CoolCoder44 commited on
Commit
2f2427f
·
verified ·
1 Parent(s): ea34e85

e07811ba9cacfe2cc49233a254b46ce179f9c24dee5dbc2e1126629e7d174863

Browse files
Files changed (50) hide show
  1. eesanje/url_46_39_12.txt +8 -0
  2. eesanje/url_46_39_2.txt +8 -0
  3. eesanje/url_46_39_3.txt +5 -0
  4. eesanje/url_46_39_4.txt +5 -0
  5. eesanje/url_46_39_5.txt +4 -0
  6. eesanje/url_46_39_6.txt +8 -0
  7. eesanje/url_46_39_7.txt +4 -0
  8. eesanje/url_46_39_8.txt +6 -0
  9. eesanje/url_46_39_9.txt +6 -0
  10. eesanje/url_46_3_1.txt +6 -0
  11. eesanje/url_46_3_10.txt +5 -0
  12. eesanje/url_46_3_11.txt +18 -0
  13. eesanje/url_46_3_12.txt +10 -0
  14. eesanje/url_46_3_2.txt +14 -0
  15. eesanje/url_46_3_3.txt +15 -0
  16. eesanje/url_46_3_4.txt +7 -0
  17. eesanje/url_46_3_5.txt +6 -0
  18. eesanje/url_46_3_6.txt +11 -0
  19. eesanje/url_46_3_7.txt +10 -0
  20. eesanje/url_46_3_8.txt +11 -0
  21. eesanje/url_46_3_9.txt +7 -0
  22. eesanje/url_46_40_1.txt +7 -0
  23. eesanje/url_46_40_10.txt +6 -0
  24. eesanje/url_46_40_11.txt +5 -0
  25. eesanje/url_46_40_12.txt +6 -0
  26. eesanje/url_46_40_2.txt +7 -0
  27. eesanje/url_46_40_3.txt +5 -0
  28. eesanje/url_46_40_4.txt +7 -0
  29. eesanje/url_46_40_5.txt +12 -0
  30. eesanje/url_46_40_6.txt +6 -0
  31. eesanje/url_46_40_7.txt +5 -0
  32. eesanje/url_46_40_8.txt +21 -0
  33. eesanje/url_46_40_9.txt +10 -0
  34. eesanje/url_46_41_1.txt +14 -0
  35. eesanje/url_46_41_10.txt +9 -0
  36. eesanje/url_46_41_11.txt +10 -0
  37. eesanje/url_46_41_12.txt +11 -0
  38. eesanje/url_46_41_2.txt +8 -0
  39. eesanje/url_46_41_3.txt +8 -0
  40. eesanje/url_46_41_4.txt +6 -0
  41. eesanje/url_46_41_5.txt +11 -0
  42. eesanje/url_46_41_6.txt +5 -0
  43. eesanje/url_46_41_7.txt +10 -0
  44. eesanje/url_46_41_8.txt +14 -0
  45. eesanje/url_46_41_9.txt +7 -0
  46. eesanje/url_46_42_1.txt +8 -0
  47. eesanje/url_46_42_10.txt +11 -0
  48. eesanje/url_46_42_11.txt +15 -0
  49. eesanje/url_46_42_12.txt +8 -0
  50. eesanje/url_46_42_2.txt +11 -0
eesanje/url_46_39_12.txt ADDED
@@ -0,0 +1,8 @@
 
 
 
 
 
 
 
 
 
1
+ ಇನ್ನು ಮೇಲೆ ಲಿಫ್ಟಿಕ್ ಹಾಕುವವರಿಗೆ ಟಿಕೆಟ್ ಕೊಡುವುದಿಲ್ಲ
2
+ ಬೆಂಗಳೂರು,ಆ.20- ನಾವು ಜನಪರ ವಾಗಿದ್ದೇವೆ ಎಂಬ ಕಾರಣಕ್ಕೆ ನನ್ನ ವಿರುದ್ಧ ಇಲ್ಲಸಲ್ಲದ ಸುಳ್ಳು ಆರೋಪಗಳನ್ನು ಬಿಜೆಪಿ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಪ್ರಧಾನಿ ರಾಜೀವ್ ಗಾಂ„ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ರವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಇಬ್ಬರು ನಾಯಕರ ಕೊಡುಗೆಗಳನ್ನು ಸ್ಮರಿಸಿದರು.
3
+ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಬಡವರ ವಿರೋಸಿದ್ದರಾಮಯ್ಯಯಾಗಿವೆ. ನಾವು ಸಮಾನತೆ ತರುವ ನಿಟ್ಟಿನಲ್ಲಿ ಹೋರಾಟ ಮಾಡುತ್ತಿದ್ದೇವೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂಬ ಕಾರಣಕ್ಕೆ ನನ್ನ ವಿರುದ್ಧ ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಕಿಡಿಕಾರಿದರು. ರಾಜೀವ್‍ಗಾಂಸಿದ್ದರಾಮಯ್ಯ ಪ್ರಧಾನಿಯಾಗಿದ್ದಾಗ ದೇಶದ ಭವಿಷ್ಯ ರೂಪಿಸುವ ಯುವಕ-ಯುವತಿಯರಿಗೆ ಹಕ್ಕು ನೀಡಿದರು. ಸಾಮಾಜಿಕ ನ್ಯಾಯದ ಪರವಾಗಿದ್ದು ಎಲ್ಲರಿಗೂ ಸಮಾನ ಅವಕಾಶ ದೊರಕಿಸಬೇಕು ಎಂಬುದು ಅವರ ಆಶಯವಾಗಿತ್ತು. ಯಾವುದೇ ಜಾತಿ, ಧರ್ಮ, ಪ್ರಾದೇಶಿಕತೆ ತಾರತಮ್ಯವಿಲ್ಲದೆ ಎಲ್ಲರೂ ಭಾರತೀಯರು ಎಂಬ ಒಗ್ಗಟ್ಟಿನ ಅಗತ್ಯವಿದೆ ಎಂಬುದು ರಾಜೀವ್‍ಗಾಂಸಿದ್ದರಾಮಯ್ಯ ಅವರ ಕನಸು. ಮಹಿಳೆಯರ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದು, ಜೊತೆಗೆ ಸಂವಿಧಾನ ತಿದ್ದುಪಡಿ ತರುವ ಮೂಲಕ ಮಹಿಳೆಯರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಮೀಸಲಾತಿ ನೀಡಿದರು ಎಂದು ಹೇಳಿದರು.
4
+ ಬಡವರು, ದಲಿತರು ಹಾಗೂ ಅಲ್ಪಸಂಖ್ಯಾತರ ಪರವಾಗಿ ಬಿಜೆಪಿಯವರು ಈ ವರ್ಗಗಳ ವಿರುದ್ಧವಾಗಿದ್ದು, ಶೋಷಿತರು, ಅವಕಾಶವಂಚಿತರು ಯಥಾಸ್ಥಿತಿಯಲ್ಲಿ ಉಳಿಯಬೇಕು ಎಂಬ ಧೋರಣೆ ಹೊಂದಿದ್ದಾರೆ. ಬಾಯಿ ಮಾತಿಗೆ ಬಿಜೆಪಿಯವರು ಅವಕಾಶ ವಂಚಿತರ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್ ಕ್ರಿಯೆಯಲ್ಲಿ ಅವಕಾಶ ವಂಚಿತರ ಪರವಾಗಿ ಕೆಲಸ ಮಾಡುತ್ತದೆ ಎಂದು ಹೇಳಿದರು.ದೇಶದಲ್ಲಿ ಇಂದು ಸಂಪರ್ಕ ಕ್ರಾಂತಿಯಾಗುತ್ತಿದೆ. ಅದಕ್ಕೆ ರಾಜೀವ್ ಗಾಂಸಿದ್ದರಾಮಯ್ಯಯವರು ಕಾರಣ. ಯುವಶಕ್ತಿಯ ಮೇಲೆ ಅವರಿಗೆ ಅಪಾರವಾದ ನಂಬಿಕೆಯಿತ್ತು ಎಂದರು.
5
+ ರಾಜೀವ್‍ಗಾಂಸಿದ್ದರಾಮಯ್ಯ ಐದು ವರ್ಷ ಮಾತ್ರ ಪ್ರಧಾನಿಯಾಗಿದ್ದರು. ಮತ್ತಷ್ಟು ದಿನ ಅವರು ಜೀವಂತವಾಗಿದ್ದು, ಅಸಿದ್ದರಾಮಯ್ಯಕಾರದಲ್ಲಿ ಮುಂದುವರೆದಿದ್ದರೆ ಮಹತ್ವದ ಬದಲಾವಣೆಗಳಾಗುತ್ತಿದ್ದವು. ಬಹಳ ಚಿಕ್ಕ ವಯಸ್ಸಿನಲ್ಲೇ ಅವರನ್ನು ಹತ್ಯೆ ಮಾಡಲಾಯಿತು ಎಂದು ವಿಷಾದಿಸಿದರು.
6
+ ದೇವರಾಜ ಅರಸು ಅವರನ್ನು ಸಾಮಾಜಿಕ ನ್ಯಾಯದ ಅ„ಕಾರ ಎಂದು ಕರೆಯಲಾಗುತ್ತದೆ. ಅವರು ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕೊಟ್ಟರು. ಸಮಾಜದ ಕಟ್ಟಕಡೆಯ ವರ್ಗಗಳಿಗೆ ಶಿಕ್ಷಣದ ಹಕ್ಕು ನೀಡಿದರು. ಅಶಕ್ತ ಸಮುದಾಯಗಳಿಗೆ ವಿಧಾನಸಭೆ ಚುನಾವಣೆಯಲ್���ಿ ನಿಲ್ಲಲು ಅವಕಾಶ ಮಾಡಿಕೊಟ್ಟರು. ದೇವರಾಜ ಅರಸು ಪಕ್ಷದ ಅಧ್ಯಕ್ಷರಾಗಿದ್ದಾಗ ಜಾ-Àರ್‍ಶರೀ-ï ಅವರಿಗೆ ವಿಧಾನಸಭೆಯ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿದರು. ಆಗ ಕಾಂಗ್ರೆಸ್ ನಾಯಕಿ ನಾಗರತ್ನಮ್ಮ ಅವರು ಜಟಕಾ ಓಡಿಸುವವರಿಗೆ ಟಿಕೆಟ್ ಕೊಟ್ಟಿದ್ದೀರ ಎಂದು ಅರಸು ಅವರನ್ನು ಕೇಳಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ದೇವರಾಜ ಅರಸು, ಇನ್ನು ಮೇಲೆ ಲಿಫ್ಟಿಕ್ ಹಾಕುವವರಿಗೆ ಟಿಕೆಟ್ ಕೊಡುವುದಿಲ್ಲ, ಜಟಕಾ ಓಡಿಸುವವರಿಗೆ, ಕ್ಷೌರ ಮಾಡುವವರಿಗೆ ಅವಕಾಶ ಕೊಡುತ್ತೇವೆ ಎಂದು ಹೇಳಿದ್ದು ವರದಿಯಾಗಿತ್ತು ಎಂದರು.
7
+ ಅರಸು ಕಾಲದಲ್ಲಿ ಉಳುವವನೇ ಭೂಮಿ ಒಡೆಯ, ಮಲ ಹೊರುವ ಪದ್ಧತಿ ನಿಷೇಧ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿದರು ಎಂದು ಹೇಳಿದರು. ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಮಾತನಾಡಿ, ಈ ಹಿಂದೆ ಬಿಜೆಪಿಗರು 2-ಜಿ ಹಗರಣವನ್ನು ಭಾರಿ ದೊಡ್ಡದಾಗಿ ಬಿಂಬಿಸಿ ಅಪಪ್ರಚಾರ ಮಾಡಿದರು. ಈಗ 5-ಜಿ ಹರಾಜಿನಲ್ಲಿ ನಿಗದಿತ ಆದಾಯ ಬಂದಿಲ್ಲ. 60 ಸಾವಿರ ಕೋಟಿ ರೂ. ಕಿಕ್‍ಬ್ಯಾಕ್ ಹೋಗಿದೆ. ಇದರ ಬಗ್ಗೆ ಏಕೆ ತನಿಖೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.
8
+ ಮಾಜಿ ಸಚಿವೆ ಮೋಟಮ್ಮ, ಬಿಜೆಪಿಯವರು ತಾನು ಕಳ್ಳ, ಪರರನ್ನು ನಂಬ ಎಂಬಂತೆ ವರ್ತಿಸುತ್ತಿದ್ದಾರೆ. ಅವರ ಕಾಲಾವಧಿಯಲ್ಲಿ ಸಾಕಷ್ಟು ಹಗರಣಗಳು ನಡೆದಿದ್ದವು. ಅದನ್ನು ಮುಚ್ಚಿಕೊಳ್ಳಲು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅನಗತ್ಯ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ವಿಧಾನಪರಿಷತ್‍ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮ್ಮದ್, ರಾಜೀವ್‍ಗಾಂಧಿಯವರಂತೆ ರಾಹುಲ್‍ಗಾಂಧಿ ಕೂಡ ಕಾರ್ಯಕರ್ತರ ಹಿತಚಿಂತನೆ ಮಾಡುತ್ತಾರೆ. ಮುಂದೊಂದು ದಿನ ಈ ದೇಶಕ್ಕೆ ರಾಹುಲ್‍ಗಾಂಧಿ ಪ್ರಧಾನಿಯಾಗಿಯೇ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಚಿವರಾದ ಈಶ್ವರ್‍ಖಂಡ್ರೆ, ಕೆ.ಜೆ.ಜಾರ್ಜ್, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.
eesanje/url_46_39_2.txt ADDED
@@ -0,0 +1,8 @@
 
 
 
 
 
 
 
 
 
1
+ ಬಿಜೆಪಿ ಭಿನ್ನಮತ ಸರಿಪಡಿಸಿಕೊಳ್ಳಲು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದೆ : ಡಿಕೆಶಿ
2
+ ಬೆಂಗಳೂರು,ಆ.21-ಬಿಜೆಪಿಯವರು ತಮ್ಮ ಮೇಲಿನ ಭಿನ್ನಮತವನ್ನು ಸರಿಪಡಿಸಿಕೊಳ್ಳಲು ತಮ್ಮ ಸರ್ಕಾರದ ವಿರುದ್ಧ ಪ್ರತಿಭಟನೆಯ ನೆಪ ಹೇಳುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರ ವಿರುದ್ಧ ಅಭಿಯೋಜನೆಗೆ ಅನುಮತಿ ಕೊಟ್ಟ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದರು.
4
+ ಬಿಜೆಪಿಯವರ ಪ್ರತಿಭಟನೆಯಲ್ಲಿ ಹುರುಳಿಲ್ಲ. ಈ ಮೊದಲು ಅವರು ನಡೆಸಿದ ಪಾದಯಾತ್ರೆಗೆ ನಾವು ಸೂಕ್ತ ಉತ್ತರ ಕೊಟ್ಟಿದ್ದೇವೆ. ನಾಳೆಯೂ ಪ್ರತಿಭಟನೆ ಮಾಡಲಿ, ನಾವು ಬೇಡ ಎನ್ನುವುದಿಲ್ಲ. ಬಿಜೆಪಿಯಲ್ಲಿ ಆಂತರಿಕ ಬಿರುಕುಗಳು ಹೆಚ್ಚಿವೆ. ಅದನ್ನು ಸರಿಪಡಿಸಿಕೊಳ್ಳಲು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದರು.
5
+ ಉತ್ತರ ಕರ್ನಾಟಕ ಭಾಗದಲ್ಲಿ ಉತ್ತಮ ಮಳೆಯಾಗಿರುವುದರಿಂದ ಆಲಮಟ್ಟಿ ತುಂಬಿ ತುಳುಕುತ್ತಿದೆ. ಇಂದು ಅಲ್ಲಿಗೆ ಮುಖ್ಯಮಂತ್ರಿಗಳೊಂದಿಗೆ ತೆರಳಿ ಬಾಗಿನ ಅರ್ಪಿಸಲಾಗುವುದು ಎಂದು ಹೇಳಿದರು.ಮಂಡ್ಯ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯ ಕೊರತೆಯಿದೆ. ಕೆರೆಗಳು ತುಂಬಿಲ್ಲ. ಬೇರೆ ಕಡೆ ಉತ್ತಮ ಮಳೆಯ ವಾತಾವರಣವಿದೆ ಎಂದರು.
6
+ ತುಂಗಭದ್ರಾ ಅಣೆಕಟ್ಟಿನಲ್ಲಿ 19ನೇ ಕ್ರಸ್ಟ್ಗೇಟ್ ಒಡೆದು ಹೋದಾಗ ವಿರೋಧಪಕ್ಷಗಳು ವ್ಯಾಪಕ ಟೀಕೆ ಮಾಡಿದ್ದವು. ನಾವು ಪ್ರತಿಕ್ರಿಯಿಸಲಿಲ್ಲ. ಹಗಲು-ರಾತ್ರಿ ಕಷ್ಟಪಟ್ಟು ಸಿಬ್ಬಂದಿಗಳು, ಅಧಿಕಾರಿಗಳು ಕೆಲಸ ಮಾಡಿ ಗೇಟ್ ದುರಸ್ತಿ ಮಾಡಿದ್ದಾರೆ. ಇಡೀ ದೇಶವೇ ಈ ಕೆಲಸವನ್ನು ಗಮನಿಸುತ್ತಿತ್ತು ಎಂದರು.
7
+ ತುಂಗಭದ್ರಾ ಅಣೆಕಟ್ಟು ಕೂಡ ತುಂಬುತ್ತದೆ. ಆ ಬಳಿಕ ನಾನು ಮತ್ತು ಮುಖ್ಯಮಂತ್ರಿಯವರು ಹೊಗಿ ಬಾಗಿನ ಅರ್ಪಿಸುತ್ತೇವೆ. ಗೇಟ್ ದುರಸ್ತಿಗೆ ಶ್ರಮಿಸಿದವರನ್ನು ಸನಾನಿಸುತ್ತೇವೆ ಎಂದು ಹೇಳಿದರು.
8
+ ಇದೇ ವೇಳೆ ರಾಜ್ಯದ ಎಲ್ಲಾ ಜಲಾಶಯಗಳ ಸುರಕ್ಷತೆ ಅಧ್ಯಯನಕ್ಕಾಗಿ ತಾಂತ್ರಿಕ ತಂಡವೊಂದನ್ನು ರಚಿಸಿ ಕಳುಹಿಸಲಾಗಿದೆ ಎಂದರು.ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರಿಗೆ ಲೋಕಾಯುಕ್ತ ಸಂಸ್ಥೆ ಮತ್ತೊಮೆ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಲು ಡಿ.ಕೆ.ಶಿವಕುಮಾರ್ ನಿರಾಕರಿಸಿ ನಿರ್ಗಮಿಸಿದರು.
eesanje/url_46_39_3.txt ADDED
@@ -0,0 +1,5 @@
 
 
 
 
 
 
1
+ ಬೀಗರ ಬಾಡೂಟ ಸೇವಿಸಿದ್ದ 24 ಜನ ವಾಂತಿ, ಭೇದಿಯಿಂದ ಅಸ್ವಸ್ಥ
2
+ ತುಮಕೂರು,ಆ,21:ಬೀಗರೂಟದಲ್ಲಿ ಬಾಡೂಟ ಸೇವಿಸಿ ಗ್ರಾಮಕ್ಕೆ ಮರಳಿದ್ದ ಸುಮಾರು 24 ಜನರಿಗೆ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿ ವಾಂತಿ, ಭೇದಿಯಿಂದ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆ ಪಾವಗಡ ತಾಲೂಕಿನ ಶ್ರೀರಂಗಪುರ ತಾಂಡಾದಲ್ಲಿ ನಡೆದಿದೆ.ಅಸ್ವಸ್ಥಗೊಂಡವರು ಬೆಂಗಳೂರು ಸೇರಿ ಪಾವಗಡ, ಹಿಂದೂಪುರ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
3
+ ಕಳೆದ ಆ.14 ಮತ್ತು 15ರಂದು ಪಾವಗಡ ತಾಲೂಕಿನ ನಾಗೇನಹಳ್ಳಿ ತಾಂಡಾದಲ್ಲಿ ಮದುವೆ ನಡೆದಿತ್ತು. ಮರು ದಿನ ಆ.16ರಂದು ಶ್ರೀರಂಗಪುರ ತಾಂಡಾದಲ್ಲಿ ಬೀಗರ ಊಟ ಆಯೋಜಿಸಲಾಗಿತ್ತು. ಊಟ ಮಾಡಿ ವಾಪಸ್‌‍ ತೆರಳಿದ ನಾಗೇನಹಳ್ಳಿ ತಾಂಡಾದ ಜನರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ.
4
+ 24 ಮಂದಿ ವಾಂತಿ, ಭೇದಿಯಾಗಿ ಅಸ್ವಸ್ಥರಾಗಿದ್ದಾರೆ. ಕಳ್ಳಬಟ್ಟಿ ಸೇವನೆಯಿಂದಲೇ ಹೀಗಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.ಅಸ್ವಸ್ಥಗೊಂಡವರು ಹೊಟ್ಟೆ ನೋವು, ಭೇದಿಯಾಗಿ ಮರುದಿನ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆಯುತ್ತಿದ್ದಾರೆ.
5
+ ನಾಗೇನಹಳ್ಳಿ ತಾಂಡಾಗೆ ಉಪವಿಭಾಗಧಿಕಾರಿ ತಹಶೀಲ್ದಾರ್‌ , ಡಿಎಚ್‌ಓ ಸೇರಿದಂತೆ ಹಲವು ಅಧಿಕಾರಿಗಳ ತಂಡ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದದೆ. ಸದ್ಯ ಕಾರ್ಯಕ್ರಮದಲ್ಲಿ ನೀಡಿದ ನೀರು, ಊಟದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆದಿದೆ
eesanje/url_46_39_4.txt ADDED
@@ -0,0 +1,5 @@
 
 
 
 
 
 
1
+ “ದುಷ್ಮನ್ ಕಹಾ ಹೈ ಅಂದ್ರೆ, ಕಾಂಗ್ರೆಸ್ ಪಾರ್ಟಿ ತುಂಬಾ ಹೈ” : ಸಿದ್ದರಾಮಯ್ಯನವರೇ ಹುಷಾರು
2
+ ಬೆಂಗಳೂರು,ಆ.21-ದುಷ್ಮನ್ ಕಹಾ ಹೈ ಅಂದರೆ, ಕಾಂಗ್ರೆಸ್‌‍ ಪಾರ್ಟಿ ತುಂಬಾ ಹೈ ಎನ್ನುವ ಮೂಲಕ ನಿಮ ಪಕ್ಷದಲ್ಲೇ ನಿಮಗೆ ಹಿತಶತ್ರುಗಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಎಚ್ಚರಿಸಿದ್ದಾರೆ.
3
+ ಕಾಂಗ್ರೆಸ್‌‍ನಲ್ಲಿ ಮುಂದಿನ ಸಿಎಂ ಬಗ್ಗೆ ಕೆಲವರಿಂದ ಒಳ ಲೆಕ್ಕಾಚಾರ ಇದೆ ಎಂಬರ್ಥದಲ್ಲಿ ಎಕ್‌್ಸನಲ್ಲಿ ಪೋಸ್ಟ್‌ ಹಾಕಿರುವ ಅಶೋಕ್‌, ಸಿಎಂ ಸಿದ್ದರಾಮಯ್ಯ ಅವರಿಗೆ ನಮ ಸಂಪೂರ್ಣ ಬೆಂಬಲ ಇದೆ ಎಂದು ಬಹಿರಂಗವಾಗಿ ಹೇಳಿಕೆ ಕೊಡುತ್ತಿರುವ ಬಹುತೇಕ ಕಾಂಗ್ರೆಸ್‌‍ ನಾಯಕರು ಅಂತರಂಗದಲ್ಲಿ ಬೇರೆಯದೇ ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.
4
+ ದುಷ್ಮನ್ ಕಹಾ ಹೈ ಅಂದ್ರೆಕಾಂಗ್ರೆಸ್ ಪಾರ್ಟಿ ತುಂಬಾ ಹೈಸಿಎಂ@siddaramaiahನವರಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಅಂತ ಬಹಿರಂಗವಾಗಿ ಹೇಳಿಕೆ ಕೊಡುತ್ತಿರುವ ಬಹುತೇಕ ಕಾಂಗ್ರೆಸ್ ನಾಯಕರು ಅಂತರಂಗದಲ್ಲಿ ಬೇರೆಯದೇ ಲೆಕ್ಕಾಚಾರ ಹಾಕುತ್ತಿದ್ದಾರೆ.ಸಿಎಂ@siddaramaiahನವರೇ, ನಿಮ್ಮ ಬೆನ್ನಿಗೆ ನಿಲ್ಲುತ್ತೇವೆ ಎನ್ನುತ್ತಲೇ ಬೆನ್ನಿಗೆ ಚೂರಿ…../HJgCdZQ1S8
5
+ ಸಿಎಂ ಸಿದ್ದರಾಮಯ್ಯನವರೇ, ನಿಮ ಬೆನ್ನಿಗೆ ನಿಲ್ಲುತ್ತೇವೆ ಎನ್ನುತ್ತಲೇ ಬೆನ್ನಿಗೆ ಚೂರಿ ಹಾಕುವ ಹಿತಶತ್ರುಗಳು ನಿಮ ಪಕ್ಷದಲ್ಲೇ ಬಹಳ ಮಂದಿ ಇದ್ದಾರೆ. ಇಡೀ ರಾಜ್ಯ ತಮ ರಾಜೀನಾಮೆಗಾಗಿ ಕಾತುರದಿಂದ ಎದುರು ನೋಡುತ್ತಿದೆ. ಕನ್ನಡಿಗರ ತಾಳೆ ಪರೀಕ್ಷೆ ಮಾಡಬೇಡಿ. ಆದಷ್ಟು ಬೇಗ ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.
eesanje/url_46_39_5.txt ADDED
@@ -0,0 +1,4 @@
 
 
 
 
 
1
+ ಚಾರ್ಮುಡಿ ಘಾಟಿಯಲ್ಲಿ ಧಾರಾಕಾರ ಮಳೆ, ಪ್ರಯಾಣಿಕರು ಕಂಗಾಲು
2
+ ಚಿಕ್ಕಮಗಳೂರು,ಆ.21– ಚಾರ್ಮುಡಿ ಘಾಟಿಯಲ್ಲಿ ದಾಖಲೆ ಪ್ರಮಾಣದ ಮಳೆ ಸುರಿಯುತ್ತಿದ್ದು, ರಸ್ತೆಗಳ ಮೇಲೆ ನೀರು ಹರಿಯುತ್ತಿದೆ.ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಚಾರ್ಮಾಡಿ ಘಾಟಿಯಲ್ಲಿ ಮಳೆ ಬೀಳುತ್ತಿದ್ದು ಧಾರಾಕಾರ ಮಳೆ ಅಬ್ಬರಕ್ಕೆ ಪ್ರಯಾಣಿಕರು ಕಂಗಾಲಾಗಿದ್ದಾರೆ.
3
+ ಇತ್ತೀಚಿನ ವರ್ಷಗಳಲ್ಲಿ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ಯಲ್ಲಿ ಕಾಣದಂತ ರಣ ಮಳೆಯಾಗಿದ್ದು ರಸ್ತೆಯಲ್ಲಿ 2 ಅಡಿ ನೀರು ಹರಿಯುತ್ತಿದೆ.ಮಳೆ ಹಾಗೂ ಮಳೆ ನೀರಿನ ಮಧ್ಯೆ ವಾಹನ ಚಲಾಯಿಸುವುದು ಚಾಲಕರಿಗೆ ಸವಾಲಾಗಿದೆ.
4
+ ಗುಡ್ಡದ ಮೇಲಿಂದ ಹರಿದು ಬರುತ್ತಿರುವ ಕೆಸರು ಮಿಶ್ರಿತ ನೀರಿನಿಂದ ರಸ್ತೆಯೇ ಕಾಣದಂತಾಗಿದೆ.ಹೋಗಿ-ಬರುತ್ತಿರುವ ವಾಹನಗಳ ಚಾಲಕರು ಬೆಳ್ತಂಗಡಿ-ಕೊಟ್ಟಿಗೆಹಾರದಲ್ಲಿ ಚಾಲಕರಿಗೆ ಹೋಗಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.
eesanje/url_46_39_6.txt ADDED
@@ -0,0 +1,8 @@
 
 
 
 
 
 
 
 
 
1
+ ಅರಮನೆಯತ್ತ ದಸರಾ ಗಜಪಡೆಯ ಮೊದಲ ತಂಡ
2
+ ಹುಣಸೂರು, ಆ.21- ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮುನ್ನುಡಿ ಬರೆಯುವ ಗಜಪಡೆ ಇಂದು ಮೈಸೂರಿನತ್ತ ಹೆಜ್ಜೆ ಹಾಕಿವೆ.ತಾಲ್ಲೂಕಿನ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೀರನಹೊಸಹಳ್ಳಿಯಲ್ಲಿ ಇಂದು ಬೆಳಿಗ್ಗೆ ತುಲಾ ಲಗ್ನದಲ್ಲಿ ಅರಮನೆ ಪುರೋಹಿತರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್‌.ಸಿ. ಮಹದೇವಪ್ಪ, ಈಶ್ವರ್‌ಖಂಡ್ರೆ, ವೆಂಕಟೇಶ್‌, ಶಾಸಕರಾದ ಅನಿಲ್‌ಚಿಕ್ಕಮಾಧು, ಹರೀಶ್‌ಗೌಡ, ಮುಡಾ ಅಧ್ಯಕ್ಷ ಮರೀಗೌಡ, ರಾಜ್ಯ ಮಹಿಳೆ ಅಧ್ಯಕ್ಷೆ ಪುಷ್ಪಾ ಅಮರ್‌ನಾಥ್‌ ಅವರ ಸಮುಖದಲ್ಲಿ ಗಜಪಡೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ಪಯಣಕ್ಕೆ ಚಾಲನೆ ನೀಡಿದರು.
3
+ ಗಜಪಡೆಯಲ್ಲಿ ಕ್ಯಾಪ್ಟನ್‌ ಅಭಿಮನ್ಯು(58), ವರಲಕ್ಷ್ಮಿ(67), ಧನಂಜಯ(43), ಗೋಪಿ(41), ಭೀಮ(24), ಲಕ್ಷ್ಮಿ(53), ಕಂಜನ್‌(25), ರೋಹಿಣಿ(22) ಹಾಗೂ ಏಕಲವ್ಯ(38) ಆನೆಗಳು ಇಂದು ಸಾಂಸ್ಕೃತಿಕ ನಗರಿಯತ್ತ ತೆರಳಿದವು.ವಿವಿಧ ಜನಪದ ಕಲಾತಂಡಗಳು, ಗಿರಿಜನರ ಸಾಂಸ್ಕೃತಿಕ ಕಾರ್ಯಕ್ರಮ ಹಾಡಿ ಮಕ್ಕಳ ನೃತ್ಯ ವೈಭವದೊಂದಿಗೆ ಬೀಳ್ಕೊಡಲಾಯಿತು.
4
+ ಇಂದು ಸಂಜೆ ಮೈಸೂರು ನಗರಕ್ಕೆ ಆನೆಗಳು ಬರಲಿದ್ದು, ಅಶೋಕಪುರಂನ ಅರಣ್ಯ ಭವನ ಆವರಣದ ಕಿರು ಅರಣ್ಯದಲ್ಲಿ ಉಳಿದುಕೊಂಡು 23 ರಂದು ಬೆಳಿಗ್ಗೆ ಅರಮನೆ ಆವರಣ ಪ್ರವೇಶಿಸಲಿದೆ.
5
+ ಮೊದಲ ಬಾರಿಗೆ ಏಕಲವ್ಯ ಭಾಗಿ:ದಸರಾದ ಪ್ರಮುಖ ಆಕರ್ಷಣೀಯವಾಗಿದ್ದ ಅರ್ಜುನ ಆನೆ ಅಕಾಲಿಕ ಮರಣ ಹೊಂದಿದ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಏಕಲವ್ಯ ಆನೆ ಈ ಬಾರಿ ದಸರಾದಲ್ಲಿ ಭಾಗವಹಿಸಲಿದೆ. 2018ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡುಗೆರೆ ಬಳಿ ಏಕಲವ್ಯನನ್ನು ಸೆರೆ ಹಿಡಿದು ಮತ್ತಿಗೋಡು ಆನೆ ಶಿಬಿರದಲ್ಲಿ ಪಳಗಿಸಲಾಗಿದೆ.
6
+
7
+ ಮೊದಲ ತಂಡದಲ್ಲಿ ಅಂಬಾರಿ ಹೊರುವ ಅಭಿಮನ್ಯು ಸೇರಿದಂತೆ ಒಂಭತ್ತು ಆನೆಗಳು ತೆರಳಿದ್ದು, ಎರಡನೇ ಹಂತದಲ್ಲಿ ಪ್ರಶಾಂತ್‌, ಮಹೇಂದ್ರ, ಸುಗ್ರೀವಾ, ಲಕ್ಷ್ಮೀ ಹಾಗೂ ಹಿರಣ್ಯ ಆನೆಗಳು ತೆರಳಲಿವೆ. ಹೆಚ್ಚುವರಿಯಾಗಿ ನಾಲ್ಕು ಆನೆಗಳನ್ನು ಅರಣ್ಯ ಇಲಾಖೆ ಸಿದ್ದಪಡಿಸಲಾಗಿದ್ದು, ಅವು ಕೂಡ ಭಾಗವಹಿಸಲಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
8
+ ತಾಲೀಮು ವೇಳೆ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟವಾದರೆ ಮುಂಜಾಗ್ರತಾ ದೃಷ್ಟಿಯಿಂದ 18 ಆನೆಗಳು, ಮಾವುತರು, ಕಾವಾಡಿ, ಅಧಿಕಾರಿ, ಸಿಬ್ಬಂದಿ ಸೇರಿ 2.33 ಕೋಟಿ ರೂ. ವಿಮೆ ಮಾಡಿಸಲಾಗಿದೆ. ಕಾವಾಡಿಗರ ಕುಟುಂಬ ಉಳಿದುಕೊಳ್ಳಲು ಅರಮನೆ ಆವರಣದಲ್ಲಿ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಲಾಗಿದೆ.
eesanje/url_46_39_7.txt ADDED
@@ -0,0 +1,4 @@
 
 
 
 
 
1
+ ದರ್ಶನ್‌ಗೆ ಬಿಗ್ ಶಾಕ್ ಕೊಟ್ಟ ಸರ್ಕಾರ : ಮನೆ ಉಟ ಮನವಿ ತಿರಸ್ಕರ
2
+ ಬೆಂಗಳೂರು, ಆ.20-  ಮನೆ ಊಟ ಪಡೆದುಕೊಳ್ಳಲು ಅನುಮತಿ ನೀಡುವಂತೆ ಕೋರಿ ಜೈಲಿನಲ್ಲಿರುವ ನಟ ದರ್ಶನ್‌ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ ಗೆ ಮಾಹಿತಿ ನೀಡಿದೆ. ಅನಾರೋಗ್ಯ ಕಾರಣ ನೀಡಿ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ಕೋರಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ನಡೆಸಿತು.
3
+ ವಿಚಾರಣೆ ವೇಳೆ ಸರ್ಕಾರದ ಪರ ಹಾಜರಿದ್ದ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ನ್ಯಾಯಪೀಠಕ್ಕೆ ಮಾಹಿತಿ ನೀಡಿ, ದರ್ಶನ್‌ ಮನವಿಯನ್ನು ಆಗಸ್ಟ್‌ 14ರಂದೇ ತಿರಸ್ಕರಿಸಲಾಗಿದೆ. ಈ ವಿಚಾರವನ್ನು ಅದೇ ದಿನ ತಿಳಿಸಲಾಗಿದೆ ಎಂದು ವಿವರಿಸಿದರು.
4
+ ಈ ವೇಳೆ ದರ್ಶನ್‌ ಪರ ವಕೀಲರು ನ್ಯಾಯಪೀಠಕ್ಕೆ ಮನವಿ ಮಾಡಿ, ಪ್ರಕರಣವನ್ನು ಮೆರಿಟ್‌ ಮೇಲೆ ವಾದಿಸಲು ಕಾಲಾವಕಾಶ ನೀಡುವಂತೆ ಕೋರಿದರು. ಮನವಿ ಪುರಸ್ಕರಿಸಿದ ಹೈಕೋರ್ಟ್, ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್‌ 5ಕ್ಕೆ ಮುಂದೂಡಿತು.
eesanje/url_46_39_8.txt ADDED
@@ -0,0 +1,6 @@
 
 
 
 
 
 
 
1
+ ರಾಜ್ಯಪಾಲರ ವಿರುದ್ಧ ಕನ್ನಡ ಒಕ್ಕೂಟದ ಹೋರಾಟದ ಎಚ್ಚರಿಕೆ
2
+ ಬೆಂಗಳೂರು, ಆ.20- ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಪ್ರಾಸಿಕ್ಯೂಷನ್‍ಅನ್ನು ಕೂಡಲೇ ವಾಪಸ್ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಬೃಹತ್ ಹೋರಾಟ ನಡೆಸುವುದಾಗಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ನೀಡಿರುವ ಪ್ರಾಸಿಕ್ಯೂಷನ್ ಹಿಂಪಡೆಯಬೇಕು.
3
+ ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಹೇಳಿದರು. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಶಿವರಾಮೇಗೌಡ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ಕನ್ನಡ ಚಳವಳಿ ನಾಯಕರಾದ ಸಾ.ರಾ.ಗೋವಿಂದು ಮಾತನಾಡಿ, ಮುಖ್ಯಮಂತ್ರಿಗಳ ಮೇಲೆ ಗಂಭೀರ ಆರೋಪ ಮಾಡಬೇಕಾದರೆ, ಸಿಐಡಿ, ಲೋಕಾಯುಕ್ತ, ಈ ರೀತಿಯ ತಲಿಕಾ ಸಂಸ್ಥೆಗಳಲ್ಲಿ ದೂರು ದಾಖಲಾಗಿರಬೇಕು. ಆದರೆ ಏಕಾಏಕಿ ರಾಜ್ಯಪಾಲರು ದುರುದ್ದೇಶದಿಂದ ಯಾರೋ ಗೊತ್ತು ಗುರಿ ಇಲ್ಲದ ವ್ಯಕ್ತಿ ದೂರು ಕೊಟ್ಟಾಗ ಪ್ರಕರಣಕ್ಕೆ ಸ್ಪಂದಿಸಿ ತಮ್ಮ ಅ„ಕಾ ದುರುಪಯೋಗಪಡಿಸಿಕೊಂಡು, ಮುಖ್ಯಮಂತ್ರಿಗಳ ಮೇಲೆ ನ್ಯಾಯಾಂಗ ತನಿಖೆಗೆ ಆದೇಶಿಸಿರುವುದು ಹುನ್ನಾರದ ಪ್ರತಿಬಿಂಬವಾಗಿದೆ ಎಂದು ಆಪಾದಿಸಿದರು.
4
+ ಇದು ಕೇಂದ್ರ ಮತ್ತು ರಾಜ್ಯದ ಬಿಜೆಪಿ ಮುಖಂಡರ ಕುತಂತ್ರದ -Àಲವಾಗಿದೆ. ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿ ಆಗಿರುವುದು ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಳಂಕ ರಹಿತವಾಗಿ ಆಡಳಿತ ಕೊಟ್ಟಿ್ದÁರೆ. ಅವರನ್ನು ಅ„ಕಾರದಿಂದ ಕೆಳಗಿಳಿಸಬೇಕೆಂಬ ದುರುದ್ದೇಶವೇ ಹೊರತು ಬೇರೇನೂ ಇಲ್ಲ ಎಂದು ದೂರಿದರು. ನಾವು ಕನ್ನಡ ಪರ ಸಂಘಟನೆಗಳು ಬಹಳಷ್ಟು ಸಾರಿ ರಾಜಭವನದ ಮುಂದೆ ಭಾಷೆಗಾಗಿ ಕಾವೇರಿ ಹೋರಾಟ, ಮಹದಾಯಿ ಹೋರಾಟ ಹೀಗೆ ಅನೇಕ ಕನ್ನಡಪರ ಹೋರಾಟಗಳನ್ನು ಮಾಡಿದರೂ ನ್ಯಾಯ ಕೊಡದ ರಾಜ್ಯಪಾಲರು ಈಗ ಕೂಡಲೇ ಅಬ್ರಾಹಂ ಕೊಟ್ಟಿರುವ ದೂರಿಗೆ ಸ್ಪಂದಿಸಿ್ದÁರೆ. ಇದು ಏಕಪಕ್ಷೀಯವಾಗಿದೆ. ಅಬ್ರಾಹಂ ಒಬ್ಬ ಲಂಚಕೋರ. ಭ್ರಷ್ಟ ವ್ಯಕ್ತಿ ಈಗಾಗಲೇ ಅವರ ಮೇಲೆ ಲಂಚದ ಆರೋಪ ಇದೆ. ದಂಡ ವಿ„ಸಿಕೊಂಡಿ್ದÁರೆ. ಇಂತಹ ವ್ಯಕ್ತಿತ್ವವುಳ್ಳ ವ್ಯಕ್ತಿಗೆ ಇವರು ಮಣೆ ಹಾಕಿ್ದÁರೆ. ಇದನ್ನು ರಾಜ್ಯದ ಜನ ಕ್ಷಮಿಸುವುದಿಲ್ಲ ಎಂದರು.
5
+ ರಾಜ್ಯಪಾಲರು ಮುಖ್ಯಮಂತ್ರಿಗೆ ನೋಟಿಸ್ ಕೊಡುವ ಅ„ಕಾರ ಇರಬಾರದು. ಈ ಬಗ್ಗೆ ಪ್ರಜಾಪ್ರಭುತ್ವ ಉಳಿಸಿಲು ರಾಜ್ಯಾದ್ಯಂತ ಚಳವಳಿ ನಡೆಸಲು ತೀರ್ಮಾನಿಸಿದ್ದೇವೆ. ಕೂಡಲೆ ರಾಜ್ಯಪಾಲರು ನಮ್ಮ ರಾಜ್ಯವನ್ನು ಬಿಟ್ಟು ಹೋಗಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಬೃಹತ್ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.
6
+ ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಕೆ.ಆರ್. ಕುಮಾರ್, ಕರ್ನಾಟಕ ರಕ್ಷಣಾ ���ೇದಿಕೆ ರಾಜ್ಯಾಧ್ಯಕ್ಷರಾದ ಮಂಜುನಾಥ್ ದೇವ್, ಹೆಚ್.ವಿ.ಗಿರೀಶ್ ಗೌಡ ಹಾಗೂ ಅನೇಕ ಕನ್ನಡಪರ ಮುಖಂಡರು ಉಪಸ್ಥಿತರಿದ್ದರು.
eesanje/url_46_39_9.txt ADDED
@@ -0,0 +1,6 @@
 
 
 
 
 
 
 
1
+ ಗೆಹ್ಲೋಟ್ ವಿರುದ್ಧ ಡಿಸಿಎಂ ಡಿಕೆಶಿ ಗರಂ
2
+ ಬೆಂಗಳೂರು,ಆ.20- ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರನ್ನುಬಿಜೆಪಿಯವರು ತಮ್ಮ ಏಜೆಂಟ ರಂತೆ ಪರಿವರ್ತಿಸಿಕೊಂಡಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಪ್ರಧಾನಿ ದಿ.ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ ಅಂಗವಾಗಿ ಶೇಷಾದ್ರಿಪುರಂ ವೃತ್ತದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಪ್ರತಿಭಟನೆಗೆ ತಿರುಗೇಟು ನೀಡಿದರು.
3
+ ರಾಜ್ಯಪಾಲರನ್ನು ಬಿಜೆಪಿಯವರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸಂವಿಧಾನ ದುರುಪಯೋಗಪಡಿಸಿಕೊಂಡು ಪ್ರಜಾಪ್ರಭುತ್ವ ಮಾರಕವಾಗುತ್ತಿದ್ದಾರೆ. ರಾಜ್ಯಪಾಲರನ್ನು ಪಕ್ಷದ ಏಜೆಂಟರನ್ನಾಗಿ ಮಾಡಿಕೊಂಡಿರುವುದಕ್ಕೆ ಇದೆಲ್ಲಾ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಕರಣದಲ್ಲಿ ತಕ್ಷಣವೇ ಅಭಿಯೋಜನೆಗೆ ಅನುಮೋದನೆ ನೀಡುವ ರಾಜ್ಯಪಾಲರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಪ್ರಕರಣದಲ್ಲಿ ಅದೇ ವೇಗದ ನಿರ್ಧಾರ ತೆಗೆದುಕೊಳ್ಳುತ್ತಾರೆಯೇ ಎಂಬ ಪ್ರಶ್ನೆಗಳು ಎದುರಾಗುತ್ತಿವೆ.ನಾನು ರಾಜ್ಯಪಾಲರಿಗಾಗಿ, ಲೋಕಾಯುಕ್ತಕ್ಕಾಗಿ ವಕ್ತಾರನಲ್ಲ. ಕಾಂಗ್ರೆಸ್ ಪಕ್ಷದ ವಕ್ತಾರ. ಪ್ರಕರಣದ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದು ನಂತರ ಪ್ರತಿಕ್ರಿಯಿಸುವುದಾಗಿ ತಿಳಿಸಿದರು.
4
+ ಮಾಜಿ ಪ್ರಧಾನಿ ರಾಜೀವ್‍ಗಾಂಧಿಯವರು ದೇಶ ಕಂಡ ದೂರದರ್ಶಿ ನಾಯಕ. ಯುವಸಮುದಾಯದಲ್ಲಿ ನಾಯಕತ್ವವನ್ನು ಸೃಷ್ಟಿಸಿದವರು. ನಾನು ಬೆಂಗಳೂರು ಅಭಿವೃದ್ಧಿ ಸಚಿವನಾದ ಸಂದರ್ಭದಲ್ಲಿ ಪುತ್ಥಳಿಯನ್ನು ಪುನರುಜ್ಜೀವನಗೊಳಿಸಲು ನನ್ನ ವಿವೇಚನಾ ಅಧಿಕಾರವನ್ನು ಬಳಸಿಕೊಂಡು ಮೊದಲ ಕಡತಕ್ಕೆ ಸಹಿ ಹಾಕಿದ್ದೆ. ಜೊತೆಗೆ ಓಕಳಿಪುರಂನ ಸಿಗ್ನಲ್ ಫ್ರೀ ಕಾರಿಡಾರ್‍ಗೆ ರಾಜೀವ್‍ಗಾಂಧಿಯವರ ಹೆಸರನ್ನು ನಾಮಕರಣ ಮಾಡುತ್ತಿದ್ದೇವೆ ಎಂದರು.
5
+ ಪ್ರತಿವರ್ಷ ಬಿಬಿಎಂಪಿಯಿಂದ ರಾಜೀವ್‍ಗಾಂಧಿ ಜನ್ಮ ದಿನಾಚರಣೆಗಾಗಿ ಕಾರ್ಯಕ್ರಮ ಆಯೋಜಿಸಿ ಆದೇಶ ಹೊರಡಿಸುತ್ತಿದ್ದೇನೆ ಎಂದು ಹೇಳಿದರು. ರಾಜೀವ್‍ಗಾಂಧಿಯವರು ಹೊಸ ಪೀಳಿಗೆಗೆ ಮತದಾನದ ಹಕ್ಕು ನೀಡಿದರು. ಇಂದು ದೇಶದ ಪ್ರತಿಯೊಬ್ಬರ ಕೈಲಿ ಒಂದಕ್ಕಿಂತ ಹೆಚ್ಚು ಮೊಬೈಲ್‍ಗಳಿದ್ದರೆ ಆ ಕ್ರಾಂತಿಗೆ ರಾಜೀವ್ ಗಾಂಧಿ ಕಾರಣ. ಸಂವಿಧಾನಕ್ಕೆ ತಿದ್ದುಪಡಿ ತಂದು ನಗರ, ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡಿದ್ದು ರಾಜೀವ್‍ಗಾಂ„ಯವರು ಎಂದು ಹೇಳಿದರು.
6
+ ರಾಜೀವ್‍ಗಾಂಧಿ ಸೇರಿದಂತೆ ಅವರ ಕುಟುಂಬ ಈ ದೇಶಕ್ಕಾಗಿ ಮಾಡಿರುವ ತ್ಯಾಗ ಸ್ಮರಣೀಯ ಎಂದರು. ಸಚಿವರಾದ ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ ಉಪಸ್ಥಿತರಿದ್ದರು.
eesanje/url_46_3_1.txt ADDED
@@ -0,0 +1,6 @@
 
 
 
 
 
 
 
1
+ ನನಗೆ ಚಾಮುಂಡೇಶ್ವರಿಯ ಆಶೀರ್ವಾದ ಇದೆ, ಐದು ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
2
+ ' , :
3
+ ಮೈಸೂರು,ಅ.3– ರಾಜ್ಯದಲ್ಲಿ ದೇವರಾಜ ಅರಸು ಬಿಟ್ಟರೆ 5 ವರ್ಷ ಸಿಎಂ ಆಗಿದ್ದು ನಾನೇ, ಮುಂದಿನ 5 ವರ್ಷಗಳಲ್ಲೂ ಕೂಡ ನಾನೇ ಸಿಎಂ, ಈಗಲೂ ಎಷ್ಟೇ ತೊಡಕು ಬಂದರೂ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ನನಗೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು.
4
+ ಜಿ.ಟಿ.ದೇವೇಗೌಡ, ನೀನೇ ಒಂದು ಸಲ ಸೋಲಿಸಿಬಿಟ್ಟೇ. ನಾನು ಮಂತ್ರಿಯಾಗಿ 40 ವರ್ಷಗ ಳಾಯಿತು. ನಾನು ಯಾವ ತಪ್ಪೂ ಮಾಡಿಲ್ಲ. ಮಾಡಿದ್ದರೆ ಸುದೀರ್ಘ ರಾಜಕೀಯದಲ್ಲಿ ಇರುತ್ತಿರಲಿಲ್ಲ. ನಾವು ಜಿ.ಟಿ.ದೇವೇಗೌಡರು ಒಂದೇ ತಾಲ್ಲೂಕಿನವರು. ಜಿ.ಟಿ .ದೇವೇಗೌಡ ಸತ್ಯಕ್ಕೆ ಜಯ ಸಿಗಬೇಕು ಎಂದಿರುವುದು ನನಗೆ ಮತ್ತಷ್ಟು ಬಲ ತಂದಿದೆ ಎಂದರು. ನಾನು ಡಿಕೆ ಇಬ್ಬರೂ ಒಟ್ಟಿಗೆ ಬೆಟ್ಟಕ್ಕೆ ಬಂದು ಚಾಮುಂಡಿ ತಾಯಿಯ ಪೂಜೆ ಮಾಡಿ 5 ಗ್ಯಾರಂಟಿಗೆ ಶಕ್ತಿ ಕೊಡಮ ಎಂದು ಕೇಳಿಕೊಂಡಿದ್ದೆವು.
5
+ ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ ಎಲ್ಲಾ ಗ್ಯಾರಂಟಿ ಜಾರಿ ಮಾಡಿದ್ದೇವೆ. ಇದು ಚಾಮುಂಡಿಯ ಆಶೀರ್ವಾದ ಎಂದು ಹೇಳಿದರು.ದೇವರ ಹಾಗೂ ಜನರ ಆಶೀರ್ವಾದ ಇರುವವರೆಗೂ ನನ್ನನ್ನು ಯಾರಿಂದಲೂ ಏನು ಮಾಡಲು ಸಾಧ್ಯವಿಲ್ಲ. ಏನಪ್ಪಾ ಜಿಟಿ, ನೀನೇ ನನ್ನ ಒಂದು ಬಾರಿ ಸೋಲಿಸಿದ್ದೆ ಎಂದು ನಗೆ ಚಾಟಿಕೆ ಹಾರಿಸಿದರು.
6
+ ಒಟ್ಟು 9 ಚುನಾವಣೆ ಗೆದ್ದಿದ್ದೇನೆ. 40 ವರ್ಷ ಮಂತ್ರಿಯೇ ಆಗಿದ್ದೇನೆ. ಚಾಮುಂಡಿ ಕೃಪೆಯಿಂದ ಇಲ್ಲಿವರೆಗೂ ತಪ್ಪು ಮಾಡಿಲ್ಲ. ತಪ್ಪು ಮಾಡಿದರೆ ಇಷ್ಟು ವರ್ಷ ದೀರ್ಘ ರಾಜಕಾರಣ ಮಾಡಲು ಆಗುತ್ತಿರಲಿಲ್ಲ. ನಾನು ಜಿ.ಟಿ.ದೇವೇಗೌಡರು ಒಂದೇ ತಾಲ್ಲೂಕಿನವರು, ಒಟ್ಟಿಗೆ ರಾಜಕಾರಣ ಮಾಡಿದ್ದೇವೆೆ, ಸತ್ಯಕ್ಕೆ ಜಯ ಸಿಕ್ಕೇ ಸಿಗುತ್ತದೆ. ಹಾಗಾಗಿ ಜಿ.ಟಿ.ದೇವೇಗೌಡರಿಗೆ ಧನ್ಯವಾದ ಹೇಳುತ್ತೇನೆ ಎಂದು ತಿಳಿಸಿದರು.
eesanje/url_46_3_10.txt ADDED
@@ -0,0 +1,5 @@
 
 
 
 
 
 
1
+ ರೇಣುಕಾಸ್ವಾಮಿ ಕೊಲೆ ಪ್ರಕರಣ : ‘ಡಿ’ಗ್ಯಾಂಗ್‌ನ ಮೂವರು ಜೈಲಿನಿಂದ ಬಿಡುಗಡೆ
2
+
3
+ ತುಮಕೂರು,ಅ.2– ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಇಂದು ತುಮಕೂರು ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ಈ ಪ್ರಕರಣದಲ್ಲಿ ಕೇಶವಮೂರ್ತಿ, ಕಾರ್ತಿಕ್‌ ಹಾಗೂ ನಿಖಿಲ್‌ಗೆ ಜಾಮೀನು ಲಭಿಸಿದ್ದು, ಇಂದು ಕಾರಾಗೃಹದಿಂದ ಮನೆಗೆ ತೆರಳಲಿದ್ದಾರೆ.
4
+ ಕೇಶವಮೂರ್ತಿಗೆ ಹೈಕೋರ್ಟ್‌ನಿಂದ ಹಾಗೂ ಕಾರ್ತಿಕ್‌ ನಿಖಿಲ್‌ಗೆ 57ನೇ ಸಿಸಿಎಚ್‌ ನ್ಯಾಯಾಲಯದಿಂದ ಸೆ.23ರಂದು ಷರತ್ತುಬದ್ಧ ಜಾಮೀನು ಲಭಿಸಿತ್ತು. ಆದರೆ ಜಾಮೀನು ಶ್ಯೂರಿಟಿಗೆ 2 ಲಕ್ಷ ಹಣ ಹಾಗೂ ಇಬ್ಬರು ಶ್ಯೂರಿಟಿದಾರರನ್ನು ಹೊಂದಿಸಲು ಈ ಮೂವರ ಕುಟುಂಬಸ್ಥರಿಗೆ ಸಾಧ್ಯವಾಗಿರಲಿಲ್ಲ.
5
+ ಸತತ 9 ದಿನಗಳಿಂದ ಶ್ಯೂರಿಟಿದಾರರು ಸಿಗದೆ ಕುಟುಂಬಸ್ಥರು ಪರದಾಡಿದ್ದರು. ನಿನ್ನೆ ಜಾಮೀನು ಶ್ಯೂರಿಟಿ ಪ್ರಕ್ರಿಯೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾತ್ರಿ ತುಮಕೂರು ಜೈಲಾಧಿಕಾರಿಗಳಿಗೆ ಜಾಮೀನು ಆದೇಶದ ಪ್ರತಿ ಮೇಲ್‌ ಮೂಲಕ ತಲುಪಿದೆ.ಹಾಗಾಗಿ ಇಂದು ಬೆಳಗ್ಗೆ ಈ ಮೂವರು ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
eesanje/url_46_3_11.txt ADDED
@@ -0,0 +1,18 @@
 
 
 
 
 
 
 
 
 
 
 
 
 
 
 
 
 
 
 
1
+ ಮುಡಾ ಹಗರಣ : ದೂರುದಾರ ಸ್ನೇಹಮಯಿ ಕೃಷ್ಣಗೆ ಇಡಿ ನೋಟಿಸ್‌‍
2
+
3
+ ಬೆಂಗಳೂರು,ಅ.2-ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೋಟಿಸ್‌‍ ನೀಡಿದ್ದಾರೆ.
4
+ ಮೊದಲ ಬಾರಿಗೆ ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಪ್ರಕರಣದ ಸಾಕ್ಷ್ಯಾಧಾರ ಮತ್ತು ದಾಖಲೆ ಸಲ್ಲಿಸುವಂತೆ ಇ.ಡಿ ಸಮನ್‌್ಸ ನೀಡಿದೆ. ಈ ಮೂಲಕ ಇ.ಡಿ ಅಧಿಕೃತವಾಗಿ ಮುಡಾ ಪ್ರಕರಣದಲ್ಲಿ ಪ್ರವೇಶ ಮಾಡಿದಂತಾಗಿದೆ.
5
+ ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಶಾಂತಿನಗರದಲ್ಲಿರುವ ನಿರ್ದೇಶನಾಲಯದ ಕಚೇರಿಗೆ ಮೂಡಾ ಅಕ್ರಮಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳ ಸಮೇತ ಬರುವಂತೆ ಸೂಚನೆ ನೀಡಲಾಗಿದೆ.
6
+ ಕಳೆದ ಶನಿವಾರವಷ್ಟೇ ಸ್ನೇಹಮಯಿ ಕೃಷ್ಣ ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಭಾಮೈದ ಮಲ್ಲಿಕಾರ್ಜುನ ಸ್ವಾಮಿ, ಭೂ ಮಾಲೀಕ ದೇವರಾಜು ವಿರುದ್ಧ ಇ.ಡಿಗೆ ದೂರು ನೀಡಿದ್ದರು. ಸೋಮವಾರ ಇ.ಡಿ ಇಸಿಐಆರ್‌ ದಾಖಲಿಸಿಕೊಂಡಿದೆ.ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಯಾದ ಜಾರಿನಿರ್ದೇಶನಾಲಯವು ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಸಿಐಆರ್‌ ದಾಖಲಿಸಿಕೊಂಡಿದೆ.
7
+ ಒಂದು ಕಡೆ ಲೋಕಾಯುಕ್ತ ಪೊಲೀಸರು ಈಗಾಗಲೇ ಅವರ ವಿರುದ್ದ ಎಫ್‌ಐಆರ್‌ ದಾಖಲಿಸಿದ್ದರೂ, ಜಾರಿ ನಿರ್ದೇಶನಾಲಯ ಸಿದ್ದರಾಮಯ್ಯ ವಿರುದ್ದ ಇಸಿಐಆರ್‌ ದಾಖಲಿಸಿಕೊಂಡಿದೆ.
8
+ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ, ಅವರ ಭಾವಮೈದುನ ಮಲ್ಲಿಕಾರ್ಜುನಸ್ವಾಮಿ ಮತ್ತು ಜಾಗವನ್ನು ಸಿಎಂ ಭಾವನಿಗೆ ಮಾರಾಟ ಮಾಡಿದ್ದ ದೇವರಾಜು ವಿರುದ್ದ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.ಇಡಿ ತನಿಖಾ ಸಂಸ್ಥೆಯು ತನ್ನ ಇಸಿಐಆರ್‌ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪೊಲೀಸ್‌‍ ಎಫ್‌ಐಆರ್‌ಗೆ ಸಮಾನವಾದ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್‌ಗಳನ್ನು ಹಾಕಿರುವುದು ಗಮನಿಸಬೇಕಾದ ವಿಚಾರವಾಗಿದೆ.
9
+ ಇ.ಡಿ ತನ್ನ ಕಾರ್ಯವಿಧಾನದ ಪ್ರಕಾರ, ಆರೋಪಿ ಸ್ಥಾನದಲ್ಲಿ ಇರುವವರನ್ನು ವಿಚಾರಣೆಗೆ ಕರೆಯಲು ಮತ್ತು ಅವಶ್ಯಕತೆ ಬಿದ್ದಲ್ಲಿ ಅವರ ಆಸ್ತಿಯನ್ನು ತನಿಖಾ ಅವಧಿಯಲ್ಲಿ ಮುಟ್ಟುಗೋಲು ಹಾಕಿಕೊಳ್ಳಲು ಇಸಿಐಆರ್‌, ಮೊದಲಿಗೆ ದಾಖಲಿಸಿಕೊಳ್ಳುತ್ತದೆ.
10
+ ಎನ್ಫೋರ್ಸ್‌ಮೆಂಟ್‌ ಕೇಸ್‌‍ ಇನ್ಫಾರ್ಮೇಶನ್‌ ರಿಪೋರ್ಟ್‌, ಇದು ಪೊಲೀಸ್‌‍ ಭಾಷೆಯಲ್ಲಿ ಎಫ್‌ಐಆರ್‌ ಇದ್ದ ಹಾಗೇ. ಜಾರಿ ನಿರ್ದೇಶನಾಲಯವು ಯಾರನ್ನಾದಾರೂ ವಿಚಾರಣೆಗೆ ಅಥವಾ ಬಂಧಿಸುವ ಮುನ್ನ ಅಥವಾ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು (ತನಿಖೆಯ ವೇಳೆ) ಹಾಕುವ ಮುನ್ನ ಇಸಿಐಆರ್‌ ಅನ್ನು ದಾಖಲಿಸಿಕೊಳ್ಳುತ್ತದೆ.
11
+ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ 2002ರ ಕಾಯ್ದೆಯಡಿ, ಇಸಿಐಆರ್‌ ಎನ್ನುವುದ�� ಶಾಸನಬದ್ಧವಲ್ಲದ ದಾಖಲೆ/ಕ್ರಮ ಎಂದು ಪರಿಗಣಿಸಲಾಗುತ್ತದೆ. ಯಾಕೆಂದರೆ ಈ ಕಾಯ್ದೆಯಲ್ಲಿ ಇದರ ನೋಂದಣಿಯ ಅಗತ್ಯವಿಲ್ಲ. ಇನ್ನೊಂದು ತನಿಖಾ ಸಂಸ್ಥೆಯು ಈಗಾಗಲೇ ಎಫ್‌ಐಆರ್‌ ದಾಖಲಿಸಿದ್ದರೂ, ಇಡಿ ತನ್ನ ಇಸಿಐಆರ್‌ ಅನ್ನು ರದ್ದುಗೊಳಿಸಬೇಕಾಗಿಲ್ಲ.
12
+ ಇಸಿಐಆರ್‌ ಎನ್ನುವುದು ಯಾವುದೇ ಆರೋಪಿಯನ್ನು ವಿಚಾರಣೆ/ಬಂಧನ ಮಾಡುವಲ್ಲಿನ ಮೊದಲ ಹೆಜ್ಜೆಯಾಗಿದೆ. ಪಿಎಂಎಲ್‌ಎ ಕಾಯ್ದೆಯಲ್ಲಿ ಇಸಿಐಆರ್‌ ಬಗ್ಗೆ ಉಲ್ಲೇಖವಿಲ್ಲದಿದ್ದರೂ, ಇಡಿ ಇದನ್ನು ದಾಖಲಿಸುವ ಪದ್ಧತಿಯನ್ನು ಪಾಲಿಸಿಕೊಂಡು ಬರುತ್ತಿದೆ.
13
+ ಇಸಿಆರ್‌ ಕಾಯ್ದೆಯಡಿ ಎಫ್‌ಐಆರ್‌ ದಾಖಲಾಗಿದ್ದು, ಈ ಪೊಲೀಸರ ಎಫ್‌ಐಆರ್‌ಗೆ ಸರಿಸಮಾನವಾಗಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ತನಿಖೆ ಹಂತದಲ್ಲಿ ಆಸ್ತಿಗಳನ್ನು ಸೀಜ್‌ ಮಾಡುವ ಅಧಿಕಾರವಿದೆ.
14
+ ಈ ಸೆಕ್ಷನ್‌ ಅಡಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯಕ್ಕೆ ಅಧಿಕಾರವಿದೆ. ಇದಕ್ಕೆ ಯಾವುದೇ ನ್ಯಾಯಾಲಯದ ಅದೇಶ ಪಡೆಯಬೇಕು ಎಂಬ ನಿಯಮ ಕೂಡ ಇಲ್ಲ. ಸಂಬಂಧಪಟ್ಟ ಆಸ್ತಿಗಾಗಿ ಮನಿಲಾಂಡರಿಂಗ್‌ (ಹಣಕಾಸು ಅಕ್ರಮ ವರ್ಗಾವಣೆ) ನಡೆದಿದೆ ಎಂದು ತನಿಖಾಧಿಕಾರಿಗೆ ಅನಿಸಿದರೆ 180 ದಿನಗಳವರೆಗೂ ಆಸ್ತಿಯನ್ನು ಮುಟ್ಟಗೋಲು ಹಾಕಿಕೊಳ್ಳಬಹುದಾಗಿದೆ.
15
+ ಹೀಗಾಗಿ ಒಂದು ವೇಳೆ ಸಿಎಂ ಪತ್ನಿ ಈ ಸೈಟ್‌ಗಳನ್ನು ವಾಪಸ್‌‍ ಕೊಡದೇ ಇದ್ದಲ್ಲಿ ಜಾರಿ ನಿರ್ದೇಶನಾಲಯ ಯಾವುದೇ ಕ್ಷಣದಲ್ಲಿ ಮುಟ್ಟಗೋಲು ಹಾಕಿಕೊಳ್ಳುವ ಸಾಧ್ಯತೆ ಇದೆ. ಸೈಟ್‌ಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡರೆ ಸಿದ್ದರಾಮಯ್ಯಗೆ ದೊಡ್ಡ ಹಿನ್ನಡೆಯಾಗುವ ಸಾಧ್ಯತೆ ಇತ್ತು. ಇದಕ್ಕಾಗಿಯೇ ಕೂಡಲೆ ಸೈಟ್‌ಗಳನ್ನು ವಾಪಸ್‌‍ ಕೊಡುವ ನಿರ್ಧಾರ ಮಾಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
16
+ ಸುಪ್ರೀಂಕೋರ್ಟ್‌ ಆದೇಶ ಏನು?:ವಿಜಯ್‌ ಮದನ್‌ ಲಾಲ್‌ ಎನ್ನುವ ಪ್ರಕರಣವೊಂದರಲ್ಲಿ ಈಗಾಗಲೇ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ, ಕೇಂದ್ರ ತನಿಖಾ ಸಂಸ್ಥೆಗಳು ಆ ಎಫ್‌ಐಆರ್‌ ಅಡಿಯಲ್ಲೇ ತಮ ಕೇಸಿನ ವಿಚಾರಣೆ ನಡೆಸುವಂತಿಲ್ಲ, ಬದಲಿಗೆ ಹೊಸದಾಗಿ ಎಫ್‌ಐಆರ್‌ ದಾಖಲಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿತ್ತು.
17
+ ಜೊತೆಗೆ ಇಡಿಯು ಇಸಿಐಆರ್‌ ಮಾಹಿತಿಯನ್ನು ಆರೋಪಿಗೆ ನೀಡುವ / ಹಂಚಿಕೊಳ್ಳುವ ಅವಶ್ಯಕತೆಯಿಲ್ಲ ಮತ್ತು ಬಂಧನದ ನಂತರ ಮ್ಯಾಜಿಸ್ಟ್ರೇಟರ್‌ ಮುಂದೆ ಹಾಜರು ಪಡಿಸುವ ಅವಶ್ಯಕತೆಯಿಲ್ಲ.
18
+ ಇನ್ನೊಂದು ಆದೇಶದ ಪ್ರಕಾರ, ಇತರ ತನಿಖಾ ಸಂಸ್ಥೆಗಳು ಈಗಾಗಲೇ ಎಫ್‌ಐಆರ್‌ ದಾಖಲಿಸಿದ್ದ ಸಂದರ್ಭದಲ್ಲಿ ಮತ್ತೊಂದು ತನಿಖಾ ಸಂಸ್ಥೆ ಹೊಸದಾಗಿ ಮತ್ತೊಂದು ಎಫ್‌ಐಆರ್‌ ಗೆ ಸಮನಾದ ಕ್ರಮವನ್ನು ತೆಗೆದುಕೊಳ್ಳಬಾರದು ಎಂದು ಮದ್ರಾಸ್‌‍ ಹೈಕೋರ್ಟ್‌ ನಲ್ಲಿ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದರು. ಇದರ ವಾದ-ಪ್ರತಿವಾದದ ನಂತರ ನ್ಯಾಯಮೂರ್ತಿ ಎಸ್‌‍.ಎಂ.ಸುಬ್ರಹಣ್ಯಂ ಮತ್ತು ವಿ.ಶಿವಘಾನಂ ಅವರಿದ್ದ ದ್ವಿಸದಸ್ಯ ಪೀಠ ಇದಕ್ಕೆ ತಡೆ ನೀಡಲು ನಿರಾಕರಿಸಿತ್ತು. ಇದೇ ತಿಂಗಳ ಸೆಪ್ಟಂಬರ್‌ 11ಕ್ಕೆ ಈ ಆದೇಶ ಹೊರಬಿದ್ದಿತ್ತು.
eesanje/url_46_3_12.txt ADDED
@@ -0,0 +1,10 @@
 
 
 
 
 
 
 
 
 
 
 
1
+ ವಿಶ್ವವಿಖ್ಯಾತ ದಸರಾ ಉತ್ಸವಕ್ಕೆ ನಾಳೆ ವಿಧ್ಯುಕ್ತ ಚಾಲನೆ
2
+ 2024
3
+ ಮೈಸೂರು,ಅ.2-ಮೈಸೂರು ಸಮೀಪದ ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಾಳೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ನಾಳೆ ಬೆಳಗ್ಗೆ 9.15 ರಿಂದ 9.45 ರ ಒಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಗುವುದು.
4
+ ನಾಡೋಜ, ಖ್ಯಾತ ಸಾಹಿತಿ ಡಾ.ಹಂಪ ನಾಗರಾಜಯ್ಯ ಅವರು ಈ ಬಾರಿಯ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವು ಗಣ್ಯರು, ರಾಜಕಾರಣಿಗಳು ಉಪಸ್ಥಿತರಿರಲಿದ್ದಾರೆ.
5
+ ಅದೇ ದಿನ ಸಂಜೆ 6ಕ್ಕೆ ಮೈಸೂರು ಅರಮನೆ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದು, ಸಂಗೀತ ವಿದ್ವಾನ್‌ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.
6
+ ಚಾಮುಂಡಿ ಬೆಟ್ಟದಲ್ಲಿ ನಡೆಯಲಿರುವ ದಸರಾ ಮಹೋತ್ಸವದ ಪ್ರಧಾನ ಉದ್ಘಾಟನಾ ಸಮಾರಂಭದ ನಂತರ ಚಲನಚಿತೋತ್ಸವ, ಆಹಾರಮೇಳ, ವಸ್ತು ಪ್ರದರ್ಶನ, ಕುಸ್ತಿ ಪಂದ್ಯಾವಳಿ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಾಗುವುದು.ಅ.12ರಂದು ವಿಜಯದಶಮಿ ಕಾರ್ಯಕ್ರಮ ನಡೆಯಲಿದ್ದು, ಆ ದಿನ ಮೈಸೂರು ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂ ಸವಾರಿ ನಡೆಯಲಿದೆ.
7
+ ಹಾಗೆಯೇ ಸಂಜೆ 7ಕ್ಕೆ ಬನ್ನಿಮಂಟಪದಲ್ಲಿ ಪಂಜಿನ ಕವಾಯತು ಮೆರವಣಿಗೆಯನ್ನು ಆಯೋಜಿಸಲಾಗಿದೆ.ಅ.3 ರಿಂದ 12ರವರೆಗೆ ನಡೆಯುವ ದಸರಾ ಮಹೋತ್ಸವಕ್ಕೆ ವ್ಯಾಪಕ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದೆ ಎಂದು ಮೈಸೂರು ಪೊಲೀಸ್‌‍ ಆಯುಕ್ತರಾದ ಸೀಮಾ ಲಟ್ಕರ್‌ ಅವರು ತಿಳಿಸಿದ್ದಾರೆ. ಒಂಬತ್ತು ದಿನಗಳ ಕಾಲ ನಡೆಯಲಿರುವ ನವರಾತ್ರಿ ಉತ್ಸವದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
8
+ ಈ ಬಾರಿ 5000ಕ್ಕೂ ಹೆಚ್ಚು ಪೊಲೀಸರನ್ನು ದಸರಾ ವಿಶೇಷ ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ತಿಳಿಸಿದರು.13,670 ಸಿಸಿ ಕ್ಯಾಮೆರಾ ಕಣ್ಗಾವಲನ್ನು ಮೈಸೂರಿನಾದ್ಯಂತ ಅಳವಡಿಸಲಾಗಿದ್ದು, ಪೊಲೀಸ್‌‍ ಸಹಾಯ ಕೇಂದ್ರಗಳನ್ನು ಪ್ರಮುಖ ಸ್ಥಳಗಳಲ್ಲಿ ತೆರೆಯಲಾಗಿದೆ. ಹಾಗೆಯೇ ಪ್ರಮುಖ ಸ್ಥಳಗಳಲ್ಲಿ ವಾಚ್‌ ಟವರ್‌ಗಳನ್ನು ಸ್ಥಾಪನೆ ಮಾಡಲಾಗಿದೆ ಎಂದು ಅವರು ವಿವರಿಸಿದರು.
9
+ ಮಹಿಳೆಯರ ರಕ್ಷಣೆಗಾಗಿಯೇ ಚಾಮುಂಡಿ ಕಾರ್ಯ ಪಡೆಯನ್ನು ಸಹ ದಸರಾ ಸಂದರ್ಭದಲ್ಲಿ ಆಯೋಜಿಸಲಾಗಿದೆ ಎಂದರು.ದಸರಾ ಮಹೋತ್ಸವದ ಅಂಗವಾಗಿ ಅ. 3ರಿಂದ 12ರವರೆಗೆ ಮೈಸೂರು ಅರಮನೆಯಲ್ಲಿ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
10
+ ಅರಮನೆಯಲ್ಲಿ ನವರಾತ್ರಿ ವೇಳೆಯಲ್ಲಿ ಯದು ವಂಶ���್ಥರಾದ ಯದುವೀರ್‌ ಅವರು ಖಾಸಗಿ ದರ್ಬಾರನ್ನು ನಡೆಸಲಿದ್ದಾರೆ. ಸಂಸದರಾದ ಬಳಿಕ ಇದೇ ಮೊದಲ ಬಾರಿಗೆ ಯದುವೀರ್‌ ಅವರು ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಖಾಸಗಿ ದರ್ಬಾರನ್ನು ನಡೆಸುತ್ತಿದ್ದಾರೆ.
eesanje/url_46_3_2.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಮತ-ಧರ್ಮಗಳ ತಾರತಮ್ಯವಿಲ್ಲದೆ ದಸರಾ ಸರ್ವಜನಾಂಗದ ಹಬ್ಬವಾಗಬೇಕು : ನಾಡೋಜ ಹಂಪನಾಗ
2
+ - 2024
3
+ ಮೈಸೂರು,ಅ.3-ದಸರಾ ಹಬ್ಬ ಮತಧರ್ಮಗಳ ತಾರತಮ್ಯವಿರದೆ ಇಡೀ ನಾಡು ಆಚರಿಸುವ ಸರ್ವಜನಾಂಗದ ಹಬ್ಬ ಎಂದು ಹಿರಿಯ ಸಾಹಿತಿ ನಾಡೋಜ ಡಾ. ಹಂಪ ನಾಗರಾಜಯ್ಯ ಪ್ರತಿಪಾದಿಸಿದರು.ಸಾಮಾನ್ಯ ಪ್ರಜೆಯೊಬ್ಬರು ಈ ನಾಡ ಹಬ್ಬದ ಸಡಗರದ ಸರಣಿಯನ್ನು ಉದ್ಘಾಟಿಸುತ್ತಿರುವುದು ಆ ಪರಿಕಲ್ಪನೆಯ ಮುಂದುವರಿಕೆಯಾಗಿದೆ. ಇದು ಪ್ರಜಾಪ್ರಭುತ್ವದಲ್ಲಿ ಪ್ರಜೆಯೇ ಪ್ರಭು ಎಂಬ ಸಿದ್ಧಾಂತವನ್ನು ಮಾನ್ಯ ಮಾಡಿದಂತೆ ಹಾಗೂ ಜನಮುಖಿ ಕಾಳಜಿಯನ್ನು ಎತ್ತಿ ಹಿಡಿದಂತೆ ಎಂದರು.
4
+ ಈ ಪವಿತ್ರ ದಸರಾ ಉತ್ಸವ ಸರಣಿ ಕಾರ್ಯಕ್ರಮದ ಉದ್ಘಾಟನೆಯನ್ನು, ನಮ ನಾಡಿನ ಪ್ರಜೆಗಳ ಪರವಾಗಿ, ವಿನಯ ಮತ್ತು ಧನ್ಯತಾ ಭಾವದಿಂದ ನೆರವೇರಿಸುತ್ತಿದ್ದೇನೆ ಎಂದು ಅವರು ಹೇಳಿದರು.
5
+ ಪ್ರಭುತ್ವಗಳಲ್ಲಿ ಪ್ರಜಾಪ್ರಭುತ್ವ ಮುಡಿಯ ಮಾಣಿಕ್ಯ, ಕಳೆದ ತಿಂಗಳು ಸೆ. 15 ರಂದು ತೆಂಕಣದ ಚಾಮರಾಜನಗರದಿಂದ ಬಡಗಣದ ಬೀದರವರೆಗೆ ಪ್ರಜಾಪ್ರಭುತ್ವದ ಬೇರುಗಳನ್ನು ಗಟ್ಟಿಗೊಳಿಸುವ ಮತ್ತು ಬಹುತ್ವದ ಮಹತ್ವವನ್ನು ಮನಗಾಣಿಸುವ ವಿಶ್ವದಾಖಲೆಯ ಮಾನವ ಸರಪಳಿಯನ್ನು ಆಯೋಜಿಸಿದ್ದು ಸಮಯೋಚಿತವೂ ಅಭಿನಂದನಾರ್ಹವೂ ಆಗಿದೆ ಎಂದರು.
6
+ ಆಸ್ತಿಕತೆ, ನಾಸ್ತಿಕತೆ ಕುರಿತ ಚರ್ಚೆ ಇಲ್ಲಿ ಅಪ್ರಸ್ತುತ, ದೇವಾಲಯಕ್ಕೆ ಬಂದವರೆಲ್ಲಾ ಆಸ್ತಿಕರೆಂದಾಗಲಿ, ಒಳಗೆ ಬರದೆ ದೂರ ಉಳಿದವರೆಲ್ಲ ನಾಸ್ತಿಕರೆಂದಾಗಲಿ ಅಲ್ಲ. ಎಲ್ಲ ದೇಶ ಕಾಲಗಳಲ್ಲೂ ಸಮಾಜ ಮಾನ್ಯಮಾಡಿದ ಶಿಷ್ಟಪರಂಪರೆಯ ಸ್ರೋತವೊಂದು ಜೀವಂತವಾಗಿರುತ್ತದೆ.
7
+ ಪ್ರತಿವರ್ಷ ನವರಾತ್ರಿಯಲ್ಲಿ ನನ್ನ ತಾಯಿ ಜಾಕಾಯಿ ಪೆಟಾರಿಯಿಂದ ತನ್ನ ತವರುಮನೆಯ ಬಳುವಳಿಯಾಗಿ ತಂದಿದ್ದ ಎರಡು ಬಚ್ಚಣಿಗೆ ಬೊಂಬೆ ಮತ್ತಿತರ ಪ್ರದರ್ಶನ ವಸ್ತುಗಳನ್ನು ತೆಗೆದು ಕೊಡುತ್ತಿದ್ದರು. ನನ್ನ ತಮ್ಮತಂಗಿಯರೊಂದಿಗೆ ನೂರಾರು ಬೊಂಬೆಗಳನ್ನು ಅಲಂಕರಿಸಿ ಮೆಟ್ಟಿಲು ಮೆಟ್ಟಿಲಾಗಿ ಪೇರಿಸಿದ ಹಲಗೆಗಳ ಮೇಲೆ ಒಪ್ಪವಾಗಿ ಜೋಡಿಸುತ್ತಿದ್ದೆವು.
8
+ ಮರದಲ್ಲಿ ಮಾಡಿದ ಆ ಎರಡು ಬಚ್ಚಣಿಗೆ ಬೊಂಬೆಗಳನ್ನು ದೂರ ದೂರ ಇಟ್ಟರೆ ನನ್ನ ತಾಯಿ ಕೂಡಲೆ ಮಕ್ಕಳೇ ಅವು ಎರಡಿದ್ದರೂ ಒಂದೇನೆ. ಅವು ಜೋಡಿ, ಅವು ಶಾಶ್ವತ ದಂಪತಿಗಳು. ಅವನ್ನು ಅಗಲಿಸಬಾರದು. ಈ ಬೊಂಬೆಗಳಂತೆ ಅಗಲದೆ ಗಂಡಹೆಂಡತಿ ಬಾಳಿ ಎಂದು ನನ್ನ ತಾಯಿತಂದೆ ಹರಸಿ ಕೊಟ್ಟಿರುವರು. ಇವು ಬರೀ ಮರದ ಬೊಂಬೆಗಳಲ್ಲ, ಮನೆ ಬೆಳಗುವ ಜೋಡಿ. ನನ್ನಮ ಹೇಳಿದ ಮಾತುಗಳನ್ನು ಈಗಲೂ ಮೆಲಕು ಹಾಕುತ್ತೇನೆ ಎಂದು ಸರಿಸಿದರು.
9
+ ಸಹನೆ ಸೌಹಾರ್ದದಿಂದ ಬಾಳಿದರೆ, ನೆಮದಿ ಇದ್ದರೆ ಪ್ರತಿ ಮನೆಯೂ ಅರಮನೆಯೇ, ಎಲ್ಲರೂ ರಾಜರಾಣಿಯರೇ ಎಂದರು.ನವರಾತ್ರಿಯ ತೆಂಕಣಗಾಳಿಗೆ ಮೈಸೂರು ಮೈಕೊಡವಿ, ಪೊರೆಬಿಟ್ಟು, ಶೃಂಗಾರಗೊಂಡು, ಕಂಗೊಳಿಸುತ್ತದೆ. ಮೈಸೂರೆಂದರೆ ದಸರ, ಜಂಬೂಸವಾರಿ ಎಂಬ ಮಾತು ಲೋಕ ಪ್ರಸಿದ್ಧಿ ಪಡೆಯಿತು. ಪ್ರಜಾಪ್ರಭುತ್ವ ಬಂದಮೇಲೆ ಕ��ಲವು ಬದಲಾವಣೆ ಆದುವು. ಈ ಬದಲಾವಣೆ ಸ್ವರೂಪದಲ್ಲೇ ಹೊರತು ಸತ್ವದಲ್ಲಿ ಅಲ್ಲ.
10
+ ಚುನಾಯಿತ ಸರಕಾರ ಈ ಹಬ್ಬವನ್ನು ಜನಮುಖಿಯಾಗಿಸಿದರು. ಇದು ಅರಮನೆಯ ಹಬ್ಬವಲ್ಲ, ಜನರು ಆರಿಸಿದ ಸರಕಾರ ನಡೆಸುವ ಉತ್ಸವವನ್ನಾಗಿಸಿ ಇನ್ನಷ್ಟು ಅರ್ಥಪೂರ್ಣವಾಗಿ ಹಿಂದಿನಂತೆಯೇ ಸಂಭ್ರಮದಿಂದ ನಡೆಸುತ್ತಿದ್ದಾರೆ. ಸರಕಾರ ಮತ್ತು ಜನರು ಒಟ್ಟಿಗೆ ಹೆಜ್ಜೆ ಹಾಕುವ ಈ ನಾಡ ಹಬ್ಬಕ್ಕೆ ಹೆಚ್ಚಿನ ಮಹತ್ವವಿದೆ ಎಂದುಪ್ರಾಯಶಃ ಇನ್ನು ಮುಂದಿನ ತಲೆಮಾರಿಗೆ ಸಿಗದೆ ಮರೆಯಾಗಬಹುದಾದ ಈ ಮಣ್ಣಿನ, ಈ ನೆಲದ ಘಮಲು, ದೇಸೀಯ ಸೊಗಡು ತುಂಬಿರುವ ಹಬ್ಬ ನಿಲ್ಲಬಾರದು. ಈ ಆಚರಣೆಯಿಂದ ಕರ್ನಾಟಕದ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆಯ ಕಿರು ಪರಿಚಯ ಇಂದಿನ ಹೊಸ ತಲೆಮಾರಿನವರಿಗೆ ಆಗುತ್ತದೆ. ದೇಸಿ ವಾದ್ಯ,ಮೇಳಗಳು, ಕಲೆ, ಕುಣಿತ, ಹಾಡು, ಸ್ತಬ್ಧಚಿತ್ರಗಳು, ಬಣ್ಣದ ವೇಷಗಳು, ಕುದುರೆಗಳ ಸಂಚಲನ, ಜಂಬೂ ಸವಾರಿ, ಮುಂತಾದವುಗಳ ಪರಿಚಯ ಶಾಲಾಕಾಲೇಜಲ್ಲಿ ಸಿಗುವುದಿಲ್ಲ. ಹೊಸ ತಲೆಮಾರಿಗೆ ನಮ್ಮ ನಾಡಿನ ಬಹುರೂಪಿ ಸಂಸ್ಕೃತಿಯ ಮತ್ತು ಅಸಿತೆಯ ಆಯಾಮ ಅನುಭವವಾಗುತ್ತದೆ ಎಂದು ತಿಳಿಸಿದರು.
11
+ ಅಭೀಷ್ಟವರಪ್ರದಾಯಿನಿ ಎಂದು ಭಕ್ತರು ಆರಾಧಿಸುವ ದೇವಿ ಚಾಮುಂಡಾಂಬಿಕೆಗೆ ಪೊಡಮಟ್ಟು ಐದು ಬೇಡಿಕೆಗಳನ್ನು ಈಡೇರಿಸಿಕೊಡಬೇಕೆಂದು ದೇವಿಯಲ್ಲಿ ಪ್ರಾರ್ಥಿಸುತ್ತೇನೆ ಎಂದರು.ಇಸ್ರೇಲ್‌‍-ಪ್ಯಾಲಸ್ಟೈನ್‌, ರಷಿಯಾ-ಉಕ್ರೈನ್‌ ಯುದ್ಧ ನಿಂತು, ನಿತ್ಯ ನಡೆಯುತ್ತಿರುವ ಅಮಾಯಕರ ಮಾರಣಹೋಮ ನಿಲ್ಲಲು ಆ ರಾಷ್ಟ್ರನಾಯಕರು ಕೂಡಲೇ ಜೀವಪರ ಕಾಳಜಿ ತೋರುವಂತೆ ಅವರಿಗೆ ಪ್ರೇರಣೆ ನೀಡಬೇಕೆಂದು ಬೇಡುತ್ತೇನೆ.
12
+ ಹೆಣ್ಣು ಭ್ರೂಣ ಹತ್ಯೆ ತಡೆಯಲೂ ಚಾಮುಂಡಾದೇವಿಯು ತಾಯಿತಂದೆಯರಿಗೆ ಸದ್ಭುದ್ಧಿ ಅನುಗ್ರಹಿಸಲೆಂದು ಪ್ರಾರ್ಥಿಸುತ್ತೇನೆ. ಬಹು ದೊಡ್ಡ ರಾಷ್ಟ್ರೀಯ ಸಮಸ್ಯೆಯೆಂದರೆ ನಿರುದ್ಯೋಗ ಸಮಸ್ಯೆ, ಯುವಜನರು ಹತಾಶರಾಗಿದ್ದಾರೆ. ನಿರುದ್ಯೋಗ ನಿವಾರಣೆಗೆ ಆದ್ಯತೆಯಿತ್ತು ಕೇಂದ್ರ ಸರಕಾರವು ಕ್ರಮ ಕೈಗೊಳ್ಳುವಂತೆ ಪ್ರೇರೇಪಿಸಬೇಕೆಂದು ಯುವಜನತೆಯ ಪರವಾಗಿ ದೇವಿಯನ್ನು ಪ್ರಾರ್ಥಿಸುತ್ತೇನೆ.
13
+ ಕನ್ನಡ ನಾಡು ನುಡಿ ನೆಲ ಜಲ ಕಲೆ ಸಂಸ್ಕೃತಿ ಸಂರಕ್ಷಣೆಗಾಗಿ ಹೋರಾಡುವವವರನ್ನು ಕೊಲೆಗಾರರಂತೆ ಕಾಣದೆ, ಪ್ರೀತಿ ಅಭಿಮಾನಗಳಿಂದ ಕಾಣುವಂತೆ ಆಡಳಿತಾಂಗಕ್ಕೆ ಪ್ರೇರಣೆ ಕೊಡುವಂತೆ ವಿನಂತಿಸುತ್ತೇನೆ.
14
+ ಸರ್ಕಾರಗಳನ್ನು ಉರುಳಿಸುವ ದುರಾಲೋಚನೆ ಬರದಂತೆ ತಡೆದು, ಚುನಾಯಿತ ಸರ್ಕಾರಗಳನ್ನು ಉಳಿಸುವ ಚಿಂತನೆಗಳನ್ನು ಲೋಕಾಂಬಿಕೆಯು ಮೂಡಿಸಲೆಂದು ಬೇಡುತ್ತೇನೆ ಎಂದು ಹೇಳಿ ಕೊನೆಯಲ್ಲಿ ಒಟ್ಟು 71 ವರ್ಷಗಳ ಸ್ನೇಹದ ಸುಖ ನೀಡಿದ್ದಲ್ಲದೆ ಆರು ವರ್ಷ ಸಹಪಾಠಿಯಾಗಿಯೂ 63 ವರ್ಷ ಮಡದಿಯಾಗಿಯೂ ನನ್ನನ್ನು ರೂಪಿಸಿದ ಮಹಾಶಿಲ್ಪಿ ನಾಡೋಜ ಪ್ರೊ ಕಮಲಾ ಹಂಪನಾ ಅವರ ದಿವ್ಯ ನೆನಪಿಗೆ ನನಗೆ ಸಂದಿರುವ ಈ ಗೌರವವನ್ನು ಸಮರ್ಪಿಸುತ್ತೇನೆ ಎಂದರು.
eesanje/url_46_3_3.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ನಾಡಹಬ್ಬ ಮೈಸೂರು ದಸರಾಗೆ ಹಿರಿಯ ಸಾಹಿತಿ, ನಾಡೋಜ ಹಂಪನಾ ಅವರಿಂದ ಅದ್ದೂರಿ ಚಾಲನೆ
2
+
3
+ ಮೈಸೂರು,ಅ.3-ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಇಂದು ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು. ಈ ಮೂಲಕ ರಾಜ್ಯದೆಲ್ಲೆಡೆ ನವರಾತ್ರಿ ಹಬ್ಬ ಆರಂಭವಾಯಿತು.ಬೆಳಗ್ಗೆ 9.15 ರಿಂದ 9.45 ರವರೆಗಿನ ಶುಭ ವೃಶ್ಚಿಕ ಲಗ್ನದಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ನಾಡ ಹಬ್ಬ ದಸರಾಗೆ ಚಾಲನೆ ನೀಡಲಾಯಿತು.
4
+ ಹಿರಿಯ ಸಾಹಿತಿ, ನಾಡೋಜ ಡಾ.ಹಂಪ ನಾಗರಾಜಯ್ಯನವರು ದಸರಾ ಮಹೋತ್ಸವವನ್ನು ಉದ್ಘಾಟಿಸುವ ಮೂಲಕ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಮಾಡಿ ವೈಭವದ ದಸರಾಗೆ ಚಾಲನೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರು ವಹಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಹೆಚ್‌.ಸಿ.ಮಹದೇವಪ್ಪ, ಹೆಚ್‌.ಕೆ.ಪಾಟೀಲ್‌, ಶಿವರಾಜ್‌ ತಂಗಡಗಿ, ಕೆ.ವೆಂಕಟೇಶ್‌, ಕೆ.ಹೆಚ್‌.ಮುನಿಯಪ್ಪ, ಶಾಸಕ ಶ್ರೀವತ್ಸ ಸೇರಿದಂತೆ ಗಣ್ಯಾತಿಗಣ್ಯರು ಸಮಾರಂಭವನ್ನು ಸಾಕ್ಷೀಕರಿಸಿದರು.
5
+ ದಸರಾ ಉದ್ಘಾಟನೆಗೂ ಮುನ್ನ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಸರ್ವಾಲಂಕೃತಳಾದ ಲೋಕಮಾತೆ ಚಾಮುಂಡಿ ದೇವಿಗೆ ಸರ್ವರೂ ನಮಿಸಿ ದಸರೆಯ ಯಶಸ್ಸಿಗೆ ಪ್ರಾರ್ಥಿಸಿದರು.ಇದಕ್ಕೂ ಮುನ್ನ ಗಣ್ಯರನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು. ಗಣ್ಯರೆಲ್ಲರೂ ಚಾಮುಂಡೇಶ್ವರಿ ಸನ್ನಿಧಿಗೆ ತೆರಳಿ ದೇವಿಯ ದರ್ಶನ ಪಡೆದು ಪುನೀತರಾದರು. ನಂತರ ವೇದಿಕೆಗೆ ಆಗಮಿಸಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.
6
+ ದಸರಾ ಚಲನಚಿತೋತ್ಸವ ಉದ್ಘಾಟನೆ:ದಸರಾ ನಿಮಿತ್ತ ಇಂದು ಬೆಳಗ್ಗೆ 11.30ಕ್ಕೆ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿನ ಘಟಿಕೋತ್ಸವ ಭವನದಲ್ಲಿ ದಸರಾ ಚಲನಚಿತೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
7
+ ದಸರಾ ಆಹಾರ ಮೇಳವನ್ನು ಬೆಳಗ್ಗೆ 11.30ಕ್ಕೆ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್‌. ಮುನಿಯಪ್ಪ ಉದ್ಘಾಟಿಸಿದರು.
8
+ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಹೆಚ್‌.ಸಿ.ಮಹದೇವಪ್ಪ ಮತ್ತು ಸರ್ಕಾರದ ವಿವಿಧ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳು ಪಾಲ್ಗೊಂಡರು.
9
+ ಫಲಪುಷ್ಪ ಪ್ರದರ್ಶನ :ಮಧ್ಯಾಹ್ನ 12.30 ಕ್ಕೆ ನಗರದ ಕುಪ್ಪಣ್ಣ ಪಾರ್ಕ್‌ (ನಿಶಾದ್‌ ಬಾಗ್‌)ನಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
10
+ ಸಂಜೆ 4 ಗಂಟೆಗೆ ಸಿದ್ಧಾರ್ಥ ನಗರದಲ್ಲಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾ���ೇಜಿನಲ್ಲಿ ರಾಜ್ಯಮಟ್ಟದ ಶಿಲ್ಪಕಲೆ ಮತ್ತು ಚಿತ್ರಕಲಾ ಶಿಬಿರದಲ್ಲಿ ರಚಿಸಲಾದ ಕಲಾಕೃತಿಗಳ ಪ್ರದರ್ಶನ, ಲಲಿತ ಕಲೆ, ಕರಕುಶಲ ಕಲೆಗಳ ಕಲಾಕೃತಿ ಪ್ರದರ್ಶನ ಮತ್ತು ರಾಷ್ಟ್ರಮಟ್ಟದ ಕರಕುಶಲ ಕಲೆಗಳ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ ಅವರು ಉದ್ಘಾಟಿಸಿದರು.
11
+ ಸಂಜೆ 5 ಗಂಟೆಗೆ ನಗರದ ಭಾರತ್‌ ಸ್ಕೌಟ್ಸ್‌‍ ಮತ್ತು ಗೈಡ್ಸ್ ಮೈದಾನದಲ್ಲಿ ಪುಸ್ತಕ ಮೇಳ ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ ಅವರು ಉದ್ಘಾಟಿಸಿದರು.ದಸರಾ ಸಿಎಂ ಕಪ್‌ ಕ್ರೀಡಾಕೂಟಕ್ಕೆ ಸಿಎಂ ಸಿದ್ದರಾಮಯ್ಯನವರು ಸಂಜೆ 4.30 ಕ್ಕೆ ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಚಾಲನೆ ನೀಡಿದರು.
12
+ ನಗರದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಆವರಣದಲ್ಲಿನ ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ದಸರಾ ಕುಸ್ತಿ ಪಂದ್ಯಾವಳಿಗೆ ಸಿಎಂ ಚಾಲನೆ ನೀಡಿದರು.
13
+ ದಸರಾ ನವರಾತ್ರಿ ಜಾನಪದ ರಂಗ ಉತ್ಸವ ಉದ್ಘಾಟನೆ:ಸಂಜೆ 5.30 ಗಂಟೆಗೆ ನಗರದ ಕಲಾಮಂದಿರದಲ್ಲಿನ ರಂಗಾಯಣದ ಭೂಮಿಗೀತದ ರಂಗ ಮಂದಿರದಲ್ಲಿ ನವರಾತ್ರಿ ಜಾನಪದ ರಂಗ ಉತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮವನ್ನು ಸಹ ಸಚಿವ ಶಿವರಾಜ್‌ ತಂಗಡಗಿ ಉದ್ಘಾಟಿಸಿದರು.
14
+ ದಸರಾ ದೀಪಾಲಂಕಾರಕ್ಕೆ ಚಾಲನೆ:ಸಂಜೆ 6.30ಕ್ಕೆ ನಗರದ ನ್ಯೂ ಸಯ್ಯಾಜಿರಾವ್‌ ರಸ್ತೆಯಲ್ಲಿರುವ ಹಸಿರು ಮಂಟಪದ ಬಳಿ ವಿದ್ಯುತ್‌ ದೀಪಾಲಂಕಾರ ಹಾಗೂ ದೀಪಾಲಂಕಾರಗೊಂಡಿರುವ ವಿದ್ಯುತ್‌ ರಥದ ಚಾಲನೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಇಂಧನ ಸಚಿವ ಕೆ.ಜೆ.ಜಾರ್ಜ್‌ ಉದ್ಘಾಟಿಸಲಿದ್ದಾರೆ.
15
+ ರಾತ್ರಿ 7.30ಕ್ಕೆ ನಗರದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಆಯೋಜಿಸಲಾಗಿರುವ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಸಿಎಂ ಉದ್ಘಾಟಿಸಲಿದ್ದಾರೆ.
eesanje/url_46_3_4.txt ADDED
@@ -0,0 +1,7 @@
 
 
 
 
 
 
 
 
1
+ ರಾಜ್ಯದಲ್ಲಿ ಇನ್ನೂ ಮೂರು ದಿನ ಮುಂದುವರೆಯಲಿದೆ ಮಳೆ
2
+
3
+ ಬೆಂಗಳೂರು, ಅ.3-ವಾತಾವರಣದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಚದುರಿದಂತೆ ಮಳೆಯಾಗುತ್ತಿದೆ. ಇದೇ ರೀತಿ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ.
4
+ ಬಂಗಾಳಕೊಲ್ಲಿಯಲ್ಲಿ ಮೇಲೈ ಸುಳಿಗಾಳಿ ಉಂಟಾಗಿದ್ದು, ಒಳನಾಡಿನಲ್ಲಿ ಟ್ರಫ್‌ ನಿರ್ಮಾಣವಾಗಿದೆ. ಅಲ್ಲದೆ, ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿರುವುದರಿಂದ ಗುಡುಗು, ಮಿಂಚು, ಬಲವಾದ ಗಾಳಿ ಸಹಿತ ಮಳೆಯಾಗುತ್ತಿದೆ. ಪೂರ್ವ ಮುಂಗಾರಿನ ರೀತಿಯಲ್ಲಿ ರಭಸವಾದ ಮಳೆ ಕೆಲವೆಡೆ ಬಿದ್ದಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
5
+ ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಗಳಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.ಕರಾವಳಿ, ಮಲೆನಾಡು ಭಾಗದಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಅದೇ ರೀತಿ ಒಳನಾಡಿನಲ್ಲೂ ಮಳೆಯಾಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ.
6
+ ಅಂದರೆ, ಅಕ್ಟೋಬರ್‌ 6ರವರೆಗೂ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ.ಅಕ್ಟೋಬರ್‌ ಆರಂಭದಲ್ಲಿ ಮಳೆ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಆದರೆ, ಸೆಪ್ಟೆಂಬರ್‌ ಮಳೆ ಕೊರತೆ ಉಂಟಾಗಿ ಬೆಳೆಗಳಿಗೆ ತೊಂದರೆಯಾಗಿತ್ತು. ಈ ಮಳೆ ಎರಡು ವಾರ ಮುಂಚೆ ಬಿದ್ದಿದ್ದರೆ ಹೆಚ್ಚು ಬೆಳೆಗಳಿಗೆ ಹೆಚ್ಚು ಅನುಕೂಲವಾಗುತ್ತಿತ್ತು ಎಂಬುದು ತಜ್ಞರ ಅಭಿಪ್ರಾಯವಾಗಿದೆ.
7
+ ಸ್ಥಳೀಯ ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಗಳಿವೆ.
eesanje/url_46_3_5.txt ADDED
@@ -0,0 +1,6 @@
 
 
 
 
 
 
 
1
+ “ಸಾರ್ವಕರ್‌ ಮಾಂಸ ತಿನ್ನುತ್ತಿದ್ದರು” : ವಿವಾದ ಸೃಷ್ಟಿಸಿದ ಸಚಿವ ಗುಂಡೂರಾವ್‌ ಹೇಳಿಕೆ
2
+ ' - , ' ':
3
+ ಬೆಂಗಳೂರು,ಅ.3-ಆರ್‌ಎಸ್‌‍ಎಸ್‌‍ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಹಾಗೂ ಪ್ರಬಲ ಹಿಂದೂ ಧರ್ಮ ಪ್ರತಿಪಾದಕರಾಗಿದ್ದ ವೀರ್‌ ಸಾರ್ವಕರ್‌ ಕೂಡ ಮಾಂಸ ಸೇವನೆ ಮಾಡುತ್ತಿದ್ದರೆಂಬ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿಕೆ ತೀವ್ರ ವಿವಾದ ಸೃಷ್ಟಿಸಿದೆ. ತಕ್ಷಣವೇ ದಿನೇಶ್‌ ಗುಂಡೂರಾವ್‌ ತಮ ಹೇಳಿಕೆಗೆ ಕ್ಷಮೆ ಕೇಳಬೇಕು, ಇಲ್ಲದಿದ್ದರೆ ಅವರ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಬಲಪಂಥೀಯ ಸಂಘಟನೆಗಳು ಎಚ್ಚರಿಕೆ ಕೊಟ್ಟಿವೆ.
4
+ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರೂ ಆಗಿರುವ ದಿನೇಶ್‌ ಗುಂಡೂರಾವ್‌, ವೀರ್‌ ಸಾರ್ವಕರ್‌ ಬ್ರಾಹಣ ಸಮುದಾಯದವರು ಅವರು ಕೂಡ ಮಾಂಸಾಹಾರ ಸೇವಿಸುತ್ತಿದ್ದರು. ಈ ಮೂಲಕ ಅವರೊಬ್ಬ ಮಾರ್ಡನಿಸ್ಟ್‌ ಆಗಿದ್ದರು ಎಂಬ ವಿವಾದಾತಕ ಹೇಳಿಕೆ ಕೊಟ್ಟಿದ್ದರು.ವೀರ್‌ ಸಾರ್ವಕರ್‌ ಮೂಲಭೂತವಾದಿ ಆಗಿದ್ದರು. ವಿಶೇಷವೆಂದರೆ ಮೂಲಭೂತವಾದ ನಮ ದೇಶದ ಸಂಸ್ಕೃತಿಯಲ್ಲ. ವೀರ್‌ ಸಾರ್ವಕರ್‌ ಯುರೋಪ್‌ನಿಂದ ಪ್ರಭಾವಿತರಾಗಿದ್ದರೆಂದು ಹೇಳಿದ್ದರು.
5
+ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಸಸ್ಯಹಾರಿ ಆಗಿದ್ದರು. ನಮ ಸಂಸ್ಕೃತಿ ಸಂಪ್ರದಾಯಗಳ ಬಗ್ಗೆ ನಂಬಿಕೆ ಇಟ್ಟುಕೊಂಡಿದ್ದರು. ದೇಶದಲ್ಲಿಂದು ದೊಡ್ಡ ಸಂಪ್ರದಾಯವಾದಿಗಳಿದ್ದಾರೆ. ಆದರೆ ಸಂಪ್ರದಾಯವಾದಿಗಳಲ್ಲ, ಮೂಲಭೂತವಾದಿಗಳೂ ಅಲ್ಲ. ಇದನ್ನು ನಾವು ಅರಿತುಕೊಳ್ಳಬೇಕಿದೆ ಎಂದು ವೀರ್‌ ಸಾರ್ವಕರ್‌ ಹಾಗೂ ಗಾಂಧಿ ಬಗ್ಗೆ ತುಲನೆ ಮಾಡಿದ್ದರು.
6
+ ಸಚಿವ ಈ ಹೇಳಿಕೆ ತೀವ್ರ ವಿವಾದವನ್ನು ಸೃಷ್ಟಿಸಿದೆ. ಹಿಂದೂ ಧರ್ಮದ ಐಕಾನ್‌ನಂತಿರುವ ವೀರ್‌ ಸಾರ್ವಕರ್‌ ಬಗ್ಗೆ ಲಘುವಾಗಿ ಮಾತನಾಡಿರುವ ದಿನೇಶ್‌ ಗುಂಡೂರಾವ್‌ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಅವರ ವಿರುದ್ಧ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಬಿಜೆಪಿ ಹಾಗೂ ಬಲಪಂಥೀಯ ಸಂಘಟನೆಗಳು ಗುಂಡೂರಾವ್‌ಗೆ ಎಚ್ಚರಿಕೆ ಕೊಟ್ಟಿದ್ದಾರೆ.
eesanje/url_46_3_6.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಜೀವಬೆದರಿಕೆ ಹಾಕಿದ್ರಾ ಕೇಂದ್ರ ಸಚಿವ ಹೆಚ್ಡಿಕೆ..? ಉದ್ಯಮಿಯಿಂದ ದೂರು ದಾಖಲು
2
+ , ₹50
3
+ ಬೆಂಗಳೂರು,ಅ.3– ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿಯವರ ವಿರುದ್ಧ ಬೆಂಗಳೂರಿನ ಪೊಲೀಸ್‌‍ ಠಾಣೆಯೊಂದರಲ್ಲಿ ಜೀವ ಬೆದರಿಕೆ ದೂರು ದಾಖಲಾಗಿದೆ. ಉದ್ಯಮಿ ವಿಜಯ್‌ ತಾತಾ ಎಂಬುವರು ದೂರು ದಾಖಲಿಸಿದ್ದಾರೆ. ವ್ಯವಹಾರಿಕವಾಗಿ ತಾವು ಮುನ್ನಡೆ ಸಾಧಿಸಿದ್ದು, ತಮಗೆ ಕೇಂದ್ರ ಸಚಿವರು ಬೆದರಿಕೆ ಹಾಕಿದ್ದಾರೆ. ತಮಗೆ 50 ಕೋಟಿ ರೂ. ನೀಡಬೇಕೆಂದು ಒತ್ತಡ ಹಾಕುತ್ತಿದ್ದಾರೆ. ಅದೇ ಹಣಕ್ಕಾಗಿ ಜೀವ ಬೆದರಿಕೆಯನ್ನೂ ಹಾಕಲಾಗಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
4
+ ಇದೇ ದೂರಿನಲ್ಲಿ ವಿಧಾನ ಪರಿಷತ್‌ ಸದಸ್ಯ ರಮೇಶ್‌ ಗೌಡ ಅವರ ಹೆಸರನ್ನೂ ಉಲ್ಲೇಖಿಸಿರುವ ಉದ್ಯಮಿ ವಿಜಯ್‌ ಟಾಟಾ, ರಮೇಶ್‌ ಗೌಡ ಅವರೂ ಕೂಡ ತಮಿಂದ ಹಣ ಕೀಳಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇಬ್ಬರೂ ಜನಪ್ರತಿನಿಧಿಗಳಿಂದ ತಮನ್ನು ಹಾಗೂ ತಮ ಕುಟುಂಬವನ್ನು ಕಾಪಾಡಬೇಕು. ತಮಗೆ ರಕ್ಷಣೆ ಒದಗಿಸಬೇಕು ಎಂದು ಅವರು ದೂರಿನಲ್ಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ.
5
+ ಅ.2ರಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕುಮಾರಸ್ವಾಮಿಯವರ ವಿರುದ್ಧ ಇದೇ ರೀತಿ ಆರೋಪ ಮಾಡಿದ್ದ ವಿಜಯ್‌ ಟಾಟಾ, ಅದೇ ದಿನ ಅಮೃತ ಹಳ್ಳಿ ಪೊಲೀಸ್‌‍ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಹೇಳಲಾಗಿದೆ.
6
+ ಖಾಸಗಿ ಮಾಧ್ಯಮವೊಂದರಲ್ಲಿ ಪ್ರಸಾರವಾದ ವಿಜಯ್‌ ಟಾಟಾ ಅವರ ಸುದ್ದಿಗೋಷ್ಠಿಯ ವಿಡಿಯೋ ಕ್ಲಿಪ್‌ನಲ್ಲಿ, ವಿಜಯ್‌ ತಾತಾ ಅವರು ನೇರವಾಗಿ ರಮೇಶ್‌ ಗೌಡ ಹಾಗೂ ಕುಮಾರಸ್ವಾಮಿ ವಿರುದ್ಧ ಆರೋಪ ಮಾಡಿದ್ದಾರೆ.
7
+ ಆ. 24ರ ರಾತ್ರಿ ತಮ ಮನೆಗೆ ಬಂದಿದ್ದ ರಮೇಶ್‌ ಗೌಡ, ಚನ್ನಪಟ್ಟಣ ವಿಧಾನಸಭಾ ಚುನಾವಣೆಯ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದರು. ನಿಖಿಲ್‌ ಕುಮಾರಸ್ವಾಮಿಗೆ ಚನ್ನಪಟ್ಟಣ ಟಿಕೆಟ್‌ ಫೈನಲ್‌ ಎಂದು ರಮೇಶ್‌ ಗೌಡ ಹೇಳಿದ್ದರು. ಉಪ ಚುನಾವಣೆಯಲ್ಲಿ ಸಕ್ರಿಯವಾಗಿ ಕೆಲಸ ಮಾಡಬೇಕೆಂದು ಸೂಚನೆ ನೀಡಿದ್ದರು ಎಂದು ವಿಜಯ್‌ ತಾತಾ ಹೇಳಿದ್ದಾರೆ.
8
+ ಇದೇ ಸಂದರ್ಭದಲ್ಲಿ, ರಮೇಶ್‌ ಗೌಡರ ಮೊಬೈಲಿಗೆ ಕುಮಾರಸ್ವಾಮಿಯವರ ಫೋನ್‌ ಕಾಲ್‌ ಬಂತು. ಕೆಲ ಹೊತ್ತು ರಮೇಶ್‌ ಗೌಡರ ಜೊತೆಗೆ ಮಾತುಕತೆ ನಡೆಸಿದ ನಂತರ ತಮ ಜೊತೆಗೂ ಕುಮಾರಸ್ವಾಮಿ ಮಾತುಕತೆ ನಡೆಸಿದರು. ಆಗ ಸಂದರ್ಭದಲ್ಲಿಯೇ ಹಣಕಾಸು ಬೇಡಿಕೆ ಬಂದಿದ್ದಾಗಿ ವಿಜಯ್‌ ತಾತಾ ಅವರು ಹೇಳಿರುವಂತೆ ಭಾಸವಾಗುತ್ತದೆ.
9
+ ಅದಾದ ಬಳಿಕ ನನಗೆ ಹಣಕ್ಕಾಗಿ ಒತ್ತಾಯ ಮಾಡಲಾಯಿತು. ಆದರೆ, ನಾನು ಅಷ್ಟೊಂದು ಹಣ ನನ್ನ ಕೈಯ್ಯಲ್ಲಿ ಕೊಡಲಾಗುವುದಿಲ್ಲ. ನಾನೂ ಸ್ವಲ್ಪ ಸಮಸ್ಯೆಯಲ್ಲಿದ್ದೇನೆ ಎಂದು ತಿಳಿಸಿದೆ. ಆದರೆ, ಅವರು ನನಗೆ ಪದೇ ಪದೇ ಹಣಕ್ಕಾಗಿ ಬೇಡಿಕೆಯಿಟ್ಟು , ಕಡೆಗೆ ಬೆದರಿಕೆ ಹಾಕಿದ್ದಾರೆ ಎಂದು ವಿಜಯ್‌ ತಾತಾ ಅವರು ಆರೋಪಿಸಿದ್ದಾರೆ.
10
+ ಜೆಡಿಎಸ್‌‍ ಮುಖಂಡ ರಮೇಶ್‌ ಗೌಡ ನಮ ಮನೆಗೆ ಬಂದಿದ���ದರು. ನಿಖಿಲ್‌ ಚನ್ನಪಟ್ಟಣ ಉಪ ಚುನಾವಣೆ ನಿಲ್ಲುತ್ತಿದ್ದಾರೆ ಎಂದಿದ್ದರು. ಅದೇ ವೇಳೆ, ಹೆಚ್ಡಿ ಕುಮಾರಸ್ವಾಮಿ ಕೂಡ ದೂರವಾಣಿ ಕರೆ ಮಾಡಿದ್ದರು. ಚುನಾವಣೆಗಾಗಿ 50 ಕೋಟಿ ರೂಪಾಯಿ ಹಣ ನೀಡುವಂತೆ ನನ್ನನ್ನು ಕೇಳಿದ್ದರು. ನಾನು ಹಣ ಕೊಡಲಾಗದು ಎಂದಿದ್ದಕ್ಕೆ ಕುಮಾರಸ್ವಾಮಿ ಕೋಪಿಸಿಕೊಂಡಿದ್ದರು.
11
+ ಹಣ ಕೊಡುವುದಿಲ್ಲ ಎಂದಿದ್ದಕ್ಕೆ, ನಿಮ ಪ್ರಾಜೆಕ್ಟ್‌ ಕಂಪ್ಲೀಟ್‌ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ. ದೇವಸ್ಥಾನ ಕಟ್ಟಲು ರಮೇಶ್‌ ಗೌಡ ಕೂಡ 5 ಕೋಟಿ ರೂಪಾಯಿ ಕೇಳಿದ್ದರು. ತುಂಬಾ ಕಷ್ಟವಿದೆ ಯಾವುದೇ ಕಾರಣಕ್ಕೂ ಹಣ ಕೊಡಲ್ಲ ಅಂದಿದ್ದೆ. 1 ವಾರದಿಂದ ರಮೇಶ್‌ ಗೌಡ ಕಾಲ್‌, ಮೆಸೇಜ್‌ ಮಾಡುತ್ತಿದ್ದರು. 2019ರ ಚುನಾವಣೆಯಲ್ಲೂ ಅವರಿಗಾಗಿ ತುಂಬಾ ಖರ್ಚು ಮಾಡಿದ್ದೆವು ಎಂದು ವಿಜಯ್‌ ಟಾಟ ಹೇಳಿದ್ದಾರೆ.
eesanje/url_46_3_7.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಮೂಡಾ ಹಗರಣದ ಸಾಕ್ಷ್ಯ ನಾಶ ಮಾಡುವ ಪ್ರಯತ್ನ ನಡೆದಿದೆ : ಎಚ್‌ಡಿಕೆ ಆರೋಪ
2
+
3
+ ಬೆಂಗಳೂರು,ಅ.2-ಸಿಎಂ ಸಿದ್ದರಾಮಯ್ಯನವರ ಕುಟುಂಬಕ್ಕೆ ಮುಡಾದಿಂದ ನೀಡಿದ್ದ ನಿವೇಶನಗಳನ್ನು ಹಿಂಪಡೆಯುವ ಮೂಲಕ ಪ್ರಕರಣದಲ್ಲಿ ಸಾಕ್ಷ್ಯ ನಾಶ ಮಾಡುವ ಪ್ರಯತ್ನ ನಡೆದಿದ್ದು, ಈ ಕಾರಣಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನು ಲೋಕಾಯುಕ್ತ ಪೊಲೀಸರು ಕೂಡಲೇ ಬಂಧಿಸಬೇಕು ಎಂದು ಕೇಂದ್ರ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
4
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪತ್ರ ಬರೆದಾಕ್ಷಣ ಅದನ್ನು ಒಪ್ಪಿಕೊಂಡು ತರಾತುರಿಯಲ್ಲಿ ನಿವೇಶನ ಹಿಂಪಡೆಯಲು ಕಾನೂನಿನಲ್ಲಿ ಅವಕಾಶವಿದೆಯೇ? ಎಂದು ಪ್ರಶ್ನಿಸಿದರು.
5
+ ಕೆಸರೆ ಗ್ರಾಮದ ಜಮೀನು ತಮದು. ಇದಕ್ಕೆ ಬದಲಿಯಾಗಿ ವಿಜಯನಗರದಲ್ಲಿ ನೀಡಿರುವ 14 ನಿವೇಶನಗಳ ಮೌಲ್ಯ 62 ಕೋಟಿ ರೂ.ಗಳಷ್ಟಾಗುತ್ತದೆ. ಅಷ್ಟು ಹಣ ಕೊಟ್ಟು ನಿವೇಶನ ವಾಪಸ್‌‍ ಪಡೆಯಲಿ, ನಾವು ಕಾನೂನುಬದ್ಧವಾದ ಜಮೀನಿನ ಮಾಲೀಕರು ಎಂದು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ವಾದಿಸಿದ್ದರು.
6
+ ಈಗ ಅದು ಹೇಗೆ ಏಕಾಏಕಿ ನಿವೇಶನಗಳನ್ನು ವಾಪಸ್‌‍ ಮುಡಾಗೆ ದಾನ ಮಾಡಿಬಿಟ್ಟರು? ಎಂದು ಕಿಡಿ ಕಾರಿದರು.ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ತೀರ್ಪು ಪ್ರಕಟಗೊಂಡಿದ್ದು, ಹಗರಣವನ್ನು ಲೋಕಾಯುಕ್ತದ ತನಿಖೆಗೆ ಆದೇಶಿಸಲಾಗಿದೆ. ಹೀಗಾಗಿ ಮುಡಾ ನಿವೇಶನಗಳು ಈಗ ನ್ಯಾಯಾಲಯದ ಆಸ್ತಿ. ಹಾಗಿದ್ದಾಗ ಯಾವ ಆಧಾರದ ಮೇಲೆ ಅವುಗಳನ್ನು ವಾಪಸ್‌‍ ನೀಡಲು ಸಾಧ್ಯ? ಎಂದರು.
7
+ ನಿವೇಶನಗಳ ಖಾತಾ ಬದಲಾವಣೆ ಮಾಡುವ ಮೂಲಕ ಸಾಕ್ಷ್ಯನಾಶ ಮಾಡಲು ಯತ್ನಿಸಲಾಗಿದೆ. ತನಿಖೆಯ ದಿಕ್ಕು ತಪ್ಪಿಸಲು ಮುಖ್ಯಮಂತ್ರಿಯವರು ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ನಿವೇಶನಗಳನ್ನು ವಾಪಸ್ ತೆಗೆದುಕೊಳ್ಳಲು ಅಧಿಕಾರಿಗಳು ಎಲ್ಲಿ ಹೋಗಿ ಸಹಿ ಹಾಕಿಸಿಕೊಂಡಿದ್ದಾರೆ? ಕಚೇರಿಗೆ ಕರೆಸಿಕೊಂಡಿದ್ದಾರೆಯೇ ಅಥವಾ ಮನೆ ಬಾಗಿಲಿಗೆ ಹೋಗಿದ್ದಾರೆಯೇ? ನಿವೇಶನ ವಾಪಸ್‌‍ ಪಡೆಯುವ ಪ್ರಕ್ರಿಯೆಯಲ್ಲಿ ಅಧಿಕಾರಿಗಳ ಮೇಲೆ ಪ್ರಭಾವ ಬೀರಿದ್ದು ಯಾರು? ಮುಖ್ಯಮಂತ್ರಿಯವರೇ? ಅಥವಾ ನಗರಾಭಿವೃದ್ಧಿ ಸಚಿವರೇ? ಎಂಬುದೂ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.
8
+ ಸಾಕ್ಷ್ಯ ನಾಶ ಮಾಡುವ ಪ್ರಯತ್ನಗಳಾಗುತ್ತಿವೆ. ವಿಚಾರಣಾ ಹಂತದಲ್ಲೇ ನಿವೇಶನ ವಾಪಸ್‌‍ ನೀಡಿರುವುದು ನ್ಯಾಯಾಂಗ ನಿಂದನೆಯಾಗುತ್ತದೆ. ಈ ಕಾರಣಕ್ಕೆ ತನಿಖೆ ಪಾರದರ್ಶಕವಾಗಿದ್ದರೆ ಲೋಕಾಯುಕ್ತ ಪೊಲೀಸರು ತಕ್ಷಣವೇ ಮುಡಾ ಆಯುಕ್ತರನ್ನು ಬಂಧಿಸಬೇಕಿದೆ ಎಂದು ಹೇಳಿದರು.
9
+ ಈ ಪ್ರಕರಣವನ್ನು ಅಷ್ಟು ಸುಲಭವಾಗಿ ಅರಗಿಸಿಕೊಳ್ಳಲು ಸಾಧ್ಯವಿಲ್ಲ. ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸುತ್ತಿದ್ದಂತೆ ತರಾತುರಿಯಲ್ಲಿ ನಿವೇಶನ ಹಿಂಪಡೆಯಲಾಗಿದೆ. ಇದರಲ���ಲಿ ಹಣ ಅಕ್ರಮ ವರ್ಗಾವಣೆಯ ಪ್ರಸ್ತಾಪ ಬರುವುದಿಲ್ಲ ಎಂದು ವಾದಿಸುತ್ತಿದ್ದಾರೆ. ಮುಖ್ಯಮಂತ್ರಿಯವರೇ ನಿವೇಶನದ ಮೌಲ್ಯ 62 ಕೋಟಿ ರೂ. ಎಂದು ಹೇಳಿದ ಮೇಲೆ ಪಿಎಂಎಲ್‌ಎ ಕಾಯ್ದೆ ಆಕರ್ಷಿತವಾಗಲಿದೆ ಎಂದು ಪ್ರತಿಪಾದಿಸಿದರು.
10
+ ತಮ ಪತ್ನಿ ಪಾರ್ವತಿಯವರು ನಿವೇಶನ ವಾಪಸ್‌‍ ಪಡೆಯುವಂತೆ ಪತ್ರ ಬರೆದಿರುವುದೇ ನನಗೆ ಗೊತ್ತಿಲ್ಲ ಎಂದು ಸಿದ್ದರಾಮಯ್ಯನವರು ಹೇಳುತ್ತಿದ್ದಾರೆ. ಹಾಗಿದ್ದ ಮೇಲೆ ಮಗ ಯತೀಂದ್ರರ ಕೈಲಿ ಪತ್ರವನ್ನು ಏಕೆ ಕಳುಹಿಸಿದರು? ಈ ವಿಚಾರ ಮನೆಯಲ್ಲಿ ಚರ್ಚೆಯಾಗಿಲ್ಲವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.ಕುಮಾರಸ್ವಾಮಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ನಾನೇಕೆ ರಾಜೀನಾಮೆ ಕೊಡಬೇಕು? ನನಗೆ ತಲೆ ಕೆಟ್ಟಿದೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.
eesanje/url_46_3_8.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಯಾವ ಆಧಾರದ ಮೇಲೆ ನಿವೇಶನ ರದ್ದು ಮಾಡಿದ್ದೀರಿ..? : ವಿಜಯೇಂದ್ರ ಪ್ರಶ್ನೆ
2
+
3
+ ಬೆಂಗಳೂರು,ಅ.2-ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಪತ್ರ ನೀಡಿದ ಕೇವಲ 24 ಗಂಟೆಯೊಳಗೆ ಮುಡಾ ಆಯುಕ್ತರು ಮಂಜೂರು ಮಾಡಿದ್ದ ನಿವೇಶನಗಳನ್ನು ಯಾವ ಆಧಾರದ ಮೇಲೆ ರದ್ದುಪಡಿಸಿ ದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶ್ನೆ ಮಾಡಿದ್ದಾರೆ.
4
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಆಯುಕ್ತರು ಇಷ್ಟು ತರಾತುರಿಯಲ್ಲಿ ನಿವೇಶನಗಳನ್ನು ರದ್ದುಪಡಿಸುವ ಅಗತ್ಯವಾದರೂ ಏನಿತ್ತು. ಇದನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬಹುದಿತ್ತಲ್ಲವೇ? ಬೇರೆಯವರಿಗೊಂದು ನ್ಯಾಯ. ಮುಖ್ಯಮಂತ್ರಿ ಕುಟುಂಬಕ್ಕೆ ಇನ್ನೊಂದು ನ್ಯಾಯವೇ ಎಂದು ತರಾಟೆಗೆ ತೆಗೆದುಕೊಂಡರು.
5
+ ನನಗಿರುವ ಮಾಹಿತಿ ಪ್ರಕಾರ ಮುಡಾ ಆಯುಕ್ತರ ನಿರ್ಧಾರ ನಿಜಕ್ಕೂ ಅಚ್ಚರಿ ತಂದಿದೆ. ಹೈಕೋರ್ಟ್ ತನಿಖೆ ನಡೆಸಬೇಕಾದ ಅಗತ್ಯವಿದೆ ಎಂದು ಹೇಳಿದ್ದರೆ, ಕೆಳಹಂತದ ನ್ಯಾಯಾಲಯ ಎಫ್ಐಆರ್ ದಾಖಲಿಸಲು ಆದೇಶಿಸಿದೆ. ಹಾಗಾದರೆ ನ್ಯಾಯಾಲಯದ ಆದೇಶಕ್ಕೆ ಬೆಲೆ ಇಲ್ಲವೇ? ಎಂದು ಪ್ರಶ್ನೆ ಮಾಡಿದರು.
6
+ ಒಂದು ಕಡೆ ಲೋಕಾಯುಕ್ತ ಮತ್ತೊಂದು ಕಡೆ ಇ.ಡಿಯಲ್ಲಿ ದೂರು ದಾಖಲಾಗಿದೆ. ಮತ್ತೊಂದು ಕಡೆ ತನಿಖೆಯೂ ಪ್ರಾರಂಭವಾಗಿದೆ. ಈಗ ನಿವೇಶನ ವಾಪಸ್ ಕೊಟ್ಟರೆ ಪ್ರಕರಣ ಇತ್ಯರ್ಥವಾಗುತ್ತದೆಯೇ? ಕಾನೂನು ತಜ್ಞರು ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯನವರಿಗೆ ಪರಿಜ್ಞಾನ ಇಲ್ಲವೇ ಎಂದು ಪ್ರಶ್ನಿಸಿದರು.
7
+ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಒಂದಾದ ಮೇಲೆ ಒಂದು ತಪ್ಪು ಮಾಡುತ್ತಿದ್ದಾರೆ. ಅವರು ಬಹಳ ಅನುಭವಿಗಳು! ಮುಡಾ ಪ್ರಕರಣವನ್ನು ಬಿಜೆಪಿ ಕೈಗೆತ್ತಿಕೊಂಡಾಗಲೇ ಎಚ್ಚೆತ್ತುಕೊಳ್ಳಬೇಕಿತ್ತು. ಹಿಂದೆಯೇ ಅವರು ಸೈಟ್ ವಾಪಸ್ ನೀಡಿದ್ದರೆ ನಾವು ಇಷ್ಟು ಹೋರಾಟ ಮಾಡಬೇಕಿರಲಿಲ್ಲ. ಆದರೆ ಅವರಿಗೆ ಯಾರು ಸಲಹೆ ನೀಡಿದರೋ ಗೊತ್ತಿಲ್ಲ? ಬಹುಶಃ ಡಿಕೆಶಿ ಅವರೇ ಸಲಹೆ ನೀಡುತ್ತಿರಬಹುದು ಎಂದು ವ್ಯಂಗ್ಯವಾಡಿದರು.
8
+ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣಾ ಅವರು ಇಡಿಯಲ್ಲೂ ದೂರು ದಾಖಲಿಸಿದ್ದಾರೆ. ಸಿದ್ದರಾಮಯ್ಯ ಅವರ ಪತ್ನಿ ಪತ್ರ ಬರೆದ 24 ಗಂಟೆಯೊಳಗೆ ಸೈಟ್ ವಾಪಸ್ ಪಡೆದಿದ್ದಾರೆ. ಹಾಗಾಗಿ ಲೋಕಾಯುಕ್ತಾ ತನಿಖೆ ಬೇಡ ಅಂತಲೇ, ಸ್ನೇಹಮಯಿ ಕೃಷ್ಣಾ ಸಿಬಿಐ ತನಿಖೆ ಬೇಕು ಅನ್ನುತ್ತಿದ್ದಾರೆ. ಬಿಜೆಪಿ ಕೂಡ ಸಿಬಿಐ ತನಿಖೆಗೆ ಆಗ್ರಹಿಸುತ್ತಿದೆ ಎಂದರು.
9
+ ರಾಜ್ಯ ಸರ್ಕಾರ ಒನ್ ಮ್ಯಾನ್ ಕಮೀಷನ್ ತನಿಖೆಗೆ ನೀಡಿದೆ ಎಂದು ಸಿದ್ದರಾಮಯ್ಯ ಭಾಷಣ ಮಾಡಿದ್ದರು. ಎಲ್ಲಾ ನಿರ್ಧಾರ ಒಂದರ ಮೇಲೆ, ಒಂದು ತಪ್ಪು ಹೊರಗೆ ಬರುತ್ತಿದೆ. ನಿವೇಶನ ವಾಪಸ್ ಪತ್ರ ಬರೆದಿದ್ದಾರೆ. ಮುಡಾ ಆಯುಕ್ತರು ಸಂಜೆಯೊಳಗೆ ಖಾತಾ ವಾಪಸ್ ಪಡೆದಿದ್ದಾರೆ. ಅಕ್ರಮ ಈಗಾಗಲೇ ಆಗಿದೆ. ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.
10
+ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟೇ ಕೊ��ುತ್ತಾರೆ. ಕೊಡಲೇ ಬೇಕು. ಮಲ್ಲಿಕಾರ್ಜುನ ಖರ್ಗೆ ಈಗಾಗಲೇ ಮಾತಾಡುತ್ತಿದ್ದಾರೆ. ಇನ್ನೊಂದು ವಾರದಲ್ಲಿ ಬೆಳವಣಿಗೆ ನೋಡಿ. ಸಿದ್ದರಾಮಯ್ಯ ಅವರು ಯಾವ ಕ್ಷಣ, ಯಾವಾಗ ರಾಜೀನಾಮೆ ಕೊಡ್ತಾರೆ ಎಂದು ಗೊತ್ತಿಲ್ಲ. ಆದರೆ ರಾಜೀನಾಮೆ ಕೊಡುವುದಂತೂ ಸತ್ಯ ಎಂದರು.
11
+ ಸಿಎಂ ಸಿದ್ದರಾಮಯ್ಯ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಏನಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, ಡಿ.ಕೆ.ಶಿವಕುಮಾರ್ ಅವರನ್ನು ಕೇಳಿ ಹೇಳುತ್ತೇನೆ ಎಂದು ಹಾಸ್ಯ ಮಾಡಿದರು.
eesanje/url_46_3_9.txt ADDED
@@ -0,0 +1,7 @@
 
 
 
 
 
 
 
 
1
+ ಬೆಳಗಾವಿ ಎಐಸಿಸಿ ಅಧಿವೇಶನಕ್ಕೆ 100 ವರ್ಷ : ರಾಜ್ಯಾದ್ಯಂತ ಕಾಂಗ್ರೆಸ್ಸಿಗರ ಗಾಂಧಿ ನಡಿಗೆ
2
+ – 100
3
+ ಬೆಂಗಳೂರು,ಅ.2- ಮಹಾತ್ಮ ಗಾಂಧೀಯವರು ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನದ ಅಧ್ಯಕ್ಷತೆ ವಹಿಸಿ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ಗಾಂಧಿನಡಿಗೆಯನ್ನು ಆಯೋಜಿಸಲಾಗಿತ್ತು.ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಜೊತೆಗೂಡಿ ಬೆಂಗಳೂರು ಸೇರಿದಂತೆ ಹಲವು ಕಡೆ ಜನಪ್ರತಿನಿಧಿಗಳು, ಕಾಂಗ್ರೆಸ್ ಪ್ರಮುಖ ನಾಯಕರು ಗಾಂಧಿ ನಡಿಗೆಯಲ್ಲಿ ಹೆಜ್ಜೆ ಹಾಕಿದರು.
4
+ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಎಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಶಾಸಕರಾದ ರಿಜ್ವಾನ್ ಹರ್ಷದ್, ಮುಖಂಡರಾದ ವಿ.ಎಸ್.ಉಗ್ರಪ್ಪ, ಗಾಂಧಿ ಪ್ರತಿಷ್ಠಾನದ ವೂಡೆ ಪಿ ಕೃಷ್ಣ ಸೇರಿದಂತೆ ಮತ್ತಿತರರು ಗಾಂಧಿಭವನದ ಬಳಿಯಿರುವ ಮಹಾತ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕಾಲ್ನಡಿಗೆ ಜಾಥಾ ಆರಂಭಿಸಿದರು.
5
+ ಅಲ್ಲಿಂದ ರೇಸ್ಕೋರ್ಸ್ ರಸ್ತೆ, ಚಾಲುಕ್ಯ ವೃತ್ತದ ಮೂಲಕ ವಿಧಾನಸೌಧದ ಬಳಿಯಿರುವ ಮಹಾತಗಾಂಧೀಜಿ ಪ್ರತಿಮೆವರೆಗೂ ಗಾಂಧಿ ನಡಿಗೆ ನಡೆಯಿತು. ಡಿ.ಕೆ.ಶಿವಕುಮಾರ್ರವರು ರಾಷ್ಟ್ರಧ್ವಜ ಹಿಡಿದು ಸಿದ್ದರಾಮಯ್ಯನವರೊಂದಿಗೆ ಹೆಜ್ಜೆ ಹಾಕಿದರು.ಆರಂಭದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಡಿ.ಕೆ.ಶಿವಕುಮಾರ್ ಗಾಂಧಿ ಟೋಪಿ ತೊಡಿಸಿದರು. ಬಿಬಿಎಂಪಿಯ ಹಿರಿಯ ಅಧಿಕಾರಿಗಳಿಗೂ ಗಾಂಧಿ ಟೋಪಿಯನ್ನು ತೊಡಿಸಲಾಯಿತು.
6
+ ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್ರವರು ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ ಗಾಂಧೀಜಿ ಕಾಂಗ್ರೆಸ್ ಅಧ್ಯಕ್ಷರಾಗಿ ನೇತೃತ್ವ ವಹಿಸಿದ್ದರು. ಅಲ್ಲಿಂದಲೇ ಸ್ವಾತಂತ್ರ್ಯ ಹೋರಾಟಕ್ಕೆ ಚಾಲನೆ ನೀಡಲಾಯಿತು. ಅಹಿಂಸಾ ಮಾರ್ಗವಾಗಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ಸ್ವಾತಂತ್ರ್ಯ ತಂದುಕೊಡುವಲ್ಲಿ ಗಾಂಧೀಜಿ ಯಶಸ್ವಿಯಾದರು. 1924 ರಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆದ ಶತಮಾನೋತ್ಸವ ನೆನಪಿಗಾಗಿ ವರ್ಷಪೂರ್ತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
7
+ ಕಾಲ್ನಡಿಗೆ ಜಾಥಾದಲ್ಲಿ ಸಚಿವರು ತಮ ಉಸ್ತುವಾರಿ ಜಿಲ್ಲೆಗಳಲ್ಲಿ ಹಾಗೂ ಶಾಸಕರು ತಮ ಕ್ಷೇತ್ರಗಳಲ್ಲಿ ಭಾಗವಹಿಸಿದ್ದರು. ನಂತರ ಸ್ವಚ್ಛತಾ ಅಭಿಯಾನದಲ್ಲಿ ಕಾಂಗ್ರೆಸ್ ನಾಯಕರು ಪಾಲ್ಗೊಂಡರು.
eesanje/url_46_40_1.txt ADDED
@@ -0,0 +1,7 @@
 
 
 
 
 
 
 
 
1
+ 31 ಲಕ್ಷ ಮೌಲ್ಯದ 45 ದ್ವಿಚಕ್ರ ವಾಹನಗಳ ವಶ
2
+ ಬೆಂಗಳೂರು,ಆ.20- ನಗರದ ವಿವಿಧ ಕಡೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿ 31 ಲಕ್ಷ ಮೌಲ್ಯದ 45 ದ್ವಿಚಕ್ರ ವಾಹನಗಳು, ಮೊಬೈಲ್, ಲ್ಯಾಪ್‍ಟಾಪ್‍ಗಳನ್ನು ವಶಪಡಿಸಿಕೊಂಡಿದ್ದಾರೆ.
3
+ ಪೀಣ್ಯ: ನಾಗಸಂದ್ರ ಮೆಟ್ರೊ ನಿಲ್ದಾಣದ ಹತ್ತಿರ ದ್ವಿಚಕ್ರ ವಾಹನ ನಿಲ್ಲಿಸಿ ಕೆಲಸಕ್ಕೆ ಹೋಗಿ ಸಂಜೆ ವಾಪಸ್ ಬಂದು ನೋಡಿದಾಗ ವಾಹನ ಕಳವಾಗಿರುವ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ವಿನಾಯಕನ ಗರದಲ್ಲಿ ಆರೋಪಿಯೊಬ್ಬನನ್ನು ಬಂಧಿಸಿ ವಿಚಾರಣೆಗೊಳಪಡಿಸಿ ಈ ಪ್ರಕರಣವಲ್ಲದೆ 20 ದ್ವಿಚಕ್ರ ವಾಹನ ಕಳವು ಮಾಡಿದ್ದಾಗಿ ತಿಳಿಸಿದ್ದಾನೆ.ಈ ಪೈಕಿ 7 ದ್ವಿಚಕ್ರ ವಾಹನಗಳನ್ನು ಚಿತ್ರದುರ್ಗದಲ್ಲಿ ಹಾಗೂ ಉಳಿದ ಏಳು ದ್ವಿಚಕ್ರ ವಾಹನಗಳನ್ನು ಇಬ್ಬರು ಸ್ನೇಹಿತರಿಗೆ ಮಾರಾಟ ಮಾಡಿರುವುದಾಗಿ ತಿಳಿಸಿದ ಮೇರೆಗೆ ಅವುಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.
4
+ ಆರೋಪಿಯ ಬಂಧನದಿಂದ ಒಟ್ಟು 15 ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿದ್ದು, ಉಳಿದ ಐದು ವಾಹನಗಳ ವಾರಸುದಾರರ ಪತ್ತೆ ಕಾರ್ಯ ಪ್ರಗತಿಯಲ್ಲಿದೆ. ಇನ್‍ಸ್ಪೆಕ್ಟರ್ ಅನಿಲ್‍ಕುಮಾರ್ ಹಾಗೂ ಸಿಬ್ಬಂದಿ ತಂಡ ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿದೆ.
5
+ ವಿದ್ಯಾರಣ್ಯಾಪುರ: ರಾತ್ರಿ ವೇಳೆ ದ್ವಿಚಕ್ರ ವಾಹನಗಳನ್ನು ಕಳವು ಮಾಡಿ ಎಂಜಿನ್ ಹಾಗೂ ಚಾರ್ಸಿ ನಂಬರ್‍ಗಳನ್ನು ಟ್ಯಾಂಪರಿಂಗ್ ಮಾಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಓಎಲ್‍ಎಕ್ಸ್‍ನಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂ„ಸಿರುವ ವಿದ್ಯಾರಣ್ಯಾಪುರ ಠಾಣೆ ಪೊಲೀಸರು 26 ಲಕ್ಷ ಮೌಲ್ಯದ 25 ದ್ವಿಚಕ್ರ ವಾಹನಗಳು, 6 ಮೊಬೈಲ್, 2 ಲ್ಯಾಪ್‍ಟಾಪ್ ಹಾಗೂ ಕಲರ್ ಪ್ರಿಂಟ್ ವಶಪಡಿಸಿಕೊಂಡಿದ್ದಾರೆ.ಈ ವ್ಯಾಪ್ತಿಯಲ್ಲಿ ಹೆಚ್ಚಾಗಿ ದ್ವಿಚಕ್ರ ವಾಹನಗಳು ಕಳವಾಗುತ್ತಿದ್ದ ಬಗ್ಗೆ ದೂರು ದಾಖಲಾದ ಹಿನ್ನಲೆಯಲ್ಲಿ ಆರೋಪಿಗಳ ಪತ್ತೆಗಾಗಿ ಇನ್‍ಸ್ಪೆಕ್ಟರ್ ಶಿವಸ್ವಾಮಿ ಅವರನ್ನೊಳಗೊಂಡ ಒಂದು ವಿಶೇಷ ತಂಡವನ್ನು ರಚಿಸಲಾಗಿತ್ತು.
6
+ ಈ ತಂಡವು ಹಲವಾರು ಆಯಾಮಗಳಲ್ಲಿ ಕಾರ್ಯಾಚರಣೆ ಕೈಗೊಂಡು ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಆಂಧ್ರಪ್ರದೇಶದ ಕಡಪ ಜಿಲ್ಲೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡಿಕೊಂಡು ತಾವು ವಾಸವಿರುವ ಹುಣಸಮಾರನಹಳ್ಳಿಯ ಮನೆಗೆ ತಂದು ಅವುಗಳ ಎಂಜಿನ್ ಚಾರ್ಸಿ ನಂಬರ್‍ಗಳನ್ನು ಟ್ಯಾಂಪರ್ ಮಾಡಿ ನಂತರ ನಕಲಿ ದಾಖಲೆಗಳನ್ನು ಸೃಷ್ಟಿಸಿ ಓಎಲ್‍ಎಕ್ಸ್‍ನಲ್ಲಿ ಮಾರಾಟ ಮಾಡುತ್ತಿದುದ್ದಾಗಿ ತಿಳಿಸಿದ್ದಾರೆ.
7
+ ಆರೋಪಿಗಳು ಕಳ್ಳತನ ಮಾಡಿ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ 17 ದ್ವಿಚಕ್ರ ವಾಹನಗಳು ಹಾಗೂ ಮನೆ ಬಳಿ ಇದ್ದ ನಾಲ್ಕು ದ್ವಿಚಕ್ರ ವಾಹನ ಮತ್ತಿ��ರ ಎಲೆಕ್ಟ್ರಾನಿಕ್ ಉಪಕರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
eesanje/url_46_40_10.txt ADDED
@@ -0,0 +1,6 @@
 
 
 
 
 
 
 
1
+ ಯುವ ಜನತೆಯಲ್ಲಿ ನೈತಿಕ ಮೌಲ್ಯಗಳು ಕಣ್ಮರೆಯಾಗುತ್ತಿವೆ : ಸಂತೋಷ್‌ ಹೆಗ್ಡೆ ಕಳವಳ
2
+ ಬೆಂಗಳೂರು: ಆ.19:ಸಮಾಜದಲ್ಲಿ ಅದರಲ್ಲೂ ಮುಖ್ಯವಾಗಿ ಯುವ ಜನತೆಯಲ್ಲಿ ನೈತಿಕ ಮೌಲ್ಯಗಳು ಕಣ್ಮರೆಯಾಗುತ್ತಿರುವುದಕ್ಕೆ ಕರ್ನಾಟಕ ಸರ್ಕಾರದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಕಳವಳ ವ್ಯಕ್ತಪಡಿಸಿದ್ದಾರೆ.
3
+ ಪರಿಮಳ ಗೆಳೆಯರ ಬಳಗದ 49ನೇ ವಾರ್ಷಿಕೋತ್ಸವ ಮತ್ತು ಹರಿದಾಸ ಸಾಹಿತ್ಯ ಸಂಶೋಧಕ ಹಾಗೂ ಲೇಖಕ ಡಾ. ಎಸ್‌‍.ಜಯಸಿಂಹ ಅವರ ಶ್ರೀಧೀರೇಂದ್ರ ದರ್ಶನ ಪುಸ್ತಕ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ನೈತಿಕತೆ ಮತ್ತು ಪ್ರಾಮಾಣಿಕತೆ ಎರಡೂ ಒಂದೇ ನಾಣ್ಯದ ಎರಡು ಮುಖಗಳು, ಇವೆರಡರ ಅಭಾವ ಮನುಷ್ಯನನ್ನು ಪಶುವಿಗಿಂತಲೂ ಹೀನವಾಗಿ ವರ್ತಿಸುವಂತೆ ಪ್ರೇರೇಪಿಸುತ್ತವೆ. ಭ್ರಷ್ಟಾಚಾರ ವಿಲ್ಲದಯಾವುದೇ ಇಲಾಖೆಯನ್ನು ಮತ್ತುಅಧಿಕಾರಿಯನ್ನು ಈ ಸಂದರ್ಭದಲ್ಲೇ ನೋಡುವುದೇ ದುಸ್ಸಾಧ್ಯವಾಗಿದೆ ಎಂದರು.
4
+ ಜೈಲಿನಿಂದ ಬಂದವರನ್ನು ಹೀರೋಗಳಂತೆ ಸ್ವಾಗತಿಸಿ ಅವರನ್ನು ವೈಭವೀಕರಿಸುವ ಸಮಾಜದಲ್ಲಿ ನಾವಿಂದು ಬದುಕಿದ್ದೇವೆ, ಮನಸ್ಸಾಕ್ಷಿ ಮತ್ತು ಕೃತಿ ಮಾತುಗಳ ನಡುವೆ ಅಂತರವಿಲ್ಲದ ವ್ಯಕ್ತಿತ್ವ ಇಂದು ಮರೀಚಿಕೆಯಾಗಿದೆ ಎಂದು ಸಂತೋಷ್‌ ಹೆಗ್ಡೆ ಅವರು ಅಭಿಪ್ರಾಯಪಟ್ಟರು.
5
+ ಇದೇ ಸಂದರ್ಭದಲ್ಲಿ ನ್ಯಾಯಾಂಗ, ಚಲನಚಿತ್ರ ನಟನೆ, ಪೊಲೀಸ್‌‍ ಸೇವೆ, ಸಾಹಿತ್ಯ, ಶಿಕ್ಷಣ, ಪತ್ರಿಕೋದ್ಯಮ, ವಿಜ್ಞಾನಮುಂತಾದ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವ ವಿ. ಶ್ರೀಶಾನಂದ, ರಮೇಶ್‌ ಅರವಿಂದ್‌, ಎಂ. ಮುತ್ತೂರಾಯ, ಎಚ್‌. ಡುಂಡಿರಾಜ್‌, ಎಸ್‌‍. ಅಹಲ್ಯ, ಶ್ಯಾಮಸುಂದರ್‌ ವಟ್ಟಂ, ಸುಧೀಂದ್ರ ಬಿಂದಗಿ ಮೊದಲಾದ ಹದಿನಾರು ಸಾಧಕರಿಗೆ ಪರಿಮಳ ಪ್ರಶಸ್ತಿ ಪ್ರದಾನ ಮಾಡಲಾಯಿತು.
6
+ ಸಮಾರಂಭದಅಧ್ಯಕ್ಷತೆ ವಹಿಸಿದ್ದ ಸುವಿದ್ಯೇಂದ್ರತೀರ್ಥರು ಪುಸ್ತಕ ಬಿಡುಗಡೆ ಮಾಡಿದರು. ಕಾಣಿಯೂರು ಮಠಾಧೀಶ ವಿದ್ಯಾವಲ್ಲಭತೀರ್ಥರು ಸಾನಿಧ್ಯ ವಹಿಸಿದ್ದರು. ಸನ್ಮಾನಿತರ ಪರವಾಗಿ ಚಿತ್ರನಟ ರಮೇಶ್‌ಅರವಿಂದ್‌ ಅವರು ಮಾತನಾಡಿ ಪ್ರಶಸ್ತಿಯ ಮೂಲಕ ರಾಯರ ಅನುಗ್ರಹ ಪ್ರಾಪ್ತವಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ರಾಯಚೂರು ಶೇಷಗಿರಿದಾಸ್‌‍ ಮತ್ತುತಂಡದವರಿಂದ ಹರಿದಾಸ ಕೀರ್ತನೆಗಳ ಗಾಯನಕಾರ್ಯಕ್ರಮವೂ ನಡೆಯಿತು.
eesanje/url_46_40_11.txt ADDED
@@ -0,0 +1,5 @@
 
 
 
 
 
 
1
+ ಸಿಎಂ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಲೋಕಾಯುಕ್ತಕ್ಕೆ ಎನ್‌.ಆರ್‌. ರಮೇಶ್‌ ಮನವಿ
2
+ ಬೆಂಗಳೂರು, ಆ.19-ಘನತೆವೆತ್ತ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಬಿಜೆಪಿ ಮುಖಂಡ ಎನ್‌.ಆರ್‌. ರಮೇಶ್‌ ಅವರು ಲೋಕಾಯುಕ್ತ ಪೊಲೀಸರಿಗೆ ಮನವಿ ಮಾಡಿದ್ದಾರೆ.
3
+ ಸಿದ್ದರಾಮಯ್ಯ ಅವರು ಮೂಡಾದಲ್ಲಿ ತಮ ಧರ್ಮಪತ್ನಿ ಪಾರ್ವತಮ ಅವರ ಹೆಸರಿಗೆ 14 ಬದಲಿ ನಿವೇಶನಗಳನ್ನು ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಹಂಚಿಕೆ ಮಾಡಿ ಸರ್ಕಾರದ ಬೊಕ್ಕಸಕ್ಕೆ 60 ಕೋಟಿ ರೂ. ನಷ್ಟ ಉಂಟು ಮಾಡಿದ್ದಾರೆ ಎಂದು ನಾನು ಜು.20ರಂದು ಲೋಕಾಯುಕ್ತಕ್ಕೆ 408 ಪುಟಗಳ ದಾಖಲೆಗಳ ಸಮೇತ ದೂರು ದಾಖಲಿಸಿದ್ದೇನೆ.
4
+ ರಾಜ್ಯದ ರಾಜ್ಯಪಾಲರು ಸಿಎಂ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿರುವ ಕಾರಣ ಸದರಿ ಪ್ರಕರಣದಲ್ಲಿ ಪ್ರಮುಖರಾದ ಸಿದ್ಧರಾಮಯ್ಯ, ಪಾರ್ವತಮ, ಮಲ್ಲಿಕಾರ್ಜುನ ಸ್ವಾಮಿ, ಬಸವೇಗೌಡ, ರಾಜೀವ್‌, ನಟೇಶ್‌, ಮರಿಗೌಡ ಮತ್ತಿತರ ಭ್ರಷ್ಟ / ವಂಚಕ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರುಪಯೋಗ, ನಕಲಿ ದಾಖಲೆ ತಯಾರಿಕೆ ಮತ್ತು ಸರ್ಕಾರಿ ಸ್ವತ್ತು ಕಬಳಿಕೆ ಸಂಚು ನಡೆಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೂಡಲೇ ಎಫ್‌ಐಆರ್‌ ದಾಖಲಿಸಿಕೊಂಡು ಕಾನೂನು ರೀತ್ಯಾ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅವರು ಲೋಕಾಯುಕ್ತ ಪೊಲೀಸರಿಗೆ ಪತ್ರ ಬರೆದಿದ್ದಾರೆ.
5
+ ಸಿಎಂ ಮತ್ತು ಅವರ ಬೆಂಬಲಿಗ ವಿರುದ್ಧ ಕ್ರಮ ಕೈಗೊಳ್ಳುವ ಮುಖೇನ ರಾಜ್ಯದ ಪ್ರಥಮ ಪ್ರಜೆಯಾಗಿರುವ ರಾಜ್ಯಪಾಲರ ಆದೇಶಕ್ಕೆ ಕಾನೂನು ರೀತ್ಯಾ ಗೌರವ ನೀಡಬೇಕೆಂದು ಕರ್ನಾಟಕ ಲೋಕಾಯುಕ್ತದ ಪೋಲೀಸ್‌‍ ಅಧೀಕ್ಷಕರನ್ನು ಹಾಗೂ ಅಪರ ನಿಬಂಧಕರನ್ನು ರಮೇಶ್‌ ಆಗ್ರಹಿಸಿದ್ದಾರೆ.
eesanje/url_46_40_12.txt ADDED
@@ -0,0 +1,6 @@
 
 
 
 
 
 
 
1
+ ಗ್ಯಾಂಗ್‌ ವಾರ್ ಪ್ರಕರಣದ ಆರೋಪಿ ರೌಡಿಗೆ ಪೊಲೀಸರ ಗುಂಡೇಟು
2
+ ಹುಬ್ಬಳ್ಳಿ , ಆ.19-ನಗರದಲ್ಲಿ ಮತ್ತೆ ಪೊಲೀಸರ ಪಿಸ್ತೂಲ್‌ ಸದ್ದು ಮಾಡಿದೆ. ತಡರಾತ್ರಿ ಗ್ಯಾಂಗ್‌ವಾರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಂಧನಕ್ಕೆ ತೆರಳಿದ ಪೊಲೀಸ್‌‍ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದ ರೌಡಿಶೀಟರ್‌ ಇನ್‌ಸ್ಪೆಕ್ಟರ್‌ ಹಾರಿಸಿದ ಗುಂಡೇಟು ತಗುಲಿ ಸಿಕ್ಕಿಬಿದ್ದಿದ್ದಾನೆ.
3
+ ರೌಡಿಶೀಟರ್‌ ಅಪ್ತಾಬ್‌ ಕರಡಿಗುಡ್ಡ ಪೊಲೀಸರಿಂದ ಗುಂಡೇಟು ತಿಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೋಪಿ.ಕಳೆದ ರಾತ್ರಿ ಕಸಬಾ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಗ್ಯಾಂಗ್‌ವಾರ್‌ನಲ್ಲಿ ಜಾವೂರ್‌ ಎಂಬಾತ ಗಾಯಗೊಂಡಿದ್ದ. ಆತ ಕಿಮ್ಸೌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಕುರಿತು ದೂರು ಪಡೆದುಕೊಂಡು ಆರೋಪಿಗಳ ಬಂಧನಕ್ಕೆ ಕಸಬಾ ಠಾಣೆಯ ಪೊಲೀಸರು ಮುಂದಾಗಿದ್ದರು.
4
+ ಈ ವೇಳೆ ಬುಡರಸಿಂಗಿ ರಸ್ತೆಯಲ್ಲಿ ಆರೋಪಿ ಅಪ್ತಾಬ್‌ ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ತಕ್ಷಣ ಅತನ ಬಂಧನಕ್ಕೆ ಇನ್ಸ್ ಪೆಕ್ಟರ್‌ ರಾಘವೇಂದ್ರ ಹಳ್ಳೂರು ತಂಡ ತೆರಳಿತ್ತು. ಆಗ ಆರೋಪಿ ಅಪ್ತಾಬ್‌ ಪೊಲೀಸ್‌‍ ಸಿಬ್ಬಂದಿಗಳಾದ ರಾಜು ರಾಠೋಡ್‌ ಮತ್ತು ಪಾಲಯ್ಯ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ.
5
+ ಕೂಡಲೇ ಎಚ್ಚೆತ್ತುಕೊಂಡ ಇನ್‌್ಸಪೆಕ್ಟರ್‌ ರಾಘವೇಂದ್ರ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಸೂಚಿಸಿದ್ದಾರೆ. ಪೊಲೀಸರ ಮಾತನ್ನು ಲೆಕ್ಕಿಸದೆ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಇನ್‌ಸ್ಪೆಕ್ಟರ್ ಹಾರಿಸಿದ ಗುಂಡು ಅಪ್ತಾಬ್‌ ಕಾಲಿಗೆ ತಗುಲಿ ಕುಸಿದುಬಿದ್ದಿದ್ದಾನೆ. ತಕ್ಷಣ ಪೊಲೀಸರು ಆತನನ್ನು ಸುತ್ತುವರೆದು ವಶಕ್ಕೆ ಪಡೆದು ಕಿಮ್ಸೌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
6
+ ಕಿಮ್ಸೌ ಆಸ್ಪತ್ರೆಗೆ ಹುಬ್ಬಳ್ಳಿ-ಧಾರವಾಡ ಕಮಿಷನರ್‌ ಎನ್‌.ಶಶಿಕುಮಾರ್‌ ಅವರು ಭೇಟಿ ನೀಡಿ ಕಾರ್ಯಾಚರಣೆ ವೇಳೆ ಗಾಯಗೊಂಡ ಸಿಬ್ಬಂದಿಯ ಆರೋಗ್ಯ ವಿಚಾರಿಸಿದರು. ಈ ಭಾಗದಲ್ಲಿ ಬಡ್ಡಿ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಮೀಟರ್‌ ಬಡ್ಡಿ ವಸೂಲಿ ಮಾಡಲು ವಿದ್ಯಾರ್ಥಿಗಳು ಹಾಗೂ ಅಪ್ರಾಪ್ತರನ್ನು ಬಳಸಿಕೊಳ್ಳಲಾಗುತ್ತಿರುವ ಅಂಶ ಬೆಳಕಿಗೆ ಬಂದಿದೆ. ಯಾರು ಬಡ್ಡಿ ಕೊಡುತ್ತಾರೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಶಶಿಕುಮಾರ್‌ ಅವರು ತಿಳಿಸಿದರು.
eesanje/url_46_40_2.txt ADDED
@@ -0,0 +1,7 @@
 
 
 
 
 
 
 
 
1
+ ವೈದ್ಯರ ರಕ್ಷಣೆ ಮಸೂದೆಗೆ ಗವರ್ನರ್ ಅಂಕಿತ
2
+ ಬೆಂಗಳೂರು,ಆ.20- ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿ ಮಾಡಲು ಮುಂದಾಗಿರುವ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ವಿಧೇಯಕ – 2024ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ಕಾಯ್ದೆ ಜಾರಿ ಸಂಬಂಧಿಸಿ ಇದೀಗ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
3
+ ಮಳೆಗಾಲದ ಅಧಿವೇಶನದಲ್ಲಿ ಜುಲೈ 25ರಂದು ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ವಿಧೇಯಕ – 2024ಕ್ಕೆ ವಿಧಾನ ಪರಿಷತ್‍ನಲ್ಲಿ ಅಂಗೀಕಾರ ಸಿಕ್ಕಿತ್ತು. ಇದೀಗ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ಕಾಯ್ದೆ ಪ್ರಕಾರ ಉದ್ದೇಶ ಪೂರ್ವಕ ವಾಗಿ ವೈದರ ಮೇಲೆ ಹಲ್ಲೇ, ನಿಂದನೆ, ಅವಮಾನಿಸುವುದನ್ನು ನಿಷೇಸಲಾಗಿದೆ. ವೈದ್ಯರ ಮೇಲಿನ ಹಲ್ಲೇಗೆ 3 ವರ್ಷದಿಂದ 7 ವರ್ಷದ ತನಕ ಜೈಲು ಶಿಕ್ಷೆ ಹಾಗೂ 25 ಸಾವಿರದಿಂದ 2 ಲಕ್ಷದವರೆಗೆ ದಂಡ ವಿಸಲು ಅವಕಾಶವಿದೆ. ಇನ್ನು ನಕಲಿ ವೈದ್ಯರ ಮೇಲಿನ ದಂಡ 10 ಸಾವಿರದಿಂದ 1 ಲಕ್ಷದವರೆಗೆ ಏರಿಕೆ ಮಾಡಲಾಗಿದೆ.
4
+ ಇನ್ನು ವೈದ್ಯಕೀಯ ಪರಿಷತ್‍ನ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರನ್ನು ಹೊರತುಪಡಿಸಿ ಇತರೆ ಸದಸ್ಯರು, ನಾಮನಿರ್ದೇಶಿತರ ಅವಧಿಯನ್ನು 5 ವರ್ಷಕ್ಕೆ ನಿಗದಿಪಡಿಸಲಾಗಿದೆ. ಎರಡು ಅವಗೆ ಅಧ್ಯಕ್ಷ ಅಥವಾ ಉಪಾಧ್ಯಕ್ಷರಾಗಿದ್ದವರು ಮತ್ತೆ ಅದೇ ಸ್ಥಾನಕ್ಕೆ ಚುನಾಯಿತರಾಗಲು ಅವಕಾಶವಿರುವುದಿಲ್ಲ. ಪರಿಷತ್‍ಗೆ 3 ವರ್ಷಗಳ ಅವಧಿಗೆ ಒಬ್ಬ ರಿಜಿಸ್ಟ್ರಾರ್ ಮತ್ತು ಉಪ ರಿಜಿಸ್ಟ್ರಾರ್ ನೇಮಕ ಮಾಡಲಾಗುತ್ತದೆ.
5
+ ಈ ಕಾಯ್ದೆ ಪ್ರಕಾರ ವೈದ್ಯರು ವೃತ್ತಿಯಲ್ಲಿ ಕಾರ್ಯ ನಿರ್ವಹಿಸ ಬೇಕಾದರೆ, ವೈದ್ಯಕೀಯ ಪರಿಷತ್ತಿ ನಲ್ಲಿ ಕಡ್ಡಾಯವಾಗಿ ನೋಂದಣಿಯಾಗಿರ ಬೇಕು. ಒಂದು ವೇಳೆ ನೋಂದಣಿ ಯಾಗದೆ ವೃತ್ತಿ ಅಭ್ಯಾಸ ಮಾಡುತ್ತಿದ್ದರೆ, ಅಂತಹವರ ವಿರುದ್ಧ ಪರಿಷತ್ ಕ್ರಮ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪರಿಷತ್ತಿನಲ್ಲಿ ನೋಂದಣಿಯಾಗದವರು ವೈದ್ಯ ವೃತ್ತಿ ನಿರ್ವಹಿಸು ವಂತಿಲ್ಲ. ನಕಲಿ ವೈದ್ಯರ ವಿರುದ್ಧ ಪರಿಷತ್ ಸ್ವಯಂ ಪ್ರೇರಣೆಯಿಂದ ದೂರು ಸಲ್ಲಿಸಬಹುದಾಗಿದೆ.
6
+ ವೈದ್ಯಕೀಯ ಪರಿಷತ್ತಿಗೆ ರಿಜಿಸ್ಟರ್ ಹಾಗೂ ಉಪ ರಿಜಿಸ್ಟರ್‍ಗಳನ್ನು ನೇಮಕ ಮಾಡುವ ವ್ಯವಸ್ಥೆಯಲ್ಲೂ ಬದಲಾವಣೆ ತರಲಾಗಿದೆ. ಪರಿಷತ್ತಿಗೆ ಸಭೆ ನಡೆಸುವ ವೇಳೆ, ಸ್ಥಳ ಹಾಗೂ ಕಾರ್ಯವಿಧಾನಗಳ ಬಗ್ಗೆಯೂ ವಿವರಿಸಲಾಗಿದೆ. ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಉಪಾಧ್ಯಕ್ಷರು, ಒಂದು ವೇಳೆ ಇಬ್ಬರು ಲಭ್ಯವಿಲ್ಲದ ಸಂದರ್ಭದಲ್ಲಿ ಸದಸ್ಯರು ಸಭೆಯ ಅಧ್ಯಕ್ಷತೆ ವಹಿಸಬಹುದು ಎಂದು ತಿಳಿಸಲಾಗಿದೆ. ಪರಿಷತ್ತಿನ ರಿಜಿಸ್ಟ್ರಾರ್ ಅವರು ವೈದ್ಯಕೀಯ ವೃತ್ತಿಗರ ಪಟ್ಟಿಯನ್ನು ಪ್ರತಿದಿನ ಅಕೃತ ಜಾಲತಾಣದಲ್ಲಿ ನಿರ್ವಹಿಸಬೇಕು ಮತ್ತು ರಾಷ್ಟ್ರೀಯ ಆಯೋಗಕ್ಕೆ ತಿಳಿಸಬೇಕು ಎಂದು ಸೂಚಿಸಲಾಗಿದೆ.
7
+ ಇನ್ನು ಮುಂದೆ ವೈದ��ಯಕೀಯ ಸೇವಾ ಸಿಬ್ಬಂದಿ ಯನ್ನು ಸಾಮಾಜಿಕ ಜಾಲತಾಣ ಗಳಲ್ಲಿ, ಆಡಿಯೊ- ವಿಡಿಯೊಗಳಲ್ಲಿ, ಆಸ್ಪತ್ರೆ ಗಳಲ್ಲೇಗಲಿ ಫೋಟೊ, ವಿಡಿಯೋ ತೆಗೆಯುವ ಮೂಲಕ ಅಗೌರವಿಸುವ, ದೌರ್ಜನ್ಯ ಎಸಗುವ ಕೃತ್ಯಗಳನ್ನು ನಡೆಸಿದರೆ ಅಂತಹ ಕೃತ್ಯಗಳೂ ದಂಡನಾರ್ಹವಾಗಲಿವೆ.
eesanje/url_46_40_3.txt ADDED
@@ -0,0 +1,5 @@
 
 
 
 
 
 
1
+ ಬೆಂಗಳೂರಿನಲ್ಲಿ ಆ.22 ರಿಂದ ಭಾರತದ ಬೃಹತ್ ಕೃಷಿ ಮತ್ತು ಆಹಾರ ಉದ್ಯಮ ಮೇಳ
2
+ ಬೆಂಗಳೂರು, ಆ.20 ಮೀಡಿಯಾ ಟುಡೆ ಉಬುಂಟು ಕನ್ನೋರ್ಟಿಯಂ (ಒಕ್ಕೂಟ) ಮತ್ತು ಫ್ಲವರ್ ಕೌನ್ಸಿಲ್ ಆಫ್ ಇಂಡಿಯಾ ಸಹಯೋಗದೊಂದಿಗೆ, ಜಾಗತಿಕವಾಗಿ ಕೃಷಿ ಮತ್ತು ಆಹಾರ ಉದ್ಯಮದಲ್ಲಿ ಮುಂಚೂಣಿಯಲ್ಲಿರುವವರು ಪಾಲ್ಗೊಳ್ಳಲಿರುವ ಬೃಹತ್ ಮೇಳವನ್ನು ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತುವುದರ್ಶನ ಕೇಂದ್ರದಲ್ಲಿ ಆ.22 ಗುರುವಾರ ಆರಂಭಗೊಳ್ಳಲಿದೆ ಎಂದು ಉಬುಂಟು ಕನ್ನೋರ್ಟಿಯಂ (ಒಕ್ಕೂಟ) ಫೌಂಡರ್ ಮತ್ತು ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ತಿಳಿಸಿದರು
3
+ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಇವರು, ದೇಶದ ಅತಿದೊಡ್ಡ ಕೃಷಿ ಮತ್ತು ಆಹಾರ ಉದ್ಯಮ ಮೇಳ ಇದಾಗಿದ್ದು, ಆಗ್ರಿಟೆಕ್ ಇಂಡಿಯಾ 2024 ಮೂರು ದಿನಗಳ ಕಾಲ ನಡೆಯಲಿರುವ ಬೃಹತ್ ಮೇಳವಾಗಿದ್ದು, ಆಗಸ್ಟ್ 22ರಂದು ಉದ್ಘಾಟನೆಗೊಳ್ಳಲಿದೆ. ಈ ಮೇಳಕ, ಮುಖ್ಯಮಂತ್ರಿಗಳು ಸೇರಿದಂತೆ ಸಂಬಂಧಿತ ಸಚಿವರನ್ನು ಕೂಡ ಆಹ್ವಾನಿಸಲಾಗಿದೆ ಎಂದರು
4
+ ಕೃಷಿ ಮತ್ತು ಆಹಾರ ಉದ್ಯಮ ಮೇಳವು 350ಕ್ಕೂ ಹೆಚ್ಚು ಪ್ರದರ್ಶಕರನ್ನು ಒಳಗೊಂಡಿರುತ್ತದೆ ಏರ್ಕಿ, ಚೀನಾ, ಜರ್ಮನಿ, ಥೈಲ್ಯಾಂಡ್, ಸ್ಪೇನ್, ನೆದರ್ಲ್ಯಾಂಡ್, ನೇಪಾಳ, ಶ್ರೀಲಂಕಾ, ಕುವೈತ್, ರಷ್ಮಾ ಶೈವಾನ್, ಫ್ರಾನ್ಸ್, ಇಟಲಿ, ಕೆನಡಾ. ಯುಎಇ ಇಂಡೋನೇಷ್ಯಾ ಬಹನ್, ಸಿಂಗಾಪುರ್ ಇರಾನ್, ಆಸ್ಟ್ರೇಲಿಯಾ ಸೇರಿದಂತೆ 25ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು, ಭೂತಾನ್, ಮಲೇಷಿಯಾ, ವಿಯಟ್ನಾಂ, ಮತ್ತು ನ್ಯೂಜಿಲ್ಯಾಂಡ್-ಉದ್ಯಮ ನಾಯಕರು, ನಾವೀನ್ಯಕಾರರು ಮತ್ತು ತಜ್ಞರು ಈ ಜಾಗತಿಕ ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೂರು ದಿನಗಳ ಕಾಲ ನಡೆಯಲಿರುವ ಈ ಮೇಳವು ವ್ಯವಹಾರಗಳಿಗೆ ಸಂಪರ್ಕ ಸಾಧಿಸಲು ಮತ್ತು ಹೊಸ ಅವಕಾಶಗಳನ್ನು ಅನ್ವೇಷಿಸಲು, ವಲಯದಲ್ಲಿ ಬೆಳವಣಿಗೆ ಮತ್ತು ನಾವೀನ್ಯತೆಗೆ ಅತ್ಯುತ್ತಮ ವೇದಿಕೆಯನ್ನು ಒದಗಿಸಲಿದ್ದು ಮೇಳಕ್ಕೆ, ಅಂದಾಜು 25,000 ವ್ಯಾಪಾರ ಸಂದರ್ಶಕರು ಆಗಮಿಸುವ ನಿರೀಕ್ಷೆಯಿದೆ ಎಂದರು
5
+ ‘ಅಗ್ರಿಟೆಕ್ ಇಂಡಿಯಾ 2024 ಕೃಷಿ ಮತ್ತು ಆಹಾರ ಪ್ರದರ್ಶನ ಮೇಳವು ಇಂಡಿಯಾ ಪುಡೆಕ್ಸ್ ಮತ್ತು ಗ್ರೀನ್ ಟೆಕ್ ಇಂಡಿಯಾ ಸಹಯೋಗದೊಂದಿಗೆ ನಡೆಯಲಿದ್ದು ಕೃಷಿ ಮತ್ತು ಆಹಾರ ಉದ್ಯಮದ ಮೌಲ್ಯವನ್ನು ಪ್ರತಿಬಿಂಬಿಸುತ್ತದೆ. ಈ ಪ್ರದರ್ಶನವು ಆಹಾರ ಉತ್ಪನ್ನಗಳು, ಫೋಜನ್ ಆಹಾರಗಳು, ತಿಂಡಿಗಳು, ಬೇಕರಿ ವಸ್ತುಗಳು: ಅನುಕೂಲಕರ ಆಹಾರಗಳು, ಸಾವಯವ ಉತ್ಪನ್ನಗಳು, ತಾಜಾ ಹಣ್ಣುಗಳು, ಆಹಾರ ಚಿಲ್ಲರೆ ವ್ಯಾಪಾರ ಡೈ ಉತ್ಪನ್ನಗಳು, ಚಹಾ, ಕಾಫಿ ಮತ್ತು ಹಣ್ಣು ಆಧಾರಿತ ಪಾನೀಯಗಳನ್ನು ಒಳಗೊಂಡಂತೆ ವೈವಿಧ್ಯಮಯ ಆಹಾರ ವಲಯದ ವಿಭಾಗಗಳು ಪ್ರದರ್ಶನದಲ್ಲಿ ಇರಲಿವೆ ಎಂದು ಮಾಹಿತಿ ನೀಡಿದರು
eesanje/url_46_40_4.txt ADDED
@@ -0,0 +1,7 @@
 
 
 
 
 
 
 
 
1
+ ರಾಜ್ಯದಲ್ಲಿ ಮಳೆ ಪ್ರಮಾಣ ಇಳಿಕೆ
2
+ ಬೆಂಗಳೂರು,ಆ.20- ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗಿದ್ದು, ಕೆಲವೆಡೆ ವ್ಯಾಪಕ ಪ್ರಮಾಣದ ಮಳೆ ಬಿದ್ದಿದೆ.ತುಮಕೂರು, ರಾಯಚೂರು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗಿದೆ. ರಾಯಚೂರು ಜಿಲ್ಲೆಯ ಗಾಣದಾನದಲ್ಲಿ 181 ಮಿಲಿ ಮೀಟರ್ ಅತ್ಯಧಿಕ ಪ್ರಮಾಣದ ಮಳೆ ಬಿದ್ದಿರುವುದು ದಾಖಲಾಗಿದೆ.
3
+ ರಾಜಧಾನಿ ಬೆಂಗಳೂರಿನ ಯಲಹಂಕದ ಕೊಡಿಗೇಹಳ್ಳಿಯಲ್ಲಿ 30 ಮಿ.ಮೀ. ನಷ್ಟು ಮಳೆಯಾಗಿದೆ. ರಾಜ್ಯದಲ್ಲಿ ಮಳೆ ಪ್ರಮಾಣ ಇಳಿಕೆಯಾಗಿದ್ದು, ಜಲಾಶಯಗಳ ಒಳಹರಿವು ಕೂಡ ಗಣನೀಯವಾಗಿ ಕುಸಿದಿದೆ. ಜಲವಿದ್ಯುತ್ ಉತ್ಪಾದಿಸುವ ಲಿಂಗನಮಕ್ಕಿ, ಸೂಪಾ, ವರಾಹಿ ಜಲಾಶಯಗಳ ವ್ಯಾಪ್ತಿಯಲ್ಲಿ ಒಳಹರಿವು ಕೇವಲ 12 ಸಾವಿರ ಕ್ಯೂಸೆಕ್ಸ್‍ಗೆ ಇಳಿಕೆಯಾಗಿದೆ. ಕಾವೇರಿ ಕೊಳ್ಳದ 4 ಜಲಾಶಯಗಳಲ್ಲಿ 18 ಸಾವಿರ ಕ್ಯೂಸೆಕ್ಸ್‍ಗೆ ಇಳಿಕೆಯಾಗಿದೆ.
4
+ ಕೃಷ್ಣ ಕೊಳ್ಳದ ಜಲಾಶಯಗಳಲ್ಲೂ ಗಣನೀಯವಾಗಿ ಒಳಹರಿವು ಇಳಿಕೆಯಾಗಿದ್ದು, ಒಟ್ಟಾರೆ 68 ಸಾವಿರದಷ್ಟು ಮಾತ್ರ ಒಳಹರಿವಿದೆ. ತುಂಗಭದ್ರಾ ಜಲಾಶಯಕ್ಕೂ ಒಳಹರಿವಿನ ಪ್ರಮಾಣ ಇಳಿಕೆಯಾಗಿದ್ದು, ಇಂದು 31 ಸಾವಿರ ಕ್ಯೂಸೆಕ್ಸ್‍ನಷ್ಟು ಒಳಹರಿವಿದ್ದು, 10 ಸಾವಿರ ಕ್ಯೂಸೆಕ್ಸ್‍ನಷ್ಟು ಹೊರಹರಿಯುವಿಕೆ, 105.79 ಟಿಎಂಸಿ ಸಾಮಥ್ರ್ಯದ ಈ ಜಲಾಶಯದಲ್ಲಿ ಪ್ರಸ್ತುತ 76.91 ಟಿಎಂಸಿ ಅಡಿಯಷ್ಟು ನೀರಿದ್ದು, ಶೇ.73 ರಷ್ಟು ಮಾತ್ರ ಸಂಗ್ರಹವಾಗಿದೆ.
5
+ ಹವಾಮುನ್ಸೂಚನೆ ಪ್ರಕಾರ, ನಾಳೆಯಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಆದರೂ ಚದುರಿದಂತೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದು ಸಾಧಾರಣ ಮಳೆಯಾಗಲಿದ್ದು, ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಪ್ರಮಾಣದ ವ್ಯಾಪಕ ಮಳೆಯಾಗಲಿದೆ. ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.
6
+ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಆ.24 ರವರೆಗೂ ಸಾಧಾರಣ ಮಳೆ ಮುಂದುವರೆಯಲಿದ್ದು, ಆನಂತರ ಮಳೆಯ ತೀವ್ರತೆ ಕಡಿಮೆಯಾಗುವ ಮುನ್ಸೂಚನೆಗಳಿವೆ. ಜುಲೈನಲ್ಲಿ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ಭಾರಿ ಮಳೆಯಾಗಿ ಅತಿವೃಷ್ಟಿ ಪ್ರವಾಹ ಉಂಟಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು.
7
+ ಆಗಸ್ಟ್‍ನಲ್ಲಿ ಮಳೆ ಪ್ರಮಾಣ ದಿನದಿಂದ ದಿನಕ್ಕೆ ಇಳಿಕೆಯಾಗಿದ್ದು, ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ವಾಡಿಕೆ ಪ್ರಮಾಣದ ಮಳೆಯಾಗಿದ್ದರೂ ಕೆಲವೆಡೆ ಮಳೆ ಕೊರತೆ ಉಂಟಾಗಿದೆ. ಜುಲೈನಲ್ಲಿ ಬಿದ್ದಂತೆ ಆಗಸ್ಟ್‍ನಲ್ಲಿ ರಾಜ್ಯದೆಲ್ಲೆಡೆ ವ್ಯಾಪಕ ಪ್ರಮಾಣದ ಮಳೆಯಾಗಿಲ್ಲ. ಒಂದೆಡೆ ಹೆಚ್ಚು ಮಳೆಯಾಗಿದ್ದರೆ, ಮತ್ತೊಂದೆಡೆ ಮಳೆಯ ಅಭಾವವಿರುವುದು ಕಂಡುಬಂದಿದೆ.
eesanje/url_46_40_5.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಎಚ್‍ಡಿಕೆ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ರಾಜ್ಯಪಾಲರಿಗೆ ಎಸ್‍ಐಟಿ ಮನವಿ
2
+ ಬೆಂಗಳೂರು,ಆ.20- ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದ ಆರೋಪಗಳ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವ ಬೆನ್ನಲ್ಲೇ ಇದೀಗ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ದೊಡ್ಡ ಗಂಡಾಂತರ ಎದುರಾಗಿದೆ.
3
+ ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಕಾನೂನು ಬಾಹಿರವಾಗಿ ಸಾಯಿ ವೆಂಕಟೇಶ್ವರ ಮಿನರಲ್ಸ್ ಎಂಬ ಅಸ್ತಿತ್ವದಲ್ಲೇ ಇಲ್ಲದ ಕಂಪನಿಗೆ ಗಣಿಗಾರಿಕೆ ನಡೆಸಲು ನಿಯಮ ಮೀರಿ ಜಮೀನು ನೀಡಿದ್ದರ ಆರೋಪ ಎದುರಿಸುತ್ತಿದ್ದಾರೆ. ಇದೀಗ ತನಿಖೆಯನ್ನು ಪೂರ್ಣಗೊಳಿಸಿರುವ ಲೋಕಾಯುಕ್ತ ವಿಶೇಷ ತನಿಖಾ ತಂಡ(ಎಸ್‍ಐಟಿ) ಕುಮಾರಸ್ವಾಮಿ ವಿರುದ್ದ ದೋಷಾರೋಪ ಪಟ್ಟಿ(ಚಾರ್ಜ್‍ಶೀಟ್) ಸಲ್ಲಿಸಲು ರಾಜ್ಯಪಾಲರಿಗೆ ಪ್ರಸ್ತಾವನೆ ಸಲ್ಲಿಸಿದೆ.
4
+ ಈ ಹಿಂದೆ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ರಾಜ್ಯಪಾಲರಿಗೆ ಕೋರಿದ್ದ ಪ್ರಸ್ತಾವನೆಗೆ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅನುಮತಿ ನೀಡಿಲ್ಲ ಎಂಬ ಆರೋಪ ಎದುರಾಗಿತ್ತು. ಇದೀಗ ಎಸ್‍ಐಟಿ ಎಚ್‍ಡಿಕೆ ವಿರುದ್ದ ಚಾಜ್‍ಶೀಟ್ ಸಲ್ಲಿಸಲು ರಾಜ್ಯಪಾಲರ ಸಮ್ಮತಿ ಕೋರಿ ದಾಖಲೆಗಳ ಸಮೇತ ಪತ್ರ ಬರೆದಿರುವುದು ಹೊಸ ಬೆಳವಣಿಗೆಯಾಗಿದೆ.
5
+ ಏನಿದು ಪ್ರಕರಣ?:ಎಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ, 1988ರಡಿ ಕಾನೂನು ಕ್ರಮಕ್ಕಾಗಿ, ಕರ್ನಾಟಕ ಲೋಕಾಯುಕ್ತದ ವಿಶೇಷ ತನಿಖಾ ತಂಡದ (ಎಸ್‍ಐಟಿ) ಎಡಿಜಿಪಿ ಚಂದ್ರಶೇಖರ್ ಖುದ್ದಾಗಿ ಪತ್ರವನ್ನು ರಾಜ್ಯಪಾಲರಿಗೆ ಬರೆದು ಅನುಮತಿ ನೀಡಲು ಕೋರಿದ್ದಾರೆ. ಕಳೆದ 2023, ನವೆಂಬರ್ 21ರಂದು ಅನುಮತಿ ಕೇಳಿತ್ತು. ಆದರೆ ರಾಜ್ಯಪಾಲರಿಂದ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಅಕ್ರಮ ಗಣಿಕಾರಿಗೆ ಸಂಬಂ„ಸಿದ ಘಟನೆ ಇದಾಗಿದ್ದು, ಕುಮಾರಸ್ವಾಮಿಯವರು ಈಗ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಎನ್‍ಡಿಎ ಸರಕಾರದಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿದ್ದಾರೆ.
6
+ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಎಂಬ ಅಸ್ತಿತ್ವದಲ್ಲಿಲ್ಲದ ಸಂಸ್ಥೆಗೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ 6.10.2007ರಂದು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಭಾವಿಹಳ್ಳಿ, ತಿಮ್ಮಪ್ಪಗುಡಿಯಲ್ಲಿ 550 ಎಕರೆ ಜಾಗವನ್ನು ಗಣಿಗಾರಿಕೆಗೆ ಅಕ್ರಮವಾಗಿ ಗುತ್ತಿಗೆಗೆ ನೀಡಿದ ಆರೋಪವಿದೆ. ಗುತ್ತಿಗೆ ನೀಡುವಾಗ ಮಿನರಲ್ಸ್ ಕನ್ಸಿಷನ್ ನಿಯಮಗಳ, ನಿಯಮ 59(2)ನ್ನು ಉಲ್ಲಂಸಿ ಮಂಜೂರು ಮಾಡಿದ್ದರು.
7
+ ಎಚ್.ಡಿ.ಕುಮಾರಸ್ವಾಮಿ ಅವರು ಎಂಸಿಆರ್ ನಿಯಮಾವಳಿಗಳನ್ನು ಉಲ್ಲಂಸಿ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅ„ಕಾರಿಗಳ ಜೊತೆಗೂಡಿ, ಸುಳ್ಳ�� ದಾಖಲೆ ಸೃಷ್ಟಿಸಿದ ವಿನೋದ್ ಗೋಯಲ್‍ಗೆ ಸಂಡೂರು ತಾಲ್ಲೂಕಿನ ಎನ್‍ಇಬಿ ರೇಂಜ್‍ನಲ್ಲಿನ 550 ಎಕರೆ ಭೂಮಿ ಮಂಜೂರು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
8
+ ಈ ಪ್ರಕರಣದಲ್ಲಿ ಎಸ್‍ಐಟಿ ಅ„ಕಾರಿಗಳು ವಿನೋದ್ ಗೋಯಲ್ ಅವರನ್ನು ಪ್ರಥಮ ಆರೋಪಿಯನ್ನಾಗಿ ಮಾಡಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರನ್ನು ಎರಡನೇ ಆರೋಪಿಯಾಗಿಸಿದ್ದಾರೆ. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಕಾರ್ಯ ದರ್ಶಿ ಕೆ.ಜಯಚಂದ್ರ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಬಿ.ಟಿ.ಜವರೇಗೌಡ ಮೂರು ಮತ್ತು ನಾಲ್ಕನೇ ಆರೋಪಿಗಳನ್ನಾಗಿ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
9
+ ಈ ಅಕ್ರಮದ ಕುರಿತಾಗಿ ದಾಖಲಾಗಿ ಲೋಕಾಯುಕ್ತದ ಎಸ್‍ಐಟಿಯು ತನಿಖೆ ಕೈಗೆತ್ತಿಕೊಂಡಿತ್ತು. ತನಿಖೆ ನಂತರ ಕುಮಾರಸ್ವಾಮಿ ತಪ್ಪೆಸಗಿದ್ದಾರೆ ಎಂದು ಲೋಕಾಯುಕ್ತಕ್ಕೆ ಮನವರಿಕೆಯಾಗಿ ಚಾರ್ಜ್‍ಶೀಟ್ ಹಾಕಲಾಗಿದೆ. ನಂತರ ಲೋಕಾಯುಕ್ತ ಎಡಿಜಿಪಿಯವರು ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್‍ಗೆ ಅನುಮತಿ ಕೇಳಿದ್ದಾರೆ ಎನ್ನಲಾಗಿದೆ.
10
+ ಕುಮಾರಸ್ವಾಮಿ ಅವರನ್ನು ಪ್ರಾಸಿಕ್ಯೂಷನ್‍ಗೆ ಒಳಪಡಿಸಲು ಲೋಕಾಯುಕ್ತ ಅನುಮತಿ ಕೋರಿರುವ ಪ್ರಕರಣದಲ್ಲಿ ಲಾಭ ಪಡೆದಿದ್ದ ಕಂಪೆನಿಯೇ ಬೋಗಸ್ ಆಗಿತ್ತು ಎಂಬುದನ್ನು ಎಸ್‍ಐಟಿ ಪತ್ತೆ ಹಚ್ಚಿದೆ. ಎಚ್.ಡಿ ಕುಮಾರಸ್ವಾಮಿಯವರು ಅಕ್ರಮವಾಗಿ ಸಹಾಯ ಮಾಡಿದ್ದಾರೆ ಎಂಬ ಆರೋಪ ಬಂದಿರುವುದು ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಲಿಮಿಟೆಡ್ ಎಂಬ ಕಂಪೆನಿ. ಅದರ ಮಾಲೀಕ ಎಂದು ಹೇಳಿಕೊಂಡು ಸೋಮನಾಥ್.ವಿ ಸಕರೆ ಎಂಬ ವ್ಯಕ್ತಿ 2004ರ ಏ.17ರಂದು ಗಣಿ ಇಲಾಖೆಗೆ ಅರ್ಜಿ ಸಲ್ಲಿಸುತ್ತಾರೆ. ತಮ್ಮ ಕಂಪನಿ ಗಣಿಗಾರಿಕೆ ಮತ್ತು ಉಕ್ಕು ಉತ್ಪಾದನೆಯಲ್ಲಿ ತೊಡಗಿರುವುದಾಗಿಯೂ ಅವರಿಗೆ ಸಂಡೂರು ತಾಲೂಕಿನ ಸದರಿ ಪ್ರದೇಶದಲ್ಲಿ 550 ಎಕರೆ ಭೂಮಿಯನ್ನು ಗಣಿಗಾರಿಕೆಗಾಗಿ ಮಂಜೂರು ಮಾಡಬೇಕೆಂದು ಅರ್ಜಿ ಸಲ್ಲಿಸಿದ್ದರು.
11
+ ಗಣಿಗಾರಿಕೆ ಹಗರಣದ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ತನ್ನ ವರದಿಯಲ್ಲಿ ಈ ಅಂಶಗಳನ್ನು ವಿವರವಾಗಿ ಉಲ್ಲೇಖಿಸಿದೆ. ತನಿಖಾ„ಕಾರಿ ಡಾ. ಯು.ವಿ.ಸಿಂಗ್ ಎದುರು ಈ ಬೋಗಸ್ ಕಂಪನಿಯ ಮಾಲೀಕ ತಾನು ಗಣಿಗಾರಿಕೆ ಮತ್ತು ಉಕ್ಕು ಕೈಗಾರಿಕೆಯಲ್ಲಿರುವ ಉದ್ಯಮಿ ಅಲ್ಲವೆಂದೂ ಮಹಾರಾಷ್ಟ್ರದಲ್ಲಿ ಗುತ್ತಿಗೆದಾರನೆಂದೂ ತಪ್ಪೋಪ್ಪಿಕೊಂಡಿದ್ದ.
12
+ ಅನುಮತಿ ಏಕೆ ಅಗತ್ಯ?:ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ಕ್ಕೆ 2018ರಲ್ಲಿ ತಿದ್ದುಪಡಿ ತರಲಾಗಿದೆ. ಅಲ್ಲಿಯವರೆಗೂ, ಹುದ್ದೆಯಿಂದ ನಿರ್ಗಮಿಸಿದ ಚುನಾಯಿತ ಪ್ರತಿನಿ„ಗಳು ಅಥವಾ ನಿವೃತ್ತ ಅ„ಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಆರೋಪಪಟ್ಟಿ ಸಲ್ಲಿಸಲು ಪೂರ್ವಾನುಮತಿ ಅಗತ್ಯವಿರಲಿಲ್ಲ. 2018ರ ತಿದ್ದುಪಡಿಯ ಪ್ರಕಾರ, ಅಪರಾಧ ಹಿಂದೆಯೇ ನಡೆದಿದ್ದರೂ ತಿದ್ದುಪಡಿಯ ಬಳಿಕ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಸಕ್ಷಮ ಪ್ರಾಧಿಕಾರದ ಅನುಮತಿ ಅಗತ್ಯ. ಈ ಕಾರಣಕ್ಕಾಗಿಯೇ ರಾಜ್ಯಪಾಲರಿಗೆ ಪ್ರಸ್ತಾವ ಸಲ್ಲಿಸಲಾಗಿದೆ.
eesanje/url_46_40_6.txt ADDED
@@ -0,0 +1,6 @@
 
 
 
 
 
 
 
1
+ ಸಾರ್ವಜನಿಕರ ನಿದ್ದೆಗೆಡಿಸಿದ್ದ ಚಿರತೆ ಸೆರೆ ಹಿಡಿದ ಅರಣ್ಯಾಧಿಕಾರಿಗಳು
2
+ ಬೆಂಗಳೂರು,ಆ.20- ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ಸುತ್ತಮುತ್ತ ಕಳೆದ ಹಲವು ತಿಂಗಳಿನಿಂದ ಸಾರ್ವಜನಿಕರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆಬಿದ್ದಿದೆ. ಕಳೆದ ರಾತ್ರಿ ಅರಕೆರೆ ಗ್ರಾಮ ಸಮೀಪದ ಜಮೀನಿನಲ್ಲಿ ಅಡಗಿ ಕುಳಿತಿದ್ದ ಚಿರತೆಯನ್ನು ಅರಣ್ಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬೋನ್‍ಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
3
+ ಡಿ.ಎಚ್.ಮಂಜುನಾಥ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಚಿರತೆ ಎರಡು ದಿನಗಳ ಹಿಂದೆ ದಾಳಿ ನಡೆಸಿ ಹಸುವನ್ನು ತಿಂದುಹಾಕಿತ್ತು. ಇದರಿಂದ ಈ ಭಾಗದ ರೈತರು ಹಗಲಿನಲ್ಲೇ ಜಮೀನುಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದರು. ಹಸುವನ್ನು ಕೊಂದಿದ್ದ ಚಿರತೆ ಪುನಃ ಸೋಮವಾರ ರಾತ್ರಿ ಅದೇ ಜಮೀನಿಗೆ ಆಗಮಿಸಿತ್ತು. ಇದರ ಸುಳಿವು ಅರಿತ ಅರಣ್ಯಾ„ಕಾರಿಗಳ ನುರಿತ ತಂಡ ಅದೇ ಜಾಗದಲ್ಲಿ ಬೋನ್ ಇರಿಸಿದ್ದರು.
4
+ ಹಸುವನ್ನು ಹುಡುಕಿಕೊಂಡು ಬಂದ ಚಿರತೆ ಕೊನೆಗೂ ಬೋನ್‍ಗೆ ಸಿಲುಕಿದ್ದು, ಅರಣ್ಯಾಧಿಕಾರಿಗಳ ಕಾರ್ಯಾಚರಣೆ ಯಶಸ್ವಿಯಾಗಿದೆ.ಅರಕೆರೆ, ನರಸಗೊಂಡನಹಳ್ಳಿ, ಎ.ಕೆ.ಕಾಲೋನಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆ, ಕರಡಿ, ಹಂದಿಗಳ ಕಾಟದಿಂದ ರೈತರು ಬೇಸತ್ತು ಹೋಗಿದ್ದರು. ಅದರಲ್ಲೂ ಸಂಜೆ 5 ಗಂಟೆಯ ನಂತರ ಈ ಕಾಡು ಪ್ರಾಣಿಗಳು ಆಹಾರ ಹುಡುಕಿಕೊಂಡು ಗ್ರಾಮಗಳಿಗೆ ಆಗಮಿಸುತ್ತಿದುದು ಜನರಲ್ಲಿ ಆತಂಕ ಹುಟ್ಟಿಸಿತ್ತು.
5
+ ಜಾನುವಾರುಗಳ ಮೇಲೆ ದಾಳಿ, ನಾಯಿಗಳನ್ನು ಹೊತ್ತುಕೊಂಡು ಹೋದರೆ, ಹಂದಿಗಳು ಬೆಳೆದು ನಿಂತ ಫಸಲಿಗೆ ಹಾನಿ ಮಾಡುತ್ತಿದ್ದವು. ಬಾಳೆ, ಮೆಕ್ಕೆಜೋಳ, ರಾಗಿ ಸೇರಿದಂತೆ ಮತ್ತಿತರ ಬೆಳೆಗಳನ್ನು ಹಾಳು ಮಾಡುತ್ತಿದ್ದವು.
6
+ ಇದರಿಂದ ಕಾಡುಪ್ರಾಣಿಗಳನ್ನು ಸೆರೆ ಹಿಡಿಯಬೇಕೆಂದು ಅನೇಕ ಬಾರಿ ರೈತರು ಪ್ರತಿಭಟನೆ ನಡೆಸಿ ಅರಣ್ಯಾ„ಕಾರಿಗಳಿಗೆ ದೂರುಗಳನ್ನು ಕೊಟ್ಟಿದ್ದರು. ಚಿರತೆ ಹಾವಳಿ ಹೆಚ್ಚಾದ ಹಿನ್ನಲೆಯಲ್ಲಿ ಅರಣ್ಯಾ„ಕಾರಿಗಳ ತಜ್ಞರ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಹಿಡಿದಿರುವುದು ಸಾರ್ವಜನಿಕರಲ್ಲಿ ನೆಮ್ಮದಿಯ ನಿಟ್ಟುಸಿರು ತಂದಿದೆ. ಸೆರೆ ಹಿಡಿದಿರುವ ಚಿರತೆಯನ್ನು ಅರಣ್ಯಾ„ಕಾರಿಗಳು ದೂರದ ಅರಣ್ಯ ಪ್ರದೇಶಕ್ಕೆ ಬಿಡಲು ತೀರ್ಮಾನಿಸಿದ್ದಾರೆ.
eesanje/url_46_40_7.txt ADDED
@@ -0,0 +1,5 @@
 
 
 
 
 
 
1
+ ನಕಲಿ ಪೊಲೀಸರ ಕೈಚಳಕ, ಮಹಿಳೆಯ ಮಾಂಗಲ್ಯ ಸರ ಅಪಹರಣ
2
+ ಗೌರಿಬಿದನೂರು, ಆ. 20- ಆಟೋಗಾಗಿ ಕಾಯುತ್ತಿದ್ದ ಮಹಿಳೆಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಪೊಲೀಸರು ಎಂದು ಜಾಗೃತಿ ನೀಡುವ ನೆಪದಲ್ಲಿ ಮಹಿಳೆಯ ಮಾಂಗಲ್ಯ ಸರವನ್ನು ಅಪಹರಿಸಿರುವ ಘಟನೆ ನಗರದ ಸಮೀಪದ ಕಲ್ಲೂಡಿ ಗ್ರಾಮದ ಕ್ರಾಸ್ ಬಳಿ ಜರುಗಿದೆ.ನಂಜಮ್ಮ ಕಲ್ಲೂಡಿ ಗ್ರಾಮದ ವಾಸಿ ಮಾಂಗಲ್ಯ ಸರವನ್ನು ನಕಲಿ ಪೊಲೀಸರಿಂದ ವಂಚಿತಳಾದ ಮಹಿಳೆ.
3
+ ಕಲ್ಲೂಡಿ ಗ್ರಾಮದ ವಾಸಿ ನಂಜಮ್ಮ ನಿನ್ನೆ ಕಲ್ಲೂಡಿಯ ಕಲೆಂತ್ರೇಶ್ವರ ದೇವಾಲಯಕ್ಕೆ ತೆರಳಲು ಆಟೋಗಾಗಿ ಕಲ್ಲೂಡಿ ಕ್ರಾಸ್ ಬಳಿ ಕಾದು ನಿಂತಿದ್ದ ಸಂದರ್ಭದಲ್ಲಿ ಹಿಂದೂಪುರ ರಸ್ತೆಯ ಕಡೆಯಿಂದ ಬೈಕ್‍ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಆಟೋಗಾಗಿ ಕಾಯುತ್ತಿದ್ದ ನಂಜಮ್ಮನ ಬಳಿ ಬೈಕ್ ನಿಲ್ಲಿಸಿ ನಾವು ಪೊಲೀಸರು ನೀವು ಈ ರೀತಿ ಮಾಂಗಲ್ಯ ಸರವನ್ನು ಹೊರಗಡೆ ಹಾಕಿಕೊಳ್ಳಬಾರದು, ಇತ್ತೀಚಿನ ದಿನಗಳಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ ಎಂದು ಹೇಳಿ ಚೈನ್ ನಿಮ್ಮ ಸೆರಗಿನಲ್ಲಿ ಕಟ್ಟಿಕೊಳ್ಳುವಂತೆ ತಿಳಿಸಿದ್ದಾರೆ.
4
+ ಅದರಂತೆ ನಂಜಮ್ಮ ತನ್ನ ಮಾಂಗಲ್ಯ ಸರವನ್ನು ಸೆರಗಿನಲ್ಲಿ ಕಟ್ಟಿಕೊಳ್ಳವ ಸಮಯದಲ್ಲಿ ಆಕೆ ಗಮನ ಬೇರೆಡೆಗೆ ಸೆಳೆದು ಸೆರಗಿನಲ್ಲಿದ್ದ ಸರವನ್ನು ತೆಗೆದುಕೊಂಡು ಕಲ್ಲುಗಳನ್ನು ಇಟ್ಟಿದ್ದಾರೆ, ನಂಜಮ್ಮ ಸೆರಗಿನಲ್ಲಿ ಕಲ್ಲುಗಳನ್ನು ಕಟ್ಟಿಕೊಂಡು ಆಟೋ ಹತ್ತಿ ದೇವಾಲಯದ ಕಡೆಗೆ ಹೊರಟಿದ್ದ ಸಂದರ್ಭದಲ್ಲಿ ಸೆರಗು ಬಿಚ್ಚಿ ನೋಡಿದಾಗ ಸೆರಗಿನಲ್ಲಿ ಕಲ್ಲುಗಳು ಇರುವುದನ್ನು ಕಂಡು ನನ್ನ ಸರ ಕಳ್ಳತನವಾಗಿದ ಎಂದು ಚೀರಿಕೊಂಡಳು. ಆದರೆ ಅಷ್ಟೊತ್ತಿಗೆ ಕಳ್ಳರು ಚೈನು ಕಸಿದುಕೊಂಡು ಪರಾರಿಯಾಗಿದ್ದಾರೆ.
5
+ ಸುದ್ದಿ ತಿಳಿಯುತ್ತಿದ್ದಂತೆಯೇ ನಗರ ಠಾಣೆಯ ಎಸ್‍ಐ ಚಂದ್ರಕಲ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನಂಜಮ್ಮನ ಬಳಿ ಹೇಳಿಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಒಟ್ಟಾರೆ ಗೌರಿಬಿದನೂರು ನಗರದಲ್ಲಿ ದಿನೇ ದಿನೇ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ, ಪೊಲೀಸರು ಧ್ವನಿವರ್ಧಕಗಳ ಮೂಲಕ ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಸಾರ್ವಜನಿಕರು ಇಂತಹ ವಂಚನೆಗಳಿಗೆ ಒಳಗಾಗುತ್ತಿರುವುದರಿಂದ ಪ್ರಕರಣಗಳು ಮರುಕಳಿಸುತ್ತಿವೆ.
eesanje/url_46_40_8.txt ADDED
@@ -0,0 +1,21 @@
 
 
 
 
 
 
 
 
 
 
 
 
 
 
 
 
 
 
 
 
 
 
1
+ ಕೆಎಸ್‌‍ಐಸಿ ಮಳಿಗೆಯಲ್ಲಿ ಮುಗಿಬಿದ್ದು ಮೈಸೂರು ಸಿಲ್ಕ್ ಸೀರೆ ಖರೀದಿಸಿದ ಮಹಿಳೆಯರು
2
+ ಬೆಂಗಳೂರು, ಆ.19-ಮೈಸೂರು ಸಿಲ್ಕ್ ಸೀರೆಗಳು ಎಂದರೆ ಮಹಿಳೆಯರಿಗೆ ಅಚ್ಚು ಮೆಚ್ಚು. ಪ್ರತಿಶನಿವಾರ ಕೆಎಸ್‌‍ಐಸಿ ಮಾರಾಟ ಮಳಿಗೆಗಳನ್ನು ತೆರೆಯುವ ಮುನ್ನವೇ ನೂರಾರು ಮಂದಿ ಕಾದು ಕುಳಿತಿದ್ದು, ಅಂಗಡಿ ತೆರೆಯುತ್ತಿದ್ದಂತೆ ಕೆಲವೇ ಗಂಟೆಗಳಲ್ಲಿ ಸೀರೆಗಳನ್ನು ಪೈಪೋಟಿಗೆ ಬಿದ್ದು ಖರೀದಿ ಮಾಡುತ್ತಿದ್ದಾರೆ. ಗ್ರಾಹಕರ ಬೇಡಿಕೆಯನ್ನು ಈಡೇರಿಸಲಾಗದೆ ಕೆಎಸ್‌‍ಐಸಿ ದಿನನಿತ್ಯ ಪರದಾಡುತ್ತಿದೆ.
3
+ ವಿಶ್ವವಿಖ್ಯಾತ ಮೈಸೂರು ಸಿಲ್‌್ಕ ಸೀರೆಗೆ ಇನ್ನಿಲ್ಲದ ಬೇಡಿಕೆ ಇದೆ. ಮಾರ್ಡನ್‌ ಸ್ಟೈಲ್‌ ಉಡುಪುಗಳನ್ನು ಧರಿಸುವವರು ಕೂಡ ಕೆಎಸ್‌‍ಐಸಿ ಬ್ರಾಂಡ್‌ ನ ಸೀರೆಗಳನ್ನು ಉಡಲು ಖುಷಿ ಪಡುತ್ತಾರೆ. ಇವು ಗುಂಪಿನಲ್ಲೂ ಭಿನ್ನ ಆಕರ್ಷಣೆಯನ್ನು ತಂದುಕೊಡುತ್ತವೆ. ಸತತವಾಗಿ ಏಳನೇ ಬಾರಿ ಬಜೆಟ್‌ ಮಂಡಿಸಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಂ ಅಂದು ಮೈಸೂರು ಸಿಲ್‌್ಕ ಸೀರೆ ಧರಿಸಿದ್ದು ಚರ್ಚೆಗೆ ಗ್ರಾಸವಾಗಿತ್ತು.
4
+ ಸ್ವಾತಂತ್ರ್ಯ ಪೂರ್ವದ 1912ರಲ್ಲಿ ಆಗಿನ ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್‌ ಮೈಸೂರು ಸಿಲ್‌್ಕ ಉದ್ಯಮವನ್ನು ಆರಂಭಿಸಿದರು. ಮೈಸೂರು ಮಹಾರಾಜರು ಸ್ಥಾಪಿಸಿದ ಕರ್ನಾಟಕ ಸೋಪ್‌್ಸ ಅಂಡ್‌ ಡಿಟರ್ಜಂಟ್‌ (ಕೆಎಸ್‌‍ಡಿಸಿಎಲ್‌) ಸೇರಿ ಅನೇಕ ಉದ್ಯಮಗಳು ಈಗಲೂ ಲಾಭದಾಯಕವಾಗಿ ನಡೆಯುತ್ತಿರುವುದಲ್ಲದೆ ಜಾಗತಿಕ ಮನ್ನಣೆ ಪಡೆದಿವೆ. ಮೈಸೂರು ಸಿಲ್‌್ಕಗೆ ದೇಶಿಯವಾಗಿ ಅಷ್ಟೆ ಅಲ್ಲ  ಅಮೇರಿಕಾ, ಆಸ್ಟ್ರೇಲಿಯದಂತಹ ದೇಶಗಳಿಂದಲೂ ಆನ್‌ಲೈನ್‌ನಲ್ಲಿ ಬೇಡಿಕೆ ಸಲ್ಲಿಕೆಯಾಗುತ್ತಿದೆ.
5
+ ಕರ್ನಾಟಕ ರೇಷೆ ಉದ್ಯಮಗಳ ನಿಗಮ ನಿಯಮಿತ ಬೆಂಗಳೂರಿನ ಎಂ.ಜಿ.ರಸ್ತೆಯ ಜುಬಿಲಿ ಶೋರೂಂ, ಬಸವೇಶ್ವರ ನಗರ, ಜಯನಗರ, ಕೆ.ಜಿ.ರಸ್ತೆ, ಗಾಂಧಿ ಬಜಾರ್‌, ಡಿ.ವಿ.ಜಿ.ರಸ್ತೆ, ಮಲ್ಲೇಶ್ವರಂ, ಮೈಸೂರಿನ ಯಾತ್ರಿ ನಿವಾಸ್‌‍, ಕೆ.ಆರ್‌.ವೃತ್ತ, ಮೃಗಾಲಯದ ಪಕ್ಕ, ಫ್ಯಾಕ್ಟರಿ ಶೋರೂಂ, ಚೆನ್ನಪಟ್ಟಣ, ದಾವಣಗೆರೆ, ಚೆನೈ, ಹೈದರಾಬಾದ್‌ ಸೇರಿ 17 ಮಾರಾಟ ಮಳಿಗೆಗಳನ್ನು ಹೊಂದಿದೆ. ಕಾಲ ಕಾಲಕ್ಕೆ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ತಾತ್ಕಾಲಿಕ ಪ್ರದರ್ಶನ ಹಾಗೂ ಮಾರಾಟ ಮೇಳಗಳನ್ನು ಆಯೋಜನೆ ಮಾಡುತ್ತಿದೆ. ಆನ್‌ಲೈನ್‌ ಖರೀದಿಗೂ ಅವಕಾಶ ಕಲ್ಪಿಸಿದೆ. ಪಾರಂಪರಿಕ ಮೈಸೂರು ಸಿಲ್‌್ಕಗೆ ಸದಾ ಕಾಲ ಬೇಡಿಕೆ ಇದ್ದೇ ಇದೆ.
6
+ 1962ರಲ್ಲಿ ನಮ ಅಜ್ಜಿ ಸೀರೆ ಖರೀದಿ ಮಾಡಿದ್ದರು ಅದನ್ನೂ ಈಗಲೂ ಇಟ್ಟಿದ್ದೇವೆ. ನಾನು ಖರೀದಿ ಮಾಡುತ್ತಿದ್ದೇನೆ, ನನ್ನ ಮಗಳು ಸಾಫ್ಟವೇರ್‌ ಇಂಜಿನಿಯರ್‌ ಆಕೆಯೂ ಕೆಎಸ್‌‍ಐಸಿಯ ಮೈಸೂರು ಸಿಲ್‌್ಕ ಸೀರೆಗಳನ್ನು ಖರೀದಿಸಿ, ಬಳಕೆ ಮಾಡುತ್ತಾರೆ ಎಂದು ಗ್ರಾಹಕ ಮಹಿಳೆಯೊಬ್ಬರು ಹೆಮೆಯಿಂದ ಹೇಳುತ್ತಾರೆ.
7
+ ಮೈಸೂರು ಸಿಲ್‌್ಕನ ನಾವೀನ್ಯತೆ, ಬಣ್ಣಗಳ ಸಂಯೋಜನೆ, ಗುಣಮಟ್ಟದ ಶುದ್ಧ ರೇಷೆ, ಶುದ್ಧ ಚಿನ್ನಲೇ��ಿತ ಜರಿ, ಆಕರ್ಷಕ ವಿನ್ಯಾಸಗಳು ಸೀರೆಯ ಗುಣದರ್ಜೆಯನ್ನು ಉನ್ನತ ಸ್ಥಾನದಲ್ಲಿರಿಸಿವೆ. ಜೊತೆಗೆ ಬೇರೆ ಎಲ್ಲಾ ಸೀರೆಗಳಿಗಿಂತಲೂ ಮೈಸೂರು ಸಿಲ್‌್ಕ ಧರಿಸಲು ಸುಲಭ ಹಾಗೂ ಸರಳವಾಗಿರುತ್ತದೆ. ಹಾಗಾಗಿ ನಮಗೆ ಈ ಸೀರೆಗಳೆಂದರೆ ಪಂಚಪ್ರಾಣ ಎಂದು ಮತ್ತೊಬ್ಬ ಮಹಿಳೆ ಹೇಳುತ್ತಾರೆ.
8
+ ಸೀರೆ ಖರೀದಿಗೆ ನಾಲ್ಕು ತಿಂಗಳಿಂದ ಬರುತ್ತಲೇ ಇದ್ದೇನೆ. ಇದು ಐದನೇ ತಿಂಗಳಿನ ಭೇಟಿ. ಯಾವಾಗ ಬಂದರೂ ಸೀರೆಗಳು ಖಾಲಿಯಾಗಿರುತ್ತವೆ. ನಮಗೆ ಇಷ್ಟವಾದ ಸೀರೆಯನ್ನು ಆಯ್ಕೆ ಮಾಡಿ ಪಕ್ಕಕ್ಕೆ ಇಟ್ಟು ಮತ್ತೊಂದು ಸೀರೆ ನೋಡುವಷ್ಟು ವ್ಯವದಾನ ಇರುವುದಿಲ್ಲ. ಮತ್ತಿನ್ಯಾರೋ ಬಂದು ನಾವು ಆಯ್ಕೆ ಮಾಡಿಟ್ಟಿದ್ದ, ಸೀರೆಯನ್ನು ತಮಗೆ ಬೇಕು ಎಂದು ಎತ್ತಿಕೊಂಡಿರುತ್ತಾರೆ. ಈ ಕಾರಣಕ್ಕೆ ಅಂಗಡಿಯಲ್ಲಿ ಹಲವು ಬಾರಿ ಜಗಳಗಳಾಗಿವೆ ಎಂದು ಸರ್ಕಾರಿ ನೌಕರರಾದ ಮಹಿಳೆಯೊಬ್ಬರು ಹೇಳಿದ್ದಾರೆ. ಸೀರೆಗಳ ಬೇಡಿಕೆಗಳ ಬಗ್ಗೆ ಮಹಿಳೆಯರು ಬಹಳ ಅಸ್ಥೆಯಿಂದ ಮಾತನಾಡುತ್ತಾರೆ.
9
+ ಪ್ರತಿ ಶನಿವಾರ ಹೊಸ ಸೀರೆಗಳು ಬಂದಿರುತ್ತವೆ. ಅಂದು ಬೆಳಗ್ಗೆ ಅಂಗಡಿ ಬಾಗಿಲು ತೆಗೆಯುವ ಮುನ್ನವೇ ನೂರಾರು ಮಂದಿ ಕಾದು ಕುಳಿತಿದ್ದು ಖರೀದಿ ಮಾಡುತ್ತಾರೆ ಎಂದರೆ ಮೈಸೂರು ಸಿಲ್‌್ಕನ ಬೇಡಿಕೆಯನ್ನು ಅಂದಾಜಿಸಬಹುದು. ಜನ ಈ ರೀತಿ ಮುಗಿ ಬಿದ್ದು ಖರೀದಿ ಮಾಡುವ ಅಪರೂಪದ ವಸ್ತುಗಳಲ್ಲಿ , ಕೆಎಸ್‌‍ಐಸಿ ಸಿಲ್‌್ಕ ಸೀರೆಗಳು ಮುಂಚೂಣಿಯಲ್ಲಿವೆ.
10
+ ಚಿನ್ನ, ಬೆಳ್ಳಿ ಬೆಲೆಗಳನ್ನು ಆಧರಿಸಿ ಸೀರೆಗಳ ದರ ನಿಗದಿಯಾಗಲಿದೆ. ಕಳೆದ ಮೇ 25ರಂದು ಕೆಎಸ್‌‍ಐಸಿ ಶೇ.11ರಿಂದ 15ರಷ್ಟು ದರವನ್ನು ಹೆಚ್ಚಿಸಿದೆ. ಅದರ ಹಿಂದಿನ ದಿನ ಏಕಕಾಲಕ್ಕೆ 1.80 ಕೋಟಿ ರೂಪಾಯಿಯಷ್ಟು ದಾಖಲೆಯ ವ್ಯವಹಾರವನ್ನು ಕೆಎಸ್‌‍ಐಸಿ ನಡೆಸಿತ್ತು. ಬೆಲೆ ಹೆಚ್ಚಳದ ಹೊರತಾಗಿಯೂ ಬೇಡಿಕೆ ತಗ್ಗಿಲ್ಲ. ಬದಲಾಗಿ ಗ್ರಾಹಕರ ಸಾಲು ಮತ್ತಷ್ಟು ಉದ್ದವಾಗಿದೆ. ಇತ್ತೀಚೆಗೆ ಮುಗಿದ ವರ ಮಹಾಲಕ್ಷ್ಮಿ ಹಬ್ಬಕ್ಕೆ ಕೆಎಸ್‌‍ಐಸಿ ಸೀರೆ ಸಿಗದೆ ಅದಷ್ಟೋ ಮಹಿಳೆಯರು ಬಿಟ್ಟಿದ್ದಾರೆ. ಹಬ್ಬ ಹರಿದಿನಗಳಲ್ಲಂತೂ ಈ ಸೀರೆಗಳ ಬೇಡಿಕೆ ಎಲ್ಲೆ ಮೀರಿಸುತ್ತದೆ. ಸರ್ಕಾರಿ ಉತ್ಪನ್ನವೊಂದು ಇಷ್ಟು ಬೇಡಿಕೆ ಉಳಿಸಿಕೊಂಡಿದ್ದರೂ ಅದನ್ನೂ ಪೂರೈಸಲು ಮೀನಾಮೇಶ ಎಣಿಸುತ್ತಿರುವುದೇಕೆ ಎಂಬುದು ನಿಗೂಢ ಪ್ರಶ್ನೆಯಾಗಿದೆ.
11
+ ಆರಂಭದಲ್ಲಿ ಮೈಸೂರು ರಾಜಮನೆತನಕ್ಕೆ ರೇಷೆ ಬಟ್ಟೆಗಳನ್ನು ತಯಾರಿಸಿ ಪೂರೈಸುವ ಹಾಗೂ ಸೇನೆಗೆ ಸಮವಸ್ತ್ರವನ್ನು ಸಜ್ಜುಗೊಳಿಸುವ ಸಲುವಾಗಿ 10 ನೇಯ್ಗೆ ಯಂತ್ರಗಳೊಂದಿಗೆ ಆರಂಭಗೊಂಡ ಮೈಸೂರು ಸಿಲ್‌್ಕ ಈಗ 150ಕ್ಕೂ ಹೆಚ್ಚು ಮಗ್ಗಗಳನ್ನು ಹೊಂದಿದೆ. ಭಾರತದಲ್ಲೇ ಮೊದಲ ಬಾರಿಗೆ ಸ್ವಿಜರ್‌ಲ್ಯಾಂಡ್‌ನಿಂದ ಅತ್ಯಾಧುನಿಕ ಮಗ್ಗಗಳು ಹಾಗೂ ಬಟ್ಟೆ ತಯಾರಿಕಾ ಯಂತ್ರಗಳನ್ನು ಆಮದು ಮಾಡಿಕೊಂಡಿದ್ದು ಮೈಸೂರು ಸಿಲ್‌್ಕ ಸಂಸ್ಥೆಯ ಹೆಗ್ಗಳಿಕೆ.
12
+ ಸಂಸ್ಥೆಯ ರೂಪಾಂತರ:
13
+ ಸ್ವಾತಂತ್ರ್ಯದ ನಂತರ ಮೈಸೂರು ರಾಜ್ಯದ ರೇಷೆ ಇಲಾಖೆ ನೇಯ್ಗೆ ಕಾರ್ಖಾನೆಯನ್ನು ತನ್ನ ಅಧೀನಕ್ಕೆ ತೆಗೆದುಕೊಂಡಿತ್ತು. 1980ರಲ್ಲಿ ಕರ್ನಾಟಕ ಕೆಎಸ್‌‍ಐಸಿಗೆ ಹಸ್ತಾಂತರಗೊಂಡಿದೆ. ಹಳೆ ಮೈಸೂರು ಭಾಗದಲ್ಲಿನ ಮೊದಲ ದರ್ಜೆಯ ನೈಸರ್ಗಿಕ ರೇಷೆಯಿಂದ ನೆಯುವುದರಿಂದ ಆಕರ್ಷಕ ಹೊಳಪು ಮೂಡುತ್ತದೆ. ವೇಗವಾದ ತಿರುಚಿವಿಕೆ 26-28 ಡೆನಿಯರ್‌ ಬಳಕೆ ಮಾಡುವುದರಿಂದ ನೈಪುಣ್ಯ ತೆಳುವು ಹಾಗೂ ಹಗುರವಾದ ಸೀರೆ ತಯಾರಾಗುತ್ತದೆ. ಶುದ್ಧ ಚಿನ್ನದ ಜರಿಗಳು ಸೀರೆಯ ಮೌಲ್ಯವನ್ನು ವೃದ್ಧಿಸಿವೆ, ದೀರ್ಘಕಾಲಿಕ ಬಾಳಿಕೆಗೆ ಕಾರಣವಾಗಿವೆ.
14
+ ಕೆಎಸ್‌‍ಐಸಿ ಸೀರೆಗಳು ಜಿಯೋಗ್ರಾಫಿಕಲ್‌ ಐಡೆಂಡಿಫಿಕೆಷನ್‌ ನೋಂದಣಿ (ಜಿಐ-11 ಟ್ಯಾಗ್‌) ಪಡೆದುಕೊಂಡಿವೆ. ಜೊತೆಗೆ ಐಎಸ್‌‍ಒ ಮಾಪಕ, ಟಿಯುವಿ ರೆಹಿನ್‌ಲ್ಯಾಂಡ್‌ ಪ್ರಮಾಣ ಪತ್ರ ಹೊಂದಿವೆ. ಉತ್ತಮ ಮಾರುಕಟ್ಟೆಗಾಗಿ 2016-17ರಲ್ಲಿ ಮುಖ್ಯಮಂತ್ರಿಯವರ ರತ್ನ ಪ್ರಶಸ್ತಿಯನ್ನು ಕೆಎಸ್‌‍ಐಸಿ ಪಡೆದುಕೊಂಡಿದೆ. ಜರಿ ಕ್ರೇಪ್‌ ಸೀರೆ, ಜರಿ ಕ್ರೇಪ್‌ ಮುದ್ರಿತ ಸೀರೆ, ಕ್ರೇಪ್‌ ಪ್ರಿಂಟೆಡ್‌ ಸೀರೆ, ಸಿದ್ಧ ಉಡುಪು ವಸ್ತುಗಳು, ಸ್ಕಾರ್ಫ್‌ ಮತ್ತು ಟೈಗಳನ್ನು ಕೆಎಸ್‌‍ಐಸಿ ಉತ್ಪಾದಿಸುತ್ತದೆ.
15
+ ಸಿಬ್ಬಂದಿ ಕೊರತೆ:
16
+ ಮೈಸೂರಿನ ಹೃದಯ ಭಾಗದ ಮಾನಂದವಾಡಿಯಲ್ಲಿ ನೇಯ್ಗೆ ಕಾರ್ಖಾನೆಯಿದೆ. ಟಿ ನರಸೀಪುರದಲ್ಲಿ ನೂಲು ತೆಗೆಯುವ ಘಟಕ, ಚನ್ನಪಟ್ಟಣದಲ್ಲಿ ಜೂಟು ರೇಷೆ ಗಿರಣಿ ಆವರಣದಲ್ಲಿ ಮತ್ತೊಂದು ನೇಯ್ಗೆ ಘಟಕ ಇದೆ. ರಾಜ್ಯ ಹಾಗೂ ಹೊರ ರಾಜ್ಯಗಳ ಮಾರಾಟ ಕೇಂದ್ರದಲ್ಲಿ 180 ಮಂದಿ, ಮೈಸೂರಿನ ನೇಯ್ಗೆ ಕೇಂದ್ರದಲ್ಲಿ 500, ಟಿ ನರಸೀಪುರದಲ್ಲಿ 200, ಚೆನ್ನಪಟ್ಟಣದಲ್ಲಿ 89 ಮಂದಿ ಕೆಲಸ ಮಾಡುತ್ತಿದ್ದಾರೆ. ನಿಗಮದಲ್ಲಿ ಕೆಲಸ ಮಾಡುವವರ ಪೈಕಿ ಬಹುತೇಕ ಮಂದಿ ಹೊರ ಗುತ್ತಿಗೆ ಆಧಾರದಲ್ಲಿದ್ದಾರೆ. ಸುದೀರ್ಘ ಕಾಲಾವಧಿಯಲ್ಲಿ ಸೇವೆ ಸಲ್ಲಿಸುವ ಅವರು ತಮನ್ನು ಖಾಯಂ ಮಾಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ದಣಿದು ಹೋಗಿದ್ದಾರೆ.
17
+ ವ್ಯಾಪಕ ಬೇಡಿಕೆ ಇದ್ದಾಗಲೂ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸದೆ ಸರ್ಕಾರಿ ಉದ್ಯಮದ ಕತ್ತು ಹಿಚುಕಲಾಗುತ್ತಿದೆ. ಕೆಎಸ್‌‍ಐಸಿ ಪರಣಿತಿ ಪಡೆದ ನೇಕಾರರಿಂದಷ್ಟೆ ಸೀರೆ ಉತ್ಪಾದಿಸುತ್ತದೆ. ಸಿಬ್ಬಂದಿಗಳ ಕೊರತೆಯ ಜೊತೆಗೆ ಪರಿಣಿತಿ ಪಡೆದ ನೇಕಾರರ ಕೊರತೆ ವ್ಯಾಪಕವಾಗಿದೆ. ಹೀಗಾಗಿ ನಿಗಮ ಖರೀದಿಸಿದ ಬಹಳಷ್ಟು ಯಂತ್ರಗಳು ಈಗಲೂ ಬಳಕೆಯಾಗದೆ ದೂಳು ತಿನ್ನುತ್ತಿವೆ. ಮೈಸೂರು ಘಟಕದಲ್ಲಿ 159 ಮಗ್ಗಗಳಲ್ಲಿ 152 ಮಾತ್ರ ಕೆಲಸ ನಿರ್ವಹಿಸುತ್ತಿದ್ದು, ಇನ್ನೂ ಏಳು ಮಗ್ಗಗಳು ನೇಕಾರರಿಲ್ಲದೆ ಬಳಕೆಯೇ ಆಗಿಲ್ಲ. ಕಿನರಸೀಪುರದಲ್ಲಿನ ನೂಲು ತೆಗೆಯುವ ಘಟಕದಲ್ಲಿ 60ರಲ್ಲಿ ಐದು ಯಂತ್ರಗಳು ಉಪಯೋಗಿಸುತ್ತಿಲ್ಲ. ಚನ್ನಪಟ್ಟಣದಲ್ಲಿ 30 ಮಗ್ಗಗಳನ್ನು ಅಳವಡಿಸಲಾಗಿದೆ. 16 ಮಾತ್ರ ಕಾರ್ಯಚರಣೆಯಲ್ಲಿದ್ದು, ಉಳಿದ ಮಗ್ಗಗಳು ತುಕ್ಕು ಹಿಡಿಯುತ್ತಿವೆ.
18
+ ಇಚ್ಚಾಸಕ್ತಿಯ ಕೊರತೆ:
19
+ ರಾಜಕೀಯ ಪುನರ್ವಸತಿ ಕೇಂದ್ರಗಳನ್ನಾಗಿ ಬಳಕೆ ಮಾಡಲಾಗುವ ಅನೇಕ ನಿಗಮ ಮಂಡಳಿಗಳು ನಷ್ಟದಲ್ಲಿವೆ, ಸರ್ಕಾರ ಅನುದಾನ ಕೊಟ್ಟು ಬಿಳಿ ಆನೆಯಂತೆ ಸಾಕುತ್ತಿದೆ. ಆದರೆ ಜನರಿಗೆ ಉಪಯುಕ್ತವಾಗಿರುವ, ಉತ್ಪನ್ನಕ್ಕೆ ವ್ಯಾಪಕ ಬೇಡಿಕೆ ಹೊಂದಿರುವ ಮತ್ತು ಲಾಭದಾಯಕವಾದ ಕೆಎಸ್‌‍ಐಸಿಯಂತಹ ಸಂಸ್ಥೆಯ ಉನ್ನತೀಕರಣಕ್ಕೆ ರಾಜಕೀಯ ಹಿತಾಸಕ್ತಿಯೇ ಇಲ್ಲವಾಗಿದೆ.
20
+ ರೇಷೆ ಇಲಾಖೆ ಎಂದರೆ ಸಂಪುಟದಲ್ಲಿ ಅನುಪಯುಕ್ತ ಖಾತೆ ಎಂಬಂತಾಗಿದೆ. ಸಚಿವರಿಗೆ ಜವಾಬ್ದಾರಿ ವಹಿಸುವಾಗ ಪ್ರಮುಖ ಖಾತೆ ಕೊಟ್ಟು ಜೊತೆಯಲ್ಲಿ ಇದನ್ನು ಉಪಖಾತೆ ಎಂಬಂತೆ ನೀಡಲಾಗುತ್ತದೆ. ಹಾಗಾಗಿ ಯಾವ ಸಚಿವರು ಕೆಎಸ್‌‍ಐಸಿ ಪುನರುತ್ತಾನ ಅಥವಾ ಅಭಿವೃದ್ಧಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಿಗಮದ ಹೆಸರಿನಲ್ಲಿ ಖರೀದಿಯಾಗುವ ವಸ್ತುಗಳು ಹಾಗೂ ವಾಹನಗಳನ್ನು ಸಚಿವಾಲಯದ ಅಧಿಕಾರಿ ಸಿಬ್ಬಂದಿಗಳು ಬಳಕೆ ಮಾಡಿಕೊಂಡು ಮಜಾ ಮಾಡಲಷ್ಟೆ ಈ ನಿಗಮ ಸೀಮಿತವಾಗಿದೆ.
21
+ ನಿಗಮವೇ ದುಡಿಯುವ ಲಾಭಂಶವನ್ನು ಬಳಕೆ ಮಾಡಿ ಸಿಬ್ಬಂದಿಗಳನ್ನು ನೇಮಿಸಿಕೊಳ್ಳುವುದು, ಮತ್ತಷ್ಟು ಉತ್ಪಾದನಾ ಘಟಕಗಳನ್ನು ಸ್ಥಾಪಿಸುವ ಮೂಲಕ ಕೆಎಸ್‌‍ಐಸಿ ಸೀರೆಗಳಿಗೆ ಇರುವ ಬೇಡಿಕೆಯನ್ನು ಪೂರೈಸಲು ವ್ಯಾಪಕ ಅವಕಾಶಗಳಿವೆ. ನಿಗಮಕ್ಕೆ ಐದು ಮಂದಿ ಐಎಎಸ್‌‍ ಅಧಿಕಾರಿಗಳು ಭಾಧ್ಯಸ್ಥರಾಗಿದ್ದಾರೆ. ಸರ್ಕಾರದ ಮಟ್ಟದಲ್ಲಿ ಸಂಸ್ಥೆಯ ಉನ್ನತೀಕರಣಕ್ಕೆ ಈವರೆಗೂ ಗಂಭೀರವಾದ ಚರ್ಚೆ ನಡೆಯದೇ ಇರುವುದು ವಿಪರ್ಯಾಸವೇ ಸರಿ.
eesanje/url_46_40_9.txt ADDED
@@ -0,0 +1,10 @@
 
 
 
 
 
 
 
 
 
 
 
1
+ : ಬೀಸೋ ದೊಣ್ಣೆಯಿಂದ ಪಾರಾದ ಸಿಎಂ ಸಿದ್ದರಾಮಯ್ಯ, ಹೈಕೋರ್ಟ್ ಮಹತ್ವದ ಆದೇಶ
2
+ ಬೆಂಗಳೂರು :ಮೂಡ ಪ್ರಕರಣದಲ್ಲಿ ಕಾನೂನಿನ ಸಂಕೋಲೆಗೆ ಸಿಲುಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೀಸುವ ದೊಣ್ಣೆಯಿಂದ ಪಾರಾಗಿದ್ದಾರೆ. ಹೈಕೋರ್ಟ್ ನಲ್ಲಿ ಇಂದು ನಡೆದ ಸುದೀರ್ಘ ವಿಚಾರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆ.29ರವರೆಗೂ ಯಾವುದೇ ಕ್ರಮಗಳನ್ನು ಕೈಗೊಳ್ಳದಂತೆ ಮಧ್ಯಂತರ ಆದೇಶ ನೀಡಲಾಗಿದೆ.
3
+ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತು ಯಾವುದೇ ಸಂಸ್ಥೆಗಳು ಮುಖ್ಯಮಂತ್ರಿ ವಿರುದ್ಧ ದುರುದ್ದೇಶ ಪೊರಿತ ಕ್ರಮ ಕೈಗೊಳ್ಳಲು ಅವಕಾಶ ಇಲ್ಲ ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಸುಚಿಸಿದ್ದಾರೆ.ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಇದೇ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮೂಡಾ ಪ್ರಕರಣದಲ್ಲಿ ತನಿಖೆ ಮತ್ತು ಅಭಿ ಯೋಜನೆಗೆ ಪೂರ್ವಾನುಮತಿ ನೀಡಿದ್ದರು.
4
+ ಸಿದ್ದರಾಮಯ್ಯ ಅದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿದರು. ಸಿದ್ದರಾಮಯ್ಯ ಅವರ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನುಸಿಂಗ್ವಿ, ರಾಜ್ಯಪಾಲರು ತಮ್ಮ ವಿವೇಚನಾ ಅಧಿಕಾರವನ್ನು ಬಳಕೆ ಮಾಡಿಲ್ಲ ಎಂದು ಆಕ್ಷೇಪಿಸಿದರು.
5
+ ಸಚಿವ ಸಂಪುಟ ಸಭೆ ನೀಡಿದ ಸಲಹೆಯನ್ನು ಪರಿಗಣಿಸಿಲ್ಲ. ಮೂಡಾ ನಿವೇಶನ ಹಂಚಿಕೆ ಸುಮಾರು 20 ವರ್ಷಗಳ ಸುದೀರ್ಘ ಕಾಲಮಾನವಾಗಿದ್ದು ಸಿದ್ದರಾಮಯ್ಯ ಅವರು ಅಧಿಕಾರರೂಢರಾಗಿ ಯಾವುದೇ ಕಡತಗಳಿಗೆ ಸಹಿ ಹಾಕಿಲ್ಲ. ರಾಜ್ಯಪಾಲರು ತೆಗೆದುಕೊಂಡಿರುವ ಕ್ರಮಗಳು ಸೂಕ್ತವಾಗಿಲ್ಲ ಎಂದು ವಾದಿಸಿದರು.
6
+ ರಾಜ್ಯಪಾಲರು ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ ನಂತರ ಪೂರ್ವಾನುಮತಿ ನೀಡಿರುವುದಾಗಿ ಹೇಳಿದ್ದಾರೆ. ಆದರೆ ದೂರು ಕೊಟ್ಟ ದಿನವೇ ಶೋಕಾಸ್ ನೋಟಿಸ್ ನೀಡಲಾಗಿದೆ. ಹಲವು ಪ್ರಕರಣಗಳು ಅಭಿಯೋಜನೆಯ ಪೂರ್ವಾನುಮತಿಗೆ ಬಾಕಿ ಇರುವಾಗ ಸಿದ್ದರಾಮಯ್ಯ ಅವರ ಪ್ರಕರಣವನ್ನು ಮಾತ್ರ ಆಯ್ಕೆ ಮಾಡಿಕೊಂಡಿರುವುದು ಪ್ರಶ್ನಾರ್ಹ ಎಂದರು.
7
+ ಅದಕ್ಕೆ ಪ್ರತಿಯಾಗಿ ರಾಜ್ಯಪಾಲರ ಪರವಾಗಿ ವಾದಿಸಿದ ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಆಕ್ಷೇಪ ವ್ಯಕ್ತಪಡಿಸಿ, ಸಚಿವ ಸಂಪುಟ ಸಭೆಯ ಸಲಹೆಯನ್ನು ಪರಿಗಣಿಸುವ ಅಗತ್ಯ ಇಲ್ಲ ಎಂದು ಪ್ರಕರಣವೊಂದನ್ನು ಉಲ್ಲೇಖಿಸಿದರು. ರಾಜ್ಯಪಾಲರು ಮುಖ್ಯಮಂತ್ರಿಯವರಿಗೆ ಶೋಕಾಸ್ ನೋಟಿಸ್ ನೀಡುವ ಮತ್ತು ತನಿಖೆಗೆ ಪೂರ್ವಾನುಮತಿ ನೀಡುವ ಅಧಿಕಾರ ಹೊಂದಿದ್ದಾರೆ. ರಾಜ್ಯಪಾಲರ ಮುಂದೆ ಅಭಿಯೋಜನೆಗೆ ಪೂರ್ವಾನುಮತಿ ಕೇಳಿರುವ ಯಾವ ಅರ್ಜಿಗಳು ಬಾಕಿ ಉಳಿದಿಲ್ಲ ಎಂದರು.
8
+ ಅಭಿಷೇಕ್ ಮನುಸಿಂಗ್ವಿ, ವಾದ ಮುಂದುವರೆಸಿ ಟಿ ಜೆ ಅಬ್ರಾಹಿಂ ದೂರು ನೀಡಿದ ದಿನವೇ ರಾಜ್ಯಪಾಲರು ಮುಖ್ಯಮಂತ್ರಿಯವರಿಗೆ ಶೋಕಾಶ್ ನೋಟಿಸ್ ನೀಡಿದ್ದಾರೆ. ಪ್ರತಿವಾದಿಗಳಾದ ಪ್ರದೀಪ್ ಕುಮಾರ್ ಮತ್ತು ಸ್ನೇಹಮಯಿ ಷ್ಣ ಅವರ ದೂರುಗಳ ಬಗ್ಗೆ ಮುಖ್ಯಮಂತ್ರಿಯವರಿಗೆ ಮಾಹ���ತಿ ನೀಡಿಲ್ಲ ಎಂದು ಆಕ್ಷೇಪಿಸಿದ್ರು.ದೂರುದಾರರ ಪರವಾಗಿ ಪ್ರಭುಲಿಂಗನಾವಡಗಿ, ಕೆ ಜಿ ರಾಘವನ್, ರಂಗನಾಥ್ ವಾದಿಸಿ ಯಾವುದೇ ತಡೆಯಾಜ್ಞೆ ನೀಡದಂತೆ ಮನವಿ ಮಾಡಿದರು.
9
+ ವಾದ ವಿವಾದ ಆಲಿಸಿದ ಹೈಕೋರ್ಟ್ ನ ನ್ಯಾಯಮೂರ್ತಿಗಳು, ಮುಂದಿನ ವಿಚಾರಣೆಯನ್ನು ಆಗಸ್ಟ್ 29ರ ಮಧ್ಯಾಹ್ನ 2:30ಕ್ಕೆ ಮುಂದೂಡುವುದಾಗಿ ತಿಳಿಸಿದರು. ಆವರೆಗೂ ಬೇರೆ ಯಾವ ಪ್ರಕ್ರಿಯೆಗಳು ಈ ವಿಚಾರಕ್ಕೆ ಸಂಬಂಧಿಸಿದಂತೆ ನಡೆಯದಂತೆ ಆದೇಶಿಸ ಬೇಕು ಎಂದು ಅಭಿಷೇಕ್ ಮನು ಸಿಂಗ್ವಿ ಕೋರಿದರು. ಪೊಲೀಸ್ ಇನ್ಸ್ಪೆಕ್ಟರ್ ಬಂದು ಮುಖ್ಯಮಂತ್ರಿಯನ್ನು ಬಂಧಿಸಲು ಸಾಧ್ಯವೇ ? ಭಯ ಏಕೆ ಎಂದು ತುಷಾರ್ ಮೆಹ್ತಾ ಆಕ್ಷೇಪಿಸಿದರು.
10
+ ಸದ್ಯಕ್ಕೆ ಯಾವುದೇ ತಡೆಯಾಜ್ಞೆಗಳು ನೀಡುವುದಿಲ್ಲ. ಆದರೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಆದೇಶ ನೀಡುವಂತಿಲ್ಲ ಮತ್ತು ಯಾವುದೇ ಪ್ರಕ್ರಿಯೆಗಳು ಮುಂದುವರಿಸುವಂತಿಲ್ಲ ಎಂದು ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದರು.ಹೈಕೋರ್ಟ್ ನ ಆದೇಶದಿಂದ ಸದಸ್ಯಕ್ಕೆ ಮುಖ್ಯಮಂತ್ರಿಯವರು 10 ದಿನಗಳ ಕಾಲ ಬೀಸುವ ದೊಣ್ಣೆಯಿಂದ ಪಾರಾದಂತಾಗಿದೆ.
eesanje/url_46_41_1.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಸಿಎಸ್‌‍ಆರ್‌ ನಿಧಿಯಡಿಯಲ್ಲಿ 200 ಶಾಲೆಗಳ ಅಭಿವೃದ್ಧಿ : ಡಿಸಿಎಂ ಡಿಕೆಶಿ
2
+ ಬೆಂಗಳೂರು, ಅ.19-ರಾಜ್ಯದಲ್ಲಿ 2000 ಶಾಲೆಗಳನ್ನು ಸಿಎಸ್‌‍ಆರ್‌ ನಿಧಿಯಡಿ ಅಭಿವೃದ್ದಿಪಡಿಸಲು ಗುರುತಿಸಲಾಗಿದ್ದು, ಉದ್ಯಮಿಗಳು ಇವುಗಳಲ್ಲಿ ಯಾವುದೇ ಶಾಲೆಗಳಲ್ಲಿ ಆಯ್ಕೆ ಮಾಡಿಕೊಂಡು ಅಭಿವೃದ್ಧಿಪಡಿಸಬಹುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕರೆ ನೀಡಿದ್ದಾರೆ.
3
+ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ ನಲ್ಲಿ ನಡೆದ ಸಿಎಸ್‌‍ಆರ್‌ ಎಜು ಕಾಂಕ್ಲೇವ್‌ ನಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳನ್ನು ನಿಮ್ಮ ಮಕ್ಕಳಂತೆ ನೋಡಿಕೊಳ್ಳಿ ಎಂದರು. ಜಗತ್ತಿನ ಯಾವುದೇ ಅಂತಾರಾಷ್ಟ್ರೀಯ ಕಂಪನಿಗಳ ಎರಡನೇ ಹುದ್ದೆ ಭಾರತೀಯರದ್ದೇ ಆಗಿದ್ದು, ಅಷ್ಟು ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ನಮ್ಮ ಮಕ್ಕಳು ಜಗತ್ತಿನ ಪೈಪೋಟು ಎದುರಿಸಬೇಕು. ಇದರಿಂದ ಉತ್ತಮ ಗುಣಮಟ್ಟದ ಶಿಕ್ಷಣ ಅಗತ್ಯವಿದೆ. ಅದಕ್ಕಾಗಿಯೇ ನಾವು ಸಿಎಸ್‌‍ಆರ್‌ ನಿಧಿಯನ್ನು ಮೂರ್ನಾಲ್ಕು ವರ್ಷ ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ವಿನಿಯೋಗಿಸಲು ಸೂಚಿಸಿದ್ದೇವೆ ಎಂದು ಅವರು ಹೇಳಿದರು.
4
+ ರಾಜ್ಯದಲ್ಲಿ 43 ದೊಡ್ಡ ಕಂಪನಿಗಳು 4 ಲಕ್ಷ ಕೋಟಿಗೂ ಹೆಚ್ಚಿನ ಲಾಭದಲ್ಲಿವೆ. ಲಾಭದಲ್ಲಿ 8063 ಕೋಟಿ ಸಿಎಸ್‌‍ಆರ್‌ ಫಂಡ್‌ ನೀಡುತ್ತಿವೆ,. ಅದರಲ್ಲಿ ಒಂದು ಪೈಸೆಯನ್ನೂ ನಮಗೆ ನೀಡದೇ ನೇರವಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬಳಸಬಹುದಾಗಿದೆ ಎಂದರು.ಗ್ರಾಮೀಣ ಭಾಗದಲ್ಲಿಯೂ ನಗರದಲ್ಲಿ ಸಿಗುವ ಗುಣಮಟ್ಟದ ಶಿಕ್ಷಣ ಸಿಗಬೇಕು. ನಾನೇ ಇದಕ್ಕೆ ಉತ್ತಮ ಉದಾಹರಣೆ. ನಾನು ಶಿಕ್ಷಣ ಸಂಸ್ಥೆ ನಡೆಸುತ್ತಿದ್ದೇನೆ. ನಮ್ಮ ಆಸ್ತಿಯಲ್ಲೇ ಹತ್ತು ಎಕರೆ ಜಾಗ ಸರ್ಕಾರಿ ಶಾಲೆಗೆ ನೀಡಿದ್ದೇವೆ. ಬೇರೆಯವರಿಗೆ ಕೇಳುವ ಮೊದಲು ನಾವೇ ಆರಂಭಿಸಬೇಕು ಎಂದು ನಾನು ಜಾಗ ನೀಡಿದ್ದೇನೆ ಎಂದು ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಹಕಾರ ಕೋರುವ ನಿಲುವನ್ನು ಅರ್ಥಪೂರ್ಣವಾಗಿ ಅವರು ಸಮರ್ಥಿಸಿಕೊಂಡರು.
5
+ ನಿಮ್ಮ ಮಕ್ಕಳಂತೆ ನೀವು ಅಭಿವೃದ್ದಿಪಡಿಸುವ ಸರ್ಕಾರಿ ಶಾಲೆಗಳನ್ನು ಸಾಕಿ, ಶಾಲೆಗಳಲ್ಲಿ ನಿಮ್ಮ ಬ್ರ್ಯಾಂಡಿಂಗ್‌ ಮಾಡಿಕೊಳ್ಳಲು ಅಡ್ಡಿ ಇಲ್ಲ. ಜಿಲ್ಲೆ, ತಾಲ್ಲೂಕು ಕೇಂದ್ರ ಸೇರಿ ನಗರ ಪ್ರದೇಶದ ಯಾವುದೇ ಶಾಲೆ ಅಭಿವೃದ್ದಿಪಡಿಸಲು ಆಯ್ಕೆ ಮಾಡಿಕೊಳ್ಳುವುದು ಬೇಡ. ಈಗಾಗಲೇ ಅಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಗ್ರಾಮೀಣ ಭಾಗದ 2000 ಶಾಲೆ ಗುರುತಿಸಿದ್ದೇವೆ ಎಂದು ಅವರು ತಿಳಿಸಿದರು.
6
+ ಮೂರ್ನಾಲ್ಕು ವರ್ಷ ಸಿಎಸ್‌‍ಆರ್‌ ನಿಧಿ ಪ್ರಾಥಮಿಕ ಶಿಕ್ಷಣ ಇಲಾಖೆಗೇ ನೀಡಬೇಕು. ಮುಂದೆ ಆರೋಗ್ಯ ಸೇರಿ ಇತರ ಇಲಾಖೆಗೆ ಆಧ್ಯತೆ ನೀಡೋಣ. ಇದು ದೇಶಕ್ಕೆ ದೊಡ್ಡ ಮಾದರಿಯಾದ ವ್‌ಯವಸ್ಥೆ ಆಗಲಿದೆ. ಬಲಿಷ್ಠ ಸರ್ಕಾರ ರಚನೆಗೆ ನೀವೆಲ್ಲಾ ಅವಕಾಶ ನೀಡಿದ್ದೀರಿ. ನಾನು ಡಿಸಿಎಂ ಆಗಿ ಸರ್ಕಾರದ ಮಟ್ಟದಿಂದ ನಿಮ್ಮ ಯಾವುದೇ ಸಮಸ್ಯೆ ಪರಿಹರಿಸಿವ ಭರವಸೆ ನೀಡುತ್ತಿದ್ದೇನೆ.ಸಮಸ���ಯೆಗಳಿದ್ದರೆ ಹೇಳಿ ಎಂದು ಕಂಪನಿಗಳಿಗೆ ಭರವಸೆ ನೀಡಿದರು.
7
+ ಈಗ ಎಂಒಯು ಮಾಡಿಕೊಳ್ಳುವವರು ಮುಂದಿನ ಮೂರ್ನಾಲ್ಕು ತಿಂಗಳಿನಲ್ಲಿ ಮೊದಲ ಹಂತದ 500 ಶಾಲೆ ಅಭಿವೃದ್ಧಿಗೆ ಮುನ್ನುಡಿ ಬರೆಯಬೇಕು. ನಂತರ ಮುಂದಿನ ದಿನಗಳಲ್ಲಿ ಉಳಿದ ಕಡೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.
8
+ ಮಧು ಬಂಗಾರಪ್ಪಗೆ ಬೇರೆ ಇಲಾಖೆ ನೀಡಲಾಗಿತ್ತು ಆದರೆ, ನಾನೇ ಹೈಕಮಾಂಡ್‌ ಜೊತೆ ಮಾತನಾಡಿ ಶಿಕ್ಷಣ ಇಲಾಖೆ ಕೊಡಿಸಿದೆ.ನಮ್ಮ ನಿರೀಕ್ಷೆಯಂತೆ ಉತ್ತಮ ರೀತಿಯಲ್ಲಿ ಮಧು ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್‌ಯಕ್ತಪಡಿಸಿದರು.
9
+ ಒಂದೇ ಸೂರಿನಲ್ಲಿ 12 ನೇ ತರಗತಿವರೆಗೂ ಶಿಕ್ಷಣ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾತನಾಡಿ, ಕಲ್ಯಾಣ ಕರ್ನಾಟಕದ ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಯುಕೆಜಿ ಆರಂಭಿಸಲಾಗುತ್ತದೆ ಎಂದು ತಿಳಿಸಿದರು.
10
+ ಎಲ್ಕೆಜಿಯಿಂದ 12 ನೇ ತರಗತಿವರೆಗೂ ಒಂದೇ ಆವರಣದಲ್ಲಿ ಶಿಕ್ಷಣ ಸಿಗುವಂತೆ ಮಾಡುವ ಗುರಿಯೊಂದಿಗೆ ಪ್ರಾಥಮಿಕ ಶಿಕ್ಷಣ ಇಲಾಖೆಯಲ್ಲಿ ಸಿಎಸ್‌‍ಆರ್‌ ನಿಧಿ ಬಳಸಿಕೊಂಡು ಶಾಲೆಗಳ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.
11
+ 16 ತಿಂಗಳ ಹಿಂದೆ ಸಚಿವನಾದೆ. ಆಗ ನನಗೆ ಸವಾಲಿನ ಜವಾಬ್ದಾರಿ ನೀಡಲು ಸಿಎಂ ಸೂಚಿಸಿದ್ದರು. ಅದರಂತೆ ಈಗ ನಾನು 44 ಸಾವಿರ ಕೋಟಿ ವಾರ್ಷಿಕ ವಿನಿಯೋಗದ ಶಿಕ್ಷಣ ಇಲಾಖೆ ನಿರ್ವಹಣೆ ಮಾಡುತ್ತಿದ್ದೇನೆ,. 1-12 ನೇ ತರಗತಿವರೆಗೆ 56 ಲಕ್ಷ ವಿದ್ಯಾರ್ಥಿಗಳು ವ್‌ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಾಕಷ್ಟು ಒತ್ತು ನೀಡಲಾಗಿದೆ,. 56 ಸಾವಿರ ಶಿಕ್ಷಕರ ಕೊರತೆ ಇದೆ, 45 ಸಾವಿರ ಅತಿಥಿ ಶಿಕ್ಷಕರ ಬಳಸಿಕೊಂಡು ಶಿಕ್ಷಣ ನೀಡಲಾಗುತ್ತಿದೆ, ಈಗ 13 ಸಾವಿರ ಶಿಕ್ಷಕರ ನೇಮಕಾತಿಯಾಗುತ್ತಿದೆ. 5000 ಶಿಕ್ಷಕರ ನೇಮಕಾತಿಗೆ ಪ್ರಕ್ರಿಯೆ ಸಧ್ಯದಲ್ಲೇ ಆಗಲಿದೆ ಎಂದರು.
12
+ ವರ್ಷದ ಹಿಂದೆ ಸಿಎಸ್‌‍ಆರ್‌ ಕಾಂಕ್ಲೇವ್‌ ನಡೆಸಿದ್ದೆವು. ಶಿಕ್ಷಣಕ್ಕೆ ಸೀಮಿತವಾಗಿ ಸಿಎಸ್‌‍ಆರ್‌ ನಿಧಿ ಪೂರ್ಣಪ್ರಮಟಣದಲ್ಲಿ ಮುಂದಿನ ಎರಡು ಮೂರು ವರ್ಷ ವಿನಿಯೋಗಕ್ಕೆ ಡಿಸಿಎಂ ಸೂಚಿಸಿದ್ದರು. ಅದರಂತೆ ಪೂರ್ಣ ಪ್ರಮಾಣದಲ್ಲಿ ನಿಧಿ ಬಳಸಿಕೊಂಡು ಶಿಕ್ಷಣ ವ್‌ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆ ತರಲಾಗಿದೆ. ಈಗಾಗಲೇ ಎಲ್ಲಾ ಸರ್ಕಾರಿ ಶಾಲೆಗಳಿಗೂ ಸಂಪೂರ್ಣ ಉಚಿತ ವಿದ್ಯುತ್‌ ನೀಡಲಾಗುತ್ತಿದೆ. ಗ್ರಾಮಗಳಲ್ಲಿ ವಿಶೇಷ ತರಗತಿ ಸಂಜೆ ವೇಳೆ ನಡೆಸಲಾಗುತ್ತಿದೆ ಎಂದು ಹೇಳಿದರು. ಬಿಸಿಯೂಟ, ಪಠ್ಯಪುಸ್ತಕ, ಸಮವಸ್ತ್ರ ಉಚಿತವಾಗಿ ನೀಡಲಾಗುತ್ತಿದೆ. ಈಗ ಅಜೀಂ ಪ್ರೇಂಜಿ ಫೌಂಡೇಷನ್‌ ಎಂಒಯು ಸಹಿ ಮಾಡಿದೆ. 1500 ಕೋಟಿ ಮೊತ್ತದಲ್ಲಿ ಮುಂದಿನ ಮೂರು ವರ್ಷ ಮೊಟ್ಟೆ ಕೊಡಲು ಒಡಂಬಡಿಕೆ ಮಾಡಲಾಗಿದೆ ಎಂದರು.
13
+ ಕಲ್ಯಾಣ ಕರ್ನಾಟಕದಲ್ಲಿ 1000 ಎಲ್ಕೆಜಿ ಯುಕೆಜಿ ತೆರೆದಿದ್ದೇವೆ. 38 ಸಾವಿರ ಮಕ್ಕಳು ದಾಖಲಾಗಿದ್ದಾರೆ. ಮುಂದೆ ರಾಜ್ಯದ ಎಲ್ಲಾ ಕಡೆ ಎಲ್ಕೆಜಿ ಯುಕೆಜಿ ತೆರೆಯಲಿದ್ದೇವೆ. ಎಲ್ಕೆಜಿ ಯುಕೆಜಿಯಿಂದ 12 ನೇ ತರಗತಿವರೆಗೆ ಒಂದೇ ಆವರಣದಲ್ಲಿ ಮಕ್ಕಳು ವ್‌ಯಾಸಂಗ ಮಾಡುವ ವ್‌ಯವಸ್ಥೆ ಬರಬೇಕು ಎನ್ನುವ ಕನಸು ನಮ್ಮದು. ಇದೇ ವೇಳೆ ವಿವಿಧ ಕಂಪನಿಗಳು ಸರ್ಕಾರದ ಜತೆ ಶಾಲೆಗಳ ಅಭಿವೃದ್ಧಿ ಕುರಿತು ಒಡಂಬಡಿಕೆ ಮಾಡಿಕೊಳ್ಳಲಾಯಿತು.
14
+ ಕಾರ್ಯಕ್ರಮದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌,ಹಿರಿಯ ಅಧಿಕಾರಿಗಳ:ಆದ ಉಮ ಮಹದೇವನ್‌,ಸೆಲ್ವಕುಮಾರ್‌ , ಕಾವೇರಿ, ರಾಜೇಂದ್ರ ಜೋಳನ್‌, ಅಜೆಯ್‌ ಸಿಂಗ್‌, ಉದ್ಯಮಿ ಪ್ರಕಾಶ್‌, ನಿತೀಶ್‌ ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು .
eesanje/url_46_41_10.txt ADDED
@@ -0,0 +1,9 @@
 
 
 
 
 
 
 
 
 
 
1
+ ರಾಜ್ಯಪಾಲರ ವಿರುದ್ಧ ನಾಳೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ
2
+ ಬೆಂಗಳೂರು, ಆ.18-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
3
+ ನಗರದಲ್ಲಿಂದು ತಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಜಿಲ್ಲಾಕೇಂದ್ರಗಳಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.
4
+ ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು. ಕೆಲ ಕಿಡಿಗೇಡಿಗಳು ಪ್ರತಿಭಟನೆಯಲ್ಲಿ ನುಸಳಿಕೊಂಡು ಕಲ್ಲು ಹೊಡೆದು, ಅಶಾಂತಿಯ ವಾತಾವರಣ ಸೃಷ್ಟಿಸಬಹುದು. ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡಬಹುದು. ಈ ನಿಟ್ಟಿನಲ್ಲಿ ಬಹಳ ಎಚ್ಚರಿಕೆ ವಹಿಸುವಂತೆಯೂ ಸೂಚಿಸಲಾಗಿದೆ. ನಾವು ಮಹಾತಗಾಂಧಿಜೀಯವರ ಅಹಿಂಸಾ ತತ್ವವನ್ನು ಪಾಲನೆ ಮಾಡುತ್ತೇವೆ. ಅದೇ ಮಾದರಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು. ಈ ಪ್ರತಿಭಟನೆಯ ಮೂಲಕ ರಾಷ್ಟ್ರಮಟ್ಟದಲ್ಲಿ ಸಂದೇಶ ರವಾನಿಸಲು ಯತ್ನಿಸುತ್ತೇವೆ ಎಂದರು.
5
+ ರಾಜ್ಯದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಯುತ್ತಿದೆ. ಇಲ್ಲದೆ ಇರುವ ವಿವಾದವನ್ನು ಸೃಷ್ಟಿಸಿ, ದೊಡ್ಡ ಸರ್ಕಾರವನ್ನು ಪತನಗೊಳಿಸಲು ಯತ್ನಿಸಲಾಗುತ್ತಿದೆ ಎಂದು ಆಕ್ಷೇಪಿಸಿದ ಅವರು, ಅಖಿಲ ಭಾರತ ಮಟ್ಟದಲ್ಲಿ ಇದೇ ವಿಚಾರವಾಗಿ ಪ್ರತಿಭಟನೆ ನಡೆಸುವ ಬಗ್ಗೆ ನಮಗೆ ಮಾಹಿತಿ ಇಲ್ಲ. ರಾಜ್ಯದ ಪಕ್ಷದ ವಿಚಾರವಾಗಿ ನಾನು ಮಾತನಾಡಬಲ್ಲೆ ಎಂದು ತಿಳಿಸಿದರು.
6
+ ಪ್ರಕರಣದ ಬೆಳವಣಿಗೆ ಹಾಗೂ ವಾಸ್ತವಾಂಶಗಳ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡುವುದು ನಮ ಜವಾಬ್ದಾರಿ. ಅದಕ್ಕಾಗಿ ನಿನ್ನೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದರು.
7
+ ಟೀಕೆ ಸಾಯುತ್ತದೆ ಕೆಲಸ ಉಳಿಯುತ್ತದೆ:ತುಂಗಾಭದ್ರಾ ಅಣೆಕಟ್ಟೆಯಲ್ಲಿ ಹೊಡೆದು ಹೋಗಿದ್ದ 19ನೇ ಕ್ರಸ್ಟ್ ಗೇಟ್ ಅಳವಡಿಕೆಯನ್ನು ಬಹಳ ಚೆನ್ನಾಗಿ ಮಾಡಿದ್ದಾರೆ. ಯಶಸ್ಸಿ ಕಾರ್ಯಾಚರಣೆ ನಡೆಸಿದ ಎಲ್ಲರನ್ನು ಕರೆಸಿ ಮುಂದಿನ ದಿನಗಳಲ್ಲಿ ನಾವು ಸನಾನ ಮಾಡುತ್ತೇವೆ ಎಂದು ತಿಳಿಸಿದರು.
8
+ ಬಿಜೆಪಿ-ಜೆಡಿಎಸ್ನವರು ಗೇಟ್ ವಿಚಾರವಾಗಿ ಮಾಡಿದ ಟೀಕೆಗಳಿಗೆ ಉತ್ತರವಾಗಿ ನಮ ಕೆಲಸ ಯಶಸ್ವಿಯಾಗಿದೆ. ವಿರೋಧ ಪಕ್ಷಗಳ ಮುಖಂಡರಾದ ಗೋವಿಂದ ಕಾರಜೋಳ, ಆರ್.ಅಶೋಕ್, ಬಸವರಾಜ ಬೊಮಾಯಿ, ವಿಜಯೇಂದ್ರ, ಹೆಚ್.ಡಿ.ಕುಮಾರಸ್ವಾಮಿ ಅವರು ಮಾಡಿದ ಟೀಕೆಗಳಿಗೆ ಸಾಕ್ಷಿಯಾಗಿ ಗೇಟ್ ಅಳವಡಿಕೆ ಕೆಲಸ ಯಶಸ್ವಿಯಾಗಿದೆ ಎಂದು ತಿರುಗೇಟು ನೀಡಿದರು.
9
+ ಟೀಕೆಗಳು ಸಾಯುತ್ತವೆ. ಕೆಲಸಗಳು ಉಳಿಯುತ್���ವೆ ಎಂದು ನಾನು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಈಗಲೂ ಹೇಳುತ್ತೇನೆ, ಮುಂದೆಯೂ ಹೇಳುತ್ತೇನೆ ಎಂದರು.
eesanje/url_46_41_11.txt ADDED
@@ -0,0 +1,10 @@
 
 
 
 
 
 
 
 
 
 
 
1
+ ವ್ಯಕ್ತಿಗೆ ಆದರ್ಶ ಇಲ್ಲದಿದ್ದರೆ ವ್ಯಕ್ತಿತ್ವ ಬೆಳೆಯಲಾರದು : ನಿರ್ಮಲಾನಂದನಾಥ ಶ್ರೀ
2
+ ಗೌರಿಬಿದನೂರು, ಆ.18-ವ್ಯಕ್ತಿಗೆ ಆದರ್ಶ ಇಲ್ಲದೆ ಹೋದರೆ ವ್ಯಕ್ತಿತ್ವ ಬೆಳೆಯಲಾರದು. ಹಾಗೇ ಸಮಾಜಕ್ಕೆ ಆದರ್ಶಪ್ರಾಯ ವ್ಯಕ್ತಿ ಇಲ್ಲದೆ ಹೋದರೆ ಸಮಾಜ ವಿಕಸಿತವಾಗದು. ಈ ನಿಟ್ಟಿನಲ್ಲಿ ಕೆಂಪೇಗೌಡ ಅವರಂತಹ ಆದರ್ಶ ವ್ಯಕ್ತಿಯ ಅದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಶ್ರೀ ಕ್ಷೇತ್ರದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಅಭಿಪ್ರಾಯಪಟ್ಟಿದ್ದಾರೆ.
3
+ ನಗರದಲ್ಲಿ ಕೆಂಪೇಗೌಡ ಸಾಂಸ್ಕೃತಿ ವೇದಿಕೆ ಮತ್ತು ತಾಲೂಕು ಆಡಳಿತ ಸಂಯುಕ್ತಾಶ್ರಯ ದಲ್ಲಿ ಹಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಜಯಂತೋತ್ಸವ ಹಾಗೂ ನಾಡಪ್ರಭು ಕೆಂಪೇಗೌಡ ವೃತ್ತ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೆಂಪೇಗೌಡ ವೃತ್ತವನ್ನು ಲೋಕಾರ್ಪಣೆ ಮಾಡಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಕೆಂಪೇಗೌಡರ ವ್ಯಕ್ತಿತ್ವ ಸ್ವಾರ್ಥಕರ್ಮಕ್ಕೆ ಸೀಮಿತವಾಗದೆ, ಸಮಾಜದ ಅಭ್ಯುದಯಕ್ಕೆ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ಬಣ್ಣಿಸಿದರು.
4
+ ಕೆಂಪೇಗೌಡರು ಸಮಾಜದಲ್ಲಿ ಜಾತ್ಯಾತೀತ ವಾಗಿ ಎಲ್ಲ ವರ್ಗದ ಜನರಿಗೆ ಕರ್ಮದ ಮಾರ್ಗವನ್ನು ತೋರಿಸಿದ್ದರು ಎಂಬುದಕ್ಕೆ ಬೆಂಗಳೂರಿ ನಲ್ಲಿ ಕುರುಬರಪೇಟೆ, ತಿಗಳರಪೇಟೆ, ಚಿಕ್ಕಪೇಟೆ, ಬಳೆಪೇಟೆ ಹೀಗೆ ಹತ್ತು ಹಲವಾರು ಕೌಶಲ್ಯಾಧಾರಿತ ವಿದ್ಯೆಯ ಅಭಿವೃದ್ಧಿಗೆ ಕೆಂಪೇಗೌಡರು ಅಂದೇ ನಾಂದಿ ಹಾಡಿದ್ದರು ಎಂದು ಹೇಳಿದರು.
5
+ ಕೆಂಪೇಗೌಡರು ತಮ ಆಳ್ವಿಕೆಯಲ್ಲಿ ಜ್ಞಾನದ ದಾಸೋಹಕ್ಕೆ ಆದ್ಯತೆ ನೀಡಿದ್ದರು. ಪೋಷಕರು ಮಕ್ಕಳಿಗೆ ದೂರದೃಷ್ಟಿಯ ಜ್ಞಾನಕ್ಕೆ ಒತ್ತು ನೀಡಬೇಕು. ಶೈಕ್ಷಣಿಕ ಅಭಿವೃದ್ಧಿಯಿಂದ ಮಾತ್ರ ಮಕ್ಕಳ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಪೋಷಕರು ಶ್ರಮಿಸಬೇಕು ಎಂದು ಕಿವಿಮಾತು ಹೇಳಿದರು.
6
+ ಶಿರಾ ತಾಲೂಕಿನ ಶ್ರೀ ಕ್ಷೇತ್ರ ಪಟ್ಟನಾಯಕನಹಳ್ಳಿಯ ಶ್ರೀ ನಂಜಾವಧೂತ ಸ್ವಾಮೀಜಿ ಅವರು ಮಾತನಾಡಿ, ಸಮಾಜದಲ್ಲಿ ಆದರ್ಶ ಪ್ರಾಯರ ಜಯಂತಿಗಳು ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಬೇಕು ಎಂಬ ನಿಟ್ಟಿನಲ್ಲಿ ಆದರ್ಶ ವ್ಯಕ್ತಿಗಳ ಜಯಂತಿ ಆಚರಣೆ ಮಾಡಲಾಗುತ್ತದೆ. ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಾಡನ್ನು ಕಟ್ಟಿ ಇಂದಿಗೆ 500 ವರ್ಷಗಳು ಕಳೆದಿವೆ. ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಬೆಂಗಳೂರು ತನ್ನದೇ ಆದ ಪ್ರಸಿದ್ಧಿ ಪಡೆದುಕೊಂಡಿದೆ. ಕೆಂಪೇಗೌಡರ ನಾಡ ಚಿಂತನೆ ಇಂದಿನ ರಾಜಕೀಯ ವ್ಯಕ್ತಿಗಳಿಗೆ ಆದರ್ಶಪ್ರಾಯವಾಗಿದೆ ಎಂದು ತಿಳಿಸಿದರು.
7
+ ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ ಮಾತನಾಡಿ, ಕೆಂಪೇಗೌಡರು ಒಂದು ವರ್ಗಕ್ಕೆ ಸೀಮಿತರಾದವರಲ್ಲ. ಸಮಾಜದ ಎಲ್ಲಾ ವರ್ಗಗಳಿಗೂ ಸೀಮಿತವಾದ ಆದರ್ಶ ವ್ಯಕ್ತಿಯಾಗಿ ದ್ದಾರೆ. ಈ ನಿಟ್ಟಿನಲ್ಲಿ ಇಂದು ನಗರದ ಬೈಪಾಸ್ ರಸ್ತೆಯ ವೃತ್ತದಲ್ಲಿ ನಾಡಪ್ರಭು ಕೆಂಪೇಗೌಡರ ವೃತ್ತವನ್ನು ಅನಾವರಣಗೊಳಿಸಲಾಗಿದೆ. ಕೆಂಪೇಗೌಡರು ಮುಂದಾಲೋಚನೆ ಯಿಂದ ಕಟ್ಟಿದ ಬೆಂಗಳೂರು ಇಂದು ಇಡೀ ರಾಜ್ಯದಲ್ಲೇ ಶೇ.60ರಷ್ಟು ತೆರಿಗೆ ಆದಾಯ ಹರಿದು ಬರುತ್ತಿದೆ ಎಂದರು.
8
+ ರಾಷ್ಟ್ರಕವಿ ಕುವೆಂಪು ಅವರು ತಿಳಿಸಿದಂತೆ ಸರ್ವಜನಾಂಗದ ಶಾಂತಿಯ ತೋಟ ಎಂಬುದನ್ನು 500 ವರ್ಷಗಳ ಹಿಂದೆಯೇ ಕೆಂಪೇಗೌಡರು ಮನಗಂಡು, ಜಾತ್ಯಾತೀತವಾಗಿ ಎಲ್ಲಾ ವರ್ಗದ ಜನರಿಗೂ ಬದುಕನ್ನು ಕಟ್ಟಿಕೊಟ್ಟಿದ್ದಾರೆ. ಅವರ ಆದರ್ಶಗಳು ಮುಂದಿನ ಪೀಳಿಗೆಗೂ ಪ್ರೇರಣೆಯಾಗಬೇಕೆಂಬ ಉದ್ದೇಶದಿಂದ ಇಂದು ಕೆಂಪೇಗೌಡ ವೃತ್ತವನ್ನು ಶ್ರೀಗಳಿಂದ ಲೋಕಾರ್ಪಣೆ ಗೊಳಿಸಲಾಗಿದೆ ಎಂದರು.
9
+ ಕೆಂಪೇಗೌಡ ಪ್ರಶಸ್ತಿ ಪುರಸ್ಕಾರ:ತಾಲೂಕಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ಪಕ್ಷಾತೀತವಾಗಿ ಗುರುತಿಸಿ ಕೆಂಪೇಗೌಡ ಸಾಂಸ್ಕೃತಿಕ ವೇದಿಕೆಯಿಂದ ಕೆಂಪೇಗೌಡ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.
10
+ ಬೆಂಗಳೂರು ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹೆಚ್.ಎಂ.ಕೃಷ್ಣಮೂರ್ತಿ, ತಹಸೀಲ್ದಾರ್ ಮಹೇಶ್ ಎಸ್.ಪತ್ರಿ, ವೃತ್ತನಿರೀಕ್ಷಕ ಕೆ.ಪಿ.ಸತ್ಯನಾರಾಯಣ್, ಪೌರಾಯುಕ್ತರಾದ ಡಿ.ಎಂ.ಗೀತಾ, ಇಒ ಹೊನ್ನಯ್ಯ ಜಿ.ಕೆ., ಬಿಇಒ ಶ್ರೀನಿವಾಸಮೂರ್ತಿ, ಸಹಾಯಕ ಕೃಷಿ ನಿರ್ದೇಶಕ ಮೋಹನ್, ಕೆಂಪೇಗೌಡ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಆರ್.ಜಿ.ಜನಾರ್ಧನ್ ಮೂರ್ತಿ, ಉಪಾಧ್ಯಕ್ಷ ಅಶ್ವತ್ಥರೆಡ್ಡಿ, ಕಾರ್ಯದರ್ಶಿ ಪ್ರಭಾಕರರೆಡ್ಡಿ, ಖಜಾಂಚಿ ಲಕ್ಷ್ಮಿನರಸಮ, ಸಹ ಕಾರ್ಯದರ್ಶಿ ಬಿ.ಎಸ್.ಪರಮೇಶ್ವರರೆಡ್ಡಿ, ರಾಮಚಂದ್ರರೆಡ್ಡಿ, ಕಾನೂನು ಸಲಹೆಗಾರ ಮಲ್ಲಿಕಾರ್ಜುನ್, ಎಸ್.ಆರ್.ಮನೋಹರ್, ಮುಖಂಡರಾದ ಶ್ರೀನಿವಾಸಗೌಡ, ಎಂ.ನರಸಿಂಹಮೂರ್ತಿ, ಅಬ್ದುಲ್ಲಾ, ವಿವಿಧ ಇಲಾಖೆ ಅಧಿಕಾರಿಗಳು, ಕೆಎಚ್ಪಿ ಬಣದ ನಗರಸಭಾ ಸದಸ್ಯರು ಭಾಗವಹಿಸಿದ್ದರು.
eesanje/url_46_41_12.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಸಿಎಂ ಸಿದ್ದರಾಮಯ್ಯನವರಿಗೆ ‘ಬಂಡೆ’ಯಿಂದಲೇ ಡೇಂಜರ್ : ಹೆಚ್ಡಿಕೆ ಮಾರ್ಮಿಕ ಹೇಳಿಕೆ
2
+ ಬೆಂಗಳೂರು, ಆ.18-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕೆಂದು ಹೇಳುವುದಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ಅವರು ರಾಜೀನಾಮೆ ನೀಡುತ್ತಾರೆಂಬ ನಂಬಿಕೆಯೂ ಇಲ್ಲ ಎಂದು ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಡೆಯಿಂದಲೇ ಸಿದ್ದರಾಮಯ್ಯ ಅವರಿಗೆ ಡೇಂಜರ್. ಇತ್ತೀಚೆಗೆ ಮಳೆ ಬಂದು ಭೂ ಕುಸಿತವಾದಾಗಲ್ಲೂ ಬಂಡೆಗಳಿಂದಲ್ಲೇ ಡೇಂಜರ್ ಆಗಿದ್ದು ಎಂದು ಮಾರ್ಮಿಕವಾಗಿ ನುಡಿದರು.
4
+ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಕಾನೂನು ಪ್ರಕಾರ ಏನು ನಡೆಯಬೇಕೋ ಅದು ನಡೆಯಲಿದೆ. ಯಾವ ಹಂತದಲ್ಲಿ ಏನು ತೀರ್ಮಾನ ಆಗಬೇಕೋ ಅದು ಆಗಲಿದೆ ಎಂದರು.
5
+ ಬೆಂಗಳೂರಿನಿಂದ ಮೈಸೂರಿನವರೆಗೆ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಪಾದಯಾತ್ರೆ ಮಾಡಿರುವುದಕ್ಕೂ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದಕ್ಕೂ ಸಂಬಂಧವಿಲ್ಲ. ನಮ ಪಾದಯಾತ್ರೆಯಿಂದ ಇದೆಲ್ಲವೂ ಆಗಿದೆ ಎಂದು ಹೇಳುವುದಿಲ್ಲ. ನಾಡಿನ ಜನತೆಗೆ ರಾಜಕೀಯ ಸಂದೇಶ ಕೊಡಬೇಕಿತ್ತು. ಅದನ್ನು ಕೊಟ್ಟಿದ್ದೇವೆ ಎಂದು ಅವರು ಹೇಳಿದರು.
6
+ ಕುಮಾರಸ್ವಾಮಿ ಅವರ ಮೇಲೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಏಕೆ ಅನುಮತಿ ಕೊಟ್ಟಿಲ್ಲ ಎಂದು ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಮಾತನಾಡುತ್ತಿದ್ದಾರೆ. 2006ರಲ್ಲಿ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ಗಣಿಗಾರಿಕೆ ನಡೆಸುವ ಮಾಲೀಕರಿಂದ ಹಣ ಸಂಗ್ರಹ ಮಾಡಿದ ಆರೋಪ ಮಾಡಿದ್ದರು. ಅದರ ಬಗ್ಗೆ ಒಂದು ಸಿಡಿ ಮಾಡಲು ಸಿಡಿ ಶಿವು ಪ್ರಯತ್ನ ಮಾಡಿದ್ದರು ಎಂದು ಆರೋಪಿಸಿದರು.
7
+ ವಿಧಾನಸಭೆಯಲ್ಲಿ ಬಂದು ಆಪರೇಷನ್ ಸಕ್ಸಸ್ ಆಗಿದೆ ಅಂದರು. ಆಗ ನಾನು ಏಕಾಂಗಿಯಾಗಿ ಹೋರಾಟ ಮಾಡುತ್ತೇನೆ ಎಂದಿದ್ದೆ. ನಿಮ ಹಾಗೆ ಕಾರ್ಯಕರ್ತರಿಗೆ ಬೀದಿಯಲ್ಲಿ ಬೆಂಕಿ ಹಾಕಿ ಅನ್ನಲಿಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
8
+ ಜಂತಕಲ್ ಮೈನಿಂಗ್ ಬಗ್ಗೆ ಹೈಕೋರ್ಟ್ ಏನು ಆದೇಶ ಕೊಟ್ಟಿದೆ ಎಂಬುದನ್ನು ನೋಡಲಿ. ಸಾಯಿ ವೆಂಕಟೇಶ್ವರ ಹಗರಣ ತನಿಖೆ ಮಾಡಿ ಅಂದರು. ನೀವು ಬೇಕಾದರೆ ಸುಪ್ರೀಂ ಕೋರ್ಟ್ ಮೊರೆ ಹೋಗಬಹುದು. ಬೇಡವೆಂದವರು ಯಾರು? ಎಂದು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದರು.
9
+ ನನ್ನನ್ನು ಹೆದರಿಸಲು ಮಾತನಾಡುತ್ತಿದ್ದೀರಾ? ಏಕೆ ಈ ನಾಟಕಗಳು? ರಾಜ್ಯಪಾಲರ ವಿರುದ್ಧ ಇದೇ ಮೊದಲ ಬಾರಿಗೆ ಪ್ರತಿಭಟನೆಗಳು ಅಗುತ್ತಿವೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
10
+ ಕಾಡುಗೊಲ್ಲರ ಮೀಸಲಾತಿ ವಿಚಾರದ ಬಗ್ಗೆ ಚರ್ಚೆ ಮಾಡಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕೇಂದ್ರ ಸಚಿವ ಅಮಿತ್ ಶಾ ಅವರ ಬಳಿ ಹೋಗಿದ್ದರು. ಅನಂತರ ನಮ ಮೇಲೆ ಕೆಂಡ ಕಾರುತ್ತಿದ್ದಾರೆ. ಜೈಲಿಗೆ ಕಳುಹಿಸಬೇಕೆಂದು ನೋಡುತ್ತಿದ್ದಾರೆ ಎಂದು ಆರೋಪಿಸಿದರು.
11
+ ಕಾಂಗ್ರೆಸ್ನಂತೆ ಕೀಳು ಮಟ್ಟದ ರಾಜಕಾರಣ ಮಾಡುವುದಿಲ್ಲ, ದೇವೇಗೌಡರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಕಿಡಿ ಕಾರಿದರು.ಲೋಕಾಯುಕ್ತ ತನಿಖೆ ಬಂದಾಗ ಅದನ್ನು ಮುಚ್ಚಿ ಹಾಕಿ ಎಸಿಬಿ ರಚಿಸಿ ಅದರಿಂದಲ್ಲೆ ರಕ್ಷಣೆ ಪಡೆದುಕೊಂಡರು ಎಂದು ಅವರು ಟೀಕಿಸಿದರು.
eesanje/url_46_41_2.txt ADDED
@@ -0,0 +1,8 @@
 
 
 
 
 
 
 
 
 
1
+ ನಾನು ಯಾವುದೇ ತಪ್ಪು ಮಾಡಿಲ್ಲ, ಕಾನೂನು ಸಮರದಲ್ಲಿ ನ್ಯಾಯ ಸಿಗುತ್ತೆ : ಸಿಎಂ
2
+ ಬೆಂಗಳೂರು,ಆ.19– ಲವತ್ತು ವರ್ಷಗಳ ರಾಜಕೀಯ ಜೀವನದಲ್ಲಿ ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಸಮರದಲ್ಲಿ ನ್ಯಾಯ ಸಿಗುವ ಉದ್ದೇಶವಿದೆ ಎಂದರು.
3
+ ಚಿತ್ರಕಲಾ ಪರಿಷತ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಾಗಿದೆ. ನಾನು ಯಾವುದೇ ತಪ್ಪು ಮಾಡಿಲ್ಲ, ಮಾಡುವುದೂ ಇಲ್ಲ ಎಂದು ಜನರಿಗೆ ಗೊತ್ತಿದೆ. ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ಬಿಜೆಪಿ-ಜೆಡಿಎಸ್‌‍ನವರು ಷಡ್ಯಂತ್ರ ಮಾಡುತ್ತಿದ್ದಾರೆ. ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
4
+ ನನ್ನ ಪ್ರಜ್ಞೆ ಸ್ಪಷ್ಟವಾಗಿದೆ. 1984 ರಿಂದ ಈವರೆಗೆ 40 ವರ್ಷಗಳಲ್ಲಿ ಸಚಿವನಾಗಿ, ಉಪಮುಖ್ಯಮಂತ್ರಿ ಯಾಗಿ, ಮುಖ್ಯಮಂತ್ರಿಯಾಗಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದೇನೆ. ಜನರ ಸೇವೆ ಮಾಡುವುದನ್ನು ಹೊರತುಪಡಿಸಿ ಬೇರೆ ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದರು.
5
+ ರಾಜಕೀಯ ಹೋರಾಟ ಮಾಡುವಾಗ ನನಗೆ ಇನ್ನೂ ಹೆಚ್ಚು ಉತ್ಸಾಹ ಬರುತ್ತದೆ. ಹೀಗಾಗಿ ಮಾನಸಿಕವಾಗಿ ಹಾಗೂ ನೈತಿಕವಾಗಿ ಕುಗ್ಗಿಲ್ಲ ಎಂದರು.ಮೊದಲಿನಿಂದಲೂ ಈ ರೀತಿಯ ರಾಜಕೀಯ ಸಂಘರ್ಷಗಳನ್ನು ಎದುರಿಸಿ ಅಭ್ಯಾಸವಿದೆ. ಹೋರಾಟ ಮಾಡುವಾಗ ಹೆಚ್ಚು ಜೋಶ್‌ ಬರುತ್ತದೆ. ಭೂತ, ಭವಿಷ್ಯ ಹಾಗೂ ವರ್ತಮಾನ ಎಲ್ಲಾ ಕಾಲದಲ್ಲೂ ರಾಜಕೀಯ ಹೋರಾಟ ಗಳನ್ನು ಮುಂದುವರೆಸಿ ದ್ದೇನೆ ಎಂದರು.
6
+ ತಾವು ಬಡವರ ಪರವಾಗಿರು ವುದರಿಂದ ವಿರೋಧಪಕ್ಷ ಗಳಿಗೆ ತಮನ್ನುಕಂಡರೆ ಭಯ. ಅದಕ್ಕಾಗಿ ನನ್ನನ್ನು ರಾಜಕೀಯವಾಗಿ ಮುಗಿಸಿದರೆ ಇಡೀ ಕಾಂಗ್ರೆಸ್‌‍ ಪಕ್ಷವನ್ನು ರಾಜಕೀಯವಾಗಿ ಮುಗಿಸಬಹುದು ಎಂಬ ಭ್ರಮೆ ವಿರೋಧಪಕ್ಷಗಳಲ್ಲಿವೆ ಎಂದು ಹೇಳಿದರು.ಬಿಜೆಪಿ-ಜೆಡಿಎಸ್‌‍ನವರು ರಾಜಕೀಯ ಪ್ರೇರಿತವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ನಾವು ರಾಜಕೀಯವಾಗಿ ಉತ್ತರ ನೀಡುತ್ತೇವೆ. ಜೊತೆಗೆ ಕಾನೂನು ಸಮರವನ್ನು ಮುಂದುವರೆಸುತ್ತೇವೆ ಎಂದರು.
7
+ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿಗೆ ಬಂದಿದ್ದರು. ಅವರೊಂದಿಗೆ ಚರ್ಚೆ ಮಾಡುವ ವೇಳೆ ದೆಹಲಿಗೆ ಬರುತ್ತೇನೆ ಎಂದು ಹೇಳಿದ್ದೇನೆ. ಹೀಗಾಗಿ ಇದೇ 23 ರಂದು ದೆಹಲಿಗೆ ತೆರಳುವ ಸಾಧ್ಯತೆಯಿದೆ.ಗುರುವಾರ ಕಾಂಗ್ರೆಸ್‌‍ ಶಾಸಕಾಂಗ ಸಭೆ ಕರೆದಿದ್ದೇವೆ. ಅಲ್ಲಿನ ವಿಚಾರಗಳ ಚರ್ಚೆಯ ಬಗ್ಗೆ ಸದ್ಯಕ್ಕೆ ಮಾಹಿತಿ ನೀಡುವುದಿಲ್ಲ ಎಂದು ಹೇಳಿದರು.
8
+ ರಾಜ್ಯಪಾಲರು ಅಭಿಯೋಜನೆಗೆ ಪೂರ್ವಾನುಮತಿ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್‌ ಪಿಟೀಶನ್‌ ಸಲ್ಲಿಸಲಾಗಿದೆ. ಅಲ್ಲಿ ರಾಜ್ಯಪಾಲರ ಆದೇಶವನ್ನು ರದ್ದುಗೊಳಿಸಬೇಕು ಹಾಗೂ ಮಧ್ಯಂತರ ತೀರ್ಪು ನೀಡಬೇಕು ಎಂದು ಮನವಿ ಮಾಡಲಾಗಿದೆ.ತಮ ಪರವಾಗಿ ವಾದಿಸಲು ಅಭಿಷೇಕ್‌ ಸಿಂಗ್‌ ಮನ್ವಿ ಹೊರಟಿದ್ದಾರೆ. ನ್ಯಾಯಾಲಯದಿಂದ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದರು.
eesanje/url_46_41_3.txt ADDED
@@ -0,0 +1,8 @@
 
 
 
 
 
 
 
 
 
1
+ ಸಿಎಂ ಸಿದ್ದರಾಮಯ್ಯ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಕೆವಿಯೇಟ್
2
+ ನವದೆಹಲಿ,ಆ.19-ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದ್ದವರಲ್ಲಿ ಒಬ್ಬರಾಗಿರುವ ಸ್ನೇಹಮಯಿ ಕೃಷ್ಣ ಅವರು, ಹೈಕೋರ್ಟ್‌ನಲ್ಲಿ ಕೆವಿಯೇಟ್‌ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಸುಪ್ರೀಂಕೋರ್ಟ್‌ನಲ್ಲೂ ಇಂದು ಅರ್ಜಿ ಸಲ್ಲಿಸಿದ್ದಾರೆ.
3
+ ಒಂದು ವೇಳೆ, ಸಿದ್ದರಾಮಯ್ಯನವರ ರಿಟ್‌ ಅರ್ಜಿಯು ಕರ್ನಾಟಕ ಹೈಕೋರ್ಟ್‌ನಲ್ಲಿ ತಿರಸ್ಕೃತವಾದರೆ ಅವರ ಮುಂದಿನ ಆಯ್ಕೆ ಸುಪ್ರೀಂ ಕೋರ್ಟ್‌ ಆಗಿರಲಿದೆ. ಆಗ ಈ ಪ್ರಕರಣ ಸುಪ್ರೀಂಕೋರ್ಟ್‌ಗೆ ಬಂದರೆ, ಅಲ್ಲಿ ಸಿದ್ದರಾಮಯ್ಯ ನವರ ಅರ್ಜಿಗೂ ಮೊದಲೇ ತಮ ಅರ್ಜಿಯನ್ನು ಪರಿ ಗಣಿಸುವಂತಾಗಬೇಕು ಎಂದು ಕೇವಿಯಟ್‌ ಅರ್ಜಿ ಸಲ್ಲಿಸಲಾಗಿದೆ.
4
+ ಮುಡಾ ಹಗರಣದ ಮತ್ತೊಬ್ಬ ದೂರುದಾರ ಟಿ.ಜೆ.ಅಬ್ರಹಾಂ ಅವರು, ಸಿದ್ದರಾಮಯ್ಯ ಅವರ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ಕೇವಿಯಟ್‌ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.
5
+ ಇದೇ ಪ್ರಕರಣ ಮತ್ತೊಬ್ಬ ದೂರುದಾರರಾದ ಪ್ರದೀಪ್‌ ಅವರು, ಆ. 16ರಂದೇ ಕರ್ನಾಟಕ ಹೈಕೋರ್ಟ್‌ಗೆ ಕೇವಿಯಟ್‌ ಅರ್ಜಿ ಸಲ್ಲಿಸಿದ್ದರು. ಈ ಮೂವರ ಕೇವಿಯಟ್‌ ಅರ್ಜಿಗಳಿಂದಾಗಿ ಸಿದ್ದರಾಮಯ್ಯನವರಿಗೆ ಕಾನೂನಾತಕವಾಗಿ ಮೂರು ತೊಡಕುಗಳು ಎದುರಾದಂತಾ ಗಿದೆ.
6
+ ಕೇವಿಯಟ್‌ ಅರ್ಜಿ ಎಂದನೇನು?:ಕೇವಿಯಟ್‌ ಅರ್ಜಿಯು ಒಂದು ನಿರ್ದಿಷ್ಟ ಪ್ರಕರಣದಲ್ಲಿ ಯಾವುದೇ ಆದೇಶಗಳು ಅಥವಾ ತೀರ್ಪುಗಳನ್ನು ಜಾರಿಗೊಳಿಸುವ ಮೊದಲು ಅವರಿಗೆ ನೋಟಿಸ್‌‍ ನೀಡುವಂತೆ ವಿನಂತಿಸಲು ನ್ಯಾಯಾಲಯದಲ್ಲಿ ವ್ಯಕ್ತಿ ಅಥವಾ ಪಕ್ಷವು ಸಲ್ಲಿಸಬಹುದಾದ ಕಾನೂನಾತಕ ಮನವಿ.ಯಾವುದೇ ಪ್ರಕರಣದಲ್ಲಿ ಪ್ರತಿವಾದಿಗಳು ಅರ್ಜಿಯನ್ನು ಸಲ್ಲಿಸಿ, ಆ ಅರ್ಜಿಯ ವಿಚಾರಣೆಯನ್ನು ಆರಂಭಿಸುವ ಮೊದಲು ತಮ ವಾದವನ್ನು ಆಲಿಸಬೇಕು ಎಂದು ಅದೇ ಪ್ರಕರಣದ ಮತ್ತೊಂದು ಕಕ್ಷಿದಾರರು ನ್ಯಾಯಾಲಯಕ್ಕೆ ಮನವಿ ಮಾಡುವಂಥದ್ದಾಗಿರುತ್ತದೆ.
7
+ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತಮ ವಿರುದ್ಧ ನೀಡಿರುವ ಪ್ರಾಸಿಕ್ಯೂಷನ್‌ ಅನುಮತಿ ವಿಚಾರಕ್ಕೆ ಸಂಬಂಧಿಸಿದಂತೆ ಶುಕ್ರವಾರದಂದೇ ಕರ್ನಾಟಕ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಲು ಸಿದ್ದರಾಮಯ್ಯ ನಿರ್ಧರಿಸಿದ್ದರು. ಅಂದು ವರಮಹಾಲಕ್ಷಿ ಹಬ್ಬವಾಗಿದ್ದರಿಂದ ಹಾಗೂ ಆನಂತರ ಶನಿವಾರ, ಭಾನುವಾರ ಸಾಲು ಸಾಲು ರಜೆ ಇದ್ದಿದ್ದರಿಂದಾಗಿ ಸೋಮವಾರದಂದು ರಿಟ್‌ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿತ್ತು.
8
+ ಆದರೆ ಅದಕ್ಕೂ ಮೊದಲೇ ಶುಕ್ರವಾರದಂದು ದೂರುದಾರರಲ್ಲೊಬ್ಬರಾದ ಪ್ರದೀಪ್‌ ಅವರು, ಹೈಕೋರ್ಟ್‌ ಗೆ ಕೇವಿಯಟ್‌ ಅರ್ಜಿ ಸಲ್ಲಿಸಿ, ಸಿದ್ದರಾಮಯ್ಯನವರ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವ ಮೊದಲು ದೂರುದಾರರ ಆಕ್ಷೇಪಣೆಗಳನ್ನು ಆಲಿಸಬೇಕೆಂದು ಮನವಿ ಮಾಡಿ ಆ ಮೂಲಕ ಸಿದ್ದರಾಮಯ್ಯನವರಿಗೆ ಸೆಡ್ಡು ಹೊ���ೆದಿದ್ದರು. ಈಗ ಸುಪ್ರೀಂಕೋರ್ಟ್‌ ನಲ್ಲೂ ಕೇವಿಯಟ್‌ ಅರ್ಜಿ ಸಲ್ಲಿಸಲಾಗಿದೆ.
eesanje/url_46_41_4.txt ADDED
@@ -0,0 +1,6 @@
 
 
 
 
 
 
 
1
+ ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ : ಸಚಿವ ಎಚ್.ಕೆ. ಪಾಟೀಲ್
2
+ ಬೆಂಗಳೂರು, ಆ.19-ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾದರೆ ಕಾನೂನು ಸಮರವನ್ನು ಮುಂದುವರೆಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪರಿಸ್ಥಿತಿ ಉದ್ಭವಿಸುವುದಿಲ್ಲ ಎಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ.22 ರಂದು ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ. ಅದೇ ದಿನ ಸಚಿವ ಸಂಪುಟ ಸಭೆ ನಡೆಯಲಿದೆ. ಸಚಿವರು ಈಗಾಗಲೇ ಸಿದ್ದರಾಮಯ್ಯ ಅವರ ಜೊತೆ ಒಟ್ಟಾಗಿ ನಿಂತಿದ್ದಾರೆ. ಅದೇ ರೀತಿ ಕಾಂಗ್ರೆಸ್ನ ಶಾಸಕರು ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿ ಕಾನೂನಿನ ಸಮರವನ್ನು ಮುಂದುವರೆಸುವಂತೆ ಸಲಹೆ ನೀಡಲಿದ್ದಾರೆ ಎಂದರು.
4
+ ಬಿಜೆಪಿ-ಜೆಡಿಎಸ್ ರಾಜಕೀಯ ಕುತಂತ್ರಕ್ಕಾಗಿ ಕೇಂದ್ರ ಸರ್ಕಾರದ ಷಡ್ಯಂತ್ರಕ್ಕೆ ರಾಜ್ಯಪಾಲರು ಮಾಡಿರುವ ಅನ್ಯಾಯದ ಆದೇಶಕ್ಕೆ ಮುಖ್ಯಮಂತ್ರಿಯವರು ರಾಜೀನಾಮೆ ಏಕೆ ನೀಡಬೇಕು? ಎಂದು ಎಚ್.ಕೆ.ಪಾಟೀಲ್ ಪ್ರಶ್ನಿಸಿದರು.ಪ್ರತಿ ತಾಲ್ಲೂಕು ಹಾಗೂ ಕ್ಷೇತ್ರದಲ್ಲಿ ಜನ ಪ್ರತಿಭಟನೆ ನಡೆಸಿ, ಸಿದ್ದರಾಮಯ್ಯ ಅವರ ಜೊತೆಗಿರುವುದಾಗಿ ಹೇಳುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ಗಟ್ಟಿಯಾದ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಹೇಳಿದರು.
5
+ ರಾಜ್ಯಸರ್ಕಾರವನ್ನು ಅಸ್ತಿರಗೊಳಿಸಲು ತೀವ್ರ ಪ್ರಯತ್ನಗಳು ನಡೆಯುತ್ತಿವೆ, ರಾಜ್ಯಪಾಲರ ಮೇಲೆ ಒತ್ತಡ ಹೇರಲಾಗುತ್ತಿದೆ, ರಾಜ್ಯದ ಜನ ಇದಕ್ಕೆ ಸೊಪ್ಪು ಹಾಕುವುದಿಲ್ಲ, ಮೈಸೂರಿನಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನೆಯನ್ನು ಗಮನಿಸಿದ ಬಳಿಕವಾದರೂ ರಾಜ್ಯಪಾಲರು ತಮ ನಿಲುವನ್ನು ಬದಲಾಯಿಸಿಕೊಳ್ಳಬೇಕಿತ್ತು ಎಂದರು.ಶಶಿಕಲಾ ಜೊಲ್ಲೆ, ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಜನಾರ್ಧನರೆಡ್ಡಿ ಅವರ ವಿರುದ್ಧ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಪ್ರಕರಣಗಳು ರಾಜ್ಯಪಾಲರಿಗೆ ಕಂಡಿಲ್ಲವೇ? ಎಂದು ಪ್ರಶ್ನಿಸಿದರು.
6
+ ಬಡವರ ಪರವಾಗಿ ಪಂಚಖಾತ್ರಿ ಯೋಜನೆಗಳನ್ನು ಜಾರಿಗೊಳಿಸಿ ಒಂದು ಕೋಟಿ ಜನರನ್ನು ಬಿಪಿಎಲ್ ವ್ಯಾಪ್ತಿಯಿಂದ ಮೇಲೆತ್ತಲಾಗುತ್ತಿದೆ. ನಮ ತೆರಿಗೆ, ನಮ ಹಕ್ಕು ಎಂದು ದಿಟ್ಟವಾಗಿ ಪ್ರಶ್ನಿಸಲಾಗಿದೆ. ಇದನ್ನು ಬಿಜೆಪಿ-ಜೆಡಿಎಸ್ನವರಿಗೆ ಸಹಿಸಲಾಗುತ್ತಿಲ್ಲ. ರಾಜ್ಯದ ಜನ ಮತ ಹಾಕಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದಿರುವುದು ಅನ್ಯಾಯವೇ ಎಂದು ಪ್ರಶ್ನಿಸಿದರು.
eesanje/url_46_41_5.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ದೇವೇಗೌಡರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಖಾಸಗಿ ವಾಹಿನಿ ಮುಖ್ಯಸ್ಥನಿಗೆ ಒಕ್ಕಲಿಗರ ಸಂಘ ಎಚ್ಚರಿಕೆ
2
+
3
+ ಬೆಂಗಳೂರು,ಆ.19-ಮುತ್ಸದ್ದಿ ರಾಜಕಾರಣಿ ನಮ ಸಮುದಾಯದ ಸರ್ವೋಚ್ಛ ನಾಯಕರು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಬಗ್ಗೆ ಖಾಸಗಿ ವಾಹಿನಿಯ (ಪವರ್‌ ಟಿವಿ) ಮುಖ್ಯಸ್ಥರು ಅವಹೇಳನಕಾರಿ ಹೇಳಿಕೆ ನೀಡಿದ್ದು ಇನ್ನು ಮುಂದೆ ಇಂತಹ ಸುದ್ದಿ ಪ್ರಸಾರ ಮಾಡುವುದನ್ನು ನಿಲ್ಲಿಸದಿದ್ದರೆ ಹೋರಾಟ ಮಾಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಹಾಗೂ ಶಾಸಕ ಸಿ.ಎನ್‌.ಬಾಲಕೃಷ್ಣ ತಿಳಿಸಿದರು.
4
+ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ವಾಹಿನಿಯ ಮಾಲೀಕರು ದೇವೇಗೌಡರ ಬಗ್ಗೆ ಹಗುರವಾಗಿ ಪದೇಪದೇ ಮಾತನಾಡುವುದನ್ನು ನಿಲ್ಲಿಸಬೇಕು. ಒಂದು ವೇಳೆ ಮುಂದುವರೆಸಿದ್ದೇ ಆದರೆ ಸಮುದಾಯದ ವಿವಿಧ ಸಂಘಟನೆಗಳ ಜೊತೆ ದೊಡ್ಡ ಮಟ್ಟದ ಸಭೆ ನಡೆಸಿ ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸಲಾಗುವುದು ಎಂದರು.
5
+ ದೇವೇಗೌಡರ ಬಗ್ಗೆ ಅವಹೇಳನಕಾರಿ ಸುದ್ದಿ ಬಿತ್ತರವಾಗಿರುವುದರ ಬಗ್ಗೆ ಒಕ್ಕಲಿಗ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮಿಜಿಯವರನ್ನು ಭೇಟಿ ಮಾಡಿ ಮಾರ್ಗದರ್ಶನವನ್ನು ಪಡೆಯಲಾಗುವುದು ಎಂದು ಹೇಳಿದರು.
6
+ ಕಾನೂನಿಗಿಂತ ಯಾರೂ ಕೂಡ ದೊಡ್ಡವರಲ್ಲ. ಯಾರೇ ತಪ್ಪು ಮಾಡಿದರೂ ನ್ಯಾಯಾಲಯದ ಮೊರೆ ಹೋಗಬಹುದು. ಇಲ್ಲವೇ ತನಿಖೆ ನಡೆಸುವಂತೆ ಸರ್ಕಾರವನ್ನು ಆಗ್ರಹಿಸಬಹುದಾಗಿದೆ. ಅದನ್ನು ಬಿಟ್ಟು ತೇಜೋವಧೆ ಮಾಡಬಾರದು. ವಾಹಿನಿಯಲ್ಲಿ ಪ್ರಸಾರವಾಗಿರುವ ಸುದ್ದಿ ತುಂಬಾ ನೋವುಂಟು ಮಾಡಿದೆ. ರಾಜ್ಯ, ರಾಷ್ಟ್ರಕ್ಕಾಗಿ ಆರು ದಶಕಗಳ ಕಾಲ ದೇವೇಗೌಡರು ಸಾಕಷ್ಟು ಹೋರಾಟ ನಡೆಸಿ ಸೇವೆಯನ್ನು ಸಲ್ಲಿಸಿದ್ದಾರೆ. ಅಂತವರ ಬಗ್ಗೆ ಅಗೌರವವಾಗಿ ಮಾತನಾಡುವುದು ಸರಿಯಲ್ಲ. ಯಾವುದೇ ಮಾಧ್ಯಮ ಇದುವರೆಗೂ ಅವರ ಬಗ್ಗೆ ಅಗೌರವವಾದ ಸುದ್ದಿ ಪ್ರಕಟಿಸಿಲ್ಲ. ರಾಷ್ಟ್ರಮಟ್ಟದಲ್ಲೂ ಅವರ ಸಾಧನೆ, ಸೇವೆಯ ಬಗ್ಗೆ ಮೆಚ್ಚುಗೆಯ ಸುದ್ದಿ ಪ್ರಸಾರವಾಗಿದೆ ಎಂದರು.
7
+ ಈಗಾಗಲೇ ಅವಹೇಳನಕಾರಿ ರೀತಿ ಹೇಳಿಕೆ ಹಾಗೂ ಸುದ್ದಿ ಪ್ರಸಾರ ಮಾಡಿರುವ ಬಗ್ಗೆ ಕ್ಷಮೆ ಯಾಚಿಸಬೇಕೆಂದು ಅವರು ಆಗ್ರಹಿಸಿದರು.ಸಂಘದ ಉಪಾಧ್ಯಕ್ಷ ಸ್ಟಾರ್‌ ಪ್ರಕಾಶ್‌ ಮಾತನಾಡಿ, ಒಕ್ಕಲಿಗರ ಸಂಘ ಖಾಸಗಿ ಸುದ್ದಿವಾಹಿನಿಯಲ್ಲಿ ದೇವೇಗೌಡರ ಬಗ್ಗೆ ಪ್ರಸಾರವಾಗಿರುವ ಸುದ್ದಿ ತುಂಬಾ ನೋವು ತಂದಿದೆ. ದೇಶಕ್ಕೆ ಸಾಕಷ್ಟು ಕೊಡುಗೆ ನೀಡಿರುವ ಮುತ್ಸದ್ದಿ ಅವರು, ಪಂಜಾಬಿನಲ್ಲಿ ಗೌಡರ ಹೆಸರಿನ್ನು ಭತ್ತದ ಥಳಿಗೆ ಇಟ್ಟಿದ್ದಾರೆ. ಅಂತವರ ಬಗ್ಗೆ ಹಗುರವಾಗಿ ಸುದ್ದಿ ಪ್ರಸಾರ ಮಾಡಿ ಬ್ಲಾಕ್‌ಮೇಲ್‌ ಮಾಡುವುದು ಸರಿಯಲ್ಲ. ಇದನ್ನು ಮುಂದೆ ಸರಿಪಡಿಸಿಕೊಂಡು ಹೋಗದಿದ್ದರೆ ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.
8
+ ನಿರ್ದೇಶಕರ��ದ ಕೆ.ವಿ.ಶ್ರೀಧರ್‌ ಮಾತನಾಡಿ, ದೇವೇಗೌಡರನ್ನು ಅವಮಾನಿಸುವುದು ನಾಡಿನ ಜನರನ್ನು ಅವಮಾನಿಸಿದಂತಾಗುತ್ತದೆ. ಟಿಆರ್‌ಪಿಗಾಗಿ ಅಗೌರವಯುತವಾದ ಸುದ್ದಿ ಪ್ರಸಾರ ಮಾಡಬಾರದು. ಅನ್ಯಾಯವಾಗಿದ್ದರೆ ಕಾನೂನು ಚೌಕಟ್ಟಿನಲ್ಲಿ ಹೋರಾಟ ನಡೆಸಲಿ ಎಂದರು.
9
+ ನಿರ್ದೇಶಕ ಡಾ.ಅಂಜನಪ್ಪ ಮಾತನಾಡಿ , ಖಾಸಗಿ ವಾಹಿನಿ ಜನರಿಗೆ ತಪ್ಪು ಸಂದೇಶ ನೀಡಬಾರದು. ಆಗಿರುವುದನ್ನು ಸರಿಪಡಿಸಿಕೊಂಡು ಮತ್ತೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದರು
10
+ ಕೆನಲಿ ಗೌಡ ಮಾತನಾಡಿ, ದೇವೇಗೌಡರು ಯುವಪೀಳೀಗೆಗೆ ಮಾದರಿಯಾಗುವ ವ್ಯಕ್ತಿತ್ವ ಹೊಂದಿರುವವರು. 92ರ ವಯಸ್ಸಿನಲ್ಲೂ ರಾಜ್ಯಸಭೆಯಲ್ಲಿ ರಾಜ್ಯ ಮತ್ತು ರಾಷ್ಟ್ರದ ಪರವಾಗಿ ದನಿಯೆತ್ತುತ್ತಿದ್ದಾರೆ. ಪಕ್ಷಾತೀತವಾಗಿ ಗೌರವಿಸುವ ಗೌಡರಿಗೆ ಮಾಡಿರುವ ಅವಮಾನ ಕನ್ನಡಿಗರಿಗೆ ಮಾಡಿರುವ ಅವಮಾನವಾಗಿದೆ. ತೇಜೋವಧೆ ನಿಲ್ಲಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಹೇಳಿದರು.
11
+ ಪತ್ರಿಕಾಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ಪುಟ್ಟಸ್ವಾಮಿ, ಪ್ರಧಾನ ಕಾರ್ಯದರ್ಶಿ ದೇವರಾಜು, ನಿರ್ದೇಶಕ ಲೋಕೇಶ್‌ ನಾಗರಾಜಯ್ಯ ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
eesanje/url_46_41_6.txt ADDED
@@ -0,0 +1,5 @@
 
 
 
 
 
 
1
+ ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್‌‍ ಪ್ರತಿಭಟನೆ
2
+ ಬೆಂಗಳೂರು,ಆ.19-ರಾಜ್ಯಾದ್ಯಂತ ಕಾಂಗ್ರೆಸ್‌‍ ಕಾರ್ಯಕರ್ತರು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆದರೆ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಹರತಾಳಗಳು ನಡೆದಿವೆ.
3
+ ಶಾಂತಿಯುತವಾಗಿ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ನಡೆಸಿರುವ ಕಾಂಗ್ರೆಸ್‌‍ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಯವರಿಗೆ ರಾಜ್ಯಪಾಲರ ವಿರುದ್ಧ ಮೇಲನವಿ ಸಲ್ಲಿಸಿದ್ದಾರೆ.
4
+ ಜೊತೆಗೆ ಇ-ಮೇಲ್‌ ಮೂಲಕವೂ ದೂರುಗಳ ಸುರಿಮಳೆಗೈಯ್ಯಲಾಗಿದೆ. ರಾಜ್ಯಪಾಲರು ರಾಜಕೀಯ ಕೈಗೊಂಬೆಯಂತೆ ವರ್ತಿಸಿದ್ದು, ನಿಯಮಬಾಹಿರವಾಗಿ ಅಭಿಯೋಜನೆಗೆ ಅನುಮತಿ ನೀಡಿದ್ದಾರೆ.
5
+ ಈ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ವಜಾಗೊಳಿಸಬೇಕು ಎಂದು ಕಾಂಗ್ರೆಸ್‌‍ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಪ್ರಜಾಪ್ರಭುತ್ವದ ಮಾದರಿಯಲ್ಲಿ ಆಯ್ಕೆಯಾದ ಸರ್ಕಾರವನ್ನು ಅಸ್ತಿರಗೊಳಿಸುವ ಹುನ್ನಾರಕ್ಕೆ ರಾಜಭವನ ದುರ್ಬಳಕೆಯಾಗುತ್ತಿದೆ ಎಂದು ಕಾಂಗ್ರೆಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
eesanje/url_46_41_7.txt ADDED
@@ -0,0 +1,10 @@
 
 
 
 
 
 
 
 
 
 
 
1
+ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ರಿಟ್‌ ಅರ್ಜಿ
2
+ ಬೆಂಗಳೂರು,ಆ.19– ಮುಡಾ ಪ್ರಕರಣದಲ್ಲಿ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ತಡೆಯಾಜ್ಞೆ ಕೋರಿದ್ದಾರೆ.
3
+ ಮುಖ್ಯಮಂತ್ರಿಯವರ ಪರವಾಗಿ ಮಾಜಿ ಅಡ್ವಕೇಟ್‌ ಜನರಲ್‌ ಪ್ರೊ.ರವಿವರ್ಮ ಕುಮಾರ್‌ ವಾದ ಮಂಡಿಸಿದ್ದು, ತುರ್ತು ವಿಚಾರಣೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು.ವಾದವನ್ನು ಪರಿಗಣಿಸಿದ ಹೇಮಂತ್‌ ಚಂದನ್‌ ಗೌಡರ್‌ ಅವರನ್ನೊಳಗೊಂಡ ಪೀಠ ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
4
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ರಿಟ್‌ ಅರ್ಜಿಯಲ್ಲಿ ರಾಜ್ಯಪಾಲರು ನೀಡಿರುವ ಅಭಿಯೋಜನೆಯ ಪೂರ್ವಾನುಮತಿಗೆ ತಡೆಯಾಜ್ಞೆ ನೀಡಲು ಹಾಗೂ ರದ್ದುಪಡಿಸಲು ಮನವಿ ಮಾಡಲಾಗಿದೆ.
5
+ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಅಭಿಯೋಜನೆಯ ಪೂರ್ವಾನುಮತಿಗೆ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ, ಜೆಡಿಎಸ್‌‍ನ ಕಾನೂನು ಘಟಕದ ಪ್ರದೀಪ್‌ ಕುಮಾರ್‌ ಹಾಗೂ ಮೈಸೂರಿನ ಸ್ನೇಹಮಯಿ ಕೃಷ್ಣ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ.
6
+ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆಕ್ಷನ್‌-17, ಭಾರತೀಯ ದಂಡ ಸಂಹಿತೆ ಹಾಗೂ ಭಾರತೀಯ ನ್ಯಾಯ ಸಂಹಿತೆ ವಿವಿಧ ಕಲಂಗಳಡಿ ದೂರು ದಾಖಲಿಸಿ ವಿಚಾರಣೆ ನಡೆಸಲು ರಾಜ್ಯಪಾಲರು ಪೂರ್ವಾನುಮತಿ ನೀಡಿದ್ದಾರೆ.
7
+ ಆದರೆ ಪೂರ್ವಾನುಮತಿ ನೀಡುವ ಮುನ್ನ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸಲ್ಲಿಸಿರುವ ದಾಖಲಾತಿಗಳನ್ನು ರಾಜ್ಯಪಾಲರು ಪರಿಶೀಲನೆ ನಡೆಸಿಲ್ಲ. ಯಾವುದೇ ಪ್ರಾಥಮಿಕ ತನಿಖೆ ನಡೆದಿಲ್ಲ. ಆದರೂ ಪೂರ್ವಾನುಮತಿಗೆ ಅನುಮತಿ ನೀಡಿರುವುದು ಕಾನೂನು ಬಾಹಿರ ಎಂದು ರಿಟ್‌ ಅರ್ಜಿಯಲ್ಲಿ ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ.
8
+ ಪ್ರಾಥಮಿಕ ತನಿಖೆ ನಡೆದು ಅದು ಮೇಲ್ನೋಟಕ್ಕೆ ವಾಸ್ತವಾಂಶ ಕಂಡುಬಂದರೆ ಹೆಚ್ಚಿನ ವಿಚಾರಣೆಗೆ ಸಕ್ಷಮ ಅಧಿಕಾರಿಗಳು ಅಭಿಯೋಜನೆಗೆ ಅನುಮತಿ ಕೋರಬಹುದು. ಮುಖ್ಯಮಂತ್ರಿ ಹುದ್ದೆಯಲ್ಲಿರುವವರ ವಿರುದ್ಧ ವಿಚಾರಣೆಗೆ ಅನುಮತಿ ಕೋರಬೇಕಾದರೆ ಪೊಲೀಸ್‌‍ ಮಹಾನಿರ್ದೇಶಕ ದರ್ಜೆಯ ಅಧಿಕಾರಿ ಅರ್ಜಿ ನೀಡಬೇಕು. ಆದರೆ ಇಲ್ಲಿ ಯಾವುದೇ ಅಂತಹ ನಿಯಮಗಳು ಪಾಲನೆಯಾಗಿಲ್ಲ ಎಂದು ವಾದಿಸಲಾಗಿದೆ.
9
+ ಜೊತೆಗೆ ಸಂವಿಧಾನದ 163 ಪರಿಚ್ಛೇದದನ್ವಯ ರಾಜ್ಯಪಾಲರು ಸಚಿವ ಸಂಪುಟ ಸಭೆಯ ಶಿಫಾರಸನ್ನು ತಿರಸ್ಕರಿಸುವಂತಿಲ್ಲ. ಈ ಹಿಂದೆ ಸಚಿವ ಸಂಪುಟ ಸಭೆ ನಿರ್ಣಯ ಕೈಗೊಂಡು ಅಭಿಯೋಜನೆ ಪೂರ್ವಾನುಮತಿಗೆ ಸಲ್ಲಿಸಿರುವ ದೂರರ್ಜಿಗಳನ್ನು ತಿರಸ್ಕರಿಸಬೇಕು ಮತ್ತು ಅಭಿಯೋಜನೆಗೆ ಅನುಮತಿ ನೀಡಬಾರದು ಎಂದು ರಾಜ್ಯಪಾಲರಿಗೆ ಸಲಹೆ ನೀಡಿತ್ತು. ಅದನ್ನು ತಿರಸ್ಕರಿಸಲಾಗಿದೆ ಎಂದು ಆಕ್ಷೇಪಿಸಲಾಗಿದೆ.
10
+ ಮುಡಾ ಪ್ರಕರಣದ ಅಭಿಯೋಜನೆ ಕೋರ್ಟ್‌ ಮೆಟ್ಟಿಲೇರಿವುದರಿಂದ ಸಿದ್ದರಾಮಯ್ಯನವರ ರಾಜಕೀಯ ಭವಿಷ್ಯದಲ್ಲಿ ತೀವ್ರ ಕುತೂಹಲ ಕೆರಳಿದೆ.
eesanje/url_46_41_8.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಕಾಂಗ್ರೆಸ್‌‍ನೊಳಗೇ ನಡೆಯುತ್ತಿದೆಯಾ ಸಿದ್ದರಾಮಯ್ಯನವರ ಸಿಎಂ ಕುರ್ಚಿಯ ಕಾಲೆಳೆಯುವ ಸಂಚು..?
2
+ ಬೆಂಗಳೂರು,ಆ.19-ಮುಡಾ ಪ್ರಕರಣದ ಚಕ್ರವ್ಯೂಹದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿಲುಕುತ್ತಿದ್ದಂತೆ ಕಾಂಗ್ರೆಸ್‌‍ನಲ್ಲಿ ವಿರೋಧಿ ಪಡೆ ಸದ್ದಿಲ್ಲದೆ ಸಕ್ರಿಯವಾಗಿದ್ದು, ತೆರೆಮರೆಯಲ್ಲಿ ನಾಯಕತ್ವ ಬದಲಾವಣೆಯ ಸಂಚುಗಳು ಆರಂಭಗೊಂಡಿವೆ.
3
+ ಮೇಲ್ನೋಟಕ್ಕೆ ಸಂಪುಟದ ಎಲ್ಲಾ ಸಚಿವರು, ಶಾಸಕರು, ಹೈಕಮಾಂಡ್‌ ನಾಯಕರು, ಸಿದ್ದರಾಮಯ್ಯ ಅವರಿಗೆ ಭಾರಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.ಅಖಂಡವಾದ ಈ ಬೆಂಬಲದ ನಡುವೆಯೂ ರಹಸ್ಯ ಸಭೆಗಳು ರಾಜಕೀಯ ಚಟುವಟಿಕೆಗಳು ಗರಿಗೆದರಿಸಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಖಾಡ ಪ್ರವೇಶಿಸಿರುವುದು ತೀವ್ರ ಕುತೂಹಲ ಕೆರಳಿಸಿದೆ.
4
+ ನಿನ್ನೆ ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಕೆಲ ಶಾಸಕರು ರಹಸ್ಯ ಸಭೆ ನಡೆಸಿದ್ದಾರೆ. ಜೊತೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಒಂದಷ್ಟು ಶಾಸಕರು ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
5
+ ಸಿದ್ದರಾಮಯ್ಯ ಅವರ ವಿರುದ್ಧವಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ದಿನವೇ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿಗೆ ಆಗಮಿಸಿದ್ದರು. ಇದು ಪೂರ್ವನಿರ್ಧರಿತ ಕಾರ್ಯಕ್ರಮ ಎಂದು ಹೇಳಲಾಗಿದ್ದರೂ ರಾಜಕೀಯವಾಗಿ ನಾನಾ ಚರ್ಚೆಗಳನ್ನು ಹುಟ್ಟುಹಾಕಿದೆ.
6
+ ಕಾಂಗ್ರೆಸ್‌‍ನ ಕೆಲ ಶಾಸಕರು ಶ್ಯಾಮನೂರು ಶಿವಶಂಕರಪ್ಪ ಅವರ ನೇತೃತ್ವದಲ್ಲಿ ಮಲ್ಲಿಕಾರ್ಜುನ ಖರ್ಗೆಯವರನ್ನು ಮನವೊಲಿಸಿ ರಾಜ್ಯರಾಜಕಾರಣಕ್ಕೆ ಮರಳುವಂತೆ ಹಾಗೂ ಮುಖ್ಯಮಂತ್ರಿ ಸ್ಥಾನ ಒಪ್ಪಿಕೊಳ್ಳುವಂತೆ ಒತ್ತಡ ಹಾಕುತ್ತಿದ್ದಾರೆ ಎನ್ನಲಾಗಿದೆ.
7
+ ಇದಕ್ಕೆ ನಕಾರಾತಕ ಪ್ರತಿಕ್ರಿಯೆ ನೀಡಿರುವ ಖರ್ಗೆಯವರು ಸದ್ಯಕ್ಕೆ ಅಂತಹ ಚರ್ಚೆಗಳಿಲ್ಲ. ತಮಗೆ ರಾಜ್ಯ ರಾಜಕೀಯದ ಬಗ್ಗೆ ಆಸಕ್ತಿಯೇ ಇಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿಯಾಗಿ ಮುಂದುವರೆಸಬೇಕು. ಒಂದು ವೇಳೆ ಎಫ್‌ಐಆರ್‌ ದಾಖಲಾದ ಬಳಿಕ ರಾಜೀನಾಮೆ ನೀಡಲೇಬೇಕು ಎಂಬ ಪರಿಸ್ಥಿತಿ ಬಂದರೆ ಪರ್ಯಾಯ ನಾಯಕತ್ವಕ್ಕೆ ಮಲ್ಲಿಕಾರ್ಜುನ ಖರ್ಗೆಯವರೇ ಬರಬೇಕು. ಉಳಿದಂತೆ ಯಾರಿಗೂ ಅವಕಾಶ ನೀಡಬಾರದು ಎಂದು ಒಳಗೊಳಗೇ ಒತ್ತಡ ಹೆಚ್ಚುತ್ತಿದೆ.
8
+ ಈ ನಡುವೆ ಇದೇ 23 ರಂದು ದೆಹಲಿಗೆ ಬರುವಂತೆ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್‌ ಬುಲಾವ್‌ ನೀಡಿರುವುದು ಮತ್ತಷ್ಟು ಬೆಳವಣಿಗೆಗಳಿಗೆ ಕಾರಣವಾಗಿದೆ.ಅಂದು ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯನವರು ಸೋನಿಯಾಗಾಂಧಿ ಮತ್ತು ರಾಹುಲ್‌ಗಾಂಧಿಯವರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗಿದೆ.
9
+ ಈ ಮೊದಲು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಎರಡು ಬಾರಿ ದೆಹಲಿಗೆ ತೆರಳಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿ ವಿವರಣೆ ನೀಡಿದ್ದರು.ಅದರ ಹೊರತಾಗಿಯೂ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿದ ಬಳಿಕ ನಡೆಯುತ್ತಿರುವ ಬೆಳವಣಿಗೆಗಳು ಕಾಂಗ್ರೆಸ್‌‍ನ ವರ್ಚಸ್ಸಿಗೆ ಧಕ್ಕೆ ಉಂಟುಮಾಡುವಂತಿದೆ.
10
+ ಹೀಗಾಗಿ ಅಖಿಲ ಭಾರತ ಮಟ್ಟದಲ್ಲಿ ಕಾಂಗ್ರೆಸ್‌‍ ತನ್ನ ಸೈದ್ಧಾಂತಿಕ ನಿಲುವುಗಳಿಗೆ ಕಟಿಬದ್ಧರಾಗಲು ಎಫ್‌ಐಆರ್‌ ದಾಖಲಾದ ಬಳಿಕ ರಾಜೀನಾಮೆ ಅನಿವಾರ್ಯವಾಗಬಹುದು ಎಂಬ ಸಂದೇಶ ರವಾನೆಯಾಗಿದೆ.
11
+ ಈ ನಿಟ್ಟಿನಲ್ಲಿ ಚರ್ಚೆ ಮಾಡುವ ಸಲುವಾಗಿಯೇ ಸಿದ್ದರಾಮಯ್ಯನವರನ್ನು ದೆಹಲಿಗೆ ಆಹ್ವಾನಿಸಲಾಗಿದೆ ಎಂದು ತಿಳಿದುಬಂದಿದೆ.ಇತ್ತ ರಾಜ್ಯಪಾಲರನ್ನು ಬಳಸಿಕೊಂಡು ಬಿಜೆಪಿ ರಾಜ್ಯಸರ್ಕಾರವನ್ನು ಅಸ್ತಿರಗೊಳಿಸಲು ಪ್ರಯತ್ನಿಸುತ್ತಿದೆ ಎಂಬ ಟೀಕೆಗಳು ವ್ಯಾಪಕವಾಗಿವೆ.
12
+ ರಾಜಕೀಯವಾಗಿ ಪ್ರತಿಸಮರ ಏನೇ ಇದ್ದರೂ ಎಫ್‌ಐಆರ್‌ದಾಖಲಾದ ಬಳಿಕ ಅಧಿಕಾರದಲ್ಲಿ ಮುಂದುವರೆಯುವುದು ಕಷ್ಟವಾಗಬಹುದು. ಅದಕ್ಕಾಗಿಯೇ ಶಾಸಕಾಂಗ ಸಭೆ ಕರೆದು ಶಾಸಕರ ಅಭಿಪ್ರಾಯ ಸಂಗ್ರಹಿಸುವಂತೆ ಹೈಕಮಾಂಡ್‌ ಸೂಚಿಸಿದೆ ಎನ್ನಲಾಗಿದೆ.
13
+ ಈ ಮೊದಲಿನಂತೆ ಶಾಸಕರ ಬೆಂಬಲ ಸಿದ್ದರಾಮಯ್ಯ ಅವರಿಗೆ ಮುಂದುವರೆಯಲಿದೆಯೇ ಅಥವಾ ಪರಿಸ್ಥಿತಿ ಏರುಪೇರಾಗಲಿದೆಯೇ ಎಂಬ ಕುರಿತು ಹೈಕಮಾಂಡ್‌ ನಿಗಾ ವಹಿಸುತ್ತಿದೆ ಎನ್ನಲಾಗಿದೆ.
14
+ ಅಭಿಯೋಜನೆಗೆ ಅನುಮತಿ ನೀಡುವುದಕ್ಕೆ ನ್ಯಾಯಾಲಯದಿಂದ ತಡೆಯಾಜ್ಞೆ ತರುವ ಮೂಲಕ ಕಾನೂನು ಸಮರವನ್ನು ಮುಂದಿಟ್ಟುಕೊಂಡು ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರೆಯುವ ಪ್ರಯತ್ನ ನಡೆಸುತ್ತಿದ್ದಾರೆ.ಇದರ ನಡುವೆ ತೆರೆಮರೆಯಲ್ಲಿ ಆಂತರಿಕ ವಿರೋಧಿಗಳು ಮಲ್ಲಿಕಾರ್ಜುನ ಖರ್ಗೆಯವರನ್ನು ಮುಂದಿಟ್ಟುಕೊಂಡು ಸಿದ್ದರಾಮಯ್ಯನವರಿಗೆ ಖೆಡ್ಡ ತೋಡಲು ತಯಾರಿ ನಡೆಸುತ್ತಿದ್ದಾರೆ.
eesanje/url_46_41_9.txt ADDED
@@ -0,0 +1,7 @@
 
 
 
 
 
 
 
 
1
+ ಕಾಂಗ್ರೆಸ್‌‍ ಸರ್ಕಾರದಲ್ಲಿ ಸ್ತ್ರೀಪೀಡಕರು, ದುರುಳರು, ಅತ್ಯಾಚಾರಿಗಳ ಅಟ್ಟಹಾಸ ಮಿತಿಮೀರಿದೆ : ವಿಜಯೇಂದ್ರ
2
+ ಬೆಂಗಳೂರು,ಆ.19-ಬೆಂಗಳೂರಿನಲ್ಲಿ ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಂಡಿಸಿದ್ದಾರೆ.
3
+ ಈ ಸಂಬಂಧ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಟ್ಟೀಟ್‌ ಮಾಡಿರುವ ಅವರು, ರಾಜ್ಯದ ಕಾಂಗ್ರೆಸ್‌‍ ಸರ್ಕಾರದಲ್ಲಿ ಸ್ತ್ರೀಪೀಡಕರು, ದುರುಳರು, ಅತ್ಯಾಚಾರಿಗಳ ಅಟ್ಟಹಾಸ ವಿಪರೀತಕ್ಕೆ ಹೋಗುತ್ತಿದೆ. ಸರಣಿ ರೂಪದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿವೆ.
4
+ ಬೆಂಗಳೂರಿನ ಹೆಚ್‌ಎಸ್‌‍ಆರ್‌ಲೇ ಔಟ್‌ನಲ್ಲಿ ಆಟೋದಲ್ಲಿ ಹೋಗುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಅತ್ಯಂತ ಹೇಯ ಹಾಗೂ ರಾಕ್ಷಸೀ ಕೃತ್ಯವಾಗಿದೆ. ಮರುಕಳಿಸುತ್ತಲೇ ಇರುವ ಇಂಥಾ ಘಟನೆಗಳಿಂದ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ತಲೆತಗ್ಗಿಸುವಂತಾಗಿದೆ.
5
+ , , & @, . , …../J9zJaRl2zI
6
+ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಘನತೆ ಕುಗ್ಗುತ್ತಿದೆ. ಮುಖ್ಯಮಂತ್ರಿಯಾದಿಯಾಗಿ ಸರ್ಕಾರದ ಯಾರೊಬ್ಬರೂ ಈ ಬಗ್ಗೆ ಗಂಭೀರತೆ ಪ್ರದರ್ಶಿಸದೇ ಉಡಾೆ ಧೋರಣೆ ಅನುಸರಿಸುತ್ತಿರುವ ಪರಿ ನೋಡಿದರೆ ಸರ್ಕಾರವೇ ಸೀ ಕುಲ ಪೀಡಕರ ರಕ್ಷಣೆಗೆ ನಿಂತಿರುವ ಅನುಮಾನ ಮೂಡಿಸುತ್ತಿದೆ.
7
+ ತಕ್ಷಣವೇ ಯುವತಿಯ ರಕ್ಷಣೆಗೆ ಮುಂದಾಗಿ ಪೈಶಾಚಿಕ ಕೃತ್ಯ ಎಸಗಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
eesanje/url_46_42_1.txt ADDED
@@ -0,0 +1,8 @@
 
 
 
 
 
 
 
 
 
1
+ ಶಾಸಕಾಂಗ ಸಭೆ ಕರೆದ ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು,ಆ.18-ರಾಜ್ಯಪಾಲರ ಅಭಿಯೋಜನೆ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕಾಂಗ ಸಭೆ ಕರೆಯುವ ಮೂಲಕ ತಮ ಪಕ್ಷದ ಚುನಾಯಿತ ಪ್ರತಿನಿಧಿಗಳ ವಿಶ್ವಾಸ ಗಳಿಸಲು ಮುಂದಾಗಿದ್ದಾರೆ.
3
+ ಗುರುವಾರ ಸಂಜೆ 4 ಗಂಟೆಗೆ ವಿಧಾನಸೌಧದ ಸಮೇಳನ ಸಭಾಂ ಗಣದಲ್ಲಿ ಶಾಸಕಾಂಗ. ಸಭೆಯನ್ನು ಆಯೋಜಿಸಲಾಗಿದೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ವಿರುದ್ಧ ತನಿಖೆ ನಡೆಸುವ ಅಭಿಯೋಜನೆಗೆ ಅನುಮತಿ ನೀಡಿದ್ದಾರೆ.
4
+ ನ್ಯಾಯಾಲಯದಿಂದ ತನಿಖೆಗೆ ಆದೇಶವಾದರೆ ಎಫ್ಐಆರ್ ದಾಖಲಾಗಲಿದ್ದು, ಮುಂದಿನ ಕಾನೂನು ಕ್ರಮಗಳು ಜರುಗಲಿವೆ. ಅಂತಹ ಸಂದರ್ಭದಲ್ಲಿ ವಿರೋಧ ಪಕ್ಷಗಳು, ಮುಖ್ಯಮಂತ್ರಿಯವರು ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಒತ್ತಡವನ್ನು ಹೆಚ್ಚಿಸಲಿದ್ದಾರೆ.
5
+ ಹೀಗಾಗಿ ಎಚ್ಚೆತ್ತುಕೊಂಡಿರುವ ಸಿದ್ದರಾಮಯ್ಯ ಪ್ರತಿ ಹಂತದಲ್ಲೂ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುತ್ತಿದ್ದಾರೆ. ಸಾಮಾನ್ಯವಾಗಿ ಅಧಿವೇಶನ ನಡೆಯುವ ವೇಳೆಗೆ ಶಾಸಕಾಂಗ ಸಭೆ ನಡೆಸುವುದು ರೂಢಿ. ಆದರೆ ರಾಜಕೀಯ ತುರ್ತು ಸಂದರ್ಭ ಎದುರಾಗಿರುವುದರಿಂದ ಅಕಾಲಿಕ ಸಭೆಯನ್ನು ಆಯೋಜಿಸಲಾಗಿದೆ.
6
+ ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸುತ್ತಿದ್ದಂತೆ ಸಚಿವ ಸಂಪುಟದ ವಿಶೇಷ ಸಭೆ ನಡೆಸಿ ಅಭಿಯೋಜನೆಯ ಪೂರ್ವಾನುಮತಿ ಬಯಸಿದ ದೂರದನ್ನು ತಿರಸ್ಕಾರ ಮಾಡಬೇಕು ಮತ್ತು ಅಭಿಯೋಜನೆಗೆ ಅನುಮತಿ ನೀಡಬಾರದೆಂಬ ಸಲಹೆ ರೂಪದ ನಿರ್ಣಯವನ್ನು ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಅದನ್ನೂ ಮೀರಿ ರಾಜ್ಯಪಾಲರು ಅನುಮತಿ ನೀಡಿದ್ದರಿಂದಾಗಿ ನಿನ್ನೆ ಮತ್ತೊಮೆ ತುರ್ತು ಸಚಿವ ಸಂಪುಟ ಸಭೆ ನಡೆಸಿ ರಾಜ್ಯಪಾಲರ ನಿರ್ಣಯವನ್ನು ಖಂಡಿಸಲಾಗಿದೆ. ಮುಖ್ಯಮಂತ್ರಿಗೆ ಸರ್ವಾನುಮತದ ಬೆಂಬಲ ಸಂಪುಟದಲ್ಲಿ ವ್ಯಕ್ತವಾಗಿದೆ.
7
+ ಮುಖ್ಯಮಂತ್ರಿಯವರು ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ತಮಗೆ ಹೈಕಮಾಂಡ್, ಪಕ್ಷದ ಕಾರ್ಯಕರ್ತರ ಹಾಗೂ ಶಾಸಕರ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದ್ದರು.
8
+ ವಿರೋಧ ಪಕ್ಷಗಳ ಟೀಕೆಗಳ ನಡುವೆಯೂ ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯನವರಿಗೆ ಒಗ್ಗಟ್ಟಿನ ಬೆಂಬಲ ಕಂಡುಬರುತ್ತಿದೆ. ಇದನ್ನು ಅಧಿಕೃತವಾಗಿ ಖಚಿತಪಡಿಸಿಕೊಳ್ಳಲು ಸಿದ್ದರಾಮಯ್ಯ ಶಾಸಕಾಂಗ ಸಭೆ ಕರೆದಿದ್ದಾರೆ.
eesanje/url_46_42_10.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಅಭಿಯೋಜನೆಗೆ ಅನುಮತಿ ಬೆನ್ನಲ್ಲೇ ವಿಶೇಷ ತುರ್ತು ಸಚಿವ ಸಂಪುಟ ಸಭೆ
2
+ ಬೆಂಗಳೂರು,ಆ.17-ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ಅಭಿಯೋಜನೆಗೆ ಅನುಮತಿ ನೀಡಿರುವುದರ ವಿರುದ್ದ ಕಾನೂನು ಸಮರದ ಚರ್ಚೆ ನಡೆಸಲು ಸಚಿವ ಸಂಪುಟ ತುರ್ತು ಹಾಗೂ ವಿಶೇಷ ಸಭೆ ಕರೆಯಲಾಗಿದೆ.
3
+ ಇಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಹಿಂದೆ ನಡೆದಿದ್ದ ಸಚಿವ ಸಂಪುಟ ಸಭೆಗೆ ಸಿದ್ದರಾಮಯ್ಯ ಗೈರು ಹಾಜರಾಗಿದ್ದರು. ತಮ ಮೇಲೆಯೇ ಆರೋಪ ಇರುವುದರಿಂದ ಸಚಿವ ಸಂಪುಟ ಸಭೆ ನನ್ನ ನೇತೃತ್ವದಲ್ಲಿ ನಡೆಯುವುದು ಸೂಕ್ತವಲ್ಲ ಎಂಬ ಕಾರಣಕ್ಕೆ ಅವರು ಹಿಂದೆ ಸರಿದಿದ್ದರು.
4
+ ಕೊನೆಗೆ ಮುಖ್ಯಮಂತ್ರಿಗಳ ಗೈರು ಹಾಜರಿಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಅಭಿಯೋಜನೆಗೆ ಅನುಮತಿ ನೀಡುವಂತೆ ಸಲ್ಲಿಸಲಾಗಿರುವ ದೂರು ಅರ್ಜಿಗಳನ್ನು ತಿರಸ್ಕಾರ ಮಾಡಬೇಕು ಹಾಗೂ ಅಭಿಯೋಜನೆಗೆ ಅನುಮತಿ ನೀಡಬಾರದು ಎಂಬ ಸಲಹೆಯನ್ನು ರಾಜ್ಯಪಾಲರಿಗೆ ನೀಡಲಾಗಿತ್ತು.
5
+ ಅದನ್ನು ಬದಿಗಿರಿಸಿ ಕೊನೆಗೂ ರಾಜ್ಯಪಾಲರು ಪೂರ್ವಾನುಮತಿ ನೀಡುವ ಮೂಲಕ ರಾಜಕೀಯ ಹೈಡ್ರಾಮಕ್ಕೆ ಮಹತ್ವದ ತಿರುವು ನೀಡಿದ್ದಾರೆ. ಈಗಿರುವ ಪರಿಸ್ಥಿತಿಯಲ್ಲಿ ಮುಂದಿನ ಕಾನೂನು ಸಮರದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ. ಸಚಿವ ಸಂಪುಟದಲ್ಲಿ ಅಭಿಯೋಜನೆಯ ವಿರುದ್ಧವಾಗಿ ಸರ್ಕಾರದ ವತಿಯಿಂದಲೇ ಹೈಕೋರ್ಟ್ಗೆ ಮೇಲನವಿ ಸಲ್ಲಿಸುವ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆಗಳಿವೆ.
6
+ ಆದರೆ ಸರ್ಕಾರ ಎಂದರೆ ರಾಜ್ಯಪಾಲರು. ಸಾಂವಿಧಾನಿಕ ಮುಖ್ಯಸ್ಥರೂ ಆಗಿರುವ ರಾಜ್ಯಪಾಲರ ನಿರ್ಧಾರಗಳೇ ಅಂತಿಮವೇ ? ಅಥವಾ ಚುನಾಯಿತ ಪ್ರತಿನಿಧಿಗಳನ್ನೊಳಗೊಂಡ ಸಂಪುಟದ ನಿರ್ಧಾರ ಮುಖ್ಯವೇ ಎಂಬ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿದೆ.
7
+ ಸರ್ಕಾರದ ವತಿಯಿಂದ ಮುಖ್ಯಮಂತ್ರಿಗಳ ಪರವಾಗಿ ರಾಜ್ಯಪಾಲರ ನಿರ್ಣಯವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಿದರೆ, ಸರ್ಕಾರದ ವಿರುದ್ಧ ಸರ್ಕಾರವೇ ನಿಂತಂತಹ ಸನ್ನಿವೇಶ ಎದುರಾಗಲಿದೆ. ಹೀಗಾಗಿ ಸಾಂವಿಧಾನಿಕ ಬಿಕಟ್ಟು ಉಲ್ಬಣಗೊಳ್ಳುವ ಆತಂಕವಿದೆ.ಜೊತೆಗೆ ದೂರುದಾರರು ರಾಜ್ಯಪಾಲರಿಗೆ ಸಲ್ಲಿಸಿರುವ ಅರ್ಜಿಯಲ್ಲಿ ಸಾಕಷ್ಟು ಕಾನೂನಿನ ತೊಡಕುಗಳಿವೆ. ಮುಡಾ ಪ್ರಕರಣದಲ್ಲಿ ಪರ್ಯಾಯ ನಿವೇಶನ ಪಡೆದುಕೊಂಡಿರುವುದು ಪಾರ್ವತಿ ಸಿದ್ದರಾಮಯ್ಯ ಅವರು. ಆದರೆ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ.
8
+ ನಿವೇಶನಗಳ ಹಂಚಿಕೆಯಾಗಿದ್ದ ವೇಳೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರಲಿಲ್ಲ. ಆದರೂ ಪ್ರಭಾವ ಬಳಕೆಯಾಗಿದೆ, ಭ್ರಷ್ಟಾಚಾರ ನಡೆಸಿದ್ದಾರೆ ಎಂಬುದು ಗಂಭೀರ ಚರ್ಚೆಗೆ ಗ್ರಾಸವಾಗಿದೆ.ಬಿಜೆಪಿ ಸರ್ಕಾರದ ಅವಧಿಯಲ್ಲೇ ಅದರಲ್ಲೂ ಮುಡಾದಲ್ಲಿ ಬಿಜೆಪಿಯ ನಾಯಕರೇ ಅಧ್ಯಕ್ಷರಾಗಿದ್ದ ವೇಳೆ ನಿವೇಶನ ಹಂಚಿಕೆ ಮಾಡಲಾಗಿದೆ. ಪಾರ್ವತಿ ಸಿದ್ದರಾಮಯ್ಯನವರಿಗೆ ಅಷ್ಟೇ ಅಲ್ಲದೆ ಹಲವಾರು ಮಂದಿಗೆ ಬದಲಿ ನಿವೇಶನಗಳನ್ನು ನೀಡಲಾಗಿದೆ.
9
+ ಪ್ರಕರಣವೊಂದರಲ್ಲಿ ಹೈಕೋರ್ಟ್ ಮುಡಾಗೆ ಛೀಮಾರಿ ಹಾಕಿ ಅರ್ಜಿದಾರರ ಪರವಾಗಿ ತೀರ್ಪು ನೀಡಿತ್ತು. ಆದರೆ ಸಿದ್ದರಾಮಯ್ಯ ಅವರ ಪ್ರಕರಣದಲ್ಲಿ ಭೂಮಿಯ ಪರಭಾರೆಯಿಂದ ಶುರುವಾಗಿ ಹಲವಾರು ಲೋಪಗಳನ್ನು ವಿರೋಧ ಪಕ್ಷದ ನಾಯಕರು ಪ್ರಸ್ತಾಪಿಸಿದ್ದಾರೆ.ಲೋಪಗಳು ನಡೆದಿರುವ ಕಾಲಾವಧಿ ಮತ್ತು ಸಿದ್ದರಾಮಯ್ಯ ಅಧಿಕಾರದಲ್ಲಿರುವ ಕಾಲಾವಧಿ ಎರಡೂ ಭಿನ್ನವಾಗಿವೆ.
10
+ ಸಿದ್ದರಾಮಯ್ಯ ಅವರು ಹೇಳಿರುವ ಪ್ರಕಾರ ತಾವು ಯಾವುದೇ ಪ್ರಭಾವ ಬೀರಿಲ್ಲ. ನಾನು ಸಹಿ ಮಾಡಿರುವ ಒಂದೇ ಒಂದು ಕಾಗದವನ್ನು ತೋರಿಸಿ ಎಂದು ಪದೇ ಪದೇ ಹೇಳುತ್ತಿದ್ದಾರೆ. ಹಾಗಿದ್ದರೂ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಅದರಲ್ಲೂ ಹಿಂದಿನ ಐಪಿಸಿ ಸೆಕ್ಷನ್ಗಳು ಹಾಗೂ ಪ್ರಸ್ತುತ ಚಾಲ್ತಿಯಲ್ಲಿರುವ ಭಾರತೀಯ ನ್ಯಾಯಸಂಹಿತೆ ಜೊತೆಗೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಗಳ ಬಹುತೇಕ ಸೆಕ್ಷನ್ಗಳನ್ನು ಉಲ್ಲೇಖ ಮಾಡಲಾಗಿದೆ.
11
+ ಭೂಮಿ ಪರಭಾರೆ ಆಗಿರುವುದು, ನಿವೇಶನ ಹಂಚಿಕೆಯಾಗಿರುವುದು ಎಲ್ಲವೂ 2021ರ ಹಿಂದೆ. ಭಾರತೀಯ ನ್ಯಾಯ ಸಂಹಿತೆ ಅನುಸಾರ 2024ರ ಜುಲೈ 1ರ ನಂತರದ ಕೃತ್ಯಗಳನ್ನು ಹೊಸ ಕಾನೂನುಗಳಡಿ ದಾಖಲಿಸಲು ಅವಕಾಶವಿದೆ. ಈ ಹಿಂದೆ ನಡೆದಿರುವ ಪ್ರಕರಣಗಳನ್ನು ಹೊಸ ಕಾನೂನಿನಡಿ ದಾಖಲಿಸಲು ಅಭಿಯೋಜನೆಗೆ ಅನುಮತಿ ನೀಡಿರುವ ತಾಂತ್ರಿಕ ಅಂಶಗಳನ್ನು ಪ್ರಶ್ನಿಸಲು ಚರ್ಚಿಸಲಾಗಿದೆ.
eesanje/url_46_42_11.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ಅತ್ಯಾಚಾರವೆಸಗಿ ವೈದ್ಯೆಯ ಹತ್ಯೆ ಖಂಡಿಸಿ ದೇಶಾದ್ಯಂತ ವೈದ್ಯರ ಪ್ರತಿಭಟನೆ, ರಾಜ್ಯದಲ್ಲೂ ರೋಗಿಗಳು ಪರದಾಟ
2
+ ನವದೆಹಲಿ/ಬೆಂಗಳೂರು,ಆ.17-ಕೋಲ್ಕತ್ತಾದಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಇಂದು ತಮ 24 ಗಂಟೆಗಳ ರಾಷ್ಟ್ರ ಹಾಗೂ ರಾಜ್ಯ ವ್ಯಾಪಿ ವೈದ್ಯರು ಪ್ರತಿಭಟನೆ ನಡೆಸಿದ್ದರಿಂದ ಹೊರರೋಗಿಗಳು ಚಿಕಿತ್ಸೆಗಾಗಿ ಪರದಾಡುವಂತಾಯಿತು.
3
+ ಕೋಲ್ಕತ್ತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಭೀಕರ ಘಟನೆ ಖಂಡಿಸಿ ದೇಶಾದ್ಯಂತ ವೈದ್ಯರು ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಒಪಿಡಿ ಸೇವೆಯಲ್ಲಿ ವ್ಯತ್ಯಯವಾಗಿ ರೋಗಿಗಳು ಪರದಾಡುವಂತಾಯಿತು.
4
+ ಇಂದು ಬೆಳಿಗ್ಗೆ 6 ಗಂಟೆಗೆ ಪ್ರಾರಂಭವಾಗುವ 24 ಗಂಟೆಗಳ ಕಾಲ ತುರ್ತು ರಹಿತ ಆರೋಗ್ಯ ಸೇವೆಗಳನ್ನು ರಾಷ್ಟ್ರವ್ಯಾಪಿ ಹಿಂತೆಗೆದುಕೊಳ್ಳುವುದಾಗಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಘೋಷಿಸಿದೆ. ಪ್ರತಿಭಟನೆಯ ನಡುವೆಯೂ ಎಲ್ಲಾ ಅಗತ್ಯ ಸೇವೆಗಳನ್ನು ಮತ್ತು ಗಾಯಾಳುಗಳನ್ನು ನಿರ್ವಹಿಸಲಾಗುವುದು ಎಂದು ತಿಳಿಸಿದೆ. ಆರ್‌ಜಿ ಕರ್‌ ಘಟನೆಯು ಆಸ್ಪತ್ರೆಯಲ್ಲಿನ ಹಿಂಸಾಚಾರದ ಎರಡು ಆಯಾಮಗಳನ್ನು ಮುನ್ನೆಲೆಗೆ ತಂದಿದೆ: ಮಹಿಳೆಯರಿಗೆ ಸುರಕ್ಷಿತ ಸ್ಥಳಗಳ ಕೊರತೆಯಿಂದಾಗಿ ಅನಾಗರಿಕ ಪ್ರಮಾಣದ ಅಪರಾಧ ಮತ್ತು ಸಂಘಟಿತ ಭದ್ರತಾ ಪ್ರೋಟೋಕಾಲ್‌ ಕೊರತೆಯಿಂದಾಗಿ ಗೂಂಡಾಗಿರಿ ನಡೆದಿದೆ ಎಂದು ಐಎಂಎ ಹೇಳಿದೆ.
5
+ ಅಪರಾಧ ಮತ್ತು ವಿಧ್ವಂಸಕ ಕತ್ಯಗಳು ರಾಷ್ಟ್ರದ ಆತಸಾಕ್ಷಿಯನ್ನು ಆಘಾತಗೊಳಿಸಿವೆ. ಇಂದು ವೈದ್ಯಕೀಯ ಭ್ರಾತತ್ವ ಮತ್ತು ರಾಷ್ಟ್ರ ಎರಡೂ ಬಲಿಪಶುಗಳಾಗಿವೆ ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.ವೈದ್ಯರು ಮತ್ತು ಆಸ್ಪತ್ರೆಗಳ ವಿರುದ್ಧದ ಹಿಂಸಾಚಾರವನ್ನು ಪರಿಹರಿಸಲು ಇದು ಮಹತ್ವದ ನೀತಿಯನ್ನು ಬಯಸುತ್ತದೆ.
6
+ 1897 ರ ಸಾಂಕ್ರಾಮಿಕ ರೋಗಗಳ ಕಾಯಿದೆಗೆ 2023 ರಲ್ಲಿ ಮಾಡಿದ ತಿದ್ದುಪಡಿಗಳನ್ನು 2019ರ ಪ್ರಸ್ತಾವಿತ ಆಸ್ಪತ್ರೆ ಸಂರಕ್ಷಣಾ ಮಸೂದೆಗೆ ಸೇರಿಸುವ ಕೇಂದ್ರ ಕಾಯಿದೆಗೆ ವೈದ್ಯರ ದೇಹವು ಒತ್ತಾಯಿಸುತ್ತಿದೆ. ಈ ಕ್ರಮವು 25 ರಾಜ್ಯಗಳಲ್ಲಿ ಅಸ್ತಿತ್ವದಲ್ಲಿರುವ ಶಾಸನವನ್ನು ಬಲಪಡಿಸುತ್ತದೆ ಎಂದು ಅದು ಹೇಳಿದೆ. ಈ ಪರಿಸ್ಥಿತಿಯಲ್ಲಿ ಕೋವಿಡ್‌ ಸಾಂಕ್ರಾಮಿಕ ಸಮಯದಲ್ಲಿ ಜಾರಿಗೊಳಿಸಲಾದ ಸುಗ್ರೀವಾಜ್ಞೆಯಂತೆಯೇ ಸೂಕ್ತವೆಂದು ಐಎಂಎ ಸೂಚಿಸಿದೆ.
7
+ ಆಸ್ಪತ್ರೆಗಳನ್ನು ಸುರಕ್ಷಿತ ವಲಯಗಳೆಂದು ಘೋಷಿಸಬೇಕೆಂದು ಐಎಂಎ ಒತ್ತಾಯಿಸಿದೆ ಮತ್ತು ಮೊದಲ ಹಂತವು ಕಡ್ಡಾಯ ಭದ್ರತಾ ಅರ್ಹತೆಗಳನ್ನು ಹೊಂದಿದೆ. ಎಲ್ಲಾ ಆಸ್ಪತ್ರೆಗಳ ಭದ್ರತಾ ಪ್ರೋಟೋಕಾಲ್‌ಗಳು (ಅದಕ್ಕಿಂತ) ವಿಮಾನ ನಿಲ್ದಾಣಕ್ಕಿಂತ ಕಡಿಮೆಯಿರಬಾರದು. ಆಸ್ಪತ್ರೆಗಳನ್ನು ಕಡ್ಡಾಯ ಭದ್ರತಾ ಅರ್ಹತೆಗಳೊಂದಿಗೆ ಸುರಕ್ಷಿತ ವಲಯಗಳಾಗಿ ಘೋಷಿಸುವುದು ಮೊದಲ ಹಂತವಾಗಿದೆ. ಸಿಸಿಟಿವಿಗಳು, ಭದ್ರತಾ ಸಿಬ್ಬಂದಿಯ ನ���ಯೋಜನೆ ಮತ್ತು ಪ್ರೋಟೋಕಾಲ್‌ಗಳನ್ನು ಅನುಸರಿಸಬಹುದು ಎಂದು ಅದು ತಿಳಿಸಿದೆ.
8
+ ಸಂತ್ರಸ್ತೆ ಇದ್ದ 36 ಗಂಟೆಗಳ ಡ್ಯೂಟಿ ಶಿಫ್‌್ಟ ಮತ್ತು ವಿಶ್ರಾಂತಿ ಪಡೆಯಲು ಸುರಕ್ಷಿತ ಸ್ಥಳಗಳ ಕೊರತೆ ಸೇರಿದಂತೆ ನಿವಾಸಿ ವೈದ್ಯರ ಕೆಲಸದ ಮತ್ತು ಜೀವನ ಪರಿಸ್ಥಿತಿಗಳ ಸಂಪೂರ್ಣ ಕೂಲಂಕುಷ ಪರೀಕ್ಷೆಗೆ ಒತ್ತಾಯಿಸಿದೆ.
9
+ ಕೋಲ್ಕತ್ತಾದ ಭಯಾನಕತೆಯನ್ನು ನಿರ್ದಿಷ್ಟ ಸಮಯದ ಚೌಕಟ್ಟಿನಲ್ಲಿ ಸೂಕ್ಷ್ಮ ಮತ್ತು ವತ್ತಿಪರ ತನಿಖೆಗೆ ಕರೆ ನೀಡಿದೆ ಮತ್ತು ಆಸ್ಪತ್ರೆಯ ಆವರಣದ ವಿಧ್ವಂಸಕ ಕತ್ಯಗಳಲ್ಲಿ ಭಾಗಿಯಾಗಿರುವವರನ್ನು ಗುರುತಿಸಿ ಮತ್ತು ದೇಶಕ್ಕೆ ಅನುಕರಣೀಯ ಶಿಕ್ಷೆಯನ್ನು ನೀಡುವುದರ ಜೊತೆಗೆ ನ್ಯಾಯ ದೊರಕಿಸಿಕೊಡಬೇಕು ಎನ್ನುವುದು ಮುಷ್ಕರ ನಿರತ ವೈದ್ಯರ ಬೇಡಿಕೆಯಾಗಿದೆ.
10
+ ಕರ್ನಾಟಕದಲ್ಲಿ ರೋಗಿಗಳ ಪರದಾಟ:ವೈದ್ಯರ ಪ್ರತಿಭಟನೆ ಹಿನ್ನಲೆಯಲ್ಲಿ ಚಿಕಿತ್ಸೆಗಾಗಿ ರಾಜ್ಯಾದ್ಯಂತ ವಿವಿಧ ಆಸ್ಪತ್ರೆಗಳಿಗೆ ಆಗಮಿಸಿದ ರೋಗಿಗಳಿಗೆ ತುರ್ತು ಚಿಕಿತ್ಸೆ ಸಿಗದೆ ಪರದಾಡುವಂತಾಯಿತು.ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್‌ ಆಸ್ಪತ್ರೆ, ಇಎಸ್‌‍ಐ ಸೇರಿದಂತೆ ಮತ್ತಿತರ ಆಸ್ಪತ್ರೆಗಳಲ್ಲಿ ಒಪಿಡಿ ಬಂದ್‌ ಆಗಿರುವುದರಿಂದ ತುರ್ತು ಚಿಕಿತ್ಸೆ ಅಗತ್ಯ ಇರುವ ರೋಗಿಗಳಿಗೆ ಮಾತ್ರ ತಪಾಸಣೆ ಮಾಡಲಾಯಿತು.
11
+ ನೆಲಮಂಗಲದಲ್ಲಿ ಸಂಪೂರ್ಣವಾಗಿ ಸಾರ್ವಜನಿಕ ಆಸ್ಪತ್ರೆ ಬಂದ್‌ ಆಗಿದ್ದರಿಂದ ಆಟೋದಲ್ಲಿ ಬಂದ ವೃದ್ಧ ದಂಪತಿ ಸೂಕ್ತ ಸಲಹೆ ಸಿಗದೆ ಆಸ್ಪತ್ರೆ ಆವರಣದಲ್ಲಿ ಕೆಲವು ಗಂಟೆಗಳ ಕಾಲ ವೈದರಿಗಾಗಿ ಕಾಯುತ್ತಿದ್ದ ದೃಶ್ಯ ಮನಕಲಕುವಂತಿತ್ತು.
12
+ ಕೆ.ಸಿ ಜನರಲ್‌ ಆಸ್ಪತ್ರೆಗೆ ಆಗಮಿಸಿದ ರೋಗಿಗಳು ತುರ್ತು ಚಿಕಿತ್ಸೆಗಾಗಿ ಹೆಸರು ನೋಂದಣಿ ಮಾಡಿಕೊಳ್ಳಲು ಸರದಿ ಸಾಲಿನಲ್ಲಿ ನಿಂತು ಕಾಯುವಂತಾಗಿತ್ತು. ಒಳರೋಗಿಗಳಿಗೆ ಮಾಮೂಲಿಯಂತೆ ಚಿಕಿತ್ಸೆ ನೀಡಲಾಯುತ್ತಿದ್ದು, ಹೊರರೋಗಿಗಳ ಚಿಕಿತ್ಸೆ ಬಂದ್‌ ಮಾಡಿದ್ದರಿಂದ ರೋಗಿಗಳು ತೊಂದರೆ ಅನುಭವಿಸುವಂತಾಯಿತು.
13
+ ಇನ್ನು ತುರ್ತು ಚಿಕಿತ್ಸೆ, ಅಪಘಾತ ಚಿಕಿತ್ಸೆಗಳು ಮಾಮೂಲಿಯಂತೆ ನಡೆದವು. ಬೆಂಗಳೂರು, ತುಮಕೂರು, ಮಂಡ್ಯ, ಮದ್ದೂರು, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಮತ್ತಿತರ ಕೇಂದ್ರ ಸ್ಥಳಗಳಲ್ಲಿ ವೈದ್ಯರು ಪ್ರತಿಭಟನೆ ನಡೆಸಿದ್ದರಿಂದ ಹೊರರೋಗಿಗಳ ಚಿಕಿತ್ಸೆಗೆ ತೊಂದರೆ ಉಂಟಾಗಿತ್ತು.
14
+ ರೋಗಿಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ವೈದ್ಯರಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದ್ದು, ವೈದ್ಯರು ತುರ್ತು ರೋಗಿಗಳಿಗೆ ಚಿಕಿತ್ಸೆ ನೀಡಿದರು.
15
+ ಪ್ರತಿಭಟನೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯರಿಗೆ ರಜೆ ನೀಡಬಾರದೆಂದು ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಿದ್ದು, ಕರ್ತವ್ಯಕ್ಕೆ ಹಾಜರಾದ ವೈದ್ಯರು ಒಳರೋಗಿಗಳಿಗೆ ಹಾಗೂ ತುರ್ತು ರೋಗಿಗಳಿಗೆ ಚಿಕಿತ್ಸೆಗೆ ನೀಡಿದರು.
eesanje/url_46_42_12.txt ADDED
@@ -0,0 +1,8 @@
 
 
 
 
 
 
 
 
 
1
+ ಕೇಂದ್ರ ಸಚಿವರ ವಿ.ಸೋಮಣ್ಣನವರ ಕಚೇರಿ ಹಿಂಪಡೆದ ರಾಜ್ಯ ಸರ್ಕಾರ, ಬಿಜೆಪಿ-ಜೆಡಿಎಸ್‌‍ ಶಾಸಕರ ಆಕ್ರೋಶ
2
+ ತುಮಕೂರು, ಆ.17-ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಕಚೇರಿ ಉಪಯೋಗಕ್ಕೆ ನಗರದ ರೈಲ್ವೆ ನಿಲ್ದಾಣ ಎದುರಿನ ಪರಿವೀಕ್ಷಣಾ ಕಟ್ಟಡ ನೀಡಿ, ಅನುಮೋದನೆ ಮಾಡಿದ್ದ ರಾಜ್ಯ ಕಾಂಗ್ರೆಸ್‌‍ ಸರ್ಕಾರ ಈಗ ಅನುಮೋದನೆ ಹಿಂಪಡೆದಿರುವ ಕ್ರಮವನ್ನು ಜಿಲ್ಲೆಯ ಎನ್‌ಡಿಎ ಮೈತ್ರಿ ಶಾಸಕರು ತೀವ್ರವಾಗಿ ಖಂಡಿಸಿದ್ದಾರೆ.
3
+ ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಟೀಕಿಸಿದ ಶಾಸಕರು, ಯಾವುದೇ ಕಾರಣಕ್ಕೂ ಸಚಿವ ವಿ.ಸೋಮಣ್ಣ ಅವರ ಕಚೇರಿಗೆ ನೀಡಿರುವ ಕಟ್ಟಡವನ್ನು ವಾಪಸ್‌‍ ನೀಡುವುದಿಲ್ಲ ಎಂದು ಹೇಳಿದರು.
4
+ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಜ್ಯೋತಿ ಗಣೇಶ್‌ ಮಾತನಾಡಿ, ನಗರದ ಪರಿವೀಕ್ಷಣಾ ಕಟ್ಟಡವನ್ನು ದುರಸ್ತಿಗೊಳಿಸಿ ತುಮಕೂರು ಲೋಕಸಭಾ ಸದಸ್ಯರೂ ಆದ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಕಚೇರಿ ಆರಂಭಿಸಲು ಅನುಮತಿ ನೀಡಿ ರಾಜ್ಯ ಸರ್ಕಾರ ಈ ತಿಂಗಳ 3ರಂದು ಅನುಮೋದನೆ ನೀಡಿತ್ತು. ಅಂದಿನಿಂದಲೇ ಸಚಿವರ ಕಚೇರಿ ಕೆಲಸ-ಕಾರ್ಯಗಳು ಇಲ್ಲಿ ಪ್ರಾರಂಭವಾಗಿವೆ. ಆದರೆ, ನಿನ್ನೆ ರಾಜ್ಯ ಸರ್ಕಾರ ಸಚಿವರ ಕಚೇರಿಗೆ ನೀಡಿದ್ದ ಕಟ್ಟಡದ ಅನುಮೋದನೆಯನ್ನು ಹಿಂಪಡೆದಿರುವುದು ಖಂಡನೀಯ ಎಂದರು.
5
+ ಸಾರ್ವಜನಿಕರ ಪರವಾದ ಕೆಲಸ-ಕಾರ್ಯಗಳಿಗೆ ಬಳಕೆಯಾಗುತ್ತಿರುವ ಸಚಿವರ ಈ ಕಚೇರಿ ಕಟ್ಟಡವನ್ನು ಹಿಂಪಡೆಯುವ ಪ್ರಯತ್ನದ ಮೂಲಕ ರಾಜ್ಯ ಸರ್ಕಾರ ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ. ಈಗಾಗಲೇ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಈ ಕಚೇರಿಯಲ್ಲಿ ಇಲಾಖೆ ಕೆಲಸ, ಸಾರ್ವಜನಿಕರ ಕೆಲಸ-ಕಾರ್ಯಗಳು ಆರಂಭವಾಗಿದ್ದು, ಯಾವುದೇ ಕಾರಣಕ್ಕೂ ಕಚೇರಿಯನ್ನು ವಾಪಸ್‌‍ ನೀಡುವುದಿಲ್ಲ. ಸರ್ಕಾರ ಯಾವ ರೀತಿ ವಾಪಸ್‌‍ ಪಡೆಯುವುದೋ ನಾವು ನೋಡುತ್ತೇವೆ ಎಂದು ಶಾಸಕ ಜ್ಯೋತಿಗಣೇಶ್‌ ಸವಾಲು ಹಾಕಿದರು.
6
+ ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕರೂ ಆದ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸಿ.ಬಿ.ಸುರೇಶ್‌ಬಾಬು ಮಾತನಾಡಿ, ಕೇಂದ್ರ ಸಚಿವರ ಕಚೇರಿಗೆಂದು ಕೊಟ್ಟ ಕಟ್ಟಡವನ್ನು ವಾಪಸ್‌‍ ಪಡೆಯಲು ರಾಜ್ಯ ಸರ್ಕಾರ ಹೊರಟಿದೆ. ಒಮೆ ಕೊಟ್ಟು ಮತ್ತೆ ವಾಪಸ್‌‍ ಪಡೆಯುವುದನ್ನು ಕಾಂಗ್ರೆಸ್‌‍ ಸರ್ಕಾರ ದಂಧೆ ಮಾಡಿಕೊಂಡಂತಿದೆ ಎಂದು ಟೀಕಿಸಿದರು.
7
+ ತುಮಕೂರು ಗ್ರಾಮಾಂತರ ಶಾಸಕ ಸುರೇಶ್‌ಗೌಡು ಮಾತನಾಡಿ, ಕೇಂದ್ರ ಸಚಿವ ವಿ.ಸೋಮಣ್ಣನವರ ಅಭಿವೃದ್ಧಿ ಕಾರ್ಯ, ಅವರ ಜನಪರ ಕೆಲಸಗಳ ವೇಗಕ್ಕೆ ಕಾಂಗ್ರೆಸ್‌‍ ನಾಯಕರಿಗೆ ನಡುಕು ಉಂಟಾಗಿದೆ. ಸಂಸದರ ವೇಗ ತಡೆಯಲು ಕಚೇರಿ ಹಿಂಪಡೆಯುವ ಕುತಂತ್ರ ಮಾಡುತ್ತಿದ್ದಾರೆ. ದಮ್‌ ಇದ್ದರೆ ಕಚೇರಿಯನ್ನು ಹಿಂಪಡೆಯಲಿ ನೋಡೋಣ. ನಾವು ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
8
+ ಸಚಿವ ವಿ.ಸೋಮಣ್ಣ ಅವರು ನಾಳೆ ನಗರದ ಪ್ರವಾಸಿ ಮಂದಿರದ ತಮ ಕಚೇರಿಯಲ್ಲಿ ಸಾರ್ವಜನಿಕರು ಭೇಟಿ ಮಾಡಿ ಕುಂದು-ಕೊರತೆ, ಅಹವಾಲುಗಳನ್ನು ಸಲ್ಲಿಸಬಹುದು. ನಾಳೆ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಚಿವ ವಿ.ಸೋಮಣ್ಣ ಕಚೇರಿಯಲ್ಲಿ ಹಾಜರಿರುತ್ತಾರೆ ಎಂದು ಸಚಿವರ ಕಚೇರಿಯ ಪ್ರಕಟಣೆ ತಿಳಿಸಿದೆ.
eesanje/url_46_42_2.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಸರ್ಕಾರ ಪತನಗೊಳಿಸುವ ಸಂಚು ಮಾಡಿದ್ದಾರೆ : ಪರಮೇಶ್ವರ್ ಕಿಡಿ
2
+ ಬೆಂಗಳೂರು,ಆ.18-ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ಕಾನೂನಾತಕವಾಗಿ ಹಾಗೂ ರಾಜಕೀಯವಾಗಿ ಎದುರಿಸುವ ಜೊತೆಗೆ ನಮ ಪಾಡಿಗೆ ನಾವು ಆಡಳಿತ ನಡೆಸಿದ್ದೇವೆ. ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ಕಚೇರಿ ದುರ್ಬಳಕೆ ಯಾಗುತ್ತಿದೆ.
3
+ ಹೀಗಾಗಿ ಕಾನೂನು ಹೋರಾಟ ನಡೆಸುವುದರ ಜೊತೆಗೆ ರಾಜಕೀಯವಾಗಿಯೂ ತಕ್ಕ ಉತ್ತರ ನೀಡುತ್ತೇವೆ. ನಾಳೆಯಿಂದ ನಮ ಪಕ್ಷದ ಕಾರ್ಯಕರ್ತರು ಬೀದಿಗಿಳಿಯಲಿದ್ದಾರೆ. ಈ ಬಗ್ಗೆ ಈಗಾಗಲೇ ಅಧ್ಯಕ್ಷರು ಸೂಚನೆ ನೀಡಿದ್ದಾರೆ. ಪ್ರತಿಭಟನೆ ವೇಳೆ ಕಲ್ಲುತೂರಾಟ ಸೇರಿದಂತೆ ಯಾವುದೇ ಹಿಂಸಾತಕ ಕೃತ್ಯಗಳನ್ನು ನಡೆಸದೆ ಶಾಂತಿಯುತ ಹೋರಾಟ ಮುಂದುವರೆಸಲಾಗುವುದು ಎಂದು ತಿಳಿಸಿದರು.
4
+ ಬಿಜೆಪಿಯವರು ಪ್ರತಿಭಟನೆ ಮಾಡಲಿ. ಅದು ಅವರ ಹಕ್ಕು. ನಾವು ನಮ ಹಕ್ಕನ್ನು ಪ್ರತಿಪಾದಿಸುತ್ತೇವೆ. ರಾಜ್ಯಪಾಲರು ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿರುವುದು ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಹುನ್ನಾರ ನಡೆಸಿರುವುದು, ಮುಖ್ಯಮಂತ್ರಿಯವರನ್ನು ಗುರಿಯಾಗಿಸಿ ಸರ್ಕಾರವನ್ನೇ ಪತನಗೊಳಿಸುವ ಸಂಚು ನಡೆದಿರುವುದು ಕಣ್ಣೆದುರಿಗೆ ಇದೆ ಎಂದರು.
5
+ ಬಿಜೆಪಿಯೇತರ ಆಡಳಿತ ಇರುವ ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ರಾಜ್ಯಪಾಲರ ವರ್ತನೆಗಳು ಆಕ್ಷೇಪಾರ್ಹ. ಈಗ ಕರ್ನಾಟಕದಲ್ಲೂ ಅಂಥದ್ದೇ ಪ್ರಯತ್ನ ನಡೆಯುತ್ತಿದೆ. ಇದರ ಕುರಿತಂತೆ ರಾಷ್ಟ್ರಮಟ್ಟದಲ್ಲಿಹೋರಾಟ ನಡೆಸುವ ಬಗ್ಗೆ ಹೈಕಮಾಂಡ್ ನಾಯಕರು ಇಂಡಿಯ ಮೈತ್ರಿಕೂಟದ ಸದಸ್ಯರ ಜೊತೆ ಚರ್ಚೆ ನಡೆಸಲಿದೆ ಎಂದು ತಿಳಿಸಿದರು.
6
+ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಶಾಸಕ ಜನಾದರ್ನ ರೆಡ್ಡಿ ಅವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡುವಂತೆ ಮನವಿಗಳು ಬಾಕಿ ಇದ್ದರೂ ರಾಜ್ಯಪಾಲರು ಅವನ್ನು ಬದಿಗಿರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅನುಮತಿ ನೀಡಿರುವುದು ಮೇಲ್ನೋಟಕ್ಕೆ ದುರುದ್ದೇಶಪೂರಿತವಾಗಿದೆ. ನಮಗೆ ಈ ನಾಲ್ವರ ವಿರುದ್ಧ ಅರ್ಜಿಗಳು ಬಾಕಿ ಇರುವುದು ಗೊತ್ತಿತ್ತು. ದ್ವೇಷದ ರಾಜಕೀಯ ಬೇಡ ಎಂದು ಸುಮನಿದ್ದೆವು ಎಂದು ಮುಗುಮಾಗಿ ಹೇಳಿದರು.
7
+ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವುದರಿಂದ ಕೊಂಚ ಮಟ್ಟಿನ ಅಧೀರತೆ ಇದೆ. ಇಲ್ಲ ಎಂದು ನಾವು ಸುಳ್ಳು ಹೇಳಿ ಸಮರ್ಥಿಸಿಕೊಳ್ಳಲು ಹೋಗುವುದಿಲ್ಲ. ಆಡಳಿತದ ಮೇಲೂ ಪರಿಣಾಮವಾಗಲಿದೆ. ಆದರೆ ಇದನ್ನೆಲ್ಲ ಸಾವರಿಸಿಕೊಂಡು ಉತ್ತಮ ಆಡಳಿತ ನೀಡುವತ್ತ ಗಮನಿಹರಿಸುತ್ತೇವೆ ಎಂದರು.
8
+ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಯಾವುದೇ ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ. ಕಾನೂನು ಸಮರವನ್ನು ಮುಂದುವರೆಸುವ ಜೊತೆಗೆ ಉತ್ತಮ ಆಡಳಿತ ನಡೆಸುವ ಕುರಿತು ಅಭಿಪ್ರಾಯಗಳು ಕೇಳಿಬಂದಿವೆ.
9
+ ಕಾನೂನು ಸಮರಕ್ಕೆ ಹಿರಿಯ ವಕೀಲರಾದ ಅಭಿಷೇಕ್ ಸಿಂಘ್ವಿ, ಕಪಿಲ್ ಸಿಬಾಲ್ ಅವರುಗಳು ಮುಖ್ಯಮಂತ್ರಿಗಳ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಅಗತ್ಯಬಿದ್ದರೆ ಇನ್ನಷ್ಟು ಹಿರಿಯ ವಕೀಲರ ನೆರವು ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
10
+ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡುವಾಗ ಪ್ರಮಾಣಿತ ಕಾರ್ಯ ನಿರ್ವಹಣಾ ಪ್ರಕ್ರಿಯೆ(ಎಸ್ಒಪಿ)ಗಳನ್ನು ಅನುಸರಿಸಿಲ್ಲ. 17ಎ ಅಡಿ ಅನುಮತಿ ನೀಡುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟ ಮಾರ್ಗಸೂಚಿ ರೂಪಿಸಿದೆ. ಮುಖ್ಯಮಂತ್ರಿಯವರಿಗೆ ಡಿಜಿಪಿ ಅಂತಹ ಅಧಿಕಾರಿ ಪ್ರಾಥಮಿಕ ವರ ನೀಡಬೇಕು. ಉಳಿದ ಶಾಸಕರಿಗೆ, ಸಚಿವರಿಗೆ ಯಾವ ಹಂತದ ಅಧಿಕಾರಿಗಳಿಂದ ವರದಿ ಪಡೆಯಬೇಕೆಂಬ ಬಗ್ಗೆ ಸ್ಪಷ್ಟ ಉಲ್ಲೇಖಗಳಿವೆ. ಅದಾವುದನ್ನೂ ರಾಜ್ಯಪಾಲರು ಪರಿಗಣಿಸಿಲ್ಲ. ಸಚಿವ ಸಂಪುಟ ಸಭೆ ನೀಡಿದ್ದ ಸಲಹೆಯನ್ನು ತಳ್ಳಿ ಹಾಕಿದ್ದಾರೆ ಎಂದು ಪರಮೇಶ್ವರ್ ಕಿಡಿಕಾರಿದರು.
11
+ ಅಭಿಯೋಜನೆಗೆ ಅನುಮತಿ ದೊರೆತ ನಂತರ ತನಿಖೆ ಮುಂದುವರೆಸಲು ಲೋಕಾಯುಕ್ತರಿಗೆ ಅವಕಾಶವಿದೆ. ಈಗಾಗಲೇ ಜೂ.18ರಂದು ಲೋಕಾಯುಕ್ತರ ಮುಂದೆ ದೂರು ದಾಖಲಾಗಿದೆ. ಬೇರೆ ಆಯ್ಕೆಗಳು ಇದ್ದಂತಿಲ್ಲ. ನ್ಯಾಯಾಲಯ ಅನುಮತಿಸಿದರೆ ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸಬಹುದು ಎಂದು ಹೇಳಿದರು.