e575b40480f67374c6723dbaac96d94e953767e33f82399e0c3917e896ef0f4f
Browse files- eesanje/url_46_153_2.txt +11 -0
- eesanje/url_46_153_3.txt +7 -0
- eesanje/url_46_153_4.txt +5 -0
- eesanje/url_46_153_5.txt +5 -0
- eesanje/url_46_153_6.txt +5 -0
- eesanje/url_46_153_7.txt +8 -0
- eesanje/url_46_153_8.txt +6 -0
- eesanje/url_46_153_9.txt +9 -0
- eesanje/url_46_154_1.txt +12 -0
- eesanje/url_46_154_10.txt +7 -0
- eesanje/url_46_154_11.txt +4 -0
- eesanje/url_46_154_12.txt +12 -0
- eesanje/url_46_154_2.txt +4 -0
- eesanje/url_46_154_3.txt +6 -0
- eesanje/url_46_154_4.txt +13 -0
- eesanje/url_46_154_5.txt +7 -0
- eesanje/url_46_154_6.txt +4 -0
- eesanje/url_46_154_7.txt +5 -0
- eesanje/url_46_154_8.txt +15 -0
- eesanje/url_46_154_9.txt +4 -0
- eesanje/url_46_155_1.txt +5 -0
- eesanje/url_46_155_10.txt +5 -0
- eesanje/url_46_155_11.txt +4 -0
- eesanje/url_46_155_12.txt +6 -0
- eesanje/url_46_155_2.txt +7 -0
- eesanje/url_46_155_3.txt +7 -0
- eesanje/url_46_155_4.txt +6 -0
- eesanje/url_46_155_5.txt +8 -0
- eesanje/url_46_155_6.txt +4 -0
- eesanje/url_46_155_7.txt +8 -0
- eesanje/url_46_155_8.txt +10 -0
- eesanje/url_46_155_9.txt +7 -0
- eesanje/url_46_156_1.txt +5 -0
- eesanje/url_46_156_10.txt +16 -0
- eesanje/url_46_156_11.txt +7 -0
- eesanje/url_46_156_12.txt +5 -0
- eesanje/url_46_156_2.txt +7 -0
- eesanje/url_46_156_3.txt +6 -0
- eesanje/url_46_156_4.txt +9 -0
- eesanje/url_46_156_5.txt +7 -0
- eesanje/url_46_156_6.txt +5 -0
- eesanje/url_46_156_7.txt +4 -0
- eesanje/url_46_156_8.txt +11 -0
- eesanje/url_46_156_9.txt +13 -0
- eesanje/url_46_157_1.txt +8 -0
- eesanje/url_46_157_10.txt +8 -0
- eesanje/url_46_157_11.txt +6 -0
- eesanje/url_46_157_12.txt +4 -0
- eesanje/url_46_157_2.txt +7 -0
- eesanje/url_46_157_3.txt +5 -0
eesanje/url_46_153_2.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯದಲ್ಲಿ ಮತದಾನ ಮುಗಿದ ಬೆನ್ನಲ್ಲೇ ಸೋಲು-ಗೆಲುವಿನ ಲೆಕ್ಕಾಚಾರ ಶುರು, ಭರ್ಜರಿ ಬೆಟ್ಟಿಂಗ್
|
2 |
+
ಬೆಂಗಳೂರು,ಮೇ8-ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಮುಗಿದ ಬೆನ್ನಲ್ಲೇ , ರಾಜ್ಯಾದ್ಯಂತ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಚುನಾವಣೆ ಮುಗಿಯುತ್ತಿದ್ದಂತೆಯೇ ಹೋಟೆಲ್, ಅಂಗಡಿ ಮುಂಗಟ್ಟುಗಳಲ್ಲಿ, ಜಮೀನಿನಲ್ಲಿ ಕೆಲಸ ಮಾಡುವ ರೈತರು, ಕಾರ್ಮಿಕರು, ಮಹಿಳೆಯರು ಸಹ ಚುನಾವಣೆಯ ಸೋಲು, ಗೆಲುವಿನ ಬಗ್ಗೆಯೇ ಚರ್ಚೆ ಮಾಡುತ್ತಿದ್ದಾರೆ. ಗೆಲುವು, ಸೋಲಿಗೆ ಯಾವ ವಿಷಯಗಳು ಕಾರಣವಾಗುತ್ತವೆ ಎಂಬ ಚರ್ಚೆ ಸರ್ವೇ ಸಾಮಾನ್ಯವಾಗಿವೆ.
|
3 |
+
ಯಾವುದೇ ಚುನಾವಣೆಗಳಲ್ಲೂ ಪ್ರಮುಖವಾಗಿ ಜಾತಿ ವಿಚಾರ, ಅಭ್ಯರ್ಥಿಗಳ ಜನಪರ ಕೆಲಸಗಳು, ಸಂಘಟನೆ ಹಾಗೂ ವ್ಯಕ್ತಿಗಳ ಆಧಾರ ಮೇಲೆ ಚುನಾವಣೆ ಲೆಕ್ಕಾಚಾರಗಳು ನಡೆಯುತ್ತವೆ. ಪ್ರಮುಖವಾಗಿ ಜಾತಿ ಲೆಕ್ಕಾಚಾರದ ಆಧಾರದ ಮೇಲೆಯೇ ಸೋಲು-ಗೆಲುವಿನ ಲೆಕ್ಕಾಚಾರಗಳು ನಡೆಯಲಾರಂಭಿಸಿವೆ.
|
4 |
+
ಮತದಾನ ಮುಗಿದ ಕೂಡಲೇ, ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್(ಇಂಡಿಯಾ) ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿ(ಎನ್ ಡಿಎ) ಅಭ್ಯರ್ಥಿಗಳು, ಇತರೆ ಪಕ್ಷಗಳ ಹಾಗೂ ಪಕ್ಷೇತರ ಅಭ್ಯರ್ಥಿಗಳು ಈಗಾಗಲೇ ಮತಗಟ್ಟೆವಾರು ಆಗಿರುವ ಮತದಾನ ವಿವರಗಳನ್ನು ಕೈಯಲ್ಲಿ ಹಿಡಿದು ತಮಗೆ ಬರಬಹುದಾದ ಮತಗಳ ಮತ್ತು ತಮ್ಮಿಂದ ಯಾವ ಆಭ್ಯರ್ಥಿ ಸೋಲಲಿದ್ದಾರೆ ಎಂಬ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.
|
5 |
+
ಬೆಟ್ಟಿಂಗ್ ಜೋರು:ಲೋಕಸಭಾ ಚುನಾವಣೆಯ ಸೋಲು, ಗೆಲುವಿನ ಚರ್ಚೆ ಒಂದೆಡೆಯಾದರೆ, ಮತ್ತೊಂದೆಡೆ ಬೆಟ್ಟಿಂಗ್ ಸಹ ಜೋರಾಗಿಯೇ ನಡೆಯುತ್ತಿದೆ. ಕೆಲವಡೆ ಎನ್ಡಿಎ ಅಭ್ಯರ್ಥಿ ಪರ ದುಪ್ಪಟ್ಟು ಬಾಜಿ ನೀಡಿದರೆ ಕೆಲವೆಡೆ ಇಂಡಿಯಾ ಅಭ್ಯರ್ಥಿ ಪರ ದುಪ್ಪಟ್ಟು ಬಾಜಿ ನೀಡುತ್ತಿದ್ದಾರೆ. ಪಟ್ಟಣ ಮತ್ತು ನಗರ ಪ್ರದೇಶಗಳಲ್ಲಿ ಸಾವಿರ, ಲಕ್ಷ ರೂ.ಗಳವರೆಗೂ ಬೆಟ್ಟಿಂಗ್ ಕಟ್ಟುತ್ತಿದ್ದಾರೆ. ಸೈಟ್ಗಳು, ಮನೆಗಳನ್ನು ಪಣಕ್ಕಿಟ್ಟಿರುವ ಉದಾಹರಣೆಗಳೂ ಇವೆ. ಗ್ರಾಮಾಂತರ ಪ್ರದೇಶಗಳಲ್ಲಿ ಜಮೀನು, ಟ್ರ್ಯಾಕ್ಟರ್, ಕಾರು, ದನ ಕರುಗಳು, ಎಮ್ಮೆ, ಕುರಿ-ಮೇಕೆ, ಕೋಳಿಗಳನ್ನು ಪಣಕ್ಕಿಟ್ಟಿದ್ದಾರೆ. ಹಣ, ಬೈಕ್, ಹಸುಗಳನ್ನು ಸಹ ಬೆಟ್ಟಿಂಗ್ ಕಟ್ಟಲು ಮುಂದಾಗುತ್ತಿದ್ದಾರೆ.
|
6 |
+
ಕ್ರಿಕೆಟ್ ಐಪಿಎಲ್ ಬೆಟ್ಟಿಂಗ್ನಂತೆಯೇ ಚುನಾವಣೆಯ ಬೆಟ್ಟಿಂಗ್ ಕಾವು ಕೂಡ ಹೆಚ್ಚಿರುವುದಂತೂ ಸುಳ್ಳಲ್ಲ. ಬೆಟ್ಟಿಂಗ್ ಹಾವಳಿ ತಡೆಗಟ್ಟಲು ಪೊಲೀಸ್ ಇಲಾಖೆಯೂ ಕಣ್ಣಿಟ್ಟಿದೆ. ಆದರೂ ಕದ್ದುಮುಚ್ಚಿ ಬೆಟ್ಟಿಂಗ್ ನಡೆಯುತ್ತಿದೆ. ದಲಿತರು, ಲಿಂಗಾಯತರು, ಕುರುಬ, ಮುಸ್ಲಿಂ ಸೇರಿದಂತೆ ಇತರೆ ಹಿಂದುಳಿದ ಸಮುದಾಯಗಳಿದ್ದರೂ ಹೆಚ್ಚಿನ ಸಂಖ್ಯೆಯಲ್ಲಿರುವ ಒಕ್ಕಲಿಗ ಮತವೇ ಕ್ಷೇತ್ರದಲ್ಲಿ ನಿರ್ಣಾಯಕ. ಒಕ್ಕಲಿಗ ಸಮುದಾಯದ ಮತಗಳು ಯಾರ ಕಡೆ ಹೋಗಿರುತ್ತವೆಯೋ ಅಂತಹ ಅಭ್ಯರ್ಥಿಗ��� ಗೆಲುವು ಸನಿಹವಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.
|
7 |
+
ಮತದಾನದ ಪ್ರಮಾಣ, ಮತಗಟ್ಟೆ ಸಮೀಪ ಮತದಾರರು ನೀಡಿದ ಅಭಿಪ್ರಾಯ, ರಾಜಕೀಯ ಪಕ್ಷಗಳ ಕಾರ್ಯಕರ್ತರ ವರದಿ ಆಧರಿಸಿ ವಿಶ್ಲೇಷಣೆಗಳು ನಡೆಯುತ್ತಿವೆ.ಎಲ್ಲಾ ಪಕ್ಷಗಳ ನಾಯಕರಲ್ಲಿ ಮಂದಹಾಸ ಮೂಡಿದ್ದು, ಗೆಲುವು ತಮ್ಮದೇ ಎಂಬ ಬಲವಾದ ನಂಬಿಕೆಯಲ್ಲಿದ್ದಾರೆ. ಮತ ಎಣಿಕೆ ಜೂನ್ 4ರಂದು ನಡೆಯಲಿದ್ದು, ತಿಂಗಳಿಗೂ ಹೆಚ್ಚು ಕಾಲ ಕಾಯುವುದು ಮತದಾರರಿಗೂ ಕಷ್ಟವಾಗಿದೆ.
|
8 |
+
ಕಾಂಗ್ರೆಸ್ಗೆ ಗ್ಯಾರಂಟಿ ನಂಬಿಕೆ:ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಮತಯಾಚನೆ ಮಾಡಿತ್ತು. ಕ್ಷೇತ್ರದಲ್ಲಿ ಪ್ರಚಾರಕ್ಕೆ ಬಂದಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ತಾರಾ ಪ್ರಚಾರಕಿ ಪ್ರಿಯಾಂಕಾ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿಗಳನ್ನು ಬಲವಾಗಿ ಪ್ರತಿಪಾದಿಸಿದ್ದರು. ಈ ಗ್ಯಾರಂಟಿಗಳು ಎಷ್ಟರ ಮಟ್ಟಿಗೆ ಮತಗಳಾಗಿ ಪರಿವರ್ತನೆಯಾಗಿವೆ ಎಂಬ ಲೆಕ್ಕಾಚಾರದಲ್ಲಿ ಕೈ ಪಡೆ ಮುಳುಗಿದೆ.
|
9 |
+
ಗೃಹಲಕ್ಷ್ಮಿ ಯೋಜನೆಯ 2,000 ನಗದು ಕ್ಷೇತ್ರ ವ್ಯಾಪ್ತಿಯ ಫಲಾನುಭವಿಗಳಿಗೆ ವಾರದ ಹಿಂದೆಯಷ್ಟೇ ತಲುಪಿದೆ. ಕಳೆದ ಎರಡು ತಿಂಗಳ ನೆರವು ಒಮ್ಮೆಗೆ ಬ್ಯಾಂಕ್ ಖಾತೆಗೆ ಜಮಾ ಆಗಿದ್ದರಿಂದ ಕಾಂಗ್ರೆಸ್ ಪಾಳೆಯ ಪುಳಕಗೊಂಡಿತ್ತು. ಮತಗಟ್ಟೆ ಎದುರು ಸಾಲುಗಟ್ಟಿ ನಿಂತಿದ್ದ ಮಹಿಳಾ ಮತದಾರರು ಕೈಬಿಟ್ಟಿಲ್ಲ ಎಂಬುದು ಕಾಂಗ್ರೆಸ್ ನಾಯಕರ ನಂಬಿಕೆ.
|
10 |
+
ಬಿಜೆಪಿಗೆ ಮೋದಿ ನಾಮಬಲ:ಪ್ರಧಾನಿ ನರೇಂದ್ರಮೋದಿ ಅಲೆ ಮತದಾರರನ್ನು ಪ್ರಭಾವಿಸಿದೆ ಎಂಬುದು ಬಿಜೆಪಿಯ ಬಲವಾದ ನಂಬಿಕೆ. ದೇಶಕ್ಕಾಗಿ ಮತದಾರರು ಹಕ್ಕು ಚಲಾಯಿಸಿದ್ದಾರೆ ಎಂದು ಕೇಸರಿ ಪಡೆ ವಿಶ್ಲೇಷಣೆ ಮಾಡುತ್ತಿದೆ. ಕ್ಷೇತ್ರದ ಅಭ್ಯರ್ಥಿ ಕೂಡ ಮೋದಿ ನಾಮ ಜಪ ಮಾಡಿ ಮತಯಾಚಿಸಿದ್ದರು. ಯುವ ಸಮೂಹ, ರೈತರು, ಪುರುಷರು, ಹೊಸ ಮತದಾರರು ಬೆಂಬಲಿಸಿದ್ದಾರೆ ಎಂದೇ ಬಿಜೆಪಿ ಪ್ರತಿಪಾದಿಸುತ್ತಿದೆ.
|
11 |
+
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಇತ್ತೀಚಿಗೆ ಪಾವತಿಯಾಗಿದೆ. ಜಿಲ್ಲೆಯ ಸಾವಿರಾರು ರೈತ ಕುಟುಂಬಗಳಿಗೆ ಸಿಕ್ಕಿರುವ ವಿಮೆ ಪರಿಹಾರವು ಮತಗಳಾಗಿ ಪರಿವರ್ತನೆಯಾಗಿವೆ ಎಂಬುದು ಬಿಜೆಪಿ ವಾದ. ಬೆಳೆ ವಿಮೆ ಪಡೆದ ರೈತ ಕುಟುಂಬ, ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳು ಕಮಲ ಅರಳುವಂತೆ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಈ ಲೆಕ್ಕಾಚಾರಗಳಲ್ಲಿ ಯಾವುದು ಸರಿ ಎಂಬುದು ಮತ ಎಣಿಕೆಯ ಬಳಿಕವಷ್ಟೇ ಖಚಿತವಾಗಲಿದೆ.
|
eesanje/url_46_153_3.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಪೆನ್ಡ್ರೈವ್ ಹಂಚಿದವರನ್ನು ಏಕೆ ತನಿಖೆಗೆ ಒಳಪಡಿಸಿಲ್ಲ..? : ಗೃಹಸಚಿವರಿಗೆ ಪ್ರಶ್ನೆ
|
2 |
+
ಬೆಂಗಳೂರು,ಮೇ8-ಹಾಸನ ಲೋಕಸಭಾ ಕ್ಷೇತ್ರದಲ್ಲಿ ಅಶ್ಲೀಲ ವಿಡಿಯೋವಿದ್ದ ಪೆನ್ಡ್ರೈವ್ ಹಂಚಿಕೆ ಮಾಡಿರುವ ಆರೋಪಿಗಳನ್ನು ಏಕೆ ತನಿಖೆಗೆ ಒಳಪಡಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಪ್ರಶ್ನಿಸಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಶ್ಲೀಲ ವಿಡಿಯೋ ಸೋರಿಕೆ ಮಾಡಿದವರ ವಿರುದ್ಧ ಏಕೆ ಕ್ರಮ ಕೈಗೊಳ್ಳಲಿಲ್ಲ. ಎಸ್ಐಟಿ ತನಿಖೆಯ ಗುರಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ಮೇಲೆ ಮಾತ್ರ ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ. ರಾಜ್ಯ ಮಹಿಳಾ ಆಯೋಗ ಬರೆದಿದ್ದ ಪತ್ರದಲ್ಲಿ ವಿಡಿಯೋ ಬಹಿರಂಗಪಡಿಸಿದವರ ಮೇಲೂ ಕ್ರಮ ಕೈಗೊಳ್ಳಬೇಕು ಎಂದಿದ್ದರು. ಇದುವರೆಗೂ ಏನೂ ಮಾಡಿಲ್ಲ ಏಕೆ? ಗೃಹ ಸಚಿವರು ಏನು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
|
4 |
+
ಪ್ರಜ್ವಲ್ನ ಮಾಜಿ ಕಾರು ಚಾಲಕ ಕಾರ್ತಿಕ್ ಅವರಿಗೆ ಖಾಸಗಿ ಚಾನಲ್ನಲ್ಲಿ ಕುಳಿತು ಟ್ರೈನಪ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಬಂಡೆ ರಕ್ಷಣೆ ಮಾಡಬಹುದೆಂದು ಕಾರ್ತಿಕ್ ಅಂದುಕೊಂಡಿರಬಹುದು. ಕಾರ್ತಿಕ್ ಗಿರಿನಗರದಲ್ಲೇ ಇದ್ದಾರಂತೆ ಆದರೂ ಏಕೆ ವಿಚಾರಣೆಗೆ ಒಳಪಡಿಸಿಲ್ಲ ಎಂದರು.
|
5 |
+
ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್, ಕಾರ್ತಿಕ್, ಶ್ರೇಯಸ್ ಅವರಿಗೆ ನೋಟಿಸ್ ಕೊಟ್ಟಿಲ್ಲ. ರೇವಣ್ಣ ಅವರಿಗೆ ಮಾತ್ರ ಕೊಟ್ಟಿದ್ದಾರೆ ಎಂದ ಅವರು, ಡಿಸಿಎಂ ಶಿವಕುಮಾರ್ ಅವರು ವಕೀಲ ದೇವರಾಜೇಗೌಡ ಅವರ ಬಳಿ ಏಕೆ ಮಾತನಾಡಿದರು, ಅವರಲ್ಲಿ ಏನು ಕೆಲಸವಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿ, ಎಸ್ಐಟಿ ಅಧಿ ಕಾರಿಗಳಿಗೆ ವಿಶ್ವಾಸರ್ಹತೆ ಇದೆಯೇ ಎಂದು ಖಾರವಾಗಿ ಪ್ರಶ್ನಿಸಿದರು.
|
6 |
+
ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ನಿವೃತ್ತ ಐಪಿಎಸ್ ಅಧಿ ಕಾರಿ ಕೆಂಪಯ್ಯ ಅವರನ್ನು ಮುಂದಿಟ್ಟುಕೊಂಡು ನನ್ನನ್ನು ಬಂಧಿಸಲು ಮುಂದಾಗಿದ್ದರು. ವಕೀಲರು ವಿಚಾರಣೆಗೆ ಹೋಗಬೇಡಿ ಎಂದು ಸಲಹೆ ಮಾಡಿದ್ದರಿಂದ ನಾನು ಹೋಗಿರಲಿಲ್ಲ. ಒಂದು ದಿನವಾದರೂ ನನ್ನನ್ನು ಅರೆಸ್ಟ್ ಮಾಡಬೇಕೆಂದಿದ್ದರು. ಯಾವ ಪ್ರಕರಣವನ್ನು ತಾರ್ಕಿಕ ಅಂತ್ಯ ಮಾಡಿಲ್ಲ ಎಂದರು.
|
7 |
+
ತೋಟದ ಮನೆಯಲ್ಲಿ ಅಪಹರಣವಾಗಿದ್ದಾರೆ ಎಂಬ ಮಹಿಳೆಯನ್ನು ಕರೆತಂದಿರುವುದಾಗಿ ಹೇಳುತ್ತಿದ್ದಾರೆ. ಇನ್ನು ಮಹಜರು ಮಾಡಿಲ್ಲ. ಆಕೆ ಸಿಕ್ಕಿದ್ದು ಸಂಬಂಧಿ ಕರ ಮನೆಯಲ್ಲಿ, ಹುಣಸೂರಿನ ಪವಿತ್ರ ಎಂಬುವರ ಮನೆಯಿಂದ ಕರೆದುಕೊಂಡು ಬಂದಿದ್ದಾರೆ. ತೋಟದ ಮನೆಯಲ್ಲ ಎಂದು ಸ್ಪಷ್ಟಪಡಿಸಿದರು.ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನಾಗಿ ರೇವಣ್ಣ ಅವರ ಪರವಾಗಿ ಮಾತ್ರ ಹೋರಾಟ ಮಾಡುತ್ತೇನೆ. ಪ್ರಜ್ವಲ್ ರೇವಣ್ಣ ಅವರ ಪ್ರಕರಣದ ಬಗ್ಗೆ ಅಲ್ಲ ಎಂದು ಸ್ಪಷ್ಟಪಡಿಸಿದರು.
|
eesanje/url_46_153_4.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಚುನಾವಣೆ ಮುಗಿದ ಬೆನ್ನಲ್ಲೇ ವಿಶ್ರಾಂತಿಗೆ ಜಾರಿದ ಸಿಎಂ, ಡಿಸಿಎಂ ಹಾಗೂ ಸಚಿವರು
|
2 |
+
ಬೆಂಗಳೂರು, ಮೇ 8-ಲೋಕಸಭೆ ಚುನಾವಣೆ ಮುಗಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದಿಯಾಗಿ ಸಂಪುಟದ ಬಹುತೇಕ ಸಚಿವರು ವಿಶ್ರಾಂತಿಗೆ ತೆರಳಿದ್ದಾರೆ. ಸಿದ್ದರಾಮಯ್ಯ ಅವರು ಊಟಿಗೆ ತೆರಳಿದ್ದರು. ಮೂರು ದಿನಗಳಿಂದ ಅಲ್ಲಿ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಇತ್ತ ಡಿ.ಕೆ.ಶಿವಕುಮಾರ್ ಅವರು ಚಿಕ್ಕಮಗಳೂರಿನಲ್ಲಿ ತಮ್ಮ ಅಳಿಯ ಅವರ ಮನೆಗೆ ಕುಟುಂಬ ಸಮೇತರಾಗಿ ತೆರಳಿ ವಿಶ್ರಾಂತಿ ಪಡೆದರು.
|
3 |
+
ಪೆನ್ಡ್ರೈವ್ ಪ್ರಕರಣ ಕಾವೇರಿದ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ವಿಶ್ರಾಂತಿಗೆ ತೆರಳಿರುವುದು ಅಚ್ಚರಿಗೆ ಕಾರಣವಾಗಿದೆ. ಡಿ.ಕೆ.ಶಿವಕುಮಾರ್ ಇಂದು ಹೆಲಿಕಾಫ್ಟರ್ನಲ್ಲಿ ಪತ್ನಿ, ಮಕ್ಕಳು ಹಾಗೂ ಅಳಿಯನ ಸಮೇತ ಪ್ರವಾಸಕ್ಕೆ ತೆರಳಿದರು. ಜೆಡಿಎಸ್ ಕಾರ್ಯಕರ್ತರು ಹಲವು ಕಡೆ ಪ್ರತಿಭಟನೆ ನಡೆಸುತ್ತಿರುವುದರಿಂದ ಚಿಕ್ಕಮಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಕುಟುಂಬಕ್ಕೆ ಬಿಗಿ ಭದ್ರತೆ ಒದಗಿಸಲಾಗಿತ್ತು.
|
4 |
+
ಸಂಪುಟದ ಹಲವು ಸಚಿವರು ಕುಟುಂಬ ಸಮೇತರಾಗಿ ಪ್ರವಾಸಿ ತಾಣಗಳಿಗೆ ತೆರಳಿ ವಿಶ್ರಾಂತಿ ಪಡೆದುಕೊಂಡರು. ನಿನ್ನೆ ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಭಾಗದ 14 ಕ್ಷೇತ್ರಗಳಿಗೆ ನಿನ್ನೆಯಷ್ಟೆ ಮತದಾನ ಮುಗಿದಿದೆ.
|
5 |
+
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ನಿರಂತರವಾಗಿ ಪ್ರಚಾರ ನಡೆಸಿ ಮುಖಂಡರು ಧಣಿದಿದ್ದಾರೆ. ಪ್ರಾಮಾಣಿಕವಾಗಿ ಕೆಲಸ ಮಾಡಿದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಅಭ್ಯರ್ಥಿ ಕಡೆಯಿಂದಲೇ ಪ್ರವಾಸ ಕೊಡುಗೆ ದೊರೆತಿದೆ. ಬಹಳಷ್ಟು ಮಂದಿ ಬಸ್ ಹಾಗೂ ಖಾಸಗಿ ವಾಹನಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ.
|
eesanje/url_46_153_5.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ವಿಚಾರಣೆ ಹಾಜರಾಗಲು ಕೋರಿದ್ದ ಕಾಲಾವಕಾಶ ಅಂತ್ಯ, ಪ್ರತ್ಯಕ್ಷ ಆಗ್ತಾರಾ ಪ್ರಜ್ವಲ್..?
|
2 |
+
ಬೆಂಗಳೂರು, ಮೇ 8-ವಿಚಾರಣೆ ಹಾಜರಾಗಲು ಸಂಸದ ಪ್ರಜ್ವಲ್ ರೇವಣ್ಣ ಕೇಳಿದ್ದ ಕಾಲಾವಕಾಶ ಅಂತ್ಯವಾಗಿರುವ ಹಿನ್ನೆಲೆಯಲ್ಲಿ ಆತ ಇಂದು ವಿದೇಶದಿಂದ ವಾಪಸ್ ಆಗುವ ನಿರೀಕ್ಷೆಯಿದೆ. ಪೆನ್ಡ್ರೈವ್ ಪ್ರಕರಣದ ತನಿಖೆಗಾಗಿ ಎಸ್ಐಟಿ ರಚನೆಯಾದ ನಂತರ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ಅವರಿಗೆ ನೋಟಿಸ್ ಜಾರಿ ಮಾಡಿದ್ದರು.
|
3 |
+
ಆ ಸಂದರ್ಭದಲ್ಲಿ ಪ್ರಜ್ವಲ್ ಅವರು ವಕೀಲರ ಮೂಲಕ ಕಾಲಾವಕಾಶ ಕೇಳಿದ್ದು, ಇಂದು ಅವ ಅಂತ್ಯವಾಗಿರುವ ಹಿನ್ನೆಲೆಯಲ್ಲಿ ಇಂದು ಅವರು ವಿದೇಶದಿಂದ ನಗರಕ್ಕೆ ಆಗಮಿಸುವ ನಿರೀಕ್ಷೆಯಿದೆ.ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ವಿಮಾನ ನಿಲ್ದಾಣಗಳಲ್ಲೂ ಎಸ್ಐಟಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.
|
4 |
+
ಒಂದು ವೇಳೆ ಪ್ರಜ್ವಲ್ ಇಂದು ವಿಚಾರಣೆಗೆ ಹಾಜರಾಗದಿದ್ದರೆ ಅವರು ಯಾವ ದೇಶದಲ್ಲಿ ಉಳಿದುಕೊಂಡಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಅಲ್ಲಿಗೆ ಹೋಗಿ ಎಸ್ಐಟಿ ಅಧಿಕಾರಿಗಳು ಕರೆತರಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ಪ್ರಜ್ವಲ್ ವಿರುದ್ಧ ಎಸ್ಐಟಿ ನೋಟಿಸ್ಗಳನ್ನು ಜಾರಿ ಮಾಡಿದ್ದು, ನಂತರ ಲುಕ್ಔಟ್ ನೋಟಿಸ್ ಹೊರಡಿಸಿತ್ತು. ಇದರ ಬೆನ್ನಲ್ಲೆ ಬ್ಲೂಕಾರ್ನರ್ ನೋಟಿಸ್ ಜಾರಿ ಮಾಲಾಗಿದೆ.
|
5 |
+
ಪ್ರಜ್ವಲ್ ವಿರುದ್ಧ 2 ಪ್ರಕರಣಗಳು ದಾಖಲಾಗಿದ್ದು, ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ, ಸಿಐಡಿಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.ಹಾಸನ ಜಿಲ್ಲೆಯಲ್ಲಿ ಪೆನ್ಡ್ರೈವ್ ಹಂಚಿಕೆಯಾದ ನಂತರ, ಲೋಕಸಭಾ ಚುನಾವಣೆ ಮತದಾನ ಮುಗಿದ ಬಳಿಕ ಪ್ರಜ್ವಲ್ ಜರ್ಮನಿಗೆ ಹೋಗಿದ್ದಾರೆ.
|
eesanje/url_46_153_6.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಹಿಂದೂ ದೇವಾಲಯದ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿಯನ್ನು ಸೇರಿಸಿ ವಿವಾದವೆಬ್ಬಿಸಿದ ಕಾಂಗ್ರೆಸ್ ಸರ್ಕಾರ
|
2 |
+
ಬೆಂಗಳೂರು, ಮೇ 8-ಲೋಕಸಭೆ ಚುನಾವಣೆಯ ಹೋಸ್ತಿಲಿನಲ್ಲೇ ಕಾಂಗ್ರೆಸ್ ಸರ್ಕಾರ ಮತ್ತೊಂದು ವಿವಾದವನ್ನು ಮೈ ಮೇಲೆ ಎಳೆದುಕೊಂಡಿದೆ. ದೇವಾಲಯದ ಬ್ರಹರಥೋತ್ಸವ ಸಮಿತಿಗೆ ಹಿಂದುಯೇತರ ವ್ಯಕ್ತಿಯನ್ನು ಸದಸ್ಯರನ್ನಾಗಿ ನೇಮಿಸುವ ಮೂಲಕ ವ್ಯಾಪಕ ಟೀಕೆಗೆ ಗುರಿಯಾಗಿದೆ.
|
3 |
+
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕು ತಹಸೀಲ್ದಾರ್ ಆದೇಶದ ಪ್ರಕಾರ ಹೊಸಕೋಟೆಯ ಕೋಟೆಯಲ್ಲಿರುವ ಆವಿಮುಕ್ತೇಶ್ವರಸ್ವಾಮಿ ಬ್ರಹರಥೋತ್ಸವ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಲು ಶಾಸಕರ ಸಲಹೆ ಮೇರೆಗೆ ಸಮಿತಿಯನ್ನು ರಚಿಸಲಾಗಿದೆ. ಅದರಲ್ಲಿ ನವಾಜ್ ಎಂಬ ವ್ಯಕ್ತಿಯ ಹೆಸರಿದ್ದು ಹಿಂದು ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.
|
4 |
+
ಮೇ 6ರಂದು ಹೊರಡಿಸಲಾದ ಆದೇಶದಲ್ಲಿ ಕೇಶವಮೂರ್ತಿಯವರನ್ನು ಸಂಚಾಲಕರನ್ನಾಗಿ ನೇಮಿಸಲಾಗಿದೆ. ಕಾರ್ಯದರ್ಶಿಯನ್ನಾಗಿ ಗಾಯತ್ರಿ ವಿಜಯಕುಮಾರ್ ನೇಮಿಸಲಾಗಿದೆ. ಉಳಿದ 10 ಮಂದಿ ಸದಸ್ಯರಲ್ಲಿ ಹಿಂದುಯೇತರ ವ್ಯಕ್ತಿ ನವಾಜ್ ಯಾಕೆ ಎಂದು ಪ್ರಶ್ನೆಗಳು ಕೇಳಿ ಬರುತ್ತಿವೆ.
|
5 |
+
ಸಾಮಾಜಿಕ ಜಾಲತಾಣಗಳಲ್ಲಿ ಆದೇಶದ ಪ್ರತಿಯನ್ನು ಹಂಚಿಕೊಳ್ಳಲಾಗುತ್ತಿದ್ದು, ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಲಾಗುತ್ತಿದೆ. ಇತ್ತೀಚೆಗೆ ಕಾನೂನು ತಿದ್ದು ಪಡಿ ತಂದು ಹಿಂದು ಧಾರ್ಮಿಕ ಸಂಸ್ಥೆಗಳ ಸಮಿತಿಗಳಲ್ಲಿ ಅನ್ಯ ಧರ್ಮಿಯರಿಗೆ ಅವಕಾಶ ಕಲ್ಪಿಸಲು ಅವಕಾಶ ಮಾಡಿಕೊಡಲಾಗಿದೆ. ಅದರ ಭಾಗವಾಗಿ ನವಾಜ್ ಅವಿಮುಕ್ತೇಶ್ವರ್ ಬ್ರಹರಥೋತ್ಸವ ಸಮಿತಿ ಸದಸ್ಯರಾಗಿ ನೇಮಕವಾಗಿದ್ದಾರೆ ಎಂದು ಹೇಳಲಾಗುತ್ತಿದೆ.
|
eesanje/url_46_153_7.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಪೆನ್ಡ್ರೈವ್ ಪ್ರಕರಣದಲ್ಲಿ ತೀರ್ಪು ನೀಡುವವಂತೆ ಮಾತನಾಡುತ್ತಿರುವ ಕುಮಾರಸ್ವಾಮಿ ನ್ಯಾಯಾಧೀಶರಲ್ಲ : ಡಿಕೆಶಿ
|
2 |
+
ಬೆಂಗಳೂರು, ಮೇ 8-ಪೆನ್ಡ್ರೈವ್ ಪ್ರಕರಣದಲ್ಲಿ ತೀರ್ಪು ನೀಡುವ ಮಾದರಿಯಲ್ಲಿ ಮಾತನಾಡುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನ್ಯಾಯಾಧೀಶರಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.
|
3 |
+
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ಡ್ರೈವ್ ಕುರಿತು ಕುಮಾರಸ್ವಾಮಿಯವರಿಗೆ ಸಂಪೂರ್ಣವಾಗಿ ಎಲ್ಲವೂ ಗೋತ್ತು. ವಕೀಲ ದೇವರಾಜೇಗೌಡ ಈಗ ಮಾತನಾಡುತ್ತಿದ್ದಾರೆ. ಕುಮಾರಸ್ವಾಮಿಗೆ ಪಾಪ ನನ್ನ ರಾಜೀನಾಮೆ ಬೇಕಂತೆ. ಒಕ್ಕಲಿಗರ ನಾಯಕತ್ವಕ್ಕೆ ಪೈಪೋಟಿಯಂತೆ. ರಾಜೀನಾಮೆ ಕೊಡೋಣ, ಒಬ್ಬರನ್ನೇ ಮುಗಿಸುವುದೇ ಅಲ್ಲವೇ ಅವರ ಕೆಲಸ. ಬ್ಲಾಕ್ಮೇಲ್ ಮಾಡುವುದೇ ಅವರ ವೃತ್ತಿ. ಕಿಂಗ್ ಆಫ್ ಬ್ಲಾಕ್ಮೇಲ್ ಎಂದು ಟೀಕಿಸಿದರು.
|
4 |
+
ಅಧಿಕಾರಿಗಳಿಗೆ, ರಾಜಕಾರಣಿಗಳಿಗೆ ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಮಾಡಲಿ, ಮುಂದೆ ಚರ್ಚೆ ಮಾಡಲು ಸಮಯ ಇದೆ. ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಲಿ. ಮೊದಲು ಕುಮಾರಸ್ವಾಮಿ ತಮ ಮಾತಿಗೆ ಬದ್ಧವಾಗಿರಲಿ. ಆರಂಭದಲ್ಲಿ ನನ್ನ ಮತ್ತು ದೇವೇಗೌಡರ ಹೆಸರು ತೆಗೆದುಕೊಳ್ಳಬೇಡಿ, ನಮ ಹಾಗೂ ರೇವಣ್ಣನವರ ಕುಟುಂಬಕ್ಕೆ ಸಂಬಂಧ ಇಲ್ಲ ಎಂದಿದ್ದರು.
|
5 |
+
ಕುಮಾರಸ್ವಾಮಿಯವರ ಪುತ್ರನೂ ಹೇಳಿದ್ದ. ಮತ್ಯಾಕೆ ಚಿಂತೆ ಮಾಡಿಕೊಳ್ಳುತ್ತಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಬೇಕು, ಕಾನೂನು ಪ್ರಕಾರ ಕ್ರಮ ಕೈಗೊಳ್ಳಿ ಎಂದು ಹೇಳಿದವರು, ಈಗ ಯಾಕೆ ಮಾತನಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
|
6 |
+
ಇವರೇನು ವಕೀಲರೇ ಅಥವಾ ನ್ಯಾಯಾದೀಶರೇ ತೀರ್ಪು ನೀಡಲು. ಪಾಯಿಂಟ್ ಪಾಯಿಂಟ್ ಮಾತನಾಡುತ್ತಿದ್ದಾರೆ. ಹೋಗಿ ನ್ಯಾಯಾಲಯಕ್ಕೆ ವಾದ ಮಾಡಲಿ. ಎಸ್ಐಟಿಯನ್ನು ಶಿವಕುಮಾರ್ ತನಿಖಾ ದಳ, ಸಿದ್ದರಾಮಯ್ಯ ತನಿಖಾ ದಳ ಎಂದು ಆರೋಪಿಸುತ್ತಿದ್ದಾರೆ. ಪೆನ್ಡ್ರೈವ್ ಬಹಿರಂಗಗೊಳ್ಳುವ ವಿಚಾರದಲ್ಲಿ ಬಿಜೆಪಿಯವರ ಕಡೆಯಿಂದ ಏನು ಮಾಡಿಸಬೇಕೋ ಅದನ್ನು ಮಾಡಿಸಿದ್ದಾರೆ. ಕುಮಾರಸ್ವಾಮಿ ಏನು ಮಾಡಬೇಕೋ ಮಾಡಿದ್ದಾರೆ, ಮೊದಲು ಪ್ರಕರಣದ ತನಿಖೆಯಾಗಲಿ ಎಂದು ಹೇಳಿದರು.
|
7 |
+
ಸಂತ್ರಸ್ಥರಲ್ಲಿ ಅವರ ಪಕ್ಷದ ಕಾರ್ಯಕರ್ತರೂ ಇದ್ದಾರೆ. ಮಾನ ಮರ್ಯಾದೆ ಇದ್ದರೆ ಮೊದಲು ಅವರನ್ನು ಭೇಟಿ ಮಾಡಿ, ಮಕ್ಕಳಿಗೆ, ತಂದೆತಾಯಿಗಳಿಗೆ ಧೈರ್ಯ ಹೇಳಲಿ. ಈಗ ಮಾತನಾಡುವವರು ಮೊದಲು ಅಲ್ಲಿಗೆ ಹೋಗಿ ಧೈರ್ಯ ತುಂಬಲಿ ಎಂದು ಒತ್ತಾಯಿಸಿದರು.ಜೆಡಿಎಸ್ ಪ್ರತಿಭಟನೆಯ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ನನ್ನ ಹೆಸರು ಹೇಳದಿದ್ದರೆ ಅವರ ಮಾರುಕಟ್ಟೆ ಓಡಲ್ಲ. ನನ್ನ ಹೆಸರು ಇಲ್ಲ ಎಂದರೆ ಅವರಿಗೆ ನಿದ್ದೆ ಇಲ್ಲ. ನನ್ನ ಹೆಸರು ಹೇಳದಿದ್ದರೆ ಮಾಧ್ಯಮಗಳಲ್ಲೂ ಅವರನ್ನು ತೋರಿಸುವುದಿಲ್ಲ. ಪ್ರಬಲವಾದಷ್ಟು ಶತ್ರುಗಳ ಸಂಖ್ಯೆ ಹೆಚ್ಚಾಗುತ್ತದೆ ಎಂದು ಲೇವಡಿ ಮಾಡಿದರು.
|
8 |
+
ಚುನಾವಣೆ ಮುಗಿದಿದೆ, ವಿಶ್ರಾಂತಿ ಬೇಕಿತ್ತು ಅದಕ್ಕಾಗಿ ಚಿಕ್ಕಮಗಳೂರಿಗೆ ಬಂದಿದ್ದೇನೆ. ನಮ ಸಿದ್ಧಾರ್ಥ ಮನೆ ಚಿಕ್ಕನಹಳ್ಳಿಗೆ ಬಹಳ ದಿನದಿಂದ ಬರಬೇಕು ಅಂದು ಕೊಂಡಿದ್ದೆ, ಸ್ವಲ್ಪ ವಿಶ್ರಾಂತಿ ಪಡೆಯಲು ಈಗ ಬಂದಿದ್ದೇನೆ. ಇವತ್ತು ಇಲ್ಲಿದ್ದು ನಂತರ ಬೇರೆ ಕಡೆ ಹೋಗುತ್ತೇನೆ ಎಂದು ತಿಳಿಸಿದರು.
|
eesanje/url_46_153_8.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಲೋಕಸಭೆ ಚುನಾವಣೆ : ರಾಜ್ಯದಲ್ಲಿ ದಾಖಲೆ ಪ್ರಮಾಣದಲ್ಲಿ ಮತದಾನ
|
2 |
+
ಬೆಂಗಳೂರು,ಮೇ8-ಪ್ರಸಕ್ತ ಲೋಕಸಭೆ ಚುನಾವಣೆಯ ರಾಜ್ಯದ ಎರಡು ಹಂತದ 28 ಕ್ಷೇತ್ರಗಳಲ್ಲಿ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಈ ಬಾರಿ ದಾಖಲೆ ಪ್ರಮಾಣದ ಶೇ.69.96ರಷ್ಟು ಮತದಾನವಾಗಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆ ಪ್ರಕಾರ, ಕಳೆದ ಎರಡು ಲೋಕಸಭೆ ಚುನಾವಣೆಗಳಿಗಿಂತ ಈ ಬಾರಿಯ ಮತದಾನ ಹೆಚ್ಚಾಗಿದೆ. 2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಶೇ.67.20ರಷ್ಟು ಮತದಾನವಾಗಿದ್ದರೆ, 2019ರ ಲೋಕಸಭೆ ಚುನಾವಣೆಯಲ್ಲಿ ಶೇ.68.81ರಷ್ಟು ಮತದಾನವಾಗಿತ್ತು.
|
3 |
+
ಕಳೆದ ಎರಡು ಚುನಾವಣೆಗೆ ಹೋಲಿಸಿದರೆ ಈ ಬಾರಿ ನಡೆದ ಎರಡು ಹಂತದ ಚುನಾವಣೆಗಳಲ್ಲೂ ಹೆಚ್ಚಿನ ಪ್ರಮಾಣದ ಮತದಾನವಾಗಿದೆ. ರಾಜ್ಯದ ಮೊದಲ ಹಂತದ ದಕ್ಷಿಣ ಕರ್ನಾಟಕದ 14 ಕ್ಷೇತ್ರಗಳಲ್ಲಿ ಶೇ.69.56ರಷ್ಟು ಮತದಾನವಾಗಿದ್ದರೆ ಉತ್ತರ ಕರ್ನಾಟಕದ ಭಾಗದ 2ನೇ ಹಂತದ 14 ಕ್ಷೇತ್ರಗಳಲ್ಲಿ ಶೇ.70.41ರಷ್ಟು ಮತದಾನವಾಗಿದೆ.2023ರ ವಿಧಾನಸಭೆ ಚುನಾವಣೆಯಲ್ಲಿ ಶೇ.73.84ರಷ್ಟು ಹಾಗೂ 2018ರ ವಿಧಾನಸಭೆ ಚುನಾವಣೆಯಲ್ಲಿ ಶೇ.72.44ರಷ್ಟು ಮತದಾನವಾಗಿತ್ತು.
|
4 |
+
ಮತ ಯಂತ್ರಗಳನ್ನು ಆಯಾ ಕ್ಷೇತ್ರದಲ್ಲಿ ನಿಗದಿಪಡಿಸಿದ ಸ್ಟ್ರಾಂಗ್ ರೂಮ್ಗಳಲ್ಲಿ ದಾಸ್ತಾನು ಮಾಡಿದ್ದು, ಸೂಕ್ತ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಜೂ.4ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗುವವರೆಗೂ ಈ ಕೇಂದ್ರಗಳಿಗೆ ಎಲ್ಲಾ ರೀತಿಯ ಭದ್ರತೆಯನ್ನು ಒದಗಿಸಲಾಗುತ್ತದೆ.
|
5 |
+
ಇದು ಪರಿಷ್ಕರಣೆಯಾಗಲಿದ್ದು, ಸಂಜೆ ವೇಳೆಗೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಗಳಿವೆ. ಈ ಬಾರಿ ಶಾಂತಿಯುತ ಹಾಗೂ ದಾಖಲೆ ಪ್ರಮಾಣದಲ್ಲಿ ಮತದಾನ ಆಗಿರುವುದಕ್ಕೆ ರಾಜ್ಯ ಮುಖ್ಯ ಚುನಾವಣಾಧಿ ಕಾರಿಗಳ ಕಚೇರಿ ಶ್ಲಾಘನೆ ವ್ಯಕ್ತಪಡಿಸಿದೆ. ಹಿರಿಯ ನಾಗರಿಕರು, ವಿಶೇಷ ಚೇತನರು, ಯುವ ಮತದಾರರು ಸೇರಿದಂತೆ ಎಲ್ಲರೂ ಮತದಾನದ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರಿಂದ ಇದು ಸಾಧ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ.
|
6 |
+
ಪ್ರಸಕ್ತ ಲೋಕಸಭೆ ಚುನಾವಣೆಯ ಕ್ಷೇತ್ರಗಳ ಶೇಕಡವಾರು ಮತದಾನ ಈ ಕೆಳಕಂಡಂತಿದೆ.ಚಿಕ್ಕೋಡಿ- 76.99ಬೆಳಗಾವಿ – 71ಬಾಗಲಕೋಟೆ 71.01ಬಿಜಾಪುರ 64.71ಗುಲ್ಬರ್ಗಾ 61.73ರಾಯಚೂರು 64.1ಬೀದರ್ 63.55ಕೊಪ್ಪಳ 69.87ಬಳ್ಳಾರಿ 72.35ಹಾವೇರಿ 76.78ಧಾರವಾಡ 72.53ಉತ್ತರಕನ್ನಡ 73.52ದಾವಣಗೆರೆ 76.23ಶಿವಮೊಗ್ಗ 76.05ಉಡುಪಿ-ಚಿಕ್ಕಮಗಳೂರು 77.15ಹಾಸನ 77.68ದಕ್ಷಿಣ ಕನ್ನಡ 77.56ಚಿತ್ರದುರ್ಗ 73.30ತುಮಕೂರು 78.05ಮಂಡ್ಯ 81.67ಮೈಸೂರು 70.62ಚಾಮರಾಜನಗರ 76.81ಬೆಂಗಳೂರು ಗ್ರಾಮಾಂತರ 68.30ಬೆಂಗಳೂರು ಉತ್ತರ 54.45ಬೆಂಗಳೂರು ಕೇಂದ್ರ 54.06ಬೆಂಗಳೂರು ದಕ್ಷಿಣ 53.17ಚಿಕ್ಕಬಳ್ಳಾಪು76ಕೋಲಾರ 78.27ಉಪಚುನಾವಣೆ: ಸುರಪುರ ಉಪಚುನಾವಣೆಯಲ್ಲಿ ಶೇ.73ರಷ್ಟು ಮತದಾನವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶೇ. 75.67ರಷ್ಟು ಮತದಾನವಾಗಿತ್ತು.
|
eesanje/url_46_153_9.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯದಲ್ಲಿ ಮತ್ತಷ್ಟು ಸಿಡಿಗಳು ಸಿಡಿಯುವ ಭೀತಿ, ಪಾತ್ರಧಾರಿಗಳಲ್ಲಿ ಹೆಚ್ಚಿದ ಆತಂಕ
|
2 |
+
ಬೆಂಗಳೂರು, ಮೇ 8-ಹಾಸನದ ಪೆನ್ಡ್ರೈವ್ ಪ್ರಕರಣ ಮಾಸುವ ಮುನ್ನವೇ ಮತ್ತಷ್ಟು ಸಿಡಿಗಳು ಬಹಿರಂಗಗೊಳ್ಳುವ ಚರ್ಚೆಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದ್ದು, ವಿಡಿಯೋ ಪಾತ್ರದಾರಿಗಳ ಎದೆಯಲ್ಲಿ ನಡುಕ ಶುರುವಾಗಿದೆ. ರಾಜ್ಯದಲ್ಲಿ ಹಲವಾರು ರಾಜಕಾರಣಿಗಳ ವಿವಾಹೇತರ ಸಂಬಂಧಗಳ ಕುರಿತು ಸಂದರ್ಭನುಸಾರ ವಿಡಿಯೋಗಳು ಬಹಿರಂಗಗೊಂಡಿವೆ, ಚರ್ಚೆಗೆ ಗ್ರಾಸವಾಗಿವೆ.
|
3 |
+
ಹಗರಣಕ್ಕೆ ಸಿಲುಕಿದವರ ಪೈಕಿ ಕೆಲವರು ರಾಜಕೀಯವಾಗಿ ನೇಪಥ್ಯಕ್ಕೆ ಸರಿದಿದ್ದಾರೆ. ಬೆಳಗಾವಿಯ ಗೋಕಾಕ್ ಕ್ಷೇತ್ರದ ಶಾಸಕ ಹಾಗೂ ಆಗಿನ ಸಚಿವ ರಮೇಶ್ ಜಾರಕಿಹೊಳಿ ಅವರ ವಿಡಿಯೋ ಬಹಿರಂಗ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಎಫ್ಐಆರ್ ದಾಖಲಾಗಿತ್ತು. ಆಗಿನ ವಿಪಕ್ಷ ಕಾಂಗ್ರೆಸ್ ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕು ಎಂದು ಭಾರೀ ಪ್ರತಿಭಟನೆಯನ್ನು ನಡೆಸಿತ್ತು. ಕೊನೆಗೆ ಆ ಪ್ರಕರಣ ಕಾಂಗ್ರೆಸ್ ನಾಯಕರ ನಿರೀಕ್ಷಿತ ರೀತಿಯಲ್ಲಿ ಇತ್ಯರ್ಥ ಕಾಣದೆ ನೇಪಥ್ಯಕ್ಕೆ ಸರಿದು ಹೋಯಿತು.
|
4 |
+
ರಮೇಶ್ ಜಾರಕಿಹೊಳಿ ವಿಡಿಯೋ ಬಹಿರಂಗವಾದ ಬೆನ್ನಲ್ಲೆ ಆಗಿನ ಸಂಪುಟದ ಸಚಿವರಾಗಿದ್ದ ಶಿವರಾಮ್ ಹೆಬ್ಬಾರ್, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ಕೆ.ಸುಧಾಕರ್, ಕೆ.ಸಿ.ನಾರಾಯಣಗೌಡ, ಬೈರತಿ ಬಸವರಾಜು ಅವರು ತಮ ವಿರುದ್ಧ ಯಾವುದೇ ರೀತಿಯ ಮಾನಹಾನಿಕರ ವಿಡಿಯೋ, ಆಡಿಯೋ, ಫೋಟೋಗಳನ್ನು ಬಹಿರಂಗ ಪಡಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. 6ಕ್ಕೂ ಹೆಚ್ಚು ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳು ಹಾಗೂ ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರನ್ನು ಪ್ರಕರಣದಲ್ಲಿ ಪ್ರತಿವಾದಿಯನ್ನಾಗಿ ಮಾಡಲಾಗಿತ್ತು. ಸಚಿವರು ತಡೆಯಾಜ್ಞೆ ತಂದಿದ್ದನ್ನು ಅನುಮಾನಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ವಿಧಾನಸಭೆ ಮತ್ತು ವಿಧಾನ ಪರಿಷತ್ ಕಲಾಪದಲ್ಲಿ ಮೂರು ದಿನ ಗದ್ದಲ ಎಬ್ಬಿಸಿದ್ದವು.
|
5 |
+
ನಾವೇನು ತಪ್ಪು ಮಾಡಿಲ್ಲ, ಆಧುನಿಕ ತಂತ್ರಜ್ಞಾನ ಯುಗದಲ್ಲಿ ನಕಲಿ ವಿಡಿಯೋಗಳನ್ನು ತಯಾರಿಸಿ, ಹರಿಯ ಬಿಟ್ಟು ನಾವು ಇಷ್ಟು ದಿನ ಗಳಿಸಿದ ರಾಜಕೀಯ ವರ್ಚಸ್ಸನ್ನು ಹಾಳು ಮಾಡಲಾಗುತ್ತದೆ. ಆ ಕಾರಣಕ್ಕಾಗಿ ನಾವು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದೇವೆ ಎಂಬ ಸಮರ್ಥನೆಯನ್ನು ಆ ವೇಳೆ ಸಚಿವರು ನೀಡಿದ್ದರು.
|
6 |
+
ಅದೇ ಚರ್ಚೆಯ ವೇಳೆ ಕಾಂಗ್ರೆಸ್-ಜೆಡಿಎಸ್ನಿಂದ ವಲಸೆ ಹೋಗಿದ್ದ 17 ಮಂದಿ ಶಾಸಕರ ಪೈಕಿ ಕೆಲವರನ್ನು ಬಾಂಬೆ ಬಾಯ್್ಸ ಎಂದು ಗುರುತಿಸಿ ಲೇವಡಿ ಮಾಡಲಾಗುತ್ತಿದೆ. ತಡೆಯಾಜ್ಞೆ ತಂದಿದ್ದವರ ಪೈಕಿ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಪ್ರಸ್ತುತ ಬಿಜೆಪಿಯಲ್ಲಿ ಅಸಮಧಾನಿತ ಶಾಸಕರಾಗಿ ಗುರುತಿಸಿಕೊಂಡಿದ್ದು, ಕಾಂಗ್ರೆಸ್ ಜೊತೆ ನಿಕಟ ಸಂಬಂಧ ಹೊಂದಿದ್ದಾರೆ. ಬಿ.ಸಿ.ಪಾಟೀಲ್, ಕೆ.ಸಿ.ನಾರಾಯಣಗೌಡ, ಡಾ.ಕೆ.ಸುಧಾಕರ್ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಅವರ ಪೈಕಿ ಡಾ.ಸುಧಾಕರ್ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಬೈರತಿ ಬಸವರಾಜ್ ಕೆ.ಆರ್.ಪುರಂ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿದ್ದಾರೆ.
|
7 |
+
ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಮತ್ತು ಫೋಟೋಗಳು ಬಹಿರಂಗಗೊಂಡ ಬೆನ್ನಲ್ಲೆ ರಾಜಕೀಯ ಜಿದ್ದಾಜಿದ್ದಿ ಶುರುವಾಗಿದೆ. ಕಾಂಗ್ರೆಸ್ ವಿಡಿಯೋಗಳನ್ನು ಆಧಾರವಾಗಿಟ್ಟುಕೊಂಡು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಲಾಗುತ್ತಿದೆ. ಇದು ಒಂದಿಷ್ಟು ಹಾನಿಗೂ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ವಿಡಿಯೋಗಳನ್ನು ಬಹಿರಂಗ ಮಾಡಿ ತಿರುಗೇಟು ನೀಡಲು ತಯಾರಿಗಳಾಗಿವೆ ಎಂಬ ಚರ್ಚೆಗಳಿವೆ.
|
8 |
+
ನ್ಯಾಯಾಲಯದಲ್ಲಿ ತಡೆಯಾಜ್ಞೆ ಇರುವುದರಿಂದ ನೇರವಾಗಿ ಅಕಾಡಕ್ಕೆ ಬರದೆ, ಡಾರ್ಕ್ನೆಟ್ ಬಳಸಿಕೊಂಡು ಅಂತರ್ಜಾಲದಲ್ಲಿ ವಿಡಿಯೋಗಳನ್ನು ಹರಿಯ ಬಿಟ್ಟು ಮುಜುಗರ ಉಂಟು ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಹಾಸನದ ಪ್ರಕರಣದಲ್ಲಿ ದಿನಕ್ಕೊಂದು ವಿಡಿಯೋಗಳನ್ನು ಬಹಿರಂಗ ಪಡಿಸಿ ರಾಜಕೀಯವಾಗಿ ಭಾರೀ ಚರ್ಚೆ ಹುಟ್ಟು ಹಾಕಲಾಗಿದೆ.
|
9 |
+
ಲೋಕಸಭೆ ಚುನಾವಣೆಯಲ್ಲಿ ಇದು ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಮುಜುಗರ ಉಂಟು ಮಾಡಿದೆ. ರಾಜಕೀಯ ಕಾರಣಕ್ಕೆ ಮತ್ತಷ್ಟು ವಿಡಿಯೋಗಳನ್ನು ಹೊರ ಹಾಕುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಇತ್ತ ಹಾಸನ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಇನ್ನಷ್ಟು ಆಘಾತಕಾರಿ ವಿಡಿಯೋಗಳನ್ನು ಹೊರ ಹಾಕುವ ನಿರೀಕ್ಷೆ ಇದೆ ಎಂದು ತಿಳಿದು ಬಂದಿದೆ.
|
eesanje/url_46_154_1.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯದಲ್ಲಿ 2ನೇ ಹಂತದ ಚುನಾವಣೆಯಲ್ಲಿ 70.41 ರಷ್ಟು ಮತದಾನ
|
2 |
+
ಬೆಂಗಳೂರು, ಮೇ 7-ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ಬಿರುಸಿನಿಂದ ಆರಂಭಗೊಂಡು ಬಹುತೇಕ ಶಾಂತಿಯುತವಾಗಿ ನಡೆಯಿತು. ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿತು. ಹಲವು ಮತಗಟ್ಟೆಗಳಲ್ಲಿ ಸಾಲುಗಟ್ಟಿ ನಿಂತು ಉತ್ಸಾಹದಿಂದ ಮತ ಚಲಾಯಿಸುತ್ತಿದ್ದ ದೃಶ್ಯ ಕಂಡುಬಂತು.
|
3 |
+
ಸಂಜೆ 5 ಗಂಟೆ ವೇಳೆಗೆ ಸರಾಸರಿಶೇ.66.05ರಷ್ಟುಮತದಾನವಾಗಿ, ಮತದಾನ ಮಕ್ತಾಯದ ವೇಳೆಗೆಶೇ.70.41ಮತದಾನವಾಗಿದ್ದು,ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆಯುವ ಮತದಾರರು ಉತ್ಸಾಹದಿಂದ ಮತದಾನ ಮಾಡುತ್ತಿರುವುದು ಅಲ್ಲಲ್ಲಿ ಕಂಡುಬಂದಿತು. ಕೆಲವೊಂದು ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಈತನಕ ಶಾಂತಿಯುತವಾಗಿ ಮತದಾನ ನಡೆದಿದೆ.
|
4 |
+
ಗ್ರಾಮೀಣ ಭಾಗದಲ್ಲಿ ಬಿರುಸಿನ ಮತದಾನವಾಗುತ್ತಿರುವುದು ಕಂಡುಬಂದಿತು. ನಗರ ಪ್ರದೇಶಗಳಲ್ಲಿ ಅಷ್ಟು ಉತ್ಸಾಹ ಕಂಡುಬರಲಿಲ್ಲ. ಗ್ರಾಮೀಣ ಭಾಗದಲ್ಲಿ ಕೃಷಿ ಮತ್ತಿತರ ಚಟುವಟಿಕೆಗಳಲ್ಲಿ ತೊಡಗಬೇಕಾದವರು ಬೆಳಗ್ಗೆಯೇ ಮತ ಚಲಾಯಿಸಿ ತಮ ಕೆಲಸ ಕಾರ್ಯಗಳಿಗೆ ತೆರಳಿದರು.
|
5 |
+
21 ಮಹಿಳೆಯರು ಸೇರಿದಂತೆ ಒಟ್ಟು 227 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಿದ್ದಾರೆ. ಇಬ್ಬರು ಕೇಂದ್ರ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳು, ನಾಲ್ವರು ಸಚಿವರ ಮಕ್ಕಳು, ಓರ್ವ ಸಚಿವರ ಸಹೋದರಿ, ಸಚಿವರೊಬ್ಬರ ಪತ್ನಿ, ಹಾಲಿ ಸಂಸದರ ಪತ್ನಿ ಹಾಗೂ ರಾಷ್ಟ್ರೀಯ ಪಕ್ಷವೊಂದರ ರಾಷ್ಟ್ರೀಯ ಅಧ್ಯಕ್ಷರ ಅಳಿಯ ಚುನಾವಣಾ ಕಣದಲ್ಲಿ ಇದ್ದಾರೆ.
|
6 |
+
|
7 |
+
ಬೆಳಗ್ಗೆ ಬಿರುಸಿನಿಂದ ಆರಂಭಗೊಂಡ ಮತದಾನವು ಮಧ್ಯಾಹ್ನ ಸ್ವಲ್ಪ ಕಡಿಮೆಯಾದರೂ 4 ಗಂಟೆ ನಂತರ ಮತ್ತೆ ಮತದಾನ ಬಿರುಸಾಗತೊಡಗಿತು. ಬಿಸಿಲು ಹೆಚ್ಚಾಗಿರುವುದರಿಂದ ಮತಗಟ್ಟೆಗಳಲ್ಲಿ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲಾಗಿತ್ತು.
|
8 |
+
ಹಿರಿಯರು,ವಿಶೇಷ ಚೇತನರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ್ದು ವಿಶೇಷವಾಗಿತ್ತು ಕೆಲವರನ್ನು ಮತಗಟ್ಟೆಗೆ ಹೊತ್ತು ತಂದು ಮಾತದಾನ ಮಾಡಿಸಿದ್ದು ಭಾರಿ ಪ್ರಶಂಸೆಗೆ ಪಾತ್ರವಾಗಿತ್ತು .ಮೊದಲ ಭಾರಿಗೆ ಮತದಾನ ಮಾಡುವ ಯುವ ಸಮುದಾಯದಲ್ಲಿ ಲವಲವಿಕೆ ಕಂಡುಬಂತು ಮತದಾನ ಮಾಡಿದ ಖುಷಿಯಲ್ಲಿ ಮಾಧ್ಯಮಗಳ ಮುಂದೆ ಸಮತಸ ಹಂಚಿಕೊಂಡರು.
|
9 |
+
ಒಟ್ಟಾರೆ 3 ತಿಂಗಳಿನಿಂದ ನಡೆದಿದ್ದ ತಂತ್ರ-ಪ್ರತಿ ತಂತ್ರ ,ನಾಯಕರ ನಡುವಿನ ಆರೋಪ -ಪ್ರತ್ಯಾರೋಪ ,ಅಬ್ಬರದ ಪ್ರಚಾರ ಕೊನೆಯಾಗಿದ್ದು ಮತದಾರ ಫ್ರಭು ತನ್ನ ಹಕ್ಕು ಚಲಾಯಿಸಿದ್ದು ಜೂನ್ 4ರ ವರೆಗೆ ಜನದೇಶಕ್ಕೆ ಕಾಯಬೇಕಾಗಿದೆ.ರಾಜ್ಯದ 28 ಕ್ಷೇತ್ರದ ಮತದಾನ ಅಧಿಕೃತವಾಗಿ ಮುಕ್ತಾಯವಾಗಿದೆ.
|
10 |
+
ಇಂದು ನಡೆದ 14 ಕ್ಷೇತ್ರಗಳಲ್ಲಿ ಒಟ್ಟು 2,59,52,958 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದರು. ಇದರಲ್ಲಿ 1,29,48,978 ಪುರುಷರು, 1,29,66,570 ಮಹಿಳೆಯರು, 1945 ತೃತೀಯ ಲಿಂಗಿಗಳಿದ್ದ��ರೆ. 6,90,929 ಯುವ ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದರು.
|
11 |
+
14 ಕ್ಷೇತ್ರಗಳಲ್ಲಿ ಒಟ್ಟು 28,269 ಮತಗಟ್ಟೆಗಳನ್ನು ತೆರೆಯಲಾಗಿತ್ತು. ಮುಕ್ತ ಹಾಗೂ ಶಾಂತಿಯುತ ಮತದಾನಕ್ಕೆ ಅನುಕೂಲವಾಗುವಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
|
12 |
+
1.45 ಲಕ್ಷ ಮತಗಟ್ಟೆ ಅಧಿಕಾರಿಗಳು, 35,000 ಪೊಲೀಸರು, ಅರೆಸೇನಾ ಪಡೆಯ 65 ಕಂಪನಿಗಳನ್ನು ನಿಯೋಜಿಸಲಾಗಿತ್ತು. ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಎಡಗೈ ತೋರುಬೆರಳಿಗೆ ಶಾಯಿಯನ್ನು ಹಾಕಲಾಗುತ್ತಿತ್ತು. ಏ.26ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಸರಾಸರಿ ಶೇ. 69.56ರಷ್ಟು ಮತದಾನವಾಗಿದೆ.
|
eesanje/url_46_154_10.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಕುಟುಂಬ ಸಮೇತ ಬಂದು ಮತದಾನ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
|
2 |
+
ಬೆಳಗಾವಿ, ಮೇ 7-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಜಯನಗರದ ಸರಕಾರಿ ಮರಾಠಿ ಪ್ರಾಥಮಿಕ ಪಾಠ ಶಾಲೆಯ ಬೂತ್ ನಂಬರ್ 61ರಲ್ಲಿ ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದರು.
|
3 |
+
ಸಚಿವರ ಪುತ್ರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್, ಸೊಸೆ ಡಾ.ಹಿತಾ, ಸಚಿವರ ತಾಯಿ ಗಿರಿಜಾ ಹಟ್ಟಿಹೊಳಿ, ಸಹೋದರ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರ ಪತ್ನಿ ಜೊತೆಗೂಡಿ ಮತದಾನ ಮಾಡಿದರು.
|
4 |
+
ಬಳಿಕ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಭಾರತ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ ಮತದಾನದ ದಿನ. ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ಉತ್ತಮ ಜನ ಪ್ರತಿನಿಧಿಯನ್ನು ಆಯ್ಕೆ ಮಾಡಬೇಕು ಎಂದರು.
|
5 |
+
ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಪರ ಉತ್ತಮ ಅಲೆಯಿದೆ. ಕ್ಷೇತ್ರದಲ್ಲಿ ಜಯ ದಾಖಲಿಸುವ ಮೂಲಕ ಕಾಂಗ್ರೆಸ್ ಹೊಸ ಇತಿಹಾಸ ಸೃಷ್ಟಿಸಲಿದೆ. ನನ್ನ ಸಹೋದರ, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಪಡೆಯೇ ನನ್ನ ದೊಡ್ಡ ಶಕ್ತಿ. ಅರಭಾವಿ, ಗೋಕಾಕ್, ಬೆಳಗಾವಿ ಉತ್ತರ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮುನ್ನಡೆ ಗಳಿಸಲಿದೆ. ಅಜ್ಜಯ್ಯನವರ (ನೊಣವಿನಕೆರೆಯ ಶ್ರೀ ಕಾಡಾಸಿದ್ದೇಶ್ವರದ ಸ್ವಾಮೀಜಿಗಳು) ಆಶೀರ್ವಾದವಿದೆ ಎಂದು ಹೇಳಿದರು.
|
6 |
+
ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಮಾತನಾಡಿ, ಈ ಬಾರಿ ನೂರಕ್ಕೆ ನೂರರಷ್ಟು ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ದಾಖಲಿಸಲಿದೆ. ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಗ್ಯಾರಂಟಿ ಎಂದರು.
|
7 |
+
ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಒಗ್ಗಟ್ಟಿನಿಂದ ಕೆಲಸ ಮಾಡಿದ್ದೇವೆ. ಚಿಕ್ಕೋಡಿ, ಬೆಳಗಾವಿ ಎರಡು ಕ್ಷೇತ್ರ ಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಜಯ ದಾಖಲಿಸಲಿದ್ದು, ಬೆಳಗಾವಿ ಸ್ವಾಭಿಮಾನಕ್ಕೆ ಗೆಲುವು ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
|
eesanje/url_46_154_11.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗಿಲ್ಲ ಮತದಾನದ ಅವಕಾಶ
|
2 |
+
ಹುಬ್ಬಳ್ಳಿ, ಮೇ 7-ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತದಾನದಲ್ಲಿ ಭಾಗವಹಿಸಲು ಶಾಸಕ ವಿನಯ್ ಕುಲಕರ್ಣಿಗೆ ಅವಕಾಶ ಇಲ್ಲ. ಮತದಾನಕ್ಕೆ ಅವಕಾಶ ಕೋರಿದ್ದ ವಿನಯ್ ಕುಲಕರ್ಣಿ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ. ನಾಳೆಗೆ ಸೀಮಿತವಾಗಿ ಧಾರವಾಡ ಪ್ರವೇಶ ಕೋರಿದ್ದ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ನಿರ್ಬಂಧ ಹೇರಿತ್ತು.
|
3 |
+
ಆ ಪ್ರಕರಣದಿಂದ ಹೊರಗೆ ಬರಲು ವಿನಯ್ ಎಷ್ಟೇ ಪ್ರಯತ್ನ ನಡೆಸಿದರೂ ಅದು ಸಾಧ್ಯವಾಗುತ್ತಲೆ ಇಲ್ಲ.2016 ರ ಜೂ.15 ರಂದು ಧಾರವಾಡದ ಸಪ್ತಾಪುರ ಬಡಾವಣೆಯಲ್ಲಿನ ಜಿಮ್ನಲ್ಲಿ ನಡೆದಿದ್ದ ಹುಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶ್ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಸೆಷನ್್ಸ ನ್ಯಾಯಾಲಯ ನಿಗದಿಪಡಿಸಿರುವ ದೋಷಾರೋಪಣೆಯಲ್ಲಿ ಸಾಕಷ್ಟು ದೋಷಗಳಿವೆ ಎಂದು ಆಕ್ಷೇಪಿಸಿ ಪ್ರಕರಣದ ಆರೋಪಿಯೂ ಆದ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು.ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ್ ಕುಲಕರ್ಣಿಗೆ ರಿಲೀಫ್ ಸಿಗುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ.
|
4 |
+
ಈ ಬಗ್ಗೆ ವಾದ-ಪ್ರತಿವಾದ ನಡೆದು ಬೆಂಗಳೂರು ಹೈಕೋರ್ಟ್ನ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರು ತೀರ್ಪನ್ನು ಕಾಯ್ದಿರಿಸಿದ್ದರು.ಅದರ ತೀರ್ಪನ್ನು ಸೋಮವಾರ ಪ್ರಕಟಿಸಲಾಗಿತ್ತು. ಅದರಲ್ಲಿ ವಿನಯ್ ಕುಲಕರ್ಣಿ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್, ಜನಪ್ರತಿನಿಧಿಗಳ ನ್ಯಾಯಾಲಯ ಮೂರು ತಿಂಗಳಲ್ಲಿ ವಿಚಾರಣೆ ಮುಕ್ತಾಯಗೊಳಿಸಬೇಕು ಎಂದು ಆದೇಶಿಸಿತ್ತು. ಇದರಿಂದಾಗಿ ವಿನಯ ಕುಲಕರ್ಣಿಗೆ ದೊಡ್ಡ ಶಾಕ್ ಎದುರಾಗಿತ್ತು.
|
eesanje/url_46_154_12.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸಾಲಲ್ಲಿ ನಿಂತು ಮತದಾನ ಮಾಡಿದ ಗಣ್ಯಾತಿಗಣ್ಯರು
|
2 |
+
ಬೆಂಗಳೂರು, ಮೇ 7- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಸಚಿವರು, ಶಾಸಕರು, ಮಾಜಿ ಸಚಿವರು ಹಲವು ಗಣ್ಯಾತಿ ಗಣ್ಯರು ಮತದಾನ ಮಾಡಿದರು. ರಾಜ್ಯದಲ್ಲಿ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಇಂದು ನಡೆದ ಮತದಾನದಲ್ಲಿ ಅಭ್ಯರ್ಥಿಗಳು, ಗಣ್ಯರು, ಮುಖಂಡರು ಬೆಳಿಗ್ಗೆಯೇ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು.
|
3 |
+
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕಲುಬುರಗಿಯ ಬಸವನಗರದಲ್ಲಿರುವ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ತಮ್ಮ ಕುಟುಂಬದವರೊಂದಿಗೆ ಆಗಮಿಸಿ ಮತಚಲಾಯಿಸಿದರು. ಸಚಿವರಾದ ಪ್ರಿಯಾಂಕ ಖರ್ಗೆ, ಅಭ್ಯರ್ಥಿ ರಾಧಾಕೃಷ್ಣ ಅವರು ಕೂಡ ತಮ ಪರಿವಾರದೊಂದಿಗೆ ಆಗಮಿಸಿ ಮತದಾನ ಮಾಡಿದರು.
|
4 |
+
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ತಮ ಕುಟುಂಬದವರೊಂದಿಗೆ ಆಗಮಿಸಿ ಶಿಕಾರಿಪುರ ಆಡಳಿತ ಭವನದ ಬೂತ್ ನಂ.137 ರಲ್ಲಿ ಮತದಾನದ ಹಕ್ಕು ಚಲಾಯಿಸಿದರು.
|
5 |
+
ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಅವರು ಹುಬ್ಬಳ್ಳಿಯ ಭವಾನಿನಗರದಲ್ಲಿರುವ ಕಿವುಡ-ಮೂಕರ ಶಾಲೆಯಲ್ಲಿ ಮತದಾನ ಮಾಡಿದರು.ವಿಜಯಪುರದ ಕಾಂಗ್ರೆಸ್ ಅಭ್ಯರ್ಥಿ ರಾಜುಅಲಗೂರು ಅವರು ಸ್ವಗ್ರಾಮ ತೊರವಿಯ ಸರ್ಕಾರಿ ಶಾಲೆಯಲ್ಲಿ ಮತಚಲಾಯಿಸಿದರು.
|
6 |
+
ಹಾವೇರಿ ಜಿಲ್ಲೆ ಶಿಗ್ಗಾವಿ ಮತಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜು ಬೊಮಾಯಿ ಅವರು ಮುಂಜಾನೆಯೇ ತಮ ಪರಿವಾರದೊಂದಿಗೆ ಆಗಮಿಸಿ ಹಕ್ಕು ಚಲಾಯಿಸಿದರು.ಬಾಗಲಕೋಟೆಯ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ವಿಜಯಪುರದ ಮರಾಠಿ ಸರ್ಕಾರಿ ಶಾಲೆಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ಹಕ್ಕು ಚಲಾಯಿಸಿದರು.
|
7 |
+
ಚಿಕ್ಕೋಡಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರು ಚಿಕ್ಕೋಡಿ ತಾಲ್ಲೂಕಿನ ಹಳೇವಂಟಮೂರಿ ಗ್ರಾಮದಲ್ಲಿ ತಮ್ಮ ಸೋದರನೊಂಧಿಗೆ ಆಗಮಿಸಿ ಮತದಾನ ಮಾಡಿದರು.ಬೆಳಗಾವಿಯ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ತಮ್ಮ ಬೀಗರಾದ ಮಾಜಿ ಸಂಸದೆ ಮಂಗಳ ಅಂಗಡಿ ಹಾಗೂ ಸೊಸೆ ಶ್ರದ್ಧಾ ಶೆಟ್ಟರ್ ಅವರೊಂದಿಗೆ ಆಗಮಿಸಿ ಬೆಳಗಾವಿ ಮತಗಟ್ಟೆ 26ರಲ್ಲಿ ಮತಚಲಾಯಿಸಿದರು.
|
8 |
+
ಉತ್ತರಕನ್ನಡದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಖಾನಾಪುರ ಸರ್ಕಾರಿ ಶಾಲೆಯಲ್ಲಿ ಮತ ಚಲಾಯಿಸಿದರು. ಸಚಿವರಾದ ಲಕ್ಷ್ಮೀಹೆಬ್ಬಾಳ್ಕರ್ ಅವರು ತಮ ಪುತ್ರ ಹಾಗೂ ಕೈ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಮತ್ತು ಸೋದರ ಚೆನ್ನರಾಜ್ ಹಟ್ಟಿಹೊಳಿ ಅವರೊಂದಿಗೆ ಆಗಮಿಸಿ ಹಿಂಡಲಗಾ ಸಮೀಪದ ವಿಜಯನಗರದ ಕನ್ನಡ-ಮರಾಠಿ ಶಾಲೆಯಲ್ಲಿ ಮತ ಚಲಾಯಿಸಿದರು.
|
9 |
+
ಮಾಜಿ ಸಚಿವ ಹಾಗೂ ಶತಾಯುಷಿಗಳಾದ ಡಾ. ಭೀಮಣ್ಣ ಖಂಡ್ರೆ, ಇವರ ಪುತ್ರ ಸಚಿವ ಈಶ್ವರ್ ಖಂಡ್ರೆ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಬೀದರ್ ಜಿಲ್ಲೆಯ ಭಾಲ್ಕಿ ಸಹಾಯಕ ಕೃಷಿ ನಿರ್ದೇಶಕ ಕಚೇರಿಯಲ್ಲಿ ಮತಚಲಾಯಿಸಿದರು.
|
10 |
+
ಸಭಾಪತಿ ಬಸವರಾಜ ಹೊರಟ್ಟಿ ಅವರು ಕುಟುಂಬ ಸಮೇತರಾಗಿ ಆಗಮಿಸಿ ಹುಬ್ಬಳ್ಳಿಯ ಲ್ಯಾಮಿಂಗ್ಟನ್ ರಸ್ತೆಯಲ್ಲಿನ ಮತಗಟ್ಟೆ ಸಂಖ್ಯೆ 119ರಲ್ಲಿ ಮತಚಲಾಯಿಸಿದರು.ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರು ನವಲಗುಂದದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ4ರಲ್ಲಿ ತಮ್ಮ ಮತ ಚಲಾಯಿಸಿದರು.
|
11 |
+
ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಅವರು ತಮ್ಮ ಕುಟುಂಬ ಸಮೇತ ಆಗಮಿಸಿ ಪದಲತಾ ಎಚ್ಪಿಎಸ್ ಮತಗಟ್ಟೆ ಸಂಖ್ಯೆ 50ರಲ್ಲಿ ತಮ ಮತಚಲಾಯಿಸಿದರು.ಅಬಕಾರಿ ಸಚಿವ ಆರ್.ಬಿ. ತಿಮಾಪುರ್ ಮುದೋಳ ನಗರದ ಮತಗಟ್ಟೆ ಸಂಖ್ಯೆ 113ರಲ್ಲಿ ಸರತಿ ಸಾಲಿನಲ್ಲಿ ನಿಂತು ಮತಚಲಾಯಿಸಿದರು.
|
12 |
+
ಶಿವಮೊಗ್ಗದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ವಿಜಯಪುರದಲ್ಲಿ ಮಾಜಿ ಸಚಿವ ಬಸವನಗೌಡ ಪಾಟೀಲ್ ಯತ್ನಾಳ್, ಉತ್ತರ ಕನ್ನಡದಲ್ಲಿ ಮಾಜಿ ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಬಳ್ಳಾರಿಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಸೇರಿದಂತೆ ಹಲವು ಗಣ್ಯರು ಮತದಾನ ಮಾಡಿದರು.
|
eesanje/url_46_154_2.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಪೆನ್ಡ್ರೈವ್ ಪ್ರಕರಣದಲ್ಲಿ ಡಿಕೆಶಿ ಕೈವಾಡ ಆರೋಪ, ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ
|
2 |
+
ಬೆಂಗಳೂರು,ಮೇ7-ಹಾಸನದ ಪೆನ್ಡ್ರೈವ್ ಸೋರಿಕೆ ಪ್ರಕರಣದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇದ್ದಾರೆ ಎಂಬ ಆರೋಪ ಕೇಳಿಬಂದಿರುವ ಹಿನ್ನಲೆಯಲ್ಲಿ ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
|
3 |
+
ಜೆಡಿಎಸ್ ಕಚೇರಿ ಜೆಪಿಭವನದ ಬಳಿ ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಫಲಕಗಳನ್ನು ಪ್ರದರ್ಶಿಸಿ ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಪ್ರತಿಭಟನಾನಿರತರು ಆಗ್ರಹಿಸಿದರು.
|
4 |
+
ಪ್ರತಿಭಟನಾ ಮೆರವಣಿಗೆ ನಡೆಸಲು ಮುಂದಾದ ಜೆಡಿಎಸ್ನ ಕೆಲ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
|
eesanje/url_46_154_3.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
“ಪ್ರಜ್ವಲ್ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದ ರಾಹುಲ್ ಗಾಂಧಿ ಅವರನ್ನು ಏಕೆ ವಿಚಾರಣೆಗೆ ಕರೆದಿಲ್ಲ..?”
|
2 |
+
ಬೆಂಗಳೂರು,ಮೇ7-ಸಂಸದ ಪ್ರಜ್ವಲ್ ರೇವಣ್ಣ ಅವರು 16 ವರ್ಷದೊಳಗಿನ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದರು ಎಸ್ಐಟಿ ಅವರನ್ನು ಏಕೆ ವಿಚಾರಣೆಗೆ ಕರೆದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.
|
3 |
+
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 400 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪವನ್ನು ಸಹ ಮಾಡಿದ್ದಾರೆ. ಈ ಆರೋಪ ಮಾಡಿದ ರಾಹುಲ್ ಗಾಂಧಿ ಅವರನ್ನು ಏಕೆ ವಿಚಾರಣೆಗೆ ಕರೆದಿಲ್ಲ. ನೇರ ಆರೋಪ ಮಾಡಿದ ಅವರ ವಿರುದ್ಧ ಏಕೆ ದೂರು ಸ್ವೀಕರಿಸಲಿಲ್ಲ ಎಂದು ಪ್ರಶ್ನಿಸಿದರು.
|
4 |
+
ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಮಾಡಿದ್ದರೆ ಪೋಕ್ಸೋ ಕಾಯ್ದೆ ದಾಖಲಾಗಬೇಕಲ್ಲವೇ? ಇಷ್ಟೆಲ್ಲ ಮಾಹಿತಿ ಅವರಿಗೆ ಹೇಗೆ ಬಂತು? ಇದು ಕಾಂಗ್ರೆಸ್ನವರು ಮಾಡಿರುವ ವ್ಯವಸ್ಥಿತ ಸಂಚು. ಪ್ರಧಾನಿ ನರೇಂದ್ರಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಏಕೆ ಎಳೆದು ತರುತ್ತೀರಿ. ಗ್ಯಾರಂಟಿಯಿಂದ ಮತ ಗಳಿಸಲು ಸಾಧ್ಯವಾಗುವುದಿಲ್ಲ ಎಂಬ ಅನುಮಾನವೇ? ಎಂದು ಪ್ರಶ್ನಿಸಿದರು.
|
5 |
+
ಪ್ರಚಾರಕ್ಕಾಗಿ, ಮತ ಗಳಿಕೆಯ ಲಾಭಕ್ಕಾಗಿ ಹೆಣ್ಣುಮಕ್ಕಳ ಮಾನವನ್ನು ಹರಾಜು ಮಾಡಿದ್ದಾರೆ. ಪ್ರಧಾನಿಯವರು ಪ್ರಜ್ವಲ್ ರೇವಣ್ಣ ಅವರ ಬಗ್ಗೆ ಮೃದು ಧೋರಣೆ ಇಲ್ಲ ಎಂದು ಹೇಳಿದ್ದಾರೆ. ಯಾರೇ ತಪ್ಪು ಮಾಡಿದರೂ ಅವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕು ಎಂಬುದನ್ನು ಮತ್ತೆ ಪುನರುಚ್ಚರಿಸುತ್ತೇನೆ ಎಂದರು.
|
6 |
+
ಹಾಸನದ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದ ಸಂತ್ರಸ್ತರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಹೇಳಿದ್ದಾರೆ. ಯಾರು ಮೊದಲು ದೂರು ಕೊಡಬೇಕು, ನಂತರ ಯಾರು ಕೊಡಬೇಕು ಎಂದು ಟಿಕ್ ಮಾಡಿದ್ದು ನೀವೇ ಅಲ್ಲವೇ ಎಂದು ವಾಗ್ದಾಳಿ ನಡೆಸಿದರು. ಈ ಪ್ರಕರಣವನ್ನು ಮುಚ್ಚಿ ಹಾಕಲು ಬಿಡುವುದಿಲ್ಲ. ಪಾರದರ್ಶಕ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದರು.
|
eesanje/url_46_154_4.txt
ADDED
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪೆನ್ಡ್ರೈವ್ ಪ್ರಕರಣ : ಡಿಕೆಶಿಯನ್ನು ಸಂಪುಟದಿಂದ ಕೈಬಿಡುವಂತೆ ಕುಮಾರಸ್ವಾಮಿ ಆಗ್ರಹ
|
2 |
+
ಬೆಂಗಳೂರು,ಮೇ7-ಹಾಸನದ ಅಶ್ಲೀಲ ವಿಡಿಯೋವುಳ್ಳ ಪೆನ್ಡ್ರೈವ್ ಸೋರಿಕೆ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇದ್ದಾರೆ ಎಂಬ ಆರೋಪ ಬಂದಿರುವ ಹಿನ್ನಲೆಯಲ್ಲಿ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.
|
3 |
+
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪೆನ್ಡ್ರೈವ್ ಪ್ರಕರಣದ ಬಗ್ಗೆ ವಿಶೇಷ ತನಿಖಾ ದಳ ನಿಷ್ಪಕ್ಷಪಾತ ಹಾಗೂ ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ. ಇದನ್ನು ಸಿಬಿಐ ತನಿಖೆಗೆ ವಹಿಸಬೇಕು ಇಲ್ಲವೇ ಹೈಕೋರ್ಟ್ ಅಥವಾ ಸುಪ್ರೀಂಕೋರ್ಟ್ನ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.
|
4 |
+
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೈತಿಕತೆ ಇದ್ದರೆ ಆರೋಪ ಕೇಳಿಬಂದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿದರು. ಅನ್ಯಾಯವಾಗಿರುವ ಹೆಣ್ಣುಮಕ್ಕಳಿಗೆ ನ್ಯಾಯ ದೊರಕಬೇಕಾದರೆ ಸಿಬಿಐ ತನಿಖೆಗೆ ವಹಿಸಬೇಕು ಎಂದ ಅವರು, ಈ ಪ್ರಕರಣದಲ್ಲಿ ಕಾಂಗ್ರೆಸ್ಗೆ ಪ್ರಚಾರ ಪಡೆಯುವ ಉದ್ದೇಶವೇ ಹೊರತು ಪಾರದರ್ಶಕ ತನಿಖೆ ನಡೆಸುವುದಲ್ಲ ಎಂದು ಹೇಳಿದರು.
|
5 |
+
ಎಸ್ಐಟಿಯು ನಿಷ್ಪಕ್ಷಪಾತವಾಗಿ ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ. ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಂ ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಂ ಆಗಿದೆ ಎಂದು ಆರೋಪಿಸಿದರು.ಹಾಸನದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ಅವರು ನೀಡಿದ ದೂರಿನ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ.
|
6 |
+
ಏ.21ರ ರಾತ್ರಿ ಅಶ್ಲೀಲ ವಿಡಿಯೋ ಬಿಡುಗಡೆಗೆ ಕ್ಷಣಗಣನೆ ಎಂದು ಪೋಸ್್ಟ ಹಾಕಿದ್ದ ವ್ಯಕ್ತಿಯ ಮೇಲೂ ಯಾವುದೇ ಕ್ರಮ ಕೈಗೊಂಡಿಲ್ಲ. ಪೆನ್ಡ್ರೈವ್ನ್ನು ಹಂಚಿಕೆ ಮಾಡಿದವರು ಯಾರು ಎಂದು ಪತ್ತೆಹಚ್ಚಿಲ್ಲ. ಕೇವಲ ಮಾಜಿ ಸಚಿವ ಎಚ್.ಡಿ.ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ಅವರ ಬಗ್ಗೆ ಮಾತ್ರ ಎಸ್ಐಟಿ ತನಿಖೆ ಮಾಡುತ್ತಿದೆ. ಇವರಿಬ್ಬರಿಗೆ ಲುಕೌಟ್ ನೋಟಿಸ್ ಹೊರಡಿಸಿದ್ದಾರೆ.
|
7 |
+
ಆದರೆ 25 ಸಾವಿರ ಪೆನ್ಡ್ರೈವ್ ಹಂಚಿಕೆ ಮಾಡಲಾಗಿದೆ ಎಂದು ವರದಿಯಾಗಿದೆ. ಹಂಚಿಕೆ ಮಾಡಿದವರ ಬಗ್ಗೆ ಲುಕೌಟ್ ನೋಟಿಸ್ ಎಸ್ಐಟಿ ಹೊರಡಿಸಿಲ್ಲ. ಪೆನ್ಡ್ರೈವ್ನಲ್ಲಿ ಹಿಂದೆ ಯಾರ್ಯಾರ ಪಾತ್ರವಿದೆ ಎಂಬ ಸತ್ಯಾಂಶ ಹೊರಬರಬೇಕೆಂದು ಆಗ್ರಹಿಸಿದರು.ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಮುಖ್ಯಮಂತ್ರಿಗೆ ಪತ್ರ ಬರೆದು, ಅಶ್ಲೀಲ ವಿಡಿಯೋ ಚಿತ್ರೀಕರಣದ ಮಾಡಿದ ಹಾಗೂ ಅದನ್ನು ಬಹಿರಂಗಗೊಳಿಸಿದವರನ್ನು ಪತ್ತೆಹಚ್ಚಬೇಕು ಹಾಗೂ ಪ್ರಭಾವಿ ರಾಜಕಾರಣಿಗಳು ಇದ್ದಾರೆ ಎಂದು ಉಲ್ಲೇಖಿಸಿದ್ದಾರೆ.
|
8 |
+
ಅದರಲ್ಲಿ ರೇವಣ್ಣ ಹೆಸರಾಗಲಿ, ಪ್��ಜ್ವಲ್ ರೇವಣ್ಣ ಅವರ ಹೆಸರಾಗಲಿ ಇಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್್ಸನಲ್ಲಿ ಪೋಸ್್ಟ ಮಾಡಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್ಡ್ರೈವ್ ಪ್ರಕರಣವನ್ನು ಎಸ್ಐಟಿಗೆ ವಹಿಸಿರುವುದಾಗಿ ಪೋಸ್್ಟ ಮಾಡಿದ್ದಾರೆ. ಇದು ಸಂಚು ನಡೆದಿರುವುದಕ್ಕೆ ನಿದರ್ಶನ ಎಂದು ಆರೋಪಿಸಿದರು.
|
9 |
+
ಸಂಭಾಷಣೆಯ ರೆಕಾರ್ಡ್ ಕೇಳಿಸಿದ ಕುಮಾರಸ್ವಾಮಿ:ಹಾಸನದ ಪೆನ್ಡ್ರೈವ್ ಕುರಿತಂತೆ ನಡೆದಿದೆ ಎನ್ನಲಾದ ಸಂಭಾಷಣೆಯೊಂದನ್ನು ಪತ್ರಿಕಾಗೋಷ್ಠಿಯಲ್ಲಿ ಕೇಳಿಸಿದರು. ಅದರಲ್ಲಿ 700 ಪೆನ್ಡ್ರೈವ್ಗಳನ್ನು ಆನಗೋಳದಲ್ಲಿ ಹಂಚಿಕೆ ಮಾಡಿರುವುದಾಗಿ ಸಂಭಾಷಣೆಯಲ್ಲಿ ವ್ಯಕ್ತವಾಗಿದೆ.
|
10 |
+
ಅಪಹರಣವಾಗಿದ್ದಾರೆ ಎನ್ನಲಾದ ಮಹಿಳೆ ಪತ್ತೆಯಾಗಿ ಎರಡು ದಿನವಾದರೂ ಇನ್ನೂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿಲ್ಲ. ಆ ಪೆನ್ಡ್ರೈವ್ ಸೋರಿಕೆ ಮಾಡಿದವರಿಗೆ ಯಾವ ನೋಟಿಸ್ ಕೊಟ್ಟಿದ್ದೀರಿ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಪ್ರಶ್ನಿಸಿದರು.ಈ ಘಟನೆಯ ನಂತರ ನಾನು ಲೋಕಸಭೆಗೆ ಹೋಗಬೇಕೋ ಅಥವಾ ಇಲ್ಲಿಯೇ ಉಳಿಯಬೇಕೋ ಎಂಬ ಚಿಂತನೆಯಲ್ಲಿದ್ದೇನೆ ಎಂದರು.
|
11 |
+
ಅಶ್ಲೀಲ ದೃಶ ನೋಡಿಲ್ಲ. ಅದರ ಬಗ್ಗೆ ಆಸಕ್ತಿ ಇಲ್ಲ ಇದೇ ಸಂದರ್ಭದಲ್ಲಿ ಅವರು ಹೇಳಿದರು.ಚುನಾವಣೆ ಮೇಲೆ ಪ್ರಭಾವವಿಲ್ಲ: ಪೆನ್ಡ್ರೈವ್ ಪ್ರಕರಣ ಲೋಕಸಭೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ವಿಚಾರ ಬಹಿರಂಗವಾದ ನಂತರ ಶಿವಮೊಗ್ಗ, ರಾಯಚೂರು, ಕೊಪ್ಪಳ, ಕಲಬುರಗಿಯಲ್ಲಿ ಮೈತ್ರಿ ಅಭ್ಯರ್ಥಿ ಪರವಾಗಿ ಪ್ರಚಾರದಲ್ಲಿ ಭಾಗಿಯಾಗಿದ್ದೆ. ಜನರು ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಮಾಧ್ಯಮಗಳಲ್ಲಿ ಮಾತ್ರ ವಿಜೃಂಭಿಸಲಾಗುತ್ತಿದೆ. ಇಂತಹ ಆರೋಪ ಹಲವರ ಮೇಲೂ ಕೇಳಿಬಂದಿತ್ತು. ಅವರೆಲ್ಲ ಚುನಾವಣೆಯಲ್ಲಿ ಗೆದ್ದಿದ್ದಾಎ ಎಂದರು.
|
12 |
+
ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಮೈತ್ರಿ ಮುಂದುವರಿಕೆ ಬಗ್ಗೆ ಏನು ತೀರ್ಮಾನ ಮಾಡುತ್ತಾರೋ ಗೊತ್ತಿಲ್ಲ. ಮುಂದುವರೆಸುತ್ತಾರೋ ಇಲ್ಲವೋ ಎಂಬ ಚಿಂತೆ ನನಗೂ ಇಲ್ಲ. ಪೆನ್ಡ್ರೈವ್ ಪ್ರಕರಣ ತಾರ್ಕಿಕ ಅಂತ್ಯವಾಗಬೇಕು ಎಂಬುದಷ್ಟೇ ಎಂದು ಹೇಳಿದರು.ವಿಧಾನಪರಿಷತ್ನ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೇ 16ರವರೆಗೆ ಅವಕಾಶವಿದೆ.
|
13 |
+
ದೀರ್ಘಾವಧಿ ಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲಾಗಿದೆ. ಬಿಜೆಪಿಯವರು ಯಾವ ತೀರ್ಮಾನ ಕೈಗೊಳ್ಳುತ್ತಾರೋ ಗೊತ್ತಿಲ್ಲ. ಗ್ಯಾರಂಟಿಯಿಂದ ಬೀಗುತ್ತಿದ್ದ ಕಾಂಗ್ರೆಸ್ಗೆ ಬಿಜೆಪಿ ಜೆಡಿಎಸ್ ಮೈತ್ರಿ ನಿದ್ದೆಗೆಡಿಸಿದೆ. ಚುನಾವಣಾ ಫಲಿತಾಂಶವು ಮುಂದಿನ ಅವರ ಭವಿಷ್ಯದ ಫಲಿತಾಂಶದ ತಳಮಳ ಶುರುವಾಗಿದೆ ಎಂದು ವ್ಯಂಗ್ಯವಾಡಿದರು.ಸುದಿಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ, ಮಾಜಿ ಸದಸ್ಯರಾದ ಚೌಡರೆಡ್ಡಿ, ರಮೇಶ್ ಗೌಡ, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಎ.ಪಿ.ರಂಗನಾಥ, ಪಕ್ಷದ ಮುಖಂಡ ಆರ್.ಪ್ರಕಾಶ್ ಮತ್ತಿತರರು ಉ��ಸ್ಥಿತರಿದ್ದರು.
|
eesanje/url_46_154_5.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಪೆನ್ಡ್ರೈವ್ ಪ್ರಕರಣದಲ್ಲಿ ವಿರೋಧ ಪಕ್ಷಗಳ ಹತಾಶೆ ಕಾಣುತ್ತಿದೆ : ಸಚಿವ ಮಧು ಬಂಗಾರಪ್ಪ
|
2 |
+
ಶಿವಮೊಗ್ಗ, ಮೇ 7-ಹಾಸನದ ಪೆನ್ಡ್ರೈವ್ ಪ್ರಕರಣದಲ್ಲಿ ವಿರೋಧ ಪಕ್ಷಗಳಲ್ಲಿ ಹತಾಶೆ ಕಂಡು ಬರುತ್ತಿದೆ. ಆರೋಪದಿಂದ ತಪ್ಪಿಸಿಕೊಳ್ಳಲು ಅನಗತ್ಯವಾದ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ಥರಿಗೆ ನಮ ಸರ್ಕಾರದಲ್ಲಿ ಖಂಡಿತಾ ನ್ಯಾಯ ಸಿಗಲಿದೆ. ಆ ಪ್ರಕರಣದಲ್ಲಿನ ಸತ್ಯಾಂಶಗಳನ್ನು ತಿರುಚುತ್ತಿರುವುದು ಖಂಡನೀಯ. ಯಾವುದೇ ಪ್ರಕರಣವಾದರೂ ಕಾನೂನು ಗೆಲ್ಲಬೇಕು, ನಮ ಸರ್ಕಾದಲ್ಲಿ ಕಾನೂನೇ ಗೆಲ್ಲಲಿದೆ. ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಲು ನನಗೂ ಆತುರ ಇದೆ. ಆದರೆ ಬಹಿರಂಗವಾಗಿ ಹೇಳುವುದಿಲ್ಲ, ನಮ್ಮ ಮುಖಂಡರ ಬಳಿ ಹಂಚಿಕೊಳ್ಳುತ್ತೇನೆ ಎಂದರು.
|
4 |
+
ದೇಶದಲ್ಲಿ ಸತ್ಯ ಮತ್ತು ಸುಳ್ಳಿನ ಮೇಲೆ ಚುನಾವಣೆ ನಡೆಯುತ್ತಿದೆ. ನಮ ಗ್ಯಾರಂಟಿಗಳು ಗೆಲ್ಲುತ್ತವೆ. ಭಾವನಾತಕ ರಾಜಕಾರಣವನ್ನು ಜನ ತಿರಸ್ಕರಿಸಿದ್ದಾರೆ. ಅಭಿವೃದ್ಧಿಯನ್ನು ಮರೆತು ಸುಳ್ಳು ಹೇಳುವುದಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದರು.
|
5 |
+
ದೇಶ ಸುರಕ್ಷಿತವಾಗಿರಬೇಕಾದರೆ ಮೋದಿ ಬೇಕು ಎಂಬ ಭಾವನೆ ಬಿತ್ತಲಾಗಿದೆ. 70 ವರ್ಷ ಕಾಂಗ್ರೆಸ್ ಆಡಳಿತದಲ್ಲಿ ಸುರಕ್ಷೆ ಇರಲಿಲ್ಲವೇ ? ಇವರೇನು ಬದುಕಿರಲಿಲ್ಲವೇ ಎಂದು ಸಾಮಾನ್ಯರೇ ತಿರುಗಿ ಪ್ರಶ್ನಿಸುತ್ತಾರೆ. ಬಿಜೆಪಿಯ ಮತದಾರರು ಕೂಡ ಈ ಬಾರಿ ರಾಜ್ಯ ಸರ್ಕಾರದ ಗ್ಯಾರಂಟಿಗಳಿಗಾಗಿ ಕಾಂಗ್ರೆಸ್ಗೆ ಮತ ನೀಡುತ್ತಿದ್ದಾರೆ.
|
6 |
+
ಸಾಮಾನ್ಯ ಜನ ಸಹಕಾರ ಬಯಸುತ್ತಾರೆ. ಸಹಕಾರ ಪಡೆದುಕೊಂಡವರು ಅದಕ್ಕೆ ಪ್ರತಿಯಾಗಿ ಮತ ಹಾಕುತ್ತಾರೆ. ಈ ಹಿಂದೆ ನಂಬಿಕೆ, ವಿಶ್ವಾಸದ ಮೇಲೆಯೇ ವಿಧಾನಸಭೆಯಲ್ಲಿ ಕಾಂಗ್ರೆಸ್ಗೆ ಅವಕಾಶ ಕೊಟ್ಟಿದ್ದರು. ಗ್ಯಾರಂಟಿ ಜಾರಿಯ ಬಳಿಕ ಅದರ ಪರಿಣಾಮ ಮತ್ತಷ್ಟು ಹೆಚ್ಚಾಗಿದೆ ಎಂದರು.
|
7 |
+
ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವಕುಮಾರ್ ಪರವಾಗಿ ಜಿಲ್ಲೆಯ ಎಲ್ಲಾ ಮುಖಂಡರು ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ. ಉತ್ತಮ ಫಲಿತಾಂಶ ಬರುವ ನಿರೀಕ್ಷೆ ಇದೆ. ಎಲ್ಲಾ ಚುನಾವಣೆಯಲ್ಲೂ ವೈಯಕ್ತಿಕ ಆರೋಪಗಳು ಸಾಮಾನ್ಯ, ಆದರೆ ಅದಕ್ಕೆ ಇತಿಮಿತಿ ಅಗತ್ಯ ಎಂದು ಕುಮಾರ ಬಂಗಾರಪ್ಪ ಅವರ ಟೀಕೆಗೆ ಪ್ರತಿಕ್ರಿಯಿಸಿದರು.
|
eesanje/url_46_154_6.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಮೂರು ತಲೆಮಾರಿನ ಮಹಿಳೆಯರ ಮತದಾನ
|
2 |
+
ಹುಬ್ಬಳ್ಳಿ, ಮೇ 7-ಮೂರು ತಲೆಮಾರಿನ ಮಹಿಳೆಯರು ನಗರದಲ್ಲಿ ಒಂದೇ ಬಾರಿ ಮತದಾನ ಮಾಡಿ ದಾಖಲೆ ಬರೆದರು. ತಾಯಿ, ಮಗಳು, ಅಜ್ಜಿ ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆಯಲ್ಲಿ ಒಂದೇ ಸಮಯದಲ್ಲಿ ಮತ ಚಲಾಯಿಸಿದ್ದು ವಿಶೇಷವಾಗಿತ್ತು.
|
3 |
+
ಇನ್ನು ಇವರು ಎಲ್ಲಾ ಚುನಾವಣೆಗಳಲ್ಲಿ ಮೊದಲ ಮತದಾನ ಮಾಡುವ ಕುಟುಂಬವಾಗಿದೆ. ಸದ್ಯ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಯುವತಿ ತಪಸ್ಯಾ ಪ್ರಭು, ಪ್ರತಿಬಾರಿ ಲ್ಯಾಮಿಂಗ್ಟನ್ ಶಾಲೆಯ ಬೂತ್ನಲ್ಲಿ ಫರ್ಸ್ಟ್ ಓಟ್ ಹಾಕುವ ಶಿಕ್ಷಕಿ ಸೌಮ್ಯ ಪ್ರಭು ಹಾಗೂ ಅಜ್ಜಿ ರಜನಿ ಪ್ರಭು ಜೊತೆ ಆಗಮಿಸಿ ಮತ ಚಲಾಯಿಸಿದರು. ಬಳಿಕ ಮತದಾನ ಪ್ರಜಾಪ್ರಭುತ್ವದ ಹಬ್ಬವಾಗಿದ್ದು ಸಂಭ್ರಮದಿಂದ ಆಚರಿಸಬೇಕು ಎಂದು ಕರೆ ಕೊಟ್ಟರು.
|
4 |
+
ಮತದಾನ ಚುರುಕು: ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಲ್ಯಾಮಿಂಗ್ಟನ್ ಶಾಲೆಯ ಮತಗಟ್ಟೆಯಲ್ಲಿ ಅತ್ಯಂತ ಉತ್ಸುಕತೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ನಡೆಯುತ್ತಿದೆ. ಈ ವೇಳೆ ಹಿರಿಯ ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿರುವ ದೃಶ್ಯಗಳು ಕಂಡುಬಂದವು.
|
eesanje/url_46_154_7.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಪ್ರಜ್ವಲ್ ರೇವಣ್ಣ ಇಂದು ರಾತ್ರಿ ಅಥವಾ ನಾಳೆ ಬೆಂಗಳೂರಿಗೆ ಬರುವ ನಿರೀಕ್ಷೆ
|
2 |
+
ಬೆಂಗಳೂರು, ಮೇ.7-ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ಇಂದು ರಾತ್ರಿ ಅಥವಾ ನಾಳೆ ಬೆಳಗ್ಗೆ ನಗರಕ್ಕೆ ಬರುವ ನಿರೀಕ್ಷೆಯಿದೆ. ಮೊದಲ ಹಂತದ ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಮುಗಿದ ನಂತರ ಪ್ರಜ್ವಲ್ ರೇವಣ್ಣ ಅವರು ಜರ್ಮನಿಗೆ ತೆರಳಿದ್ದರು.
|
3 |
+
ಹೊಳೆನರಸೀಪುರ ನಗರ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆಯನ್ನು ಸರ್ಕಾರ ಎಸ್ಐಟಿ ವಹಿಸಿದೆ. ಎಸ್ಐಟಿ ಅಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಂಡ ರಚಿಸಿಕೊಂಡು ತನಿಖೆ ಕೈಗೊಂಡು ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ಗೆ ನೋಟಿಸ್ ನೀಡಿದ್ದರು.
|
4 |
+
ಪ್ರಜ್ವಲ್ ಪರ ವಕೀಲರು ವಿಚಾರಣೆಗೆ ಕಾಲಾವಕಾಶ ನೀಡುವಂತೆ ಕೋರಿದ್ದರೂ ಎಸ್ಐಟಿ ಅವಕಾಶ ನೀಡಲಿಲ್ಲ. ನಂತರದಲ್ಲಿ ಲುಕ್ಔಟ್ ನೋಟಿಸ್ ನೀಡಿ, ಪ್ರಜ್ವಲ್ ಎಲ್ಲಿದ್ದಾರೆಂಬ ಬಗ್ಗೆ ಪತ್ತೆಕಾರ್ಯ ಮುಂದುವರೆಸಿದ್ದರು.
|
5 |
+
ಈ ನಡುವೆ ಬ್ಲೂ ಕಾರ್ನರ್ ನೋಟಿಸ್ ಸಹ ಪ್ರಜ್ವಲ್ ವಿರುದ್ಧ ಜಾರಿ ಮಾಡಿದ್ದರು.ಎಸ್ಐಟಿ ಪ್ರಜ್ವಲ್ ಬಂಧನಕ್ಕೆ ಸಜ್ಜಾಗಿದ್ದು, ಅವರು ನಗರಕ್ಕೆ ಬರುತ್ತಿದ್ದಂತೆ ಬಂಧಿಸಲಿದ್ದಾರೆ.ಪ್ರಜ್ವಲ್ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿದ್ದು, ಹೊಳೆನರಸೀಪುರ ನಗರ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾದರೆ, ಸಿಐಡಿಯಲ್ಲಿ ಮಹಿಳೆಯೊಬ್ಬರು ಅತ್ಯಾಚಾರ ದೂರು ನೀಡಿದ್ದಾರೆ.
|
eesanje/url_46_154_8.txt
ADDED
@@ -0,0 +1,15 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿಯವರೇ ಪೆನ್ಡ್ರೈವ್ ಬಿಡುಗಡೆ ಮಾಡಿಸಿದ್ದಾರೆ, ಇದರಲ್ಲಿ ಡಿಕೆಶಿ ಕೈವಾಡ ಇಲ್ಲ : ಶಿವರಾಮೇಗೌಡ
|
2 |
+
ಬೆಂಗಳೂರು, ಮೇ 7-ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಪೆನ್ಡ್ರೈವ್ ಬಿಡುಗಡೆ ಬಿಡುಗಡೆಯ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕೈವಾಡ ಇಲ್ಲ. ಬಿಜೆಪಿಯ ನಾಯಕರ ಒತ್ತಡದಿಂದ ವಿಡಿಯೋಗಳನ್ನು ತಾನೇ ಬಹಿರಂಗ ಪಡಿಸಿದ್ದಾಗಿ ವಕೀಲ ದೇವರಾಜೇಗೌಡ ತಮ್ಮ ಬಳಿ ಹೇಳಿಕೊಂಡಿದ್ದರು ಎಂದು ಮಾಜಿ ಸಚಿವ ಎಲ್.ಆರ್.ಶಿವರಾಮೇಗೌಡ ಸ್ಪಷ್ಟ ಪಡಿಸಿದ್ದಾರೆ.
|
3 |
+
ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ದೇವರಾಜಗೌಡ ಹಾಗೂ ತಮ ನಡುವಿನ ಭೇಟಿ ಹಾಗೂ ಅನಂತರದ ಬೆಳವಣಿಗೆಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದ್ದಾರೆ. ಜೊತೆಗೆ ತಮ ಹಾಗೂ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಕೇಳಿ ಬಂದಿರುವ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.
|
4 |
+
ಪೆನ್ಡ್ರೈವ್ ಬಹಿರಂಗದ ಹಿಂದೆ ಡಿ.ಕೆ.ಶಿವಕುಮಾರ್ ಅವರ ಹಸ್ತಕ್ಷೇಪವಿದೆ. ಎಲ್.ಆರ್.ಶಿವರಾಮೇಗೌಡ ಅವರ ಮುಖಾಂತರ ತಮನ್ನು ಸಂಪರ್ಕಿಸಿದ್ದ ಡಿ.ಕೆ.ಶಿವಕುಮಾರ್ ಸಂಪುಟ ದರ್ಜೆಯ ಸ್ಥಾನಮಾನ ನೀಡುವ ಆಮಿಶ ತೊರಿಸಿದ್ದರು ಎಂದು ಬಿಜೆಪಿ ನಾಯಕರು ಆಗಿರುವ ದೇವರಾಜೇಗೌಡ ನಿನ್ನೆ ತುರ್ತು ಸುದ್ದಿಗೋಷ್ಟಿಯಲ್ಲಿ ಆರೋಪಿಸಿದ್ದರು.
|
5 |
+
ಇದಕ್ಕೆ ಸ್ಪಷ್ಟನೆ ನೀಡಿರುವ ಎಲ್.ಆರ್.ಶಿವರಾಮೇಗೌಡ, ತಾವು ಮತ್ತು ದೇವರಾಜೇಗೌಡ ಬಿಜೆಪಿಯಲ್ಲಿದ್ದೇವು. ಅವರು ಹೊಳೆನರಸೀಪುರದ ಅಭ್ಯರ್ಥಿ ಎಂಬ ಕಾರಣಕ್ಕೆ ಸಿಕ್ಕಾಗ ಹಾಯ್ ಬಾಯ್ ಹೇಳುತ್ತಿದ್ದೆ. ನಾಲ್ಕು ದಿನಗಳ ಹಿಂದಷ್ಟೆ ಅವರ ಜೊತೆ ಮಾತನಾಡಿದ್ದು ಬಿಟ್ಟರೆ, ಅದಕ್ಕೂ ಮೊದಲು ಹೆಚ್ಚಿನ ಪರಿಚಯ ಇರಲಿಲ್ಲ ಎಂದರು.
|
6 |
+
ತಮ್ಮ ಮನೆಯಲ್ಲಿ ಎಂದಿನಂತೆ ಜನರನ್ನು ಭೇಟಿ ಮಾಡುವ ವೇಳೆ ಹೊಳೆನರಸೀಪುರದವರು ಬಂದಿದ್ದರು. ಅವರು ನಮ್ಮ ದೇವರಾಜೇಗೌಡರು ನಿಮ್ಮನ್ನು ಕೇಳುತ್ತಿದ್ದರು ಎಂದು ಹೇಳಿದರು. ವಿಡಿಯೋ ಬಹಿರಂಗದ ಬಗ್ಗೆ ನನಗೂ ಕುತೂಹಲ ಇತ್ತು. ಹಾಗಾಗಿ ಕರೆ ಮಾಡಿಕೊಡುವಂತೆ ಹೊಳೆನರಸೀಪುರದವರ ಬಳಿ ಹೇಳಿದ್ದೆ. ಫೋನ್ನಲ್ಲಿ ಸಂಪರ್ಕಕ್ಕೆ ಸಿಕ್ಕ ದೇವರಾಜೇಗೌಡರಿಗೆ ನಿಮ್ಮ ಆಸೆ ಈಡೇರಿತ್ತಲ್ಲ, ಎರಡು ವರ್ಷದ ನಿಮ್ಮ ಹೋರಾಟ ಯಶಸ್ವಿಯಾಯಿತಲ್ಲ. ಕೊನೆಗೂ ಹೋರಾಟವನ್ನು ಒಂದು ಹಂತಕ್ಕೆ ತಂದು ಬಿಟ್ಟಿರಿ ಎಂದು ನಾನು ಹೇಳಿದ್ದೆ.
|
7 |
+
ಆಗ ನಾನು ತುಂಬ ಕಷ್ಟದಲ್ಲಿದ್ದೇನೆ. ನಿಮನ್ನು ಭೇಟಿ ಮಾಡಬೇಕು ಎಂದು ದೇವರಾಜ್ಗೌಡ ಕೇಳಿಕೊಂಡರು. ನಾನು ಬ್ಯೂಸಿ ಇದ್ದೇನೆ, ಸದ್ಯಕ್ಕೆ ಭೇಟಿ ಸಾಧ್ಯವಿಲ್ಲ ಎಂದು ಹೇಳಿದ್ದೆ. ನಾನು ಪ್ರಮೀಳಾ ನೇಸರ್ಗಿ ಅವರ ಕಚೇರಿಯಲ್ಲಿ ಕಿರಿಯ ವಕೀಲನಾಗಿ ಕೆಲಸ ಮಾಡುತ್ತಿದ್ದೇನೆ ಎಂದು ದೇವರಾಜೇಗೌಡ ಹೇಳಿದರು. ಪ್ರಮೀಳಾ ಮೇಡಂ ತಮಗೆ ಹಳೇ ವಕೀಲರು, ಇವತ್ತು ಮೂರು ಗಂಟೆಗೆ ಎಂ.ಜಿ.ರಸ್ತೆ ಬರುತ್ತೇನೆ, ಅಲ್ಲಿಗೆ ಬಾ ಸಿಗುತ್ತೇನೆ ಎಂದು ನಾನು ಹೇಳಿದ್ದೆ. ಅದರಂತೆ ನಾವು ಎಂ.ಜಿ.ರಸ್ತೆಯಲ್ಲಿ ಭೇಟಿಯಾದವು ಎಂದು ವಿವರಿಸಿದ್ದಾರೆ.
|
8 |
+
ಆ ವೇಳೆ ದೇವರಾಜೇಗೌಡ ತಮ್ಮ ಕಷ್ಟಗಳನ್ನು ಹೇಳಿಕೊಂಡರು. ಬಿಜೆಪಿಯ ಎಲ್ಲಾ ಮುಖಂಡರು ವಿಡಿಯೋ ಬಹಿರಂಗ ಪಡಿಸುವಂತೆ ಬಲವಂತ ಮಾಡಿದ್ದರು. ಅದಕ್ಕಾಗಿ ನಾನೇ ಬಿಡುಗಡೆ ಮಾಡಿದ್ದೆ. ಅದಕ್ಕೆ ಕುಮಾರಸ್ವಾಮಿಯವರ ಒಪ್ಪಿಗೆಯೂ ಇತ್ತು ಎಂದು ದೇವರಾಜೇಗೌಡ ನನ್ನ ಬಳಿ ಹೇಳಿಕೊಂಡರು. ನಾನು ವಿಡಿಯೋ ಬಿಡುಗಡೆ ಮಾಡಿದ ಮೇಲೆ ಸಾಕಷ್ಟು ಬೆಳವಣಿಗೆಯಾಗಿದೆ.
|
9 |
+
ವ್ಯಾಪಕ ಚರ್ಚೆಯಾಗುತ್ತಿದೆ. ಒಮೆ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿಸಿ ಎಂದು ಅವರು ಕೇಳಿಕೊಂಡರು. ದೇವರಾಜಗೌಡ ಕೂಡ ಯುವ ಕಾಂಗ್ರೆಸ್ನಲ್ಲಿದ್ದರಂತೆ, ಆಗ ಡಿ.ಕೆ.ಶಿವಕುಮಾರ್ ಬೆಂಬಲ ನೀಡಲಿಲ್ಲ ಎಂಬ ಆಕ್ಷೇಪವನ್ನು ವ್ಯಕ್ತ ಪಡಿಸಿದ್ದರು. ಆಗಿದ್ದು ಆಗಿ ಹೋಯಿತು ಬಿಡಿ ಎಂದು ನಾನು ಸಮಾಧಾನ ಮಾಡಿದ್ದೆ. ನಮ ಮಾತುಕತೆ ವೇಳೆಗೆ ಡಿ.ಕೆ.ಶಿವಕುಮಾರ್ ಬೇರೆ ಊರಿನ ಪ್ರವಾಸದಲ್ಲಿದ್ದರು. ದೇವರಾಜೇಗೌಡ ರಾತ್ರಿ ಏಳು ಗಂಟೆಯವರೆಗೂ ತಮ ಜೊತೆಯಲ್ಲಿ ತಿಂಡಿ ತಿಂದುಕೊಂಡು ತಿರುಗಾಡಿಕೊಂಡಿದ್ದರು. ಆ ಬಳಿಕ ಹೋದರು. ಆ ಕ್ಷಣದಲ್ಲಿ ಅವರ ಚಟುವಟಿಕೆ ನೋಡಿದರೆ ಪ್ರಜ್ವಲ್ ರೇವಣ್ಣನಿಗಿಂತ ದೊಡ್ಡ ಮನೋರೋಗಿ ಎನಿಸಿತ್ತು ಎಂದು ದೂರಿದ್ದರು.
|
10 |
+
ತಮ ಮೊಬೈಲ್ ಅನ್ನು ಗುಪ್ತಚರ ಇಲಾಖೆಯವರು ಟಾಪ್ ಮಾಡುತ್ತಿದ್ದಾರೆ ಎಂದು ಆತ ವಾಕಿಟಾಕಿ ಬಳಸುತ್ತಿದ್ದಾರೆ. ಹೋರಾಟ ಮಾಡುವ ನೀನು ಹುಷಾರು ಎಂದು ನಾನು ಕಾಳಜಿಯಿಂದ ಹೇಳಿದ್ದೆ. ರಾತ್ರಿ 11ಗಂಟೆಗೆ ಎಂದಿನಂತೆ ನಾನು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಲು ಹೋಗಿದ್ದೆ. ಆರಂಭದಲ್ಲಿ ದೇವರಾಜೇಗೌಡ ನಿಮ ಬಳಿ ಮಾತನಾಡಬೇಕಂತೆ ಮಾತನಾಡುತ್ತೀರಾ ಎಂದು ಡಿ.ಕೆ.ಶಿವಕುಮಾರ್ ಅವರನ್ನು ಕೇಳಿದೆ.
|
11 |
+
ಅವರು ಬೇಡ ಎಂದರು, ನಾನೇಕೆ ಅವರ ಜೊತೆ ಮಾತನಾಡಬೇಕು ಎಂದು ಅವರು ಹೇಳಿದರು. ನಾನೇ ಬಲವಂತ ಮಾಡಿ ಒಪ್ಪಿಸಿದೆ. ಸರಿ ಕರೆ ಮಾಡಿಕೊಡಿ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಆ ವೇಳೆಗೆ ದೇವರಾಜೇಗೌಡ ದೂರದಲ್ಲಿದ್ದೇನೆ ಬರಲು ತಡವಾಗುತ್ತದೆ ಎಂದು ಹೇಳಿದ್ದರು. ಫೋನ್ನಲ್ಲೇ ಮಾತನಾಡಿ ಎಂದು ಡಿ.ಕೆ.ಶಿವಕುಮಾರ್ ಕೈಗೆ ಫೋನ್ ಕೊಟ್ಟೆ. ಡಿ.ಕೆ.ಶಿವಕುಮಾರ್ ಬಳಿಯೂ ದೇವರಾಜ್ಗೌಡ ಫೋನ್ನಲ್ಲಿ ಎರಡು ಮೂರು ಮಂದಿ ಸಂತ್ರಸ್ಥರ ಬಗ್ಗೆ ವಿವರಣೆ ನೀಡುತ್ತಿದ್ದರು.
|
12 |
+
ಅದನ್ನೇಲ್ಲಾ ಕೇಳಲು ನಿರಾಕರಿಸಿದ ಡಿ.ಕೆ.ಶಿವಕುಮಾರ್ ಎಸ್ಐಟಿ ರಚನೆ ಮಾಡಿದ್ದೇವೆ. ಏನೇ ಇದ್ದರೂ ತನಿಖಾಧಿಕಾರಿಗಳ ಮುಂದೆ ಹೇಳಿ ಎಂದು ಫೋನ್ ಕಟ್ ಮಾಡಿದ್ದರು ಎಂದು ಶಿವರಾಮೇಗೌಡ ವಿವರಿಸಿದ್ದಾರೆ.
|
13 |
+
ಡಿ.ಕೆ.ಶಿವಕುಮಾರ್ಗೂ ಇದಕ್ಕೂ ಸಂಬಂಧ ಇಲ್ಲ, ದೇವರಾಜೇಗೌಡನನ್ನೂ ಕರೆದುಕೊಂಡು ಬಾ ಎಂದು ನನ್ನ ಬಳಿ ಅವರು ಹೇಳಿರಲಿಲ್ಲ. ಇಷ್ಟು ಕೆಳಮಟ್ಟದಲ್ಲಿ ರಾಜಕಾರಣ ಮಾಡುತ್ತಾರೆ ಎಂದು ನನಗೆ ಗೊತ್ತಿರಲಿಲ್ಲ. ಡಿ.ಕೆ.ಶಿವಕುಮಾರ್ ಮಾತನಾಡಿರುವ ಆಡಿಯೋ ಇದ್ದರೆ ಪೂರ್ತಿ ಬಹಿರಂಗ ಮಾಡಲಿ. ರಾಜಕೀಯಕ್ಕಾಗಿ ಸ್ಟಂಟ್ ಮಾಡುವುದು ಬೇಡ ಎಂದು ಶಿವರಾಮೇಗೌಡ ಸವಾಲು ಹಾಕಿದರು.
|
14 |
+
ಡಿ.ಕೆ.ಶಿವಕುಮಾರ್ ಮಾತನಾಡಿರುವ ಕಾಲ್ ಅನ್ನು ದೇವರಾಜೇಗೌಡ ರೆಕಾರ್ಡ್ ಮಾಡಿಕೊಳ್ಳುವುದು ನನಗೆ ಗೊತ್ತಿರಲಿಲ್ಲ. ವಕೀಲ ಎಂಬ ಗೌರವದಿಂದ ನಾನು ಮಾತನಾಡಿದ್ದೆ, ಈ ರೀತಿ ಮಾಡುತ್ತಾರೆ ಎಂಬ ಮಾಹಿತಿ ಇದಿದ್ದರೆ ಹತ್ತಿರಕ್ಕೂ ಸೇರಿಸಿಕೊಳ್ಳುತ್ತಿರಲಿಲ್ಲ ಎಂದು ಅಸಮಧಾನ ವ್ಯಕ್ತ ಪಡಿಸಿದರು.
|
15 |
+
ಹಾಸನದ ಪ್ರಕರಣ ವಿಶ್ವದಲ್ಲೇ ದೊಡ್ಡ ಹಗರಣ, ಅದರ ವಿರುದ್ಧ ದೇವರಾಜೇಗೌಡ ಎರಡು ವರ್ಷದಿಂದ ಹೋರಾಟ ನಡೆಸುತ್ತಿದ್ದಾರೆ, ವಿಡಿಯೋ ಬಿಡುಗಡೆ ಮಾಡುತ್ತೇನೆ ಎಂದು ಹೇಳುತ್ತಿದ್ದರು. ಈಗ ಬೇರೆಯವರ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಕಿಡಿಕಾರಿದರು.
|
eesanje/url_46_154_9.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಕಲಿತವರು, ತಿಳಿದವರೇ ಮತದಾನಕ್ಕೆ ಹಿಂದೇಟು ಹಾಕುತ್ತಿದ್ದಾರೆ : ಹೊರಟ್ಟಿ
|
2 |
+
ಹುಬ್ಬಳ್ಳಿ, ಮೇ 7-ಪ್ರಜಾಪ್ರಭುತ್ವದಲ್ಲಿ ಕಲಿತವರು, ತಿಳಿದವರೇ ಕಡ್ಡಾಯ ಮತದಾನ ಮಾಡುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಈ ಬಗ್ಗೆ ಕೇಂದ್ರ ಚುನಾವಣೆ ಆಯೋಗ ಮುಂದಾಗಬೇಕೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.
|
3 |
+
ನಗರದ ಲ್ಯಾಮಿಂಗ್ಟನ್ ರಸ್ತೆಯಲ್ಲಿನ ಮತಗಟ್ಟೆ ಸಂಖ್ಯೆ 119ಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ ಅವರು ಮತದಾನ ಮಾಡಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತವನ್ನು ಚಲಾವಣೆ ಮಾಡಿದ್ದೇನೆ. ಆದರೆ ಬಹಳಷ್ಟು ಜನರು ಮತದಾನ ಮಾಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
|
4 |
+
ಈ ಚುನಾವಣೆ ಕೇವಲ ಟೀಕೆ ಟಿಪ್ಪಣಿಗಳಿಗೆ ಸೀಮಿತವಾಗಿದೆ. ಜನರ ಸಮಸ್ಯೆಗಳ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಅಸಮಾಧಾನಗೊಂಡರು.
|
eesanje/url_46_155_1.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ದೇವರಾಜೇಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸುತ್ತೇನೆ : ಶ್ರೇಯಸ್ ಪಟೇಲ್
|
2 |
+
ಹಾಸನ, ಮೇ 7-ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನಮ್ಮ ಮೇಲೆ ಹಾಗೂ ನಮ್ಮ ನಾಯಕರು ಮೇಲೆ ಸುಳ್ಳಿನ ಮಳೆ ಸುರಿಸುತ್ತಿದ್ದಾರೆ ಎಂದು ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ದೇವರಾಜೇಗೌಡ ಅವರು ಹೇಳಿರುವುದು ಶುದ್ದಸುಳ್ಳು. ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದರು.
|
3 |
+
ನಾನು ಯಾರನ್ನು ಭೇಟಿ ಮಾಡಿಲ್ಲ. ಒಂದು ವೇಳೆ ನಾನು ಭೇಟಿ ಮಾಡಿದ್ದೇನೆ ಎಂಬ ಸಂಶಯವಿದ್ದರೆ, ಸ್ಕೈಬರ್ಡ್ ಹೋಟೆಲ್ನಲ್ಲಿ ಸಿಸಿಟಿವಿ ವಿಡಿಯೋ ಇದೆ ಪರಿಶೀಲನೆ ನಡೆಸಲಿ ಎಂದು ಕಿಡಿಕಾರಿದರು.ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಪೆನ್ಡ್ರೈವ್ ಪ್ರಕರಣದ ಬಗ್ಗೆ ಹಾಸನ, ಹೊಳೆನರಸೀಪುರದಲ್ಲಿ ಬಹಿರಂಗವಾಗಿ ಚರ್ಚೆಗೆ ಬರಲಿ. ಅದರಲ್ಲಿ ನನ್ನ ಪಾತ್ರ ಇದೆ ಎಂದು ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದರು.
|
4 |
+
ದೇವರಾಜೇಗೌಡ ಅವರು ಎಸ್ಐಟಿ ತನಿಖೆ ದಿಕ್ಕು ತಪ್ಪಿಸುತ್ತಿದ್ದಾರೆ. ಅವರು ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಯಾವ ಪಕ್ಷದಲ್ಲಿ ಇದ್ದಾರೆ. ಈ ಪ್ರಕರಣ ಸರಿಯಾಗಿ ತನಿಖೆ ನಡೆಯಬೇಕು.ದೇವರಾಜೇ ಗೌಡ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸುತ್ತೇನೆ. ಈಗಾಗಲೇ ವಕೀಲರ ಜೊತೆ ಮಾತನಾಡಿದ್ದೇನೆ. ನಾನು ಯಾವುದೇ ಕಳಂಕ ಬರುವ ಕೆಲಸ ಮಾಡಿಲ್ಲ. ದೇವರಾಜೇಗೌಡ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ.
|
5 |
+
ಪೆನ್ಡ್ರೈವ್ ವಿಚಾರ ಮಾತನಾಡಲು ಅಸಹ್ಯ ಆಗುತ್ತೆ, ನಾನು ಸುಸಂಸ್ಕೃತ ಕುಟುಂಬದಿಂದ ಬಂದವನು. ಅಕ್ಕ-ತಂಗಿಯರ ಜೊತೆ ಬೆಳೆದವನು. ಈ ಕೊಚ್ಚೆ ರಾಜಕಾರಣಕ್ಕೆ ದೇವರಾಜೇಗೌಡ ಕಾರಣ. ಎಸ್ಐಟಿ ದಿಕ್ಕು ತಪ್ಪಿಸಲು ಈ ರೀತಿ ಮಾತನಾಡುತ್ತಿದ್ದಾರೆ ಎಂದು ಹೇಳಿದರು.
|
eesanje/url_46_155_10.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
108 ಆ್ಯಂಬುಲೆನ್ಸ್ ಚಾಲಕರಿಗೆ ವೇತನ ನೀಡಿದ ಸರ್ಕಾರಕ್ಕೆ ಕುಟುಕಿದ ಜೆಡಿಎಸ್
|
2 |
+
ಬೆಂಗಳೂರು,ಮೇ 6-ರಾಜ್ಯದ 108 ಆ್ಯಂಬುಲೆನ್ಸ್ ನಲ್ಲಿ ಕಾರ್ಯ ನಿರ್ವಹಿಸುವ ಚಾಲಕರಿಗೆ ವೇತನ ಕೊಡಿಸುವಂತೆ ಜೆಡಿಎಸ್ ಆಗ್ರಹಿಸಿದೆ. ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಬಾಗಲಕೋಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಷಣ ಮಾಡುತ್ತಾ ರಾಜ್ಯದ ಒಬ್ಬನೇ ಒಬ್ಬ ಸರ್ಕಾರಿ ನೌಕರ ನನ್ನ ಬಳಿ ಬಂದು ಸಂಬಳ ಪಾವತಿಯಾಗಿಲ್ಲ ಎಂದು ಹೇಳಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಗುಡುಗಿದ್ದರು ಎಂದಿದೆ.
|
3 |
+
ಸಿದ್ದರಾಮಯ್ಯ ಅವರೇ ನೀವು ರಾಜೀನಾಮೆ ನೀಡುವುದು ಯಾವಾಗ? ಕುರ್ಚಿ ಬಿಡುವ ಮೊದಲು ಆ್ಯಂಬುಲೆನ್ಸ್ ಚಾಲಕರಿಗೆ ವೇತನ ಕೊಡಿಸಿ ಎಂದು ಆಗ್ರಹಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಜನರಿಗಿಂತ ಜನಪ್ರಿಯತೆಯ ವ್ಯಸನವೇ ಹೆಚ್ಚು. ಬರ ನಿರ್ವಹಣೆಗಿಂತ ಬೇಜವಾಬ್ದಾರಿಯೇ ಜಾಸ್ತಿ ಎಂದು ಟೀಕಿಸಿದೆ.
|
4 |
+
•ರಾಜ್ಯ@INCKarnatakaಸರಕಾರಕ್ಕೆ ಜನರಿಗಿಂತ ಜನಪ್ರಿಯತೆಯ ವ್ಯಸನವೇ ಹೆಚ್ಚು. ಬರ ನಿರ್ವಹಣೆಗಿಂತ ಬೇಜವಾಬ್ದಾರಿಯೇ ಜಾಸ್ತಿ. ಗ್ಯಾರಂಟಿ ಕೊಟ್ಟು ಜನರ ಬದುಕು ಹಸನು ಮಾಡಿದ್ದೇವೆನ್ನುವ ಇವರಿಗೆ 108 ಆಂಬುಲೆನ್ಸ್ ಚಾಲಕರಿಗೆ ಸಂಬಳ ಕೊಡಲಿಕ್ಕೂ ಹಣವಿಲ್ಲ! ತಮ್ಮ ಜೀವ ಪಣಕ್ಕಿಟ್ಟು ಜನರ ಜೀವ ರಕ್ಷಿಸುವ ಈ ಚಾಲಕರಿಗೆ ಸಂಬಳದ ಗ್ಯಾರಂಟಿ ಕೊಡಲು…../
|
5 |
+
ಗ್ಯಾರಂಟಿ ಕೊಟ್ಟು ಜನರ ಬದುಕು ಹಸನು ಮಾಡಿದ್ದೇವೆ ಎನ್ನುವ ಇವರಿಗೆ 108 ಆ್ಯಂಬುಲೆನ್್ಸ ಚಾಲಕರಿಗೆ ಸಂಬಳ ಕೊಡಲಿಕ್ಕೂ ಹಣವಿಲ್ಲ. ತಮ್ಮ ಜೀವ ಪಣಕ್ಕಿಟ್ಟು ಜನರ ಜೀವ ರಕ್ಷಿಸುವ ಈ ಚಾಲಕರಿಗೆ ಸಂಬಳದ ಗ್ಯಾರಂಟಿ ಕೊಡಲು ಸಾಧ್ಯವಾಗಿಲ್ಲ. ಮೂರು ತಿಂಗಳಿನಿಂದ ಅವರಿಗೆ ವೇತನ ಪಾವತಿ ಮಾಡಿಲ್ಲ ಎಂದರೆ ನಾಚಿಕೆಗೇಡು ಎಂದು ವಾಗ್ದಾಳಿ ನಡೆಸಿದೆ.
|
eesanje/url_46_155_11.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗೆ ಕಂಟ್ರೋಲ್ ರೂಂ ಸ್ಥಾಪನೆ
|
2 |
+
ಬೆಂಗಳೂರು,ಮೇ 6-ವಿಧಾನಪರಿಷತ್ನ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾರರು, ಸಾರ್ವಜನಿಕರು, ಸಂಘ ಸಂಸ್ಥೆಗಳು ತಮ್ಮ ದೂರು, ಕುಂದು ಕೊರತೆಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ದೂರು ನಿವಾರಣಾ ಕೇಂದ್ರವನ್ನು ತೆರೆಯಲಾಗಿದೆ.
|
3 |
+
ಸಹಾಯವಾಣಿ ಸಂಖ್ಯೆ 080 – 22211106 ಅಥವಾ ಇ-ಮೇಲ್ .@. ಮೂಲಕ ಸಲ್ಲಿಸಬಹುದಾಗಿದೆ. ಅಲ್ಲದೆ ಸಾಮಾಜಿಕ ಜಾಲಾತಣಾಗಳಾದ , , , ನಲ್ಲೂ ದೂರು ಸಲ್ಲಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿ ಕಾರಿಗಳ ಪ್ರಕಟಣೆ ತಿಳಿಸಿದೆ.
|
4 |
+
ನಗರ ಜಿಲ್ಲಾ ವ್ಯಾಪ್ತಿಯ ಯಲಹಂಕ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹದೇವಪುರ, ಬೆಂಗಳೂರು ದಕ್ಷಿಣ, ಆನೆಕಲ್ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ ಸಾರ್ವಜನಿಕರು ದೂರು ಮತ್ತು ಕುಂದುಕೊರತೆಗಳನ್ನು ನಿವಾರಿಸಿಕೊಳ್ಳಲು ನಗರದ ಕೆ.ಜಿ.ರಸ್ತೆಯಲ್ಲಿರುವ ಜಿಲ್ಲಾಧಿ ಕಾರಿಗಳ ಕಚೇರಿ ಆವರಣದ ರಾಜ್ಯ ಕಂದಾಯ ಇಲಾಖಾ ನೌಕರರ ಸಂಘದ ಕಟ್ಟಡದ 2ನೇ ಮಹಡಿಯಲ್ಲಿ ಕಾರ್ಯ ನಿರ್ವಹಿಸುವ ಕಂಟ್ರೋಲ್ ರೂಂ ಅನ್ನು ಸಂಪರ್ಕಿಸಬಹುದಾಗಿದೆ.
|
eesanje/url_46_155_12.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ರೇವಣ್ಣ ಪ್ರಕರಣ : ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಎಸ್ಐಟಿ ತಂಡದಿಂದ ಮಾಹಿತಿ ಪಡೆದುಕೊಂಡ ಸಿಎಂ
|
2 |
+
ಬೆಂಗಳೂರು,ಮೇ 6-ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಬಂಧನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಎಸ್ಐಟಿ ತಂಡದ ಪ್ರಮುಖರೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.
|
3 |
+
ಕಳೆದ ಎರಡು ದಿನಗಳ ಹಿಂದೆ ರೇವಣ್ಣ ಅವರನ್ನು ಪೊಲೀಸರು ಅಪಹರಣ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿಸಿದರು. ಪ್ರಸ್ತುತ ರೇವಣ್ಣ ಎಸ್ಐಟಿ ಅಧಿಕಾರಿಗಳ ವಶದಲ್ಲಿದ್ದಾರೆ. ಹಾಸನದಲ್ಲಿ ನಡೆದಿದೆ ಎಂದು ಹೇಳಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಸದ ಪ್ರಜ್ವಲ್ ರೇವಣ್ಣ ಈವರೆಗೂ ಪತ್ತೆಯಾಗಿಲ್ಲ. ಅವರು ವಿದೇಶದಲ್ಲಿರಬಹುದು ಎಂಬ ವದಂತಿಗಳಿವೆ. ಈ ಹಿನ್ನೆಲೆಯಲ್ಲಿ ಇಂದು ಸಭೆ ನಡೆಸಿದ ಸಿದ್ದರಾಮಯ್ಯ ಅವರು, ಪ್ರಜ್ವಲ್ನನ್ನು ವಶಕ್ಕೆ ಪಡೆದುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
|
4 |
+
ಕಳೆದ ಶನಿವಾರ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿ ಕಾರಿಗಳೊಂದಿಗೆ ಸಭೆ ನಡೆಸಿದರು. ಅದರ ಬಳಿಕ ರೇವಣ್ಣ ಅವರ ಬಂಧನವಾಗಿತ್ತು. ವಿದೇಶದಲ್ಲಿದ್ದಾರೆ ಎಂದು ಹೇಳಲಾದ ಪ್ರಜ್ವಲ್ ರೇವಣ್ಣ ಅವರ ಮಾಹಿತಿ ಪಡೆದುಕೊಳ್ಳುವ ಸಲುವಾಗಿ ಸಿಬಿಐ ಮೂಲಕ ಇಂಟರ್ಪೋಲ್ನಿಂದ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲಾಗಿದೆ.
|
5 |
+
ಮೂಲಗಳ ಪ್ರಕಾರ, ಬ್ಲೂ ಕಾರ್ನರ್ ನೋಟಿಸ್ ಸಕ್ರಿಯವಾದ ಬಳಿಕ ಪ್ರಜ್ವಲ್ ರೇವಣ್ಣ ಅವರ ನಿಖರ ಮಾಹಿತಿ ಎಸ್ಐಟಿ ಅಧಿ ಕಾರಿಗಳಿಗೆ ಲಭ್ಯವಾಗಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಸೇರಿದಂತೆ ಹಿರಿಯ ಅಧಿ ಕಾರಿಗಳ ಸಭೆ ನಡೆಸಿ ಪ್ರಕರಣದ ತನಿಖೆಯ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ.
|
6 |
+
ನಿಷ್ಪಕ್ಷಪಾತ ಹಾಗೂ ಕಾನೂನಾತ್ಮಕವಾಗಿ ತನಿಖೆ ನಡೆಯಬೇಕು. ತಪ್ಪಿತಸ್ಥರು ತಪ್ಪಿಸಿಕೊಳ್ಳಲು ಅವಕಾಶವಾಗದಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ಪ್ರಭಾವ ಹಾಗೂ ಒತ್ತಡಕ್ಕೆ ಮಣಿಯದೆ ಸಾಕ್ಷ್ಯ ಹಾಗೂ ಪುರಾವೆ ಆಧಾರದ ಮೇಲೆ ತನಿಖೆಯನ್ನು ಮುಂದುವರೆಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಮುಖ್ಯಮಂತ್ರಿಯವರ ಸಭೆಯ ಬಳಿಕ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ತನಿಖೆ ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆಯಿದೆ.
|
eesanje/url_46_155_2.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಬೆಂಗಳೂರಿನಲ್ಲಿ ರಾರಾಜಿಸಿದ ಲುಲು ಕುಮಾರ, ಬೋಸು ಡಿಕೆ, ಪಿಂಪ್, ರಾಜಕೀಯ ವ್ಯಭಿಚಾರಿ ಪೋಸ್ಟರ್ಗಳು
|
2 |
+
ಬೆಂಗಳೂರು,ಮೇ7-ವಿಧಾನಸಭೆ ಚುನಾವಣೆಗೂ ಮುನ್ನ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಪೇ ಸಿಎಂ ಅಭಿಯಾನ ನಡೆಸಿದ್ದ ಕಾಂಗ್ರೆಸ್ ಮೇಲೆ ಇದೀಗ ಅದರ ತಂತ್ರವೇ ತಿರುಮಂತ್ರವಾಗಿ ಪರಿಣಮಿಸಿದೆ. ಏಕೆಂದರೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಆಡಿಯೋ ಆಚೆ ಬರಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಕಾರಣ ಎಂದು ವಕೀಲ ದೇವರಾಜೇಗೌಡ ಆರೋಪಿಸಿದ ಬೆನ್ನಲ್ಲೇ ಈಗ ಬೆಂಗಳೂರಿನಲ್ಲಿ ಪೋಸ್ಟರ್ಗಳು ಎಲ್ಲೆಡೆ ರಾಜಾಜಿಸುತ್ತಿವೆ.
|
3 |
+
ನಗರದ ಅನೇಕ ಕಡೆ ರಾತ್ರೋರಾತ್ರಿ ಕೆಲವರು ಪೋಸ್ಟರ್ಗಳನ್ನು ಅಂಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಟೀಕೆಗಳ ಸುರಿಮಳೆಗೈಯ್ಯಲಾಗಿದೆ.
|
4 |
+
ಬಸವೇಶ್ವನಗರ, ರಾಜಾಜಿನಗರ, ಸದಾಶಿವನಗರ ಸೇರಿದಂತೆ ಅನೇಕ ಕಡೆ ಸುಮಾರು 15ಕ್ಕೂ ಹೆಚ್ಚು ಪೋಸ್ಟರ್ಗಳನ್ನು ಅಂಟಿಸಿ ಸಿಎಂ ಮತ್ತು ಡಿಸಿಎಂ ವಿರುದ್ದ ಗಂಭೀರ ಆರೋಪಗಳನ್ನು ಮಾಡಲಾಗಿದೆ.ಒಂದು ಪೋಸ್ಟರ್ನಲ್ಲಿ ಡಿ.ಕೆ.ಶಿವಕುಮಾರ್ ಹೋಲುವ ಭಾವಚಿತ್ರವನ್ನು ಅಂಟಿಸಿ ರಾಜಕೀಯಕ್ಕಾಗಿ ಫೋಟೋವನ್ನೇ ಮಾರಾಟಕ್ಕಿಟ್ಟ ಲುಲು ಕುಮಾರ ಎಂದು ಆರೋಪಿಸಲಾಗಿದೆ.
|
5 |
+
ಮತ್ತೊಂದು ಪೋಸ್ಟರ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೂ ನೀವು ಎಚ್ಚೆತ್ತುಕೊಳ್ಳದಿದ್ದರೆ ಮುಂದೊಂದು ದಿನ ಈ ಮಹಾನುಭಾವ ನಿಮ್ಮ ಸಿ.ಡಿಯನ್ನು ಆಚೆ ತರಲು ಹಿಂದೆಮುಂದೆ ನೋಡುವುದಿಲ್ಲ ಎಂದು ಬರಹದಲ್ಲಿ ಎಚ್ಚರಿಸಲಾಗಿದೆ.
|
6 |
+
ಹೆಣ್ಣುಮಕ್ಕಳ ಫೋಟೊ ಬಳಸಿ ರಾಜಕೀಯ ಬೋಸು ಡಿಕೆ ನಾನು ಎಂದು ಆರೋಪಿಸಲಾಗಿದೆ. ಹುಡುಗಿಯರನ್ನು ಸಪ್ಲೈ ಮಾಡುವವನು ಪಿಂಪ್, ಹುಡುಗಿಯರ ವ್ಯಾಪಾರ ಮಾಡುವವನು ಪಿಂಪ್, ಹುಡುಗಿಯರ ಕಳುಹಿಸಿ ಹನಿಟ್ರಾಪ್ ಮಾಡುವವನು ಪಿಂಪ್. ಇವರೆಲ್ಲ ಪಿಂಪ್ ಆದ ಮೇಲೆ ಹುಡುಗಿಯರ ವಿಡಿಯೋವನ್ನು ಸ್ವಾರ್ಥಕ್ಕೆ ಬಳಸಿಕೊಳ್ಳುವವನು ಏನು? ಅವನು ಪಿಂಪ್ ಅಷ್ಟೇ ಎಂದು ದೂರಲಾಗಿದೆ.
|
7 |
+
ಹೆಣ್ಣು ಮಕ್ಕಳ ಫೋಟೋಗಳನ್ನು ರಾಜಕೀಯಕ್ಕಾಗಿ ಬಳಸಿಕೊಂಡ ರಾಜಕೀಯ ವ್ಯಭಿಚಾರಿ ಡಿ.ಕೆ.ಶಿವಕುಮಾರ್ ಎಂದು ಪೋಸ್ಟರ್ನಲ್ಲಿ ಹಾಕಲಾಗಿದೆ. ಹೀಗೆ ಅನೇಕ ಪೋಸ್ಟರ್ಗಳಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಅವರ ಬಗ್ಗೆ ಕೆಲವು ಅನಾಮಧೇಯ ವ್ಯಕ್ತಿಗಳು ಗಂಭೀರವಾದ ಆರೋಪಗಳನ್ನು ಮಾಡಿದ್ದಾರೆ.
|
eesanje/url_46_155_3.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಸಿದ್ದರಾಮಯ್ಯ-ಪರಮೇಶ್ವರ್ ಅವರ ಸಿ.ಡಿ ಬಂದರೂ ಅಚ್ಚರಿಯಿಲ್ಲ : ರಮೇಶ್ ಜಾರಕಿಹೊಳಿ
|
2 |
+
ಬೆಳಗಾವಿ,ಮೇ7-ತಕ್ಷಣವೇ ಎಚ್ಚೆತ್ತುಕೊಳ್ಳದಿದ್ದೆ ಮುಂದೊಂದು ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ಸಿ.ಡಿಗಳು ಆಚೆ ಬಂದರೂ ಅಚ್ಚರಿ ಇಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.
|
3 |
+
ತಮ್ಮ ತವರು ಕ್ಷೇತ್ರ ಗೋಕಾಕ್ನಲ್ಲಿ ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ನಾನು ಸದ್ಯದಲ್ಲೇ ಸಿ.ಡಿ ಬಿಡುಗಡೆಯಾಗುತ್ತದೆ ಎಂದು ಹೇಳಿದ್ದೆ. ಮಹಾನಾಯಕನೊಬ್ಬ ಪ್ರತಿಷ್ಠಿತ ಕುಟುಂಬಕ್ಕೆ ಖೆಡ್ಡಾ ತೋಡುತ್ತಿದ್ದಾನೆ ಎಂದಾಗ ನನ್ನ ಮಾತು ನಂಬಿರಲಿಲ್ಲ. ಈಗ ಏನಾಗಿದೆ ಎಂದು ಪ್ರಶ್ನಿಸಿದರು.
|
4 |
+
ರಾಜಕಾರಣದಲ್ಲಿ ಈಗ ಸೈದ್ಧಾಂತಿಕ ಹೋರಾಟ ಮುಗಿದು ಹೋಗಿದೆ. ಒಬ್ಬರನ್ನು ಕಂಡರೆ ಮತ್ತೊಬ್ಬರು ತುಳಿಯುವವರೇ ಜಾಸ್ತಿಯಾಗಿದೆ. ಸಿ.ಡಿ, ಪೆನ್ಡ್ರೈವ್ ಪ್ರಕರಣಗಳು ಯಾವುದು ಒಳ್ಳೆಯದಲ್ಲ. ಇದನ್ನು ಪಕ್ಷಾತೀತವಾಗಿ ಇಲ್ಲಿಗೆ ಮುಗಿಸಬೇಕು. ಇಲ್ಲದಿದ್ದರೆ ಮುಂದೊಂದು ದಿನ ಸಿದ್ದರಾಮಯ್ಯ ಮತ್ತು ಡಾ.ಜಿ.ಪರಮೇಶ್ವರ್ ಅವರ ಸಿ.ಡಿಗಳು ಆಚೆ ಬಂದರೂ ಅಚ್ಚರಿಪಡುವಂಥದ್ದು ಏನೂ ಇಲ್ಲ ಎಂದು ಹೇಳಿದರು.
|
5 |
+
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಆಚೆ ಬಂದಿದ್ದರ ಹಿಂದೆ ನಾನು ಮೊದಲ ದಿನವೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೈವಾಡವಿದೆ ಎಂದು ಹೇಳಿದ್ದೆ. ನನ್ನ ಮಾತನ್ನು ಯಾರೂ ಕೂಡ ಗಂಭೀರವಾಗಿ ಪರಿಗಣಿಸಲಿಲ್ಲ. ಈಗ ವಕೀಲ ದೇವರಾಜೇಗೌಡ ಬಿಡುಗಡೆ ಮಾಡಿರುವ ಆಡಿಯೋ ಏನು ಹೇಳುತ್ತದೆ ಎಂದು ಪ್ರಶ್ನೆ ಮಾಡಿದರು.
|
6 |
+
ಈಗಲೂ ನಾನು ಸ್ಪಷ್ಟವಾಗಿ ಹೇಳುತ್ತೇನೆ. ಇದರ ಸೂತ್ರಧಾರ ಡಿ.ಕೆ.ಶಿವಕುಮಾರ್ ಎಂಬುದರಲ್ಲಿ ಎರಡು ಮಾತಿಲ್ಲ. ತನಗೆ ಆಗದವರನ್ನು ಈ ರೀತಿ ಬಳಸಿಕೊಂಡು ಚಾರಿತ್ರ್ಯಹರಣ ಮಾಡುವುದು ಅವರಿಗೆ ಮೊದಲಿನಿಂದಲೂ ಅಭ್ಯಾಸವಿದೆ ಎಂದು ವಾಗ್ದಾಳಿ ನಡೆಸಿದರು.ನನ್ನ ಪ್ರಕರಣದಲ್ಲೂ ಡಿ.ಕೆ.ಶಿವಕುಮಾರ್ ನೇರ ಶಾಮೀಲಾಗಿದ್ದವರು. ಅದಕ್ಕೆ ನಮ್ಮವರು ಕೂಡ ಕೈಜೋಡಿಸಿದ್ದಾರೆ. ಜೂ.4ರ ನಂತರ ನಾನು ಕೆಲವು ವಿಷಯಗಳನ್ನು ಬಹಿರಂಗಪಡಿಸುತ್ತೇನೆ. ಅಲ್ಲಿಯವರೆಗೂ ಕಾದು ನೋಡಿ ರಮೇಶ್ ಜಾರಕಿಹೊಳಿ ಕುತೂಹಲ ಹುಟ್ಟಿಸಿದರು.
|
7 |
+
ನಾನು ಸುಖಾಸುಮ್ಮನೆ ಯಾರ ಬಗ್ಗೆಯೂ ಆಧಾರರಹಿತ ಆರೋಪ ಮಾಡುವುದಿಲ್ಲ. ರಾಜಕಾರಣದಲ್ಲಿ ಜನರ ಬಳಿ ಹೋಗಿ ಹೋರಾಟ ನಡೆಸಿ ಜನನಾಯಕನಾಗಬೇಕು. ಅದನ್ನು ಬಿಟ್ಟು ಪೆನ್ ಡ್ರೈವ್, ಸಿ.ಡಿ ಇಟ್ಟುಕೊಂಡು ಬ್ಲಾಕ್ಮೇಲ್ ಮಾಡುವುದರಿಂದ ನಾಯಕನಾಗುವುದಿಲ್ಲ ಎಂದು ಪರೋಕ್ಷವಾಗಿ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದರು.
|
eesanje/url_46_155_4.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಸದ್ಯದಲ್ಲೇ ಮತ್ತೊಂದು ಸಿ.ಡಿ ಫ್ಯಾಕ್ಟರಿ ಬಹಿರಂಗವಾಗಲಿದೆ : ಯತ್ನಾಳ್ ಬಾಂಬ್
|
2 |
+
ಬಿಜಾಪುರ,ಮೇ7-ಸದ್ಯದಲ್ಲೇ ಮತ್ತೊಂದು ಸಿ.ಡಿ ಫ್ಯಾಕ್ಟರಿ ರಾಜ್ಯದಲ್ಲಿ ಬಹಿರಂಗವಾಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿ.ಡಿ ಯಾರಿಗೆ ಸಂಬಂಧಿಸಿದ್ದು, ಅದರ ಹಿಂದೆ ಯಾರಿದ್ದಾರೆ ಎಂಬ ವಿವರವನ್ನು ಮಾತ್ರ ಬಹಿರಂಗಪಡಿಸದೆ ಕುತೂಹಲ ಕೆರಳಿಸಿದರು.
|
3 |
+
ಒಂದು ಕಡೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದೆ ಎನ್ನಲಾದ ಪೆನ್ಡ್ರೈವ್ ಪ್ರಕರಣ ವಿವಾದ ಸೃಷ್ಟಿಸಿರುವ ಬೆನ್ನಲ್ಲೇ ಯತ್ನಾಳ್ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಮಹತ್ವ ಪಡೆದುಕೊಂಡಿದೆ.
|
4 |
+
ಲೋಕಸಭೆ ಚುನಾವಣೆಯಲ್ಲಿ ಬಿಜಾಪುರದಲ್ಲಿ ತಮ್ಮ ಹಕ್ಕು ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದನ್ನು ಬಾಯಿ ಚಪಲಕ್ಕೆ ಇಲ್ಲವೇ ಪ್ರಚಾರಕ್ಕೆ ಹೇಳುವುದಿಲ್ಲ. ಹಿಂದೆಯೇ ನಾನು ಸಿ.ಡಿ ಸ್ಫೋಟಗೊಳ್ಳಲಿದೆ ಎಂದು ಹೇಳಿದ್ದೆ. ಆದರೆ ಯಾರದ್ದು ಎಂದು ಹೇಳಿರಲಿಲ್ಲ. ನನ್ನ ಮಾತು ಈಗ ನಿಜವಾಗಿದೆ ಎಂದು ತಮ್ಮ ಹೇಳಿಕೆಯನ್ನು ಬಲವಾಗಿ ಸಮರ್ಥಿಸಿಕೊಂಡರು.
|
5 |
+
ಪ್ರಜ್ವಲ್ ಅಶ್ಲೀಲ ವಿಡಿಯೋ ಬಹಿರಂಗವಾಗಿದ್ದರ ಹಿಂದೆ ಡಿಸಿಎಂ ಡಿ.ಕೆ ಶಿವಕುಮಾರ್ ಕೈವಾಡವಿದೆ ಎಂದು ಆರೋಪಿಸಿದ ಅವರು, ವಕೀಲ, ಬಿಜೆಪಿ ನಾಯಕ ದೇವೇರಾಜೇ ಗೌಡರು ಆರೋಪಿಸಿದಂತೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಶಿವಕುಮಾರ್ ಅವರ ಕೈವಾಡ ಇರುವುದು ಸ್ಪಷ್ಟ ಎಂದರು.
|
6 |
+
ರಾಜ್ಯ ಸರ್ಕಾರ ರಚನೆ ಮಾಡಿರುವ ಎಸ್ಐಟಿಯು ಡಿ.ಕೆ.ಶಿವಕುಮಾರ್ ವಶದಲ್ಲಿದೆ. ಅದು ಅವರ ಆಣತಿಯಂತೆ ಕೆಲಸ ಮಾಡುತ್ತದೆ ಎಂದು ಯತ್ನಾಳ್ ದೂರಿದರು.ಪ್ರಜ್ವಲ್ ಪ್ರಕರಣ ಉತ್ತರ ಕರ್ನಾಟಕ ಭಾಗದ ಚುನಾವಣೆಯಲ್ಲಿ ಬಿಜೆಪಿ ಮೇಲೆ ಪರಿಣಾಮ ಬೀರುವುದಿಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ 2019ರ ಚುನಾವಣೆಯಲ್ಲಿಯೂ ನಾವು ಉತ್ತಮ ಸಾಧನೆ ಮಾಡಿದ್ದೆವು. ಈ ಭಾಗದಲ್ಲಿ ಜೆಡಿಎಸ್ ಅಷ್ಟು ಪ್ರಬಲವಾಗಿಲ್ಲ. ಈ ಎಲ್ಲ ಕಾರಣಗಳಿಂದ ಪ್ರಜ್ವಲ್ ಪ್ರಕರಣದಿಂದ ಈ ಭಾಗದಲ್ಲಿ ಬಿಜೆಪಿಗೆ ಹಿನ್ನಡೆಯಾಗುವುದಿಲ್ಲ ಎಂದು ಹೇಳಿದರು.
|
eesanje/url_46_155_5.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯದಲ್ಲಿ 2ನೇ ಹಂತದ ಮತದಾನ ಬಿರುಸಿನಿಂದ ಆರಂಭ
|
2 |
+
ಬೆಂಗಳೂರು,ಮೇ7-ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ಬಿರುಸಿನಿಂದ ಆರಂಭಗೊಂಡು ಬಹುತೇಕ ಶಾಂತಿಯುತವಾಗಿ ನಡೆಯಿತು. ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿತು. ಹಲವು ಮತಗಟ್ಟೆಗಳಲ್ಲಿ ಸಾಲುಗಟ್ಟಿ ಮತ ಚಲಾಯಿಸುತ್ತಿದ್ದ ದೃಶ್ಯ ಕಂಡುಬಂದಿತು.
|
3 |
+
ಯುವ ಮತದಾರರು ಉತ್ಸಾಹದಿಂದ ಮತದಾನ ಮಾಡುತ್ತಿರುವುದು ಅಲ್ಲಲ್ಲಿ ಕಂಡುಬಂದಿತು. ಕೆಲವೊಂದು ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಈತನಕ ಶಾಂತಿಯುತವಾಗಿ ಮತದಾನ ನಡೆದಿದೆ. ಗ್ರಾಮೀಣ ಭಾಗದಲ್ಲಿ ಬಿರುಸಿನ ಮತದಾನವಾಗುತ್ತಿರುವುದು ಕಂಡುಬಂದಿತು. ನಗರ ಪ್ರದೇಶಗಳಲ್ಲಿ ಅಷ್ಟು ಉತ್ಸಾಹ ಕಂಡುಬರಲಿಲ್ಲ.
|
4 |
+
ಗ್ರಾಮೀಣ ಭಾಗದಲ್ಲಿ ಕೃಷಿ ಮತ್ತಿತರ ಚಟುವಟಿಕೆಗಳಲ್ಲಿ ತೊಡಗಿಸಬೇಕಾದವರು ಬೆಳಗ್ಗೆಯೇ ಮತ ಚಲಾಯಿಸಿ ತಮ್ಮ ಕೆಲಸ ಕಾರ್ಯಗಳಿಗೆ ತೆರಳಿದರು. 21 ಮಹಿಳೆಯರು ಸೇರಿದಂತೆ ಒಟ್ಟು 227 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಿದ್ದಾರೆ. ಇಬ್ಬರು ಕೇಂದ್ರ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳು, ನಾಲ್ವರು ಸಚಿವರ ಮಕ್ಕಳು, ಓರ್ವ ಸಚಿವರ ಸಹೋದರಿ, ಸಚಿವರೊಬ್ಬರ ಪತ್ನಿ, ಹಾಲಿ ಸಂಸದರ ಪತ್ನಿ ಹಾಗೂ ರಾಷ್ಟ್ರೀಯ ಪಕ್ಷವೊಂದರ ರಾಷ್ಟ್ರೀಯ ಅಧ್ಯಕ್ಷರ ಅಳಿಯ ಚುನಾವಣಾ ಕಣದಲ್ಲಿ ಇದ್ದಾರೆ.
|
5 |
+
ಬೆಳಗ್ಗೆ 11 ಗಂಟೆ ವೇಳೆಗೆ ರಾಯಚೂರಿನಲ್ಲಿ ಅತಿ ಕಡಿಮೆ ಶೇ.15.27ರಷ್ಟು ಮತದಾನವಾಗಿದ್ದರೆ ಶಿವಮೊಗ್ಗದಲ್ಲಿ ಶೇ.20.39ರಷ್ಟು ಬಿರುಸಿನ ಮತದಾನವಾಗಿತ್ತು.ಚಿಕ್ಕೋಡಿ ಶೇ.20.81, ಬೆಳಗಾವಿ ಶೇ.18.48, ಬಾಗಲಕೋಟೆ ಶೇ.16.59, ಬಿಜಾಪುರ ಶೇ.18.26, ಗುಲ್ಬರ್ಗ ಶೇ.16.71, ರಾಯಚೂರು ಶೇ.16.27, ಬೀದರ್ ಶೇ.16.90, ಕೊಪ್ಪಳ ಶೇ.16.79, ಬಳ್ಳಾರಿ ಶೇ. 20.37, ಹಾವೇರಿ ಶೇ.16.62, ಧಾರವಾಡ ಶೇ.18.38, ಉತ್ತರಕನ್ನಡ ಶೇ.22.07, ದಾವಣಗೆರೆ ಶೇ.18.11, ಶಿವಮೊಗ್ಗ ಶೇ.22.39ರಷ್ಟು ಮತದಾನವಾಗಿತ್ತು.
|
6 |
+
ಬೆಳಗ್ಗೆ ಬಿರುಸಿನಿಂದ ಆರಂಭಗೊಂಡ ಮತದಾನವು ಮಧ್ಯಾಹ್ನವಾಗುತ್ತಿದ್ದಂತೆ ಕಡಿಮೆಯಾಯಿತು. ಬೇಸಿಗೆಯ ಬಿರುಬಿಸಿಲಿನಿಂದಾಗಿ ಮಧ್ಯಾಹ್ನದ ವೇಳೆ ಮತದಾನ ಮಾಡಲು ಅಷ್ಟಾಗಿ ಆಸಕ್ತಿ ತೋರದಿರುವುದು ಕಂಡುಬಂತು. ಸಂಜೆಯಾಗುತ್ತಿದ್ದಂತೆ ಮತ್ತೆ ಮತದಾನ ಬಿರುಸಾಗತೊಡಗಿತು.
|
7 |
+
ಬಿಸಿಲು ಹೆಚ್ಚಾಗಿರುವುದರಿಂದ ಮತಗಟ್ಟೆಗಳಲ್ಲಿ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲಾಗಿತ್ತು. 14 ಕ್ಷೇತ್ರಗಳಲ್ಲಿ ಒಟ್ಟು 2,59,52,958 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದರು. ಇದರಲ್ಲಿ 1,29,48,978 ಪುರುಷರು, 1,29,66,570 ಮಹಿಳೆಯರು, 1945 ತೃತೀಯ ಲಿಂಗಿಗಳಿದ್ದಾರೆ. 6,90,929 ಯುವ ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದರು.
|
8 |
+
14 ಕ್ಷೇತ್ರಗಳಲ್ಲಿ ಒಟ್ಟು 28,269 ಮತಗಟ್ಟೆಗಳನ್ನು ತೆರೆಯಲಾಗಿತ್ತು. ಮುಕ್ತ ಹಾಗೂ ಶಾಂತಿಯುತ ಮತದಾನಕ್ಕೆ ಅನುಕೂಲವಾಗುವಂತೆ ಸೂಕ್ತ ಪೊಲೀಸ್ ಬಂದೋಬಸ್್ತ ವ್ಯವಸ್ಥೆ ಮಾಡಲಾಗಿತ್ತು. 1.45 ಲಕ್ಷ ಮತಗಟ್ಟೆ ಅಧಿ ಕಾರಿಗಳು, 35,000 ಪೊಲೀಸರು, ಅರೆಸೇನಾ ಪಡೆಯ 65 ಕಂಪನಿಗಳನ್ನು ನಿಯೋಜಿಸಲಾಗಿತ್ತು. ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಎಡಗೈ ತೋರುಬೆರಳಿಗೆ ಶಾಯಿಯನ್ನು ಹಾಕಲಾಗುತ್ತಿತ್ತು.
|
eesanje/url_46_155_6.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಪರಿವಾರದ ಜೊತೆ ತೆರಳಿ ಸಚಿವ ಪ್ರಲ್ಹಾದ ಜೋಶಿ ಮತದಾನ
|
2 |
+
ಹುಬ್ಬಳ್ಳಿ, ಮೇ.7:ಹುಬ್ಬಳ್ಳಿಯಲ್ಲಿ ಇಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ಬೆಳಗ್ಗೆಯೇ ಮತದಾನ ಮಾಡಿ, ಮತೋತ್ಸವಕ್ಕೆ ಪ್ರೀರಣೆ ನೀಡಿದರು. ಹುಬ್ಬಳ್ಳಿಯ ಭವಾನಿ ನಗರದಲ್ಲಿ ಇರುವ ಚಿನಯಿ ವಿದ್ಯಾಲಯದ ಮತಗಟ್ಟೆ 111ರಲ್ಲಿ ಸಚಿವರು ಬೆಳಗ್ಗೆ 8.30ಕ್ಕೇ ಕುಟುಂಬ ಸಮೇತ ತೆರಳಿ ಗುಪ್ತ ಮಾತದಾನಗೈದರು.
|
3 |
+
ಮತದಾನ ಪ್ರಜಾಪ್ರಭುತ್ವದ ಪವಿತ್ರ ಹಬ್ಬವಾಗಿದೆ. ಭವ್ಯ ಭಾರತದ ನಿರ್ಮಾಣ, ರಾಷ್ಟ್ರದ ಅಭಿವೃದ್ಧಿಗಾಗಿ ಸರ್ವರೂ ಮತಗಟ್ಟೆಗಳಿಗೆ ಧಾವಿಸಿ ತಮ ಅಮೂಲ್ಯ ಹಕ್ಕು ಚಲಾಯಿಸಬೇಕು ಎಂದು ಕರೆ ನೀಡಿದರು.
|
4 |
+
ಪ್ರತಿಯೊಬ್ಬರೂ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗುವಂತೆ ನೋಡಿಕೊಳ್ಳಬೇಕು. ಪರಿವಾರ, ಅಕ್ಕಪಕ್ಕದವರು ವೋಟ್ ಮಾಡುವಂತೆ ಪ್ರೀರೇಪಿಸಿ ಮತಗಟ್ಟೆಗಳಿಗೆ ಕರೆತರಬೇಕು ಎಂದು ಕೋರಿದರು.
|
eesanje/url_46_155_7.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಭಾರೀ ಮಳೆ ನಿರೀಕ್ಷೆ : ಅನಾಹುತ ತಡೆಯಲು ಮುನ್ನೆಚ್ಚರಿಕೆ ಕ್ರಮಕ್ಕೆ ಕಂದಾಯ ಇಲಾಖೆ ಸುತ್ತೋಲೆ
|
2 |
+
ಬೆಂಗಳೂರು,ಮೇ 6-ಬಿರುಬೇಸಿಗೆ, ಬಿಸಿಗಾಳಿ, ಉಷ್ಣಾಂಶ ಏರಿಕೆಯಿಂದ ಜನಸಾಮಾನ್ಯರು ಬಳಲುತ್ತಿರುವ ಸಂದರ್ಭದಲ್ಲೇ ಮುಂಗಾರಿನಲ್ಲಿ ಸಾಮಾನ್ಯಕ್ಕಿಂತಲೂ ಹೆಚ್ಚಿನ ಮಳೆ ಸುರಿಯುವ ನಿರೀಕ್ಷೆಯಿದ್ದು, ಇದರಿಂದಾಗುವ ಅನಾಹುತಗಳನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿದೆ.
|
3 |
+
ಒಟ್ಟು 13 ಅಂಶಗಳ ಸೂಚನೆಗಳನ್ನು ಪ್ರಾದೇಶಿಕ ಆಯೋಜಕರು, ಜಿಲ್ಲಾಧಿ ಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿ ಕಾರಿಗಳಿಗೆ ರವಾನೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಏ.15 ರಂದು ನೀಡಿರುವ ನೈಋತ್ಯಮುಂಗಾರಿನ ಮುನ್ಸೂಚನೆ ಪ್ರಕಾರ, ದೇಶಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚಾಗಿ ಮಳೆಯಾಗುವ ನಿರೀಕ್ಷೆಯಿದೆ. ಸರಾಸರಿ ಶೇ.104ಕ್ಕಿಂತ ಹೆಚ್ಚು ಮಳೆಯನ್ನು ಅಂದಾಜಿಸಲಾಗಿದ್ದು, ಕರ್ನಾಟಕ ಸೇರಿದಂತೆ ಭಾರತದ ಪರ್ಯಾಯ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯ ಸಾಧ್ಯತೆಯಿದೆ.
|
4 |
+
ವಾಡಿಕೆಗಿಂತ ಹೆಚ್ಚಿನ ಮಳೆಯುಂಟಾದಲ್ಲಿ ಸಂಭವಿಸಬಹುದಾದ ದುಷ್ಪರಿಣಾಮಗಳನ್ನು ಸಮರ್ಥವಾಗಿ ಎದುರಿಸಲು ಹಾಗೂ ಹಾನಿಯನ್ನು ತಗ್ಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಲಾಗಿದೆ.
|
5 |
+
ಕಂದಾಯ, ನಗರಾಭಿವೃದ್ಧಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಜಲಸಂಪನ್ಮೂಲ ಇಲಾಖೆಗಳ ಸಹಯೋಗದೊಂದಿಗೆ ಕೆಲಸ ಮಾಡಬೇಕು. ವಿಪತ್ತಿಗೆ ತುತ್ತಾಗುವ ಪ್ರದೇಶಗಳನ್ನು ಗುರುತಿಸಿ ಅರಿವು ಮೂಡಿಸಬೇಕು. ತುರ್ತು ಸ್ಪಂದನೆಗೆ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವ ಕೇಂದ್ರಗಳನ್ನು ಸ್ಥಾಪಿಸಿ ತಂಡಗಳನ್ನು ರಚಿಸಬೇಕು.
|
6 |
+
ವಿಪತ್ತು ನಿರ್ವಹಣೆಯಲ್ಲಿ ತೊಡಗುವ ಅಧಿ ಕಾರಿಗಳ ವಾಟ್ಸಾಪ್ ಗ್ರೂಪ್ಗಳನ್ನು ರಚಿಸಿ ಕಾಲಕಾಲಕ್ಕೆ ಮಾಹಿತಿ ನಿರ್ಣಯ ಮಾಡಿಕೊಳ್ಳಬೇಕು. ದೂರ ಸಂಪರ್ಕ ಸೇವೆ ಪೂರೈಕೆದಾರರೊಂದಿಗೆ ಸಭೆ ನಡೆಸಿ ಹಾನಿಗೊಳಗಾದ ಸೇವೆಗಳನ್ನು ತಕ್ಷಣ ದುರಸ್ತಿಗೊಳಿಸಲು ಸೂಚಿಸಬೇಕು ಎಂದು ಸಲಹೆ ನೀಡಲಾಗಿದೆ.
|
7 |
+
ನದಿ ಹಾಗೂ ಜಲಾಶಯ ನೀರಿನ ಹರಿವು ಹಾಗೂ ತಗ್ಗು ಪ್ರದೇಶಗಳಲ್ಲಿನ ಜನರಿಗೆ ತುರ್ತು ಸಂದರ್ಭಗಳಲ್ಲಿ ಮಾಹಿತಿ ನೀಡಬೇಕು. ತಂತ್ರಜ್ಞಾನದ ಬಳಕೆ ಮಾಡಿಕೊಂಡು ವರುಣ ಮಿತ್ರ ಸಹಾಯವಾಣಿ, ಸಿಡಿಲು ಆ್ಯಪ್, ದಾಮಿನಿ ಆ್ಯಪ್ ಮುಂತಾದವುಗಳ ಮೂಲಕ ಎಚ್ಚರಿಕೆಯ ಸಂದೇಶ ರವಾನಿಸಬೇಕು.
|
8 |
+
ಪರಿಹಾರ, ಪುನರ್ ವಸತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಚರಂಡಿಗಳು, ಕಾಲುವೆಗಳ ಹೂಳೆತ್ತಿಸಿ ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ. ಭೂಕುಸಿತ ಪ್ರದೇಶಗಳಲ್ಲಿ ತ್ವರಿತ ರಕ್ಷಣಾ ಕಾರ್ಯಾಚರಣೆ ನಡೆಸುವುದು, ವಿದ್ಯುತ್ ಸರಬರಾಜು ವ್ಯತ್ಯಯಗೊಳ್ಳದಂತೆ ಆರೋಗ್ಯ ಕಾಳಜಿ, ಪಶುಸಂಗೋಪನೆ ಸೇರಿದಂತೆ ಹಲವು ವಿಚಾರಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಕಂದಾಯ ಇಲಾಖೆ ಸೂಚನೆ ನೀಡಿದೆ.
|
eesanje/url_46_155_8.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಚಿನ್ನದ ಬೆಲೆ ಏರಿಕೆ ನಡುವೆಯೇ ಬಂತು ಅಕ್ಷಯ ತೃತೀಯ
|
2 |
+
ಎಂ. ಕೃಷ್ಣಪ್ಪ, ಚಿಕ್ಕಬಳ್ಳಾಪುರಇದೇ ಮೆ 10 ರಂದು ಅಕ್ಷಯ ತೃತೀಯ. ಈ ಹಬ್ಬಕ್ಕೆ ಋಹಿಂದೂ ಧರ್ಮದಲ್ಲಿ ವಿಶೇಷ ಮಹತ್ವವಿದೆ. ಈ ದಿನ ಹೊಸ ವಸ್ತುಗಳನ್ನು ಖರೀದಿಸುವ ಮೂಲಕ, ದಾನ ಮಾಡುವ ಮೂಲಕ ಅಕ್ಷಯ ತೃತೀಯವನ್ನು ಆಚರಿಸುತ್ತಾರೆ. ಅಕ್ಷಯ ತೃತೀಯ ಪೌರಾಣಿಕ ಮಹತ್ವವನ್ನು ಹೊಂದಿರುವ ಹಬ್ಬವೂ ಹೌದು ಇತ್ತೀಚಿನ ಕೆಲ ವರ್ಷಗಳಂತೆ ಪ್ರಸಕ್ತ ಸಾಲಿನಲ್ಲೂ ಹೊಸ ವಸ್ತು ಬಂಗಾರ ಕೊಳ್ಳಲು ಜನ ಮುಗಿ ಬೀಳಬಹುದು ಎಂಬ ಹಿನ್ನೆಲೆಯಲ್ಲಿ ವಿವಿಧ ತೆರನಾದ ವಸ್ತುಗಳಿಗೆ ಚಿಕ್ಕಬಳ್ಳಾಪುರ ನಗರದ ಬಜಾರ್ ರಸ್ತೆ ಹಾಗೂ ಬಂಗಾರ ಕೊಳ್ಳಲು ಗಂಗಮ್ಮನ ಗುಡಿ ರಸ್ತೆ ಸರ್ವಸನ್ನದ್ಧವಾಗ ತೊಡಗಿದೆ.
|
3 |
+
ಪ್ರತಿ ವರ್ಷ ವೈಶಾಖ ಮಾಸದಲ್ಲಿ ಮಹಿಳೆಯರಿಗೆ ಅಚ್ಚುಮೆಚ್ಚಿನ ಬಂಗಾರ ತನ್ನದಾಗಿಸುವ ಸಡಗರ ಸಂಭ್ರಮದ ಹಬ್ಬ ಅಕ್ಷಯ ತೃತೀಯ. ಆದರೆ ಈ ವರ್ಷ ಬಂಗಾರದ ಬೆಲೆ ಗಗನಕ್ಕೆ ಏರಿದ್ದು ಈ ಬಾರಿ ಬಂಗಾರ ಕೊಳ್ಳುವವರಲ್ಲಿ ನಿರುತ್ಸಾಹ ಮೂಡಿಸಿದೆ.
|
4 |
+
ಅಕ್ಷಯ ತೃತೀಯ ದಿನದಂದು ಹೊಸದಾಗಿ ಖರೀದಿಸಿದ ಬಂಗಾರದ ಒಡವೆಗಳನ್ನು ಲಕ್ಷ್ಮೀದೇವಿ ಮುಂದಿಟ್ಟು ಪೂಜೆ ಸಲ್ಲಿಸಿದರೆ ಅಂತಹವರ ಮನೆಗಳಲ್ಲಿ ಬಂಗಾರ ಇನ್ನಷ್ಟು ಮತ್ತಷ್ಟು ವೃದ್ಧಿಯಾಗುತ್ತದೆ ಮತ್ತು ಲಕ್ಷ್ಮೀದೇವಿ ಕೃಪೆಯಿಂದ ಸಿರಿ ಸಂಪತ್ತು ವೃದ್ಧಿಸುತ್ತದೆ ಎಂಬ ನಂಬಿಕೆ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಹೆಚ್ಚು ಪ್ರಚಲಿತಗೊಳ್ಳುತ್ತಿರುವ ಕಾರಣ ಬಂಗಾರದ ಅಂಗಡಿಗಳಿಗೆ ಜನ ಆ ದಿನ ಮುಗಿಬಿದ್ದು ಖರೀದಿಸುವುದು ನಡೆದುಕೊಂಡು ಬರುತ್ತಿರುವ ಸಂಪ್ರದಾಯವಾಗಿದೆ.
|
5 |
+
ಆದರೆ ಈ ವರ್ಷ ಬಂಗಾರದ ಬೆಲೆ ಸಾರ್ವಕಾಲಿಕ ದಾಖಲೆ ಏರಿಕೆಯ ಪರಿಣಾಮ ಒಂದು ಗ್ರಾಂ ಚಿನ್ನಕ್ಕೆ ಏಳು ಸಾವಿರಕ್ಕೂ ಅಧಿಕ ಮೌಲ್ಯ ಆಗಿದ್ದು ಬಂಗಾರ ಕೊಳ್ಳಲು ಸಾಧ್ಯವಾಗದೆ ಮಧ್ಯಮ ವರ್ಗದ ಜನತೆ ಚಡಪಡಿಸುತ್ತಿದ್ದಾರೆ. ಒಮ್ಮೆ ಬಂಗಾರ ಕೊಂಡರೆ ಅದನ್ನು ಅವರ ಜೀವಮಾನ ಪರ್ಯಂತ ಇಟ್ಟುಕೊಳ್ಳೋದು ಹಾಗೂ ಎಂದೂ ಒಳಪನ್ನ ಕಳೆದುಕೊಳ್ಳದ ಹಾಗೂ ಕಷ್ಟಕಾಲದಲ್ಲಿ ಕ್ಷಣಮಾತ್ರದಲ್ಲಿ ಹಣ ಒದಗಿಸಿಕೊಡುವ ಏಕೈಕ ಹಳದಿ ಲೋಹ ಆಗಿರುವುದು ವಿಶೇಷವಾಗಿದೆ.
|
6 |
+
ಹಳ್ಳಿಗಾಡಿನ ಗಿರವಿ ಅಂಗಡಿಗಳಿಂದ ಹಿಡಿದು ಅಂತಾರಾಷ್ಟ್ರೀಯ ಬ್ಯಾಂಕ್ ವಹಿವಾಟಿನ ತನಕ ಷೇರು ಮಾರುಕಟ್ಟೆಯಲ್ಲಿನ ಏರುಪೇರುಗಳಿಗೂ ಸಹ ಬಂಗಾರದ ಬೆಲೆಯೇ ಮಾನದಂಡವಾಗಲಿದೆ. ಇದಿಷ್ಟೇ ಅಲ್ಲದೆ ದೇಶದಲ್ಲಿ ನೋಟುಗಳನ್ನು ಮುದ್ರಿಸಲು ಸಹ ಇಂತಿಷ್ಟು ಬಂಗಾರವನ್ನು ಕೇಂದ್ರ ಸರ್ಕಾರ ಸಂಗ್ರಹಿಸಬೇಕು ಎಂಬ ನಿಯಮವೂ ಇದೆ ಹಾಗಾಗಿ ಬಂಗಾರ ಎಂದರೆ ಎಲ್ಲರಿಗೂ ಅಷ್ಟೊಂದು ಪ್ರೆತಿ.
|
7 |
+
ಕೂಲಿ ಮಾಡುವವರಿಂದ ಹಿಡಿದು ದೇಶದ ಆಗರ್ಭ ಶ್ರೀಮಂತರ ತನಕ ಬಂಗಾರದ ಪ್ರದರ್ಶನ ಮದುವೆ ಮುಂತಾದ ಶುಭ ಸಮಾರಂಭಗಳಲ್ಲಿ ಅವರವರ ಪ್ರತಿಷ್ಠೆಯನ್ನು ಹೆಚ್ಚಿಸುತ್ತದೆ . ಉದಾಹರಣೆಗೆ ಕಡು ಬಡವರು ಮದುವೆ ಮಾಡಿಕೊಟ್ಟರೆ ಕನಿಷ್ಠ ಚಿನ್ನದ ಬೆಲೆಯನ್ನಾದರೂ ಕೊಡಲೇಬೇಕು ಅದರೊಂದಿಗೆ ಮದುಮಗ ಹಾಗೂ ಮದುಮಗಳಿಗೂ ತಮ್ಮ ಕೈಲಾದಷ್ಟು ಚಿನ್ನವನ್ನು ಒಡವೆ ರೂಪದಲ್ಲಿ ಕೊಡುತ್ತಾರೆ. ಹಾಗಾಗಿ ದೇಶದ ಜನರಲ್ಲಿ ಪ್ರತಿಯೊಬ್ಬರಿಗೂ ಬಂಗಾರ ಕೊಳ್ಳುವಿಕೆ ಅನಿವಾರ್ಯವಾಗಿದೆ.
|
8 |
+
ವಿವಾಹ ಸಮಾರಂಭ, ಆಸ್ತಿ ಖರೀದಿ, ಅನಾರೋಗ್ಯ ಸಂದರ್ಭ, ಮಕ್ಕಳ ವಿದ್ಯಾಭ್ಯಾಸ , ಮನೆ ಕಟ್ಟುವಿಕೆ ಈ ರೀತಿಯ ನಾನಾ ಕಾರಣಗಳಿಂದ ಬಂಗಾರ ಇದ್ದರೆ ಯಾರನ್ನೂ ಕಾಡಿ ಬೇಡದೆ ತನ್ನ ಒಡವೆ ಅಡಮಾನ ಇಟ್ಟು ತಮಗೆ ಬೇಕಿರುವಷ್ಟು ಹಣ ಪಡೆದುಕೊಳ್ಳಬಹುದಾಗಿದೆ. ಹೀಗಾಗಿ ಬಂಗಾರ ಕಷ್ಟಕ್ಕೆ ಆಗುವ ನಂಟ ಎಂದು ಶ್ರೀಸಾಮಾನ್ಯರು ತಿಳಿದುಕೊಳ್ಳುವುದರಿಂದಲೇ ಬಂಗಾರಕ್ಕೆ ಇಷ್ಟೊಂದು ಪ್ರಮಾಣದಲ್ಲಿ ಡಿವ್ಯಾಂಡ್ ಎಂದರೂ ತಪ್ಪಾಗಲಾರದು.
|
9 |
+
ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಂಗಾರದ ಅಲ್ಪಸ್ವಲ್ಪ ಏರಿಳಿಕೆ ಹೊರತುಪಡಿಸಿದರೆ ಬಂಗಾರದ ಬೆಲೆಯಲ್ಲಿ ನಿರಂತರ ಏರಿಕೆಕಂಡು ಬಂದಿದೆಯೇ ಹೊರತು ಯಾವುದೇ ಸಂದರ್ಭದಲ್ಲಿ ಇಳಿಮುಖ ಕಂಡಿಲ್ಲ ಹಾಗಾಗಿ, ಮಾರುಕಟ್ಟೆಯಲ್ಲಿಯೂ ಬಂಗಾರ ತನ್ನ ಸ್ಥಿರತೆಯನ್ನು ಕಂಡುಕೊಂಡಿದೆ.
|
10 |
+
ಸಾಲ ಮಾಡಿ ಆದರೂ ತುಪ್ಪ ತಿನ್ನು ಎಂಬ ಗಾದೆ ಮಾತಿನಂತೆ ಬಂಗಾರಕೊಳ್ಳುವ ಆತುರದಲ್ಲಿ ಮಧ್ಯಮ ವರ್ಗದವರು ಹರ ಸಾಹಸ ಪಟ್ಟು ಸಾಲ-ಸೋಲಮಾಡಿ ಅಕ್ಷಯ ತೃತೀಯ ದಿನಕ್ಕೆ ಒಂದೆರಡು ಗ್ರಾಮ್ ಆದರೂ ಸಹ ಬಂಗಾರ ಕೊಳ್ಳಲು ಚಿನ್ನದ ಅಂಗಡಿಗಳಿಗೆ ಲಗ್ಗೆ ಇಡುತ್ತಿದ್ದಾರೆ. ಈ ವರ್ಷ ಮೇ 10ರಂದು ಅಕ್ಷಯ ತೃತೀಯ ಬರುವ ಹಿನ್ನೆಲೆಯಲ್ಲಿ ಬಂಗಾರಕ್ಕೆ ಮತ್ತಷ್ಟು ಬೇಡಿಕೆ ಕಂಡು ಬರುವುದರಲ್ಲೂ ಆಶ್ಚರ್ಯವಿಲ್ಲ.
|
eesanje/url_46_155_9.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಪೆನ್ಡ್ರೈವ್ ಪ್ರಕರಣದಲ್ಲಿ ಎಚ್ಡಿಡಿ, ಎಚ್ಡಿಕೆ ಹೆಸರು ಬಳಸದಂತೆ ತಡೆಯಾಜ್ಞೆ
|
2 |
+
ಬೆಂಗಳೂರು, ಮೇ 6-ಹಾಸನ ಪೆನ್ಡ್ರೈವ್ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರು ಬಳಸದಂತೆ ಸೆಷನ್ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
|
3 |
+
ಪ್ರಕರಣಗಳ ಸುದ್ದಿ ಪ್ರಸಾರ ಮಾಡುವಾಗ ಅನಗತ್ಯವಾಗಿ ತಮ್ಮ ಹೆಸರು ಬಳಸದಂತೆ ಕೋರಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸೆಷನ್ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ಹಾಗೂ ಮಾಜಿ ಸಚಿವ ರೇವಣ್ಣ ವಿರುದ್ಧದ ಮಹಿಳಾ ಅಪಹರಣ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿದೆ.
|
4 |
+
ರಾಜಕೀಯ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪ ಕೆಸರೆರಚಾಟಕ್ಕೂ ಕಾರಣವಾಗಿದೆ.ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೆಸರನ್ನು ಉಲ್ಲೇಖಿಸಿ ಪದೇ ಪದೇ ಆರೋಪ ಮಾಡುತ್ತಿದ್ದಾರೆ. ಅನಗತ್ಯವಾಗಿ ಈ ಆರೋಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ಇಬ್ಬರು ನಾಯಕರು ನ್ಯಾಯಾಲದ ಮೊರೆ ಹೋಗಿದ್ದರು.
|
5 |
+
ಪೆನ್ಡ್ರೈವ್ ಪ್ರಕರಣದಲ್ಲಿ ದೇವೇಗೌಡರ ಹೆಸರು ಬಳಸಿದಿರಿ :ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಪೆನ್ಡ್ರೈವ್ ಪ್ರಕರಣದಲ್ಲಿ ವಿನಾ ಕಾರಣ ಮಾಜಿ ಪ್ರಧಾನಿ ದೇವೇಗೌಡರ ಹೆಸರನ್ನು ಬಳಸಬಾರದು ಎಂದು ಒಕ್ಕಲಿಗ ಜಾಗೃತಿ ವೇದಿಕೆಯ ಅಧ್ಯಕ್ಷ ಕೆ.ಸಿ. ಗಂಗಾಧರ್ ಒತ್ತಾಯಿಸಿದ್ದಾರೆ.ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಹಾಸನದ ಪೆನ್ಡ್ರೈವ್ ಜಂಜಾಟದಲ್ಲಿ ಮಾಜಿ ಪ್ರಧಾನಿ ಹೆಸರು ಬಳಸುವುದರಿಂದ ದೇವೇಗೌಡರ ಮನಸ್ಸಿಗೆ ನೋವುಂಟಾಗಲಿದೆ. ಹಾಗಾಗಿ ಯಾರೂ ಸಹ ಅವರ ಹೆಸರನ್ನು ಬಳಸಬಾರದು ಎಂದು ಮನವಿ ಮಾಡಿದರು.
|
6 |
+
ಪಕ್ಷಾತೀತವಾಗಿ ರಾಜಕೀಯ ನಾಯಕರು ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಮಾನಸಿಕವಾಗಿ ಧೈರ್ಯ ತುಂಬಬೇಕು. ಶಾಸಕ ಎಚ್.ಡಿ. ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಎಸ್ಐಟಿ ಮೂಲಕ ಪಕ್ಷಾತೀತವಾಗಿ ತನಿಖೆ ನಡೆಸಿ ರಾಜ್ಯಸರ್ಕಾರ ಸತ್ಯಾಂಶವನ್ನು ಜನತೆಯ ಮುಂದಿಡಬೇಕು ಎಂದು ಒತ್ತಾಯಿಸಿದ್ದಾರೆ.
|
7 |
+
ಬಸವನಗುಡಿಯ ರೇವಣ್ಣ ಮನೆಯಲ್ಲಿ ಸ್ಥಳ ಮಹಜರುಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ತನಿಖೆ ನಡೆಸುತ್ತಿರುವ ಎಸ್ಐಟಿ ಇಂದು ನಗರದ ಬಸವನಗುಡಿಯ ರೇವಣ್ಣ ಅವರ ನಿವಾಸಕ್ಕೆ ತೆರಳಿ ಸ್ಥಳ ಮಹಜರು ನಡೆಸಿತು. ಮೂವರು ಮಹಿಳಾ ಆಧಿಕಾರಿಗಳು ಸೇರಿದಂತೆ ಆರು ಮಂದಿಯ ತಂಡ ಸಂತ್ರಸ್ತೆಯನ್ನು ಬಸವನಗುಡಿಯ ರೇವಣ್ಣ ಅವರ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಕರೆದೊಯ್ದು ಪರಿಶೀಲನೆ ನಡೆಸಿತು. ಸಂತ್ರಸ್ತೆಯ ಸಮ್ಮುಖದಲ್ಲಿ ಮಹಜರು ನಡೆಸಿ ಆಕೆಯ ಹೇಳಿಕೆಯನ್ನು ಅಽಕ��ರಿಗಳು ದಾಖಲಿಸಿಕೊಂಡರು. ಈ ವೇಳೆ ಮನೆ ಬಳಿ ಯಾರೂ ಬಾರದಂತೆ ಬಿಗಿ ಪೊಲೀಸ್ ಬಂದೋಬಸ್್ತ ಮಾಡಲಾಗಿತ್ತು.
|
eesanje/url_46_156_1.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ರಾಜ್ಯದಲ್ಲಿ 2ನೇ ಹಂತದ ಮತದಾನ : ಭದ್ರತೆಗಾಗಿ 40 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ
|
2 |
+
ಬೆಂಗಳೂರು,ಮೇ6-ರಾಜ್ಯದಲ್ಲಿ ಎರಡನೇ ಹಂತದ ಮತದಾನ ಮುಕ್ತ ಹಾಗೂ ಶಾಂತಿಯುತವಾಗಿ ನಡೆಯಲು ಅಧಿಕಾರಿಗಳು ಸೇರಿದಂತೆ 40 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಹಿತೇಂದ್ರ ಅವರು ತಿಳಿಸಿದ್ದಾರೆ.
|
3 |
+
ಈ ಸಂಜೆಯೊಂದಿಗೆ ಮಾತನಾಡಿದ ಅವರು, ಸ್ಥಳೀಯ ಪೊಲೀಸರ ಜೊತೆಗೆ 70 ಕಂಪನಿ ಕೇಂದ್ರ ಪಡೆಗಳು, 150 ಫ್ಲಟೂನ್ ಕೆಎಸ್ಆರ್ಪಿ, ಡಿಎಆರ್ ಪ್ಲಟೂನ್ಗಳನ್ನು ನಿಯೋಜಿಸಲಾಗಿದೆ ಎಂದರು.
|
4 |
+
ಬೆಂಗಳೂರು, ಮೈಸೂರು ಸೇರಿದಂತೆ ಇತರೆ ಜಿಲ್ಲೆಗಳಿಂದಲೂ ಸಹ 2ನೇ ಹಂತದ ಮತದಾನಕ್ಕೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಮತದಾನ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್್ತ ಮಾಡಲಾಗಿದೆ ಎಂದರು.
|
5 |
+
ನಾಳೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಹಿರಿಯ ಅಧಿಕಾರಿಗಳು ಇಂದು ಗಸ್ತಿನಲ್ಲಿರುತ್ತಾರೆ ಎಂದು ಹಿತೇಂದ್ರ ಅವರು ತಿಳಿಸಿದರು.
|
eesanje/url_46_156_10.txt
ADDED
@@ -0,0 +1,16 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪ್ರಜ್ವಲ್ ರೇವಣ್ಣ ಲೊಕೇಶನ್ ಪತ್ತೆಹಚ್ಚಿದ ಎಸ್ಐಟಿ, ವಶಕ್ಕೆ ಪಡೆಯಲು ಸಿದ್ಧತೆ
|
2 |
+
ಬೆಂಗಳೂರು,ಮೇ 5-ಹಾಸನದ ಪೆನ್ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ಬ್ಲೂ ಕಾರ್ನರ್ ನೋಟೀಸ್ ಜಾರಿಯಾಗಿದ್ದು, ಅವರು ಎಲ್ಲಿದ್ದಾರೆ ಎಂಬ ಮಾಹಿತಿ ಎಸ್ಐಟಿ ಅಧಿ ಕಾರಿಗಳಿಗೆ ಗೊತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಅಂತಾರಾಷ್ಟ್ರೀಯ ಪೊಲೀಸ್ ಸಂಸ್ಥೆ ಇಂಟರ್ಪೋಲ್ಗೆ ತಿಳಿಸಿ ಬ್ಲೂ ಕಾರ್ನರ್ ನೋಟೀಸ್ ಜಾರಿಗೊಳಿಸಲಾಗಿದೆ.
|
4 |
+
ವಿವಿಧ ದೇಶಗಳ ಪೊಲೀಸರನ್ನು ಸಂಪರ್ಕಿಸಿ ಮೊಬೈಲ್ನ ಲೊಕೇಶನ್ ಆಧರಿಸಿ ಪತ್ತೆ ಹಚ್ಚುವ ಕಾರ್ಯ ನಡೆದಿದೆ. ಅದರ ಬಳಿಕ ಎಸ್ಐಟಿ ಅಧಿ ಕಾರಿಗಳು ವಿದೇಶದಿಂದ ಕರೆತರುವ ಪ್ರಕ್ರಿಯೆಗಳಿಗೆ ಚಾಲನೆ ನೀಡಲಿದ್ದಾರೆ. ಅದಕ್ಕೆ ಅಗತ್ಯವಾದ ಸಹಕಾರಗಳನ್ನು ಸರ್ಕಾರ ನೀಡಲಿದೆ ಎಂದು ಹೇಳಿದರು.
|
5 |
+
ಪ್ರಕರಣದಲ್ಲಿ ಎಸ್ಐಟಿ ಅಧಿ ಕಾರಿಗಳು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುತ್ತಾರೆ. ಮುಂದಿನ ದಿನಗಳಲ್ಲಿ ಎಸ್ಐಟಿಯ ಮೇಲೂ ಆಪಾದನೆಗಳು ಬರುವ ಸಾಧ್ಯತೆಯಿದೆ. ಹೀಗಾಗಿ ನಿಯಮ ಅನುಸಾರವೇ ಕಾನೂನಿನ ಚೌಕಟ್ಟಿನಲ್ಲಿ ಎಲ್ಲವೂ ನಡೆಯಬೇಕು. ನಿಯಮ ಬಿಟ್ಟು ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಸರ್ಕಾರ ಸ್ಪಷ್ಟ ಸೂಚನೆ ನೀಡಿದೆ ಎಂದು ಹೇಳಿದರು.
|
6 |
+
ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿ ಕಾರಿಗಳು ಎಲ್ಲಾ ರೀತಿಯ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಎಂದು ನನಗೆ ಗೊತ್ತಿಲ್ಲ. ಆದರೆ ಎಸ್ಐಟಿ ಅಧಿ ಕಾರಿಗಳಿಗೆ ಮಾಹಿತಿ ಇದೆ. ಭಾರತಕ್ಕೆ ಕರೆದುಕೊಂಡು ಬರುವವರೆಗೂ ಮಾಹಿತಿಯನ್ನು ಬಹಿರಂಗಪಡಿಸುವುದಿಲ್ಲ ಎಂದರು.
|
7 |
+
ತನಿಖೆಗೆ ಸಂಬಂಧಪಟ್ಟಂತೆ ಯಾವುದೇ ವಿಚಾರಗಳನ್ನು ನಾವು ಬಹಿರಂಗಪಡಿಸುತ್ತಿಲ್ಲ. ಮೇಲ್ನೋಟಕ್ಕೆ ಸಾಧುವಾದಂತಹ ಮಾಹಿತಿಯನ್ನು ನಾನೇ ನೇರವಾಗಿ ಮಾತನಾಡುತ್ತಿದ್ದೇನೆ. ಉಳಿದಂತೆ ತನಿಖೆಯ ಆಂತರಿಕ ಮಾಹಿತಿಗಳು ಎಸ್ಐಟಿಯ ಒಳ ವಲಯದಲ್ಲೇ ನಡೆಯುತ್ತಿದೆ. ನಮಗೂ ಕೂಡ ತಿಳಿಯುವುದಿಲ್ಲ. ಒಂದು ವೇಳೆ ಎಸ್ಐಟಿಯಿಂದ ವಿಚಾರಗಳು ಬಹಿರಂಗಗೊಳ್ಳುತ್ತವೆ ಎಂದಾದರೆ ಮತ್ತಷ್ಟು ಬಿಗಿಗೊಳಿಸುವುದಾಗಿ ಕುಮಾರಸ್ವಾಮಿಯವರ ಟೀಕೆಗೆ ಪ್ರತಿಕ್ರಿಯಿಸಿದರು.
|
8 |
+
ಎಸ್ಐಟಿ ತನಿಖೆ ಯಾವ ರೀತಿ ನಡೆಯುತ್ತಿದೆ ಎಂದು ವಕ್ತಾರರ ಮಾದರಿಯಲ್ಲಿ ತಾವು ವಿವರ ನೀಡಲು ಸಾಧ್ಯವಿಲ್ಲ. ಎಸ್ಐಟಿ ಕಾನೂನು ಪ್ರಕಾರ ದೂರು ಆಧರಿಸಿ ರೇವಣ್ಣ ಅವರನ್ನು ಬಂಧಿಸಿದೆ. ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಮುಂದಿನ ಪ್ರಕ್ರಿಯೆಯನ್ನು ಕೈಗೊಳ್ಳುತ್ತಾರೆ ಎಂದು ಹೇಳಿದರು.
|
9 |
+
ವಿಡಿಯೋ ಬಹಿರಂಗವಾದ ಮೂಲಗಳು ಸೇರಿದಂತೆ ಪ್ರಕರಣವನ್ನು ಎಲ್ಲಾ ಆಯಾಮಗಳಲ್ಲೂ ಎಸ್ಐಟಿ ಅಧಿ ಕಾರಿಗಳು ತನಿಖೆ ನಡೆಸುತ್ತಾರೆ. ಕಾರ್ತಿಕ್ ಎಂಬಾತ ಎಲ್ಲಿದ್ದಾರೆ? ಎಂಬ ಬಗ್ಗೆಯೂ ಎಸ್ಐಟಿ ಅಧಿ ಕಾರಿಗಳಿಗೆ ಮಾಹಿತಿ ಇರಬಹುದು ಎಂದರು.
|
10 |
+
ಪ್ರಜ್ವಲ್ ವಶಕ್ಕೆ ಪಡೆಯಲು ಎಸ್ಐಟಿ ಸಿದ್ಧತೆ :ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಇಂದು ಸಂಜೆ ಅಥವಾ ನಾಳೆ ಭಾರತಕ್ಕೆ ವಾಪಾಸ್ ಆಗುವ ಸಾಧ್ಯತೆಯಿದ್ದು, ಅವರನ್ನು ವಶಕ್ಕೆ ಪಡೆಯಲು ಎಸ್ಐಟಿ ಬೆಂಗಳೂರು, ಮಂಗಳೂರು ಮತ್ತು ಗೋವಾ ಸೇರಿದಂತೆ ವಿವಿಧ ವಿಮಾನ ನಿಲ್ದಾಣದಲ್ಲಿ ತೀವ್ರ ನಿಗಾ ವಹಿಸಿದೆ.
|
11 |
+
ಸಂಸದ ಪ್ರಜ್ವಲ್ ಪತ್ತೆಗಾಗಿ ಲುಕ್ಔಟ್ ನೋಟಿಸ್ ಜಾರಿ ಮಾಡಿರುವುದರಿಂದ ಅವರು ಭಾರತಕ್ಕೆ ಬಂದು ಇಳಿಯುತ್ತಿದ್ದಂತೆ ವಶಕ್ಕೆ ಪಡೆಯಲು ಎಸ್ಐಟಿ ಸಿದ್ಧತೆ ಮಾಡಿಕೊಂಡಿದೆ. ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧ ಸಾಕಷ್ಟು ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ರೇವಣ್ಣ ಅವರಿಗೆ ಎಸ್ಐಟಿ ನೋಟಿಸ್ ನೀಡಿತ್ತು. ವಿದೇಶದಲ್ಲಿ ಇರುವುದರಿಂದ ವಿಚಾರಣೆಗೆ ಹಾಜರಾಗಲು 7 ದಿನಗಳು ಕಾಲಾವಕಾಶ ನೀಡಬೇಕೆಂದು ತಮ ವಕೀಲರ ಮೂಲಕ ಪ್ರಜ್ವಲ್ ಅವರು ಮನವಿ ಮಾಡಿದ್ದರು. ಆದರೆ ಈ ಮನವಿಯನ್ನು ತಿರಸ್ಕರಿಸಿದ್ದ ಎಸ್ಐಟಿ ಲುಕ್ಔಟ್ ನೋಟಿಸ್ ಜಾರಿ ಮಾಡಿತ್ತು.
|
12 |
+
ನಂತರ ಬ್ಲೂ ಕಾರ್ನರ್ ಅಸ್ತ್ರ ಪ್ರಯೋಗಿಸಿ ಬಂಧನಕ್ಕೆ ಸಿದ್ಧತೆ ನಡೆಸಿದೆ. ಈ ನಡುವೆ ಜೆಡಿಎಸ್ನ ಮಾಜಿ ಸಂಸದರೊಬ್ಬರು ಪ್ರಜ್ವಲ್ ರೇವಣ್ಣ ಅವರು ಭಾರತಕ್ಕೆ ಹಿಂದಿರುಗುವ ಮಾಹಿತಿ ನೀಡಿದ್ದರು. ಲೈಂಗಿಕ ದೌರ್ಜನ್ಯದ ಪ್ರಕರಣ ಪ್ರಮುಖದ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಇಂದು ಸಂಜೆ ಅಥವಾ ನಾಳೆ ಭಾರತಕ್ಕೆ ಹಿಂದಿರುಗುವ ಸಾಧ್ಯತೆ ದಟ್ಟವಾಗಿದ್ದು, ಅವರನ್ನು ವಶಕ್ಕೆ ಪಡೆಯಲು ಎಸ್ಐಟಿ ಸಿದ್ಧತೆ ಮಾಡಿಕೊಂಡಿದೆ.
|
13 |
+
ಸಿಐಡಿ ಠಾಣೆಯಲ್ಲಿ ಮಹಿಳೆಯೊಬ್ಬರು ಹಾಗೂ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಸಂಸದರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ದಾಖಲಿಸಿದ್ದಾರೆ.ಮಹಿಳೆಯ ಅಪಹರಣ ಪ್ರಕರಣದಲ್ಲಿ ತನ್ನ ತಂದೆ ಎಚ್.ಡಿ. ರೇವಣ್ಣ ಅವರಿಗೆ ಜಾಮೀನು ಸಿಗದೆ ಹಿನ್ನೆಲೆಯಲ್ಲಿ ಎಸ್ಐಟಿ ನಿನ್ನೆ ಅವರನ್ನು ಬಂಧಿಸಿದೆ.ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಶೀಘ್ರದಲ್ಲೇ ವಿದೇಶದಿಂದ ಭಾರತಕ್ಕೆ ವಾಪಾಸ್ ಆಗುವ ಸಾಧ್ಯತೆ ಇದೆ.
|
14 |
+
ಕ್ಷಣಕ್ಕೊಂದು ತಿರುವು.. :ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಹಾಸನ ಪೆನ್ಡ್ರೈವ್ ಪ್ರಕರಣ ದಿನಕ್ಕೊಂದು, ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.ಹಾಸನದಲ್ಲಿ ಹರಿದಾಡಿದೆ ಎನ್ನಲಾದ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಸಂತ್ರಸ್ತೆಯರು ದೂರು ನೀಡಲು ಮುಂದೆ ಬಂದಿದ್ದಾರೆ ಎಂದು ತಿಳಿದು ಬಂದಿದೆ.
|
15 |
+
ಈಗಾಗಲೇ ಮಹಿಳೆಯೊಬ್ಬರು ಸಿಐಡಿ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದು, ತನಿಖೆ ���ಡೆಸಲಾಗುತ್ತಿದೆ. ಮತ್ತೆ ಮೂವರು ಮಹಿಳೆಯರು ದೂರು ನೀಡಲು ಮುಂದೆ ಬಂದಿರುವುದರಿಂದ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.
|
16 |
+
ಮೂವರು ಸಂತ್ರಸ್ತೆಯರು ಎಸ್ಐಟಿ ಅಧಿಕಾರಿಗಳನ್ನು ಸಂಪರ್ಕಿಸಿ ದೂರು ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಎಸ್ಐಟಿ ಪರಿಶೀಲನೆ ನಡೆಸುತ್ತಿದ್ದು, ಮೂವರಿಂದ ಪ್ರತ್ಯೇಕ ದೂರು ದಾಖಲಾಗುವ ಸಾಧ್ಯತೆಯಿದೆ.ಮಹಿಳೆಯ ಅಪಹರಣ ಪ್ರಕರಣದಲ್ಲಿ ಈಗಾಗಲೇ ಶಾಸಕ ರೇವಣ್ಣ ಅವರನ್ನು ಬಂಧಿಸಲಾಗಿದೆ. ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಪ್ರಮುಖ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿಲು ಎಸ್ಐಟಿ ಬ್ಲೂ ಕಾರ್ನರ್ ಅಸ್ತ್ರ ಪ್ರಯೋಗಿಸಲು ಸಿದ್ಧತೆ ನಡೆಸಿದೆ.
|
eesanje/url_46_156_11.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಎಚ್.ಡಿ.ರೇವಣ್ಣ ಅವರನ್ನು ಸುದೀರ್ಘ ವಿಚಾರಣೆಗೊಳಪಡಿಸಿದ ಎಸ್ಐಟಿ
|
2 |
+
ಬೆಂಗಳೂರು, ಮೇ 5-ಮಹಿಳೆಯ ಅಪಹರಣ ಆರೋಪ ಪ್ರಕರಣದಲ್ಲಿ ನಿನ್ನೆ ಸಂಜೆ ಬಂಧನವಾಗಿರುವ ಶಾಸಕ ಎಚ್.ಡಿ. ರೇವಣ್ಣ ಅವರನ್ನು ಇಂದು ಎಸ್ಐಟಿ ತೀವ್ರ ವಿಚಾರಣೆಗೆ ಒಳಪಡಿಸಿದೆ.ಸಿಐಡಿಯ ಎಸ್ಐಟಿ ಕಚೇರಿಯಲ್ಲಿ ರೇವಣ್ಣ ಅವರನ್ನು ತೀವ್ರ ವಿಚಾರಣೆ ಗೊಳಪಡಿಸಿದ್ದು, ಪ್ರಕರಣದ ಬಗ್ಗೆ ಪ್ರಶ್ನೆಗಳನ್ನು ಕೇಳಿ ಮಾಹಿತಿ ಕಲೆ ಹಾಕಲಾಗುತ್ತಿದೆ.
|
3 |
+
ಮೈಸೂರು ಜಿಲ್ಲೆಯ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ಮಹಿಳೆಯನ್ನು ಯಾಕೆ ಅಪಹರಿಸಲಾಯಿತು? ಅಪಹರಿಸಿ ಅವರನ್ನು ಎಲ್ಲಿ ಇಡಲಾಗಿತ್ತು? ಮಹಿಳೆಯ ಮೇಲೆ ಹಲ್ಲೆ ನಡೆಸಲಾಗಿದೆಯೇ ಎಂಬಿತ್ಯಾದಿ ಪ್ರಶ್ನೆಗಳನ್ನು ರೇವಣ್ಣ ಅವರಿಗೆ ಕೇಳಿದ್ದಾರೆ.
|
4 |
+
ಇದೇ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಸತೀಶ್ ಬಾಬು ಅವರನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧವೂ ಕೂಡ ವಿಚಾರಣೆ ನಡೆಸಿ ರೇವಣ್ಣ ಅವರಿಂದ ಹಲವು ಮಾಹಿತಿಗಳನ್ನುಪಡೆಯಲಾಗುತ್ತಿದೆ.
|
5 |
+
ಈ ಮಹಿಳೆ ಎಷ್ಟು ವರ್ಷದಿಂದ ನಿಮಗೆ ಪರಿಚಿತರು? ಭವಾನಿ ರೇವಣ್ಣ ಅವರು ಮನೆಯಲ್ಲಿಲ್ಲದ ಸಮಯದಲ್ಲಿ ಸ್ಟೋರ್ ರೂಂ ಹಾಗೂ ಅಡುಗೆ ಮನೆಯಲ್ಲಿ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿತ್ತೆ…? ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿ ಎಸ್ಐಟಿ ತೀವ್ರ ವಿಚಾರಣೆ ನಡೆಸಿದೆ.
|
6 |
+
ನಿಮ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ಎಲ್ಲಿ ವಾಸ ಮಾಡುತ್ತಿದ್ದರು. ಅವರ ಕೃತ್ಯ ನಿಮಗೆ ಗೊತ್ತಿರಲಿಲ್ಲವೇ. ಚುನಾವಣಾ ಸಂದರ್ಭದಲ್ಲಿ ಪೆನ್ಡ್ರೈವ್ಗಳ ಹಂಚಿಕೆ ನಿಮಗೆ ಗೊತ್ತಾಗಲಿಲ್ಲವೇ ಎಂದು ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರಿಗೆ ಪ್ರಶ್ನಿಸಿದ್ದಾರೆ. ಸಂಸದರ ಕಾರು ಚಾಲಕ ಕಾರ್ತಿಕ್ ಅವರು ಕೆಲಸ ಬಿಡಲು ಕಾರಣವೇನು, ಅವರು ಹಾಗೂ ಅವರ ಕುಟುಂಬದ ಮೇಲೆ ಹಲ್ಲೆ ನಡೆಸಲಾಗಿತ್ತೇ? ಎಂಬುದರ ಬಗ್ಗೆ ಕೂಡ ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
|
7 |
+
ರೇವಣ್ಣ ಅವರು ಕೆಲವು ಪ್ರಶ್ನೆಗಳಿಗೆ ಉತ್ತರ ನೀಡಿದ್ದರೆ, ಇನ್ನು ಹಲವು ಪ್ರಶ್ನೆಗಳಿಗೆ ಉತ್ತರಿಸಿಲ್ಲ ಎನ್ನಲಾಗಿದೆ. ಎಸ್ಐಟಿ ವಶದಲ್ಲಿರುವ ರೇವಣ್ಣ ಅವರನ್ನು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.
|
eesanje/url_46_156_12.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಕಾನೂನಿಗಿಂತ ಯಾರೂ ದೊಡ್ಡವರಲ್ಲ : ಮಾಜಿ ಸಿಎಂ ಯಡಿಯೂರಪ್ಪ
|
2 |
+
ಶಿವಮೊಗ್ಗ,ಮೇ5-ಕಾನೂನಿನ ಪ್ರಕಾರ ಏನಾಗಬೇಕೋ ಅದೇ ಆಗುತ್ತದೆ. ನೆಲದ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
|
3 |
+
ಮಹಿಳೆ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಪೆನ್ಡ್ರೈವ್ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾನೂನಿನ ಪ್ರಕಾರವೇ ಎಲ್ಲ ಕ್ರಮಗಳು ಜರುಗುತ್ತವೆ ಎಂದು ತಿಳಿಸಿದರು.
|
4 |
+
ಕಾನೂನಿಗಿಂತ ಯಾರೂ ದೊಡ್ಡವರಲ್ಲ. ತಪ್ಪು ಮಾಡಿದ್ದರೆ ಶಿಕ್ಷೆಯಾಗಬೇಕೆಂದು ಸ್ವತಃ ಕುಮಾರಸ್ವಾಮಿಯವರೇ ಹೇಳಿದ್ದಾರೆ. ಕಾನೂನಿಗೆ ತಲೆ ಬಾಗಿ ರೇವಣ್ಣ ಎಸ್ಐಟಿಗೆ ಶರಣಾಗಿದ್ದಾರೆ. ಮುಂದೆ ಕಾನೂನು ಪ್ರಕ್ರಿಯೆಗಳು ನಡೆಯುತ್ತವೆ ಎಂದರು.
|
5 |
+
ಇಂತಹ ಇಳಿ ವಯಸ್ಸಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ನೋವು ತರಿಸುವ ಘಟನೆ ನಡೆದಿದ್ದು ತುಂಬಾ ಬೇಸರ ತಂದಿದೆ. ಆದಷ್ಟು ಬೇಗ ಸತ್ಯಾಂಶ ಹೊರಬರಬೇಕು. ಗೌಡರು ಇದರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬಾರದು. ಅವರು ತಮ್ಮ ಆರೋಗ್ಯದ ಕಡೆ ಗಮನಹರಿಸಲಿ ಎಂದು ಬಿಎಸ್ವೈ ಮನವಿ ಮಾಡಿದರು.
|
eesanje/url_46_156_2.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ರೇವಣ್ಣ ವಿರುದ್ಧ ದೂರು ಕೊಡಿಸಿದ್ದು ಕೆ.ಆರ್.ನಗರ ಶಾಸಕ : ಲಿಂಗೇಶ್ ಗಂಭೀರ ಆರೋಪ
|
2 |
+
ಹಾಸನ,ಮೇ 6-ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ವಿರುದ್ಧ ಮಹಿಳೆ ಅಪಹರಣದ ದೂರನ್ನು ಕೆ.ಆರ್.ನಗರ ಶಾಸಕರು ಕೊಡಿಸಿದ್ದಾರೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ಗಂಭೀರ ಆರೋಪ ಮಾಡಿದ್ದಾರೆ.
|
3 |
+
ಕೆ.ಆರ್.ನಗರದ ಮಹಿಳೆ ಅಪಹರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರ ವಿರುದ್ಧ ದೂರು ದಾಖಲಾಗುವುದರ ಹಿಂದೆ ಅಲ್ಲಿನ ಶಾಸಕರ ಪಾತ್ರವಿದೆ ಎಂದು ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನದಲ್ಲಿನ ಅಶ್ಲೀಲ ಪೆನ್ಡ್ರೈವ್ ವಿಚಾರದ ಬಗ್ಗೆ ಎಸ್ಐಟಿ ತನಿಖೆ ನಡೆಸುತ್ತಿರುವುದನ್ನು ನಾವು ಸ್ವಾಗತಿಸುತ್ತೇವೆ.
|
4 |
+
ಆದರೆ ಎಸ್ಐಟಿ ಪೆನ್ಡ್ರೈವ್ ಹಂಚಿದವರ ಬಗ್ಗೆ ತನಿಖೆ ಮಾಡದೇ ದಿಕ್ಕು ತಪ್ಪಿರುವಂತೆ ಕಾಣುತ್ತಿದೆ ಎಂದು ಆಪಾದಿಸಿದರು. ರೇವಣ್ಣ ಹಣಿಯಲು ಎಸ್ಐಟಿ ಅನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ ಅವರು, ರೇವಣ್ಣ ಅವರ ಮೇಲೆ ಮೊದಲು ಮಹಿಳೆಯೊಬ್ಬರಿಂದ ದೂರು ದಾಖಲಾಯಿತು. ಆ ಮಹಿಳೆಯಿಂದ ದೂರು ಕೊಡಿಸಿದವರು ಯಾರು? ಬಳಿಕ ಅಪಹರಣದ ಪ್ರಕರಣ ದಾಖಲಾಗಿದೆ ಎಂದರು.
|
5 |
+
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಮನೆಯಲ್ಲಿ ರೇವಣ್ಣ ಅವರು ಅವಿತುಕೊಂಡಿರಲಿಲ್ಲ. ರೇವಣ್ಣ ಅವರಿಗೆ ತಂದೆ ತಾಯಿ ಎಂದರೆ ದೇವರಷ್ಟೇ ಗೌರವ. ಹಾಗಾಗಿ ದೇವೇಗೌಡರ ಆರೋಗ್ಯ ವಿಚಾರಿಸಲು ಹೋಗಿದ್ದರು. ಅವರನ್ನು ಬಂಧಿಸದೇ ವಿಚಾರಣೆ ಮಾಡಬಹುದಿತ್ತು, ತನಿಖೆಗೆ ಅವರು ಸಹಕಾರ ಕೊಡುತ್ತಿದ್ದರು, ರಾಜಕೀಯ ದುರುದ್ದೇಶದಿಂದ, ಹತಾಶ ಮನೋಭಾವದಿಂದ ಈ ರೀತಿ ಮಾಡಲಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
|
6 |
+
ಗುಂಡಿಗೆ ಬಿದ್ದಾಗ ಆಳಿಗೊಂದು ಕಲ್ಲು ಎನ್ನುವ ರೀತಿಯಲ್ಲಿ ದೇವೇಗೌಡರ ಕುಟುಂಬವನ್ನು ಮುಗಿಸುವ ಹುನ್ನಾರ ಮಾಡಿದ್ದಾರೆ. ಆದರೆ ಅದು ಯಾವುದೇ ಕಾರಣಕ್ಕೂ ಸಾಧ್ಯವಾಗುವುದಿಲ್ಲ ಎಂದರು.
|
7 |
+
ತಪ್ಪು ಮಾಡಿದವರು ರಾಜಾರೋಷವಾಗಿ ಓಡಾಡಿಕೊಂಡು ಇದ್ದರೂ ಅವರ ವಿರುದ್ಧ ಧ್ವನಿ ಎತ್ತುವವರೇ ಇಲ್ಲ. ಪೆನ್ಡ್ರೈವ್ ಪ್ರಕರಣದ ಬಳಿಕ ಜೆಡಿಎಸ್ನ ಕಾರ್ಯಕರ್ತರು ಸಾಕಷ್ಟು ನೊಂದಿದ್ದಾರೆ ಎಂದ ಅವರು, ಹರಿದಾಡುತ್ತಿರುವ ಅಶ್ಲೀಲ ವಿಡಿಯೋ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಎಸ್ಪಿಯವರಲ್ಲಿ ಮನವಿ ಮಾಡುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು.ಶಾಸಕ ಸಿ.ಎನ್.ಬಾಲಕೃಷ್ಣ ಸೇರಿದಂತೆ ಪಕ್ಷದ ಹಲವು ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
|
eesanje/url_46_156_3.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಚುನಾವಣಾ ಅಕ್ರಮ : ರಾಜ್ಯದಲ್ಲಿ ಈವರೆಗೆ 452.72 ಕೋಟಿ ಮೊತ್ತದ ನಗದ, ಮದ್ಯ ಜಪ್ತಿ
|
2 |
+
ಬೆಂಗಳೂರು,ಮೇ 6-ಪ್ರಸಕ್ತ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇದುವರೆಗೂ 452.72 ಕೋಟಿ ರೂ. ಮೊತ್ತದ ಮದ್ಯ, ಡ್ರಗ್ಸ್, ಚಿನ್ನ, ಬೆಳ್ಳಿ, ವಜ್ರ, ಉಚಿತ ಉಡುಗೊರೆ ಹಾಗೂ ನಗದನ್ನು ಜಪ್ತಿ ಮಾಡಲಾಗಿದೆ.
|
3 |
+
ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿ ಬಂದಾಗಿನಿಂದ ಪ್ರತಿನಿತ್ಯ ಒಂದಲ್ಲಾ ಒಂದು ಕಡೆ ಈ ರೀತಿ ಜಪ್ತಿಯಾಗುತ್ತಲೇ ಇದೆ. ಈ ಬಾರಿ ದಾಖಲೆ ಪ್ರಮಾಣದಲ್ಲಿ ಹಣ, ಚಿನ್ನ ಹಾಗೂ ಇತರ ವಸ್ತುಗಳು ಜಪ್ತಿಯಾಗಿವೆ.
|
4 |
+
ಉತ್ತರಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆದಾಯ ತೆರಿಗೆ ಇಲಾಖೆಯವರು 47,47,000 ರೂಪಾಯಿ ವೌಲ್ಯದ 750 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಕ್ಷಿಪ್ರಪಡೆಗಳು, ಸ್ಥರ ಕಣ್ಗಾವಲು ತಂಡಗಳು 143.16 ಕೋಟಿ ರೂ. ಮೊತ್ತದ ಮದ್ಯ, ಡ್ರಗ್್ಸ, ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ನಗದನ್ನು ಜಪ್ತಿ ಮಾಡಿದ್ದಾರೆ.
|
5 |
+
ಅಬಕಾರಿ ಇಲಾಖೆಯವರು 178.48 ಕೋಟಿ ರೂ. ಮೊತ್ತದ ಮದ್ಯ ಹಾಗೂ ಡ್ರಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದರೆ, ಆದಾಯ ತೆರಿಗೆ ಅಧಿ ಕಾರಿಗಳು 49.97 ಕೋಟಿ ರೂ. ಮೊತ್ತದ ನಗದು, ಚಿನ್ನ, ವಜ್ರಹಾಗೂ ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
|
6 |
+
ವಾಣಿಜ್ಯ ತೆರಿಗೆ ಇಲಾಖೆಯವರು 80.91 ಕೋಟಿ ರೂ. ಮೊತ್ತದ ಚಿನ್ನ, ಬೆಳ್ಳಿ, ಉಚಿತ ಉಡುಗೊರೆಗಳಿಗೆ ಸಂಬಂಧಿಸಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ 2,301 ಎಫ್ಐಆರ್ ಅನ್ನು ದಾಖಲಿಸಲಾಗಿದ್ದು, 2,071 ವಿವಿಧ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿ ಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
|
eesanje/url_46_156_4.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
5 ತಿಂಗಳಿಂದ ವೇತನ ನೀಡದ ಗ್ಯಾರಂಟಿ ಸರ್ಕಾರ : 108 ಆಂಬ್ಯುಲೆನ್ಸ್ ನೌಕರರ ಮುಷ್ಕರ
|
2 |
+
ಬೆಂಗಳೂರು,ಮೇ6-ಕಳೆದ ಐದು ತಿಂಗಳಿಂದ ವೇತನ ಸಿಗದ ಮತ್ತು ಸಂಬಳ ಕಡಿತದಂತಹ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ 108 ಆಂಬ್ಯುಲೆನ್ಸ್ ನೌಕರರು ರಾಜ್ಯಾದ್ಯಂತ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಇಂದು ರಾತ್ರಿ 8 ಗಂಟೆಯಿಂದ ಮುಷ್ಕರ ಆರಂಭವಾಗಲಿದೆ. ಇದರಿಂದಾಗಿ ರಾಜ್ಯಾದ್ಯಂತ ಆಂಬ್ಯುಲೆನ್ಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.
|
3 |
+
ಕರ್ನಾಟಕದಾದ್ಯಂತ ಸುಮಾರು 715 ಆಂಬ್ಯುಲೆನ್ಸ್ ಗಳು ಮತ್ತು ಸರಿಸುಮಾರು 3,500 ಉದ್ಯೋಗಿಗಳು 108 ಆಂಬ್ಯುಲೆನ್್ಸ ಅಸೋಸಿಯೇಷನ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿಯೇ ತುರ್ತು ಆರೋಗ್ಯ ಸೇವೆಗಳ ಮೇಲೆ ಮುಷ್ಕರ ಪರಿಣಾಮ ಬೀರುವ ಸಾಧ್ಯತೆ ಇದೆ.
|
4 |
+
ಆಂಬ್ಯುಲೆನ್್ಸ ಸೇವೆಯನ್ನು ನಿರ್ವಹಿಸುವ ಜಿವಿಕೆ ಸಂಸ್ಥೆ ಮತ್ತು ರಾಜ್ಯ ಸರ್ಕಾರದ ನಡುವಿನ ಅಸಮಾಧಾನದಿಂದ ಈ ಮುಷ್ಕರ ನಡೆಯುತ್ತಿದ್ದು, ಚಾಲಕರು ಮತ್ತು ವೈದ್ಯಕೀಯ ತಂತ್ರಜ್ಞರು ಸೇರಿದಂತೆ ನೌಕರರಿಗೆ ಫೆಬ್ರವರಿ, ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಮೂರು ತಿಂಗಳ ಸಂಬಳವನ್ನು ಪಾವತಿಸಿಲ್ಲ ಎಂದು 108 ಆಂಬ್ಯುಲೆನ್ಸ್ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ.
|
5 |
+
ಹೆಚ್ಚುವರಿಯಾಗಿ ಜನವರಿಯಲ್ಲಿ ಸಂಬಳ ಕಡಿತವಾಗಿದೆ. 30,000 ರೂ. ಪಡೆಯುವವರು ಕೇವಲ 12,000 ರೂ.ಸಂಬಳ ಪಡೆದಿದ್ದಾರೆ. ಕಳೆದ ಐದು ತಿಂಗಳಿನಿಂದ ಎರಡು ತಿಂಗಳ ವೇತನಕ್ಕೆ ಸಮನಾದ ವೇತನವನ್ನು ಮಾತ್ರ ಪಡೆದಿದ್ದೇವೆ ಎಂದು ಸಂಘದ ನೌಕರರು ಹೇಳಿದ್ದಾರೆ.
|
6 |
+
ಸಂಘವು ಬೆಂಗಳೂರಿನಲ್ಲಿ ಸುಮಾರು 90 ಆಂಬ್ಯುಲೆನ್ಸ್ ಗಳನ್ನು ನಿರ್ವಹಿಸುತ್ತಿದ್ದು, 400ಕ್ಕೂ ಹೆಚ್ಚು ಕೆಲಸಗಾರರನ್ನು ಹೊಂದಿದೆ. ಕರ್ನಾಟಕ ರಾಜ್ಯ ಆರೋಗ್ಯ ವಿಮಾ 108 ನೌಕರರ ಸಂಘವು ಮುಷ್ಕರವನ್ನು ಆಯೋಜಿಸುತ್ತಿದೆ. ತಮ್ಮ ಬೇಡಿಕೆಗಳನ್ನು ತ್ವರಿತವಾಗಿ ಈಡೇರಿಸದಿದ್ದರೆ ಸೇವೆಯನ್ನು ಸ್ಥಗಿತಗೊಳಿಸಲು ಸಿಬ್ಬಂದಿ ಸಿದ್ಧರಿದ್ದಾರೆ ಎಂದು ಒಕ್ಕೂಟ ಸ್ಪಷ್ಟಪಡಿಸಿದೆ.
|
7 |
+
ಇಷ್ಟು ತಿಂಗಳಿನಿಂದ ಕಡಿತಗೊಳಿಸಿರುವ ವೇತನವನ್ನು ಇಂದು ಸಂಜೆಯೊಳಗೆ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಆರೋಗ್ಯ ಇಲಾಖೆಗೆ ಮನವಿ ಸಲ್ಲಿಸಲಾಗಿದೆ. ಇಲ್ಲದೆ ಇದ್ದರೇ ಇಂದು ರಾತ್ರಿ 8 ಗಂಟೆಯಿಂದ ಮುಷ್ಕರ ನಡೆಸಲಿದ್ದೇವೆ ಎಂದು ನೌಕರರು ಎಚ್ಚರಿಕೆ ನೀಡಿದ್ದಾರೆ.
|
8 |
+
ವೇತನ ಬಿಡುಗಡೆ ಮಾಡದೇ ಇದ್ದರೇ, ಇಂದು ರಾತ್ರಿಯಿಂದಲೇ ರಾಜ್ಯದಾದ್ಯಂತ ಒಟ್ಟು 711 ವಾಹನಗಳು 108 ಆಂಬ್ಯುಲೆನ್ಸ್ ಸೇವೆಯನ್ನು ಸ್ಥಗಿತಗೊಳಿಸಲಿವೆ. ಈ ಕಠಿಣ ನಿರ್ಧಾರ ಅನೇಕರ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ. ವಿಶೇಷವಾಗಿ ವೈದ್ಯಕೀಯ ಆರೈಕೆಯ ಅಗತ್ಯವಿರುವವರಿಗೆ ತುಂಬಾ ಕಷ್ಟವಾಗಲಿದೆ. ಆಂಬ್ಯುಲೆನ್್ಸ ಸೇವೆಯ ಅಲಭ್ಯತೆಯಿಂದ ರೋಗಿಗಳಿಗೆ ಯಾವುದೇ ತೊಂದರೆ ಉಂಟಾದರೆ ಸರ್ಕಾರವೇ ನೇರ ಹೊಣೆ ಎಂದು ಒಕ್ಕೂಟ ಸ್ಪಷ್ಟಪಡಿಸಿದೆ.
|
9 |
+
ನಾವು ಈಗಾಗಲ��� 108 ಸೇವಾ ಪೂರೈಕೆದಾರರಿಗೆ ಅಗತ್ಯ ಸೇವೆಗಳ ನಿರ್ವಹಣೆ ಕಾಯಿದೆ (ಎಸ್ಮಾ) ಸೂಚನೆಯನ್ನು ನೀಡಿದ್ದೇವೆ. ಆದ್ದರಿಂದ ಯಾವುದೇ ಸಮಯದಲ್ಲಿ 108 ತುರ್ತು ಆಂಬ್ಯುಲೆನ್ಸ್ ಸೇವೆಗಳಿಗೆ ಅಡ್ಡಿಯಾಗುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿ ಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
|
eesanje/url_46_156_5.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಎಸ್ಐಟಿ ಮುಂದೆ ಹಾಜರಾಗುವಂತೆ ಪ್ರಜ್ವಲ್ ರೇವಣ್ಣ ಮೇಲೆ ಕುಟುಂಬಸ್ಥರು ಹಾಗೂ ಹಿತೈಷಿಗಳು ಒತ್ತಡ
|
2 |
+
ಬೆಂಗಳೂರು,ಮೇ 6-ವಿಶೇಷ ತನಿಖಾ ತಂಡದ ಮುಂದೆ ಶೀಘ್ರದಲ್ಲೇ ಹಾಜರಾಗುವಂತೆ ಹಾಸನದ ಅಶ್ಲೀಲ ಪೆನ್ಡ್ರೈವ್ ಹಾಗೂ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ಅವರ ಕುಟುಂಬಸ್ಥರು ಹಾಗೂ ಹಿತೈಷಿಗಳು ಒತ್ತಡ ಹೇರುತ್ತಿದ್ದಾರೆ.
|
3 |
+
ಆರೋಪ ಕೇಳಿ ಬಂದ ಕೂಡಲೇ ರಾಜ್ಯಸರ್ಕಾರ ತನಿಖೆಗೆ ಎಸ್ಐಟಿ ರಚಿಸಿದೆ. ಎಸ್ಐಟಿ ಮುಂದೆ ಹಾಜರಾಗುವಂತೆ ಪ್ರಜ್ವಲ್ ರೇವಣ್ಣ ಅವರ ಕುಟುಂಬಸ್ಥರು, ಆಪ್ತರು ಒತ್ತಾಯಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
|
4 |
+
ಎಸ್ಐಟಿ ವಿಚಾರಣೆಗೆ ಹಾಜರಾಗದೆ ದೂರ ಉಳಿದರೆ ಅನುಮಾನಗಳು ಹೆಚ್ಚಾಗುತ್ತಾ ಹೋಗುತ್ತವೆ. ಅಲ್ಲದೆ, ಈ ಆರೋಪ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದೆ. ವಿಚಾರಣೆಗೆ ಹಾಜರಾಗದೆ ರಕ್ಷಣೆ ಪಡೆಯುವುದು ಕಷ್ಟವಾಗಬಹುದು ಎಂಬ ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ.
|
5 |
+
ಆರೋಪ ಕೇಳಿಬಂದ ಕೂಡಲೇ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ತೆರಳಿದ್ದಾರೆ ಎಂಬ ಸುದ್ದಿ ದಟ್ಟವಾಗಿ ಹರಡಿಕೊಂಡಿದೆ. ಎಸ್ಐಟಿ ಕೂಡ ಪ್ರಜ್ವಲ್ ರೇವಣ್ಣ ಅವರ ಪತ್ತೆಗೆ ಬ್ಲೂ ಕಾರ್ನರ್ ನೋಟೀಸ್ ಹೊರಡಿಸಿದೆ. ಅವರನ್ನು ಬಂಧಿಸಲು ಎಲ್ಲಾ ರೀತಿಯ ಸಿದ್ಧತೆಯನ್ನೂ ಕೂಡ ಮಾಡಿಕೊಂಡಿದೆ.
|
6 |
+
ಈ ಹಂತದಲ್ಲಿ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದು ಒಳ್ಳೆಯದು. ಇಲ್ಲವೆ ಕಾನೂನು ಹೋರಾಟ ನಡೆಸಿದರೆ ಮತ್ತಷ್ಟು ಸಮಸ್ಯೆ ಎದುರಿಸಬೇಕಾಗಬಹುದು. ವಿಚಾರಣೆಗೆ ಹಾಜರಾದರೆ ಸತ್ಯಾಂಶ ಕೂಡ ಹೊರಬರಲಿದೆ. ಈಗಾಗಲೇ ಕುಟುಂಬಕ್ಕೆ ಹಾಗೂ ಪಕ್ಷಕ್ಕೆ ಸಾಕಷ್ಟು ಮುಜುಗರ ಉಂಟಾಗಿದೆ.
|
7 |
+
ಇಂತಹ ಪರಿಸ್ಥಿತಿಯಲ್ಲಿ ವಿಚಾರಣೆಯಿಂದ ದೂರ ಸರಿಯುವುದು ಸಮಂಜಸವಲ್ಲ. ಈ ವಿಚಾರದ ಬಗ್ಗೆ ಕೂಡಲೇ ವಕೀಲರ ಜೊತೆ ಮಾತುಕತೆ ನಡೆಸಿ ಆದಷ್ಟು ಶೀಘ್ರವಾಗಿ ಎಸ್ಐಟಿ ಮುಂದೆ ಹಾಜರಾಗುವಂತೆ ಸಲಹೆ ಮಾಡಿದ್ದಾರೆ ಎಂದು ಗೊತ್ತಾಗಿದೆ.
|
eesanje/url_46_156_6.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ್ ನಿಧನ, ಸಿಎಂ ಸಂತಾಪ
|
2 |
+
ಬೆಂಗಳೂರು, ಮೇ 6-ಸೇಡಂನ ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಡಾ. ನಾಗರೆಡ್ಡಿ ಪಾಟೀಲರು ಹಾಗೂ ತಾವು ಮೊದಲಬಾರಿ 1983 ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದುದನ್ನು ಮುಖ್ಯಮಂತ್ರಿಯವರು ಸ್ಮರಿಸಿದ್ದಾರೆ.
|
3 |
+
ಪಾಟೀಲರು ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಅತ್ಯುತ್ತಮ ಕೊಡುಗೆ ನೀಡಿದವರು. ಅವರ ನಿಧನದಿಂದ ಒಬ್ಬ ಜನಾನುರಾಗಿ ಮುತ್ಸದ್ದಿ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ಬಣ್ಣಿಸಿದ್ದಾರೆ.
|
4 |
+
ಸೇಡಂನ ಮಾಜಿ ಶಾಸಕ ಡಾ. ನಾಗರೆಡ್ಡಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. 1983ರಲ್ಲಿ ನಾಗರೆಡ್ಡಿಯವರು ಮತ್ತು ನಾನು ಮೊದಲ ಬಾರಿಗೆ ಶಾಸಕರಾಗಿ ವಿಧಾನಸಭೆ ಪ್ರವೇಶ ಮಾಡಿದ್ದೆವು. ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಸುಶಿಕ್ಷಿತ ಸಮಾಜ ನಿರ್ಮಾಣಕ್ಕಾಗಿ ದುಡಿದ ನಾಗರೆಡ್ಡಿಯವರ ನಿಧನದಿಂದ ನಾಡು ಬಡವಾಗಿದೆ.ಮೃತರ ಆತ್ಮಕ್ಕೆ ಶಾಂತಿ…../t7RX8vAaX7
|
5 |
+
ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ, ಅವರ ಕುಟುಂಬದವರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
|
eesanje/url_46_156_7.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಪೆನ್ಡ್ರೈವ್ ಪ್ರಕರಣದ ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭಿಸಿದ ಎಸ್ಐಟಿ
|
2 |
+
ಬೆಂಗಳೂರು,ಮೇ6-ಹಾಸ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯದ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಈಗಾಗಲೇ ಸಹಾಯವಾಣಿ ತೆರೆದಿದೆ.
|
3 |
+
ವಿಶೇಷ ತನಿಖಾ ತಂಡದ ಅಧಿಕಾರಿಗಳಿಗೆ ತನಿಖಾ ಕಾಲದಲ್ಲಿ ಈ ಘಟನೆಗೆ ಸಂಬಂಧಪಟ್ಟಂತೆ ಇನ್ನೂ ಸಂತ್ರಸ್ತರು ಇರುವುದು ಗೊತ್ತಾಗಿದೆ. ಯಾರೇ ಸಂತ್ರಸ್ತರಿಗೆ ಕಾನೂನು ನೆರವು ಮತ್ತು ರಕ್ಷಣೆ ಹಾಗೂ ಇನ್ನಿತರ ಯಾವುದೇ ಸಹಾಯಬೇಕಾಗಿದ್ದಲ್ಲಿ ಹೆಲ್ಪ್ ಲೈನ್ ನಂ.6360938947ಕ್ಕೆ ಕರೆ ಮಾಡಬಹುದಾಗಿದೆ.
|
4 |
+
ಸಂತ್ರಸ್ಥರ ಅಥವಾ ಬಾತ್ಪೀದಾರರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
|
eesanje/url_46_156_8.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯದಲ್ಲಿ ನಾಳೆ 2ನೇ ಹಂತದ ಮತದಾನ : ಘಟಾನುಘಟಿಗಳು ಸೇರಿ 227 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
|
2 |
+
ಬೆಂಗಳೂರು,ಮೇ 6- ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ 227 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ರಾಜ್ಯದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾಳೆ ಮತದಾನ ನಡೆಯಲಿದೆ.
|
3 |
+
ನಾಳೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಭಾರತದ ಚುನಾವಣಾ ಆಯೋಗ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ.ಚುನಾವಣಾ ಹಾಗೂ ಭದ್ರತಾ ಸಿಬ್ಬಂದಿ ಆಯಾ ಕ್ಷೇತ್ರದ ಮಸ್ಟರಿಂಗ್ ಕೇಂದ್ರಗಳಲ್ಲಿ ಸಮಾವೇಶಗೊಂಡು ನಿಗದಿಪಡಿಸಿದ ಮತಗಟ್ಟೆಗಳಿಗೆ ಮತಯಂತ್ರ, ಚುನಾವಣಾ ಸಾಮಗ್ರಿ ಹಾಗೂ ಭದ್ರತಾ ಸಿಬ್ಬಂದಿಯೊಂದಿಗೆ ಮಧ್ಯಾಹ್ನದ ನಂತರ ತೆರಳಿದರು.
|
4 |
+
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದ್ದು, ಕಾಂಗ್ರೆಸ್, ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದರೆ, ಬಿಎಸ್ಪಿ 9, ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳು 23, ಸ್ವತಂತ್ರ ಅಭ್ಯರ್ಥಿಗಳು 117 ಸೇರಿದಂತೆ ಮತ್ತು 327 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಇದರಲ್ಲಿ 206 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ.ಉತ್ತರ ಕರ್ನಾಟಕದ ಒಟ್ಟು 14 ಕ್ಷೇತ್ರಗಳಲ್ಲಿ 2,59,52,958 ಮತದಾರರಿದ್ದು, 1,29,48,978 ಪುರುಷ, 1,29,64,570 ಮಹಿಳಾ ಹಾಗೂ 1,945 ತೃತೀಯ ಲಿಂಗಿ ಮತದಾರರು ಇದ್ದಾರೆ.
|
5 |
+
ಉತ್ತರ ಕನ್ನಡ ಜಿಲ್ಲೆಯಲ್ಲಿ ಅತೀ ಕಡಿಮೆ 16,41,156 ಮತದಾರರಿದ್ದರೆ, ಅತೀ ಹೆಚ್ಚು ಗುಲ್ಬರ್ಗ ಲೋಕಸಭಾ ಕ್ಷೇತ್ರದಲ್ಲಿ 20,98,202 ಮತದಾರರಿದ್ದಾರೆ. 28,269 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.ಸೂಕ್ಷ್ಮ ಮತಗಟ್ಟೆಗಳಿಗೆ ಒಬ್ಬರು ಹೆಡ್ಕಾನ್ಸ್ ಟೇಬಲ್ ಹಾಗೂ ಒಬ್ಬರು ಕಾನ್್ಸಟೇಬಲ್ ಅನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಸಾಮಾನ್ಯ ಮತಗಟ್ಟೆಗೆ ಒಬ್ಬರು ಕಾನ್ಸ್ ಟೇಬಲ್ ಅನ್ನು ನಿಯೋಜಿಸಲಾಗಿದ್ದು, ಮತಗಟ್ಟೆಗಳ ಸಮೂಹ ಇರುವ ಕಡೆ ಕೇಂದ್ರದ ಪಡೆಯನ್ನು ನಿಯೋಜಿಸಲಾಗಿದೆ.
|
6 |
+
ಸುರಪುರ ಉಪಚುನಾವಣೆ ಹಾಗೂ ಲೋಕಸಭಾ ಚುನಾವಣೆ ನಡೆಯುವ 14 ಕ್ಷೇತ್ರಗಳಲ್ಲೂ ಎಡಗೈ ತೋರುಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಾಕಲಾಗುತ್ತದೆ.
|
7 |
+
ಪರ್ಯಾಯ ಗುರುತಿನ ಚೀಟಿ :ಚುನಾವಣಾ ಆಯೋಗದಿಂದ ಈಗಾಗಲೇ ನೀಡಲಾಗಿರುವ ವೋಟರ್ರಸ ಸ್ಲಿಪ್ನ ಜೊತೆಗೆ ಮತದಾರರ ಗುರುತಿನ ಚೀಟಿ, ಆಧಾರ್ಕಾರ್ಡ್, ನರೇಗ ಜಾಬ್ಕಾರ್ಡ್, ಬ್ಯಾಂಕ್, ಪೋಸ್್ಟ ಆಫೀಸ್ ಪಾಸ್ಬುಕ್, ಕಾರ್ಮಿಕ ಸಚಿವರು ನೀಡುವ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೈಸೆನ್್ಸ, ಪ್ಯಾನ್ ಕಾರ್ಡ್, ಪಾಸ್ಪ���ರ್ಟ್, ಪಿಂಚಣಿಯ ದಾಖಲೆ, ರಾಜ್ಯಸರ್ಕಾರ, ಸಾರ್ವಜನಿಕ ಸಂಸ್ಥೆಗಳು, ಪಬ್ಲಿಕ್ ಲಿಮಿಟೆಡ್ ಕಂಪನಿಗಳು ಉದ್ಯೋಗಿಗಳಿಗೆ ನೀಡಿದ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು, ಎಂಪಿ, ಎಂಎಲ್ಎ, ಎಂಎಲ್ಸಿಗಳಿಗೆ ನೀಡಿರುವ ಅಧಿ ಕೃತ ಗುರುತಿನ ಚೀಟಿ, ಸಾಮಾಜಿಕ ನ್ಯಾಯ ಸಬಲೀಕರಣ ನೀಡಿರುವ ವಿಶಿಷ್ಟ ಅಂಗವಿಕಲ ಗುರುತಿನ ಚೀಟಿ ತೋರಿಸಿ ಮತ ಚಲಾಯಿಸಬಹುದಾಗಿದೆ.
|
8 |
+
ಮತದಾನ ಸಾರ್ವತ್ರಿಕ ರಜೆ :ಮತದಾನ ನಡೆಯುವ ಎಲ್ಲಾ ಕ್ಷೇತ್ರಗಳಲ್ಲಿ ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು, ಕೈಗಾರಿಕೋದ್ಯಮಗಳು, ವಿವಿಧ ಖಾಸಗಿ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದ್ದು, ದಿನಗೂಲಿ ವೇತನದಲ್ಲಿ ಕೆಲಸ ಮಾಡುವವರಿಗೂ ಮತ ಚಲಾಯಿಸಲು ಅನುಕೂಲವಾಗುವಂತೆ ಸರ್ಕಾರ ವೇತನ ಸಹಿತ ರಜೆಯನ್ನು ಮಂಜೂರು ಮಾಡಿ ಆದೇಶಿಸಿದೆ.
|
9 |
+
ನೆರಳಿನ ವ್ಯವಸ್ಥೆ :ಬೇಸಿಗೆಯ ಬಿಸಿಲು ತೀವ್ರವಾಗಿ ಹೆಚ್ಚಾಗಿದ್ದು, ಜನರು ತತ್ತರಿಸುವಂತಾಗಿರುವುದರಿಂದ ಮತಗಟ್ಟೆಗಳಲ್ಲಿ ಕನಿಷ್ಠ ಸೌಲಭ್ಯಗಳಾದ ರ್ಯಾಂಪ್, ಕುಡಿಯುವ ನೀರು, ವಿದ್ಯುತ್, ಪೀಠೋಪಕರಣ, ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ, ಮತದಾರರಿಗೆ ಸಹಾಯವಾಗುವ ಸಂಕೇತ ಫಲಕಗಳನ್ನು ಅಳವಡಿಸಲಾಗಿದೆ.
|
10 |
+
ಮತಗಟ್ಟೆಯ ಅಕ್ಕಪಕ್ಕದ ಕೊಠಡಿಗಳನ್ನು ವಿಶ್ರಾಂತಿ ಕೊಠಡಿಗಳನ್ನಾಗಿ ಮಾರ್ಪಡಿಸಿ ಸಿದ್ಧವಿರಿಸಲಾಗಿದೆ. ತೀವ್ರ ಬಿಸಿಲು ಇರುವ ಹಿನ್ನೆಲೆಯಲ್ಲಿ ಮತಗಟ್ಟೆ ಆವರಣದಲ್ಲಿ ಶಾಮಿಯಾನ, ಫ್ಯಾನ್ ಮತ್ತು ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ, ಶುಷ್ರೂಕರು, ಆಶಾ ಕಾರ್ಯಕರ್ತೆಯರೊಂದಿಗೆ ಓಆರ್ಎಸ್ ಸೇರಿದಂತೆ ಇತರೆ ವೈದ್ಯಕೀಯ ಕಿಟ್ಗಳ ವ್ಯವಸ್ಥೆ ಮಾಡಲಾಗಿದೆ. ತುರ್ತು ಸಂದರ್ಭದಲ್ಲಿ ಆಂಬುಲೆನ್್ಸ ಒದಗಿಸಲು ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಕಾಯ್ದಿರಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿ ಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
|
11 |
+
ಸಂಸ್ಕೃತಿಯ ಪ್ರತಿಬಿಂಬ :560 ಮತಗಟ್ಟೆಗಳನ್ನು ಮಹಿಳೆಯರೇ ನಿರ್ವಹಿಸಲಿದ್ದು, 112 ಮತಗಟ್ಟೆಗಳನ್ನು ದಿವ್ಯಾಂಗರು ನಿರ್ವಹಿಸುತ್ತಾರೆ. ಇತರೆ ವಿವಿಧ ವಿಷಯಗಳ 224 ಮಾದರಿ ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಸ್ಥಳೀಯ ಸಂಸ್ಕೃತಿ ಸಂಪ್ರದಾಯವನ್ನು ಬಿಂಬಿಸುವಂತೆ ಅಲಂಕರಿಸಲಾಗಿದೆ.
|
eesanje/url_46_156_9.txt
ADDED
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬಿಸಿಲಿನ ಝಳ ಮತ್ತು ಉಚಿತ ಗ್ಯಾರಂಟಿ ಎಫೆಕ್ಟ್, ರಾಜ್ಯದಲ್ಲಿ ವಿಪರೀತ ವಿದ್ಯುತ್ ಬಳಕೆ
|
2 |
+
ಬೆಂಗಳೂರು,ಮೇ6-ಉಚಿತ ಗ್ಯಾರಂಟಿ, ತಾಪಮಾನ ಏರಿಕೆಯಿಂದಾಗಿ ರಾಜ್ಯದಲ್ಲಿ ವಿದ್ಯುತ್ ಬಳಕೆಯ ಪ್ರಮಾಣದ ವಿಪರೀತ ಹೆಚ್ಚಾಗುತ್ತಿದೆ. ಜನರ ಬೇಡಿಕೆ ನೀಗಿಸಲು ಇಂಧನ ಇಲಾಖೆ ಪಡಿಪಾಟಲು ಪಡುವಂತಾಗಿದೆ. ಮಳೆ, ಸಂಪನ್ಮೂಲಗಳ ಕೊರತೆಯಿಂದ ಉತ್ಪಾದನೆಯೂ ಕುಗ್ಗಿದೆ. ಇದರಿಂದ ರಾಜ್ಯ ಸರ್ಕಾರ ಮತ್ತೆ ಭಾರೀ ಪ್ರಮಾಣದಲ್ಲಿ ವಿದ್ಯುತ್ ಖರೀದಿಗೆ ಮುಂದಾಗಿದೆ.
|
3 |
+
ರಾಜ್ಯ ತೀವ್ರ ಬರಗಾಲ ಎದುರಿಸುತ್ತಿದೆ. ಮುಂಗಾರು ಪೂರ್ವ ಮಳೆಯೂ ಕೈ ಕೊಟ್ಟಿದೆ. ತಾಪಮಾನ ವಿಪರೀತ ಹೆಚ್ಚುತ್ತಿದೆ. ಮಳೆ ಬೀಳದ ಕಾರಣ ರಾಜ್ಯದ ಬಹುತೇಕ ಪ್ರಮುಖ ಜಲಾಶಯಗಳ ಒಡಲು ಬರಿದಾಗುತ್ತಿದೆ. ಇದರಿಂದ ರಾಜ್ಯದ ಪ್ರಮುಖ ಮೂರು ಜಲ ವಿದ್ಯುತ್ ಘಟಕಗಳಲ್ಲೂ ವಿದ್ಯುತ್ ಉತ್ಪಾದನೆ ಭಾಗಶಃ ಸ್ಥಗಿತವಾಗಿದೆ.
|
4 |
+
ಉಷ್ಣ ವಿದ್ಯುತ್ ಸ್ಥಾವರಗಳ ಮೂಲಕ ಹೆಚ್ಚಿನ ಉತ್ಪಾದನೆ ಮಾಡುತ್ತಿದೆಯಾದರೂ, ಈಗಿನ ಬೇಡಿಕೆಯನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಎಸ್ಕಾಂಗಳು ವಿದ್ಯುತ್ ಬೇಡಿಕೆ ಈಡೇರಿಸಲು ಅಪಾರ ಪ್ರಮಾಣದಲ್ಲಿ ವಿದ್ಯುತ್ ಖರೀದಿ ಮಾಡುತ್ತಿವೆ.
|
5 |
+
ಗರಿಷ್ಠ ಮಟ್ಟ ತಲುಪಿದ ವಿದ್ಯುತ್ ಬಳಕೆ:ರಾಜ್ಯದಲ್ಲಿ ಸರಾಸರಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ಗೂ ಅಧಿಕವಿದೆ. ಇದರ ಪರಿಣಾಮವಾಗಿ ವಿದ್ಯುತ್ ಬಳಕೆ ತೀವ್ರವಾಗಿದೆ. ಇಂಧನ ಇಲಾಖೆ ನೀಡಿರುವ ಮಾಹಿತಿಯಂತೆ, ಏಪ್ರಿಲ್ ಅಂತ್ಯಕ್ಕೆ ರಾಜ್ಯದ ವಿದ್ಯುತ್ ಬಳಕೆ 330.50 ಮೆಗಾ ವ್ಯಾಟ್ಗೆ ತಲುಪಿದೆ.
|
6 |
+
ಕಳೆದ ವರ್ಷ ಏಪ್ರಿಲ್ 30ಕ್ಕೆ ರಾಜ್ಯದ ವಿದ್ಯುತ್ ಬಳಕೆ 230 ಮೆಗಾ ವ್ಯಾಟ್ ಇತ್ತು. ಅಂದರೆ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಏಪ್ರಿಲ್ ಅಂತ್ಯಕ್ಕೆ ರಾಜ್ಯದ ಒಟ್ಟು ವಿದ್ಯುತ್ ಬಳಕೆ 100 ಮೆಗಾವ್ಯಾಟ್ನಷ್ಟು ಹೆಚ್ಚಳವಾಗಿದ್ದು, ರಾಜ್ಯದ ಗರಿಷ್ಠ ವಿದ್ಯುತ್ ಬೇಡಿಕೆ 16,693 ಮೆಗಾ ವ್ಯಾಟ್ಗೆ ತಲುಪಿದೆ.
|
7 |
+
ರಾಜ್ಯದ ಪ್ರಮುಖ ಮೂರು ಜಲ ವಿದ್ಯುತ್ ಘಟಕಗಳಿಂದ ಪ್ರಸಕ್ತ ವರ್ಷ 1,638 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಕಳೆದ ವರ್ಷ ಇದು 2,212 ಮೆಗಾವ್ಯಾಟ್ ಇತ್ತು. ಅಂದರೆ ಈ ವರ್ಷ ಸುಮಾರು 574 ಮೆಗಾವ್ಯಾಟ್ ಕೊರತೆ ಉಂಟಾಗಿದೆ.
|
8 |
+
ಮೂರು ಜಲ ವಿದ್ಯುತ್ ಘಟಕಗಳಿಂದ ಈ ವರ್ಷದ ನಾಲ್ಕು ತಿಂಗಳಲ್ಲಿ (ಏಪ್ರಿಲ್ 30ಕ್ಕೆ) 18.97 ಮೆಗಾವ್ಯಾಟ್ ವಿದ್ಯುತ್ ಮಾತ್ರ ಉತ್ಪಾದನೆಯಾಗಿದೆ ಎಂದು ಇಂಧನ ಇಲಾಖೆ ತಿಳಿಸಿದೆ.
|
9 |
+
ಇನ್ನು ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳಿಂದ ಹೆಚ್ಚಿನ ವಿದ್ಯುತ್ ಉತ್ಪಾದನೆಯಾಗುತ್ತಿದೆ. ರಾಯಚೂರು ಉಷ್ಣ ವಿದ್ಯುತ್ ಸ್ಥಾವರ ಏಪ್ರಿಲ್ ತಿಂಗಳಲ್ಲಿ 783 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿದೆ. ಬಳ್ಳಾರಿ ಉಷ್ಣ ವಿದ್ಯುತ್ ಸ್ಥಾವರದಿಂದ 756 ಮೆಗಾವ್ಯಾಟ್, ಯರಮರಸ್ ಉಷ್ಣ ವಿದ್ಯುತ್ ಸ್ಥಾವರದಿಂದ (ವೈಟಿಪಿಎಸ್) 659 ಮೆಗಾವ್ಯಾಟ್ ವ��ದ್ಯುತ್ ಉತ್ಪಾದನೆಯಾಗಿದೆ.
|
10 |
+
ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳು, ಜಲ ವಿದ್ಯುತ್ ಘಟಕಗಳು, ಸೋಲಾರ್ನಿಂದ ಏ.30ರಂದು ಒಟ್ಟು 96 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಿದೆ ಎಂದು ಕೆಪಿಟಿಸಿಎಲ್ ಮಾಹಿತಿ ನೀಡಿದೆ.
|
11 |
+
ವಿದ್ಯುತ್ ಖರೀದಿ ಗಣನೀಯ ಹೆಚ್ಚಳ:ಏರುತ್ತಿರುವ ತಾಪಮಾನ, ಬರಿದಾದ ಜಲಾಶಯ, ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಎಸ್ಕಾಂಗಳಿಗೆ ವಿದ್ಯುತ್ ಖರೀದಿ ಅನಿವಾರ್ಯವಾಗಿದೆ. 2024 ಜನವರಿಯಿಂದ ಏಪ್ರಿಲ್ವರೆಗೆ ಒಟ್ಟು 4,811 ಮಿಲಿಯನ್ ಯೂನಿಟ್ ವಿದ್ಯುತ್ ಖರೀದಿ ಮಾಡಲಾಗಿದೆ.
|
12 |
+
ದಾಮೋದರ್ ವ್ಯಾಲಿ ಕಾರ್ಪೊರೇಷನ್ನಿಂದ 4 ತಿಂಗಳಲ್ಲಿ ಸುಮಾರು 1,163 ಮಿಲಿಯನ್ ಯುನಿಟ್, ಉಡುಪಿ ಪವರ್ ಕಾರ್ಪೊರೇಷನ್ ಲಿಮಿಟೆಡ್ನಿಂದ ಸುಮಾರು 2,196 ಮಿಲಿಯನ್ ಯುನಿಟ್ ವಿದ್ಯುತ್ ಖರೀದಿ ಮಾಡಲಾಗಿದೆ. ಅನ್ಯ ರಾಜ್ಯಗಳಿಂದ ಸುಮಾರು 1,452 ಮಿಲಿಯನ್ ಯುನಿಟ್ ವಿದ್ಯುತ್ ಖರೀದಿ ಮಾಡಲಾಗಿದೆ ಎಂದು ಇಂಧನ ಇಲಾಖೆ ಅಂಕಿಅಂಶ ನೀಡಿದೆ.
|
13 |
+
ಜನವರಿ ತಿಂಗಳಲ್ಲಿ ಒಟ್ಟು ಖರೀದಿಸಲ್ಪಟ್ಟ ವಿದ್ಯುತ್ 1,143 ಮಿಲಿಯನ್ ಯೂನಿಟ್ ಫೆಬ್ರವರಿಯಲ್ಲಿ 1,198 ಮಿಲಿಯನ್ ಯುನಿಟ್, ಮಾರ್ಚ್ನಲ್ಲಿ 1,244 ಮಿಲಿಯನ್ ಯೂನಿಟ್, ಏಪ್ರಿಲ್ ತಿಂಗಳಲ್ಲಿ 1,226 ಮಿಲಿಯನ್ ಯುನಿಟ್ ವಿದ್ಯುತ್ ಖರೀದಿ ಮಾಡಲಾಗಿದೆ.
|
eesanje/url_46_157_1.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಮಳೆ ಕೊರತೆ, ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಕುಸಿಯುತ್ತಿರುವ ನೀರಿನ ಮಟ್ಟ
|
2 |
+
ಬೆಂಗಳೂರು,ಮೇ5-ಕಳೆದ ವರ್ಷದ ಮುಂಗಾರು ಹಾಗೂ ಹಿಂಗಾರು ಮಳೆ ಕೊರತೆಯಿಂದಾಗಿ ರಾಜ್ಯದಲ್ಲಿ ತೀವ್ರ ಬರ ಆವರಿಸಿದ್ದು, ಪೂರ್ವ ಮುಂಗಾರು ಮಳೆಯು ಕೈಕೊಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ತೀವ್ರವಾಗಿ ಕುಸಿದಿದೆ.
|
3 |
+
ಒಂದೆಡೆ ತೀವ್ರ ಬಿಸಿಲಿನ ಬೇಗೆ ಹೆಚ್ಚಳವಾದರೆ ಮತ್ತೊಂದೆಡೆ ಮಳೆ ಕೊರತೆ ಉಂಟಾಗಿದೆ. ಹೀಗಾಗಿ ಸಕಾಲಕ್ಕೆ ಸರಿಯಾಗಿ ಮುಂಗಾರು ಪ್ರಾರಂಭವಾಗಿ ಉತ್ತಮ ಮಳೆಯಾಗದಿದ್ದರೆ ಜೂನ್ ತಿಂಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಲಿದೆ.
|
4 |
+
ಈಗಾಗಲೇ ಬಹತೇಕ ಜಲಾಶಯಗಳ ನೀರಿನ ಮಟ್ಟ ಕಡಿಮೆಯಾಗಿದ್ದು, ಕುಡಿಯುವ ನೀರಿಗೆ ಮಾತ್ರ ಬಳಕೆ ಮಾಡಲಾಗುತ್ತಿದೆ. ಯಾವ ಜಲಾಶಯಗಳಿಗೂ ಒಳಹರಿವಿನ ಪ್ರಮಾಣ ಇಲ್ಲ. ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿ ನೀರಿನ ಸಂಗ್ರಹ ಶೇ.22ರಷ್ಟು ಮಾತ್ರ ಇದೆ. ಜಲವಿದ್ಯುತ್ ಉತ್ಪಾದಿಸುವ ಲಿಂಗನಮಕ್ಕಿ, ಸೂಪಾ, ವರಾಹಿ ಜಲಾಶಯಗಳ ವ್ಯಾಪ್ತಿಯಲ್ಲಿ ಶೇ.19ರಷ್ಟು ನೀರಿದ್ದರೆ, ಕಾವೇರಿ ನದಿಪಾತ್ರದ ಜಲಾಶಯಗಳಲ್ಲಿ ಶೇ.27ರಷ್ಟು ಹಾಗೂ ಕೃಷ್ಣಾ ಕೊಳ್ಳದ ಜಲಾಶಯಗಳಲ್ಲಿ ಶೇ.21ರಷ್ಟು ಮಾತ್ರ ನೀರಿದೆ.
|
5 |
+
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಕಳೆದ ವರ್ಷ ಇದೇ ಅವಧಿಯಲ್ಲಿ 14 ಜಲಾಶಯಗಳಲ್ಲಿ 245.62 ಟಿಎಂಸಿ ಅಡಿಯಷ್ಟು ನೀರಿತ್ತು. ಪ್ರಸ್ತುತ 199.91 ಅಡಿಯಷ್ಟು ಮಾತ್ರ ನೀರಿದೆ.ರಾಜ್ಯದ ಪ್ರಮುಖ ಜಲಾಶಯಗಳಲ್ಲಿ 895.62 ಟಿಎಂಸಿ ನೀರು ಗರಿಷ್ಠ ಸಂಗ್ರಹ ಸಾಮರ್ಥ್ಯವಿದೆ.
|
6 |
+
ಕಾವೇರಿ ನದಿಪಾತ್ರದ ಹಾರಂಗಿ, ಹೇಮಾವತಿ, ಕೆಆರ್ಎಸ್, ಕಬಿನಿ ಜಲಾಶಯಗಳಲ್ಲಿ ಒಟ್ಟು 30.46 ಟಿಎಂಸಿಯಷ್ಟು ನೀರಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 38.87 ಟಿಎಂಸಿಯಷ್ಟು ನೀರಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ 8 ಟಿಎಂಸಿಯಷ್ಟು ನೀರಿನ ಕೊರತೆ ಇದೆ.
|
7 |
+
ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಕೆಆರ್ಎಸ್ ಜಲಾಶಯದಲ್ಲಿ 11.08 ಟಿಎಂಸಿಯಷ್ಟು ನೀರಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ 3 ಟಿಎಂಸಿಯಷ್ಟು ನೀರು ಕಡಿಮೆ ಇದೆ. ಕೃಷ್ಣಾ ಕೊಳ್ಳದ ಜಲಾಶಯಗಳಲ್ಲಿ 89.59 ಟಿಎಂಸಿಯಷ್ಟು ಮಾತ್ರ ನೀರಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 94.87 ಟಿಎಂಸಿ ಅಡಿಯಷ್ಟು ನೀರಿತ್ತು.
|
8 |
+
ಜಲವಿದ್ಯುತ್ ಉತ್ಪಾದಿಸುವ ಲಿಂಗನಮಕ್ಕಿ, ಸೂಪಾ, ವಾರಾಹಿ ಜಲಾಶಯಗಳಲ್ಲಿ 62.87 ಟಿಎಂಸಿಯಷ್ಟು ಮಾತ್ರ ನೀರಿದೆ. ಕಳೆದ ವರ್ಷ 85.23 ಟಿಎಂಸಿ ಅಡಿಯಷ್ಟು ನೀರು ಸಂಗ್ರಹವಾಗಿತ್ತು.
|
eesanje/url_46_157_10.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ವಿಚಾರಣೆಗೆ ಹಾಜರಾಗಲು ಎಚ್.ಡಿ.ರೇವಣ್ಣ ಅವರಿಗೆ ಸಂಜೆಯವರೆಗೂ ಕಾಲಾವಕಾಶವಿದೆ : ಪರಮೇಶ್ವರ್
|
2 |
+
ಬೆಂಗಳೂರು,ಮೇ.4-ಹಾಸನದ ಪೆನ್ಡ್ರೈವ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಇಂದು ಸಂಜೆಯವರೆಗೂ ಕಾಲಾವಕಾಶವಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
|
3 |
+
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ.ರೇವಣ್ಣ ಅವರಿಬ್ಬರಿಗೂ ಸೇರಿ ಆರಂಭದಲ್ಲೇ ಲುಕ್ ಔಟ್ ನೋಟೀಸ್ ನೀಡಲಾಗಿದೆ. ರೇವಣ್ಣ ಅವರು ವಿದೇಶಕ್ಕೆ ತೆರಳುವ ಅವಕಾಶವಿರಬಾರದು ಎಂಬ ಕಾರಣಕ್ಕೆ ಎಸ್ಐಟಿ ಅಧಿಕಾರಿಗಳು ಲುಕ್ಔಟ್ ನೋಟೀಸ್ ಜಾರಿ ಮಾಡಿದ್ದಾರೆ ಎಂದು ತಿಳಿಸಿದರು.
|
4 |
+
ಈಗಾಗಲೇ 2ನೇ ನೋಟಿಸ್ ಅನ್ನು ನೀಡಲಾಗಿದೆ. ಅದರ ಪ್ರಕಾರ ವಿಚಾರಣೆಗೆ ಹಾಜರಾಗಲು ಇಂದು ಸಂಜೆವರೆಗೂ ಕಾಲಾವಕಾಶವಿದ್ದು, ಆ ಬಳಿಕ ಕಾನೂನು ರೀತ್ಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
|
5 |
+
ಈ ನಡುವೆ ಕೆ.ಆರ್.ನಗರ ಠಾಣೆಯಲ್ಲಿ ದಾಖಲಾಗಿರುವ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ರೇವಣ್ಣ ಅವರು ನಿರೀಕ್ಷಣಾ ಜಾಮೀನಿಗಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ತಿಳಿಸಿದರು. ಇದೇ ಅಪಹರಣ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ಸತೀಶ್ ಬಾಬು ಅವರ ಬಂಧನವಾಗಿದೆ. ಸಾಮಾನ್ಯವಾಗಿ ಪೊಲೀಸರು ಇಂತಹ ಪ್ರಕ್ರಿಯೆಗಳನ್ನು ನಿರಂತರವಾಗಿ ಚಾಲ್ತಿಯಲ್ಲಿಟ್ಟಿರುತ್ತಾರೆ. ಬಂಧನ, ವಿಚಾರಣೆ ಎಲ್ಲವೂ ಸಾಮಾನ್ಯ. ಪ್ರತಿಯೊಂದನ್ನೂ ಸಾರ್ವಜನಿಕವಾಗಿ ಮಾಹಿತಿ ನೀಡಲು ಸಾಧ್ಯವಾಗುವುದಿಲ್ಲ. ರೇವಣ್ಣ ಅವರಿಗೆ ಸಿಆರ್ಪಿಸಿ ಸೆಕ್ಷನ್ 47 ಎ ಅಡಿ ನೋಟೀಸ್ ನೀಡಲಾಗಿದೆ. ಅವರು ಖುದ್ದು ವಿಚಾರಣೆಗೆ ಹಾಜರಾಗಲೇಬೇಕು ಎಂದರು.
|
6 |
+
ಪ್ರಜ್ವಲ್ ರೇವಣ್ಣ ಸದ್ಯಕ್ಕೆ ಭಾರತಕ್ಕೆ ಮರಳುವ ಸಾಧ್ಯತೆಯಿಲ್ಲ ಎಂಬ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿದ ಗೃಹಸಚಿವರು ಇಂದಲ್ಲಾ ನಾಳೆ ಭಾರತಕ್ಕೆ ಮರಳಲೇಬೇಕು ಎಂದು ಹೇಳಿದರು.ಲೋಕಸಭಾ ಚುನಾವಣೆ ಮುಗಿದ ಬಳಿಕ ಪ್ರಕರಣವನ್ನು ಕಡೆಗಣಿಸಲಾಗುತ್ತದೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿರುವುದು ಅವರ ಅಭಿಪ್ರಾಯ. ಪ್ರಕರಣದ ನಂತರ ಏನಾಗುತ್ತದೆ ಎಂಬುದನ್ನು ಕಾದು ನೋಡಲಿ. ಪ್ರಸ್ತುತ ನಡೆಯುತ್ತಿರುವ ಚರ್ಚೆಗಳನ್ನು ಮತದಾರರು ಗಮನಿಸುತ್ತಿದ್ದಾರೆ ಎಂದು ತಿಳಿಸಿದರು.
|
7 |
+
ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ನಡೆದಿದೆ ಎಂಬ ಕುರಿತ ಪ್ರಶ್ನೆಗೆ ಸಿಡಿಮಿಡಿಗೊಂಡ ಗೃಹಸಚಿವರು, ಲವ್ ಜಿಹಾದ್ ನಡೆದಿದೆ ಎಂದು ನಿಮಗೆ ಗೊತ್ತಿದೆಯೇ? ಸಾಕ್ಷಿ ಇದೆಯೇ? ಪ್ರಶ್ನೆಗಳನ್ನು ಕೇಳುವಾಗ ಸೂಕ್ಷ್ಮತೆ ಇರಬೇಕು ಎಂದು ಆಕ್ಷೇಪಿಸಿದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು.
|
8 |
+
ರಾಹುಲ್ಗಾಂಧಿ ಗೆ ನೋಟೀಸ್ ನೀಡುವಂತೆ ಎಚ್.ಡಿ.ಕುಮಾರಸ್ವಾಮಿಯವರ ಒತ್ತಾಯಕ್ಕೆ ಪ್ರತಿಕ್ರಿಯಿಸಿ��� ಗೃಹಸಚಿವರು, ಅವರನ್ನೇ ಕೇಳಿಯೇ ಎಲ್ಲಾ ಕೆಲಸ ಮಾಡೋಣ ಎಂದು ಟಾಂಗ್ ನೀಡಿದರು.
|
eesanje/url_46_157_11.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ವೇದಿಕೆ ಮೇಲೆ ಅಭಿನಯಿಸುತ್ತಿರುವಾಗಲೇ ಪ್ರಾಣ ಬಿಟ್ಟ ಕಲಾವಿದ
|
2 |
+
ಯಲಹಂಕ, ಮೇ.4-ವೇದಿಕೆ ಮೇಲೆ ಅಭಿನಯಿಸುವಾಗಲೇ ಕಲಾವಿದರೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಯಲಹಂಕ ತಾಲ್ಲೂಕಿನ ಸಾತನೂರು ಬಳಿ ನಡೆದಿದೆ.
|
3 |
+
ದೇವನಹಳ್ಳಿ ತಾಲ್ಲೂಕು ಹರದೇಶಹಳ್ಳಿಯ ನಿವಾಸಿಯಾದ ಮುನಿಕೆಂಪಣ್ಣ ಮೃತಪಟ್ಟ ಕಲಾವಿದ. ನಿನ್ನೆ ರಾತ್ರಿ ಯಲಹಂಕ ತಾಲ್ಲೂಕಿನ ಸಾತನೂರು ಬಳಿ ಕುರುಕ್ಷೇತ್ರ ನಾಟಕ ಪ್ರದರ್ಶನ ನಡೆಯುತ್ತಿತ್ತು. ಈ ವೇಳೆ ಶಕುನಿಯ ಪಾತ್ರ ನಿರ್ವಹಿಸುತ್ತಿದ್ದ ಮುನಿ ಕೆಂಪಣ್ಣ ರಾತ್ರಿ 1.30ರ ಸಂದರ್ಭದಲ್ಲಿ ಪಾತ್ರದಲ್ಲಿ ಅಭಿನಯಿಸುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
|
4 |
+
ಹೃದಯಾಘಾತದಿಂದ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸಾವಿಗೂ ಮುನ್ನ ವೇದಿಕೆಯಲ್ಲಿ ಅದ್ಭುತವಾಗಿ ಅಭಿನಯಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
|
5 |
+
ಮುನಿಕೆಂಪಣ್ಣ ಅವರು ನಿವೃತ್ತ ಉಪನ್ಯಾಸಕರು. ಸಾಹಿತಿ, ಕಲಾವಿದರಾಗಿ ಸೇವೆ ಸಲ್ಲಿಸಿದ್ದಾರೆ. ದೇವನಹಳ್ಳಿಯಲ್ಲಿ ನಡೆದ 28ನೇ ಕನ್ನಡ ಸಾಹಿತ್ಯ ಸಮೇಳನದ ಅಧ್ಯಕ್ಷರಾಗಿದ್ದರು. ಇಂದು ಮಧ್ಯಾಹ್ನ ಮೂರು ಗಂಟೆಗೆ ಅವರ ಹುಟ್ಟೂರಾದ ಅರದೇಶಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
|
6 |
+
ಇದೇ ರೀತಿ ಕಳೆದ ಬುಧವಾರ ರಾತ್ರಿ ಕೋಟಾ ಗಾಂಧಿ ಮೈದಾನದ ಬಳಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತೆ ಯಕ್ಷಗಾನ ವೇಳೆ ಯಕ್ಷಗಾನ ಮೇಳದ ಕಲಾವಿದ ಸವ್ಯಸಾಚಿ ಗಂಗಾಧರ್ ಪುತ್ತೂರು ಅವರು ವೇಶ ಕಳಚುತ್ತಿರುವಾಗಲೇ ಮೃತಪಟ್ಟಿದ್ದರು.
|
eesanje/url_46_157_12.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಮಂಗಳೂರು ಏರ್ಪೋರ್ಟ್ಗೆ ಬಾಂಬ್ ಬೆದರಿಕೆ ಇಮೇಲ್
|
2 |
+
ಮಂಗಳೂರು,ಮೇ4-ಇಲ್ಲಿನ ಏರ್ಪೋರ್ಟ್ಗೆ ಬಾಂಬ್ ಇಡಲಾಗಿದ್ದು ಕೆಲವೇ ಗಂಟೆಗಳಲ್ಲಿ ದೊಡ್ಡ ಮಟ್ಟದ ರಕ್ತಪಾತವಾಗಲಿದೆ ಎಂದು ಉಗ್ರರ ಹೆಸರಿನಲ್ಲಿ ಇಮೇಲ್ ಬಂದಿದೆ.
|
3 |
+
ಏರ್ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ. ಅಲ್ಲದೆ ಮೂರು ವಿಮಾನಗಳಲ್ಲಿಯೂ ಬಾಂಬ್ ಇಡಲಾಗಿದೆ ಎಂಬ ಸಂದೇಶ ಗಮನಿಸಿದ ಏರ್ಪೋರ್ಟ್ ಸಿಬ್ಬಂದಿ ತಕ್ಷಣ ಪೊಲೀಸರಿಗೆ ದೂರು ನೀಡಿದ್ದಾರೆ.
|
4 |
+
ಈ ಕೃತ್ಯದ ಹಿಂದೆ ಟೆರರೈಸರ್ರಸ 111 ಇದೆ ಎಂದು ಉಗ್ರರ ಹೆಸರಿನಲ್ಲಿ ಇಮೇಲ್ ಬಂದಿದ್ದು, ಏರ್ಪೋರ್ಟ್ ಠಾಣೆ ಪೊಲೀಸರು ಬಾಂಬ್ ನಿಷ್ಕ್ರಿಯ ದಳ , ತನಿಖಾ ದಳ, ಶ್ವಾನದಳದೊಂದಿಗೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
|
eesanje/url_46_157_2.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಗೆದ್ದರೂ ಅಮಾನತು ಹಿಂಪಡೆಯದಂತೆ ಅಶೋಕ್ ಮನವಿ
|
2 |
+
ಬೆಂಗಳೂರು,ಮೇ5-ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ವಿಜೇತರಾದರೂ ಅವರನ್ನು ಜೆಡಿಎಸ್ನಿಂದ ಕೆಲಕಾಲ ಅಮಾನತು ಮಾಡಿರುವ ನಿರ್ಧಾರವನ್ನು ಹಿಂತೆಗೆದುಕೊಳ್ಳದಂತೆ ಪಕ್ಷದ ನಾಯಕರಿಗೆ ನಾವೇ ಮನವಿ ಮಾಡುತ್ತೇವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
|
3 |
+
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಜೆಡಿಎಸ್ ಕೂಡ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ಅವರನ್ನು ಪಕ್ಷದಿಂದ ಅಮಾನತುಪಡಿಸಲಾಗಿದೆ ಎಂದರು.
|
4 |
+
ಹಾಸನದಲ್ಲಿ ಅವರು ವಿಜೇತರಾದರೂ ಅಮಾನತು ಆದೇಶವನ್ನು ಹಿಂಪಡೆಯದಂತೆ ಮನವಿ ಮಾಡುತ್ತೇವೆ. ತನಿಖೆ ಮುಗಿದು ನ್ಯಾಯಾಲಯದ ತೀರ್ಪು ಬರುವರೆಗೂ ಅಮಾನತು ಪ್ರಕರಣನ್ನು ವಾಪಸ್ ಪಡೆಯಬಾರದು. ಈ ನಿಲುವಿನಿಂದ ಕುಮಾರಸ್ವಾಮಿ ಹಿಂದೆ ಸರಿಯಬಾರದೆಂದು ಮನವಿ ಮಾಡಿದರು.
|
5 |
+
ಮಾಜಿ ಸಚಿವ ಎಚ್.ಡಿ.ರೇವಣ್ಣ ಬಂಧನ ಪ್ರಕ್ರಿಯೆ ಕಾನೂನಿನ ಪ್ರಕಾರವೇ ನಡೆದಿದೆ. ಎಸ್ಐಟಿ ಅವರು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಅಂತಿಮವಾಗಿ ನ್ಯಾಯಾಲಯದಲ್ಲಿ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡದ ಕಾರಣ ಎಸ್ಐಟಿಗೆ ಶರಣಾಗಿದ್ದಾರೆ. ಎಲ್ಲವೂ ಕೂಡ ಕಾನೂನಿನ ಅನ್ವಯ ನಡೆದಿದೆ. ಪೊಲೀಸರ ಕ್ರಮವನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದರು.
|
6 |
+
ಈ ಪ್ರಕರಣದಿಂದ ಫಲಿತಾಂಶದ ಮೇಲೆ ಯಾವುದೇ ನಕಾರಾತ್ಮಕ ಪರಿಣಾಮ ಬೀರುವುದಿಲ್ಲ. ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಎನ್ನುವುದಕ್ಕಿಂತ ಹೆಚ್ಚಾಗಿ ಕಾಂಗ್ರೆಸಿಗರು ಲಾಭ ಮಾಡಿಕೊಳ್ಳಲು ಹೊರಟಿದ್ದರು. ಮತದಾರರಿಗೆ ಇವರ ನಿಜವಾದ ಬಂಡವಾಳ ಗೊತ್ತಾಗಿದೆ ಎಂದು ವಾಗ್ದಾಳಿ ನಡೆಸಿದರು.
|
7 |
+
ಕಾಂಗ್ರೆಸ್ ಏನೇ ಗ್ಯಾರಂಟಿ , ಮಣ್ಣುಮಸಿ ಎಂದುಕೊಂಡರೂ ಯಾವುದೇ ಕಾರಣಕ್ಕೂ ಅವರು ಎರಡಂಕಿ ದಾಟುವುದಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಹೆಚ್ಚಿನ ಸ್ಥಾನ ಗೆಲ್ಲಲಿದೆ. ಫಲಿತಾಂಶದಲ್ಲಿ ಕಾಂಗ್ರೆಸ್ಗೆ ಹತಾಶೆ ಕಟ್ಟಿಟ್ಟ ಬುತ್ತಿ ಎಂದು ಭವಿಷ್ಯ ನುಡಿದರು.
|
eesanje/url_46_157_3.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ನಾಳೆ ರಾತ್ರಿಯಿಂದ 108 ಆಂಬುಲೆನ್ಸ್ ಸೇವೆ ಸ್ಥಗಿತ
|
2 |
+
ಬೆಂಗಳೂರು,ಮೇ.5– ನಾಳೆ ರಾತ್ರಿಯಿಂದ ಆಂಬುಲೆನ್ಸ್ ಸೇವೆಗಳು ಸ್ಥಗಿತಗೊಳ್ಳಲಿವೆ. ಮೂರು ತಿಂಗಳ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ನಾಳೆ ರಾತ್ರಿ ಎಂಟು ಗಂಟೆಯಿಂದ ಆರೋಗ್ಯ ಕವಚ 108 ಆಂಬುಲೆನ್ಸ್ ಸೇವೆಗಳನ್ನು ಸ್ಥಗಿತಗೊಳಿಸಲು ಸಿಬ್ಬಂದಿಗಳು ಸಿದ್ದರಾಗಿದ್ದಾರೆ.
|
3 |
+
108 ಆಂಬುಲೆನ್ಸ್ ಸೇವೆಯ ಉಸ್ತುವಾರಿ ವಹಿಸಿಕೊಂಡಿರುವ ಜಿವಿಕೆ ಸಂಸ್ಥೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಿಬ್ಬಂದಿಗಳು ಅಕ್ರೋಶ ವ್ಯಕ್ತಪಡಿಸಿ ನಾಳೆಯಿಂದ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ ಎಂದು 108 ಅಂಬುಲೆನ್ಸ್ ನೌಕರ ಸಂಘದ ಉಪಾಧ್ಯಕ್ಷ ದಯಾನಂದ್ ತಿಳಿಸಿದ್ದಾರೆ.
|
4 |
+
ಒಂದು ಕಡೆ ಮೂರು ತಿಂಗಳಿಂದ ಸಂಬಳವಿಲ್ಲ..ಮತ್ತೊಂದು ಕಡೆ ವೇತನ ಕಡಿತಗೊಳಿಸಿರೋ ಜಿವಿಕೆ ಸಂಸ್ಥೆಯ ನಿರ್ಧಾರ ವಿರೋಧೀಸಿ ನಾವು ಹೋರಾಟಕ್ಕಿಳಿಯಲು ತೀರ್ಮಾನಿಸಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.
|
5 |
+
ಈಗಾಗಲೇ ಡಿಸೆಂಬರ್, ಜನವರಿ ತಿಂಗಳ ವೇತನವನ್ನು 30 ಸಾವಿರದಿಂದ ಕಡಿತ ಮಾಡಿ ಕೇವಲ 13 ಸಾವಿರ ವೇತನ ನೀಡಲಾಗಿದೆ. ನಾಳೆ ಸಂಜೆಯೊಳಗೆ ಕಡಿತ ಮಾಡಿದ ವೇತನವನ್ನು ಬಿಡುಗಡೆ ಮಾಡಬೇಕು ಇಲ್ಲಿದಿದ್ದರೆ ನಮ ಸೇವೆ ಸ್ಥಗಿತಗೊಳಿಸುತ್ತೇವೆ ಎಂದು ಅವರು ಎಚ್ಚರಿಸಿದ್ದಾರೆ.
|