d3a69b035611849cf6164e7648f72575790400ad55f26c85773cfa10599e72b6
Browse files- eesanje/url_46_169_12.txt +7 -0
- eesanje/url_46_169_2.txt +4 -0
- eesanje/url_46_169_3.txt +8 -0
- eesanje/url_46_169_4.txt +6 -0
- eesanje/url_46_169_5.txt +5 -0
- eesanje/url_46_169_6.txt +12 -0
- eesanje/url_46_169_7.txt +9 -0
- eesanje/url_46_169_8.txt +5 -0
- eesanje/url_46_169_9.txt +5 -0
- eesanje/url_46_16_1.txt +4 -0
- eesanje/url_46_16_10.txt +9 -0
- eesanje/url_46_16_11.txt +6 -0
- eesanje/url_46_16_12.txt +6 -0
- eesanje/url_46_16_2.txt +6 -0
- eesanje/url_46_16_3.txt +9 -0
- eesanje/url_46_16_4.txt +12 -0
- eesanje/url_46_16_5.txt +6 -0
- eesanje/url_46_16_6.txt +9 -0
- eesanje/url_46_16_7.txt +11 -0
- eesanje/url_46_16_8.txt +8 -0
- eesanje/url_46_16_9.txt +6 -0
- eesanje/url_46_170_1.txt +7 -0
- eesanje/url_46_170_10.txt +8 -0
- eesanje/url_46_170_11.txt +10 -0
- eesanje/url_46_170_12.txt +7 -0
- eesanje/url_46_170_2.txt +4 -0
- eesanje/url_46_170_3.txt +4 -0
- eesanje/url_46_170_4.txt +11 -0
- eesanje/url_46_170_5.txt +12 -0
- eesanje/url_46_170_6.txt +5 -0
- eesanje/url_46_170_7.txt +6 -0
- eesanje/url_46_170_8.txt +7 -0
- eesanje/url_46_170_9.txt +8 -0
- eesanje/url_46_171_1.txt +8 -0
- eesanje/url_46_171_10.txt +4 -0
- eesanje/url_46_171_11.txt +8 -0
- eesanje/url_46_171_12.txt +6 -0
- eesanje/url_46_171_2.txt +9 -0
- eesanje/url_46_171_3.txt +6 -0
- eesanje/url_46_171_4.txt +6 -0
- eesanje/url_46_171_5.txt +10 -0
- eesanje/url_46_171_6.txt +9 -0
- eesanje/url_46_171_7.txt +8 -0
- eesanje/url_46_171_8.txt +4 -0
- eesanje/url_46_171_9.txt +11 -0
- eesanje/url_46_172_1.txt +8 -0
- eesanje/url_46_172_10.txt +11 -0
- eesanje/url_46_172_11.txt +6 -0
- eesanje/url_46_172_12.txt +4 -0
- eesanje/url_46_172_2.txt +11 -0
eesanje/url_46_169_12.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಪ್ರಧಾನಿ ಮೋದಿ ಮಂಗಳಸೂತ್ರದ ಟೀಕೆಗೆ ಕಾಂಗ್ರೆಸ್ ಪ್ರತ್ಯುತ್ತರ
|
2 |
+
ಬೆಂಗಳೂರು,ಏ.24-ಹತ್ತು ವರ್ಷದ ಸುದೀರ್ಘ ಆಡಳಿತ ಮಾಡಿಯೂ ಒಂದೇ ಒಂದು ತನ್ನ ಸಾಧನೆ ಹೇಳಿ ಮತ ಕೇಳಲು ಮುಖವಿಲ್ಲದ ಮೋದಿಯವರು, ಅತ್ಯಂತ ನಿರ್ಲಜ್ಜ ಹಾಗೂ ಸಂವೇದನಾಶೂನ್ಯರಾಗಿ ಮಾತಾಡುತ್ತಿದ್ದಾರೆ, ಮಂಗಳಸೂತ್ರ ಎಂಬುದು ಮಹಿಳೆಯರ ಭಾವನಾತ್ಮಕ ವಿಚಾರ. ಯಾವ ವಿಚಾರವನ್ನು ಸಹಿಸಿದರೂ ಮಾಂಗಲ್ಯ ವಿಚಾರವನ್ನು ಮಹಿಳೆಯರು ಸಹಿಸಲಾರರು ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.
|
3 |
+
ತನ್ನ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿಯವರ ಟೀಕೆಗೆ ಪ್ರತ್ಯುತ್ತರಿಸಿದೆ. ತಾಳಿ ನಮ್ಮ ದೇಶದ ಜನರ ಸಂಸ್ಕøತಿ, ಸಂಪ್ರದಾಯ, ಭಾವನೆಗಳಲ್ಲಿ ಅಡಕವಾಗಿರುವ ಪವಿತ್ರ ವಸ್ತು. ಇಂತಹ ತಾಳಿಯ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಹತಾಶ ಮೋದಿಯವರು ದೇಶದ ಮಹಿಳೆಯರ ಮಾಂಗಲ್ಯವನ್ನು ಕಿತ್ತು ವಿಧವೆಯರನ್ನಾಗಿ ನೋಡಲು ಬಯಸುತ್ತಿದ್ದಾರೆಯೇ? ಹೀಗೆ ಬಯಸಿದರೂ ಆಶ್ಚರ್ಯವಿಲ್ಲ, ಏಕೆಂದರೆ ಮಾಂಗಲ್ಯ ಕಿತ್ತುಕೊಂಡ ಕರಾಳ ಇತಿಹಾಸವೇ ಇವರಿಗಿದೆ ಎಂದು ಕಿಡಿಕಾರಿದೆ.
|
4 |
+
ಗೋದ್ರಾ ಗಲಭೆಯಲ್ಲಿ ಸುಮಾರು 2000 ಜನರ ಮಾಂಗಲ್ಯ ಕಿತ್ತುಕೊಂಡವರಲ್ಲವೇ? ರೈತ ಪ್ರತಿಭಟನೆಯಲ್ಲಿ 700 ರೈತ ಮಹಿಳೆಯರ ಮಾಂಗಲ್ಯ ಕಿತ್ತುಕೊಂಡವರಲ್ಲವೇ? ಕೋವಿಡ್ ಸಮಯದಲ್ಲಿ ಆಕ್ಸಿಜನ್, ಚಿಕಿತ್ಸೆ ನೀಡದೆ ಸಾವಿರಾರು ಜನರ ಮಾಂಗಲ್ಯ ಕಿತ್ತುಕೊಂಡವರು ನೀವಲ್ಲವೇ? ಇಂತಹ ಮಾಂಗಲ್ಯ ಕಸಿಯುವ ಬಿಜೆಪಿಯಿಂದ ದೇಶದ ಮಹಿಳೆಯರ ಜೀವನಕ್ಕೆ ಭದ್ರತೆ ದೊರೆಯುವುದು ಅಸಾಧ್ಯ ಎಂದು ವಾಗ್ದಾಳಿ ನಡೆಸಿದೆ.
|
5 |
+
ಸ್ವತಂತ್ರಾನಂತರ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ವಹಿಸಿಕೊಂಡಾಗ ದೇಶದ ಸ್ಥಿತಿ ಅಕ್ಷರಶಃ ಸೊನ್ನೆ ಎನ್ನುವಂತಿತ್ತು, ಕಾಂಗ್ರೆಸ್ ಮುಂದೆ ಏಕಕಾಲಕ್ಕೆ ಹಲವು ಸವಾಲುಗಳಿದ್ದವು, ದೇಶದ ರಕ್ಷಣಾ ವ್ಯವಸ್ಥೆ ಬಲಪಡಿಸುವುದರಿಂದ ಹಿಡಿದು, ಮೂಲಸೌಕರ್ಯದ ಅಭಿವೃದ್ಧಿ, ಅರ್ಥ ವ್ಯವಸ್ಥೆಯ ಬಲವರ್ಧನೆ, ಉದ್ಯಮಗಳ ಸ್ಥಾಪನೆ, ನೀರಾವರಿ ವ್ಯವಸ್ಥೆ ಸೇರಿದಂತೆ ದೇಶದ ಸರ್ವತೋಮುಖ ಅಭಿವೃದ್ಧಿ ಮಾಡುವ ಸವಾಲಿತ್ತು.
|
6 |
+
ಜೊತೆಗೆ ಶೇ. 88 ರಷ್ಟಿದ್ದ ಅನಕ್ಷರತೆಯ ಪ್ರಮಾಣವನ್ನು ಕಡಿಮೆ ಮಾಡಿ ದೇಶದ ಜನರಿಗೆ ಶಿಕ್ಷಣ ನೀಡಬೇಕಾದ ಸವಾಲು, ಸಾಂಕ್ರಾಮಿಕ ರೋಗಗಳನ್ನು ಎದುರಿಸುತ್ತಾ ಆರೋಗ್ಯ ಕ್ಷೇತ್ರವನ್ನು ಬಲಪಡಿಸುವ ಸವಾಲು, ವೈಜ್ಞಾನಿಕ ಕೃಷಿಯ ಮೂಲಕ ಆಹಾರ ಭದ್ರತೆಯನ್ನು ಸ್ಥಾಪಿಸುವ ಸವಾಲುಗಳನ್ನು ಏಕಕಾಲಕ್ಕೆ ಎದುರಿಸಿದ ಕಾಂಗ್ರೆಸ್ ದೇಶವನ್ನು ಸಮರ್ಥವಾಗಿ ಕಟ್ಟಿದೆ ಎಂದು ಸಮರ್ಥಿಸಿಕೊಳ್ಳಲಾಗಿದೆ.
|
7 |
+
ಉಚಿತ ಶಿಕ್ಷಣ, ಉಚಿತ ಆರೋಗ್ಯ ಸೇವೆ, ಉಚಿತ ಸರ್ಕಾರಿ ಸೇವೆಗಳನ್ನು ನೀಡಿ ಜನರನ್ನು ಸದೃಢರನ್ನಾಗಿಸುವ ನಮ್ಮ ಪ್ರಯತ್ನದ ಫಲವಾಗಿ ಇಂದು ಭಾರತದ ಅಭಿವೃದ್ಧಿಶೀಲ ರಾಷ್ಟ್ರವಾಗಿ ಮುನ್ನುವಂತಾಗಿದೆ. ಕಾಂಗ್ರೆಸ್ ನಾಯಕರ ತ್ಯಾಗ, ಬಲಿದಾನ ಹಾಗೂ ಜನಪರ ಕೆಲಸಗ��� ಬಗ್ಗೆ ದೇಶದ ಜನ ಮೆಚ್ಚುಗೆಯ ಭಾವನೆ ಹೊಂದಿದ್ದಾರೆ ಎಂದು ಹೇಳಿಕೊಂಡಿದೆ.
|
eesanje/url_46_169_2.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ರಾಜ್ಯದಲ್ಲಿ ನಾಳೆ ಮೊದಲ ಹಂತದ ಚುನಾವಣೆ, ಮತದಾನದ ಹಕ್ಕು ಪಡೆದಿದ್ದಾರೆ 2,88,19,342 ಮತದಾರರು
|
2 |
+
ಬೆಂಗಳೂರು,ಏ.25-ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದ್ದು, 2,88,19,342 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ. 1,44,17,530 ಪುರುಷ, 1,43,87,585 ಮಹಿಳಾ, 3,057 ಇತರ, 11,160 ಸೇವಾ ಮತದಾರರು ಸೇರಿದ್ದಾರೆ. 14 ಲೋಕಸಭಾ ಕ್ಷೇತ್ರಗಳಲ್ಲಿ 30,602 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸೇರಿದಂತೆ ಲೋಕಸಭಾ ಚುನಾವಣೆಯಲ್ಲಿ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಾಕಲಾಗುತ್ತದೆ.
|
3 |
+
ಪರ್ಯಾಯ ದಾಖಲೆ :ಮತದಾನ ಮಾಡಲು ಚುನಾವಣಾ ಆಯೋಗ ನೀಡಿರುವ ಮತದಾರರ ಗುರುತಿನ ಚೀಟಿ ಹಾಗೂ ವೋಟರ್ ಸ್ಲಿಪ್ ಅನ್ನು ತೋರಿಸಿ ಮತ ಚಲಾಯಿಸಬಹುದು. ಒಂದು ವೇಳೆ ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ, ಪರ್ಯಾಯವಾಗಿ ಭಾವಚಿತ್ರವುಳ್ಳ ಇತರ ಅಕೃತ ಗುರುತಿನ ಚೀಟಿಗಳನ್ನು ತೋರಿಸಿ ಮತದಾನ ಮಾಡಬಹುದಾಗಿದೆ.
|
4 |
+
ಆಧಾರ್ ಕಾರ್ಡ್, ನರೇಗಾ ಜಾಬ್ ಕಾರ್ಡ್, ಬ್ಯಾಂಕ್, ಪೋಸ್ಟ್ ಆಫೀಸ್ ಪಾಸ್ ಬುಕ್, ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೈಸನ್್ಸ, ಪ್ಯಾನ್ ಕಾರ್ಡ್, ಪಾಸ್ಪೋರ್ಟ್, ಪಿಂಚಣಿಯ ದಾಖಲೆ, ಕೇಂದ್ರ, ರಾಜ್ಯ ಸರ್ಕಾರಗಳು, ಪಬ್ಲಿಕ್ ಲಿಮಿಟೆಡ್ ಕಂಪನಿಗಳು ಉದ್ಯೋಗಿಗಳಿಗೆ ನೀಡಿರುವ ಗುರುತಿನ ಚೀಟಿ, ಎಂಪಿ, ಎಂಎಲ್ಎ, ಎಂಎನ್ಸಿಗಳಿಗೆ ನೀಡಿರುವ ಗುರುತಿನ ಚೀಟಿಗಳು, ಭಾರತ ಸರ್ಕಾರ ನೀಡಿರುವ ವಿಶಿಷ್ಟ ಅಂಗವೈಕಲ್ಯ ಕಾರ್ಡ್ ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ.
|
eesanje/url_46_169_3.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಕರ್ನಾಟಕ ಸೇರಿ 13 ರಾಜ್ಯಗಳ 89 ಕ್ಷೇತ್ರಗಳಲ್ಲಿ ನಾಳೆ ನಿರ್ಧಾರವಾಗಲಿದೆ ಘಟಾನುಘಟಿ ನಾಯಕರ ಭವಿಷ್ಯ
|
2 |
+
ಬೆಂಗಳೂರು,ಏ.25-ಕಾಂಗ್ರೆಸ್ನ ವರಿಷ್ಠ ನಾಯಕ ರಾಹುಲ್ಗಾಂಧಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಬೂಪೇಶ್ ಬಗೇಲ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ನಟಿ ಹೇಮಾಮಾಲಿನಿ, ಬಿಜೆಪಿ ರಾಷ್ಟ್ರೀಯ ಯುವ ಘಟಕ ಅಧ್ಯಕ್ಷ ತೇಜಸ್ವಿ ಸೂರ್ಯ ಸೇರಿದಂತೆ ಪ್ರಮುಖ ನಾಯಕರ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿರುವ ಎರಡನೇ ಹಂತದ ಲೋಕಸಭಾ ಚುನಾವಣೆ ನಾಳೆ ನಡೆಯಲಿದೆ.
|
3 |
+
ನಾಳೆ 13 ರಾಜ್ಯಗಳ 89 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಅದರಲ್ಲಿ ಕೇರಳದ 20 ಕ್ಕೆ 20 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ಪೂರ್ಣಗೊಳ್ಳಲಿದೆ. ಉಳಿದಂತೆ ಕರ್ನಾಟಕದ 14, ರಾಜಸ್ಥಾನದ 13, ಉತ್ತರಪ್ರದೇಶ, ಮಹಾರಾಷ್ಟ್ರ ತಲಾ 8, ಮಧ್ಯಪ್ರದೇಶದ 7, ಅಸ್ಸಾಂ, ಬಿಹಾರದ ತಲಾ 5, ಛತ್ತೀಸ್ಗಡ, ಪಶ್ಚಿಮಬಂಗಾಳದ ತಲಾ 3, ತ್ರಿಪುರ, ಜಮ್ಮು-ಕಾಶ್ಮೀರ ತಲಾ 1, ಮಣಿಪುರದಲ್ಲಿ ಒಂದು ಅರ್ಧ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.
|
4 |
+
ಏಪ್ರಿಲ್ 4ಕ್ಕೆ ನಾಮಪತ್ರ ಸಲ್ಲಿಸುವ ಕೊನೆಯ ದಿನದ ವೇಳೆಗೆ 89 ಕ್ಷೇತ್ರಗಳಿಗೆ 1,206 ಅಭ್ಯರ್ಥಿಗಳಿಂದ 2,633 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ನಾಮಪತ್ರ ಪರಿಶೀಲನೆ ಬಳಿಕ 1,428 ನಾಮಪತ್ರಗಳು ಊರ್ಜಿತಗೊಂಡಿವೆ.
|
5 |
+
ಕೇರಳದ ವೈನಾಡು ಕ್ಷೇತ್ರದಲ್ಲಿ ರಾಹುಲ್ಗಾಂ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದರೆ, ಬಿಜೆಪಿಯ ಕೆ.ಸಿಂಗರಂ ಮತ್ತು ಸಿಪಿಐನ ಅಣೈರಾಜ ಅವರ ನಡುವೆ ತ್ರಿಕೋನ ಸ್ಪರ್ಧೆಯಿದೆ. ತಿರುವನಂತಪುರಂ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನ ಹಿರಿಯ ನಾಯಕ ಶಶಿತರೂರ್ ಎದುರು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಸ್ಪರ್ಧೆ ಮಾಡಿದ್ದಾರೆ.
|
6 |
+
ಬಿಜೆಪಿಯ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕೋಟಾ ಕ್ಷೇತ್ರದಿಂದ, ಹೇಮಾಮಾಲಿನಿ ಮಥುರಾ ಕ್ಷೇತ್ರದಿಂದ, ಅರುಣ್ ಗೋವಿಂದ್ ಮೀರಥ್ನಿಂದ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬೆಂಗಳೂರು ಉತ್ತರ ಕ್ಷೇತ್ರದಿಂದ, ಅಮರಾವತಿಯಲ್ಲಿ ನವನೀತ್ ರಾಣ, ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯ, ಕಾಂಗ್ರೆಸ್ನ ಮಾಜಿ ಮುಖ್ಯಮಂತ್ರಿ ಬೂಪೇಶ್ ಬಗೇಲ್, ರಾಜಾನಂದಗೌನ, ಮಂಡ್ಯದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೆಡಿಎಸ್ನಿಂದ ಕಣದಲ್ಲಿದ್ದಾರೆ. ಉಳಿದಂತೆ ಪ್ರಮುಖರಾದ ಕೆ.ಸಿ.ವೇಣುಗೋಪಾಲ್, ಕೆ.ಮುರಳೀಧರನ್, ಸುರೇಶ್ ಗೋಪಿ, ಗೋವಿಂದ್ ಕಾರಜೋಳ, ಡಿ.ಕೆ.ಸುರೇಶ್, ಪ್ರಜ್ವಲ್ ರೇವಣ್ಣ ಸೇರಿದಂತೆ ಹಲವರು ಕಣದಲ್ಲಿದ್ದಾರೆ.
|
7 |
+
2019 ರ ಲೋಕಸಭಾ ಚುನಾವಣೆಯಲ್ಲಿ 88 ಕ್ಷೇತ್ರಗಳಲ್ಲಿ ಬಿಜೆಪಿ 52, ಶಿವಸೇನೆ 4, ಜೆಡಿಯು 4, ಪಕ್ಷೇತರ 1 ಸೇರಿದಂತೆ ಎನ್ಡಿಎ ಕೂಟ 61 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ ನೇತೃತ್ವದ ಯುಪಿಎ ಕೂಟದಲ್ಲಿ ಜೆಡಿಎಸ್ 1, ಕೇರಳ ಕಾಂಗ್ರೆಸ್ ಮಣಿ 1, ಪಕ್ಷೇತರರು 1, ಐಯುಎಂಎಲ್ 2, ಕಾಂಗ್ರೆಸ್ 18 ಕ್ಷೇತ್ರಗಳಲ್ಲಿ ಸೇರಿ 24 ಕ್ಷೇ���್ರಗಳಲ್ಲಿ ಗೆಲುವು ಸಾಧಿಸಿತ್ತು. ಇತರ ಪಕ್ಷಗಳಾದ ಬಿಎಸ್ಪಿ, ಸಿಪಿಎಂ, ಎನ್ಪಿಎಫ್ ತಲಾ 1 ರಲ್ಲಿ ಗೆಲುವು ಕಂಡಿತ್ತು.
|
8 |
+
ಎರಡನೇ ಹಂತದ ಚುನಾವಣೆಗಾಗಿ ಆಯೋಗ ದೇಶಾದ್ಯಂತ ಬಿಗಿ ಕ್ರಮಗಳನ್ನು ಕೈಗೊಂಡಿದೆ. ಇಂದು ಹಲವು ಕಡೆ ಮಸ್ಟರಿಂಗ್ ಕೇಂದ್ರಗಳ ಮೂಲಕ ಚುನಾವಣಾ ಸಿಬ್ಬಂದಿಗಳು ಮತಯಂತ್ರ ಹಾಗೂ ಅಗತ್ಯ ಪರಿಕರಳೊಂದಿಗೆ ಮತಗಟ್ಟೆಗೆ ತೆರಳಿದ್ದಾರೆ.ಬಿಸಿಲಿನ ತಾಪಮಾನ ವ್ಯಾಪಕವಾದ ಹಿನ್ನೆಲೆಯಲ್ಲಿ ರಾಜಸ್ಥಾನ ಸೇರಿದಂತೆ ಕೆಲವು ಕಡೆ ಮಸ್ಟರಿಂಗ್ ಸೆಂಟರ್ಗಳಲ್ಲಿ ಪೆಂಡಾಲ್ಗಳನ್ನು ಹಾಕಿ ನೆರಳಿನ ವ್ಯವಸ್ಥೆ ಮಾಡಲಾಗಿತ್ತು. ಛತ್ತೀಸ್ಗಡದಲ್ಲಿ ಸೂಕ್ಷ್ಮ ಮತಗಟ್ಟೆಗೆ ತೆರಳುವ ಸಿಬ್ಬಂದಿಗಳಿಗೆ ಹೆಲಿಕಾಫ್ಟರ್, ಪ್ರತ್ಯೇಕ ವಾಹನ ಹಾಗೂ ಭದ್ರತಾ ವ್ಯವಸ್ಥೆ ಮಾಡಿದ್ದು ಗಮನ ಸೆಳೆದಿತ್ತು.
|
eesanje/url_46_169_4.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
“ಮುಸ್ಲಿಮರನ್ನು ಓಲೈಸಲು ಹಿಂದುಳಿದ ವರ್ಗಕ್ಕೆ ಸಿಎಂ ಸಿದ್ದರಾಮಯ್ಯ ಐತಿಹಾಸಿಕ ಅನ್ಯಾಯ”
|
2 |
+
ಬೆಂಗಳೂರು, ಏ.25-ಮುಸ್ಲಿಮರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ರಾಷ್ಟ್ರೀಯ ಹಿಂದುಳಿದ ಆಯೋಗಕ್ಕೆ ಸದ್ದಿಲ್ಲದೇ ಶಿಫಾರಸು ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಂದುಳಿದ ವರ್ಗಕ್ಕೆ ಐತಿಹಾಸಿಕ ಅನ್ಯಾಯ ಎಸಗುತ್ತಿದ್ದಾರೆ ಎಂದು ಮಾಜಿ ಸಚಿವ ವಿ.ಸುನೀಲ್ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
|
3 |
+
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ನಮ್ಮ ವಿದ್ಯಾರ್ಥಿಗಳು ಹಾಗೂ ಯುವಕರ ಶೈಕ್ಷಣಿಕ ಹಾಗೂ ಉದ್ಯೋಗದ ಮೀಸಲಾತಿಯ ಪಾಲನ್ನು ಮುಸ್ಲಿಮರಿಗೆ ಹಂಚುವ ಜತೆಗೆ ನಗರ- ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳು ಸಂವಿಧಾನದ ಪ್ರಕಾರ ಪಡೆದ ಪಾಲನ್ನೂ ಮುಸ್ಲಿಮರ ಜತೆಗೆ ಹಂಚಿಕೊಳ್ಳಬೇಕಾಗುತ್ತದೆ. ಹೇಳಿ ಸಿದ್ದರಾಮಯ್ಯನವರೇ , ಹಿಂದುಳಿದ ವರ್ಗದ ಮೇಲೆ ನಿಮಗ್ಯಾಕೆ ಈ ಆಕ್ರೋಶ ಎಂದು ಪ್ರಶ್ನಿಸಿದ್ದಾರೆ.
|
4 |
+
ಹಿಂದುಳಿದ ವರ್ಗಗಳ ಸಂವಿಧಾನಬದ್ಧ ಹಕ್ಕನ್ನು ಕಸಿದುಕೊಂಡು ಅದನ್ನು ಮುಸ್ಲಿಮರಿಗೆ ಹಂಚುವ ಕುತ್ಸಿತ ಹಾಗೂ ತುಷ್ಟೀಕರಣ ರಾಜಕಾರಣದ ಸಂಚು ಇದರಲ್ಲಿ ಅಡಗಿದೆ. ಹಿಂದುಳಿದ ವರ್ಗಗಳ ಹಿತಾಸಕ್ತಿ ರಕ್ಷಣೆಯ ಚಾಂಪಿಯನ್ ತಾನೆಂದು ಸ್ವಯಂ ಘೋಷಿಸಿಕೊಂಡಿರುವ ಸಿದ್ದರಾಮಯ್ಯನವರಿಗೆ ಓಬಿಸಿ ಸಮುದಾಯಕ್ಕಿಂತ ಮುಸ್ಲಿಂ ಓಲೈಕೆಯೇ ಮುಖ್ಯ ಎಂಬುದು ಇದರಿಂದ ಸಾಬೀತಾಗಿದೆ ಎಂದಿದ್ದಾರೆ.
|
5 |
+
ಓಬಿಸಿ ಸಮುದಾಯದ ಪರ ಮಾತೃ ಹೃದಯ ಪ್ರದರ್ಶನ ಮಾಡುವುದನ್ನು ಬಿಟ್ಟು ಮಲತಾಯಿ ಧೋರಣೆಯನ್ನು ತೋರುತ್ತಿದ್ದಾರೆ. ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಸಕಾಲದಲ್ಲಿ ಈ ಬಗ್ಗೆ ಆಕ್ಷೇಪ ಎತ್ತದೇ ಹೋಗಿದ್ದರೆ ಭವಿಷ್ಯದಲ್ಲಿ ಹಿಂದುಳಿದ ವರ್ಗ ತೆರಬೇಕಿದ್ದ ಬೆಲೆಯನ್ನು ಊಹಿಸಿಕೊಂಡರೂ ಒಂದು ಕ್ಷಣ ಮೈ ನಡುಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
|
6 |
+
ಹೇಳಿ ಸಿದ್ದರಾಮಯ್ಯನವರೇ, ಹಿಂದುಳಿದ ವರ್ಗದ ಮೇಲೆ ನಿಮಗ್ಯಾಕೆ ಈ ಆಕ್ರೋಶ ? ಸಮುದಾಯಕ್ಕೆ ಮಾಡುವ ಈ ಚಾರಿತ್ರಿಕ ಅನ್ಯಾಯದಿಂದ ನಿಮಗೆ ಸಿಗುವ ಲಾಭವೇನು ? ಆಯೋಗಕ್ಕೆ ಈ ಶಿಫಾರಸು ಮಾಡುವ ಮುನ್ನ ಯಾರ ಜತೆಗೆ ಚರ್ಚೆ ನಡೆಸಿದ್ದೀರಿ? ಕದ್ದುಮುಚ್ಚಿ ನಿರ್ಧಾರ ತೆಗೆದುಕೊಳ್ಳಲು ಅಧಿಕಾರ ಕೊಟ್ಟವರು ಯಾರು ? ಎಂದು ಅವರು ಪ್ರಶ್ನಿಸಿದ್ದಾರೆ.
|
eesanje/url_46_169_5.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಏ. 29ರಿಂದ ಮೇ 16ರವರೆಗೆ ಪಿಯುಸಿ-2 ಪರೀಕ್ಷೆ
|
2 |
+
ಬೆಂಗಳೂರು,ಏ.25-ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29ರಿಂದ ಮೇ 16 ರವರೆಗೆ ನಡೆಯಲಿದ್ದು, ಒಟ್ಟು 1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಗೆ ನೋಂದಾಯಿಸಿರುವ ಎಲ್ಲಾ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಮಂಡಳಿಯ ವೆಬ್ಸೈಟ್ ://... ನಲ್ಲಿ ಪಡೆಯಬಹುದಾಗಿದೆ.
|
3 |
+
ಹನ್ನೊಂದು ಅಂಕಿಗಳನ್ನೊಳಗೊಂಡ ನೋಂದಣಿ ಸಂಖ್ಯೆಯನ್ನು ಹೊಂದಿರುವ ವಿದ್ಯಾರ್ಥಿಗಳು ಮಾತ್ರ ಪ್ರವೇಶ ಪತ್ರವನ್ನು ಆನ್ಲೈನ್ನಲ್ಲಿ ಪಡೆಯಬಹುದಾಗಿದೆ. ಇನ್ನುಳಿದ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ ಪ್ರವೇಶ ಪತ್ರ ಪಡೆದುಕೊಳ್ಳಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.
|
4 |
+
ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಒಟ್ಟು 1,49,300 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 32,848 ವಿದ್ಯಾರ್ಥಿಗಳು ಫಲಿತಾಂಶವನ್ನು ಉನ್ನತೀಕರಿಸಿಕೊಳ್ಳಲು ಪರೀಕ್ಷೆ ತೆಗೆದುಕೊಂಡಿದ್ದು, 27,092 ವಿದ್ಯಾರ್ಥಿಗಳು ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ, ನಾಟ್ ಕ್ಲಿಯರ್ಡ್ ವಿದ್ಯಾರ್ಥಿಗಳ ಸಂಖ್ಯೆ 89,221 ಆಗಿದ್ದು, 139 ವಿದ್ಯಾರ್ಥಿಗಳು ಶೇ.75ರಷ್ಟು ಹಾಜರಾತಿ ಇಲ್ಲದೇ 17 ವರ್ಷ ತುಂಬಿದ ಖಾಸಗಿಯಾಗಿ ನೋಂದಾಯಿಸಿಕೊಂಡಿದ್ದಾರೆ ಎಂದು ಮಂಡಳಿ ಮಾಹಿತಿ ನೀಡಿದೆ.
|
5 |
+
ಒಟ್ಟು 84,933 ವಿದ್ಯಾರ್ಥಿಗಳು, 64,367 ವಿದ್ಯಾರ್ಥಿನಿಯರು ಸೇರಿ 1,49,300 ಅಭ್ಯರ್ಥಿಗಳು ಪರೀಕ್ಷೆ 2ಕ್ಕೆ ಹಾಜರಾಗುತ್ತಿದ್ದು, ಕಲಾ ವಿಭಾಗದಲ್ಲಿ 52,492, ವಾಣಿಜ್ಯ ವಿಭಾಗದಲ್ಲಿ 39,427 ಮತ್ತು ವಿಜ್ಞಾನ ವಿಭಾಗದಲ್ಲಿ 57,381 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯಾದ್ಯಂತ 301 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸುವ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದೆ.
|
eesanje/url_46_169_6.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸ್ಯಾಮ್ ಪಿಟ್ರೋಡ ಹೇಳಿಕೆ ವೈಯಕ್ತಿಕವಾದದ್ದು, ಬಿಜೆಪಿಯವರು ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ : ಡಿಕೆಶಿ
|
2 |
+
ಬೆಂಗಳೂರು,ಏ.25-ಸಂಪತ್ತಿನ ತೆರಿಗೆ ವಿಚಾರವಾಗಿ ಕಾಂಗ್ರೆಸ್ ನಾಯಕ ಸ್ಯಾಂ ಪಿಟ್ರೋಡ ಅವರ ಹೇಳಿಕೆ ಸಂಪೂರ್ಣ ವೈಯಕ್ತಿಕವಾಗಿದ್ದು, ಪಕ್ಷದಲ್ಲಿ ಅಂತಹ ಯಾವುದೇ ಚರ್ಚೆಗಳು ನಡೆದಿಲ್ಲ, ಅದು ಸಾಧ್ಯವೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
|
3 |
+
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೋಲಿನ ಭಯದಿಂದ ಹತಾಶವಾಗಿದೆ. ಹೀಗಾಗಿ ಅನಗತ್ಯವಾದ ವಿವಾದಗಳನ್ನು ಕೆಣಕಿ ಜನರ ಮನಸ್ಸನ್ನು ದಿಕ್ಕು ತಪ್ಪಿಸುವ ಹುನ್ನಾರ ನಡೆಸಿದೆ ಎಂದು ಕಿಡಿಕಾರಿದರು.
|
4 |
+
ಈ ಹಿಂದೆ ಬಿಜೆಪಿ ಸರ್ಕಾರದಲ್ಲೇ ಸಂಪತ್ತಿನ ಒಡೆತನದ ಅಮಾನೀಕರಣ ವ್ಯವಸ್ಥೆಯನ್ನು ಜಾರಿಗೆ ತಂದು, ನಂತರ ಅದನ್ನು ಮರು ಹಂಚಿಕೆ ಮಾಡುವ ಚರ್ಚೆ ನಡೆದಿತ್ತು ಎಂದು ಯಾವುದೋ ಮಾಧ್ಯಮದಲ್ಲಿ ನಾನು ಓದಿದ್ದೆ. ನಮ್ಮ ಪಕ್ಷದಲ್ಲಿ ಅಂತಹ ಯಾವುದೇ ಚರ್ಚೆಗಳು, ತೀರ್ಮಾನಗಳು ಆಗಿಲ್ಲ. ಪ್ರಣಾಳಿಕೆಯಲ್ಲಿ ಏನು ಭರವಸೆ ಕೊಟ್ಟಿದ್ದೇವೆ ಅದಕ್ಕೆ ಮಾತ್ರ ನಾವು ಬದ್ಧ. ಅದನ್ನಷ್ಟೇ ಜಾರಿಗೊಳಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.
|
5 |
+
ಸ್ಯಾಂ ಪಿಟ್ರೋಟ ಹೇಳಿಕೆ ಸಂಪೂರ್ಣ ವೈಯಕ್ತಿಕ. ಈಗಾಗಲೇ ಇದಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಸ್ಪಷ್ಟನೆ ನೀಡಿದ್ದಾರೆ. ಅದು ಅವರ ವೈಯಕ್ತಿಕ ಹೇಳಿಕೆಯಾಗಿದ್ದು, ಅದಕ್ಕೆ ಪಕ್ಷದ ಒಪ್ಪಿಗೆ ಇಲ್ಲ. ಈ ಹಿಂದೆ ಸಾಂಪ್ರದಾಯಿಕವಾಗಿ ಯಾವ ರೀತಿ ನಡೆದುಕೊಂಡು ಬಂದಿದೆಯೋ ಅದೇ ವ್ಯವಸ್ಥೆ ಮುಂದುವರೆಯಲಿದೆ. ರಾಜಕೀಯವಾಗಿ ಪರಂಪರೆಯನ್ನು ಮುಂದುವರೆಸಲಾಗುತ್ತದೆ. ಅಂತಹುದರಲ್ಲಿ ಪಿತ್ರಾರ್ಜಿತ ಆಸ್ತಿ ವರ್ಗಾವಣೆಯಾಗುವಾಗ ತೆರಿಗೆ ವಿಧಿಸಲು ಸಾಧ್ಯವೇ ಇಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
|
6 |
+
ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ. ಅದಕ್ಕಾಗಿಯೇ ಪ್ರಧಾನಿ ನರೇಂದ್ರ ಮೋದಿಯವರು ಮಂಗಳಸೂತ್ರದಂತಹ ಹೇಳಿಕೆಗಳನ್ನು ನೀಡಿ ಗೊಂದಲ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಮಂಗಳಸೂತ್ರವನ್ನು ಕಿತ್ತು ಕಾಂಗ್ರೆಸ್ನವರು ಬೇರೆಯವರಿಗೆ ನೀಡುತ್ತಾರೆ ಎಂದು ಮೋದಿ ಹತಾಶೆ ಹೇಳಿಕೆ ನೀಡಿದ್ದಾರೆ. ಪ್ರಸ್ತುತ ಸಂದರ್ಭದಲ್ಲಿ ಚಿನ್ನದ ಬೆಲೆ ಏರಿಕೆ ನೋಡಿದರೆ ಮಂಗಳಸೂತ್ರವನ್ನು ಮಾಡಿಸಿಕೊಳ್ಳಲಾಗದಂತಹ ವಾತಾವರಣವಿದೆ. ಇನ್ನು ಅದನ್ನು ಕಿತ್ತು ಬೇರೆಯವರಿಗೆ ಕಿತ್ತು ಕೊಡುವ ಅವಕಾಶವಾದರೂ ಎಲ್ಲಿದೆ ಎಂದು ಪ್ರಶ್ನಿಸಿದರು.
|
7 |
+
2014 ರಲ್ಲಿ ಮೋದಿ ಪ್ರಧಾನಿಯಾದಾಗ ಪ್ರತೀ ಗ್ರಾಂ ಚಿನ್ನದ ಬೆಲೆ 2,800 ರೂ. ಗಳಿತ್ತು. ಈಗ 75 ಸಾವಿರ ರೂ. ಆಗಿದೆ. 300 ಪಟ್ಟು ಹೆಚ್ಚಾಗಿದೆ. ಬಡವರು ಇಂತಹ ಪರಿಸ್ಥಿತಿಯಲ್ಲಿ ಮಂಗಳಸೂತ್ರ ಮಾಡಿಸಿಕೊಳ್ಳಲು ಸಾಧ್ಯವೇ ಎಂದು ಹೇಳಿದರು.
|
8 |
+
ನರೇಂದ್ರ ಮೋದಿಯವರಿಗೆ ದೇಶದ ಜನ 10 ವರ್ಷ ಅವಕಾಶ ನೀಡಿದರು. ಆದರೆ ಅಭಿವೃದ್ಧಿಯಾಗಲಿಲ್ಲ. ಚುನಾವಣೆಯಲ್ಲೂ ಅಭಿವೃದ್ಧಿಯ ವಿಚಾರಗಳು ಚರ್ಚೆಯೇ ಆಗುತ್ತಿಲ್ಲ. ಮಂಗಳಸೂತ್ರ, ಸಂಪತ್ತಿನ ತೆರಿಗೆಯಂತಹ ಸುಳ್ಳುಗಳ ವಿಚಾರಗಳನ್ನೇ ದೊಡ್ಡದಾಗಿ ಬಿಂಬಿಸಿ ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಬಿಜೆಪಿಯವರು ಜನರ ಅಭಿಪ್ರಾಯವನ್ನು ಗೌರವಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಒಪ್ಪಿಕೊಳ್ಳಬೇಕೆಂದು ಹೇಳಿದರು.
|
9 |
+
ಮೊದಲ ಹಂತದ ಚುನಾವಣಾ ವೇಳೆ ತಮಿಳುನಾಡಿನಲ್ಲಿ 40 ಸ್ಥಾನಗಳಲ್ಲೂ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಗೆಲ್ಲುವ ಸಾಧ್ಯತೆಗಳಿವೆ. ಅದಕ್ಕಾಗಿ ಬಿಜೆಪಿಯವರು ಮೈ ಪರಚಿಕೊಳ್ಳುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
|
10 |
+
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ನಿನ್ನೆ ಮೂರ್ನಾಲ್ಕು ಕಡೆ ಕಾಂಗ್ರೆಸ್ನ ಮುಖಂಡರನ್ನೇ ಗುರಿಯಾಗಿಸಿಕೊಂಡು ಆದಾಯ ತೆರಿಗೆ ದಾಳಿ ನಡೆದಿದೆ. ಬಿಜೆಪಿಯವರ್ಯಾರೂ ಹಣ ಹಂಚುತ್ತಿಲ್ಲವೇ? ಅದು ಚುನಾವಣಾ ಆಯೋಗಕ್ಕೆ, ಆದಾಯ ತೆರಿಗೆ ಅಧಿಕಾರಿಗಳಿಗೆ ಗೊತ್ತಿಲ್ಲವೇ? ಈವರೆಗೂ ಬಿಜೆಪಿಯ ಒಬ್ಬರ ಮನೆಯ ಮೇಲೂ ಏಕೆ ದಾಳಿಯಾಗಿಲ್ಲ ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು.
|
11 |
+
ಸುಳ್ಳು ವದಂತಿಗಳನ್ನು ಸೃಷ್ಟಿಸಿ, ಅಪಥ್ಯಗಳನ್ನು ವೈಭವೀಕರಿಸುವ ಪ್ರಯತ್ನ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ನೀಡುವ ಭರವಸೆಯಂತೆ ಮಹಾಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ, ನಿರುದ್ಯೋಗಿ ಯುವಕರಿಗೆ ವೃತ್ತಿ ತರಬೇತಿಯೊಂದಿಗೆ 1 ಲಕ್ಷ ಶಿಷ್ಯ ವೇತನ, 25 ಲಕ್ಷ ರೂ.ವರೆಗೆ ಆರೋಗ್ಯ ವಿಮೆ, ನಗರಪ್ರದೇಶದಲ್ಲಿ ಉದ್ಯೋಗ ಖಾತ್ರಿಯಂತಹ ಭರವಸೆಗಳನ್ನು ನೀಡಿದೆ. ಜನರಿಗೆ ಇವು ತಲುಪಿವೆ ಮತ್ತು ಅರ್ಥವಾಗಿವೆ. ಹೀಗಾಗಿ ಲೋಕಸಭಾ ಮತದಾನದಲ್ಲಿ ಬಿಜೆಪಿಗೆ ಚೊಂಬು ನೀಡಲಿದ್ದಾರೆ ಎಂದರು.
|
12 |
+
ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ನುಡಿದಂತೆ ನಡೆದುಕೊಂಡಿದೆ. ಪಂಚಖಾತ್ರಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ದೇಶದಲ್ಲೂ ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸಲು ಬದ್ಧವಾಗಿದೆ ಎಂದು ತಿಳಿಸಿದರು.
|
eesanje/url_46_169_7.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ವೋಟ್ ಮಾಡಿ ಹೋಟೆಲ್ನಲ್ಲಿ ಉಚಿತ ಊಟ ಮಾಡಿ
|
2 |
+
ಬೆಂಗಳೂರು,ಏ.25-ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನರು ಮತ ಚಲಾವಣೆ ಮಾಡಿ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುವಂತೆ ಮತದಾನದ ಬಗ್ಗೆ ಹಲವು ರೀತಿಯಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ನಡೆಯುತ್ತಿವೆ.
|
3 |
+
ಕೆಲವರು ತಮ್ಮ ಮದುವೆ ಕಾರ್ಯಕ್ರಮಗಳಲ್ಲೂ ಮತದ ಹಕ್ಕಿನ ಬಗ್ಗೆ ಅರಿವು ಮೂಡಿಸಿರುವುದು ಕಂಡುಬರುತ್ತಿದೆ. ಆದರೆ, ಬೆಂಗಳೂರಿನ ಹೋಟೆಲ್ವೊಂದು ಮತದಾನ ಮಾಡಿ ಬಂದವರಿಗೆ ಉಚಿತ ಉಪಾಹಾರ ನೀಡಲು ಮುಂದಾಗಿದೆ. ಮತದಾನದ ಜಾಗೃತಿ ಸಲುವಾಗಿ ನಗರದ ನಿಸರ್ಗ ಹೊಟೇಲ್ ಮಾಲೀಕರು ಮತದಾನ ಮಾಡಿ ಬಂದವರಿಗೆ ಉಚಿತ ತಿಂಡಿತಿನಿಸುಗಳನ್ನು ನೀಡಲು ನಿರ್ಧರಿಸಿದ್ದಾರೆ.
|
4 |
+
ರಾಜ್ಯದಲ್ಲಿ ಮೊದಲ ಹಂತದಲ್ಲಿ ಬೆಂಗಳೂರು ಸೇರಿ 14 ಕ್ಷೇತ್ರಗಳಲ್ಲಿ ನಾಳೆ ಮತದಾನ ನಡೆಯಲಿದೆ. ಈ ದಿನ ಮತದಾನ ಮಾಡಿದ ಬಳಿಕ ಹೋಟೆಲ್ಗೆ ಬಂದು ಮತದಾನದ ಗುರುತು ತೋರಿಸಿದರೆ ಜನರಿಗೆ ಉಚಿತ ಬೆಣ್ಣೆ ದೋಸೆ, ಸಿಹಿ ತಿನಿಸು, ತಂಪು ಪಾನಕ ನೀಡಲಿದ್ದಾರೆ.
|
5 |
+
ಚುನಾವಣಾ ಆಯೋಗದ ಅನುಮತಿ ಮೇರೆಗೆ ರಿಯಾಯಿತಿ ದರದಲ್ಲಿ ಊಟ, ತಿಂಡಿ, ಉಚಿತ ಸೇವೆಗೆ ಅವಕಾಶ ನೀಡಲಾಗಿದೆ. ಇದನ್ನು ಬಳಸಿಕೊಂಡು ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಹೋಟೆಲ್ ಮತದಾರರಿಗೆ ಈ ಮೂಲಕ ಮತದಾನದ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.
|
6 |
+
ವೋಟ್ ಮಾಡಿ ಊಟ ಮಾಡಿ:ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಿ ಗುರುತು ತೋರಿಸಿದವರಿಗೆ ಬೆಣ್ಣೆ ಖಾಲಿ ದೋಸೆ, ತುಪ್ಪದ ಲಾಡು ಮತ್ತು ತಂಪು ಪಾನಕವನ್ನು ಮತದಾನದ ಉತ್ತೇಜನಕ್ಕಾಗಿ ಉಚಿತವಾಗಿ ನೀಡಲಾಗುವುದು. ವೋಟ್ ಮಾಡಿ, ಊಟ ಮಾಡಿ ಎನ್ನುವ ಸಾಮಾಜಿಕ ಕಳಕಳಿವುಳ್ಳ ರಾಜಕೀಯೇತರ ಕಾರ್ಯಕ್ರಮ ಇದಾಗಿದೆ ಎಂದು ನಿಸರ್ಗ ಹೊಟೇಲ್ ಮಾಲೀಕರಾದ ಕೃಷ್ಣ ರಾಜ್ ಹೇಳಿದ್ದಾರೆ.
|
7 |
+
ಚಿಕ್ಕಮಗಳೂರು, ಕೊಡಗು ಮುಂತಾದ ಕಡೆಗಳಲ್ಲಿ ಹೋಟೆಲ್ ಹಾಗೂ ಹೋಮ್ ಸ್ಟೇಗಳನ್ನು ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮತದಾನ ಮಾಡಲು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
|
8 |
+
ನಾಳೆ ಶುಕ್ರವಾರ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಇದ್ದು, ಶನಿವಾರ ಏಪ್ರಿಲ್ ತಿಂಗಳ ನಾಲ್ಕನೇ ಶನಿವಾರವಾಗಿದೆ. ಶುಕ್ರವಾರ ಮತ್ತು ಶನಿವಾರ ಸಾರ್ವಜನಿಕ ರಜೆ ಇದ್ದು ಭಾನುವಾರ ಸಹ ರಜೆ ಸಿಗುವ ಕಾರಣ ಮೂರು ದಿನ ರಜೆಯಾಗುತ್ತದೆ. ಸಾಲು ಸಾಲು ರಜೆಗಳು ಸಿಗುವ ಕಾರಣ ಕೆಲವೊಬ್ಬರು ಗುರುವಾರವೇ ಬೆಂಗಳೂರು ಪಟ್ಟಣ ಬಿಟ್ಟು ಟ್ರಿಪ್ಗೆ ಹೋಗುವ ಯೋಜನೆ ರೂಪಿಸುತ್ತಿದ್ದಾರೆ.
|
9 |
+
ಆದರೆ, ಇದನ್ನು ತಡೆಯುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇದಕ್ಕೆ ಬೆಂಗಳೂರಿನಲ್ಲಿ ಸಹ ಹೋಟೆಲ್ ಮಾಲೀಕರು ಹೊಸದಾಗಿ ಅರಿವು ಮೂಡಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ.
|
eesanje/url_46_169_8.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ನಾಳೆ ಮತದಾನ : ಮತಗಟ್ಟೆಗಳತ್ತ ತೆರಳುತ್ತಿರುವ ಚುನಾವಣಾ ಸಿಬ್ಬಂದಿ
|
2 |
+
ಬೆಂಗಳೂರು,ಏ.25-ನಾಳೆ ಮತದಾನ ನಡೆಯಲಿರುವ ದಕ್ಷಿಣ ಕರ್ನಾಟಕದ 14 ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳಿಗೆ ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ಇಂದು ಮಧ್ಯಾಹ್ನ ತೆರಳಿದರು.
|
3 |
+
ಇಂದು ಬೆಳಿಗ್ಗೆ ಆಯಾ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮಸ್ಟರಿಂಗ್ ಕೇಂದ್ರಗಳಲ್ಲಿ ಚುನಾವಣಾ ಸಿಬ್ಬಂದಿ ಸಮಾವೇಶಗೊಂಡು ನಿಗದಿಪಡಿಸಿದ ಮತಗಟ್ಟೆಗಳಿಗೆ ಮತಯಂತ್ರ ಹಾಗೂ ಇತರ ಸಾಮಗ್ರಿಗಳೊಂದಿಗೆ ತೆರಳಿದರು.
|
4 |
+
ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಕ್ಷೇತ್ರಗಳಲ್ಲಿ ಒಟ್ಟು 30,602 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
|
5 |
+
ಮತಗಟ್ಟೆಯ 200 ಮೀಟರ್ ದೂರದಲ್ಲಿ ಅಭ್ಯರ್ಥಿಗಳ ತಾತ್ಕಾಲಿಕ ಕಚೇರಿಗಳನ್ನು ಸ್ಥಾಪಿಸಲು ಅಭ್ಯರ್ಥಿಗಳಿಗೆ ಚುನಾವಣಾ ಆಯೋಗ ಅವಕಾಶ ಮಾಡಿಕೊಟ್ಟಿದೆ.
|
eesanje/url_46_169_9.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ನಾಳೆ ಮೊದಲ ಹಂತದ ಚುನಾವಣೆ : ವೋಟ್ ಐಡಿ ಇಲ್ಲದಿದ್ದರೆ ಪರ್ಯಾಯ ದಾಖಲೆಗಳೇನಿರಬೇಕು..?
|
2 |
+
ಬೆಂಗಳೂರು,ಏ.25-ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದ್ದು, 2,88,19,342 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ. 1,44,17,530 ಪುರುಷ, 1,43,87,585 ಮಹಿಳಾ, 3,057 ಇತರೆ, 11,160 ಸೇವಾ ಮತದಾರರು ಸೇರಿದ್ದಾರೆ.
|
3 |
+
14 ಲೋಕಸಭಾ ಕ್ಷೇತ್ರಗಳಲ್ಲಿ 30,602 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸೇರಿದಂತೆ ಲೋಕಸಭಾ ಚುನಾವಣೆಯಲ್ಲಿ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಹಿಯನ್ನು ಹಾಕಲಾಗುತ್ತದೆ.
|
4 |
+
ಪರ್ಯಾಯ ದಾಖಲೆ :ಮತದಾನ ಮಾಡಲು ಚುನಾವಣಾ ಆಯೋಗ ನೀಡಿರುವ ಮತದಾರರ ಗುರುತಿನ ಚೀಟಿ ಹಾಗೂ ವೋಟರ್ ಸ್ಲಿಪ್ ಅನ್ನು ತೋರಿಸಿ ಮತ ಚಲಾಯಿಸಬಹುದು. ಒಂದು ವೇಳೆ ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ, ಪರ್ಯಾಯವಾಗಿ ಭಾವಚಿತ್ರವುಳ್ಳ ಇತರೆ ಅಧಿಕೃತ ಗುರುತಿನ ಚೀಟಿಗಳನ್ನು ತೋರಿಸಿ ಮತದಾನ ಮಾಡಬಹುದಾಗಿದೆ.
|
5 |
+
ಆಧಾರ್ ಕಾರ್ಡ್, ನರೇಗಾ ಜಾಬ್ ಕಾರ್ಡ್, ಬ್ಯಾಂಕ್, ಪೋಸ್ಟ್ ಆಫೀಸ್ ಪಾಸ್ ಬುಕ್, ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ಪ್ಯಾನ್ ಕಾರ್ಡ್, ಪಾಸ್ಪೋರ್ಟ್, ಪಿಂಚಣಿಯ ದಾಖಲೆ, ಕೇಂದ್ರ, ರಾಜ್ಯ ಸರ್ಕಾರಗಳು, ಪಬ್ಲಿಕ್ ಲಿಮಿಟೆಡ್ ಕಂಪನಿಗಳು ಉದ್ಯೋಗಿಗಳಿಗೆ ನೀಡಿರುವ ಗುರುತಿನ ಚೀಟಿ, ಎಂಪಿ, ಎಂಎಲ್ಎ, ಎಂಎನ್ಸಿಗಳಿಗೆ ನೀಡಿರುವ ಗುರುತಿನ ಚೀಟಿಗಳು, ಭಾರತ ಸರ್ಕಾರ ನೀಡಿರುವ ವಿಶಿಷ್ಟ ಅಂಗವೈಕಲ್ಯ ಕಾರ್ಡ್ ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ.
|
eesanje/url_46_16_1.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ರಾಮನಗರ : ಮರಕ್ಕೆ ಕಾರು ಡಿಕ್ಕಿ ಹೊಡೆದು ನಾಲ್ವರು ಸಾವು
|
2 |
+
:
|
3 |
+
ಬೆಂಗಳೂರು,ಸೆ.17– ರಾಷ್ಟ್ರೀಯ ಹೆದ್ದಾರಿ 75ರ ಕುದೂರು ಸಮೀಪದ ಭದ್ರಾಪುರ ಗೇಟ್ ಬಳಿ ಕಾರು ಮರಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟು ಒಬ್ಬರು ಗಾಯಗೊಂಡಿದ್ದಾರೆ.
|
4 |
+
ಇಂದು ಮಧ್ಯಾಹ್ನ ಸುಮಾರು 4ಗಂಟೆ ಸಮಯದಲ್ಲಿ ಕುಣಿಗಲ್ ಕಡೆಯಿಂದ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಗಾಯಗೊಂಡಿರುವವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಕುದೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
|
eesanje/url_46_16_10.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ನಾಗಮಂಗಲ ಕೋಮುಗಲಭೆ ಪ್ರಕರಣವನ್ನು ಎನ್ಐಎಗೆ ವಹಿಸುವಂತೆ ಶೋಭಾ ಕರಂದ್ಲಾಜೆ ಒತ್ತಾಯ
|
2 |
+
|
3 |
+
ಬೆಂಗಳೂರು,ಸೆ.17-ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ನಡೆದ ಕೋಮುಗಲಭೆಯನ್ನು ರಾಜ್ಯ ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)ಕ್ಕೆ ವಹಿಸಬೇಕೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.
|
4 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಲ್ನೋಟಕ್ಕೆ ಇದು ಆಕಸಿಕವಾಗಿ ನಡೆದ ಗಲಾಟೆ ಅಲ್ಲ. ಇದೊಂದು ಪೂರ್ವ ನಿಯೋಜಿತ ಕೃತ್ಯ. ಪೆಟ್ರೋಲ್ ಬಾಂಬ್ಗಳು ಎಲ್ಲಿಂದ ಬಂದವು? ಮಾಸ್ಕ್ಗಳನ್ನು ಏಕೆ ಖರೀದಿಸಲಾಯಿತು? ಎಂದು ಪ್ರಶ್ನಿಸಿದರು.ಸತ್ಯಾಸತ್ಯತೆ ಹೊರಬರಬೇಕೆಂದರೆ ಪೊಲೀಸರಿಂದ ನಿಷ್ಪಕ್ಷಪಾತ ತನಿಖೆ ನಡೆಸಲು ಸಾಧ್ಯವೇ ಇಲ್ಲ. ಹೀಗಾಗಿ ಪ್ರಕರಣವನ್ನು ಎನ್ಐಎಗೆ ವಹಿಸಬೇಕು ಎಂದು ಆಗ್ರಹಿಸಿದರು.
|
5 |
+
ಕರ್ನಾಟಕದಲ್ಲಿ ಅಪರಾಧಿಗಳು, ದೇಶದ್ರೋಹಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಅನೇಕ ಕಡೆ ಪ್ಯಾಲೇಸ್ತೈನ್ ಧ್ವಜ ಹಿಡಿದುಕೊಂಡು ಪಾಕಿಸ್ತಾನ ಪರ ಘೋಷಣೆ ಕೂಗುತ್ತಿದ್ದಾರೆ. ಸರ್ಕಾರಕ್ಕೆ ಕಣ್ಣು ಕಾಣುತ್ತಿಲ್ಲವೇ ಎಂದು ಕಿಡಿಕಾರಿದರು.ರಾಜ್ಯದ ಕೆಲವು ಕಡೆ ನಡೆದ ಗಲಭೆಯಲ್ಲಿ ಪಿಎಫ್ಐ ಮತ್ತು ಎಸ್ಡಿಪಿಐ ಸದಸ್ಯರು ಶಾಮೀಲಾಗಿದ್ದಾರೆ. ನ್ಯಾಯ ಕೊಡಬೇಕಾದ ಸರ್ಕಾರ ಸಣ್ಣ ಘಟನೆ ಎಂದು ತಿಪ್ಪೇ ಸಾರುವ ಕೆಲಸ ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದರು.
|
6 |
+
ಶಾಸಕ ಮುನಿರತ್ನ ಪ್ರಕರಣದಲ್ಲಿ ಸತ್ಯಾಸತ್ಯತೆ ಹೊರಬರಬೇಕು. ಕಾನೂನು ಏನು ಕ್ರಮ ಕೈಗೊಳ್ಳೊತ್ತೊ ಅದೇ ಆಗಲಿ. ಎಸ್ಎಫ್ಎಲ್ ವರದಿ ಬರಬೇಕು. ತಪ್ಪಿದರೆ ಕಾನೂನು ಕ್ರಮ ಕೈಗೊಳ್ಳುತ್ತದೆ ಎಂದರು. ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ರಾಜ್ಯದಲ್ಲಿ ಸಾಲು ಸಾಲು ಕೋಮುಗಲಭೆಗಳು ಸರಣಿ ರೂಪದಲ್ಲಿ ನಡೆಯುತ್ತಿದ್ದರೂ ಪೊಲೀಸರು ಏನೂ ಮಾಡದ ಅಸಹಾಯಕ ಸ್ಥಿತಿಯಲ್ಲಿದ್ದಾರೆ ಎಂದು ವಿಷಾದಿಸಿದ್ದಾರೆ.
|
7 |
+
ಮಂಗಳೂರು, ನಾಗಮಂಗಲ ಸೇರಿದಂತೆ ಅನೇಕ ಕಡೆ ಗಲಭೆ ಪ್ರಕರಣಗಳು ನಡೆಯುತ್ತಿವೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿವೆ. ಪೊಲೀಸರು ಸತ್ವ ಕಳೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಸರ್ಕಾರ ಹೇಳುವ ಕೆಲಸವನ್ನಷ್ಟೇ ಪೊಲೀಸರು ಮಾಡುತ್ತಿದ್ದಾರೆ. ಅವರ ಕೈಯನ್ನು ಸಂಪೂರ್ಣವಾಗಿ ಕಟ್ಟಿ ಹಾಕಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ವೋಟ್ ಬ್ಯಾಂಕ್ ಮನಸ್ಥಿತಿಯಿಂದ ನಾವು ನ್ಯಾಯ ನಿರೀಕ್ಷೆ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು.
|
8 |
+
ಸಿದ್ದರಾಮಯ್ಯ ಅವರು ಒಂದೇ ಒಂದು ಕಳಂಕ ಇಲ್ಲ ಎನ್ನುತ್ತಾರೆ. ಅರ್ಕಾವತಿ ಡಿ ನೋಟಿಫಿಕೇಷನ್ ಹಗರಣ, ಮುಡಾ ಭ್ರಷ್ಟಾಚಾರ ಬಯಲಿಗೆ ಬರುತ್ತಿದೆ, ಮಹರ್ಷಿ ವಾಲೀಕಿ ಹಗರಣ 187 ಕೋಟಿ ಹಗರಣ ಆಗಿದೆ ಅದು ಕಳಂಕ ಅಲ್ಲವೇ ಎಂದು ಪ್ರಶ್ನೆ ಮಾಡಿದರು.ನೀವು ಉತ್ತರ ಕೊಡುವ ವೇದಿಕೆ ವಿಧಾನಸಭೆ, ವಿಧಾನಪರಿಷತ್. ಅಲ್ಲಿ ಉತ್ತರ ಕೊಡದೆ ಪಲಾಯನ ಮಾಡಿದ್ದೀರಿ.
|
9 |
+
ನ್ಯಾಯಾಲಯದ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ. ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟರೆ ಅದರ ವಿರುದ್ಧ ಆಂದೋಲನ ಮಾಡಿಸುತ್ತೀರ, ನೀವೇ ಜಡ್್ಜ ಆಗುತ್ತೀರ, ನೀವೇ ವಕೀಲರಾಗುತ್ತೀರಿ ಎಂದು ವ್ಯಂಗ್ಯವಾಡಿದ ಅವರು, ವಿಶೇಷ ಅಧಿವೇಶನ ಕರಿಯಿರಿ, ಚರ್ಚೆ ಮಾಡೋಣ ಎಂದು ಒತ್ತಾಯಿಸಿದರು.
|
eesanje/url_46_16_11.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಕಲ್ಯಾಣ ಕರ್ನಾಟಕ ವಿಮೋಚನಾ ದಿನ : ಕಲಬುರಗಿಯಲ್ಲಿ ಸಿಎಂ ಧ್ವಜಾರೋಹಣ
|
2 |
+
|
3 |
+
ಬೆಂಗಳೂರು,ಸೆ.17-ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಆ ಭಾಗದ 6 ಜಿಲ್ಲೆಗಳಲ್ಲೂ ವಿಭಿನ್ನ ಹಾಗೂ ವಿಶಿಷ್ಟವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರಧ್ವಜಾರೋಹಣ ನೆರವೇರಿಸಿದ್ದು, ಬೀದರ್, ಬಳ್ಳಾರಿ, ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಸಚಿವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
|
4 |
+
ಬಳ್ಳಾರಿಯಲ್ಲಿ ಪೌರಾಡಳಿತ ಸಚಿವ ರಹೀಂಖಾನ್ ಧ್ವಜಾರೋಹಣ ನೆರವೇರಿಸಿ ಗೌರವರಕ್ಷೆ ಸ್ವೀಕರಿಸಿದರು. ಬೀದರ್ನಲ್ಲಿ ಉಸ್ತುವಾರಿ ಸಚಿವ ಈಶ್ವರಖಂಡ್ರೆ, ಕೊಪ್ಪಳದಲ್ಲಿ ಸಚಿವ ಶಿವರಾಜ್ ತಂಗಡಗಿ, ರಾಯಚೂರಿನಲ್ಲಿ ಡಾ.ಶರಣಪ್ರಕಾಶ್ ಪಾಟೀಲ್ ಸೇರಿದಂತೆ ಹಲವು ಕಡೆ ಧ್ವಜಾರೋಹಣ ಹಾಗೂ ಗೌರವರಕ್ಷೆ ಸ್ವೀಕಾರ ಕಾರ್ಯಕ್ರಮಗಳು ನಡೆದವು.
|
5 |
+
ಕಲಬುರಗಿಯಲ್ಲಿ ಹೈದರಾಬಾದ್-ಕರ್ನಾಟಕ ವಿಮೋಚನಾ ದಿನದ ಸುವರ್ಣ ಮಹೋತ್ಸವ ಹಾಗೂ 371 ಜೆ ವಿಧಿಯ ಅನುಷ್ಟಾನ ದಶಮಾನೋತ್ಸವ ಸಂದರ್ಭದ ಜೊತೆಯಲ್ಲೇ ರಾಜ್ಯ ಸಚಿವ ಸಂಪುಟ ಸಭೆಯನ್ನು ಆಯೋಜಿಸಲಾಗಿತ್ತು.
|
6 |
+
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಸಂಪುಟದ ಎಲ್ಲಾ ಸಚಿವರು ಕಾರ್ಯಕ್ರಮಗಳಲ್ಲಿ ಹಾಗೂ ಸಚಿವ ಸಂಪುಟ ಸಭೆಗಳಲ್ಲಿ ಭಾಗವಹಿಸಿದ್ದರು.
|
eesanje/url_46_16_12.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ರಾಹುಲ್ ಗಾಂಧಿಗೆ ನಿಂದಿಸಿದ ಯತ್ನಾಳ್ ವಿರುದ್ಧ ಪೊಲೀಸರಿಗೆ ದೂರು
|
2 |
+
|
3 |
+
ಬೆಂಗಳೂರು, ಸೆ.17-ಕೇಂದ್ರದ ಮಾಜಿಸಚಿವ ಹಾಗೂ ಬಿಜೆಪಿಯ ವಿಜಯಪುರ ಜಿಲ್ಲೆಯ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿರವರ ವಿರುದ್ಧ ಅತ್ಯಂತ ಕೀಳು ಹಾಗೂ ವಯಕ್ತಿಕ ನಿಂಧನೆ ಮಾಡಿರುವ ಹಿನ್ನೆಲೆಯಲ್ಲಿ ಕೂಡಲೇ ಅವರ ವಿರುದ್ಧ ತನಿಖೆ ನಡೆಸಿ ಬಂಧಿಸಬೇಕೆಂದು ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಸ್. ಮನೋಹರ್ ನೇತೃತ್ವದ ನಿಯೋಗ ಪೊಲೀಸರಿಗೆ ದೂರು ನೀಡಿದೆ.
|
4 |
+
ಬಸವನಗೌಡ ಪಾಟೀಲ್ ಯತ್ನಾಳ್ ಪ್ರತಿ ಬಾರಿಯೂ ಕೇವಲ ತನ್ನ ರಾಜಕೀಯಕ್ಕಾಗಿ ಹಾಗೂ ಪ್ರಚಾರಕ್ಕೋಸ್ಕರ ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಟೀಕೆ ನಡೆಸುತ್ತಿರುತ್ತಾರೆ. ರಾಹುಲ್ ಗಾಂಧಿರವರ ಬಗ್ಗೆ ಈಗಾಗಲೆ ಅನೇಕ ಬಾರಿ ಇಂತಹ ಟೀಕೆಗಳನ್ನು ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಈಗಾಗಲೇ ತಮಗೆ ದೂರನ್ನು ಸಲ್ಲಿಸಿದ್ದೇವೆ.
|
5 |
+
ಆದರೂ ಸಹ ಪೊಲೀಸ್ ಇಲಾಖೆ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಆದ್ದರಿಂದ ವೈಯಕ್ತಿಕವಾಗಿ ರಾಹುಲ್ಗಾಂದಿರವರ ವಿರುದ್ಧ ನಿಂದನೆ ಹಾಗೂ ಟೀಕೆಯನ್ನು ಮಾಡುತ್ತಿದ್ದಾರೆ.
|
6 |
+
ಇದು ಕಾನೂನು ಸುವ್ಯವಸ್ಥೆಗೆ ವಿರುದ್ಧವಾದ ಹೇಳಿಕೆ ಆಗಿರುವುದರಿಂದ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ತೀವ್ರ ನೋವು ತರುವಂತಹ ಹೇಳಿಕೆ ನೀಡಿರುವ ಇವರ ವಿರುದ್ಧ ತುರ್ತಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಈ ನಿಯೋಗದ ಮೂಲಕ ಮನವಿಯಲ್ಲಿ ಉಲ್ಲೇಖಿಸಲಾಗಿದೆ.
|
eesanje/url_46_16_2.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಮಾಜಿ ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ ವಿಧಿವಶ
|
2 |
+
|
3 |
+
ಯಾದಗಿರಿ,ಸೆ.17-ಕಲ್ಯಾಣ ಕರ್ನಾಟಕದ ಸ್ವಾಂತ್ರತ್ಯ ಹೋರಾಟ ಗಾರ ದಿ.ವಿಶ್ವನಾಥರೆಡ್ಡಿ ಮುದ್ನಾಳ ಅವರ ಪುತ್ರ, ಮಾಜಿ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ (70) ತೀವ್ರ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.
|
4 |
+
ಜಿಲ್ಲೆಯ ಬಿಜೆಪಿ ಹಿರಿಯ ಮುಖಂಡರಾಗಿದ್ದ ಅವರು ಕಳೆದ ಹಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯು ಸಿರೆಳೆದಿದ್ದಾರೆ.
|
5 |
+
ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪ ಅವರ ಆಪ್ತ ಬಳಗದಲ್ಲಿದ್ದ ಮುದ್ನಾಳ ಅವರು ಕಳೆದ ವಿಧಾನಸಭಾ ಚುನಾವಣೆಯ ನಂತರ ಸಾರ್ವಜನಿಕವಾಗಿ ಹೆಚ್ಚಾಗಿ ಕಾಣಿಸಿಕೊಂಡಿಲ್ಲ. 2018ರಲ್ಲಿ ಬಿಜೆಪಿಯಿಂದ ಯಾದಗಿರಿ ಮತಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಮುದ್ನಾಳ ಅವರು 2023ರಲ್ಲಿ ಪರಾಭವಗೊಂಡಿದ್ದರು.
|
6 |
+
ಕಲ್ಯಾಣ ಕರ್ನಾಟಕದ ಸ್ವಾಂತ್ರತ್ಯ ಹೋರಾಟಗಾರ ದಿ. ವಿಶ್ವನಾಥರಡ್ಡಿ ಮುದ್ನಾಳ ಅವರ ಪುತ್ರರಾಗಿದ್ದ ವೆಂಕಟರೆಡ್ಡಿ ಮುದ್ನಾಳ ಕಲ್ಯಾಣ ಕರ್ನಾಟಕ ಉತ್ಸವ ದಿನದಂದೇ ನಿಧನರಾಗಿದ್ದಾರೆ.
|
eesanje/url_46_16_3.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
|
2 |
+
|
3 |
+
ಬೆಂಗಳೂರು, ಸೆ.17-ರಾಹುಲ್ ಗಾಂಧಿಯವರ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿದ್ದ ಶಿವಸೇನೆಯ ಶಾಸಕ ಸಂಜಯ್ ಗಾಯಕ್ವಾಡ್ರನ್ನು ಬಂಧಿಸಬೇಕೆಂದು ಆಗ್ರಹಿಸಿ ಕೆಪಿಸಿಸಿ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು.ಪಕ್ಷದ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
|
4 |
+
ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ಶಾಸಕ ಸಂಜಯ್ ಗಾಯಕ್ವಾಡ್ ವಿವಾದಿತ ಹೇಳಿಕೆ ನೀಡಿ ರಾಹುಲ್ ಗಾಂಧಿಯವರ ನಾಲಗೆ ಕತ್ತರಿಸಿ ದವರಿಗೆ 11 ಲಕ್ಷ ರೂ.ಗಳ ಬಹು ಮಾನ ನೀಡುವುದಾಗಿ ಘೋಷಿಸಿ ದ್ದರು. ಇದು ಕಾಂಗ್ರೆಸಿಗರನ್ನು ಕೆರಳಿಸಿದೆ.
|
5 |
+
ಪ್ರತಿಭಟನೆಯಲ್ಲಿ ಮಾತನಾಡಿದ ಜಿ.ಸಿ. ಚಂದ್ರಶೇಖರ್, ಮಹಾ ರಾಷ್ಟ್ರದಲ್ಲಿ ಗೂಂಡಾ ಸರ್ಕಾರ ಅಧಿಕಾರದಲ್ಲಿದೆ. ಸಂಜಯ್ ಗಾಯಕ್ವಾಡ್ ರೌಡಿಶೀಟರ್ ಆಗಿದ್ದು, ಶಾಸಕನಾಗಿರುವುದು ದುರಂತವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪರಿಶಿಷ್ಟ ಜಾತಿ/ಪಂಗಡದವರೂ ಸೇರಿದಂತೆ ಶೋಷಿತ ಸಮುದಾಯ ಗಳಿಗೆ ಮೀಸಲಾತಿ ನೀಡಿದ್ದೇ ಕಾಂಗ್ರೆಸ್ ಪಕ್ಷ.
|
6 |
+
ರಾಹುಲ್ಗಾಂಧಿ ಅಮೆರಿಕದಲ್ಲಿ ನೀಡಿದ್ದ ಹೇಳಿಕೆಯನ್ನು ಬಿಜೆಪಿ ಉದ್ದೇಶಪೂರ್ವಕವಾಗಿ ತಿರುಚಿ ಗೊಂದಲ ಮೂಡಿಸುವ ಪ್ರಯತ್ನ ನಡೆಸುತ್ತಿದೆ. ಶೋಷಿತ ವರ್ಗಗಳಿಗೆ ಆರ್ಥಿಕ, ಸಾಮಾಜಿಕ ಸುಸ್ಥಿರತೆಯನ್ನು ತಂದ ಬಳಿಕ ಮೀಸಲಾತಿಯನ್ನು ತೆಗೆಯುವುದಾಗಿ ರಾಹುಲ್ಗಾಂಧಿ ಹೇಳಿದ್ದಾರೆ. ಆದರೆ ಅದನ್ನು ಪೂರ್ಣವಾಗಿ ಅರ್ಥೈಸಿಕೊಳ್ಳದೆ ಅಪಪ್ರಚಾರ ನಡೆಸಲಾಗುತ್ತಿದೆ.
|
7 |
+
ಆರಂಭದಿಂದಲೂ ರಾಹುಲ್ಗಾಂಧಿಯವರನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಆದರೆ ಅದಕ್ಕೆ ಜನ ಅವಕಾಶ ನೀಡಲಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಬಿಜೆಪಿಗೆ ಬುದ್ಧಿ ಕಲಿಸಿದ್ದಾರೆ. ಸಂಜಯ್ ಗಾಯಕ್ವಾಡ್ ಹೇಳಿಕೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರಿನಲ್ಲಿ ಪೊಲೀಸರಿಗೆ ದೂರು ನೀಡಲಾಗುವುದು. ನ್ಯಾಯಾ ಲಯದಲ್ಲಿ ಪ್ರಕರಣ ದಾಖಲಿಸ ಲಾಗು ವುದು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ತಮ ಹುದ್ದೆಯ ಘನತೆಯನ್ನು ಮರೆತು ಹೀನ ಹಾಗೂ ಕೀಳುಮಟ್ಟದ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರಿದರು.
|
8 |
+
ಬಿಜೆಪಿಯವರು ಸಂವಿಧಾನವನ್ನು ಪಾಲಿಸುತ್ತಿಲ್ಲ. ಮೋದಿ, ಅಮಿತ್ ಶಾ ಕಾನೂನುಗಳನ್ನು ಪಾಲನೆ ಮಾಡುತ್ತಿದ್ದಾರೆ. ಬಿಜೆಪಿಯ ಗೂಂಡಾಗಳು ಜನರ ಶಾಂತಿ ನೆಮದಿಯನ್ನು ಕೆಡಿಸುವುದು, ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿ ಹಿಂಸಾಚಾರಕ್ಕೆ ಕುಮಕ್ಕು ನೀಡು ವುದನ್ನೇ ಪ್ರವೃತ್ತಿ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
|
9 |
+
ರಾಹುಲ್��ಗಾಂಧಿಯ ನಾಲಗೆ ಕತ್ತರಿಸುವುದಿರಲಿ ಅವರನ್ನು ಮುಟ್ಟಲೂ ಕೂಡ ಬಿಜೆಪಿಯವರಿಗೆ ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷ ರಾಹುಲ್ಗಾಂಧಿಯವರ ಜೊತೆ ಸದೃಢವಾಗಿ ನಿಲ್ಲಲಿದೆ. ಶಿವಸೇನೆ ಸಂಜಯ್ ಗಾಯಕ್ವಾಡ್ನನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಜೊತೆಗೆ ಕ್ರಿಮಿನಲ್ ಪ್ರಕರಣದಲ್ಲಿ ಬಂಧಿಸಬೇಕು ಎಂದು ಒತ್ತಾಯಿಸಿದರು.
|
eesanje/url_46_16_4.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಭಯೋತ್ಪಾದನೆ ಹೆಚ್ಚಾಗುತ್ತೆ : ಆರ್.ಅಶೋಕ್
|
2 |
+
|
3 |
+
ಬೆಂಗಳೂರು,ಸೆ.17-ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಮುಸ್ಲಿಂ ಭಯೋತ್ಪಾದನೆ ಹೆಚ್ಚಾಗುತ್ತದೆ. ಇದಕ್ಕೆ ಅತಿಯಾದ ತುಷ್ಟಿಕರಣ ನೀತಿಯೇ ಕಾರಣ ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
|
4 |
+
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣೇಶ ಹಬ್ಬದಲ್ಲಿ ಪೆಟ್ರೋಲ್ ಬಾಂಬ್ ಹಾಕುತ್ತಾರೆ, ಪ್ಯಾಲೆಸ್ತೈನ್ ಧ್ವಜ ಹಿಡ್ಕೊಂಡು ಓಡಾಡುತ್ತಾರೆ, ದೇಶಕ್ಕೆ ದ್ರೋಹ ಬಗೆಯುವವರ ಜೊತೆ ರಾಹುಲ್ ಟೀ ಪಾರ್ಟಿ ಮಾಡುತ್ತಾರೆ. ವಿದೇಶದಲ್ಲಿ ಭಾರತವನ್ನು ತೆಗಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
|
5 |
+
ಈದ್ ಮಿಲಾದ್ ಹೆಸರು ಹೇಳಿಕೊಂಡು ಪ್ಯಾಲೆಸ್ಟೈನ್ ಧ್ವಜ ಹಾರಿಸುತ್ತಾರೆ. ಎಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆಯೋ ಅಲ್ಲೆಲ್ಲ ಮುಸ್ಲಿಂ ಭಯೋತ್ಪಾದಕರಿಗೆ ಹಬ್ಬ ಎಂದು ಕಿಡಿಕಾರಿದರು.
|
6 |
+
ಬಂಟ್ವಾಳದಲ್ಲಿ ಸವಾಲು ಹಾಕಿದವರನ್ನು ಹಿಡಿದು ಜೈಲಿಗೆ ಹಾಕದೆ, ಪೊಲೀಸರು ಕರೆದು ಕಾಫಿ ಕೊಟ್ಟು ಕಳಿಸಿದ್ದಾರೆ. ನಾವು ಕರೆದಾಗ ಬನ್ನಿ ಅಂತಾರೆ, ಖಡಕ್ ನಿರ್ಧಾರಗಳಿಲ್ಲ ಈ ಕೋಮು ದಳ್ಳುರಿ ಎಲ್ಲಿಗೆ ಹೋಗಿ ಮುಟ್ಟುತ್ತೊ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.
|
7 |
+
ಈ ಘಟನೆಗಳಿಗೆ ಪ್ರಚೋದನೆ ಕೊಡುತ್ತಿರುವುದೇ ಕಾಂಗ್ರೆಸ್ಪಕ್ಷ. ಒಂದು ಸಮುದಾಯದ ಓಲೈಕೆಗಾಗಿ ಕಾಂಗ್ರೆಸ್, ಅವರು ಏನೇ ಮಾಡಿದರೂ ಕೇಳುವುದಿಲ್ಲ. ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ನ್ಯಾಯಾಲಯದಲ್ಲಿ ಏನಾಗುತ್ತದೆ ಎಂಬುದೇ ಅವರಿಗೆ ಚಿಂತೆ ಎಂದು ಕಿಡಿಕಾರಿದರು.
|
8 |
+
ಚಲುವರಾಯಸ್ವಾಮಿ ಆರೋಪ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ನವರು ಸತ್ಯಹರಿಶ್ಚಂದ್ರನ ಮೊಮಕ್ಕಳಾ? ವಿಧಾನಸೌಧದಲ್ಲಿ ಕೂಗಿದಾಗ ಕೂಗೇ ಇಲ್ಲವೆಂದರು. ರಾಮೇಶ್ವರಂ ಕೆಫೆನದ್ದು ದೋಸೆ ಗಲಾಟೆ ಎಂದಿದ್ದರು. ಈಗ ಎನ್ಐಎನವರು ಹಿಡಿದಾಕಿದ್ದಾರೆ ಎಂದು ಹೇಳಿದರು.
|
9 |
+
ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣ ಸಂಬಂಧ, ಓ ಮೈ ಬ್ರದರ್ಸ್ ಎನ್ನುತ್ತಾರೆ. ಅವರು ತಪ್ಪೇ ಮಾಡಿಲ್ಲ ಎನ್ನುತ್ತಾರೆ. ಅಲ್ಲಿ ನಡೆದದ್ದನ್ನು, ಜನ ಹೇಳಿದ್ದನ್ನು ನಾವು ಹೇಳಿದ್ದೀವಿ ಎಂದರು.
|
10 |
+
ಸರ್ಕಾರ ತನಿಖೆಗೂ ಮೊದಲು ಕ್ಲೀನ್ ಚಿಟ್ ಕೊಡುತ್ತಾರೆ. ಗಣೇಶ ಹಬ್ಬದಲ್ಲಿ ಪೆಟ್ರೋಲ್ ಬಾಂಬ್, ಲಾಂಗು ಮಚ್ಚು ಹೇಗೆ ಬಂತು? ಗಲಾಟೆ ಆಗುತ್ತದೆ ಎಂಬುದು ಗೊತ್ತಿದ್ದರೂ ಮುನ್ನೆಚ್ಚರಿಕೆ ವಹಿಸಿದ್ದರೂ ಕೇರಳದಿಂದ ಇಲ್ಲಿಗೆ ಬಂದು ಕೃತ್ಯಗಳನ್ನು ಮಾಡಿದ್ದಾರೆ. ಹಿಂದುಗಳ ಅಂಗಡಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ ಎಂದು ಕಿಡಿಕಾರಿದ್ದಾರೆ.
|
11 |
+
ಆರ್ಎಸ್ಎಸ್ ನಾಯಕರ ಜೊತೆ ನಡೆಸಿದ ಸಂಧಾನ ವಿಫಲವಾಯಿತೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅಶೋಕ್, ಸಂಘದಿಂದ ಬಿಜೆಪಿ���ೆ ಯಾವುದೇ ಸೂಚನೆ ಬಂದಿಲ್ಲ. ಸಂಘ ಒಂದು ಸಾಂಸ್ಕೃತಿಕ ಸಂಸ್ಥೆಯಾಗಿ. ಸಂಘ ರಾಜಕೀಯ ಮಾಡುವುದಿಲ್ಲ. ಸಂಘದ ಕಾರ್ಯ ಪದ್ಧತಿಯಲ್ಲಿ ರಾಜಕೀಯ ನುಸುಳಿಲ್ಲ ಎಂದು ಸಮರ್ಥಿಸಿಕೊಂಡರು.
|
12 |
+
ಅಧಿಕಾರಿ/ನೌಕರರ ಪ್ರಾಸಿಕ್ಯೂಷನ್ ವಿವರ ಕೇಳಿ ರಾಜ್ಯಪಾಲರು ಥಾವರ್ಚಂದ್ರ ಗೆಹ್ಲೋಟ್ ಅವರು ವಿವರಣೆ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವುದನ್ನು ಸಮರ್ಥಿಸಿಕೊಂಡ ಅವರು, ರಾಜ್ಯಪಾಲರು ಸರ್ಕಾರದ ಜೊತೆ ಸಂಘರ್ಷಕ್ಕೆ ಇಳಿದಿಲ. ಕಾನೂನು ಪ್ರಕಾರ ಪತ್ರ ಬರೆದಿದ್ದಾರೆ. ಅವರಿಗೆ ಮಾಹಿತಿ ಕೇಳುವ ಅಧಿಕಾರ ಇದೆ. ಮಾಹಿತಿ ಬಂದ ನಂತರ ರಾಜ್ಯಪಾಲರು ಔಚಿತ್ಯವಾದ ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.
|
eesanje/url_46_16_5.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಡಿಕೆಶಿ ವಿರುದ್ಧ ಶಾಸಕ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ
|
2 |
+
|
3 |
+
ಬೆಂಗಳೂರು,ಸೆ.17– ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಪ್ರತಿವಾದಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿ ಅರ್ಜಿ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ.
|
4 |
+
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೈಗೆತ್ತಿ ಕೊಂಡ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಗಳಾದ ಸೂರ್ಯಕಾಂತ್ ಹಾಗೂ ಉಜ್ಜಲ್ ಬುಯಾನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ಲೋಕಾಯುಕ್ತ, ಸಿಬಿಐ, ರಾಜ್ಯ ಸರ್ಕಾರ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ತಕರಾರು ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿ ಅರ್ಜಿ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿತು.
|
5 |
+
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ ಪ್ರಕರಣ ಸಂಬಂಧ ಸಚಿವ ಸಂಪುಟದಲ್ಲಿ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಸಿಬಿಐ ತನಿಖೆಯನ್ನು ಹಿಂಪಡೆಯಲಾಗಿತ್ತು. ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ದ್ವಿಸದಸ್ಯ ಪೀಠ ಇದನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸುವಂತೆ ಸೂಚಿಸಿ ಯತ್ನಾಳ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಇದರಂತೆ ಯತ್ನಾಳ್ ಸುಪ್ರೀಂಕೋರ್ಟ್ಗೆ ಮೇಲನವಿ ಸಲ್ಲಿಸಿದ್ದರು.
|
6 |
+
ಬಸನಗೌಡ ಯತ್ನಾಳ್ ಅರ್ಜಿ ಸಲ್ಲಿಕೆಗೆ ಮುನ್ನವೇ ಡಿ.ಕೆ ಶಿವಕುಮಾರ್ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೇವಿಯಟ್ ಸಲ್ಲಿಸಿದ್ದು, ಪ್ರಕರಣದಲ್ಲಿ ತಮ ಅಭಿಪ್ರಾಯ ಕೇಳದೆ ಯಾವುದೇ ಆದೇಶ ನೀಡಬಾರದು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
|
eesanje/url_46_16_6.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮೀಸಲಿಟ್ಟ ಹಣ ತೆಲಂಗಾಣ ಚುನಾವಣೆಯಲ್ಲಿ ಬಳಕೆ : ಆರ್.ಅಶೋಕ್
|
2 |
+
|
3 |
+
ಬೆಂಗಳೂರು,ಸೆ.17– ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮೀಸಲಿಟ್ಟ ಹಣ ಹಾಗೇ ಉಳಿದಿದೆಯೋ ಅಥವಾ ತೆಲಂಗಾಣ ಚುನಾವಣಾ ಪ್ರಚಾರಕ್ಕೆ ಗುಳೇ ಹೋಯಿತೋ? ಎಂಬುದನ್ನು ಸ್ಪಷ್ಟಪಡಿಸಬೇಕೆಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರವನ್ನು ಒತ್ತಾಯಿ ಸಿದರು.
|
4 |
+
ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರ್ಕಾರದ ವಿರುದ್ಧ ಸಾಲು ಸಾಲು ಪೋಸ್ಟ್ ಮಾಡಿರುವ ಅವರು, ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳು ಕೇವಲ ಪೊಳ್ಳು ಭರವಸೆಗಳಾಗಿ ಉಳಿದಿದೆಯೂ ಅಥವಾ ಕಿಂಚಿತ್ತಾದರೂ ಅನುಷ್ಠಾನ ಆಗಿದೆಯೂ ಎಂದು ಸಚಿವ ಪ್ರಿಯಾಂಕ ಖರ್ಗೆ ಅವರೇ ತಮ ಚೀಫ್ ್ಢಃಟಟಚಿಛ್ಟಿ ಮೂಲಕ ಫ್ಯಾಕ್ಟ್ ಚೆಕ್ ಮಾಡಿಸಿ ಕಲ್ಯಾಣ ಕರ್ನಾಟಕದ ಜನತೆಗೆ ವಾಸ್ತವಾಂಶ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.
|
5 |
+
ಕಲ್ಯಾಣ ಕರ್ನಾಟಕದಲ್ಲಿ ಸಂಪುಟ ಸಭೆ ಮಾಡಿ ಮಾಡಿ ಬಿಟ್ಟಿ ಪ್ರಚಾರ ಗಿಟ್ಟಿಸಿಕೊಳ್ಳಲು ಹೊರಟಿರುವ ಕಾಂಗ್ರೆಸ್, ಸರ್ಕಾರ ಕಲ್ಯಾಣ ಕರ್ನಾಟಕದ ಜನತೆಯ ಕಣ್ಣಿಗೆ ಮಣ್ಣೆರಚಿ ದ್ರೋಹ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯನವರೇ, ಕಲ್ಯಾಣ ಕರ್ನಾಟಕದಲ್ಲಿ ಸಂಪುಟ ಸಭೆ ಮಾಡಿದ ಮಾತ್ರಕ್ಕೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಆಗಿಬಿಡುತ್ತಾ? ನಿಮಗೆ ಕಿಂಚಿತ್ತಾದರೂ ಆತಸಾಕ್ಷಿ ಇದ್ದರೆ ಸಂಪುಟ ಸಭೆ ಮಾಡುವ ಮುನ್ನ ಕಲ್ಯಾಣ ಕರ್ನಾಟಕದ ಜನತೆಯ ಈ ಪ್ರಶ್ನೆಗಳಿಗೆ ಉತ್ತರಿಸಿ ಎಂದು ಒತ್ತಾಯಿಸಿದ್ದಾರೆ.
|
6 |
+
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5,000 ಕೋಟಿ ರೂಪಾಯಿ ನೀಡುವುದಾಗಿ ತಮ ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದರಲ್ಲ, ಕಳೆದ ಎರಡು ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕಕ್ಕೆ ಒಟ್ಟು ಎಷ್ಟು ಹಣ ಮೀಸಲಿಟ್ಟಿದ್ದೀರಿ? ಅದರಲ್ಲಿ ಬಿಡುಗಡೆಯಾದ ಅನುದಾನ ಎಷ್ಟು? ಖರ್ಚಾಗಿದ್ದು ಎಷ್ಟು? ಎಂದು ಪ್ರಶ್ನೆ ಮಾಡಿದ್ದಾರೆ.
|
7 |
+
ಬಳ್ಳಾರಿಯಲ್ಲಿ 5,000 ಕೋಟಿ ರೂಪಾಯಿ ಮೊತ್ತದ ಅಪೇರಲ್ ಪಾರ್ಕ್ ಸ್ಥಾಪಿಸುವ ಭರವಸೆ ಏನಾಯ್ತು?ತಮ್ಮ ಪ್ರಚಾರ ಭಾಷಣದಲ್ಲಿ ಬಳ್ಳಾರಿಯನ್ನ ಜೀನ್ಸ್ ರಾಜಧಾನಿ ಮಾಡುವ ಭರವಸೆ ಏನಾಯ್ತು? ಕಲ್ಯಾಣ ಕರ್ನಾಟಕದಲ್ಲಿ 41 ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ 100 ಪಿಯುಸಿ ಕಾಲೇಜು, ಒಂದು ಮಹಿಳಾ ಪದವಿ ಕಾಲೇಜು ಸ್ಥಾಪಿಸುವ ಭರವಸೆ ನೀಡಿದ್ದರಲ್ಲಾ? ಅದರಲ್ಲಿ ಒಂದಾದರೂ ಸ್ಥಾಪನೆಯಾಗಿದೆಯಾ? ಕಲ್ಯಾಣ ಕರ್ನಾಟಕದ ಪ್ರತಿ ಹೋಬಳಿಯಲ್ಲಿ ಒಂದು ಬಾಬಾ ಸಾಹೇಬ್ ಅಂಬೇಡ್ಕರ್ ಇಂಗ್ಲಿಷ್ ಮಾಧ್ಯಮ ಶಾಲೆ ಸ್ಥಾಪಿಸುವ ಭರವಸೆ ನೀಡಿದ್ದರಲ್ಲ, ಕನಿಷ್ಠ ಪಕ್ಷ ಒಂದಾದರೂ ಸ್ಥಾಪನೆ ಆಗಿದೆಯಾ? ಎಂದು ಪ್ರಶ್ನಿಸಿದ್ದಾರೆ.
|
8 |
+
ಎರಡು ವರ್ಷದೊಳಗೆ ಕಲ್ಯಾಣ ಕರ್ನಾಟಕದ 2,500 ಹೊಸ ಶಾಲಾ ಕೊಠಡಿ ನಿರ್ಮಾಣ ಹಾಗು ಖಾಲಿ ಇರುವ ಎಲ್ಲ ಶಿಕ್ಷಕ ಹುದ್ದೆಗಳ ನೇಮಕಾತಿ ಮಾಡುತ್ತೇವೆ ಎನ್ನುವ ಭರವಸೆ ಈಡೇರುವುದು ಯಾವಾಗ? ಕಳೆದ 15 ತಿಂಗಳಲ್ಲಿ ಎಷ್ಟು ಶಿಕ್ಷಕರ ನೇಮಕಾತಿ ಆಗಿದೆ? ಎಷ್ಟು ಶಾಲಾ ಕೊಠಡಿಗಳ ನಿರ್ಮಾಣ ಆಗಿದೆ ಎಂದು ಪ್ರಶ್ನೆ ಹಾಕಿದ್ದಾರೆ.
|
9 |
+
ಕಲ್ಯಾಣ ಕರ್ನಾಟಕದ ಗ್ರಾಮ ಪಂಚಾಯಿತಿಗಳಿಗೆ ತಲಾ ಒಂದು ಕೋಟಿ ರೂಪಾಯಿ ಅನುದಾನ ನೀಡುವ ಭರವಸೆ ಈಡೇರಿದೆಯೇ? ಎಂದು ಎಂದು ಪ್ರಶ್ನೆ ಮಾಡಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕವನ್ನ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಕಾಂಗ್ರೆಸ್ ಸರ್ಕಾರಕ್ಕೆ ಕಿಂಚಿತ್ತಾದರೂ ನೈತಿಕತೆ ಇದ್ದರೆ ನಾಮಕಾವಸ್ತೆ ಸಂಪುಟ ಸಭೆ ಮಾಡುವ ಮೊದಲು ಕಲ್ಯಾಣ ಕರ್ನಾಟಕದ ಜನತೆಯ ಈ ಪ್ರಶ್ನೆಗಳಿಗೆ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
|
eesanje/url_46_16_7.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
5 ಸಾವಿರ ಕೋಟಿ ರೂ.ಗಳ ವಿಶೇಷ ಅನುದಾನದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಸಂಕಲ್ಪ : ಸಿಎಂ
|
2 |
+
5000
|
3 |
+
ಬೆಂಗಳೂರು,ಸೆ.17- ಕಲ್ಯಾಣ ಕರ್ನಾಟಕ ಭಾಗದ ಪ್ರಗತಿಗಾಗಿ 5 ಸಾವಿರ ಕೋಟಿ ರೂ.ಗಳ ವಿಶೇಷ ಅನುದಾನದಲ್ಲಿ ಕ್ರಿಯಾಯೋಜನೆ ರೂಪಿಸಲಾಗಿದ್ದು, ಅಭಿವೃದ್ಧಿಯ ನವಕ್ರಾಂತಿಯನ್ನು ನಿರೀಕ್ಷಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
|
4 |
+
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದ ವಿಶೇಷ ಸ್ಥಾನಮಾನ ಕಲ್ಪಿಸುವ 371 ಜೆ ವಿಧಿಯ ಜಾರಿಯ ದಶಮಾನೋತ್ಸವದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಗೌರವರಕ್ಷೆ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಈ ವರ್ಷ ಉತ್ತಮ ಮಳೆಯಾಗಿದ್ದು, ಪ್ರಕೃತಿಯ ಆಶೀರ್ವಾದದಿಂದ ರೈತರಲ್ಲಿ ಸಂತಸ ಮೂಡಿದೆ ಎಂದರು. 2013 ರಿಂದ ಈವರೆಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 19,778 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದ್ದು, 13,229 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಈವರೆಗೂ 11,174 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ಹೇಳಿದರು.
|
5 |
+
ಬಿಡುಗಡೆಯಾದ ಅನುದಾನಕ್ಕೆ ಶೇ.85 ರಷ್ಟು ಮಂಡಳಿ ಆರ್ಥಿಕ ಪ್ರಗತಿಯನ್ನು ಸಾಧಿಸಿದೆ ಒಟ್ಟಾರೆ 35,885 ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, 27,164 ಕಾಮಗಾರಿಗಳು ಪೂರ್ಣಗೊಂಡಿವೆ. 8,621 ಕಾಮಗಾರಿಗಳು ವಿವಿಧ ಹಂತದ ಪ್ರಗತಿಯಲ್ಲಿವೆ ಎಂದು ವಿವರಿಸಿದರು.
|
6 |
+
ಭಾರತಕ್ಕೆ ಸ್ವಾತಂತ್ರ್ಯ ಬಂದರೂ ಹೈದರಾಬಾದ್ ನಿಜಾಮರ ಆಳ್ವಿಕೆಯಲ್ಲಿತ್ತು. ಬೀದರ್, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ಸ್ವಾತಂತ್ರ್ಯದ ಬೆಳಕು ಬಂದಿದ್ದು 1948 ರಲ್ಲಿ. ಅಸಂಖ್ಯಾತರ ಹೋರಾಟ, ತ್ಯಾಗ ಬಲಿದಾನದಿಂದ ಸರ್ದಾರ್ ವಲ್ಲಭಾಬಾಯಿ ಪಟೇಲ್, ಜವಹರಲಾಲ್ ನೆಹರೂ ಅವರ ದೂರದೃಷ್ಟಿಯಿಂದಾಗಿ ಕಲ್ಯಾಣ ಕರ್ನಾಟಕ ಭಾಗ ಭಾರತದ ಒಕ್ಕೂಟ ವ್ಯವಸ್ಥೆಗೆ ಸೇರ್ಪಡೆಯಾಗುವಂತಾಯಿತು. ಹೈದರಾಬಾದ್-ಕರ್ನಾಟಕದ ವಿಮೋಚನೆಗಾಗಿ ಹೋರಾಡಿದ ಎಲ್ಲರನ್ನೂ ಸರಿಸುವುದಾಗಿ ಹೇಳಿದರು.
|
7 |
+
ಕಲ್ಯಾಣ ಕರ್ನಾಟಕ ಭಾಗ ಸೂಫಿ ಸಂತರ ಬೀಡಾಗಿದ್ದು, ಕೋಮುಸೌಹಾರ್ದತೆಗೆ ಹೆಸರುವಾಸಿಯಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸ್ವಾತಂತ್ರ್ಯ ಹೋರಾಟ, ಹೈದರಾಬಾದ್-ಕರ್ನಾಟಕ ವಿಮೋಚನಾ ಹೋರಾಟ, ಭಾಷಾವಾರು ಪ್ರಾಂತ್ಯ ರಚನೆ ಹೋರಾಟ, ವಿಶೇಷ ಸ್ಥಾನಮಾನಕ್ಕಾಗಿ ಹೋರಾಟ ಸೇರಿ ನಾಲ್ಕು ಮಹತ್ವದ ಚಳವಳಿಗಳು ನಡೆದಿವೆ. ಈ ಭಾಗವನ್ನು ಬ್ರಿಟಿಷರು ಮತ್ತು ನಿಜಾಮರು ಕಡೆಗಣಿಸಿದ್ದರು. ಹೀಗಾಗಿ ಪ್ರಾದೇಶಿಕ ಅಸಮಾನತೆ ಹೆಚ್ಚಾಗಿತ್ತು. ವಿಶೇಷ ಸ್ಥಾನಮಾನದಿಂದಾಗಿ ಅಭಿವೃದ್ಧಿಯ ವೇಗ ಕಾಣುತ್ತಿದೆ ಎಂದು ಹೇಳಿದರು.
|
8 |
+
ಪಂಚಖಾತ್ರಿ ಯೋಜನೆಗಳ ಸಮಗ್ರ ವಿವರಣೆ ನೀಡಿದ ಮುಖ್ಯಮಂತ್ರಿಯವರು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ ಪ್ರಸಕ್ತ ಬಜೆಟ್ನಲ್ಲಿ 5 ಸಾವಿರ ಕೋಟಿ ರೂ. ಘೋಷಿಸಿ, ಅನುದಾನ ಹಂಚಿಕೆ ಮಾಡಲಾಗಿದೆ. ಅಷ್ಟು ಮೊತ್ತದ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿಯ ಹೊಸ ಕ್ರಾಂತಿಯನ್ನು ನಿರೀಕ್ಷಿಸಲಾಗಿದೆ.
|
9 |
+
ನಂಜುಂಡಪ್ಪ ವರದಿ 2002ರಲ್ಲಿ ಸಲ್ಲಿಕೆಯಾಗಿತ್ತು. ಅನಂತರ ಸಾಮಾಜಿಕ, ಆರ್ಥಿಕ ಹಾಗೂ ಇನ್ನಿತರ ಆಯಾಮಗಳಲ್ಲಿ ಮಹತ್ವದ ಬೆಳವಣಿಗೆಗಳಾಗಿವೆ. ಇದರ ಪರಿಣಾಮಗಳ ಅಧ್ಯಯನಕ್ಕಾಗಿ ಪ್ರೊ.ಗೋವಿಂದರಾವ್ ಅಧ್ಯಕ್ಷತೆಯಲ್ಲಿ ಉನ್ನತ ಅಧಿಕಾರ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯ ಆಧಾರದ ಮೇಲೆ ರಾಜ್ಯದಲ್ಲಿ ತಾಲ್ಲೂಕು ಮತ್ತು ಜಿಲ್ಲೆಗಳ ಆರ್ಥಿಕ ಮತ್ತು ಅಸಮಾನತೆಯನ್ನು ವರ್ಗೀಕರಿಸಿ ಹೊಸ ಅಭಿವೃದ್ಧಿ ಸೂಚ್ಯಂಕವನ್ನು ತಯಾರಿಸಲಾಗುವುದು ಎಂದರು.
|
10 |
+
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ 38 ಸಾವಿರ ಕೋಟಿ ರೂ.ಗಳನ್ನು ಮೀಸಲಿಡಲಾಗಿದ್ದು, ಅದರ ಲಾಭವನ್ನು ಈ ಭಾಗದ ಜನ ಪಡೆಯುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಶೇಷ ಸ್ಥಾನಮಾನಕ್ಕೆ ಹೊರಡಿಸಲಾಗಿರುವ ಆದೇಶದ ಅನುಷ್ಠಾನದ ಮೇಲ್ವಿಚಾರಣೆಗೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರ ಮೇಲ್ವಿಚಾರಣೆಯಲ್ಲಿ ಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ.
|
11 |
+
ಶಿಕ್ಷಣದಲ್ಲಿ ಅಮೂಲಾಗ್ರ ಬದಲಾವಣೆ ತರಲು ಅಕ್ಷರ ಆವಿಷ್ಕಾರ ಯೋಜನೆ ಜಾರಿಗೆ ತರಲಾಗಿದೆ. 1,008 ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಮಾದರಿ ಶಿಕ್ಷಣ ಆರಂಭಿಸಲಾಗಿದೆ. 36,445 ಮಕ್ಕಳು ಪ್ರವೇಶ ಪಡೆದಿದ್ದು, ಇದಕ್ಕಾಗಿ 1,353 ಅತಿಥಿ ಶಿಕ್ಷಕರು ಹಾಗೂ 892 ಸಹಾಯಕಿಯರನ್ನು ನೇಮಿಸಲಾಗಿದೆ. 872 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್ ಭಾಷಾ ಕಲಿಕೆಯನ್ನು ಪ್ರಾರಂಭಿಸಲಾಗಿದೆ. ಕೌಶಲ್ಯಾಭಿವೃದ್ಧಿ ಕಂಪ್ಯೂಟರ್ ಕಲಿಕಾ ಆಸರೆ ಎಂಬ ವಿಶೇಷ ಅಭ್ಯಾಸವನ್ನು ಒದಗಿಸಲಾಗಿದೆ ಎಂದರು.
|
eesanje/url_46_16_8.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ನಾಗಮಂಗಲದ ಗಲಭೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಲ್ಲ : ಗೃಹಸಚಿವ ಪರಮೇಶ್ವರ್
|
2 |
+
|
3 |
+
ಕಲಬುರಗಿ,ಸೆ.17-ನಾಗಮಂಗಲದ ಗಲಭೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕೆಂದು ಬಿಜೆಪಿಯ ಆಗ್ರಹವನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್ ತಳ್ಳಿಹಾಕಿದ್ದಾರೆ.ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ತನಿಖೆ ನಡೆಯುತ್ತಿದೆ. ಕರ್ತವ್ಯಲೋಪಕ್ಕೆ ಹೊಣೆ ಮಾಡಿ ಡಿವೈಎಸ್ಪಿ ಹಾಗೂ ಇನ್ಸ್ ಪೆಕ್ಟರ್ರನ್ನು ಅಮಾನತುಪಡಿಸಲಾಗಿದೆ ಎಂದರು.
|
4 |
+
ಘಟನೆಯಲ್ಲಿ ಭಾಗಿಯಾಗಿದ್ದರೆ ಯಾರನ್ನೂ ರಕ್ಷಣೆ ಮಾಡುವುದಿಲ್ಲ. ಹಾಗೆಯೇ ಅನಗತ್ಯವಾಗಿ ಯಾರನ್ನೂ ಹೊಣೆ ಮಾಡುವುದಿಲ್ಲ. ತನಿಖೆಯ ವರದಿ ಬಂದ ಬಳಿಕ ಮತ್ತಷ್ಟು ಕಠಿಣ ಕ್ರಮ ಜರುಗಿಸಲಾಗುವುದು ಎಂದರು.ಘಟನೆ ನಡೆದ ತಕ್ಷಣವೇ ರಾಜ್ಯಸರ್ಕಾರ ತುರ್ತು ಕ್ರಮಗಳನ್ನು ಕೈಗೊಂಡಿದೆ.
|
5 |
+
ಇದ್ಯಾವುದನ್ನೂ ಲಘುವಾಗಿ ಪರಿಗಣಿಸಿಲ್ಲ. ಹೊರಗಿನಿಂದ ಬಂದವರು ಘಟನೆಯಲ್ಲಿ ಭಾಗಿಯಾಗಿದ್ದರೆ ಅವರ ವಿರುದ್ಧವೂ ಕ್ರಮ ಜರುಗಿಸಲಾಗುವುದು. ತನಿಖೆ ನಡೆದು, ಸ್ಪಷ್ಟ ಮಾಹಿತಿ ತಿಳಿಯುವವರೆಗೂ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.
|
6 |
+
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವಿಫಲವಾಗಿದೆ. ನಾಗಮಂಗಲದ ಘಟನೆಯನ್ನು ಎನ್ಐಎ ತನಿಖೆಗೆ ವಹಿಸಬೇಕೆಂದು ಬಿಜೆಪಿಯವರು ಹೇಳಿದ್ದಾರೆ. ಅವರು ಹೇಳುವುದಕ್ಕಾಗಿಯೇ ಇದ್ದಾರೆ. ನಾವು ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದರು.
|
7 |
+
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿದ್ದ ಜೈಲಿನಲ್ಲಿ ಮೊಬೈಲ್ ಪತ್ತೆಯಾದ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಈ ಹಿಂದೆ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದಾಗ ಅನಪೇಕ್ಷಿತ ಆತಿಥ್ಯಕ್ಕೆ ಸಂಬಂಧಪಟ್ಟಂತೆ ಕಠಿಣ ಕ್ರಮ ಕೈಗೊಳ್ಳಲಾಗಿದೆ. 11 ಮಂದಿ ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದೇವೆ. ದರ್ಶನ್ ಮತ್ತು ಸಂಗಡಿಗರನ್ನು ಬೇರೆಬೇರೆ ಜೈಲುಗಳಿಗೆ ಸ್ಥಳಾಂತರಿಸಲಾಗಿದೆ ಎಂದರು.
|
8 |
+
ಬಳ್ಳಾರಿ ಜೈಲಿನಲ್ಲಿ ಮೊಬೈಲ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾರು ಭಾಗಿಯಾಗಿದ್ದಾರೆ ಎಂದು ಪರಿಶೀಲಿಸಲಾಗುವುದು ಎಂದು ತಿಳಿಸಿದರು.ಶಾಸಕ ಮುನಿರತ್ನ ಪ್ರಕರಣದಲ್ಲಿ ಸರ್ಕಾರ ತುರ್ತು ಕ್ರಮಗಳನ್ನು ಕೈಗೊಂಡಿದೆ. ಅದೇ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಅವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸಲಾಗಿದೆ ಎಂಬ ವ್ಯಾಖ್ಯಾನ ಸರಿಯಲ್ಲ. ಮುನಿರತ್ನ ಪ್ರಕರಣದಲ್ಲಿ ದೂರು ದಾಖಲಾಗಿದೆ. ತಕ್ಷಣವೇ ಕ್ರಮ ಕೈಗೊಂಡಿದ್ದೇವೆ ಎಂದರು.
|
eesanje/url_46_16_9.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ನಾಗಮಂಗಲ ಗಲಭೆಯಲ್ಲಿ ಬಾಂಗ್ಲಾದೇಶಿಗಳ ಕೈವಾಡ : ಸುರೇಶ್ಗೌಡ ಹೊಸ ಬಾಂಬ್
|
2 |
+
:
|
3 |
+
ಮಂಡ್ಯ,ಸೆ.17-ನಾಗಮಂಗಲದಲ್ಲಿ ನಡೆದ ಗಲಭೆಯಲ್ಲಿ ಕೇವಲ ಕೇರಳ ಮೂಲದವರ ಕೈವಾಡವಿಲ್ಲ. ಅಕ್ರಮವಾಗಿ ನಾಗಮಂಗಲದಲ್ಲಿ ನೆಲೆಸಿರುವ ಬಾಂಗ್ಲಾದೇಶಿಗಳು ಇರುವ ಸಾಧ್ಯತೆ ಇದೆ ಎಂದು ಮಾಜಿ ಶಾಸಕ ಶಾಸಕ ಸುರೇಶ್ಗೌಡ ಹೇಳಿದ್ದಾರೆ.
|
4 |
+
ಸುದ್ದಿಗಾರೊಂದಿಗೆ ಮಾತನಾಡಿದ ಅವರು ಪೊಲೀಸರು ಈಗ ಕೇರಳ ಮೂಲದ ನಿಷೇದಿತ ಸಂಘಟನೆಯ ಸದಸ್ಯರನ್ನು ಬಂಧಿಸಿದ್ದಾರೆ ಇದನ್ನು ನೋಡಿದರೆ ಗಲಭೆಯಲ್ಲಿ ಕೇವಲ ಕೇರಳ ಮೂಲದ ಪಿಎಫ್ಐ ಸಂಘಟನೆಯವರು ಮಾತ್ರವಲ್ಲ. ಬಾಂಗ್ಲಾದೇಶದಿಂದ ಆಕ್ರಮವಾಗಿ ಬಂದು ನಾಗಮಂಗಲ ತಾಲೂಕಿನಲ್ಲಿ ನೆಲಸಿರುವವರು ಸಹ ಭಾಗಿಯಾಗಿದ್ದಾರೆ ಎಂದು ಆರೋಪ ಮಾಡಿದ್ದಾರೆ.
|
5 |
+
ನಾಗಮಂಗಲ ತಾಲೂಕಿನ ಹಲವೆಡೆ ತೋಟದ ಮನೆಗಳಲ್ಲಿ ಅಕ್ರಮವಾಗಿ ಬಾಂಗ್ಲಾದೇಶದಿಂದ ಬಂದವರು ನೆಲೆಸಿದ್ದಾರೆ. ನಾನು ಶಾಸಕನಾಗಿದ್ದ ವೇಳೆ ಪೊಲೀಸ್ ಇಲಾಖೆಗೆ ಹಾಗೂ ಆಗಿನ ಗೃಹ ಸಚಿವರಿಗೂ ಮಾಹಿತಿ ನೀಡಿದ್ದೇನೆ. ಆದರೆ ಅವರನ್ನು ಪತ್ತೆ ಹಚ್ಚುವ ಕೆಲಸ ಮಾಡಿಲ್ಲ.
|
6 |
+
ಈ ತನಿಖೆಯನ್ನು ಎನ್ಐಎಗೆ ನೀಡಿದರೆ ಎಲ್ಲಾ ಸತ್ಯಗಳು ಹೊರಗೆ ಬರುತ್ತವೆ. ಹೀಗಾಗಿ ನಾಗಮಂಗಲ ಗಲಭೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
|
eesanje/url_46_170_1.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಮತಗಟ್ಟೆ ಅಧಿಕಾರಿಗಳ ರ್ಯಾಂಡಮೈಸೇಷನ್ ಮುಕ್ತಾಯ
|
2 |
+
ಬೆಂಗಳೂರು, ಏ.24-ಮತಗಟ್ಟೆ ಅಧಿಕಾರಿಗಳ ಅಂತಿಮ ಹಂತದ ರ್ಯಾಂಡಮೈಸೇಷನ್ ಇಂದು ನಡೆಸಲಾಯಿತು. ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಮತಗಟ್ಟೆ ಸಿಬ್ಬಂದಿಯ ಅಂತಿಮ ಹಂತದ ರ್ಯಾಂಡಮೈಸೇಷನ್ ಅನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ಸಾಮಾನ್ಯ ವೀಕ್ಷಕರುಗಳ ಸಮ್ಮುಖದಲ್ಲಿ ಇಂದು ಮಲ್ಲೇಶ್ವರಂ ಐಪಿಪಿ ಕೇಂದ್ರದಲ್ಲಿ ನಡೆಸಿದರು.
|
3 |
+
ಜಿಲ್ಲಾ ಚುನಾವಣಾಧಿಕಾರಿಗಳ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಸೇರಿದಂತೆ ಮೂರು ಲೋಕಸಭಾ ಕ್ಷೇತ್ರಗಳು ಬರಲಿವೆ. ಈ ಸಂಬಂಧ ಮೂರು ಲೋಕಸಭಾ ಕ್ಷೇತ್ರಗಳಲ್ಲಿ 24 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ 1 ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ 3 ಲೋಕಸಭಾ ಕ್ಷೇತ್ರಗಳು ಬರಲಿವೆ.
|
4 |
+
ಅದರಂತೆ, 28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟಾರೆ 43123 ಮತಗಟ್ಟೆ ಅ„ಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಜೊತೆಗೆ 305 ವಲ್ನರಬಲ್ ಹಾಗೂ ಕ್ರಿಟಿಕಲ್ ಮತಗಟ್ಟೆಗಳಿಗಾಗಿ 385 ಮೈಕ್ರೋ ಅಬ್ಸರ್ವರ್ಸ್ ಗಳನ್ನು ನಿಯೋಜನೆ ಮಾಡಲಾಗಿದ್ದು, ಅವರನ್ನು ಕೂಡಾ ರ್ಯಾಂಡಮೈಸೇಷನ್ ಮಾಡಲಾಯಿತು.
|
5 |
+
ಮತಗಟ್ಟೆ ಅಧಿಕಾರಿಗಳಿಗೆ ಎರಡು ಬಾರಿ ತರಬೇತಿ:ಲೋಕಸಭಾ ಚುನಾವಣೆಗೆ ನಿಯೋಜಿಸಿಕೊಂಡಿರುವ ಮತಗಟ್ಟೆ ಅಧಿಕಾರಿಗಳಿಗೆ ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಪ್ರಕ್ರಿಯೆ ಕುರಿತು ಎರಡು ಬಾರಿ ತರಬೇತಿಯನ್ನು ನೀಡಲಾಗಿದೆ.
|
6 |
+
ಮಸ್ಟರಿಂಗ್ ಸೆಂಟರ್ ಗಳಿಂದ ಮತದಾನ ಸಾಮಗ್ರಿಗಳ ಸಂಗ್ರಹ:ನಗರದಲ್ಲಿರುವ ಎಲ್ಲಾ 8984 ಮತಗಟ್ಟೆಗಳಲ್ಲಿ ಏಪ್ರಿಲ್ 26 ರಂದು ಮತದಾನ ನಡೆಯಲಿದ್ದು, ಈ ಸಂಬಂಧ ನಾಳೆ ಎಲ್ಲಾ ಸಿಬ್ಬಂದಿಗಳು ಬೆಳಗ್ಗೆ 9.30ಕ್ಕೆ ಮಸ್ಟರಿಂಗ್ ಕೇಂದ್ರಗಳಿಗೆ ತೆರಳಿ ಮತಗಟ್ಟೆಗಳ ಸಾಮಗ್ರಿಗಳನ್ನು ಸಂಗ್ರಹಿಸಿಕೊಂಡು ಆಯಾ ಚುನಾವಣಾಧಿಕಾರಿಗಳು ವ್ಯವಸ್ಥೆ ಮಾಡಿರುವ ವಾಹನಗಳ ಮೂಲಕ ಮತಗಟ್ಟೆಗಳಿಗೆ ತೆರಳಲಿದ್ದಾರೆ.
|
7 |
+
ಈ ವೇಳೆ ಸಾಮಾನ್ಯ ವೀಕ್ಷಕರುಗಳಾದ ಗಾಯತ್ರಿ ರಾಥೋರ್, ವಾಣಿ ಮೋಹನ್, ಮಕರಂದ್ ಪಾಂಡುರಂಗ, ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಹರೀಶ್ ಕುಮಾರ್, ಕೆ.ಎ ದಯಾನಂದ್ , ವಿನೋತ್ ಪ್ರಿಯಾ, ಸ್ನೆಹಲ್ , ಸಹಾಯಕ ಆಯುಕ್ತ ರವಿ ಚಂದ್ರ ನಾಯ್ಕ್ , ಜಿಲ್ಲಾ ಮಟ್ಟದ ಮಾನವ ಸಂಪನ್ಮೂಲ ನೋಡಲ್ ಅ„ಕಾರಿಯಾದ ಡಿ.ಆರ್ ಅಶೋಕ್ ಇನ್ನಿತರೆ ಸಂಬಂಧಪಟ್ಟ ಅ„ಕಾರಿಗಳು ಉಪಸ್ಥಿತರಿದ್ದರು.
|
eesanje/url_46_170_10.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
‘ಲೋಕ’ ಕಣದಲ್ಲಿ ಕಾಂಚಾಣ ಕುಣಿತ : ಒಂದೇ ದಿನದಲ್ಲಿ 23.88 ಕೋಟಿ ರೂ. ಮೌಲ್ಯದ ನಗದು, ವಸ್ತುಗಳು ಜಪ್ತಿ
|
2 |
+
ಬೆಂಗಳೂರು,ಏ.24-ಪ್ರಸಕ್ತ ಲೋಕಸಭಾ ಚುನಾವಣೆಗೆ ಮತದಾನ ಮಾಡುವ ದಿನ ಹತ್ತಿರವಾಗುತ್ತಿದ್ದಂತೆಯೇ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ನಗದು, ಮದ್ಯ, ಡ್ರಗ್ಸ್, ಚಿನ್ನ, ವಜ್ರ, ಉಚಿತ ಉಡುಗೊರೆಗಳ ಜಪ್ತಿಯಾಗುತ್ತಿದೆ. ನಿನ್ನೆ ಒಂದೇ ದಿನ 23.88 ಕೋಟಿ ರೂ. ಮೌಲ್ಯದ ನಗದು ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಮಾದರಿ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ ನಿನ್ನೆಯವರೆಗೆ ರಾಜ್ಯದಲ್ಲಿ 430.61 ಕೋಟಿ ರೂ. ಮೌಲ್ಯದ ನಗದು, ಚಿನ್ನಾಭರಣ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
|
3 |
+
ಪೊಲೀಸ್ ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು 136.23 ಕೋಟಿ ರೂ. ಮೌಲ್ಯದ ನಗದು, ಮದ್ಯ, ಡ್ರಗ್ಸ್, ಚಿನ್ನ, ಬೆಳ್ಳಿ ಹಾಗೂ ಉಚಿತ ಉಡುಗೊರೆಗಳನ್ನು ವಶಪಡಿಸಿಕೊಂಡಿದೆ. ಅಬಕಾರಿ ಇಲಾಖೆಯವರು 177.12 ಕೋಟಿ ರೂ. ಮೌಲ್ಯದ ಮದ್ಯ, ಡ್ರಗ್ಸ್, ಇತರೆ ವಸ್ತುಗಳನ್ನು ಜಪ್ತಿ ಮಾಡಿದ್ದರೆ ಆದಾಯ ತೆರಿಗೆ ಅಧಿಕಾರಿಗಳು 37.42 ಕೋಟಿ ರೂ. ಮೌಲ್ಯದ ನಗದು, ಚಿನ್ನ, ವಜ್ರದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
|
4 |
+
ವಾಣಿಜ್ಯ ತೆರಿಗೆ ಅಧಿಕಾರಿಗಳು 79.84 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಚುನಾವಣೆಗೆ ಸಂಬಂಧಿಸಿದಂತೆ ವಶಪಡಿಸಿಕೊಳ್ಳಲಾದ ನಗದು, ಮದ್ಯ, ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳಿಗೆ ಸಂಬಂಧಿಸಿದಂತೆ 2,049 ಎಫ್ಐಆರ್ಗಳನ್ನು ದಾಖಲಿಸಲಾಗಿದ್ದು, 1,801 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಜಯನಗರ ಅಡಗಲಿ ಪೊಲೀಸ್ ತಂಡದವರು 12.17 ಲಕ್ಷ ರೂ. ನಗದು, 2.50 ಲಕ್ಷ ರೂ. ಮೌಲ್ಯದ 28.5 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
|
5 |
+
23.88 ಕೋಟಿ ರೂ. ಮೌಲ್ಯದ ಚಿನ್ನ, ವಜ್ರ, ನಗದು ವಶ :ಸ್ಥಿರ ಕಣ್ಗಾವಲು ತಂಡದವರು ರಾಮನಗರ ಜಿಲ್ಲೆಯ ಗಂಟಕನದೊಡ್ಡಿ ಚೆಕ್ಪೋಸ್ಟ್ ನಲ್ಲಿ 23.11 ಲಕ್ಷ ರೂ. ಹಾಗೂ ಮೈಸೂರು ಜಿಲ್ಲೆಯ ಚಾಮರಾಜನಗರ ಲೋಕಸಭಾ ಕ್ಷೇತ್ರದ ಮಡವಾಡಿ ಚೆಕ್ ಪೋಸ್ಟ್ ನಲ್ಲಿ 13.18 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.
|
6 |
+
ಆದಾಯ ತೆರಿಗೆ ಇಲಾಖೆಯವರು ಬಸವನಗುಡಿಯಲ್ಲಿ 1,29,24,959 ರೂ. ಮೌಲ್ಯದ 1839.59 ಗ್ರಾಂ ಚಿನ್ನವನ್ನು ಶಂಕರಪುರಂನಲ್ಲಿ 3,10,10,375 ರೂ. ಮೌಲ್ಯದ 4413.66 ಗ್ರಾಂ ಚಿನ್ನ, ಶಾರದಾದೇವಿ ರಸ್ತೆಯಲ್ಲಿ 3,39,60,360 ರೂ. ಮೌಲ್ಯದ 4833.527 ಗ್ರಾಂ ಚಿನ್ನವನ್ನು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2,13,64,941 ರೂ. ಮೌಲ್ಯದ 3040.84 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದೆ.
|
7 |
+
ವಿಜಯನಗರದಲ್ಲಿ 5,33,85,093 ರೂ. ಮೌಲ್ಯದ 7597.22 ಗ್ರಾಂ ಚಿನ್ನ, ಚಾಮರಾಜಪೇಟೆಯಲ್ಲಿ 84,31,200 ರೂ. ಮೌಲ್ಯದ 1200 ಗ್ರಾಂ ಚಿನ್ನದ ಗಟ್ಟಿಯನ್ನು ಹಾಗೂ ಬಸವನಗುಡಿಯಲ್ಲಿ 3,24,950 ರೂ. ಮೌಲ್ಯದ 6.38 ಕ್ಯಾರೆಟ್ ವಜ್ರವನ್ನು, ಶಾರದಾದೇವಿ ರಸ್ತೆಯಲ್ಲಿ 3,14,475 ರೂ. ಮೌಲ್ಯದ 5.99 ಕ್ಯಾರೆಟ್ ವಜ್ರವನ್ನು, ಜಯನಗರದಲ್ಲಿ 6,40,33,668 ರೂ. ಮೌಲ್ಯದ 202.83 ಕ್ಯಾರೆಟ್ ವಜ್ರವನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
|
8 |
+
ಬಸವನಗುಡಿಯಲ್ಲಿ 17 ಲಕ್ಷ ರೂ. ನಗದು, ಶಂಕರಪುರಂನಲ್ಲಿ 55 ಲಕ್ಷ ರೂ. ನಗದು, ಶಾರದಾದೇವಿ ರಸ್ತೆಯಲ್ಲಿ 16 ಲಕ್ಷ ರೂ. ನಗದು, ಜಯನಗರದಲ್ಲಿ 8,77,800 ರೂ. ನಗದು, 37 ಲಕ್ಷ ರೂ. ನಗದನ್ನು ಬಸವನಗುಡಿಯಲ್ಲಿ ವಶಪಡಿಸಿಕೊಂಡಿದ್ದಾರೆ.ಪುಲಕೇಶಿ ನಗರದಲ್ಲಿ 3,67,50,000 ರೂ. ನಗದು, ಮಹಾಲಕ್ಷ್ಮಿ ಲೇ ಔಟ್ನಲ್ಲಿ 63,92,240 ರೂ. ನಗದನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆಂದು ಪ್ರಕಟಣೆ ತಿಳಿಸಿದೆ.
|
eesanje/url_46_170_11.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕನ್ನಡಿಗರ ಮೇಲೆ ಪ್ರಧಾನಿಗೆ ಏಕಿಷ್ಟು ದ್ವೇಷ..? : ಸಿಎಂ ಸಿದ್ದರಾಮಯ್ಯ ಆಕ್ರೋಶ
|
2 |
+
ಬೆಂಗಳೂರು,ಏ.23-ರಾಜ್ಯದ ಬರ ನಿರ್ವಹಣೆಗೆ ಅನುದಾನ ಬಿಡುಗಡೆ ಮಾಡದೆ ಕನ್ನಡಿಗರ ಮೇಲೆ ದ್ವೇಷ ಸಾಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ರಾಜ್ಯಕ್ಕೆ ಬಂದು ಮತ ಕೇಳುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
|
3 |
+
ವಿಧಾನಸೌಧದ ಬಳಿಯ ಮಹಾತ್ಮಗಾಂಧೀ ಪ್ರತಿಮೆ ಎದುರು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ನಿಂದ ನಡೆಸಲಾದ ಪ್ರತಿಭಟನೆ ಯಲ್ಲಿ ಭಾಗವಹಿಸಿದ್ದ ಅವರು, ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಇಂದು ಸಾಂಕೇತಿಕ ಪ್ರತಿಭಟನೆ ನಡೆಸಿದ್ದೇವೆ. ನರೇಂದ್ರ ಮೋದಿ ಮತ್ತು ಅಮಿತ್ ಶಾ ರಾಜ್ಯವನ್ನು ಮತ್ತು ರೈತರನ್ನು ದ್ವೇಷಿಸುತ್ತಾರೆ. ರಾಜ್ಯಕ್ಕೆ ನ್ಯಾಯ ಕೊಡಿ ಎಂದರೆ ಸ್ಪಂದಿಸಿಲ್ಲ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆದಿಯಾಗಿ ಕೇಂದ್ರ ಸರ್ಕಾರ ರಾಜ್ಯವನ್ನು ಕಡೆಗಣಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
|
4 |
+
ರಾಜ್ಯದಲ್ಲಿ 100 ವರ್ಷಗಳ ಬಳಿಕ ಭೀಕರ ಬರಪರಿಸ್ಥಿತಿ ಇದೆ. ರಾಜ್ಯದಲ್ಲಿ 223 ತಾಲೂಕುಗಳು ಬರಪೀಡಿತವಾಗಿವೆ. ಸೆಪ್ಟೆಂಬರ್ 22 ರಂದು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿ 18,172 ಕೋಟಿ ರೂ.ಗಳ ಅನುದಾನ ಕೋರಿ ಎನ್ಡಿಆರ್ಎಫ್ನಡಿ ಮನವಿ ಸಲ್ಲಿಸಲಾಗಿತ್ತು. ಸಚಿವರಾದ ಕೃಷ್ಣಭೈರೇಗೌಡ, ಚೆಲುವರಾಯಸ್ವಾಮಿ, ಪ್ರಿಯಾಂಕ್ ಖರ್ಗೆ ದೆಹಲಿಗೆ ಹೋಗಿ ಸಚಿವರು ಹಾಗೂ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಬಂದಿದ್ದರು.
|
5 |
+
ಖುದ್ದು ತಾವು ದೆಹಲಿಗೆ ತೆರಳಿ ಪ್ರಧಾನಮಂತ್ರಿ ಹಾಗೂ ಗೃಹಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಅಮಿತ್ ಶಾ ಡಿ.23 ರಂದು ಸಭೆ ನಡೆಸಿ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ ಎಂದು ಕಿಡಿಕಾರಿದರು.
|
6 |
+
ಅದೇ ಅಮಿತ್ ಶಾ ರಾಜ್ಯಕ್ಕೆ ಬಂದು ರಾಜ್ಯಸರ್ಕಾರದಿಂದ ಪ್ರಸ್ತಾವನೆ ಸಲ್ಲಿಸುವುದು ವಿಳಂಬವಾಗಿತ್ತು ಎಂದು ಟೀಕೆ ಮಾಡಿದ್ದಾರೆ. ನಿರ್ಮಲಾ ಸೀತಾರಾಮನ್ ರಾಜ್ಯಸರ್ಕಾರಕ್ಕೆ ಯಾವುದೇ ಬಾಕಿ ನೀಡಬೇಕಿಲ್ಲ ಎಂದು ಹೇಳಿದರು. ಚುನಾವಣೆ ಘೋಷಣೆಯಾದ ಬಳಿಕ ಆಯೋಗ ಅನುಮತಿ ಕೊಡುವುದಿಲ್ಲ ಎಂದು ಸಬೂಬು ಮುಂದಿಟ್ಟಿದ್ದರು ಎಂದು ಟೀಕಿಸಿದರು.
|
7 |
+
ಕೇಂದ್ರ ಸಚಿವರು ಹೇಳಿದ ಅಷ್ಟೂ ಹೇಳಿಕೆಗಳು ಸುಳ್ಳು ಎಂದು ಸಾಬೀತಾಗಿವೆ. ರಾಜ್ಯಸರ್ಕಾರ ಅನಿವಾರ್ಯವಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಬೇಕಾಯಿತು. ವಿಚಾರಣೆ ಹಂತದಲ್ಲಿ ಕೇಂದ್ರ ಸರ್ಕಾರದ ಅಟಾರ್ನಿ ಜನರಲ್ ಮತ್ತು ಸಾಲಿಸಿಟರ್ ಜನರಲ್ರವರು ಅಮಿತ್ ಶಾ ಮತ್ತು ನಿರ್ಮಲಾ ಸೀತಾರಾಮನ್ರವರ ಹೇಳಿಕೆಗನುಸಾರ ಸಮರ್ಥನೆ ಮಾಡಿಕೊಳ್ಳಲಿಲ್ಲ. ಅಲ್ಲಿಗೆ ಹಣ ಬಿಡುಗಡೆ ಮಾಡದೇ ಕೇಂದ್ರ ಸಚಿವರು ನೀಡಿದ ಸಬೂಬುಗಳು ಸುಳ್ಳು ಸಾಬೀತಾಗಿದೆ ಎಂದರು.
|
8 |
+
ಅನಿವಾರ್ಯವಾಗಿ ಈಗ ಕೇಂದ್ರ ಸರ್ಕಾರ ಪರಿಹಾರ ಪಾವತಿಸಬೇಕಾದ ಸ್ಥಿತಿಗೆ ಸಿಲುಕಿದೆ. ಬರ ನಿರ್ವಹಣೆಗೆ ಹಣ ನೀಡಿದರೆ ಅದನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಾರೆ ಎಂದು ಕೇಂದ್ರ ಸಚಿವರು ಅಪಪ್ರಚಾರ ಮಾಡುತ್ತಾರೆ. ಗ್ಯಾರಂಟಿ ಯೋಜನೆಗಳಿಗೆ ಈಗಾಗಲೇ 36 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಿದ್ದೇನೆ. 2024-25 ನೇ ಸಾಲಿಗೆ 52 ಸಾವಿರ ಕೋಟಿ ರೂ.ಗಳನ್ನು ಕಾಯ್ದಿರಿಸಿದ್ದೇವೆ. ಎನ್ಡಿಆರ್ಎಫ್ ಹಣವನ್ನು ಸಂಪೂರ್ಣವಾಗಿ ಬರನಿರ್ವಹಣೆಗೆ ಖರ್ಚು ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
|
9 |
+
48 ಸಾವಿರ ಹೆಕ್ಟೇರ್ನಲ್ಲಿ ಬೆಳೆ ನಷ್ಟವಾಗಿದೆ, ರೈತರು ಸಂಕಷ್ಟದಲ್ಲಿದ್ದಾರೆ. ರಾಜ್ಯಸರ್ಕಾರ ತನ್ನ ಬೊಕ್ಕಸದಿಂದ 600 ಕೋಟಿ ರೂ.ಗಳಿಗೂ ಹೆಚ್ಚು ಹಣ ಖರ್ಚು ಮಾಡಿ 32 ಲಕ್ಷ ರೈತರಿಗೆ ಮೊದಲ ಕಂತಾಗಿ 2 ಸಾವಿರ ರೂ.ಗಳನ್ನು ಪಾವತಿಸಿದೆ. ನಾವು ಮನವಿ ಸಲ್ಲಿಸಿ 7 ತಿಂಗಳಾದರೂ ಕೇಂದ್ರ ಈವರೆಗೂ ಒಂದು ಬಿಡುಗಾಸನ್ನೂ ಬಿಡುಗಡೆ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು.
|
10 |
+
ಮೊದಲು ಹಣ ಬಿಡುಗಡೆ ಮಾಡಿ, ಆನಂತರ ಪ್ರಧಾನಿ ಮತ್ತು ಕೇಂದ್ರ ಗೃಹಸಚಿವರು ರಾಜ್ಯಕ್ಕೆ ಬಂದು ಮತ ಕೇಳಲಿ. ಬರ, ನೆರೆ ಸಂದರ್ಭದಲ್ಲಿ ಇವರಿಗೆ ಕರ್ನಾಟಕ ನೆನಪಾಗುವುದಿಲ್ಲ. ಚುನಾವಣೆಯಲ್ಲಿ ಮಾತ್ರ ನೆನಪಾಗುತ್ತದೆ. ತೆರಿಗೆ ಹಂಚಿಕೆ, ಭದ್ರಾ ಮೇಲ್ದಂಡೆ, ಬೆಂಗಳೂರು ಕೆರೆಗಳ ಅಭಿವೃದ್ಧಿ, ಹೊರವರ್ತುಲ ರಸ್ತೆ, ಹಣಕಾಸು ಆಯೋಗದ ಮಧ್ಯಂತರ ಅವ ಸೇರಿದಂತೆ ಹಲವಾರು ಸಂದರ್ಭಗಳಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡಿ ದ್ವೇಷ ಸಾಸುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.
|
eesanje/url_46_170_12.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿಗೆ ವಿಶ್ವಕರ್ಮ ಮಹಾ ಸಂಘ ಬೆಂಬಲ
|
2 |
+
ಬೆಂಗಳೂರು, ಏ.23-ಭಾರತಾದ್ಯಂತ ಸುಮಾರು 12 ಕೋಟಿ ಜನಸಂಖ್ಯೆ ಇರುವ ವಿಶ್ವಕರ್ಮ ಸಮಾಜಕ್ಕೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ವಿಶ್ವಕರ್ಮ ಸಮ್ಮಾನ್ ಯೋಜನೆಯನ್ನು ತಂದು ಲಕ್ಷಾಂತರ ಕುಟುಂಬಗಳಿಗೆ ನೆರವಾಗಿ, ನಮ್ಮ ಸಮಾಜವನ್ನು ಪ್ರಪಂಚಾದ್ಯಂತ ಗುರುತಿಸುವ ಹಾಗೆ ಮಾಡಿದ್ದಾರೆ. ಆದ್ದರಿಂದ ಬಿಜೆಪಿಗೆ ನಮ್ಮ ಸಮುದಾಯ ಬೆಂಬಲವಾಗಿ ನಿಲ್ಲಲಿದೆ ಎಂದು ಅಖಿಲ ಭಾರತ ವಿಶ್ವಕರ್ಮ ಮಹಾ ಸಂಘದ ಅಧ್ಯಕ್ಷ ಡಾ.ಜಯಂತ್ ಕೆ.ಎಂ. ತಿಳಿಸಿದರು.
|
3 |
+
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಮಾಜದ ಹಿತದೃಷ್ಟಿ ಎಂದರೆ ನಮ್ಮ ವಿಶ್ವಕರ್ಮ ಸಮಾಜವು ರಾಜಕೀಯ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಕಾರಣ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರು ನಮ್ಮ ಸಮಾಜವನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ನಮ್ಮ ಸಮಾಜಕ್ಕೆ ಬೆಂಬಲ ನೀಡುತ್ತಾರೆಂಬ ನಂಬಿಕೆ ಯಿಂದ ನಮ್ಮ ಸಂಘಟನೆ ಬೆಂಬಲವನ್ನು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ನೀಡುವ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದರು.
|
4 |
+
ಮೋದಿಜಿಯವರು ವಿಶ್ವಕರ್ಮ ಸಮ್ಮಾನ್ ಯೋಜನೆಯನ್ನು ಕೊಡುವ ಮುಖಾಂತರ ನಮ್ಮ ಸಮಾಜಕ್ಕೆ ಮನ್ನಣೆ ನೀಡಿದ್ದು, ಇದರಿಂದ ನಮ್ಮ ಸಮಾಜದ ಕಾಯಕವನ್ನು ಎತ್ತಿ ಹಿಡಿಯುವ ಕೆಲಸ ಮಾಡಿದ್ದಾರೆ.
|
5 |
+
ಅಯೋಧ್ಯ ಶ್ರೀರಾಮನ ವಿಗ್ರಹವನ್ನು ಕೆತ್ತನೆ ಮಾಡಲು ನಮ್ಮ ಸಮಾಜದ ಶಿಲ್ಪಿ ಅರುಣ್ ಯೋಗಿರಾಜ್ ರವರಿಗೆ ಅವಕಾಶ ನೀಡುವ ಮುಖಾಂತರ ನಮ್ಮ ಸಮಾಜದ ಕೀರ್ತಿಯನ್ನು ರಾಷ್ಟ್ರ ಹಾಗೂ ವಿಶ್ವಕ್ಕೆ ತೋರಿಸುವಲ್ಲಿ ಮೋದಿಜಿರವರ ಸಹಕಾರ ಹೆಚ್ಚಿರುವ ಕಾರಣ ನಮ್ಮ ಸಮಾಜವು ಬಿ.ಜೆ.ಪಿ. ಪಕ್ಷಕ್ಕೆ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡುವ ತೀರ್ಮಾನ ಮಾಡಿದೆ ಎಂದರು.
|
6 |
+
ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷ ಸೇರ್ಪಡೆಯ ಬಗ್ಗೆ ಮಾತನಾಡಿದ ಅವರು, ಇನ್ನೂ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಬಿಟ್ಟಿಲ್ಲ, ಯಾವ ಕಾರಣಕ್ಕೆ ಅವರು ಬೇರೆ ಪಕ್ಷಕ್ಕೆ ಹೋಗುತ್ತಿದ್ದಾರೋ ಗೊತ್ತಿಲ್ಲ ಅವರು ಬಿಜೆಪಿಯಲ್ಲಿ ಇರಬೇಕಿತ್ತು ಎಂದರು.
|
7 |
+
ಈಗ ಬಿಜೆಪಿ ಪಕ್ಷವನ್ನು ನಾವು ಬೆಂಬಲಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ನಮ್ಮ ಸಮಾಜಕ್ಕೆ ಆರ್ಥಿಕ ವಾಗಿ, ಸಾಮಾಜಿಕವಾಗಿ ಮುಖ್ಯ ವಾಗಿ ರಾಜಕೀಯವಾಗಿ ನಮಗೆ ಸ್ಥಾನಮಾನ ಗಳನ್ನು ಬಿಜೆಪಿ ಪಕ್ಷ ಕೊಡಬೇಕು ಎಂದು ಬಿಜೆಪಿ ಪಕ್ಷಕ್ಕೆ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕಿ ಕಾಮಾಕ್ಷಿ, ಜಂಟಿ ಕಾರ್ಯದರ್ಶಿ ದೀಕ್ಷಿತ ಬಿ.ಆರ್., ನಿರ್ದೇಶಕ ಅಮೃತ್ ರಾಜ್ ಬಿ.ಆರ್. ಉಪಸ್ಥಿತರಿದ್ದರು.
|
eesanje/url_46_170_2.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ನೇಹಾ ಹಂತಕ ಫಯಾಜ್ ಸಿಐಡಿ ವಶಕ್ಕೆ
|
2 |
+
ಧಾರವಾಡ,ಏ.24-ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿರುವ ಹಿನ್ನೆಲೆಯಲ್ಲಿ ಧಾರವಾಡದ ಕೇಂದ್ರ ಕಾರಾಗೃಹದಲ್ಲಿರುವ ಹಂತಕ ಫಯಾಜ್ನನ್ನು ಸಿಐಡಿ ಪೊಲೀಸರು ತಮ್ಮ ವಶಕ್ಕೆ ಪಡೆಯಲಿದ್ದಾರೆ.
|
3 |
+
ಫಯಾಜ್ನನ್ನು ತಮ್ಮ ವಶಕ್ಕೆ ನೀಡುವಂತೆ ಹುಬ್ಬಳ್ಳಿಯ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಸಿಐಡಿ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದು , ಇಂದು ನ್ಯಾಯಾಲಯದ ಆದೇಶ ಪಡೆದು ಧಾರವಾಡ ಕೇಂದ್ರ ಕಾರಾಗೃಹಕ್ಕೆ ಬಂದು ಅಧಿಕಾರಿಗಳು ಫಯಾಜ್ನನ್ನು ತಮ್ಮ ವಶಕ್ಕೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.
|
4 |
+
ಆನಂತರ ಫಯಾಜ್ನನ್ನು ಬಿವಿಬಿ ಕಾಲೇಜಿನಲ್ಲಿ ಹತ್ಯೆ ಮಾಡಿದ ಸ್ಥಳಕ್ಕೆ ಕರೆದೊಯ್ದು ಸ್ಥಳ ಮಹಜರು ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
|
eesanje/url_46_170_3.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ರಾಜ್ಯದಲ್ಲಿ 189 ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು
|
2 |
+
ಬೆಂಗಳೂರು,ಏ.24-ರಾಜ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಗಂಭೀರ ಸ್ವರೂಪದ 189 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ಕುಮಾರ್ ಮೀನಾ ತಿಳಿಸಿದರು.
|
3 |
+
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ 23 ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ಬಿಜೆಪಿ 12, ಕಾಂಗ್ರೆಸ್ 9, ಜೆಡಿಎಸ್ 2 ಪ್ರಕರಣಗಳು ದಾಖಲಾಗಿವೆ.
|
4 |
+
ಧಾರ್ಮಿಕ ವಿಚಾರಕ್ಕೆ ಸಂಬಂಧಿಸಿದಂತೆ 15 ಪ್ರಕರಣಗಳು ದಾಖಲಾಗಿದ್ದು, 8 ಬಿಜೆಪಿ, 6 ಕಾಂಗ್ರೆಸ್ ಹಾಗೂ 1 ಪಕ್ಷೇತರ ಅಭ್ಯರ್ಥಿಗೆ ಸಂಬಂಧಿಸಿದೆ. ಚುನಾವಣೆ ಸಂದರ್ಭದಲ್ಲಿ ಮಕ್ಕಳ ಬಳಕೆಗೆ ಸಂಬಂಧಿಸಿದಂತೆ 7 ಬಿಜೆಪಿ, 7 ಕಾಂಗ್ರೆಸ್, ಒಂದು ಪಕ್ಷೇತರ ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
|
eesanje/url_46_170_4.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮೋದಿ ಆಡಳಿತದಲ್ಲಿ ಮಾಂಗಲ್ಯ ಮಾಡಿಸಿಕೊಳ್ಳಲೂ ಸಾಧ್ಯವಾಗದಷ್ಟು ಚಿನ್ನದ ಬೆಲೆ ಏರಿಕೆಯಾಗಿದೆ : ಡಿಕೆಶಿ
|
2 |
+
ಬೆಂಗಳೂರು,ಏ.24-ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಲ್ಲಿ ಚಿನ್ನದ ಬೆಲೆ ಗಗನಕ್ಕೆ ಮುಟ್ಟಿದ್ದು, ಬಡವರು ಮಾಂಗಲ್ಯ ಮಾಡಿಸಿಕೊಳ್ಳಲೂ ಸಾಧ್ಯವಾಗದಂತಹ ಪರಿಸ್ಥಿತಿ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
|
3 |
+
ಪಕ್ಷದ ಕಚೇರಿಯಲ್ಲಿಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ವಿಶ್ವಕರ್ಮ ಸಮುದಾಯದ ಪ್ರಮುಖ ನಾಯಕ ಕೆ.ಪಿ.ನಂಜುಂಡಿ ಹಾಗೂ ಇತರೆ ನಾಯಕರನ್ನು ಬರಮಾಡಿಕೊಂಡ ಬಳಿಕ ಮಾತನಾಡಿದ ಅವರು, 2014 ರಲ್ಲಿ ಪ್ರತಿ ಗ್ರಾಂ ಚಿನ್ನದ ಬೆಲೆ 2800 ರೂ.ಗಳಿತ್ತು. ಈಗ 7,500 ರೂ. ಗಳಾಗಿವೆ. ಕನಿಷ್ಟ ಮಾಂಗಲ್ಯ ಮಾಡಿಸಿಕೊಳ್ಳಲೂ ಸಾಧ್ಯವಾಗದೆ ಬಡವರು ಸಮಸ್ಯೆಗೆ ಸಿಲುಕಿದ್ದಾರೆ ಎಂದು ಹೇಳಿದರು.
|
4 |
+
ಕೆ.ಪಿ.ನಂಜುಂಡಿಯವರು ಕಾಂಗ್ರೆಸ್ ಸೇರುತ್ತಿರುವುದೇಕೆ ಎಂಬ ಕುರಿತು ತಮ್ಮಲ್ಲಿ ಹೇಳಿಕೊಂಡಿದ್ದು, ನಮ್ಮ ಸಮುದಾಯಕ್ಕೆ ಮಾಂಗಲ್ಯ, ಮಾಂಗಲ್ಯ ಸರ ಮಾಡಿಕೊಡುವ ಅವಕಾಶವನ್ನು ದೇವರು ಕೊಟ್ಟಿದ್ದಾರೆ. ಪ್ರಸ್ತುತ ಬೆಲೆ ಏರಿಕೆಯಿಂದಾಗಿ ಮಾಂಗಲ್ಯ ಸರ ಮಾಡಿಸಿಕೊಳ್ಳಲಾಗದೆ ಸಂಕಟ ಪಡುತ್ತಿರುವ ತಾಯಂದಿರ ಗೋಳು ನೋಡಲಾಗುತ್ತಿಲ್ಲ. ಈ ವಿಷಯವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳದ ತಾವು ಪಕ್ಷದಲ್ಲಿ ಉಳಿಯಬಾರದು ಎಂದು ಕಾಂಗ್ರೆಸ್ ಸೇರುತ್ತಿರುವುದಾಗಿ ಹೇಳಿದರು.
|
5 |
+
ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಸೇರಿದಂತೆ ವಿವಿಧ ಯೋಜನೆಗಳಿಂದ ತಿಂಗಳಿಗೆ 2 ಸಾವಿರ ರೂ. ಉಳಿತಾಯವಾಗುತ್ತಿದೆ. ಈಗ ತಾಯಂದಿರು ಸಣ್ಣಪುಟ್ಟ ಒಡವೆ ಖರೀದಿಗಳಿಗೆ ಮುಂದಾಗುತ್ತಿದ್ದಾರೆ. ಬಿಜೆಪಿ ಆಡಳಿತದಲ್ಲಿ ಇಂತಹ ಒಂದು ನಿರ್ಧಾರವನ್ನೂ ತೆಗೆದುಕೊಳ್ಳಲಿಲ್ಲ ಎಂದು ಕೆ.ಪಿ.ನಂಜುಂಡಿ ಹೇಳಿದ್ದಾಗಿ ಡಿ.ಕೆ.ಶಿವಕುಮಾರ್ ತಿಳಿಸಿದರು.
|
6 |
+
ಕೆ.ಪಿ.ನಂಜುಂಡಿ ಅವರು ಸಿದ್ದರಾಮಯ್ಯ ಅವರನ್ನು ಹೊರತುಪಡಿಸಿದರೆ ಹಿಂದುಳಿದ ವರ್ಗದಲ್ಲಿ ಅತ್ಯಂತ ಉತ್ತಮ ಸಂಘಟಕರಾಗಿದ್ದಾರೆ. ಅವರನ್ನು ಕಾಂಗ್ರೆಸ್ಗೆ ಮರಳಿ ಕರೆತರಬೇಕೆಂಬುದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಒತ್ತಾಸೆಯಾಗಿತ್ತು. ಹೈಕಮಾಂಡ್ನ ಸೂಚನೆ ಮೇರೆಗೆ ತಾವು ಆರಂಭದಿಂದಲೂ ನಂಜುಂಡಿ ಅವರನ್ನು ಕಾಂಗ್ರೆಸ್ಗೆ ಬರುವಂತೆ ಆಹ್ವಾನ ನೀಡಿದ್ದಾಗಿ ಹೇಳಿದರು.
|
7 |
+
ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರೇ ಖುದ್ದು ಆಗಮಿಸಿ ನಂಜುಂಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ನಂಜುಂಡಿ ಅವರೊಂದಿಗೆ ವಿಶ್ವಕರ್ಮ ಸಮುದಾಯದ ಅಧ್ಯಕ್ಷರು ಸೇರಿದಂತೆ ಹಲವು ಮುಖಂಡರು ಇಂದು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದರು.
|
8 |
+
ರಣದೀಪ್ ಸಿಂಗ್ ಸುರ್ಜೇವಾಲ ಮಾತನಾಡಿ, ಬಿಜೆಪಿ ಅಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ ಮಾಡುವುದಾಗಿ ರಾಜಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿ ಬಹಿರಂಗವಾಗಿ ಹೇಳಿದ್ದಾರೆ. ಎಸ್ಸಿ, ಎಸ್ಟಿ, ಓಬಿಸಿಗಳ ಮೀಸಲಾತಿಯನ್ನು ಕಿತ್ತು ಹಾಕುವ ಹುನ್ನಾರವಿದೆ ಎಂದು ಹೇಳಿದರು.
|
9 |
+
ಕೇಂದ್ರ ಸರ್ಕಾರದಲ್ಲಿ ಎಸ್ಸಿ, ಎಸ್ಟಿಯವರು ಕಾರ್ಯದರ್ಶಿ ಹುದ್ದೆಗೆ ನೇಮಕವಾಗಲು ಅವಕಾಶ ಸಿಗುವುದಿಲ್ಲ. ಜಂಟಿ ಕಾರ್ಯದರ್ಶಿಗಳಿಗಿಂತ ಮೇಲ್ಪಟ್ಟ ಹುದ್ದೆಗಳಿಗೆ ಮೋದಿಯವರು ಖಾಸಗಿ ವಲಯದಿಂದ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ವಿಶ್ವಕರ್ಮ, ಕೋಲಿ, ಈಡಿಗದಂತಹ ಸೂಕ್ಷ್ಮ ಸಮುದಾಯಗಳಿಗೆ ಅವಕಾಶವೇ ಸಿಗುವುದಿಲ್ಲ.
|
10 |
+
ಬಿಜೆಪಿ ಸರ್ಕಾರ ಕಳೆದ 10 ವರ್ಷಗಳಲ್ಲಿ 73 ಸಾರ್ವಜನಿಕ ಉದ್ಯಮಗಳನ್ನು ಮಾರಾಟ ಮಾಡಿದ್ದಾರೆ. ಅದರಿಂದ ಹಿಂದುಳಿದ ವರ್ಗಗಳಿಗೆ ಸಿಗುತ್ತಿದ್ದ ಶೇ.27 ರಷ್ಟು ಮೀಸಲಾತಿ ಗ್ಯಾರಂಟಿ ರದ್ದುಗೊಂಡಿದೆ ಎಂದು ಆತಂಕ ವ್ಯಕ್ತಪಡಿಸಿದರು.
|
11 |
+
ಕೇಂದ್ರ ಸರ್ಕಾರದ ಒಟ್ಟಾರೆ ಕಾರ್ಯದರ್ಶಿ ಹುದ್ದೆಗಳಲ್ಲಿ ಒಬ್ಬರೇ ಒಬ್ಬರು ಹಿಂದುಳಿದ ವರ್ಗಕ್ಕೆ ಸೇರಿದವರಿದ್ದಾರೆ. ಇನ್ನು ಎಸ್ಸಿ, ಎಸ್ಟಿ, ಆದಿವಾಸಿಗಳ ಹಕ್ಕುಗಳ ವಿಷಯದಲ್ಲಂತೂ ಕೇಳುವಂತೆಯೇ ಇಲ್ಲ. ಹಿಂದುಳಿದ ವರ್ಗಗಳ ಆದಾಯ ಮಿತಿಯನ್ನು ಮೋದಿ ಸರ್ಕಾರ ಪರಿಷ್ಕರಣೆ ಮಾಡಿಲ್ಲ. 13 ಲಕ್ಷ ಬ್ಯಾಕ್ಲಾಗ್ ಹುದ್ದೆಗಳು ಖಾಲಿ ಉಳಿದಿವೆ. ಹೀಗಾಗಿ ಸಮುದಾಯವಾರು ಭಾರೀ ಅನ್ಯಾಯವಾಗಿದೆ ಎಂದು ವಿವರಿಸಿದರು.
|
eesanje/url_46_170_5.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಹೈವೋಲ್ಟೇಜ್ ಕ್ಷೇತ್ರ ಬೆಂಗಳೂರು ಗ್ರಾಮಾಂತರದ ಎಲ್ಲಾ ಮತಗಟ್ಟೆಗಳಲ್ಲೂ ವೆಬ್ ಕಾಸ್ಟಿಂಗ್ ವ್ಯವಸ್ಥೆ
|
2 |
+
ಬೆಂಗಳೂರು,ಏ.24-ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಏ.26ರಂದು ಮತದಾನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.ಇಡೀ ರಾಷ್ಟ್ರದ ಗಮನಸೆಳೆದಿರುವ ಹೈವೋಲ್ಟೇಜ್ ಕ್ಷೇತ್ರವೆಂದೇ ಪರಿಗಣಿತವಾಗಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತದಾನದಂದು ಎಲ್ಲ ಮತಗಟ್ಟೆಗಳಲ್ಲೂ ವೆಬ್ ಕಾಸ್ಟಿಂಗ್ ಮಾಡಲಾಗುತ್ತದೆ.
|
3 |
+
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ಕುಮಾರ್ ಮೀನಾ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ 2829 ಮತಗಟ್ಟೆಗಳಿದ್ದು, ಮತದಾನ ದಿನದಂದು ಎಲ್ಲ ಮತಗಟ್ಟೆಗಳಲ್ಲೂ ಶೇ.100ರಷ್ಟು ವೆಬ್ ಕಾಸ್ಟಿಂಗ್ ಮಾಡಲಾಗುವುದು. ಅಲ್ಲದೆ ಇತರೆ ಕ್ಷೇತ್ರಗಳಿಗಿಂತ ಎರಡು ಪಟ್ಟು ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಕೇಂದ್ರದ ಅರೆಸೇನಾ ಪಡೆಯ 7 ಕಂಪನಿಗಳು ಹಾಗೂ ರಾಜ್ಯದ ಇತರೆ ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗೆ ಬಳಸಿಕೊಳ್ಳಲಾಗಿದೆ ಎಂದರು.
|
4 |
+
ಅಭ್ಯರ್ಥಿಗಳ ಕೋರಿಕೆ ಹಾಗೂ ಪೊಲೀಸ್ ವೀಕ್ಷಕರು ಮತ್ತು ಕ್ಷೇತ್ರದಲ್ಲಿನ ವಾತಾವರಣವನ್ನು ಗಮನಿಸಿ ಭದ್ರತೆ ಒದಗಿಸಲಾಗುತ್ತದೆ ಎಂದು ಹೇಳಿದರು. ಮೊದಲ ಹಂತದ ಚುನಾವಣೆ ನಡೆಯುವ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಕ್ಷೇತ್ರಗಳಲ್ಲಿ ಒಟ್ಟು 30,602 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 2,88,19,342 ಮತದಾರರು ಇದ್ದಾರೆ.
|
5 |
+
ಎರಡು ಹಂತದ 28 ಕ್ಷೇತ್ರಗಳಲ್ಲಿ 5,47,72,300 ಮತದಾರರು ಇದ್ದು , ಒಟ್ಟು 58,821 ಮತಗಟ್ಟೆಗಳಿದ್ದು, ಮುಕ್ತ ಹಾಗೂ ನ್ಯಾಯಸಮ್ಮತ, ಶಾಂತಿಯುತ ಮತದಾನಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
|
6 |
+
ಸುರಪುರ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಸೇರಿದಂತೆ ರಾಜ್ಯದಲ್ಲಿ ಎಡಗೈ ತೋರುಬೆರಳಿಗೆ ಇಂಕ್ ಹಾಕಲಾಗುವುದು. ಈಗಾಗಲೇ ಶೇ.90ಕ್ಕೂ ಹೆಚ್ಚು ವೋಟರ್ ಸ್ಲಿಪ್ನ್ನು ತಲುಪಿಸಲಾಗಿದೆ. ಮತದಾನದ ಸಮಯದಲ್ಲಿ ಆ ಸ್ಲಿಪ್ ಅನ್ನು ಎಪಿಕ್ ಕಾರ್ಡ್ ಅನ್ನು ತೋರಿಸಬೇಕು. ಅದಿಲ್ಲದಿದ್ದರೆ ಆಧಾರ್ ಕಾರ್ಡ್, ನರೇಗಾ ಜಾಬ್ ಕಾರ್ಡ್, ಪಾಸ್ಪೋರ್ಟ್, ಪ್ಯಾನ್ ಕಾರ್ಡ್ ಸೇರಿದಂತೆ ಭಾವಚಿತ್ರ ಇರುವ ಗುರುತಿನ ಚೀಟಿಯನ್ನು ತೋರಿಸಿ ಮತ ಚಲಾಯಿಸಬಹುದಾಗಿದೆ ಎಂದರು.
|
7 |
+
ಶೂನ್ಯ ಅವಧಿ:ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುನ್ನ ಶೂನ್ಯ ಅವಧಿ ಘೋಷಣೆಯಾಗಿದ್ದು, ಇಂದು ಸಂಜೆ 6 ಗಂಟೆಯಿಂದ ಯಾವುದೇ ರೀತಿಯ ಸಾರ್ವಜನಿಕ ಸಭೆ, ರ್ಯಾಲಿ ನಡೆಸುವಂತಿಲ್ಲ ಮತದಾರರಲ್ಲದ ರಾಜಕೀಯ ಪಕ್ಷಗಳ ಕಾರ್ಯಕರ್ತರು, ಮುಖಂಡರು, ನಾಯಕರು ಕ್ಷೇತ್ರ ಬಿಟ್ಟು ತೆರಳಬೇಕು. ಸಂಜೆ 6 ಗಂಟೆಯಿಂದ ಮದ್ಯ ಮಾರಾಟವನ್ನು ನ���ಷೇಧಿಸಲಾಗಿದೆ. ಕಲ್ಯಾಣ ಮಂಟಪ, ಹೋಟೆಲ್ಗಳನ್ನು ಸಂಜೆ 6 ಗಂಟೆ ನಂತರ ಪರಿಶೀಲನೆ ಮಾಡಲು ಸೂಚಿಸಲಾಗಿದೆ.
|
8 |
+
ಯಾವುದೇ ರೀತಿಯ ಸರ್ವೆ, ಸಮೀಕ್ಷೆ, ಅಭಿಪ್ರಾಯ ಸಂಗ್ರಹವನ್ನು ಜೂ.1ರ ಕೊನೆಯ ಹಂತದ ಮತದಾನ ಮುಕ್ತಾಯವಾಗುವವರೆಗೂ ನಿರ್ಬಂಧಿಸಲಾಗಿದೆ. 6 ಗಂಟೆಯ ನಂತರ ಐದು ಜನ ಮೀರದಂತೆ, ಧ್ವನಿ ವರ್ಧಕ ಬಳಸದೆ ಮತಯಾಚನೆ ಮಾಡಬಹುದು ಎಂದರು. ಸಾಮಾನ್ಯ ಜನರು, ಯಾತ್ರಾರ್ಥಿಗಳು, ಪ್ರವಾಸಿಗರಿಗೆ ಕ್ಷೇತ್ರ ಬಿಟ್ಟು ತೆರಳುವ ನಿರ್ಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು.
|
9 |
+
ರಜೆ ಘೋಷಣೆ:ಮತದಾನ ನಡೆಯುವ ದಿನದಂದು ಎಲ್ಲಾ ಸರ್ಕಾರಿ ಕಚೇರಿಗಳಿಗೆ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು, ಕಾರ್ಖಾನೆಗಳಿಗೂ ಸಾರ್ವತ್ರಿಕ ರಜೆ ನೀಡಲಾಗಿದೆ. ವ್ಯಾಪಾರೋದ್ಯಮ, ಕೈಗಾರಿಕೋದ್ಯಮ, ವಾಣಿಜ್ಯ ಸಂಸ್ಥೆಗಳು ಸೇರಿದಂತೆ ಎಲ್ಲಾ ರೀತಿಯ ಸಂಸ್ಥೆಗಳಲ್ಲಿ ವೇತನ ಸಹಿತ ರಜೆ ನೀಡಲು ಸೂಚಿಸಲಾಗಿದೆ.
|
10 |
+
ನಾಳೆ ಮತ್ತು ಶುಕ್ರವಾರ ಎಂಸಿಎಂಸಿ ಇಲ್ಲವೇ ಪೂರ್ವ ಪ್ರಮಾಣೀಕರಿಸಿದ ಜಾಹೀರಾತುಗಳನ್ನು ಮಾತ್ರ ಪತ್ರಿಕೆಗಳು ಪ್ರಕಟಿಸಬೇಕು. ಮತಗಟ್ಟೆಗಳ ಬಳಿ 200 ಮೀಟರ್ ದೂರದಲ್ಲಿ ರಾಜಕೀಯ ಪಕ್ಷಗಳ ಒಂದು ಟೇಬಲ್, ಎರಡು ಕುರ್ಚಿಗಳನ್ನು ಹಾಕಿಕೊಳ್ಳಬಹುದಾಗಿದೆ.
|
11 |
+
65 ಕಂಪನಿ ಅರೆಸೇನಾ ಪಡೆ:ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ 65 ಕಂಪನಿ ಅರೆಸೇನಾ ಪಡೆ, 50 ಸಾವಿರ ಸಿವಿಲ್ ಪೊಲೀಸ್ ಬಳಕೆ ಮಾಡುತ್ತಿದ್ದು, 1370 ಮತಗಟ್ಟೆಗಳಲ್ಲಿ ಸಿಸಿಟಿವಿ ಅಳವಡಿಕೆ, 19,701 ಮತಗಟ್ಟೆಗಳಲ್ಲಿ ವೆಬ್ಕಾಸ್ಟಿಂಗ್ ಮಾಡಲಾಗುವುದು. 5 ಸಾವಿರ ಸೂಕ್ಷ್ಮ ವೀಕ್ಷಕರನ್ನು ಕೂಡ ನಿಯೋಜಿಸಲಾಗಿದೆ.
|
12 |
+
ಕ್ಯೂಆರ್ ಕೋಡ್ ವೋಟರ್ ಸ್ಲಿಪ್:ನಗರಪ್ರದೇಶದ ಮತದಾರರ ಅನುಕೂಲಕ್ಕಾಗಿ ವೋಟರ್ ಸ್ಲಿಪ್ನ ಹಿಂಬದಿಯಲ್ಲಿ ಕ್ಯೂಆರ್ ಕೋಡ್ ನಮೂದಿಸಿದ್ದು, ಅದನ್ನು ಸ್ಕ್ಯಾನ್ ಮಾಡಿದರೆ ಮತಗಟ್ಟೆಗೆ ಡೈರೆಕ್ಷನ್ ತೋರಿಸಲಿದೆ. ಮತಗಟ್ಟೆ ಬಳಿ ಇರುವ ಕ್ಯೂ ಪಾರ್ಕಿಂಗ್, ಸ್ಥಳಾವಕಾಶದ ಬಗ್ಗೆಯೂ ಮಾಹಿತಿ ಸಿಗಲಿದೆ. ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಈ ಪ್ರಯೋಗ ಯಶಸ್ವಿಯಾಗಿದ್ದರಿಂದ ಲೋಕಸಭಾ ಚುನಾವಣೆಯಲ್ಲಿ ನಗರಪ್ರದೇಶಗಳಲ್ಲಿ ಮತದಾನದ ಪ್ರಮಾಣ ಹೆಚ್ಚಳಕ್ಕೆ ಮೊದಲ ಬಾರಿಗೆ ಬಳಸಲಾಗುತ್ತಿದೆ ಎಂದು ಎಲ್ಲಾ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಅಪರ ಮುಖ್ಯ ಚುನಾವಣಾಧಿಕಾರಿಗಳಾದ ಆರ್.ವೆಂಕಟೇಶ್ ಕುಮಾರ್ ಹಾಗೂ ಕೂರ್ಮರಾವ್.ಎಮ್ ಉಪಸ್ಥಿತರಿದ್ದರು.
|
eesanje/url_46_170_6.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ನಿಷೇಧ
|
2 |
+
ಬೆಂಗಳೂರು,ಏ.24– ಮೊದಲ ಹಂತದ ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಗೆ ಒಳಪಡುವ ಕೇಂದ್ರಗಳಲ್ಲಿ ಮದ್ಯ ಮಾರಾಟಕ್ಕೆ ಇಂದು ಸಂಜೆ ಕಡಿವಾಣ ಬೀಳಲಿದೆ. ಸಂಜೆ 5 ಗಂಟೆ 59 ನಿಮಿಷದಿಂದ 26ರ ಮಧ್ಯರಾತ್ರಿ 12ಗಂಟೆವರೆಗೆ ಎಂಎಸ್ಐಎಲ್/ರೆಸ್ಟೋರೆಂಟ್, ಡಾಬಾ ಸೇರಿದಂತೆ ಎಲ್ಲಿಯೂ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ಕಟ್ಟುನಿಟ್ಟಿನ ನಿಬಂಧನೆಯನ್ನು ಹಾಕಿದೆ.
|
3 |
+
ಒಂದು ವೇಳೆ ಆಯೋಗದ ಆದೇಶವನ್ನು ಉಲ್ಲಂಘಿಸಿ ಮದ್ಯ ಮಾರಾಟ ಮಾಡಿದರೆ ಅಂಥ ಮಳಿಗೆಗಳನ್ನು ತತ್ಕ್ಷಣವೇ ಜಪ್ತಿ ಮಾಡಿ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ಕೊಟ್ಟಿದೆ.
|
4 |
+
ಸಂಜೆ 5 ಗಂಟೆ 59 ನಿಮಿಷದಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಮತದಾನ ನಡೆಯುವ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಹಾಸನ, ಉಡುಪಿ-ಚಿಕ್ಕಮಗಳೂರು ಮತ್ತು ದಕ್ಷಿಣಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹಾಕಲಾಗಿದೆ.
|
5 |
+
ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ನಡೆಸಲು ಆಯೋಗ ಬಿಗಿಯಾದ ಕ್ರಮಗಳನ್ನು ತೆಗೆದುಕೊಂಡಿದೆ. ಮತದಾನ ನಡೆಯುವ 48 ಗಂಟೆಗೂ ಮುನ್ನ ಮದ್ಯ ಮಾರಾಟ ನಿಷೇಧ ಮಾಡುವುದು ಸರ್ವೇ ಸಾಮಾನ್ಯವಾಗಿದೆ.
|
eesanje/url_46_170_7.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಶ್ರೀ ಗುರುರಾಘವೇಂದ್ರ, ವಸಿಷ್ಠ ಬ್ಯಾಂಕ್ ಹಗರಣ ತನಿಖೆಗೆ ವಿಶೇಷ ದಳ ರಚನೆ ಡಿಸಿಎಂ
|
2 |
+
ಬೆಂಗಳೂರು,ಏ.24-ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಮತ್ತು ವಸಿಷ್ಠ ಬ್ಯಾಂಕ್ ಹಗರಣದ ತನಿಖೆಗೆ ವಿಶೇಷ ತನಿಖಾ ದಳ ರಚಿಸಿ ಠೇವಣಿದಾರರಿಗೆ ನ್ಯಾಯ ದೊರಕಿಸಲು ಕ್ರಮ ಕೈಗೊಳ್ಳುವುದಾಗಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.
|
3 |
+
ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುರಾಘವೇಂದ್ರ ಸಹಕಾರ ಬ್ಯಾಂಕ್ನಲ್ಲಿ 3 ಲಕ್ಷಕ್ಕೂ ಹೆಚ್ಚು ಜನ ತಮ್ಮ ಖಾತೆಯಲ್ಲಿ ಉಳಿತಾಯಕ್ಕೆ ಹಣವನ್ನಿಟ್ಟಿದ್ದರು. ಅದು ಬಿಜೆಪಿ ನಾಯಕರ ಪಾಲಾಗಿದೆ. ಹೀಗಾಗಿ ತೊಂದರೆಗೆ ಸಿಲುಕಿದ ಬಹಳಷ್ಟು ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಟ್ಟು 300 ಕ್ಕೂ ಹೆಚ್ಚು ಪ್ರಾಣಹಾನಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
|
4 |
+
ಹಗರಣವನ್ನು ರಾಜ್ಯಸರ್ಕಾರ ಈಗಾಗಲೇ ಸಿಬಿಐ ತನಿಖೆಗೆ ಒಪ್ಪಿಸಿದೆ. ಆದರೆ ಹಗರಣದಲ್ಲಿ ಬಿಜೆಪಿ ನಾಯಕರೇ ಹೆಚ್ಚು ಭಾಗಿಯಾಗಿರುವುದರಿಂದಾಗಿ ಸಿಬಿಐ ಈವರೆಗೂ ತನಿಖೆ ಕೈಗೆತ್ತಿಕೊಂಡಿಲ್ಲ. ಬೇರೆಬೇರೆ ಪ್ರಕರಣಗಳಲ್ಲಿ ನಮ್ಮಂಥವರಿಗೆ ಕಿರುಕುಳ ಕೊಡುವುದರಲ್ಲಿ ಸಿಬಿಐ ತೊಡಗಿದೆ ಎಂದು ಆರೋಪಿಸಿದರು.
|
5 |
+
ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಮತ್ತು ವಸಿಷ್ಠ ಬ್ಯಾಂಕ್ ಠೇವಣಿದಾರರು ಇಂದು ಕಾಂಗ್ರೆಸ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಯವರನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡರು.ಈ ವೇಳೆ ಠೇವಣಿದಾರರಿಗೆ ಭರವಸೆ ನೀಡಿರುವ ಪ್ರಿಯಾಂಕ ಗಾಂ ಸಿಬಿಐ ಸೂಕ್ತ ತನಿಖೆ ನಡೆಸಿ ನ್ಯಾಯ ಕೊಡಿಸುವುದಾದರೆ ಕೊಡಿಸಿ. ಇಲ್ಲವಾದರೆ, ರಾಜ್ಯಸರ್ಕಾರವೇ ವಿಶೇಷ ತನಿಖಾ ದಳ ರಚನೆ ಮಾಡಿ ಸಂತ್ರಸ್ತರ ನೆರವಿಗೆ ಬರಬೇಕು ಎಂದು ಸೂಚನೆ ನೀಡಿದ್ದಾರೆ.
|
6 |
+
ಈ ವಿಷಯವಾಗಿ ತಮ್ಮೊಂದಿಗೂ ಚರ್ಚಿಸಿದ್ದು, ಮುಖ್ಯಮಂತ್ರಿಯವರಿಗೆ ಪತ್ರ ಬರೆಯುವುದಾಗಿ ಪ್ರಿಯಾಂಕ ಗಾಂಧಿ ಹೇಳಿರುವುದಾಗಿ ಡಿ.ಕೆ.ಶಿವಕುಮಾರ್ ವಿವರಿಸಿದರು.ಲೋಕಸಭಾ ಚುನಾವಣೆ ಬಳಿಕ ಕಾನೂನು ರೀತಿಯಲ್ಲಿ ಎಸ್ಐಟಿ ರಚಿಸಿ ನ್ಯಾಯ ಕೊಡಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
|
eesanje/url_46_170_8.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಹಿರಿಯ ಪತ್ರಕರ್ತ ಎನ್.ಅರ್ಜುನ್ ದೇವ ನಿಧನ
|
2 |
+
ಬೆಂಗಳೂರು,ಏ.24-ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಎನ್.ಅರ್ಜುನ್ ದೇವ(88) ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕೆಂಗೇರಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಅವರು ಇಹಲೋಕ ತ್ಯಜಿಸಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
|
3 |
+
ಕೋಲಾರ ಜಿಲ್ಲೆಯ ವೇಮಗಲ್ ಮೂಲದವರಾದ ಅರ್ಜುನ್ ದೇವ ಅವರು ತಮ್ಮ ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರ ಹುಟ್ಟೂರಾದ ವೇಮಗಲ್ ಸಮೀಪದ ಚೌಡದೇವನಹಳ್ಳಿಯಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನೆರವೇರಲಿದೆ.
|
4 |
+
ಪ್ರಜಾವಾಣಿ, ಸಂಯುಕ್ತ ಕರ್ನಾಟಕ, ತಾಯಿನಾಡು ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದ ಅವರು, ವಿಧಾನಸೌಧದ ವರದಿಗಾರಿಕೆಗೆ ಹೊಸ ಅರ್ಥ ಕಲ್ಪಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪ್ರಜಾವಾಣಿ ಪತ್ರಿಕೆಯಿಂದ ನಿವೃತ್ತರಾದ ನಂತರ ಭಾರತೀಯ ವಿದ್ಯಾಭವನದಲ್ಲಿ ಪತ್ರಿಕೋದ್ಯಮ ಅಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದರು.
|
5 |
+
ನಂತರ ಅವರು ಸೂರ್ಯೋದಯ ಮತ್ತಿತರ ಪತ್ರಿಕೆಗಳಿಗೂ ಸಂಪಾದಕರಾಗಿ ಕಾರ್ಯ ನಿರ್ವಹಿಸಿ ಜನಮನಗೆದ್ದಿದ್ದರು. ಇವರಿಗೆ 1984ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, ಪತ್ರಿಕಾ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಪತ್ರಕರ್ತರ ಸಂಘದ ಅತ್ಯುತ್ತಮ ತನಿಖಾ ವರದಿಗಾಗಿ ನೀಡುವ ಚಿನ್ನದ ಪದಕ ಸೇರಿದಂತೆ ಗಣ್ಯ ಪತ್ರಕರ್ತರಿಗೆ ನೀಡುವ ಹಲವು ಪ್ರಶಸ್ತಿಗಳು ಕೂಡ ಇವರಿಗೆ ಸಂದಿವೆ.
|
6 |
+
ಇವರ ಗರಡಿಯಲ್ಲಿ ಪಳಗಿದ್ದ ಹಲವಾರು ಪತ್ರಕರ್ತರು ಇಂದು ರಾಜ್ಯದ ವಿವಿಧ ಮಾಧ್ಯಮಗಳಲ್ಲಿ ಪ್ರಮುಖ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜ್ಯದಲ್ಲಿರುವ ಎಲ್ಲಾ ಪ್ರಮುಖ ರಾಜಕಾರಣಿಗಳಿಂದಲೂ ಅಜಾತಶತ್ರು ಎಂದೇ ಕರೆಸಿಕೊಳ್ಳುತ್ತಿದ್ದ ಅರ್ಜುನ್ ದೇವ ಅವರ ನಿಧನಕ್ಕೆ ರಾಜಕಾರಣಿಗಳು ಹಾಗೂ ಪತ್ರಕರ್ತರು ಸಂತಾಪ ವ್ಯಕ್ತಪಡಿಸಿದ್ದಾರೆ.
|
7 |
+
ಶ್ರೀಯುತರ ನಿಧನಕ್ಕೆ ಕರ್ನಾಟಕ ಪತ್ರಕರ್ತರ ಸಹಕಾರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ವರದಿಗಾರರ ಕೂಟ, ಪ್ರೆಸ್ಕ್ಲಬ್ ಸೇರಿದಂತೆ ಹಲವಾರು ಸಂಘಟನೆಗಳು ಸಂತಾಪ ಸೂಚಿಸಿವೆ.
|
eesanje/url_46_170_9.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಎತ್ತ ಸಾಗುತಿದೆ ಕರ್ನಾಟಕ..? : ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ 20 ಮುಸ್ಲಿಂ ಯುವಕರಿಂದ ಹಲ್ಲೆ
|
2 |
+
ಕೊಪ್ಪಳ, ಏ.24-ಇಲ್ಲಿನ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಸುಮಾರು 20 ಮಂದಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿರುವ ಘಟನೆ ಕಳೆದ ರಾತ್ರಿ ನಡೆದಿದೆ. ಕುಮಾರ್ ರಾಠೋಡ್ ಹಲ್ಲೆಗೊಳಗಾಗದ ವ್ಯಕ್ತಿಯಾಗಿದ್ದು ಸದ್ಯ ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
|
3 |
+
ಕಳೆದ ರಾತ್ರಿ ಸನ್ಶೈನ್ ಬಾರ್ನಲ್ಲಿ ಮದ್ಯ ಸೇವನೆಯ ವೇಳೆ ಕುಮಾರ್ ರಾಠೋಡ್ ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಅದೇ ವೇಳೆ ಮುಸ್ಲಿಂ ಯವಕನೊಬ್ಬ ಆಕ್ಷೇಪಿಸಿದ್ದಾನೆ. ಈ ವೇಳೆ ಅವರಿಬ್ಬರ ನಡುವೆ ಜಗಳವಾಗಿದೆ.
|
4 |
+
ಕೆಲವು ನಿಮಿಷಗಳ ನಂತರ ಬಾರ್ನಿಂದ ಹೊರಬಂದಾಗ ಕುಮಾರ್ ರಾಠೋಡ್ ನನ್ನು ಅಡ್ಡಗಟ್ಟಿದ ಸುಮಾರು 30 ಮಂದಿ ಧಮಕಿ ಹಾಕಿದ್ದಾರೆ ಬಂಜಾರ ಸಮುದಾಯದ ಕುರಿತಾಗಿ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ.
|
5 |
+
ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ ವಿಚಾರವಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಕುಮಾರ್ ರಾಠೋಡ್ಗೆ ಮದ್ಯಪಾನದ ಚಟವಿದೆ. ಬಾರ್ನಲ್ಲಿ ಗ್ಲಾಸಿಗೆ ನೀರು ಸುರಿಯುವ ಸಂದರ್ಭ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಾನೆ. ಹನುಮ ಜಯಂತಿ ಇರುವ ಕಾರಣ ಆತ ಘೋಷಣೆ ಕೂಗಿದ್ದಾನೆ. ಈ ವೇಳೆ ಅಲ್ಲಿದ್ದ ಮುಸ್ಲಿಂ ಯುವಕನೊಬ್ಬ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾನೆ.
|
6 |
+
ಈ ವೇಳೆ ಅವರಿಬ್ಬರ ನಡುವೆ ಜಗಳವಾಗಿದೆ. ಕೆಲವು ನಿಮಿಷಗಳ ನಂತರ ಬಾರ್ನಿಂದ ಹೊರಬಂದಾಗ ಅವರ ಸಮುದಾಯದ 20ರಿಂದ 30 ಮಂದಿ ಅಲ್ಲಿಗೆ ಬಂದು ಕುಮಾರ್ ರಾಠೋಡ್ ಮೇಲೆ ಹಲ್ಲೆ ಮಾಡಿದ್ದಾರೆ. ಜತೆಗೆ ಆತನ ಬಂಜಾರ ಸಮುದಾಯದ ಕುರಿತಾಗಿ ಜಾತಿ ನಿಂದನೆಯನ್ನೂ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
|
7 |
+
ನಂತರ ಸ್ಥಳೀಯರು ಜಗಳ ನಿಲ್ಲಿಸಿ ಕುಮಾರ್ ರಾಠೋಡ್ನನ್ನು ಮನೆಗೆ ತಲುಪಿಸಿದರು. ಆದರೆ, ನಂತರ ಆತನಿಗೆ ಹೊಟ್ಟೆನೋವು ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಿಸಲಾಯಿತು ಎಂದೂ ಸ್ಥಳೀಯರು ತಿಳಿಸಿದ್ದಾರೆ.
|
8 |
+
ಲೋಕಸಭೆ ಚುನಾವಣೆ ಸಂದರ್ಭದಲ್ಲೇ ರಾಜ್ಯದಲ್ಲಿ ಮತೀಯ, ಧರ್ಮ ಸಂಘರ್ಷಗಳು ಹೆಚ್ಚಾಗುತ್ತಿದ್ದು, ಇತ್ತೀಚೆಗಷ್ಟೇ ರಾಮನವಮಿ ಸಂದರ್ಭ ಬೆಂಗಳೂರಿನಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ ಮಾಡಲಾಗಿತ್ತು. ಇದೀಗ ಗಂಗಾವತಿಯ ಶ್ರೀರಾಮ ನಗರದಲ್ಲಿ ಘಟನೆ ನಡೆದಿದೆ.
|
eesanje/url_46_171_1.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಕರ್ನಾಟಕದಲ್ಲಿ ತಾಲಿಬಾನ್ ಆಡಳಿತ ನಡೆಯುತ್ತಿದೆಯೇ ಎಂದೆನಿಸುತ್ತಿದೆ : ಪಿ.ರಾಜೀವ್
|
2 |
+
ಬೆಂಗಳೂರು, ಏ.23-ರಾಜ್ಯದ ಸಿಎಂ, ಗೃಹ ಸಚಿವರ ಕೃಪಾಕಟಾಕ್ಷದಿಂದ ಇವತ್ತು ಕರ್ನಾಟಕವು ಕರಾಳ ದಿನಗಳನ್ನು ಎದುರಿಸಬೇಕಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆಕ್ಷೇಪ ವ್ಯಕ್ತಪಡಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾನೂನು- ಸುವ್ಯವಸ್ಥೆ ಜೀವಂತ ಇದೆಯಾ ಎಂಬ ಸಂಶಯ ಎಲ್ಲರಲ್ಲಿ ಮನೆಮಾಡುತ್ತಿದೆ. ಕರ್ನಾಟಕದಲ್ಲಿ ಹೆಣ್ಮಕ್ಕಳು, ವಿದ್ಯಾರ್ಥಿಗಳ ಜೀವಕ್ಕೆ ಸುರಕ್ಷತೆ ಇಲ್ಲವಾಗಿದೆ. ದಲಿತರ ಮನೆಗೆ ನುಗ್ಗಿ ಪೊಷಕರ ಸಮ್ಮುಖದಲ್ಲೇ ಒಬ್ಬ ದಲಿತ ಯುವಕನನ್ನು ಮರ್ಮಾಂಗಕ್ಕೆ ಒದ್ದು, ಕತ್ತು ಹಿಸುಕಿ ಸಾಯಿಸುವ ಘಟನೆ ಈ ಕರ್ನಾಟಕದಲ್ಲಿ ನಡೆದಿದೆ ಎಂದರು.
|
3 |
+
ಯಾದಗಿರಿಯಲ್ಲಿ ಮೊನ್ನೆ ರಾತ್ರಿ 10.30ರ ಸುಮಾರಿಗೆ ಈ ಘಟನೆ ನಡೆದಿದೆ. ರಾಕೇಶ್ ಅವರ ಹತ್ಯೆಯಾಗಿದೆ. ಆದರೆ, ನಿನ್ನೆ ಮಧ್ಯಾಹ್ನ 1 ಗಂಟೆಗೆ ಎಫ್ಐಆರ್ ದಾಖಲಾಗಿದೆ. ಕಾನೂನು- ಸುವ್ಯವಸ್ಥೆ ಈ ರಾಜ್ಯದಲ್ಲಿ ಜೀವಂತ ಇದೆಯೇ ಎಂದು ಪ್ರಶ್ನಿಸಿದರು.
|
4 |
+
ನೀತಿ ಸಂಹಿತೆ ಜಾರಿಯಲ್ಲಿದ್ದರೂ ಸಚಿವ ಕೃಷ್ಣ ಬೈರೇಗೌಡರು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ಮಾಡಿದ್ದಾರೆ. ಇವತ್ತು ಕಾಂಗ್ರೆಸ್ ಸಚಿವರ- ಶಾಸಕರ ದಂಡು ವಿಧಾನಸೌಧದಲ್ಲಿ ಹೋರಾಟವನ್ನು ಮಾಡುತ್ತಿದೆ. ವಿಧಾನಸೌಧ ಪ್ರಜಾತಂತ್ರದ ಪ್ರತೀಕವೇ? ಕಾಂಗ್ರೆಸ್ಸಿನ ಕಾರ್ಯಾಲಯವೇ ಎಂದು ಕೇಳಿದರು.
|
5 |
+
ರಾಜ್ಯದಲ್ಲಿ ನಡೆದ ಮಹಿಳೆಯ ವಿವಸ್ತ್ರ ಪ್ರಕರಣ, ಸಾಮೂಹಿಕ ಅತ್ಯಾಚಾರ, ರಾಮೇಶ್ವರಂ ಕೆಫೆಸ್ಪೋಟ, ಕುಕ್ಕರ್ ಬಾಂಬ್ ಸ್ಪೋಟ, ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಪ್ರಕರಣಗಳನ್ನು ನಾನು ನೆನಪಿಸಲು ಹೋಗುವುದಿಲ್ಲ. ಕರ್ನಾಟಕದಲ್ಲಿ ಕೇವಲ 3 ದಿನಗಳಲ್ಲಿ 8 ಕೊಲೆ ಪ್ರಕರಣಗಳು ನಡೆದಿವೆ. ಯಾಕೆ ಎಂದ ಅವರು, ರಾಜ್ಯದಲ್ಲಿ ಜನಪರ ಸರಕಾರ ಇದೆಯೇ ಅಥವಾ ತಾಲಿಬಾನ್ ಆಡಳಿತ ನಡೆಯುತ್ತಿದೆಯೇ ಎಂಬ ಭಾವನೆ ಜನರಲ್ಲಿ ಮೂಡುತ್ತಿದೆ. ಯಾಕೆ ಎಂದು ಪ್ರಶ್ನಿಸಿದರು.
|
6 |
+
ಕರ್ನಾಟಕವು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ವಾಗಿ ಅತ್ಯಂತ ಉನ್ನತ ಸ್ಥಿತಿಯಲ್ಲಿ, ದೇಶಕ್ಕೆ ಮಾದರಿ ರಾಜ್ಯವಾಗಿತ್ತು. ಭಿಕ್ಷೆ ಬೇಡುವ ಮುಖ್ಯಮಂತ್ರಿ, ಮೈ ಪರಚಿಕೊಳ್ಳುವ ಸಿಎಂ, ವಿಚಾರಣೆಗೆ ಮೊದಲೇ ತೀರ್ಪನ್ನು ನೀಡುವ ಗೃಹ ಸಚಿವ, ಪ್ರಕರಣದ ಪ್ರಾಥಮಿಕ ಮಾಹಿತಿಯನ್ನು ತಿಳಿದುಕೊಳ್ಳದೆ ಉತ್ತರಿಸುವ ಪೊಲೀಸ್ ಸಚಿವರಿರುವುದು ರಾಜ್ಯದ ದುರ್ದೈವ ಎಂದು ನುಡಿದರು.
|
7 |
+
ರಾಜ್ಯದಲ್ಲಿ ಕೊಲೆ, ಅತ್ಯಾಚಾರ, ಭಯೋತ್ಪಾದನಾ ಕೃತ್ಯಗಳು ಜಾಸ್ತಿ ಆಗುತ್ತಿವೆ ಯಾಕೆ ಎಂದು ಕೇಳಿದ ಅವರು, ಪೊಲೀಸ್ ಠಾಣೆಯಲ್ಲಿ ನಮಗೆ ರಾಜಾತಿಥ್ಯ ಇದೆ ಎಂದು ಡಿ.ಕೆ.ಶಿವಕುಮಾರರ ಬ್ರದರ್ಸ್ಗೆ ಗೊತ್ತಾಗಿದೆ. ಈಗಿನ ಕಾಂಗ್ರೆಸ್ ನೇತೃತ್ವದ ಸರಕಾರದಲ್ಲಿ ನಾವು ಯಾವುದೇ ಅಪರಾಧ ಮಾಡಿದರೂ ನಮ್ಮ ಮನೆಗೆ ಪೊಲೀಸ್ ರಕ್ಷಣೆ ಕೊಡುತ್ತಾರೆ.
|
8 |
+
ಅಮಾಯ��� ಯುವತಿಯನ್ನು ಕೊಲೆ ಮಾಡಿದರೆ ಪೊಲೀಸ್ ಠಾಣೆಯಲ್ಲಿ ನನಗೆ ರಾಜಾತಿಥ್ಯ ಕೊಟ್ಟು, ನನ್ನ ಮನೆಗೆ ರಕ್ಷಣೆ ನೀಡಲು ಕಾಂಗ್ರೆಸ್ ಸರಕಾರ ಸನ್ನದ್ಧವಾಗಿದೆ ಎಂಬ ಭಾವನೆಯಿಂದ ಇಂಥ ಕೃತ್ಯಗಳು ನಡೆಯುತ್ತಿವೆ ಎಂದು ಪಿ.ರಾಜೀವ್ ಆರೋಪಿಸಿದರು.ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ರಾಜ್ಯ ವಕ್ತಾರ ಎಂ.ಜಿ.ಮಹೇಶ್, ಪ್ರಮುಖರು ಈ ಸಂದರ್ಭದಲ್ಲಿ ಇದ್ದರು.
|
eesanje/url_46_171_10.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಹೆರಿಗೆ ವೇಳೆ ಇಬ್ಬರು ಮಹಿಳೆಯರ ಸಾವಿಗೆ ಕಾರಣವಾದ ಸ್ತ್ರೀರೋಗ ತಜ್ಞೆ ಡಾ.ಪರಿಮಳ ದೇಸಾಯಿ ಅಮಾನತು
|
2 |
+
ಬೆಂಗಳೂರು,ಏ.23-ಹೆರಿಗೆ ಸಂದರ್ಭದಲ್ಲಿ ಇಬ್ಬರು ಮಹಿಳೆಯರ ಸಾವಿಗೆ ಕಾರಣವಾದ ಸ್ತ್ರೀರೋಗ ತಜ್ಞೆ ಡಾ.ಪರಿಮಳ ದೇಸಾಯಿ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಮಾನತುಗೊಳಿಸಿದೆ.
|
3 |
+
ಬಳ್ಳಾರಿ ಜಿಲ್ಲೆಯ ಮೋಕ ಸಮುದಾಯ ಆರೋಗ್ಯ ಕೇಂದ್ರ ತಜ್ಞೆಯಾಗಿ ಕೆಲಸ ಮಾಡುತ್ತಿರುವ ಡಾ.ಪರಿಮಳ ದೇಸಾಯಿಯವರು ಮಾ.6 ರಂದು ಸಿಂಧುವಾಳ ನಗರದ ರಾಜಮ್ಮ(23) ಅವರಿಗೆ ಹೆರಿಗೆ ಸಂದರ್ಭದಲ್ಲಿ ಶಸ್ತ್ರಚಿಕಿತ್ಸೆ ನಡೆಸಿದ್ದರು. ಮಾ.7 ರಂದು ನ್ಯೂಮೋಕ ವಾಸಿ ಭಾಗ್ಯಮ್ಮ(23) ಎಂಬುವರಿಗೂ ಶಸ್ತ್ರಚಿಕಿತ್ಸೆ ಮಾಡಿದ್ದರು. ಈ ಇಬ್ಬರೂ ಮಹಿಳೆಯರು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.
|
4 |
+
ಶಸ್ತ್ರಚಿಕಿತ್ಸೆಯ ಲೋಪ ಕಂಡುಬಂದಿದೆ. ಬೇಜವಾಬ್ದಾರಿತನ, ಕರ್ತವ್ಯ ನಿರ್ಲಕ್ಷ್ಯತೆ, ಮೇಲುಸ್ತುವಾರಿ ನಿಗಾ ವಹಿಸದೇ ಇರುವುದು, ಮೇಲಧಿಕಾರಿಗಳು ಸಕಾಲಕ್ಕೆ ವರದಿ ಸಲ್ಲಿಸದೇ ಇರುವ ಕಾರಣಕ್ಕಾಗಿ ಡಾ.ಪರಿಮಳ ದೇಸಾಯಿ ಅವರನ್ನು ಶಿಸ್ತುಕ್ರಮ ಬಾಕಿ ಇರಿಸಿ ಅಮಾನತುಗೊಳಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಿ.ರಂದೀಪ್ ಆದೇಶಿಸಿದ್ದಾರೆ.
|
eesanje/url_46_171_11.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಪಿಕ್ಪ್ಯಾಕೆಟ್ ಮಾಡಿ ಕಾಂಗ್ರೆಸ್ ಮೇಲೆ ಗೂಬೆ ಕೂರಿಸಿದ ಬಿಜೆಪಿ : ಡಿಕೆಶಿ ವಾಗ್ದಾಳಿ
|
2 |
+
ಬೆಂಗಳೂರು,ಏ.23-ಬಿಜೆಪಿಯವರು ತಾವು ಮಾಡಿದ ಪಿಕ್ಪ್ಯಾಕೆಟ್ ಅನ್ನು ಕಾಂಗ್ರೆಸ್ನವರ ಮೇಲೆ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿಂದು ತಮ್ಮ ನಿವಾಸದಲ್ಲಿ ತಮಿಳುನಾಡಿನ ಚಿದಂಬರಂ ಕ್ಷೇತ್ರದ ಸಂಸದ ಹಾಗೂ ವಿಡುದಲೈ ಚಿರುತೈಗಳ್ ಕಚ್ಚಿ (ವಿಸಿಕೆ) ಪಕ್ಷದ ಅಧ್ಯಕ್ಷ ತೋಳ್ಕಪಿಯನ್ ತಿರುಮವಳವನ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಬಿಜೆಪಿಯ ಜಾಹೀರಾತಿನ ವಿರುದ್ಧ ಕಿಡಿಕಾರಿದರು.
|
3 |
+
ವಿದ್ಯುತ್ ಬಿಲ್ ಅನ್ನು ಏರಿಕೆ ಮಾಡಿದ್ದು ಬಿಜೆಪಿ ಅವಧಿಯಲ್ಲಿ. ನಮ್ಮ ಸರ್ಕಾರ ಎಲ್ಲಾ ಗ್ರಾಹಕರಿಗೂ ಗೃಹಜ್ಯೋತಿ ಯೋಜನೆಯ ಮೂಲಕ ವಿದ್ಯುತ್ ಬಿಲ್ ರಿಯಾಯಿತಿ ನೀಡಿ ಜನರಿಗೆ ಹೊರೆಯಾಗದಂತೆ ಎಚ್ಚರಿಕೆ ವಹಿಸಿದೆ.
|
4 |
+
ಇತಿಹಾಸದಲ್ಲೇ ಮೊದಲ ಬಾರಿಗೆ ಕಾಂಗ್ರೆಸ್ ಸರ್ಕಾರ ಕಳೆದ ತಿಂಗಳೂ 1.50 ರೂ.ನಷ್ಟು ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡಿದೆ. ಆದರೆ ಬಿಜೆಪಿಯವರು ಜಾಹೀರಾತಿನಲ್ಲಿ ನಮ್ಮ ಸರ್ಕಾರದ ವಿರುದ್ಧ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದಲ್ಲಿ ಜನರ ಜೇಬಿನ ಕಳ್ಳತನ ಮಾಡುತ್ತಿದೆ.
|
5 |
+
ಶೇ.40 ರಷ್ಟು ಲಂಚದ ಪ್ರಕರಣ ಬಿಗ್ ಪಿಕ್ಪ್ಯಾಕೆಟ್ಗೆ ದೊಡ್ಡ ಉದಾಹರಣೆ. ಅದನ್ನೆಲ್ಲಾ ಮರೆತು ಬಿಜೆಪಿ ಕಾಂಗ್ರೆಸ್ ವಿರುದ್ಧ ಪಿಕ್ಪ್ಯಾಕೆಟ್ ಆರೋಪ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದರು. ಕೇಂದ್ರ ಸರ್ಕಾರದ ವಿರುದ್ಧ ಇಂದು ಕಾಂಗ್ರೆಸ್ ಪಕ್ಷ ಸಾಂಕೇತಿಕ ಹೋರಾಟ ನಡೆಸಿದೆ. ಕೇಂದ್ರದಿಂದ ನಮಗೆ ನಿರಂತರವಾಗಿ ಅನ್ಯಾಯವಾಗುತ್ತಿರುವುದನ್ನು ಜನರ ಗಮನಕ್ಕೆ ತರುವುದು ನಮ್ಮ ಜವಾಬ್ದಾರಿ ಎಂದು ಹೇಳಿದರು.
|
6 |
+
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನಿನ್ನೆ ಹಾಸನದಲ್ಲಿ ಕಣ್ಣೀರು ಹಾಕಿರುವುದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಯಾವ ಅನ್ಯಾಯವಾಗಿದೆ ಎಂದು ದೇವೇಗೌಡರು ಕಣ್ಣೀರು ಹಾಕಿದ್ದಾರೆ? ಅವರನ್ನು ಕಾಂಗ್ರೆಸ್ ಪಕ್ಷ ಪ್ರಧಾನಿ ಮಾಡಿತ್ತು. ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರದ ಜನ ಮುಖ್ಯಮಂತ್ರಿ ಮಾಡಿದ್ದಾರೆ, ಹಾಸನದವರಲ್ಲ. ಅವರಿಗೆ ತಮ್ಮ ಕೊಡುಗೆ ಏನು ಎಂದು ಹೇಳಿಕೊಳ್ಳಲಾಗುತ್ತಿಲ್ಲ. ಅದಕ್ಕಾಗಿ ಕಣ್ಣೀರು ಹಾಕುತ್ತಿದ್ದಾರೆ ಎಂದು ಹೇಳಿದರು.
|
7 |
+
ಜೆಡಿಎಸ್ ಅಧಿಕೃತವಾಗಿ ಸ್ರ್ಪಧಿಸಿರುವ 3 ಹಾಗೂ ಅನಕೃತವಾಗಿ ಸ್ಪರ್ಧೆಯಲ್ಲಿರುವ 1 ಕ್ಷೇತ್ರ ಸೇರಿದಂತೆ 4 ಕಡೆ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಇದೇ ಸಂದರ್ಭದಲ್ಲಿ ನುಡಿದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಾವು ಹೊಸದಾಗಿ ರಾಜಕಾರಣ ಮಾಡುತ್ತಿಲ್ಲ, ಚು���ಾವಣೆಯಲ್ಲಿ ಗೆದ್ದ ದಿನದಿಂದಲೂ ಸೇವೆ ಮಾಡುತ್ತಿದ್ದೇವೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಾಯಕರು ಕೋವಿಡ್ ಸಂದರ್ಭದಲ್ಲಿ ನಾಪತ್ತೆಯಾಗಿದ್ದರು. ಔಷಧಿ, ಆಹಾರ, ಚಿಕಿತ್ಸೆ ಸೇರಿದಂತೆ ಯಾವುದಕ್ಕೂ ಸ್ಪಂದಿಸಿರಲಿಲ್ಲ, ಕೊನೆಗೆ ಹೆಣ ಹೂಳಲಿಕ್ಕೂ ಬಂದಿರಲಿಲ್ಲ. ಚುನಾವಣೆ ಎಂಬ ಕಾರಣಕ್ಕೆ ಈಗ ಪದೇಪದೇ ಬರುತ್ತಿದ್ದಾರೆ ಎಂದು ತಿಳಿಸಿದರು.
|
8 |
+
ವಿಕೆಸಿ ಪಕ್ಷದ ಸಂಸದರು ಅತ್ಯಂತ ಪ್ರಭಾವಿ ಹಾಗೂ ಇಂಡಿಯಾ ಮೈತ್ರಿ ಕೂಟದ ಪಾಲುದಾರರಾಗಿದ್ದಾರೆ. ಅವರ ಪಕ್ಷದಿಂದ ಬೆಂಗಳೂರು ಗ್ರಾಮಾಂತರದಲ್ಲಿ ಚಂದ್ರಶೇಖರ್, ಕೋಲಾರದಲ್ಲಿ ಎಂ.ಸಿ.ವೇಣು, ಬೆಂಗಳೂರು ದಕ್ಷಿಣದಲ್ಲಿ ರಾಜ್ಕುಮಾರ್ರವರು ಸ್ಪರ್ಧೆ ಮಾಡಿದ್ದರು. ತಮ್ಮ ಮನವಿಗೆ ಸ್ಪಂದಿಸಿ ಈ ಮೂರೂ ಜನ ಚುನಾವಣೆ ನಿವೃತ್ತಿ ಘೋಷಿಸಿದ್ದು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
|
eesanje/url_46_171_12.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ರಾಜ್ಯದ 2ನೇ ಹಂತದ ಚುನಾವಣಾ ಕಣದಲ್ಲಿ 227 ಅಭ್ಯರ್ಥಿಗಳು
|
2 |
+
ಬೆಂಗಳೂರು,ಏ.23-ರಾಜ್ಯದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ನಾಮಪತ್ರ ಹಿಂಪಡೆಯುವಿಕೆ ಮುಕ್ತಾಯಗೊಂಡಿದ್ದು, ಚುನಾವಣಾ ಕಣದಲ್ಲಿ 227 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ನ ತಲಾ 14 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದರೆ, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಯಾವುದೇ ಕ್ಷೇತ್ರದಲ್ಲಿ ಸ್ರ್ಪಧಿಸಿಲ್ಲ.
|
3 |
+
ರಾಯಚೂರು ಮತ್ತು ಬಿಜಾಪುರ ಲೋಕಸಭಾ ಕ್ಷೇತ್ರದಲ್ಲಿ ಅತೀ ಕಡಿಮೆ 8 ಅಭ್ಯರ್ಥಿಗಳಿದ್ದರೆ, ದಾವಣಗೆರೆ ಕ್ಷೇತ್ರದಲ್ಲಿ ಅತೀ ಹೆಚ್ಚು 30 ಅಭ್ಯರ್ಥಿಗಳಿದ್ದಾರೆ. ಚಿಕ್ಕೋಡಿ 18, ಬೆಳಗಾವಿ 13, ಬಾಗಲಕೋಟೆ 22, ಗುಲ್ಬರ್ಗ 14, ಬೀದರ್ 18, ಕೊಪ್ಪಳ 19, ಬಳ್ಳಾರಿ 10, ಹಾವೇರಿ 14, ಧಾರವಾಡ 17, ಉತ್ತರ ಕನ್ನಡ 13, ಶಿವಮೊಗ್ಗ 23 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ.
|
4 |
+
ಇದರಲ್ಲಿ 206 ಪುರುಷ ಹಾಗೂ 21 ಮಹಿಳಾ ಅಭ್ಯರ್ಥಿಗಳು ಸೇರಿದ್ದಾರೆ. ನಾಮಪತ್ರ ಹಿಂಪಡೆಯಲು ಕಡೆಯ ದಿನವಾದ ನಿನ್ನೆ 45 ನಾಮಪತ್ರಗಳನ್ನು ವಾಪಸ್ಸು ಪಡೆಯಲಾಗಿದೆ.ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 247 ಹಾಗೂ ಎರಡನೇ ಹಂತದ 14 ಕ್ಷೇತ್ರಗಳಲ್ಲಿ 227 ಅಭ್ಯರ್ಥಿಗಳು ಸೇರಿದಂತೆ ಒಟ್ಟು 474 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ.
|
5 |
+
ಎರಡು ಹಂತದ 28 ಲೋಕಸಭಾ ಕ್ಷೇತ್ರಗಳಲ್ಲಿ 5.47 ಕೋಟಿ ಮತದಾರರಿದ್ದು, 58,834 ಮತಗಟ್ಟೆಗಳನ್ನು ತೆರಯಲಾಗುತ್ತದೆ. 1832 ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ ಎಂದು ರಾಜ್ಯ ಚುನಾವಣಾಧಿಕಾರಿಗಳ ಇಲಾಖೆ ಪ್ರಕಟಣೆ ತಿಳಿಸಿದೆ.
|
6 |
+
ಉಪಚುನಾವಣೆ:ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣದಲ್ಲಿ ಬಿಜೆಪಿ, ಕಾಂಗ್ರೆಸ್ನ ತಲಾ ಒಬ್ಬರು ಹಾಗೂ ನಾಲ್ವರು ಸ್ವತಂತ್ರ್ಯ ಅಭ್ಯರ್ಥಿ ಸೇರಿದಂತೆ ಒಟ್ಟು 6 ಮಂದಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ.ಮೇ 7 ರಂದು 14 ಕ್ಷೇತ್ರಗಳ ಹಾಗೂ ಸುರಪುರ ಕ್ಷೇತ್ರದ ಉಪಚುನಾವಣೆಗೆ ಮತದಾನ ನಡೆಯಲಿದೆ.
|
eesanje/url_46_171_2.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪಾಕಿಸ್ತಾನಕ್ಕೆ ಹಾರಲು ಪ್ಲಾನ್ ಮಾಡಿದ್ದ ರಾಮೇಶ್ವರಂ ಕೆಫೆ ಸ್ಪೋಟದ ಬಾಂಬರ್ಗಳು
|
2 |
+
ಬೆಂಗಳೂರು, ಏ.23-ರಾಮೇಶ್ವರಂ ಕೆಫೆ ಸ್ಪೋಟಿಸಿದ ನಂತರ ಪಾಕಿಸ್ತಾನಕ್ಕೆ ಹಾರಲು ಬಾಂಬರ್ಗಳು ಸಿದ್ಧತೆ ಮಾಡಿಕೊಂಡಿದ್ದರು ಎಂಬ ಸ್ಪೋಟಕ ಮಾಹಿತಿ ಎನ್ಐಎ ತನಿಖೆಯಲ್ಲಿ ಗೊತ್ತಾಗಿದೆ. ಎನ್ಐಎ ತಂಡ ಒಂದು ವೇಳೆ ಪಶ್ಚಿಮ ಬಂಗಾಳದಲ್ಲಿ ಇಬ್ಬರು ಬಾಂಬರ್ಗಳನ್ನು ಬಂಧಿಸದಿದ್ದರೆ ಈ ವೇಳೆಗಾಗಲೇ ಅವರು ಪಾಕಿಸ್ತಾನದಲ್ಲಿ ನೆಲೆಸುತ್ತಿದ್ದರು ಎಂಬುವುದು ತಿಳಿದು ಬಂದಿದೆ.
|
3 |
+
ಬಾಂಬರ್ ಮುಸಾವೀರ್ ಮತ್ತು ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹ ಕೆಫೆ ಸ್ಪೋಟಿಸಿದ ನಂತರ ರಾಜ್ಯದ ಹಲವು ಕಡೆಗಳಲ್ಲಿ ಸಂಚರಿಸಿ ನಂತರ ವಿವಿಧ ರಾಜ್ಯಗಳಲ್ಲೂ ತಲೆಮರೆಸಿಕೊಂಡು ಪಶ್ಚಿಮ ಬಂಗಾಳಕ್ಕೆ ಪರಾರಿಯಾಗಿದ್ದರು.
|
4 |
+
ಈ ಇಬ್ಬರಿಗೆ ಸಹಾಯ ಮಾಡಿದ್ದ ಆರೋಪಿ ಮುಜಾಮಿಲ್ ತನ್ನ ಹಾಗೂ ಗೆಳೆಯರ ಬ್ಯಾಂಕ್ ಅಕೌಂಟ್ ಹಾಗೂ ಎಟಿಎಂ ಕಾರ್ಡ್ ನೀಡಿದ್ದು ವಿದೇಶದಿಂದಲೂ ಇವರ ಖಾತೆಗೆ ಹಣ ಬರುತ್ತಿತ್ತು ಎಂಬುವುದು ವಿಚಾರಣೆಯಿಂದ ತಿಳಿದುಬಂದಿದೆ.
|
5 |
+
ಪಶ್ಚಿಮ ಬಂಗಾಳದಿಂದ ಬಾಂಗ್ಲಾಕ್ಕೆ ಹೋಗಿ ಅಲ್ಲಿಂದ ಪಾಕಿಸ್ತಾನಕ್ಕೆ ಹಾರಲು ಈ ಇಬ್ಬರು ಬಾಂಬರ್ಗಳು ಯೋಜನೆ ರೂಪಿಸಿಕೊಂಡು ಹಣಕ್ಕಾಗಿ ಕಾಯುತ್ತಿದ್ದರು. ಅದಕ್ಕಾಗಿ ಇವರಿಗೆ ಕನಿಷ್ಟ ಒಂದು ಲಕ್ಷ ಹಣದ ಅವಶ್ಯಕತೆಯಿತ್ತು.
|
6 |
+
ಯಾವಾಗ ಎನ್ಐಎಗೆ ಬ್ಯಾಂಕ್ ಅಕೌಂಟ್ಬಗ್ಗೆ ಮಾಹಿತಿ ಲಭ್ಯವಾಯಿತು. ಆ ಬಳಿಕ ಮತೀನ್ ತಾಹ ಹಾಗೂ ಮುಜಾವೀರ್ ಅಕೌಂಟ್ ಬಳಕೆ ನಿಲ್ಲಿಸಿದ್ದರಿಂದ ಆರ್ಥಿಕ ಸಂಕಷ್ಟ ಎದುರಾಗಿ ಹಣ ಪಡೆಯಲು ಸಾಧ್ಯವಾಗದಿದ್ದಾಗ ಪಶ್ಚಿಮ ಬಂಗಾಳದಲ್ಲೇ ಉಳಿದುಕೊಂಡಿದ್ದರು.
|
7 |
+
ಈ ಮಾಹಿತಿ ಕಲೆ ಹಾಕಿದ ಎನ್ಐಎ ತಂಡ ಕ್ಷಣಾರ್ಧದಲ್ಲಿ ಪಶ್ಚಿಮ ಬಂಗಾಳಕ್ಕೆ ತೆರಳಿ ಇಬ್ಬರು ಬಾಂಬರ್ಗಳ ಎಡೆಮುರಿ ಕಟ್ಟಿ ಕರೆತಂದಿದ್ದಾರೆ.ಈ ಆರೋಪಿಗಳು ಟೆಲಿಗ್ರಾಂ, ಸಿಗ್ನಲ್, ಎಂಡ್ಟುಎಂಡ್ ಎನ್ಕ್ರಿಪೈಡ್ ಮಾದರಿಯಲ್ಲಿ ಮಾತುಕತೆ ನಡೆಸುತ್ತಾ ತಾವು ಏನೆಲ್ಲಾ ಮಾಡಬೇಕೆಂಬ ವಿಚಾರದ ಬಗ್ಗೆ ಅಬ್ದುಲ್ ಮತೀನ್ ತಾಹಗೆ ಕಮಾಂಡರ್, ಹ್ಯಾಂಡರ್ಸ್ ಅಥವಾ ಕರ್ನಲ್ ಎಂಬ ಹೆಸರಿನಲ್ಲಿ ನಿರ್ದೇಶನ ಬರುತ್ತಿತ್ತು ಎಂಬುವುದು ವಿಚಾರಣೆಯಿಂದ ಗೊತ್ತಾಗಿದೆ.
|
8 |
+
ಈ ಹ್ಯಾಂಡ್ಲರ್ ಮೂಲತಃ ಪಾಕಿಸ್ತಾನದ ವ್ಯಕ್ತಿ ಎಂಬ ಶಂಕೆ ವ್ಯಕ್ತವಾಗಿದ್ದು, ಈತ ಮಧ್ಯಪ್ರಾಚ್ಯ ದೇಶದಲ್ಲಿ ಇದ್ದುಕೊಂಡು ತಾಹಗೆ ನಿರ್ದೇಶನ ನೀಡಿದ್ದರ ಬಗ್ಗೆಯೂ ಎನ್ಐಎಗೆ ಮಾಹಿತಿ ಲಭ್ಯವಾಗಿದೆ.
|
9 |
+
ವಿದೇಶದಿಂದ ಹಣದ ನೆರವು:ಈ ಇಬ್ಬರು ಬಾಂಬರ್ಗಳ ಖಾತೆಗಳಿಗೆ ವಿದೇಶದಿಂದ ಹಣ ಬರುತ್ತಿತ್ತು ಎಂಬುದು ಎನ್ಐಎ ತನಿಖೆಯಿಂದ ಗೊತ್ತಾಗಿದೆ. ಯಾವಾಗ ಬ್ಯಾಂಕ್ ಅಕೌಂಟ್ಗಳ ಬಗ್ಗೆ ಮಾಹಿತಿ ಲಭ್ಯವಾಯಿತೋ ಆ ಸಂದರ್ಭದಲ್ಲಿ ಮಾಸ್ಟರ್ ಮೈಂಡ್ ಮತೀನ್ ತಾಹ ಹಾಗೂ ಬಾಂಬರ್ ಮುಸಾವೀರ್ ಅಕೌಂಟ್ ಬಳಸುವುದನ್ನು ನಿಲ್ಲಿಸಿದ್ದರಿಂದ ಇವರಿಗೆ ಆರ್ಥಿಕ ಸಂಕಷ್ಟ ಎದುರಾಗಿ ಪಾಕಿ��್ತಾನಕ್ಕೆ ಹಾರುವ ಸಂಚು ವಿಫಲವಾಗಿದ್ದರಿಂದ ಎನ್ಐಎಗೆ ಸಿಕ್ಕಿಕೊಂಡಿದ್ದರು.
|
eesanje/url_46_171_3.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಆಸ್ಪತ್ರೆಗೆ ದಾಖಲು
|
2 |
+
ಬೆಂಗಳೂರು, ಏ.23-ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ರಾತ್ರಿಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಲಿನಲ್ಲಿ ಗಾಯ ಉಲ್ಬಣಗೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ.ಸುದರ್ಶನ್ ಬಲ್ಲಾಳ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ.
|
3 |
+
ಇನ್ನೆರಡು ದಿನಗಳು ಐಸಿಯುನಲ್ಲೇ ಚಿಕಿತ್ಸೆ ಮುಂದುವರೆಯಲಿದೆ. ನಂತರ ವಾರ್ಡ್ಗೆ ಶಿಫ್ಟ್ ಮಾಡಲಾಗುವುದು ಎಂದು ಬಲ್ಲಾಳ್ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಶ್ರೀ ನಿವಾಸ್ ಪ್ರಸಾದ್ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಮಧ್ಯೆ, ಶ್ರೀ ನಿವಾಸ್ ಪ್ರಸಾದ್ ಅಳಿಯ ಧೀರಜ್ ಪ್ರಸಾದ್ ಮತ್ತು ಸಹೋದರ ಕಾಂಗ್ರೆಸ್ ಸೇರಿದ್ದರು. ಇದು ಚಾಮರಾಜನಗರ ರಾಜಕೀಯದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿತ್ತು.
|
4 |
+
ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ತವರು ಕ್ಷೇತ್ರ ವರುಣಾ ಇರುವ ಲೋಕಸಭಾ ಕ್ಷೇತ್ರವಾದ ಚಾಮರಾಜನಗರ ಗೆಲ್ಲಿಸಲೇಬೇಕೆಂದು ಪಣ ತೊಟ್ಟಿದ್ದು, ಶ್ರೀನಿವಾಸ್ ಪ್ರಸಾದ್ರನ್ನು ಇತ್ತೀಚೆಗೆ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇದು ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ಕಡೆ ವಾಲಿದ್ದಾರೆಯೇ ಎಂಬ ಅನುಮಾನಕ್ಕೆ ಕಾರಣವಾಗಿತ್ತು.
|
5 |
+
ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಮೈಸೂರಿನಲ್ಲಿ ಪ್ರಧಾನಿ ಮೋದಿ ಸಮಾವೇಶದ ಸಂದರ್ಭದಲ್ಲಿ ಶ್ರೀನಿವಾಸ್ ಪ್ರಸಾದ್ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ನೀಡಿಮನವೊಲಿಸುವ ಪ್ರಯತ್ನ ಮಾಡಿದ್ದರು. ಮೋದಿ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ ನೀಡಿದ್ದರು. ಆದರೆ, ಯಡಿಯೂರಪ್ಪ ಆಹ್ವಾನವನ್ನು ಶ್ರೀನಿವಾಸ್ ಪ್ರಸಾದ್ ನಯವಾಗಿ ತಿರಸ್ಕರಿಸಿದ್ದರು.
|
6 |
+
ಶ್ರೀನಿವಾಸದ ಪ್ರಸಾದ್ ಅವರು ಕೇಂದ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಗ್ರಾಹಕ ಸೇವೆಗಳ ಸಚಿವರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2013 ರಿಂದ 2016 ರವರೆಗೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಖಾತೆ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಈವರೆಗೆ 6 ಬಾರಿ ಲೋಕಸಭಾ ಚುನಾವಣೆ ಸೇರಿದಂತೆ ಒಟ್ಟು 14 ಚುನಾವಣೆಗಳಲ್ಲಿ ಸ್ರ್ಪಧಿಸಿ 11 ಬಾರಿ ಜಯಗಳಿಸಿದ್ದಾರೆ.
|
eesanje/url_46_171_4.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ರಾಜ್ಯ ಪೊಲೀಸರು ಅಸಹಾಯಕರಾಗಿದ್ದಾರೆ, ನೇಹಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು : ಬೊಮ್ಮಾಯಿ
|
2 |
+
ಹುಬ್ಬಳ್ಳಿ,ಏ.23-ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚಾಗುತ್ತಿದ್ದು, ಪೊಲೀಸರು ಅಸಹಾಯಕರಾಗುತ್ತಿದ್ದಾರೆ. ಹೀಗಾಗಿ ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
|
3 |
+
ಇಂದು ಹನುಮ ಜಯಂತಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಅಶೋಕನಗರದ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೇಹಾ ತಂದೆ ನಿರಂಜನ ಹಿರೇಮಠ ಅವರು ರಾಜ್ಯ ಸರ್ಕಾರದ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದಿದ್ದಾರೆ.
|
4 |
+
ಹೀಗಾಗಿ ಪ್ರಕರಣ ಸಿಬಿಐಗೆ ಹಸ್ತಾಂತರ ಮಾಡಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲವೇ ಇಲ್ಲ. ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಸೆಂಟರ್ ಆಗಿವೆ. ರಾಜಕಾರಣಿಗಳು ಪೊಲೀಸರ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಇದರಿಂದ ಪೊಲೀಸರು ಅಸಹಾಯಕರಾಗುತ್ತಿದ್ದಾರೆ ಎಂದರು.
|
5 |
+
ಬಿಜೆಪಿಯವರಿಗೆ ಹಿಂದುಗಳ ಕೊಲೆಯಾಗದೆ ಖುಷಿ ಎಂಬ ಸಚಿವ ಸಂತೋಷ ಲಾಡ್ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ನೇಹಾ ಹಿರಮೇಠ ಅವರನ್ನು ಒಂದು ಜಾತಿಗೆ ಸಿಮೀತ, ಮಾಡಬೇಡಿ. ಕಾಂಗ್ರೆಸ್ ಪಾಲಿಕೆ ಸದಸ್ಯರಿಗೆ ರಕ್ಷಣೆ ಕೊಡಲು ಆಗಿಲ್ಲ. ಹಾಡ ಹಗಲೇ ಬೆಳೆದು ಬಾಳಬೇಕಾದ ಯುವತಿಯ ಕೊಲೆ ಆಗಿದೆ. ಕಾಂಗ್ರೆಸ್ ನವರು ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ ಎಂದು ಆರೋಪಿಸಿದರು.
|
6 |
+
ಕೆಪಿ ನಂಜುಡಿ ರಾಜೀನಾಮೆ ಕುರಿತು ಕೇಳಿದ ಪ್ರಶ್ನೆಗೆ ಅದು ಪರಿಣಾಮ ಬೀರುವುದಿಲ್ಲ ಅವರು ಕಾಂಗ್ರೆಸ್ ನಲ್ಲಿದ್ರು ಬಿಜೆಪಿಗೆ ಬಂದಿದ್ದರು. ಹೀಗಾಗಿ ರಾಜೀನಾಮೆ ಪರಿಣಾಮ ಬೀರುವುದಿಲ್ಲ ಎಂದು ಅವರು ಹೇಳಿದರು.
|
eesanje/url_46_171_5.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಬಹಿರಂಗ ಸವಾಲು
|
2 |
+
ಬೆಂಗಳೂರು, ಏ.23-ರಾಜ್ಯದಲ್ಲಿ ಭೀಕರ ಬರಗಾಲ ಇದೆ ಎಂದು ಬೊಬ್ಬೆ ಹಾಕುತ್ತಿರುವ ಕಾಂಗ್ರೆಸ್ ನಾಯಕರು ಈವರೆಗೂ ಎಷ್ಟು ಪರಿಹಾರವನ್ನು ಬಿಡುಗಡೆ ಮಾಡಿದ್ದಾರೆ ಎಂಬುದನ್ನು ಬಹಿರಂಗಪಡಿಸಬೇಕೆಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸರ್ಕಾರಕ್ಕೆ ಬಹಿರಂಗ ಸವಾಲು ಹಾಕಿದ್ದಾರೆ.
|
3 |
+
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 223 ತಾಲ್ಲೂಕುಗಲ್ಲಿ ಬರಗಾಲವಿದೆ ಎಂದು ಮುಖ್ಯಮಂತ್ರಿ ಸೇರಿದಂತೆ ಇಡೀ ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಎಸ್ಡಿಆರ್ಎಫ್ ಅಡಿ ನೀವು ಎಷ್ಟು ಹಣವನ್ನು ಬಿಡುಗಡೆ ಮಾಡಿದ್ದೀರಿ? ಜನತೆಯ ಮುಂದಿಡಿ ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದ ಅನುದಾನವನ್ನು ಎಸ್ಡಿಆರ್ಎಫ್ನಡಿ ಜನಕ್ಕೆ ಕೊಟ್ಟು ಇದನ್ನು ರಾಜ್ಯ ಸರ್ಕಾರವೇ ಕೊಟ್ಟಿದ್ದು ಎಂದು ಜನಗಳಿಗೆ ಸುಳ್ಳು ಹೇಳುತ್ತಿದ್ದಾರೆ.
|
4 |
+
ಸರ್ಕಾರದ ಬೊಕ್ಕಸದಿಂದ ಇದುವರೆಗೂ ನೀವು ಒಂದೇ ಒಂದೂ ನಯಾಪೈಸೆ ಯನ್ನೂ ಬಿಡುಗಡೆ ಮಾಡಿಲ್ಲ. ಯಾವ ಮುಖ ಇಟ್ಟುಕೊಂಡು ಕೇಂದ್ರದ ಬಗ್ಗೆ ಮಾತನಾಡುತ್ತೀರಿ ಎಂದು ಅಶೋಕ್ ಪ್ರಶ್ನಿಸಿದರು.
|
5 |
+
ಎಸ್ಡಿಆರ್ಎಫ್ನಡಿ ಕೇಂದ್ರ ಸರ್ಕಾರ 2 ಸಾವಿರ ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕ ಸರ್ಕಾರದ ಶೇ.25ರಷ್ಟು ಮಾತ್ರ. ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕ್ರಮಗಳಾದರೂ ಏನು. ಪ್ರತಿದಿನ ಕೇಂದ್ರ ಸರ್ಕಾರ ಮತ್ತು ನರೇಂದ್ರಮೋದಿಯವರನ್ನು ಟೀಕಿಸಿ ಜಾಹೀರಾತು ನೀಡುವುದೇ ಇವರ ಉದ್ಯೋಗವಾಗಿದೆ ಎಂದು ಆರೋಪಿಸಿದರು.
|
6 |
+
ಕಡೆಪಕ್ಷ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯಲ್ಲಿ ಇಲ್ಲವೇ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಕರ್ನಾಟಕದ ವಿಷಯದ ಬಗ್ಗೆ ಎಂದಾದರೂ ಮಾತನಾಡಿದ್ದಾರಾ? ಇಲ್ಲಿ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂದು ಬಾಯಿ ಬಾಯಿ ಬಡಿದುಕೊಳುತ್ತಿದ್ದಾರೆ. ಯಾವ ಯೋಗ್ಯತೆ ಇಟ್ಟುಕೊಂಡು ನೀವು ಕರ್ನಾಟಕದಲ್ಲಿ ಮತ ಕೇಳುತ್ತೀರಿ ಎಂದು ಅಶೋಕ್ ಪ್ರಶ್ನಿಸಿದರು.
|
7 |
+
ಸರ್ಕಾರದ ಆದೇಶ ಪಾಲನೆ ಮಾಡಬೇಕಾದ ಅಕಾರಿಗಳು ಸರ್ಕಾರದ ಕೈಗೊಂಬೆ ಆಗಿದ್ದಾರೆ. ಡಿ.ಕೆ ಶಿವಕುಮಾರ್ಗೆ ಹೇಳೋರಿಲ್ಲ ಕೇಳೋರಿಲ್ಲ. ವಿಧಾನಸೌಧದ ಪಾರ್ಟಿ ಸೇರ್ಪಡೆ ಕಾರ್ಯಕ್ರಮ ಮಾಡಿದರು. ಇದು ಅಪರಾಧ, ಕ್ರಮಕೈಗೊಳ್ತೀನಿ ಎಂದರು ಇದುವರೆಗೂ ಕ್ರಮಕೈಗೊಂಡಿಲ್ಲ. ಚುನಾವಣೆ ವೇಳೆ ವಿಧಾನಸೌಧದ ದುರ್ಬಳಕೆಯಾಗಿದೆ. ಮುಖ್ಯ ಕಾರ್ಯದರ್ಶಿಯವರು ಪ್ರತಿಭಟನೆಗೆ ಅವಕಾಶ ಕೊಟ್ಟಿದ್ದು ಏಕೆ ಎಂದು ಆಕ್ಷೇಪಿಸಿದರು.
|
8 |
+
ಇವರಮೇಲೆ ಕ್ರಮಕೈಗೊಳ್ಳುವಂತೆ ಚುನಾವಣೆ ಆಯೋಗಕ್ಕೆ ದೂರು ನೀಡುತ್ತೇವೆ. ಇಂದು ಮುಖ್ಯ ಕಾರ್ಯದರ್ಶಿಗಳು ಶಿಷ್ಟಾಚಾರ ಪಾಲನೆ ಮಾಡಿಲ್ಲ. ಡಿಕೆಶಿ ಯಾರನ್ನೂ ಹೇಳಲ್ಲ ಕೇಳಲ್ಲ, ಅವರದ್ದೇ ಒಂದು ಗೂಂಡಾ ರಾಜ್ಯ ಮಾಡಿಕೊಂಡಿದ್ದಾರೆ ಎಂದು ಅಶೋಕ್ ವಾಗ್ದಾಳಿ ನಡೆಸಿದರು.
|
9 |
+
ಬರ�� ಪರಿಹಾರ ಅನುದಾನ ನೀಡುವುದಕ್ಕೆ ಚುನಾವಣೆ ನೀತಿಸಂಹಿತೆ ಇದೆ. ನ್ಯಾಯಾಲಯ ಕೂಡ ಹೇಳಿದೆ. ನಿರ್ಮಲಾ ಸೀತಾರಾಮನ್ ಕೂಡ ಹೇಳಿದ್ದಾರೆ. ಚುನಾವಣಾ ಆಯೋಗ ಸೂಚಿಸಿದ ಕೂಡಲೇ ಬಿಡುಗಡೆ ಮಾಡುತ್ತೇವೆ ಎಂದು ಅಟಾರ್ನಿ ಜನರಲ್ ಕೂಡ ಹೇಳಿದ್ದಾರೆ. ಕೋರ್ಟ್ ಗಮನಕ್ಕೆ ತಂದಿದ್ದಾರೆ. ನಮ್ಮ ಸಾಲಿಸಿಟರಲ್ ಜನರಲ್ ನ್ಯಾಯಾಲಯದ ಗಮನಕ್ಕೆ ತಂದಿದ್ದು, ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಮುಂದಿನ ಸೋಮವಾರಕ್ಕೆ ಕೇಸ್ ಮುಂದೂಡಿದ್ದಾರೆ. ಅದಕ್ಕೆ ಅವರ ವಕೀಲ ಕಪಿಲ್ ಸಿಬಲ್ ಒಪ್ಪಿದ್ದಾರೆ. ಇದನ್ನ ಕಾಂಗ್ರೆಸ್ ಜಯ ಆಗಿದೆ ಎಂದು ಓಡಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
|
10 |
+
ಹಣ ಬಿಡುಗಡೆ ಮಾಡಬೇಕೆಂದು ಚುನಾವಣಾ ಆಯೋಗಕ್ಕೆ ಅಪೀಲು ಮಾಡಿರುವುದು ನಾವು. ಏನು ಜಯ ಆಯ್ತು ನಿಮಗೆ? ನೀವಿಟ್ಟಿರುವ ಲಾಯರ್ ಏನು ವಾದ ಮಾಡಿದ್ದಾರೆ? ಕೇಂದ್ರದ ಮನವಿಗೆ ಸರ್ವ ಸಮ್ಮತಿ ಇದೆ ಎಂದು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.
|
eesanje/url_46_171_6.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಪೊಲೀಸರ ತಯಾರಿ ಹೇಗಿದೆ..?
|
2 |
+
ಬೆಂಗಳೂರು, ಏ.23-ರಾಜ್ಯದ ಮೊದಲ ಹಂತದಲ್ಲಿ ಏ.26ರಂದು ಮತದಾನ ನಡೆಯಲಿದ್ದು, ನಗರದ ಮತದಾರರು ನಿರ್ಭೀತಿಯಿಂದ ಮತದಾನ ಮಾಡಲು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ ಅವರು ತಿಳಿಸಿದ್ದಾರೆ.
|
3 |
+
ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಗೆ ಒಳಪಡುವ ಐದು ಲೋಕಸಭಾ ಕ್ಷೇತ್ರಗಳ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸುಗಮವಾಗಿ ಮತ ಚಲಾವಣೆ ಮಾಡಲು ಅನುಕೂಲವಾಗುವಂತೆ ಭಾರತದ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.
|
4 |
+
ನಗರ ಪೊಲೀಸ್ ಘಟಕದಿಂದ ಚುನಾವಣಾ ಕರ್ತವ್ಯಗಳಿಗೆ ಮೂವರು ಹೆಚ್ಚುವರಿ ಪೊಲೀಸ್ ಆಯುಕ್ತರು, 24 ಡಿಸಿಪಿಗಳು, 52 ಎಸಿಪಿಗಳು, 118 ಇನ್ಸ್ಪೆಕ್ಟರ್ಗಳು, 687 ಪಿಎಸ್ಐ/ಎಎಸ್ಐ, 8511 ಎಚ್ಸಿ/ಪಿಸಿ ಸೇರಿದಂತೆ9,397 ಅಧಿಕಾರಿ ಸಿಬ್ಬಂದಿಗಳು, 3,919 ಗೃಹ ರಕ್ಷಕ ಸಿಬ್ಬಂದಿ, 54 ಸಶಸ್ತ್ರ ತುಕಡಿಗಳು ಹಾಗೂ 11 ಕೇಂದ್ರೀಯ ಪೊಲೀಸ್ ಕಂಪನಿಗಳನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದರು.
|
5 |
+
ನಗರ ಪೊಲೀಸರ ಜೊತೆಗೆ ಸಿಎಆರ್ಪಿಎಫ್ನ 11 ಕಂಪನಿ, ಕೆಎಸ್ಆರ್ಪಿಯ 14, ಸಿಎಆರ್ನ 40 ಪ್ಲಟೂನ್ಸ್ಗಳನ್ನು ನೀಯೋಜಿಸಲಾಗಿದೆ. ಐದು ಕ್ಷೇತ್ರಗಳ ವ್ಯಾಪ್ತಿಯಲ್ಲಿ 2564 ಮತಗಟ್ಟೆ ಕೇಂದ್ರಗಳಿದ್ದು, 8088 ಮತಗಟ್ಟೆಗಳಿದ್ದು, ಇದರಲ್ಲಿ 1737 ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ.
|
6 |
+
ನಗರದ 8 ವಿಭಾಗಗಳ ವ್ಯಾಪ್ತಿಯಲ್ಲಿ ಕೇಂದ್ರೀಯ ಭದ್ರತಾ ಪಡೆಗಳೊಂದಿಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಪ್ಲಾಗ್ ಮಾರ್ಚ್ಗಳನ್ನು ಕೈಗೊಳ್ಳಲಾಗಿದೆ. 103 ಚೆಕ್ ಪೋಸ್ಟ್ ಅಳವಡಿಸಿದ್ದು, 91 ಫ್ಲೈಯಿಂಗ್ ಸ್ಕ್ವಾಡ್ಗಳು ಕಾರ್ಯಾಚರಣೆಯಲ್ಲಿರುತ್ತವೆ. ರೌಡಿ ಪಟ್ಟಿಯಲ್ಲಿರುವ ಆಸಾಮಿಗಳು/ಕ್ರಿಮಿನಲ್ ಹಿನ್ನಲೆಯುಳ್ಳ 5117 ಜನರಿಂದ ಭದ್ರತಾ ಕಾಯ್ದೆಯಡಿ ಶಾಂತಿಭಂಗ ಉಂಟು ಮಾಡದಂತೆ ಮುಚ್ಚಳಿಕೆ ಪಡೆಯಲಾಗಿದೆ ಎಂದು ಅವರು ಹೇಳಿದರು.
|
7 |
+
ನಗರದ 146 ಕಡೆಗಳಲ್ಲಿ ಸಶಸ್ತ್ರ ತುಕಡಿಗಳೊಂದಿಗೆ ಪೊಲೀಸ್ ಪಥಸಂಚಲನ ನಡೆಸಲಾಗಿದೆ. 5533 ಪರಾವನಗಿ ಪಡೆದ ಶಸ್ತ್ರಾಸ್ತ್ರಗಳನ್ನು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಜಮೆ ಮಾಡಲಾಗಿದ್ದು , ವಿಶೇಷ ಕಾರ್ಯಾಚರಣೆ ಕೈಗೊಂಡು 1444 ವಾರೆಂಟ್ಗಳನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.
|
8 |
+
ನಾಳೆ ಸಂಜೆ 6 ಗಂಟೆಯಿಂದ ಏ.26ರ ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಮುಂಚಿತವಾಗಿ ಅಂದರೆ ನಾಳೆ ಸಂಜೆ 6 ಗಂಟೆಯ ನಂತರ ಮತದಾರರು ಅಲ್ಲದವರು ಕ್ಷೇತ್ರ ಬಿಟ್ಟು ಅವರ ಮಾತೃಪಕ್ಷಕ್ಕೆ ತೆರಳಬೇಕು. ಯಾವುದೇ ರೀತಿಯ ಗುಂಪುಗಾರಿಕೆ ಮಾಡುವುದನ್ನು ನಿಷೇಧಿಸಲಾಗಿದೆ.
|
9 |
+
ಸಾರ್ವಜನಿಕರು ಪೊಲೀಸ್ ಸಹಾಯಕ್ಕಾಗಿ ಚುನಾವಣಾ ಅಕ್ರಮಗಳ ಮಾಹಿತಿ ನೀಡಲು ಪೊಲೀಸ್ ದೂರವಾಣಿ 112ಕ್ಕೆ ಸಂಪರ್ಕಿಸಲು ಆಯುಕ್ತರು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.
|
eesanje/url_46_171_7.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಏ.28ಕ್ಕೆ ಮತ್ತೆ ರಾಜ್ಯಕ್ಕೆ ಮೋದಿ ಆಗಮನ, ಉತ್ತರ ಕರ್ನಾಟಕದಲ್ಲಿ ಮತಬೇಟೆ
|
2 |
+
ಬೆಂಗಳೂರು, ಏ.23-ಲೋಕಸಭಾ ಚುನಾವಣೆಯ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ಮತದಾನಕ್ಕೆ ಮೂರೇ ದಿನ ಬಾಕಿ ಇರುವಾಗಲೇ ಪ್ರಧಾನಿ ನರೇಂದ್ರಮೋದಿ ಅವರು ಏ.28ರಂದು ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಮೇ7ರಂದು ರಾಜ್ಯದ 17 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಬಹುತೇಕ ಮಧ್ಯ ಕರ್ನಾಟಕ, ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ.
|
3 |
+
ಬಹುತೇಕ ಲಿಂಗಾಯಿತರ ಪ್ರಾಬಲ್ಯ ಹೊಂದಿರುವ ಈ ಕ್ಷೇತ್ರದಲ್ಲಿ ಬಿಜೆಪಿ 14 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಇಟ್ಟುಕೊಂಡಿದೆ. ಹೀಗಾಗಿ ರಾಜ್ಯಕ್ಕೆ ಮೋದಿ ಅವರಿಂದ ಹೆಚ್ಚು ಸಾರ್ವಜನಿಕ ಸಭೆಗಳನ್ನು ನಡೆಸಲು ಉದ್ದೇಶಿಸಿದೆ.
|
4 |
+
2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಈ ಭಾಗದ ಎಲ್ಲ ಸ್ಥಾನಗಳನ್ನು ಗೆದ್ದು ಬೀಗಿತ್ತು. ಈ ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಮೋದಿ ಅವರಿಂದಲೇ ಬೃಹತ್ ಸಮಾವೇಶಗಳನ್ನು ನಡೆಸಲು ಉದ್ದೇಶಿಸಿದೆ.
|
5 |
+
ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ಪ್ರಧಾನಿ ಮೋದಿ ಮೊದಲ ಬಾರಿಗೆ ಉತ್ತರ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಎಪ್ರಿಲ್ 28 ಹಾಗೂ 29ರಂದು ಆರು ಕಡೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಗಾ ಕ್ಯಾಂಪೇನ್ ಮಾಡಲಿದ್ದಾರೆ. ಎರಡು ದಿನ, 12 ಕ್ಷೇತ್ರಗಳ ಟಾರ್ಗೆಟ್ ಮಾಡಿ ಆರು ಕಡೆ ಬೃಹತ್ ಸಮಾವೇಶ ನಡೆಸಲಿದ್ದಾರೆ.
|
6 |
+
ಮೋದಿ ಕಾರ್ಯಕ್ರಮದ ವೇಳಾಪಟ್ಟಿ:ಏ.28ರಂದು ದಾವಣಗೆರೆ, ಕಾರವಾರ, ಬೆಳಗಾವಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಅಂದು ಪ್ರಧಾನಿ ಮೋದಿ ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ವಿಟಿಯು ಗೆಸ್ಟ್ ಹೌಸ್, ಐಟಿಸಿ ವೆಲ್ಕಮ್, ಮೇರಿಯಟ್, ಯುಕೆ-27 ಯಾವುದಾದರು ಒಂದು ಹೊಟೇಲ್ನಲ್ಲಿ ತಂಗಲಿದ್ದಾರೆ. ಎಸ್ಪಿಜಿ ಪರಿಶೀಲನೆ ಬಳಿಕ ಹೊಟೇಲ್ ನಿಗದಿಯಾಗಲಿದೆ. ಎಪ್ರಿಲ್ 29 ರಂದು ವಿಜಯಪುರ, ಕೊಪ್ಪಳ ಹಾಗೂ ಕಲಬುರಗಿ ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ.
|
7 |
+
ದಾವಣಗೆರೆಯಿಂದ ಆರಂಭವಾಗುವ ಮೋದಿ ದಂಡಯಾತ್ರೆ ಬೆಳಗಾವಿ, ಕಲಬುರ್ಗಿ ಸೇರಿದಂತೆ ಆರು ಜಿಲ್ಲೆಗಳಲ್ಲಿ ನಡೆಯಲಿದೆ. ಎರಡು ಲೋಕಸಭೆ ಕ್ಷೇತ್ರಕ್ಕೆ ಒಂದರಂತೆ 6 ಬೃಹತ್ ಸಮಾವೇಶ ನಡೆಸಲಿದ್ದಾರೆ.
|
8 |
+
ಬೃಹತ್ ಸಮಾವೇಶಗಳ ಮೂಲಕ ಕಿತ್ತೂರು ಕರ್ನಾಟಕದ ಆರು ಕ್ಷೇತ್ರಗಳನ್ನು ಮರಳಿ ಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ಕಲ್ಯಾಣ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದಲ್ಲಿ ಎರಡು ದಿನಗಳ ಕಾಲ 12 ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿ ಭರ್ಜರಿ ಮತಬೇಟೆ ನಡೆಸಲಿದ್ದಾರೆ.
|
eesanje/url_46_171_8.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ರಾಜ್ಯದ ಮೊದಲ ಹಂತದ ಚುನಾವಣೆಯಲ್ಲಿ ಕರ್ತವ್ಯನಿರತ ಸಿಬ್ಬಂದಿಗಳಿಂದ ಶೇ.89.95 ರಷ್ಟು ಮತದಾನ
|
2 |
+
ಬೆಂಗಳೂರು,ಏ.23-ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ನಡೆದ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗಳ ಮತದಾನದಲ್ಲಿ ಶೇ.89.95 ರಷ್ಟು ಮತದಾರರು ಮತ ಚಲಾಯಿಸಿದ್ದಾರೆ.
|
3 |
+
ಏ.26 ರಂದು ಮತದಾನ ನಡೆಯುವ ಕ್ಷೇತ್ರಗಳಿಗೆ ಸಂಬಂಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗಳಿಗೆ ಏ.19 ರಿಂದ ಏ.21 ರವರೆಗೆ ಮತದಾನ ಮಾಡಲು ಅಂಚೆ ಮತದಾನ ಕೇಂದ್ರಗಳನ್ನು ಆಯಾ ಕ್ಷೇತ್ರ ವ್ಯಾಪ್ತಿಯಲ್ಲಿ ತೆರೆಯಲಾಗಿತ್ತು.
|
4 |
+
ಈ ಅವಧಿಯಲ್ಲಿ 5,90,355 ಮತದಾರರಲ್ಲಿ 53,104 ಮತದಾರರು ಅಂಚೆ ಮತದಾನ ಕೇಂದ್ರಗಳಲ್ಲಿ ತಮ್ಮ ಮತಗಳನ್ನು ಚಲಾಯಿಸಿದ್ದಾರೆ ಎಂದು ರಾಜ್ಯ ಮುಖ್ಯಚುನಾವಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
|
eesanje/url_46_171_9.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬರ ನಿರ್ವಹಣೆಗೆ ಹಣ ನೀಡದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
|
2 |
+
ಬೆಂಗಳೂರು,ಏ.23-ಬರ ನಿರ್ವಹಣೆಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಆರ್ಥಿಕ ನೆರವು ನೀಡಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ವತಿಯಿಂದ ವಿಧಾನ ಸೌಧದ ಬಳಿಯ ಮಹಾತ್ಮಗಾಂಧಿ ಪ್ರತಿಮೆ ಎದುರು ಇಂದು ಪ್ರತಿಭಟನೆ ನಡೆಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ಕೃಷ್ಣ ಭೈರೇಗೌಡ, ಭೈರತಿ ಸುರೇಶ್, ಶಾಸಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
|
3 |
+
ಈ ವೇಳೆ ರಣದೀಪ್ ಸಿಂಗ್ ಸುರ್ಜೇವಾಲ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಬರ ನಿರ್ವಹಣೆಗೆ ಹಣ ನೀಡದೇ ಕರ್ನಾಟಕದ ಮಣ್ಣಿನ ಮೇಲೆ ಕಾಲಿಡುವ ನೈತಿಕತೆ ಹೊಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
|
4 |
+
ರಾಜ್ಯದ ಜನ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಕ್ಕಾಗಿ ಪ್ರಧಾನಿ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ರಾಜ್ಯಕ್ಕೆ ಆರ್ಥಿಕ ನೆರವು ನೀಡದೇ ವಂಚನೆ ಮಾಡುತ್ತಿದ್ದಾರೆ. ಭಾರತೀಯ ಚೊಂಬು ಪಾರ್ಟಿ ಯಾವ ಮುಖ ಇಟ್ಟುಕೊಂಡು ಕನ್ನಡಿಗರ ಬಳಿ ಮತ ಕೇಳುತ್ತಿದೆ ಎಂದು ಪ್ರಶ್ನಿಸಿದರು.
|
5 |
+
ಇದೇ ವೇಳೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ, ಕೇಂದ್ರ ಸರ್ಕಾರ ಬರನಿರ್ವಹಣೆಗೆ ಹಣ ಬಿಡುಗಡೆ ಮಾಡಿಲ್ಲ. ಹೀಗಾಗಿ ನಾವು ಸುಪ್ರೀಂಕೋರ್ಟ್ನ ಮೊರೆ ಹೋಗಬೇಕಾಯಿತು. ನಿನ್ನೆಯ ವಿಚಾರಣೆ ವೇಳೆ ಹಣ ಬಿಡುಗಡೆ ಮಾಡುವುದಾಗಿ ಒಪ್ಪಿಕೊಂಡಿದ್ದಾರೆ. ಆದರೆ ಇನ್ನೂ ಒಂದು ರೂಪಾಯಿ ಕೂಡಾ ನೀಡಿಲ್ಲ. ಆದರೆ ಬಿಜೆಪಿಯವರು ಸಾಮಾಜಿಕ ಜಾಲತಾಣದಲ್ಲಿ ನಾಚಿಕೆ, ಮಾನ ಮರ್ಯಾದೆ ಇಲ್ಲದೆ ರಾಜ್ಯದ ಬರ ನಿರ್ವಹಣೆಗೆ ಹಣ ನೀಡಿದ ಪ್ರಧಾನಿಯವರಿಗೆ ಧನ್ಯವಾದ ಎಂದು ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.
|
6 |
+
ಸುಪ್ರೀಂಕೋರ್ಟ್ನ ನಿರ್ದೇಶನದ ಮೇರೆಗೆ ಬಿಡುಗಡೆಯಾಗುವ ಹಣವನ್ನು ರಾಜ್ಯಸರ್ಕಾರ ಬೇರೆ ಉದ್ದೇಶಗಳಿಗೆ ಬಳಕೆ ಮಾಡುವುದಿಲ್ಲ. ನೇರವಾಗಿ ರೈತರ ಖಾತೆಗಳಿಗೆ ಬೆಳೆನಷ್ಟ ಪರಿಹಾರವಾಗಿ ಸಂದಾಯ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.
|
7 |
+
ಸಂಕಷ್ಟ ಸಮಯದಲ್ಲಿ ಹಣ ನೀಡದೇ ಬರ ಮುಗಿದ ಮೇಲೆ ಪರಿಹಾರ ನೀಡಿದರೆ ಪ್ರಯೋಜನವಿಲ್ಲ. ಇದು ರೈತ ಸಮುದಾಯವನ್ನು ಅಪಮಾನ ಮಾಡಿ ಅಪಹಾಸ್ಯ ಮಾಡಿದಂತಾಗುತ್ತದೆ. ಬರ ನಿರ್ವಹಣೆಗೆ ಹಕ್ಕಿನ ಪಾಲು ಕೇಳಿದ್ದಕ್ಕಾಗಿ ರಾಜ್ಯಸರ್ಕಾರದ ಮೇಲೆ ಬಿಜೆಪಿಯವರು ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಸುಳ್ಳು ಮಾಹಿತಿಗಳ ಮೂಲಕ ಜನರನ್ನು ದಿಕ್ಕು ತಪ್ಪಿಸಿದ್ದಾರೆ ಎಂದು ಆರೋಪಿಸಿದರು.
|
8 |
+
ನಾವು ಏನು ಮೋಸ ಮಾಡಿದ್ದೇವೆ, ಅವರು ನಮ್ಮ ಮೇಲೆ ಏಕೆ ಇಷ್ಟು ದ್ವೇಷ ಸಾಧಿಸುತ್ತಿದ್ದಾರೆ ಎಂದು ಪ್ರಶ್ನಿಸಿದ ಕೃಷ್ಣಭೈರೇಗೌಡ, ಆರ್ಥಿಕ ನೆರವಿಗಾಗಿ ನ್ಯಾಯಯುತ ಹೋರಾಟ ನಡೆಸುತ್ತೇವೆ. ಈ ವಿಷಯದಲ್ಲಿ ನಮಗೆ ರಾಜಕ��ಯ ಅಥವಾ ಪ್ರತಿಷ್ಠೆ ಮುಖ್ಯವಲ್ಲ ಎಂದು ಹೇಳಿದರು.
|
9 |
+
ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ದಿನಬಳಕೆಯ ವಸ್ತುಗಳ ಬೆಲೆ 2-3 ಪಟ್ಟು ಹೆಚ್ಚಾಗಿದೆ. ಬಡ ಹಾಗೂ ಮಧ್ಯಮ ವರ್ಗದದವರ ದುಡಿಮೆ ಶ್ರೀಮಂತರ ಪಾಲಾಗುತ್ತಿದೆ. ನಿರುದ್ಯೋಗದ ಪ್ರಮಾಣ 1947ರ ನಂತರದ ಅತ್ಯಧಿಕ ದಾಖಲೆ ಪ್ರಮಾಣದಲ್ಲಿ ಹೆಚ್ಚಾಗಿದೆ.
|
10 |
+
ಈ ಎಲ್ಲಾ ವಿಚಾರಗಳನ್ನು ಮರೆಮಾಚಲು ಬಿಜೆಪಿಯವರು ಜನರ ಮನಸ್ಸಿನಲ್ಲಿ ಕೋಮು ಭಾವನೆಗಳನ್ನು ಬಿತ್ತುತ್ತಿದ್ದಾರೆ. ಬೆಲೆ ಏರಿಕೆ ಕೇವಲ ಮುಸ್ಲಿಮರಿಗಷ್ಟೇ ಅಲ್ಲ, ಶೇ.85 ರಷ್ಟು ಜನಸಂಖ್ಯೆಯನ್ನು ಹೊಂದಿರುವ ಹಿಂದೂಗಳನ್ನೂ ಕಾಡುತ್ತಿದೆ ಎಂದು ವಿವರಿಸಿದರು. ಈ ವೇಳೆ ಬಿತ್ತಿಪತ್ರಗಳನ್ನು ಹಿಡಿದ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿ ಮತ್ತು ಕೇಂದ್ರ ಗೃಹಸಚಿವ ಗೋ ಬ್ಯಾಕ್ ಎಂದು ಘೋಷಣೆ ಕೂಗಿದರು.
|
11 |
+
ರಣದೀಪ್ ಸಿಂಗ್ ಸುರ್ಜೇವಾಲ ಕನ್ನಡದಲ್ಲೇ ನ್ಯಾಯ ಕೊಡಿ ಎಂದು ಘೋಷಣೆ ಕೂಗುವ ಮೂಲಕ ಗಮನ ಸೆಳೆದರು. ಪ್ರಧಾನಿ ನರೇಂದ್ರ ಮೋದಿಯವರಿಗೆ ಚೊಂಬು ತೋರಿಸಿದ ದೇವೇಗೌಡರಿಗೆ ಜಯವಾಗಲಿ ಎಂದು ಸಚಿವ ಕೃಷ್ಣ ಭೈರೇಗೌಡ ಘೋಷಣೆ ಕೂಗಿದರು.
|
eesanje/url_46_172_1.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಏ.26 ರಂದು ರಾಜ್ಯದಲ್ಲಿ ಮೊದಲ ಹಂತದ ಮತದಾನ, ನಾಳೆ ಬಹಿರಂಗ ಪ್ರಚಾರಕ್ಕೆ ತೆರೆ
|
2 |
+
ಬೆಂಗಳೂರು,ಏ.23-ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಏ.26 ರಂದು ಮತದಾನ ನಡೆಯಲಿದ್ದು, ನಾಳೆ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳಲ್ಲಿ ನಾಳೆ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.
|
3 |
+
ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿದ್ದಂತೆ ಮತದಾರರಲ್ಲದ ಚುನಾವಣಾ ಪ್ರಚಾರಕ್ಕೆ ಆಗಮಿಸಿರುವ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಮುಖಂಡರು ತೆರಳಬೇಕಿದೆ. ಈ ಬಗ್ಗೆ ಈಗಾಗಲೇ ಚುನಾವಣಾ ಆಯೋಗ ಸಂಬಂಧಪಟ್ಟ ಚುನಾವಣಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದು, ವಸತಿ ಗೃಹಗಳು, ಸಮುದಾಯ ಭವನಗಳು ಸೇರಿದಂತೆ ತಪಾಸಣೆ ನಡೆಸಲು ಸೂಚಿಸಿದೆ.
|
4 |
+
ಚೆಕ್ ಪೋಸ್ಟ್ ಗಳಲ್ಲಿ ಕೂಡ ತಪಾಸಣೆ ನಡೆಸಿ ಮತದಾರರಲ್ಲದವರನ್ನು ಪತ್ತೆಹಚ್ಚಿ ಹೊರಗೆ ಕಳುಹಿಸಲು ನಿರ್ದೇಶನ ನೀಡಿದೆ.ಈ 14 ಕ್ಷೇತ್ರಗಳಲ್ಲಿ ಒಟ್ಟು 247 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ 14 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದರೆ, ಬಿಜೆಪಿ 12 ಹಾಗೂ ಜೆಡಿಎಸ್ 3 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿವೆ. 226 ಪುರುಷ ಹಾಗೂ 21 ಮಹಿಳಾ ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ.
|
5 |
+
ಹೀಗಾಗಿ ರಾಜಕೀಯ ಪಕ್ಷಗಳ ನಾಯಕರು, ಅಭ್ಯರ್ಥಿಗಳು, ಮುಖಂಡರು, ಕಾರ್ಯಕರ್ತರು ಬೇಸಿಗೆ ಬಿರುಬಿಸಿಲನ್ನು ಲೆಕ್ಕಿಸದೆ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.ಪ್ರಮುಖ ರಾಜಕೀಯ ಪಕ್ಷಗಳ ನಾಯಕರ ನಡುವೆ ವಾಗ್ವಾದ, ಆರೋಪ, ಪ್ರತ್ಯಾರೋಪ ತಾರಕಕ್ಕೇರಿದೆ. ಪ್ರಚಾರದ ಅಬ್ಬರ ಮುಗಿಲು ಮುಟ್ಟಿದೆ.
|
6 |
+
ಬಹಿರಂಗ ಪ್ರಚಾರಕ್ಕೆ ಇನ್ನೊಂದು ದಿನ ಮಾತ್ರ ಬಾಕಿ ಉಳಿದಿರುವುದರಿಂದ ರೋಡ್ ಶೋ, ಬಹಿರಂಗ ಸಮಾವೇಶಗಳ ಮೂಲಕ ಪ್ರಚಾರದ ಕಾವು ರಂಗೇರುವಂತಾಗಿದೆ. ಇದಲ್ಲದೆ, ಪಕ್ಷದ ಕಾರ್ಯಕರ್ತರು ಅಭ್ಯರ್ಥಿಗಳ ಹಿತೈಷಿಗಳು ಮನೆಮನೆಗೆ ತೆರಳಿ ಮತದಾರರನ್ನು ಓಲೈಸುವ ಪ್ರಯತ್ನ ನಡೆಸುತ್ತಿದ್ದಾರೆ.
|
7 |
+
ಬಹಿರಂಗ ಪ್ರಚಾರದ ಜೊತೆಗೆ ನಾನಾ ರೀತಿಯ ತಂತ್ರ, ಕಾರ್ಯತಂತ್ರಗಳ ಮೂಲಕ ಮತದಾರರನ್ನು ಆಕರ್ಷಿಸಲು ಅಭ್ಯರ್ಥಿಗಳು ಹರಸಾಹಸ ಪಡುತ್ತಿದ್ದಾರೆ. ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಜೊತೆಗೆ ಪಕ್ಷೇತರರು ಕೂಡ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಹೀಗಾಗಿ 14 ಕ್ಷೇತ್ರಗಳಲ್ಲೂ ಪ್ರಚಾರದ ಕಾವು ಏರತೊಡಗಿದೆ.
|
8 |
+
ಎಲ್ಲಿ ನೋಡಿದರೂ ಚುನಾವಣೆಯ ವಿಚಾರದಲ್ಲಿ ಚರ್ಚೆಯಾಗುತ್ತಿದೆ. ಜನರಲ್ಲೂ ಕೂಡ ಚುನಾವಣಾ ಜ್ವರ ಶುರುವಾಗಿದೆ. ಆಯಾ ಕ್ಷೇತ್ರದ ಜ್ವಲಂತ ವಿಚಾರಗಳಿಗಿಂತ ಮುಖ್ಯವಾಗಿ ರಾಷ್ಟ್ರೀಯ ವಿಚಾರಗಳು ಪ್ರಮುಖ ಚರ್ಚೆಗೆ ���ಂದಿವೆ.ಅಭ್ಯರ್ಥಿ ಹಾಗೂ ಪಕ್ಷಗಳ ಬಗ್ಗೆ ಬಿರುಸಿನ ಚರ್ಚೆಗಳು ನಡೆಯುತ್ತಿದ್ದು, ಮತದಾರರನ್ನು ಆಕರ್ಷಿಸಲು ಎಲ್ಲಾ ರೀತಿಯ ಪ್ರಯತ್ನಗಳು ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ನಿರಂತರವಾಗಿ ಮಾಡುತ್ತಿದ್ದಾರೆ.
|
eesanje/url_46_172_10.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪ್ರಧಾನಿ ಹೇಳಿಕೆ ಘನತೆಗೆ ತಕ್ಕುದಲ್ಲ : ಸಿಎಂ ಸಿದ್ದರಾಮಯ್ಯ
|
2 |
+
ಶಿವಮೊಗ್ಗ,ಏ.22-ಪ್ರಧಾನಮಂತ್ರಿಯಾಗಿದ್ದವರು ದೇಶದ ಪ್ರತಿಯೊಬ್ಬರನ್ನೂ ಸಮಾನವಾಗಿ ಕಾಣಬೇಕು. ಆದರೆ ನರೇಂದ್ರ ಮೋದಿಯವರು ಅತ್ಯಂತ ಕೆಳಮಟ್ಟಕ್ಕೆ ಇಳಿದು ಟೀಕೆ ಮಾಡಿರುವುದು ಹುದ್ದೆಯ ಘನತೆಗೆ ಧಕ್ಕೆ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಮಹಿಳೆಯರ ಮಂಗಳಸೂತ್ರವನ್ನು ಕಿತ್ತು ಮುಸ್ಲಿಂ ಮಹಿಳೆಯರಿಗೆ ಕೊಡಲಾಗುತ್ತಿದೆ ಎಂದು ಪ್ರಧಾನಿ ಹೇಳಿರುವುದು ಅನಾರೋಗ್ಯಕರವಾದ ಟೀಕೆ. ಪ್ರಧಾನಿ ಹುದ್ದೆಯಲ್ಲಿದ್ದವರಿಂದ ಇಂತಹ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ. ಪ್ರಧಾನಿಯಾದ ಅವರು ಎಲ್ಲರನ್ನೂ ಸಮಾನವಾಗಿ ಕಾಣಬೇಕಾಗಿದೆ ಎಂದರು.
|
4 |
+
ಕಾಂಗ್ರೆಸ್ ಪಕ್ಷ ಸಂಪತ್ತಿನ ಸಮಾನ ಹಂಚಿಕೆಗೆ ಆದ್ಯತೆ ನೀಡುತ್ತದೆ. ರಾಜಕೀಯ, ಶೈಕ್ಷಣಿಕ, ಆರ್ಥಿಕ ಹಾಗೂ ಸಂಪತ್ತಿನ ಅವಕಾಶಗಳು ಎಲ್ಲರಿಗೂ ಸಮಾನವಾಗಿ ದೊರೆಯಬೇಕು ಎಂಬುದು ಅಂಬೇಡ್ಕರ್ ಅವರ ಆಶಯ. ಕಾಂಗ್ರೆಸ್ ಪಕ್ಷ ಅದಕ್ಕೆ ಪೂರಕವಾಗಿ ನಡೆದುಕೊಳ್ಳುತ್ತಿದೆ.
|
5 |
+
ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಚೊಂಬು ನೀಡಿದೆ. 15 ಲಕ್ಷ ರೂ. ಹಣ, 2 ಕೋಟಿ ರೂ. ಉದ್ಯೋಗ, ರೈತರ ಆದಾಯ ದ್ವಿಗುಣ ಸೇರಿದಂತೆ ಕೊಟ್ಟ ಯಾವ ಭರವಸೆಗಳನ್ನೂ ಈಡೇರಿಸಿಲ್ಲ. ರಾಜ್ಯಕ್ಕೆ ತೆರಿಗೆ ಪಾಲಿನಲ್ಲೂ ವಂಚನೆ ಮಾಡಲಾಗಿದೆ. ಈ ಮೂಲಕ ಬಿಜೆಪಿ ಚಿಪ್ಪು ಮತ್ತು ಚೊಂಬು ಈ ಎರಡನ್ನೂ ನೀಡಿದೆ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.
|
6 |
+
ಕಾಂಗ್ರೆಸ್ ಡೇಂಜರ್ ಎಂದು ಬಿಜೆಪಿ ನೀಡಿರುವ ಜಾಹೀರಾತಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು ಮಹಿಳೆಯರಿಗೆ 2 ಸಾವಿರ ರೂ. ನೀಡುತ್ತಿದ್ದೇವೆ. ಉಚಿತ ಪ್ರಯಾಣದ ಅವಕಾಶ ಕಲ್ಪಿಸಿದ್ದೇವೆ, ಉಚಿತ ವಿದ್ಯುತ್ ಪೂರೈಕೆಯಾಗುತ್ತಿದೆ, ಹೆಚ್ಚುವರಿಯಾಗಿ 5 ಕೆ.ಜಿ. ಅಕ್ಕಿ ಕೊಡುತ್ತಿದ್ದೇವೆ. ಇದರಲ್ಲಿ ಯಾವುದು ಡೇಂಜರ್ ಎಂದು ಸಿದ್ದರಾಮಯ್ಯ ಮರುಪ್ರಶ್ನಿಸಿದರು.ವಿವಿಧತೆಯಲ್ಲಿ ಏಕತೆ ದೇಶಕ್ಕೆ ಒಳ್ಳೆಯದು. ಆದರೆ ಬಿಜೆಪಿ ಏಕತೆಗೆ ಡೇಂಜರ್ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
|
7 |
+
ಆದಾಯ ತೆರಿಗೆ, ಇಡಿ ಸೇರಿದಂತೆ ಯಾವುದೇ ದಾಳಿಗಳಿಗೆ ನಮ್ಮ ವಿರೋಧವಿಲ್ಲ. ಆದರೆ ಅದು ಕಾನೂನುಪ್ರಕಾರ ನಡೆಯಬೇಕು. ರಾಜಕೀಯ ದ್ವೇಷಕ್ಕೆ ಬಳಕೆಯಾಗಬಾರದು. ಬಿಜೆಪಿಯಲ್ಲಿ ಯಡಿಯೂರಪ್ಪ, ವಿಜಯೇಂದ್ರ ಅಕ್ರಮ ಸಂಪತ್ತು ಗಳಿಸಿಲ್ಲವೇ?, ಭ್ರಷ್ಟಾಚಾರ ಮಾಡಿಲ್ಲವೇ? ಅವರ ಮೇಲೆ ಏಕೆ ದಾಳಿಯಾಗಿಲ್ಲ? ಬಸವರಾಜ ಬೊಮ್ಮಾಯಿ, ಶೋಭಾ ಕರಂದ್ಲಾಜೆ, ಆರ್.ಅಶೋಕ್ ಮೇಲೆ ಎಂದಾದರೂ ದಾಳಿಗಳು ನಡೆದಿದೆಯೇ? ಎಂದು ಪ್ರಶ್ನಿಸಿದರು.
|
8 |
+
ಈಶ್ವರಪ್ಪ ಅವರಿಗೆ ಮೆದುಳು ಮತ್ತು ನಾಲಿಗೆ ಮೇಲೆ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಅವರ ಟೀಕೆಗೆ ಪ್ರತಿಕ್ರಿಯಿಸುವುದಿಲ್ಲ. ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ ಎಂದು ಯಡಿಯೂರಪ್ಪ ಹೇಳಿದರು. ಲೋಕಸಭಾ ಚುನಾವಣೆಯಲ್ಲೂ ಅದೇ ರೀತಿ ಮಾತನಾಡುತ್ತಿದ್ದಾರೆ. ಆದರೆ ಜನ ಅದಕ್ಕೆ ಮನ್ನಣೆ ನೀಡುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸ್ಥಾನ ಗೆಲ್ಲಿಸಿಕೊಡುತ್ತಾರೆ ಎಂದು ಹೇಳಿದರು.
|
9 |
+
ಧಾರವಾಡದಲ್ಲಿರುವ ಫಕೀರೇಶ್ವರ ಮಠ ಜಾತ್ಯತೀತ ನಿಲುವುಗಳಿಗೆ ಬದ್ಧವಾಗಿ ನಡೆದುಕೊಂಡು ಬಂದಿದೆ. ಅಲ್ಲಿನ ಮಠಾೀಧಿಶರ ದಿಂಗಾಲೇಶ್ವರ ಸ್ವಾಮಿಯವರೂ ಕೂಡ ಜಾತ್ಯತೀತರು. ಲೋಕಸಭಾ ಚುನಾವಣೆಯಲ್ಲಿ ಸ್ರ್ಪಧಿಸಲು ನಾಮಪತ್ರ ಸಲ್ಲಿಸಿದ್ದಾರೆ. ಅದನ್ನು ಹಿಂಪಡೆದು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವಂತೆ ನಾವು ಮನವಿ ಮಾಡಿಕೊಂಡಿದ್ದೇವೆ ಎಂದರು.
|
10 |
+
ವಿಪತ್ತು ನಿರ್ವಹಣಾ ಕಾಯ್ದೆಯ ಪ್ರಕಾರ, ರಾಜ್ಯಸರ್ಕಾರಗಳು ಪ್ರಸ್ತಾವನೆ ಸಲ್ಲಿಸಿದ ಒಂದು ತಿಂಗಳ ಒಳಗಾಗಿ ನೆರೆ ಮತ್ತು ಬರ ಪರಿಸ್ಥಿತಿಗೆ ಪರಿಹಾರ ಪಾವತಿಸಬೇಕು. ಆದರೆ ಕೇಂದ್ರ ಸರ್ಕಾರ 6 ತಿಂಗಳಾದರೂ ಕರ್ನಾಟಕಕ್ಕೆ ಬಿಡಿಗಾಸು ಕೊಟ್ಟಿಲ್ಲ. ನಾವು ಸತತ ಪ್ರಯತ್ನ ನಡೆಸಿದ್ದೇವೆ. ಆದರೂ ಮಲತಾಯಿ ಧೋರಣೆ ಮುಂದುವರೆದಿದೆ ಎಂದು ಮುಖ್ಯಮಂತ್ರಿ ಕಿಡಿಕಾರಿದ್ದಾರೆ.
|
11 |
+
ರಾಜ್ಯದ ಖಜಾನೆ ಖಾಲಿಯಾಗಿದೆ ಎಂಬ ಬಿಜೆಪಿಯವರ ಟೀಕೆ ಅಪ್ರಸ್ತುತ. ಯಾವ ಆಧಾರದ ಮೇಲೆ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ? ನಮ್ಮ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಿಂತಿಲ್ಲ. ಜೊತೆಗೆ ಪಂಚಖಾತ್ರಿ ಯೋಜನೆಗಳು ಯಶಸ್ವಿಯಾಗಿ ಜಾರಿಗೊಂಡಿವೆ ಎಂದು ಮುಖ್ಯಮಂತ್ರಿಗಳು ಸಮರ್ಥಿಸಿಕೊಂಡರು.
|
eesanje/url_46_172_11.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಬರ ನಿರ್ವಹಣೆ ಕಾನೂನು ಸಮರಕ್ಕೆ ಜಯ : ಸಚಿವ ಕೃಷ್ಣಭೈರೇಗೌಡ
|
2 |
+
ನವದೆಹಲಿ, ಏ.22-ಕರ್ನಾಟಕ ರಾಜ್ಯಕ್ಕೆ ಬರ ನಿರ್ವಹಣೆ ಅನುದಾನ ಪಾವತಿ ವಿಚಾರವಾಗಿ ಒಂದು ವಾರದೊಳಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ಇದಕ್ಕೆ ಸಂಬಂಧಪಟ್ಟಂತಹ ಪೂರ್ವಾನುಮತಿಗಳನ್ನು ಚುನಾವಣಾ ಆಯೋಗಗಳಿಂದ ಪಡೆಯಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದ್ದು, ರಾಜ್ಯಸರ್ಕಾರದ ಕಾನೂನು ಸಮರಕ್ಕೆ ಜಯ ಸಿಕ್ಕಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
|
3 |
+
ರಾಜ್ಯದಲ್ಲಿ 223ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರಪರಿಸ್ಥಿತಿ ಇದೆ. ಪರಿಹಾರ ನೀಡುವಂತೆ ಕಳೆದ ಸೆಪ್ಟೆಂಬರ್ನಲ್ಲಿ ರಾಜ್ಯಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿ 17,400 ಕೋಟಿ ರೂ.ಗಳ ಆರ್ಥಿಕ ನೆರವಿಗೆ ಮನವಿ ಮಾಡಿತ್ತು. ಕಂದಾಯ ಸಚಿವ ಕೃಷ್ಣಭೈರೇಗೌಡ, ಕೃಷಿ ಸಚಿವ ಚೆಲುವರಾಯಸ್ವಾಮಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹಲವು ಬಾರಿ ದೆಹಲಿಗೆ ತೆರಳಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಚಿವರುಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.
|
4 |
+
ಡಿಸೆಂಬರ್ನಲ್ಲಿ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ್ದರು. ಆದರೂ ರಾಜ್ಯಕ್ಕೆ ಯಾವ ಆರ್ಥಿಕ ನೆರವೂ ದೊರೆಯಲಿಲ್ಲ.
|
5 |
+
ಕೊನೆಗೆ ರಾಜ್ಯಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯದ ಎದುರು ಕೇಂದ್ರ ಸರ್ಕಾರ ಹೇಳಿಕೆ ನೀಡಿದ್ದು, ಒಂದು ವಾರದೊಳಗಾಗಿ ಬರ ನಿರ್ವಹಣೆಯ ಅನುದಾನದ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದೆ.
|
6 |
+
ಈ ಬಗ್ಗೆ ಮಾಹಿತಿ ನೀಡಿರುವ ಕಂದಾಯ ಸಚಿವರು, ದೇಶದ ಇತಿಹಾಸದಲ್ಲೇ ಇಂತಹ ಸಂದರ್ಭಗಳು ಒದಗಿಬಂದಿರಲಿಲ್ಲ. ನಿಯಮಾನುಸಾರ ರಾಜ್ಯದ ಜನರಿಗೆ ದೊರೆಯಬೇಕಾಗಿದ್ದ ಪರಿಹಾರಕ್ಕಾಗಿ ನ್ಯಾಯಾಲಯದ ಮೆಟ್ಟಿಲು ಹತ್ತುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈಗ ಪ್ರಕರಣ ಒಂದು ಹಂತಕ್ಕೆ ಬಂದಿದೆ. ಕೇಂದ್ರ ಸರ್ಕಾರ ಒತ್ತಡಕ್ಕೆ ಮಣಿದು ತನ್ನ ಅಭಿಪ್ರಾಯವನ್ನು ತಿಳಿಸಿದೆ. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ಗೆ ಧನ್ಯವಾದ ಎಂದಿದ್ದಾರೆ.
|
eesanje/url_46_172_12.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ದಾಂಡೇಲಿ : ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ದಾರುಣ ಸಾವು
|
2 |
+
ಕಾರವಾರ,ಎ.22-ಪ್ರವಾಸಕ್ಕೆಂದು ಬಂದಿದ್ದ ಒಂದೇ ಕುಟುಂಬದ ಆರು ಮಂದಿ ಕಾಳಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಾಂಡೇಲಿಯ ಅಕೊರ್ಡಾ ಬಳಿ ನಡೆದಿದೆ. ಮೃತರನ್ನು ಹುಬ್ಬಳ್ಳಿಯ ಈಶ್ವರನಗರ ನಿವಾಸಿಗಳಾದ ನಜೀರ ಅಹ್ಮದ್ (40), ಅಲ್ಛೀಯಾ ಅಹ್ಮದ್ (10), ಮೋಹಿನ್ ಅಹ್ಮದ್ (6), ರೇಷಾ ಉನ್ನಿಸಾ (38), ಇಫ್ರಾ ಅಹ್ಮದ್ (15), ಅಬೀದ್ ಅಹ್ಮದ್ (12) ಎಂದು ಗುರುತಿಸಲಾಗಿದೆ.
|
3 |
+
ಒಟ್ಟು ಎಂಟು ಮಂದಿ ನಿನ್ನೆ ರಜೆ ಕಾರಣ ಪ್ರವಾಸಕ್ಕೆ ಆಗಮಿಸಿದ್ದರು ಮಧ್ಯಾಹ್ನ ಸಂತೋಷ ಕೊಟ ನಡೆಸಿ ಸಂಜೆ ಮಕ್ಕಳು ಸೇರಿ ಆರು ಮಂದಿ ಕಾಳಿ ನದಿಯಲ್ಲಿ ಈಜಲು ಇಳಿದಿದ್ದರು.ಇದರಲ್ಲಿ ಒಬ್ಬ ಬಾಲಕಿ ನೀರಿನಲ್ಲಿ ಮುಳುಗಿದ್ದಾಳೆ ಆಕೆಯನ್ನು ರಕ್ಷಿಸಲು ಹೋಗಿ ಉಳಿದವರು ನದಿಯಲ್ಲಿ ಮುಳುಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
|
4 |
+
ಸ್ಥಳಕ್ಕೆ ಧಾವಿಸಿದ ದಾಂಡೇಲಿ ಗ್ರಾಮಾಂತರ ಪೊಲೀಸರು ಅಗ್ನಿಶಮಕ ಸಿಬ್ಬಂದಿ ಹಾಗು ಈಜುಗಾರರ ಸಹಾಯದಿಂದ ಎಲ್ಲಾ ಮೃತದೇಹಗಳನ್ನು ರಾತ್ರಿ ವೇಳೆಗೆ ಪತ್ತೆಯಾಗಿವೆ. ಮೃತದೇಹಗಳನ್ನು ದಾಂಡೇಲಿ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ. ಘಟನೆ ವೇಳೆ ಇಬ್ಬರು ಮಹಿಳೆಯರು ದಡದಲ್ಲೇ ಇದ್ದರು ಸಹಾಯಕ್ಕಾಗಿ ಕೂಗಿಕೊಂಡರು ಯಾವುದೇ ಪ್ರಯೋಜನವಾಗಲಿಲ್ಲ .
|
eesanje/url_46_172_2.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಚುನಾವಣಾ ಅಕ್ರಮ : ಈವರೆಗೆ 400 ಕೋಟಿ ದಾಟಿದ ಜಪ್ತಿಯಾದ ಸಂಪತ್ತು
|
2 |
+
ಬೆಂಗಳೂರು, ಏ.22-ಪ್ರಸಕ್ತ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋಟಿ ಕೋಟಿ ನಗದು, ಕೆ.ಜಿ.ಗಟ್ಟಲೆ ಚಿನ್ನ, ಬೆಳ್ಳಿ, ಲೀಟರ್ಗಟ್ಟಲೆ ಮದ್ಯ ಜಪ್ತಿಯಾಗಿದೆ. ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದ ಮಾ.16ರಿಂದ ನಿನ್ನೆಯವರೆಗೆ ರಾಜ್ಯದಲ್ಲಿ 403.40 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್, ಚಿನ್ನ, ಬೆಳ್ಳಿ, ವಜ್ರ, ಉಚಿತ ಉಡುಗೊರೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
|
3 |
+
ಪ್ರತಿ ದಿನವೂ ಒಂದಲ್ಲ ಒಂದು ಕಡೆ ಈ ರೀತಿಯ ವಸ್ತುಗಳು ತಪಾಸಣೆ ಸಂದರ್ಭದಲ್ಲಿ ಪತ್ತೆಯಾಗುತ್ತಿವೆ. ಭಾರತದ ಚುನಾವಣಾ ಆಯೋಗವೂ ಈ ಬಾರಿಯ ಚುನಾವಣೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕಾನೂನು ಬಾಹಿರ ಸಾಗಾಣಿಕೆ ಮೇಲೆ ಹದ್ದಿನ ಕಣ್ಣಿಡಲು ಸೂಚಿಸಿದೆ. ಹೀಗಾಗಿ ಅಪಾರ ಪ್ರಮಾಣದ ಜಪ್ತಿಯಾಗುತ್ತಿದೆ.
|
4 |
+
ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್ ಅಧಿಕಾರಿಗಳು ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ಲೋಹ ಮತ್ತು ಉಚಿತ ಉಡುಗೊರೆಗಳನ್ನು ವಶಪಡಿಸಿಕೊಂಡಿರುವ ಪ್ರಕರಣ ಗಳಿಗೆ ಸಂಬಂಧಿಸಿದಂತೆ 1975 ಎಫ್ಐಆರ್ಗಳನ್ನು ದಾಖಲಿಸಿದ್ದಾರೆ.
|
5 |
+
ಕರ್ನಾಟಕ ಅಬಕಾರಿ ಕಾಯ್ದೆಯಡಿ 23,522 ಪ್ರಕರಣಗಳು ದಾಖಲಾಗಿವೆ. 1739 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಇಲಾಖೆಯ ಘೋರ ಅಪರಾಧದಡಿಯಲ್ಲಿ 2,781 ಪ್ರಕರಣ ದಾಖಲಾಗಿದ್ದರೆ, ಪರವಾನಗಿ ಉಲ್ಲಂಘನೆಯಡಿಯಲ್ಲಿ 4,155 ಪ್ರಕರಣಗಳು ದಾಖಲಾಗಿವೆ ಎಂದು ಪ್ರಕಟಣೆ ತಿಳಿಸಿದೆ.
|
6 |
+
ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್ ಅಧಿಕಾರಿಗಳು ಈತನಕ 132.86 ಕೋಟಿ ರೂ. ಮೌಲ್ಯದ ನಗದು, ಮದ್ಯ, ಡ್ರಗ್ಸ್, ಉಚಿತ ಉಡುಗೊರೆಗಳನ್ನು ವಶಪಡಿಸಿಕೊಂಡಿದ್ದಾರೆ. ಅಬಕಾರಿ ಅಧಿಕಾರಿಗಳು 176.90 ಕೋಟಿ ರೂ. ಮೌಲ್ಯದ ಮದ್ಯ ಮತ್ತು ಡ್ರಗ್ಸ್ ವಶಪಡಿಸಿಕೊಂಡಿದ್ದರೆ, ಆದಾಯ ತೆರಿಗೆ ಅಧಿಕಾರಿಗಳು 13.80 ಕೋಟಿ ರೂ. ಮೌಲ್ಯದ ವಜ್ರ, ನಗದು, ಚಿನ್ನವನ್ನು ವಶಪಡಿಸಿಕೊಂಡು ಪರಿಶೀಲನೆಗೆ ಒಳಪಡಿಸಿದ್ದಾರೆ.
|
7 |
+
ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು 79.84 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ತಂಡದವರು 46,25,000 ರೂ. ಮೌಲ್ಯದ 185 ಗ್ರಾಂ ಕೊಕೇನ್, 3,27,000 ರೂ. ಮೌಲ್ಯದ 45 ಗ್ರಾಂ ಇಸಿ ಟ್ಯಾಬ್ಲೆಟ್ ಅನ್ನು ಸಿ.ವಿ.ರಾಮನ್ ನಗರದಲ್ಲಿ ವಶಪಡಿಸಿಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
|
8 |
+
2 ಕೋಟಿ ಹಣ ಪತ್ತೆ ಚುರುಕು ಕಂಡ ತನಿಖೆಬೆಂಗಳೂರು,ಏ.22- ಕಾಟನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಪಾಸಣೆ ವೇಳೆ ಕಾರಿನಲ್ಲಿ 2 ಕೋಟಿ ರೂಪಾಯಿ ಹಣ ಪತ್ತೆಗೆ ಸಂಬಂಧಪಟ್ಟಂತೆ ಮೂವರ ವಿರುದ್ಧ ಪ್ರಕರಣವನ್ನು ದ���ಖಲಾಗಿದೆ. ಪ್ರಕರಣ ಆದಾಯ ತೆರಿಗೆ ಇಲಾಖೆಗೆ ವರ್ಗಾವಣೆಯಾಗಿದ್ದು, ಹಣ ಜಪ್ತಿ ಮಾಡಿಕೊಂಡ ಇಲಾಖೆ ತನಿಖೆ ಚುರುಕುಗೊಳಿಸಿದೆ.
|
9 |
+
ಕಳೆದ ಶನಿವಾರ ಮಧ್ಯಾಹ್ನ ಕಾಟನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಪಾಸಣೆ ನಡೆಸುವಾಗ ಕಾರಿನಲ್ಲಿ 2 ಕೋಟಿ ಹಣ ಪತ್ತೆ ಆದ ಹಿನ್ನೆಲೆ ಚುನಾವಣಾಕಾರಿ ರವಿ ಅಸೂತಿ ಎಂಬುವರು ನೀಡಿದ ದೂರಿನ ಮೇರೆಗೆ ರಾಜ್ಯ ಬಿಜೆಪಿ ಕಾರ್ಯಾಲಯದ ಕಾರ್ಯದರ್ಶಿ ಲೊಕೇಶ್ ಅಂಬೆಕಲï, ಹಣ ಸಾಗಿಸುತ್ತಿದ್ದ ವೆಂಕಟೇಶ್ ಪ್ರಸಾದ್ ಹಾಗೂ ಗಂಗಾಧರ್ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಐಟಿ ಅಧಿಕಾರಿಗಳು ಮಾಹಿತಿ ಮೇರೆಗೆ ಹಣ ಜಪ್ತಿ ಮಾಡಿಕೊಂಡಿದ್ದು, ಇಬ್ಬರು ಆರೋಪಿತರನ್ನು ಹೆಚ್ಚಿನ ವಿಚಾರಣೆ ನಡೆಸಲು ನೊಟೀಸ್ ಜಾರಿ ಮಾಡಿದ್ದಾರೆ.
|
10 |
+
ಕೋದಂಡರಾಮಪುರ ಕೆನೆರಾ ಬ್ಯಾಂಕಿನಲ್ಲಿ ಕಳೆದ ಮಾರ್ಚ್ 27ರಂದು 5 ಕೋಟಿ ರೂಪಾಯಿ ಹಣ ವಿತ್ ಡ್ರಾ ಮಾಡಲಾಗಿದ್ದು, ಈ ಪೈಕಿ 2 ಕೋಟಿ ಹಣವನ್ನು ಮೈಸೂರು – ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳ ಬೂತ್ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕ್ರಮಗಳಿಗೆ ಹಣ ಹಂಚಲು ಹೋಗುತ್ತಿರುವುದಾಗಿ ಆರೋಪಿತರು ಪ್ರಾಥಮಿಕ ತನಿಖೆಯಲ್ಲಿ ಒಪ್ಪಿಕೊಂಡಿದ್ದರು.
|
11 |
+
ಈ ವೇಳೆ, ಪತ್ತೆಯಾದ ಪತ್ರದಲ್ಲಿ ಮೇಲಿನ ಲೋಕಸಭಾ ಕ್ಷೇತ್ರಗಳ ಬೂತ್ ಮಟ್ಟದ ಕಾರ್ಯಕರ್ತರಿಗೆ ಹಣ ಹಂಚಲು ವೆಂಕಟೇಶ್ ಮೂಲಕ ಹಣ ಸಾಗಿಸುತ್ತಿರುವ ಬಗ್ಗೆ ಉಲ್ಲೇಖವಾಗಿತ್ತು ಎಂದು ಚುನಾವಣಾಧಿಕಾರಿಗಳು ದೂರಿನಲ್ಲಿ ವಿವರಿಸಿದ್ದಾರೆ. ಈ ಸಂಬಂಧ ಪೊಲೀಸರ ಸಮಕ್ಷಮದಲ್ಲಿ ಹಣ ಎಣಿಕೆ ಮಾಡಿ ವಶಕ್ಕೆ ಪಡೆದುಕೊಂಡು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
|