲಿದೆ.
8
+ ಜನ ನಕಾರಾತ್ಮಕತೆಯನ್ನು ತಿರಸ್ಕರಿಸಿದ್ದಾರೆ : ಮೋದಿ
9
+ ಯಾವುದೇ ಕಾರಣಕ್ಕೂ ಮತದಾರ ಇದನ್ನು ಸಹಿಸುವುದಿಲ್ಲ. ಇದಕ್ಕೆ ನಿನ್ನೆಯ ಫಲಿತಾಂಶವೇ ಸಾಕ್ಷಿ ಎಂದರು.ದೇಶದಲ್ಲಿ ಮೋದಿಯವರ ಜನಪ್ರಿಯತೆ, ಅಭಿವೃದ್ಧಿಪರವಾದ ಕೆಲಸಕ್ಕೆ ಮತದಾರ ಮತ ಹಾಕಿದ್ದಾನೆ. ಯಾರು ಏನೇ ಹೇಳಿದರೂ ಮುಂದಿನ ದಿನಗಳಲ್ಲಿ ಮೋದಿಯವರೇ ಪ್ರಧಾನಿಯಾಗಲಿದ್��ಾರೆ. ಪ್ರತಿಪಕ್ಷಗಳ ತಂತ್ರ, ಕುತಂತ್ರ ಯಾವುದೂ ನಡೆಯುವುದಿಲ್ಲ. ಹಿಂದುತ್ವ ಮತ್ತು ಅಭಿವೃದ್ಧಿ ದೇಶದಲ್ಲಿ ಉಳಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
eesanje/url_46_298_4.txt ADDED
@@ -0,0 +1,10 @@
 
 
 
 
 
 
 
 
 
 
 
1
+ ರಾಜ್ಯದ ರೈತರಿಗೆ 7 ಗಂಟೆ 3 ಫೇಸ್ ವಿದ್ಯುತ್ ಪೂರೈಕೆ : ಸಚಿವ ಖರ್ಗೆ
2
+ ಬೆಳಗಾವಿ,ಡಿ.4-ಬರಗಾಲದ ಸಂಕಷ್ಟದ ನಡುವೆಯೂ ರಾಜ್ಯದ ರೈತರಿಗೆ 7 ಗಂಟೆ ಮೂರು ಫೇಸ್ ವಿದ್ಯುತ್ ಪೂರೈಕೆ ಮಾಡಲು ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿಯವರ ಪ್ರಶ್ನೆಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಪರವಾಗಿ ಉತ್ತರಿಸಿದ ಅವರು, ರಾಜ್ಯದಲ್ಲಿ ಈ ಬಾರಿ ತಮ್ಮ ನಿರೀಕ್ಷೆಗೆ ತಕ್ಕಂತೆ ಮಳೆ ಬಾರದ ಕಾರಣ ಬರಗಾಲ ಆವರಿಸಿ ವಿದ್ಯುತ್ ಸಮಸ್ಯೆಯಾಗಿದೆ ಎಂಬುದನ್ನು ಒಪ್ಪಿಕೊಂಡರು.
3
+ ಕಳೆದ ವರ್ಷಕ್ಕೆ ಹೋಲಿಸಿಕೊಂಡರೆ ಈ ಬಾರಿ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಆದರೂ ಸರ್ಕಾರ ರೈತರಿಗೆ ತೊಂದರೆಯಾಗದಂತೆ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ರೈತರ ಕೃಷಿ ಪಂಪ್‍ಸೆಟ್‍ಗಳಿಗೆ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್ ಪೂರೈಕೆ ಮಾಡುತ್ತಿದ್ದೇವೆ ಎಂದರು.
4
+ ವಿವಿಧ ಭಾಗಗಳಲ್ಲಿ ಹೆಚ್ಚು ಪೂರೈಕೆ ಮಾಡಬೇಕೆಂಬ ಬೇಡಿಕೆಯಿದೆ. ಭತ್ತ ಮತ್ತು ಕಬ್ಬು ಬೆಳೆಯುತ್ತಿರುವ ಪ್ರದೇಶಗಳಲ್ಲಿ ಬೇಡಿಕೆ ಹೆಚ್ಚಿದೆ. ಹೀಗಾಗಿ ಕೆಲವು ಪ್ರದೇಶಗಳಲ್ಲಿ ಸ್ಥಳೀಯ ಅಗತ್ಯಕ್ಕೆ ಅನುಗುಣವಾಗಿ ಹಗಲಿನಲ್ಲಿ ನಾಲ್ಕು ಗಂಟೆ, ರಾತ್ರಿ 3 ಗಂಟೆ ಸೇರಿದಂತೆ ಒಟ್ಟು 7 ಗಂಟೆ ಕಾಲ ವಿದ್ಯುತ್ ಪೂರೈಸುತ್ತಿದ್ದೇವೆ.
5
+ ಬರಗಾಲದ ಹಿನ್ನಲೆಯಲ್ಲಿ ಈ ಬಾರಿ ಕೃಷಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಬಳಕೆಯ ಪ್ರಮಾಣ ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಬರಗಾಲ ಆವರಿಸಿರುವ ಕಾರಣ ಸರ್ಕಾರ ಹಾಲಿ ಇರುವ ಕಾನೂನಿಗೆ ತಿದ್ದುಪಡಿ ಮಾಡಿದೆ. ಸೆಕ್ಷನ್ 6ರ ಪ್ರಕಾರ ನಮ್ಮ ರಾಜ್ಯದಲ್ಲಿ ಉತ್ಪಾದನೆ ಮಾಡಿದ ವಿದ್ಯುತ್‍ನ್ನು ಹೊರ ರಾಜ್ಯಗಳಿಗೆ ಮಾರಾಟ ಮಾಡದಂತೆ ನಿರ್ಬಂಧ ಹಾಕಿದ್ದೇವೆ. ಅಲ್ಲದೆ ಹರಿಯಾಣ, ಪಂಜಾಬ್‍ನಿಂದಲೂ ವಿದ್ಯುತ್ ಖರೀದಿ ಮಾಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು.
6
+ ಸ್ನೇಹಿತರ ಜೊತೆ ಸೇರಿ ತಂಗಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಪಾಪಿ ಅಣ್ಣ
7
+ ಸದ್ಯಕ್ಕೆ ರೈತರಿಗೆ ದಿನಕ್ಕೆ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್ ಪೂರೈಕೆ ಮಾಡುತ್ತಿದ್ದೇವೆ. ಕಬ್ಬು ಬೆಳೆಗಾರರಿಗೆ ತೊಂದರೆಯಾಗದಂತೆ ವಿದ್ಯುತ್ ಒದಗಿಸುತ್ತಿದ್ದೇವೆ. ಒಂದೂವರೆ ತಿಂಗಳು ಸ್ವಲ್ಪ ಮಟ್ಟಿಗೆ ತೊಂದರೆಯಾಗಿದ್ದು ನಿಜ. ಈಗ ಪರಿಸ್ಥಿತಿ ಸುಧಾರಿಸಿದೆ ಎಂದು ಹೇಳಿದರು. ಸಚಿವರ ಉತ್ತರಕ್ಕೆ ತೃಪ್ತರಾಗದ ಬಿಜೆಪಿ ಸದಸ್ಯರು, ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ಗ್ರಾಮೀಣ ಭಾಗಗಳಲ್ಲಿ ಸಕಾಲಕ್ಕೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡದೆ ರೈತರು ಹಿಡಿಶಾಪ ಹಾಕುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ, ಕೋಟಾ ಶ್ರೀನಿವಾಸ್ ಪೂಜಾರಿ, ವೈ.ನಾರಾಯಣಸ್ವಾಮಿ ಮತ್ತಿತರರು ಕಿಡಿಕಾರಿದರು.
8
+ ಇದಕ್ಕೆ ತಿರುಗೇಟು ಕೊಟ್ಟ ಕಾಂಗ್���ೆಸ್ ಸದಸ್ಯರು, ನಿಮ್ಮ ಕಾಲದಲ್ಲಿ ಎಷ್ಟು ವಿದ್ಯುತ್ ಉತ್ಪಾದನೆ ಮಾಡಿದ್ದೀರಿ. ಒಂದೇ ಒಂದು ಯೂನಿಟ್ ಉತ್ಪಾದನೆ ಮಾಡದೆ ನಿಮ್ಮಿಂದ ನಾವೇನು ಪಡೆಯುವುದಿದೆ ಎಂದು ಪ್ರಶ್ನಿಸಿದರು. ಈ ಹಂತದಲ್ಲಿ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ಉಂಟಾಯಿತು. ಆಗ ಸಭಾಪತಿಯವರು ತಮ್ಮ ಪೀಠದಿಂದ ಎದ್ದು ನಿಂತು ಸದಸ್ಯರನ್ನು ಹೊರತುಪಡಿಸಿ ಯಾರೂ ಮಾತನಾಡಬಾರದು. ನಾನು ಈ ವಿಷಯದ ಬಗ್ಗೆ ಚರ್ಚಿಸಲು ಅರ್ಧ ಗಂಟೆ ಸಮಯ ಕೊಡುವುದಾಗಿ ಹೇಳಿದಾಗ ಚರ್ಚೆಗೆ ತೆರೆ ಬಿದ್ದಿತು.
9
+ ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬರದಿಂದ ನೀರಾವರಿ ಅವಲಂಬಿತ ಬೆಳೆಗಾರರಿಗೆ ಆತಂಕ ಆಗಿದೆ. ಸರ್ಕಾರ 7 ಗಂಟೆಗಳ ವಿದ್ಯುತ್ ಪೂರೈಸುವುದಾಗಿ ಹೇಳಿ.ಅವರು ಕೇವಲ 3 ತಾಸು ವಿದ್ಯುತ್ ಕೊಡುತ್ತೀದ್ದಿರಿ. ಮಧ್ಯರಾತ್ರಿ 2-3 ಗಂಟೆಗೆ ವಿದ್ಯುತ್ ಕೊಡುತ್ತಿದ್ದಾರೆ ರೈತರಿಗೆ ಇದರಿಂದ ಬಹಳ ಸಮಸ್ಯೆ ಆಗುತ್ತಿದೆ ಎಂದು ಸರ್ಕಾರದ ಗಮನ ಸೆಳೆದರು.
10
+ ಸರ್ಕಾರದ ವಾಗ್ದಾನ ಮಾತ್ರ ಜಾರಿ ಆಗುತ್ತಿಲ್ಲ. ವಿದ್ಯುತ್ ಸಿಗುತ್ತಾ ಇದ್ದರೆ ಮೊಸಳೆಯನ್ನು ತಂದು ರೈತರು ಯಾಕೆ ಪ್ರತಿಭಟನೆ ಮಾಡುತ್ತಿದ್ದರು ಎಂದು ಪ್ರಶ್ನೆ ಮಾಡಿದರು.
eesanje/url_46_298_5.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ವಿಧಾನಮಂಡಲದ ಉಭಯ ಸದನಗಳಲ್ಲಿ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ
2
+ ಬೆಳಗಾವಿ,ಡಿ.4- ಇತ್ತೀಚೆಗೆ ಅಗಲಿರುವ ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಡಿ.ಬಿ.ಚಂದ್ರೇಗೌಡ ಸೇರಿದಂತೆ ಹಲವು ಗಣ್ಯರಿಗೆ ವಿಧಾನಮಂಡಲದ ಉಭಯ ಸದನಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಲಾಪ ಆರಂಭದಲ್ಲೇ ಸಭಾಧ್ಯಕ್ಷ ಯು.ಟಿ.ಖಾದರ್ ಸಂತಾಪ ಸೂಚಕ ನಿರ್ಣಯವನ್ನು ಮಂಡಿಸಿದರು. ಮಾಜಿ ಸಚಿವ ಶ್ರೀರಂಗದೇವರಾಯಲು, ವಿಧಾನಸಭೆಯ ಮಾಜಿ ಸದಸ್ಯರಾದ ಸಿ.ವೆಂಕಟೇಶಪ್ಪ, ಶ್ರೀಕಾಂತ್‍ಶೆಟ್ಟಪ್ಪ ಭೀಮಣ್ಣವರ ವಿಲಾಸಬಾಬು ಆಲಮೇಕರ್, ಈಶಾನ್ಯ ರಾಜ್ಯಗಳ ಮಾಜಿ ರಾಜ್ಯಪಾಲ ಪಿ.ಬಿ.ಆಚಾರ್ಯ ಉಗ್ರರ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಸದನದಲ್ಲಿ ಗೌರವಪೂರ್ವಕ ಶ್ರದ್ಧಾಂಜಲಿ ಸಲ್ಲಿಸಿದರು.
3
+ ಸಭಾಧ್ಯಕ್ಷ ಯು.ಟಿ.ಖಾದರ್‍ರವರು ಅಗಲಿದ ಗಣ್ಯರ ಪರಿಚಯ ಮಾಡಿಕೊಟ್ಟರು. ಡಿ.ಬಿ.ಚಂದ್ರೇಗೌಡರವರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ದಾರದಹಳ್ಳಿ ಗ್ರಾಮದಲ್ಲಿ ಜನಿಸಿದರು. ಕಾನೂನು ಪದವೀಧರರಾಗಿದ್ದು, ವೃತ್ತಿಯಲ್ಲಿ ವಕೀಲರಾಗಿದ್ದರು. ಸಂಗೀತ, ಸಾಹಿತ್ಯದಲ್ಲಿ ಅಪಾರ ಆಸಕ್ತಿ ಹೊಂದಿದ್ದ ಅವರು ನನ್ನ ಗೋಪಾಲ ಚಲನಚಿತ್ರದಲ್ಲೂ ಅಭಿನಯಿಸಿದ್ದರು.
4
+ ಪ್ರಜಾಪ್ರಭುತ್ವದ ಗಟ್ಟಿ ಧ್ವನಿಯ ಪ್ರತಿಪಾದಕರಾಗಿದ್ದ ಚಂದ್ರೇಗೌಡರು ನರಗುಂದದಲ್ಲಿ ನಡೆದ ಗೋಲಿಬಾರ್ ಪ್ರಕರಣವನ್ನು ವಿರೋಸಿ ಬೆಂಗಳೂರಿಗೆ ರೈತ ಜಾಥಾ ಏರ್ಪಡಿಸಿದ್ದರು. 1971, 1976, 2009 ರಲ್ಲಿ ಲೋಕಸಭಾ ಸದಸ್ಯರಾಗಿ 1986 ರಿಂದ 1989 ರವರೆಗೆ ರಾಜ್ಯಸಭಾ ಸದಸ್ಯರಾಗಿ 1978 ರಿಂದ 1983 ರವರೆಗೆ ವಿಧಾನಪರಿಷತ್ ಸದಸ್ಯರಾಗಿ ಮೇಲ್ಮನೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದ್ದರು. 1983 ರಲ್ಲಿ ಪ್ರಥಮ ಬಾರಿಗೆ ಏಳನೇ ವಿಧಾನಸಭೆಗೆ ತೀರ್ಥಹಳ್ಳಿ ಕ್ಷೇತ್ರದಿಂದ ಆಯ್ಕೆಯಾಗಿದ್ದರು.
5
+ ಸ್ನೇಹಿತರ ಜೊತೆ ಸೇರಿ ತಂಗಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಪಾಪಿ ಅಣ್ಣ
6
+ ವಿಧಾನಸಭೆಯ ಅಧ್ಯಕ್ಷ, ಸಭಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. 1989 ರಲ್ಲಿ ಪುನರ್ ಆಯ್ಕೆಯಾಗಿದ್ದ ಅವರು ವಿರೋಧಪಕ್ಷದ ನಾಯಕರಾಗಿ ಕೆಲಸ ಮಾಡಿದ್ದರು. 1999 ರಲ್ಲಿ ಶೃಂಗೇರಿ ಕ್ಷೇತ್ರದಿಂದ ಚುನಾಯಿತರಾಗಿದ್ದ ಚಂದ್ರೇಗೌಡರು ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರುಗಳಾಗಿ ಕೆಲಸ ನಿರ್ವಹಿಸಿದ್ದರು.
7
+ ಶ್ರೀರಂಗದೇವರಾಯಲು ಅವರು ಆನೆಗುಂದಿ ಗ್ರಾಮದಲ್ಲಿ ಜನಿಸಿದ್ದರು. ಸಹಕಾರ ಕ್ಷೇತ್ರದಲ್ಲಿ ಕೆಲಸ ಮಾಡಿದ ಅವರು, ಕನಕಗಿರಿ ಕ್ಷೇತ್ರದಿಂದ 7,8 ನೇ ವಿಧಾನಸಭೆಗೆ ಗಂಗಾವತಿ ಕ್ಷೇತ್ರದಿಂದ 9,10 ಮತ್ತು 11 ನೇ ವಿಧಾನಸಭೆಗೆ ಪುನರ್ ಆಯ್ಕೆಯಾಗಿದ್ದರು. ಕಾಡ ಸಚಿವರಾಗಿಯೂ ಕೆಲಸ ಮಾಡಿದ್ದರು. ವಿಜಯನಗರದ ರಾಜ ವಂಶಸ್ಥರಾಗಿದ್ದ ಶ್ರೀರಂಗದೇವರಾಯಲು ಆಗಸ್ಟ್ 22 ರಂದು ನಿಧನ ಹೊಂದಿದರು ಎಂದು ವಿವರಿಸಿದರು.
8
+ ಪಿ.ಬಿ.ಆಚಾರ್ಯ ಅವರು ಉಡುಪಿ ಜಿಲ್ಲೆಯ ತೆಂಕಪೇಟೆಯಲ್ಲಿ ಜನಿಸಿದ್ದು, ಕಾನೂನು ಪದವೀಧರರಾಗಿದ್ದರು. ಅಖಿಲ ಭ��ರತ ವಿದ್ಯಾರ್ಥಿ ಪರಿಷತ್‍ನ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂಬೈ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. ನಾಗಾಲ್ಯಾಂಡ್ ರಾಜ್ಯಪಾಲರಾಗಿ ತ್ರಿಪುರ, ಅಸ್ಸಾಂ, ಅರುಣಾಚಲ ಪ್ರದೇಶ ಹಾಗೂ ಮಣಿಪುರ ರಾಜ್ಯಗಳಲ್ಲಿ ಹಂಗಾಮಿ ರಾಜ್ಯಪಾಲರಾಗಿ ಕೆಲಸ ನಿರ್ವಹಿಸಿದ್ದರು. ನವೆಂಬರ್ 10 ರಂದು ನಿಧನರಾಗಿದ್ದಾರೆಂದು ತಿಳಿಸಿದರು.
9
+ ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ನವೆಂಬರ್ 22 ರಂದು ಸೇನಾಪಡೆ ಮತ್ತು ಉಗ್ರರ ನಡುವೆ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಕರ್ನಾಟಕದ ಮಂಗಳೂರು ಜಿಲ್ಲೆಯ ಕ್ಯಾಪ್ಟನ್ ಎಂ.ಬಿ.ಪ್ರಾಂಜಲ್ ಸೇರಿದಂತೆ ಕ್ಯಾಪ್ಟನ್ ಶುಭನ್ ಗುಪ್ತಾ, ಹವಲ್ದಾರ್ ಅಬ್ದುಲ್ ಮಜಿದ್, ಲಾನ್ಸ್‍ನಾಯ್ಕ್ ಸಂಜಯ್ ಬಿಸ್ಟ್ ಮತ್ತು ಪಾರಾಟ್ರುಪರ್ ಸಚಿನ್ ಲಾರ್ ಸೇರಿದಂತೆ ಐವರು ವೀರಯೋಧರು ಹುತಾತ್ಮರಾಗಿದ್ದಾರೆ ಎಂದು ವಿವರಿಸಿದರು.
10
+ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಡಿ.ಬಿ.ಚಂದ್ರೇಗೌಡರವರು ಉತ್ತಮ ವಾಜ್ಮಿಗಳಾಗಿದ್ದರು, ಸಂಸ್ಕøತಿಯ ವ್ಯವಹಾರಗಳ ಬಗ್ಗೆ ಅಪಾರ ತಿಳುವಳಿಕೆ ಹೊಂದಿದ್ದರು ಎಂದು ಗುಣಗಾನ ಮಾಡಿದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಸೂಕ್ತ ಅಭ್ಯರ್ಥಿಯ ನ್ನು ಹುಡುಕುವಂತೆ ಬಿಜೆಪಿಯ ಪ್ರಮುಖ ನಾಯಕರಾದ ಅನಂತಕುಮಾರ್ ಮತ್ತು ಯಡಿಯೂರಪ್ಪನವರು ತಮಗೆ ಸಲಹೆ ನೀಡಿದ್ದರು.
11
+ ತಾವು ಚಂದ್ರೇಗೌಡರ ಹೆಸರನ್ನು ಸೂಚಿಸಿ, ಖುದ್ದು ಚಂದ್ರೇಗೌಡರಿಗೆ ದೂರವಾಣಿ ಕರೆ ಮಾಡಿದ್ದೆ, ಅದಕ್ಕೆ ಪ್ರತಿಕ್ರಿಯಿಸಿದ ಅವರು, ನೀನು ಹೇಳುವುದಾದರೆ ನಾನು ಈಗಲೇ ಬಸ್ ಹತ್ತಿ ಬೆಂಗಳೂರಿಗೆ ಬರುತ್ತೇನೆ ಎಂದು ಉತ್ಸಾಹ ತೋರಿದ್ದರು. ಕಾನೂನಿನ ಬಗ್ಗೆ ಅಪಾರ ಜ್ಞಾನ ಹೊಂದಿದ್ದರು. ನಮಗೆ ಯಾವುದೇ ಸಮಸ್ಯೆಗಳಾದರೂ ಅವರ ಬಳಿ ಸಲಹೆ ಕೇಳುತ್ತಿದ್ದೆವು ಎಂದು ಸ್ಮರಿಸಿಕೊಂಡರು.
12
+ ಪಿ.ಬಿ.ಆಚಾರ್ಯ ಈಶಾನ್ಯ ರಾಜ್ಯಗಳಲ್ಲಿ ರಾಜ್ಯಪಾಲರಾಗಿದ್ದಾಗ ಕರ್ನಾಟಕದಲ್ಲಿ ಈ ಭಾಗದ ಜನರ ಮೇಲೆ ದಾಳಿ ಮಾಡುವ ಹುಸಿ ಬೆದರಿಕೆಯ ಕರೆ ಬಂದಿತ್ತು. ಅದರಿಂದ ಆತಂಕಗೊಂಡ ಸಾವಿರಾರು ಜನ ಏಕಾಏಕಿ ತಮ್ಮ ಊರಿಗೆ ತೆರಳಲು ಮುಂದಾದರು. ಒಂದೇ ಒಂದು ರೈಲು ವ್ಯವಸ್ಥೆ ಇತ್ತು. ಅವರಲ್ಲಿ ಒಂದು ಸಾವಿರ ಜನ ಮಾತ್ರ ಪ್ರಯಾಣಿಸುವ ವ್ಯವಸ್ಥೆ ಇತ್ತು. ಮೂರ್ನಾಲ್ಕು ಸಾವಿರ ಜನ ಏಕಾಏಕಿ ಮುನ್ನುಗ್ಗಿದ್ದರಿಂದಾಗಿ ಸಮಸ್ಯೆ ಎದುರಾಯಿತು. ಆಗ ರಾಜ್ಯಪಾಲರಾಗಿದ್ದ ಆಚಾರ್ಯ ಅವರು ತಮ್ಮ ನೆರವಿಗೆ ಧಾವಿಸಿದ್ದರು ಎಂದು ಹೇಳಿದರು.
13
+ ಅಬ್ಬರಿಸುತ್ತಿದೆ ಮೈಚಾಂಗ್ ಚಂಡಮಾರುತ
14
+ ಜಮ್ಮು-ಕಾಶ್ಮೀರದ ಧಾಳಿಯಲ್ಲಿ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ಮತ್ತಷ್ಟು ಸಹಾಯಧನ ನೀಡಬೇಕೆಂದು ಅಶೋಕ್ ಸಲಹೆ ನೀಡಿದರು. ಗೃಹಸಚಿವ ಜಿ.ಪರಮೇಶ್ವರ್ ಮಾತನಾಡಿ, ಡಿ.ಬಿ.ಚಂದ್ರೇಗೌಡ ಅವರು ಇಂದಿರಾಗಾಂಯವರಿಗೆ ಚಿಕ್ಕಮಗಳೂರು ಕ್ಷೇತ್ರ ಬಿಟ್ಟುಕೊಟ್ಟು ದೇಶದಲ್ಲೇ ರಾಜಕೀಯ ಬದಲಾವಣೆಗೆ ನಾಂದಿ ಹಾಡಿದ್ದರು. ಅಂತಹ ಕ್ಯಾಪ್ಟನ್ ಪ್ರಾಂಜಲ್ ಯುವಕರಿಗೆ ಸೂರ್ತಿ ಎಂದು ಸ್ಮರಿಸಿಕೊಂಡರು.
15
+ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಚಿವರಾದ ಎಚ್.ಕೆ.ಪಾಟೀಲ್, ಶಿವರಾಜ್ ತಂಗಡಗಿ, ಶಾಸಕರಾದ ಸಿ.ಎನ್.ಬಾಲಕೃಷ್ಣ, ಜನಾರ್ಧನ ರೆಡ್ಡಿ ಮತ್ತಿತರರು ಸಂತಾಪ ಸೂಚಿಸಿದರು.
eesanje/url_46_298_6.txt ADDED
@@ -0,0 +1,7 @@
 
 
 
 
 
 
 
 
1
+ ಅಧಿವೇಶನಕ್ಕೆ ಮಧುವಣಗಿತ್ತಿಯಂತೆ ಸಿಂಗಾರಗೊಂಡ ಕುಂದಾನಗರಿ
2
+ ಬೆಳಗಾವಿ,ಡಿ.4- ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಬಹುನಿರೀಕ್ಷಿತ ವಿಧಾನಮಂಡಲ ಅಧಿವೇಶನ ಆರಂಭಗೊಂಡಿದ್ದು, ಕುಂದಾನಗರಿ ಅಧಿವೇಶನಕ್ಕಾಗಿ ಮಧುವಣಗಿತ್ತಿಯಂತೆ ಸಿಂಗಾರಗೊಂಡಿತ್ತು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಎರಡನೇ ಅವಧಿಯ ಸರ್ಕಾರದಲ್ಲಿ ಬೆಳಗಾವಿಯಲ್ಲಿ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ.
3
+ ಬಿಜೆಪಿ ಕಳೆದ ತಿಂಗಳಷ್ಟೇ ವಿಧಾನಸಭೆಯ ವಿರೋಧಪಕ್ಷದ ನಾಯಕನನ್ನು ನೇಮಕ ಮಾಡಿರುವುದರಿಂದ ಆರ್.ಅಶೋಕ್ ಕೇಸರಿ ಪಡೆಯನ್ನು ಮುನ್ನಡೆಸಲಿದ್ದಾರೆ. ವಿಧಾನಪರಿಷತ್‍ಗೆ ಈವರೆಗೂ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ. ಹತ್ತು ದಿನಗಳ ಕಾಲದ ಅವೇಶನ ಜಿದ್ದಾಜಿದ್ದಿನ ಕಣವಾಗಿರಲಿದೆ. ಸದನದ ಒಳಗೆ ಪ್ರಜಾಸತ್ತಾತ್ಮಕ ಚರ್ಚೆಗಳು ನಡೆಯುತ್ತಿದ್ದರೆ, ಸದನದ ಹೊರಗೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
4
+ ಗೊಂದಲಕ್ಕೆ ಆಸ್ಪದವಾಗದಂತೆ ಸರ್ಕಾರ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ವಹಿಸಿದೆ. ಭದ್ರತೆಯಿಂದ ಹಿಡಿದು ವಸತಿ, ಊಟ ಸೇರಿದಂತೆ ಹಲವು ಸೌಲಭ್ಯಗಳನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡಲಾಗುತ್ತಿದೆ. ಸದನದ ಆರಂಭದ ದಿನವಾದ ಇಂದು ವಿಧಾನಸೌಧದ ಮುಂದೆ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು.
5
+ ಮೂರು ರಾಜ್ಯಗಳ ಗೆಲುವಿಗೆ ನಡ್ಡಾ ಪರಿಶ್ರಮ ಕಾರಣ : ಮೋದಿ
6
+ ಬೆಳಗಾವಿಯ ರಸ್ತೆಗಳಲ್ಲೆಲ್ಲಾ ವಿವಿಧ ರಾಜಕೀಯ ನಾಯಕರುಗಳ ಫ್ಲೆಕ್ಸ್, ಪೋಸ್ಟರ್‍ಗಳು ರಾರಾಜಿಸುತ್ತಿದ್ದವು. ವಿಧಾನಪರಿಷತ್ ಹಾಗೂ ವಿಧಾನಸಭೆ ಸದಸ್ಯರು ಅತ್ಯುತ್ಸಾಹದಿಂದ ಕಲಾಪದಲ್ಲಿ ಭಾಗವಹಿಸಿದ್ದರು.
7
+ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಸರ್ಕಾರ ರಚನೆ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿರುವುದರಿಂದ ಇಂದಿನ ಕಲಾಪಕ್ಕೆ ಗೈರುಹಾಜರಾಗಿದ್ದರು. ಉಳಿದಂತೆ ಎಲ್ಲಾ ಸಚಿವರು, ಶಾಸಕರು ಕಲಾಪದಲ್ಲಿ ಭಾಗವಹಿಸಿದ್ದರು. ಹೊಸ ಕ್ಯಾಪ್ಟನ್ ನೇಮಕದ ಬಳಿಕ ಬಿಜೆಪಿ ಪಾಳೆಯದಲ್ಲಿ ಅತ್ಯುತ್ಸಾಹ ಕಂಡುಬಂದಿತು.
eesanje/url_46_298_7.txt ADDED
@@ -0,0 +1,5 @@
 
 
 
 
 
 
1
+ ಎಡವಿದ ಸಿಎಂ-ಡಿಸಿಎಂ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್
2
+ ಬೆಂಗಳೂರು, ಡಿ.3- ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರು ಎಡವಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ವಿಶ್ವ ವಿಕಲಚೇತನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
3
+ ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಮುಗಿಲು ಮುಟ್ಟಿದ ಬಿಜೆಪಿ ಹರ್ಷೋದ್ಘಾರ
4
+ ಕಾರ್ಯಕ್ರಮ ಮುಗಿಸಿ ವಾಪಸ್ ತೆರಳುವಾಗ ಹಸಿರು ಹೊದಿಕೆಗಳ ಕೆಳಗೆ ಇದ್ದಂತಹ ಮೆಟ್ಟಿಲನ್ನು ನೋಡದೇ ತಪ್ಪು ಹೆಜ್ಜೆ ಇಟ್ಟು ಎಡವಿದರು. ತಕ್ಷಣವೇ ಭದ್ರತಾ ಅಧಿಕಾರಿಗಳು ಅವರನ್ನು ಹಿಡಿದುಕೊಂಡು ಬ್ಯಾರಿಕೇಡ್‍ನ ಆಚೆಬದಿಯಲ್ಲಿ ನಿಂತಿದ್ದ ಯುವತಿಯೊಬ್ಬರ ಸಹಾಯದಿಂದ ಸಿದ್ದರಾಮಯ್ಯ ಕೆಳಗೆ ಬೀಳದಂತೆ ಆಸರೆಯಾದರು.
5
+ ಅತ್ತ ತೆಲಂಗಾಣ ವಿಧಾನಸಭೆ ಚುನಾವಣೆ ನಿಮಿತ್ತ ಹೈದ್ರಾಬಾದ್‍ನಲ್ಲಿರುವ ಡಿ.ಕೆ.ಶಿವಕುಮಾರ್‍ರವರು ಕಾರು ಹತ್ತುವಾಗ ತಕ್ಷಣಕ್ಕೆ ಕಾರಿನ ಹ್ಯಾಂಡಲ್ ಕೈಗೆ ಸಿಗದೆ ಆಯತಪ್ಪಿ ಬೀಳುವಂತಾಗಿದ್ದರು. ಅವರಿಗೆ ಸಿಬ್ಬಂದಿ ಆಸರೆಯಾಗಿ ಬೀಳದಂತೆ ತಡೆದಿದ್ದರು. ರಾಜ್ಯದ ಇಬ್ಬರು ಪ್ರಮುಖ ನಾಯಕರು ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುವ ಸಂದರ್ಭದಲ್ಲೇ ಆಯತಪ್ಪಿದ್ದು ಕಾಕತಾಳೀಯವಾಗಿತ್ತು.
eesanje/url_46_298_8.txt ADDED
@@ -0,0 +1,7 @@
 
 
 
 
 
 
 
 
1
+ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‍ಗಢದಲ್ಲಿ `ಕೈ’ಕೊಟ್ಟ ಗ್ಯಾರಂಟಿಗಳು
2
+ ಬೆಂಗಳೂರು,ಡಿ.3- ಕರ್ನಾಟಕ ಚುನಾವಣೆಯಲ್ಲಿ ಕಮಾಲ್ ಮಾಡಿದ ಗ್ಯಾರಂಟಿ ಯೋಜನೆಗಳು ತೆಲಂಗಾಣದಲ್ಲಿ ಕಾಂಗ್ರೆಸ್‍ನ ಕೈಹಿಡಿದರೆ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‍ಗಢದಲ್ಲಿ ಈ ಯೋಜನೆಗಳಿಗೆ ಜನ ಆದ್ಯತೆ ನೀಡಿದಂತಿಲ್ಲ. ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳು ;ಭಾರೀ ಸದ್ದು ಮಾಡಿದ್ದವು. ತೆಲಂಗಾಣದಲ್ಲಿ ಆರು ಗ್ಯಾರಂಟಿ ಯೋಜನೆಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಸೇರಿದಂತೆ ಮುಖಂಡರು ಅಬ್ಬರದ ಪ್ರಚಾರ ನಡೆಸಿ ಘೋಷಣೆ ಮಾಡಿದ್ದರು.
3
+ ಕರ್ನಾಟಕದ ಮಾದರಿಯಂತೆ ಗ್ಯಾರಂಟಿ ಯೋಜನೆಗಳನ್ನು ನೀಡುವ ಭರವಸೆ ನೀಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸದಸ್ಯರೆಲ್ಲಾ ಪ್ರಚಾರದ ಕಣಕ್ಕೆ ದಾಂಗುಡಿಯಿಟ್ಟು ಅಬ್ಬರದ ಪ್ರಚಾರ ನಡೆಸಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದರು.
4
+ ರಾಜಸ್ಥಾನ ಮಾಂತ್ರಿಕನ ಕಾಟದಿಂದ ಮುಕ್ತವಾಗಿದೆ : ಶೇಖಾವತ್
5
+ ತೆಲಂಗಾಣದಲ್ಲಿ ಭಾರೀ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವಿನ ನಿರೀಕ್ಷೆ ಮಾಡಿತ್ತು. ಆದರೆ ಕರ್ನಾಟಕದಷ್ಟು ಭರ್ಜರಿ ಬಹುಮತ ಸಾಧಿಸಲು ಸಾಧ್ಯವಾಗಿಲ್ಲ. ಅದೇ ರೀತಿ ಛತ್ತೀಸ್‍ಗಢದಲ್ಲೂ ಕೂಡ ಜನ ಕಾಂಗ್ರೆಸ್ ಅನ್ನು ನಿರೀಕ್ಷಿತ ಮಟ್ಟದಲ್ಲಿ ಕೈ ಹಿಡಿದಿಲ್ಲ.
6
+ ಛತ್ತೀಸ್‍ಗಢದಲ್ಲಿ ಕಾಂಗ್ರೆಸ್‍ಗೆ ಬಿಜೆಪಿ ಸಮಬಲದ ಪೈಪೋಟಿ ನೀಡಿದೆ. ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಬಿಜೆಪಿ ಭರ್ಜರಿ ಬಹುಮತದತ್ತ ದಾಪುಗಾಲು ಇಟ್ಟಿದೆ. ರಾಜಸ್ಥಾನದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಬಿಜೆಪಿ ಅಧಿಕಾರ ಹಿಡಿಯಲು ಮುಂದಾಗಿದೆ. ಮಧ್ಯಪ್ರದೇಶದಲ್ಲೂ ಕೂಡ ಭಾರೀ ಮುನ್ನಡೆ ಸಾಧಿಸಿದ್ದು, ಅಧಿಕಾರ ಚುಕ್ಕಾಣಿ ಹಿಡಿಯುವ ಕಸರತ್ತುಗಳು ಆರಂಭವಾಗಿವೆ.
7
+ ಈ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್‍ನ ಗ್ಯಾರಂಟಿ ಯೋಜನೆಗಳು ಫಲ ನೀಡಿದಂತೆ ಕಂದುಬಂದಿಲ್ಲ. ಕರ್ನಾಟಕದಲ್ಲಿ ನಿರೀಕ್ಷೆಗೂ ಮೀರಿ ಕಾಂಗ್ರೆಸ್‍ಗೆ ಬಹುಮತ ಬಂದಿತ್ತು. ಕಾಂಗ್ರೆಸ್ ನೀಡಿದ ಗ್ಯಾರಂಟಿ ಯೋಜನೆಗಳು ಫಲ ನೀಡಿದ್ದವು. ಅದೇ ಮಾದರಿಯನ್ನು ಪಂಚರಾಜ್ಯಗಳ ಚುನಾವಣೆಯಲ್ಲಿ ಅನುಸರಿಸಿತ್ತಾದರೂ ಜನ ಗ್ಯಾರಂಟಿ ಯೋಜನೆಗಳಿಗೆ ಮಾನ್ಯತೆ ನೀಡಿರುವುದು ಕಂಡುಬಂದಂತಿಲ್ಲ.
eesanje/url_46_298_9.txt ADDED
@@ -0,0 +1,5 @@
 
 
 
 
 
 
1
+ ಮೋದಿ ನಾಯಕತ್ವದ ಪರ ಜನರ ತೀರ್ಪು ನೀಡಿದ್ದಾರೆ : ಎಚ್‍ಡಿಕೆ
2
+ ಬೆಂಗಳೂರು,ಡಿ.3- ಪಂಚರಾಜ್ಯ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರಮೋದಿ ಅವರ ನಾಯಕತ್ವದ ಪರವಾಗಿ ಜನ ತೀರ್ಮಾನ ಕೈಗೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ನಾಲ್ಕು ರಾಜ್ಯಗಳ ಮತ ಎಣಿಕೆ ಇಂದು ನಡೆದಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ ಎಂದ ಅವರು, ಮತದಾನೋತ್ತರ ಸಮೀಕ್ಷೆಗಳಲ್ಲಿ ಎರಡು ರಾಜ್ಯಗಳಲ್ಲಿ ಬಿಜೆಪಿ, ಮತ್ತೆರಡು ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬುದಿತ್ತು.
3
+ ಆದರೆ ಮತ ಎಣಿಕೆಯ ನಂತರದ ಫಲಿತಾಂಶದಲ್ಲಿ ನರೇಂದ್ರಮೋದಿ ಅವರ ಪರವಾಗಿ ಜನರ ತೀರ್ಮಾನ ಇರುವುದು ಕಂಡುಬರುತ್ತಿದೆ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಲು ನಾನಾ ಕಾರಣಗಳಿವೆ. ಮುನ್ನಡೆಗೆ ಕಾಂಗ್ರೆಸ್‍ನ ಶಕ್ತಿ ಕಾರಣವಲ್ಲ. ಯಾವ ಕಾರಣಕ್ಕೆ ಕಾಂಗ್ರೆಸ್ ಅಲ್ಲಿ ಮೇಲೆ ಬಂದಿದೆ ಎಂಬುದು ಗೊತ್ತಿದೆ. ಐದಕ್ಕೆ ಐದೂ ರಾಜ್ಯಗಳನ್ನು ಗೆಲ್ಲುತ್ತೇವೆ ಎಂದು ಬೀಗುತ್ತಿದ್ದ ಕಾಂಗ್ರೆಸ್‍ನವರಿಗೆ ಜನರು ಸೂಕ್ತ ಉತ್ತರ ನೀಡಿದ್ದಾರೆ.
4
+ ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಮುಗಿಲು ಮುಟ್ಟಿದ ಬಿಜೆಪಿ ಹರ್ಷೋದ್ಘಾರ
5
+ ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿಗೆ ಹಲವು ಕಾರಣಗಳಿವೆ. ಇಲ್ಲಿಂದ ರವಾನೆಯಾದ ಆರ್ಥಿಕ ತೈಲಿಗಳು, ಚೀಲಗಳು ಕಾರಣ ಇರಬಹುದು. ಕಾಂಗ್ರೆಸ್‍ನವರ ಸಮಾಜಸೇವೆ ಅಭಿವೃದ್ಧಿಗೆ ಪೂರಕವಾದ ಜನಸೇವೆ ನೋಡಿ ತೆಲಂಗಾಣದ ಜನರು ಈ ತೀರ್ಪು ನೀಡಿಲ್ಲ. ಮುಂಬರುವ ಲೋಕಸಭೆ ಚುನಾವಣೆ ನಂತರ ಏನೇನಾಗುತ್ತದೆ ಎಂಬುದನ್ನು ಕಾದು ನೋಡಬೇಕು ಎಂದರು.
eesanje/url_46_299_1.txt ADDED
@@ -0,0 +1,6 @@
 
 
 
 
 
 
 
1
+ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಅಂತಿಮ : ನಾಳೆಯೊಳಗೆ ಹೊರಬೀಳಲಿದೆ ಪಟ್ಟಿ
2
+ ಬೆಂಗಳೂರು, ಡಿ. 2- ನಿಗಮ ಮಂಡಳಿಗಳಿಗೆ, ಅಧ್ಯಕ್ಷರ ನೇಮಕಾತಿಗೆ ಅಂತಿಮ ಹಂತದ ಸಿದ್ಧತೆಗಳು ನಡೆದಿದ್ದು, ಇಂದು ಸಂಜೆ ಅಥವಾ ನಾಳೆಯೊಳಗೆ ನೇಮಕಾತಿಯ ಪಟ್ಟಿ ಹೊರಬೀಳುವ ಸಾಧ್ಯತೆ ಇದೆ. ನಿಗಮಮಂಡಳಿಗಳ ಜೊತೆಗೆ ಇನ್ನೂ ನಾಲ್ಕೈದು ರಾಜಕೀಯ ಕಾರ್ಯದರ್ಶಿಗಳನ್ನು ನೇಮಿಸುವ ನಿರೀಕ್ಷೆಯಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆ.ಗೋವಿಂದರಾಜು, ನಸೀರ್ ಅಹಮ್ಮದ್ ಅವರನ್ನು ರಾಜಕೀಯ ಕಾರ್ಯದರ್ಶಿಗಳನ್ನಾಗಿ ನೇಮಿಸಲಾಗಿದೆ.
3
+ ಮುಖ್ಯಮಂತ್ರಿಗಳಿಗೆ ಇನ್ನೂ ಇಬ್ಬರು ಶಾಸಕರನ್ನು ರಾಜಕೀಯ ಕಾರ್ಯದರ್ಶಿಗಳನ್ನಾಗಿ ನೇಮಿಸುವ ಸಾಧ್ಯತೆಯಿದೆ. ಜೊತೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮೂರು ಮಂದಿ ರಾಜಕೀಯ ಕಾರ್ಯದರ್ಶಿಗಳನ್ನು ನಿಯೋಜಿಸುವ ಚರ್ಚೆಗಳಾಗಿವೆ ಎಂದು ಮೂಲಗಳು ತಿಳಿಸಿವೆ.
4
+ ಪಿಎಸ್‍ಐ ಪರೀಕ್ಷೆ ಮುಂದೂಡಿಕೆಗೆ ದೂರವಾಣಿ ಕರೆ ಅಭಿಯಾನ
5
+ ಕಳೆದ ವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಡುವೆ ನಡೆದ ಸಭೆಯಲ್ಲಿ ನಿಗಮ ಮಂಡಳಿಗಳಿಗೆ ನೇಮಕಾತಿಯ ಕುರಿತು ಚರ್ಚೆ ನಡೆಸಲಾಗಿದೆ.
6
+ ಸಂಭವನೀಯ ಪಟ್ಟಿಯನ್ನು ದೆಹಲಿಗೆ ಕಳುಹಿಸಲಾಗಿದೆ. ಹೈಕಮಾಂಡ್ ನಾಯಕರು ಪಟ್ಟಿಯನ್ನು ಪರಿಶೀಲಿಸಿದ್ದು, ಬಹುತೇಕ ಅಂಕಿತ ನೀಡುವ ನಿರೀಕ್ಷೆಯಿದ್ದು, ಇಂದು ಅಥವಾ ನಾಳೆಯೊಳಗೆ ಅಧಿಕೃತವಾಗಿ ಪಟ್ಟಿ ಹೊರಬೀಳಲಿದೆ ಎಂದು ಹೇಳಲಾಗುತ್ತಿದೆ. ಬಳಿಕ ನೇಮಕಾತಿ ಪ್ರಕ್ರಿಯೆಗಳು ನಡೆಯಲಿವೆ. ವಿಧಾನಮಂಡಲ ಅಧಿವೇಶನದ ಮುನ್ನ ನೇಮಕಾತಿಯಾಗುವುದಾದರೆ ಅದು ಸಾಧ್ಯ. ಇಲ್ಲವಾದರೆ ಸಂಕ್ರಾಂತಿಯ ಬಳಿಕವೇ ನಿಗಮ ಮಂಡಳಿಗಳಿಗೆ ಮೋಕ್ಷ ಎಂದು ಮೂಲಗಳು ತಿಳಿಸಿವೆ.
eesanje/url_46_299_10.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಆಡಳಿತ-ಪ್ರತಿಪಕ್ಷಗಳ ವಾಕ್ಸಮರಕ್ಕೆ ಸುವರ್ಣಸೌಧ ಸಜ್ಜು
2
+ ಬೆಂಗಳೂರು, ಡಿ. 2- ಸೋಮವಾರದಿಂದ ಬೆಳಗಾವಿಯ ಸುವರ್ಣ ವಿಕಾಸ ಸೌಧದದಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ವೇದಿಕೆಯಾಗಲಿದೆ. ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಆಡಳಿತ ಪಕ್ಷದ ಮೇಲೆ ಮುಗಿಬೀಳಲು ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಸಜ್ಜಾಗಿದ್ದರೆ ಇನ್ನು ಸದನದಲ್ಲೇ ಪ್ರತಿಪಕ್ಷಗಳನ್ನು ಉತ್ತರದ ಮೂಲಕ ಕಟ್ಟಿಹಾಕಲು ಕಾಂಗ್ರೆಸ್ ಕೂಡ ಸಿದ್ಧತೆ ಮಾಡಿಕೊಂಡಿದೆ. ಚಳಿಗಾಲದಲ್ಲೂ ಸರ್ಕಾರವನ್ನು ಚಳಿ ಬಿಡಿಸಲು ಪ್ರತಿಪಕ್ಷಗಳು ಸಜ್ಜಾಗಿದ್ದರೆ ಸದನದಲ್ಲಿ ಪ್ರತ್ಯುತ್ತರ ನೀಡಲು ಸರ್ಕಾರ ಸಜ್ಜಾಗಿದೆ.
3
+ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಮೈತ್ರಿಯಾದ ನಂತರ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿರುವುದರಿಂದ ಸರ್ಕಾರದ ವಿರುದ್ಧ ಸದನದಲ್ಲಿ ಉಭಯ ಪಕ್ಷಗಳು ಜಂಟಿ ಹೋರಾಟ ನಡೆಸಲು ಮುಂದಾಗಿವೆ.
4
+ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಡೆದ ಎರಡು ಅಧಿವೇಶನಗಳಿಗೆ ಪ್ರತಿಪಕ್ಷದ ನಾಯಕರು ಇರಲಿಲ್ಲ. ಇದನ್ನೇ ಅಸ್ತ್ರ ಮಾಡಿಕೊಂಡಿದ್ದ ಸರ್ಕಾರ ಪ್ರತಿಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗದವರು ನಮಗೇನು ಹೇಳುತ್ತೀರಿ ಎಂದು ತಿರುಗೇಟು ನೀಡುತ್ತಿದ್ದರು.
5
+ ಕಿಂಗ್ ಚಾಲ್ರ್ಸ್ ಪರಿಸರ ಸಂರಕ್ಷಣೆ ಕಾರ್ಯ ಶ್ಲಾಘನೀಯ; ಮೋದಿ
6
+ ಇದೀಗ ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಸತತ ಏಳು ಬಾರಿ ಗೆದ್ದಿರುವ ಆರ್.ಅಶೋಕ್ ಅವರು ನೇಮಕವಾಗಿದ್ದಾರೆ. ಮೊದಲ ಬಾರಿಗೆ ಅವರು ಪ್ರತಿಪಕ್ಷದ ನಾಯಕರಾಗಿ ಕಲಾಪದಲ್ಲಿ ಭಾಗಿಯಾಗುತ್ತಿರುವುದರಿಂದ ಸರ್ಕಾರದ ವಿರುದ್ಧ ಚಾಟಿ ಬೀಸುವ ಮುನ್ಸೂಚನೆಯನ್ನು ಕೊಟ್ಟಿದ್ದಾರೆ. ವಿಧಾನಪರಿಷತ್‍ಗೆ ನಾಳೆ ಸಂಜೆಯೊಳಗೆ ಪ್ರತಿಪಕ್ಷದ ನಾಯಕ, ಉಪನಾಯಕ, ಮುಖ್ಯ ಸಚೇತಕ ನೇಮಕವಾಗುವ ಸಾಧ್ಯತೆಯಿದೆ.
7
+ ಇನ್ನು ಈ ಬಾರಿಯ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ಪ್ರತಿಪಕ್ಷಗಳಿಗೆ ಸಾಕಷ್ಟು ಅಸ್ತ್ರಗಳು ಸಿಕ್ಕಿವೆ. ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ.
8
+ ರಾಜ್ಯಸರ್ಕಾರ ಬರನಿರ್ವಹಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಪ್ರತಿಪಕ್ಷಗಳು ದೂರುತ್ತಲೇ ಬಂದಿವೆ. ಸದನದಲ್ಲಿ ಇದನ್ನು ಚರ್ಚಿಸಲು ಆರ್.ಅಶೋಕ್ ಅವರು ಮುಂದಾಗಿದ್ದಾರೆ. ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ರೈತರಿಗೆ ನಿರಂತರವಾಗಿ ಆರು ಗಂಟೆ ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡದಿರುವುದು ಸೇರಿದಂತೆ ಕೆಲವು ಪ್ರಚಲಿತ ಸಮಸ್ಯೆಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ-ಜೆಡಿಎಸ್ ಸಜ್ಜಾಗಿವೆ.
9
+ ಸದನದಲ್ಲಿ ಚರ್ಚಿಸುವ ವಿಷಯಗಳ ಕುರಿತು ಶುಕ್ರವಾರವಷ್ಟೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂ��್ರ, ಆರ್.ಅಶೋಕ್ ಸೇರಿದಂತೆ ಹಲವು ರಹಸ್ಯ ಸಭೆ ನಡೆಸಿದ್ದರು. ಸದನದಲ್ಲಿ ಈ ಬಾರಿ ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡದೇ ನಾಡಿನ ಪ್ರಚಲಿತ ಸಮಸ್ಯೆಗಳ ಬಗ್ಗೆ ಧ್ವನಿಯಾಗಬೇಕೆಂಬ ತೀರ್ಮಾನಕ್ಕೆ ಪ್ರತಿಪಕ್ಷಗಳು ಬಂದಿವೆ.
10
+ ಎರಡು ದಿನಗಳ ಹಿಂದೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರಗಾಲದಿಂದ ತತ್ತರಿಸಿರುವ ರೈತರಿಗೆ ಸರ್ಕಾರದ ವತಿಯಿಂದ ಕನಿಷ್ಠ 1 ಸಾವಿರದಿಂದ ಗರಿಷ್ಠ 2 ಸಾವಿರ ಹಣ ನೀಡುವುದಾಗಿ ಘೋಷಣೆ ಮಾಡಿದ್ದರು. ಇದು ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ ಸಂಕಷ್ಟದಲ್ಲಿರುವ ರೈತರ ಪ್ರತಿ ಹೆಕ್ಟೇರ್‍ಗೆ 25 ಸಾವಿರ ರೂ. ಹಣವನ್ನು ಪರಿಹಾರ ಧನ ಬಿಡುಗಡೆ ಮಾಡಬೇಕೆಂದು ಹೋರಾಟ ನಡೆಸಲು ಪ್ರತಿಪಕ್ಷಗಳು ತೀರ್ಮಾನಿಸಿವೆ.
11
+ ಬಲವಂತದ ಮತಾಂತರ : 42 ಜನರ ವಿರುದ್ಧ ಎಫ್‍ಐಆರ್, 9 ಮಂದಿ ಬಂಧನ
12
+ ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸಿ ರಾಜ್ಯಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವುದು ಬೇಡ. ಮೊದಲು ರಾಜ್ಯಸರ್ಕಾರ ತನ್ನ ಪಾಲಿನ ಹಣವನ್ನು ಬಿಡುಗಡೆ ಮಾಡಲಿ. ಕೇಂದ್ರಕ್ಕೆ ಆರ್ಥಿಕ ನೆರವು ನೀಡಲು ನಾವು ಕೂಡ ಮನವಿ ಮಾಡುತ್ತೇವೆ ಎಂದು ಉತ್ತರಿಸಲು ಸಿದ್ಧರಾಗಿದ್ದಾರೆ.ಸದನದಲ್ಲಿ ಇತ್ತೀಚೆಗೆ ಶಾಸಕ ಬಿ.ಆರ್.ಪಾಟೀಲ್ ಅವರು ಸಚಿವರಾದ ಕೃಷ್ಣಭೈರೇಗೌಡ ಮತ್ತು ಪ್ರಿಯಾಂಕ ಖರ್ಗೆ ವಿರುದ್ಧ ಮುಖ್ಯಮಂತ್ರಿಗೆ ಬರೆದ ಪತ್ರದ ಬಗ್ಗೆಯೂ ಪ್ರಸ್ತಾಪಿಸಲು ಪ್ರತಿಪಕ್ಷಗಳು ತೀರ್ಮಾನಿಸಿವೆ.
13
+ ಜಮೀರ್ ವಿರುದ್ಧ ಹಕ್ಕುಚ್ಯುತಿ:ತೆಲಂಗಾಣ ವಿಧಾನಸಭೆ ಚುನಾವಣೆಯ ಪ್ರಚಾರದ ವೇಳೆ ವಿಧಾನಸಭೆಯ ಸ್ಪೀಕರ್ ಸ್ಥಾನಮಾನದ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದ ವಸತಿ ಸಚಿವ ಜಮೀರ್ ಅಹಮ್ಮದ್ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ಪ್ರತಿಪಕ್ಷಗಳು ತೀರ್ಮಾನಿಸಿವೆ. ಸ್ಪೀಕರ್ ಸ್ಥಾನಕ್ಕೆ ಅವಮಾನ ಮಾಡಿರುವ ಜಮೀರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ಹಕ್ಕುಚ್ಯುತಿ ಮಂಡನೆಗೆ ಬಿಜೆಪಿ ಮತ್ತು ಜೆಡಿಎಸ್ ಸಜ್ಜಾಗಿದ್ದು, ಸದನದಲ್ಲಿ ಹೋರಾಟಕ್ಕೂ ಮುಂದಾಗಿವೆ.
14
+ ಒಟ್ಟಿನಲ್ಲಿ 2 ವಾರಗಳ ಕಾಲ ನಡೆಯಲಿರುವ ಈ ಚಳಿಗಾಲದ ಅಧಿವೇಶನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತಾರಕಕ್ಕೇರಿದ ಚರ್ಚೆ ನಡೆಯಲಿದೆ.
eesanje/url_46_299_11.txt ADDED
@@ -0,0 +1,6 @@
 
 
 
 
 
 
 
1
+ ಅಶೋಕ್-ವಿಜಯೇಂದ್ರ ಹೈಕಮಾಂಡ್ ಭೇಟಿ ಮತ್ತಷ್ಟು ವಿಳಂಬ
2
+ ಬೆಂಗಳೂರು,ಡಿ.1- ಐದು ರಾಜ್ಯಗಳ ಚುನಾವಣೆಯ ಫಲಿತಾಂಶಗಳು ಡಿ.3 ರಂದು (ಭಾನುವಾರ) ಪ್ರಕಟವಾಗಲಿದ್ದು, ಹೊಸದಾಗಿ ನೇಮಕಗೊಂಡ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಬಿಜೆಪಿ ಹೈಕಮಾಂಡ್ ಭೇಟಿ ಮತ್ತಷ್ಟು ವಿಳಂಬವಾಗಲಿದೆ.
3
+ ಡಿ.4 ರಂದು ಬೆಳಗಾವಿಯಲ್ಲಿ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಮೊದಲು ಈ ಇಬ್ಬರೂ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಯೋಜಿಸಿದ್ದರು. ಆದರೆ ಬಿಜೆಪಿ ಹೈಕಮಾಂಡ್ ನಾಯಕರು ಪ್ರಚಾರದಲ್ಲಿ ನಿರತರಾಗಿದ್ದರು ಮತ್ತು ಈಗ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.
4
+ ನಿಜ್ಜಾರ್ ಹತ್ಯೆ ಹಿಂದೆ ಭಾರತದ ಕೈವಾಡವಿಲ್ಲ : ಶ್ರೀನಿವಾಸನ್
5
+ ಆದ್ದರಿಂದ ರಾಜ್ಯದ ಇಬ್ಬರು ನಾಯಕರನ್ನು ಭೇಟಿ ಮಾಡಲು ಲಭ್ಯವಿಲ್ಲ ಎಂದು ಬಲ್ಲ ಮೂಲಗಳು ತಿಳಿಸಿವೆ.ಇದೇ ವೇಳೆ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಚಿವ ವಿ.ಸೋಮಣ್ಣ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಸಮಾನ ಮನಸ್ಕ ಮುಖಂಡರು ಡಿ.7ರಿಂದ 9ರ ನಡುವೆ ಯಾವಾಗ ಬೇಕಾದರೂ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ.
6
+ ಇದೇ ವೇಳೆ, ವೀರಶೈವ-ಲಿಂಗಾಯತ ಮುಖಂಡ ಸೋಮಣ್ಣ, ಅದೇ ಸಮುದಾಯದ ವಿಜಯೇಂದ್ರ ಅವರನ್ನು ದೂರವಿಟ್ಟು ಗುರುಭವನ ಉದ್ಘಾಟನೆ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದಲ್ಲಿ ರ್ಯಾಲಿ ನಡೆಸುತ್ತಿದ್ದಾರೆ.ಹೈಕಮಾಂಡ್ ನಾಯಕರು ಭಿನ್ನಮತೀಯರನ್ನು ಭೇಟಿಯಾದ ನಂತರವೇ ವಿಜಯೇಂದ್ರ ಮತ್ತು ಅಶೋಕ ಅವರನ್ನು ಭೇಟಿ ಮಾಡುತ್ತಾರೆಯೇ ಎಂದು ನೋಡಬೇಕು. ಹೀಗಾದರೆ, ಇಬ್ಬರೂ ಡಿ. 9 ರ ನಂತರವಷ್ಟೇ ದೆಹಲಿಗೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
eesanje/url_46_299_12.txt ADDED
@@ -0,0 +1,7 @@
 
 
 
 
 
 
 
 
1
+ ಬಾಂಬ್ ಬೆದರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತೇವೆ : ಡಿಸಿಎಂ
2
+ ಬೆಂಗಳೂರು,ಡಿ.1- ನಗರದ ವಿವಿಧ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಹಾಕಿರುವುದನ್ನು ನಿರ್ಲಕ್ಷಿಸದೆ ಗಂಭೀರವಾಗಿ ಪರಿಗಣಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಟತ್ತು ಕಡೆ ಹುಸಿ ಬಾಂಬ್ ಬೆದರಿಕೆ ಹಾಕಿ, ಒಂದು ಕಡೆ ಟಾರ್ಗೆಟ್ ಮಾಡುವ ಸಾಧ್ಯತೆ ಇರುವುದರಿಂದ ಇಂಥ ಬೆದರಿಕೆಯನ್ನು ನಿರ್ಲಕ್ಷಿಸಲಾಗುವುದಿಲ್ಲ ಎಂದರು.
3
+ ನಾನು ಮನೆಯಲ್ಲಿ ಬೆಳಗ್ಗೆ ವ್ಯಾಯಾಮ ಮಾಡುತ್ತಿದ್ದಾಗ ಸುದ್ದಿ ತಿಳಿದು ಗಾಬರಿಯಾದೆ. ತಕ್ಷಣ ಪರಿಚಯಸ್ಥರು ಮತ್ತು ಇತರೆ ಶಾಲೆಗಳಿಗೆ ಬೆದರಿಕೆ ಬಂದಿರುವ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದಿದ್ದೇನೆ. ಇಮೇಲ್ ಮೂಲಕ ಮಾಹಿತಿ ಬಂದಿರುವುದು ಗೊತ್ತಾಗಿದೆ ಎಂದು ಹೇಳಿದರು.
4
+ ಇದು ಮೇಲ್ನೋಟಕ್ಕೆ ಹುಸಿ ಬೆದರಿಕೆಯಾಗಿದ್ದರೂ ನಾವು ನಿರ್ಲಕ್ಷ್ಯ ಮಾಡಲು ಆಗುವುದಿಲ್ಲ. ಒಮ್ಮೆ ಗಂಭೀರ ಪ್ರಯತ್ನವನ್ನು ಮಾಡುತ್ತಾರೆ. ಪೆÇಲೀಸರು ಎಲ್ಲಾ ಪರಿಶೀಲನೆ ನಡೆಸಿದ್ದು, ಬೆದರಿಕೆ ಹಾಕಿದವರನ್ನು ಪತ್ತೆಹಚ್ಚುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
5
+ ಬಾಂಬ್ ಬೆದರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಪರಮೇಶ್ವರ್
6
+ ತಕ್ಷಣ ಎಲ್ಲಾ ಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಪರಿಶೀಲನೆ ನಡೆಸುತ್ತಿದ್ದು, ಈವರೆಗೂ ಯಾವುದೇ ರೀತಿಯ ಸ್ಪೋಟಕ ವಸ್ತು ಪತ್ತೆಯಾಗಿಲ್ಲ ಎಂದು ಹೇಳಿದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎಲ್ಲಾ ರೀತಿಯ ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.
7
+ ಸಾರ್ವಜನಿಕರು ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ. ಕೆಲ ಕಿಡಿಕೇಡಿಗಳಿಂದ ಇಂತಹ ಕೃತ್ಯಗಳು ನಡೆಯುತ್ತವೆ. ಈ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದರು. ಬೆಂಗಳೂರು ಹಬ್ಬದ ವೇಳೆ ಬೆದರಿಕೆ ಹಾಕಲಾಗಿದ್ದು, ಹಬ್ಬ ಮಾಡುವವರು ಮಾಡಬೇಕು, ಆದರೂ ಈ ವಿಚಾರವನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ಮುನ್ನಚ್ಚರಿಕೆ ವಹಿಸಬೇಕು ಎಂದು ಹೇಳಿದರು.
eesanje/url_46_299_2.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ : ತೀವ್ರಗೊಂಡ ತನಿಖೆ
2
+ ಬೆಂಗಳೂರು,ಡಿ.2- ನಗರ ಹಾಗೂ ಹೊರವಲಯದ 70ಕ್ಕೂ ಹೆಚ್ಚು ಪ್ರತಿಷ್ಠಿತ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಕಳುಹಿಸಿರುವ ದುಷ್ಕರ್ಮಿ ಬಂಧನಕ್ಕಾಗಿ ಸಿಸಿಬಿ ಸೈಬರ್ ಕ್ರೈಂ ಅಧಿಕಾರಿ ಮತ್ತು ಸಿಬ್ಬಂದಿ ಶೋಧ ನಡೆಸುತ್ತಿದ್ದಾರೆ.
3
+ ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸತೀಶ್‍ಕುಮಾರ್ ಅವರ ನೇತೃತ್ವದಲ್ಲಿ ಸಿಸಿಬಿ ಪೊಲೀಸರ ತಂಡ ಹಲವು ಆಯಾಮಗಳಲ್ಲಿ ತನಿಖೆ ಕೈಗೊಂಡಿದೆ. ಈ ಹಿಂದೆ ಬಂದಿದ್ದ ಹುಸಿ ಬಾಂಬ್ ಇ-ಮೇಲ್‍ಗಳನ್ನು ಆಧರಿಸಿ ಈ ತಂಡ ತನಿಖೆ ಕೈಗೊಂಡಿದ್ದು, ಪದೇ ಪದೇ ಈ ರೀತಿ ನಡೆಯುತ್ತಿರುವ ಕೃತ್ಯದ ಹಿಂದಿರುವ ದುಷ್ಕರ್ಮಿಗಳಾರು?; ಇದರ ಹಿಂದಿನ ಅಸಲಿ ಕಾರಣವೇನು? ಪ್ರತಿಷ್ಠಿತ ಖಾಸಗಿ ಶಾಲೆಗಳನ್ನೇ ಟಾರ್ಗೆಟ್ ಮಾಡಿ ಇಮೇಲ್ ಕಳುಹಿಸುತ್ತಿರುವ ಇದರ ಉದ್ದೇಶವಾದರೂ ಏನು? ಈ ಕೃತ್ಯಕ್ಕೆ ಇ-ಮೇಲ್ ಬಳಸುತ್ತಿರುವ ದುಷ್ಕರ್ಮಿ ಯಾರೆಂಬ ಬಗ್ಗೆ ವಿವಿಧ ದೃಷ್ಟಿಕೋನಗಳಲ್ಲಿ ತನಿಖೆ ನಡೆಸಲಾಗುತ್ತಿದೆ.
4
+ ದುಷ್ಕರ್ಮಿಯು ವರ್ಚುಯಲ್ ಪ್ರೈವೇಟ್ ನೆಟ್‍ವರ್ಕ್ ಬಳಸಿ ಶಾಲೆಗಳಿಗೆ ಇಮೇಲ್ ಸಂದೇಶಗಳನ್ನು ಕಳುಹಿಸಿದ್ದಾನೆ. ಹೀಗಾಗಿ ಪೊಲೀಸರು ದುಷ್ಕರ್ಮಿ ಬಳಸಿರುವ ಕಂಪ್ಯೂಟರ್, ಸೈಬರ್ ಕೆಫೆ ಇಲ್ಲವೇ ಲ್ಯಾಪ್‍ಟಾಪ್ ಬಗ್ಗೆ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.
5
+ ಪಿಎಸ್‍ಐ ಪರೀಕ್ಷೆ ಮುಂದೂಡಿಕೆಗೆ ದೂರವಾಣಿ ಕರೆ ಅಭಿಯಾನ
6
+ ಪೊಲೀಸ್ ಮೂಲಗಳ ಪ್ರಕಾರ ದುಷ್ಕರ್ಮಿಯು ಖಾಸಗಿ ಕಂಪನಿಯ ವರ್ಚುಯಲ್ ಪ್ರೈವೇಟ್ ನೆಟ್‍ವರ್ಕ್ ಬಳಸಿ ಇಮೇಲ್ ಮಾಡಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಕಂಪನಿಯ ಯಾವ ಸರ್ವರ್ ಬಳಸಲಾಗಿದೆ, ಬಳಸಿದ ಐಡಿ, ಐಪಿ ಯಾವುದು ಎಂಬುದರ ಬಗ್ಗೆಯೂ ಮಾಹಿತಿ ನೀಡುವಂತೆ ವಿದೇಶದ ಸಿರ್ಟಸ್ ಎಂಬ ಕಂಪನಿಗೆ ಪೊಲೀಸ್ ಅಧಿಕಾರಿಗಳು ಪತ್ರ ಬರೆದಿದ್ದಾರೆ.
7
+ ನಿನ್ನೆ ಬೆಳಗ್ಗೆ ಶಾಲೆಗೆ ಬಂದ ಆಡಳಿತ ಮಂಡಳಿ ಸಿಬ್ಬಂದಿಗಳು ಇಮೇಲ್ ಪರಿಶೀಲಿಸಿದಾಗ ಅದರಲ್ಲಿ ನಿಮ್ಮ ಶಾಲೆಗೆ ಬಾಂಬ್ ಇಡಲಾಗಿದೆ ಎಂಬ ಸಂದೇಶ ನೋಡಿ ಆತಂಕಗೊಂಡು ಪೊಲೀಸರಿಗೆ ವಿಷಯ ತಿಳಿಸುತ್ತಿದ್ದಂತೆ ಇದೇ ರೀತಿ 70ಕ್ಕೂ ಹೆಚ್ಚು ಪ್ರತಿಷ್ಠಿತ ಖಾಸಗಿ ಶಾಲೆಗಳಿಗೆ ಸಂದೇಶ ಬಂದಿರುವುದು ಗಮನಿಸಿ ಪೋಷಕರು ಆತಂಕಗೊಂಡಿದ್ದರು.
8
+ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದಂತೆ ಶಾಲೆಗಳ ಬಳಿ ಪೋಷಕರು ದೌಡಾಯಿಸಿ ತಮ್ಮ ಮಕ್ಕಳನ್ನು ಸುರಕ್ಷಿತವಾಗಿ ಮನೆಗೆ ಕರೆದುಕೊಂಡು ಹೋದ ದೃಶ್ಯ ಕಂಡುಬಂತು. ಬಾಂಬ್ ಇಡಲಾಗಿದೆ ಎಂಬ ಮಾಹಿತಿ ಹಿನ್ನಲೆಯಲ್ಲಿ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ, ಸ್ಥಳೀಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಶಾಲೆಯ ಕೊಠಡಿಗಳ ಒಳಗೆ ಹಾಗೂ ಶೌಚಾಲಯ ಸೇರಿದಂತೆ ಕಾಂಪೌಂಡ್ ಸುತ್ತ ತಪಾಸಣೆ ನಡೆಸಿದರಾದರೂ ಯಾವುದೇ ಬಾಂಬ್ ಪತ್ತೆಯಾಗಿಲ್ಲ.
9
+ ಪಿಎಸ್‍ಐ ಪರೀಕ್ಷೆ ಮುಂದೂಡಿಕೆಗೆ ದೂರವಾಣಿ ಕರೆ ಅಭ��ಯಾನ
10
+ ಇದು ಹುಸಿ ಬಾಂಬ್ ಬೆದರಿಕೆ ಸಂದೇಶ ಎಂಬುದು ತಿಳಿದು ಪೋಷಕರು ನಿಟ್ಟುಸಿರು ಬಿಟ್ಟರು. ಎಂದಿನಂತೆ ಇಂದು ಎಲ್ಲಾ ಶಾಲೆಗಳಲ್ಲಿ ತರಗತಿಗಳು ನಡೆದವು.
eesanje/url_46_299_3.txt ADDED
@@ -0,0 +1,8 @@
 
 
 
 
 
 
 
 
 
1
+ ಭ್ರೂಣ ಹತ್ಯೆ ತಡೆಗೆ ಕಠಿಣ ಕಾನೂನು ಜಾರಿ : ಗುಂಡೂರಾವ್
2
+ ಬೆಂಗಳೂರು, ಡಿ. 2- ಭ್ರೂಣ ಹತ್ಯೆ ತಡೆಗೆ ಕಾನೂನನ್ನು ಮತ್ತಷ್ಟು ಬಿಗಿಗೊಳಿಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಡ್ಯ ಹಾಗೂ ಮಂಗಳೂರಿನಲ್ಲಿ ಪ್ರತ್ಯೇಕವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರೂಣಹತ್ಯೆ ಅತ್ಯಂತ ಹೇಯ ಮತ್ತು ಖಂಡನೀಯ ಕೃತ್ಯ. ಇದು ಸಮಾಜದ ಮನಸ್ಥಿತಿ, ಸಾಮಾಜಿಕ ಪಿಡುಗು ಕೂಡ ಆಗಿದೆ. ಈಗಾಗಲೇ ಇರುವ ಕಾನೂನುಗಳನ್ನು ಮತ್ತಷ್ಟು ಬಿಗಿಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಕಾನೂನು ಬದಲಾವಣೆಗಳ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಿದರು.
3
+ ಇಂತಹ ಕೃತ್ಯಗಳನ್ನು ತಡೆಯಲು ಪೊಲೀಸರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯ ನಿರ್ವಹಣೆ ಮಾಡಬೇಕಿದೆ. ಗುಪ್ತಚರ ಮಾಹಿತಿಯನ್ನು ಕಲೆ ಹಾಕಬೇಕು. ಅದರ ಆಧಾರದ ಮೇಲೆ ಪಿಡುಗನ್ನು ತಡೆಯಬೇಕಿದೆ ಎಂದು ಹೇಳಿದರು.
4
+ ವೈದ್ಯರಾಗಿದ್ದ ಸತೀಶ್ ಆತ್ಮಹತ್ಯೆ ಕುರಿತಂತೆ ತಾವು ಪ್ರತಿಕ್ರಿಯಿಸುವುದಿಲ್ಲ. ಅವರು ಪಿರಿಯಾಪಟ್ಟಣದಲ್ಲಿ ಆಯುರ್ವೇದ ವೈದ್ಯರಾಗಿದ್ದರು. ಮಂಡ್ಯದಲ್ಲಿ ಆಲೋಪತಿ ಕ್ಲಿನಿಕ್ ನಡೆಸುತ್ತಿದ್ದರು. ಭ್ರೂಣಹತ್ಯೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸುತ್ತಿದ್ದರು ಎಂದು ಸಾರ್ವಜನಿಕರೇ ಹೇಳಿಕೆ ನೀಡಿದ್ದಾರೆ. ಇದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು.
5
+ ರಾಜ್ಯಶಿಕ್ಷಣ ನೀತಿ ನಮ್ಮ ಆದ್ಯತೆ : ಸಚಿವ ಮಧು ಬಂಗಾರಪ್ಪ
6
+ ಡಯಾಲಿಸಿಸ್ ಕೇಂದ್ರಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ 20 ತಿಂಗಳಿನಿಂದಲೂ ವೇತನ ಕೊಟ್ಟಿಲ್ಲ ಎಂದು ಹೇಳಲಾಗುತ್ತಿದೆ. ಗುತ್ತಿಗೆ ಸಂಸ್ಥೆಗಳೊಂದಿಗೆ ಚರ್ಚೆ ನಡೆಸಿ ವೇತನ ಪಾವತಿಸಲು ಒತ್ತಡ ಹೇರಲಾಗುತ್ತಿದೆ. ಇಎಸ್‍ಐ, ಪಿಎಫ್ ಸೌಲಭ್ಯದ ಹಣವನ್ನು ಸರ್ಕಾರದಿಂದಲೇ ಪಾವತಿಸಬೇಕಾದರೆ ಗುತ್ತಿಗೆ ಸಂಸ್ಥೆಗಳನ್ನು ಕಪ್ಪುಪಟ್ಟಿಗೆ ಸೇರಿಸಬೇಕಿದೆ. ಅದಕ್ಕೆ ಈಗಾಗಲೇ ಪ್ರಕ್ರಿಯೆ ಆರಂಭಿಸಲಾಗಿದೆ ಎಂದರು.
7
+ ಡಯಾಲಿಸಿಸ್ ತೊಂದರೆಗಳ ನಿರ್ವಹಣೆಗೆ ಹೊಸದಾಗಿ ಟೆಂಡರ್ ಕರೆಯಲಾಗಿದೆ. ಪಿಪಿಪಿ ಮಾದರಿಯಲ್ಲಿ ಈ ಸೇವೆಯನ್ನು ಜಾರಿಗೆ ತರಲಾಗಿದೆ. ಬಹಳಷ್ಟು ಕಡೆ ಡಯಾಲಿಸಿಸ್ ಯಂತ್ರಗಳು ಕೆಟ್ಟು ಹೋಗಿವೆ. ಅದನ್ನು ಬದಲಾವಣೆ ಮಾಡಲಾಗುತ್ತಿಲ್ಲ. ಸರ್ಕಾರ ಎಲ್ಲಾ ರೀತಿಯ ಸಹಕಾರ ಕೊಡುತ್ತಿದೆ. ಯಂತ್ರಗಳ ಬದಲಾವಣೆ ಹಾಗೂ ಸಿಬ್ಬಂದಿಗಳ ವರ್ಗಾವಣೆ ಗುತ್ತಿಗೆ ಪಡೆದಿರುವ ಸಂಸ್ಥೆಗಳ ಹೊಣೆಗಾರಿಕೆ. ಅವರು ಅದನ್ನು ಮಾಡದೇ ಇದ್ದರೆ ಏನು ಮಾಡಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ.
8
+ ಹೊಸದಾಗಿ ಟೆಂಡರ್ ಕರೆಯಲಾಗಿದ್ದು, ಡಯಾಲಿಸಿಸ್ ಯಂತ್ರಗಳನ್ನು ಬದಲಾವಣೆ ಮಾಡಲಾಗುವುದು. ಒಂದು ವೇಳೆ ಆಗಲೂ ಸರಿ ಹೋಗದೇ ಇದ್ದರೆ ಏನು ಮಾಡಬೇಕು ಎಂಬುದನ್ನು ಪರಿಶೀಲನೆ ನಡೆಸಲಾಗುವುದು. ಸಿಬ್ಬಂದಿಗಳ ಹಿತರಕ್ಷಣೆಗೆ ಸರ್ಕಾರ ಆದ್ಯತೆ ��ೀಡುತ್ತಿದೆ, ಬೇಡಿಕೆಗಳನ್ನು ಈಡೇರಿಸಲು ಚರ್ಚೆ ನಡೆಯುತ್ತಿದೆ. ಒಂದು ವೇಳೆ ಸಿಬ್ಬಂದಿಗಳು ಮುಷ್ಕರ ನಿಲ್ಲಿಸಿ ಕರ್ತವ್ಯಕ್ಕೆ ಮರಳದಿದ್ದರೆ ಜಿಲ್ಲಾ ಆರೋಗ್ಯಧಿಕಾರಿಗಳೇ ಲಭ್ಯವಿರುವ ಸಿಬ್ಬಂದಿಗಳನ್ನು ಬಳಸಿಕೊಂಡು ಡಯಾಲಿಸಿಸ್ ಕೇಂದ್ರಗಳನ್ನು ನಿರ್ವಹಣೆ ಮಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
eesanje/url_46_299_4.txt ADDED
@@ -0,0 +1,9 @@
 
 
 
 
 
 
 
 
 
 
1
+ ಹೆಣ್ಣು ಭ್ರೂಣ ಪತ್ತೆ-ಹತ್ಯೆ ಪ್ರಕರಣದಲ್ಲಿ ನರ್ಸ್ ಬಂಧನ
2
+ ಬೆಂಗಳೂರು,ಡಿ.2- ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಬೈಯಪ್ಪನ ಹಳ್ಳಿ ಠಾಣೆ ಪೊಲೀಸರು ನರ್ಸ್ ಮಂಜುಳ ಎಂಬಾಕೆಯನ್ನು ಬಂಧಿಸಿದ್ದಾರೆ. ಒಟ್ಟಾರೆ ಈ ಪ್ರಕರಣದಲ್ಲಿ ಇದುವರೆಗೂ ಬಂಧಿತರಾಗಿರುವ ಸಂಖ್ಯೆ 10ಕ್ಕೆ ಏರಿದೆ.
3
+ ಚಾಮರಾಜನಗರದ ನಿವಾಸಿ, ನರ್ಸ್ ಮಂಜುಳಾ ಈ ಹಿಂದೆ ಡಾ.ಚಂದನ್ ಬಲ್ಲಾಳ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಳು. ಪ್ರಕರಣ ಬೆಳಕಿಗೆ ಬಂದ ಬಳಿಕ ಅಲ್ಲಿ ಕೆಲಸವನ್ನು ಬಿಟ್ಟು ಮೈಸೂರಿನ ಮತ್ತೊಂದು ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಸೇರಿಕೊಂಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಇದೀಗ ಮಂಜುಳಾಳನ್ನು ಬಲೆಗೆ ಬೀಳಿಸಿಕೊಂಡು ವಿಚಾರಣೆಗೊಳಪಡಿಸಿದ್ದಾರೆ.
4
+ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ : ತನಿಖೆ ಬಗ್ಗೆ ಗೃಹಸಚಿವ ಪರಮೇಶ್ವರ್ ಹೇಳಿದ್ದೇನು..?
5
+ ಮಾತ್ರೆ ಕೊಟ್ಟು ಭ್ರೂಣ ಹತ್ಯೆ:ಭ್ರೂಣವನ್ನು ಹೇಗೆ ಹತ್ಯೆ ಮಾಡುತ್ತಿದ್ದರು ಎಂಬ ಬಗ್ಗೆ ಆರೋಪಿಗಳು ಮಾಹಿತಿ ನೀಡಿದ್ದನ್ನು ತಿಳಿದು ಪೊಲೀಸರೇ ಒಂದು ಕ್ಷಣ ಶಾಕ್ ಆಗಿದ್ದಾರೆ. ಆರು ತಿಂಗಳ ಗರ್ಭಿಣಿಗೆ ಮಾತ್ರೆಯನ್ನು ಕೊಟ್ಟು ಬಳಿಕ ಡೆಲಿವರಿ ಮಾದರಿಯಲ್ಲಿ ಭ್ರೂಣವನ್ನು ಆರೋಪಿಗಳು ಹೊರತೆಗೆಯುತ್ತಿದ್ದರು ಎಂಬುದು ಗೊತ್ತಾಗಿದೆ.
6
+ ಸಾಮಾನ್ಯವಾಗಿ 14ರಿಂದ 18 ವಾರಗಳ ಭ್ರೂಣದಲ್ಲಿ ಲಿಂಗ ಪತ್ತೆಯಾಗುತ್ತದೆ. ಸ್ಕ್ಯಾನಿಂಗ್ ವೇಳೆ ಲಿಂಗ ಪತ್ತೆಯಾದ ನಂತರ ಗರ್ಭಿಣಿಗೆ ರಕ್ತ ಪರೀಕ್ಷೆ ಮಾಡಿ ನಂತರ ಭ್ರೂಣವನ್ನು ಹೊರತೆಗೆದು ಹತ್ಯೆ ಮಾಡಿರುವುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ. ಗರ್ಭಿಣಿಗೆ ರಕ್ತ ಪರೀಕ್ಷೆ ಮಾಡಿದ ನಂತರ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಮಾಡಲು ಆರೋಪಿಗಳಾದ ಮಂಜುಳಾ ಹಾಗೂ ಚಂದನ್ ಕೆಲಸ ಆರಂಭಿಸುತ್ತಿದ್ದರು.
7
+ ಗರ್ಭಿಣಿ ಮಾತ್ರೆ ತೆಗೆದುಕೊಂಡ ಕೆಲ ಸಮಯದ ನಂತರ ಆಕೆಗೆ ರಕ್ತಸ್ರಾವವಾಗಿ ಭ್ರೂಣ ಹೊರಬರುತ್ತಿತ್ತು. ಆ ವೇಳೆ ಈ ಇಬ್ಬರು ಆರೋಪಿಗಳು ಸೇರಿಕೊಂಡು ಡೆಲಿವರಿ ಮಾಡಿಸಿದ ರೀತಿಯಲ್ಲಿ ಭ್ರೂಣ ಹೊರತೆಗೆಯುತ್ತಿದ್ದರು ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ. ಭ್ರೂಣ ಹತ್ಯೆ ಸಂಬಂಧ ಅಕ್ಟೋಬರ್‍ನಲ್ಲಿ ಬೈಯಪ್ಪನಹಳ್ಳಿ ಠಾಣೆ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪ್ರಕರಣ ದಾಖಲಿಸಿದ್ದರು.
8
+ ತನಿಖೆಯ ವೇಳೆ ಇದರ ಹಿಂದೆ ಬೃಹತ್ ಜಾಲವೇ ಇರುವುದು ಪತ್ತೆಯಾಗಿತ್ತು. ಅದರಂತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಚುರುಕುಗೊಳಿಸಿ ಒಬ್ಬೊಬ್ಬರಂತೆ ಇದುವರೆಗೂ ಹತ್ತು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಎರಡು ವರ್ಷಗಳಲ್ಲಿ 900ಕ್ಕೂ ಹೆಚ್ಚು ಭ್ರೂಣ ಹತ್ಯೆ ಮಾಡಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ.
9
+ ಇದೀಗ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಹೆಚ್ಚಿನ ತನಿಖೆಗಾಗಿ ಸಿಐಡಿಗೆ ವಹಿಸಿದೆ. ಸದ್ಯದಲ್ಲೇ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಈ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಿದ್ದಾರೆ.
eesanje/url_46_299_5.txt ADDED
@@ -0,0 +1,5 @@
 
 
 
 
 
 
1
+ ಹೈದ್ರಾಬಾದ್‍ನತ್ತ ಡಿಸಿಎಂ ಡಿ.ಕೆ.ಶಿವಕುಮಾರ್
2
+ ಬೆಂಗಳೂರು, ಡಿ. 2- ಪಕ್ಷ ವಹಿಸುವ ಜವಾಬ್ದಾರಿಯನ್ನು ನಿಭಾಯಿಸುವುದು ನನ್ನ ಕರ್ತವ್ಯ. ಈ ನಿಟ್ಟಿನಲ್ಲಿ ಹೈದ್ರಾಬಾದ್‍ಗೆ ತೆರಳುವುದಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ತೆಲಂಗಾಣ ನಮ್ಮ ನೆರೆಯ ರಾಜ್ಯ. ಅಲ್ಲಿನ ಚುನಾವಣೆಯ ಪ್ರಕ್ರಿಯೆಗಳಲ್ಲಿ ನಾವು ತೊಡಗಿಸಿಕೊಂಡಿದ್ದೇವೆ. ಗೆಲ್ಲುವ ವಿಶ್ವಾಸವಿದೆ. ನಾಳೆ ಫಲಿತಾಂಶ ಬಂದ ಬಳಿಕ ಮಾತನಾಡುತ್ತೇನೆ ಎಂದರು. ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೆಳೆಯಲು ಬೇರೆ ಬೇರೆ ಪಕ್ಷದವರು ಪ್ರಯತ್ನ ನಡೆಸಿದ್ದಾರೆ. ಸಂಪರ್ಕಕ್ಕೆ ಒಳಗಾದ ಅಭ್ಯರ್ಥಿಗಳು ನಮಗೆ ಮಾಹಿತಿ ನೀಡಿದ್ದಾರೆ. ಯಾರು ಕೂಡ ಆಮಿಷಗಳಿಗೆ ಒಳಗಾಗುವುದಿಲ್ಲ. ಪಕ್ಷಾಂತರ ಮಾಡುವುದಿಲ್ಲ. ನಮಗೆ ಯಾವುದೇ ಆತಂಕವಿಲ್ಲ ಎಂದು ಸ್ಪಷ್ಟಪಡಿಸಿದರು.
3
+ ತೆಲಂಗಾಣದ ಶಾಸಕರನ್ನು ಸುರಕ್ಷಿತವಾಗಿಡಲು ರಾಜ್ಯದಲ್ಲಿ ರೆಸಾರ್ಟ್‍ಗಳನ್ನು ಕಾಯ್ದಿರಿಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಲು ಡಿ.ಕೆ.ಶಿವಕುಮಾರ್ ನಿರಾಕರಿಸಿದರು.
4
+ ಮೋದಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಇಟಲಿ ಪ್ರಧಾನಿ
5
+ ಇಂದು ತಾವು ಸ್ವಕ್ಷೇತ್ರ ಕನಕಪುರಕ್ಕೆ ಭೇಟಿ ನೀಡುತ್ತಿದ್ದು, ಅಲ್ಲಿ ಜನಸಂಪರ್ಕ ಸಭೆ ನಡೆಸುತ್ತಿದ್ದೇನೆ. 10 ದಿನ ಬೆಳಗಾವಿಯಲ್ಲಿ ವಿಧಾನಮಂಡಲ ಅವೇಶನವಿದೆ. ಅದರಲ್ಲಿ ಭಾಗವಹಿಸುತ್ತಿದ್ದೇನೆ. ಅಷ್ಟೂ ದಿನ ಕ್ಷೇತ್ರದ ಜನರ ಜೊತೆ ಮಾತನಾಡಲಾಗುವುದಿಲ್ಲ ಎಂಬ ಕಾರಣಕ್ಕೆ ಇಂದು ಜನಸಂಪರ್ಕ ಸಭೆ ನಡೆಸುವುದಾಗಿ ಹೇಳಿದರು.
eesanje/url_46_299_6.txt ADDED
@@ -0,0 +1,7 @@
 
 
 
 
 
 
 
 
1
+ ಸಾಮಾಜಿಕ ನ್ಯಾಯಪಾಲನೆಯಿಂದ ಒಂದಿಂಚೂ ಹಿಂದೆ ಸರಿಯುವುದಿಲ್ಲ : ಸಿದ್ದರಾಮಯ್ಯ
2
+ ಬೆಂಗಳೂರು, ಡಿ. 2- ಯಾರು, ಏನೇ ಹೇಳಿದರೂ ಸಾಮಾಜಿಕ ನ್ಯಾಯಪಾಲನೆಯಿಂದ ತಾವು ಒಂದಿಂಚೂ ಹಿಂದೆ ಸರಿಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿಂದು ಅಖಿಲ ಕರ್ನಾಟಕ ಗಾಣಿಗರ ಸಂಘದ ಸುವರ್ಣ ಮಹೋತ್ಸವ, ಗಾಣಿಗ ಜನಾಂಗದ ಸಮಾವೇಶ, ಗಾಣಿಗರ ಭವನದ ನೂತನ ಕಟ್ಟಡ ಬ್ಲಾಕ್ 1 ರ ಉದ್ಘಾಟನೆ, ಬ್ಲಾಕ್ 2 ರ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದರು.
3
+ ಶತಶತಮಾನಗಳಿಂದ ಅಕ್ಷರ ಸಂಸ್ಕøತಿ, ಸಾಮಾಜಿಕ ನ್ಯಾಯ ಸೇರಿದಂತೆ ಅವಕಾಶ ವಂಚಿತ ಸಮುದಾಯಗಳ ಜೊತೆ ನಾವಿದ್ದೇವೆ ಎಂದು ಭರವಸೆ ನೀಡಿದರು. ಗಾಣಿಗ ಸಮುದಾಯ ಎಣ್ಣೆ ಉತ್ಪಾದನೆಯನ್ನು ಕುಲಕಸುಬನ್ನಾಗಿ ಪಾಲಿಸುತ್ತಿದ್ದರು. ಕೈಗಾರೀಕರಣದ ಬಳಿಕ ವೃತ್ತಿ ತೊರೆಯಬೇಕಾದ ಪರಿಸ್ಥಿತಿ ಬಂದು ಬಹಳಷ್ಟು ಮಂದಿ ಇದರಿಂದ ನಿರುದ್ಯೋಗಿಗಳಾಗಿದ್ದಾರೆ. ಕೆಲವರಿಗಷ್ಟೇ ಜಮೀನುಗಳಿವೆ. ಉಳಿದವರಿಗೆ ಜೀವನಾದಾಯ ಮೂಲಗಳಿಲ್ಲ ಎಂಬುದು ತಮ್ಮ ಗಮನದಲ್ಲಿದೆ ಎಂದರು.
4
+ ವಿಶ್ವಕರ್ಮ ಯೋಜನೆಯಡಿ ಗಾಣಿಗ ವೃತ್ತಿಯನ್ನು ಕೈಬಿಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಪತ್ರ ಬರೆಯುವಂತೆ ಸಮುದಾಯದ ಮುಖಂಡರು ಮನವಿ ಮಾಡಿದ್ದಾರೆ. ಇದು ದುರ್ದೈವ. ನಿಮ್ಮ ಸಮುದಾಯಕ್ಕೆ ಸೇರಿದವರೇ ಪ್ರಧಾನಮಂತ್ರಿಯಾಗಿದ್ದಾರೆ. ಅವರಿಗೆ ಸಮಸ್ಯೆ ಗೊತ್ತಿದೆಯೋ, ಗೊತ್ತಿಲ್ಲವೋ ಮಾಹಿತಿ ಇಲ್ಲ. ನಾನು ಕೂಡಲೇ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಹೇಳಿದರು.
5
+ ರಾಜ್ಯದಲ್ಲಿ ನಡೆದಿರುವ ಆರ್ಥಿಕ, ಸಾಮಾಜಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಲು ಸರ್ಕಾರ ಸಿದ್ಧವಿದೆ. ಈ ಹಿಂದೆ ತಾವು ಮುಖ್ಯಮಂತ್ರಿಯಾಗಿದ್ದಾಗಲೇ ಆಯೋಗ ರಚನೆ ಮಾಡಲಾಗಿತ್ತು. ಸಮೀಕ್ಷೆ ಅವೈಜ್ಞಾನಿಕ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ವರದಿಯನ್ನು ಈವರೆಗೂ ಯಾರೂ ನೋಡಿಲ್ಲ. ಇದಕ್ಕೆ ಮುಂಚಿತವಾಗಿಯೇ ಅವೈಜ್ಞಾನಿಕ ಎಂದು ಹೇಳುವುದು ಸರಿಯಲ್ಲ. ವರದಿ ಸ್ವೀಕರಿಸುವ ಸಲುವಾಗಿಯೇ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರ ಅಕಾರ ಅವಯನ್ನು 2 ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ. ವರದಿ ಬಂದ ಬಳಿಕ ಅದನ್ನು ಪರಿಶೀಲಿಸಲಾಗುವುದು ಎಂದರು.
6
+ ನಾಳೆ 4 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ, ಹೆಚ್ಚಿದ ಕಾತುರ
7
+ ಗಾಣಿಗ ಸಮುದಾಯಕ್ಕೆ 50 ಲಕ್ಷ ರೂ. ಆರ್ಥಿಕ ನೆರವು ನೀಡಲಾಗಿತ್ತು. ಇನ್ನೂ ಹೆಚ್ಚಿನ ನೆರವು ನೀಡಲು ಕ್ರಮ ಕೈಗೊಳ್ಳಲಾಗುವುದು. ಸಮುದಾಯಕ್ಕೆ ನ್ಯಾಯ ಕೊಡಿಸುವಲ್ಲಿ ತಾವು ಸದಾ ನಿಮ್ಮೊಂದಿಗಿರುತ್ತೇನೆ. ಅವಕಾಶ ವಂಚಿತ, ಹಿಂದುಳಿದ, ದಲಿತ, ಅಲ್ಪಸಂಖ್ಯಾತ ಸಮುದಾಯದವರಿಗೆ ನ್ಯಾಯ ದೊರಕಿಸಲು ಕ್ರಮ ಕೈಗೊಳ್ಳಲಾಗುವುದು. ಸಮುದಾಯದಲ್ಲಿ ಉತ್ತಮ ಸೇವೆ ಸಲ್ಲಿಸಿದವರನ್ನು ಗುರ್ತಿಸಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ ಎಂದು ಹೇಳಿದರು. ವಿಧಾನಪರಿಷತ್‍ನ ಮಾಜಿ ಸಭಾಪತಿ ವಿ.ಆರ್.ಸುದರ್ಶನ��� ಹಾಗೂ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
eesanje/url_46_299_7.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ರಾಜ್ಯಶಿಕ್ಷಣ ನೀತಿ ನಮ್ಮ ಆದ್ಯತೆ : ಸಚಿವ ಮಧು ಬಂಗಾರಪ್ಪ
2
+ ಬೆಂಗಳೂರು, ಡಿ. 2- ರಾಜ್ಯಕ್ಕೆ ಪ್ರತ್ಯೇಕವಾದ ಶಿಕ್ಷಣ ನೀತಿ ರೂಪಿಸುವುದಾಗಿ ಪ್ರಣಾಳಿಕೆಯಲ್ಲಿ ಬರೆದು ಜನರಿಗೆ ಭರವಸೆ ನೀಡಿ ಮತ ಹಾಕಿಸಿಕೊಂಡು ಅಧಿಕಾರದಲ್ಲಿದ್ದೇವೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಬಿಜೆಪಿಯವರು ಹೇಳಿದ್ದಾರೆ ಎಂಬ ಕಾರಣಕ್ಕೆ ಬದಲಾವಣೆ ಮಾಡಲಾಗುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ.
3
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಶಿಕ್ಷಣ ನೀತಿಯ ಬಗ್ಗೆ ಬಿಜೆಪಿಯವರು ವಿಧಾನಮಂಡಲದಲ್ಲಿ ಪ್ರಸ್ತಾಪ ಮಾಡುವುದಾದರೆ ಅದನ್ನು ಸ್ವಾಗತಿಸುತ್ತೇವೆ. ನಾವು ಚುನಾವಣೆಯ ಸಂದರ್ಭದಲ್ಲಿ ಸ್ಪಷ್ಟ ಭರವಸೆಯನ್ನು ನೀಡಿದ್ದೇವೆ. ಜನ ಅದಕ್ಕಾಗಿಯೇ ನಮಗೆ ಮತ ಹಾಕಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಭರವಸೆಗಳನ್ನು ಈಡೇರಿಸುವುದು ನಮ್ಮ ಕರ್ತವ್ಯ ಎಂದು ಪುನರುಚ್ಚರಿಸಿದರು.
4
+ ಇತ್ತೀಚೆಗೆ ಬೆಂಗಳೂರು ಟೆಕ್ ಸಮ್ಮೇಳನದಲ್ಲಿ ಮಾತನಾಡಿದ ಇನೋಸಿಸ್‍ನ ನಾರಾಯಣಮೂರ್ತಿಯವರು, ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಭವಿಷ್ಯದ ಪ್ರಜೆಗಳನ್ನು ರೂಪಿಸುವಲ್ಲಿ ಉತ್ತಮವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅದರ ಬೆನ್ನಲ್ಲೇ ಬಿಜೆಪಿ ಎನ್‍ಇಪಿ ಜಾರಿಯನ್ನು ರಾಜ್ಯದಲ್ಲಿ ಮುಂದುವರೆಸಬೇಕು ಎಂದು ಪಟ್ಟು ಹಿಡಿದಿದೆ. ಇದಕ್ಕೆ ತಿರುಗೇಟು ನೀಡಿದ ಮಧುಬಂಗಾರಪ್ಪ, ಭರವಸೆಗಳನ್ನು ಈಡೇರಿಸದೇ ಇದ್ದರೆ ರಾಜ್ಯದ ಜನರಿಗೆ ಅನ್ಯಾಯ ಮಾಡಿದಂತಾಗುತ್ತದೆ. ಪಂಚಖಾತ್ರಿಗಳ ರೀತಿಯಲ್ಲೇ ರಾಜ್ಯ ಶಿಕ್ಷಣ ನೀತಿ ರೂಪಿಸುವುದು ನಮ್ಮ ಆದ್ಯತೆ ಎಂದರು.
5
+ ಬಾಹ್ಯಾಕಾಶದಲ್ಲಿ ಕಾರ್ಯಚರಣೆ ಆರಂಭಿಸಿದ ಆದಿತ್ಯ-ಎಲ್1
6
+ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಭದ್ರತೆಯ ಲೋಪ ಎಂದು ಬಿಜೆಪಿ ಟೀಕೆ ಮಾಡುತ್ತಿರುವುದು ಅಸಮಂಜಸ. ತಮ್ಮ ಪಕ್ಷದ ಅಧ್ಯಕ್ಷರು ಹಾಗೂ ವಿಧಾನಸಭೆಯ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಆರು ತಿಂಗಳು ತೆಗೆದುಕೊಂಡವರಿಂದ ಇನ್ನೆಂಥಹ ಮಾತುಗಳನ್ನು ನಿರೀಕ್ಷಿಸಲು ಸಾಧ್ಯ ಎಂದು ಲೇವಡಿ ಮಾಡಿದರು.
7
+ ಬಿಜೆಪಿಯವರು ವಿಪಕ್ಷದಲ್ಲಿದ್ದಾರೆ. ಜವಾಬ್ದಾರಿಯುತವಾಗಿ ಮಾತನಾಡಬೇಕು. ರಾಜ್ಯಸರ್ಕಾರ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಬಿಟ್ಟು ಇಂತಹ ಘಟನೆಗಳನ್ನೇ ಮುಂದಿಟ್ಟುಕೊಂಡು ಜನರನ್ನು ಆತಂಕಕ್ಕೀಡು ಮಾಡುವಂತಹ ಹೇಳಿಕೆಗಳನ್ನು ನೀಡಬಾರದು ಎಂದರು.
8
+ ನಿನ್ನೆ ಇಡೀ ದಿನ ಶಿಕ್ಷಣ ಇಲಾಖೆ ಅಕಾರಿಗಳು ಮತ್ತು ಪೊಲೀಸರು ಜೊತೆಯಾಗಿ ಕೆಲಸ ಮಾಡಿದ್ದಾರೆ. ಯಾವನೋ ತಲೆಹರಟೆ ಮಾಡಿದ ಕೆಲಸದಿಂದ ಆತಂಕ ನಿರ್ಮಾಣವಾಗಿತ್ತು. ಪೋಷಕರು, ಶಾಲಾ ಆಡಳಿತ ಮಂಡಳಿ, ಮಕ್ಕಳು ಗೊಂದಲಕ್ಕೆ ಒಳಗಾಗಿದ್ದರು. ಇಂತಹುದನ್ನು ನಿಲ್ಲಿಸುವುದು ಹೇಗೆ ಎಂಬ ಪ್ರಶ್ನೆ ಎಲ್ಲರ ಮುಂದಿದೆ ಎಂದು ಹೇಳಿದರು.
9
+ ಶಾಲೆಗಳಿಗೆ ಬೆದರಿಕೆ ಕರೆ ಬಂದಿರುವುದರಲ್ಲಿ ಸರ್ಕಾರ ವೈಫಲ್ಯವಿಲ್ಲ. ದೇಶದಲ್ಲಿ ನಾನಾ ರೀತಿಯ ಘಟನೆಗಳಾಗುತ್ತವೆ. ಅದಕ್ಕೆಲ್ಲಾ ಬಿಜೆಪಿಯವರೇ ಹೊಣೆ ಎಂದು ಹೇಳಲು ಸಾಧ್ಯವೇ? ಬೆದರಿಕೆಯ ಮಾಹಿತಿ ದೊರೆತ ತಕ್ಷಣವೇ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ತಪಾಸಣೆಗಳಾಗಿವೆ. ಭಾರತದಲ್ಲಷ್ಟೇ ಅಲ್ಲ, ದೇಶ-ವಿದೇಶದಲ್ಲೂ ಈ ರೀತಿಯ ಘಟನೆಗಳಾಗಿವೆ. ಹಾಗೆಂದು ನಿರ್ಲಕ್ಷಿಸಲು ಸಾಧ್ಯವಿಲ್ಲ. ಮಕ್ಕಳ ವಿಷಯ ಬಂದಾಗ ಕಾಳಜಿ ವಹಿಸಬೇಕಾಗುತ್ತದೆ. ಗೃಹಸಚಿವರು ಮತ್ತು ಪೆÇಲೀಸರ ಜೊತೆ ತಾವು ನಿರಂತರವಾಗಿ ಸಂಪರ್ಕದಲ್ಲಿದ್ದು, ಸಹಕಾರ ನೀಡಲಾಗಿದೆ. ಪೊಲೀಸರು ತಮ್ಮ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
10
+ ಬಲವಂತದ ಮತಾಂತರ : 42 ಜನರ ವಿರುದ್ಧ ಎಫ್‍ಐಆರ್, 9 ಮಂದಿ ಬಂಧನ
11
+ ಮಕ್ಕಳಿಗೆ ಬೆದರಿಕೆ ಹಾಕುವುದು ಅಸತ್ಯ ಮತ್ತು ಕ್ಷುದ್ರ ಕೃತ್ಯ. ಇದಕ್ಕೆ ಸಂಬಂಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಶತಸಿದ್ಧ ಎಂದು ಸ್ಪಷ್ಟಪಡಿಸಿದರು. ನಿಗಮ ಮಂಡಳಿ ನೇಮಕಾತಿಯ ಬಗ್ಗೆ ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಗಳು ಮತ್ತು ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ. ಶಿವಮೊಗ್ಗ ಜಿಲ್ಲೆಗೆ ಅವಕಾಶ ಸಿಗಬೇಕೆಂಬುದು ನಮ್ಮ ಅಭಿಲಾಷೆ. ಆದರೆ ಸ್ಥಳಾವಕಾಶ ಎಷ್ಟಿದೆ ಎಂಬುದು ಕೂಡ ಗಮನಾರ್ಹ ಎಂದರು.
eesanje/url_46_299_8.txt ADDED
@@ -0,0 +1,8 @@
 
 
 
 
 
 
 
 
 
1
+ ಪಿಎಸ್‍ಐ ಪರೀಕ್ಷೆ ಮುಂದೂಡಿಕೆಗೆ ದೂರವಾಣಿ ಕರೆ ಅಭಿಯಾನ
2
+ ಬೆಂಗಳೂರು, ಡಿ. 2- ಪಿಎಸ್‍ಐ ಪರೀಕ್ಷೆ ದಿನಾಂಕವನ್ನು ಮುಂದೂಡಬೇಕೆಂದು ಅಭ್ಯರ್ಥಿಗಳು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೆವಾಲ ಅವರೊಂದಿಗೆ ದೂರವಾಣಿ ಕರೆ ಅಭಿಯಾನ ನಡೆಸಿದ್ದಾರೆ.
3
+ ನೂರಾರು ಅಭ್ಯರ್ಥಿಗಳು ರಣದೀಪ್ ಸಿಂಗ್ ಸುರ್ಜೆವಾಲ ಅವರೊಂದಿಗೆ ಮೊಬೈಲ್‍ನಲ್ಲಿ ಮಾತನಾಡಿ, ತಮ್ಮ ನೆರವಿಗೆ ಧಾವಿಸುವಂತೆ ಮನವಿ ಮಾಡಿದ್ದಾರೆ. ಅಭ್ಯರ್ಥಿಗಳ ಮನವಿಗಳನ್ನು ಸಹನೆ ಯಿಂದ ಕೇಳಿದ ಸುರ್ಜೆವಾಲ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ನಿಯೋಗ ತೆರಳುವಂತೆ ಸಲಹೆ ನೀಡಿದ್ದಾರೆ.
4
+ ಕಿಂಗ್ ಚಾಲ್ರ್ಸ್ ಪರಿಸರ ಸಂರಕ್ಷಣೆ ಕಾರ್ಯ ಶ್ಲಾಘನೀಯ; ಮೋದಿ
5
+ ಅಭ್ಯರ್ಥಿಗಳು ತಾವು ಗೃಹಸಚಿವರ ಬಳಿಗೆ ಹೋಗಿ ಮಾತುಕತೆ ನಡೆಸಿದ್ದೇವೆ ಎಂದು ಹೇಳಿದ್ದಾರೆ. ಆದರೆ ಅವರ ಜೊತೆ ಮಾತನಾಡುವುದಕ್ಕಿಂತಲೂ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರ ಜೊತೆ ಸಮಾಲೋಚನೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಈ ಹಿಂದೆ 545 ಪಿಎಸ್‍ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮಗಳಾಗಿವೆ ಎಂಬ ಆರೋಪಗಳಿದ್ದವು. ಈ ಹಿನ್ನೆಲೆಯಲ್ಲಿ ಹಿಂದಿನ ಸರ್ಕಾರ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಹೈಕೋರ್ಟ್ ಸದರಿ ಆದೇಶವನ್ನು ಎತ್ತಿಹಿಡಿದು ಇತ್ತೀಚೆಗೆ ತೀರ್ಪು ನೀಡಿದೆ.
6
+ ಅದರ ಆಧಾರದ ಮೇಲೆ ರಾಜ್ಯಸರ್ಕಾರ ಮರುಪರೀಕ್ಷೆಗೆ ಕ್ರಮ ಕೈಗೊಂಡಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಡಿಸೆಂಬರ್ 23 ರಂದು ಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಇದನ್ನು ವಿರೋಧಿಸುತ್ತಿದ್ದಾರೆ.
7
+ ಒಂದು ತಿಂಗಳ ಕಲಾವಕಾಶ ಸಾಕಾಗುವುದಿಲ್ಲ. ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ಸಮಯ ಬೇಕು. ಹೀಗಾಗಿ ಡಿಸೆಂಬರ್ 23 ರಂದು ನಿಗದಿಯಾಗಿರುವ ಪರೀಕ್ಷೆಯನ್ನು ಮುಂದೂಡಬೇಕು ಎಂಬುದು ಅಭ್ಯರ್ಥಿಗಳ ಬೇಡಿಕೆಯಾಗಿದೆ.
8
+ ರಣದೀಪ್ ಸಿಂಗ್ ಸುರ್ಜೆವಾಲರೊಂದಿಗೆ ದೂರವಾಣಿ ಕರೆ ಅಭಿಯಾನ ನಡೆಸಿರುವ ಅಭ್ಯರ್ಥಿಗಳು ಸಮಸ್ಯೆಗೆ ಪರಿಹಾರ ದೊರಯದೇ ಇದ್ದರೆ ರಾಹುಲ್‍ಗಾಂಯವರೊಂದಿಗೂ ದೂರವಾಣಿ ಕರೆ ಅಭಿಯಾನ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
eesanje/url_46_299_9.txt ADDED
@@ -0,0 +1,9 @@
 
 
 
 
 
 
 
 
 
 
1
+ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ : ತನಿಖೆ ಬಗ್ಗೆ ಗೃಹಸಚಿವ ಪರಮೇಶ್ವರ್ ಹೇಳಿದ್ದೇನು..?
2
+ ಬೆಂಗಳೂರು, ಡಿ. 2- ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕಳುಹಿಸಿದ ಇ-ಮೇಲ್‍ನ ಐಪಿ ಅಡ್ರೆಸ್ ವಿದೇಶಿ ಮೂಲದ್ದಾಗಿರುವ ಅನುಮಾನಗಳಿದ್ದು, ಈ ಬಗ್ಗೆ ಗಂಭೀರ ತನಿಖೆ ನಡೆಸಲಾಗುತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲುಪ್ರತ್ಯೇಕ ಕಾಯ್ದೆ ರೂಪಿಸುವುದಾಗಿ ಹೇಳಿದ್ದಾರೆ. ಶಾಲೆಗಳಿಗೆ ಬೆದರಿಕೆ ಕರೆ ಬಂದಿರುವ ಮೇಲ್ ಐಡಿಯ ಐಪಿ ವಿಳಾಸ ಭಾರತ ದೇಶದಲ್ಲಿಲ್ಲ. ಹೀಗಾಗಿ ಅದರ ಮೂಲ ಮಾಹಿತಿಗಳನ್ನು ನೀಡಲು ಸಂಬಂಧಿಸಿದ ಸಂಸ್ಥೆಗೆ ಪತ್ರ ಬರೆಯಲಾಗಿದೆ. ಅಲ್ಲಿಂದ ಉತ್ತರ ಬಂದ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.
3
+ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿರುವ ವಿದ್ಯಮಾನ ಹೊಸದಲ್ಲ. ಈ ಮೊದಲು ಮಲೇಶಿಯಾ, ಸಿಂಗಾಪುರ್, ಜರ್ಮನಿ ಸೇರಿದಂತೆ ಹಲವಾರು ವಿದೇಶಿ ಶಾಲೆಗಳಿಗೂ ಇದೇ ರೀತಿಯ ಮೇಲ್ ಐಡಿಯಿಂದ ಬೆದರಿಕೆ ಹಾಕಲಾಗಿದೆ. ಹಾಗೆಂದು ಅದನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಸರ್ಕಾರ ಗಂಭೀರ ಕ್ರಮಗಳನ್ನು ಕೈಗೊಂಡಿದೆ.
4
+ ನಕಲಿ ಬೆದರಿಕೆ ಹಾಕುವವರ ಮೂಲವನ್ನು ಪತ್ತೆ ಹಚ್ಚಲು ಪ್ರಯತ್ನಿಸಲಾಗುತ್ತಿದೆ. ಜೊತೆಯಲ್ಲೇ ಶಾಲೆಗಳಿಗೆ ಆಯಾ ಪೊಲೀಸ್ ಠಾಣೆಯ ಅಧಿಕಾರಿಗಳು ಕಾಲಕಾಲಕ್ಕೆ ಭೇಟಿ ನೀಡಿ ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಪೊಲೀಸರು ಇಂತಹ ಕ್ರಮಗಳನ್ನು ಆರಂಭಿಸಿದ್ದಾರೆ ಎಂದು ಹೇಳಿದರು.
5
+ ನಕ್ಸಲರು ಹುದುಗಿಸಿಟ್ಟಿದ ಸ್ಪೋಟ, ಇಬ್ಬರು ಯೋಧರು ಗಂಭೀರ
6
+ ಕೇಂದ್ರ ಸರ್ಕಾರವೂ ನಮ್ಮ ಸಂಪರ್ಕದಲ್ಲಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಜೊತೆ ಚರ್ಚೆ ನಡೆಸಿದೆ. ಆರಂಭದಲ್ಲಿ 15 ಶಾಲೆಗಳಿಗೆ ಬೆದರಿಕೆ ಬಂದಿತ್ತು. ನಂತರ ಅದು 45 ಶಾಲೆಗಳಿಗೆ ಎಂದು ಖಚಿತವಾಗಿದೆ. ಎಲ್ಲಾ ಶಾಲೆಗಳಲ್ಲೂ ತಪಾಸಣೆ ನಡೆಸಿ ಯಾವುದೇ ಸ್ಪೋಟಕಗಳಿಲ್ಲ ಎಂದು ದೃಢಪಡಿಸಲಾಗಿದೆ. ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದರು.
7
+ ಆಧುನಿಕತೆಯ ಪರಿಸ್ಥಿತಿಯಲ್ಲಿ ಪ್ರತಿದಿನ ಈ ರೀತಿಯ ಸವಾಲುಗಳು ಉದ್ಭವಿಸುತ್ತಲೇ ಇರುತ್ತವೆ. ಅವುಗಳನ್ನು ನಿಭಾಯಿಸಲೇಬೇಕು. ಶಾಲೆಗಳಿಗೆ ಬೆದರಿಕೆ ಕರೆ ಹಾಕಿದ ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ ಮಾಡುವ ಅಗತ್ಯವಿಲ್ಲ. ನಮ್ಮ ಸಿಐಡಿ ವಿಭಾಗದಲ್ಲಿ ನುರಿತ ಅಧಿಕಾರಿಗಳ ಸಿಬ್ಬಂದಿಗಳಿದ್ದು, ಸಮರ್ಪಕ ತನಿಖೆ ಮಾಡುತ್ತಾರೆ. ಒಂದು ವೇಳೆ ಆರೋಪಿ ವಿದೇಶದಲ್ಲಿದ್ದು, ಆತನನ್ನು ಬಂಧಿಸಿ ಕರೆತರಲು ಅನುಮತಿಸಿದರೆ ಆ ಕಾರ್ಯಾಚರಣೆಗಾಗಿ ವಿಶೇಷ ತಂಡ ರಚಿಸಲಾಗುವುದು ಎಂದು ತಿಳಿಸಿದರು.
8
+ ಬಲವಂತದ ಮತಾಂತರ : 42 ಜನರ ವಿರುದ್ಧ ಎಫ್‍ಐಆರ್, 9 ಮಂದಿ ಬಂಧನ
9
+ ಈ ಮೊದಲು ಮೊರಾಕೊದಿಂದ ಕೊಲೆ ಆರೋಪಿಯನ್ನು ಬಂಧಿಸಿ ಕರೆತರಲಾಗಿದೆ. ದುಬೈನಲ್ಲಿರು��� ಕುಖ್ಯಾತನ ಬಂಧನಕ್ಕೂ ತಂಡ ರಚಿಸುವ ಸಾಧ್ಯತೆಯಿದೆ ಎಂದು ಹೇಳಿದರು. ಭ್ರೂಣಲಿಂಗಪತ್ತೆ ಜೊತೆಗೆ ನವಜಾತ ಶಿಶುಗಳ ಮಾರಾಟ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಈ ಎರಡೂ ರೀತಿಯ ಕೃತ್ಯಗಳು ರಾಜ್ಯಾದ್ಯಂತ ನಡೆದಿರುವ ಸಾಧ್ಯತೆಗಳಿದ್ದು, ಅದನ್ನು ಸಿಐಡಿ ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ ಎಂದರು.
eesanje/url_46_29_1.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ : ಮುಂದುವರೆದ ವಿಚಾರಣೆ
2
+
3
+ ಬೆಂಗಳೂರು,ಆ.31-ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ಮುಂದುವರೆದಿದ್ದು, ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇಂದು ಸುದೀರ್ಘ ವಾದ ಮಂಡಿಸಿದರು.
4
+ ನ್ಯಾ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ನಡೆದ ವಿಚಾರಣಾ ಸಂದರ್ಭದಲ್ಲಿ ತಮ ಸುದೀರ್ಘ ವಾದ ಮಂಡಿಸಿದ ತುಷಾರ್ಮೆಹ್ತಾಅವರು 5 ಅಂಶಗಳನ್ನು ಉಲ್ಲೇಖಿಸಿ, ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನ್ನು ಸಮರ್ಥಿಸಿಕೊಂಡರು.
5
+ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಾಗ ಸಂಪುಟದ ಅಭಿಪ್ರಾಯ ಪುರಸ್ಕರಿಸಿಲ್ಲ ಎಂದು ತಿಳಿಸಿದ್ದಾರೆ. ಮುಡಾ ಹಗರಣದ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ರಾಜ್ಯಪಾಲರು ತನಿಖೆಯ ನಂತರವೇ ತೀರ್ಮಾನ ತೆಗೆದುಕೊಳ್ಳಬೇಕು ಎಂದೇನಿಲ್ಲ. ತನಿಖಾ ಸಂಸ್ಥೆ ನೋಡಿಕೊಳ್ಳುತ್ತದೆ ಎಂದು ಹೇಳಿದರು.
6
+ ಸಿಎಂ ವಿರುದ್ಧ ಆರೋಪ ಬಂದಿದೆ, ತನಿಖೆ ಆಗಬೇಕಿದೆ, ಸಿಎಂ ಪರ ವಕೀಲರು ಆತಾಹುತಿ ವಾದ ಮಂಡಿಸುತ್ತಿದ್ದಾರೆ, ಪತ್ನಿ ವಿರುದ್ಧ ಆರೋಪಕ್ಕೆ ಗಂಡನ ಹೊಣೆ ಮಾಡುತ್ತಿದ್ದಾರೆ ಎನ್ನುವುದನ್ನು ಒಪ್ಪುವುದಾದರೆ 17 ಎ ಅವಶ್ಯಕತೆ ಇಲ್ಲ. ದೂರುದಾರ ನೇರವಾಗಿ ತನಿಖಾ ಸಂಸ್ಥೆ ಬಳಿ ಹೋಗಬಹುದಿತ್ತು. 17 ಎ ಅಡಿಯಲ್ಲಿ ತನಿಖೆಗೆ ಮಾತ್ರ ಅನುಮತಿ ನೀಡಲಾಗಿದೆ. ಬಿಎನ್ಎಸ್ ಕಾಯ್ದೆಯಡಿ ತನಿಖೆಗೆ ಕೇಳಲಾಗಿದೆ ಎಂದು ತುಷಾರ್ ಮೆಹ್ತಾ ತಮ ವಾದ ಮಂಡಿಸಿದರು.
7
+ ರಾಜ್ಯಪಾಲರ ಶೋಕಾಸ್ ನೋಟಿಸ್ಗೆ ಮುಖ್ಯಮಂತ್ರಿ ಉತ್ತರಿಸಿದ್ದಾರೆ. ಕ್ಯಾಬಿನೆಟ್ ಸಲಹೆ, ದೂರುದಾರರ ಅರ್ಜಿ ಎಲ್ಲವನ್ನೂ ಪರಿಗಣಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಆದೇಶ ನೀಡಿದ್ದಾರೆ. ಲಿಖಿತ ದೂರು ಆಧರಿಸಿ ತನಿಖೆಗೆ ಅನುಮತಿ ನೀಡಿದ್ದಾರೆ. ಇಲ್ಲಿ ರಾಜ್ಯಪಾಲರು ತಮ ವಿವೇಚನೆ ಬಳಸಿ ಆದೇಶ ನೀಡಿದ್ದಾರೆ. 17 ಎ ಬಳಕೆ ಬಗ್ಗೆ ಸುಪ್ರೀಂ ಕೋರ್ಟ್ ಹಲವು ತೀರ್ಪು ನೀಡಿದೆ. ಈ ಕಾಯ್ದೆ ಬಳಸುವ ಬಗ್ಗೆ ಅನುಮತಿ ನೀಡುವಾಗ ವಿವರಣೆ ನೀಡಬೇಕೆಂದೇನಿಲ್ಲ ಎಂದು ಹೇಳಿದರು.
8
+ ಈ ಸೆಕ್ಷನ್ನಡಿಯಲ್ಲಿ ಶಿಕ್ಷೆ ವಿಧಿಸಬೇಕು ಎಂದು ರಾಜ್ಯಪಾಲರು ಸೂಚಿಸಿಲ್ಲ, ಕೇವಲ ತನಿಖೆಗೆ ಅವಕಾಶ ನೀಡಲಾಗಿದೆ. ಯಾವುದೇ ದೂರಿನಲ್ಲಿ ಸಂದೇಹ ಬಂದರೆ ರಾಜ್ಯಪಾಲರು ತನಿಖೆಗೆ ಆದೇಶಿಸಬಹುದು. ರಾಜ್ಯಪಾಲರಿಗೆ ತನಿಖೆಯ ಅವಶ್ಯಕತೆ ಇದೆ ಎಂದೆನಿಸಿದರೆ ಆದೇಶಿಸಬಹುದು. ಇದು ಅವರ ಹಕ್ಕು ಮಾತ್ರ ಅಲ್ಲ, ಕರ್ತವ್ಯವೂ ಆಗಿದೆ. ಇದು ಮುಖ್ಯಮಂತ್ರಿ ಹಾಗೂ ರಾಜ್ಯಪಾಲರ ನಡುವಿನ ಪ್ರಕರಣವಲ್ಲ ಎಂದು ಮೆಹ್ತಾ ವಾದಿಸಿದರು.
9
+ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಸಂಪೂರ್ಣ ಆದೇಶವನ್ನು ತಮ ವಾದದ ಸಂದರ್ಭದಲ್ಲಿ ಓದಿದರು.ಎಜೆ ಅಭಿಪ್ರಾಯ, ಕ್ಯಾಬಿನೇಟ್ ನಿರ್ಣಯ ತಮ ಅಭಿಪ್ರಾಯ ಎಂದು ಮುಖ್ಯಮಂತ್ರಿಗಳು ತಮ ಅಭಿಪ್ರಾಯದಲ್ಲಿ ತಿಳಿಸಿದ್ದ��ರೆ. ಸಿಎಂ ಕೂಡ ತಮ ವಿವೇಚನವನ್ನು ಬಳಸಿಲ್ಲ ಎಂದರು.
10
+ ಒಬ್ಬರ ದೂರಿಗೆ ಶೋಕಾಸ್ ನೋಟಿಸ್ ನೀಡಿದಾಕ್ಷಣ ಉಳಿದವರ ದೂರಿಗೂ ಶೋಕಾಸ್ ನೋಟಿಸ್ ನೀಡಬೇಕೆಂದೇನಿಲ್ಲ. ಹೀಗಾಗಿಯೇ ಉಳಿದವರ ದೂರಿಗೆ ಶೋಕಾಸ್ ನೋಟಿಸ್ ನೀಡಿಲ್ಲ. ದೂರುದಾರರಾದ ಅಬ್ರಹಾಂ ದೂರಿಗೂ ಶೋಕಾಸ್ ನೋಟಿಸ್ ಕಡ್ಡಾಯವಾಗಿರಲಿಲ್ಲ.
11
+ ಸಂಪುಟದ ಸಲಹೆಯನ್ನು ಪರಿಗಣಿಸುವ ಅಗತ್ಯ ರಾಜ್ಯಪಾಲರಿಗೆ ಇಲ್ಲ. ಸಂಪುಟದ ಸದಸ್ಯರನ್ನು ಮುಖ್ಯಮಂತ್ರಿಗಳು ನೇಮಿಸುತ್ತಾರೆ. ಮುಖ್ಯಮಂತ್ರಿಗಳು ಆಯ್ಕೆ ಮಾಡುವ ಸಚಿವರು ಸಂಪುಟದ ಸದಸ್ಯರಾಗಿರುತ್ತಾರೆ. ಅಂತಹ ಸಂಪುಟ ಸದಸ್ಯರ ನಿರ್ಣಯಕ್ಕೆ ಮಹತ್ವ ನೀಡುವ ಅಗತ್ಯವಿರುವುದಿಲ್ಲ. ಅವರು ನೇಮಿಸಿದ ವ್ಯಕ್ತಿಯೇ ಸಂಪುಟದ ನೇತೃತ್ವ ವಹಿಸಿ ನೀಡಿರುವ ಸಲಹೆಯನ್ನು ರಾಜ್ಯಪಾಲರು ಪರಿಗಣಿಸಬೇಕೆಂದೇನಿಲ್ಲ ಎಂದು ತುಷಾರ್ ಮೆಹ್ತಾ ಪ್ರಬಲ ವಾದ ಮಂಡಿಸಿದರು.
12
+ ರಾಜ್ಯಪಾಲರು ಅಪರೂಪದ ಸಂದರ್ಭದಲ್ಲಿ ಸ್ವತಂತ್ರ್ಯ ವಿವೇಚನೆ ಬಳಸಬಹುದಾಗಿದೆ ಎಂದು ಮಧ್ಯಪ್ರದೇಶದ ಪ್ರಕರಣವನ್ನು ಉಲ್ಲೇಖಿಸಿದರು. ಈ ಪ್ರಾಸಿಕ್ಯೂಷನ್ ನೀಡಿದ ಪ್ರಕರಣದಲ್ಲಿ ರಾಜ್ಯಪಾಲರು ತರಾತುರಿ ನಿರ್ಣಯ ಕೈಗೊಂಡಿಲ್ಲ.
13
+ ಎಲ್ಲವನ್ನೂ ಅಧ್ಯಯನ ಮಾಡಿ, ನಿರ್ಣಯಿಸಿ ಅನುಮತಿ ನೀಡಿದ್ದಾರೆ ಎಂದು ಹೈ ಕೋರ್ಟ್ ಗಮನಕ್ಕೆ ತಂದರು.ದೂರುದಾರ ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಮಣೀಂದರ್ ಸಿಂಗ್ ವಾದ ಮಂಡಿಸಿದರು. ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ನಾಗಪ್ರಸನ್ನ ಅವರು ಮಧ್ಯಾಹ್ನಕ್ಕೆ ಮುಂದೂಡಿದರು.
eesanje/url_46_29_10.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಸೆ. 2 ರಿಂದ ರಾಜ್ಯಾದ್ಯಂತ 1-5 ನಮೂನೆ ಡಿಜಿಟಲ್‌ ಪೋಡಿ ದುರಸ್ಥಿ ಅಭಿಯಾನ: ಕೃಷ್ಣ ಬೈರೇಗೌಡ
2
+ ಬೆಂಗಳೂರು ಆಗಸ್ಟ್‌ 30: ಸೆಪ್ಟೆಂಬರ್‌ 2 ರಿಂದ 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ದಶಕಗಳಿಂದ ಬಾಕಿ ಉಳಿದಿರುವ ಪೋಡಿ ದುರಸ್ಥಿ ಕಾರ್ಯಕ್ಕೆ ಚುರುಕು ನೀಡುವ ಸಂಬಂಧ ವಿಕಾಸಸೌಧದಲ್ಲಿ ಶುಕ್ರವಾರ ಎಲ್ಲಾ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಕಂದಾಯ ನಿರೀಕ್ಷಕರೂ ಸೇರಿ ಇಲಾಖೆಯ ಎಲ್ಲಾ ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಚಿವ ಕೃಷ್ಣ ಬೈರೇಗೌಡ ಅವರು ಸಭೆ ನಡೆಸಿದರು.
3
+ “ರಾಜ್ಯದಲ್ಲಿ ಸುಮಾರು 10 ಲಕ್ಷ ರೈತರಿಗೆ ಹತ್ತಾರು ವರ್ಷಗಳ ಹಿಂದೆ ಸರ್ಕಾರಿ ಜಮೀನು ಅಕ್ರಮ ಸಕ್ರಮದಡಿ ಮಂಜೂರಾಗಿದ್ದರೂ ಸಹ, ಪೋಡಿ ದುರಸ್ಥಿ ಆಗದೆ ಬಾಕಿ ಉಳಿದಿದೆ. ಲಕ್ಷಾಂತರ ರೈತರು ಅನೇಕ ವರ್ಷಗಳಿಂದ ಪ್ರಯತ್ನ ಮಾಡುತ್ತಿದ್ದರೂ ಸಹ, ಕೆಲವೇ ಕೆಲವರಿಗೆ ಮಾತ್ರ ಪೋಡಿ ದುರಸ್ಥಿಯಾಗಿದ್ದು ಬಹುತೇಕರಿಗೆ ಆಗಿರುವುದಿಲ್ಲ. ಇದರಿಂದಾಗಿ ಹಲವು ರೈತರು ತೀವ್ರ ತೊಂದರೆಗೆ ಸಿಲುಕಿದ್ದು, ಅಧಿಕಾರಿಗಳು ಸೆಪ್ಟೆಂಬರ್‌ 2 ರಿಂದ ಅಭಿಯಾನ ಮಾದರಿಯಲ್ಲಿ 1-5 ನಮೂನೆ ಪೋಡಿ ದುರಸ್ಥಿ ಕೆಲಸಕ್ಕೆ ಮುಂದಾಗಬೇಕು, ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು” ಎಂದು ಸೂಚಿಸಿದರು.
4
+ ಮುಂದುವರೆದು, “ಜಮೀನು ಮಂಜೂರಾಗಿದ್ದರೂ ಪೋಡಿಯಾಗಿ ಆರ್.ಟಿ.ಸಿ ಆಗದೆ ಇರುವುದರಿಂದ, ಅಂತಹ ರೈತರ ಪರಿಸ್ಥಿತಿ ತ್ರಿಶಂಕುವಿನಂತೆ ಆಗಿದೆ. ತಾಲ್ಲೂಕು ಕಛೇರಿ, ಸರ್ವೆ ಕಛೇರಿಗಳಿಗೆ ಅಲೆದು ಅಲೆದು ಪ್ರಯೋಜನವಾಗದೆ ತೀವ್ರ ತೊಂದರೆಗೆ ತುತ್ತಾಗಿದ್ದಾರೆ. ಈ ಬಗ್ಗೆ ಬಹಳ ವರ್ಷಗಳಿಂದ ಚರ್ಚೆಗಳು, ಪ್ರಯತ್ನಗಳು ಆಗುತ್ತಿದ್ದರೂ ಸರಿಯಾದ ಪರಿಹಾರ ದೊರೆತಿರುವುದಿಲ್ಲ.
5
+ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯನವರು ಈ ಸಮಸ್ಯೆಯನ್ನು ಪರಿಹರಿಸಲು, ಸೂಕ್ತ ಪರಿಹಾರ ಕ್ರಮಕೈಗೊಳ್ಳಲು ಸೂಚಿಸಿದ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆ ದುರಸ್ಥಿಗೆ ಬಾಕಿಯಿರುವ ಪ್ರಕರಣಗಳ ವಿಲೆಗೆ ವ್ಯವಸ್ಥಿತವಾದ ಯೋಜನೆ ಆರಂಭಿಸಿದೆ” ಎಂದು ಮಾಹಿತಿ ನೀಡಿದರು.
6
+ “ಈ ಹಿಂದೆ ಪೋಡಿ ದುರಸ್ಥಿ ಮಾಡಲು ಅವಶ್ಯವಿರುವ 1-5 ನಮೂನೆಗಳನ್ನು ತಯಾರಿಸಲು ಕಾಗದದ ಕಡತಗಳನ್ನು ತಯಾರಿಸಲು ಪ್ರಯತ್ನಿಸಲಾಗಿತ್ತು. ಆದರೆ, ಆ ಕೆಲಸವೂ ಸಮರ್ಪಕವಾಗಿ ಆಗಿರುವುದಿಲ್ಲ. ಆದ ಕೆಲವು ಕಡತಗಳು ಕಾಣೆಯಾಗಿವೆ ಅಥವಾ ಕೈಗೆ ಸಿಗುವುದಿಲ್ಲ. ಇದರಿಂದ ಕಡತಗಳು ಇದ್ದರೂ ಅನೇಕರಿಗೆ ಅದರ ಪ್ರಯೋಜನ ಸಿಗುತ್ತಿಲ್ಲ. ಈ ಸಮಸ್ಯೆಗಳಿಂದ ಕಂದಾಯ ಇಲಾಖೆ ಪೋಡಿ ದುರಸ್ಥಿ 1-5 ಕಡತಗಳನ್ನು ಕಂಪ್ಯೂಟರ್ಗಳನ್ನು ಬಳಸಿ ಗಣಕೀಕರಿಸಿದ (ಡಿಜಿಟಲ್‌) 1-5 ಕಡತಗಳನ್ನು ತಯಾರಿಸಲು ಆರಂಭಿಸಿದೆ.
7
+ ಡಿಜಿಟಲ್‌ ಆ್ಯಪ್ ಮುಖಾಂತ��� ಮಾಡುವುದರಿಂದ ಸರಳ, ವೇಗವಾಗಿ ಕಡತಗಳನ್ನು ತಯಾರಿಸಬಹುದು. ಯಾರ ಬಳಿ ವಿಳಂಬವಾಗಿದೆ ಎಂಬುದು ಪಾರದರ್ಶಕವಿರುವುದರಿಂದ, ವೇಗವಾಗಿ ಕೆಲಸವಾಗಬಹುದು. ಮೂಲ ಮಂಜೂರಿ ದಾಖಲೆಗಳನ್ನು ಸುರಕ್ಷಿತವಾಗಿಡಬಹುದು. ಮುಂದೆ ತಿದ್ದಲು, ನಕಲು ಮಾಡಲು ಸಾಧ್ಯವಿಲ್ಲ. ಒಬ್ಬ ರೈತನಿಗೆ ತಯಾರು ಮಾಡಿದ 1-5 (ನಮೂನೆ)ಕಡತ, ಆ ಸರ್ವೆ ನಂಬರಿನ ಎಲ್ಲಾ ರೈತರಿಗೂ ಅದೇ ಕಡತ ಅನುಕೂಲವಾಗುತ್ತದೆ. 1-5(ನಮೂನೆ)ಕಡತ ಕಾಣೆಯಾಗಲು ಅಥವಾ ಕಳೆದು ಹೋಗಲು ಸಾಧ್ಯವಿಲ್ಲ” ಎಂದು ತಿಳಿಸಿದರು.
8
+ ಮುಂದುವರೆದು, “ಈ ಅಭಿಯಾನವನ್ನು ಸೆಪ್ಟೆಂಬರ್‌ 02 ರಿಂದ ರಾಜ್ಯಾದ್ಯಂತ ಆರಂಭಿಸುತ್ತಿದ್ದೇವೆ. ರಾಜ್ಯದಲ್ಲಿ ಎಲ್ಲೆಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳ ದುರಸ್ಥಿಯಾಗದೆ ಬಾಕಿ ಉಳಿದಿದೆ ಅಂತಹ ಪ್ರತಿಯೊಂದು ಕಡೆಯಲ್ಲೂ ಡಿಜಿಟಲಾಗಿ 1-5(ನಮೂನೆ)ಕಡತ ಸೆಪ್ಟೆಂಬರ್‌ 02 ರಿಂದ ತಯಾರಿ ಮಾಡಲಾಗುವುದು. 1-5(ನಮೂನೆ)ಕಡತ ಎಲ್ಲಾ ಸರ್ಕಾರಿ ಜಮೀನಿಗೆ (ರೈತರಿಗೆ ಮಂಜೂರಾಗಿರುವ), ರೈತರ ಅರ್ಜಿಗೆ ಕಾಯದೆ ಕಂದಾಯ ಇಲಾಖೆ ಸ್ವಯಂ ಕಡತಗಳನ್ನು ತಯಾರಿಸಲಿದೆ.
9
+ 1-5ನಮೂನೆ ಪ್ರಕಾರ ತಯಾರಾದ ಕಡತಗಳನ್ನು ಮುಂದೆ 6-10 ಮಾಡಿ ಅವರಿಗೆ ಸರ್ವೆಯೊಂದಿಗೆ ದುರಸ್ಥಿ ಮಾಡಿದ ನಂತರ ಹೊಸ ಸರ್ವೆ ನಂಬರ್ ಪಹಣಿಯೊಂದಿಗೆ ಸಂಪೂರ್ಣ ದಾಖಲೆ ಮಾಡಿಕೊಡಲಾಗುವುದು. ಇದನ್ನು ಅಭಿಯಾನ ಮಾದರಿಯಲ್ಲಿ ಅನುಷ್ಟಾನ ಮಾಡಲಾಗುವುದು. ಇದೊಂದು ದೀರ್ಘಕಾಲದ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿ ರೈತರಿಗೆ ನೆಮ್ಮದಿಯನ್ನು ನೀಡುವ ಅಭಿಯಾನವಾಗಲಿದೆ. ಹೀಗಾಗಿ ಎಲ್ಲಾ ಅಧಿಕಾರಿಗಳೂ ಈ ಯೋಜನೆ ಯಶಸ್ವಿಯಾಗಲು ಸಹಕರಿಸಬೇಕಿದೆ. ಆ ಮೂಲಕ ರೈತರ ದೀರ್ಘ ಕಾಲದ ಸಮಸ್ಯೆಗಳನ್ನು ಪರಿಹರಿಸಲು ತಮ್ಮಿಂದಾದ ಸಹಕಾರ ನೀಡಬೇಕಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮನವಿ ಮಾಡಿದರು.
10
+ ಹಾಸನದಲ್ಲಿ ಯಶಸ್ವಿಯಾದ ಪೈಲಟ್‌ ಯೋಜನೆ
11
+ ಡಿಜಿಟಲಾಗಿ 1-5(ನಮೂನೆ) ಪೋಡಿ ದುರಸ್ಥಿ ಕಾರ್ಯವನ್ನು ರಾಜ್ಯಾದ್ಯಂತ ವಿಸ್ತರಿಸುವ ಮುನ್ನ ಈ ಯೋಜನೆಯನ್ನು ಹಾಸನದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗಿದೆ. ಈ ಪ್ರಾಯೋಗಿಕ ಯೋಜನೆ ಯಶಸ್ವಿಯಾಗಿರುವುದನ್ನು ಖಚಿತಪಡಿಸಿಕೊಂಡ ನಂತರವೇ ಇದೀಗ ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ತಿಳಿಸಿದರು.
12
+ ಈ ಬಗ್ಗೆ ಗಮನ ಸೆಳೆದ ಅವರು, “ಪೋಡಿ ದುರಸ್ಥಿಗೊಳಿಸಿ ರೈತರಿಗೆ ನೆಮ್ಮದಿ ನೀಡಬೇಕು ಎಂಬ ಉದ್ದೇಶದಿಂದ ಎಂಟು ತಿಂಗಳ ಹಿಂದೆಯೇ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಟಾರಿಯಾ ಹಾಗೂ ಕಂದಾಯ ಆಯುಕ್ತರಾದ ಸುನೀಲ್‌ ಕುಮಾರ್‌ ಸೇರಿ ಹಿರಿಯ ಅಧಿಕಾರಿಗಳ ಜೊತೆ ನಿರಂತರವಾಗಿ ಚರ್ಚಿಸಲಾಯಿತು. ಚರ್ಚೆಯ ಫಲವಾಗಿ ಇದೀಗ ಡಿಜಿಟಲ್‌ ಆ್ಯಪ್ ಸಿದ್ದಗೊಂಡಿದೆ. ಇದರ ಸಹಾಯದಿಂದ 1-5(ನಮೂನೆ) ಪೋಡಿ ದುರಸ್ಥಿ ಕಾರ್ಯವನ್ನು ಸುಲಭವಾಗಿ ನಿಭಾಯಿಸಬಹುದು” ಎಂದರು.
13
+ ಮುಂದುವರೆದು, “ಆ್ಯಪ್ ಗೆ ಹಾಸನದಲ್ಲಿ ಪ್ರಾಯೋಗಿಕವಾಗಿ ಚಾಲನೆ ನ��ಡಿ ಕಳೆದ ಕೆಲ ತಿಂಗಳಿನಿಂದ ಪೋಡಿ ದುರಸ್ಥಿ ಕೆಲಸವನ್ನು ಯಶಸ್ವಿಯಾಗಿ ಮುನ್ನಡೆಸಲಾಗುತ್ತಿದೆ. ಇದರ ಸಹಾಯದಿಂದ ಪೋಡಿ ದುರಸ್ಥಿ ಕೆಲಸ ನೂರಕ್ಕೆ ನೂರರಷ್ಟು ಸಾಧ್ಯ ಎಂಬುದನ್ನು ಹಾಸನದಲ್ಲಿ ಸಾಧಿಸಿ ತೋರಿಸಲಾಗಿದೆ. ಹೀಗಾಗಿ ಅಧಿಕಾರಿಗಳು ಪೋಡಿ ದುರಸ್ಥಿ ಬಗ್ಗೆ ಇನ್ನೂ ಕಥೆ ಹೇಳುವ ಅಗತ್ಯವಿಲ್ಲ. ಇಲಾಖೆಯ ಬಳಿ ಪ್ರತಿ ತಾಲೂಕಿನ ಡಾಟಾ ಇದ್ದು, ದುರಸ್ಥಿ ಕೆಲಸ ಎಲ್ಲಾ ತಾಲೂಕುಗಳಲ್ಲೂ ಅಭಿಯಾನ ಮಾದರಿಯಲ್ಲಿ ಆರಂಭವಾಗಬೇಕು.
14
+ ಅಲ್ಲದೆ, ಈ ಆ್ಯಪ್ ಮೂಲಕ ಯಾವ ಫೈಲು ಯಾವ ಅಧಿಕಾರಿಯ ಬಳಿ ಎಷ್ಟು ದಿನದಿಂದ ಬಾಕಿ ಇದೆ ಎಂಬ ಮಾಹಿತಿಯನ್ನೂ ಪತ್ತೆಹಚ್ಚಬಹುದು. ಹೀಗಾಗಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಿ. ನಿಮ್ಮ ತಾಲೂಕಿನಲ್ಲಿ ದರ್ಖಾಸ್ತು ಪೋಡಿ ಆಗಬೇಕಿರುವ ಸರ್ವೇ ನಂಬರ್ ಎಷ್ಟಿದೆ ಎಂದು ಮೊದಲು ಪಟ್ಟಿ ಮಾಡಿ, ಮುಖ್ಯವಾಗಿ ಜಿಲ್ಲಾಧಿಕಾರಿಗಳು ಪ್ರತಿ ವಾರ ಗ್ರಾಮ ಆಡಳಿತ ಅಧಿಕಾರಿಯಿಂದ ತಹಶೀಲ್ದಾರ್‌ ವರೆಗೆ ಎಲ್ಲಾ ಅಧಿಕಾರಿಗಳ ಸಭೆ ನಡೆಸಿ ಸಲಹೆ ಸೂಚನೆ ನೀಡಬೇಕು, ಈ ಬಗ್ಗೆ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸೂಕ್ತ ತರಬೇತಿ ನೀಡಬೇಕು ಹಾಗೂ ಪೋಡಿ ದುರಸ್ಥಿ ಕೆಲಸದ ಬಗ್ಗೆ ನಿರಂತರ ಮೇಲುಸ್ತುವಾರಿ ನಡೆಸಬೇಕು” ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
eesanje/url_46_29_11.txt ADDED
@@ -0,0 +1,4 @@
 
 
 
 
 
1
+ ಕಾಶ್ಮೀರದ ಜ್ಯೇಷ್ಟೇಶ್ವರ ದೇವರ ದರ್ಶನ‌ ಪಡೆದು ದೇವೇಗೌಡರು
2
+ ಶ್ರೀನಗರ, ಆ.31-ಜಮ್ಮು ಮತ್ತು ಕಾಶ್ಮೀರ ರಾಜ್ಯದ ಪ್ರವಾಸದಲ್ಲಿರುವ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರು ಇಂದು ಕಾಶ್ಮೀರದ ಶಂಕರಾಚಾರ್ಯರ ಬೆಟ್ಟದ ಮೇಲಿರುವ ಜ್ಯೇಷ್ಟೇಶ್ವರ ದೇವರ ದರ್ಶನ‌ ಪಡೆದು ವಿಶೇಷ ಪೂಜೆ ಮಾಡಿದ್ದಾರೆ. ಶಿವನ ದೇವಸ್ಥಾನವೆಂದೇ ಕರೆಯಲ್ಪಡುವ ಈ ಪವಿತ್ರ ಶಂಕರಾಚಾರ್ಯ ದೇವಸ್ಥಾನದಲ್ಲಿ ದೇವರ ದರ್ಶನ‌ ಪಡೆದು ಪ್ರಾಥನೆ ಸಲ್ಲಿಸಿದ್ದಾರೆ.
3
+ , , , . ’ .1/2pic../Fo2wckXjpp
4
+ ಈ ದೇವಸ್ಥಾನಕ್ಕೆ ಭೇಟಿ ನೀಡಿ, ಶಿವನ‌‌ ದರ್ಶನ ಪಡೆಯಬೇಕೆಂಬುದು ನನ್ನ ಜೀವಮಾನದ ಆಸೆಯಾಗಿತ್ತು ಎಂದು ಗೌಡರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಕಾಶ್ಮೀರ ಕಣಿವೆಯಲ್ಲಿನ ತ್ರಾಸದಾಯಕವಾದ ಈ ದೇವಾಲಯಕ್ಕೆ ಗೌಡರು, ಸೇನೆಯ ಬಿಗಿ ಭದ್ರತೆಯ ಜತೆಗೆ ಸಹಾಯಕರ ಸಹಾಯದಿಂದ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಿನ್ನೆ ಕಾಶ್ಮೀರದ ಉರಿಯ ಜಲ ವಿದ್ಯುತ್ ಉತ್ಪಾದನಾ ಸ್ಥಾವರಕ್ಕೆ ಭೇಟಿ ನೀಡಿದ್ದರು.
eesanje/url_46_29_12.txt ADDED
@@ -0,0 +1,9 @@
 
 
 
 
 
 
 
 
 
 
1
+ ದೇವೇಗೌಡರ ಕನಸು ಈಡೇರಿಸಲು ಕಾರ್ಯಕರ್ತರು ಕೆಲಸ ಮಾಡಬೇಕು : ನಿಖಿಲ್‌ ಕುಮಾರಸ್ವಾಮಿ
2
+ ತುಮಕೂರು,ಆ.30- ಸದಸ್ಯತ್ವ ನೋಂದಣಿ ಇವತ್ತು ನೆನ್ನೆಯದು ಅಲ್ಲ ಮಾಜಿ ಪ್ರಧಾನಿ ದೇವೇಗೌಡರ ಹಲವು ವರ್ಷಗಳ ಕನಸು ಈ ಕನಸು ಈಡೇರಬೇಕು ಆ ನಿಟ್ಟಿನಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಕರೆ ನೀಡಿದರು.
3
+ ನಗರದ ಕೊಲ್ಲಾಪುರದಮ ಸಭಾಂಗಣದಲ್ಲಿ ಹಮಿಕೊಂಡಿದ್ದ ಬೂತ್‌ ಸಮಿತಿ ಅಭಿಯಾನ ಹಾಗೂ ಸದಸ್ಯತ್ವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಮೂವತ್ತೊಂದು ಜೆಲ್ಲೆಯಲ್ಲೂ ಸದಸ್ಯತ್ವ ನೋಂದಣಿ ಕಾರ್ಯ ನಡೆಯಲ್ಲಿದ್ದು ಇಂದು ತುಮಕೂರಿನಿಂದ ಪ್ರಾರಂಭ ಮಾಡಿದೇವೆ. ರಾಜ್ಯದಲ್ಲಿ ಪಕ್ಷವನ್ನು ಸದೃಢವಾಗಿ ಕಟ್ಟಬೇಕಾಗಿದೆ ಅಲ್ಲದೆ ಗ್ರಾಮೀಣ ಮಟ್ಟದ ಕಾರ್ಯಕರ್ತರನ್ನು ಗುರುತಿಸುವ ಕೆಲಸವನ್ನು ಮಾಡುವ ಉದ್ದೇಶ ದಿಂದ ಸದಸ್ಯತ್ವ ನೋಂದಣಿ ಮಾಡಿಸಲಾಗುತ್ತಿದೆ. ಈ ಹಿಂದೆ ತುಮಕೂರು ಜಿಲ್ಲೆಯ ಹನ್ನೊಂದು ಕ್ಷೇತ್ರಗಳ ಪೈಕಿ ಒಂಬತ್ತು ಸ್ಥಾನಗಳನ್ನು ಪಕ್ಷ ಗೆದ್ದಿತ್ತು.ಅದೇ ರೀತಿ ಮುಂದಿನ ದಿನದಲ್ಲೂ ಪಕ್ಷ ಜಿಲ್ಲೆಯಲ್ಲಿ ಸದೃಡವಾಗಬೇಕು ಎಂದರು.
4
+ ಕಾಂಗ್ರೆಸ್‌‍ನವರು ಕುಮಾರಸ್ವಾಮಿಯವರನ್ನು ಐದು ವರ್ಷ ಮುಖ್ಯಮಂತ್ರಿ ಎಂದು ಕರೆದುಕೊಂಡು ಹೋದರು. ಮತ್ತೆ ಮಾಜಿ ಪ್ರಧಾನಿ ದೇವೇಗೌಡರನ್ನು ಲೋಕಸಭೆಗೆ ಕರೆದುಕೊಂಡು ಬಂದು ವಿಶ್ವಾಸ ದ್ರೋಹ ವೆಸಗುವ ಕೆಲಸ ಮಾಡಿದ್ದರು ಎಂದು ವಾಗ್ದಾಳಿ ನಡೆಸಿದರು.ಮುಂದಿನ ದಿನಗಳಲ್ಲಿ ಜಿಪಂ, ತಾಪಂ, ಪಾಲಿಕೆ,ಪುರಸಭೆಯ ಚುನಾವಣೆಗಳು ನಡೆಯುತ್ತವೆ ಆಗ ನಮ ಶಕ್ತಿ ಪ್ರದರ್ಶನ ವಾಗಬೇಕಾಗಿದೆ ಗ್ರಾಮೀಣ ಮಟ್ಟದಲ್ಲಿ ಪಕ್ಷ ಸದೃಡವಾಗಿ ಬೆಳೆದರೆ ಎಲ್ಲಾ ಕಾರ್ಯಕರ್ತರಿಗೂ ಪ್ರಾತಿನಿಧ್ಯ ಕಲ್ಪಿಸಲು ಅವಕಾಶ ಸಿಕ್ಕಂತೆ ಆಗುತ್ತದೆ ಎಂದು ತಿಳಿಸಿದರು.
5
+ ಪಕ್ಷದ ಕಾರ್ಯಕರ್ತರಿಗೆ ತರಬೇತಿ ಯನ್ನು ನಿರಂತರವಾಗಿ ಮಾಡುತ್ತೇವೆ ,ವಿಚಾರ ಸಂಕಿರಣ ಗಳನ್ನು ಹಮಿಕೊಂಡು ಪಕ್ಷದ ತತ್ವಸಿದ್ದಾಂತಗಳನ್ನು ತಿಳಿಸುವಕೆಲಸ ಮಾಡುತ್ತೇವೆ ಎಂದು ಹೇಳಿದರು. ಜೆಡಿಎಸ್‌‍ ಪಕ್ಷದ ಜೆ ಡಿ ಎಲ್‌ ಪಿ ನಾಯಕ ಹಾಗೂ ಶಾಸಕ ಸುರೇಶ್‌ ಬಾಬು ಮಾತನಾಡಿ, ಪಕ್ಷವನ್ನು ಕೇಡರ್‌ ಬೇಸಡ್‌ ಪಕ್ಷವನ್ನಾಗಿ ಕಟ್ಟಬೇಕಾಗಿದೆ. ಕಳೆದ ಲೋಕಸಭೆಯಲ್ಲಿ ವಿ.ಸೋಮಣ್ಣ ನವರನ್ನು ಗೆಲ್ಲಿಸಲ್ಲು ಪ್ರಾಮಣಿಕ ಪ್ರಯತ್ನ ಮಾಡಿದೇವೆ ಸೋಮಣ್ಣ ಪಕ್ಷದ ಕಾರ್ಯಕರ್ತರನ್ನು ನೆನಪು ಮಾಡಿಕೊಳ್ಳುತ್ತಾರೆ ಪಕ್ಷವನ್ನು ಸದೃಡವಾಗಿ , ಬಲಿಷ್ಠವಾಗಿ ಕಟ್ಟಬೇಕಾಗಿದೆ, ಹಾಸನ ಮತ್ತು ಮಂಡ್ಯ ಜಿಲ್ಲೆಗಿಂತ ಪಕ್ಷ ತುಮಕೂರಿನಲ್ಲಿ ಸದೃಢವಾಗಿದೆ. ಮಂಡ್ಯ ,ಹಾಸನ ಈ ಎರಡು ಜಿಲ್ಲೆಗಳಿಗಿಂತ ತುಮಕೂರು ಜಿಲ್ಲೆಯಲ್ಲಿ ಪಕ್ಷ ಹೆಚ್ಟು ಮತಗಳನ್ನುಗಳಿಸಿದೆ ಎಂದು ಹೇಳಿದರು.
6
+ ಭೂತ್‌ ಮಟ್ಟದ ಸಮಿತಿ ರಚನೆ ಮಾಡುವಾಗ ಎಲ್ಲಾ ಜಾತಿಯವರು ಮತ್ತು ಮಹಿಳೆಯರನ್ನು ಹಿರಿ��ರನ್ನು ಒಳಗೊಂಡಂತೆ ಪ್ರಾತಿನಿಧ್ಯ ನೀಡಬೇಕು ಪ್ರತಿ ಭೂತ್‌ ಮಟ್ಟದ ಸದಸ್ಯರಿಂದಲ್ಲೂ ಸದಸ್ಯತ್ವ ಶುಲ್ಕ ಹತ್ತು ರೂಪಾಯಿ ಪಡೆಯಲೇ ಬೇಕು ಆಗ ಕಾರ್ಯಕರ್ತರಲ್ಲಿ ನಾನು ಶುಲ್ಕ ನೀಡಿ ಸದಸ್ಯ ಆಗಿದ್ದೇನೆ ಎಂಬ ಹೆಮೆಯಿಂದ ಇರುತ್ತಾರೆ ಎಂದು ನುಡಿದರು.
7
+ ರಾಜ್ಯದಲ್ಲಿ ಕಾಂಗ್ರೆಸ್‌‍ ಪಕ್ಷ ದಲಿತರಿಗೆ ನೀಡುತ್ತಿದ್ದ ಸೌಲಭ್ಯ ಗಳಿಗೂ ಕತ್ತರಿ ಹಾಕುತ್ತಿದೆ ಇದು ದುರ್ದೈವದ ಸಂಗತಿ ಕುಮಾರಸ್ವಾಮಿ ಅವರು ನೀಡಿದ ಪಂಚರತ್ನ ಯೋಜನೆಗಳೇ ಕಾಂಗ್ರೆಸ್‌‍ ನ ಗ್ಯಾರೆಂಟಿಗಳಿಗಿಂತ ಚೆನ್ನಾಗಿದ್ದವು. ರೈತರಿಗೆನಾವು ಏನನ್ನಾದರೂ ಕೊಟ್ಟರೆ, ರೈತರು ಮರಳಿ ಮತ್ತೆ ನಮಗೆ ನೀಡುತ್ತಾರೆ ಎಂದು ತಿಳಿಸಿದರು. ಮಾಜಿ ವಿಧಾನ ಪರಿಷತ್‌ ಸದಸ್ಯ ಎಚ್‌.ಎಸ್‌‍.ಶಿವಶಂಕರ್‌ ಮಾತನಾಡಿ, ಪಕ್ಷದಲ್ಲಿ ಕಾರ್ಯಕರ್ತರಿಗಿಂತ ನಾಯಕರೇ ಹೆಚ್ಚು. ಅದ್ದರಿಂದ ಇಷ್ಟು ದಿನ ಸದಸ್ಯತ್ವ ನೋಂದಣಿ ಸಾಧ್ಯವಾಗುತ್ತಿರಲಿಲ್ಲ. ಈಗ ಕಡ್ಡಾಯವಾಗಿ ಈ ಬಾರಿ ಸದಸ್ಯತ್ವ ನೋಂದಣಿ ಮಾಡಿಸಲೇಬೇಕು ಎಂದರು.
8
+ ಜಿಲ್ಲಾಧ್ಯಕ್ಷ ಆರ್‌.ಸಿ.ಅಂಜನಪ್ಪ ಮಾತನಾಡಿ, ಪಕ್ಷ ಮುಂದಿನ ದಿನದಲ್ಲಿ ರಾಜ್ಯದಲ್ಲಿ ನೂರು ಸೀಟು ಪಡೆದು ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು, ಆದ್ದರಿಂದ ಕುಮಾರಸ್ವಾಮಿ ಮತ್ತು ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಸದಸ್ಯತ್ವ ನೋಂದಣಿ ಮಾಡಿಸಲಾಗುತ್ತಿದೆ ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ ಹತ್ತುಸಾವಿರ ಸದಸ್ಯರು, 500 ಮಂಚೂಣಿ ಕಾರ್ಯಕರ್ತರನ್ನು ಗುರುತಿಸಿ ನೋಂದಾಯಿಸುವ ಕೆಲಸವನ್ನು ಪಕ್ಷ ಮಾಡುತ್ತದೆ ಎಂದು ಹೇಳಿದರು.
9
+ ಮಾಜಿ ಸಚಿವ ಡಿ.ನಾಗರಾಜಯ್ಯ, ಶಾಸಕರಾದ ಎಂ.ಟಿ.ಕೃಷ್ಣಪ್ಪ, ಮಾಜಿ ಶಾಸಕರಾದ ತಿಮರಾಯಪ್ಪ, ಸುಧಾಕರ್‌ ಲಾಲ್‌, ವೀರಭದ್ರಪ್ಪ, ಎಚ್‌.ಲಿಂಗಪ್ಪ, ಮಾಜಿ ಜಿಪಂ ಸದಸ್ಯ ತಿಮಾರೆಡ್ಡಿ, ಗಂಗಣ್ಣ, ಪಾಲಿಕೆ ಮಾಜಿ ಉಪಮೇಯರ್‌ ನಾಗರಾಜ್‌, ಸದಸ್ಯರಾದ ಮಂಜುನಾಥ್‌, ಮನು, ಯೋಗೀಶ್‌, ರಾಮಚಂದ್ರಯ್ಯ, ಮಹಿಳಾ ಘಟಕದ ಲಕ್ಷ್ಮಮ, ರೇಖಾ, ಮುಖಂಡರಾದ ಉಗ್ರೇಶ್‌, ಭದ್ರಣ್ಣ, ಜಹಂಗೀರ್‌ ರವೀಶ್‌, ಕೊಂಡವಾಡಿ ಚಂದ್ರಶೇಖರ್‌ ಸೇರಿದಂತೆ ಮತ್ತಿತರರು ಇದ್ದರು.
eesanje/url_46_29_2.txt ADDED
@@ -0,0 +1,7 @@
 
 
 
 
 
 
 
 
1
+ ಕೋವಿಡ್ ತನಿಖಾ ಆಯೋಗದ ಅವಧಿ ವಿಸ್ತರಣೆ : ಡಾ.ಜಿ.ಪರಮೇಶ್ವರ್
2
+
3
+ ಬೆಂಗಳೂರು,ಆ.31– ಕೋವಿಡ್ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ತನಿಖೆಗೆ ಸಂಬಂಧಿಸಿದಂತೆ ರಚಿಸಲಾಗಿರುವ ತನಿಖಾ ಆಯೋಗದ ಅವಧಿಯನ್ನು ಆರು ತಿಂಗಳು ವಿಸ್ತರಣೆ ಮಾಡಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದರು.
4
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಯೋಗದ ಕೋರಿಕೆ ಮೇರೆಗೆ ಇನ್ನು ಆರು ತಿಂಗಳು ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಕೋವಿಡ್ ಸಂದರ್ಭದಲ್ಲಿನ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ನೀಡಲು ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹ ಅವರ ನೇತೃತ್ವದ ತನಿಖಾ ಆಯೋಗ ರಚಿಸಲಾಗಿತ್ತು.
5
+ ಆಯೋಗವು ಮಧ್ಯಂತರ ವರದಿಯನ್ನು ನೀಡಬಹುದಷ್ಟೆ. ಆದರೆ ಪೂರ್ಣ ಪ್ರಮಾಣದ ವರದಿ ನೀಡಲು ಇನ್ನು ಸಮಯ ಅವಕಾಶವಿದೆ ಎಂದು ಹೇಳಿದರು.ಬಳ್ಳಾರಿ ಜೈಲಿನಲ್ಲಿರುವ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಅವರನ್ನು ಮೊದಲ ಅಥವಾ 2ನೇ ಆರೋಪಿ ಮಾಡಬೇಕೆಂಬುದನ್ನು ತನಿಖಾ ಅಧಿಕಾರಿಗಳು ನಿರ್ಧರಿಸುತ್ತಾರೆ. ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಫೋನ್ ಕಾಲ್, ವಿಡಿಯೋ ಕಾಲ್ ಮಾಡಿರುವ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ.
6
+ ಈ ಬಗ್ಗೆ ತನಿಖೆ ನಡೆಸಲು ಸಿಸಿಬಿ ಮುಖ್ಯಸ್ಥರಾದ ಚಂದ್ರಗುಪ್ತ ಅವರನ್ನು ನೇಮಕ ಮಾಡಲಾಗಿದೆ. ತನಿಖೆ ನಡೆಸಿ ಅವರು ವರದಿ ನೀಡಿದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
7
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಮುಡಾ ನಿವೇಶನ ಪಡೆಯಲು ಪ್ರಭಾವ ಬೀರಿರುವ ಆರೋಪ ಕೇಳಿಬಂದಿದೆ. ಈ ಹಿನ್ನಲೆಯಲ್ಲಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಈಗಾಗಲೇ ನಾವೆಲ್ಲ ಹೇಳಿದ್ದೇವೆ. ಹೀಗಾಗಿ ಊಹಾಪೋಹಕ್ಕೆ ಅವಕಾಶವಿಲ್ಲ ಎಂದು ಅವರು ತಿಳಿಸಿದರು.
eesanje/url_46_29_3.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಪ್ರತಿಪಕ್ಷದವರ ಪ್ರಕರಣಗಳ ಪ್ರಾಸಿಕ್ಯೂಷನ್‌ಗೆ ಆಗ್ರಹಿಸಿ ಕಾಂಗ್ರೆಸ್ ರಾಜಭವನ ಚಲೋ
2
+
3
+ ಬೆಂಗಳೂರು, ಆ.31-ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವರಾದ ಜಿ.ಜನಾರ್ಧ ನರೆಡ್ಡಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕು ಎಂದು ರಾಜ್ಯಪಾಲರನ್ನು ಆಗ್ರಹಿಸಿ ಕಾಂಗ್ರೆಸ್ ಇಂದು ರಾಜಭವನ ಚಲೋ ಪ್ರತಿಭಟನೆ ನಡೆಸಿತು.
4
+ ವಿಧಾನಸೌಧ ಮತ್ತು ವಿಕಾಸಸೌಧದ ನಡುವೆ ಇರುವ ಮಹಾತಗಾಂಧೀಜಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು ಬಳಿಕ ಅಲ್ಲಿಂದ ರಾಜಭವನದವರೆಗೂ ಪಾದಯಾತ್ರೆ ನಡೆಸಿದರು. ಆನಂತರ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಈ ಸಂಬಂಧ ಮನವಿಪತ್ರವನ್ನು ಸಲ್ಲಿಸಲಾಯಿತು.
5
+ ಮಹಾತಗಾಂಧೀಜಿ ಪ್ರತಿಮೆ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ, ಸಚಿವರಾದ ಡಾ.ಜಿ.ಪರಮೇಶ್ವರ, ಹೆಚ್.ಕೆ.ಪಾಟೀಲ್, ಕೃಷ್ಣಭೈರೇಗೌಡ, ರಾಮಲಿಂಗಾರೆಡ್ಡಿ, ಜಮೀರ್ ಅಹಮದ್ ಖಾನ್,ಈಶ್ವರ್ ಖಂಡ್ರೆ, ಬೈರತಿ ಸುರೇಶ್, ಡಿ.ಸುಧಾಕರ್, ಡಾ. ಎಂ.ಸಿ.ಸುಧಾಕರ್, ಎಸ್.ಎಸ್.ಮಲ್ಲಿಕಾರ್ಜುನ್, ಡಾ.ಶರಣ ಪ್ರಕಾಶ್ ಪಾಟೀಲ್ ಸೇರಿಂದತೆ ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರು , ಮಾಜಿ ಸಂಸದರು, ಮಾಜಿ ಶಾಸಕರು ಕೆಲಕಾಲ ಪ್ರತಿಭಟನೆ ನಡೆಸಿದರು.
6
+ ಈ ಸಂದರ್ಭದಲ್ಲಿ ಧರಣಿನಿರತರು ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಪ್ರಜಾಪ್ರಭುತ್ವ ಬಜಾವೋ ಸೇರಿದಂತೆ ಹಲವು ರೀತಿಯ ಫಲಕಗಳನ್ನು ಪ್ರದರ್ಶಿಸಿದರು.ಪ್ರಜಾ ತಾಂತ್ರಿಕವಾಗಿ ಚುನಾಯಿತರಾದ ಸರ್ಕಾರಗಳನ್ನು ಅಪ್ರಜಾ ತಾಂತ್ರಿಕ ಮಾರ್ಗದಲ್ಲಿ ಅಸ್ಥಿರಗೊಳಿಸುವ ಕೇಂದ್ರ ಸರ್ಕಾರ ಮತ್ತು ರಾಜಭವನ ಷಡ್ಯಂತ್ರ ನಡೆಸುತ್ತಿವೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಯಿತು.
7
+ ಅಲ್ಲದೆ ತನಿಖೆಗೆ ಅನುಮತಿ ನೀಡುವ ವಿಚಾರದಲ್ಲಿ ರಾಜ್ಯಪಾಲರು ತಾರತಮ್ಯ ನೀತಿ ಅನುಸರಿಸುತ್ತಿದ್ದು, ಇದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವುದಾಗಿ ಕಾಂಗ್ರೆಸ್ ನಾಯಕರು ಹೇಳಿದರು.
8
+ ರಾಜ್ಯಪಾಲರು ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ತನಿಖೆ ನಡೆದು ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿರುವ ಹಲವು ಪ್ರಕರಣಗಳಿಗೆ ರಾಜ್ಯಪಾಲರು ಅನುಮತಿಯನ್ನೇ ಕೊಟ್ಟಿಲ್ಲ. ಸಾಯಿ ವೆಂಕಟೇಶ್ವರ್ ಮಿನರಲ್ಸ್ ಗೆ ಸಂಬಂಧಿಸಿದಂತೆ ಎಚ್.ಡಿ.ಕುಮಾರಸ್ವಾಮಿ ಅವರ ಮೇಲಿರುವ ಆರೋಪದ ವಿರುದ್ಧ, ಇನ್ವೆಸ್ಟ್ ಕರ್ನಾಟಕ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಮುರುಗೇಶ್ ನಿರಾಣಿ ವಿರುದ್ಧ, ಮೊಟ್ಟೆ ಖರೀದಿಯ ಟೆಂಡರ್ ಪ್ರಕರಣದಲ್ಲಿನ ಅವ್ಯವಹಾರದ ಆರೋಪದಲ್ಲಿ ಶಶಿಕಲಾ ಜೊಲ್ಲೆ ವಿರುದ್ಧ ಹಾಗೂ ಅಕ್ರಮ ಆಸ್ತಿ ಗಳಿಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಕೋರಲಾಗಿದ್ದರೂ ರಾಜ್ಯಪಾಲರು ಈತನಕ ನೀಡಿಲ್ಲ ಎಂದು ಪ್ರತಿಭಟನಾನಿರತ ಕಾಂಗ್ರೆಸ್ ನಾಯಕರು ಆರೋಪಿಸಿದರು.
9
+ ಅಭಿಯೋಜನೆಗೆ ಕೋರಿ ವರ್ಷವಾಗಿದ್ದರೂ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟಿಲ್ಲ. ಅಭಿಯೋಜನೆಗೆ ಬಾಕಿ ಇರುವ ಮನವಿಗಳ ವಿಚಾರದಲ್ಲೂ ರಾಜ್ಯಪಾಲರು ಕೂಡಲೇ ತೀರ್ಮಾನ ಕೈಗೊಳ್ಳಬೇಕು ಎಂದು ಧರಣಿ ನಿರತ ಕಾಂಗ್ರೆಸ್ ನಾಯಕರು ಆಗ್ರಹಿಸಿದರು.
10
+ ಅಭಿಯೋಜನೆ ನೀಡುವ ವಿಚಾರದಲ್ಲಿ ರಾಜ್ಯಪಾಲರು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪ ಮಾಡಿದ ಕಾಂಗ್ರೆಸ್ ನಾಯಕರು, ಕಳೆದ ವರ್ಷವೇ ಹೆಚ್.ಡಿ.ಕುಮಾರಸ್ವಾಮಿ, ಜನಾರ್ಧನರೆಡ್ಡಿ, ಮುರುಗೇಶ್ ನಿರಾಣಿ ಹಾಗೂ ಶಶಿಕಲಾ ಜೊಲ್ಲೆ ವಿರುದ್ಧ ಅಭಿಯೋಜನೆಗೆ ಅನುಮತಿ ಕೋರಿದ್ದರೂ ಇದುವರೆಗೂ ಏಕೆ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
11
+ ಮುಖ್ಯಮಂತ್ರಿ ವಿರುದ್ಧ ಅಭಿಯೋಜನೆಗೆ ನೀಡಿರುವ ಅನುಮತಿಯನ್ನು ಹಿಂದಕ್ಕೆ ಪಡೆಯುವಂತೆ ರಾಜ್ಯಪಾಲರ ಮೇಲೆ ಒಂದೆಡೆ ಒತ್ತಡ ತರುವ ತಂತ್ರವನ್ನು ಅನುಸರಿಸುತ್ತಿದ್ದ ಕಾಂಗ್ರೆಸ್ ಮತ್ತೊಂದೆಡೆ ಕಾನೂನು ಹೋರಾಟವನ್ನು ಮುಂದುವರೆಸಿದೆ.
12
+ ಈ ನಡುವೆ ರಾಜ್ಯಪಾಲರು ತಮ ವಿರುದ್ಧ ನೀಡಿರುವ ಅಭಿಯೋಜನೆ ರದ್ದುಗೊಳಿಸುವಂತೆ ಕೋರಿ ಸಿದ್ದರಾಮಯ್ಯ ಅವರು ಈಗಾಗಲೇ ಹೈಕೋರ್ಟ್ ಮೊರೆ ಹೋಗಿದ್ದಾರೆ.
eesanje/url_46_29_4.txt ADDED
@@ -0,0 +1,10 @@
 
 
 
 
 
 
 
 
 
 
 
1
+ ರಾಜ್ಯಪಾಲರು ನ್ಯಾಯ ಕೊಡುವ ಭರವಸೆ ನೀಡಿದ್ದಾರೆ : ಡಿಕೆಶಿ
2
+ :
3
+ ಬೆಂಗಳೂರು,ಆ.31-ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ನಮ ಮನವಿಯನ್ನು ಆಲಿಸಿದ್ದು, ನ್ಯಾಯ ಕೊಡುವ ಭರವಸೆ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
4
+ ಕಾಂಗ್ರೆಸ್ ನಾಯಕರ ನಿಯೋಗದೊಂದಿಗೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿಯೊಬ್ಬರ ಹಾಗೂ ಮೂವರು ಮಾಜಿ ಸಚಿವರ ವಿರುದ್ಧ ಅಭಿಯೋಜನೆ ಕೋರಿ ಬಂದಿರುವ ಮನವಿಗಳಿಗೆ ಕಾನೂನು ಬದ್ದವಾಗಿ, ನ್ಯಾಯಬದ್ಧವಾಗಿ ಸಮಾನತೆಯಿಂದ ಅನುಮತಿ ನೀಡಬೇಕೆಂದು ವಿನಂತಿಸಿದ್ದೇವೆ ಎಂದರು.
5
+ ರಾಜಭವನದಲ್ಲಿ ಅಂತಹ ಯಾವುದೇ ಪ್ರಕರಣಗಳು ಬಾಕಿ ಇಲ್ಲ. ವಿಲೇವಾರಿ ಮಾಡಿರುವುದಾಗಿ ರಾಜ್ಯಪಾಲರು ಹೇಳಿದ್ದಾರೆ. ಅವರು ಸ್ಪಷ್ಟನೆ ಕೇಳಿರಬಹುದು. ಈ ಬಗ್ಗೆ ನಾವು ಕೂಡ ಮರುಪರಿಶೀಲನೆ ಮಾಡುತ್ತೇವೆ. ರಾಜ್ಯಪಾಲರು ಅನುಮತಿ ಕೊಡಬೇಕಾಗುತ್ತದೆ. ಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
6
+ ರಾಜಭವನ ಪಕ್ಷಾತೀತವಾಗಿ ನಡೆದುಕೊಳ್ಳಬೇಕು ಎಂಬ ಉದ್ದೇಶದಿಂದ ನಮ ಕರ್ತವ್ಯವನ್ನು ನಾವು ಮಾಡಿದ್ದೇವೆ. ರಾಜ್ಯದ ಜನತೆಯ ಹಿತಕ್ಕಾಗಿ ನಾವು ಹೋರಾಟ ಮಾಡಿದ್ದೇವೆ. ನಮ ಕೋರಿಕೆಗೆ ಸಂಬಂಧಿಸಿದಂತೆ ಸ್ಪಂದಿಸುತ್ತಾರೆ ಎಂಬ ವಿಶ್ವಾಸದೆ ಎಂದರು.
7
+ ಮಾಜಿ ಮುಖ್ಯಮಂತ್ರಿಯೊಬ್ಬರ ವಿಚಾರದಲ್ಲಿ ಎಸ್ಐಟಿ ಹಾಗೂ ಲೋಕಾಯುಕ್ತದಿಂದ ತನಿಖೆಯಾಗಿದ್ದು, ಚಾರ್ಜ್ಶೀಟ್ ಸಲ್ಲಿಸಲು ಅಭಿಯೋಜನೆಗೆ ರಾಜ್ಯಪಾಲರ ಅನುಮತಿಯನ್ನು ಕೋರಲಾಗಿದೆ. ಅದೇ ರೀತಿ ಮೂವರು ಸಚಿವರ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಅಭಿಯೋಜನೆಗೆ ಅನುಮತಿ ಕೋರಲಾಗಿದೆ. ಆದರೂ ಈತನಕ ನೀಡಿಲ್ಲ ಎಂದು ಅವರು ಹೇಳಿದರು.
8
+ ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರದಲ್ಲಿ ಯಾರೊಬ್ಬರು ಅರ್ಜಿ ಕೊಟ್ಟ ತಕ್ಷಣ ಶೋಕಾಸ್ ನೀಡಿ ಅನಂತರ ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. ಈ ಅರ್ಜಿಯನ್ನು ತಿರಸ್ಕಾರ ಮಾಡುವಂತೆ ಸಚಿವ ಸಂಪುಟ ಸಭೆ ಸಲಹೆ ಮಾಡಿತ್ತು. ಅಲ್ಲದೆ ಯಾವುದೇ ತನಿಖಾ ವರದಿ ಸಿದ್ದರಾಮಯ್ಯನವರ ಪ್ರಕರಣದಲ್ಲಿ ಇರಲಿಲ್ಲ . ಈ ಪ್ರಕರಣವನ್ನು ನಾವು ರಾಜ್ಯಪಾಲರ ಬಳಿ ಪ್ರಸ್ತಾಪಿಸಿಲ್ಲ. ಏಕೆಂದರೆ ಈಗಾಗಲೇ ಈ ಪ್ರಕರಣ ನ್ಯಾಯಾಲಯದಲ್ಲಿದ್ದು, ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.
9
+ ನಮ ಉದ್ದೇಶ ರಾಜಭವನ ರಾಜಕೀಯ ಕಚೇರಿ ಆಗಬಾರದು. ಅಧಿಕಾರದಲ್ಲಿರುವ ನಾವ್ಯಾರು ಶಾಶ್ವತವಲ್ಲ. ಸಂವಿಧಾನಬದ್ದವಾಗಿ ರಚನೆಯಾಗಿರುವ ರಾಜ್ಯಪಾಲರ ಸ್ಥಾನ ನ್ಯಾಯಾಲಯದ ಸ್ಥಾನದಲ್ಲಿದೆ. ರಾಜಭವನ ಸರ್ಕಾರವನ್ನು ರಕ್ಷಿಸುವ ಕೆಲಸ ಮಾಡಬೇಕು. ವಿಧಾನಸಭೆ ಚುನಾವಣೆಯಲ್ಲಿ 136 ಶಾಸಕರನ್ನು ಗೆಲ್ಲಿಸಿ ಜನರು ನಮಗೆ ಜನಾದೇಶ ನೀಡಿದ್ದಾರೆ. ಇಂತಹ ಬಲಿಷ್ಠ ಸರ್ಕಾರವನ್ನು ಅಸ್ಥಿರಗೊಳಿಸುವ ದೊಡ್ಡ ಪ್ರಯತ್ನ ಹಾಗೂ ಸಂಚು ನಡೆಯುತ್ತಿದೆ ���ಂದು ಆರೋಪಿಸಿದರು.
10
+ ಒಕ್ಕೂಟ ವ್ಯವಸ್ಥೆಯಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ನಮ ರಾಜ್ಯ ದೇಶಕ್ಕೆ ಹಾಗೂ ಬೇರೆ ರಾಜ್ಯಗಳಿಗೂ ಸಹಾಯ ಮಾಡುತ್ತಿದೆ. ಇದನ್ನು ಸಹಿಸದೆ ಪ್ರಜಾಪ್ರಭುತ್ವ ವ್ಯವಸ್ಥೆ ಕಗ್ಗೊಲೆ ಮಾಡಬೇಕು, ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ಆ ಪ್ರಯತ್ನಕ್ಕೆ ಅವಕಾಶವಾಗಬಾರದು ಎಂದು ರಾಜ್ಯಪಾಲರ ಮನವಿ ಮಾಡಿದ್ದೇವೆ ಎಂದು ಹೇಳಿದರು.
eesanje/url_46_29_5.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಮೋದಿ 4 ತಿಂಗಳಲ್ಲಿ ಅಧಿಕಾರ ಕಳೆದುಕೊಳ್ಳುತ್ತಾರೆ, ರಾಹುಲ್ ಗಾಂಧಿಯವರಿಗೆ ಒಳ್ಳೆಯ ಕಾಲ ಬರಲಿದೆ : ಜಾರ್ಜ್
2
+ 4 , :
3
+ ಕೋಲಾರ,ಆ.31-ಈಗಾಗಲೇ ಮೋದಿಯವರ ವರ್ಚಸ್ಸು ಮುಗಿದಿದೆ. ಇನ್ನೂ ನಾಲ್ಕು ತಿಂಗಳಲ್ಲಿ ಅವರು ಅಧಿಕಾರ ಕಳೆದುಕೊಳ್ಳಲಿದ್ದು, ಮುಂದಿನ 15 ವರ್ಷ ರಾಹುಲ್ ಗಾಂಧಿ ಅವರಿಗೆ ಒಳ್ಳಯ ಕಾಲ ಬರಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದರು.
4
+ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷವು ನೂರು ಸುಳ್ಳುಗಳನ್ನು ಹೇಳಿ ಒಂದು ಸತ್ಯ ಮಾಡಲು ಹೊರಟಿದ್ದಾರೆ. ಅವರ ಪತನದ ಕಾಲ ಸನಿಹಿತವಾಗಿದೆ ಎಂದರು.
5
+ ಜನರು ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ. ಒಳ್ಳೆಯ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ ಬಿಜೆಪಿಯಂತೆ ಕೋಮುಭಾವನೆ ಹಾಗೂ ಜಾತಿ ಧರ್ಮಗಳ ಗಲಾಟೆಯ ಮೂಲಕ ರಾಜಕಾರಣ ಮಾಡಿಲ್ಲ. ಜನರ ಆಶೀರ್ವಾದವು ಕಾಂಗ್ರೆಸ್ ಪಕ್ಷಕ್ಕೆ ಇದ್ದು ಕಾರ್ಯಕರ್ತರಿಗೂ ಒಳ್ಳೆಯ ಅವಕಾಶ ಸಿಗಲಿದೆ ಎಂದರು.
6
+ ಮುಂದೆ ಸಹ ಕಾಂಗ್ರೆಸ್ ಪಕ್ಷದೊಂದಿಗೆ ಜನರ ವಿಶ್ವಾಸ ಇದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದಿದೆ ಎಂದು ಹೇಳಿದರು.
7
+ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮಾತನಾಡಿ, ದೇಶದಲ್ಲಿ ಇಂದಿರಾಗಾಂಧಿ ಹಾಗೂ ರಾಜೀವ್ ಗಾಂಧಿ ಅವರ ಜನಪರ ಕಾರ್ಯಕ್ರಮಗಳನ್ನು ನೋಡಿ ಸಾಕಷ್ಟು ನಾಯಕರು ಕಾಂಗ್ರೆಸ್ ಪಕ್ಷ ಸೇರಲು ಬಯಸುತ್ತಿದ್ದಾರೆ. ಅಧಿಕಾರವಿರಲಿ ಇಲ್ಲದಿರಲಿ ಎಲ್ಲರೂ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಎಂದರು.
8
+ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಕೋಲಾರ ಜಿಲ್ಲೆಯ ವಿದ್ಯುತ್ ಸಮಸ್ಯೆಗಳ ಪರಿಹಾರಕ್ಕೆ ಗಮನ ಹರಿಸಲು ಸಚಿವರನ್ನು ಕರೆಸಲಾಗಿದೆ ಜಿಲ್ಲೆಯಲ್ಲಿ ಹೊಸದಾಗಿ ಪವರ್ ಕೇಂದ್ರಗಳ ಸ್ಥಾಪನೆಗೆ ಒತ್ತು ನೀಡಿ ರೈತರ ಕಷ್ಟಗಳಿಗೆ ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದು ಹೇಳಿದರು.
9
+ ಶಾಸಕ ಕೆ.ವೈ ನಂಜೇಗೌಡ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ವೇಗವಾಗಿ ನಾಯಕ ಅಂತ ಗುರುತಿಸಿಕೊಂಡು ಅವಕಾಶಗಳಿಗಾಗಿ ಬರತ್ತಾರೆ ಪಕ್ಷದ ನಾಯಕನು ಎನಿಸಿಕೊಂಡವರಿಗೆ ಪಕ್ಷದ ಬಗ್ಗೆ ನಿಷ್ಠೆ ತಾಳೆ ಇರಬೇಕು ಕಾಂಗ್ರೆಸ್ ಸರಕಾರವಿದೆ ಒಳ್ಳೆಯ ದಿನಗಳು ಬಂದಿವೆ ಅವಕಾಶಗಳು ಎಲ್ಲರಿಗೂ ಸಿಗುತ್ತವೆ ಎಂದರು,
10
+ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ನಗರಸಭೆ ಅಧ್ಯಕ್ಷೆ ಲಕ್ಷೀದೇವಮ, ಉಪಾಧ್ಯಕ್ಷೆ ಸಂಗೀತಾ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಕುಡಾ ಅಧ್ಯಕ್ಷ ಮಹಮದ್ ಹನೀಫ್, ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಕೆ.ವಿ ಗೌತಮ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷೀನಾರಾಯಣ, ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸಾದ್ ಬಾಬು ಮುಂತಾದವರಿದ್ದರು.
eesanje/url_46_29_6.txt ADDED
@@ -0,0 +1,9 @@
 
 
 
 
 
 
 
 
 
 
1
+ ಶ್ರಾವಣ ಮಾಸದ ಕಡೇ ಶನಿವಾರ, ರಾಜ್ಯದೆಲ್ಲೆಡೆ ಗೋವಿಂದ ನಾಮಸ್ಮರಣೆ
2
+
3
+ ಬೆಂಗಳೂರು, ಆ.31– ಶ್ರಾವಣ ಮಾಸದ ಕಡೇ ಶನಿವಾರದ ಅಂಗವಾಗಿ ರಾಜ್ಯದೆಲ್ಲೆಡೆ ಇಂದು ಗೋವಿಂದ ನಾಮಸ್ಮರಣೆ ಮೊಳಗಿತ್ತು.ಇಂದು ಮುಂಜಾನೆಯಿಂದಲೇ ರಾಜ್ಯದ ವೆಂಕಟೇಶ್ವರ, ಶನಿಮಹಾತ, ಆಂಜನೇಯ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಪೂಜೆ ಪುನಸ್ಕಾರಗಳು ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
4
+ ಶನಿಶ್ಚರಸ್ವಾಮಿಗೆ ಭಕ್ತರು ಅತ್ಯಂತ ನಿಷ್ಠೆ ಹಾಗೂ ನಿಯಮದಿಂದ ಪೂಜೆ ಸಲ್ಲಿಸುವ ಪದ್ದತಿ ಹಿಂದಿನಿಂದಲೂ ರೂಢಿಸಿಕೊಂಡು ಬಂದಿದ್ದು, ಇಂದು ದೇವಾಲಯಗಳಿಗೆ ತೆರಳಿ ಶ್ರದ್ಧಾ ಭಕ್ತಿಯಿಂದ ಪೂಜೆ ಸಲ್ಲಿಸಿದರು.
5
+ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಧುರೆಯ ಶನಿಮಹಾತ ದೇವಾಲಯದಲ್ಲಿ ವಿವಿಧ ಬಗೆಯ ಪುಷ್ಪಗಳಿಂದ ದೇವಾಲಯಗಳನ್ನು ಶೃಂಗರಿಸಿದ್ದು, ಬೆಂಗಳೂರು, ತುಮಕೂರು, ದೊಡ್ಡಬಳ್ಳಾಪುರ, ನೆಲಮಂಗಲ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದರು.
6
+ ಅದೇ ರೀತಿ ಬೆಂಗಳೂರಿನ ಮಾಗಡಿ ರಸ್ತೆಯ ಟೋಲ್ಗೆಟ್ ವೃತ್ತದ ಸಮೀಪವಿರುವ ಶ್ರೀ ಶನೇಶ್ವರ ದೇವಾಲಯದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ನೆರವೇರಿದವು. ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
7
+ ಚಿಕ್ಕಬಳ್ಳಾಪುರ ನಗರದ ಕಂದಾವರ ಪೇಟೆಯಲ್ಲಿರುವ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ದೇವರಿಗೆ ಮುತ್ತಿನ ಅಲಂಕಾರ ಹಾಗೂ ವಿವಿಧ ಬಗೆಯ ಹೂಗಳಿಂದ ಶೃಂಗರಿಸಲಾಗಿತ್ತು.ಇಂದು ಬೆಳಗ್ಗೆಯಿಂದಲೇ ಭಕ್ತರು ಸಾಲುಗಟ್ಟಿ ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆದು ಪುನೀತರಾದರು. ಸರದಿ ಸಾಲಿನಲ್ಲೇ ನಿಂತ ಭಕ್ತರು ಗೋವಿಂದ ಗೋವಿಂದ ಎಂಬ ನಾಮಸರಣೆಯೊಂದಿಗೆ ಪೂಜೆ ಸಲ್ಲಿಸಿ ಭಕ್ತಿಪರಕಾಷ್ಠೆ ಮೆರೆದರು.
8
+ ಮಾಲೂರು ತಾಲ್ಲೂಕಿನ ಚಿಕ್ಕತಿರುಪತಿ ಪ್ರಸನ್ನ ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ಭಕ್ತ ಸಾಗರವೇ ಹರಿದುಬಂದಿದ್ದು, ಮುಂಜಾನೆ 4 ಗಂಟೆಯಿಂದಲೇ ಸರದಿ ಸಾಲಿನಲ್ಲಿ ಆಗಮಿಸಿ ಇಂದು ವೆಂಕಟರಮಣನ ದರ್ಶನ ಪಡೆದು ಕೃತಾರ್ಥರಾದರು.
9
+ ಶ್ರಾವಣ ಮಾಸದಲ್ಲಿ ವೆಂಕಟರಮಣನ ದರ್ಶನ ಪಡೆದು ಪೂಜೆ ಸಲ್ಲಿಸಿದರೆ ಇಷ್ಟಾರ್ಥಗಳು ಈಡೇರುತ್ತವೆ ಎಂಬುವುದು ಭಕ್ತರ ನಂಬಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ವಿವಿಧ ದೇವಾಲಯಗಳಿಗೆ ಭಕ್ತರು ಆಗಮಿಸಿ ಹರಕೆಗಳನ್ನು ಸಲ್ಲಿಸಿದ್ದಾರೆ.
eesanje/url_46_29_7.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ : ಸಿಎಂ ಸಿದ್ದರಾಮಯ್ಯನವರ ಮುಡಾ ಹಗರಣದಲ್ಲಿ ರಾಷ್ಟ್ರಪತಿ ಎಂಟ್ರಿ
2
+ '
3
+ ಬೆಂಗಳೂರು,ಆ.31-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಅಭಿಯೋಜನೆ ಹಾಗೂ ತನಿಖೆಗೆ ಪೂರ್ವಾನುಮತಿ ನೀಡಿರುವ ರಾಜ್ಯಪಾಲರ ಕ್ರಮದ ವಿರುದ್ಧ ದೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸ್ಪಂದಿಸಿದ್ದು ಸೂಕ್ತ ಕ್ರಮ ಕೈಗೊಂಡು ಮಾಹಿತಿ ನೀಡುವಂತೆ ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದಾರೆ.
4
+ ಮುಡಾ ಪ್ರಕರಣದಲ್ಲಿ ಟಿ.ಜೆ.ಅಬ್ರಹಾಂ, ಪ್ರದೀಪ್‌ ಕುಮಾರ್‌, ಸ್ನೇಹಮಯಿ ಕೃಷ್ಣ ಅವರುಗಳು ನೀಡಿದ್ದ ದೂರನ್ನು ಪರಿಗಣಿಸಿ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆ ಹಾಗೂ ತನಿಖೆಗೆ ಪೂರ್ವಾನುಮತಿ ನೀಡಿದ್ದಾರೆ.
5
+ ಇದನ್ನು ವಿರೋಧಿಸಿ ರಾಜ್ಯಪಾಲರ ವಿರುದ್ಧ ಆ.19 ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆಗಳು ನಡೆದಿದ್ದವು. ಅಂದು ಕಾಂಗ್ರೆಸ್‌‍ ಪಕ್ಷದ ಮಾಧ್ಯಮ ಮತ್ತು ಸಂವಹನ ಘಟಕದ ಅಧ್ಯಕ್ಷ ರಮೇಶ್‌ಬಾಬು ರಾಷ್ಟ್ರಪತಿಯವರಿಗೆ ಇ-ಮೇಲ್‌ ಮೂಲಕ ದೂರು ನೀಡಿದ್ದರು.
6
+ ಇದಕ್ಕೆ ಪ್ರತಿಯಾಗಿ ರಾಷ್ಟ್ರಪತಿಯವರ ಅಧೀನ ಕಾರ್ಯದರ್ಶಿ ಪಿ.ಸಿ.ಮೀನಾ ಅವರು ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ದೂರನ್ನು ರವಾನಿಸಿದ್ದು, ರಾಷ್ಟ್ರಪತಿಯವರಿಗೆ ಸಲ್ಲಿಕೆಯಾಗಿರುವ ಈ ಅರ್ಜಿಯ ಮೇಲೆ ಕ್ರಮ ತೆಗೆದುಕೊಂಡು ಅರ್ಜಿದಾರರಿಗೆ ನೇರವಾಗಿ ಮಾಹಿತಿ ನೀಡಿ ಎಂದು ಸೂಚನೆ ನೀಡಿದ್ದಾರೆ.
7
+ ರಮೇಶ್‌ಬಾಬು ತಮ ದೂರಿನಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರ ಕ್ರಮವನ್ನು ಅಸಂವಿಧಾನಿಕ ಎಂದು ವಿವರಿಸಿದರು. ಜನರಿಂದ ಚುನಾಯಿತವಾಗಿರುವ ರಾಜ್ಯದ ಕಾಂಗ್ರೆಸ್‌‍ ಸರ್ಕಾರದಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಮುನ್ನಡೆಸುತ್ತಿದ್ದಾರೆ. ಹಲವಾರು ಜನಪರವಾದ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ.
8
+ ಇಂತಹ ಸಂದರ್ಭದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ರವರು ರಾಜಕೀಯ ಪ್ರೇರಿತವಾಗಿ ಪ್ರಜಾಸತ್ತಾತಕ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಗಾಳಿಗೆ ತೂರಿ ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. ಇದು ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರವಾಗಿದ್ದು, ಜನಾದೇಶವನ್ನು ಅಪಮಾನ ಮಾಡಿದಂತೆ ಎಂದು ದೂರಿದರು.
9
+ ಪ್ರಮುಖ ಅಂಶಗಳ ಪೈಕಿ ರಾಜ್ಯಪಾಲರ ನಿರ್ಧಾರ ಕೇಂದ್ರ ಸರ್ಕಾರದ ರಾಜಕೀಯ ಹಿತಾಸಕ್ತಿಯಿಂದ ಪ್ರಭಾವಿತವಾಗಿದೆ. ಎನ್‌ಡಿಎ ಮಿತ್ರಪಕ್ಷಗಳಾಗಿರುವ ಜೆಡಿಎಸ್‌‍ ಮತ್ತು ಬಿಜೆಪಿ ರಾಜ್ಯಪಾಲರ ಕಚೇರಿಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ರಾಜಕೀಯ ದ್ವೇಷಕ್ಕಾಗಿ ಜನಪರವಾದ ಯೋಜನೆಗಳಿಗೆ ತೊಂದರೆಯುಂಟು ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988 ರ ಸೆಕ್ಷನ್‌ 17ಎ ಪ್ರಕಾರ ಅಭಿಯೋಜನೆಗೆ ಅನುಮತಿ ನೀಡಬೇಕಾದರೆ ಅನುಸರ��ಸಬೇಕಾದ ಪ್ರಮಾಣಿತ ಕಾರ್ಯನಿರ್ವಹಣಾ ಪ್ರಕ್ರಿಯೆ(ಎಸ್‌‍ಓಪಿ)ಯನ್ನು ಕೇಂದ್ರ ಸರ್ಕಾರ ನಿರ್ಣಯಿಸಿದೆ. ಅದನ್ನು ಸಿದ್ದರಾಮಯ್ಯ ಅವರ ಪ್ರಕರಣದಲ್ಲಿ ರಾಜ್ಯಪಾಲರು ಉಲ್ಲಂಘಿಸಿದ್ದಾರೆ ಎಂದು ದೂರಿದರು.
10
+ ರಾಜ್ಯಪಾಲರಿಗೆ ಸಲ್ಲಿಕೆಯಾಗಿದ್ದ ದೂರುಗಳಿಗೆ ಸವಿಸ್ತಾರವಾದ ವಿವರಣೆಗಳನ್ನು ಹಾಗೂ ಸ್ಪಷ್ಟನೆಗಳನ್ನು ನೀಡಲಾಗಿತ್ತು. ಅದರ ಹೊರತಾಗಿಯೂ ರಾಜ್ಯಪಾಲರು ಶೋಕಾಸ್‌‍ ನೋಟಿಸ್‌‍ ನೀಡಿದ್ದರು. ನಂತರ ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. ಇದು ಸಂವಿಧಾನದ ಬಾಧ್ಯತೆಯನ್ನು ಉಲ್ಲಂಘಿಸಿದಂತಾಗಿದ್ದು, ರಾಜ್ಯಪಾಲರ ನಿಸ್ಪಕ್ಷಪಾತ ನಡವಳಿಕೆಗೆ ಅಪಚಾರವಾಗಿದೆ ಎಂದು ಕಿಡಿಕಾರಿದರು.
11
+ ಮುಖ್ಯಮಂತ್ರಿಯವರ ವಿರುದ್ಧ ದೂರುಗಳು ಆಧಾರರಹಿತ ಎಂದು ರಾಜ್ಯಪಾಲರಿಗೆ ಮನವರಿಕೆಯಾಗಿದ್ದರೂ ಕೂಡ ರಾಜಕೀಯ ಆಧಾರಿತ ದ್ವೇಷದ ಪ್ರಭಾವದಿಂದ ಪೂರ್ವಾನುಮತಿ ನೀಡಿದ್ದಾರೆ.
12
+ ಸಿದ್ದರಾಮಯ್ಯ ಅವರ ವಿರುದ್ಧ ತುರ್ತು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದರೆ ಇತರೆ ರಾಜಕೀಯ ನಾಯಕರಾದ ಎಚ್‌.ಡಿ.ಕುಮಾರಸ್ವಾಮಿ, ಮುರುಗೇಶ್‌ನಿರಾಣಿ, ಶಶಿಕಲಾ ಜೊಲ್ಲೆ, ಅವರ ವಿರುದ್ಧ ತನಿಖೆ ನಡೆದು ಅಭಿಯೋಜನೆಗೆ ಪೂರ್ವಾನುಮತಿ ಕೇಳಿದ್ದರೂ ರಾಜ್ಯಪಾಲರು ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.
13
+ ಕಾಂಗ್ರೆಸ್‌‍ ಪಕ್ಷಕ್ಕೆ ಜನ ಮತ ಹಾಕಿರುವುದನ್ನು ಮತ್ತೆ ಅದರ ನಂತರ ರಚನೆಯಾದ ಸರ್ಕಾರ ಜಾರಿಗೊಳಿಸಿದ ಪಂಚಖಾತ್ರಿ ಯೋಜನೆಗಳನ್ನು ಬಿಜೆಪಿಯಿಂದ ಸಹಿಸಿಕೊಳ್ಳಲಾಗುತ್ತಿಲ್ಲ. ಅದಕ್ಕಾಗಿ ಅನ್ಯಮಾರ್ಗದ ಮೂಲಕ ಪ್ರಜಾಪ್ರಭುತ್ವದ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಲಾಗಿದೆ. ಈ ಹಿಂದೆ ಉತ್ತರಕಾಂಡ್‌, ದೆಹಲಿ ಸರ್ಕಾರಗಳನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡಲಾಗಿತ್ತು ಎಂದು ದೂರಿದರು.
14
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನೀಡಲಾಗಿರುವ ಅಭಿಯೋಜನೆ ಪೂರ್ವಾನುಮತಿಯನ್ನು ಹಿಂಪಡೆಯಬೇಕು. ರಾಜಭವನವನ್ನು ಸಾಂವಿಧಾನಿಕ ಹಾಗೂ ನಿಸ್ಪಕ್ಷಪಾತವಾಗಿ ವರ್ತಿಸುವ ಕಚೇರಿಯನ್ನಾಗಿ ಖಾತ್ರಿ ಪಡಿಸಬೇಕು. ಒಕ್ಕೂಟ ವ್ಯವಸ್ಥೆ ಹಾಗೂ ಸಾಂವಿಧಾನಿಕ ಮೌಲ್ಯಗಳನ್ನು ರಚಿಸಬೇಕು. ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳಿಗೆ ಕಡಿವಾಣ ಹಾಕಬೇಕು ಎಂದು ರಮೇಶ್‌ಬಾಬು ದೂರಿನಲ್ಲಿ ವಿವರಿಸಿದರು.
15
+ ಈ ದೂರನ್ನು ರಾಷ್ಟ್ರಪತಿಯವರು ಮುಖ್ಯ ಕಾರ್ಯದರ್ಶಿಯವರಿಗೆ ಕಳುಹಿಸಿಕೊಟ್ಟಿದ್ದು, ಸೂಕ್ತ ಕ್ರಮ ಕೈಗೊಂಡು ಅರ್ಜಿದಾರರಿಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.
eesanje/url_46_29_8.txt ADDED
@@ -0,0 +1,7 @@
 
 
 
 
 
 
 
 
1
+ ಬಣ್ಣ ರಹಿತ ಮಣ್ಣಿನ ಗಣೇಶ ಮೂರ್ತಿ ಪೂಜಿಸುವಂತೆ ಸಚಿವ ಈಶ್ವರ ಖಂಡ್ರೆ ಮನವಿ
2
+
3
+ ಬೆಂಗಳೂರು,ಆ.31-ಗಣೇಶ ಪರಿಸರ ಮತ್ತು ಪ್ರಕೃತಿಯಿಂದಲೇ ಹುಟ್ಟಿದ ದೇವರಾಗಿದ್ದು, ಗಣಪತಿಯ ಪೂಜಿಸುವ ನಾವು ಪ್ರಕೃತಿ, ಪರಿಸರವನ್ನೂ ಉಳಿಸಬೇಕು, ಈ ಬಾರಿ ಬಣ್ಣ ರಹಿತ ಮಣ್ಣಿನ ವಿನಾಯಕ ಮೂರ್ತಿಯನ್ನು ಮಾತ್ರ ಪೂಜಿಸಿ ಎಂದು ಅರಣ್ಯ, ಜೀವಿಶಾಸ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನಾಡಿನ ಜನತೆಗೆ ಮನವಿ ಮಾಡಿದ್ದಾರೆ.
4
+ ಈ ವರ್ಷ ದೇಶಾದ್ಯಂತ ಸುರಿದ ಧಾರಾಕಾರ ಮಳೆಯಿಂದ ಹಲವು ಕಡೆ ಭೂ ಕುಸಿತ ಉಂಟಾಗಿ ಅನಾಹುತಗಳು ಸಂಭವಿಸಿವೆ. ಹೀಗಾಗಿ ಪ್ರಕೃತಿ ಪರಿಸರ ಸಂರಕ್ಷಣೆಯ ಹೊಣೆ ಹಿಂದೆಂದಿಗಿಂತಲೂ ಈಗ ಹೆಚ್ಚಾಗಿದೆ. ಈ ಬಾರಿಯ ಗಣೇಶೋತ್ಸವವನ್ನು ಪರಿಸರ ಸ್ನೇಹಿ ಮಾಡೋಣ. ಪ್ರಕೃತಿ ವಿಕೋಪ ನಿವಾರಕ – ನಮ ಪರಿಸರ ವಿನಾಯಕನನ್ನು – ಬಣ್ಣ ರಹಿತ ಮಣ್ಣಿನ ಮೂರ್ತಿಗಳ ರೂಪದಲ್ಲಿ ಪೂಜಿಸೋಣ ಎಂದು ಅವರು ಸಂದೇಶ ನೀಡಿದ್ದಾರೆ.
5
+ ಸಂಕಲ್ಪ:ಜಲಚರಗಳ ಸಾವಿಗೆ ಕಾರಣವಾಗುವ, ಜಲ ಮೂಲಗಳನ್ನು ಕಲುಷಿತಗೊಳಿಸುವ ರಾಸಾಯನಿಕ ಬಣ್ಣ ಲೇಪಿತ ಪಿಓಪಿ ಗಣೇಶ ಮೂರ್ತಿ ಪೂಜೆ ಮಾಡದೆ, ಸಣ್ಣ ಮಣ್ಣಿನ ಪರಿಸರ ಸ್ನೇಹಿ ಗಣಪನನ್ನೇ ತಂದು ಪೂಜಿಸಿ, ಮನೆಯಲ್ಲೇ ವಿಸರ್ಜಿಸಿ ಆ ನೀರನ್ನು ಮರ -ಗಿಡಗಳಿಗೆ ಹಾಕುತ್ತೇನೆ ಎಂದು ಸಂಕಲ್ಪ ಮಾಡೋಣ ಎಂದು ಅವರು ವಿನಂತಿಸಿದ್ದಾರೆ.
6
+ ಹಬ್ಬದ ಸಂಭ್ರಮದಲ್ಲಿ, ಗಣೇಶನ ಮೆರವಣಿಗೆಯ ವೇಳೆ ಹಸಿರು ಪಟಾಕಿಯನ್ನಷ್ಟೇ ಹಚ್ಚಬೇಕು. ಶಬ್ದ ಮಾಲಿನ್ಯ ಆಗದಂತೆ ಧ್ವನಿವರ್ಧಕ ಬಳಸಬೇಕು ಜೊತೆಗೆ ಜಲ ಮಾಲಿನ್ಯ, ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಬೇಕು ಎಂದು ಅವರು ನಾಡಿನ ಜನತೆಗೆ ಮನವಿ ಮಾಡಿದ್ದಾರೆ.
7
+ ಮುಚ್ಚಳಿಕೆ :ಎಲ್ಲ ಗಣೇಶೋತ್ಸವ ಸಮಿತಿಗಳಿಂದ ಮಣ್ಣಿನ ಗಣೇಶ ಮೂರ್ತಿಯನ್ನು ಮಾತ್ರ ವಿಸರ್ಜನೆ ಮಾಡುವುದಾಗಿ ಮುಚ್ಚಳಿಕೆ ಬರೆಸಿಕೊಂಡು ಪೆಂಡಾಲ್‌ ಗೆ ಅನುಮತಿ ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
eesanje/url_46_29_9.txt ADDED
@@ -0,0 +1,5 @@
 
 
 
 
 
 
1
+ ಹಬ್ಬಕ್ಕೆ ಖಾಸಗಿ ಬಸ್‌ಗಳು ಪ್ರಯಾಣ ದರ ಹೆಚ್ಚಿಸಿದರೆ ಪರವಾನಗಿ ರದ್ದು :ರಾಮಲಿಂಗಾರೆಡ್ಡಿ
2
+ ಬೆಂಗಳೂರು,ಆ.30- ಗೌರಿ-ಗಣೇಶ ಸೇರಿದಂತೆ ಇತರ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣದರವನ್ನು ಹೆಚ್ಚಳ ಮಾಡಿದರೆ ಖಾಸಗಿ ಬಸ್‌‍ಗಳ ರಹದಾರಿಯನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ. ಈ ಬಗ್ಗೆ ಇಲಾಖಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಮಾರ್ಗದರ್ಶನ ನೀಡಿರುವ ಸಚಿವರು, ಖಾಸಗಿ ಬಸ್‌‍ಗಳ ಪ್ರಯಾಣದರದಲ್ಲಿ ನಿಗಾ ವಹಿಸುವಂತೆ ತಾಕೀತು ಮಾಡಿದ್ದಾರೆ.
3
+ ಸಾಮಾನ್ಯವಾಗಿ ಖಾಸಗಿ ಬಸ್‌‍ಗಳು ಗೌರಿ-ಗಣೇಶ, ಯುಗಾದಿ, ನಾಗರಪಂಚಮಿ, ದೀಪಾವಳಿ, ಆಯುಧಪೂಜೆಯಂತಹ ಸಂದರ್ಭಗಳಲ್ಲಿಬಸ್‌‍ ಪ್ರಯಾಣ ದರಗಳನ್ನು ಮೂರರಿಂದ ನಾಲ್ಕು ಪಟ್ಟು ಏರಿಕೆ ಮಾಡಿ ಹಗಲು ದರೋಡೆಗಿಳಿಯುತ್ತವೆ. 15 ದಿನಕ್ಕೂ ಮೊದಲೇ ಟಿಕೆಟ್‌ ಬುಕ್ಕಿಂಗ್‌ ದರ ಏಕಾಏಕಿ ಹೆಚ್ಚಳವಾಗಿರುತ್ತದೆ. ಉತ್ತರ ಕರ್ನಾಟಕ, ಕರಾವಳಿ ಸೇರಿದಂತೆ ದೂರದೂರುಗಳಿಗೆ ಪ್ರಯಾಣಿಸುವವರು ಖಾಸಗಿ ಬಸ್‌‍ಗಳ ಹಗಲು ದರೋಡೆಯಿಂದ ಚಡಪಡಿಕೆಗೊಳಗಾಗುವುದು ಸಾಮಾನ್ಯ.
4
+ ಈ ಹಿನ್ನೆಲೆಯಲ್ಲಿ ಈ ಬಾರಿ ಎಚ್ಚೆತ್ತುಕೊಂಡಿರುವ ರಾಜ್ಯಸರ್ಕಾರ ವಾರದ ಮೊದಲೇ ಕಟ್ಟುನಿಟ್ಟಿನ ಸೂಚನೆಗಳನ್ನು ರವಾನಿಸಿದೆ.ಈ ಹಿಂದಿನ ಸಾಮಾನ್ಯ ದರಕ್ಕಿಂತಲೂ ಅಸಾಮಾನ್ಯವಾಗಿ ಪ್ರಯಾಣದರ ಹೆಚ್ಚಳವಾದರೆ ಸದರಿ ಖಾಸಗಿ ಬಸ್‌‍ಗಳ ಮಾಲಿಕರಿಗೆ ನೋಟೀಸ್‌‍ ಕೊಟ್ಟು ವಿಚಾರಣೆ ನಡೆಸುವಂತೆ ದುರುದ್ದೇಶಪೂರಿತವಾಗಿ ಅಥವಾ ನಿಯಮ ಮೀರಿ ಲಾಭದ ಆಸೆಯಿಂದ ಪ್ರಯಾಣ ದರ ಹೆಚ್ಚಳ ಮಾಡಿದರೆ ಅಂತಹ ಬಸ್‌‍ಗಳ ರಹದಾರಿ(ಪರ್ಮಿಟ್‌)ಯನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
5
+ ಖಾಸಗಿ ಬಸ್‌‍ಗಳ ಟಿಕೆಟ್‌ ಬುಕ್ಕಿಂಗ್‌, ಆನ್‌ಲೈನ್‌ ಬುಕ್ಕಿಂಗ್‌ ಮೇಲೆ ನಿಗಾ ವಹಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
eesanje/url_46_2_1.txt ADDED
@@ -0,0 +1,9 @@
 
 
 
 
 
 
 
 
 
 
1
+ ಮುಡಾ ಹಗರಣದಿಂದ ಜನರ ಗಮನ ಬೇರೆಡೆ ಸೆಳೆಯಲು ಸಾವರ್ಕರ್‌ ಬಳಕೆ : ವಿಜಯೇಂದ್ರ
2
+ ' :
3
+ ಬೆಂಗಳೂರು, ಅ.4-ಮುಡಾ ಹಗರಣದಿಂದ ಸಾರ್ವಜನಿಕರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್‌‍ ಸರ್ಕಾರ ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್‌ ಸಾವರ್ಕರ್ ಅವರನ್ನು ಗುರಿಯಾಗಿಸಿಕೊಂಡಿದೆ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದ್ದಾರೆ.
4
+ ಕರ್ನಾಟಕ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಸಾವರ್ಕರ್‌ ಮಾಂಸ ತಿನ್ನುತ್ತಿದ್ದರು ಮತ್ತು ಗೋಹತ್ಯೆಯನ್ನು ವಿರೋಧಿಸಲಿಲ್ಲ ಎಂದು ಹೇಳಿದ್ದರು. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.
5
+ ಇದು ನಮ ರಾಷ್ಟ್ರನಾಯಕರಿಗೆ ಮಾಡಿದ ದ್ರೋಹ! ಅಧಿಕಾರದ ದುರಾ ಸೆಯಿಂದ ನಡೆಸುತ್ತಿರುವ ಕಾಂಗ್ರೆಸ್‌‍ ಸರ್ಕಾರವು ಭಾರತದ ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಾಗಿಟ್ಟ ದೇಶಭಕ್ತ ವೀರ್‌ ಸಾವರ್ಕರ್‌ ಅವರನ್ನು ನಾಚಿಕೆಗೇಡಿನ ರೀತಿಯಲ್ಲಿ ಗುರಿಯಾಗಿಸಿದೆ – ಕೇವಲ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು.
6
+ ಮುಡಾಸ್ಕಾಮ್‌ನಲ್ಲಿನ ಅವರ ಭ್ರಷ್ಟಾಚಾರದಿಂದ ಸಾರ್ವಜನಿಕರನ್ನು ದಾರಿತಪ್ಪಿಸುವ ಈ ಹತಾಶ ತಂತ್ರವು ಸ್ವೀಕಾರಾರ್ಹವಲ್ಲ. ಕಾಂಗ್ರೆಸ್‌‍ನ ಭ್ರಷ್ಟ ನಾಯಕರನ್ನು ಹೊಣೆಗಾರರನ್ನಾಗಿ ಮಾಡುವವರೆಗೂ ಬಿಜೆಪಿ ಹೋರಾಟ ನಡೆಸಲಿದೆ ಎಂದು ಹೇಳಿದರು.ಇದು ಕೇವಲ ಸಾವರ್ಕರ್‌ ಮೇಲಿನ ದಾಳಿಯಲ್ಲ, ಆದರೆ ನಮ ರಾಷ್ಟ್ರದ ತ್ಯಾಗವನ್ನು ಗೌರವಿಸುವ ಪ್ರತಿಯೊಬ್ಬ ಭಾರತೀಯನಿಗೆ ಅವಮಾನವಾಗಿದೆ.
7
+ ವೀರ್‌ ಸಾವರ್ಕರ್‌ ಸ್ವತಃ ಹೇಳಿದಂತೆ, ಸ್ವಾತಂತ್ರ್ಯವನ್ನು ಎಂದಿಗೂ ನೀಡಲಾಗುವುದಿಲ್ಲ, ಅದನ್ನು ಯಾವಾಗಲೂ ತೆಗೆದುಕೊಳ್ಳಲಾಗುತ್ತದೆ. ಯಾವುದೇ ಸುಳ್ಳು ಅಥವಾ ಗೊಂದಲಗಳು ಸತ್ಯವನ್ನು ಮರೆಮಾಚುವುದಿಲ್ಲ ಮತ್ತು ನಿಮ ಭ್ರಷ್ಟ ನಾಯಕರನ್ನು ಹೊಣೆಗಾರರನ್ನಾಗಿ ಮಾಡುವವರೆಗೆ ನಾವು ಹೋರಾಡುತ್ತೇವೆ ಎಂದು ಹೇಳಿದರು.
8
+ ಚಿತ್ಪಾವನ ಬ್ರಾಹಣರಾಗಿದ್ದ ಸಾವರ್ಕರ್‌ ಮಾಂಸಾಹಾರ ಸೇವಿಸುತ್ತಿದ್ದರು, ಮಾಂಸಾಹಾರ ಸೇವಿಸುತ್ತಿದ್ದರು ಮತ್ತು ಗೋಹತ್ಯೆಗೆ ವಿರೋಧವಿರಲಿಲ್ಲ, ಅವರು ಒಂದು ರೀತಿಯಲ್ಲಿ ಆಧುನಿಕರಾಗಿದ್ದರು ಎಂದು ಸಚಿವ ಗುಂಡೂರಾವ್‌ ಹೇಳಿದ್ದರು.
9
+ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಬಿಎಂ ಮತ್ತು ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ಸೆ.27ರಂದು ಎಫ್‌ಐಆರ್‌ ದಾಖಲಿಸಿದ್ದಾರೆ.ಮುಡಾದಿಂದ ಅವರ ಪತ್ನಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ವಿರುದ್ಧ ಪೊಲೀಸರು ಎಫ್‌ಐಆರ್‌ಗೆ ಸಮಾನವಾದ ಎನ್‌ಫೋರ್ಸ್‌ಮೆಂಟ್‌ ಕೇಸ್‌‍ ಮಾಹಿತಿ ವರದಿಯನ್ನು (ಇಸಿಐಆರ್‌) ಇಡಿ ದಾಖಲಿಸಿದ್ದಾರೆ.
eesanje/url_46_2_10.txt ADDED
@@ -0,0 +1,7 @@
 
 
 
 
 
 
 
 
1
+ ದೋಸ್ತಿ ನಾಯಕರಿಗೆ ಜಿಟಿಡಿ ಟಾಂಗ್
2
+
3
+ ಮೈಸೂರು,ಅ.3– ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ, ಜೆಡಿಎಸ್‌‍ ದೋಸ್ತಿ ನಾಯಕರಿಗೆ ಶಾಸಕ ಹಾಗೂ ಜೆಡಿಎಸ್‌‍ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಟಾಂಗ್‌ ಕೊಟ್ಟಿದ್ದಾರೆ.
4
+ ಮೈಸೂರು ದಸರಾ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಶಾಸಕ ಜಿ.ಟಿ ದೇವೇಗೌಡ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ.ರಾಜೀನಾಮೆ ಕೊಡೋದೆ. ಆದರೆ ಎಫ್‌ಐಆರ್‌ ಆಗಿರೋ ಎಲ್ಲಾ ನಾಯಕರು ಕೊಡಲಿ. ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿಯೂ ಕೊಡಲಿ ಎಂದು ಹೇಳುವ ಮೂಲಕ ಸ್ವಪಕ್ಷದ ನಾಯಕ ಕುಮಾರಸ್ವಾಮಿಗೆ ಟಾಂಗ್‌ ಕೊಟ್ಟರು.
5
+ ಸಿಎಂ ಪರ ಬ್ಯಾಟ್‌ ಬೀಸಿದ ಜೆಡಿಎಸ್‌‍ ಶಾಸಕ ಜಿ.ಟಿ.ದೇವೇಗೌಡ, ಎಲ್ಲಾ ಗಾಜಿನ ಮನೆಯಲ್ಲಿ ಕೂತಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲು ನ್ಯಾಯಾಲಯ ಹೇಳಿದೆಯಾ? ಕೇಂದ್ರದಲ್ಲಿ ಮಂತ್ರಿ ಆದವರಿಗೆ ಜವಾಬ್ದಾರಿ ಬೇಡವಾ? ಕುಮಾರಸ್ವಾಮಿಗೆ ರಾಜೀನಾಮೆ ಕೊಡು ಅಂದರೆ ಕೊಡುತ್ತಾರಾ? 136 ಸ್ಥಾನ ಗೆದ್ದು ಸಿಎಂ ಆಗಿರುವ ಸಿದ್ದರಾಮಯ್ಯ ರಾಜೀನಾಮೆ ಕೊಡಲು ಆಗುತ್ತಾ ? ರಾಜೀನಾಮೆ ಕೊಡಿ ರಾಜೀನಾಮೆ ಕೊಡಿ ಅಂದರೆ ಕೊಡುವುದಕ್ಕೆ ಆಗುತ್ತಾ? ಒಂದು ಅತ್ಯಾಚಾರ, ಕೊಲೆ ಮೂರು ತಿಂಗಳು ಮಾಧ್ಯಮ ತೋರಿಸುತ್ತೆ.
6
+ ಒಂದು ಎಫ್‌ಐಆರ್‌ ನಾ ಎಷ್ಟು ದಿನ ತೋರಿಸುತ್ತಿರಾ? ಯಾರ ಯಾರ ಮೇಲೆ ಎಫ್‌ ಐ ಆರ್‌ ಆಗಿದೆ ಅವರೆಲ್ಲರೂ ರಾಜೀನಾಮೆ ಕೊಡಿ ಎಂದು ಸವಾಲು ಹಾಕಿದರು.
7
+ ಶಾಸಕ ಜಿ.ಟಿ.ದೇವೇಗೌಡ ಭಾಷಣಕ್ಕೆ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌‍ ಸಚಿವರು ಶಾಸಕರು ಫಿದಾ ಆದರು. ಭಾಷಣ ಮುಗಿಸಿ ಬಂದ ಜಿ.ಟಿ.ದೇವೇಗೌಡರಿಗೆ ಶಾಸಕರಾದ ರಮೇಶ್‌ ಬಂಡೀಸಿದ್ದೇಗೌಡ ತನ್ವೀರ್‌ ಸೇಠ್‌ ಎದ್ದು ನಿಂತು ಗೌರವ ಸಲ್ಲಿಸಿದರು. ಬಳಿಕ ಸಚಿವ ಹೆಚ್‌.ಕೆ.ಪಾಟೀಲ್‌, ವೆಂಕಟೇಶ್‌ ಹಸ್ತಲಾಘವ ಮಾಡಿ ಅಭಿನಂದನೆ ಸಲ್ಲಿಸಿದರು.
eesanje/url_46_2_11.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಕರ್ನಾಟಕದಲ್ಲಿ ಪಾಕಿಗಳು : ದಾವಣಗೆರೆ ಅಲ್ತಾಫ್‌ ಜೊತೆ ಮದುವೆಯಾಗಿದ್ದ ಪಾಕ್‌ ಮಹಿಳೆ
2
+
3
+ ದಾವಣಗೆರೆ,ಅ.3-ಬೆಂಗಳೂರಿನಲ್ಲಿ ಪಾಕ್‌ ಪ್ರಜೆ ಸೇರಿ ಇಬ್ಬರ ಬಂಧನದ ಬೆನ್ನಲ್ಲೇ ಪಾಕಿಸ್ತಾನಿ ಮಹಿಳೆಯೊಬ್ಬರು ರಾಜ್ಯದ ದಾವಣಗೆರೆಯ ವ್ಯಕ್ತಿಯನ್ನು ಮದುವೆ ಆಗಿರುವುದು ಬೆಳಕಿಗೆ ಬಂದಿದ್ದು ಚೆನ್ನೈನಲ್ಲಿ ವಲಸೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪಾಕಿಸ್ತಾನ ಮೂಲದ ಮಹಿಳೆ ಫಾತಿಮಾ ದಾವಣಗೆರೆಯ ಅಲ್ತಾಫ್‌ ಎಂಬಾತನನ್ನು ಕಳೆದ 4 ವರ್ಷಗಳ ಹಿಂದೆ ವಿವಾಹವಾಗಿರುವುದು ತನಿಖೆಯಿಂದ ತಿಳಿದುಬಂದಿದೆ.
4
+ ನಗರದ ಶಿವಕುಮಾರ ಸ್ವಾಮಿ ಬಡಾವಣೆ 1ನೇ ಹಂತದಲ್ಲಿ ವಾಸವಾಗಿರುವ ಆರೋಗ್ಯ ಇಲಾಖೆ ನಿವೃತ್ತ ನೌಕರ ಖಲಂದರ್‌ ಎಂಬವರ ಮೊದಲ ಮಗ ಅಲ್ತಾಫ್‌ನನ್ನು ಫಾತಿಮಾ ಮದುವೆಯಾಗಿದ್ದಾಳೆ.
5
+ ಖಲಂದರ್‌ ನಿವೃತ್ತಿ ನಂತರ ಬೆಂಗಳೂರಿಗೆ ಕುಟುಂಬ ಸಮೇತ ಶಿಫ್ಟ್ ಆಗಿದ್ದರು. ಅಲ್ಲಿಯೇ ಅಲ್ತಾಫ್‌ ಮತ್ತು ಫಾತಿಮಾ ನಿಖಾ (ಮದುವೆ) ನಡೆದಿತ್ತು ಎಂದು ತಿಳಿದುಬಂದಿದ್ದು ಪ್ರಸ್ತುತ ದಾವಣಗೆರೆಯ ಶಿವಕುಮಾರಸ್ವಾಮಿ ಬಡಾವಣೆಯ ಮನೆಯನ್ನು ಖಲಂದರ್‌ ಬಾಡಿಗೆ ನೀಡಿದ್ದಾರೆ.
6
+ ಅಲ್ತಾಫ್‌ನನ್ನು ವಿವಾಹವಾಗಿದ್ದ ಫಾತಿಮಾ ಆಗಾಗ ದಾವಣಗೆರೆಗೆ ಬಂದು, ಹೋಗುತ್ತಿದ್ದಳು. ಕಳೆದ ವರ್ಷ ಖಲಂದರ್‌ ಪತ್ನಿ ಮೃತಪಟ್ಟಿದ್ದಾಗ ಕೂಡ ಫಾತಿಮಾ ದಾವಣಗೆರೆಗೆ ಬಂದಿದ್ದಳು ಎನ್ನಲಾಗಿದೆ.
7
+ ಅಲ್ತಾಫ್‌ ಹಾಗೂ ಫಾತಿಮಾ ದಂಪತಿ ಇಸ್ಲಾಂ ಧರ್ಮದ ಬಗ್ಗೆ ಪ್ರಚಾರ ಮಾಡುವ ಮೆಹದಿ ಫೌಂಡೇಷನ್‌ ಇಂಟರ್‌ ನ್ಯಾಷನಲ್ ಸಂಸ್ಥೆಗಾಗಿ ಕೆಲಸ ಮಾಡುತ್ತಿದುದ್ದಲ್ಲದೆ ತಮ ಸಮಾಜದವರಿಗೆ ಮುಸ್ಲಿಂ ಪ್ರಚಾರ ಕಾರ್ಯಗಳನ್ನು ನೋಡುವಂತೆ ಪ್ರೇರೇಪಿಸುತ್ತಿದ್ದರು. ಅದಕ್ಕಾಗಿ ಅವರಿಗೆ ಹಣ ಸಂದಾಯವಾಗುತ್ತಿತ್ತು ಎಂಬುದು ತನಿಖೆಯಿಂದ ಗೊತ್ತಾಗಿದೆ.ಪಾಕ್‌ ಮೂಲದ ಮಹಿಳೆಗೆ ದಾವಣಗೆರೆ ನಿವಾಸದ ವಿಳಾಸದಲ್ಲೇ ಪಾರ್ಸ್‌ಪೋರ್ಟ್‌ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಮಾಡಿಸಿಕೊಡಲಾಗಿದೆ ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ.
8
+ ಪ್ರಸ್ತುತ ಅಲ್ತಾಫ್‌ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ದಾವಣಗೆರೆ ಪೊಲೀಸರು ಸಹ ತನಿಖೆಗೆ ಸಹಕರಿಸಿದ್ದು, ಪಾಸ್‌‍ಪೋರ್ಟ್‌ ಮೇಲೆ ನಿಗಾ ಇಟ್ಟಿದ್ದಾರೆ. ಫಾತಿಮಾಳನ್ನು ಮದುವೆಯಾದ ಬಳಿಕ ಆಕೆಯ ಕುಟುಂಬದವರನ್ನು ಪಾಕ್‌ ಮತ್ತು ಬಾಂಗ್ಲಾದಿಂದ ಮೊದಲು ದೆಹಲಿಗೆ ಕರೆಸಿಕೊಳ್ಳಲಾಗಿದೆ ಎಂಬ ಮಾಹಿತಿಯನ್ನು ತನಿಖಾ ಅಧಿಕಾರಿಗಳು ಕಲೆ ಹಾಕಿದ್ದಾರೆ.
9
+ ಇತ್ತೀಚೆಗೆ ಜಿಗಣಿ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಆರು ವರ್ಷಗಳಿಂದ ಹಿಂದು ಹೆಸರಿಟ್ಟುಕೊಂಡು ಬೆಂಗಳೂರಿನಲ್ಲೇ ವಾಸವಿದ್ದರೂ ಯಾರಿಗೂ ತಿಳಿದಿರಲಿಲ್ಲ ಎಂಬುದು ಅಚ್ಚರಿ ಮೂಡಿಸಿದೆ.
10
+ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳು ಅಕ್ರಮವಾಗಿ ಭಾರತಕ್ಕೆ ನುಸುಳಿರುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ನೀಡಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಗಣಿ ಪೊಲೀಸರು ಪಾಕಿಸ್ತಾನಿ, ಬಾಂಗ್ಲಾದೇಶ ಮೂಲದ ಪ್ರಜೆಗಳನ್ನ ಬಂಧಿಸಿದ್ದರು ಇದೀಗ ದಾವಣಗೆರೆಯಲ್ಲೂ ಪಾಕಿಸ್ತಾನ ಮೂಲದ ಮಹಿಳೆ ಮದುವೆಯಾಗಿರುವ ಬಗ್ಗೆ ಬೆಳಕಿಗೆ ಬಂದಿರುವುದು ಸ್ಥಳೀಯರನ್ನು ಬೆಚ್ಚಿಬಿಳಿಸಿದೆ.
eesanje/url_46_2_12.txt ADDED
@@ -0,0 +1,16 @@
 
 
 
 
 
 
 
 
 
 
 
 
 
 
 
 
 
1
+ ನನಗೆ ಇ.ಡಿ.ನೋಟೀಸ್ ಬಂದಿಲ್ಲ : ಸಚಿವ ಬೈರತಿ ಸುರೇಶ್‌ ಸ್ಪಷ್ಟನೆ
2
+ ..
3
+ ಬೆಂಗಳೂರು,ಅ.3– ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಇಸಿಐಆರ್‌ ದಾಖಲಾಗಿರುವ ಬೆನ್ನಲ್ಲೇ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ಗೆ ವಿಚಾರಣೆಗೆ ಹಾಜರಾಗಬೇಕೆಂದು ಜಾರಿನಿರ್ದೇಶನಾಲಯ(ಇಡಿ) ನೋಟಿಸ್‌‍ ಜಾರಿ ಮಾಡಿದೆ.
4
+ ಇ.ಡಿ ನೋಟಿಸ್‌‍ಗೆ ಉತ್ತರಿಸಿರುವ ಸಚಿವ ಭೈರತಿ ಸುರೇಶ್‌ ಅವರು ನವರಾತ್ರಿ ಹಬ್ಬ ಇರುವ ಕಾರಣ ವಿಚಾರಣೆಗೆ ಬರಲು ಸಾಧ್ಯವಾಗುತ್ತಿಲ್ಲ. ಹಬ್ಬ ಮುಗಿದ ತಕ್ಷಣ ಬರುವುದಾಗಿ ಹೇಳಿದ್ದಾರೆ. ಬೆಳಗ್ಗೆ ಹೆಬ್ಬಾಳದಲ್ಲಿರುವ ಭೈರತಿ ಸುರೇಶ್‌ ಅವರ ನಿವಾಸಕ್ಕೆ ತೆರಳಿದ್ದ ಇಡಿ ಅಧಿಕಾರಿಗಳ ತಂಡ ನೋಟಿಸ್‌‍ ನೀಡಿ ವಿಚಾರಣೆಗೆ ಆಗಮಿಸಬೇಕೆಂದು ಸೂಚನೆ ನೀಡಿದೆ.
5
+ ನಗರಾಭಿವೃದ್ದಿ ಸಚಿವರಾಗಿರುವ ಸುರೇಶ್‌ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಅಕ್ರಮಗಳ ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
6
+ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕುಟುಂಬದವರ ಹೆಸರು ಪ್ರಕರಣದಲ್ಲಿ ಕೇಳಿಬರುತ್ತಿದ್ದಂತೆ ರಾತ್ರೋರಾತ್ರಿ ಮೈಸೂರಿಗೆ ತೆರಳಿದ್ದ ಸಚಿವರು ಕೆಲವು ಮಹತ್ವದ ದಾಖಲೆಗಳನ್ನು ವಿಶೇಷ ವಿಮಾನದಲ್ಲಿ ತೆಗೆದುಕೊಂಡು ಬೆಂಗಳೂರಿಗೆ ಬಂದಿದ್ದಾರೆ ಎಂಬ ಆರೋಪವನ್ನು ಪ್ರತಿಪಕ್ಷದ ನಾಯಕರು ಮಾಡಿದ್ದರು.
7
+ ಇ.ಡಿಗೆ 500 ಪುಟಗಳ ದೂರು ನೀಡಿದ್ದ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಕೆಲವು ಮಹತ್ವದ ಮಾಹಿತಿಯನ್ನು ತನಿಖಾಧಿಕಾರಿಗಳ ಗಮನಕ್ಕೆ ತಂದಿದ್ದರು ಎನ್ನಲಾಗಿದೆ. ಈ ದೂರಿನ ಆಧಾರದ ಮೇಲೆ ಇಡಿ ಅಧಿಕಾರಿಗಳು ಸಚಿವ ಸುರೇಶ್‌ಗೆ ನೋಟಿಸ್‌‍ ನೀಡಿದ್ದು, ಸರ್ಕಾರದ ಪ್ರಭಾವಿ ಸಚಿವರಿಗೆ ಕಾನೂನಿನ ಕುಣಿಕೆ ಬಿಗಿಯಾಗಿದೆ.
8
+ ಬೆಂಗಳೂರು: ಮುಡಾ ಹಗರಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆಯಾಗಿರುವುದಾಗಿ ದೂರು ನೀಡಿದ್ದ ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ಜಾರಿ ನಿರ್ದೇಶಾನಾಲಯ (ಇಡಿ) ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
9
+ ಇಡಿ ನೋಟೀಸ್‌ ಕೊಟ್ಟಿಲ್ಲ ಬೈರತಿ ಸುರೇಶ್‌ ಸ್ಪಷ್ಟನೆಮುಡಾ ಪ್ರಕರಣ ಸಂಬಂಧ ನನಗೆ ಯಾವುದೇ ರೀತಿಯ ನೋಟಿಸ್ ಬಂದಿಲ್ಲ. ಕೆಲವರು ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಸ್ಪಷ್ಟಪಡಿಸಿದರು.
10
+ ತಮಗೆ ವಿಚಾರಣೆಗೆ ಹಾಜರಾಗಬೇಕೆಂದು ಇಡಿ ನೋಟಿಸ್‌‍ ನೀಡಿದೆ ಎಂಬುದರ ಕುರಿತು ಸ್ಪಷ್ಟನೆ ನೀಡಿದ ಅವರು, ನನ್ನ ಕಚೇರಿಗೆ ಆಗಲಿ, ಮನೆಗೆ ಯಾರು ಬಂದು ನೋಟಿಸ್‌‍ ಕೊಟ್ಟಿಲ್ಲ. ತಪ್ಪೇ ಮಾಡದಿದ್ದಾಗ ನನಗೇಕೆ ನೋಟಿಸ್‌‍ ಕೊಡುತ್ತಾರೆ ಎಂದು ಪ್ರಶ್ನೆ ಮಾಡಿದರು.
11
+ ನನ್ನನ್ನು ತೇಜೋವಧೆ ಮಾಡುವ ಪ್ರಯತ್ನ ನಡೆಸಲಾಗಿದೆ. ಕಾನೂನುಬದ್ದವಾಗಿ ನಾನು ಇಲಾಖೆಯನ್ನು ನಿರ್ವಹಿಸಿದ್ದೇನೆ. ಇಂಥ ಸುಳ್ಳು ಸುದ್ದಿಗ���ನ್ನು ಯಾರೂ ಹಬ್ಬಿಸುತ್ತಿದ್ದಾರೋ ಗೊತ್ತಿಲ್ಲ. ಅವರಿಗೆ ಒಳ್ಳೆಯದಾಗಲಿ ಎಂದು ಪರೋಕ್ಷವಾಗಿ ತಮ ಎದುರಾಳಿಗಳಿಗೆ ತಿರುಗೇಟು ನೀಡಿದರು.
12
+ ವಿಚಾರಣೆಗೆ ಹಾಜರಾದ ಸ್ನೇಹಮಯಿ ಕೃಷ್ಣ:ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ಎಸಗಿರುವುದಾಗಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಹಾಗೂ ಅಂದಿನ ಮುಡಾ ಆಯುಕ್ತರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
13
+ ಈ ಮಧ್ಯೆ ಮುಡಾ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆಯಾಗಿದ್ದು ಸಿದ್ದರಾಮಯ್ಯ ಒಳಗೊಂಡಂತೆ ಸಂಬಂಧಿಸಿದ ವ್ಯಕ್ತಿಗಳ ವಿರುದ್ಧ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಅವರು ಸೆ.27ರಂದು ಇಡಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ ಅಧಿಕಾರಿಗಳು ಇಂದು ವಿಚಾರಣೆಗೆ ಬರುವಂತೆ ಅ.1ರಂದು ನೋಟಿಸ್‌‍ ಜಾರಿ ಮಾಡಿದ್ದರು. ಇದರಂತೆ ಇಂದು ಇಡಿ ಮುಂದೆ ಹಾಜರಾಗಿದ್ದರು.
14
+ ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ, ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್‌‍ ನೀಡಿ ನನ್ನ ಮತ್ತು ನನ್ನ ಕುಟುಂಬದ ಬಗ್ಗೆ ದಾಖಲೆ ಕೇಳಿದ್ದರು. ಆಸ್ತಿ ಪತ್ರ, ಬ್ಯಾಂಕ್‌ ಖಾತೆ ವಿವರ ಹಾಗೂ ಆದಾಯದ ಮಾಹಿತಿ ಕೇಳಿದ್ದರು. ಇಡಿ ಅಧಿಕಾರಿಗಳ ತನಿಖೆ ಪ್ರಕಾರ ಮೊದಲು ದೂರುದಾರರ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಾರೆ. ಹೀಗಾಗಿ ಮೊದಲು ನನ್ನ ವಿಚಾರಣೆಗೆ ಕರೆದಿದ್ದಾರೆ. 500 ಪುಟಗಳ ದಾಖಲೆಗಳನ್ನು ಸಲ್ಲಿಸಿ ವಿಚಾರಣೆಗೆ ಹಾಜರಾಗುತ್ತಿದ್ದೇನೆ ಎಂದರು.
15
+ ಪ್ರಕರಣದ ಹಿಂದೆ ಕಾಣದ ಕೈಗಳು ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿ, ಇಲ್ಲಿ ಸಿಎಂ ವಿರುದ್ಧ ಹೋರಾಡಲು ಯಾರಾದರೇನು? ಸಮಾಜದ ಕಟ್ಟ ಕಡೆಯ ವ್ಯಕ್ತಿ ಕೂಡ ಸಿಎಂ ವಿರುದ್ಧ ಹೋರಾಟ ಮಾಡಬಹುದು. ಸಿಎಂ ವಿರುದ್ಧ ಒಬ್ಬ ಮಧ್ಯಮವರ್ಗದವನು ಹೋರಾಟ ಮಾಡಬಾರದಾ? ಕಾಣದ ಕೈಗಳು ಇದಾವೋ ಇಲ್ವೋ ಅನ್ನೋದು ಮುಖ್ಯವಲ್ಲ. ಸಿಎಂ ವಿರುದ್ಧ ಕೇಳಿ ಬಂದಿರುವ ಆರೋಪ ಎಷ್ಟು ಸತ್ಯ ಅಥವಾ ಸುಳ್ಳು ಅನ್ನೋದು ನೋಡಬೇಕು. ಹಾಗೇನಾದರೂ ನನ್ನ ಮೇಲೆ ಅನುಮಾನವಿದ್ದರೆ ಯಾವ ತನಿಖಾ ಸಂಸ್ಥೆಯಾದರೂ ನನ್ನ ವಿಚಾರಣೆ ನಡೆಸಬಹುದು ಎಂದರು.
16
+ ಸಿಬಿಐಗೆ ವರ್ಗಾವಣೆ ವಿಚಾರ ಸಂಬಂಧ ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ನನ್ನ ಕಣ್ಣ ಮುಂದೆಯೇ ಕೇಸ್‌‍ ತನಿಖೆ ಶುರು ಮಾಡಿದ್ದಾರೆ. ಆದರೂ ನಾನು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದೇನೆ. ಸಿಬಿಐ ತನಿಖೆ ಬಗ್ಗೆ ನಮ ವಕೀಲರು ವಾದ ಮಾಡಲಿದ್ದಾರೆ ಎಂದರು.
eesanje/url_46_2_2.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಜಾತಿ ಗಣತಿ ವರದಿ ವಿಚಾರದಲ್ಲಿ ಆತುರದ ನಿರ್ಧಾರ ಬೇಡ : ಡಿ.ಕೆ.ಸುರೇಶ್‌
2
+
3
+ ಬೆಂಗಳೂರು, ಅ.4-ರಾಜ್ಯ ಸರ್ಕಾರದಿಂದ ನಡೆಸಲಾಗಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ವರದಿಯ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆಯ ಹೆಜ್ಜೆ ಇಡಬೇಕು.
4
+ ರಾಷ್ಟ್ರ ಮಟ್ಟದ ಜನಗಣತಿಯವರೆಗೂ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವರದಿ ಕುರಿತು ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ.
5
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿದ ಸಮೀಕ್ಷಾ ವರದಿಯನ್ನು ಬಹಿರಂಗಗೊಳಿಸಬೇಕು ಮತ್ತು ಅಂಗೀಕರಿಸಬೇಕು ಎಂಬ ಒತ್ತಡಗಳು ಹೆಚ್ಚಿವೆ. ಮುಂದಿನ ಸಚಿವ ಸಂಪುಟದಲ್ಲಿ ಜಾತಿ ಜನಗಣತಿ ಎಂದೇ ಹೇಳಲಾದ ಸಮೀಕ್ಷಾ ವರದಿ ಕುರಿತು ಚರ್ಚಿಸುವ ಸನ್ನಿವೇಶಗಳು ಸೃಷ್ಟಿಯಾಗಿರುವ ಹಂತದಲ್ಲಿ ಡಿ.ಕೆ.ಸುರೇಶ್‌ ಅವರ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
6
+ ಕೇಂದ್ರ ಸರ್ಕಾರ ಈಗಾಗಲೇ ಜನಗಣತಿಯನ್ನು ಘೋಷಣೆ ಮಾಡಿದೆ. ಅದಕ್ಕೆ ಯಾವ ರೀತಿಯ ಮಾನದಂಡಗಳನ್ನು ಅಳವಡಿಸಲಾಗುತ್ತಿದೆ ಎಂದು ಕಾದು ನೋಡುತ್ತಿದ್ದೇವೆ. ಬಹುತೇಕ ಜಾತಿ ಗಣತಿಯನ್ನು ಕೇಂದ್ರ ಸರ್ಕಾರ ಅಳವಡಿಸಿಕೊಳ್ಳುವ ಸಾಧ್ಯತೆ ಇದೆ. ಒಂದು ವೇಳೆ ಅಲ್ಲಿ ಜಾತಿ ಗಣತಿ ನಡೆದರೆ ರಾಷ್ಟ್ರಮಟ್ಟದಲ್ಲೇ ದತ್ತಾಂಶಗಳು ಸಂಗ್ರಹವಾಗುತ್ತವೆ. ಎಲ್ಲಾ ಗೊಂದಲಗಳು ಬಗೆ ಹರಿಯುತ್ತವೆ.
7
+ ಜೊತೆಗೆ ರಾಷ್ಟ್ರ ಮಟ್ಟದ ಸಮೀಕ್ಷಾ ವರದಿಗೆ ಅಧಿಕೃತ ಮಾನ್ಯತೆಯೂ ದೊರೆಯಲಿದೆ. ರಾಜ್ಯ ಮಟ್ಟದಲ್ಲಿ ನಡೆದಿರುವ ಸಮೀಕ್ಷೆಗೆ ಮಾನ್ಯತೆ ಪಡೆಯಲು ಹೋರಾಟ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆಯ ಹೆಜ್ಜೆ ಇಡಬೇಕಿದೆ. ರಾಷ್ಟ್ರ ಮಟ್ಟದ ಗಣತಿ ಒಂದು ವರ್ಷದಲ್ಲಿ ಮುಗಿಯುವ ಸಾಧ್ಯತೆ ಇದ್ದು ಅಲ್ಲಿಯವರೆಗೂ ಕಾದು ನೋಡುವಂತೆ ಸಲಹೆ ನೀಡಿದರು.
8
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ ನಾಯಕರು. ಮುಂದಿನ ಐದು ವರ್ಷ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು ಎಂಬುದು ನಮ ಆಸೆಯಾಗಿದೆ. ಆದಷ್ಟು ಶೀಘ್ರದಲ್ಲಿ ಅವರ ಮೇಲಿರುವ ಆರೋಪಗಳಿಂದ ಮುಕ್ತರಾಗಿ ಅವರು ಹೊರಬರಲಿ ಎಂದು ಹೇಳಿದರು.
9
+ ನಿನ್ನೆ ಮೈಸೂರಿನಲ್ಲಿ ಜೆಡಿಎಸ್‌‍ ನ ಶಾಸಕ ಜಿ.ಟಿ.ದೇವೇಗೌಡರು ನೀಡಿರುವ ಹೇಳಿಕೆ ಸರಿಯಿದೆ. ಮುಡಾದಿಂದ ನಿವೇಶನ ನೀಡಿರುವುದು ಬಿಜೆಪಿ ಸರ್ಕಾರದ ಅವಧಿಯಲ್ಲಿ. ಅದರಲ್ಲಿ ಎಲ್ಲಾ ಪಕ್ಷಗಳ ನಾಯಕರು ಫಲಾನುಭವಿಗಳಿದ್ದಾರೆ. ಅನಗತ್ಯವಾಗಿ ಈ ಕುರಿತು ಹೆಚ್ಚು ಚರ್ಚೆ ಮಾಡುವ ಅಗತ್ಯ ಇಲ್ಲ . ಜೆಡಿಎಸ್‌‍ ನಾಯಕರು ಮಾಡಿರುವುದನ್ನು ಜಿ.ಟಿ.ದೇವೇಗೌಡರು ಜನರ ಮುಂದೆ ಮಂಡಿಸಿದ್ದಾರೆ. ಪಕ್ಷದಲ್ಲಿದ್ದೇವೆ ಎಲ್ಲವನ್ನೂ ಸಹಿಸಿಕೊಂಡಿರಬೇಕು ಎಂದೇನು ಇಲ್ಲ ಎಂದರು.
10
+ ಶಾಸಕ ಮುನಿರತ್ನ ಅವರ ಪ್ರಕರಣದಿಂದ ಕರ್ನಾಟಕ ದೇಶದ ಎದರು ತಲೆ ತಗ್ಗಿಸುವಂತಾಗಿದೆ. ಇಂತಹ ಚರ್ಚೆಗಳು ಒಳ್ಳೆಯದಲ್ಲ. ಅನಗತ್ಯ ವಿವಾದಗಳಿಂದ ರಾಜ್ಯದ ಘನತೆಗೆ ಕುಂದುಡಾಗುತ್ತಿದೆ. ಎಲ್ಲರೂ ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಚರ್ಚೆಗಳು ಹೆಚ್ಚಾಗುತ್ತಿವೆ. ರಾಜ್ಯದ ಹಿತದೃಷ್ಟಿಯಿಂದ ಸಕಾರಾತಕ ಚರ್ಚೆಗಳು ಹೆಚ್ಚಬೇಕು ಎಂದರು.
11
+ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಜನ ನನ್ನನ್ನು ಸೋಲಿಸಿ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ. ಅದರಂತೆ ನಾನು ನಡೆದುಕೊಳ್ಳುತ್ತಿದ್ದೇನೆ. ಚನ್ನಪಟ್ಟಣ ವಿಧಾನಸಭೆ ಚುನಾವಣೆಯಲ್ಲಿ ನಾನು ಅಭ್ಯರ್ಥಿಯಾಗುವ ಆಕಾಂಕ್ಷಿಯಲ್ಲ. ಉಪಚುನಾವಣೆ ಘೋಷಣೆಯಾದ ಬಳಿಕ ನಮ ಪಕ್ಷದ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುವುದು ಎಂದರು.
12
+ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಬೇರೆಯವರ ಬಗ್ಗೆ ಮಾಹಿತಿ ಪಡೆದುಕೊಳ್ಳುವುದು ನನ್ನ ಕೆಲಸವಲ್ಲ. ನನಗೆ ನನ್ನದೆ ಆದ ಕೆಲಸಗಳಿವೆ. ಅದರಲ್ಲಿ ತೊಡಗಿಸಿಕೊಂಡಿದ್ದೇನೆ ಎಂದರು.
eesanje/url_46_2_3.txt ADDED
@@ -0,0 +1,10 @@
 
 
 
 
 
 
 
 
 
 
 
1
+ ತೀವ್ರಗೊಂಡ ಪಿಡಿಒ, ಕಾರ್ಯದರ್ಶಿಗಳ ಅನಿರ್ದಿಷ್ಟಾವಧಿ ಪ್ರತಿಭಟನೆ
2
+
3
+ ಬೆಂಗಳೂರು, ಅ.4-ಇಲಾಖೆಗಳಲ್ಲಿ ಆಗುತ್ತಿರುವ ತಾರತಮ್ಯ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಪಿಡಿಓಗಳು ಹಾಗೂ ಕಾರ್ಯದರ್ಶಿಗಳು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ.
4
+ ನಗರದ ಫ್ರೀಡಂಫಾರ್ಕ್‌ನಲ್ಲಿ ರಾಜ್ಯದ ನಾನಾಕಡೆಯಿಂದ ಬಂದಿರುವ ಸಾವಿರಾರು ಮಂದಿ ಸರ್ಕಾರದ ಧೋರಣೆಯನ್ನು ಕಟುವಾಗಿ ಟೀಕಿಸಿದ್ದು, ನಮ ಭಾವನೆಗಳಿಗೆ ಮತ್ತು ಬೇಡಿಕೆಗಳಿಗೆ ಸ್ಪಂದಿಸದ ಹೊರತು ಹೋರಾಟ ನಿಲ್ಲುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
5
+ ನಮದು ಶಾಂತಿಯುತ ಹೋರಾಟ. ನಮ ಹಕ್ಕಿನ ಬೇಡಿಕೆಯಾಗಿದ್ದು, ಇದನ್ನು ಸಹಾನುಭೂತಿಯಿಂದ ಕೇಳಿಸಿಕೊಳ್ಳದೆ ಇಲಾಖೆ ಅಧಿಕಾರಿಗಳು ಜಾರಿಕೊಳ್ಳುತ್ತಿದ್ದಾರೆ.ಅತ್ತ ನಾವು ಎಷ್ಟೇ ಬಾರಿ ಮನವಿ ಸಲ್ಲಿಸಿದರೂ ಅದನ್ನು ಕಸದ ಬುಟ್ಟಿಗೆ ಎಸೆದು ನಮನ್ನು ಕೀಳಾಗಿ ಕಾಣುತ್ತಿದ್ದಾರೆ ಎಂದು ಇದಕ್ಕೆ ತಾರ್ಕಿಕ ಅಂತ್ಯ ಕಾಣಿಸುವ ನಿಟ್ಟಿನಲ್ಲಿ ಹೋರಾಟದ ಹಾದಿ ಅನಿವಾರ್ಯವಾಗಿತ್ತು ಎಂದು ಗ್ರಾಮಪಂಚಾಯಿತಿ ಸದಸ್ಯರ ಒಕ್ಕೂಟದ ಅಧ್ಯಕ್ಷ ಕಾಡಾಶೆಟ್ಟಿಹಳ್ಳಿ ಸತೀಶ್‌ ಹೇಳಿದ್ದಾರೆ.
6
+ ಯಾವುದೇ ಸೂಚನೆ ನೀಡದೆ ವರ್ಗಾವಣೆ ಮಾಡಲಾಗುತ್ತಿದೆ. ಬಡತಿಯಲ್ಲೂ ಅನ್ಯಾಯವಾಗುತ್ತಿದೆ. ನಿರಂತರ ಕೆಲಸರಜೆ ನೀಡದೆ ಸತಾಯಿಸುವುದೂ ಸೇರಿದಂತೆ ಹಲವಾರು ನಮ ಬೇಡಿಕೆ ದೂರು-ದುಮಾನಗಳನ್ನು ಸಚಿವರ ಗಮನಕ್ಕೆ ತಂದಿದ್ದೇವೆ.
7
+ ಬಹುದಿನದ ಬೇಡಿಕೆಯಾದ ಖಾಲಿ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಗಳನ್ನು ಬಿ ಗ್ರೂಪ್‌ಗೆ ಸೇರ್ಪಡೆಗೊಳಿಸುವುದೂ ಸೇರಿದಂತೆ ಉಚಿತ ಬಸ್‌‍, ಆರೋಗ್ಯ ವಿಮೆ, ಇಎಸ್‌‍ಐ, ಪಿಎಫ್‌ ಸೇರಿದಂತೆ ಗ್ರಾಪಂ ಸಿಬ್ಬಂದಿಗಳಿಗೆ ಕಂದಾಯ ಇಲಾಖೆ ವತಿಯಿಂದಲೇ ವೇತನವನ್ನು ನೀಡಬೇಕೆಂದು ನಾವು ಕೇಳುತ್ತಿದ್ದರೂ ಬಲವಂತವಾಗಿ ಕೆಲ ನಿಯಮಗಳನ್ನು ಹೇರಲಾಗುತ್ತಿದೆ ಎಂದು ರಾಜ್ಯ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜು ಆರೋಪಿಸಿದ್ದಾರೆ.
8
+ ನಮ ಈ ಹೋರಾಟಕ್ಕೆ ಕಾರ್ಯದರ್ಶಿಗಳು ಲೆಕ್ಕ ಸಹಾಯಕರು, ಕರವಸೂಲಿ ಸಿಬ್ಬಂದಿ, ಕಂಪ್ಯೂಟರ್‌ ಡೇಟಾ ಆಪರೇಟರ್‌ಗಳು ಬೆಂಬಲ ಸೂಚಿಸಿ ಹೋರಾಟಕ್ಕೆ ಬಂದಿದ್ದಾರೆ. ಕಳೆದ ವಾರವೇ ನಾವು ಅನಿರ್ದಿಷ್ಟ ಹೋರಾಟದ ಬಗ್ಗೆ ಸರ್ಕಾರದ ಗಮನಕ್ಕೆ ತಂದರೂ ನಮಗೆ ಯಾವುದೇ ಭರವಸೆ ಸಿಕ್ಕಿಲ್ಲ ಎಂದು ಟೀಕಿಸಿದ್ದಾರೆ.
9
+ ಒಂದೇ ತಾಲ್ಲೂಕಿನಲ್ಲಿ 7 ವರ್ಷ ಸೇವೆಸಲ್ಲಿಸಿದವರನ್ನು ವರ್ಗಾವಣೆ ಮಾಡುವ ನಿಯಮವನ್ನು ಬಲವಂತವಾಗಿ ಹೇರಲಾಗಿದೆ. ಇದರಿಂದ ಹಲವರು ಒತ್ತಡದ ಕೆಲಸದ ಒತ್ತಡದಲ್ಲಿ ಜೀವ ಕಳೆದುಕೊಂಡಿದ್ದಾರೆ. ಇನ್ನೂ ಹಲವರಿಗೆ ಮಾನಸಿಕ ಒತ್ತಡದಿಂದ ಆರೋಗ್ಯ ಹಾಳಾಗಿದೆ ಇಷ್ಟಾದರೂ ಅಧಿಕಾರಿಗಳು ನಮ ನೋವನ್ನು ಮನಗಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
10
+ ರಾಜ್ಯಾದ್ಯಂತ ಸುಮಾರು 45000ಕ್ಕೂ ಹೆಚ್��ು ಸಿಬ್ಬಂದಿಗಳು ಹೋರಾಟಕ್ಕೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಂದೆ ಆಗುವ ಅನಾಹುತಗಳಿಗೆ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡಿದರು.