CoolCoder44 commited on
Commit
10f0b2c
·
verified ·
1 Parent(s): 1a7040e

48e4df51ca6d6c60b2271da5dc7c64ce5d5637c37e86e464ccd9b932c86effff

Browse files
Files changed (50) hide show
  1. eesanje/url_46_77_1.txt +3 -0
  2. eesanje/url_46_77_10.txt +8 -0
  3. eesanje/url_46_77_11.txt +7 -0
  4. eesanje/url_46_77_12.txt +9 -0
  5. eesanje/url_46_77_2.txt +6 -0
  6. eesanje/url_46_77_3.txt +10 -0
  7. eesanje/url_46_77_4.txt +5 -0
  8. eesanje/url_46_77_5.txt +6 -0
  9. eesanje/url_46_77_6.txt +13 -0
  10. eesanje/url_46_77_7.txt +7 -0
  11. eesanje/url_46_77_8.txt +5 -0
  12. eesanje/url_46_77_9.txt +5 -0
  13. eesanje/url_46_78_1.txt +12 -0
  14. eesanje/url_46_78_10.txt +9 -0
  15. eesanje/url_46_78_11.txt +12 -0
  16. eesanje/url_46_78_12.txt +5 -0
  17. eesanje/url_46_78_2.txt +4 -0
  18. eesanje/url_46_78_3.txt +6 -0
  19. eesanje/url_46_78_4.txt +16 -0
  20. eesanje/url_46_78_5.txt +9 -0
  21. eesanje/url_46_78_6.txt +5 -0
  22. eesanje/url_46_78_7.txt +9 -0
  23. eesanje/url_46_78_8.txt +5 -0
  24. eesanje/url_46_78_9.txt +10 -0
  25. eesanje/url_46_79_1.txt +8 -0
  26. eesanje/url_46_79_10.txt +8 -0
  27. eesanje/url_46_79_11.txt +3 -0
  28. eesanje/url_46_79_12.txt +8 -0
  29. eesanje/url_46_79_2.txt +6 -0
  30. eesanje/url_46_79_3.txt +5 -0
  31. eesanje/url_46_79_4.txt +11 -0
  32. eesanje/url_46_79_5.txt +6 -0
  33. eesanje/url_46_79_6.txt +5 -0
  34. eesanje/url_46_79_7.txt +5 -0
  35. eesanje/url_46_79_8.txt +6 -0
  36. eesanje/url_46_79_9.txt +6 -0
  37. eesanje/url_46_7_1.txt +11 -0
  38. eesanje/url_46_7_10.txt +9 -0
  39. eesanje/url_46_7_11.txt +8 -0
  40. eesanje/url_46_7_12.txt +9 -0
  41. eesanje/url_46_7_2.txt +10 -0
  42. eesanje/url_46_7_3.txt +14 -0
  43. eesanje/url_46_7_4.txt +13 -0
  44. eesanje/url_46_7_5.txt +10 -0
  45. eesanje/url_46_7_6.txt +8 -0
  46. eesanje/url_46_7_7.txt +6 -0
  47. eesanje/url_46_7_8.txt +10 -0
  48. eesanje/url_46_7_9.txt +7 -0
  49. eesanje/url_46_80_1.txt +12 -0
  50. eesanje/url_46_80_10.txt +11 -0
eesanje/url_46_77_1.txt ADDED
@@ -0,0 +1,3 @@
 
 
 
 
1
+ ಆತ್ಮಹತ್ಯೆಗೆ ಮುಂದಾಗಿದ್ದ ವ್ಯಕ್ತಿಯ ಜೀವ ಉಳಿಸಿದ ಪೊಲೀಸರು
2
+ ಹುಬ್ಬಳ್ಳಿ,ಜು.14-ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ನೆಲ್ಲಿಹರವಿ ಗ್ರಾಮದಲ್ಲಿ ಆತಹತ್ಯೆಗೆ ಮುಂದಾಗಿದ್ದ ವ್ಯಕ್ತಿಯನ್ನು ಉಳಿಸಿ ಕಲಘಟಗಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.
3
+ ತಾಲ್ಲೂಕಿನ ನೆಲ್ಲಿಹರವಿ ಗ್ರಾಮದ ಶಂಭುಲಿಂಗಯ್ಯ ಹುಲಸೋಗಿ ಕುಡಿದ ಮತ್ತಿನಲ್ಲಿ ನೇಣಿ ಹಾಕಿಕೊಳ್ಳಲು ಮುಂದಾಗಿದ್ದ,ಮನೆಯಲ್ಲಿ ನೇಣು ಬಿಗಿದು ಆತಹತ್ಯೆ ಮಾಡಿಕೊಳ್ಳುತ್ತಿದ್ದಾಗ ಏಕಾಏಕಿ 112ಗೆ ಕರೆ ಬಂದ ಹಿನ್ನಲೆ ಅಲರ್ಟ್ ಆದ ಪೊಲೀಸ್ ಸಿಬ್ಬಂದಿ ಗಣೇಶ್ ಹಾಗೂ ಸಂಗನಗೌಡರ ಅವರು ಸ್ಥಳಕ್ಕೆ ದೌಡಾಯಿಸಿ ನೇಣಿಗೆ ಕೊರಳೊಡ್ಡಿದ ಶಂಭುಲಿಂಗಯ್ಯ ಪ್ರಾಣ ಉಳಿಸಿದ್ದಾರೆ. ಸದ್ಯ ಕಲಘಟಗಿ ತಾಲೂಕ ಆಸ್ಪತ್ರೆಯಲ್ಲಿ ಶಂಭುಲಿಂಗಯ್ಯನಿಗೆ ಚಿಕಿತ್ಸೆ ನೀಡಲಾಗುತ್ತಿದೆ.
eesanje/url_46_77_10.txt ADDED
@@ -0,0 +1,8 @@
 
 
 
 
 
 
 
 
 
1
+ ಸನಾತನ ಧರ್ಮ ಉಳಿಸಲು ಹೋರಾಟ ಅನಿವಾರ್ಯ : ಬಾಲಿ ಸೆನೆಟರ್
2
+ ಬೆಂಗಳೂರು,ಜು.13– ಹಿಂದೂ ಧರ್ಮವನ್ನು ಉಳಿಸುವ ನಿಟ್ಟಿನಲ್ಲಿ ಭಾರತ ಮತ್ತು ಇಂಡೋನೇಷ್ಯಾ ಜಂಟಿಯಾಗಿ ಹೋರಾಟ ನಡೆಸಲು ಮುಂದಾಗುವ ಅವಶ್ಯಕತೆ ಇದೆ ಎಂದು ಬಾಲಿ ಸೆನೆಟರ್(ಸಂಸದ) ಡಾ.ಗುಸ್ತಿ ಆರ್ಯ, ವೇದಕರ್ಣ ಮಹೇಂದ್ರದತ್ತ ವೇದಸ್ವರಪುತ್ರ ಸೂರ್ಯ ಅವರು ಹೇಳಿದ್ದಾರೆ.
3
+ ಕರ್ನಾಟಕದ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಅರವಿಂದ ಲಿಂಬಾವಳಿ ಅವರು ಇತ್ತೀಚೆಗೆ ಇಂಡೋನೇಷ್ಯಾಕ್ಕೆ ಭೇಟಿ ನೀಡಿದ್ದರು. ಲಿಂಬಾವಳಿಯವರು ಬಾಲಿ ದ್ವೀಪಕ್ಕೆ ಭೇಟಿ ನೀಡಿದ ವೇಳೆ ಸ್ಥಳೀಯ ಸಂಸದರಾಗಿರುವ ಡಾ. ಗುಸ್ತಿ ಆರ್ಯ ವೇದಕರ್ಣ ಮಹೇಂದ್ರದತ್ತ ವೇದಸ್ವರಪುತ್ರ ಸೂರ್ಯ ಅವರನ್ನು ಭೇಟಿಯಾಗಿ ಕರ್ನಾಟಕ ಹಾಗೂ ಭಾರತದ ರಾಜಕೀಯ ಬೆಳವಣಿಗೆಗಳು, ಶಿಕ್ಷಣ, ಕೈಗಾರಿಕೆ, ಆರೋಗ್ಯ, ಹಿಂದೂ ಧರ್ಮದ ಬೆಳವಣಿಗೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.
4
+ ಬಾಲಿಯಲ್ಲಿ 10 ವರ್ಷಗಳ ಹಿಂದೆ ಶೇ.95ರಷ್ಟಿದ್ದ ಹಿಂದೂ ಜನಸಂಖ್ಯೆ ಈಗ ಶೇ.75ಕ್ಕೆ ಇಳಿಕೆಯಾಗಿದೆ. ಕೇವಲ ಒಂದು ದಶಕದ ಅವಧಿಯಲ್ಲಿ ಶೇ.20ರಷ್ಟು ಕುಸಿತ ಕಂಡಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ ಎಂದು ಡಾ.ಗುಸ್ತಿ ಆರ್ಯ ಅವರು ವಿಷಾದಿಸಿರುವುದಾಗಿ ಲಿಂಬಾವಳಿ ಹೇಳಿದ್ದಾರೆ.
5
+ ಭಾರತ ಮತ್ತು ಇಂಡೊನೇಷ್ಯಾ ಸನಾತನ ಧರ್ಮದ ಉಳಿವಿಗಾಗಿ ಹೋರಾಟ ನಡೆಸಬೇಕು. ಧರ್ಮ ಮತ್ತು ಅಧರ್ಮದ ನಡುವೆ ಹೋರಾಟ ನಡೆದರೆ ಮಾತ್ರ ಹಿಂದೂ ಧರ್ಮ ಉಳಿಯಲು ಸಾಧ್ಯ. ನಾವು ಯಾವುದೇ ಬೆಲೆ ತೆತ್ತಾದರೂ ಸನಾತನ ಧರ್ಮದ ಉಳಿವಿಗಾಗಿ ಮುಂದಾಗಲೇಬೇಕು. ಈ ನಿಟ್ಟಿನಲ್ಲಿ ಭಾರತದ ಹೋರಾಟಕ್ಕೆ ಇಂಡೊನೇಷ್ಯಾ ಸದಾ ಕೈ ಜೋಡಿಸಲಿದೆ ಎಂದು ಅವರು ಭರವಸೆ ನೀಡಿದ್ದಾಗಿ ಲಿಂಬಾವಳಿ ತಿಳಿಸಿದ್ದಾರೆ.
6
+ ಹಿಂದೂ ಧರ್ಮದ ಉಳಿವಿಗಾಗಿ ಇಂಡೋನೇಷ್ಯಾ ಇಟ್ಟುಕೊಂಡಿರುವ ಕಳಕಳಿ ನನಗೆ ಒಂದು ಕ್ಷಣ ಅಚ್ಚರಿ ಮತ್ತು ದಿಗ್ಬ್ರಾಂತಿ ಉಂಟು ಮಾಡಿತು. ಧರ್ಮವನ್ನ ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ ಎಂಬುದನ್ನುಅಲ್ಲಿನ ಜನತೆ ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ.
7
+ ಪ್ರವಾಸದ ಸಂದರ್ಭದಲ್ಲಿ ಅನೇಕ ಹಿಂದೂ ಯುವಕರನ್ನು ಭೇಟಿಯಾಗಿ ಮುಕ್ತವಾಗಿ ಚರ್ಚೆ ನಡೆಸಿದೆ. ಸ್ಥಳೀಯ ಜನರು ಹಿಂದೂ ಹೆಸರು ಇಟ್ಟುಕೊಂಡಿದ್ದರೂ ಅವರಿಗೆ ಅದರ ಅರ್ಥ ಮತ್ತು ಮಹತ್ವ ಗೊತ್ತಿಲ್ಲ. ಹಿಂದೂ ಧರ್ಮದ ಬಗ್ಗೆ ಜಾಗೃತಿ ಮೂಡಿಸುವ ಕುರಿತು ಅವರಿಗೆ ತಿಳಿ ಹೇಳಿದ್ದಾಗಿ ಲಿಂಬಾವಳಿ ತಿಳಿಸಿದ್ದಾರೆ.
8
+ ಪ್ರಧಾನಮಂತ್ರಿ ನರೇಂದ್ರ ಮೋದಿಯವರಂತಹ ಧೀಮಂತ ನಾಯಕನಿದ್ದರೂ ದೇಶದಲ್ಲಿ ಬಿಜೆಪಿಯ ಬಲ ಕುಸಿದಿರುವುದು ಪಕ್ಷಕ್ಕೆ ಎಚ್ಚರಿಕೆಯ ಘಂಟೆ. ಇದರಿಂದ ಪಕ್ಷ ಮತ್ತು ಅದರ ನಾಯಕರು ಎಚ್ಚೆತ್ತುಕೊಳ್ಳಬೇಕು ಎಂದು ಗುಸ್ತಿ ಆರ್ಯ ಅಭಿಪ್ರಾಯ ವ್ಯಕ್ತಪಡಿಸಿದರು.ಇದೇ ವೇಳೆ ಐಟಿ ರಾಜಧಾನಿಯಾಗಿರುವ ಬೆಂಗಳೂರಿನೊಂದಿಗೆ ಶೈಕ್ಷಣಿಕ, ಸಾಂಸ್ಕೃತಿಕ ವಿಜ್ಞಾನ ಮತ್ತು ಸಾಫ್ಟ್ ವೇರ್ ಕ್ಷೇತ್ರಗಳ��್ಲಿ ನಾವು ಬಾಲಿಯನ್ನು ಜೋಡಿಸ ಬಯಸುತ್ತೇವೆ, ನಮ್ಮಗೆ ನಿಮ ಸಹಕಾರ ಬಹಳ ಅಗತ್ಯ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ನಾನು ಅವರನ್ನು ಬೆಂಗಳೂರಿಗೆ ಆಹ್ವಾನಿಸಿದೆ ಮತ್ತು ಅವರು ಸಂತೋಷದಿಂದ ಇಲ್ಲಿಗೆ ಭೇಟಿ ನೀಡಲು ಸಿನೆಟರ್ ಒಪ್ಪಿದರು ಎಂದು ಲಿಂಬಾವಳಿ ತಿಳಿಸಿದರು.
eesanje/url_46_77_11.txt ADDED
@@ -0,0 +1,7 @@
 
 
 
 
 
 
 
 
1
+ ಕ್ಯಾಮೆರಾ ಕಣ್ಗಾವಲಿನಲ್ಲಿ ನಡೆದ ಪರೀಕ್ಷೆ ವೀಕ್ಷಿಸಿದ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್
2
+ ಬೆಂಗಳೂರು,ಜು.13-ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಇಂದು ಬಿಎಂಟಿಸಿ (ಕಲ್ಯಾಣ ಕರ್ನಾಟಕ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವಿವಿಧ ಹುದ್ದೆಗಳಿಗೆ ನಡೆಯುತ್ತಿರುವ ಪರೀಕ್ಷೆ ಪ್ರಕ್ರಿಯೆಯನ್ನು ವೆಬ್ಕಾಸ್ಟಿಂಗ್ ಮೂಲಕ ವೀಕ್ಷಿಸಿದರು.
3
+ ಕೆಇಎನಲ್ಲಿ ಅಳವಡಿಸಿರುವ ಟಿವಿ ಪರದೆಗಳಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಪರೀಕ್ಷಾ ಪ್ರಕ್ರಿಯೆಯ ನೇರ ಪ್ರಸಾರವನ್ನು ಸಚಿವರು ಹಾಗೂ ಅಧಿಕಾರಿಗಳು ವೀಕ್ಷಿಸಿದರು. ಇಂದು ಮತ್ತು ನಾಳೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕ್ಯಾಮರಾ ಕಣ್ಗಾವಲಿನಲ್ಲಿ ಮೇಲಿನ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸುತ್ತಿದೆ.
4
+ ಬೆಂಗಳೂರು, ಕಲ್ಬುರ್ಗಿ, ಧಾರವಾಡ ಮತ್ತು ಬಳ್ಳಾರಿ ನಗರಗಳ ಒಟ್ಟು 22 ಕೇಂದ್ರಗಳ, 377 ಕೊಠಡಿಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲೂ ಕ್ಯಾಮರಾ ಅಳವಡಿಸಿದ್ದು, ಇದೇ ಮೊದಲ ಬಾರಿಗೆ ವೆಬ್ ಕ್ಯಾಸ್ಟಿಂಗ್ ಮೂಲಕ ಅಲ್ಲಿನ ಎಲ್ಲ ಬೆಳವಣಿಗೆಗಳನ್ನು ವೀಕ್ಷಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ತಿಳಿಸಿದ್ದಾರೆ.
5
+ ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಈ ಕ್ರಮ ತೆಗೆದುಕೊಂಡಿದ್ದು, ಬೆಂಗಳೂರಿನ ಕೆಇಎ ಕಚೇರಿಯಲ್ಲಿ ರಾಜ್ಯ ಮಟ್ಟದ ಕಮಾಂಡ್ ಸೆಂಟರ್ ಸ್ಥಾಪಿಸಿದ್ದು, ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಆಗುವ ಬೆಳವಣಿಗೆಗಳನ್ನು ಗಮನಿಸಲು ಟಿವಿಗಳನ್ನು ಅಳವಡಿಸಲಾಗಿದೆ. ಮೇಲ್ವಿಚಾರಣೆಗೆ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
6
+ ಪ್ರಶ್ನೆ ಪತ್ರಿಕೆ ಸ್ವೀಕಾರ ಮತ್ತು ಅದರ ಬಂಡಲ್ ತೆರೆಯುವ ಎಲ್ಲ ಪ್ರಕ್ರಿಯೆಯನ್ನೂ ವೆಬ್ ಕಾಸ್ಟಿಂಗ್ ಮಾಡಲಾಗುತ್ತದೆ. ಅಲ್ಲದೆ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಸಂದರ್ಭದಲ್ಲಿ ಅವರ ಬೆರಳಚ್ಚು ಮತ್ತು ಭಾವಚಿತ್ರವನ್ನು ತೆಗೆದುಕೊಂಡು ಅಲ್ಲೇ ಅದನ್ನು ಅವರು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಗತ್ತಿಸಿರುವ ಚಿತ್ರದ ಜತೆಗೂ ಆನ್ ಲೈನ್ ನಲ್ಲಿ ಹೊಂದಾಣಿಕೆ ಮಾಡುವ ವ್ಯವಸ್ಥೆ ಮಾಡಲಾಗಿದೆ. ಹೀಗೆ ಮಾಡುವುದರಿಂದ ಯಾರದೊ ಹೆಸರಿನಲ್ಲಿ ಇನ್ಯಾರೊ ಪರೀಕ್ಷೆ ಬರೆಯುವುದನ್ನು ತಡೆಯಬಹುದು ಎಂದು ಹೇಳಿದ್ದಾರೆ.
7
+ ಇತ್ತೀಚೆಗೆ ನಡೆಸಿದ ಡಿಸಿಇಟಿ ಸಂದರ್ಭದಲ್ಲಿ ಪ್ರಾಯೋಗಿಕವಾಗಿ ಪ್ರಾಂಶುಪಾಲರ ಕಚೇರಿಯಲ್ಲಿನ ಬೆಳವಣಿಗೆಗಳನ್ನು ವೆಬ್ ಕಾಸ್ಟಿಂಗ್ ಮಾಡಿದ್ದು ಯಶಸ್ವಿಯಾದ ನಂತರ ಪರೀಕ್ಷೆ ನಡೆಯುವ ಕೊಠಡಿಯಿಂದಲೂ ವೆಬ್ ಕಾಸ್ಟಿಂಗ್ ಮಾಡಲು ತೀರ್ಮಾನಿಸಲಾಗಿದೆ.ಕಲ್ಬುರ್ಗಿ, ಧಾರವಾಡ ಮತ್ತು ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿಯೂ ಒಂದೊಂದು ಉಪ ಕಮಾಂಡಿಂಗ್ ಸೆಂಟರ್ ಇದ್ದು, ಅಲ್ಲಿಯೂ ಮೇಲ್ವಿಚಾರಣೆ ನಡೆಸಲಾಗುತ್ತದೆ. ಇದೇ ಮೊದಲ ಬಾರಿಗೆ ಬೇರೆ ಜಿಲ್ಲೆಗಳ ವಿಶೇಷ ವೀಕ್ಷಕರನ್ನೂ ನಿಯೋಜಿಸಿದ್ದು, ಅವರು ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ನಿಗಾ ಇಡಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.
eesanje/url_46_77_12.txt ADDED
@@ -0,0 +1,9 @@
 
 
 
 
 
 
 
 
 
 
1
+ ನಾಗೇಂದ್ರ ಅವರೇ ವಾಲ್ಮೀಕಿ ನಿಗಮ ಅಕ್ರಮದ ರೂವಾರಿ : ಇಡಿ
2
+ ಬೆಂಗಳೂರು,ಜು.13-ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂ. ಅಕ್ರಮದ ರೂವಾರಿ ಮಾಜಿ ಸಚಿವ ಬಿ.ನಾಗೇಂದ್ರ ಅವರೇ ಎಂದು ಜಾರಿನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ರಿಮ್ಯಾಂಡ್ ಅರ್ಜಿ ಸಲ್ಲಿಸಿದೆ. ಬೆಂಗಳೂರಿನ ವಿಶೇಷ ಜನಪ್ರತಿನಿ„ಗಳ ನ್ಯಾಯಾಲಯಕ್ಕೆ ಇಡಿ ಅಧಿಕಾರಿಗಳು, 100 ಪುಟಗಳ ರಿಮ್ಯಾಂಡ್ ಅರ್ಜಿ ಸಲ್ಲಿಸಿದ್ದು, ತಾವು ಬಿ.ನಾಗೇಂದ್ರ ಅವರನ್ನು ಏಕೆ ಬಂಧಿಸುತ್ತಿದ್ದೇವೆ ಎಂದು ಅರ್ಜಿಯಲ್ಲಿ ಮನವರಿಕೆ ಮಾಡಿದ್ದಾರೆ.
3
+ ಈ ಅಕ್ರಮದ ಮಾಸ್ಟರ್ ಮೈಂಡ್ ಬಿ.ನಾಗೇಂದ್ರ. ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂ. ಅಕ್ರಮಕ್ಕೆ ಇವರೇ ಸೂತ್ರಧಾರರು. ಇವರ ನಿರ್ದೇಶನದಂತೆಯೇ ಇದು ನಡೆದಿದೆ ಎಂದು ಹೇಳಿದೆ.ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ ಎಂದು ಹೇಳುತ್ತಿರುವ ಬಿ.ನಾಗೇಂದ್ರ ನಿಗಮದಲ್ಲಿದ್ದ 187 ಕೋಟಿ ಹಣದಲ್ಲಿ ಮೊದಲು 97 ಕೋಟಿಯನ್ನು ವರ್ಗಾವಣೆ ಮಾಡಲು ಅಧಿಕಾರಿಗಳ ಮೇಲೆ ನಿರಂತರವಾಗಿ ಒತ್ತಡ ಹಾಕಿದ್ದರು.
4
+ ಒಂದು ಹಂತದಲ್ಲಿ ಹಣ ವರ್ಗಾವಣೆ ಮಾಡದಿದ್ದರೆ ಹಿಂದಿನ ಪ್ರಕರಣವನ್ನು ಮುಂದಿಟ್ಟುಕೊಂಡು ಸೇವೆಯಿಂದ ಅಮಾನತುಪಡಿಸುವ ಬೆದರಿಕೆ ಹಾಕಿದ್ದರು ಎಂಬುದನ್ನು ಪತ್ತೆಹಚ್ಚಿದೆ.ಹೈದರಾಬಾದ್‍ನ ಬಂಜಾರಾ ಹಿಲ್ಸ್‍ನಲ್ಲಿರುವ ರತ್ನಾಕರ ಬ್ಯಾಂಕ್‍ನಲ್ಲಿ 18 ನಕಲಿ ಖಾತೆಗಳನ್ನು ತೆರೆದು ಮೇ 29ರಂದು ನಿಗಮದಿಂದ ರಾತ್ರೋರಾತ್ರಿ 40 ಕೋಟಿ ರೂ.ಗೂ ಅ„ಕ ಹಣ ವರ್ಗಾವಣೆ ಮಾಡಲಾಗಿದೆ.
5
+ ಮಹರ್ಷಿ ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್, ಮುಖ್ಯ ಹಣಕಾಸು ಅಧೀಕ್ಷಕರು ಸೇರಿದಂತೆ ನಿಗಮ ಹಲವು ಅಧಿಕಾರಿಗಳು ಬೆಂಗಳೂರಿನ ಶಾಂಗ್ರೀಲ ಹೋಟೆಲ್‍ನಲ್ಲಿ ಸಭೆ ನಡೆಸಿದ್ದರು ಎಂದು ರಿಮ್ಯಾಂಡ್ ಅರ್ಜಿಯಲ್ಲಿ ಇಡಿ ಉಲ್ಲೇಖ ಮಾಡಿದೆ.ಒಂದು ಹಂತದಲ್ಲಿ ನಿಗಮದ ಅಧಿಕಾರಿಗಳು ಮುಂದೊಂದು ದಿನ ಪ್ರಕರಣ ಆಚೆ ಬಂದರೆ ನಿಮಗೂ ಮತ್ತು ನಮಗೂ ಕಾನೂನಿನ ಸಂಕಷ್ಟ ಎದುರಾಗಲಿದೆ.
6
+ ಹೀಗಾಗಿ ಕಾನೂನು ಬಾಹಿರವಾಗಿ ಹಣ ವರ್ಗಾವಣೆ ಮಾಡುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದರು. ಇದಕ್ಕೆ ನಾಗೇಂದ್ರ ನಾನು ಅಧಿಕಾರದಲ್ಲಿದ್ದರೆ ಯಾವುದು ಕೂಡ ಆಚೆ ಬರುವುದಿಲ್ಲ. ನಿಮ್ಮನೆಲ್ಲ ರಕ್ಷಣೆ ಮಾಡುತ್ತೇನೆ. ನಾನು ಹೇಳಿದಂತೆ ಕೇಳಿ ಬಂಜಾರಾ ಹಿಲ್ಸ್‍ನಲ್ಲಿರುವ 18 ಖಾತೆಗಳಿಗೆ ಹಣ ವರ್ಗಾವಣೆ ಮಾಡಿ, ಅದಕ್ಕೂ ಮುನ್ನ ಎಂಜಿರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉಪಖಾತೆ ತೆರೆಯುವಂತೆ ಸೂಚಿಸಿದ್ದರು.
7
+ ಮೇ 29ರಂದು ಶಾಂಗ್ರೀಲ ಹೋಟೆಲ್‍ನಲ್ಲಿ ನಡೆದ ಸಭೆಗೆ ನಾಗೇಂದ್ರ ಅವರ ಸಂಬಂ„ ನೆಕ್ಕುಂಟಿ ನಾಗರಾಜ್ ಸೇರಿದಂತೆ ನಿಗಮದ ಕೆಲವು ಅ„ಕಾರಿಗಳನ್ನು ಆಹ್ವಾನಿಸಲಾಗಿತ್ತು.ಇದಕ್ಕೂ ಮುನ್ನ ಕನ್ನಿಂಗ್‍ಹ್ಯಾಮ್ ರಸ್ತೆಯಲ್ಲಿರುವ ಚಂದ್ರಿಕಾ ಹೋಟೇಲ್‍ನಿಂದ ಪದ್ಮನಾಭ್ ಮತ್ತು ನಾಗೇಂದ್ರ ಒಂದೇ ಕಾರಿನಲ್ಲ��� ಶಾಂಗ್ರೀಲಾ ಹೋಟೆಲ್‍ಗೆ ತೆರಳಿದ್ದರು.
8
+ ಈ ವೇಳೆ ಇಬ್ಬರ ನಡುವೆ ನಡೆದ ಮಾತುಕತೆಯಂತೆ ನಿಗಮದಲ್ಲಿರುವ ಒಟ್ಟು 187 ಕೋಟಿ ಹಣವನ್ನ ಹಂತ ಹಂತವಾಗಿ ವರ್ಗಾವಣೆ ಮಾಡುವ ಬಗ್ಗೆ ಮಾತುಕತೆ ನಡೆದಿದೆ.ಇವೆಲ್ಲವೂ ಕೂಡ ಸಚಿವ ನಾಗೇಂದ್ರ ತಮ್ಮ ಪ್ರಭಾವ ಬಳಸಿ ಅ„ಕಾರ ದುರುಪಯೋಗಪಡಿಸಿಕೊಂಡು ಹಣ ವರ್ಗಾವಣೆ ಮಾಡಿರುವುದಕ್ಕೆ ಸಿಕ್ಕಿರುವ ಸಾಕ್ಷ್ಯಾಧಾರಗಳು.
9
+ ನಿಗಮದ ಅಧಿಕಾರಿಗಳ ಜೊತೆ ನಡೆದಿರುವ ದೂರವಾಣಿ ಸಂಭಾಷಣೆ, ಚಾಟಿಂಗ್, ಡಿಜಿಟಲ್ ಸಾಕ್ಷ್ಯಾಧಾರ ಕಲೆ ಹಾಕಿದೆ. ಅವರು ಪ್ರಭಾವಿ ವ್ಯಕ್ತಿಯಾಗಿದ್ದು, ಆಚೆ ಇದ್ದರೆ ಸಾಕ್ಷ್ಯಗಳನ್ನು ನಾಶಪಡಿಸುವ ಸಾಧ್ಯತೆ ಇದೆ. ಹೀಗಾಗಿ ಅವರ ಬಂಧನ ಅಗತ್ಯವಿದೆ ಎಂದು ಇಡಿ ಅ„ಕಾರಿಗಳು ರಿಮ್ಯಾಂಡ್ ಅರ್ಜಿಯಲ್ಲಿ ಮನವರಿಕೆ ಮಾಡಿದ್ದಾರೆ.
eesanje/url_46_77_2.txt ADDED
@@ -0,0 +1,6 @@
 
 
 
 
 
 
 
1
+ ಅಧಿವೇಶನ ಆರಂಭಕ್ಕೂ ಮುನ್ನವೇ ಹಿರಿಯ ಅಧಿಕಾರಿಗಳಿಗೆ ಸಿಎಂ ಚಾಟಿ
2
+ ಬೆಂಗಳೂರು,ಜು.14-ಸರ್ಕಾರದ ಅಭಿವೃದ್ಧಿ ಕಾರ್ಯಚಟುವಟಿಕೆಗಳ ಕುರಿತು ನಿಖರವಾದ, ಕರಾರುವಕ್ಕಾದ ಮಾಹಿತಿಗಳನ್ನು ತತ್ಕ್ಷಣ ಒದಗಿಸಲು ಪೂರಕ ವಾತಾವರಣವನ್ನು ಸಜ್ಜುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
3
+ ಗೃಹಕಚೇರಿ ಕೃಷ್ಣಾದಲ್ಲಿಂದು ಸರ್ಕಾರದ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿದಂತೆ ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಆಯುಕ್ತರು ಹಾಗೂ ನಿರ್ದೇಶಕರೊಂದಿಗೆ ಮಹತ್ವದ ಸಮಾಲೋಚನೆ ನಡೆಸಿದರು.
4
+ ಈ ಬಾರಿಯ ಅಧಿವೇಶನದಲ್ಲಿ ಸಾಕಷ್ಟು ವಿಚಾರಗಳು ಚರ್ಚೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಕೆಲವು ವಿವಾದಗಳನ್ನು ಪ್ರಸ್ತಾಪಿಸಿ ವಿರೋಧ ಪಕ್ಷಗಳು ಟೀಕೆ ಮಾಡಬಹುದು. ಯಾವುದೇ ವಿಚಾರವಾದರೂ ಅದರ ಪೂರ್ವಪರ ಹಾಗೂ ವರ್ತಮಾನದ ಸಮಗ್ರ ಮಾಹಿತಿಗಳು ಸಂಬಂಧಪಟ್ಟ ಸಚಿವರಿಗೆ ತತಕ್ಷಣಕ್ಕೆ ಲಭ್ಯವಾಗುವಂತೆ ಹಿರಿಯ ಅಧಿಕಾರಿಗಳು ಕಾಳಜಿ ವಹಿಸಬೇಕು.
5
+ ಈ ಹಿಂದೆ ನಡೆದಿರುವ ಚರ್ಚೆಗಳು, ಆದೇಶಗಳು ಎಲ್ಲವನ್ನೂ ಮುಕ್ತವಾಗಿ ಪಾರದರ್ಶಕವಾಗಿ ಸಚಿವರ ಗಮನಕ್ಕೆ ತರಬೇಕು ಎಂದು ಸೂಚಿಸಲಾಗಿದೆ. ರಾಜ್ಯದ ಹಣಕಾಸು ಸ್ಥಿತಿ, ಗ್ಯಾರಂಟಿ ಯೋಜನೆಗಳು, ಕಾರ್ಯಕ್ರಮಗಳ ಪ್ರಗತಿ, ಬಜೆಟ್ ಘೋಷಿತ ಯೋಜನೆಗಳ ಕಾರ್ಯಾನುಷ್ಟಾನ ಆದೇಶ ಸೇರಿದಂತೆ ಪ್ರತಿಯೊಂದು ವಿಚಾರವನ್ನು ಅಧಿವೇಶನದಲ್ಲಿ ಸಚಿವರಿಗೆ ಒದಗಿಸಬೇಕು.
6
+ ತಪ್ಪು ಮಾಹಿತಿ ನೀಡಿ ಸದನದಲ್ಲಿ ಮುಜುಗರದ ವಾತಾವರಣ ಸೃಷ್ಟಿಯಾದರೆ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಕುಡಿಯುವ ನೀರಿನ ಸಮಸ್ಯೆ, ಕಲುಷಿತ ನೀರು ಸೇರಿದಂತೆ ಗಂಭೀರವಾದ ಸಮಸ್ಯೆಗಳ ಬಗ್ಗೆ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.
eesanje/url_46_77_3.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಜಲಾಶಯಗಳಿಗೆ ಒಳ ಹರಿವು ಹೆಚ್ಚಳ, ಹೆಚ್ಚುವರಿ ನೀರು ತಮಿಳುನಾಡಿಗೆ
2
+ ಮಂಡ್ಯ,ಜು.14-ತಮಿಳುನಾಡಿಗೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚಿಸಿದ್ದಕ್ಕಿಂತಲೂ ಹೆಚ್ಚುವರಿ ನೀರು ಹರಿದು ಹೋಗುತ್ತಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ನಿರ್ವಹಣಾ ಸಮಿತಿ ಒಂದು ಟಿಎಂಸಿ ಅಂದರೆ 11,500 ಕ್ಯೂಸೆಕ್ ನೀರನ್ನು ಪ್ರತಿದಿನ ಹರಿಸುವಂತೆ ಸೂಚನೆ ನೀಡಿದೆ. ಅದೃಷ್ಟವಶಾತ್ ಕಬಿನಿ ಪಾತ್ರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಒಳಹರಿವಿನ ಪ್ರಮಾಣ 4,500 ಕ್ಯೂಸೆಕ್ಸ್ ಇದೆ.
3
+ ಸಹಜವಾಗಿ 18ರಿಂದ 20 ಸಾವಿರ ಕ್ಯೂಸೆಕ್ಸ್ ಹೊರ ಹರಿವಿದೆ. ತಮಿಳುನಾಡಿಗೆ ಯಾವುದೇ ಜಲಾಶಯದಿಂದ ನೀರು ಹರಿದರೂ ಅದು ಪರಿಗಣಿಸಲ್ಪಡುವುದರಿಂದ ಸದ್ಯಕ್ಕೆ ಬೀಸುವ ದೊಣ್ಣೆಯಿಂದ ಪಾರಾದಂತಾಗಿದೆ ಎಂದು ಹೇಳಿದರು. ಮಳೆ ಇದೇ ರೀತಿ ಮುಂದುವರೆದು 10 ದಿನ ಸರಿದೂಗಿಸಿದರೆ ತಮಿಳುನಾಡಿಗೆ ನೀರು ಹರಿಸಬೇಕಾದ ಈ ತಿಂಗಳ ಕೋಟಾ ಮುಗಿಯುತ್ತದೆ.
4
+ ಹೇಮಾವತಿಯಲ್ಲೂ ನೀರಿನ ಸಂಗ್ರಹ ಉತ್ತಮವಾಗಿದೆ. ಆದರೆ ಕೆಆರ್ಎಸ್ಗೆ 11 ಸಾವಿರದಷ್ಟಿದ್ದ ಒಳಹರಿವು 6 ಸಾವಿರ, ನಂತರ ಈಗ 3 ಸಾವಿರ ಕ್ಯೂಸೆಕ್‌್ಸಗೆ ಇಳಿಕೆಯಾಗಿದೆ. ಹೇಮಾವತಿ, ಹಾರಂಗಿ ಜಲಾಶಯಗಳು ನಾಲ್ಕೈದು ದಿನಗಳಲ್ಲಿ ತುಂಬುವ ಅವಕಾಶವಿದೆ ಎಂದು ವಿವರಿಸಿದರು.
5
+ ತಮಿಳುನಾಡಿಗೆ ನೀರು ಹರಿಸುವಂತೆ ಸಿಡಬ್ಲುಆರ್ಸಿ ನೀಡಿರುವ ಆದೇಶದ ಜಾರಿಗೆ ಕಾಲಾವಕಾಶ ಕೇಳಿ ಮೇಲನವಿ ಸಲ್ಲಿಸಲು ಚರ್ಚೆಗಳಾಗುತ್ತಿವೆ. ಇನ್ನು ಸುಮಾರು 10 ದಿನಗಳ ಕಾಲ ಮಳೆಯ ಪ್ರಮಾಣವನ್ನು ನೋಡಿಕೊಂಡು ನೀರು ಹರಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
6
+ ಸದ್ಯದ ಪರಿಸ್ಥಿತಿಯಲ್ಲಿ ಕೆಆರ್ಎಸ್ ತುಂಬಿಲ್ಲ. 104 ಅಡಿಯಷ್ಟು ಮಾತ್ರ ನೀರಿದೆ. ಕೆರೆಕಟ್ಟೆಗಳಿಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ. ಜು.15ರ ನಂತರ ಭತ್ತ ಬೆಳೆಯುವ ಚಟುವಟಿಕೆಗಳು ಶುರುವಾಗಬೇಕಾಗಿತ್ತು. ಆದರೆ ನೀರಿನ ಲಭ್ಯತೆ ಮತ್ತು ಕೊರತೆಯನ್ನು ನೋಡಿಕೊಂಡು ಕೃಷಿ ಮಾಡುವಂತೆ ರೈತರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.
7
+ ಕಾವೇರಿ ನೀರು ನಿಯಂತ್ರಣ ಸಮಿತಿಯ ಮುಂದೆ ರಾಜ್ಯದ ಪರವಾಗಿ ಸರಿಯಾದ ವಾದ ಮಂಡಿಸಿಲ್ಲ ಎಂಬ ಮಾಜಿ ಸಂಸದ ಪುಟ್ಟರಾಜು ಅವರ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಚೆಲುವರಾಯಸ್ವಾಮಿ, ರಾಜ್ಯ ಲಿಖಿತವಾಗಿಯೇ ವಾದ ಮಂಡಿಸಿದೆ. ತನ್ನ ಇತಿಮತಿಯಲ್ಲಿ ಎಲ್ಲಾ ಮಾಹಿತಿಗಳನ್ನು ಒದಗಿಸಿದೆ. ಆದರೂ ಸಮಿತಿಯ ತೀರ್ಪು ಆಘಾತಕಾರಿಯಾಗಿದೆ ಎಂದರು. ಲೋಕಸಭಾ ಚುನಾವಣೆಯಲ್ಲಿ ಕಾವೇರಿ ವಿವಾದ ಬಗೆಹರಿಸುವುದು ತಮ ಆದ್ಯತೆ ಎಂದು ಹೇಳಿ ಪ್ರಚಾರ ಮಾಡಿ ಸಂಸದರಾಗಿ, ಕೇಂದ್ರದಲ್ಲಿ ಸಚಿವರಾಗಿರುವವರು ಸಂಜೆ ನಡೆಯುವ ಸರ್ವಪಕ್ಷ ಸಭೆಯಲ್ಲಿ ಯಾವ ರೀತಿಯ ಸಲಹೆ ನೀಡುತ್ತಾರೆ ಎಂಬುದನ್ನು ಕಾದುನೋಡುತ್ತೇವೆ ಎಂದು ಹೇಳಿದರು.
8
+ ಮಂಡ್ಯದಲ್ಲಿ ಡಿ.21ರಿಂದ ಮೂರು ದಿನಗಳ ಕಾಲ ನಡೆಯುವ ಅಖಿಲಭಾರತ ಕನ್ನಡ ಸಾಹಿತ್ಯ ಸಮೇಳನಕ್ಕೆ ಚಿಕ್ಕಮಂಡ್ಯ , ಅಮರಾವತಿ ಹೋಟೆಲ್ ಹಿಂಭಾಗ ಸೇರಿದಂತೆ ಮೂರು ಸ್ಥಳಗಳನ್ನು ಗುರುತಿಸಲಾಗಿದೆ. ಸೂಕ್ತ ಜಾಗವನ್ನು ಶೀಘ್ರವಾಗಿ ಅಖೈರುಗೊಳಿಸುವುದಾಗಿ ಹೇಳಿದರು.
9
+ ಮುಡಾ ನಿವೇಶನ ಹಂಚಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ. ಅವರ ಪತ್ನಿಯ ಹೆಸರಿಲ್ಲಿ ಜಮೀನನ್ನು ಮುಡಾದವರು ಅಕ್ರಮವಾಗಿ ಬಳಕೆ ಮಾಡಿಕೊಂಡು ನಿವೇಶನ ಮಾಡಿ ಮಾರಾಟ ಮಾಡಿದ್ದಾರೆ. ಇದನ್ನು ಒಪ್ಪಿಕೊಂಡು ಬದಲಿ ಜಾಗ ನೀಡಲಾಗಿದೆ. ಜಾಗ ನೀಡಿದ ಸಂದರ್ಭದಲ್ಲಿ ಮುಡಾ ಅಧ್ಯಕ್ಷರಾಗಿದ್ದು ಬಿಜೆಪಿಯ ರಾಜೇಶ್ ಎಂಬ ವ್ಯಕ್ತಿ.
10
+ ಮುಖ್ಯಮಂತ್ರಿಯಾಗಿ ಬಸವರಾಜ ಬೊಮಾಯಿ ಅವರು ಮಾಡಿದ್ದ ತಪ್ಪುಗಳನ್ನು ಮುಚ್ಚಿಕೊಳ್ಳಲು ಸಿದ್ದರಾಮಯ್ಯ ಅವರನ್ನು ಹೊಣೆಗಾರರನ್ನಾಗಿ ಮಾಡಿ ಟೀಕಿ ಮಾಡುತ್ತಿದ್ದಾರೆ ಎಂದು ಚೆಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.
eesanje/url_46_77_4.txt ADDED
@@ -0,0 +1,5 @@
 
 
 
 
 
 
1
+ ಮಾಜಿ ಸಚಿವ ನಾಗೇಂದ್ರಗೆ ಇಡಿ ಗ್ರಿಲ್
2
+ ಬೆಂಗಳೂರು,ಜು.14-ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ತೀವ್ರ ವಿಚಾರಣೆಗೊಳಪಡಿಸಿರುವ ಇ.ಡಿ ಅಧಿಕಾರಿಗಳು ವಾಲೀಕಿ ನಿಗಮದ ಬಹುಕೋಟಿ ಹಗರಣದ ಬಗ್ಗೆ ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ನಿಗಮದ ಅಕ್ರಮ ಹಣ ವರ್ಗಾವಣೆ ಬಗ್ಗೆ ಬಿ.ನಾಗೇಂದ್ರ ಅವರನ್ನು ಶುಕ್ರವಾರ ಬಂಧಿಸಿದ್ದ ಇ.ಡಿ ಅಧಿಕಾರಿಗಳು ಶನಿವಾರ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. ನ್ಯಾಯಾಲಯ ಆರು ದಿನಗಳ ಕಾಲ ಇ.ಡಿ ಕಸ್ಟಡಿಗೆ ನೀಡಿದೆ.
3
+ ನಾಗೇಂದ್ರ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ಇ.ಡಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳನ್ನು ಮುಂದಿಟ್ಟು ಮಾಹಿತಿಗಳನ್ನು ಪಡೆದಿದ್ದಾರೆ ಎಂದು ಗೊತ್ತಾಗಿದೆ.
4
+ ಹಣ ಎಲ್ಲಿಂದ, ಯಾರಿಗೆ ಹೋಯಿತು, ಯಾವುದಕ್ಕೆ ಉಪಯೋಗಿಸಲಾಯಿತು ಎಂಬಿತ್ಯಾದಿ ಪ್ರಶ್ನೆಗಳ ಮೂಲಕ ಮಾಹಿತಿಗಳನ್ನು ಇಡಿ ಅಧಿಕಾರಿಗಳು ಪಡೆದಿದ್ದಾರೆ ಎಂದು ತಿಳಿದುಬಂದಿದೆ.
5
+ ಹಲವು ಪ್ರಶ್ನೆಗಳಿಗೆ ನಾಗೇಂದ್ರ ಅವರು ಉತ್ತರಿಸಿದ್ದು, ಇನ್ನು ಹಲವು ಪ್ರಶ್ನೆಗಳಿಗೆ ನನಗೇನೂ ಗೊತ್ತಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.
eesanje/url_46_77_5.txt ADDED
@@ -0,0 +1,6 @@
 
 
 
 
 
 
 
1
+ ನಾಳೆಯಿಂದ ವಿಧಾನಮಂಡಲ ಅಧಿವೇಶನ : ಹಗರಣಗಳ ಹೈಡ್ರಾಮಾ ನಿರೀಕ್ಷೆ
2
+ ಬೆಂಗಳೂರು,ಜು.14-ಲೋಕಸಭೆ ಚುನಾವಣೆ ಬಳಿಕ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವೆ ನಡೆಯುವ ಮಾತಿನ ಸಮರಕ್ಕೆ ನಾಳೆಯಿಂದ ವಿಧಾನಮಂಡಲ ಅಧಿವೇಶನ ವೇದಿಕೆಯಾಗಲಿದೆ. ಲೋಕಸಭೆ ಚುನಾವಣೆ ಮತ್ತು ಅದಕ್ಕೂ ಮೊದಲು ಆಡಳಿತಾರೂಢ ಕಾಂಗ್ರೆಸ್‌‍ ಹಾಗೂ ಪ್ರತಿಪಕ್ಷ ಬಿಜೆಪಿ-ಜೆಡಿಎಸ್‌‍ ನಡುವೆ ಆರೋಪ-ಪ್ರತ್ಯಾರೋಪಗಳು ಕೇಳಿಬಂದಿದ್ದವು.
3
+ ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಒಂದರ ಮೇಲೊಂದರಂತೆ ಹಗರಣಗಳನ್ನು ಪ್ರಸ್ತಾಪಿಸಿ ವಿಪಕ್ಷಗಳು ಕಾಂಗ್ರೆಸ್‌‍ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಅದರಲ್ಲೂ ಪ್ರಮುಖವಾಗಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಹಂಚಿಕೆ ಭಾರೀ ಸದ್ದು ಮಾಡಿವೆ.
4
+ ಜೊತೆಗೆ ಅಭಿವೃದ್ಧಿಯಲ್ಲಿನ ಹಿನ್ನಡೆ, ಕಲುಷಿತ ನೀರಿನ ಪ್ರಕರಣಗಳು, ಹಾಲಿನ ದರ ಏರಿಕೆ, ಬರ ನಿರ್ವಹಣೆಯಲ್ಲಿನ ಲೋಪಗಳು ಮತ್ತು ಮಳೆಗಾಲದಲ್ಲಿ ಮುಂಗಾರು ಚಟುವಟಿಕೆಗಳಿಗೆ ಪೂರಕವಾದ ಸೌಲಭ್ಯಗಳ ಕೊರತೆ ಸೇರಿದಂತೆ ಹಲವಾರು ವಿಚಾರಗಳು ಪ್ರತಿಪಕ್ಷಗಳ ಬತ್ತಳಿಕೆಯಲ್ಲಿವೆ.
5
+ ಇದರ ನಡುವೆ ರಾಜಕೀಯ ಪ್ರೇರಿತ ವಿವಾದಿತ ಹೇಳಿಕೆಗಳು ಸಾಕಷ್ಟು ಚರ್ಚೆಗೆ ಗ್ರಾಸವಾಗಿವೆ. ಆಡಳಿತಾರೂಢ ಕಾಂಗ್ರೆಸ್‌‍ನ ವಿರುದ್ಧ ಪ್ರತಿಪಕ್ಷಗಳು ಒಟ್ಟಾಗಿ ವಾಗ್ದಾಳಿ ನಡೆಸಲು ಸಜ್ಜುಗೊಂಡಿದ್ದರೆ, ಇತ್ತ ಈ ಹಿಂದಿನ ಸರ್ಕಾರದಲ್ಲಿ ಆಗಿರುವ ಹಗರಣಗಳು ಹಾಗೂ ಲೋಪಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳಿಗೆ ತಿರುಗೇಟು ನೀಡಲು ಕಾಂಗ್ರೆಸ್‌‍ ಕೂಡ ತಯಾರಿ ನಡೆಸಿದೆ.
6
+ ಬಹುತೇಕ ಈ ಅಧಿವೇಶನದಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳ ನಡುವಿನ ಜುಗಲ್‌ಬಂಧಿಯೇ ಸದ್ದು ಮಾಡುವ ಸಾಧ್ಯತೆ ಇದೆ. ಡೆಂಘೀ ಪ್ರಕರಣಗಳು ತೀವ್ರವಾಗಿ ಸಾಕಷ್ಟು ಕಷ್ಟನಷ್ಟಕ್ಕೆ ಕಾರಣವಾಗಿದೆ. ಅದರೊಂದಿಗೆ ಬೇರೆ ರೀತಿಯ ಸಾಂಕ್ರಾಮಿಕ ಸಮಸ್ಯೆಗಳು, ಆರೋಗ್ಯ ಕೇಂದ್ರಗಳಲ್ಲಿನ ಸೌಲಭ್ಯ ಕೊರತೆ ಜನರನ್ನು ಬಧಿಸುತ್ತಿದೆ. ಇಂತಹ ಜನಪರವಾದ ವಿಚಾರಗಳನ್ನು ಕುರಿತು ಚರ್ಚೆಗೆ ಅವಕಾಶವಾಗಲಿದೆಯೇ ಎಂಬುದೇ ಕುತೂಹಲ ಕೆರಳಿಸಿದೆ.
eesanje/url_46_77_6.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ವಿವಿಧ ಸಮುದಾಯಗಳ ನಿಗಮ-ಮಂಡಳಿಗಳಿಗೂ ತಟ್ಟಿದ ವಾಲ್ಮೀಕಿ ನಿಗಮದ ಅಕ್ರಮ ಎಫೆಕ್ಟ್
2
+ ಬೆಂಗಳೂರು,ಜು.14-ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಹಣ ಅಕ್ರಮ ವರ್ಗಾವಣೆ ಪ್ರಕರಣದ ಪರಿಣಾಮವಾಗಿ ಸರ್ಕಾರದ ವಿವಿಧ ಸಮುದಾಯಗಳ ನಿಗಮ ಮಂಡಳಿಗಳಿಗೂ ಭಾರೀ ಬಿಸಿ ತಗಲುವಂತಾಗಿದೆ.
3
+ ಎತ್ತಿಗೆ ಜ್ವರ ಬಂದರೆ ಎಮೆಗೆ ಬರೆ ಎಳೆದಂತೆ ವಾಲೀಕಿ ನಿಗಮದಲ್ಲಾಗಿರುವ ಅವ್ಯವಹಾರದಿಂದಾಗಿ ಬಹುತೇಕ ಎಲ್ಲಾ ನಿಗಮಗಳಲ್ಲೂ ಸೌಲಭ್ಯಗಳ ಹಂಚಿಕೆ, ಫಲಾನುಭವಿಗಳ ಆಯ್ಕೆ, ಹಣ ಬಿಡುಗಡೆಗೆ ತಡೆ ನೀಡಲಾಗಿದೆ.
4
+ ರಾಜಕೀಯ ಕಾರಣಗಳಿಗಾಗಿ ಬಿಜೆಪಿ, ಕಾಂಗ್ರೆಸ್‌‍ ಪಕ್ಷಗಳು ಅವಕಾಶ ಸಿಕ್ಕಾಗಲೆಲ್ಲ ಜಾತಿಗೊಂದು ನಿಗಮಗಳನ್ನು ರಚನೆ ಮಾಡಿದ್ದಾರೆ. ಹೀಗಾಗಿ ಬಹುತೇಕ ಜಾತಿ ಆಧಾರಿತ ನಿಗಮಗಳಲ್ಲಿ ಸ್ವಾವಲಂಬನೆ, ಸ್ವಯಂ ಉದ್ಯೋಗ, ಶೈಕ್ಷಣಿಕ ಚಟುವಟಿಕೆಯ ಬೆಂಬಲ ಸೇರಿದಂತೆ ಹಲವಾರು ಸೌಲಭ್ಯಗಳಿವೆ.
5
+ ಆದರೆ ಅವುಗಳನ್ನು ತಲುಪಿಸಲು ಸಾಧ್ಯವಾಗದೆ ನಿಗಮಗಳು ನಿಷ್ಕ್ರಿಯಗೊಂಡಿವೆ. ವಿಧಾನಸಭಾ ಚುನಾವಣೆ ಕಾರಣಕ್ಕಾಗಿ ಕಳೆದ ವರ್ಷ ನಿಗಮಗಳ ಚಟುವಟಿಕೆಗಳಿಗೆ ಗ್ರಹಣ ಬಡಿದಿತ್ತು. ಹೊಸ ಸರ್ಕಾರ ಬಂದು ಸುಧಾರಿಸಿಕೊಳ್ಳುವಷ್ಟರಲ್ಲಿ ಮತ್ತೆ ಲೋಕಸಭೆ ಚುನಾವಣೆ ಎದುರಾಗಿತ್ತು.
6
+ ನೀತಿಸಂಹಿತೆಯಿಂದಾಗಿ ಜೂನ್‌ವರೆಗೂ ಸರಿಸುಮಾರು ನಾಲ್ಕು ತಿಂಗಳು ಆಡಳಿತ ಯಂತ್ರ ಕೋಮಾ ಸ್ಥಿತಿಯಲ್ಲಿತ್ತು. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯೂ ನಡೆಯಲಿಲ್ಲ. ಕಳೆದ ಮೂರು ವರ್ಷಗಳಿಂದಲೂ ಫಲಾನುಭವಿಗಳ ಪಟ್ಟಿ ಇಲ್ಲದೆ, ಹಣ ಬಿಡುಗಡೆಯಾಗದೆ ಯೋಜನೆಗಳು ನೆನೆಗುದಿಗೆ ಬಿದ್ದಿವೆ.
7
+ ಹೆಸರಿಗೆ ಮಾತ್ರ ಸರ್ಕಾರದ ಸೌಲಭ್ಯಗಳ ಪ್ರಗತಿ ಕಾಗದ ಪತ್ರದಲ್ಲಿದೆ. ಪ್ರತಿಯೊಂದು ಇಲಾಖೆಯಲ್ಲೂ ಆಯಾ ಸಚಿವರು ತಮ ಸಾಧನೆಗಳ ಬಗ್ಗೆ ಹೇಳಿಕೊಳ್ಳುತ್ತಿದ್ದಾರೆ. ಆದರೆ ಅವೆಲ್ಲವೂ ಕೇವಲ ಲೆಕ್ಕಪತ್ರಗಳಿಗೆ ಮಾತ್ರ ಸೀಮಿತವಾಗಿವೆ. ಭೌತಿಕವಾಗಿ ನಿಗಮಗಳಲ್ಲಿ ಫಲಾನುಭವಿಗಳ ಪಟ್ಟಿಯೇ ಇಲ್ಲ ಎಂಬ ಅಂಶ ಚರ್ಚೆಗೆ ಗ್ರಾಸವಾಗಿದೆ.
8
+ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಇದೇ ರೀತಿ ಬಳಕೆಯಾಗದೆ ಉಳಿದ 187 ಕೋಟಿ ರೂ.ಗಳನ್ನು ದುಷ್ಟ ಜಾಲ ದುರ್ಬಳಕೆ ಮಾಡಿಕೊಂಡು ನುಂಗಿ ನೀರು ಕುಡಿಯುವ ಹುನ್ನಾರ ನಡೆಸಿತ್ತು. ಬಹುತೇಕ ಅಷ್ಟೂ ಹಣಕ್ಕೂ ನಕಲಿ ಫಲಾನುಭವಿಗಳ ಪಟ್ಟಿಯನ್ನು ಲಗತ್ತಿಸಿ ಹಣ ಲಪಟಾಯಿಸುವ ಸಾಧ್ಯತೆಗಳಿದ್ದವು.
9
+ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಆತಹತ್ಯೆಯಿಂದಾಗಿ ಹಗರಣ ಬಯಲಿಗೆ ಬಂದಿದೆ. ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಇಲಾಖೆಯ ಸಚಿವರಾಗಿದ್ದವರೂ ಸೇರಿದಂತೆ ಎಲ್ಲರೂ ವಿಚಾರಣೆಗೊಳಗಾಗಿ ಜೈಲಿನ ಕಂಬಿ ಎಣಿಸುವಂತಾಗಿದೆ.
10
+ ಹಗರಣ ಬೆಳಕಿಗೆ ಬರುತ್ತಿದ್ದಂತೆ ಸರ್ಕಾರದ ಪ್ರಮುಖರು ಎಲ್ಲಾ ನಿಗಮಗಳ ಅಧ್ಯಕ್ಷರಿಗೆ ಸ್ಪಷ್ಟ ಸೂಚನೆ ನೀಡಿದ್ದು, ಯಾವುದೇ ಕಡತಗಳನ್ನು ವಿಲೇವಾರಿ ಮಾಡಬಾರದು, ಫಲಾನುಭವಿಗಳ ಆಯ್ಕೆ ಪಟ್ಟಿ ಸೇ��ಿದಂತೆ ಬೇರೆಲ್ಲ ಚಟುವಟಿಕೆಗಳು ನಡೆದರೂ ಹಣ ಒಂದೂ ರೂಪಾಯಿಯೂ ಬಿಡುಗಡೆಯಾಗಬಾರದು ಎಂಬ ಸೂಚನೆ ನೀಡಿದ್ದಾರೆ. ಇದರಿಂದಾಗಿ ಹಲವಾರು ನಿಗಮಗಳಲ್ಲಿ ಸಾವಿರಾರು ಕೋಟಿ ರೂ. ಕೊಳೆಯುತ್ತ ಬಿದ್ದಿದೆ.
11
+ ಹಿಂದುಳಿದ ವರ್ಗಗಳ ಇಲಾಖೆಗೆ ಸೇರಿದ ಕೆಲವು ನಿಗಮಗಳಲ್ಲಿ ಮೂರು ವರ್ಷಗಳಿಂದಲೂ ಫಲಾನುಭವಿಗಳಿಗೆ ಸೌಲಭ್ಯ ಹಂಚಿಕೆಯಾಗದೆ ಸುಮಾರು 500ರಿಂದ 600 ಕೋಟಿ ರೂ.ಗಳಷ್ಟು ಹಣ ಬಾಕಿ ಇವೆ ಎಂದು ಹೇಳಲಾಗುತ್ತಿದೆ.
12
+ ಈ ಹಿಂದಿನ ಸರ್ಕಾರಗಳು ಸೌಲಭ್ಯಗಳನ್ನು ಜನರಿಗೆ ತಲುಪಿಸಲು ಮನಸ್ಸಿಲ್ಲದೆ ಫಲಾನುಭವಿಗಳು ಸಂತ್ರಸ್ತರಾದರೆ , ಪ್ರಸ್ತುತ ಸರ್ಕಾರದಲ್ಲಿ ಹಗರಣದ ಗ್ರಹಣದಿಂದಾಗಿ ಮತ್ತಷ್ಟು ವಿಳಂಬವಾಗಿದೆ.
13
+ ಆದರೆ ಪ್ರತಿಯೊಂದು ಇಲಾಖೆಯ ಸಚಿವರು ಮಾತ್ರ ನೂರಾರು ಫಲಾನುಭವಿಗಳ ಪಟ್ಟಿ ನೀಡುತ್ತಾ ಹಣ ಖರ್ಚುವೆಚ್ಚದ ಮಾಹಿತಿ ನೀಡುತ್ತಲೇ ಬಂದಿದ್ದಾರೆ. ವಾಸ್ತವವಾಗಿ ಫಲಾನುಭವಿಗಳು ಇಲ್ಲ, ಸೌಲಭ್ಯಗಳು ಇಲ್ಲ ಎಂಬಂತಾಗಿದೆ. ನಾಳೆಯಿಂದ ನಡೆಯುವ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಚರ್ಚಿಸಲು ಕೆಲವು ಶಾಸಕರು ದಾಖಲಾತಿಗಳನ್ನು ಸಜ್ಜುಗೊಳಿಸಿಕೊಂಡಿದ್ದಾರೆ.
eesanje/url_46_77_7.txt ADDED
@@ -0,0 +1,7 @@
 
 
 
 
 
 
 
 
1
+ ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣನ ಆರ್ಭಟ, ರೆಡ್‌ ಅಲರ್ಟ್‌ ಘೋಷಣೆ
2
+ ಬೆಂಗಳೂರು,ಜು.14-ಕರಾವಳಿ, ಮಲೆನಾಡು, ಉತ್ತರಕನ್ನಡ, ಉಡುಪಿ, ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಈ ಐದು ಜಿಲ್ಲೆಗಳಲ್ಲೂ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಆಂಕೋಲ, ಕುಮುಟಾ, ಕಡ್ತ, ಗೇರುಸೊಪ್ಪೆ, ಹೊನ್ನಾವರದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗುತ್ತಿದೆ. ಉಡುಪಿ ಜಿಲ್ಲೆಯ ಕಾರ್ಕಳ, ಕೊಡುಗು ಜಿಲ್ಲೆಯ ಬಾಗಮಂಡಲದಲ್ಲಿ ನಿನ್ನೆ ಒಂದೇ ದಿನ 13 ಸೆ.ಮೀ ಮಳೆಯಾಗಿದೆ.
3
+ ನಿರಂತರ ಮಳೆಯಿಂದ ಮಲೆನಾಡು, ಕರಾವಳಿ ಭಾಗದಲ್ಲಿ ರಸ್ತೆಗಳೆಲ್ಲ ಜಲಾವೃತವಾಗಿದ್ದು, ಹೊಲಗದ್ದೆಗಳಿಗೂ ನೀರು ತುಂಬಿ ಬೆಳೆಗಳಿಗೂ ಹಾನಿಯಾಗಿದೆ. ಕೆರೆಕಟ್ಟೆಗಳು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನಕ್ಕೆ ಹಲವೆಡೆ ತೊಂದರೆಯಾಗಿದೆ.
4
+ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಬರುತ್ತಿರುವುದರಿಂದ ಕಬಿನಿ, ಹೇಮಾವತಿ, ಹಾರಂಗಿ, ಕೃಷ್ಣರಾಜಸಾಗರ ಜಲಾಶಯಗಳ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗಿ ನೀರು ಸಂಗ್ರಹ ಜಾಸ್ತಿಯಾಗಿದೆ. ಅತ್ತ ಶಿವಮೊಗ್ಗ ಮತ್ತು ಮಲೆನಾಡು ಪ್ರದೇಶಗಳಲ್ಲೂ ನಿರಂತರ ಮಳೆಯಾಗುತ್ತಿರುವುದರಿಂದ ತುಂಗ, ಭದ್ರ ಜಲಾಶಯಗಳಿಗೂ ನೀರಿನ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.
5
+ ಭಾರೀ ಮಳೆ ಮುನ್ಸೂಚನೆ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಗೆ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಧಾರವಾಡ ಜಿಲ್ಲೆಗೆ ನಾಳೆ ಆರೆಂಜ್‌ ಅಲೆರ್ಟ್‌ ಹಾಗೂ ಮುಂದಿನ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.ಯಾದಗಿರಿ, ಹಾವೇರಿ, ವಿಜಯಪುರ, ರಾಯಚೂರು, ಬಾಗಲಕೋಟೆ ಜಿಲ್ಲೆಗಳಲ್ಲೂ ಕೂಡ ಭಾರೀ ಮಳೆ ಮುನ್ಸೂಚನೆ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.
6
+ ಬಳ್ಳಾರಿ, ಚಿತ್ರದುರ್ಗ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ನಾಳೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಈಗಾಗಲೇ ನಿರಂತರ ಮಳೆಯಾಗುತ್ತಿದ್ದು, ಮತ್ತೆ ಮಳೆ ಹೆಚ್ಚಾಗುವ ಸಂಭವವಿದೆ.
7
+ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ. ನದಿಪಾತ್ರದ ಜನರು ಎಚ್ಚರದಿಂದಿರುವಂತೆ ಜಿಲ್ಲಾಡಳಿತ ಸೂಚಿಸಿದೆ. ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಹಗುರ ಮತ್ತು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
eesanje/url_46_77_8.txt ADDED
@@ -0,0 +1,5 @@
 
 
 
 
 
 
1
+ ಬಸವರಾಜ್‌ ರಾಯರೆಡ್ಡಿ “ಖಜಾನೆ ಖಾಲಿ” ಹೇಳಿಕೆಗೆ ದಿನೇಶ್‌ ಗೂಳಿಗೌಡ ಆಕ್ಷೇಪ
2
+ ಬೆಂಗಳೂರು,ಜು.14-ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದೆ ಎಂಬ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್‌ ರಾಯರೆಡ್ಡಿ ಅವರು ನೀಡಿದ ಹೇಳಿಕೆಗೆ ವಿಧಾನಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
3
+ ಅಧಿಕಾರಕ್ಕೆ ಬರುವ ಮೊದಲು ಹೊರಡಿಸಿದ್ದ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌‍ ಪಕ್ಷವು ಘೋಷಿಸಿದ್ದ 5 ಪ್ರಮುಖ ಗ್ಯಾರಂಟಿ ಯೋಜನೆಗಳ ಸಹಿತ ಇನ್ನಿತರ ಆಶ್ವಾಸನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಈಡೇರಿಸುತ್ತಾ ಬರುತ್ತಿದ್ದಾರೆ.
4
+ ರಾಜ್ಯದಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ನಡೆಯುತ್ತಿರಬೇಕಾದರೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಬಸವರಾಜ ರಾಯರೆಡ್ಡಿ ಅವರು ಇಂತಹ ಹೇಳಿಕೆಗಳನ್ನು ನೀಡಬಾರದು ಎಂದು ಹೇಳಿದ್ದಾರೆ.
5
+ ಇಂಥ ಹೇಳಿಕೆಗೆ ಕಡಿವಾಣ ಹಾಕಲು ಮನವಿ:ರಾಜ್ಯದ 223 ತಾಲೂಕುಗಳಲ್ಲಿ ತೀವ್ರತರದ ಬರ ಪರಿಸ್ಥಿತಿ ಇತ್ತು. ಆದರೆ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಬರೆದ ಬಿಸಿ ಅಷ್ಟಾಗಿ ತಟ್ಟಲಿಲ್ಲ. ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯದ ಜನತೆಯೇ ಕೊಂಡಾಡುತ್ತಿರುವಾಗ ಇಂತಹ ಗೊಂದಲಮಯ ಹೇಳಿಕೆ ನೀಡುವುದು ಸರಿಯಲ್ಲ. ಇಂತಹ ಹೇಳಿಕೆಗಳಿಗೆ ಮುಖ್ಯಮಂತ್ರಿಗಳು ಕಡಿವಾಣ ಹಾಕಬೇಕು ಎಂದು ಅವರು ಮನವಿ ಮಾಡಿದ್ದಾರೆ.
eesanje/url_46_77_9.txt ADDED
@@ -0,0 +1,5 @@
 
 
 
 
 
 
1
+ ವಾಲ್ಮೀಕಿ ನಿಗಮದ ಅಕ್ರಮದ ಆರೋಪಿ ಶಾಸಕ ಬಸನಗೌಡ ದದ್ದಲ್‌ ಪರಾರಿ
2
+ ಬೆಂಗಳೂರು,ಜು.14-ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣದ ಆರೋಪಿ ಶಾಸಕ ಬಸನಗೌಡ ದದ್ದಲ್‌ ಅವರು ಪಶ್ಚಿಮ ಬಂಗಾಳ ಅಥವಾ ಹೈದರಾಬಾದ್‌ಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ.
3
+ ತಲೆಮರೆಸಿಕೊಂಡಿರುವ ದದ್ದಲ್‌ ಅವರ ಪತ್ತೆಗೆ ಜಾರಿ ನಿರ್ದೇಶನಾಲಯ(ಇಡಿ) ಬಲೆ ಬೀಸಿದೆ.ಬಸನಗೌಡ ದದ್ದಲ್‌ ಅವರು ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌‍ಐಟಿ ಎದುರು ಶುಕ್ರವಾರ ವಿಚಾರಣೆಗೆ ಹಾಜರಾಗಿದ್ದರು. ಸೋಮವಾರ ಮತ್ತೆ ವಿಚಾರಣೆಗೆ ಬರುವಂತೆ ಎಸ್‌‍ಐಟಿ ಅಧಿಕಾರಿಗಳು ಸೂಚಿಸಿದ್ದರು. ನಂತರ ಅವರು ನಾಪತ್ತೆಯಾಗಿದ್ದಾರೆ.
4
+ ಇಡಿ ಅಧಿಕಾರಿಗಳು ಅವರ ವಿಧಾನಸಭಾ ಕ್ಷೇತ್ರದಲ್ಲಿ ಹಾಗೂ ಬೆಂಗಳೂರಿನ ಯಲಹಂಕದಲ್ಲಿರುವ ಅವರ ನಿವಾಸ, ಕಚೇರಿಯಲ್ಲಿ ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಮಂತ್ರಾಲಯ ಮಾರ್ಗವಾಗಿ ಹೈದರಾಬಾದ್‌ಗೆ ತೆರಳಿದ್ದು, ಅಲ್ಲಿಂದ ಪಶ್ಚಿಮ ಬಂಗಾಳಕ್ಕೆ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಈ ಜಾಡು ಹಿಡಿದಿರುವ ಇಡಿ ಅವರನ್ನು ವಶಕ್ಕೆ ಪಡೆಯಲು ಮುಂದಾಗಿದೆ.
5
+ ಮಂಗಳವಾರ ಮತ್ತು ಬುಧವಾರ ಇಡಿ ಅಧಿಕಾರಿಗಳು ದದ್ದಲ್‌ ಅವರ ಯಲಹಂಕದಲ್ಲಿರುವ ನಿವಾಸ, ರಾಯಚೂರಿನ ನಿವಾಸ ಸೇರಿ ವಿವಿಧೆಡೆ ದಾಳಿ ನಡೆಸಿ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.
eesanje/url_46_78_1.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಸಿಎಂ ಪತ್ನಿಗೆ ದಾನವಾಗಿ ಬಂದ ಜಮೀನು ಮುಡಾಗೆ ಸೇರಿದ್ದು : ಹೆಚ್ಡಿಕೆ
2
+ ಬೆಂಗಳೂರು,ಜು.13-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ದಾನವಾಗಿ ಬಂದಿದ್ದ ಜಮೀನು ಮುಡಾಗೆ ಸೇರಿದ್ದಾಗಿದೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.
3
+ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 2010ರಲ್ಲಿ ಮುಖ್ಯಮಂತ್ರಿಯವರ ಪತ್ನಿಗೆ ದಾನವಾಗಿ ಕೃಷಿ ಜಮೀನು ಬಂದಿರುವ ಮಾಹಿತಿ ಇದೆ. ಆದರೆ 1997ರಲ್ಲೇ ಜಮೀನು ಭೂಸ್ವಾಧೀನವಾಗಿದ್ದು, ಮುಡಾದಿಂದ ನ್ಯಾಯಾಲಯಕ್ಕೆ 3.16 ಲಕ್ಷ ರೂ. ಹಣ ಪಾವತಿಯಾಗಿದೆ ಎಂದರು.
4
+ ಮುಡಾ ಸ್ವಾಧೀನಪಡಿಸಿಕೊಂಡ ಜಮೀನಿಗೆ ಹಣ ಪಾವತಿಸಿದ ಮೇಲೆ ಜಮೀನು ಮೂಡಾ ಸ್ವತ್ತಾಗಿದೆ. 2004ರಲ್ಲಿ ದೇವರಾಜು ಎಂಬುವರಿಂದ ಮಲ್ಲಿಕಾರ್ಜುನ ಸ್ವಾಮಿ ಎಂಬುವರು ಖರೀದಿಸಿರುವ ಮಾಹಿತಿ ಇದೆ. ನಂತರ ಆ ಜಮೀನನ್ನ 2005ರಲ್ಲಿ ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸಿದ್ದಾರೆ. ಆಗ ಉಪ ಮುಖ್ಯಮಂತ್ರಿಯಾಗಿದ್ದವರೇ ಸಿದ್ದರಾಮಯ್ಯ ಅವರೇ ಎಂದು ಹೇಳಿದರು.
5
+ ನಿಂಗ ಅಲಿಯಾಸ್ ಜವರ ಎಂಬ ವ್ಯಕ್ತಿ ಹೆಸರಿನಲ್ಲಿ 1992-93ರಲ್ಲಿ 3 ಎಕರೆ 16 ಗುಂಟೆ ಜಮೀನು ಪೌತಿ ಖಾತೆಯಾಗಿದೆ. 1998ರಲ್ಲಿ ಡಿನೋಟಿಫಿಕೇಷನ್ ಅನ್ನು ಸತ್ತ ವ್ಯಕ್ತಿ ಹೆಸರಿನಲ್ಲಿ ಮಾಡಲಾಗಿದೆ. ಆಗ ಉಪಮುಖ್ಯಮಂತ್ರಿಯಾಗಿದ್ದವರು ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಂದು ತಿಳಿಸಿದರು.
6
+ ಸಿದ್ದರಾಮಯ್ಯ ಅವರ ಪತ್ನಿಯ ತಮ ದಾನವಾಗಿ ಈ ಜಮೀನನ್ನು ನೀಡಿರುವುದಾಗಿ ಹೇಳಲಾಗಿದೆ. ಆದರೆ ಮುಡಾ ಜಮೀನು ದೇವರಾಜು ಅವರಿಗೆ ಹೇಗೆ ಬಂತು? ಸತ್ತ ವ್ಯಕ್ತಿಗೆ ಡಿನೋಟಿಫಿಕೇಷನ್ ಹೇಗಾಯ್ತು ಎಂಬ ವಿವರವನ್ನು ಮುಖ್ಯಮಂತ್ರಿ ಬಹಿರಂಗಪಡಿಸಬೇಕೆಂದು ಆಗ್ರಹಿಸಿದರು.
7
+ ತಮ ಆರೋಪಕ್ಕೆ ಸಂಬಂಧಪಟ್ಟಂತೆ ಮೂಡಾದ ಯೋಜನಾ ನಕ್ಷೆ ಸೇರಿದಂತೆ ಹಲವು ದಾಖಲೆಗಳನ್ನು ಪ್ರದರ್ಶಿಸಿದರು. 2013ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ ಪತ್ನಿ ಹೆಸರಿಗೆ ದಾನವಾಗಿ ಬಂದಿರುವ ಜಮೀನಿನ ಮಾಹಿತಿಯನ್ನು ಸಿದ್ದರಾಮಯ್ಯ ಪ್ರಮಾಣಪತ್ರದಲ್ಲಿ ಉಲ್ಲೇಖಿಸಿಲ್ಲ ಎಂದು ಟೀಕಿಸಿದರು.
8
+ ಮುಡಾ ಹಗರಣ ಬೇರೆ, ಮುಖ್ಯಮಂತ್ರಿ ಕುಟುಂಬದ ಅವ್ಯವಹಾರದ ಪ್ರಶ್ನೆಯೇ ಬೇರೆ. ಮುಖ್ಯಮಂತ್ರಿಯ ಮೂಗಿನ ನೇರಕ್ಕೆ ಇದು ನಡೆದಿದೆ. ಉಪಮುಖ್ಯಮಂತ್ರಿ, ಮುಖ್ಯಮಂತ್ರಿ ಸ್ಥಾನದಲ್ಲಿ ನಡೆದ ಅವ್ಯವಹಾರವಾಗಿದ್ದು,ಇದು ಅಧಿಕಾರದ ದುರುಪಯೋಗವಾಗಿದೆ ಎಂದು ಆರೋಪಿಸಿದರು.
9
+ 62 ಕೋಟಿ ರೂ. ಬೆಲೆ ಬಾಳುವ ಆಸ್ತಿಗೆ ಬದಲಿ ನಿವೇಶನ ಪಡೆದಿರುವುದಾಗಿ ಹೇಳಿದ್ದಾರೆ. ಎಲ್ಲಿ ಭೂಸ್ವಾಧೀನವಾಗಿದೆಯೋ ಆ ಜಾಗದಲ್ಲಿ ಎರಡು ನಿವೇಶನ ಪಡೆಯಬಹುದು ಎಂಬ ನಿಯಮವಿದೆ. ಅದರೆ ಬೇರೆ ಕಡೆ ನಿವೇಶವನ್ನು ಪಡೆದಿದ್ದಾರೆ. ಇದು ಅವರ ಪಿತ್ರಾರ್ಜಿತ ಆಸ್ತಿಯಲ್ಲ ಎಂದು ತಿಳಿಸಿದರು.
10
+ ಎಲ್ಲರ ಮೇಲೆ ಕ್ರಮವಾಗಲಿ:ಮೂರ್ನಾಲ್ಕು ಸಾವಿರ ಕೋಟಿ ರೂ. ಮೂಡ ಹಗರಣವಾಗಿದ್ದು, ಆರೋಪ ಯಾರ್ಯಾರ ಮೇಲೆ ಬಂದಿದೆಯೋ ಅವರ ಮ���ಲೆ ಕ್ರಮ ಕೈಗೊಳ್ಳುವುದು ಸರ್ಕಾರದ ಕರ್ತವ್ಯ ಎಂದರು.ಮುಖ್ಯಮಂತ್ರಿಯವರ ಮೇಲೆ ಕೇಳಿಬಂದಿರುವ ಆರೋಪಕೆ ಸಂಬಂಧಿಸಿದಂತೆ ನಾನು ಮಾಹಿತಿ ಒದಗಿಸಿದ್ದೇನೆ. ಯಾರಾದರೂ ವಕೀಲರು ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ ಪಡೆದು ನ್ಯಾಯಾಲಯದ ಮೊರೆ ಹೋಗಬಹುದು ಎಂದು ಹೇಳಿದರು.
11
+ ಹಿಂದುಳಿದ ನಾಯಕ ಮುಖ್ಯಮಂತ್ರಿ ಆಗಿರುವುದನ್ನು ಸಹಿಸದೆ ಪ್ರತಿಪಕ್ಷಗಳು ಟೀಕೆಮಾಡುತ್ತಿವೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ,ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದಾಗ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವೆಯಾಗಲ್ಲವೆ? ಚಂದ್ರಶೇಖರ್ ಎಂಬುವರ ಡೆತ್ನೋಟ್ ಇಲ್ಲದಿದ್ದರೆ ಏನು ಮಾಡುತ್ತಿದ್ದಿರಿ? ಎಂದು ವಾಗ್ದಾಳಿ ನಡೆಸಿದರು.
12
+ ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಬಂಡಪ್ಪ ಕಾಶೆಂಪುರ್, ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ, ಎಸ್.ಎಲ್.ಭೋಜೇಗೌಡ, ಜೆಡಿಎಸ್ ಮುಖಂಡರಾದ ಆರ್.ಪ್ರಕಾಶ್ ಮತ್ತಿತರರು ಹಾಜರಿದ್ದರು.
eesanje/url_46_78_10.txt ADDED
@@ -0,0 +1,9 @@
 
 
 
 
 
 
 
 
 
 
1
+ ವಾಲ್ಮೀಕಿ ನಿಗಮ ಅವ್ಯವಹಾರ : ಶಾಸಕ ದದ್ದಲ್‌ ಜೊತೆ ಪುತ್ರ ತ್ರಿಶೂಲ್‌ಗೂ ಕಾನೂನು ಕಂಟಕ
2
+ ಬೆಂಗಳೂರು,ಜು.13-ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರ ಪ್ರಕರಣದಲ್ಲಿ ಈಗಾಗಲೇ ಇಡಿ ಅಧಿಕಾರಿಗಳ ಖೆಡ್ಡಾಕ್ಕೆ ಮಾಜಿ ಸಚಿವ ಬಿ.ನಾಗೇಂದ್ರ ಬಿದ್ದಿರುವ ಬೆನ್ನಲ್ಲೇ ಇದೀಗ ಶಾಸಕ ಬಸನಗೌಡ ದದ್ದಲ್‌ ಮತ್ತು ಪುತ್ರನಿಗೂ ಸಂಕಷ್ಟ ಎದುರಾಗಿದೆ.
3
+ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ಬಸನಗೌಡ ದದ್ದಲ್‌ ಅವರನ್ನು ವಶಕ್ಕೆ ಪಡೆಯಲು ಬಲೆ ಬೀಸಿದೆ.ಈ ಬೆನ್ನಲ್ಲೇ ದದ್ದಲ್‌ ಅವರ ಪುತ್ರತ್ರಿಶೂಲ್‌ಗೂ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದು, ಎಸ್‌‍ಐಟಿ ಹಾಗೂ ಇಡಿ ಜೊತೆ ಜೊತೆಯಾಗಿ ವಶಕ್ಕೆ ಪಡೆಯಲು ಮುಂದಾಗಿದೆ.
4
+ ಶುಕ್ರವಾರ ಸಂಜೆ ಬೆಂಗಳೂರಿನಲ್ಲಿ ಸುಮಾರು 6 ಗಂಟೆಗೂ ಹೆಚ್ಚು ಕಾಲ ಎಸ್‌‍ಐಟಿ ವಿಚಾರಣೆ ಎದುರಿಸಿದ್ದ ಬಸನಗೌಡ ದದ್ದಲ್‌ ನಂತರ ಎಲ್ಲಿಗೆ ಹೋಗಿದ್ದಾರೆ ಎಂಬುದು ಯಾರಿಗೂ ಗೊತ್ತಿಲ್ಲ.ಈವರೆಗೂ ಅವರು ಎಲ್ಲಿದ್ದಾರೆ ಎಂಬುದು ಕುಟುಂಬದ ಸದಸ್ಯರಿಗೂ ಕೂಡ ಮಾಹಿತಿ ಇಲ್ಲ ಎಂದು ತಿಳಿದುಬಂದಿದೆ. ಸದ್ಯ ಅವರ ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು, ಇಡಿ ಯಾವುದೇ ಕ್ಷಣದಲ್ಲಿ ಬಂಧಿಸಬಹುದೆಂಬ ಭಯದಿಂದ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.
5
+ ಈ ಹಗರಣದಲ್ಲಿ ಬಸನಗೌಡ ದದ್ದಲ್‌ ಕೂಡ ಶಾಮೀಲಾಗಿರುವುದು ಕೆಲವು ದಾಖಲಾತಿಗಳಿಂದ ಬಹಿರಂಗಗೊಂಡಿದೆ. ಹೀಗಾಗಿಯೇ ಇಡಿ ಅವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲು ಮುಂದಾಗಿದೆ. ಬುಧವಾರ ಮುಂಜಾನೆಯೇ ಬೆಂಗಳೂರಿನ ಯಲಹಂಕ, ರಾಯಚೂರು ಸೇರಿದಂತೆ ಸಂಬಂಧಿಕರ ಮನೆ, ಕಚೇರಿ, ಮತ್ತಿತರ ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಕೆಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.
6
+ ಬಸನಗೌಡ ದದ್ದಲ್‌ ಅವರ ಆಪ್ತ ಕಾರ್ಯದರ್ಶಿ ಪಂಪಣ್ಣ ಸೇರಿದಂತೆ ಕೆಲವು ಆಪ್ತರನ್ನು ವಿಚಾರಣೆಗೊಳಪಡಿಸಿ ಮಾಹಿತಿ ಕಲೆ ಹಾಕಿದ್ದರು. ಪ್ರಕರಣದಲ್ಲಿ ದದ್ದಲ್‌ ಹೆಸರು ಕೂಡ ಕೇಳಿಬಂದಿದ್ದು, ಇಡಿ ಅಧಿಕಾರಿಗಳು ಕೆಲವು ಡಿಜಿಟಲ್‌ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಯಾವುದೇ ಕ್ಷಣದಲ್ಲೂ ಅವರು ಇಡಿ ಗಾಳಕ್ಕೆ ಬೀಳಬಹುದೆಂದು ತಿಳಿದುಬಂದಿದೆ.
7
+ ಪುತ್ರನಿಗೂ ಸಂಕಷ್ಟ:ಇಷ್ಟೆಲ್ಲ ಬೆಳವಣಿಗೆಗಳ ನಡುವೆಯೇ ಬಸನಗೌಡ ದದ್ದಲ್‌ ಪುತ್ರ ತ್ರಿಶೂಲ್‌ ನಾಯಕ್‌ ಖರೀದಿಸಿರುವ ಜಮೀನು ವಿವಾದದ ಕೇಂದ್ರಬಿಂದುವಾಗಿದೆ. ಸಿರವಾರ ಹೋಬಳಿ ಗಣದಿನ್ನಿ ಗ್ರಾಮದಲ್ಲಿ ಸರ್ವೆ ನಂ.33/1 ನಂಬರಿನ ಬಸನ ಗೌಡ ಸಿದ್ದನಗೌಡ ಎಂಬುವರಿಂದ ಜಮೀನು ಖರೀದಿಸಿರುವುದು ವಿವಾದಕ್ಕೆ ಕಾರಣವಾಗಿದೆ.
8
+ ಕಳೆದ ಮೇ 25ರಂದು ತ್ರಿಶೂಲ್‌ ನಾಯಕ್‌ ಹೆಸರಿನಲ್ಲಿ ಜಮೀನನ್ನು ನೋಂದಣಿ ಮಾಡಿಸಲಾಗಿದೆ. 4 ಎಕರೆ 30 ಗುಂಟೆ ಜಮೀನನ್ನು ದದ್ದಲ್‌ ಖರೀದಿಸಿದ್ದಾರೆ.ಗಮನಾರ್ಹ ವಿಷಯವೆಂದರೆ ಮಹರ್ಷಿ ��ಾಲೀಕಿ ಹಗರಣ ಹೊರಬರಲು ಕಾರಣರಾಗಿದ್ದ ಶಿವಮೊಗ್ಗದ ಚಂದ್ರಶೇಖರನ್‌ ಆತಹತ್ಯೆಗೂ ಮುನ್ನವೇ ಈ ಜಮೀನನ್ನು ಖರೀದಿಸಲಾಗಿತ್ತು.
9
+ ಒಂದು ಎಕರೆಗೆ 36 ಲಕ್ಷ ರೂ.ನಂತೆ ಒಟ್ಟು 4 ಎಕರೆ 30 ಗುಂಟೆ ಜಮೀನನ್ನು ಖರೀದಿ ಮಾಡಲಾಗಿದೆ. ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರದ ಹಣದಿಂದಲೇ ಈ ಜಮೀನನ್ನು ಖರೀದಿಸಲಾಗಿದೆಯೇ ಎಂಬ ಅನುಮಾನ ಎಸ್‌‍ಐಟಿ ಮತ್ತು ಇಡಿಗೆ ಮೂಡಿದೆ.ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಎಸ್‌‍ಐಟಿ ನೋಟಿಸ್‌‍ ನೀಡಲು ಮುಂದಾಗಿದ್ದರೆ, ಇಡಿ ಕೂಡ ತ್ರಿಶೂಲ್‌ ನಾಯಕ್‌ ಅವರನ್ನು ವಿಚಾರಣೆಗೊಳಪಡಿಸಲು ಸಜ್ಜಾಗುತ್ತಿದೆ. ಸದ್ಯ ತ್ರಿಶೂಲ್‌ ನಾಯಕ್‌ ದೆಹಲಿಯಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಾರೆ.
eesanje/url_46_78_11.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಮಾಜಿ ಸಚಿವ ಬಿ.ನಾಗೇಂದ್ರ 6 ದಿನ ಇಡಿ ವಶಕ್ಕೆ
2
+ ಬೆಂಗಳೂರು,ಜು.13-ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ(ಇಡಿ) ವಶಕ್ಕೆ ನೀಡಿ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.ಶುಕ್ರವಾರ ಬೆಳಗ್ಗೆ ಡಾಲರ್‌ರ‍ಸ ಕಾಲೋನಿಯಲ್ಲಿರುವ ನಾಗೇಂದ್ರ ಅವರ ಫ್ಲಾಟ್‌ನಲ್ಲಿ ಇಡಿ ಅಧಿಕಾರಿಗಳು ಬಂಧಿಸಿ ಬೆಂಗಳೂರಿನ ಶಾಂತಿನಗರ ಕಚೇರಿಯಲ್ಲಿ ಸರಿಸುಮಾರು 22 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದರು.
3
+ ನಿಯಮದಂತೆ ಆರೋಪಿಯೊಬ್ಬರನ್ನು ವಶಕ್ಕೆ ಪಡೆದ ನಂತರ 24 ಗಂಟೆಯೊಳಗೆ ನ್ಯಾಯಾಲಯ ಇಲ್ಲವೇ ನ್ಯಾಯಾಧೀಶರ ಎದುರು ಹಾಜರುಪಡಿಸಬೇಕು. ಅದರಂತೆ ಇಡಿ ಅಧಿಕಾರಿಗಳು ಶನಿವಾರ ಮುಂಜಾನೆ ಯಲಹಂಕದಲ್ಲಿರುವ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಮೂರ್ತಿ ಗಜಾನನ ಭಟ್‌ ಅವರ ಮುಂದೆ ಹಾಜರುಪಡಿಸಿದರು.
4
+ ಮೊದಲು ಆರೋಪಿ ನಾಗೇಂದ್ರ ಅವರನ್ನು 14 ದಿನಗಳ ಕಾಲ ತಮ್ಮ ವಶಕ್ಕೆ ನೀಡಬೇಕೆಂದು ಕೋರಿದರು. ಅಂತಿಮವಾಗಿ ನ್ಯಾಯಾಲಯ ಆರು ದಿನಗಳ ಕಾಲ ವಶಕ್ಕೆ ನೀಡಿ ಆದೇಶ ನೀಡಿತು. ಪುನಃ ಅಂದರೆ ಜುಲೈ 18ರಂದು ತಮ ಮುಂದೆ ಹಾಜರುಪಡಿಸಬೇಕೆಂದು ಇಡಿ ಅಧಿಕಾರಿಗಳಿಗೆ ನ್ಯಾಯಾಧೀಶರು ನಿರ್ದೇಶನ ನೀಡಿದರು.
5
+ ಈ ವೇಳೆ ಆರೋಪಿ ಸ್ಥಾನದಲ್ಲಿರುವ ನಾಗೇಂದ್ರ ಅವರು ತಮಗೆ ಆರೋಗ್ಯದ ಸಮಸ್ಯೆ ಇರುವುದನ್ನು ನ್ಯಾಯಮೂರ್ತಿಗಳ ಮುಂದೆ ಹೇಳಿಕೊಂಡರು. ಬಿಪಿ, ಆಯಾಸ ಇದೆ ಎಂದು ನ್ಯಾಯಮೂರ್ತಿಗಳ ಗಮನಸೆಳೆಯುವ ಪ್ರಯತ್ನ ಮಾಡಿದರು. ಪ್ರತಿದಿನ ಮೂರು ಗಂಟೆ ಮಾತ್ರ ವಿಚಾರಣೆ ನಡೆಸಬಹುದು. ವಿಚಾರಣೆಯ ನಂತರ 30 ನಿಮಿಷಗಳ ಕಾಲ ವಿಶ್ರಾಂತಿ ನೀಡಬೇಕು. ಅಲ್ಲದೆ ಅವರಿಗೆ ಪ್ರತಿದಿನ ವೈದ್ಯಕೀಯ ತಪಾಸಣೆಗೊಳಪಡಿಸಬೇಕೆಂದು ಇಡಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
6
+ ಈ ವೇಳೆ ನಾಗೇಂದ್ರ ನ್ಯಾಯಾಧೀಶರ ಮುಂದೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನಾನು ನಿಯಮದಂತೆಯೇ ಸಚಿವನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಹಣ ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ನನ್ನನ್ನು ಬಲಿಪಶು ಮಾಡಲಾಗಿದೆ ಎಂದು ಅಳಲು ತೋಡಿಕೊಂಡರು.
7
+ ನನಗೆ ಆರೋಗ್ಯ ಸಮಸ್ಯೆ ಇದೆ. ಹೀಗಾಗಿ ವೈದ್ಯಕೀಯ ನೆರವು ಬೇಕು. ಇಡಿ ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ನ್ಯಾಯಾಧೀಶರಿಗೆ ಮನವಿ ಮಾಡಿದರು. ಇದನ್ನು ಮನ್ನಿಸಿದ ನ್ಯಾಯಾಧೀಶರು ಆರೋಪಿಗೆ ಅಗತ್ಯವಿರುವ ವೈದ್ಯಕೀಯ ಚಿಕಿತ್ಸೆಯನ್ನು ನೀಡಬೇಕೆಂದು ಸೂಚನೆ ನೀಡಿದರು.
8
+ ಇದಕ್ಕೂ ಮುನ್ನ ಇಡಿ ಪರ ಹಾಜರಾದ ವಿಶೇಷ ಸಾರ್ವಜನಿಕ ಅಭಿಯೋಜಕ ನಾಗೇಂದ್ರ ಅವರನ್ನು ಹೆಚ್ಚಿನ ವಿಚಾರಣೆ ನಡೆಸಬೇಕು. ಇದು ಬಹುಕೋಟಿ ಹಗರಣವಾಗಿದೆ. ಒಂದು ರಾಜ್ಯದಿಂದ ಎರಡು ರಾಜ್ಯಗಳಿಗೆ ಹಣ ವರ್ಗಾವಣೆಯಾಗಿರುವ ಆ���ೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ ಯಾರ್ಯಾರು ಭಾಗಿಯಾಗಿದ್ದಾರೆ ಎಂಬುದನ್ನು ಪತ್ತೆಹಚ್ಚಬೇಕು.
9
+ ನೂರಾರು ಕೋಟಿ ಅವ್ಯವಹಾರ ಹೇಗೆ ನಡೆಯಿತು ಎಂಬುದರ ಕುರಿತು ವಿಸ್ತೃತ ಚರ್ಚೆ ನಡೆಯಬೇಕು, ಆರೋಪಿ ಸ್ಥಾನದಲ್ಲಿರುವವರು ಪ್ರಭಾವಿ ವ್ಯಕ್ತಿಯಾಗಿರುವುದರಿಂದ ಸಾಕ್ಷ್ಯಾಧಾರಗಳನ್ನು ನಾಶಪಡಿಸುವ ಸಾಧ್ಯತೆ ಇದೆ. ಹೀಗಾಗಿ ಅವರನ್ನು 14 ದಿನ ಇಡಿ ಅಧಿಕಾರಿಗಳ ವಶಕ್ಕೆ ನೀಡುವಂತೆ ಕೋರಿದರು.
10
+ ಅಂತಿಮವಾಗಿ ನ್ಯಾಯಾಲಯ ಆರು ದಿನಗಳ ಕಾಲ ಇಡಿ ವಶಕ್ಕೆ ನೀಡಿ ಆದೇಶಿಸಿ ಇದೇ 18ರಂದು(ಗುರುವಾರ) ಬೆಳಗ್ಗೆ 11.30ಕ್ಕೆ ಹಾಜರುಪಡಿಸಬೇಕೆಂದು ನಿರ್ದೇಶನ ನೀಡಿದರು.ನಾಗೇಂದ್ರ ಅವರನ್ನು ಶುಕ್ರವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಅದಕ್ಕೂ ಮುನ್ನ ಸತತ 40 ಗಂಟೆಗಳ ಕಾಲ ನಾಗೇಂದ್ರ ಅವರ ಮನೆ ಹಾಗೂ ಕಚೇರಿಯನ್ನು ತಪಾಸಣೆ ನಡೆಸಲಾಗಿತ್ತು.
11
+ ನಾಗೇಂದ್ರಗೆ ನಿನ್ನೆ ತಡರಾತ್ರಿ ವೈದ್ಯಕೀಯ ತಪಾಸಣೆ ಮಾಡಿಸಲಾಗಿದೆ. ಬೌರಿಂಗ್‌ ಆಸ್ಪತ್ರೆಯಲ್ಲಿ ತಪಾಸಣೆ ಮುಗಿಸಿ ನಿನ್ನೆ ರಾತ್ರಿ ಇಡಿ ಕಚೇರಿಗೆ ಕರೆತರಲಾಗಿತ್ತು. ಬೌರಿಂಗ್‌ ಆಸ್ಪತ್ರೆಯ ವೈದ್ಯರು, ಆರೋಗ್ಯ ಸ್ಥಿರವಾಗಿದೆ ಎಂದು ರಿಪೋರ್ಟ್‌ ನೀಡಿದ್ದಾರೆ.
12
+ ಶನಿವಾರ ಬೆಳಗ್ಗೆ ನಾಗೇಂದ್ರರನ್ನು ಕರೆತರುವಂತೆ ನ್ಯಾಯಾಧೀಶರು ಸೂಚಿಸಿದ್ದರು. ಹೀಗಾಗಿ ನಿನ್ನೆ ರಾತ್ರಿಯೂ ಇಡಿ ಕಚೇರಿಯಲ್ಲೇ ಅವರನ್ನು ಅಧಿಕಾರಿಗಳು ಇರಿಸಿಕೊಂಡಿದ್ದರು. ಇಡಿ ಕಚೇರಿಯಲ್ಲೇ ಮಲಗಲು ಬೆಡ್ಶೀಟ್‌‍, ದಿಂಬು ತರಿಸಿಕೊಂಡಿದ್ದರು. ಲೋಕಲ್‌ ಪೊಲೀಸ್‌‍ ಸ್ಟೇಷನ್‌ಗೂ ಕರೆದೊಯ್ಯದೆ ವಿಚಾರಣಾ ಗೌಪ್ಯತೆ ಕಾಪಾಡಿಕೊಂಡಿದ್ದರು.
eesanje/url_46_78_12.txt ADDED
@@ -0,0 +1,5 @@
 
 
 
 
 
 
1
+ ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣಗಳಲ್ಲಿ ಸಿಎಂ ಪಾತ್ರದ ಕುರಿತು ಸಮಗ್ರ ತನಿಖೆಯಾಗಬೇಕು : ಜೋಷಿ
2
+ ಬೆಂಗಳೂರು, ಜು.13-ರಾಜ್ಯದಲ್ಲಿ ವಾಲ್ಮೀಕಿ ಹಗರಣ, ಮುಡಾ ಹಗರಣಗಳಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರದ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಅವರಿಗೂ ಎಸ್‌‍ಐಟಿ ನೋಟಿಸ್‌‍ ನೀಡಿ ತನಿಖೆ ನಡೆಸಬೇಕು ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಷಿ ಆಗ್ರಹಿಸಿದರು.
3
+ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಲೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರ ಇದ್ದೇ ಇದೆ ಎಂದು ಗಂಭೀರ ಆರೋಪ ಮಾಡಿದರು.
4
+ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ಬಾರದೆ 187 ಕೋಟಿ ರೂ.ನಷ್ಟು ದೊಡ್ಡಮೊತ್ತದ ಹಣ ವಾಲೀಕಿ ಅಭಿವೃದ್ಧಿ ನಿಗಮದಿಂದ ವರ್ಗಾವಣೆಯಾಗಲು ಸಾಧ್ಯವೇ ಇಲ್ಲ. ಈ ಭ್ರಷ್ಟಾಚಾರದ ಬಗ್ಗೆ ಸಿಎಂ ಅವರಿಗೂ ಎಸ್‌‍ಐಟಿ ನೋಟಿಸ್‌‍ ನೀಡಿ ತನಿಖೆ ನಡೆಸಬೇಕು. ಇನ್ನು ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರ ಪಾತ್ರವಿದೆ. ಅವರ ಹಸ್ತಕ್ಷೇಪವಿಲ್ಲದೆ ನಡೆಯಲು ಸಾಧ್ಯವಿಲ್ಲ. ಈ ಬಗ್ಗೆಯೂ ಕೂಡ ಅವರ ವಿರುದ್ಧ ನೇರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.
5
+ ಮೈಸೂರು ಮುಖ್ಯಮಂತ್ರಿಯವರ ತವರು ಜಿಲ್ಲೆ. ಅವರಿಗೆ ಗೊತ್ತಿದ್ದೇ ಈ ಭ್ರಷ್ಟಾಚಾರ ನಡೆದಿದೆ. ಅವರು ಈ ಹಗರಣದ ನೈತಿಕ ಹೊಣೆ ಹೊರಬೇಕು. ಈ ಎರಡು ಬಹುದೊಡ್ಡ ಹಗರಣಗಳ ಬಗ್ಗೆ ಸಿಎಂ ವಿರುದ್ಧ ತನಿಖೆ ನಡೆಸಬೇಕು ಎಂದು ಜೋಷಿ ಆಗ್ರಹಿಸಿದರು.
eesanje/url_46_78_2.txt ADDED
@@ -0,0 +1,4 @@
 
 
 
 
 
1
+ ಸಿದ್ದರಾಮಯ್ಯನವರೇ ನಿಮ್ಮ ಅಹಂಕಾರವೇ ನಿಮನ್ನು ರಾಜಕೀಯ ಅಧಃಪತನಕ್ಕೆ ತಳ್ಳುತ್ತೆ : ಅಶೋಕ್ ಕಿಡಿ
2
+ ಬೆಂಗಳೂರು,ಜು.13-ತಾವು ಯಾವ ಸೀಮೆ ಸುಲ್ತಾನರೂ ಅಲ್ಲ, ನವಾಬರೂ ಅಲ್ಲ. ನಿಮ್ಮ ಅಹಂಕಾರವೇ ನಿಮನ್ನ ರಾಜಕೀಯ ಅಧಃಪತನಕ್ಕಿಳಿಸುವುದು ಶತ:ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಎಚ್ಚರಿಕೆ ಕೊಟ್ಟಿದ್ದಾರೆ.
3
+ ಈ ಕುರಿತು ತಮ ಎಕ್ಸ್ಸ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು,ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ. ಹತ್ತಿದ ಏಣಿಯನ್ನೇ ಒದೆಯುವಷ್ಟು ಅಧಿಕಾರದ ಮದವೇರಿದೆಯೇ ಸಿಎಂನವರೇ? ಅಧಿಕಾರದ ಮದವೇರಿದ ಪಕ್ಷಕ್ಕೆ ಮತದಾರರು ವಸ್ತುಗಳೇ ಹೊರತು ಜನರ ಸಮಸ್ಯೆಗಳ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎನ್ನುವುದಕ್ಕೆ ಚಾಮರಾಜನಗರದಲ್ಲಿ ನಡೆದಿರುವ ಘಟನೆಯೇ ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
4
+ ಮುಖ್ಯಮಂತ್ರಿಗಳೇ ಜನರು ತಮ ಸಮಸ್ಯೆಗಳು, ಕುಂದುಕೊರತೆಗಳನ್ನು ಬರೆದು ಅಹವಾಲುಗಳನ್ನು ಕೊಟ್ಟರೆ ಅದನ್ನು ನಿಕೃಷ್ಟವಾಗಿ ಬೀದಿಪಾಲು ಮಾಡುತ್ತೀರಲ್ಲ, ಇದಕ್ಕೇನಾ ಜನ ನಿಮಗೆ ಅಧಿಕಾರ ಕೊಟ್ಟಿರುವುದು? ಎಂದು ಪ್ರಶ್ನೆ ಮಾಡಿದ್ದಾರೆ. ತಮ್ಮ ಕುರ್ಚಿ ಜನಸೇವೆ ಮಾಡಲಿ ಎಂದು ಮತದಾರರು ನೀಡಿರುವ ಭಿಕ್ಷೆ ಎಂದು ಅವರು ತಿರುಗೇಟು ನೀಡಿದ್ದಾರೆ.
eesanje/url_46_78_3.txt ADDED
@@ -0,0 +1,6 @@
 
 
 
 
 
 
 
1
+ ಉಪ್ಪು ತಿಂದವರು ನೀರು ಕುಡಿಯಲೇಬೇಕು : ಸಿಎಂ ಸಿದ್ಧರಾಮಯ್ಯ
2
+ ಬೆಂಗಳೂರು, ಜು.13– ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತನಿಖೆ ನಡೆಯುತ್ತಿದ್ದು, ಜಾರಿನಿರ್ದೇಶನಾಲಯದ ಮಧ್ಯಪ್ರವೇಶ ಅಗತ್ಯ ಇರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
3
+ ಖಾಸಗಿ ಸುದ್ದಿ ವಾಹಿನಿಯೊಂದಿಗೆ ಮಾತನಾಡಿರುವ ಅವರು, ನಮ್ಮ ಸರ್ಕಾರ ಯಾರನ್ನೂ ರಕ್ಷಿಸುವುದಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಪ್ರಕರಣದ ಮಾಹಿತಿ ತಿಳಿಯುತ್ತಿದ್ದಂತೆ ವಿಶೇಷ ತನಿಖಾದಳ ರಚನೆ ಮಾಡಿದ್ದೇವೆ ಎಂದು ಹೇಳಿದರು.
4
+ ನಿಗಮದಲ್ಲಿನ ಹಣ ವರ್ಗಾವಣೆ ಪ್ರಕರಣಕ್ಕೆ ಆರ್ಥಿಕ ಇಲಾಖೆ ಹೊಣೆ ಯಲ್ಲ. ಬ್ಯಾಂಕ್ಗಳಲ್ಲಿ ಅಕ್ರಮಗಳಾದರೆ ಅದಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಥವಾ ಪ್ರಧಾನಿ ನರೇಂದ್ರಮೋದಿ ಹೊಣೆಗಾರರು ಎಂದು ಹೇಳಲು ಸಾಧ್ಯವೇ? ನಿಗಮದಲ್ಲಿನ ವ್ಯವಸ್ಥಾಪಕ ನಿರ್ದೇಶಕರು, ಹಣಕಾಸು ಅಧಿಕಾರಿಗಳು ಹೊಣೆಗಾರರಾಗಿದ್ದಾರೆ.
5
+ ವಿವಿಧ ಖಾತೆಗಳಿಗೆ ಹಣ ವರ್ಗಾವಣೆ ಮಾಡಲು ವ್ಯವಸ್ಥಾಪಕ ನಿರ್ದೇಶಕರು ಏಕಾಂಗಿಯಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಿದರು. ಎಸ್ಐಟಿ ತನಿಖೆ ಬಹಳ ಮುಂದುವರೆದಿದೆ. ಸಂಬಂಧಪಟ್ಟವರನ್ನು ಬಂಧಿಸಿರುವ ಜೊತೆಗೆ ಈವರೆಗೂ ನಡೆದ ತನಿಖೆ ಹಾಗೂ ಕಾರ್ಯಾಚರಣೆಯಲ್ಲಿ 30 ಕೋಟಿ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ.
6
+ ಈ ಹಂತದಲ್ಲಿ ಜಾರಿನಿರ್ದೇಶನಾಲಯದ ಮಧ್ಯಪ್ರವೇಶ ಅಗತ್ಯ ಇರಲಿಲ್ಲ. ಬಹುಶಃ ಬ್ಯಾಂಕ್ನಲ್ಲಿ ನಡೆದ ವಹಿವಾಟಿಗೆ ಸಂಬಂಧಪಟ್ಟಂತೆ ಇಡಿ ತನಿಖೆ ನಡೆಸುತ್ತಿರಬಹುದು ಎಂದು ಹೇಳಿದ್ದಾರೆ.
eesanje/url_46_78_4.txt ADDED
@@ -0,0 +1,16 @@
 
 
 
 
 
 
 
 
 
 
 
 
 
 
 
 
 
1
+ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು, ಜು.13-ಎರಡನೇ ಬಾರಿ ಮುಖ್ಯಮಂತ್ರಿಗಳಾದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಅವರ ಮೊದಲ ಕಾರ್ಯಕರ್ತರ ಅಹವಾಲು ಸ್ವೀಕಾರ ಅಭಿಯಾನ ಹುರುಪು-ನಿರೀಕ್ಷೆ-ಭರವಸೆಗಳೊಂದಿಗೆ ನಡೆಯಿತು. ಆರಂಭದಲ್ಲಿ ಮುಖ್ಯಮಂತ್ರಿಯವರು ಖುದ್ದು ವಿಕಲಚೇತನರ ಬಳಿಗೇ ಹೋಗಿ ಅಹವಾಲುಗಳನ್ನು ಸ್ವೀಕರಿಸಿದರು.
3
+ ತ್ರಿಚಕ್ರ ವಾಹನ, ಸರ್ಕಾರಿ ಉದ್ಯೋಗ, ನಿಗಮ ಮಂಡಳಿಯಲ್ಲಿ ಅವಕಾಶ, ಗುತ್ತಿಗೆ ನೌಕರಿ, ಸ್ವಂತ ಉದ್ಯೋಗಕ್ಕೆ ಅನುದಾನ, ಸಾಲದ ಸವಲತ್ತು ಸೇರಿ ನಾನಾ ಬೇಡಿಕೆಗಳನ್ನು ವಿಕಲಚೇತನ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿಗಳ ಮುಂದಿಟ್ಟರು. ಪ್ರತಿಯೊಬ್ಬ ಕಾರ್ಯಕರ್ತರ ಅಹವಾಲು ಮತ್ತು ಪಕ್ಷ ಸಂಘಟನೆಯಲ್ಲಿ ಅವರು ತೊಡಗಿಸಿಕೊಂಡಿರುವ ಬಗ್ಗೆ ವಿವರವಾಗಿ ಕೇಳಿ ತಿಳಿದುಕೊಂಡ ಮುಖ್ಯಮಂತ್ರಿಯವರು, ಅಹವಾಲುಗಳನ್ನು ಪಟ್ಟಿ ಮಾಡಿಕೊಂಡು ಸಂಬಂಧಪಟ್ಟ ಅ„ಕಾರಿಗಳ ಮೂಲಕ ಈಡೇರಿಸುವಂತೆ ತಮ್ಮ ಕಚೇರಿ ಸಿಬ್ಬಂದಿಗೆ ಸ್ಪಷ್ಟ ಸೂಚನೆ ನೀಡಿದರು. ತಕ್ಷಣ ಬಗೆಹರಿಸಬಹುದಾದ ಬೇಡಿಕೆಗಳಿಗೆ ಸಳದಲ್ಲೇ ಸ್ಪಂದಿಸಿದರು.
4
+ ರಾಜ್ಯದ ಹಲವೆಡೆಯಿಂದ ಕಾರ್ಯಕರ್ತರು ಆಗಮಿಸಿದ್ದರು. ಸುಮಾರು 712 ಜನ ಗೂಗಲ್ ಫಾರಂನಲ್ಲಿ ನೋಂದಣಿಯಾಗಿದ್ದು, ಒಟ್ಟು ನಾಲ್ಕು ಸಾವಿರ ಮಂದಿ ನೋಂದಣಿಯಾಗಿದೆ. ಮುಖ್ಯಮಂತ್ರಿಯವರನ್ನು ಭೇಟಿ ಮಾಡಲು ಆಗಮಿಸಿದ ಸಾವಿರಕ್ಕೂ ಹೆಚ್ಚು ಜನರ ಹೆಸರು, ವಿಳಾಸ, ಪಕ್ಷದ ಸದಸ್ಯತ್ವ ಸಂಖ್ಯೆಯನ್ನು ಪರಿಶೀಲಿಸಿ, ಕೆಪಿಸಿಸಿ ಕಚೇರಿ ಸಿಬ್ಬಂದಿಗಳು ಪಡೆದುಕೊಂಡು ಅರ್ಜಿ ಸಂಖ್ಯೆ ನೀಡಿದರು. ಮಧ್ಯಹ್ನಾ 2 ಗಂಟೆಯ ಬಳಿಕ ಕಾರ್ಯಕ್ರಮಕ್ಕೆ ತೆರಳಬೇಕಿರುವುದರಿಂದ ಟೋಕನ್ ಸಂಖ್ಯೆ ಇಲ್ಲದವರ ಅರ್ಜಿಗಳನ್ನು ನೇರವಾಗಿ ಪಡೆದುಕೊಳ್ಳಲಾಯಿತು. ದೂರಗಳ ಸಂಖ್ಯೆ ಜಾಸ್ತಿ ಇದೆ. ಪ್ರತಿ ತಿಂಗಳು ಕನಿಷ್ಠ ಎರಡು ಬಾರಿ ಕಾರ್ಯಕರ್ತರ ಸ್ಪಂದನಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ಕೆಪಿಸಿಸಿ ಕಾರ್ಯಧ್ಯಕ್ಷ ಜಿ.ಸಿ.ಚಂದ್ರಶೇಖರ್ ಮನವಿ ಮಾಡಿದರು.
5
+ ಕಾರ್ಯಕರ್ತರ ಸ್ಪಂದನಾ ಕಾರ್ಯಕ್ರಮದ ಕೊನೆಯಲ್ಲಿ ಸಮಯದ ಕೊರತೆಯಿಂದ ಸಾಲಾಗಿ ನಿಂತಿದ್ದ ಕಾರ್ಯಕರ್ತರಿಂದ ಮುಖ್ಯಮಂತ್ರಿಯವರು ಖುದ್ದು ಅರ್ಜಿಗಳನ್ನು ಪಡೆದುಕೊಂಡು ಸ್ಪಂದಿಸುವುದಾಗಿ ಹೇಳಿ ಕಳುಹಿಸಿದರು.ವಿಕಲಚೇತನರ ಸಮಸ್ಯೆ ಆಲಿಕೆ ವೇಳೆ ಕಾರ್ಯಕರ್ತನೊಬ್ಬ ತಾನು ಹಾಸನದ ದುದ್ದ ಗ್ರಾಮದಿಂದ ಬಂದಿದ್ದೇನೆ. ಜೀವನಕ್ಕೆ ಅನುಕೂಲ ಮಾಡಿಕೊಡುವಂತೆ ಬೇಡಿಕೆ ಸಲ್ಲಿಸಿದರು. ಮೂರು ಚಕ್ರದ ವಾಹನ ನೀಡುವಂತೆ ಕೆಲವರು ಮನವಿ ಮಾಡಿದರು. ಮತ್ತೊಬ್ಬರಿಂದ ನಾಲ್ಕು ಚಕ್ರದ ವಾಹನಕ್ಕೆ ಬೇಡಿಕೆ ಕೇಳಿ ಬಂತು.
6
+ ಬಸವನಗುಡಿ ಕ್ಷೇತ್ರದ ಕಾರ್ಯಕರ್ತರೊಬ್ಬರು ಮಕ್ಕಳ ಶಾಲಾ ಶುಲ್ಕ ಪಾವತಿಸಲು ಸಮಸ್ಯೆ ಇದೆ, ಸಹಾಯ ಮಾಡಿ ಎಂದು ಮನವಿ ಮಾಡಿದರು. ಮಹಿಳೆಯೊಬ್ಬರು ಆರ್ಥಿಕ ಸಹಾಯಕ್ಕೆ ಮ��ವಿ ಮಾಡಿದರು. ನಿಗಮದಿಂದ ಸಹಾಯ ಮಾಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು.
7
+ ಬೀದಿಬದಿ ವ್ಯಾಪಾರಿ ಘಟಕದ ಅಧ್ಯಕ್ಷರು, ನಿವೇಶನಕ್ಕೆ ಬೇಡಿಕೆ ಮಂಡಿಸಿದರು. ಅರ್ಜಿ ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು.ಮತ್ತೊಬ್ಬರು ಸೈಬರ್ ಸೆಂಟರ್ ಸ್ಥಾಪನೆಗೆ ಮನವಿ ಸಲ್ಲಿಸಿದರು. ಮಹಿಳೆಯೊಬ್ಬರು ತಾವು ಎಂಎ ಪದವಿ ಪಡೆದಿದ್ದು, ಕೆಲಸ ಕೊಡಿಸುವಂತೆ ಮನವಿ ಮಾಡಿದರು. ನಿಮಗೆ ಪಾಠ ಮಾಡೋಕೆ ಸಾಧ್ಯವೇ ಎಂದು ಮುಖ್ಯಮಂತ್ರಿ ಕೇಳಿದರು. ಮಹಿಳೆ ಸಾಧ್ಯವಿದೆ ಎಂದಾಗ ಅವಕಾಶ ಕೊಡಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು.
8
+ ನಾನು 50 ವರ್ಷದಿಂದ ಕೆಲಸ ಮಾಡುತ್ತಿದ್ದೇನೆ, ನಿಗಮ ಮಂಡಳಿಯಲ್ಲಿ ಅವಕಾಶ ಕೊಡಿಸಿ ಎಂದು ಕಾರ್ಯಕರ್ತರೊಬ್ಬರು ಬೇಡಿಕೆಯಿಟ್ಟರು. ಮಹಿಳೆಯೊಬ್ಬರು ಪಾತಿಮಾ -ಫೌಂಡೇಶನ್ ಆ್ಯಂಬುಲೆನ್ಸ್ ಕೊಡಿಸುವಂತೆ ಬೇಡಿಕೆಯಿಟ್ಟರು.
9
+ ಮತ್ತೊಬ್ಬ ಕಾರ್ಯಕರ್ತೆ ನಿಮ್ಮನ್ನ ನೋಡಿದರೆ ದೇವರನ್ನು ನೋಡಿದಂತಾಗುತ್ತದೆ ಎಂದು ಹೊಗಳಿದರು. ನನಗೆ ಪಕ್ಷದಲ್ಲಿ ಸ್ಥಾನಮಾನ ಕೊಡಿಸಿ, ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಮನವಿ ಸಲ್ಲಿಸಿದರು. ಪಕ್ಷದ ಪದಾ„ಕಾರಿಯನ್ನಾಗಿ ನಾಳೆಯೇ ನೇಮಕ ಮಾಡುವುದಾಗಿ ಕೆಪಿಸಿಸಿ ಕಾರ್ಯಧ್ಯಕ್ಷ ಜಿ.ಸಿ.ಚಂದ್ರಶೇಖರ್ ಭರವಸೆ ನೀಡಿದರು.
10
+ ನೆಲಮಂಗಲದ ಮಾರುತಿ ಎಂಬುವರು ಗುತ್ತಿಗೆ ನೌಕರಿ ಕೊಡಿಸುವಂತೆ, ಬ್ರೈನ್ ಸ್ಟ್ರೊಕ್ ಗೊಳಗಾದ ಕಾರ್ಯಕರ್ತ ತನಗೆ ಕೆಲಸ ಕೊಡಿಸಿ ಮನವಿ ಕೇಳಿ ಬಂತು. ನಿನಗೆ ಮಕ್ಕಳಿದ್ದಾರಾ, ಏನು ಓದುತ್ತಿದ್ದಾರೆ. ನಿಮ್ಮ ಹೆಂಡತಿಗೆ ಗೃಹ ಲಕ್ಷ್ಮಿ ಬರುತ್ತಿದ್ಯಾ ಎಂದು ಕೇಳಿ ವಿವರಣೆ ಪಡೆದುಕೊಂಡ ಮುಖ್ಯಮಂತ್ರಿ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು.
11
+ ಪಹಣಿ ಹಾಗೂ ಭೂ ದಾಖಲೆ ಮಾಡಿಕೊಡುವಲ್ಲಿ ವಿಳಂಬವಾಗಿರುವ ಬಗ್ಗೆ ಹಾಸನ ಚನ್ನಪಟ್ಟಣ ತಾಲ್ಲೂಕು ಬಾಗೂರು ಹೋಬಳಿ ಮಾದಿಹಳ್ಳಿಯ ಕಾರ್ಯಕರ್ತರೊಬ್ಬರು ದೂರು ನೀಡಿದರು. ಈ ವೇಳೆ ಹಾಸನದ ಜಿಲ್ಲಾ„ಕಾರಿಗೆ ದೂರವಾಣಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು, ಯಾಕಪ್ಪ ಇಷ್ಟೊಂದು ವಿಳಂಬ ಮಾಡುತ್ತೀರಾ. ಇಂತದಕ್ಕೆಲ್ಲ ವಿಳಂಬ ಮಾಡ್ಬೇಡಿ. ನಮ್ಮ ಮೂವರು ಕಾರ್ಯಕರ್ತರು ಬರ್ತಾರೆ. ಕೂಡಲೇ ಕೆಲಸ ಮಾಡಿಕೊಡಿ ಎಂದು ಸಿಎಂ ಕಟ್ಟಪ್ಪಣೆ ಮಾಡಿದರು.
12
+ ಕಾಂಗ್ರೆಸ್ ಕಚೇರಿ ಬಳಿ ಪೌರಕಾರ್ಮಿಕರ ನಿಯೋಗವೊಂದು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮನೆಗೆ ಮನವಿ ನೀಡಿತ್ತು. ರಾಜೀವ್‍ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಕರೆ ಮಾಡಿದ ಮುಖ್ಯಮಂತ್ರಿಯವರು ಐದು ಮಂದಿ ಇದ್ದಾರೆ, ಅವರಿಗೆ ಮನೆ ಕೊಡಿಸಿ ಎಂದು ಸೂಚನೆ ನೀಡಿದರು.
13
+ ಶಿರಹಟ್ಟಿ ಬಸಪ್ಪ ಶಿವಪ್ಪ ಗಂಟಿ ಇವರಿಗೆ ಕೊಳವೆ ಮಂಜೂರು ಮಾಡಿಕೊಡಿ ಎಂದು ಸಂಬಂ„ಸಿದ ಅ„ಕಾರಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.ಮಹಿಳೆಯೊಬ್ಬರು ಮನೆಗೆ ಬೇಡಿಕೆ ಇಟ್ಟಾಗ ಸ್ಪಂದಿಸುವುದಾಗಿ ಹೇಳಿದ ಮುಖ್ಯಮಂತ್ರಿಯವರು, ಗೃಹಲಕ್ಷ್ಮೀ, ಅನ್ನಭಾಗ್ಯದ ಹಣ ಬರುತ್ತಿದೆ. ಶಕ್ತಿ ಯೋಜನೆ ಬಗ್ಗೆ ಪುರುಷರು ಟೀಕೆ ಮಾಡುತ್ತಿದ್ಧಾರೆ. ಬಸ್ ಫ್ರೀ ಇರುವುದು ತಮಗೆ ಅನುಕೂಲವಾಗಿದೆ. ಅನ್ನ ಕೊಟ್ಟು ಅನ್ನರಾಮಯ್ಯ ಆಗಿರುವ ಸಿದ್ದರಾಮಯ್ಯ, ವಸತಿ ನೀಡಿ ವಸತಿ ರಾಮಯ್ಯ ಆಗಲಿ ಎಂದು ಹೇಳಿದರು.
14
+ ಬೀದಿ ಬದಿ ವ್ಯಾಪಾರಿಗಳಿಗೆ ಅನಗತ್ಯ ತೊಂದರೆ ಕೊಡುತ್ತಿದ್ದಾರೆ. ಎತ್ತಂಗಡಿ ಮಾಡಿಸುತ್ತಿದ್ದಾರೆ ಎಂದು ಹುಬ್ಬಳ್ಳಿ ಧಾರವಾಡ ಬೀದಿ ವ್ಯಾಪಾರಿಗಳ ಕಾಂಗ್ರೆಸ್ ಘಟಕದ ಇಸ್ಮಾಯಿಲ್ ಅವರು ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಿದರು. ಇದಕ್ಕೆ ಗರಂ ಆದ ಸಿಎಂ ಸ್ಥಳದಿಂದಲೇ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಬೀದಿ ಬದಿ ವ್ಯಾಪಾರಿಗಳ ಜೊತೆ ಮಾನವೀಯವಾಗಿ ವರ್ತಿಸಬೇಕು. ಅವರಿಗೆ ಅನಗತ್ಯ ತೊಂದರೆ ಕೊಡಬಾರದು ಎನ್ನುವ ಸೂಚನೆ ನೀಡಿದರು.
15
+ ಸದ್ಯ ಕೆಎಂಎಫ್ ನಲ್ಲಿರುವ ಸಾಫ್ಟ್ ವೇರ್ ಹಾಲು ಉತ್ಪಾದಕರಿಗೆ ಅನುಕೂಲ ಆಗಿಲ್ಲದಿರುವುದರಿಂದ ಅನುಕೂಲವಾದ ಕನ್ನಡ ಸಾಫ್ಟ್ ವೇರ್ ಅಳವಡಿಸುವಂತೆ ಮೈಸೂರಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಮಹಾಮಂಡಳದ ಎಸ್.ಶಿವನಾಗಪ್ಪ ಅವರು ಮನವಿ ಸಲ್ಲಿಸಿದರು.
16
+ ಮುಖ್ಯಮಂತ್ರಿಗಳು ಸ್ಥಳದಲ್ಲೇ ಎಂಡಿ ಅವರಿಗೆ -ಫೋನ್ ಮೂಲಕ ಸಂಪರ್ಕಿಸಿ, ಹಾಲು ಉತ್ಪಾದಕರ ಸ್ನೇಹಿಯಾಗಿರುವ ಸಾಫ್ಟ್ ವೇರ್ ಅನ್ನು ಅಳವಡಿಸುವಂತೆ ಸೂಚನೆ ನೀಡಿದರು. ಕೆಪಿಸಿಸಿ ಕಾರ್ಯಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್, ತನ್ವೀರ್ ಶೆಠ್, ವಸಂತ ಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್, ಮುಖ್ಯಮಂತ್ರಿ ಕಾರ್ಯಕರ್ತರಿಗೆ ಹಸ್ತಲಾಘವ ನೀಡಿ ಅರ್ಜಿ ಸ್ವೀಕರಿಸಿ, ಗಂಭೀರ ಸಮಸ್ಯೆಗಳ ಬಗ್ಗೆ ತಾಳ್ಮೆಯಿಂದ ವಿವರಣೆ ಪಡೆದುಕೊಂಡರು.
eesanje/url_46_78_5.txt ADDED
@@ -0,0 +1,9 @@
 
 
 
 
 
 
 
 
 
 
1
+ ಕೇಂದ್ರ ತನಿಖಾ ಸಂಸ್ಥೆಗಳು ರಾಜಕೀಯ ಅಸ್ತ್ರಗಳಾಗಬಾರದು : ಗೃಹ ಸಚಿವ ಪರಮೇಶ್ವರ್
2
+ ಬೆಂಗಳೂರು, ಜು.13– ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಯಾವುದೇ ತಕರಾರು ಇಲ್ಲ. ಆದರೆ ಕೇಂದ್ರ ತನಿಖಾ ಸಂಸ್ಥೆಗಳು ರಾಜಕೀಯ ಅಸ್ತ್ರಗಳಾಗಬಾರದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ನಾಗೇಂದ್ರರನ್ನು ಇಡಿ ಅ„ಕಾರಿಗಳು ಬಂ„ಸಿದ್ದಾರೆ. ಇಡಿ ಸಂಸ್ಥೆಗೆ ಸಿಕ್ಕ ಮಾಹಿತಿ ಆಧಾರದ ಮೇಲೆ ತನಿಖೆ ಹಾಗೂ ಬಂಧನ ಮಾಡಿದ್ದಾರೆ. ಇದು ಕಾನೂನು ಪ್ರಕಾರ ನಡೆಯುವ ಪ್ರಕ್ರಿಯೆ. ಆದರೆ ಇದನ್ನು ರಾಜಕೀಯವಾಗಿ ಉಪಯೋಗಿಸಬಾರದು ಎಂದರು.
4
+ ಇಡಿ, ಸಿಬಿಐ ಸೇರಿ ಕೇಂದ್ರ ತನಿಖಾ ಸಂಸ್ಥೆಗಳು ರಾಜಕೀಯ ಅಸಗಳಾಗಬಾರದು ಎಂದು ಮೊದಲಿನಿಂದಲೂ ಹೇಳುತ್ತಿದ್ದೇವೆ. ತನಿಖೆಗೆ ನಮ್ಮ ತಕರಾರು ಇಲ್ಲ. ನಮ್ಮ ಸರ್ಕಾರ ಎಸ್‍ಐಟಿ ರಚನೆ ಮಾಡಿದ್ದೇವೆ. ಮಾಜಿ ಸಚಿವ ನಾಗೇಂದ್ರ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆಗಿರುವ ಶಾಸಕ ಬಸನಗೌಡ ದದ್ಧಲ್‍ರನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ. ಬ್ಯಾಂಕ್ ವಿಚಾರಕ್ಕೆ ಸಿಬಿಐ ಕೂಡ ತನಿಖೆ ನಡೆಸುತ್ತಿದೆ. ಏಕಾಏಕಿ ಇಡಿ ಪ್ರವೇಶ ಮಾಡಿದೆ, ಅವರಿಗೆ ಮಾಹಿತಿ ಇರಬಹುದು ಅದನ್ನು ನಾವು ಅಲ್ಲಗಳೆಯುವುದಿಲ್ಲ ಎಂದು ಹೇಳಿದ್ದಾರೆ.
5
+ ಇತ್ತ ಜಾರಿ ನಿರ್ದೇಶನಾಲಯ ತನಿಖೆ ನಡೆಯುತ್ತಿರುವ ನಡುವೆಯೇ ಎಸ್‍ಐಟಿ ಕೂಡ ಇಬ್ಬರನ್ನು ಕರೆಸಿ ವಿಚಾರಣೆ ಮಾಡಿ, ಅಗತ್ಯ ಮಾಹಿತಿ ಪಡೆದಿದೆ. ಅಗತ್ಯ ಎನಿಸಿದರೆ ಮತ್ತೆ ವಿಚಾರಣೆಗೆ ಕರೆಯುತ್ತಾರೆ, ನಿಗಮದ ಅಧ್ಯಕ್ಷ ಬಸವನಗೌಡ ದದ್ಧಲ್ ತಲೆ ಮರೆಸಿಕೊಂಡಿಲ್ಲ. ಕುಟುಂಬದ ಸದಸ್ಯರ ಜೊತೆ ಇಲ್ಲೆ ಓಡಾಡಿಕೊಂಡಿದ್ದಾರೆ ಎಂದು ನಿನ್ನೆ ನಾನು ಕೇಳಿದಾಗ ಅಧಿಕಾರಿಗಳು ಹೇಳಿದರು. ಅವರು ಎಲ್ಲಿಯೂ ತಲೆ ಮರೆಸಿಕೊಂಡಿಲ್ಲ ಎಂದು ಗೃಹ ಸಚಿವರು ಸ್ಪಷ್ಟ ಪಡಿಸಿದರು.
6
+ ನಿಗಮದ ಹಣವನ್ನು ಲೋಕಸಭೆ ಚುನಾವಣೆಗೆ ಬಳಕೆ ಮಾಡಲಾಗಿದೆ ಎಂಬ ಕಾರಣಕ್ಕೆ ಇಡಿ ತನಿಖೆ ನಡೆಸಲಾಗುತ್ತಿದೆ ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ. ಇಡಿಯವರು ನಮ್ಮ ಪೊಲೀಸರಿಗೆ ಯಾವುದೇ ಮಾಹಿತಿ ನೀಡಿಲ್ಲ, ಊಹೆ ಮಾಡಿ ಹೇಳುವುದು ನಮಗೂ ಸರಿ ಕಾಣುವುದಿಲ್ಲ ಎಂದು ಹೇಳಿದರು.
7
+ ದೇವರಾಜ ಅರಸು ಟ್ರಕ್ ಟ್ರಮಿನಲ್‍ನಲ್ಲಿ 40-50 ಕೋಟಿ ಅವ್ಯವಹಾರ ನಡೆದಿದೆ ಎಂಬ ಕಾರಣಕ್ಕೆ ಹಿಂದೆ ಸಂಸ್ಥೆಯ ಅಧ್ಯಕ್ಷರಾಗಿದ್ದ ವಿಧಾನ ಪರಿಷತ್‍ನ ಮಾಜಿ ಅಧ್ಯಕ್ಷ ವೀರಯ್ಯರನ್ನು ಬಂ„ಸಲಾಗಿದೆ ಎಂದು ಹೇಳಿದರು.
8
+ ನಾಳೆ ಸರ್ವಪಕ್ಷ ಸಭೆ:ಕಾವೇರಿ ನದಿ ನೀರಿನ ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶದ ಹಿನ್ನೆಲೆಯಲ್ಲಿ ನಾಳೆ ಸರ್ವ ಪಕ್ಷ ಸಭೆ ಕರೆಯಲಾಗಿದೆ. ತಾಂತ್ರಿಕ ಸಮಿತಿಯವರು ನಾಳೆ ಸಭೆಯಲ್ಲಿ ನೀಡುವ ಮಾಹಿತಿಗಳೇನು ಎಂಬುದನ್ನು ಕಾದು ನೋಡಬೇಕಿದೆ. ಸುಪ್ರೀಂ ���ೋರ್ಟ್ ಯಾವ ಕಾಲದಲ್ಲಿ ಎಷ್ಟು ನೀರು ಬಿಡಬೇಕು ಎಂಬ ಕುರಿತು ಮಾರ್ಗಸೂಚಿ ನೀಡಿದೆ. ಹಿಂದಿನ ಆದೇಶಗಳು ಇವೆ. ಆದರೆ ಅಷ್ಟು ನೀರು ಬಿಡಲು ನಮ್ಮ ಬಳಿ ನೀರು ಇರಬೇಕಲ್ಲ. ಈಗಷ್ಟೆ ಮಳೆ ಶುರುವಾಗಿದೆ. ಅಣೆಕಟ್ಟೆಯಲ್ಲಿ ಎಷ್ಟು ನೀರಿದೆ, ಒಳ ಹರಿವು ಎಷ್ಟು ಎಂಬ ಬಗ್ಗೆ ತಂತ್ರಜ್ಞರು ಮಾಹಿತಿ ನೀಡಲಿದ್ದಾರೆ ಎಂದರು.
9
+ ಪ್ರತಿಭಟನೆ ಎಲ್ಲರ ಹಕ್ಕು, ಆದರೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನಗಳನ್ನು ಗಮನದಲ್ಲಿ ಇಟ್ಟುಕೊಂಡು ಪ್ರತಿಭಟನೆ ಮಾಡಬೇಕು. ಈ ವೇಳೆ ಸಾರ್ವಜನಿಕಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು. ಸುಪ್ರೀಂಕೋರ್ಟ್‍ಗಿಂತ ಯಾರು ದೊಡ್ಡವರಾಗಲು ಸಾಧ್ಯವಿಲ್ಲ ಎಂದು ಹೇಳಿದರು.
eesanje/url_46_78_6.txt ADDED
@@ -0,0 +1,5 @@
 
 
 
 
 
 
1
+ “ನನಗೇನು ಗೊತ್ತಿಲ್ಲ” : ಮತ್ತೆ ಸಮರ್ಥಿಸಿಕೊಂಡ ಮಾಜಿ ಸಚಿವ ನಾಗೇಂದ್ರ
2
+ ಬೆಂಗಳೂರು,ಜು.13– ವಾಲೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್‌ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಮಾಜಿ ಸಚಿವ ನಾಗೇಂದ್ರ ಅವರು ಮತ್ತೆ ಸಮರ್ಥಿಸಿಕೊಂಡಿದ್ದಾರೆ.
3
+ ಪ್ರಕರಣ ಸಂಬಂಧ ವಿಚಾರಣೆಗಾಗಿ ಕಾಂಗ್ರೆಸ್‌‍ ಮಾಜಿ ಸಚಿವ ನಾಗೇಂದ್ರ ಅವರನ್ನು ಇಂದು ಬೆಳಗ್ಗೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದರು. ಇಡಿ ಕಚೇರಿಗೆ ಕರೆದೊಯ್ಯುವ ವೇಳೆ ಮಾಧ್ಯಮಗಳಿಗೆ ನನಗೇನೂ ಗೊತ್ತಿಲ್ಲ ಎಂದಷ್ಟೇ ನಾಗೇಂದ್ರ ಪ್ರತಿಕ್ರಿಯಿಸಿದರು.
4
+ ಹಗರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳವರೆಗೆ ಜಾರಿ ನಿರ್ದೇಶನಾಲಯ ಶೋಧ ನಡೆಸಿತು. ಅಧಿಕಾರಿಗಳು, ಬಸನಗೌಡ ದದ್ದಲ್‌ ಅವರ ಮನೆ, ಕಚೇರಿಗಳಲ್ಲಿ ಪರಿಶೀಲನೆ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿತ್ತು.
5
+ ಈ ವೇಳೆ ನಾಗೇಂದ್ರ ಆಪ್ತ ಸಹಾಯಕ ಹರೀಶ್‌ ಅವರನ್ನು ಇ.ಡಿ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿತ್ತು. ನಂತರ ವಾಪಸ್‌‍ ಕಳುಹಿಸಿತ್ತು. ಇತ್ತ ಬಸನಗೌಡ ಅವರ ವಿಚಾರಣೆಯೂ ನಡೆದಿತ್ತು.
eesanje/url_46_78_7.txt ADDED
@@ -0,0 +1,9 @@
 
 
 
 
 
 
 
 
 
 
1
+ ಜು.15ರಿಂದ ವಿಧಾನಮಂಡಲ ಅಧಿವೇಶನ, ವಾಕ್ಸಮರಕ್ಕೆ ವೇದಿಕೆ ಸಜ್ಜು
2
+ ಬೆಂಗಳೂರು, ಜು.13-ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನವು ಜುಲೈ 15ರಿಂದ 26ವರೆಗೆ ನಡೆಯಲಿದೆ. ಕಾವೇರಿ ನದಿ ನೀರು ಹಂಚಿಕೆ ಬಿಕ್ಕಟ್ಟು, ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ವಿಳಂಬ, ವಾಲೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ, ಮುಡಾ ಹಗರಣ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳು ಉಭಯ ಸದನಗಳಲ್ಲಿ ಪ್ರತಿಧ್ವನಿಸಲಿವೆ.
3
+ ಆಡಳಿತಾರೂಢ ಕಾಂಗ್ರೆಸ್‌‍ ಹಾಗೂ ಪ್ರತಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌‍ ನಡುವಿನ ವಾಕ್ಸಮರಕ್ಕೆ ಅಧಿವೇಶನ ವೇದಿಕೆಯಾಗಲಿದೆ. ಈಗಾಗಲೇ ವಾಲೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಹಾಗೂ ಮುಡಾ ಹಗರಣ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ.
4
+ ಅಭಿವೃದ್ಧಿಗೆ ಆದ್ಯತೆ ನೀಡಿಲ್ಲ ಎಂಬ ಪ್ರತಿಪಕ್ಷಗಳು ನಿರಂತರ ಆರೋಪ ಮಾಡುತ್ತಾ ಬಂದಿವೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಪ್ರಮುಖವಾಗಿ ಈ ವಿಚಾರ ಪ್ರಸ್ತಾಪಿಸುವ ಸಾಧ್ಯತೆಗಳಿವೆ.ಮಳೆ ಹಾನಿಯ ಪರಿಹಾರ ಬಿಡುಗಡೆ ವಿಳಂಬ, ಕಳೆದ ವರ್ಷದ ಬರ ಪರಿಹಾರ ನೀಡಿಕೆ ವಿಳಂಬ, ಡೆಂಘೀ ರೋಗ ಉಲ್ಬಣ, ಹಾಲಿನ ದರ ಏರಿಕೆ ಸೇರಿದಂತೆ ಹಲವು ವಿಚಾರಗಳು ಪ್ರತಿಪಕ್ಷಗಳ ಅಸ್ತ್ರವಾಗಲಿವೆ.
5
+ ಆಡಳಿತ ಪಕ್ಷವೂ ಪ್ರತಿಪಕ್ಷಗಳ ಅಸ್ತ್ರಗಳಿಗೆ ತಕ್ಕ ಪ್ರತ್ಯಸ್ತ್ರಗಳನ್ನು ಬಳಸಲು ಸಜ್ಜಾಗಿದೆ. ಬಿಜೆಪಿ ಆಡಳಿತಾವಧಿಯಲ್ಲಿನ ಲೋಪ-ದೋಷಗಳನ್ನು ಮುಂದಿಟ್ಟುಕೊಂಡು ಪ್ರತಿಕ್ಷಗಳನ್ನು ಇಕ್ಕಟ್ಟಿಗೆ ಸಿಲುಕಿಸುವ ಉದ್ದೇಶ ಹೊಂದಿದೆ.
6
+ ಅಧಿವೇಶನದ ಮೊದಲ ದಿನ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸಲ್ಲಿಸಲಾಗುತ್ತದೆ. ಬಳಿಕ ಅಧಿಕೃತ ಕಾರ್ಯಕಲಾಪಗಳು ಆರಂಭವಾಗಲಿವೆ. ಮಂಗಳವಾರದಿಂದ ಅಧಿವೇಶನದಲ್ಲಿ ಕಾವೇರಿದ ಚರ್ಚೆ ನಡೆಯುವ ಸಾಧ್ಯತೆಗಳಿವೆ.
7
+ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್‌‍ ಅಧಿವೇಶನದಲ್ಲೂ ಜಂಟಿ ಹೋರಾಟ ನಡೆಸಲು ನಿರ್ಧರಿಸಿವೆ. ಮುಡಾ ಹಗರಣ, ವಾಲೀಕಿ ನಿಗಮದ ಹಗರಣ, ವರ್ಗಾವಣೆ ದಂಧೆ, ಪರಿಶಿಷ್ಟ ಜಾತಿ, ವರ್ಗದ ಹಣ ದುರ್ಬಳಕೆ, ರೈತರ ಆತ್ಮಹತ್ಯೆ ಪ್ರಕರಣಗಳು ಸೇರಿದಂತೆ ಅನೇಕ ವಿಷಯಗಳನ್ನು ಆದ್ಯತೆ ಮೇಲೆ ಸದನದಲ್ಲಿ ಪ್ರಸ್ತಾಪಿಸಲು ಸಿದ್ಧತೆ ನಡೆಸಿವೆ.
8
+ ಬರಗಾಲ ಸಮಸ್ಯೆ, ಮಳೆಯ ಅವಾಂತರ, ಡೆಂಘೀಯಿಂದ ಸಾವನ್ನಪ್ಪಿದವರ ವಿಚಾರ, ಕಾನೂನು ಮತ್ತು ಸುವ್ಯವಸ್ಥೆ, ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೀಡಿಕೆಯಲ್ಲಿನ ವಿಳಂಬ ಸೇರಿದಂತೆ ಹತ್ತಾರು ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿವೆ.
9
+ ಹೀಗಾಗಿ ಮಳೆಗಾಲದ ಈ ಅಧಿವೇಶನವು ಹಲವು ಪ್ರಮುಖ ವಿಚಾರಗಳ ಬಗ್ಗೆ ಬೆಳಕು ಚೆಲ್ಲುವ ನಿರೀಕ್ಷೆ ಇದೆ. 9 ದಿನಗಳ ಕಾಲ ನಡೆಯುವ ವಿಧಾನ ಮಂಡಲದ ಅಧಿವೇಶನವು ಆಡಳಿತ ಮತ್ತು ಪ್ರತಿ ಪಕ್ಷಗಳ ನಡುವಿನ ವಾಕ್ಸಮರಕ್ಕೆ ವೇದಿಕೆಯಾಗಲಿದೆ.
eesanje/url_46_78_8.txt ADDED
@@ -0,0 +1,5 @@
 
 
 
 
 
 
1
+ ರಾಮನಗರ ಜಿಲ್ಲೆ ಮರುನಾಮಕರಣ ಬೇಡ : ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಆಗ್ರಹ
2
+ ಬೆಂಗಳೂರು, ಜು.13-ಧಾರ್ಮಿಕ ಹಾಗೂ ಐತಿಹಾಸಿಕ ಮಹತ್ವವಿರುವ ರಾಮನಗರ ಜಿಲ್ಲೆಯ ಹೆಸರನ್ನು ಯಾವುದೇ ಕಾರಣಕ್ಕೂ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾಯಿಸಬಾರದು ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
3
+ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ರಾಮನಗರಕ್ಕೆ ಐತಿಹಾಸಿಕ, ಪೌರಾಣಿಕ ಚರಿತ್ರೆ ಇದೆ. ಜತೆಗೆ ಭಾವನಾತ ಹಾಗೂ ಧಾರ್ಮಿಕ ವಿಚಾರ ಅಡಗಿರುವುದರಿಂದ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಬಾರದು ಎಂದು ಆಗ್ರಹಿಸಿದ್ದಾರೆ.
4
+ ಮಾಜಿ ಮುಖ್ಯಮಂತ್ರಿ ಕೆಂಗಲ್‌ ಹನುಮಂತಯ್ಯ ಅವರು ರಾಮನಗರ ಎಂಬ ಹೆಸರನ್ನು ನಾಮಕರಣ ಮಾಡಿದ್ದಾರೆ. ಸಿದ್ಧಗಂಗಾಮಠದ ಡಾ.ಶ್ರೀ ಶಿವಕುಮಾರಸ್ವಾಮೀಜಿಗಳು ಹಾಗೂ ಆದಿ ಚುಂಚನಗಿರಿ ಮಠದ ಪೀಠಾಧ್ಯಕ್ಷರಾಗಿದ್ದ ಭೈರವೈಕ್ಯ ಡಾ. ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರು ಜನಿಸಿದ್ದು ರಾಮನಗರ ಜಿಲ್ಲೆಯಲ್ಲಿಯೇ ಎಂದು ಅವರು ಹೇಳಿದ್ದಾರೆ.
5
+ ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಸಹ ಇದೇ ಜಿಲ್ಲೆಗೆ ಸೇರಿದವರು. 2007ರಲ್ಲಿ ಅಭಿವೃದ್ಧಿ ದೃಷ್ಟಿಯಿಂದ ರಾಮನಗರ ಜಿಲ್ಲೆ ಮಾಡಲಾಗಿದೆ. ಅದನ್ನು ಕಡೆಗಣಿಸಿ ಈಗ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡುವ ಪ್ರಸ್ತಾವನೆಯನ್ನು ತಿರಸ್ಕರಿಸಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.
eesanje/url_46_78_9.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಮಾಜಿ ಸಚಿವ ನಾಗೇಂದ್ರಗೆ ಜೈಲುವಾಸ ಹೊಸದೇನಲ್ಲ, ಇಲ್ಲಿದೆ ಹಿಸ್ಟರಿ
2
+ ಬೆಂಗಳೂರು,ಜು.13– ಇಡಿ ಬಲೆಗೆ ಬಿದ್ದಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೂ ಜೈಲು ವಾಸ ಇಲ್ಲವೇ ಕೇಂದ್ರೀಯ ತನಿಖಾ ಸಂಸ್ಥೆಗಳ ವಿಚಾರಣೆ ಹೊಸತೇನಲ್ಲ..! ಏಕೆಂದರೆ ಈ ಹಿಂದೆಯೂ ಆಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ನಾಗೇಂದ್ರ ಶ್ರೀಕೃಷ್ಣನ ಜನಸ್ಥಳವನ್ನು ದರ್ಶನ ಮಾಡಿದ್ದರು. ಈಗಲೂ ಅದರ ವಿಚಾರಣೆ ನಡೆಯುತ್ತಿದ್ದು, ಆರೋಪಿ ಸ್ಥಾನದಲ್ಲಿದ್ದಾರೆ.
3
+ ಸಿಬಿಐ ಸಲ್ಲಿಸಿದ್ದ ಚಾರ್ಜ್‌ ಶೀಟ್‌ ನಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಪ್ರಥಮ ಆರೋಪಿ ಎಂದು ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಕೂಡ್ಲಿಗೆ ಶಾಸಕರಾದ ನಾಗೇಂದ್ರ, ಕಾರವಾರದ ಶಾಸಕ ಸತೀಶ್‌ ಸೈಲ್‌‍, ಕಂಪ್ಲಿ ಶಾಸಕ ಸುರೇಶ್‌‍ಬಾಬು, ವಿಜಯನಗರ ಶಾಸಕ (ಆಗ ಹೊಸಪೇಟೆ) ಆನಂದ್‌‍ಸಿಂಗ್‌ ವಿರುದ್ಧವೂ ಚಾರ್ಜ್‌ಶೀಟ್‌ ಸಲ್ಲಿಸಲಾಗಿತ್ತು. 2013ರಲ್ಲಿ ನಾಗೇಂದ್ರ ಅವರ ಬಂಧನವಾಗಿತ್ತು.
4
+ ಆನಂತರ, 2014ರ ಡಿಸೆಂಬರ್‌ ನಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ ಜಾಮೀನಿನ ಆಧಾರದ ಮೇಲೆ ಬುಧವಾರ ನಾಗೇಂದ್ರ ಜೈಲಿಂದ ಬಿಡುಗಡೆಯಾದರು.ಆದರೆ, 2015ರಲ್ಲಿ ಎರಡು ಬಾರಿ ಅವರ ಬಂಧನವಾಗಿತ್ತು.
5
+ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡ್ಲಿಗಿ ಶಾಸಕ ನಾಗೇಂದ್ರ ಅವರನ್ನು ಲೋಕಾಯುಕ್ತ ವಿಶೇಷ ತನಿಖಾ ದಳ ಮಾ. 20ರಂದು ಬಂಧಿಸಲಾಗಿತ್ತು. ಅದರಿಂದ ಜಾಮೀನು ಪಡೆದ ನಂತರ ಜೂ.4ರಂದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಅವರನ್ನು ಸಿಬಿಐ ಅಧಿಕಾರಿಗಳು ಮತ್ತೆ ಬಂಧಿಸಿದ್ದರು.
6
+ ಆಗ, ನಾಗೇಂದ್ರ ಸೇರಿದಂತೆ 7 ಜನರನ್ನು ಸಿಬಿಐ ಅಧಿಕಾರಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದರು. ಎಲ್ಲರನ್ನೂ ಜೂ.8ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಆನಂತರ ಅದರಲ್ಲೂ ಜಾಮೀನು ಪಡೆದಿದ್ದ ನಾಗೇಂದ್ರ ಹೊರಬಂದಿದ್ದರು. ಆಗಿನ ಲೋಕಾಯುಕ್ತರಾಗಿದ್ದ ನ್ಯಾ.ಸಂತೋಷ್‌ ಹೆಗ್ಡೆ ನೇತೃತ್ವದಲ್ಲಿ ನಡೆದಿದ್ದ ಆ ಅಕ್ರಮದ ತನಿಖೆಯಲ್ಲಿ ಮೊದಲ ಹೆಸರು ಕೇಳಿಬಂದಿದ್ದು ಈಗಿನ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರದ್ದು.
7
+ ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಬೇಲೇಕೇರಿಯಿಂದ ಸಾವಿರಾರು ಮೆಟ್ರಿಕ್‌ ಟನ್‌ ನಷ್ಟು ಅದಿರು ನಾಪತ್ತೆಯಾದ ಪ್ರಕರಣ. ಕಬ್ಬಿಣದ ಅದಿರನ್ನು ಬಳ್ಳಾರಿಯಿಂದ ಉತ್ತರ ಕನ್ನಡದ ಬೇಲೇಕೇರಿ ಬಂದರಿಗೆ ಅಕ್ರಮವಾಗಿ ಸಾಗಿಸಿ, ವಿದೇಶಕ್ಕೆ ಕಳ್ಳ ಸಾಗಣಿಕೆ ಮಾಡುತ್ತಿದ್ದ ಪ್ರಕರಣವನ್ನು ನಿಷ್ಟುರ ತನಿಖೆಗೊಳಪಡಿಸಿದ್ದರು. ಲೋಕಾಯುಕ್ತ ನ್ಯಾ.ಸಂತೋಷ್‌ ಹೆಗ್ಡೆ ಅವರು ಸರಕಾರಕ್ಕೆ ವರದಿ ಕೊಟ್ಟಾಗ ರಾಜಕೀಯ ಎದ್ದು ಅಲ್ಲೋಲ ಕಲ್ಲೋಲ ಉಂಟು ಮಾಡಿತ್ತು.
8
+ ಆಗ ದೊಡ್ಡ ಕಂಪನಿಯಿಂದ ಲಂಚ ಪಡೆದು ಅಕ್ರಮವಾಗಿ ಅದಿರು ಸಾಗಾಣಿಕೆಗೆ ಅವಕಾಶಕೊಟ್ಟ ಆರೋಪದ ಮೇಲೆ ದೊಡ್ಡ-ದೊಡ್ಡ ಅಧಿಕಾರಿಗಳೇ ಜೈಲು ಪಾಲಾಗಿದ್ದರು. ಆದರೆ ತನಿಖೆಯ ಅಂಗವಾಗಿ ಬೇಲೇಕೇರಿ ಬಂದರಿನಲ್ಲಿದ್ದ 8.50 ಲಕ್ಷ ಮೆಟ್ರಿಕ್‌ ಟನ್‌ ಕಬ್ಬಿಣದ ಅದಿರಿಗೆ ಹೊದಿಕೆ ಹೊದಿಸಿ, ಅದನ್ನು ಸೀಝ್‌ ಮಾಡಲಾಗಿತ್ತು. ಆದರೂ ಅಷ್ಟೂ ಅದಿರು ಅಲ್ಲಿಂದ ನಾಪತ್ತೆಯಾಗಿತ್ತು.
9
+ ಬೇಲೇಕೇರಿ ಬಂದರಿಗೆ ಅದಿರು ಕಳ್ಳ ಸಾಗಾಣಿಕೆಯಾಗಿರುವುದನ್ನು ತನ್ನ ತನಿಖಾ ವರದಿಯಲ್ಲಿ ಉಲ್ಲೇಖಿಸಿದ್ದ ಸಿಇಸಿ, ಸಿಬಿಐ ತನಿಖೆಗೆ ಶಿಫಾರಸು ಮಾಡಿತ್ತು. ಅದಾನಿ ಕಂಪನಿ ವಿರುದ್ಧವು ತನಿಖೆ ಮಾಡುವಂತೆ ತಿಳಿಸಿತ್ತು.
10
+ ಈ ಹಿನ್ನೆಲೆಯಲ್ಲಿ ಸಿಬಿಐ ತಂಡ ಆಗ, ಚೆನ್ನೈನಲ್ಲಿ ಈ ಕುರಿತಂತೆ ಪ್ರಕರಣ ದಾಖಲಿಸಿತ್ತು. ಆ ಪ್ರಕರಣದಲ್ಲಿ ಆರೋಪಿಗಳಾಗಿದ್ದವರಲ್ಲಿ ಬಿ.ನಾಗೇಂದ್ರ ಕೂಡ ಒಬ್ಬರು. ಆಗ ಅವರು ಕೂಡ್ಲಿಗಿಯ ಬಿಜೆಪಿ ಶಾಸಕರಾಗಿದ್ದರು.
eesanje/url_46_79_1.txt ADDED
@@ -0,0 +1,8 @@
 
 
 
 
 
 
 
 
 
1
+ ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರದ ಸಂಭ್ರಮ
2
+ ಮೈಸೂರು,ಜು.12-ಚಾಮುಂಡಿ ಬೆಟ್ಟದಲ್ಲಿಂದು ಮೊದಲ ಆಷಾಢ ಶುಕ್ರವಾರ ಪ್ರಯುಕ್ತ ಸಡಗರ, ಸಂಭ್ರಮ ಮನೆ ಮಾಡಿತ್ತು.ಮುಂಜಾನೆ ನಾಡ ಅಧಿದೇವತೆ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಮಹಾಲಕ್ಷ್ಮಿ ಅಲಂಕಾರ ಮಾಡಲಾಗಿದ್ದು ನೋಡಲು ಎರಡು ಕಣ್ಣುಗಳು ಸಾಲದೆಂಬಂತಿದೆ.
3
+ ದೇವಿಯ ದರ್ಶನಕ್ಕಾಗಿ ರಾಜ್ಯಾದ್ಯಂತ ಆಗಮಿಸಿರುವ ಲಕ್ಷಾಂತರ ಮಂದಿ ಭಕ್ತಾದಿಗಳಿಗೆ ಸುಗಮ ದರ್ಶನಕ್ಕೆ ಜಿಲ್ಲಾಡಳಿತ ಸೂಕ್ತ ವ್ಯವಸ್ಥೆ ಕಲ್ಪಿಸಿದೆ. ಚಾಮುಂಡಿ ಬೆಟ್ಟಕ್ಕೆ ಭಕ್ತಾದಿಗಳನ್ನು ಕರೆದೊಯ್ಯಲು 35 ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
4
+ ಬೆಳಿಗ್ಗೆ ದೇವಾಲಯದ ಪ್ರಧಾನ ಅರ್ಚಕರಾದ ಡಾಕ್ಟರ್ ಶಶಿಶೇಖರ ದೀಕ್ಷಿತ್ ಅವರ ನೇತೃತ್ವದಲ್ಲಿ ದೇವಿ ಚಾಮುಂಡೇಶ್ವರಿಗೆ ಮುಂಜಾನೆ ಮೂರು ಮೂವತ್ತರಿಂದ ಮಹಾನ್ ನ್ಯಾಸ ಪೂರ್ವಕ ರುದ್ರಾಭಿಷೇಕ, ಅಷ್ಟೋತ್ತರ ಸಹಸ್ರನಾಮ ಮತ್ತಿತರ ಪೂಜಾ ಕೈಂಕರ್ಯಗಳು ನೆರವೇರಿದವುವಿಶೇಷ ಪೂಜೆ ನಂತರ ಭಕ್ತಾದಿಗಳಿಗೆ ಬೆಳಿಗ್ಗೆ 6 ಗಂಟೆಯಿಂದ ತಾಯಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.
5
+ ಭಕ್ತಾದಿಗಳು ದೇವಾಲಯ ಪ್ರವೇಶಿಸಲು ಮೂರು ಸಾಲುಗಳ ವ್ಯವಸ್ಥೆ ಮಾಡಲಾಗಿತ್ತು. ಒಂದರಲ್ಲಿ ಧರ್ಮದರ್ಶನ ಮತ್ತೆರಡು ಸಾಲಿನಲ್ಲಿ 50 ರೂ.ವಿನ ಟಿಕೆಟ್ ಖರೀದಿಸಿ ದೇವಿಯ ದರ್ಶನಕ್ಕೆ ತೆರಳಬಹುದಾಗಿದೆ.ಪ್ರತಿ ವರ್ಷದಂತೆ ಈ ಬಾರಿಯೂ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು.
6
+ ಭಕ್ತಾದಿಗಳು ಮೈಸೂರಿನ ಲಲಿತ ಮಹಲ್ ಹೆಲಿಪ್ಯಾಡ್ ನಲ್ಲಿ ವಾಹನಗಳನ್ನು ನಿಲ್ಲಿಸಿ ಅಲ್ಲಿಂದ ವ್ಯವಸ್ಥೆ ಮಾಡಲಾಗಿರುವ ಉಚಿತ ಬಸ್ಸುಗಳಲ್ಲಿ ಚಾಮುಂಡಿ ಬೆಟ್ಟಕ್ಕೆ ತೆರಳಬೇಕಾಗಿದೆ. ಭಕ್ತಾದಿಗಳಿಗಾಗಿ ಇಲ್ಲಿ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
7
+ ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲುಗಳ ಮೂಲಕ ತೆರಳುವ ಭಕ್ತಾದಿಗಳಿಗಾಗಿ ಚಾಮುಂಡಿ ಬೆಟ್ಟದ ಮೆಟ್ಟಿಲುಗಳಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ.ಶಕ್ತಿದೇವತೆಯ ದರ್ಶನ ಪಡೆದ ಭಕ್ತರು ಪುನೀತರಾಗಿ ದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್್ತ ಮಾಡಲಾಗಿದೆ. ಎಲ್ಲಾ ವ್ಯವಸ್ಥೆ ಅಚ್ಚುಕಟ್ಟಾಗಿದೆ, 800 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
8
+ ದೇವಾಲಯದ ಪ್ರಾಂಗಣ ಹಾಗೂ ಆವರಣವನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿದ್ದು, ಹಬ್ಬದ ವಾತಾವರಣ ಮನೆ ಮಾಡಿದೆ. ರಾತ್ರಿವರೆಗೂ ದೇವಿಯ ದರ್ಶನ ಇರಲಿದೆ.
eesanje/url_46_79_10.txt ADDED
@@ -0,0 +1,8 @@
 
 
 
 
 
 
 
 
 
1
+ ತಮ್ಮ ಕುರ್ಚಿಗೆ ಕಂಟಕವಾಗುತ್ತದೆ ಎಂದು ಸಿಎಂ ನಮ್ಮ ಪ್ರತಿಭಟನೆ ಹತ್ತಿಕ್ಕುತ್ತಿದ್ದಾರೆ : ವಿಜಯೇಂದ್ರ
2
+ ಬೆಂಗಳೂರು,ಜು.12– ಮುಡಾ ಹಗರಣ ಆಚೆ ಬಂದರೆ ತಮ್ಮ ಕುರ್ಚಿಗೆ ಕಂಟಕವಾಗುತ್ತದೆ ಎಂಬ ಏಕೈಕ ಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ ಪ್ರತಿಭಟನೆಯನ್ನು ಪೊಲೀಸರ ಮೂಲಕ ಹತ್ತಿಕ್ಕಿದ್ದಾರೆ. ಆದರೆ ಇದನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯುವವರೆಗೂ ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎಚ್ಚರಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನೆ ನಡೆಸುವುದು ನಮ ಹಕ್ಕು. ಅದನ್ನು ಹತ್ತಿಕ್ಕಲು ಸರ್ಕಾರಕ್ಕಾಗಲೀ, ಇಲ್ಲವೇ ಪೊಲೀಸರಿಗಾಗಲೀ ಅವಕಾಶವಿಲ್ಲ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೋ? ಅಥವಾ ತುಘಲಕ್‌ ದರ್ಬಾರ್‌ ಆಡಳಿತದಲ್ಲಿದ್ದೇವೋ? ಎಂದು ಪ್ರಶ್ನಿಸಿದರು.
4
+ ಮುಡಾ ಹಗರಣ ಆಚೆ ಬಂದರೆ ರಾಜೀನಾಮೆ ನೀಡಬೇಕಾಗುತ್ತದೆ ಎಂಬ ಕಾರಣಕ್ಕಾಗಿ ಸಿದ್ದರಾಮಯ್ಯನವರು ಪ್ರಕರಣವನ್ನು ತಿಪ್ಪೆ ಸಾರುವ ಕೆಲಸ ಮಾಡುತ್ತಿದ್ದಾರೆ. ಹಿಂದೆ ಇವರು ಪ್ರತಿಪಕ್ಷದ ನಾಯಕರಾದಾಗ ನಮ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿರಲಿಲ್ಲವೇ? ಅವರಿಗೊಂದು ನ್ಯಾಯ, ನಮಗೊಂದು ನ್ಯಾಯವೇ? ಎಂದು ಆಕ್ರೋಶ ಹೊರಹಾಕಿದರು.
5
+ ನಾವು ಪೊಲೀಸರ ಬಗ್ಗೆ ದೂಷಣೆ ಮಾಡುವುದಿಲ್ಲ. ಅವರು ಸರ್ಕಾರದ ನಿರ್ದೇಶನದಂತೆ ಕೆಲಸ ಮಾಡುತ್ತಾರೆ. ನೀವು ಎಷ್ಟೇ ಹತ್ತಿಕ್ಕಿದರೂ ಸತ್ಯಾಂಶವನ್ನು ಮರೆಮಾಚಲು ಸಾಧ್ಯವಿಲ್ಲ. ಇಂದಲ್ಲಾ ನಾಳೆ ಸಿದ್ದರಾಮಯ್ಯನವರ ಕುರ್ಚಿಗೆ ಕಂಟಕ ಬರುವುದು ಗ್ಯಾರಂಟಿ ಎಂದು ವಿಜಯೇಂದ್ರ ಭವಿಷ್ಯ ನುಡಿದರು.
6
+ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದ ಹಣವನ್ನು ತೆಲಂಗಾಣ ವಿಧಾನಸಭಾ ಚುನಾವಣೆಗೆ ಬಳಸಿಕೊಳ್ಳಲಾಗಿದೆ. ಮಾಜಿ ಸಚಿವ ಬಿ.ನಾಗೇಂದ್ರ ಮೇಲೆ ಒತ್ತಡ ಹಾಕಿ ನಿಗಮದಲ್ಲಿದ್ದ ಹಣವನ್ನು ಸಾಗಿಸಲಾಗಿದೆ. ಇದರಲ್ಲಿ ಅವರು ಹರಕೆ ಕುರಿ, ಇನ್ನೂ ಕೆಲವರು ಸಿಕ್ಕಿಬೀಳಲಿದ್ದಾರೆ ಎಂದು ಹೇಳಿದರು.
7
+ ನಾನು ಹಿಂದುಳಿದ ಸಮುದಾಯದಿಂದ ಬಂದವನೆಂಬ ಕಾರಣಕ್ಕಾಗಿ ಬಿಜೆಪಿಯವರು ಷಡ್ಯಂತರ ನಡೆಸುತ್ತಿದ್ದಾರೆ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ತಿರುಗೇಟು ನೀಡಿದ ವಿಜಯೇಂದ್ರ, ಕಾಂಗ್ರೆಸ್‌‍ನಲ್ಲಿ ಇವರೊಬ್ಬರು ಮಾತ್ರ ಹಿಂದುಳಿದವರೇ? ಎಂದು ಪ್ರಶ್ನಿಸಿದರು.
8
+ ಕಾಂಗ್ರೆಸ್‌‍ ಪಕ್ಷದಲ್ಲಿ ಅನೇಕ ದಲಿತ, ಹಿಂದುಳಿದ ನಾಯಕರಿದ್ದಾರೆ. ಅವರಿಗಿಂತ ಹಿಂದುಳಿದವರು ಇನ್ಯಾರಿದ್ದಾರೆ?. ಬಿ.ಕೆ.ಹರಿಪ್ರಸಾದ್‌ ನೀಡಿರುವ ಹೇಳಿಕೆಗೆ ಮೊದಲು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಉತ್ತರ ಕೊಡಬೇಕು.ಅಧಿವೇಶನದಲ್ಲೂ ನಮ ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದರು.
eesanje/url_46_79_11.txt ADDED
@@ -0,0 +1,3 @@
 
 
 
 
1
+ ಅಪರ್ಣಾ ಅಗಲಿಕೆಯ ನೋವನ್ನು ಕವಿತೆ ಮೂಲಕ ವ್ಯಕ್ತಪಡಿಸಿದ ಪತಿ ನಾಗರಾಜು
2
+ ಬೆಂಗಳೂರು, ಜು. 12:ಪತ್ನಿ ಅಪರ್ಣಾಳನ್ನು ಕಳೆದುಕೊಂಡ ನೋವಿನಲ್ಲಿ ಪತಿ ನಾಗರಾಜು ಅವರು ರಚಿಸಿದ ಶೋಕ ಕವನಬೆಳಗಿಕೊಂಡಿರೆಂದುಕಿಡಿ ತಾಕಿಸಿ ಹೊರಟಿತುಹೆಣ್ಣುಚಿತ್ತು ತೆಗೆದುಬತ್ತಿಯ ನೆತ್ತಿ ಚೆನ್ನಾಗಿಸಿತಿರುಪಿ ತಿದ್ದಿಇರುತುಸುವಿರೆಂದು ಕರೆದರೂನಿಲ್ಲದೆಯೇಬೇರಾವುದೋ ಕರೆಗೆತಣ್ಣಗೆ ಓಗೊಟ್ಟ ಮೇರೆಯಲ್ಲಿಒಂದೇ ಒಂದುನಿಮಿಷಬಂದೇನೆಂದು ಕಡೆಗಳಿಗೆಯ ಸೆರಗಿನ ಬೆನ್ನಿನಲ್ಲಿಅಂದು.ಕಾದಿದ್ದೇನೆಈಗ ಬಂದಾಳೆಂದುಆಗ ಬಂದಾಳೆಂದುಮರಳಿಜೀವ ತಂದಾಳೆಂದುಇದುಮೂರನೇ ದಿವಸಇಷ್ಟಾಗಿಬೆಳಗಲಿಟ್ಟ ಕಿರಿಸೊಡರಬೆಳಕು ನಾನುಉರಿವುದಷ್ಟೇ ಕೆಲಸಇರುವ ತನಕ. ನಾಗರಾಜ್‌ ಅವರ ಫೇಸ್‌ಬುಕ್‌ ಬರಹಅಪರ್ಣಾ ಇಹಲೋಕದ ವ್ಯಾಪಾರವನ್ನು ತ್ಯಜಿಸಿ ಸ್ವರ್ಗಸ್ಥಳಾಗಿದ್ದಾಳೆ. ಕಳೆದ ಎರಡು ವರ್ಷಗಳಿಂದ ನಾನು ಮತ್ತು ಅವಳ ನಾಲ್ಕನೇ ಹಂತದಲ್ಲಿದ್ದ ಶ್ವಾಸಕೋಶದ ಕ್ಯಾನರ್‌ ವಿರುದ್ಧ ಸೆಣಸುತ್ತಿದ್ದೇವು. ಈ ಹೋರಾಟದಲ್ಲಿ ನಾವಿಬ್ಬರೂ ಸೋತಿದ್ದೇವೆ. ಅತ್ಯಂತ ವಿಷಾದದಿಂದ ಈ ಮಾತುಗಳನ್ನು ನಿಮ್ಮ ಮುಂದೆ ಇಡುತ್ತಿದ್ದೇನೆ.
3
+ ಅಪರ್ಣಾಳಿಗೆ ಬರುವ ಅಕ್ಟೋಬರ್‌ಗೆ 58 ವರ್ಷ ತುಂಬುತ್ತಿತ್ತು. ಎಲ್ಲರ ಪ್ರೀತಿ ಸಹಕಾರ ಇರಲಿ ಎಂದು ಅವರ ಪತಿ ವಸ್ತಾರೆ ನಾಗರಾಜು ಅವರು ಅಪರ್ಣಾ ಅವರ ಅಂತಿಮ ವಿದಾಯದ ಸಂದರ್ಭದಲ್ಲಿ ಮಾದ್ಯಮದವರೊಂದಿಗೆ ನೋವು ತೋಡಿಕೊಂಡ ರೀತಿ.
eesanje/url_46_79_12.txt ADDED
@@ -0,0 +1,8 @@
 
 
 
 
 
 
 
 
 
1
+ ವಾಲ್ಮೀಕಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅರೆಸ್ಟ್
2
+ ಬೆಂಗಳೂರು, ಜು.12 –ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಬೆಳಿಗ್ಗೆ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಮಾಡಿ ನಂತರ ಬಂಧಿಸಿದ್ದಾರೆ.
3
+ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಬೆಳಿಗ್ಗೆ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ವಶಕ್ಕೆ ತೆಗೆದುಕೊಂಡಿತ್ತು.ನಾಗೇಂದ್ರ ಅವರನ್ನು ವಿಚಾರಣೆಗಾಗಿ ಇಡಿ ಅಧಿಕಾರಿಗಳ ತಂಡ ಅವರ ನಿವಾಸಕ್ಕೆ ಆಗಮಿಸಿ ನಂತರ ಕಚೇರಿಗೆ ಕರೆದೊಯ್ಯದಿದ್ದರು.
4
+ ಹಗರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾಗಿದ್ದ ನಾಗೇಂದ್ರ ಅವರು ಜೂನ್‌ 6 ರಂದು ರಾಜೀನಾಮೆ ಸಲ್ಲಿಸಿದರು.
5
+ ನನ್ನ ಮನೆಯಿಂದ ಕರೆತರಲಾಗುತ್ತಿದೆ…ನನಗೇನೂ ಗೊತ್ತಿಲ್ಲ ಎಂದು ಇಡಿ ಕಚೇರಿಗೆ ಕರೆದೊಯ್ಯುತ್ತಿದ್ದಂತೆ ನಾಗೇಂದ್ರ ಸುದ್ದಿಗಾರರಿಗೆ ತಿಳಿಸಿದ್ದಾರೆ.ಹಲವು ಸ್ಥಳಗಳಲ್ಲಿ ಇಡಿ ಕಳೆದ ಎರಡು ದಿನಗಳಿಂದ ಶೋಧ ನಡೆಸಿ ಪ್ರಸ್ತುತ ಶಾಕರನ್ನು ವಶಕ್ಕೆ ಪಡೆದಿರುವುದು ಸಂಚಲನ ಸೃಷ್ಠಿಸಿದೆ.
6
+ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದ ಸುಮಾರು 20 ಸ್ಥಳಗಳಲ್ಲಿ ಮನಿ ಲಾಂಡರಿಂಗ್‌ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದಾಖಲಿಸಿದ ಪ್ರಕರಣದ ಭಾಗವಾಗಿ ಇವರನ್ನು ವಶಕ್ಕೆ ಪಡಯಲಾಗಿದೆ ಎಂದು ಮೂಲಗಳು ತಿಳಿಸಿವೆ.ಇಲಾಖೆಯ ಅಧೀಕ್ಷಕ ಚಂದ್ರಶೇಖರನ್‌ ಕಳೆದ ಮೇ 26 ರಂದು ಆತಹತ್ಯೆ ಮಾಡಿಕೊಂಡ ನಂತರ 187 ಕೋಟಿ ಅವ್ಯವಹಾರ ಬೆಳಕಿಗೆ ಬಂದಿತ್ತು.
7
+ ನಿಗಮಕ್ಕೆ ಸೇರಿದ 187 ಕೋಟಿ ರೂ.ಗಳನ್ನು ಬ್ಯಾಂಕ್‌ ಖಾತೆಯಿಂದ ಅನಧಿಕೃತವಾಗಿ ಪ್ರಸಿದ್ಧ ಐಟಿ ಕಂಪನಿಗಳು ಮತ್ತು ಹೈದರಾಬಾದ್‌ ಮೂಲದ ಸಹಕಾರಿ ಬ್ಯಾಂಕ್‌ಗೆ ಸೇರಿದ ವಿವಿಧ ಖಾತೆಗಳಿಗೆ 88.62 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ.
8
+ ಅಮಾನತುಗೊಂಡಿರುವ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ ಜಿ ಪದನಾಭ್‌,ಪರಶುರಾಮ್‌ ಜಿ ದುರುಗಣ್ಣವರ್‌ ಮತ್ತು ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಮುಖ್ಯ ವ್ಯವಸ್ಥಾಪಕಿ ಸುಚಿಸಿತಾ ರಾವಲ್‌ ಅವರ ಹೆಸರನ್ನು ಟಿಪ್ಪಣಿಯಲ್ಲಿ ಹೆಸರಿಸಿದ್ದಾರೆ, ಆದರೆ ಸಚಿವರು ಹಣವನ್ನು ವರ್ಗಾಯಿಸಲು ಮೌಖಿಕ ಆದೇಶವನ್ನು ನೀಡಿದ್ದಾರೆ ಎಂದು ತಿಳಿಸಿದ್ದಾರೆ.
eesanje/url_46_79_2.txt ADDED
@@ -0,0 +1,6 @@
 
 
 
 
 
 
 
1
+ ವಾಲ್ಮೀಕಿ ನಿಗಮ ಹಗರಣದಲ್ಲಿ ನನ್ನ ಪಾತ್ರವಿಲ್ಲ : ನಾಗೇಂದ್ರ
2
+ ಬೆಂಗಳೂರು,ಜು.12– ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪ್ರಕರಣದಲ್ಲಿ ತಮ ಪಾತ್ರ ಇಲ್ಲ ಎಂದು ಪುನರುಚ್ಚರಿಸಿರುವ ಮಾಜಿ ಸಚಿವ ಬಿ.ನಾಗೇಂದ್ರ ತಮ ಆಪ್ತ ಸಹಾಯಕರೂ ಸೇರಿದಂತೆ ಕಚೇರಿಯ ಸಿಬ್ಬಂದಿಗಳು ಹಣ ಪಡೆದಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
3
+ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬೆಳಿಗ್ಗೆ ನಾಗೇಂದ್ರ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗಾಗಿ ಶಾಂತಿನಗರದ ಕಚೇರಿಗೆ ಕರೆತರುವ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆಯಿಂದ ತಮನ್ನು ಕರೆತಂದಿದ್ದಾರೆ. ನಮ ಕಚೇರಿಯ ಸಿಬ್ಬಂದಿಗಳು ಹಣ ಪಡೆದಿರುವ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
4
+ ಹಗರಣ ಬೆಳಕಿಗೆ ಬಂದ ವೇಳೆಯಲ್ಲಿ ನಾಗೇಂದ್ರ ಅವರು ಪತ್ರಿಕಾಗೋಷ್ಠಿ ನಡೆಸಿ ಹಣ ಅಕ್ರಮ ವರ್ಗಾವಣೆಯಲ್ಲಿ ಬ್ಯಾಂಕ್‌ ಸಿಬ್ಬಂದಿಗಳ ಪಾತ್ರ ಇದೆ. ಅಧಿಕಾರಿಗಳ ನಡವಳಿಕೆಗಳು ಸಂಶಯಾಸ್ಪದ ಎಂದು ಹೇಳಿದರು.
5
+ ಅಕ್ರಮ ಹಣ ವರ್ಗಾವಣೆ ಕುರಿತು ನಮಗೆ ಯಾವುದೇ ಮಾಹಿತಿ ಇಲ್ಲ ಎಂಬ ಸಮರ್ಥನೆ ನೀಡಿದ್ದರು. ಆತಹತ್ಯೆ ಮಾಡಿಕೊಂಡ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಮರಣ ಪತ್ರದಲ್ಲಿ ಸಚಿವರ ಮೌಖಿಕ ಸೂಚನೆ ಎಂದು ಉಲ್ಲೇಖಿಸಿರುವ ಬಗ್ಗೆ ತನಿಖೆಯ ಬಳಿಕವಷ್ಟೇ ಸತ್ಯಾಂಶ ಹೊರಬರಲಿದೆ ಎಂದು ಹೇಳಿಕೊಂಡಿದ್ದರು.
6
+ ಈಗ ಅದೇ ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ಹಗರಣದ ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ.
eesanje/url_46_79_3.txt ADDED
@@ -0,0 +1,5 @@
 
 
 
 
 
 
1
+ ಎಸ್ಐಟಿ ವಿಚಾರಣೆಗೆ ಹಾಜರಾದ ಶಾಸಕ ಬಸನಗೌಡ ದದ್ದಲ್
2
+ ಬೆಂಗಳೂರು,ಜು.12– ಬಹುಕೋಟಿ ಹಣ ಅಕ್ರಮ ವರ್ಗಾವಣೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಅವರು ಇಂದು ಎಸ್ಐಟಿ ಎದುರು ವಿಚಾರಣೆಗೆ ಹಾಜರಾದರು.ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಹಗರಣದ ಬಗ್ಗೆ ದದ್ದಲ್ ಅವರಿಗೆ ಪ್ರಶ್ನೆಗಳನ್ನು ಕೇಳಿ ಮಾಹಿತಿಗಳನ್ನು ಪಡೆದುಕೊಂಡರು.
3
+ ಮಂಗಳವಾರ ಮುಂಜಾನೆ ಇ.ಡಿ ಅಧಿಕಾರಿಗಳು ದದ್ದಲ್ ಅವರ ಬೆಂಗಳೂರಿನ ಯಲಹಂಕದ ನಿವಾಸ, ಕಚೇರಿ ಹಾಗೂ ರಾಯಚೂರಿನ ನಿವಾಸ ಸೇರಿದಂತೆ ಹಲವೆಡೆ ದಾಳಿ ಮಾಡಿ ಶೋಧ ನಡೆಸಿದ್ದರು.
4
+ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಶಾಸಕರು, ಆಪ್ತರು ಸೇರಿದಂತೆ ಹಲವರನ್ನು ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಶಾಸಕ ದದ್ದಲ್ ಅವರು ಈ ಪ್ರಕರಣದ ಸಂಬಂಧ ಸೋಮವಾರ ಎಸ್ಐಟಿ ಎದುರು ವಿಚಾರಣೆಗೆ ಹಾಜರಾಗಿದ್ದರು.
5
+ ಮಂಗಳವಾರ ಮತ್ತೆ ವಿಚಾರಣೆಗೆ ಬರುವಂತೆ ಎಸ್ಐಟಿ ನೋಟೀಸ್ ನೀಡಿತ್ತು. ಆದರೆ ಮಂಗಳವಾರ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿರಲಿಲ್ಲ. ಎಸ್ಐಟಿ ನೋಟೀಸ್ ನೀಡಿದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದ ದದ್ದಲ್ ಅವರಿಂದ ಎಸ್ಐಟಿ ಅಧಿಕಾರಿಗಳು ಹಲವು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
eesanje/url_46_79_4.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಮೌನಕ್ಕೆ ಜಾರಿದ ‘ಅಚ್ಚ ಕನ್ನಡ’ತಿ, ಕೊನೆಗೂ ನನಸಾಗದ ಅಪರ್ಣಾ ಕನಸು
2
+ ಬೆಂಗಳೂರು,ಜು.12-ಛಲ ಬಿಡದ ಹೋರಾಟಗಾರ್ತಿ ಅಮೋಘ ನಿರೂಪಣಾ ಶೈಲಿಯ ಮೂಲಕ ಕನ್ನಡ ಭಾಷೆ ಬೆಳಗಿಸಿದ ಶ್ರೇಷ್ಠ ಕನ್ನಡತಿ ಅಪರ್ಣಾ ಕನ್ನಡ ನಾಡಿನ ಮನೆ ಮಾತಾಗಿದ್ದಾರೆ. ತಮ ಮಾತಿನ ಶೈಲಿಯಿಂದಲೇ ಜನಮನ್ನಣೆ ಗಳಿಸಿದವರು. ಮೂಲತಃ ಚಿಕ್ಕಮಗಳೂರಿನ ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿಯವರಾದ 1966 ಅಕ್ಟೋಬರ್ 14 ರಂದು ನಾರಾಯಣಸ್ವಾಮಿ ಮತ್ತು ಪದಾವತಿಯ ದಂಪತಿಯ ಮಗಳಾಗಿ ಜನಿಸಿದರು.
3
+ ಆದರೆ ಇವರು ಬೆಳೆದಿದ್ದೆಲ್ಲವೂ ಬೆಂಗಳೂರಿನಲ್ಲಿ. ಕುಮಾರಪಾರ್ಕ್ನ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಎಂಎಎಸ್ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದರು. ಅಪರ್ಣಾ ಅವರ ತಂದೆ ನಾರಾಯಣಸ್ವಾಮಿ ಪ್ರಸಿದ್ಧ ಪತ್ರಿಕೆಯಲ್ಲಿ ಸಿನಿಮಾ ಪುರವಣಿ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದರು. ನಾರಾಯಣಸ್ವಾಮಿಯವರಿಗೆ ಖ್ಯಾತ ಸಿನಿಮಾ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಪರಿಚಯವಿತ್ತು. ಈ ಹಿನ್ನೆಲೆಯಲ್ಲಿ ಕಣಗಾಲ್ರವರು ಅಪರ್ಣಾ ಅವರ ಪ್ರತಿಭೆ ಗುರುತಿಸಿ ಸಿನಿಮಾದಲ್ಲಿ ಅಭಿನಯಕ್ಕೆ ಅವಕಾಶ ನೀಡಿದ್ದರು.
4
+ ಹೀಗೆ 1984 ರಲ್ಲಿ ಮಸಣದ ಹೂವು ಚಿತ್ರದಿಂದ ತಮ ಸಿನಿಮಾ ಪ್ರಯಾಣ ಆರಂಭಿಸಿದ ಅಪರ್ಣಾ ನಂತರದಲ್ಲಿ ಇನ್ಸ್ಪೆಕ್ಟರ್ ವಿಕ್ರಂ, ನಮೂರ ರಾಜ, ಸಾಹಸವೀರ, ಡಾ.ಕೃಷ್ಣ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿ ಮನ್ನಣೆ ಗಳಿಸಿದರು. ಹಿರಿಯ ನಟರಾದ ವಿಷ್ಣುವರ್ಧನ್, ಅಂಬರೀಶ್, ರವಿಚಂದ್ರನ್, ಟೈಗರ್ ಪ್ರಭಾಕರ್ ಹಾಗೂ ಶಿವರಾಜ್ಕುಮಾರ್ ಸೇರಿದಂತೆ ಹಲವು ನಟರೊಂದಿಗೆ ಬೆಳ್ಳಿತೆರೆಯಲ್ಲಿ ಮಿಂಚಿದರು. ಇವರ ನಟನೆಯ ಕೊನೆಯ ಚಿತ್ರ ಗ್ರೇ ಗೇಮ್ಸೌ ಆಗಿತ್ತು.
5
+ 1993 ರಿಂದ 2010 ರವರೆಗೂ ರೇಡಿಯೋ ಆರ್ಜೆ ಆಗಿಯೂ ಕಾರ್ಯ ನಿರ್ವಹಿಸಿದರು. 90 ರ ದಶಕದಲ್ಲಿ ದೂರದರ್ಶನ ಆಕಾಶವಾಣಿ ಕಾರ್ಯಕ್ರಮಗಳ ನಿರೂಪಣಾ ಶೈಲಿ ಅಪರ್ಣಾ ಅವರಿಗೆ ಹೆಚ್ಚು ಖ್ಯಾತಿ ತಂದುಕೊಟ್ಟವು. ಸರ್ಕಾರದ ಕಾರ್ಯಕ್ರಮಗಳು, ವಿವಿಧ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಅಪರ್ಣಾ ಅವರ ನಿರೂಪಣೆಯೇ ಇರುತ್ತಿತ್ತು.
6
+ ಭಾಷಾ ಶ್ರೀಮಂತಿಕೆಗೆ ಮೆರಗು : ಕನ್ನಡ ಭಾಷಾ ಸೌಂದರ್ಯ ಹೆಚ್ಚಿಸಿದ ನಿರೂಪಕಿ ಎಂದರೆ ತಪ್ಪಾಗಲಾರದು. ನಿರೂಪಣೆ ಎಂದರೆ ಕೇವಲ ಮಾತಲ್ಲ. ಕನ್ನಡದ ಕಂಪು, ಸಾಹಿತ್ಯ ಧಾರೆ, ಭಾಷಾ ಶ್ರೀಮಂತಿಕೆಯನ್ನು ತೋರಿಸಿಕೊಟ್ಟವರು ಅಪರ್ಣಾ. ಇದೇ ಕಾರಣಕ್ಕೆ ನಿರೂಪಣಾ ಲೋಕದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ ಕೀರ್ತಿ ಅವರದ್ದಾಯಿತು. ದೀಪಾವಳಿ ಕಾರ್ಯಕ್ರಮದಲ್ಲಿ ಸತತ 8 ಗಂಟೆ ಕಾಲ ನಿರೂಪಣೆ ನಿರ್ವಹಿಸಿದ ದಾಖಲೆಯೂ ಅಪರ್ಣಾ ಅವರ ಹೆಸರಿನಲ್ಲಿದೆ.
7
+ ನಮ್ಮ ಮೆಟ್ರೋದಲ್ಲಿ ಅಪರ್ಣಾ ಧ್ವನಿ :ಇನ್ನು ಕಿರುತೆರೆಯ ಮೂಡಲಮನೆ, ಮುಕ್ತ ಸೇರಿದಂತೆ ಹಲವಾರು ಧಾರವಾಹಿಗಳ ಮೂಲಕ ಜನರಿಗೆ ಮತ್ತಷ್ಟು ಹತ್ತಿರವಾದ ಅಪರ್ಣಾ ಶುದ್ಧ ಕನ್ನಡ ಸಾಹಿತ್ಯದ ಗಾಂಭೀರ್ಯದೊಂದಿಗೆ ಹಾಸ್ಯ ನಟನೆಯ ಮೂಲಕವೂ ಪರಿಚಯವಾದರು. ಕಿರುತೆರ��ಯ ಮಜಾ ಟಾಕೀಸ್ನಲ್ಲಿ ಮೊದಲ ಬಾರಿಗೆ ಕಾಮಿಡಿ ಶೋನಲ್ಲಿ ಒನ್ ಅಂಡ್ ಓನ್ಲಿ ವರಲಕ್ಷ್ಮಿ ಪಾತ್ರದಲ್ಲಿ ಮಿಂಚಿದರು. ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಮೊದಲ ಸೀಸನ್ನಲ್ಲಿ ಅಪರ್ಣಾ ಸ್ಪರ್ಧಿಯಾಗಿ ಜನರ ಗಮನ ಸೆಳೆದಿದ್ದರು.
8
+ ಮುಂದಿನ ನಿಲ್ದಾಣ ಬೆಂಗಳೂರಿನ ನಮ ಮೆಟ್ರೋಗೂ ದನಿಯಾಗಿದ್ದರು. ಅವರು ನಟಿ, ನಿರೂಪಕಿ ಮಾತ್ರವಲ್ಲ. ಸೃಜನಶೀಲ ಮನಸ್ಸಿನ ಕನ್ನಡದ ಶ್ರೇಷ್ಠ ಕುಡಿ. ಒಂದೇ ಒಂದು ಇಂಗ್ಲಿಷ್ ಪದ ಬಳಸದೆ ಕನ್ನಡದಲ್ಲಿಯೇ ಯಾವುದೇ ಕಾರ್ಯಕ್ರಮವನ್ನೂ ಲೀಲಾಜಾಲವಾಗಿ ನಡೆಸಿಕೊಡುತ್ತಿದ್ದ ರೀತಿ ಎಂಥವರನ್ನು ನಿಬ್ಬೆರೆಗಾಗಿಸುತ್ತಿತ್ತು.
9
+ ಅವರ ನಿರೂಪಣಾ ಶೈಲಿ ಎಲ್ಲರಿಗೂ ಇಷ್ಟವಾಗುತ್ತಿತ್ತು. ಚಿತ್ರರಂಗ ಕಾರ್ಯಕ್ರಮವಾಗಲೀ, ರಾಜಕೀಯ ಕಾರ್ಯಕ್ರಮವಾಗಲೀ, ಧಾರ್ಮಿಕ, ಸಾಮಾಜಿಕ, ಯಾವುದೇ ಕಾರ್ಯಕ್ರಮವಾಗಲೀ ಅಪರ್ಣಾ ಅವರ ನಿರೂಪಣೆ ಎಲ್ಲರಿಗೂ ಇಷ್ಟ. ಕೇವಲ 57 ವರ್ಷಕ್ಕೆ ಅವರು ಇಹಲೋಕ ತ್ಯಜಿಸಿದ್ದು, ಕನ್ನಡ ಅಭಿಮಾನಿ ಬಳಗಕ್ಕೆ ತುಂಬಲಾರದ ನೋವಿನ ಸಂಗತಿ.
10
+ ನನಸಾಗದ ಅಪರ್ಣಾ ಕನಸುಖ್ಯಾತ ನಿರೂಪಕಿಯಾಗಿದ್ದ ಅಪರ್ಣಾ ಅವರು ನಿರೂಪಣಾ ಶಾಲೆಯೊಂದನ್ನು ತೆರೆಯಬೇಕೆಂಬ ಮಹತ್ವಾಕಾಂಕ್ಷೆಯನ್ನು ಹೊಂದಿದ್ದರು.ತಮ ಗೆಳೆಯರ ಬಳಿ ಆಸೆಯನ್ನು ಹಂಚಿಕೊಂಡಿದ್ದರು. ಕೊನೆಗೂ ಅವರ ಆಸೆ ಈಡೇರಲಿಲ್ಲ. ಅವರ ಕನಸು ನನಸಾಗಲಿಲ್ಲ. ತಮ ನಿರೂಪಣಾ ಶೈಲಿಯಿಂದಲೇ ಮನೆಮಾತಾಗಿದ್ದ ಅಪರ್ಣಾ ಅವರು ನಿರೂಪಣಾ ಶಾಲೆ ತೆರೆದು ಅದನ್ನು ವಿಸ್ತರಿಸಬೇಕೆಂದು ಕಂಡಿದ್ದ ಕನಸು ಕನಸಾಗಿಯೇ ಉಳಿಯಿತು.
11
+ ಅಪರ್ಣಾ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಕಾಣಿಸಿಕೊಂಡಿತ್ತು. ಎರಡು ವರ್ಷದಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು. ಕ್ಯಾನ್ಸರ್ ನಾಲ್ಕನೇ ಸ್ಟೇಜ್ನಲ್ಲಿತ್ತು. ಕೀಮೋಥೆರಪಿ ಮಾಡಿಸಿದ್ದರು. ಆದರೆ ಚಿಕಿತ್ಸೆ ಫಲ ಕೊಡದೆ ಇಹಲೋಕ ತ್ಯಜಿಸಿದರು.
eesanje/url_46_79_5.txt ADDED
@@ -0,0 +1,6 @@
 
 
 
 
 
 
 
1
+ ಮೂಡಾದಲ್ಲಿ ಯಾವುದೇ ಲೋಪವಾಗಿಲ್ಲ, ಬಿಜೆಪಿ ರಾಜಕೀಯಕ್ಕಾಗಿ ಪ್ರತಿಭಟನೆ ನಡೆಸುತ್ತಿದೆ : ಡಿಕೆಶಿ
2
+ ಬೆಂಗಳೂರು,ಜು.12-ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಡಿ ನಿವೇಶನ ಹಂಚಿಕೆಯಲ್ಲಿ ಯಾವುದೇ ಲೋಪವಾಗಿಲ್ಲ, ಬಿಜೆಪಿ ರಾಜಕೀಯ ಕಾರಣಕ್ಕೆ ಮೈಸೂರಿನಲ್ಲಿ ಪ್ರತಿಭಟನೆ ನಡೆಸುತ್ತಿದೆ. ಅದಕ್ಕೆ ಕಾಂಗ್ರೆಸ್‌‍ ರಾಜಕೀಯವಾಗಿಯೇ ತಿರುಗೇಟು ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ನಾವು ಗೆದ್ದ ಬಳಿಕ ಬಿಜೆಪಿಯವರು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ನಾನಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ದೇಶದಲ್ಲೇ ದೊಡ್ಡ ರಾಜ್ಯಗಳ ಪೈಕಿ ಅಧಿಕಾರದಲ್ಲಿರುವುದು ಕರ್ನಾಟಕದಲ್ಲಿ ಮಾತ್ರ. ಅದಕ್ಕಾಗಿ ಇಲ್ಲಿ ನಮನ್ನು ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕೆ ಅವಕಾಶ ನೀಡುವುದಿಲ್ಲ ಎಂದರು.
4
+ ತಾವು ಹಿಂದುಳಿದ ವರ್ಗಕ್ಕೆ ಸೇರಿರುವುದರಿಂದ ಬಿಜೆಪಿ ಷಡ್ಯಂತರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿರುವುದಕ್ಕೆ ಡಿ.ಕೆ.ಶಿವಕುಮಾರ್‌ ಸಹಮತ ವ್ಯಕ್ತಪಡಿಸಿದರು.ಯಾವುದೇ ಹುರುಳಿಲ್ಲದೇ ಇದ್ದರೂ ರಾಜಕೀಯ ಮಾಡುತ್ತಿದ್ದಾರೆ. ಸಮಯ ಬಂದಾಗ ಸೂಕ್ತ ಉತ್ತರ ನೀಡುತ್ತೇವೆ ಎಂದರು.
5
+ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ವಿಚಾರಣೆ ಅಗತ್ಯವಿರಲಿಲ್ಲ. ಈಗಾಗಲೇ ರಾಜ್ಯಸರ್ಕಾರವೇ ತನಿಖೆ ನಡೆಸುತ್ತಿತ್ತು. ಅದರ ಹೊರತಾಗಿಯೂ ಜಾರಿ ನಿರ್ದೇಶನಾಲಯ ಏನು ಮಾಡುತ್ತಿದೆ ಎಂಬುದನ್ನು ತಿಳಿದುಕೊಂಡು ನಂತರ ಪ್ರತಿಕ್ರಿಯಿಸುತ್ತೇವೆ ಎಂದರು.
6
+ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತೀರ್ಪಿಗೆ ಸಂಬಂಧಪಟ್ಟಂತೆ ಈಗಾಗಲೇ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಲಾಗಿದೆ. ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ಅದರ ನಂತರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
eesanje/url_46_79_6.txt ADDED
@@ -0,0 +1,5 @@
 
 
 
 
 
 
1
+ ಅಕ್ರಮವಾಗಿ ಮರಗಳನ್ನು ಕಡಿದಿರುವ ಪ್ರಕರಣದ ವಿಚಾರಣೆಗೆ 4 ತಿಂಗಳ ಗಡುವು
2
+ ಬೆಂಗಳೂರು, ಜು.12-ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮಾಗೇರಿ ಗ್ರಾಮದ ಹಿಡುವಳಿ ಪ್ರದೇಶದಲ್ಲಿ ಅನುಮತಿ ನೀಡದ ಸರ್ವೆ ನಂಬರ್‌ಗಳಲ್ಲಿ ಅಕ್ರಮವಾಗಿ ಮರಗಳನ್ನು ಕಡಿದಿರುವ ಆರೋಪ ಪ್ರಕರಣದ ಮಂಡನಾಧಿಕಾರಿಯಾಗಿ ಹಾಸನ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯನ್ನು ನೇಮಿಲಾಗಿದೆ.
3
+ ಈ ಪ್ರಕರಣದ ವಿಚಾರಣಾ ಪ್ರಕ್ರಿಯೆಯನ್ನು ನಾಲ್ಕು ತಿಂಗಳ ಕಾಲ ಮಿತಿಯೊಳಗೆ ಪೂರ್ಣಗೊಳಿಸಿ ವಿಚಾರಣಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ಅರಣ್ಯ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.
4
+ ಕಳೆದ 2023ರ ಸೆ.12ರಂದು ಹೊರಡಿಸಿದ್ದ ಆದೇಶದಲ್ಲಿ ಸಾಮಾಜಿಕ ಅರಣ್ಯ ಬೆಂಗಳೂರು ನಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯನ್ನು ಮರಗಳನ್ನು ಕಡಿದ ಪ್ರಕರಣದ ಮಂಡನಾಧಿಕಾರಿಯನ್ನಾಗಿ ಮಾಡಲಾಗಿತ್ತು. ಈಗ ಮಂಡನಾಧಿಕಾರಿಯನ್ನು ಬದಲಿಸಿದ್ದು, ಹಾಸನ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ವಿಚಾರಣೆ ಹೊಣೆಗಾರಿಕೆಯನ್ನು ವಹಿಸಲಾಗಿದೆ.
5
+ ಮರಗಳನ್ನು ಅನುಮತಿ ಇಲ್ಲದೆ ಕಡಿದಿರುವ ಆರೋಪಕ್ಕೆ ಸಂಬಂಧಿಸಿದಂತೆ ಹಿಂದಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ಸಿ.ಲಿಂಗರಾಜ, ಅಂದಿನ ವಲಯ ಅರಣಾಧಿಕಾರಿ ಸಿ.ಅಭಿಲಾಷ್‌ ಮತ್ತು ವಲಯ ಅರಣ್ಯಾಧಿಕಾರಿ (ಕಡ್ಡಾಯ ನಿವೃತ್ತಿ) ಹೆಚ್‌.ಕೆ.ಮರಿಸ್ವಾಮಿ ಅವರ ವಿರುದ್ಧ 1957ರ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 13ರ ಅನ್ವಯ ಜಂಟಿ ಇಲಾಖಾ ವಿಚಾರಣೆ ಜರುಗಿಸಲು 2023ರ ಸೆ.12ರಂದು ಆದೇಶಿಸಲಾಗಿತ್ತು.
eesanje/url_46_79_7.txt ADDED
@@ -0,0 +1,5 @@
 
 
 
 
 
 
1
+ ಮಳೆಗಾಲದ ಅಧಿವೇಶನಕ್ಕೆ ವಿಧಾನಸೌಧದಲ್ಲಿ ಸಕಲ ಸಿದ್ಧತೆ
2
+ ಬೆಂಗಳೂರು, ಜು.12-ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಮಳೆಗಾಲದ ಅಧಿವೇಶನ ಜುಲೈ 15ರಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸಿದ್ಧತಾ ಕಾರ್ಯಗಳು ಚುರುಕುಗೊಂಡಿವೆ.
3
+ ಸಕಲ ಸಿದ್ಧತೆಗಳು ನಡೆಯುತ್ತಿವೆ. ವಿಧಾನಸಭೆ ಪ್ರವೇಶದ್ವಾರವನ್ನು ನವೀಕರಿಸಲಾಗುತ್ತಿದೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಸಭಾಂಗಣ, ಮೊಗಸಾಲೆಗಳನ್ನು ಶುಚಿಗೊಳಿಸಲಾಗುತ್ತಿದೆ. ಉಭಯ ಸದನಗಳ ಪ್ರವೇಶ ದ್ವಾರಗಳಲ್ಲಿ ಅಲಂಕಾರಿಕ ಗಿಡಗಳನ್ನು ಇಟ್ಟು ಶೃಂಗರಿಸಲಾಗುತ್ತಿದೆ.
4
+ ವಿಧಾನಸಭಾಧ್ಯಕ್ಷರ ಹಾಗೂ ವಿಧಾನ ಪರಿಷತ್‌ ಸಭಾಪತಿಗಳ ಪೀಠದ ಇಕ್ಕೆಲಗಳಲ್ಲಿ ವಿಶೇಷ ಅಲಂಕಾರಿಕ ಗಿಡಗಳು, ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗುತ್ತದೆ.ಅಧಿವೇಶನಕ್ಕೆ ಇನ್ನೆರಡು ದಿನ ಬಾಕಿ ಉಳಿದಿರುವುದರಿಂದ ಉಭಯ ಸದನಗಳ ಸಿಬ್ಬಂದಿ ಸಿದ್ಧತಾ ಕಾರ್ಯದಲ್ಲಿ ನಿರತರಾಗಿದ್ದಾರೆ.
5
+ ವಿಧಾನಸೌಧದ ಪ್ರವೇಶ ದ್ವಾರಗಳು, ಕಾರಿಡಾರ್‌ಗಳನ್ನು ಶುಚಿಗೊಳಿಸುವ ಕಾರ್ಯ ನಡೆಯುತ್ತಿದೆ. ಹೀಗಾಗಿ ವಿಧಾನಸೌಧದ ಆವರಣದಲ್ಲೂ ಹೊಸ ಸೊಬಗು ಕಂಡುಬರುತ್ತಿದೆ.ಮಳೆಗಾಲವಾಗಿರುವುದರಿಂದ ವಿಧಾನಸೌಧದ ಆವರಣದಲ್ಲಿ ಹಚ್ಚ ಹಸಿರಿನ ವಾತಾವರಣವಿದೆ. ಗಿಡಗಳು ಹೂವುಗಳಿಂದ ಕಂಗೊಳಿಸುತ್ತಿವೆ. ಈ ಬಾರಿಯ ಅಧಿವೇಶನಕ್ಕೆ ವಿಧಾನಸೌಧದಲ್ಲಿ ಹೊಸ ಮೆರುಗು ಮೂಡಿದೆ.
eesanje/url_46_79_8.txt ADDED
@@ -0,0 +1,6 @@
 
 
 
 
 
 
 
1
+ ಉಪ್ಪು ತಿಂದವರು ನೀರು ಕುಡಿಯಲೇ ಬೇಕು : ಸಿಎಂಗೆ ಅಶೋಕ್‌ ಎಚ್ಚರಿಕೆ
2
+ ಬೆಂಗಳೂರು,ಜು.12-ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ತಮ ಪಾಪದ ಕೊಡ ತುಂಬಿದೆ. ಪ್ರಾಯಶ್ಚಿತ ಕಾದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಎಚ್ಚರಿಕೆ ಕೊಟ್ಟಿದ್ದಾರೆ.
3
+ ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಪೋಸ್ಟ್‌ ಮಾಡಿರುವ ಅಶೋಕ್‌, ಮುಖ್ಯಮಂತ್ರಿ ಸಿದ್ದರಾಮಯ್ಯನವರು 4,000 ಕೋಟಿ ಮೌಲ್ಯದ ಮುಡಾ ಭೂಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ತಮ ಎಂದಿನ ಶೈಲಿಯಲ್ಲಿ ಜಾತಿ ಹೆಸರಿನಲ್ಲಿ ರಕ್ಷಣೆ ಪಡೆಯುವ ಹತಾಶ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
4
+ ಸಿದ್ದರಾಮಯ್ಯನವರೇ, ತಮ ನಾಯಕ ರಾಹುಲ್‌ ಗಾಂಧಿ ಅವರು ಮೋದಿ ಉಪನಾಮದ ಬಗ್ಗೆ ನಿಂದನೆ ಮಾಡಿ ನ್ಯಾಯಾಲಯದಲ್ಲಿ ಛೀಮಾರಿ ಹಾಕಿಸಿಕೊಂಡರಲ್ಲ, ಹಿಂದುಳಿದ ವರ್ಗದ ವ್ಯಕ್ತಿಯೊಬ್ಬ ಎರಡು ಬಾರಿ ಪ್ರಧಾನ ಮಂತ್ರಿ ಆದರಲ್ಲ ಅನ್ನುವ ಹೊಟ್ಟೆ ಉರಿಯಿಂದ ನಿಂದಿಸಿದ್ದಾ? ಎಂದು ಪ್ರಶ್ನೆ ಮಾಡಿದ್ದಾರೆ.
5
+ ತಾವು ಮತ್ತು ತಮ ಪಟಾಲಂ ದಿನ ಬೆಳಗಾದರೆ ಪ್ರಧಾನಿ ಮೋದಿ ಅವರನ್ನ ಪದೇ ಪದೇ ವೈಯಕ್ತಿಕ ನಿಂದನೆ ಮಾಡುತ್ತೀರಲ್ಲ, ಅದು ಕೂಡ ಹಿಂದುಳಿದ ಸಮುದಾಯಕ್ಕೆ ಸೇರಿದ ಒಬ್ಬ ಚಹಾ ಮಾರುವ ವ್ಯಕ್ತಿ ಮೂರು ಬಾರಿ ಸತತವಾಗಿ ದೇಶದ ಪ್ರಧಾನಿ ಆದರಲ್ಲ ಎನ್ನುವ ದ್ವೇಷದಿಂದಲೇ? ಎಂದು ತಾರಾಟೆಗೆ ತೆಗೆದುಕೊಂಡಿದ್ದಾರೆ.
6
+ ತಮ ಇಡೀ ಜೀವನವೆಲ್ಲಾ ಅಹಿಂದ ಸಮುದಾಯಗಳ ಬೆನ್ನಿನ ಮೇಲೆ ಸವಾರಿ ಮಾಡಿ ಅಧಿಕಾರ ಅನುಭವಿದ ತಾವು ದಲಿತರಿಗೆ, ಹಿಂದುಳಿದವರಿಗೆ ಮಾಡಿದ್ದಾದರೂ ಏನು? ದಲಿತರ ದುಡ್ಡು ಲೂಟಿ ಹೊಡೆದಿದ್ದು, ದಲಿತರ ಕುರ್ಚಿ ಕಿತ್ತುಕೊಂಡು ಅವರಿಗೆ ಮೋಸ ಮಾಡಿದ್ದು, ಇದಿಷ್ಟೇ ನಿಮ ಸಾಧನೆ ಎಂದು ಅಶೋಕ್‌ ಸಿದ್ದರಾಮಯ್ಯ ವಿರುದ್ದ ಆರೋಪಗಳ ಸುರಿಮಳೆಗೈದಿದ್ದಾರೆ.
eesanje/url_46_79_9.txt ADDED
@@ -0,0 +1,6 @@
 
 
 
 
 
 
 
1
+ ಮೈಸೂರು ಚಲೋ ಪ್ರತಿಭಟನೆ, ಬಿಜೆಪಿ ನಾಯಕರು ಪೊಲೀಸರ ವಶಕ್ಕೆ
2
+ ಬೆಂಗಳೂರು,ಜು.12-ಮೈಸೂರಿನ ಮುಡಾದಲ್ಲಿ ನಡೆದಿರುವ ನಿವೇಶನ ಹಂಚಿಕೆ ಅಕ್ರಮ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಬೃಹತ್‌ ಪ್ರತಿಭಟನೆ ನಡೆಸಿತು.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಮಾಜಿ ಸಚಿವರಾದ ಸಿ.ಟಿ.ರವಿ, ಮುನಿರತ್ನ ಸೇರಿದಂತೆ ಬಿಜೆಪಿಯ ಬಹುತೇಕ ಎಲ್ಲಾ ಶಾಸಕರು, ಪಕ್ಷದ ಪ್ರಮುಖರು ಮತ್ತಿತರರು ಬೆಂಗಳೂರಿನಿಂದ ಮೈಸೂರು ಚಲೋ ಪ್ರತಿಭಟನೆ ನಡೆಸಿದರು.
3
+ ಆದರೆ ವಾಹನಗಳಲ್ಲಿ ಮೈಸೂರಿಗೆ ಹೊರಟಿದ್ದ ಪ್ರತಿಭಟನಾನಿರತರನ್ನು ಪೊಲೀಸರು ರಾಮನಗರ ಸಮೀಪದ ಕಣಮಿಣಿಕೆ ಟೋಲ್‌ ಬಳಿ ವಶಕ್ಕೆ ಪಡೆದುಕೊಂಡರು.ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ಬಿಜೆಪಿ ದೊಡ್ಡಮಟ್ಟದಲ್ಲಿ ಪ್ರತಿಭಟನೆ ನಡೆಸಲು ಮುಂದಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಜೆಪಿಯ ಪ್ರಮುಖ ನಾಯಕರನ್ನು ಬಿಜೆಪಿ ಕಚೇರಿ ಮತ್ತು ಮನೆಗಳಲ್ಲೇ ವಶಕ್ಕೆ ಪಡೆಯುವ ಪ್ರಯತ್ನ ನಡೆಸಿದರು.
4
+ ಆದರೂ ಪೊಲೀಸರ ಜೊತೆ ವಾಗ್ವಾದ ನಡೆಸಿ ವಾಹನಗಳಲ್ಲಿ ಭಾರಿ ಸಂಖ್ಯೆಯ ಕಾರ್ಯಕರ್ತರು ಮೈಸೂರಿನತ್ತ ಹೊರಟಿದ್ದರು. ಆಗಲೇ ರಸ್ತೆಯಲ್ಲಿ ವಶಕ್ಕೆ ಪಡೆಯಲು ಮುಂದಾಗಿದ್ದ ಪೊಲೀಸರು ಕಣಮಿಣಿಕೆ ಬಳಿ ಬರುತ್ತಿದ್ದಂತೆ ಎಲ್ಲರನ್ನೂ ವಶಕ್ಕೆ ಪಡೆದುಕೊಂಡು ಠಾಣೆಗೆ ಕರೆದೊಯ್ದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾ ನಿರತರ ನಡುವೆ ಭಾರಿ ಮಾತಿನ ಚಕಮಕಿ ನಡೆದು ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.
5
+ ವಾಹನಗಳು ತೆರಳದಂತೆ ಪೊಲೀಸರು ಟೋಲ್‌ ಸೇರಿದಂತೆ ಮತ್ತಿತರ ಕಡೆ ಅಡ್ಡಲಾಗಿ ಬ್ಯಾರಿಕೇಡ್‌ ಹಾಗೂ ಪೊಲೀಸ್‌‍ ವಾಹನಗಳನ್ನು ಅಡ್ಡ ನಿಲ್ಲಿಸಿದ್ದರು. ಆದರೂ ಬಿಜೆಪಿ ಕಾರ್ಯಕರ್ತರು ವಾಹನಗಳನ್ನು ತೆರವುಗೊಳಿಸಿ ಮೈಸೂರಿನತ್ತ ಹೊರಡಲು ಪ್ರಯತ್ನ ನಡೆಸಿದರೂ ಪೊಲೀಸರು ಅವಕಾಶ ನೀಡಲಿಲ್ಲ. ತಕ್ಷಣವೇ ಪ್ರತಿಭಟನಾನಿರತ ನೂರಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಸ್‌‍ಗಳಲ್ಲಿ ಬಲವಂತವಾಗಿ ತುಂಬಿಕೊಂಡು ಠಾಣೆಗೆ ಕರೆದೊಯ್ದರು.
6
+ ಇದಕ್ಕೂ ಮುನ್ನ ಪೊಲೀಸರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮುಖಂಡರಾದ ತಮೇಶ್‌ಗೌಡ, ಮುನಿರತ್ನ, ಅಶ್ವತ್ಥ ನಾರಾಯಣ, ಕೃಷ್ಣಪ್ಪ, ನಂದೀಶ್‌ ರೆಡ್ಡಿ ಸೇರಿದಂತೆ ಹಲವರನ್ನು ಅವರ ನಿವಾಸದ ಬಳಿಯೇ ವಶಕ್ಕೆ ಪಡೆಯಲು ಮುಂದಾಗಿದ್ದರು. ಮನೆಯಿಂದ ಆಚೆ ಬರದಂತೆ ಅವರವರ ನಿವಾಸದ ಬಳಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು.
eesanje/url_46_7_1.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ವಿಧಾನಮಂಡಲದ ಜಂಟಿ ಸ್ಥಾಯಿ ಸಮಿತಿಗಳ ನೇಮಕ
2
+
3
+ ಬೆಂಗಳೂರು, ಸೆ.28– ಪ್ರಸಕ್ತ 2024-25ನೇ ಸಾಲಿನ ಕರ್ನಾಟಕ ವಿಧಾನಮಂಡಲದ 9 ವಿವಿಧ ಜಂಟಿ ಸ್ಥಾಯಿ ಸಮಿತಿಗಳು ಹಾಗೂ 6 ಸ್ಥಾಯಿ ಸಮಿತಿಗಳನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ರವರು ರಚನೆ ಮಾಡಿದ್ದಾರೆ. ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ಸಭಾಧ್ಯಕ್ಷರು ನಾಮ ನಿರ್ದೇಶನ ಮಾಡಿದ್ದಾರೆ ಎಂದು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
4
+ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಅಧ್ಯಕ್ಷರಾಗಿ ಶಾಸಕ ಸಿ.ಸಿ. ಪಾಟೀಲ್‌ ಅವರನ್ನು ನೇಮಕ ಮಾಡಲಾಗಿದ್ದು, ಹಿರಿಯ ಶಾಸಕರಾದ ಆರ್‌.ವಿ. ದೇಶಪಾಂಡೆ ಸೇರಿದಂತೆ ವಿಧಾನಸಭೆಯ 15 ಸದಸ್ಯರು ಹಾಗೂ ವಿಧಾನ ಪರಿಷತ್ತಿನ ನಾಲ್ವರು ಸದಸ್ಯರು ಸಮಿತಿಯ ಸದಸ್ಯರಾಗಿದ್ದಾರೆ.
5
+ ಸಾರ್ವಜನಿಕ ಉದ್ದಿಮೆಗಳ ಸಮಿತಿಯ ಅಧ್ಯಕ್ಷರಾಗಿ ಶಾಸಕ ಬಸವರಾಜ್‌ ನೀಲಪ್ಪ ಶಿವಣ್ಣನವರ್‌, ಸದಸ್ಯರಾಗಿ ವಿಧಾನಸಭೆಯ 15 ಸದಸ್ಯರು ಹಾಗೂ ವಿಧಾನ ಪರಿಷತ್ತಿನ 5 ಸದಸ್ಯರು ನೇಮಕಗೊಂಡಿದ್ದಾರೆ.ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾಗಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಸದಸ್ಯರಾಗಿ ವಿಧಾನಸಭೆಯ 15 ಸದಸ್ಯರು ಹಾಗೂ ವಿಧಾನ ಪರಿಷತ್ತಿನ 5 ಸದಸ್ಯರು ನೇಮಕವಾಗಿದ್ದಾರೆ.
6
+ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಅಧ್ಯಕ್ಷರಾಗಿ ಶಾಸಕ ಎ.ಆರ್‌.ಕೃಷ್ಣಮೂರ್ತಿ, ಸದಸ್ಯರಾಗಿ ವಿಧಾನಸಭೆಯ 15 ಸದಸ್ಯರು ಹಾಗೂ ವಿಧಾನ ಪರಿಷತ್ತಿನ 5 ಸದಸ್ಯರು ನೇಮಕಗೊಂಡಿದ್ದಾರೆ.ಅಧೀನ ಶಾಸನ ರಚನಾ ಸಮಿತಿಯ ಅಧ್ಯಕ್ಷರಾಗಿ ಶಾಸಕ ಬಿ.ಶಿವಣ್ಣ, ಸದಸ್ಯರಾಗಿ ವಿಧಾನಸಭೆಯ 16 ಸದಸ್ಯರು ಹಾಗೂ ವಿಧಾನ ಪರಿಷತ್ತಿನ 5 ಸದಸ್ಯರು ನೇಮಕಗೊಂಡಿದ್ದಾರೆ.
7
+ ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿ ಅಧ್ಯಕ್ಷರಾಗಿ ಶಾಸಕ ಹೆಚ್‌,ಡಿ,ರೇವಣ್ಣ ಹಾಗೂ ಸದಸ್ಯರಾಗಿ ವಿಧಾನಸಭೆಯ 15 ಸದಸ್ಯರು ಹಾಗೂ ವಿಧಾನ ಪರಿಷತ್ತಿನ 5 ಸದಸ್ಯರು ನೇಮಕವಾಗಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾಗಿ ಶಾಸಕ ಎನ್‌. ಎಚ್‌. ಕೋನರೆಡ್ಡಿ, ಸದಸ್ಯರಾಗಿ ವಿಧಾನಸಭೆಯ 14 ಸದಸ್ಯರು ಹಾಗೂ ವಿಧಾನ ಪರಿಷತ್ತಿನ 5 ಸದಸ್ಯರು ನೇಮಕಗೊಂಡಿದ್ದಾರೆ.
8
+ ಗ್ರಂಥಾಲಯ ಸಮಿತಿ ಅಧ್ಯಕ್ಷರಾಗಿ ಶಾಸಕ ಯು.ಬಿ.ಬಣಕಾರ್‌, ಸದಸ್ಯರಾಗಿ ವಿಧಾನಸಭೆಯ 5 ಸದಸ್ಯರು ಹಾಗೂ ವಿಧಾನ ಪರಿಷತ್ತಿನ 3ಸದಸ್ಯರು ಹಾಗೂ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿ ಅಧ್ಯಕ್ಷರಾಗಿ ರಿಜ್ವಾನ್‌ ಅರ್ಷದ್‌, ಸದಸ್ಯರಾಗಿ ವಿಧಾನಸಭೆಯ 14 ಸದಸ್ಯರು ಹಾಗೂ ವಿಧಾನ ಪರಿಷತ್ತಿನ 5 ಸದಸ್ಯರು ನೇಮಕಗೊಂಡಿದ್ದಾರೆ.
9
+ ವಿಧಾನಸಭೆಯ ಸಮಿತಿಗಳಾದ ಅಂದಾಜು ಸಮಿತಿ ಅಧ್ಯಕ್ಷರಾಗಿ ಶಾಸಕ ಹಂಪನಗೌಡ ಬಾದರ್ಲಿ ಹಾಗೂ 18 ಶಾಸಕರು ಸದಸ್ಯರಾಗಿ ನೇಮಕವಾಗಿದ್ದಾರೆ. ಸರ್ಕಾರಿ ಭರವಸೆಗಳ ಸಮಿತಿಯ ಅಧ್ಯಕ್ಷರಾಗಿ ಶಾಸಕ ಕೆ.ವೈ.ನಂಜೇಗೌಡ ಹಾಗೂ 15 ಶಾಸಕರು ಸದಸ್ಯರಾಗಿದ್ದಾರೆ.
10
+ ಹಕ್ಕುಬಾಧ್ಯತೆಗಳ ಸಮಿತಿಯ ಅಧ್ಯಕ್ಷರಾಗಿ ಕೌಜಲಗಿ ಶಿವಾನಂದ ಮಹಾಂತೇಶ ಹಾಗೂ 11 ಶಾಸಕರು ಸದಸ್ಯರಾಗಿದ್ದಾರೆ. ಖಾಸಗಿ ಸದಸ್ಯರು ವಿಧೇಯಕ ಹಾಗೂ ನಿರ್ಣಯಗಳ ಸಮಿತಿಯ ಅಧ್ಯಕ್ಷರಾಗಿ ವಿಧಾನಸಭಾಧ್ಯಕ್ಷರಾದ ರುದ್ರಪ್ಪ, ಮಾನಪ್ಪ ಲಮಾಣಿ ಹಾಗೂ 11 ಶಾಸಕರು ಸದಸ್ಯರಾಗಿ ನೇಮಕವಾಗಿದ್ದಾರೆ.
11
+ ಅರ್ಜಿಗಳ ಸಮಿತಿಯ ಅಧ್ಯಕ್ಷರಾಗಿ ವಿಧಾನಸಭಾಧ್ಯಕ್ಷರಾದ ರುದ್ರಪ್ಪ, ಮಾನಪ್ಪ ಲಮಾಣಿ ಹಾಗೂ 16ಶಾಸಕರು ಸದಸ್ಯರಾಗಿ ನೇಮಕವಾಗಿದ್ದಾರೆ. ವಸತಿ ಸೌಕರ್ಯ ಸಮಿತಿ ಅಧ್ಯಕ್ಷರಾಗಿ ವಿಧಾನಸಭಾಧ್ಯಕ್ಷರಾದ ರುದ್ರಪ್ಪ, ಮಾನಪ್ಪ ಲಮಾಣಿ ಹಾಗೂ 12 ಶಾಸಕರು ಸದಸ್ಯರಾಗಿ ನೇಮಕವಾಗಿದ್ದಾರೆ.
eesanje/url_46_7_10.txt ADDED
@@ -0,0 +1,9 @@
 
 
 
 
 
 
 
 
 
 
1
+ ನೈತಿಕತೆ ಇದ್ದರೆ ಸಿಎಂ ಒಂದೇ ಒಂದು ಕ್ಷಣವೂ ಅಧಿಕಾರದಲ್ಲಿರಬಾರದು : ಅಶ್ವಥ್‌ ನಾರಾಯಣ
2
+ :
3
+ ಬೆಂಗಳೂರು,ಸೆ.27-ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೈತಿಕತೆ ಇದ್ದರೆ ಒಂದೇ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯದೇ ಕೂಡಲೇ ತಮ ಸ್ಥಾನಕ್ಕೆ ರಾಜೀನಾಮೆ ನೀಡಿ ನಿಷ್ಪಕ್ಷಪಾತ ತನಿಖೆಗೆ ಅವಕಾಶ ಕಲ್ಪಿಸಬೇಕೆಂದು ಮಾಜಿ ಸಚಿವ ಹಾಗೂ ಶಾಸಕ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ ಒತ್ತಾಯಿಸಿದ್ದಾರೆ.
4
+ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಇನ್ನೊಬ್ಬರ ನೈತಿಕತೆ ಬಗ್ಗೆ ಮಾತನಾಡುವ ಸಿದ್ದರಾಮಯ್ಯನವರು ಯಾವ ಮುಖ ಇಟ್ಟುಕೊಂಡು ಅಧಿಕಾರದಲ್ಲಿ ಮುಂದುವರೆಯುತ್ತಾರೆ. ಸಾರ್ವಜನಿಕ ಜೀವನದಲ್ಲಿರುವ ಅವರಿಗೆ ದೇಶದ ಕಾನೂನು ಬಗ್ಗೆ ಗೌರವವಿದ್ದರೆ ಒಂದೇ ಒಂದು ಕ್ಷಣವೂ ಸಿಎಂ ಸ್ಥಾನದಲ್ಲಿ ಇರಬಾರದು ಎಂದು ಆಗ್ರಹಿಸಿದರು.
5
+ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್‌‍ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ಒಂದೇ ಕೆಲಸ ಪ್ರಾಮಾಣಿಕವಾಗಿ ಮಾಡುತ್ತಿದೆ. ಅಧಿಕಾರ ದುರ್ಬಳಕೆ, ಭ್ರಷ್ಟಾಚಾರ, ಆಡಳಿತ ಶೂನ್ಯ, ಸರ್ಕಾರದ ಅಧಿಕಾರಿಗಳ ಆತಹತ್ಯೆ ಇಷ್ಟೇ ಆಗುತ್ತಿದೆ. ಭ್ರಷ್ಟ ಕಾಂಗ್ರೆಸ್‌‍ ಪ್ರಾಮಾಣಿಕ ಆಡಳಿತ ನೀಡುವುದಾಗಿ ಹೇಳುತ್ತಿದ್ದಾರೆ. ಇವರು ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿಗಳು. ಅವರ ವಿಚಾರದಲ್ಲಿ ಯಾವುದೂ ಸ್ಪಷ್ಟತೆ ಇಲ್ಲ ಎಂದು ಕಿಡಿಕಾರಿದರು.
6
+ ಮಹರ್ಷಿ ವಾಲೀಕಿಯಿಂದ ಆರಂಭವಾಗಿ, ಇತ್ತೀಚಿನವರೆಗೂ ಭ್ರಷ್ಟಾಚಾರ ಆಗಿದೆ. ಶೇ.100 ಭ್ರಷ್ಟಾಚಾರ ಮಾಡಿರುವುದಾಗಿ ಅವರೇ ಒಪ್ಪಿಕೊಂಡಿದ್ದಾರೆ. ಭೂಮಿ ಕಬಳಿಕೆ ಮಾಡಿರುವುದು ಸ್ಪಷ್ಟವಾಗಿದೆ. ಏನೇ ಹೇಳಿದರೂ ನಾವು ಮಾಡಿಲ್ಲ ಅಂತಿದ್ದಾರೆ. ಇವರ ಭ್ರಷ್ಟಾಚಾರ ಸಂಪೂರ್ಣವಾಗಿ ಬಯಲಿಗೆ ಬಂದಿದೆ. ಕೋರ್ಟಲ್ಲಿ ಎಲ್ಲವೂ ಬಯಲಾಗಿದೆ. ಸಾಮಾನ್ಯ ಜನರಿಗೂ ಇದು ಅರ್ಥ ಆಗಿದೆ ಎಂದರು.
7
+ ಏನೆಲ್ಲಾ ಕ್ರಮ ಆಗಬೇಕು ಎಂದು ರಾಜ್ಯಪಾಲರು ಸೂಚಿಸಿದ್ದರೂ ಇದರ ವಿರುದ್ಧ ನ್ಯಾಯಾಲಯಕ್ಕೆ ಹೋಗಿದ್ದಾರೆ. ಕೋರ್ಟ್‌ ಕೂಡ ಇವರ ತಪ್ಪು ಏನೆಂದು ತಿಳಿಸಿದೆ. ಜಮೀನು ಹೇಗೆ ಕೈ ಬದಲಾವಣೆ ಆಗಿದೆ ಎಂಬುದರ ಬಗ್ಗೆ ಸಂಪೂರ್ಣ ದಾಖಲೆ ಇದೆ. ಅಧಿಕಾರ ಹೇಗೆ ದುರ್ಬಳಕೆ ಮಾಡಿದ್ದಾರೆ ಎಂಬ ಮಾಹಿತಿ ಇದೆ. ಇಷ್ಟೆಲ್ಲಾ ಆದರೂ ರಾಜೀನಾಮೆ ಕೊಡಲು ಮೀನಾ ಮೇಷ ಎಣಿಸುತ್ತಿದ್ದಾರೆ ಎಂದು ದೂರಿದರು.
8
+ ಸರ್ಕಾರವನ್ನು ಕಾಂಗ್ರೆಸ್‌‍ಮಯ ಮಾಡಿಕೊಂಡಿದ್ದಾರೆ. ರಾಜ್ಯಪಾಲರು ಏನೇ ಕೇಳಿದರೂ ಉತ್ತರ ಇಲ್ಲ. ರಾಜ್ಯಪಾಲರಿಗೆ ಚೀಫ್‌ ಸೆಕ್ರೆಟರಿ ಉತ್ತರ ಕೊಡುವಂತಿಲ್ಲ, ಡಿಜಿಪಿ ಮೇಲೆ ನಂಬಿಕೆ ಇಲ್ಲ. ಕ್ಯಾಬಿನೆಟ್‌ ನಲ್ಲಿ ಅಳೆದು ತೂಗಿ ಉತ್ತರ ಕೊಡುತ್ತೇ ಎನ್ನುತಾರೆ. ರಾಜ್ಯಪಾಲರಿಗೆ ಮಾಹಿತಿ ಕೊಡುವುದಿಲ್ಲ ಎಂಬುದು ಕಾಂಗ್ರೆಸ್‌‍ ಆಡಳಿತಾನಾ? ಮುಖ್ಯ ಕಾರ್ಯದರ್ಶಿ, ಅಧಿಕಾರಿಗಳನ್ನು ರಾಜ್ಯಪಾಲರು ನೇಮಕ ಮಾಡ್ತಾರಾ ಎಂದು ಪ್ರಶ್ನಿಸಿದರು.
9
+ ಮಾಜಿ ವಿಧಾನಸಭೆ ಸ್ಪೀಕರ್‌ ಕೆ.ಬಿ.ಕೋಳಿವಾಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕೋಳಿವಾಡ ಅವರಿದ ಆರಂಭವಾಗಿ ಸಂತೋಷ್‌ ಹೆಗ್ಡೆ ಅವರು ಹೇಳಿದ್ದಾರೆ. ಫೇರ್‌ ಅಂಡ್‌ ಇಂಪಾರ್ಷಲ್‌ ಆಗಿ ತನಿಖೆಯಾಗಬೇಕು ಎಂದು ಸಿದ್ದರಾಮಯ್ಯ ಹೇಳಿದ್ದರು. ಸಿದ್ದರಾಮಯ್ಯ ಅವರ ಮಾತು, ಅವರೇ ಕೇಳಲ್ಲ ಅಂದರೆ ಹೇಗೆ ಎಂದು ವ್ಯಂಗ್ಯವಾಡಿದರು.
eesanje/url_46_7_11.txt ADDED
@@ -0,0 +1,8 @@
 
 
 
 
 
 
 
 
 
1
+ ಸಿಬಿಐ ತನಿಖೆಗೆ ರಾಜ್ಯ ಸರ್ಕಾರದ ಅನುಮತಿ : ಸಿಎಂ ರಕ್ಷಣೆಗೆ ಈ ನಿರ್ಣಯ ಮಾಡಿಲ್ಲ ಎಂದ ಸಚಿವ ಪಾಟೀಲ್
2
+
3
+ ಬೆಂಗಳೂರು,ಸೆ.27-ಸಿಬಿಐ ಮುಕ್ತ ತನಿಖೆಗೆ ಅವಕಾಶ ನಿರಾಕರಿಸುವ ಬದಲಾವಣೆಗಳ ಕುರಿತು ಕಾಂಗ್ರೆಸ್ ನಾಯಕರು ಸಮರ್ಥನೆ ನೀಡುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಕ್ಷಣೆಗಾಗಿ ಈ ರೀತಿಯ ನಿರ್ಣಯ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
4
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಈ ಹಿಂದೆ ಕೇಂದ್ರದ ಅಧಿಕಾರಿಗಳ ವಿರುದ್ಧ ನೇರವಾಗಿ ತನಿಖೆ ನಡೆಸಲಾಗುತ್ತಿದೆ. ಅದಕ್ಕೆ ನಮ್ಮ ಅನುಮತಿ ಬೇಕಿರಲಿಲ್ಲ. ಇನ್ನು ಮುಂದೆ ಕೇಂದ್ರದ ಅಧಿಕಾರಿಗಳ ತನಿಖೆಗೂ ರಾಜ್ಯಸರ್ಕಾರದ ಅನುಮತಿಯ ಅಗತ್ಯವಿದೆ ಎಂಬ ಬದಲಾವಣೆ ಮಾಡಿದ್ದೇವೆ. ಸಿದ್ದರಾಮಯ್ಯನವರಿಗಾಗಿ ಈ ನಿರ್ಣಯ ತೆಗೆದುಕೊಂಡಿಲ್ಲ. ಸಿದ್ದರಾಮಯ್ಯ ಕೇಂದ್ರ ಸರ್ಕಾರದ ನೌಕರರು ಅಲ್ಲ ಎಂದು ಸ್ಪಷ್ಟಪಡಿಸಿದರು.
5
+ ರಾಜ್ಯಸರ್ಕಾರದ ನಿರ್ಣಯ ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ಸಂಬಂಧಪಟ್ಟಿದ್ದಾಗಿದೆ. ಇದನ್ನು ರಾಜಕೀಯವಾಗಿ ವಿಶ್ಲೇಷಣೆ ಮಾಡುವುದು ಸರಿಯಲ್ಲ ಎಂದು ಹೇಳಿದರು.ಪ್ರಧಾನಮಂತ್ರಿ ನರೇಂದ್ರಮೋದಿ ಹರಿಯಾಣದಲ್ಲಿ ಕರ್ನಾಟಕದ ಪ್ರಕರಣವನ್ನು ಉಲ್ಲೇಖ ಮಾಡಿದ್ದಾರೆ. ಮಾನ್ಯ ಪ್ರಧಾನಿಯವರು ಎಲೆಕ್ಟ್ರೋಲ್ ಬಾಂಡ್ಗಳ ಬಗ್ಗೆ ಸುಪ್ರೀಂಕೋರ್ಟ್ ಈ ಬಗ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಪುನರುಚ್ಚರಿಸಬೇಕು.
6
+ ಮೋದಿಯವರು ತಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಯನ್ನು ಎದುರಿಸಬೇಕು ಎಂದು ಪ್ರತಿಸವಾಲು ಹಾಕಿದರು.ಕೇಂದ್ರಸಚಿವ ಎಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಪ್ರಾಥಮಿಕ ತನಿಖೆಯಾಗಿದೆ. ಅವರೂ ಕೂಡ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಒತ್ತಾಯಿಸಿದರು.
7
+ ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡಿಲ್ಲ. ಅವರ ವಿರುದ್ಧ ಈವರೆಗೂ ಪ್ರಾಥಮಿಕ ತನಿಖೆ ಕೂಡ ಆಗಿಲ್ಲ ಎಂಬುದನ್ನು ಮರೆಯುವಂತಿಲ್ಲ ಎಂದು ಹೇಳಿದರು.ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ರವರು ಅಧಿಕಾರಿಗಳಿಗೆ ನೇರವಾಗಿ ಪತ್ರ ಬರೆಯುವುದಿಲ್ಲ. ಮುಖ್ಯಮಂತ್ರಿಯವರಿಗೆ ಬರೆಯಬೇಕು. ಎಲ್ಲದಕ್ಕೂ ಒಂದು ನಿಯಮವಿದೆ.
8
+ ರಾಜ್ಯಪಾಲರು ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ನಿಯಮಗಳನ್ನು ಮೀರುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಕಾಂಗ್ರೆಸ್ ನಾಯಕ ಕೆ.ಬಿ.ಕೋಳಿವಾಡ ಅವರಿಗೆ ವಯಸ್ಸಾಗಿದೆ. ಹೀಗಾಗಿ ಅವರ ಹೇಳಿಕೆಗೆ ಹೆಚ್ಚಿನ ಮಹತ್ವ ನೀಡಬೇಕಿಲ್ಲ ಎಂದು ಹೇಳಿದರು.
eesanje/url_46_7_12.txt ADDED
@@ -0,0 +1,9 @@
 
 
 
 
 
 
 
 
 
 
1
+ ಕೋರ್ಟ್ ಸೂಚನೆಯಂತೆ ಸಿಎಂ ವಿರುದ್ಧ ಎಫ್ಐಆರ್ ದಾಖಲು..?
2
+ ..?
3
+ ಬೆಂಗಳೂರು,ಸೆ.27– ಮುಡಾ ಅಕ್ರಮ ನಿವೇಶನ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಸಿಆರ್ಪಿಸಿ ಸೆಕ್ಷನ್ ಅಡಿಯೇ ಇಂದು ಎಫ್ಐಆರ್ ದಾಖಲಾಗಲಿದೆ. ಸಿಆರ್ಪಿಸಿ ಸೆಕ್ಷನ್ 156(3)ರಡಿಯೇ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದುನ ಮಲ್ಲಿಕಾರ್ಜುನ ಸ್ವಾಮಿ, ಜಮೀನು ಮಾಲೀಕ ದೇವರಾಜ್ ಹಾಗೂ ಇತರರ ವಿರುದ್ಧ ಮೈಸೂರು ಲೋಕಾಯುಕ್ತ ಎಸ್ಪಿ ಇಂದು ಸಂಜೆಯೊಳಗೆ ಎಫ್ಐಆರ್ ದಾಖಲಿಸಲಿದ್ದಾರೆ.
4
+ ಯಾವ ಕಾಯ್ದೆಯಡಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ದೂರು ದಾಖಲಿಸಬೇಕೆಂದು ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರು ಲೋಕಾಯುಕ್ತ ಎಡಿಜಿಪಿ ಮೌನೀಶ್ ಕರ್ಬಿಕರ್ ಅವರಿಗೆ ಪತ್ರ ಬರೆದು ಸಲಹೆ ಕೇಳಿದ್ದರು.ಈ ನಡುವೆ ಪ್ರಕರಣದ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಸಹ ಕೇಳಿದ್ದರು.
5
+ ಈ ಪತ್ರಕ್ಕೆ ಉತ್ತರಿಸಿರುವ ಎಡಿಜಿಪಿ ಮೌನೀಶ್ ಕರ್ಬಿಕರ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನಿರ್ದೇಶನದಂತೆ ಸಿಆರ್ಪಿಸಿ ಸೆಕ್ಷನ್ 156(3) ಅಡಿಯೇ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.ಹಿರಿಯ ಅಧಿಕಾರಿಗಳ ಸೂಚನೆ ಮತ್ತು ಕಾನೂನು ತಜ್ಞರ ಸಲಹೆಯಂತೆ ಮೈಸೂರು ಲೋಕಾಯುಕ್ತ ಎಸ್ಪಿ ಅವರು ಪ್ರಕರಣ ದಾಖಲಿಸಲಿದ್ದಾರೆ.
6
+ ಇದರಿಂದಾಗಿ ಕಳೆದ ಎರಡು ದಿನಗಳಿಂದ ಸಿದ್ದರಾಮಯ್ಯ ಪ್ರಕರಣದಲ್ಲಿ ಯಾವ ಕಾಯ್ದೆಯಡಿ ದೂರು ದಾಖಲಿಸಬೇಕು ಎಂಬುದರ ಕುರಿತು ಉಂಟಾಗಿದ್ದ ಗೊಂದಲ ಬಹುತೇಕ ನಿವಾರಣೆಯಾಗಿದೆ. ಇದೀಗ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಯಾವುದೇ ಸಂದರ್ಭದಲ್ಲಿ ಎಫ್ಐಆರ್ ದಾಖಲಾಗುವ ಸಾಧ್ಯತೆ ನಿಚ್ಚಳವಾಗಿದೆ.
7
+ ಸೆಕ್ಷನ್ 120ಬಿ(ಅಪರಾಧಿಕ ಒಳಸಂಚು), 166-ಯಾವುದೇ ವಯಕ್ತಿಗೆ ಹಾನಿ ಉಂಟು ಮಾಡುವ ಉದ್ದೇಶದಿಂದ ಸಾರ್ವಜನಿಕ ನೌಕರನು ಕಾನೂನು ಬದ್ದ ಆದೇಶ ಪಾಲಸದಿರುವುದು, 403 ಸ್ವತ್ತಿನ ಅಪ್ರಮಾಣಿಕ ದುರುಪಯೋಗ, 406 ಅಪರಾಧಿಕ ನಂಬಿಕೆದ್ರೋಹ, 420 ವಂಚನೆ ಮಾಡುವುದು ಮತ್ತು ಸ್ವತ್ತನ್ನ ನೀಡಲು ಅಪ್ರಮಾಣಿಕವಾಗಿ ಪ್ರೇರೇಪಿಸುವುದು, 42 ಕೇಡಿನ ಅಪರಾಧಕ್ಕಾಗಿ ದಂಡನೆ, 465 ಖೋಟಾ ತಯಾರಿಕೆಗೆ ದಂಡನೆ, 468 ವಂಚನೆ ಉದ್ದೇಶಕ್ಕಾಗಿ ಖೋಟಾ ತಯಾರಿಕೆ, 340 ಅಕ್ರಮ ಬಂಧನ, 351 ಹಲ್ಲೆ ಕಾನೂನಿನಡಿ ತನಿಖೆ ನಡೆಯಲಿದೆ.
8
+ ಪ್ರಕರಣದಲ್ಲಿ ಸಿದ್ದರಾಮಯ್ಯ ಮೊದಲ ಆರೋಪಿಯಾದರೆ ಪಾರ್ವತಿ 2ನೇ ಆರೋಪಿ, ಮಲ್ಲಿಕಾರ್ಜುನಸ್ವಾಮಿ 3ನೇ ಹಾಗೂ ದೇವರಾಜ್ 4ನೇ ಆರೋಪಿಯಾಗಲಿದ್ದಾರೆ. ನ್ಯಾಯಾಲಯವು ಆರೋಪಿಗಳ ವಿರುದ್ಧ ನಿರ್ಧಿಷ್ಟ ಸೆಕ್ಷನ್ಗಳಡಿ ದಾಖಲಿಸಿ ತನಿಖೆ ನಡೆಸಬೇಕೆಂದು ನಿರ್ದೇಶನ ನೀಡಿರುವುದರಿಂದ ಲೋಕಾಯುಕ್ತ ಪೊಲೀಸರು ಅದರ ಪ್ರಕಾರವೇ ತನಿಖೆಯನ್ನು ಕೈಗೆತ್ತಿಕೊಳ್ಳಲಿದ್ದಾರೆ.
9
+ ಎಫ್ಐಆರ್ ದಾಖಲಾದ ನಂತರ ಆರೋಪಿ ಸ್ಥಾನದಲ್ಲಿ ಇರುವವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡುವ ಸಾಧ್ಯತ��� ಇದೆ. ಇದಕ್ಕೂ ಮುನ್ನ ಲೋಕಾಯುಕ್ತ ಅಧಿಕಾರಿಗಳು ಯಾವ ಸೆಕ್ಷನ್ನಡಿ ದೂರು ದಾಖಲಿಸಬೇಕೆಂಬ ಗೊಂದಲ ಉಂಟಾಗಿತ್ತು. ಸಿಆರ್ಪಿಸಿ ಅಡಿ ಎಫ್ಐಆರ ದಾಖಲಿಸುವ ಬಗ್ಗೆಯೇ ಭಿನ್ನಾಭಿಪ್ರಾಯ ಇತ್ತು. ಅಂತಿಮವಾಗಿ ಕಾನೂನು ತಜ್ಞರು ನ್ಯಾಯಾಲಯದ ಆದೇಶದಂತೆ ದೂರು ದಾಖಲಿಸಬೇಕೆಂಬ ಸಲಹೆ ಕೊಟ್ಟ ನಂತರ ಗೊಂದಲ ಬಗೆಹರಿದಿದೆ.
eesanje/url_46_7_2.txt ADDED
@@ -0,0 +1,10 @@
 
 
 
 
 
 
 
 
 
 
 
1
+ “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ವರ್ಷದಲ್ಲೇ 12 ಸಾವಿರ ಶಿಕ್ಷಕರ ನೇಮಕಾತಿ ಮಾಡಿದ್ದೇವೆ”
2
+ 12
3
+ ಅರಕಲಗೂಡು, ಸೆ.28-ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲೆ 12 ಸಾವಿರ ಶಿಕ್ಷಕರ ನೇಮಕಾತಿ ಮಾಡಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
4
+ ಶಿಕ್ಷಕರ ದಿನಾಚರಣೆ ಸಮಿತಿ ಹಾಗೂ ತಾಲ್ಲೂಕು ಶಿಕ್ಷಕರ ಸಂಘಗಳ ಸಹಯೋಗದಲ್ಲಿ ಪಟ್ಟಣದ ಶಿಕ್ಷಕರ ಭವನದಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಇಲಾಖೆ ಬಹು ದೊಡ್ಡ ಇಲಾಖೆಯಾಗಿದೆ. ರಾಜ್ಯದಲ್ಲಿ 58 ಸಾವಿರ ಶಾಲಾ ಕಾಲೇಜುಗಳು ಇದ್ದು ಒಂದು ಕೋಟಿಗೂ ಹೆಚ್ಚಿನ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ.
5
+ ಸರ್ಕಾರಿ ನೌಕರರಲ್ಲಿ ಶೇ 40 ರಷ್ಟು ನೌಕರರು ಈ ಇಲಾಖೆಯವರೆ ಇದ್ದು ವಾರ್ಷಿ ರೂ 50 ಸಾವಿರ ಕೋಟಿ ವೆಚ್ಚವಾಗುತ್ತಿದೆ. 7 ನೇ ವೇತನ ಆಯೋಗದ ಅನುಷ್ಠಾನದಿಂದ ಶಿಕ್ಷರ ವೇತನದಲ್ಲಿ ರೂ 6 ಸಾವಿರ ಕೋಟಿ ಹೆಚ್ಚಳವಾಗಿದೆ ಎಂದರು.
6
+ ಕಲ್ಯಾಣ ಕರ್ನಾಟಕದಲ್ಲಿ 6 ಸಾವಿರ ಶಿಕ್ಷಕರ ನೇಮಕಾತಿ ಬಾಕಿ ಇದ್ದು 5800 ಶಿಕ್ಷಕರನ್ನು ಒಂದುತಿಂಗಳಲ್ಲಿ ನೇಮಕಾತಿ ಮಾಡಲಾಗುವುದು. ರಾಜ್ಯದಲ್ಲಿ 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಕಮಾಡಿ ಕೊಂಡಿದ್ದು ದೈಹಿಕ ಶಿಕ್ಷರು ಸೇರಿದಂತೆ ವಿವಿಧ ವಿಷಯಗಳನ್ನು ಬೋಧಿಸಲು ಹೆಚ್ಚುವರಿಯಾಗಿ 10 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು.
7
+ ಸರ್ಕಾರಿ ಶಾಲೆಯ ಮಕ್ಕಳಲ್ಲಿ ಅಪೌಷ್ಠಕತೆ ಹೊಗಲಾಡಿಸಲಿ ಈ ಗಾಗಲೆ ರಾಗಿ ಮಾಲ್ಟ ನೀಡಲಾಗುತ್ತಿದೆ. ವಾರದಲ್ಲಿ ಎರಡು ದಿನ ಕೋಳಿ ಮೊಟ್ಟೆ ನೀಡುವ ಯೋಜನೆ ಮಾಡಲಾಗಿತ್ತು.ಈ ಯೋಜನೆಗೆ ಅಜೀಂ ಪ್ರೇಂಜೀ ಪೌಂಡೇಷನ್‌ ರೂ1591ಕೋಟಿ ದೇಣಿಗೆ ನೀಡಿದ್ದು ಇದರಲ್ಲಿ ವಾರದ 6 ದಿನಗಳೂ ಮೊಟ್ಟೆ ನೀಡುವ ಯೋಜನೆ ರೂಪಿಸಿದ್ದು ಈಗಾಗಲೇ ಚಾಲನೆ ನೀಡಲಾಗಿದೆ ಎಂದರು.
8
+ ಶಾಸಕ ಎ. ಮಂಜು ಮಾತನಾಡಿ, ತಾಲ್ಲೂಕಿನಲ್ಲಿ ತಾವು ಹಳೆಯ ವಿದ್ಯಾರ್ಥಿಗಳ ಸಹಯೋಗದಲ್ಲಿ ತೆರೆದಿರುವ 12 ಮಕ್ಕಳ ಮನೆ ಪೂರ್ವ ಪ್ರಾಥಮಿಕ ಶಾಲೆಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ, ಇದಕ್ಕೆ ಶಿಕ್ಷಕರು ಮತ್ತು ಶಾಲಾಭಿವೃದ್ಧಿ ಸಮಿತಿಯ ಸಹಕಾರ ಮುಖ್ಯವಾಗಿದೆ. ಸಚಿವರು ತಾಲ್ಲೂಕಿನಲ್ಲಿ ಶೈಕ್ಷಣಿಕ ಅಭಿವೃದ್ದಿಗೆ ಹೆಚ್ಚಿನ ನೆರವು ನೀಡುವಂತೆ ಮನವಿ ಮಾಡಿದರು.
9
+ ಸಂಸದ ಶ್ರೇಯಸ್‌‍ ಎಂ. ಪಟೇಲ್‌ ಹಾಗೂ ಹುಣಸೂರು ಬಾಲಕಿಯರ ಸರ್ಕಾರಿಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎಚ್‌.ಎನ್‌. ಗಿರೀಶ್‌ ಮಾತನಾಡಿದರು. ಇದೇ ವೇಳೆ ನವೀಕೃತ ಗುರುಭವನವನ್ನು ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು.
10
+ ಪಪಂ ಅಧ್ಯಕ್ಷ ಎಸ್‌‍. ಎಸ್‌‍. ಪ್ರದೀಪ್‌ ಕುಮಾರ್‌, ತಹಶೀಲ್ದಾರ್‌ ಸೌಮ್ಯ, ಜಿಪಂ ಉಪಕಾರ್ಯದರ್ಶಿ ಚಂದ್ರಶೇಖರ್‌, ಜಿಲ್ಲಾ ಪದವಿ ಪೂರ್ವ ಶಿಕ್ಷಣ ಉಪನಿರ್ದೇಶಕ ಮಹಾಲಿಂಗಯ್ಯ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್‌‍.ಕೆ. ಪಾಂಡು, ಡಯಟ್‌ ಪ್ರಾಂಶುಪಾಲ ಜಿ. ರ��ಗನಾಥಸ್ವಾಮಿ, ತಾಪಂ ಇಒ ಪ್ರಕಾಶ್‌, ಬಿಇಒ ಕೆ.ಪಿ. ನಾರಾಯಣ್‌‍, ಬಿಆರ್‌ ಸಿ ಸಿ.ಎಸ್‌‍. ಬಾಲರಾಜು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸಿ. ಎ. ರಂಗಸ್ವಾಮಿ, ಪಪಂ ಮುಖ್ಯಾಧಿಕಾರಿ ಬಸವರಾಜ್‌ ಟಾಕಪ್ಪ ಶಿಗ್ಗಾಂವಿ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಣ್ಣಪ್ಪ, ಜಿಲ್ಲಾ ಪ್ರೌಢಶಾಲಾ ಸಂಘದ ಅಧ್ಯಕ್ಷ ಎಚ್‌‍.ಸಿ. ಬಸವರಾಜ್‌‍, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೈ.ಪಿ.ಶಿವಶಂಕರ್‌ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.
eesanje/url_46_7_3.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಖರ್ಗೆ ಕುಟುಂಬದಿಂದ ಸರ್ಕಾರಿ ಆಸ್ತಿ ಕಬಳಿಕೆ : ಲೋಕಾಯುಕ್ತಕ್ಕೆ ಎನ್‌.ಆರ್‌.ರಮೇಶ್‌ ದೂರು
2
+
3
+ ಬೆಂಗಳೂರು,ಸೆ.27– ತಮ ಪ್ರಭಾವ ಬಳಸಿಕೊಂಡು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬ ನಗರದ ಎರಡು ಬೇರೆ ಬೇರೆ ಸ್ಥಳಗಳಲ್ಲಿ ಅಮೂಲ್ಯವಾದ ಸರ್ಕಾರಿ ಸ್ವತ್ತುಗಳನ್ನು ಕಬಳಿಕೆ ಮಾಡಿಕೊಂಡಿದೆ ಎಂಬ ಗಂಭೀರ ಆರೋಪ ಮಾಡಿರುವ ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಅವರು ಈ ಕುರಿತಂತೆ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ದಾಖಲೆ ಸಮೇತ ದೂರು ನೀಡಿದ್ದಾರೆ.
4
+ ಲೋಕಾಯುಕ್ತ ಪೊಲೀಸ್‌‍ ಮಹಾನಿರ್ದೇಶಕ ಸುಬ್ರಮಣ್ಯೇಶ್ವರ ರಾವ್‌ ಅವರನ್ನು ಭೇಟಿಯಾಗಿ ದೂರು ನೀಡಿದ ನಂತರ ಮಾತ ನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಮತ್ತವರ ಕುಟುಂಬಸ್ಥರ ನೇತತ್ವದ ಸಿದ್ಧಾರ್ಥ ವಿಹಾರ ಟ್ರಸ್ಟ್‌ ಹೆಸರಿನಲ್ಲಿ ಬಹತ್‌ ಭೂ ಹಗರಣ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.
5
+ ನಾಡಿನ ಅತ್ಯಂತ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಮತ್ತವರ ಕುಟುಂಬದವರು ಭಾರತ ಸಂವಿಧಾನದ ಬಗ್ಗೆ ಸ್ಪಷ್ಟ ತಿಳುವಳಿಕೆ ಇದ್ದರೂ ಸಹ, ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ತಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ತಮದೇ ಸಿದ್ದಾರ್ಥ ವಿಹಾರ ಟ್ರಸ್ಟ್‌ ಹೆಸರಿನಲ್ಲಿ ವಂಚನೆ ಮಾಡಿದ್ದಾರೆ ಎಂದಿದ್ದಾರೆ.
6
+ 2014ರಲ್ಲಿ ಬಿಟಿಎಂ 4ನೇ ಹಂತದಲ್ಲಿ 8,002 ಚ. ಮೀ. (86,133 ಚ. ಅಡಿ) ವಿಸ್ತೀರ್ಣದ ಸಿಎ ನಿವೇಶನವನ್ನು ಶೈಕ್ಷಣಿಕ ಉದ್ದೇಶಕ್ಕೆಂದು ಬಿಡಿಎಯಿಂದ 30 ವರ್ಷಗಳ ಗುತ್ತಿಗೆಗೆ ಪಡೆದಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್‌ ಸಂಸ್ಥೆಯು ಈ ವಿಷಯವನ್ನು ಮರೆ ಮಾಚಿ ಇದೀಗ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಯಲಹಂಕ ಬಳಿಯ ಬಾಗಲೂರಿನ ಹೈಟೆಕ್‌ ಡಿಫೆನ್‌್ಸ ಮತ್ತು ಏರೋಸ್ಪೇಸ್‌‍ ಪಾರ್ಕ್‌ನ ಹಾರ್ಡ್‌ವೇರ್‌ ಪಾರ್ಕ್‌ ನಲ್ಲಿ 05 ಎಕರೆ ವಿಸ್ತೀರ್ಣದ ಸಿಎ ನಿವೇಶನವನ್ನು ಮಂಜೂರು ಮಾಡಿಸಿ ಕೊಳ್ಳುವ ಮೂಲಕ ಕಾನೂನು ಬಾಹಿರ ಕಾರ್ಯವನ್ನು ಎಸಗಿದೆ.
7
+ ಮಲ್ಲಿಕಾರ್ಜುನ ಖರ್ಗೆ, ರಾಧಾಕೃಷ್ಣ, ಮಾರುತಿ ರಾವ್‌ ಡಿ. ಮಾಲೆ, ಶಾಂತಪ್ಪ, ಸಾಯಬಣ್ಣ ಅವರನ್ನೊಳಗೊಂಡ ಸಿದ್ಧಾರ್ಥ ವಿಹಾರ ಟ್ರಸ್ಟ್‌ ಎಂಬ ಸಂಸ್ಥೆಯನ್ನು ಗುಲ್ಬರ್ಗ ಜಿಲ್ಲೆಯ ಕುಸನೂರು ಗ್ರಾಮದ ವಿಳಾಸದಲ್ಲಿ 1994 ರಲ್ಲಿ ಪ್ರಾರಂಭಿಸಿದ ನಂತರ, ಟ್ರಸ್ಟ್‌ ಮೂಲಕ ಬೆಂಗಳೂರು ಮಹಾನಗರದಲ್ಲಿ ಶೈಕ್ಷಣಿಕ ಸಂಸ್ಥೆ ಯನ್ನು ಪ್ರಾರಂಭಿಸುವ ಉದ್ದೇಶ ದಿಂದ 2009ರಲ್ಲಿ ಬಿಡಿಎಯಲ್ಲಿ ಸಿವ ನಿವೇಶನ ಹಂಚಿಕೆ ಮಾಡುವಂತೆ ಅರ್ಜಿ ಸಲ್ಲಿಸಿರುತ್ತಾರೆ.
8
+ ಸಿಎ ನಿವೇಶನಕ್ಕಾಗಿ ಸಿದ್ಧಾರ್ಥ ವಿಹಾರ ಟ್ರಸ್ಟ್‌ ಸಲ್ಲಿಸಿದ್ದ ಅರ್ಜಿ ಯನ್ನು ಪುರಸ್ಕರಿಸಿದ್ದ ಬೆಂಗಳೂರು ಅಭಿವದ್ಧಿ ಪ್ರಾಧಿಕಾರ ಮೊದಲಿಗೆ ಬನಶಂಕರಿ 6ನೇ ಹಂತ, 5ನೇ ಬ್ಲಾಕ್‌ ನಲ್ಲಿರುವ 8,125 ಚ. ಮೀಟರ್‌ ವಿಸ್ತೀರ್ಣದ ಸಿವ ನಿವೇಶನ ಸಂಖ್ಯೆ 3 ಅನ್ನು ಹಂಚಿಕೆ ಮಾಡಿ 2010 ರಂದು ಹಂಚಿಕೆ ಪತ್ರ ನೀಡಿರುತ್ತದೆ.
9
+ ಸಿದ್��ಾರ್ಥ ವಿಹಾರ ಟ್ರಸ್ಟ್‌ ಟ್ರಸ್ಟೀಗಳಲ್ಲಿ ಒಬ್ಬರಾದ ರಾಧಾಕಷ್ಣರವರು ಬನಶಂಕರಿ 6ನೇ ಹಂತದ 5ನೇ ಬ್ಲಾಕ್‌ ನ ಸಿಎ ನಿವೇಶನ ಸಂಖ್ಯೆ – 03 ಕ್ಕೆ ಬದಲಾಗಿ ಈಗಾಗಲೇ ಅಭಿವದ್ಧಿಗೊಂಡಿರುವ ಬಡಾವಣೆಯಲ್ಲಿ ಬದಲಿ ನಿವೇಶನ ಹಂಚಿಕೆ ಮಾಡುವಂತೆ ಬೆಂಗಳೂರು ಅಭಿವದ್ಧಿ ಪ್ರಾಧಿಕಾರಕ್ಕೆ ಮನವಿ ಪತ್ರ ಸಲ್ಲಿಸುತ್ತಾರೆ. ಸದರಿ ಮನವಿ ಪತ್ರದಲ್ಲಿ ಬೆಂಗಳೂರು ಮಹಾನಗರದ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾಗಿರುವ ಬಿಟಿಎಂ 4ನೇ ಹಂತದ 2ನೇ ಬ್ಲಾಕ್‌ನ ಸಿಎ ನಿವೇಶನ ಸಂಖ್ಯೆ – 05 ಅನ್ನು ಬದಲಿ ನಿವೇಶನದ ಹೆಸರಿನಲ್ಲಿ ಹಂಚಿಕೆ ಮಾಡಲಾಗುತ್ತದೆ.
10
+ ಸದರಿ ಬಿಟಿಎಂ 4ನೇ ಹಂತದ ಸಿಎ ನಿವೇಶನವನ್ನು ಸಿದ್ಧಾರ್ಥ ವಿಹಾರ ಟ್ರ್ಟ್‌‍ನ ಕಾರ್ಯದರ್ಶಿ ಮಾರುತಿ ರಾವ್‌ ಡಿ. ಮಾಲೆ ಅವರ ಹೆಸರಿಗೆ 2014 ರಂದು ಬಿಡಿಎ ಸ್ವಾಧೀನ ಪತ್ರ ನೀಡಿರುತ್ತದೆ.
11
+ ಪ್ರಸ್ತುತ 130 ಕೋಟಿ ರೂ. ಬೆಲೆ ಬಾಳುವ ಈ ಆಸ್ತಿಗೆ ಬಿಬಿಎಂಪಿ ಯಿಂದ ಖಾತಾ ಕೂಡ ಮಾಡಿ ಕೊಡಲಾಗಿದೆ. ಈ ಸಮಯದಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದರೆ, ಖರ್ಗೆ ಅವರು ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಒಂದೇ ಸಂಸ್ಥೆಯ ಹೆಸರಿಗೆ – ಒಂದೇ ಉದ್ದೇಶಕ್ಕಾಗಿ – ಒಂದಕ್ಕಿಂತ ಹೆಚ್ಚು ಸರ್ಕಾರೀ ಸ್ವತ್ತನ್ನು ಪಡೆಯುವುದು ಕಾನೂನು ಸಮತವಲ್ಲದ ಕಾರ್ಯ ಎಂಬ ಸ್ಪಷ್ಟ ಅರಿವು ಇದ್ದರೂ ಟ್ರಸ್ಟ್‌ನವರು 2024ರ ಮಾರ್ಚ್‌ ತಿಂಗಳಿನಲ್ಲಿ ಕೆಐಎಡಿಬಿಗೆ ಅರ್ಜಿ ಸಲ್ಲಿಸಿ ಬಾಗಲೂರಿನಲ್ಲಿ ಅಭಿವದ್ಧಿ ಪಡಿಸಿರುವ ಹೈಟೆಕ್‌ ಡಿಫೆನ್ಸ್ ಮತ್ತು ಏರೋಸ್ಪೇಸ್‌‍ ಪಾರ್ಕ್‌ನ ಹಾರ್ಡ್‌ವೇರ್‌ ಪಾರ್ಕ್‌ನಲ್ಲಿ ಸಿಎ ನಿವೇಶನವನ್ನು ಹಂಚಿಕೆ ಮಾಡುವಂತೆ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿ ಸಲಾಗಿದೆ.
12
+ ಸದರಿ ಸ್ವತ್ತಿಗೆ ಗುತ್ತಿಗೆ ಮೊತ್ತ 14,25,00,000 ರೂ. ಗಳನ್ನು ನಿಗದಿ ಪಡಿಸಿ 30 ವರ್ಷಗಳ ಗುತ್ತಿಗೆಗೆ ನೀಡಲಾಗಿದೆ. ಆದರೆ ಹಂಚಿಕೆಯಾಗಿರುವ 5 ಎಕರೆ ಮೌಲ್ಯದ ಆಸ್ತಿ ಮೌಲ್ಯದ ಸದ್ಯದ ಬೆಲೆ 110 ಕೋಟಿ ರೂ.ಗಳಾಗಿರುವುದು ವಿಶೇಷ.
13
+ ಒಂದೇ ಸಂಸ್ಥೆಯ ಹೆಸರಿಗೆ ಒಟ್ಟು 240 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯದ ಎರಡು ಸಿಎ ನಿವೇಶನಗಳನ್ನು ಬಿಡಿಎ ಮತ್ತು ಕೆಐಎಡಿಬಿ ಸರ್ಕಾರಿ ಸಂಸ್ಥೆಗಳಿಂದ ಹಂಚಿಕೆ ಮಾಡಿಸಿಕೊಳ್ಳುವ ಮೂಲಕ ಮಹಾ ವಂಚನೆ ಮಾಡಿರುವ ಟ್ರಸ್ಟ್‌ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
14
+ ಸಿದ್ಧಾರ್ಥ ವಿಹಾರ ಟ್ರಸ್ಟ್‌ ಹೆಸರಿಗೆ ಹಂಚಿಕೆ ಮಾಡಿರುವ ಕೈಗಾರಿಕಾ ಸಚಿವ ಎಂ.ಬಿ .ಪಾಟೀಲ್‌, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಸೆಲ್ವಕುಮಾರ್‌, ಮತ್ತಿತರ ಇಲಾಖೆ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ, ವಂಚನೆ, ಮತ್ತು ಸರ್ಕಾರಿ ಭೂ ಕಬಳಿಕೆಗೆ ಸಹಕಾರ ಪ್ರಕರಣಗಳನ್ನು ದಾಖಲಿಸಲಾಗಿದೆ. ಜೊತೆಗೆ ರಾಜ್ಯಪಾಲರಿಗೂ ಸಂಪೂರ್ಣ ದಾಖಲೆ ನೀಡಲಾಗಿದೆ ಎಂದು ರಮೇಶ್‌ ಹೇಳಿದರು.
eesanje/url_46_7_4.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಮುಡಾ ಸಣ್ಣ ಪ್ರಕರಣ : ಸಿಎಂ ಬೆನ್ನಿಗೆ ನಿಂತ ಮಲ್ಲಿಕಾರ್ಜುನ ಖರ್ಗೆ
2
+ '
3
+ ಬೆಂಗಳೂರು,ಸೆ.27– ಉದ್ಯಮಿಗಳ 16 ಲಕ್ಷ ಕೋಟಿ ಸಾಲವನ್ನು ರೈಟ್‌ ಆಫ್‌ ಮಾಡಲಾಗಿದೆ. ಕೋಟ್ಯಂತರ ರೂ. ನಷ್ಟವನ್ನು ಕಡೆಗಣಿಸಿ ಸಣ್ಣಪ್ರಮಾಣದ ಮುಡಾ ಪ್ರಕರಣವನ್ನು ಪ್ರತಿನಿತ್ಯ ಚರ್ಚಿಸಲಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.
4
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಹೈಕಮಾಂಡ್‌ ಇದೆ ಎಂದು ಹೇಳುವ ಮೂಲಕ ಎಲ್ಲಾ ವದಂತಿಗಳಿಗೂ ತೆರೆ ಎಳೆದಿದ್ದಾರೆ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗುವ ಹಂತದಲ್ಲಿ ಹೈಕಮಾಂಡ್‌ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರ ಈ ಹೇಳಿಕೆಗಳು ರಾಜಕೀಯವಾಗಿ ಭುಗಿಲೆದ್ದಿದ್ದ ಚರ್ಚೆಗಳಿಗೆ ತೆರೆ ಎಳೆದಿವೆ.
5
+ ಮುಡಾ ಪ್ರಕರಣದಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಕೆಯಾಗಿಲ್ಲ. ದೋಷಿ ಎಂದೂ ಕೂಡ ತೀರ್ಮಾನವಾಗಿಲ್ಲ. ಆದರೂ ಪ್ರತಿದಿನ ಈ ಕುರಿತೇ ಹೆಚ್ಚು ಚರ್ಚೆಯಾಗುತ್ತಿದೆ. ಈ ಮೂಲಕ ಕಾಂಗ್ರೆಸ್‌‍ ಪಕ್ಷದ ವರ್ಚಸ್ಸನ್ನು ಹಾಳು ಮಾಡುವ ಹುನ್ನಾರ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.
6
+ ಈ ಹಿಂದೆ ಗುಜರಾತ್‌ನಲ್ಲಿ ನರೇಂದ್ರ ಮೋದಿ ಮುಖ್ಯಮಂತ್ರಿಯಾಗಿದ್ದಾಗ ಗೋದ್ರಾ ಹತ್ಯಾಕಾಂಡ ನಡೆದಿತ್ತು. ಆ ವೇಳೆ ಅವರು ರಾಜೀನಾಮೆ ನೀಡಿದ್ದರೇ? ಅಮಿತ್ ಷಾ ವಿರುದ್ಧವೂ ಹಲವು ಪ್ರಕರಣಗಳು ಬಾಕಿ ಇದ್ದವು. ಅವರೂ ಕೂಡ ರಾಜೀನಾಮೆ ನೀಡಿರಲಿಲ್ಲ. ಬಿಜೆಪಿಯವರು ಯಾವುದೋ ಒಬ್ಬ ವ್ಯಕ್ತಿಯನ್ನು ಗುರಿಯಾಗಿಸಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
7
+ ವ್ಯಕ್ತಿಯ ವರ್ಚಸ್ಸನ್ನು ಹಾಳು ಮಾಡುವ ಮೂಲಕ ಪಕ್ಷದ ವರ್ಚಸ್ಸಿಗೂ ಧಕ್ಕೆ ಉಂಟು ಮಾಡುವ ಹುನ್ನಾರಗಳನ್ನು ಬಿಜೆಪಿ ನಡೆಸಿದೆ. ಬಿಜೆಪಿಯ ಕೇಂದ್ರ ನಾಯಕರ ಗುರಿ ಕಾಂಗ್ರೆಸ್‌‍ ಪಕ್ಷವಾಗಿದೆ. ವ್ಯಕ್ತಿಗತ ಗುರಿಯಿಲ್ಲ. ಏನೇ ಆದರೂ ಪಕ್ಷ ಮುಂದುವರೆಯುತ್ತದೆ. ನಮ ಪಕ್ಷವನ್ನು ಮುಗಿಸಲು ಮೂಲ ಮತಬ್ಯಾಂಕನ್ನು ನಾಶಪಡಿಸಲು ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿ ಈ ಎಲ್ಲಾ ಪ್ರತಿಭಟನೆಗಳು, ಚರ್ಚೆಗಳು ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
8
+ ಕಾನೂನು ತನ್ನ ನಿರ್ಧಾರವನ್ನು ತೆಗೆದುಕೊಳ್ಳಲಿ. ಆ ಸಂದರ್ಭ ಎದುರಾದಾಗ ನಾವು ಪರಿಶೀಲನೆ ನಡೆಸುತ್ತೇವೆ. ಈಗ ಏನೂ ಇಲ್ಲ. ಆದರೂ ಪ್ರತಿದಿನ ಮುಡಾ … ಮುಡಾ… ಎಂದು ಚರ್ಚೆಗಳಾಗುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
9
+ ಉದ್ಯಮಿಗಳ 14 ಲಕ್ಷ ಕೋಟಿ ರೂ.ಗಳ ಸಾಲವನ್ನು ರೈಟ್‌ ಆಫ್‌ ಹೆಸರಿನಲ್ಲಿ ಮನ್ನಾ ಮಾಡಲಾಗಿದೆ. ಅದನ್ನು ಮರೆತು ದೋಷಾರೋಪಣ ಪಟ್ಟಿಯೂ ಸಲ್ಲಿಕೆಯಾಗಿಲ್ಲ, ಶಿಕ್ಷೆಯೂ ಘೋಷಣೆಯಾಗದಿರುವ ಸಣ್ಣ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿದಿನ ಹೋರಾಟ ನಡೆಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.
10
+ ಸಿಬಿಐ ತನಿಖೆಗಿಂತ ಮುಕ��ತ ಅವಕಾಶವನ್ನು ಮೊಟಕುಗೊಳಿಸುವ ರಾಜ್ಯ ಸಚಿವ ಸಂಪುಟದ ನಿರ್ಣಯವನ್ನು ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ಇದು ಹೊಸದಲ್ಲ. ಈ ಹಿಂದೆ ದೇವರಾಜ ಅರಸುರವರು ಮುಖ್ಯಮಂತ್ರಿಯಾಗಿದ್ದಾಗಲೂ ಇಂತಹ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಸಿಬಿಐ ತನಿಖೆಯ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಾಗ ತನಿಖೆಯ ಮುಕ್ತ ಅವಕಾಶವನ್ನು ಹಿಂಪಡೆಯಲಾಗಿತ್ತು ಎಂದು ಹೇಳಿದರು.
11
+ ತಮಿಳುನಾಡಿನ ವೀರಪ್ಪನ್‌ ಮತ್ತು ಸ್ಟಾಂಪ್‌ ಹಗರಣದ ಆರೋಪಿ ತೆಲಗಿ ಮತ್ತು ಕೋಲಾರದ ದಲಿತರ ಸಜೀವ ದಹನ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ನಾನು ಗೃಹಸಚಿವನಾಗಿದ್ದಾಗ ಶಿಫಾರಸ್ಸು ಮಾಡಿದ್ದೆ.
12
+ ಆದರೆ ರಾಜ್ಯಸರ್ಕಾರದ ತನಿಖೆಯೇ ಸರಿಯಾಗಿದೆ ಎಂದು ಹೇಳಿ ಸಿಬಿಐ ತನಿಖೆಗೆ ಮುಂದಾಗಲಿಲ್ಲ. ವೀರಪ್ಪನ್‌ ಕರ್ನಾಟಕ, ತಮಿಳುನಾಡು ಸೇರಿ 2 ರಾಜ್ಯಗಳಲ್ಲಿ ನೂರಾರು ಜನರನ್ನು ಕೊಂದಿದ್ದ. ಸ್ಟಾಂಪ್‌ ಹಗರಣದಲ್ಲಿ ನೂರಾರು ಕೋಟಿ ರೂ.ಗಳ ನಷ್ಟವಾಗಿತ್ತು.ಈ ಪ್ರಕರಣಗಳಲ್ಲಿ ಅಂತಾರಾಜ್ಯ ವ್ಯಾಪ್ತಿ ಇದ್ದುದರಿಂದ ಸಿಬಿಐ ತನಿಖೆ ಅಗತ್ಯ ಎಂದು ನಾನು ಶಿಫಾರಸ್ಸು ಮಾಡಿದಾಗ ಸಿಬಿಐ ಸಿದ್ಧವಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
13
+ ಸಿಬಿಐಗೆ ತನಿಖೆ ಒಪ್ಪಿಸಬೇಕೇ, ಬೇಡವೇ ಎಂದು ರಾಜ್ಯಸರ್ಕಾರದ ವಿವೇಚನೆಗೆ ಒಳಪಟ್ಟಿದೆ ಎಂದು ಖರ್ಗೆ ಸಮರ್ಥಿಸಿಕೊಂಡರು. ರಾಜಭವನ ಹಾಗೂ ರಾಜ್ಯಸರ್ಕಾರದ ನಡುವಿನ ಸಂಘರ್ಷದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.
eesanje/url_46_7_5.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಯುಪಿಯಲ್ಲಿ ಕಾಂಗ್ರೆಸ್‌‍-ಎಸ್‌‍ಪಿ ಮೈತ್ರಿ ಕ್ಷೀಣ
2
+ 10 ,
3
+ ಲಕ್ನೋ,ಸೆ.27-ಉತ್ತರ ಪ್ರದೇಶ ವಿಧಾನಸಭಾ ಉಪ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆಗಳನ್ನು ತೀವ್ರಗೊಳಿಸಿವೆ.ಲೋಕಸಭೆ ಚುನಾವಣೆ ನಂತರ ನಡೆಯುತ್ತಿರುವ ಈ ಉಪ ಚುನಾವಣೆಯಲ್ಲಿ ಎಸ್‌‍ಪಿ- ಕಾಂಗ್ರೆಸ್‌‍ ಮೈತ್ರಿಯ ವ್ಯಾಪ್ತಿ ಕ್ಷೀಣಿಸಿರುವುದರಿಂದ ಕಾಂಗ್ರೆಸ್‌‍ ಎಲ್ಲಾ 10 ಸ್ಥಾನಗಳಲ್ಲಿ ತನ್ನ ಪ್ರಭಾವ ಮೂಡಿಸಲು ಪ್ರಾರಂಭಿಸಿದೆ.
4
+ ಇದೇ ಸಮಯದಲ್ಲಿ, ಮೂರು ವಿಧಾನಸಭಾ ಸ್ಥಾನಗಳು ತನಗೆ ಹೆಚ್ಚು ಸೂಕ್ತ ಎಂದು ಪರಿಗಣಿಸಿವೆ. ವಾಸ್ತವವಾಗಿ ಹರಿಯಾಣ ಮತ್ತು ಜಮು ಮತ್ತು ಕಾಶೀರ ಚುನಾವಣೆಗಳ ನಂತರ, ಉತ್ತರಪ್ರದೇಶದಲ್ಲಿ ಉಪಚುನಾವಣೆ ಪ್ರಕ್ರಿಯೆಯು ವೇಗ ಪಡೆಯುತ್ತಿದೆ.
5
+ ಕರ್ಹಾಲ್‌, ಮಿಲ್ಕಿಪುರ್‌, ಕತೇಹಾರಿ, ಕುಂದರ್ಕಿ, ಘಾಜಿಯಾಬಾದ್‌, ಖೈರ್‌, ಮೀರಾಪುರ್‌, ಫುಲ್ಪುರ್‌, ಮಂಜ್ವಾ ಮತ್ತು ಸಿಸಾಮಾವುಗಳಲ್ಲಿ ಉಪಚುನಾವಣೆಗಳು ನಡೆಯಲಿವೆ.ಈ ಪೈಕಿ ಮೊದಲ 5 ಸ್ಥಾನಗಳು ಸಮಾಜವಾದಿ ಪಕ್ಷದದ್ದಾಗಿದ್ದವು. ಇದಲ್ಲದೇ ಆರೆಲ್‌ಡಿ-ನಿಶಾದ್‌ ಪಕ್ಷ ತಲಾ ಒಂದು ಸ್ಥಾನ ಗೆದ್ದಿದ್ದರೆ, ಬಿಜೆಪಿ 3 ಸ್ಥಾನಗಳನ್ನು ಗೆದ್ದಿತ್ತು. ಆದರೆ ಲೋಕಸಭೆ ಚುನಾವಣೆ ಫಲಿತಾಂಶವನ್ನು ಗಮನಿಸಿದರೆ ಬಿಜೆಪಿ ಈ ಬಾರಿ ಎಚ್ಚೆತ್ತುಕೊಂಡಿದೆ.
6
+ ಸದಸ್ಯತ್ವ ಅಭಿಯಾನದ ಹೆಸರಿನಲ್ಲಿ ಉಪಚುನಾವಣೆಗಳ ನೆಲೆಯನ್ನು ಬಲಪಡಿಸುತ್ತಿದ್ದಾರೆ. ಮತ್ತೊಂದೆಡೆ, ಎಸ್‌‍ಪಿ ಯುವಕರು ಮತ್ತು ಹಿರಿಯ ಅಧಿಕಾರಿಗಳ ತಂಡಗಳನ್ನು ಸಹ ನಿಯೋಜಿಸಿದ್ದಾರೆ. ಏತನಧ್ಯೆ, ಲೋಕಸಭೆ ಚುನಾವಣೆಯಲ್ಲಿ ಮಿತ್ರ ಪಕ್ಷವಾಗಿದ್ದ ಕಾಂಗ್ರೆಸ್‌‍, ಎಸ್‌‍ಪಿ ಜೊತೆಗಿನ ಮೈತ್ರಿ ಬಗ್ಗೆ ಇನ್ನೂ ಯಾವುದೇ ಪ್ರತಿಕ್ರಿಯೆಯನ್ನು ಸ್ವೀಕರಿಸಿಲ್ಲ. ಹೀಗಾಗಿ ಕಾಂಗ್ರೆಸ್‌‍ ಕೂಡ ಉಪಚುನಾವಣೆಗೆ ಸಿದ್ಧತೆ ಆರಂಭಿಸಿದೆ.
7
+ ಕಾಂಗ್ರೆಸ್‌‍ ತನ್ನ ಇಬ್ಬರು ಶಾಸಕರು ಮತ್ತು 6 ಸಂಸದರನ್ನು ಕಣಕ್ಕಿಳಿಸಿದೆ. ಅವರನ್ನು ಚುನಾವಣಾ ಕ್ಷೇತ್ರಗಳ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಜತೆಗೆ ರಾಷ್ಟ್ರೀಯ ತಂಡವೂ ಚುನಾವಣಾ ತಯಾರಿಯಲ್ಲಿ ನಿರತವಾಗಿದೆ. ಮತ್ತೊಂದೆಡೆ, ಬುಧವಾರ ಕಾಂಗ್ರೆಸ್‌‍ ವಾರ್‌ ರೂಮ್‌ನ ಉಸ್ತುವಾರಿಯನ್ನು ಘೋಷಿಸಿದೆ.
8
+ ಕಾಂಗ್ರೆಸ್‌‍ ಎಲ್ಲ 10 ಸ್ಥಾನಗಳಿಗೂ ವಾರ್‌ ರೂಂ ಉಸ್ತುವಾರಿಗಳನ್ನು ಮಾಡಿದೆ. ಕಾಂಗ್ರೆಸ್‌‍ ಎಲ್ಲಾ ಕ್ಷೇತ್ರಗಳಿಗೂ ಸಿದ್ಧತೆ ಆರಂಭಿಸಿದೆ. ಆದರೆ, ಮೀರಾಪುರ್‌, ಫುಲ್ಪುರ್‌, ಮಂಜ್ವಾ ಸೀಟುಗಳು ತನಗೆ ಹೆಚ್ಚು ಸೂಕ್ತವೆಂದು ಪರಿಗಣಿಸಿದ್ದಾರೆ.
9
+ ಎಸ್‌‍ಪಿ ಮೂಲಗಳ ಪ್ರಕಾರ, ಹರಿಯಾಣದಲ್ಲಿ ಕಾಂಗ್ರೆಸ್‌‍ ಸೀಟುಗಳನ್ನು ಹಂಚಿಕೊಳ್ಳದ ಕಾರಣ ಉನ್ನತ ನಾಯಕತ್ವವು ಕಂಗಾಲಾಗಿದೆ. ಅನೇಕ ಕಾಂಗ್ರೆಸ್‌‍ ನಾಯಕರು, ಮೈತ್ರಿ ಚರ್ಚೆಯಲ್ಲಿ, ಹರಿಯಾಣದಲ್ಲಿ ಎಸ್ಪಿ ಬೆಂಬಲವನ್ನು ತಿರಸ್ಕರಿಸಿದರು. ಅಷ್ಟೇ ಅಲ್ಲ, ಕೊನೆಯ ಕ್ಷಣದವರೆಗೂ ಚಿತ್ರವೂ ಕ್ಲಿಯರ್‌ ಆಗಿರಲಿಲ್ಲ. ಈ ಹಿಂದೆ ಮಧ್ಯಪ್ರದೇಶದಲ್ಲೂ ಇದೇ ದ್ರೋಹ ನಡೆದಿತ್ತು.
10
+ ಆದ್ದರಿಂದ, ಹರ್ಯಾಣದಲ್ಲಿ ಎಸ್‌‍ಪಿ ಬೆಂಬಲ ನೆಲೆಯನ್ನು ಹೊಂದಿಲ್ಲದಿರುವಂತೆ, ಯುಪಿಯಲ್ಲಿ ಕಾಂಗ್ರೆಸ್‌‍ಗೆ ಹೆಚ್ಚು ಅಸ್ತಿತ್ವವಿಲ್ಲ ಎಂದು ಎಸ್‌‍ಪಿ ನಾಯಕರು ಹೇಳುತ್ತಾರೆ. ಅದೇ ಸಮಯದಲ್ಲಿ, ಅನೇಕ ಹಿರಿಯ ಎಸ್ಪಿ ನಾಯಕರು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಜೊತೆಗಿನ ಮೈತ್ರಿಯನ್ನು ಸಮರ್ಥಿಸಲಿಲ್ಲ. ಹೀಗಿರುವಾಗ ಉಪಚುನಾವಣೆಯಲ್ಲಿ ಉಭಯ ಪಕ್ಷಗಳ ನಡುವೆ ಮೈತ್ರಿ ಏರ್ಪಡುವ ನಿರೀಕ್ಷೆ ಗರಿಗೆದರಿದೆ.
eesanje/url_46_7_6.txt ADDED
@@ -0,0 +1,8 @@
 
 
 
 
 
 
 
 
 
1
+ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಕುರಿತು ಹೈಕೋರ್ಟ್‌ಗೆ ಸುಪ್ರೀಂ ಮಹತ್ವದ ನಿರ್ದೇಶನ
2
+ ' -
3
+ ನವದೆಹಲಿ,ಸೆ.27-ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶ ಕುರಿತು ಮರು ಮತಗಳ ಎಣಿಕೆ ಬಗ್ಗೆ ಕರ್ನಾಟಕ ಹೈಕೋರ್ಟ್‌ ಸೂಕ್ತ ವಿಚಾರಣೆ ನಡೆಸಿ ನಿರ್ಧಾರ ತೆಗೆದುಕೊಳ್ಳಬೇಕೆಂದು ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿದೆ.
4
+ ಕಳೆದ 2023 ಮೇ ತಿಂಗಳಿನಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮಾಜಿ ಶಾಸಕ ಡಿ.ಎನ್‌.ಜೀವರಾಜ್‌ ಅವರು ಕಾಂಗ್ರೆಸ್‌‍ ವಿಜೇತ ಅಭ್ಯರ್ಥಿ ಟಿ.ಡಿ.ರಾಜೇಗೌಡ ವಿರುದ್ಧ 201 ಮತಗಳ ಅಂತರದಿಂದ ಸೋಲು ಕಂಡಿದ್ದರು.
5
+ ಪರಾಜಿತ ಜೀವರಾಜ್‌ ಅವರು ಒಟ್ಟು ಚಲಾವಣೆಯಾದ ಮತಗಳಲ್ಲಿ 279 ಕುಲಗೆಟ್ಟ ಮತಗಳಿರುವುದರಿಂದ ಮರು ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸಬೇಕೆಂದು ಚುನಾವಣಾಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದು ಪುರಸ್ಕರಿಸಿರಲಿಲ್ಲ.ಇದನ್ನು ಪ್ರಶ್ನಿಸಿ ಜೀವರಾಜ್‌ ಸುಪ್ರೀಂಕೋರ್ಟ್‌ನಲ್ಲಿ ಮೇಲನವಿ ಅರ್ಜಿ ಸಲ್ಲಿಸಿ ಚುನಾವಣಾಧಿಕಾರಿಗಳ ಕ್ರಮಕ್ಕೆ ಆಕ್ಷೇಪಿಸಿ ಮರು ಎಣಿಕೆಗೆ ಅವಕಾಶ ನೀಡಬೇಕೆಂದು ಕೋರಿದ್ದರು.
6
+ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳು ಸೋತಿರುವ ಮತಗಳಿಗಿಂತ ಕುಲಗೆಟ್ಟ ಮತಗಳೇ ಹೆಚ್ಚಾಗಿವೆ. ಹೀಗಾಗಿ ಮರು ಮತ ಎಣಿಕೆ ನಡೆಸಬೇಕೆಂದು ಅವರ ಪರ ವಕೀಲರು ನ್ಯಾಯಾಧೀಶರಿಗೆ ಮನವಿ ಮಾಡಿದರು.
7
+ ಇದನ್ನು ಮನ್ನಿಸಿದ ನ್ಯಾಯಪೀಠ ನಿಮ ಅರ್ಜಿದಾರರು ಕೇಳುತ್ತಿರುವುದು ನ್ಯಾಯಯುತವಾಗಿದೆ. ಪರಾಜಿತ ಅಭ್ಯರ್ಥಿ 201 ಮತಗಳಿಂದ ಸೋಲು ಕಂಡಿದ್ದಾರೆ. ಕುಲಗೆಟ್ಟ ಮತಗಳೇ 279 ಇವೆ. ಹೀಗಾಗಿ ಮರು ಎಣಿಕೆ ನಡೆಸಬೇಕೆಂಬುದರಲ್ಲಿ ನಮಗೆ ಸಹಮತವಿದೆ ಎಂದು ಅಭಿಪ್ರಾಯಪಟ್ಟರು.
8
+ ಕರ್ನಾಟಕ ಹೈಕೋರ್ಟ್‌ ಈ ಬಗ್ಗೆ ವಿಚಾರಣೆ ನಡೆಸಿ ಸೂಕ್ತವಾದ ನಿರ್ಧಾರವನ್ನು ಕೈಗೊಳ್ಳಬೇಕೆಂದು ಸುಪ್ರೀಂಕೋರ್ಟ್‌ ಆದೇಶಿಸಿದೆ. ಇದೀಗ ನ್ಯಾಯಾಲಯದ ಆದೇಶದಂತೆ ಹೈಕೋರ್ಟ್‌ ಮರು ಎಣಿಕೆ ನಡೆಸುತ್ತದೆಯೇ ಎಂಬ ಯಕ್ಷ ಪ್ರಶ್ನೆ ಎದುರಾಗಿದೆ.
eesanje/url_46_7_7.txt ADDED
@@ -0,0 +1,6 @@
 
 
 
 
 
 
 
1
+ ಮುಕ್ತ ಪ್ರವೇಶಕ್ಕೆ ಸಿಬಿಐಗೆ ನಿರ್ಭಂಧ : ಕೇಂದ್ರ ಸಚಿವ ಎಚ್‌ಡಿಕೆ ಗರಂ
2
+
3
+ ಬೆಂಗಳೂರು,ಸೆ.27-ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್‌ ಮಾಡಿಸಿದ್ದೀರಿ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಆರೋಪ ಮಾಡಿದ್ದಾರೆ.
4
+ ಈ ಸಂಬಂಧ ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಅವರು, ಸಿಬಿಐ ರಾಜ್ಯ ಪ್ರವೇಶಕ್ಕೆ ಬಂದ್‌ ಮಾಡಿಸಿರುವುದರಿಂದ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ಸಿದ್ದಾಪರಾಧ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ ಎಂದು ಲೇವಡಿ ಮಾಡಿದ್ದಾರೆ.ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆ. ಅದೇ ಈ ನೆಲದ ಕಾನೂನಿನ ಶಕ್ತಿ ಎಂದು ಅವರು ಹೇಳಿದ್ದಾರೆ.
5
+ ಸಿದ್ದರಾಮಯ್ಯನವರೇ, ನಿಮ ಸಿದ್ವಿಲಾಸಕ್ಕೆ ಉಘೇಉಘೇ ಎನ್ನಲೇಬೇಕು. ಅಂದು, ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ. ಇಂದು, ಮೂಡಾ ಹಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ.
6
+ ಕರ್ಮ ಹಿಟ್‌ ಬ್ಯಾಕ್‌ ಎಂದರೆ ಇದೇ ಅಲ್ಲವೇ ಸಿದ್ದರಾಮಯ್ಯನವರೇ?, ನಿಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್‌ ಬರ್ಖಾಸ್ತು ಮಾಡಿಬಿಟ್ಟಿತು ಎಂದು ಅವರು ಟೀಕಾ ಪ್ರಹಾರ ಮಾಡಿದ್ದಾರೆ.
eesanje/url_46_7_8.txt ADDED
@@ -0,0 +1,10 @@
 
 
 
 
 
 
 
 
 
 
 
1
+ ದ್ವೇಷದ ರಾಜಕಾರಣ ಕಡಿವಾಣಕ್ಕಾಗಿ ಸಿಬಿಐನ ಮುಕ್ತ ತನಿಖೆಗೆ ನೀಡಲಾಗಿದ್ದ ಅನುಮತಿ ಹಿಂಪಡೆಯಲಾಗಿದೆ ; ಡಿಕೆಶಿ
2
+ "' ":
3
+ ಬೆಂಗಳೂರು,ಸೆ.27-ದ್ವೇಷದ ರಾಜಕಾರಣಕ್ಕೆ ಕಡಿವಾಣ ಹಾಕಲು ಸಿಬಿಐನ ಮುಕ್ತ ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ಹಿಂಪಡೆಯಲಾಗಿದೆ. ರಾಜ್ಯದ ಅಧಿಕಾರಿಗಳು ತನಿಖೆ ಮಾಡಲು ಸಾಧ್ಯವಾಗದೇ ಇರುವ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸಲು ರಾಜ್ಯಸರ್ಕಾರ ಸಿದ್ಧವಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.
4
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಯಾವೆಲ್ಲ ಪ್ರಕರಣಗಳನ್ನು ಸಿಬಿಐನವರಿಗೆ ವಹಿಸಲಾಗಿತ್ತು. ಸಿಬಿಐನವರು ಐಎಂಎ ಸೇರಿ ಹಲವು ಪ್ರಕರಣಗಳಲ್ಲಿ ಯಾವ ರೀತಿ ವರದಿ ನೀಡಿದ್ದರು ಎಂದು ಗೊತ್ತಿದೆ ಎಂದು ಹೇಳಿದರು.
5
+ ಬಿಜೆಪಿ ಮತ್ತು ಜೆಡಿಎಸ್‌‍ನವರು ಸಿಬಿಐ ಬಗ್ಗೆ ಕೆಲ ವರ್ಷಗಳ ಹಿಂದೆ ಯಾವ ರೀತಿ ಹೇಳಿಕೆ ನೀಡಿದ್ದರು ಎಂಬುದನ್ನು ಸರಿಸಿಕೊಳ್ಳಲಿ. ಕಾಂಗ್ರೆಸ್‌‍ ಬಚಾವೋ ಸಂಸ್ಥೆ ಎಂದೆಲ್ಲ ಟೀಕೆ ಮಾಡಿದ್ದರು. ಈಗ ಅದೇ ಸಿವಿಐ ಪರವಾಗಿ ಮಾತನಾಡುತ್ತಿದ್ದಾರೆ. ರಾಜ್ಯಸರ್ಕಾರದ ವಿರುದ್ಧವೂ ಟೀಕೆ ಮಾಡುತ್ತಿದ್ದಾರೆ. ಅದಕ್ಕೆಲ್ಲಾ ಸೂಕ್ತ ಸಮಯದಲ್ಲಿ ಅವರಿಗೆ ಉತ್ತರ ನೀಡುತ್ತೇನೆ ಎಂದರು.
6
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಕ್ಷಣೆ ಮಾಡಲು ರಾಜ್ಯ ಸಂಪುಟದಲ್ಲಿ ಸಿಬಿಐ ತನಿಖೆಗೆ ಮುಕ್ತ ಅವಕಾಶ ನಿರಾಕರಿಸುವ ರೀತಿಯ ನಿರ್ಣಯ ಕೈಗೊಂಡಿಲ್ಲ. ತುರ್ತು ಹಾಗೂ ಅಗತ್ಯ ಸಂದರ್ಭದಲ್ಲಿ ಸಿಬಿಐ ತನಿಖೆಗೆ ರಾಜ್ಯಸರ್ಕಾರ ಅನುಮತಿ ನೀಡಲು ಸಿದ್ಧವಿದೆ ಎಂದು ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು.
7
+ ರಾಜ್ಯಪಾಲರಿಗೆ ವರದಿ ಸಲ್ಲಿಸಬೇಕಾದರೆ, ಅದಕ್ಕೊಂದು ನಿಯಮ ಇದೆ. ಮೊದಲು ಮುಖ್ಯಮಂತ್ರಿ ಕಛೇರಿಗೆ ಪತ್ರ ಬರಬೇಕು. ಅನಂತರ ಅಲ್ಲಿಂದ ಮುಖ್ಯ ಕಾರ್ಯದರ್ಶಿ ಅವರಿಗೆ ಮಾಹಿತಿ ತಲುಪಬೇಕಿದೆ ಎಂದರು.
8
+ ರೀ ಡೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಡತವೊಂದು ತಮ ಬಳಿ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಉಪಸಮಿತಿ ರಚಿಸುವ ನಿರ್ಣಯ ಕೈಗೊಳ್ಳಲಾಗಿದೆ. ಹಾಗೆಯೇ ಯಾವುದೇ ವಿಚಾರವಾದರೂ ಮುಖ್ಯಮಂತ್ರಿಯವರ ಗಮನಕ್ಕೆ ತರಲು ತೀರ್ಮಾನಿಸಲಾಗಿದೆ.
9
+ ಪರಿಸ್ಥಿತಿ ಹೀಗಿರುವಾಗ ಮನಸೋ ಇಚ್ಛೆ ನಾವಾಗಿಯೇ ರಾಜ್ಯಪಾಲರಿಗೆ ವರದಿ ನೀಡಲು ಸಾಧ್ಯವೇ?, ನನಗೆ ಆಡಳಿತ ವ್ಯವಹಾರಗಳ ಬಗ್ಗೆ ಅಲ್ಪಸ್ವಲ್ಪ ಜ್ಞಾನ ಇದೆ. ಅಷ್ಟೊಂದು ಬುದ್ಧಿವಂತ, ವಿದ್ಯಾವಂತ ಅಲ್ಲದೇ ಇದ್ದರೂ ಪ್ರಜ್ಞಾವಂತಿಕೆ ಇದೆ ಎಂದರು.ರಾಜ್ಯಪಾಲರು ಅರ್ಕಾವತಿ ರೀ ಡೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಹಿತಿ ಕೇಳಿದಾಕ್ಷಣ ನಾವು ವರದಿ ನೀಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಹೇಳಿದ ಅವರು, ರಾಜ್ಯಪಾಲರ ಪತ್ರದ ಬಗ್ಗೆ ಮುಖ್ಯಮಂತ್ರಿಯವರಿಗೆ ತಿಳಿಸಿದ್ದೇನೆ ಎಂದರು.
10
+ ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಾಗುವುದರಿಂದ ಯಾವುದೇ ಮುಜುಗರ ಆಗುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ರಾಜ್ಯಪಾಲರ ಕಚೇರಿಯಿಂದ ಮಾಹಿತಿ ಸೋರಿಕೆಯಾಗುತ್ತಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ರಾಜ್ಯಪಾಲರ ಕಚೇರಿಯಲ್ಲಿ ಹಾಗೂ ಲೋಕಾಯುಕ್ತ ಕಚೇರಿಯಲ್ಲಿ ಏನು ನಡೆಯುತ್ತಿದೆ ಎಂದು ನನಗೆ ತಿಳಿದಿಲ್ಲ ಎಂದರು.
eesanje/url_46_7_9.txt ADDED
@@ -0,0 +1,7 @@
 
 
 
 
 
 
 
 
1
+ ನಾನು ತಪ್ಪು ಮಾಡಿಲ್ಲ, ರಾಜೀನಾಮೆ ಕೊಡಲ್ಲ : ಸಿಎಂ ಪುನರುಚ್ಚಾರ
2
+ , :
3
+ ಮೈಸೂರು,ಸೆ.27-ರಾಜಭವನದ ಅಧಿಕಾರ ವ್ಯಾಪ್ತಿ ಹಾಗೂ ದುರುಪಯೋಗದ ಬಗ್ಗೆ ದೇಶವ್ಯಾಪ್ತಿಯಲ್ಲಿ ಚರ್ಚೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಮೈಸೂರು ಪ್ರವಾಸ ಕೈಗೊಂಡಿರುವ ಸಿಎಂ, ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.
4
+ ನಾನು ತಪ್ಪು ಮಾಡಿಲ್ಲ, ಹಾಗಾಗಿ ರಾಜೀನಾಮೆ ಕೊಡುವುದಿಲ್ಲ. ಕೇಂದ್ರ ಸರ್ಕಾರ ರಾಜಭವನ ದುರ್ಬಳಕೆ ಮಾಡಿಕೊಳ್ಳುತ್ತಿದೆ ನನ್ನ ರಾಜೀನಾಮೆ ಕೇಳಲು ಬಿಜೆಪಿಗೆ ಯಾವ ನೈತಿಕತೆ ಇದೆ ಎಂದು ಪ್ರತಿಕ್ರಿಯಿಸಿದರು.ರಾಜ್ಯಪಾಲರು ಆಡಳಿತದಲ್ಲಿ ತಲೆ ಹಾಕಬಾರದು, ರಾಜ್ಯದ ಜನರು ನಮಗೆ 5 ವರ್ಷ ಅಧಿಕಾರ ನಡೆಸಿ, ಅಭಿವೃದ್ಧಿ ಮಾಡಿ ಎಂದು ಅವಕಾಶ ನೀಡಿದ್ದಾರೆ. ಕೇಂದ್ರ ಸರ್ಕಾರ ರಾಜಭವನ ಸೇರಿ ಎಲ್ಲಾ ಕಡೆ ಸಿಬಿಐ, ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.
5
+ ನಿಮ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಮಾಡುತ್ತಿದೆಯಲ್ಲ ಎಂಬ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ನಾನು ಏಕೆ ರಾಜೀನಾಮೆ ಕೊಡಬೇಕು, ತಪ್ಪು ಮಾಡಿದ್ದರೆ ಮಾತ್ರ ರಾಜೀನಾಮೆ ಕೊಡಬೇಕು ಎಂದು ಹೇಳಿದರು.
6
+ ಗೋದ್ರಾ ಗಲಭೆ ಆಗಿದ್ದಾಗ ಮೋದಿ ರಾಜೀನಾಮೆ ನೀಡಿದ್ದರಾ, ಎಫ್‌ಐಆರ್‌ ಆಗಿ ಜಾಮೀನು ಪಡೆದಿರುವ ಕುಮಾರಸ್ವಾಮಿ ಏಕೆ ರಾಜೀನಾಮೆ ಕೊಟ್ಟಿಲ್ಲ, ನಾನು ತಪ್ಪು ಮಾಡಿಲ್ಲ, ರಾಜೀನಾಮೆ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
7
+ ನಾನು ಕಾನೂನು ಹೋರಾಟ ಮುಂದುವರೆಸುತ್ತೇನೆ, ಸಿಎಂ ಸ್ಥಾನಕ್ಕೆ ರಾಜೀನಾಮೆ ಪ್ರಶ್ನೆಯೇ ಇಲ್ಲ, ರಾಜ್ಯಪಾಲರ ಯಾವ ಪತ್ರಗಳಿಗೂ ಸಿಎಸ್‌‍ ಉತ್ತರಿಸದಂತೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ಖಡಕ್ಕಾಗಿ ಹೇಳಿದರು.
eesanje/url_46_80_1.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ನೈತಿಕತೆ ಇದ್ದರೆ ನಾಗೇಂದ್ರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ : ಶ್ರೀರಾಮಲು
2
+ ಬೆಂಗಳೂರು,ಜು.11– ವಾಲೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ನಡೆದಿರುವ ಅಕ್ರಮದ ಪ್ರಮುಖ ರೂವಾರಿ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ನೈತಿಕತೆ, ಸ್ವಾಭಿಮಾನವಿದ್ದರೆ ಕೂಡಲೇ ತಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿ.ಶ್ರೀರಾಮಲು ಸವಾಲು ಹಾಕಿದ್ದಾರೆ.
3
+ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಗೇಂದ್ರ ಅವರಿಗೆ ತಪ್ಪು ಮಾಡಿದ್ದೇನೆ ಎನ್ನುವ ಸ್ವಾಭಿಮಾನವಿದ್ದರೆ ಅವರು ಶಾಸಕ ಸ್ಥಾನದಲ್ಲಿ ಮುಂದುವರೆ ಯಬಾರದು. ಪರಿಶಿಷ್ಟ ಪಂಗಡಕ್ಕೆ ಸೇರಿದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದೇನೆ ಎಂಬ ಪಾಪಪ್ರಜ್ಞೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
4
+ ಸಮುದಾಯದ ಮಂತ್ರಿಯಾಗಿ ಮೀಸಲು ಕ್ಷೇತ್ರದಿಂದ ಗೆದ್ದು ಆ ಸಮುದಾಯದ ಬೆನ್ನಿಗೆ ಚೂರಿ ಹಾಕಿರುವ ನಾಗೇಂದ್ರ ಶಾಸಕ ಸ್ಥಾನದಲ್ಲಿ ಮುಂದುವರೆಯುವ ನೈತಿಕತೆ ಉಳಿಸಿಕೊಂಡಿಲ್ಲ. ಎಸ್‌‍ಐಟಿ ಇಲ್ಲವೇ ಇ.ಡಿ ಅಧಿಕಾರಿಗಳು ತಕ್ಷಣವೇ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿದರು.
5
+ ಈ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳ ವಿರುದ್ಧ ತನಿಖಾ ತಂಡದವರು ಪ್ರಬಲವಾದ ಎಫ್‌ಐಆರ್‌ ದಾಖಲಿಸಬೇಕು. ಜೊತೆಗೆ ಒಂದು ತಿಂಗಳೊಳಗೆ ನಿಗಮದ ಹಣವನ್ನು ಸರ್ಕಾರಕ್ಕೆ ಹಿಂತಿರುಗಿಸಬೇಕೆಂದು ಒತ್ತಾಯ ಮಾಡಿದರು.
6
+ ಕೇವಲ ವಾಲೀಕಿ ಅಭಿವೃದ್ಧಿ ನಿಗಮವಲ್ಲದೆ, ಇದೇ ರೀತಿ ಅನೇಕ ನಿಗಮಮಂಡಳಿಗಳಲ್ಲೂ ಹಣ ದುರುಪಯೋಗ ಮಾಡಿರುವ ಆರೋಪ ಕೇಳಿಬಂದಿದೆ. ತಕ್ಷಣವೇ ಸರ್ಕಾರ ಪ್ರತಿಯೊಂದು ನಿಗಮಗಳ ಲೆಕ್ಕ ಪರಿಶೋಧನೆ ನಡೆಸಲು ಮುಂದಾಗಬೇಕು ಎಂದು ಹೇಳಿದರು.
7
+ ನಾವು ಈ ಪ್ರಕರಣವನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯುವವರೆಗೂ ಬಿಡುವುದಿಲ್ಲ. ಶೀಘ್ರದಲ್ಲೇ ಪರಿಶಿಷ್ಟ ಪಂಗಡದ ನಿಯೋಗವು ದೆಹಲಿಗೆ ತೆರಳಿ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ದೂರು ನೀಡುತ್ತೇವೆ. ನಮ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಯಾರೇ ದುರುಪಯೋಗಪಡಿಸಿಕೊಂಡಿದ್ದರೂ ಸುಮನೆ ಬಿಡುವುದಿಲ್ಲ. ಒಂದೊಂದು ರೂಪಾಯಿ ಕೂಡ ವಾಪಸ್‌‍ ಹಿಂತಿರುಗಿಸುವವರೆಗೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.
8
+ ನಾಗೇಂದ್ರ ಅವರ ಆಪ್ತ ಕಾರ್ಯದರ್ಶಿ ಹರೀಶ್‌ ಖಾತೆಗೆ 80 ಲಕ್ಷ ಹಣ ವರ್ಗಾವಣೆಯಾಗಿದೆ. ಇದೇ ರೀತಿ ಅವರ ಸುತ್ತಮುತ್ತಲೂ ಇರುವವರು, ಸಂಬಂಧಿಕರು ಬೇರೆ ಬೇರೆಯವರ ಹೆಸರಿನಲ್ಲಿ ಹಣ ಬೇಕಾಬಿಟ್ಟಿ ವರ್ಗಾ ವಣೆಯಾಗಿರುವುದು ಬೆಳಕಿಗೆ ಬಂದಿದೆ ಎಂದು ಆರೋಪಿಸಿದರು.ಗೃಹಸಚಿವ ಡಾ.ಜಿ.ಪರಮೇಶ್ವರ್‌ ಒಬ್ಬ ಹಿರಿಯರು. ಅವರ ಬಗ್ಗೆ ನನಗೆ ಅಪಾರವಾದ ಗೌರವವಿದೆ. ಆದರೆ ಅವರು ಬೇಜವಾಬ್ದಾರಿಯಾಗಿ ಮಾತನಾಡಿರುವುದಕ್ಕೆ ನೋವಿದೆ ಎಂದು ಅಸಮಾಧಾನ ಹೊರಹಾಕಿದರು.
9
+ ಮಾಜಿ ಸಚಿವ ರಾಜೀವ್‌ಗೌಡ ಮಾತನಾಡಿ, ಮೂರು ಕೋಟಿ ಮೇಲೆ ವರ್ಗಾವಣೆ ಆಗಬೇಕಾದರೆ ಚೀ್‌‍ ಸೆಕ್ರೆಟರಿ ಗಮನಕ್ಕೆ ತರಬೇಕು. ಆದರೆ ಯಾರ ಗಮನಕ್ಕೂ ತಾರದೆ 50 ಕೋಟಿ ಒಂದೇ ದಿನ ವರ್ಗಾವಣೆ ಮಾಡಿದ್ದಾರೆ.
10
+ ಇತಿಹಾಸದಲ್ಲಿ ಮೊದಲ ಬಾರಿಗೆ ಬ್ಯಾಂಕ್‌ ಮೂಲಕ ಲೂಟಿ ಮಾಡಿದ್ದಾರೆ. ವೈಟ್‌ ಮೂಲಕವೇ ಕೊಳ್ಳೆ ಹೊಡೆಯುವ ಕೆಲಸ ಕಾಂಗ್ರೆಸ್‌‍ ಮಾಡಿದೆ. ವೈಟ್‌ ಮೂಲಕವೇ ಹಣ ವರ್ಗಾವಣೆ ಆಗಿದ್ದು, ಅದನ್ನು ರಿಕವರಿ ಮಾಡುವುದಕ್ಕೆ ಇಷ್ಟು ದಿನ ಬೇಕಾ? ಎಂದು ಪ್ರಶ್ನಿಸಿದರು.
11
+ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತ್ತಿದೆ. ಎಸ್ಟಿ ಸಮುದಾಯದ ಪರ ಕೆಲಸ ಮಾಡಲು ನಾವು ಸೋತಿದ್ದೇವೆ. ಕಾಂಗ್ರೆಸ್‌‍ನಿಂದ ಎಸ್ಟಿ ಸಮುದಾಯದ 14 ಜನ ಗೆದ್ದಿದ್ದಾರೆ. ಆದರೆ ಯಾರೂ ಕೂಡ ಮಾತಾಡುತ್ತಿಲ್ಲ. ಎಲ್ಲರೂ ಕೇವಲ ರಬ್ಬರ್‌ ಸ್ಟ್ಯಾಂಪ್‌ ಆಗಿದ್ದಾರೆ ಎಂದರು.ನಿಗಮದ ಹಣ ಬ್ಯಾಂಕಿನಲ್ಲಿ ಇಡಬೇಕಾದರೆ ಸಿಎಂ ಅನುಮತಿ ಇಲ್ಲದೆ ಇಡಲು ಸಾಧ್ಯವಿಲ್ಲ.
12
+ ನಾನು ನಿಗಮದ ಅಧ್ಯಕ್ಷ ಆಗಿದ್ದವನು. ಹಣ ಬಡ್ಡಿ ಹೆಚ್ಚು ಕೊಡ್ತಾರೆ ಅಂದ್ರೆ ಟೆಂಡರ್‌ ಕರೆದು ಇಡಬೇಕು. ಆದರೆ ಇದನ್ನು ಮುಚ್ಚಿಹಾಕಲು ನೋಡುತ್ತಿದ್ದಾರೆ. ಸಿಬಿಐ ಪ್ರವೇಶ ಮಾಡಿರುವುದರಿಂದ ಇನ್ನು ಮುಚ್ಚಿಹಾಕಲು ಸಾಧ್ಯವಾಗಿಲ್ಲ. ಎಸ್ಟಿ ಬೋರ್ಡಿಗೆ ಹಣ ವಾಪಸ್‌‍ ತರಬೇಕು. ಜಮೀನು ತೆಗೆದವರಿಗೆ ಹಣ ಸಿಕ್ಕಿಲ್ಲ, ಬೋರು ಕೊರೆಸಲು ಹಣ ಇಲ್ಲದೆ ಕಾಯುತ್ತಿದ್ದಾರೆ. ನಾಗೇಂದ್ರ ಒಬ್ಬರ ರಾಜೀನಾಮೆ ಪಡೆದರೆ ಸಾಲುವುದಿಲ್ಲ. 187 ಕೋಟಿ ಹಣ ವಾಪಸ್‌‍ ತರಬೇಕು. ಅಧಿಕಾರಿಗಳ ತಲೆದಂಡ ಕೂಡ ಆಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.
eesanje/url_46_80_10.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಸರ್ಕಾರಿ ಶಾಲೆಗಳಲ್ಲಿ `ನಾವು ಮನುಜರು’ ಎಂಬ ವಿನೂತನ ಕಾರ್ಯಕ್ರಮ
2
+ ಬೆಂಗಳೂರು,ಜು.11-ಮೇಲು-ಕೀಳು ಎಂಬ ಮನೋಭಾವವನ್ನು ಹೋಗಲಾಡಿಸಿ ಮಕ್ಕಳಲ್ಲಿ ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವನೆ ಹಾಗೂ ಸಾಂವಿಧಾನಿಕ ಮೌಲ್ಯಗಳನ್ನು ಬೆಳೆಸುವ ಸದುದ್ದೇಶದಿಂದ ಶಾಲಾ ಮಕ್ಕಳಲ್ಲಿ ನಾವು ಮನುಜರು ಎಂಬ ವಿಶೇಷ ಶೈಕ್ಷಣಿಕ ನೂತನ ಕಾರ್ಯಕ್ರಮವನ್ನು ಆಯೋಜಿಸಲು ರಾಜ್ಯ ಸರ್ಕಾರ ಮುಂದಾಗಿದೆ.
3
+ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಈ ಕಾರ್ಯಕ್ರಮವು ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅನುಷ್ಠಾನಕ್ಕೆ ಬರಲಿದೆ. ಇನ್ನು ಮುಂದೆ ಶಾಲೆಗಳಲ್ಲಿ ಚರ್ಚೆ, ವಿಮರ್ಶೆ ಮತ್ತು ಸಂವಾದಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯನ್ನು ಬೆಳೆಸಲು ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.
4
+ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ ಮಾರ್ಚ್‌ನಲ್ಲಿ ಮಂಡಿಸಿದ್ದ ಬಜೆಟ್‌ ವೇಳೆ ರಾಷ್ಟ್ರಕವಿ ಕುವೆಂಪು ಅವರ ಆಶಯದಂತೆ ಸಮಸಮಾಜ ನಿರ್ಮಾಣ ಹಾಗೂ ನಾವೆಲ್ಲರೂ ಮನುಜರು ಎಂಬುದನ್ನು ಉಲ್ಲೇಖಿಸಿದ್ದರು. ಹೀಗಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯಡಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಶಾಲಾ ಮಕ್ಕಳಲ್ಲಿ ಸಾಮರಸ್ಯ ಮೂಡಿಸುವ ಹಾಗೂ ಸಾಂವಿಧಾನಿಕ ಮೌಲ್ಯಗಳನ್ನು ಬಿತ್ತುವ ಮತ್ತು ವೈಜ್ಞಾನಿಕ ಮನೋಭಾವನೆ ಮೂಡಿಸಲು ನಾವು ಮನುಜರು ಕಾರ್ಯಕ್ರಮವನ್ನು ಆಯೋಜಿಸುವುದಾಗಿ ಘೋಷಿಸಿದ್ದರು.
5
+ ಇದೀಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೊರಡಿಸಿರುವ ಅಧಿಸೂಚನೆಯಂತೆ ಇನ್ನು ಮುಂದೆ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಶಿಕ್ಷಕರು ವಿದ್ಯಾರ್ಥಿಗಳಿಗೆ ನಾವು ಮನುಜರು ಎಂಬ ವಿನೂತನವಾದ ಶೈಕ್ಷಣಿಕ ಕಾರ್ಯಕ್ರಮವನ್ನು ಆಯೋಜನೆ ಮಾಡಬೇಕಾಗುತ್ತದೆ.
6
+ ಏನಿದು ಕಾರ್ಯಕ್ರಮ :ಈ ಕಾರ್ಯಕ್ರಮವು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಾರಕ್ಕೆ ಎರಡು ಗಂಟೆಗಳ ಕಾಲ (40 ನಿಮಿಷಗಳ ಮೂರು ಅವಧಿಗಳೊಂದಿಗೆ) ಚರ್ಚೆಗಳು ಮತ್ತು ಸಂವಾದಗಳನ್ನು ಒಳಗೊಂಡಿರುತ್ತದೆ.ಮೌಲ್ಯ ಶಿಕ್ಷಣದ ಒಂದು ಅವಧಿ ಮತ್ತು ಸಾಮಾಜಿಕವಾಗಿ ಉಪಯುಕ್ತ ಉತ್ಪಾದಕ ಕೆಲಸಗಳ ಎರಡು ಅವಧಿಗಳನ್ನು ಇದಕ್ಕೆ ಹೊಂದಿಸಲಾಗಿದೆ.
7
+ ಕಾರ್ಯಕ್ರಮದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸೂಕ್ತ ಮಾರ್ಗದರ್ಶನ ನೀಡುವಂತೆ ಹಾಗೂ ಜಿಲ್ಲಾ ಮಟ್ಟದಲ್ಲಿ ನೋಡಲ್‌ ಅಧಿಕಾರಿಯನ್ನು ನೇಮಿಸಿ, ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಇಲಾಖೆಗೆ (ಡಿಎಸ್‌‍ಇಆರ್‌ಟಿ) ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
8
+ ಈ ಕಾರ್ಯಕ್ರಮ ಅನುಷ್ಠಾನಕ್ಕೆ ವಿಶೇಷ ಅನುದಾನ ನೀಡುವುದಿಲ್ಲ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕಾರ್ಯಕ್ರಮದ ಅನುಷ್ಠಾನದ ಸ್ವರೂಪ���ನ್ನು ಬಿಡುಗಡೆ ಮಾಡಿದೆ. ಸಾಮರಸ್ಯದ ಪಾಠಗಳು ಸ್ವರೂಪದ ಪ್ರಕಾರ, ಸ್ಥಳೀಯ ಮತ್ತು ರಾಷ್ಟ್ರೀಯ ಹಬ್ಬಗಳು, ಜಾನಪದ ಆಟಗಳು, ಕ್ರೀಡೆಗಳು ಇತ್ಯಾದಿಗಳನ್ನು ಆಧರಿಸಿ ಸಾಮಾಜಿಕ ಸಾಮರಸ್ಯ ಮತ್ತು ಅದರ ಮಹತ್ವದ ಬಗ್ಗೆ ಚರ್ಚೆ ನಡೆಸಬೇಕು.
9
+ ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ, ಮೌಲ್ಯಯುತ ಶಿಕ್ಷಣ ಮತ್ತು ಸಹಬಾಳ್ವೆಯನ್ನು ಉತ್ತೇಜಿಸಲು ಸಂಪನೂಲ ವ್ಯಕ್ತಿಗಳು, ತಜ್ಞರನ್ನು ಆಹ್ವಾನಿಸಿ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಬೇಕು.
10
+ ವಾರಕ್ಕೆ ಎರಡು ಗಂಟೆಗಳನ್ನು (ತಲಾ 40 ನಿಮಿಷಗಳ ಮೂರು ಕಾರ್ಯಕ್ರಮ) ಮೀಸಲಿಡಲು ಸೂಚಿಸಲಾಗಿದೆ. ದೇಶದ ಸಮಾಜ ಸುಧಾರಕರು, ಕ್ರಾಂತಿಗಳ ಮಾಹಿತಿ ಒದಗಿಸುವುದು, ಸಮೀಪದ ಐತಿಹಾಸಿಕ ಸ್ಥಳಗಳಿಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುವುದು, ಸಮಾಜದಲ್ಲಿನ ಅಸಮಾನತೆ ನಿವಾರಣೆ ಕುರಿತು ಚರ್ಚೆಗಳನ್ನು ಆಯೋಜಿಸಲು ತಿಳಿಸಲಾಗಿದೆ.
11
+ ಈ ಬಗ್ಗೆ ಪ್ರತಿಕ್ರಿಯಿಸಿದ ಸಾರ್ವಜನಿಕ ಶಿಕ್ಷಣದ ಆಯುಕ್ತರಾದ ಬಿ.ಬಿ.ಕಾವೇರಿ, ಡಿಎಸ್‌‍ಇಆರ್‌ಟಿ ಈ ಕಾರ್ಯಕ್ರಮದ ಅನುಷ್ಠಾನ ಪ್ರಾಧಿಕಾರವಾಗಿದ್ದು, ವಿದ್ಯಾರ್ಥಿಗಳು ಸ್ವತಂತ್ರವಾಗಿ ಯೋಚಿಸುವ ಸಾಮರ್ಥ್ಯವನ್ನು ಸುಧಾರಿಸಲು, ತರ್ಕಬದ್ಧತೆ ಮತ್ತು ಪ್ರತಿಯೊಂದು ಸಮಸ್ಯೆಯ ಸಾಧಕ-ಬಾಧಕಗಳನ್ನು ಅರ್ಥ ಮಾಡಿಕೊಳ್ಳುವಂತೆ ಮಾಡುವ ಗುರಿಯನ್ನು ಹೊಂದಿದೆ. ಇದು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೂ ಸಹಕಾರಿಯಾಗಲಿದೆ. ಶೀಘ್ರದಲ್ಲೇ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇದನ್ನು ಕಾರ್ಯಗತಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.