33fb7c0f7e12e9faf44a89ead568c5a11a8011fad4b55482a4cb79b6ff3b3093
Browse files- eesanje/url_46_270_11.txt +9 -0
- eesanje/url_46_270_12.txt +14 -0
- eesanje/url_46_270_2.txt +12 -0
- eesanje/url_46_270_3.txt +10 -0
- eesanje/url_46_270_4.txt +9 -0
- eesanje/url_46_270_5.txt +9 -0
- eesanje/url_46_270_6.txt +10 -0
- eesanje/url_46_270_7.txt +8 -0
- eesanje/url_46_270_8.txt +6 -0
- eesanje/url_46_270_9.txt +12 -0
- eesanje/url_46_271_1.txt +5 -0
- eesanje/url_46_271_10.txt +6 -0
- eesanje/url_46_271_11.txt +8 -0
- eesanje/url_46_271_12.txt +7 -0
- eesanje/url_46_271_2.txt +5 -0
- eesanje/url_46_271_3.txt +9 -0
- eesanje/url_46_271_4.txt +5 -0
- eesanje/url_46_271_5.txt +9 -0
- eesanje/url_46_271_6.txt +5 -0
- eesanje/url_46_271_7.txt +9 -0
- eesanje/url_46_271_8.txt +7 -0
- eesanje/url_46_271_9.txt +13 -0
- eesanje/url_46_272_1.txt +12 -0
- eesanje/url_46_272_10.txt +12 -0
- eesanje/url_46_272_11.txt +9 -0
- eesanje/url_46_272_12.txt +6 -0
- eesanje/url_46_272_2.txt +6 -0
- eesanje/url_46_272_3.txt +6 -0
- eesanje/url_46_272_4.txt +8 -0
- eesanje/url_46_272_5.txt +9 -0
- eesanje/url_46_272_6.txt +8 -0
- eesanje/url_46_272_7.txt +14 -0
- eesanje/url_46_272_8.txt +9 -0
- eesanje/url_46_272_9.txt +18 -0
- eesanje/url_46_273_1.txt +7 -0
- eesanje/url_46_273_10.txt +10 -0
- eesanje/url_46_273_11.txt +10 -0
- eesanje/url_46_273_12.txt +4 -0
- eesanje/url_46_273_2.txt +9 -0
- eesanje/url_46_273_3.txt +6 -0
- eesanje/url_46_273_4.txt +7 -0
- eesanje/url_46_273_5.txt +6 -0
- eesanje/url_46_273_6.txt +8 -0
- eesanje/url_46_273_7.txt +16 -0
- eesanje/url_46_273_8.txt +6 -0
- eesanje/url_46_273_9.txt +9 -0
- eesanje/url_46_274_1.txt +11 -0
- eesanje/url_46_274_10.txt +6 -0
- eesanje/url_46_274_11.txt +5 -0
- eesanje/url_46_274_12.txt +9 -0
eesanje/url_46_270_11.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಗೌರವಕ್ಕೆ ಚ್ಯುತಿ ಬಾರದಂತೆ ಕರ್ತವ್ಯ ನಿರ್ವಹಿಸಿ : ಪೊಲೀಸ್ ಆಯುಕ್ತ
|
2 |
+
ಬೆಂಗಳೂರು,ಜ.5- ಪೊಲೀಸ್ ಠಾಣೆಗಳು ನ್ಯಾಯದೇಗುಲವಿದ್ದಂತೆ ಅವುಗಳ ಗೌರವಕ್ಕೆ ಚ್ಯುತಿ ಬರದಂತೆ ನಾವು ನ್ಯಾಯಯುತವಾಗಿ ಕರ್ತವ್ಯ ನಿರ್ವಹಿಸಬೇಕು, ಜನಪರ ಕಾಳಜಿ ಮತ್ತು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವ ಮೂಲಕ ಆದರ್ಶಪ್ರಾಯ ರಾಗಬೇಕು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.
|
3 |
+
ಥಣಿಸಂದ್ರದ ಸಿಎಆರ್ ಕವಾತು ಮೈದಾನದಲ್ಲಿ ಇಂದು ಮಾಸಿಕ ಕವಾಯತು ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡುತ್ತಾ, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ 2024ರ ಶುಭಾಷಯ ಸಂದೇಶ ನೀಡಿ, ನಾನು ಆಯುಕ್ತನಾಗಿ ಕಳೆದ 7 ತಿಂಗಳಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ಅಧಿಕಾರಿಗಳ ಕರ್ತವ್ಯ, ಸಮಯಪ್ರಜ್ಞೆ ಮತ್ತು ಜವಾಬ್ದಾರಿಗಳನ್ನು ಗಮನಿಸಿ ಸ್ವತಃ ನನ್ನ ಅನುಭವವನ್ನು ಸಂದೇಶ ಪತ್ರದಲ್ಲಿ ಹಂಚಿಕೊಂಡಿದ್ದೇನೆ ಎಂದರು.
|
4 |
+
ನಗರ ಪೊಲೀಸ್ ಘಟಕ 61ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ 2023ರ ವಿಧಾನಸಭೆ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಿ ಶ್ಲಾಘನೆಗೆ ಪಾತ್ರರಾಗಿದ್ದೀರಿ, ಈ ವರ್ಷ ಲೋಕಸಭಾ ಚುನಾವಣೆ ಬರಲಿದೆ. ಈ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಹೇಳಿದರು.
|
5 |
+
15 ಮಂದಿ ಭಾರತೀಯರಿದ್ದ ಹಡಗು ಸೊಮಾಲಿಯಾ ಕರಾವಳಿಯಲ್ಲಿ ಅಪಹರಣ
|
6 |
+
ಮಾದಕವಸ್ತು ಸಾಗಾಣೆ ವಿರುದ್ಧ ನಮ್ಮ ಹೋರಾಟ ನಿರಂತರವಾಗಿದೆ. ಸೈಬರ್ ಅಪರಾಧಗಳು, ಮಹಿಳೆಯರು, ದೀನದಲಿತರ ರಕ್ಷಣೆ ಇತ್ಯಾದಿ ವಿಷಯಗಳಾದ ಠಾಣೆಗಳ ಭೌತಿಕ ಹಾಗೂ ಕಡತ ನಿರ್ವಹಣೆ, ಗಣಕೀಕೃತ ವ್ಯವಸ್ಥೆ ,ಸಮಯಪ್ರಜ್ಞೆ, ವಿವೇಚನೆಯುಕ್ತ ವರ್ತನೆಗಳಿಂದ ಬೆಂಗಳೂರು ನಗರ ಪೊಲೀಸರು ಬೇರೆ ಜಿಲ್ಲೆಗಳಿಗೆ ಮಾದರಿಯಾಗಿದ್ದಾರೆ.
|
7 |
+
ನಮ್ಮಲ್ಲಿ ಅನೇಕ ದೋಷಗಳಿವೆ. ಮುಖ್ಯವಾಗಿ ಪೊಲೀಸ್ ಠಾಣೆಗಳಲ್ಲಿ ದೀನ ದಲಿತರ, ಅಮಾಯಕರಿಗೆ ರಕ್ಷಣೆ ಒದಗಿಸದೆ ಕೇವಲ ಬಲಾಢ್ಯರು, ಹಣವಂತರಿಗೆ ಮಣೆ ಹಾಕುತ್ತಾರೆ ಎಂಬ ಆರೋಪಗಳು ಇವೆ. ಭ್ರಷ್ಟಾಚಾರ, ಆರೋಪಿಗಳೊಂದಿಗೆ ಪೊಲೀಸರ ಶಾಮೀಲು, ಸಿವಿಲ್ ವ್ಯಾಜ್ಯಗಳಲ್ಲಿ ಹಸ್ತಕ್ಷೇಪ ಮಾಡುವ ಪ್ರವೃತ್ತಿ ಪೊಲೀಸ್ ಇಲಾಖೆಯ ಘನತೆಗೆ ಧಕ್ಕೆ ತರುವಂತಾಗಿದೆ ಎಂದು ಇದೇ ಸಂದರ್ಭದಲ್ಲಿ ಆಯುಕ್ತರು ವಿಷಾದ ವ್ಯಕ್ತಪಡಿಸಿದರು.
|
8 |
+
2024ರಲ್ಲಿ ನಾವು ಈ ಎಲ್ಲ ದೋಷ ಮತ್ತು ಆರೋಪಗಳನ್ನು ಹಿಮ್ಮೆಟ್ಟಿಸಿ ನ್ಯಾಯಸಮ್ಮತ ಕರ್ತವ್ಯ, ಜನಪರ ಕಾಳಜಿ ಮತ್ತು ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿದು ಬೆಂಗಳೂರಿನ ಪ್ರಜ್ಞಾವಂತ ನಾಗರಿಕರಿಗೆ ಉತ್ತಮ ಸೇವೆ ಮತ್ತು ರಕ್ಷಣೆಯ ಜವಾಬ್ದಾರಿಯನ್ನು ಹೊರಬೇಕೆಂದು ತಿಳಿಸಿದರು. ಕಳೆದ ವರ್ಷ ಉತ್ತಮವಾಗಿ ಕೆಲಸ ಮಾಡಿದ್ದೀರಿ. ಈ ವರ್ಷವು ಸಹ ಜವಾಬ್ದಾರಿಯುತವಾಗಿ ಕೆಲಸ ಮಾಡಿ ನಗರದ ಜನರ ಮನ್ನಣೆ ಗಳಿಸಬೇಕೆಂದು ದಯಾನಂದ್ ಅವರು ಹೇಳಿದರು.
|
9 |
+
ಇದೇ ಸಂದರ್ಭದಲ್ಲಿ ಡಿಸೆಂಬರ್ ತಿಂಗಳಿನಲ್ಲಿ ಉತ್ತ��ವಾಗಿ ಕಾರ್ಯ ನಿರ್ವಹಿಸಿದ ವಿವಿಧ ಶ್ರೇಣಿಯ 112 ಪೊಲೀಸ್ ಅಧಿಕಾರಿ ಹಾಗು ಸಿಬ್ಬಂದಿಗಳಿಗೆ ಪ್ರಸಶನಾ ಪತ್ರ ನೀಡಿ ಅಭಿನಂದಿಸಿದರು.
|
eesanje/url_46_270_12.txt
ADDED
@@ -0,0 +1,14 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಉಪ ಮುಖ್ಯಮಂತ್ರಿ ಪಟ್ಟಕ್ಕೆ ಸಿದ್ದು ಆಪ್ತರ ಪಟ್ಟು
|
2 |
+
ಬೆಂಗಳೂರು,ಜ.5- ಹೆಚ್ಚುವರಿ ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿ, ಜಾತಿ ಜನಗಣತಿ ವರದಿ ಬಿಡುಗಡೆ, ಒಳಮೀಸಲಾತಿ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ನಿನ್ನೆ ನಡೆದ ಸಿದ್ದರಾಮಯ್ಯನವರ ಆಪ್ತ ಸಚಿವರ ಬಣದ ರಹಸ್ಯ ಸಭೆಯಲ್ಲಿ ಗಂಭೀರ ಚರ್ಚೆಗಳಾಗಿವೆ.
|
3 |
+
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರ ಮನೆಯಲ್ಲಿ ನಡೆದ ರಹಸ್ಯ ಭೋಜನಾ ಕೂಟದಲ್ಲಿ ರಾಜಕೀಯ ಕುರಿತು ಚರ್ಚೆಗಳಾಗಿದ್ದು, ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆಗೆ ಕಾರಣವಾಗಿದೆ. ನಿನ್ನೆ ರಾತ್ರಿ 9 ಗಂಟೆಯಿಂದ 11 ಗಂಟೆಯಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಎಚ್.ಸಿ.ಮಹದೇವಪ್ಪ, ಪರಮೇಶ್ವರ್, ಕೆ.ಎನ್.ರಾಜಣ್ಣ, ಕೆ.ಎಚ್.ಮುನಿಯಪ್ಪ, ದಿನೇಶ್ ಗುಂಡೂರಾವ್ ಭಾಗವಹಿಸಿದ್ದರು.
|
4 |
+
ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವುದರಿಂದ ಹಾಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರ ಪ್ರಭಾವ ತಗ್ಗಲಿದೆ ಎಂಬ ಲೆಕ್ಕಾಚಾರವಿದೆ. ಇದಕ್ಕಾಗಿಯೇ ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್ ಆರಂಭದಲ್ಲಿ ಒಂದಿಷ್ಟು ರಾಜಿ ಮಾಡಿಕೊಂಡರಾದರೂ ಸರ್ಕಾರದಲ್ಲಿ ಒಂದೇ ಉಪಮುಖ್ಯಮಂತ್ರಿ ಹುದ್ದೆ ಇರಬೇಕು ಎಂಬ ಷರತ್ತು ವಿಧಿಸಿದ್ದರು. ಅದು ಈವರೆಗೂ ಜಾರಿಯಲ್ಲಿದೆ.
|
5 |
+
ಈ ತಂತ್ರಗಾರಿಕೆಗೆ ಪ್ರತಿತಂತ್ರ ರೂಪಿಸಲು ಸಿದ್ದರಾಮಯ್ಯ ಅವರ ಅಗೋಚರವಾದ ಬಣ ಸದಾ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಲೇ ಇದೆ. ಸಿದ್ದರಾಮಯ್ಯ ಅವರ ಪರಮಾತ್ಮ ಎಂದೇ ಗುರುತಿಸಿಕೊಂಡಿರುವ ಕೆ.ಎನ್.ರಾಜಣ್ಣ ಮೊಟ್ಟ ಮೊದಲ ಬಾರಿಗೆ ಜಾತಿವಾರು 3 ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿಯಾಗಬೇಕು ಎಂಬ ಹೇಳಿಕೆ ನೀಡಿದ್ದರು. ಅದು ಸುದೀರ್ಘ ಕಾಲದ ಚರ್ಚೆಗೆ ಗ್ರಾಸವಾಗಿತ್ತು. ಪರಮೇಶ್ವರ್, ಸತೀಶ್ ಜಾರಕಿಹೊಳಿ, ಎಚ್.ಸಿ.ಮಹದೇವಪ್ಪ, ಎಂ.ಬಿ.ಪಾಟೀಲ್ ಸೇರಿದಂತೆ ಉಪಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಅನೇಕ ಸಚಿವರು ರಾಜಣ್ಣ ಅವರ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿದರು.
|
6 |
+
15 ಮಂದಿ ಭಾರತೀಯರಿದ್ದ ಹಡಗು ಸೊಮಾಲಿಯಾ ಕರಾವಳಿಯಲ್ಲಿ ಅಪಹರಣ
|
7 |
+
ಹೈಕಮಾಂಡ್ ಮಟ್ಟದಲ್ಲೂ ಇದು ಚರ್ಚೆಗೊಳಗಾಯಿತು. ಆದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೆಚ್ಚುವರಿಯಾದ ತ್ರಾಸ ತೆಗೆದುಕೊಳ್ಳಲು ಇಷ್ಟವಿಲ್ಲದೆ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯನ್ನು ಅಲ್ಲಿಗೇ ಬಿಟ್ಟು ನಿಗಮ ಮಂಡಳಿಗಳ ನೇಮಕಾತಿಯತ್ತ ಗಮನ ಹರಿಸಿತ್ತು. ಆದರೆ ಅದೂ ಕೂಡ ಕಾರ್ಯಗತವಾಗಿಲ್ಲ.
|
8 |
+
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಗೆ ಭೇಟಿ ನೀಡುತ್ತಿದ್ದ ಬೆನ್ನಲ್ಲೇ ತುಮಕೂರಿನಲ್ಲಿ ಮಾತನಾಡಿದ್ದ ಕೆ.ಎನ್.ರಾಜಣ್ಣ, ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದ ಪರಮೇಶ್ವರ್, ಸತೀಶ್ ಜಾರಕಿಹೊಳಿಯವರು ಮತ್ತೆ ಉಪಮುಖ್ಯಮಂತ್ರಿ ಹುದ್ದೆಯ ಕುರಿತು ಕೆಣಕಿದ್ದರು. ಅಷ್ಟಕ್ಕೇ ಸುಮ್ಮನಾ��ದೆ ನಿನ್ನೆ ರಹಸ್ಯ ಸಭೆ ನಡೆಸಿದ್ದಾರೆ. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ತಲಾ ಒಂದೊಂದು ರೀತಿ ಭಿನ್ನ ಹೇಳಿಕೆ ನೀಡಿದ್ದಾರೆ.
|
9 |
+
ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ವರದಿ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿ ಸಮುದಾಯಗಳು ನೀಡಿರುವ ಪತ್ರಕ್ಕೆ ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್ರಂತಹ ಸರ್ಕಾರದ ಪ್ರತಿನಿಧಿಗಳು ಸಹಿ ಹಾಕಿದ್ದಾರೆ.
|
10 |
+
ಸಿದ್ದರಾಮಯ್ಯನವರ ಬಣ ವರದಿಯನ್ನು ಸ್ವೀಕರಿಸಿ ಬಹಿರಂಗಪಡಿಸಲೇಬೇಕು ಎಂಬ ಹಠಕ್ಕೆ ಬಿದ್ದಿದೆ. ಆದರೆ ಕೆಲವು ಸಮುದಾಯಗಳು ವರದಿ ಅವೈಜ್ಞಾನಿಕವಾಗಿದೆ. ಬಿಡುಗಡೆ ಮಾಡಬಾರದು ಎಂಬ ಪಟ್ಟು ಹಿಡಿದಿದ್ದು, ಇದಕ್ಕಾಗಿ ರಾಜಕೀಯ ಬಣ ಕ್ರೂಢೀಕರಣಕ್ಕೆ ಮುಂದಾಗಿವೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಂತೆ ನಡೆದುಕೊಳ್ಳಬೇಕು ಎಂಬುದು ಪಕ್ಷದ ಕೆಲವರ ವಾದ. ಕೆಪಿಸಿಸಿ ಅಧ್ಯಕ್ಷರೇ ಇದಕ್ಕೆ ವಿರೋಧ ವ್ಯಕ್ತಪಡಿಸುವುದಾದರೆ ಸಮಾಜದಲ್ಲಿ ತಪ್ಪು ಸಂದೇಶ ಹೋಗುತ್ತದೆ. ಲೋಕಸಭೆ ಚುನಾವಣೆಯಲ್ಲಿ ಅಡ್ಡಪರಿಣಾಮಗಳಾಗುತ್ತವೆ ಎಂದು ನಿನ್ನೆ ನಡೆದ ಸಭೆಯಲ್ಲಿ ವಿಶ್ಲೇಷಿಸಲಾಗಿದೆ.
|
11 |
+
ವಿಧಾನಸಭೆ ಚುನಾವಣೆಯಲ್ಲಿ ದಲಿತರು, ಅಲ್ಪಸಂಖ್ಯಾತರೂ ಸೇರಿದಂತೆ ಎಲ್ಲಾ ಸಮುದಾಯಗಳು ಕಾಂಗ್ರೆಸ್ ಕೈ ಹಿಡಿದಿದ್ದರಿಂದಾಗಿಯೇ ಸ್ಪಷ್ಟ ಬಹುಮತ ಬಂದಿದೆ. ಆದರೆ ಅಧಿಕಾರ ಹಂಚಿಕೆ ವಿಷಯ ಬಂದಾಗ ಸಮುದಾಯವನ್ನು ಕಡೆಗಣಿಸಿರುವುದು ಲೋಕಸಭೆ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ ಎಂದು ಸಭೆಯಲ್ಲಿ ನಾಯಕರು ತಮ್ಮ ಅಸಮಾಧಾನವನ್ನು ಹೊರಹಾಕಿದರು ಎಂದು ಹೇಳಲಾಗಿದೆ.
|
12 |
+
ಮತ್ತೊಮ್ಮೆ ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಅದಾನಿ
|
13 |
+
ನಿಗಮ ಮಂಡಳಿಗಳಲ್ಲಿ ಆದ್ಯತೆ ನೀಡುವುದಷ್ಟೇ ಅಲ್ಲ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಲೇಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರಲು ನಾಯಕರು ಚರ್ಚೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ದೆಹಲಿಗೆ ನಿಯೋಗ ತೆರಳಿ ಹೈಕಮಾಂಡ್ ನಾಯಕರ ಮುಂದೆ ತಮ್ಮ ಹಕ್ಕು ಪ್ರತಿಪಾದನೆ ಮಾಡಬೇಕು ಎಂಬ ನಿರ್ಣಯ ಕೈಗೊಳ್ಳಲಾಗಿದೆ.
|
14 |
+
ಇದರ ಜೊತೆಯಲ್ಲಿ ಲೋಕಸಭೆ ಚುನಾವಣೆ ತಯಾರಿ, ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಇನ್ನೂ ಕೆಲವು ಮಹತ್ವದ ವಿಚಾರಗಳನ್ನು ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
|
eesanje/url_46_270_2.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ನೈಸ್ ಯೋಜನೆಗೆ ಸ್ವಾದೀನಪಡಿಸಿಕೊಂಡ ಹೆಚ್ಚುವರಿ ಜಮೀನನ್ನು ರೈತರಿಗೆ ಹಿಂದಿರುಗಿಸಿ : ದೇವೇಗೌಡರು
|
2 |
+
ಬೆಂಗಳೂರು,ಜ.5- ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್(ಬಿಎಂಐಸಿ) ಯೋಜನೆಗೆ ಸ್ವಾೀಧಿನಪಡಿಸಿಕೊಂಡಿದ್ದ ಹೆಚ್ಚುವರಿ ಜಮೀನನ್ನು ಮರಳಿ ರೈತರಿಗೆ ನೀಡಬೇಕು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಒತ್ತಾಯಿಸಿದರು.
|
3 |
+
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಬಂಧ ಅಕ್ಟೋಬರ್ 19ರಂದು ಮುಖ್ಯಮಂತ್ರಿಗೆ ಪತ್ರ ಬರೆದು, ಈ ಯೋಜನೆಯಿಂದ ಸಂಕಷ್ಟಕ್ಕೆ ಒಳಗಾಗಿರುವ ಬಡವರ ಜಮೀನನ್ನು ಉಳಿಸಿಕೊಡುವಂತೆ ಕೋರಿದ್ದೇನೆ ಎಂದರು.
|
4 |
+
ಹಿಂದಿನ ಸರ್ಕಾರದಲ್ಲಿ ಸಚಿವರಾಗಿದ್ದ ಟಿ.ಬಿ.ಜಯಚಂದ್ರ ಅಧ್ಯಕ್ಷತೆಯ ಸದನ ಸಮಿತಿಯು ಬಿಎಂಐಸಿ ಯೋಜನೆಯ ಅಕ್ರಮ ವಿಚಾರ ಪ್ರಸ್ತಾಪಿಸಿ ಸರ್ಕಾರ ಕ್ರಮ ಕೈಗೊಳ್ಳುವಂತೆ ಶಿಫಾರಸ್ಸು ಮಾಡಿದ್ದೆ. ಆದರೂ ಈ ತನಕ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
|
5 |
+
ಯೋಜನೆಗೆ ಒಳಪಡದ ಸುಮಾರು 7 ಸಾವಿರ ಕೋಟಿ ಮೌಲ್ಯದ 13 ಸಾವಿರಕ್ಕೂ ಹೆಚ್ಚು ಎಕರೆ ಭೂಮಿಯನ್ನು ವಾಪಸ್ ರೈತರಿಗೆ ನೀಡಬೇಕು. ಸದನ ಸಮಿತಿ ಶಿಫಾರಸ್ಸಿನ ಅನ್ವಯ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಏನು ಕಷ್ಟವಿದೆಯೋ ಗೊತ್ತಿಲ್ಲ. ಯಾವಾಗಲೂ ಬಡವರ ಪರ ಮಾತನಾಡುವ ಸಿದ್ದರಾಮಯ್ಯನವರು ಬಿಎಂಐಸಿ ವಿಚಾರದಲ್ಲಿ ಕ್ರಮ ಕೈಗೊಳ್ಳದಿದ್ದರೆ ಅವರು ಎಷ್ಟೇ ಉತ್ತಮ ಆಡಳಿತ ನಡೆಸಿದರೂ ಕಪ್ಪುಚುಕ್ಕೆಯಿಂದ ಹೊರಬರಲು ಸಾಧ್ಯವಾಗುವುದಿಲ್ಲ ಎಂದರು.
|
6 |
+
ಜೆ.ಎಚ್.ಪಟೇಲ್, ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಕಾಂಗ್ರೆಸ್ ಅನಾಯಕಿ ಸೋನಿಯಾ ಗಾಂಧಿ ಅವರ ಸಮ್ಮುಖದಲ್ಲಿ ಮಾತುಕತೆ ಆಗಿತ್ತು. ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಧರ್ಮಸಿಂಗ್ , ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಹಾಗೂ ನಾನು ಇದ್ದೆವು. ಆ ಸಂದರ್ಭದಲ್ಲಿ ಸೋನಿಯಾ ಗಾಂಧಿಯವರು ಬಿಎಂಐಸಿ ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳಲು ಧರ್ಮಸಿಂಗ್ಗೆ ಸೂಚಿಸಿದ್ದರು. ಈತನಕ ಯಾವುದೇ ಕ್ರಮ ಆಗಿಲ್ಲ ಎಂದು ಹೇಳಿದರು.
|
7 |
+
ಬಿಎಂಐಸಿ ವಿರುದ್ಧದ ಹೋರಾಟದಲ್ಲಿ ನಮ್ಮ ಪಕ್ಷ ಎಂದೂ ರಾಜಿ ಮಾಡಿಕೊಳ್ಳುವುದಿಲ್ಲ. ಹಿಂದೆ ಸರಿಯುವುದಿಲ್ಲ, ಬಡವರ , ರೈತರಪರ ಹೋರಾಟ ಮುಂದುವರೆಸುತ್ತೇವೆ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗಲೂ ಹೆಚ್ಚುವರಿ ಭೂಮಿ ಕೊಡಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಲಾಗಿದೆ ಎಂದರು. ಇಡೀ ರಾಜ್ಯದಲ್ಲಿ ರೈತರ ಪರ ನಮ್ಮ ಪಕ್ಷ ಹೋರಾಟವನ್ನು ಮುಂದುವರೆಸಲಿದೆ ಎಂದು ಗೌಡರು ಹೇಳಿದರು.
|
8 |
+
ಉತ್ತರ ಪ್ರದೇಶ : ವಾಂಟೆಡ್ ಕ್ರಿಮಿನಲ್ ವಿನೋದ್ ಕುಮಾರ್ ಉಪಾಧ್ಯಾಯ ಎನ್ಕೌಂಟರ್
|
9 |
+
ಸೇಡಿನ ರಾಜಕಾರಣ:30 ವರ್ಷ ಹಳೆಯ ಪ್ರಕರಣಕ್ಕೆ ಮರುಜೀವ ಕೊಟ್ಟು ರಾಜ್ಯ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಎನ್ಡಿಎ ಮಿತ್ರಪಕ್ಷವಾಗಿರುವ ನಾವು ಎಲ್ಲಿಯವರೆಗೂ ಮೈತ್ರಿ ಮುಂದುವರೆಸುತ್ತೇವೋ ಅಲ್ಲಿಯವರೆಗೂ ಸೇಡಿನ ರಾಜಕಾರಣದ ವಿರುದ್ಧ ದನಿ ಎತ್ತುತ್ತೇವೆ. ನಾಲ್ಕು ರಾಜ್ಯಗಳ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರ ಸಂಪತ್ತು,ಹಣವನ್ನು ಎಷ್ಟು ಸಾಗಿಸಿದರೂ, ಚುನಾವಣಾ ಆಯೋಗ ಎಷ್ಟನ್ನು ಸೀಜ್ ಮಾಡಿದೆ ಎಂಬ ಮಾಹಿತಿ ಇದೆ.
|
10 |
+
ಉಪಮುಖ್ಯಮಂತ್ರಿ ಅವರೇ ನೀರಾವರಿ ಖಾತೆಯ ಹೊಣೆ ಹೊತ್ತಿದ್ದರು. ಏನಾಗುತ್ತದೆ ಎಂದು ಪ್ರಶ್ನಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಂಥದ್ದನೆಲ್ಲ ತಡೆಯುವ ಶಕ್ತಿ ಇದೆಯೋ ಇಲ್ಲವೊ ಗೊತ್ತಿಲ್ಲ. ಅಹಿಂದ ಮತ್ತು ಬಡವರ ಬಗ್ಗೆ ಸಿದ್ದರಾಮಯ್ಯ ಪಣ ತೊಟ್ಟು ನಿಂತಿದ್ದಾರೆ. ಟಿಪ್ಪು ಬಿಟ್ಟರೆ ಬೇರೆ ಕೆಲಸವೇ ಇಲ್ಲವೇ ಎಂದು ಪ್ರಶ್ನಿಸಿದರು.
|
11 |
+
ಶ್ರೀರಾಮನ ಪೂಜೆ ಮಾಡುವೆ:ಶ್ರೀರಾಮನ ಪೂಜೆ ಮಾಡುವ ವಿಚಾರದಲ್ಲಿ ಯಾವುದೇ ಅಪನಂಬಿಕೆ, ಮನಸ್ಸಿನಲ್ಲಿ ಸಂಕೋಚವೂ ಇಲ್ಲ. ಮುಸ್ಲಿಂ ಸಮುದಾಯದವರು ಕೊಟ್ಟಿದ್ದ ಚಿನ್ನದ ಕತ್ತಿಯನ್ನು ಶ್ರೀರಾಮನ ದೇವಾಲಯಕ್ಕೆ ನೀಡಿದ್ದೇನೆ. ಆಗ ಕತ್ತಿಗೆ 65 ಸಾವಿರ ರೂ. ಹಣವನ್ನೂ ಕಟ್ಟಲಾಗಿದೆ. ಬೇರೆ ಸಮುದಾಯದವರಿಗೆ ಅಪಾಯವಾದರೆ ರಕ್ಷಣೆ ಕೊಡಬೇಕಾಗಿದ್ದು ಅಧಿಕಾರದಲ್ಲಿರುವವರ ಜವಾಬ್ದಾರಿ. ಪ್ರಧಾನಿಯಾಗಿದ್ದಾಗ ದರ್ಗಾಕ್ಕೂ ಹೋಗಿದ್ದೆ. ದೇವಾಲಯಕ್ಕೂ ಹೋಗಿದ್ದೆ. ಆದರೆ ನಿಷ್ಪಕ್ಷಪಾತವಾಗಿ ಕೆಲಸ ಮಾಡಿದ್ದೆ ಎಂದು ಹೇಳಿದರು.
|
12 |
+
ಸುದ್ದಿಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್, ರಾಜಸಭೆ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ, ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ, ಮಾಜಿ ಸದಸ್ಯ ರಮೇಶ್ ಗೌಡ, ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಮತ್ತಿತರರು ಉಪಸ್ಥಿತರಿದ್ದರು.
|
eesanje/url_46_270_3.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸಂಸದ ಪ್ರತಾಪ್ ಸಿಂಹ ಸೋದರನ ಪ್ರಕರಣಕ್ಕೆ ಬಿಗ್ಟ್ವಿಸ್ಟ್ ಕೊಟ್ಟ ಎಚ್ಡಿಕೆ
|
2 |
+
ಬೆಂಗಳೂರು,ಜ.5-ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ಧ ಎತ್ತುವ ಧ್ವನಿಯನ್ನು ಅಡಗಿಸಲು ರಾಜ್ಯ ಸರ್ಕಾರದಿಂದ ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ 30 ವರ್ಷಗಳ ಹಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ ಸೇವಕ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿ ಸೇಡಿನ ರಾಜಕಾರಣ ಮಾಡಲಾಗುತ್ತಿದೆ. ದೊಡ್ಡ ಮಟ್ಟದಲ್ಲಿ ಕಾನೂನು ದುರುಪಯೋಗವಾಗುತ್ತಿದೆ ಎಂದು ದೂರಿದರು.
|
3 |
+
ಹಾಸನದ ಬೇಲೂರು ಬಳಿ ಮರ ಕಡಿದ ವಿಚಾರಕ್ಕೆ ಬಿಎಸ್ಎಫ್, ಎಸಿಎಫ್, ಆರ್ಎಫ್ಒ ಸೇರಿದಂತೆ ಐವರನ್ನು ಅಮಾನತು ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಿಸಿಸಿಎಫ್ ಅವರಿಗೆ ಕರೆ ಮಾಡಿ ಗೆಂಡೆಕೆರೆ ಅರಣ್ಯದಲ್ಲಿ ಬೀಟೆ ಮರ ಕಡಿದು, ಮರ ಕಡಿದಿರುವ ಪ್ರದೇಶಕ್ಕೆ ತಂದು ಹಾಕಿ ಎಂಬ ಸೂಚನೆ ನೀಡಿದ್ದರು ಎಂದು ಗಂಭೀರ ಆರೋಪ ಮಾಡಿದರು.
|
4 |
+
ಸೂಚನೆ ಪಾಲಿಸದ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಇದಕ್ಕೆ ಅರಣ್ಯ ಸಚಿವ ಅಧ್ಯಕ್ಷತೆಯಲ್ಲಿ ನಡೆದ ಅರಣ್ಯಾಧಿಕಾರಿಗಳ ಸಭೆಯಲ್ಲಿ ವಿರೋಧವೂ ವ್ಯಕ್ತವಾಗಿದೆ ಎಂದು ಹೇಳಿದರು. ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರನ್ನು ಮರದ ಕಡಿದ ಆರೋಪದಲ್ಲಿ ಬಂಧಿಸಿದ್ದಾರೆ. ಆದರೆ ಅವರು ಶುಂಠಿ ಬೆಳೆಯಲು ಲೀಸ್ ಪಡೆದಿದ್ದ ಅವಧಿ ಜನವರಿಯಿಂದ ಪ್ರಾರಂಭವಾಗುತ್ತಿತ್ತು. 4 ಎಕರೆ ಜಮೀನು ರಾಕೇಶ್ ಎಂಬುವರಿಗೆ ಮಂಜೂರಾಗಿದ್ದು, ಅವರ ಮಗಳ ವಿಕ್ರಮ್ ಸಿಂಹ ಅವರಿಗೆ ಶುಂಠಿ ಬೆಳೆಯಲು ಲೀಸ್ ನೀಡಿದ್ದರು.
|
5 |
+
ಉತ್ತರ ಪ್ರದೇಶದ ಸರ್ಕಾರಿ ಬಸ್ಗಳಲ್ಲಿ ರಾಮ ಭಜನೆ
|
6 |
+
ಮರ ಕಡಿದ ಪ್ರಕರಣದಲ್ಲಿ ಮೊದಲ ಮತ್ತು 2ನೇ ಆರೋಪಿಗಳನ್ನು ಅರಣ್ಯಾಧಿಕಾರಿಗಳು ಜಾಮೀನಿನ ಮೇಲೆ ಬಿಡುಗಡೆ ಮಾಡುತ್ತಾರೆ. ಆದರೆ ಮೂರನೇ ವಿಕ್ರಮ್ ಸಿಂಹ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಈ ರೀತಿ ಸೇಡಿನ ಹಾಗೂ ಕುತಂತ್ರದ ರಾಜಕಾರಣ ಮಾಡಲಾಗುತ್ತಿದೆ.
|
7 |
+
ಅಮಾನತು ಮಾಡಿರುವ ಮೋಹನ್ಕುಮಾರ್ ಎಂಬ ಡಿಎಫ್ಒ ದಲಿತ ಸಮುದಾಯಕ್ಕೆ ಸೇರಿದವರು. ಅವರು ಯಾವ ತಪ್ಪು ಮಾಡದಿದ್ದರೂ ಅಮಾನತು ಮಾಡಲಾಗಿದೆ. ಹಾಸನಕ್ಕೆ ಈ ಅಕಾರಿ ವರ್ಗಾವಣೆಯಾದಾಗ, ವರ್ಗಾವಣೆ ಆದೇಶ ಪತ್ರವನ್ನು ಹಿಡಿದು ಶಾಸಕರೊಬ್ಬರು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಪ್ರಶ್ನಿಸಿದರು.
|
8 |
+
ಈ ವಿಚಾರಕ್ಕೆ ಒಂದು ಆಯೋಗ ರಚನೆ ಮಾಡಿ ತನಿಖೆ ಮಾಡಿಸುತ್ತಿದ್ದೀರಾ, ಮುಖ್ಯಮಂತ್ರಿ ಸೂಚನೆ ನೀಡಿರುವ ಬಗ್ಗೆ ಕಾಲ್ ಲಿಸ್ಟ್ ತನಿಖೆಯಾಗಲಿ ಸತ್ಯಾಂಶ ಗೊತ್ತಾಗುತ್ತದೆ ಎಂದು ಹೇಳಿದರು. ಮಂಡ್ಯ ಜಿಲ್ಲೆಯಲ್ಲಿ ವಿಧಾನಪರಿಷತ್ ಸದಸ್ಯರ ಸಮ್ಮುಖದಲ್ಲೇ ಸರ್ಕಾರಿ ಜಮೀನಿನಲ್ಲಿ ಮರ ಕಡಿದ ಆರೋಪವಿ���ೆ. ಅದರ ಬಗ್ಗೆ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದರು.
|
9 |
+
ಬಿಜೆಪಿ ನಾಯಕರು ಕರಸೇವಕನ ಬಂಧನವನ್ನು ವಿರೋಸಿ ನಮ್ಮನ್ನೂ ಬಂಸಿ ಎಂದು ಹೋರಾಟ ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಯ ವಿಚಾರ ದೇಶದಲ್ಲಿ ಚರ್ಚೆಯಾಗುತ್ತಿರುವ ಸಂದರ್ಭದಲ್ಲಿ ಬರ, ರೈತರ ಆತ್ಮಹತ್ಯೆಯಂತಹ ಜ್ವಲಂತ ಸಮಸ್ಯೆಗಳನ್ನು ಬಿಟ್ಟು ಸೇಡಿನ ರಾಜಕೀಯ ಮಾಡುತ್ತಿದೆ. ಸರ್ಕಾರದ ನಿಷ್ಕ್ರಿಯತೆಯನ್ನು ಮರೆಮಾಚಲು ಕರಸೇವಕರ ಹಳೆಯ ಪ್ರಕರಣ ಮುಂದಿಟ್ಟುಕೊಂಡು ದಬ್ಬಾಳಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
|
10 |
+
ನೈಸ್ ಸಂಸ್ಥೆ ವಿಚಾರದಲ್ಲಿ ನಮ್ಮ ಪಕ್ಷ ರಾಜೀ ಇಲ್ಲ. ಬಡವರು ಮತ್ತು ರೈತರಿಗೆ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ ಎಂದರು.
|
eesanje/url_46_270_4.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸಾಬೂನು ಕಾರ್ಖಾನೆ ಸಿಬ್ಬಂದಿಗೆ 5 ಲಕ್ಷ ವಿಮೆ ಸೌಲಭ್ಯ : ಎಂ.ಬಿ.ಪಾಟೀಲ
|
2 |
+
ಬೆಂಗಳೂರು: ಯಶವಂತಪುರದಲ್ಲಿ ಇರುವ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್ಡಿಎಲ್) ಆವರಣದಲ್ಲಿ ಸರಕಾರಿ ಕಚೇರಿಗಳಿಗೆ ಜಾಗ ಒದಗಿಸಲು ಸುಸಜ್ಜಿತ ಸಂಕೀರ್ಣ ನಿರ್ಮಿಸಲಾಗುವುದು. ಮುಂದಿನ 100 ವರ್ಷಗಳ ಅವಧಿಗೆ ಕಾರ್ಖಾನೆಯ ವಿಸ್ತರಣೆಗೆ ಬೇಕಾದ ಜಾಗವನ್ನು ಮೀಸಲಿಟ್ಟುಕೊಂಡು ಈ ಕೆಲಸ ಕೈಗೊಳ್ಳಲಾಗುವುದು ಎಂದು ಕಾರ್ಖಾನೆ ಅಧ್ಯಕ್ಷರೂ ಆಗಿರುವ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ.
|
3 |
+
100 ವರ್ಷಗಳಿಗೂ ಹೆಚ್ಚಿನ ಇತಿಹಾಸವಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತದ (ಕೆಎಸ್ಡಿಎಲ್) ಸಿಬ್ಬಂದಿ ವರ್ಗಕ್ಕೆ ಇದೇ ಮೊದಲ ಬಾರಿಗೆ ಏರ್ಪಡಿಸಿದ್ದ ಸಮಗ್ರ ಆರೋಗ್ಯ ತಪಾಸಣೆ ಶಿಬಿರ ಮತ್ತು ಹೆಲ್ತ್ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
|
4 |
+
ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಖನಿಜ ಭವನದ ಆವರಣದಲ್ಲಿ ಹಲವು ಸರಕಾರಿ ಮತ್ತು ಖಾಸಗಿ ಕಂಪನಿಗಳ ಕಚೇರಿಗಳಿಗೆ ಸ್ಥಳಾವಕಾಶ ಕೊಡಲಾಗಿದೆ. ಅದೇ ಮಾದರಿಯನ್ನೂಕೆಎಸ್ಡಿಎಲ್ನಲ್ಲೂ ಅಳವಡಿಸಿಕೊಳ್ಳಲಾಗುವುದು.ಕೆಎಸ್ಡಿಎಲ್ವತಿಯಿಂದಲೇ ಹಂತಹಂತವಾಗಿ ಇದನ್ನು ನಿರ್ಮಿಸಲಾಗುವುದು. ಇದರಿಂದ ಸಂಸ್ಥೆಯು ಆರ್ಥಿಕ ಸ್ವಾವಲಂಬನೆ ಸಾಧಿಸುವುದು ಸುಲಭವಾಗಲಿದೆ ಎಂದು ಅವರು ನುಡಿದರು.
|
5 |
+
₹5,000 ಕೋಟಿ ವಹಿವಾಟಿನ ಗುರಿ:ಮೈಸೂರು ಮಹಾರಾಜರು ಮತ್ತು ಸರ್ ಎಂ ವಿಶ್ವೇಶ್ವರಯ್ಯನವರು ಸ್ಥಾಪಿಸಿದಕೆಎಸ್ಡಿಎಲ್ಸದ್ಯಕ್ಕೆ ವಾರ್ಷಿಕವಾಗಿ 1,200 ಕೋಟಿ ರೂ.ಗಳಿಗಿಂತ ಹೆಚ್ಚಿನ ವಹಿವಾಟು ನಡೆಸುತ್ತಿದ್ದು, ಲಾಭದ ಹಾದಿಯಲ್ಲಿದೆ. ಇದು 2025ರ ವೇಳೆಗೆ ₹2,500 ಕೋಟಿ ಹಾಗೂ 2030ರ ಹೊತ್ತಿಗೆ 5,000 ಕೋಟಿ ರೂ. ಮುಟ್ಟಬೇಕು. ವಿದೇಶಗಳಲ್ಲೂ ಮಾರುಕಟ್ಟೆ ಸೃಷ್ಟಿಗೆ ಆದ್ಯತೆ ಬೀಡಲಾಗುತ್ತಿದ್ದು, ಯೂರೋಪ್ ಮತ್ತು ಅರಬ್ ರಾಷ್ಟ್ರಗಳಿಗೆಕೆಎಸ್ಡಿಎಲ್ಉತ್ಪನ್ನಗಳನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ರಫ್ತು ಮಾಡಲಿದ್ದೇವೆ ಎಂದು ಅವರು ತಿಳಿಸಿದರು.ಕೆಎಸ್ಡಿಎಲ್ಆವರಣದಲ್ಲಿ ದಿನನಿತ್ಯದ ದಿನಸಿ ಪದಾರ್ಥಗಳು, ಡೆಟಾಲ್, ಹ್ಯಾಂಡ್ ಸೋಪ್ ಮುಂತಾದವೆಲ್ಲ ಲಭ್ಯವಾಗಬೇಕು. ಸದ್ಯಕ್ಕೆ ಸಾಬೂನು ಮತ್ತು ಮಾರ್ಜಕಗಳ ಮಾರುಕಟ್ಟೆ ವಿತರಣೆ ಚೆನ್ನಾಗಿ ನಡೆಯುತ್ತಿದೆ. ಸಂಸ್ಥೆಯು ಕಾರ್ಮಿಕರ ಯೋಗಕ್ಷೇಮಕ್ಕೂ ಆದ್ಯತೆ ನೀಡುವ ಉತ್ತರದಾಯಿತ್ವವನ್ನು ಪ್ರದರ್ಶಿಸಿದೆ ಎಂದು ಅವರು ಹೇಳಿದರು.
|
6 |
+
ಎಂಎಸ್ಐಎಲ್ ಗೆ ಮತ್ತಷ್ಟು ಬಲ:ಸರಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (ಎಂಎಸ್ಐಎಲ್) ನಡೆಸುವ ವಹಿವಾಟನ್ನು ವಿಸ್ತರಿಸಲು ನಿರ್ಧರಿಸಲಾಗಿದ್ದು, ಕೇರಳ ಮಾದರಿಯಲ್ಲಿ ಚಿಟ್ ಫಂಡ್ ನಡೆಸಲಾಗುವುದು. ಇದರ ಮೂಲಕ ವಾರ್ಷಿಕ 10 ಸಾವಿರ ಕೋಟಿ ರೂ. ವ್ಯವಹಾರ ಬೆಳೆಸಲಾಗುವುದು. ಇದರಲ್ಲಿ ಮಹಿಳಾ ಸ್���ಸಹಾಯ ಗುಂಪುಗಳ ಸಹಕಾರ ತೆಗೆದುಕೊಂಡು, ಖಾಸಗಿಯವರಿಗೆ ಆರೋಗ್ಯಕರ ಸ್ಪರ್ಧೆ ನೀಡಲಾಗುವುದು ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.ಎಂಎಸ್ಐಎಲ್ ನ 200 ಮದ್ಯ ಮಾರಾಟ ಪ್ರೀಮಿಯಂ ಬೋಟಿಕ್ ಗಳನ್ನು ಆರಂಭಿಸಲಾಗುತ್ತಿದೆ. ಇತ್ತೀಚೆಗೆ ಬಸವೇಶ್ವರ ನಗರದಲ್ಲಿ ಹೊಸ ವರ್ಷ ದಿನ ಆರಂಭಿಸಿದ್ದು ಅಲ್ಲಿ 30-40ರಷ್ಟು ವಹಿವಾಟು ಹೆಚ್ಚಾಗಿದೆ. ಯಾವ ಖಾಸಗಿ ಬೋಟಿಕ್ ಗಳಿಗೂ ಕಡಿಮೆ ಇಲ್ಲದಂತೆ ಅಭಿವೃದ್ಧಿ ಮಾಡಲಾಗುತ್ತಿದೆ. ಇದೇ ರೀತಿಯಲ್ಲಿ ಲೇಖಕ್ ನೋಟ್ ಪುಸ್ತಕಗಳ ಗುಣಮಟ್ಟವನ್ನೂ ಹೆಚ್ಚಿಸಲಾಗುವುದು. ಒಟ್ಟಿನಲ್ಲಿ ಸರ್ಕಾರಿ ಉದ್ದಿಮೆಗಳಿಗೆ ಕಾರ್ಪೊರೇಟ್ ಸ್ಪರ್ಶ ನೀಡಿ, ಲಾಭದ ಹಳಿಗೆ ತರಲಾಗುವುದು ಎಂದು ಪಾಟೀಲ ಪ್ರತಿಪಾದಿಸಿದರು.
|
7 |
+
ಕಾರ್ಯಕ್ರಮದಲ್ಲಿಕೆಎಸ್ಡಿಎಲ್ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್, ಪ್ರಧಾನ ವ್ಯವಸ್ಥಾಪಕ (ಆಡಳಿತ) ಗಂಗಪ್ಪ, ಮಲ್ಲಿಗೆ ಆಸ್ಪತ್ರೆ ಸಿಇಒ ಡಾ.ಶ್ರೀನಿವಾಸ, ಕೈಗಾರಿಕಾ ಇಲಾಖೆಯ ಮಹಾಂತೇಶ ಬಿರಾದರ ಇದ್ದರು.
|
8 |
+
ಆರೋಗ್ಯ ಶಿಬಿರ, ಹೆಲ್ತ್ ಕಾರ್ಡ್ ವಿತರಣೆ:ಕೆಎಸ್ಡಿಎಲ್ಸಿಬ್ಬಂದಿಗೆ ಇದೇ ಮೊದಲ ಬಾರಿಗೆ ಆರೋಗ್ಯ ತಪಾಸಣೆ ಶಿಬಿರ ಮತ್ತು ಐದು ಲಕ್ಷ ರೂಪಾಯಿ ಮೊತ್ತದ ಚಿಕ್ಸಿತೆ ಪಡೆಯಬಹುದಾದ ಹೆಲ್ತ್ ಕಾರ್ಡ್ ಅನ್ನು ಸಚಿವ ಎಂ.ಬಿ.ಪಾಟೀಲ ವಿತರಿಸಿದರು.169 ಕಾಯಂ ಸಿಬ್ಬಂದಿ ಮತ್ತು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ 464 ಸಿಬ್ಬಂದಿ ಮತ್ತು ಅವರ ಕುಟುಂಬದವರಿಗೆ ಈ ವಿಮಾ ಸೌಲಭ್ಯ ಅನ್ವಯ ಆಗುತ್ತದೆ. ಮಲ್ಲಿಗೆ ಆಸ್ಪತ್ರೆ ಜತೆಗೂಕೆಎಸ್ಡಿಎಲ್ಒಪ್ಪಂದ ಮಾಡಿಕೊಂಡಿದ್ದು ರಿಯಾಯಿತಿ ದರದಲ್ಲಿ ಚಿಕಿತ್ಸೆ ಲಭ್ಯವಾಗಲಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ವಿವರಿಸಿದರು.
|
9 |
+
ಪ್ರತಿಷ್ಠಿತಕೆಎಸ್ಡಿಎಲ್ಕಾರ್ಖಾನೆಗೆ ಶುಕ್ರವಾರ ಭೇಟಿ ನೀಡಿ ಅಲ್ಲಿ ಸಾಬೂನು ಉತ್ಪಾದನೆಯನ್ನು ಪರಿಶೀಲಿಸಿದ ಕಾರ್ಖಾನೆ ಅಧ್ಯಕ್ಷರೂ ಆದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ. ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್ ಸೇರಿದಂತೆ ಇತರ ಸಿಬ್ಬಂದಿ ವರ್ಗ ಇದ್ದರು.
|
eesanje/url_46_270_5.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಡಿಸಿಎಂ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗಿ
|
2 |
+
ಬೆಂಗಳೂರು,ಜ.5- ಬೆಂಗಳೂರಿನ ನಾಗರಿಕರ ಅಹವಾಲುಗಳನ್ನು ಇತ್ಯರ್ಥಪಡಿಸಲು ನಡೆಯುತ್ತಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಯಲಹಂಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷಾತೀತವಾಗಿ ಜನಪ್ರತಿನಿಧಿಗಳು ಭಾಗವಹಿಸಿದ್ದರು. ಬಿಜೆಪಿಯ ಶಾಸಕರಾದ ಯಲಹಂಕದ ಎಸ್.ಆರ್.ವಿಶ್ವನಾಥ್, ದಾಸರಹಳ್ಳಿ ಮುನಿರಾಜು ಅವರು ಡಿ.ಕೆ.ಶಿವಕುಮಾರ್ ಅವರನ್ನು ವೇದಿಕೆಯಲ್ಲಿ ಸನ್ಮಾನಿಸಿದರು.
|
3 |
+
ಎಸ್.ಆರ್.ವಿಶ್ವನಾಥ್ ಮಾತನಾಡಿ, ವ್ಯವಸ್ಥಿತವಾಗಿ ಜನಸ್ಪಂದನ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್ರವರು ವಾರದಿಂದ 10 ದಿನಗಳೊಳಗಾಗಿ ಜನರ ಸಮಸ್ಯೆಗೆ ಪರಿಹಾರ ದೊರಕಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಶಾಸಕ ಮುನಿರಾಜು ಅಕಾರ ಸಿಕ್ಕಾಗ ಜನ ನೆನಪಿಸಿಕೊಳ್ಳುವಂತಹ ಶಾಶ್ವತ ಕೆಲಸ ಮಾಡಬೇಕು. ಬೆಂಗಳೂರಿಗೆ ಕಾವೇರಿ ನೀರು ಪೂರೈಸಲು ಚಿಂತನೆ ನಡೆದ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ದೇವರಾಜು ಅರಸುರವರನ್ನು ಮಂಡ್ಯದಲ್ಲಿ ರೈತರು ಮುತ್ತಿಗೆ ಹಾಕಿ ಬೆಂಗಳೂರಿಗೆ ನೀರು ತೆಗೆದುಕೊಂಡು ಹೋದರೆ ರೈತರಿಗೆ ಅನ್ಯಾಯವಾಗಲಿದೆ ಎಂದು ಒತ್ತಡ ಹೇರಿದರು.
|
4 |
+
ಕಾರಿನಿಂದ ಇಳಿದ ದೇವರಾಜು ಅರಸು, ಅರ್ಧಗಂಟೆ ಕಾಲ ನಡೆದುಕೊಂಡು ಹೋಗಿ ಬೇರೆ ವಾಹನದಲ್ಲಿ ಪ್ರಯಾಣ ಮುಂದುವರೆಸಿದರು. ಏನೇ ಆದರೂ ಬೆಂಗಳೂರಿಗೆ ನೀರು ಕೊಡುತ್ತೇನೆ ಎಂದು ಪ್ರಕಟಿಸಿದರು. ಅದರ ಪರಿಣಾಮ ನಾವು ಇಂದು ಕಾವೇರಿ ನೀರು ಕುಡಿಯುತ್ತಿದ್ದೇವೆ. ಡಿ.ಕೆ.ಶಿವಕುಮಾರ್ ಅವರಿಗೆ ಅದೇ ರೀತಿಯ ಶಾಶ್ವತ ಕೆಲಸ ಮಾಡುವ ಧೈರ್ಯ, ತಾಕತ್ತು, ಇಚ್ಛಾ ಶಕ್ತಿ ಇದೆ. ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರಕಿಸಿ ಎಂದು ಸಲಹೆ ನೀಡಿದರು.
|
5 |
+
ಸಚಿವ ಕೃಷ್ಣಭೈರೇಗೌಡ ಮಾತನಾಡಿ, ಜನರ ಮೂಲಭೂತ ಸಮಸ್ಯೆಗಳನ್ನ ಬಗೆಹರಿಸುವುದು ಬಹಳ ಮುಖ್ಯವಾಗಿದೆ. ಅಭಿವೃದ್ಧಿಯ ಜೊತೆಗೆ ಜನರ ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ ನೀಡಿದಾಗ ಮಾತ್ರ ಸರ್ಕಾರ ಜನಪರವಾಗಿರಲು ಸಾಧ್ಯಎಂದರು.
|
6 |
+
15 ಮಂದಿ ಭಾರತೀಯರಿದ್ದ ಹಡಗು ಸೊಮಾಲಿಯಾ ಕರಾವಳಿಯಲ್ಲಿ ಅಪಹರಣ
|
7 |
+
ಜನಸ್ಪಂದನದಲ್ಲಿ ನಾನಾರೀತಿಯ ಸಮಸ್ಯೆಗಳು ಕೇಳಿಬಂದವು. ವ್ಯಕ್ತಿಯೊಬ್ಬರು ನನ್ನ ನಿವೇಶನ ಬಿಡಿಎಗೆ ಸ್ವಾೀಧಿನವಾಗಿದೆ. 30 ವರ್ಷದಿಂದ ನಾನು ವಾಸವಿದ್ದೇನೆ. ನನ್ನ ಜಾಗ ನನಗೆ ಉಳಿಸಿಕೊಡಿ ಎಂದು ಮನವಿ ಮಾಡಿದರು. ಈ ವೇಳೆ ನೀನು ಇರುವಲ್ಲಿಯೇ ಬಿಗಿಯಾಗಿರು, ಜಾಗ ಬಿಡಬೇಡ ಎಂದು ಉಪಮುಖ್ಯಮಂತ್ರಿ ಸಲಹೆಯೊಂದಿಗಿನ ಭರವಸೆ ನೀಡಿದರು.
|
8 |
+
ಈ ಹಿಂದೆ ಸಂಪಿಗೆಹಳ್ಳಿಯಲ್ಲಿನ ಪೊಲೀಸ್ ಅಧಿಕಾರಿಯೊಬ್ಬರು ನನ್ನ ಹೆಸರಿನಲ್ಲಿ ಸಾಲ ಪಡೆದು ವಂಚನೆ ಮಾಡುತ್ತಿದ್ದಾರೆ. ಕೇಳಿದರೆ ಏನು ಬೇಕಾದರೂ ಮಾಡಿಕೊ ಎನ್ನುತ್ತಾರೆ ಎಂದು ಮತ್ತೊಬ್ಬರು ದೂರು ಹೇಳಿದರು.ನಾಗರತ್ನ ಎಂಬ ಮಹಿಳೆ ನಾನು ಬಡ���ಿ. ಬಿಪಿಎಲ್ ಕಾರ್ಡ್ಗಾಗಿ ಹಲವು ಬಾರಿ ಮನವಿ ಮಾಡಿದ್ದೇನೆ. ಶಾಸಕರ ಕಚೇರಿಗೂ ಹೋಗಿದ್ದೆ. ಆದರೂ ಪ್ರಯೋಜನವಾಗಿಲ್ಲ ಎಂದು ದುಃಖಿಸಿದರು. ಅಳಬೇಡಮ್ಮಾ, ನಾನಿದ್ದೇನೆ, ಬಿಪಿಎಲ್ ಕಾರ್ಡ್ ಮಾಡಿಸಿಕೊಡುತ್ತೇನೆಂದು ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.
|
9 |
+
ಮಹಿಳೆಯೊಬ್ಬರು ತಮ್ಮ ಮನೆಗೆ ವಿದ್ಯುತ್ ಸಂಪರ್ಕ ಇಲ್ಲ ಎಂದು ಹೇಳಿದರು. ಅಕಾರಿಗಳನ್ನು ಮನೆಬಾಗಿಲಿಗೆ ಕಳುಹಿಸುತ್ತೇನೆಂದು ಡಿ.ಕೆ.ಶಿವಕುಮಾರ್ ಆಶ್ವಾಸನೆ ನೀಡಿದರು. ಕೆಂಪೇಗೌಡ ಪ್ರಶಸ್ತಿ ನೀಡಿ ಎಂದು ಕಲಾವಿದರೊಬ್ಬರು ಮನವಿ ಸಲ್ಲಿಸಿದರು. ಬಹಳಷ್ಟು ಮಂದಿ ಮೌಖಿಕವಾಗಿ ದೂರು ನೀಡಿದಾಗ ಏನೇ ಹೇಳುವುದಿದ್ದರೂ ಅದನ್ನು ಲಿಖಿತವಾಗಿ ದೂರು ನೀಡಿ ಎಂದು ಡಿ.ಕೆ.ಶಿವಕುಮಾರ್ ಸಲಹೆ ನೀಡಿದರು.
|
eesanje/url_46_270_6.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ವಿದ್ಯುತ್ ದರ ಪರಿಷ್ಕರಣೆಗೆ ಪ್ರಸ್ತಾವನೆ
|
2 |
+
ಬೆಂಗಳೂರು,ಜ.5- ರಾಜ್ಯದ ಜನರಿಗೆ ಸರ್ಕಾರದಿಂದ ವಿದ್ಯುತ್ ದರ ಏರಿಕೆಯ ಶಾಕ್ ಎದುರಾಗುವ ಸಾಧ್ಯತೆಗಳಿದ್ದು, ದರ ಪರಿಷ್ಕರಣೆಗೆ ವಿದ್ಯಚ್ಛಕ್ತಿ ಸರಬರಾಜು ಕಂಪನಿಗಳು ಮುಂದಾಗಿವೆ. ಪ್ರತಿ ವರ್ಷ ಏಪ್ರಿಲ್ ತಿಂಗಳಿನಲ್ಲಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ( ಕೆಇಆರ್ಸಿ) ದರ ಪರಿಷ್ಕರಣೆ ಮಾಡುತ್ತಿತ್ತು. ಆದರೆ ಈ ಬಾರಿ ಲೋಕಸಭಾ ಚುನಾವಣೆ ಮಾರ್ಚ್-ಏಪ್ರಿಲ್ ಅಥವಾ ಮೇ ತಿಂಗಳ ಅವಧಿಯಲ್ಲಿ ನಡೆಯಲಿದೆ ಒಂದು ವೇಳೆ ದಿನಾಂಕ ಘೋಷಣೆಯಾದರೆ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಹೊಸ ದರ ಪರಿಷ್ಕರಣೆಯಾಗುವ ಸಂಭವವಿದೆ.
|
3 |
+
ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ ಸೇರಿದಂತೆ ಇತರ ವಿದ್ಯುತ್ ಸರಬರಾಜು ಕಂಪನಿಗಳಿಂದ ವಿದ್ಯುತ್ ದರ ಪರಿಷ್ಕರಣೆಗೆ ಒತ್ತಾಯಿಸಲಾಗಿದೆ. ಕಂಪನಿಗಳ ನಿರ್ವಹಣೆ ವೆಚ್ಚ ಹೆಚ್ಚಳದ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ ಕೋರಲಾಗಿದೆ ಎಂದು ಅಧಿಕಾರಿಗಳೂ ತಿಳಿಸಿದ್ದಾರೆ. ಎಸ್ಕಾಂಗಳು ಹಾಗೂ ಸಾರ್ವಜನಿಕರಿಂದ ಕೆಇಆರ್ಸಿ ಅಭಿಪ್ರಾಯವನ್ನು ಸಂಗ್ರಹಿಸಲು ಮುಂದಾಗಿದೆ. ಬಳಿಕ ಎಲ್ಲಾ ಸಾಧಕ ಬಾಧಕಗಳನ್ನು ಪರಿಗಣಿಸಿ ಶೀಘ್ರದಲ್ಲೇ ಹೊಸ ವಿದ್ಯುತ್ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಲಿದೆ ಎಂದು ತಿಳಿದು ಬಂದಿದೆ.
|
4 |
+
ಈ ವರ್ಷ ಪ್ರತಿ ಯೂನಿಟ್ಗೆ 35ರಿಂದ 45 ಪೈಸೆ ಹೆಚ್ಚಳವಾಗುವ ಸಾಧ್ಯತೆ ಇದೆ. ಈ ತಿಂಗಳ ಅಂತ್ಯದಲ್ಲಿ ಹೊಸ ವಿದ್ಯುತ್ ದರ ಪರಿಷ್ಕರಣೆ ಪಟ್ಟಿ ಬಿಡುಗಡೆಯಾಗಬಹುದು ಎಂದು ಮೂಲಗಳು ತಿಳಿಸಿವೆ. 2024ನೇ ಸಾಲಿಗೆ ಅನ್ವಯವಾಗುವಂತೆ ವಿದ್ಯುತ್ ದರ ಪರಿಷ್ಕರಣೆ ಕಾರ್ಯ ಅಂತಿಮ ಹಂತ ತಲುಪಿದ್ದು, ಲೋಕಸಭೆ ಚುನಾವಣೆಗೂ ಮುನ್ನವೇ ಅಧಿಕೃತವಾಗಿ ಪ್ರಕಟಿಸಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ) ನಿರ್ಧರಿಸಿದೆ.
|
5 |
+
ಉತ್ತರ ಪ್ರದೇಶ : ವಾಂಟೆಡ್ ಕ್ರಿಮಿನಲ್ ವಿನೋದ್ ಕುಮಾರ್ ಉಪಾಧ್ಯಾಯ ಎನ್ಕೌಂಟರ್
|
6 |
+
ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ, ಚಾಮುಂಡೇಶ್ವರಿ ಸಹಿತ ಐದು ವಿದ್ಯುತ್ ಸರಬರಾಜು ಕಂಪನಿಗಳ ಪ್ರಸ್ತಾವನೆಗಳ ಬಗ್ಗೆ ಕೆಇಆರ್ ಸಿ ಈಗಾಗಲೇ ಪರಿಶೀಲನೆ ನಡೆಸಿದೆ. ಇದಕ್ಕೆ ಆಕ್ಷೇಪಣೆಗಳನ್ನು ಆಲಿಸಲು ಮುಂದಾಗಿದೆ. ಇನ್ನಷ್ಟೇ ಆದೇಶ ಹೊರಬೀಳ ಬೇಕಿದೆ. ಎಸ್ಕಾಂಗಳಲ್ಲದೆ ಕೆಪಿಟಿಸಿಲ್, ಮಂಗಳೂರು ಎಸ್ಇಝೆಡ್ ಹಾಗೂ ಸಹಕಾರಿ/ಖಾಸಗಿ ಕ್ಷೇತ್ರದ ವಿದ್ಯುತ್ ಕಂಪನಿಗಳ ದರ ಪರಿಷ್ಕರಣೆ ಕೂಡ ಆಗಲಿದೆ.
|
7 |
+
40-50 ಪೈಸೆ ಏರಿಕೆ ಸಾಧ್ಯತೆ:ಆಯೋಗವು ಪ್ರತಿ ಯೂನಿಟ್ಗೆ 40-50 ಪೈಸೆಯಷ್ಟು ಏರಿಕೆ ಮಾಡುವ ನಿರೀಕ್ಷೆ ಇದೆ. ಆದರೆ, ಎಸ್ಕಾಂಗಳು 1 ರೂ.ನಿಂದ 1.65 ಪೈಸೆ ಏರಿಕೆ ಮಾಡಿ ಸಂಸ್ಥೆಗಳ ನಷ್ಟ ಭರಿಸಿಕೊಳ್ಳಲು ಅವಕಾಶ ಮಾಡಿಕೊಡುವಂತೆ ವಿಚಾರಣೆ ಸಂದರ್ಭದಲ್ಲಿ ಮನವಿ ಮಾಡಿಕೊಂಡಿವೆ. ಪ್ರಸ್ತಾವನೆಯಂತೆ ಉತ್ಪಾದನೆಯ ಖರ್ಚು-ವೆಚ್ಚ ಮತ್ತು ನಿರ್ವಹಣೆಯ ನಷ್ಟ ಸರಿದೂಗಿಸುವ ನಿಟ್ಟಿನಲ್ಲಿ ದರ ಏರಿಕೆಗೆ ಕೆಇಆರ್ಸಿ ಮುಂದಾಗಿ��ೆ. ಸದ್ಯ ಪ್ರಸ್ತಾವನೆ ಪರಿಶೀಲಿಸಲಿರುವ ಆಯೋಗ, ಗ್ರಾಹಕ ಮತ್ತು ವಿದ್ಯುತ್ ಪೂರೈಕೆ ಕಂಪನಿಗಳು ಇಬ್ಬರಿಗೂ ಹೊರೆಯಾಗದಂತೆ ಏಪ್ರಿಲ್ ಪರಿಷ್ಕೃತ ದರ ಜಾರಿ ಮಾಡುವ ಸಾಧ್ಯತೆಯಿದೆ.
|
8 |
+
ಎಸ್ಕಾಂಗಳು ಸಲ್ಲಿಸಿರುವ ಬೇಡಿಕೆಗಳ ಮುಂದಿಟ್ಟು, ಕೆಇಆರ್ಸಿ ಅಧ್ಯಕ್ಷ ರವಿಕುಮಾರ್ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಅದಾಲತ್ಗಳನ್ನು ಎಲ್ಲಾ ಎಸ್ಕಾಂಗಳಲ್ಲಿಯೂ ನಡೆಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಕೆಇಆರ್ಸಿ ಮೂಲಗಳು ತಿಳಿಸಿವೆ. ವಿದ್ಯುತ್ ದರ ಪರಿಷ್ಕರಣೆಗೆ ಲೋಕಸಭೆ ಚುನಾವಣೆ ಅಡ್ಡಿಯಾಗಬಹುದು ಎಂದು ಹೇಳಲಾಗುತ್ತಿದೆ.
|
9 |
+
ಮತ್ತೊಮ್ಮೆ ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಅದಾನಿ
|
10 |
+
ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯುವ ಅಂದಾಜಿದೆ. ಒಂದು ವೇಳೆ ಚುನಾವಣೆಗೆ ದಿನಾಂಕ ನಿಗ ಮಾಡಿ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದರೆ, ವಿದ್ಯುತ್ ದರ ಪರಿಷ್ಕರಣೆ ಮಾಡಿದ್ದನ್ನು ಜಾರಿಗೆ ತರಲು ಸಮಸ್ಯೆ ಎದುರಾಗಬಹುದು. ಹೀಗಾಗಿ ಎಲ್ಲಾ ತಾಂತ್ರಿಕ ಅಂಶಗಳನ್ನು ಪರಿಗಣಿಸಿ ದರ ಪರಿಷ್ಕರಣೆಗೆ ಕೆಇಆರ್ಸಿ ಮುಂದಾಗಿದೆ. ಅಂತಿಮವಾಗಿ ರಾಜ್ಯ ಸರ್ಕಾರವೇ ತೀರ್ಮಾನಿಸುವುದರಿಂದ ಒಪ್ಪಿಗೆ ಸಿಗುತ್ತದೆ ಎಂಬುದನ್ನು ಕಾದು ನೋಡಬೇಕು.
|
eesanje/url_46_270_7.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ನಾವು ಹಿಂದೂ ವಿರೋಧಿಗಳಲ್ಲ : ಗೃಹಸಚಿವ ಪರಮೇಶ್ವರ್
|
2 |
+
ಬೆಂಗಳೂರು,ಜ.5- ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರುವಲ್ಲಿ ಹೆಚ್ಚಿನಂಶ ಹಿಂದೂಗಳೇ ಇದ್ದಾರೆ. ನಾವು ಹೇಗೆ ಹಿಂದೂ ವಿರೋಧಿಗಳಾಗಲು ಸಾಧ್ಯ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೀಕೆಗೂ ಇತಿಮಿತಿಗಳಿರಬೇಕು. ನಮ್ಮ ಸರ್ಕಾರ ನ್ಯಾಯ ರೀತಿ ನಡೆದುಕೊಳ್ಳುತ್ತಿದೆ ಎಂದು ಹೇಳಿದರು.
|
3 |
+
ಬಿಜೆಪಿಯವರ ನಾನು ಕರಸೇವಕ ಎಂಬ ಅಭಿಯಾನಕ್ಕೆ ಪ್ರತಿಕ್ರಿಯಿಸಿದ ಅವರು, ಕಾನೂನು ಸುವ್ಯವಸ್ಥೆ ವಿಷಯದಲ್ಲಿ ರಾಜಕೀಯ ಮಾಡುವುದು ಅನಗತ್ಯ. ನ್ಯಾಯಾಲಯಗಳಿಂದ ಸಮನ್ಸ್ ಹೋಗಿದೆ. ಅದರ ಆಧಾರದ ಮೇಲೆ ಪೊಲೀಸರು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಿದ್ದಾರೆ. ಎಲ್ಲವೂ ಕಾನೂನಿನ ಪ್ರಕಾರವೇ ನಡೆಯುತ್ತಿದೆ.
|
4 |
+
ಇದರಲ್ಲಿ ಯಾವುದೇ ಲೋಪಗಳಾಗಿಲ್ಲ. ರಾಜಕೀಯ ಕಾರಣಕ್ಕಾಗಿ ಬಳಕೆ ಮಾಡುವುದು ಒಳ್ಳೆಯದಲ್ಲ ಎಂದರು. ಬಾಬಾ ಬುಡನ್ಗಿರಿ ಪ್ರಕರಣದಲ್ಲಿ ನಾವು ಯಾವುದೇ ಮುತುವರ್ಜಿ ವಹಿಸಿಲ್ಲ. ನ್ಯಾಯಾಲಯ ಸೂಚನೆ ನೀಡಿದೆ. ಅದನ್ನು ಠಾಣೆಯ ಅಧಿಕಾರಿಗಳು ಪಾಲನೆ ಮಾಡುತ್ತಿದ್ದಾರೆ. ಕೋರ್ಟ್ ಆದೇಶವನ್ನು ಪಾಲಿಸಬಾರದೆ? ಬಿಜೆಪಿಯವರಿಗೆ ಕೋರ್ಟ್ ಅಥವಾ ಕಾನೂನಿನ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದರು.
|
5 |
+
ಉತ್ತರ ಪ್ರದೇಶ : ವಾಂಟೆಡ್ ಕ್ರಿಮಿನಲ್ ವಿನೋದ್ ಕುಮಾರ್ ಉಪಾಧ್ಯಾಯ ಎನ್ಕೌಂಟರ್
|
6 |
+
ಹುಬ್ಬಳ್ಳಿ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿ ವಿರುದ್ಧ 16 ಪ್ರಕರಣಗಳಿವೆ. ಅದರಲ್ಲಿ 9 ಪ್ರಕರಣಗಳು ಅಕ್ರಮ ಮದ್ಯಕ್ಕೆ ಸಂಬಂಧಪಟ್ಟಿದ್ದಾಗಿದೆ. ಅಂತಹ ಅಪರಾಧಿಗೆ ಬಿಜೆಪಿಯವರು ಬೆಂಬಲ ನೀಡುತ್ತಾ ಇದನ್ನು ರಾಷ್ಟ್ರೀಯ ವಿವಾದವಾಗಿ ಮಾಡಿದ್ದಾರೆ ಎಂದು ಕಿಡಿಕಾರಿದರು. ಪೊಲೀಸ್ ಇಲಾಖೆಯಲ್ಲಿನ ಪತಿ, ಪತ್ನಿ ಪ್ರಕರಣದಲ್ಲಿ ವರ್ಗಾವಣೆ ಮಾಡಿಕೊಡಲು ಕ್ರಮ ಕೈಗೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಲಾಗುವುದು. ಕೆಸಿಎಸ್ಆರ್ ನಿಯಮಾವಳಿಗಳಂತೆಯೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
|
7 |
+
ರಾಜಕೀಯ ಚರ್ಚೆ :ನಿನ್ನೆ ರಾತ್ರಿ ನಡೆದ ಭೋಜನಾ ಕೂಟ ಸಭೆಯಲ್ಲಿ ಭಾಗವಹಿಸಿ ಊಟ ಮಾಡಿ ಬಂದಿದ್ದೇನೆ. ರಾಜಕಾರಣಿಗಳು ಒಂದೆಡೆ ಸೇರಿದ ಮೇಲೆ ರಾಜಕೀಯವೇ ಚರ್ಚೆಯಾಗುತ್ತದೆ. ಅಲ್ಲಿ ಏನೆಲ್ಲಾ ಮಾತುಕತೆ ನಡೆದಿದೆ ಎಂಬುದನ್ನು ಬಹಿರಂಗಪಡಿಸಲಾಗುವುದಿಲ್ಲ. ಅದು ರಹಸ್ಯ ಸಭೆ ಎಂದ ಮೇಲೆ ಎಲ್ಲವನ್ನೂ ಬಹಿರಂಗವಾಗಿ ಹೇಳಲು ಹೇಗೆ ಸಾಧ್ಯ ಎಂದರು.
|
8 |
+
ವಿಧಾನಸಭೆ ಚುನಾವಣೆಗೂ ಮೊದಲು ಚಿತ್ರದುರ್ಗದಲ್ಲಿ ಕಾಂಗ್ರೆಸ್ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಮಾವೇಶ ನಡೆಸಿ 10 ಘೋಷಣೆಗಳನ್ನು ಮಾಡಿದ್ದೆವು. ಅವುಗಳನ್ನು ಅನುಷ್ಠಾನಕ್ಕೆ ತರುವ ಸಂಬಂಧಪಟ್ಟಂತೆ ಒಂದಿಷ್ಟು ಚರ್ಚೆಯಾಗಿದೆ. ಮುಖ್ಯವಾಗಿ ಊಟಕ್ಕೆ ಸೇರುವ ಉದ್ದೇಶವಿತ್ತು ಎಂದು ಹೇಳಿದರು.
|
eesanje/url_46_270_8.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಲೋಕಸಭೆ ಚುನಾವಣೆಗೂ ಮೊದಲೇ ಡಿಸಿಎಂ ಹುದ್ದೆ ಕೊಡಿ : ಜಾರಕಿಹೊಳಿ
|
2 |
+
ಬೆಂಗಳೂರು,ಜ.5- ಲೋಕಸಭೆ ಚುನಾವಣೆಗೂ ಮೊದಲೇ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವುದು ಸೂಕ್ತ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಿನ್ನೆ ತಮ್ಮ ಮನೆಯಲ್ಲಿ ನಡೆದ ಭೋಜನಾಕೂಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಒಂದೇ ಪಕ್ಷದ ಸಚಿವರುಗಳು ಸಹಜವಾಗಿ ಕೂಟಕ್ಕೆ ಸೇರಿದ್ದೇವೆ. ಅದರಲ್ಲಿ ವಿಶೇಷವೇನಿಲ್ಲ. ರಾಜಕಾರಣಿಗಳು ಸೇರಿದರೆ ರಾಜಕಾರಣ ಚರ್ಚೆಯಾಗಿಯೇ ಆಗುತ್ತದೆ ಎಂದರು.
|
3 |
+
ನಮ್ಮ ಮುಂದೆ ಲೋಕಸಭೆ ಚುನಾವಣೆಯ ಸವಾಲಿದೆ. ಅದನ್ನು ನಿಭಾಯಿಸುವ ಬಗ್ಗೆ ಚರ್ಚೆ ನಡೆಸಿದ್ದೇವೆ. ಚುನಾವಣೆಗೂ ಮೊದಲೇ ಉಪಮುಖ್ಯಮಂತ್ರಿ ಹುದ್ದೆಯನ್ನು ಸೃಷ್ಟಿಸಿದರೆ ರಾಜಕೀಯವಾಗಿ ಪಕ್ಷಕ್ಕೆ ಲಾಭವಾಗುತ್ತದೆ ಎಂಬುದು ಎಲ್ಲರ ಅಭಿಪ್ರಾಯ. ಅದರ ಹೊರತಾಗಿ ದಲಿತ ಮುಖ್ಯಮಂತ್ರಿ ಕುರಿತು ಚರ್ಚೆಯಾಗಿಲ್ಲ ಎಂದು ಹೇಳಿದರು.
|
4 |
+
15 ಮಂದಿ ಭಾರತೀಯರಿದ್ದ ಹಡಗು ಸೊಮಾಲಿಯಾ ಕರಾವಳಿಯಲ್ಲಿ ಅಪಹರಣ
|
5 |
+
ಇದೇ ಜನವರಿ 28 ರಂದು ಚಿತ್ರದುರ್ಗದಲ್ಲಿ ಶೋಷಿತರ ಸಮಾವೇಶ, ಫೆಬ್ರವರಿಯಲ್ಲಿ ಚಿತ್ರದುರ್ಗದಲ್ಲಿ ಎಸ್ಸಿ, ಎಸ್ಟಿ ಸಮಾವೇಶ ಆಯೋಜನೆ ಮಾಡುವ ಚರ್ಚೆಗಳಾಗಿವೆ ಎಂದು ತಿಳಿಸಿದರು. ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸಲಾಗಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ವರದಿಯ ಬಗ್ಗೆ ಯಾವುದೇ ರೀತಿಯ ಚರ್ಚೆಗಳಾಗಿಲ್ಲ. ಅದು ಸರ್ಕಾರಕ್ಕೆ ಸಲ್ಲಿಕೆಯಾದ ಬಳಿಕವಷ್ಟೇ ಅದರ ಬಗ್ಗೆ ಮಾತನಾಡುತ್ತೇವೆ. ಸದ್ಯಕ್ಕೆ ಅದರ ಬಗ್ಗೆ ಒತ್ತಡ ಹೇರುವ ಸಂದರ್ಭವೂ ಇಲ್ಲ ಎಂದರು.
|
6 |
+
ಕರಸೇವಕರ ಬಂಧನದ ಪ್ರಕರಣ ರಾಜಕೀಯ ಅನಗತ್ಯ. ಇದೀಗ ಪಕ್ಷಗಳ ವ್ಯಾಪ್ತಿಗಳು ಮೀರಿ ಹೋಗಿವೆ. ಏನೇ ಆಗಬೇಕಿದ್ದರೂ ಅದು ನ್ಯಾಯಾಲಯದಲ್ಲಿ ಇತ್ಯರ್ಥಗೊಳ್ಳಬೇಕು ಎಂದು ಹೇಳಿದರು.
|
eesanje/url_46_270_9.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ತೆರಿಗೆ ಸಂಗ್ರಹಕ್ಕೆ ಕಠಿಣ ಕ್ರಮ : ಡಿಕೆಶಿ
|
2 |
+
ಬೆಂಗಳೂರು,ಜ.5- ಜನತಾದರ್ಶನದಲ್ಲಿ ಸ್ವೀಕಾರವಾಗುವ ಅರ್ಜಿಗಳನ್ನು ಕಾನೂನು ಚೌಕಟ್ಟಿನಲ್ಲಿ ಇತ್ಯರ್ಥಪಡಿಸಲು ಅಧಿಕಾರಿಗಳ ತಂಡ ರಚನೆ ಮಾಡುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಯಲಹಂಕದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿವಿಧ ಇಲಾಖೆಗಳ 300 ಕ್ಕೂ ಹೆಚ್ಚು ಅಧಿಕಾರಿಗಳು ಇಲ್ಲಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
|
3 |
+
ಎಲ್ಲರ ಅರ್ಜಿಗಳನ್ನು ನೋಂದಣಿ ಮಾಡಿಸಿಕೊಂಡು ಉತ್ತರದಾಯಿತ್ವದ ಮೂಲಕ ಇತ್ಯರ್ಥಪಡಿಸಲಾಗುವುದು, ಪರಿಹಾರ ಸಾಧ್ಯವಿಲ್ಲ ಎಂದಾದರೆ ಅದಕ್ಕೆ ಸ್ಪಷ್ಟ ಕಾರಣಗಳನ್ನು ಅರ್ಜಿದಾರರಿಗೆ ನೀಡಲಾಗುವುದು. ಜನರ ಬಳಿಗೆ ಸರ್ಕಾರ ಬರಬೇಕೆಂಬುದು ನಮ್ಮ ಆಶಯ. ಆ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದೇವೆ ಎಂದರು.
|
4 |
+
ಅಧಿಕಾರಿಗಳು ಗೌರವ ಕೊಡುವುದಿಲ್ಲ ಎಂದಾಗ ಮಾತ್ರ ಜನರು ಜನಪ್ರತಿನಿಧಿಗಳ ಬಳಿ ಬರುತ್ತಾರೆ. ಯಾರೇ ಲಂಚ ಕೇಳಿದ್ದರೆ ಅಥವಾ ಮಧ್ಯವರ್ತಿಗಳು ಹಸ್ತಕ್ಷೇಪವಿದ್ದರೆ ಮುಲಾಜಿಲ್ಲದೆ ನನ್ನ ಬಳಿ ಹೇಳಿ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ. ಆದರೆ ಸುಳ್ಳು ಮಾಹಿತಿ ನೀಡಿದರೆ ನಿಮ್ಮ ವಿರುದ್ಧವೇ ಪ್ರಕ ರಣ ದಾಖಲಿಸಲಾಗುತ್ತದೆ ಎಂದು ಎಚ್ಚರಿಸಿದರು.
|
5 |
+
ರಾಜಕಾರಣದಲ್ಲಿ ಜನರೇ ದೇವರು. ಅವರು ವಿಶ್ವಾಸವಿಟ್ಟು ನೀಡಿರುವ ಅಧಿಕಾರವನ್ನು ಸದುಪ ಯೋಗಪಡಿಸಿಕೊಂಡು ನಿಮ್ಮ ಸೇವೆ ಮಾಡಲು ಪ್ರಯತ್ನಿಸುತ್ತೇವೆ. ಪ್ರತಿದಿನ ತಮ್ಮ ಮನೆ ಬಳಿ ಬರುವ ಜನರ ಸಮಸ್ಯೆ ಕೇಳಲು ರಾತ್ರಿ 2 ಗಂಟೆಯಾದರೂ ಸಮಯ ಸಾಲುವುದಿಲ್ಲ. ಹೀಗಾಗಿ ಜನರ ಬಳಿಯೇ ಹೋಗಿ ಸಮಸ್ಯೆ ಬಗೆಹರಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
|
6 |
+
ಉತ್ತರ ಪ್ರದೇಶ : ವಾಂಟೆಡ್ ಕ್ರಿಮಿನಲ್ ವಿನೋದ್ ಕುಮಾರ್ ಉಪಾಧ್ಯಾಯ ಎನ್ಕೌಂಟರ್
|
7 |
+
ಬೆಂಗಳೂರಿಗೆ ಅಂತಾರಾಷ್ಟ್ರೀಯ ಗುಣದರ್ಜೆಯ ಸೌಲಭ್ಯ ಕಲ್ಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಶಾಸಕರ ಬೇಡಿಕೆಗನುಗುಣವಾಗಿ ಅನುದಾನ ನೀಡಲಾಗುವುದು. ಈ ಬಾರಿ ಪಂಚಖಾತ್ರಿ ಯೋಜನೆಗಳನ್ನು 35 ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ ಜಾರಿಗೆ ತಂದಿದ್ದೇವೆ. ಮುಂದಿನ ಬಾರಿ 55 ಸಾವಿರ ಕೋಟಿ ರೂ.ಗಳಷ್ಟು ವೆಚ್ಚವಾಗಲಿದೆ. ಅದರ ಹೊರತಾಗಿಯೂ ಬೆಂಗಳೂರಿಗೆ ಅಗತ್ಯ ಅನುದಾನ ನೀಡುತ್ತೇವೆ. ತೆರಿಗೆ ಸಂಗ್ರಹಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಮೊದಲು ಒಂದು ಕಟ್ಟಡದ ಲೆಕ್ಕ ತೋರಿಸಿ, 4 ಮನೆಗಳನ್ನು ನಿರ್ಮಿಸಿ ದ್ದಾರೆ.
|
8 |
+
ಇಂತಹ ತಪ್ಪು ಮಾಹಿತಿಗಳನ್ನು ಸರಿಪಡಿಸಿ, ಕ್ರಮಬದ್ಧಗೊಳಿಸಲಾಗುವುದು ಎಂದರು. ಪಂಚಖಾತ್ರಿಗಳ ಪೈಕಿ ಎಲ್ಲರಿಗೂ ಗೃಹಜ್ಯೋತಿ ದೊರೆಯುತ್ತಿದೆ. 5 ಕೆ.ಜಿ. ಅಕ್ಕಿ, 5 ಕೆ.ಜಿ.ಗೆ ಹಣ ನೀಡುತ್ತಿದ್ದೇವೆ. ಉಳಿದ 5 ಕೆ.ಜಿ. ಅಕ್ಕಿಯನ್ನು ಪೂರೈಸಲು ಟೆಂಡರ್ ಕರೆಯಲಾಗುವುದು. 5 ಲಕ್ಷ ಮಹಿಳೆಯರಿಗೆ ಮಾತ್ರ ಗೃಹಲಕ್ಷ್ಮಿ ಹಣ ತಲುಪಿಲ್ಲ. ಇ��ಕ್ಕೆ ಕಾರಣ ದೂರವಾಣಿ ಸಂಖ್ಯೆ ನೀಡುವಾಗ ತಾಂತ್ರಿಕ ಸಮಸ್ಯೆಯಾಗಿದೆ. ಮಹಿಳೆಯರ ಹೆಸರಿನಲ್ಲಿ ಫೋನ್ ನಂಬರುಗಳಿಲ್ಲ. ಪತಿಯ ಫೋನ್ ನಂಬರ್ಗಳನ್ನೇ ನೀಡಿದ್ದಾರೆ.
|
9 |
+
ಇನ್ನೂ ಕೆಲವು ಪ್ರಕರಣಗಳಲ್ಲಿ ಮಹಿಳೆಯರ ಫೋನ್ ನಂಬರ್ ಇಲ್ಲದೇ ಇದ್ದಾಗ ನೋಂದಣಿ ಮಾಡಿಸುವವರು ಕಮಿಷನ್ ಆಸೆಗಾಗಿ ತಮ್ಮ ಫೋನ್ ನಂಬರನ್ನೇ ನಮೂದಿಸಿದ್ದಾರೆ. ಇದರಿಂದಾಗಿ ಹಣ ಸಿಕ್ಕಿಲ್ಲ. ಬೆಂಗಳೂರು ನಗರದ ಕುಡಿಯುವ ನೀರು, ತ್ಯಾಜ್ಯ ನಿರ್ವಹಣೆ, ರಸ್ತೆ ಸೇರಿದಂತೆ ಗಂಭೀರ ಸಮಸ್ಯೆ ಬಗೆಹರಿಸಲಾಗುವುದು ಎಂದರು.
|
10 |
+
ಶಿವರಾಂ ಕಾರಂತರ ಬಡಾವಣೆ ಸೇರಿದಂತೆ ವಿವಿಧ ಲೇಔಟ್ಗಳ ಸಮಸ್ಯೆಗಳ ಬಗ್ಗೆ ಅರ್ಜಿಗಳು ಸಲ್ಲಿಕೆಯಾದವು. ಮಹಿಳೆಯೊಬ್ಬರು ತಮ್ಮ ಮಗನ ಮೆದುಳಿನ ಸಮಸ್ಯೆಗೆ ಸಂಬಂಧಪಟ್ಟಂತೆ ಅರ್ಜಿ ಸಲ್ಲಿಸಿದಾಗ ಸ್ಥಳದಲ್ಲೇ 50 ಸಾವಿರ ರೂ. ನೀಡುವುದಾಗಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. ರೈತ ಸಂಘದ ಮುಖಂಡರು ಆಗಮಿಸಿ ಹಸಿರು ಶಾಲು ಹೊದಿಸಿ ಯಲಹಂಕ ಕ್ಷೇತ್ರದ ಹಲವು ಸಮಸ್ಯೆಗಳನ್ನು ವಿವರಿಸಿದರು. ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಹಲವಾರು ವರ್ಷಗಳಿಂದ ಇಲ್ಲೇ ಠಿಕಾಣಿ ಹೂಡಿದ್ದಾರೆ. ವರ್ಗಾವಣೆಯಾದರೂ ಇಲ್ಲೇ ಉಳಿದುಕೊಂಡಿದ್ದಾರೆ. 30 ಲಕ್ಷ ಲಂಚ ಕೇಳುತ್ತಾರೆ ಎಂದು ದೂರಿದರು. ಲಂಚ ಕೇಳಿದವರ ಹೆಸರನ್ನು ಬರೆದುಕೊಡುವಂತೆ ಸೂಚಿಸಿದರು.
|
11 |
+
ಮತ್ತೊಮ್ಮೆ ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಅದಾನಿ
|
12 |
+
ನಿವೇಶನ, ಹಕ್ಕುಪತ್ರಗಳಿಗಾಗಿ ಸಾಕಷ್ಟು ಅರ್ಜಿಗಳು ಸಲ್ಲಿಕೆಯಾದವು. ಬ್ಯಾಟರಾಯನಪುರ ಕ್ಷೇತ್ರದ ಶಾಸಕರೂ ಆದ ಕಂದಾಯ ಸಚಿವ ಕೃಷ್ಣಭೈರೇಗೌಡ, ಯಲಹಂಕ ಶಾಸಕರಾದ ಎಸ್. ಆರ್.ಶ್ರೀನಿವಾಸ್, ದಾಸರಹಳ್ಳಿಯ ಮುನಿರಾಜು, ವಿಧಾನಸಭೆ ಸದಸ್ಯ ಎಂ.ಆರ್.ಸೀತಾರಾಮು, ಯೋಜನಾ ಆಯೋಗದ ಉಪಾಧ್ಯಕ್ಷ ರಾಜೀವ್ಗೌಡ, ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಆಡಳಿತಾಕಾರಿ ರಾಕೇಶ್ಸಿಂಗ್, ಬಿಡಿಎ ಆಯುಕ್ತ ಜಯರಾಂ ಸೇರಿದಂತೆ ಹಲವು ಅಕಾರಿಗಳು ಉಪಸ್ಥಿತರಿದ್ದರು.
|
eesanje/url_46_271_1.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಲಕ್ಷ್ಮೀ ಹೆಬ್ಬಾಳ್ಕರ್ಗೆ ರಾಮ ಮಂದಿರ ಉದ್ಘಾಟನೆ ಆಮಂತ್ರಣ
|
2 |
+
ಬೆಳಗಾವಿ,ಜ.4- ಅಯೋಧ್ಯೆಯ ಶ್ರೀ ರಾಮಮೂರ್ತಿ ಪ್ರತಿಷ್ಠಾಪನೆಯಲ್ಲಿ ಭಾಗವಹಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ವಿಶ್ವ ಹಿಂದೂ ಪರಿಷತ್ನ ಪ್ರಮುಖರು ಆಮಂತ್ರಣ ನೀಡಿದ್ದಾರೆ.
|
3 |
+
ಬೆಳಗಾವಿಯಲ್ಲಿಂದು ವಿಶ್ವ ಹಿಂದೂ ಪರಿಷತ್ನ ಪ್ರಮುಖರಾದ ಪರಮೇಶ್ವರ್ ಹೆಗ್ಡೆ, ಶ್ರೀಕಾಂತ ಕದಂ, ಆನಂದ ಬುಕ್ಕೆಬಾಗ್, ಗುರುದತ್ ಕುಲಕರ್ಣಿ, ಸಚಿವೆ ಲಕ್ಮೀ ಹೆಬ್ಬಾಳ್ಕರ್, ವಿಧಾನಪರಿಷತ್ ಸದಸ್ಯ ಚನ್ನರಾಜ ಅಟ್ಟಿಹೊಳಿ, ಲಕ್ಮೀ ಹೆಬ್ಬಾಳ್ಕರ್ರ ಪುತ್ರ ಮೃನಾಲ ಹೆಬ್ಬಾಳ್ಕರ್ ಅವರನ್ನು ಭೇಟಿ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ್ದಾರೆ.
|
4 |
+
ಕ್ರಿಮಿನಲ್ಗಳನ್ನು ಬೆಂಬಲಿಸುವುದು ಕಾಂಗ್ರೆಸ್ ಸಂಸ್ಕøತಿ: ಆರ್.ಅಶೋಕ್
|
5 |
+
ಅಯೋಧ್ಯೆಯ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೇ, ಬೇಡವೇ ಎಂಬ ಕುರಿತಂತೆ ಕಾಂಗ್ರೆಸ್ನಲ್ಲಿ ಇನ್ನೂ ಚರ್ಚೆಗಳು ನಡೆಯುತ್ತಿವೆ. ಸಂಘ ಪರಿವಾರದ ಮುಖಂಡರು ಆಯ್ದ ಮುಖಂಡರಿಗೆ ಆಹ್ವಾನ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿಲ್ಲ ಎಂಬ ಆಕ್ಷೇಪಗಳು ಇವೆ. ಇದರ ನಡುವೆ ಸಚಿವೆ ಲಕ್ಮೀ ಹೆಬ್ಬಾಳ್ಕರ್ ಅವರಿಗೆ ಆಹ್ವಾನ ನೀಡಿರುವುದು ಕುತೂಹಲ ಕೆರಳಿಸಿದೆ.
|
eesanje/url_46_271_10.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಸೈಬರ್ ಕ್ರೈಂ ಭೇದಿಸುವಲ್ಲಿ ಹಿಂದೆ ಬಿದ್ದ ಬೆಂಗಳೂರು ಪೊಲೀಸರು..!
|
2 |
+
ಬೆಂಗಳೂರು,ಜ.4- ಕಳೆದ ವರ್ಷ ನಗರದಲ್ಲಿ ಸೈಬರ್ ಅಪರಾಧ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದ್ದು, ಉತ್ತರ ವಿಭಾಗದಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ನಗರದ 8 ವಿಭಾಗಗಳು ಹಾಗೂ ಒಂದು ಸೈಬರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021 ನೇ ಸಾಲಿನಲ್ಲಿ 6422 ಪ್ರಕರಣ ದಾಖಲಾದರೆ 2022ರಲ್ಲಿ 9940 ಹಾಗೂ 2023ಲ್ಲಿ 17623 ಪ್ರಕರಣಗಳು ದಾಖಲಾಗಿವೆ. 2022ಕ್ಕೆ ಹೋಲಿಸಿದರೆ ಸೈಬರ್ ಅಪರಾಧ ಪ್ರಕರಣಗಳು ಗಣನೀಯ ವಾಗಿ ಹೆಚ್ಚಳವಾಗಿವೆ.
|
3 |
+
ಉತ್ತರ ಭಾಗ ಮೊದಲನೇ ಸ್ಥಾನದಲ್ಲಿದ್ದು, ಅತಿ ಹೆಚ್ಚು ಅಂದರೆ 3260 ಪ್ರಕರಣಗಳು ಪೈಕಿ 238 ಪತ್ತೆಹಚ್ಚಿದರೆ, 2809 ಪ್ರಕರಣಗಳು ಬಾಕಿಯಿವೆ. ಆಗ್ನೇಯ ವಿಭಾಗ 2ನೇ ಸ್ಥಾನದಲ್ಲಿದ್ದು , 2674 ಪ್ರಕರಣಗಳ ಪೈಕಿ 298 ಪ್ರಕರಣವನ್ನ ಪತ್ತೆ ಹಚ್ಚಿದರೆ, 2319 ಪ್ರಕರಣಗಳು ಪತ್ತೆ ಕಾರ್ಯ ಬಾಕಿಯಿವೆ. ವೈಟ್ಫೀಲ್ಡ್ ವಿಭಾಗದ 3ನೇ ಸ್ಥಾನದಲ್ಲಿದ್ದು, 2562 ಪ್ರಕರಣಗಳ ಪೈಕಿ 55 ಪತ್ತೆಯಾದರೆ, 2394 ಪ್ರಕರಣಗಳು ಬಾಕಿಯಿವೆ.
|
4 |
+
75 ವರ್ಷದ ನಂತರ ಕಾಶ್ಮೀರ ಗಡಿ ಗ್ರಾಮಕ್ಕೆ ವಿದ್ಯುತ್ ಸಂಪರ್ಕ
|
5 |
+
2023 ನೇ ಸಾಲಿನಲ್ಲಿ ಕೇಂದ್ರ ವಿಭಾಗ 1126 ಪ್ರಕರಣ, ಪಶ್ಚಿಮ ವಿಭಾಗ 1941,ದಕ್ಷಿಣ 2094, ಪೂರ್ವ 1994, ಈಶಾನ್ಯ 1917 ಹಾಗೂ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ 55 ಪ್ರಕರಣಗಳು ದಾಖಲಾಗಿದ್ದು ಒಟ್ಟಾರೆ ಈ 9 ಪೊಲೀಸ್ ಠಾಣೆಗಳಲ್ಲಿ ಒಟ್ಟು 17,623 ಪ್ರಕರಣಗಳ ಪೈಕಿ 14,285 ಪ್ರಕರಣಗಳ ಪತ್ತೆ ಕಾರ್ಯ ಕ್ಷೀಣವಾಗಿದೆ.ಪ್ರಕರಣಗಳು ದಾಖಲಾಗಲು ಪ್ರಮುಖ ಕಾರಣವಂದರೆ ಸೈಬರ್ ಟಿಪ್ಲೈನ್, ಎನ್ಸಿಆರ್ಪಿ ಪೋರ್ಟಲ್, 112 ಮುಖಾಂತರ ದಾಖಲಾದ ದೂರುಗಳನ್ನು ಎಫ್ಐಆರ್ ದೂರುಗಳನ್ನು ಎಫ್ಐಆರ್ ಗಳನ್ನಾಗಿ ಪರಿವರ್ತಿಸಿರುವುದು.
|
6 |
+
ಜೊತೆಗೆ ಸಾರ್ವಜನಿಕರಲ್ಲಿ ಜಾಗೃತಿ ಮಾಡಲಾಗಿರುವ ಕಾರಣ, ಅಲ್ಲದೆ ಸಿನ್ ಪೊಲೀಸ್ ಠಾಣೆ ಹೊರತುಪಡಿಸಿ ನಗರದ ಎಲ್ಲಾ ಪೊಲೀಸ್ ಠಾಣೆಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತಿರುವುದೇ ದೂರುಗಳು ಹೆಚ್ಚಾಗಿ ದಾಖಲಾಗಲು ಕಾರಣವಾಗಿದೆ.
|
eesanje/url_46_271_11.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
‘ನನ್ನನ್ನೂ ಬಂಧಿಸಿ’ ಅಭಿಯಾನ ಆರಂಭಿಸಿದ ಬಿಜೆಪಿ
|
2 |
+
ಬೆಂಗಳೂರು, ಜ.4- ರಾಮಜನ್ಮ ಭೂಮಿಗಾಗಿ ಹೋರಾಟ ನಡೆಸಿದ ಕರಸೇವಕ ಶ್ರೀಕಾಂತ್ ಕುಲಕರ್ಣಿ ಬಂಧನದ ವಿರುದ್ದ ಬೀದಿಗಿಳಿದು ಹೋರಾಟ ನಡೆಸಿದ್ದ ಪ್ರತಿಪಕ್ಷ ಬಿಜೆಪಿ ಇದೀಗ ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ ಎಂಬ ಅಭಿಯಾನವನ್ನು ನಡೆಸುವ ಮೂಲಕ ಸರ್ಕಾರದ ವಿರುದ್ದ ಮತ್ತೊಂದು ಸುತ್ತಿನ ಸಮರಕ್ಕೆ ಸಜ್ಜಾಗಿದೆ.
|
3 |
+
ಬಿಜೆಪಿಯ ಶಾಸಕರು, ಮಾಜಿ ಶಾಸಕರು ಸೇರಿದಂತೆ ರಾಜ್ಯದ ನಾನಾ ಕಡೆ ರಾಮಜನ್ಮ ಭೂಮಿಗಾಗಿ ಅಂದು ಹೋರಾಟ ನಡೆಸಿದ ಕರಸೇವಕರು ಕೈಯಲ್ಲಿ ಬ್ಯಾನರ್ ಹಿಡಿದುಕೊಂಡು ನನ್ನನ್ನು ಬಂಸಿ ಸಿದ್ದರಾಮಯ್ಯ ಎಂಬ ಅಭಿಯಾನವನ್ನು ನಡೆಸಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಶಾಸಕ ವಿ.ಸುನಿಲ್ ಕುಮಾರ್ ಸದಾಶಿವನಗರ ಪೊಲೀಸ್ ಠಾಣೆ ಮುಂಭಾಗ ಏಕಾಂಗಿಯಾಗಿ ನನ್ನನ್ನು ಬಂಧಿಸಿ ಎಂದು ಪ್ರತಿಭಟನೆ ನಡೆಸಿದರೆ, ಅತ್ತ ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿ.ಟಿ.ರವಿ ಅವರು ನಗರದ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು.
|
4 |
+
ಈ ಮೂಲಕ ರಾಜ್ಯದ್ಯಾಂತ ಬರುವ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಮುಂದಾಗಿದ್ದು, ಹಂತ ಹಂತವಾಗಿ ಒಬ್ಬೊಬ್ಬರೇ ಪೊಲೀಸ್ ಠಾಣೆಗಳ ಮುಂದೆ ನಾನು ಕರಸೇವಕ, ನನ್ನನ್ನು ಬಂಧಿಸಬೇಕು ಎಂದು ಒತ್ತಾಯ ಮಾಡಲಿದೆ.
|
5 |
+
ಜಾಕ್ವೆಲಿನ್ -ಸುಕೇಶ್ ಜತೆಗಿನ ವಾಟ್ಸಾಫ್ ಸಂಭಾಷಣೆ ಬಹಿರಂಗ
|
6 |
+
ಸಾಮಾಜಿಕ ಜಾಲತಾಣಗಳ ಮೂಲಕ ಅಭಿಯಾನಕ್ಕೆ ಚಾಲನೆ ದೊರಕಿದ್ದು, ಆಡಳಿತರೂಢ ಕಾಂಗ್ರೆಸ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಗಳನ್ನು ಹಿಂದೂ ವಿರೋಧಿ ಎಂದು ಬಿಂಬಿಸುವ ಪ್ರಯತ್ನವನ್ನು ಬಿಜೆಪಿ ನಡೆಸಲಿದೆ. ರಾಮ ಮಂದಿರದ ಕರಸೇವಕ ನಾನು. ನನ್ನನ್ನು ಬಂಧಿಸಿ ಎಂದು ಧರಣಿ ನಡೆಸಿದರು. ಠಾಣೆಯ ಮುಂದೆ ಪ್ರತಿಭಟನೆಗೆ ಅವಕಾಶ ಇಲ್ಲದ ಕಾರಣ ಸುನಿಲ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದರು.ಪ್ರತಿಭಟನೆ ವೇಳೆ ಸುನೀಲ್ ಕುಮಾರ್ ಅವರು ನನ್ನನ್ನೂ ಬಂಧಿಸಿ ಎಂಬ ಬರಹವುಳ್ಳ ಕರಪತ್ರವನ್ನು ಹಿಡಿದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
|
7 |
+
31 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಎಂಬುವವರನ್ನು ಬಂಧನ ಮಾಡಲಾಗಿದೆ. ಇವರ ವಿರುದ್ಧ ಗಲಭೆ ದೊಂಬಿ, ಅಬಕಾರಿ ಕೇಸ, ಜೂಜಾಟ ಪ್ರಕರಣಗಳು ಇವೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಆದರೆ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಇವರ ಬಂಧನ ಏಕೆ ಎಂದು ಬಿಜೆಪಿ ಪ್ರಶ್ನಿಸುತ್ತಿದೆ.
|
8 |
+
ಹುಬ್ಬಳ್ಳಿಯಲ್ಲಿ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧನ ಮಾಡಿರುವ ವಿಚಾರವಾಗಿ ಬಿಜೆಪಿ ತೀವ್ರ ಪ್ರತಿಭಟನೆ ನಡೆಸಲು ಮುಂದಾಗಿದೆ. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು 48 ಗಂಟೆಗಳ ಗಡುವನ್ನು ಸರ್ಕಾರಕ್ಕೆ ನೀಡಿದ್ದಾರೆ.
|
eesanje/url_46_271_12.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಧಾರ್ಮಿಕ ಸಂಸ್ಥೆಗಳಿಗೆ ಏಕರೂಪ ವಿದ್ಯುತ್ ಶುಲ್ಕ ನಿಗದಿ
|
2 |
+
ಬೆಂಗಳೂರು,ಜ.4- ರಾಜ್ಯದ ಎಲ್ಲಾ ಧಾರ್ಮಿಕ ಸಂಸ್ಥೆಗಳು ಸರ್ಕಾರಿ ಸ್ವಾಮ್ಯದ ಆಯ್ದ ವಾಣಿಜ್ಯ ಸೇವೆಗಳಿಗೆ ಏಕರೂಪ ವಿದ್ಯುತ್ ಶುಲ್ಕ ದರವನ್ನು ನಿಗದಿಪಡಿಸಲಾಗಿದೆ. ಯಾವುದೇ ತಾರತಮ್ಯ ಇಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಕೆಲ ಸಂದೇಶಗಳು ಹರಿದಾಡುತ್ತಿದ್ದು, ಸಾಮಾನ್ಯ ನಾಗರಿಕರಿಗೆ 7.85 ಪೈಸೆ, ಮಸೀದಿ ಮತ್ತು ಚರ್ಚ್ಗೆ 1.85 ಪೈಸೆ ಶುಲ್ಕ ವಿಧಿಸಲಾಗುತ್ತಿದೆ. ಇದು ಜಾತ್ಯತೀತ ಭಾರತ ಎಂಬ ಸಂದೇಶ ಹರಿದಾಡುತ್ತಿದೆ.
|
3 |
+
ಇದಕ್ಕೆ ಸ್ಪಷ್ಟನೆ ನೀಡಲಾಗಿದ್ದು, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಸಮಿತಿ 2023 ರ ಏಪ್ರಿಲ್ 21 ರಂದು ನಿಗದಿಪಡಿಸಿರುವ ವಿದ್ಯುತ್ ದರದ ಪ್ರಕಾರ ಯಾವುದೇ ವ್ಯತ್ಯಾಸಗಳಿಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಹಾಗೂ ಸ್ಥಳೀಯ ಸಂಸ್ಥೆಗಳಿಂದ ನಡೆಸಲಾಗುವ ಆಸ್ಪತ್ರೆಗಳು, ಆರೋಗ್ಯ ಕೇಂದ್ರಗಳು, ವಿಕಲಚೇತನರು, ವಯೋವೃದ್ಧರು, ಅಂಗಾಂಗ ಊನರಿಗಾಗಿ ನಡೆಸಲಾಗುವ ಪುನರ್ವಸತಿ ಕೇಂದ್ರಗಳು, ಆಶ್ರಮಗಳು, ಶಾಲೆಗಳು, ವಿದ್ಯಾರ್ಥಿ ನಿಲಯಗಳು, ಏಡ್ಸ್ ಸೋಂಕಿತ ಚಿಕಿತ್ಸಾ ಕೇಂದ್ರಗಳು, ರೈಲ್ವೆ ಸಿಬ್ಬಂದಿಗಳ ಕ್ವಾರ್ಟಸ್ಗಳಿಗೆ ಏಕರೂಪದ ಶುಲ್ಕ ವಿಧಿಸಲಾಗಿದೆ.
|
4 |
+
ಜಾಕ್ವೆಲಿನ್ -ಸುಕೇಶ್ ಜತೆಗಿನ ವಾಟ್ಸಾಫ್ ಸಂಭಾಷಣೆ ಬಹಿರಂಗ
|
5 |
+
ಅದೇ ರೀತಿ ದೇವಸ್ಥಾನ, ಚರ್ಚ್, ಗುರುದ್ವಾರ, ಆಶ್ರಮ, ಮಠ, ಧಾರ್ಮಿಕ ಕೇಂದ್ರಗಳು, ದತ್ತಿ ಸಂಸ್ಥೆಗಳು, ಟ್ರಸ್ಟ್ ವತಿಯಿಂದ ನಡೆಯುವ ಆಸ್ಪತ್ರೆಗಳು, ಎಕ್ಸ್ರೇ ಘಟಕಗಳು, ಬಂೀಖಾನೆಗಳು, ಸರ್ಕಾರಿ ಸ್ವಾಮ್ಯದ ಶಾಲಾ-ಕಾಲೇಜುಗಳು, ಧಾರ್ಮಿಕ ದತ್ತಿ ಸಂಸ್ಥೆಯ ಸಾಂಸ್ಕøತಿಕ, ವೈಜ್ಞಾನಿಕ ಕೇಂದ್ರಗಳು, ಗ್ರಂಥಾಲಯಗಳು, ಪ್ರವಾಸಿ ಮಂದಿರಗಳು, ವಸ್ತು ಸಂಗ್ರಹಲಾಯಗಳು, ಐತಿಹಾಸಿಕ ಸ್ಮಾರಕಗಳು, ಸುಲಭ್ ಶೌಚಾಲಯಗಳು ಸೇರಿದಂತೆ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಏಕರೂಪ ವಿದ್ಯುತ್ ಶುಲ್ಕ ದರ ಇದೆ. ಯಾವುದರಲ್ಲೂ ವ್ಯತ್ಯಾಸವಿಲ್ಲ ಎಂದು ತಿಳಿಸಲಾಗಿದೆ.
|
6 |
+
ಪ್ರತಿ ತಿಂಗಳು ನಿಗದಿತ ವಿದ್ಯುತ್ ಶುಲ್ಕ, 50 ಕಿಲೋವ್ಯಾಟ್ವರೆಗೂ 1.10 ರೂ.ಗಳಿವೆ. 50 ಕಿಲೊವ್ಯಾಟ್ ಮೇಲ್ಪಟ್ಟ ಪ್ರತಿ ಯುನಿಟ್ಗೆ 2.10 ರೂ. ಮಾಸಿಕ ನಿಗದಿತ ಶುಲ್ಕವಿದೆ. 0 ಯಿಂದ 100 ಯುನಿಟ್ವರೆಗಿನ ವಿದ್ಯುತ್ ಶುಲ್ಕ ಪ್ರತಿ ಕಿಲೋ ವ್ಯಾಟ್ಗೆ 4.75 ಪೈಸೆ, 100 ಯುನಿಟ್ಗಿಂತ ಮೇಲ್ಪಟ್ಟ ವಿದ್ಯುತ್ ಬಳಕೆದಾರರಾಗಿದ್ದರೆ ಅವರು ಶೂನ್ಯದಿಂದಲೂ ಪ್ರತಿ ಯುನಿಟ್ಗೆ 7 ರೂ.ನಂತೆ ಶುಲ್ಕ ಪಾವತಿಸಬೇಕಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
|
7 |
+
ಪ್ರಸ್ತುತ ಗೃಹಜ್ಯೋತಿ ಯೋಜನೆ ಜಾರಿಯಲ್ಲಿದ್ದು, 200 ಯುನಿಟ್ವರೆಗೆ ವಿದ್ಯುತ್ ಬಳಕೆಗೆ ಅವಕಾಶ ಇರುವುದರಿಂದ 7 ರೂ. ನ ವಿದ್ಯುತ್ನ ಬರೆ ಜನಸಾಮಾನ್ಯರಿಗೆ ತಗುಲಿಲ್ಲ.
|
eesanje/url_46_271_2.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ನಂಬರ್ಪ್ಲೇಟ್ ಮರೆಮಾಚಿ ಸಂಚಾರ, ವಾಹನ ಜಪ್ತಿ
|
2 |
+
ಬೆಂಗಳೂರು, ಜ.4- ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆಯನ್ನು ಮರೆಮಾಚಿಕೊಂಡು ವಾಹನ ಚಲಾಯಿಸುತ್ತಿದ್ದ ಸವಾರನನ್ನು ವೈಟ್ಫೀಲ್ಡ್ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಜುನಾಥ್ ರಾವತ್ (24) ಬಂಧಿತ ಸವಾರ. ಈತ ಚಲಾಯಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಲಾಗಿದೆ.
|
3 |
+
ಡಿ.19ರಂದು ರಾತ್ರಿ 10.48ರ ಸುಮಾರಿನಲ್ಲಿ ವೈಟ್ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ವರ್ತೂರು ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆ ಮರೆಮಾಚಿಕೊಂಡು ಸವಾರ ಚಾಲನೆಮಾಡಿಕೊಂಡು ಹೋಗುತ್ತಿದ್ದ ಬಗ್ಗೆ ಸಾರ್ವಜನಿಕರೊಬ್ಬರು ಫೋಟೋ ತೆಗೆದು ನಗರ ಸಂಚಾರ ವಿಭಾಗದ ಸಾಮಾಜಿಕ ಜಾಲತಾಣದ ಟ್ವಿಟ್ಟರ್ ಅಕೌಂಟಿನಲ್ಲಿ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.
|
4 |
+
ಲಕ್ಷದ್ವೀಪದಲ್ಲಿ ಪ್ರಧಾನಿ ಮೋದಿ ಸ್ನೋರ್ಕೆಲಿಂಗ್: ಸಮುದ್ರ ತಟದಲ್ಲಿ ನಡಿಗೆ
|
5 |
+
ಅದರನ್ವಯ ಕಾರ್ಯಚರಣೆ ಕೈಗೊಂಡು ಪೊಲೀಸರು ವಾಹನ ಹಾಗೂ ಸವಾರನನ್ನು ವಶಕ್ಕೆ ಪಡೆದು ವರ್ತೂರು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಠಾಣೆಗೆ ನೀಡಿದ್ದು, ಸವಾರನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ಕಾನೂನು ರೀತಿ ಕ್ರಮ ಕೈಗೊಳ್ಳಲಾಗಿದೆ ಎಂದು ಪೂರ್ವ ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಆರ್.ಜೈನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
|
eesanje/url_46_271_3.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕ್ರಿಮಿನಲ್ಗಳನ್ನು ಬೆಂಬಲಿಸುವುದು ಕಾಂಗ್ರೆಸ್ ಸಂಸ್ಕøತಿ: ಆರ್.ಅಶೋಕ್
|
2 |
+
ಬೆಂಗಳೂರು, ಜ.4- ಕ್ರಿಮಿನಲ್ಗಳಿಗೆ ಬೆಂಬಲ ಮಾಡೋದು, ಜೈಲಿಂದ ಬಂದವರಿಗೆ ಸನ್ಮಾನ ಮಾಡೋದು ಕಾಂಗ್ರೆಸ್ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹುಬ್ಬಳ್ಳಿ ಕರಸೇವಕ ಶ್ರೀಕಾಂತ್ ಪೂಜಾರಿ ಎಂಬ ಬಡ ಆಟೋ ಚಾಲಕನನ್ನು ಬಂಧಿಸಿದ್ದಾರೆ. ಅವರ ಮೇಲೆ ಬಹಳಷ್ಟು ಪ್ರಕರಣ ಇವೆ. 1992ರಲ್ಲಿಯೇ ಅವರ ಮೇಲೆ ಕೇಸ್ ಹಾಕಲಾಗಿದೆ.
|
3 |
+
ಪದೇ ಪದೇ ಕೇಸ್ ಹಾಕಿದ್ದಾರೆ. ಜೈಲಿಗೆ ಕಳುಹಿಸುವ ಕೃತ್ಯ ಮಾಡಿದ್ದಾರೆಯೇ ಎಂದು ಪ್ರಶ್ನಿಸಿದರು.ಅಯೋಧ್ಯೆಯಲ್ಲಿ ರಾಮಮಂದಿರ ಕಾರ್ಯಕ್ಕೆ ಕಲ್ಲು ಹಾಕಬೇಕು, ಅಡಚಣೆ ಮಾಡ್ಬೇಕು ಎಂದು ಈ ರೀತಿ ಮಾಡುತ್ತಿದ್ದಾರೆ. 50 ಸಾವಿರ ಜನರ ಮೇಲೆ ಕೇಸ್ಗಳಿವೆ. ಬೆಂಗಳೂರಿನಲ್ಲೇ 10 ಸಾವಿರ ಕೇಸ್ಗಳಿವೆ. ಅವರನ್ನು ಯಾವ ಜೈಲಿಗೆ ಹಾಕುತ್ತೀರಾ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
|
4 |
+
ಆಯೋಧ್ಯೆ ರಾಮಮಂದಿರ ಉದ್ಘಾಟನೆ ವೇಳೆಯೇ ಶ್ರೀಕಾಂತ್ ಪೂಜಾರಿ ಬಂಧನ ಮಾಡಿದ್ದೇಕೆ? ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಶಶಿತರೂರ್ ಅವರ ಮೇಲೆ ಯಾವ ಕೇಸ್ ಇವೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೇಲೆ ಯಾವ ಕೇಸ್ ಇದೆ. ಸಚಿವ ನಾಗೇಂದ್ರ ಅವರ ಮೇಲೆ 23 ಕೇಸ್ಗಳಿವೆ ಎಂದು ಅಶೋಕ್ ವಾಗ್ದಾಳಿ ನಡೆಸಿದರು.
|
5 |
+
ಕ್ರಿಮಿನಲ್ಗೆ ರಾಮಭಕ್ತನ ಸೋಗು: ದಿನೇಶ್ ಗುಂಡೂರಾವ್
|
6 |
+
ಶಿವಕುಮಾರ್ ಕೇಸ್ ವೇಳೆ 5000 ಜನ ಧರಣಿ ಮಾಡಿದರು. ಅವರು ಜೈಲಿನಿಂದ ಬಂದಾಗ ಸಂಭ್ರಮಾಚರಣೆ ಮಾಡಿದಿರಿ. ಹಾಗಾದರೆ ನೀವು ಯಾರ ಪರವಾಗಿದ್ದೀರಾ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು. ನಿಮ್ಮ ಕಾರ್ಯಕರ್ತರನ್ನು ಈ ರೀತಿ ಜೈಲಿಗೆ ಹಾಕಿದ್ವಾ? ಆಯೋಧ್ಯೆಗೆ ಅಡೆತಡೆ ಮಾಡಲು ನೀವು ಹೊರಟಿದ್ದೀರಾ ಎಂದು ಆರೋಪಿಸಿದರು.
|
7 |
+
ಒಂದೆಡೆ ಸಿದ್ದರಾಮಯ್ಯ ಇನ್ನೊಂದೆಡೆ ಹರಿಪ್ರಸಾದ್ ಅವರು ರೈಲಿನಲ್ಲಿ ಹೋದರೆ ಗೋದ್ರಾ ರೀತಿ ಆಗುತ್ತದೆ ಅಂತಾರೆ. ಮಾಜಿ ಶಾಸಕ ಯತೀಂದ್ರ ಪಾಕ್, ಅಫ್ಘಾನಿಸ್ತಾನ ಅಂತಾರೆ, ನಿಮ್ಮ ಉದ್ದೇಶವೇನು ಎಂದು ಅವರು ಹರಿಹಾಯ್ದರು. ಹಿಂದೂ ಅನ್ನುವುದು ಒಂದು ಪರಂಪರೆ. ಹಿಂದೂ ರಾಷ್ಟ್ರ ಅನ್ನದೆ ಇನ್ನೇನು ಅನ್ನಬೇಕು. ರಾಜ್ಯದ ಜನ ಭಯಬೀತರಾಗಬೇಕು. ಯಾರೂ ಅಲ್ಲಿಗೆ ಹೋಗಬಾರದು ಎಂದು ಕುತಂತ್ರವನ್ನು ಮಾಡುತ್ತೀದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದರು.
|
8 |
+
ಲಕ್ಷದ್ವೀಪದಲ್ಲಿ ಪ್ರಧಾನಿ ಮೋದಿ ಸ್ನೋರ್ಕೆಲಿಂಗ್: ಸಮುದ್ರ ತಟದಲ್ಲಿ ನಡಿಗೆ
|
9 |
+
ರಾಮಮಂದಿರ ಹೋರಾಟ 500 ವರ್ಷದಿಂದ ನಡೆದಿದೆ. ಸಾವಿರಾರು ರಾಜರು ಹೋರಾಟ ಮಾಡಿದ್ದಾರೆ. ಲಕ್ಷಾಂತರ ಸೈನಿಕರು ಸಾವನ್ನಪ್ಪಿದ್ದಾರೆ. ಅವರೇನು ಬಿಜೆಪಿ ಕಾರ್ಯಕರ್ತರೇ ಎಂದು ಪ್ರಶ್ನಿಸಿದರು.ಸಿದ್ದರಾಮಯ್ಯ ದೇವಸ್ಥಾನ ಉದ್ಘಾಟನೆ ಮಾಡಿದ್ದಾರೆ. ಉದ್ಘಾಟಿಸಿದ ಮೇಲೆ ದೇಗುಲದ ಒಳಗೆ ಹೋಗಲ್ಲ. ಹೆಸ��ಲ್ಲೇ ರಾಮ ಇದ್ದಾನೆ ಅಂತಾರೆ. ದೇಗುಲದ ಒಳಗೆ ಹೋಗಿ ಪೂಜೆ ಮಾಡೋಕೆ ಹಿಂಜರಿಕೆ ಮಾಡುತ್ತಾರೆ ಎಂದು ಟೀಕಿಸಿದರು.
|
eesanje/url_46_271_4.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಕ್ರಿಮಿನಲ್ಗೆ ರಾಮಭಕ್ತನ ಸೋಗು: ದಿನೇಶ್ ಗುಂಡೂರಾವ್
|
2 |
+
ಬೆಂಗಳೂರು,ಜ.4- ಕ್ರಿಮಿನಲ್ ಹಿನ್ನೆಲೆ ಇರುವ ವ್ಯಕ್ತಿ ರಾಮಭಕ್ತನ ಸೋಗು ಹಾಕಿಕೊಂಡರೆ ಕಾನೂನು ಕ್ರಮ ಕೈಗೊಳ್ಳಬಾರದಾ ಎಂದು ಪ್ರಶ್ನಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಕ್ರಿಮಿನಲ್ ವ್ಯಕ್ತಿಯ ಪರವಾಗಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಸಂಸ್ಕಾರ ಇಲ್ಲವೇ ಎಂದು ಪ್ರಶ್ನಿಸಿದಾರೆ.
|
3 |
+
ಹಳೆಯ ಪ್ರಕರಣವೊಂದರಲ್ಲಿ ಹುಬ್ಬಳ್ಳಿ ಪೊಲೀಸರು ಬಂಧಿಸಿರುವ ಶ್ರೀಕಾಂತ್ ಪೂಜಾರಿ ಶ್ರೀ ರಾಮನಂತೆ ಆದರ್ಶ ಪುರುಷನೂ ಅಲ್ಲ, ಶ್ರೀ ಕೃಷ್ಣನಂತೆ ಅವತಾರ ಪುರುಷನೂ ಅಲ್ಲ. ಆತ ವೃತ್ತಿಪರ ಕ್ರಿಮಿನಲ್ ಅಷ್ಟೆ. ಶ್ರೀಕಾಂತ್ ಪೂಜಾರಿ ವಿರುದ್ಧ 1992 ರಿಂದ 2014 ರವರೆಗೆ ಹುಬ್ಬಳ್ಳಿಯ ವಿವಿಧ ಠಾಣೆಗಳಲ್ಲಿ ಸುಮಾರು 16 ಕ್ರಿಮಿನಲ್ ಪ್ರಕರಣ ದಾಖಲಾಗಿವೆ. ಇಂತಹ ಕ್ರಿಮಿನಲ್ ಹಿನ್ನೆಲೆಯಿರುವ ವ್ಯಕ್ತಿ ರಾಮಭಕ್ತ ಎಂಬ ಸೋಗು ಹಾಕಿಕೊಂಡರೆ ಕಾನೂನು ಕ್ರಮ ತೆಗೆದುಕೊಳ್ಳಬಾರದೆ ಎಂದು ಕೇಳಿದ್ದಾರೆ.
|
4 |
+
ಲಕ್ಷದ್ವೀಪದಲ್ಲಿ ಪ್ರಧಾನಿ ಮೋದಿ ಸ್ನೋರ್ಕೆಲಿಂಗ್: ಸಮುದ್ರ ತಟದಲ್ಲಿ ನಡಿಗೆ
|
5 |
+
ರಾಜಕೀಯ ಕಾರಣಗಳಿಗಾಗಿ ಕ್ರಿಮಿನಲ್ ಹಿನ್ನೆಲೆ ಹೊಂದಿರುವ ವ್ಯಕ್ತಿಯ ಬೆಂಬಲಕ್ಕೆ ನಿಂತಿರುವ ರಾಜ್ಯ ಬಿಜೆಪಿ ನಾಯಕರಿಗೆ ಮಾನ,ಮರ್ಯಾದೆ ಮತ್ತು ಸಂಸ್ಕಾರವೇ ಇಲ್ಲದಂತಾಗಿದೆ. ದೀರ್ಘಾವಧಿಯಿಂದ ಬಾಕಿ ಉಳಿದಿರುವ ಪ್ರಕರಣಗಳ ವಿಚಾರಣಾ ಪ್ರಮಾಣಪತ್ರವನ್ನು ನ್ಯಾಯಾಲಯ ಕೇಳಿದೆ. ಅದರಂತೆ ಪೊಲೀಸರು ಇತ್ಯರ್ಥವಾಗದ ಹಳೆಯ ಪ್ರಕರಣ ಸಂಬಂಧ ಶ್ರೀಕಾಂತ್ ಪೂಜಾರಿ ಹೆಸರಿದ್ದುದರಿಂದ ಬಂಧಿಸಿದ್ದಾರೆ. ನ್ಯಾಯಾಲಯದ ಸೂಚನೆಯ ಅನುಸಾರ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಈ ವಿಚಾರ ತಿಳಿದಿದ್ದರೂ ರಾಜ್ಯ ಬಿಜೆಪಿ ನಾಯಕರು ಕ್ರಿಮಿನಲ್ ಪರ ಪ್ರತಿಭಟನೆ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ.
|
eesanje/url_46_271_5.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮಕರ ಸಂಕ್ರಾಂತಿವರೆಗೆ ಜೆಡಿಎಸ್ ತಟಸ್ಥ
|
2 |
+
ಬೆಂಗಳೂರು,ಜ.4- ಮಕರ ಸಂಕ್ರಾಂತಿ ಹಬ್ಬದವರೆಗೂ ಜೆಡಿಎಸ್ ತಟಸ್ಥ ನಿಲುವನ್ನು ತಳೆಯಲಿದೆ.ಸಂಕ್ರಾಂತಿ ಹಬ್ಬದವರೆಗೂ ಯಾವುದೇ ಸಭೆ, ಸಮಾರಂಭ, ಕಾರ್ಯಕ್ರಮಗಳು ಪಕ್ಷದ ವತಿಯಿಂದ ನಿಗದಿಯಾಗಿಲ್ಲ. ಧನುರ್ಮಾಸ ಆಚರಣೆ ಸಂದರ್ಭದಲ್ಲಿ ಪಕ್ಷದಿಂದ ಯಾವುದೇ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿಲ್ಲ.
|
3 |
+
ಕೇಂದ್ರಸರ್ಕಾರ ಕೊಬ್ಬರಿಯ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿ ಅರಸೀಕೆರೆಯಿಂದ ತುಮಕೂರಿನವರೆಗೆ ನಡೆಸಲು ಉದ್ದೇಶಿಸಿದ ಪಾದಯಾತ್ರೆಯನ್ನು ಸದ್ಯಕ್ಕೆ ಕೈಬಿಟ್ಟಂತಾಗಿದೆ. ಈಗಾಗಲೇ ಲೋಕಸಭೆ ಚುನಾವಣೆ ಸಿದ್ಧತೆ ಆರಂಭಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಸ್ರ್ಪಧಿಸಲಿರುವ ಕ್ಷೇತ್ರಗಳ ಪಕ್ಷದ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದಾರೆ. ಲೋಕಸಭೆ ಚುನಾವಣೆಯ ಅಭ್ಯರ್ಥಿ ಆಯ್ಕೆ, ಬಿಜೆಪಿಯೊಂದಿಗಿನ ಮೈತ್ರಿ, ಚುನಾವಣಾ ಕಾರ್ಯತಂತ್ರ, ಪ್ರಚಾರದ ರೂಪುರೇಷದ ಬಗ್ಗೆ ಮಾತುಕತೆ ನಡೆಸಿ ಸಲಹೆ ಸೂಚನೆಯನ್ನು ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
|
4 |
+
ಲಕ್ಷದ್ವೀಪದಲ್ಲಿ ಪ್ರಧಾನಿ ಮೋದಿ ಸ್ನೋರ್ಕೆಲಿಂಗ್: ಸಮುದ್ರ ತಟದಲ್ಲಿ ನಡಿಗೆ
|
5 |
+
ಲೋಕಸಭಾ ಕ್ಷೇತ್ರಗಳ ಹಂಚಿಕೆ ಹಾಗೂ ಅಭ್ಯರ್ಥಿಗಳ ಆಯ್ಕೆ ಸಂಬಂಧ ಬಿಜೆಪಿ ನಾಯಕರೊಂದಿಗೆ ಕುಮಾರಸ್ವಾಮಿ ಮಾತುಕತೆ ನಡೆಸಿದ ನಂತರ ಅಂತಿಮಗೊಳಿಸಲಿದ್ದಾರೆ. ಇತ್ತೀಚೆಗೆ ದೆಹಲಿ ಭೇಟಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದರು. ಆದರೆ, ಕಾರ್ಯದೊತ್ತಡದಿಂದ ಕೇಂದ್ರ ಗೃಹಸಚಿವ ಅಮಿತ್ಶಾ ಅವರನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಾಗೂ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯದಲ್ಲಿ ಬಿಜೆಪಿ ನಾಯಕರು ಬ್ಯುಸಿಯಾಗಿದ್ದಾರೆ. ಹೀಗಾಗಿ ಚುನಾವಣಾ ಪೂರ್ವ ಮೈತ್ರಿ ವಿಚಾರದ ಬಗ್ಗೆ ಚರ್ಚೆ ಮಾಡಲು ಸಮಯಾವಕಾಶ ಸಿಗುತ್ತಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
|
6 |
+
ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಭಾಗಿಯಾಗಲಿ ದ್ದಾರೆ. ಅದೇ ಸಂದರ್ಭದಲ್ಲಿ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಕ್ಷೇತ್ರ ಹಂಚಿಕೆ ಅಂತಿಮಗೊಳಿಸುವ ಸಾಧ್ಯತೆಗಳಿವೆ.ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 4 ರಿಂದ 5 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ ಮಾಡಲು ಜೆಡಿಎಸ್ ಆಸಕ್ತಿ ವಹಿಸಿದೆ. ಉಳಿದ ಕ್ಷೇತ್ರಗಳನ್ನು ಮಿತ್ರ ಪಕ್ಷ ಬಿಜೆಪಿಗೆ ಬಿಟ್ಟುಕೊಡಲಿದೆ.
|
7 |
+
ಐಟಿ ಇಲಾಖೆಗೆ ಗುತ್ತಿಗೆದಾರರ ಮಾಹಿತಿ ನೀಡಲು ಅಡ್ಡಿಯಿಲ್ಲ: ಸತೀಶ್ ಜಾರಕಿಹೊಳಿ
|
8 |
+
ಲೋಕಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳು ಜಂಟಿಯಾಗಿ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಹೋರಾಟ ನಡೆಸಿ, ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕೆಂಬ ಗುರಿ ಹಾಕಿಕೊಂಡಿದೆ. ಜೆಡಿಎಸ್ ಪ್ರಾಬಲ್ಯ ಹೆಚ್ಚಾಗಿರುವ ಹಾಸನ, ಮಂಡ್ಯ, ತುಮಕೂರು ಹಾಗೂ ಕೋಲಾರ ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಬಿಜೆಪಿ ವರಿಷ್ಠರನ್ನು ಕೋರಿದ್ದಾರೆ.
|
9 |
+
ಈ ಕ್ಷೇತ್ರಗಳಿಗೆ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಆಯಾ ಕ್ಷೇತ್ರದ ಸ್ಥಳೀಯ ಮುಖಂಡರ ಅಭಿಪ್ರಾಯವನ್ನು ಕುಮಾರಸ್ವಾಮಿ ಪಡೆದುಕೊಂಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
|
eesanje/url_46_271_6.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ರಾಜ್ಯದಲ್ಲಿ 3 ದಿನ ಮೋಡ ಕವಿದ ವಾತಾವರಣ
|
2 |
+
ಬೆಂಗಳೂರು, ಜ.4- ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ. ಮುಂದಿನ 3 ದಿನಗಳ ಕಾಲ ಕೆಲವೆಡೆ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
|
3 |
+
ಅರಬ್ಬಿಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಕರಾವಳಿ ಜಿಲ್ಲೆಗಳು ಮಲೆನಾಡಿನಲ್ಲಿ ಚದುರಿದಂತೆ ಮಳೆಯಾಗಲಿದೆ. ಅದೇ ರೀತಿ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಹಗುರ ಮಳೆ ನಿರೀಕ್ಷಿಸಬಹುದಾಗಿದೆ ಎಂದು ಹೇಳಿದ್ದಾರೆ.
|
4 |
+
ಹದಿನೈದನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಭಾರೀ ಅನ್ಯಾಯ: ಸಿದ್ದರಾಮಯ್ಯ ಕಿಡಿ
|
5 |
+
ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದೆ. ಆದರೆ ಭಾರಿ ಮಳೆಯಾಗುವ ಮುನ್ಸೂಚನೆ ಇಲ್ಲ. ಆದರೆ ಕೆಲವೆಡೆ ಮಾತ್ರ ಹಗುರದಿಂದ ಸಾಧಾರಣ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದ ಬಹುತೇಕ ಭಾಗದಲ್ಲಿ ಒಣಹವೆ ಮುಂದುವರೆಯಲಿದೆ. ಹೀಗಾಗಿ ಚಳಿಯ ಪ್ರಮಾಣವು ಹೆಚ್ಚಾಗಿ ಕಂಡುಬರಲಿದೆ ಎಂದು ಅವರು ಮಾರ್ಗಸೂಚಿ ನೀಡಿದ್ದಾರೆ.
|
eesanje/url_46_271_7.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಲೋಕಸಭಾ ಚುನಾವಣೆಗೆ `ಕೈ’ ತಯಾರಿ
|
2 |
+
ಬೆಂಗಳೂರು,ಜ.4-ಲೋಕಸಭೆ ಚುನಾವಣೆ ತಯಾರಿ, ನಿಗಮ ಮಂಡಳಿ ನೇಮಕಾತಿ, ಭಾರತ್ ನ್ಯಾಯ ಯಾತ್ರೆ ಸೇರಿದಂತೆ ರಾಜ ಕೀಯದ ನಾನಾ ರೀತಿಯ ವಿದ್ಯಮಾನಗಳ ಕುರಿತು ಇಂದು ದೆಹಲಿಯಲ್ಲಿ ನಡೆದ ಕಾಂಗ್ರೆಸ್ನ ಮಹ ತ್ವದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದಾರೆ.
|
3 |
+
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಲವಾರು ಮಹತ್ವದ ವಿಚಾರಗಳು ಚರ್ಚೆಯಾಗಿವೆ. ಇದರಲ್ಲಿ ಭಾಗವಹಿಸಲು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ.ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಇಂಡಿಯಾ ರಾಜಕೀಯ ಕೂಟದ ಇತರ ಪಕ್ಷಗಳೊಂದಿಗೆ ಸ್ಥಾನ ಹೊಂದಾಣಿಕೆ ಕುರಿತಂತೆ ನಿರ್ಧಾರ ತೆಗೆದುಕೊಳ್ಳಲು ಕಾಂಗ್ರೆಸ್ ಮಹತ್ವದ ಸಭೆ ನಡೆಸಿದೆ.
|
4 |
+
ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಲ್ಲೂ ವೀಕ್ಷಕರಾಗಿದ್ದ ಆಯಾ ಸಚಿವರು ಸಭೆ ನಡೆಸಿ ಅಭಿಪ್ರಾಯ ಕ್ರೂಢೀಕರಿಸಿ ಮುಚ್ಚಿದ ಲಕೋಟೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವರದಿ ಸಲ್ಲಿಸಿದ್ದಾರೆ. ಆ ವರದಿಯೊಂದಿಗೆ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಸಚಿವರು ನೀಡಿರುವ ಸಂಭವನೀಯ ಪಟ್ಟಿಯಲ್ಲಿ ಪ್ರತಿ ಕ್ಷೇತ್ರಕ್ಕೂ ತಲಾ ಮೂರು ಮಂದಿ ಆಕಾಂಕ್ಷಿಗಳ ಹೆಸರುಗಳಿವೆ. ಕೆಲವು ಕ್ಷೇತ್ರಗಳಿಗೆ ಒಂದೇ ಹೆಸರನ್ನು ಶಿಫಾರಸ್ಸು ಮಾಡಲಾಗಿದೆ. ಅದನ್ನು ರಾಜ್ಯ ನಾಯಕರು ಹೈಕಮಾಂಡ್ಗೆ ಸಲ್ಲಿಸಲಿದ್ದಾರೆ.
|
5 |
+
ಐಟಿ ಇಲಾಖೆಗೆ ಗುತ್ತಿಗೆದಾರರ ಮಾಹಿತಿ ನೀಡಲು ಅಡ್ಡಿಯಿಲ್ಲ: ಸತೀಶ್ ಜಾರಕಿಹೊಳಿ
|
6 |
+
ಈ ಸಂಭವನೀಯ ಪಟ್ಟಿ ಆಧರಿಸಿ ಹೈಕಮಾಂಡ್ ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸಲಿದೆ. ರಾಜ್ಯ ಕಾಂಗ್ರೆಸ್ ವತಿಯಿಂದಲೂ 2-3 ಸಮಾಲೋಚನಾ ಸಭೆ ನಡೆಯುವ ನಿರೀಕ್ಷೆಗಳಿವೆ. ರಾಜ್ಯದಲ್ಲಿ ಕನಿಷ್ಟ 22 ಕ್ಷೇತ್ರಗಳಲ್ಲಿ ಗೆಲ್ಲಲೇಬೇಕು ಎಂದು ಪಣ ತೊಟ್ಟಿರುವ ರಾಜ್ಯ ನಾಯಕರು ಅದಕ್ಕೆ ಪೂರ್ವ ತಯಾರಿಗಳನ್ನು ಕೈಗೊಳ್ಳುತ್ತಿದ್ದಾರೆ.
|
7 |
+
ಭಾರತ್ ನ್ಯಾಯ ಯಾತ್ರೆ ಪೂರ್ವ ತಯಾರಿ:ಕಾಂಗ್ರೆಸ್ ನಾಯಕ ರಾಹುಲ್ಗಾಂ ಜ.14 ರಿಂದ ಮಾರ್ಚ್ 20 ರವರೆಗೆ ಮಣಿಪುರದಿಂದ ಮುಂಬೈವರೆಗೆ 6,200 ಕಿ.ಮೀ. ದೂರ ಕೈಗೊಳ್ಳಲಿರುವ ಭಾರತ್ ನ್ಯಾಯ ಯಾತ್ರೆ ಪೂರ್ವ ತಯಾರಿ ಬಗ್ಗೆಯೂ ಮಹತ್ವದ ಚರ್ಚೆಗಳಾಗಿವೆ. ರಾಹುಲ್ಗಾಂಧಿಯವರ ಯಾತ್ರೆ 14 ರಾಜ್ಯಗಳ 85 ಜಿಲ್ಲೆಗಳಲ್ಲಿ ಹಾದು ಹೋಗಲಿದೆ.
|
8 |
+
75 ವರ್ಷದ ನಂತರ ಕಾಶ್ಮೀರ ಗಡಿ ಗ್ರಾಮಕ್ಕೆ ವಿದ್ಯುತ್ ಸಂಪರ್ಕ
|
9 |
+
ಕರ್ನಾಟಕದ ನೆರೆಯ ಮಹಾರಾಷ್ಟ್ರದವರೆಗೂ ಯಾತೆ ತಲುಪಲಿದೆ. ಭಾರತ್ ಜೋಡೊ ಯಾತ್ರೆ ಬಳಿಕ ನಡೆಯುತ್ತಿರುವ 2ನೇ ಬೃಹತ್ ಯಾತ್ರೆಯನ್ನು ಯಶಸ್ಸುಗೊಳಿಸಲು ಹೈಕಮಾಂಡ್ ವಿವಿಧ ರಾಜ್ಯಗಳ ಸಹಕಾರ ಕೋರಿದೆ.ಅದರ ಅನುಸಾರ ರಾಜ್ಯನಾಯಕರು ಇಂದು ಚರ್ಚೆ ನಡೆಸಿದ್ದಾರೆ.
|
eesanje/url_46_271_8.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಹದಿನೈದನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಭಾರೀ ಅನ್ಯಾಯ: ಸಿದ್ದರಾಮಯ್ಯ ಕಿಡಿ
|
2 |
+
ಬೆಂಗಳೂರು,ಜ.4- ಹದಿನೈದನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಭಾರೀ ಅನ್ಯಾಯವಾಗುತ್ತಿದೆ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸರಣಿ ಪೋಸ್ಟ್ಗಳ ಮೂಲಕ ಕೇಂದ್ರದ ಅನ್ಯಾಯವನ್ನು ವಿವರಿಸಿರುವ ಅವರು, ವರ್ಷದಿಂದ ವರ್ಷಕ್ಕೆ ಕೇಂದ್ರದ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಭಾರೀ ಅನ್ಯಾಯ, ಗುಜರಾತಿಗೆ ವಿಪರೀತ ಏರಿಕೆ ನೀಡಲಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಕನ್ನಡಿಗರ ಪಾಲು ಕಡಿತಗೊಳ್ಳುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
|
3 |
+
ಜಿಎಸ್ಟಿ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲೇ 2 ನೇ ಸ್ಥಾನದಲ್ಲಿದೆ. ಆದರೆ ಅನುದಾನ ಪಡೆಯುವುದರಲ್ಲಿ ಕೊನೆಯ ಸಾಲಿನಲ್ಲಿದೆ. ಒಂದು ರೂಪಾಯಿ ತೆರಿಗೆ ಪಾವತಿಸಿದರೆ ಕೇಂದ್ರದಿಂದ ರಾಜ್ಯಕ್ಕೆ ಮರಳಿ ದೊರೆಯುತ್ತಿರುವುದು 15 ಪೈಸೆ ಮಾತ್ರ. ಅದೇ ಬಿಹಾರಕ್ಕೆ 7.06 ಪೈಸೆ, ಉತ್ತರ ಪ್ರದೇಶಕ್ಕೆ 2.73 ಪೈಸೆ ದೊರೆಯುತ್ತಿದೆ. ತೆರಿಗೆ ಪಾಲಿನಲ್ಲಿ ಒಟ್ಟು ಲೆಕ್ಕಾಚಾರದ ಪ್ರಕಾರ ಬಿಹಾರಕ್ಕೆ 1,02,737 ಕೋಟಿ ರೂ.ಗಳಾಗಿದ್ದು, ಶೇ.10.06 ರಷ್ಟು ಪಾಲು ಹೊಂದಿದೆ.
|
4 |
+
ಸೈಬರ್ ಕ್ರೈಂ ಭೇದಿಸುವಲ್ಲಿ ಹಿಂದೆ ಬಿದ್ದ ಬೆಂಗಳೂರು ಪೊಲೀಸರು..!
|
5 |
+
ಉತ್ತರ ಪ್ರದೇಶ 1,83,237 ಕೋಟಿ ರೂ.ಗಳ ಜೊತೆ ಶೇ.17.94 ರಷ್ಟು ಪಾಲು ಪಡೆದರೆ, ಕರ್ನಾಟಕ 37,257 ಕೋಟಿ ರೂ. ಮಾತ್ರ ಪಡೆದುಕೊಂಡು ಶೇ.3.64 ರಷ್ಟು ಪಾಲು ಹೊಂದಿದೆ.15ನೇ ಹಣಕಾಸು ಆಯೋಗದ ಶಿಫಾರಸ್ಸಿನ ಪ್ರಕಾರ 5,495 ಕೋಟಿ ರೂ. ವಿಶೇಷ ಅನುದಾನಕ್ಕೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಲ್ಲು ಹಾಕಿದ್ದಾರೆ.
|
6 |
+
14 ನೇ ಹಣಕಾಸು ಆಯೋಗದಲ್ಲಿ ಶೇ. 4.71 ರಷ್ಟು ಪಾಲು ದೊರೆತಿತ್ತು. 15 ನೇ ಹಣಕಾಸು ಆಯೋಗದ ವೇಳೆಗೆ ಅದು ಶೇ.3.64 ರಷ್ಟಾಗಿದ್ದು, ಶೇ.1.07 ರಷ್ಟು ಕಡಿಮೆಯಾಗಿದೆ. ಇದರಿಂದ 3 ವರ್ಷಗಳಲ್ಲಿ ರಾಜ್ಯಕ್ಕೆ 26,140 ಕೋಟಿ ರೂ.ಗಳಷ್ಟು ನಷ್ಟವಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
|
7 |
+
ಇದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶಗಳು ಕೇಳಿಬಂದಿವೆ. ರಾಜ್ಯದಲ್ಲಿ ಮಂದಿರ, ಮಸೀದಿ ಎಂದು ಗದ್ದಲ ಮಾಡಲಾಗುತ್ತಿದೆ. ಆದರೆ ಕೇಂದ್ರದಿಂದಾಗುತ್ತಿರುವ ತೆರಿಗೆ ಅನ್ಯಾಯ ಹಾಗೂ ಸಂಪನ್ಮೂಲ ಕೊರತೆಯ ಬಗ್ಗೆ ಚರ್ಚೆಗಳಾಗುತ್ತಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ಕೇಳಿಬಂದಿವೆ.
|
eesanje/url_46_271_9.txt
ADDED
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಐಟಿ ಇಲಾಖೆಗೆ ಗುತ್ತಿಗೆದಾರರ ಮಾಹಿತಿ ನೀಡಲು ಅಡ್ಡಿಯಿಲ್ಲ: ಸತೀಶ್ ಜಾರಕಿಹೊಳಿ
|
2 |
+
ಬೆಂಗಳೂರು,ಜ.4- ರಾಜ್ಯದ ಗುತ್ತಿಗೆದಾರರ ಮಾಹಿತಿಯನ್ನು ಆದಾಯ ತೆರಿಗೆ ಇಲಾಖೆ ಕೇಳಿದರೆ ಅದನ್ನು ಒದಗಿಸಲು ಯಾವುದೇ ಅಡಚಣೆ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದು ಸರ್ಕಾರದ ದಾಖಲೆ. ಮುಚ್ಚಿಡುವ ಅಗತ್ಯವಿಲ್ಲ. 10 ರೂ. ಪಾವತಿಸಿ ಆರ್ಟಿಐ ಅರ್ಜಿ ಹಾಕಿದರೆ ದಾಖಲೆ ಕೊಡುತ್ತೇವೆ. ಇನ್ನು ಆದಾಯ ತೆರಿಗೆ ಸರ್ಕಾರಿ ಸಂಸ್ಥೆ ಕೇಳಿದರೆ ಕೊಡಲ್ಲ ಎಂದು ಹೇಳಲು ಸಾಧ್ಯವೇ ಎಂದು ಪ್ರಶ್ನಿಸಿದರು.
|
3 |
+
ಆದಾಯ ತೆರಿಗೆ ಇಲಾಖೆ 6 ಬಾರಿ ಪತ್ರ ಬರೆದಿರುವುದು ನನ್ನ ಗಮನಕ್ಕೆ ಬಂದಿಲ್ಲ. ಇದು ಸಚಿವರ ಅಥವಾ ಸರ್ಕಾರದವರೆಗೂ ಬರುವ ವಿಚಾರವಲ್ಲ. ಅಧಿಕಾರಿಗಳು ನಿರ್ಧಾರ ತೆಗೆದುಕೊಂಡು ಮಾಹಿತಿ ಒದಗಿಸುತ್ತಾರೆ ಎಂದರು.
|
4 |
+
ಇತ್ತೀಚೆಗೆ ತಾವು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಟ್ಕರಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದಲ್ಲಿ ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ 20 ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೇರಿಸುವ ಸಂಬಂಧ ಪಟ್ಟಂತೆ ಚರ್ಚೆ ನಡೆಸಿದ್ದೇವೆ. ಭೂ ಸ್ವಾೀಧಿನ, ಅರಣ್ಯ ಪ್ರದೇಶದ ಪೂರ್ವಾನುಮತಿ, ನಿರಪೇಕ್ಷಣಾ ಪತ್ರ ಸೇರಿದಂತೆ ಹಲವು ರೀತಿಯ ತೊಡಕುಗಳು ಬಾಕಿ ಉಳಿದಿವೆ. ಅವುಗಳನ್ನು 3 ತಿಂಗಳಲ್ಲಿ ಬಗೆಹರಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದಾಗಿ ಸತೀಶ್ ಜಾರಕಿಹೊಳಿ ತಿಳಿಸಿದರು.
|
5 |
+
ಬೆಂಗಳೂರು ನಗರದಲ್ಲಿ ಸುರಂಗ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಆಸಕ್ತಿ ಹೊಂದಿದೆ. ರಾಜ್ಯಸರ್ಕಾರ ನಿರಪೇಕ್ಷಣಾ ಪತ್ರ ನೀಡಿದ್ದೇ ಆದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೇ ಸುರಂಗ ನಿರ್ಮಾಣಕ್ಕೆ ಮುಂದಾಗಲಿದೆ. ಆದರೆ ಯಾರಿಂದ ಕಾಮಗಾರಿ ನಡೆಸಬೇಕೆಂಬುದು ನಿರ್ಣಯವಾಗಿಲ್ಲ. ಸದ್ಯಕ್ಕೆ ಬಿಬಿಎಂಪಿ ಅದರ ಮೇಲುಸ್ತುವಾರಿಯನ್ನು ವಹಿಸುತ್ತಿದೆ. ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
|
6 |
+
75 ವರ್ಷದ ನಂತರ ಕಾಶ್ಮೀರ ಗಡಿ ಗ್ರಾಮಕ್ಕೆ ವಿದ್ಯುತ್ ಸಂಪರ್ಕ
|
7 |
+
ಹುಬ್ಬಳ್ಳಿಯಲ್ಲಿನ ಕರಸೇವಕನ ಬಂಧನ ಪ್ರಕರಣದಲ್ಲಿ ರಾಜಕೀಯ ಅನಗತ್ಯ. ಬಾಕಿ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನನ್ನು ಬಿಡುಗಡೆ ಮಾಡಲು ಬಿಜೆಪಿ ಗಡುವು ನೀಡಿದರೆ ಅದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಏಕೆಂದರೆ ಅದು ಇನ್ನೇನ್ನಿದ್ದರೂ ಕಾನೂನಾತ್ಮಕ ಹೋರಾಟ ನಡೆಯಬೇಕೇ ಹೊರತು, ರಾಜಕೀಯ ಸಂಘರ್ಷದಿಂದ ಪ್ರಯೋಜನವಾಗುವುದಿಲ್ಲ ಎಂದರು.
|
8 |
+
ತಾನು ರಾಮಸೇವಕ. ತನ್ನನ್ನು ಬಂಧಿಸಿ ಎಂದು ಬಿಜೆಪಿಯವರು ಹೇಳುತ್ತಿರುವುದು ಅಪ್ರಸ್ತುತ ವಿಚಾರ. ಕ್ರಿಮಿನಲ್ಗಳಾಗಿದ್ದರೆ, ತಪ್ಪು ಮಾಡಿದರೆ ಮಾತ್ರ ಬಂಧಿ���ಲಾಗುತ್ತದೆ. ಅನಗತ್ಯವಾಗಿ ಯಾರನ್ನೂ ಬಂಧಿಸುವ ಅಗತ್ಯವಿಲ್ಲ. ಬಿಜೆಪಿಯವರ ಹೋರಾಟಗಳೇ ಹಾಸ್ಯಾಸ್ಪದ ಎಂದರು.
|
9 |
+
ಅಯೋಧ್ಯೆಯಲ್ಲಿ ರಾಮಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ತೆರಳುವವರಿಗೆ ಸೂಕ್ತ ರಕ್ಷಣ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿರುವುದರಲ್ಲಿ ತಪ್ಪಿಲ್ಲ. ಜ.22 ರವರೆಗೂ ಅಯೋಧ್ಯೆಗೆ ಹೋಗಿಬರುವವರ ಸಂಖ್ಯೆ ಹೆಚ್ಚಿರುತ್ತದೆ. ಧ್ವಜ ಹಾಕಿಕೊಂಡು ಮೆರವಣಿಗೆ ನಡೆಸಿ ಅಯೋಧ್ಯೆಯತ್ತ ಪ್ರಯಾಣ ಮಾಡುತ್ತಾರೆ. ಈ ಸಂದರ್ಭದಲ್ಲಿ ಸಂಘರ್ಷಗಳಾಗಬಹುದು. ಹೀಗಾಗಿ ಹೆಚ್ಚಿನ ಸಮಸ್ಯೆಗಳಾಗದಂತೆ ಪೊಲೀಸರು ಮುಂಜಾಗ್ರತೆ ವಹಿಸಬೇಕಿದೆ ಎಂದು ಹೇಳಿದರು.
|
10 |
+
ರಾಮಮಂದಿರ ಒಂದು ಪಕ್ಷಕ್ಕೆ ಸೇರಿದ್ದಲ್ಲ. ಆದರೆ ಒಂದೇ ಪಕ್ಷ ಮುಂದಾಳತ್ವ ವಹಿಸುವುದ ರಿಂದ ಸಹಜವಾಗಿಯೇ ರಾಜಕೀಯ ಲಾಭ ಪಡೆಯುವ ಹುನ್ನಾರ ನಡೆದಿದೆ ಎಂಬ ಆರೋಪಗಳು ಕೇಳಿಬರುತ್ತವೆ. ಅದರ ಬದಲು ರಾಮ ಸಮಿತಿಯವರು ಎಲ್ಲಾ ಪಕ್ಷದವರ ವಿಶ್ವಾಸ ತೆಗೆದುಕೊಂಡು ಮುನ್ನಡೆದರೆ ಪಕ್ಷಾತೀತವಾಗಿರಲಿದೆ ಎಂದರು. ರಾಮಮೂರ್ತಿ ಉದ್ಘಾಟನೆಗೆ ಆಯ್ದ ವ್ಯಕ್ತಿಗಳಿಗೆ ಆಹ್ವಾನ ನೀಡಿದ್ದಾರೆ. ಅಲ್ಲಿಗೆ ಹೋಗುವವರಿಗೆ ಆಹ್ವಾನದ ಅಗತ್ಯವೂ ಇಲ್ಲ, ಆಸಕ್ತಿ ಇರುವವರು ಹೋಗಬಹುದು. ತಾವು ತಮ್ಮ ಊರಿನ ರಾಮ ಮಂದಿರದಲ್ಲಿ ಪೂಜೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು.
|
11 |
+
ಸೈಬರ್ ಕ್ರೈಂ ಭೇದಿಸುವಲ್ಲಿ ಹಿಂದೆ ಬಿದ್ದ ಬೆಂಗಳೂರು ಪೊಲೀಸರು..!
|
12 |
+
ರಾಮ ಮಂದಿರ ಪೂರ್ತಿಯಾಗದೇ ಮೂರ್ತಿ ಪ್ರತಿಷ್ಠಾಪನೆಯಾಗುತ್ತಿರುವುದರ ಬಗ್ಗೆ ಪ್ರಶ್ನೆ ಮಾಡಿದರೆ ಹಿಂದೂ ವಿರೋಧಿ ಎಂದ ಆರೋಪ ಪಟ್ಟಿ ಕಟ್ಟುತ್ತಾರೆ. ಹೀಗಾಗಿ ತಾವು ಈ ವಿಷಯದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.
|
13 |
+
ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ಕಾರ್ಯಕರ್ತರ ಸ್ಪರ್ಧೆಗೆ ಅವಕಾಶ ಮಾಡಿಕೊಡಲಾಗುವುದು. ತಮ್ಮ ಕುಟುಂಬದಿಂದ ಯಾರೂ ಸ್ಪರ್ಧೆ ಮಾಡುವುದಿಲ್ಲ. ಇಂದು ದೆಹಲಿಯಲ್ಲಿ ನಡೆಯುವ ಸಭೆಯ ಬಳಿಕ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದುನೋಡುತ್ತಿದ್ದೇವೆ. ಸಚಿವರು ಸ್ಪರ್ಧೆ ಮಾಡಬೇಕು ಎಂದಾದರೆ ಪಕ್ಷದ ಆದೇಶವನ್ನು ಪಾಲನೆ ಮಾಡುತ್ತೇವೆ ಎಂದು ಹೇಳಿದರು.
|
eesanje/url_46_272_1.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿ ಹಿಂದೂಗಳಿಗೆ ಅಪಮಾನ ಮಾಡುತ್ತಿದೆ : ಸಚಿವ ರಾಜಣ್ಣ
|
2 |
+
ತುಮಕೂರು,ಜ.4- ಹಿಂದುತ್ವವನ್ನು ದುರುಪಯೋಗಪಡಿಸಿಕೊಂಡು ಬಿಜೆಪಿ ಹಿಂದೂಗಳಿಗೆ ಅಪಮಾನ ಮಾಡುತ್ತಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಬಂಧಿತ ಕರಸೇವಕನ ವಿರುದ್ಧ ಮಟ್ಕಾ, ದೊಂಬಿ, ನಕಲಿ ಮದ್ಯಮಾರಾಟ ಸೇರಿದಂತೆ ವಿವಿಧ ಪ್ರಕರಣಗಳು ದಾಖಲಾಗಿವೆ. ಆತನ ವಿರುದ್ಧ ಹಲವಾರು ವರ್ಷಗಳಿಂದಲೂ ಕಾಲಕಾಲಕ್ಕೆ ಪ್ರಕರಣಗಳು ದಾಖಲಾಗಿವೆ. ಸುದೀರ್ಘ ಕಾಲದಿಂದ ನೆನೆಗುದಿಯಲ್ಲಿದ್ದ ಪ್ರಕರಣವನ್ನು ಇತ್ಯರ್ಥಪಡಿಸುವ ಸಲುವಾಗಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
|
3 |
+
ಇಂತಹ ಆರೋಪಿಯನ್ನು ರಕ್ಷಣೆ ಮಾಡಲು ಹಿಂದುತ್ವವವನ್ನು ಬಳಕೆ ಮಾಡುತ್ತಿರುವುದು ಶೋಭೆಯಲ್ಲ ಎಂದರು. ಬಿಜೆಪಿಯವರು ಕ್ಷುಲ್ಲಕ ವಿಚಾರವನ್ನು ರಾಷ್ಟ್ರದ ಸಮಸ್ಯೆ ಎಂಬಂತೆ ಚರ್ಚೆ ಮಾಡುತ್ತಿದ್ದಾರೆ. ತಪ್ಪು ಮಾಡಿದವರನ್ನ ಶಿಕ್ಷಿಸಲು ಅಡ್ಡಿಪಡಿಸುವ ಮೂಲಕ ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
|
4 |
+
ಬ್ಲಾಕ್ಮೇಲೆ ಮಾಡಿದ ಮಾಜಿ ಮಾಡೆಲ್ ಹತ್ಯೆ
|
5 |
+
ಹಿಂದುತ್ವ ಮತ್ತು ಶ್ರೀರಾಮನನ್ನ ಬಿಜೆಪಿಯವರು ಗುತ್ತಿಗೆ ತೆಗೆದುಕೊಂಡಿಲ್ಲ. ಪದೆಪದೆ ರಾಜ್ಯಸರ್ಕಾರವನ್ನು ಹಿಂದುತ್ವದ ವಿರೋಧಿ ಎಂದು ಬಿಂಬಿಸುವುದು ಖಂಡನೀಯ. ರಾಜಕಾರಣಕ್ಕಾಗಿ ಹಿಂದುತ್ವವನ್ನು ಬಳಸಿಕೊಂಡು ಹಿಂದೂಗಳಿಗೆ ಅಪಮಾನ ಮಾಡುತ್ತಿದ್ದಾರೆ. ಹಿಂದುತ್ವದ ದುರುಪಯೋಗವನ್ನು ಕಂಡು ಬೇಸರಗೊಂಡೇ ಅಂಬೇಡ್ಕರ್ರವರು ಬೌದ್ಧಧರ್ಮಕ್ಕೆ ಮತಾಂತರಗೊಂಡರು ಎಂದರು.
|
6 |
+
ಯಾವುದೋ ಒಂದು ಧರ್ಮದಿಂದ ದೇಶ ಕಟ್ಟಲು ಸಾಧ್ಯವಿಲ್ಲ. ಎಲ್ಲರ ಸಹಕಾರವೂ ಅಗತ್ಯ. ರಾಕೆಟ್ ತಂತ್ರಜ್ಞಾನ, ಟಿಪ್ಪು ಸುಲ್ತಾನರಿಂದ ಆರಂಭಗೊಂಡು ಇಂದು ಅಭಿವೃದ್ಧಿಗೊಂಡಿದೆ. ಅಬ್ದುಲ್ ಕಲಾಂರ ಕೊಡುಗೆಯನ್ನು ಮರೆಯಲು ಸಾಧ್ಯವೇ ಎಂದರು.
|
7 |
+
ಹಿಂದುತ್ವದಲ್ಲಿ ಗೋಡ್ಸೆ ಮತ್ತು ಮಹಾತ್ಮಗಾಂಧಿಯವರ ಭಿನ್ನ ಸಿದ್ಧಾಂತಗಳಿವೆ. ನಾವು ಮಹಾತ್ಮಗಾಂಧಿಯವರ ಹಿಂದುತ್ವವನ್ನು ಪಾಲನೆ ಮಾಡುತ್ತೇವೆ. ನಮ್ಮಲ್ಲೂ ರಾಮನ ದೇವಸ್ಥಾನಗಳಿವೆ. ಅದಕ್ಕೆ ಭಕ್ತಿ ಪೂರ್ವಕವಾಗಿ ನಡೆದುಕೊಳ್ಳುತ್ತೇವೆ. ಅಯೋಧ್ಯೆಗೆ ಹೋಗಿಯೇ ರಾಮನ ಪೂಜೆ ಮಾಡಬೇಕೆಂದೇನಿಲ್ಲ. ಅಲ್ಲಿ ಇನ್ನೂ ಕಟ್ಟಡ ನಿರ್ಮಾಣ ಪೂರ್ಣಗೊಂಡಿಲ್ಲ. ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯೂ ಆಗಿಲ್ಲ. ಆದರೆ ನಮ್ಮಲ್ಲಿ ಶತಮಾನಗಳಷ್ಟು ಹಳೆಯದಾದ ರಾಮನ ದೇವಸ್ಥಾನಗಳಿವೆ ಎಂದರು.
|
8 |
+
ಅಯೋದ್ಯೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಬರುತ್ತಾರೆಂದಾಕ್ಷಣ ನಮ್ಮ ರಾಮನನ್ನು ಬಿಟ್ಟು ಹೋಗಲು ಸಾಧ್ಯವೇ. ರಾಮಜನ್ಮ ಭೂಮಿ ಅಯೋಧ್ಯೆ ಎಂಬ ಹಿನ್ನೆಲೆಯಿಂದ ದೇವಸ್ಥಾನ ಕಟ್ಟುವುದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದರು. ಶ್ರೀರಾಮನನ್ನು ವಿಶ್ವಕ್ಕೆ ಪರಿಚಯಿಸಿದವರು ವಾಲ್ಮೀಕಿ. ಇಲ್ಲದೇ ಹೋದರೆ ರಾಮನೇ ತಿಳಿಯುತ್ತಿರಲಿಲ್��. ಅಯೋಧ್ಯೆಯಲ್ಲಿ ರಾಮನ ದೇವಸ್ಥಾನವೆಂದೇ ವಾಲ್ಮೀಕಿಯ ದೇವಸಸ್ಥಾನವನ್ನು ಕಟ್ಟಬೇಕು. ಇಲ್ಲವಾದರೆ ನಾವು ದೇಶಾದ್ಯಂತ ಹೋರಾಟ ನಡೆಸುತ್ತೇವೆ ಎಂದು ರಾಜಣ್ಣ ಹೇಳಿದರು.
|
9 |
+
ದೇವರು ಎಂಬುದು ನಮ್ಮ ನಂಬಿಕೆ. ಬೇಸಾಯ ಮಾಡುವಾಗ ಮಳೆ ಬಂದ ತಕ್ಷಣ ನಾವು ಹೊಲಕ್ಕೆ ಹೋಗಿ ಸಗಣಿ, ಬೆಣಚಿನಕಲ್ಲು, ಗರಿಕೆ ಬಳಸಿ ಶ್ರದ್ಧಾಪೂರ್ವಕವಾಗಿ ಪೂಜೆ ಮಾಡುತ್ತಿದ್ದೆವು. ಅದು ಹಿಂದೂ ಆಚರಣೆಯಲ್ಲವೆ ಎಂದು ಪ್ರಶ್ನಿಸಿದರು.
|
10 |
+
ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ಇಬ್ಬರ ಬಂಧನ
|
11 |
+
ಕಾಂಗ್ರೆಸ್ ನಾಯಕ ಹರಿಪ್ರಸಾದ್ರವರು ಮುನ್ನೆಚ್ಚರಿಕೆಯ ಮಾತುಗಳನ್ನಾಡಿದ್ದಾರೆ. ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸಲಿದೆ. ನಮ್ಮ ಸರ್ಕಾರ ಹಿಂಸೆಯನ್ನು ಬೆಂಬಲಿಸುವುದಿಲ್ಲ ಎಂದರು.ರಾಜ್ಯದಲ್ಲಿ 3 ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂಬ ಹೇಳಿಕೆಗೆ ತಾವು ಈಗಲೂ ಬದ್ಧ.
|
12 |
+
ಪಂಚರಾಜ್ಯಗಳ ಚುನಾವಣೆ ಬಳಿಕ ಬಿಜೆಪಿಯವರು 3 ರಾಜ್ಯಗಳಲ್ಲಿ ಪರಿಶಿಷ್ಟರನ್ನು ಉಪಮುಖ್ಯಮಂತ್ರಿಗಳನ್ನಾಗಿ ಮಾಡಿದ್ದಾರೆ. ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಉಪಮುಖ್ಯಮಂತ್ರಿಗಳನ್ನು ಮಾಡಬೇಕು. ಅಧಿಕಾರ ಮತ್ತು ಸಂಪತ್ತು ಕೆಲವರ ಬಳಿಯೇ ಉಳಿದುಕೊಂಡರೆ ಅದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದರು.
|
eesanje/url_46_272_10.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮತ್ತೊಂದು ಗೋದ್ರಾ ಹತ್ಯಾಕಾಂಡಕ್ಕೆ ಸಂಚು- ಬಿ.ಕೆ.ಹರಿಪ್ರಸಾದ್
|
2 |
+
ಬೆಂಗಳೂರು,ಜ.3- ಅಯೋಧ್ಯೆಯಲ್ಲಿ ನಡೆಯುತ್ತಿರುವುದು ಧಾರ್ಮಿಕ ಕಾರ್ಯಕ್ರಮವಲ್ಲ. ರಾಜಕೀಯಪ್ರೇರಿತ ಕಾರ್ಯಕ್ರಮ. ಧಾರ್ಮಿಕ ಗುರುಗಳಿಂದ ರಾಮನ ಪ್ರತಿಷ್ಠಾಪನೆಯಾಗುತ್ತಿದ್ದರೆ ನಾವು ಸ್ವಯಂಪ್ರೇರಿತವಾಗಿ ಭಾಗವಹಿಸುತ್ತಿದ್ದೆವು ಎಂದು ಕಾಂಗ್ರೆಸ್ನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
|
3 |
+
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹೇಳುತ್ತಿರುವುದು ಸಂಪೂರ್ಣ ವೈಯಕ್ತಿಕ ಅಭಿಪ್ರಾಯ. ಇದಕ್ಕೂ , ಪಕ್ಷಕ್ಕೂ ಸಂಬಂಧವಿಲ್ಲ ಎಂದು ಆರಂಭದಲ್ಲೇ ಸ್ಪಷ್ಟಪಡಿಸಿದರು. ನಮಗೆ ತಿಳಿದ ಮಟ್ಟಿಗೆ ರಾಮನ ಪೂಜೆ ಎಂದರೆ ಕೋಸಂಬರಿ ಮತ್ತು ಪಾನಕದ ನೆನಪುಗಳಿವೆ. ಆದರೆ ಈಗ ನಡೆಯುತ್ತಿರುವ ಆಡಂಬರ ಏಕೆ ಎಂದು ಪ್ರಶ್ನಿಸಿದರು.
|
4 |
+
ಹಿಂದೂ ಧರ್ಮದ ಧಾರ್ಮಿಕ ಗುರು ಶಂಕರಾಚಾರ್ಯರು. ಅಂತಹ ಯಾವುದೇ ಧಾರ್ಮಿಕ ಗುರುಗಳಿಂದ ರಾಮನ ಮೂರ್ತಿ ಪ್ರತಿಷ್ಠಾಪನೆಯಾಗುತ್ತಿದ್ದರೆ ಆಹ್ವಾನ ಇಲ್ಲದೆ ನಾವು ಕಾರ್ಯಕ್ರಮದಲ್ಲಿ ಭಾಗವಹಿಸಬಹುದಿತ್ತು. ಆದರೆ ಪ್ರಧಾನಿ ನರೇಂದ್ರಮೋದಿ, ಕೇಂದ್ರ ಗೃಹಸಚಿವ ಅಮಿತ್ ಷಾ ಅವರಿಂದ ಮೂರ್ತಿ ಪ್ರತಿಷ್ಠಾಪನೆಯಾಗುತ್ತಿದೆ. ಅವರು ಧಾರ್ಮಿಕ ಗುರುಗಳಲ್ಲ. ರಾಜಕೀಯ ನಾಯಕರು. ಮೊದಲಾಗಿ ವಿಶ್ವಗುರು ಮತ್ತು ಅಮಿತ್ ಷಾ ಅವರ ಧರ್ಮ ಯಾವುದು ಎಂಬುದೇ ಸ್ಪಷ್ಟವಾಗಿಲ್ಲ ಎಂದರು.
|
5 |
+
ರಾಮಮಂದಿರಕ್ಕೆ ಬಿಗಿ ಭದ್ರತೆಗೆ ವಿಶೇಷ ಪೊಲೀಸ್ ಪಡೆ ನಿಯೋಜನೆ
|
6 |
+
ಅಯೋಧ್ಯೆಯ ಕಾರ್ಯಕ್ರಮದ ನಿಮಿತ್ತ ಉನ್ಮಾದ ಅಗತ್ಯವಿಲ್ಲ. ಸಂಘಟನೆಯ ಪ್ರಮುಖರು ಈಗಾಗಲೇ ಬಿಜೆಪಿ ನಾಯಕರ ಜೊತೆ ಸಭೆ ನಡೆಸಿ ಯಾವೆಲ್ಲ ರೀತಿ ಪ್ರಚೋದನೆ ನೀಡಿದ್ದಾರೆ ಎಂಬುದು ತಮಗೆ ದಾಖಲಾತಿ ಸಹಿತ ಮಾಹಿತಿ ಇದೆ. ಒಡಿಶಾದಲ್ಲಿ ಮೂರ್ನಾಲ್ಕು ದಿನಗಳ ಹಿಂದೆ ನಡೆದ ಸಭೆಯಲ್ಲಿ ಚರ್ಚೆಗಳಾಗಿರುವ ವಿಷಯವನ್ನು ನಾನು ಗಮನಿಸಿದ್ದೇನೆ ಎಂದರು.
|
7 |
+
ಅಯೋಧ್ಯೆಗೆ ತೆರಳುವವರಿಗೆ ಸೂಕ್ತ ವ್ಯವಸ್ಥೆ ಮತ್ತು ರಕ್ಷಣೆಯನ್ನು ಸರ್ಕಾರ ಮಾಡಿಕೊಡಬೇಕು. ಈ ಹಿಂದೆ ಇಂಥದ್ದೇ ಸಂದರ್ಭದಲ್ಲಿ ಗುಜರಾತಿನ ಗೋದ್ರಾದಲ್ಲಿ ಕರಸೇವಕರ ಸಜೀವ ದಹನವಾಗಿತ್ತು. ಅನಂತರ ಹತ್ಯಾಕಾಂಡಗಳೇ ನಡೆದವು. ಈಗ ಕಟ್ಟೆಚ್ಚರ ವಹಿಸದೆ ಇದ್ದರೆ ಗೋದ್ರಾದಂತಹ ಹತ್ಯಾಕಾಂಡಗಳು ನಡೆಯುವ ಆತಂಕವಿದೆ ಎಂದು ಎಚ್ಚರಿಸಿದರು.
|
8 |
+
ಹೋರಾಟ ಮಾಡುವುದಾದರೆ ರಾಮ ಮಂದಿರ, ಬಾಬ್ರಿ ಮಸೀದಿಯ ಫಲಾನುಭವಿಗಳು ಮತ್ತು ಅವರ ಮಕ್ಕಳು ಪ್ರತಿಭಟನೆ ನಡೆಸಲಿ. ಪಕ್ಕದ ಮನೆಯ ಮಕ್ಕಳನ್ನು ಬಾವಿಗೆ ತಳ್ಳಿ ಆಳ ನೋಡುವುದು ಬೇಡ. ಅಮಾಯಕರ ಮಕ್ಕಳು ಹೋರಾಟಕ್ಕೆ ಹೋಗಿ ಜೈಲು, ಕೇಸು ಎಂದೆಲ್ಲ ಸಂಕಷ್ಟಕ್ಕೆ ಸಿಲುಕುವುದು ಒಳ್ಳೆಯದಲ್ಲ. ಬೇಕಿದ್ದರೆ ಪ್ರಹ್ಲಾದ್ ಜೋಷಿ, ಯಡಿಯೂರಪ್ಪ, ಈಶ್ವರಪ್ಪ ಅವರಂತಹ ನಾಯಕರು ಮತ್ತು ಅವರ ಮಕ್ಕಳು ಹೋರಾಟ ಮಾಡಿಕೊಳ್ಳಲಿ ಎಂದು ಹೇಳಿದರು.
|
9 |
+
ಬಾಬ್ರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ನಲ್ಲಿ ನಡೆದ ವಾದವನ್ನು ಗಮನಿಸುವುದಾದರೆ ಇದು ಸಂಪೂರ್ಣ ರಾಜಕೀಯ ಪ್ರೇರಿತ ಎಂಬುದು ಗೊತ್ತಾಗುತ್ತದೆ. ಒಂದು ಧಾರ್ಮಿಕ ಸ್ಥಳವನ್ನು ಧ್ವಂಸಗೊಳಿಸಿ ಮತ್ತೊಂದು ಮಂದಿರ ಕಟ್ಟಿದ ಉದಾಹರಣೆ ಇಲ್ಲ.ಸುಪ್ರೀಂಕೋರ್ಟ್ ತೀರ್ಪು ನೀಡುವಾಗ ಬಹುಸಂಖ್ಯಾತರ ಭಾವನೆಗಳನ್ನು ಪರಿಗಣಿಸುವುದಾಗಿ ಹೇಳಿದೆ.
|
10 |
+
ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
|
11 |
+
ಮಸೀದಿ ಧ್ವಂಸಗೊಳಿಸುವುದಕ್ಕೆ ಸಂಬಂಧಪಟ್ಟಂತೆ ಎಲ್.ಕೆ.ಅಡ್ವಾಣಿ ಸೇರಿದಂತೆ ಬಹಳಷ್ಟು ಮಂದಿ ಈಗಲೂ ಆರೋಪಿಗಳಾಗಿದ್ದರೆ. ನ್ಯಾಯಾಲಯ ಆರೋಪದಿಂದ ಖುಲಾಸೆ ಮಾಡಿಲ್ಲ. ಮಸೀದಿ ಧ್ವಂಸ ಸರಿ ಎಂದು ಕೂಡ ಹೇಳಿಲ್ಲ. ಅಯೋಧ್ಯೆಯಲ್ಲಿ ದೇವಸ್ಥಾನವಿತ್ತೋ, ಮಸೀದಿ ಇತ್ತೋ ಎಂಬ ಬಗ್ಗೆ ಇನ್ನು ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.
|
12 |
+
ಸಿದ್ದರಾಮಯ್ಯ ರಾಮನಿದ್ದಂತೆ ಎಂದು ಮಾಜಿ ಸಚಿವ ಎಚ್.ಆಂಜನೇಯ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಹರಿಪ್ರಸಾದ್, ಕೈಲಾಸ್ ಆಶ್ರಮಕ್ಕೂ ಭಕ್ತರಿದ್ದಾರೆ. ಅದೇ ರೀತಿ ಸಿದ್ದರಾಮಯ್ಯನವರಿಗೂ ಕೆಲ ಭಕ್ತರಿದ್ದಾರೆ. ಅವರ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದರು.
|
eesanje/url_46_272_11.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕ್ರಿಮಿನಲ್ಗಳಿಗೆ ಜಾತಿ, ಧರ್ಮದ ಬಣ್ಣಕಟ್ಟಿ ಪ್ರತಿಭಟಿಸುವ ದುಸ್ಥಿತಿಯಲ್ಲಿ ಬಿಜೆಪಿ : ಸಿಎಂ ಸಿದ್ದರಾಮಯ್ಯ
|
2 |
+
ಬೆಂಗಳೂರು, ಜ.3- ಕರಸೇವಕರ ಬಂಧನವಾಗಿದೆ ಎಂದು ಬೀದಿಗಿಳಿದಿರುವ ಬಿಜೆಪಿ ನಾಯಕರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕ್ರಿಮಿನಲ್ಗಳಿಗೆ ಜಾತಿ, ಧರ್ಮದ ಬಣ್ಣಕಟ್ಟಿ ಪ್ರತಿಭಟಿಸುವ ದುಸ್ಥಿತಿ ರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು ಎಂದು ಲೇವಡಿ ಮಾಡಿದ್ದಾರೆ.
|
3 |
+
ಪತ್ರಿಕಾ ಹೇಳಿಕೆ ನೀಡಿರುವ ಅವರು, ನಾಲ್ಕು ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರದ ಹಗರಣಗಳಲ್ಲಿಯೇ ಕಾಲ ಕಳೆದಿದ್ದ ಭಾರತೀಯ ಜನತಾ ಪಕ್ಷಕ್ಕೆ ನಮ್ಮ ಸರ್ಕಾರದ ಸಾಧನೆಗಳಿಗೆ ವ್ಯಕ್ತವಾಗುತ್ತಿರುವ ಜನಸ್ಪಂದನೆÀ ದಿಗಿಲು ಹುಟ್ಟಿಸಿದೆ. ಇದಕ್ಕಾಗಿ ಹುಬ್ಬಳ್ಳಿಯ ಕ್ರಿಮಿನಲ್ಆರೋಪಿಯೊಬ್ಬನ ಬಂಧನದ ಎಳೆ ಹಿಡಿದುಕೊಂಡು ನೇತಾಡುತ್ತಿದ್ದಾರೆ. ಅಪರಾಗಳಿಗೆ ಜಾತಿ,ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ ಎನ್ನುವುದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಬೇಕು.
|
4 |
+
ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಯಡಿಯೂರಪ್ಪನವರಿಗಿಂತ ದೊಡ್ಡ ಹಿಂದೂ? ರಾಮ ಭಕ್ತ ಯಾರಿದ್ದಾರೆ? ಹಾಗಿದ್ದರೆ ಆಗಿನ ಸರ್ಕಾರ ಹಿಂದು ವಿರೋಧಿಯೇ? ಬಿಜೆಪಿ ಬಿಟ್ಟು ಬಿಡಿ, ಅದರ ಪರಿವಾರದ ನಾಯಕರು ಕೂಡಾ ಹಿಂದೂ ಯಡಿಯೂರಪ್ಪನವರನ್ನು ಬಂಧಿಸಿದ ಸರ್ಕಾರ ಹಿಂದು ವಿರೋಧಿ ಎಂದು ಕೂಗಾಡಲಿಲ್ಲವಲ್ಲ? ಈಗ ಯಾಕೆ ಈ ಕೂಗಾಟ? ಎಂದು ಪ್ರಶ್ನಿಸಿದ್ದಾರೆ.
|
5 |
+
ರಾಜ್ಯದ ಬಿಜೆಪಿಯ ಸ್ಥಿತಿ ಒಂದು ಮನೆ ನೂರು ಬಾಗಿಲು ಎಂಬಂತಾಗಿದೆ. ಆ ಪಕ್ಷದ ರಾಜ್ಯಾಧ್ಯಕ್ಷರನ್ನು ಅದೇ ಪಕ್ಷದ ಹಿರಿಯ ನಾಯಕರು ಈಗಲೂ ಒಪ್ಪಿಕೊಂಡಿಲ್ಲ, ವಿರೋಧ ಪಕ್ಷದ ನಾಯಕರ ಮಾತಿಗೆ ಸದನದಲ್ಲಿಯೇ ಸದಸ್ಯರು ಬಿಡಿಗಾಸಿನ ಕಿಮ್ಮತ್ತು ಕೊಟ್ಟಿಲ್ಲ. ಯಡಿಯೂರಪ್ಪ ಮತ್ತು ಮಕ್ಕಳ ವಿರುದ್ದ ದಿನಕ್ಕೊಂದು ಗಂಭೀರ ಸ್ವರೂಪದ ಆರೋಪ ಮಾಡುತ್ತಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕನಿಷ್ಠ ಒಂದು ಎಚ್ಚರಿಕೆಯ ನೋಟೀಸ್ ನೀಡಲಾಗದಷ್ಟು ಪಕ್ಷ ನಿರ್ವಿರ್ಯವಾಗಿದೆ. ಕಾಂಗ್ರೆಸ್ ಸರ್ಕಾರ ದಿನದಿಂದ ದಿನಕ್ಕೆ ಜನಾನುರಾಗಿಯಾಗುತ್ತಿದೆ. ಈ ಹತಾಶೆಯಿಂದ ಹೊರಬರಲು ಒಬ್ಬ ಕ್ರಿಮಿನಲ್ ಆರೋಪಿಯನ್ನು ಮುಂದಿಟ್ಟು ಬಿಜೆಪಿ ನಾಯಕರು ಕೂಗಾಡುತ್ತಿದ್ದಾರೆ ಎಂದು ಕಟುಶಬ್ದಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ.
|
6 |
+
ಅಂಗನವಾಡಿ ಕಾರ್ಯಕರ್ತೆಯ ಮೂಗು ಕತ್ತರಿಸಿದ ದುಷ್ಕರ್ಮಿ
|
7 |
+
ಒಬ್ಬ ಕ್ರಿಮಿನಲ್ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿ ಒಂದು ರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು. ಹುಬ್ಬಳ್ಳಿಯ ಆರೋಪಿಯನ್ನು ಸಮರ್ಥಿಸಿಕೊಂಡು ಹೋರಾಟಕ್ಕೆ ಇಳಿದಿರುವ ಬಿಜೆಪಿ ನಾಯಕರಲ್ಲಿ ಯಾರಾದರೂ ಸ್ವಲ್ಪ ಬುದ್ದಿಗಿದ್ದಿ ಹೊಂದಿ��ವರಿದ್ದರೆ ದಯವಿಟ್ಟು ಆ ವ್ಯಕ್ತಿಯ ಮೇಲಿನ ಆರೋಪಗಳ ಪಟ್ಟಿಯನ್ನು ತರಿಸಿ ಓದಿ, ಆ ಮೇಲೆ ಹೋರಾಟಕ್ಕೆ ಇಳಿಯಿರಿ. ಜನಸಂಖ್ಯೆಯಲ್ಲಿ ಹಿಂದೂಗಳೇ ಬಹುಸಂಖ್ಯೆಯಲ್ಲಿರುವುದರಿಂದ ಜೈಲುಗಳಲ್ಲಿರುವ ಕೈದಿಗಳಲ್ಲಿಯೂ ಹಿಂದೂ ಧರ್ಮಿಯರೇ ಬಹುಸಂಖ್ಯೆಯಲ್ಲಿದ್ದಾರೆ. ಅವರೆಲ್ಲ ಹಿಂದೂ ಧರ್ಮಕ್ಕೆ ಸೇರಿದವರು ಎನ್ನುವ ಕಾರಣಕ್ಕೆ ಬಿಜೆಪಿ ಅವರ ಪರವಾಗಿ ಹೋರಾಟ ನಡೆಸುತ್ತಾ ಎಂದು ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದ್ದಾರೆ.
|
8 |
+
ರಾಜ್ಯದಲ್ಲಿ ಕ್ರಿಮಿನಲ್ ಕೃತ್ಯಗಳು ಹೆಚ್ಚಾಗಲು ಅಪರಾಧ ಮತ್ತು ಅಪರಾಗಳಿಗೆ ಜಾತಿ-ಧರ್ಮದ ಬಣ್ಣಹಚ್ಚುವ ಬಿಜೆಪಿಯ ಕಾನೂನು ವಿರೋ ನಡವಳಿಕೆಗಳೇ ಕಾರಣ. ವ್ಯಕ್ತಿಯೊಬ್ಬ ಎಂತಹ ಘನಘೋರ ಅಪರಾಧಗಳನ್ನು ಬೇಕಾದರೂ ಎಸಗಲಿ, ಆತ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡು ನಾನೊಬ್ಬ ಹಿಂದೂ ಎಂದು ಕೂಗಿದರೆ ಬಿಜೆಪಿ ನಾಯಕರು ಆತನ ರಕ್ಷಣೆಗೆ ಧಾವಿಸುತ್ತಾರೆ. ಈ ಮೂಲಕ ಕೇಸರಿ ಶಾಲು ಮಾತ್ರವಲ್ಲ ಹಿಂದೂ ಧರ್ಮಕ್ಕೂ ಬಿಜೆಪಿ ನಾಯಕರು ಅವಮಾನ ಮಾಡುತ್ತಿದ್ದಾರೆ. ಇದು ಧರ್ಮದ್ರೋಹದ ನಡೆ. ಕಾನೂನನ್ನು ಅದರ ಪಾಡಿಗೆ ಕೆಲಸ ಮಾಡಲು ಬಿಟ್ಟು ಬಿಡಿ ಎಂದು ಒತ್ತಾಯಿಸಿದ್ದಾರೆ.
|
9 |
+
ರಾಜ್ಯದ ಬಿಜೆಪಿ ನಾಯಕರಲ್ಲಿ ಈಗಲೂ ನಾನು ವಿನಂತಿ ಮಾಡುತ್ತಿದ್ದೇನೆ. ದೇವರು-ಧರ್ಮದ ಹೆಸರಲ್ಲಿ ಕ್ಷುಲಕ ರಾಜಕೀಯ ಮಾಡುವುದನ್ನು ಕೈಬಿಟ್ಟು ಜವಾಬ್ದಾರಿಯುತವಾದ ವಿರೋಧಪಕ್ಷವಾಗಿ ಕಾರ್ಯನಿರ್ವಹಿಸುವ ಪ್ರಯತ್ನ ಮಾಡಿ. ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂದು ಹೇಳುತ್ತಿರುವ ಬಿಜೆಪಿ ರೀತಿಯಲ್ಲಿ ನಾವು ರಾಜ್ಯವನ್ನು ಬಿಜೆಪಿ ಮುಕ್ತ ಮಾಡುತ್ತೇವೆ ಎಂಬ ಸೊಕ್ಕಿನ ಹೇಳಿಕೆಗಳನ್ನು ನೀಡುವುದಿಲ್ಲ. ಆದರೆ ರಾಜ್ಯದಲ್ಲಿ ಬಿಜೆಪಿಯನ್ನು ಶಾಶ್ವತವಾಗಿ ವಿರೋಧಪಕ್ಷದ ಸ್ಥಾನದಲ್ಲಿ ಕೂರಿಸಬೇಕೆಂಬುದು ನನ್ನ ಗುರಿ. ರಾಜ್ಯ ಬಿಜೆಪಿ ನಾಯಕರ ಇತ್ತೀಚಿನ ಅವಾಂತರಗಳನ್ನೆಲ್ಲ ನೋಡಿದರೆ ಈ ಗುರಿ ಸಾಧನೆಗೆ ಅವರೇ ಸಹಕಾರ ನೀಡುತ್ತಿರುವಂತೆ ಕಾಣುತ್ತಿದೆ ಎಂದು ಲೇವಡಿ ಮಾಡಿದ್ದಾರೆ.
|
eesanje/url_46_272_12.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಅಂಗನವಾಡಿ ಕಾರ್ಯಕರ್ತೆಯ ಮೂಗು ಕತ್ತರಿಸಿದ ದುಷ್ಕರ್ಮಿ
|
2 |
+
ಬೆಳಗಾವಿ, ಜ.3- ಕುಂದಾನಗರಿ ಬೆಳಗಾವಿಯಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿದ್ದು, ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ. ಅಂಗನವಾಡಿ ಮಕ್ಕಳು ಹೂವು ಕಿತ್ತರು ಎಂದು ಆರೋಪಿಸಿ ಅಂಗನವಾಡಿ ಕಾರ್ಯಕರ್ತೆಯ ಮೂಗನ್ನು ಧೂರ್ತನೊಬ್ಬ ಕತ್ತರಿಸಿರುವ ಘಟನೆ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ನಡೆದಿದೆ.
|
3 |
+
ಅಂಗನವಾಡಿ ಪಕ್ಕದಲ್ಲೇ ಇದ್ದ ಮನೆಯೊಂದರ ಬಳಿ ಮಕ್ಕಳು ಆಟವಾಡುತ್ತ ಮಲ್ಲಿಗೆ ಹೂವು ಕಿತ್ತಿದ್ದಾರೆ. ಇದರಿಂದ ಆಕ್ರೋಶಗೊಂಡ ಮನೆಯಿಂದ ಹೊರಬಂದ ವ್ಯಕ್ತಿಯೊಬ್ಬ ಕುಡುಗೋಲು ತೆಗೆದುಕೊಂಡು ಬಂದು ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಿ ಆಕೆಯ ಮೂಗನ್ನು ಕತ್ತರಿಸಿದ್ದಾನೆ. ಇದರಿಂದ ಕುಸಿದುಬಿದ್ದ ಸುಗಂಧಾ ಮೋರೆ (50) ಎಂಬ ಅಂಗನವಾಡಿ ಕಾರ್ಯಕರ್ತೆಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.
|
4 |
+
ಹಲ್ಲೆ ಮತ್ತು ಮೂಗನ್ನು ಕತ್ತರಿಸಿರುವುದರಿಂದ ನರಳಾಡುತ್ತಿರುವ ಆಕೆಯ ವೇದನೆ ನೋಡಿ ವೈದ್ಯರೇ ಮರುಗಿದ್ದಾರೆ. ಘಟನೆ ನಡೆದು ಒಂದು ದಿನ ಕಳೆದರೂ ಪೊಲೀಸರು ಕ್ರಮ ಕೈಗೊಳ್ಳದೆ ಇರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
|
5 |
+
ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
|
6 |
+
ಮಾಧ್ಯಮಗಳಲ್ಲಿ ವರದಿ ಪ್ರಸಾರವಾದ ನಂತರ ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ಹಾಗೂ ಗ್ರಾಮೀಣ ಠಾಣೆ ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
|
eesanje/url_46_272_2.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಅಸ್ತಿಪಂಜರ ಪತ್ತೆ ಪ್ರಕರಣ ದಿನಕ್ಕೊಂದು ತಿರುವು: ಗೋಡೆಯ ಮೇಲೆ ಹಸ್ತ ಗುರುತು
|
2 |
+
ಚಿತ್ರದುರ್ಗ,ಜ.3- ನಿವೃತ್ತ ಎಂಜಿನಿಯರ್ ಜಗನ್ನಾಥ್ ರೆಡ್ಡಿ ಅವರ ಮನೆಯಲ್ಲಿ ಪತ್ತೆಯಾದ ಐದು ಅಸ್ತಿಪಂಜರಗಳ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಮನೆಯ ಗೋಡೆಯ ಮೇಲೆ ರಕ್ತದ ಕಲೆ ಮಾದರಿಯ ಐದು ಹಸ್ತದ ಗುರುತುಗಳು ಕುತೂಹಲ ಕೆರಳಿಸಿವೆ.
|
3 |
+
ಚಿತ್ರದುರ್ಗದ ಕಾರಾಗೃಹ ರಸ್ತೆಯ ಜಗನ್ನಾಥ್ ರೆಡ್ಡಿ ಅವರ ಮನೆಯಲ್ಲಿ 5 ಅಸ್ತಿಪಂಜರಗಳು ಡಿ.29ರಂದು ಪತ್ತೆಯಾಗಿದ್ದವು. ಅವುಗಳನ್ನು ಜಗನ್ನಾಥ್ ರೆಡ್ಡಿ ಮತ್ತು ಅವರ ಕುಟುಂಬದ ಐದು ಸದಸ್ಯರಿಗೆ ಸೇರಿದವು ಎಂದು ಹೇಳಲಾಗಿದೆ.
|
4 |
+
ಮನೆಯಲ್ಲಿ 2019ರ ಜುಲೈನಲ್ಲಿ ಕ್ಯಾಲೆಂಡರ್ ಬದಲಾವಣೆ ಯಾಗಿರುವುದು ಕಂಡುಬಂದಿತ್ತು. ಆ ವೇಳೆಯಲ್ಲೇ ಸಾವುಗಳು ಆಗಿರಬಹುದೆಂದು ಶಂಕಿಸಲಾಗಿದೆ. ಆರಂಭದಲ್ಲಿ ಇದನ್ನು ಆತ್ಮಹತ್ಯೆ ಎಂದು ಹೇಳಲಾಗಿತ್ತು. ಆದರೆ 5 ಅಸ್ತಿಪಂಜರಗಳ ಪೈಕಿ ಎರಡಕ್ಕೆ ಕೈಕಾಲು ಕಟ್ಟಿ ಹಾಕಿರುವ ಕುರುಹುಗಳು ಮತ್ತು ಹಗ್ಗ ಕಂಡುಬಂದಿದೆ.
|
5 |
+
ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಬಿಜೆಪಿ ಪ್ರತಿಭಟನೆ: ಡಿಕೆಶಿ
|
6 |
+
ಹೀಗಾಗಿ ಆತ್ಮಹತ್ಯೆಯೋ, ಕೊಲೆಯೋ ಎಂಬ ಶಂಕೆಗಳು ಹರಿದಾಡುತ್ತಿವೆ. ಸೂಕ್ಷ್ಮವಾಗಿ ತನಿಖೆ ಮುಂದುವರೆಸಿರುವ ಪೆÇಲೀಸರಿಗೆ ಮನೆಯ ಗೋಡೆಯ ಮೇಲೆ ಐದು ಹಸ್ತದ ಗುರುತುಗಳು ಪತ್ತೆಯಾಗಿವೆ. ಅವನ್ನು ರಕ್ತಸಿಕ್ತ ಹಸ್ತದ ಗುರುತುಗಳೆಂದು ಪರಿಭಾವಿಸ ಲಾಗಿದೆ. ತನಿಖಾಕಾರಿಗಳು ಪ್ರತಿಯೊಂದು ವಿಚಾರವನ್ನು ಎಚ್ಚರಿಕೆಯಿಂದ ಪರಿಶೀಲಿಸುತ್ತಿದ್ದಾರೆ. ಹಸ್ತದ ಗುರುತುಗಳು ಪತ್ತೆಯಾದ ಬಳಿಕ ಪ್ರಕರಣಕ್ಕೆ ಮತ್ತೊಂದು ರೀತಿಯ ತಿರುವು ಸಿಕ್ಕಂತಾಗಿದೆ.
|
eesanje/url_46_272_3.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಓದಿದ್ದು ಎಸ್ಎಸ್ಎಲ್ಸಿ, ವಂಚಿಸಿದ್ದು 1 ಕೋಟಿ 10 ಲಕ್ಷ
|
2 |
+
ಆನೇಕಲ್, ಜ.3- ತಾವು ಕೆಲಸಕ್ಕಿದ್ದ ಕಂಪೆನಿಗೆ ವಂಚಿಸಿ ನೈಕಿ ಕಂಪನಿಯ ಶೂಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಅಸ್ಸಾಂ ಮೂಲದ ಮೂವರು ಆರೋಪಿಗಳನ್ನು ಅತ್ತಿಬೆಲೆ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳಿಂದ ಒಂದು ಕೋಟಿ ಹತ್ತು ಲಕ್ಷ ರೂಪಾಯಿ ಮೌಲ್ಯದ ನೈಕಿ ಕಂಪನಿಯ ಶೂಗಳು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಈಚರ್ ಕಂಟೈನರ್ ಕ್ಯಾಂಟರ್ನ್ನು ಮೌಲೀಸರು ವಶಪಡಿಸಿಕೊಂಡಿದ್ದಾರೆ.ಆರೋಪಿಗಳಾದ ಸುಭಾನ್ ಪಾಷ, ಮನ್ಸೂರ್ ಅಲಿ, ಶಾಹಿದುಲ್ ರೆಹಮಾನ್ನನ್ನು ಬಂಧಿಸಲಾಗಿದ್ದು, ಉಳಿದ ಇಬ್ಬರ ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗಿದೆ.
|
3 |
+
ಅಸ್ಸಾಂ ಮೂಲದವರಾದ ಈ ಮೂವರು ಆರೋಪಿಗಳು ಎಸ್ಎಸ್ಎಲ್ಸಿ ವ್ಯಾಸಂಗ ಮಾಡಿದ್ದು, ಕೆಲಸಕ್ಕಿದ್ದ ಕಂಪೆನಿಯಲ್ಲೇ ಮಾಲೀಕರನ್ನು ನಂಬಿಸಿ, ವಂಚಿಸಿ ಇದೀಗ ಖಾಕಿ ಬಲೆಗೆ ಬಿದ್ದಿದ್ದಾನೆ. ಅತ್ತಿಬೆಲೆ ಪೋಲಿಸ್ ಠಾಣೆ ವ್ಯಾಪ್ತಿಯ ಶೆಟ್ಟಹಳ್ಳಿ ಗ್ರಾಮದ ಬಳಿಯಿರುವ ನೈಕಿ ಗೋಡೌನ್ನಿಂದ ಅನುಗೊಂಡನಹಳ್ಳಿ ಗ್ರಾಮದ ಸಮೀಪದಲ್ಲಿರುವ ಮಿಂತ್ರ ಗೋಡೋನ್ಗೆ ಈಚರ್ ಕಂಟೈನರ್ ಕ್ಯಾಂಟರ್ನಲ್ಲಿ ನೈಕಿ ಕಂಪನಿಗೆ ಸೇರಿದ ಶೂಗಳನ್ನು ಸಾಗಿಸುತ್ತಿದ್ದರು.
|
4 |
+
ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಬಿಜೆಪಿ ಪ್ರತಿಭಟನೆ: ಡಿಕೆಶಿ
|
5 |
+
ಆ ಸಂದರ್ಭದಲ್ಲಿ ಕ್ಯಾಂಟರ್ನ ಚಾಲಕ ಮಿಂತ್ರ ಗೋಡೌನ್ನಲ್ಲಿ ಅನ್ಲೋಡ್ ಮಾಡದೆ ವಾಹನ ಸಮೇತ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದನು. ಪ್ರಕರಣವನ್ನು ಕೈಗೆತ್ತಿಕೊಂಡ ಅತ್ತಿಬೆಲೆ ಪೋಲಿಸ್ ಠಾಣೆಯ ಇನ್ಸ್ ಪೆಕ್ಟರ್ ರಾಘವೇಂದ್ರ ಮತ್ತು ಅವರ ತಂಡ ವೈಜ್ಞಾನಿಕವಾಗಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ, ಒಂದು ಕೋಟಿ ಹತ್ತು ಲಕ್ಷ ರೂಪಾಯಿ ಮೌಲ್ಯದ ನೈಕಿ ಕಂಪನಿಯ ಶೂಗಳು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಈಚರ್ ಕಂಟೈನರ್ ಕ್ಯಾಂಟರ್ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
|
6 |
+
ಪತ್ರಿಕಾ ಗೋಷ್ಠಿಯಲ್ಲಿ ಅಡಿಶಿನಲ್ ಎಸ್ಪಿ ಪುರುಷೋತ್ತಮ್, ಡಿವೈಎಸ್ಪಿ ಮೋಹನ್ ಕುಮಾರ್, ಅತ್ತಿಬೆಲೆ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ರಾಘವೇಂದ್ರ, ಸೂರ್ಯ ಸಿಟಿ ಇನ್ಸ್ ಪೆಕ್ಟರ್ ಮಹಾಜನ್, ಸಬ್ ಇನ್ಸ್ ಪೆಕ್ಟರ್ ಮುರಳಿ, ಪೋಲಿಸರಾದ ಅರುಣ್ ಕುಮಾರ್, ಅಪ್ರೋಜ್ ಖಾನ್, ಮಹೇಶ್, ಇಪ್ರಾನ್, ಮತ್ತಿತರು ಹಾಜರಿದ್ದರು.
|
eesanje/url_46_272_4.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಬಿಜೆಪಿ ಪ್ರತಿಭಟನೆ: ಡಿಕೆಶಿ
|
2 |
+
ಬೆಂಗಳೂರು, ಜ.3- ಹುಬ್ಬಳ್ಳಿಯಲ್ಲಿ ಕರಸೇವಕನ ಬಂಧನವನ್ನು ಮುಂದಿಟ್ಟುಕೊಂಡು ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ನಾವಿನ್ನೂ ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ನಡೆಯುತ್ತಿರುವ ರಾಜಕೀಯ ನಾಟಕ ಎಂದು ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
|
3 |
+
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಈಗಾಗಲೇ ಗೃಹ ಸಚಿವರು ಸ್ಪಷ್ಟ ಪಡಿಸಿದ್ದಾರೆ. ನಾವು ಯಾರಿಗೂ ತೊಂದರೆ ಕೊಡುವುದಿಲ್ಲ. ಬಾಕಿ ಇದ್ದ ಪ್ರಕರಣಗಳಲ್ಲಿ ದೇಶಕ್ಕೆ, ರಾಜ್ಯಕ್ಕೆ ಅಗೌರವ ತರುವವರು ಮತ್ತು ಅಶಾಂತಿ ಸೃಷ್ಟಿಸುವವರ ವಿರುದ್ಧ ಮೊದಲಿನಿಂದಲೂ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಅದರಂತೆ ಈಗಲೂ ಕ್ರಮ ಕೈಗೊಂಡಿದ್ದಾರ ಎಂದರು.
|
4 |
+
ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಶಾಂತಿ-ಸೌಹಾರ್ದತೆಯ ಸಂದೇಶಕ್ಕೆ ಒತ್ತು: ಸಿದ್ದರಾಮಯ್ಯ
|
5 |
+
ಬಿಜೆಪಿಯವರಿಗೆ ಏಳು ತಿಂಗಳು ವಿರೋಧ ಪಕ್ಷದ ನಾಯಕನನ್ನು ಮಾಡಲಾಗಲಿಲ್ಲ. ಈಗ ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದೆ. ನಾವೇನೋ ಬಹಳ ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ಪ್ರಜಾಪ್ರಭುತ್ವದಲ್ಲಿ ಜನರೂ ಉತ್ತರ ನೀಡುತ್ತಾರೆ, ನಾವು ಉತ್ತರಿಸುತ್ತೇವೆ ಎಂದರು.
|
6 |
+
ನಾವು ಬಿಜೆಪಿಯವರಂತೆ ಅಧಿಕಾರ ದುರುಪಯೋಗ ಪಡಿಸಿಕೊಂಡಿಲ್ಲ. ಅವರು ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಎಷ್ಟು ಕೇಸು ಹಾಕಿದ್ದಾರೆ ಎಂದು ಗೋತ್ತಿದೆ. ಹುಬ್ಬಳ್ಳಿಯಲ್ಲಿ, ಬೆಂಗಳೂರಿನಲ್ಲೇ ಬಹಳಷ್ಟು ಕೇಸುಗಳನ್ನು ದಾಖಲಿಸಿದ್ದಾರೆ. ಅಮಾಯಕರ ಮೇಲೂ ಕೇಸುಗಳನ್ನು ಹಾಕಲಾಗಿದೆ. ನಾವು ಆ ರೀತಿ ಮಾಡಿಲ್ಲ ಎಂದರು.
|
7 |
+
ವಿರೋಧ ಪಕ್ಷದ ನಾಯಕರು ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಹೋಗಿರುವುದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಹೋಗಿ ಕಟ್ಟಿ ಹಾಕಿಕೊಳ್ಳಲಿ. ಆರ್.ಅಶೋಕ್ ಅವರು ಗೃಹ ಸಚಿವರಾಗಿದ್ದಾಗ ಏನು ಮಾಡಿದ್ದರು. ಪೊಲೀಸರು ಮತ್ತು ಅಧಿಕಾರಿಗಳಿಗೆ ಬಿಜೆಪಿಯ ಕೇಸರಿ ಬಟ್ಟೆ ಹಾಕಿಸಿ ನಿಲ್ಲಿಸಿದ್ದರು. ನಾವು ಆ ಕೆಲಸ ಮಾಡಿಲ್ಲ ಎಂದರು.
|
8 |
+
ತಮ್ಮ ಮೇಲಿರುವ ಅಕ್ರಮ ಆಸ್ತಿ ಪ್ರಕರಣದ ಲೋಕಾಯುಕ್ತ ತನಿಖೆಗೆ ಸಂಬಂಧ ಪಟ್ಟಂತೆ ನನಗಿನ್ನೂ ನೋಟಿಸ್ ಬಂದಿಲ್ಲ. ನೋಟಿಸ್ ಬಂದರೆ ಉತ್ತರ ನೀಡುತ್ತೇನೆ ಎಂದರು.
|
eesanje/url_46_272_5.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸರ್ಕಾರದ ದಮ್ಮು-ತಾಕತ್ತು ಗೊತ್ತಾಗಲಿದೆ: ಪರಮೇಶ್ವರ್
|
2 |
+
ಬೆಂಗಳೂರು,ಜ.3- ಹುಬ್ಬಳ್ಳಿಯ ಶ್ರೀಕಾಂತ್ ಪೂಜಾರಿ ವಿರುದ್ಧ 16 ಕ್ರಿಮಿನಲ್ ಮೊಕದ್ದಮೆಗಳಿವೆ. ಹುಬ್ಬಳ್ಳಿಯಲ್ಲಿ 26 ಪ್ರಕರಣಗಳಲ್ಲಿ 36 ಆರೋಪಿ ಗಳಿದ್ದು, ಅವರಲ್ಲಿ ಇರುವ ಬೇರೆ ಹಿಂದೂಗಳ ಬಗ್ಗೆ ಬಿಜೆಪಿಯವರು ಏಕೆ ಮಾತನಾಡುತ್ತಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ.ಬಿಜೆಪಿಯವರು ಧಮ್ಮು, ತಾಕತ್ತು ಎಂದೆಲ್ಲ ಹೇಳಿಕೊಂಡು ಪ್ರತಿಭಟನೆ ಮಾಡುತ್ತಿದ್ದಾರೆ. ಈಗಾಗಲೇ ರಾಜ್ಯದ ಜನ ಯಾರಿಗೆ ಧಮ್ಮು , ತಾಕತ್ತು ಇದೆ ಎಂಬುದನ್ನು ತೋರಿಸಿದ್ದಾರೆ. ಸರ್ಕಾರಕ್ಕೆ ತಾಕತ್ತು ಇದೆಯೋ ಇಲ್ಲವೋ ಎಂಬುದು ಗೊತ್ತಾಗಲಿದೆ ಎಂದು ಹೇಳಿದರು.
|
3 |
+
ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವವರ ಪರವಾಗಿ ಬಿಜೆಪಿಯವರು ವಕಾಲತ್ತು ವಹಿಸಿ ಹೋರಾಟ ನಡೆಸುತ್ತಿರುವುದನ್ನು ನೋಡಿದರೆ ಅವರಿಗೆ ಏನಾಗಿದೆ ಎಂಬುದೇ ಅರ್ಥವಾಗುತ್ತಿಲ್ಲ. ಶ್ರೀಕಾಂತ್ ಪೂಜಾರಿ ಕರಸೇವಕನಲ್ಲ. ಆತನ ವಿರುದ್ಧ 16 ಕ್ರಿಮಿನಲ್ ಕೇಸ್ಗಳಿವೆ ಎಂದರು.
|
4 |
+
ಈಗ ಪ್ರತಿಭಟನೆ ಮಾಡುವ ಬಿಜೆಪಿಯವರು ಹಿಂದೆ ಐದು ವರ್ಷ ಮತ್ತು ಇತ್ತೀಚೆಗೆ 4 ವರ್ಷ ಆಡಳಿತ ನಡೆಸಿದ್ದರು. ಒಂದು ವೇಳೆ ಶ್ರೀಕಾಂತ್ ಬಿಜೆಪಿ ಆರೋಪಿಯಾಗಿದ್ದಾಗಲೇ ಅವರ ಸರ್ಕಾರ ಇದ್ದಾಗಲೇ ಪ್ರಕರಣವನ್ನು ಇತ್ಯರ್ಥ ಮಾಡಬಹುದಿತ್ತು ಅಥವಾ ಖುಲಾಸೆಗೊಳಿಸ ಬಹುದಾಗಿತ್ತು, ಏಕೆ ಮಾಡಲಿಲ್ಲ. ಈಗ ಯಾರು, ಯಾರನ್ನು ದೂಷಣೆ ಮಾಡಬೇಕು ಎಂದು ಪ್ರಶ್ನಿಸಿದರು.
|
5 |
+
31 ವರ್ಷಗಳ ಹಳೆಯ ಪ್ರಕರಣ ಎಂಬುದು ನಿಜ. ಆದರೆ ಅವುಗಳನ್ನು ಎಷ್ಟು ವರ್ಷ ನನೆಗುದಿಯಲ್ಲಿಡಬೇಕು. ಹಳೆಯ ಪ್ರಕರಣಗಳನ್ನು ಇತ್ಯರ್ಥಪಡಿಸಿ ಎಂದು ಸೂಚನೆ ನೀಡಿದಾಗ, ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅದರಲ್ಲಿ ಶ್ರೀಕಾಂತ್ ಪೂಜಾರಿ ಪ್ರಕರಣವು ಮುನ್ನೆಲೆಗೆ ಬಂದಿದೆ. ಇದೊಂದೇ ಅಲ್ಲ 26 ಪ್ರಕರಣಗಳಲ್ಲಿ 36 ಮಂದಿ ಆರೋಪಿಗಳಿದ್ದಾರೆ. ಅವರಲ್ಲಿಯೂ ಹಿಂದೂಗಳಿದ್ದಾರೆ. ಅವರ ಬಗ್ಗೆ ಬಿಜೆಪಿಯವರು ಏಕೆ ಮಾತನಾಡುವುದಿಲ್ಲ ಎಂದರು. ಚುನಾವಣೆಯಲ್ಲಿ ರಾಜಕೀಯ ಮಾಡಬೇಕು, ಕಾನೂನು ಸುವ್ಯವಸ್ಥೆಯಂತಹ ವಿಚಾರದಲ್ಲೂ ರಾಜಕೀಯ ಮಾಡುವುದು ಒಳ್ಳೆಯದಲ್ಲ. ಜನ ಈಗಾಗಲೇ ಪಾಠ ಕಲಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲೂ ಪಾಠ ಕಲಿಸುತ್ತಾರೆ ಎಂದು ಹೇಳಿದರು.
|
6 |
+
1 ವರ್ಷದಲ್ಲಿ ಮನೆ ಬಾಗಿಲಿಗೆ ಖಾತೆ: ಡಿ.ಕೆ.ಶಿವಕುಮಾರ್
|
7 |
+
ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರೆ ಪೊಲೀಸ್ ಅಧಿಕಾರಿಗಳು ವಿಪಕ್ಷ ನಾಯಕ ಆರ್. ಅಶೋಕ ಸೇರಿದಂತೆ ಬಿಜೆಪಿ ನಾಯಕರಿಗೆ ವಾಸ್ತವಾಂಶಗಳನ್ನು ತಿಳಿಸಿ ಹೇಳುವ ಪ್ರಯತ್ನ ಮಾಡುತ್ತಾರೆ. ಒಂದು ವೇಳೆ ಕೇಳದೆ ಇದ್ದರೆ ಕಾನೂನು ರೀತಿಯಲ್ಲಿ ಕ್ರಮ ಜರುಗಿಸುತ್ತಾರೆ. ಪೊಲೀಸರಿಗೆ ಕಾನೂನಿನ ಪುಸ್ತಕ ಇದೆ, ಸಮವಸ್ತ್ರ ಧರಿಸಿದ ಅಧಿಕಾರಿಗಳು ಕಾನೂನನ್ನು ಪಾಲನೆ ಮಾಡಲು ಏನೆಲ್ಲ ಬೇಕೋ ಅದನ್ನು ಖಂಡಿತ ಮಾಡುತ್ತಾರೆ ಎಂದು ಹೇಳಿದರು.
|
8 |
+
ಬೆಳಗಾವಿಯ ಬೈಲಹೊಂಗಲದಲ್ಲಿ ಅಂಗನವಾಡಿ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದ ಬಳಿಕ ಇಂತಹ ಘಟನೆಗಳಲ್ಲಿ ಸೂಕ್ಷ್ಮವಾಗಿ ನಡೆದುಕೊಳ್ಳುವಂತೆ ಸೂಚಿಸಲಾಗಿದೆ.ಯಾವುದೇ ಪ್ರಕರಣಗಳು ವರದಿಯಾದರೆ ತಕ್ಷಣ ಕ್ರಮ ಕೈಗೊಳ್ಳಬೇಕು. ಬೈಲುಹೊಂಗಲ ಪ್ರಕರಣದಲ್ಲಿ ಕೇಸು ದಾಖಲಿಸಲು ವಿಳಂಬವಾಗಿದ್ದರೆ ಪರಿಶೀಲಿಸಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.
|
9 |
+
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸೈಬರ್ ಕ್ರೈಂ ಸೇರಿದಂತೆ ಎಲ್ಲ ಪ್ರಕರಣಗಳನ್ನು ಕಡ್ಡಾಯವಾಗಿ ದಾಖಲಿಸುವಂತೆ ಸೂಚಿಸಿದ್ದೇವೆ. ಅದರಿಂದಾಗಿ 46ರಿಂದ 60 ಸಾವಿರಗಳಿಗೆ ಪ್ರಕರಣಗಳ ಸಂಖ್ಯೆ ಹೆಚ್ಚಾಗಿವೆ. ಈ ಹಿಂದೆ ಪ್ರಕರಣಗಳೇ ದಾಖಲಾಗುತ್ತಿರಲಿಲ್ಲ. ನಮ್ಮ ಅವಧಿಯಲ್ಲಿ ಎಲ್ಲರಿಗೂ ನ್ಯಾಯ ಸಿಗಬೇಕು ಎಂಬುದು ಸರ್ಕಾರದ ಉದ್ದೇಶ. ಸಮರ್ಪಕ ತನಿಖೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ಸಂಖ್ಯೆ ಹೆಚ್ಚಾಗಿದೆ ಎಂದಾಕ್ಷಣ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಅರ್ಥವಲ್ಲ ಎಂದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಲಾಗಿದೆ. ಶೀಘ್ರವೇ ತನಿಖೆ ಆರಂಭಗೊಳ್ಳಲಿದೆ ಎಂದು ಹೇಳಿದರು.
|
eesanje/url_46_272_6.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಶಾಂತಿ-ಸೌಹಾರ್ದತೆಯ ಸಂದೇಶಕ್ಕೆ ಒತ್ತು: ಸಿದ್ದರಾಮಯ್ಯ
|
2 |
+
ಬೆಂಗಳೂರು,ಜ.3-ಶಾಂತಿ, ಸೌಹಾರ್ದತೆ, ಸಮಾನತೆಯನ್ನು ಪ್ರತಿಪಾದಿಸುವ ಸಂದೇಶಗಳಿರುವ ಚಲನಚಿತ್ರಗಳನ್ನು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶಿಸಲು ಆದ್ಯತೆ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ 15ನೇ ಆವೃತ್ತಿಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಅವರು, ಫೆಬ್ರವರಿ 29ರಿಂದ ಮಾ.7ರವರೆಗೆ ಚಲನಚಿತ್ರೋತ್ಸವ ನಡೆಯಲಿದೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉದ್ಘಾಟನೆ ಮತ್ತು ಸಮಾರೋಪ ಸಮಾರಂಭವನ್ನು ಆಯೋಜಿಸಲಾಗುವುದು ಎಂದು ಹೇಳಿದರು.
|
3 |
+
ಇಂದು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿಯ ಸಭೆ ನಡೆಸಲಾಗಿದೆ. ದೇಶ, ವಿದೇಶಗಳ ಮತ್ತು ಕನ್ನಡ ಭಾಷೆಯ ಚಲನಚಿತ್ರಗಳನ್ನು ಪ್ರದರ್ಶಿಸಲಾಗುವುದು ಎಂದರು.ಮಾರ್ಚ್ 1ರಿಂದ 7ರವರೆಗೆ ಚಿತ್ರೋತ್ಸವದ ಚಲನಚಿತ್ರ ಪ್ರದರ್ಶನ ನಡೆಯಲಿದೆ. ಮಾರ್ಚ್ 7ರಂದು ಗುರುವಾರ ಸಂಜೆ ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲರು ಪ್ರಶಸ್ತಿ ವಿತರಣೆ ಮಾಡಲಿದ್ದಾರೆ.
|
4 |
+
ಚಲನಚಿತ್ರೋತ್ಸವ ಆಯೋಜನೆಗೆ 1.61 ಕೋಟಿ ರೂ. ಲಭ್ಯವಿದ್ದು, ಹೆಚ್ಚುವರಿಯಾಗಿ ಅಗತ್ಯವಿರುವ ಅನುದಾನ ಒದಗಿಸಲು ಸರ್ಕಾರ ಸಿದ್ದವಿದೆ ಎಂದು ಹೇಳಿದರು. ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ತೀರ್ಮಾನಿಸಲಾಯಿತು. ಲಿಂಗ ಸಮಾನತೆ, ಸಮಾನತೆಗೂ ಆದ್ಯತೆ ನೀಡಲಾಗುತ್ತಿದೆ ಎಂದರು.
|
5 |
+
2023ರಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿ 68518 ಅಪರಾಧ ಪ್ರಕರಣಗಳು ದಾಖಲು
|
6 |
+
ಚಲನಚಿತ್ರೋತ್ಸವದ ಆಯೋಜನೆಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಕೋರ್ ಸಮಿತಿಯನು ರಚಿಸಲಾಗಿದೆ. ಸಮಿತಿ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಮೊದಲ ಹಂತದಲ್ಲಿ ದೇಶ-ವಿದೇಶಗಳ ಉತ್ತಮ ಸಿನಿಮಾಗಳನ್ನು ಚಿತ್ರೋತ್ಸವದಲ್ಲಿನ ಪ್ರದರ್ಶನಕ್ಕಾಗಿ ತರಿಸಿಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
|
7 |
+
ಚಿತ್ರೋತ್ಸವದ ಕೆಲಸಗಳಲ್ಲಿ ಪರಿಣಿತಿ ಹೊಂದಿರುವ ವಿದ್ಯಾಶಂಕರ್ ಅವರನ್ನು ಕಲಾತ್ಮಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಇದರೊಂದಿಗೆ ಸಂಘಟಕರು, ತಾಂತ್ರಿಕ ಸಲಹೆಗಾರರು, ಸ್ವಯಂ ಸೇವಕರುಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಂಡು ಸಂಭಾವನೆ ಆಧಾರದಲ್ಲಿ ಇವರ ಸೇವೆಯನ್ನು ಪಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದರು.
|
8 |
+
ಸಭೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರು ಚಲನಚಿತ್ರೋತ್ಸವ ಯಶಸ್ವಿಗೊಳಿಸಲು ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ��ು. ಪ್ರತಿ ವರ್ಷದಂತೆ ಒರಿಯಾನ್ ಮಾಲ್ನಲ್ಲಿರುವ ಪಿವಿಆರ್ನ 11 ಪರದೆಗಳಲ್ಲಿ ಚಿತ್ರ ಪ್ರದರ್ಶನ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
|
eesanje/url_46_272_7.txt
ADDED
@@ -0,0 +1,14 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
1 ವರ್ಷದಲ್ಲಿ ಮನೆ ಬಾಗಿಲಿಗೆ ಖಾತೆ: ಡಿ.ಕೆ.ಶಿವಕುಮಾರ್
|
2 |
+
ಕೆಆರ್ಪುರ, ಜ.3- ಸಿಎಂ ಸಿದ್ದರಾಮಯ್ಯನವರ ಜನತಾ ದರ್ಶನ ಮಾದರಿಯಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಗರದಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ದೊರಕಿಸುವ ಪ್ರಯತ್ನ ನಡೆಸಿದರು.
|
3 |
+
ಮೊದಲ ಹಂತದಲ್ಲಿ ಕೆ.ಆರ್.ಪುರಂನಲ್ಲಿ ಬಾಗಿಲಿಗೆ ಬಂತು ಸರ್ಕಾರ, ಸೇವೆಗಿರಲಿ ನಿಮ್ಮ ಸಹಕಾರ, ಅಹವಾಲು ನಿಮ್ಮದು ಪರಿಹಾರ ನಮ್ಮದು ಎಂಬ ಧ್ಯೇಯ ವಾಕ್ಯದೊಂದಿಗೆ ಜನತಾ ದರ್ಶನ ಆಯೋಜಿಸಲಾಗಿತ್ತು.ಶಾಸಕ ಭೈರತಿ ಬಸವರಾಜ್, ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ರಾಜೀವ್ ಗೌಡ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
|
4 |
+
ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಜನರ ಕಷ್ಟಗಳನ್ನು ನಿವಾರಿಸಲು ಮನೆ ಬಾಗಿಲಿಗೆ ಸರ್ಕಾರ ಬಂದಿದ್ದು ಸಮಸ್ಯೆ ಹೇಳಿ ಪರಿಹಾರ ಪಡೆಯಿರಿ ಎಂದು ಕರೆ ನೀಡಿದರು. ಬೆಂಗಳೂರು ನಗರದಲ್ಲಿ ನೀರು, ಕಸ, ಟ್ರಾಫಿಕ್ ದೊಡ್ಡ ಸಮಸ್ಯೆಯಾಗಿ ಮಾರ್ಪಟ್ಟಿದ್ದು ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು. ಶಾಸಕರಾದ ಬೈರತಿ ಬಸವರಾಜ ಹಾಗೂ ಮಂಜುಳಾ ಅರವಿಂದ ಲಿಂಬಾವಳಿ ಅವರು ಕುಡಿಯುವ ನೀರಿನ ಸಮಸ್ಯೆ, ರಸ್ತೆ, ಫ್ಲೈಓವರ್ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದಿದ್ದಾರೆ. ಆದಷ್ಟು ಬೇಗ ಬಗೆಹರಿಸುವ ಕೆಲಸ ಮಾಡಲಾಗುತ್ತದೆ ಎಂದರು.
|
5 |
+
ಬೆಂಗಳೂರು ನಗರದಲ್ಲಿ ತ್ಯಾಜ್ಯ ವಿಲೇವಾರಿ ದೊಡ್ಡ ಸಮಸ್ಯೆಯಾಗಿದೆ. ಇದನ್ನು ಬಗೆಹರಿಸಲು ಕಸ ಸುಡುವುದು, ಗ್ಯಾಸ್ ತಯಾರಿಕೆ ಮಾಡುವುದು, ಮಾಡಲಾಗುವುದು ಈಗಾಗಲೇ ನಾಲ್ಕು ಟೆಂಡರ್ ಕರೆದಿದ್ದು ಇನ್ನು ನಾಲ್ಕು ಟೆಂಡರ್ಗಳನ್ನು ಕರೆಯಲಾಗುವುದು ಎಂದು ತಿಳಿಸಿದರು. ರಾಜಕಾಲುವೆ ಪಕ್ಕದಲ್ಲಿ 150 ಮೀಟರ್ ಯಾವ ಕಟ್ಟಡವನ್ನು ನಿರ್ಮಾಣ ಮಾಡುವಂತಿಲ್ಲ. ಸಾರ್ವಜನಿಕರು ಓಡಾಡೋಕೆ ಅವಕಾಶ ಕಲ್ಪಿಸಲಾಗುತ್ತಿದೆ. ಸಾಕಷ್ಟು ತೆರಿಗೆ ಸೋರಿಕೆಯಾಗುತ್ತಿದೆ, ತೆರಿಗೆ ಕಟ್ಟಿದರೆ ಅಭಿವೃದ್ದಿ ಸಾಧ್ಯ, ಎಲ್ಲರೂ ತೆರಿಗೆ ಪಾವತಿಸಿ ಎಂದು ಸಲಹೆ ನೀಡಿದರು.
|
6 |
+
ಮನೆ ಬಾಗಿಲಿಗೆ ಖಾತೆ ನೀಡುವ ಕೆಲಸ ಒಂದು ವರ್ಷದಲ್ಲಿ ಮಾಡುತ್ತೇವೆ. ಯಾರಿಗೂ ಒಂದು ರೂಪಾಯಿ ಕೊಡಬೇಡಿ ಎಂದು ಹೇಳಿದರು. ನಮ್ಮ ಸರ್ಕಾರ ನೀಡಿರುವ ಅನ್ನಭಾಗ್ಯ ಅಕ್ಕಿಯನ್ನು ಮಂತ್ರಾಕ್ಷತೆಯಾಗಿ ಪರಿವರ್ತನೆ ಮಾಡಿ ಎಲ್ಲಾ ಕಡೆ ಹಂಚಾಲಾಗುತ್ತಿದೆ ಎಂದು ಅಯೋಧ್ಯೆಯ ಮಂತ್ರಾಕ್ಷತೆ ಬಗ್ಗೆ ಕಿಚಾಯಿಸಿದರು.
|
7 |
+
ಶಾಸಕ ಬೈರತಿ ಬಸವರಾಜ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ. 110 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಅನುದಾನ ನೀಡಬೇಕು ಎಂದು ಮನವಿ ಮಾಡಿದರು. ಕಳೆದ ಸರ್ಕಾರದಲ್ಲಿ ಹಳೆ ಮದ್ರಾಸ್ ರಸ್ತೆಯಲ್ಲಿ ಸೇತುವೆ ನಿರ್ಮಾಣಕ್ಕೆ 350 ಕೋಟಿ ರೂ. ಮೀಸಲಿರಿಸಿ ಎಲ್ಲಾ ರೀತಿಯ ಪ್ಲಾನ್ಗಳನ್ನು ತಯಾರಿಸಿ ���ೆಡಿ ಮಾಡಿದ್ದೆವು. ಆದರೆ ಇದೀಗ ಅದನ್ನು ಸ್ಥಗಿತಗೊಳಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಎಲ್ಲೂ ಪ್ರಸ್ತಾಪ ಮಾಡಿಲ್ಲ, ಲಕ್ಷಾಂತರ ವಾಹನ ಸಂಚರಿಸುವ ರಸ್ತೆ ಇದಾಗಿದೆ. ವಾಹನ ದಟ್ಟಣೆ ಹೆಚ್ಚಾಗಿದೆ. ಆದಷ್ಟು ಬೇಗ ಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡಬೇಕಿದೆ ಎಂದು ಹೇಳಿದರು.
|
8 |
+
ಕೆಆರ್ಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವು ಕೆರೆಗಳು ಅಭಿವೃದ್ಧಿಯಾಗಬೇಕಿದೆ. ಬೃಹತ್ ನೀರುಗಾಲುವೆಗಳಿಂದ ಸಾಕಷ್ಟು ಜನರಿಗೆ ತೊಂದರೆಯಾಗುತ್ತಿದೆ. 60 ಕಿ.ಮೀನಷ್ಟು ಬೃಹತ್ ನೀರುಗಾಲುವೆಯಲ್ಲಿ ನೀರು ಹರಿದು ಹೋಗುತ್ತದೆ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿ ಮಾಡಬೇಕು ಎಂದು ಹೇಳಿದರು.
|
9 |
+
2023ರಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿ 68518 ಅಪರಾಧ ಪ್ರಕರಣಗಳು ದಾಖಲು
|
10 |
+
ಕಳೆದ ಸರ್ಕಾರದಲ್ಲಿ ನೀಡಿದ್ದ ಅನುದಾನದಲ್ಲಿ ನಡೆಯುತ್ತಿದ್ದ ಕಾಮಗಾರಿ ಪೇಮೆಂಟ್ ನೀಡದೆ ಸ್ಥಗಿತಗೊಳಿಸಿದ್ದೀರಿ ರಿಲೀಸ್ ಮಾಡಿಸಬೇಕು ಎಂದರು. ಉದಯನಗರ ಬಳಿ ಬೆನ್ನಗಾನಹಳ್ಳಿ ಮೆಟ್ರೋ ಎಂದು ಸ್ಟೇಷನ್ ಎಂದು ಹಾಕಿದ್ದಾರೆ ಅದನ್ನು ತೆಗೆಸಿ ಉದಯನಗರ ಸ್ಟೇಷನ್ ಎಂದು ಹೆಸರಿಡಲು ಅನುಮೋದನೆ ನೀಡಬೇಕು ಎಂದು ಹೇಳಿದರು.
|
11 |
+
ವಿದ್ಯುತ್ ದೀಪಗಳ ಅಳವಡಿಕೆಗೆ ಅನುದಾನ ನೀಡಬೇಕು, ಹೆಚ್ಚಿನ ಪೌರಕಾರ್ಮಿಕರ ನೇಮಕ ಆಗಬೇಕು, ಕಗ್ಗದಾಸಪುರ ರೈಲ್ವೆ ಸೇತುವೆ ಸ್ಥಗಿತಗೊಳಿಸಲಾಗಿದೆ ಅದಕ್ಕೆ ಅನುಮೋದನೆ ನೀಡಬೇಕು. ಮೆಟ್ರೋ ಕಾಮಗಾರಿಯಿಂದ ರಸ್ತೆ ಹಾಳಾಗಿದೆ, ಸರಿಪಡಿಸಿಕೊಡಬೇಕು ಎಂದು ಹೇಳಿದರು.
|
12 |
+
ರಾಮಮಂದಿರಕ್ಕೆ ಬಿಗಿ ಭದ್ರತೆಗೆ ವಿಶೇಷ ಪೊಲೀಸ್ ಪಡೆ ನಿಯೋಜನೆ
|
13 |
+
ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಮಾತನಾಡಿ, ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಸಮಸ್ಯೆ ಬಗೆಹರಿಸಿಕೊಡಬೇಕು ಎಂದು ಹೇಳಿದರು. ಕಸ ಡಂಪಿಂಗ್ ಮಾಡಿದ್ದ ಜಾಗದ ಸುತ್ತಮುತ್ತಲ ಹಳ್ಳಿಗಳಲ್ಲಿ ಸ್ಪ್ರೇ ಮಾಡಬೇಕು, ರಾಜಕಾಲುವೆಗಳಲ್ಲಿ ಹೂಳೆತ್ತಬೇಕಿದೆ, ನಿಧಾನಗತಿಯಲ್ಲಿ ಕಾಮಗಾರಿ ನಡೆಯುತ್ತಿದೆ ಅದನ್ನು ಚುರುಕುಗೊಳಿಸಬೇಕು ಎಂದರು. ಮಹದೇವಪುರ ಕ್ಷೇತ್ರದಲ್ಲಿ ಬಡವರು ಹೆಚ್ಚಾಗಿ ವಾಸಿಸುತ್ತಿದ್ದು ಅವರಿಗೊಂದು ಸುಸರ್ಜಿತ ಆಸ್ಪತ್ರೆ ನಿರ್ಮಾಣವಾಗಬೇಕಿದೆ ಎಂದರು.
|
14 |
+
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ. ಮೋಹನ್ಬಾಬು, ಎಂ.ಎಲ್.ಸಿ ನಾರಾಯಣಸ್ವಾಮಿ ಸೇರಿದಂತೆ ಸ್ಥಳೀಯ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.
|
eesanje/url_46_272_8.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪಾಳುಕೊಂಪೆಯಾದ ಬಿಎಸ್ಎನ್ಎಲ್ ಶಾಖಾ ಕಚೇರಿ
|
2 |
+
ಬೆಂಗಳೂರು,ಜ.3- ಒಂದು ಕಾಲದಲ್ಲಿ ಗತವೈಭವ ಮೆರೆದಿದ್ದ ಬಿಎಸ್ಎನ್ಎಲ್ನ ನಗರ ಕೇಂದ್ರ ಭಾಗದಲ್ಲಿರುವ ಶಾಖಾ ಕಚೇರಿಯು ಈಗ ಪಾಳುಕೊಂಪೆಯಾಗಿದೆ. ಮೊಬೈಲ್ ಸೇವೆಯ ಆರಂಭದ ದಿನಗಳಲ್ಲಿ ಬಿಎಸ್ಎನ್ಎಲ್ ಸಿಮ್ ಪಡೆದುಕೊಳ್ಳಲು ಮುಂಜಾನೆ 4 ಗಂಟೆಗೆ ಎದ್ದು ಸರತಿಸಾಲಿನಲ್ಲಿ ನಿಲ್ಲಬೇಕಾಗಿತ್ತು. ಕೆಲವು ಕಡೆ ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಿದ ಉದಹಾರಣೆಗಳೂ ಇವೆ.
|
3 |
+
ಅಂಥ ಗತವೈಭವ ಮರೆಯಾಗಿ ಇಂದು ಬಿಎಸ್ಎನ್ಎಲ್ ಸೊರಗಿ ಹೋಗಿದೆ. ಇದಕ್ಕೆ ಸ್ಪಷ್ಟ ಉದಾಹರಣೆ ಬೆಂಗಳೂರಿನ ಹೃದಯ ಭಾಗದಲ್ಲಿರುವ ಬಿಎಸ್ಎನ್ಎಲ್ನ ಪ್ರಾದೇಶಿಕ ಪ್ರಧಾನ ವ್ಯವಸ್ಥಾಪಕರ ಪ್ರಧಾನ ಕಚೇರಿ ಸಾಕ್ಷಿಯಾಗಿದೆ. ಬಿಎಸ್ಎನ್ಎಲ್ನ ಕಚೇರಿಗೆ ಭೇಟಿ ನೀಡುವುದಾದರೆ ಮೂಗು ಮುಚ್ಚಿಕೊಂಡೇ ಒಳಹೋಗಬೇಕು. ಎಲ್ಲೆಂದರಲ್ಲಿ ಕಸದ ರಾಶಿ, ತಿಪ್ಪೆಗುಂಡಿ, ಅಡ್ಡಾದಿಡ್ಡಿಯಾಗಿ ಬಿದ್ದಿರುವ ತ್ಯಾಜ್ಯ ವಸ್ತುಗಳು ಅಸಹನೀಯ ವಾತಾವರಣ ಸೃಷ್ಟಿಸಿವೆ.
|
4 |
+
ಎಲ್ಲೆಂದರಲ್ಲಿ ಅಗೆದು ಗುಂಡಿಗಳನ್ನು ನಿರ್ಮಿಸಲಾಗಿದೆ. ಪಾರ್ಕಿಂಗ್ ಸ್ಥಳವಂತೂ ಹಾಳು ಕೊಂಪೆಯಾಗಿದೆ. ಬಿಎಸ್ಎನ್ಎಲ್ನ ಕ್ಯಾಂಟೀನ್ನಲ್ಲಿ ತಿಂಡಿ, ಊಟಕ್ಕಾಗಿ ಜನ ಕಿಕ್ಕಿರಿದು ತುಂಬಿರುತ್ತಿದ್ದರು. ಈಗ ಇಡೀ ಕ್ಯಾಂಟೀನ್ ಬಣಗುಡುತ್ತಿದೆ. ವಾಣಿಜ್ಯ ನ್ಯಾಯಾಲಯಗಳ ಸಂಕೀರ್ಣ, ಟೆಲಿಕಾಂ ರೆಗ್ಯುಲಾರಿಟಿ ಅಥಾರಿಟಿ ಆಫ್ ಇಂಡಿಯಾ(ಟ್ರಾಯ್) ಪ್ರಾದೇಶಿಕ ಕಚೇರಿಗಳು ಬಿಎಸ್ಎನ್ಎಲ್ನ ಕೇಂದ್ರ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿವೆ. ವಾಣಿಜ್ಯ ನ್ಯಾಯಾಲಯಗಳ ಪ್ರಕರಣಗಳಿಗಾಗಿ ಆಗಮಿಸುವವರು ಬಿಎಸ್ಎನ್ಎಲ್ನ ದುಸ್ಥಿತಿ ಕಂಡು ಮರುಗುವಂತಾಗಿದೆ.
|
5 |
+
ಕ್ರಿಮಿನಲ್ಗಳಿಗೆ ಜಾತಿ, ಧರ್ಮದ ಬಣ್ಣಕಟ್ಟಿ ಪ್ರತಿಭಟಿಸುವ ದುಸ್ಥಿತಿಯಲ್ಲಿ ಬಿಜೆಪಿ : ಸಿಎಂ ಸಿದ್ದರಾಮಯ್ಯ
|
6 |
+
ಖಾಸಗಿ ದೂರ ಸಂಪರ್ಕ ಸೇವೆಗಳು ಹವಾನಿಯಂತ್ರಿತ ಐಷಾರಾಮಿ ಕಚೇರಿಗಳನ್ನು ನಿರ್ವಹಣೆ ಮಾಡುತ್ತಿವೆ. ಖಾಸಗಿ ಸಂಸ್ಥೆಗಳ ದೂರ ಸಂಪರ್ಕ ಸೇವೆಯೂ ಕೂಡ ಜನಸ್ನೇಹಿ ಹಾಗೂ ಅತ್ಯಾಧುನಿಕ ತಂತ್ರಜ್ಞಾನವನ್ನು ಒಳಗೊಂಡಿದೆ. ಬಿಎಸ್ಎನ್ಎಲ್ ಇನ್ನೂ 3ಜಿ ಬಿಟ್ಟು ಮೇಲೆ ಬಂದಿಲ್ಲ. ಮೊಬೈಲ್ ಸಿಮ್ ಪಡೆದುಕೊಳ್ಳಲು ಜನ ಹಿಂದೇಟು ಹಾಕುತ್ತಿದ್ದಾರೆ. ಖಾಸಗಿ ಸೇವೆಯಿಂದ ಬಿಎಸ್ಎನ್ಎಲ್ಗೆ ಪೋರ್ಟ್ ಆಗಲು ಬಯಸುವವರು ಸರ್ಕಾರಿ ವ್ಯವಸ್ಥೆಯ ಕಿರಿಕಿರಿಯನ್ನು ಅನುಭವಿಸಲಾಗದೆ ಇರುವ ಸಂಪರ್ಕದಲ್ಲೇ ಮುಂದುವರೆಯುತ್ತಿರುವುದು ಕಂಡುಬಂದಿದೆ.
|
7 |
+
ಅದೇ ಬೇರೆ ಯಾವುದೇ ಸೇವೆಯಿಂದ ಖಾಸಗಿಗೆ ಪೋರ್ಟ್ ಆಗಲು ಎಸ್ಎಂಎಸ್ ಆಧಾರಿತ ಸೂಚನೆ ಕಳುಹಿಸಿದ ತಕ್ಷಣವೇ ನಿಮಗೆ ಕರೆ ಬರುತ್ತದೆ. ನೀವು ಪೋರ್ಟ್ ಆಗಲು ಬಯಸುವ ಸಂಸ್ಥೆಯ ಪ್ರತಿನಿಧಿ ನಿಮ್ಮ ಅನುಕೂಲಕರ ಸಮಯಕ್ಕೆ ಅನುಗುಣವಾಗಿ ಮನೆ ಅಥವಾ ಕಚೇರಿ ಬಾಗಿಲಿಗೆ ಬರಲು ಸಿದ್ದರಿರುತ್ತಾರೆ. ಬಿಎಸ್ಎನ್ಎಲ್ಗೆ ಪರಿವರ್ತನೆಯಾಗಬೇಕಾದರೆ ಕೇಂದ್ರ ಕಚೇರಿಗೆ ಭೇಟಿ ನೀಡಬೇಕು. ಅಲ್ಲಿನ ಸಿಬ್ಬಂದಿಗಳ ಸಮಯಕ್ಕೆ ಅನುಗುಣವಾಗಿ ಕಾದುಕುಳಿತುಕೊಳ್ಳಬೇಕು. ಅವರು ಕೇಳಿದ ಅಷ್ಟು ದಾಖಲಾತಿಗಳನ್ನು ಒದಗಿಸಿ ಸೇವೆ ಪಡೆದುಕೊಳ್ಳುವಷ್ಟರಲ್ಲಿ ಹೈರಾಣಾಗುವ ಸ್ಥಿತಿ ಇದೆ.
|
8 |
+
ಮತ್ತೊಂದು ಗೋದ್ರಾ ಹತ್ಯಾಕಾಂಡಕ್ಕೆ ಸಂಚು- ಬಿ.ಕೆ.ಹರಿಪ್ರಸಾದ್
|
9 |
+
ದೂರ ಸಂಪರ್ಕ ಸೇವೆಯಷ್ಟೇ ಅಧ್ವಾನವಾಗಿಲ್ಲ. ಕಚೇರಿಯ ನೈರ್ಮಲೀಕರಣವೂ ಕೂಡ ಗಬ್ಬೆದ್ದು ಹೋಗಿದೆ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ.
|
eesanje/url_46_272_9.txt
ADDED
@@ -0,0 +1,18 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
2023ರಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿ 68518 ಅಪರಾಧ ಪ್ರಕರಣಗಳು ದಾಖಲು
|
2 |
+
ಬೆಂಗಳೂರು, ಜ.03- ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 2022ರಲ್ಲಿ ಒಟ್ಟಾರೆ 46187 ಪ್ರಕರಣಗಳು ದಾಖಲಾದರೆ 2023ನೇ ಸಾಲಿನಲ್ಲಿ 68518 ಅಪರಾಧ ಪ್ರಕರಣಗಳು ದಾಖಲಾಗಿದ್ದು, ಪ್ರಸ್ತುತ ಅಪರಾಧ ಪ್ರಕರಣಗಳು ಹೆಚ್ಚಾಗಿವೆ.
|
3 |
+
ಸಾರ್ವಜನಿಕ ನಿರ್ಭೀತಿ ಮತ್ತು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸುವ ಬಗ್ಗೆ ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸಲಾಗಿದೆ. ಅಲ್ಲದೆ, ಕಂಟ್ರೋಲ್ ರೂಂ 112ಕ್ಕೆ ಬರುವ ಕರೆಗಳನ್ನು ಸಹ ದೂರುಗಳನ್ನಾಗಿ ಪರಿವರ್ತಿಸಿ ಪ್ರಕರಣ ದಾಖಲು ಮಾಡಿಕೊಂಡರೆ, ಇ-ಎಫ್ಐಆರ್ ವ್ಯವಸ್ಥೆಯನ್ನು ಸಾರ್ವಜನಿಕರಿಗೆ ರೂಪಿಸಲಾಗಿರುವುದರಿಂದ ಅಪರಾಧ ಪ್ರಕರಣಗಳು ಹೆಚ್ಚಾಗಿ ದಾಖಲಾಗಲು ಕಾರಣವಾಗಿವೆ.
|
4 |
+
ಮಾದಕ ವಸ್ತುಗಳ ವಿರುದ್ಧ ಕ್ರಮ:ನಗರಾದ್ಯಂತ ನಿಷೇಧಿತ ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಕಳೆದ ಸಾಲಿನಲ್ಲಿ 3433 ಪ್ರಕರಣಗಳನ್ನು ದಾಖಲಿಸಿ 103.21 ಕೋಟಿ ರೂ. ಮೌಲ್ಯದ 5387 ಕೆಜಿ ನಿಷೇತ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು 4399 ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಪೈಕಿ 99 ವಿದೇಶಿ ಪ್ರಜೆಗಳು ಒಳಗೊಂಡಿರುತ್ತಾರೆ.
|
5 |
+
ಆಸ್ತಿ ಜಪ್ತಿ:ಸಿಸಿಬಿ ಪೊಲೀಸರು ಪಿಟ್ ಎನ್ಡಿಪಿಎಸ್ ಕಾಯ್ದೆಯಡಿಯಲ್ಲಿ ಆರೋಪಿಯೊಬ್ಬನ ವಿರುದ್ಧ ಕ್ರಮ ಜರುಗಿಸಲಾಗಿದ್ದು, ಮಾದಕ ವಸ್ತುಗಳ ಮಾರಾಟ ಜಾಲದಲ್ಲಿ ತೊಡಗಿದ್ದ ಮತ್ತೊಬ್ಬ ಆರೋಪಿಯ ಆಸ್ತಿ ಜಪ್ತಿಗೆ ಕ್ರಮ ವಹಿಸಲಾಗಿದೆ. ಕಳೆದ ಸಾಲಿನಲ್ಲಿ ಒಟ್ಟು 111 ಕೋಟಿ ರೂ. ಮೌಲ್ಯದ 6425 ಕೆಜಿ ಮಾದಕ ವಸ್ತುಗಳನ್ನು ನಾಶಪಡಿಸಲಾಗಿದೆ.
|
6 |
+
ವಿದೇಶಿಯರ ಗಡಿಪಾರು:ನಗರದಲ್ಲಿ ವಾಸವಾಗಿದ್ದುಕೊಂಡು ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿದ್ದ ವಿದೇಶಿಯರ ವಿರುದ್ಧ 92 ಪ್ರಕರಣಗಳನ್ನು ದಾಖಲಿಸಿ 126 ಮಂದಿಯನ್ನು ಬಂಧಿಸಿ, 247 ವಿದೇಶಿಯರನ್ನು ಗಡಿಪಾರು ಮಾಡಲಾಗಿರುತ್ತದೆ.
|
7 |
+
ರಾಮಮಂದಿರಕ್ಕೆ ಬಿಗಿ ಭದ್ರತೆಗೆ ವಿಶೇಷ ಪೊಲೀಸ್ ಪಡೆ ನಿಯೋಜನೆ
|
8 |
+
ಕಾನೂನು ಬಾಹಿರ ಚಟುವಟಿಕೆ ನಿಯಂತ್ರಣ:ಮಟ್ಕ-83 ಪ್ರಕರಣ 149 ಮಂದಿ ಬಂಧನ, ಜೂಜು- 231 ಪ್ರಕರಣ 2593 ಮಂದಿ ಬಂಧನ. ಕ್ರಿಕೆಟ್ ಬೆಟ್ಟಿಂಗ್- 147 ಪ್ರಕರಣದಲ್ಲಿ 229 ಬಂಧನ. ಆನ್ಲೈನ್ ಬೆಟ್ಟಿಂಗ್-1 ಪ್ರಕರಣ ಒಬ್ಬನ ಬಂಧನ, ಇತರೆ ಬೆಟ್ಟಿಂಗ್-19 ಪ್ರಕರಣ 44 ಮಂದಿ ಬಂಧನ, ಲಿಕ್ಕರ್-193 ಪ್ರಕರಣ 197 ಮಂದಿ ಬಂಧನ ಸೇರಿದಂತೆ ಅನಧಿಕೃತ ಕ್ಲಬ್ಗಳು, ಕಾಪಿರೇಟ್ ಕಾಯ್ದೆ, ಕೋಪ್ಟ ಕಾಯ್ದೆ, ಎನ್ಡಿಪಿಎಸ್ ಪ್ರಕರಣಗಳು ಸೇರಿದಂತೆ ಒಟ್ಟಾರೆ 5994 ಪ್ರಕರಣಗಳಲ್ಲಿ 9414 ಮಂದಿಯನ್ನು ಬಂಧಿಸಲಾಗಿದೆ.
|
9 |
+
45 ಆರೋಪಿಗಳ ಗಡಿಪಾರು:ಮುಂಜಾಗ್ರತ ಕ್ರಮದ ಅಡಿಯಲ್ಲಿ ಒಟ್ಟು 4799 ಪಿಎಆರ್ ಪ್ರಕರಣಗಳನ್ನು ದಾಖಲಿಸಲಾಗಿದೆ. ಮುಚ್ಚಳಿಕೆ ಉಲ್ಲಂಘನೆ ಮಾಡಿದ 30 ವ್ಯಕ್ತಿಗಳ ವಿರುದ್ಧ ಬಾಂಡ್ ಮೌಲ್ಯದ ಮೊತ್ತವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. 10 ಮಂದಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದು, 45 ಆರ���ಪಿಗಳನ್ನು ಗಡಿಪಾರು ಮಾಡಲಾಗಿರುತ್ತದೆ.
|
10 |
+
ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆ:ನ್ಯಾಯಾಲಯದಲ್ಲಿ ಎಲ್ಪಿಆರ್ ಪ್ರಕರಣಗಳಿದ್ದು, ತಲೆಮರೆಸಿಕೊಂಡಿದ್ದ ಆರೋಪಿಗಳ ಪೈಕಿ 99 ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಈ ಸಾಲಿನಲ್ಲಿ 77 ಆರೋಪಿಗಳನ್ನು ಪತ್ತೆ ಮಾಡಿ 174ಎ ಐಪಿಸಿ ಅಡಿಯಲ್ಲಿ ಹಾಗೂ 212 ಆರೋಪಿಗಳನ್ನು ಪತ್ತೆ ಮಾಡಿ 229ಎ ಐಪಿಸಿ ಪ್ರಕರಣದಲ್ಲಿ ಬಂಧಿಸಿ ಕಾನೂನು ಕ್ರಮ ಜರುಗಿಸ ಲಾಗಿದೆ.
|
11 |
+
ರೌಡಿಗಳ ವಿರುದ್ಧ ಕ್ರಮ:ಮುಂಜಾಗ್ರತ ಕ್ರಮದ ಅಡಿಯಲ್ಲಿ ರೌಡಿಗಳ ವಿರುದ್ಧ ಒಟ್ಟು 4020 ಪಿಎಆರ್ ಪ್ರಕರಣಗಳನ್ನು ದಾಖಲಿಸಿ 229ಎ ಐಪಿಸಿ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಲಾಗಿದ್ದು, 14 ಮಂದಿ ರೌಡಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಜರುಗಿಸಲಾಗುತ್ತದೆ. ತಲೆಮರೆಸಿಕೊಂಡಿರುವ ರೌಡಿಗಳ ಪೈಕಿ 324 ರೌಡಿಗಳನ್ನು ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸಲಾಗಿದೆ.
|
12 |
+
ಶಿಕ್ಷೆಗಳ ವಿವರ:ಒಟ್ಟಾರೆ 21428 ಪ್ರಕರಣಗಳು ವಿಚಾರಣೆ ಪೂರೈಸಿ 15229 ಪ್ರಕರಣಗಳು ಶಿಕ್ಷೆಗೆ ನ್ಯಾಯಾಲಯವು ಆದೇಶಿಸಿರುತ್ತದೆ. 48 ಪ್ರಕರಣಗಳಲ್ಲಿ 65 ಜನ ಆರೋಪಿಗಳಿಗೆ 14 ವರ್ಷ ಜೀವಾವ ಶಿಕ್ಷೆ ವಿಧಿಸಲಾಗಿದೆ.11 ಪ್ರಕರಣಗಳಲ್ಲಿ 21 ಆರೋಪಿಗಳಿಗೆ 10ರಿಂದ 14 ವರ್ಷ ಶಿಕ್ಷೆ, 18 ಪ್ರಕರಣಗಳಲ್ಲಿ 19 ಮಂದಿಗೆ 7ರಿಂದ 10 ವರ್ಷ ಶಿಕ್ಷೆ, 28 ಪ್ರಕರಣಗಳಲ್ಲಿ 30 ಮಂದಿಗೆ 3ರಿಂದ 7 ವರ್ಷ ಶಿಕ್ಷೆ, 56 ಪ್ರಕರಣಗಳಲ್ಲಿ 68 ಮಂದಿಗೆ 1ರಿಂದ 3 ವರ್ಷ ಶಿಕ್ಷೆ, 41 ಪ್ರಕರಣಗಳಲ್ಲಿ 46 ಮಂದಿಗೆ ಒಂದು ವರ್ಷಕ್ಕಿಂತ ಕೆಳಪಟ್ಟು ಶಿಕ್ಷೆ ವಿಧಿಸಲಾಗಿದೆ.15026 ಪ್ರಕರಣಗಳಲ್ಲಿ 16817 ಆರೋಪಿಗಳಿಗೆ ದಂಡ ಶುಲ್ಕ ವಿಧಿಸಲಾಗಿದೆ. ಕಳೆದ ಸಾಲಿನಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲದಂತೆ ಚುನಾವಣಾ ಬಂದೋಬಸ್ತ್, ಎಲ್ಲಾ ಧರ್ಮಗಳ ಹಬ್ಬಗಳು, ರಾಷ್ಟ್ರೀಯ ಹಬ್ಬಗಳು, ಜಾತ್ರೆ ಮತ್ತು ಮೆರವಣಿಗೆ, ಪಂಜಾಗಳನ್ನು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿರುತ್ತದೆ.
|
13 |
+
ಎನ್ಡಿಪಿಎಸ್ ಪ್ರಕರಣಗಳು:ವಿವಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಏ. 09ರಂದು ನೈಜೀರಿಯಾ ದೇಶದ ಇಬ್ಬರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಿ ಸುಮಾರು 7 ಕೋಟಿ ಮೊತ್ತದ 2 ಕೆಜಿ 997 ಗ್ರಾಂ ತೂಕದ ಕೊಕೈನ್, ಎಂಡಿಎಂಎ ಮತ್ತು ಎಕ್ಸ್ಟಸಿ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ.
|
14 |
+
ಸಿಸಿಬಿ ಪೊಲೀಸರು ಜೂನ್ 22ರಂದು ಮೂವರು ಅಂತರ್ ರಾಜ್ಯ ಡ್ರಗ್ ಪೆಡ್ಲರ್ಗಳನ್ನು ಬಂಧಿಸಿ ಸುಮಾರು 11.44 ಕೋಟಿ ರೂ. ಮೌಲ್ಯದ 1438 ಕೆಜಿ ತೂಕದ ಮಾದಕ ವಸ್ತು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.ನ. 5ರಂದು ಸಿಸಿಬಿ ಪೊಲೀಸರು ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೈಜೀರಿಯಾ ದೇಶದ ಪ್ರಜೆಯನ್ನು ಬಂಧಿಸಿ ಸುಮಾರು 10 ಕೋಟಿ ರೂ. ಬೆಲೆ ಬಾಳುವ ಎಂಡಿಎಂಎ, ಸೋಡಿಯಂ ಹೈಡ್ರಾಕ್ಸೈಡ್, ಹೈಡ್ರೋಕ್ಲೋರಿಕ್ ಆಸಿಡ್ ಮತ್ತು ಅಸೆಟಾಲ್ನ್ನು ವಶಪಡಿಸಿಕೊಂಡಿದ್ದಾರೆ.
|
15 |
+
ಇತರೆ ಪ್ರಕರಣಗಳು:ಸಾಹಿತಿಗಳಿಗೆ ಬ��ದರಿಕೆ ಹಾಕಿರುವ ಪ್ರಕರಣವನ್ನು ಬೇಧಿಸಿ ಆರೋಪಿಗಳನ್ನು ಬಂಧಿಸಲಾಗಿದೆ, ಹೆಣ್ಣು ಭ್ರೂಣಲಿಂಗ ಪತ್ತೆ ಮಾಡಿ ಗರ್ಭಪಾತ ಮಾಡುತ್ತಿದ್ದ ಜಾಲವನ್ನು ಭೇದಿಸಿ ವೈದ್ಯರು, ಸಹಚರರು, ಏಜೆಂಟ್ಗಳು ಹಾಗೂ ಲ್ಯಾಬ್ ಟೆಕ್ನಿಷಿಯನ್ ರನ್ನು ಬಂಸುವಲ್ಲಿ ಬೈಯ್ಯಪ್ಪನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.ಸಿಸಿಬಿ ಪೊಲೀಸರು ಮಕ್ಕಳ ಮಾರಾಟ ಜಾಲವನ್ನು ಪತ್ತೆ ಮಾಡಿ ಮಕ್ಕಳ ಕಳ್ಳ ಸಾಗಣೆ ಮಾಡುತ್ತಿದ್ದ ಅಂತರ್ ರಾಜ್ಯ ಜಾಲವನ್ನು ಭೇದಿಸಿ ತಮಿಳು ನಾಡು ಮೂಲದ ಮಹಿಳೆ ಸೇರಿದಂತೆ ಒಟ್ಟು 8 ಮಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
|
16 |
+
ಅಂಗನವಾಡಿ ಕಾರ್ಯಕರ್ತೆಯ ಮೂಗು ಕತ್ತರಿಸಿದ ದುಷ್ಕರ್ಮಿ
|
17 |
+
ಬ್ಯಾಂಕ್ ಖಾತೆ ತೆರೆದು ಸಾಮಾಜಿಕ ಜಾಲತಾಣಗಳಾದ ವಾಟ್ಸ್ಪ್ ಮತ್ತು ಟೆಲಿಗ್ರಾಂ ಆಪ್ಗಳ ಮೂಲಕ ಹಣವನ್ನು ಹೂಡಿಕೆ ಮಾಡಿಸಿ ಜನರಿಗೆ ಕೋಟ್ಯಾಂತರ ರೂ. ವಂಚಿಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ.ಆರೋಪಿಗಳು ದೇಶಾದ್ಯಂತ 5013 ಮಂದಿಯಿಂದ ಸುಮಾರು 854 ಕೋಟಿ ರೂ. ಹಣವನ್ನು ವಂಚನೆ ಮಾಡಿದ್ದು, ಆರು ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
|
18 |
+
ಲೋಕಸ್ಪಂದನ/ ಕ್ಯೂಆರ್ ಕೋಡ್:ಠಾಣಾ ಮಟ್ಟದಲ್ಲಿ ಪೊಲೀಸ್ ಸೇವೆಯಲ್ಲಿ ಲೋಪದೋಷವನ್ನು ಗುರುತಿಸಲು, ಭ್ರಷ್ಟಾಚಾರ ತಡೆಗಟ್ಟಲು ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಜಾರಿಗೆ ತರುವಲ್ಲಿ ಲೋಕಸ್ಪಂದನ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.ಸೈಬರ್ ಅಪರಾಧ ಪ್ರಕರಣಗಳ ಜಾಗೃತಿ:ಸೈಬರ್ ಅಪರಾಧ ಪ್ರಕರಣಗಳ ಜಾಗೃತಿ ಕುರಿತಂತೆ ಸಾರ್ವಜನಿಕರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಸೈಬರ್ ಟಿಪ್ ಆಫ್ ದಿ ಡೇ ಹಾಗೂ ಪಾತಾಳ ಗರಡಿ ಮುಂತಾದ ಕಾರ್ಯಕ್ರಮವನ್ನು ನಡೆಸಲಾಗಿದೆ.
|
eesanje/url_46_273_1.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
|
2 |
+
ಬೆಂಗಳೂರು,ಜ.3- ರಾಮ ಜನ್ಮಭೂಮಿಗಾಗಿ ಹೋರಾಟ ನಡೆಸಿದ ಹಿಂದೂ ಕಾರ್ಯಕರ್ತರನ್ನು ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಇಂದು ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಿದೆ.ರಾಜಧಾನಿ ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮೈಸೂರು, ಚಾಮರಾಜನಗರ, ದಾವಣಗೆರೆ, ಕಲಬುರಗಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
|
3 |
+
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಮಾಜಿ ಸಚಿವರು, ಶಾಸಕರು, ಸಂಸದರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕೆಂಡಕಾರಿದ್ದಾರೆ. ನಗರದ ಫ್ರೀಡಂಪಾರ್ಕ್ನಲ್ಲಿ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.
|
4 |
+
ಹೊಸ ಕಾನೂನು ಮಸೂದೆ ಆಧ್ಯಯನಕ್ಕೆ ಮುಂದಾದ ದೆಹಲಿ ಪೊಲೀಸರು
|
5 |
+
ಅತ್ತ ಹುಬ್ಬಳ್ಳಿಯಲ್ಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಠಾಣೆಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು.ಈ ವೇಳೆ ಪ್ರತಿಭಟನಾನಿರತರು ಹಾಗೂ ಪೊಲೀಸರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೂ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಭಾರೀ ಬಿಗಿಭದ್ರತೆಯನ್ನು ಕೈಗೊಳ್ಳಲಾಗಿತ್ತು.
|
6 |
+
ಇದೇ ರೀತಿ ರಾಜ್ಯದ ಹಲವು ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಮೂಲಕ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಅಲ್ಪಸಂಖ್ಯಾತರನ್ನು ತುಷ್ಟೀಕರಣ ಮಾಡಲು 31 ವರ್ಷಗಳ ಹಿಂದಿನ ಪ್ರಕರಣವನ್ನು ಕೆದಕಿ ರಾಮ ಜನ್ಮಭೂಮಿಗಾಗಿ ಹೋರಾಟ ನಡೆಸಿದ ಹಿಂದೂ ಕಾರ್ಯಕರ್ತರನ್ನು ಬಂಧಿಸಿ ಜೈಲಿಗಟ್ಟಿದೆ. ಬರುವ ದಿನಗಳಲ್ಲಿ ಇದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
|
7 |
+
ಹಿಂದೂ ಕಾರ್ಯಕರ್ತರನ್ನು ಇದೇ ರೀತಿ ಬಂಧಿಸಿದರೆ ರಾಷ್ಟ್ರ ಮಟ್ಟದಲ್ಲೂ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ. ತಕ್ಷಣವೇ ಬಂಧಿಸಿರುವ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಕುಲಕರ್ಣಿಯನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು. ಇಡೀ ದೇಶವೇ ರಾಮಮಂದಿರ ನಿರ್ಮಿಸಿದ್ದಕ್ಕಾಗಿ ಸಂಭ್ರಮದಲ್ಲಿದೆ. ಆದರೆ ಒಂದು ಸಮುದಾಯವನ್ನು ತೃಪ್ತಿಪಡಿಸಲು ಸರ್ಕಾರ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಬಂಧಿಸುವ ಕೆಲಸಕ್ಕೆ ��ೈ ಹಾಕಿದೆ. ರಾಮಭಕ್ತರು ಸಿಡಿದೆದ್ದರೆ ಯಾವ ಸರ್ಕಾರವೂ ಉಳಿಯುವುದಿಲ್ಲ. ಇದೇ ರೀತಿ ಹಿಂದೂ ವಿರೋಧಿ ಧೋರಣೆ ಅನುಸರಿಸಿದರೆ ದೇಶದ ಜನತೆಯೇ ಮುಗಿಬೀಳಲಿದ್ದಾರೆ ಎಂದು ಎಚ್ಚರಿಕೆ ಕೊಟ್ಟರು.
|
eesanje/url_46_273_10.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಆಧಾರ್ ಲಿಂಕ್ ನಂತರ ರೈತರಿಗೆ ಬರ ಪರಿಹಾರ : ಸಿಎಂ ಸಿದ್ದರಾಮಯ್ಯ
|
2 |
+
ಕೊಪ್ಪಳ/ವಿಜಯಪುರ,ಜ.2- ರೈತರ ಖಾತೆಗಳಿಗೆ ಆಧಾರ್ ಲಿಂಕ್ ಮಾಡಬೇಕಿರುವು ದರಿಂದ ಬರ ಪರಿಹಾರ ಪಾವತಿ ವಿಳಂಬವಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಜಯಪುರ ಜಿಲ್ಲಾ ಪ್ರವಾಸಕ್ಕಾಗಿ ಕೊಪ್ಪಳದ ಗಿಣಿ ಗೇರ ಏರ್ಸ್ಟ್ರಿಪ್ಗೆ ಬಂದಿಳಿದ ಮುಖ್ಯಮಂತ್ರಿಗಳು ಸುದ್ದಿಗಾರ ರೊಂದಿಗೆ ಮಾತನಾಡಿದರು.ಬೆಳೆನಷ್ಟಕ್ಕೆ ತಾತ್ಕಾಲಿಕವಾಗಿ 2 ಸಾವಿರ ರೂ. ಪರಿಹಾರ ನೀಡುವುದಾಗಿ ಘೋಷಿಸಲಾಗಿದೆ. ಅದನ್ನು ಶೀಘ್ರವೇ ಪಾವತಿ ಮಾಡಲಾಗುವುದು. ಸದ್ಯಕ್ಕೆ ಖಾತೆಗಳಿಗೆ ಆಧಾರ್ ಲಿಂಕ್ ಜೋಡಣೆಯಾಗಬೇಕಿರುವುದರಿಂದ ತಡವಾಗುತ್ತಿದೆ ಎಂದು ಹೇಳಿ ನಿರ್ಗಮಿಸಿದರು.
|
3 |
+
ಇದಕ್ಕೂ ಮುನ್ನ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು ಸೇವೆ ಖಾಯಂಗೊಳಿಸುವಂತೆ ಒತ್ತಾಯಿಸಿ ಪಾದಯಾತ್ರೆ ನಡೆಸುತ್ತಿದ್ದಾರೆ. ನಾನು ಅವರೊಂದಿಗೆ ಈಗಾಗಲೇ ಚರ್ಚೆ ನಡೆಸಿದ್ದೇನೆ. ಅದರ ಬಳಿಕವೂ ಪ್ರತಿಭಟನೆ ಮುಂದುವರೆಸಿದ್ದಾರೆ. ಸೇವೆ ಖಾಯಂಗೊಳಿಸುವುದು ಕಷ್ಟದ ಕೆಲಸ ಎಂದರು.
|
4 |
+
ಆಪರೇಷನ್ ಕಮಲಕ್ಕೆ ಒಳಗಾಗುವ ಶಾಸಕರು ಕಾಂಗ್ರೆಸ್ನಲ್ಲಿ ಇಲ್ಲ: ಚೆಲುವರಾಯಸ್ವಾಮಿ
|
5 |
+
ರಾಮಮಂದಿರ ಉದ್ಘಾಟನೆಯ ದಿನ ಸರ್ಕಾರಿ ರಜೆ ಘೋಷಣೆ ಮಾಡಬೇಕೆನ್ನುವ ಘೋಷಣೆಯನ್ನು ಮುಖ್ಯಮಂತ್ರಿ ತಳ್ಳಿಹಾಕಿದರು. ಕಾರ್ಯಕ್ರಮ ಮಾಡುತ್ತಿರುವುದು ಕೇಂದ್ರ ಸರ್ಕಾರ. ಅವರೇ ಸರ್ಕಾರದ ರಜೆ ಘೋಷಣೆ ಮಾಡಲಿ ಎಂದು ತಿರುಗೇಟು ನೀಡಿದರು. ರಾಮಮಂದಿರ ಉದ್ಘಾಟನೆಗೆ ಯಾರನ್ನು ಕರೆಯಬೇಕು, ಕರೆಯಬಾರದು ಎಂಬುದು ಅವರಿಗೆ ಸಂಬಂಧಪಟ್ಟ ವಿಚಾರ. ಯಾರಿಗೆಲ್ಲಾ ಆಹ್ವಾನ ಹೋಗಿದೆ, ಹೋಗಿಲ್ಲ ಎಂಬ ಬಗ್ಗೆ ನಮಗೆ ಮಾಹಿತಿ ಇಲ್ಲ. ಆಹ್ವಾನ ಇದ್ದವರು ಹೋಗಬಹುದು, ಇಲ್ಲದೇ ಇದ್ದವರು ಗೈರುಹಾಜರಾಗುತ್ತಾರೆ ಎಂದು ತಿಳಿಸಿದರು.
|
6 |
+
ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, ತಪ್ಪು ಮಾಡಿದ್ದರೆ ಅವರನ್ನು ಹಾಗೆಯೇ ಬಿಟ್ಟು ಬಿಡೆಬೇಕೆ? ಎಂದು ಮರು ಪ್ರಶ್ನಿಸಿದರು. ಹಳೆಯ ಬಾಕಿ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಸೂಚನೆ ನೀಡಲಾಗಿದೆ. ಅದರ ಪ್ರಕಾರ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ. ಇದರಲ್ಲಿ ದ್ವೇಷದ ರಾಜಕಾರಣವಾಗಲಿ, ನಿರಪರಾಧಿಗಳನ್ನು ಬಂಧಿಸುವುದಾಗಲೀ ನಡೆದಿಲ್ಲ ಎಂದು ಸಮರ್ಥಿಸಿಕೊಂಡರು.
|
7 |
+
ನ್ಯಾಯಾಲಯದ ನಿರ್ದೇಶನಗಳಿದ್ದರೆ ಸರ್ಕಾರ ಅದರ ಅನುಸಾರವೂ ನಡೆದುಕೊಳ್ಳಲಿದೆ ಎಂದು ಹೇಳಿದರು.ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, ಕಾಂಗ್ರೆಸ್ ಸರ್ಕಾರ ಐಸಿಸ್ ಸರ್ಕಾರ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ಜೋಷಿ ನೀಡಿದ ಹೇಳಿಕೆಗೆ ತಿರುಗೇಟು ನೀಡಿ, ಅಪರಾಧಿ ಎಂದಿಗೂ ಅಪರಾಧಿಯೇ. ಸಮಯ ಆಗಿದೆ ಎಂದಾಕ್ಷಣ ಅಪರಾಧ ಕಳೆದು ಹೋಗಿದೆ ಎಂದರ್ಥವಲ್ಲ.
|
8 |
+
ನ್ಯಾಯಾಲಯ ನಿರಪರಾಧಿ ಎಂದು ಘೋಷಿಸುವವರೆಗೂ ಅಪರಾಧ ಚಾ��್ತಿಯಲ್ಲಿರುತ್ತದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರಿಗೆ ಕಾನೂನು ಗೊತ್ತಿಲ್ಲವೇ ಎಂದು ಹುಬ್ಬಳ್ಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಿರುಗೇಟು ನೀಡಿದರು.
|
9 |
+
ಬಾಬ್ರಿ ಮಸೀದಿ ಕಳೆದುಕೊಂಡ ಬೇಸರ ಇಲ್ಲವೇ: ಮುಸ್ಲಿಂ ಯುವಕರಿಗೆ ಓವೈಸಿ ಪ್ರಶ್ನೆ
|
10 |
+
ಗೃಹಸಚಿವರು ಹಳೆ ಪ್ರಕರಣಗಳನ್ನು ಇತ್ಯರ್ಥ ಮಾಡಬೇಕೆಂದು ಹೇಳಿದ್ದಾರೆ. ಇದರ ಪ್ರಕಾರ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ವಿಳಂಬವಾದಾಕ್ಷಣ ಕ್ರಮ ಕೈಗೊಳ್ಳಬಾರದು ಎಂದಿದೆಯೇ, ಸರ್ಕಾರ ಕಾನೂನಿನ ಪ್ರಕಾರ ನಡೆದುಕೊಂಡಿದೆ. ಪ್ರಹ್ಲಾದ್ ಜೋಷಿಯೇನು ಕಾನೂನು ತಜ್ಞರಲ್ಲ ಅಥವಾ ಅವರು ನ್ಯಾಯಾಲಯವೂ ಅಲ್ಲ, ಅವರು ಹೇಳಿದ್ದೆಲ್ಲವೂ ವೇದವಾಕ್ಯವೂ ಅಲ್ಲ. ಕಾನೂನು ಪ್ರಕಾರ ಮಾತನಾಡದೇ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಅಪರಾಧಿಗಳಿಗೆ ಕುಮ್ಮಕ್ಕು ನೀಡುವ ಮೂಲಕ ಬಿಜೆಪಿಯವರು ನೀಚ ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಆಕ್ರೋಶ ವ್ಯಕ್ತಪಡಿಸಿದರು.
|
eesanje/url_46_273_11.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಆಪರೇಷನ್ ಕಮಲಕ್ಕೆ ಒಳಗಾಗುವ ಶಾಸಕರು ಕಾಂಗ್ರೆಸ್ನಲ್ಲಿ ಇಲ್ಲ: ಚೆಲುವರಾಯಸ್ವಾಮಿ
|
2 |
+
ಬೆಂಗಳೂರು,ಜ.2- ಆಪರೇಷನ್ ಕಮಲಕ್ಕೆ ಒಳಗಾಗುವ ಶಾಸಕರು ಕಾಂಗ್ರೆಸ್ನಲ್ಲಿ ಯಾರೂ ಇಲ್ಲ. ಆದರೆ ವಿರೋಧ ಪಕ್ಷಗಳಿಂದ 10ರಿಂದ 15 ಮಂದಿ ಶಾಸಕರು ನಮ್ಮ ಪಕ್ಷಕ್ಕೆ ಬರಲು ಸಿದ್ಧರಿದ್ದಾರೆ ಎಂದು ಕೃಷಿ ಸಚಿವ ಎನ್.ಚೆಲುವರಾಯ ಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಮುನ್ನ ಅಥವಾ ನಂತರ 10-15 ಮಂದಿ ಕಾಂಗ್ರೆಸ್ಗೆ ಬರಲು ತಯಾರಾಗಿದ್ದಾರೆ. 136 ಶಾಸಕರನ್ನು ಹೊಂದಿರುವ ಪ್ರಬಲ ಬಹುಮತ ಇರುವ ಸರ್ಕಾರ ಅಸ್ಥಿರವಾಗಲಿದೆ ಎಂದು ವಿರೋಧ ಪಕ್ಷದವರು ಹೇಳಿದರೆ ನಂಬುತ್ತೀರಾ ಎಂದು ಪ್ರಶ್ನಿಸಿದರು.
|
3 |
+
ನಾವು ಕಿವಿಯಲ್ಲಿ ಹೂ ಮುಡಿದಿಲ್ಲ. ನಮಗೂ ರಾಜಕೀಯ ಮಾಡಲು ಬರುತ್ತದೆ. ಐದು ವರ್ಷ ನಮ್ಮ ಸರ್ಕಾರ ಸುಭದ್ರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜೆಡಿಎಸ್ ಬಿಜೆಪಿ ಮೈತ್ರಿ ಬಹಳಷ್ಟು ಮಂದಿಗೆ ಇಷ್ಟವಿಲ್ಲ. ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಮೇಲೆ ಉಂಟಾಗಿರುವ ಅಸಮಾಧಾನವನ್ನು ತಣಿಸಲು ಈ ರೀತಿ ಆಧಾರ ರಹಿತ ಹೇಳಿಕೆ ನೀಡುತ್ತಿದ್ದಾರೆ ಎಂದರು.
|
4 |
+
ಅಭ್ಯರ್ಥಿ ಅಲ್ಲ:ಮುಂಬರುವ ಲೋಕಸಭೆ ಚುನಾವಣೆಗೆ ನಾನು ಸ್ರ್ಪಧಿಸುವುದಿಲ್ಲ. ನಮ್ಮ ಕುಟುಂಬದಿಂದಲೂ ಯಾರೂ ಸ್ರ್ಪಧಿಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಲೋಕಸಭೆ ಚುನಾವಣೆಗೆ ಸ್ರ್ಪಧಿಸುವಂತೆ ಪಕ್ಷದ ಹೈಕಮಾಂಡ್ ಕೂಡ ಹೇಳಿಲ್ಲ. ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಕಣಕ್ಕಿಳಿಸುತ್ತೇವೆ ಎಂದರು.
|
5 |
+
ಜ. 5ರಿಂದ ಮೂರು ದಿನ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ
|
6 |
+
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸ್ಪರ್ಧೆ ಮಾಡುವುದು ಅವರಿಗೆ ಬಿಟ್ಟಿದ್ದು, ಎದುರಾಳಿ ಸ್ಪರ್ಧೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಲಿ ನಮ್ಮ ಅಭ್ಯರ್ಥಿ ಗೆಲುವಷ್ಟೇ ಮುಖ್ಯವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇನೆ ಎಂದರು.ಹಿಂದಿನ ಸರ್ಕಾರದಲ್ಲಿ ಮೂರು ಮಂದಿ ಬಿಜೆಪಿಯಿಂದ ಮುಖ್ಯಮಂತ್ರಿಗಳಾಗಿದ್ದರು.
|
7 |
+
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಭರವಸೆ ನೀಡಿ ಜನರು ಬಹುಮತ ನೀಡಿದ್ದಾರೆ. ಬಿಜೆಪಿ ಜೆಡಿಎಸ್ನ್ನು ಜನರು ತಿರಸ್ಕರಿಸಿದ್ದಾರೆ. ಲೋಕಸಭೆ ಚುನಾವಣೆಗೆ ಅವರ ಆಡಳಿತ, ಅಭಿವೃದ್ಧಿ ವಿಚಾರಗಳನ್ನು ಮುಂದಿಟ್ಟುಕೊಂಡು ಹೋಗಲು ಸಾಧ್ಯವಾಗದೆ ಕಾಂಗ್ರೆಸ್ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.
|
8 |
+
ರಾಜಕಾರಣ:ಅಯೋಧ್ಯೆಯ ಶ್ರೀರಾಮ ಮಂದಿರದ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಶ್ರೀರಾಮ, ರಾಮಮಂದಿರ ಎಲ್ಲರಿಗೂ ಸೇರಬೇಕು. ನಾವು ದೇವರು, ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡುವ���ದಿಲ್ಲ. ಅಭಿವೃದ್ಧಿ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತೇವೆ. ಅಭಿವೃದ್ಧಿ ವಿಚಾರಗಳನ್ನು ಚರ್ಚೆ ಮಾಡಲು ಬಯಸುತ್ತೇವೆ ಎಂದರು. ಹಳೆಯ ಪ್ರಕರಣಗಳನ್ನು ವಿಲೇವಾರಿ ಮಾಡಲು ಸರ್ಕಾರ ಸೂಚಿಸಿದೆಯೇ ಹೊರತು ಯಾವುದೇ ಕೇಸನ್ನು ಹಾಕಿ ಜನರಿಗೆ ತೊಂದರೆ ಕೊಡಿ ಎಂದು ಹೇಳಿಲ್ಲ ಎಂದು ಬಿಜೆಪಿ ಆರೋಪವನ್ನು ನಿರಾಕರಿಸಿದರು.
|
9 |
+
ಮಾಹಿತಿ ಬಂದಿಲ್ಲ:ರಾಜ್ಯದ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು, ಇದುವರೆಗೂ ಯಾವುದೇ ಮಾಹಿತಿ ಬಂದಿಲ್ಲ. ಮುಖ್ಯಮಂತ್ರಿ ಹಾಗೂ ಸಚಿವರು ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ಹಾಗೂ ಕೇಂದ್ರ ಗೃಹಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಆದರೂ ಯಾವುದೇ ಪರಿಹಾರ ಬಿಡುಗಡೆಯಾಗಿಲ್ಲ.
|
10 |
+
ರಾಷ್ಟ್ರದಲ್ಲೇ ಮೊದಲ ಬಾರಿಗೆ ಬರಪೀಡಿತ ಪ್ರದೇಶಗಳನ್ನು ಘೋಷಣೆ ಮಾಡಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೆವು. ತ್ವರಿತವಾಗಿ ಸ್ಪಂದಿಸಿದ ಕೇಂದ್ರ ಅಧ್ಯಯನ ತಂಡ ಕಳುಹಿಸಿತು. ಆ ತಂಡ ರಾಜ್ಯದಲ್ಲಿ ಪರಿಶೀಲನೆ ನಡೆಸಿ ವರದಿಯನ್ನೂ ಕೊಟ್ಟಿದೆ. ಆದರೆ ರೀತಿಯ ಸ್ಪಂದನೆಯ ಕೆಲಸ ಆಗಿಲ್ಲ. ಮತ್ತೊಮ್ಮೆ ಮನವಿ ಮಾಡುವ ಬಗ್ಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದರು.
|
eesanje/url_46_273_12.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಅನಕ್ಷರಸ್ಥ ಶಿಕ್ಷಣ ಸಚಿವ ಮಧುಬಂಗಾರಪ್ಪನವರ ಅಮೋಘ ಸಾಧನೆಗಳು
|
2 |
+
ಬೆಂಗಳೂರು,ಜ.2- ಅಧಿಕಾರಕ್ಕೆ ಬಂದ ದಿನದಿಂದ ಅನಕ್ಷರಸ್ಥ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಅಮೋಘ ಸಾಧನೆಗಳು ಎಂದು ಟ್ವೀಟ್ ಮೂಲಕ ಬಿಜೆಪಿ ಪಟ್ಟಿ ಬಿಡುಗಡೆ ಮಾಡಿದೆ. ಅಪ್ರಯೋಜಕ ಅಸಮರ್ಥರ ಕೈಗೆ ಶಿಕ್ಷಣ ಇಲಾಖೆಯನ್ನು ಕೊಟ್ಟರೆ ಏನಾಗುತ್ತದೆ ಅನ್ನುವುದಕ್ಕೆ ಈ ಪ್ರಕರಣಗಳೇ ಸಾಕ್ಷಿ ಎಂದು ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ.
|
3 |
+
ಅಧಿಕಾರಕ್ಕೆ ಬಂದ ದಿನದಿಂದ ಅನಕ್ಷರಸ್ಥ ಶಿಕ್ಷಣ ಸಚಿವ@Madhu_Bangarappಅವರ ಅಮೋಘ ಸಾಧನೆಗಳು:▪ ಶಾಲಾ ಮಕ್ಕಳ ಕೈಯಲ್ಲಿ ಟಾಯ್ಲೆಟ್ ಕ್ಲೀನ್▪ ಚೆಕ್ ಬೌನ್ಸ್ ಮಾಡಿಸಿ ವಂಚನೆ▪ ಪಠ್ಯ ಪರಿಷ್ಕರಣೆ ಮೂಲಕ ಎಡಬಿಡಂಗಿ ಸಿದ್ಧಾಂತ ಹೇರಿಕೆ▪ ಮೊಟ್ಟೆ ವಿತರಣೆ ಶಿಕ್ಷಕರ ಜೇಬಿಗೆ ಕತ್ತರಿ▪ ಅಪಾಯದ ಸ್ಥಿತಿಯಲ್ಲಿ ಶಾಲಾ ಕಟ್ಟಡಗಳು…
|
4 |
+
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಅಮೋಘ ಸಾಧನೆಗಳು
|
eesanje/url_46_273_2.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬರ ಪರಿಹಾರ ಅನುದಾನ ಬಿಡುಗಡೆಗೆ ಕಾಂಗ್ರೆಸ್ ಒತ್ತಾಯ
|
2 |
+
ಬೆಂಗಳೂರು, ಜ.3- ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಿರುವ ಬರ ಪರಿಹಾರ ಹಾಗೂ ಇತರೆ ಅನುದಾನಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
|
3 |
+
ಕರ್ನಾಟಕದಿಂದ 18177.44 ಕೋಟಿ ರೂ. ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. 42 ಸಾವಿರ ಕೋಟಿ ರೂ. ಜಿ.ಎಸ್.ಟಿ.ಪಾಲು ಸೇರಿ ಇತರ ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
|
4 |
+
ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ವತಃ ಪ್ರಧಾನಿ ಮೋದಿ ಅವರನ್ನು ಭೇಟಿಯಾದರೂ ಸ್ಪಂದನೆ ಇಲ್ಲ. ಅನುದಾನ ಬಿಡುಗಡೆಗೆ ಒತ್ತಾಯಿಸದ ಬಿಜೆಪಿ ಸಂಸದರ ವಿರುದ್ಧ ಸುರ್ಜೆವಾಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ರಾಜ್ಯದಲ್ಲಿ 236 ರಲ್ಲಿ 223 ತಾಲೂಕುಗಳನ್ನು ಬರ ಪೀಡಿತ ಎಂದು ಗುರುತಿಸಲಾಗಿದೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ ಎಂದು ಅಧ್ಯಯನ ನಡೆಸಿ ವರದಿ ಮಾಡಲಾಗಿದೆ.
|
5 |
+
ಜಪಾನ್ ಭೂಕಂಪಕ್ಕೆ 62 ಬಲಿ, ಮುಂದುವರೆದ ರಕ್ಷಣಾ ಕಾರ್ಯಚರಣೆ
|
6 |
+
ಬರದಿಂದ ಸಣ್ಣ ಹಾಗೂ ಅತಿ ಸಣ್ಣ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಎನ್.ಡಿ.ಆರ್.ಎಫ್. ನಿಯಮಾವಳಿಯಂತೆ 18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಅದರಲ್ಲಿ 4663.12 ಕೋಟೊ ರೂ. ಇನ್ಪುಟ್ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಅನುದಾನ, 363.68 ಕೋಟಿ ರೂ. ಜಾನುವಾರುಗಳ ರಕ್ಷಣೆಗೆ ಹಣ ಒದಗಿಸುವಂತೆ ಮನವಿ ಮಾಡಲಾಗಿದೆ. ಆದರೆ, ಕೇಂದ್ರ ಸರ್ಕಾರ ಮಾತ್ರ ಕಿವುಡಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
|
7 |
+
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೆಗೌಡ ಅವರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಶೀಘ್ರ ಹಣ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಹಾಗೂ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಮಾತನಾಡಿದ್ದಾರೆ. ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದಾರೆ. ಇಷ್ಟಾದರೂ ಕೇಂದ್ರ ಇದುವರೆಗೂ ಬರ ಪರಿಹಾರ ಬಿಡುಗಡೆ ಮಾಡಿಲ್ಲ. ಇದು ಕೇಂದ್ರ ಸರ್ಕಾರ ನಡೆದುಕೊಳ್ಳುವ ರೀತಿಯೇ? ಎಂದು ಸುರ್ಜೆವಾಲಾ ಕಟುವಾಗಿ ಪ್ರಶ್ನಿಸಿದ್ದಾರೆ.
|
8 |
+
ಕೇವಲ ಬರ ಪರಿಹಾರ ಮಾತ್ರವಲ್ಲ ಜಿಎಸ್ ಟಿಯ ರಾಜ್ಯದ ಪಾಲು, ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುವುದು ಬಾಕಿ ಇದೆ. 14 ನೇ ಹಣಕಾಸು, 15 ನೇ ಹಣಕಾಸು ಸೇರಿ ಕೇಂದ್ರ ಪುರಸ್ಕೃತ ಯೋಜನೆಗೆ ಬರಬೇಕಾದ ಸುಮಾರು 42 ಸಾವಿರ ಕೋಟಿ ರೂ. ಅನುದಾನ ಬಾಕಿ ಇದೆ. ಆ ಅನುದಾನವನ್ನೂ ಶೀಘ್ರ ಬಿಡುಗಡೆ ಮಾಡಬ��ಕು ಎಂದು ಸುರ್ಜೆವಾಲಾ ಒತ್ತಾಯಿಸಿದ್ದಾರೆ.
|
9 |
+
ಸಂಸದರು ಏನು ಮಾಡುತ್ತಿದ್ದಾರೆ ?ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಬೆಳೆ ನಷ್ಟದಿಂದ ಕಂಗಾಲಾಗಿದ್ದಾರೆ. ಸರ್ಕಾರದಿಂದ ಪರಿಹಾರದ, ನೆರವಿನ ನಿರೀಕ್ಷೆಯಲ್ಲಿದ್ದಾರೆ. ರಾಜ್ಯದಿಂದ 26 ಬಿಜೆಪಿಯಿಂದ ಆಯ್ಕೆಯಾದ ಹಾಗೂ ಒಬ್ಬರು ಬಿಜೆಪಿ ಬೆಂಬಲಿತ ಸಂಸದರಿದ್ದಾರೆ. ಈಗ ಅವರು ಏನು ಮಾಡುತ್ತಿದ್ದಾರೆ ಎಂಬುದೇ ಅರ್ಥವಾಗದು. ಜನರ ಮುಂದೆ ಹೇಗೆ ಮುಖ ಹೊತ್ತು ಹೋಗುತ್ತಾರೆ ? ಎಂದು ಸುರ್ಜೆವಾಲಾ ಪ್ರಶ್ನಿಸಿದ್ದಾರೆ.ಈ ಎಲ್ಲ ಸಂಸದರು ರಾಜಕೀಯ ಮಾಡದೇ ರೈತರ ಹಿತಾಸಕ್ತಿಯ ಪರವಾಗಿ ಕೆಲಸ ಮಾಡಬೇಕು. ಪ್ರಧಾನಿ ಅವರನ್ನು ಭೇಟಿಯಾಗಿ ಅನುದಾನ ಬಿಡುಗಡೆಗೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದ್ದಾರೆ.
|
eesanje/url_46_273_3.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ದರೋಡೆಗೆ ಹೊಂಚು ಹಾಕಿದ್ದ 6 ಮಂದಿ ಬಂಧನ
|
2 |
+
ಬೆಂಗಳೂರು,ಜ.2- ರುದ್ರಭೂಮಿ ಕಡೆಗೆ ಹೋಗುವ ರಸ್ತೆಯಲ್ಲಿ ಸಾರ್ವಜನಿಕರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ, ಬೆಲೆ ಬಾಳುವ ವಸ್ತು ಗಳನ್ನು ದೋಚಲು ಹೊಂಚು ಹಾಕುತ್ತಿದ್ದ ಆರು ಮಂದಿ ದರೋಡೆ ಕೋರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚಂದನ್, ಮನು, ಪವನ್, ಲೋಕೇಶ್, ದರ್ಶನ್ ಮತ್ತು ವಸಂತ್ ಬಂಧಿತ ಆರೋಪಿಗಳು.
|
3 |
+
ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ವೀರಣ್ಣಪಾಳ್ಯ ಹಿಂದು ರುದ್ರಭೂಮಿ ಕಡೆಗೆ ಹೋಗುವ ರಸ್ತೆಯಲ್ಲಿ ಸಾರ್ವಜನಿಕ ರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ ಹಣ ಮತ್ತು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಲು ಹೊಂಚು ಹಾಕುತ್ತಿದ್ದಾರೆ ಎಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಧಾವಿಸಿ ಆರು ಮಂದಿಯನ್ನು ಬಂಧಿಸಿ ಮಾರಕಾಸ್ತ್ರಗಳು ಮತ್ತು ಕೃತ್ಯಕ್ಕೆ ಬಳಸಿದ್ದ ಮೂರು ಬೈಕ್ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
|
4 |
+
ರೈತರು, ಕನ್ನಡಪರ ಹೋರಾಟಗಾರರ ಕೇಸ್ ವಾಪಸ್!
|
5 |
+
ಆರೋಪಿಗಳ ಪೈಕಿ ಮನು ವಿರುದ್ಧ 2018ನೇ ಇಸವಿಯಲ್ಲಿ ಕೆಜಿಹಳ್ಳಿ ಪೊಲೀಸ್ ಠಾಣೆಯಲ್ಲಿ ಡಕಾಯಿತಿ ಪ್ರಕರಣ ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಈ ದಾಳಿಯನ್ನು ಸಿಸಿಬಿಯ ಸಂಘಟಿತ ಅಪರಾಧ ದಳ(ಪಶ್ಚಿಮ) ಅಧಿಕಾರಿ ಮತ್ತು ಸಿಬ್ಬಂದಿಗಳು ಯಶಸ್ವಿಯಾಗಿರುತ್ತಾರೆ.
|
6 |
+
ಆರೋಪಿಗಳ ವಿರುದ್ಧ ಗೋವಿಂದಪುರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿರುತ್ತದೆ.
|
eesanje/url_46_273_4.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ರೈತರು, ಕನ್ನಡಪರ ಹೋರಾಟಗಾರರ ಕೇಸ್ ವಾಪಸ್!
|
2 |
+
ಬೆಂಗಳೂರು,ಜ.2- ರೈತರು, ಕನ್ನಡಪರ ಹೋರಾಟ ಗಾರರು ಸೇರಿದಂತೆ ಅಮಾಯಕರ ವಿರುದ್ಧ ದಾಖಲಾಗಿದ್ದ ಪ್ರಕರಣಗಳ ಪೈಕಿ 300 ರಿಂದ 400 ರಷ್ಟನ್ನು ಹಿಂಪಡೆಯಬೇಕು ಎಂದು ಅರ್ಜಿಗಳು ಬಂದಿದ್ದು, ಅವುಗಳನ್ನು ಪರಿಶೀಲಿಸಲಾ ಗುತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಏಕಾಏಕಿ ಪ್ರಕರಣಗಳನ್ನು ಹಿಂಪಡೆಯು ವುದಿಲ್ಲ. ಇದಕ್ಕಾಗಿ ತಮ್ಮ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದೆ. ಅಲ್ಲಿ ಪರಿಶೀಲನೆ ನಡೆಸಲಾಗು ವುದು.
|
3 |
+
ಪೊಲೀಸ್ ಅಧಿಕಾರಿಗಳು ಪ್ರಕರಣ ಹಿಂಪಡೆಯ ಬಹುದೇ ಅಥವಾ ಬೇಡವೇ ಎಂಬುದರ ಬಗ್ಗೆ ಸ್ಪಷ್ಟ ಶಿಫಾರಸ್ಸಿನೊಂದಿಗೆ ಕಡತ ಮಂಡಿಸಲಿದ್ದಾರೆ. ಉಪಸಮಿತಿ ಅದನ್ನು ಪರಿಶೀಲಿಸಲಿದೆ. ಸೂಕ್ತವಾಗಿದ್ದರೆ ಹಿಂಪಡೆಯುವ ಬಗ್ಗೆ ಪ್ರಕ್ರಿಯೆ ಮುಂದುವರೆಸಲು ಸಂಪುಟಕ್ಕೆ ಶಿಫಾರಸ್ಸು ಮಾಡಲಾಗುವುದು. ಇಲ್ಲವಾದರೆ ಪ್ರಕರಣವನ್ನು ಮುಂದುವರೆಸಲು ಪೊಲೀಸರಿಗೆ ಸೂಚಿಸಲಾಗುವುದು ಎಂದರು.
|
4 |
+
ರಾಜ್ಯಾದ್ಯಂತ 400ಕ್ಕೂ ಹೆಚ್ಚು ಅರ್ಜಿಗಳು ಪ್ರಕರಣವನ್ನು ಹಿಂಪಡೆಯುವ ಸಲುವಾಗಿ ಬಂದಿವೆ. ಇದರಲ್ಲಿ ಸ್ಪಷ್ಟವಾದ ಮಾರ್ಗಸೂಚಿ ಪಾಲನೆ ಮಾಡಲಾಗುವುದು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಎಂಬ ಆದ್ಯತೆಗಳಿರುವುದಿಲ್ಲ ಎಂದು ಹೇಳಿದರು. ರಾಜ್ಯಾದ್ಯಂತ ಇರುವ ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಎಲ್ಲಾ ಜಿಲ್ಲೆಗಳ ಎಸ್ಪಿಗಳು, ನಗರ ಪ್ರದೇಶದ ಆಯುಕ್ತರು ಪರಿಶೀಲನೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಪರಿಶೀಲನೆ ನಡೆಸುವಾಗ 32 ಪ್ರಕರಣಗಳು ಕಂಡುಬಂದಿವೆ. ಅದರಲ್ಲಿ ರಾಮ ಜನ್ಮಭೂಮಿ ಹೋರಾಟ ಪ್ರಕರಣದಲ್ಲಿ ಭಾಗಿಯಾದವರೂ ಸೇರಿದ್ದಾರೆ. ಆದರೆ ಅದೊಂದೇ ಪ್ರಕರಣವನ್ನು ನಾವು ಕೆದಕಿಲ್ಲ. ರಾಜ್ಯಾದ್ಯಂತ ಪರಿಶೀಲನೆ ನಡೆಯುವಾಗ ಹುಬ್ಬಳ್ಳಿ ಪ್ರಕರಣವೂ ಕಂಡುಬಂದಿದೆ. ಅಯೋಧ್ಯೆ ರಾಮಮಂದಿರ ಉದ್ಘಾಟನೆ ವೇಳೆ ಇದು ಕಂಡುಬಂದಿರುವುದು ಕಾಕತಾಳೀಯವಷ್ಟೇ ಎಂದರು.
|
5 |
+
ಕೋವಿಡ್ ಮೇಲೆ ನಿಗಾ: ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ
|
6 |
+
ಬಿಜೆಪಿಯವರು ಇದನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುವುದು ಅನಗತ್ಯ. ಹಳೆಯ ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಯಾದರೂ ಆಗಬೇಕು, ಶಿಕ್ಷೆಗಾದರೂ ಒಳಗಾಗಬೇಕು. ಎಷ್ಟು ದಿನ ಎಂದು ಅವು ಬಾಕಿ ಪ್ರಕರಣಗಳಲ್ಲಿ ನನೆಗುದಿಯಲ್ಲಿರಲು ಸಾಧ್ಯ. ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಮುಖಂಡರೂ ಕೂಡ ಅಧಿಕಾರ ನಡೆಸಿದ್ದಾರೆ. ಅವರಿಗೆ ಈ ವಿಚಾರ ಗೊತ್ತಿಲ್ಲವೇ ಎಂದು ತಿರುಗೇಟು ನೀಡಿದರು.
|
7 |
+
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ವಹಿಸುವಾಗ ನಿಯಮ ಪಾಲನೆಯಾಗಿಲ್ಲ ಎಂಬ ಲೋಪ ಕಂಡುಬಂದಿದೆ. ಅದನ್ನು ಸರಿಪಡಿಸಲು ನಾವು ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದೇವೆ. ಮುಂದಿನ ತನಿಖೆಗೆ ಪ್ರ���ರಣವನ್ನು ಲೋಕಾಯುಕ್ತಕ್ಕೆ ಒಪ್ಪಿಸಲಾಗಿದೆ. ಇದು ಸರ್ಕಾರದ ಆದೇಶ. ನಂತರದ ಬೆಳವಣಿಗೆಯಲ್ಲಿ ಲೊಕಾಯುಕ್ತರು ಸಿಬಿಐ ಅಧಿಕಾರಿಗಳು ಸಂಪರ್ಕಿಸಿ ದಾಖಲಾತಿಗಳನ್ನು ಪಡೆದುಕೊಳ್ಳಬೇಕು. ಒಂದು ವೇಳೆ ಸಿಬಿಐನವರು ನಾವೇ ತನಿಖೆ ಮುಂದುವರೆಸುತ್ತೇವೆ ಎಂದರೆ ಅದರಿಂದಾಗುವ ಕಾನೂನು ವಿಚಾರಗಳ ಬಗ್ಗೆ ಮುಂದಿನ ದಿನಗಳಲ್ಲಿ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.
|
eesanje/url_46_273_5.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಕೆಎಸ್ ಡಿಎಲ್: ಮಾರ್ಜಕಗಳ ಮಾರಾಟದಲ್ಲಿ 40 ವರ್ಷಗಳಲ್ಲೇ ದಾಖಲೆ ವಹಿವಾಟು!
|
2 |
+
ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ ಡಿಎಲ್) 2023ರ ಡಿಸೆಂಬರ್ ತಿಂಗಳೊಂದರಲ್ಲೇ 123.42 ಕೋಟಿ ರೂ. ಮೌಲ್ಯದ 852 ಟನ್ ಮಾರ್ಜಕಗಳನ್ನು ಉತ್ಪಾದಿಸಿದ್ದು, ಕಳೆದ 40 ವರ್ಷಗಳಲ್ಲಿ ಇದು ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
|
3 |
+
ಈ ಬಗ್ಗೆ ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, `ಕಳೆದ ತಿಂಗಳು ಕೆಎಸ್ಡಿಎಲ್ 852 ಟನ್ ಮಾರ್ಜಕಗಳನ್ನು ತಯಾರಿಸಿ, ಮಾರುಕಟ್ಟೆಗೆ ಬಿಡುಗಡೆ ಮಾಡುವ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. 2022ರ ಸೆಪ್ಟೆಂಬರ್ ತಿಂಗಳಲ್ಲಿ 775 ಟನ್ ಮಾರ್ಜಕಗಳನ್ನು ಉತ್ಪಾದಿಸಿದ್ದು ಇದುವರೆಗಿನ ದಾಖಲೆಯಾಗಿತ್ತು’ ಎಂದಿದ್ದಾರೆ.
|
4 |
+
ಕೆಎಸ್ಡಿಎಲ್ ನಲ್ಲಿ ಇದುವರೆಗೆ ಮಾರ್ಜಕಗಳ ಉತ್ಪಾದನಾ ವಿಭಾಗದಲ್ಲಿ ಒಂದು ಪಾಳಿಯ ಕೆಲಸದ ವ್ಯವಸ್ಥೆ ಇತ್ತು. ಅದನ್ನೀಗ ಮೂರು ಪಾಳಿಗಳಿಗೆ ವಿಸ್ತರಿಸಲಾಗಿದೆ. ಜೊತೆಗೆ, ಈವರೆಗೆ ಸಂಸ್ಥೆಯಲ್ಲಿ ಮಾರ್ಜಕಗಳ ತಯಾರಿಕೆಗೆ ಕೇವಲ ಒಂದು ಯಂತ್ರ ಮಾತ್ರವಿತ್ತು. ಸರಕಾರಿ ಉದ್ದಿಮೆಗಳು ಖಾಸಗಿ ವಲಯದಂತೆಯೇ ಲಾಭ ಗಳಿಸಬೇಕೆಂಬ ಉದ್ದೇಶದಿಂದ ಈಗ ಈ ವಿಭಾಗದಲ್ಲಿ ಮೂರು ಯಂತ್ರಗಳನ್ನು ಅಳವಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
|
5 |
+
ಸಂಸ್ಥೆಯು ಮೊದಲಿನಿಂದಲೂ ಸಾಬೂನು ತಯಾರಿಕೆಗೆ ಹೆಸರುವಾಸಿಯಾಗಿದ್ದು, ಮಾರುಕಟ್ಟೆ ಕೂಡ ಅದರ ಸುತ್ತಲೇ ಕೇಂದ್ರೀಕೃತವಾಗಿತ್ತು. ಇತ್ತೀಚೆಗೆ ಮಾರ್ಜಕಗಳ ಉತ್ಪಾದನೆಯತ್ತಲೂ ಹೆಚ್ಚಿನ ಗಮನ ಹರಿಸುವ ತೀರ್ಮಾನ ಕೈಗೊಳ್ಳಲಾಗಿತ್ತು. ಅದು ಈಗ ಫಲ ನೀಡಿದೆ. ಮುಂದಿನ ದಿನಗಳಲ್ಲಿ ಖಾಸಗಿ ಕಂಪನಿಗಳ ಮಾರ್ಜಕಗಳಿಗೆ ಸಡ್ಡು ಹೊಡೆಯುವ ರೀತಿಯಲ್ಲಿ ಮಾರುಕಟ್ಟೆ ಜಾಲವನ್ನು ಕೂಡ ಅಖಿಲ ಭಾರತ ಮಟ್ಟದಲ್ಲಿ ವಿಸ್ತರಿಸಲಾಗುವುದು ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.
|
6 |
+
ಹೋದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ 2023-24ನೇ ಹಣಕಾಸು ವರ್ಷದಲ್ಲಿ ಡಿಸೆಂಬರ್ ಅಂತ್ಯದವರೆಗೆ ಸಾಬೂನು, ಮಾರ್ಜಕ ಮತ್ತು ಕಾಸ್ಮೆಟಿಕ್ಸ್ ಉತ್ಪಾದನೆ ನಿಗದಿತ ಗುರಿಗಿಂತ ಹೆಚ್ಚಾಗಿದೆ. ಸಂಸ್ಥೆಯು ಹೋದ ಸಾಲಿನಲ್ಲಿ 118 ಕೋಟಿ ರೂ. ಲಾಭ ಗಳಿಸಿತ್ತು. ಈ ಹಣಕಾಸು ಸಾಲಿನ ಮೊದಲ ಒಂಬತ್ತು ತಿಂಗಳಲ್ಲಿ ಸಂಸ್ಥೆಯು 1171.07 ಕೋಟಿ ರೂ. ಮೊತ್ದದಷ್ಟು ವಹಿವಾಟು ನಡೆಸಿದೆ. ಈ ವರ್ಷಕ್ಕೆ ಒಟ್ಟು 1,404 ಕೋಟಿ ರೂ. ವಹಿವಾಟು ನಿಗದಿ ಪಡಿಸಲಾಗಿದ್ದು, ಇದನ್ನು ಮೀರುವುದರಲ್ಲಿ ಅನುಮಾನವಿಲ್ಲ ಎಂದು ಎಂ ಬಿ ಪಾಟೀಲ ಹೇಳಿದ್ದಾರೆ.
|
eesanje/url_46_273_6.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಕೋವಿಡ್ ಮೇಲೆ ನಿಗಾ: ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ
|
2 |
+
ಬೆಂಗಳೂರು,ಜ.2- ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಮೇಲೆ ನಿಗಾ ವಹಿಸಲು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿಂದು ಉನ್ನತ ಮಟ್ಟದ ಸಭೆ ನಡೆಸಲಾಯಿತು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಕ್ತರ್, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ.ಸುಜಾತ ರಾಥೋಡ್, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ರವಿ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
|
3 |
+
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶರಣಪ್ರಕಾಶ್ ಪಾಟೀಲ್, ಕೋವಿಡ್ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿವೆ. ಅದನ್ನು ನಿಯಂತ್ರಿಸುವುದು ಮತ್ತು ಚಿಕಿತ್ಸೆಗೆ ಪೂರ್ವ ತಯಾರಿ ಮಾಡಿಕೊಳ್ಳುವುದಕ್ಕೆ ಸಂಬಂಧಪಟ್ಟಂತೆ ಸಭೆಯಲ್ಲಿ ಚರ್ಚಿಸಲಾಗಿದೆ. ಎಲ್ಲಾ ವೈದ್ಯಕೀಯ ಕಾಲೇಜುಗಳಲ್ಲಿ ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ ಆಮ್ಲಜನಕದ ಬೆಡ್ಗಳು, ತುರ್ತು ಚಿಕಿತ್ಸಾ ಘಟಕಗಳು, ವೆಂಟಿಲೇಟರ್ ಸೇರಿದಂತೆ ಪ್ರತ್ಯೇಕ ಚಿಕಿತ್ಸಾ ವ್ಯವಸ್ಥೆಗಳನ್ನು ಸಜ್ಜುಗೊಳಿಸಿಕೊಳ್ಳಲು ಸೂಚಿಸಲಾಗಿದೆ. ಕಳೆದ ಬಾರಿಯಾದಂತೆ ಆಕ್ಸಿಜನ್ ಅಥವಾ ಔಷಧಿಗಳ ಕೊರತೆಯಿಂದ ಜನರಿಗೆ ತೊಂದರೆಯಾಗಬಾರದು. ಅದಕ್ಕೆ ಅಗತ್ಯವಾದ ಪೂರ್ವ ಸಿದ್ಧತೆಗಳನ್ನು ಸಜ್ಜುಗೊಳಿಸಬೇಕು ಎಂದು ಸೂಚಿಸಿರುವುದಾಗಿ ಹೇಳಿದರು.
|
4 |
+
ಕೋವಿಡ್ ಪ್ರಕರಣ ಹೆಚ್ಚಾಗುತ್ತಿದೆ ಎಂದಾಕ್ಷಣ ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ರೂಪಾಂತರಿ ಉಪತಳಿಗಳು ಪ್ರಸರಣಾ ಸಾಮಥ್ರ್ಯವನ್ನು ಹೆಚ್ಚು ಹೊಂದಿದೆ. ಆದರೆ ಪ್ರಾಣಾಂತಿಕವಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಾಹಿತಿಯಾಗಿದೆ. ಹೀಗಾಗಿ ಜನರು ಆತಂಕಪಡುವ ಅಗತ್ಯವಿಲ್ಲ. ಮುಂಜಾಗ್ರತೆ ಅಗತ್ಯವಿದೆ ಎಂದರು.60 ವರ್ಷ ಮೇಲ್ಪಟ್ಟವರು ಮಾಸ್ಕ್ ಧರಿಸಬೇಕು. ಜನಸಂದಣಿ ಪ್ರದೇಶಗಳಲ್ಲಿ ಕೋವಿಡ್ ಪ್ರಮಾಣಿತ ಕ್ರಮಗಳನ್ನು ಪಾಲನೆ ಮಾಡಬೇಕು ಎಂದು ಸಲಹೆ ನೀಡಿದರು.
|
5 |
+
ಗ್ಯಾರಂಟಿಗಳ ಬೇಡ ಎನ್ನುವ ಧೈರ್ಯ ಬಿಜೆಪಿಗಿದೆಯೇ?: ಸಚಿವ ಮಧು ಬಂಗಾರಪ್ಪ
|
6 |
+
ಇಲ್ಲಿವರೆಗೂ ರಾಜ್ಯದಲ್ಲಿ ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿದ್ದ 10 ಜನ ಸಾವನ್ನಪ್ಪಿದ್ದಾರೆ. ಅವರಿಗೆ ಸೋಂಕಿನ ಜೊತೆಗೆ ಇತರ ಬೇರೆ ಬೇರೆ ಆರೋಗ್ಯದ ಸಮಸ್ಯೆಗಳಿದ್ದವು ಎಂದರು. ಮೃತಪಟ್ಟವರಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬರು ಕೋವಿಡ್ ಲಸಿಕೆ ತೆಗೆದುಕೊಂಡಿರಲಿಲ್ಲ. ಮದ್ಯಪಾನದ ವ್ಯಸನಕ್ಕೆ ತುತ್ತಾಗಿದ್ದರು ಎಂದು ಹೇಳಿದರು.
|
7 |
+
ಇಂದಿನ ಸಭೆಯಲ್ಲಿ 99 ಮೆಡಿಕಲ್ ಕಾಲೇಜುಗಳು, 10 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ದೇಶಕರುಗಳ ಜೊತೆ ಚರ್ಚೆ ನಡೆಸಲಾಗಿದೆ. ಎಲ್ಲಾ ಸರ್ಕಾರಿ ಕಾಲೇಜುಗಳಲ್ಲೂ ಪ್ರತ್ಯೇಕವಾದ ಆಕ್ಸಿಜನ್ ಬೆಡ್ ಮತ್ತು ಐಸಿಯು ವ್ಯವಸ್ಥೆ ಮಾಡಲಾಗಿದೆ. ಅಗತ್ಯ ಮಾನವ ಸಂಪನ್ಮೂಲಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. 30 ಸಾವಿರ ಲಸಿಕೆಗಳು ಲಭ್ಯವಿದ್ದು, ಈವರೆಗೂ ಲಸಿಕೆ ಪಡೆಯದೇ ಇದ್ದವರೂ ಮತ್ತು ಮುಂಜಾಗ್ರತಾ ಲಸಿಕೆಯನ್ನಾಗಿ ತೆಗೆದುಕೊಳ್ಳುವವರು ಈ ಸೌಲಭ್ಯ ಪಡೆದುಕೊಳ್ಳಬಹುದು ಎಂದರು.
|
8 |
+
ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪರೀಕ್ಷಾ ಸಾಮಥ್ರ್ಯವನ್ನೂ ಹೆಚ್ಚಿಸಲಾಗುತ್ತಿದೆ. ಜೊತೆಗೆ ಆರೋಗ್ಯ ಸೌಲಭ್ಯಗಳ ಕಾರ್ಯ ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದರು.
|
eesanje/url_46_273_7.txt
ADDED
@@ -0,0 +1,16 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಗ್ಯಾರಂಟಿಗಳ ಬೇಡ ಎನ್ನುವ ಧೈರ್ಯ ಬಿಜೆಪಿಗಿದೆಯೇ?: ಸಚಿವ ಮಧು ಬಂಗಾರಪ್ಪ
|
2 |
+
ಶಿವಮೊಗ್ಗ,ಜ.2- ಬಿಜೆಪಿಯವರು ಪಂಚಖಾತ್ರಿ ಯೋಜನೆಗಳ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯಯೋಜನೆಯ ಸೌಲಭ್ಯವನ್ನು ಬಿಜೆಪಿ ಕಾರ್ಯಕರ್ತರು ಪಡೆಯಬಾರದು ಎಂದು ಆ ಪಕ್ಷದ ನಾಯಕರು ಕರೆ ನೀಡಲಿ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸವಾಲು ಹಾಕಿದರು.
|
3 |
+
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಖಾತ್ರಿಗಳಿಂದ ರಾಜ್ಯ ದಿವಾಳಿಯಾಗಿದೆ ಎಂದು ಬಿಂಬಿಸುತ್ತಿದ್ದಾರೆ. ಈ ಸೌಲಭ್ಯಗಳಿಂದ ಜನರ ಆರ್ಥಿಕ ಸ್ಥಿತಿ ಉತ್ತಮಗೊಂಡಿದೆ. ಬಿಜೆಪಿಯವರೂ ಸೇರಿದಂತೆ ಎಲ್ಲರೂ ಯೋಜನೆಯ ಲಾಭ ಪಡೆಯಬೇಕೆಂಬುದು ನಮ್ಮ ಆಶಯ. ಆದರೆ ಟೀಕೆ ಮಾಡು ವವರು ತಮ್ಮ ಕಾರ್ಯಕರ್ತರಿಗೆ ಯೋಜನೆ ಲಾಭ ಪಡೆಯಬೇಡಿ ಎಂದು ಹೇಳುವ ಧೈರ್ಯವಿದೆಯೇ ಎಂದರು.
|
4 |
+
ಶಿವಮೊಗ್ಗ-ಶಿಕಾರಿಪುರದಲ್ಲಿ ಯಾವುದಾದರೂ ವರ್ಗಾವಣೆಗಳಾ ದರೆ ಅದನ್ನು ತಡೆಹಿಡಿಯುವಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಿಕಾರಿಪುರದ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರೆ ಮಾಡಿ ಒತ್ತಡ ಹಾಕುತ್ತಿದ್ದಾರೆ. ಈಗಲೂ ಇನ್ನೂ ತಮ್ಮದೇ ಸರ್ಕಾರ ಇದೆ ಎಂಬ ಭ್ರಮೆಯಲ್ಲಿ ಅವರು ಇದ್ದಂತೆ ಕಾಣುತ್ತಿದೆ ಎಂದು ಲೇವಡಿ ಮಾಡಿದರು.
|
5 |
+
ಕಳೆದ 14, 15 ವರ್ಷಗಳಿಂದ ಇಲ್ಲೇ ಟಿಕಾಣಿ ಹೂಡಿದವರನ್ನು ನಾನೇ ಪತ್ರ ಬರೆದು ಎತ್ತಂಗಡಿ ಮಾಡಿಸಿದ್ದೇನೆ. ಅದು ಯಾರೆಂದು ಎಲ್ಲರಿಗೂ ಗೊತ್ತು. ಹೆಸರು ಹೇಳಿ ಅವರನ್ನು ನಾನು ದೊಡ್ಡವರನ್ನಾಗಿ ಮಾಡುವುದಿಲ್ಲ. ಇಲ್ಲಿಂದಲೇ ಸರ್ಕಾರವನ್ನು ನಿಯಂತ್ರಣ ಮಾಡುತ್ತೇವೆ ಎಂಬ ಉದ್ಧಟತನಕ್ಕೆ ನಾವು ಸೊಪ್ಪು ಹಾಕುವುದಿಲ್ಲ ಎಂದರು.
|
6 |
+
ನನ್ನ ಕಾರಿನ ಅಪಘಾತ ಪ್ರಕರಣವನ್ನು ಅನಗತ್ಯವಾಗಿ ವೈಭವೀಕರಿಸಲಾಯಿತು. ನನ್ನ ಕಾರು 2 ಕಿ.ಮೀ. ವೇಗದಲ್ಲಿತ್ತು. ಉತ್ತರ ಪ್ರದೇಶದ ಲಾರಿ ಚಾಲಕ ಬಂದು ಡಿಕ್ಕಿ ಹೊಡೆದ. ಅದೊಂದು ಸಣ್ಣ ಮತ್ತು ಮೂರ್ಖತನದ ಅಪಘಾತ. ನನಗಾಗಲೀ, ಸಿಬ್ಬಂದಿಗಾಗಲೀ ಯಾರಿಗೂ ತೊಂದರೆಯಾಗಲಿಲ್ಲ. ತಕ್ಷಣವೇ ನಾನು ಪೊಲೀಸರ ಜೀಪಿನಲ್ಲಿ ಸದರಿ ಲಾರಿ ಚಾಲಕನನ್ನು ಕೂರಿಸಿಕೊಂಡು ಪ್ರಯಾಣವನ್ನು ಮುಂದುವರೆಸಿದೆ. ಕೊನೆಗೆ ಲಾರಿ ಚಾಲಕನನ್ನು ಹೊಡೆಯಬೇಡಿ. ಊಟ ಕೊಡಿಸಿ ಎಂದು ಪೊಲೀಸರಿಗೆ ಹಣ ಕೊಟ್ಟು ಹೋದೆ ಎಂದು ಹೇಳಿದರು.
|
7 |
+
6 ಕೋಟಿ ಆರ್ಥಿಕ ವಹಿವಾಟಿನ ಪ್ರಕರಣ ಸಂಪೂರ್ಣ ಖಾಸಗಿಯಾದ ವಿಚಾರ. ಅದನ್ನು ಬೇರೆ ರೀತಿ ಬಿಂಬಿಸಲಾಗಿದೆ. ಹೀಗಾಗಿ ನಾನು ಅದರ ಕುರಿತು ಯಾವುದೇ ಮಾಹಿತಿ ನೀಡುವುದಿಲ್ಲ. ಯಾರು ವರದಿ ಮಾಡಿದರೋ ಅವರೇ ಸತ್ಯಾಂಶವನ್ನು ಹುಡುಕಿ ಹೇಳಲಿ ಎಂದು ಸವಾಲು ಹಾಕಿದರು.
|
8 |
+
ಈ ಪ್ರಕರಣವನ್ನು ಮುಚ್ಚಿ ಹಾಕಲು ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹನನ್ನು ಬಂಧಿಸಲಾಯಿತು ಎಂದು ಹೇಳುವುದು ಹಾಸ್ಯಾಸ್ಪದ. ಅವನೇನು ��ೊಡ್ಡ ಭೂಕ್ಲಾಂಡ ಎಂದು ಪ್ರಶ್ನಿಸಿದರು. ಮರ ಕಡಿದ ಪ್ರಕರಣದಲ್ಲಿ ಅರಣ್ಯಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಅವನ ತಮ್ಮನನ್ನು ಕಾಪಾಡಿಕೊಳ್ಳಲು ನನ್ನ ಹೆಸರು ದುರ್ಬಳಕೆ ಮಾಡಲಾಗುತ್ತಿದೆಯೇ ಎಂದು ಪ್ರಶ್ನಿಸಿದರು.
|
9 |
+
ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮಕ್ಕೆ ಹೋಗದೇ ಇದ್ದರೆ ನಮಗೆ ಇಲ್ಲೇ ಇರುವ ರಾಮನನ್ನು ಪೂಜಿಸಿಕೊಳ್ಳುತ್ತೇವೆ. ರಾಮ ಹೃದಯ ದಲ್ಲಿದ್ದಾನೆ. ಆತ ಎಲ್ಲರಿಗೂ ಸೇರಿದ್ದು, ಬಿಜೆಪಿ ಯವರಿಗೆ ಮಾತ್ರ ಸೀಮಿತವಲ್ಲ ಎಂದರು.
|
10 |
+
ಅಯೋಧ್ಯೆ ರಾಮಮಂದಿರ ನಿರ್ಮಾಣದಲ್ಲಿ ಆರ್ಥಿಕ ಅವ್ಯವಹಾರ ಅಗಿದೆ ಎಂಬ ದೂರುಗಳನ್ನು ಕೇಳಿದ್ದೆವು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅದನ್ನು ತನಿಖೆ ಮಾಡಿಸಬೇಕು. ರಾಮ ಪವಿತ್ರವಾದ ದೇವರು. ಅದಕ್ಕೆ ಅವ್ಯವಹಾರದ ಮಂದಿರ ಎಂಬ ಕಳಂಕ ಅಂಟಬಾರದು ಎಂದು ಹೇಳಿದರು.
|
11 |
+
ರಾಮಮಂದಿರದ ನಿರ್ಮಾಣದ ಹಿಂದೆ ಸಂಪೂರ್ಣ ರಾಜಕೀಯ ಇದೆ. 2008 ರಿಂದಲೂ ಇದರ ಪ್ರಕ್ರಿಯೆಗಳು ನಡೆಯುತ್ತಿದ್ದವು. ಆದರೆ ಚುನಾವಣೆ ಕಾಲಕ್ಕೆ ಇದನ್ನು ದೊಡ್ಡದಾಗಿ ಬಿಂಬಿಸಿಕೊಂಡು ರಾಜಕೀಯ ಲಾಭ ಪಡೆಯುವ ಪ್ರಯತ್ನ ನಡೆಯುತ್ತಿದೆ. ರಾಜ್ಯದ ಜನ ಭಾವನಾತ್ಮಕ ವಿಚಾರಗಳಿಗೆ ಸೊಪ್ಪು ಹಾಕುವುದಿಲ್ಲ. ಪಂಚಖಾತ್ರಿ ಯೋಜನೆಗಳು ಜನರ ಜೀವನವನ್ನು ಸುಧಾರಿಸಿವೆ. ಹೀಗಾಗಿ ಜನ ಭಾವನಾತ್ಮಕ ರಾಜಕಾರಣಕ್ಕಿಂತಲೂ ಬದುಕಿನ ರಾಜಕಾರಣದ ಬಗ್ಗೆ ಯೋಚಿಸುತ್ತಾರೆ ಎಂದರು.
|
12 |
+
ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ಹಣ ವಸೂಲಿ : ವಂಚಕ ಸೆರೆ
|
13 |
+
ಶಾಲಾ ಶಿಕ್ಷಣ ಇಲಾಖೆಯ ಶಾಲೆಗಳಲ್ಲಿ ಮಕ್ಕಳ ಕೈಲಿ ಶೌಚಾಲಯ ಸ್ವಚ್ಛಗೊಳಿಸುವುದು ಸಹನೀಯವಲ್ಲ. ಇದು ಬಿಜೆಪಿಯವರ ಪಾಪಕೃತ್ಯ. ನಾನು ಸರಿಪಡಿಸುತ್ತೇನೆ. ಮುಂದಿನ ದಿನಗಳಲ್ಲಿ ಇಂತಹದ್ದನ್ನು ಮುಂದುವರೆಯಲು ಬಿಡುವುದಿಲ್ಲ ಎಂದು ಹೇಳಿದರು.
|
14 |
+
ಯುವನಿಧಿ ಯೋಜನೆಯಡಿ ಹಣ ಸಂದಾಯ ಮಾಡುವ ಕಾರ್ಯಕ್ರಮ ಜನವರಿ 12 ರಂದು ಶಿವಮೊಗ್ಗದಲ್ಲಿ ನಡೆಯಲಿದೆ. ಅದರ ಪೂರ್ವ ತಯಾರಿ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲರೊಂದಿಗೆ ನಾಳೆ ಸಭೆ ನಡೆಸಲಾಗುತ್ತಿದೆ. ಯುವನಿಧಿಗೆ ಈವರೆಗೂ 20 ಸಾವಿರ ಮಂದಿ ನೊಂದಣಿಯಾಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ನೊಂದಣಿಯಾಗುವ ಮೂಲಕ ಸರ್ಕಾರದ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
|
15 |
+
ಖಾಸಗಿ ವ್ಯವಹಾರಕ್ಕೆ ಸಂಬಂಧಪಟ್ಟಂತೆ ಸಂಸದ ಬಿ.ವೈ.ರಾಘವೇಂದ್ರ ನನ್ನ ರಾಜೀನಾಮೆ ಕೇಳಿದ್ದಾರೆ. ಬಿಜೆಪಿಯ ಶಾಸಕ ಬಸನಗೌಡ ಯತ್ನಾಳ್ ಕೋವಿಡ್ ಸಂದರ್ಭದಲ್ಲಿ 40 ಸಾವಿರ ಕೋಟಿ ರೂ. ಅವ್ಯವಹಾರವಾಗಿದೆ ಎಂದು ಹೇಳಿದ್ದಾರೆ. ಅದಕ್ಕೆ ಮೊದಲು ಉತ್ತರ ಕೊಡಿ ಎಂದರು.
|
16 |
+
ವಿಜಯೇಂದ್ರ ಅವರು ನನ್ನ 6 ಸಾಲ ಕೋಟಿ ರೂ. ಪ್ರಕರಣವನ್ನು ಟ್ವೀಟ್ ಮಾಡುವ ಮೂಲಕ ಒಂದೇ ದಿನ ನನ್ನ ಮೌಲ್ಯವನ್ನು ಹೆಚ್ಚಿಸಿದ್ದಾರೆ. ಹಲವಾರು ಸ್ನೇಹಿತರು ಕರೆ ಮಾಡಿ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದರು. ���ದರ ಮೊತ್ತ ಸರಿಸುಮಾರು 100 ಕೋಟಿ ರೂ.ಗಳಿಗೂ ಅಧಿಕ. ಸದ್ಯಕ್ಕೆ ನನ್ನ ಬಳಿ ನಾನೇ ದುಡಿದ ಹಣ ಇದೆ. ಅದರಿಂದ ಸಾಲ ಪಾವತಿಸುವ ಶಕ್ತಿಯೂ ಇದೆ. ಅಧಿಕಾರದಲ್ಲಿದ್ದೇನೆ ಎಂಬ ಕಾರಣಕ್ಕಾಗಿ 4 ರೂ. ಹೆಚ್ಚಾಗಿ ಬರಬಹುದು ಎಂದು ಕೆಲವರು ಪ್ರಕರಣವನ್ನು ವೈಭವೀಕರಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
|
eesanje/url_46_273_8.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಹೊಸ ವರ್ಷಾಚರಣೆ ನಂತರ ಉಲ್ಬಣಿಸುತ್ತಿದೆ ಕೊರೊನಾ..
|
2 |
+
ಬೆಂಗಳೂರು,ಜ.2- ಹೊಸ ವರ್ಷಾಚರಣೆ ನಂತರ ನಗರದಲ್ಲಿ ಕೊರೊನಾ ಸೋಂಕಿನ ಪ್ರಮಾಣದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ರಾಜ್ಯದಲ್ಲಿ ಸರಿಸುಮಾರು 1245ಕೊವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ ಎಂಬಂತಾಗಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿನಿತ್ಯ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.
|
3 |
+
ಕಳೆದ 24 ಗಂಟೆಗಳಲ್ಲಿ ನಗರದಲ್ಲಿ 131 ಕೊರೊನಾ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಒಟ್ಟಾರೆ 634 ಕೊರೊನಾ ಸೋಂಕಿನ ಪ್ರಕರಣಗಳಿವೆ ಎಂದು ಅಂದಾಜಿಸಲಾಗಿದೆ. ಬಾಗಲಕೋಟೆ- 7, ಬಳ್ಳಾರಿಯಲ್ಲಿ 33,ಬೆಳಗಾವಿ- 8, ಬೆಂಗಳೂರು ಗ್ರಾಮಾಂತರ-33,ಬೀದರ್- 4, ಚಾಮರಾಜನಗರ -30,ಚಿಕ್ಕಬಳ್ಳಾಪುರ-35, ಚಿಕ್ಕಮಗಳೂರಿನಲ್ಲಿ 15, ಚಿತ್ರದುರ್ಗ-15, ದಕ್ಷಿಣ ಕನ್ನಡದಲ್ಲಿ 45, ದಾವಣಗೆರೆ 13, ಧಾರವಾಡ-13, ಗದಗ- 16, ಹಾಸನ 43, ಹಾವೇರಿ-1, ಕಲಬುರಗಿ 12, ಕೊಡಗು 3, ಕೋಲಾರ 15, ಕೊಪ್ಪಳ 10, ಮೈಸೂರಿನಲ್ಲಿ 109, ಮಂಡ್ಯ 46, ರಾಯಚೂರು 5, ರಾಮನಗರದಲ್ಲಿ 12, ಶಿವಮೊಗ್ಗ 23, ತುಮಕೂರು 23, ಉಡುಪಿ 2, ಉತ್ತರಕರ್ನಾಟಕ-7 , ವಿಜಯನಗರ-32, ಹಾಗೂ ಯಾದಗಿರಿ ಒಂದು ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿವೆ.
|
4 |
+
ಅನಕ್ಷರಸ್ಥ ಶಿಕ್ಷಣ ಸಚಿವ ಮಧುಬಂಗಾರಪ್ಪನವರ ಅಮೋಘ ಸಾಧನೆಗಳು
|
5 |
+
ಕರುನಾಡಲ್ಲಿ ಆರ್ಭಟ ಶುರು ಮಾಡಿರುವ ಜೆಎನ್.1 ಉಪತಳಿ:ರಾಜ್ಯದಲ್ಲಿ ಬರೋಬ್ಬರಿ 199 ಜೆಎನ್ . 1 ಪ್ರಕರಣಗಳು ವರದಿಯಾಗಿವೆ. ಜಿನೋಮಿಕ್ ಸಿಕ್ವೇನ್ಸ್ ವರದಿಯಲ್ಲಿ 199 ಮಂದಿಗೆ ಜೆಎನ್.1ಸೋಂಕು ತಗುಲಿರೋದು ಕನ್ ಫರ್ಮ್ ಆಗಿದೆ. ಇದುವರೆಗೆ ಜಿನೋಮ್ ಸೀಕ್ವೆನ್ಸ್ ಟೆಸ್ಟ್ಗೆ 601 ಸ್ಯಾಂಪಲ್ಸ್ಗಳ್ ರವಾನೆ ಮಾಡಲಾಗಿದ್ದು, ಈ ಪೈಕಿ 262 ಮಂದಿಯ ವರದಿ ಕೈ ಸೇರಿದೆ.
|
6 |
+
ಡಿಸೆಂಬರ್ 25 ಹೊರ ಬಿದ್ದ ಮೊದಲ ರಿಪೋರ್ಟ್ ನಲ್ಲಿ 60 ಸ್ಯಾಂಪಲ್ ಗಳ ಪೈಕಿ 34 ಮಂದಿಗೆ ಜೆಎನ್. 1 ತಗುಲಿರೋದು ಕನ್ ಫರ್ಮ್ ಆಗಿತ್ತು ನಿನ್ನೆ ಮತ್ತೆ 202 ಮಾದರಿಗಳ ವರದಿಯಲ್ಲಿ 165 ಮಂದಿಯಲ್ಲಿ ಜೆಎನ್.1 ಸೋಂಕು ಇರುವುದು ದೃಢವಾಗಿದೆ. ಇಲ್ಲಿಯವರೆಗೆ 199 ಜನರಿಗೆ ಜೆ.ಎನ್ 1 ವೈರಸ್ ಸೋಂಕು ತಗುಲಿದೆ, 28 ಜನರಿಗೆ ಎಕ್ಸ್ಬಿಬಿ ಉಪ ತಳಿ ಸೋಂಕು ಪತ್ತೆಯಾಗಿರುವುದು ಕಂಡುಬಂದಿದೆ.
|
eesanje/url_46_273_9.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ಹಣ ವಸೂಲಿ : ವಂಚಕ ಸೆರೆ
|
2 |
+
ಬೆಂಗಳೂರು,ಜ.2- ಸಿನಿಮಾ ನೋಡಿ ಪ್ರೇರಣೆಗೊಂಡು ಲೋಕಾಯುಕ್ತ ಅಧಿಕಾರಿ ಎಂದು ಹೇಳಿ ಹಣಕ್ಕಾಗಿ ಬೇಡಿಕೆ ಇಟ್ಟು ಸರ್ಕಾರಿ ಅಧಿಕಾರಿಗಳು ಕೆಲಸ ಮಾಡದಂತೆ ಮಾನಸಿಕವಾಗಿ ತೊಂದರೆ ನೀಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
|
3 |
+
ಆಂಧ್ರಪ್ರದೇಶ ಮೂಲದ ಶ್ರೀನಾಥ ರೆಡ್ಡಿ(34) ಬಂಧಿತ ವಂಚಕ. ಈತ 10ನೇ ತರಗತಿ ವ್ಯಾಸಂಗ ಮಾಡಿದ್ದು, ಆಂಧ್ರಪ್ರದೇಶದಲ್ಲೂ ಸರ್ಕಾರಿ ನೌಕರರಿಗೆ ಇದೇ ರೀತಿ ಕರೆ ಮಾಡಿ ಬೆದರಿಸಿ ಹಣ ವಸೂಲಿ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ. ಅನಾ ಮಧೇಯ ವ್ಯಕ್ತಿಯೊಬ್ಬ ಸರ್ಕಾರಿ ಅಧಿಕಾರಿಯೊಬ್ಬರಿಗೆಮೊಬೈಲ್ನಿಂದ ಕರೆ ಮಾಡಿ ತಾನು ಲೋಕಾಯುಕ್ತ ಇನ್ಸ್ಪೆಕ್ಟರ್ ಚಂದ್ರಶೇಖರ್ ಮಾತನಾಡುತ್ತಿರುವುದಾಗಿ ಪರಿಚಯಿಸಿಕೊಂಡು, ನಮ್ಮ ಎಡಿಜಿಪಿ ಸಾಹೇಬರು ಮಾತನಾಡುತ್ತಾರೆಂದು ಹೇಳಿ ನಿಮ್ಮ ವಿರುದ್ಧ ಲೋಕಾಯುಕ್ತದಲ್ಲಿ ಪಿಟಿಶನ್ ಇರುತ್ತದೆ. ಅದನ್ನು ವಿಚಾರಣೆ ಮಾಡದೆ ಮುಕ್ತಾಯಗೊಳಿಸಬೇಕಾದರೆ ಹಣ ನೀಡಬೇಕಾಗುತ್ತದೆ ಎಂದು ಹೆದರಿಸಿದ್ದಾನೆ.
|
4 |
+
ನೀವು ಹಣ ಕೊಟ್ಟರೆ ಪಿಟಿಶನ್ನ್ನು ನಮ್ಮ ಟೆಕ್ನಿಕಲ್ ಟೀಮ್ನಿಂದ ವಿಚಾರಣೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಲಾಗುವುದು ಎಂದು ಹೇಳಿ ಹಣಕ್ಕಾಗಿ ಬೇಡಿಕೆ ಇಟ್ಟು ಸರ್ಕಾರಿ ಅಧಿಕಾರಿಗಳು ಕೆಲಸ ಮಾಡದಂತೆ ಮಾನಸಿಕವಾಗಿ ತೊಂದರೆ ನೀಡುತ್ತಿದ್ದನು.
|
5 |
+
ಈ ಅನಾಮಧೇಯ ವ್ಯಕ್ತಿಯ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಸಿಬಿ ಪೊಲೀಸರು ತನಿಖೆಯನ್ನು ಮುಂದುವರೆಸಿ ಅನಾಮಧೇಯ ವ್ಯಕ್ತಿಯ ಬಗ್ಗೆ ಹಲವು ಮಾಹಿತಿಗಳನ್ನು ಕಲೆ ಹಾಕಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ, ತಾನು ಸಿನಿಮಾದಿಂದ ಪ್ರೇರಣೆಗೊಂಡು ಈ ರೀತಿಯ ಅಪರಾಧ ಕೃತ್ಯಗಳನ್ನು ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.
|
6 |
+
ಆಪರೇಷನ್ ಕಮಲಕ್ಕೆ ಒಳಗಾಗುವ ಶಾಸಕರು ಕಾಂಗ್ರೆಸ್ನಲ್ಲಿ ಇಲ್ಲ: ಚೆಲುವರಾಯಸ್ವಾಮಿ
|
7 |
+
ಅಲ್ಲದೆ ಎಡಿಜಿಪಿ ಕೇಶವರಾವ್ ಅವರ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ಬೆದರಿಸಿ ಹಣ ವಸೂಲಿ ಮಾಡಲು ಪ್ರಯತ್ನಿಸಿದ್ದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಆರೋಪಿಯು ನಗರದ ಸಿದ್ದಾಪುರ, ಹೈಗ್ರೌಂಡ್ಸ್ ಮತ್ತು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಟೂ ಟೌನ್ ಹಾಗೂ ರಾಜ್ ಮಂಡ್ರಿಯಾದ ತ್ರಿ ಟೌನ್ ಪೊಲೀಸ್ ಠಾಣೆಗಳಲ್ಲಿ ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಹಣ ವಸೂಲಿ ಮಾಡಿದ ಪ್ರಕರಣಗಳು ದಾಖಲಾಗಿರುತ್ತವೆ.
|
8 |
+
ಈತನ ವಿರುದ್ಧ ನಗರದಲ್ಲಿನ ಬೇಗೂರು, ಎಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ, ಹೆಬ್ಬಗೋಡಿ, ಜಿಗಣಿ, ಸೂರ್ಯಸಿಟಿ, ಕೋಲಾರ ಟೌನ್ಗಳಲ್ಲಿ ಮನೆ ಕಳವು ಪ್ರಕರಣಗಳು ದಾಖಲಾಗಿರುತ್ತವೆ. ಈ ಕಾರ್ಯಾಚರಣೆಯನ್ನು ಬೆಂಗಳೂರುನಗರ ಉಪಪೊಲೀಸ್ ಆಯುಕ್ತರು ಅಪರಾಧ-2 ಅವರ ಮಾರ್ಗದರ್ಶನದಲ್ಲಿ ಸಂಘಟಿತ ಅಪರಾಧ ದಳ(ಪೂರ್ವ) ಅಧಿಕಾರಿ ಮತ್ತು ಸಿಬ್ಬಂದಿಗಳು ಬೇಸುವಲ್ಲಿ ಯಶಸ್ವಿಯಾಗಿರುತ್ತಾರೆ.
|
9 |
+
ಮೊಸ ಹೋಗಿದ್ದಲ್ಲಿ ದೂರು ನೀಡಿ:ಈ ವ್ಯಕ್ತಿಯು 35 ರಿಂದ 40 ಮಂದಿಗೆ ಮೋಸ ಮಾಡಿದ್ದು, ಯಾರಾದರೂ ಈ ಆರೋಪಿಯಿಂದ ವಂಚನೆಗೊಳಗಾಗಿದ್ದಲ್ಲಿ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡುವಂತೆ ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ವ್ಯಕ್ತಿಯಿಂದ ವಂಚನೆಗೊಳಗಾದವರ ಪೈಕಿ ಕೆಲವರು ದೂರು ನೀಡಿಲ್ಲ. ಹಾಗಾಗಿ ಮೋಸಕ್ಕೊಳಗಾದವರು ಯಾರಿಗೂ ಹೆದರದೆ ದೂರು ನೀಡುವಂತೆ ಆಯುಕ್ತರು ಅಭಯ ನೀಡಿದ್ದಾರೆ.
|
eesanje/url_46_274_1.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಜ. 5ರಿಂದ ಮೂರು ದಿನ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ
|
2 |
+
ಬೆಂಗಳೂರು,ಜ.2-ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳವನ್ನು ಜನವರಿ 5ರಿಂದ 7ರವರೆಗೆ ಮೂರು ದಿನಗಳ ಕಾಲ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಆಯೋಜಿಸಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.5ರಂದು ಬೆಳಗ್ಗೆ 11 ಗಂಟೆಗೆ ಮೇಳ ಉದ್ಘಾಟನೆಯಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಕೇಂದ್ರ, ರಾಜ್ಯ ಸಚಿವರು ಪಾಲ್ಗೊಳ್ಳಲಿದ್ದಾರೆ ಎಂದರು.
|
3 |
+
ಸಿರಿಧಾನ್ಯಗಳಿಂದ ಮೇಳದಲ್ಲಿ ಆಹಾರವನ್ನು ಸಿದ್ದಪಡಿಸಲಾಗುತ್ತದೆ. ಇದರಲ್ಲಿ ಗ್ರಾಹಕರು, ಸಾರ್ವಜನಿಕರು ಭಾಗವಹಿಸಬಹುದು ಎಂದು ತಿಳಿಸಿದರು. ಮೂರು ದಿನಗಳ ಕಾಲ ರಾಜ್ಯ, ಅಂತಾರಾಷ್ಟ್ರೀಯ ಮಟ್ಟದ ಚರ್ಚಾ ಗೋಷ್ಟಿಗಳು ನಡೆಯಲಿವೆ. ಸಿರಿಧಾನ್ಯಗಳ ಬಗ್ಗೆ ವಿಸ್ತೃತವಾಗಿ ತಿಳಿದುಕೊಳ್ಳುವ ಅವಕಾಶ ದೊರೆಯಲಿದೆ. ಸಾವಯವ ಸಿರಿಧಾನ್ಯಗಳು ಬೆಳೆಯುವುದರ ಜೊತೆಗೆ ಅವುಗಳ ಮೌಲ್ಯ ವರ್ಧನೆ ಮಾಡುವುದು, ಆಹಾರವಾಗಿ ಬಳಕೆ ಮಾಡುವುದು ಮೊದಲಾದ ವಿಚಾರಗಳ ಬಗ್ಗೆ ಮೇಳದಲ್ಲಿ ಬೆಳಕು ಚೆಲ್ಲಲಾಗುತ್ತದೆ ಎಂದರು.
|
4 |
+
ಸಿರಿಧಾನ್ಯವನ್ನು ಬೆಳೆಯುವುದಷ್ಟೇ ಅಲ್ಲ. ಮೌಲ್ಯವರ್ಧನೆ ಮಾಡಿ ರಫ್ತು ಮಾಡಬೇಕು. ಸಿರಿಧಾನ್ಯ ಉತ್ಪಾದನೆಯಲ್ಲಿ ರಾಜ್ಯ 4ನೇ ಸ್ಥಾನದಲ್ಲಿದ್ದು, ಮೊದಲ ಸ್ಥಾನಕ್ಕೆ ಬರಬೇಕೆಂಬುದು ನಮ್ಮ ಉದ್ದೇಶ ಎಂದು ಹೇಳಿದರು. ಕಳೆದ 2017ರಿಂದಲೂ ಸಿರಿಧಾನ್ಯ ಮತ್ತು ಸಾವಯವ ಮೇಳವನ್ನು ಆಯೋಜಿಸಲಾಗುತ್ತಿದೆ. ಈ ಬಾರಿಯ ಮೇಳಕ್ಕೆ 2 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ. 300 ಮಳಿಗೆಗಳನ್ನು ತೆರೆಯಲಾಗುತ್ತದೆ.
|
5 |
+
ಸಿರಿಧಾನ್ಯಗಳಿಗೆ ಉತ್ತೇಜನ ಸಿಗುವುದರಿಂದ ರೈತರಿಗೆ ಅನುಕೂಲ ಸಿಗಲಿದೆ. ರೋಗನಿರೋಧಕ ಗುಣವನ್ನು ಹೊಂದಿರುವುದರಿಂದ ಸಿರಿಧಾನ್ಯಗಳು ಆರೋಗ್ಯ ಸುಧಾರಣೆಗೂ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.ಜರ್ಮನ್, ಸೌದಿ ಅರೇಬಿಯಾ, ಒಮನ್, ಆಸ್ಟ್ರೇಲಿಯಾ ಸೇರಿದಂತೆ ಏಳೆಂಟು ರಾಷ್ಟ್ರಗಳು ಮೇಳದಲ್ಲಿ ಪಾಲ್ಗೊಳ್ಳುತ್ತಿವೆ. ಅಲ್ಲದೆ ಆಂಧ್ರಪ್ರದೇಶ, ಕೇರಳ, ಒಡಿಶಾ, ಮೇಘಾಲಯ, ಉತ್ತರಪ್ರದೇಶ ಮೊದಲಾದ ರಾಜ್ಯಗಳು ಭಾಗವಹಿಸಲಿವೆ ಎಂದರು.
|
6 |
+
ಮೇಳದಲ್ಲಿ ಹತ್ತು ವಿವಿಧ ಸಿರಿಧಾನ್ಯ ಹೋಟೆಲ್ಗಳು ಇರಲಿದ್ದು, ವೈವಿಧ್ಯ ಮತ್ತು ರುಚಿಕರವಾದ ಸಿರಿಧಾನ್ಯ ಊಟ ಮತ್ತು ಉಪಹಾರ ಸವಿಯುವ ಅವಕಾಶವಿದೆ ಎಂದರು. 35ಕ್ಕೂ ಹೆಚ್ಚು ಪ್ರಖ್ಯಾತ ಉಪನ್ಯಾಸಕರು ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮಾಹಿತಿ ನೀಡಲಿದ್ದಾರೆ. ರೈತರಿಗೂ ಕೃಷಿ ವಿವಿಯಿಂದ ಕಾರ್ಯಗಾರ ಆಯೋಜಿಸಲಾಗುತ್ತಿದೆ. ಸಾವಯವ ಮತ್ತು ಸಿರಿಧಾನ್ಯಗಳ ಉತ್ಪನ್ನಗಳಿಗೆ ಮಾರುಕಟ್ಟೆ ಸಂಪರ್ಕ ಕಲ್ಪಿಸಿಕೊಡಲು ಮೇಳದಲ್ಲಿ ಉತ್ಪಾದಕರ, ಮಾರುಕಟ್ಟೆದಾರರ ಸಮಾಲೋಚನೆ ಸಭೆಗಳನ್ನು ಏರ್ಪಡಿಸಲಾಗುತ್ತದೆ ಎಂದು ತಿಳಿಸಿ���ರು.
|
7 |
+
ಮೇಳದಲ್ಲಿ ಚಿಲ್ಲರೆ ಮಾರಾಟಗಾರರು, ರಫ್ತುದಾರರು, ರೈತ ಗುಂಪುಗಳು, ಪ್ರಾಂತೀಯ ಒಕ್ಕೂಟಗಳು ಭಾಗವಹಿಸಲಿವೆ. ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನೋಡಲ್ ಏಜೆನ್ಸಿಯಾಗಿದೆ. ಅಂತಾರಾಷ್ಟ್ರೀಯ ಮಟ್ಟದ ಸಂಶೋಧನಾ ಸಂಸ್ಥೆಗಳಾದ ಜಿಐಜೆಡ್, ಐಐಎಂಆರ್ ಮೊದಲಾದ ಸಂಸ್ಥೆಗಳು ಭಾಗವಹಿಸಲಿವೆ ಎಂದರು.
|
8 |
+
ಬಾಬ್ರಿ ಮಸೀದಿ ಕಳೆದುಕೊಂಡ ಬೇಸರ ಇಲ್ಲವೇ: ಮುಸ್ಲಿಂ ಯುವಕರಿಗೆ ಓವೈಸಿ ಪ್ರಶ್ನೆ
|
9 |
+
ಇದಕ್ಕೂ ಮುನ್ನ ರಫ್ತುದಾರರ ಸಮಾವೇಶದಲ್ಲಿ ಪಾಲ್ಗೊಂಡು ಮಾತ ನಾಡಿದ ಸಚಿವ ಚಲುವರಾಯಸ್ವಾಮಿ ಅವರು ಸಿರಿಧಾನ್ಯಗಳ ಬಗ್ಗೆ ಯುವ ಸಮುದಾಯಕ್ಕೆ ಸಾಕಷ್ಟು ಅರಿವಿದೆ. ತಾರಾ ಹೋಟೆಲ್ಗಳಲ್ಲೂ ಸಿರಿಧಾನ್ಯದ ಆಹಾರ ಲಭ್ಯವಾಗುತ್ತಿದೆ. ಸಿರಿಧಾನ್ಯದ ರಫ್ತಿನ ನಿರ್ಬಂಧ ಸಡಿಲ ಮಾಡಿ ಉತ್ತೇಜನ ನೀಡಬೇಕು.
|
10 |
+
ಮುಂದಿನ ವರ್ಷದಲ್ಲಿ ರಫ್ತು ಎರಡುಮೂರು ಪಟ್ಟು ಹೆಚ್ಚಾಗಬೇಕು, ಸಿರಿಧಾನ್ಯ ಬೆಳೆಯುವುದು ಮತ್ತು ರಫ್ತಿನಲ್ಲಿ ರಾಜ್ಯ ಮೊದಲ ಸ್ಥಾನಕ್ಕೆ ಬರಬೇಕು, ಹೆಕ್ಟೇರ್ಗೆ 10 ಸಾವಿರ ರೂ. ಪ್ರೋತ್ಸಾಹ ಧನ ನೀಡುತ್ತಿದ್ದು ಮುಂದಿನ ವರ್ಷ ಹೆಚ್ಚಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ವಿವರಿಸಿದರು.
|
11 |
+
ಇದೇ ಸಂದರ್ಭದಲ್ಲಿ ಸಿರಿಧಾನ್ಯಗಳ ಮೌಲ್ಯ ರ್ವತ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಯಿತು.ಕೆಫೆಕ್ನ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ್, ಕೃಷಿ ಇಲಾಖೆ ನಿರ್ದೇಶಕ ಡಾ.ಪುತ್ರ.ಜಿ.ಟಿ, ಅಪರ ಕೃಷಿ ನಿರ್ದೇಶಕ ವೆಂಕಟರಾಮ ರೆಡ್ಡಿ, ಜೆ.ಪಾಟೀಲ್, ಕೆಫೆಕ್ ವ್ಯವಸ್ಥಾಪಕ ನಿರ್ದೇಶಕ ಎನ್.ಎಚ್.ಭಂತನಾಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
|
eesanje/url_46_274_10.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ನಿಗಮ ಮಂಡಳಿ ನೇಮಕಾತಿ ಚರ್ಚೆಗೆ ಸಿಎಂ,ಡಿಸಿಎಂ ದೆಹಲಿಗೆ
|
2 |
+
ಬೆಂಗಳೂರು,ಜ.1- ಲೋಕಸಭೆ ಚುನಾವಣೆ ತಯಾರಿ ನಿಗಮ ಮಂಡಳಿ ನೇಮಕಾತಿ ಸೇರಿದಂತೆ ವಿವಿಧ ವಿಚಾರಗಳ ಕುರಿತು ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜ.4 ರಂದು ದೆಹಲಿಗೆ ತೆರಳಲಿದ್ದಾರೆ.
|
3 |
+
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಕರ್ನಾಟಕದಲ್ಲಷ್ಟೇ ಅಲ್ಲ, ವಿವಿಧ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು, ಪಕ್ಷದ ಸರ್ಕಾರಗಳು ಅಧಿಕಾರದಲ್ಲಿರುವ ರಾಜ್ಯದ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಲೋಕಸಭೆ ಚುನಾವಣೆಗೆ ತಯಾರಿ ನಡೆಸುವ ಸಂಬಂಧಪಟ್ಟಂತೆ ಮಹತ್ವದ ಚರ್ಚೆಗಳಾಗುವ ಸಾಧ್ಯತೆಗಳಿವೆ.
|
4 |
+
ಅಭ್ಯರ್ಥಿಗಳ ಆಯ್ಕೆ, ಇಂಡಿಯಾ ರಾಜಕೀಯ ಮೈತ್ರಿಕೂಟದ ನಡುವಿನ ಸೀಟು ಹಂಚಿಕೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆಯಿದೆ. ಇದೇ ರೀತಿ ಕರ್ನಾಟಕದಲ್ಲಿನ ನಿಗಮ ಮಂಡಳಿಗಳ ನೇಮಕಾತಿ ವಿಷಯವಾಗಿಯೂ ಚರ್ಚೆಯಾಗುವ ನಿರೀಕ್ಷೆಗಳಿವೆ. ಕಾಂಗ್ರೆಸ್ನ ಕಾರ್ಯಕರ್ತರು, ಮುಖಂಡರು, ಶಾಸಕರು, ನಿಗಮ ಮಂಡಳಿಗಳ ನೇಮಕಾತಿಯಾಗಲಿದೆ, ತಮಗೆ ಅವಕಾಶ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಆದರೆ ಕಳೆದ 7 ತಿಂಗಳಿನಿಂದಲೂ ನಿಗಮ ಮಂಡಳಿಗಳಿಗೆ ನೇಮಕಾತಿಯಲ್ಲೇ ಕಾಲಾಹರಣ ಮಾಡುತ್ತಿರುವುದು ವ್ಯಾಪಕ ಅಸಮಾಧಾನಕ್ಕೂ ಕಾರಣವಾಗಿದೆ.
|
5 |
+
ಈ ಮೊದಲು ನಾಲ್ಕು ಬಾರಿ ಸಭೆಗಳಾಗಿ ಚರ್ಚೆಗಳಾಗಿವೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯ ಮಂತ್ರಿ ಎರಡು-ಮೂರು ಬಾರಿ ದೆಹಲಿಗೆ ಭೇಟಿ ನೀಡಿ ಬರಿಗೈಲಿ ಮರಳಿದ್ದಾರೆ. ಮೂಲಗಳ ಪ್ರಕಾರ ರಾಜ್ಯದ ನಾಯಕರು ಸಂಭವನೀಯ ಅಧ್ಯಕ್ಷರ ಪಟ್ಟಿಯನ್ನು ಸಿದ್ಧಪಡಿಸಿ ಹೈಕಮಾಂಡ್ಗೆ ಸಲ್ಲಿಸಿದ್ದಾರೆ. ಅದರಲ್ಲಿ ಕೆಲವು ಭಿನ್ನಮತಗಳಿದ್ದು, ಅದನ್ನು ಬಗೆಹರಿಸಿಕೊಳ್ಳುವಂತೆ ಹೈಕಮಾಂಡ್ ಸೂಚನೆ ನೀಡಿದೆ. ಆದರೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ಪ್ರತಿಷ್ಠೆಗೆ ಬಿದ್ದಿರುವುದರಿಂದ ಪಟ್ಟಿ ಅಂತಿಮಗೊಂಡಿಲ್ಲ ಎಂಬ ಮಾಹಿತಿ ಇದೆ. ಪ್ರತಿ ಬಾರಿ ದೆಹಲಿಗೆ ಹೋದಾಗಲೂ ಬೇರೆಬೇರೆ ವಿಚಾರಗಳು ಚರ್ಚೆಯಾಗುತ್ತಿದ್ದು, ನಿಗಮ ಮಂಡಳಿ ಕಾರ್ಯಕರ್ತರಿಗೆ ಮರೀಚಿಕೆಯಾಗಿಯೇ ಉಳಿದಿದೆ.
|
6 |
+
ಇತ್ತೀಚೆಗೆ ಬೆಂಗಳೂರಿನಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ, ಶೀಘ್ರವೇ ನೇಮಕಾತಿ ಪಟ್ಟಿಗೆ ಅಂಗೀಕಾರ ನೀಡುವುದಾಗಿ ತಿಳಿಸಿದರು. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಬ್ಬರೂ ದೆಹಲಿಗೆ ಹೋಗುವ ಮುನ್ನ ನಿಗಮ ಮಂಡಳಿಗಳ ನೇಮಕಾತಿ ಪಟ್ಟಿಯನ್ನು ಅಂತಿಮಗೊಳಿಸಿಕೊಂಡೇ ಬರುವುದಾಗಿ ಹೇಳಿದ್ದರು. ಆದರೆ ವಾಪಸ್ ಬಂದ ನಂತರ ಅದರ ಬಗ್ಗೆ ಚಕಾರ ಎತ್ತುತ್ತಿಲ್ಲ. ಮೊದಲ ಹಂತದಲ್ಲಿ ಶಾಸಕರಿಗೆ, ಎರಡನೇ ಹಂತದಲ್ಲಿ ಕಾರ್ಯಕರ್ತರ��, ಮುಖಂಡರು ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲು ನೇಮಕಾತಿ ಮಾಡುವುದಾಗಿ ತಿಳಿಸಿದರು. ಆದರೆ ಆ ಕಾಲ ಇನ್ನೂ ಕೂಡದೇ ಇರುವುದು ನಾನಾ ರೀತಿಯ ಚರ್ಚೆಗಳನ್ನು ಹುಟ್ಟುಹಾಕಿದೆ.
|
eesanje/url_46_274_11.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಹೂಗುಚ್ಛ ಬೇಡ, ಅನಾಥ ಮಕ್ಕಳಿಗೆ ಸಹಾಯ ಮಾಡಿ : ದಯಾನಂದ
|
2 |
+
ಬೆಂಗಳೂರು,ಜ.1- ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಶುಭಾಶಯ ತಿಳಿಸಲು ಬರುವ ಕಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹೂವಿನ ಗುಚ್ಛ ಹಾಗೂ ಸಿಹಿ ತಿನಿಸುಗಳು ಹಾಗೂ ಉಡುಗೊರೆಗಳನ್ನು ತಂದು ಹಣ ವ್ಯರ್ಥ ಮಾಡುವ ಬದಲು ಸಂಕಷ್ಟದಲ್ಲಿರುವ ಬಡವರು, ವೃದ್ಧಾಶ್ರಮಗಳು ಹಾಗೂ ಅನಾಥಶ್ರಮಗಳಿಗೆ ಆ ಹಣ ವಿನಿಯೋಗಿಸಿದರೆ ಅವರಿಗೆ ನೆರವಾಗಲಿದೆ ಎಂಬ ಸಂದೇಶವನ್ನು ನೀಡುವ ಮೂಲಕ ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಅವರು ಮಾದರಿ ಯಾಗಿದ್ದಾರೆ.
|
3 |
+
ಅನಾಥಾಶ್ರಮಗಳಿಗೆ ಮಾಡಿರುವ ಸಹಾಯದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಇತರರಿಗೂ ಮಾದರಿ ಯಾಗುವಂತೆ ಎಸಿಪಿಗಳು, ಇನ್ಸ್ಪೆಕ್ಟರ್ಗಳಿಗೆ ಆಯುಕ್ತರು ವರ್ಚುಲ್ ಸಭೆ ಮೂಲಕ ಸಲಹೆ ನೀಡಿದ್ದಾರೆ. ಪೊಲೀಸ್ ಆಯುಕ್ತರ ಈ ನಡೆಗೆ ನಗರ ಕಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
|
4 |
+
ವಾಹಿನಿಯಲ್ಲಿ ಹೂಡಿಕೆ: ಡಿ.ಕೆ.ಶಿವಕುಮಾರ್ ದಂಪತಿಗೆ ಸಿಬಿಐ ನೋಟಿಸ್
|
5 |
+
ಆಯುಕ್ತರ ಸಲಹೆಯಂತೆ ಸಿಬ್ಬಂದಿ ವರ್ಗ ತಮ್ಮ ಕೈಲಾದ ಹಣದಿಂದ ಅನಾಥಾಶ್ರಮದ ಮಕ್ಕಳಿಗೆ ಹಾಲು, ಹಣ್ಣು, ಬ್ರೆಡ್, ಸಿಹಿ ತಿನಿಸುಗಳನ್ನು ನೀಡಿ ಅವರೊಂದಿಗೆ ಬೆರೆತು ಸಂತಸ ಹಂಚಿಕೊಂಡಿದ್ದಾರೆ.
|
eesanje/url_46_274_12.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಹೊಸ ವರ್ಷಾಚರಣೆ ವೇಳೆ ಹಲವು ಅವಾಂತರ: ಸ್ನೇಹಿತರಿಂದಲೇ ಗೆಳೆಯನ ಕೊಲೆ
|
2 |
+
ಬೆಂಗಳೂರು, ಜ.1- ಹೊಸ ವರ್ಷಾಚರಣೆ ಸಂದರ್ಭದಲ್ಲಿ ಅನಾಹುತ ಗಳು ಸಂಭವಿಸುವುದು ಹೊಸದೇನಲ್ಲ. ಈ ಬಾರಿಯೂ ನಗರದಲ್ಲಿ ಸಣ್ಣಪುಟ್ಟ ಅವಾಂತರಗಳು ನಡೆದಿವೆ. ಅದರಲ್ಲೂ ಕುಡಿದ ಮತ್ತಿನಲ್ಲಿ ಸ್ನೇಹಿತರೇ ಗೆಳೆಯನನ್ನು ಕೊಲೆ ಮಾಡಿರುವುದು ಸೇರಿದಂತೆ ಹಲವಾರು ಅವಘಡಗಳು ನಡೆದಿವೆ. ಯುವಕನ ಕೊಲೆ, ಯುವತಿ ಜೊತೆ ಅಸಭ್ಯ ವರ್ತನೆ ತೋರಿದ ಯುವಕನಿಗೆ ಪೊಲೀಸರು ಕೆನ್ನೆಗೆ ಬಾರಿಸಿರುವುದು, ಪಬ ನಲ್ಲಿ ಕನ್ನಡ ಹಾಡು ಹಾಕಿಲ್ಲವೆಂದು ಗಲಾಟೆ, ಪೊಲೀಸರ ಜೊತೆ ಯುವಕ, ಯುವತಿಯರ ವಾಗ್ವಾದ ಸೇರಿದಂತೆ ಅನೇಕ ಘಟನೆಗಳು ನಡೆದಿವೆ.
|
3 |
+
ಹೊಸ ವರ್ಷಾಚರಣೆಗಾಗಿ ಸ್ನೇಹಿತರೆಲ್ಲರೂ ಸೇರಿ ಪಾರ್ಟಿ ಮಾಡಿ ವಾಪಸ್ ಆಟೋದಲ್ಲಿ ಹಿಂದಿರುಗುತ್ತಿದ್ದಾಗ ಅವರುಗಳ ನಡುವೆ ಜಗಳವಾಗಿ ಗೆಳೆಯನನ್ನೇ ಇರಿದು ಕೊಲೆ ಮಾಡಿ ರಸ್ತೆ ಬದಿ ತಳ್ಳಿ ಪರಾರಿಯಾಗಿರುವ ಘಟನೆ ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ.
|
4 |
+
ಶ್ರೀನಿವಾಸನಗರ ನಿವಾಸಿ ವಿಜಯ (21) ಕೊಲೆಯಾದ ದುರ್ದೈವಿ. ಈತ ವೃತ್ತಿಯಲ್ಲಿ ವೆಲ್ಡರ್.ರಾತ್ರಿ ಹೊಸ ವರ್ಷಾಚರಣೆ ನಿಮಿತ್ತ ವಿಜಯ್ ತನ್ನ ಸ್ನೇಹಿತರೊಡನೆ ಸೇರಿ ಶ್ರೀನಿವಾಸನಗರ 80 ಅಡಿ ರಸ್ತೆ ಸಮೀಪ ಪಾರ್ಟಿ ಮಾಡಿದ್ದಾನೆ. ಪಾರ್ಟಿ ಮುಗಿಸಿಕೊಂಡು ಬೆಳಗಿನಜಾವ 2 ಗಂಟೆ ಸುಮಾರಿನಲ್ಲಿ ಆಟೋದಲ್ಲಿ ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ ಸ್ನೇಹಿತರ ನಡುವೆಯೇ ಜಗಳವಾಗಿದೆ. ಮಾರ್ಗಮಧ್ಯೆ ಆಟೋದಲ್ಲೇ ವಿಜಯ್ಗೆ ಚಾಕುವಿನಿಂದ ಇರಿದು ಆಟೋದಿಂದ ರಸ್ತೆಬದಿ ಆತನನ್ನು ತಳ್ಳಿ ಪರಾರಿಯಾಗಿದ್ದಾರೆ. ಇರಿತದಿಂದಾಗಿ ಗಂಭೀರ ಗಾಯಗೊಂಡು ತೀವ್ರ ರಕ್ತಸ್ರಾವವಾಗಿ ವಿಜಯ್ ಕೊನೆಯುಸಿರೆಳೆದಿದ್ದಾನೆ. ಸುದ್ದಿ ತಿಳಿದ ಹನುಮಂತನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
|
5 |
+
ನಾನೂ ಹಿಂದೂ ಆದರೆ, ಬಿಜೆಪಿಯವರಂತೆ ಪ್ರದರ್ಶಿಸುವುದಿಲ್ಲ; ರಂಜನ್ ಸಿಂಗ್
|
6 |
+
ಹೊಸ ವರ್ಷ ಆಚರಿಸಲು ಚರ್ಚ್ಸ್ಟ್ರೀಟ್ನಲ್ಲಿ ಜಮಾಯಿಸಿದ್ದ ಜನಸಮೂಹದ ನಡುವೆ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಯುವಕನೊಬ್ಬನಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಕೋರಮಂಗಲ ಪಬ್ನಲ್ಲಿ ಯುವಕನೊಬ್ಬ ಕನ್ನಡ ಸಾಂಗ್ಸ್ ಹಾಕಿಲ್ಲ ಅಂತಾ ಕುಡಿದ ಮತ್ತಿನಲಿ ಗಲಾಟೆ ಮಾಡಿದ್ದಾನೆ. ಪೊಲೀಸರು ಆತನನ್ನು ಹರಸಾಹಸಪಟ್ಟು ಸಮಾಧಾನಪಡಿಸುವಂತಾಗಿತ್ತು. ಇನ್ನೊಂದೆಡೆ ಚರ್ಚ್ಸ್ಟ್ರೀಟ್ನಲ್ಲಿ ಫೇಸ್ಮಾಸ್ಕ್ ಧರಿಸಿ ಹಾವಳಿ ಮಾಡ್ತಿದ್ದ ಪುಂಡರಿಗೆ ಪೊಲೀಸರು ತರಾಟೆಗೆ ತೆಗೆದುಕೊಂಡ್ರು.
|
7 |
+
ಚರ್ಚ್ಸ್ಟ್ರೀಟ್ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರಿಂದ ಒಮ್ಮೆಲೆ ನೂಕು ನುಗ್ಗಲು ಉಂಟಾಯಿತು. ತಳ್ಳಾಟ ನೂಕಾಟದ ಪರಿಸ್ಥಿತಿ ತಲೆ���ೋರಿತು. ಬ್ಯಾರಿಕೇಡ್ಗಳನ್ನು ತಳ್ಳಿ ಸಾರ್ವಜನಿಕರು ನುಗ್ಗಲು ಪ್ರಯತ್ನಿಸಿದ್ರು. ಈ ವೇಳೆ ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ತಹಬದಿಗೆ ತಂದರು.
|
8 |
+
ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷಾಚರಣೆಗೆ ಬಂದಿದ್ದ ಯುವತಿಯೊಬ್ಬಳು ಅಸ್ವಸ್ಥಗೊಂಡು ಕುಸಿದುಬಿದ್ದ ಘಟನೆ ನಡೆದಿದೆ. ಕೂಡಲೇ ಆಕೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಆ್ಯಂಬುಲೆನ್ಸ್ನಲ್ಲಿ ಪೊಲೀಸರು ಆಸ್ಪತ್ರೆಗೆ ರವಾನಿಸಿದರು.ಹೊಸ ವರ್ಷ ಸಂಭ್ರಮಾಚರಣೆ ವೇಳೆ ಕೋರಮಂಗಲ, ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರ ಸೇರಿದಂತೆ ಎಲ್ಲೇಡೆ ಪಾರ್ಟಿ ಮುಗಿದ ಬಳಿಕ ಯುವಕ, ಯುವತಿಯರು ಕುಡಿದು ತೂರಾಡಿದ್ದಾರೆ. ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಕಾಲಿಡಲು ಜಾಗವಿಲ್ಲದಷ್ಟು ಜನ ಜಮಾಯಿಸಿದ್ದರು.
|
9 |
+
ಸಂಚಾರ ದಟ್ಟಣೆ:ಹೊಸವರ್ಷ ಸ್ವಾಗತಿಸಿದ ನಂತರ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಸಾವಿರಾರು ಜನರು ಏಕಕಾಲದಲ್ಲಿ ತಮ್ಮ ವಾಹನಗಳಲ್ಲಿ ಮನೆಗೆ ಹಿಂದಿರುಗುತ್ತಿದ್ದರಿಂದ ಎಂ.ಜಿ.ರಸ್ತೆ ಸುತ್ತಮುತ್ತಲಿನ ರಿಚ್ಮಂಡ್ ಸರ್ಕಲ್, ಕಬ್ಬನ್ ಪಾರ್ಕ್, ಚರ್ಚ್ ಸ್ಟ್ರೀಟ್, ಬ್ರಿಗೇಡ್ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಯಿತು.ಸಂಚಾರ ಪೊಲೀಸರು ಸ್ಥಳದಲ್ಲಿದ್ದು ಯಾವುದೇ ತೊಂದರೆಯಾಗದಂತೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು. ಹೊಸ ವರ್ಷಾಚರಣೆಯ ಭದ್ರತೆಗಾಗಿ ಅಕಾರಿಗಳು ಸೇರಿದಂತೆ 8500 ಮಂದಿ ಪೊಲೀಸ್ ಸಿಬ್ಬಂದಿಯನ್ನು ಬಂದೋಬಸ್ತ್ಗಾಗಿ ನಿಯೋಜಿಸಲಾಗಿತ್ತು.
|