CoolCoder44 commited on
Commit
1a7040e
·
verified ·
1 Parent(s): 84d1f90

8d995703bfe62abe74b8a0fa2d9518f995ee04eb36143f524a01653ad3d3740a

Browse files
Files changed (50) hide show
  1. eesanje/url_46_72_8.txt +7 -0
  2. eesanje/url_46_72_9.txt +15 -0
  3. eesanje/url_46_73_1.txt +10 -0
  4. eesanje/url_46_73_10.txt +9 -0
  5. eesanje/url_46_73_11.txt +10 -0
  6. eesanje/url_46_73_12.txt +7 -0
  7. eesanje/url_46_73_2.txt +7 -0
  8. eesanje/url_46_73_3.txt +5 -0
  9. eesanje/url_46_73_4.txt +6 -0
  10. eesanje/url_46_73_5.txt +7 -0
  11. eesanje/url_46_73_6.txt +7 -0
  12. eesanje/url_46_73_7.txt +8 -0
  13. eesanje/url_46_73_8.txt +8 -0
  14. eesanje/url_46_73_9.txt +12 -0
  15. eesanje/url_46_74_1.txt +10 -0
  16. eesanje/url_46_74_10.txt +8 -0
  17. eesanje/url_46_74_11.txt +14 -0
  18. eesanje/url_46_74_12.txt +9 -0
  19. eesanje/url_46_74_2.txt +8 -0
  20. eesanje/url_46_74_3.txt +7 -0
  21. eesanje/url_46_74_4.txt +9 -0
  22. eesanje/url_46_74_5.txt +9 -0
  23. eesanje/url_46_74_6.txt +7 -0
  24. eesanje/url_46_74_7.txt +4 -0
  25. eesanje/url_46_74_8.txt +7 -0
  26. eesanje/url_46_74_9.txt +8 -0
  27. eesanje/url_46_75_1.txt +4 -0
  28. eesanje/url_46_75_10.txt +6 -0
  29. eesanje/url_46_75_11.txt +6 -0
  30. eesanje/url_46_75_12.txt +7 -0
  31. eesanje/url_46_75_2.txt +7 -0
  32. eesanje/url_46_75_3.txt +9 -0
  33. eesanje/url_46_75_4.txt +6 -0
  34. eesanje/url_46_75_5.txt +9 -0
  35. eesanje/url_46_75_6.txt +5 -0
  36. eesanje/url_46_75_7.txt +7 -0
  37. eesanje/url_46_75_8.txt +10 -0
  38. eesanje/url_46_75_9.txt +7 -0
  39. eesanje/url_46_76_1.txt +6 -0
  40. eesanje/url_46_76_10.txt +7 -0
  41. eesanje/url_46_76_11.txt +4 -0
  42. eesanje/url_46_76_12.txt +8 -0
  43. eesanje/url_46_76_2.txt +4 -0
  44. eesanje/url_46_76_3.txt +5 -0
  45. eesanje/url_46_76_4.txt +5 -0
  46. eesanje/url_46_76_5.txt +6 -0
  47. eesanje/url_46_76_6.txt +11 -0
  48. eesanje/url_46_76_7.txt +5 -0
  49. eesanje/url_46_76_8.txt +4 -0
  50. eesanje/url_46_76_9.txt +9 -0
eesanje/url_46_72_8.txt ADDED
@@ -0,0 +1,7 @@
 
 
 
 
 
 
 
 
1
+ ಎಚ್ಚೆತ್ತುಕೊಂಡ ಜಿಟಿ ಮಾಲ್‌ : ಪಂಚೆ ಧರಿಸಿ ಬಂದ ರೈತನಿಗೆ ಸನ್ಮಾನ
2
+ ಬೆಂಗಳೂರು,ಜು.17-ಬೆಂಗಳೂರು,ಜು.17- ಪಂಚೆ ಧರಿಸಿದ್ದಾರೆಂಬ ಒಂದೇ ಕಾರಣಕ್ಕಾಗಿ ಮಾಲ್‌ನೊಳಗೆ ಬಿಡದೆ ರೈತನಿಗೆ ಅಪಮಾನ ಮಾಡಿದ್ದ ಮಾಲ್‌ನವರು ಎಚ್ಚೆತ್ತುಕೊಂಡು ಸನ್ಮಾನಿಸಿದ ಅಪರೂಪದ ಘಟನೆ ನಗರದಲ್ಲಿ ನಡೆದಿದೆ.
3
+ ಮಂಗಳವಾರ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್‌ಗೆ ಹಾವೇರಿ ಮೂಲದ ಕುಟುಂಬವೊಂದು ಕಲ್ಕಿ ಸಿನಿಮಾ ವೀಕ್ಷಿಸಲು ಆಗಮಿಸಿತ್ತು. ಇದೇ ವೇಳೆ ಅವರ ಜೊತೆಗೆ ಫಕೀರಪ್ಪ ಎಂಬ ರೈತರು ಕೂಡ ಬಂದಿದ್ದರು.
4
+ ಸೆಕ್ಯುರಿಟಿ ಗಾರ್ಡ್‌ಗಳು, ಪಂಚೆ ಉಟ್ಟಿದ್ದಾರೆ ಎಂಬ ಕಾರಣಕ್ಕಾಗಿ ಅವರನ್ನು ಮಾಲ್‌ ಒಳಗೆ ಬಿಡದೆ ಅವಮಾನಿಸಿ ಹೊರಗೆ ಕಳುಹಿಸಿದ್ದರು. ಇದನ್ನು ಅವರ ಪುತ್ರ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.
5
+ ಇದಕ್ಕೆ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು ಸೇರಿದಂತೆ ಅನೇಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಮಾಲ್‌ನವರು ಕೂಡಲೇ ರೈತನ ಕ್ಷಮೆಯಾಚಿಸಬೇಕು ಇಲ್ಲದಿದ್ದರೆ ಮಾಲ್‌ ಮುಂದೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಘಟನೆಯನ್ನು ವಿರೋಧಿಸಿದ ಕನ್ನಡ ಸಂಘಟನೆಯ ಕಾರ್ಯಕರ್ತರು ರೈತರ ಗೆಟಪ್‌ನಲ್ಲಿ ಬೆಳಗ್ಗೆ ಮಾಲ್‌ ಮುಂದೆ ಜಮಾಯಿಸಿದ್ದರು.
6
+ ಕುರುಬೂರು ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಅವರು ಈ ಘಟನೆಯ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿ, ಇಂಥ ಘಟನೆಯ ಮೂಲಕ ರೈತರಿಗೆ ಅವಮಾನ ಮಾಡಲಾಗಿದೆ ಎಂದು ಖಂಡಿಸಿದ್ದಾರೆ. ಕೂಡಲೇ ಮಾಲ್‌ ಮಾಲೀಕರ ವಿರುದ್ಧ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
7
+ ಕ್ಷಮೆ ಯಾಚನೆ: ನಿನ್ನೆಯ ಅವಾಂತರದ ನಂತರ ಎಚ್ಚೆತ್ತುಕೊಂಡ ಮಾಲ್‌ ಸಿಬ್ಬಂದಿ ಇಂದು ಪಂಚೆ ಉಟ್ಟವರನ್ನು ಒಳಗೆ ಬಿಡುತ್ತಿರುವುದಷ್ಟೇ ಅಲ್ಲ, ಪಂಚೆ ಉಟ್ಟವರಿಗೆ ಕೈಮುಗಿದು ಬರಮಾಡಿಕೊಳ್ಳುತ್ತಿದ್ದಾರೆ!
eesanje/url_46_72_9.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ಸಚಿವರು, ಅಧಿಕಾರಿಗಳ ಜೊತೆ ಸಿಎಂ ಸಭೆ, ಸದ್ಯದಲ್ಲೇ ಕಾದಿದೆಯಾ ‘ತೆರಿಗೆ ಏರಿಕೆ’ ಶಾಕ್..?
2
+ ಬೆಂಗಳೂರು,ಜು.17-ಆಸ್ತಿ ತೆರಿಗೆ ಪರಿಷ್ಕರಣೆ, ಕಸ ವಿಲೇವಾರಿ, ಸಂಚಾರ ದಟ್ಟಣೆ ನಿರ್ವಹಣೆ ಸೇರಿದಂತೆ ಬ್ರ್ಯಾಂಡ್‌ ಬೆಂಗಳೂರಿಗೆ ಪೂರಕವಾಗಿ ಮಹತ್ವದ ಯೋಜನೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ನಗರದ ಸಚಿವರು ಹಾಗೂ ಬಿಬಿಎಂಪಿ ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು.
3
+ ಬೆಂಗಳೂರಿನಲ್ಲಿ ಹಲವಾರು ವರ್ಷಗಳಿಂದ ಆಸ್ತಿ ತೆರಿಗೆಯ ಪರಿಷ್ಕರಣೆ ಆಗಿಲ್ಲ. ಕಳೆದ ವರ್ಷ ಕಂದಾಯ ಇಲಾಖೆ ಆಸ್ತಿಗಳ ಮಾರ್ಗಸೂಚಿ ದರವನ್ನು 25 ರಿಂದ 30 ರಷ್ಟು ಹೆಚ್ಚಳ ಮಾಡಿತ್ತು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಪ್ರಸ್ತಾವವನ್ನು ರಾಜ್ಯಸರ್ಕಾರ ಪ್ರಯತ್ನಪೂರ್ವಕವಾಗಿ ತಡೆಹಿಡಿದಿತ್ತು. ಆದರೆ ಮುಂದಿನ ದಿನಗಳಲ್ಲಿ ತೆರಿಗೆ ಹೆಚ್ಚಳ ಮಾಡುವುದು ಅನಿವಾರ್ಯ ಎಂಬ ಪ್ರಸ್ತಾವನೆಗಳಿವೆ.
4
+ ಪ್ರಸ್ತುತ ಜಾರಿಯಲ್ಲಿರುವ ಸ್ವಯಂಘೋಷಿತ ಆಸ್ತಿ ತೆರಿಗೆಯನ್ನು ಬದಲಾವಣೆ ಮಾಡಿ ಆಸ್ತಿಗಳ ಮೌಲ್ಯದ ಮೇಲೆ ತೆರಿಗೆ ವಿಧಿಸುವ ಹೊಸ ವ್ಯವಸ್ಥೆಯನ್ನು ಜಾರಿಗೆ ತರುವ ಬಗ್ಗೆ ಪ್ರಸ್ತಾವನೆಗಳಿವೆ.ಸ್ವಯಂ ಸ್ವಾಧೀನದಲ್ಲಿರುವ ಜನವಸತಿ ಪ್ರದೇಶಗಳಿಗೆ ಮಾರ್ಗಸೂಚಿ ಮೌಲ್ಯದ ಮೇಲೆ ಶೇ.0.1 ರಷ್ಟು ಬಾಡಿಗೆ ಆಧಾರಿತ ಆಸ್ತಿಗಳಿಗೆ ಶೇ.0.2 ರಷ್ಟು ತೆರಿಗೆ ವಿಧಿಸುವ ಬಗ್ಗೆ ಚರ್ಚೆಗಳು ನಡೆದಿವೆ.
5
+ ಸ್ವಯಂಘೋಷಿತ ಆಸ್ತಿ ತೆರಿಗೆ ಪದ್ಧತಿಗಳಲ್ಲಿ ನಿರೀಕ್ಷಿತ ಪ್ರಮಾಣದ ಆದಾಯ ಬರುತ್ತಿಲ್ಲ. ಬಹಳಷ್ಟು ಮಂದಿ ತಪ್ಪು ಮಾಹಿತಿ ನೀಡಿ ತೆರಿಗೆ ವಂಚಿಸುತ್ತಿದ್ದಾರೆ ಎಂಬ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ತೆರಿಗೆ ವ್ಯವಸ್ಥೆಯ ಬಗ್ಗೆಯೂ ಚರ್ಚೆಗಳಾಗಿವೆ.
6
+ ಸಂಚಾರ ದಟ್ಟಣೆ ನಿರ್ವಹಣೆಗೆ ಬೆಂಗಳೂರಿನಲ್ಲಿ ಮೇಲ್ಸೇತುವೆ, ಕೆಳ ಸೇತುವೆ ಹಾಗೂ ಸುರಂಗ ಮಾರ್ಗದ ರಸ್ತೆಗಳ ನಿರ್ಮಾಣ ಕುರಿತು ಬಹಳ ದಿನಗಳಿಂದಲೂ ಚರ್ಚೆ ನಡೆಯುತ್ತಿದೆ. ಕೇಂದ್ರ ಸರ್ಕಾರದ ಸಹಯೋಗದಲ್ಲಿ ಅತೀ ಉದ್ದನೆಯ ಸುರಂಗ ಮಾರ್ಗ ರಸ್ತೆ ಕುರಿತು ಪ್ರಸ್ತಾವನೆಗಳಿವೆ. ಅದೇ ರೀತಿ ಬೆಂಗಳೂರಿನಲ್ಲಿ 200 ಕಿ.ಮೀ. ಹೊಸ ರಸ್ತೆಗಳ ನಿರ್ಮಾಣಕ್ಕೂ ತಯಾರಿಗಳಾಗಿದ್ದು, ಈ ರಸ್ತೆಗಳಿಗೆ 50 ಅಡಿ ಇಕ್ಕೆಲಗಳಲ್ಲಿ ಬಫರ್‌ಝೂನ್‌ ಕಾಯ್ದಿರಿಸುವ ಬಗ್ಗೆಯೂ ಚರ್ಚೆಗಳಾಗಿವೆ.
7
+ ಜೊತೆಗೆ ಬೆಂಗಳೂರಿನಲ್ಲಿ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲು ವಿದ್ಯುತ್‌ ಉತ್ಪಾದನೆಯಂತಹ ಉಪಕ್ರಮಗಳ ಚರ್ಚೆಗಳಾಗುತ್ತಿವೆ. ತ್ಯಾಜ್ಯ ವಿಲೇವಾರಿ ಘಟಕಗಳು ತುಂಬಿ ಹೋಗಿದ್ದು, ಬದಲಿ ಜಾಗದ ಹುಡುಕಾಟದ ಜೊತೆಗೆ ತ್ಯಾಜ್ಯವನ್ನೇ ಬಳಸಿಕೊಂಡು ವಿದ್ಯುತ್‌ ಉತ್ಪಾದನೆ ಮಾಡುವ ಸಾಧಕ-ಬಾಧಕಗಳು ಹಾಗೂ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
8
+ ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆಯ ಕುರಿತು ಅಧಿಕಾರಿಗಳ��� ತಯಾರಿಸಿರುವ ಪ್ರಸ್ತಾವನೆಯನ್ನು ಸಭೆಯಲ್ಲಿ ಮಂಡಿಸಲಾಗಿದೆ. ಬಿಬಿಎಂಪಿ ಚುನಾವಣೆಗೆ ಕಾಲಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ತೆರಿಗೆ ಹೆಚ್ಚಳ ದರ ಏರಿಕೆ ಪ್ರಸ್ತಾವನೆಗಳ ಬಗ್ಗೆ ಮುಖ್ಯಮಂತ್ರಿ ನಕಾರಾತಕ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ. ಆದರೆ ಸಂಪನೂಲ ಕ್ರೂಢೀಕರಣ, ಮೂಲ ಸೌಲಭ್ಯ ಹೆಚ್ಚಳ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಬ್ರ್ಯಾಂಡ್‌ ಬೆಂಗಳೂರಿಗಾಗಿ ಕಠಿಣ ನಿರ್ಧಾರ ತೆಗೆದುಕೊಳ್ಳುವ ಅನಿವಾರ್ಯ ಇದೆ ಎಂದು ನಗರಾಭಿವೃದ್ಧಿ ಹಾಗೂ ಬಿಬಿಎಂಪಿ ಅಧಿಕಾರಿಗಳು ವಾದಿಸಿದ್ದಾರೆ.ಸರ್ಕಾರದಿಂದ ಹೆಚ್ಚುವರಿ ಆರ್ಥಿಕ ನೆರವಿಗಾಗಿಯೂ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲಾಗಿದೆ.
9
+ ಬೆಂಗಳೂರು,ಜು.17-ಆಸ್ತಿ ತೆರಿಗೆ ಪರಿಷ್ಕರಣೆ, ಕಸ ವಿಲೇವಾರಿ, ಸಂಚಾರ ದಟ್ಟಣೆ ನಿರ್ವಹಣೆ ಸೇರಿದಂತೆ ಬ್ರ್ಯಾಂಡ್‌ ಬೆಂಗಳೂರಿಗೆ ಪೂರಕವಾಗಿ ಮಹತ್ವದ ಯೋಜನೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ನಗರದ ಸಚಿವರು ಹಾಗೂ ಬಿಬಿಎಂಪಿ ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು.
10
+ ಬೆಂಗಳೂರಿನಲ್ಲಿ ಹಲವಾರು ವರ್ಷಗಳಿಂದ ಆಸ್ತಿ ತೆರಿಗೆಯ ಪರಿಷ್ಕರಣೆ ಆಗಿಲ್ಲ. ಕಳೆದ ವರ್ಷ ಕಂದಾಯ ಇಲಾಖೆ ಆಸ್ತಿಗಳ ಮಾರ್ಗಸೂಚಿ ದರವನ್ನು 25 ರಿಂದ 30 ರಷ್ಟು ಹೆಚ್ಚಳ ಮಾಡಿತ್ತು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಪ್ರಸ್ತಾವವನ್ನು ರಾಜ್ಯಸರ್ಕಾರ ಪ್ರಯತ್ನಪೂರ್ವಕವಾಗಿ ತಡೆಹಿಡಿದಿತ್ತು. ಆದರೆ ಮುಂದಿನ ದಿನಗಳಲ್ಲಿ ತೆರಿಗೆ ಹೆಚ್ಚಳ ಮಾಡುವುದು ಅನಿವಾರ್ಯ ಎಂಬ ಪ್ರಸ್ತಾವನೆಗಳಿವೆ.
11
+ ಪ್ರಸ್ತುತ ಜಾರಿಯಲ್ಲಿರುವ ಸ್ವಯಂಘೋಷಿತ ಆಸ್ತಿ ತೆರಿಗೆಯನ್ನು ಬದಲಾವಣೆ ಮಾಡಿ ಆಸ್ತಿಗಳ ಮೌಲ್ಯದ ಮೇಲೆ ತೆರಿಗೆ ವಿಧಿಸುವ ಹೊಸ ವ್ಯವಸ್ಥೆಯನ್ನು ಜಾರಿಗೆ ತರುವ ಬಗ್ಗೆ ಪ್ರಸ್ತಾವನೆಗಳಿವೆ.ಸ್ವಯಂ ಸ್ವಾಧೀನದಲ್ಲಿರುವ ಜನವಸತಿ ಪ್ರದೇಶಗಳಿಗೆ ಮಾರ್ಗಸೂಚಿ ಮೌಲ್ಯದ ಮೇಲೆ ಶೇ.0.1 ರಷ್ಟು ಬಾಡಿಗೆ ಆಧಾರಿತ ಆಸ್ತಿಗಳಿಗೆ ಶೇ.0.2 ರಷ್ಟು ತೆರಿಗೆ ವಿಧಿಸುವ ಬಗ್ಗೆ ಚರ್ಚೆಗಳು ನಡೆದಿವೆ.
12
+ ಸ್ವಯಂಘೋಷಿತ ಆಸ್ತಿ ತೆರಿಗೆ ಪದ್ಧತಿಗಳಲ್ಲಿ ನಿರೀಕ್ಷಿತ ಪ್ರಮಾಣದ ಆದಾಯ ಬರುತ್ತಿಲ್ಲ. ಬಹಳಷ್ಟು ಮಂದಿ ತಪ್ಪು ಮಾಹಿತಿ ನೀಡಿ ತೆರಿಗೆ ವಂಚಿಸುತ್ತಿದ್ದಾರೆ ಎಂಬ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ತೆರಿಗೆ ವ್ಯವಸ್ಥೆಯ ಬಗ್ಗೆಯೂ ಚರ್ಚೆಗಳಾಗಿವೆ.
13
+ ಸಂಚಾರ ದಟ್ಟಣೆ ನಿರ್ವಹಣೆಗೆ ಬೆಂಗಳೂರಿನಲ್ಲಿ ಮೇಲ್ಸೇತುವೆ, ಕೆಳ ಸೇತುವೆ ಹಾಗೂ ಸುರಂಗ ಮಾರ್ಗದ ರಸ್ತೆಗಳ ನಿರ್ಮಾಣ ಕುರಿತು ಬಹಳ ದಿನಗಳಿಂದಲೂ ಚರ್ಚೆ ನಡೆಯುತ್ತಿದೆ. ಕೇಂದ್ರ ಸರ್ಕಾರದ ಸಹಯೋಗದಲ್ಲಿ ಅತೀ ಉದ್ದನೆಯ ಸುರಂಗ ಮಾರ್ಗ ರಸ್ತೆ ಕುರಿತು ಪ್ರಸ್ತಾವನೆಗಳಿವೆ. ಅದೇ ರೀತಿ ಬೆಂಗಳೂರಿನಲ್ಲಿ 200 ಕಿ.ಮೀ. ಹೊಸ ರಸ್ತೆಗಳ ನಿರ್ಮಾಣಕ್ಕೂ ತಯಾರಿಗಳಾಗಿದ್ದು, ಈ ರಸ್ತೆಗಳಿಗೆ 50 ಅಡಿ ಇಕ್ಕೆಲಗಳಲ್ಲಿ ಬಫರ್‌ಝೂನ್‌ ಕಾಯ್ದಿರಿಸುವ ಬಗ್ಗೆಯೂ ಚರ್ಚೆಗಳಾಗಿವೆ.
14
+ ಜೊತೆಗೆ ಬೆಂಗಳೂರಿನಲ್ಲಿ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲು ವಿದ್ಯುತ್‌ ಉತ್ಪಾದನೆಯಂತಹ ಉಪಕ್ರಮಗಳ ಚರ್ಚೆಗಳಾಗುತ್ತಿವೆ. ತ್ಯಾಜ್ಯ ವಿಲೇವಾರಿ ಘಟಕಗಳು ತುಂಬಿ ಹೋಗಿದ್ದು, ಬದಲಿ ಜಾಗದ ಹುಡುಕಾಟದ ಜೊತೆಗೆ ತ್ಯಾಜ್ಯವನ್ನೇ ಬಳಸಿಕೊಂಡು ವಿದ್ಯುತ್‌ ಉತ್ಪಾದನೆ ಮಾಡುವ ಸಾಧಕ-ಬಾಧಕಗಳು ಹಾಗೂ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
15
+ ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆಯ ಕುರಿತು ಅಧಿಕಾರಿಗಳು ತಯಾರಿಸಿರುವ ಪ್ರಸ್ತಾವನೆಯನ್ನು ಸಭೆಯಲ್ಲಿ ಮಂಡಿಸಲಾಗಿದೆ. ಬಿಬಿಎಂಪಿ ಚುನಾವಣೆಗೆ ಕಾಲಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ತೆರಿಗೆ ಹೆಚ್ಚಳ ದರ ಏರಿಕೆ ಪ್ರಸ್ತಾವನೆಗಳ ಬಗ್ಗೆ ಮುಖ್ಯಮಂತ್ರಿ ನಕಾರಾತಕ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ. ಆದರೆ ಸಂಪನೂಲ ಕ್ರೂಢೀಕರಣ, ಮೂಲ ಸೌಲಭ್ಯ ಹೆಚ್ಚಳ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಬ್ರ್ಯಾಂಡ್‌ ಬೆಂಗಳೂರಿಗಾಗಿ ಕಠಿಣ ನಿರ್ಧಾರ ತೆಗೆದುಕೊಳ್ಳುವ ಅನಿವಾರ್ಯ ಇದೆ ಎಂದು ನಗರಾಭಿವೃದ್ಧಿ ಹಾಗೂ ಬಿಬಿಎಂಪಿ ಅಧಿಕಾರಿಗಳು ವಾದಿಸಿದ್ದಾರೆ.ಸರ್ಕಾರದಿಂದ ಹೆಚ್ಚುವರಿ ಆರ್ಥಿಕ ನೆರವಿಗಾಗಿಯೂ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲಾಗಿದೆ.
eesanje/url_46_73_1.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಸದನದೊಳಗೆ ಸ್ವಪಕ್ಷ ನಾಯಕರಿಂದಲೇ ಮುಜುಗರಕ್ಕೀಡಾಗುತ್ತಿದೆ ಪ್ರತಿಪಕ್ಷ ಬಿಜೆಪಿ
2
+ ಬೆಂಗಳೂರು,ಜು.17-ರಾಜ್ಯ ಸರ್ಕಾರದ ಹಗರಣಗಳನ್ನು ಮುಂದಿಟ್ಟುಕೊಂಡು ವಿಧಾನಮಂಡಲದ ಉಭಯ ಸದನಗಳಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕಾದ ಪ್ರತಿಪಕ್ಷ ಬಿಜೆಪಿ ಸದನದೊಳಗೆ ಮುಜುಗರಕ್ಕೀಡಾಗುತ್ತಿದೆ. ಅದರಲ್ಲೂ ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮಂಗಳವಾರ ಸದನದಲ್ಲಿ ಪರೋಕ್ಷವಾಗಿ ನಡೆಸಿದ ವಾಗ್ದಾಳಿ, ಮಾಡಿರುವ ಟೀಕೆ ಬಿಜೆಪಿಯೊಳಗೆ ಮತ್ತೆ ಎಲ್ಲವೂ ಸರಿಯಿಲ್ಲ ಎಂಬುದನ್ನು ಜಗಜ್ಜಾಹೀರು ಮಾಡಿದೆ.
3
+ ಕಾಂಗ್ರೆಸ್‌‍ ಸರ್ಕಾರದ ಭ್ರಷ್ಟಾಚಾರಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸಬೇಕೆಂದು ಬಿಜೆಪಿ ವರಿಷ್ಠರು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ವಾಲೀಕಿಯಲ್ಲಿ ನಡೆದ ಭ್ರಷ್ಟಾಚಾರ, ಮೂಡಾ ನಿವೇಶನ ಹಂಚಿಕೆ ಅಕ್ರಮ ಸೇರಿದಂತೆ ಆಡಳಿತಾರೂಢ ಕಾಂಗ್ರೆಸ್‌‍ ಸರ್ಕಾರ ವೈಫಲ್ಯಗಳನ್ನು ಸದನದ ಮುಂದಿಟ್ಟು ಹೋರಾಟ ನಡೆಸಬೇಕೆಂಬುದು ಕೇಂದ್ರ ಬಿಜೆಪಿ ವರಿಷ್ಠರ ಸೂಚನೆಯಾಗಿತ್ತು.
4
+ ಆದರೆ ಸರ್ಕಾರವನ್ನು ಬೆತಲು ಮಾಡುತ್ತೇವೆ ಎಂದು ಅಧಿವೇಶನಕ್ಕೂ ಮೊದಲೇ ಗುಡುಗಿದ್ದ ಬಿಜೆಪಿ ಇದೀಗ ಸದನದಲ್ಲಿ ತಾನೇ ಮುಜುಗರಕ್ಕೆ ಸಿಲುಕಿ ತಲೆ ತಗ್ಗಿಸುವಂತಾಗಿದೆ. ಏಕೆಂದರೆ ಬಿಜೆಪಿಯ ಖಾಯಂ ವಿರೋಧ ಪಕ್ಷದ ನಾಯಕನೆಂದೇ ಗುರುತಿಸಿಕೊಂಡಿರುವ ಯತ್ನಾಳ್‌ ಸದನದೊಳಗೆ ಆಡಿರುವ ಮಾತುಗಳು ವಿರೋಧ ಪಕ್ಷಗಳ ಕೈಗೆ ಮತ್ತೊಂದು ಅಸ್ತ್ರ ಸಿಕ್ಕುವಂತೆ ಮಾಡಿದೆ.
5
+ ಸದನದಲ್ಲಿ ಯತ್ನಾಳ್‌ ಎದ್ದು ನಿಂತರೆಂದರೆ, ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸುವ ಜೊತೆಗೆ ಸ್ವಪಕ್ಷದ ನಾಯಕರನ್ನೇ ಪದೇ ಪದೇ ಚುಚ್ಚುತ್ತಾರೆ. ಸದನದಲ್ಲೇ ತಮ ಪಕ್ಷದ ನಾಯಕರ ವಿರುದ್ಧ ಅಡ್ಜೆಸ್ಟ್‌ಮೆಂಟ್‌ ರಾಜಕಾರಣದ ಆರೋಪ ಮಾಡುತ್ತಿದ್ದಾರೆ.ವಾಲೀಕಿ ನಿಗಮದ ಹಗರಣದ ಬಗ್ಗೆ ಸದನದಲ್ಲಿ ಮಾತನಾಡುತ್ತಾ ಯತ್ನಾಳ್‌, ಬಿಜೆಪಿ ಹೋರಾಟ ಕೇವಲ ನಾಟಕ ಎಂದು ಜರಿದಿದ್ದರು. ಹಗರಣವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ, ಉಗ್ರವಾಗಿ ಖಂಡಿಸುತ್ತೇವೆ, ಸಭಾತ್ಯಾಗ ಮಾಡುತ್ತೇವೆ. ಹಗಲೂ ರಾತ್ರಿ ಧರಣಿ ಕೂರುತ್ತೇವೆ. ರಾತ್ರಿ, ನೀವು, ಹೋಂ ಮಿನಿಸ್ಟರ್‌ ಬರ್ತಾರೆ ಊಟ ತಿಂಡಿ ಕೊಡ್ತೀರಿ, ನಾಟಕ ಮಾಡ್ತೀರಿ ಎಂದು ಕಾಲೆಳೆದಿದ್ದರು.
6
+ ಅಶೋಕ್‌ ಕಾಲೆಳೆದ ಯತ್ನಾಳ್‌:ಅಶೋಕ್‌ ನೇತೃತ್ವದಲ್ಲಿ ದಲಿತ ಸಮುದಾಯದ ಹಿತ ಕಾಪಾಡುತ್ತೇವೆ ಎನ್ನುವುದು ಪರಿಹಾರ ಅಲ್ಲ. ಅಶೋಕ್‌ ಸ್ವಾಭಿಮಾನದ ರಾಜಕೀಯ ಮಾಡಲು ನಿರ್ಧಾರ ಮಾಡಿದ್ದರಿಂದ ಚೆನ್ನಾಗಿ ಮಾಡಿದ್ದಾರೆ. ಯಾರ ಅಪ್ಪ ಮಕ್ಕಳಿಗೆ ಯಾರೂ ಅಂಜಬಾರದು. ಯಾರಿಗೂ ಅಪ್ಪಾಜಿ ಅನ್ನಬಾರದು. ಅಪ್ಪಾಜಿ ಸಂಸ್ಕೃತಿ ಬೇಡ ಎಂದು ಪರೋಕ್ಷವಾಗಿ ವಿಜಯೇಂದ್ರ ಹಾಗೂ ಬಿಎಸ್‌‍ ಯಡಿಯೂರಪ್ಪ ಅವರಿಗೂ ಟಾಂ���್‌ ನೀಡಿದರು.
7
+ ಭಾರೀ ಹೋರಾಟ , ಗಡ ಗಡ ನಡುಗಿದ ಸರ್ಕಾರ ಎಂದು ಒಂದು ಕಡೆಯಲ್ಲಿ ಹೇಳುತ್ತಾರೆ. ಬಳಿಕ ಆಡಳಿತ ಪಕ್ಷದ ನಾಯಕರಿಗೆ ಫೋನ್‌ ಕರೆ ಮಾಡಿ, ಏನೂ ತಪ್ಪು ತಿಳಿದುಕೊಳ್ಳಬೇಡಿ, ಮೇಲಿ ಒತ್ತಡ ಹೈಕಮಾಂಡ್‌ ಒತ್ತಡ ಎನ್ನುತ್ತಾರೆ. ಅಲ್ಲದೆ, ವಾಲೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರ ರಾಜೀನಾಮೆ ಪಡೆದುಕೊಂಡಿದ್ದಕ್ಕೆ ನಿಮನ್ನು ಅಭಿನಂದಿಸುತ್ತೇನೆ ಎಂದು ಆರ್‌.ಅಶೋಕ್‌ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಉಲ್ಲೇಖಿಸಿ ನೀಡಿದ್ದ ಹೇಳಿಕೆಯನ್ನು ಸದನದಲ್ಲಿ ಪ್ರಸ್ತಾಪಿಸಿದ್ದ ಯತ್ನಾಳ್‌, ಪರೋಕ್ಷವಾಗಿ ಹೊಂದಾಣಿಕೆ ರಾಜಕೀಯ ಬಿಜೆಪಿಯಲ್ಲಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
8
+ ಯತ್ನಾಳ್‌ ನಡೆ ವಿರುದ್ಧ ಹೈಕಮಾಂಡ್‌ ಕೂಡಾ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಆಡಳಿತ ಪಕ್ಷದ ಸದಸ್ಯರು ಯತ್ನಾಳ್‌ ಮಾತಿಗೆ ನಿಂತರೆ ಮತ್ತಷ್ಟು ಮಾತನಾಡಿ ಎಂದು ಹುರಿದುಂಬಿಸುತ್ತಾರೆ. ಯತ್ನಾಳ್‌ ಅವರು ವಿರೋಧ ಪಕ್ಷದೊಳಗಿನ ವಿರೋಧ ಪಕ್ಷದ ನಾಯಕ ಎಂಬ ಮಾತೂ ವಾಸ್ತವ.
9
+ ಪರಿಷತ್‌ನಲ್ಲೂ ಅದೇ ಸ್ಥಿತಿ:ವಿಧಾನಸಭೆಯಲ್ಲಿ ಒಂದು ಕತೆಯಾದರೆ ಪರಿಷತ್‌ನಲ್ಲೂ ಅದೇ ಕಥೆ ಇದೆ. ವಿರೋಧ ಪಕ್ಷದ ನಾಯಕನ ಸ್ಥಾನವಿಲ್ಲದೆ ಏಕಾಂಗಿಯಾಗಿರುವ ಬಿಜೆಪಿಯಲ್ಲಿ ಯಾವ ಸದಸ್ಯರು ಯಾವ ವಿಷಯವನ್ನು ಕೈಗೆತ್ತಿಕೊಳ್ಳಬೇಕು, ಸರ್ಕಾರದ ವಿರುದ್ಧ ಹೇಗೆ ಹೋರಾಟ ನಡೆಸಬೇಕು ಎಂಬುದರ ಬಗ್ಗೆ ತಲೆಬುಡ ಒಂದೂ ಇಲ್ಲ.
10
+ ಸೋಮವಾರದಿಂದ ಆರಂಭವಾದ ಕಲಾಪದಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಒಂದಿಷ್ಟು ಸರ್ಕಾರದ ವಿರುದ್ಧ ಅಬ್ಬರಿಸುತ್ತಿದ್ದಾರೆ. ಆದರೆ ಅವರಿಗೆ ಸ್ವಪಕ್ಷೀಯರೇ ಬೆಂಬಲ ನೀಡುತ್ತಿಲ್ಲ. ಮಂಗಳವಾರ ಮಾಜಿ ಸಚಿವ ನಾಗೇಂದ್ರ ಫೋಟೋ ಹಿಡಿದು ಸದನದಲ್ಲಿ ಸಿ.ಟಿ.ರವಿ ಮಾತನಾಡಿದ್ದರು. ಈ ವೇಳೆ ಆಡಳಿತಾರೂಢ ಕಾಂಗ್ರೆಸ್‌‍ ಸದಸ್ಯರು ರವಿ ವಿರುದ್ಧ ಪ್ರತಿದಾಳಿ ನಡೆಸಿದರು. ಆಗ ಬಿಜೆಪಿಯ ಯಾವ ಸದಸ್ಯರೂ ಕೂಡ ತಮ ಸದಸ್ಯನ ಪರವಾಗಿ ನಿಲ್ಲನಿಲ್ಲ. ಇದು ಪಕ್ಷದೊಳಗೆ ತಾಳಮೇಳ ಎಲ್ಲವೂ ತಪ್ಪಿದೆ ಎಂದು ರುಜುವಾತು ಪಡಿಸಿದೆ.
eesanje/url_46_73_10.txt ADDED
@@ -0,0 +1,9 @@
 
 
 
 
 
 
 
 
 
 
1
+ ಬೆಂಗಳೂರು ಶಾಸಕರೊಂದಿಗೆ ಜು.27ರಂದು ಸಭೆ : ಡಿಕೆಶಿ
2
+ ಬೆಂಗಳೂರು,ಜು.16- ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೂಲ ಸೌಕರ್ಯ ಕಲ್ಪಿಸುವ ಸಂಬಂಧ ಬೆಂಗಳೂರಿನ ಶಾಸಕರ ಜೊತೆ ಜು.27ರಂದು ಸಭೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿಧಾನಸಭೆಗೆ ತಿಳಿಸಿದರು.
3
+ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಅವರ ಪ್ರಶ್ನೆಗೆ ಉತ್ತರಿಸಿದ ಉಪಮುಖ್ಯಮಂತ್ರಿ, ಅಧಿವೇಶನ ಮುಗಿದ ಮರುದಿನವೇ ವೈಟ್ಯಾಪಿಂಗ್‌, ರಸ್ತೆಗುಂಡಿ ಮುಚ್ಚುವುದು ಮೊದಲಾದ ಮೂಲ ಸೌಕರ್ಯಗಳಿಗೆ ಸಂಬಂಧಿಸಿದಂತೆ ಚರ್ಚೆ ಮಾಡಿ ನಿರ್ಧಾರ ಮಾಡೋಣ, ಕಸ ವಿಲೇವಾರಿ, ಸಂಚಾರ ದಟ್ಟಣೆ, ಬೀದಿ ದೀಪ ನಿರ್ವಹಣೆ, ತೆರಿಗೆ ಸಂಗ್ರಹ, ಹಸರೀಕರಣ, ಕುಡಿಯುವ ನೀರು ಮೊದಲಾದ ವಿಚಾರಗಳ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಮಾಡೋಣ. ಶಾಸಕರು ಹೇಳಿದಂತೆ ವಿವಿಧ ಇಲಾಖೆಗಳ ನಡುವೆ ಸಮನ್ವಯ ಇಲ್ಲ. ತಾವು ಉಸ್ತುವಾರಿ ವಹಿಸಿದ ನಂತರ ಒಂದು ಹಂತಕ್ಕೆ ಬಂದಿದೆ ಎಂದು ಹೇಳಿದರು.
4
+ ವೈಟ್ಯಾಪಿಂಗ್‌ ಕಾಮಗಾರಿ, ರಸ್ತೆಗಳ ನಿರ್ಮಾಣ ಮತ್ತು ಹಗಲೀಕರಣ, ಸುರಂಗ ಮಾರ್ಗ, ಮೆಟ್ರೊ ರೋಡ್‌ ಫ್ಲೈಓವರ್‌ ಸೇರಿದಂತೆ ವಿವಿಧ ಕಾಮಗಾರಿಗಳಿಗೆ 3450 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರದಿಂದ ನಿಗದಪಡಿಸಲಾಗಿದೆ. ಇದರಲ್ಲಿ ಬಿಬಿಎಂಪಿ ವತಿಯಿಂದ ಪ್ರಸಕ್ತ ಸಾಲಿನಲ್ಲಿ 1790 ಕೋಟಿ ರೂ. ರಾಜ್ಯ ಸರ್ಕಾರದಿಂದ 1660 ಕೋಟಿ ರೂ. ಒದಗಿಸಲಾಗಿದೆ ಎಂದು ತಿಳಿಸಿದರು.
5
+ ಏ.1ರಿಂದ ಜೂ.30ರವರೆಗೆ ಪಾಲಿಕೆ ವ್ಯಾಪ್ತಿಯಲ್ಲಿ 16,202 ರಸ್ತೆಗುಂಡಿಗಳನ್ನು ಗುರುತಿಸಿದ್ದು, ಈ ಪೈಕಿ 15,686 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. 516 ರಸ್ತೆ ಗುಂಡಿಗಳು ಬಾಕಿ ಇವೆ. ರಸ್ತೆ ಗುಂಡಿಗಳನ್ನು ದುರಸ್ತಿಪಡಿಸಲು ಬಿಬಿಎಂಪಿ ಬ್ಯಾಚ್‌ ಮಿಕ್ಸ್ ಸ ಘಟಕವನ್ನು ಸ್ಥಾಪಿಸಲಾಗಿದ್ದು, ಪ್ರತಿ ವಾರ್ಡ್‌ 15 ಲಕ್ಷ ರೂ. ಅನುದಾನವನ್ನು ಗುಂಡಿ ಮುಚ್ಚಲು ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.
6
+ ಮಳೆಗಾಲದಲ್ಲಿಯೂ ರಸ್ತೆಗುಂಡಿ ಮುಚ್ಚಲು ತಂಪಾದ ಡಾಂಬರು ಮಿಶ್ರಣ ತಯಾರಿಸುವ ಘಟಕವನ್ನು ಸ್ಥಾಪಿಸಲಾಗಿದೆ. ಬಿಡಬ್ಲುಎಸ್‌‍ಎಸ್‌‍ಬಿ ಸೇರಿದಂತೆ ಇತರೆ ಇಲಾಖೆಗಳೊಂದಿಗೆ ಸಮನ್ವಯತೆ ಸಾಧಿಸಲಾಗಿದ್ದು, ರಸ್ತೆ ಅಗೆಯುವುದನ್ನು ಹೆಚ್ಚು ಪರಿಣಾಮಕಾರಿಯಾಗಿ ನಿಯಂತ್ರಿಸಲಾಗಿದೆ. ರಸ್ತೆ ಗುಂಡಿಗಳನ್ನು ಗುರುತಿಸಲು ಮತ್ತು ನಿಗಾವಹಿಸಲು ರಸ್ತೆಗುಂಡಿ ಗಮನ ಎಂಬ ನೂತನ ಮೊಬೈಲ್‌ ಆಪ್‌ನ್ನು ಸೃಜಿಸಲು ಉದ್ದೇಶಿಸಲಾಗಿದೆ ಎಂದರು.
7
+ ಇದಕ್ಕೂ ಮುನ್ನ ಮಾತನಾಡಿದ ಶಾಸಕ ರಾಮಮೂರ್ತಿ, ಬ್ರಾಂಡ್ ಬೆಂಗಳೂರು, ಗ್ರೇಟರ್‌ ಬೆಂಗಳೂರು ಎಂದು ಹೇಳುತ್ತೀರಿ. ಬೆಂಗಳೂರನ್ನು 5 ಭಾಗ ಮಾಡುವುದಾಗಿ ಹೇಳುತ್ತೀರಿ. ಈ ಪರಿಕಲ್ಪನೆ ಅರ್ಥವಾಗುತ್ತಿಲ್ಲ. ವಿರೋಧ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಅನುದಾನ ಕೊಟ್ಟಿಲ್ಲ. ಕೇವಲ 516 ರಸ್ತೆ ಗುಂಡಿಗಳು ಬಾಕಿ ಉಳಿದಿರುವುದಾಗಿ ಹೇಳುತ್ತೀರಿ, ಯಾವ ರಸ್ತೆಯಲ್ಲಿ ಗುಂಡಿಗಳಿಲ್ಲ ಹೇಳಿ ಎಂದು ಆಗ್ರಹಿಸಿದರು.
8
+ ಇದಕ್ಕೆ ದನಿಗೂಡಿಸಿದ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌, ಎಲ್ಲಾ ರಸ್ತೆಗಳು ಗುಂಡಿಗಳಾಗಿವೆ. ಮಳೆಯಿಂದ ಹೆಚ್ಚು ಗುಂಡಿಗಳಾಗುತ್ತಿವೆ. ಗುಂಡಿ ಮುಚ್ಚಿರುವುದರ ಗುಣಮಟ್ಟವೂ ಸರಿಯಿಲ್ಲ. ಕಳೆದ 15 ವರ್ಷದಲ್ಲಿ ಯಾವ ಯಾವ ಕ್ಷೇತ್ರಕ್ಕೆ ಎಷ್ಟೇಷ್ಟು ಅನುದಾನ ನೀಡಲಾಗಿದೆ ಎಂಬ ಮಾಹಿತಿಯ ಶ್ವೇತಪತ್ರ ಹೊರಡಿಸಿ, ಬಿಜೆಪಿ 16 ಶಾಸಕರು ಬೆಂಗಳೂರಿನಲ್ಲಿದ್ದಾರೆ. ಎಲ್ಲಾ ಕ್ಷೇತ್ರದ ಅಭಿವೃದ್ಧಿಗೂ ಅನುದಾನ ಕೊಡಿ ಎಂದು ಒತ್ತಾಯಿಸಿದರು.
9
+ ಬಿಜೆಪಿ ಶಾಸಕ ಎಸ್‌‍.ಸುರೇಶ್‌ಕುಮಾರ್‌ ಮಾತನಾಡಿ, ಬ್ರಾಂಡ್‌ ಬೆಂಗಳೂರು ಮಾಡಲು ಹೊರಟಿದ್ದೀರಿ. ವಿವಿಧ ಇಲಾಖೆಗಳ ನಡುವೆ ಸಮನ್ವಯ ಇಲ್ಲ. ಬೆಂಗಳೂರು ಮಟ್ಟದಲ್ಲಿ ಟಾಸ್ಕ್‌ಫೋರ್ಸ್‌ ರಚನೆ ಮಾಡಿ, ವಿಧಾನಸಭಾ ಕ್ಷೇತ್ರ ಮಟ್ಟದಲ್ಲೂ ಒಂದು ಟಾಸ್ಕ್‌ಫೋರ್ಸ್‌ ರಚನೆ ಮಾಡಿ ಎಂದು ಸಲಹೆ ಮಾಡಿದರು.
eesanje/url_46_73_11.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಇನ್ನೊಂದು ತಿಂಗಳಲ್ಲಿ ಹೊಸ ಪ್ರವಾಸೋದ್ಯಮ ನೀತಿ ಜಾರಿಗೆ
2
+ ಬೆಂಗಳೂರು,ಜು.16-ಇನ್ನೊಂದು ತಿಂಗಳಲ್ಲಿ ಹೊಸ ಪ್ರವಾಸೋದ್ಯಮ ನೀತಿ ಜಾರಿಗೆ ತರುವುದಾಗಿ ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್‌ವಿಧಾನಸಭೆಗೆ ತಿಳಿಸಿದರು.ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಸುರೇಶ್‌ ಎಚ್‌.ಕೆ. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಪ್ರವಾಸಿತಾಣಗಳಲ್ಲಿ ಮೂಲಸೌಲಭ್ಯ ಕಲ್ಪಿಸಲು ಒತ್ತು ನೀಡಲಾಗುವುದು ಎಂದರು.
3
+ ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 26 ದೇವಾಲಯಗಳಿದ್ದು, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಸಂರಕ್ಷಿತ ಸಾರಕಗಳಲ್ಲಿ ಬೇಲೂರು ಮತ್ತು ಹಳೇಬೀಡು ದೇವಾಲಯಗಳು ಸೇರಿವೆ. ಬೇಲೂರು, ಹಳೇಬೀಡು ದೇವಾಲಯಗಳಂತೆ ಶಿಲ್ಪಕಲೆ ಇರುವ 21 ಪ್ರಾಚೀನ ದೇವಾಲಯಗಳಿವೆ.
4
+ ಬೇಲೂರು, ಹಳೇಬೀಡಿಗೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ಇನ್ನಷ್ಟು ಮೂಲಸೌಲಭ್ಯ ಕಲ್ಪಿಸುವ ಅಗತ್ಯವಿದೆ ಎಂದು ಹೇಳಿದರು.ಹಳೇಬೀಡು ಹೊಯ್ಸಳೇಶ್ವರ ದೇವಾಲಯ ಹಾಗೂ ಸುತ್ತಮುತ್ತಲಿನ ಶಿಲ್ಪಕಲೆಗಳ ದೇವಾಲಯಗಳ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ರಾತ್ರಿ ವೇಳೆ ತಂಗಲು ಯಾತ್ರಿ ನಿವಾಸ ನಿರ್ಮಿಸಲಾಗಿದೆ ಎಂದರು.
5
+ ಪ್ರವಾಸೋದ್ಯಮ ಮೂಲಭೂತ ಸೌಕರ್ಯ ವೆಚ್ಚದಡಿಯಲ್ಲಿ 20 ಕೋಟಿ ರೂ.ಗಳ ಪೈಕಿ 16 ಕೋಟಿ ರೂ.ಗಳನ್ನು ಮುಂದುವರೆದ ಕಾಮಗಾರಿಗಳಿಗೆ 4 ಕೋಟಿ ರೂ.ಗಳನ್ನು ನೂತನ ಕಾಮಗಾರಿಗಳಿಗೆ ಕೈಗೊಳ್ಳಲಾಗುವುದು. ಮೂಲ ಸೌಲಭ್ಯ ಅಭಿವೃದ್ಧಿಗೆ 50 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಹೇಳಿದರು.
6
+ ಶಾಸಕ ಗುರುಮೇಸುರೇಶ್‌ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಉಡುಪಿ ಜಿಲ್ಲೆಯ ಕಾಪು ಲೈಟ್‌ಹೌಸ್‌‍ ಬೀಚ್‌ ಅಭಿವೃದ್ಧಿ ಕಾಮಗಾರಿಗೆ 5 ಕೋಟಿ ರೂ. ಮಂಜೂರು ಮಾಡಲಾಗಿದೆ. ಒಂದು ಜಿಲ್ಲೆಯಲ್ಲಿ ಒಂದು ತಾಣ ಅಭಿವೃದ್ಧಿ ಯೋಜನೆಯಡಿಯಲ್ಲಿ ಈ ಹಣ ಮಂಜೂರು ಮಾಡಲಾಗಿದೆ. ಮತ್ತೊಂದು ಬೀಚ್‌ ಅಭಿವೃದ್ಧಿಪಡಿಸಲು ಅನುದಾನದ ಸಮಸ್ಯೆ ಇದೆ. ಎರಡರಲ್ಲಿ ಯಾವುದಾದರೊಂದು ತಾಣ ಅಭಿವೃದ್ಧಿ ಪಡಿಸಿಕೊಳ್ಳಬಹುದು. ಅದನ್ನೇ ಶಾಸಕರೇ ನಿರ್ಧಾರ ಮಾಡಬೇಕು ಎಂದರು.
7
+ ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರ ಬದ್ಧಪ್ರವಾಸೋದ್ಯಮ ಅಭಿವೃದ್ಧಿಗೆ 2024-25ನೇ ಸಾಲಿನಲ್ಲಿ 23,930.40 ಲಕ್ಷ ರೂಪಾಯಿಗಳ ಅನುದಾನವನ್ನು ಒದಗಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ ಸಚಿವ ಎಚ್‌.ಕೆ.ಪಾಟೀಲ್‌ ತಿಳಿಸಿದ್ದಾರೆ.
8
+ ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಕಾಂಗ್ರೆಸ್‌‍ ಶಾಸಕ ನರೇಂದ್ರ ಸ್ವಾಮಿಯವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸದರಿ ಅನುದಾನದಲ್ಲಿ ರಾಜ್ಯದ ವಿವಿಧ ಪ್ರವಾಸಿತಾಣಗಳಲ್ಲಿ ಯಾತ್ರಿನಿವಾಸ, ಡಾರ್ಮಿಟರಿ, ಶೌಚಾಲಯ, ಅಂತಿಮ ಹಂತದ ಕೂಡು ರಸ್ತೆ, ಮೆಟ್ಟಿಲುಗಳು, ರೇಲಿಂಗ್‌್ಸ, ಕುಡಿಯುವ ನೀರಿನ ಸೌಲಭ್ಯ, ಸ್ನ���ನಗೃಹ, ಸಾರಕಗಳ ಸಂರಕ್ಷಣೆ ಇತ್ಯಾದಿ ಮೂಲಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.
9
+ ನೂತನ ಕಾಮಗಾರಿಗಳಿಗೆ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ. ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಯಡಿ 3071.64 ಲಕ್ಷ ರೂಪಾಯಿಗಳನ್ನು ಒದಗಿಸಲಾಗಿದ್ದು, ಈವರೆಗೂ ಯಾವುದೇ ಕಾಮಗಾರಿಗಳನ್ನು ಕೈಗೊಂಡಿಲ್ಲ. ಕ್ರಿಯಾಯೋಜನೆಯನ್ನು ಸಿದ್ಧಪಡಿಸಿ ಸಮಾಜಕಲ್ಯಾಣ ಇಲಾಖೆಯ ಅನುಮೋದನೆಗಾಗಿ ಕಳುಹಿಸಲಾಗಿದೆ ಎಂದು ಹೇಳಿದರು.
10
+ ಮಳವಳ್ಳಿ ಕ್ಷೇತ್ರದ ಬಸವನಬೆಟ್ಟ ಮತ್ತು ಶಿವನಸಮುದ್ರ ಸುತ್ತಮುತ್ತ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಬೇಕೆಂದು ಶಾಸಕರು ಒತ್ತಾಯಿಸಿದರು. ಈ ಬಗ್ಗೆ ವರದಿ ಪಡೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.
eesanje/url_46_73_12.txt ADDED
@@ -0,0 +1,7 @@
 
 
 
 
 
 
 
 
1
+ ವಾಲ್ಮೀಕಿ ನಿಗಮ ಹಗರಣದಲ್ಲಿ ಇನ್ನೂ ಹಲವು ಸಚಿವರು ಶಾಮೀಲಾಗಿದ್ದಾರೆ : ವಿಜಯೇಂದ್ರ
2
+ ಬೆಂಗಳೂರು,ಜು.16-ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಶಾಸಕರು, ಮಾಜಿ ಮಂತ್ರಿಗಳು ಮಾತ್ರವಲ್ಲದೆ ಕೆಲವು ಸಚಿವರು ಭಾಗಿಯಾಗಿದ್ದಾರೆ. ಇವೆಲ್ಲವೂ ಬಹಿರಂಗವಾಗಿದ್ದು, ರಾಜ್ಯದ ಜನತೆ ಮುಂದೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದರು.
3
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಜೊತೆ ಮಾತನಾಡಿದ ಅವರು, ಹಗರಣದಲ್ಲಿ ಯಾರೂ ಕೂಡ ತನಿಖೆಯಿಂದ ತಪ್ಪಿಸಿಕೊಂಡು ಹೋಗಲು ಸಾಧ್ಯವಿಲ್ಲ. ಯಾರೆಷ್ಟೇ ದೊಡ್ಡವರಾದರೂ ಸಿಬಿಐ ಮತ್ತು ಇ.ಡಿ ಮುಂದಕ್ಕೆ ಹೋಗಬೇಕಾಗುತ್ತದೆ. ಅವರದೇ ಆದ ರೀತಿಯಲ್ಲಿ ತನಿಖೆ ನಡೆಸುತ್ತಾರೆ ಎಂದರು.
4
+ ಒಂದೆಡೆ ಸಿಬಿಐ ತನಿಖೆ ನಡೆದಿದೆ. ಇನ್ನೊಂದೆಡೆ ಪ್ರತ್ಯೇಕವಾಗಿ ರಾಜ್ಯದಿಂದ ಎಸ್ಐಟಿ ತನಿಖೆ ನಡೆಸುತ್ತಿದೆ. ನಾಗೇಂದ್ರ ಅವರು ಈಗಾಗಲೇ ಇ.ಡಿ ಕಸ್ಟಡಿಯಲ್ಲಿದ್ದಾರೆ. ವಾಲ್ಮೀಕಿ ನಿಗಮದ ಅಧ್ಯಕ್ಷ, ಶಾಸಕ ದದ್ದಲ್ ಅವರು ನಿನ್ನೆ ಸದನಕ್ಕೆ ಹಾಜರಾಗಿದ್ದರು. ಯಾರು ಎಲ್ಲಿದ್ದಾರೆಂಬುದು ಮುಖ್ಯವಲ್ಲ. ಅದಕ್ಕಿಂತ ಹೆಚ್ಚಾಗಿ ನಾಗೇಂದ್ರರ ಜೊತೆಗೆ ದದ್ದಲ್ ಅವರ ಪಾತ್ರವೂ ಇದೆ ಎಂಬುದು ಬಹಿರಂಗವಾಗಿದೆ ಎಂದು ವಿವರಿಸಿದರು.
5
+ ಕಾವೇರಿ ನೀರು- ರೈತರ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳದಿರಿ. ಕಾವೇರಿ ನದಿ ನೀರಿನ ಸಂಬಂಧ ತಮಿಳುನಾಡಿನಲ್ಲಿ ಸರ್ವಪಕ್ಷ ಸಭೆ ಕರೆದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ತಮಿಳುನಾಡಿನಲ್ಲಿ ಏನು ಮಾಡುತ್ತಾರೆ ಎಂಬುದು ಮುಖ್ಯವಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿಗಳು ಕರೆದ ಸಭೆಯಲ್ಲಿ ನಮ್ಮ ಪಕ್ಷದ ನಿಲುವನ್ನು ಸ್ಪಷ್ಟವಾಗಿ ಮಂಡಿಸಿದ್ದೇವೆ.
6
+ ಯಾವುದೇ ಕಾರಣಕ್ಕೂ ರಾಜ್ಯದ, ಅದರಲ್ಲೂ ವಿಶೇಷವಾಗಿ ಮೈಸೂರು ಭಾಗದ ರೈತರ ಹಿತಾಸಕ್ತಿಗೆ ವಿರುದ್ಧವಾಗಿ ರಾಜ್ಯ ಸರಕಾರ ನಡೆದುಕೊಳ್ಳಬಾರದು ಎಂದು ಆಗ್ರಹಿಸಿದ್ದಾಗಿ ತಿಳಿಸಿದರು. ಪ್ರತಿ ವರ್ಷವೂ ಕ್ಯಾತೆ ತೆಗೆಯುವ ತಮಿಳುನಾಡು ಸರಕಾರ ಪ್ರತಿ ಸಂದರ್ಭದಲ್ಲೂ, ಪ್ರತಿ ವರ್ಷವೂ ಕ್ಯಾತೆ ತೆಗೆಯುತ್ತಲೇ ಇರುತ್ತದೆ.
7
+ ಟ್ರಿಬ್ಯೂನಲ್ನಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ವಾದ ಮಂಡಿಸಬೇಕು. ಇದಕ್ಕಾಗಿ ಸೂಕ್ತ ನ್ಯಾಯವಾದಿಗಳನ್ನು ನೇಮಿಸುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇವೆ. ಆ ನಿಟ್ಟಿನಲ್ಲಿ ಅವರು ಸಮರ್ಪಕ ನಿರ್ಧಾರ ಕೈಗೊಳ್ಳುವ ವಿಶ್ವಾಸ ನಮ್ಮಗೂ ಇದೆ ಎಂದು ಅವರು ಹೇಳಿದರು.
eesanje/url_46_73_2.txt ADDED
@@ -0,0 +1,7 @@
 
 
 
 
 
 
 
 
1
+ ವಾಲ್ಮೀಕಿ ನಿಗಮ ಹಗರಣ : ಬಿ.ನಾಗೇಂದ್ರ ಪತ್ನಿಯನ್ನು ವಶಕ್ಕೆ ಪಡೆದ ಇಡಿ
2
+ ಬೆಂಗಳೂರು,ಜು.17-ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಪತ್ನಿಯನ್ನು ಜಾರಿನಿರ್ದೇಶನಾಲಯ(ಇ.ಡಿ)ದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
3
+ ಬಿಇಎಲ್‌ ರಸ್ತೆಯಲ್ಲಿರುವ ರಾಮ್ಕೆ ಅಪಾರ್ಟ್‌ಮೆಂಟ್‌ನಲ್ಲಿದ್ದ ಬಿ.ನಾಗೇಂದ್ರ ಪತ್ನಿ ಮಂಜುಳಾ ಅವರನ್ನು ಇ.ಡಿ ಅಧಿಕಾರಿಗಳ ಒಂದು ತಂಡ ವಶಕ್ಕೆ ಪಡೆದಿದೆ. ಶಾಂತಿನಗರದಲ್ಲಿರುವ ಇ.ಡಿ ಕಚೇರಿಯಲ್ಲಿ ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ. ಮೂಲಗಳ ಪ್ರಕಾರ ಮಂಜುಳಾ ಅವರ ಖಾತೆಯೂ ನಾಗೇಂದ್ರ ಕೋಟ್ಯಂತರ ಹಣವನ್ನು ವರ್ಗಾವಣೆ ಮಾಡಿದ್ದರ ಆರೋಪದ ಹಿನ್ನಲೆಯಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ.
4
+ ಇ.ಡಿ ಅಧಿಕಾರಿಗಳು ನಾಗೇಂದ್ರ ಅವರ ಬ್ಯಾಂಕ್‌ ವಹಿವಾಟನ್ನು ತನಿಖೆಗೊಳಪಡಿಸಿದಾಗ ಪತ್ನಿ ಖಾತೆಗೆ ಕೋಟ್ಯಂತರ ಹಣವನ್ನು ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿತ್ತು ಎನ್ನಲಾಗಿದೆ. ಮಂಜುಳ ಹೆಸರಿನಲ್ಲಿ ಬೇನಾಮಿ ಖಾತೆಗಳನ್ನು ತೆರೆದಿದ್ದ ನಾಗೇಂದ್ರ ಹಂತ ಹಂತವಾಗಿ ಸುಮಾರು 20 ಕೋಟಿಗೂ ಹೆಚ್ಚು ಹಣವನ್ನು ವರ್ಗಾವಣೆ ಮಾಡಿದ್ದರೆಂಬ ಶಂಕೆ ಹಿನ್ನಲೆಯಲ್ಲಿ ವಶಕ್ಕೆ ಪಡೆಯಲಾಗಿದೆ.
5
+ ಹೈದರಾಬಾದ್‌ನ ಬಂಜಾರ ಹಿಲ್ಸ್ ನಲ್ಲಿರುವ ಆರ್‌ಎಲ್‌ವಿ ಬ್ಯಾಂಕ್‌ನಲ್ಲಿ ಬೇನಾಮಿ ಖಾತೆ ತೆರೆದು ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಉಪಖಾತೆ ತೆರೆದು ಅಲ್ಲಿಂದ ಹಣವನ್ನು ವರ್ಗಾವಣೆ ಮಾಡಲಾಗಿತ್ತು. ಇದೀಗ ಇ.ಡಿ ತನಿಖಾ ತಂಡ ಹಣದ ಮೂಲಕ್ಕೆ ಕೈ ಹಾಕಿದ್ದು, ಮಂಜುಳಾ ಅವರಿಂದ ಮಾಹಿತಿ ಪಡೆಯುತ್ತಿದೆ.
6
+ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರ ನಿವಾಸ, ಕಚೇರಿ ಸೇರಿದಂತೆ ಮತ್ತಿತರ ಕಡೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಂಗಳೂರು, ಬಳ್ಳಾರಿ ಸೇರಿದಂತೆ ನಾಗೇಂದ್ರ ಒಡೆತನಕ್ಕೆ ಸೇರಿದ ಮನೆಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಸುಮಾರು ಎರಡು ದಿನಗಳ ನಂತರ ಸುದೀರ್ಘ ವಿಚಾರಣೆ ಬಳಿಕ ನಾಗೇಂದ್ರ ಅವರನ್ನು ಇಡಿ ಬಂಧಿಸಿತ್ತು.
7
+ ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಇ.ಡಿ ತನ್ನ ವಶಕ್ಕೆ ಪಡೆದುಕೊಂಡಿದೆ. ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಸನಗೌಡ ದದ್ದಲ್‌ ಮೇಲೂ ದಾಳಿ ನಡೆಸಲಾಗಿತ್ತು. ಇದೀಗ ಇ.ಡಿ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್‌‍ ಜಾರಿ ಮಾಡಿದೆ.
eesanje/url_46_73_3.txt ADDED
@@ -0,0 +1,5 @@
 
 
 
 
 
 
1
+ ವಿದೇಶದಲ್ಲಿ ಕೆಲಸಕ್ಕೆ ಹೋಗುವ ಮುನ್ನ ಏಜೆಂಟ್‌ಗಳ ನೈಜತೆ ಪರಿಶೀಲಿಸಿ : ಆರತಿ ಕೃಷ್ಣ
2
+ ಬೆಂಗಳೂರು, ಜು.17-ಹೊರ ದೇಶಗಳಲ್ಲಿ ಕೆಲಸಕ್ಕಾಗಿ ತೆರಳುವ ಮುನ್ನ ಏಜೆಂಟ್‌ಗಳ ನೈಜತೆ ಪರಿಶೀಲನೆ ಮಾಡಿಕೊಳ್ಳಬೇಕು ಎಂದು ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣ ಅವರು ಸಲಹೆ ಮಾಡಿದ್ದಾರೆ.
3
+ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಧಿಕೃತವಲ್ಲದ ಏಜೆಂಟ್‌ಗಳ ಮಾತಿಗೆ ಮರುಳಾಗಿ ಮೋಸ ಹೋಗಬಾರದು. ಅಧಿಕೃತ ಏಜೆಂಟ್‌ಗಳ ಇಲ್ಲವೇ ಸಂಬಂಧಿಸಿದ ಸರ್ಕಾರದ ಇಲಾಖೆಗಳ ಸಹಾಯ ಪಡೆಯುವಂತೆ ತಿಳಿಸಿದ್ದಾರೆ.
4
+ ರಾಮನಗರದ ನಿವಾಸಿ ಮೊಹಮದ್‌ ಅಶ್ಪಾಕ್‌ ಎಂಬುವರು ಸೌದಿ ಅರೇಬಿಯಾಕ್ಕೆ ಉದ್ಯೋಗಕ್ಕೆ ತೆರಳಿದ್ದು, ಅಲ್ಲಿ ಉದ್ಯೋಗವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದರು. ಅಶ್ಪಾಕ್‌ ಕುಟುಂಬದ ಮನವಿ ಮೇರೆಗೆ ನಮ ಸಮಿತಿಯು ಸೌದಿ ಅರೇಬಿಯದ ಭಾರತೀಯ ರಾಯಭಾರಿ ಕಚೇರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿತು. ಬಳಿಕ ಜೆದ್ದಾ ಕಾನ್ಸುಲ್‌ ಜನರಲ್‌ರನ್ನು ಸಂಪರ್ಕಿಸಿ ತ್ವರಿತವಾಗಿ ಎಕ್ಸಿಟ್‌ ಪಾಸ್‌‍ ದೊರೆಯುವಂತೆ ಮಾಡಲಾಯಿತು ಎಂದು ಅವರು ಹೇಳಿದ್ದಾರೆ.
5
+ ಕೆ.ಎನ್‌.ಆರ್‌.ಐ.ಜೆಡ್ಡಾ ಕನ್ನಡ ಸಂಘವು ವಿಮಾನ ಟಿಕೆಟ್‌ ಮತ್ತು ಭಾರತಕ್ಕೆ ವಾಪಸ್ಸಾಗುವರೆಗೂ ಆದ ವೆಚ್ಚದ ನೆರವು ನೀಡಿದೆ. ಅನಿವಾಸಿ ಭಾರತಿಯ ಸಮಿತಿಯ ಸಕಾಲಿಕ ಪ್ರಯತ್ನದಿಂದ ಅಶ್ಪಾಕ್‌ ತಾಯ್ನಾಡಿಗೆ ಮರಳಿದ್ದಾರೆ ಎಂದು ಅವರು ತಿಳಿಸಿದ್ದಾರೆ.
eesanje/url_46_73_4.txt ADDED
@@ -0,0 +1,6 @@
 
 
 
 
 
 
 
1
+ ಕರಾವಳಿಯಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ
2
+ ಬೆಂಗಳೂರು, ಜು.17-ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ಇಂದು ಕೂಡ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ.
3
+ ಕರಾವಳಿ ಭಾಗದಲ್ಲಿ ಬಲವಾದ ಮೇಲೈ ಗಾಳಿಯೊಂದಿಗೆ ಅತ್ಯಧಿಕ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಉಲ್ಲೇಖಿಸಿ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
4
+ ಅಲ್ಲದೆ, ನಾಳೆಯಿಂದ ಜು.21ರವರೆಗೆ ಕರಾವಳಿ ಭಾಗದಲ್ಲಿ ಜೋರಾದ ಗಾಳಿ ಮತ್ತು ಮಳೆ ಮುಂದುವರೆಯಲಿದೆ. ಇಂದಿನಿಂದ ಜು.21ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಹವಾಮಾನ ಮುನ್ಸೂಚನೆಗಳಿವೆ. ಹೀಗಾಗಿ ಹವಾಮಾನ ಇಲಾಖೆಯು ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ.
5
+ ಉತ್ತರ ಒಳನಾಡಿನಲ್ಲಿ ಮಳೆ ಕಡಿಮೆ ಇದೆ. ಆದರೆ, ಜುಲೈ 19ರಿಂದ ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ.ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಅರಬ್ಬೀ ಸಮುದ್ರದಲ್ಲಿ ಮೇಲುಬ್ಬರ(ಟ್ರಫ್‌) ಉಂಟಾಗಿರುವ ಪರಿಣಾಮ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಕೆಲವೆಡೆ ಭಾರೀ ಮಳೆ ಹಾಗೂ ಮತ್ತೆ ಕೆಲವೆಡೆ ಹಗುರ ಇಲ್ಲವೇ ಸಾಧಾರಣ ಮಳೆಯಾಗುತ್ತಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
6
+ ಮುಂಗಾರು ಹಂಗಾಮಿನ ಬಿತ್ತನೆ ಸಂದರ್ಭದಲ್ಲಿ ನಿರಂತರ ಮಳೆಯಾಗುತ್ತಿರುವುದು ರೈತರಿಗೆ ಖುಷಿ ತಂದಿದೆ. ಮುಂಗಾರು ಬೆಳೆಗಳ ಬಿತ್ತನೆಗೆ ಸೂಕ್ತ ವಾತಾವರಣ ಸೃಷ್ಟಿಯಾಗಿದ್ದು, ಕೃಷಿ ಚಟುವಟಿಕೆಗಳು ಚುರುಕಾಗಿವೆ.
eesanje/url_46_73_5.txt ADDED
@@ -0,0 +1,7 @@
 
 
 
 
 
 
 
 
1
+ 110 ಅಡಿ ದಾಟಿದ ಕೆಆರ್‌ಎಸ್‌‍ ಜಲಾಶಯದ ನೀರಿನಮಟ್ಟ
2
+ ಬೆಂಗಳೂರು, ಜು.17-ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌‍ ಜಲಾಶಯಕ್ಕೆ ಒಂದೇ ದಿನ ಮೂರು ಅಡಿಯಷ್ಟು ನೀರು ಬಂದಿದ್ದು, ಇಂದು 110 ಅಡಿಗಿಂತ ಹೆಚ್ಚು ನೀರು ಸಂಗ್ರಹವಾಗಿದೆ.
3
+ ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾದ ಪರಿಣಾಮ ಕೆಆರ್‌ಎಸ್‌‍ ಜಲಾಶಯದ ಒಳಹರಿವು ನಿರಂತರವಾಗಿ ಹೆಚ್ಚಾಗಿದೆ. ಇಂದು 36,674 ಕ್ಯೂಸೆಕ್‌ ಒಳಹರಿವು ಇತ್ತು.
4
+ ನಿನ್ನೆ 107.60 ಅಡಿ ಇದ್ದ ಕೆಆರ್‌ಎಸ್‌‍ ಜಲಾಶಯದ ನೀರಿನ ಮಟ್ಟವು ಇಂದು 110.60 ಅಡಿಗೆ ತಲುಪಿದೆ. ನಿನ್ನೆ ಕೆಆರ್‌ಎಸ್‌‍ ಜಲಾಶಯದಲ್ಲಿ 29.378 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು. ಇಂದು 32.330 ಟಿಎಂಸಿ ಅಡಿಗೆ ಏರಿಕೆಯಾಗಿದೆ.
5
+ ಈ ಜಲಾಶಯದ ಗರಿಷ್ಠ ಮಟ್ಟ ಸಾಮರ್ಥ್ಯ 124.80 ಅಡಿ ಆಗಿದೆ. ಅಂದರೆ, ಗರಿಷ್ಠ 49.452 ಟಿಎಂಸಿ ಅಡಿ ನೀರು ಸಂಗ್ರಹವಾಗಲಿದೆ. ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದ್ದರೂ ಹೊರ ಹರಿವು 2,361 ಕ್ಯೂಸೆಕ್‌ನಷ್ಟಿದೆ.
6
+ ಇದೆ ರೀತಿ ಕಾವೇರಿ ಕೊಳ್ಳದ ಹೇಮಾವತಿ, ಹಾರಂಗಿ ಹಾಗೂ ಕಬಿನಿ ಜಲಾಶಯಗಳಿಗೂ ಒಳ ಹರಿವು ಗಣನೀಯವಾಗಿ ಏರಿಕೆಯಾಗಿದೆ. ಕಬಿನಿ ಹಾಗೂ ಹಾರಂಗಿ ಜಲಾಶಯಗಳು ಭರ್ತಿಯಾಗುವ ಸನಿಹದಲ್ಲಿವೆ. ಆದರೆ, ಒಳಹರಿವಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಜಲಾಶಯದಿಂದ ಹೊರಕ್ಕೆ ನೀರನ್ನು ಬಿಡಲಾಗುತ್ತಿದೆ.
7
+ ಭಾರೀ ಮಳೆಯಾಗುತ್ತಿರುವ ಹಾಗೂ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ಎರಡೂ ಜಲಾಶಯಗಳಿಂದ ಹೆಚ್ಚಿನ ನೀರನ್ನು ನದಿಗಳಿಗೆ ಬಿಡಲಾಗುತ್ತಿದೆ.
eesanje/url_46_73_6.txt ADDED
@@ -0,0 +1,7 @@
 
 
 
 
 
 
 
 
1
+ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ನೇಮಕದಲ್ಲಿ ಕರ್ನಾಟಕದ ಪ್ರಾತಿನಿಧ್ಯ ಕಡೆಗಣಿಸದಂತೆ ಮನವಿ
2
+ ಬೆಂಗಳೂರು, ಜು.17-ದೇಶದ ಇತರ ರಾಜ್ಯಗಳ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳ ನೇಮಕ ಮಾಡುವಾಗ ಕರ್ನಾಟಕದ ಪ್ರಾತಿನಿಧ್ಯದ ಕೊರತೆ ನಿವಾರಿಸುವಂತೆ ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಅವರಲ್ಲಿ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ.ರಂಗನಾಥ ಮನವಿ ಮಾಡಿದ್ದಾರೆ.
3
+ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರ ನೇಮಕಕ್ಕೆ ಸಂಬಂಧಿಸಿದಂತೆ ಕೂಲಂಕಷವಾಗಿ ಪರಿಶೀಲಿಸಿ ಅಸಮತೋಲನವನ್ನು ಪರಿಹರಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೊಲಿಜಿಯಂನ ಮುಖ್ಯಸ್ಥರಾಗಿರುವ ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿ ಅವರಿಗೆ ರಂಗನಾಥ ಅವರು ಪತ್ರ ಬರೆದಿದ್ದಾರೆ.
4
+ ನ್ಯಾಯಾಧೀಶರ ನೇಮಕಾತಿಯು ಹೆಚ್ಚು ಪಾರದರ್ಶಕ ಮತ್ತು ಅಂತರ್ಗತ ಆಯ್ಕೆ ಪ್ರಕ್ರಿಯೆಯನ್ನು ಒಳಗೊಂಡಿರುತ್ತದೆ. ಕರ್ನಾಟಕ ಸೇರಿದಂತೆ ಇತರ ಕಡಿಮೆ ಪ್ರಾತಿನಿಧ್ಯವಿರುವ ಪ್ರದೇಶಗಳಿಂದ ಅರ್ಹ ಅಭ್ಯರ್ಥಿಗಳನ್ನು ಗುರುತಿಸಲು ಮತ್ತು ಉತ್ತೇಜಿಸಲು ಸಂಘಟಿತ ಪ್ರಯತ್ನವಿರಬೇಕು ಎಂದು ಭಾವಿಸುವುದಾಗಿ ಅವರು ಪತ್ರದಲ್ಲಿ ತಿಳಿಸಿದ್ದಾರೆ.
5
+ ಭಾರತದಾದ್ಯಂತ ಇರುವ ಇತರ ರಾಜ್ಯಗಳ ಹೈಕೋರ್ಟ್‌ಗಳಲ್ಲಿ ಮುಖ್ಯ ನ್ಯಾಯಮೂರ್ತಿ ಹುದ್ದೆಯ ನೇಮಕಾತಿಯಲ್ಲಿ ಕರ್ನಾಟಕ ಹೈಕೋರ್ಟಿನ ನ್ಯಾಯಾಧೀಶರ ಪ್ರಾತಿನಿಧ್ಯ ಕಡಿಮೆ ಇರುವ ಬಗ್ಗೆ ಕಳವಳದೊಂದಿಗೆ ಪತ್ರ ಬರೆದಿರುವುದಾಗಿ ಹೇಳಿದ್ದಾರೆ.
6
+ ಕರ್ನಾಟಕ ಉಚ್ಚ ನ್ಯಾಯಾಲಯವು ಹಲವು ವರ್ಷಗಳಿಂದ ಹೆಚ್ಚು ಸಮರ್ಥ ಮತ್ತು ಅನುಭವಿ ನ್ಯಾಯಾಧೀಶರನ್ನು ಸೃಷ್ಟಿಸಿದೆ. ಅವರಲ್ಲಿ ಹಲವರು ತಮ್ಮ ಕಾನೂನು ಚಾತುರ್ಯ, ನ್ಯಾಯಾಂಗ ಮನೋಧರ್ಮ ಮತ್ತು ಸಂವಿಧಾನವನ್ನು ಎತ್ತಿಹಿಡಿಯುವ ಬದ್ಧತೆಯ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ. ಆದರೂ, ಇತ್ತೀಚಿನ ವರ್ಷಗಳಲ್ಲಿ ಇತರ ರಾಜ್ಯಗಳ ಹೈಕೋರ್ಟ್‌ಗಳಲ್ಲಿ ಮುಖ್ಯ ನ್ಯಾಯಮೂರ್ತಿಗಳ ನೇಮಕಾತಿಯಾಗುವಾಗ ಕರ್ನಾಟಕದ ನ್ಯಾಯಾಧೀಶರನ್ನು ನಿರಂತರವಾಗಿ ಕಡೆಗಣಿಸಲಾಗುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
7
+ ನ್ಯಾಯಾಂಗ ನೇಮಕಾತಿಗಳ ಪ್ರಕ್ರಿಯೆಯು ಹಿರಿತನ, ಅರ್ಹತೆ ಮತ್ತು ಪ್ರಾದೇಶಿಕ ಸಮತೋಲನದ ಪರಿಗಣನೆಗಳನ್ನು ಒಳಗೊಂಡಿರುವ ಒಂದು ಸಂಕೀರ್ಣ ಪ್ರಕ್ರಿಯೆಯಾಗಿದೆ ಎಂದು ಅರ್ಥಮಾಡಿಕೊಳ್ಳಬಹುದು ಎಂದು ರಂಗನಾಥ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ..
eesanje/url_46_73_7.txt ADDED
@@ -0,0 +1,8 @@
 
 
 
 
 
 
 
 
 
1
+ ಹಾಸನಾಂಬ ದರ್ಶನ ಮಹೋತ್ಸವಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ
2
+ ಹಾಸನ ಜು.17-ಶ್ರೀ ಹಾಸನಾಂಬ ದೇವಾಲಯದ ಬಾಗಿಲನ್ನು ಅ.24 ಕ್ಕೆ ತೆರೆದು ನ.3 ರಂದು ಬಾಗಿಲು ಮುಚ್ಚಲಾಗುವುದು. ಜಾತ್ರಾ ಮಹೋತ್ಸವವು ಅಚ್ಚುಕಟ್ಟಾಗಿ ಹಾಗೂ ಅತ್ಯಂತ ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ಧತೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
3
+ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ 9 ದಿನಗಳು ಮಾತ್ರ ದೊರಕುತ್ತದೆ. ಭಕ್ತಾಧಿಗಳಿಗೆ ದೇವಿ ದರ್ಶನ ಪಡೆಯಲು ಅವಕಾಶ ಕಲ್ಪಿಸುವ ನಿಟ್ಡಿನಲ್ಲಿ ಸುಸ್ಸಜ್ಜಿತವಾದ ಸಿದ್ದತೆ ಮಾಡಿಕೊಳ್ಳುವುದರ ಜೊತೆಗೆ ಕಳೆದ ಬಾರಿ ಕಂಡು ಬಂದಿರುವ ಸಣ್ಣಪುಟ್ಟ ಲೋಪದೋಷಗಳನ್ನು ಗಮನಿಸಿ ಸರಿಪಡಿಸಲು ಅಧಿಕಾರಿಗಳು ನಿಗಾ ವಹಿಸುವಂತೆ ಸೂಚಿಸಿದರು.
4
+ ಕುಡಿಯುವ ನೀರು, ವಿದ್ಯುತ್‌ ದೀಪಾಲಂಕಾರ, ಹೂವಿನ ಅಲಂಕಾರ, ಲಡ್ಡು ಪ್ರಸಾದ, ದೊನ್ನೆ ಪ್ರಸಾದ ಮತ್ತಿತರೆ ಅಗತ್ಯವಿರುವ ಎಲ್ಲಾ ಸಿದ್ದತೆಗಾಗಿ ಒಂದು ವಾರದೊಳಗೆ ಟೆಂಡರ್‌ ಕರೆಯುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಜಾತ್ರಾ ಸಂದರ್ಭದಲ್ಲಿ ಸ್ವಚ್ಚತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಹೆಚ್ಚು ಜನಸಂದಣಿ ಇರುವ ಕಾರಣ ಶೌಚಾಲಯ ನಿರ್ವಹಣೆ ಬಹಳ ಅಚ್ಚುಕಟ್ಟಾಗಿ ಆಗಬೇಕು ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದರು.
5
+ ಯಾವುದೇ ಅವಘಡಗಳಿಗೆ ಆಸ್ಪದವಿಲ್ಲದಂತೆ ದೇವಸ್ಥಾನದ ಸುತ್ತ ಇರುವ ವಿದ್ಯುತ್‌ ಲೈನ್‌ ಅನ್ನು ಅಂಡರ್‌ ಗ್ರೌಂಡ್‌ ಕೇಬಲ್‌ ಅಳವಡಿಸಲು ಚೆಸ್ಕಾಂ ಅಧಿಕಾರಿಗಳು ಕ್ರಮ ವಹಿಸುವಂತೆ ತಿಳಿಸಿದರಲ್ಲದೆ, ಸುರಕ್ಷತಾ ಕ್ರಮಗಳನ್ನು ಕೈಗೊಂಡು ಜಾತ್ರಾ ಸಂದರ್ಭದಲ್ಲಿ ವಿದ್ಯುತ್‌ ನಿರ್ವಹಣೆಯ ಸಂಪೂರ್ಣ ಜವಾಬ್ದಾರಿಯನ್ನು ಇಲಾಖೆ ಅಧಿಕಾರಿಗಳು ನಿರ್ವಹಿಸುವಂತೆ ನಿರ್ದೇಶನ ನೀಡಿದರು.
6
+ ಆನ್‌ಲೈನ್‌ ಬುಕ್ಕಿಂಗ್‌ :ದೇವಿ ದರ್ಶನಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಅನುಕೂಲವಾಗುವಂತೆ ಈ ಬಾರಿ ಆನ್‌ ಲೈನ್‌ ಬುಕಿಂಗ್‌ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದರು. ಹೂವಿನ ಅಲಂಕಾರವನ್ನು ಕಳೆದ ಬಾರಿಗಿಂತ ವಿಭಿನ್ನವಾಗಿ ಮಾಡಿಸಲು ಪ್ರಯತ್ನಿಸಿ ಎಂದು ತಿಳಿಸಿದರು.
7
+ ಪ್ಯಾಕೇಜ್‌ ಟೂರ್‌ :ಪ್ರವಾಸಿಗರು ಹಾಸನ ಜಿಲ್ಲೆಯಲ್ಲಿರುವ ಪ್ರೇಕ್ಷಣೀಯ ಸ್ಥಳಗಳನ್ನು ನೋಡಲು ಅನುಕೂಲವಾಗುವಂತೆ ಕೆ.ಎಸ್‌‍.ಆರ್‌.ಟಿ.ಸಿ. ಬಸ್‌‍ಗಳಲ್ಲಿ ಪ್ಯಾಕೇಜ್‌ ಟೂರ್‌ ವ್ಯವಸ್ಥೆ ಮಾಡುವಂತೆ ಸೂಚಿಸಿದರು. ಪ್ರವಾಸೋದ್ಯಮ ಇಲಾಖೆ ವತಿಯಿಂದ ಪ್ಯಾರ ಮೋಟರಿಂಗ್‌, ಪ್ಯಾರ ಗ್ಲೈಡಿಂಗ್‌ ಹಾಗೂ ಹಾಸನ ಬೈ ಸ್ಕೈ ಆಯೋಜನೆಗೆ ಕ್ರಮ ವಹಿಸಿ ಎಂದು ತಿಳಿಸಿದರಲ್ಲದೆ, ಚನ್ನಪಟ್ಟಣ ಕೆರೆ ಅಂಗಳದಲ್ಲಿ ನಿರ್ಮಿಸಿರುವ ವಿಹಾರ ಧಾಮದಲ್ಲಿ ಬೋಟಿಂಗ್‌ ವ್ಯವಸ್ಥೆಗೆ ಕೂಡ ನಿಗಾ ವಹಿಸಲು ಸೂಚಿಸಿದರು.
8
+ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕ್ರೆಡಾಕೂಟ ಆಯೋಜನೆಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರಲ್ಲದೆ, ನಗರದ ರಸ್ತೆಗಳ ಗುಂಡಿ ಮುಚ್ಚುವುದು ಹಾಗೂ ಸ್ವಚ್ಚತೆಗೆ ಗಮನ ಹರಿಸುವಂತೆ ನಗರ ಸಭೆ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್‌. ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಚೆಸ್ಕಾಂ ಸೂಪರಿಟೆಂಡೆಂಟ್‌ ಇಂಜಿನಿಯರ್‌ ಎಂ.ಕೆ.ಸೋಮಶೇಖರ್‌, ಉಪ ವಿಭಾಗಾಧಿಕಾರಿ ಮಾರುತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಿ.ಎ.ಜಗದೀಶ್‌ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
eesanje/url_46_73_8.txt ADDED
@@ -0,0 +1,8 @@
 
 
 
 
 
 
 
 
 
1
+ ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ಚಿಂತನೆ
2
+ ಬೆಂಗಳೂರು,ಜು.16-ಕರ್ನಾಟಕದ ಮದರಸಾ ಗಳಲ್ಲಿ ಉರ್ದುವಿನಲ್ಲೇ ಬೋಧನೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ರಾಜ್ಯ ಸರ್ಕಾರ ಅಲ್ಲಿಯೂ ಕನ್ನಡ ಕಡ್ಡಾಯಗೊಳಿಸಲು ಚಿಂತನೆ ನಡೆಸಿದೆ. ಇನ್ನು ಮುಂದೆ ರಾಜ್ಯದ ಮದರಸಾಗಳಲ್ಲಿ ಕಡ್ಡಾಯ ವಾಗಿ ಕನ್ನಡದಲ್ಲೇ ಬೋಧನೆ ಮಾಡಬೇಕು ಎಂಬ ದಿಸೆಯಲ್ಲಿ ಆದೇಶ ಹೊರಡಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಹೊಸ ಯೋಜನೆ ರೂಪಿಸಿದೆ. ಈ ಕುರಿತಂತೆ ಕನ್ನಡ ಕಡ್ಡಾಯಗೊಳಿಸಿ ಶೀಘ್ರದಲ್ಲೇ ಆದೇಶ ಹೊರಡಿಸಲಾಗುತ್ತದೆ ಎಂದು ತಿಳಿದುಬಂದಿದೆ.
3
+ ರಾಜ್ಯದಲ್ಲಿ ಸಾವಿರಾರು ಮದರಸಾಗಳಿದ್ದು, ಮುಸ್ಲಿಂ ವಿದ್ಯಾರ್ಥಿಗಳಿಗೆ ಬೋಧಕರು ಕನ್ನಡದಲ್ಲಿ ಪಾಠ ಮಾಡಲು, ಕನ್ನಡ ಕಲಿಸಲು ಹಿಂದೇಟು ಹಾಕುತ್ತಿದ್ದಾರೆ. ಇದಕ್ಕಾಗಿಯೇ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಹೊಸ ಯೋಜನೆ ರೂಪಿಸಿದೆ. ಕನ್ನಡದಲ್ಲೇ ಪಾಠ ಮಾಡಬೇಕು. ವಾರದಲ್ಲಿ ಕನಿಷ್ಠ 2-3 ಗಂಟೆ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿಯೇ ಬೋಧನೆ ಮಾಡಬೇಕು. ಆ ಮೂಲಕ ಮಕ್ಕಳು ಕನ್ನಡ ಕಲಿಯುವಂತಾಗಬೇಕು ಎಂಬ ದೃಷ್ಟಿಯಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಯೋಜನೆ ರೂಪಿಸಿದೆ.
4
+ ಹಾಗೊಂದು ವೇಳೆ, ಪ್ರಾಧಿಕಾರವು ಆದೇಶ ಹೊರಡಿಸಿದರೆ, ಮುಸ್ಲಿಂ ಮಕ್ಕಳು ಮದರಸಾಗಳಲ್ಲಿ ಕನ್ನಡ ಕಲಿಯಲಿದ್ದಾರೆ. ಮದರಸಾಗಳಲ್ಲಿ ರಾಮನ ಕುರಿತು ಅಧ್ಯಯನ ಉತ್ತರಾಖಂಡದ ಮದರಸಾ ಗಳಲ್ಲೂ ಶ್ರೀರಾಮನ ಕುರಿತು ಅಧ್ಯಯನ ನಡೆಯಬೇಕು ಎಂದು ಹೊಸ ಪಠ್ಯವನ್ನು ಅಳವಡಿಸಿಕೊಳ್ಳಲಾಗುತ್ತಿದೆ.
5
+ ಆ ಮೂಲಕ ಇನ್ನು ಮುಸ್ಲಿಂ ವಿದ್ಯಾರ್ಥಿಗಳು ಕೂಡ ರಾಮನ ಕುರಿತು ಅಧ್ಯಯನ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಇದು ಧಾರ್ಮಿಕ ಸೌಹಾರ್ದತೆಯ ಸಂಕೇತವೂ ಆಗಿದೆ ಎನ್ನಲಾಗುತ್ತಿದೆ.
6
+ ಈ ಕುರಿತು ಉತ್ತರಾಖಂಡ ವಕ್ಸ್ ಫ ಬೋರ್ಡ್‌ ಚೇರ್ಮನ್‌ ಆಗಿರುವ ಶಾದಾಬ್‌ ಶಾಮ್ಸೌ ಅವರೇ ಕೆಲ ತಿಂಗಳ ಹಿಂದೆ ಮಾಹಿತಿ ನೀಡಿದ್ದರು. ಮದರಸಾ ಆಧುನೀಕರಣ ಯೋಜನೆಯ ಭಾಗವಾಗಿ ಇನ್ನು ಮುಂದೆ ಉತ್ತರಾಖಂಡದ ಮದರಸಾಗಳಲ್ಲೂ ಶ್ರೀರಾಮನ ಕುರಿತ ಪಠ್ಯಗಳನ್ನು ಅಳವಡಿಸಿಕೊಳ್ಳ ಲಾಗುತ್ತದೆ. ಮುಸ್ಲಿಂ ವಿದ್ಯಾರ್ಥಿಗಳು ಪ್ರವಾದಿ ಮೊಹಮದರ ಜತೆಗೆ ಶ್ರೀರಾಮನ ಕುರಿತು ಕೂಡ ಅಧ್ಯಯನ ಮಾಡಲಿದ್ದಾರೆ ಎಂದು ತಿಳಿಸಿದ್ದರು.
7
+ ಶಾದಾಬ್ ಶಾಮ್ಸೌ ಅವರು ಬಿಜೆಪಿ ಮುಖಂಡರೂ ಆಗಿದ್ದು, ಅವರು ಮದರಸಾಗಳಲ್ಲಿ ಬೋಧನೆ ಮಾಡುವ ಮೌಲ್ವಿಗಳನ್ನೂ ಒಪ್ಪಿಸಿದ್ದಾರೆ. ಧರ್ಮ, ಜಾತಿಯ ಸಂಕೋಲೆಗಳು ಇಲ್ಲದೆಯೇ ರಾಮನನ್ನು ಆರಾಧಿಸಬಹುದು. ಆತನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬಹುದು ಎಂಬ ಮನೋಭಾವದಿಂದ ಶಾದಾಬ್‌ ಶಾಮ್ಸೌ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
8
+ ಉತ್ತರಾಖಂಡದ ವಕ್ಸ್ ಫ ಬೋರ್ಡ್‌ ವ್ಯಾಪ್ತಿಗೆ ಸುಮಾರು 117 ಮದರಸಾಗಳು ಬರುತ್ತವೆ. ಡೆಹ್ರಾಡೂನ್‌, ಹರಿದ್ವಾರ, ಉಧಾಮ್‌ ಸಿಂಗ್‌ ನಗರ ಹಾಗೂ ನೈನಿತಾಲ್‌ ಜಿಲ್ಲೆ ಸೇರಿ ಹಲವೆಡೆ ವಕ್ಸ್ ಫ ಬೋರ್ಡ್‌ ವ್ಯಾಪ್ತಿಯ ಮದರಸಾಗಳಲ್ಲಿ ರಾಮನ ಕುರಿತ ಅಧ್ಯಾಯಗಳನ್ನು ಸೇರಿಸಲಾಗುತ್ತದೆ ಎಂದು ತಿಳಿದುಬಂದಿದೆ.
eesanje/url_46_73_9.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಮೇಲ್ಮನೆಯಲ್ಲಿ ವಿರೋಧ ಪಕ್ಷದ ನಾಯಕರೇ ಇಲ್ಲ
2
+ ಬೆಂಗಳೂರು,ಜು.16-ರಾಜ್ಯ ವಿಧಾನ ಮಂಡಲದ ಅಧಿವೇಶನ ಆರಂಭಗೊಂಡಿದ್ದು, ವಿಧಾನ ಪರಿಷತ್ತಿಗೆ ಪ್ರತಿಪಕ್ಷದ ನಾಯಕನ ಆಯ್ಕೆಗೆ ಯಾವುದೇ ಹೆಸರನ್ನು ಅಂತಿಮ ಗೊಳಿಸದ ಕಾರಣ ವಿರೋಧ ಪಕ್ಷದ ನಾಯಕರೇ ಇಲ್ಲದೇ ಬಿಜೆಪಿ ಭಾಗಿಯಾಗುವಂತಾಗಿದೆ.
3
+ ವಿರೋಧ ಪಕ್ಷದ ನಾಯಕನ ಆಸನ ಖಾಲಿಯಿಟ್ಟು ಕೇಸರಿ ಪಡೆ ಸದನದಲ್ಲಿ ಹಾಜರಾಗಿದ್ದು, ಯಾರ ನಾಯಕತ್ವದಲ್ಲಿ ಮುನ್ನಡೆಯಬೇಕು ಎನ್ನುವ ಗೊಂದಲದಲ್ಲೇ ಸದಸ್ಯರು ಕಲಾಪದಲ್ಲಿ ಮುಂದುವರೆಯುವ ಅನಿವಾರ್ಯತೆ ಸೃಷ್ಟಿಯಾಗಿದೆ.
4
+ ವಿರೋಧಪಕ್ಷ ನಾಯಕ ಸ್ಥಾನದ ಹುದ್ದೆ ಖಾಲಿ ಇರುವುದರಿಂದ ಮೊದಲ ದಿನದ ಕಲಾಪ ದಲ್ಲಿಯೇ ಇದರ ಪರಿಣಾಮ ಬಿಜೆಪಿಗೆ ತಟ್ಟಿದೆ. ನಿಲುವಳಿ ಸೂಚನೆ ಮಂಡನೆ, ಪ್ರಶ್ನೋತ್ತರ ಕಲಾಪದಲ್ಲಿ ಉಪ ಪ್ರಶ್ನೆಗಳಿಗೆ ಸಾಥ್‌ ಕೊರತೆ, ಸಭಾಪತಿಗಳ ಮೂಲಕ ಸರ್ಕಾರಕ್ಕೆ ಚಾಟಿ ಬೀಸುವ ಅವಕಾಶವನ್ನು ತಪ್ಪಿಸಿಕೊಂಡಿತು.
5
+ ವಿರೋಧ ಪಕ್ಷದ ನಾಯಕರು ಯಾವಾಗ ಎದ್ದು ನಿಂತರೂ ಅವರು ಮಾತನಾಡಲು ಅವಕಾಶ ಕೊಡಲಾಗುತ್ತದೆ. ಆದರೆ ಈಗ ಆ ಸ್ಥಾನ ಖಾಲಿ ಇರುವ ಕಾರಣ ಬಿಜೆಪಿ ಸದಸ್ಯರು ಅಗತ್ಯ ಬಿದ್ದಾಗಲೆಲ್ಲಾ ಮಧ್ಯಪ್ರವೇಶ ಮಾಡಿ ಸರ್ಕಾರವನ್ನು ಟೀಕಿಸುವ ಅವಕಾಶ ಕಳೆದುಕೊಂಡಿದ್ದಾರೆ.
6
+ ಇದು ಒಂದು ರೀತಿಯಲ್ಲಿ ಸರ್ಕಾರಕ್ಕೆ ಧನಾತಕವಾದ ಅಂಶವಾಗಿದೆ. ಆಡಳಿತ ಪಕ್ಷದ ಚರ್ಚೆಯ ಬೇಡಿಕೆಗೆ ವಿರೋಧ ವ್ಯಕ್ತಪಡಿಸಲು ವಿರೋಧ ಪಕ್ಷದ ನಾಯಕರಿಲ್ಲದ ಕಾರಣ ಆಡಳಿತ ಪಕ್ಷಕ್ಕೆ ಕೆಲವೊಂದು ವಿಷಯ ಆಕ್ಷೇಪಣೆ ಯಿಲ್ಲದೆ ಅರ್ಧ ಗಂಟೆ ಚರ್ಚೆಗೆ ಅವಕಾಶ ಪಡೆದುಕೊಳ್ಳಲು ಸಾಧ್ಯವಾಯಿತು.
7
+ ಭಾನುವಾರ ರಾತ್ರಿ ವೇಳೆಗೆ ಹೈಕಮಾಂಡ್‌ನಿಂದ ವಿರೋಧ ಪಕ್ಷದ ನಾಯಕರ ಹೆಸರು ಪ್ರಕಟವಾಗಲಿದೆ ಎನ್ನುವ ನಿರೀಕ್ಷೆ ಇತ್ತು. ಆದರೆ, ಬೆಳಗ್ಗೆ ಕಲಾಪ ಶುರುವಾದರೂ ಹೈಕಮಾಂಡ್‌ ಕಡೆಯಿಂದ ಯಾವುದೇ ಸಂದೇಶ ಬಾರದ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕರಿಲ್ಲದೆ ಬಿಜೆಪಿ ಸದನಕ್ಕೆ ಹಾಜರಾಗುವಂತಾಗಿದೆ.
8
+ ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕರಾಗಿದ್ದ ಕೋಟಾ ಶ್ರೀನಿವಾಸ ಪೂಜಾರಿ ಸಂಸತ್‌ ಸದಸ್ಯರಾಗಿ ಆಯ್ಕೆಯಾಗಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆ, ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕನ ಸ್ಥಾನ ತೆರವಾಗಿದ್ದು, ಆ ಸ್ಥಾನಕ್ಕೆ ಮತ್ತೊಬ್ಬರ ನೇಮಕ ಮಾಡಲು ಬಿಜೆಪಿ ಮತ್ತೆ ವಿಳಂಬ ಮಾಡುತ್ತಿದೆ.ವರ್ಷದ ಹಿಂದೆಯೂ ಈ ಸ್ಥಾನವನ್ನು ಖಾಲಿಯಾಗಿಟ್ಟೇ ಎರಡು ಅಧಿವೇಶನ ಮುಗಿಸಿದ್ದ ಬಿಜೆಪಿ, ಈಗ ಮತ್ತೊಮೆ ಅಂತಹದ್ದೇ ಸ್ಥಿತಿ ಎದುರಿಸುವಂತಾಗಿದೆ.
9
+ 2023ರ ಮೇ ತಿಂಗಳಿನಲ್ಲಿಯೇ ಕಾಂಗ್ರೆಸ್‌‍ ಸರ್ಕಾರ ರಚಿಸಿದರೂ ಬಿಜೆಪಿಗೆ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡಲು ಆರು ತಿಂಗಳು ಬೇಕಾಯಿತು. ಡಿಸೆಂಬರ್‌ನಲ್ಲಿ ವಿಧಾನಪರಿಷತ್‌ ಪ್ರತಿಪಕ್ಷದ ನಾಯಕನನ್ನು ಆಯ್ಕೆ ಮಾಡಿತು. ಇದೀಗ ಮತ್ತೆ ಹೊಸ ಪ್ರತಿಪಕ್ಷ ನಾಯಕರ ತಲಾಶ್‌ನಲ್ಲಿ ಬಿಜೆಪಿ ಹೈಕಮಾಂ���್‌ ನಿರತವಾಗಿದೆ. ಸದ್ಯ ಪರಿಷತ್‌ ಪ್ರತಿಪಕ್ಷದ ಸಚೇತಕರಾಗಿರುವ ರವಿಕುಮಾರ್‌ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಅನುಭವಿ, ಉತ್ತಮ್ಮ ಸಂಘಟಕ, ಪಕ್ಷಕ್ಕೆ ಸಲ್ಲಿಸಿರುವ ಸೇವೆ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ವ್ಯಕ್ತಿಯೂ ಆಗಿರುವ ಹಿನ್ನೆಲೆಯಲ್ಲಿ ರವಿಕುಮಾರ್‌ ಅವರನ್ನೇ ಪ್ರತಿಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ.
10
+ ಉತ್ಸಾಹದಲ್ಲಿ ಸಿ.ಟಿ.ರವಿ: ಸಿ.ಟಿ.ರವಿ ಉತ್ತಮ್ಮ ವಾಗಿ, ಪಕ್ಷದ ನಿಷ್ಟಾವಂತ ಕಾರ್ಯ ಕರ್ತ. ಯಡಿಯೂರಪ್ಪ ಸಂಪುಟದಲ್ಲಿದ್ದಾಗ ಸಂಘಟನೆಗೆ ಬರುವಂತೆ ಪಕ್ಷ ನೀಡಿದ್ದ ನಿರ್ದೇಶನವನ್ನು ಪಾಲಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ಜವಾಬ್ದಾರಿ ವಹಿಸಿಕೊಂಡಿದ್ದವರು.
11
+ ಪಕ್ಷದ ಶಿಸ್ತಿನ ಸಿಪಾಯಿ, ಕ್ರಿಯಾಶೀಲತೆ, ರಾಜಕೀಯ ಅನುಭವದ ಆಧಾರದಲ್ಲಿ ಸರ್ಕಾರವನ್ನು ಇಕ್ಕಟ್ಟಿನಲ್ಲಿ ಸಿಲುಕಿಸುವ ಚಾಕಚಕ್ಯತೆ ಇರುವ ಹಿನ್ನೆಲೆ ಸಿ. ಟಿ ರವಿ ಬಿಜೆಪಿಗೆ ಉತ್ತಮ್ಮ ಆಯ್ಕೆ. ಆದರೆ ಉಭಯ ಸದನಗಳಲ್ಲಿಯೂ ಒಕ್ಕಲಿಗ ಸಮುದಾಯಕ್ಕೆ ವಿರೋಧ ಪಕ್ಷದ ನಾಯಕನ ಸ್ಥಾನ ನೀಡಲು ಕಷ್ಟಸಾಧ್ಯವಾಗಿರುವ ಹಿನ್ನೆಲೆ ಸದ್ಯದ ಮಟ್ಟಿಗೆ ಸಿ.ಟಿ.ರವಿಗೆ ಅವಕಾಶ ಸಿಗುವುದು ಅನುಮಾನ ಎಂಬ ಮಾತುಗಳು ಕೇಳಿಬರುತ್ತಿವೆ.
12
+ ಆದರೂ ಹೈಕಮಾಂಡ್‌ ನಿರ್ಧಾರದ ಮೇಲೆ ಎಲ್ಲವೂ ನಿಂತಿದೆ. ಸದ್ಯ ಸದನಕ್ಕೆ ಉತ್ಸಾಹದಲ್ಲಿ ಭಾಗಿಯಾಗಿರುವ ಸಿ ಟಿ ರವಿ, ಬಿಜೆಪಿ ಪರ ಗಟ್ಟಿ ದನಿಯಾಗಿ ಮಾತನಾಡುತ್ತಿ ದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ರಾಧಾಮೋಹನ್‌ ದಾಸ್‌‍ ಅಗರ್ವಾಲ್‌ ನೇಮಕಗೊಂಡ ನಂತರ ಮೊದಲ ಕಾರ್ಯಕಾರಿಣಿ ಪೂರ್ಣಗೊಂಡಿದ್ದು, ನಂತರ ನಡೆದ ಅನೌಪಚಾರಿಕ ಸಭೆಯಲ್ಲಿ ಪರಿಷತ್‌ ಪ್ರತಿಪಕ್ಷ ನಾಯಕರ ಆಯ್ಕೆ ವಿಷಯದ ಕುರಿತು ಚರ್ಚೆಯಾಗಿದೆ. ಆಕಾಂಕ್ಷಿಗಳ ಪಟ್ಟಿಯೊಂದಿಗೆ ಅಗರ್ವಾಲ್‌ ದೆಹಲಿಗೆ ತೆರಳಿದ್ದು, ಹೈಕಮಾಂಡ್‌ ಮಟ್ಟದಲ್ಲಿ ಚರ್ಚೆಯಾಗಿದೆ.
eesanje/url_46_74_1.txt ADDED
@@ -0,0 +1,10 @@
 
 
 
 
 
 
 
 
 
 
 
1
+ ನನ್ನ ಮಗ ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಿ : ವಿಧಾನಸಭೆಯಲ್ಲಿ ರೇವಣ್ಣ ಆಕ್ರೋಶ
2
+ ಬೆಂಗಳೂರು,ಜು.16-ಹಾಸನದ ಪೆನ್‌ಡ್ರೈವ್‌ ಪ್ರಕರಣ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿದ್ದು, ವಾದ-ಪ್ರತಿವಾದಗಳಿಂದಾಗಿ ಕಾವೇರಿದ ವಾತಾವರಣ ನಿರ್ಮಾಣವಾಯಿತು. ವಿಧಾನಸಭೆಯಲ್ಲಿ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ರವರು ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮಗಳ ಕುರಿತು ಚರ್ಚೆ ಮಾಡುವ ವೇಳೆಯಲ್ಲಿ ರಾಜ್ಯಸರ್ಕಾರ ರಚಿಸಿರುವ ಎಸ್‌‍ಐಟಿ ತನಿಖೆಯ ತಾರತಮ್ಯವನ್ನು ಪ್ರಸ್ತಾಪಿಸಿದರು.
3
+ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ತನಿಖೆ ನಡೆಸುತ್ತಿರುವ ಎಸ್‌‍ಐಟಿ ತಂಡ ಎಫ್‌ಐಆರ್‌ ದಾಖಲಾಗಿ 40 ದಿನಗಳಾದರೂ ಮಾಜಿ ಸಚಿವ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ಅವರನ್ನು ವಿಚಾರಣೆಗೆ ಕರೆಯುವುದಿಲ್ಲ. ಅದೇ ರೀತಿ ರೇವಣ್ಣನ ಮಗ ಮಾಡಿದ ತಪ್ಪಿಗೆ ರೇವಣ್ಣ ಅವರನ್ನು ಬಂಧಿಸಿ ಜೈಲಿಗೆ ಹಾಕಲಾಯಿತು. ಬೆಂಗಳೂರು, ಹಾಸನ, ಹೊಳೆನರಸೀಪುರದಲ್ಲಿರುವ ರೇವಣ್ಣ ಅವರ ಮನೆಗೆ ತಲಾ 20 ಮಂದಿ ಪೊಲೀಸರ ತಂಡಗಳನ್ನು ನಿಯೋಜಿಸಲಾಗಿತ್ತು.
4
+ ರೇವಣ್ಣ ಅವರ ಪತ್ನಿ ಭವಾನಿಯವರ ಬಂಧನಕ್ಕೂ ಪ್ರಯತ್ನಿಸಲಾಯಿತು. ಅವರು ನ್ಯಾಯಾಲಯದಲ್ಲಿ ಜಾಮೀನು ಪಡೆದುಕೊಂಡರು. ನಮ್ಮ ಪಕ್ಷದ ಮಾಜಿ ಶಾಸಕ ಪ್ರೀತಂಗೌಡ ಅವರನ್ನು ಬಂಧಿಸುವ ಯತ್ನಗಳಾದವು. ಎಸ್‌‍ಐಟಿ ಅಧಿಕಾರಿಗಳ ಈ ತಾರತಮ್ಯ ಏಕೆ ಎಂದು ಪ್ರಶ್ನಿಸಿದರು. ಮಧ್ಯಪ್ರವೇಶಿಸಿದ ಜೆಡಿಎಸ್‌‍ನ ಹಿರಿಯ ಶಾಸಕರೂ ಆಗಿರುವ ಎಚ್‌.ಡಿ.ರೇವಣ್ಣ, ವಿರೋಧಪಕ್ಷದ ನಾಯಕರು ನನ್ನ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಸ್ಪಷ್ಟನೆ ನೀಡಲು ನನಗೆ ಅವಕಾಶ ಕೊಡಬೇಕು ಎಂದು ಮನವಿ ಮಾಡಿದರು.
5
+ ಜೆಡಿಎಸ್‌‍ನ ಶಾಸಕ ಕೃಷ್ಣಪ್ಪ ಅವರು, ರೇವಣ್ಣ ಅವರ ಪುತ್ರ ತಪ್ಪು ಮಾಡಿದ್ದಾರೆ ಎಂದು ಹೇಳುವುದು ಸರಿಯಲ್ಲ. ಅದನ್ನು ನ್ಯಾಯಾಲಯ ತೀರ್ಮಾನ ಮಾಡುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಆರ್‌.ಅಶೋಕ್‌ ಅವರು ತಮ್ಮ ಹೇಳಿಕೆಯನ್ನು ಸರಿಪಡಿಸಿಕೊಳ್ಳುವುದಾಗಿ ಹೇಳಿದರು.
6
+ ಚರ್ಚೆಯ ನಡುವೆ ಪದೇಪದೇ ವಿಷಯ ಪ್ರಸ್ತಾಪವಾದಾಗ ಕಾಂಗ್ರೆಸ್‌‍ನ ಶಾಸಕ ರಿಜ್ವಾನ್‌ ಹರ್ಷದ್‌, ಎರಡು ಎಸ್‌‍ಐಟಿ ತಂಡಗಳ ನಡುವೆ ಪದೇ ಪದೇ ಹೋಲಿಕೆ ಮಾಡಿ ಮಾತನಾಡುತ್ತಿರುವುದು ಏಕೆ?, ನೂರಾರು ಮಹಿಳೆಯರ ಮಾನಹರಣವಾಗಿರುವ ಪ್ರಕರಣ ವಾಲ್ಮೀಕಿ ಹಗರಣಕ್ಕಿಂತಲೂ ಕಡಿಮೆ ಎಂಬ ಧೋರಣೆಯೇ?, ಮಹಿಳೆಯರ ಮಾನಕ್ಕೆ ಬೆಲೆ ಇಲ್ಲವೇ? ಎಂದು ಆಕ್ಷೇಪ ವ್ಯಕ್ತಪಡಿಸಿದರು.
7
+ ಕಾಂಗ್ರೆಸ್‌‍ನ ಶಾಸಕ ನಾರಾಯಣ ಸ್ವಾಮಿಯವರು ಮಧ್ಯಪ್ರವೇಶ ಮಾಡಿ ಹಣ ಹೋದರೆ ಬರುತ್ತದೆ, ಮಾನ ಹೋದರೆ ಬರುತ್ತದೆಯೇ? ಎಂದು ಪ್ರಶ್ನಿಸಿದರು.ಸಿಟ್ಟಾದ ರೇವಣ್ಣ ಅವರು ನಿಮ ಬಂಡವಾಳ ಗೊತ್ತಿದೆ, ಕುಳಿತುಕೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
8
+ ಕೃಷ್ಣಪ್ಪ, ನೀವೆಲ್ಲಾ ಶ್ರೀರಾಮಚಂದ್ರರು ಎಂದು ಕಾಂಗ್ರೆಸ್ಸಿಗರನ್ನು ಮೂದಲಿಸಿದರು.ಅವಕಾಶ ಪಡ���ದುಕೊಂಡು ಸ್ಪಷ್ಟನೆ ನೀಡಿದ ರೇವಣ್ಣ ಅವರು, ನನಗೆ ಕಾಂಗ್ರೆಸ್‌‍ ಶಾಸಕರಂತೆ ವಾದ ಮಾಡುವಷ್ಟು ಶಕ್ತಿ ಇಲ್ಲ. ನನ್ನ ಮಗ ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಿ, ನಾನು ಯಾರ ಪರವಾಗಿಯೂ ವಹಿಸಿಕೊಂಡು ಮಾತನಾಡುತ್ತಿಲ್ಲ. 40 ವರ್ಷ ಸಾರ್ವಜನಿಕ ಜೀವನದಲ್ಲಿದ್ದೇನೆ. 25 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ನನ್ನ ವಿರುದ್ಧ ಹೆಣ್ಣು ಮಗಳೊಬ್ಬಳನ್ನು ಪೊಲೀಸ್‌‍ ಮಹಾನಿರ್ದೇಶಕರ ಕಚೇರಿಗೆ ಕರೆಸಿಕೊಂಡು ದೂರು ಬರೆಸಿಕೊಂಡಿದ್ದಾರೆ. ಇಂತಹ ವ್ಯಕ್ತಿ ಪೊಲೀಸ್‌‍ ಮಹಾನಿರ್ದೇಶಕನಾಗಲು ಅನರ್ಹ. ಮೂರೂ ಬಿಟ್ಟು ನೀತಿಗೆಟ್ಟ ಈ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
9
+ ಈ ಸಂದರ್ಭದಲ್ಲಿ ಕಾಂಗ್ರೆಸ್‌‍ ಪಾಳಯದಿಂದ ಆಕ್ಷೇಪಗಳು ವ್ಯಕ್ತವಾದವು. ಸಚಿವ ಪ್ರಿಯಾಂಕ ಖರ್ಗೆ ಸಂತ್ರಸ್ತರ ದೂರು ತೆಗೆದುಕೊಳ್ಳುವುದು ತಪ್ಪೇ? ಎಂದು ಪ್ರಶ್ನಿಸಿದರು.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು, ರೇವಣ್ಣ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ. ಅವರಿಗೆ ಅನ್ಯಾಯವಾಗಿದ್ದರೆ ಪ್ರತ್ಯೇಕವಾಗಿ ನೋಟೀಸ್‌‍ ಕೊಡಲಿ, ಚರ್ಚೆಗೆ ಅವಕಾಶ ಮಾಡಿಕೊಡಿ ಎಂದು ಸಲಹೆ ಮಾಡಿದರು.
10
+ ನಾನು ನೋಟೀಸ್‌‍ ಕೊಡುತ್ತೇನೆ ಎಂದು ರೇವಣ್ಣ ಪ್ರತ್ಯುತ್ತರಿಸಿದರು. ಈ ನಡುವೆ ಕಾಂಗ್ರೆಸ್‌‍ ಶಾಸಕ ಪೊನ್ನಣ್ಣ ಸ್ಪಷ್ಟನೆ ನೀಡಲು ಬಯಸಿದರಾದರೂ ಸಭಾಧ್ಯಕ್ಷರು ಅವಕಾಶ ಕೊಡಲಿಲ್ಲ.ಒಟ್ಟಾರೆ ಪೆನ್‌ಡ್ರೈವ್‌ ಪ್ರಕರಣ ಕಲಾಪದಲ್ಲಿ ಕೆಲಕಾಲ ಕಾವೇರಿದ ಚರ್ಚೆಗೆ ಗ್ರಾಸವಾಯಿತು.
eesanje/url_46_74_10.txt ADDED
@@ -0,0 +1,8 @@
 
 
 
 
 
 
 
 
 
1
+ ಹಾಲಿನ ಪ್ರೋತ್ಸಾಹ ಧನ ಶೀಘ್ರ ಬಿಡುಗಡೆ : ಸಚಿವ ಕೆ.ವೆಂಕಟೇಶ್
2
+ ಬೆಂಗಳೂರು,ಜು.16-ಬಾಕಿ ಇರುವ ಹಾಲಿನ ಪ್ರೋತ್ಸಾಹಧನವನ್ನು ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಪಶು ಸಂಗೋಪನಾ ಖಾತೆ ಸಚಿವ ಕೆ.ವೆಂಕಟೇಶ್ ಆಶ್ವಾಸನೆ ನೀಡಿದರು.
3
+ ವಿಧಾನಪರಿಷತ್ನಲ್ಲಿ ಸದಸ್ಯ ಹನುಮಂತ ನಿರಾಣಿಯವರು ಬಾಗಲಕೋಟೆ , ವಿಜಾಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸುಮಾರು 31 ಕೋಟಿ ಹಾಲಿನ ಪ್ರೋತ್ಸಾಹ ಧನವನ್ನು ನೀಡಿಲ್ಲ. ಇದರಿಂದ ರೈತರಿಗೆ ತೊಂದರೆಯಾಗುತ್ತದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಗಮನಸೆಳೆದರು.
4
+ ಈ ವೇಳೆ ಸಚಿವ ರಾಜಣ್ಣ ಉತ್ತರಿಸಲು ಮುಂದಾದಾಗ ಮಧ್ಯಪ್ರವೇಶಿಸಿದ ವೆಂಕಟೇಶ್ ಅವರು, ಬಾಕಿ ಇರುವ ಹಾಲಿನ ಪ್ರೋತ್ಸಾಹಧನ ನಮ್ಮ ಸರ್ಕಾರದ ಅವಧಿಯಲ್ಲಿ ಬಾಕಿ ಉಳಿಸಿಕೊಳ್ಳಲಾಗಿತ್ತು. ಸುಮಾರು 700 ಕೋಟಿ ಬಾಕಿ ಇತ್ತು. ನಮ್ಮ ಸರ್ಕಾರ 200 ಕೋಟಿ ಸಹಾಯಧನವನ್ನು ಬಿಡುಗಡೆ ಮಾಡಿದೆ ಎಂದರು.
5
+ ಇದಕ್ಕೆ ಆಕ್ಷೇಪಿಸಿದ ಬಿಜೆಪಿ ಸದಸ್ಯರು, ಇಲ್ಲಿ ಯಾವ ಪಕ್ಷದ ಸರ್ಕಾರ ಇದೆ ಎಂಬುದು ಮುಖ್ಯವಲ್ಲ. ಮೊದಲು ಬಾಕಿ ಇರುವ ಹಣವನ್ನು ಬಿಡುಗಡೆ ಮಾಡಿ. ಹಿಂದೆ ನಿಮ ಸರ್ಕಾರದ ಅವಧಿಯಲ್ಲಿ ಬಾಕಿ ಇರಲಿಲ್ಲವೇ? ರೈತರಿಗೇಕೆ ಇಂತಹ ಪಕ್ಷಪಾತ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು.
6
+ ಆಗ ಸಚಿವ ರಾಜಣ್ಣ ಇದು ನಿರಂತರವಾದ ಪ್ರಕ್ರಿಯೆ. ಎಲ್ಲಾ ಸರ್ಕಾರಗಳು ಪ್ರೋತ್ಸಾಹಧನವನ್ನು ಬಿಡುಗಡೆ ಮಾಡಬೇಕು. ಇದರಲ್ಲಿ ಯಾವ ಸರ್ಕಾರ ಎಂಬುದು ಮುಖ್ಯವಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲಿ ಬಾಕಿ ಇದ್ದ ಕಾರಣ ವಿಳಂಬವಾಗಿದೆ. ಹಂತ ಹಂತವಾಗಿ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದರು.
7
+ ಆದಷ್ಟು ಬೇಗ ಕ್ರಮ:ಕಾಂಗ್ರೆಸ್ ಸದಸ್ಯ ಎಸ್.ರವಿ ಅವರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಹಕಾರ ಸಚಿವ ರಾಜಣ್ಣ, ಸಾಲ ಮನ್ನಾ ಯೋಜನೆಯಡಿ ಸಹಕಾರಿ ಬ್ಯಾಂಕ್ಗಳಿಗೆ ಆದಷ್ಟು ಬೇಗ ಹಣವನ್ನು ಪಾವತಿ ಮಾಡಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
8
+ ಹಿಂದೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 50 ಸಾವಿರ ರೂ.ವರೆಗೆ ರೈತರ ಸಾಲ ಮನ್ನ ಮಾಡಲಾಗಿತ್ತು. ಇದರಿಂದ ಸಹಕಾರಿ ಬ್ಯಾಂಕ್ಗಳಿಗೆ ಹಣವನ್ನು ಕೆಲವು ಗೊಂದಲಗಳಿಂದ ಪಾವತಿಯಾಗಿಲ್ಲ. ಆದಷ್ಟು ಶೀಘ್ರ ಹಣ ಪಾವತಿಸುವುದಾಗಿ ತಿಳಿಸಿದರು.
eesanje/url_46_74_11.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ವಾಲ್ಮೀಕಿ, ಮುಡಾ ಹಗರಣ : ವಿಧಾನಸಭೆಯಲ್ಲಿ ವಾಕ್ಸಮರ, ಕೋಲಾಹಲ
2
+ ಬೆಂಗಳೂರು,ಜು.16-ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದ ಚರ್ಚೆಗೂ ಮುನ್ನ ಭ್ರಷ್ಟಾಚಾರದ ಕುರಿತಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಕಾವೇರಿದ ವಾಗ್ವಾದ ನಡೆದು ಗದ್ದಲ ತೀವ್ರಗೊಂಡು ಕಲಾಪವನ್ನು ಕೆಲಕಾಲ ಮುಂದೂಡಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.
3
+ ವಿಧಾನಸಭೆಯ ಕಲಾಪದಲ್ಲಿ ಪ್ರಶ್ನೋತ್ತರ ಮತ್ತು ಶೂನ್ಯ ವೇಳೆಯ ಬಳಿಕ ಸಭಾಧ್ಯಕ್ಷರು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಕುರಿತಂತೆ ನಿನ್ನೆಯಿಂದ ನಡೆಯುತ್ತಿರುವ ಚರ್ಚೆಯನ್ನು ಮುಂದುವರೆಸಲು ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಸೂಚನೆ ನೀಡಿದರು.
4
+ ಆರ್.ಅಶೋಕ್ರವರು ಮಾತನಾಡಲು ಎದ್ದು ನಿಂತಾಗ ಟ್ರಜರಿ ಬೆಂಚ್ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಮಾತ್ರ ಇದ್ದರು. ಆರ್ಥಿಕ ಇಲಾಖೆಯ ಅಧಿಕಾರಿಗಳು ಸದನದಲ್ಲಿಲ್ಲ. ನಾವು ಹೇಳುವುದನ್ನುದಾಖಲಿಸಿಕೊಳ್ಳುವವರು ಯಾರು? ಎಂದು ಆರ್.ಅಶೋಕ್ ಆಕ್ಷೇಪ ವ್ಯಕ್ತಪಡಿಸಿದರು.
5
+ ಇದಕ್ಕೆ ಬಿಜೆಪಿಯ ಅಶ್ವತ್ಥನಾರಾಯಣ, ಸುರೇಶ್ಕುಮಾರ್ ಬೆಂಬಲ ವ್ಯಕ್ತಪಡಿಸಿದರು. ಈ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಸಿಐಡಿಯ ಹಿರಿಯ ಅಧಿಕಾರಿಗಳು ಸದನದ ಒಳಗೆ ಬಂದರು.ಆದರೆ ಆರ್ಥಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿಲ್ಲದೇ ಇರುವುದನ್ನು ವಿಪಕ್ಷಗಳ ನಾಯಕರು ಪ್ರಧಾನವಾಗಿ ಪ್ರಸ್ತಾಪಿಸಿ ವಿರೋಧ ಪಕ್ಷದ ನಾಯಕರು ಮಾತನಾಡುವಾಗ ಖುದ್ದು ಮುಖ್ಯಮಂತ್ರಿಯವರೇ ಇರಬೇಕು. ಕನಿಷ್ಠ ಪಕ್ಷ ಆರ್ಥಿಕ ಇಲಾಖೆಯ ಅಧಿಕಾರಿಗಳಾದರೂ ಹಾಜರಿರಬೇಕು ಎಂದು ಪಟ್ಟು ಹಿಡಿದರು.
6
+ ಸಭಾಧ್ಯಕ್ಷರ ಪೀಠದಲ್ಲಿದ್ದ ಉಪಾಧ್ಯಕ್ಷ ರುದ್ರಪ್ಪ ಲಮಾಣಿಯವರು ಸಮಯ ವ್ಯರ್ಥ ಮಾಡಬೇಡಿ, ಚರ್ಚೆ ಮುಂದುವರೆಸಿ, ಸಂಬಂಧಪಟ್ಟ ಅಧಿಕಾರಿಗಳು ಬರುತ್ತಾರೆ ಎಂದು ಸಲಹೆ ನೀಡಿದರು.ಈ ಸಂದರ್ಭದಲ್ಲಿ ಅಶ್ವತ್ಥನಾರಾಯಣ ಹಠಕ್ಕೆ ಬಿದ್ದು ಮುಖ್ಯಮಂತ್ರಿಗಳು ಹಾಗೂ ಅಧಿಕಾರಿಗಳು ಕಲಾಪದಲ್ಲಿ ಹಾಜರಿರಬೇಕು. ಅವರನ್ನು ಕರೆಸಿ ಎಂದು ಒತ್ತಾಯಿಸಿದರು. ಇದರಿಂದ ಉಪಸಭಾಧ್ಯಕ್ಷರೊಂದಿಗೆ ಕೆಲಕಾಲ ಮಾತುಕತೆಗಳು ನಡೆದವು.
7
+ ಅಶ್ವತ್ಥನಾರಾಯಣರವರು ವಾಲ್ಮೀಕಿ ನಿಗಮದ ಹಣ ವರ್ಗಾವಣೆ ಆರ್ಥಿಕ ಇಲಾಖೆಯ ಬಾಧ್ಯತೆಯನ್ನು ಹೊಂದಿದೆ. ಮುಖ್ಯಮಂತ್ರಿಯವರೂ ಇದರಲ್ಲಿ ಭಾಗಿಯಾಗಿದ್ದಾರೆ ಎಂದರು.ಇದರಿಂದ ಸಿಟ್ಟಾದ ಡಿ.ಕೆ.ಶಿವಕುಮಾರ್ರವರು ಏಕವಚನದಲ್ಲಿ ನೀನು ಭ್ರಷ್ಟಾಚಾರದ ಪಿತಾಮಹ ಎಂದು ವಾಗ್ದಾಳಿ ನಡೆಸಿದರು.
8
+ ಇದು ಬಿಜೆಪಿ ಶಾಸಕರನ್ನು ಕೆರಳಿ ಕೆಂಡವಾಗಿಸಿತು. ಎಲ್ಲರೂ ಎದ್ದುನಿಂತು ಗದ್ದಲ ಮಾಡಲಾರಂಭಿಸಿದರು. ಅಶ್ವತ್ಥನಾರಾಯಣ ಅವರು ಉಪಮುಖ್ಯಮಂತ್ರಿಯವರು ನನ್ನ ಹೆಸರನ್ನು ಪ್ರಸ್ತಾಪಿಸಿ ಆರೋಪ ಮಾಡಿದ್ದಾರೆ. ಅದಕ್ಕೆ ಸೂಕ್ತ ಮಾಹಿತಿ ಕೊ���ಬೇಕು. ಇಲ್ಲವಾದರೆ, ಕ್ಷಮೆ ಕೇಳಬೇಕು. ಆರೋಪ ಮಾಡಲಾದ ಪದಗಳನ್ನು ಕಡತದಿಂದ ತೆಗೆಯಬೇಕು ಎಂದು ಪಟ್ಟು ಹಿಡಿದರು.
9
+ ಆದರೆ ಇದಕ್ಕೆ ಒಪ್ಪದ ಡಿ.ಕೆ.ಶಿವಕುಮಾರ್ ನೇರವಾಗಿ ಮುಖ್ಯಮಂತ್ರಿಯವರ ಪಾತ್ರ ಇದೆ ಎಂದು ಮಾತನಾಡುವುದು ಸರಿಯೇ? ಎಂದು ತಿರುಗೇಟು ನೀಡಿದ್ದಲ್ಲದೆ, ಮತ್ತೊಮೆ ತಮ್ಮ ಆರೋಪವನ್ನು ಪುನರುಚ್ಚರಿಸಿದರು.ಉಪಮುಖ್ಯಮಂತ್ರಿಗಳು ಹಿಟ್ ಅಂಡ್ ರನ್ ಪ್ರವೃತ್ತಿ ಅನುಸರಿಸುತ್ತಿದ್ದಾರೆ ಎಂದು ಅಶ್ವತ್ಥನಾರಾಯಣ ಕಿಡಿಕಾರಿದರು.
10
+ ಸಚಿವ ಕೆ.ಜೆ.ಜಾರ್ಜ್ ಎಲೆಕ್ಟೊರ ಬಾಂಡ್ನಲ್ಲಿ ಸಾವಿರಾರು ಕೋಟಿ ರೂ. ಭ್ರಷ್ಟಾಚಾರವಾಗಿದೆ ಎಂದು ಪ್ರಸ್ತಾಪಿಸಿದರು.ಬಿಜೆಪಿಯ ಸುನೀಲ್ಕುಮಾರ್ರವರು ಉಪಮುಖ್ಯಮಂತ್ರಿಯವರು ಯಾವುದೇ ನೋಟೀಸ್ ನೀಡದೆ ನಮ್ಮ ಪಕ್ಷದ ಶಾಸಕರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ನಿಯಮಾವಳಿಗಳನ್ನು ಮೀರಿ ಯಾರು, ಯಾರ ಹೆಸರನ್ನಾದರೂ ಹೇಳಬಹುದೇ?, ನಾವೂ ನಿಮ ಹೆಸರನ್ನು ಹೇಳಬಹುದೇ? ಎಂದು ತಿರುಗೇಟು ನೀಡಿದರು.
11
+ ಈ ಸಂದರ್ಭದಲ್ಲಿ ಗೃಹಸಚಿವ ಪರಮೇಶ್ವರ್ ಹಾಗೂ ಬಿಜೆಪಿಯ ಸುರೇಶ್ಕುಮಾರ್ ನಡುವೆ ಮಾತಿನ ಚಕಮಕಿ ನಡೆದವು.ವಾದ-ವಿವಾದ ಕಾವೇರಿ ಪರಿಸ್ಥಿತಿ ಗದ್ದಲಮಯವಾಯಿತು.ಉಪಸಭಾಧ್ಯಕ್ಷರು ಸಮಯ ವ್ಯರ್ಥ ಮಾಡಬೇಡಿ, ಚರ್ಚೆ ಮುಂದುವರೆಸಿ ಎಂದು ಹಲವು ಬಾರಿ ಸಲಹೆ ನೀಡಿದರೂ ಪ್ರಯೋಜನವಾಗಲಿಲ್ಲ.
12
+ ಬಿಜೆಪಿಯ ಶಾಸಕರು ಕಾಂಗ್ರೆಸಿಗರು ದಲಿತರ ಹಣವನ್ನು ಲೂಟಿ ಮಾಡಿ ಇಲ್ಲಿ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರೆ ಕಾಂಗ್ರೆಸ್ ಸದಸ್ಯರು ಆಪರೇಷನ್ ಕಮಲದ ಮೂಲಕ ಭ್ರಷ್ಟಾಚಾರದ ಪಿತಾಮಹ ಆಗಿದ್ದು ಯಾರು? ಎಂದು ಪ್ರತಿದಾಳಿ ನಡೆಸಿದರು.ಈ ಹಂತದಲ್ಲಿ ಪೀಠಕ್ಕೆ ಆಗಮಿಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದರು. ಆದರೆ ಎರಡೂ ಕಡೆಯಿಂದಲೂ ವಾಗ್ದಾಳಿಗಳು ಜೋರಾದ ಹಿನ್ನೆಲೆಯಲ್ಲಿ ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು.
13
+ ನಂತರ ಸದನ ಸಮಾವೇಶಗೊಂಡಾಗ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಆಕ್ಷೇಪಾರ್ಹ ಹೇಳಿಕೆಗಳನ್ನು ಕಡತದಿಂದ ತೆಗೆದುಹಾಕುವುದಾಗಿ ಹೇಳಿ ಚರ್ಚೆಗೆ ಅವಕಾಶ ನೀಡಿದರು.ಹಿರಿಯ ಸದಸ್ಯ ಸುರೇಶ್ಕುಮಾರ್ರವರು, ಈಗಾಗಲೇ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ನೇರಪ್ರಸಾರದಲ್ಲಿ ಎಲ್ಲವೂ ಜನರಿಗೆ ತಲುಪಿ ಆಗಿದೆ. ಈಗ ಕಡತದಿಂದ ತೆಗೆದರೆ ಅದರಿಂದ ಏನೂ ಪ್ರಯೋಜನವಾಗುವುದಿಲ್ಲ.
14
+ ಕಡತದಿಂದ ತೆಗೆಯುವಂತಹ ಸಂಪ್ರದಾಯ ಹಳೆಯದು. ಬದಲಾದ ಕಾಲಮಾನದಲ್ಲಿ ಹೇಳಿಕೆಗಳು ನೇರವಾಗಿ ಪ್ರಸಾರವಾಗುತ್ತಿವೆ ಎಂದು ಹೇಳಿದರು.ಈ ವಿಚಾರದಲ್ಲಿ ತಾವು ಬೇರೇನು ಮಾಡಲು ಸಾಧ್ಯ? ಎಂದು ಸಭಾಧ್ಯಕ್ಷರು ಅಸಹಾಯಕತೆ ವ್ಯಕ್ತಪಡಿಸಿದರು. ನಂತರ ಚರ್ಚೆಯನ್ನು ಮುಂದುವರೆಸಲು ವಿಪಕ್ಷ ನಾಯಕರಿಗೆ ಸೂಚನೆ ನೀಡಿದರು.ಕಾವೇರಿದ ವಾತಾವರಣ ತಿಳಿಯಾಗಿ ಚರ್ಚೆ ಮುಂದುವರೆಯಿತು.
eesanje/url_46_74_12.txt ADDED
@@ -0,0 +1,9 @@
 
 
 
 
 
 
 
 
 
 
1
+ ಚಡ್ಡಿ ಹಾಕಿಕೊಂಡು ಬರುವವರಿಗೂ ಸಹಕಾರಿ ಬ್ಯಾಂಕ್‌ಗಳು ಸಾಲ ಕೊಡಬೇಕು : ದಿನೇಶ್‌ ಗೂಳಿಗೌಡ
2
+ ಬೆಂಗಳೂರು,ಜು.16-ಚಡ್ಡಿ ಹಾಕಿಕೊಂಡು ಬರುವವರಿಗೂ ಸಹಕಾರಿ ಬ್ಯಾಂಕ್‌ಗಳು ಸಾಲ ನೀಡುವಂತೆ ಸರ್ಕಾರ ಸಂಬಂಧಪಟ್ಟವರಿಗೆ ಸೂಕ್ತ ನಿರ್ಧಾರ ನೀಡಬೇಕೆಂದು ಕಾಂಗ್ರೆಸ್‌‍ ಸದಸ್ಯ ದಿನೇಶ್‌ ಗೂಳಿಗೌಡ ಪರಿಷತ್‌ನಲ್ಲಿ ಆಗ್ರಹಿಸಿದರು.
3
+ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಸಹಕಾರಿ ಬ್ಯಾಂಕ್‌ಗಳು ಇಂದು ಸಿ.ಟಿ.ರವಿ, ಭೋಜೇಗೌಡ ಅಂಥವರಿಗೆ ಮಾತ್ರ ಸಾಲ ಕೊಡುತ್ತಾರೆ. ಚಡ್ಡಿ ಹಾಕಿಕೊಂಡು ಬರುವವರಿಗೂ ಸಾಲ ಕೊಡಬೇಕು. ಈ ಹಿನ್ನಲೆಯಲ್ಲಿ ಸರ್ಕಾರ ಸಹಕಾರಿ ಬ್ಯಾಂಕ್‌ಗಳ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಬೇಕೆಂದು ಆಗ್ರಹಿಸಿದರು.
4
+ ಸರ್ಕಾರ ಸಹಕಾರಿ ಬ್ಯಾಂಕ್‌ಗಳ ಮೂಲಕ ರೈತರಿಗೆ ಶೇ.95ರಷ್ಟು ಸಾಲ ನೀಡಿದ್ದೇವೆ ಎಂದು ಹೇಳುತ್ತಿದೆ. ಕಳೆದ ವರ್ಷ ಕೃಷಿ ಇಲಾಖೆಯು 148 ಲಕ್ಷ ಟನ್‌ ಆಹಾರ ಉತ್ಪಾದಿಸುವ ಗುರಿ ಹೊಂದಿತ್ತು. ವಾಸ್ತವವಾಗಿ 128 ಲಕ್ಷ ಟನ್‌ ಆಹಾರ ಉತ್ಪಾದನೆಯಾಯಿತು. 20 ಲಕ್ಷ ಟನ್‌ ಉತ್ಪಾದನೆಯಲ್ಲಿ ಹಿಂದೆ ಬಿದ್ದಿದ್ದೇವೆ ಎಂದು ವಿವರಿಸಿದರು.
5
+ ಅದೇ ರೀತಿ ಪ್ರಸಕ್ತ ವರ್ಷ 80 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿಯನ್ನು ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಅವರು ಇಟ್ಟುಕೊಂಡಿದ್ದರು. ವಾಸ್ತವವಾಗಿ ಈವರೆಗೂ 60 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ. ನಮ ರೈತರಿಗೆ ಸಕಾಲಕ್ಕೆ ಸರಿಯಾಗಿ ಬೀಜ, ಗೊಬ್ಬರ, ಯಂತ್ರೋಪಕರಣಗಳು ಸಿಗುವಂತೆ ಸರ್ಕಾರ ಮುಂದಾಗಲಿ ಎಂದು ಒತ್ತಾಯಿಸಿದರು.
6
+ ಆಗ ಸಹಕಾರ ಸಚಿವ ರಾಜಣ್ಣ, ಪ್ರತಿ ವರ್ಷ ಸಹಕಾರಿ ಇಲಾಖೆಯಿಂದ ಇಂತಿಷ್ಟು ಸಾಲ ನೀಡಬೇಕೆಂಬ ಗುರಿ ಇಟ್ಟುಕೊಂಡಿದ್ದೇವೆ. ಈ ಬಾರಿ ಶೇ.95ರಷ್ಟು ಗುರಿ ಮುಟ್ಟಿದ್ದೇವೆ. ಇದಕ್ಕಾಗಿ ಸದಸ್ಯರು ನನಗೆ ಅಭಿನಂದನೆ ಸಲ್ಲಿಸಬೇಕೆಂದು ನಿರೀಕ್ಷೆ ಇಟ್ಟುಕೊಂಡಿದ್ದೆ. ಆದರೆ ಅವರು ಶೇ.100ರಷ್ಟು ಗುರಿ ತಲುಪಿಲ್ಲ ಎಂದು ಹೇಳುತ್ತಿರುವುದು ಆಶ್ಚರ್ಯವಾಗುತ್ತಿದೆ ಎಂದು ಹಾಸ್ಯ ಮಾಡಿದರು.
7
+ ರೈತರಿಗೆ ಅಲ್ಪಾವಧಿ ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ 3ರಿಂದ 5 ಲಕ್ಷದವರೆಗೆ ಹಾಗೂ ಮಧ್ಯಮಾವಧಿ ಸಾಲವನ್ನ 10ರಿಂದ 15 ಲಕ್ಷ ನೀಡುತ್ತೇವೆ. ಅರ್ಜಿ ಹಾಕಿದ ಎಲ್ಲರಿಗೂ ಸಾಲ ನೀಡುವುದಿಲ್ಲ. ರೈತರಿಗೆ ಸಾಲ ನೀಡಬೇಕಾದರೆ ಕೆಲವು ಮಾನದಂಡಗಳಿರುತ್ತವೆ. ಅದರ ಪ್ರಕಾರವೇ ಅಧಿಕಾರಿಗಳು ಸಾಲ ನೀಡುತ್ತಾರೆ ಎಂದು ರಾಜಣ್ಣ ಸದನಕ್ಕೆ ತಿಳಿಸಿದರು.
8
+ ಸದಸ್ಯ ಶಾಂತರಾಮ್‌ ಸಿದ್ದಕ್ಕಿ ಅವರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ರಾಜಣ್ಣ, ಲ್ಯಾಂಡ್‌ ಬ್ಯಾಂಕ್‌ ಮೂಲಕ ಅರಣ್ಯ ಪ್ರದೇಶಗಳಲ್ಲಿ ಕಿರು ಉತ್ಪನ್ನ ಬೆಳೆಯುವ ಅರಣ್ಯವಾಸಿಗಳಿಗೆ ಹೆಚ್ಚಿನ ಆರ್ಥಿಕ ನೆರವು ನೀಡಲು ಸರ್ಕಾರ ಬದ್ದವಾಗಿದೆ ಎಂದು ತಿಳಿಸಿದರು.
9
+ ಅರಣ್ಯದಲ್ಲಿ ಸಿಗುವ ಕಿರು ಉತ್ಪನ್ನಗಳನ್ನು ಬಳಸಿಕೊಂಡು ಸಹಕಾರಿ ಬ್ಯಾಂಕ್‌ನಲ್ಲಿ ಮಾರಾಟ ಮಾಡಲು ಅವಕಾಶವಿದೆ. ಪ್ರಸ್ತುತ 11 ಜಿಲ್ಲೆಗಳಲ್ಲಿ ಈ ವ್ಯವಸ್ಥೆ ಇದೆ. ಅರಣ್ಯಗಳಲ್ಲಿ ಉತ್ಪನ್ನಗಳನ್ನು ಬಳಸಲು ಕೆಲವು ನಿಬಂಧನೆಗಳು ಇವೆ. ಇದು ನಮ ವ್ಯಾಪ್ತಿಗೆ ಬರುವುದಿಲ್ಲ. ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡಲು ಅವಕಾಶವೂ ಇಲ್ಲ ಎಂದು ಸ್ಪಷ್ಟಪಡಿಸಿದರು.
eesanje/url_46_74_2.txt ADDED
@@ -0,0 +1,8 @@
 
 
 
 
 
 
 
 
 
1
+ ವಿಧಾನಸಭೆಯಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಘೋಷಿಸಿದ ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು,ಜು.16– ರಾಜ್ಯ ಸರ್ಕಾರಿ ನೌಕರರ ಮೂಲ ವೇತನ ಮತ್ತು ಪಿಂಚಣಿಯನ್ನು ಏಳನೇ ರಾಜ್ಯ ವೇತನ ಆಯೋಗದ ಶಿಫಾರಸು ಆಧರಿಸಿ ಶೇ.58.50ರವರೆಗೆ ಪರಿಷ್ಕರಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ಪ್ರಕಟಿಸಿದರು.
3
+ ಸ್ವಯಂ ಪ್ರೇರಿತವಾಗಿ ಹೇಳಿಕೆ ನೀಡಿದ ಅವರು, ರಾಜ್ಯ ಸರ್ಕಾರಿ ನೌಕರರ ವೇತನ-ಭತ್ಯೆ, ಪಿಂಚಣಿ ಪರಿಷ್ಕರಣೆಯ ಬೇಡಿಕೆಗಳನ್ನು ಪರಿಷ್ಕರಿಸಲು 2022ರ ನವೆಂಬರ್ 19ರಂದು 7ನೇ ರಾಜ್ಯ ವೇತನ ಆಯೋಗವನ್ನು ರಚಿಸಲಾಗಿತ್ತು. ಆಯೋಗವು 2024ರ ಮಾರ್ಚ್ 24ರಂದು ವರದಿ ನೀಡಿದೆ ಎಂದು ವಿವರಿಸಿದರು.
4
+ 7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ, ವೇತನ ಸಂಬಂಽತ ಭತ್ಯೆ, ಪಿಂಚಣಿಯನ್ನು 2022ರ ಜುಲೈ 1ರಿಂದ ಅನ್ವಯವಾಗುವಂತೆ ಪರಿಷ್ಕರಿಸಿ ಮುಂದಿನ ಆಗಸ್್ಟ 1ರಿಂದ ಅನುಷ್ಠಾನಗೊಳಿಸಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿರುತ್ತದೆ ಎಂದರು.
5
+ 2022ರ ಜುಲೈ 1ರಿಂದ ನೌಕರರ ಮೂಲ ವೇತನಕ್ಕೆ ಶೇಕಡಾ 31ರಷ್ಟು ತುಟ್ಟಿ ಭತ್ಯೆ ಮತ್ತು ಶೇ. 27.50 ರಷ್ಟು ಫಿಟ್ಮೆಂಟ್ ಸೇರಿಸಿ ವೇತನ ಮತ್ತು ಪಿಂಚಣಿಯನ್ನು ಪರಿಷ್ಕರಿಸಲಾಗುವುದು. ಇದರಿಂದ ನೌಕರರ ಮೂಲ ವೇತನ ಮತ್ತು ಪಿಂಚಣಿಯಲ್ಲಿ ಶೇ 58.50 ರಷ್ಟು ಹೆಚ್ಚಳವಾಗುತ್ತದೆ. ಮನೆ ಬಾಡಿಗೆ ಭತ್ಯೆಯಲ್ಲಿ ಶೇ. 32ರಷ್ಟು ಹೆಚ್ಚಳವಾಗುತ್ತದೆ ಎಂದು ಪ್ರಕಟಿಸಿದರು.
6
+ ಪರಿಷ್ಕರಣೆಯ ಬಳಿಕ ನೌಕರರ ಕನಿಷ್ಠ ಮೂಲವೇತನ 17 ಸಾವಿರದಿಂದ 27 ಸಾವಿರಕ್ಕೆ, ಗರಿಷ್ಟ ವೇತನ 1,50,600 ದಿಂದ 2,41.200 ವರೆಗೆ ಪರಿಷ್ಕರಣೆಯಾಗುತ್ತದೆ. ನೌಕರರ ಕನಿಷ್ಠ ಪಿಂಚಣಿಯು 8,500 ದಿಂದ 13,500ಕ್ಕೆ ಮತ್ತು ಗರಿಷ್ಠ ಪಿಂಚಣಿಯು 75,300 ದಿಂದ ರೂ. 1,20,600 ಕ್ಕೆ ಪರಿಷ್ಕರಣೆಗೊಳ್ಳುತ್ತದೆ ಎಂದು ವಿವರಿಸಿದರು.
7
+ ಈ ಪರಿಷ್ಕರಣೆಯು ಅನುದಾನಿತ ಶಿಕ್ಷಣ ಸಂಸ್ಥೆ ಮತ್ತು ಸ್ಥಳೀಯ ಸಂಸ್ಥೆಗಳ ನೌಕರರು, ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಅನ್ವಯವಾಗುತ್ತದೆ ಎಂದು ಹೇಳಿದರು.ನೌಕರರ ವೇತನ ಪರಿಷ್ಕರಣೆಯಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ 20,208 ಕೋಟಿ ರೂಪಾಯಿಗಳಷ್ಟು ಹೆಚ್ಚುವರಿ ವೆಚ್ಚ ಉಂಟಾಗುತ್ತದೆ.
8
+ ಈ ಹೆಚ್ಚುವರಿ ವೆಚ್ಚಕ್ಕೆ 2024-25ರ ಆಯವ್ಯಯದಲ್ಲಿ ಅಗತ್ಯ ಅನುದಾನವನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.ಮುಖ್ಯಮಂತ್ರಿಯವರ ಪ್ರಕಟಣೆಯನ್ನು ಆಡಳಿತ ಪಕ್ಷದ ಶಾಸಕರು ಮೇಜುಕುಟ್ಟಿ ಸ್ವಾಗತಿಸಿದರು. ಸಭಾಧ್ಯಕ್ಷರು ಸರ್ಕಾರಿ ನೌಕರ ಪರವಾಗಿ ಸರ್ಕಾರವನ್ನು ಅಭಿನಂದಿಸುವುದಾಗಿ ತಿಳಿಸಿದರು.
eesanje/url_46_74_3.txt ADDED
@@ -0,0 +1,7 @@
 
 
 
 
 
 
 
 
1
+ ವಿಧಾನಸಭೆಯಲ್ಲಿ ಬಿಜೆಪಿ-ಕಾಂಗ್ರೆಸ್‌‍ ಸದಸ್ಯರ ನಡುವೆ ಏರುಧ್ವನಿಯಲ್ಲಿ ವಾಗ್ವಾದ
2
+ ಬೆಂಗಳೂರು,ಜು.16-ಬಿಜೆಪಿ ಮತ್ತು ಕಾಂಗ್ರೆಸ್‌‍ ಸದಸ್ಯರ ನಡುವೆ ಏರಿದ ಧ್ವನಿಯಲ್ಲಿ ವಾಗ್ವಾದ ವಿಧಾನಸಭೆಯಲ್ಲಿಂದು ಜರುಗಿತು.ವಿರೋಧ ಪಕ್ಷದ ನಾಯಕ ಆರ್‌.ಅಶೋಕ್ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಅಕ್ರಮವಾಗಿ ದುರುಪಯೋಗವಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸು ತ್ತಿದ್ದಂತೆ ಕಾಂಗ್ರೆಸ್‌‍ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
3
+ ಭಾರಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ಬೋವಿ ನಿಗಮ, ಬಂಜಾರ ನಿಗಮದಲ್ಲಿ ಅವ್ಯವಹಾರವಾಗಿದೆ. ದೇವರಾಜ ಅರಸು ಟ್ರಕ್‌ ಟರ್ಮಿನಲ್‌ನಲ್ಲೂ ಅವ್ಯವಹಾರವಾಗಿದೆ. ಅಲ್ಲಿಗೂ ಇ.ಡಿ ಮತ್ತು ಸಿಬಿಐ ಅನ್ನು ಕಳುಹಿಸಿ. ಎಲೆಕ್ಟೊರಲ್‌ ಬಾಂಡ್‌್ಸನಲ್ಲೂ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದರು.
4
+ ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಮಾತನಾಡಿ, ರಾಜಕೀಯ ದುರುದ್ದೇಶದಿಂದ ಮಾತನಾಡಿದ್ದಾರೆ. ಅವರಿಗೆ ಶೋಭೆ ತರುವುದಿಲ್ಲ ಎಂದು ಛೇಡಿಸಿದರು. ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಮಧ್ಯಪ್ರವೇಶಿಸಿ, ದಲಿತರ ಪರವಾಗಿ ಮೊಸಳೆ ಕಣ್ಣೀರು ಸುರಿಸಿದ್ದಾರೆ. ದಲಿತರ ಉದ್ಧಾರಕ್ಕೆ ಎಸ್ಸಿಪಿ/ಟಿಎಸ್ಪಿ ಕಾಯ್ದೆಯನ್ನು ನಾವು ತಂದಿದ್ದೇವೆ ಎಂದರು.
5
+ ಈ ಹಂತದಲ್ಲಿ ಆಡಳಿತ ಮತ್ತು ಬಿಜೆಪಿ ಶಾಸಕರ ನಡುವೆ ಏರಿದ ಧ್ವನಿಯಲ್ಲಿ ವಾಗ್ವಾದ ನಡೆದು ಸದನದಲ್ಲಿ ಗೊಂದಲದ ವಾತಾವರಣ ಉಂಟಾಯಿತು.ಒಂದು ಹಂತದಲ್ಲಿ ಬಸನಗೌಡ ಪಾಟೀಲ್‌ ಯತ್ನಾಳ್‌ ಮಾತನಾಡಿ, ದೇವರಾಜ ಅರಸು ಅಭಿವೃದ್ಧಿ ನಿಗಮ, ತಾಂಡಾ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರವಾಗಿದ್ದರೆ ತನಿಖೆ ಮಾಡಿಸಿ ಎಂದು ತಿರುಗೇಟು ನೀಡಿದರು.
6
+ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ದೇವರಾಜು ಅರಸು ಟ್ರಕ್‌ ಟರ್ಮಿನಲ್‌, ತಾಂಡಾ ಅಭಿವೃದ್ಧಿ ನಿಗಮದಲ್ಲೂ ಅವ್ಯವಹಾರವಾಗಿದೆ. ಅಲ್ಲಿಗೂ ಇ.ಡಿ., ಐಟಿ ಅಧಿಕಾರಿಗಳನ್ನು ಕಳುಹಿಸಿ ಎಂದು ಒತ್ತಾಯಿಸಿದರು.
7
+ ಇದೇ ರೀತಿ ಕಾಂಗ್ರೆಸ್‌‍ ಮತ್ತು ಬಿಜೆಪಿ ಶಾಸಕರ ನಡುವೆ ಏರಿದ ಧ್ವನಿಯಲ್ಲಿ ವಾಗ್ವಾದ ನಡೆಯಿತು. ಆಗ ಮಧ್ಯಪ್ರವೇಶಿಸಿದ ಸಭಾಧ್ಯಕ್ಷ ಯು.ಟಿ.ಖಾದರ್‌ರವರು ಆಡಳಿತ ಮತ್ತು ವಿಪಕ್ಷ ಶಾಸಕರನ್ನು ಸಮಾಧಾನಪಡಿಸಿ ಮುಖ್ಯಮಂತ್ರಿಯವರು ಹೇಳಿಕೆ ನೀಡಲು ಅನುವು ಮಾಡಿಕೊಟ್ಟರು.
eesanje/url_46_74_4.txt ADDED
@@ -0,0 +1,9 @@
 
 
 
 
 
 
 
 
 
 
1
+ ವಾಲ್ಮೀಕಿ ನಿಗಮ ಹಗರಣ : ಸಿಎಂ ರಾಜೀನಾಮೆಗೆ ಅಶೋಕ್‌ ಒತ್ತಾಯ
2
+ ಬೆಂಗಳೂರು,ಜು.16-ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಅಕ್ರಮವಾಗಿ ದುರುಪಯೋಗವಾಗಿದೆ ಎಂದು ಆರೋಪಿಸಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯಲ್ಲಿಂದು ಒತ್ತಾಯಿಸಿದರು.
3
+ ನಿಯಮ 69ರಡಿ ಚರ್ಚೆ ನಡೆಸಿದ ಅವರು, ವಾಲ್ಮೀಕಿ ನಿಗಮದ ಹಣ ಅಕ್ರಮವಾಗಿ ದುರುಪಯೋಗವಾಗಿರುವುದರ ಬಗ್ಗೆ ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು. ಈ ಆರೋಪದಲ್ಲಿ ಕಾನೂನು ವಿಚಾರ ಏನೇ ಇದ್ದರೂ ಬದಿಗಿರಿಸಿ ದಲಿತರ ಹಣ ದುರ್ಬಳಕೆಯಾಗಿರುವುದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ಆಗ ಬಿಜೆಪಿ ಶಾಸಕರು ಮೇಜು ಕುಟ್ಟಿ ಸ್ವಾಗತಿಸಿದರು.
4
+ ಈ ಹಣ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗವಾಗಿರುವುದರ ಹೊಣೆಯನ್ನು ಯಾರೂ ಹೊತ್ತ್ತುಕೊಳ್ಳಲು ಸಿದ್ಧರಿಲ್ಲ. ಸಮಾಜಕಲ್ಯಾಣ ಇಲಾಖೆ ನಮ್ಮಗೆ ಸಂಬಂಽಸಿದ್ದಲ್ಲ ಎಂದು ಹೇಳಿದೆ. ಹಣಕಾಸು ಇಲಾಖೆ ನಾವು ಹಣ ಕೊಟ್ಟಿದ್ದೇವೆ. ನಮ್ಮಗೇನೂ ಗೊತ್ತಿಲ್ಲ ಎಂದಿದೆ. ಮುಖ್ಯಮಂತ್ರಿಯವರು ಹಣ ಕೊಟ್ಟಿದ್ದೇವೆ, ನಮ್ಮಗೆ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಹೀಗೆ ಒಬ್ಬರ ಮೇಲೆ ಇನ್ನೊಬ್ಬರು ವರ್ಗಾಯಿಸುತ್ತಿದ್ದಾರೆ. ಯಾರೂ ಅದರ ಹೊಣೆ ಹೊರುತ್ತಿಲ್ಲ. ಸರ್ಕಾರಕ್ಕೆ ಜವಾಬ್ದಾರಿ ಇಲ್ಲವೇ? ಸರ್ಕಾರ ಈ ಹೊಣೆಗಾರಿಕೆಯಿಂದ ತಪ್ಪಿಸಿಕೊಂಡಿದೆ ಎಂದು ಅಶೋಕ್ ವಾಗ್ದಾಳಿ ನಡೆಸಿದರು.
5
+ ಮುಖ್ಯಮಂತ್ರಿ ಹಣಕಾಸು ಖಾತೆಯನ್ನು ಹೊಂದಿದ್ದಾರೆ. ಹೀಗಾಗಿ ಹಣ ಮಂಜೂರಾಗುವುದು, ಹಣ ಖರ್ಚಾಗುವುದು ಎಲ್ಲದರ ಮಾಹಿತಿ ಇರುತ್ತದೆ. ಇಲ್ಲದಿದ್ದರೆ ಕೇಳಬೇಕಲ್ಲವೇ? ಆ ಇಲಾಖೆಯ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿಯೂ ಮಾತನಾಡಲಿಲ್ಲ ಎಂದು ಟೀಕಿಸಿದರು.ಆಡಳಿತ ಪಕ್ಷದ ಮೊಗಸಾಲೆಯಲ್ಲಿ ಶಾಸಕರು ದಲಿತರ ಮತದಾನದಿಂದ ಗೆದ್ದಿದ್ದೇವೆ. ದಲಿತರ ಹಣವನ್ನೇ ಹೊಡೆಯಬೇಕಿತ್ತೇ? ಯಾವ ಮುಖವಿಟ್ಟುಕೊಂಡು ಮತ ಕೇಳೋಣ, ಲಿಂಗಾಯತರ, ಒಕ್ಕಲಿಗರ, ಬ್ರಾಹ್ಮಣರ ನಿಗಮದ ಹಣ ಹೊಡೆಯಬಾರದಿತ್ತೇ? ಅವರು ಶ್ರೀಮಂತರು. ದಲಿತರ ಹಣ ಲೂಟಿಯಾಗಿದೆ ಎಂದು ಮಾತನಾಡಿಕೊಂಡಿದ್ದಾರೆ ಎಂದರು.
6
+ ಲಾನುಭವಿಗಳಿಗೆ ಸಿಗಬೇಕಾದ ಹಣ ತೆಲಂಗಾಣಕ್ಕೆ ಹೋಗಿದೆ. ಯಾರನ್ನು ಗುರಿ ಮಾಡುತ್ತೀರ? ಯಾರು ರಾಜೀನಾಮೆ ಕೊಡುತ್ತಾರೆ? 224 ಕ್ಷೇತ್ರದ ಮತದಾರರಿಗೆ ತಲುಪಬೇಕಾದ ಹಣ ದುರ್ಬಳಕೆಯಾಗಿದೆ. ದಲಿತರ ಬದುಕಿಗೆ ಸರ್ಕಾರ ಕೊಳ್ಳಿ ಇಟ್ಟಿದೆ. ಶೋಷಿತ ಸಮುದಾಯದ ಹಣ ಲೂಟಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.
7
+ ಮುಖ್ಯಮಂತ್ರಿಯವರಿಗೆ ಹಾಗೂ ಸಚಿವರಿಗೆ ವಿನಂತಿ ಮಾಡುತ್ತೇನೆ. ಎಸ್ಟಿ ಜನಾಂಗದವರ ಮನೆಯಲ್ಲಿ ಒಂದು ದಿನ ವಾಸ್ತವ್ಯ ಮಾಡಿ, ಅವರ ಕಷ್ಟ, ಗೋಳು ನಿಮಗೆ ಗೊತ್ತಾಗು��್ತದೆ. ಆರ್ಟಿಜಿಎಸ್, ಗೂಗಲ್ಪೇ ಹೀಗೆ ಅವರ ಹಣವನ್ನು ಲೂಟಿ ಮಾಡಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರನ್ ಅವರ ಕುಟುಂಬ ಬೀದಿಗೆ ಬಂದಿದೆ.
8
+ ಸಚಿವರಾದ ಮಧುಬಂಗಾರಪ್ಪ ಹಾಗೂ ಪರಮೇಶ್ವರ ಅವರು ಸಾಂತ್ವನ ಹೇಳಿದ್ದಾರೆ. ಮತ್ತ್ಯಾರೂ ಬಂದಿಲ್ಲ ಎಂದು ಚಂದ್ರಶೇಖರನ್ ಕುಟುಂಬದವರು ಹೇಳಿದ್ದಾರೆ. ಜೀವ ಒತ್ತೆಯಿಟ್ಟಾದರೂ ನ್ಯಾಯ ಪಡೆಯುವುದಾಗಿ ಚಂದ್ರಶೇಖರನ್ ಅವರ ಪತ್ನಿ ಹೇಳಿದ್ದಾರೆ. ಅನ್ಯಾಯವಾಗಿ ಅಮಾಯಕರ ಸಾವಾಗಿದೆ ಎಂದು ತಮ್ಮದೇ ಆದ ಧಾಟಿಯಲ್ಲಿ ವಾಗ್ದಾಳಿ ನಡೆಸಿದರು.
9
+ ಒಂದು ವೇಳೆ ಚಂದ್ರಶೇಖರನ್ ಆತ್ಮಹತ್ಯೆ ನಡೆಯದಿದ್ದರೆ ಗೋವಾದಲ್ಲಿ 187 ಕೋಟಿ ರೂ.ಗೂ ಬಿಲ್ ತಯಾರಿಸುತ್ತಿದ್ದರು. ವಾಲ್ಮೀಕಿ ಜನಾಂಗದ ಶಾಪ ನಿಮಗೆ ತಟ್ಟಬಾರದು ಎಂದಿದ್ದರೆ ಕೂಡಲೇ ಲಾನುಭವಿಗಳಿಗೆ ಹಣ ಬಿಡುಗಡೆ ಮಾಡಿ. ಅಕ್ರಮ ಹಣ ವರ್ಗಾವಣೆ ಬಗ್ಗೆ ಸಿಬಿಐ ತನಿಖೆಗೆ ವಹಿಸಿ ಎಂದು ಒತ್ತಾಯಿಸಿದರು.
eesanje/url_46_74_5.txt ADDED
@@ -0,0 +1,9 @@
 
 
 
 
 
 
 
 
 
 
1
+ ಮೇಕೆದಾಟು ಯೋಜನೆಗೆ ಸಹಕಾರ ತಮಿಳುನಾಡಿಗೆ ಡಿಸಿಎಂ ಡಿಕೆಶಿ ‘ವಿನಮ್ರ ಮನವಿ’
2
+ ಬೆಂಗಳೂರು, ಜು.16- ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದ್ದು, ಈ ಯೋಜನೆ ಜಾರಿಗೆ ಸಹಕಾರ ನೀಡಿ ಎಂದು ನಮ್ರತೆಯಿಂದ ಕೇಳಿಕೊಳ್ಳುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಮಿಳುನಾಡಿಗೆ ಮನವಿ ಮಾಡಿದರು.
3
+ ಕಾವೇರಿ ನೀರಿನ ವಿಚಾರವಾಗಿ ತಮಿಳುನಾಡು ಸರ್ಕಾರ ಸರ್ವಪಕ್ಷ ಸಭೆ ಕರೆದಿರುವ ಬಗ್ಗೆ ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾವೇರಿ ನೀರಿನ ವಿಚಾರದಲ್ಲಿ ನಾವು ಸರ್ವಪಕ್ಷ ಸಭೆ ಮಾಡಿದಂತೆ, ತಮಿಳುನಾಡಿನವರು ಸಹ ಸರ್ವಪಕ್ಷ ಸಭೆ ಮಾಡುತ್ತಿದ್ದಾರೆ. ಅದು ಅವರ ಹಕ್ಕು. ಅವರ ಸಭೆಗೆ ನಮ್ಮ ಆಕ್ಷೇಪವಿಲ್ಲ. ಆದರೆ ನಿಮಗೂ ಹೆಚ್ಚು ಅನುಕೂಲ ಆಗುವ ಮೇಕೆದಾಟು ಯೋಜನೆಗೆ ಸಹಕಾರ ನೀಡಿ ಎಂದು ತಿಳಿಸಿದರು.
4
+ ರಾಜ್ಯದಲ್ಲಿ ನಿನ್ನೆಯಿಂದ ಹೆಚ್ಚು ಮಳೆ ಬೀಳುತ್ತಿದ್ದು, ಕಾವೇರಿ ಕೊಳ್ಳದ ಅಣೆಕಟ್ಟುಗಳಿಗೆ ಒಳಹರಿವು ಪ್ರಮಾಣ ಹೆಚ್ಚಾಗಿದೆ. ಹಾರಂಗಿಯಿಂದ 20 ಸಾವಿರ ಕ್ಯೂಸೆಕ್ ನಷ್ಟು ನೀರನ್ನು ಹೊರಗೆ ಹರಿಬಿಡಲಾಗುತ್ತಿದೆ. ಮಳೆಯೇ ನಮ್ಮಗೆ ಆಧಾರ. ನಾನು ತಮಿಳುನಾಡಿನ ಬಳಿ ಮನವಿ ಮಾಡಿಕೊಳ್ಳುತ್ತೇನೆ.
5
+ ನಿಮ್ಮ ಹಿತಾಸಕ್ತಿ ಕಾಪಾಡುವುದಕ್ಕಾಗಿ ಮೇಕೆದಾಟು ಯೋಜನೆಗೆ ಸಹಕಾರ ನೀಡಿ. ಈ ಯೋಜನೆ ನಮ್ಮಗಿಂತ ನಿಮಗೆ ಹೆಚ್ಚು ಅನುಕೂಲವಾಗುತ್ತದೆ. ಈ ಅಣೆಕಟ್ಟಿನಲ್ಲಿ ಸಂಗ್ರಹವಾದ ನೀರನ್ನು ನಿಮಗೇ ನೀಡಲಾಗುವುದು. ಬೆಂಗಳೂರಿನಲ್ಲಿ ಕನ್ನಡಿಗರು, ತಮಿಳಿಗರು, ಆಂಧ್ರದವರು ಮತ್ತು ಉತ್ತರ ಭಾರತದ ರಾಜ್ಯಗಳ ಜನರಿದ್ದಾರೆ. ಎಲ್ಲರಿಗೂ ಕುಡಿಯುವ ನೀರು ಲಭಿಸಲಿದೆ.ಹೀಗಾಗಿ ಮೇಕೆದಾಟು ಯೋಜನೆಗೆ ಸಹಕಾರ ನೀಡುವಂತೆ ಕರ್ನಾಟಕ ರಾಜ್ಯದ ಪರವಾಗಿ ವಿನಮ್ರವಾಗಿ ಮನವಿ ಮಾಡುತ್ತೇವೆ ಎಂದು ತಿಳಿಸಿದರು.
6
+ ಮಳೆ ಇದೇ ರೀತಿ ಬಿದ್ದರೆ, ನೀವು ತಮಿಳುನಾಡಿಗೆ ನೀರು ಬಿಡುತ್ತೀರಾ ಎಂದು ಕೇಳಿದಾಗ, ಖಂಡಿತವಾಗಿ ಬಿಡುತ್ತೇವೆ. ನಾವು ಬಿಡಲೇಬೇಕು. ಒಳಹರಿವು ಹೆಚ್ಚಳವಾದರೆ ನಾವು ನೀರನ್ನು ಹರಿಸಲೇಬೇಕು. ಅದನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ ಎಂದು ಹೇಳಿದರು.
7
+ ಕುಮಾರಸ್ವಾಮಿ ತಮ್ಮ ಪಕ್ಷದವರನ್ನು ಗೋಡಂಬಿ, ದ್ರಾಕ್ಷಿ ತಿನ್ನಲು ಕಳಿಸಿದ್ದರಾ? :ಸರ್ವಪಕ್ಷ ಸಭೆಗೆ ಗೋಡಂಬಿ ದ್ರಾಕ್ಷಿ ತಿನ್ನಲು ಹೋಗಬೇಕಿತ್ತಾ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಅವರು ಸಿನಿಮಾ ಶೈಲಿಯಲ್ಲಿ ಮಾತನಾಡುತ್ತಿದ್ದಾರೆ. ಗೋಡಂಬಿ, ದ್ರಾಕ್ಷಿ ತಿನ್ನಲು ನಾವು ಕರೆದಿದ್ದೇವಾ? ಹಾಗಿದ್ದರೆ, ಕುಮಾರಸ್ವಾಮಿ ಅವರು ತಮ್ಮ ಪಕ್ಷದ ನಾಯಕರನ್ನು ಸರ್ವಪಕ್ಷ ಸಭೆಗೆ ಗೋಡಂಬಿ, ದ್ರಾಕ್ಷಿ ತಿನ್ನಲು ಕಳುಹಿಸಿದ್ದರೆ? ಕುಮಾರಸ್ವಾಮಿಗೆ ರಾಜಕಾರಣ, ಟೀಕೆ, ಆರೋಪ, ಹಿಟ್ ಅಂಡ್ ರನ್ ಮಾಡುವುದು ಬಿಟ್ಟರೆ, ಕಾವೇರಿ ನೀರು, ನಮ್ಮ ರೈತರ ಹಿತ, ರಾಜ್ಯದ ಹಿತದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ತಿಳಿಸಿದರು.
8
+ ಕುಮಾರಸ್ವಾಮಿ ಅವರು ನಿಮ್ಮ ಮೇಲೆ ವೈಯಕ್ತಿಕವಾಗಿ ದಾಳಿ ಮಾಡುತ್ತಿರುವುದೇಕೆ ಎಂದು ಕೇಳಿದಾಗ, ಅಸೂಯೆ ಬಿಟ್ಟರೆ ಬೇರೇನೂ ಇಲ್ಲ. ಮೊದಲಿಂದಲೂ ಇದನ್ನೇ ಮಾಡಿಕೊಂಡು ಬಂದಿದ್ದಾರೆ. ಎಲ್ಲಾ ವಿಚಾರವನ್ನು ಬಹಿರಂಗವಾಗಿ ಚರ್ಚೆ ಮಾಡೋಣ ಬಾ ಎಂದು ಕರೆಯುತ್ತಿದ್ದೇನೆ. ಕಳೆದ ಬಾರಿ ಸದನದಲ್ಲಿ ಚರ್ಚೆಗೆ ಕರೆದಾಗಲೂ ಬರಲಿಲ್ಲ ಎಂದು ತಿಳಿಸಿದರು.
9
+ ನಾನು ಯಾವುದೇ ತಪ್ಪು ಮಾಡಿಲ್ಲ:ತಮ್ಮ ವಿರುದ್ಧದ ಸಿಬಿಐ ಪ್ರಕರಣ ರದ್ದು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿರುವ ಬಗ್ಗೆ ಕೇಳಿದಾಗ, ಈಗಾಗಲೇ ಈ ಪ್ರಕರಣವನ್ನು ಲೋಕಾಯುಕ್ತ ಸಂಸ್ಥೆಗೆ ನೀಡಲಾಗಿದೆ. ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸುತ್ತಿದೆ. ಆದರೂ ಸಿಬಿಐ ತಮ್ಮ ವ್ಯಾಪ್ತಿ ಮೀರಿ ಈ ಪ್ರಕರಣ ತನಿಖೆ ನಡೆಸಲು ಮುಂದಾಗಿರುವುದು ಏಕೆ ಎಂದು ಗೊತ್ತಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ಮುಂದಿನ ಒಂದೆರಡು ದಿನಗಳಲ್ಲಿ ಅವರ ಮುಂದೆ ಹೋಗಿ ನನ್ನ ವಿಚಾರ ತಿಳಿಸುತ್ತೇನೆ. ತನಿಖೆ ಹೆಸರಲ್ಲಿ ನನ್ನ ಜತೆ ವ್ಯವಹಾರ ಮಾಡಿದವರಿಗೆ ಕಿರುಕುಳ ನೀಡಿದ್ದಾರೆ ಎಂದು ನುಡಿದರು.
eesanje/url_46_74_6.txt ADDED
@@ -0,0 +1,7 @@
 
 
 
 
 
 
 
 
1
+ ರಾಜ್ಯದ ಹಿತದೃಷ್ಟಿಯಿಂದ 2ನೇ ಅಂತಾರಾಜ್ಯ ವಿಮಾನ ನಿಲ್ದಾಣ ಸ್ಥಾಪನೆ : ಎಂ.ಬಿ.ಪಾಟೀಲ್
2
+ ಬೆಂಗಳೂರು,ಜು.16- ರಾಜ್ಯದ ಜನತೆಯ ಹಿತದೃಷ್ಟಿ ಮತ್ತು ಭವಿಷ್ಯದ ಬೆಂಗಳೂರನ್ನು ಗಮನದಲ್ಲಿಟ್ಟುಕೊಂಡು ಸೂಕ್ತವಾದ ಸ್ಥಳದಲ್ಲಿ 2ನೇ ಅಂತಾರಾಜ್ಯ ವಿಮಾನ ನಿಲ್ದಾಣವನ್ನು ಸ್ಥಾಪನೆ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿಧಾನಪರಿಷತ್ಗೆ ತಿಳಿಸಿದರು.
3
+ ಸದಸ್ಯ ನವೀನ್ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ದೆಹಲಿ, ಗೋವಾ, ಮುಂಬೈನಲ್ಲಿ ಈಗಾಗಲೇ 2ನೇ ವಿಮಾನ ನಿಲ್ದಾಣಗಳನ್ನು ಸ್ಥಾಪನೆ ಮಾಡಿದ್ದಾರೆ. ಅದೇ ಮಾದರಿಯಲ್ಲಿ ಬೆಂಗಳೂರಿನಲ್ಲೂ ಸ್ಥಾಪನೆ ಮಾಡುವುದಾಗಿ ಹೇಳಿದರು.
4
+ ಬೆಂಗಳೂರಿನ ಸುತ್ತಮುತ್ತ ಏಳೆಂಟು ಕಡೆ ಸ್ಥಳಗಳನ್ನು ಗುರುತಿಸಲಾಗಿದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಽಕಾರ ಹಾಗೂ ಸಂಬಂಧಪಟ್ಟ ಸಂಸ್ಥೆಗಳ ಜೊತೆ ಮಾತುಕತೆ ನಡೆಸಲಾಗುವುದು. ಇಂತಹ ಸ್ಥಳದಲ್ಲೇ ವಿಮಾನ ನಿಲ್ದಾಣ ಸ್ಥಾಪನೆ ಮಾಡಬೇಕೆಂಬ ಒತ್ತಡವಿದೆ. ನಾನು ಯಾವುದೇ ಒತ್ತಡಕ್ಕೂ ಬಗ್ಗದೆ ಸೂಕ್ತ ಸ್ಥಳದಲ್ಲಿ ರಾಜ್ಯದ ಹಿತದೃಷ್ಟಿ ಮತ್ತು ಭವಿಷ್ಯದ ಬೆಂಗಳೂರನ್ನು ಗಮನದಲ್ಲಿಟ್ಟುಕೊಂಡು ವಿಮಾನ ನಿಲ್ದಾಣ ಸ್ಥಾಪನೆ ಮಾಡುತ್ತೇವೆ ಎಂದು ಹೇಳಿದರು.
5
+ ಪ್ರಸ್ತುತ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2035ಕ್ಕೆ 110 ಮಿಲಿಯನ್ ಪ್ರಯಾಣಿಕರ ಸಾಮರ್ಥ್ಯ ತಲುಪುತ್ತದೆ. ಅದೇ ರೀತಿ ಸರಕು ಸಾಗಾಣಿಕೆಯಲ್ಲಿ 110 ಟನ್ ತಲುಪಲಿದೆ. ನಾವು 2033ರೊಳಗೆ 2ನೇ ವಿಮಾನ ನಿಲ್ದಾಣವನ್ನು ಸ್ಥಾಪನೆ ಮಾಡಬೇಕಿದೆ ಎಂದರು.
6
+ ತುಮಕೂರು, ಚಿತ್ರದುರ್ಗ, ಎಲೆಕ್ಟ್ರಾನಿಕ್ ಸಿಟಿ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹೀಗೆ ಹಲವಾರು ಕಡೆ ವಿಮಾನ ನಿಲ್ದಾಣ ಸ್ಥಾಪನೆಗೆ ಒತ್ತಡವಿದೆ. ಯಾವುದೇ ಒಂದು ವಿಮಾನ ನಿಲ್ದಾಣವನ್ನು ಸ್ಥಾಪನೆ ಮಾಡಬೇಕಾದರೆ ಕೆಲವು ಮಾನದಂಡಗಳಿವೆ ಎಂದು ಮಾಹಿತಿ ನೀಡಿದರು.
7
+ ಮೊದಲ ಸುತ್ತಿನ ಸಭೆಯಲ್ಲಿ ಏಳೆಂಟು ಸ್ಥಳಗಳನ್ನು ಗುರುತಿಸಿದ್ದೇವೆ. ಅದು ಅಂತಿಮಗೊಂಡಿಲ್ಲ. ಬೆಂಗಳೂರು ಸುತ್ತಮುತ್ತ ಸ್ಥಾಪನೆ ಮಾಡುವುದಂತೂ ಖಚಿತ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಪಾಟೀಲ್ ಪುನರುಚ್ಚಿಸಿದರು. ಇದಕ್ಕೂ ಮುನ್ನ ಸದಸ್ಯ ನವೀನ್ ಅವರು, 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡುವುದಾದರೆ ಚಿತ್ರದುರ್ಗ, ತುಮಕೂರು ಮಧ್ಯ ಭಾಗದಲ್ಲಿ ಮಾಡಬೇಕೆಂದು ಮನವಿ ಮಾಡಿದರು.
eesanje/url_46_74_7.txt ADDED
@@ -0,0 +1,4 @@
 
 
 
 
 
1
+ ಹೊಸ ಪೊಲೀಸ್‌‍ ಠಾಣೆಗೆ ಪ್ರಾರಂಭಿಸಲು 50 ರಿಂದ 60 ಸಾವಿರ ಜನಸಂಖ್ಯೆ ಇರಬೇಕು : ಪರಮೇಶ್ವರ್‌
2
+ ಬೆಂಗಳೂರು,ಜು.16-ಹೊಸ ಪೊಲೀಸ್‌‍ ಠಾಣೆ ಪ್ರಾರಂಭಿಸಲು ಜನಸಂಖ್ಯೆ 50ರಿಂದ 60 ಸಾವಿರ ಇರಬೇಕು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಅಲ್ಲಮಪ್ರಭು ಪಾಟೀಲ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಷ್ಟ್ರೀಯ ಪೊಲೀಸ್‌‍ ಆಯೋಗದ ಮಾರ್ಗಸೂಚಿಯಂತೆ ಪೊಲೀಸ್‌‍ ಠಾಣೆ ತೆರೆಯಬೇಕಾಗುತ್ತದೆ.
3
+ ಶಾಸಕರು ಕೇಳಿರುವ ಕಲಬರುಗಿ ನಗರದ ಜೇವರ್ಗಿ ರಸ್ತೆಯ ರಾಮಮಂದಿರದ ಬಳಿ ಕೊಟನೂರು ಪೊಲೀಸ್‌‍ ಹೊರಠಾಣೆಗೆ ನಿಗದಿತ ಮಾನದಂಡಗಳನ್ನು ಪೂರೈಸದ ಹಿನ್ನಲೆಯಲ್ಲಿ ಪರಿಗಣಿಸಿಲ್ಲ .
4
+ ಶಾಸಕರು ಮತ್ತೊಮೆ ಪರಿಶೀಲನೆ ಮಾಡುವಂತೆ ಹೇಳಿದ್ದಾರೆ. ಅದರಂತೆ ಪರಿಶೀಲಿಸಿ ಅಗತ್ಯಬಿದ್ದರೆ ಪರಿಗಣಿಸಲಾಗು ವುದು. ಆದರೆ ಅಕ್ಕಪಕ್ಕದ ಠಾಣೆಗಳನ್ನು ಬಲವರ್ಧನೆ ಮಾಡ ಲಾಗುವುದು ಎಂದು ಹೇಳಿದರು.
eesanje/url_46_74_8.txt ADDED
@@ -0,0 +1,7 @@
 
 
 
 
 
 
 
 
1
+ ಮೇಲ್ಮನೆಯಲ್ಲಿ ಪ್ರತಿಧ್ವನಿಸಿದ ವಾಲ್ಮೀಕಿ ನಿಗಮ ಹಗರಣ, ಕಲಾಪ ಮುಂದೂಡಿಕೆ
2
+ ಬೆಂಗಳೂರು,ಜು.16– ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣದ ಕುರಿತು ಚರ್ಚೆಗೆ ಅವಕಾಶ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ-ಜೆಡಿಎಸ್‌‍ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸಿದ ಹಿನ್ನೆಲೆಯಲ್ಲಿ ಪರಿಷತ್‌ ಕಲಾಪವನ್ನು ಕೆಲಕಾಲ ಮುಂದೂಡಲಾಯಿತು.
3
+ ಶೂನ್ಯ ಅವಧಿ ಮುಗಿದ ನಂತರ ಸಭಾಪತಿ ಬಸವರಾಜ ಹೊರಟ್ಟಿ ಅವರು, ಬೇರೊಂದು ಕಾರ್ಯಕಲಾಪವನ್ನು ತೆಗೆದುಕೊಳ್ಳಲು ಮುಂದಾದರು. ಇದಕ್ಕೆ ತೀರಾ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿಯ ಸದಸ್ಯರಾದ ಸಿ.ಟಿ.ರವಿ, ಎನ್‌.ರವಿಕುಮಾರ್‌ ಸೇರಿದಂತೆ ಮತ್ತಿತರರು ಪ್ರಶ್ನೋತ್ತರ ಮುಗಿದ ಮೇಲೆ ಚರ್ಚೆಗೆ ಅವಕಾಶ ಕೊಡುತ್ತೇನೆ ಎಂದು ಹೇಳಿದ್ದೀರಿ. ಈಗ ಏಕೆ ನಿಲುವು ಬದಲಾಯಿಸಿದ್ದೀರಿ ಎಂದು ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
4
+ ಈಗಾಗಲೇ ಇದರ ಬಗ್ಗೆ ಚರ್ಚೆಯಾಗಿದೆ. ಪ್ರಕರಣದ ಕುರಿತು ತನಿಖೆಯೂ ಆಗುತ್ತಿದೆ. ಪುನಃ ಅದೇ ವಿಷಯವನ್ನು ಚರ್ಚೆ ಮಾಡುವುದರಲ್ಲಿ ಅರ್ಥವಿಲ್ಲ. ನಾನು ಕಾರ್ಯ ಕಲಾಪದ ಪ್ರಕಾರ ಸದನವನ್ನು ನಡೆಸಬೇಕೆಂದು ಹೊರಟ್ಟಿ ಅವರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡರು.
5
+ ಪ್ರಶ್ನೋತ್ತರ ಅವಧಿ ಮುಗಿದ ಬಳಿಕ ಚರ್ಚೆಗೆ ಅವಕಾಶ ಕೊಡುತ್ತೇನೆ ಎಂದ ಮೇಲೆ ಏಕಾಏಕಿ ನೀವು ನಿಲುವು ಬದಲಾಯಿಸಿದ್ದು ಸರಿಯಲ್ಲ. ಇದರಲ್ಲಿ ಬ್ರಹಾಂಡ ಭ್ರಷ್ಟಾಚಾರ ನಡೆದಿದೆ. ನೂರಾರು ಕೋಟಿ ಹಣವನ್ನು ಲಪಾಟಯಿಸಿ ಕೆಲವರು ಜೈಲು ಪಾಲಾಗಿದ್ದಾರೆ. ಚರ್ಚೆಗೆ ಅವಕಾಶ ಕೊಡುವುದಿಲ್ಲ ಎಂದರೆ ಹೇಗೆ ಎಂದು ಸ್ಪೀಕರ್‌ ವಿರುದ್ಧ ಅಸಮಾಧಾನ ಹೊರಹಾಕಿದರು.
6
+ ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ಮಾತಿನ ಚಕಮಕಿ, ಗದ್ದಲ, ಕೋಲಾಹಲ ಉಂಟಾಯಿತು. ಸಭಾಪತಿಗಳು ಒಂದು ಬಾರಿ ರೂಲಿಂಗ್‌ ನೀಡಿದ ಮೇಲೆ ಅದನ್ನು ಪ್ರಶ್ನಿಸುವ ಅಧಿಕಾರ ಯಾರಿಗೂ ಇಲ್ಲ. ನಿಮ ಮೇಲೆ ಅಧಿಕಾರ ಚಲಾಯಿಸಲು ಅವಕಾಶ ಕೊಡಬೇಡಿ ಎಂದು ಬಿಜೆಪಿ ಸದಸ್ಯರ ವಿರುದ್ಧ ಕಾಂಗ್ರೆಸ್‌‍ ಸದಸ್ಯರು ಆಕ್ರೋಶ ಹೊರಹಾಕಿದರು.
7
+ ಸದಸ್ಯರು ಸದನ ನಡೆಯಲು ಅವಕಾಶ ಮಾಡಿಕೊಡಬೇಕೆಂದು ಹೊರಟ್ಟಿಯವರು ಮಾಡಿಕೊಂಡ ಮನವಿಗೆ ಯಾರೂ ಕೂಡ ಜಗ್ಗಲಿಲ್ಲ. ಬಿಜೆಪಿ ಸದಸ್ಯರು ಚರ್ಚೆಗೆ ಒತ್ತಾಯಿಸಿದರೆ ಕಾಂಗ್ರೆಸ್‌‍ ಸದಸ್ಯರು ಅವಕಾಶ ನೀಡಬೇಡಿ ಎಂದು ತಿರುಗೇಟು ನೀಡಿದರು.ಸದನ ಸಹಜ ಸ್ಥಿತಿಗೆ ಬರದ ಕಾರಣ ಸಭಾಪತಿಯವರು ಕೆಲ ಕಾಲ ಸದನವನ್ನು ಮುಂದೂಡಿದರು.
eesanje/url_46_74_9.txt ADDED
@@ -0,0 +1,8 @@
 
 
 
 
 
 
 
 
 
1
+ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಶಾಸಕ ಸತೀಶ್ ಸೈಲ್ ಆಕ್ರೋಶ
2
+ ಬೆಂಗಳೂರು,ಜು.16- ಕಾರವಾರದ ಅಂಕೋಲಾ ಬಳಿ ಶಿರೂರು ಗ್ರಾಮದ ಬಳಿ ಭೂಕುಸಿತವಾಗಿ 10 ರಿಂದ 15 ಜನ ಗಂಗಾವತಿ ನೀರು ಪಾಲಾಗಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಆತಂಕ ವ್ಯಕ್ತಪಡಿಸಿದ್ದಾರೆ.ವಿಧಾನಸಭೆಯ ಶೂನ್ಯ ವೇಳೆಯಲ್ಲಿ ವಿಷಯಪ್ರಸ್ತಾಪಿಸಿದ ಶಾಸಕರು, ಭಾರಿ ಮಳೆಯಿಂದಾಗಿ ಭೂಕುಸಿತವಾಗಿದೆ. ರಾಷ್ಟ್ರೀಯ ಹೆದ್ದಾರಿ ಸಮೀಪವಿದ್ದ 2,3 ಮನೆಗಳು ಹಾಗೂ ಸಂಚರಿಸುತ್ತಿದ್ದ ಟ್ಯಾಂಕರ್ ಕೂಡ ನದಿಗೆ ಕೊಚ್ಚಿಕೊಂಡು ಹೋಗಿದೆ. ನಿವಾಸಿಗಳು ಮತ್ತು ಟ್ಯಾಂಕರ್ ಸಿಬ್ಬಂದಿ ಸೇರಿ 10-15 ಮಂದಿ ಗಂಗಾವತಿ ನದಿಯ ನೀರು ಪಾಲಾಗಿದ್ದಾರೆ ಎಂದು ವಿವರಿಸಿದರು.
3
+ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುವಾಗ ಬೆಟ್ಟ-ಗುಡ್ಡದ ಮೇಲಿನ ಭೂಮಿಯನ್ನು 400 ಮೀಟರ್ ಇಳಿಜಾರು ಮಾದರಿಯಲ್ಲಿ ನಿರ್ಮಿಸಬೇಕು ಎಂದು ನಾವು ಹಲವು ಬಾರಿ ಸಲಹೆ ನೀಡಿದ್ದೇವೆ. ಆದರೆ ರಾಷ್ಟ್ರೀಯ ಪ್ರಾಧಿಕಾರದ ಅಧಿಕಾರಿಗಳು ನಮ್ಮ ಮಾತಿಗೆ ಮನ್ನಣೆ ನೀಡುವುದಿಲ್ಲ. ಈ ಮೊದಲು ಅಲ್ಲಿ ಕೆಲಸ ನಿರ್ವಹಿಸುತ್ತಿದ್ದ ಜಿಲ್ಲಾಧಿಕಾರಿಯವರಿಗೆ ಸಾಕಷ್ಟು ಬಾರಿ ದೂರು ನೀಡಿದ್ದೇವೆ. ಅವರು ವರ್ಗಾವಣೆಯಾಗಿ ಹೋದರು. ಈಗ ಉಸ್ತುವಾರಿ ಜಿಲ್ಲಾಧಿಕಾರಿಯಾಗಿರುವ ರಿತೀಶ್ಕುಮಾರ್ ಸಿಂಗ್ ಅವರಿಗೆ ಮನವಿ ಮಾಡಿದ್ದೇವೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ಷೇಪಿಸಿದರು.
4
+ ರಸ್ತೆ ನಿರ್ಮಿಸುವಾಗ ಗುಡ್ಡದ ಪ್ರದೇಶವನ್ನು ಕಡಿದಾಗಿ ಕತ್ತರಿಸಿದ್ದರಿಂದಾಗಿ ಇಂದು ಭೂ ಕುಸಿತವಾಗಿದೆ. ಅಂಕೋಲಾದಲ್ಲಿನ ಹೃದಯಭಾಗದಲ್ಲಿ 415 ಹೆಕ್ಟೇರ್ ಜಾಗವನ್ನು ಸೀಬರ್ಡ್ ಯೋಜನೆಗೆ ಬಿಟ್ಟುಕೊಡಲಾಗಿದೆ. ಈ ಪ್ರದೇಶದಲ್ಲಿ 15, 20 ಅಂತಸ್ತಿನ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಹೇಳುವವರು, ಕೇಳುವವರು ಇಲ್ಲದಂತಾಗಿದೆ. ಪ್ರಶ್ನೆ ಮಾಡಿದರೆ ದೇಶದ ಹಿತಾಸಕ್ತಿ ಚರ್ಚೆ ಮಾಡಬೇಡಿ ಎಂದು ಹೇಳುತ್ತಾರೆ. ಜನಸಾಮಾನ್ಯರಿಗೆ ಇರುವಂತೆ ಸೀಬರ್ಡ್ ಯೋಜನೆಯ ಕಟ್ಟುಪಾಡುಗಳು ನೇವಿಯವರಿಗೆ ಇಲ್ಲ ಎಂದು ಆಕ್ಷೇಪಿಸಿದರು.
5
+ ಸರ್ಕಾರದ ಪರವಾಗಿ ಪ್ರತಿಕ್ರಿಯೆ ನೀಡಿದ ಸಚಿವ ಕೃಷ್ಣಾಭೈರೇಗೌಡ, ರಾಷ್ಟ್ರೀಯ ಹೆದ್ದಾರಿ ಹಾಗೂ ಸೀಬರ್ಡ್ ಈ ಎರಡೂ ಯೋಜನೆಗಳು ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿವೆ. ಕಳೆದ ಬಾರಿ ತಾವು ಕಾರಾವರಾರಕ್ಕೆ ಭೇಟಿ ನೀಡಿದಾಗ ಸೀಬರ್ಡ್ ಯೋಜನೆಯ ಅಧಿಕಾರಿಗಳನ್ನು ಕರೆಸಿ ಕೆಲವು ಸಲಹೆಗಳನ್ನು ನೀಡಿದ್ದೇವೆ. ರಾಜ್ಯಸರ್ಕಾರ ನಿರ್ದೇಶನ ನೀಡಲು ಬರುವುದಿಲ್ಲ. ಮುಂದಿನ ದಿನಗಳಲ್ಲಿ ಹೆದ್ದಾರಿ ನಿರ್ಮಾಣದಲ್ಲಾಗಿರುವ ಲೋಪಗಳನ್ನು ಸರಿಪಡಿಸಲು ಪ್ರಯತ್ನಿಸಲಾಗುವುದು. ಸದ್ಯಕ್ಕೆ ಭೂಕುಸಿತದಿಂದ ಶಿರೂರಿನಲ್ಲಿ ಸಂಸಿರುವ ಘಟನೆಯ ಬಗ್ಗೆ ಮಾಹಿತಿ ಪಡೆದು ಸದನಕ್ಕೆ ತಿಳಿಸುತ್ತೇನೆ ಎಂದು ಹೇಳಿದರು.
6
+ ವಿಪಕ್ಷ ನಾಯಕ ಆರ್.ಅಶೋಕ್, 10-15 ಮಂದಿ ನೀರು ಪಾಲಾಗಿದ್ದಾರೆ ಎಂದು ಶಾಸಕರು ಹೇಳಿದ್ದಾರೆ. ಮೊದಲು ಅವರ ಪರಿಸ್ಥಿತಿ ಏನಾಗಿದೆ, ಜೀವರಕ್ಷಣೆಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಿ. ನಂತರ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕುರಿತು ಪ್ರಸ್ತಾಪಿಸಬಹುದು ಎಂದು ಸಲಹೆ ನೀಡಿದರು.
7
+ ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೃಷ್ಣಭೈರೇಗೌಡ, ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದ್ದಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ವಿಪತ್ತು ನಿರ್ವಹಣಾ ದಳದ ತಂಡವನ್ನು ಕಾರವಾರದಲ್ಲಿ ನೆಲೆ ನಿಲ್ಲಿಸಲಾಗಿದೆ. ಅದರ ಮೂಲಕ ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
8
+ ಸತೀಶ್ ಶೈಲು ಅವರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿಗಳ ಧೋರಣೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದಾಗ, ಸಭಾಧ್ಯಕ್ಷ ಯು.ಟಿ.ಖಾದರ್ ಜಿಲ್ಲಾಧಿಕಾರಿಗಳು ಹೆದ್ದಾರಿ ಪ್ರಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲು ಅವಕಾಶವಿದೆ. ಈ ಹಿಂದೆ ಪ್ರಕರಣವೊಂದರಲ್ಲಿ ಹಲವು ಬಾರಿ ಮೌಖಿಕ ಸೂಚನೆ ನೀಡಿದಾಗ ಎನ್ಎಚ್ಐನ ಅಧಿಕಾರಿಗಳು ಸ್ಪಂದಿಸಿರಲಿಲ್ಲ. ಕೊನೆಗೆ ಜಿಲ್ಲಾಧಿಕಾರಿಯವರು ಸರಿಯಾದ ರಸ್ತೆ ನಿರ್ವಹಣೆಯಾಗದೇ ಇದ್ದರೆ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿದರು. ಆಗ ರಸ್ತೆ ಸರಿ ಹೋಯಿತು. ಅಂಕೋಲದ ಪ್ರಕರಣದಲ್ಲೂ ಜಿಲ್ಲಾಧಿಕಾರಿಗಳ ಪಾತ್ರ ಇರುತ್ತದೆ ಎಂದರು.
eesanje/url_46_75_1.txt ADDED
@@ -0,0 +1,4 @@
 
 
 
 
 
1
+ ಗೌರಿ ಲಂಕೇಶ್‌ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು
2
+ ಬೆಂಗಳೂರು,ಜು.16-ಪತ್ರಕರ್ತೆ ಗೌರಿ ಲಂಕೇಶ್‌ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಹೈಕೋರ್ಟ್‌ ನ್ಯಾಯಮೂರ್ತಿ ಎಸ್‌‍.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ, ಆರೋಪಿಗಳಾದ ಅಮಿತ್‌ ದಿಗ್ವೇದ್‌ಕರ್‌, ಕೆ.ಟಿ.ನವೀನ್‌ಕುಮಾರ್‌, ಎಚ್‌.ಎಲ್‌.ಸುರೇಶ್‌ಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ.
3
+ ಗೌರಿ ಲಂಕೇಶ್‌ ಕೊಲೆ ಪ್ರಕರಣದಲ್ಲಿ ಆರೋಪಿಗಳು ಆರು ವರ್ಷಗಳಿಂದ ಜೈಲಿನಲ್ಲಿದ್ದಾರೆ. ಪ್ರಕರಣದ ವಿಚಾರಣೆ ಮುಗಿಯದೇ ಇರುವುದರಿಂದ ದೀರ್ಘಕಾಲ ಅವರನ್ನು ಜೈಲಿನಲ್ಲಿ ಇಡುವಂತಿಲ್ಲ ಎಂದು ಅಭಿಪ್ರಾಯಪಟ್ಟಿರುವ ಪೀಠ, ಜಾಮೀನು ಮಂಜೂರು ಮಾಡಿದೆ.
4
+ ಹಿರಿಯ ವಕೀಲ ಅರುಣ್‌ ಶಾಮ್‌, ಮಧುಕರ್‌ ದೇಶಪಾಂಡೆ, ಬಸವರಾಜ್‌ ಸಪ್ಪಣ್ಣನವರ್‌ ಆರೋಪಿಗಳ ಪರ ವಾದ ಮಂಡಿಸಿದರು. ಈ ಪ್ರಕರಣದಲ್ಲಿ ಈ ಹಿಂದೆ ಆರೋಪಿ ಎ11 ಮೋಹನ್‌ ನಾಯಕ್‌ಗೆ ಮಾತ್ರ ಜಾಮೀನು ದೊರೆತಿತ್ತು.
eesanje/url_46_75_10.txt ADDED
@@ -0,0 +1,6 @@
 
 
 
 
 
 
 
1
+ ತಮಿಳುನಾಡಿಗೆ ಹರಿಯುತ್ತಿದೆ ಬೇಡಿಕೆಗಿಂತ ಹೆಚ್ಚು ಕಾವೇರಿ ನೀರು
2
+ ಬೆಂಗಳೂರು,ಜು.15-ಕಾನೂನು ಸಂಕಷ್ಟದಿಂದ ಪಾರಾಗಲು ರಾಜ್ಯ ಸರ್ಕಾರ ತಮಿಳುನಾಡಿಗೆ ಪ್ರಸ್ತುತ ಬೇಡಿಕೆಗಿಂತ ಹೆಚ್ಚು ನೀರನ್ನು ಬಿಡುತ್ತಿದೆ. ನಮ್ಮಲ್ಲೇ ನೀರಿಲ್ಲ, ನೀರು ಬಿಡಲುಸಾಧ್ಯವೇ ಇಲ್ಲ ಎಂದು ಒಂದೆಡೆ ಸರ್ವಪಕ್ಷಗಳ ಸಭೆ ಕರೆದು ನಿರ್ಣಯ ಕೈಗೊಳ್ಳುವ ನಾಟಕ ಆಡುವುದರ ಜೊತೆಗೆ ನೀರನ್ನು ಸಹ ತಮಿಳುನಾಡಿಗೆ ಹರಿಯಬಿಡುತ್ತಿದೆ.
3
+ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಒಂದು ಟಿಎಂಸಿ ನೀರನ್ನು ಜುಲೈ 25ರವರೆಗೆ ಹರಿಸುವಂತೆ ಆದೇಶಿಸಿದೆ. ಒಂದು ಹೆಜ್ಜೆ ಮುಂದೆ ಹೋಗಿರುವ ರಾಜ್ಯ ಸರ್ಕಾರ, ಪ್ರತಿದಿನ 2 ಟಿಎಂಸಿ ನೀರನ್ನು ಹರಿಸುತ್ತಿದೆ.
4
+ ಕಾವೇರಿ ಜಲಾಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಜಲಾಶಯಗಳು ಭರ್ತಿಯಾಗುವ ಸಂಭವವಿದೆ. ಇನ್ನು ಮುಂದೆ ಮಳೆಯಾಗುವ ಸಾದ್ಯತೆ ಇದೆ. ಈಗಾಗಲೇ ನಾವು ತಮಿಳುನಾಡಿಗೆ ನಿಗದಿತ ಪ್ರಮಾಣದಲ್ಲಿ ನೀರು ಹರಿಸಬೇಕಿತ್ತು. ಈಗ ಮಳೆಯಾಗುತ್ತಿದ್ದು, ನೀರು ಬಿಡುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ ಎಂಬುದನ್ನು ಅರಿತು ಪ್ರತಿದಿನ 25 ಸಾವರ ಕ್ಯೂಸೆಕ್ಸ್ ಸ ನೀರನ್ನು ಹರಿಯಬಿಡುತ್ತಿದೆ.
5
+ ಕಾವೇರಿ ಜಲಾಯನ ಪ್ರದೇಶದ ಕಬಿನಿ ಭರ್ತಿಯಾಗಿದೆ. ಹಾರಂಗಿಗೆ ಒಳ ಹರಿವನ ಪ್ರಮಾಣ ಹೆಚ್ಛಾಗಿದೆ. ಅದೇ ರೀತಿ ಹೇಮಾವತಿ, ಕೆಆರ್ಎಸ್ ಜಲಾಶಯಗಳಿಗೂ ನೀರು ಹೆಚ್ಚಾಗಿ ಹರಿದುಬರುತ್ತಿದೆ. ಮಳೆಯೂ ಕೂಡ ಜಲಾನಯನ ಪ್ರದೇಶದಲ್ಲಿ ಬಿಡುತ್ತಿದೆ. ಹೀಗಾಗಿ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ.
6
+ ಕಾನೂನು ಸಂಕಷ್ಟದಿಂದ ಪಾರಾಗಲು ಮತ್ತು ಜೂನ್, ಜುಲೈ ತಿಂಗಳಿಲ್ಲಿ ಹರಿಸಬೇಕಾದ ನೀರನ್ನು ಸಾಧ್ಯವಾದಷ್ಟು ಮಟ್ಟಿಗೆ ಪ್ರಯತ್ನ ಮಾಡಲಾಗುತ್ತಿದೆ. ಒಂದೆಡೆ ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ. ನಮ್ಮಗೆ ನೀರು ಸಾಕಾಗುವುದಿಲ್ಲ ಎಂದು ಎಲ್ಲ ಹೇಳುತ್ತೇಲೇ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ.
eesanje/url_46_75_11.txt ADDED
@@ -0,0 +1,6 @@
 
 
 
 
 
 
 
1
+ ಡೆಂಘೀ ಚಿಕಿತ್ಸೆಗೆ ಹೆಚ್ಚಿನ ದರ ಪಡೆದರೆ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಗುಂಡೂರಾವ್
2
+ ಬೆಂಗಳೂರು,ಜು.15-ಡೆಂಘೀ ಪ್ರಕರಣಗಳಿಗೆ ಖಾಸಗಿ ಆಸ್ಪತ್ರೆಯವರು ಹೆಚ್ಚಿನ ದರ ತೆಗೆದುಕೊಂಡರೆ ಅಂಥವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.ಬಿಜೆಪಿ ಸದಸ್ಯ ಧನಂಜಯ್ಯ ಸರ್ಜಿ ಪರವಾಗಿ ಡಿ.ಎಸ್.ಅರುಣ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ದರ ನಿಗದಿಪಡಿಸಿ ಸುತ್ತೋಲೆ ಹೊರಡಿಸಿದೆ. ಇದನ್ನು ಮೀರಿ ಸಾರ್ವಜನಿಕರಿಂದ ಹೆಚ್ಚಿನ ಹಣ ತೆಗೆದುಕೊಂಡರೆ ಕಾನೂನು ಕ್ರಮ ಖಚಿತ ಎಂದು ಎಚ್ಚರಿಕೆ ಕೊಟ್ಟರು.
3
+ ಡೆಂಘೀ ಪ್ರಕರಣವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಕೋವಿಡ್ ಮಾದರಿಯಲ್ಲಿ ನಿಯಂತ್ರಣ ಮಾಡಬೇಕೆಂದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಹಾಗೂ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಜೊತೆಗೆ ಟಾಸ್ಕ್ಫೋರ್ಸ್ ಕೂಡ ರಚನೆ ಮಾಡಲಾಗಿದೆ ಎಂದು ವಿವರಿಸಿದರು.
4
+ ಎರಡಕ್ಕಿಂತ ಹೆಚ್ಚು ಡೆಂಘೀ ಪ್ರಕರಣಗಳು ಕಂಡುಬಂದರೆ ಅದನ್ನು ಹಾಟ್ಸ್ಪಾಟ್ ಎಂದು ಘೋಷಣೆ ಮಾಡಲಾಗುವುದು. ಅಲ್ಲದೆ ಈ ಪ್ರದೇಶದಲ್ಲಿ ಹೆಚ್ಚಿನ ಡೆಂಘೀ ತಪಾಸಣೆ ನಡೆಸಲು ಸೂಚನೆ ನೀಡಲಾಗಿದೆ. ಅಧಿಕಾರಿಗಳು ಈಗಾಗಲೇ ಸಮಾರೋಪಾದಿಯಲ್ಲಿ ಕೆಲಸಗಳನ್ನು ಕೈಗೊಂಡಿದ್ದಾರೆ ಎಂದರು.
5
+ ಎರಡು ಅಥವಾ ಮೂರಕ್ಕಿಂತ ಡೆಂಘೀ ಪ್ರಕರಣಗಳು ಕಾಣಿಸಿಕೊಂಡರೆ ಕ್ಲಿನಿಕ್ಗಳನ್ನು ತೆರೆಯಲು ಸೂಚಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ನಾವು ಉಚಿತವಾಗಿ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ದಿನೇಶ್ ಗುಂಡೂರಾವ್ ಹೇಳಿದರು. ಕರ್ನಾಟಕ, ತಮಿಳುನಾಡು ಮತ್ತು ಕೇರಳಗಳಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಉತ್ತರ ಭಾರತದಲ್ಲಿ ಈ ಪ್ರಕರಣಗಳು ಕಡಿಮೆ ಇದೆ.
6
+ ಮಳೆಗಾಲವಾಗಿರುವುದರಿಂದ ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಸೆಪ್ಟೆಂಬರ್ವರೆಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಸಲಹೆ ಮಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಾಭಿವೃದ್ಧಿ, ಕಂದಾಯ, ಶಿಕ್ಷಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಮೂಲಕ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತಿದ್ದೇವೆ. ಸರ್ಕಾರದ ಜೊತೆಗೆ ಶಾಸಕರು ಸೇರಿದಂತೆ ಇತರೆ ಜನಪ್ರತಿನಿಧಿಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು.
eesanje/url_46_75_12.txt ADDED
@@ -0,0 +1,7 @@
 
 
 
 
 
 
 
 
1
+ ಅಗಲಿದ ಗಣ್ಯರಿಗೆ ವಿಧಾನಪರಿಷತ್‌ನಲ್ಲಿ ಭಾವಪೂರ್ಣ ಶ್ರದ್ದಾಂಜಲಿ
2
+ ಬೆಂಗಳೂರು,ಜು.15-ಕೇಂದ್ರದ ಮಾಜಿ ಸಚಿವ ವಿ.ಶ್ರೀನಿವಾಸ್‌‍ ಪ್ರಸಾದ್‌, ಚಿತ್ರನಟ ದ್ವಾರಕೀಶ್‌, ಖ್ಯಾತ ನಿರೂಪಕಿ ಅಪರ್ಣಾ, ಸಾಹಿತಿ ಕಮಲ ಹಂಪನಾ ಸೇರಿದಂತೆ ಇತ್ತೀಚೆಗೆ ಅಗಲಿದ ಗಣ್ಯರಿಗೆ ವಿಧಾನಪರಿಷತ್‌ನಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.ದಿನದ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಂತಾಪ ನಿರ್ಣಯವನ್ನು ಮಂಡಿಸಿದರು.
3
+ ಇತ್ತೀಚೆಗೆ ಅಗಲಿದ ವಿಧಾನಪರಿಷತ್‌ ಮಾಜಿ ಸದಸ್ಯೆ ಸುನಂದಾ ಪಾಟೀಲ್‌‍, ಟಿ.ಕೆ.ಚಿನ್ನಸ್ವಾಮಿ, ಇಕ್ಬಾಲ್‌ ಅಹಮದ್‌ ಸರಡಗಿ, ಎಂ.ಬಿ.ಭಾನು ಪ್ರಕಾಶ್‌‍, ಮಾಜಿ ಸಚಿವೆ ನಾಗಮ ಕೇಶವಮೂರ್ತಿ, ಕೇಂದ್ರದ ಮಾಜಿ ಸಚಿವ ಶ್ರೀನಿವಾಸಪ್ರಸಾದ್‌, ಎಂ.ಪಿ.ಕೇಶವಮೂರ್ತಿ, ಪಾಡ್ದನ ಕಲಾವಿದೆ ಗಿಡಿಗೆರೆ ರಾಮಕ್ಕ, ನಟ ದ್ವಾರಕೀಶ್‌, ಯಕ್ಷಗಾನ ಕಲಾವಿದ ಸುಬ್ರಹಣ್ಯ ಧಾರೇಶ್ವರ, ಪೇತ್ರಿ ಮಾಧವನಾಯಕ್‌ , ಸರೋದ್‌ ವಾದಕ ರಾಜೀವ್‌ ತಾರಾನಾಥ್‌‍, ಹಿರಿಯ ರಂಗಕರ್ಮಿ ಡಾ.ನಟೇಶ್‌ ರತ್ನ, ಕನ್ನಡ ವಿದುಷಿ ಕಮಲಾ ಹಂಪನಾ, ನಿರೂಪಕಿ ಅಪರ್ಣಾ ಅವರಿಗೆ ಸಂತಾಪ ಸೂಚಿಸಲಾಯಿತು.
4
+ ಸಂತಾಪ ನಿರ್ಣಯದ ಮೇಲೆ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ ಅಗಲಿದ ಗಣ್ಯರ ಸೇವೆಯನ್ನು ಸರಿಸಿದರು. ಕೇಂದ್ರ ಮಾಜಿ ಸಚಿವರಾಗಿದ್ದ ವಿ.ಶ್ರೀನಿವಾಸ್‌‍ ಪ್ರಸಾದ್‌ ಅವರು, ದಲಿತ ಸಮುದಾಯದ ಆಶಾಕಿರಣವಾಗಿದ್ದರು. ಯಾವುದೇ ಹುದ್ದೆಯನ್ನು ನೀಡಿದರೂ ಅದನ್ನು ಯಶಸ್ವಿಯಾಗಿ ನಿಭಾಯಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ರಾಜ್ಯವು ಅವರನ್ನು ಕಳೆದುಕೊಂಡು ಬಡವಾಗಿದೆ ಎಂದು ವಿಷಾದಿಸಿದರು.
5
+ ಚಿತ್ರನಟ ದ್ವಾರಕೀಶ್‌, ನಿರೂಪಕಿ ಅಪರ್ಣ ಸೇರಿದಂತೆ ಅನೇಕರು ಕನ್ನಡ ಭಾಷಾ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದರು. ಅವರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ ಎಂದು ಹೇಳಿದರು.ಸಭಾ ನಾಯಕ ಎನ್‌.ಎಸ್‌‍.ಭೋಸರಾಜ್‌ ಮಾತನಾಡಿ, ಮಾಜಿ ಸಚಿವೆ ನಾಗಮ ಕೇಶವಮೂರ್ತಿಯವರು ಶಾಸನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಬೇಕೆಂದು ಕನಸು ಕಂಡಿದ್ದರು. ಮಹಿಳೆಯರ ಸಬಲೀಕರಣಕ್ಕಾಗಿ ಅನೇಕ ಹೋರಾಟಗಳನ್ನು ನಡೆಸಿದ್ದರು ಎಂದು ಸರಿಸಿದರು.
6
+ ಹಿಂದುಳಿದ ಕಲ್ಯಾಣ ಕರ್ನಾಟಕದ ಕಲಬುರಗಿಯಿಂದ ಸಂಸದರಾಗಿ ವಿಧಾನಪರಿಷತ್‌ ಸದಸ್ಯರಾಗಿದ್ದ ಇಕ್ಬಾಲ್‌ ಅಹಮದ್‌ ಸರಡಗಿ, ವಿ.ಶ್ರೀನಿವಾಸ್‌‍ ಪ್ರಸಾದ್‌, ದ್ವಾರಕೀಶ್‌ ಸೇರಿದಂತೆ ಅನೇಕರು ನಾಡಿಗೆ ತಮದೇ ಆದ ಸೇವೆ ಸಲ್ಲಿಸಿದ್ದಾರೆ. ಅವರ ಕೊಡುಗೆ ಎಂದೆಂದಿಗೂ ಅಜರಾಮರವಾಗಿರತ್ತದೆ ಎಂದು ಬಣ್ಣಿಸಿದರು.
7
+ ಸಂತಾಪ ನಿರ್ಣಯದ ಮೇಲೆ ಬಿಜೆಪಿಯ ಶಶಿಲ್‌ ನಮೋಶಿ ಕೂಡ ಮಾತನಾಡಿ, ಅಗಲಿದ ಗಣ್ಯರ ಸೇವೆಯನ್ನು ಕೊಂಡಾಡಿದರು. ಮೃತರ ಗೌರವಾರ್ಥವಾಗಿ ಸದನದ ಎಲ್ಲ ಸದಸ್ಯರು ಎದ್ದು ನಿಂತು ಒಂದು ನಿಮಿಷ ಮೌನ ಆಚರಿಸಿದರು. ಬಳಿಕ ಸಭಾಪತಿಯವರು ಜೆಡಿಎಸ್‌‍ನ ಎಸ್‌‍.ಎಲ್‌.ಭೋಜೇಗೌಡ ಅವರನ್ನು ಜೆ��ಿಎಸ್‌‍ ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಕ ಮಾಡಲಾಗಿದೆ ಎಂದು ಪ್ರಕಟಿಸಿದರು.
eesanje/url_46_75_2.txt ADDED
@@ -0,0 +1,7 @@
 
 
 
 
 
 
 
 
1
+ ಅಂಕೋಲಾ :ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಗುಡ್ಡ ಕುಸಿದು 7 ಮಂದಿ ದುರ್ಮರಣ, ತುರ್ತು ರಕ್ಷಣಾ ಕಾರ್ಯ
2
+
3
+ ಬೆಂಗಳೂರು,ಜು.16- ಉತ್ತರಕನ್ನಡ ಜಿಲ್ಲೆಯಲ್ಲಿ ವರುಣನ ರೌದ್ರ ನರ್ತನಕ್ಕೆ ಅಂಕೋಲ ತಾಲ್ಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಭಾರಿ ಪ್ರಮಾಣದ ಗುಡ್ಡ ಕುಸಿದಿದ್ದು, ಏಳು ಮಂದಿ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿರುವ ದುರ್ಘಟನೆ ಇಂದು ಬೆಳಗ್ಗೆ ನಡೆದಿದೆ.
4
+ ಇನ್ನು ಹಲವರು ಮಣ್ಣನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು ಹೊರತೆಗೆಯಲು ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಎನ್‌ಡಿಆರ್‌ಎಫ್‌ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಹೆದ್ದಾರಿ 66 ಸಮೀಪದ ಹೋಟೆಲ್‌ವೊಂದರ ಬಳಿ ಎಲ್‌ಪಿಜಿ ಟ್ಯಾಂಕರ್‌ ನಿಲ್ಲಿಸಿಕೊಂಡು ಟೀ ಕುಡಿಯುತ್ತಿದ್ದ ವೇಳೆ ಗುಡ್ಡ ಕುಸಿತ ಉಂಟಾಗಿ ಟ್ಯಾಂಕರ್‌ನ ಚಾಲಕ ಮತ್ತು ಕ್ಲೀನರ್‌ ಸೇರಿದಂತೆ 9 ಮಂದಿ ಮಣ್ಣಿನಡಿ ಸಿಲುಕಿದ್ದಾರೆ. ಇದರಲ್ಲಿ ಏಳು ಮಂದಿ ಸಾವನ್ನಪ್ಪಿರುವುದು ದೃಢಪಟ್ಟಿದೆ ಎಂದು ಉತ್ತರಕನ್ನಡ ಲೋಕಸಭಾ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
5
+ ಒಂದೇ ಕುಟುಂಬದ ಐದು ಮಂದಿ ಸೇರಿದಂತೆ ಏಳು ಮಂದಿ ದುರ್ಮರಣಕ್ಕೀಡಾಗಿದ್ದು, ಮಣ್ಣಿನಡಿ ಸಿಲುಕಿರುವ ಇನ್ನಿಬ್ಬರು ಬದುಕಿರುವ ಸಾಧ್ಯತೆ ಕ್ಷೀಣಿಸಿದೆ. ಅವರನ್ನು ಹೊರತೆಗೆಯಲು ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.ಮಣ್ಣಿನಡಿ ಸಿಲುಕಿರುವ ಮೃತದೇಹಗಳನ್ನು ಎನ್‌ಡಿಆರ್‌ಎಫ್‌ ಸಿಬ್ಬಂದಿ ಹೊರತೆಗೆಯುತ್ತಿದ್ದಾರೆ.
6
+ ಹೆದ್ದಾರಿ ಸಂಚಾರ ಬಂದ್‌:ಗುಡ್ಡ ಕುಸಿತದಿಂದಾಗಿ ಅಂಕೋಲ ಹೆದ್ದಾರಿಯಲ್ಲಿ ಸಂಚಾರ ಬಂದ್‌ ಆಗಿದ್ದು, ಕಿಲೋಮೀಟರ್‌ಗಟ್ಟಲೆ ವಾಹನಗಳು ರಸ್ತೆಯಲ್ಲಿ ನಿಂತಿವೆ. ಉತ್ತರಕನ್ನಡದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ನಗರದಲ್ಲಿರುವ ಕೆಎಸ್‌‍ಆರ್‌ಟಿಸಿ ಬಸ್‌‍ ಡಿಪೋ ಜಲಾವೃತವಾಗಿದ್ದು, 50ಕ್ಕೂ ಹೆಚ್ಚು ಬಸ್‌‍ಗಳು ಮುಳುಗಡೆಯಾಗಿ ಪ್ರಯಾಣಿಕರಿಗೆ ಅಡಚಣೆಯಾಗಿದೆ.
7
+ ಅಬ್ಬುವಾಡ ರಸ್ತೆಯಲ್ಲಿನ ಡಿಪೋದಲ್ಲಿದ್ದ ಬಸ್‌‍ಗಳನ್ನು ಹೊರ ತೆಗೆಯಲು ಚಾಲಕರು ಹರಸಾಹಸ ಪಡುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಬಿಟ್ಟುಬಿಡದೆ ಮಳೆ ಸುರಿಯುತ್ತಿದ್ದು, ಚರಂಡಿ ನೀರು ಡಿಪೋಗೆ ನುಗ್ಗಿದ ಪರಿಣಾಮ ಸಮಸ್ಯೆಯಾಗಿದೆ. ಹೊನ್ನಾವರ, ಬಾಸ್‌‍ಕೆರೆ , ಹೊರ್ನೆಕೆರೆ ಬಳಿ ಗುಡ್ಡ ಕುಸಿತವಾಗಿದೆ. ರಾಷ್ಟ್ರೀಯ ಹೆದ್ದಾರಿ 69ರಲ್ಲಿ ತಾತ್ಕಾಲಿಕವಾಗಿ ಸಂಚಾರ ಬಂದ್‌ ಮಾಡಲಾಗಿದೆ. ನೂರಾರು ವಾಹನಗಳು ನಿಂತಲ್ಲಿಯೇ ನಿಂತಿದ್ದವು.
eesanje/url_46_75_3.txt ADDED
@@ -0,0 +1,9 @@
 
 
 
 
 
 
 
 
 
 
1
+ ನಿಷ್ಪಕ್ಷಪಾತವಾಗಿ ಮುಡಾ ಹಗರಣದ ತನಿಖೆ ನಡೆಸುವಂತೆ ನಟ ಚೇತನ್‌ ಆಗ್ರಹ
2
+ ಚಿಕ್ಕಬಳ್ಳಾಪುರ,ಜು.16– ಮುಡಾ ಹಗರಣದಲ್ಲಿ ಯಾರ್ಯಾರು ಭಾಗಿಯಾಗಿರುವವರೆಲ್ಲರನ್ನೂ ಪಕ್ಷಾತೀತ ಹಾಗೂ ಪಾರದರ್ಶಕವಾಗಿ ವಿಚಾರಣೆಗೊಳಪಡಿಸಿ ತನಿಖೆ ನಡೆಸಬೇಕು ಎಂದು ನಟ ಚೇತನ್‌ ಆಗ್ರಹಿಸಿದರು.ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣ, ವಾಲೀಕಿ ನಿಗಮದ ಹಗರಣ ಸೇರಿದಂತೆ ಸಾಕಷ್ಟು ಹಗರಣಗಳ ತನಿಖೆ ಮಾಡುವಲ್ಲಿ ಎಸ್‌‍.ಐ.ಟಿ ವಿಲವಾಗುತ್ತಿದೆ. ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದರು.
3
+ ಮುಡಾ ಹಗರಣದಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ. ಅವರೆಲ್ಲರನ್ನೂ ಪಕ್ಷಾತೀತವಾಗಿ, ಪಾರದರ್ಶಕವಾಗಿ ವಿಚಾರಣೆಗೊಳಪಡಿಸಿ ತನಿಖೆ ನಡೆಸಬೇಕು. ಸಿಎಂ ಸಿದ್ದರಾಮಯ್ಯ ಅದು ಬಿಜೆಪಿ ಅವಧಿಯಲ್ಲಿ ಆಗಿರುವುದು ಎಂದು ಹೇಳುತ್ತಿರುವುದು ಸರಿಯಾದ ಕ್ರಮವಲ್ಲ ಎಂದರು.
4
+ ವಿಧಾನಸೌಧದ ಮುಂಭಾಗದಲ್ಲಿ 25 ಅಡಿ ಉದ್ದದ ಭುವನೇಶ್ವರಿ ಪ್ರತಿಮೆ ಸ್ಥಾಪಿಸಿರುವುದು ಮೌಢ್ಯದ ಪ್ರತೀಕ. ಇದು ವೈಜ್ಞಾನಿಕ ಮನಸ್ಥಿತಿಯನ್ನು ಹೋಗಲಾಡಿಸುವ ಪ್ರಯತ್ನ ಇದನ್ನು ಎಲ್ಲರೂ ಖಂಡಿಸಬೇಕು ಎಂದ ಅವರು ತನಿಖಾ ಸಂಸ್ಥೆಗಳು ಸರ್ಕಾರದ ತಾಳಕ್ಕೆ ಕುಣಿಯುತ್ತಿವೆ.
5
+ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಗರಣಗಳು ಹೊರಬರಬೇಕು. ರಾಜ್ಯದ ಕುರಿ ಕಳ್ಳತನ ಹೆಚ್ಚುತ್ತಿರುವ ಕಾರಣ ಕುರಿಗಾಹಿಗಳು ಬಂದೂಕು ವಿತರಣೆ ಮಾಡುವ ಕುರಿತು ಸರ್ಕಾರ ಬಹಳ ದಿನಗಳಿಂದ ಚಿಂತನೆ ನಡೆಸುತ್ತಿದೆ. ಇದೂ ಸಹ ಸರಿಯಾದ ಕ್ರಮವಲ್ಲ. ಇದು ಸಮಾಜದ ಶಾಂತಿ, ಸುರಕ್ಷತೆಗೆ ಹಾನಿಕಾರಕ. ಇದಕ್ಕೆ ಬದಲಾಗಿ ಪೊಲೀಸ್‌‍ ವ್ಯವಸ್ಥೆಯಲ್ಲಿ ಸುಧಾರಣೆ ಮಾಡಿ. ನೀವು ಬಂದೂಕು ಕೊಡುತ್ತಿರುವುದು ರಕ್ಷಣೆಗೆ ಅಲ್ಲ. ಮನುಷ್ಯರ ನಡುವಿನ ಸಂಘರ್ಷಕ್ಕೆ ದಾರಿಯಾಗಲಿದೆ ಎಂದು ಹೇಳಿದರು.
6
+ ದೇಶದಲ್ಲಿ ಅರಣ್ಯ ಕಬಳಿಕೆ ಹೆಚ್ಚಾಗಿದೆ. ಅರಣ್ಯಗಳು ಪ್ರಪಂಚದ ಶ್ವಾಸಕೋಶಗಳಿದ್ದಂತೆ. ಗೋಮಾಳ ಜಾಗವನ್ನು ಕೈಗಾರಿಕೆ ಮತ್ತು ಭೂ ಮಾಲೀಕರು ಅತಿಕ್ರಮಣ ಮಾಡುತ್ತಿದ್ದಾರೆ. ಪ್ರಾಣಿ ಪಕ್ಷಿಗಳ ಉಳಿವಿಗಾಗಿ, ಧನ, ಕರು, ಕುರಿ ಮೇಕೆಗಳ ಮೇವಿಗಾಗಿ ಗೋಮಾಳಗಳ ರಕ್ಷಣೆ ಆಗಬೇಕಿದೆ ಎಂದರು.
7
+ ಅಹಿಂದ ಒಕ್ಕೂಟಗಳ ಅಧ್ಯಕ್ಷ, ಹೈಕೋರ್ಟ್‌ ವಕೀಲ ಹರಿರಾಂ ಮಾತನಾಡಿ, ಕಾಂಗ್ರೆಸ್‌‍ ಸರ್ಕಾರ ಗ್ಯಾರಂಟಿಗಳಿಗಾಗಿ ಬೇರೆ ಮಾರ್ಗ ಅನುಸರಿಸಬಹುದು ಎಂದು ನಾವು ಭಾವಿಸ್ದೆಿವು. ಆದರೆ, ದಲಿತರ ಜೇಬನ್ನು ಕದಿಯುತ್ತಿರುವ 420 ಕಾಂಗ್ರೆಸ್‌‍ ಎಂದು ನಾವು ಊಹಿಸಿರಲಿಲ್ಲ. ದಲಿತರ ಎಸ್ಸಿಪಿ – ಟಿಎಸ್ಪಿ ಹಣವನ್ನು ಗ್ಯಾರಂಟಿಗಳ ಅನುಷ್ಟಾನಕ್ಕೆ ಬಳಸಿದೆ. ಕಳೆದ 9 ವರ್ಷಗಳಲ್ಲಿ ಸುಮಾರು 75 ಸಾವಿರ ಕೋಟಿ ದಲಿತರ ಹಣ ದುರ್ಬಳಕೆ ಆಗಿದೆ. ನಿಗಮಗಳಿಗೆ ಹಣ ಬಿಡುಗಡೆ ಆಗುತ್ತಿಲ್ಲ. ದಲಿತರ ನಿಯೋಗ ಇದೆಲ್ಲವನ್ನೂ ಪ್ರಶ್ನೆ ಮಾಡಲು ಹೋದಾಗ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಕಿಡಿಕಾರಿದರು.
8
+ ಪಿ.ಟಿ.ಸಿ.ಎಲ್‌ ಕಾಯ್ದೆಯ ಪರಿಣಾಮ ದಲಿತರು ಭೂಮಿ ಕಳೆದುಕೊಂಡರು. ಅಧಿಕಾರಿಗಳು ದಲಿತರ ವಿರುದ್ಧವಾಗಿ ಆದೇಶ ಮಾಡುತ್ತಿದ್ದಾರೆ. ಎಸಿ, ಡಿಸಿಗಳನ್ನು ನಿಯಂತ್ರಣ ಮಾಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಅವರನ್ನ ರಕ್ಷಣೆ ಮಾಡುವ ಕೆಲಸಕ್ಕೆ ಸರ್ಕಾರ ಮುಂದಾಗುತ್ತಿದೆ ಎಂದು ಗುಡುಗಿದರು.
9
+ ಭೂಮಿ ಮಂಜೂರು ಸಮಿತಿ ಅಧ್ಯಕ್ಷರಾಗಿರುವ ಶಾಸಕರ ಸಂಬಂಧಿಯೊಬ್ಬರು 150 ಕೋಟಿ ಬೆಲೆಬಾಳುವ ಜಮೀನನ್ನು ದಲಿತರ ವಿರುದ್ಧವಾಗಿ ಆದೇಶ ಮಾಡಿದ್ದಾರೆ. ಜನಪ್ರತಿನಿಧಿಗಳಷ್ಟೇ ಅಲ್ಲ, ಅವರ ಕೆಳಗಿನ ಅಧಿಕಾರಿ ವರ್ಗವೂ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅಂತವರನ್ನು ಕಾಪಾಡುವ ಕೆಲಸಕ್ಕೆ ಸರಕಾರ ಮುಂದಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಪರಿವರ್ತನ ಸಂಘ ರಾಜ್ಯಾಧ್ಯಕ್ಷರಾದ ಹರಿರಾಮ್‌ ನಾಗಾರ್ಜುನ, ವಕೀಲ ಮುನಿರಾಜು, ಅಭಿಲಾಶ್‌, ನಾಗಾರ್ಜುನ, ಸುಬ್ಬು ಇದ್ದರು.
eesanje/url_46_75_4.txt ADDED
@@ -0,0 +1,6 @@
 
 
 
 
 
 
 
1
+ ಬುರ್ಖಾ ಧರಿಸಿ ಬಂದು ಚಿನ್ನ ದೋಚಿದ ಕಳ್ಳರು
2
+ ಅರಕಲಗೂಡು, ಜು.15-ಪಟ್ಟಣದ ಆರ್‌ಆರ್‌ ಗೋಲ್ಸ್ ಡ ಪ್ಯಾಲೇಸ್‌‍ ಚಿನ್ನದ ಅಂಗಡಿಯಲ್ಲಿ ಚಿನ್ನದ ಖರೀದಿಸುವ ನೆಪದಲ್ಲಿ ಮಾರುವೇಷದಲ್ಲಿ ಬುರ್ಖಾ ಧರಿಸಿ ಬಂದಿದ್ದ ನಾಲ್ವರು ಒಡೆಗಳನ್ನು ಕದ್ದು ಪರಾರಿಯಾಗಿದ್ದಾರೆ.
3
+ ಒಡವೆಗಳನ್ನು ಖರೀದಿಸುವ ನೆಪದಲ್ಲಿ ಅಂಗಡಿಗೆ ಬಂದಿರುವ ಕಳ್ಳರು ಓಲೆ ತೋರಿಸಲು ಹೇಳಿ ಓಲೆ ಮತ್ತು ಮಾಂಗಲ್ಯ ಸರಗಳನ್ನು ನೋಡುತ್ತಾ ಸೇಲ್ಸ್ ಸ ಮ್ಯಾನ್‌ ದೀಪಿಕಾ ಅವರ ಗಮನವನ್ನು ಬೇರೆಡೆ ಸೆಳೆದು 94.715 ಗ್ರಾಂ ತೂಕದ 6,91,323 ರೂ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
4
+ 7.466 ಗ್ರಾಂನ ಓಲೆ, 37.169 ಗ್ರಾಂ ನ ಚಿನ್ನದ ಕರಿಮಣಿ ಸರ, 50.080 ಗ್ರಾಂ ನ 916 ಚಿನ್ನದ ಸರ, ಎರಡು ಎಳೆ ಮಾಂಗಲ್ಯ ಸರ 37.466 ಗ್ರಾಂನ ತೂಕದ ಓಲೆ 37.16 9 ಗ್ರಾಂ ತೂಕದ ಕರಿಮಣಿ ಸರ, 50.080 ಎರಡೆಳೆ ಮಾಂಗಲ್ಯ ಸರವನ್ನು ಕದ್ದಿರುತ್ತಾರೆ. ಈ ಎಲ್ಲಾ ಕಳ್ಳತನದ ದೃಶ್ಯ ನಮ್ಮ ಅಂಗಡಿಯಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
5
+ ನಾವು ಮರುದಿನ ಸ್ಟಾಕ್‌ ಚೆಕ್‌ ಮಾಡುವ ವೇಳೆ ಈ ಘಟನೆ ಕಂಡುಬಂದಿರುತ್ತದೆ. ಈ ಸಂದರ್ಭದಲ್ಲಿ ನಮ್ಮ ಅಂಗಡಿಯ ಎಕ್ಸಿಕ್ಯೂಟಿವ್‌ ದೀಪಿಕಾ ಅವರ ಗಮನವನ್ನು ಬೇರೆ ಸೆಳೆದು ನಾಲ್ಕು ಜನರು ಸಹ ಚಾಲಾಕಿತನದಿಂದ ಈ ಕಳ್ಳತನವನ್ನು ಮಾಡಿಕೊಂಡು ಹೋಗಿರುತ್ತಾರೆ.
6
+ ನಾವು ಅರಕಲಗೂಡು ಪಟ್ಟಣದ ಇತರೆ ಅಂಗಡಿಗಳು ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗಿ ಅವರುಗಳು ಅನಕೃ ವೃತ್ತದವರೆಗೆ ನಡೆದುಕೊಂಡು ಬಂದಿದ್ದು ಆನಂತರ ಯಾವ ಕಡೆ ಹೋಗಿರುತ್ತಾರೆ ಎಂದು ತಿಳಿದು ಬಂದಿದಿಲ್ಲ. ದಿನೇ ದಿನೇ ಪಟ್ಟಣದಲ್ಲಿ ಕಳ್ಳತನಗಳು ಹೆಚ್ಚಾಗುತ್ತಿದ್ದು ಈ ನಿಟ್ಟಿನಲ್ಲಿ ಆರಕ್ಷಕ ಇಲಾಖೆಯವರು ತುರ್ತಾಗಿ ಕ್ರಮ ಕೈಗೊಂಡು ಕಳ್ಳತನಗಳುನ್ನು ತಡೆಗಟ್ಟಬೇಕೆಂದು ನಾವು ಎಲ್ಲರ ಪರವಾಗಿ ಕೇಳಿಕೊಳ್ಳುತ್ತೇನೆ ಎಂದರು. ಅರಕಲಗೂಡು ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
eesanje/url_46_75_5.txt ADDED
@@ -0,0 +1,9 @@
 
 
 
 
 
 
 
 
 
 
1
+ ಅಗಲಿದ ಗಣ್ಯರಿಗೆ ವಿಧಾನಸಭೆಯಲ್ಲಿ ಶ್ರದ್ಧಾಂಜಲಿ
2
+ ಬೆಂಗಳೂರು,ಜು.15-ವಿಧಾನಸಭೆಯ ಮಾಜಿ ಉಪ ಸಭಾಧ್ಯಕ್ಷರಾಗಿದ್ದ ನಾಗಮ ಕೇಶವಮೂರ್ತಿ, ಕೇಂದ್ರ ಹಾಗೂ ರಾಜ್ಯದ ಮಾಜಿ ಸಚಿವರಾಗಿದ್ದ ವಿ.ಶ್ರೀನಿವಾಸ ಪ್ರಸಾದ್‌, ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ, ನಿರೂಪಕಿ ಅಪರ್ಣಾ ಸೇರಿದಂತೆ ಇತ್ತೀಚೆಗೆ ನಿಧನರಾದ ಗಣ್ಯರಿಗೆ ವಿಧಾನಸಭೆಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡಾಗ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಸಂತಾಪ ಸೂಚನಾ ನಿರ್ಣಯವನ್ನು ಮಂಡಿಸಿದರು.
3
+ ಸಭಾಧ್ಯಕ್ಷರು ಮಂಡಿಸಿದ ಸಂತಾಪ ಸೂಚನೆಯನ್ನು ಬೆಂಬಲಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ನಾಗಮ ಕೇಶವಮೂರ್ತಿಯವರು ಸಾಮಾಜಿಕ ಸೇವೆಯಲ್ಲಿ ಮದರ್‌ ಥೆರೇಸಾ, ರಾಜಕಾರಣದಲ್ಲಿ ದಾವಣಗೆರೆ ಇಂದಿರಾಗಾಂಧಿ ಎಂದೇ ಖ್ಯಾತಿ ಪಡೆದಿದ್ದರು. ಶ್ರೀನಿವಾಸ್‌‍ ಪ್ರಸಾದ್‌ ಅವರು, ಆರು ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿ ಶೋಷಿತರ, ದೀನ ದಲಿತರ ಹಿಂದುಳಿದವರ ಧ್ವನಿಯಾಗಿದ್ದರು ಎಂದು ಗುಣಗಾನ ಮಾಡಿದರು.
4
+ ದ್ವಾರಕೀಶ್‌ ಅವರು ಖ್ಯಾತ ಹಾಸ್ಯನಟರಾಗಿದ್ದು, ನಿರ್ಮಾಪಕ, ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಸಿಂಗಾಪುರದಲ್ಲಿ ರಾಜಾ ಕುಳ್ಳ ಎಂಬುದು ವಿದೇಶದಲ್ಲೇ ಚಿತ್ರೀಕರಣಗೊಂಡ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು ಎಂದು ಸರಿಸಿದರು.ಸಾಹಿತಿ ಕಮಲಾ ಹಂಪನಾ ಅವರು ಜೈನ ಧರ್ಮ, ಹಳಗನ್ನಡ ಗ್ರಂಥ ಸಂಪಾದನೆ ಮಾಡಿದ್ದರು. ದಾನ ಚಿಂತಾಮಣಿ, ಅತ್ತಿಮಬ್ಬೆ ಹಾಗೂ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದು. ನಾಡೋಜ ಗೌರವವೂ ಅವರಿಗೆ ಸಂದಿತ್ತು ಎಂದು ಹೇಳಿದರು.
5
+ ನಿರೂಪಕಿ ಅಪರ್ಣಾ ಅವರು ಶುದ್ಧಕನ್ನಡದಲ್ಲಿ ನಿರೂಪಣೆ ಮಾಡುವ ಕಲೆ ಮೈಗೂಡಿಸಿಕೊಂಡಿದ್ದರು. ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದರು ಎಂದರು. ಖ್ಯಾತ ಧರ್ಮಗುರುವಾಗಿದ್ದ ಖಾಝಿ ಅಸ್ಸಯ್ಯದ್ ಫಝಲ್‌ ಕೋಯಮ ತಂಙಳ್‌ ಅಲ್ಬುಖಾರಿ ಅವರು ಜಾತಿ, ಧರ್ಮ, ಮತ ಭೇದವಿಲ್ಲದೆ ಮಾನವೀಯತೆಯಿಂದ ಕೂಡಿದ ವ್ಯಕ್ತಿ ಎಂದು ಸರಿಸಿದ ಅವರು, ಇತ್ತೀಚೆಗೆ ಅಗಲಿದ ಎಲ್ಲಾ ಗಣ್ಯರಿಗೂ ಶಾಂತಿ ದೊರೆಯಲಿ, ಸಾವಿನ ದುಃಖ ಭರಿಸುವ ಶಕ್ತಿ ಅವರ ಕುಟುಂಬ ವರ್ಗದವರಿಗೆ, ಹಿತೈಷಿಗಳಿಗೆ ಹಾಗೂ ಬಂಧುಗಳಿಗೆ ದೊರೆಯಲಿ ಎಂದು ಕೋರಿದರು.
6
+ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ಮಾತನಾಡಿ, ನಾನು ಶಾಸಕನಾಗಿದ್ದಾಗ ಮತ್ತು ಶಾಸಕನಾಗುವ ಮೊದಲು ಸದಸ್ಯರಾಗಿದ್ದವರು ನಿಧನರಾಗಿದ್ದಾರೆ. ಅವರು ಈ ಸದನಕ್ಕೆ ಗೌರವ ತರುವ ರೀತಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಸಾಹಿತ್ಯ, ಚಿತ್ರರಂಗಕ್ಕೂ ಗೌರವ ತರುವ ರೀತಿಯಲ್ಲಿ ಕೆಲಸ ಮಾಡಿದ ಗಣ್ಯರೂ ಅಗಲಿದ್ದಾರೆ. ಇವರೆಲ್ಲರಿಗೂ ಸಂತಾಪವನ್ನು ಸೂಚಿಸುವುದಾಗಿ ತಿಳಿಸಿದರು.
7
+ ನಾಗಮ ಕೇಶವಮೂರ್ತಿಯವರು ಮಹಿಳೆಯರಿಗೆ ದಾರಿದೀಪವಾಗಿದ್ದವರು ಎಂದು ಸರಿಸಿದರು. ಶ್ರೀನಿವಾಸ್‌‍ ಪ್ರಸಾದ್‌ ಅವರು ಯಾವುದೇ ಪಕ್ಷದಲ್ಲಿದ್ದರೂ ತಮ್ಮ ತನವನ್ನು ಬಿಟ್ಟುಕೊಟ್ಟಿರಲಿಲ್ಲ. ತುಳಿತಕ್ಕೆ ಒಳಗಾದವರ ಧ್ವನಿಯಾಗಿ ಕೆಲಸ ಮಾಡಿದ್ದರು. ಅಪರ್ಣಾ ಅವರ ಧ್ವನಿ ಮೆಟ್ರೋದಲ್ಲಿ ಉಳಿದಿದೆ. ದ್ವಾರಕೀಶ್‌ ಅವರು ಹಾಸ್ಯನಟರಾಗಿ ಹೆಚ್ಚು ಚಿರಪರಿಚಿತರಾದವರು ಎಂದು ಮೃತರ ಗುಣಗಾನ ಮಾಡಿದರು.
8
+ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾತನಾಡಿ, ಶ್ರೀನಿವಾಸ್‌‍ ಪ್ರಸಾದ್‌ ಸ್ನೇಹಮಯಿಯಾಗಿದ್ದರು. ದ್ವಾರಕೀಶ್‌ ಅವರು ಆತೀಯರಾಗಿದ್ದರೂ ಅವರ ಸಿನಿಮಾವನ್ನು ಕ್ಯೂನಲ್ಲಿ ನಿಂತು ಟಿಕೆಟ್‌ ಪಡೆದು ವೀಕ್ಷಿಸಲಾಗುತ್ತಿತ್ತು. ಕಮಲಾ ಹಂಪನಾ ಅವರ ಪುತ್ರನ ಜೊತೆ ತಾವೂ ವ್ಯಾಸಂಗ ಮಾಡುವಾಗ ರಾಜಾಜಿನಗರದಲ್ಲಿ ಸಮಯ ಕಳೆದಿದ್ದೆವು ಎಂದು ಮೃತರ, ಗಣ್ಯರ ನಡುವಿನ ಒಡನಾಟವನ್ನು ಮೆಲುಕು ಹಾಕಿದರು.
9
+ ಸಚಿವ ಡಾ.ಎಚ್‌.ಸಿಮಹದೇವಪ್ಪ ಮಾತನಾಡಿ, 14 ಜನ ಮಹನೀಯರು ನಮ್ಮನ್ನು ಅಗಲಿದ್ದಾರೆ. ಹುಟ್ಟು ಸ್ವಾಭಾವಿಕ, ಸಾವು ಖಚಿತ. ಬದುಕಿನ ಪ್ರಯಾಣ ಅಂತ್ಯಗೊಳಿಸಿದವರಿಗೆ ನಾವು ಸಂತಾಪವನ್ನು ಸಲ್ಲಿಸುತ್ತಿದ್ದೇವೆ ಎಂದು ಹೇಳಿ ಮೃತರ ಗುಣಗಾನ ಮಾಡಿದರು.ಜೆಡಿಎಸ್‌‍ನ ಶಾಸಕರಾದ ಶಾರದಾ ಪೂರ್ಯ ನಾಯಕ್‌, ತರೀಕೆರೆ ಶ್ರೀನಿವಾಸ್‌‍, ಹರೀಶ್‌ ಪೂಂಜಾ, ದರ್ಶನ್‌ ಧ್ರುವನಾರಾಯಣ, ಕೂಡ್ಲಗಿ ಶ್ರೀನಿವಾಸ್‌‍, ಶೈಲೇಂದ್ರ, ಹರೀಶ್‌, ಕೆ.ಆರ್‌.ಕೃಷ್ಣಮೂರ್ತಿ, ಬಿ.ವೈ.ವಿಜಯೇಂದ್ರ, ಬಸಂತಪ್ಪ, ಕೃಷ್ಣಪ್ಪ ಮತ್ತಿತರರು ಮೃತರ ಗುಣಗಾನ ಮಾಡಿ ತೀವ್ರ ಸಂತಾಪ ಸೂಚಿಸಿದರು.ನಂತರ ಸದನದಲ್ಲಿ ಸದಸ್ಯರೆಲ್ಲರೂ ಎದ್ದು ನಿಂತು ಮೌನಾಚರಣೆ ಮಾಡುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
eesanje/url_46_75_6.txt ADDED
@@ -0,0 +1,5 @@
 
 
 
 
 
 
1
+ ಜೆಡಿಎಲ್‌ಪಿ ನಾಯಕರಾಗಿ ಸುರೇಶ್‌ಬಾಬು ನೇಮಕ
2
+ ಬೆಂಗಳೂರು,ಜು.15-ಜೆಡಿಎಸ್‌‍ನ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸುರೇಶ್‌ಬಾಬು ಅವರನ್ನು ನೇಮಿಸಲಾಗಿದೆ. ಜೆಡಿಎಸ್‌‍ನ ರಾಜ್ಯಾಧ್ಯಕ್ಷರಾದ ಎಚ್‌.ಡಿ.ಕುಮಾರಸ್ವಾಮಿಯವರ ಶಿಫಾರಸು ಆಧರಿಸಿ ಜೆಡಿಎಸ್‌‍ ಪಕ್ಷದ ಶಾಸಕರನ್ನಾಗಿ ನೇಮಿಸಿರುವುದಾಗಿ ವಿಧಾನಸಭೆಯ ಅಧ್ಯಕ್ಷ ಯು.ಟಿ.ಖಾದರ್‌ ಪ್ರಕಟಿಸಿದರು.
3
+ ಕುರುಬ ಸಮುದಾಯಕ್ಕೆ ಸೇರಿರುವ ಸುರೇಶ್‌ಬಾಬು ಅವರು, ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ನಾಲ್ಕನೇ ಅವಧಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಮೊದಲು ಎಚ್‌.ಡಿ. ಕುಮಾರ ಸ್ವಾಮಿಯವರು ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕರಾಗಿ ಕೆಲಸ ಮಾಡುತ್ತಿದ್ದರು.
4
+ ಅಧಿಕೃತ ಬಿಜೆಪಿ ವಿರೋಧ ಪಕ್ಷವಾಗಿದ್ದರೂ ಕೂಡ ಜೆಡಿಎಸ್‌‍ನ ಕುಮಾರಸ್ವಾಮಿಯವರ ಚರ್ಚೆಗಳು, ಹೇಳಿಕೆಗಳು ಹೆಚ್ಚು ಮಹತ್ವ ಪಡೆದುಕೊಂಡಿದ್ದವು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ- ಜೆಡಿಎಸ್‌‍ ಮೈತ್ರಿರಾಜಕಾರಣ ನಡೆಯುತ್ತಿದ್ದು, ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಮಂಡ್ಯ ಕ್ಷೇತ್ರ ದಿಂದ ಸಂಸದರಾಗಿ ಆಯ್ಕೆಯಾಗಿದ್ದು, ಕೇಂದ್ರ ಸರ್ಕಾರದಲ್ಲಿ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ.
5
+ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಅವರಿಂದ ತೆರವಾದ ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸುರೇಶ್‌ ಬಾಬು ಅವರನ್ನು ನೇಮಿಸಲಾಗಿದೆ.
eesanje/url_46_75_7.txt ADDED
@@ -0,0 +1,7 @@
 
 
 
 
 
 
 
 
1
+ ರಾಯಚೂರು ಏಮ್ಸೌ ಕುರಿತು ಮೇಲ್ಮನೆಯಲ್ಲಿ ವಾಕ್ಸಮರ
2
+ ಬೆಂಗಳೂರು,ಜು.15-ರಾಯಚೂರಿ ನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸೌ) ಸ್ಥಾಪನೆ ಮಾಡುವ ಕುರಿತು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಿಧಾನ ಪರಿಷತ್ನಲ್ಲಿ ಭಾರೀ ಮಾತಿನ ಚಕಮಕಿ ನಡೆಯಿತು. ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ನ ತಿಪ್ಪೇಸ್ವಾಮಿ ಅವರು ರಾಯಚೂರಿನಲ್ಲಿ ಏಮ್ಸೌ ಆಸ್ಪತ್ರೆಯನ್ನು ಯಾವಾಗ ಸ್ಥಾಪನೆ ಮಾಡುತ್ತೀರಿ ಎಂದು ಪ್ರಶ್ನಿಸಿದರು.
3
+ ಇದಕ್ಕೆ ಉತ್ತರಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು, ರಾಯಚೂರಿನಲ್ಲಿ ಏಮ್ಸೌ ಸ್ಥಾಪನೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು, ಸಂಸದರು, ಕಲ್ಯಾಣ ಕರ್ನಾಟಕ ಭಾಗದ ಶಾಸಕರು, ಕೇಂದ್ರದ ಆರೋಗ್ಯ ಸಚಿವರನ್ನು ಎರಡು ಬಾರಿ ಭೇಟಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
4
+ ಏಮ್ಸೌ ಆಸ್ಪತ್ರೆ ಸ್ಥಾಪನೆ ಮಾಡಿದರೆ ಭೂಮಿ, ವಿದ್ಯುತ್, ನೀರು ಸೇರಿದಂತೆ ಎಲ್ಲಾ ರೀತಿಯ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡುವುದಾಗಿ ಹೇಳಿದ್ದೆವು. ಆದರೂ ಕೇಂದ್ರ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ದೇಶದ ಎಲ್ಲ ರಾಜ್ಯಗಳಲ್ಲೂ ಏಮ್ಸೌ ಸ್ಥಾಪನೆ ಮಾಡಲು ಅವಕಾಶ ನೀಡಲಾಗಿದೆ ಆದರೆ ಕರ್ನಾಟಕ ಮತ್ತು ಕೇರಳಕ್ಕೆ ಅವಕಾಶ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಆಕ್ಷೇಪಿಸಿದರು.
5
+ ಈ ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ಗದ್ದಲ ಉಂಟಾಯಿತು. ಬಿಜೆಪಿಯ ಸಿ.ಟಿ.ರವಿ ಅವರು ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡಿಲ್ಲ. ಐಐಟಿ ಕೊಟ್ಟಿದ್ದು ನರೇಂದ್ರಮೋದಿ ಸರ್ಕಾರವಲ್ಲವೇ? ಎಂದು ಪ್ರಶ್ನೆ ಮಾಡಿದರು.
6
+ ಆಗ ಆಡಳಿತ ಪಕ್ಷ ಪ್ರಿಯಾಂಕ ಖರ್ಗೆ ಸೇರಿದಂತೆ ಮತ್ತಿತರರು ಕೇಂದ್ರ ಸರ್ಕಾರವೇನೂ ನಮ್ಮಗೆ ದಾನ ಕೊಡುತ್ತದೆಯೇ? ನಾವೇನು ಕೇಂದ್ರಕ್ಕೆ ತೆರಿಗೆ ಕಟ್ಟುವುದಿಲ್ಲವೇ? ಕರ್ನಾಟಕಕ್ಕೆ ಏಮ್ಸೌ ಮಂಜೂರು ಮಾಡಲು ನಿಮ ಪ್ರಧಾನಿಗೆ ಹೇಳಿ ಎಂದು ಸವಾಲು ಹಾಕಿದರು.
7
+ ಮುಖ್ಯಮಂತ್ರಿಗಳು ಅನೇಕ ಬಾರಿ ಸಂಬಂಧಪಟ್ಟ ಸಚಿವರನ್ನು ಭೇಟಿಯಾಗಿ ಮನವಿ ಮಾಡಿಕೊಂಡರೂ ಸ್ಪಂದಿಸಿಲ್ಲ. ಇನ್ನು ಎಷ್ಟು ಬಾರಿ ಪ್ರಯತ್ನಿಸಬೇಕು, ನಮ್ಮಗೇನು ಉಚಿತವಾಗಿ ಕೊಡುವುದಿಲ್ಲ. ಬೇರೆ ರಾಜ್ಯಗಳಿಗೆ ಕೊಟ್ಟಂತೆ ನಮ್ಮಗೂ ಕೊಡಬೇಕು ಎಂಬುದಷ್ಟೇ ನಮ್ಮ ಮನವಿ. ನಿಮ ಸಂಸದರ ಮೂಲಕ ಒತ್ತಡ ಹಾಕಿ ಶರಣಪ್ರಕಾಶ್ ಪಾಟೀಲ್ ಸಿ.ಟಿ.ರವಿಗೆ ತಿರುಗೇಟು ನೀಡಿದರು.
eesanje/url_46_75_8.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಡಿಸಿಎಂ ಡಿಕೆಶಿಗೆ “ಸುಪ್ರೀಂ” ಹಿನ್ನಡೆ, ಸಿಬಿಐ ತನಿಖೆ ರದ್ದು ಕೋರಿದ್ದ ಅರ್ಜಿ ವಜಾ
2
+ ಬೆಂಗಳೂರು,ಜು.15-ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತಮ್ಮ ವಿರುದ್ಧ ದಾಖಲಿಸಿರುವ ದೂರನ್ನು ರದ್ದುಗೊಳಿಸಬೇಕೆಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಮೇಲನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ನ್ಯಾಯಾಲಯದ ಈ ಆದೇಶದಿಂದಾಗಿ ಕಾನೂನು ಹೋರಾಟದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಭಾರೀ ಹಿನ್ನಡೆ ಉಂಟಾಗಿದೆ.
3
+ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಎಸ್ಸಿ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠವು ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ಕ್ಷಮಿಸಿ ನಿಮ ಅರ್ಜಿಯನ್ನು ವಜಾಗೊಳಿಸುತ್ತೇವೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸುಪ್ರೀಂಕೋರ್ಟ್ನ ದ್ವಿಸದಸ್ಯ ಪೀಠ ಮೂರು ತಿಂಗಳೊಳಗೆ ಶಿವಕುಮಾರ್ ಮೇಲಿನ ಆರೋಪದ ಕುರಿತು ತನಿಖೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶನ ನೀಡಿದೆ.
4
+ ಈ ವೇಳೆ ಡಿ.ಕೆ.ಶಿವಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಕಾಯ್ದೆಯಡಿ ಈಗಾಗಲೇ ಕಾನೂನು ಕ್ರಮ ಜರುಗಿಸಲಾಗಿದೆ. ಸಿಬಿಐ ಕೂಡ ಅದರ ವಿಚಾರಣೆ ನಡೆಸುವುದು ಹೇಗೆ? ಇದು ಅಕ್ರಮ ಎಂದು ವಾದ ಮಂಡಿಸಿದರು.
5
+ ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ ನಿಮ ಮೇಲೆ ಇಸಿ ಆಕ್ಟ್ ನಡಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಇಸಿ ಆಕ್ಟ್ನಡಿ ಆದಾಯ ತೆರಿಗೆ ಅಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಹೀಗಾಗಿ ನಾವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿತು.
6
+ ಏನಿದು ಪ್ರಕರಣ?:2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿ.ಕೆ.ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಇಡಿ ಡಿಕೆಶಿ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್ 3 ರಂದು ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
7
+ ಈ ಎಫ್ಐಆರ್ನ್ನು ರದ್ದುಗೊಳಿಸುವಂತೆ ಕೋರಿ ಡಿಕೆಶಿ ಹೈಕೋರ್ಟ್, ಸುಪ್ರೀಂ ಮೊರೆ ಹೋಗಿದ್ದರು. ಡಿಕೆ ಶಿವಕುಮಾರ್ ಅವರು 2013 ಮತ್ತು 2018 ರ ನಡುವೆ ತಮ್ಮ ಆದಾಯಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿಯನ್ನು ಗಳಿಸಿದ್ದಾರೆ . ಈ ಅವಧಿಯಲ್ಲಿ ಅವರು ಸಚಿವರಾಗಿದ್ದರು ಎಂದು ಸಿಬಿಐ ಆರೋಪಿಸಿದೆ.ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದಾಗ, 2013 ರ ಏಪ್ರಿಲ್ 1 ರಿಂದ 2018 ರ ಏಪ್ರಿಲ್ 30 ಅವಧಿಯಲ್ಲಿ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರ���. 74.93 ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಗಳಿಸಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು.
8
+ 2017 ರಲ್ಲಿ ಶಿವಕುಮಾರ್ ಮನೆ ಮತ್ತು ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧ ಕಾರ್ಯಾಚರಣೆಗಳ ಆಧಾರದ ಮೇಲೆ, ಜಾರಿ ನಿರ್ದೇಶನಾಲಯ ಕೂಡ ವಿರುದ್ಧ ಡಿಕೆ ಶಿವಕುಮಾರ್ ವಿರುದ್ಧ ತನಿಖೆಯನ್ನು ಪ್ರಾರಂಭಿಸಿತ್ತು. ಇ.ಡಿ ತನಿಖೆಯ ಆಧಾರದ ಮೇಲೆ ಸಿಬಿಐ ಅವರ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ರಾಜ್ಯ ಸರ್ಕಾರವು 2019 ರ ಸೆಪ್ಟೆಂಬರ್ 25ರಂದು ಅನುಮತಿ ನೀಡಿತ್ತು. ಅದರಂತೆ, ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ 2020 ರ ಅಕ್ಟೋಬರ್ 3 ರಂದು ಎಫ್ಐಆರ್ ದಾಖಲಿಸಿತ್ತು. ಸುಮಾರು ಶೇ.45 ಅಥವಾ ರೂ. 75 ಕೋಟಿ ರೂ.ರಷ್ಟು ಏರಿಕೆಯಾಗಿದೆ ಎಂದು ಸಿಬಿಐ ತನ್ನ ಅರ್ಜಿಯಲ್ಲಿ ಆರೋಪಿಸಿತ್ತು.
9
+ ಈಗಲ್ಟನ್ ರೆಸಾರ್ಟ್ನಲ್ಲಿ ನಡೆದ ದಾಳಿಯನ್ನು ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಸಿಬಿಐ ತನಿಖೆಗೆ ನೀಡಿತ್ತು. ಸರ್ಕಾರದ ನಡೆಯನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.2017ರಲ್ಲಿ ಡಿ.ಕೆ ಶಿವಕುಮಾರ್ ವಾಸ್ತವ್ಯವಿದ್ದ ಈಗಲ್ಟನ್ ರೆಸಾರ್ಟ್ ಮತ್ತು ಅವರ ಸಹಚರರ ಮೇಲೆ ದಾಳಿ ಮೇಲೆ ದಾಳಿ ಮಾಡಿದ್ದ ಆದಾಯ ತೆರಿಗೆ ಇಲಾಖೆ ಸುಮಾರು 8.59 ಕೋಟಿ ಹಣ ವಶಪಡಿಸಿಕೊಂಡಿತ್ತು. ಲೆಕ್ಕಕ್ಕೆ ಸಿಗದ ಈ ಹಣವನ್ನು ಡಿ.ಕೆ ಶಿವಕುಮಾರ್ ತಮ್ಮ ಸಹಚರರ ಬಳಿ ಇರಿಸಿದ್ದರು ಎಂದು ಆರೋಪಿಸಿತ್ತು.
10
+ ಇದೇ ಪ್ರಕರಣದಲ್ಲಿ ಇಡಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು.ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್ 3 ರಂದು ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. 2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.
eesanje/url_46_75_9.txt ADDED
@@ -0,0 +1,7 @@
 
 
 
 
 
 
 
 
1
+ ಸಾರಿಗೆ ಬಸ್ ಟಿಕೆಟ್ ದರ ಏರಿಕೆಯಿಲ್ಲ : ಸಚಿವ ರಾಮಲಿಂಗಾರೆಡ್ಡಿ
2
+ ಬೆಂಗಳೂರು,ಜು.15-ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ತಮ್ಮ ಮುಂದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶಾನ್ಯ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿರುವ ರಾಜು ಕಾಗೆ ಅವರು, ಪೆಟ್ರೋಲ್, ಡೀಸೆಲ್ ದರದ ಏರಿಕೆ ನಂತರ ಸಾರಿಗೆ ಸಂಸ್ಥೆಗಳಿಗೆ ನಷ್ಟವಾಗುತ್ತಿದೆ.
3
+ ಈಗ ಈ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಬೇಕೆಂಬ ಹೇಳಿಕೆಗೆ ಸಚಿವರು ಅಸಮತಿ ಸೂಚಿಸಿದರು.ಅಧ್ಯಕ್ಷರಾಗಿ ಅವರು ತಮ್ಮ ಅಭಿಪ್ರಾಯವನ್ನು ಹೇಳಿಕೊಂಡಿದ್ದಾರೆ. ಆದರೆ ಸಚಿವನಾಗಿ ನನ್ನ ಮುಂದೆ ಯಾವುದೇ ಪ್ರಸ್ತಾಪಗಳಿಲ್ಲ. ಒಂದು ವೇಳೆ ಅಂತಹ ಪ್ರಸ್ತಾಪಗಳು ಬಂದರೆ ಪರಿಶೀಲಿಸುವುದಾಗಿ ಹೇಳಿದರು. ಈ ಮೂಲಕ ಬಸ್ ಪ್ರಯಾಣ ದರ ಏರಿಕೆಯ ಪ್ರಸ್ತಾಪವನ್ನು ಸಚಿವರು ತಳ್ಳಿ ಹಾಕಿದ್ದಾರೆ. ಪೆಟ್ರೋಲ್, ಡೀಸೆಲ್ ಮೇಲೆ ಮಾರಾಟ ತೆರಿಗೆ ಏರಿಕೆ ಮಾಡಿದ ಬಳಿಕ ಸಾರಿಗೆ ಸಂಸ್ಥೆಗಳಿಗೆ ನಷ್ಟವಾಗುತ್ತಿದೆ ಎಂಬ ವ್ಯಾಖ್ಯಾನಗಳು ಕೇಳಿಬಂದಿವೆ.
4
+ ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ. ಬಿಜೆಪಿಯವರು ಹೇಳುತ್ತಿರುವಂತಹ ಹಗರಣ ನಡೆದಿರುವುದು 2021 ರಲ್ಲಿ. ಆಗ ಮುಖ್ಯಮಂತ್ರಿಯಾಗಿದ್ದುದು ಬಿ.ಎಸ್.ಯಡಿಯೂರಪ್ಪ ಅವರು. ಸಾರಿಗೆ ಸಚಿವರು, ಮುಡಾ ಅಧ್ಯಕ್ಷರಾಗಿದ್ದವರೂ ಕೂಡ ಬಿಜೆಪಿ ನಾಯಕರು. ಸಿದ್ದರಾಮಯ್ಯನವರು ತಮ್ಮ ಜಮೀನಿಗೆ ಪರಿಹಾರ ಕೇಳಿದ್ದಾರೆ. ಬಿಜೆಪಿಯವರು ನಿಯಮ ಬಾಹಿರವಾಗಿ ನಿವೇಶನಗಳನ್ನು ಕೊಟ್ಟಿದ್ದರೆ ಅದು ಅವರೇ ಮಾಡಿದ ತಪ್ಪು. ಅದಕ್ಕೆ ನಮ್ಮ ಸರ್ಕಾರ ಹೊಣೆಯಲ್ಲ ಎಂದರು.
5
+ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಪಕ್ಷ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ಯಾವುದೇ ಆರೋಪಗಳು ಕೇಳಿಬಂದರೂ ತನಿಖೆ ನಡೆಸುತ್ತಿದ್ದೇವೆ. ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಹಗರಣದಲ್ಲಿ ಎಸ್ಐಟಿ ತನಿಖೆಗೆ ವಹಿಸಲಾಗಿದೆ. ಮುಡಾ ಹಗರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ.
6
+ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಿಎಸ್ಐ, ಎಂಜಿನಿಯರಿಂಗ್, ಕೆಇಬಿ ಹುದ್ದೆಗಳ ನೇಮಕಾತಿಗೆ ಹಗರಣಗಳಾಗಿದ್ದವು. ಬಿಟ್ ಕಾಯಿನ್, 40 ಪರ್ಸೆಂಟ್ ಕಮಿಷನ್ ಸೇರಿದಂತೆ ನಾನಾ ಹಗರಣಗಳಾಗಿದ್ದವು. ಬಿಜೆಪಿ ಇದ್ಯಾವುದನ್ನೂ ತನಿಖೆಗೆ ಒಪ್ಪಿಸಲಿಲ್ಲ. ನಮ್ಮ ಸರ್ಕಾರ ಪಾರದರ್ಶಕವಾಗಿದೆ. ಅದಕ್ಕಾಗಿ ಯಾವುದೇ ಆರೋಪ ಕೇಳಿಬಂದರೂ ತನಿಖೆ ಮಾಡಿಸುತ್ತಿದ್ದೇವೆ ಎಂದು ಹೇಳಿದರು.
7
+ ಶೇ.40 ಹಗರಣಕ್ಕೆ ಸಾಕ್ಷಿ ಇರುವುದಿಲ್ಲ. ಒಂದು ವೇಳೆ ಸಾಕ್ಷಿ ಕೊಡಬೇಕೆಂದಾದರೂ ನ್ಯಾಯಾಲಯದಲ್ಲಿ ವಿಚಾರಣೆಯಾಗಬೇಕು, ದೋಷಾರೋಪಣ ಪಟ್ಟಿ ಸಲ್ಲಿಕೆಯಾಗಬೇಕು, ಅನಂತರ ಸಾಕ್ಷಿಯನ್ನು ಸಲ್ಲಿಸಬಹುದು ಎಂದರು.
eesanje/url_46_76_1.txt ADDED
@@ -0,0 +1,6 @@
 
 
 
 
 
 
 
1
+ ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ಕುರಿತ ಚರ್ಚೆಗೆ ವಿಧಾನಪರಿಷತ್‌ನಲ್ಲಿ ನಿಲುವಳಿ ಸೂಚನೆ
2
+ ಬೆಂಗಳೂರು,ಜು.15-ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯಲ್ಲಿ ನಡೆದಿರುವ ಬಹುಕೋಟಿ ಹಗರಣ ಕುರಿತು ಚರ್ಚೆಗೆ ಅವಕಾಶ ಕೊಡಬೇಕೆಂದು ಪ್ರತಿಪಕ್ಷ ಬಿಜೆಪಿ ವಿಧಾನಪರಿಷತ್‌ನಲ್ಲಿ ನಿಲುವಳಿ ಸೂಚನೆ ಮಂಡಿಸಿತು. ಬಿಜೆಪಿ ಸದಸ್ಯ ಸಿ.ಟಿ.ರವಿ ಅವರು ನಿಯಮ 59ರಡಿ ನಿಲುವಳಿ ಸೂಚನೆ ಮಂಡಿಸಿ ಚರ್ಚೆಗೆ ಅವಕಾಶ ಮಾಡಿಕೊಡಬೇಕೆಂದು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮನವಿ ಮಾಡಿದರು.
3
+ ಇದು ಬಹುದೊಡ್ಡ ಹಗರಣವಾಗಿರುವುದರಿಂದ ದಿನದ ಕಲಾಪವನ್ನು ಬದಿಗೊತ್ತಿ ಚರ್ಚೆಗೆ ಅವಕಾಶ ಮಾಡಿಕೊಡಿ. ಇದೊಂದು ಬ್ರಹಾಂಡ ಭ್ರಷ್ಟಾಚಾರ. ಅಹಿಂದ ನಾಯಕರು ಎಂದುಕೊಂಡವರ ಅಡಿಯಲ್ಲೇ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು.ಆಗ ಸಭಾಪತಿಗಳು ಸದನವನ್ನು ನಿಯಮಗಳ ಪ್ರಕಾರ ನಡೆಸಬೇಕು, ನೀವು ನೋಟಿಸ್‌‍ ನೀಡಿರುವುದು ನಮ ಗಮನಕ್ಕೆ ಬಂದಿದೆ. ಮೊದಲು ಪ್ರಶ್ನೋತ್ತರ ಕಲಾಪವನ್ನು ಕೈಗೆತ್ತಿಕೊಳ್ಳಬೇಕು. ನಂತರ ನಿರ್ಧರಿಸುತ್ತೇನೆ ಎಂದು ಹೇಳಿದರು.
4
+ ಈ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿಯ ಎನ್‌.ರವಿಕುಮಾರ್‌ ಅವರು ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಿಂದ ಬಳ್ಳಾರಿ ಲೋಕಸಭೆ ಚುನಾವಣೆಗೆ ಎಷ್ಟು ಹಣ ಹೋಗಿದೆ? ತೆಲಂಗಾಣಕ್ಕೆ ಎಷ್ಟು ಹಣ ಹೋಗಿದೆ ಇದರ ಬಗ್ಗೆ ಚರ್ಚೆಯಾಗಬೇಕೆಂದು ಪಟ್ಟು ಹಿಡಿದರು.
5
+ ಈ ಸಂದರ್ಭದಲ್ಲಿ ಕಾಂಗ್ರೆಸ್‌‍ನ ಯು.ಬಿ.ವೆಂಕಟೇಶ್‌ ಅವರು ನಿಮದು ಸಾವಿರಾರು ಕೋಟಿ ಭ್ರಷ್ಟಾಚಾರದ ಬಗ್ಗೆ ನಮ ಬಳಿಯೂ ದಾಖಲೆಗಳಿವೆ. ಸಭಾಪತಿಗಳು ಪ್ರಶ್ನೋತ್ತರವನ್ನು ಕೈಗೆತ್ತಿಕೊಳ್ಳುತ್ತೇನೆ ಎಂದು ಹೇಳಿದ ಮೇಲೆ ಚರ್ಚೆ ಮಾಡುವ ಅಗತ್ಯವೇನಿದೆ ಎಂದು ಪ್ರಶ್ನೆ ಮಾಡಿದರು.
6
+ ಈ ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತಾದರೂ ಗಲಾಟೆ ನಡುವೆಯೇ ಸಭಾಪತಿಯವರು ಪ್ರಶ್ನೋತ್ತರ ಕಲಾಪವನ್ನು ಕೈಗೆತ್ತಿಕೊಂಡರು.
eesanje/url_46_76_10.txt ADDED
@@ -0,0 +1,7 @@
 
 
 
 
 
 
 
 
1
+ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ : ರೆಡ್‌ ಅಲರ್ಟ್‌ ಘೋಷಣೆ
2
+ ಬೆಂಗಳೂರು, ಜು.15-ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದೆ. ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ.
3
+ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಹಾಗೂ ಪಿಯುಸಿವರೆಗೂ ಕಾಲೇಜಿಗೆ ರಜೆ ನೀಡಲಾಗುತ್ತಿದೆ. ರಾಜ್ಯದ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುತ್ತಿದೆ. ಮಲೆನಾಡು ಸೇರಿದಂತೆ ಕೆಲವೆಡೆ ಉತ್ತಮ ಮಳೆಯಾಗಿದೆ.ವಾತಾವರಣದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ. ಮೋಡ ಕವಿದ ವಾತಾವರಣವಿರಲಿದ್ದು, ಆಗಾಗ್ಗೆ ಹಗುರ ಮಳೆಯಾಗುವ ಸಾಧ್ಯತೆಗಳಿವೆ.
4
+ ಕೇರಳದ ಉತ್ತರ ಕರಾವಳಿಯೊಂದ ಮಹಾರಾಷ್ಟ್ರದವರೆಗೆ ಅರಬ್ಬೀ ಸಮುದ್ರದಲ್ಲಿ ಮೇಲುಬ್ಬರ(ಟ್ರಫ್‌) ಉಂಟಾಗಿದೆ. ಜೊತೆಗೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಉಂಟಾಗಿದೆ. ಆಂದ್ರ ಪ್ರದೇಶದ ಕರಾವಳಿಯ ಮಧ್ಯ ಬಂಗಾಳ ಕೊಲ್ಲಿಯ ಮೇಲೆ ಚಂಡಮಾರುತದೆ ಪರಿಚಲನೆ ಉಂಟಾಗುತ್ತಿದೆ.
5
+ ಈ ಎರಡು ಕಾರಣಗಳಿಂದ ಮೋಡ ಕವಿದ ವಾತಾವರಣ ಕಂಡುಬರಲಿದೆ. ಕೆಲವೆಡೆ ತುಂತುರು ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.ನಾಳೆಯಿಂದ ಜು.19ರವರಗೆ ಜೋರಾದ ಮೇಲೈ ಗಾಳಿ ಬೀಸಲಿದೆ. ಅಲ್ಲದೆ, ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯನ್ನು ಉಲ್ಲೇಖಿಸಿ ಹೇಳಿದೆ.
6
+ ಉತ್ತರ ಒಳನಾಡಿನಲ್ಲಿ ನಾಳೆಯಿಂದ ಎರಡು ದಿನ ಅಧಿಕ ಮಳೆಯಾಗುವ ಮುನ್ಸೂಚನೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.ನಿನ್ನೆಯಿಂದಲೇ ಕೆಲವೆಡೆ ಆಗಾಗ್ಗೆ ತುಂತುರು ಮಳೆ ಆರಂಗೊಂಡಿದ್ದು, ಇಂದೂ ಮುಂದುವರೆದಿದೆ. ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಆರಂಭಗೊಂಡ ಹಗುರ ಮಳೆ ಇಂದೂ ಕೂಡ ಮುಂದುವರೆದಿದೆ.
7
+ ಮೋಡ ಕವಿದಿರುವುದರಿಂದ ತಂಪಾದ ವಾತಾವರಣವಿದ್ದು, ಚಳಿಯ ಅನುಭವವಾಗುತ್ತಿದೆ. ಜಿಟಿಜಿಟಿ ಮಳೆಯಾಗುವ ಲಕ್ಷಗಳು ಗೋಚರಿಸುತ್ತಿವೆ. ಇದರಿಂದ ದೈನಂದಿನ ಕೆಲಸ ಕಾರ್ಯಗಳಿಗೆ ತೆರಳುವವರು ಕೊಡೆ, ಜರ್ಕಿನ್‌ಗಳ ಆಶ್ರಯ ಪಡೆದಿರುವುದು ಹಲವೆಡೆ ಕಂಡುಬಂದಿತು.
eesanje/url_46_76_11.txt ADDED
@@ -0,0 +1,4 @@
 
 
 
 
 
1
+ ದುಮ್ಮಿಕ್ಕಿ ಹರಿಯುತ್ತಿರುವ ಜೋಗ ಜಲಪಾತ ವೀಕ್ಷಣೆಗೆ ಮುಗಿಬಿದ್ದ ಪ್ರವಾಸಿಗರು
2
+ ಶಿವಮೊಗ್ಗ,ಜು.15-ಶರಾವತಿ ನದಿಪಾತ್ರದಲ್ಲಿ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿರುವುದರಿಂದ ಜೋಗಜಲಪಾತದ ರಾಜ, ರಾಣಿ, ರೋರಲ್‌ಲೇಡಿ ಹಾಗೂ ರಾಕೇಟ್‌ ದುಮಿಕ್ಕಿ ಹರಿಯುತ್ತಿದ್ದು ಈ ರಮಣಿಯ ಸೌಂದರ್ಯ ವೀಕ್ಷಣೆಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
3
+ ಜೋಗಜಲಪಾತದಲ್ಲಿ ಹಾಲ್ನೋರೆಯಂತೆ ಬಂಡೆಗಳ ನಡುವೆ ಹರಿಯುತ್ತಾ ಸದ್ದು ಮಾಡುತ್ತಾ ಭಾರಿ ಎತ್ತರದಿಂದ ಧುಮಿಕ್ಕಿ ಹರಿಯುವ ಮನೋಹರ ದೃಶ್ಯವನ್ನು ನೋಡುವುದೆ ಒಂದು ಚಂದ ಅದರಲ್ಲೂ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ನೀರಿನ ರಭಸ ಜೋರಾಗಿದ್ದು ಸ್ವರ್ಗವೆ ಧರೆಗಿಳಿದಂತೆ ಭಾಸವಾಗುತ್ತದೆ.
4
+ ರಾಜ್ಯದ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿ ಜಲಪಾತದ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ನೆನ್ನೆ ವಿಕೆಂಡ್‌ ಹಿನ್ನಲೆಯಲ್ಲಿ ಚುಮು ಚುಮ ಚಳಿ, ತುಂತುರು ಮಳೆ ನಡುವೆಯೂ ಬೆಂಗಳೂರು, ಮೈಸೂರು, ತುಮಕೂರು, ಸೇರಿದಮಂತೆ ವಿವಿಧ ಜಿಲ್ಲೆಗಳಿಂದ ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದು ವಾಹನ ದಟ್ಟಣೆ ಹಾಗೂ ಜನ ದಟ್ಟಣೆ ಉಂಟಾಗಿತ್ತು.ಸರದಿ ಸಾಲಿನಲ್ಲಿ ನಿಂತು ಜನರು ಟಿಕೆಟ್‌ ಖರೀದಿಸಿ ಜಲಪಾತದ ರಮಣೀಯ ದೃಶ್ಯವನ್ನು ಕಣ್ತುಂಬಿಕೊಂಡರು.
eesanje/url_46_76_12.txt ADDED
@@ -0,0 +1,8 @@
 
 
 
 
 
 
 
 
 
1
+ ಕಾವೇರಿ ನೀರು ಹರಿಸುವ ತೀರ್ಪಿನ ಹಿನ್ನೆಲೆಯಲ್ಲಿ ಇಂದು ಸಂಜೆ ಸರ್ವಪಕ್ಷ ಸಭೆ
2
+ ಬೆಂಗಳೂರು,ಜು.14- ಕಾವೇರಿ ನದಿಪಾತ್ರದಿಂದ ತಮಿಳುನಾಡಿಗೆ ಪ್ರತಿದಿನ ಒಂದು ಟಿಎಂಸಿ ನೀರು ಹರಿಸುವಂತೆ ಹೇಳಲಾಗಿರುವ ತೀರ್ಪಿನ ಕುರಿತಂತೆ ಇಂದು ಸಂಜೆ ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ರಾಜ್ಯದ ಹಿತಾಸಕ್ತಿ ತಕ್ಷಣದ ಸಲುವಾಗಿ ಮಹತ್ವದ ಚರ್ಚೆಗಳು ನಡೆಯಲಿವೆ.ಸಭೆಗೆ ಕಾವೇರಿ ನದಿಪಾತ್ರದ ಶಾಸಕರು, ವಿಧಾನಪರಿಷತ್‌ ಸದಸ್ಯರು, ಸಂಸದರು, ರಾಜ್ಯಸಭಾ ಸದಸ್ಯರು, ರಾಜ್ಯದಿಂದ ಕೇಂದ್ರದಲ್ಲಿ ಸಚಿವರಾದವರನ್ನು ಆಹ್ವಾನಿಸಲಾಗಿದೆ.
3
+ ಪ್ರತಿದಿನ ಒಂದು ಟಿಎಂಸಿ ನೀರನ್ನು ಹರಿಸಬೇಕು ಎಂದು ಆದೇಶಿಸಿರುವುದು ರಾಜ್ಯ ಸರ್ಕಾರಕ್ಕೆ ಬಿಸಿ ತುಪ್ಪವಾಗಿದ್ದು, ಇದರ ಪಾಲಿಸಿದರೆ ಭವಿಷ್ಯದಲ್ಲಿ ಕೃಷಿ, ಕುಡಿಯುವ ನೀರಿಗೆ ಸಮಸ್ಯೆಎ ಎದುರಾಗಲಿದೆ.
4
+ ಹೀಗಾಗಿ ಆದೇಶದ ಪಾಲನೆ ಕಷ್ಟಸಾಧ್ಯ ಎಂಬ ಅಭಿಪ್ರಾಯವನ್ನು ರಾಜ್ಯ ಸರ್ಕಾರ ಹೊಂದಿದೆ. ಈಗಾಗಲೇ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ನೀಡಿರುವುದರಿಂದ ಅದರ ಅನುಷ್ಠಾನಕ್ಕೆ ಕಾಲಾವಕಾಶ ನೀಡುವಂತೆ ಮೇಲನವಿ ಸಲ್ಲಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
5
+ ಆದರೆ ಸರ್ವಪಕ್ಷಗಳ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿ ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಮಂಡ್ಯದ ಸಂಸದರಾಗಿರುವ ಎಚ್‌.ಡಿ.ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ಪ್ರಮುಖ ಸಚಿವರಾಗಿದ್ದಾರೆ. ಹೀಗಾಗಿ ಕಾವೇರಿ ನೀರಿನ ವಿವಾದವನ್ನು ಬಗೆಹರಿಸಲು ಅವರ ಸಹಕಾರ ಕೋರಲು ಸರ್ಕಾರ ನಿರ್ಧರಿಸಿದೆ.
6
+ ರಾಜ್ಯದಲ್ಲಿ ಮಳೆಯಾಗುತ್ತಿದ್ದರೂ ಕೆರೆಕಟ್ಟೆಗಳು ತುಂಬುವಷ್ಟು ನೀರು ಬರುತ್ತಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ತಮಿಳುನಾಡಿನಲ್ಲೂ ಸಾಕಷ್ಟು ಮಳೆಯಾಗಿದ್ದು, ಅಲ್ಲಿನ ಜಲಾಶಯಗಳಲ್ಲಿ ಹೆಚ್ಚುವರಿ ನೀರಿದೆ. ಸುಮಾರು 5.5 ಟಿಎಂಸಿ ನೀರನ್ನು ತಮಿಳುನಾಡು ನದಿಗೆ ಹರಿಯಬಿಟ್ಟಿದೆ ಎಂದು ಸಿಡಬ್ಲ್ಯುಆರ್‌ಸಿ ಮುಂದೆ ಕರ್ನಾಟಕ ವಾದ ಮಂಡಿಸಿತ್ತು. ಅದರ ಹೊರತಾಗಿಯೂ ಜು.31ರವರೆಗೆ ಪ್ರತಿದಿನ 11,500 ಸಾವಿರ ಕ್ಯೂಸೆಕ್‌ ಅಂದರೆ ಒಂದು ಟಿಎಂಸಿ ನೀರನ್ನು ಹರಿಸುವಂತೆ ಸಿಡಬ್ಲ್ಯುಆರ್‌ಸಿ ಆದೇಶ ನೀಡಿದೆ.
7
+ ನದಿಪಾತ್ರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆಲವು ಜಲಾಶಯಗಳ ಒಳಹರಿವು ಹೆಚ್ಚಿದೆ. ಯಾಂತ್ರಿತವಾಗಿ ಹೊರಹರಿವು ಕೂಡ ಹೆಚ್ಚಾಗಿದ್ದು, ತಮಿಳುನಾಡಿಗೆ ನ್ಯಾಯಾಲಯದ ಆದೇಶಕ್ಕಿಂತಲೂ ಹೆಚ್ಚಿನ ನೀರು ತಲುಪುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ಮಳೆ ಕಡಿಮೆಯಾದರೆ ಜಲಾಶಯಗಳಲ್ಲಿನ ನೀರಿನ ಸಂಗ್ರಹ ತಗ್ಗಿದರೆ ಸಂಕಷ್ಟ ವರ್ಷ ಸೃಷ್ಟಿಯಾಗಲಿದೆ. ಪ್ರಸ್ತುತ ಉತ್ತಮ ಮಳೆಯಾಗುತ್ತಿದ್ದರೂ ಜಲಾಶಯಗಳಲ್ಲಿರುವ ನೀರು ಕೆರೆಕಟ್ಟೆಗಳನ್ನು ತುಂಬಿಸುವಷ್ಟು ಲಭ್ಯವಿಲ್ಲ ಎಂಬ ಅಂಕಿಅಂಶಗಳಿವೆ.
8
+ ತಮಿಳುನಾಡು ಹಿಂದಿನ ಜಲವರ್ಷದ ಬಾಕಿಯನ್ನೂ ಲೆಕ್ಕ ಹಾಕಿ ಪ್ರಸಕ್ತ ಸಾಲಿನಲ್ಲಿ ನೀರು ಹರಿಸಬೇಕೆಂದು ಪ��್ಟು ಹಿಡಿದಿದೆ. ಈ ನಿಟ್ಟಿನಲ್ಲಿ ಸಂಜೆ ನಡೆಯುವ ಸರ್ವಪಕ್ಷ ಸಭೆ ಗಮನಸೆಳೆದಿದೆ.
eesanje/url_46_76_2.txt ADDED
@@ -0,0 +1,4 @@
 
 
 
 
 
1
+ ರಾಜ್ಯದ ಉಪಮುಖ್ಯಮಂತ್ರಿಗಳ ಶೂಗಳನ್ನೇ ಕದ್ದ ಕಳ್ಳರು
2
+ ಬೆಂಗಳೂರು,ಜು.15-ವೈಟ್ಯಾಪಿಂಗ್‌ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮದ ಸಂದರ್ಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಶೂ ಕಳವಾಗಿದೆ. ಬಿಬಿಎಂಪಿ ಪಶ್ಚಿಮ ವಲಯದ ನಾಲ್ಕು ಪ್ರದೇಶಗಳ ರಸ್ತೆಗಳ ವೈಟ್ಯಾಪಿಂಗ್‌ ಕಾಮಗಾರಿಗೆ ಚಾಲನೆ ನೀಡಲಾಯಿತು.
3
+ ಚಾಲನೆಗೂ ಮುನ್ನ ನಡೆದ ಪೂಜೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌, ಶಾಸಕ ಅಶ್ವಥ್‌ ನಾರಾಯಣ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಭಾಗವಹಿಸಿದ್ದರು. ಸದಾಶಿವನಗರದ ಭಾಷಂ ಸರ್ಕಲ್‌ ಬಳಿ ನಡೆದ ಕಾರ್ಯಕ್ರಮದ ಸಂದರ್ಭದಲ್ಲಿ ಚಾಲಾಕಿ ಕಳ್ಳನೊಬ್ಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಶೂವನ್ನು ಎಗರಿಸಿದ್ದಾನೆ.
4
+ ವೈಟ್ಯಾಪಿಂಗ್‌ ಕಾಮಗಾರಿಗೂ ಮುನ್ನ ಶಿವಕುಮಾರ್‌ ಅವರು ಶೂ ಬಿಚ್ಚಿಟ್ಟಿದ್ದರು. ಪೂಜೆ ಮುಗಿಸಿ ಕಾರಿನ ಬಳಿ ತೆರಳಿದಾಗ ಶೂಗಳೇ ಇರಲಿಲ್ಲ. ಕೆಲ ಕಾಲ ಹುಡುಕಾಡಿದ ನಂತರ ಅವರು ಕಾರಿನಲ್ಲಿದ ಬೇರೆ ಶೂಗಳನ್ನು ಧರಿಸಿ ಹೊರಟರು.
eesanje/url_46_76_3.txt ADDED
@@ -0,0 +1,5 @@
 
 
 
 
 
 
1
+ ದಲಿತರ ಹೆಸರು ಹೇಳಿ ಗೆದ್ದು ಅವರ ಹಣವನ್ನೇ ಲೂಟಿ ಮಾಡಿದ ಕಾಂಗ್ರೆಸ್‌‍ ಸರ್ಕಾರ : ಅಶೋಕ್‌ ಕಿಡಿ
2
+ ಬೆಂಗಳೂರು,ಜು.15-ರಾಜ್ಯದ ಇತಿಹಾಸದಲ್ಲಿ 187 ಕೋಟಿ ದಲಿತರ ಹಣ ಲೂಟಿಯಾಗಿದೆ. ದಲಿತರ ಪರ ಹೇಳುತ್ತಾ ಮತ ಪಡೆದ ಕಾಂಗ್ರೆಸ್‌‍ ಅವರ ಹಣವನ್ನೇ ಲೂಟಿ ಹೊಡೆದಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಕಿಡಿಕಾರಿದರು.
3
+ ಈ ಸರ್ಕಾರ ನೈತಿಕವಾಗಿ ಸತ್ತು ಹೋಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮರ್ಯಾದೆ ಇದ್ದರೆ ಕೂಡಲೇ ತಮ ಸ್ಥಾನಕ್ಕೆ ರಾಜೀನಾಮೆ ಕೋಡಬೇಕು ಎಂದು ಆಗ್ರಹಿಸಿದರು. 187 ಕೋಟಿ ಲೂಟಿ ಮಾಡಿರುವ ಕಾಂಗ್ರೆಸ್‌‍ ವಿರುದ್ಧ ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಸದನದ ಒಳಗೆ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
4
+ ಸಿಎಂ ತಮನ್ನು ರಕ್ಷಣೆ ಮಾಡಿಕೊಳ್ಳಲು ಆಗಲು ನಿವೃತ್ತ ನ್ಯಾಯಮೂರ್ತಿಗಳ ಮುಖಾಂತರ ನ್ಯಾಯಾಂಗ ತನಿಖೆ ಮಾಡಿಸುತ್ತಿದ್ದಾರೆ. ಇವರ ಮೇಲೆ ಆರೋಪ ಬಂದರೆ ನ್ಯಾಯಂಗ ತನಿಖೆ. ಯಡಿಯೂರಪ್ಪ ಮೇಲಾದರೆ ಎಸ್‌‍ಐಟಿ ತನಿಖೆಯೇ? ಎಂದು ವ್ಯಂಗ್ಯವಾಡಿದರು.
5
+ ಶಾಸಕ ಅಶ್ವಥನಾರಾಯಣ್‌ ಮಾತನಾಡಿ, ಸಿದ್ದರಾಮಯ್ಯ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ತೊಡಗಿದೆಮುಡಾ ಹಗರಣದಲ್ಲಿ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ನಿವೃತ್ತ ನ್ಯಾಯಾಧೀಶರನ್ನು ನೇಮಕ ಮಾಡಿದ್ದಾ. ಸಿಬಿಐಗೆ ಹಸ್ತಾಂತರ ಮಾಡಬೇಕಿತ್ತು. ಸಿಎಂ ರಾಜೀನಾಮೆ ಕೊಡಬೇಕು. ಕಾಂಗ್ರೆಸ್‌‍ಗೆ ನೈತಿಕತೆ ಇಲ್ಲ, ಹೈಕಮಾಂಡ್‌ ನಾಯಕರೂ ಕೂಡ ಪ್ರತಿಕ್ರಿಯೆ ನೀಡಿಲ್ಲ. ಸದನದಲ್ಲಿ ಈ ವಿಷಯ ಪ್ರಸ್ತಾಪಿಸಿ ಚರ್ಚಿಸುತ್ತೇವೆ ಎಂದರು.
eesanje/url_46_76_4.txt ADDED
@@ -0,0 +1,5 @@
 
 
 
 
 
 
1
+ ವಿಧಾನಪರಿಷತ್‌ನ ಸಭಾನಾಯಕರಾಗಿ ಎನ್‌.ಎಸ್‌‍.ಭೋಸರಾಜ್‌ ನೇಮಕ
2
+ ಬೆಂಗಳೂರು,ಜು.15-ವಿಧಾನಪರಿಷತ್‌ನ ಸಭಾನಾಯಕರಾಗಿ ಹಾಲಿ ಸಚಿವ ಎನ್‌.ಎಸ್‌‍.ಭೋಸರಾಜ್‌ ಅವರು ನೇಮಕವಾಗಿದ್ದಾರೆ. ಮುಂಗಾರು ಅಧಿವೇಶನದ ಮೊದಲ ದಿನದ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಭಾ ನಾಯಕರಾಗಿ ಭೋಸರಾಜ್‌ ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಿಸಿದರು.
3
+ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆಯಂತೆ ಭೋಸರಾಜ್‌ ಅವರನ್ನು ನೇಮಿಸಲಾಗಿದೆ ಎಂದು ಪ್ರಕಟಿಸುತ್ತಿದ್ದಂತೆ ಸದನದ ಸದಸ್ಯರು ಮೇಜುಕುಟ್ಟಿ ಸ್ವಾಗತಿಸಿದರು.
4
+ ಸಣ್ಣ ನೀರಾವರಿ ಸಚಿವರಾಗಿರುವ ಭೋಸ್‌‍ ರಾಜ್‌ ಅವರು ಇತ್ತೀಚೆಗೆ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದರು.
5
+ ಹಿರಿತನದ ಆಧಾರದ ಮೇಲೆ ಭೋಸ್‌‍ರಾಜ್‌ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆಯೂ ಅವರು ಸಭಾ ನಾಯಕರಾಗಿ ಕಾರ್ಯ ನಿರ್ವಹಿಸಿದ್ದರು.
eesanje/url_46_76_5.txt ADDED
@@ -0,0 +1,6 @@
 
 
 
 
 
 
 
1
+ ವಿಧಾನಸೌಧದಲ್ಲಿ ಶಾಸಕ ಬಸನಗೌಡ ದದ್ದಲ್‌ ಪ್ರತ್ಯಕ್ಷ
2
+ ಬೆಂಗಳೂರು,ಜು.15- ಎಸ್‌‍ಐಟಿ ತನಿಖೆ ನಂತರ ಸಾರ್ವಜನಿಕವಾಗಿ ಕಾಣಿಸಿಕೊಳ್ಳದೇ ಇದ್ದ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ದದ್ದಲ್‌ ಇಂದು ವಿಧಾನಸೌಧದಲ್ಲಿ ಪ್ರತ್ಯಕ್ಷರಾದರು.ಕಲಾಪದಲ್ಲಿ ಭಾಗವಹಿಸಲು ಆಗಮಿಸಿ ಬಸನಗೌಡ ದದ್ದಲ್‌ ಮುಖ್ಯಮಂತ್ರಿಯವರನ್ನು ವಿಧಾನಸಭೆಯ ಕಾರಿಡಾರ್‌ನಲ್ಲಿರುವ ಕಚೇರಿಯಲ್ಲಿ ಭೇಟಿ ಮಾಡಿ ವಿವರಣೆ ನೀಡಿದ್ದಾರೆ.
3
+ ಈ ಸಂದರ್ಭದಲ್ಲಿ ಎಸ್‌‍ಐಟಿ ತನಿಖೆಯ ಬಗ್ಗೆ ಬಸನಗೌಡ ದದ್ದಲ್‌ಮುಖ್ಯಮಂತ್ರಿಯವರಿಗೆ ವಿವರಣೆ ನೀಡಿದ್ದು, ತಾವು ಎರಡು-ಮೂರು ದಿನಗಳಿಂದ ಎಲ್ಲಿದ್ದೆ ಎಂಬ ಬಗ್ಗೆಯೂ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
4
+ ನಂತರ ಸ್ಪೀಕರ್‌ ಯು.ಟಿ.ಖಾದರ್‌ ಅವರನ್ನು ಬಸನಗೌಡ ದದ್ದಲ್‌ಭೇಟಿಯಾಗಿದ್ದು, ಶುಕ್ರವಾರ ಎಸ್‌‍ಐಟಿ ವಿಚಾರಣೆ ಬಳಿಕ ತಾವು ಊರಿಗೆ ತೆರಳಿದ್ದು, ಮನೆಯಲ್ಲಿಯೇ ಇದ್ದಿದ್ದಾಗಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
5
+ ತಾವು ಎಲ್ಲಿಯೂ ಹೋಗಿಲ್ಲ. ತಲೆ ಮರೆಸಿಕೊಂಡೂ ಇಲ್ಲ. ಬಿಜೆಪಿಯವರು ಅನಗತ್ಯವಾಗಿ ತಮ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ದೂರಿದರು.ನಂತರ ಕಲಾಪದಲ್ಲಿಯೂ ಭಾಗವಹಿಸಿದ್ದಾರೆ.
6
+ ಇದಕ್ಕೂ ಮುನ್ನ ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸನಗೌಡ ದದ್ದಲ್‌, ಎಲ್ಲಾ ಪ್ರಶ್ನೆಗಳಿಗೂ ವಿಧಾನಸಭೆಯಲ್ಲಿಯೇ ಉತ್ತರ ನೀಡುವುದಾಗಿ ತಿಳಿಸಿದ್ದಾರೆ.ನಾನು ಕಲಾಪದಲ್ಲಿ ಭಾಗವಹಿಸುತ್ತಿದ್ದೇನೆ, ಅಲ್ಲಿಯೇ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡುತ್ತೇನೆ ಎಂದು ಹೇಳಿದರು.
eesanje/url_46_76_6.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಧಾರಾಕಾರ ಮಳೆ : ಜಲಾಶಯಗಳು ಭರ್ತಿ, ಹೊಲಗದ್ದೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ
2
+ ಕಾರವಾರ/ಮಡಿಕೇರಿ/ಕೊಡಗು,ಜು.15-ಕರಾವಳಿ, ಕೊಡಗು, ದಕ್ಷಿಣ ಕನ್ನಡ, ಉತ್ತರಕನ್ನಡ ಜಿಲ್ಲೆಗಳಲ್ಲಿ ಧಾರಕಾರ ಮಳೆ ಸುರಿಯುತ್ತಿದ್ದು, ನದಿಗಳು ಉಕ್ಕಿ ಹರಿಯುತ್ತಿದ್ದು, ಜಲಾಶಯಗಳು ಭರ್ತಿಯಾಗತೊಡಗಿವೆ. ಹಳ್ಳಕೊಳ್ಳಗಳು ತುಂಬಿಹರಿದು ಹೊಲಗದ್ದೆಗಳು ಜಲಾವೃತವಾಗಿ ರಸ್ತೆಗಳಿಗೆ ನೀರು ಹರಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ.
3
+ ಕೊಡಗು, ಉತ್ತರಕನ್ನಡ ಜಿಲ್ಲೆಗಳಲ್ಲಿ ವರುಣನ ಅಬ್ಬರ ಮುಂದುವರೆದ ಪರಿಣಾಮ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ ಏರಿಕೆಯಾಗಿದೆ.
4
+ ಜಲಾಶಯದಿಂದ ತಡರಾತ್ರಿ 10 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದ್ದು, ಕಾವೇರಿ ಮತ್ತು ಹಾರಂಗಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಸೃಷ್ಟಿಯಾಗಿದೆ. ತ್ರಿವೇಣಿ ಸಂಗಮದಲ್ಲಿ ನದಿಯ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಮಳೆ ಇದೇ ರೀತಿ ಮುಂದುವರೆದರೆ ಮಡಿಕೇರಿ, ನಾಪೊಕ್ಲು ರಸ್ತೆ ಸಂಪರ್ಕ ಕಳೆದುಕೊಳ್ಳುವ ಸಾಧ್ಯತೆಯಿದೆ. ಹಲವಾರು ಹಳ್ಳಿಗಳಲ್ಲಿ ವಿದ್ಯುತ್‌ಕಂಬ ಹಾಗೂ ಮರಗಳು ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ.
5
+ ಬೆಳಗಾವಿ :ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ, ದೂಧ್‌ಗಂಗಾ, ವೇದ್‌ಗಂಗಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಸೇತುವೆಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ.
6
+ ಚಿಕ್ಕಮಗಳೂರು :ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಭಾರಿ ಮಳೆಗೆ ಹಳ್ಳಕೊಳ್ಳಗಳು ತುಂಬಿಹರಿಯುತ್ತಿದ್ದು, ಹೊಲಗದ್ದೆಗಳು ಜಲಾವೃತಗೊಂಡಿವೆ. ಭದ್ರಾ ತುಂಗಾ ಜಲಾಶಯಕ್ಕೆ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗಿದೆ.
7
+ ಉತ್ತರ ಕನ್ನಡ :ಉತ್ತರಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಮುಂದುವರೆದಿದ್ದು, ಹಲವೆಡೆ ಹಾನಿ ಸಂಭವಿಸಿದೆ. ತಾಲ್ಲೂಕಿನ ಇಡೂರಿನ ಮನೆಗಳಿಗೆ ನೀರು ನುಗ್ಗಿ ಗ್ರಾಮ ಮುಳುಗಡೆಯಾದಂತಾಗಿದೆ. ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಗ್ರಾಮಸ್ಥರು ಪರದಾಡುವಂತಾಗಿದೆ.
8
+ ಕಾರವಾರ ತಾಲ್ಲೂಕಿನ ಬಿಣಗ, ಚಂಗ್ಯಾ ಸೇರಿದಂತೆ ಹಲವು ಗ್ರಾಮಗಳ ಮನೆಗಳಿಗೆ ನೀರು ನುಗ್ಗಿ ಜನ ಜಾಗರಣೆ ಮಾಡುವಂತಾಗಿತ್ತು. ಈ ಭಾಗದ ನೂರಾರು ಎಕರೆ ಪ್ರದೇಶ ಜಲಾವೃತಗೊಂಡು ಬೆಳೆಗಳು ಹಾನಿಯಾಗಿವೆ. ಸೂಕ್ತ ಪರಿಹಾರ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
9
+ ಮಂಗಳೂರು :ಮಂಗಳೂರು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
10
+ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು, ಜಲಾಶಯಗಳಿಗೆ ನೀರು ಹರಿದುಬರುತ್ತಿದೆ. ಕಬಿನಿ ಭರ್ತಿಯಾಗಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.
11
+ ಹೇಮಾವತಿ, ಕೃಷ್ಣರಾಜಸಾಗರ ಜಲಾಶಯಕ್ಕೆ ಕೂಡ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಅತ್ತ ತೀರ್ಥಹಳ್ಳಿಯ ಆಗುಂಬೆಯ 5ನೇ ಘಾಟ್‌ನ ತಿರುವಿನಲ್ಲಿ ಗುಡ್ಡಕುಸಿತ ಉಂಟಾದ ಪರಿಣಾಮ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
eesanje/url_46_76_7.txt ADDED
@@ -0,0 +1,5 @@
 
 
 
 
 
 
1
+ ವಿರೋಧಪಕ್ಷಗಳ ಆರೋಪಕ್ಕೆ ಸದನದಲ್ಲಿಯೇ ಉತ್ತರ ಕೊಡ್ತೀನಿ : ಸಿಎಂ
2
+ ಬೆಂಗಳೂರು,ಜು.15– ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ವಿರೋಧಪಕ್ಷಗಳು ನೀಡಿರುವ ನಿಲುವಳಿ ಸೂಚನೆಗೆ ಸದನದಲ್ಲಿಯೇ ಉತ್ತರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದ ಯಾವುದೇ ವಿಚಾರವಿದ್ದರೂ ಅದರ ಚರ್ಚೆಗೆ ಸರ್ಕಾರ ಸಿದ್ಧವಿದೆ. ಸದನದಲ್ಲಿ ವಿಪಕ್ಷಗಳು ನಿಲುವಳಿ ಸೂಚನೆ ಸೇರಿದಂತೆ ಯಾವುದೇ ನಿಯಮದಡಿ ಪ್ರಸ್ತಾಪ ಮಾಡಿದರೂ ಅದಕ್ಕೆ ಸದನದ ಒಳಗೆ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿ ತೆರಳಿದರು.
4
+ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ನೀಡುವಂತೆ ಸ್ಪೀಕರ್‌ ಅವರಿಗೆ ಮನವಿ ಸಲ್ಲಿಸಿದೆ. ಇದು ಕಲಾಪದಲ್ಲಿ ಕಾವೇರಿದ ಚರ್ಚೆಗೆ ಕಾರಣವಾಗುವ ಸಾಧ್ಯತೆಯಿದೆ.
5
+ ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಪೂರ್ವ ತಯಾರಿಗಳನ್ನು ಮಾಡಿಕೊಂಡಿದ್ದು, ಸದನದ ಹೊರಗೆ ಚರ್ಚೆ ಮಾಡುವ ಬದಲಾಗಿ ಸದನದ ಒಳಗೇ ಉತ್ತರ ನೀಡುವುದಾಗಿ ಹೇಳಿದರು.
eesanje/url_46_76_8.txt ADDED
@@ -0,0 +1,4 @@
 
 
 
 
 
1
+ ಕೇಂದ್ರ ಸಚಿವ .ಕುಮಾರಸ್ವಾಮಿಯವರಿಗೆ ಡಿಕೆಶಿ ಓಪನ್ ಚಾಲೆಂಜ್
2
+ ಬೆಂಗಳೂರು,ಜು.15-ಭ್ರಷ್ಟಾಚಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರು ತಮೊಂದಿಗೆ ಸಾರ್ವಜನಿಕ ಚರ್ಚೆಗೆ ಬರಲಿ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸವಾಲು ಹಾಕಿದ್ದಾರೆ.
3
+ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ತಮ ಜೀವನದುದ್ದಕ್ಕೂ ಹಿಟ್‌ ಅಂಡ್‌ ರನ್‌ ರೀತಿಯಲ್ಲೇ ವರ್ತಿಸುತ್ತಿದ್ದಾರೆ. ಅವರು ಮಾಡಿದ ಆರೋಪಗಳಿಗೆ ಬದ್ಧತೆ ಇದ್ದರೆ ವಿಧಾನಸೌಧದ ಕಲಾಪದಲ್ಲಿ ಬಂದು ಚರ್ಚೆ ಮಾಡಬೇಕಿತ್ತು. ಅವರ ಪಕ್ಷದ ಶಾಸಕರು ಬಂದು ಚರ್ಚೆ ಮಾಡಲಿ ಎಂದು ಸವಾಲು ಹಾಕಿದರು.
4
+ ಕುಮಾರಸ್ವಾಮಿ ನೇರವಾಗಿ ತಮೊಂದಿಗೆ ಚರ್ಚೆಗೆ ಬರಲಿ. ಇಲ್ಲವಾದರೇ ಯಾವುದೇ ವಾಹಿನಿಯಲ್ಲಿ ಚರ್ಚೆಗೆ ಕರೆದರೂ ನಾನು ಸಿದ್ಧ. ಅನಗತ್ಯವಾಗಿ ಹಿಟ್‌ ಅಂಡ್‌ ರನ್‌ ಆರೋಪ ಮಾಡಿ ಓಡಿಹೋಗಲಾಗುತ್ತಿದೆ. ಕಿಂಗ್‌ ಆಫ್‌ ಕರೆಕ್ಷನ್‌ ಯಾರು ಎಂದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.
eesanje/url_46_76_9.txt ADDED
@@ -0,0 +1,9 @@
 
 
 
 
 
 
 
 
 
 
1
+ ರಾಜ್ಯದಲ್ಲಿ ಡೆಂಘೀ ಹೆಚ್ಚಳ : ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಶಾಲೆಗಳಿಗೆ ಸುತ್ತೋಲೆ
2
+ ಬೆಂಗಳೂರು,ಜು.15-ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು (ಡಿಎಸ್‌‍ಇಎಲ್‌‍) ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮತ್ತು ರೋಗ ಹರಡುವಿಕೆ ತಡೆಯಲು ಕ್ರಮ ಕೈಗೊಳ್ಳುವಂತೆ ಸುತ್ತೋಲೆ ಹೊರಡಿಸಿದೆ.
3
+ ಮಕ್ಕಳು ಮತ್ತು 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಡೆಂಘೀ ಪತ್ತೆಯಾಗುತ್ತಿದೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ ಶಿಕ್ಷಣ ಇಲಾಖೆ ಈಗ ಸುತ್ತೋಲೆ ಹೊರಡಿಸಿದೆ.
4
+ ಸೊಳ್ಳೆಗಳ ಉತ್ಪತ್ತಿಯನ್ನು ತಡೆಗಟ್ಟಲು ಶಾಲಾ ಆವರಣ ಮತ್ತು ಸಮೀಪದಲ್ಲಿ ಸಂಗ್ರಹವಾಗಿರುವ ನೀರನ್ನು ತೆರವುಗೊಳಿಸಲು ಮತ್ತು ಒದ್ದೆಯಾದ ತ್ಯಾಜ್ಯವನ್ನು ತಕ್ಷಣವೇ ವಿಲೇವಾರಿ ಮಾಡಲು ಶಾಲೆಗಳಿಗೆ ಸೂಚನೆ ನೀಡಿದೆ.
5
+ ಶಾಲಾ ವಿದ್ಯಾರ್ಥಿಗಳು ಅಂತಹ ಪ್ರದೇಶಗಳ ಬಳಿ ತಿರುಗಾಡದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ತ್ಯಾಜ್ಯವನ್ನು ತೆರವುಗೊಳಿಸಲು ಮತ್ತು ವಿಲೇವಾರಿ ಮಾಡಲು ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಲಾಗಿದೆ.
6
+ ಶಿಕ್ಷಣ ಸಂಸ್ಥೆಗಳು ಗ್ರಾಮ ಪಂಚಾಯತಿ ಮತ್ತು ನಾಗರಿಕ ಸಂಸ್ಥೆಗಳ ಜೊತೆಗೂಡಿ ಡೆಂಗ್ಯೂ ವಿರೋಧಿ ಕ್ರಮಗಳಿಗಾಗಿ ಔಷಧಿ ಸಿಂಪಡಣೆ ಮತ್ತು ಫಾಗಿಂಗ್‌ ಕಾರ್ಯಾಚರಣೆಗಳನ್ನು ನಡೆಸಬೇಕು. ಶಾಲೆಗಳಲ್ಲಿನ ನೀರಿನ ಸಂಗ್ರಹಕಗಳನ್ನು (ತೊಟ್ಟಿ, ಬ್ಯಾರೆಲ್‌ ಇತ್ಯಾದಿ)ಗಳನ್ನು ವಾರಕ್ಕೊಮೆ ಉಜ್ಜಿ, ತೊಳೆದು, ಖಾಲಿ ಮಾಡಿ. ಒಣಗಿಸಿ ಭರ್ತಿ ಮಾಡಿದ ನಂತರ ಭದ್ರವಾದ ಮುಚ್ಚಳದಿಂದ ಮುಚ್ಚಬೇಕು ಎಂದು ಸೂಚಿಸಿದೆ.
7
+ ಶಾಲೆಗಳಲ್ಲಿ ಪ್ರಾರ್ಥನೆ ಸಮಯದಲ್ಲಿ ಮಕ್ಕಳಲ್ಲಿ ಜಾಗೃತಿ ಮೂಡಿಸಲುವ ಕೆಲಸ ಮಾಡಬೇಕು. ಡೆಂಗ್ಯೂ, ಚಿಕೂನ್‌‍ಗುನ್ಯಾ ಮತ್ತು ಝೀಕಾ ವೈರಸ್‌‍ನಂತಹ ರೋಗಗಳ ಲಕ್ಷಣಗಳ ಬಗ್ಗೆ ಮಕ್ಕಳಿಗೆ ತಿಳಿಸಬೇಕು.
8
+ ಶಾಲಾ ವಿದ್ಯಾರ್ಥಿಗಳಲ್ಲಿ ಜ್ವರದ ಪ್ರಕರಣಗಳು ವರದಿಯಾದರೆ ಕೂಡಲೇ ಹತ್ತಿರದ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಪೋಷಕರು ಮತ್ತು ಶಿಕ್ಷಕರು ಮಕ್ಕಳ ರೋಗಲಕ್ಷಣಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು. ಮಕ್ಕಳು ಬೆಳಿಗ್ಗೆ ಮತ್ತು ಸಂಜೆ ಹೊರಾಂಗಣದಲ್ಲಿದ್ದಾಗ ಉದ್ದ ತೋಳಿನ ಬಟ್ಟೆಗಳನ್ನು ಧರಿಸುವಂತಹ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
9
+ ನಾಗರಿಕರು ತಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ನಿರ್ಜಲೀಕರಣವನ್ನು ತಪ್ಪಿಸಲು ಸಾಕಷ್ಟು ನೀರು ಕುಡಿಯಬೇಕು. ಕನಿಷ್ಠ ಎರಡು-ಮೂರು ಲೀಟರ್‌ ನೀರು ಮತ್ತು ನೀರಿನಂಶ ಹೆಚ್ಚಿರುವ ಕಲ್ಲಂಗಡಿ ಮತ್ತು ಕಿತ್ತಳೆಯಂತಹ ಹಣ್ಣುಗಳನ್ನು ಸೇವಿ���ಬೇಕು. ಮಕ್ಕಳು ಮತ್ತು ಯುವಕರು ಸಮತೋಲಿತ ಆಹಾರ ಕ್ರಮವನ್ನು ಅನುಸರಿಸಬೇಕು ಎಂದು ಸಲಹೆ ನೀಡಿದ್ದಾರೆ.