CoolCoder44 commited on
Commit
10a99f6
·
verified ·
1 Parent(s): 8883e67

d7ee73b8768b236e6992151e75aadf6308355974e74bca4fd23f19bac45807dc

Browse files
Files changed (50) hide show
  1. eesanje/url_46_334_1.txt +9 -0
  2. eesanje/url_46_334_10.txt +9 -0
  3. eesanje/url_46_334_11.txt +10 -0
  4. eesanje/url_46_334_12.txt +12 -0
  5. eesanje/url_46_334_2.txt +13 -0
  6. eesanje/url_46_334_3.txt +6 -0
  7. eesanje/url_46_334_4.txt +11 -0
  8. eesanje/url_46_334_5.txt +9 -0
  9. eesanje/url_46_334_6.txt +11 -0
  10. eesanje/url_46_334_7.txt +9 -0
  11. eesanje/url_46_334_8.txt +9 -0
  12. eesanje/url_46_334_9.txt +6 -0
  13. eesanje/url_46_335_1.txt +9 -0
  14. eesanje/url_46_335_10.txt +9 -0
  15. eesanje/url_46_335_11.txt +7 -0
  16. eesanje/url_46_335_12.txt +14 -0
  17. eesanje/url_46_335_2.txt +8 -0
  18. eesanje/url_46_335_3.txt +6 -0
  19. eesanje/url_46_335_4.txt +18 -0
  20. eesanje/url_46_335_5.txt +8 -0
  21. eesanje/url_46_335_6.txt +7 -0
  22. eesanje/url_46_335_7.txt +12 -0
  23. eesanje/url_46_335_8.txt +6 -0
  24. eesanje/url_46_335_9.txt +9 -0
  25. eesanje/url_46_336_1.txt +10 -0
  26. eesanje/url_46_336_10.txt +6 -0
  27. eesanje/url_46_336_11.txt +9 -0
  28. eesanje/url_46_336_12.txt +10 -0
  29. eesanje/url_46_336_2.txt +15 -0
  30. eesanje/url_46_336_3.txt +6 -0
  31. eesanje/url_46_336_4.txt +10 -0
  32. eesanje/url_46_336_5.txt +11 -0
  33. eesanje/url_46_336_6.txt +12 -0
  34. eesanje/url_46_336_7.txt +12 -0
  35. eesanje/url_46_336_8.txt +8 -0
  36. eesanje/url_46_336_9.txt +14 -0
  37. eesanje/url_46_337_1.txt +8 -0
  38. eesanje/url_46_337_10.txt +10 -0
  39. eesanje/url_46_337_11.txt +12 -0
  40. eesanje/url_46_337_12.txt +12 -0
  41. eesanje/url_46_337_2.txt +7 -0
  42. eesanje/url_46_337_3.txt +12 -0
  43. eesanje/url_46_337_4.txt +13 -0
  44. eesanje/url_46_337_5.txt +10 -0
  45. eesanje/url_46_337_6.txt +12 -0
  46. eesanje/url_46_337_7.txt +14 -0
  47. eesanje/url_46_337_8.txt +5 -0
  48. eesanje/url_46_337_9.txt +8 -0
  49. eesanje/url_46_338_1.txt +15 -0
  50. eesanje/url_46_338_10.txt +6 -0
eesanje/url_46_334_1.txt ADDED
@@ -0,0 +1,9 @@
 
 
 
 
 
 
 
 
 
 
1
+ ಬಿಗ್‍ಬಾಸ್‍ನಿಂದ ಹೊರಬಂದು ಪ್ರದೀಪ್ ಈಶ್ವರ್ ಹೇಳಿದ್ದೇನು..?
2
+ ಬೆಂಗಳೂರು,ಅ.10-ಬಿಗ್‍ಬಾಸ್‍ಗೆ ನಾನು ಸ್ರ್ಪಧಿಯಾಗಿ ಹೋಗಿರಲಿಲ್ಲ. ಖಾಸಗಿ ಚಾನೆಲ್‍ನ ಸ್ನೇಹಿತರು ಆಹ್ವಾನಿಸಿದ್ದಕ್ಕಾಗಿ ಎರಡು ಮೂರು ಗಂಟೆ ಭಾಗವಹಿಸಿದ್ದೆ. ಆದರೆ ನಾನೇ ಸ್ರ್ಪಧಿ ಎಂದು ಉದ್ದೇಶಪೂರ್ವಕವಾಗಿಯೇ ಫ್ರಾಂಕ್ ಮಾಡಲಾಗಿತ್ತು ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.
3
+ ಮಾಜಿ ಸಚಿವ ಡಾ. ಸುಧಾಕರ್ ಅವರು ನಿನ್ನೆ ಪತ್ರಿಕಾಗೋಷ್ಠಿ ನಡೆಸಿ ಶಾಸಕರು ಬಿಗ್‍ಬಾಸ್‍ಗೆ ಹೋಗಿದ್ದರಿಂದಾಗಿ ನಗೆಪಾಟಲಿನ ವಾತಾವರಣ ನಿರ್ಮಾಣವಾಗಿದೆ ಎಂದು ಟೀಕೆ ಮಾಡಿದರು. ಇದಕ್ಕೆ ತಿರುಗೇಟು ನೀಡಿದ ಪ್ರದೀಪ್ ಈಶ್ವರ್, ಈ ಹಿಂದೆ ಚಿಕ್ಕಬಳ್ಳಾಪುರ ಉತ್ಸವ ಮಾಡಿ ದೊಡ್ಡ ದೊಡ್ಡ ಸ್ಟಾರ್‌ಗಳನ್ನೇ ಕರೆಸಿದ್ದಸುಧಾಕರ್‌ರವರುಸೋಲು ಕಂಡಿದ್ದಾರೆ. ಈಗ ನಾನು ಬಿಗ್‍ಬಾಸ್‍ಗೆ ಹೋಗಿದ್ದಕ್ಕಾಗಿ ಟೀಕೆ ಮಾಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕನಾಗಿ ಕನಿಷ್ಠ ಸರಿಯಾಗಿ ವಿಮರ್ಶೆ ಮಾಡಲು ಅವರಿಗೆ ಬರುತ್ತಿಲ್ಲ ಎಂದರು.
4
+ ಟೀಕೆ ಮಾಡುವುದು ವಿರೋಧಪಕ್ಷದವರ ಹಕ್ಕು. ಒಂದು ವೇಳೆ ನಾನೇ ಸುಧಾಕರ್ ಅವರ ಸ್ಥಾನದಲ್ಲಿದ್ದರೆ ಆಟವೇ ಬೇರೆಯಾಗಿರುತ್ತಿತ್ತು. ನನ್ನ ಪ್ರಕಾರ ಸುಧಾಕರ್ ಅವರು ಬೆಳಿಗ್ಗೆಯಿಂದ ಸಂಜೆವರೆಗೂ ಚಾನಲ್‍ನಲ್ಲೇ ಕುಳಿತುಕೊಂಡಿರಬೇಕಿತ್ತು. ಬಿಗ್‍ಬಾಸ್‍ಗೆ ಹೋಗಿರುವುದು ನಗೆಪಾಟಲು ಎಂದಿದ್ದಾರೆ. ಅದೊಂದು ದೊಡ್ಡ ವೇದಿಕೆ. ಕೋಟ್ಯಂತರ ಜನ ನೋಡುತ್ತಾರೆ. ನಾನು ಯುವಜನರಿಗೆ ಒಂದಷ್ಟು ಸಕಾರಾತ್ಮಕ ಸಂದೇಶಗಳನ್ನು ನೀಡಬೇಕಿತ್ತು. ಈಗಾಗಲೇ ಹಲವಾರು ಮಾಧ್ಯಮಗಳಲ್ಲಿ, ವೇದಿಕೆಗಳಲ್ಲಿ ನನ್ನ ಅನಿಸಿಕೆಗಳನ್ನು ಹಂಚಿಕೊಂಡಿದ್ದೇನೆ. ಬಿಗ್‍ಬಾಸ್ ಕೂಡ ದೊಡ್ಡ ವೇದಿಕೆಯಾದ್ದರಿಂದ ಅದರಲ್ಲಿ ಭಾಗವಹಿಸಿದ್ದೆ ಎಂದರು.
5
+ ಪುರಾತನ ದೇವರ ವಿಗ್ರಹ ಕದ್ದಿದ್ದ ಕಳ್ಳನ ಬಂಧನ
6
+ ಶೋ ನಡೆಸುವ ಖಾಸಗಿ ಚಾನಲ್‍ನಲ್ಲಿ ನನ್ನ ಸ್ನೇಹಿತರಿದ್ದಾರೆ. ಅವರ ಮನವಿ ಮೇರೆಗೆ ಸೌಜನ್ಯದಿಂದ ನಾನು ಬಿಗ್‍ಬಾಸ್‍ಗೆ ಹೋಗಿದ್ದೆ. ಬೆಳಿಗ್ಗೆಯಿಂದ ಕ್ಷೇತ್ರದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿದ್ದೆ. ಸಂಜೆ ಬೆಂಗಳೂರಿಗೆ ಬಂದು 8.30 ರ ವೇಳೆಗೆ ಶೋಗೆ ಹೋದೆ. 11.30 ರ ವೇಳೆಗೆ ವಾಪಸ್ ಬಂದೆ. ಚಾನಲ್‍ನವರು ಮಾರುಕಟ್ಟೆ ದೃಷ್ಟಿಯಿಂದ ನನ್ನನ್ನು ಸ್ರ್ಪಧಿ ಎಂದು ಫ್ರಾಂಕ್ ಮಾಡುವುದಾಗಿ ಹೇಳಿದರು. ಅನುಕೂಲವಾಗುವುದಾದರೆ ಆಗಲಿ ಎಂದು ನಾನು ಸುಮ್ಮನಿದ್ದೆ ಎಂದು ಹೇಳಿದರು.
7
+ ನಾನು ಬಿಗ್‍ಬಾಸ್‍ಗೆ ಅತಿಥಿಯಾಗಿ ಹೋಗಿದ್ದೇನೆ ಹೊರತು ಸ್ರ್ಪಧಿಯಲ್ಲ. ಅಲ್ಲಿರುವ ಸ್ರ್ಪಧಿಗಳು 100 ದಿನ ಮನೆಯವರಿಂದ ದೂರ ಇರುತ್ತಾರೆ. ಅವರನ್ನು ಪ್ರೇರೇಪಿಸುವ ಸಂದೇಶ ನೀಡುವುದು ನನ್ನ ಉದ್ದೇಶವಾಗಿತ್ತು. ನಾನು ಬಿಗ್‍ಬಾಸ್‍ಗೆ ಹೋಗಿದ್ದು ಏಕೆ ಎಂದು ಮಾಜಿ ಶಾಸಕರಿಗೆ ಅರ್ಥವಾಗಿಲ್ಲ. ಹೋಗಲಿ ಅವರು ಅಂದುಕೊಂಡತೆಯಾದರೂ ಸರಿಯಾಗಿ ಟೀಕೆ ಮಾಡಿಲ್ಲ. ಇನ್ನು ಕೆಲವು ಸಂಘಟನೆಗಳು ನನ್�� ವಿರುದ್ಧ ವಿಧಾನಸಭಾಧ್ಯಕ್ಷರಿಗೆ ದೂರು ನೀಡಿದ್ದಾರೆ. ಇದು ಅವರ ಅಸ್ತಿತ್ವದ ಪ್ರಶ್ನೆ. ನನ್ನ ಆಕ್ಷೇಪವೇನಿಲ್ಲ. ಟೀಕೆಗಳನ್ನು ಎದುರಿಸಲು ಸಿದ್ಧವಾಗಿಯೇ ರಾಜಕಾರಣಕ್ಕೆ ಬಂದಿದ್ದೇನೆ. ಇಂತವರಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.
8
+ ಉದ್ಯಮಿಗೆ 5.39 ಕೋಟಿ ಪಂಗನಾಮ : ಹೆಚ್ಚು ಲಾಭಕ್ಕಾಗಿ ಹೂಡಿಕೆ ಮಾಡುವ ಮುನ್ನ ಹುಷಾರ್..!
9
+ ಬಿಗ್‍ಬಾಸ್‍ಗೆ ತೆರಳುವ ಮುನ್ನ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಹಿತಿ ನೀಡಿದ್ದೆ. ಪ್ರತಿಯೊಂದಕ್ಕೂ ಸರ್ಕಾರದ ಅನುಮತಿ ಕೇಳುವ ಅಗತ್ಯವಿಲ್ಲ. ನಮಗೂ ವೈಯಕ್ತಿಕ ಸ್ವಾತಂತ್ರವಿದೆ. ಕ್ಷೇತ್ರ ಬಿಟ್ಟು ಬಿಗ್‍ಬಾಸ್‍ನಲ್ಲಿ ಕುಳಿತುಕೊಳ್ಳಬೇಕೇ, ಬೇಡವೇ ಎಂಬುದರ ಅರಿವಿದೆ ಎಂದು ಹೇಳಿದರು.
eesanje/url_46_334_10.txt ADDED
@@ -0,0 +1,9 @@
 
 
 
 
 
 
 
 
 
 
1
+ ಪಟಾಕಿ ದುರಂತ : ನರಹತ್ಯೆ ಸೇರಿ ಗಂಭೀರ ಸೆಕ್ಷನ್‍ಗಳಡಿ ಕಾನೂನು ಕ್ರಮ
2
+ ಬೆಂಗಳೂರು, ಅ.8- ಅತ್ತಿಬೆಲೆ ಪಟಾಕಿ ದುರಂತದ ಪ್ರಕರಣದಲ್ಲಿ ಮೃತಪಟ್ಟ 12 ಮಂದಿಯ ಗುರುತನ್ನು ಪತ್ತೆ ಹಚ್ಚಲಾಗಿದ್ದು, ಶವವನ್ನು ಸಂಬಂಧಿತರಿಗೆ ಹಸ್ತಾಂತರಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ನರಹತ್ಯೆ ಸೇರಿದಂತೆ ಕಠಿಣ ಕಾನೂನುಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ತಿಳಿಸಿದ್ದಾರೆ.
3
+ ಅತ್ತಿಬೆಲೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಟಾಕಿ ಮಾರಾಟದ ಮಳಿಗೆ ಮತ್ತು ಗೋಡನ್‍ಗಳಲ್ಲಿ ಅಗ್ನಿನಂದಕ ಸಲಕರಣೆಗಳನ್ನು ಇಟ್ಟಿರಲಿಲ್ಲ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಹೇಳಿದ್ದಾರೆ.
4
+ ಗೋಡನ್‍ನ ಮಾಲಿಕರು, ಆತನ ಪುತ್ರ, ಮ್ಯಾನೇಜರ್ ಸೇರಿದಂತೆ ಐವರ ವಿರುದ್ಧ ಸ್ಪೋಟಕ ಕಾನೂನು, ಕೊಲೆಯಲ್ಲದ ನರಹತ್ಯೆ ಆರೋಪ ಸೇರಿದಂತೆ ಕಠಿಣ ಕಾನೂನುಗಳಡಿ ಪ್ರಕರಣ ದಾಖಲಿಸಲಾಗಿದೆ. ಘಟನೆ ಹೇಗೆ ನಡೆಯಿತು ಎಂಬುದರ ಬಗ್ಗೆ ಎಫ್‍ಎಸ್‍ಎಲ್, ಅಗ್ನಿಶಾಮಕ ಮತ್ತು ಸೀನಫ್ ಕ್ರೈಂ ತಜ್ಞರು ವರದಿ ನೀಡಲಿದ್ದಾರೆ. ಅದರ ನಂತರ ತನಿಖೆ ಮುಂದುವರೆಯಲಿದೆ ಎಂದು ಹೇಳಿದರು.
5
+ ಲೋಕಸಭೆ ಚುನಾವಣೆ : ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸದ್ಯದಲ್ಲೇ ಹೈಕಮಾಂಡ್‍ಗೆ ರವಾನೆ
6
+ ಈವರೆಗೂ 14 ಮೃತದೇಹಗಳು ಪತ್ತೆಯಾಗಿವೆ. ಅದರಲ್ಲಿ 12 ಮಂದಿಯ ಪಾರ್ಥೀವ ಶರೀರಗಳನ್ನು ಗುರುತಿಸಲಾಗಿದೆ. ಸಂಬಂಕರ ಮಾಹಿತಿ ಆಧರಿಸಿ ಶವಗಳನ್ನು ಹಸ್ತಾಂತರಿಸಲಾಗುತ್ತಿದೆ ಎಂದು ಹೇಳಿದರು.ಮುನ್ನೆಚ್ಚರಿಕೆ ಕ್ರಮವಾಗಿ ಪಟಾಕಿ ದಾಸ್ತಾನು ಮತ್ತು ಮಾರಾಟ ಮಳಿಗೆಗಳಲ್ಲಿ ಏನೆಲ್ಲಾ ಇರಬೇಕು, ಏನೆಲ್ಲಾ ಇಲ್ಲ ಎಂಬುದನ್ನು ತನಿಖೆ ನಡೆಸಲು ಪೊಲೀಸ್ ಮಹಾ ನಿರ್ದೇಶಕರು ಈಗಾಗಲೇ ಸೂಚನೆ ನೀಡಿದ್ದಾರೆ. ಅದರಂತೆ ಕ್ರಮ ಕೈಗೊಳ್ಳುತ್ತೇವೆ. ಎಲ್ಲವೂ ತನಿಖೆಯ ಬಳಿಕ ಸ್ಪಷ್ಟವಾಗಲಿದೆ ಎಂದು ಹೇಳಿದರು.
7
+ ಕಠಿಣ ಕಾನೂನಿನಡಿ ಪ್ರಕರಣ :ಘಟನೆ ಕುರಿತಂತೆ ಸ್ಥಳೀಯ ಕಾರ್ಮಿಕ ಲೋಗೇಶ್ವರನ್ ನೀಡಿರುವ ದೂರು ಆಧರಿಸಿ, ಅತ್ತಿಬೆಲೆಯ ಶ್ರೀ ಬಾಲಾಜಿ ಟ್ರೇಡರ್ಸ್‍ನ ಮಾಲಿಕ ರಾಮಸ್ವಾಮಿ ರೆಡ್ಡಿ, ಇವರ ಪುತ್ರ ನವೀನ್‍ರೆಡ್ಡಿ, ಸಂಸ್ಥೆ ವ್ಯವಸ್ಥಾಪಕ ಲೋಕೇಶ್, ಗೋಧಾಮಿಗೆ ಕಟ್ಟಡ ಬಾಡಿಗೆ ನೀಡಿದ ಶ್ರೀಮತಿ ಜಯಮ್ಮ ಹಾಗೂ ಟ್ರೇಡರ್ಸ್‍ನ ಅನಿಲ್‍ರೆಡ್ಡಿ ಯವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
8
+ ಪಶ್ಚಿಮ ಬಂಗಾಳದ ನಗರಾಭಿವೃದ್ಧಿ ಸಚಿವ ನಿವಾಸದ ಮೇಲೆ ಸಿಬಿಐ ದಾಳಿ
9
+ ಎಫ್‍ಐಆರ್‍ನಲ್ಲಿ ಸೋಟಕ ನಿರ್ವಹಣಾ ಕಾಯಿದೆ ಸೆಕ್ಷನ್ 9 ಬಿ, ಭಾರತೀಯ ದಂಡ ಸಂಹಿತೆ 427 (ದುರ್ನಡತೆಯಿಂದ ನಷ್ಟ ಉಂಟು ಮಾಡುವುದು), 285 (ಉದಾಸೀನತೆಯಿಂದ ಬೆಂಕಿ ಅನಾಹುತಕ್ಕೆ ಕಾರಣವಾಗುವುದು), 286 (ಸೋಟಕಗಳ ನಿರ್ಲಕ್ಷತೆ ನಿರ್ವಹಣೆ), 304 (ಕೊಲೆಯಲ್ಲದ ನರಹತ್ಯೆ), 337 (ಉದಾಸೀನತೆಯಿಂದ ಮಾನವ ಜೀವಕ್ಕೆ ಅಪಾಯ ತಂದೊಡ್ಡುವುದು), 338 (ಜೀವ ಭದ್ರತೆಗೆ ಧಕ್ಕೆಯಾಗುವಂತ ಘಾಸಿ ಮಾಡುವುದು ಮತ್ತು ಇತರ ಸುರಕ್ಷತೆಯನ್ನು ನಿರ್ಲಕ್ಷಿಸುವುದು) ಸೇರಿದಂತೆ ಪ್ರಮುಖ ಕಾಯಿದೆಗಳಡಿ ಪ್ರಕರಣ ದಾಖಲಿಸಲಾಗಿದೆ.
eesanje/url_46_334_11.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಅತ್ತಿಬೆಲೆ ಪಟಾಕಿ ದುರಂತ ಸಿಐಡಿ ತನಿಖೆ : ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು, ಅ.8- ಅತ್ತಿಬೆಲೆ ಪಟಾಕಿ ದುರಂತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿರುವು ದಲ್ಲದೆ, ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸುವುದಾಗಿ ಘೋಷಿಸಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಎಂ.ಸಿ.ಸುಧಾಕರ್, ರಾಮಲಿಂಗಾರೆಡ್ಡಿ, ಭೈರತಿ ಸುರೇಶ್, ಶಾಸಕರಾದ ಶಿವಣ್ಣ, ಎಸ್.ಟಿ.ಸೋಮಶೇಖರ್, ತಮಿಳುನಾಡಿನಕಾಂಗ್ರೆಸ್ ನಾಯಕ ಚಲ್ಲಕುಮಾರ್ ಸೇರಿದಂತೆ ಮತ್ತಿತರರು ಜತೆಗಿದ್ದರು.
3
+ ಅಗ್ನಿಶಾಮಕ ದಳದ ಡಿಜಿಪಿ ಕಮಲ್‍ಪಂಥ್, ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಸೇರಿದಂತೆ ಹಿರಿಯ ಅಧಿಕಾರಿಗಳು, ಮುಖ್ಯಮಂತ್ರಿಯವರಿಗೆ ಘಟನೆ ಬಗ್ಗೆ ಸವಿಸ್ತಾರವಾದ ಮಾಹಿತಿ ನೀಡಿದರು. ಘಟನೆಯ ಪ್ರತಿ ಸ್ಥಳಕ್ಕೂ ಖುದ್ದಾಗಿ ಭೇಟಿ ನೀಡಿದ ಮುಖ್ಯಮಂತ್ರಿಗಳು, ನಷ್ಟದ ಅಂದಾಜುಗಳು ಹಾಗೂ ಇತರ ವಿವರಗಳನ್ನು ಪರಿಶೀಲನೆ ನಡೆಸಿದರು.
4
+ ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರವಾನಗಿ ಪಡೆದು ಪಟಾಕಿ ಮಾರಾಟ ಮಾಡುವುದು ದೀಪಾವಳಿ ಸಂದರ್ಭದಲ್ಲಿ ಕಂಡುಬರುತ್ತದೆ. ನಿನ್ನೆ 3 ಗಂಟೆ ಸುಮಾರಿನಲ್ಲಿ ಈ ಗೋದಾಮಿನಲ್ಲಿ ಅಗ್ನಿ ದುರಂತ ನಡೆದಿದೆ. ಇದಕ್ಕೆ ಪಟಾಕಿ ದಾಸ್ತಾನು ಮಳಿಗೆಯಲ್ಲಿ ಸರಿಯಾದ ಸುರಕ್ಷತಾ ಕ್ರಮ ಮಾಡದಿರುವುದು ಕಾರಣ ಎಂದರು.
5
+ ಪ್ಯಾಲೆಸ್ತೇನ್‍ನ ಉಗ್ರರ ನೆರವಿಗೆ ಬಂದ ಇರಾನ್ ಸೇನೆ
6
+ ಪಟಾಕಿ ಮಾರಾಟ ಹಾಗೂ ಸಂಗ್ರಹಕ್ಕೆ ಎರಡು ಪರವಾನಗಿಗಳನ್ನು ಪಡೆದಿದ್ದಾರೆ. 2023 ರ ಸೆಪ್ಟೆಂಬರ್ 13 ರಂದು ಒಂದು ಪರವಾನಗಿ ನವೀಕರಣಗೊಂಡಿದ್ದು, ಅದು 2028 ರ ಅಕ್ಟೋಬರ್ 31 ರವರಗೆ ಚಾಲ್ತಿಯಲ್ಲಿರುತ್ತದೆ. ಇನ್ನೊಂದು ಪರವಾನಗಿಯನ್ನು 2021ರ ಜನವರಿ 18 ರಂದು ಪಡೆಯಲಾಗಿದ್ದು, 2026 ರ ಜನವರಿ 28 ರವರೆಗೂ ಚಾಲ್ತಿಯಲ್ಲಿರಲಿದೆ.
7
+ ಜಯಮ್ಮ ಅವರಿಗೆ ಸೇರಿದ ಜಾಗವನ್ನು ಬಾಡಿಗೆ ಪಡೆದು ಪಟಾಕಿ ವ್ಯಾಪಾರ ಮಾಡಲಾಗುತ್ತಿತ್ತು. ಮೃತಪಟ್ಟವರು ಕೃಷ್ಣಗಿರಿ, ಧರ್ಮಪುರಿ ಜಿಲ್ಲೆಗೆ ಸೇರಿದವರಾಗಿದ್ದು, ಅವರಲ್ಲಿ ಬಹುತೇಕರು ವಿದ್ಯಾರ್ಥಿಗಳಾಗಿದ್ದಾರೆ. ರಜಾ ಅವಧಿಯಲ್ಲಿ ವಿದ್ಯಾರ್ಥಿಗಳು ಸಂಪಾದನೆಗಾಗಿ ಕೆಲಸ ಮಾಡುತ್ತಿದ್ದರು. ಮ್ಯಾನೇಜರ್ ಮಾತ್ರ ಖಾಯಂ ನೌಕರ. ಉಳಿದೆಲ್ಲರೂ ದಿನಗೂಲಿಗಾಗಿ ಕೆಲಸ ಮಾಡುತ್ತಿದ್ದರು ಎಂದು ಹೇಳಿದ್ದಾರೆ.
8
+ ಪೊಲೀಸರು ಮತ್ತು ಅಗ್ನಿಶಾಮಕ ದಳದಿಂದ ನಿರಪೇಕ್ಷಣಾ ಪತ್ರ ಸಲ್ಲಿಸಿದ್ದರಿಂದ ಪರವಾನಗಿಯನ್ನು ನವೀಕರಣ ಮಾಡಿಕೊಟ್ಟಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ನಿರಪೇಕ್ಷಣಾ ಪತ್ರ ನೀಡಿದವರು ಸ್ಥಳಕ್ಕೆ ಭೇಟಿ ನೀಡಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಬೇಕಿತ್ತು. ಇದು ಆಗಿಲ್ಲ. ಜಿಲ್ಲಾಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿಲ್ಲ. ಹೀಗಾಗಿ ಘಟನೆಯನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗುತ್ತಿದೆ ಎಂದು ಹೇಳಿದರು.
9
+ ಕೆನಡಾದಲ್ಲಿ ಭಾರತೀಯ ವಿದ��ಯಾರ್ಥಿಗಳಿಗೆ ಸಿಗ್ತಿಲ್ಲ ಉದ್ಯೋಗ
10
+ ತನಿಖೆಯ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಘಟನೆಯಲ್ಲಿ 14 ಮಂದಿ ಮೃತಪಟ್ಟಿರುವುದರಿಂದ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದರು. ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಮತ್ತು ಗಾಯಗೊಂಡ 4 ಜನರಿಗೆ ಉಚಿತ ಚಿಕಿತ್ಸೆ ಕೊಡಿಸಲಾಗುವುದು ಎಂದರು.
eesanje/url_46_334_12.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಹೊಸ ಮದ್ಯದಂಗಡಿಗೆ ಅನುಮತಿ ನೀಡುವಂತೆ ಸಿಎಂ ಮೇಲೆ ಶಾಸಕರ ಒತ್ತಡ
2
+ ಬೆಂಗಳೂರು,ಅ.8- ಹೊಸದಾಗಿ ಮದ್ಯದಂಗಡಿಗಳಿಗೆ ಪರವಾನಗಿ ಕೊಡಲು ಅನುಮತಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಆಡಳಿತಾರೂಢ ಪಕ್ಷದ ಶಾಸಕರು ಭಾರೀ ಒತ್ತಡ ಹೇರಲಾರಂಭಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಂಪುಟದ ಬಹುತೇಕ ಸಚಿವರು, ಕಾಂಗ್ರೆಸ್ ಶಾಸಕರು, ವಿರೋಧ ಪಕ್ಷದಲ್ಲಿರುವ ಕೆಲವು ಶಾಸಕರೂ ಕೂಡ ಹೊಸ ಮದ್ಯದಂಗಡಿಗಳಿಗೆ ಅನುಮತಿ ನೀಡಬೇಕು ಎಂದು ಮುಖ್ಯಮಂತ್ರಿಯವರ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ.
3
+ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ನಡುವೆ ಈ ವಿಷಯದಲ್ಲಿ ಭಿನ್ನ ಅಭಿಪ್ರಾಯಗಳು ಕೇಳಿಬಂದಿವೆ. ಕಳೆದ 30 ವರ್ಷಗಳಿಂದಲೂ ಹೊಸ ಮದ್ಯ ಮಾರಾಟದ ಸನ್ನದ್ಧುಗಳನ್ನು ನೀಡಿಲ್ಲ. ಈಗಿರುವ ಪರವಾನಗಿಗಳನ್ನೇ ನಾಲ್ಕರಿಂದ ಐದು ಕೋಟಿ ರೂ.ಗಳಿಗೆ ಮಾರಾಟ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಹೊಸ ಸನ್ನದ್ಧುಗಳನ್ನು ನೀಡಬೇಕು, ಇದರಿಂದ ಉದ್ಯೋಗವಕಾಶಗಳು ಹೆಚ್ಚುತ್ತವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
4
+ ಆದರೆ ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಾಸಗಟಾಗಿ ತಳ್ಳಿಹಾಕಿದ್ದು, ನನ್ನ ಪ್ರಕಾರ ಹೊಸ ಮದ್ಯ ಮಾರಾಟಕ್ಕೆ ಪರವಾನಗಿಗಳನ್ನು ನೀಡುವ ಅಗತ್ಯ ಇಲ್ಲ ಎಂದಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಹಲವಾರು ಜನಪರ ಭರವಸೆಗಳನ್ನು ನೀಡಿದ್ದಂತೆ ಬಂಡವಾಳಿಶಾಹಿಗಳಿಗೂ ಕೆಲವು ಆಶ್ವಾಸನೆಗಳನ್ನು ಕೊಟ್ಟಿತ್ತು. ಸಂಪನ್ಮೂಲ ಕ್ರೂಢೀಕರಣ, ಪಕ್ಷ ಸಂಘಟನೆ ದೃಷ್ಟಿಯಿಂದಾಗಿ ಕಾಲಕಾಲಕ್ಕೆ ಕೆಲವು ಭರವಸೆಗಳನ್ನು ನೀಡಲಾಗಿದೆ. ಅವುಗಳ ಈಡೇರಿಕೆಗೆ ಸಂಪುಟದಲ್ಲಿ ಸದಸ್ಯರಾಗಿರುವವರು ಹರಸಾಹಸ ನಡೆಸುತ್ತಿದ್ದಾರೆ.
5
+ ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳನ್ನು ಪ್ರಶಂಸಿಸಿದ ರಾಜ್ಯಪಾಲ ಗೆಹ್ಲೋಟ್
6
+ ಒಂದು ವೇಳೆ ಹೊಸ ಪರವಾನಗಿಗಳನ್ನು ನೀಡಲು ಮುಂದಾದರೆ ಸಾವಿರಾರು ಕೋಟಿ ರೂ.ಗಳ ಭ್ರಷ್ಟಾಚಾರ ನಡೆಯುವ ಆತಂಕ ಇದೆ. ಇದು ಲೋಕಸಭೆ ಚುನಾವಣೆಯಲ್ಲಿ ವಿರೋಧ ಪಕ್ಷಗಳಿಗೆ ಅಸ್ತ್ರವಾಗಲಿದೆ ಎಂದು ಗುಪ್ತಚರ ಇಲಾಖೆ ಮುಖ್ಯಮಂತ್ರಿಯವರಿಗೆ ವರದಿ ನೀಡಿದೆ.
7
+ ಇತ್ತೀಚೆಗೆ ಕಲ್ಬುರ್ಗಿ, ಬಿಜಾಪುರ, ಬಾಗಲಕೋಟೆ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗ್ರಾಮೀಣ ಭಾಗದಲ್ಲಿ ಮದ್ಯ ಮಾರಾಟವನ್ನು ವಿರೋಸಿ ಸ್ತ್ರೀಶಕ್ತಿ ಸಂಘಗಳ ನೇತೃತ್ವದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. ಅದಕ್ಕೆ ಬೆಂಬಲವಾಗಿ ಆಡಳಿತಾರೂಢ ಕಾಂಗ್ರೆಸ್‍ನ ಅಳಂದ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಮದ್ಯ ಮಾರಾಟ ಮಾಡಿದ ಪಾಪದ ಹಣದಲ್ಲಿ ಸರ್ಕಾರ ನಡೆಸಬಾರದು ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು.
8
+ ಅಬಕಾರಿ ಸಚಿವರು ಗ್ರಾಮ ಪಂಚಾಯಿತಿಗೊಂದರಂತೆ ಮದ್ಯ ಮಾರಾಟ ಪರವಾನಗಿ ನೀಡುವ ಚಿಂತನೆ ನಡೆಸಿದ್ದಾರೆ. ಇದು ಒಳ್ಳೆಯದಲ್ಲ. ಗ್ರಾಮೀಣ ಭಾಗದಲ್ಲಿ ಮಹಿಳೆಯರು ಮದ್ಯ ಮಾರಾಟ�� ವಿರುದ್ಧ ತೀವ್ರ ಆಕ್ರೋಶಗೊಂಡಿದ್ದಾರೆ. ನಮಗೆ ಉಚಿತ ಅಕ್ಕಿ ಬೇಡ, ಗೃಹಲಕ್ಷ್ಮಿ ಹಣವೂ ಬೇಡ, ಮದ್ಯ ಮಾರಾಟವನ್ನು ನಿಲ್ಲಿಸಿ ಎಂದು ಬೇಡಿಕೊಳ್ಳುತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ ಅನಕೃತವಾದ ಮದ್ಯ ಮಾರಾಟದಿಂದ ಸಾಮಾಜಿಕ ಸ್ವಾಸ್ಥ್ಯ ಕೆಡುತ್ತಿದೆ, ಸಂಸಾರಗಳು ಬೀದಿಪಾಲಾಗುತ್ತಿವೆ. ಹೀಗಾಗಿ ಹೆಚ್ಚುವರಿ ಮದ್ಯ ಮಾರಾಟಕ್ಕೆ ಅನುಮತಿ ನೀಡಬಾರದು ಎಂದು ಬಿ.ಆರ್.ಪಾಟೀಲ್ ಒತ್ತಾಯಿಸಿದರು.
9
+ ಶಾಸಕರ ವಲಯದಲ್ಲಿ ವಿರೋಧ ವ್ಯಕ್ತಪಡಿಸುವ ಒಂದು ವರ್ಗವಿದ್ದರೆ, ಪರವಾನಗಿ ನೀಡಲೇಬೇಕು ಎಂದು ಹಠ ಹಿಡಿಯುತ್ತಿರುವ ಮತ್ತಷ್ಟು ಶಾಸಕರು ವಾದ, ವಿವಾದಗಳಿಗೆ ತಲೆ ಕೆಡಿಸಿಕೊಳ್ಳದೆ ಮದ್ಯ ಮಾರಾಟಕ್ಕೆ ಅನುಮತಿ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.
10
+ ಪಟಾಕಿ ದುರಂತ : ಉನ್ನತ ಮಟ್ಟದ ತನಿಖೆಗೆ ಹೆಚ್‌ಡಿಕೆ ಆಗ್ರಹ
11
+ ಪಂಚಖಾತ್ರಿಗಳನ್ನು ಜಾರಿಗೊಳಿಸಿರುವ ರಾಜ್ಯಸರ್ಕಾರ ಅದಕ್ಕೆ ಅಗತ್ಯವಾದ ಹಣಕಾಸು ಕ್ರೂಢೀಕರಣಕ್ಕೆ ವಿವಿಧ ರೀತಿಯ ಮೂಲಗಳನ್ನು ಆಶ್ರಯಿಸಿದೆ. ಅದರಲ್ಲಿ ಪ್ರಮುಖವಾಗಿ ಅಬಕಾರಿ ತೆರಿಗೆಯೂ ಸೇರಿದೆ.ಪ್ರತಿ ತಾಲೂಕಿನಲ್ಲೂ ಶೇ. 30 ರಷ್ಟು ಹೆಚ್ಚು ಮದ್ಯ ಮಾರಾಟ ಮಾಡಬೇಕು ಎಂಬ ಗುರಿ ನಿಗದಿ ಪಡಿಸಲಾಗಿದೆ. ಹೀಗಾಗಿ ಸರ್ಕಾರದ ಅಧಿಕೃತ ಸಂಸ್ಥೆ ಎಂಎಸ್‍ಐಎಲ್‍ಗಳೂ ಸೇರಿದಂತೆ ಹಲವಾರು ಕಡೆ ಗ್ರಾಮೀಣ ಭಾಗದ ಅನಧಿಕೃತ ಮಾರಾಟಕ್ಕೆ ಮದ್ಯ ಪೂರೈಕೆ ಮಾಡಲಾಗುತ್ತಿದೆ.
12
+ ಅನಧಿಕೃತವಾದ ಮದ್ಯ ಮಾರಾಟದಿಂದ ಸರ್ಕಾರಕ್ಕೂ ಆದಾಯ ಬರುವುದಿಲ್ಲ. ಸಮಾಜದ ಸ್ವಾಸ್ಥ್ಯವೂ ಪಾಲನೆ ಆಗುವುದಿಲ್ಲ. ಹೀಗಾಗಿ ನೇರವಾಗಿ ಪರವಾನಗಿ ನೀಡುವುದೇ ಸೂಕ್ತ ಎಂಬ ವಾದಗಳು ಇವೆ. ವಾದ ವಿವಾದ ಏನೇ ಇದ್ದರೂ ಒಂದು ಕಾಲದಲ್ಲಿ ಸರ್ಕಾರವನ್ನೆ ಅಲುಗಾಡಿಸುತ್ತಿದ್ದ ಅಬಕಾರಿ ಲಾಬಿ ಈಗ ಮತ್ತೊಮ್ಮೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರ ನಡುವೆಯೇ ಭಿನ್ನಾಭಿಪ್ರಾಯ ಸೃಷ್ಟಿಸುವ ಸಾಧ್ಯತೆಗಳಿವೆ.
eesanje/url_46_334_2.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ವಿದ್ಯುತ್ ಸಮಸ್ಯೆ ಕುರಿತು ಶ್ವೇತಪತ್ರಕ್ಕೆ ಹೆಚ್‍ಡಿಕೆ ಆಗ್ರಹ
2
+ ಬೆಂಗಳೂರು, ಅ.10- ಅಡ್ಡದಾರಿಯಲ್ಲಿ ಅಧಿಕಾರ ಪಡೆಯಲು 5 ಗ್ಯಾರಂಟಿ ಕೊಟ್ಟ ಕಾಂಗ್ರೆಸ್, 6ನೇ ಗ್ಯಾರಂಟಿ ಕತ್ತಲೆಭಾಗ್ಯವನ್ನು ನವರಾತ್ರಿಗೆ ಮೊದಲೇ ಖಾತರಿಪಡಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಹೊಸ ಭಾಗ್ಯ ಡಿಸೆಂಬರಿಗೋ, ಜನವರಿಗೋ ಎಂದಷ್ಟೇ ತೀರ್ಮಾನ ಆಗಬೇಕಿದೆ.
3
+ ಕೂಡಲೇ ವಿದ್ಯುತ್ ದುಸ್ಥಿತಿಯ ಬಗ್ಗೆ ರಾಜ್ಯಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಆಗ್ರಹಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಈಗಾಗಲೇ 5 ಅರೆಬರೆ ಗ್ಯಾರಂಟಿಗಳನ್ನು ಕೊಟ್ಟು ಕೈ ತೊಳೆದುಕೊಂಡಿದೆ. ಶೀಘ್ರವೇ 6ನೇ ಗ್ಯಾರಂಟಿ ಕೊಡಲು ಸಿದ್ಧತೆ ನಡೆಸಿದೆ. ಅದರ ಹೆಸರು ಕತ್ತಲೆಭಾಗ್ಯ ಎಂದು ಅವರು ಟೀಕಿಸಿದ್ದಾರೆ.
4
+ ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಈ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ. 2024ರ ಹೊಸ ವರ್ಷಕ್ಕೆ ತಾನು ಕೊಟ್ಟ ಗೃಹಜ್ಯೋತಿಗೆ ಎಳ್ಳುನೀರು ಬಿಟ್ಟು ಕಗ್ಗತ್ತಲ ಕರ್ನಾಟಕದ ಉದಯ ಮಾಡಿಸುವುದು ಗ್ಯಾರಂಟಿ. ಇದು ಸತ್ಯ ಎಂದಿದ್ದಾರೆ. ಕಾವೇರಿ ಬಗ್ಗೆ ಸರ್ಕಾರ ಕಳ್ಳಾಟ ಆಡಿದೆ. ತಮಿಳುನಾಡು ವಿಧಾನಸಭೆಯಲ್ಲಿ ರಾಜ್ಯದ ವಿರುದ್ಧ ನಿಲುವಳಿ ಸೂಚನೆ ಅಂಗೀಕಾರವಾಗಿದೆ. ಎಮ್ಮೆ ಚರ್ಮದ ಸರ್ಕಾರಕ್ಕೆ ಕಾವೇರಿ ಒಡಲಾಳದ ಬೇಗುದಿ ಬಗ್ಗೆ ಜಾಣ ಕುರುಡು ಪ್ರದರ್ಶಿಸಿದೆ.
5
+ ಸರ್ಕಾರ ರಾಜ್ಯದ ಉದ್ದಗಲಕ್ಕೂ ಅನಧಿಕೃತ ಲೋಡ್ ಶೆಡ್ಡಿಂಗ್ ಹೇರಿ ದಿನಕ್ಕೆ 2 ಗಂಟೆ ವಿದ್ಯುತ್ತಿಗೂ ದಿಕ್ಕಿಲ್ಲದ ದುಸ್ಥಿತಿ ನಿರ್ಮಾಣ ಮಾಡಿದೆ. ನಮ್ಮ ರೈತರಿಗೆ ಲೋಡ್ ಶೆಡ್ಡಿಂಗ್, ತಮಿಳುನಾಡಿಗೆ ಸಮೃದ್ಧ ನೀರು ಎಂದು ವಾಗ್ದಾಳಿ ನಡೆಸಿದ್ದಾರೆ.
6
+ ಹ್ಯಾಟ್ರಿಕ್ ಗೆಲುವಿನೊಂದಿಗೆ ಮತ್ತೆ ಕೆಸಿಆರ್ ಅಧಿಕಾರಕ್ಕೆ : ಕೆಟಿಆರ್ ವಿಶ್ವಾಸ
7
+ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿದ್ಯುತ್ ಅಭಾವದಿಂದ ನೀರು ಹರಿಸಲಾಗದೇ ಬೆಳೆಗಳು ಒಣಗುತ್ತಿವೆ. ನಾಲೆಗಳಲ್ಲೂ ನೀರಿಲ್ಲ, ಬೋರ್‍ವೆಲ್‍ಗಳಿಂದ ಪಂಪ್ ಮಾಡಲು ವಿದ್ಯುತ್ತೂ ಇಲ್ಲ. ಮೊದಲೇ ಕಷ್ಟದಲ್ಲಿರುವ ರೈತನ ಬೆನ್ನಿನ ಮೇಲೆ ಬರೆಯ ಮೇಲೆ ಬರೆ ಎಳೆಯುತ್ತಿದೆ ಕಾಂಗ್ರೆಸ್ ಸರ್ಕಾರ ಎಂದು ಅವರು ಆರೋಪಿಸಿದ್ದಾರೆ. ವಿದ್ಯುತ್ ಕ್ಷಾಮಕ್ಕೆ ಮೊದಲೇ ಕರ್ನಾಟಕ ವಿದ್ಯುತ್‍ಉತ್ಪಾದನೆಯಲ್ಲಿ ಕೊರತೆಯಾಗಿದೆ. ಉತ್ಪಾದನೆಗೆ ಅಗತ್ಯವಾದ ಮೂಲಗಳ ಕ್ಷಾಮಕ್ಕೆ ತುತ್ತಾಗಿ, ಪರರಾಜ್ಯಗಳ ಮುಂದೆ ದೈನೇಸಿಯಾಗಿ ನಿಂತು ವಿದ್ಯುತ್ ಸಾಲಕ್ಕೆ ಅರ್ಜಿ ಹಾಕಿಕೊಳ್ಳುತ್ತಿದೆ.
8
+ ಜಲ, ಪವನ, ಸೌರ ವಿದ್ಯುತ್ ಉತ್ಪಾದನೆ ಕುಸಿತವಾಗಿದೆ. ಇದು ದೂರದೃಷ್ಟಿಯ ಕೊರತೆ ಹಾಗೂ ನಿರ್ವಹಣೆಯ ವೈಫಲ್ಯ ಎಂದು ಟೀಕಿಸಿದ್ದಾರೆ. ಜಲಾಶಯಗಳು ಖಾಲಿಯಾಗಿದ್ದು, ವಿದ್ಯುತ್ ಉತ್ಪಾದನೆ ಮಿತವಾಗಿ ಮಾಡುವಂತೆ ಸರ್ಕಾರವೇ ಆದೇಶಿಸಿದೆ. ಇನ್ನೊಂದೆಡೆ ಉಷ್ಣ ವಿದ್ಯುತ್ ಸ್ಥಾವರಗಳು ಕಲ್ಲಿದ್ದಲು ಬವಣೆಯಿಂದ ಅಲ್ಪಸ್ವಲ್ಪ ಉತ್ಪಾದಿಸುತ್ತಿವೆ ಎಂದು ಅವರು ಹೇಳಿದ್ದಾರೆ.
9
+ ರಾಜ್ಯದ ಒಟ್ಟಾರೆ ಬೇಡಿಕೆಯಲ್ಲಿ ಶೇ.20ರಷ್ಟು ವಿದ್ಯುತ್ತನ್ನು ಸರ್ಕಾರ ಹೊರಗಿನಿಂದಲೇ ಪಡೆಯುತ್ತಿದೆ. ರಾಜ್ಯವನ್ನು ವಿದ್ಯುತ್ ಸಾಲಕ್ಕೆ ತಳ್ಳಿ, ಕರುನಾಡನ್ನು ಬರ್ಬಾದ್ ಮಾಡಲಿದೆ ಕಾಂಗ್ರೆಸ್ ಸರ್ಕಾರ.ಆದರೆ, ವಿದ್ಯುತ್ ಸಾಲ ನೀಡುವ ಸ್ಥಿತಿಯಲ್ಲಿ ಇತರೆ ರಾಜ್ಯಗಳೂ ಇಲ್ಲ. ಹಾಗಾದರೆ ಮುಂದೇನು? ಸಂಬಂಧಪಟ್ಟ ಸಚಿವರು ಮೌನವ್ರತ ಮಾಡುತ್ತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.
10
+ ನಿರ್ವಹಣೆ, ರಿಪೇರಿ ನೆಪದಲ್ಲಿ ಇಡೀ ದಿನ ವಿದ್ಯುತ್ ಕಡಿತ ಮಾಡುತ್ತಿರುವ ಸರ್ಕಾರದ ಸದಾರಮೆ ಆಟ ಈಗಷ್ಟೇ ಗೊತ್ತಾಗುತ್ತಿದೆ. ಹಿಂದೆ ಬರದಂತಹ ಕ್ಲಿಷ್ಟ ಸ್ಥಿತಿ ಇದ್ದರೂ ವಿದ್ಯುತ್ ಖರೀದಿಗೆ ಹಣ ಇರುತ್ತಿತ್ತು. ಈಗ ಖಜಾನೆ ಖಾಲಿಯಂತೆ ಎಂದು ಟೀಕಿಸಿದ್ದಾರೆ.
11
+ ಉದ್ಯಮಿಗೆ 5.39 ಕೋಟಿ ಪಂಗನಾಮ : ಹೆಚ್ಚು ಲಾಭಕ್ಕಾಗಿ ಹೂಡಿಕೆ ಮಾಡುವ ಮುನ್ನ ಹುಷಾರ್..!
12
+ ಲೋಕಸಭೆ ಚುನಾವಣೆವರೆಗೂ ಜನರನ್ನು ಗ್ಯಾರಂಟಿಗಳ ಅಮಲಿನಲ್ಲಿ ತೇಲಿಸಿ, ಆಮೇಲೆ ಕೈ ಎತ್ತಿಬಿಡುವ ದುಷ್ಟ ಹುನ್ನಾರ ಸರ್ಕಾರದ್ದು. ಆ ಕಾರಣಕ್ಕಾಗಿಯೇ ಸರ್ಕಾರ ಸತ್ಯ ಮರೆಮಾಚಿ ಮೊಸಳೆ ಕಣ್ಣೀರು ಹಾಕುತ್ತಿದೆ.ಆದರೆ, ಕತ್ತಲೆಭಾಗ್ಯ ಕರುಣಿಸುವ ಮುನ್ನ ಜನತೆಗೆ ಸತ್ಯವನ್ನೇ ಹೇಳಲಿ. ಬೇಡ ಎಂದವರು ಯಾರು? ವಿದ್ಯುತ್ ಸಾಲಕ್ಕೂ ದಿಕ್ಕಿಲ್ಲದ ಸರ್ಕಾರವು, ಖಾಸಗಿ ವಿದ್ಯುತ್ ಪೂರೈಕೆದಾರರಿಗೆ ಕಳೆದ ಆರೇಳು ತಿಂಗಳಿಂದ ಬಾಕಿ ಹಣ ನೀಡಿಲ್ಲ ಎನ್ನುವ ಮಾಹಿತಿ ಇದೆ. ಕೆಲ ಕಂಪನಿಗಳಿಗೆ 11 ತಿಂಗಳಿಂದ ಬಿಡಿಗಾಸು ಕೊಟ್ಟಿಲ್ಲವಂತೆ ಎಂದು ವ್ಯಂಗ್ಯವಾಡಿದ್ದಾರೆ.
13
+ ಇದು ಹೌದು ಎಂದಾದರೆ, ರಾಜ್ಯದ ಭವಿಷ್ಯದ ಗತಿ ಏನು? ಕೃಷಿ, ಕೈಗಾರಿಕೆಗಳ ಪಾಡೇನು? ಬೇಕಾಬಿಟ್ಟಿ ಬೆಲೆ ಏರಿಕೆ ಬರೆ ಎಳೆಸಿಕೊಂಡು ಏದುಸಿರು ಬಿಡುತ್ತಿರುವ ಜನರಿಗೆ ಸರ್ಕಾರದ ಉತ್ತರವೇನು ಎಂದು ಅವರು ಪ್ರಶ್ನಿಸಿದ್ದಾರೆ. ಕೃತಕ ಕತ್ತಲು ಸೃಷ್ಟಿಸಿ ಕಬ್ಬೆಕ್ಕಿನಂತೆ ಕದ್ದು ಹಾಲು ಕುಡಿಯುತ್ತೇವೆ ಎಂದರೆ ಆಗುವುದಿಲ್ಲ. ಜನರಿಗೂ ಕಳ್ಳಬೆಕ್ಕಿನ ಕಣ್ಣಾಮುಚ್ಚಾಲೆ ಈಗೀಗ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.
eesanje/url_46_334_3.txt ADDED
@@ -0,0 +1,6 @@
 
 
 
 
 
 
 
1
+ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಎಲ್‍ಇಟಿ ಉಗ್ರರು ಹತ್ಯೆ
2
+ ಶ್ರೀನಗರ, ಅ.10-ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಲಷ್ಕರ್-ಎ-ತೊಯ್ಬಾದ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಜಿಲ್ಲೆಯ ಅಲ್ಶಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿಯ ನಂತರ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಗುಂಡಿನ ಚಕಮಕಿ ನಡೆದಿದೆ.
3
+ ಇದರಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದ್ದು ಕಾರ್ಯಾಚರಣೆ ಮುಂದುವರೆದಿದ್ದು ,ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
4
+ ಈ ವರ್ಷದ ಆರಂಭದಲ್ಲಿ ಬ್ಯಾಂಕ್ ಗಾರ್ಡ್ ಸಂಜಯ್ ಶರ್ಮಾನನ್ನು ಇದೇ ಎಲ್‍ಇಟಿ ಉಗ್ರರು ಹತ್ಯೆ ಮಾಡಿದ್ದರು ಎಂದು ಹೇಳಿದ್ದಾರೆ. ಹತರಾದ ಭಯೋತ್ಪಾದಕರನ್ನು ಮೋರಿಫತ್ ಮಕ್ಬೂಲ್ ಮತ್ತು ಜಾಜಿಮ್ ಫಾರೂಕ್ ಅಲಿಯಾಸ್ ಅಬ್ರಾರ್ ಎಂದು ಗುರುತಿಸಲಾಗಿದೆ.
5
+ ಡೋರ್ ಲಾಕ್ ಒಡೆದು ಚಿನ್ನಾಭರಣ ಲೂಟಿ, ಇಬ್ಬರು ನೇಪಾಳದ ಸೆಕ್ಯೂರಿಟಿ ಗಾರ್ಡ್ ಬಂಧನ
6
+ ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಹತ್ಯೆಯಲ್ಲಿ ಭಯೋತ್ಪಾದಕ ಅಬ್ರಾರ್ ಭಾಗಿಯಾಗಿದ್ದಾನೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾಶ್ಮೀರ ವಲಯ) ವಿಜಯ್ ಕುಮಾರ್ ತಿಳಿಸಿದ್ದಾರೆ.
eesanje/url_46_334_4.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ 70ನೇ ಸಹಕಾರ ಸಪ್ತಾಹ ಸರಳ ಆಚರಣೆ : ಕೆ.ಎನ್.ರಾಜಣ್ಣ
2
+ ಬೆಂಗಳೂರು, ಅ.9- ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಇರುವುದರಿಂದ 70ನೆ ಅಖಿಲ ಭಾರತ ಸಹಕಾರಿ ಸಪ್ತಾಹವನ್ನು ಸರಳವಾಗಿ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು. ಸಹಕಾರ ಸಪ್ತಾಹದ ಪೂರ್ವಸಿದ್ಧತಾ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರ ಪರಿಸ್ಥಿತಿಯಿಂದಾಗಿ ಸಪ್ತಾಹವನ್ನು ಅದ್ಧೂರಿಯಾಗಿ ಆಚರಿಸಲಾಗದು.
3
+ ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯರನ್ನು ಗುರುತಿಸಿ ಸಹಕಾರ ರತ್ನ ಪ್ರಶಸ್ತಿ ನೀಡಲು ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು. ರಾಜ್ಯದ ವಿವಿಧ ಭಾಗಗಳಲ್ಲಿ ಸಹಕಾರಿ ಸಪ್ತಾಹ ಆಚರಣೆ ಅಂಗವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದರು.
4
+ ಆಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕೂ ಶುಭಮನ್‍ ಗಿಲ್ ಅಲಭ್ಯ
5
+ ಒಂದು ತಿಂಗಳಲ್ಲಿ ವರದಿ:ಸಹಕಾರಿ ಸಂಸ್ಥೆಗಳಲ್ಲಿ ನಡೆದಿರುವ ಅವ್ಯವಹಾರ ಹಾಗೂ ಠೇವಣಿದಾರರ ಹಿತ ಕಾಪಾಡುವ ಉದ್ದೇಶದಿಂದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನೇತೃತ್ವದಲ್ಲಿ ರಚಿಸಲಾಗಿರುವ ಸಮಿತಿ ಇನ್ನೊಂದು ಇನ್ನೊಂದು ತಿಂಗಳಲ್ಲಿ ವರದಿ ಕೊಡಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ರಾಜಣ್ಣ ತಿಳಿಸಿದರು.
6
+ ಸಹಕಾರಿ ಸಂಸ್ಥೆಗಳಲ್ಲಿ ನಡೆದಿರುವ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ರೈತರ ಹಾಗೂ ಠೇವಣಿದಾರರ ಹಿತ ಕಾಪಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಇವರಿಗೆ ಅನ್ಯಾಯ ಮಾಡಿದವರಿಗೆ ಶಿಕ್ಷೆಯಾಗಬೇಕು ಎಂಬುದು ಸರ್ಕಾರದ ಉದ್ದೇಶ. ಬಹಳಷ್ಟು ಸಂಸ್ಥೆಗಳು ಒಳ್ಳೆಯ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
7
+ ಸರ್ಕಾರಿ ವಲಯದಲ್ಲಿ ಡಿಜಿಟಲೀಕರಣ ಮಾಡುವುದರಿಂದ ಪಾರದರ್ಶಕತೆ ತರಬಹುದು, ದುರ್ಬಳಕೆ ತಡೆಯಬಹುದು. ಹೀಗಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮವನ್ನು ಸ್ವಾಗತಿಸುತ್ತೇವೆ ಎಂದರು. ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ.ದೇವೇಗೌಡರು ಮಾತನಾಡಿ, ನವೆಂಬರ್ 14 ರಿಂದ 20ರ ವರೆಗೆ 70ನೆ ಅಖಿಲ ಭಾರತ ಸಪ್ತಾಹವನ್ನು ಹಮ್ಮಿಕೊಳ್ಳಲಾಗುವುದು.
8
+ ಸಪ್ತಾಹದ ಮುಖ್ಯ ಧ್ಯೇಯ 5 ಟ್ರಿಲಿಯನ್ ಡಾಲರ್. ಆರ್ಥಿಕತೆ ಸಾಧನೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳು ಎಂಬುದಾಗಿ ಘೋಷಿಸಲಾಗಿದೆ. ಪ್ರತಿದಿನವೂ ಒಂದೊಂದು ಶೀರ್ಷಿಕೆಯಡಿ ಏಳು ದಿನವೂ ರಾಜ್ಯದ ವಿವಿಧೆಡೆ ಸಪ್ತಾಹ ಆಚರಿಸಲಾಗುವುದು. ನವೆಂಬರ್ 14ರಂದು ಸಹಕಾರ ಸಂಘಸಂಸ್ಥೆಗಳಲ್ಲಿನ ಇತ್ತೀಚಿನ ಬೆಳವಣಿಗೆಗಳು, ನವೆಂಬರ್ 15ರಂದು ಸಾಲೇತರ ಸಹಕಾರ ಸಂಘಗಳ ಪುನಶ್ಚೇತನ ಹಾಗೂ ಆರ್ಥಿಕ ಸೇರ್ಪಡೆ, ನ.16ರಂದು ಸಹಕಾರ ಸಂಸ್ಥೆಗಳನ್ನು ಡಿಜಿಟಲೀಕರಣಗೊಳಿಸಲು ತಾಂತ್ರಿಕತೆಯ ಅಳ���ಡಿಕೆ ಮತ್ತು ಉನ್ನತೀಕರಣ ವಿಚಾರದ ಬಗ್ಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
9
+ ಟಾಸ್ ಗೆದ್ದು ಬ್ಯಾಟ್ ಮಾಡಿದ್ದೇ ಆಸ್ಟ್ರೇಲಿಯಾ ಸೋಲಿಗೆ ಕಾರಣ
10
+ ನ.17ರಂದು ಸಹಕಾರ ಸಂಸ್ಥೆಗಳಲ್ಲಿ ಸರಳ ವ್ಯಾಪಾರ ಪ್ರಕ್ರಿಯೆ ಮತ್ತು ಉದಯೋನ್ಮುಖ ವಲಯಗಳು, ನ.18ರಂದು ಸಾರ್ವಜನಿಕ-ಖಾಸಗಿ-ಸಹಕಾರಿ ಸಹಭಾಗಿತ್ವವನ್ನು ಬಲಪಡಿಸುವುದು, ನ.19ರಂದು ಮಹಿಳೆಯರು, ಯುವಜನ ಮತ್ತು ಅಬಲ ವರ್ಗಕ್ಕೆ ಸಹಕಾರ ಸಂಸ್ಥೆಗಳು, ನ.20ರಂದು ಸಹಕಾರ ಶಿಕ್ಷಣ ಮತ್ತು ತರಬೇತಿಯ ಪರಿಷ್ಕರಣೆ ಶೀರ್ಷಿಕೆಯಡಿ ಕಾರ್ಯಕ್ರಮ ನಡೆಯಲಿದೆ ಎಂದರು.
11
+ ಸಹಕಾರ ಸಪ್ತಾಹದಲ್ಲಿ ಎಲ್ಲ ಸಹಕಾರಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕು. ಸಹಕಾರ ಸಪ್ತಾಹದ ಉದ್ಘಾಟನೆ, ಸಮಾರೋಪ ಹಾಗೂ ವಿವಿಧ ಕಾರ್ಯಕ್ರಮಗಳ ಸ್ಥಳವನ್ನು ಸದ್ಯದಲ್ಲೇ ತಿಳಿಸಲಾಗುವುದು ಎಂದು ತಿಳಿಸಿದರು.
eesanje/url_46_334_5.txt ADDED
@@ -0,0 +1,9 @@
 
 
 
 
 
 
 
 
 
 
1
+ ಕೋವಿಡ್ ಹಗರಣದ ಬೆನ್ನುಬಿದ್ದ ಕುನ್ಹಾ
2
+ ಬೆಂಗಳೂರು,ಅ.9- ಬಿಜೆಪಿ ಸರ್ಕಾರ ಅವಧಿಯ ಮತ್ತೊಂದು ಹಗರಣದ ಬೆನ್ನು ಬಿದ್ದಿದೆ ಕಾಂಗ್ರೆಸ್ ಸರ್ಕಾರ. ಕೊರೊನಾ ಟೈಮ್ ನಲ್ಲಿ ನೂರಾರೂ ಕೋಟಿ ಹಗರಣವಾಗಿದೆ ಅಂತ ದೂರು ಬಂದ ಹಿನ್ನೇಲೆಯಲ್ಲಿ ಹಗರಣದ ತನಿಖೆ ನಡೆಸಲಾಗುತ್ತಿದೆ. ಹಗರಣದಲ್ಲಿ ಮಾಜಿ ಸಚಿವರು ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂಬ ಅರೋಪ ಕೇಳಿಬಂದಿರುವುದರಿಂದ ತನಿಖಾ ಸಮಿತಿ ಅಧ್ಯಕ್ಷ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರು ವಿಚಾರಣೆ ತೀವ್ರಗೊಳಿಸಿದ್ದಾರೆ.
3
+ ಸಮಿತಿ ಅಧ್ಯಕ್ಷ ನಿವೃತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರು ಹಗರಣದ ಇಂಚಿಂಚು ಮಾಹಿತಿ ಸಂಗ್ರಹ ಮಾಡುತ್ತಿರುವುದರಿಂದ ತಪ್ಪಿತಸ್ಥರಲ್ಲಿ ನಡುಕ ಆರಂಭವಾಗಿದೆ. ಕಳೆದ ಮೂರು ದಿನಗಳಿಂದ ಪಾಲಿಕೆ ಅಯುಕ್ತರ ವಿಚಾರಣೆ ನಡೆಸ್ತಿರೋ ತನಿಖಾ ಸಮಿತಿ ಕೋವಿಡ್ ಟೈಮ್ ನಲ್ಲಿ ಬಿಬಿಎಂಪಿ ಮಾಡಿರುವ ಖರ್ಚು, ವೆಚ್ಚಗಳ ಬಗ್ಗೆ ದಾಖಲೆ ನೀಡುವಂತೆ ಸೂಚನೆ ನೀಡಿದೆ. 2019 ರಿಂದ 2022 ರವೆಗೆ ಪಾಲಿಕೆಯಲ್ಲಿ ಖರ್ಚು ಮಾಡಿರೋ ಪೈಲ್ ಗಳನ್ನೂ ನೀಡುವಂತೆಯೂ ಆದೇಶಿಸಿದ್ದಾರೆ.
4
+ ಬ್ರಾಂಡ್ ಬೆಂಗಳೂರಿಗೆ ಸಾರ್ವಜನಿಕ ಸಹಭಾಗಿತ್ವಕ್ಕಾಗಿ ಮಹತ್ವದ ಸುಧಾರಣೆಗಳ ಜಾರಿ : ಡಿಸಿಎಂ
5
+ ಈ ಅದೇಶದ ಹಿನ್ನೆಲೆಯಲ್ಲಿ ದಾಖಲೆಗಳ ಪಟ್ಟಿ ಮಾಡಿ ತನಿಖಾ ಸಂಸ್ಥೆಗೆ ಬಿಬಿಎಂಪಿ ಅರೋಗ್ಯ ಇಲಾಖೆ ಅಧಿಕಾರಿಗಳು ಹಸ್ತಾಂತರ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಪಾಲಿಕೆ ಅಯುಕ್ತರಿಗೆ ಸಮಿತಿ ಅಧ್ಯಕ್ಷರಿಂದ ಪ್ರಶ್ನೇಗಳ ಸುರಿಮಳೆ ಸುರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
6
+ 2019 ರಿಂದ 2022 ರವರೆಗೆ ಕೋವಿಡ್ ಟೈಮ್ ನಲ್ಲಿ ಪಾಲಿಕೆಯಿಂದ ಎಷ್ಟು ಖರ್ಚು ಮಾಡಲಾಗಿದೆ, ಯಾವ,ಯಾವ ಕೋವಿಡ್ ಉಪಕರಣಗಳನ್ನೂ ಪರ್ಚೆಸ್ ಮಾಡಿದಿರಿ, ಅದಕ್ಕೆ ಸಂಬಂಧಿಸಿದ ಬಿಲ್ ಗಳನ್ನೂ ಸಲ್ಲಿಸಿ, ಪಾಲಿಕೆ ವ್ಯಾಪ್ತಿಯಲ್ಲಿ ಎಷ್ಟು ಅಂಬುಲೆನ್ಸ್ ಗಳನ್ನೂ ಬಾಡಿಗೆಗೆ ಪಡೆದಿದ್ರಿ,ಅವುಗಳ ಲಾಗ್ ಬುಕ್ ಹಾಗೂ ಬಾಡಿಗೆ ನೀಡಿರೋ ದಾಖಲೆ ನೀಡಿ.
7
+ ಸ್ಯಾನಿಟೈಸರ್ , ಮಾಸ್ಕ್, ಸಿಲಿಂಡರ್, ಹಾಸಿಗೆ, ಸೇರಿದಂತೆ ಇತರೆ ವಸ್ತುಗಳ ಖರೀದಿ ಬಿಲ್ ಗಳನ್ನೂ ನೀಡಿ, ಕೋವಿಡ್ ಟೈಮ್ ನಲ್ಲಿ ಅಸ್ಪತ್ರೆಗಳಿಗೆ , ಕೋವಿಡ್ ವಾರಿಯರ್ಸ್ ಗಳಿಗೆ ಹಾಗೂ ಅನಾಥರಿಗೆ ನೀಡಿದ ಊಟದ ಲೆಕ್ಕ ನೀಡಿ, ಇನ್ನೂ ಕೋರೋನಾ ಸೊಂಕಿತರಿಗೆ ಖಾಸಗಿ ಅಸ್ಪತ್ರೆಯಲ್ಲಿ ಎಷ್ಟು ಜನಕ್ಕೆ ಚಿಕಿತ್ಸೆ ನೀಡಿದ್ದೀರಾ ಹಾಗೂ ಎಷ್ಟು ಹಣ ಖರ್ಚು ಮಾಡಲಾಗಿದೆ ಎಂಬ ಮಾಹಿತಿ ಕೇಳಲಾಗಿದೆಯಂತೆ.
8
+ : ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಘೋಷಣೆ
9
+ ಇದರ ಜತೆಗೆ ಖಾಸಗಿ ಅಸ್ಪತ್ರೆಗೆ ನೀಡಿರೋ ಬಿಲ್ ಗಳ ದಾಖಲೆ ನೀಡಿ,,ಹೀಗೆ ಹತ್ತು ಹಲವು ಪ್ರಶ್ನೇಗಳನ್ನೂ ಕೇಳಿ, ಒಂದು ವಾರದೋಳಗೆ ಕೇಳಿರೋ ಎಲ್ಲಾ ದಾಖಲೆಗಳನ್ನೂ ನೀಡುವಂತೆ ಸೂಚನೆ ನೀಡಿರುವುದರಿಂದ ಪಾಲಿಕೆ ಅರೋಗ್ಯ ಅಧಿಕಾರಿಗಳು ಬಿಲ್‍ಗಳ ಹುಡುಕಾಟ ನಡೆಸಿ ಹಲವು ಬಿಲ್ ಗಳ ಪಟ್ಟಿ ರೆಡಿ ಮಾಡಿದ್ದಾರಂತೆ.
eesanje/url_46_334_6.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ರಾಜ್ಯ ಸರ್ಕಾರ ತನ್ನ ವೈಫಲ್ಯತೆಯನ್ನು ಪ್ರಧಾನಿ ಮೇಲೆ ಹೇರುತ್ತಿದೆ : ಸುಮಲತಾ
2
+ ಬೆಂಗಳೂರು,ಅ.9- ಕಾವೇರಿ ನದಿ ನೀರಿನ ಹಂಚಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ವಾಸ್ತವ ಪರಿಸ್ಥಿತಿಯನ್ನು ತಾವು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಜಲಶಕ್ತಿ ಸಚಿವರಿಗೆ ವಿವರಿಸಿರುವುದಾಗಿ ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಸ್ಪಷ್ಟಪಡಿಸಿದ್ದಾರೆ.
3
+ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಧ್ಯಪ್ರವೇಶ ಮಾಡಬೇಕು ಎಂಬುದು ರಾಜ್ಯಸರ್ಕಾರದ ಅಸಹಾಯಕತೆಯ ವಾದ. ಇವರ ವೈಫಲ್ಯವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
4
+ ನೀರು ನಿರ್ವಹಣಾ ಪ್ರಾಧಿಕಾರ ಆದೇಶಗಳೇ ಅಂತಿಮ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಹೀಗಿರುವಾಗ ಪ್ರಧಾನಮಂತ್ರಿಯವರು ಮಧ್ಯಪ್ರವೇಶ ಮಾಡಲು ಹೇಗೆ ಸಾಧ್ಯ. ದೇಶದ ಪ್ರಧಾನಿಯವರು ಯಾವುದೋ ಒಂದು ರಾಜ್ಯದ ಪರವಾಗಿ ಮಾತನಾಡಲು ಸಾಧ್ಯವಿಲ್ಲ ಎಂದು ಹೇಳಿದರು.
5
+ ಈ ಹಿಂದೆ ತಾವು ಪ್ರಧಾನಮಂತ್ರಿ ಮತ್ತು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ವಾಸ್ತವ ಪರಿಸ್ಥಿತಿಯನ್ನು ವಿವರಿಸಿದ್ದೆ. ಆ ವೇಳೆ ಅವರು ತಮಿಳುನಾಡು ಮತ್ತು ಕರ್ನಾಟಕ ರಾಜ್ಯದಲ್ಲಿ ಅಧಿಕಾರದಲ್ಲಿರುವ ಎರಡೂ ಪಕ್ಷಗಳ ನಡುವೆ ಉತ್ತಮ ರಾಜಕೀಯ ಹೊಂದಾಣಿಕೆ ಇದೆ. ಹೀಗಾಗಿ ಅವರು ಕುಳಿತು ಮಾತುಕತೆ ನಡೆಸಿ ಸೌಹಾರ್ದಯುತ ಪರಿಹಾರ ತೆಗೆದುಕೊಳ್ಳುವುದಾದರೆ ನಮ್ಮ ಅಭ್ಯಂತರ ಇಲ್ಲ. ಆದರೆ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯಸರ್ಕಾರ ತಮಿಳುನಾಡಿನ ಜೊತೆ ಮಾತುಕತೆಗೆ ಮುಂದಾಗಬೇಕು ಎಂದರು.
6
+ : ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಘೋಷಣೆ
7
+ ಕಾವೇರಿ ನೀರು ನಿಯಂತ್ರಣಾ ಸಮಿತಿ ಸಭೆ ನಾಳೆ ನಡೆಯಲಿದೆ. ಅಲ್ಲಿ ನೀರು ಬಿಡಬೇಡಿ ಎಂದು ಹೇಳಲು ಸಾಧ್ಯವಿಲ್ಲ. ಸಹಜವಾಗಿಯೇ ನೀರು ಬಿಡಿ ಎಂದೇ ಆದೇಶ ಬರುತ್ತದೆ. ರಾಜ್ಯಸರ್ಕಾರ ವಾಸ್ತವಾಂಶಗಳನ್ನು ಪ್ರಬಲವಾಗಿ ಮನವರಿಕೆ ಮಾಡಿಕೊಡುವ ವಾದ ಮಂಡಿಸುವಲ್ಲಿ ವೈಫಲ್ಯ ಅನುಭವಿಸಿವೆ. ಮೊದಲು ಎಲ್ಲಿ ಲೋಪಗಳಾಗಿವೆ ಎಂಬುದನ್ನು ಗುರುತಿಸಿ ಸರಿಪಡಿಸಬೇಕಿದೆ ಎಂದರು.
8
+ ಕಾವೇರಿ ವಿಷಯದಲ್ಲಿ ವಿಧಾನಸಭೆ ಅಧಿವೇಶನ ಕರೆದು ನಿರ್ಣಯ ಕೈಗೊಳ್ಳಬೇಕೆಂಬ ದೊಡ್ಡ ದೊಡ್ಡ ವಿಚಾರಗಳ ಬಗ್ಗೆ ತಾವು ಮಾತನಾಡಲು ಬಯಸುವುದಿಲ್ಲ ಎಂದು ಹೇಳಿದರು.
9
+ ಬಿಜೆಪಿ, ಜೆಡಿಎಸ್ ಮೈತ್ರಿಯ ಬಗ್ಗೆ ತಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಬಿಜೆಪಿ ಪಕ್ಷದಿಂದ ಮೈತ್ರಿಯ ಬಗ್ಗೆ ಈವರೆಗೂ ಅಧಿಕೃತವಾಗಿ ನನಗೆ ಯಾವುದೇ ಮಾಹಿತಿ ಬಂದಿಲ್ಲ. ಯಾವ ಕಾರಣಕ್ಕೆ ಮೈತ್ರಿಯಾಗಿದೆ ಎಂಬುದು ತಮಗೆ ಗೊತ್ತಿಲ್ಲ. ಮೈತ್ರಿ ಬಳಿಕ ಸ್ಪರ್ಧೆಯ ಕುರಿತು ನಂತರ ತೀರ್ಮಾನ ತೆಗೆದುಕೊಳ್ಳುತ್ತೇನೆ. ಸದ್ಯಕ್ಕೆ ಯಾವುದೇ ಆತುರವಿಲ್ಲ ಎಂದರು.
10
+ ಇಸ್ರೇಲ್‍ನಲ್ಲಿ 18,000 ಭಾರತೀಯರು ಸುರಕ್ಷಿ���
11
+ ಬೆಂಗಳೂರು, ಮೈಸೂರು ಎಕ್ಸ್‍ಪ್ರೆಸ್ ಹೆದ್ದಾರಿಯ ಮಾರ್ಗಗಳ ಮಧ್ಯೆ ವಿವಿಧ ನಗರಗಳನ್ನು ಸಂಪರ್ಕಿಸುವ ತಾತ್ಕಾಲಿಕ ದ್ವಾರಗಳನ್ನು ಬಂದ್ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಂಸದರು ಈ ಮೊದಲೇ ಹೇಳಿದಂತೆ ಹೆದ್ದಾರಿ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದಾರೆ. ಅವುಗಳನ್ನು ತಾತ್ಕಾಲಿಕವಾಗಿ ಮಾತ್ರ ನಿರ್ಮಿಸಲಾಗಿತ್ತು. ಈಗ ಅವನ್ನು ಬಂದ್ ಮಾಡುವುದರಿಂದ ಹೆಚ್ಚಿನ ಪರಿಣಾಮ ಏನೂ ಆಗುವುದಿಲ್ಲ. ಹೆದ್ದಾರಿ ಸಮಸ್ಯೆ ಕುರಿತಂತೆ ತಾವು ಅಧಿಕಾರಿಗಳ ಜೊತೆ ಚರ್ಚಿಸಿ ಸರಿಪಡಿಸುವುದಾಗಿ ಹೇಳಿದರು.
eesanje/url_46_334_7.txt ADDED
@@ -0,0 +1,9 @@
 
 
 
 
 
 
 
 
 
 
1
+ ಇನ್ನೊಂದು ವಾರದಲ್ಲಿ ಬರ ಅಧ್ಯಯನ ವರದಿ ಕೇಂದ್ರಕ್ಕೆ ಸಲ್ಲಿಕೆ
2
+ ಬೆಂಗಳೂರು, ಅ.9- ರಾಜ್ಯದ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಕೇಂದ್ರ ಅಧ್ಯಯನ ತಂಡವು ಕೇಂದ್ರ ಸರ್ಕಾರಕ್ಕೆ ಇನ್ನೊಂದು ವಾರದಲ್ಲಿ ಬರ ಅಧ್ಯಯನ ಕುರಿತ ವರದಿ ಸಲ್ಲಿಸುವುದಾಗಿ ಹೇಳಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು. ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಬರ ಅಧ್ಯಯನ ತಂಡಗಳೊಂದಿಗೆ ಸಂಪುಟ ಉಪ ಸಮಿತಿ ಸಭೆ ನಡೆಸಿದ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಷ್ಟು ಪರಿಹಾರ ಕೊಡುತ್ತಾರೆ ಎಂಬುದನ್ನು ನೋಡಬೇಕು ಎಂದರು.
3
+ ಕೇಂದ್ರದ ಮೂರು ತಂಡಗಳು ರಾಜ್ಯದ ಹಲವು ಜಿಲ್ಲೆಗಳಿಗೆ ಭೇಟಿ ನೀಡಿ ಕುಡಿಯುವ ನೀರು, ಮೇವು, ಬೆಳೆ ಪರಿಸ್ಥಿತಿ ಅವಲೋಕನ ಮಾಡಿವೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ 4800 ಕೋಟಿ ರೂ. ನೀಡುವಂತೆ ಮನವಿ ಮಾಡಿದ್ದೇವೆ ಎಂದು ಹೇಳಿದರು.ಕೇಂದ್ರ ಕೃಷಿ ಇಲಾಖೆ ಕಾರ್ಯದರ್ಶಿಗೆ ಅಧ್ಯಯನ ತಂಡ ವರದಿ ಸಲ್ಲಿಸಿದರೆ, ನಂತರ ಕೇಂದ್ರ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬಹುದು. ಕೇಂದ್ರ ಗೃಹ ಮತ್ತು ಕೃಷಿ ಸಚಿವರ ಭೇಟಿಗೆ ಸಮಯ ಕೇಳಿ ಪತ್ರ ಬರೆಯುತ್ತೇವೆ. ಸಮಯ ನೀಡಿದರೆ ಸಂಪುಟ ಉಪ ಸಮಿತಿಯ ಸದಸ್ಯರು ಭೇಟಿ ರಾಜ್ಯದ ಎದುರಿಸುತ್ತಿರುವ ಬರದ ಸಮಸ್ಯೆ ಮನವರಿಕೆ ಮಾಡುತ್ತೇವೆ ಎಂದು ಅವರು ತಿಳಿಸಿದರು.
4
+ : ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಘೋಷಣೆ
5
+ ರಾಜ್ಯದಲ್ಲಿನ ಬರ ಪರಿಸ್ಥಿತಿಯ ಮನವಿಯನ್ನು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾವು.ಬಳಿಕ ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಲು ಸಮಯ ಕೇಳಿದ್ದೆವು, ಸಿಕ್ಕಿಲ್ಲ ಎಂದರು. ಮನವಿ ಸಲ್ಲಿಕೆ ನಂತರ ಕೇಂದ್ರ ತಂಡ ರಾಜ್ಯಕ್ಕೆ ಆಗಮಿಸಿ ಪರಿಶೀಲಿಸಿದೆ. ಮನವಿ ವಸ್ತು ಸ್ಥಿತಿಯಿಂದ ಕೂಡಿದ್ದು, ಸಾಕಷ್ಟು ರೈತರಿಗೆ ಬೆಳೆ ಹಾನಿಯಿಂದ ತೊಂದರೆ ಆಗಿದೆ.
6
+ ಹಿಂಗಾರು ಮಳೆ ತೊಂದರೆ ಆಗಬಹುದು, ಕುಡಿಯುವ ನೀರಿಗೂ ತೊಂದರೆ ಆಗಬಹುದು ಎಂದು ಹೇಳಿದ್ದಾರೆ. ಸಣ್ಣ ಮತ್ತು ಅತಿ ಸಣ್ಣ ರೈತರ ಅಂಕಿ- ಅಂಶ ಕೇಳಿದ್ದು, ಅದನ್ನು ಒದಗಿಸಿಕೊಡುತ್ತೇವೆ. ವಾರದ ಒಳಗಡೆ ಕೇಂದ್ರಕ್ಕೆ ವರದಿ ಸಲ್ಲಿಕೆ ಮಾಡುವುದಾಗಿ ಹೇಳಿದ್ದಾರೆ ಎಂದರು.
7
+ ಈಗ ವಿಚಿತ್ರ ಹವಾಮಾನ ಪರಿಸ್ಥಿತಿ ಇದೆ. ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಮಳೆ ಸ್ಥಿತಿಗತಿಗಳ ಬಗ್ಗೆ ಸ್ಪಷ್ಟತೆ ಇಲ್ಲದ ವಾತಾವರಣ ಇದೆ. ಇದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಇದಕ್ಕೆ ಅನುಗುಣವಾಗಿ ಕಾರ್ಯಕ್ರಮ ರೂಪಿಸಲು ಕ್ರಮ ಕೈಗೊಳ್ಳಬೇಕು. ಉದ್ಯೋಗ ಖಾತ್ರಿಯಲ್ಲಿ ಕೂಲಿ ಪಾವತಿ ಆಗಿಲ್ಲ 475 ಕೋಟಿ ರೂ. ತಕ್ಷಣ ಬಿಡುಗಡೆ ಮಾಡಬೇಕು.ಕೂಲಿ ಹಣ ಬಾಕಿಯಿಂದ ಬಡವರು ಮತ್ತಷ್ಟು ಸಂಕಷ್ಟದಲ್ಲಿದ್ದಾರೆ ಎಂದರು.
8
+ ಇಸ್ರೇಲ್‍ನಲ್ಲಿ 18,000 ಭಾರತೀಯರು ಸುರಕ್ಷಿತ
9
+ ಫಸಲು ಭೀಮಾ ಯೋಜನೆ ರೈತರಿಗೆ ಪರಿಣಾಮಕಾರಿ ಅನುಕೂಲ ಆಗುತ್ತಿಲ್ಲ. ಇದನ್ನು ಕೇಂದ್ರದ ಅಧಿಕಾರಿಗಳ ಗಮನಕ್ಕೆ ತರುವಂತೆ ಹೇಳಿದ್ದೇವೆ. ಪರಿಹಾರದ ಬಗ್ಗ��� ನಾವು ಒತ್ತಡ ಹಾಕಬಹುದು, ಆದರೆ ಅಂತಿಮ ನಿರ್ಧಾರ ಅವರದ್ದೇ ಎಂದು ಸಚಿವರು ತಿಳಿಸಿದರು.
eesanje/url_46_334_8.txt ADDED
@@ -0,0 +1,9 @@
 
 
 
 
 
 
 
 
 
 
1
+ ಡಿಸಿಎಂ ಡಿಕೆಶಿ ವಿರುದ್ಧ ಜೆಡಿಎಸ್ ವಾಗ್ದಾಳಿ
2
+ ಬೆಂಗಳೂರು,ಅ. 9- ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಎರಡೂವರೆ ವರ್ಷ ಮುಖ್ಯಮಂತ್ರಿಯಾಗುತ್ತೇನೆಂದು ಹೇಳುವ ಎದೆಗಾರಿಕೆ ತೋರುತ್ತಿಲ್ಲ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ. ದೇವೇಗೌಡರು ಇಂದಿಲ್ಲಿ ಟೀಕಿಸಿದರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಡಿಕೆ ಶಿವಕುಮಾರ್ ಅವರು ಉತ್ತರನ ಪೌರುಷವಿದ್ದಂತೆ ಎರಡೂವರೆ ವರ್ಷಗಳ ಕಾಲ ಮುಖ್ಯಮಂತ್ರಿಯಾಗುವ ಹೇಳಿಕೆಯ ಧೈರ್ಯವೂ ತೋರಲಿಲ್ಲ ಎಂದು ವ್ಯಂಗ್ಯವಾಡಿದರು.
3
+ ವಿಧಾನಸಭೆ ಚುನಾವಣೆಗೂ ಮುನ್ನ ಮಾಜಿ ಪ್ರಧಾನಿ ದೇವೇಗೌಡರು, ಎಸ್‍ಎಂ ಕೃಷ್ಣ, ಡಿವಿ ಸದಾನಂದ ಗೌಡ, ಎಚ್‍ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾರೆ ಒಮ್ಮೆ ಅವಕಾಶ ಕೊಡಿ ನಾನು ಸಿಎಂ ಆಗುತ್ತೇನೆ ಎಂದು ಕೋರಿದ್ದರು. ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಉಪಮುಖ್ಯಮಂತ್ರಿ ಆಗಿದ್ದಾರೆ, ಆದರೆ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಾವೇ ಮುಖ್ಯಮಂತ್ರಿ ಎನ್ನುತ್ತಾರೆ. ಕೆಎನ್ ರಾಜಣ್ಣ ಮೂವರು ಉಪಮುಖ್ಯಮಂತ್ರಿಗಳಾಬೇಕು ಎಂದರೆ, ಮಾಜಿ ಸಚಿವ ಬಸವರಾಜರಾಯರೆಡ್ಡಿ 6 ಮಂದಿ ಉಪಮುಖ್ಯಮಂತ್ರಿಗಳಾಗಲಿ ಎಂದು ಹೇಳಿಕೆ ನೀಡಿದ್ದಾರೆ.
4
+ ಫೈಟರ್ ಮನಮೋಹಕ, ಗೆದ್ದ ನಿರ್ಮಾಪಕ
5
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುರುಬರ ಸಮಾವೇಶದಲ್ಲಿ ಕಾವೇರಿಯಿಂದ ಕನ್ಯಾಕುಮಾರಿಯವರೆಗೂ ಕುರುಬ ಸಮುದಾಯವಿದೆ. ಈ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಹೇಳಿದ್ದಾರೆ.ಆದರೆ ಐದು ವರ್ಷ ಅಧಿಕಾರದಲ್ಲಿ ಮುಂದುವರಿಯುವುದಾಗಿ ಸಂದರ್ಶನದಲ್ಲಿ ಹೇಳಿದ್ದಾರೆ. ಆದರೆ ಡಿ ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಎಲ್ಲಿ ಸಿಗುತ್ತದೆ ಎಂದು ಪ್ರಶ್ನಿಸಿದರು. ಪರಿಹಾರ ಸಿಕ್ಕಿಲ್ಲ ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಭೀಕರ ಬರಗಾಲವಿದ್ದು, 40 ಲಕ್ಷ ಹೆಕ್ಟೇರ್ ಬೆಳೆಹಾನಿಯಾಗಿದ್ದರೂ ಇದುವರೆಗೂ ರಾಜ್ಯ ಸರ್ಕಾರ ಬೆಳೆನಷ್ಟ ಪರಿಹಾರ ನೀಡಿಲ್ಲ.
6
+ ಬರಪೀಡಿತ ಪ್ರದೇಶಗಳಿಗೆ ಸಚಿವರು ಭೇಟಿ ನೀಡಿ ರೈತರಿಗೆ, ಜನರಿಗೆ ಧೈರ್ಯ ತುಂಬಿಲ್ಲ. ರೈತರ ಸ್ಥಿತಿ ರಾಜ್ಯದಲ್ಲಿ ಜೀವನ್ಮರಣದ ಪರಿಸ್ಥಿತಿ ಉಂಟಾಗಿದೆ. ಕೃಷಿ ಪಂಪ್ ಸೆಟ್‍ಗಳಿಗೆ 7 ಗಂಟೆ ಬದಲಿಗೆ 2 ಗಂಟೆ ಮಾತ್ರ ವಿದ್ಯುತ್ ನೀಡುತ್ತಿದ್ದಾರೆ. 10 ಸಾವಿರ ರೂ. ಕಟ್ಟಿದರೆ ಕೃಷಿ ಪಂಪ್ ಸೆಟ್‍ಗೆ ವಿದ್ಯುತ್ ಸಂಪರ್ಕ ದೊರಕುತ್ತಿತ್ತು.
7
+ ಈಗ ನಾಲ್ಕರಿಂದ 5 ಲಕ್ಷ ರೂ. ಕಟ್ಟಬೇಕಾಗಿದೆ. ರೈತರು ಸ್ವಂತ ಜಮೀನಿನಲ್ಲಿ ಮನೆ ಕಟ್ಟಿಕೊಂಡರೆ ನಿರಂತರ ಜ್ಯೋತಿ ನೀಡುವುದಿಲ್ಲ. ಇಂತಹ ಸರ್ಕಾರ ಇರಬೇಕೇ ಎಂದು ಪ್ರಶ್ನಿಸಿದರು. ಆಸ್ಪತ್ರೆ, ಶಾಲೆ, ರಸ್ತೆ ಗುಂಡಿ ಮುಚ್ಚಲು ಹಣವಿಲ್ಲ, ಮದ್ಯದ ಪಾಪದ ಹಣದಿಂದ ಸರ್ಕಾರ ನಡೆಸಬೇಕೇ ಎಂದು ಕಾಂಗ್ರೆಸ್ ಮುಖಂಡರೇ ಹೇಳಿದ್ದಾರೆ.
8
+ ಲಡಾಕ್ ಕೌನ್ಸಿಲ್ ಚುನಾವಣ���ಯಲ್ಲಿ ಬಿಜೆಪಿ ಹೀನಾಯ ಸೋಲು
9
+ ಮೈಸೂರಿನಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗೆ ಬಸವಣ್ಣ ಪ್ರೇರಣೆ ಎಂದಿದ್ದಾರೆ. ಬಸವಣ್ಣನವರು ಕಾಯಕ ಮಾಡಿ ಬದುಕಬೇಕು ಎಂದು ಹೇಳಿದ್ದರೆ ಹೊರತು ಬಿಟ್ಟಿಭಾಗ್ಯದಿಂದಲ್ಲ ಎಂದರು.
eesanje/url_46_334_9.txt ADDED
@@ -0,0 +1,6 @@
 
 
 
 
 
 
 
1
+ ರಾಜ್ಯದಲ್ಲಿ ಒಂದು ವಾರ ಮಳೆ ಸಾಧ್ಯತೆ
2
+ ಬೆಂಗಳೂರು, ಅ.9- ರಾಜ್ಯಾದ್ಯಂತ ಅಕ್ಟೋಬರ್ ಮೊದಲ ವಾರದಿಂದ ಹಿಂಗಾರು ಮಳೆ ಪ್ರಾರಂಭವಾಗಿದ್ದು, ಆರಂಭದಲ್ಲಿ ಮಂದವಾಗಿದ್ದ ಮಳೆ ಚುರುಕುಗೊಂಡಿದ್ದು, ನಿನ್ನೆ ಸಂಜೆಯಿಂದ ರಾಜಧಾನಿ ಸೇರಿದಂತೆ ವಿವಿಧೆಡೆ ತುಂತುರು ಮಳೆಯಾಗುತ್ತಿದ್ದು, ವಾತಾವರಣ ತಂಪಾಗಿದೆ.
3
+ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಸಂಜೆಯಿಂದ ಪ್ರಾರಂಭವಾದ ಜಿಟಿಜಿಟಿ ಮಳೆಯಾಗುತ್ತಿದ್ದು, ಮೋಡ ಕವಿದ ವಾತಾವರಣವಿದೆ. ಇನ್ನೂ ಒಂದು ವಾರ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
4
+ ರಾಜ್ಯದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿದ್ದು, ಹಾಸನ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಮಂಡ್ಯ, ದಾವಣಗೆರೆ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ.
5
+ ನಟ ಶಾರುಖ್​ ಖಾನ್​ಗೆ ವೈ ಪ್ಲಸ್ ಭದ್ರತೆ
6
+ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಸುತ್ತಮುತ್ತ ನಿನ್ನೆ ಸಂಜೆ ಗುಡುಗು ಸಿಡಿಲು ಸಮೇತ ಉತ್ತಮ ಮಳೆಯಾಗಿದೆ.ಕೆಲದಿನಗಳಿಂದ ಬಿಸಿಲಿನ ತಾಪದಿಂದ ಬಳಲಿದ್ದ ಜನತೆಗೆ ವರುಣ ತಂಪೆರೆದಿದ್ದಾನೆ.
eesanje/url_46_335_1.txt ADDED
@@ -0,0 +1,9 @@
 
 
 
 
 
 
 
 
 
 
1
+ ಪಟಾಕಿ ದುರಂತದಲ್ಲಿ ಮೃತರ ಸಂಖ್ಯೆ 14ಕ್ಕೆರಿಕೆ, ಇಬ್ಬರ ಬಂಧನ
2
+ ಬೆಂಗಳೂರು, ಅ.8- ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ನಿನ್ನೆ ರಾತ್ರಿ 12 ಶವಗಳನ್ನು ಗೋದಾಮಿನಿಂದ ಹೊರತೆಗೆಯಲಾಗಿದ್ದು, ತಡರಾತ್ರಿ ಇನ್ನೆರಡು ಶವಗಳು ಸಿಕ್ಕಿವೆ. ಎಲ್ಲ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
3
+ ಇದರಲ್ಲಿ ಇನ್ನೂ ಕೆಲವರ ಗುರುತು ಸಿಕ್ಕಿಲ್ಲ. ಅವರುಗಳ ಗುರುತುಗಳನ್ನು ಪತ್ತೆಹಚ್ಚುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ. ದುರಂತದಲ್ಲಿ ನಾಲ್ಕು ಮಂದಿ ಗಾಯಗೊಂಡಿದ್ದು, ಸೆಂಟ್‍ಜಾನ್ ಮತ್ತು ಆಕ್ಸ್‍ಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬಗ್ಗೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಇಬ್ಬರನ್ನು ಬಂಧಿಸಿದ್ದೇವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್‍ಪಿ ಅವರು ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ರಾಮಸ್ವಾಮಿ ರೆಡ್ಡಿ ಮತ್ತು ನವೀನ್ ಅವರನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ನಡೆಸುತ್ತಿದ್ದೇವೆ ಎಂದು ವಿವರಿಸಿದರು.
4
+ ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳನ್ನು ಪ್ರಶಂಸಿಸಿದ ರಾಜ್ಯಪಾಲ ಗೆಹ್ಲೋಟ್
5
+ ಘಟನೆಗೆ ಇನ್ನೂ ನಿಖರವಾದ ಕಾರಣ ತಿಳಿದುಬಂದಿಲ್ಲ. ನಮ್ಮ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಅವರು ಹೇಳಿದರು. ನಿನ್ನೆ ಮಧ್ಯಾಹ್ನ 3.30ರ ಸಂದರ್ಭದಲ್ಲಿ ಪಟಾಕಿ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುದ್ದಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಏಳು ವಾಹನಗಳೊಂದಿಗೆ ಸ್ಥಳಕ್ಕೆ ದಾವಿಸಿ ಸತತ ಪ್ರಯತ್ನ ನಡೆಸಿ ತಡರಾತ್ರಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆದರೂ 14 ಜೀವಗಳು ಬಲಿಯಾಗಿದ್ದು, ಕೆಲವು ಶವಗಳು ಗುರುತು ಸಿಗದ ರೀತಿಯಲ್ಲಿ ಸುಟ್ಟುಹೋಗಿವೆ.
6
+ ಭೇಟಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ತಮಿಳುನಾಡಿನ ಸಚಿವರು, ಶಾಸಕರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
7
+ ಮುನ್ನೆಚ್ಚರಿಕೆ ಕ್ರಮ ವಹಿಸದೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಪಟಾಕಿಯನ್ನು ಸಂಗ್ರಹಿಸಲು ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕೆಲವರು ತಮಿಳುನಾಡಿನ ಹೊಸೂರು, ಶಿವಕಾಶಿ ಸೇರಿದಂತೆ ಹಲವೆಡೆ ಪಟಾಕಿ ಖರೀದಿಸಲು ತೆರಳುತ್ತಾರೆ. ಅದನ್ನು ಕರ್ನಾಟಕದ ಗಡಿಭಾಗ ಅತ್ತಿಬೆಲೆಯಲ್ಲಿ ಸಂಗ್ರಹಿಸಿದರೆ ಹೆಚ್ಚಿನ ಹಣ ಸಂಪಾದಿಸಬಹುದು ಎಂದು ಕೆಲವರು ಗೋದಾಮುಗಳಲ್ಲಿ ಇದನ್ನು ಶೇಖರಿಸಿಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
8
+ ಪಟಾಕಿ ದುರಂತ : ಉನ್ನತ ಮಟ್ಟದ ತನಿಖೆಗೆ ಹೆಚ್‌ಡಿಕೆ ಆಗ್ರಹ
9
+ ಅಕ್ಕಪಕ್ಕದಲ್ಲಿರುವುದರಿಂದ ಸ್ಥಳೀಯ ನಿವಾಸಿಗಳನ್ನು ಅಲ್ಲಿಂದ ಬೇರೆಡೆಗೆ ಸ್ಥಳಾಂತರಿಸಲಾಗ���ದೆ. ಒಟ್ಟಾರೆ ಸಂಭವಿಸಿದ ಈ ಘೋರ ದುರಂತದಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ ಇದ್ದು, ಮೃತರಿಗೆ 5 ಲಕ್ಷ ರೂ. ಹಾಗೂ ಗಾಯಗೊಂಡಿರುವವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ.
eesanje/url_46_335_10.txt ADDED
@@ -0,0 +1,9 @@
 
 
 
 
 
 
 
 
 
 
1
+ ಕಾವಾಡಿಗರ ಹಟ್ಟಿಗೆ 4 ಕೋಟಿ ರೂ. ನೆರವು : ಸಿಎಂ ಸಿದ್ದರಾಮಯ್ಯ
2
+ ಚಿತ್ರದುರ್ಗ, ಅ.6- ಕಲುಷಿತ ನೀರು ಕುಡಿದು ಆರು ಮಂದಿ ಮೃತಪಟ್ಟಿದ್ದ ಕಾವಾಡಿಗರ ಹಟ್ಟಿಯ ಅಭಿವೃದ್ದಿಗೆ 3 ಎಕರೆ ಜಾಗ, 4 ಕೋಟಿ ರೂಪಾಯಿ ನೀಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಕಲುಷಿತ ನೀರು ಕುಡಿದು ಆರು ಮಂದಿ ಮೃತಪಟ್ಟಿದ್ದ ಕಾವಾಡಿಗರಹಟ್ಟಿಯಲ್ಲಿ ಸಂತ್ರಸ್ಥ ಕುಟುಂಬಗಳ ಬಂಧುಗಳನ್ನು ಮಾತನಾಡಿಸಿದ ಬಳಿಕ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಈ ಭರವಸೆ ನೀಡಿದರು.
3
+ ಸಂತ್ರಸ್ತ ಕುಟುಂಬಗಳ ಜವಾಬ್ದಾರಿ ಸರ್ಕಾರ ವಹಿಸಿಕೊಳ್ಳಲಿದೆ. ಈ ಕುಟುಂಬಗಳ ಸದಸ್ಯರಿಗೆ ಉದ್ಯೋಗವನ್ನೂ ಕೊಡುತ್ತೇವೆ. ಮನೆಯನ್ನೂ ಕಟ್ಟಿಸಿಕೊಡುತ್ತೇವೆ ಎಂದರು. ಶುದ್ಧ ಕುಡಿಯುವ ನೀರು ಕೊಡುವುದು ನಮ್ಮ ಕರ್ತವ್ಯ. ಘಟನೆ ಘಟಿಸಿದ ತಕ್ಷಣ ಸ್ಥಳೀಯ ಶಾಸಕರು, ಜಿಲ್ಲಾ ಮಂತ್ರಿಗಳು ಮತ್ತು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದೆ. ತಕ್ಷಣಕ್ಕೆ 10 ಲಕ್ಷ ಪರಿಹಾರ ನೀಡಿದೆವು ಎಂದು ವಿವರಿಸಿದರು.
4
+ ಒಬಿಸಿ ಮೀಸಲಾತಿ ನಿರ್ಧಾರದಿಂದ ಕಾಂಗ್ರೆಸ್ ಚುನಾವಣಾ ಹಾದಿ ಸುಗಮ
5
+ ಮೊದಲೇ ಶುದ್ಧ ನೀರಿನ ವ್ಯವಸ್ಥೆ ಇದ್ದಿದ್ದರೆ ಈ ಅನಾಹುತ ನಡೆಯುತ್ತಿರಲಿಲ್ಲ. ಘಟನೆ ಬಳಿಕ ಶುದ್ದ ಕುಡಿಯುವ ನೀರಿಗೆ ತೊಂದರೆ ಆಗದಂತೆ ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದೆ ಇಂತಹ ಅನಾಹುತ ನಡೆದರೆ ಸಂಬಂಧ ಪಟ್ಟ ಅvಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಖಚಿತ ಎಂದು ಎಚ್ಚರಿಸಿದರು.
6
+ 123 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ ಆಗಿದೆ. ಬರ ಪೀಡಿತ ಜಿಲ್ಲೆಗಳ ಸಂಖ್ಯೆ ಹೆಚ್ಚುತ್ತಿದೆ. 42 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ. 30 ಸಾವಿರ ಕೋಟಿಯಷ್ಟು ನಷ್ಟ ಆಗಿದೆ. ನಾವು ಎನ್‍ಡಿಆರ್‍ಎಫ್ ಅಡಿಯಲ್ಲಿ ಕೇಂದ್ರಕ್ಕೆ ಪರಿಹಾರ ಕೇಳಿದ್ದೇವೆ. ಸದ್ಯ ಕೇಂದ್ರ ಅಧ್ಯಯನ ತಂಡ ರಾಜ್ಯಕ್ಕೆ ಬಂದಿದ್ದು ನಾಳೆ ಚಿತ್ರದುರ್ಗಕ್ಕೂ ಬರಲಿದೆ ಎಂದು ವಿವರಿಸಿದರು.
7
+ ಮೈತ್ರಿಗೆ ಜೆಡಿಎಸ್-ಬಿಜೆಪಿಯಲ್ಲಿ ಅಪಸ್ವರ
8
+ ಇಂದು ಇಡೀ ದೇಶದಲ್ಲಿ ಬರಗಾಲದ ಸ್ಥಿತಿ ಇದೆ. ರಾಜ್ಯದಲ್ಲೂ ಬರ ಇದ್ದು ಕುಡಿಯುವ ನೀರು, ರಾಸುಗಳಿಗೆ ಮೇವು- ನೀರು ತೊಂದರೆ ಆಗದಂತೆ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಉದ್ಯೋಗ ಸೃಷ್ಟಿ ಮಾಡಬೇಕು. ಕೆಲಸಕ್ಕಾಗಿ ವಲಸೆ ಹೋಗುವ ಸ್ಥಿತಿ ಬರದಂತೆ ನೋಡಿಕೊಳ್ಳಲು ಎಚ್ಚರಿಸಿದ್ದೇನೆ ಎಂದರು.
9
+ ನಮ್ಮ ಸರ್ಕಾರ ಬಡವರ, ಮಧ್ಯಮ ವರ್ಗದವರ ಸಂಕಷ್ಟ ಬಗೆಹರಿಸುವ ಸಲುವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದರು. ಕೃಷಿ ಸಚಿವ ಚಲುವರಾಯಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕ ವೀರೇಂದ್ರ ಪಪ್ಪಿ, ಮಾಜಿ ಸಚಿವ ಎಚ್.ಆಂಜನೇಯ ಸೇರಿ ದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
eesanje/url_46_335_11.txt ADDED
@@ -0,0 +1,7 @@
 
 
 
 
 
 
 
 
1
+ ಶಿವಮೊಗ್ಗ ಗಲಭೆಕೋರರ ಮೇಲೆ ನಿರ್ದಾಕ್ಷಿಣ್ಯ ಕ್ರಮ : ಡಿಸಿಎಂ
2
+ ಬೆಂಗಳೂರು,ಅ.6- ಶಿವಮೊಗ್ಗ ಗಲಭೆ ಪ್ರಕರಣದಲ್ಲಿ ಕಾನೂನು ಕೈಗೆತ್ತಿಕೊಂಡಿರುವ ಎಲ್ಲರ ವಿರುದ್ಧವೂ ಸರ್ಕಾರ ನಿರ್ದಾಕ್ಷಿಣ್ಯವಾದ ಕಾನೂನು ಕ್ರಮ ಜರುಗಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ತಪ್ಪು ಮಾಡಿದವರಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಎಂದು ಸ್ಪಷ್ಟಪಡಿಸಿದರು.
3
+ ಬಿಜೆಪಿಯವರ ಸತ್ಯ ಶೋಧನಾ ಸಮಿತಿ ಏನು ಬೇಕಾದರೂ ಮಾಡಿಕೊಳ್ಳಲಿ. ಅವರು ಸಮಾಜವನ್ನು ಒಡೆಯಲು ಯತ್ನಿಸುತ್ತಿದ್ದಾರೆ. ಕಬ್ಬಿಣದಲ್ಲಿ ಎರಡು ಕೆಲಸಗಳನ್ನು ಮಾಡಬಹುದು. ಒಂದು ಸೂಜಿಯನ್ನಾಗಿ ಬದಲಾಯಿಸಿ ಸಮಾಜವನ್ನು ಹೊಲಿಯಬಹುದು. ಮತ್ತೊಂದು ಕತ್ತರಿ ತಯಾರಿಸಿ ಸಮಾಜವನ್ನು ಕತ್ತರಿಸಬಹುದು. ನಾವು ಸೂಜಿಯನ್ನು ತಯಾರಿಸಿ ಸಮಾಜವನ್ನು ಹೊಲೆಯುವ ಕೆಲಸ ಮಾಡುತ್ತಿದ್ದೇವೆ.
4
+ ಅವರು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಇದು ನಮಗೂ ಮತ್ತು ಬಿಜೆಪಿಯವರಿಗೂ ಇರುವ ವ್ಯತ್ಯಾಸ ಎಂದು ತಿರುಗೇಟು ನೀಡಿದರು.
5
+ ಕರ್ನಾಟಕ ಭಯೋತ್ಪಾದಕರು, ಜಿಹಾದಿಗಳು ಮತ್ತು ಗುಂಡಾಗಳ ತಾಣವಾಗಿದೆ : ಬಿಜೆಪಿ ವಾಗ್ದಾಳಿ
6
+ ಘಟನಾ ಸ್ಥಳಕ್ಕೆ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಭೇಟಿ ನೀಡಿದ್ದರು. ಅಲ್ಲಿ ಹಿಂದೂ, ಮುಸ್ಲಿಂ ಎಂಬ ಬೇಧವಿಲ್ಲದೆ ಎಲ್ಲಾ ಸಮುದಾಯದವರನ್ನು ಭೇಟಿ ಮಾಡಿ ಚರ್ಚೆ ನಡೆಸಿ ಸಾಂತ್ವಾನ ಹೇಳಿದ್ದಾರೆ. ಬಿಜೆಪಿಯವರು ಒಂದು ಸಮುದಾಯದವರನ್ನು ಮಾತ್ರ ಭೇಟಿ ಮಾಡಿದ್ದಾರೆ. ಇದರಲ್ಲೇ ಅವರು ಸಮಾಜವನ್ನು ವಿಭಜಿಸುವ ಸಂಚು ಸ್ಪಷ್ಟವಾಗುತ್ತದೆ ಎಂದರು.
7
+ ಘಟನೆಯಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ. ಯಾರನ್ನೂ ರಕ್ಷಣೆ ಮಾಡುವ ಉದ್ದೇಶ ಇಲ್ಲ. ಕಾನೂನನ್ನು ಕೆಣಕಿದರೆ ಅದರ ಪರಿಣಾಮ ಏನು ಎಂಬುದು ತಪ್ಪಿತಸ್ಥರಿಗೆ ಅರಿವಾಗಲಿದೆ ಎಂದು ಹೇಳಿದರು. ಕಾಂಗ್ರೆಸ್ ಎಸ್.ಎಂ.ಕೃಷ್ಣ ಅವರ ಕಾಲದಲ್ಲೇ ಕುವೆಂಪು ಅವರ ಪದ್ಯ ಬಳಸಿಕೊಂಡು ಸರ್ವ ಜನಾಂಗದ ಶಾಂತಿಯ ತೋಟ ಎಂಬ ಪರಿಕಲ್ಪನೆಯನ್ನು ಆರಂಭಿಸಿತ್ತು. ನಮ್ಮ ನಾಡಗೀತೆಯಲ್ಲೇ ಸರ್ವ ಜನರನ್ನು ಒಳಗೊಂಡ ಮೂಲ ಉದ್ದೇಶಗಳಿವೆ ಎಂದರು.
eesanje/url_46_335_12.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಬೆಂಗಳೂರಿನಲ್ಲಿ 6.05 ಎಕರೆ ಸರ್ಕಾರಿ ಜಮೀನು ಒತ್ತುವರಿ ತೆರವು
2
+ ಬೆಂಗಳೂರು, ಅ.6: ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಸಿರುವ ಕಂದಾಯ ಇಲಾಖೆ ಅಧಿಕಾರಿಗಳು, ಯಲಹಂಕ ತಾಲೂಕು, ಜಾಲ ಹೋಬಳಿ, ಕಟ್ಟಿಗೇನಹಳ್ಳಿ ಗ್ರಾಮದ ಸರ್ವೆ ನಂ.28 ರಲ್ಲಿ ಒತ್ತುವರಿಯಾಗಿದ್ದ ಸುಮಾರು 10 ಕೋಟಿ ರೂ. ಮೌಲ್ಯದ 6.05 ಎಕರೆ ಸರ್ಕಾರಿ ಜಮೀನನ್ನು ವಶಕ್ಕೆ ಪಡೆದಿದ್ದಾರೆ.
3
+ ಈ ಮೂಲಕ ಭೂ ಒತ್ತುವರಿದಾರರು ಹಾಗೂ ಭೂ ಮಾಫಿಯಾಗೆ ಸರ್ಕಾರ ಬಿಸಿ ಮುಟ್ಟಿಸಿದೆ. ಬೆಂಗಳೂರಿನಾದ್ಯಂತ ಭೂ ಒತ್ತುವರಿ ತೆರವು ಮಾಡುವಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಅದರಂತೆ ಕಳೆದ ವಾರ ಯಲಹಂಕದ ಬಾಗಲೂರಿನ ಬಳಿ 25 ಕೋಟಿ ರೂ. ಮೌಲ್ಯದ 6.07 ಎಕರೆ ಸರ್ಕಾರಿ ಭೂ ಒತ್ತುವರಿ ತೆರವುಗೊಳಿಸಲಾಗಿತ್ತು. ಈಗ ಕಾರ್ಯಾಚರಣೆ ಮುಂದುವರಿಸಿ ಇನ್ನಷ್ಟು ಒತ್ತುವರಿ ತೆರವು ಮಾಡಲಾಗಿದೆ.
4
+ ಯಲಹಂಕ ತಾಲ್ಲೂಕು ಜಾಲ ಹೋಬಳಿ, ಕಟ್ಟಿಗೇನಹಳ್ಳಿ ಗ್ರಾಮದ ಸರ್ವೆ ನಂ.28 ರ ಜಮೀನಿಗೆ ಸಂಬಂಧಿಸಿದಂತೆ, ಗೋಮಾಳದ ಜಮೀನಿಗೆ ವಿವರವಾದ ವರದಿಯನ್ನು ದಾಖಲೆಗಳೊಂದಿಗೆ ಸಲ್ಲಿಸಲು ಮತ್ತು ಜಮೀನಿನಲ್ಲಿ ಯಾವುದೇ ಖಾತೆ ಅನುಭವವಿಲ್ಲದೇ ಇರುವ ಒತ್ತುವರಿದಾರರನ್ನು ಖುಲ್ಲಾಪಡಿಸಿ ಕ್ರಮವಹಿಸುವಂತೆ ನಿರ್ದೇಶಿಸಲಾಗಿತ್ತು.
5
+ ಒಬಿಸಿ ಮೀಸಲಾತಿ ನಿರ್ಧಾರದಿಂದ ಕಾಂಗ್ರೆಸ್ ಚುನಾವಣಾ ಹಾದಿ ಸುಗಮ
6
+ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 104 ರ ಅಡಿ ವಿಚಾರಣೆ ನಡೆಸಲು ನಿರ್ಧರಿಸಿ ಪ್ರತಿವಾದಿಗಳಿಗೆ ನೋಟೀಸ್ ಕೂಡ ನೀಡಲಾಗಿತ್ತು. ಅದರಂತೆ ಕಟ್ಟಿಗೇನಹಳ್ಳಿಯ ಸರ್ವೆ ನಂ.28 ರ ಜಮೀನಿನಲ್ಲಿ ತಾಲೂಕು ಮೋಜಿಣಿದಾರರು ಒತ್ತುವರಿ ಎಂದು ಗುರುತಿಸಿದ 6.05 ಎಕರೆ ಜಮೀನನಲ್ಲಿ ಒತ್ತುವರಿ ತೆರವುಗೊಳಿಸಲಾಗಿದೆ.
7
+ ಒತ್ತುವರಿದಾರರ ವಿವರ:
8
+ * ಕೋಗಿಲು ಗ್ರಾಮದ ಸರ್ವೆ ನಂ. 100 ರ ಹಿಡುವಳಿದಾರರಾದ ಉಡುಪ ಅವರಿಂದ ಕಟ್ಟಿಗೇನಹಳ್ಳಿಯ ಸರ್ವೆ ನಂ.28 ರಲ್ಲಿ 0-10 ಗುಂಟೆ ಜಮೀನನ್ನು ಒತ್ತುವರಿ ಮಾಡಿದ್ದು, ಇದನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.
9
+ * ಎಸ್.ಜಯರಾಮ್ ಬಿನ್ ಸುಬ್ರಮಣ್ಯ ಮೊದಲಿಯಾರ್ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0-20 ಗುಂಟೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.
10
+ * ಸುಬ್ಬಣ್ಣ ಬಿನ್ ಚಿಕ್ಕಮುನಿಯಪ್ಪ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 2-29 ಎಕರೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.
11
+ ಬರಪೀಡಿತ ಪ್ರದೇಶಗಳಲ್ಲಿ ಕೇಂದ್ರ ತಂಡಗಳಿಂದ ಪರಿಸ್ಥಿತಿ ಅವಲೋಕನ
12
+ * ದೊಡ್ಡಕ್ಕಮ್ಮ ಕೋಂ ಲೇಟ್ ಕೆ.ಮುನಿಯಪ್ಪ, ಮುನಿರಾಜು ಮತ್ತು ಎಂ. ಮಂಜುನಾಥ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0-12 ಗುಂಟೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.
13
+ * ವೈ.ಜಿ.ಕೇಶವ ಬಿನ್ ಗೋವಿಂದಪ್ಪ ಅವರಿಗೆ ಸಂಬಂಧಿಸಿದಂತೆ, ನಂ.ಎಲ್ಎನ್ ಡಿ/ಎ��್ ಆರ್/1/104/78-79 ರಂತೆ ಅಬ್ದುಲ್ ಸತ್ತಾರ್ ರವರಿಗೆ 2-00 ಎಕರೆ ಮಂಜೂರಾಗಿತ್ತು. ನಂತರ ಕ್ರಯವಿಕ್ರಯ ನಡೆದು, ವೈ.ಜಿ ಕೇಶವ ಬಿನ್ ಗೋವಿಂದಪ್ಪ ರವರಿಗೆ ಖಾತೆ ದಾಖಲಾಗಿತ್ತು. ವಿಶೇಷ ಜಿಲ್ಲಾಧಿಕಾರಿಗಳ ಆದೇಶದಂತೆ ಸರ್ಕಾರದ ಹೆಸರಿಗೆ ಖಾತೆ ದಾಖಲಾಗಿ, ಗೋಮಾಳ ಶೀರ್ಷಿಕೆಯಲ್ಲಿ ಖಾತೆ ಮುಂದುವರೆಯುತ್ತಿದೆ. 2.00 ಎಕರೆ ಜಮೀನಿನ ಪ್ರಕರಣ ವಿಶೇಷ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಆದರೆ, ಇವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0.05 ಗುಂಟೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.
14
+ * ರಮೇಶ್ ಬಿನ್ ಚಿಕ್ಕಪಾಪಮ್ಮ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0.12 ಎಕರೆ ಜಮೀನು ಒತ್ತುವರಿ ತೆರವುಗೊಳಿಸಲಾಗಿದೆ. ಇದೇ ಗ್ರಾಮದಲ್ಲಿ ಬ್ಲಾಕ್ ನಂ.12ರಲ್ಲಿ 0.15 ಗುಂಟೆ ವಿಸ್ತೀರ್ಣದಲ್ಲಿ 4 ಮನೆಗಳು ನಿರ್ಮಾಣವಾಗಿದ್ದು, ತೆರವುಗೊಳಿಸಲು ಮೌಖಿಕವಾಗಿ 2 ದಿನಗಳ ಕಾಲಾವಕಾಶ ಕೋರಿದ್ದರು. ಅದರಂತೆ ಕಾಲಾವಕಾಶ ನೀಡಿ, ಸೂಕ್ತ ಪೊಲೀಸ್ ಬಂದೋಬಸ್ತ್‌ನೊಂದಿಗೆ ತೆರವುಗೊಳಿಸಲಾಗಿದೆ.
eesanje/url_46_335_2.txt ADDED
@@ -0,0 +1,8 @@
 
 
 
 
 
 
 
 
 
1
+ ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳನ್ನು ಪ್ರಶಂಸಿಸಿದ ರಾಜ್ಯಪಾಲ ಗೆಹ್ಲೋಟ್
2
+ ಬೆಂಗಳೂರು, ಅ. 8- ಭಾರತವು ಒಲಿಂಪಿಕ್ಸ್, ಕಾಮನ್ವೆಲ್ತ್ ಕ್ರೀಡಾಕೂಟಗಳಲ್ಲಿ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ನೀಡಿದೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಂಸಿಸಿದರು. ನಗರದ ಕಂಠೀರವ ಕ್ರೀಡಾಗಂಣದಲ್ಲಿ 62 ನೇ ಓಪನ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ಅಡಿಯಲ್ಲಿ ಆಯೋಜಿಸಲಾದ ಬೆಂಗಳೂರು ಮ್ಯಾರಥಾನ್ ಅನ್ನು ಇಂದು ಉದ್ಘಾಟಿಸಿ ಮಾತನಾಡಿದ ಅವರು, 19ನೇ ಏಷ್ಯನ್ ಗೇಮ್ಸ್‍ನಲ್ಲಿ ಭಾರತೀಯ ಆಟಗಾರರು ತಮ್ಮ ದಾಖಲೆ ಮುರಿದ ಪ್ರದರ್ಶನದ ಮೂಲಕ ದೇಶಕ್ಕೆ ಹೆಮ್ಮೆ ತಂದಿದ್ದಾರೆ ಎಂದು ಶ್ಲಾಘಿಸಿದರು.
3
+ ಬೆಂಗಳೂರು ಮ್ಯಾರಥಾನ್‍ನಲ್ಲಿ ವಿಶ್ವದ ವಿವಿಧ ಭಾಗಗಳಿಂದ ಸಾವಿರಾರು ಸ್ರ್ಪಧಿಗಳು ಭಾಗವಹಿಸುತ್ತಿರುವುದು ಸಂತಸದ ವಿಷಯ. ಈ ಘಟನೆಯು ಕರ್ನಾಟಕವನ್ನು ಅಂತಾರಾಷ್ಟ್ರೀಯ ಕ್ರೀಡಾ ಹಬ್ ಆಗಿ ಮಾಡುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ ಎಂದರು.
4
+ ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-10-2023)
5
+ ಭಾರತ ಸರ್ಕಾರದ ಕ್ರೀಡಾ ಸಚಿವಾಲಯ ಮತ್ತು ಕ್ರೀಡಾ ಸಂಸ್ಥೆಗಳು ಹಾಗೂ ಕರ್ನಾಟಕ ಸರ್ಕಾರವು ಅನೇಕ ಕ್ರೀಡಾ ಯೋಜನೆಗಳನ್ನು ಮಾಡಿವೆ. ಆಟಗಾರರು ಅವುಗಳ ಲಾಭವನ್ನು ಪಡೆಯುತ್ತಿದ್ದಾರೆ. ಇದರಿಂದಾಗಿ ಕ್ರೀಡೆಯ ಮಟ್ಟ ಸುಧಾರಿಸಿದೆ. ಅದರ ಫಲಿತಾಂಶ ಇಂದು ನಮ್ಮೆಲ್ಲರ ಮುಂದಿದೆ ಎಂದರು.
6
+ ಈ ಮ್ಯಾರಾಥಾನ್ ನಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಶುಭಕೋರಿದ ರಾಜ್ಯಪಾಲರು, ಅತ್ಯುತ್ತಮ ಪ್ರದರ್ಶನ ಮತ್ತು ಉಜ್ವಲ ಭವಿಷ್ಯಕ್ಕಾಗಿ ಭಾಗವಹಿಸುವ ಎಲ್ಲಾ ಆಟಗಾರರಿಗೆ ಶುಭ ಹಾರೈಸಿದರು.
7
+ ಜೆಸಿ ರಸ್ತೆ ಸ್ಟೀಲ್ ಬ್ರಿಡ್ಜ್ ಬದಲಿಗೆ ಕಾಂಕ್ರಿಟ್ ಸೇತುವೆ ನಿರ್ಮಾಣ
8
+ ಈ ಸಂದರ್ಭದಲ್ಲಿ ಕ್ರೀಡಾ ಸಚಿವರಾದ ಬಿ. ನಾಗೇಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ , ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಕೆ. ಗೋವಿಂದರಾಜ್, ಓಟದ ನಿರ್ದೇಶಕ ನಾಗರಾಜ್, ಅರ್ಜುನ್ ಪ್ರಶಸ್ತಿ ಪುರಸ್ಕೃತ ಡಾ. ರೀತ್ ಅಬ್ರಹಾಂ, ವಿಪ್ರೋ ಮುಖ್ಯಸ್ಥ ಎಚ್.ಆರ್. ಸೌರಭ್ ಗೋವಿಲ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
eesanje/url_46_335_3.txt ADDED
@@ -0,0 +1,6 @@
 
 
 
 
 
 
 
1
+ ಪಟಾಕಿ ದುರಂತ : ಉನ್ನತ ಮಟ್ಟದ ತನಿಖೆಗೆ ಹೆಚ್‌ಡಿಕೆ ಆಗ್ರಹ
2
+ ಬೆಂಗಳೂರು, ಅ.8-ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಸಂಗ್ರಹಗಾರದಲ್ಲಿ ಸಂಭವಿಸಿರುವ ಅಗ್ನಿ ದುರಂತದ ಬಗ್ಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಆಗ್ರಹಿಸಿದ್ದಾರೆ.
3
+ ದುರಂತದಿಂದ ಬದುಕು ಕಳೆದುಕೊಂಡ ಕುಟುಂಬಗಳಿಗೆ ರಾಜ್ಯ ಸರ್ಕಾರ ಆಸರೆಯಾಗಿ ನಿಲ್ಲಬೇಕು ಎಂದಿದ್ದಾರೆ. ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಈ ಘಟನೆ ಅನೇಕ ಪ್ರಶ್ನೆಗಳಿಗೆ ದಾರಿ ಮಾಡಿಕೊಟ್ಟಿದೆ. ಸುರಕ್ಷತೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸದೆ ಇದ್ದುದ್ದೇ ದುರಂತಕ್ಕೆ ಕಾರಣ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಅವರು ತಿಳಿಸಿದ್ದಾರೆ.
4
+ ಪ್ರೊಫೆಸರ್ ಕಾರು ಡಿಕ್ಕಿ : ಇಬ್ಬರು ವಿದ್ಯಾರ್ಥಿನಿಯರು ಸೇರಿ ಮೂವರಿಗೆ ಗಾಯ
5
+ ಪಟಾಕಿ ಸಂಗ್ರಹಗಾರದಲ್ಲಿ ಸಂಭವಿಸಿರುವ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ದುರಂತದ ಸಾವು ಕಂಡಿರುವ ಘಟನೆ ತಿಳಿದು ನನಗೆ ತೀವ್ರ ದಿಗ್ಭ್ರಮೆ ಉಂಟಾಗಿದೆ. ದೀಪಾವಳಿಗೆ ಬದುಕು ಕಟ್ಟಿಕೊಳ್ಳಲು ಹೊರಟಿದ್ದ ಈ ಮುಗ್ಧ ಜೀವಗಳು ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಬಲಿಯಾಗಿರುವ ಘಟನೆ ನನ್ನ ಮನವನ್ನು ಕಲಕಿದೆ ಎಂದು ಅವರು ಹೇಳಿದ್ದಾರೆ.
6
+ ಜೀವ ಕಳೆದುಕೊಂಡ ಎಲ್ಲಾ ನತದೃಷ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕುಟುಂಬಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಅವರು ತಿಳಿಸಿದ್ದಾರೆ.
eesanje/url_46_335_4.txt ADDED
@@ -0,0 +1,18 @@
 
 
 
 
 
 
 
 
 
 
 
 
 
 
 
 
 
 
 
1
+ ಬಸ್ ಪ್ರಯಾಣ ದರ ಹೆಚ್ಚಳದ ಮುನ್ಸೂಚನೆ ನೀಡಿದ ಡಿಸಿಎಂ
2
+ ಬೆಂಗಳೂರು,ಅ.7- ಸರ್ಕಾರದ ಸಾರಿಗೆ ಸಂಸ್ಥೆಗಳನ್ನು ವ್ಯವಹಾರಿಕ ಮಾದರಿಯಲ್ಲಿ ಸ್ಥಾಪಿಸಲಾಗಿದ್ದು, ಅವುಗಳ ಉಳಿವಿಗಾಗಿ ರಾಜಕೀಯ ಹಿತಾಸಕ್ತಿ ಪ್ರದರ್ಶನ ಅಗತ್ಯವಿದೆ, ಕಳೆದ ಏಳೆಂಟು ವರ್ಷಗಳಿಂದಲೂ ಪ್ರಯಾಣ ದರ ಪರಿಷ್ಕರಣೆಯಾಗಿಲ್ಲ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಸ್ ಪ್ರಯಾಣ ದರದ ಏರಿಕೆಯ ಮುನ್ಸೂಚನೆ ನೀಡಿದ್ದಾರೆ.
3
+ ವಿಧಾನಸೌಧದ ಮುಂಭಾಗದಲ್ಲಿ 100 ನೂತನ ಕರ್ನಾಟಕ ಸಾರಿಗೆ ಮತ್ತು 40 ಹವಾನಿಯಂತ್ರಣರಹಿತ ಸ್ಲೀಪರ್ ಬಸ್‍ಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಹಿಂದೆ ಸಗೀರ್ ಅಹಮ್ಮದ್‍ಸಾರಿಗೆ ಸಚಿವರಾಗಿದ್ದಾಗ ಡೀಸೆಲ್ ಬೆಲೆ ಏರಿಕೆಗನುಗುಣವಾಗಿ ಬಸ್ ಪ್ರಯಾಣ ದರವನ್ನು ಪರಿಷ್ಕರಣೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು.
4
+ ಕಳೆದ ಏಳೆಂಟು ವರ್ಷಗಳಿಂದಲೂ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಏರಿಕೆಯಾಗಿಲ್ಲ ಎಂದು ಹೇಳಿದರು.ಸಾರಿಗೆ ಸಂಸ್ಥೆಗಳ ಉದ್ದೇಶ ಕೇವಲ ಲಾಭ ಮಾಡುವುದಷ್ಟೇ ಅಲ್ಲ, ಜನರಿಗೆ ಸೇವೆ ಮಾಡಬೇಕು, ಅದೇ ಸಮಯದಲ್ಲಿ ಲಾಭದಾಯಕವಾಗಿಯೂ ಅವು ನಡೆಯಬೇಕು ಎಂದು ಅಭಿಪ್ರಾಯಪಟ್ಟರು.
5
+ ದೇಶದಲ್ಲಿ ಎಲ್ಲೂ ಇಲ್ಲದಂತಹ ವಿಮಾ ಸೌಲಭ್ಯವನ್ನು ನಮ್ಮ ಸಾರಿಗೆ ನಿಗಮಗಳು ಅಳವಡಿಸಿಕೊಂಡಿವೆ. ಅಪಘಾತದಲ್ಲಿ ಸಿಬ್ಬಂದಿಗಳು ಮೃತಪಟ್ಟ ಸಂದರ್ಭದಲ್ಲಿ 1 ಕೋಟಿ ರೂ. ಪರಿಹಾರ ನೀಡುವ ವಿಮಾ ಸೌಲಭ್ಯ ಕೆಎಸ್‍ಆರ್‍ಟಿಸಿಯಲ್ಲಿದ್ದು, ಉಳಿದಂತೆ ವಿವಿಧ ನಿಗಮಗಳಿಗೂ ಅದನ್ನು ಹಂತಹಂತವಾಗಿ ವಿಸ್ತರಿಸಲಾಗುವುದು ಎಂದು ತಿಳಿಸಿದರು.
6
+ ಬಿಎಸ್‍ವೈ ರಾಜ್ಯ ಪ್ರವಾಸಕ್ಕೆ ವರಿಷ್ಠರಿಂದ ಇನ್ನೂ ಸಿಕ್ಕಿಲ್ಲ ಅನುಮತಿ
7
+ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಯಡಿ ಈವರೆಗೂ 72 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಇದು ಸರ್ಕಾರಕ್ಕೆ ಹೊರೆಯಾಗಿದೆ. ನಿಗಮಗಳಿಗೆ ಸರ್ಕಾರದಿಂದ ಹಣ ಭರಿಸುವುದು ಕಷ್ಟವಾಗುತ್ತಿದೆ. ಈ ಯೋಜನೆ ಪ್ರಸ್ತಾಪಿಸಿದ್ದಕ್ಕಾಗಿ ಕೆಲವರು ನನ್ನನ್ನು ಟೀಕಿಸುತ್ತಿದ್ದಾರೆ. ಸಾರಿಗೆ ನಿಗಮಗಳ ಆಡಳಿತ ಮಂಡಳಿಯವರು ಶಕ್ತಿ ಯೋಜನೆಯಿಂದ ನಿಗಮ ನಡೆಸುವುದು ಕಷ್ಟ ಎಂದು ಚರ್ಚೆ ಮಾಡಿದ್ದಾರೆ. ಎಲ್ಲವೂ ಗೊತ್ತಿದೆ ಎಂದರು.
8
+ ಆದರೆ ಹೆಣ್ಣುಮಕ್ಕಳು ಉಚಿತವಾಗಿ ಪ್ರಯಾಣಿಸಬೇಕು ಎಂಬ ನಮ್ಮ ಬದ್ಧತೆ ಈಡೇರಿದೆ. ಇಂದು ಬೆಳಿಗ್ಗೆ ತಾವು ಮನೆಯಿಂದ ಹೊರಡುವಾಗ ಸಾರಿಗೆ ಬಸ್‍ಗಳ ಉದ್ಘಾಟನೆಗಾಗಿ ಹೋಗುತ್ತಿರುವುದಾಗಿ ಪತ್ನಿಗೆ ತಿಳಿಸಿದ್ದು, ಇಲ್ಲಿಂದ ಮೈಸೂರಿಗೆ ಒಮ್ಮೆ ಸಾರಿಗೆ ಬಸ್‍ನಲ್ಲಿ ಪ್ರಯಾಣಿಸುವಂತೆ ಸಲಹೆ ನೀಡಿದ್ದೇನೆ ಎಂದರು.
9
+ ಇಂದು ಉದ್ಘಾಟನೆಗೊಂಡ ಬಸ್‍ಗಳಿಗೆ ಪಲ್ಲಕ್ಕಿ ಎಂದು ಉತ್ತಮವಾದ ಹೆಸರಿಟ್ಟವರಿಗೆ ಪ್ರಶಸ್ತಿ ಕೊಡಬೇಕು ಎಂದ ಡಿ.ಕೆ.ಶಿವಕುಮಾರ್, ಹೆಸರು ಸೂಚಿಸಿದವರು ಯಾರು ಎಂದು ಸಾರಿಗೆ ಸಚಿವರಲ್ಲಿ ಕೇಳಿದರು. ಅಧಿಕಾರಿಗಳು ಸಚಿವ ರಾಮಲಿಂಗಾರೆಡ್ಡಿ ಅವರೇ ಹೆ���ರಿಟ್ಟಿದ್ದಾರೆ ಎಂದಾಗ ಅವರಿಗೆ ಪ್ರಮಾಣಪತ್ರ ನೀಡಬೇಕೆಂದು ಡಿ.ಕೆ.ಶಿವಕುಮಾರ್ ಹೇಳಿದರು.
10
+ ರಾಜ, ಮಹಾರಾಜರನ್ನು ಹೊರುತ್ತಿದ್ದ ಪಲ್ಲಕ್ಕಿಯ ಹೆಸರನ್ನು ನಮ್ಮ ಸಾರಿಗೆ ಸಂಸ್ಥೆಗಳ ಬಸ್‍ಗಳಿಗೆ ಇಡಲಾಗಿದೆ. ಅವು ಹೆಣ್ಣುಮಕ್ಕಳ ಪ್ರಯಾಣಕ್ಕೆ ಲಭ್ಯವಾಗಿರುವುದು ಸಂತೋಷ. ತಾವು ಪಲ್ಲಕ್ಕಿ ಬಸ್‍ಗಳನ್ನು ಪರಿಶೀಲಿಸಿದ್ದು, ಆರಾಮದಾಯಕವಾಗಿವೆ. ಆರು ಅಡಿ ಸೀಟುಗಳಿದ್ದು, ಪ್ರಯಾಣಕ್ಕೆ ಅನುಕೂಲವಾಗಿವೆ ಎಂದರು.
11
+ ಶಾಸಕರಿಗೆ ಸಾರಿಗೆ ಬಸ್‍ಗಳಲ್ಲಿ ತಲಾ ಸೀಟುಗಳನ್ನು ಮೀಸಲಿಡಲಾಗಿದೆ. ಇದನ್ನು ಉತ್ತರ ಕರ್ನಾಟಕದಲ್ಲಿರುವವರು ಬಳಕೆ ಮಾಡಿಕೊಳ್ಳಬಹುದು. ಆದರೆ ಬಹುತೇಕ ಶಾಸಕರು ಆರ್ಥಿಕವಾಗಿ ಪ್ರಬಲವಾಗಿದ್ದು, ಬಸ್‍ನಲ್ಲಿ ಪ್ರಯಾಣಿಸುತ್ತಿಲ್ಲ ಎಂದು ಹೇಳಿದರು.
12
+ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಎಲ್ಲಾ ಸಾರಿಗೆ ನಿಗಮಗಳಲ್ಲಿ 24 ಸಾವಿರ ಬಸ್‍ಗಳಿದ್ದು, 1.58 ಲಕ್ಷ ಟ್ರಿಪ್‍ಗಳು ಸಂಚರಿಸುತ್ತಿವೆ. ಪ್ರತಿವರ್ಷ ಶೇ.10 ರಷ್ಟು ಬಸ್‍ಗಳನ್ನು ಸ್ಕ್ರಾಪ್ ಮಾಡಲಾಗುತ್ತಿದೆ. ಪ್ರತಿವರ್ಷ ಹೊಸ ಬಸ್‍ಗಳನ್ನು ಖರೀದಿಸಬೇಕು ಮತ್ತು ನಿವೃತ್ತರಾಗುವ ಶೇ.10 ರಷ್ಟು ಹುದ್ದೆಗಳಿಗೆ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಬೇಕಿದೆ. 2016 ರ ನಂತರ ಸಾರಿಗೆ ನಿಗಮಗಳಲ್ಲಿ ನೇಮಕವಾಗಿಲ್ಲ, 4 ವರ್ಷಗಳಿಂದಲೂ ಹೊಸ ಬಸ್‍ಗಳನ್ನೂ ಖರೀದಿಸಿಲ್ಲ ಎಂದು ತಿಳಿಸಿದರು.
13
+ ಮನರೇಗಾ ಯೋಜನೆ ಡಿಜಿಟಲಿಕರಣದ ಹಿಂದೆ ದುರುದ್ದೇಶ : ಜೈರಾಮ್ ರಮೇಶ್
14
+ ಬಜೆಟ್‍ನಲ್ಲಿ 500 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, 1,300 ಬಸ್‍ಗಳನ್ನು ಖರೀದಿಸಲಾಗುವುದು. ಮುಂದಿನ ನಾಲ್ಕೈದು ತಿಂಗಳಿನಲ್ಲಿ ಸಾರಿಗೆ ನಿಗಮಗಳಲ್ಲಿ 4,500 ಬಸ್‍ಗಳನ್ನು ಸೇರ್ಪಡೆ ಮಾಡಲಾಗುವುದು. 13,000 ಸಿಬ್ಬಂದಿಗಳನ್ನು ನೇಮಕಾತಿ ಮಾಡಲು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದೆಲ್ಲವೂ ಸಾಧ್ಯವಾದ ಬಳಿಕ ಇನ್ನಷ್ಟು ಉತ್ತಮ ಸೇವೆ ಸಲ್ಲಿಸಲು ಹಾಗೂ ರಾಜ್ಯದ ಪ್ರತಿಯೊಂದೂ ಕೊನೆ ಭಾಗಕ್ಕೂ ಸಾರಿಗೆ ಸೇವೆ ಒದಗಿಸಲು ಅನುಕೂಲವಾಗಲಿದೆ ಎಂದರು.
15
+ ಕರೊನ ಕಾಲದಲ್ಲಿ 2,800 ಸಂಚಾರ ಅವಧಿಗಳನ್ನು ಸ್ಥಗಿತಗೊಳಿಸಲಾಗಿತ್ತು. ಅದನ್ನು ಮರು ಆರಂಭಿಸಬೇಕಿದೆ. 300 ರಿಂದ 400 ಕಿ.ಮೀ. ದೂರ ರಾತ್ರಿ ಪ್ರಯಾಣಿಸುವವರು ನಾನ್ ಎಸಿ ಬಸ್‍ಗಳಿಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ ಅಗತ್ಯಕ್ಕನುಗುಣವಾಗಿ ಅವುಗಳನ್ನು ಖರೀದಿಸಲಾಗುವುದು. ಎಕ್ಸ್‍ಪ್ರೆಸ್ ಬಸ್‍ಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತಹ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ ಎಂದು ಹೇಳಿದರು.
16
+ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ದಾಖಲೆ 100 ಪದಕ ಸಾಧನೆ
17
+ ರಾಜ್ಯದ ಸಾರಿಗೆ ಸಂಸ್ಥೆಗಳು ಉತ್ತಮ ಹೆಸರು ಗಳಿಸಿವೆ. ಇದುವರೆಗೂ ಕೆಎಸ್‍ಆರ್‍ಟಿಸಿಗೆ 300, ಬಿಎಂಟಿಸಿಗೆ 145 ಪ್ರಶಸ್ತಿಗಳು ಬಂದಿವೆ. ಬೇರೆ ಯಾವುದೇ ರಾಜ್ಯದ ಸಾರಿಗೆ ನಿಗಮಗಳಿಗೆ ಇಷ್ಟು ಪ್ರಶಸ್ತಿಗಳು ಬಂದಿಲ್ಲ. ಶಕ್ತಿ ಯೋಜನೆ ಆರಂಭಿಸುವಾಗ ಹಲವು ಕೊರತೆಗಳಿದ��ದವು. ಆದರೂ ಧೈರ್ಯ ಮಾಡಿ ಯೋಜನೆ ಜಾರಿಗೊಳಿಸಿದ್ದು, ಸಾಧನೆಗಳಿಗೆ ಉತ್ತಮ ಉದಾಹರಣೆಯಾಗಿದೆ. ವಿರೋಧಪಕ್ಷದವರು ಈ ವಿಷಯದಲ್ಲಿ ಮಾಡಿದ ಟೀಕೆಗಳೆಲ್ಲವೂ ಸುಳ್ಳಾಗಿವೆ ಎಂದು ಹೇಳಿದರು.
18
+ ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಬಸ್‍ಗಳನ್ನು ಉದ್ಘಾಟಿಸಿದರು. ಸಚಿವರಾದ ಕೆ.ಎಚ್.ಮುನಿಯಪ್ಪ, ಮಾಜಿ ಸಚಿವ ಎಚ್.ಎಂ.ರೇವಣ್ಣ, ವಿಧಾನಪರಿಷತ್ ಸದಸ್ಯ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.
eesanje/url_46_335_5.txt ADDED
@@ -0,0 +1,8 @@
 
 
 
 
 
 
 
 
 
1
+ ಗ್ಯಾರಂಟಿ ಯೋಜನೆಗಳಿಗೆ ಆರ್ಥಿಕ ಸಮಸ್ಯೆ ಇಲ್ಲ : ಸಿಎಂ
2
+ ಮೈಸೂರು, ಅ. 7- ರಾಜ್ಯ ಸರ್ಕಾರ ನೀಡುತ್ತಿರುವ ಯಾವುದೇ ಗ್ಯಾರಂಟಿ ಯೋಜನೆ ಗಳಿಗೆ ಆರ್ಥಿಕ ಸಮಸ್ಯೆ ಇಲ್ಲ. ಎಲ್ಲವೂ ವ್ಯವಸ್ಥಿತವಾಗಿ ನಡೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಕೇಂದ್ರ ಸರ್ಕಾರಕ್ಕೆ 4860 ಕೋಟಿ ರೂ. ಬರ ಪರಿಹಾರಕ್ಕಾಗಿ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದರು.
3
+ ರಾಜ್ಯಾದ್ಯಂತ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 30 ಸಾವಿರಕ್ಕೂ ಹೆಚ್ಚು ಬೆಳೆ ನಾಶ ಆಗಿದೆ. ಕೇಂದ್ರ ಸರ್ಕಾರ ಮೂರು ತಂಡಗಳನ್ನು ರಾಜ್ಯಕ್ಕೆ ಕಳುಹಿಸಿದೆ. ತಂಡದ ಸದಸ್ಯರು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲಿದ್ದಾರೆ. ಆನಂತರ ಕೇಂದ್ರ ಸರ್ಕಾರ ತಜ್ಞರು ನೀಡಿದ ವರದಿಯನ್ನು ಪರಿಶೀಲಿಸಿ ಹಣ ಬಿಡುಗಡೆ ಮಾಡಲಿದೆ ಎಂದವರು ತಿಳಿಸಿದರು.
4
+ ಬಿಎಸ್‍ವೈ ರಾಜ್ಯ ಪ್ರವಾಸಕ್ಕೆ ವರಿಷ್ಠರಿಂದ ಇನ್ನೂ ಸಿಕ್ಕಿಲ್ಲ ಅನುಮತಿ
5
+ ಕಳೆದ 70 ವರ್ಷಗಳಿಂದಲೂ ಹಿಂದುಳಿದಿರುವವರನ್ನು ಜಾತಿ ಜನಗಣತಿ ಆಧಾರದಲ್ಲಿ ಗುರುತಿಸಿ ಅವರನ್ನು ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಜಾತಿ ಆಧಾರಿತ ಗಣತಿಯನ್ನು ನಡೆಸಲಾಗುವುದು ಎಂದವರು ತಿಳಿಸಿದರು.ಕುಮಾರಸ್ವಾಮಿ ಮುಖ್ಯ ಮಂತ್ರಿ ಆಗಿದ್ದಾಗಲೇ ಕಾಂತ ರಾಜು ಅವರು ಕರ್ನಾಟಕದಲ್ಲಿನ ಜಾತಿ ಗಣತಿ ವರದಿ ನೀಡಿದ್ದರು. ಆದರೆ ಕುಮಾರಸ್ವಾಮಿ ಅವರು ವರದಿಯನ್ನು ಸ್ವೀಕರಿಸಲಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಹಾಗಾಗಿ ಈಗ ಬೇರೆಯವರು ಅಧ್ಯಕ್ಷರಾಗಿದ್ದಾರೆ. ನಾನು ಅವರಿಗೆ ಹೇಳಿದ್ದೇನೆ. ಆದಷ್ಟು ಬೇಗ ಕಾಂತರಾಜು ನೀಡಿದಂತೆ ವರದಿ ನೀಡುವಂತೆ ತಿಳಿಸಿದ್ದೇನೆ. ಅವರು ನವೆಂಬರ್‍ನಲ್ಲಿ ವರದಿ ನೀಡುವುದಾಗಿ ತಿಳಿಸಿದ್ದಾರೆ ಎಂದರು.
6
+ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಎಲ್ಲಿಯೂ ಹೊಸದಾಗಿ ಮದ್ಯದಂಗಡಿ ತೆರೆಯಲು ಹೊಸ ರಹದಾರಿ ನೀಡುವುದಿಲ್ಲ. ಸಾರ್ವಜನಿಕರ ಅಭಿಪ್ರಾಯ ಹೇಗಿದೆಯೋ ಅದರ ಆಧಾರದ ಮೇಲೆ ನಾವು ಕ್ರಮ ಕೈಗೊಳ್ಳುತ್ತವೆ. ಒಟ್ಟಿನಲ್ಲಿ ಸದ್ಯದಲ್ಲಿ ಯಾವುದೇ ಲಿಕ್ಕರ್ ಅಂಗಡಿಗಳನ್ನು ತಡೆಯಲು ರಹದಾರಿ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
7
+ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ದಾಖಲೆ 100 ಪದಕ ಸಾಧನೆ
8
+ ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಹಿಂದೆಯೂ ಮಹಿಷ ದಸರಾ ಮಾಡಿದ್ದರು. ಆದರೆ ಚಾಮುಂಡಿ ಬೆಟ್ಟದಲ್ಲಿ ಮಾಡಿರಲಿಲ್ಲ. ಈ ಕುರಿತು ಜಿಲ್ಲಾಡಳಿತ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ತಿಳಿಸಿದರು.
eesanje/url_46_335_6.txt ADDED
@@ -0,0 +1,7 @@
 
 
 
 
 
 
 
 
1
+ ಇ ಪ್ರಕ್ಯೂರ್ಮೆಂಟ್ ಹ್ಯಾಕಿಂಗ್ ಪ್ರಕರಣ : ಐವರ ಮನೆ ಮೇಲೆ ದಾಳಿ
2
+ ಬೆಂಗಳೂರು,ಅ.7- ಸರ್ಕಾರದ ಇ- ಪ್ರಕ್ಯೂರ್ಮೆಂಟ್ ವೆಬ್‍ಸೈಟ್ ಹ್ಯಾಕಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚುವರಿಯಾಗಿ ಮತ್ತಿಬ್ಬರನ್ನು ಬಂಸಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು ಸಾಕ್ಷ್ಯಗಳ ಸಂಗ್ರಹಕ್ಕಾಗಿ ನಗರದ ಐದು ಮಂದಿ ಪ್ರಮುಖ ವ್ಯಕ್ತಿಗಳ ಮನೆಗಳು ಸೇರಿದಂತೆ 7 ಕಡೆ ದಾಳಿ ಮಾಡಿ ಶೋಧ ಕಾರ್ಯಾ ಚರಣೆ ನಡೆಸಿದ್ದಾರೆ.
3
+ 2019 ರಲ್ಲಿ ಬೆಳಕಿಗೆ ಬಂದಿದ್ದ ಇ-ಪ್ರಕ್ಯೂರ್ಮೆಂಟ್ ಹ್ಯಾಕಿಂಗ್ ಪ್ರಕರಣ ದಿನೇದಿನೇ ಕುತೂಹಲ ಕೆರಳಿಸುತ್ತಿದೆ. ಪ್ರಮುಖ ಆರೋಪಿ ಶ್ರೀಕಿ ನೀಡಿದ ಮಾಹಿತಿ ಆಧರಿಸಿ ಆರಂಭದಲ್ಲೇ 18 ಮಂದಿಯನ್ನು ಬಂಧಿಸಲಾಗಿತ್ತು. ಆದರೆ ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ಕೆಲಸ ಮಾಡಿದ ಪ್ರಮುಖ ಆರೋಪಿಗಳು ಹಾಗೂ ಮಧ್ಯವರ್ತಿಗಳು ಪ್ರಕರಣದಿಂದ ನುಣುಚಿಕೊಂಡಿದ್ದರು. ಕೆಲವರು ತಲೆಮರೆಸಿಕೊಂಡಿದ್ದರು.
4
+ ಕಾಂಗ್ರೆಸ್ ಸರ್ಕಾರ ರಚಿಸಿರುವ ವಿಶೇಷ ತನಿಖಾದಳ ಹ್ಯಾಕಿಂಗ್‍ನಿಂದ ಅಕ್ರಮವಾಗಿ ಗಳಿಸಿದ ಹಣವನ್ನು ವರ್ಗಾವಣೆ ಹಾಗೂ ಪಡೆದುಕೊಂಡವರ ಬೆನ್ನು ಬಿದ್ದಿದೆ. ತನಿಖೆಯ ಪ್ರಗತಿಯಲ್ಲಿ ನಾಗ್ಪುರದ ನಿತಿನ್ ಮಿಶ್ರಾ ಮತ್ತು ದರ್ಶಿತ್ ಪಟೇಲ್ ಎಂಬಿಬ್ಬರನ್ನು ಬಂಧಿಸಲಾಗಿದೆ.
5
+ ಸಾರ್ವಜನಿಕರಿಗೆ ಮೈಸೂರು ಅರಮನೆ ಪ್ರವೇಶ ನಿರ್ಬಂಧ
6
+ ಈ ಆರೋಪಿಗಳು 10.5 ಕೋಟಿ ರೂ. ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದರು. ಇತ್ತೀಚೆಗೆ ಪಂಜಾಬ್‍ನ ಲೂದಿಯಾನದಲ್ಲಿ ಪ್ರಮುಖ ಆರೋಪಿ ಅರವಿಂದ್ ಸಿಂಗ್‍ನನ್ನು ಬಂಧಿಸಲಾಗಿತ್ತು. ಈವರೆಗೂ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 21 ಕ್ಕೆ ಏರಿಕೆಯಾಗಿದೆ. ಆರೋಪಿ ಶ್ರೀಕಿ ಇ-ಪ್ರಕ್ಯೂರ್ಮೆಂಟ್, ಪೋಕರ್ ಗೇಮಿಂಗ್ ಸೇರಿದಂತೆ ವಿವಿಧ ವೆಬ್‍ಸೈಟ್‍ಗಳನ್ನು ಹ್ಯಾಕ್ ಮಾಡಿ ಕೋಟ್ಯಂತರ ರೂ. ಹಣ ಲಪಟಾಯಿಸಿದ್ದ ಆರೋಪಗಳಿವೆ. ಅವುಗಳನ್ನು ವರ್ಗಾವಣೆ ಮಾಡಿರುವುದಕ್ಕೆ ಸಂಬಂಧಪಟ್ಟಂತೆ ತನಿಖೆಗಳು ನಡೆಯುತ್ತಿವೆ.
7
+ ಬಿಟ್‍ಕಾಯಿನ್ ಹಾಗೂ ವೆಬ್‍ಸೈಟ್ ಹ್ಯಾಕಿಂಗ್ ಎರಡೂ ಪ್ರಕರಣಗಳಲ್ಲಿ ಪ್ರಮುಖ ಆರೋಪಿಗಳ ಮನೆ ಮೇಲೆ 7 ಕ್ಕೂ ಹೆಚ್ಚು ಕಡೆ ದಾಳಿ ನಡೆದಿದೆ. ನ್ಯಾಯಾಲಯದಿಂದ ಅನುಮತಿ ಪಡೆದು ಶೋಧ ಕಾರ್ಯಾಚರಣೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಪೊಲೀಸರು 5 ಮಂದಿಯ ಮನೆ ಹಾಗೂ ಕಚೇರಿಗಳಲ್ಲಿ ಸಾಕ್ಷ್ಯಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
eesanje/url_46_335_7.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಐಷಾರಾಮಿ ಪಲ್ಲಕ್ಕಿ ಸಾರಿಗೆ ಸೇವೆ ಆರಂಭ
2
+ ಬೆಂಗಳೂರು,ಅ.7- ಸಾರಿಗೆ ನಿಗಮಗಳಲ್ಲಿ ದೂರದ ಪ್ರಯಾಣಕ್ಕೆ ಅನುಕೂಲವಾಗುವಂತೆ ಹೈಟೆಕ್ ಸ್ಲೀಪರ್‍ಕೋಚ್ ಬಸ್‍ಗಳ ಸೇವೆಯನ್ನು ಆರಂಭಿಸಲಾಗಿದ್ದು, ಕಡಿಮೆ ಪ್ರಯಾಣ ದರದಲ್ಲಿ ಆರಾಮದಾಯಕ ಸೌಲಭ್ಯ ಒದಗಿಸಲಾಗುತ್ತಿದೆ. ಜೊತೆಗೆ ಪಲ್ಲಕ್ಕಿ ಹೆಸರಿನಲ್ಲಿ ಹೊಸ ಬ್ರಾಂಡಿಂಗ್ ಸೇವೆಯನ್ನು ಸಾರಿಗೆ ನಿಗಮಗಳು ಆರಂಭಿಸಿವೆ.
3
+ ಮುಖ್ಯಮಂತ್ರಿಸಿದ್ದರಾಮಯ್ಯನವರು ವಿಧಾನ ಸೌಧದ ಗ್ರಾಂಡ್ ಸ್ಟೆಪ್‍ಗಳಲ್ಲಿ 40 ನಾನ್ ಎಸಿ ಸ್ಲೀಪರ್‍ಕೋಚ್ ಮತ್ತು 100 ಸಾಮಾನ್ಯ ಬಸ್‍ಗಳ ಪ್ರಯಾಣಕ್ಕೆ ಚಾಲನೆ ನೀಡಿದರು. ಇವುಗಳಲ್ಲಿ 13.5 ಮೀಟರ್ ಉದ್ದದ 8 ಬಸ್‍ಗಳಿದ್ದು, ಅವುಗಳಲ್ಲಿ 4 ನಾನ್ ಎಸಿ, ಉಳಿದ 4 ಎಸಿ ಬಸ್‍ಗಳಾಗಿವೆ. ಅತ್ಯಾಧುನಿಕವಾದ ಈ ಬಸ್‍ಗಳು ಐಶಾರಾಮಿ ಸೌಲಭ್ಯ ಹೊಂದಿವೆ. ಪ್ರಮುಖವಾಗಿ ದೂರದ ಬೆಳಗಾವಿ, ಮಂಗಳೂರುನÀಂತಹ ಪ್ರದೇಶಗಳಿಂದ ರಾಜಧಾನಿ ಗೆ ಪ್ರಯಾಣಿಸುತ್ತಿವೆ. ಮುಂದಿನ ಹಂತದಲ್ಲಿ ವಿವಿಧ ಭಾಗಗಳಿಗೂ ಸಂಪರ್ಕ ಕಲ್ಪಿಸುವ ಸಾಧ್ಯತೆ ಇದೆ.
4
+ ಸ್ಲೀಪರ್‍ಕೋಚ್‍ನ ಪ್ರತಿಯೊಂದು ಬಸ್‍ನಲ್ಲೂ 36 ಸೀಟುಗಳನ್ನು ವ್ಯವಸ್ಥೆ ಮಾಡಲಾಗಿದೆ. 6 ಅಡಿ ಉದ್ದದ ಸೀಟುಗಳಲ್ಲಿ ಆರಾಮದಾಯಕವಾಗಿ ಮಲಗಬಹುದು. ಜೊತೆಗೆ ಕುಳಿತುಕೊಳ್ಳಲೂ ಅವಕಾಶವಿದೆ. ಪ್ರತ್ಯೇಕವಾದ ಲೈಟಿಂಗ್, ಮೊಬೈಲ್ ಚಾರ್ಜಿಂಗ್ ಪಾಯಿಂಟ್, ಶೂ ಅಥವಾ ಚಪ್ಪಲಿ ಇಡಲು ಸ್ಥಳಾವಕಾಶ, ಲಗೇಜ್ ಬ್ಯಾಗ್‍ಗಳಿಗೂ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಡಿಜಿಟಲ್ ವಾಚ್ ಸೇರಿದಂತೆ ಅತ್ಯಾಧುನಿಕ ವ್ಯವಸ್ಥೆಗಳು ಕಡಿಮೆ ದರದಲ್ಲಿ ಪ್ರಯಾಣಿಕರಿಗೆ ಲಭ್ಯವಾಗುತ್ತಿವೆ.
5
+ ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ, 500 ಕೋಟಿ ರೂ.ಗೆ ಬೇಡಿಕೆ
6
+ ಪ್ರಾಯೋಗಿಕವಾಗಿ ಆರಂಭವಾಗಿರುವ 13.5 ಅಡಿ ಉದ್ದದ ಈ ಬಸ್‍ಗಳಲ್ಲಿ ಉತ್ತಮವಾದ ಸಸ್ಪೆನ್ಷನ್, ಶಬ್ಧ ನಿಯಂತ್ರಣ, ಚಾಲಕರಿಗೆ ಅಗತ್ಯ ಸೌಲಭ್ಯಗಳಿವೆ. ಪ್ರಯಾಣಿಕರ ಅನುಭವಗಳನ್ನು ಆಧರಿಸಿ ಮುಂದೆ ಇವುಗಳನ್ನು ಮತ್ತಷ್ಟು ವಿಸ್ತರಿಸುವ ಚಿಂತನೆ ಇದೆ ಎಂದು ಸಾರಿಗೆ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
7
+ ಈವರೆಗೂ ಸಾರಿಗೆ ನಿಗಮಗಳಲ್ಲಿ 15 ಮತ್ತು 12 ಮೀಟರ್ ಉದ್ದದ ಬಸ್‍ಗಳು ಸಂಚರಿಸುತ್ತಿದ್ದವು. ಕಿರಿದಾದ ಮತ್ತು ಗುಡ್ಡಗಾಡು, ಅರಣ್ಯ ಪ್ರದೇಶಗಳ ರಸ್ತೆಗಳ ತಿರುವುಗಳಲ್ಲಿ ಉದ್ದದ ಬಸ್‍ಗಳ ಸಂಚಾರ ಕಷ್ಟವಾಗುತ್ತಿತ್ತು. ಈಗ 13.5 ಮೀಟರ್ ಉದ್ದದ 8 ಹೊಸ ಬಸ್‍ಗಳನ್ನು ಸೇವೆಗೆ ಸಮರ್ಪಿಸಲಾಗಿವೆ. ಇವು ಕಿರಿದಾದ ಮಾರ್ಗಗಳಲ್ಲೂ ಸುಗಮ ಸಂಚಾರ ಮಾಡಲಿವೆ.
8
+ ಇನ್ನು ದೂರದ ಪ್ರಯಾಣಕ್ಕಾಗಿರುವ ಎಕ್ಸ್‍ಪ್ರೆಸ್ ಬಸ್‍ಗಳಲ್ಲೂ ಸೀಟುಗಳ ವಿನ್ಯಾಸವನ್ನು ಪರಿಷ್ಕರಿಸಲಾಗಿದೆ. 54 ರ ಬದಲಾಗಿ 51 ಕ್ಕೆ ಸೀಟು ಸಂಖ್ಯೆಯನ್ನು ಇಳಿಸಲಾಗಿದ್ದು, ಆರಾಮದಾಯಕವಾಗಿ ಕಾಲು ಚಾಚಿಕೊಳ್ಳಲು ಸ್ಥಳಾವಕಾಶ ಮಾಡಲಾಗಿದೆ. ಬಸ್‍ನ ಎತ್ತರವನ್ನು 2 ಅಡಿ ಹೆಚ್ಚಿಸಿರುವುದರಿಂದ ಗಾಳಿ, ಬೆಳಕು ಸಂಚಾರ ಇನ್ನಷ್ಟು ಸುಧಾರಣೆಗೊಂಡ�� ಪ್ರಯಾಣಿಕರಿಗೆ ಮಲ್ಟಿ ಆಕ್ಸೆಲ್ ಅನುಭವ ಹಿತ ನೀಡಲಿದೆ ಎಂದು ಸಾರಿಗೆ ನಿಗಮಗಳ ಅಧಿಕಾರಿಗಳು ತಿಳಿಸಿದ್ದಾರೆ. ಡಿಜಿಟಲ್ ನೇಮ್ ಬೋರ್ಡ್, ನಿರಂತರವಾಗಿ ರೆಕಾರ್ಡ್ ಆಗುವ ರಿವರ್ಸ್ ಕ್ಯಾಮರಾ, ಬೆಂಕಿ ನಂದಿಸುವ ಸಲಕರಣೆಗಳು ಮತ್ತು ಎಚ್ಚರಿಕೆಯ ಗಂಟೆ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
9
+ ಪಲ್ಲಕ್ಕಿ ಬ್ರಾಂಡಿಂಗ್ :ಕೆಎಸ್‍ಆರ್‍ಟಿಸಿಯಲ್ಲಿ ಐರಾವತ, ಬಿಎಂಟಿಸಿಯಲ್ಲಿ ವಜ್ರ ಎಂಬ ಬ್ರಾಂಡಿಂಗ್ ಸಾರಿಗೆ ಸೇವೆಗಳು ಇದಾಗಲೇ ಚಾಲ್ತಿಯಲ್ಲಿವೆ. ಅವುಗಳ ಸಾಲಿಗೆ ಹೊಸದಾಗಿ ಸಾರಿಗೆ ನಿಗಮಗಳು ಪಲ್ಲಕ್ಕಿ ಎಂಬ ಹೊಸ ಬ್ರಾಂಡ್‍ಗೆ ಚಾಲನೆ ನೀಡಿದೆ. ಸಂತೋಷ ಪ್ರಯಾಣದಲ್ಲಿದೆ ಎಂಬ ಅಡಿಬರಹದಡಿ ಪಲ್ಲಕ್ಕಿ ಸೇವೆಗಳು ಲೋಕಾರ್ಪಣೆಗೊಂಡಿವೆ. ಶಕ್ತಿ ಯೋಜನೆಯ ಉಚಿತ ಪ್ರಯಾಣ ಸ್ಲೀಪರ್ ಕೋಚ್ ಹೊರತುಪಡಿಸಿದರೆ ಉಳಿದಂತೆ ಎಲ್ಲಾ ಎಕ್ಸ್‍ಪ್ರೆಸ್ ಸಾರಿಗೆ ಸೇವೆಯಲ್ಲೂ ಲಭ್ಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
10
+ ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ, 500 ಕೋಟಿ ರೂ.ಗೆ ಬೇಡಿಕೆ
11
+ ದೂರದ ಪ್ರಯಾಣಗಳಿಗೆ ಕೆಎಸ್‍ಆರ್‍ಟಿಸಿಯಲ್ಲಿ ನಾನ್ ಎಸಿ ಸ್ಲೀಪರ್‍ಕೋಚ್‍ಗಳ ಬಸ್‍ಗಳು ಕಡಿಮೆ ಇದ್ದವು. ಅದರ ಬೇಡಿಕೆಯನ್ನು ಪರಿಗಣಿಸಿ ಹೊಸ ಬಸ್‍ಗಳನ್ನು ನಿಯೋಜಿಸಲಾಗಿದೆ. ನೂತನ ಬಸ್‍ಗಳಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಸ್‍ನ ಒಳ ವಿನ್ಯಾಸಗಳನ್ನು ಪರಿಶೀಲಿಸಿದರು. ರೈಲು ಸೇವೆಯಲ್ಲಿರುವಂತೆಯೇ ಆರಾಮದಾಯಕ ವ್ಯವಸ್ಥೆಗಳಿವೆ. ನಾನು ಕೂತು, ಮಲಗಿದ್ದೇನೆ ಎಂದು ಡಿ.ಕೆ.ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು.
12
+ 6 ಗಂಟೆ ದೂರದ ಪ್ರಯಾಣ ಇರುವವರಿಗೆ ಇವು ಅನುಕೂಲವಾಗಿವೆ. ಪ್ರತಿ ಕಿ.ಮೀ.ಗೆ 2 ರೂ. ಪ್ರಯಾಣದರವನ್ನು ನಿಗದಿ ಮಾಡಲಾಗಿದೆ ಎಂದು ಕೆಎಸ್‍ಆರ್‍ಟಿಸಿಯ ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೀಟುಗಳನ್ನು ಪರಿಶೀಲಿಸಿದ್ದು, ಚೆನ್ನಾಗಿವೆ, ಪತಿ-ಪತ್ನಿ ಇಬ್ಬರೂ ಪ್ರಯಾಣಿಸಬಹುದು ಎಂದು ಹೇಳಿದರು.
eesanje/url_46_335_8.txt ADDED
@@ -0,0 +1,6 @@
 
 
 
 
 
 
 
1
+ ಬಿಜೆಪಿ ಪೋಸ್ಟರ್ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
2
+ ಬೆಂಗಳೂರು,ಅ.7-ರಾಹುಲ್‍ಗಾಂಧಿಯವರನ್ನು ರಾವಣನಿಗೆ ಹೋಲಿಕೆ ಮಾಡಿದ ಬಿಜೆಪಿಯ ವಿವಾದಿತ ಪೋಸ್ಟರ್ ಅನ್ನು ಖಂಡಿಸಿ ಕಾಂಗ್ರೆಸ್ ನಗರದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್‍ನಲ್ಲಿ ಬೆಂಗಳೂರಿನ ಎಲ್ಲಾ ಕಾಂಗ್ರೆಸ್ ಘಟಕಗಳೂ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ವಿಧಾನಪರಿಷತ್ ಸದಸ್ಯ ನಾಗರಾಜ್ ಯಾದವ್, ಹಿರಿಯ ನಾಯಕರಾದ ಎಚ್.ಎಂ.ರೇವಣ್ಣ ಹಾಗೂ ಇತರ ನಾಯಕರು ಉಪಸ್ಥಿತರಿದ್ದರು.
3
+ ಪ್ರತಿಭಟನೆಯಲ್ಲಿ ಮಾತನಾಡಿದ ರಾಮಲಿಂಗಾರೆಡ್ಡಿ ಅವರು, ಬಿಜೆಪಿಯವರಿಗೆ ರಾಹುಲ್‍ಗಾಂಧಿಯವರನ್ನು ರಾಜಕೀಯವಾಗಿ ಎದುರಿಸಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಆಕ್ಷೇಪಾರ್ಹ ಪೋಸ್ಟರ್‍ಗಳನ್ನು ಪ್ರಕಟಿಸಿ ಅವಹೇಳನ ಮಾಡುವ ಪ್ರಯತ್ನ ಮಾಡಿದೆ. ಇದು ರಾಹುಲ್‍ ಗಾಂಧಿಯವರ ಜನಪ್ರಿಯತೆ ತಗ್ಗಿಸಲು ಸಾಧ್ಯವಿಲ್ಲ.
4
+ ಈ ಹಿಂದೆ ಚುನಾವಣೆಯಲ್ಲಿ ಸುಳ್ಳು ಭರವಸೆಗಳನ್ನ ನೀಡಿದ ಬಿಜೆಪಿಯವರು ಕಪ್ಪುಹಣವನ್ನು ವಿದೇಶದಿಂದ ತಂದು, ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಾಕಿರುವುದಾಗಿ ಹೇಳಿದರು.
5
+ ಏಷ್ಯನ್ ಗೇಮ್ಸ್‌ನಲ್ಲಿ ಪದಕಗಳ ಸೆಂಚುರಿ ಭಾರಿಸಿದ ಭಾರತ, ಪ್ರಧಾನಿ ಅಭಿನಂದನೆ
6
+ ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಯುವಕರಲ್ಲಿ ಆಸೆ ಹುಟ್ಟಿಸಿದರು. ಅದ್ಯಾವುದೂ ಈಡೇರಿಲ್ಲ. ಕಳೆದ 9 ವರ್ಷಗಳಲ್ಲಿ ದೇಶದ ಅಭಿವೃದ್ಧಿಯನ್ನು ಹಿಮ್ಮುಖವಾಗಿ ತೆಗೆದುಕೊಂಡು ಹೋಗಿದ್ದಾರೆ. ಇದನ್ನು ಮರೆಮಾಚಲು ವಿವಾದಿತ ಕಾನೂನುಗಳನ್ನು ಜಾರಿಗೆ ತರುತ್ತಾರೆ. ಭಾವನಾತ್ಮಕ ರಾಜಕಾರಣದ ಮೂಲಕ ಜನರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಾರೆ. ಈಗ ವಿವಾದಿತ ಪೋಸ್ಟರ್‍ಗಳ ಮೂಲಕ ಅವಹೇಳನ ಮಾಡುವ ಪ್ರವೃತ್ತಿಗೆ ಕೈ ಹಾಕಿದ್ದಾರೆ. ಇದಕ್ಕೆ ಲೋಕಸಭೆ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ ಎಂದರು.
eesanje/url_46_335_9.txt ADDED
@@ -0,0 +1,9 @@
 
 
 
 
 
 
 
 
 
 
1
+ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದು ಡಿಸಿಎಂ ಮುಂದೆ ಪೌರಕಾರ್ಮಿಕ ಮಹಿಳೆ ಅಳಲು
2
+ ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಅನುದಾನ ಬರುತ್ತಿಲ್ಲ ಎಂದು ಪೌರಕಾರ್ಮಿಕ ಮಹಿಳೆ ಖುದ್ದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಳಿ ಅಸಮಾಧಾನ ತೋಡಿಕೊಂಡ ಘಟನೆ ನಡೆದಿದೆ. ಬಿಬಿಎಂಪಿಯಲ್ಲಿ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿಯವರನ್ನು ಆಹ್ವಾನಿಸಲು ಪೌರಕಾರ್ಮಿಕರ ನಿಯೋಗ ಇಂದು ಡಿ.ಕೆ.ಶಿವಕುಮಾರ್ ಅವರ ಮನೆಗೆ ಬಂದಿತ್ತು.
3
+ ಈ ವೇಳೆ ಇದೇ 12 ರಂದು ಕಾರ್ಯಕ್ರಮ ನಿಗದಿಯಾಗಿದೆ ಎಂದು ನಿಯೋಗದ ಸದಸ್ಯರು ತಿಳಿಸಿದರು. ನೀವು ಕಾರ್ಯಕ್ರಮ ಏರ್ಪಡಿಸುವಾಗ ನನ್ನ ಸಮಯ ನೋಡಿಕೊಂಡು ನಿಗದಿ ಮಾಡಬೇಕು. ನಿಮ್ಮಷ್ಟಕ್ಕೆ ನೀವೇ ದಿನಾಂಕ ನಿಗದಿ ಮಾಡಿದರೆ ನಮಗೆ ಬಿಡುವಿರುವುದಿಲ್ಲ. ಬರದೇ ಇದ್ದರೆ ನಿಮಗೆ ಅಪಮಾನ ಎಂದು ಅಸಮಾಧಾನ ವ್ಯಕ್ತಪಡಿಸಿದರು.
4
+ ಕರ್ನಾಟಕ ಭಯೋತ್ಪಾದಕರು, ಜಿಹಾದಿಗಳು ಮತ್ತು ಗುಂಡಾಗಳ ತಾಣವಾಗಿದೆ : ಬಿಜೆಪಿ ವಾಗ್ದಾಳಿ
5
+ ಈ ವೇಳೆ ನಿಯೋಗದ ಮುಖಂಡರು ಮುಂದಿನ ಬಾರಿ ನಿಮ್ಮ ಸಮಯ ನೋಡಿಕೊಂಡೇ ಸಮಯ ನಿಗದಿ ಮಾಡುತ್ತೇವೆ. ಈ ಬಾರಿ ಬಂದು ಹೋಗಿ ಎಂದು ಮನವಿ ಮಾಡಿಕೊಂಡಿದ್ದಾರೆ. ಮುಂದುವರೆದ ನಿಯೋಗದ ಸದಸ್ಯರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪೌರಕಾರ್ಮಿಕರನ್ನು ಖಾಯಂ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಅದರಂತೆ ಖಾಯಂ ಮಾಡಿ ಎಂದು ಬೇಡಿಕೆ ಮುಂದಿಟ್ಟರು.
6
+ ಈ ಹಂತದಲ್ಲಿ ಪ್ರತಿಮನೆಯ ಯಜಮಾನಿಗೆ 2,000 ರೂ. ನೀಡುವ ಗೃಹಲಕ್ಷ್ಮಿ ಸೇರಿದಂತೆ ಪಂಚಖಾತ್ರಿ ಯೋಜನೆಗಳನ್ನು ಜಾರಿಗೊಳಿಸ ಲಾಗುತ್ತಿದೆ. ಹೀಗಾಗಿ ಸ್ವಲ್ಪ ತಾಳ್ಮೆಯಿಂದಿರಿ. ಮುಂದಿನ ದಿನಗಳಲ್ಲಿ ನಿಮ್ಮ ಬೇಡಿಕೆಯನ್ನು ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದರು.
7
+ ಒಬಿಸಿ ಮೀಸಲಾತಿ ನಿರ್ಧಾರದಿಂದ ಕಾಂಗ್ರೆಸ್ ಚುನಾವಣಾ ಹಾದಿ ಸುಗಮ
8
+ ಈ ವೇಳೆ ನಿಯೋಗದಲ್ಲಿದ್ದ ಮಹಿಳೆಯೊಬ್ಬರು, ಎಲ್ಲಿ ಸ್ವಾಮಿ ನಮಗೆ ಹಣ ಬರುತ್ತಿಲ್ಲ ಎಂದು ಹೇಳಿದರು. ಇದರಿಂದ ಸಿಡಿಮಿಡಿಗೊಂಡ ಡಿ.ಕೆ.ಶಿವಕುಮಾರ್, ಎಲ್ಲರಿಗೂ ಹಣ ಬರುತ್ತಿದೆ. ಯಾರು ದಾಖಲೆಗಳನ್ನು ಸರಿಯಾಗಿ ಕೊಟ್ಟಿಲ್ಲವೋ ಅವರಿಗೆ ಬಂದಿಲ್ಲ. ನೀವು ಮೊದಲು ದಾಖಲೆಗಳನ್ನು ಸರಿಪಡಿಸಿಕೊಳ್ಳಿ ಎಂದು ಖಾರವಾಗಿ ಹೇಳಿದ್ದಲ್ಲದೆ, ಎಲ್ಲಾ ಮಹಿಳೆಯರೂ ಉಚಿತವಾಗಿ ಬಸ್‍ನಲ್ಲಿ ಓಡಾಡುತ್ತಿಲ್ಲವೇ ಎಂದು ಪ್ರಶ್ನಿಸಿದರು.
9
+ ಪೌರ ಕಾರ್ಮಿಕರ ದಿನಾಚರಣೆಗೂ ಮುನ್ನ 10 ಅಥವಾ 12 ರಂದು ಯಾರಾದರೂ ಬಂದು ನನಗೆ ನೆನಪಿಸಿ ಎಂದು ನಿಯೋಗದ ಸದಸ್ಯರಿಗೆ ಹೇಳಿ ಡಿ.ಕೆ.ಶಿವಕುಮಾರ್ ನಿರ್ಗಮಿಸಿದರು.
eesanje/url_46_336_1.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬರಪೀಡಿತ ಪ್ರದೇಶಗಳಲ್ಲಿ ಕೇಂದ್ರ ತಂಡಗಳಿಂದ ಪರಿಸ್ಥಿತಿ ಅವಲೋಕನ
2
+ ಬೆಂಗಳೂರು,ಅ.6- ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ವಾಸ್ತವ ಸ್ಥಿತಿಗತಿ ಅಧ್ಯಯನವನ್ನು ಕೇಂದ್ರ ಸರ್ಕಾರದ ಮೂರು ತಂಡಗಳು ಇಂದು ಆರಂಭಿಸಿವೆ. ಇಂದಿನಿಂದ ಮೂರು ದಿನಗಳ ಕಾಲ ಬರಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಜಿಲ್ಲಾಧಿಕಾರಿಗಳು, ತಹಸೀಲ್ದಾರ್, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿವೆ.
3
+ ಬರಪೀಡಿತ ತಾಲೂಕುಗಳ ಜಮೀನುಗಳಿಗೆ ಭೇಟಿ ನೀಡಿ ಮಳೆ, ಬೆಳೆ ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸುತ್ತಿವೆ. 10 ಸದಸ್ಯರನ್ನೊಳಗೊಂಡ ಮೂರು ತಂಡ ರಾಜ್ಯಕ್ಕೆ ಆಗಮಿಸಿ ನಿನ್ನೆ ಸಚಿವರು ಹಾಗೂ ಹಿರಿಯ ಅಧಿಕಾರಿಗಳಿಂದ ಬರಪರಿಸ್ಥಿತಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ಪಡೆದುಕೊಂಡಿದ್ದರು.
4
+ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ಅವರ ನೇತೃತ್ವದ ಮೊದಲ ತಂಡವು ಇಂದು ಬೆಳಗಾವಿ, ವಿಜಯಪುರ ಜಿಲ್ಲೆಗಳ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿತು. ನಾಳೆ (ಅ.7) ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳ ಬರಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಲಿದೆ.
5
+ ಕೇಂದ್ರ ಕುಡಿಯುವ ನೀರು ಹಾಗೂ ಸ್ವಚ್ಛತಾ ಸಚಿವಾಲಯದ ಹೆಚ್ಚುವರಿ ಸಲಹೆಗಾರ ಡಿ.ರಾಜಶೇಖರ್ ನೇತೃತ್ವದ ಎರಡನೇ ತಂಡವು ಇಂದು ಗದಗ, ಕೊಪ್ಪಳ ಜಿಲ್ಲೆಗಳಿಗೆ ಭೇಟಿ ನೀಡಿ ಬರಪೀಡಿತ ಪ್ರದೇಶಗಳ ವಾಸ್ತವ ಸ್ಥಿತಿಗತಿಯನ್ನು ಪರಿಶೀಲಿಸಿತು.
6
+ ಭಾರೀ ಚರ್ಚೆಗೆ ಕಾರಣವಾಯ್ತು ರಾವಣನಿಗೆ ರಾಹುಲ್ ಗಾಂಧಿ ಹೋಲಿಕೆ
7
+ ನಾಳೆ ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಬರಪರಿಸ್ಥಿತಿಯ ಅಧ್ಯಯನ ಕೈಗೊಳ್ಳಲಿದೆ. ಕೇಂದ್ರ ಜಲ ಆಯೋಗದ ನಿರ್ದೇಶಕರಾದ ವಿ.ಅಶೋಕ್‍ಕುಮಾರ್ ನೇತೃತ್ವದ ಮೂರನೇ ತಂಡವು ಇಂದು ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಬರಕ್ಕೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಿತು. ನಾಳೆ ಚಿತ್ರದುರ್ಗ, ದಾವಣಗೆರೆ ಹಾಗೂ ಅ.8 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತುಸ್ಥಿತಿ ಅಧ್ಯಯನ ಮಾಡಲಿದೆ.
8
+ ವಿವಿಧ ಜಿಲ್ಲೆಗಳ ಬರಪೀಡಿತ ಪ್ರದೇಶಗಳಿಗೆ ಈ ಮೂರು ತಂಡಗಳು ಭೇಟಿ ನೀಡಿ ಅಧ್ಯಯನ ನಡೆಸಿ, ಮಾಹಿತಿ ಸಂಗ್ರಹಿಸಿದ ಬಳಿಕ ಅ.8 ರಂದು ಬೆಂಗಳೂರಿಗೆ ಮರಳಲಿವೆ. ಅ.9 ರಂದು ಬೆಂಗಳೂರಿನಲ್ಲಿ ಕೃಷಿ, ತೋಟಗಾರಿಕೆ ಸೇರಿದಂತೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಂದ ಮತ್ತೊಮ್ಮೆ ಸಂಕ್ಷಿಪ್ತ ವಿವರಣೆ ಪಡೆದು ದೆಹಲಿಗೆ ಮರಳುವ ಕಾರ್ಯಕ್ರಮವಿದೆ.
9
+ ವಿವೇಕ್ ರಾಮಸ್ವಾಮಿಗೆ ಮಧ್ಯದ ಬೆರಳು ತೋರಿಸಿದ ಪ್ರತಿಭಟನಾಕಾರರು
10
+ ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳಲ್ಲಿನ ವಾಸ್ತವ ಸ್ಥಿತಿಗತಿ ಅಧ್ಯಯನ ಮಾಡಿ ಮತ್ತು ರಾಜ್ಯಸರ್ಕಾರ ನೀಡಿದ ಮನವಿ ಪತ್ರದಲ್ಲಿನ ಅಂಶಗಳನ್ನು ಪರಿಶೀಲಿಸಿ ಕೇಂದ್ರಸರ್ಕಾರಕ್ಕೆ ಈ ತಂಡ ವರದಿ��ನ್ನು ಸಲ್ಲಿಸಲಿದೆ. ವರದಿಯನ್ನಾಧರಿಸಿ ಕೇಂದ್ರ ಸರ್ಕಾರ ಪರಿಹಾರ ಧನವನ್ನು ರಾಜ್ಯಕ್ಕೆ ಮಂಜೂರು ಮಾಡಲಿದೆ. ರಾಜ್ಯದ 195 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿದ್ದು, ಮಾರ್ಗಸೂಚಿ ಪ್ರಕಾರ 4,800 ಕೋಟಿ ರೂ. ಪರಿಹಾರ ನೀಡುವಂತೆ ರಾಜ್ಯಸರ್ಕಾರ ಮನವಿ ಸಲ್ಲಿಸಿದೆ.
eesanje/url_46_336_10.txt ADDED
@@ -0,0 +1,6 @@
 
 
 
 
 
 
 
1
+ ಶಿವಮೊಗ್ಗ ಗಲಭೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಅಲೋಕ್ ಮೋಹನ್
2
+ ಬೆಂಗಳೂರು,ಅ.4- ಇತ್ತೀಚೆಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಘಟನೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ರಾಜ್ಯದ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್ ತಿಳಿಸಿದ್ದಾರೆ. ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಅಪರಾಧ ಪ್ರಕರಣಗಳ ವಿಮರ್ಶಾ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.
3
+ ಅಂದಿನ ಘಟನೆ ಸಂದರ್ಭದಲ್ಲಿ ಕರ್ತವ್ಯ ನಿರತ ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಇದನ್ನು ಇಲಾಖೆ ಗಂಭೀರವಾಗಿ ಪರಿಗಣಿಸಲಾಗಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಗಿಗುಡ್ಡದಲ್ಲಿ ನಡೆದ ಗಲಭೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು.
4
+ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಪ್ರತಿಪಕ್ಷದ ಹಾಲಿ, ಮಾಜಿ ಶಾಸಕರು
5
+ ರಾಜ್ಯದಲ್ಲಿ ಇಂತಹ ಘಟನೆಗಳು ಮುಂದೆಂದೂ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು. ಪ್ರಸ್ತುತ ಪರಿಸ್ಥಿತಿಶಾಂತವಾಗಿದೆ. ಗಲಭೆ ಸಂಬಂಧ ಈವರೆಗೆ 27 ಪ್ರಕರಣಗಳು ದಾಖಲಾಗಿದ್ದು, ಇದುವರೆಗೆ 64 ಮಂದಿಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.
6
+ ಶಿವಮೊಗ್ಗದಲ್ಲಿ ಕೆಎಸ್‍ಆರ್‍ಪಿ ಮತ್ತು ಡಿಎಆರ್ ಪ್ಲಟೂನ್ ಗಳನ್ನು ನಿಯೋಜಿಸಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಪರಿಸ್ಥಿತಿ ಶಾಂತವಾಗಿದೆ ಎಂದರು.
eesanje/url_46_336_11.txt ADDED
@@ -0,0 +1,9 @@
 
 
 
 
 
 
 
 
 
 
1
+ ಜಾತ್ಯತೀತ ಸಿದ್ಧಾಂತ ಬಿಟ್ಟುಕೊಡಲು ಸಾಧ್ಯವಾಗುತ್ತಿಲ್ಲ : ಸಿ.ಎಂ.ಇಬ್ರಾಹಿಂ
2
+ ಬೆಂಗಳೂರು,ಅ.4-ಬಿಜೆಪಿ ಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ನಮ್ಮ ಪಕ್ಷದ ಚಿಹ್ನೆ ಉಳಿಯಲಿದೆಯೇ ಎಂಬ ಪ್ರಶ್ನೆ ಕಾಡುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡರೂ ನಾವು ಜಾತ್ಯತೀತ ಸಿದ್ದಾಂತ ಬಿಟ್ಟುಕೊಡಲು ಆಗುವುದಿಲ್ಲ ಎಂದರು.
3
+ ಜೆಡಿಎಸ್ ಸಿದ್ದಾಂತವನ್ನು ಮೆಚ್ಚಿ ಬಿಜೆಪಿಯವರು ಬಂದಿದ್ದಾರೆಯೇ ಅಥವಾ ಬಿಜೆಪಿ ಸಿದ್ದಾಂತವನ್ನು ಮೆಚ್ಚಿ ಜೆಡಿಎಸ್‍ನವರು ಹೋಗಿದ್ದಾರಾ? ಎಂಬ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಎಲ್ಲ ಕಡೆ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಅಕ್ಟೋಬರ್ 16ರಂದು ಮೈತ್ರಿ ಕುರಿತಂತೆ ಸವಿಸ್ತಾರವಾಗಿ ಚರ್ಚೆ ಮಾಡುತ್ತೇವೆ. ಎಲ್ಲರೂ ಸಲಹೆ ಕೊಡಲು ಕಾತುರದಿಂದ ಕಾಯುತ್ತಿದ್ದಾರೆ. ಆ ಸಭೆಯ ನಂತರ ಅಭಿಪ್ರಾಯವನ್ನು ಸಂಗ್ರಹಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ತಿಳಿಸುವುದಾಗಿ ಹೇಳಿದರು.
4
+ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಪ್ರತಿಪಕ್ಷದ ಹಾಲಿ, ಮಾಜಿ ಶಾಸಕರು
5
+ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿಯಾದ ಬಳಿಕ ನಾನು ಪಕ್ಷದಲ್ಲಿ ಕಾಣಿಸುತ್ತಿಲ್ಲ ಎಂಬುದು ತಪ್ಪು. ಎಲ್ಲ ಜಿಲ್ಲೆಯವರು ನಮ್ಮ ಸಂಪರ್ಕದಲ್ಲಿದ್ದಾರೆ. ನಾನು ಕೂಡ ಎಲ್ಲ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದೇನೆ. ಈ ಮೈತ್ರಿ ಕಾಂಗ್ರೆಸಿಗೆ ಬೇಕು, ಬಿಜೆಪಿಗೆ ಬೇಕೊ ಎಂಬುದು ಗೊತ್ತಿಲ್ಲ ಎಂದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಶೇ.20ರಷ್ಟು ಮತಗಳು ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಬಂದಿದೆ. ಇದನ್ನು ಶಾಸಕರು ಒಪ್ಪಿದ್ದಾರೆ. ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಹೆಚ್ಚು ಮತಗಳು ಬರಲಿಲ್ಲ, ಏಕೆ ಬರಲಿಲ್ಲ ಎಂಬುದರ ಕಾರಣ ಹುಡುಕಬೇಕಿದೆ ಎಂದರು.
6
+ ನಾನು ಪಕ್ಷದ ರಾಜ್ಯಾಧ್ಯಕ್ಷನಾಗಿ ಏನು ಅಡುಗೆ ಮಾಡಬೇಕೊ ಅದನ್ನು ಮಾಡಿದ್ದೇನೆ. ಬಿರಿಯಾನಿಯನ್ನೇ ಯಾಕೆ ಮಾಡಿಲ್ಲ ಎಂದರೆ ಅದು ನನಗೆ ಗೊತ್ತಿಲ್ಲ. ಮೈತ್ರಿ ಬಗ್ಗೆ ಕೆಲವರಿಗೆ ಅಸಮಾಧಾನವಿದೆ. ಆದರೆ ಅವರ ಹೆಸರನ್ನು ಬಹಿರಂಗಪಡಿಸುವುದಿಲ್ಲ ಎಂದು ತಿಳಿಸಿದರು.
7
+ ಮೈಸೂರು ದಸರಾ : ಅ.6ರಿಂದ 13ರವರೆಗೆ ಯುವ ಸಂಭ್ರಮ
8
+ ವಿಧಾನಪರಿಷತ್ ಸದಸ್ಯ ಸ್ಥಾನವನ್ನೇ ಬಿಟ್ಟು ಬಂದಿದ್ದೇನೆ. ನಾನು ಅಧಿಕಾರಕ್ಕಾಗಿ ಪಕ್ಷಾಂತರ ಮಾಡಿದವನಲ್ಲ ನಾಡಿನ ಜನರ ಹೃದಯದಲ್ಲಿದ್ದೇನೆ ಎಂದು ರಾಯಭಾರ ಹುದ್ದೆಯ ಬೇಡಿಕೆ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.
9
+ ರಾಜ್ಯ ಸರ್ಕಾರದ ಬಗ್ಗೆ ಸಂಸದ ಪ್ರತಾಪ್ ಸಿಂಹ ಅವರು ನೀಡಿದ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಶಿವಾಜಿ, ಮಹಾತ್ಮ ಗಾಂೀಧಿಜಿ, ಟಿಪ್ಪು ಸುಲ್ತಾನ್ ಕಟೌಟ್‍ಗಳನ್ನು ಹಾಕಿದರೆ ತಪ್ಪೇ? ಟಿಪ್ಪು, ಔರಂಗಜೇಬ್ ಯಾರು ಎಂದು ಗೊತ್ತೆ? ಔರಂಗಜೇಬ್ ಹಿಂದೂಸ್ಥಾನದ ದೊರೆಯಾಗಿ���್ದರು. ಅವರ ಕಟೌಟ್ ಹಾಕಿದರೆ ತಪ್ಪೇನು ಎಂದು ಇದೇ ಸಂದರ್ಭದಲ್ಲಿ ಪ್ರಶ್ನಿಸಿದರು.
eesanje/url_46_336_12.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಆಭರಣ ಮಳಿಗೆ, ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಐಟಿ ದಾಳಿ
2
+ ಬೆಂಗಳೂರು,ಅ.4-ತೆರಿಗೆ ಕಟ್ಟದೆ ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ನಗರದ 50 ಕಡೆ ಏಕಕಾಲಕ್ಕೆ ಆಭರಣ ಮಾಲೀಕರ ಅಂಗಡಿ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೆ, ವ್ಯಾಪಾರಿಗಳು, ವರ್ತಕರು, ದಂತ ವೈದ್ಯರು, ಮಾಲೀಕರು, ಖಾಸಗಿ ಕಂಪನಿಗಳು, ಮನೆ ಮತ್ತು ಕಚೇರಿಗಳ ಮೇಲೆ 15 ಕ್ಕೂ ಹೆಚ್ಚು ಅಧಿಕಾರಿಗಳು ದಿಢೀರ್ ದಾಳಿ ಮಾಡಿ ತೆರಿಗೆ ವಂಚನೆ ಸಂಬಂಧ ಕೆಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
3
+ ದಾಳಿಗೆ ಒಳಗಾಗಿರುವ ಆಭರಣ ಅಂಗಡಿ ಮಾಲೀಕರು, ದಂತ ವೈದ್ಯರು, ಖಾಸಗಿ ವ್ಯಕ್ತಿಗಳಿಗೆ ಸದ್ಯದಲ್ಲೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಐಟಿ ಮುಂದಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ವಿಜಯನಗರ, ಬಿಟಿಎಂ ಲೇಔಟ್, ಸದಾಶಿವನಗರ, ಹುಳಿಮಾವು ಸೇರಿದಂತೆ ಮತ್ತಿತರ ಕಡೆ ಒಟ್ಟು 50 ಅಧಿಕಾರಿಗಳ ತಂಡ ಚಿನ್ನದ ಅಂಗಡಿಗಳು, ಮೆಡಿಕಲ್ ಶಾಪ್‍ಗಳು, ಖಾಸಗಿ ಆಸ್ಪತ್ರೆಗಳ ಮಾಲಕರ ಮನೆ, ಉದ್ಯಮ ಸಂಸ್ಥೆಗಳ ಮೇಲೆ ದಾಳಿ ನಡೆಸಿ ಚಿರ, ಚರಾಸ್ತಿ ಪತ್ತೆ ಮಾಡಿದ್ದಾರೆ.
4
+ ಸುದ್ದಿ ಸಂಸ್ಥೆಗಳ ಮೇಲಿನ ದಾಳಿ ಸತ್ಯವನ್ನು ಹತ್ತಿಕ್ಕುವ ಪ್ರಯತ್ನ : ಸಚಿವ ಗುಂಡೂರಾವ್
5
+ ಗೋವಾ ಮತ್ತು ಚೆನ್ನೈನಿಂದ ಆಗಮಿಸಿದ್ದ ಐಟಿ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ಸಣ್ಣದೊಂದು ಮಾಹಿತಿಯನ್ನೂ ನೀಡದೆ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. ವಿಜಯನಗರ ಮತ್ತು ಶಾಂತಿನಗರದಲ್ಲಿ ವೈದ್ಯೆಯರ ಮನೆ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ತೆರಿಗೆ ವಂಚನೆಗೆ ಸಂಬಂಧಿಸಿದ ದಾಖಲೆಗಳನ್ನು ಪತ್ತೆ ಮಾಡಿದ್ದಾರೆ.
6
+ ಮೇಕ್ರಿ ಸರ್ಕಲ್ ಬಳಿಯ ಗಜರಾಜ ಜ್ಯುವೆಲರ್ಸ್ ಮೇಲೂ ದಾಳಿ ನಡೆಸಲಾಗಿದೆ. ಕಳೆದ ಒಂದೂವರೆ ವರ್ಷದಿಂದ ತೆರಿಗೆ ಕಟ್ಟಿರಲಿಲ್ಲ ಎಂದು ತಿಳಿದುಬಂದಿದೆ. ದಾಳಿ ಸಂದರ್ಭದಲ್ಲಿ ಅಂಗಡಿಯ ಬಾಗಿಲು ಹಾಕಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಅಂಗಡಿ ಮಾಲೀಕರು ಪ್ರತಿರೋಧ ತೋರಿದರೂ ಐಟಿ ಅಧಿಕಾರಿಗಳು ಯಾವುದಕ್ಕೂ ಜಗ್ಗಲಿಲ್ಲ.
7
+ ಪ್ರಭಾವಿ ರಾಜಕಾರಣಿ ಸಂಬಂಧಿಕರ ಆಭರಣ ಅಂಗಡಿ ಮತ್ತು ಕಚೇರಿಗಳ ಮೇಲೆ ದಾಳಿಯನ್ನು ನಡೆಸಲಾಗಿದೆ. ಸದಾಶಿವನಗರದ ಸ್ಯಾಂಕಿಟ್ಯಾಂಕಿ ರಸ್ತೆಯಲ್ಲಿರುವ ಲಕ್ಷ್ಮಿಲಾಲ ಜೈನ್‍ಗಣೇಶ್ ಆಭರಣದ ಅಂಗಡಿಗಳ ಮೇಲೂ ದಾಳಿ ನಡೆಸಲಾಗಿದೆ. ಎರಡು ಖಾಸಗಿ ಇನ್ನೋವ ಕಾರಿನಲ್ಲಿ ಬಂದಿದ್ದ ಐಟಿ ಅಧಿಕಾರಿಗಳು ಸುಮಾರು 3 ಗಂಟೆಗೂ ಹೆಚ್ಚು ಕಾಲ ದಾಖಲೆಗಳನ್ನು ಪರಿಶೀಲಿಸಿ ವಶಕ್ಕೆ ಪಡೆದಿದ್ದಾರೆ.
8
+ ತಿಂಗಳಾಂತ್ಯಕ್ಕೆ ಪಂಚರಾಜ್ಯ ಚುನಾವಣೆ ಘೋಷಣೆ ಸಾಧ್ಯತೆ
9
+ ವಿಜಯನಗರದ ಖ್ಯಾತ ದಂತ ವೈದ್ಯೆ ಸಂಧ್ಯಾ ಪಾಟೀಲ್ ಅವರು ನಡೆಸುತ್ತಿರುವ ಕ್ಲಿನಿಕ್ ಹಾಗೂ ಪ್ರಶಾಂತನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಲಾಗಿದೆ. ಶಾಂತಿನಗರದಲ್ಲಿ ನವೀನ್ ಎಂಬುವರಿಗೆ ಸೇರಿದ ಕಚೇರಿ ಮೇಲೆ ದಾಳಿ ನಡೆಸಿರು��� ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಿಗಿ ಭದ್ರತೆ ನಡುವೆ ಎರಡು ಇನ್ನೋವಾ ಕಾರಿನಲ್ಲಿ 10 ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ ನವೀನ್‍ರಿಗೆ ಸೇರಿದ ಬ್ಯಾಂಕ್ ಖಾತೆಗಳು, ಚಿರ, ಚರಾಸ್ತಿಗಳ ಬಗ್ಗೆ ಪರಿಶೀಲನೆ ಮಾಡಿ, ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
10
+ ಕಳೆದ ತಿಂಗಳು ಸೆಪ್ಟೆಂಬರ್ 27ರಂದು ಬೆಂಗಳೂರಿನ ಹಲವು ಕಂಪೆನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಬೆಂಗಳೂರಿನ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಆದಾಯ ತೆರಿಗೆ ತಪ್ಪು ಮಾಹಿತಿ, ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ದಾಳಿ ನಡೆದಿತ್ತು. ಅದಾಗಿ ಒಂದು ವಾರದ ನಂತರ ಮತ್ತೊಮ್ಮೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
eesanje/url_46_336_2.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ಮೈತ್ರಿಗೆ ಜೆಡಿಎಸ್-ಬಿಜೆಪಿಯಲ್ಲಿ ಅಪಸ್ವರ
2
+ ಬೆಂಗಳೂರು,ಅ.6-ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ನ್ನು ಸೋಲಿಸಲು ಭಿನ್ನಾಭಿಪ್ರಾಯ ಮರೆತು ಒಗ್ಗೂಡಲು ಮುಂದಾಗಿದ್ದ ಬಿಜೆಪಿ , ಜೆಡಿಎಸ್ ಮೈತ್ರಿಗೆ ಅಪಸ್ವರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಎರಡು ಪಕ್ಷಗಳ ನಡುವೆ ಕಂದಕ ಇನ್ನಷ್ಟು ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಳವಾಗಿದೆ.
3
+ ಸೈದ್ಧಾಂತಿಕವಾಗಿ ಉತ್ತರ ಧೃವ ಮತ್ತು ದಕ್ಷಿಣ ಧೃವ ಎಂಬಂತಿದ್ದ ಬಿಜೆಪಿ, ಜೆಡಿಎಸ್ ಮೈತ್ರಿ ಮೇಲ್ನೋಟಕ್ಕೆ ಮೊದಲ ಹಂತದ ನಾಯಕರ ನಡುವೆ ಆಗಿದೆ. ಆದರೆ ಎರಡನೇ ಮತ್ತು ಮೂರನೇ ಹಂತದ ನಾಯಕರು ಈ ಕ್ಷಣಕ್ಕೂ ಮೈತ್ರಿಯನ್ನು ವಿರೋಧಿಸುತ್ತಲೇ ಇದ್ದಾರೆ.
4
+ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರುವುದು ಒಂದು ನೆಪಮಾತ್ರ. ಬರುವ ದಿನಗಳಲ್ಲಿ ಈ ಧ್ವನಿಗೆ ಇನ್ನಷ್ಟು ಶಕ್ತಿ ಬರಲಿದ್ದು, ಜೆಡಿಎಸ್ ಜೊತೆ ಹೊಂದಾಣಿಕೆ ಬೇಡವೇ ಬೇಡ ಎಂಬ ಕೂಗು ಹೆಚ್ಚಾಗಲಿದೆ.
5
+ ಮಾಜಿ ಶಾಸಕ ಪ್ರೀತಂಗೌಡ ಕೂಡ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈತ್ರಿಗೆ ವಿರೋಧ ವ್ಯಕ್ತಪಡಿಸುವುದರ ಜೊತೆಗೆ ಹಾಸನ ಕ್ಷೇತ್ರವನ್ನು ಜೆಡಿಎಸ್‍ನವರು ನಮಗೆ ಬಿಟ್ಟುಕೊಡಲಿ ಎಂದು ಸವಾಲು ಹಾಕಿದ್ದಾರೆ. ಇನ್ನು ಇದೇ ರೀತಿ ಅನೇಕ ಶಾಸಕರು ಒಳಗೊಳಗೇ ಜೆಡಿಎಸ್ ಜೊತೆ ಮೈತ್ರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದು, ಬಹಿರಂಗವಾಗಿ ಯಾರೂ ಹೇಳಿಕೊಳ್ಳುವ ಸ್ಥಿತಿಯಲ್ಲಿಲ್ಲ. ಏಕೆಂದರೆ ರಾಷ್ಟ್ರೀಯ ಮಟ್ಟದಲ್ಲಿ ಮೈತ್ರಿ ವಿರೋಧ ವ್ಯಕ್ತವಾದರೆ ತಮ್ಮ ರಾಜಕೀಯ ಭವಿಷ್ಯಕ್ಕೆ ಕಲ್ಲು ಬೀಳಬಹುದು ಎಂಬ ಆತಂಕ ಕಾಡುತ್ತಿದೆ.
6
+ ವಿವೇಕ್ ರಾಮಸ್ವಾಮಿಗೆ ಮಧ್ಯದ ಬೆರಳು ತೋರಿಸಿದ ಪ್ರತಿಭಟನಾಕಾರರು
7
+ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಬಹುತೇಕ ಬಿಜೆಪಿಗೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆ ವೇಳೆಗೆ ಶಾಸಕ ಸ್ಥಾನಕ್ಕೆ ಇಬ್ಬರು ರಾಜೀನಾಮೆಯನ್ನು ನೀಡಬಹುದು. ಹೀಗಾಗಿಯೇ ಅವರು ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂಬ ಮಾತು ಪಕ್ಷದ ವಲಯದಲ್ಲಿ ಕೇಳಿಬಂದಿದೆ.
8
+ ಅಲ್ಲದೆ ಎಸ್.ಟಿ.ಸೋಮಶೇಖರ್ ಪ್ರತಿನಿಧಿಸುವ ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸಂಘಟನೆಯಲ್ಲಿ ಪ್ರಬಲವಾಗಿದ್ದು, ಉಪಚುನಾವಣೆ ಎದುರಾದರೆ ಗೆದ್ದು ಬರುವುದು ಅಷ್ಟು ಸರಳವಾಗಿಲ್ಲ ಎಂಬುದು ಅವರಿಗೂ ಗೊತ್ತಾಗಿದೆ. ಹೀಗಾಗಿಯೇ ಜೆಡಿಎಸ್ ಜೊತೆ ಹೊಂದಾಣಿಕೆಗೆ ವಿರೋಧವನ್ನು ಹೊರಹಾಕಿದ್ದಾರೆ. ಸದ್ಯ ಶಿವರಾಂ ಹೆಬ್ಬಾರ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿಲ್ಲವಾದರೂ ಸೋಮಶೇಖರ್ ಅಭಿಪ್ರಾಯಕ್ಕೆ ಅವರ ಸಹಮತ ಇದ್ದೇ ಇರುತ್ತದೆ ಎಂದು ಹೇಳಲಾಗಿದೆ.
9
+ ಉಳಿದಂತೆ ಹಳೆ ಮೈಸೂರು ಭಾಗವಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆಗೆ ಎರ��ು ಮತ್ತು ಮೂರನೇ ಹಂತದ ನಾಯಕರು ಸುತಾರಾಂ ಒಪ್ಪುತ್ತಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ನಮಗೆ ಹಿನ್ನಡೆ ಉಂಟಾಗಿರಬಹುದು. ಆದರೆ ಇದೇ ಪರಿಸ್ಥಿತಿ ಲೋಕಸಭೆ ಚುನಾವಣೆಯಲ್ಲಿ ಇರುತ್ತದೆ ಎಂದು ಭಾವಿಸಬೇಕಿಲ್ಲ.
10
+ ವಿಧಾನಸಭಾ ಚುನಾವಣೆ ಸ್ಥಳೀಯ ರಾಜಕೀಯ ಪರಿಸ್ಥಿತಿಗನುಗುಣವಾಗಿ ನಡೆಯುತ್ತದೆ. ಇದೇ ಫಲಿತಾಂಶವನ್ನು ಲೋಕಸಭೆ ಚುನಾವಣೆಗೂ ಅನ್ವಯಿಸಿಕೊಳ್ಳಬೇಕಾಗಿಲ್ಲ. ಎರಡು ಚುನಾವಣೆಗಳ ಪರಿಸ್ಥಿತಿ ವಿಭಿನ್ನವಾಗಿರುತ್ತದೆ. 2019 ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲೇ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರ ಇತ್ತು. ಒಂದು ಕಡೆ ಮುಖ್ಯಮಂತ್ರಿಯಾಗಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್, ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ, ಸಂಘಟನೆಯ ಚತುರ ಡಿ.ಕೆ.ಶಿವಕುಮಾರ್‍ರಂತಹ ಘಟಾನುಘಟಿಗಳು ಇದ್ದಾಗಲೇ ನಾವು 25 ಸ್ಥಾನಗಳನ್ನು ಗೆದ್ದಿದ್ದೆವು ಇದೇ ರೀತಿ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‍ಗಡದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದಾಗಲೂ ಬಿಜೆಪಿ ಕ್ಲೀನ್‍ಸ್ವೀಪ್ ಮಾಡಿತ್ತು.
11
+ ಈಗ ಪಂಚಖಾತ್ರಿ ಯೋಜನೆಗಳು ಸರ್ಕಾರದ ಜನಪ್ರಿಯತೆ ಅಂದುಕೊಂಡರೂ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಕನಿಷ್ಠ ಎಂದರೂ 28 ರ ಪೈಕಿ 14 ರಿಂದ 15 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ. ಒಂದಿಷ್ಟು ಶ್ರಮ ಹಾಕಿದರೆ 18 ರಿಂದ 20 ಸ್ಥಾನಗಳು ನಮಗೆ ಲಭಿಸಲಿವೆ.
12
+ ಹೈಸ್ಪೀಡ್ ರೈಲು ಸಂಚರಿಸುವ ಸುರಂಗ ಮಾರ್ಗ ಪೂರ್ಣ
13
+ 1999 ರಿಂದ ಈವರೆಗೂ ರಾಜ್ಯದಲ್ಲಿ ಲೋಕಸಭೆ ಚುನಾವಣೆ ವೇಳೆ ಬಿಜೆಪಿ ನಿಚ್ಛಳವಾಗಿ ಮುನ್ನಡೆ ಸಾಧಿಸಿಕೊಂಡು ಬಂದಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರೆ ನಮಗೆ ಲಾಭಕ್ಕಿಂತ ನಷ್ಟವೇ ಹೆಚ್ಚು. ನಮ್ಮ ಪರಿಶ್ರಮದಲ್ಲಿ ಜೆಡಿಎಸ್ ಮೂರರಿಂದ ನಾಲ್ಕು ಸ್ಥಾನಗಳನ್ನು ಗೆದ್ದುಕೊಳ್ಳಬಹುದು. ಬದಲಿಗೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಕ್ಕಿಂತ ಹಿಂದೆ ಸರಿಯುವುದೇ ಲೇಸು ಎನ್ನುವುದು ಬಹುತೇಕ ನಾಯಕರ ಒತ್ತಾಸೆಯಾಗಿದೆ.
14
+ ಹಾವು ಮುಂಗಸಿಯಂತಿದ್ದ ನಾವು ಏಕಾಏಕಿ ಪರಸ್ಪರ ಹಸ್ತಲಾಘವ ಮಾಡುವುದು ಅಷ್ಟು ಸುಲಭವಲ್ಲ. ಜೆಡಿಎಸ್‍ನ ಭದ್ರಕೋಟೆ ಎನಿಸಿದ ಹಾಸನದಲ್ಲೇ ಎರಡು ಸ್ಥಾನಗಳನ್ನು ಗೆದ್ದಿದ್ದೇವೆ. ಅಲ್ಲದೆ ಸ್ವತಃ ಹಾಸನ ಕ್ಷೇತ್ರದಲ್ಲೇ ನಮ್ಮ ಸಂಘಟನೆ ಈಗಲೂ ಪ್ರಬಲವಾಗಿದೆ. ಈ ಬಾರಿ ಬಿಜೆಪಿ ಗೆಲ್ಲುವ ವಾತಾವರಣವಿದ್ದು, ನಾವೇಕೆ ಜೆಡಿಎಸ್‍ಗೆ ಬಿಟ್ಟುಕೊಡಬೇಕೆಂದು ಪ್ರೀತಂಗೌಡ ರಾಜ್ಯನಾಯಕರಿಗೆ ಒತ್ತಡ ಹಾಕಿದ್ದಾರೆ.
15
+ ಹೀಗೆ ಎಲ್ಲಾ ಹಂತದಲ್ಲಿ ಜೆಡಿಎಸ್ ಜೊತೆ ಮೈತ್ರಿಗೆ ವಿರೋಧ ವ್ಯಕ್ತವಾಗುತ್ತಿರುವುದರಿಂದ ಬಿಜೆಪಿಗೆ ಮತ್ತೊಂದು ತಲೆನೋವು ಎದುರಾಗಿದೆ.
eesanje/url_46_336_3.txt ADDED
@@ -0,0 +1,6 @@
 
 
 
 
 
 
 
1
+ ಸಿಎಂ ಜನತಾದರ್ಶನ ಮುಂದೂಡಿಕೆ
2
+ ಬೆಂಗಳೂರು,ಅ.5- ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯನವರ ಜನತಾದರ್ಶನ ಮುಂದೂಡಿಕೆಯಾಗಿದೆ. ಅ.9 ರಂದು ಗೃಹಕಚೇರಿ ಕೃಷ್ಣಾದಲ್ಲಿ ಬೆಳಿಗ್ಗೆ 10.30ರಿಂದ ಜನತಾದರ್ಶನ ನಡೆಸಲು ನಿರ್ಧರಿಸಿ ಅಧಿಕೃತ ಪ್ರಕಟಣೆ ಹೊರಡಿಸಲಾಗಿತ್ತು.
3
+ ಆದರೆ ಅದೇ ದಿನ ದೆಹಲಿಯಲ್ಲಿ ಅಖಿಲ ಭಾರತ ಕಾಂಗ್ರೆಸ್‍ನ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮುಖ್ಯಮಂತ್ರಿಯವರು ದೆಹಲಿಗೆ ತೆರಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಜನತಾದರ್ಶನವನ್ನು ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
4
+ ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸಲು ಮೊದಲ ಅವಯ ಮುಖ್ಯಮಂತ್ರಿಯಾಗಿದಾಗಲೇ ಸಿದ್ದರಾಮಯ್ಯ ಜನತಾದರ್ಶನಕ್ಕೆ ಒತ್ತು ನೀಡಿದ್ದರು. ಎರಡನೇ ಅವಯಲ್ಲಿ ಜಿಲ್ಲಾ ಹಾಗೂ ಇಲಾಖಾವಾರು ಜನತಾದರ್ಶನಗಳಿಗೆ ಸೂಚನೆ ನೀಡಿದ್ದರು. ಅದರಂತೆ ಕಳೆದ ತಿಂಗಳು 25 ರಿಂದ 2 ದಿನಗಳ ಕಾಲ ನಡೆದ ಜಿಲ್ಲಾ ಜನತಾದರ್ಶನದಲ್ಲಿ ಸುಮಾರು 12 ಸಾವಿರಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಲಾಗಿತ್ತು. ಅವುಗಳನ್ನು ಬಹುತೇಕ ಇತ್ಯರ್ಥಗೊಂಡಿದ್ದು, ಬಾಕಿ ಅರ್ಜಿಗಳನ್ನು ಇಲಾಖಾವಾರು ಪರಿಶೀಲನೆ ನಡೆಸಲಾಗುತ್ತಿದೆ.
5
+ ವಿಶ್ವವಿಖ್ಯಾತ ದಸರಾಕ್ಕೆ ಬರದ ಸಿದ್ಧತೆ, ವೇಳಾಪಟ್ಟಿ ಬಿಡುಗಡೆ
6
+ ಈ ಮೊದಲು ಮುಖ್ಯಮಂತ್ರಿಯವರ ನೇರ ಜನತಾದರ್ಶನದಲ್ಲಿ ಸಾವಿರಾರು ಅರ್ಜಿಗಳು ಬರುತ್ತಿದ್ದವು. ಸಿದ್ದರಾಮಯ್ಯನವರ ಬಳಿಕ ಈ ರೀತಿಯ ಜನತಾದರ್ಶನಗಳು ಸ್ಥಗಿತಗೊಂಡಿದ್ದವು. ಅದಕ್ಕೆ ಮತ್ತೆ ಚಾಲನೆ ನೀಡಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಜನತಾದರ್ಶನದ ದಿನಾಂಕವನ್ನು ಪ್ರಕಟಿಸುವುದಾಗಿ ಮುಖ್ಯಮಂತ್ರಿ ಕಚೇರಿ ತಿಳಿಸಿದೆ.
eesanje/url_46_336_4.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಕೇಂದ್ರ ತಂಡದಿಂದ ರಾಜ್ಯದಲ್ಲಿ ಬರ ಅಧ್ಯಯನ
2
+ ಬೆಂಗಳೂರು,ಅ.5- ರಾಜ್ಯದ ಬರಪೀಡಿತ ಪ್ರದೇಶಗಳ ವಾಸ್ತವ ಸ್ಥಿತಿಗತಿ ಅಧ್ಯಯನವನ್ನು ನಾಲ್ಕು ದಿನಗಳ ಕಾಲ ಕೇಂದ್ರ ಸರ್ಕಾರದ ಮೂರು ತಂಡಗಳು ನಡೆಸಲಿವೆ. 10 ಸದಸ್ಯರನ್ನೊಳಗೊಂಡ ಕೇಂದ್ರ ಸರ್ಕಾರದ ಮೂರು ತಂಡ ರಾಜ್ಯಕ್ಕೆ ಆಗಮಿಸಿದ್ದು, ನಾಳೆಯಿಂದ ಬರಪೀಡಿತ ಜಿಲ್ಲೆಗಳಲ್ಲಿ ಪರಿಸ್ಥಿತಿಯ ಅಧ್ಯಯನ ಮಾಡಲಿವೆ.
3
+ ಇಂದು ಬೆಳಿಗ್ಗೆ ಕರ್ನಾಟಕ ರಾಜ್ಯಪ್ರಾಕೃತಿಕ ವಿಕೋಪ ಉಸ್ತುವಾರಿ ಕೇಂದ್ರಕ್ಕೆ ಭೇಟಿ ನೀಡಿ ಬರಪರಿಸ್ಥಿತಿ ಕುರಿತ ಮಾಹಿತಿಯನ್ನು ಅಧಿಕಾರಿಗಳಿಂದ ಕೇಂದ್ರದ ತಂಡಗಳು ಪಡೆದುಕೊಂಡಿವೆ. ಇಂದು ಮಧ್ಯಾಹ್ನ ಬರಪರಿಸ್ಥಿತಿಯ ಕುರಿತಂತೆ ಜಿಲ್ಲಾವಾರು ಮಾಹಿತಿಯನ್ನು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳಿಂದ ಪಡೆದುಕೊಂಡಿವೆ. ಮೂರು ತಂಡಗಳು ಇಂದೇ ವಿವಿಧ ಜಿಲ್ಲೆಗಳಿಗೆ ತೆರಳಲಿದ್ದು, ನಾಳೆಯಿಂದ ಬರಪೀಡಿತ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡು ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲಿವೆ.
4
+ ರಾಜ್ಯದ 195 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿರುವ ರಾಜ್ಯಸರ್ಕಾರ ಹೆಚ್ಚಿನ ಪರಿಹಾರ ನೀಡುವಂತೆ ಕೇಂದ್ರಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ರಾಜ್ಯಸರ್ಕಾರದ ಮನವಿ ಮೇರೆಗೆ ಅಧ್ಯಯನ ತಂಡಗಳನ್ನು ಕೇಂದ್ರಸರ್ಕಾರ ರಾಜ್ಯಕ್ಕೆ ಕಳುಹಿಸಿಕೊಟ್ಟಿದೆ. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ಅವರ ನೇತೃತ್ವದ ಮೊದಲ ತಂಡವು ಇಂದು ಬೆಳಗಾವಿಗೆ ತೆರಳಲಿದೆ. ನಾಳೆ ಬೆಳಗಾವಿ, ವಿಜಯಪುರ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಅ.7 ರಂದು ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳ ಬರಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಲಿದೆ.
5
+ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ಮಧ್ಯಪ್ರದೇಶ ಸರ್ಕಾರ
6
+ ಕೇಂದ್ರ ಕುಡಿಯುವ ನೀರು ಹಾಗೂ ಸ್ವಚ್ಛತಾ ಸಚಿವಾಲಯದ ಹೆಚ್ಚುವರಿ ಸಲಹೆಗಾರ ಡಿ.ರಾಜಶೇಖರ್ ನೇತೃತ್ವದ ಎರಡನೇ ತಂಡವು ಇಂದು ಹುಬ್ಬಳ್ಳಿಗೆ ತೆರಳಲಿದೆ. ನಾಳೆ ಗದಗ, ಕೊಪ್ಪಳ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಅ.7 ರಂದು ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಬರಪರಿಸ್ಥಿತಿಯ ಅಧ್ಯಯನ ಕೈಗೊಳ್ಳಲಿದೆ.
7
+ ಕೇಂದ್ರ ಜಲ ಆಯೋಗದ ನಿರ್ದೇಶಕರಾದ ವಿ.ಅಶೋಕ್‍ಕುಮಾರ್ ನೇತೃತ್ವದ ಮೂರನೇ ತಂಡವು ನಾಳೆ ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಮಾಹಿತಿ ಸಂಗ್ರಹಿಸಲಿದೆ. ಅ.7 ರಂದು ಚಿತ್ರದುರ್ಗ, ದಾವಣಗೆರೆ ಹಾಗೂ ಅ.8 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತುಸ್ಥಿತಿ ಅಧ್ಯಯನ ಮಾಡಲಿದೆ.
8
+ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥಗೌಡ ನಿವಾಸದ ಮೇಲೆ ಇಡಿ ದಾಳಿ
9
+ ಈ ಮೂರು ತಂಡಗಳು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ಮಾಹಿತಿ ಸಂಗ್ರಹಿಸಿ ಅ.8 ರಂದು ಬೆಂಗಳೂರಿಗೆ ಮರಳಲಿವೆ. ಅ.9 ರಂದು ಬೆಂಗ���ೂರಿನಲ್ಲಿ ಕೃಷಿ, ತೋಟಗಾರಿಕೆ ಸೇರಿದಂತೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಂದ ಮತ್ತೊಮ್ಮೆ ಸಂಕ್ಷಿಪ್ತ ವಿವರಣೆ ಪಡೆದು ದೆಹಲಿಗೆ ಮರಳುವ ಕಾರ್ಯಕ್ರಮವಿದೆ.
10
+ ಈ ನಡುವೆ ಕೃಷಿ ಸಚಿವ ಚಲುವರಾಯಸ್ವಾಮಿಯವರು ಬರಪೀಡಿತ ಪ್ರದೇಶಗಳ ಅಧ್ಯಯನಕ್ಕೆ ಆಗಮಿಸಿರುವ ಕೇಂದ್ರಸರ್ಕಾರದ ಅಧ್ಯಯನದ ತಂಡಗಳಿಗೆ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮುಂಗಾರು ಹಂಗಾಮಿನ ಮಳೆಯ ವಾಸ್ತವ ಪರಿಸ್ಥಿತಿ, ಬೆಳೆಹಾನಿ, ಇಳುವರಿ ಕುಸಿತವಾಗುವುದು ಸೇರಿದಂತೆ ಮಳೆ ಕೊರತೆಯಿಂದ ಉಂಟಾಗಿರುವ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಡುವಂತೆ ಸೂಚಿಸಿದ್ದಾರೆ.
eesanje/url_46_336_5.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ವಿಶ್ವವಿಖ್ಯಾತ ದಸರಾಕ್ಕೆ ಬರದ ಸಿದ್ಧತೆ, ವೇಳಾಪಟ್ಟಿ ಬಿಡುಗಡೆ
2
+ ಬೆಂಗಳೂರು,ಅ.5- ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಶರನ್ನಾವರಾತ್ರಿ ಪ್ರಯುಕ್ತ ಅರಮನೆಯಲ್ಲಿ ನಡೆಯುವ ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಅ.9ರಂದು ರತ್ನ ಖಚಿತ ಸಿಂಹಾಸನ ಜೋಡಣೆ ಆಗಲಿದೆ. ಬೆಳಗ್ಗೆ 7 ಗಂಟೆಗೆ ನವಗ್ರಹ ಹೋಮ ಸೇರಿ ಹಲವು ಪೂಜಾವಿಧಿ ವಿಧಾನಗಳು ನಡೆಯಲಿದೆ. ಬಳಿಕ ಬೆಳಗ್ಗೆ 10:05 ರಿಂದ 10:35ರ ಶುಭ ಲಗ್ನದಲ್ಲಿ ಸಿಂಹಾಸನ ಜೋಡಣೆ ಆಗಲಿದೆ. ಬಳಿಕ ಗೋಶಾಲೆಗೆ ಪಟ್ಟದ ಆನೆ, ಪಟ್ಟದ ಕುದುರೆ ಹಾಗೂ ಪಟ್ಟದ ಹಸು ಆಗಮಿಸಲಿವೆ.
3
+ ಅ.15ರಂದು 6 ಗಂಟೆಯಿಂದ 6:25 ವರೆಗೆ ಶುಭ ಮುಹೂರ್ತದಲ್ಲಿ ಸಿಂಹ ಜೋಡಣೆ ಮಾಡಲಾಗುತ್ತದೆ. ಬೆಳಗ್ಗೆ 07:05ರಿಂದ 7:45ರ ಶುಭ ಲಗ್ನದಲ್ಲಿ ಕಂಕಣ ಧಾರಣೆ ನಡೆಯಲಿದೆ. ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಅವರ ಪತ್ನಿ ತ್ರಿಷಿಕಾ ಕುಮಾರಿಗೆ ಕಂಕಣ ಧಾರಣೆ ಮಾಡಲಾಗುತ್ತದೆ.
4
+ ನಂತರ 9:45ಕ್ಕೆ ಅರಮನೆ ಸವಾರಿ ತೊಟ್ಟಿಗೆ ಪಟ್ಟದ ಆನೆ, ಪಟ್ಟದ ಕುದುರೆ ಮತ್ತು ಪಟ್ಟದ ಹಸು ಆಗಮಿಸಲಿವೆ. ಬೆಳಗ್ಗೆ 10:15ಕ್ಕೆ ಕಳಸ ಪೂಜೆ ಹಾಗೂ ಸಿಂಹಾಸನ ಪೂಜೆ, ಬಳಿಕ ಬೆಳಗ್ಗೆ 11:30ರಿಂದ 11:50ಕ್ಕೆ ಖಾಸಗಿ ದರ್ಬಾರ್ ನಡೆಯಲಿದೆ. ಅಂದು ಮಧ್ಯಾಹ್ನ 1:45ರಿಂದ 02:05ರ ಅವಧಿಯಲ್ಲಿ ಚಾಮುಂಡೇಶ್ವರಿ ದೇವಿಯನ್ನು ಚಾಮುಂಡಿ ತೊಟ್ಟಿಯಿಂದ ಕನ್ನಡಿ ತೊಟ್ಟಿಗೆ ರವಾನೆ ಮಾಡಲಾಗುತ್ತದೆ.
5
+ ಅ.20ರಂದು 10:05ರಿಂದ 10:25ಕ್ಕೆ ಸರಸ್ವತಿ ಪೂಜೆ, ಅ.21ರಂದು ಕಾಳರಾತ್ರಿ ಪೂಜೆ, ಅ.22ರಂದು ಮತ್ತು ಅ.23ರಂದು ದುರ್ಗಾಷ್ಠಮಿ ಪೂಜೆ ನಡೆಯಲಿದೆ. ಅದೇ ದಿನ ಬೆಳಗ್ಗೆ 5:30ಕ್ಕೆ ಚಂಡಿಹೋಮದೊಂದಿಗೆ ಪೂಜೆ ಆರಂಭವಾಗಲಿದೆ. ಆ ಸಮಯದಲ್ಲಿ ಆನೆ ಬಾಗಿಲಿಗೆ ಪಟ್ಟದ ಆನೆ, ಪಟ್ಟದ ಕುದುರೆ ಹಾಗೂ ಪಟ್ಟದ ಹಸು ಆಗಮಿಸಲಿವೆ.
6
+ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕೇಸರಿ ಬಣ್ಣ ಏಕೆ..?
7
+ ಬಳಿಕ ಬೆಳಗ್ಗೆ 6:05ರಿಂದ 06:15ಕ್ಕೆ ಖಾಸಾ ಆಯುಧಗಳು ಅರಮನೆ ಕೋಡಿ ಸೋಮೇಶ್ವರ ದೇಗುಲಕ್ಕೆ ರವಾನೆ ಆಗಲಿವೆ. ಬೆಳಗ್ಗೆ 07:15ಕ್ಕೆ ಖಾಸಾ ಆಯುಧಗಳು ಕೋಡಿ ಸೋಮೇಶ್ವರ ದೇಗುಲದಿಂದ ಅರಮನೆಗೆ ವಾಪಸ್ ತರಲಾಗುತ್ತದೆ. ಬೆಳಗ್ಗೆ 9:30ಕ್ಕೆ ಚಂಡಿಹೋಮ ಪೂರ್ಣಾಹುತಿ ನಡೆಯಲಿದೆ.
8
+ ಬೆಳಗ್ಗೆ 11:45ಕ್ಕೆ ಕಲ್ಯಾಣ ಮಂಟಪಕ್ಕೆ ಪಟ್ಟದ ಆನೆ, ಪಟ್ಟದ ಕುದುರೆ ಹಾಗೂ ಪಟ್ಟದ ಹಸು ಬರಲಿವೆ. ಬಳಿಕ ಮಧ್ಯಾಹ್ನ 12:20ಕ್ಕೆ ಆಯುಧಪೂಜೆ ಆರಂಭವಾಗಲಿದೆ. ಈ ವೇಳೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ಆಯುಧಗಳಿಗೆ ಪೂಜೆ ನಡೆಯಲಿದೆ.
9
+ ಬಳಿಕ ಸಂಜೆ ಖಾಸಗಿ ದರ್ಬಾರ್ ಇರಲಿದೆ. ನಂತರ ಸಿಂಹ ವಿಸರ್ಜನೆ, ವಾಣಿ ವಿಲಾಸ ದೇವರ ಮನೆಯಲ್ಲಿ ಕಂಕಣ ವಿಸರ್ಜನೆ ಆಗಲಿದೆ. ಅಂಬಾವಿಲಾಸದಲ್ಲಿ ದಪ್ತಾರ್ ಪೂಜೆ ಮಾಡಿ, ಮಹಾಸನ್ನಿಧಾನದಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಮಲದೇವಿ ದರ್ಶನ ಪಡೆಯಲಿದ್ದಾರೆ.
10
+ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥಗೌಡ ನಿವಾಸದ ಮೇಲೆ ಇಡಿ ದಾಳಿ
11
+ ಅ.24ರಂದು ವಿಜಯದಶಮಿ ಆಚರಣೆ ನಡೆಯಲಿದೆ. ಬೆಳಗ್ಗೆ 9:45ಕ್ಕೆ ಆನೆ ಬಾಗಿಲಿಗೆ ಪಟ್ಟದ ಆನೆ, ಪಟ್ಟದ ಕುದುರೆ ಮತ್ತು ಪಟ್ಟದ ಹಸು ಆಗಮಿಸಲಿವೆ. ಬೆಳಗ್ಗೆ 11 ರಿಂದ 11:40ರ ವೇಳೆಗೆ ವಿಜಯದಶಮಿ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆ ಅರಮನೆ ಆನೆ ಬಾಗಿಲಿನಿಂದ ಅರಮನೆ ಭುವನೇಶ್ವರಿ ದೇಗುಲದವರೆಗೂ ನಡೆಯಲಿದೆ. ಬಳಿಕ ಭುವನೇಶ್ವರಿ ದೇಗುಲದಲ್ಲಿ ಶಮಿ ಪೂಜೆಯನ್ನು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ನೆರವೇರಿಸಲಿದ್ದಾರೆ.
eesanje/url_46_336_6.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಸರ್ಕಾರೀ ವೆಬ್‍ಸೈಟ್ ಹ್ಯಾಕ್ : ಆರೋಪಿಯನ್ನು ಬಂಧಿಸಿದ ಎಸ್‍ಐಟಿ
2
+ ಬೆಂಗಳೂರು,ಅ.5- ಬಿಟ್‍ಕಾಯಿನ್ ಹಗರಣದ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ದಳ, ಕರ್ನಾಟಕ ಸರ್ಕಾರದ ಇ -ಪ್ರಕ್ಯೂರ್ಮೆಂಟ್ ವೆಬ್‍ಸೈಟ್ ಹ್ಯಾಕ್ ಮಾಡಿದ್ದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಸಾಧಿಸಿದ್ದು, ಹಣ ವರ್ಗಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರೋಪಿಯನ್ನು ಪಂಜಾಬ್‍ನ ಲೂದಿಯಾನದಲ್ಲಿ ಬಂಧಿಸಿದ್ದಾರೆ.
3
+ ಅಂತರಾಷ್ಟ್ರೀಯ ಕುಖ್ಯಾತಿಯ ಶ್ರೀಕಿ ನಡೆಸಿದ ಹ್ಯಾಕರ್ ಕೃತ್ಯದಿಂದ ಸಂಪಾದಿಸಿದ ಹಣವನ್ನು ಸುರಕ್ಷಿತ ಖಾತೆಗಳಿಗೆ ವರ್ಗಾವಣೆ ಮಾಡಿರುವ ಮೂಲಗಳ ಬೆನ್ನು ಬಿದ್ದಿರುವ ಎಸ್‍ಐಟಿ ತಂಡ ಲೂದಿಯಾನದಲ್ಲಿ ಆರೋಪಿ ಅರವಿಂದರ್ ಸಿಂಗ್‍ನನ್ನು ಬಂಧಿಸಿದೆ. ಸಂಕೀರ್ಣವಾದ ಈ ಪ್ರಕರಣದಲ್ಲಿ ಜಾಲದ ಜಾಡು ಹಿಡಿದು ಹೋದಂತೆ ಒಂದೊಂದೇ ಕೊಂಡಿಗಳು ತೆರೆದುಕೊಳ್ಳುತ್ತಿವೆ. ಅದರ ಭಾಗವಾಗಿ ಅರವಿಂದರ್ ಸಿಂಗ್ ಎಸ್‍ಐಟಿ ಬಲೆಗೆ ಬಿದ್ದಿದ್ದಾನೆ.
4
+ ಶ್ರೀಕಿ ಇ-ಪ್ರಕ್ಯೂರ್ಮೆಂಟ್ ವೆಬ್‍ಸೈಟ್ ಹ್ಯಾಕ್ ಮಾಡಿದ ವೇಳೆ 1.5 ಕೋಟಿ ರೂ.ಗಳನ್ನು ದೆಹಲಿಯ ವ್ಯಕ್ತಿಗಳಿಗೆ ಹಾಗೂ ಮತ್ತೊಂದು ಚಹಂತದಲ್ಲಿ ಮಹಾರಾಷ್ಟ್ರದ ನಾಗ್ಪುರದ ವ್ಯಕ್ತಿಗಳಿಗೆ 10.5 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಿರುವುದು ತನಿಖೆಯ ವೇಳೆ ಬಹಿರಂಗವಾಗಿದೆ.
5
+ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ಮಧ್ಯಪ್ರದೇಶ ಸರ್ಕಾರ
6
+ ಅಕ್ರಮವಾದ ಹ್ಯಾಕಿಂಗ್ ಮೂಲಕ ಶ್ರೀಕಿ ಹಣ ಸಂಪಾದಿಸುತ್ತಿದ್ದರೆ ಅದನ್ನು ಬೇರೆ ಬೇರೆಯಾದ ಸುರಕ್ಷಿತ ಖಾತೆಗಳಿಗೆ ವರ್ಗಾವಣೆ ಮಾಡಲು ದೊಡ್ಡ ಜಾಲವೇ ಕೆಲಸ ಮಾಡುತ್ತಿತ್ತು. ಹಣ ಆನ್‍ಲೈನ್ ನಲ್ಲಿ ವರ್ಗಾವಣೆಯಾಗಿರುವುದರಿಂದ ಸಿಕ್ಕಿಹಾಕಿಕೊಳ್ಳುವುದಿಲ್ಲ ಎಂಬ ಧೈರ್ಯದ ಮೇಲೆ ಬಹಳಷ್ಟು ಅಕ್ರಮಗಳು ನಡೆದಿವೆ ಎಂದು ಹೇಳಲಾಗಿದೆ.
7
+ ಮನಿಲ್ಯಾಂಡ್ರಿಂಗ್ ಕಾಯ್ದೆಯನ್ನು ಉಲ್ಲಂಘಿಸಿ ಕೋಟ್ಯಂತರ ರೂ.ಗಳನ್ನು ವರ್ಗಾವಣೆ ಮಾಡಿಕೊಂಡಿರುವುದು ಪ್ರಕರಣದಲ್ಲಿ ಸ್ಪಷ್ಟವಾಗಿದೆ. ಬಿಟ್‍ಕಾಯಿನ್ ಮತ್ತು ಇ-ಪ್ರಕ್ಯೂರ್ಮೆಂಟ್ ಹಗರಣದಲ್ಲಿ ಹಣ ಯಾರಿಗೆಲ್ಲಾ ತಲುಪಿದೆ ಎಂಬುದು ಮೊದಲಿನಿಂದಲೂ ಕುತೂಹಲದ ಪ್ರಶ್ನೆಯಾಗಿತ್ತು. ಅದಕ್ಕೆ ಉತ್ತರ ಕಂಡುಕೊಳ್ಳಲು ಎಸ್‍ಐಟಿ ಮಹತ್ವದ ಹೆಜ್ಜೆ ಇಟ್ಟಿದೆ.
8
+ ಈ ಮೊದಲು ಬಂಧಿತರಾಗಿದ್ದ ಆರೋಪಿಗಳ ವಿಚಾರಣೆ ಹಾಗೂ ತಾಂತ್ರಿಕ ಮಾಹಿತಿಯನ್ನು ಆಧರಿಸಿ ಎಸ್‍ಐಟಿ ತಂಡದ ತನಿಖಾಕಾಧಿರಿಗಳು ಅತ್ಯಂತ ಚಾಣಾಕ್ಷತನ ಹಾಗೂ ಬುದ್ಧಿವಂತಿಕೆಯಿಂದ ಜಾಲದ ಸಿಕ್ಕುಗಳನ್ನು ಒಂದೊಂದಾಗಿ ಬಿಡಿಸಲಾರಂಭಿಸಿದ್ದಾರೆ. ದೆಹಲಿ ಮತ್ತು ನಾಗ್ಪುರದಲ್ಲಿ ಹಣ ಸ್ವೀಕರಿಸಿದ ವ್ಯಕ್ತಿಗಳು ಮತ್ತು ಅವರಿಂದ ಮುಂದುವರೆದು ಯಾರಿಗೆಲ್ಲಾ ನಗದು ರವಾನೆಯಾಗಿದೆ ಎಂಬುದರ ಕುರಿತು ವಿಚಾರಣೆ ಮುಂದುವರೆಯುವ ಸಾಧ್ಯತೆ ಇದೆ.
9
+ ಅಂತರಾಷ್ಟ್ರೀಯ ಕುಖ್ಯಾತಿಯ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ 2019 ರಲ್ಲಿ ಮಾದಕ ವ್ಯಸನ ಪ್ರಕರಣವ���ಂದರಲ್ಲಿ ಸಿಲುಕಿದ್ದ. ವಿಚಾರಣೆ ವೇಳೆ ಆತ ರಾಜ್ಯಸರ್ಕಾರದ ಇ-ಪ್ರಕ್ಯೂರ್ಮೆಂಟ್ ಅನ್ನು ಹ್ಯಾಕ್ ಮಾಡಿ ಕೋಟ್ಯಂತರ ರೂ.ಗಳನ್ನು ಲಪಟಾಯಿಸಿರುವುದಾಗಿ ಬಾಯ್ಬಿಟ್ಟಿದ್ದ. ಅದೇ ರೀತಿ ಪೋಕರ್ ಸೇರಿದಂತೆ ವಿವಿಧ ಆನ್‍ಲೈನ್ ಗೇಮ್‍ಗಳ ವೆಬ್‍ಸೈಟ್‍ಗಳನ್ನು ಹ್ಯಾಕ್ ಮಾಡಿರುವುದಾಗಿ ಹೇಳಿದ್ದ. ಅದು ಮುಂದುವರೆದು ಬಿಟ್‍ಕಾಯಿನ್ ಹಗರಣಕ್ಕೂ ಸಂಪರ್ಕಗೊಂಡಿತ್ತು.
10
+ ಅ.11ರಿಂದ ಕಿತ್ತೂರು ಕರ್ನಾಟಕ ಭಾಗದಲ್ಲಿ 3 ದಿನ ಜೆಡಿಎಸ್‍ನ ಕೋರ್ ಕಮಿಟಿ ಪ್ರವಾಸ
11
+ ಆರಂಭದಲ್ಲಿ ತನಿಖೆ ನಡೆಸಿದ್ದ ಸಿಸಿಬಿ ಪೋಲೀಸರು ಶ್ರೀಕಿ ಸೇರಿದಂತೆ 11 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದರು. ಆದರೆ ಹಣ ವರ್ಗಾವಣೆಯಾದ ಮೂಲಗಳ ಕುರಿತು ತನಿಖೆ ನಡೆಸಿರುವ ಸಾಧ್ಯತೆಗಳು ಕ್ಷೀಣವಾಗಿವೆ. ಹಗರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. ಆ ವೇಳೆ ವಿರೋಧಪಕ್ಷದಲ್ಲಿದ್ದ ಕಾಂಗ್ರೆಸ್ ಬಿಟ್‍ಕಾಯಿನ್ ಹಗರಣದಲ್ಲಿ ಪ್ರಭಾವಿಗಳ ಪಾತ್ರ ಇದೆ ಎಂಬ ಗಂಭೀರ ಆರೋಪ ಮಾಡಿತ್ತು.
12
+ ರಾಜ್ಯದಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಹಗರಣವನ್ನು ಮನೀಶ್ ಕರ್ಬಿಕರ್ ನೇತೃತ್ವದಲ್ಲಿ ಎಸ್‍ಐಟಿ ತನಿಖೆಗೆ ವಹಿಸಿದೆ. ತನಿಖೆ ನಡೆಸುತ್ತಿರುವ ತಂಡಕ್ಕೆ ಮಹತ್ವದ ಸುಳಿವುಗಳು ದೊರೆತಿದ್ದು, ವಿಚಾರಣೆ ಮುಂದುವರೆದಿದೆ.
eesanje/url_46_336_7.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಕಾವೇರಿ ವಿವಾದ ಇತ್ಯರ್ಥಕ್ಕೆ ಕೇಂದ್ರ ಮಧ್ಯಪ್ರವೇಶಿಸಬೇಕು : ಸಚಿವ ಚಲುವರಾಯಸ್ವಾಮಿ
2
+ ಮಂಡ್ಯ,ಅ.5- ಜೆಡಿಎಸ್, ಬಿಜೆಪಿ ನಾಯಕರು ಕಾವೇರಿ ನದಿ ನೀರಿನ ವಿಚಾರದಲ್ಲಿ ಪ್ರಚಾರಕ್ಕಾಗಿ ಪ್ರತಿಭಟನೆ ಮಾಡುವುದನ್ನು ಬಿಟ್ಟು ಪ್ರಧಾನಿ ಮಧ್ಯಸ್ಥಿಕೆಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಒತ್ತಾಯಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತ ಹಾಗೂ ಕನ್ನಡಪರ ಸಂಘಟನೆಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನ ಸೆಳೆಯಲು ಪ್ರತಿಭಟನೆ ನಡೆಸುತ್ತಾರೆ. ಬೆಳೆ ಹಾಗೂ ನೀರಿನ ರಕ್ಷಣೆ ವಿಷಯದಲ್ಲಿ ಅವರ ಕಾಳಜಿಗಳು ಸ್ತುತ್ಯಾರ್ಹ ಎಂದು ಹೇಳಿದರು.
4
+ ಕಾವೇರಿ ವಿವಾದದಲ್ಲಿ ಸುಪ್ರೀಂಕೋರ್ಟ್‍ನ ತೀರ್ಪು ಹಾಗೂ ಕೇಂದ್ರ ಸರ್ಕಾರದ 2 ತಾಂತ್ರಿಕ ಸಮಿತಿಗಳ ಆದೇಶ ಪ್ರಮುಖವಾಗಿದೆ. ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು. ಬಿಜೆಪಿಯವರಿಗೆ ರಾಜ್ಯದ ಜನರ ವಿಷಯದಲ್ಲಿ ಕನಿಷ್ಠ ಕೃತಜ್ಞತೆ ಇಲ್ಲ. 25 ಜನ ಸಂಸದರು ಗೆದ್ದಿದ್ದಾರೆ. ಕಾವೇರಿ ವಿಷಯದಲ್ಲಿ ಅವರ ಪಾತ್ರ ಏನು. ಮಂಡ್ಯದಲ್ಲಿ ಬಂದು ಮಾದ್ಯಮದ ಎದುರು ಪ್ರತಿಭಟನೆ ಮಾಡಿ ಪ್ರಚಾರ ಮಾಡುವುದಕ್ಕಷ್ಟೇ ಸೀಮಿತವೇ ಎಂದು ಪ್ರಶ್ನಿಸಿದರು.
5
+ ರಾಜಕಾರಣಕ್ಕಾಗಿ ಪ್ರಧಾನಿಯವರನ್ನು ಭೇಟಿ ಮಾಡುವ ನಾಯಕರು ಕಾವೇರಿ ವಿಷಯದಲ್ಲಿ ಪ್ರಧಾನಿಯವರ ಜೊತೆ ಏಕೆ ಚರ್ಚೆ ಮಾಡುತ್ತಿಲ್ಲ. ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಏನು ಮಾಡುತ್ತಿದ್ದಾರೆ. ಕಾವೇರಿ ನದಿ ಪಾತ್ರದ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಕೇಂದ್ರ ಮಧ್ಯ ಪ್ರವೇಶ ಮಾಡಬೇಕು ಎಂದರು.
6
+ ಈ ನಿಟ್ಟಿನಲ್ಲಿ ರಾಜ್ಯಸರ್ಕಾರ ತನ್ನ ಪ್ರಾಮಾಣಿಕ ಪ್ರಯತ್ನ ಮಾಡಿದೆ. ಎರಡು ಬಾರಿ ಸರ್ವಪಕ್ಷ ಸಭೆ ನಡೆಸಿದೆ. ಕೇಂದ್ರದಲ್ಲಿ ಸರ್ವಪಕ್ಷ ಸಂಸದರ ಜೊತೆಯೂ ಚರ್ಚೆ ನಡೆಸಲಾಗಿದೆ. ಮೂರು ದಿನ ದೆಹಲಿಯಲ್ಲೇ ಉಳಿದು ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ವಾಸ್ತವತೆಯನ್ನು ಮನವರಿಕೆ ಮಾಡಿಕೊಟ್ಟಿದ್ದೇವೆ. ಪ್ರಧಾನಿಯವರ ಭೇಟಿಗೆ ಎಷ್ಟೇ ಪ್ರಯತ್ನ ನಡೆಸಿದ್ದರೂ ಪ್ರಯೋಜನವಾಗಲಿಲ್ಲ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಹಾಗೂ ಇತರರು ಸಹಾಯ ಮಾಡಲಿಲ್ಲ.
7
+ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥಗೌಡ ನಿವಾಸದ ಮೇಲೆ ಇಡಿ ದಾಳಿ
8
+ ಪ್ರಧಾನಮಂತ್ರಿಯವರು ಮಧ್ಯಪ್ರವೇಶ ಮಾಡಲಾಗುವುದಿಲ್ಲ ಎಂದು ರಾಜ್ಯದ ಬಿಜೆಪಿ ನಾಯಕರೇ ಹೇಳುತ್ತಿರುವುದು ಸರಿಯಲ್ಲ. ಈ ಹಿಂದೆ ವಾಜಪೇಯಿ ಕೂಡ ಅಂತರಾಜ್ಯ ನದಿ ವಿವಾದದಲ್ಲಿ ಮಧ್ಯಪ್ರವೇಶ ಮಾಡಿದ್ದರು. ಬಿಜೆಪಿಯವರು ಪ್ರಧಾನಿಯವರ ಬಳಿ ಚರ್ಚೆ ಮಾಡದೇ ತಾವಾಗಿಯೇ ಪ್ರಧಾನಿ ಮಧ್ಯಪ್ರವೇಶ ಸಾಧ್ಯವಿಲ್ಲ ಎಂದು ಘೋಷಿಸುತ್ತಿದ್ದಾರೆ. ಹಾಗಿದ್ದ ಮೇಲೆ ರಾಜಕಾರಣ ಮಾಡುವುದನ್ನು ಬಿಟ್ಟು ಮನೆಯಲ್ಲಿರಲಿ ಎಂದು ಕಿ��ಿಕಾರಿದರು.
9
+ ಇಂಡಿಯಾ ಘಟಬಂದನ್‍ಗಾಗಿ ತಮಿಳುನಾಡಿಗೆ ನೀರು ಬಿಡಲಾಗಿದೆ ಎಂಬ ಆರೋಪ ಆಧಾರರಹಿತ. ರಾಜ್ಯ ಹಿತಾಸಕ್ತಿ ವಿಷಯದಲ್ಲಿ ಎರಡೂ ರಾಜ್ಯಗಳು ತಮ್ಮದೇ ಆದ ನಿಟ್ಟಿನಲ್ಲಿ ಕೆಲಸ ಮಾಡುತ್ತವೆ. ರಾಜಕೀಯವೇ ಬೇರೆ, ರಾಜ್ಯದ ಹಿತಾಸಕ್ತಿಯೇ ಬೇರೆ. ರಾಜ್ಯಸರ್ಕಾರ ಹೇಳದೇ, ಕೇಳದೆ ತಮಿಳುನಾಡಿಗೆ ನೀರು ಬಿಟ್ಟಿದೆ ಎಂದು ಬಿಜೆಪಿ ನಾಯಕರು ಆರೋಪ ಮಾಡುತ್ತಾರೆ. ತಾಂತ್ರಿಕ ಸಮಿತಿಗಳ ಆದೇಶವನ್ನು ಎಲ್ಲಾ ಕಾಲದಲ್ಲೂ ಸರ್ಕಾರಗಳು ಪಾಲನೆ ಮಾಡಿವೆ. ಸಂಕಷ್ಟದ ಸಂದರ್ಭದಲ್ಲಿ ಆದೇಶ ಪಾಲನೆ ಮಾಡಲಾಗದ ಬಗ್ಗೆ ನಾವು ಸಾಕಷ್ಟು ಮನವರಿಕೆ ಮಾಡಿಕೊಟ್ಟಿದ್ದೇವೆ.
10
+ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ಮಧ್ಯಪ್ರದೇಶ ಸರ್ಕಾರ
11
+ ಈ ಪ್ರಯತ್ನದ ಹಂತದಲ್ಲಿ ಬಿಜೆಪಿ, ಜೆಡಿಎಸ್ ಪಕ್ಷಗಳ ನಾಯಕರು ರಾಜ್ಯಸರ್ಕಾರಕ್ಕೆ ಸಹಕಾರ ನೀಡಿಲ್ಲ. ಹೀಗಾಗಿ ಕಾವೇರಿ ವಿಷಯದಲ್ಲಿನ ಹೊಣೆಗಾರಿಕೆ ಬಿಜೆಪಿಯವರದ್ದೇ. ನಾಟಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆಯೇ ಹೊರತು ಪ್ರಾಮಾಣಿಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
12
+ ಕಾವೇರಿ ನೀರು ನಿಯಂತ್ರಣಾ ಸಮಿತಿ ಇದೇ 12 ರಂದು ಮತ್ತೆ ಸಭೆ ನಡೆಸಲಿದ್ದು, ಅಂದು ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ವಾದಿಸುತ್ತಿವೆ ಎಂದರು. ರಾಜ್ಯದಲ್ಲಿ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಅದರ ಕುರಿತು ಸಚಿವ ಸಂಪುಟ ಹಾಗೂ ಸಂಪುಟ ಉಪಸಮಿತಿಯಲ್ಲಿ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರ ಆಧಾರದ ಮೇಲೆ ಕೇಂದ್ರ ಸರ್ಕಾರದ ಅಕಾರಿಗಳ ಮೂರು ತಂಡಗಳು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ನಾಲ್ಕು ದಿನಗಳ ಕಾಲ ಬರ ಅಧ್ಯಯನ ನಡೆಸಲಿವೆ ಎಂದು ಹೇಳಿದರು.
eesanje/url_46_336_8.txt ADDED
@@ -0,0 +1,8 @@
 
 
 
 
 
 
 
 
 
1
+ ಬರ ಅಧ್ಯಯನಕ್ಕೆ ನಾಳೆ ಕೇಂದ್ರ ತಂಡ ಆಗಮನ
2
+ ಬೆಂಗಳೂರು,ಅ.4-ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆಯಿಂದ ಬರಗಾಲ ಆವರಿಸಿರುವುದರಿಂದ ಕೇಂದ್ರ ಉನ್ನತ ಅಧಿಕಾರಿಗಳ ಬರ ಅಧ್ಯಯನ ತಂಡ ರಾಜ್ಯಕ್ಕೆ ನಾಳೆ ಆಗಮಿಸಿದೆ. ಒಟ್ಟು ಮೂರು ತಂಡಗಳಲ್ಲಿ ಆಗಮಿಸುವ ತಂಡವು ಬರಪೀಡಿತ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಿಗೆ ಭೇಟಿ ಕೊಟ್ಟು ಅಧ್ಯಯನ ನಡೆಸಲಿದೆ.
3
+ ಬರ ಅಧ್ಯಯನಕ್ಕೆ ತೆರಳುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿರುವ ಈ ತಂಡವು ಅಗತ್ಯವಾದ ಮಾಹಿತಿಯನ್ನು ಪಡೆಯಲಿದೆ. ಬಳಿಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳನ್ನು ಭೇಟಿಯಾಗಿ ಮಾಹಿತಿಯನ್ನು ಪಡೆದುಕೊಂಡು ನಂತರ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.
4
+ ಲಿಕ್ಕರ್ ನೀತಿ ಹಗರಣ : ಎಎಪಿ ರಾಜ್ಯಸಭೆ ಸಂಸದ ಸಂಜಯ್ ಸಿಂಗ್ ನಿವಾಸದ ಮೇಲೆ ಇ.ಡಿ ದಾಳಿ
5
+ ಮೂರು ಅಧಿಕಾರಿಗಳ ತಂಡವು ಮೊದಲ ದಿನ ಒಟ್ಟು 12 ಜಿಲ್ಲೆಗಳಿಗೆ ಭೇಟಿ ಕೊಡಲಿದೆ. ತಂಡದಲ್ಲಿ ಕೃಷಿ, ಎಣ್ಣೆ ಬೀಜಗಳು, ನೀತಿ ಆಯೋಗ ಸೇರಿದಂತೆ ವಿವಿಧ ಕೇಂದ್ರ ಇಲಾಖೆಯ ಅಧಿಕಾರಿಗಳು ಆಗಮಿಸಲಿದ್ದಾರೆ. ಈ ಅಧಿಕಾರಿಗಳಿಗೆ ರಾಜ್ಯದ ಕೃಷಿ, ಕಂದಾಯ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಆಯಾ ಜಿಲ್ಲಾಧಿಕಾರಿಗಳು, ಸಿಇಒಗಳು, ಕೆಎಸ್‍ಎಂಡಿ ಎಂಸಿ, ತಹಸೀಲ್ದಾರ್ ಸೇರಿದಂತೆ ಮತ್ತಿತರರು ಅಗತ್ಯ ಮಾಹಿತಿಯನ್ನು ಒದಗಿಸಲಿದ್ದಾರೆ.
6
+ 2024ರ ವೇಳೆಗೆ ಅತ್ಯಾಕರ್ಷಕ ಸ್ಲೀಪರ್ ಕೋಚ್ ವಂದೇ ಭಾರತ್
7
+ ಗುರುವಾರದಿಂದ ಇದೇ 9ರವರೆಗೆ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಲಿರುವ ತಂಡ ಕೆಲವು ಕಡೆ ರೈತರಿಂದಲೂ ಮಾಹಿತಿ ಪಡೆಯಲಿದೆ. ರೈತರ ಜಮೀನುಗಳಿಗೆ ಖುದ್ದು ಭೇಟಿ ಕೊಡಬೇಕೆಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ.
8
+ ತಂಡ 1: ಅಜಿತ್‍ಕುಮಾರ್ ಸುಹು, ಡಾ.ಕೆ.ಪೊನ್ನುಸ್ವಾಮಿಮಹೇಂದ್ರ ಚಾಂಡಿಲಿಯ, ಶಿವಚಂದನ್ ಮೀನಾ, ವೈ.ಎಸ್.ಪಾಟೀಲ್ಭೇಟಿ ಕೊಡುವ ಸ್ಥಳ- ಬೆಳಗಾವಿ, ಬಿಜಾಪುರ, ಬಾಗಲಕೋಟೆ, ಧಾರವಾಡ2ನೇ ತಂಡ:ಡಿ.ರಾಜಶೇಖರ್, ವಿ.ಆರ್.ಠಾಕ್ರೆ, ಮೋಟಿ ರಾಮ್,ಕರೆಗೌಡಭೇಟಿ ಕೊಡುವ ಸ್ಥಳ : ಗದಗ, ಕೊಪ್ಪಳ, ಬಳ್ಳಾರಿ, ವಿಜಯನಗರ3ನೇ ತಂಡ: ಅಶೋಕ್ ಕುಮಾರ್, ಕರಣ್ ಚೌಧರಿ, ಸಂಗೀತ್ ಕುಮಾರ್, ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿಭೇಟಿ ಕೊಡುವ ಸ್ಥಳ: ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆ, ಬೆಂಗಳೂರು ಗ್ರಾಮಾಂತರ
eesanje/url_46_336_9.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಶಾಮನೂರು ಹೇಳಿಕೆಗೆ ಪೂರಕವಾಗಿ ಲಿಂಗಾಯತ ಸಮುದಾಯದ ಅಧಿಕಾರಿಗಳಿಂದ ದೂರು
2
+ ಬೆಂಗಳೂರು,ಅ.4- ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂಬ ಆರೋಪಕ್ಕೆ ಪೂರಕವಾಗಿ ಕೆಲವರಿಗೆ ಉದ್ದೇಶಪೂರಕವಾದ ಕಿರುಕುಳ ನೀಡುತ್ತಿರುವ ದೂರುಗಳು ಕೇಳಿಬಂದಿವೆ. ಪಕ್ಷದ ಹಿರಿಯ ಶಾಸಕರಾದ ಶ್ಯಾಮನೂರು ಶಿವಶಂಕರಪ್ಪ ಅವರು ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಸಮುದಾಯದ ಅಧಿಕಾರಿಗಳದ್ದು ನಾಯಿ ಪಾಡಾಗಿದೆ ಎಂದು ಬಹಿರಂಗ ಆರೋಪ ಮಾಡಿದರು.
3
+ ಇದಕ್ಕೂ ಮೊದಲು ಸಮುದಾಯದ ಹಲವಾರು ಪ್ರಮುಖ ಅಧಿಕಾರಿಗಳ ನಿಯೋಗ ಶ್ಯಾಮನೂರು ಶಿವಶಂಕರಪ್ಪ ಅವರನ್ನು ಭೇಟಿ ಮಾಡಿ ಪರಿಸ್ಥಿತಿಯನ್ನು ವಿವರಿಸಿದೆ ಎಂದು ಹೇಳಲಾಗಿದೆ.ಐಎಎಸ್, ಕೆಎಎಸ್ ಹಾಗೂ ಪತ್ರಾಂಕಿತ ಅಧಿಕಾರಿಗಳ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಉದ್ದೇಶಪೂರಕವಾಗಿ ವರ್ಗಾವಣೆ ಮಾಡಲಾಗುತ್ತಿದೆ. ಕೆಲವರು ಕೆಎಟಿ ಹಾಗೂ ಸಿಎಟಿ ಯಂತಹ ನ್ಯಾಯಾಕರಣಗಳಿಂದ ತಡೆಯಾಜ್ಞೆ ತಂದಿದ್ದಾರೆ. ಇದನ್ನೇ ಗುರಿಯಾಗಿಸಿಕೊಂಡು ಸದರಿ ಅಧಿಕಾರಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ದೂರುಗಳಿವೆ.
4
+ ಈ ಹಿಂದೆ ಸದರಿ ಅಧಿಕಾರಿಗಳು ಕೆಲಸ ಮಾಡಿದ ಅವಧಿಯಲ್ಲಿ ಮಾಡಿರಬಹುದಾದಂತಹ ಲೋಪಗಳನ್ನು ಬೆನ್ನಟ್ಟಿ ತನಿಖೆ ಮಾಡಲು ಸೂಚಿಸಲಾಗಿದೆ. ಕೆಎಟಿ ಮೆಟ್ಟಿಲೇರಿದ ಬಹಳಷ್ಟು ಅಧಿಕಾರಿಗಳಿಗೆ ಈ ರೀತಿಯ ತನಿಖೆ ಹಾಗೂ ವಿಚಾರಣೆಯ ಬಿಸಿ ತಟ್ಟಿದೆ. ಇದರಿಂದಾಗಿ ಕಂಗಾಲಾದ ಅಧಿಕಾರಿಗಳು ಸಮುದಾಯದ ಸಚಿವರನ್ನು ಭೇಟಿ ಮಾಡಲು ಯತ್ನಿಸಿದರು. ಆದರೆ ತಾವು ಅಸಹಾಯಕರು ಎಂದು ಸಚಿವರು ಕೈಚೆಲ್ಲಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಅಕಾರಿಗಳ ನಿಯೋಗ ಶ್ಯಾಮನೂರು ಶಿವಶಂಕರಪ್ಪ ಅವರನ್ನು ಭೇಟಿ ಮಾಡಿ ತಮ್ಮ ಸಂಕಷ್ಟಗಳನ್ನು ಹೇಳಿಕೊಂಡಿದೆ ಎನ್ನಲಾಗಿದೆ.
5
+ ಲಾಲೂಪ್ರಸಾದ್ ಯಾದವ್ ಕುಟುಂಬಕ್ಕೆ ಬಿಗ್ ರಿಲೀಫ್
6
+ ಅಧಿಕಾರಿಗಳ ಮೇಲಾಗುತ್ತಿರುವ ಕಿರುಕುಳದ ಮಾಹಿತಿ ಪಡೆದುಕೊಂಡ ಬಳಿಕ ವ್ಯಘ್ರರಾದ ಶ್ಯಾಮನೂರು ಶಿವಶಂಕರಪ್ಪ ಸಮುದಾಯದ ಕೆಲ ಸಚಿವರಿಗೆ ವಿಷಯ ತಿಳಿಸಿ ಲೋಪಗಳನ್ನು ಸರಿಪಡಿಸುವಂತೆ ಸಲಹೆ ನೀಡಿದ್ದರು ಎನ್ನಲಾಗಿದೆ. ಆದರೆ ಈ ಬಗ್ಗೆ ಯಾರೂ ಬಹಿರಂಗವಾಗಿ ಮಾತನಾಡಲು ಧೈರ್ಯ ತೋರಿಸದೆ ಹಿಂದೇಟು ಹಾಕಿದ್ದರು ಎಂಬ ಮಾಹಿತಿ ಇದೆ.
7
+ ಈ ಹಿನ್ನೆಲೆಯಲ್ಲಿ ಖುದ್ದು ಶ್ಯಾಮನೂರು ಶಿವಶಂಕರಪ್ಪನವರೇ ಅಖಾಡಕ್ಕೆ ಇಳಿದಿರುವುದಾಗಿ ತಿಳಿದುಬಂದಿದೆ. ಇದರ ಹಿಂದೆ ಒಂದಿಷ್ಟು ರಾಜಕೀಯ ಲೆಕ್ಕಾಚಾರ ಕೂಡ ಕೇಳಿಬಂದಿವೆ. ಸಿದ್ದರಾಮಯ್ಯನವರು ಈ ಹಿಂದೆ ಜೆಡಿಎಸ್‍ನಿಂದ ಉಪಮುಖ್ಯಮಂತ್ರಿಯಾಗಿದ್ದಾಗ ನೇರವಾಗಿಯೇ ಅಹಿಂದ ಸಮಾವೇಶ ನಡೆಸಲು ಮುಂದಾಗಿದ್ದರು. ಅದನ್ನು ಪಕ್ಷದ ವೇದಿಕೆಯಿಂದಲೇ ಮಾಡುವಂತೆ ಆ ಪಕ್ಷದ ವರಿಷ್ಠರು ಸೂಚನೆ ನೀಡಿದ್ದರು.
8
+ ಆದರೆ ಅದಕ್ಕೆ ಸಿದ್ದರಾಮಯ್ಯ ಕಿವಿ ಕೊಟ್ಟಿರಲಿಲ್ಲ. ಪರಿಣಾಮ ರಾಜಕೀಯವಾಗಿ ಕ್ಷಿಪ್ರ ಬೆಳವಣಿಗೆಗಳಾದವು.ಇತ್ತೀಚೆಗೆ ಸಿದ್ದರಾಮಯ್ಯ ಅವರ ಆಪ್ತ ಬಳಗ, ಕೆಲ ನಾಯಕರು ಅಖಿಲ ಭಾರತ ಕುರುಬರ ಸಮಾವೇಶವನ್ನು ಸಂಯೋಜಿಸಿದ್ದರು. ಪಕ್ಷಾತೀತವಾಗಿ ನಡೆದ ಈ ಸಮಾವೇಶದಲ್ಲಿ ಬಿಜೆಪಿ, ಜೆಡಿಎಸ್‍ನ ಹಲವು ನಾಯಕರು ಭಾಗಿಯಾಗಿದ್ದರು. ಮೂಲ ಕಾಂಗ್ರೆಸಿಗರಿಗೆ ಇದು ನುಂಗಲಾರದ ಬಿಸಿ ತುಪ್ಪವಾಗಿತ್ತು.
9
+ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಪಕ್ಷದ ವೇದಿಕೆಯಿಂದಲೇ ಈ ರೀತಿಯ ಸಮಾವೇಶಗಳನ್ನು ನಡೆಸಬಹುದಿತ್ತು. ಸರ್ಕಾರದ ಸಂಪನ್ಮೂಲ ಮತ್ತೂ ಪ್ರಭಾವಗೊಳಿಸಿ ಸಿದ್ದರಾಮಯ್ಯ ತಮ್ಮ ವೈಯಕ್ತಿಕ ವರ್ಚಸ್ಸು ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಹೀಗಾಗಿ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ತೊಂದರೆಯಾಗಬಹುದು ಎಂಬ ಆತಂಕ ಕಾಂಗ್ರೆಸಿಗರನ್ನು ಕಾಡುತ್ತಿದೆ.
10
+ 2024ರ ವೇಳೆಗೆ ಅತ್ಯಾಕರ್ಷಕ ಸ್ಲೀಪರ್ ಕೋಚ್ ವಂದೇ ಭಾರತ್
11
+ ಲೋಕಸಭೆ ಚುನಾವಣೆ ಬಳಿಕ ಸ್ಥಾನ ಪಲ್ಲಟಗಳಾಗಲಿವೆ ಎಂಬ ವದಂತಿಗಳ ನಡುವೆಯೇ ನಡೆಯುತ್ತಿರುವ ಜಾತಿವಾರು ಸಮಾವೇಶಗಳು ಮತ್ತಷ್ಟು ಗೊಂದಲಕ್ಕೆ ಕಾರಣವಾಗಿದೆ. ಅದರ ಜೊತೆಯಲ್ಲಿ ಕೆಲವು ಸಮುದಾಯದ ಅಧಿಕಾರಿಗಳ ಮೇಲೆ ಉದ್ದೇಶಪೂರಕವಾದ ಹಗೆತನ ಸಾಧಿಸಲಾಗುತ್ತಿದೆ ಎಂಬ ಅಸಮಾಧಾನಗಳು ಶ್ಯಾಮನೂರು ಶಿವಶಂಕರಪ್ಪ ಅವರ ಸಿಟ್ಟು ಸೋಟಗೊಳ್ಳಲು ಕಾರಣ ಎನ್ನಲಾಗುತ್ತಿದೆ.
12
+ ಈ ಮೊದಲು ಬಿ.ಕೆ.ಹರಿಪ್ರಸಾದ್ ಅವರು ಹಿಂದುಳಿದ ಸಮುದಾಯಗಳ ವಿಷಯವಾಗಿ ಹೇಳಿಕೆ ನೀಡಿ ಸರ್ಕಾರವನ್ನು ಮುಜುಗರಕ್ಕೀಡು ಮಾಡಿದ್ದರು. ಅದರ ಬೆನ್ನಲ್ಲೇ ಶ್ಯಾಮನೂರು ಅವರ ಟೀಕೆ ಕಾಂಗ್ರೆಸ್‍ಗೆ ದುಬಾರಿಯಾಗಿ ಪರಿಣಮಿಸಿದೆ.
13
+ ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ ಸಮುದಾಯದ ಜೊತೆಗೆ ಲಿಂಗಾಯತ ಸಮುದಾಯವೂ ಕಾಂಗ್ರೆಸ್ ಬೆನ್ನಿಗೆ ನಿಂತಿದ್ದರಿಂದಾಗಿಯೇ 135 ಸ್ಥಾನಗಳ ಅಭೂತಪೂರ್ವ ಯಶಸ್ಸು ಗಳಿಸಲು ಸಾಧ್ಯವಾಗಿತ್ತು. ಈಗ ಲೋಕಸಭೆ ಚುನಾವಣಾ ವೇಳೆ ಲಿಂಗಾಯತ ಸಮುದಾಯದ ಕ್ರೋಧಾಗ್ನಿ ಪಕ್ಷಕ್ಕೆ ಹಾನಿಯುಂಟು ಮಾಡುವ ಸಾಧ್ಯತೆ ಇದೆ ಎಂಬ ಚರ್ಚೆಗಳು ನಡೆಯುತ್ತಿವೆ.
14
+ ಹೇಳಿಕೆ ನೀಡಿದ ಶ್ಯಾಮನೂರು ಶಿವಶಂಕರಪ್ಪ ಅವರ ಜೊತೆ ತಾವು ಚರ್ಚೆ ಮಾಡುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಆದರೆ ಮೂರು ದಿನ ಕಳೆದಿದ್ದು, ಹೇಳಿಕೆಗಳ ಮೇಲೆ ಹೇಳಿಕೆಗಳು ಹೊರಬರುತ್ತಲೇ ಇವೆ. ದಿನೇ ದಿನೇ ಸಮುದಾಯದಲ್ಲಿ ಅಸಮಾಧಾನ ಮಡುಗಟ್ಟುತ್ತಿದ್ದು, ನಕಾರಾತ್ಮಕವಾದ ಸಂದೇಶಗಳು ರವಾನೆಯಾಗುತ್ತಿವೆ.
eesanje/url_46_337_1.txt ADDED
@@ -0,0 +1,8 @@
 
 
 
 
 
 
 
 
 
1
+ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಪ್ರತಿಪಕ್ಷದ ಹಾಲಿ, ಮಾಜಿ ಶಾಸಕರು
2
+ ಬೆಂಗಳೂರು,ಅ.4- ಜೆಡಿಎಸ್, ಬಿಜೆಪಿ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ವದಂತಿಗಳಿಗೆ ಪೂರಕವಾಗಿ ಮತ್ತಷ್ಟು ಪ್ರಮುಖ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರನ್ನು ಭೇಟಿ ಮಾಡಿದ್ದಾರೆ. ಹನೂರಿನ ಶಾಸಕ ಮಂಜುನಾಥ್ ಅವರು ಸಿಎಂ ಸಿದ್ದರಾಮಯ್ಯನವರ ಜೊತೆ ರಹಸ್ಯ ಮಾತುಕತೆ ನಡೆಸಿದ್ದಾರೆ.
3
+ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‍ರೊಂದಿಗೆ ಸಿದ್ದರಾಮಯ್ಯನವರನ್ನು ಭೇಟಿ ಮಾಡಿರುವ ಜೆಡಿಎಸ್‍ನ ಶಾಸಕರು ರಾಜಕೀಯ ಆಗುಹೋಗುಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಮತ್ತೊಂದೆಡೆ ಬಿಜೆಪಿಯ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರನ್ನು ಭೇಟಿ ಮಾಡಿದ್ದಾರೆ.
4
+ ಕಾಂಗ್ರೆಸಿಗರು ಹಾಲಿ ಶಾಸಕರನ್ನು ಪಕ್ಷಕ್ಕೆ ಸೆಳೆದುಕೊಳ್ಳುವ ಬದಲಾಗಿ ಮಾಜಿ ಶಾಸಕರು, ಪ್ರಭಾವಿ ಮುಖಂಡರನ್ನು ಕೇಂದ್ರೀಕರಿಸಿದ್ದಾರೆ. ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಿದ್ದಂತೆ ಜೆಡಿಎಸ್‍ನಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಅತೃಪ್ತ ಪ್ರಮುಖ ನಾಯಕರು ಕಾಂಗ್ರೆಸ್‍ನತ್ತ ಮುಖ ಮಾಡಿದ್ದಾರೆ.
5
+ ಸುದ್ದಿ ಸಂಸ್ಥೆಗಳ ಮೇಲಿನ ದಾಳಿ ಸತ್ಯವನ್ನು ಹತ್ತಿಕ್ಕುವ ಪ್ರಯತ್ನ : ಸಚಿವ ಗುಂಡೂರಾವ್
6
+ ಈಗಾಗಲೇ ಬಿಬಿಎಂಪಿ ಸೇರಿದಂತೆ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ನಾಯಕರುಗಳು ಹಂತ ಹಂತವಾಗಿ ಕಾಂಗ್ರೆಸ್‍ಗೆ ಸೇರ್ಪಡೆಯಾಗುತ್ತಿದ್ದಾರೆ. ಕೆಲವು ಪ್ರಭಾವಿ ನಾಯಕರುಗಳನ್ನು ವರಿಷ್ಠ ನಾಯಕರು ಕೆಪಿಸಿಸಿಯಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಸಿಕೊಂಡರೆ ಕೆಳ ಹಂತದ ನಾಯಕರನ್ನು ಜಿಲ್ಲಾ ಮಟ್ಟದಲ್ಲೇ ಕರೆದುಕೊಳ್ಳಲಾಗುತ್ತಿದೆ.
7
+ ಹನೂರಿನ ಹಾಲಿ ಶಾಸಕ ಮಂಜುನಾಥ್ ಅವರು ಮುಖ್ಯಮಂತ್ರಿಯವರನ್ನು ಭೇಟಿಯಾಗಿದ್ದರ ಹಿಂದೆ ರಾಜಕೀಯ ಉದ್ದೇಶವಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಮಾತುಕತೆ ನಡೆಸಿದ್ದಾರೆ ಎಂಬ ಅಭಿಪ್ರಾಯಗಳು ಕೇಳಿಬಂದಿವೆ. ಆದರೆ ಸಚಿವ ಭೈರತಿ ಸುರೇಶ್ ಜೊತೆಗೆ ಹೋದ ಶಾಸಕರು ಮುಖ್ಯಮಂತ್ರಿಯವರ ರಹಸ್ಯ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ.
8
+ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಪಕ್ಷವನ್ನು ದುರ್ಬಲಗೊಳಿಸಲು ಸಿದ್ದರಾಮಯ್ಯ ತೆರೆಮರೆಯ ಕಾರ್ಯತಂತ್ರವನ್ನು ರೂಪಿಸಿದ್ದಾರೆಯೇ ಎಂಬ ಅನುಮಾನ ರಹಸ್ಯ ಮಾತುಕತೆ ಹುಟ್ಟುಹಾಕಿದೆ.
eesanje/url_46_337_10.txt ADDED
@@ -0,0 +1,10 @@
 
 
 
 
 
 
 
 
 
 
 
1
+ ರಾಜ್ಯದಲ್ಲಿ ಮತ್ತೆ ಮಳೆ ಬರುವ ಸಾಧ್ಯತೆ ವಿರಳ
2
+ ಬೆಂಗಳೂರು,ಅ.3- ರಾಜ್ಯದಲ್ಲಿ ಇನ್ನೊಂದು ವಾರ ಕಾಲ ಒಣಹವೆ ಮುಂದುವರೆಯಲಿದ್ದು, ಮಳೆ ಬರುವ ಸಾಧ್ಯತೆಗಳು ಕಡಿಮೆ. ಕಳೆದ ಒಂದು ವಾರದಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದ ಮಳೆಯಾಗುವ ಆಶಾಭಾವನೆ ಮೂಡಿಸಿತ್ತು. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಸದ್ಯಕ್ಕೆ ಮಳೆ ಬರುವಂತಹ ಯಾವುದೇ ರೀತಿಯ ಬದಲಾವಣೆಗಳು ಕಂಡುಬರುತ್ತಿಲ್ಲ. ಹೀಗಾಗಿ ಇನ್ನು ಒಂದು ವಾರ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ತೀರ ವಿರಳ ಎಂದು ಹವಾಮಾನ ತಜ್ಞರು ತಿಳಿಸಿದರು.
3
+ ವಾರದ ನಂತರ ಒಂದೆರಡು ದಿನ ಮಳೆಯಾಗುವ ಮುನ್ಸೂಚನೆಗಳಿವೆ. ಸದ್ಯಕ್ಕೆ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಬಲವಾದ ಮೇಲ್ಮೈ ಗಾಳಿ ಬೀಸಲಿದೆ. ಒಂದೆರಡು ಕಡೆ ಚದುರಿದಂತೆ ಸಾಧಾರಣ ಮಳೆಯಾಗಬಹುದು. ಆಗಸ್ಟ್, ಸೆಪ್ಟೆಂಬರ್‍ನಂತೆ ಅಕ್ಟೋಬರ್‍ನಲ್ಲೂ ಮಳೆ ಕೊರತೆ ಮುಂದುವರೆಯುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಅವರು ಹೇಳಿದ್ದಾರೆ.
4
+ ಭೀಕರ ಅಪಘಾತ : ತಾಯಿ-ಮಗು ಸಜೀವ ದಹನ
5
+ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಸೆ.26ರಿಂದ ನಿನ್ನೆಯವರೆಗೆ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಶೇ.65, ಉತ್ತರ ಒಳನಾಡಿನಲ್ಲಿ ಶೇ.42ರಷ್ಟು ಮಳೆ ಕೊರತೆಯಾಗಿದ್ದರೆ, ಮಲೆನಾಡಿನಲ್ಲಿ ವಾಡಿಕೆಗಿಂತ ಶೇ.10ರಷ್ಟು ಹಾಗೂ ಕರಾವಳಿಯಲ್ಲಿ ಶೇ.130ರಷ್ಟು ಹೆಚ್ಚು ಮಳೆಯಾಗಿದೆ. ರಾಜ್ಯದಲ್ಲಿ ಈ ಅವಧಿಯಲ್ಲಿ ವಾಡಿಕೆಗಿಂತ ಶೇ.17ರಷ್ಟು ಕಡಿಮೆ ಮಳೆಯಾದ ವರದಿಯಾಗಿದೆ. ಮಲೆನಾಡು ಭಾಗದಲ್ಲಿ ವಾಡಿಕೆ ಪ್ರಮಾಣದ ಮಳೆಯಾದ ಹಿನ್ನಲೆಯಲ್ಲಿ ಪ್ರಮುಖ ಜಲಾಶಯಗಳ ಒಳಹರಿವು ಸ್ವಲ್ಪ ಹೆಚ್ಚಳವಾಗಿತ್ತು.
6
+ ನಿನ್ನೆಯ ಮಾಹಿತಿ ಪ್ರಕಾರ ಜಲವಿದ್ಯುತ್ ಉತ್ಪಾದಿಸುವ ಲಿಂಗನಮಕ್ಕಿ, ವರಾಹಿ ಹಾಗೂ ಸೂಪಾ ಜಲಾಶಯಗಳಿಗೆ ಒಟ್ಟಾರೆ 22933 ಕ್ಯೂಸೆಕ್ಸ್‍ನಷ್ಟು ಒಳಹರಿವಿತ್ತು. ಕಾವೇರಿ ಕೊಳ್ಳದ ಹಾರಂಗಿ-3000, ಹೇಮಾವತಿ-8900, ಕೆಆರ್‍ಎಸ್- 5800 ಹಾಗೂ ಕಬಿನಿ ಜಲಾಶಯಕ್ಕೆ 8000 ಕ್ಯೂಸೆಕ್‍ಗೂ ಹೆಚ್ಚು ಒಳಹರಿವು ಇತ್ತು.
7
+ ತಮಿಳುನಾಡಿಗೆ ಕಾವೇರಿಕೊಳ್ಳದಿಂದ ನೀರು ಹರಿಸಿದ ಪರಿಣಾಮ ಈ ನಾಲ್ಕು ಜಲಾಶಯಗಳಲ್ಲಿ ಸಂಗ್ರಹವಾಗಿದ್ದ ನೀರಿನ ಪ್ರಮಾಣದಲ್ಲಿ ಗಣನೀಯವಾಗಿ ಇಳಿಕೆಯಾಗಿತ್ತು. ಒಟ್ಟಾರೆ ಶೇ.54ರಷ್ಟು ಮಾತ್ರ ನಾಲ್ಕು ಜಲಾಶಯಗಳಲ್ಲಿ ನೀರು ಸಂಗ್ರಹವಾಗಿದೆ.
8
+ ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ
9
+ ಈ ನಾಲ್ಕು ಜಲಾಶಯಗಳ ಒಟ್ಟು ಸಾಮಥ್ರ್ಯ 114.57 ಟಿಎಂಸಿ ಅಡಿ ಆಗಿದ್ದು, ಪ್ರಸ್ತುತ 62.38 ಟಿಎಂಸಿ ಅಡಿ ಮಾತ್ರ ಇದೆ. ಕಳೆದ ವರ್ಷ ಇದೇ ಅವಯಲ್ಲಿ 110.09 ಟಿಎಂಸಿ ಅಡಿ ನೀರಿತ್ತು. ರಾಜ್ಯದ ಪ್ರಮುಖ ಜಲಾಶಯಗಳ ಪೈಕಿ ವರಾಹಿಯನ್ನು ಹೊರತುಪಡಿಸಿದರೆ ಅತಿ ಕಡಿಮೆ ನೀರು ಸಂಗ್ರಹವಾಗಿರುವ ಜಲಾಶಯ ಕೆಆರ್‍ಎಸ್. ಈ ಜಲಾಶಯದಲ್ಲಿ ಕೇವಲ ಶೇ44ರಷ್ಟು ಮಾತ್ರ ನೀರು ಸಂಗ್ರಹವಾಗಿದೆ.
10
+ ಕಳೆದ ಎರಡು ದಿನಗಳಿಂದ ಹೆಚ್ಚಾಗಿದ್ದ ಒಳಹರಿವು ಮಳೆ ಕಡಿಮೆಯಾಗಿರುವುದರಿಂದ ಇಳಿಕೆಯಾಗಲಿದೆ. ಸದ್ಯಕ್ಕೆ ಉತ್ತಮ ಮಳೆಯಾಗುವ ಮುನ್ಸೂಚನೆಗಳು ಇಲ್ಲದಿರುವುದರಿಂದ ಜಲಾಶಯಗಳ ಒಳಹರಿವು ಹೆಚ್ಚಾಗುವ ಸಾಧ್ಯತೆಗಳು ಇಲ್ಲ ಎನ್ನಬಹುದಾಗಿದೆ.
eesanje/url_46_337_11.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಹುಬ್ಬಳ್ಳಿ – ಧಾರವಾಡದಲ್ಲಿ ಉಗ್ರರ ಕ್ಯಾಂಪ್..!
2
+ ಹುಬ್ಬಳ್ಳಿ,ಅ.3- ಅತ್ಯಂತ ದೊಡ್ಡ ಭಯೋತ್ಪಾದನಾ ನಿಗ್ರಹ ಕಾರ್ಯಾಚ ರಣೆಯೊಂದರಲ್ಲಿ ರಾಷ್ಟ್ರೀಯ ತನಿಖಾ ದಳದ (ಎನ್‍ಐಎ) ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಮೂವರು ಶಂಕಿತ ಐಸಿಸ್ ಭಯೋತ್ಪಾದಕರನ್ನು ದೆಹಲಿ ವಿಶೇಷ ಘಟಕದ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಕರ್ನಾಟಕದ ಹುಬ್ಬಳ್ಳಿ-ಧಾರವಾಡ ಹಾಗೂ ಪಶ್ಚಿಮಘಟ್ಟದಲ್ಲಿ ಉಗ್ರರ ಕ್ಯಾಂಪ್ ಸ್ಥಾಪಿಸುವ ಉದ್ದೇಶ ಹೊಂದಿದ್ದರು ಎಂಬ ಸ್ಪೋಟಕ ವಿಚಾರ ಬೆಳಕಿಗೆ ಬಂದಿದೆ.
3
+ ಬಂಧಿತರನ್ನು ಶಹನವಾಜ್, ಮೊಹಮ್ಮದ್ ರಿಜ್ಜಾನ್ ಮತ್ತು ಮೊಹಮ್ಮದ್ ಅರ್ಷದ್ ವಾರ್ಸಿ ಎಂದು ಗುರುತಿಸಲಾಗಿದೆ. ಈ ಪೈಕಿ ಶಹನವಾಜ್‍ನನ್ನು 2 ದಿನದ ಹಿಂದೆಯೇ ಬಂಧಿಸಲಾಗಿತ್ತಾದರೂ ಅಧಿಕೃತವಾಗಿ ಬಂಧನವನ್ನು ಘೋಷಿಸಿರಲಿಲ್ಲ. ನಿನ್ನೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.
4
+ ಇದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್, ಸ್ಥಳೀಯರು ಇದರಲ್ಲಿ ಶಾಮೀಲಾದ ಮಾಹಿತಿ ಈವರೆಗೂ ಸಿಕ್ಕಿಲ್ಲ. ಬಂಧಿತರ ಬಗ್ಗೆ ದೆಹಲಿ ಪೊಲೀಸರ ಜತೆ ಸಂಪರ್ಕದಲ್ಲಿದ್ದೇವೆ. ನಮ್ಮ ವ್ಯಾಪ್ತಿಯಲ್ಲಿ ಅಂತಹ ಕೃತ್ಯಗಳು ನಡೆಯುತ್ತಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
5
+ ಇಂಡಿಯಾ ಮೈತ್ರಿಕೂಟದಿಂದ ಹೊರಬರುವುದೇ ಎಎಪಿ..?
6
+ ಇವರೆಲ್ಲ ಕರ್ನಾಟಕದ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಘಟ್ಟ ಪ್ರದೇಶದಲ್ಲಿ ತಮ್ಮ ನೆಲೆ ಸ್ಥಾಪಿಸಿ, ಬಳಿಕ ದೇಶದಲ್ಲಿ ಐಸಿಸ್ ಉಗ್ರರ ನೆಲೆ ವಿಸ್ತರಿಸಿ ಭಯೋತ್ಪಾದಕ ದಾಳಿ ನಡೆಸಲು ಹಾಗೂ ಅಶಾಂತಿ ಸೃಷ್ಟಿಸಲು ಸಂಚು ರೂಪಿಸಿದ್ದರು. ಈ ಸಂಬಂಧ ದೇಶದ ಪಶ್ಚಿಮ ಮತ್ತು ದಕ್ಷಿಣದ ಭಾಗಗಳನ್ನು ಪರಿಶೀಲನೆ ಮಾಡಿದ್ದರು ಎಂದು ದಿಲ್ಲಿ ಪೊಲೀಸ್ ವಿಶೇಷ ಸೆಲ್ ಅಧಿಕಾರಿ ಧಾಲಿವಾಲ್ ಹೇಳಿದ್ದಾರೆ.
7
+ ಈತನ ಸ್ನೇಹಿತರು ಪುಣೆ ಉಗ್ರ ಪ್ರಕರಣದಲ್ಲಿ ಕೆಲ ತಿಂಗಳ ಹಿಂದೆ ಬಂಯಾಗಿದ್ದರು. ಅವರು ಬೆಳಗಾವಿ ಸಮೀಪದ ಮಹಾರಾಷ್ಟ್ರದ ಅಂಬೋಲಿ ಅರಣ್ಯದಲ್ಲಿ ಉಗ್ರ ತರಬೇತಿ ಶಿಬಿರ ನಡೆಸಿದ್ದರು ಎಂದು ಬೆಳಕಿಗೆ ಬಂದಿದೆ. ವಿಶೇಷವೆಂದರೆ ಎಲ್ಲ ಶಂಕಿತ ಉಗ್ರರೂ ಎಂಜಿನಿಯರ್‍ಗಳಾಗಿದ್ದು, ಈ ಪೈಕಿ ವಾರ್ಸಿ ಎಂಬಾತ ಪಿಎಚ್‍ಡಿ ಕೂಡ ಮಾಡುತ್ತಿದ್ದ. ಇವರೆಲ್ಲ ಬಾಂಬ್ ತಯಾರಿಯಲ್ಲಿ ಪರಿಣತರಾಗಿದ್ದರು ಎಂದು ದೆಹಲಿ ಪೊಲೀಸ್ ವಿಶೇಷ ಘಟಕ ಮಾಹಿತಿ ನೀಡಿದೆ.ದೆಹಲಿ ಪೊಲೀಸ್ ವಿಶೇಷ ಸೆಲ್ ಹಲವಾರು ರಾಜ್ಯಗಳಲ್ಲಿನ ಭಯೋತ್ಪಾದಕ ಜಾಲಗಳನ್ನು ಭೇದಿಸಲು ಎನ್‍ಐಎಯೊಂದಿಗೆ ಕೆಲಸ ಮಾಡುವ ಹಲವಾರು ಏಜೆನ್ಸಿಗಳಲ್ಲಿ ಒಂದಾಗಿದೆ.
8
+ ಪುಣೆ ಐಸಿಸ್ ಕೇಸಿನಲ್ಲಿ ಬೇಕಾಗಿದ್ದ ಶಹನವಾಜ್:ವೃತ್ತಿಯಲ್ಲಿ ಮೈನಿಂಗ್ ಇಂಜಿನಿಯರ್ ಆಗಿರುವ ಶಹನವಾಜ್ ಐಸಿಸ್ ಪುಣೆ ಮಾಡ್ಯೂಲ್ ಪ್ರಕರಣದಲ್ಲಿ ಬೇಕಾಗಿದ್ದ. ಮೂಲಗಳ ಪ್ರಕಾರ, ಶಹನವಾಜ್ ಮೂಲತಃ ದೆಹಲಿಯವನಾದರೂ ಪುಣೆಗೆ ತೆರಳಿದ್ದ. ಜುಲೈನಲ್ಲಿ ಪುಣೆಯಲ್ಲಿ ನಡೆದ ದಾಳಿ�� ವೇಳೆ ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿತ್ತು. ಶಹನವಾಜ್ ಪರಾರಿಯಾಗಿ, ದೆಹಲಿಗೆ ಮರಳಿದ್ದ. ಅಂದಿನಿಂದ ಅಡಗುದಾಣದಲ್ಲಿ ಆತ ವಾಸಿಸುತ್ತಿದ್ದ. ಈತ ತನ್ನ ಹೆಂಡತಿ ಬಸಂತಿಯನ್ನು ಇಸ್ಲಾಂಗೆ ಮತಾಂತರಿಸಿದ್ದ ಎಂದು ಮೂಲಗಳು ಹೇಳಿವೆ.
9
+ ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ
10
+ ಈ ತಿಂಗಳ ಆರಂಭದಲ್ಲಿ ಶಹನವಾಜ್ ಮತ್ತು ಇತರ ಮೂವರು ಭಯೋತ್ಪಾದಕ ಶಂಕಿತರಾದ ರಿಜ್ಜಾನ್ ಅಬ್ದುಲ್ ಹಾಜಿ ಅಲಿ, ಅಬ್ದುಲ್ಲಾ ಫಯಾಜ್ ಶೇಖ್ ಅಲಿಯಾಸ್ ಡಯಾಪರ್ವಾಲಾ ಮತ್ತು ತಲ್ಹಾ ಲಿಯಾಕತ್ ಖಾನ್ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ 3 ಲಕ್ಷ ನಗದು ಬಹುಮಾನ ನೀಡುವುದಾಗಿ ಎನ್‍ಐಎ ಘೋಷಿಸಿತ್ತು . ಈ ಪೈಕಿ ಡಯಪರ್ವಾಲಾ ಹಾಗೂ ತಲ್ಹಾ ಇನ್ನೂ ಸಿಕ್ಕಿಲ್ಲ. ಅವರಿಗಾಗಿ ಬಲೆ ಬೀಸಲಾಗಿದೆ.
11
+ ಶಹನವಾಜ್, ಅಬ್ದುಲ್ಲಾ ಮತ್ತು ರಿಜ್ಜಾನ್ ಅವರು ಐಸಿಸ್ ಸಂಬಂಧಿ ಟೆಲಿಗ್ರಾಮ್ ಅಪ್ಲಿಕೇಶನ್ ಮೂಲಕ ಬ್ರೇನ್‍ವಾಶ್ ಆಗಿ ಭಯೋತ್ಪಾದಕರಾಗಿದ್ದರು. ಮಹಾರಾಷ್ಟ್ರದ ಪುಣೆಯಲ್ಲಿರುವ ಐಸಿಸ್ ಮಾಡ್ಯೂಲ್‍ನೊಂದಿಗೆ ಇವರಿಬ್ಬರೂ ನಂಟು ಹೊಂದಿದ್ದರು. ಅವರು ದೇಶಾದ್ಯಂತ ಹಿಂಸಾಚಾರ ಮತ್ತು ಭಯೋತ್ಪಾದನೆಯನ್ನು ಪ್ರಚುರಪಡಿಸಲು ಸಂಚು ರೂಪಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.
12
+ ಮೂಲಗಳ ಪ್ರಕಾರ, ಅಬ್ದುಲ್ಲಾ ಡಯಾಪರ್ವಾಲಾ ಪುಣೆಯಲ್ಲಿ ಡಯಾಪರ್ ಅಂಗಡಿಯನ್ನು ನಡೆಸುತ್ತಿದ್ದ. ಅದನ್ನು ಸ್ಪೋಟಕ ಸಾಧನಗಳನ್ನು ಜೋಡಿಸಲು ಬಳಸಲಾಗುತ್ತಿತ್ತು. ಬಂಧಿತರಿಂದ ಪ್ಲಾಸ್ಟಿಕ್ ಟ್ಯೂಬ್, ಕಬ್ಬಿಣದ ಪೈಪ್, ವಿವಿಧ ರೀತಿಯ ರಾಸಾಯನಿಕ, ಟೈಮಿಂಗ್ ಉಪಕರಣ ಮೊದಲಾದ ವಸ್ತುಗಳನ್ನು ವಶಪಡಿ ಸಿಕೊಳ್ಳಲಾಗಿದೆ. ಇವೆಲ್ಲವೂ ಸುಧಾರಿತ ಸೋಟಕ ತಯಾರಿಸಲು ಬಳಸುವ ವಸ್ತುಗಳಾಗಿರುವ ಕಾರಣ, ಇವರೆಲ್ಲಾ ದೊಡ್ಡ ದುಷ್ಕೃತ್ಯ ನಡೆಸಲು ಸಜ್ಜಾಗಿದ್ದರು ಎಂಬುದು ಖಚಿತಪಟ್ಟಿದೆ.
eesanje/url_46_337_12.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ 2 ತಿಂಗಳಲ್ಲಿ 4 ಸಾವಿರ ಎಕರೆ ಅರಣ್ಯ ಹೆಚ್ಚಳ : ಸಚಿವ ಈಶ್ವರ್‌ ಖಂಡ್ರೆ
2
+ ಬೆಂಗಳೂರು,ಅ.2- ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯಾದ್ಯಂತ ನಾಲ್ಕು ಸಾವಿರ ಎಕರೆ ಅರಣ್ಯ ಪ್ರದೇಶವನ್ನು ಹೆಚ್ಚಿಸಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ. 69ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ನಡೆದ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಕಾರ್ಯಕ್ರಮದಲ್ಲಿ ಮಾತ ನಾಡಿದ ಅವರು, ಜಾಗತಿಕವಾಗಿ ಪರಿಸರ ಜೀವವೈವಿಧ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದೆ. ಜಗತ್ತು ಹವಾಮಾನ ವೈಪರೀತ್ಯ, ಜಾಗತಿಕ ತಾಪಮಾನ ಏರಿಕೆಯಿಂದ ನಾನಾ ವಿಧದ ಸಮಸ್ಯೆಯನ್ನು ಎದುರಿಸುತ್ತಿದೆ. ಇದಕ್ಕೆ ಇರುವ ಏಕೈಕ ಪರಿಹಾರವೆಂದರೆ ಹಸಿರು ಹೊದಿಕೆಯನ್ನು ಹೆಚ್ಚಿಸುವುದಾಗಿದೆ ಎಂದರು.
3
+ ತಾವು ಅರಣ್ಯ ಸಚಿವರಾದ ಬಳಿಕ 5 ಕೋಟಿ ಸಸಿ ನೆಟ್ಟು ಪೋಷಿಸುವ ಸಂಕಲ್ಪ ಮಾಡಿದ್ದು, ಈವರೆಗೆ 4.75 ಲಕ್ಷ ಸಸಿ ನೆಡಲಾಗಿದೆ. ಇದರಲ್ಲಿ ಎಷ್ಟು ಬದುಕಿ ಉಳಿಯುತ್ತದೆ ಎಂದು ತಿಳಿಯಲು ಜಿಯೋ ಟ್ಯಾಗ್ ಮಾಡಲಾಗಿದೆ ಮತ್ತು ಮೂರನೇ ವ್ಯಕ್ತಿ (ಥರ್ಡ್ ಪಾರ್ಟಿ) ಆಡಿಟ್ ಮಾಡಿಸಲಾಗುತ್ತಿದೆ ಎಂದು ಹೇಳಿದರು.
4
+ ಇದರ ಜೊತೆಗೆ ರಾಜ್ಯದ 5 ನಗರಗಳನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲು ಸಂಕಲ್ಪ ಮಾಡಿದ್ದು, ಮೈಸೂರು, ಬೀದರ್, ಗುಲ್ಬರ್ಗಾ, ಧರ್ಮಸ್ಥಳ ಮತ್ತು ತುಮಕೂರು ನಗರವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಎಂದು ಘೋಷಿಸಲಾಗಿದೆ. ಪ್ರಜ್ಞಾವಂತರಾದ ನೀವೆಲ್ಲರೂ ಪ್ಲಾಸ್ಟಿಕ್ ಅದರಲ್ಲೂ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ನಿಲ್ಲಿಸಬೇಕು. ಜಾಗೃತಿ ಮೂಡಿಸಬೇಕು ಎಂದು ಮನವಿ ಮಾಡಿದರು.
5
+ ರಾಜ್ಯಾದ್ಯಂತ ಒತ್ತುವಾರಿಯಾಗಿದ್ದ 2 ಸಾವಿರ ಎಕರೆ ಅರಣ್ಯ ಭೂಮಿಯ ಒತ್ತುವರಿಯನ್ನು ತೆರವು ಮಾಡಲಾಗಿದೆ. ಜೊತೆಗೆ 4 ಸಾವಿರ ಎಕರೆ ಸರ್ಕಾರಿ ಭೂಮಿಯನ್ನು ಅರಣ್ಯ ಎಂದು ಘೋಷಿಸಲಾಗಿದೆ ಎಂದು ಹೇಳಿದರು.
6
+ ಭೂಮಿ ಸಾಫ್ಟ್ ವೇರ್ ಮಾದರಿಯಲ್ಲಿ ಗ್ರಾ.ಪಂಗಳ ಅಸ್ತಿ ಸಂರಕ್ಷಣೆಗೆ ಕ್ರಮ : ಡಿಸಿಎಂ
7
+ ಇಷ್ಟು ದಿನ ರಾಸಾಯನಿಕ ಬಣ್ಣ ಲೇಪಿತ ಪಿಓಪಿ ಗಣಪತಿ ಮೂರ್ತಿಗಳನ್ನು ವಿಸರ್ಜಿಸಿ ಜಲ ಮೂಲ ನಾಶ ಮಾಡದಂತೆ ಸುತ್ತೋಲೆ ಹೊರಡಿಸಿ ಮನವಿ ಮಾಡಲಾಗುತ್ತಿತ್ತು. ಈಗ ಈ ಸಂಬಂಧ ಸರ್ಕಾರಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.
8
+ ಅರಣ್ಯ ವ್ಯಾಪ್ತಿ ಕ್ಷೀಣಿಸಿದರೆ, ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ಇತ್ತೀಚೆಗೆ ಹಲವಾರು ಆನೆಗಳ ದಾಳಿಯಿಂದ ಮೃತಪಟ್ಟಿದ್ದಾರೆ. ಹೀಗಾಗಿ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗುತ್ತಿದೆ. ರಾಜ್ಯದಲ್ಲಿ 312 ಕಿ.ಮೀಟರ್ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗಿದ್ದು, ಇನ್ನೂ 300 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಅಳವಡಿಸಿದರೆ ಆನೆ ನಾಡಿಗೆ ಬಾರದಂತೆ ತಡೆಯಬಹುದು ಎಂದರು.
9
+ ವನ್ಯಜೀವಿಯಾಗಿರಲಿ, ಕೀಟವೇ ಆಗಿರಲಿ, ಪಕ್ಷಿಯೇ ಆಗಿರಲಿ ಅಥವಾ ಸಸ್ಯ ಸಂಕುಲವೇ ಆಗಿರಲಿ ಎಲ್ಲ ಜೀವಿ, ಸಸ್ಯಗಳಿಗೂ ಬದುಕುವ ಹಕ್ಕಿದೆ. ಆದರೆ ಇಂದು ಹಲವು ವನ್ಯ ಜೀವಿಗಳು ��ಳಿವಿನ ಅಂಚಿನಲ್ಲಿವೆ. ಕೆಲವು ನಶಿಸಿಹೋಗಿವೆ. ಹೀಗಾಗಿ ಜನರಲ್ಲಿ ಅರಣ್ಯದ ಬಗ್ಗೆ ವನ್ಯ ಜೀವಿಗಳ ಬಗ್ಗೆ ಜಾಗೃತಿ ಮೂಡಿಸಲು ವನ್ಯಜೀವಿ ಸಪ್ತಾಹ ವನ್ನು ಆಚರಿಸಲಾಗುತ್ತದೆ ಎಂದರು.
10
+ ಗೃಹ ಸಚಿವ ಪರಮೇಶ್ವರ್ ವಿರುದ್ಧ ಈಶ್ವರಪ್ಪ ಹಿಗ್ಗಾಮುಗ್ಗಾ ವಾಗ್ದಾಳಿ
11
+ ವನ್ಯಜೀವಿ ಸಂರಕ್ಷಣೆ ಬಗ್ಗೆ ಅರಿವು ಮೂಡಿಸಲು ಅರಣ್ಯ ಇಲಾಖೆ ಉತ್ತಮ ಕಾರ್ಯ ಮಾಡುತ್ತಿದೆ. ಶಾಲಾ ಮಕ್ಕಳಿಗೆ ಬಾಲ್ಯದಿಂದಲೇ ಅರಣ್ಯದ ಬಗ್ಗೆ ಅರಿವು ಮೂಡಿಸಿದರೆ ಅವರು ದೊಡ್ಡವರಾದ ಬಳಿಕವೂ ಪ್ರಕೃತಿ, ಪರಿಸರ ಕಾಪಾಡುತ್ತಾರೆ. ಅದಕ್ಕೆ ಕೇವಲ ಪಠ್ಯದಲ್ಲಿ ವಿಷಯ ಇದ್ದರೆ ಸಾಲದು, ಅವರಿಗೆ ಸಾಕ್ಷಾತ್ ಅರಣ್ಯ ದರ್ಶನ ಮಾಡಿಸಿದಾಗ ಹೆಚ್ಚಿನ ಅರಿವು ಮೂಡುತ್ತದೆ. ಅದಕ್ಕಾಗಿಯೇ ನಮ್ಮ ಇಲಾಖೆ ಚಿಣ್ಣರ ವನ ದರ್ಶನ ಎಂಬ ಕಾರ್ಯಕ್ರಮವನ್ನೇ ಹಮ್ಮಿಕೊಂಡಿದೆ ಎಂದರು.
12
+ ಈ ಕಾರ್ಯಕ್ರಮದ ಅಡಿಯಲ್ಲಿ ಮಕ್ಕಳಿಗೆ ಉಪಯುಕ್ತವಾದ ಪರಿಸರ, ಅರಣ್ಯ, ವನ್ಯಜೀವಿಗಳ ಪುಸ್ತಕ ನೀಡಲಾಗುತ್ತದೆ. ಅರಣ್ಯಪ್ರದೇಶಕ್ಕೆ ಕರೆದುಕೊಂಡು ಹೋಗಿ ತೋರಿಸಲಾಗುತ್ತದೆ. ಈ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
eesanje/url_46_337_2.txt ADDED
@@ -0,0 +1,7 @@
 
 
 
 
 
 
 
 
1
+ ಮೈಸೂರು ದಸರಾ : ಅ.6ರಿಂದ 13ರವರೆಗೆ ಯುವ ಸಂಭ್ರಮ
2
+ ಮೈಸೂರು, ಅ. 4- ಮೈಸೂರು ದಸರಾ ಅಂಗವಾಗಿ ಯುವ ಸಂಭ್ರಮ ಕಾರ್ಯಕ್ರಮ ಅ. 6ರಿಂದ 13ರವರೆಗೆ ನಡೆಯಲಿದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಟ್ಕರ್ ತಿಳಿಸಿದರು. ನಗರದ ಎಸ್ಪಿ ಕಚೇರಿಯಲ್ಲಿಂದು ಬೆಳಿಗ್ಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಯುವ ಸಂಭ್ರಮ ಕುರಿತ ಮಾಹಿತಿ ನೀಡಿದರು.
3
+ ಅ. 6ರಿಂದ 13ರವರೆಗೆ ಮೈಸೂರಿನ ಮಾನಸಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಯುವ ಸಂಭ್ರಮ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದರು. ಉದ್ಘಾಟನಾ ಸಮಾರಂಭ ಅ.6ರಂದು ಸಂಜೆ ನಡೆಯಲಿದ್ದು, ಈ ಸಮಾರಂಭವನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದವರು ಹೇಳಿದರು. ಉದ್ಘಾಟನೆಯ ದಿನದಂದು ಚಿತ್ರ ನಟ ವಶಿಷ್ಟ ಸಿಂಹ ಹಾಗೂ ಹರಿಪ್ರಿಯ ತಾರಾ ಮೆರಗು ನೀಡಲಿದ್ದಾರೆ ಎಂದವರು ತಿಳಿಸಿದರು.
4
+ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಸಾಧಕ-ಬಾಧಕಗಳ ಕುರಿತು ಚರ್ಚೆ : ಪರಮೇಶ್ವರ್
5
+ ಈ ಸಂಭ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧಡೆಯಿಂದ 400ಕ್ಕೂ ಹೆಚ್ಚು ಅರ್ಜಿಗಳು ಬಂದಿದೆ. ರಾಜ್ಯದಲ್ಲಿನ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಉತ್ಸುಕರಾಗಿದ್ದಾರೆ ಎಂದವರು ತಿಳಿಸಿದರು.
6
+ ಸಿಕ್ಕಿಂನಲ್ಲಿ ಮೇಘಸ್ಪೋಟ, 23 ಸೇನಾ ಸಿಬ್ಬಂದಿ ನಾಪತ್ತೆ
7
+ ಈ ಬಾರಿ ಚಂದ್ರಯಾನ, ರಾಷ್ಟ್ರೀಯ ಭಾವೈಕ್ಯತೆ, ನಾಡು ನುಡಿಗಾಗಿ ಹೋರಾಡಿದವರು ಸೇರಿದಂತೆ 20 ವಿಷಯ ಕುರಿತು ನೃತ್ಯ ಪ್ರದರ್ಶನ ನೀಡಲು ಕಾಲೇಜು ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ ಎಂದವರು ತಿಳಿಸಿದರು. ಪ್ರತಿ ಕಾಲೇಜಿಗೆ 5 ನಿಮಿಷ ಕಾಲಾವಕಾಶವನ್ನು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರತಿದಿನ ಸಂಜೆ 5ರಿಂದ ರಾತ್ರಿ 10 ಗಂಟೆಯವರೆಗೆ ಈ ಸಮಾರಂಭ ನಡೆಯಲಿದೆ ಎಂದವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
eesanje/url_46_337_3.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಸಾಧಕ-ಬಾಧಕಗಳ ಕುರಿತು ಚರ್ಚೆ : ಪರಮೇಶ್ವರ್
2
+ ಬೆಂಗಳೂರು,ಅ.4- ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷಾ ವರದಿಯನ್ನು ಶೀಘ್ರವೇ ಸರ್ಕಾರಕ್ಕೆ ಸಲ್ಲಿಸುವುದಾಗಿ ಹೇಳಿದ್ದಾರೆ. ವರದಿ ಸಲ್ಲಿಕೆಯಾದ ಬಳಿಕ ಅದರ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಈ ಹಿಂದೆ ಸದುದ್ದೇಶದಿಂದಲೇ ಸಮೀಕ್ಷೆ ನಡೆಸಿದೆ. ಸರ್ಕಾರದ ಹಣ ಫೋಲು ಮಾಡುವ ಸಲುವಾಗಿ ಯಾವುದೇ ಸರ್ಕಾರ ಸಮೀಕ್ಷೆ ಮಾಡುವುದಿಲ್ಲ ಎಂದರು.
3
+ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಅನೇಕ ವರ್ಷಗಳಿಂದ ಬೇಡಿಕೆಗಳಿವೆ. ತಮಿಳುನಾಡಿನಲ್ಲಿ ಶೇ.69 ರಷ್ಟು ಮೀಸಲಾತಿಯನ್ನು ಹೆಚ್ಚಿಸಲಾಗಿದೆ. ರಾಜ್ಯದಲ್ಲೂ ಮೀಸಲಾತಿ ಪರಿಷ್ಕರಣೆಗೆ ಬೇಡಿಕೆ ಕೇಳಿಬಂದಿದೆ. ಅನೇಕ ಸಮುದಾಯಗಳು ಮೀಸಲಾತಿ ವ್ಯಾಪ್ತಿಗೆ ಒಳಪಡಲು ಪ್ರಯತ್ನಿಸುತ್ತಿದೆ. ಇದೆಲ್ಲದಕ್ಕೂ ಸಮೀಕ್ಷಾ ವರದಿ ಅನುಕೂಲವಾಗಲಿದೆ. ಯಾವ ಸಮುದಾಯ ಎಷ್ಟು ಜನಸಂಖ್ಯೆ ಇದೆ ಎಂಬುದರ ಬಗ್ಗೆಯೂ ವಿಶ್ಲೇಷಣೆ ನಡೆಯಲಿದೆ ಎಂದರು.
4
+ ಸಿಕ್ಕಿಂನಲ್ಲಿ ಮೇಘಸ್ಪೋಟ, 23 ಸೇನಾ ಸಿಬ್ಬಂದಿ ನಾಪತ್ತೆ
5
+ ಈ ಹಿಂದೆ ಕಾಂಗ್ರೆಸ್ ತನ್ನ ಚುನಾವಣಾ ಪ್ರನಾಳಿಕೆಯಲ್ಲಿ ಸಮೀಕ್ಷಾ ವರದಿಯನ್ನು ಬಹಿರಂಗಪಡಿಸುವುದಾಗಿ ಭರವಸೆ ನೀಡಿತ್ತು. ಅದರಂತೆ ನಾವು ನಡೆದುಕೊಳ್ಳುತ್ತೇವೆ. ಇದರಲ್ಲಿ ಯಾವುದೇ ಹಿಂಜರಿಕೆ ಇಲ್ಲ ಎಂದು ತಿಳಿಸಿದರು.
6
+ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಎಲ್ಲಾ ಕಾಲಘಟ್ಟದಲ್ಲೂ ಕ್ರಮ ವಹಿಸಲಾಗಿದೆ. ಹಿಂದಿನ ಸರ್ಕಾರದಲ್ಲಿ ಎಷ್ಟು ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂಬ ಮಾಹಿತಿ ತಮ್ಮ ಬಳಿ ಇದೆ. ಅಗತ್ಯ ಬಿದ್ದರೆ ಅದನ್ನು ಬಹಿರಂಗಪಡಿಸಲು ಸಿದ್ಧರಿದ್ದೇವೆ ಎಂದು ಹೇಳಿದರು.
7
+ ಜನಸಾಮಾನ್ಯರು ಪ್ರಕರಣ ಹಿಂಪಡೆಯುವಂತೆ ಶಾಸಕರಿಗೆ, ಸಂಸದರಿಗೆ, ಸಚಿವರಿಗೆ, ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸುವುದು ಸಹಜ. ಅಂತಹ ವೇಳೆ ಅವುಗಳು ಗೃಹ ಇಲಾಖೆಗೆ ರವಾನೆಯಾಗುತ್ತವೆ. ಈ ಅರ್ಜಿಗಳನ್ನು ಸಚಿವ ಸಂಪುಟದ ಉಪಸಮಿತಿಯ ಮುಂದೆ ಮಂಡಿಸಿ ಸಾಧಕ-ಬಾಧಕಗಳನ್ನು ಪರಿಶೀಲಿಸಿ ಅವುಗಳನ್ನು ತೆಗೆಯಬಹುದಾ, ತೆಗೆಯಬಾರದ ಎಂಬೆಲ್ಲಾ ವಿಚಾರ ವಿನಿಮಯ ನಡೆಸಲಾಗುವುದು.
8
+ ಅಮಾಯಕರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದಾದರೆ ಅವುಗಳನ್ನು ಹಿಂಪಡೆಯುವಂತೆ ಸಚಿವ ಸಂಪುಟ ಸಭೆಗೆ ಪ್ರಸ್ತಾವನೆ ಮಂಡಿಸಲಾಗುವುದು. ಸಂಪುಟದಲ್ಲೂ ಅದು ಚರ್ಚೆಯಾಗಲಿದೆ.
9
+ ಇಡಿ,ಐಟಿ ಅಧಿಕಾರಿಗಳು ಬೀದಿ ನಾಯಿ, ಬೆಕ್ಕುಗಳಂತೆ ತಿರುಗುತ್ತಿದ್ದಾರೆ ; ಬಘೇಲ್
10
+ ಉಪ ಸಮಿತಿಯ ವರದಿಯನ್ನು ಒಪ್ಪಲೇಬೇಕೆಂಬ ನಿಯಮವಿಲ್ಲ. ಸಂಪುಟದ ಸದಸ್ಯರು ಆಕ್ಷೇಪ ವ���ಯಕ್ತಪಡಿಸಿದರೆ ಅವು ವಾಪಸ್ ಬರಲಿವೆ. ಇಷ್ಟೆಲ್ಲಾ ಪ್ರಕ್ರಿಯೆಗಳಿರುವಾಗ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯವರಿಗೆ ಒಂದು ಪತ್ರ ಬರೆದರು ಎಂಬ ಕಾರಣಕ್ಕೆ ಬೊಬ್ಬೆ ಹೊಡೆಯುವುದು ಸರಿಯಲ್ಲ ಎಂದು ಹೇಳಿದರು.
11
+ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಪಟ್ಟಂತೆ ಚುನಾವಣೆಗೆ ಮೊದಲು ನಡೆದಿದೆ ಎಂದು ಹೇಳಲಾದ ಚಿಲುಮೆ ಹಗರಣದ ತನಿಖೆ ಯಾವ ಹಂತದಲ್ಲಿದೆ ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ. ಈ ಹಿಂದೆ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ಮತದಾರರ ಪಟ್ಟಿಯಲ್ಲಿ ಲೋಪಗಳಾಗಿವೆ ಎಂಬ ಶಂಕೆಯನ್ನು ವ್ಯಕ್ತಪಡಿಸಿ ಆರೋಪ ಮಾಡಿತ್ತು. ಅದರ ಕುರಿತು ಚುನಾವಣಾ ಆಯೋಗ ತನಿಖೆಗೆ ಆದೇಶಿಸಿರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ.
12
+ ಬಿಬಿಎಂಪಿಯ ಆಯುಕ್ತ ತುಷಾರ್ ಗಿರಿನಾಥ್ ಅದರಲ್ಲಿ ಭಾಗಿಯಾಗಿರುವ ಕುರಿತು ಮತ್ತು ಮತದಾರರ ಪಟ್ಟಿಯನ್ನು ಅಕ್ರಮವಾಗಿ ಪರಿಷ್ಕರಣೆ ಮಾಡಿದ್ದರಿಂದಾಗಿಯೇ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಿನ್ನಡೆಯಾಗಿದೆ ಎಂಬ ಮಾಹಿತಿ ತಮಗಿಲ್ಲ ಎಂದು ಹೇಳಿದರು.
eesanje/url_46_337_4.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಶ್ಯಾಮನೂರು ಶಿವಶಂಕರಪ್ಪನವರ ಹೇಳಿಕೆ ಆಡಳಿತದ ಮೇಲೆ ಪರಿಣಾಮ ಬೀರಲಿದೆ : ರಾಯರೆಡ್ಡಿ
2
+ ಬೆಂಗಳೂರು,ಅ.3- ಸರ್ಕಾರಿ ಅಧಿಕಾರಿಗಳ ಬಗ್ಗೆ ಜಾತಿ ಆಧಾರದ ಮೇಲೆ ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪನವರು ಮಾತನಾಡಿರುವುದು ತಪ್ಪು. ಇದು ಆಡಳಿತದ ಮೇಲೆ ಪರಿಣಾಮ ಬೀರಲಿದೆ ಎಂದು ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಇಂದಿಲ್ಲಿ ತಿಳಿಸಿದರು.
3
+ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಶ್ಯಾಮನೂರು ಶಿವಶಂಕರಪ್ಪ ಅವರು ಮಾಹಿತಿ ಕೊರತೆಯಿಂದ ಲಿಂಗಾಯಿತ ಅಧಿಕಾರಿಗಳನ್ನು ಜಿಲ್ಲಾಧಿಕಾರಿಗೆ ಹುದ್ದೆಗೆ ನಿಯೋಜಿಸಿಲ್ಲ. ಐಎಎಸ್, ಐಪಿಎಸ್ ಹಾಗೂ ಕೆಎಎಸ್ ಅಧಿಕಾರಿಗಳನ್ನು ಕಡೆಗಣಿಸಲಾಗಿದೆ. ಲಿಂಗಾಯಿತ ಅಧಿಕಾರಿಗಳಿಗೆ ಮಹತ್ವವಿಲ್ಲ ಎಂದು ಹೇಳಿಕೆ ನೀಡಿರುವುದು ಸರಿಯಲ್ಲ.
4
+ ಜಾತಿ ಆಧಾರದ ಮೇಲೆ ಹುದ್ದೆ ಕೊಡಲಾಗುವುದಿಲ್ಲ. ಎಲ್ಲ ಜಾತಿಯಲ್ಲೂ ಅರ್ಹರು, ಅನರ್ಹರು ಇರುತ್ತಾರೆ. ಅರ್ಹತೆ ಆಧಾರದ ಮೇಲೆ ಅಧಿಕಾರಿಗಳಿಗೆ ಹುದ್ದೆ ನೀಡುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಲಿಂಗಾಯಿತರಿಗೆ ಅನ್ಯಾಯ ಮಾಡಿದೆ ಎಂಬುದನ್ನು ಒಪ್ಪುವುದಿಲ್ಲ ಎಂದು ಹೇಳಿದರು.
5
+ ಸಾಮಾಜಿಕ ನ್ಯಾಯದ ಮೇಲೆ ಬಸವ ತತ್ವ ಅವಲಂಬಿತವಾಗಿರುವುದರಿಂದ ಸಿದ್ದರಾಮಯ್ಯ ಅವರು ಬಸವ ತತ್ವದ ಅನುಯಾಯಿ ಆಗಿದ್ದಾರೆ. ತಮ್ಮ ಸಂಪುಟದಲ್ಲಿ ಏಳು ಲಿಂಗಾಯಿತರಿಗೆ ಸಚಿವ ಸ್ಥಾನ ನೀಡಿದ್ದಾರೆ. ಲಿಂಗಾಯಿತ ಸಮುದಾಯದ ಮೂವರು ಜಿಲ್ಲಾಕಾರಿಗಳು, 7 ಎಸ್ಪಿಗಳು, 13 ವಿಶ್ವವಿದ್ಯಾನಿಲಯದ ಕುಲಪತಿಗಳು, ನಾಲ್ವರು ಸಿಇಒಗಳು ಹಾಗೂ ಮುಖ್ಯ ಇಂಜಿನಿಯರ್‍ಗಳು ಇದ್ದಾರೆ ಎಂದು ಅಂಕಿ ಅಂಶಗಳ ಸಹಿತ ಮಾಹಿತಿ ನೀಡಿದರು.
6
+ ಗುಜರಿ ಅಂಗಡಿ ಮಾಲೀಕನ ಮನೆಯಲ್ಲಿ ಚಿನ್ನ-ಹಣ ದೋಚಿದ್ದ ಆರೋಪಿ ಸೆರೆ
7
+ ಅಧಿಕಾರಿಗಳನ್ನು ಜಾತಿಯ ದೃಷ್ಟಿಯಿಂದ ನೋಡಬಾರದು. ಅದರ ಬಗ್ಗೆ ಮಾತನಾಡುವುದು ಸರಿಯಲ್ಲ ಎನ್ನುತ್ತಲೇ ಈ ಅಂಕಿಅಂಶಗಳನ್ನು ನೀಡಿದರು. ಮೊದಲ ಬಾರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೋವನ್ನು ಸರ್ಕಾರಿ ಕಚೇರಿಗಳಲ್ಲಿ ಹಾಕಲು ಆದೇಶ ನೀಡಿದರು. ಹಿಂದೆ ಮುಖ್ಯಮಂತ್ರಿಯಾಗಿದ್ದ ಲಿಂಗಾಯಿತ ಸಮುದಾಯದವ ರಾರು ಕೂಡ ಈ ಕಾರ್ಯ ಮಾಡಿರಲಿಲ್ಲ. ವಿಜಯಪುರ ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕ ಮಹಾದೇವಿ ಹೆಸರನ್ನು ನಾಮಕರಣ ಮಾಡಲಾಗಿದೆ.
8
+ ಕಲ್ಬುರ್ಗಿ ವಿವಿಗೆ ಬಸವೇಶ್ವರರ ಹೆಸರನ್ನು ಇಡಬೇಕೆಂಬ ಪ್ರಯತ್ನ ಮಾಡಲಾಗಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಅದನ್ನು ಕಾರ್ಯಗತ ಮಾಡಬಹುದಿತ್ತು. ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.ಸಿದ್ದರಾಮಯ್ಯ ಅವರು ಲಿಂಗಾಯಿತ ವಿರೋಧಿಯಾಗಿದ್ದರೆ ಇವೆಲ್ಲ ಮಾಡಲು ಸಾಧ್ಯವಾದೀತೆ? ತುಳಿತಕ್ಕೊಳಗಾದವರ ಬಗ್ಗೆ ಅವರಲ್ಲಿ ಮೃದು ಧೋರಣೆಯಿದೆ. ಅಧಿಕಾರಿಗಳನ್ನು ಜಾತಿ ಆಧಾರದ ಮೇಲೆ ಗುರುತಿಸುವ, ಹುದ್ದೆ ನೀಡುವ ಕಾರ್ಯ ಸರಿಯಲ್ಲ. ಇದು ಅವರ ನೈತಿಕತೆ ಕುಗ್ಗಿಸು�� ಜೊತೆಗೆ ಆಡಳಿತದ ಮೇಲೂ ಪರಿಣಾಮ ಉಂಟಾಗುತ್ತದೆ ಎಂದು ಒತ್ತಿ ಹೇಳಿದರು.
9
+ ಅಸಮಾಧಾನವಿಲ್ಲ:ಸರ್ಕಾರದ ಬಗ್ಗೆ ಲಿಂಗಾಯಿತ ಶಾಸಕರಲ್ಲಿ ಅಸಮಾಧಾನವಿಲ್ಲ. ವಿರೋಧ ಪಕ್ಷದವರು ಹೇಳಿದಂತೆ ಬಹುಮತವುಳ್ಳ ನಮ್ಮ ಸರ್ಕಾರ ಏನೂ ಆಗುವುದಿಲ್ಲ. ಪಕ್ಷದಲ್ಲಿ ಯಾವುದೇ ರೀತಿಯ ಸಮಸ್ಯೆ ಗೊಂದಲವಿಲ್ಲ. ಆಂತರಿಕ ಪ್ರಜಾಪ್ರಭುತ್ವ ಪಕ್ಷದಲ್ಲಿ ಜಾಸ್ತಿ ಇರುವುದರಿಂದ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅವರು ಮುಖ್ಯಮಂತ್ರಿ ಪರವಾಗಿ ಆಗಲಿ ಅಥವಾ ಶ್ಯಾಮನೂರು ಶಿವಶಂಕರಪ್ಪ ಅವರ ವಿರುದ್ದವಾಗಿ ಮಾತನಾಡುತ್ತಿಲ್ಲ. ಶಾಸಕನಾಗಿ ಜಾತಿ ಆಧಾರದ ಮೇಲೆ ಮಾತನಾಡಬಾರದು ಎಂದರು.
10
+ ಮಾಜಿ ಸಿಎಂ ಯಡಿಯೂರಪ್ಪ ಅವರ ಹೇಳಿಕೆಯನ್ನು ಒಪ್ಪಲಾಗದು. ಲಿಂಗಾಯಿತ ಅಧಿಕಾರಿಗಳನ್ನು ಕಡೆಗಣಿಸಲಾಗಿದೆ ಎಂಬ ಹೇಳಿಕೆ ನೀಡಿರುವ ಶ್ಯಾಮನೂರು ಶಿವಶಂಕರಪ್ಪ ಅವರು ಕ್ಷಮೆ ಕೋರುವಂತೆ ಆಗ್ರಹಿಸುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
11
+ ಜಾತಿಜನಗಣತಿ ಬಿಡುಗಡೆಗೆ ಸಚಿವ ಸತೀಶ್ ಜಾರಕಿಹೊಳಿ ಒತ್ತಾಯ
12
+ ಜಾತಿ ಗಣತಿ ಬಿಡುಗಡೆ ಮಾಡಲಿ:ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಅವರ ಅವಧಿಯಲ್ಲಿ ಸಿದ್ದಪಡಿಸಲಾದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷಾ ವರದಿಯನ್ನು ಸರ್ಕಾರ ಸ್ವೀಕರಿಸಿ ಬಿಡುಗಡೆ ಮಾಡಬೇಕು. ಬಿಹಾರದಲ್ಲಿ ಜಾತಿ ಗಣತಿಯನ್ನು ಬಿಡುಗಡೆ ಮಾಡಲಾಗಿದೆ. ಜಾತಿಗಣತಿ ಬಿಡುಗಡೆ ಮಾಡುವುದರಿಂದ ದುರ್ಬಲ ಸಮುದಾಯಗಳಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸೌಲಭ್ಯ ಕಲ್ಪಿಸಲು ಅನುಕೂಲವಾಗಲಿದೆ ಎಂದರು.
13
+ ಡಿಸಿಎಂ ಹುದ್ದೆ ಸಂವಿಧಾನದಲ್ಲಿಲ್ಲ:ಉಪಮುಖ್ಯಮಂತ್ರಿ ಹುದ್ದೆ ಸಂವಿಧಾನದಲ್ಲಿ ಇಲ್ಲ. ಅದೊಂದು ಗೌರವದ ಹುದ್ದೆ. ಮತ್ತೆ ಮೂರು ಉಪಮುಖ್ಯಮಂತ್ರಿ ಮಾಡಬೇಕೆಂಬ ವಿಚಾರ ಬಂದಾಗ ಮೂರು ಏಕೆ ಆರು ಮಾಡಿ ಎಂದು ಹೇಳಿದ್ದು ನಿಜ. ಉಪಮುಖ್ಯಮಂತ್ರಿಗಳ ಸಂಖ್ಯೆ ಹೆಚ್ಚಾದಾಗ ಪ್ರಧಾನ ಉಪಮುಖ್ಯಮಂತ್ರಿಯನ್ನು ಮಾಡಬೇಕೆ? ಎಂದು ಪ್ರಶ್ನಿಸಿದರು.
eesanje/url_46_337_5.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಹೆದ್ದಾರಿಗಳಲ್ಲಿ ಎಚ್ಚರ ತಪ್ಪಿದರೆ ಪ್ರಾಣಕ್ಕೆ ಕಂಟಕ
2
+ ಬೆಂಗಳೂರು, ಅ.3- ಹೆದ್ದಾರಿ ಹಾಗೂ ಎಕ್ಸ್‍ಪ್ರೆಸ್ ಹೈವೇಗಳಲ್ಲಿ ಪ್ರಯಾಣಿಸುವಾಗ ಒಂದು ಕ್ಷಣ ಎಚ್ಚರ ತಪ್ಪಿದರೂ ಪ್ರಾಣ ಕಂಟಕವಾಗಲಿದೆ ಎಂಬುದಕ್ಕೆ ಬೆಂಗಳೂರಿನ ಹೊರವಲಯದ ಸೋಂಪುರದ ಬಳಿಯ ನೈಸ್‍ರಸ್ತೆಯಲ್ಲಿ ನಡೆದ ಅಪಘಾತ ಸ್ಪಷ್ಟ ಉದಾಹರಣೆಯಾಗಿದೆ.
3
+ ಟಾಟಾ ನೆಕ್ಸಾನ್ ಕಾರಿನಲ್ಲಿ ಮುಂಜಾನೆ 2.30ರ ಸುಮಾರಿಗೆ ಕುಟುಂಬ ಸಮೇತ ಪ್ರಯಾಣಿಸುತ್ತಿದ್ದ ಸಾಫ್ಟ್‍ವೇರ್ ಇಂಜಿನಿಯರ್ ಮಹೇಂದ್ರನ್ ರವರು ನೈಸ್ ರಸ್ತೆಯಲ್ಲಿರುವಾಗ ನೀರು ಕುಡಿಯಲು ಬಾಟಲ್ ತೆಗೆದುಕೊಂಡಿದ್ದಾರೆ.
4
+ ನಾಂದೇಡ್ : ಔಷಧಿ ಕೊರತೆಯಿಂದ ಮೃತಪಟ್ಟ ಮಕ್ಕಳ ಸಂಖ್ಯೆ 31ಕ್ಕೆ ಏರಿಕೆ
5
+ ಕೆಲವೇ ಕ್ಷಣಗಳಲ್ಲಿ ಕಾರು ಲಾರಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದೆ.ಅಪಘಾತದ ರಭಸಕ್ಕೆ ಕಾರಿನಲ್ಲಿದ್ದವರು ಆಘಾತಕ್ಕೊಳಗಾಗಿದ್ದಾರೆ. ಒಳಗಿದ್ದವರನ್ನು ರಕ್ಷಿಸಲು ಏರ್‍ಬ್ಯಾಗ್ ಅದೇ ವೇಳೆ ತೆರೆದುಕೊಂಡಿದೆ. ಅಪಘಾತದ ತಕ್ಷಣವೇ ಕಾರಿನ ಡೀಸೆಲ್ ಟ್ಯಾಂಕ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡಿದ್ದು, ಸೋಟಗೊಂಡಿದೆ. ಘಟನೆಯಿಂದ ಆಘಾತಕ್ಕೊಳಗಾದವರು ಏರ್‍ಬ್ಯಾಗ್ ಅನ್ನು ಸಡಿಲಿಸಿ ಹೊರಬರುವುದರೊಳಗೆ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದ್ದು, ಕಾರಿನಲ್ಲಿದ್ದ ನಾಲ್ವರ ಪೈಕಿ ತಾಯಿ ಮತ್ತು ಮಗಳು ಸಜೀವ ದಹನವಾಗಿದ್ದಾರೆ.
6
+ ಆಧುನಿಕತೆ ಮತ್ತು ತಂತ್ರಜ್ಞಾನ ಜೀವರಕ್ಷಣೆಗಾಗಿ ನಾನಾ ರೀತಿಯ ಸೌಲಭ್ಯಗಳನ್ನು ಒದಗಿಸುತ್ತಿದೆ. ಆದರೆ ಕೆಲವೊಮ್ಮೆ ಅದೂ ಕೂಡ ಅಪಾಯಕಾರಿಯಾಗಲಿದೆ ಎಂಬುದಕ್ಕೆ ಈ ಅಪಘಾತ ಉದಾಹರಣೆಯಾಗಿದೆ.
7
+ ಎಕ್ಸ್‍ಪ್ರೆಸ್ ಹೈವೇಗಳಲ್ಲಿ ಕಾರು ಚಾಲನೆ ಮಾಡುವವರು ಕನಿಷ್ಟ 70 ರಿಂದ 80 ಕಿಲೋ ಮೀಟರ್ ವೇಗದಲ್ಲಿ ಚಲಿಸುತ್ತಿರುತ್ತಾರೆ. ಕೆಲವೊಮ್ಮೆ ಅದು 120 ಕಿಲೋ ಮೀಟರ್ ಹೋಗುವ ಸಾಧ್ಯತೆ ಇದೆ. ಅದರಲ್ಲೂ ಮಧ್ಯರಾತ್ರಿ ಎಂದರೆ ರಸ್ತೆ ಖಾಲಿ ಇರುವುದರಿಂದ ವೇಗವೂ ಕೂಡ ಇಮ್ಮಡಿಗೊಂಡಿರುತ್ತದೆ. ನಿದ್ದೆಯ ಮಂಪರು ಕೂಡ ಸಾಮಾನ್ಯವಾಗಿರುತ್ತದೆ.
8
+ ಬಿಬಿಎಂಪಿ ಆಯುಕ್ತರ ವಿರುದ್ಧ ತನಿಖೆಗೆ ಸೂಚನೆ
9
+ ಈ ಸಂದರ್ಭದಲ್ಲಿ ಒಂದೇ ಒಂದು ಕ್ಷಣ ಎಚ್ಚರ ತಪ್ಪಿದರೂ ಅಪಾಯ ಎದುರಾಗಲಿದೆ. ಸಾಮಾನ್ಯವಾಗಿ ಚಾಲನೆಯಲ್ಲಿರುವಾಗಲೇ ನೀರು ಕುಡಿಯುವುದು, ಮೊಬೈಲ್ ಬಳಸುವುದು, ಅಕ್ಕಪಕ್ಕದಲ್ಲಿದ್ದವರ ಜೊತೆ ಅನಗತ್ಯವಾದ ಸಂವಹನ, ಮದ್ಯಪಾನ ಮಾಡಿ ಚಾಲನೆ ಮಾಡುವುದು, ಧೂಮಪಾನ ಮಾಡುವುದು ಪ್ರಾಣ ಕಂಟಕಗಳಾಗುತ್ತವೆ.
10
+ ಸಂಚಾರ ಮತ್ತು ರಸ್ತೆ ಸುರಕ್ಷತೆ ಬಗ್ಗೆ ಇಲಾಖೆಗಳು ಎಷ್ಟೇ ಜಾಗೃತಿ ಮೂಡಿಸಿದರೂ ಮೋಜಿನ ಪ್ರವಾಸದ ಭರದಲ್ಲಿ ವಾಹನ ಚಾಲಕರು ಎಚ್ಚರ ತಪ್ಪಿ ಅಪಘಾತಗಳಿಗೆ ಕಾರಣರಾಗುತ್ತಿದ್ದಾರೆ ಎಂಬ ವರದಿಗಳು ಹೆಚ್ಚಾಗಿ ಕಂಡುಬರುತ್ತಿವೆ.
eesanje/url_46_337_6.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಶೈಕ್ಷಣಿಕ-ಸಾಮಾಜಿಕ ವರದಿ ಬಹಿರಂಗಕ್ಕೆ ಹರಿಪ್ರಸಾದ್ ಒತ್ತಾಯ
2
+ ನವದೆಹಲಿ, ಅ.3- ರಾಜ್ಯದಲ್ಲಿ ಈ ಹಿಂದೆ ನಡೆದಿರುವ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸಮೀಕ್ಷಾ ವರದಿಯನ್ನು ರಾಜ್ಯಸರ್ಕಾರ ಮೊದಲು ಬಹಿರಂಗಪಡಿಸಬೇಕು. ಅದರ ಬಗ್ಗೆ ಸಾರ್ವಜನಿಕ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಹಿರಿಯ ಕಾಂಗ್ರೆಸಿಗ ಬಿ.ಕೆ.ಹರಿಪ್ರಸಾದ್ ಒತ್ತಾಯಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮೀಕ್ಷೆ ನಡೆಸಿರುವುದು ಸರ್ಕಾರದಿಂದ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವುದು ಕಾಂಗ್ರೆಸ್ ಪಕ್ಷದಿಂದ. ಹೀಗಾಗಿ ತಾವು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೇಳಿಕೆ ನೀಡುವುದಿಲ್ಲ. ನೇರವಾಗಿ ವರದಿ ಜಾರಿಯಾಗಬೇಕು ಎಂದು ಒತ್ತಾಯಿಸುತ್ತೇನೆ ಎಂದರು.
4
+ ಕಾಂಗ್ರೆಸ್‍ನ ವರಿಷ್ಠ ನಾಯಕ ರಾಹುಲ್‍ಗಾಂಧಿ ದೇಶ ಮತ್ತು ರಾಜ್ಯಗಳಲ್ಲಿ ಜಾತಿ ಜನಗಣತಿ ಆಗಬೇಕು ಎಂದು ಪ್ರತಿಪಾದಿಸುತ್ತಿದ್ದಾರೆ. ಕರ್ನಾಟಕ ಸರ್ಕಾರ ಬಹಳ ಹಿಂದೆಯೇ ಕಾಂತರಾಜು ನೇತೃತ್ವದಲ್ಲಿ ಸಮೀಕ್ಷೆ ನಡೆಸಿದೆ. ಅದನ್ನು ಅನುಷ್ಠಾನಕ್ಕೆ ತರಲು ಸಾಧ್ಯವೋ, ಇಲ್ಲವೋ ಅದು ಬೇರೆ ವಿಚಾರ. ಆದರೆ ಮೊದಲು ಅದು ಬಹಿರಂಗಗೊಳಿಸಬೇಕಿದೆ ಎಂದು ಹೇಳಿದರು.
5
+ ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ
6
+ ಜಾತಿ ಜನಗಣತಿ ವರದಿ ಬಿಡುಗಡೆಯಾಗದೇ ಇರುವುದಕ್ಕೆ ಹಲವು ಕಾರಣಗಳಿರಬಹುದು. ಬಿಡುಗಡೆಯಾದ ತಕ್ಷಣವೇ ಅನುಷ್ಠಾನಕ್ಕೆ ಬರುತ್ತದೆ ಎಂದೇನಿಲ್ಲ. ಮೊದಲು ವರದಿ ಸಾರ್ವಜನಿಕವಾಗಿ ಚರ್ಚೆಯಾಗಲಿ. ಅಲ್ಲಿರುವ ಲೋಪದೋಷಗಳನ್ನು ಪರಿಶೀಲಿಸಿ ಮತ್ತೊಮ್ಮೆ ಸಮೀಕ್ಷೆ ನಡೆಸಬಹುದು ಎಂದು ಹೇಳಿದರು.
7
+ ರಾಜ್ಯದಲ್ಲಿ ಮೊದಲಿನಿಂದಲೂ ಆವನೂರು ಆಯೋಗ, ಚಿನ್ನಪ್ಪರೆಡ್ಡಿ ಆಯೋಗ ಸೇರಿದಂತೆ ಹಲವು ವರದಿಗಳಿವೆ. ಬಿಜೆಪಿ ಸರ್ಕಾರದಲ್ಲೂ ಒಂದು ವರದಿಯಿದೆ. ಎಲ್ಲವನ್ನೂ ಸೇರಿಸಿ ವರದಿಯನ್ನು ಬಹಿರಂಗ ಪಡಿಸಲಿ. ಕೆಲವು ಸಮುದಾಯಗಳು ಹೆಚ್ಚಿವೆ, ಕೆಲವು ಕಡಿಮೆ ಇವೆ ಎಂಬ ಚರ್ಚೆಗಳಿವೆ. ಅದನ್ನು ನಂತರ ಸರಿಪಡಿಸಬಹುದು. ವಿಧಾನಸಭೆ, ವಿಧಾನಪರಿಷತ್‍ನಲ್ಲಿ ಚರ್ಚೆಯಾದ ಬಳಿಕವೇ ಇದು ಅನುಷ್ಠಾನಕ್ಕೆ ಬರಲು ಸಾಧ್ಯ ಎಂದು ಹೇಳಿದರು.
8
+ ಈ ಹಿಂದೆ ಸಮೀಕ್ಷೆ ನಡೆಸಿರುವುದು ರಾಜ್ಯಸರ್ಕಾರ. ಅದರ ಕುರಿತು ಏನೆಲ್ಲಾ ಚರ್ಚೆ ನಡೆದಿದೆ. ಸಂಪುಟದಲ್ಲಿ ಏನೆಲ್ಲಾ ವಿಶ್ಲೇಷಣೆಗಳಾಗಿವೆ ಎಂಬ ಮಾಹಿತಿ ತಮಗಿಲ್ಲ. ಈ ಬಗ್ಗೆ ಸರ್ಕಾರವೇ ಸ್ಪಷ್ಟನೆ ನೀಡಬೇಕು. ಆದರೆ ಪಕ್ಷದ ಸದಸ್ಯನಾಗಿ ಈ ಬಗ್ಗೆ ಪ್ರಸ್ತಾಪಿಸುವ ಅಧಿಕಾರ ತಮಗಿದೆ ಎಂದು ತಿಳಿಸಿದರು.
9
+ ಇಂಡಿಯಾ ಮೈತ್ರಿಕೂಟದಿಂದ ಹೊರಬರುವುದೇ ಎಎಪಿ..?
10
+ ಲಿಂಗಾಯತ ಸಮುದಾಯಕ್ಕೆ ಸರಿಯಾದ ಆದ್ಯತೆ ಸಿಗುತ್ತಿಲ್ಲ ಎಂದು ಹಿರಿಯ ನಾಯಕರಾದ ಶ್ಯಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ್ದಾರೆ. ಅದೇ ರೀತಿ ಹಲವು ನಾಯಕರುಗಳು ಚರ್ಚೆ ಮಾಡಿದ್ದಾರೆ. ಆದರೆ ಈ ಬಗ್ಗೆ ತಾವು ಪ್ರತಿಕ್ರಿಯಿಸಲು ಬಯಸುವುದಿಲ್ಲ. ಟೀಕೆ ಮಾಡಿ��ವರೇ ಸ್ಪಷ್ಟನೆ ನೀಡಬೇಕು ಎಂದು ಹೇಳಿದರು.
11
+ ಜಾತಿ ಪ್ರಾತಿನಿಧ್ಯಗಳ ಬಗ್ಗೆ ಈಗಾಗಲೇ ತಾವು ತಮ್ಮ ಅನಿಸಿಕೆಯನ್ನು ಹೇಳಿಯಾಗಿದೆ. ತಮ್ಮ ಹೇಳಿಕೆಗೆ ಕಾಂಗ್ರೆಸ್ ನೋಟಿಸ್ ನೀಡಿದೆ. ಶ್ಯಾಮನೂರು ಶಿವಶಂಕರಪ್ಪ ಅವರಿಗೆ ನೋಟಿಸ್ ನೀಡಿಲ್ಲ ಎಂಬ ಚರ್ಚೆಯನ್ನು ಮಾಡಲು ನಾವು ಬಯಸುವುದಿಲ್ಲ. ನನ್ನ ಮೇಲೆ ಕೆಲವರಿಗೆ ಪ್ರೀತಿ ಜಾಸ್ತಿ. ಹೀಗಾಗಿ ನೋಟಿಸ್ ನೀಡಿದ್ದಾರೆ ಎಂದು ಪ್ರತಿಕ್ರಿಯಿಸಿದರು.
12
+ ದೆಹಲಿ ಭೇಟಿಗೆ ವಿಶೇಷ ಅರ್ಥ ಇಲ್ಲ. 30 ವರ್ಷ ಇಲ್ಲಿ ವಾಸ ಮಾಡಿದ್ದೆ. ಬಹಳಷ್ಟು ಸ್ನೇಹಿತರು ನನಗೆ ದೆಹಲಿಯಲ್ಲಿದ್ದಾರೆ. ಅವರನ್ನು ಭೇಟಿ ಮಾಡಲು ಆಗಮಿಸಿದ್ದೇನೆ. ಹೈಕಮಾಂಡ್ ನಾಯಕರು ಈಗ ರಾಜ್ಯದವರೇ ಆಗಿದ್ದಾರೆ. ಹೀಗಾಗಿ ವರಿಷ್ಠರನ್ನು ಭೇಟಿ ಮಾಡುವ ಬಗ್ಗೆ ವಿಶೇಷ ಏನಿಲ್ಲ ಎಂದರು.
eesanje/url_46_337_7.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ರಾಜ್ಯದಲ್ಲಿ ಜಾತಿ ಜನಗಣತಿ ವರದಿ ಬಿಡುಗಡೆಗೆ ತೀವ್ರಗೊಂಡ ಒತ್ತಡ
2
+ ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿಯನ್ನೇ ಎಬ್ಬಿಸಲಿದೆ ಎಂದೇ ಹೇಳಲಾಗುತ್ತಿರುವ ಜಾತಿ ಜನಗಣತಿ ವರದಿ ಬಿಡುಗಡೆಗೆ ಒತ್ತಡ ಕೇಳಿಬರುತ್ತಿದೆ. ಜಾತಿ ಜನಗಣತಿ ವರದಿಗೆ ಆದಷ್ಟು ಬೇಗ ಸಮ್ಮತಿ ಸೂಚಿಸಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರೂ ಕೂಡಾ ಈ ಪ್ರಕ್ರಿಯೆ ಕೊಂಚ ತಡವಾಗುವ ಸಾಧ್ಯತೆಗಳಿವೆ. ಕಾಂತರಾಜ್ ಆಯೋಗ ಸಿದ್ದಪಡಿಸಿದ್ದ ಸಾಮಾಜಿಕ ಹಾಗೂ ಆರ್ಥಿಕ ಜಾತಿ ಸರ್ವೆ ವರದಿ ಸಿದ್ದಗೊಂಡು ಈಗಾಗಲೇ 5 ವರ್ಷದ ಮೇಲಾಗಿದೆ. ಸದ್ಯ ಈ ವರದಿ ಇನ್ನೂ ಬಹಿರಂಗವಾಗದೆ ಕಡತಗಳು ಧೂಳು ತಿನ್ನುತ್ತಿವೆ.
3
+ ಪ್ರಬಲ ಸಮುದಾಯಗಳು ಈ ವರದಿ ಬಿಡುಗಡೆಗೆ ತೀವ್ರವಾಗಿ ವಿರೋಧವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸಿರುವುದರಿಂದ ಜೇನುಗೂಡಿನಂತಿರುವ ಜಾತಿ ಜನಗಣತಿ ವರದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೈ ಹಾಕಲಿದ್ದಾರೆಯೇ ಎಂಬ ಯಕ್ಷಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಅತ್ತ ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜಾತಿ ಜನಗಣತಿ ವರದಿಯನ್ನು ಬಿಡುಗಡೆ ಮಾಡುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಿದ್ಧಪಡಿಸಿದ್ದ ವರದಿ ಬಿಡುಗಡೆಗೆ ಸಿದ್ಧವಾಗಿ ಹಲವಾರು ವರ್ಷಗಳೇ ಆಗಿದ್ದರೂ ರಾಜಕೀಯ ಕಾರಣಗಳಿಗಾಗಿ ನೆನೆಗುದಿಗೆ ಬಿದ್ದಿದೆ.
4
+ ವಾಸ್ತವವಾಗಿ ಈ ವರದಿ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ 2013 ರಲ್ಲಿ ವಿಶೇಷ ಆಸಕ್ತಿ ವಹಿಸಿ ಅಂದಾಜು 162 ಕೋಟಿ ರೂ.ಗಳ ವೆಚ್ಚದಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕಾಂತರಾಜು ನೇತೃತ್ವದಲ್ಲಿ ಸಮೀಕ್ಷೆಯನ್ನು ನಡೆಸಿದ್ದರು.
5
+ 2016 ರ ವೇಳೆಗೆ ಬಹುತೇಕ ವರದಿ ಪೂರ್ಣಗೊಂಡು ಅಂದು ಸರ್ಕಾರ ಜನರ ನಾಡಿಮಿಡಿತವನ್ನು ಅರಿಯಲು ವರದಿಯನ್ನು ಸೋರಿಕೆ ಮಾಡಿತ್ತು. ಅದೇ ಸಂದರ್ಭದಲ್ಲಿ ವೀರಶೈವ ಲಿಂಗಾಯಿತ ಪ್ರತ್ಯೇಕ ಧರ್ಮ ಮುನ್ನಲೆಗೆ ಬಂದಿತ್ತು.ಇಂತಹ ಸಂದರ್ಭದಲ್ಲಿ ವರದಿಯನ್ನು ಬಿಡುಗಡೆ ಮಾಡಿದರೆ ಸರ್ಕಾರಕ್ಕೆ ತಿರುಗುಬಾಣವಾಗಬಹುದು ಎಂಬ ಆತಂಕದಿಂದ ಸಿದ್ದರಾಮಯ್ಯನವರು ದುಸ್ಸಾಹಸಕ್ಕೆ ಕೈ ಹಾಕಿರಲಿಲ್ಲ. ತದನಂತರ ಬಂದ ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಕೂಡ ವರದಿಯನ್ನು ಕಣ್ಣೆತ್ತಿಯೂ ನೋಡದೆ ಅಕಾರ ಮುಗಿಸಿದ್ದು ಇತಿಹಾಸ.
6
+ ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ
7
+ ವಿಧಾನಸಭೆ ಚುನಾವಣೆ ವೇಳೆ ಸಿದ್ದರಾಮಯ್ಯನವರು, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಜಾತಿ ಜನಗಣತಿಯನ್ನು ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದ್ದರು. ಇದೀಗ ಕಾಂಗ್ರೆಸ್ ಅಭೂತಪೂರ್ವ ಬಹುಮತವನ್ನು ಪಡೆದು ಅಧಿಕಾರಕ್ಕೆ ಬಂದಿದ್ದೂ ಆಗಿದೆ, ಸಿದ್ದರಾಮಯ್ಯನವರು ಸಿಎಂ ಆಗಿದ್ದೂ ಆಗಿದೆ. ಹಿಂದುಳಿದ ವರ್ಗಗಳ ಆಯೋಗ ಸಿದ್ದಪಡಿಸಿರುವ ಈ ವರದಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿ ತದನಂತರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಅಂಗೀಕರಿಸುವುದಷ್ಟೇ ಬಾಕಿ ಉಳಿದಿದೆ.
8
+ ತಲೆಕೆಳಗಾದ ಲೆಕ್ಕಾಚಾರ: ಇದುವರೆಗೂ ರಾಜ್ಯದಲ್ಲಿ ಲಿಂಗಾಯಿತರು, ತದನಂತರ ಒಕ್ಕಲಿಗರು, ಕುರುಬರು, ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತರು, ಪರಿಶಿಷ್ಟ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆಂದು ಭಾವಿಸಲಾಗಿತ್ತು.
9
+ ಆದರೆ ಸರ್ಕಾರ ನಡೆಸಿರುವ ಅಧಿಕೃತ ವರದಿ ಪ್ರಕಾರ, ರಾಜ್ಯದಲ್ಲಿ ದಲಿತರೇ ಹೆಚ್ಚಾಗಿದ್ದು, ಕುರುಬ ಜನಾಂಗವೇ ಅತಿ ಹಿಂದುಳಿದ ಸಮುದಾಯವಾಗಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಜಾತಿ ಗಣತಿ ಮತ್ತು ಜಾತಿ ಮರುವಿಂಗಡಣೆ ವರದಿ ಸಿದ್ಧವಾಗಿದ್ದು. ಇನ್ನೇನು ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.
10
+ ಈ ವರದಿಗೆ ಸರ್ಕಾರ ಸಮ್ಮತಿ ಸೂಚಿಸದೆ ಇರಲು ಹಲವಾರು ಕಾರಣಗಳಿವೆ. ವಿಳಂಬ ಧೋರಣೆ ಅನುಸರಿಸಲು ಕಾನೂನಾತ್ಮಕ ಹಾಗೂ ರಾಜಕೀಯ ಕಾರಣಗಳೂ ಇವೆ. 2024ರ ಲೋಕಸಭಾ ಚುನಾವಣೆವರೆಗೂ ಈ ವರದಿಗೆ ಸಮ್ಮತಿ ಸೂಚಿಸುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ತಡೆ ಹಿಡಿಯುವ ಸಾಧ್ಯತೆಗಳಿವೆ ಎನ್ನುವ ಮಾಹಿತಿ ಮೂಲಗಳಿಂದ ಲಭ್ಯವಾಗಲಿದೆ. ಮುಂದಿನ ವರ್ಷ ಏಪ್ರಿಲ್ – ಮೇ ವೇಳೆಗೆ ಚುನಾಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ವರದಿ ಬಗ್ಗೆ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
11
+ ನಿಜ್ಜರ್ ಹತ್ಯೆ ತನಿಖೆಗೆ ಸಹಕರಿಸುವಂತೆ ಭಾರತಕ್ಕೆ ಅಮೆರಿಕ ಮನವಿ
12
+ ಕಾಂತರಾಜ್ ಸಮಿತಿಯು ಜಾತ್ಯಾಧಾರಿತ ಜನ ಗಣತಿ ರೂಪಿಸುವಾಗ ತಪ್ಪು ಲೆಕ್ಕ ಹಾಕಿದೆ ಎನ್ನುವ ಕೆಲವು ಸಮುದಾಯಗಳ ವಾದವಾಗಿತ್ತು. ಈ ಜಾತಿ ಗಣತಿ ವರದಿ ಮಾಧ್ಯಮಗಳಿಗೆ ಸೋರಿಕೆ ಕೂಡಾ ಆಗಿತ್ತು. ಈ ವರದಿಗಳ ಪ್ರಕಾರ ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ಲಿಂಗಾಯತ ಸಮುದಾಯ ಕೇವಲ ಶೇ. 14 ಹಾಗೂ ಒಕ್ಕಲಿಗ ಸಮುದಾಯ ಕೇವಲ ಶೇ. 11ರಷ್ಟು ಪ್ರತಿನಿಸುತ್ತದೆ ಎಂಬ ಮಾಹಿತಿ ಇದೆ ಎನ್ನಲಾಗಿದೆ.
13
+ ಇದೇ ವಿಚಾರವಾಗಿ ಕೆಲವು ಸಮುದಾಯಗಳ ನಾಯಕರು ಹೈಕೋರ್ಟ್ ಮೊರೆ ಹೋಗಿದ್ದರು. ಜಾತಿ ಗಣತಿ ನಡೆಸೋದು ಕೇಂದ್ರ ಸರ್ಕಾರದ ವಿಶೇಷಾಕಾರ. ಈ ಅಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದವು. ಇನ್ನೊಂದೆಡೆ ಒಬಿಸಿ ಸಮುದಾಯಗಳ ಕಾರ್ಯಕರ್ತರೂ ನ್ಯಾಯಾಲಯದ ಮೊರೆ ಹೋಗಿದ್ದರು. ಸರ್ಕಾರವು ವರದಿಯನ್ನು ಒಪ್ಪಿ ಅದರ ಶಿಫಾರಸ್ಸುಗಳನ್ನು ಜಾರಿ ಮಾಡಬೇಕೆಂದು ಆಗ್ರಹಿಸಿದ್ದರು. ಸದ್ಯ ಎರಡೂ ಪ್ರಕರಣಗಳ ವಿಚಾರಣೆ ನ್ಯಾಯಾಲಯದಲ್ಲಿ ಬಾಕಿ ಇದೆ.
14
+ ಜಾತಿವಾರು ಜನಸಂಖ್ಯೆ
eesanje/url_46_337_8.txt ADDED
@@ -0,0 +1,5 @@
 
 
 
 
 
 
1
+ ಜಾತಿಜನಗಣತಿ ಬಿಡುಗಡೆಗೆ ಸಚಿವ ಸತೀಶ್ ಜಾರಕಿಹೊಳಿ ಒತ್ತಾಯ
2
+ ಬೆಳಗಾವಿ, ಅ.3- ಜಾತಿಜನಗಣತಿ ವರದಿ ನಮ್ಮಲ್ಲಿ ಸಿದ್ಧವಾಗಿದ್ದು, ಅದು ಶೀಘ್ರವಾಗಿ ಬಿಡುಗಡೆಯಾಗಿ ಜಾರಿಗೆ ಬರಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಲಹೆ ನೀಡಿದ್ದಾರೆ. ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಆಡಳಿತದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 162 ಕೋಟಿ ರೂ.ಗಳಿಗೂ ಹೆಚ್ಚು ಅನುದಾನ ಖರ್ಚು ಮಾಡಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿತ್ತು. ಅದು ಸಿದ್ಧವಾಗಿದೆ. ಅದನ್ನು ಅನುಷ್ಠಾನಕ್ಕೆ ತರಬೇಕು ಎಂದು ನಮ್ಮಲ್ಲೂ ವ್ಯಾಪಕ ಒತ್ತಾಯಗಳಿವೆ ಎಂದರು.
3
+ ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ
4
+ ರಾಜ್ಯಸರ್ಕಾರ ಕೂಡ ಈ ನಿಟ್ಟಿನಲ್ಲಿ ಚರ್ಚೆ ನಡೆಸುತ್ತಿದೆ. ವರದಿ ಜಾರಿಯ ನಂತರ ಜನಸಂಖ್ಯೆಗನುಗುಣವಾಗಿ ಸಮುದಾಯಗಳಿಗೆ ಆದ್ಯತೆ ನೀಡುವುದು, ಬಜೆಟ್‍ನಲ್ಲಿ ಅನುದಾನ ಮೀಸಲಿಡುವುದು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲು ಸಹಾಯವಾಗುತ್ತದೆ. ಹೀಗಾಗಿ ವರದಿ ಅನುಷ್ಠಾನದಿಂದ ಲಾಭವಾಗಲಿದೆ ಎಂದು ಹೇಳಿದರು.
5
+ ಬಿಹಾರದಲ್ಲಿ ನಿತೀಶ್ ಕುಮಾರ್ ಸರ್ಕಾರ ಜಾತಿ ಆಧಾರಿತ ಸಮೀಕ್ಷಾ ವರದಿಯನ್ನು ಅನುಷ್ಠಾನಕ್ಕೆ ತಂದಿರುವುದು ಉತ್ತಮ ಬೆಳವಣಿಗೆ ಎಂದರು.
eesanje/url_46_337_9.txt ADDED
@@ -0,0 +1,8 @@
 
 
 
 
 
 
 
 
 
1
+ ರಾಜ್ಯದಲ್ಲಿ ಎಲ್ಲಿಯೂ ಕೋಮುಗಲಭೆಗಳಾಗಿಲ್ಲ : ಸಿಎಂ ಸಿದ್ದರಾಮಯ್ಯ
2
+ ಬೆಳಗಾವಿ, ಅ.3- ಪ್ರತಿಪಕ್ಷ ಬಿಜೆಪಿಯವರು ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಎಲ್ಲಿಯೂ ಕೋಮುಗಲಭೆಗಳಾಗಿಲ್ಲ. ಶಿವಮೊಗ್ಗದಲ್ಲಿ ಕಲ್ಲು ತೂರಾಟವಾಗಿರುವ ಪ್ರಕರಣ ವರದಿಯಾಗಿದ್ದು, ತಕ್ಷಣವೇ ಕ್ರಮ ಕೈಗೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಮ್ಮ ಸರ್ಕಾರದಲ್ಲಿ ಕೋಮುಗಲಭೆಗಳು ನಡೆಯಲು ಅವಕಾಶವಿಲ್ಲ. ಯಾವುದೇ ಗೊಂದಲವಾದರೂ ತಕ್ಷಣ ಹತ್ತಿಕ್ಕುತ್ತೇವೆ ಎಂದು ಹೇಳಿದರು. ಬಿಜೆಪಿಯವರಿಗೆ ಆರೋಪ ಮಾಡುವುದನ್ನು ಬಿಟ್ಟರೆ ಬೇರೆ ಕೆಲಸ ಇಲ್ಲ. ಆದರೆ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ರಾಜ್ಯದಲ್ಲಿ ಎಲ್ಲಿಯೂ ಕೋಮುಗಲಭೆಯಾಗಿಲ್ಲ. ಶಿವಮೊಗ್ಗ ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ತಪ್ಪಿತಸ್ಥರನ್ನು ಬಂಧಿಸಿದ್ದಾರೆ ಎಂದು ತಿಳಿಸಿದರು.
4
+ ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ
5
+ ಕೋಲಾರ ಸೇರಿದಂತೆ ವಿವಿಧೆಡೆ ಬಿಜೆಪಿಯ ಪ್ರತಿಭಟನೆಗಳು ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಅವಕಾಶಗಳಿವೆ. ಆದರೆ ಅದಕ್ಕೆ ಸಕಾರಣಗಳಿರಬೇಕು ಎಂದು ಹೇಳಿದರು. ತಮ್ಮ ಸರ್ಕಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗಿಲ್ಲ, ಅನ್ಯಾಯ ಆಗಲು ಬಿಡುವುದೂ ಇಲ್ಲ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ. ಹಿರಿಯ ನಾಯಕರಾದ ಶ್ಯಾಮನೂರು ಶಿವಶಂಕರಪ್ಪನವರ ಜೊತೆ ತಾವು ಚರ್ಚೆ ಮಾಡುತ್ತೇವೆ ಎಂದರು.
6
+ ರಾಜ್ಯದಲ್ಲಿ ಬೇರೆ ಬೇರೆ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ. ಒಕ್ಕಲಿಗರ ಹೋರಾಟ ಸಮಿತಿಯವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದರು. ಅದನ್ನು ಆಧರಿಸಿ ಡಿ.ಕೆ.ಶಿವಕುಮಾರ್ ತಮಗೆ ಪತ್ರ ಬರೆದಿದ್ದಾರೆ. ಇಂದಷ್ಟೇ ತಾವು ಅದನ್ನು ನೋಡಿದ್ದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
7
+ ಕುರುಬ ಸಮುದಾಯದಿಂದ ನಾಯಕರಾದ ರೇವಣ್ಣ, ವಿಶ್ವನಾಥ್ ಸೇರಿದಂತೆ ಅನೇಕರು ಇಂದು ಬೆಳಗಾವಿಯಲ್ಲಿ ಸಮಾವೇಶ ಆಯೋಜಿಸಿದ್ದಾರೆ. ತಮ್ಮನ್ನೂ ಹಾಗೂ ಹರಿಯಾಣದ ರಾಜ್ಯಪಾಲರನ್ನೂ ಸಮಾವೇಶಕ್ಕೆ ಆಹ್ವಾನಿಸಿದ್ದಾರೆ. ಈ ಸಮಾವೇಶಕ್ಕೆ ಪ್ರತಿಯಾಗಿ ಶ್ಯಾಮನೂರು ಶಿವಶಂಕರಪ್ಪ ಲಿಂಗಾಯತ ಸಮುದಾಯಕ್ಕೆ ಅನ್ಯಾಯವಾಗಿದೆ ಎಂಬ ಹೇಳಿಕೆ ನೀಡಿದ್ದಾರೆ ಎಂಬ ವಾದ ಸರಿಯಲ್ಲ ಎಂದರು. ಬೆಳಗಾವಿ ಜಿಲ್ಲೆ ವಿಭಜನೆಗೆ ಸಂಬಂಧಪಟ್ಟಂತೆ ಮುಂದಿನ ದಿನಗಳಲ್ಲಿ ಪರಿಶೀಲನೆ ನಡೆಸುವುದಾಗಿ ಅವರು ಸ್ಪಷ್ಟಪಡಿಸಿದರು.
8
+ ನಿಜ್ಜರ್ ಹತ್ಯೆ ತನಿಖೆಗೆ ಸಹಕರಿಸುವಂತೆ ಭಾರತಕ್ಕೆ ಅಮೆರಿಕ ಮನವಿ
eesanje/url_46_338_1.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ಬಿಜೆಪಿ-ಜೆಡಿಎಸ್ ಮೈತ್ರಿ ವಿರುದ್ಧ ಡಿಕೆಶಿ ಗುಡುಗು
2
+ ಬೆಂಗಳೂರು, ಅ.2- ನಾಯಕ ರಾಗಲು ತಮ್ಮ ವೈಯಕ್ತಿಕ ಲಾಭಗಳಿಗೆ ಎಲ್ಲಿ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುವುದಾದರೆ ಅವರನ್ನು ನಂಬಿದ್ದ ಕಾರ್ಯಕರ್ತರು, ಮುಖಂಡರ ಗತಿ ಏನು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಪಕ್ಷದ ಕಚೇರಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಚನ್ನಪಟ್ಟಣದ ಮಾಜಿ ಶಾಸಕ ಎಂ.ಸಿ.ಅಶ್ವತ್ಥ್ ಹಾಗೂ ಮತ್ತಿತರರು ಕಾಂಗ್ರೆಸ್ ಸೇರ್ಪಡೆ ವೇಳೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
3
+ 5 ವರ್ಷದಲ್ಲಿ ರಾಜ್ಯದ ಸಮಸ್ಯೆಯನ್ನು ಬಗೆಹರಿಸದಿದ್ದರೆ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ, ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಪದೇ ಪದೇ ಹೇಳುತ್ತಿದ್ದಾರೆ. ದಂಡನಾಯಕರು ಈ ರೀತಿ ಹೇಳಿದರೆ ಪಕ್ಷ, ಅದರ ಮುಖಂಡರು, ಕಾರ್ಯಕರ್ತರ ಗತಿ ಏನಾಗಬೇಕು, ಯಾರನ್ನು ನಂಬಿಕೊಂಡು ರಾಜಕಾರಣ ಮಾಡಬೇಕು ಎಂದು ಪ್ರಶ್ನಿಸಿದರು.
4
+ ತಮ್ಮ ಅನುಕೂಲಕ್ಕಾಗಿ ಒಂದೇ ದಿನದಲ್ಲಿ ಯಾರ ಜೊತೆ ಬೇಕಾದರೂ ಮೈತ್ರಿ ಮಾಡಿಕೊಳ್ಳಬಹುದು. ಸಿದ್ಧಾಂತ ನಂಬಿಕೊಂಡು ರಾಜಕಾರಣ ಮಾಡುವವರು ಏನಾಗಬೇಕು, ಕಾಂಗ್ರೆಸ್ ಪಕ್ಷದಲ್ಲಿ ವಿಧಾನಪರಿಷತ್ ಸದಸ್ಯರಾಗಿದ್ದ ಸಿ.ಎಂ.ಇಬ್ರಾಹಿಂ ರಾಜಿನಾಮೆ ಕೊಟ್ಟು ಜೆಡಿಎಸ್ ಸೇರಿದ್ದರು. ನೀವು ಈ ಮೊದಲು ಅವರಿಗೆ ಕೊಟ್ಟ ಮಾತು ಏನಾಯಿತು. ಮೈತ್ರಿ ವಿಷಯ ಇಬ್ರಾಹಿಂಗೆ ಮಾಹಿತಿ ಇಲ್ಲವಂತೆ ಎಂದು ಲೇವಡಿ ಮಾಡಿದರು.
5
+ ಇಬ್ರಾಹಿಂ ಸೇರ್ಪಡೆಯಾಗುವಾಗ ಮಿಸ್ಟರ್ ಶಿವಕುಮಾರ್ ಎಂದು ನನ್ನನ್ನು ಹಂಗಿಸಿದರು. ನಾನು ಪಕ್ಷದ ಅಧ್ಯಕ್ಷನಾಗಿದ್ದಾಗ ನಮ್ಮ ಪಕ್ಷದ ನಾಯಕನನ್ನು ಸೇರ್ಪಡೆ ಮಾಡಿಸಿಕೊಂಡಿದ್ದು ರಾಜಕೀಯ ಚದುರಂಗದಾಟವಲ್ಲವೆ, ಹಾವು- ಏಣಿ ಆಟ ಅಲ್ಲವೇ, ಫುಟ್ಬಾಲ್ ಆಟ ಅಲ್ಲವೇ, ಈಗ ಜೆಡಿಎಸ್ ನಲ್ಲಿರುವವರು ಸಾಗರೋಪಾದಿ ಯಲ್ಲಿ ಕಾಂಗ್ರೆಸ್‍ನತ್ತ ಬರುತ್ತಿದ್ದಾರೆ. ನಾವು ಯಾರನ್ನೂ ಕರೆಯಬೇಕಿಲ್ಲ. ಬರುವವರನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಎಂದು ಹೇಳಿದರು.
6
+ ಮುಂದಿನ ದಿನಗಳಲ್ಲಿ ಬೀದರ್‍ನಿಂದ ಚಾಮರಾಜನಗರದವರೆಗೂ ಎಲ್ಲಾ ಜಿಲ್ಲೆಗಳಲ್ಲಿ ಸಾವಿರಾರು ಮಂದಿ ಕಾಂಗ್ರೆಸ್ ಸೇರುತ್ತಿದ್ದಾರೆ. ನಮ್ಮ ಪಕ್ಷ ಸಿದ್ಧಾಂತದ ಮೇಲೆ ನಿಂತಿದೆಯೇ ಹೊರತು ವ್ಯಕ್ತಿಯ ಮೇಲೆ ನಿಂತಿಲ್ಲ. ನಾನಿಲ್ಲದೇ ಹೋದರೂ ಪಕ್ಷ ನಿಮ್ಮನ್ನು ರಕ್ಷಣೆ ಮಾಡಲಿದೆ ಎಂದು ತಿಳಿಸಿದರು.
7
+ ಶಿವಮೊಗ್ಗ ಗಲಾಟೆಗೆ ಸಂಬಂಧಿಸಿದಂತೆ 43 ಮಂದಿ ಬಂಧನ : ಸಿಎಂ
8
+ ಮುಂದಿನ ದಿನಗಳಲ್ಲಿ ಚನ್ನಪಟ್ಟಣದಲ್ಲಿ ಬೃಹತ್ ಕಾರ್ಯಕ್ರಮ ಮಾಡಿ ಇನ್ನಷ್ಟು ಕಾರ್ಯಕರ್ತರು ಹಾಗೂ ಮುಖಂಡರನ್ನು ಕಾಂಗ್ರೆಸ್ ಗೆ ಸೇರಿಸಿಕೊಳ್ಳಲಾಗುವುದು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಿಸ್ಟರ್ ಶಿವಕುಮಾರ್ ನಿಮ್ಮ ಆಟ ನಡೆಯುವುದಿಲ್ಲ ಎಂದು ನನಗೆ ಎಚ್ಚರಿಕೆ ನೀಡಿದ್ದಾರೆ. ಹಿರಿಯರ ಮ��ತುಗಳನ್ನು ಆಶೀರ್ವಾದ ಎಂದು ಭಾವಿಸುತ್ತೇನೆ. ಆದರೆ ದೇವೇಗೌಡರ ಪುತ್ರರು ಜನತಾದಳವನ್ನು ವಿಸರ್ಜನೆ ಮಾಡುತ್ತೇನೆ ಎಂದು ಪದೇ ಪದೇ ಹೇಳುತ್ತಿದ್ದಾರೆ. ಹಾಗಾದರೆ ಕಾರ್ಯಕರ್ತರು ಎಲ್ಲಿ ಹೋಗಬೇಕು, ಬಿಜೆಪಿ ಜೊತೆ ಯಾವುದೇ ಕಾರಣಕ್ಕೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಈ ಮೊದಲು ಹೇಳಿದ್ದವರು ಈಗ ಮಾಡಿದ್ದೇನು, ರಾಜ್ಯದ ಜನರಿಗೆ ನಿಮ್ಮಿಂದ ಯಾವ ಸಂದೇಶ ರವಾನೆಯಾಗಿದೆ ಎಂದು ಪ್ರಶ್ನಿಸಿದರು.
9
+ ಪ್ರತಿಯೊಂದು ಮನೆಯಿಂದಲೂ ಒಬ್ಬೊಬ್ಬ ಕಾರ್ಯಕರ್ತರನ್ನು ಕಾಂಗ್ರೆಸ್‍ಗೆ ಸೇರ್ಪಡೆ ಮಾಡಿಕೊಳ್ಳುವುದು ನಮ್ಮ ಜವಾಬ್ದಾರಿ. ಆ ಕೆಲಸವನ್ನು ನಮ್ರತೆಯಿಂದ ಮಾಡುತ್ತೇನೆ. ಕುಮಾರಸ್ವಾಮಿಯವರನ್ನು ಬೆಳೆಸಿದ ಜನರೇ ಇಂದು ಆ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಎಷ್ಟೇ ಬೆದರಿಸಿ, ಹೆದರಿಸಿದರೂ, ಬುಲೆಟ್‍ನ ಮಾತುಗಳನ್ನಾಡಿದರು. ಅದನ್ನು ಮೀರಿ ಕಾಂಗ್ರೆಸ್ ಸೇರಿದ್ದಾರೆ ಎಂದು ಹೇಳಿದರು.
10
+ ಕಾಂಗ್ರೆಸ್ ಸೇರ್ಪಡೆಯಾದ ಜೆಡಿಎಸ್ ನಾಯಕರು ಕ್ಷೇತ್ರಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಅನ್ನು ಸಂಘಟಿಸಬೇಕು ಎಂದು ಸಲಹೆ ನೀಡಿದರು. ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಬಿಜೆಪಿ, ಜೆಡಿಎಸ್ ಪಕ್ಷಗಳ ಸಿದ್ಧಾಂತಗಳೇ ಬೇರೆ. ಅದನ್ನು ಮರೆತು ಮೈತ್ರಿ ಮಾಡಿಕೊಂಡಿದ್ದಾರೆ. ಈಗಾಗಲೇ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಎರಡು ಪಕ್ಷಗಳು ಲೋಕಸಭೆ ಚುನಾವಣೆಯಲ್ಲಿ ಪಾಠ ಕಲಿಯಲಿವೆ ಎಂದು ಎಚ್ಚರಿಸಿದರು.
11
+ ಸಚಿವ ಜಮೀರ್ ಅಹಮ್ಮದ್ ಖಾನ್, ಚನ್ನಪಟ್ಟಣದಲ್ಲಿ ಕುಮಾರಸ್ವಾಮಿಯವರು 60-70 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿಲ್ಲ. ಕೇವಲ 12 ಸಾವಿರ ಮತಗಳ ಅಂತರದಿಂದ ಗೆದ್ದಿದ್ದಾರೆ. ಅವರ ಗೆಲುವಿಗೆ ಮುಸಲ್ಮಾನರ ಮತಗಳೇ ಕಾರಣ. ಈಗ ಮುಸಲ್ಮಾನರು ನನಗೆ ಅನಿವಾರ್ಯವಾಗಿ ಮತ ನೀಡಿದ್ದಾರೆ ಎಂಬ ಹೇಳಿಕೆಗಳು ತೀವ್ರ ನೋವುಂಟು ಮಾಡಿವೆ ಎಂದರು.
12
+ ಶಿವಮೊಗ್ಗದಲ್ಲಿ ಪೊಲೀಸರ ಕ್ರಮದಿಂದ ದೊಡ್ಡ ಅನಾಹುತ ತಪ್ಪಿದೆ : ಗೃಹಸಚಿವ ಪರಮೇಶ್ವರ್
13
+ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ರಾಜ್ಯಾದ್ಯಂತ 50 ರಿಂದ 70 ಜನ ಪಾಲಿಕೆ ಸದಸ್ಯರು, ಮಾಜಿ ಶಾಸಕರು, ಪ್ರಮುಖ ನಾಯಕರು, ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ದೇವೇಗೌಡರು ಜಾತ್ಯತೀತರು ಎಂದು ಈಗಲೂ ನಾನು ನಂಬುತ್ತೇನೆ. ಆದರೆ ಕುಮಾರಸ್ವಾಮಿ ಪ್ಯಾಂಟ್ ಒಳಗೆ ಖಾಕಿ ಚಡ್ಡಿ ಹಾಕಿಕೊಂಡು ರಾಜಕಾರಣ ಮಾಡಿದವರು. ಈಗ ತಮ್ಮ ಅಸಲಿ ಬಣ್ಣ ಬಯಲು ಮಾಡಿಕೊಂಡಿದ್ದಾರೆ ಎಂದು ಹೇಳಿದರು.
14
+ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಅಶ್ವತ್ಥ ನಾರಾಯಣ ಮಾತನಾಡಿ, ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದರಿಂದಾಗಿ ಬೇಸರವಾಗಿ ಹಾಗೂ ಸಂಸದ ಡಿ.ಕೆ.ಶಿವಕುಮಾರ್ ಅವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದರು.
15
+ ಅಲ್ಪಸಂಖ್ಯಾತ ಮುಖಂಡ ಜಬಿವುಲ್ಲಾಖಾನ್ ಅವರು ಮಾತನಾಡಿ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯವರ���್ನು ಸೋಲಿಸಬೇಕೆಂದು ಕಾಂಗ್ರೆಸ್‍ನವರ ಕೈ, ಕಾಲನ್ನು ಹಿಡಿದು ಕುಮಾರಸ್ವಾಮಿಯವರಿಗೆ ಮತ ಹಾಕಿಸಿದ್ದೆವು. ಈಗ ಅಲ್ಪಸಂಖ್ಯಾತರ ಕುರಿತು ಹಗುರವಾಗಿ ಮಾತನಾಡುತ್ತಿರುವುದನ್ನು ಕೇಳಿದರೆ ಮನಸ್ಸಿಗೆ ನೋವಾಗುತ್ತಿದೆ ಎಂದು ಹೇಳಿದರು.
eesanje/url_46_338_10.txt ADDED
@@ -0,0 +1,6 @@
 
 
 
 
 
 
 
1
+ ಕಾವೇರಿ ವಿವಾದ ಪರಿಹಾರಕ್ಕೆ ಸಂಕಷ್ಟ ಸೂತ್ರ ಅಗತ್ಯ : ಎಸ್.ಎಂ.ಕೃಷ್ಣ
2
+ ಬೆಂಗಳೂರು,ಅ.1- ಕಾವೇರಿ ನದಿನೀರು ಹಂಚಿಕೆ ವಿಚಾರದಲ್ಲಿ ಸಂಕಷ್ಟ ಸೂತ್ರವನ್ನು ರೂಪಿಸುವುದು ಅಗತ್ಯ ಎಂದು ಮಾಜಿ ಮುಖ್ಯ ಮಂತ್ರಿ ಎಸ್.ಎಂ.ಕೃಷ್ಣ ಅವರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಕಷ್ಟ ಸೂತ್ರ ರೂಪಿಸುವ ಮೂಲಕ ಕಾವೇರಿ ವಿವಾದಕ್ಕೆ ತೆರೆ ಎಳೆಯಬೇಕು. ಕಾವೇರಿ ನದಿಪಾತ್ರದ ನಾಲ್ಕೂ ರಾಜ್ಯಗಳು ಸಂಕಷ್ಟ ಸೂತ್ರದ ಬಗ್ಗೆ ಚರ್ಚಿಸಿ ಆನಂತರ ಸಂಕಷ್ಟ ಸೂತ್ರದ ಚೌಕಟ್ಟಿನಲ್ಲಿ ನದಿ ನೀರು ನಿರ್ವಹಣೆ ಬಗ್ಗೆ ಸೂಕ್ತ ತೀರ್ಮಾನವನ್ನು ಮಾಡಬೇಕು ಎಂದು ಸಲಹೆ ಮಾಡಿದರು.
3
+ ತಾವು ಮುಖ್ಯಮಂತ್ರಿ ಯಾಗಿದ್ದ ಸಂದರ್ಭದಲ್ಲಿ ಕಾವೇರಿ ವಿಚಾರದಲ್ಲಿ ಇಂಥದ್ದೇ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ ಸಂಧಾನ ಮಾಡಲು ಯತ್ನ ಮಾಡಿದರೂ ಸಫಲವಾಗಲಿಲ್ಲ. ಅಂತಿಮವಾಗಿ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಬೇಕಾಯಿತು ಎಂದು ಹೇಳಿದರು. ಆಗ ಸುಪ್ರೀಂಕೋರ್ಟ್‍ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ವೆಂಕಟಾಚಲ ಅವರಂತಹ ಕಾನೂನು ಪರಿಣಿತರ ಸಲಹೆ ಪಡೆದು ಮುಂದಿನ ಹೆಜ್ಜೆ ಇಡಲಾಗುತ್ತಿತ್ತು. ಅದೇ ರೀತಿ ಈ ಸರ್ಕಾರವು ಮುಂದುವರೆಯಬೇಕು ಎಂದು ಅವರು ಸಲಹೆ ನೀಡಿದರು.
4
+ ಬಿಜೆಪಿ ಅಧಿಕಾರದಲ್ಲಿದ್ದಾಗ ಪೊಲೀಸ್ ಠಾಣೆಗೆ ಕೂಡ ರಕ್ಷಣೆ ಇರಲಿಲ್ಲ : ಸಚಿವ ಖರ್ಗೆ
5
+ ಕಾವೇರಿ ಜಲಾನಯನ ಭಾಗದಲ್ಲಿ ಮಳೆ ಕಡಿಮೆಯಾದಾಗ ಕಾವೇರಿ ವಿಚಾರ ಸದ್ದು ಮಾಡುತ್ತದೆ. ಮಳೆಗಾಲ ಕ್ಷೀಣಿಸಿದಾಗ ನೀರಿಗಾಗಿ ಒತ್ತಡ ಉಂಟಾಗಲಿದೆ. ತಮಿಳುನಾಡಿನ ಹೇಳಿಕೆಗಳು ಬಹಳ ಮಟ್ಟಿಗೆ ವಸ್ತುಸ್ಥಿತಿಗೆ ನಾಚಿಸುವಂತಿವೆ. ಕಾವೇರಿ ವಿಚಾರದಲ್ಲಿ ಕರ್ನಾಟಕ ತೆಗೆದುಕೊಂಡ ನಿಲುವನ್ನು ಸಮರ್ಥಿಸುವುದಾಗಿ ಹೇಳಿದರು.
6
+ ರಾಜಕಾರಣ ಮಾತನಾಡು ವುದಿಲ್ಲ:ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಎಸ್.ಎಂ.ಕೃಷ್ಣಾ ಅವರು ನಾನೀಗ ರಾಜಕಾರಣದಲ್ಲಿ ಇಲ್ಲ. ಹೀಗಾಗಿ ಮೈತ್ರಿ ವಿಚಾರದಲ್ಲಿ ನನ್ನ ನಿಲುವು ಅಪ್ರಸ್ತುತ ಎಂದರು.