fd08c18bc8ecfb9cb0f66613f7f235c20c9c9e6b234dfe413fc894a6784c2544
Browse files- eesanje/url_46_17_8.txt +7 -0
- eesanje/url_46_17_9.txt +9 -0
- eesanje/url_46_180_1.txt +7 -0
- eesanje/url_46_180_10.txt +4 -0
- eesanje/url_46_180_11.txt +4 -0
- eesanje/url_46_180_12.txt +6 -0
- eesanje/url_46_180_2.txt +6 -0
- eesanje/url_46_180_3.txt +6 -0
- eesanje/url_46_180_4.txt +7 -0
- eesanje/url_46_180_5.txt +7 -0
- eesanje/url_46_180_6.txt +6 -0
- eesanje/url_46_180_7.txt +5 -0
- eesanje/url_46_180_8.txt +6 -0
- eesanje/url_46_180_9.txt +6 -0
- eesanje/url_46_181_1.txt +6 -0
- eesanje/url_46_181_10.txt +5 -0
- eesanje/url_46_181_11.txt +3 -0
- eesanje/url_46_181_12.txt +5 -0
- eesanje/url_46_181_2.txt +7 -0
- eesanje/url_46_181_3.txt +5 -0
- eesanje/url_46_181_4.txt +3 -0
- eesanje/url_46_181_5.txt +13 -0
- eesanje/url_46_181_6.txt +5 -0
- eesanje/url_46_181_7.txt +8 -0
- eesanje/url_46_181_8.txt +15 -0
- eesanje/url_46_181_9.txt +7 -0
- eesanje/url_46_182_1.txt +8 -0
- eesanje/url_46_182_10.txt +8 -0
- eesanje/url_46_182_11.txt +6 -0
- eesanje/url_46_182_12.txt +6 -0
- eesanje/url_46_182_2.txt +8 -0
- eesanje/url_46_182_3.txt +8 -0
- eesanje/url_46_182_4.txt +6 -0
- eesanje/url_46_182_5.txt +6 -0
- eesanje/url_46_182_6.txt +4 -0
- eesanje/url_46_182_7.txt +10 -0
- eesanje/url_46_182_8.txt +13 -0
- eesanje/url_46_182_9.txt +7 -0
- eesanje/url_46_183_1.txt +9 -0
- eesanje/url_46_183_10.txt +5 -0
- eesanje/url_46_183_11.txt +9 -0
- eesanje/url_46_183_12.txt +5 -0
- eesanje/url_46_183_2.txt +13 -0
- eesanje/url_46_183_3.txt +4 -0
- eesanje/url_46_183_4.txt +12 -0
- eesanje/url_46_183_5.txt +8 -0
- eesanje/url_46_183_6.txt +6 -0
- eesanje/url_46_183_7.txt +7 -0
- eesanje/url_46_183_8.txt +7 -0
- eesanje/url_46_183_9.txt +8 -0
eesanje/url_46_17_8.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ನಾಗಮಂಗಲ ಗಲಭೆ ವೇಳೆ ಮತಾಂಧರಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ : ಆರ್.ಅಶೋಕ್
|
2 |
+
: .
|
3 |
+
ಬೆಂಗಳೂರು,ಸೆ.16– ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
|
4 |
+
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಘಟನೆ ಬೆನ್ನಲ್ಲೇ ಚಿಕ್ಕಮಗಳೂರಲ್ಲಿ ಬೈಕ್ ನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದಿರುವ ಪುಂಡಾಟ, ದಾವಣಗೆರೆಯ ಗಾಂಧಿನಗರ ಹಾಗೂ ಅಹದ್ ನಗರಗಳಲ್ಲಿ ಹಿಂದೂ ಯುವಕರು ಬಾವುಟ ಕಟ್ಟಿದ್ದಕ್ಕೆ ಮತಾಂಧ ಪುಂಡರು ಅವರ ಮೇಲೆ ಹಲ್ಲೆ ಮಾಡಿರುವುದು, ಇವನ್ನೆಲ್ಲಾ ಗಮನಿಸುತ್ತಿದ್ದರೆ ಈ ಪ್ರಚೋದನಕಾರಿ ಘಟನೆಗಳು ಗಣೇಶೋತ್ಸವವನ್ನೇ ಟಾರ್ಗೆಟ್ ಮಾಡಿರುವಂತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
|
5 |
+
ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ?ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿತ್ತಿದೆ.…../
|
6 |
+
ಇಂತಹ ಘಟನೆಗಳು ಅಯೋಧ್ಯ ರಾಮ ಮಂದಿರದ ಉದ್ಘಾಟನೆ ಸಂದರ್ಭದಲ್ಲಿಯೂ ನಡೆದಿತ್ತು. ಹಿಂದೂಗಳ ಹಬ್ಬಗಳು, ಉತ್ಸವಗಳು, ಸಂಭ್ರಮಾಚರಣೆಗಳನ್ನೇ ಗುರಿಯಾಗಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಇಂತಹ ದುಷ್ಕೃತ್ಯಗಳ ಹಿಂದೆ ಮತೀಯ ಮೂಲಭೂತವಾದಿ ಸಂಘಟನೆಗಳ ದೊಡ್ಡ ಜಾಲವೇ ಇರುವಂತಿದೆ.
|
7 |
+
ಅಂತಾರಾಜ್ಯ, ಅಂತರಾಷ್ಟ್ರೀಯ ನಂಟು ಹೊಂದಿರುವ ಇಂತಹ ವ್ಯವಸ್ಥಿತ, ಪ್ರಾಯೋಜಿತ, ಜಾಲವನ್ನು ಬೇಧಿಸುವುದು ಸ್ಥಳೀಯ ಪೊಲೀಸರಿಂದ ಅಸಾಧ್ಯವಾಗಿದ್ದು, ಕೂಡಲೇ ಈ ಪ್ರಕರಣಗಳನ್ನ ಎನ್ಐಗೆ ವಹಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
|
eesanje/url_46_17_9.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ನಂಬರ್ ಪ್ಲೇಟ್ ಅಳವಡಿಕೆ ಗಡುವು ಮುಕ್ತಾಯ, ಸೆ.18ರವರೆಗೂ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ
|
2 |
+
|
3 |
+
ಬೆಂಗಳೂರು,ಸೆ.16– ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಎಚ್ಎಸ್ಆರ್ಪಿ) ಅಳವಡಿಸುವ ಅಂತಿಮ ಗಡುವು ನಿನ್ನೆಗೆ ಮುಕ್ತಾಯವಾಗಿದ್ದು, ಈ ನಡುವೆ ಸೆ.18ರವರೆಗೂ ಯಾವುದೇ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸಾರಿಗೆ ಇಲಾಖೆ ಸೂಚನೆ ನೀಡಿದೆ.ಸಾರಿಗೆ ಇಲಾಖೆ ಸೂಚನೆ ಹಿನ್ನೆಲೆಯಲ್ಲಿ ಇಂದು ಕೂಡ ನೋಂದಣಿಗೆ ಅವಕಾಶವಿದ್ದು, ನೋಂದಣಿ ಮಾಡಿಸಿಕೊಳ್ಳದವರಿಗೆ ನೋಂದಣಿ ಮಾಡಿಸಿಕೊಳ್ಳುವ ಅವಕಾಶ ಸಿಕ್ಕಂತಾಗಿದೆ.
|
4 |
+
ಸೆಪ್ಟೆಂಬರ್ 18ರಂದು ಎಚ್ಎಸ್ಆರ್ಪಿ ಅಳವಡಿಕೆ ಸಂಬಂಧಿಸಿದ ಅರ್ಜಿ ವಿಚಾರಣೆಗೆ ಹೈಕೋರ್ಟ್ ನಲ್ಲಿ ಬರಲಿದೆ. ಹೀಗಾಗಿ, ಅಲ್ಲಿಯವರೆಗೆ ವಾಹನ ಮಾಲೀಕರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುವುದು ಬೇಡ ಎಂದು ಸಾರಿಗೆ ಇಲಾಖೆ ಆಯುಕ್ತ ಎ.ಎಂ.ಯೋಗೀಶ್ ಹೇಳಿದ್ದಾರೆ.
|
5 |
+
ಸೋಮವಾರದಿಂದ ದಂಡ ವಿಧಿಸುವುದಾಗಿ ಕರ್ನಾಟಕ ಸಾರಿಗೆ ಇಲಾಖೆ ಘೋಷಣೆ ಮಾಡಿತ್ತು. ಕರ್ನಾಟಕ ಪೊಲೀಸ್ ಇಲಾಖೆ ಸಂಚಾರ ವಿಭಾಗ, ಸಾರಿಗೆ ಇಲಾಖೆಯವರೂ ಹಳೆ ನಂಬರ್ ಪ್ಲೇಟ್ ಇದ್ದ ವಾಹನದವರಿಗೆ ದಂಡವನ್ನು ವಿಧಿಸಲು ಆರಂಭಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಮೂರು ದಿನದವರೆಗೆ ಕ್ರಮ ಕೈಗೊಳ್ಳದಂತೆ ಸಾರಿಗೆ ಇಲಾಖೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರಿಯಾಯ್ತಿ ಸಿಕ್ಕಿದೆ.
|
6 |
+
ಸುಮಾರು 1.5 ಕೋಟಿ ವಾಹನಗಳು ಇನ್ನೂ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ನ್ನು ಅಳವಡಿಸಿಕೊಂಡಿಲ್ಲ. ಗಡುವು ವಿಸ್ತರಣೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಒಪ್ಪಿಗೆ ಬೇಕು ಎಂದು ಸಾರಿಗೆ ಇಲಾಖೆ ಮೂಲಗಳು ಮಾಹಿತಿ ನೀಡಿವೆ.
|
7 |
+
ಹಲವು ವಾಹನ ಮಾಲೀಕರು ಹೊಸ ನಂಬರ್ ಪ್ಲೇಟ್ಗಳಿಗಾಗಿ ಅರ್ಜಿ ಸಲ್ಲಿಸುತ್ತಾರೆ. ಆದರೆ, ವಾಹನ ಮಾರಾಟಗಾರರ ಬಳಿಗೆ ಹೋಗಿ ತಮ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಗಳನ್ನು ಲಗತ್ತಿಸುತ್ತಿಲ್ಲ. ಹೀಗಾಗಿ ವಾಹನ ಡೀಲರ್ಗಳ ಬಳಿ ನೂರಾರು ನಂಬರ್ ಪ್ಲೇಟ್ಗಳು ಬಿದ್ದಿವೆ. ಅವುಗಳನ್ನು ವಾಹನಗಳಿಗೆ ಅಳವಡಿಸಿದ ನಂತರವೇ, ಎಚ್ಎಸ್ಆರ್ಪಿ ಪ್ರಕ್ರಿಯೆಯು ಕೊನೆಗೊಳ್ಳುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
|
8 |
+
2019ರ ಏಪ್ರಿಲ್ 1ರ ಮೊದಲು ನೋಂದಾಯಿಸಲ್ಪಟ್ಟ ವಾಹನಗಳಿಗೆ ಎಚ್ಎಸ್ಆರ್ಪಿ ಕಡ್ಡಾಯಗೊಳಿಸುವ ಅಧಿಸೂಚನೆಯನ್ನು 2023ರ ಆಗಸ್ಟ್ನಲ್ಲಿ ಹೊರಡಿಸಿತ್ತು. ಆರಂಭದಲ್ಲಿ 2023ರ ನವೆಂಬರ್ 17ರ ಗಡುವನ್ನು ನಿಗದಿಪಡಿಸಲಾಗಿತ್ತು. ನಿಧಾನಗತಿಯ ಅಳವಡಿಕೆಯ ಕಾರಣ ಗಡುವನ್ನು ಮೂರು ಬಾರಿ ವಿಸ್ತರಿಸಲಾಗಿತ್ತು.
|
9 |
+
ಸಾರಿಗೆ ಇಲಾಖೆ ಅಂಕಿಅಂಶದ ಪ್ರಕಾರ ರಾಜ್ಯದಲ್ಲಿರುವ ಹಳೆಯ ಎರಡು ಕೋಟಿ ವಾಹನಗಳ ಪೈಕಿ ಶೇ.26ರಷ್ಟು ವಾಹನಗಳಿಗೆ ಮಾತ್ರ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ವಾಹನ ಮಾಲೀಕರ ನೀರಸ ಪ್ರತಿಕ್ರಿಯೆಯಿಂದಾಗಿ ಎಚ್ಎಸ್ಆರ್ಪಿ ಅಳವಡಿಕೆ ಗಡುವನ್ನು ಈ ಹಿಂದೆ ಮೂರು ಬಾರಿ ವಿಸ್ತರಣೆ ಮಾಡಲಾಗಿದೆ.
|
eesanje/url_46_180_1.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ನಿವಾಸಕ್ಕೆ ಮಹಿಳಾ ಕಾರ್ಯಕರ್ತರ ಮುತ್ತಿಗೆ
|
2 |
+
ಬೆಳಗಾವಿ,ಏ.14-ಬೆಳಗಾವಿ ಲೋಕಸಭಾ ಚುನಾವಣಾ ಕಣದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಬಿಜೆಪಿಯ ಮಾಜಿ ಶಾಸಕ ಸಂಜಯ್ ಪಾಟೀಲ್ ಅವರ ನಿವಾಸಕ್ಕೆ ಮಹಿಳಾ ಕಾರ್ಯಕರ್ತರು ತಡರಾತ್ರಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
|
3 |
+
ಬೆಳಗಾವಿಯ ಹಿಂಡಲಗದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಪಕ್ಷದ ನಾಯಕರ ಸಮ್ಮುಖದಲ್ಲಿ ಮಾತನಾಡಿದ ಸಂಜಯ್ ಪಾಟೀಲ್, ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದರು.
|
4 |
+
ಇದರಿಂದ ಮಹಿಳಾ ಸಮುದಾಯಕ್ಕೆ ಅಪಮಾನವಾಗಿದೆ. ಸಂಜಯ್ ಪಾಟೀಲ್ ಈ ಮೊದಲು ಮೂರ್ನಾಲ್ಕು ಬಾರಿ ಇದೇ ರೀತಿಯ ಅವಹೇಳನಕಾರಿ ಹೇಳಿಕೆಗಳನ್ನು ನೀಡಿ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ ಎಂದು ಮಹಿಳಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
|
5 |
+
ತಡರಾತ್ರಿಯವರೆಗೂ ಸಂಜಯ್ ಪಾಟೀಲ್ ಮನೆ ಮುಂದೆ ಪ್ರತಿಭಟನೆ ನಡೆಸಿದ ಮಹಿಳಾ ಕಾರ್ಯಕರ್ತರು, ಸಂಯಜ್ ಪಾಟೀಲ್ ಮನೆಯಿಂದ ಹೊರಗೆ ಬಂದು ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಬೇಕು. ಸಚಿವರ ವಿರುದ್ಧ ನಿಂದನೆ ಮಾಡಿದ್ದಕ್ಕೆ ಕ್ಷಮೆ ಸಂಜಯ್ ಪಾಟೀಲ್ ಕ್ಷಮೆ ಕೇಳಬೇಕು. ಪೊಲೀಸರು ಮಾಜಿ ಶಾಸಕನ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.
|
6 |
+
ಈ ಸಂದರ್ಭದಲ್ಲಿ ಸೀರೆ, ಬಳೆ, ಹೂವುಗಳನ್ನು ಸಂಜಯ್ ಪಾಟೀಲ್ ಭಾವಚಿತ್ರಕ್ಕೆ ತೊಡಿಸಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು. ಮಹಿಳೆಯರ ಪ್ರತಿಭಟನೆಯನ್ನು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಸಂಜಯ್ಪಾಟೀಲ್ರವರ ಆಪ್ತನಿಗೆ ಪ್ರತಿಭಟನಾ ನಿರತ ಮಹಿಳೆಯರು ಕಪಾಳ ಮೋಕ್ಷ ಮಾಡಿದ್ದಾರೆ. ಬೆಳಗಾವಿಯ ಡಿಸಿಪಿ ರೋಹನ್ ಜಗದೀಶ್ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾ ನಿರತರ ಮನವೊಲಿಕೆ ಮಾಡಿದರು.
|
7 |
+
ಏನಿದು ಘಟನೆ:ಶನಿವಾರ ಹಿಂಡಲಗಾದಲ್ಲಿ ನಡೆದ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಸಂಜಯ ಪಾಟೀಲ್, ‘ಅಕ್ಕನ ಕ್ಷೇತ್ರದಲ್ಲಿಯೇ ಬಿಜೆಪಿ ಸಮಾವೇಶದಲ್ಲಿ ಅಪಾರ ಸಂಖ್ಯೆಯ ಮಹಿಳೆಯರು ಸೇರಿದ್ದಾರೆ. ಅಕ್ಕ ನಿದ್ದೆಗೆಡುವುದು ಗ್ಯಾರಂಟಿ’ . ಅವರಿಂದು ನಿದ್ದೆ ಮಾತ್ರೆ ತೆಗೆದುಕೊಳ್ಳಬೇಕು ಇಲ್ಲವೇ ಒಂದು ಎಕ್ಸ್ಟ್ರಾ ಪೆಗ್ ಹೆಚ್ಚುವರಿ ಕುಡಿಯಬೇಕು’ ಎಂದು ಹೇಳಿದ್ದರು.
|
eesanje/url_46_180_10.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ : ಇಂದಿನಿಂದ ಏ.18ರವರೆಗೆ ಅಂಚೆ ಮತದಾನ
|
2 |
+
ಬೆಂಗಳೂರು,ಏ.13-ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದಿನಿಂದ ಏ.18 ರವರೆಗೆ ಅಂಚೆ ಮತದಾನ ನಡೆಯಲಿದೆ.85 ವರ್ಷಕ್ಕಿಂತ ಮೇಲ್ಪಟ್ಟ ಮತದಾರರು ಶೇ.40 ಕ್ಕಿಂತ ಹೆಚ್ಚಿನ ದಿವ್ಯಾಂಗ ಮತದಾರರು (ಇಡಬ್ಲ್ಯೂಡಿ, ಎವಿಪಿಡಿ) ಮಾತ್ರ ಮನೆಯಿಂದ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.
|
3 |
+
ಮನೆಯಿಂದ ಮತದಾನ ಮಾಡುವ ಸೌಲಭ್ಯವನ್ನು ಆಯ್ಕೆ ಮಾಡಿಕೊಂಡಿರುವ 85 ವರ್ಷ ಮೇಲ್ಪಟ್ಟ ಹಿರಿಯ ಮತದಾರರು ಹಾಗೂ ವಿಕಲಚೇತನರಿಗೆ ಮತದಾನ ಮಾಡಲು ದಿನಾಂಕವನ್ನು ನಿಗದಿಪಡಿಸಲಾಗಿದೆ. ಮನೆಯಿಂದ ಮತದಾನ ಪ್ರಕ್ರಿಯೆಗಳನ್ನು ವೀಕ್ಷಿಸಲು ಸ್ರ್ಪಧಿಸುವ ಅಭ್ಯರ್ಥಿಗಳ ಪರವಾಗಿ ಅಧಿಕೃತ ಪ್ರತಿನಿಧಿಯನ್ನು ನೇಮಿಸಿಕೊಳ್ಳಲು ಎಲ್ಲಾ ರಾಜಕೀಯ ಪಕ್ಷಗಳಿಗೆ ತಿಳಿಸಿರುವುದಾಗಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
|
4 |
+
ನಮೂನೆ- 12 ಡಿ ಆಯ್ಕೆ ಮಾಡಿದ ಮತದಾರರ ವಿವರ ಕೆಳಕಂಡಂತಿದೆ :ಉಡುಪಿ – ಚಿಕ್ಕಮಗಳೂರು ; 4,665 ಹಿರಿಯ ಮತದಾರರು, 1503 ದಿವ್ಯಾಂಗ ಮತದಾರರುಹಾಸನ ; 2636 ಹಿರಿಯ ಮತದಾರರು, 1377 ಪಿಡಬ್ಲ್ಯೂಡಿದಕ್ಷಿಣ ಕನ್ನಡ ; 6053 ಹಿರಿಯ ಮತದಾರರು, 1975 ಪಿಡಬ್ಲ್ಯೂಡಿಚಿತ್ರದುರ್ಗ ; 2723 ಹಿರಿಯ ಮತದಾರರು, 2059 ಪಿಡಬ್ಲ್ಯೂಡಿತುಮಕೂರು ; 3069 ಹಿರಿಯ ಮತದಾರರು, 889 ಪಿಡಬ್ಲ್ಯೂಡಿಮಂಡ್ಯ ; 2570 ಹಿರಿಯ ಮತದಾರರು, 1075 ಪಿಡಬ್ಲ್ಯೂಡಿಮೈಸೂರು ; 2475 ಹಿರಿಯ ಮತದಾರರು, 918 ಪಿಡಬ್ಲ್ಯೂಡಿಚಾಮರಾಜನಗರ ; 982 ಹಿರಿಯ ಮತದಾರರು, 445 ಪಿಡಬ್ಲ್ಯೂಡಿಬೆಂಗಳೂರು ಗ್ರಾಮಾಂತರ ; 2240 ಹಿರಿಯ ಮತದಾರರು, 768 ಪಿಡಬ್ಲ್ಯೂಡಿಬೆಂಗಳೂರು ಉತ್ತರ ; 1975 ಹಿರಿಯ ಮತದಾರರು, 87 ಪಿಡಬ್ಲ್ಯೂಡಿಬೆಂಗಳೂರು ಕೇಂದ್ರ ; 1752 ಹಿರಿಯ ಮತದಾರರು, 60 ಪಿಡಬ್ಲ್ಯೂಡಿಬೆಂಗಳೂರು ದಕ್ಷಿಣ ; 2469 ಹಿರಿಯ ಮತದಾರರು, 54 ಪಿಡಬ್ಲ್ಯೂಡಿಚಿಕ್ಕಬಳ್ಳಾಪುರ ; 1639 ಹಿರಿಯ ಮತದಾರರು, 941 ಪಿಡಬ್ಲ್ಯೂಡಿಕೋಲಾರ ; 1433 ಹಿರಿಯ ಮತದಾರರು, 806 ಪಿಡಬ್ಲ್ಯೂಡಿ ಮತದಾರರಿದ್ದಾರೆ.14 ಲೋಕಸಭಾ ಕ್ಷೇತ್ರಗಳಲ್ಲಿ 36,691 ಮಂದಿಯಲ್ಲಿ 85 ಮೇಲ್ಪಟ್ಟ ಹಿರಿಯ ಮತದಾರರು ಹಾಗೂ 12,957 ಪಿಡಬ್ಲ್ಯೂಡಿ ಮತದಾರರು, 12 ಡಿ ಮನೆಯಲ್ಲೇ ಮತದಾನ ಮಾಡಲು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
|
eesanje/url_46_180_11.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಹೆಜ್ಜಾಲ ಚೆಕ್ಪೋಸ್ಟ್ನಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ ವಶ
|
2 |
+
ಬೆಂಗಳೂರು, ಏ.12-ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್ಪೋಸ್ಟ್ ಗಳಲ್ಲಿ ಹದ್ದಿನ ಕಣ್ಣಿಟ್ಟಿರುವ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಸೂಕ್ತ ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಬರೋಬ್ಬರಿ10 ಕೆಜಿ ಚಿನ್ನ, 5 ಕೆಜಿ ಬೆಳ್ಳಿಯನ್ನು ವಶಪಡಿಸಿಕೊಂಡಿದ್ದಾರೆ.
|
3 |
+
ಬೆಂಗಳೂರು- ಮೈಸೂರು ರಸ್ತೆಯ ಹೆಜ್ಜಾಲ ಬಳಿ ನಿರ್ಮಿಸಲಾಗಿರುವ ಚೆಕ್ಪೋಸ್ಟ್ ಬಳಿ ಇಂದು ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾಗ ವಾಹನದಲ್ಲಿ ಚಿನ್ನವನ್ನು ಸಾಗಿಸುತ್ತಿರುವುದು ಕಂಡು ಬಂದಿದ್ದು ಜಪ್ತಿ ಮಾಡಿದ್ದಾರೆ.
|
4 |
+
ಜಪ್ತಿ ಮಾಡಿಕೊಂಡಿರುವ ಚಿನ್ನಕ್ಕೆ ಸದ್ಯಕ್ಕೆ ಯಾವುದೇ ಸೂಕ್ತ ದಾಖಲೆ ಇಲ್ಲದಿರುವುದು ಪರಿಶೀಲನೆ ವೇಳೆ ಕಂಡುಬಂದಿದೆ ಎಂದು ಪೊಲೀಸರು `ಈಸಂಜೆ’ಗೆ ತಿಳಿಸಿದ್ದಾರೆ.
|
eesanje/url_46_180_12.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಈಶ್ವರಪ್ಪನವರಿಗೆ ಇನ್ನೂ ಸಮಯವಿದೆ, ಕಾದು ನೋಡೋಣ : ವಿಜಯೇಂದ್ರ
|
2 |
+
ಬಳ್ಳಾರಿ,ಏ.12-ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶ ಇದೆ. ಈಗಲೇ ಅಂತಿಮ ತೀರ್ಮಾನ ಮಾಡಬೇಡಿ, ಸಮಯ ಇದೆ, ನೋಡೋಣ. ಬಳ್ಳಾರಿಯ ಬಗ್ಗೆ ಮಾತನಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಶ್ರೀರಾಮುಲು ಅವರ ನಾಮ ಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಬಳ್ಳಾರಿಗೆ ಆಗಮಿಸಿರುವ ಬಿ.ವೈ. ವಿಜಯೇಂದ್ರ ಅವರು ಸುದ್ದಿಗಾರೊರಂದಿಗೆ ಮಾತನಾಡುತ್ತಾ, ಕೆ.ಎಸ್.ಈಶ್ವರಪ್ಪನವರು ನಾಮಪತ್ರ ಹಿಂಪಡೆಯಲು ಇನ್ನು ಅವಕಾಶವಿದೆ. ಈಗಲೇ ಅಂತಿಮ ನಿರ್ಧಾರ ಕೈಗೊಳ್ಳಬೇಡಿ ಎಂದು ಮನವಿ ಮಾಡಿದರು.
|
3 |
+
ಶ್ರೀರಾಮುಲು ದಾಖಲೆಯ ಅಂತರದ ಗೆಲುವು ಸಾಧಿಸಲಿದ್ದಾರೆ. ರಾಜ್ಯದ 30 ಸಚಿವರನ್ನು ಕರೆತಂದರೂ ಬಳ್ಳಾರಿಯಲ್ಲಿ ಬಿಜೆಪಿ ಗೆಲುವು ಶತಸಿದ್ಧ. ಬಳ್ಳಾರಿಗೆ ಯಡಿಯೂರಪ್ಪ ಸೇರಿದಂತೆ ಇತರ ನಾಯಕರು ಪ್ರಚಾರಕ್ಕೆ ಆಗಮಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪ್ರಮುಖ ಲಿಂಗಾಯತ ಮುಖಂಡರ ಸಭೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನೀಗ ಯಾವುದೇ ಲಿಂಗಾಯತ ಮುಖಂಡರ ಸಭೆ ಮಾಡಿಲ್ಲ. ಕೆಲಕಾಲ ಮಾತನಾಡಿದ್ದೇನಷ್ಟೇ.
|
4 |
+
ಮುಂದಿನ ದಿನಗಳಲ್ಲಿ ಇಂಟಲೆಕ್ಚುವಲ್ಸ್ ಸಭೆ ಕರೆಯಲಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆ ಆಗಲು ಕಾರಣಗಳು ಬಹಳಷ್ಟಿವೆ. ಅದರ ಬಗ್ಗೆ ಈ ಚರ್ಚೆ ಮಾಡಲು ಹೋಗುವುದಿಲ್ಲ. ಎಲ್ಲವನ್ನೂ ಮರೆತು, ನರೇಂದ್ರ ಮೋದಿಯವರು ಮತ್ತೆ ಪ್ರಧಾನಿ ಆಗುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷದವರು ಒಂದಾಗಿ ಕೆಲಸ ಮಾಡಬೇಕಿದೆ ಎಂದು ಕರೆ ನೀಡಿದರು.
|
5 |
+
ಈ ಚುನಾವಣೆಯು ವಿಜಯೇಂದ್ರ ವರ್ಸಸ್ ಸಿದ್ದರಾಮಯ್ಯ ಅಂತಾನಾ ಎಂಬ ಮಾಧ್ಯಮದವರ ಪ್ರಶ್ನೆ ಪ್ರತಿಕ್ರಿಯಿಸಿದ ಅವರು, ಹಾಗೇನಿಲ್ಲ, ಹೊಸ ಚರ್ಚೆಗೆ ಅವಕಾಶ ಮಾಡಿಕೊಡುವುದು ಬೇಡ. ಎಲ್ಲ 28 ಕ್ಷೇತ್ರಗಳಲ್ಲಿಯೂ ಬಿಜೆಪಿ – ಜೆಡಿಎಸ್ ಮೈತ್ರಿ ಪಕ್ಷಗಳು ಗೆಲ್ಲಬೇಕು ಎಂಬುದೇ ನಮ್ಮ ಗುರಿಯಾಗಿದೆ. ಆ ಒಂದು ಆತ್ಮವಿಶ್ವಾಸದೊಂದಿಗೆ ನಾವೀಗ ಮುನ್ನುಗ್ಗುತ್ತಿದ್ದೇವೆ ಎಂದರು.
|
6 |
+
ವಿವಿ ಸಂಘದ ಸಭೆ: ಗಾಂಧಿನಗರದಲ್ಲಿನ ಬಳ್ಳಾರಿಯ ವಿವಿ ಸಂಘಕ್ಕೆ ಆಗಮಿಸಿದ ಬಿ.ವೈ. ವಿಜಯೇಂದ್ರ ಸಂಘದ ಸದ್ಯಸ್ಯರ ಜೊತೆ ಕೆಲಕಾಲ ಚರ್ಚೆ ನಡೆಸಿದ್ದಾರೆ. ಕಳೆದ ಚುನಾವಣೆಯಲ್ಲಿ ಬಿಜೆಪಿಯು ಬಳ್ಳಾರಿ ಜಿಲ್ಲೆಯಲ್ಲಿ 5 ಸ್ಥಾನಗಳನ್ನು ಕಳೆದುಕೊಂಡಿತ್ತು. ಲಿಂಗಾಯತ ಮತಗಳನ್ನು ಕಳೆದುಕೊಂಡ ಕಾರಣ ಬಿಜೆಪಿ ಸೋಲು ಕಂಡಿತ್ತು. ಹೀಗಾಗಿ ಬಳ್ಳಾರಿ – ವಿಜಯನಗರ ಜಿಲ್ಲೆಗಳ ಪ್ರಮುಖ ಲಿಂಗಾಯತ ಮುಖಂಡರ ಸಭೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
|
eesanje/url_46_180_2.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಇಂದು ನಡೆಯಿತು 2ನೇ ಹಂತದ ರ್ಯಾಂಡಮೈಸೇಷನ್
|
2 |
+
ಬೆಂಗಳೂರು,ಏ.13-ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ ಸಿಬ್ಬಂದಿಯ ಎರಡನೇ ಹಂತದ ರ್ಯಾಂಡಮೈಸೇಷನ್ ಅನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ಸಾಮಾನ್ಯ ವೀಕ್ಷಕರುಗಳ ಸಮ್ಮುಖದಲ್ಲಿ ಇಂದು ಮಲ್ಲೇಶ್ವರಂ ಐಪಿಪಿ ಕೇಂದ್ರದಲ್ಲಿ ನಡೆಸಿದರು.
|
3 |
+
ಜಿಲ್ಲಾ ಚುನಾವಣಾಧಿಕಾರಿಗಳ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಸೇರಿದಂತೆ ಮೂರು ಲೋಕಸಭಾ ಕ್ಷೇತ್ರಗಳು ಬರಲಿವೆ. ಈ ಸಂಬಂಧ ಮೂರು ಲೋಕಸಭಾ ಕ್ಷೇತ್ರಗಳಲ್ಲಿ 24 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ 1 ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ 3 ಲೋಕಸಭಾ ಕ್ಷೇತ್ರಗಳು ಬರಲಿವೆ. ಅದರಂತೆ, 28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟಾರೆ 43123 ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ.
|
4 |
+
ಲೋಕಸಭಾ ಚುನಾವಣೆಗೆ ನಿಯೋಜನೆ ಮಾಡಿಕೊಂಡಿರುವ ಮತಗಟ್ಟೆ ಅಧಿಕಾರಿಗಳಿಗೆ ಏ.17 ರಂದು ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿಗದಿಪಡಿಸಿರುವ ಸ್ಥಳಗಳಲ್ಲಿ ಬೆಳಗ್ಗೆ 9.30ರಿಂದ ಎರಡನೇ ಹಂತದ ತರಬೇತಿ ನೀಡಲು ನಿರ್ಧರಿಸಲಾಗಿದೆ. ಏ.24 ರಂದು ಅಂತಿಮ ಹಂತದ ರ್ಯಾಂಡಮೈಸೇಷನ್ ಅನ್ನು ನಡೆಸಲಾಗುತ್ತದೆ.
|
5 |
+
ಅದಲ್ಲದೆ, ಮತದಾನದ ದಿನ ಕಾರ್ಯನಿರ್ವಹಿಸಲು ಮೈಕ್ರೋ ಅಬ್ಸವರ್ಸ್ ನೇಮಿಸುವ ಹಾಗೂ ಅವರಿಗೆ ತರಬೇತಿ ನೀಡುವ ಕುರಿತು ಸಾಮಾನ್ಯ ವೀಕ್ಷಕರೊಂದಿಗೆ ಇದೇ ವೇಳೆ ಚರ್ಚಿಸಲಾಯಿತು.
|
6 |
+
ಈ ವೇಳೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಮಕ್ರಂದ್ ಪಾಂಡುರಂಗ್ , ಬೆಂಗಳೂರು ಉತ್ತದ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಗಾಯತ್ರಿ ರಾಥೋರ್, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ವಾಣಿ ಮೋಹನ್ ಹಾಗೂ ಎಂಸಿಸಿ ನೊಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ , ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಚುನಾವಣಾಕಾರಿಗಳಾದ ಡಾ. ಹರೀಶ್ ಕುಮಾರ್, ಕೆ.ಎ ದಯಾನಂದ್, ವಿನೋತ್ ಪ್ರಿಯಾ, ಸಹಾಯಕ ಆಯುಕ್ತ ರವಿ ಚಂದ್ರ ನಾಯ್ಕ್ , ಜಿಲ್ಲಾ ಮಟ್ಟದ ಮಾನವ ಸಂಪನ್ಮೂಲ ನೋಡಲ್ ಅಧಿಕಾರಿ ಡಿ.ಆರ್ ಅಶೋಕ್ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
|
eesanje/url_46_180_3.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಜಯನಗರದಲ್ಲಿ ಎರಡು ಕಾರುಗಳಲ್ಲಿ ಸಾಗಿಸುತ್ತಿದ್ದ ಕೋಟಿ ಕೋಟಿ ಹಣ ಪತ್ತೆ
|
2 |
+
ಬೆಂಗಳೂರು,ಏ.13-ಪ್ರಸಕ್ತ ಲೋಕಸಭೆ ಚುನಾವಣೆ ಮಾದರಿ ನೀತಿಸಂಹಿತೆ ಕಟ್ಟುನಿಟ್ಟಿನ ಜಾರಿ ಹಿನ್ನಲೆಯಲ್ಲಿ ಜಯನಗರ 4ನೇ ಬ್ಲಾಕ್ನಲ್ಲಿ ಕೋಟ್ಯಂತರ ರೂ. ಹಣ ಪತ್ತೆಯಾಗಿದೆ.ಜಯನಗರ 4ನೇ ಬ್ಲಾಕ್ನ ಗಣಪತಿ ದೇವಾಲಯದ ಬಳಿ 2 ಕಾರು ಹಾಗೂ 1 ಬೈಕ್ನ್ನು ತಡೆದು ಪರಿಶೀಲನೆ ನಡೆಸಿದ ಎಂಸಿಸಿ ತಂಡ ಕಾರುಗಳಲ್ಲಿ ಹಣ ಇರುವುದನ್ನು ಪತ್ತೆಹಚ್ಚಿದೆ.
|
3 |
+
ಎರಡು ಕಾರಿಗಳಲ್ಲಿ ಹಣ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯನ್ನು ಪಡೆದ ಎಂಸಿಸಿ ತಂಡ ಗಣಪತಿ ದೇವಾಲಯದ ಬಳಿ ತಡೆದು ತಪಾಸಣೆಗೊಳಪಡಿಸಿದಾಗ, ಒಂದು ಕಾರಿನೊಳಗಿದ್ದ ಬ್ಯಾಗ್ಗಳಲ್ಲಿ ಹಣ ಇರುವುದು ಪತ್ತೆಯಾಗಿದೆ. ಮತ್ತೊಂದು ಕಾರಿನ ಬಾಗಿಲನ್ನು ತೆಗೆಯಲು ಆಗಿಲ್ಲ. ಎರಡೂ ಕಾರುಗಳಲ್ಲಿ ಕೋಟ್ಯಂತರ ರೂ. ಸಾಗಾಣಿಕೆ ಮಾಡಲಾಗುತ್ತಿತ್ತು ಎನ್ನಲಾಗಿದೆ.
|
4 |
+
ಈ ಕಾರುಗಳು ಮತ್ತು ಬೈಕ್ ಯಾರಿಗೆ ಸೇರಿದ್ದು ಎಂಬುದರ ಮಾಹಿತಿ ಈತನಕ ತಿಳಿದುಬಂದಿಲ್ಲ. ಕಾರಿನಲ್ಲಿದ್ದ ಹಣವನ್ನು ಯಾರು ಎಲ್ಲಿಗೆ ಕೊಂಡೊಯ್ಯುತ್ತಿದ್ದರು? ಯಾರಿಗೆ ಸೇರಿದ್ದು ಎಂಬ ಮಾಹಿತಿ ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದ ಬಳಿಕ ಸ್ಪಷ್ಟವಾಗಲಿದೆ. ಕಾರುಗಳಲ್ಲಿನ ಬ್ಯಾಗ್ಗಳಲ್ಲಿ ಹಣ ಇರುವುದರ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಮಾಹಿತಿಯನ್ನು ಎಂಸಿಸಿ ತಂಡ ನೀಡಿದೆ.
|
5 |
+
ಕಾರುಗಳನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ಕಾರಿನ ನೋಂದಾಯಿತ ಸಂಖ್ಯೆಯನ್ನು ಆಧರಿಸಿ ಮಾಲೀಕರಿಗೆ ನೋಟಿಸ್ ನೀಡಲಿದ್ದಾರೆ. ಬಳಿಕ ಹಣದ ಬಗ್ಗೆ ಮಾಹಿತಿ ಕಲೆ ಹಾಕಲಿರುವ ಚುನಾವಣಾ ಅಧಿಕಾರಿಗಳು ಸದ್ಯ ಸಿಕ್ಕಿರುವ ಹಣಕ್ಕೆ ದಾಖಲೆಯನ್ನು ಕೇಳಲಾಗಿದ್ದು, ಸರಿಯಾದ ದಾಖಲೆ ಇಲ್ಲದ ಕಾರಣ ಹಣವನ್ನು ವಶಕ್ಕೆ ಪಡೆಯಲಾಗಿದೆ.
|
6 |
+
ಒಟ್ಟು ಮೂರು ಕಾರಿನಲ್ಲಿ ಬಂದಿರುವ ಶಂಕೆಯಿದ್ದು, ಅದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಫ್ಯಾರ್ಚುನ್ ಕಾರಿನಲ್ಲಿದ್ದವರು ಕಾರು ಸಮೇತ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಐಷರಾಮಿ ಕಾರುಗಳಲ್ಲಿ ಕೋಟ್ಯಾಂತರ ರೂ. ಹಣ ಇತ್ತು ಎಂದು ಮಾಹಿತಿ ಲಭ್ಯವಾಗಿದ್ದು, ಹಣವನ್ನು ವಶಕ್ಕೆ ಪಡೆದು ಎಣಿಕೆ ಕಾರ್ಯದಲ್ಲಿ ಅಧಿಕಾರಿಗಳು ತೊಡಗಿದ್ದಾರೆ.
|
eesanje/url_46_180_4.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ರಾಮೇಶ್ವರ ಕೆಫೆ ಸ್ಪೋಟದ ಬಂಧಿತ ಉಗ್ರರು ಹತ್ತು ದಿನ ಎನ್ಐಎ ವಶಕ್ಕೆ
|
2 |
+
ಬೆಂಗಳೂರು,ಏ.13-ನಗರದ ಕುಂದಲಹಳ್ಳಿಯ ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಇಬ್ಬರು ಶಂಕಿತ ಉಗ್ರರನ್ನು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿನ ನ್ಯಾಯಾಲಯ ಹತ್ತು ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ(ಎನ್ಐಎ)ದ ವಶಕ್ಕೆ ನೀಡಿ ಆದೇಶ ನೀಡಿದೆ.
|
3 |
+
ಪಶ್ಚಿಮ ಬಂಗಾಳದ ಮಿಡ್ನಾಪುರದಲ್ಲಿ ನಿನ್ನೆ ಬಂಧನಕ್ಕೊಳಗಾಗಿದ್ದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ನಿವಾಸಿಗಳಾದ ಪ್ರಮುಖ ಆರೋಪಿ ಮುಸಾವಿರ್ ಹುಸೇನ್ ಶಬೀಬ್ ಹಾಗೂ ಮಾಸ್ಟರ್ ಮೈಂಡ್ ಎಂದೇ ಹೇಳಲಾಗುತ್ತಿರುವ ಅಬುಲ್ದ್ ಮತೀನ್ ತಹಾನನ್ನು ಎನ್ಐಎ ಅಧಿಕಾರಿಗಳು ಕೋರಮಂಗಲದಲ್ಲಿರುವ ನ್ಯಾಯಾೀಧಿಶರ ಮುಂದೆ ಹಾಜರುಪಡಿಸಿದರು.
|
4 |
+
ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಅಗತ್ಯ ಇರುವುದರಿಂದ 15 ದಿನಗಳ ಕಾಲ ವಶಕ್ಕೆ ನೀಡಬೇಕೆಂದು ಎನ್ಐಎ ಪರ ವಕೀಲರಾದ ಎಸ್ಪಿಪಿ ಪ್ರಸನ್ನಕುಮಾರ್ ವಾದ ಮಂಡಿಸಿದರು. ವಾದ ಆಲಿಸಿದ ನ್ಯಾಯಾೀಧಿಶರು ಬಂಧಿತ ಆರೋಪಿಗಳನ್ನು ಹತ್ತು ದಿನಗಳ ಕಾಲ ಎನ್ಐಎ ವಶಕ್ಕೆ ನೀಡಿ ಆದೇಶ ಹೊರಡಿಸಿದರು. ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮ ಸಮುಚ್ಚಯದಲ್ಲಿರುವ ನ್ಯಾಯಾಧೀಶರ ನಿವಾಸದಲ್ಲಿ ಆರೋಪಿಗಳನ್ನು ನ್ಯಾಯಾೀಧಿಶರ ಮುಂದೆ ಹಾಜರುಪಡಿಸುವ ವೇಳೆ ಹೆಚ್ಚಿನ ಬಿಗಿಭದ್ರತೆಯನ್ನು ಒದಗಿಸಲಾಗಿತ್ತು.
|
5 |
+
ಇದಕ್ಕೂ ಮುನ್ನ ನಿನ್ನೆ ಬಂಧಕ್ಕೊಳಗಾಗಿದ್ದ ಇಬ್ಬರು ಆರೋಪಿಗಳನ್ನು ಕೋಲ್ಕತ್ತಾದಿಂದ ವಿಮಾನದಲ್ಲಿ ಭಾರೀ ಭದ್ರತೆಯಲ್ಲಿ ನಗರಕ್ಕೆ ಮಧ್ಯರಾತ್ರಿ 2 ಗಂಟೆಗೆ ಕರೆತರಲಾಯಿತು. ಬಳಿಕ ಅವರನ್ನು ಮಡಿವಾಳದಲ್ಲಿರುವ ಎಫ್ಎಸ್ಎಲ್ನ ಬಳಿ ಇರುವ ಇಂಟ್ರಾಗೇಷನ್ ಸೆಂಟರ್ನಲ್ಲಿ ತೀವ್ರ ವಿಚಾರಣೆ ನಡೆಸಿ ಮಾಹಿತಿಯನ್ನು ಕಲೆ ಹಾಕಲಾಯಿತು.
|
6 |
+
ಮೂಲತಃ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುದ್ದೆ ಬಡಾವಣೆಯ ನಿವಾಸಿಗಳಾಗಿರುವ ಅಬ್ದುಲ್ ಮತೀನ್ ತಹಾ ಮತ್ತು ಮುಸಾವಿರ್ ಹುಸೇನ್ ಶಬೀಬ್ ಐಸಿಸ್ ಪರ ಒಲವು ಹೊಂದಿರುವ ಉಗ್ರರು ಎಂದು ತಿಳಿದುಬಂದಿದೆ. ಈ ಹಿಂದೆ ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಪೋಟ, ಶಿವಮೊಗ್ಗದ ತುಂಗಾ ನದಿ ಬಳಿ ಸಂಭವಿಸಿದ ಬಾಂಬ್ ಸ್ಪೋಟ ಹೀಗೆ ರಾಜ್ಯದ ನಾನಾ ಕಡೆ ನಡೆದಿರುವ ವಿಧ್ವಂಸಕ ಕೃತ್ಯಗಳಲ್ಲಿ ಇವರು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಶಾಮೀಲಾಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.
|
7 |
+
ಕಳೆದ ಮಾ.1ರಂದು ಬೆಂಗಳೂರಿನ ಎಚ್ಎಎಲ್ನ ಕುಂದಲಹಳ್ಳಿ ರಾಮೇಶ್ವರ ಕೆಫೆಯಲ್ಲಿ ಸಂಭವಿಸಿದ ಬಾಂಬ್ಸೋಟ ಪ್ರಕರಣದಲ್ಲಿ ಎನ್ಐಎನಿಂದ ಬಂಧಕ್ಕೆ ಒಳಗಾಗಿರುವ ಈ ಇಬ್ಬರ ಕೈವಾಡ ಇರುವ ಕುರಿತು ವಿವಿಧ ಆಯಾಮಗಳಲ್ಲಿ ಎನ್ಐಎ ಮಾಹಿತಿ ಕಲೆ ಹಾಕುತ್ತಿದೆ.
|
eesanje/url_46_180_5.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಹಿಂದೂಗಳ ಹೆಸರಿನಲ್ಲಿ ಸಂಚು ನಡೆಸಿದ್ದ ರಾಮೇಶ್ವರಂ ಕೆಫೆ ಸ್ಪೋಟದ ಉಗ್ರರು
|
2 |
+
ಬೆಂಗಳೂರು, ಏ.13-ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಮುಖ ಇಬ್ಬರು ಉಗ್ರರ ಬಗ್ಗೆ ಒಂದೊಂದೇ ರಹಸ್ಯಗಳು ಬಯಲಾಗುತ್ತಿವೆ.ಬಾಂಬರ್ ಮುಸಾವೀರ್ ಹುಸೇನ್ ಶಾಜಿಬ್ ಮತ್ತು ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹ ಬಳಿ ನಕಲಿ ಆಧಾರ್ ಕಾರ್ಡ್ಗಳು ಪತ್ತೆಯಾಗಿವೆ. ಈ ಇಬ್ಬರು ನಕಲಿ ಆಧಾರ್ ಮಾಡಿಸಿಕೊಂಡಿರುವುದಲ್ಲದೇ ಹಿಂದೂ ಹೆಸರಿಟ್ಟುಕೊಂಡು ಯಾರಿಗೂ ಅನುಮಾನ ಬಾರದಂತೆ ಸುತ್ತಾಡುತ್ತಿದ್ದರು.
|
3 |
+
ಎನ್ಐಎ ಅಧಿಕಾರಿಗಳು ಹಾಗೂ ಪಶ್ಚಿಮ ಬಂಗಾಳ ಪೊಲೀಸರು ಈ ಇಬ್ಬರನ್ನು ಕೋಲ್ಕತಾದಲ್ಲಿ ಬಂಧಿಸಿದಾಗ ಇಬ್ಬರು ಬಳಿಯೂ ನಕಲಿ ಆಧಾರ್ ಕಾರ್ಡ್ಗಳು ಪತ್ತೆಯಾಗಿರುವುದು ಹಲವು ಅನುಮಾನಕ್ಕೆಡೆ ಮಾಡಿಕೊಟ್ಟಿದೆ. ಕಲಬುರಗಿಯ ವರ್ದಾ ನಗರದ ನಿವಾಸಿಯಾಗಿರುವ ಸಾಫ್ಟ್ವೆರ್ ಎಂಜಿನಿಯರ್ ಅನಮೂಲ ಕುಲಕರ್ಣಿ ಅವರ ಆಧಾರ್ ಕಾರ್ಡ್ ಉಗ್ರರ ಬಳಿಯಿದ್ದು, ಇವರಿಗೆ ಆಧಾರ್ ಕಾರ್ಡ್ ಹೇಗೆ ಸಿಕ್ಕಿತು ಎಂಬ ಬಗ್ಗೆ ವಿವಿಧ ದೃಷ್ಟಿಕೋನಗಳಲ್ಲಿ ಎನ್ಐಎ ಅಧಿಕಾರಿಗಳು ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.
|
4 |
+
ಅನಮೂಲ ಕುಲಕರ್ಣಿ ಅವರು ಪ್ರಸ್ತುತ ನಗರದ ಖಾಸಗಿ ಕಂಪನಿವೊಂದರಲ್ಲಿ ಸಾಫ್ಟ್ವೇರ್ ಎಂಜಿನಿಯರ್. ಇವರ ಆಧಾರ್ ಕಾರ್ಡ್ ಉಗ್ರರ ಬಳಿ ಪತ್ತೆಯಾದ ಹಿನ್ನೆಲೆಯಲ್ಲಿ ಕುಲಕರ್ಣಿ ಅವರನ್ನು ಸಹ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.
|
5 |
+
ಮಾ.1 ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿದ ನಂತರ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಸಂಚರಿಸುತ್ತಾ ಪ್ರತಿದಿನ ಜಾಗ ಬದಲಿಸುತ್ತಿದ್ದ ಬಾಂಬರ್ ಮುಸಾವೀರ್ ಹುಸೇನ್ ಶಾಜಿದ್ ಬೆಂಬಲಕ್ಕೆ ಯಾರ್ಯಾರು ಇದ್ದಾರೆ ಎಂಬ ಬಗ್ಗೆ ಎನ್ಐಎ ಅಧಿಕಾರಿಗಳು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.
|
6 |
+
ಹೋಟೆಲ್- ಲಾಡ್ಜ್ಗಳಲ್ಲೇ ವಾಸ್ತವ್ಯ:ಕಳೆದ 12 ದಿನಗಳಿಂದ ಪಶ್ಚಿಮ ಬಂಗಾಳದ ಕೋಲ್ಕಾತಾ ದಲ್ಲಿ ಈ ಇಬ್ಬರು ಒಟ್ಟಾಗಿ ಓಡಾಡಿಕೊಂಡು ಯಾರಿಗೂ ಅನುಮಾನ ಬಾರದಂತೆ ಹಿಂದೂ ಹೆಸರಿಟ್ಟುಕೊಂಡು ತಾವು ತಂಗುತ್ತಿದ್ದ ಹೋಟೆಲ್ ಮತ್ತು ಲಾಡ್ಜ್ಗಳಲ್ಲಿ ಹಿಂದೂ ಹೆಸರನ್ನೇ ನಮೂದಿಸಿ, ತಾವು ಜಾರ್ಖಂಡ್ ಹಾಗೂ ತ್ರಿಪುರ ಮೂಲದವರೆಂದು ಪರಿಚಯಿಸಿಕೊಂಡಿದ್ದರು.
|
7 |
+
ಕೋಲ್ಕತಾದಲ್ಲಿ ದಿನ ಕಳೆದಂತೆ ವಾಸ್ತವ್ಯ ಬಸಲಿಸುತ್ತಾ ತಮ್ಮ ಹೆಸರನ್ನು ಸಂಜಯ್ ಅಗರ್ವಾಲ್, ಉದಯ್ ದಾಸ್, ಯಶು ಪಟೇಲ್, ವಿಜ್ಞೇಶ್ ಎಂಬಿತ್ಯಾದಿ ಹೆಸರುಗಳಿಂದ ಗುರುತಿಸಿಕೊಂಡು ಹೋಟೆಲ್ ಪ್ಯಾರಡೈಸ್, ಲೆನಿನ್ ಸೆರಾನಿ ಹೊಟೆಲ್ ಸೇರಿದಂತೆ ಹಲವು ಹೋಟೆಲ್ಗಳಲ್ಲಿ ತಂಗುತ್ತಾ ಸಾರ್ವಜನಿಕ ವಲಯದಲ್ಲಿ ಆಟೋದಲ್ಲೇ ಸುತ್ತಾಡುತ್ತಿದ್ದರು ಎಂಬುವುದು ತನಿಖೆಯಿಂದ ಗೊತ್ತಾಗಿದೆ.
|
eesanje/url_46_180_6.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ರಾಮೇಶ್ವರಂ ಕೆಫೆ ಸ್ಫೋಟಿಸಿದ ಉಗ್ರರ ಬಂಧನ : ಎನ್ಐಎ ಮತ್ತು ರಾಜ್ಯ ಪೊಲೀಸರ ಕಾರ್ಯವೈಖರಿಗೆ ಸಿಎಂ ಶ್ಲಾಘನೆ
|
2 |
+
ಮೈಸೂರು, ಏ.13-ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್ಐಎ ತಂಡ ಮತ್ತು ಕರ್ನಾಟಕ ಪೊಲೀಸ್ನ ಕಾರ್ಯವೈಖರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಿ ರಾಮೇಶ್ವರಂ ಕೆಫೆ ಬಾಂಬ್ ಪ್ರಕರಣದ ಆರೋಪಿಗಳನ್ನು ಕೋಲ್ಕತ್ತಾದಿಂದ ಬೆಂಗಳೂರಿಗೆ ಕರೆ ತಂದು ನಂತರ ವಿಚಾರಣೆ ಮಾಡಿ ಹೆಚ್ಚಿನ ವಿವರ ಪಡೆಯಲಾಗುವುದು ಎಂದು ಹೇಳಿದ್ದಾರೆ.
|
3 |
+
ಎನ್ಡಿಎಗೆ ಪೂರ್ಣ ಬಹುಮತ ದೊರಕುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಬಿಜೆಪಿ ವಿರುದ್ಧವಿರುವ ಇಂಡಿಯಾ ಮೈತ್ರಿಗೆ ಬಹುಮತ ದೊರೆಯಲಿದೆ. 400ಕ್ಕೂ ಹೆಚ್ಚು ಸ್ಥಾನ ಪಡೆಯುವುದಾಗಿ ಹೇಳಿಕೊಳ್ಳುತ್ತಿರುವ ಬಿಜೆಪಿಯದ್ದು ಜನರ ದಾರಿತಪ್ಪಿಸುವ ಕಾರ್ಯತಂತ್ರ ಎಂದರು.
|
4 |
+
ಮೋದಿಯವರು ನಾಳೆ ಮೈಸೂರಿಗೆ ಆಗಮಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೋದಿಯವರು ಬಂದು ಹೋಗಲು ನನ್ನದೇನೂ ತಕರಾರಿಲ್ಲ. ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ರಾಜ್ಯದ ಜನತೆಗೆ ಹೇಳಬೇಕು. ನಿರುದ್ಯೋಗ, ತೆರಿಗೆ ಹಂಚಿಕೆ, ಬರಗಾಲಕ್ಕೆ ಇಂದಿನವರೆಗೂ ಯಾಕೆ ಪರಿಹಾರ ನೀಡಿಲ್ಲ ಎಂಬುದಕ್ಕೆಲ್ಲಾ ಉತ್ತರ ಹೇಳಲಿ ಎಂದು ಗರಮ್ಮಾದರು.
|
5 |
+
ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಏಕಿಲ್ಲ:ಅಂಬೇಡ್ಕರ್ ಬಂದರೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ. ಬಿಜೆಪಿ ಸಂವಿಧಾನದ ಪರವಾಗಿದೆ ಎಂದಿರುವ ಮೋದಿಯವರ ಹೇಳಿಕೆಗೆ ಉತ್ತರಿಸಿದ ಅವರು, ಹಾಗಾದರೆ ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ. ಅವರನ್ನು ಪಕ್ಷದಿಂದ ಅಥವಾ ಮಂತ್ರಿ ಸ್ಥಾನದಿಂದ ಕೈಬಿಟ್ಟಿದ್ದಾರೆಯೇ ಎಂದು ಪ್ರಶ್ನಿಸಿದರು.
|
6 |
+
ಉತ್ತರ ಕರ್ನಾಟಕದಲ್ಲಿ ಐದು ವರ್ಷಗಳಿಂದ ಏನೂ ಕೆಲಸ ಮಾಡದೇ ಮನೆಯಲ್ಲಿ ಕುಳಿತಿದ್ದರು. ಕೊನೇ 3-4 ತಿಂಗಳು ಬಂದು ಸೋಲುವ ವರದಿಯಾಧಾರದ ಮೇಲೆ ಅನಂತಕುಮಾರ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದರು. ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿಲ್ಲ. ಸಂವಿಧಾನ ಜಾರಿಯಾದಾಗ ಸಾವರ್ಕರ್ ಹಾಗೂ ಗೋಲ್ವಾಲ್ಕರ್ ಅವರು ಭಾರತದ ಸಂವಿಧಾನವನ್ನು ವಿಧಿರೋಸಿದ್ದರು ಎಂದು ಹೇಳಿದರು.
|
eesanje/url_46_180_7.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಕಡುಬಡತನದ ಪ್ರತಿಭಾವಂತ ವಿದ್ಯಾರ್ಥಿನಿಗೆ ಪ್ರವೇಶಾತಿ ಕಲ್ಪಿಸಿದ ನಿರ್ಮಲಾನಂದನಾಥ ಶ್ರೀಗಳು
|
2 |
+
ಬೆಂಗಳೂರು,ಏ.13-ಕಡುಬಡತನಕ್ಕೆ ಸಿಲುಕಿ ಡೋಲಾಯಮಾನ ಸ್ಥಿತಿಯಲ್ಲಿದ್ದ ಪ್ರತಿಭಾವಂತ ವಿದ್ಯಾರ್ಥಿನಿಯೊಬ್ಬರಿಗೆ ಬಿಜಿಎಸ್ ಸಂಸ್ಥೆಯಲ್ಲಿ ಪ್ರವೇಶಾತಿ ಕಲ್ಪಿಸುವ ಮೂಲಕ ಆದಿಚುಂಚನಗಿರಿ ಪೀಠದ ಪೀಠಾಧ್ಯಕ್ಷರಾದ ಡಾ.ಶ್ರೀ.ನಿರ್ಮಲಾನಂದನಾಥ ಮಾನವೀಯತೆ ಮೆರೆದಿದ್ದಾರೆ. ನಗರದ ಅಶೋಕ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಮೇಘಶ್ರೀ.ಎಂ ವಿದ್ಯಾರ್ಥಿನಿಗೆ ಪ್ರವೇಶ ಶುಲ್ಕ ಕಟ್ಟಲು ಹಣವಿಲ್ಲದ ಕಾರಣ ಆಡಳಿತ ಮಂಡಳಿ ಪ್ರವೇಶಾತಿಯನ್ನು ನಿರಾಕರಿಸಿತ್ತು.
|
3 |
+
ಈ ವಿಷಯವು ಒಕ್ಕಲಿಗ ಯುವ ಬ್ರಿಗೇಡ್ನ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ ಅವರ ಗಮನಕ್ಕೆ ಬರುತ್ತಿದ್ದಂತೆ ತಕ್ಷಣವೇ ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿಸಿ ವಿದ್ಯಾರ್ಥಿನಿಯ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟರು. ಕಡುಬಡವರಾಗಿರುವ ಮೇಘಶ್ರೀಯವರ ತಾಯಿ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ತಮ್ಮ ಪುತ್ರಿಯನ್ನು ದ್ವಿತೀಯ ಪಿಯುಸಿಗೆ ಪ್ರವೇಶ ಶುಲ್ಕ ಕಟ್ಟಲು ಸಾಧ್ಯವಾಗದ ಸ್ಥಿತಿಯಲ್ಲಿದ್ದರು.
|
4 |
+
ತಂದೆ ಇಲ್ಲದೆ ಬಡತನದಲ್ಲೇ ಬೆಳೆದಿರುವ ಈ ವಿದ್ಯಾರ್ಥಿನಿಯು ಪ್ರಥಮ ಪಿಯುಸಿಯಲ್ಲಿ 600 ಅಂಕಗಳಿಗೆ 598 ಅಂಕಗಳನ್ನು ಗಳಿಸಿದ್ದಾಳೆ. ಕನ್ನಡ 99, ಇಂಗ್ಲೀಷ್ 100, ಭೌತಶಾಸ್ತ್ರ 100ಕ್ಕೆ ನೂರು, ರಸಾಯನಶಾಸ್ತ್ರ 100ಕ್ಕೆ 100, ಗಣಿತ 99, ಜೀವಶಾಸ್ತ್ರ 100ಕ್ಕೆ ನೂರು ಅಂಕ ಪಡೆದಿದ್ದಾಳೆ.
|
5 |
+
ಇತ್ತೀಚೆಗೆ ವಿದ್ಯಾರ್ಥಿನಿಯು ಆದಿಚುಂಚನಗಿರಿ ಪೀಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಶ್ರೀಗಳನ್ನು ಭೇಟಿ ಮಾಡಿ ದ್ವೀತಿಯ ಪಿಯುಸಿ ವ್ಯಾಸಂಕ್ಕಾಗಿ ಸಹಾಯ ಮಾಡುವಂತೆ ಕೋರಿಕೊಂಡಿದ್ದರು. ವಿದ್ಯಾರ್ಥಿನಿಯ ಪ್ರತಿಭೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ಶ್ರೀಗಳು ತಮ್ಮ ಬಿಜಿಎಸ್ ಸಂಸ್ಥೆಯಲ್ಲಿ ಮುಂದಿನ ವ್ಯಾಸಂಗಕ್ಕೆ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ.
|
eesanje/url_46_180_8.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
2ನೇ ಹಂತದ ಚುನಾವಣೆ : ರಾಜ್ಯದಲ್ಲಿ ಮೊದಲ ದಿನ 41 ಅಭ್ಯರ್ಥಿಗಳಿಂದ 57 ನಾಮಪತ್ರ ಸಲ್ಲಿಕೆ
|
2 |
+
ಬೆಂಗಳೂರು,ಏ.13-ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ನಿನ್ನೆಯಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದ್ದು, ಮೊದಲ ದಿನ 41 ಅಭ್ಯರ್ಥಿಗಳು 57 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ದಾವಣಗೆರೆ ಹಾಗೂ ಶಿವಮೊಗ್ಗ ಕ್ಷೇತ್ರಗಳಲ್ಲಿ ತಲಾ 5, ಉತ್ತರ ಕನ್ನಡ, ಬಳ್ಳಾರಿ, ಕೊಪ್ಪಳ, ಬಿಜಾಪುರ ಕ್ಷೇತ್ರಗಳಲ್ಲಿ ತಲಾ ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
|
3 |
+
ಚಿಕ್ಕೋಡಿ, ಬಾಗಲಕೋಟೆ, ಗುಲ್ಬರ್ಗ ಕ್ಷೇತ್ರಗಳಲ್ಲಿ ತಲಾ ಮೂರು ಮಂದಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರೆ, ಬೀದರ್ನಲ್ಲಿ ಇಬ್ಬರು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಬೆಳಗಾವಿ, ರಾಯಚೂರು, ಹಾವೇರಿ, ಧಾರವಾಡ ಕ್ಷೇತ್ರಗಳಲ್ಲಿ ತಲಾ ಒಬ್ಬರು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.
|
4 |
+
41 ಅಭ್ಯರ್ಥಿಗಳ ಪೈಕಿ 37 ಪುರುಷರು, ನಾಲ್ವರು ಮಹಿಳೆಯರು ನಾಮಪತ್ರ ಸಲ್ಲಿಸಿದ್ದಾರೆ. 14 ಪಕ್ಷೇತರರು, 20 ಮಂದಿ ನೋಂದಾಯಿತ ಮಾನ್ಯತೆ ಪಡೆಯದ ಪಕ್ಷಗಳ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ.ಬಿಎಸ್ಪಿ 2, ಎಎಪಿ 1, ಕಾಂಗ್ರೆಸ್ 11, ಬಿಜೆಪಿಯ ಅಭ್ಯರ್ಥಿಗಳಿಂದ 9 ನಾಮಪತ್ರ ಸಲ್ಲಿಕೆಯಾಗಿವೆ.
|
5 |
+
ಇಂದು ಮತ್ತು ನಾಳೆ ರಜಾ ದಿನವಾಗಿರುವುದರಿಂದ ನಾಮಪತ್ರ ಸಲ್ಲಿಕೆಯಾಗುವುದಿಲ್ಲ. ಸೋಮವಾರದಿಂದ ರಾಜಕೀಯ ಪಕ್ಷಗಳ ಹಾಗೂ ಇತರೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಜೋರಾಗಿ ನಡೆಯಲಿದೆ.
|
6 |
+
ಈ ಹಂತದಲ್ಲಿ ನಾಮಪತ್ರ ಸಲ್ಲಿಸಲು ಏ.19 ಕಡೆಯ ದಿನವಾಗಿದೆ. ಸುರಪುರ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಜುಗೌಡ ನಾಯಕ್ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.
|
eesanje/url_46_180_9.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಚುನಾವಣಾ ಅಕ್ರಮ : ರಾಜ್ಯದಲ್ಲಿ ಈವರೆಗೆ 307.61 ಕೋಟಿ ಮೊತ್ತದ ನಗದು, ಚಿನ್ನಾಭರಣ ಜಪ್ತಿ
|
2 |
+
ಬೆಂಗಳೂರು,ಏ.13-ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಅಕ್ರಮಗಳ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿರುವ ಹಿನ್ನೆಲೆಯಲ್ಲಿ ಜಪ್ತಿಯಾಗುತ್ತಿರುವ ನಗದು, ಚಿನ್ನಾಭರಣ, ಮದ್ಯ, ಉಚಿತ ಉಡುಗೊರೆಗಳ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದ ದಿನದಿಂದ ನಿನ್ನೆಯವರೆಗೆ ರಾಜ್ಯದಲ್ಲಿ 307.61 ಕೋಟಿ ಮೊತ್ತದ ನಗದು, ಚಿನ್ನಾಭರಣ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
|
3 |
+
ಪೊಲೀಸ್ ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು, 81.33 ಕೋಟಿ ರೂ. ಮೌಲ್ಯದ ನಗದು, ಮದ್ಯ, ಡ್ರಗ್ಸ್, ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಿವೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ಅಬಕಾರಿ ಇಲಾಖೆಯವರು 146.70 ಕೋಟಿ ರೂ. ಮೌಲ್ಯದ ಮದ್ಯ, ಡ್ರಗ್ಸ್ ವಶಪಡಿಸಿಕೊಂಡಿದ್ದರೆ, ಆದಾಯ ತೆರಿಗೆ ಅಧಿಕಾರಿಗಳು 13.60 ಕೋಟಿ ರೂ. ಮೌಲ್ಯದ ನಗದು ಚಿನ್ನ ಹಾಗೂ ವಜ್ರದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
|
4 |
+
ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು 65.98 ಕೋಟಿ ರೂ. ಮೌಲ್ಯದ ಚಿನ್ನ, ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. 46.01 ಕೋಟಿ ರೂ. ನಗದು, 147.03 ಕೋಟಿ ರೂ. ಮೌಲ್ಯದ ಮದ್ಯ, 9.75 ಕೋಟಿ ರೂ. ಮೌಲ್ಯದ ಡ್ರಗ್ಸ್, 24.38 ಕೋಟಿ ರೂ. ಮೌಲ್ಯದ ಚಿನ್ನ, 69 ಲಕ್ಷ ರೂ. ಮೌಲ್ಯದ ಬೆಳ್ಳಿ, 9 ಲಕ್ಷ ರೂ. ಮೌಲ್ಯದ ವಜ್ರ, 7.73 ಕೋಟಿ ರೂ. ಮೌಲ್ಯದ ಉಚಿತ ಉಡುಗೊರೆಗಳು, 71.94 ಕೋಟಿ ರೂ. ಮೌಲ್ಯದ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
|
5 |
+
ನಗದು, ಮದ್ಯ, ಡ್ರಗ್ಸ್, ಉಚಿತ ಉಡುಗೊರೆ ಹಾಗೂ ಬೆಲೆ ಬಾಳುವ ಲೋಹಗಳಿಗೆ ಸಂಬಂಧಿಸಿದಂತೆ 1587 ಎಫ್ಐಆರ್ಗಳನ್ನು ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು ಮತ್ತು ಪೊಲೀಸರು ದಾಖಲಿಸಿದ್ದಾರೆ. 1,214 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಂಡಿದ್ದು, ಅಬಕಾರಿ ಇಲಾಖೆ ಘೋರ ಅಪರಾಧದಡಿಯಲ್ಲಿ 2,002 ಪ್ರಕರಣಗಳನ್ನು ದಾಖಲಿಸಲಾಗಿದೆ. ಪರವಾನಗಿ ಉಲ್ಲಂಘನೆಯಡಿಯಲ್ಲಿ 2,531 ಪ್ರಕರಣ, ಎನ್ಡಿಪಿಎಸ್ ಅಡಿಯಲ್ಲಿ 119 ಪ್ರಕರಣ ಹಾಗೂ ಅಬಕಾರಿ ಕಾಯ್ದೆ ಉಲ್ಲಂಘನೆಯಡಿಯಲ್ಲಿ 12,766 ಪ್ರಕರಣಗಳನ್ನು ದಾಖಲಿಸಲಾಗಿದೆ.
|
6 |
+
ಕೊಳ್ಳೇಗಾಲ ಪೊಲೀಸ್ ಠಾಣೆ ತಂಡದವರು 1,02,90,469 ರೂ. ಮೌಲ್ಯದ 2.170 ಕೆ.ಜಿ. ಚಿನ್ನದ ಆಭರಣ, ಸ್ಥಿರ ಕಣ್ಗಾವಲು ತಂಡದವರು ದಾವಣಗೆರೆ ಜಿಲ್ಲೆಯ ಲೋಕಿಕೆರೆ ಚೆಕ್ ಪೋಸ್ಟ್ ನಲ್ಲಿ 12,50,45,115 ರೂ. ಮೌಲ್ಯದ 20.874 ಕೆ.ಜಿ. ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
|
eesanje/url_46_181_1.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಜಾಗತಿಕ ಸಾಹಿತ್ಯ ಪ್ರಶಸ್ತಿ ಪಡೆದ ಕವಯಿತ್ರಿ ಡಾ.ಮಮ್ತಾ ಸಾಗರ್ ಅವರಿಗೆ ಸಿಎಂ ಅಭಿನಂದನೆ
|
2 |
+
ಬೆಂಗಳೂರು,ಏ.12-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಸಾಹಿತ್ಯ ಪ್ರಶಸ್ತಿಯನ್ನು ಪಡೆದ ಕವಯಿತ್ರಿ ಡಾ.ಮಮ್ತಾ ಸಾಗರ್ ಅವರಿಗೆ ಇಂದು ಅಭಿನಂದನೆ ಸಲ್ಲಿಸಿದರು.
|
3 |
+
ಏಪ್ರಿಲ್ 4 ರಿಂದ 6 ರವರೆಗೆ ನೈಜೀರಿಯಾದ ಅಬುಜ ನಗರದಲ್ಲಿ ಜಾಗತಿಕ ಬರಹಗಾರರ ಒಕ್ಕೂಟ ಆಯೋಜಿಸಿದ್ದ ಏಳನೇ ಅಂತಾರಾಷ್ಟ್ರೀಯ ಸಾಹಿತ್ಯೋತ್ಸವದಲ್ಲಿ ಮಮ್ತಾ ಸಾಗರ್ ಅವರು ಜಾಗತಿಕ ಸಾಹಿತ್ಯ ಪ್ರಶಸ್ತಿ ಪಡೆದಿದ್ದು, ಇಂದು ಚಿನ್ನದ ಪದಕ ಮತ್ತು ಪ್ರಶಸ್ತಿ ಪತ್ರ ಸಮೇತ ಕಾವೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದರು.
|
4 |
+
ಜಾಗತಿಕ ಸಾಹಿತ್ಯ ಪ್ರಶಸ್ತಿಯನ್ನು ಪಡೆದ ಖ್ಯಾತ ಕವಯತ್ರಿ ಡಾ|| ಮಮ್ತಾ ಸಾಗರ್ ಅವರು ಇಂದು ನನ್ನನ್ನು ಭೇಟಿಯಾದ ಸಂದರ್ಭದಲ್ಲಿ ಅವರ ಸಾಧನೆಯನ್ನು ಶ್ಲಾಘಿಸಿ, ಅಭಿನಂದಿಸಿದೆ.ಏಪ್ರಿಲ್ 4 ರಿಂದ 6 ರವರೆಗೆ ನೈಜೀರಿಯಾದ ಅಬುಜ ನಗರದಲ್ಲಿ ಜಾಗತಿಕ ಬರಹಗಾರರ ಒಕ್ಕೂಟ ಆಯೋಜಿಸಿದ್ದ ಏಳನೇ ಅಂತಾರಾಷ್ಟ್ರೀಯ ಸಾಹಿತ್ಯೋತ್ಸವದಲ್ಲಿ ಮಮ್ತಾ ಸಾಗರ್ ಅವರು…../EdJTZpd23u
|
5 |
+
ವೈವಿಧ್ಯವನ್ನು ಸಂಭ್ರಮಿಸುವ ಮೂಲಕ ಹೊಸ ಏಕತೆಯನ್ನು ಕುರಿತು ಚಿಂತಿಸುವ ಅಗತ್ಯವಿದೆ ಎಂದು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಕರೆಕೊಟ್ಟ ಖ್ಯಾತ ಕವಯಿತ್ರಿ ಡಾ. ಮಮ್ತಾ ಸಾಗರ್ ಅವರಿಗೆ ಮುಖ್ಯಮಂತ್ರಿಗಳು ಅಭಿನಂದಿಸಿದರು.
|
6 |
+
ಈ ಬಾರಿಯ ಪ್ರತಿಷ್ಠಿತ ಜಾಗತಿಕ ಒಕ್ಕೂಟದ ಗೌರವ ಪ್ರಶಸ್ತಿಯನ್ನು ನೊಬೆಲ್ ಪ್ರಶಸ್ತಿ ವಿಜೇತ ಬರಹಗಾರ ವೋಲೆ ಸೋಯೆಂಕಾ ಅವರಿಗೆ ಘೋಷಿಸಲಾಗಿದೆ.
|
eesanje/url_46_181_10.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಅಭ್ಯರ್ಥಿಗಳು ಖರ್ಚು, ವೆಚ್ಚ ಕುರಿತು ಚುನಾವಣಾ ವೀಕ್ಷಕರಿಂದ ಸಹಿ ಪಡೆದುಕೊಳ್ಳುವುದು ಕಡ್ಡಾಯ
|
2 |
+
ಬೆಂಗಳೂರು,ಏ.11-ಚುನಾವಣಾ ಅಭ್ಯರ್ಥಿಗಳು ತಮ್ಮ ಖರ್ಚು ವೆಚ್ಚವನ್ನು ಚುನಾವಣಾ ವೆಚ್ಚ ವೀಕ್ಷಕರು ಹಾಗೂ ಸಹಾಯಕ ವೆಚ್ಚ ವೀಕ್ಷಕರಿಂದ ಸಹಿ ಪಡೆದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ.
|
3 |
+
ಪ್ರಜಾಪ್ರತಿ ನಿಧಿ ಕಾಯ್ದೆ-1951ರ ಕಲಂ-77ರ ಪ್ರಕಾರ 2024ರ ಲೋಕಸಭಾ ಚುನಾವಣಾ ಅಭ್ಯರ್ಥಿಗಳು ಅಥವಾ ಅಭ್ಯರ್ಥಿಗಳು ನಿಗದಿ ಪಡಿಸಿರುವ ಪ್ರತಿನಿಧಿಗಳು, ಚುನಾವಣಾ ವೆಚ್ಚವನ್ನು ಪ್ರತ್ಯೇಕವಾಗಿ ರಿಜಿಸ್ಟರ್ಗಳಲ್ಲಿ ( ಎ ಬಿ ಸಿ) ಗಳಲ್ಲಿ ನಿರ್ವಹಿಸಿ, ಚುನಾವಣಾ ವೆಚ್ಚ ವೀಕ್ಷಕರಿಗೆ ಮತ್ತು ಸಹಾಯಕ ವೆಚ್ಚ ವೀಕ್ಷಕರಿಂದ ಕನಿಷ್ಠ 3 ಬಾರಿ ಪರಿಶೀಲನೆಗೆ ಒಳಪಡಿಸಿ ಸಹಿ ಪಡೆಯುವುದು ಅಭ್ಯರ್ಥಿಗಳ ಜವಾಬ್ದಾರಿಯಾಗಿರುತ್ತದೆ.
|
4 |
+
ಆದ್ದರಿಂದ, ತಮಗೆ ಈ ಮೂಲಕ ತಿಳಿಯ ಪಡಿಸುವುದೇನೆಂದರೆ, ಚುನಾವಣಾ ವೆಚ್ಚದ ರಿಜಿಸ್ಟರ್ಗಳನ್ನು ಪರಿಶೀಲಿಸಲು ಈ ಕೆಳಕಂಡ ದಿನಾಂಕ, ಸಮಯ ಮತ್ತು ವಿಳಾಸದಲ್ಲಿ ತಪ್ಪದೇ ಹಾಜರಾಗತಕ್ಕದ್ದು ಹಾಗೂ ವೆಚ್ಚಕ್ಕೆ ಸಂಬಂಧಿಸಿದಂತೆ ವೋಚರ್ ಅಥವಾ ಬಿಲ್ ಗಳೊಂದಿಗೆ ಚುನಾವಣಾ ಮೀಸಲು ಖಾತೆಯ ಬ್ಯಾಂಕ್ ಪಾಸ್ ಪುಸ್ತಕವನ್ನು ನಿಗದಿಪಡಿಸಿದ ಹಿಂದಿನ ದಿನಾಂಕಕ್ಕೆ ಇಂದೀಕರಿಸಿಕೊಂಡು ಪರಿಶೀಲನಾ ಸಮಯದಲ್ಲಿ ಹಾಜರು ಪಡಿಸಬೇಕಿದೆ.
|
5 |
+
ನಾಳೆ, ಏ.18 ಹಾಗೂ ಏ.24ರಂದು ಮೂರು ದಿನಗಳ ಕಾಲ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಬಿಬಿಎಂಪಿ ಮುಖ್ಯ ಕಚೇರಿಯಲ್ಲಿರುವ ಅನೆಕ್ಸ್ 3 ರಲ್ಲಿರುವ ಕೊಠಡಿ ಸಂಖ್ಯೆ 201ರಲ್ಲಿ ಅಭ್ಯರ್ಥಿಗಳ ವೆಚ್ಚ ತಪಾಸಣೆ ನಡೆಯಲಿದೆ ಎಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಚುನಾವಣಾ„ಕಾರಿ ಡಾ.ಕೆ.ಹರೀಶ್ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
|
eesanje/url_46_181_11.txt
ADDED
@@ -0,0 +1,3 @@
|
|
|
|
|
|
|
|
|
1 |
+
ಇಲ್ಲಿದೆ ದ್ವಿತೀಯ ಪಿಯುಸಿಯಲ್ಲಿ ಶೂನ್ಯ ಫಲಿತಾಂಶ ಪಡೆದ ಕಾಲೇಜುಗಳ ವಿವರ
|
2 |
+
ಬೆಂಗಳೂರು,ಏ.11-ವಿದ್ಯಾರ್ಥಿಗಳಿಂದ ಲಕ್ಷ ಲಕ್ಷ ಶುಲ್ಕ ಕಟ್ಟಿಸಿಕೊಂಡಿದ್ದರೂ ಕೆಲವು ಖಾಸಗಿ ಕಾಲೇಜುಗಳು ಸೇರಿದಂತೆ 35 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಪಿಯುಸಿಯಲ್ಲಿ ಶೂನ್ಯ ಫಲಿತಾಂಶ ಕಳಿಸಿದ ಖಾಸಗಿ ಹಾಗೂ ಸರ್ಕಾರಿ ಕಾಲೇಜುಗಳ ಪಟ್ಟಿ ಇಂತಿದೆ.1.ವಿನಾಯಕ ಪಿಯು ಕಾಲೇಜ್ ಫಾರ್ ವುಮೆನ್ – ಸುಂಕದಕಟ್ಟೆ2.ಪವನ್ ಪಿಯು ಕಾಲೇಜು – ಶ್ರೀರಾಮಪುರಂ3.ಬಸವರಾಜ್ ಸ್ವಾಮಿ ಪಿಯು ಕಾಲೇಜು – ಲವ ಕುಶ ನಗರ, ಲಗ್ಗೆರೆ4.ಮೊಹರೆ ಪಿಯು ಕಾಲೇಜು – ಬಾಬುಸಪಾಳ್ಯ- ಬೆಂಗಳೂರು5.ವಿನಾಯಕ ಸರಸ್ವತಿ ಪಿಯು ಕಾಲೇಜು – ಹೊಸಪೇಟೆ ಬಳ್ಳಾರಿ6.ಬಸವ ಪಿಯು ಕಾಲೇಜು ಇಂಡಿ ತಾಲೂಕು ವಿಜಯಪುರ7.ದಯಾನಂದ ಪಿಯು ಕಾಲೇಜು ಸಿಂಧಗಿ ವಿಜಯಪುರ8.ವಿಜಯ ಪಿಯು ಕಾಲೇಜು, ಗದಗ9.ಎಸ್ ಕೆ ಆರ್ ಸ್ವಾಮಿ ಕಂಪ್ಯೂಟರ್ ಸೈನ್ಸï ಪಿಯು ಕಾಲೇಜು – ಚಿತ್ರದುರ್ಗ10.ಸುನಾಗರ್ ಪಿಯು ಕಾಲೇಜು – ವಿಜಯಪುರ11.ಎಸ್ವಿ ಪಿಯು ಕಾಲೇಜು ಬೀದರ್12.ಜಾಸ್ಮಿನ್ ಪಿಯು ಕಾಲೇಜು ಬೀದರ್13.ಶಾರದಾ ಪಿಯು ಕಾಲೇಜು – ಬೀದರ್14.ಹೆಚ್ಎಸ್ಬಿ ಪಿಯು ಕಾಲೇಜು – ಹಾವೇರಿ15.ಡಾಕ್ಟರ್ ಬಿ ಆರ್ ಅಂಬೇಡ್ಕರ್ ಪಿಯು ಕಾಲೇಜು – ಹಾವೇರಿ16.ಮಲ್ಲಿಕಾ ಪಿಯು ಕಾಲೇಜು – ಯಾದಗಿರಿ17.ನೀಲಕಂಠ ಪಿಯು ಕಾಲೇಜು – ಯಾದಗಿರಿ18.ಜೆಂಟ್ಸ್ ಕಾಮರ್ಸ್ ಪಿಯು ಕಾಲೇಜು – ಧಾರವಾಡ19.ಟಿಇಎಸ್ ಕಾದರ್ ಪಟೇಲ್ ಪಿಯು ಕಾಲೇಜು – ಕಲಬುರಗಿ20.ಹೆಚ್ಕೆ ಗರೀಬ್ ನವಾಜ್ ಪಿಯು ಕಾಲೇಜು – ಕಲಬುರಗಿ21.ಎಸ್ಟಿಎಂಇಎಸ್ ಗಲ್ಸರ್ï ಪಿಯು ಕಾಲೇಜು ಯಾದಗಿರಿ22.ಸಾಗರ್ ನಾಡು ಪಿಯು ಕಾಲೇಜು – ಯಾದಗಿರಿ23.ಆದಿತ್ಯ ಪಿಯು ಕಾಲೇಜು – ರಾಯಚೂರು24.ಕೆ ಆರ್ ಸಿ ಗಲ್ಸರ್ï ರೂರಲ್ ಪಿಯು ಕಾಲೇಜು ಕೊಪ್ಪಳ25.ಬ್ರಾಹ್ಮರಂಭ ವುಮೆನ್ ಪಿಯು ಕಾಲೇಜು ಕೊಪ್ಪಳ26.ಶಿರಡಿ ಸಾಯಿ ಪಿಯು ಕಾಲೇಜು ಉಡುಪಿ
|
3 |
+
ಸರ್ಕಾರಿ ಕಾಲೇಜುಗಳು1.ಗವರ್ನಮೆಂಟ್ ಪಿಯು ಕಾಲೇಜು ದಾವಣಗೆರೆ2.ಗವರ್ನಮೆಂಟ್ ಪಿಯು ಕಾಲೇಜು ಧಾರವಾಡಅನುದಾನಿತ ಕಾಲೇಜುಗಳು1.ಸಿದ್ದಗಂಗಾ ಪಿಯು ಕಾಲೇಜು ಬೆಂಗಳೂರು2.ಸಾರ್ವಜನಿಕ ಕಂಪ್ಯೂಟರ್ ಸೈನ್ಸ್ ಪಿಯು ಕಾಲೇಜು ರಾಮನಗರ3.ಕೆಎಲ್ಇಎಸ್ ಪಿಯು ಕಾಲೇಜು, ಬೀದರ್4.ಜಿವಿಎ ಮೆಮ್ ಕಂಪ್ಯೂಟರ್ ಪಿಯು ಕಾಲೇಜು – ಚಿತ್ರದುರ್ಗ5.ಮೆಥೋಡಿಸ್ಟ್ ಗರ್ಲ್ಸ್ ಪಿಯು ಕಾಲೇಜು ಕೋಲಾರ6.ಸೆಂಟ್ರಲ್ ಕಂಪ್ಯೂಟರ್ ಸೈನ್ಸ್ ಪಿಯು ಕಾಲೇಜು ತುಮಕೂರುವಿಭಜಿತ ಕಾಲೇಜು1.ಡಾಕ್ಟರ್ ಅಂಬೇಡ್ಕರ್ ಪಿಯು ಕಾಲೇಜು – ಇಂದಿರಾನಗರ ಬೆಂಗಳೂರು
|
eesanje/url_46_181_12.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಕರ್ನಾಟಕದಲ್ಲಿ ಮತ್ತೊಂದು ನ್ಯೂಸ್ ಚಾನಲ್, ಫ್ರೀಡಂ ಟಿವಿ ಲೋಕಾರ್ಪಣೆ
|
2 |
+
ಬೆಂಗಳೂರು,ಏ.11- ಜನ ಸಾಮಾನ್ಯರ ಶಕ್ತಿ ಎಂಬ ಟ್ಯಾಗ್ ಲೈನ್ ಹೊಂದಿರುವ ಫ್ರೀಡಂ ಟಿವಿ ಲೋಕಾರ್ಪಣೆಗೊಂಡಿದೆ. ಪತ್ರಕರ್ತ ಎಲ್ .ಎಂ.ನಾಗರಾಜು ಅವರ ಸಾರಥ್ಯದಲ್ಲಿ ಆರಂಭವಾಗಿರುವ ಫ್ರೀಡಂ ಟಿವಿ ಸದಾಶಿವನಗರದ ಭಾಷ್ಯಂ ಸರ್ಕಲ್ ನಲ್ಲಿ ಆರಂಭಗೊಂಡಿದೆ. ಇಂತಹ ಟಿವಿಯನ್ನು ಪೌರ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಆಟೋ ಚಾಲಕರು, ಹಾಗೂ ರೈತರ ಪ್ರತಿನಿಧಿಗಳ ಮೂಲಕ ಉದ್ಘಾಟಿಸಿದ್ದು ವಿಶೇಷವಾಗಿತ್ತು.
|
3 |
+
ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಪಾಲ್ಗೊಂಡು ಜ್ಯೋತಿ ಬೆಳಗಿಸಿದರು. ಹಿರಿಯ ನಟಿ ಪ್ರೇಮಾ ಫ್ರೀಡಂ ಟಿವಿಯ ಸ್ಟುಡಿಯೋ ಉದ್ಘಾಟಿಸಿದರು. ಲಹರಿ ಸಂಸ್ಥೆಯ ಸಂಸ್ಥಾಪಕ ಲಹರಿ ವೇಲು ಅವರು ಪ್ರೊಡಕ್ಷನ್ ಕಂಟ್ರೋಲ್ ರೂಂ ಉದ್ಘಾಟಿಸಿದರು.
|
4 |
+
ಫ್ರೀಡಂ ಟಿವಿಯ ಸಂಸ್ಥಾಪಕರು, ಮ್ಯಾನೇಜಿಂಗ್ ಡೈರೆಕ್ಟರ್ ಆದ ಎಲ್ .ಎಂ.ನಾಗರಾಜ್ ಮಾತನಾಡಿ, ವಾಹಿನಿಯು ಜನಸಾಮಾನ್ಯರ ಪ್ರತಿನಿಧಿಯಂತೆ ಕೆಲಸ ಮಾಡಲಿದೆ. ಪ್ರಜಾತಂತ್ರದ ಮೌಲ್ಯಗಳನ್ನು ಎತ್ತಿ ಹಿಡಿಯುವ ಮೂಲಕ ಪತ್ರಿಕಾರಂಗದ ಘನತೆ ಹೆಚ್ಚಿಸಲು ಶ್ರಮಿಸಲಿದೆ ಎಂದರು.
|
5 |
+
ಫ್ರೀಡಂ ಸುದ್ದಿವಾಹಿನಿಯು ದೈನಂದಿನ ಸುದ್ದಿಗಳ ಜೊತೆ ಜೊತೆಯಲ್ಲೇ ಧಾರ್ಮಿಕ, ಆಧ್ಯಾತ್ಮ, ಮನರಂಜನೆ, ಕ್ರೀಡೆ, ಹೀಗೆ ಪ್ರತಿಕ್ಷೇತ್ರದ ಆಗುಹೋಗುಗಳ ಬಗ್ಗೆ ಮಾಹಿತಿ ನೀಡಲಿದೆ. ಎಲ್ಲಾ ಕೇಬಲ್ ನೆಟ್ ವರ್ಕ್ಗಳ ಜೊತೆ ಯೂಟ್ಯೂಬ್ , -ಫೇಸ್ಬುಕ್, ಟ್ವಿಟರ್, ಇನ್ಸ್ಟಾಗ್ರಾಂನಂತಹ ಸಾಮಾಜಿಕ ಜಾಲತಾಣಗಳ ಮೂಲಕವೂ ಫ್ರೀಡಂ ಟಿವಿ ನಿಮ್ಮ ಮನೆ ಮನೆಗೆ ಬರಲಿದೆ ಎಂದು ಅವರು ತಿಳಿಸಿದರು.
|
eesanje/url_46_181_2.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಕಾಂಗ್ರೆಸ್ನತ್ತ ಮುಖ ಮಾಡಿದ ಮಾಜಿ ಶಾಸಕರು..?
|
2 |
+
ಬೆಂಗಳೂರು,ಏ.12-ಬಿಜೆಪಿ-ಜೆಡಿಎಸ್ ಮೈತ್ರಿಯ ಅಪಸ್ವರದ ನಡುವೆ ಹಲವು ಕ್ಷೇತ್ರಗಳಲ್ಲಿ ಮಾಜಿ ಶಾಸಕರು ಅಸಮಾಧಾನಗೊಂಡು ಕಾಂಗ್ರೆಸ್ನತ್ತ ಮುಖ ಮಾಡಿದ್ದಾರೆ. ಅದರಲ್ಲೂ ಕೌಟುಂಬಿಕ ರಾಜಕಾರಣದಲ್ಲಿ ಒಡೆದಾಳುವ ನೀತಿಯಿಂದ ಸಿಟ್ಟಾಗಿರುವ ಕಲಬುರಗಿ ಜಿಲ್ಲೆಯ ಅಫ್ಜಲ್ಪುರದ ಶಾಸಕ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ನಾಯಕರನ್ನು ಸಂಪರ್ಕಿಸಿದ್ದರೆ, ಮಂಡ್ಯ ಜಿಲ್ಲೆಯ ನಾಗಮಂಗಲದ ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಸಭೆಯಲ್ಲಿ ಭಾಗವಹಿಸಿ ಗಮನ ಸೆಳೆದಿದ್ದಾರೆ.
|
3 |
+
ಮಾಲೀಕಯ್ಯ ಗುತ್ತೇದಾರ್ ಅವರು ಬಿಜೆಪಿಯಲ್ಲಿದ್ದು, ಕಳೆದ ಬಾರಿ ಅಫ್ಜಲ್ಪುರದ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನ ಎಂ.ವೈ.ಪಾಟೀಲ್ ವಿರುದ್ಧ ಸೋಲು ಕಂಡಿದ್ದರು. ಇದಕ್ಕೆ ಮೂಲ ಕಾರಣ ಅವರ ಸಹೋದರ ಸಂಬಂಧಿ ನಿತಿನ್ ಗುತ್ತೇದಾರ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾಗಿತ್ತು.
|
4 |
+
ಪ್ರಸ್ತುತ ಬಿಜೆಪಿ ನಾಯಕರು ನಿತಿನ್ ಗುತ್ತೇದಾರ್ರನ್ನು ಬಿಜೆಪಿಗೆ ಸೇರಿಸಿಕೊಂಡು ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಇದರಿಂದ ಅಸಮಾಧಾನಗೊಂಡಿರುವ ಮಾಲೀಕಯ್ಯ ಗುತ್ತೇದಾರ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ರನ್ನು ಭೇಟಿ ಮಾಡಿದ್ದಾರೆ.
|
5 |
+
ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಲಬುರಗಿಯ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಡಿ.ಕೆ.ಶಿವಕುಮಾರ್ ಹಾಗೂ ಅವರು ಹಳೆಯ ಸ್ನೇಹಿತರು. ಈ ಕಾರಣಕ್ಕಾಗಿ ಪರಸ್ಪರ ಭೇಟಿಯಾಗಿದ್ದಾರೆ. ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಡಿ.ಕೆ.ಶಿವಕುಮಾರ್ರವರೇ ಸ್ಪಷ್ಟನೆ ನೀಡಬೇಕು ಎಂದು ಹೇಳಿದರು.
|
6 |
+
ಇತ್ತ ಮಂಡ್ಯ ಜಿಲ್ಲೆಯ ಪ್ರಮುಖ ನಾಯಕ ಎಲ್.ಆರ್.ಶಿವರಾಮೇಗೌಡ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ನಡೆದ ಸಭೆಯಲ್ಲಿ ಭಾಗವಹಿಸಿದ್ದಾರೆ. ಎಲ್.ಆರ್.ಶಿವರಾಮೇಗೌಡ ಮತ್ತು ಪುತ್ರ ಚೇತನ್ಗೌಡ ಇಬ್ಬರೂ ಕೆಲ ತಿಂಗಳುಗಳ ಹಿಂದೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು. ಚೇತನ್ಗೌಡ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಅವರ ತಂದೆ ಎಲ್.ಆರ್.ಶಿವರಾಮೇಗೌಡ ಕಾಂಗ್ರೆಸ್ ಅಭ್ಯರ್ಥಿ ಪರವಾದ ಸಭೆಯಲ್ಲಿ ಭಾಗವಹಿಸಿರುವುದು ಕುತೂಹಲ ಕೆರಳಿಸಿದೆ.
|
7 |
+
ಚನ್ನಪಟ್ಟಣದಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ರವರ ಪುತ್ರಿ ನಿಶಾ ಕಾಂಗ್ರೆಸ್ ಸೇರಲು ತುದಿಗಾಲಿನಲ್ಲಿ ನಿಂತಿದ್ದಾರೆ. ಹಲವಾರು ಕ್ಷೇತ್ರಗಳಲ್ಲಿ ಇದೇ ರೀತಿಯ ಬೆಳವಣಿಗೆಗಳಾಗಿವೆ. ಚುನಾವಣಾ ಕಾಲದಲ್ಲಿ ಪಕ್ಷಾಂತರಗೊಳ್ಳುವ ಸ್ಥಾನಪಲ್ಲಟಗಳು ಸಾಮಾನ್ಯ ಎಂದು ಹೇಳಲಾಗಿದ್ದರೂ ಪ್ರಮುಖ ನಾಯಕರು ರಾಜಕೀಯ ಮಗ್ಗಲು ಬದಲಿಸುತ್ತಿರುವುದು ಗಮನ ಸೆಳೆದಿದೆ.
|
eesanje/url_46_181_3.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ
|
2 |
+
ಬೆಂಗಳೂರು,ಏ.12-ರಾಜ್ಯದ ಕೆಲವೆಡೆ ಚದುರಿದಂತೆ ಮುಂಗಾರು ಪೂರ್ವ ಮಳೆ ಆಗುತ್ತಿದ್ದು, ರಾಜ್ಯದಲ್ಲಿ ಇನ್ನೆರೆಡು ದಿನ ಇದೇ ರೀತಿ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೆರೆಡು ದಿನ ಹಗುರದಿಂದ ಸಾಧಾರಣ ಮಳೆಯಾಗಲಿದೆ.
|
3 |
+
ರಾಜ್ಯದ ಕೆಲವೆಡೆ ಅಲ್ಲಲ್ಲಿ ಮಳೆಯಾಗಲಿದೆ, ಕೆಲವೆಡೆ ಗುಡುಗು, ಮಿಂಚಿನಿಂದ ಕೂಡಿದೆ. ಮಳೆಯಾಗುವ ಸಾಧ್ಯತೆಗಳಿವೆ. ಉಳಿದಂತೆ ರಾಜ್ಯದಲ್ಲಿ ಒಣಹವೆ ಮುಂದುವರೆದಿದೆ. ಚಿಕ್ಕಮಗಳೂರು, ಹಾವೇರಿ, ಧಾರವಾಡ, ಗದಗ, ಹುಬ್ಬಳ್ಳಿ , ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಕೊಡಗು, ಶಿವಮೊಗ್ಗ ಸೇರಿದಂತೆ ಕೆಲವೆಡೆ ನಿನ್ನೆ ಮಳೆಯಾಗಿದೆ.
|
4 |
+
ಕೆಲವೆಡೆ ಭಾಗಶಃ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಸಂಜೆ ಹಾಗೂ ರಾತ್ರಿ ಮಳೆಯಾಗುವ ಮುನ್ಸೂಚನೆಗಳಿವೆ. ಮಳೆ ಬಿದ್ದ ಪರಿಣಾಮ ಗರಿಷ್ಠ ತಾಪಮಾನದಲ್ಲಿ 1 ರಿಂದ 2 ಡಿ.ಸೆ.ನಷ್ಟು ಇಳಿಕೆಯಾಗಿದೆ.
|
5 |
+
ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಇಂದು ಮತ್ತು ನಾಳೆ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ.
|
eesanje/url_46_181_4.txt
ADDED
@@ -0,0 +1,3 @@
|
|
|
|
|
|
|
|
|
1 |
+
ಲಘು ಹೃದಯಾಘಾತದಿಂದ ಆಸ್ಪತ್ರೆ ಸೇರಿದ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ
|
2 |
+
ಬೆಂಗಳೂರು,ಏ.12-ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಲಘು ಹೃದಯಾಘಾತಕ್ಕೆ ಒಳಗಾಗಿ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.ಲಘು ಹೃದಯಾಘಾತದಿಂದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖವಾಗಿರುವುದಾಗಿ ಶರವಣ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
|
3 |
+
ಆಸ್ಪತ್ರೆಯಲ್ಲಿ ತಮಗೆ ಸ್ಟಂಟ್ ಅಳವಡಿಸಲಾಗಿದೆ. ಇದೀಗ ಗುಣಮುಖವಾಗಿದ್ದು, ಅಭಿಮಾನಿಗಳು, ಆತ್ಮೀಯರು ಆತಂಕಪಡುವ ಅವಶ್ಯಕತೆಯಿಲ್ಲ. ಎಲ್ಲರ ಪ್ರೀತಿ, ಹಾರೈಕೆ, ಪ್ರಾರ್ಥನೆಯಿಂದ ಹಾಗೂ ಭಗವಂತನ ಕೃಪೆಯಿಂದ ಚೇತರಿಸಿಕೊಳ್ಳುತ್ತಿರುವುದಾಗಿ ಶರವಣ ತಿಳಿಸಿದ್ದಾರೆ.
|
eesanje/url_46_181_5.txt
ADDED
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
: ರಾಮೇಶ್ವರಂ ಕೆಫೆ ಸ್ಪೋಟದ ಪ್ರಮುಖ ರೂವಾರಿಗಳು ಪಶ್ಚಿಮಬಂಗಾಳದಲ್ಲಿ ಅರೆಸ್ಟ್
|
2 |
+
ನವದೆಹಲಿ,ಏ.12-ಕರ್ನಾಟಕದ ರಾಜಧಾನಿ ಬೆಂಗಳೂರಿನ ಎಚ್ಎಲ್ನ ಕುಂದಲಹಳ್ಳಿ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದ ಪ್ರಮುಖ ರೂವಾರಿಗಳನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗದಲ್ಲಿ ತೀರ್ಥಹಳ್ಳಿ ತಾಲ್ಲೂಕಿನವರಾದ ಮುಸಾವೀರ್ ಹುಸೇನ್ ಶಬೀರ್ ಹಾಗೂ ಅಬ್ದುಲ್ ಮತೀನ್ ಎಂಬುವರನ್ನು ಎನ್ಐಎ ಅಧಿಕಾರಿಗಳು ಪಶ್ಚಿಮಬಂಗಾಳದಲ್ಲಿ ಬಂಧಿಸಿದ್ದಾರೆ.
|
3 |
+
ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದ ಎನ್ಐಎ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಖಚಿತ ಸುಳಿವಿನ ಮೇರೆಗೆ ಮಿಂಚಿನ ಕಾರ್ಯಾಚರಣೆ ನಡೆಸಿ ಉಗ್ರ ಎಡೆಮುರಿ ಕಟ್ಟಿದ್ದಾರೆ.ಇಬ್ಬರು ಐಸಿಸ್ ಉಗ್ರ ಸಂಘಟನೆಯ ಪರ ಒಲವು ಹೊಂದಿದ್ದು, ವಿಶೇಷವಾಗಿ ದಕ್ಷಿಣ ಭಾಗದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸುವುದು ಹಾಗೂ ಈ ಸಂಘದ ಮೇಲೆ ವಿದ್ಯಾವಂತ ಯುವಕರನ್ನು ಸೆಳೆಯುವ ಕಾರ್ಯದಲ್ಲಿ ಹಲವು ವರ್ಷಗಳಿಂದ ನಿರತರಾಗಿದ್ದರು.
|
4 |
+
ಎನ್ಐಎ ಮೂಲಗಳ ಪ್ರಕಾರ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟದ ಮೋಸ್ಟ್ ವಾಂಟೆಡ್, ಶಂಕಿತ ಉಗ್ರರಾದ ಮುಸ್ಸಾವೀರ್, ಅಬ್ದುಲ್ ಮತೀನ್ ಹಲವು ವರ್ಷಗಳಿಂದ ಉಗ್ರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ತಮಿಳುನಾಡು, ಮಹಾರಾಷ್ಟ್ರದಲ್ಲಿಯೂ ಸಕ್ರಿಯರಾಗಿದ್ದರು ಎಂಬ ವಿಚಾರ ಎನ್ಐಎ ತನಿಖೆಯಿಂದ ಗೊತ್ತಾಗಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಮೂಲದ ಅಬ್ದುಲ್ ಮತೀನ್, ಮುಸ್ಸಾವಿರ್ ಮೊದಲಿನಿಂದಲೂ ಉಗ್ರ ತತ್ವದ ಒಲವು ಹೊಂದಿದ್ದರು.
|
5 |
+
ಜನವರಿ ಮತ್ತು ಫೆಬ್ರವರಿಯಲ್ಲಿ ಚೆನ್ನೈನಲ್ಲಿ ತಂಗಿದ್ದ ಮುಸಾವೀರ್ ಹುಸೇನ್ ಶಜೀಬ್ ಮಾರ್ಚ್ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆಸಿದ್ದಾನೆ ಎನ್ನಲಾಗಿದೆ. ಈತ ಮಾಸ್ಟರ್ ಮೈಂಡ್ ಕೂಡ ಆಗಿರಬಹುದು ಎಂಬ ಬಗ್ಗೆಯೂ ಎನ್ಐಎ ತನಿಖೆ ನಡೆಸುತ್ತಿತ್ತು. ಈತನ ಜೊತೆ ಅಬ್ದುಲ್ ಮತೀನ್ ತಹಾ ಕೂಡ ಇದ್ದ ಎಂಬುದು ಗೊತ್ತಾಗಿದೆ. ಈ ಇಬ್ಬರು ಕೂಡ ಅಲ್ ಹಿಂದ್ ಮಾಡ್ಯೂಲ್ ಕೇಸ್ನಲ್ಲಿ ಎನ್ಐಎಗೆ ಬೇಕಾಗಿದ್ದು, 2020ರಿಂದಲೂ ತಲೆಮರೆಸಿಕೊಂಡಿದ್ದಾರೆ.
|
6 |
+
ಕಳೆದ ಮಾ.1ರಂದು ನಡೆದ ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎನ್ಐಎ ಅಧಿಕಾರಿಗಳು ಪ್ರಮುಖ ಆರೋಪಿ ಮುಸಾವೀರ್ ಶಬೀರ್ನನ್ನು ಬಂಧಿಸಿತ್ತು.ಚಿಕ್ಕಮಗಳೂರು ದುಬೈನಗರದ ಮುಜಮೀಲ್, ಕೆಫೆಯಲ್ಲಿ ಬಾಂಬ್ ಇರಿಸಿದ್ದ ಶಂಕಿತ ಹಾಗೂ ಇತರರ ಜೊತೆ ಸೇರಿ ಸಂಚು ರೂಪಿಸಿದ್ದ. ಕೆಲ ಪುರಾವೆಗಳನ್ನು ಆಧರಿಸಿ ಮುಜಮೀಲ್ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಈತನೇ ಪ್ರಮುಖ ಸಂಚುಕೋರ ಎಂಬುದು ಗೊತ್ತಾಗಿತ್ತು.
|
7 |
+
18 ಸ್ಥಳಗಳ ಮೇಲೆ ದಾಳಿ:ಬಾಂಬ್ ಇರಿಸಲು ಸಜ್ಜಾಗಿದ್ದ ಮುಸಾವೀರ್, ತಾಹಾಗೆ ಅಗತ್ಯವಿದ್ದ ಕಚ್ಚಾ ಸಾಮಗ್ರಿ ಹಾಗೂ ಇತರೆ ವಸ್ತುಗಳನ್ನು ಮುಜಮೀಲ್ ಪೂರೈಸಿದ್ದ. ರಾಮೇಶ್ವರಂ ಕೆಫೆ ಸ್ಥಳಕ್ಕೆ ತಲುಪಲು ಹಾಗೂ ಅಲ್ಲಿಂದ ಪರಾರಿಯಾಗುವ ಸಂದರ್ಭದಲ್ಲಿ ಸಾರಿಗೆ ವ್ಯವಸ್ಥೆಗೂ ಅನುಕೂಲ ಕಲ್ಪಿಸಿದ್ದ. ಮುಜಮೀಲ್ ಸಹಾಯದಿಂದಲೇ ಮುಸಾವೀರ್, ಕೆಫೆಯಲ್ಲಿ ಬಾಂಬ್ ಇರಿಸಿ ಪರಾರಿಯಾಗಿದ್ದ ಎಂದು ಎನ್ಐಎ ಮೂಲಗಳು ಹೇಳಿವೆ.
|
8 |
+
ಸ್ಪೋಟದಲ್ಲಿ ಭಾಗಿಯಾಗಿದ್ದವರ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆಯೇ ಕರ್ನಾಟಕ, ತಮಿಳುನಾಡು ಹಾಗೂ ಉತ್ತರ ಪ್ರದೇಶದ 18 ಸ್ಥಳಗಳ ಮೇಲೆ ಇತ್ತೀಚೆಗೆ ದಾಳಿ ನಡೆಸಲಾಗಿತ್ತು.ಮುಜಮೀಲ್, ಮುಸಾವೀರ್, ಅಬ್ದುಲ್ ಮತೀನ್ ತಾಹಾ ಮನೆಗಳು ಹಾಗೂ ಅಂಗಡಿಗಳಲ್ಲಿ ಶೋಧ ನಡೆಸಲಾಯಿತು. ದಾಳಿ ಸಂದರ್ಭದಲ್ಲೇ ಮುಜಮೀಲ್ ಸಿಕ್ಕಿಬಿದ್ದಿದ್ದ.
|
9 |
+
ಕರ್ನಾಟಕ, ತಮಿಳುನಾಡು ಸೇರಿದಂತೆ ಹಲವು ರಾಜ್ಯದಲ್ಲಿರುವ ಶಂಕಿತರು, ದೇಶದಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದಾರೆ. ಅದರ ಭಾಗವಾಗಿಯೇ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾಗಿದೆ. ಇದೊಂದು ದೊಡ್ಡ ಸಂಚು. ಇದರ ಹಿಂದಿರುವ ಪ್ರತಿಯೊಬ್ಬರನ್ನು ಪತ್ತೆ ಮಾಡಲು ತನಿಖೆ ಮುಂದುವರಿದಿದೆ¿ ಎಂದು ಮೂಲಗಳು ತಿಳಿಸಿವೆ.
|
10 |
+
ಯಾರು ಈ ಮುಸಾವೀರ್ ಹುಸೇನ್?:ಮುಸಾವೀರ್ ಹುಸೇನ್ ಶಜೀಬ್ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನವನು. ಶಿವಮೊಗ್ಗ ಐಸಿಸ್ ಮಾಡ್ಯೂಲ್ನ ಭಾಗವಾಗಿದ್ದ ಈತ ಎನ್ಐಎಗೆ ಈ ಹಿಂದೆಯೇ ಬೇಕಾಗಿದ್ದ. 2020ರ ಅಲ್ ಹಿಂದ್ ಮಾಡ್ಯೂಲ್ ಕೇಸ್ನಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಎನ್ಐಎ ವಾರೆಂಟ್ ಪಟ್ಟಿಯಲ್ಲಿ ಈತನ ಹೆಸರಿದೆ. ಎ-17 ಆಗಿದ್ದು, ತಲೆಮರೆಸಿಕೊಂಡಿದ್ದಾನೆ. ಕೊನೆಯದಾಗಿ ಬೆಂಗಳೂರು ಸ್ಪೋಟ ಪ್ರಕರಣದ ಬಳಿಕ ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ಈತನ ಜಾಡು ಕಂಡುಬಂದಿದೆ. ಬೆಂಗಳೂರಿನಲ್ಲಿ ರೆಡಿಮೆಡ್ ಗಾರ್ಮೆಂಟ್ಸ್ ವ್ಯವಹಾರವನ್ನು ಮುಸಾವೀರ್ ನಡೆಸುತ್ತಿದ್ದ. ಆದರೆ 2019ರಿಂದ ನಾಪತ್ತೆಯಾಗಿದ್ದಾನೆ ಎಂದು ಅವರ ತಾಯಿ ಹೈಕೋರ್ಟ್ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು.
|
11 |
+
ಅಲ್ ಹಿಂದ್ನ ಸಕ್ರಿಯ ಸದಸ್ಯ!ಐಸಿಸ್ನಿಂದ ಪ್ರೇರೆಪಿತವಾಗಿ ಕಟ್ಟಿದ್ದ ಭಯೋತ್ಪಾದಕ ಸಂಘಟನೆ ಅಲ್ ಹಿಂದ್ನ ಸಕ್ರಿಯ ಸದಸ್ಯನಾಗಿ ಮುಸಾವೀರ್ ಹುಸೇನ್ ಕಾರ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ.
|
12 |
+
ಏನಿದು ಅಲ್ ಹಿಂದ್?ಐಸಿಸ್ ಪ್ರೇರೆಪಿತ ಅಲ್ ಹಿಂದ್ ಮಾಡ್ಯೂಲ್ ಅನ್ನು ಬೆಂಗಳೂರಿನಲ್ಲಿ ಸ್ಥಾಪಿಸಿದ್ದರು. ದಕ್ಷಿಣ ಭಾರತದ ಮುಸ್ಲಿಂ ಯುವಕರನ್ನು ಸೇರಿಸಿಕೊಂಡು ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಮುಂದಾಗಿದ್ದರು. ಬೆಂಗಳೂರನ್ನೇ ಮೂಲವಾಗಿಟ್ಟುಕೊಂಡು ಕರ್ನಾಟಕ, ತಮಿಳುನಾಡಿನ ಹಲವೆಡೆ ಏ.2019ರಿಂದಲೂ ಸಭೆ ನಡೆಸಿ, ದೇಶದಲ್ಲಿ ವಿಧ್ವಂಶಕ ಕೃತ್ಯ ನಡೆಸಲು ಸಂಚು ರೂಪಿಸಿದ್ದರು.
|
13 |
+
ಅಬ್ದುಲ್ ಮತೀನ್ ಐಸಿಸ್ ಉಗ್ರರ ಜತೆ ಸಂಪರ್ಕ ಹೊಂದಿದ್ದ ಶಂಕೆಯಿದೆ. ಆನ್ಲೈನ್ ಮೂಲಕ ವಿಧ್ವಂಸಕ ಕೃತ್ಯಗಳಿಗೆ ಪ್ರೇರಣೆ ನೀಡುತ್ತಿದ್ದ ಉಗ್ರನನ್ನು ಅಲ್ ಹಿಂದ್ ಮುಖ್ಯಸ್ಥ ಮೆಹಬೂಬ್ ಪಾಷಾ ಜತೆ ಸಂಪರ್ಕ ಸಾಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವಿಚಾರವೂ ಅಲ್ ಹಿಂದ್ ಕೇಸ್ ತನಿಖೆಯಲ್ಲಿ ಗೊತ್ತಾಗಿತ್ತು. 2020ರಲ್ಲಿ ಅಲ್ ಹಿಂದ್ ಸಂಘಟನೆಯ ಸಂಚು ವಿಫಲಗೊಂಡು ಮೊಹಮದ್ ಪಾಷಾ ಸೇರಿ 18 ಮಂದಿ ಬಂಧನವಾಗುತ್ತಿದ್ದಂತೆಯೇ ಮತೀನ್, ಮುಸಾವೀರ್ ತಲೆಮರೆಸಿಕೊಂಡಿದ್ದರು.
|
eesanje/url_46_181_6.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಮಂಗಳೂರು ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿಟ್ಟುಕೊಂಡು ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದವನ ಬಂಧನ
|
2 |
+
ಮಂಗಳೂರು,ಏ. 12:ಪ್ರಯಾಣಿಕನೊಬ್ಬ ಗುದನಾಳದಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದದನ್ನು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿ 58 ಲಕ್ಷ ರೂ ಮೌಲ್ಯದ 812 ಗ್ರಾಂ ಚಿನ್ನವನ್ನು ಜಪ್ತಿ ಮಾಡಿದ್ದಾರೆ.
|
3 |
+
ಕಳೆದ ರಾತ್ರಿ ದಮ್ಮಾಮ್ನಿಂದ ಇಲ್ಲಿಗೆ ವಿಮಾನದಲ್ಲಿ ಆಗಮಿಸುತ್ತಿದ್ದ ಪ್ರಯಾಣಿಕರೊಬ್ಬ ಹೊರಹೋಗುವಾಗ ಮೆಟಲ್ ಡಿಟೆಕ್ಟರ್ ಪರೀಕ್ಷೆಯ ಸಮಯದಲ್ಲಿ, ಸೊಂಟದ ಬಳಿ ಬೀಪ್ ಶಬ್ದ ಹೊರಹೊಮ್ಮಿದೆ.
|
4 |
+
ಅನುಮಾನ ಬಂದು ಆತನನ್ನು ತಪಾಸಣೆಗೆ ಒಳಪಡಿಸಲಾಯಿತು. ಈ ವೇಳೆ ಆತ ತನ್ನು ಗುದನಾಳದಲ್ಲಿ ಮೂರು ಸುತ್ತಿನ ರಿಂಗ್ ಆಕಾರದ ವಸ್ತುಗಳೊಳಗೆ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಬಚ್ಚಿಟ್ಟಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.
|
5 |
+
ನಂತರ ಪೇಸ್ಟ್ ರೂಪದಲ್ಲಿದ್ದ ಚಿನ್ನವನ್ನು ಹೊರತೆಗೆಯಲಾಯಿತು.ಪರಿಶೀಲಿಸಿದಾಗ 24-ಕ್ಯಾರೆಟ್ನ 812 ಗ್ರಾಂ ಚಿನ್ನ ಇರುವುದು ತಿಳಿದುಬಂತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿಸಲಾಗಿದೆ.
|
eesanje/url_46_181_7.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ, “ಕಾಂಗ್ರೆಸ್ಸಿನ ಗೂಂಡಾ”ನ ವಿರುದ್ಧ ಕ್ರಮಕ್ಕೆ ವಿಜಯೇಂದ್ರ ಆಗ್ರಹ
|
2 |
+
ಬೆಂಗಳೂರು,ಏ.11-ರೇಷ್ಮೆ ಬೆಳೆಗಾರ ಹಾಗೂ ಬಿಜೆಪಿ ಕಾರ್ಯಕರ್ತ ಶೇಖರ್ ಅವರ ಮೇಲೆ ಕಾಂಗ್ರೆಸ್ಸಿನ ಗೂಂಡಾ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆ ನಡೆಸಿ, ಕೂಡಲೇ ಚುನಾವಣಾ ಆಯೋಗ ಹಾಗೂ ಪೊಲೀಸ್ ಇಲಾಖೆ ಕಾಂಗ್ರೆಸ್ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
|
3 |
+
ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೊಸ್ಟ್ ಮಾಡಿ ರುವ ಅವರು, ಶಾಂತಿಯುತ ಮತದಾನ ನಡೆಸಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಜರುಗಿಸಲು ಹಾಗೂ ಗ್ರಾಮಾಂತರ ಮತದಾರರ ರಕ್ಷಣೆಗೆ ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿ ಕಾರ್ಯಕರ್ತ ಶೇಖರ್ ಅವರ ಮೇಲೆ ಕಾಂಗ್ರೆಸ್ಸಿನ ಗೂಂಡಾ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿದ್ದರೂ ಆತನನ್ನು ಬಂಧಿಸದೇ ಇರುವುದು ಅನುಮಾನಗಳಿಗೆ ಆಸ್ಪದ ಮಾಡಿಕೊಟ್ಟಿದೆ.
|
4 |
+
ಜಿಲ್ಲೆಯನ್ನು ತಮ್ಮ ಕಪಿಮುಷ್ಠಿಯಲ್ಲಿ ಹಿಡಿದಿಟ್ಟುಕೊಂಡಿರುವ ಡಿ.ಕೆ.ಬ್ರದರ್ಸ್ ಅಧಿಕಾರ ದರ್ಪ ನೆತ್ತಿಗೇರಿದಂತಿದ್ದು, ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿ ಮತದಾರರನ್ನು ಬೆದರಿಸುವ ಕೆಲಸಕ್ಕೆ ಮುಂದಾಗಿರುವುದು ಅಕ್ಷಮ್ಯ ಅಪರಾಧ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
|
5 |
+
ಹಣ, ಹೆಂಡ ಹಾಗೂ ತೋಳ್ಬಲದ ಗೂಂಡಾಗಿರಿ ರಾಜಕೀಯಕ್ಕೆ ಹೆಸರಾಗಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸಿಗರು ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಬಂಡೆ ಪುಡಿ ಪುಡಿಯಾಗುವ ವಾತಾವರಣ ಉದ್ಭವಿಸಿರುವ ಹಿನ್ನೆಲೆಯಲ್ಲಿ ಹತಾಶರಾಗಿದ್ದಾರೆ. ಇವರಿಗೆ ವಿರುದ್ಧವಾಗಿ ನಿಂತಿರುವ ಮತದಾರರು ಹಾಗೂ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಮೇಲೆ ಅಮಾನುಷ ಹಲ್ಲೆ ನಡೆಸಿ ಕ್ಷೇತ್ರದಲ್ಲಿ ಭಯ ಮೂಡಿಸುವ ಕೃತ್ಯ ಆರಂಭಿಸಿದ್ದಾರೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ.
|
6 |
+
ಆಯೋಗ ಕಡಿವಾಣ ಹಾಕಬೇಕು :ಇನ್ನು ಇದೇ ವಿಷಯಕ್ಕೆ ಸಬಂಧಿಸಿದಂತೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಆಶೋಕ್ ಕೂಡಾ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸರ್ಕಾರ ವಿರುದ್ದ ಪೊಸ್ಟ್ ಮಾಡಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರು ನಿರ್ಭೀತಿಯಿಂದ ಮತದಾನ ಮಾಡುವ ವಾತಾವರಣ ಕೆಡಿಸಿ ಮತದಾರರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡುವ ಈ ದುಷ್ಕøತ್ಯಕ್ಕೆ ಚುನಾವಣಾ ಆಯೋಗ ಕಡಿವಾಣ ಹಾಕಬೇಕು. ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮ ಕೈಗೊಂಡು ನಿಷ್ಪಕ್ಷಪಾತವಾಗಿ ಅವಕಾಶ ಕಲ್ಪಿಸಿ, ಮತದಾರರಲ್ಲಿ ಧೈರ್ಯ, ವಿಶ್ವಾಸ ತುಂಬುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
|
7 |
+
ಬೆಂಗಳೂರು ಗ್ರಾಮಾಂತರದಲ್ಲಿ ಸೋಲು ಗ್ಯಾರಂಟಿ ಆಗುತ್ತಿದ್ದಂತೆ, ಮುಖ್ಯಮಂತ್ರಿ ಸ್ಥಾನಕ್ಕೆ ಶಾಶ್ವತವಾಗಿ ಕಾಯಬೇಕಾಗುತ್ತದೆ ಎನ್ನುವ ಹತಾಶೆಯಿಂದ ಕಂಗಾಲಾಗಿರುವ ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ.ಸುರೇಶ್ ಮತದಾರರ ಮೇಲಿನ ಕೋಪಕ್ಕೆ ಗೂಂಡಾಗಿರಿಗೆ ಇಳಿದಿದ್ದಾರೆ ಎಂದು ಆರೋಪಿಸಿದ್ದಾರೆ.
|
8 |
+
ಬಿಜೆಪಿ ಕಾರ್ಯಕರ್ತ ಸಹೋದರ ನವೀನ್ ಮೇಲೆ ಕಾಂಗ್ರೆಸ್ಸಿನ ಗೂಂಡಾಗಳು ಮಾರಣಾಂತಿಕ ಹಲ್ಲೆ ಮಾಡಿದ್ದರೂ ಆತನನ್ನು ಬಂಧಿಸದೆ ಕಾಟಾಚಾರಕ್ಕೆ ಕೇಸ್ ಹಾಕುವ ಮೂಲಕ ಯಾರನ್ನು ರಕ್ಷಣೆ ಮಾಡುತ್ತಿದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿರುವ ಆಶೋಕ್, ಸಿದ್ದರಾಮಯ್ಯನವರೇ? ಸ್ಟ್ರಾಂಗ್ ಸಿಎಂ ಎಂದು ಹೇಳಿಕೊಳ್ಳುವ ನೀವು ಡಿಕೆ ಸಹೋದರದ ಮುಂದೆ ಅಷ್ಟೊಂದು ವೀಕ್ ಯಾಕಾಗಿದ್ದೀರಿ ಎಂದು ವ್ಯಂಗ್ಯವಾಡಿದ್ದಾರೆ.
|
eesanje/url_46_181_8.txt
ADDED
@@ -0,0 +1,15 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
‘ಇನ್ ಕ್ವೆಸ್ಟ್ ಆಫ್ ಗುರು’ ಪುಸ್ತಕ ಬಿಡುಗಡೆ ಮಾಡಿದ ನಿರ್ಮಲಾನಂದನಾಥ ಸ್ವಾಮೀಜಿ
|
2 |
+
ಬೆಂಗಳೂರು,ಏ.11-ನಮ್ಮ ಸಂಸ್ಕøತಿಯನ್ನು ಉತ್ತೇಜಿಸಲು ಮತ್ತು ಭಾರತದ ಮೌಲ್ಯಗಳ ಮೂಲಕ ಜಾಗತಿಕ ಶಾಂತಿಯನ್ನು ಬೆಳೆಸಲು ನಾವು ಏನು ಮಾಡುತ್ತಿದ್ದೇವೆ? ಮಾನವೀಯತೆಯ ಕಲ್ಯಾಣಕ್ಕಾಗಿ ಸನಾತನ ಧರ್ಮದ ಬೋಧನೆಗಳನ್ನು ಹಂಚಿಕೊಳ್ಳುವ ಜವಾಬ್ದಾರಿ ನಮಗಿಲ್ಲವೇ?' ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಪ್ರಶ್ನಿಸಿದರು. ಥಿಂಕರ್ಸ್ ಫೋರಂ-ಕರ್ನಾಟಕ ಮಿಥಿಕ್ ಸೊಸೈಟಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇನ್ ಕ್ವೆಸ್ಟ್ ಆಫ್ ಗುರು ಎಂಬ ಪರಿವರ್ತನಾಶೀಲ ಆಧುನಿಕ ಸನಾತನ ಧರ್ಮ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು,ಅಮೆರಿಕ ಮೂಲದ ಲೇಖಕರೊಬ್ಬರು ಭಾರತಕ್ಕೆ ಬಂದು ಸನಾತನ ಧರ್ಮದ ಮೂಲವನ್ನು ಅರ್ಥ ಮಾಡಿಕೊಂಡಿದ್ದು, ಅದನ್ನು ಇನ್ ಕ್ವೆಸ್ಟ್ ಆಫ್ ಗುರು ಪುಸ್ತಕದ ರೂಪದಲ್ಲಿ ವ್ಯಕ್ತಪಡಿಸಿದ್ದಾರೆ. ಇದು ಭಾರತೀಯರಾದ ನಮ್ಮನ್ನು ನಾವೇ ಕೇಳಿಕೊಳ್ಳಲು ಪ್ರೇರೇಪಿಸುತ್ತದೆ’ ಎಂದು ಹೇಳಿದರು.
|
3 |
+
ಆನಂದ ಮ್ಯಾಥ್ಯೂಸ್ ಅವರು ಭಾರತದ ಆಧ್ಯಾತ್ಮಿಕತೆಯ ಭಾಗವಾಗಿದ್ದಾರೆ ಮತ್ತು ವಿಶ್ವಾದ್ಯಂತ ಆಧ್ಯಾತ್ಮಿಕ ಅನ್ವೇಷಕರಿಗೆ ಸರಳೀಕೃತ ವೈದಿಕ ಮಾರ್ಗದರ್ಶನವನ್ನು ಒದಗಿಸುತ್ತಾರೆ. ಈ ಕೃತಿ ಜಾಗತಿಕ ನಾಗರಿಕರಿಗೆ ಧರ್ಮ ಮತ್ತು ಸಂಸ್ಕøತಿಯನ್ನು ಪ್ರಚಾರ ಮಾಡಲು ನಾವು ಏನು ಮಾಡುತ್ತಿದ್ದೇವೆ? ಎಂದು ನಮ್ಮನ್ನು ನಾವೇ ಕೇಳಿಕೊಳ್ಳುವಂತೆ ಮಾಡುತ್ತದೆ' ಎಂದು ಹೇಳಿದರು.
|
4 |
+
ಆಧ್ಯಾತ್ಮಿಕವಾದಿ ಡಿವೈನ್ ಕರ್ನಲ್ ಅಶೋಕ್ ಕಿಣಿ ಮಾತನಾಡಿ,ಆನಂದ ಬರೆದ ಪುಸ್ತಕ ಇನ್ ಕ್ವೆಸ್ಟ್ ಆಫ್ ಗುರು (ಗುರುವಿನ ಅನ್ವೇಷಣೆಯಲ್ಲಿ) ಸನಾತನ ಧರ್ಮದ ಪ್ರಾಯೋಗಿಕ ಅನ್ವಯವನ್ನು ಪರಿಶೋಸುತ್ತದೆ, ತೃಪ್ತಿ ಮತ್ತು ಸಂತೋಷದಾಯಕ ಜೀವನಕ್ಕಾಗಿ ನಮ್ಮ ಪ್ರಾಚೀನ ವೈದಿಕ ತತ್ವಗಳಿಗೆ ಸಮಕಾಲೀನ ವಿಧಾನವನ್ನು ನೀಡುತ್ತದೆ. ಇನ್ ಕ್ವೆಸ್ಟ್ ಆಫ್ ಗುರು ಕೇವಲ ಪುಸ್ತಕವಲ್ಲ. ಇದು ಜಾಗತಿಕ ಯುವಕರು ಮತ್ತು ಆಧ್ಯಾತ್ಮಿಕ ಅನ್ವೇಷಕರು ಸುಲಭವಾಗಿ ಅರ್ಥ ಮಾಡಿಕೊಳ್ಳಲು ಆಧುನಿಕ ಪದಗಳಲ್ಲಿ ಪ್ರಸ್ತುತಪಡಿಸಲಾದ ಆಧ್ಯಾತ್ಮಿಕ ರೂಪಾಂತರ ಸಾಧನವಾಗಿದೆ ‘ ಎಂದು ಹೇಳಿದರು.
|
5 |
+
‘ಇನ್ ಕ್ವೆಸ್ಟ್ ಆಫ್ ಗುರು’ ಆಧ್ಯಾತ್ಮಿಕ ಅನ್ವೇಷಕರನ್ನು ಕರೆದೊಯ್ಯುವ ಪಯಣವನ್ನು ಎಸ್-ವ್ಯಾಸ ಯೋಗ ವಿಶ್ವವಿದ್ಯಾನಿಲಯದ ಪದ್ಮಶ್ರೀಡಾ.ಎಚ್.ಆರ್.ನಾಗೇಂದ್ರ ಗುರುಗಳು ಸುಂದರವಾಗಿ ವಿವರಿಸುತ್ತಾ, “ಆನಂದವೇ ಎಲ್ಲವನ್ನು ವ್ಯಾಪಿಸಿದೆ. ಸೃಷ್ಟಿಯು ಆನಂದದಿಂದ ಬಂದಿದೆ. ಆನಂದ ಇರುವ ಆಳವಾದ ಮೌನದಲ್ಲಿದೆ. ನಮ್ಮ ಧರ್ಮಗ್ರಂಥಗಳು ನಮಗೆ ಯೋಗದ ವ್ಯಾಖ್ಯಾನವನ್ನು ನೀಡುತ್ತವೆ – ದೈವಿಕತೆಯೊಂದಿಗಿನ ವೈಜ್ಞಾನಿಕ ಒಕ್ಕೂಟ. ಅಂತೆಯೇ, ಆನಂದ ಮ್ಯಾಥ್ಯೂಸ್ ಅವರು ಬರೆದ ಈ ಪುಸ್ತಕವು ಖಂಡಿತವಾಗಿಯೂ ನಮ್ಮ ಭಾರತ ದೇಶದ ಯುವಕರಿಗೆ ಪ್ರಯೋ��ನವನ್ನು ನೀಡುತ್ತದೆ, ಆಧ್ಯಾತ್ಮಿಕತೆ ಮತ್ತು ದೈವಿಕತೆಯನ್ನು ಅರ್ಥಮಾಡಿಕೊಳ್ಳಲು ಅವರಿಗೆ ಸುಲಭವಾಗಿ ಮಾರ್ಗದರ್ಶನ ನೀಡುತ್ತದೆ, ಅವರು ಸಂತೋಷವನ್ನು ಕಂಡುಕೊಳ್ಳಲು ಬ್ರಹ್ಮಾಂಡದೊಳಗಿನ ಎಲ್ಲವೂ ಅನುವು ಮಾಡಿಕೊಡುತ್ತದೆ.”
|
6 |
+
ನ್ಯಾಯಮೂರ್ತಿ ಪಿ ಕೃಷ್ಣ ಭಟ್ ಅವರು ‘ಇನ್ ಕ್ವೆಸ್ಟ್ ಆಫ್ ಗುರು’ ಆಳವಾದ ಒಳನೋಟಗಳನ್ನು ಹಂಚಿಕೊಂಡರು, “ನಿಜವಾಗಿಯೂ ಸಕಾರಾತ್ಮಕ ಮಾನವರಾಗಲು ಮತ್ತು ಈ ಜೀವನದ ಉದ್ದೇಶವನ್ನು ಪೂರೈಸಲು, ಒಬ್ಬ ಗುರುವನ್ನು ಹೊಂದಿರಬೇಕು ಮತ್ತು ಮಾನವೀಯತೆಯ ಸೇವೆಗೆ ಮೀಸಲಾದ ಉದಾತ್ತ ಗುರಿಯನ್ನು ಹೊಂದಿರಬೇಕು. ವಿವಿಧ ವೃತ್ತಿಗಳು. ಇಂಜಿನಿಯರಿಂಗ್, ವೈದ್ಯಕೀಯ ಮತ್ತು ಸರ್ಕಾರಿ ಸೇವೆಯು ಗುರುವಿನ ಮಾರ್ಗದರ್ಶನ ಮತ್ತು ಸಮಾಜದ ಒಳಿತಿಗಾಗಿ ನಿಸ್ವಾರ್ಥ ಸೇವೆಯಿಂದ ನಿಜವಾದ ಯಶಸ್ಸು ಉಂಟಾಗುತ್ತದೆ ಎಂಬುದನ್ನು ಸ್ಪಷ್ಟವಾಗಿ ನಿರೂಪಿಸುತ್ತದೆ. ‘ಇನ್ ಕ್ವೆಸ್ಟ್ ಆಫ್ ಗುರು’ ಪುಸ್ತಕವು ಈ ಅಮೂಲ್ಯವಾದ ಬೋಧನೆಗಳನ್ನು ನೀಡುತ್ತದೆ.ಅದರ ಮಾರ್ಗದರ್ಶನವನ್ನು ಅನುಸರಿಸುವುದು ಒಬ್ಬನನ್ನು ದೈವಿಕ ಸ್ಥಿತಿಗೆ ಏರಿಸುತ್ತದೆ. ‘ಇನ್ ಕ್ವೆಸ್ಟ್ ಆಫ್ ಗುರು’ ಲೇಖಕ ಆನಂದ ಮ್ಯಾಥ್ಯೂಸ್, 13 ವರ್ಷಗಳ ಹಿಂದೆ ಭಾರತಕ್ಕೆ ಆಗಮಿಸಿದ, ನಮ್ಮ ಆಳವಾದ ಆಧ್ಯಾತ್ಮಿಕತೆಯನ್ನು ಅರ್ಥಮಾಡಿಕೊಂಡು ಆನಂದವಾಗಿ ರೂಪಾಂತರಗೊಂಡಿದ್ದಾರೆ. ಪ್ರಪಂಚದ ಎಲ್ಲಾ ಸಮಸ್ಯೆಗಳಿಗೆ ಭಾರತದಲ್ಲೇ ಉತ್ತರವಿದೆ ಎಂದು ಅವರು ಗುರುತಿಸಿದ್ದಾರೆ. ಆನಂದ ಮ್ಯಾಥ್ಯೂಸ್ ಎಲ್ಲವನ್ನೂ ತ್ಯಜಿಸಿ ಭಾರತದಲ್ಲಿ ಸತ್ಯದ ಅನ್ವೇಷಣೆ ಹುಡುಕಿದರೂ. ಈಗ ಅವರು ಪ್ರಪಂಚದಾದ್ಯಂತದ ಆಧ್ಯಾತ್ಮಿಕ ಅನ್ವೇಷಕರಿಗೆ ಭಾರತದ ಲೋಕ ಜ್ಞಾನವನ್ನು ನೀಡುತ್ತಿದ್ದಾರೆ.
|
7 |
+
ಈ ಪುಸ್ತಕವು ಸಂತೃಪ್ತ, ಆನಂದದಾಯಕ ಆನಂದ ಜೀವನಕ್ಕಾಗಿ ಸನಾತನ ಧರ್ಮ ಮತ್ತು ವೈದಿಕ ತತ್ವಗಳ ಆಧುನಿಕ ವಿಧಾನದ ಮೂಲಕ ಜ್ಞಾನೋದಯದ ಕಡೆಗೆ ಮಾನವ ಆತ್ಮದ ಪ್ರಯಾಣವನ್ನು ವಿವರಿಸುತ್ತದೆ. ಆಕರ್ಷಣೀಯ ನಿರೂಪಣೆಯ ಮೂಲಕ, ಓದುಗರನ್ನು ಸ್ವಯಂ-ಸಾಕ್ಷಾತ್ಕಾರ ಮತ್ತು ಆಧ್ಯಾತ್ಮಿಕ ಜಾಗೃತಿಯ ಪರಿವರ್ತಕ ಸಮುದ್ರಯಾನಕ್ಕೆ ಕರೆದೊಯ್ಯಲಾಗುತ್ತದೆ, ಸತ್ಯ ಮತ್ತು ಜ್ಞಾನಕ್ಕಾಗಿ ಸಾರ್ವತ್ರಿಕ ಅನ್ವೇಷಣೆಯನ್ನು ಪ್ರತಿಧ್ವನಿಸುತ್ತದೆ.
|
8 |
+
ಆನಂದ ಮ್ಯಾಥ್ಯೂಸ್ ಅವರು ಭಾರತ್ದಲ್ಲಿ ತಮ್ಮ ಆಳವಾದ ರೂಪಾಂತರವನ್ನು ಹಂಚಿಕೊಂಡಿದ್ದಾರೆ, ಮ್ಯಾಥ್ಯೂ ಡೇವಿಡ್ ಝ್ಸ್ಕೋಚೆಯಿಂದ ಆನಂದ ಮ್ಯಾಥ್ಯೂಸ್ವರೆಗಿನ ಪ್ರಯಾಣ, ಸತ್ಯದ ಅನ್ವೇಷಕರಿಗೆ ಶಾಶ್ವತ ಸಂತೋಷದ ಹಾದಿಗೆ ಮಾರ್ಗದರ್ಶನ ನೀಡುತ್ತಾರೆ. ಅವರ ಗುರು, ಡಿವೈನ್ ಕರ್ನಲ್ – ಅಶೋಕ್ ಕಿಣಿ ಜಿ ಅವರೊಂದಿಗಿನ ಅವರ ಮುಖಾಮುಖಿಯು ಒಂದು ಮಹತ್ವದ ತಿರುವು ನೀಡಿತು, ಭಾರತದ ಸದಾ ಅವರೋಹಣ ಆಧ್ಯಾತ್ಮಿಕ ಜ್ಞಾನವನ್ನು ಹಂಚಿಕೊಳ್ಳಲು ಸಮರ್ಪಿತವಾದ ಜೀವನದ ಕಡೆಗೆ ಅವರಿಗೆ ಮಾರ್ಗದರ್ಶನ ನೀಡಿತು.
|
9 |
+
ಅನೇಕರು ಗುರುವಿನ ಭೌತಿಕ ಉಪಸ್ಥಿತಿಯನ್ನು ಅನುಭವಿಸಲು ಸಾಧ್ಯವಾಗದಿರಬಹುದು ಆದರೆ ‘ಇನ್ ಕ್ವೆಸ್ಟ್ ಆಫ್ ಗುರು’ ಎಂಬ ಪದಗಳ ಹಿಂದಿನ ಶಕ್ತಿಯ ಮೂಲಕ, ಆಧ್ಯಾತ್ಮಿಕ ಅನ್ವೇಷಕರು ತಾವು ಪ್ರಬುದ್ಧ ಸಂತನ ಉಪಸ್ಥಿತಿಯಲ್ಲಿ ರೂಪಾಂತರಗೊಳ್ಳುತ್ತಿದ್ದಾರೆ ಎಂದು ಭಾವಿಸುತ್ತಾರೆ. ನಮ್ಮ ಜೀವನದ ಎಲ್ಲಾ ಆಳವಾದ ಪ್ರಶ್ನೆಗಳಿಗೆ ಪುಸ್ತಕವು ಉತ್ತರವನ್ನು ತೋರುತ್ತದೆ. ನೀವು ಓದುತ್ತಿರುವ ನಿಮ್ಮ ಪ್ರಯಾಣ ಎಂದು ನೀವು ಭಾವಿಸುವಿರಿ ಮತ್ತು ಪುಸ್ತಕವು ನಿಮ್ಮೊಂದಿಗೆ ನೇರವಾಗಿ ಮಾತನಾಡುತ್ತಿದೆ. ಆನಂದ ಮ್ಯಾಥ್ಯೂಸ್ ಮತ್ತು ಡಿವೈನ್ ಕರ್ನಲ್ ನಡುವಿನ ಸಂಭಾಷಣೆಯ ಮೂಲಕ – ಅಶೋಕ್ ಕಿಣಿ ಜಿ, ಆಳವಾದ ಆಧ್ಯಾತ್ಮಿಕತೆಯನ್ನು ಹಂಚಿಕೊಳ್ಳುತ್ತಾರೆ ಒಳನೋಟಗಳು ಮತ್ತು ಸಹಾನುಭೂತಿಯ ಮಾರ್ಗದರ್ಶನ, ಯಾವುದೇ ಸವಾಲನ್ನು ಜಯಿಸಲು ಸನಾತನ ಧರ್ಮದ ಸಾರವನ್ನು ಪ್ರಾಯೋಗಿಕವಾಗಿ ಹೇಗೆ ಅನ್ವಯಿಸಬೇಕು ಎಂಬುದನ್ನು ಓದುಗರು ಅರ್ಥಮಾಡಿಕೊಳ್ಳುತ್ತಾರೆ.
|
10 |
+
ಆಧ್ಯಾತ್ಮಿಕವಾದಿ ಡಿವೈನ್ ಕರ್ನಲ್ – ಅಶೋಕ್ ಕಿಣಿ ಜಿ ಮಂಗಳೂರು ಭಾಗದ ಕನ್ನಡಿಗ. ಕ್ಯಾಲಿಕಟ್ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದ ನಂತರ, ಅವರು ಭಾರತೀಯ ಸೇನೆಗೆ ಸೇರಿದರು ಮತ್ತು 20 ವರ್ಷಗಳ ವರ್ಣರಂಜಿತ ಸೇವೆಯನ್ನು ಹೊಂದಿದ್ದರು. ಅವರು ಶ್ರೀಲಂಕಾದಲ್ಲಿ ಭಾರತೀಯ ಶಾಂತಿಪಾಲನಾ ಪಡೆಯಲ್ಲಿದ್ದರು ಮತ್ತು ಅಂಗೋಲಾದಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಯಲ್ಲಿಯೂ ಸೇವೆ ಸಲ್ಲಿಸಿದರು. ಅವರು ಕಾರ್ಗಿಲ್ ಯುದ್ಧದ ಸಮಯದಲ್ಲಿ ಸಮಾರಂಭಗಳ ಉಸ್ತುವಾರಿ ವಹಿಸಿದ್ದರು ಮತ್ತು ಹುತಾತ್ಮರ ದೇಹಗಳ ಕೊನೆಯ ಪ್ರಯಾಣವನ್ನು ನಿರ್ವಹಿಸಿದರು.
|
11 |
+
ಮೇಜರ್ ಜನರಲ್ ಡಾ.ಜಿ.ಡಿ.ಬಕ್ಷಿ ಅವರು ಕರ್ನಲ್ ಕಿಣಿಯವರ ಮೇಲೆ ‘ಸ್ಮಶಾನ ಸಾಧನ’ವನ್ನು ಒತ್ತಾಯಿಸಲಾಯಿತು ಎಂದು ವಿವರಿಸುತ್ತಾರೆ, ಅವರು ಈ ಸವಾಲುಗಳನ್ನು ಜೀವನ ಮತ್ತು ದೈವತ್ವದ ಸತ್ಯವನ್ನು ಅರ್ಥಮಾಡಿಕೊಳ್ಳುವ ಅನ್ವೇಷಣೆಯೊಂದಿಗೆ ಆಧ್ಯಾತ್ಮಿಕ ಹಾದಿಯಲ್ಲಿ ಚಲಿಸುವ ಅವಕಾಶವನ್ನಾಗಿ ಪರಿವರ್ತಿಸಬಹುದು. “ಅವರು ಕಾಞಂಗಾಡ್ನ ಬಾಬಾ ನಿತ್ಯಾನಂದ, ಅವರ ಎಲ್ಲಾ ಗುರುಗಳು ಮತ್ತು ದೈವಿಕ ತಾಯಿಯಿಂದ ಆಶೀರ್ವದಿಸಿದ್ದಾರೆ” ಎಂದು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಜನರಲ್ ಬಕ್ಷಿ ಅವರು ಒತ್ತಿ ಹೇಳಿದರು. “ಡಿವೈನ್ ಕರ್ನಲ್” ಬಿರುದನ್ನು ಅವರಿಗೆ ಮಾಜಿ ರಾಷ್ಟ್ರಪತಿ, ಭಾರತರತ್ನ ಡಾ. ಎಪಿಜೆ ಅಬ್ದುಲ್ ಕಲಾಂ ಜಿ ಅವರ ಆಧ್ಯಾತ್ಮಿಕ ಮನೋಭಾವವನ್ನು ಗುರುತಿಸಿ, ಧರ್ಮವನ್ನು ಆಧ್ಯಾತ್ಮಿಕ ಶಕ್ತಿಯಾಗಿ ಪರಿವರ್ತಿಸುವ ಮತ್ತು ಸುಸ್ಥಿರ ಜೀವನದ ಸಂದೇಶವನ್ನು ಹರಡುವ ಉದ್ದೇಶದೊಂದಿಗೆ ಡಾ ಕಲಾಂ ಅವರಿಂದ ಗುರು ಮಂತ್ರವನ್ನು ಸ್ವೀಕರಿಸಲು ಅವರು ಆಶೀರ್ವದಿಸಿದರು.
|
12 |
+
‘ಇನ್ ಕ್ವೆಸ್ಟ್ ಆಫ್ ಗುರು’ ಈಗಾಗಲೇ ಜೀವನವನ್ನು ಸ್ಪರ್ಶಿಸಲು ಪ್ರಾರಂಭಿಸಿದೆ, ಜೀವನದ ಸವಾಲುಗಳನ್ನು ಜಯಿಸಲು ಮತ್ತು ನಿಸ್ವಾರ್ಥ ಸೇವೆಯ ಸಂತೋಷದಾಯಕ ಮಾರ್ಗಗಳನ್ನು ಪ್ರಾರಂಭಿಸಲು ವ್ಯಕ್ತಿಗಳನ್ನು ಪ್ರೇರೇಪಿಸುತ್ತದೆ. ಭಾರತದ ಅತ್ಯಂತ ಹಳೆಯ ಪ್ರಕಾಶಕರಾದ ಮೋತಿಲಾಲ್ ಬನಾರಸಿದಾಸ್ ಪಬ್ಲಿಷಿಂಗ್ ಹೌಸ್ () ಪ್ರಕಟಿಸಿದ ಈ ಪುಸ್ತಕವು ಸನಾತನ ಧರ್ಮದ ಕಾಲಾತೀತ ಬುದ್ಧಿವಂತಿಕೆಗೆ ಸಾಕ್ಷಿಯಾಗಿದೆ. ಅದರ ಆಳವಾದ ಸಂದೇಶವು ಪ್ರೇಕ್ಷಕರೊಂದಿಗೆ ಆಳವಾಗಿ ಪ್ರತಿಧ್ವನಿಸಿತು, ನಿಜವಾದ ಸಂತೋಷ ಮತ್ತು ಸಂತೃಪ್ತಿಯ ಪ್ರಯಾಣವು ಆವಿಷ್ಕರಿಸಲು ಕಾಯುತ್ತಿದೆ ಎಂಬ ಕಟುವಾದ ಜ್ಞಾಪನೆಯಾಗಿ ಕಾರ್ಯನಿರ್ವಹಿಸುತ್ತದೆ.
|
13 |
+
ಈ ಕಾರ್ಯಕ್ರಮವು ಜಗದ್ಗುರು ಶ್ರೀ ಶ್ರೀ ಡಾ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಪ್ರಬಲ ಸಂದೇಶದೊಂದಿಗೆ ಮುಕ್ತಾಯವಾಯಿತು: “ಆನಂದ ಮ್ಯಾಥ್ಯೂಸ್ ರೂಪಾಂತರಗೊಳ್ಳಲು ಸಾಧ್ಯವಾದರೆ, ಭಾರತ ಮತ್ತು ಪ್ರಪಂಚದ ಪ್ರತಿಯೊಬ್ಬ ಯುವಕ, ಪುರುಷ ಮತ್ತು ಮಹಿಳೆ ಬದಲಾಗಬಹುದು.”
|
14 |
+
ಬೆಂಗಳೂರಿನ ಪ್ರಮುಖ ವ್ಯಕ್ತಿಗಳೊಂದಿಗೆ ಪುಸ್ತಕ ಅನಾವರಣ ಸಮಾರಂಭದ ಭಾಗವಾಗಿದ್ದಕ್ಕಾಗಿ ಸ್ವಾಮೀಜಿ ಅವರು ಆಳವಾದ ಕೃತಜ್ಞತೆ ಮತ್ತು ಸಂತೋಷವನ್ನು ವ್ಯಕ್ತಪಡಿಸಿದರು. ಪುಸ್ತಕವನ್ನು ಬಿಡುಗಡೆ ಮಾಡಲು ಆಹ್ವಾನಿಸಿದ್ದಕ್ಕಾಗಿ ಅವರು ಡಿವೈನ್ ಕರ್ನಲ್ – ಅಶೋಕ್ ಕಿಣಿ ಜಿ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದರು. ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಅಧ್ಯಕ್ಷತೆಯಲ್ಲಿ ರಾಷ್ಟ್ರಪತಿ ಭವನದಲ್ಲಿ ನಡೆದ ಸಂವಾದದ ನೆನಪುಗಳನ್ನು ನೆನಪಿಸಿಕೊಂಡ ಸ್ವಾಮೀಜಿ, ಡಿವೈನ್ ಕರ್ನಲ್ ಅಪಾರವಾದ ಆಧ್ಯಾತ್ಮಿಕ ಜ್ಞಾನವನ್ನು ಹೊಂದಿದ್ದಾರೆ ಎಂದು ಗಮನಿಸಿದರು. ಅವರು ಮ್ಯಾಥ್ಯೂಗೆ ಈ ಆಳವಾದ ಬುದ್ಧಿವಂತಿಕೆಯನ್ನು ನೀಡಲು ಸಮರ್ಥರಾಗಿದ್ದರು, ಅವರಿಗೆ ಆನಂದ ಮ್ಯಾಥ್ಯೂಸ್ ಎಂದು ಸೂಕ್ತವಾಗಿ ಹೆಸರಿಸಿದರು, ಇದು ಜನರ ದುಃಖಗಳನ್ನು ನಿವಾರಿಸುವ ಮತ್ತು ಅವರ ಜೀವನಕ್ಕೆ ಸಂತೋಷವನ್ನು ತರುವ ಆತ್ಮವನ್ನು ಸೂಚಿಸುತ್ತದೆ
|
15 |
+
ಕಾರ್ಯಕ್ರಮದಲ್ಲಿ ಎಸ್.ವ್ಯಾಸ ಯೋಗ ವಿಶ್ವವಿದ್ಯಾನಿಲಯದ ಪದ್ಮಶ್ರೀ ಡಾ.ಎಚ್.ಆರ್. ನಾಗೇಂದ್ರ ಗುರೂಜಿ, ಮೇಜರ್ ಜನರಲ್ ಡಾ.ಜಿ.ಡಿ.ಭಕ್ಷಿ , ನ್ಯಾಯಮೂರ್ತಿ ಪಿ.ಕೃಷ್ಣ ಭಟ್, ಭಾರತೀಯ ಸೇನೆಯ ಮಾಜಿ ಲೆಫ್ಟಿನೆಂಟ್ ಜನರಲ್ಗಳಾದ ಎ.ನಟರಾಜನ್, ಪಿ.ಜಿ.ಕಾಮತ್ ಮುಂತಾದವರು ಉಪಸ್ಥಿತರಿದ್ದರು.
|
eesanje/url_46_181_9.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಚುನಾವಣಾ ‘ಹಬ್ಬ’ : ಕೈಗೆ ಸಿಗುತ್ತಿಲ್ಲ ಕೂಲಿ ಕಾರ್ಮಿಕರು
|
2 |
+
ಬೆಂಗಳೂರು, ಏ.11-ಕಟ್ಟಡ ನಿರ್ಮಾಣದ ಕಾರ್ಮಿಕರು ಸಿಕ್ತಿಲ್ಲ… ಕೂಲಿ ಕಾರ್ಮಿಕರು ಬರ್ತಿಲ್ಲ…ದಿನಗೂಲಿ ಕೆಲಸದವರೂ ಕೂಡ ಕೈಗೆ ಸಿಗ್ತಾಯಿಲ್ಲ….ಬಹುತೇಕ ಮಂದಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರದ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.
|
3 |
+
ತಮ್ಮ ತಮ್ಮ ಪಕ್ಷಗಳ ಪ್ರಚಾರಕ್ಕಾಗಿ ಕೂಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರನ್ನು ಕರೆದೊಯ್ಯುತ್ತಿರುವುದಕ್ಕೆ ನಗರ ಪ್ರದೇಶಗಳಲ್ಲಿ ಮನೆ ನಿರ್ಮಾಣ ಮತ್ತಿತರ ಕೆಲಸಗಳಿಗೆ ಸಧ್ಯ ಕಾರ್ಮಿಕರು ಸಿಗುತ್ತಿಲ್ಲ. ಗಾರೆ ಕೆಲಸ, ಇಟ್ಟಿಗೆ ಕೆಲಸ, ಸಿಮೆಂಟ್ ಕಾಂಕ್ರೀಟ್ ಕೆಲಸ, ಪೇಂಟರ್, ಕಾರ್ಪೇಂಟರ್ಗಳ ಹೆಲ್ಪರ್ಗಳಿಗೆ ದಿನವೊಂದಕ್ಕೆ 500 ರೂ. ಸಂಬಳ ಸಿಗುತ್ತಿದೆ.
|
4 |
+
ಪ್ರಸ್ತುತ ರಾಜಕೀಯ ಪಕ್ಷಗಳ ಬೆಂಬಲಿಗರು ಈ ಮಂದಿಯನ್ನು ಕರೆದೊಯ್ದು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡು 500 ರಿಂದ 1000 ರೂ. ಗಳವರೆಗೆ ಕೂಲಿ ನೀಡುತ್ತಿದ್ದಾರೆ. ಹೀಗಾಗಿ ಮೂರು ವಾರಗಳಿಂದ ಈ ವರ್ಗದ ಬಹುತೇಕ ಜನ ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯಕ್ಕೆ ತೆರಳುತ್ತಿದ್ದಾರೆ.
|
5 |
+
ಗಲ್ಲಿ ಗಲ್ಲಿಗಳಲ್ಲಿ ಪ್ರಚಾರ ನಡೆಸಿ, ಮನೆ ಮನೆಗೆ ತೆರಳಿ ಕರಪತ್ರಗಳನ್ನು ವಿತರಿಸಬೇಕು. ಪ್ರತಿದಿನ ಇಂತಿಷ್ಟು ಮನೆಗಳಿಗೆ ಕರ ಪತ್ರಗಳನ್ನು ಹಂಚಬೇಕು. ಬೆಳಗ್ಗೆಯಿಂದ ಸಂಜೆ ವರೆಗೆ ಮನೆ ಮನೆಗೆ ಕರಪತ್ರ ಹಂಚಿದರೆ ಸಂಜೆ ಅಂದಿನ ಬಟವಾಡೆ ಸಿಗುತ್ತದೆ.ಎರಡರಿಂದ ಮೂರು ವಾರ ಶ್ರಮವಿಲ್ಲದ ಕೆಲಸವೆಂಬುದನ್ನು ಅರಿತು ಬಹಳಷ್ಟು ಕಾರ್ಮಿಕರು ಪ್ರಚಾರ ಕಾರ್ಯಕ್ಕೆ ತೆರಳಿರುವುದರಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ನಗರ, ಪಟ್ಟಣ ಪ್ರದೇಶಗಳಲ್ಲಿ ಕಾರ್ಮಿಕರ ಕೊರತೆ ಕಾಡುತ್ತಿದೆ.
|
6 |
+
ಮನೆ, ಕಟ್ಟಡ, ಅಪಾರ್ಮೆಂಟ್ಗಳ ನಿರ್ಮಾಣ, ಹಲವೆಡ ಸ್ಥಗಿತಗೊಂಡಿರುವುದು ತಿಳಿದುಬಂದಿದೆ. ಪ್ರತಿದಿನ ಕೆಲಸಕ್ಕೆ ಹೋಗಿ ಶ್ರಮ ವಹಿಸುವ ಗಂಡಾಳಿಗೆ 500 ರಿಂದ 750 ರೂ. ವರೆಗೆ ಕೂಲಿ ಸಿಗುತ್ತದೆ. ಹೆಣ್ಣಾಳಿಗೆ 400 ರಿಂದ 600ರ ವರೆಗೆ ಕೂಲಿ ದೊರೆಯುತ್ತದೆ.
|
7 |
+
ಆದರೆ ಚುನಾವಣಾ ಪ್ರಚಾರದಲ್ಲಿ ತಲೆಯ ಮೇಲೆ ಪಕ್ಷಗಳ ಟೋಪಿ ಧರಿಸಿ ಹೆಗಲಮೇಲೊಂದು ಶಾಲು ಹಾಕಿಕೊಂಡು, ಕೈಯಲ್ಲಿ ಕರಪತ್ರ ಹಿಡಿದುಕೊಂಡು ಮನೆ ಮನೆಗೆ ಹೋಗಿ ಕೊಟ್ಟು ಬಂದರೆ ಆಯ್ತು. ಅಥವಾ ಪಕ್ಷಗಳ ಮುಖಂಡರು ಆಯೋಜಿಸುವ ಸಭೆ ಸಮಾರಂಭ, ಮೆರವಣಿಗೆಗಳಿಗೆ ಬಾವುಟ ಹಿಡಿದುಕೊಂಡು ಹೋಗಿ ಘೋಷಣೆಗಳನ್ನು ಕೂಗಿ ಬಂದರೆ ಸಾಕು ಊಟ, ತಿಂಡಿ ಆ ದಿನದ ಕೂಲಿ ಸುಲಭವಾಗಿ ಸಿಗುತ್ತದೆ. ಹೀಗಾಗಿ ಬಹುತೇಕ ಕೂಲಿ ಕಾರ್ಮಿಕರು ಪ್ರಚಾರ ಕಾರ್ಯಕ್ಕೆ ತೆರಳಿದ್ದಾರೆ.
|
eesanje/url_46_182_1.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪವರ್ ಸ್ಟಾರ್ ಪವನ್ ಕಲ್ಯಾಣ್ ಪ್ರಚಾರ
|
2 |
+
ಬೆಂಗಳೂರು,ಏ.11-ತೆಲುಗು ಮತದಾರರನ್ನು ಸೆಳೆಯಲು ಟಾಲಿವುಡ್ ಪವರ್ ಸ್ಟಾರ್ ಹಾಗೂ ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಅವರನ್ನು ರಾಜ್ಯಕ್ಕೆ ಬಿಜೆಪಿ ಕರೆ ತರುತ್ತಿದೆ. ತೆಲುಗು ಭಾಷಿಗರು ಹೆಚ್ಚಿರುವ 4 ಕ್ಷೇತ್ರಗಳಲ್ಲಿ ಏಪ್ರಿಲ್ 17ರಂದು ಪವನ್ ಕಲ್ಯಾಣ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ.
|
3 |
+
ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 17 ರಂದು ರಾಜ್ಯದಲ್ಲಿ ನಟ ಪವನ್ ಕಲ್ಯಾಣ್ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಕ್ಯಾಂಪೇನ್ ಮಾಡಲಿದ್ದಾರೆ. ರಾಯಚೂರು, ಬಳ್ಳಾರಿ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸುವ ಮೂಲಕ ಅಭ್ಯರ್ಥಿಗಳಾದ ರಾಜಾ ಅಮರೇಶ್ವರ ನಾಯಕ, ಬಿ.ಶ್ರೀರಾಮುಲು, ಡಾ. ಸುಧಾಕರ್, ತೇಜಸ್ವಿ ಸೂರ್ಯ ಪರ ಮತ ಯಾಚಿಸಲಿದ್ದಾರೆ.
|
4 |
+
ಗಡಿ ಜಿಲ್ಲೆಯಾದ ರಾಯಚೂರು ಆಂಧ್ರಪ್ರದೇಶದ ಜೊತೆ ನಂಟು ಹೊಂದಿದ್ದು, ತೆಲುವು ಭಾಷಿಕರು ಹೆಚ್ಚಿದ್ದಾರೆ. ಜೊತೆಗೆ ಆಂಧ್ರದ ಸಿನಿ ತಾರೆಯರ ಪ್ರಭಾವವೂ ಅವರ ಮೇಲೆ ಹೆಚ್ಚಿದೆ. ಹೀಗಾಗಿ ಅಲ್ಲಿನ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ್ ಪರ ಪ್ರಚಾರ ನಡೆಸಿ ತೆಲುಗು ಭಾಷಿಗರನ್ನು ಸೆಳೆಯುವ ಪ್ರಯತ್ನ ನಡೆಸಲಿದ್ದಾರೆ.
|
5 |
+
ಇನ್ನೂ ಬಳ್ಳಾರಿಯಂತೂ ತೆಲುಗು ಸೀಮೆಯ ಒಡನಾಟ ಇರಿಸಿಕೊಂಡ ಕ್ಷೇತ್ರ. ಸಹಜವಾಗಿ ರಾಜಕಾರಣದಲ್ಲಿ ತೆಲುಗು ಪ್ರಭಾವ ಹೆಚ್ಚಾಗಿದೆ. ಹೀಗಾಗಿ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ಪರ ಪವನ್ ಕಲ್ಯಾಣ್ ರೋಡ್ ಶೋ ನಡೆಸುವ ಮೂಲಕ ಮತಯಾಚಿಸಿ ಮತದಾರರನ್ನು ಸೆಳೆಯಲಿದ್ದಾರೆ. ಶ್ರೀರಾಮುಲು ಸ್ನೇಹಿತ ಪ್ರಭಾವಿ ರಾಜಕಾರಣಿ ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶ ಮಾಡದಂತೆ ನಿರ್ಬಂಧ ಇರುವ ಹಿನ್ನೆಲೆ, ಪವನ್ ಕಲ್ಯಾಣ್ ಪ್ರಚಾರ ಪಕ್ಷಕ್ಕೆ ಹೆಚ್ಚಿನ ಲಾಭ ತಂದುಕೊಡಲಿದೆ ಎನ್ನಲಾಗಿದೆ.
|
6 |
+
ಚಿಕ್ಕಬಳ್ಳಾಪುರ ಕೂಡ ತೆಲುಗು ಭಾಷಿಗರು ಹೆಚ್ಚಿರುವ ಕ್ಷೇತ್ರ. ತೆಲುಗು ಸಿನಿಮಾಗಳು ಹೆಚ್ಚಾಗಿ ಪ್ರಭಾವ ಬೀರಿರುವ ಕ್ಷೇತ್ರ. ಹಾಗಾಗಿ ಇಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್ ಪರ ಪವನ್ ಕಲ್ಯಾಣ್ ಪ್ರಚಾರ ನಡೆಸಲಿದ್ದಾರೆ. ಆ ಮೂಲಕ ತೆಲುಗು ಮತದಾರರ ಮತಗಳು ಬಿಜೆಪಿ ಕಡೆ ವಾಲಿದರೆ, ಬಿಜೆಪಿ ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗಲಿದೆ ಎನ್ನುವುದು ಬಿಜೆಪಿ ಲೆಕ್ಕಾಚಾರ. ರಾಜಧಾನಿ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲೂ ತೆಲುಗು ಮಂದಿ ಹೆಚ್ಚಿದ್ದಾರೆ.
|
7 |
+
ಈ ಹಿನ್ನೆಲೆ, ಪವನ್ ಕಲ್ಯಾಣ್ ಪ್ರಚಾರ ನಡೆಸಲಿದ್ದಾರೆ. ಇಲ್ಲಿ ಕಳೆದ 32 ವರ್ಷಗಳಿಂದಲೂ ಬಿಜೆಪಿಯೇ ಗೆಲುವು ಪಡೆಯುತ್ತಾ ಬಂದಿದೆ. ಈ ಕ್ಷೇತ್ರದಲ್ಲಿ ಅನಂತ್ ಕುಮಾರ್ ಮೂರು ದಶಕಗಳ ಕಾಲ ಹಿಡಿತ ಹೊಂದಿದ್ದರು. ಅವರ ನಿಧನದ ನಂತರವೂ ಕ್ಷೇತ್ರ ಬಿಜೆಪಿ ಹಿಡಿತದಲ್ಲೇ ಇದೆ. ತೇಜಸ್ವಿ ಸೂರ್ಯ ಎರಡನೇ ಬಾರಿ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ.
|
8 |
+
ಆ���ರೆ, ಈ ಬಾರಿ ಗೆಲುವಿಗಾಗಿ ಪೈಪೋಟಿ ಜೋರಾಗಿದೆ. ಸೌಮ್ಯ ರೆಡ್ಡಿ ಅವರು ಕಾಂಗ್ರೆಸ್ನಿಂದ ಸ್ಪರ್ಧೆ ಮಾಡಿದ್ದು, ತೆಲುಗು ಭಾಷಿಕರ ಮೇಲೆ ರಾಮಲಿಂಗಾ ರೆಡ್ಡಿ ಕುಟುಂಬದ ಹಿಡಿತ ಇದೆ. ಹಾಗಾಗಿ ತೆಲುಗು ಮತದಾರರು ಪಕ್ಷದಿಂದ ದೂರ ಸರಿಯದಂತೆ ಮಾಡಲು ಪವನ್ ಕಲ್ಯಾಣ್ ಅವರನ್ನು ಕರೆತಂದು ಪ್ರಚಾರ ಮಾಡಿಸಲಾಗುತ್ತಿದೆ ಎನ್ನಲಾಗಿದೆ.
|
eesanje/url_46_182_10.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಮೇ ತಿಂಗಳಲ್ಲಿ ಮತ್ತಷ್ಟು ಏರಲಿದೆ ತಾಪಮಾನ, ಇರಲಿ ಎಚ್ಚರ
|
2 |
+
ಬೆಂಗಳೂರು,ಏ.8-ಭಾರತ ಹವಾಮಾನ ಇಲಾಖೆಯು ಮುನ್ಸೂಚನೆ ಅನ್ವಯ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2 ರಿಂದ 3 ಡಿಗ್ರಿ ಸೆ. ನಷ್ಟು ಅಧಿಕ ತಾಪಮಾನ ದಾಖಲಾಗುತ್ತಿದೆ. ಇದು ಮಾನವ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದೆ.
|
3 |
+
ರಾಜ್ಯದಲ್ಲಿ ಏಪ್ರಿಲ್, ಮೇ ಅವಧಿಯಲ್ಲಿ ಬಿಸಿ ವಾತಾವರಣವು ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಾಗಿರಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಲಾಗಿದೆ. ರಾಜ್ಯದಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು 2-14 ದಿನಗಳು ಮೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಅತೀ ಹೆಚ್ಚು ತಾಪಮಾನದಿಂದ ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾಮಾನ್ಯ ಸೂಚನೆಗಳನ್ನು ನೀಡಲಾಗಿದೆ.
|
4 |
+
ಸಾಧ್ಯವಾದಷ್ಟು ಮಟ್ಟಿಗೆ ಮಧ್ಯಾಹ್ನದ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು, ಕಾಲಕಾಲಕ್ಕೆ ಸಾಕಷ್ಟು ನೀರು ಕುಡಿಯುವುದು, ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿಬಟ್ಟೆಗಳನ್ನು ಧರಿಸುವುದು, ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ / ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸುವುದು, ಹೊರಗಿನ ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸುವುದು, ಪ್ರಯಾಣಿಸುವಾಗ ನೀರನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗುವುದು, ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್ ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳ ಸೇವನೆ ಮಾಡಬಾರದು ಹಾಗೂ ಬಿಸಿ ಆಹಾರವನ್ನು ಸೇವಿಸುವುದು ಸೇರಿದಂತೆ ಹಲವು ಸಲಹೆಗಳನ್ನು ಆರೋಗ್ಯ ಇಲಾಖೆ ನೀಡಿದೆ.
|
5 |
+
ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ಹಣ್ಣುಗಳನ್ನು ಬಳಸುವುದು. ಸಾಕುಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸಬೇಕು.
|
6 |
+
ಅತೀ ಹೆಚ್ಚು ತಾಪಮಾನ ಸಮಯದಲ್ಲಿ ಬೆಂಕಿಯ ತಡೆಗಟ್ಟುವಿಕೆ:
|
7 |
+
ಆಸ್ಪತ್ರೆಗಳು, ಕೈಗಾರಿಕೆಗಳು, ಜನಸಂದಣಿ ಸ್ಥಳಗಳು ಇತ್ಯಾದಿಗಳಲ್ಲಿ ಅಗ್ನಿ ಸುರಕ್ಷತೆಯ ವಿವಿಧ ಅಂಶಗಳ ಮೇಲೆ ಆಗಾಗ್ಗೆ ತಪಾಸಣೆ ಕೈಗೊಳ್ಳುವುದು. ಅಗ್ನಿ ಸುರಕ್ಷತೆಗೆ ತರಬೇತಿಗಳನ್ನು ಕೈಗೊಳ್ಳುವುದು. ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್ ಕಡ್ಡಾಯವಾಗಿ ನಡೆಸುವುದು.
|
8 |
+
ಅತೀ ಹೆಚ್ಚು ತಾಪಮಾನ ತಡೆಗಟ್ಟುವ ಕುರಿತಂತೆ ಇಲಾಖಾವಾರು ಕರ್ತವ್ಯ / ಜವಾಬ್ದಾರಿಗಳನ್ನು ಅತೀ ಹೆಚ್ಚು, ತಾಪಮಾನದ ಕ್ರಿಯಾ ಯೋಜನೆಗಳಲ್ಲಿ ನಿಗದಿಪಡಿಸಲಾಗಿರುತ್ತದೆ. ಕ್ರಿಯಾ ಯೋಜನೆಗಳಡಿಯಲ್ಲಿ ಇಲಾಖೆಗಳಿಗೆ ನಿಗದಿಪಡಿಸಿರುವಂತೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಲು ಅಧಿಕೃತ ಪ್ರಕಟಣೆ ತಿಳಿಸಿದೆ.
|
eesanje/url_46_182_11.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ನಮ್ಮ ರಾಷ್ಟ್ರ ಮುನ್ನಡೆಸಲು ತಪ್ಪದೆ ಮತ ಚಲಾಯಿಸೋಣ : ರಮೇಶ್ ಅರವಿಂದ್
|
2 |
+
ಬೆಂಗಳೂರು, ಏ.8-ನಮ್ಮ ರಾಷ್ಟ್ರವನ್ನು ಮುನ್ನೆಡಸಲು ಎಲ್ಲರೂ ಒಂದಾಗಿ ತಪ್ಪದೆ ಮತ ಚಲಾಯಿಸೋಣ ಎಂದು ಚುನಾವಣಾ ರಾಯಭಾರಿ ಹಾಗೂ ಚಿತ್ರನಟ ರಮೇಶ್ ಅರವಿಂದ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿಂದು ಬಸವನಗುಡಿಯ ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾವೆಲ್ಲರೂ ಒಟ್ಟಾಗಿ ಪ್ರಜಾಪ್ರಭುತ್ವಕ್ಕೆ ಹಲೋ ಎಂದಾಗ ಮಾತ್ರ ನಾವು ಪ್ರಜಾಪ್ರಭುತ್ವಕ್ಕೆ ನ್ಯಾಯ ಒದಗಿಸಲು ಸಾಧ್ಯ ಎಂದು ಹೇಳಿದರು.
|
3 |
+
ಶೇ.20 ರಷ್ಟು ಮಂದಿ ಒಂದಾಗಿ ಕೂಗಿದಾಗ ಹೆಚ್ಚು ಶಬ್ದ ಬರಲು ಸಾಧ್ಯವಿಲ್ಲ. ಅದೇ ಶೇ. 100ರಷ್ಟು ಮಂದಿ ಒಟ್ಟಾಗಿ ಕೂಗಿದಾಗ ಶಬ್ದ ಜೋರಾಗಿ ಬರಲಿದೆ. ಅದೇ ರೀತಿ ಚುನಾವಣೆಯಲ್ಲಿಯೂ ಶೇ. 20 ರಷ್ಟು ಮತದಾನ ಮಾಡಿದರೆ ಯಾವುದೇ ಪ್ರಯೋಜನವಿಲ್ಲ. ಎಲ್ಲರೂ ಒಟ್ಟಾಗಿ ಶೇ.100ರಷ್ಟು ಮತ ಚಲಾಯಿಸಿದಾಗ ಮಾತ್ರ ನಾವು ಉತ್ತಮ ಪ್ರಜಾಪ್ರಭುತ್ವವನ್ನು ಕಟ್ಟಲು ಸಾಧ್ಯ ಎಂದು ಹೇಳಿದರು.
|
4 |
+
ಗೂಗಲ್ನಲ್ಲಿ ನಿಮ್ಮ ಕ್ಷೇತ್ರದ ಆಭ್ಯರ್ಥಿ ಯಾರು, ಏನೇನು ಕೆಲಸ ಮಾಡಿದ್ದಾರೆ, ಅವರ ಹಿನ್ನೆಲೆ ಏನು, ಅವರ ನೀಡಿದ್ದ ಪ್ರಣಾಳಿಕೆಯಲ್ಲಿ ಕಳೆದ 5 ವರ್ಷಗಳಲ್ಲಿ ಏನೆಲ್ಲಾ ಈಡೇರಿಸಿದ್ದಾರೆ ಎಂಬುದನ್ನು ಪರಿಶೀಲಿಸಿ. ಯಾವುದಾದರೂ ಅಭ್ಯರ್ಥಿಗೆ ಮತದಾನ ಮಾಡಿದರೆ ಅವರು ನಮಗೆ ಏನು ಮಾಡುತ್ತಾರೆ ಎಂಬುದನ್ನು ಕೂಲಂಕುಶವಾಗಿ ಆಲೋಚಿಸಿ ಮತದಾನ ಮಾಡಿ. ಯಾರೋ ಹೇಳಿದ ಮಾತು ಕೇಳಿ ಮತದಾನ ಮಾಡಬೇಡಿ ಎಂದು ಕಿವಿಮಾತು ಹೇಳಿದರು.
|
5 |
+
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಕಾಂತರಾಜು ಮಾತನಾಡಿ, ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಯುವ ಮತದಾರರು ಏ.26ರಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಮತದಾನ ಮಾಡುವ ಅವಕಾಶವಿದ್ದು, ಎಲ್ಲರೂ ತಪ್ಪದೆ ಮತ ಚಲಾಯಿಸಲು ತಿಳಿಸಿದರು.
|
6 |
+
ಪ್ರತಿಜ್ಞಾ ವಿಧಿ ಸ್ವೀಕಾರ:ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಎಂಎಸ್ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಮತದಾನ ಪ್ರತಿಜ್ಞಾ ವಿಧಿ ಸ್ವೀಕರಿಸಿ ಎಲ್ಲರೂ ತಪ್ಪದೆ ಮತದಾನ ಮಾಡುವುದಾಗಿ ತಿಳಿಸಿದರು. ಈ ವೇಳೆ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಪ್ರತಿಭಾ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸ್ವೀಪ್ ನೋಡಲ್ ಅಧಿಕಾರಿ ರಮಾಮಣಿ, ಬಿಎಂಎಸ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಸುಂದರಾ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
|
eesanje/url_46_182_12.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ದಾವಣಗೆರೆಯಿಂದ ಜಿ.ಬಿ.ವಿನಯ್ ಕುಮಾರ್ ಸ್ಪರ್ಧೆ ಖಚಿತ
|
2 |
+
ದಾವಣಗೆರೆ,ಏ.8-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕವೂ ದಾವಣಗೆರೆಯಲ್ಲಿ ಟಿಕೆಟ್ ವಂಚಿತ ಜಿ.ಬಿ.ವಿನಯ್ಕುಮಾರ್ ಬಂಡಾಯವಾಗಿ ಸ್ಪರ್ಧೆ ಮಾಡುವ ಇಂಗಿತದಿಂದ ಹಿಂದೆ ಸರಿದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ದಾವಣಗೆರೆಯಲ್ಲಿ ಕುಟುಂಬ ರಾಜಕಾರಣದಿಂದ ರೊಚ್ಚಿಗೆದ್ದು ನಿಂತಿರುವ ವಿನಯ್ಕುಮಾರ್, ಈವರೆಗೂ 6 ಕ್ಷೇತ್ರಗಳಲ್ಲಿ ಸಂಚರಿಸಿ ಜನರ ಅಭಿಪ್ರಾಯ ಸಂಗ್ರಹಿಸಿದ್ದಾರೆ.
|
3 |
+
ದಾವಣಗೆರೆ ಉತ್ತರ ಹಾಗೂ ಮಾಯಕೊಂಡ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಜನರ ಅಭಿಪ್ರಾಯ ಪಡೆದ ಬಳಿಕ ಪಕ್ಷೇತರನಾಗಿ ಸ್ಪರ್ಧೆ ಮಾಡಬೇಕೋ ಅಥವಾ ಬೇಡವೋ ಎಂಬ ಕುರಿತು ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.
|
4 |
+
ನಿನ್ನೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದೇವೆ. ಅದೊಂದು ಸೌಜನ್ಯಯುತವಾದ ಭೇಟಿ. ಭೇಟಿ ಮಾಡಿದಾಕ್ಷಣ ನಾನು ಬಂಡಾಯ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ ಎಂಬ ಅಭಿಪ್ರಾಯಕ್ಕೆ ಬರಬೇಡಿ, ಮುಖ್ಯಮಂತ್ರಿಯವರ ಬಳಿಯೂ ಪಕ್ಷೇತರನಾಗಿ ನಿಂತರೆ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂದು ಮನವರಿಕೆ ಮಾಡಿಕೊಟ್ಟಿದ್ದೇನೆ. ಅದಕ್ಕೆ ಅವರು ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಸಲಹೆ ನೀಡಿದ್ದಾರೆ.
|
5 |
+
ಮುಂದಿನ ದಿನಗಳಲ್ಲಿ ನಾವು ನಿನ್ನನ್ನು ಬೆಳೆಸುತ್ತೇವೆ, ಉತ್ತಮ ಭವಿಷ್ಯವಿದೆ, ಯಾವುದೇ ನಿರ್ಧಾರ ಮಾಡಬೇಡಿ ಎಂದು ಹೇಳಿದ್ದಾರೆ. ಆದರೆ ತಾವು ಬಂಡಾಯ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ ಎಂದು ವ್ಯಾಖ್ಯಾನ ಮಾಡುವುದು ಬೇಡ. ಇನ್ನೆರೆಡು ಕ್ಷೇತ್ರಗಳಲ್ಲಿ ಜನರ ಅಭಿಪ್ರಾಯ ಪಡೆದ ಬಳಿಕ ನನ್ನ ನಿರ್ಧಾರವನ್ನುತಿಳಿಸುತ್ತೇನೆ. ಸದ್ಯಕ್ಕೆ ನಾನಿನ್ನೂ ಪಕ್ಷೇತರರಾಗಿ ಸ್ರ್ಪಧಿಸುವ ಇರಾದೆಯಲ್ಲಿಯೇ ಇರುವುದಾಗಿ ಹೇಳಿದ್ದಾರೆ.
|
6 |
+
ಶ್ಯಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೆ ಲೋಕಸಭಾ ಚುನಾವಣೆಯ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ವಿನಯ್ಕುಮಾರ್ ರೊಚ್ಚಿಗೆದ್ದಿದ್ದು, ಪಕ್ಷೇತರನಾಗಿ ಸ್ರ್ಪಧಿಸುವ ಪ್ರಯತ್ನ ಮಾಡುತ್ತಿದ್ದಾರೆ.
|
eesanje/url_46_182_2.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆಗೆ ನಾಳೆ ಅಧಿಸೂಚನೆ
|
2 |
+
ಬೆಂಗಳೂರು,ಏ.11-ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಮತಬೇಟೆ ರಂಗೇರಿರುವ ಬೆನ್ನಲ್ಲೇ ಉಳಿದ 14 ಕ್ಷೇತ್ರಗಳಿಗೆ ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ. ಬಹುತೇಕ ರಾಜ್ಯದ ಮದ್ಯಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಸೇರಿದಂತೆ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
|
3 |
+
ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಇದೇ ತಿಂಗಳ 19 ಕಡೆಯ ದಿನವಾಗಿದ್ದು, 20 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, 22 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ 7 ರಂದು ಮತದಾನ ನಡೆಯಲಿದೆ. ಇದೇ ವೇಳೆ ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆಯಲಿದ್ದು, ಆಯೋಗ ಅಧಿಸೂಚನೆಯನ್ನು ಹೊರಡಿಸಲಿದೆ.
|
4 |
+
ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗಳು ಲೋಕಸಭಾ ಚುನಾವಣೆಗೆ ನಿಗದಿಪಡಿಸಿರುವ ದಿನಾಂಕಗಳೇ ಅನ್ವಯವಾಗಲಿದೆ. 2ನೇ ಹಂತದಲ್ಲಿ ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ಬೀದರ್, ವಿಜಾಪುರ, ಕಲಬುರಗಿ, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಉತ್ತರಕನ್ನಡ ಲೋಕಸಭಾ ಕ್ಷೇತ್ರಗಳಿಗೆ ಜೂನ್ 7 ರಂದು ಮತದಾನ ನಡೆಯಲಿದೆ.
|
5 |
+
2 ನೇ ಹಂತದಲ್ಲಿ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 2,88,08,182 ಮತದಾರರು ಮತದಾನದ ಹಕ್ಕು ಹೊಂದಿದ್ದಾರೆ. ಇದರಲ್ಲಿ ಪುರುಷರು 1,44,17,530, ಮಹಿಳೆಯರು 1,43,87,585, ತೃತೀಯ ಲಿಂಗಿಗಳು 3067, ಸೇವಾ ಮತದಾರರು 11,160, ಯುವ ಮತದಾರರು 599,444, ದಿವ್ಯಾಂಗ ಮತದಾರರು 2,76,042, 85 ವರ್ಷ ಮೇಲ್ಪಟ್ಟವರು 3,40,856, 2,849 ಸಾಗರೋತ್ತರ ಮತದಾರರು ಮತದಾನದ ಹಕ್ಕು ಹೊಂದಿದ್ದಾರೆ.
|
6 |
+
ಮೇ 7 ರಂದು ನಡೆಯಲಿರುವ ಚುನಾವಣೆಗೆ ಈ ಬಾರಿ ಸ್ಪರ್ಧಾ ಕಣದಲ್ಲಿ ಘಟಾನುಘಟಿ ನಾಯಕರು ಇದ್ದಾರೆ.ರಾಜ್ಯದ ಗಮನ ಸೆಳೆದಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ, ಬಿ.ವೈ.ವಿಜಯೇಂದ್ರ, ಕೆ.ಎಸ್.ಈಶ್ವರಪ್ಪ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಪತ್ನಿ ಗೀತಾ ಶಿವರಾಜ್ಕುಮಾರ್ ಕಣದಲ್ಲಿದ್ದಾರೆ.
|
7 |
+
ದಾವಣಗೆರೆಯಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪತ್ನಿ ಪ್ರಭಾ ಮಲ್ಲಿಕಾರ್ಜುನ್, ಗಾಯತ್ರಿ ಸಿದ್ದೇಶ್ವರ್, ಬಳ್ಳಾರಿಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮಲು, ಹಾವೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬೆಳಗಾವಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬೀದರ್ನಲ್ಲಿ ಕೇಂದ್ರ ಸಚಿವ ಭಗವಂತ್ ಕೂಬಾ ಕಣದಲ್ಲಿರುವ ಪ್ರಮುಖರು.
|
8 |
+
ಇನ್ನು ಕಾಂಗ್ರೆಸ್ನಿಂದ ಪ್ರಮುಖವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರ ಅಳಿಯ ರಾಧಾಕೃಷ್ಣನ್ ಕಲಬುರಗಿಯಿಂದ, ಸಚಿವರಾದ ಸತೀಶ್ ಜಾರಕಿಹೊಳಿ ಪು��್ರಿ ಪ್ರಿಯಾಂಕ ಜಾರಕಿಹೊಳಿ ಚಿಕ್ಕೋಡಿಯಿಂದ, ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಬೆಳಗಾವಿಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಪ್ರಹ್ಲಾದ್ ಜೋಷಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ, ರಾಮಲು ವಿರುದ್ಧ ಶಾಸಕ ತುಕಾರಾಂ, ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಬೀದರ್ನಿಂದ ಹೀಗೆ ಘಟಾನುಘಟಿ ನಾಯಕರು ತಮ್ಮ ಅದೃಷ್ಟವನ್ನು ಪಣಕ್ಕಿಟ್ಟಿದ್ದಾರೆ.ಅಂತಿಮವಾಗಿ ಮತದಾರರ ಕೃಪೆ ಯಾರಿಗೆ ಎಂಬುದು ಜೂನ್ 4 ರ ಫಲಿತಾಂಶದವರೆಗೆ ಕಾಯಲೇಬೇಕು.
|
eesanje/url_46_182_3.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಏ.14ರಂದು ರಾಜ್ಯದಲ್ಲಿ ಪ್ರಧಾನಿ ಮೋದಿ ಮತಬೇಟೆ, ದೇವೇಗೌಡರ ಸಾಥ್
|
2 |
+
ಬೆಂಗಳೂರು,ಏ.11-ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಈ ಹೊತ್ತಿನಲ್ಲಿ ರಾಜ್ಯದಲ್ಲಿ ಪಕ್ಷಗಳಿಂದ ಪ್ರಚಾರ ಜೋರಾಗಿದೆ. ಇದೇ ಭಾನುವಾರ ಏಪ್ರಿಲ್ 14ರಂದು ಪ್ರಧಾನಿ ಮೋದಿಯವರು ಕರ್ನಾಟಕಕ್ಕೆ ಬಂದು ಮತ್ತೊಂದು ಸುತ್ತಿನ ಪ್ರಚಾರ ನಡೆಸಲಿದ್ದಾರೆ.
|
3 |
+
ಕರ್ನಾಟಕ ಬಿಜೆಪಿ ತನ್ನ ರಾಜಕೀಯ ಪ್ರಚಾರದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಅಭಿಮಾನಿಗಳು ಮತ್ತು ಅನುಯಾಯಿಗಳಾದ ಸಾಮಾನ್ಯ ಜನರಿಗೆ ನಾನು ಮೋದಿ ಪರಿವಾರ, ಮೋದಿಗಾಗಿ ಒಂದು ಭಾನುವಾರ (ಮೋದಿಗಾಗಿ ಭಾನುವಾರ) ಅಭಿಯಾನದಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತಿದೆ. ಈ ನಿಟ್ಟಿನಲ್ಲಿ ಪ್ರಚಾರ ಕಾರ್ಯ ತೀವ್ರಗೊಳಿಸಿದೆ.
|
4 |
+
ಏಪ್ರಿಲ್ 14 ರಂದು ಮೈಸೂರಿನ ರ್ಯಾಲಿಯಲ್ಲಿ ವೇದಿಕೆ ಹಂಚಿಕೊಳ್ಳಲಿರುವ ಪ್ರಧಾನಿ ಮೋದಿ, ದೇವೇಗೌಡ:ಮೈಸೂರಿನಲ್ಲಿ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವೇದಿಕೆ ಹಂಚಿಕೊಳ್ಳುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಮತ್ತು ಹಾಸನ ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಗೆಲುವಿಗೆ ಪೈಪೋಟಿ ನಡೆಸುತ್ತಿದೆ.
|
5 |
+
ಸಂಜೆ 4 ಗಂಟೆಗೆ ಸಾರ್ವಜನಿಕರೊಂದಿಗೆ ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನದ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ.ಮೈಸೂರಿನಲ್ಲಿ ದೇವೇಗೌಡರ ಉಪಸ್ಥಿತಿಯಿಂದ ಹಳೇ ಮೈಸೂರು ಭಾಗದಲ್ಲಿ ತಮ್ಮ ಪಕ್ಷಕ್ಕೆ ಬಲ ಬರಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಇಲ್ಲಿ ಜೆಡಿಎಸ್ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಪಕ್ಷದ ಗೆಲುವಿಗೆ ಸಹಕಾರಿಯಾಗಲಿದೆ.
|
6 |
+
ರ್ಯಾಲಿ ಮತ್ತು ರೋಡ್ ಶೋನಲ್ಲಿ ಭಾಗವಹಿಸುವ ಜನರಿಗೆ ಪಕ್ಷದ ಚಿಹ್ನೆಯಾದ ಕಮಲದ ಆಧಿಕಾರದಲ್ಲಿ ಮೆಹೆಂದಿಯನ್ನು ತಮ್ಮ ಅಂಗೈಗೆ ಹಾಕಿಕೊಳ್ಳುವಂತೆ ಬಿಜೆಪಿ ಮನವಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.
|
7 |
+
ಮಂಗಳೂರಿನಲ್ಲಿ ರೋಡ್ ಶೋ :ಮಂಗಳೂರಿನ ನಾರಾಯಣ ಗುರು ವೃತ್ತದಿಂದ ಹಂಪನಕಟ್ಟೆ ವರೆಗೆ ಸುಮಾರು 2 ಕಿ.ಮೀ ವರೆಗೆ ಪ್ರಧಾನಿ ರೋಡ್ ಶೋ ನಡೆಸಲಿದ್ದಾರೆ ಎಂದು ದಕ್ಷಿಣ ಕನ್ನಡ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಇದು ಬಲ್ಲಾಳ್ಬಾಗ್, ಪಿವಿಎಸ್ ಜಂಕ್ಷನ್ ಮತ್ತು ನವಭಾರತ ವೃತ್ತದ ಮೂಲಕ ಹಾದುಹೋಗುತ್ತದೆ. ರೋಡ್ ಶೋ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಲು ಪಕ್ಷವು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಲಿದೆ ಎಂದು ಹೇಳಿದರು.
|
8 |
+
ಮಂಗಳೂರು ನಗರ ದಕ್ಷಿಣ, ಮಂಗಳೂರು ನಗರ ಉತ್ತರ, ಮಂಗಳೂರು, ಮೂಡುಬಿದಿರೆಯಿಂದ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿದೇಶಾಂಗ ಸಚಿವ ಜೈ ಶಂಕರ್ 15ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ.
|
eesanje/url_46_182_4.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಚಮತ್ಕಾರ : ನಾಪತ್ತೆಯಾಗಿ ಭಾರೀ ಸಂಚಲನ ಸೃಷ್ಟಿಸಿದ್ದ ಕಡತ ಕೆಪಿಎಸ್ಸಿ ಕಚೇರಿಯಲ್ಲೇ ಪತ್ತೆ.!
|
2 |
+
ಬೆಂಗಳೂರು,ಏ.10-ಎರಡು ತಿಂಗಳಿಂದ ನಾಪತ್ತೆಯಾಗಿದ್ದ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಕಿರಿಯ ಎಂಜಿನಿಯರ್ ನೇಮಕಾತಿ ಆಯ್ಕೆ ಪಟ್ಟಿ ಕಡತ ಕರ್ನಾಟಕ ಲೋಕಸೇವಾ ಆಯೋಗ ಕಚೇರಿಯಲ್ಲೇ ಪತ್ತೆಯಾಗಿದೆ.
|
3 |
+
2016 ರಲ್ಲಿ ಕೊಳಗೇರಿ ಮಂಡಳಿ ಜೂನಿಯರ್ ಇಂಜಿನಿಯರ್ ನೇಮಕಾತಿ ಪರೀಕ್ಷೆ ನಡೆದಿತ್ತು. 2018ರಲ್ಲಿ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಚ್.ಡಿ. ವಿವೇಕಾನಂದ ಎಂಬುವವರು ಹೈಕೋರ್ಟ್ ಮೊರೆ ಹೋಗಿದ್ದರು. ಬಳಿಕ ಹೈಕೋರ್ಟ್ ಆದೇಶದಂತೆ ಕೆಪಿಎಸ್ಸಿ ಗೌಪ್ಯ ಶಾಖೆ-3 ರಲ್ಲಿ ಆಯ್ಕೆ ಪಟ್ಟಿ ತಯಾರಿಸಲಾಗಿತ್ತು. ಜನವರಿ 22 ರಂದು ಕಾರ್ಯದರ್ಶಿಯವರ ಆಪ್ತ ಶಾಖೆಯಲ್ಲಿ ಕಡತ ಸ್ವೀಕಾರ ಮಾಡಲಾಯಿತು. ಆ ಬಳಿಕ ಕಡತ ನಾಪತ್ತೆಯಾಗಿತ್ತು.
|
4 |
+
ಬಳಿಕ ಕೆಪಿಎಸ್ಸಿಯ ಎಲ್ಲ ಶಾಖೆಗಳಲ್ಲೂ ಕಡತಕ್ಕಾಗಿ ಶೋಧ ನಡೆಸಲಾಯ್ತು. ಕಡತ ಪತ್ತೆಯಾದಲ್ಲಿ ಕೂಡಲೇ ಶಾಖೆ-2ಕ್ಕೆ ಹಿಂದಿರುಗಿಸುವಂತೆ ಕೆಪಿಎಸ್ಸಿ ಜಾ್ಞಪನ ಹೊರಡಿಸಿತ್ತು. ಬಳಿಕ ಕೆಪಿಎಸ್ಸಿ ಸಿಬ್ಬಂದಿಯಿಂದ ಕಡತಕ್ಕಾಗಿ ಎಲ್ಲೆಡೆ ಶೋಧ ನಡೆಸಿದೆ. ಅಧಿಕಾರಿ, ಸಿಬ್ಬಂದಿ ಸುಮಾರು ಒಂದು ತಿಂಗಳು ಕಾಲ ಶೋಧ ನಡೆಸಿದರು. ಆದರೆ ಕಡೆತ ಎಲ್ಲೂ ಸಿಕ್ಕಿರಲಿಲ್ಲ.
|
5 |
+
ಹೀಗಾಗಿ ಕಡತ ನಾಪತ್ತೆ ಬಗ್ಗೆ ದೂರು ದಾಖಲಿಸಲು ಆಯೋಗ ಸಭೆ ನಡೆಸಿ ನಿರ್ಧಾರ ಕೈಗೊಂಡು, ಕಾರ್ಯದರ್ಶಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನೆ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿ, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದರು.
|
6 |
+
ಘಟನೆ ಸಂಬಂಧ ಮಾಧ್ಯಮಗಳಲ್ಲಿ ಸುದ್ದಿಯಾದ ಬೆನ್ನಲ್ಲೇ ಕಡತ ಪತ್ತೆಯಾಗಿದೆ. ಕಡತ ಪತ್ತೆಯಾದ ಬಗ್ಗೆ ಆಯೋಗದ ಹಿರಿಯ ಅಧಿಕಾರಿಗಳು ಮËಖಿಕವಾಗಿ ವಿಧಾನಸೌಧ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಅಕೃತವಾಗಿ ಪತ್ರದ ಮೂಲಕ ಮಾಹಿತಿ ನೀಡುವಂತೆ ಹೇಳಿದ್ದಾರೆ. ಪತ್ರದಲ್ಲಿ ನೀಡುವ ಮಾಹಿತಿ ಆಧಾರದ ಮೇಲೆ ವಿಧಾನಸೌಧ ಪೊಲೀಸರು ಮುಂದಿನ ಪ್ರಕ್ರಿಯೆ ನಡೆಸಲಿದ್ದಾರೆ.
|
eesanje/url_46_182_5.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಬಿಜೆಪಿ-ಜೆಡಿಎಸ್ ಕೃಪಾಪೋಷಿತ ಕಿಡಿಗೇಡಿಗಳಿಂದ ಕೋಮುಭಾವನೆ ಕೆರಳಿಸುವ ಸುಳ್ಳು ಸುದ್ದಿ : ಸಿಎಂ ಕಿಡಿ
|
2 |
+
ಬೆಂಗಳೂರು,ಏ.10-ಬಿಜೆಪಿ – ಜೆಡಿಎಸ್ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾ ಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
|
3 |
+
ಈ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಗೆ ದೂರು ನೀಡಿದ್ದು, ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ತಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು ಎಂದು ತಿಳಿಸಿದ್ದಾರೆ.
|
4 |
+
ಬಿಜೆಪಿ – ಜೆಡಿಎಸ್ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ…../6Gin6L9Dvz
|
5 |
+
ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು ಬಿಜೆಪಿ ಮತ್ತು ಜೆಡಿಎಸ್ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು ಎಂದು ಮರುಕ ವ್ಯಕ್ತಪಡಿಸಿದ್ದಾರೆ.
|
6 |
+
ಸುಳ್ಳು ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಎಚ್ಚರಿಕೆ ವಹಿಸಿ. ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದ್ದಾರೆ.
|
eesanje/url_46_182_6.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಲೋಕಸಭಾ ಚುನಾವಣೆ : ಚಿಕ್ಕಬಳ್ಳಾಪುರದಲ್ಲಿ ಅತಿ ಹೆಚ್ಚು, ದಕ್ಷಿಣ ಕನ್ನಡದಲ್ಲಿ ಅತಿ ಕಡಿಮೆ ಅಭ್ಯರ್ಥಿಗಳ ಸ್ಪರ್ಧೆ
|
2 |
+
ಬೆಂಗಳೂರು, ಏ.10-ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 247 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಅತಿ ಹೆಚ್ಚು 29 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರೆ, ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಅತಿ ಕಡಿಮೆ 9 ಅಭ್ಯರ್ಥಿಗಳಿದ್ದಾರೆ.ಮೊದಲ ಹಂತದ 14 ಕ್ಷೇತ್ರಗಳಲ್ಲಿ ಒಟ್ಟು 226 ಪುರುಷ ಹಾಗೂ 21 ಮಂದಿ ಮಹಿಳಾ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ನಾಮಪತ್ರ ಪಡೆಯಲು ಕಡೆಯ ದಿನವಾಗಿದ್ದ ಏ.8ರಂದು 52 ಅಭ್ಯರ್ಥಿಗಳು ಉಮೇದುವಾರಿಕೆ ಹಿಂಪಡೆದಿದ್ದರು.
|
3 |
+
ಬಿಜೆಪಿಯಿಂದ 11, ಜೆಡಿಎಸ್ನಿಂದ 3 ಹಾಗೂ ಕಾಂಗ್ರೆಸ್ನಿಂದ 14 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಈ ಬಾರಿಯೂ ಪಕ್ಷೇತರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.ಕ್ಷೇತ್ರವಾರು ಅಭ್ಯರ್ಥಿಗಳ ವಿವರ ಈ ಕೆಳಕಂಡಂತಿದೆ.
|
4 |
+
ಉಡುಪಿ-ಚಿಕ್ಕಮಗಳೂರು- 10, ಹಾಸನ-15, ದಕ್ಷಿಣ ಕನ್ನಡ-9, ಚಿತ್ರದುರ್ಗ- 20, ತುಮಕೂರು- 18, ಮಂಡ್ಯ-14, ಮೈಸೂರು- 18, ಚಾಮರಾಜನಗರ- 14, ಬೆಂಗಳೂರು ಗ್ರಾಮಾಂತರ- 15, ಬೆಂಗಳೂರು ಉತ್ತರ- 21, ಬೆಂಗಳೂರು ಕೇಂದ್ರ- 24, ಬೆಂಗಳೂರು ದಕ್ಷಿಣ- 22, ಚಿಕ್ಕಬಳ್ಳಾಪುರ- 29, ಕೋಲಾರ-18 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.
|
eesanje/url_46_182_7.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮಂತ್ರಿಗಿರಿ ಉಳಿಸಿಕೊಳ್ಳಲು ಚುನಾವಣಾ ಕಣದಲ್ಲಿ ಬೆವರು ಹರಿಸುತ್ತಿರುವ ಸಚಿವರು
|
2 |
+
ಬೆಂಗಳೂರು,ಏ.10-ಲೋಕಸಭಾ ಚುನಾವಣೆ ಕಾಂಗ್ರೆಸ್ ಪಕ್ಷದಲ್ಲಿ ಕಣದಲ್ಲಿರುವ ಅಭ್ಯರ್ಥಿಗಳಿಗಷ್ಟೇ ಅಲ್ಲ, ಸಂಪುಟದ ಹಲವು ಸಚಿವರಿಗೂ ರಾಜಕೀಯ ಭವಿಷ್ಯದ ಅಳಿವು-ಉಳಿವಿನ ಪ್ರಶ್ನೆಯ ಸವಾಲಾಗಿದೆ. ಗೆಲುವು ಅನಿವಾರ್ಯ ಎಂಬ ಕಾರಣಕ್ಕೆ ಅಭ್ಯರ್ಥಿಗಳೊಂದಿಗೆ ಸಚಿವರು, ಪ್ರಮುಖ ನಾಯಕರು ಹಗಲಿರುಳು ಬೆವರು ಸುರಿಸುತ್ತಿದ್ದಾರೆ.
|
3 |
+
ಲೋಕಸಭಾ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಹಲವಾರು ವಿಪ್ಲವಗಳು ನಡೆಯುವ ಸಾಧ್ಯತೆಯಿದೆ.ಈ ಹಿಂದೆ ವಿಧಾನಸಭಾ ಚುನಾವಣೆಯ ಬಳಿಕ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಯಲ್ಲಿ ನಡೆದ ಸಂಧಾನದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆಯ ಜೊತೆಗೆ ಲೋಕಸಭಾ ಚುನಾವಣೆಯವರೆಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಸುವುದಾಗಿ ಹೈಕಮಾಂಡ್ ಘೋಷಣೆ ಮಾಡಿತ್ತು. ಚುನಾವಣೆ ಬಳಿಕ ಕೆಪಿಸಿಸಿ ಅಧ್ಯಕ್ಷರ ಸ್ಥಾನ ಬದಲಾಗುವ ಸಾಧ್ಯತೆಯಿದೆ. ಜೊತೆಯಲ್ಲಿ ಹಲವು ಸಚಿವರ ಸ್ಥಾನಪಲ್ಲಟವಾಗುವ ನಿರೀಕ್ಷೆಗಳಿವೆ.
|
4 |
+
ಸಚಿವ ಸಂಪುಟ ವಿಸ್ತರಣೆ ವೇಳೆ ಹಲವಾರು ಮಂದಿ ಅಸಮಾಧಾನಗೊಂಡು ಬಂಡಾಯದ ಕಹಳೆ ಊದಲಾರಂಭಿಸಿದರು. ಆ ವೇಳೆ ಅತೃಪ್ತರನ್ನು ಸಮಾಧಾನಪಡಿಸಿದ ಕಾಂಗ್ರೆಸ್ ನಾಯಕರು ಲೋಕಸಭಾ ಚುನಾವಣೆವರೆಗೂ ಸಮಾಧಾನದಿಂದಿರಿ. ಸಂಪುಟ ಪುನರ್ ರಚನೆಯಾಗಲಿದೆ. ಎಲ್ಲರಿಗೂ ಅವಕಾಶ ಸಿಗಲಿದೆ ಎಂದು ಸಮಾಧಾನ ಪಡಿಸಿದರು.
|
5 |
+
ಕೆಲವು ಅತೃಪ್ತರಿಗೆ ಇತ್ತೀಚೆಗೆ ನಿಗಮಮಂಡಳಿಗಳಲ್ಲಿ ಅವಕಾಶ ಕಲ್ಪಿಸಿ ಸಮಾಧಾನಪಡಿಸುವ ಪ್ರಯತ್ನವೂ ನಡೆದಿತ್ತು. ಎಲ್ಲರಿಗೂ ಲೋಕಸಭಾ ಚುನಾವಣೆ ಬಳಿಕ ಅವಕಾಶ ದೊರೆಯಲಿದೆ ಎಂಬ ಭರವಸೆಯನ್ನು ನೀಡಲಾಗಿತ್ತು.
|
6 |
+
ಬಹಳಷ್ಟು ಮಂದಿ ಲೋಕಸಭಾ ಚುನಾವಣೆ ಮುಗಿಯುವುದನ್ನೇ ಕಾದು ಕುಳಿತಿದ್ದಾರೆ. ತಮಗೆ ಈ ಬಾರಿ ಅಧಿಕಾರ ಸಿಗಲಿದೆ ಎಂಬ ನಿರೀಕ್ಷೆಗಳೊಂದಿಗೆ ಚುನಾವಣೆಗಾಗಿ ಶ್ರಮಿಸುತ್ತಿದ್ದಾರೆ. ಅದರಲ್ಲೂ ಸಂಪುಟದ ಸಚಿವರುಗಳಿಗೆ ಆಯಾ ಜಿಲ್ಲಾ ಉಸ್ತುವಾರಿ ಇರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲೇಬೇಕು ಎಂಬ ಷರತ್ತು ವಿಸಲಾಗಿದೆ.
|
7 |
+
ಒಂದು ವೇಳೆ ಕಾಂಗ್ರೆಸ್ ಅಭ್ಯರ್ಥಿಗಳು ಸೋಲು ಕಂಡರೆ ಅದಕ್ಕೆ ಉಸ್ತುವಾರಿ ಸಚಿವರು ಹೊಣೆಗಾರರು ಎಂಬ ಎಚ್ಚರಿಕೆ ನೀಡಲಾಗಿದೆ. ಹೀಗಾಗಿ ಸಂಪುಟದ ಸಚಿವರು ತನು-ಮನ-ಧನದ ಜೊತೆಗೆ ಕಾಯಾವಾಚಾ ಕಾಂಗ್ರೆಸ್ನ ಗೆಲುವಿಗಾಗಿ ಬೆವರು ಸುರಿಸುತ್ತಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ಪ್ರಬಲ ಪೈಪೋಟಿಯಲ್ಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳು ಹಿನ್ನಡೆ ಅನುಭವಿಸುವ ಆತಂಕವಿದೆ. ಅಂತಹ ಕ್ಷೇತ್ರಗಳಿಗೆ ಹೆಚ್ಚಿನ ಸಂಪನ್ಮೂಲ ಒದಗಿಸುವಂತೆ ಸಚಿವರು ಪಕ್ಷದ ವರಿಷ್ಠ ನಾಯಕರಿಗೆ ದುಂಬಾಲು ಬಿದ್ದಿದ್ದಾರೆ.
|
8 |
+
ಬಹಳಷ್ಟು ಮಂದಿ ಸಚಿವರಿಗೆ ಆರ್ಥಿಕವಾಗಿ ಸಂಪತ್ಭರಿತವಾದ ಇಲಾಖೆಗಳು ದೊರೆತಿಲ್ಲ ಎಂಬ ಅಸಮಾಧಾನಗಳಿವೆ. ಅಂತವರು ಲೋಕಸಭಾ ಚುನಾವಣೆಯಲ್ಲಿ ತಮಗೆ ಸಹಾಯ ಮಾಡಿ ಎಂದು ವರಿಷ್ಠ ನಾಯಕರ ಬಳಿ ಹೆಚ್ಚಿನ ಬೇಡಿಕೆ ಇಡುತ್ತಿರುವುದು ಕಂಡುಬಂದಿದೆ.ಈ ಮೊದಲು ಸಚಿವ ಕೆ.ಎಚ್.ಮುನಿಯಪ್ಪ ಎರಡೂವರೆ ವರ್ಷದ ಬಳಿಕ ಸಚಿವರು ಬೇರೆಯವರಿಗೆ ಅವಕಾಶ ಮಾಡಿಕೊಡಲು ಹುದ್ದೆ ತ್ಯಾಗ ಮಾಡಬೇಕು ಎಂದು ಈ ಹಿಂದೆ ಬಹಿರಂಗವಾಗಿ ಹೇಳಿದ್ದರು.
|
9 |
+
ಆ ವೇಳೆ ಅವರಿಗೆ ಕೋಲಾರ ಲೋಕಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ರ್ಪಸುವ, ರಾಷ್ಟ್ರ ರಾಜಕಾರಣಕ್ಕೆ ತೆರಳುವ ಇರಾದೆಯಿತ್ತು. ಆದರೆ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಮುನಿಯಪ್ಪ ಅಥವಾ ಅವರ ಕುಟುಂಬಕ್ಕೆ ಲೋಕಸಭೆಯಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿಲ್ಲ. ಈಗಲೂ ಅವರು ಸಚಿವ ಸ್ಥಾನ ತ್ಯಾಗದ ಇರಾದೆಯಲ್ಲಿಯೇ ಇದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ.ಬಹಳಷ್ಟು ಮಂದಿ ಸಚಿವರು ಅಭಿವೃದ್ಧಿಗಿಂತಲೂ ವಿವಾದಗಳಲ್ಲಿ ಹೆಚ್ಚು ಸುದ್ದಿ ಮಾಡುತ್ತಿದ್ದಾರೆ.
|
10 |
+
ಅಂತವರಿಗೆ ಲೋಕಸಭಾ ಚುನಾವಣೆ ಬಳಿಕ ಕೋಕ್ ಸಿಗುವ ಸಾಧ್ಯತೆಯಿದೆ. ಹೊಸಬರಿಗೆ ಅವಕಾಶ ಕೊಡುವುದು ಮತ್ತು ಸಂಪುಟದಲ್ಲಿ ಸುದೀರ್ಘ ಸೇವೆ ಸಲ್ಲಿಸಿದವರನ್ನು ಪಕ್ಷಸಂಘಟನೆಗೆ ತೊಡಗಿಸಿಕೊಂಡು ಮುಂದಿನ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಯಾರಿ ಮಾಡಿರುವುದು ಕಾಂಗ್ರೆಸ್ ನಾಯಕರ ಅಭಿಲಾಷೆ ಎಂದು ಹೇಳಲಾಗುತ್ತಿದೆ.
|
eesanje/url_46_182_8.txt
ADDED
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ, ಇಲ್ಲಿದೆ ಕಂಪ್ಲೀಟ್ ಮಾಹಿತಿ
|
2 |
+
ಬೆಂಗಳೂರು,ಏ.10-ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ದಾಖಲೆಯ ಶೇಕಡಾ 81.15 ರಷ್ಟು ಫಲಿತಾಂಶ ಬಂದಿದೆ.ಎಂದಿನಂತೆ ಈ ಬಾರಿಯೂ ವಿದ್ಯಾರ್ಥಿಗಳಿಗಿಂತ ವಿದ್ಯಾರ್ಥಿನಿಯರದೇ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದು, ನಗರ ಪ್ರದೇಶಗಳಿಗೆ ಹೋಲಿಸಿದರೆ ಗ್ರಾಮೀಣ ಭಾಗದ ಫಲಿತಾಂಶ ಏರಿಕೆಯಾಗಿದೆ.
|
3 |
+
2023 ರಲ್ಲಿ 74.67 ರಷ್ಟು ಫಲಿತಾಂಶ ಬಂದಿತ್ತು. ಈ ಬಾರಿ ಶೇ.6.4 ರಷ್ಟು ಏರಿಕೆಯಾಗಿದ್ದು, ದಾಖಲೆಯ 81.15 ರಷ್ಟು ಫಲಿತಾಂಶ ದಾಖಲಾಗಿರುವುದು ವರ್ಷದಿಂದ ವರ್ಷಕ್ಕೆ ಫಲಿತಾಂಶ ಏರಿಕೆಯಾಗುತ್ತಿರುವುದರ ಸಕಾರಾತ್ಮಕ ಬೆಳವಣಿಗೆಯಾಗಿದೆ.ಕಳೆದ ಮಾರ್ಚ್ 1 ರಿಂದ 27 ರವರೆಗೆ ರಾಜ್ಯದ 1,124 ಕೇಂದ್ರಗಳಲ್ಲಿ ನಡೆದ ದ್ವಿತೀಯ ಪಿಯುಸಿ-1 ರ ಪರೀಕ್ಷೆಗೆ ಒಟ್ಟು 6,81,079 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 5,22,690 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
|
4 |
+
ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಘೋಷಿಸಿದರು. ಕಲಾವಿಭಾಗದಲ್ಲಿ ಶೇ.68.36, ವಾಣಿಜ್ಯ ಶೇ.80.94, ವಿಜ್ಞಾನ ಶೇ.89.96 ಫಲಿತಾಂಶ ಹೊರಬಂದಿದೆ. ಜಿಲ್ಲಾವಾರು ಫಲಿತಾಂಶದಲ್ಲಿ ಎಂದಿನಂತೆ ಈ ಬಾರಿಯೂ ದಕ್ಷಿಣ ಕನ್ನಡ, ಉಡುಪಿ, ವಿಜಯಪುರ ಕ್ರಮವಾಗಿ ಮೊದಲ ಸ್ಥಾನದಲ್ಲಿದ್ದರೆ, ಗದಗ ಕೊನೆಯ ಸ್ಥಾನದಲ್ಲಿದೆ.
|
5 |
+
ಕಲಾವಿಭಾಗದಲ್ಲಿ ಬೆಂಗಳೂರಿನ ಎನ್ಎನ್ಕೆಆರ್ವಿ ಪಿಯು ಕಾಲೇಜಿನ ಮೇಧಾ ಡಿ. 596, ವಿಜಯಪುರದ ಎಸ್ಎಸ್ ಪಿಯು ಕಾಲೇಜಿನ ವೇದಾಂತ್ ಜಯನುಬಾ ನವಿ 596, ಬಳ್ಳಾರಿ ಜಿಲ್ಲೆ ಕೊಟ್ಟೂರು ತಾಲೂಕಿನ ಕೂಡ್ಲಗಿಯ ಇಂದು ಪಿಯು ಕಾಲೇಜಿನ ಕವಿತಾ ಬಿ.ವಿ. 596 ಅಂಕಗಳನ್ನು ಪಡೆದಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ವಿದ್ಯಾಲಕ್ಷ್ಮಿ 598 ಅಂಕ ಪಡೆದು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದಾರೆ.
|
6 |
+
ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ವಿದ್ಯಾನಿ ಪಿಯು ಕಾಲೇಜಿನ ಜ್ಞಾನವಿ ಎಂ. 597, ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಕುಮದ್ವತಿ ಕಾಲೇಜಿನ ಪವನ್ ಎಂ.ಎಸ್. 596, ಉಡುಪಿಯ ಪೂರ್ಣ ಪ್ರಜ್ಞಾ ಪಿಯು ಕಾಲೇಜಿನ ಹರ್ಷಿತಾ ಎಸ್.ಎಚ್. 596 ಅಂಕ ಪಡೆದಿದ್ದಾರೆ.
|
7 |
+
ಈ ಬಾರಿ ಪರೀಕ್ಷೆಗೆ ಹಾಜರಾದ 6,22,819 ಹೊಸ ವಿದ್ಯಾರ್ಥಿಗಳ ಪೈಕಿ 5,26,558 (84.59) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪುನರಾವರ್ತಿತ 36,007 ವಿದ್ಯಾರ್ಥಿಗಳಲ್ಲಿ ಹಾಜರಾದವರ ಪೈಕಿ 15,116 ವಿದ್ಯಾರ್ಥಿಗಳು (41.98), 22,253 ಖಾಸಗಿ ವಿದ್ಯಾರ್ಥಿಗಳ ಪೈಕಿ 10,716 (48.16) ತೇರ್ಗಡೆಯಾಗಿದ್ದಾರೆ.
|
8 |
+
ಕಲಾ ವಿಭಾಗದಲ್ಲಿ 1,87,891 ಹಾಜರಾದ ವಿದ್ಯಾರ್ಥಿಗಳ ಪೈಕಿ 1,28,448 (68.36), ವಾಣಿಜ್ಯ ವಿಭಾಗದಲ್ಲಿ 2,15,357 ಹಾಜರಾದವರ ಪೈಕಿ 1,74,315 (80.94), ವಿಜ್ಞಾನ ವಿಭಾಗದಲ್ಲಿ 2,77,831 ಹಾಜರಾದವರ ಪೈಕಿ 249927 (89.96) ಫಲಿತಾಂಶ ಪ್ರಕಟಗೊಂಡಿದೆ.ಬಾಲಕರ ಪೈಕಿ ಪರೀಕ್ಷೆಗೆ 3,21,467 ಹಾಜರಾದವರ ಪೈಕಿ 2,47,478 (76.98), ಅದೇ ರೀತಿ ಬಾಲಕಿಯರಲ್ಲಿ 3,59,612 ವಿದ್ಯಾರ್ಥಿನಿಯರಲ್ಲಿ 3,05,212 (84.87) ಫಲಿತಾಂಶ ಹೊರಬಂದಿದೆ.
|
9 |
+
ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಹೋಲಿಸಿದರೆ ಗ್ರಾಮಾಂತರ ವಿದ್ಯಾರ್ಥಿಗಳು ತಾವು ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಕಡಿಮೆ ಇಲ್ಲ ಎಂಬಂತೆ ಹೆಚ್ಚಿನ ಅಂಕ ಪಡೆದಿದ್ದಾರೆ.ನಗರ ಪ್ರದೇಶದಿಂದ 5,32,279 ಹಾಜರಾದವರ ಪೈಕಿ 4,32,060 (81.10), ಅದೇ ರೀತಿ ಗ್ರಾಮಾಂತರ ಪ್ರದೇಶದಿಂದ 1,48,350 ಹಾಜರಾದ ವಿದ್ಯಾರ್ಥಿಗಳಲ್ಲಿ 1,20,630 (81.31) ಉತ್ತೀರ್ಣರಾಗಿದ್ದಾರೆ.
|
10 |
+
ಈ ಬಾರಿ ಶೇ.85 ಅಥವಾ ಅದಕ್ಕಿಂತ ಹೆಚ್ಚಿನ ಅಂಗಳನ್ನು 1,53,370 ವಿದ್ಯಾರ್ಥಿಗಳು ಪಡೆದಿದ್ದರೆ ಶೇ.85 ಕ್ಕಿಂತ ಕಡಿಮೆ ಹಾಗೂ ಶೇ. 60 ಅಥವಾ ಶೇ.60 ಕ್ಕಿಂತ ಕಡಿಮೆ ಅಂಕವನ್ನು 2,89,733 ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ.
|
11 |
+
ಶೇ.60 ಕ್ಕಿಂತ ಕಡಿಮೆ, ಶೇ.50 ಅಥವಾ ಶೇ.50 ಕ್ಕಿಂತ ಹೆಚ್ಚು ಅಂಕಗಳನ್ನು 72,098, ಶೇ.50 ಕ್ಕಿಂತ ಕಡಿಮೆ ಅಂಕಗಳನ್ನು 37,489 ವಿದ್ಯಾರ್ಥಿಗಳು ಪಡೆದಿದ್ದಾರೆ.ಈ ಬಾರಿ ಅಚ್ಚರಿಯೆಂಬಂತೆ 91 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ. 100 ರಷ್ಟು ಫಲಿತಾಂಶ ಬಂದಿದ್ದರೆ, 2 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.
|
12 |
+
26 ಅನುದಾನಿತ ಪದವಿ ಪೂರ್ವ ಕಾಲೇಜಿನಲ್ಲಿ ಶೇ.100 ರಷ್ಟು ಫಲಿತಾಂಶ ಬಂದಿದ್ದರೆ, 6 ಕಾಲೇಜುಗಳಲ್ಲಿ ಶೂನ್ಯ, 345 ಅನುದಾನರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ.100 ರಷ್ಟು ಹಾಗೂ 26 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಹಾಗೂ ಒಂದು ವಿಭಜಿತ ಪದವಿ ಪೂರ್ವ ಕಾಲೇಜಿನಲ್ಲಿ ಶೇ.100 ರಷ್ಟು ಹಾಗೂ ಒಂದು ಕಾಲೇಜಿನಲ್ಲಿ ಶೂನ್ಯ ಫಲಿತಾಂಶ ಸೇರಿದಂತೆ ಒಟ್ಟು 463 ಕಾಲೇಜಿನಲ್ಲಿ ಶೇ.100 ರಷ್ಟು ಫಲಿತಾಂಶ ಮತ್ತು 35 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ದಾಖಲಾಗಿದೆ.
|
13 |
+
ಜಿಲ್ಲಾವಾರುದಕ್ಷಿಣ ಕನ್ನಡ ಶೇ.95.33ಉಡುಪಿ ಶೇ.95.24ವಿಜಯಪುರ ಶೇ.84.69ಉತ್ತರ ಕನ್ನಡ ಶೇ.89.74ಕೊಡಗು ಶೇ.90.55ಬೆಂಗಳೂರು ದಕ್ಷಿಣ ಶೇ.82.3ಬೆಂಗಳೂರು ಉತ್ತರ ಶೇ.82.25ಶಿವಮೊಗ್ಗ ಶೇ.83.13ಚಿಕ್ಕಮಗಳೂರು ಶೇ.83.28ಬೆಂಗಳೂರು ಗ್ರಾಮಾಂತರ ಶೇ.83.04ಬಾಗಲಕೋಟೆ ಶೇ.78.79ಕೋಲಾರ ಶೇ.79.2ಹಾಸನ ಶೇ.83.14ಚಾಮರಾಜನಗರ ಶೇ.81.92ಚಿಕ್ಕೋಡಿ ಶೇ.78.76ರಾಮನಗರ ಶೇ.78.12ಮೈಸೂರು ಶೇ.79.89ಚಿಕ್ಕಬಳ್ಳಾಪುರ ಶೇ.77.77ಬೀದರ್ ಶೇ.78ತುಮಕೂರು ಶೇ.74.5ದಾವಣಗೆರೆ ಶೇ.75.72ಕೊಪ್ಪಳ ಶೇ.74.8ಧಾರವಾಡ ಶೇ.73.54ಮಂಡ್ಯ ಶೇ.77.47ಹಾವೇರಿ ಶೇ.74.13ಯಾದಗಿರಿ ಶೇ.62.98ಬೆಳಗಾವಿ ಶೇ.73.98ಕಲಬುರಗಿ ಶೇ.69.37ಬಳ್ಳಾರಿ ಶೇ.69.55ರಾಯಚೂರು ಶೇ.66.21ಚಿತ್ರದುರ್ಗ ಶೇ.69.5ಗದಗ ಶೇ.66.91
|
eesanje/url_46_182_9.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಯುಗಾದಿ ಸಂಭ್ರಮ ಕಸಿದ ಬರಗಾಲ, ಮಾರುಕಟ್ಟೆ ಕುಸಿದ ಖರೀದಿ
|
2 |
+
ಬೆಂಗಳೂರು,ಏ. 8-ಸಾಮಾನ್ಯವಾಗಿ ಹಬ್ಬಗಳ ಸಂದರ್ಭದಲ್ಲಿ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರಾಗಿರುತ್ತದೆ. ಆದರೆ ಈ ಯುಗಾದಿಗೆ ಮಾರುಕಟ್ಟೆಗಳಲ್ಲಿ ಹೇಳಿಕೊಳ್ಳುವಷ್ಟು ಜನರಿಲ್ಲ. ರಾಜ್ಯಾದ್ಯಂತ ಬರಗಾಲ ಆವರಿಸಿದ್ದು, ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚಾಗಿದೆ. ಕುಡಿಯಲು ನೀರಿಲ್ಲದೆ ಹಬ್ಬದ ಸಂಭ್ರಮ ಕಳೆಗುಂದಿದೆ. ಹಿಂದೂ ಪಂಚಾಂಗದ ಪ್ರಕಾರ, ಯುಗಾದಿ ಹೊಸವರ್ಷವನ್ನು ಎಲ್ಲರೂ ಸಂಭ್ರಮದಿಂದ ಆಚರಿಸುತ್ತಾರೆ. ಈ ಬಾರಿ ಬರಗಾಲ ಹಬ್ಬದ ಸಂಭ್ರಮ ಕಸಿದುಕೊಂಡಿದೆ.
|
3 |
+
ಒಂದು ಕಡೆ ಬಿಸಿಲಿಗೆ ಹೆದರಿ ಜನರು ಮಾರುಕಟ್ಟೆಗೆ ಬರಲು ಹಿಂದೇಟು ಹಾಕುತ್ತಿದ್ದರೆ, ಮತ್ತೊಂದೆಡೆ ನೀರಿಲ್ಲದೆ ಹೂವು, ಹಣ್ಣು, ತರಕಾರಿ ಬೆಳೆ ಕಡಿಮೆಯಾಗಿದ್ದು, ಇವುಗಳ ಬೆಲೆ ಗಗನಕ್ಕೇರಿರುವುದರಿಂದ ಜನರು ಮಾರುಕಟ್ಟೆಯತ್ತ ಮುಖ ಮಾಡುತ್ತಿಲ್ಲ.
|
4 |
+
ನಗರದಲ್ಲಿ ಕುಡಿಯುವ ನೀರಿಗೆ ತೀವ್ರ ಹಾಹಾಕಾರ ಉಂಟಾಗಿದ್ದು, ಶಾಲಾ-ಕಾಲೇಜು ಗಳಿಗೆ ರಜೆ ಕೂಡ ಬಂದಿದೆ. ಇದರ ಜತೆಗೆ ಸಾಲುಸಾಲು ರಜೆ ಬಂದಿರುವ ಹಿನ್ನೆಲೆಯಲ್ಲಿ ಜನರು ಊರುಗಳತ್ತ ತೆರಳಿದ್ದು, ನಗರದಲ್ಲಿ ಜನರ ಸಂಖ್ಯೆ ಕಡಿಮೆಯಾಗಿದೆ. ಹಾಗಾಗಿ ಮಾರುಕಟ್ಟೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಜನರು ಖರೀದಿಗೆ ಬರುತ್ತಿಲ್ಲ.
|
5 |
+
ನೀರಿನ ಸಮಸ್ಯೆ ಹಾಗೂ ಬಿಸಿಲಿನ ತಾಪಕ್ಕೆ ಹೂವುಗಳ ಬೆಳೆ ಅಷ್ಟಾಗಿ ಚೆನ್ನಾಗಿ ಬಂದಿಲ್ಲ. ಜತೆಗೆ ಬಿಸಿಲಿನ ತಾಪಕ್ಕೆ ಹೂವುಗಳು ಬೇಗ ಬಾಡುತ್ತಿದ್ದು, ಮಾರುಕಟ್ಟೆಗೆ ಗುಣಮಟ್ಟದ ಹೂವುಗಳು ಸರಬರಾಜಾಗುತ್ತಿಲ್ಲ. ಆದರೂ ಸಹ ಬೆಲೆ ಮಾತ್ರ ಗಗನಕ್ಕೇರಿದೆ. ಮಲ್ಲಿಗೆ ಕೆಜಿಗೆ 500 ರಿಂದ 600ರೂ., ಸೇವಂತಿಗೆ 300 ರಿಂದ 350ರೂ., ಕನಕಾಂಬರ 900 ರಿಂದ 1000ರೂ., ತುಳಸಿ ಒಂದು ಮಾರಿಗೆ 100ರೂ., ಬೇವಿನ ಸೊಪ್ಪು ಒಂದು ಕಟ್ಟಿಗೆ 30ರೂ.ಗೆ ಮಾರಾಟವಾಗುತ್ತಿದೆ.
|
6 |
+
ಕೆಲವು ದಿನಗಳ ಹಿಂದೆ 100ರೂ. ಗಡಿ ದಾಟಿದ್ದ ಏಲಕ್ಕಿ ಬಾಳೆ 50ರೂ.ಗೆ ಮಾರಾಟವಾಗುತ್ತಿದೆ. ಏಕೆಂದರೆ ಬಿಸಿಲಿಗೆ ಹಣ್ಣುಗಳು ಕಪ್ಪಾಗುತ್ತಿದ್ದು, ಕೇಳುವವರಿಲ್ಲದಂತಾಗಿದೆ.ತರಕಾರಿ ಬೆಲೆಯಲ್ಲೂ ಸಹ ಏರಿಕೆಯಾಗಿದ್ದು, ನಾಟಿ ಬೀನ್ಸ್ ಕೆಜಿ 80ರೂ., ಮೂಲಂಗಿ 40ರೂ., ಬೆಂಡೆಕಾಯಿ 50ರೂ., ಹಾಗಲಕಾಯಿ 60ರೂ., ಹೀರೇಕಾಯಿ 50ರೂ.ಗೆ ಮಾರಾಟವಾಗುತ್ತಿದೆ.
|
7 |
+
ಬೆಲೆ ಹೆಚ್ಚಾದರೂ ಸರಿಯೇ ನಮ್ಮ ಸಂಪ್ರದಾಯವನ್ನು ಮುಂದುವರೆಸಿಕೊಂಡು ಹೋಗಬೇಕಲ್ಲ ಎಂದು ಬೆಲೆ ಏರಿಕೆ ನಡುವೆಯೂ ಹಬ್ಬವನ್ನು ಆಚರಿಸುತ್ತಿದ್ದಾರೆ.
|
eesanje/url_46_183_1.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬರ ಪರಿಹಾರ ವರದಿ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ 2 ವಾರದ ಗಡುವು ನೀಡಿದ ಸುಪ್ರೀಂ
|
2 |
+
ನವದೆಹಲಿ, ಮಾ.8-ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ()ಯಡಿ ಕರ್ನಾಟಕಕ್ಕೆ ಬಿಡುಗಡೆ ಮಾಡಿರುವ ಅನುದಾನ ಕುರಿತು ಎರಡು ವಾರಗಳಲ್ಲಿ ವರದಿ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಬರ ಪರಿಹಾರ ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯ ಮೂರ್ತಿ ಬಿ.ಆರ್. ಗವಾಯಿ ಅವರಿದ್ದ ಏಕಸದಸ್ಯ ಪೀಠ, ಪರಿಹಾರ ಬಿಡುಗಡೆ ಮಾಡಿರುವ ಕುರಿತು ಎರಡು ವಾರದಲ್ಲಿ ವರದಿ ನೀಡ ಬೇಕೆಂದು ಸೂಚಿಸಿದೆ.
|
3 |
+
ಇದೇ ವೇಳೆ ನ್ಯಾಯಪೀಠ ಬರ ಪರಿಹಾರ ಬಿಡುಗಡೆ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಘರ್ಷಕ್ಕಿಳಿಯದೆ ಒಕ್ಕೂ ವ್ಯವಸ್ಥೆಯಡಿ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕೆಂಬ ಮಹತ್ವದ ಸಲಹೆಯನ್ನು ಸಹ ನೀಡಿತು. ಒಂದು ಹಂತದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿ ಬಿ.ಆರ್.ಗವಾಯಿ, ಪ್ರತಿಯೊಂದಕ್ಕೂ ರಾಜ್ಯ ಸರ್ಕಾರಗಳು ನ್ಯಾಯಾಲಯಕ್ಕೆ ಬರಬೇಕೆ? ಎಲ್ಲವನ್ನು ನ್ಯಾಯಾಲಯವೇ ಇತ್ಯರ್ಥಪಡಿಸುವುದಾದರೆ ಕೇಂದ್ರ ಸರ್ಕಾರದ ಪಾತ್ರವೇನೆಂದು ಅಟಾರ್ನಿ ಜನರಲ್ ಪ್ರಶ್ನೆ ಮಾಡಿದರು.
|
4 |
+
ಇದಕ್ಕೂ ಮುನ್ನ ಕರ್ನಾಟಕ ಸರ್ಕಾರದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಕಪೀಲ್ ಸಿಬಾಲ್ ಅವರು, ಕರ್ನಾಟಕದಲ್ಲಿ ಈ ಬಾರಿ ಭೀಕರ ಬರಗಾಲ ಅವರಿಸಿದೆ. ರಾಜ್ಯದ ಬಹುತೇಕ ಎಲ್ಲ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಎನ್ಡಿಆರ್ಎಫ್ನಡಿ ಸಿಗಬೇಕಾದ ಪರಿಹಾರ ಸಿಕ್ಕಿಲ್ಲ ಎಂದು ಆಕ್ಷೇಪಿಸಿದರು. ಕಳೆದ ಡಿಸೆಂಬರ್ ತಿಂಗಳಿನಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳು, ಕಂದಾಯ ಸಚಿವರು ಸೇರಿದಂತೆ ಮತ್ತಿತರ ಅಧಿಕಾರಿಗಳ ನಿಯೋಗವು ಕೇಂದ್ರ ವಿಪತ್ತು ನಿರ್ವಹಣಾ ಸಮಿತಿಯ ಅಧ್ಯಕ್ಷರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದಾರೆ.
|
5 |
+
ಆದರೂ ಕೇಂದ್ರ ಸರ್ಕಾರ ಪರಿಹಾರ ನೀಡದೆ ವಿಳಂಬ ಧೋರಣೆಯನ್ನು ಅನುಸರಿಸುತ್ತಿದೆ. ನಮಗೆ ನ್ಯಾಯಯುತವಾಗಿ ಸಿಗಬೇಕಾದ ಪಾಲು ಸಿಕ್ಕಿದ್ದರೆ ನಾವೇಕೆ ನ್ಯಾಯಾಲಯದ ಮೊರೆ ಹೋಗಬೇಕಿತ್ತು ಎಂದು ಪ್ರಶ್ನಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅರ್ಟಾನಿ ಜನರಲ್ ವೆಂಕಟರಮಣ, ಕರ್ನಾಟಕಕ್ಕೆ ಸಿಗಬೇಕಾದ ಪರಿಹಾರವನ್ನು ಕಾಲಕಾಲಕ್ಕೆ ಬಿಡುಗಡೆ ಮಾಡಿದ್ದೇವೆ. ಯಾವುದೇ ರಾಜ್ಯಗಳಿಗೂ ತಾರತಮ್ಯ ತೋರಿಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲ ರಾಜ್ಯಗಳಿಗೂ ಯಾವ ರೀತಿ ನ್ಯಾಯ ಕೊಡಬೇಕೋ ಅದೇ ರೀತಿ ಕೇಂದ್ರ ಸರ್ಕಾರ ಕರ್ನಾಟಕಕ್ಕೂ ಅದೇ ಮಾನದಂಡವನ್ನು ಅನುಸರಿಸಿದೆ ಎಂದು ಸಮರ್ಥಿಸಿಕೊಂಡರು.
|
6 |
+
ಈ ವೇಳೆ ಕಪಿಲ್ ಸಿಬಾಲ್ ಮತ್ತು ಎಜಿ ವೆಂಕಟರಮಣ ನಡುವೆ ಭಾರೀ ಜಟಾಪಟಿ ನಡೆಯಿತು. ಈ ಹಂತದಲ್ಲಿ ಮಧ್ಯಪ್ರವೇಶ ಮಾಡಿದ ನ್ಯಾಯಾೀಧಿಶರು, ���ೇಂದ್ರ ಪರಿಹಾರ ಬಿಡುಗಡೆ ವಿಷಯದಲ್ಲಿ ಸಂಘರ್ಷ ಮಾಡಿಕೊಳ್ಳುವುದು ಬೇಡ ಎಂದು ಸೂಚನೆ ನೀಡಿದರು. ಕರ್ನಾಟಕಕ್ಕೆ ಎಷ್ಟು ಪರಿಹಾರ ನೀಡಿದೆ ಎಂಬುದರ ಬಗ್ಗೆ ನಿಮ್ಮ ಬಳಿ ದಾಖಲೆಗಳು ಇವೆಯೇ ಎಂದು ಅಟಾರ್ನಿ ಜನರಲ್ ಅವರನ್ನು ನ್ಯಾಯಾೀಧಿಶರು ಪ್ರಶ್ನಿಸಿದರು.
|
7 |
+
ನಮಗೆ ಒಂದಿಷ್ಟು ಸಮಯ ಅವಕಾಶ ಕೊಟ್ಟರೆ ಎಲ್ಲವನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದೇವೆ ಎಂದು ಅಟಾರ್ನಿ ಜನರಲ್ ಹೇಳಿದರು. ಎರಡೂ ಕಡೆ ವಾದ-ವಿವಾದ ಆಲಿಸಿದ ನ್ಯಾಯಾೀಧಿಶರು ಎರಡು ವಾರಗಳ ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದರು.
|
8 |
+
ಏನಿದು ಅರ್ಜಿ?:ರಾಜ್ಯವು ತೀವ್ರ ಬರದಿಂದ ಸಂಕಷ್ಟಕ್ಕೆ ಸಿಲುಕಿದ್ದು, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್ಡಿಆರೆಫ್) ಆರ್ಥಿಕ ನೆರವು ಬಿಡುಗಡೆ ಮಾಡಲು ಕೇಂದ್ರದ ಗೃಹ ಇಲಾಖೆಗೆ ನಿರ್ದೇಶಿಸಬೇಕು ಎಂದು ಕೋರಿ ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
|
9 |
+
ಸಂವಿಧಾನದ 32ನೇ ವಿಧಿಯಡಿ ರಿಟ್ ಅರ್ಜಿಯನ್ನು ಕರ್ನಾಟಕ ಸರ್ಕಾರವು ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಕೆ ಮಾಡಿದ್ದು, ಕೇಂದ್ರ ಗೃಹ ಇಲಾಖೆಯ ಕ್ರಮವು ಸಂವಿಧಾನದ 14 ಮತ್ತು 21ನೇ ಧಿವಿಯಡಿ ಕಲ್ಪಿಸಿರುವ ರಾಜ್ಯದ ಜನರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆಕ್ಷೇಪಿಸಿತ್ತು.
|
eesanje/url_46_183_10.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಮೋದಿಯ ಹಾದಿ ಸತ್ಯ, ಸಿದ್ದರಾಮಯ್ಯರ ಅವರದ್ದು ಮುಳ್ಳಿನ ದಾರಿ: ಕಾಗೇರಿ
|
2 |
+
ಬೆಂಗಳೂರು: ದೇಶದ ಪ್ರಧಾನಿ ನರೇಂದ್ರ ಮೋದಿ ಜೀ ಅವರು ನುಡಿದಂತೆ ನಡೆದರೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳಿನ ಭರವಸೆಗಳನ್ನು ನೀಡುವ ಮೂಲಕ ಜನರನ್ನು ಮುಳ್ಳಿನ ಹಾದಿಯಲ್ಲಿ ನಡೆಸುತ್ತಿದ್ದಾರೆ ಎಂದು ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಅಭ್ಯರ್ಥಿ ಹಾಗೂ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದರು.
|
3 |
+
ಹೋಟೆಲ್ ಜಿ.ಎಂ. ರಿಜಾಯ್ಸ್ ನ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮ ಸಂವಾದದಲ್ಲಿ ಅವರು ಪಾಲ್ಗೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ನುಡಿದಂತೆ ನಡೆದಿದೆ. ಜಿ 20, ಉಜ್ವಲ, ಎಲ್ಪಿಜಿ, ಜನೌಷಧ, ಸುಕನ್ಯ ಸಮೃದ್ಧ್ಧಿ, ಮುದ್ರಾ ಯೋಜನೆಗಳಂತಹ ಇನ್ನೂ ಅನೇಕ ಪ್ರಮುಖ ಯೋಜನೆಗಳು ಇದಕ್ಕೆ ಸಾಕ್ಷಿಯಾಗಿವೆ ಎಂದು ನುಡಿದರು.
|
4 |
+
2014 ರಲ್ಲಿ ಭಾರತದ ಪ್ರಧಾನಿಯಾಗಿ ಮೋದಿಯವರು ಪ್ರಮಾಣವಚನ ಸ್ವೀಕರಿಸಿದರು. ಅವರ ಹತ್ತು ವರ್ಷಗಳ ಆಡಳಿತದಲ್ಲಿ ಮಾಡಿದಂತಹ ಸಾಧನೆಗಳು ಜನಸಾಮಾನ್ಯರನ್ನು ತಲುಪಿದೆ. ಮಹಾತ್ಮ ಗಾಂಧೀಜಿ ಅವರ ಅಂತ್ಯೋದಯ ಅನ್ನ ಯೋಜನೆಯ ಕನಸನ್ನು ಬಿಜೆಪಿ ಸರ್ಕಾರ ನನಸು ಮಾಡಿದೆ. ಆದರೆ ಕಾಂಗ್ರೆಸ್ನವರು ಗಾಂಧೀಜಿ ಅವರನ್ನು ಹೀಯಾಳಿಸುವಂಥÀ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನರು ಭ್ರಮನಿರಸನಗೊಂಡಿದ್ದಾರೆ ಎಂದು ತಿಳಿಸಿದರು.
|
5 |
+
ರಾಜ್ಯದ 28ಕ್ಕೆ 28 ಮತ ಕ್ಷೇತ್ರಗಳು ಬಿಜೆಪಿಗೆ ಸುರಕ್ಷಿತ ಕ್ಷೇತ್ರಗಳು, 400ಕ್ಕೂ ಮೀರಿ ಕ್ಷೇತ್ರಗಳನ್ನು ಗೆದ್ದು ಮೋದಿ ಜೀ ಅವರು ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯ ವಕ್ತಾರರಾದ ಹರಿಪ್ರಕಾಶ್ ಕೋಣೆಮನೆ, ಪ್ರಕಾಶ್ ಶೇಷರಾಘವಾಚಾರ್, ಮಾಧ್ಯಮ ಪ್ರಕೋಷ್ಠದ ಸಂಚಾಲಕ ಕರುಣಾಕರ ಖಾಸಲೆ ಹಾಗೂ ಸಹ ಸಂಚಾಲಕ ಪ್ರಶಾಂತ್ ಕೆಡೆಂಜಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
|
eesanje/url_46_183_11.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪ್ರಚಾರದಿಂದ ಕೆ.ಎಚ್.ಮುನಿಯಪ್ಪ ದೂರ
|
2 |
+
ಬೆಂಗಳೂರು,ಏ.7- ಕೋಲಾರ ಲೋಕಸಭಾ ಕ್ಷೇತ್ರದ ಬಂಡಾಯ ಈವರೆಗೂ ಶಮನವಾಗಿಲ್ಲ, ಸಚಿವ ಕೆ.ಎಚ್.ಮುನಿಯಪ್ಪ ಈವರೆಗೂ ಕ್ಷೇತ್ರದ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸದೆ ದೂರ ಉಳಿದಿರುವುದು ಕಾಂಗ್ರೆಸ್ಸಿಗರಿಗೆ ತಲೆನೋವಾಗಿ ಪರಿಣಮಿಸಿದೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಕೆ.ಎಚ್.ಮುನಿಯಪ್ಪ, ಕೋಲಾರ ಲೋಕಸಭಾ ಕ್ಷೇತ್ರದ ಪ್ರಚಾರ ಕಾರ್ಯಕ್ರಮಕ್ಕೆ ತಮಗೆ ಆಹ್ವಾನ ಇರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
|
3 |
+
ತಮಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಜವಾಬ್ದಾರಿ ವಹಿಸಿದ್ದು, ತಾವು ಅಲ್ಲಿ ಕೆಲಸ ಮಾಡುವುದಾಗಿ ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯ ರಾಜಕಾರಣದಲ್ಲಿ ಮಾಜಿ ಸಚಿವ ರಮೇಶ್ ಕುಮಾರ್ ಹಾಗೂ ಹಾಲಿ ಸಚಿವ ಕೆ.ಎಚ್.ಮುನಿಯಪ್ಪ ನಡುವಿನ ಬಂಡಾಯ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ.
|
4 |
+
ಮುನಿಯಪ್ಪ ಲೋಕಸಭಾ ಚುನಾವಣೆಯಲ್ಲಿ ಸ್ರ್ಪಸಲು ತಮ್ಮ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ಇದಕ್ಕೆ ಒಂದು ಹಂತದಲ್ಲಿ ಹೈಕಮಾಂಡ್ ಒಪ್ಪಿಕೊಂಡಿತ್ತು. ಆದರೆ ಕಾಂಗ್ರೆಸ್ನ ಸಚಿವರು, ಶಾಸಕರು ಇದಕ್ಕೆ ಒಪ್ಪದೆ ರಾಜೀನಾಮೆ ನೀಡಲು ಮುಂದಾಗಿದ್ದರು.
|
5 |
+
ಮುನಿಯಪ್ಪ ಅವರ ಕುಟುಂಬಕ್ಕೆ ಟಿಕೆಟ್ ನೀಡಿದರೆ ತಾವು ರಾಜೀನಾಮೆ ನೀಡುತ್ತೇವೆ ಎಂದು ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕ ಪತ್ತನೂರು ಮಂಜುನಾಥ್, ಕೆ.ವೈ.ನಂಜೇಗೌಡ, ವಿಧಾನಪರಿಷತ್ ಸದಸ್ಯರಾದ ನಜೀರ್ ಅಹಮ್ಮದ್, ಅನಿಲ್ಕುಮಾರ್, ಎಸ್.ಎನ್. ನಾರಾಯಣಸ್ವಾಮಿ ಬೆದರಿಕೆ ಹಾಕಿದ್ದರು. ಸಾಲದೆಂಬಂತೆ ಕೋಲಾರ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ಜನಸಂಖ್ಯೆ 3.80 ಲಕ್ಷ ಇದೆ. ಆ ಸಮುದಾಯಕ್ಕೆ ಅವಕಾಶ ಮಾಡಿಕೊಡಿ ಎಂದು ಪ್ರತಿಪಾದಿಸುವ ಮೂಲಕ ಮುನಿಯಪ್ಪ ಅವರ ಕುಟುಂಬದ ವಿರುದ್ಧ ಸೆಡ್ಡು ಹೊಡೆದಿದ್ದರು.
|
6 |
+
ಕೊನೆಗೆ ರಾಜ್ಯ ನಾಯಕರು ಅಳೆದು ತೂಗಿ ಯಾರಿಗೂ ಅಸಮಾಧಾನವಾಗಬಾರದು ಎಂಬ ಕಾರಣಕ್ಕೆ ಪರ್ಯಾಯ ಅಭ್ಯರ್ಥಿಯನ್ನಾಗಿ ಎಡಗೈ ಸಮುದಾಯದ ಕೆ.ವಿ.ಗೌತಮ್ ಅವರನ್ನು ಕಣಕ್ಕಿಳಿಸಿದೆ. ಕೋಲಾರ ಟಿಕೆಟ್ ಹಂಚಿಕೆಯ ಗೊಂದಲ ಮುಗಿದ ಬಳಿಕ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೋಲಾರ ಜಿಲ್ಲೆಯ ಕುರುಡುಮಲೆಯ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಕಾಂಗ್ರೆಸ್ನ ಪ್ರಜಾಧ್ವನಿ-2 ಯಾತ್ರೆಗೆ ಚಾಲನೆ ನೀಡಿದರು. ಈ ವೇಳೆ ರಮೇಶ್ಕುಮಾರ್ ಬಣದ ಎಲ್ಲಾ ನಾಯಕರೂ ಹಾಜರಿದ್ದರು. ಸಚಿವ ಮುನಿಯಪ್ಪ ಮತ್ತು ಅವರ ಪುತ್ರಿ ಹಾಗೂ ಶಾಸಕಿಯಾಗಿರುವ ರೂಪ ಶಶಿಧರ್ ಕಾರ್ಯಕ್ರಮಕ್ಕೆ ಗೈರುಹಾಜರಾಗಿದ್ದರು.
|
7 |
+
ಮಾಜಿ ಸಚಿವ ರಮೇಶ್ಕುಮಾರ್, ಪಕ್ಷ ಒಮ್ಮೆ ಟಿಕೆಟ್ ಘೋಷಣೆ ಮಾಡಿದ ಮೇಲೆ ಮುಗಿಯಿತು. ಅದನ್ನು ನಾವೆಲ್ಲರೂ ಒಪ್ಪಿಕೊಳ್ಳಲೇಬೇಕು. ಕೆಲಸ ಮಾಡಲೇಬೇಕು. ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿಕೊಂಡು ಬರಬೇಕು ಎಂದು ಹೇಳುವ ಮೂಲಕ ಮುನಿ��ಪ್ಪ ಅವರಿಗೆ ಟಾಂಗ್ ನೀಡಿದ್ದರು.ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಕೆ.ಎಚ್.ಮುನಿಯಪ್ಪ, ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
|
8 |
+
ನಿನ್ನೆ ಪ್ರಜಾಧ್ವನಿ-2 ಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ನನಗೆ ಯಾರೂ ಆಹ್ವಾನ ನೀಡಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಕರೆದಿಲ್ಲ. ಹೀಗಾಗಿ ನಾನು ಕಾರ್ಯಕ್ರಮಕ್ಕೆ ಹೋಗಲಿಲ್ಲ ಎಂದು ತಿಳಿಸಿದ್ದಾರೆ. ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಅವರೇ ಗೆಲ್ಲಿಸಿಕೊಂಡು ಬರಲಿ, ಏನಾದರೂ ಮಾಡಿಕೊಳ್ಳಲಿ ತಾವು ತಲೆಕೆಡಿಸಿಕೊಳ್ಳುವುದಿಲ್ಲ, ತಮಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಜವಾಬ್ದಾರಿ ವಹಿಸಿದ್ದಾರೆ. ಅಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರನ್ನು ಗೆಲ್ಲಿಸಿಕೊಂಡು ಬರುತ್ತೇನೆ ಎಂದು ಹೇಳಿದ್ದಾರೆ.
|
9 |
+
ಮುನಿಯಪ್ಪ ಪರಿಶಿಷ್ಟ ಜಾತಿಯ ಎಡಗೈ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಅವರ ಅಸಮಾಧಾನ ರಾಜ್ಯದಲ್ಲಿ 18 ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚಿನ ಮತದಾರರನ್ನು ಹೊಂದಿರುವ ಎಡಗೈ ಸಮುದಾಯದ ಮೇಲೆ ಪರಿಣಾಮ ಬೀರಲಿದೆ. ತನ್ಮೂಲಕ ಚುನಾವಣಾ ಫಲಿತಾಂಶದಲ್ಲೂ ವ್ಯತ್ಯಾಸಗಳಾಗಲಿವೆ ಎಂಬ ಆತಂಕ ಕಾಂಗ್ರೆಸ್ ಅನ್ನು ಕಾಡುತ್ತಿದೆ. ಕೋಲಾರದಲ್ಲಿ ಜಿಲ್ಲೆಗೆ ಸೀಮಿತವಾಗಿರುವ ನಾಯಕರಿಗೆ ಮಣೆ ಹಾಕಿ ರಾಜ್ಯಮಟ್ಟದ ಪ್ರಭಾವಿ ನಾಯಕರನ್ನು ಅಪಮಾನ ಮಾಡುವ ಮೂಲಕ ಕಾಂಗ್ರೆಸ್ ತನ್ನ ಸಾಂಪ್ರದಾಯಿಕ ಮತ ಬ್ಯಾಂಕಿಗೆ ಕೊಳ್ಳಿ ಇಟ್ಟುಕೊಳ್ಳುತ್ತಿದೆ ಎಂಬ ವ್ಯಾಖ್ಯಾನಗಳು ಕೇಳಿಬಂದಿವೆ.
|
eesanje/url_46_183_12.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ನಾಮಪತ್ರ ವಾಪಸ್ಗೆ ನಾಳೆ ಕಡೆ ದಿನ
|
2 |
+
ಬೆಂಗಳೂರು,ಏ.7- ಬಾಕಿ ಉಳಿದಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ನಾಮಪತ್ರ ಪರಿಶೀಲನೆ ನಿನ್ನೆ ಪೂರ್ಣಗೊಂಡಿದ್ದು, 14 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 74 ನಾಮಪತ್ರಗಳು ತಿರಸ್ಕøತಗೊಂಡಿವೆ.ನಾಮಪತ್ರ ವಾಪಸ್ ಪಡೆಯಲು ನಾಳೆ ಕಡೆಯ ದಿನವಾಗಿದ್ದು, ಚುನಾವಣೆಯ ಅಂತಿಮ ಕಣದಲ್ಲಿ ಉಳಿಯುವ ಅಧಿಕೃತ ಅಭ್ಯರ್ಥಿಗಳ ಪಟ್ಟಿ ನಾಳೆ ಸಂಜೆ ವೇಳೆಗೆ ಪ್ರಕಟವಾಗಲಿದೆ.
|
3 |
+
14 ಲೋಕಸಭಾ ಕ್ಷೇತ್ರಗಳಲ್ಲಿ 300 ಅಭ್ಯರ್ಥಿಗಳ 419 ನಾಮಪತ್ರಗಳು ಮಾನ್ಯವಾಗಿದ್ದು, 74 ತಿರಸ್ಕøತಗೊಂಡಿವೆ. ಬಾಕಿ ಉಳಿದಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 32 ಅಭ್ಯರ್ಥಿಗಳ 40 ನಾಮಪತ್ರಗಳ ಪೈಕಿ 4 ನಾಮಪತ್ರಗಳು ತಿರಸ್ಕøತಗೊಂಡಿವೆ. 36 ನಾಮಪತ್ರಗಳು ಪುರಸ್ಕøತವಾಗಿದ್ದು, 28 ಅಭ್ಯರ್ಥಿಗಳ ನಾಮಪತ್ರಗಳು ಮಾನ್ಯವಾಗಿವೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
|
4 |
+
ಯುಗಾದಿ ಹಬ್ಬದ ಜೊತೆಯಲ್ಲಿ ಪ್ರಸಕ್ತ ಲೋಕಸಭಾ ಚುನಾವಣೆಯ ಅಖಾಡ ರಂಗೇರಲಿದೆ. ಈಗಾಗಲೇ ಪ್ರಮುಖ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರವನ್ನು ಆರಂಭಿಸಿವೆ. ರೋಡ್ ಶೋ, ಬಹಿರಂಗ ಸಮಾವೇಶದ ಮೂಲಕ ಪ್ರಚಾರ ಕೈಗೊಂಡು ತಮ್ಮತಮ್ಮ ಆಡಳಿತಾವಯಲ್ಲಿ ಮಾಡಿರುವ ಸಾಧನೆಗಳನ್ನು ಜನರ ಮುಂದಿಟ್ಟು ಮತ ಯಾಚಿಸುತ್ತಿದ್ದಾರೆ.
|
5 |
+
ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಎನ್ಡಿಎ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ಕೈಗೊಂಡಿದ್ದರೆ, ಕಾಂಗ್ರೆಸ್ ನಾಯಕರು ತಮ್ಮ ಅಭ್ಯರ್ಥಿಗಳ ಪರವಾಗಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಹೀಗಾಗಿ ನಾಳೆಯ ನಂತರ ಲೋಕಸಭಾ ಚುನಾವಣೆ ಅಖಾಡ ಕಾವೇರಲಿದೆ.
|
eesanje/url_46_183_2.txt
ADDED
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಧಾರವಾಡ ಲೋಕಸಭಾದಲ್ಲಿ ಪ್ರಹ್ಲಾದ್ ಜೋಷಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ..!
|
2 |
+
ಬೆಂಗಳೂರು,ಏ.8-ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸ್ಪರ್ಧೆ ಮಾಡಿರುವ ಪ್ರತಿಷ್ಠಿತ ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಶಿರಹಟ್ಟಿ ಭಾವೈಕ್ಯತಾ ಮಹಾಸಂಸ್ಥಾನ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ.
|
3 |
+
ಸ್ವಾಮೀಜಿಯವರ ಈ ನಿರ್ಧಾರ ಬಿಜೆಪಿಗೆ ಭಾರೀ ಹಾನಿ ಮಾಡುವ ಸಂಭವವಿದ್ದು, ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಷಿ ಹೊಸ ತಂತ್ರವನ್ನು ಹೆಣೆಯಬೇಕಾದ ಸಂದಿಗ್ಧತೆಗೆ ಸಿಲುಕಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ದಿಂಗಾಲೇಶ್ವರ ಸ್ವಾಮೀಜಿಯವರು ತಮ್ಮ ಬೆಂಬಲಿಗರು, ಹಿತೈಷಿಗಳು, ಅಭಿಮಾನಿಗಳ ಜೊತೆ ಸಭೆ ನಡೆಸಿದರು.
|
4 |
+
ಈ ಬಾರಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ನೀವು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲೇಬೇಕೆಂದು ಬೆಂಬಲಿಗರು ಪಟ್ಟು ಹಿಡಿದ ಕಾರಣ ಅಂತಿಮವಾಗಿ ಸ್ಪರ್ಧೆ ಮಾಡುವುದಾಗಿ ಸ್ವಾಮೀಜಿ ತಮ್ಮ ನಿರ್ಧಾರವನ್ನು ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.
|
5 |
+
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿಂಗಾಲೇಶ್ವರ ಸ್ವಾಮೀಜಿ, ರಾಜಕೀಯದಲ್ಲಿ ಧರ್ಮ ಇರಬೇಕು ಎಂದು ಜನರು ಬಯಸಿದ್ದಾರೆ. ನೊಂದ ಜನರು ನಮ್ಮ ಜೊತೆಗೆ ನೋವು ತೊಡಗಿಕೊಂಡರು. ಹೀಗಾಗಿ ಚುನಾವಣೆಗೆ ಸ್ಪರ್ಧಿಸುತ್ತಿರುವುದಾಗಿ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡರು.
|
6 |
+
ಎರಡೂ ರಾಷ್ಟ್ರೀಯ ಪಕ್ಷಗಳು ಎಲೆಕ್ಷನ್ ಫಿಕ್ಸಿಂಗ್ ಮಾಡಿಕೊಂಡಿವೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಇದು ಮತದಾರರಿಗೆ ಮಾಡಿದ ದ್ರೋಹವಾಗಿದೆ. ಎರಡು ರಾಷ್ಟ್ರೀಯ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಣೆ ಮಾಡಿವೆ. ಆದರೆ ಮತದಾರರು ನಮ್ಮನ್ನು ಚುನಾವಣೆಗೆ ನಿಲ್ಲಿಸುವ ನಿರ್ಧಾರ ಮಾಡಿದ್ದಾರೆ.
|
7 |
+
ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ, ಸ್ವಾರ್ಥ ರಾಜಕಾರಣಿಗಳ ವಿರುದ್ಧ ಸ್ವಾಭಿಮಾನಿ ಧರ್ಮ ಗುರುಗಳು ಮಾಡಿದ ಧರ್ಮ ಯುದ್ಧದ ಘೋಷಣೆ ಇದಾಗಿದೆ. ಧರ್ಮ ಯುದ್ಧವು ಕೇವಲ ಈ ಚುನಾವಣೆಗೆ ಸೀಮಿತವಾಗಿಲ್ಲ, ಜೀವ ಇರುವವರೆಗೂ ಮುಂದುವರೆಯಲಿದೆ, ನೊಂದವರ ಕಷ್ಟಕ್ಕೆ ಸ್ಪಂದಿಸಲು ಈ ನಿರ್ಧಾರ ಎಂದು ಹೇಳಿದರು.
|
8 |
+
ರಾಜ್ಯದಲ್ಲಿ ಲಿಂಗಾಯತ, ಗೌಡ ಜನಾಂಗ ಬಿಟ್ಟರೆ ಕುರುಬ ಸಮಾಜ ದೊಡ್ಡದಿದೆ. ಆದರೆ ಕುರುಬ ಸಮಾಜಕ್ಕೆ ಒಂದೇ ಒಂದು ಟಿಕೆಟ್ನ್ನು ಬಿಜೆಪಿ ನೀಡಿಲ್ಲ. ರೆಡ್ಡಿ, ಜಂಗಮ, ಲಂಬಾಣಿ ಸೇರಿ ನೂರಾರು ಸಮಾಜಗಳು ಅಲಕ್ಷ್ಯಕ್ಕೆ ಒಳಗಾಗಿವೆ. ಎಲ್ಲ ಸಮಾಜಗಳು ಇಂದು ಬಿಜೆಪಿಯಿಂದ ನೋವು ಅನುಭವಿಸಿವೆ.
|
9 |
+
ಈಶ್ವರಪ್ಪನವರಿಗೆ ಬಿಜೆಪಿ ಟಿಕೆಟ್ ಕೊಡಲಿಲ್ಲ. ಈಶ್ವರಪ್ಪ ಪುತ್ರ ಒಂದೂವರೆ ವರ್ಷದಿಂದ ಕೆಲಸ ಮಾಡಿದರೂ ಟಿಕೆಟ್ ಕೊಡಲಿಲ್ಲ. ಬಿಜೆಪಿ ಹೈಕಮಾಂಡ್ ನಾಯಕರು ಆ ಸಮುದಾಯ ನಮಗೆ ಅವಶ್ಯಕತೆ ಇಲ್ಲ ಎನ್ನುತ್ತಾರೆ. ಬಹುದೊಡ್ಡ ಸಮುದಾಯವನ್ನು ಬಿಜೆಪಿ ಕಡೆಗಣಿಸಿದೆ. 2% ಇರುವ ಸಮುದಾಯದ ನಾಯಕರಿ���ೆ ಎರಡು ಕ್ಯಾಬಿನೆಟ್ ಹುದ್ದೆ ನೀಡಿದ್ದಾರೆ.
|
10 |
+
ದೊಡ್ಡ ಸಂಖ್ಯೆಯ ಜನರಿಗೆ ಟಿಕೆಟ್ ನೀಡದೆ ಕಡಿಮೆ ಜನಸಂಖ್ಯೆ ಇರುವ ಜಾತಿಗೆ ಮೂರು ಟಿಕೆಟ್ ಕೊಟ್ಟಿದ್ದಾರೆ, ಎಲ್ಲಿದೆ ಸಾಮಾಜಿಕ ನ್ಯಾಯ ಎಂದು ಆಕ್ರೋಶ ಹೊರಹಾಕಿದರು. ಲಿಂಗಾಯತ ಸಮುದಾಯದವರಿಗೆ ಕ್ಯಾಬಿನೆಟ್ ಸ್ಥಾನದಲ್ಲಿ ಖಾತೆ ಕೊಟ್ಟಿದ್ದು ಬರೀ ರಾಜ್ಯ ಖಾತೆ ಅಷ್ಟೇ ಕೊಟ್ಟಿದ್ದಾರೆ. ವಿ. ಸೋಮಣ್ಣ ಅವರಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ನಿಲ್ಲಿಸಬಹುದಿತ್ತು. ಆದರೆ ತುಮಕೂರು ಜಿಲ್ಲೆಯಲ್ಲಿ ಸೋಮಣ್ಣ ಅವರನ್ನು ನಿಲ್ಲಿಸಿದ್ದಾರೆ. ಅಲ್ಲಿರುವ ಲಿಂಗಾಯತ ಸಮುದಾಯದ ನಾಯಕರು ಹೊಡೆದಾಡಲಿ ಎಂದು ಅಭಿಪ್ರಾಯವಿರಬೇಕು ಎಂದರು.
|
11 |
+
ತೇಜಸ್ವಿ ಸೂರ್ಯ ಅವರನ್ನು ತುಮಕೂರಿನಲ್ಲಿ ನಿಲ್ಲಿಸಿ. ಸೋಮಣ್ಣ ಅವರನ್ನು ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ನಿಲ್ಲಿಸಬೇಕಿತ್ತು. ಆಗ ಯಾರ ತಾಕತ್ ಹೇಗಿದೆ ಅಂತ ಗೊತ್ತಾಗ್ತಿತ್ತು. ಲಿಂಗಾಯತ ಸಮುದಾಯದ ನಾಯಕರಿಗೆ ಎರಡು ಅಥವಾ ಮೂರು ಅವಧಿಯಲ್ಲಿ ಅವಕಾಶ ಕೊಡುತ್ತಾರೆ. ಬೇರೆ ಸಮುದಾಯದ ನಾಯಕರಿಗೆ ಹತ್ತು ಅವಧಿಯವರೆಗೆ ಅವಕಾಶ ಕೊಡುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
|
12 |
+
ಪ್ರಹ್ಲಾದ್ ಜೋಷಿ ಹೀರೋ ಆಗಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ಝಿರೋ ಆಗಿದ್ದಾರೆ. ತಮ್ಮ ಸಮುದಾಯದ ಬೆಳವಣಿಗೆ ಅಷ್ಟೇ ನೋಡುತ್ತಾರೆ. ಬೇರೆ ಸಮುದಾಯದವನ್ನು ಕಡೆಗಣಿಸುತ್ತಾರೆ. ನಮ್ಮ ಸಮುದಾಯವನ್ನು ತುಳಿದು ರಾಜಕಾರಣ ಮಾಡಿದ್ದಾರೆ. ಈಶ್ವರಪ್ಪ ಅವರಿಗೆ ಟಿಕೆಟ್ ತಪ್ಪಲು ಪ್ರಹ್ಲಾದ್ ಜೋಷಿ ಅವರೇ ಕಾರಣ ಎಂದು ಇದೇ ಸಂದರ್ಭದಲ್ಲಿ ಸ್ವಾಮೀಜಿ ಹೇಳಿದರು.
|
13 |
+
ಯಾರು ಈ ಸ್ವಾಮೀಜಿ:ಶಿರಹಟ್ಟಿ ಮಠದ ಪಕೀರ ದಿಂಗಾಲೇಶ್ವರ ಸ್ವಾಮೀಜಿ ಸದಾ ಒಂದಲ್ಲ ಒಂದು ವಿವಾದಿಂದ ಸುದ್ದಿಯಲ್ಲಿದ್ದಾರೆ. ಕೋಮು ಸೌಹಾರ್ದ ಜಾತ್ಯಾತೀತ ಹೋರಾಟ, ಎಡಪಂಥೀಯ ದೃಷ್ಟಿಕೋನದಿಂದ ಬೆಳೆದು ಬಂದ ಅವರು ಹುಬ್ಬಳ್ಳಿಯ ಮೂರುಸಾವಿರ ಮಠದ ಉತ್ತರಾಧಿಕಾರಕ್ಕಾಗಿ ಹೋರಾಟ ಸೇರಿದಂತೆ ಅನೇಕ ಬೆಳವಣಿಗೆಗಳು, ಜೀವ ಬೆದರಿಕೆ, ಭಾವೈಕ್ಯತೆ ಸೇರಿದಂತೆ ಮಠದ ವಿಷಯವಾಗಿ ವಿವಾದಾತ್ಮಕ ಹೇಳಿಕೆಗಳಿಂದಲೇ ಅವರು ಗಮನ ಸೆಳೆದವರು.
|
eesanje/url_46_183_3.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಸೌದಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉತ್ತರ ಕನ್ನಡದ ಮೂವರ ಸಾವು
|
2 |
+
ಶಿರಸಿ(ಉತ್ತರಕನ್ನಡ),ಏ.8-ಹಜ್ ಯಾತ್ರೆಗೆ ತೆರಳಿದ್ದ ಜಿಲ್ಲೆಯ ಮುಂಡಗೋಡಿನ ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ.
|
3 |
+
ಮುಂಡಗೋಡ ಪಟ್ಟಣದ ರೋಣ ಮೆಡಿಕಲ್ಸ್ನ ಮಾಲೀಕರಾದ ಫಯಾಜ್ ರೋಣ ಅವರ ಪತ್ನಿ ಅಫ್ರೀನ ಬಾನು ಹಾಗೂ ಅವರ ಅಣ್ಣನ ಮಗ ಅಯಾನ್ ರೋಣ ಮೃತ ದುರ್ದೈವಿಗಳು.
|
4 |
+
ಅಪಘಾತದಲ್ಲಿ ಫಯಾಜ್ ಅವರ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಮಾ.26ರಂದು ಮೆಕ್ಕಾ ಮದೀನಾ ದರ್ಶನಕ್ಕೆ ತೆರಳಿದ್ದರು. ಏ.6ರ ರಾತ್ರಿ ಮೆಕ್ಕಾದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.
|
eesanje/url_46_183_4.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
5, 8 , 9 ಹಾಗೂ 11ನೇ ತರಗತಿ ಬೋರ್ಡ್ ಪರೀಕ್ಷೆಯ ಫಲಿತಾಂಶಕ್ಕೆ ಸುಪ್ರೀಂ ತಡೆಯಾಜ್ಞೆ
|
2 |
+
ನವದೆಹಲಿ,ಏ.8-ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಕಳೆದ ಮಾರ್ಚ್ನಲ್ಲಿ 5, 8 , 9 ಹಾಗೂ 11ನೇ ತರಗತಿಗಳಿಗೆ ನಡೆಸಿದ್ದ ಬೋರ್ಡ್ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸದಂತೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಸದ್ಯ ಯಾವುದೇ ಶಾಲೆಗಳು ಫಲಿತಾಂಶ ಪ್ರಕಟಿಸಬಾರದು. ಮುಂದಿನ ಆದೇಶದವರೆಗೂ ಕಾಯಬೇಕು ಎಂದು ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದೆ.
|
3 |
+
ಮಂಗಳವಾರ 5, 8, ಮತ್ತು 11ನೇ ತರಗತಿಯ ಫಲಿತಾಂಶವನ್ನು ಎದುರು ನೋಡುತ್ತಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸುಪ್ರೀಂಕೋರ್ಟ್ನ ಈ ಆದೇಶ ನಿರಾಸೆ ತಂದಿದೆ. 5, 8, 9 ಹಾಗೂ 11ನೇ ತರಗತಿಗಳಿಗೆ ನಡೆಸಲು ಉದ್ದೇಶಿಸಿದ್ದ ಬೋರ್ಡ್ ಪರೀಕ್ಷೆಗೆ, ಹೈಕೋರ್ಟ್ನ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಮತ್ತು ರಾಜೇಶ್.ಕೆ ರೈ ಅವರಿದ್ದ ಪೀಠ ಕೆಲವು ಷರತ್ತುಗಳನ್ನು ವಿಧಿಸಿ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿತ್ತು.
|
4 |
+
ಮಾರ್ಚ್ನಲ್ಲಿ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶ ನೀಡಿದ್ದ ಹೈಕೋರ್ಟ್, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಸೂಚನೆ ನೀಡಿತ್ತು. ಅದರಂತೆ ಬಳಿಕ ಶಾಲೆಗಳು ಪರೀಕ್ಷೆಗಳನ್ನು ನಡೆಸಿದ್ದವು. ಇದೀಗ ಫಲಿತಾಂಶ ಪ್ರಕಟವಾಗುವ ಸಂದರ್ಭದಲ್ಲೇ ಸುಪ್ರೀಂಕೋರ್ಟ್ ತಡೆಯಾಜ್ಞೆ ಬಂದಿದೆ.
|
5 |
+
ಆದರೆ ದ್ವಿಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ರೂಪ್ಸಾ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಸೋಮವಾರ ಮೌಲ್ಯಾಂಕನ ಪರೀಕ್ಷೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಂದಿನ ಆದೇಶದವರೆಗೆ ಫಲಿತಾಂಶವನ್ನು ಪ್ರಕಟಿಸಬಾರದೆಂದು ಆದೇಶಿಸಿ ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಅರ್ಜಿ ವಿಚಾರಣೆ ವೇಳೆ ರೂಪ್ಸಾ ಪರ ವಾದ ಮಂಡಿಸಿದ್ದ ವಕೀಲರು, 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಅಕಾರವಿಲ್ಲ ಎಂದು ರೂಪ್ಸಾ ಪರ ವಕೀಲರು ವಾದ ಮಾಡಿದ್ದರು.
|
6 |
+
ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆಯಡಿ ತಿಳಿಸಿರುವಂತೆ 6ರಿಂದ 14 ವರ್ಷದ ಮಕ್ಕಳಿಗೆ ಬೋರ್ಡ್ ಮಟ್ಟದ ಪರೀಕ್ಷೆಗಳನ್ನು ನಡೆಸುವುದಕ್ಕೆ ಅವಕಾಶವಿಲ್ಲ. ಆದರೂ ರಾಜ್ಯ ಸರ್ಕಾರ ಈ ನಿರ್ಧಾರಕ್ಕೆ ಕೈಗೊಂಡಿದೆ. ಕರ್ನಾಟಕ ಹೈಕೋರ್ಟ್ ದ್ವಿಸದಸ್ಯ ಪೀಠ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು. ಫಲಿತಾಂಶವನ್ನು ಪ್ರಕಟಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದರು.
|
7 |
+
ಅಲ್ಲದೆ ಮೌಲ್ಯಮಾಪನವನ್ನು ಬೇಕಾಬಿಟ್ಟಿಯಾಗಿ ನಡೆಸಲಾಗಿದೆ. ಉತ್ತಮವಾಗಿ ಓದಿದ ಅಭ್ಯರ್ಥಿಗಳಿಗೆ ಕಡಿಮೆ ಅಂಕ ನೀಡಲಾಗಿದೆ. ಮೌಲ್ಯ ಮಾಪನ ದೋಷದ ಬಗ್ಗೆ ಹಲವಾರು ಖಾಸಗಿ ಶಿಕ್ಷಣ ಸಂಸ್ಥೆಗಳೇ ಅನುಮಾನ ವ್ಯಕ್ತಪಡಿಸ���ವೆ. ಇದು ಸಾಕಷ್ಟು ದೋಷಪೂರಿತವಾಗಿರುವುದರಿಂದ ತಡೆಯಾಜ್ಞೆ ನೀಡಬೇಕೆಂದು ವಕೀಲರು ಕೋರಿದರು. ಅಂತಿಮವಾಗಿ ವಾದ ಆಲಿಸಿದ ನ್ಯಾಯಮೂರ್ತಿಗಳು ಮಂಗಳವಾರ ಫಲಿತಾಂಶ ಪ್ರಕಟಿಸದಂತೆ ತಡೆಯಾಜ್ಞೆ ನೀಡಿತು.
|
8 |
+
ಹಿನ್ನಲೆ:ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿದ್ದ ಬೋರ್ಡ್ ಪರೀಕ್ಷೆ ಹೈಕೋರ್ಟ್ ವಿಭಾಗೀಯ ಪೀಠ ಒಪ್ಪಿಗೆ ಸೂಚಿಸಿತ್ತು. ಬೋರ್ಡ್ ಪರೀಕ್ಷೆ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ಆದೇಶ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗೀಯ ಪೀಠದ ಮೆಟ್ಟಲೇರಿತ್ತು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಬೋರ್ಡ್ ಪರೀಕ್ಷೆಗೆ ಅಸ್ತು ಎಂದಿತ್ತು. ಉಳಿದ ವಿಷಯಗಳ ಪರೀಕ್ಷೆ ನಡೆಸಲು ತುರ್ತು ಹಾಗೂ ಸೂಕ್ತ ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿತ್ತು.
|
9 |
+
ಈ ಮೊದಲು ರಾಜ್ಯದಲ್ಲಿ 5 ಮತ್ತು 8ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸುವ ಪ್ರಯತ್ನದಲ್ಲಿದ್ದ ಶಿಕ್ಷಣ ಇಲಾಖೆಗೆ ಹಿನ್ನಡೆ ಆಗಿತ್ತು. 5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ಹೈಕೋರ್ಟ್ನ ಏಕಸದಸ್ಯ ಪೀಠ ಮಾರ್ಚ್ 10ರಂದು ತೀರ್ಪು ನೀಡಿತ್ತು.
|
10 |
+
ಶಾಲಾ ಮಟ್ಟದ ಮೌಲ್ಯಮಾಪನಕ್ಕೆ ಬದಲಾಗಿ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸಲು ತೀರ್ಮಾನಿಸಿ 2022ರ ಡಿಸೆಂಬರ್ 12ರಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆದರೆ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ ಹಾಗೂ ಪೋಷಕರ ಸಂಘಟನೆ ಶಿಕ್ಷಣ ಇಲಾಖೆಯ ಸುತ್ತೋಲೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿತ್ತು.
|
11 |
+
ಈ ಶೈಕ್ಷಣಿಕ ವರ್ಷದಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದು ಸರಿಯಲ್ಲ. 2022-23ನೇ ಸಾಲಿನ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ವಿಧಾನವನ್ನು ಬದಲಿಸುವ ಪ್ರಯತ್ನ ಕಾರ್ಯಸಾಧುವಲ್ಲ ಎಂದು ಸಂಘದ ಪರ ವಕೀಲರು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು.
|
12 |
+
ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಏಕಸದಸ್ಯ ಪೀಠ, ರಾಜ್ಯ ಶಿಕ್ಷಣ ಇಲಾಖೆ 2022ರ ಡಿಸೆಂಬರ್ 12ರಂದು ಪ್ರಕಟಿಸಿದ್ದ ಸುತ್ತೋಲೆಯನ್ನು ಅನೂರ್ಜಿತಗೊಳಿಸಿ, ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ತೀರ್ಪು ನೀಡಿತ್ತು. ಆದರೆ ಏಕಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಪರ ವಕೀಲರು ಮೇಲ್ಮನವಿ ಸಲ್ಲಿಸಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆ ನಡೆಸಲು ಷರತ್ತುಬದ್ಧ ಒಪ್ಪಿಗೆ ಸೂಚಿಸಿತ್ತು.
|
eesanje/url_46_183_5.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ರಣಬಿಸಿಲಿನ ಎಫೆಕ್ಟ್ : ರಾಜ್ಯದಲ್ಲಿ ಸಾಂಕ್ರಾಮಿಕ ರೋಗದ ಭೀತಿ, 14 ಮಂದಿಗೆ ಕಾಲರಾ ದೃಢ
|
2 |
+
ಬೆಂಗಳೂರು,ಏ.8-ರಾಜ್ಯದಲ್ಲಿ ರಣರಣ ಬಿಸಿಲಿನ ಬೇಗೆಯ ನಡುವೆ ಕಾಲರಾ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ 14 ಕಾಲರಾ ದೃಢಪಟ್ಟಿದ್ದು, ಆತಂಕವನ್ನು ಮತ್ತಷ್ಟು ತೀವ್ರಗೊಳಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ 13 ಕಾಲರಾ ಪ್ರಕರಣಗಳು ದಾಖಲಾಗಿದೆ.
|
3 |
+
ಬಿಬಿಎಂಪಿ ವ್ಯಾಪ್ತಿಯಲ್ಲಿ 8, ಬೆಂಗಳೂರು ನಗರ ವ್ಯಾಪ್ತಿಯಲ್ಲಿ 5 ಕಾಲರಾ ರೋಗದ ಪ್ರಕರಣಗಳು ದೃಢಪಟ್ಟಿದ್ದು, ರಾಮನಗರದಲ್ಲಿ 1 ಪ್ರಕರಣ ಪತ್ತೆಯಾಗಿದೆ. ಕಳೆದ 3 ತಿಂಗಳಲ್ಲಿ 14 ಕಾಲರಾ ರೋಗದ ಪ್ರಕರಣಗಳು ದೃಢಪಟ್ಟಿದ್ದು, ಸೂಕ್ತ ಮುನ್ನೆಚ್ಚರಿಕೆ ವಹಿಸದಿದ್ದರೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.
|
4 |
+
ಕಾಲರಾ ರೋಗಕ್ಕೆ ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ಸಾವು ಸಂಭವಿಸಬಹುದೆಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಕಲುಷಿತ ನೀರಿನಿಂದ ಈ ರೋಗ ಹರಡುವುದರಿಂದ ಜನ ಕಾದಾರಿಸಿದ ನೀರು ಕುಡಿಯುವುದು ಉತ್ತಮ. ರಾಜ್ಯದಲ್ಲಿ ಕಳೆದ ಒಂದು ತಿಂಗಳಿನಿಂದ ಬಿಸಿಲಿನ ತಾಪಮಾನ ಏರಿಕೆಯಾಗುತ್ತಲೇ ಇದೆ. ಬಹುತೇಕ ಕಡೆ ಕುಡಿಯುವ ನೀರಿಗೆ ಆಹಾಕಾರ ಶುರುವಾಗಿದೆ. ಕಲುಷಿತ ನೀರು, ಕಲುಷಿತ ಆಹಾರ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ ಕಾಲರಾ ರೋಗಲಕ್ಷಣಗಳು ಪತ್ತೆಯಾಗುತ್ತಿವೆ.
|
5 |
+
ಬೆಂಗಳೂರು ನಗರದಲ್ಲಿ ಮಾರ್ಚ್ನಲ್ಲಿ 2 ಹಾಗೂ ಏಪ್ರಿಲ್ನಲ್ಲಿ 3 ರಂತೆ ಒಟ್ಟು 5 ಪ್ರಕರಣಗಳು ಪತ್ತೆಯಾಗಿತ್ತು. ಬಿಬಿಎಂಪಿ ವ್ಯಾಪ್ತಿಯಲ್ಲಿ ಏಪ್ರಿಲ್ನಲ್ಲಿ 5 ಸೇರಿ ಒಟ್ಟು 8 ಪ್ರಕರಣಗಳು ದಾಖಲಾಗಿವೆ.ಬೇಸಿಗೆ ಕಾಲದಲ್ಲಿ ಕಾಲರಾ ರೋಗವು ಉಲ್ಭಣಗೊಳ್ಳುತ್ತಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತೀವ್ರ ನಿಗಾ ವಹಿಸಿದೆ.
|
6 |
+
ಜನರು ಸ್ವಚ್ಚತೆ ಕಾಪಾಡಿಕೊಳ್ಳುವುದರ ಜೊತೆಗೆ ಬಿಸಿನೀರು ಕುಡಿಯಬೇಕು ಮತ್ತು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕೆಂದು ಆರೋಗ್ಯ ಇಲಾಖೆ ಆಯುಕ್ತರಾದ ಡಿ.ರಂದೀಪ್ ತಿಳಿಸಿದ್ದಾರೆ.ವಾಂತಿಬೇಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಬೆಂಗಳೂರಿನ ಬಿಎಂಸಿಆರ್ಐ ಮಹಿಳಾ ಹಾಸ್ಟೆಲ್ನ 47 ವಿದ್ಯಾರ್ಥಿನಿಯರ ಪೈಕಿ ಮೂವರಲ್ಲಿ ಕಾಲರಾ ಸೋಂಕು ಪತ್ತೆಯಾಗಿದೆ. ಕೆಲವರಿಗೆ ಹ್ಯಾಂಗಿಂಗ್ ಡ್ರಾಪ್ ವಿಧಾನದ ಹಾಗೂ ಕಲ್ಚರ್ ಪರೀಕ್ಷೆ ಮಾಡಲಾಗಿದ್ದು, ಇಬ್ಬರಲ್ಲಿ ವಿಬ್ರಿಯೋ ಕಾಲರಾ ಪತ್ತೆಯಾಗಿದೆ. ಮತ್ತೊಬ್ಬರಿಗೂ ಪರೀಕ್ಷೆ ನಡೆಸಲಾಗಿದ್ದು, ಇವರಿಗೂ ಪಾಸಿಟೀವ್ ಕಂಡುಬಂದಿದೆ.
|
7 |
+
ಕಲ್ಚರ್ ಪರೀಕ್ಷೆ ವರದಿ ಬಂದ ನಂತರವಷ್ಟೇ ಕಾಲರಾ ಇದೆಯೋ, ಇಲ್ಲವೋ ಎಂಬ ಬಗ್ಗೆ ದೃಢಪಡಲಿದೆ. ಆಸ್ಪತ್ರೆಗೆ ಸೇರಿದ್ದ ವಿದ್ಯಾರ್ಥಿನಿಯರಲ್ಲಿ 13 ವಿದ್ಯಾರ್ಥಿನಿಯರು ಡಿಸ್ಚಾರ್ಜ್ ಆಗಿದ್ದಾರೆ. ಇಂದು ಮತ್ತೋರ್ವ ವಿದ್ಯಾರ್ಥಿನಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಉಳಿದ ವಿದ್ಯಾರ್ಥಿನಿಯರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
|
8 |
+
ಮುನ್ನೆಚ್ಚರಿಕೆ ಕ್ರಮ:ಕಲುಷಿತ ಆಹಾರ ಸೇವನೆಯಿಂದ ದೂರವಿರಿ. ವಾಂತಿ ಬೇಧಿ ಕಾಣಿಸಿಕೊಂಡ ಕೂಡಲೇ ವೈದ್ಯರನ್ನು ಸಂಪರ್ಕಿಸಿ, ರಸ್ತೆಬದಿ ಶುಚಿತ್ವವಿಲ್ಲದೆ ಮಾರಾಟ ಮಾಡುವ ಆಹಾರ, ಪಾನೀಯ ಸೇವನೆ ಬೇಡ, ಹಸಿ ಆಹಾರ, ಶೆಲ್ಫಿಶ್ ಸೇವಿಸಬೇಡಿ, ತರಕಾರಿ-ಹಣ್ಣಿನ ಜ್ಯೂಸ್, ರಾಗಿಗಂಜಿಯಂತಹ ದ್ರವ ಆಹಾರಗಳನ್ನು ಹೆಚ್ಚಾಗಿ ಸೇವಿಸಿ. ನೀವು ವಾಸಿಸುವ ಸುತ್ತಮುತ್ತಲ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರಿಂದ ರೋಗ-ರುಜಿನಗಳಿಂದ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ.
|
eesanje/url_46_183_6.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ರಾಜ್ಯದಲ್ಲಿ ನಾಮಪತ್ರ ವಾಪಸ್ ಪಡೆಯಲು ಇಂದು ಕೊನೇ ದಿನ
|
2 |
+
ಬೆಂಗಳೂರು,ಏ.8-ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ವಾಪಸ್ ಪಡೆಯುವ ಅವಧಿ ಇಂದು ಮುಕ್ತಾಯಗೊಂಡಿದ್ದು, ಸಂಜೆ ವೇಳೆಗೆ ಚುನಾವಣಾ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಪ್ರಕಟವಾಗಲಿದೆ. ಆಯಾ ಕ್ಷೇತ್ರದ ಚುನಾವಣಾ ಅಧಿಕಾರಿಗಳ ಕಚೇರಿಗಳಲ್ಲಿ ಪಟ್ಟಿ ಪ್ರಕಟಿಸಲಾಗುತ್ತದೆ. ಹೀಗಾಗಿ ಇಂದಿನಿಂದಲೇ ರಾಜ್ಯದಲ್ಲಿ ಚುನಾವಣಾ ಕಾವು ಹೆಚ್ಚಾಗಲಿದೆ.
|
3 |
+
ರಾಜಕೀಯ ಪಕ್ಷಗಳ ಹಾಗೂ ಅಭ್ಯರ್ಥಿಗಳ ನಡುವೆ ಆರೋಪ, ಪ್ರತ್ಯಾರೋಪ ತಾರಕಕ್ಕೇರಲಿದ್ದು, ರೋಡ್ ಶೋ, ಬಹಿರಂಗ ಸಮಾವೇಶದ ಮೂಲಕ ಮತದಾರರ ಮನ ಗೆಲ್ಲಲು ಪ್ರಯತ್ನಿಸಲಾಗುತ್ತಿದೆ. ಮೊದಲ ಹಂತದಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರಚಾರದ ಅಬ್ಬರದಲ್ಲಿ ಮುಂದಿವೆ. ಪಕ್ಷೇತರರು ಸೇರಿದಂತೆ ಉಳಿದ ಪಕ್ಷಗಳ ಅಭ್ಯರ್ಥಿಗಳು ಕೂಡ ಪ್ರಚಾರದಲ್ಲಿ ನಿರತರಾಗಿದ್ದಾರೆ.
|
4 |
+
14 ಲೋಕಸಭಾ ಕ್ಷೇತ್ರಗಳಲ್ಲಿ 300 ಅಭ್ಯರ್ಥಿಗಳ 419 ನಾಮಪತ್ರಗಳು ಮಾನ್ಯವಾಗಿದ್ದು, 74 ನಾಮಪತ್ರಗಳು ತಿರಸ್ಕøತಗೊಂಡಿವೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಸ್ರ್ಪಧಿಸಿದ್ದರೆ, ಬಿಜೆಪಿ 11 ಕ್ಷೇತ್ರಗಳಲ್ಲಿ ಹಾಗೂ ಕಾಂಗ್ರೆಸ್ 14 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
|
5 |
+
ಬಿಎಸ್ಪಿ -5 , ನೋಂದಾಯಿತ ಹಾಗೂ ಮಾನ್ಯತೆ ಪಡೆಯದ ಪಕ್ಷಗಳಿಂದ 71, ಹಾಗೂ 102 ಪಕ್ಷೇತರರು ನಾಮಪತ್ರ ಸಲ್ಲಿಸಿದ್ದರು.
|
6 |
+
ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ವಿವರ:ಉಡುಪಿ-ಚಿಕ್ಕಮಗಳೂರು:ಕೋಟಾ ಶ್ರೀನಿವಾಸಪೂಜಾರಿ(ಬಿಜೆಪಿ) ಜಯಪ್ರಕಾಶ್ ಹೆಗ್ಡೆ (ಕಾಂಗ್ರೆಸ್)ಹಾಸನ:ಪ್ರಜ್ವಲ್ ರೇವಣ್ಣ (ಜೆಡಿಎಸ್), ಶ್ರೇಯಸ್ ಪಟೇಲ್ ಗೌಡ(ಕಾಂಗ್ರೆಸ್)ದಕ್ಷಿಣ ಕನ್ನಡ:ಬ್ರಿಜೇಶ್ ಚೌಟ(ಬಿಜೆಪಿ), ಪದ್ಮರಾಜ್(ಕಾಂಗ್ರೆಸ್)ಚಿತ್ರದುರ್ಗ:ಗೋವಿಂದ ಕಾರಜೋಳ(ಬಿಜೆಪಿ), ಬಿ.ಎನ್.ಚಂದ್ರಪ್ಪ(ಕಾಂಗ್ರೆಸ್)ತುಮಕೂರು:ವಿ.ಸೋಮಣ್ಣ (ಬಿಜೆಪಿ), ಎಸ್.ಪಿ.ಮುದ್ದಹನುಮೇಗೌಡ(ಕಾಂಗ್ರೆಸ್)ಮಂಡ್ಯ:ಎಚ್.ಡಿ.ಕುಮಾರಸ್ವಾಮಿ( ಜೆಡಿಎಸ್), ವೆಂಕಟರಮಣೇ ಗೌಡ(ಕಾಂಗ್ರೆಸ್)ಮೈಸೂರು:ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (ಬಿಜೆಪಿ), ಎಂ.ಲಕ್ಷ್ಮಣ್(ಕಾಂಗ್ರೆಸ್)ಚಾಮರಾಜನಗರ:ಎಸ್.ಬಾಲರಾಜ್(ಬಿಜೆಪಿ), ಸುನೀಲ್ ಬೋಸ್(ಕಾಂಗ್ರೆಸ್)ಬೆಂಗಳೂರು ಗ್ರಾಮಾಂತರ:ಡಾ.ಸಿ.ಎನ್.ಮಂಜುನಾಥ್ (ಬಿಜೆಪಿ), ಡಿ.ಕೆ.ಸುರೇಶ್(ಕಾಂಗ್ರೆಸ್)ಬೆಂಗಳೂರು ಉತ್ತರ:ಶೋಭಾ ಕರಂದ್ಲಾಜೆ(ಬಿಜೆಪಿ), ರಾಜೀವ್ ಗೌಡ (ಕಾಂಗ್ರೆಸ್)ಬೆಂಗಳೂರು ಕೇಂದ್ರ:ಪಿ.ಸಿ.ಮೋಹನ್(ಬಿಜೆಪಿ), ಮನ್ಸೂರ್ ಆಲಿಖಾನ್(ಕಾಂಗ್ರೆಸ್)ಬೆಂಗಳೂರು ದಕ್ಷಿಣ:ತೇಜಸ್ವಿ ಸೂರ್ಯ(ಬಿಜೆಪಿ), ಸೌಮ್ಯ ರೆಡ್ಡಿ(ಕಾಂಗ್ರೆಸ್)ಚಿಕ್ಕಬಳ್ಳಾಪುರ:ಡಾ.ಕೆ.ಸುಧಾಕರ್ (ಬಿಜೆಪಿ), ರಕ್ಷಾ ರಾಮಯ್ಯ(ಕಾಂಗ್ರೆಸ್)ಕೋಲಾರ:ಎಂ.ಮಲ್ಲೇಶ್ ಬ���ಬು( ಜೆಡಿಎಸ್), ಕೆ.ವಿ.ಗೌತಮ್(ಕಾಂಗ್ರೆಸ್)
|
eesanje/url_46_183_7.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯದಲ್ಲಿ ಮನೆಯಿಂದಲೇ ಮತದಾನ ಮಾಡುವ ಅರ್ಹತೆ ಹೊಂದಿದ್ದಾರೆ 11 ಲಕ್ಷ ಮತದಾರರು
|
2 |
+
ಬೆಂಗಳೂರು, ಏ.8-ಕರ್ನಾಟಕದಲ್ಲಿ 85 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ 5.7 ಲಕ್ಷ ಹಿರಿಯ ನಾಗರಿಕರು ಮತ್ತು 6.13 ಲಕ್ಷ ವಿಕಲಚೇತನರು ಲೋಕಸಭೆ ಚುನಾವಣೆಯಲ್ಲಿ ಮನೆಯಿಂದಲೇ ಮತ ಚಲಾಯಿಸಲು ಅರ್ಹತೆ ಹೊಂದಿದ್ದಾರೆ ಎಂಬುದು ಚುನಾವಣಾ ಆಯೋಗದ ಅಂಕಿಅಂಶಗಳಿಂದ ತಿಳಿದುಬಂದಿದೆ.
|
3 |
+
ಮನೆಯಿಂದಲೇ ಮತದಾನ ಮಾಡಲು ಬೇಕಾದ ಅರ್ಜಿ ನಮೂನೆ 12ಡಿ (12ಆ) ವಿತರಿಸುವ ಪ್ರಕ್ರಿಯೆಯನ್ನು ಚುನಾವಾಣಾ ಆಯೋಗದ ಅಧಿಕಾರಿಗಳು ಈಗಾಗಲೇ ಆರಂಭಿಸಿದ್ದಾರೆ.ಅರ್ಜಿ ನಮೂನೆ 12ಡಿ ಮೂಲಕ ಅರ್ಹ ಮತದಾರರು ಮನೆಯಿಂದ ಮತ ಚಲಾಯಿಸಲು ಸಹಾಯಕ ಚುನಾವಣಾಧಿಕಾರಿಗೆ ಮನವಿ ಮಾಡಲು ಅವಕಾಶ ನೀಡಲಾಗಿದೆ. ತಾವು ಮತ ಚಲಾಯಿಸಲು ಮತಗಟ್ಟೆಗೆ ಹೋಗುವ ಸ್ಥಿತಿಯಲ್ಲಿಲ್ಲ ಎಂಬುದನ್ನು ಈ ಅರ್ಜಿ ಮೂಲಕ ತಿಳಿಸಬಹುದಾಗಿದೆ.
|
4 |
+
ಕರ್ನಾಟಕದಲ್ಲಿ ಚುನಾವಣಾ ಅಸೂಚನೆ ಹೊರಡಿಸಿದ ನಂತರ (ಮೊದಲ ಹಂತದ ಮತದಾನಕ್ಕೆ ಮಾರ್ಚ್ 28ರಂದು ಅಧಿಸೂಚನೆ ಹೊರಡಿಸಲಾಗಿದೆ) ಐದು ದಿನಗಳ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಜನರು ಚುನಾವಣಾ ಆಯೋಗದ ವೆಬ್ಸೈಟ್ನಿಂದ (://.,,) ಫಾರ್ಮ್ ಅನ್ನು ಡೌನ್ಲೋಡ್ ಮಾಡಿ, ಅದನ್ನು ಭರ್ತಿ ಮಾಡಿ ಆಯಾ ವ್ಯಾಪ್ತಿಯ ಚುನಾವಣಾಧಿಕಾರಿ ಕಚೇರಿಗೆ ಸಲ್ಲಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದರು.
|
5 |
+
2020ರ ಬಿಹಾರ ವಿಧಾನಸಭೆ ಚುನಾವಣೆ ವೇಳೆ, ಕೋವಿಡ್ ಸಾಂಕ್ರಾಮಿಕದ ಕಾರಣ 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಅಂಗವಿಕಲರಿಗೆ ಮೊದಲ ಬಾರಿಗೆ ಮನೆಯಿಂದಲೇ ಮತದಾನ ಮಾಡುವ ಸೌಲಭ್ಯವನ್ನು ಒದಗಿಸಲಾಗಿತ್ತು.
|
6 |
+
ಕರ್ನಾಟಕದಲ್ಲಿ 2023 ರ ವಿಧಾನಸಭಾ ಚುನಾವಣೆಯಲ್ಲಿ ಸುಮಾರು ಒಂದು ಲಕ್ಷ ಜನರು ಮನೆಯಿಂದಲೇ ಮತ ಚಲಾಯಿಸಿದ್ದರು. ಮನೆಯಿಂದಲೇ ಮತದಾನಕ್ಕೆ ಮನವಿ ಸಲ್ಲಿಸಿದ್ದ ಸುಮಾರು 80,251 ಹಿರಿಯ ನಾಗರಿಕರ ಪೈಕಿ ಶೇ.95ರಷ್ಟು (76,120) ಮಂದಿ ಮತದಾನ ಮಾಡಿದ್ದರು. ಮನೆಯಿಂದಲೇ ಮತದಾನಕ್ಕೆ ಮನವಿ ಮಾಡಿದ್ದ 19,280 ಅಂಗವಿಕಲರಲ್ಲಿ ಶೇ.97ಕ್ಕಿಂತ (18,811) ಹೆಚ್ಚು ಮಂದಿ ಮತದಾನ ಮಾಡಿದ್ದರು.
|
7 |
+
ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಹಿರಿಯ ನಾಗರಿಕರು (10,280) ಮನೆಯಿಂದಲೇ ಮತ ಚಲಾಯಿಸಿದ್ದರು. ನಂತರದ ಸ್ಥಾನದಲ್ಲಿ ಬೆಳಗಾವಿ (6,975) ಮತ್ತು ತುಮಕೂರು (6,333) ಇದ್ದವು. ಅಂಗವಿಕಲರ ವಿಭಾಗದಲ್ಲಿ ತುಮಕೂರು ಅತಿ ಹೆಚ್ಚು (2,788) ಮತ್ತು ದಕ್ಷಿಣ ಕನ್ನಡ (1,926) ಮತ್ತು ಬೆಳಗಾವಿ (1,661) ನಂತರದ ಸ್ಥಾನದಲ್ಲಿದ್ದವು.
|
eesanje/url_46_183_8.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ರಾಜಕೀಯದಲ್ಲಿ ಮಹಿಳೆಯರಿಗಿಲ್ಲವೇ ಆಸಕ್ತಿ..? ಕರ್ನಾಟಕದಲ್ಲಿ ಕೇವಲ 25 ಮಹಿಳೆಯರಿಂದ ನಾಮಪತ್ರ ಸಲ್ಲಿಕೆ!
|
2 |
+
ಬೆಂಗಳೂರು,ಏ.8-ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದು, 2029ರ ಲೋಕಸಭೆ ಚುನಾವಣೆ ವೇಳೆಗೆ ದೇಶಾದ್ಯಂತ ಜಾರಿಯಾಗುವ ಸಾಧ್ಯತೆಯಿದೆ.
|
3 |
+
ಆದರೆ, ಕರ್ನಾಟಕದ ಮುಖ್ಯ ಚುನಾವಣಾಕಾಧಿರಿಗಳು ಲೋಕಸಭಾ ಚುನಾವಣೆಯಲ್ಲಿ ಸ್ರ್ಪಧಿಸುತ್ತಿರುವ ಅಭ್ಯರ್ಥಿಗಳ ಅಂಕಿಅಂಶಗಳನ್ನು ಬಿಡುಗಡೆ ಮಾಡಿರುವ ಪ್ರಕಾರ, ಏಪ್ರಿಲ್ 26ರಂದು ನಡೆಯುವ ಚುನಾವಣೆಯ ಅಭ್ಯರ್ಥಿಗಳ ನಾಮನಿರ್ದೇಶನಗಳಲ್ಲಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಮಾಣದಲ್ಲಿ ಸಾಕಷ್ಟು ವ್ಯತ್ಯಾಸವಿದೆ. ಇದು ಮಹಿಳಾ ಮೀಸಲಾತಿ ಬಗ್ಗೆ ಚಿಂತೆ ಹುಟ್ಟುಹಾಕುತ್ತಿದೆ.
|
4 |
+
14 ಕ್ಷೇತ್ರಗಳಿಗೆ (ಮಾರ್ಚ್ 28ರಿಂದ ಏಪ್ರಿಲ್ 4ರವರೆಗೆ) ನಾಮಪತ್ರ ಸಲ್ಲಿಸಿದ ಒಟ್ಟು 338 ಅಭ್ಯರ್ಥಿಗಳ ಪೈಕಿ ಕೇವಲ 25 ಮಹಿಳೆಯರಿದ್ದಾರೆ. ನಾಮಪತ್ರದ ಸಲ್ಲಿಕೆಯ ಶೇ.8ಕ್ಕಿಂತ ಕಡಿಮೆ ಪ್ರತಿನಿಧಿಸುತ್ತಿದ್ದಾರೆ. ದೇಶದ ಚುನಾವಣಾ ಪ್ರಕ್ರಿಯೆಯಲ್ಲಿ ಮಹಿಳಾ ಪ್ರತಿನಿಧಿಗಳ ಭಾಗವಹಿಸುವಿಕೆಯ ಉದ್ದೇಶಿತ ಗುರಿ ಮತ್ತು ಪ್ರಸ್ತುತ ವಾಸ್ತವತೆಯ ನಡುವಿನ ಈ ವ್ಯತ್ಯಾಸವು ಚುನಾವಣಾ ರಾಜಕೀಯದಲ್ಲಿ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ಬೆಳೆಸುವಲ್ಲಿ ವ್ಯವಸ್ಥಿತ ಸವಾಲುಗಳನ್ನು ಎತ್ತಿ ತೋರಿಸುತ್ತದೆ.
|
5 |
+
ಮಹಿಳಾ ಮೀಸಲಾತಿ ಮಸೂದೆಯು ನಿರ್ಧಾರ ತೆಗೆದುಕೊಳ್ಳುವ ಪಾತ್ರಗಳಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸುವ ಪ್ರಯತ್ನದಲ್ಲಿರುವಾಗ, ಮಹಿಳಾ ಅಭ್ಯರ್ಥಿಗಳ ಪ್ರಾತಿನಿಧ್ಯವು ಸರ್ಕಾರ ಮತ್ತು ನಾಗರಿಕ ಸಮಾಜ ಸಂಸ್ಥೆಗಳಿಂದ ಸಂಘಟಿತ ಪ್ರಯತ್ನಗಳ ಅಗತ್ಯವನ್ನು ಒತ್ತಿಹೇಳುತ್ತದೆ.
|
6 |
+
ಮಹಿಳಾ ನಾಯಕತ್ವದಲ್ಲಿ ಹೆಚ್ಚೆಚ್ಚು ಮಂದಿ ತೊಡಗಿಸಿಕೊಳ್ಳುವುದು ಬಲವಾದ ಮತ್ತು ಹೆಚ್ಚು ವೈವಿಧ್ಯಮಯ ರಾಷ್ಟ್ರವಾಗಿ ರೂಪುಗೊಳ್ಳಲು ಸಹಾಯ ಮಾಡುತ್ತದೆ. ಮಹಿಳೆಯರು ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ಮಾತ್ರ ಅವರ ಕುಂದುಕೊರತೆಗಳನ್ನು ಪರಿಹರಿಸಲು ಸಾಧ್ಯ. ಈ ಕ್ಷೇತ್ರಗಳಲ್ಲಿ ಮಹಿಳಾ ಮತದಾರರು ಸಾಕಷ್ಟು ಸಂಖ್ಯೆಯಲ್ಲಿ ಹೊಂದಿದ್ದರೂ, ಮಹಿಳಾ ಅಭ್ಯರ್ಥಿಗಳ ಕೊರತೆಯು ಕಳವಳಕಾರಿಯಾಗಿದೆ.
|
7 |
+
ರಾಜಕೀಯ ಪ್ರಾತಿನಿಧ್ಯದಲ್ಲಿ ಲಿಂಗ ಅಂತರವನ್ನು ಕಡಿಮೆ ಮಾಡಲು ಜಾಗೃತಿ ಅಭಿಯಾನಗಳು, ತರಬೇತಿ ಕಾರ್ಯಕ್ರಮಗಳು, ಸಮಾನ ಸಂಪನ್ಮೂಲ ವಿತರಣೆ ಮತ್ತು ನೀತಿ ಅನುಷ್ಠಾನದಂತಹ ಸಮಗ್ರ ಕ್ರಮಗಳು ಅನುಷ್ಟಾನಕ್ಕೆ ಬರಬೇಕು ಎಂಬುದು ಬಹತೇಕ ಮಹಿಳಾ ಮತದಾರರ ಒಕ್ಕೋರಲಿನ ಅಭಿಪ್ರಾಯವಾಗಿದೆ.
|
eesanje/url_46_183_9.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಚುನಾವಣಾ ಕಣದಲ್ಲಿ ಜೋರಾಗೇ ಹರಿದಾಡ್ಡುತ್ತಿದೆ ಹಣ ಮತ್ತು ಉಡುಗೊರೆಗಳು
|
2 |
+
ಬೆಂಗಳೂರು,ಏ.8-ಪ್ರಸಕ್ತ ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಅಬಕಾರಿ, ಆದಾಯ ತೆರಿಗೆ, ವಾಣಿಜ್ಯ ತೆರಿಗೆ ಅಧಿಕಾರಿಗಳು ಹಾಗೂ ಪೊಲೀಸರು ನಡೆಸಿದ ತಪಾಸಣೆ ಸಂದರ್ಭದಲ್ಲಿ ರಾಜ್ಯದಲ್ಲಿ 2,77,59,00,168 ರೂ. ಮೌಲ್ಯದ ನಗದು, ಮದ್ಯ, ಡ್ರಗ್ಸ್, ಚಿನ್ನಾಭರಣ ಹಾಗೂ ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಿದ್ದಾರೆ.
|
3 |
+
ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟವಾದ ಮಾ.16 ರಿಂದ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಅಂದಿನಿಂದ ನಿನ್ನೆಯವರೆಗೆ ಈ ಪ್ರಮಾಣದ ಜಪ್ತಿ ಮಾಡಲಾಗಿದೆ. ಪೊಲೀಸ್, ಕ್ಷಿಪ್ರ ಪಡೆಗಳು, ಸ್ಥಿರ ಕಣ್ಗಾವಲು ತಂಡಗಳು ಒಟ್ಟು 57,65,83,037 ರೂ. ಮೌಲ್ಯದ ಚಿನ್ನ, ಬೆಳ್ಳಿ, ವಜ್ರ, ಉಚಿತ ಉಡುಗೊರೆ, ನಗದು, ಮದ್ಯ, ಡ್ರಗ್ಸ್ಗಳನ್ನು ವಶಪಡಿಸಿಕೊಂಡಿದ್ದಾರೆ.
|
4 |
+
ಅಬಕಾರಿ ಇಲಾಖೆ 1,43,10,75,607 ರೂ. ಮೌಲ್ಯದ ಮದ್ಯ, ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದರೆ, ಆದಾಯ ತೆರಿಗೆ ಇಲಾಖೆ ಒಟ್ಟು 10,98,20,120 ರೂ. ಮೌಲ್ಯದ ನಗದು, ಚಿನ್ನ, ವಜ್ರಾಭರಣಗಳನ್ನು ಜಪ್ತಿ ಮಾಡಿದೆ. ವಾಣಿಜ್ಯ ತೆರಿಗೆ ಇಲಾಖೆಯು 65,84,21,404 ರೂ. ಮೌಲ್ಯದ ಚಿನ್ನ, ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
|
5 |
+
ನೀತಿ ಸಂಹಿತೆ ಜಾರಿಗೆ ಬಂದಂದಿನಿಂದ ನಿನ್ನೆಯವರೆಗೆ 35,61,95,342 ರೂ. ನಗದನ್ನು 1.43 ಕೋಟಿ ರೂ. ಮೌಲ್ಯದ ಮದ್ಯ, 1.51 ಕೋಟಿ ರೂ. ಮೌಲ್ಯದ ಡ್ರಗ್ಸ್ 9.48 ಕೋಟಿ ರೂ. ಮೌಲ್ಯದ ಚಿನ್ನ, 27.23 ಲಕ್ಷ ಮೌಲ್ಯದ ಬೆಳ್ಳಿ, 9 ಲಕ್ಷ ಮೌಲ್ಯದ ವಜ್ರಾಭರಣ, 71.74 ಕೋಟಿ ರೂ. ಮೌಲ್ಯದ ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಲಾಗಿದೆ.ಜಪ್ತಿ ಮಾಡಲಾದ ನಗದು, ವಸ್ತುಗಳಿಗೆ ಸಂಬಂಧಿಸಿದಂತೆ 1384 ಎಫ್ಐಆರ್ಗಳನ್ನು ಈತನಕ ದಾಖಲಿಸಲಾಗಿದೆ.
|
6 |
+
ಅಲ್ಲದೆ, ಬೆಂಗಳೂರು ನಗರ ಕೇಂದ್ರ ಅಪರಾಧ ವಿಭಾಗದ ಪೊಲೀಸ್ ತಂಡದವರು 4 ಕೋಟಿ ರೂ. ಮೌಲ್ಯದ 4 ಕೆ.ಜಿ. ಡ್ರಗ್ಸ್ ಅನ್ನು ಶೆಟ್ಟಿಹಳ್ಳಿಯಲ್ಲಿ ವಶಪಡಿಸಿಕೊಂಡಿದ್ದಾರೆ. ಕ್ಷಿಪ್ರ ಪಡೆಯವರು ಜೇವರ್ಗಿಯಲ್ಲಿ 18,200 ಕೆ.ಜಿ. ಅಡಿಕೆ ಇದ್ದ 260 ಚೀಲಗಳನ್ನು ವಶಪಡಿಸಿಕೊಂಡಿದ್ದು, ಇದರ ಮೌಲ್ಯ 19,87,440 ಆಗಿದೆ ಎಂದು ಅಂದಾಜಿಸಲಾಗಿದೆ.
|
7 |
+
ಶಿವಮೊಗ್ಗದ ಸೀಗೆಹಟ್ಟಿಯಲ್ಲಿ 12,50,000 ರೂ. ಮೌಲ್ಯದ ಬಟ್ಟೆ, ಸ್ಟೀಲ್ ಮತ್ತು ಎಲೆಕ್ಟ್ರಿಕ್ ವಸ್ತುಗಳನ್ನು ಅಕ್ರಮ ದಾಸ್ತಾನು ಮಾಡಿದ್ದ ಆರೋಪದ ಮೇಲೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ತಂಡದವರು ವಶಪಡಿಸಿಕೊಂಡಿದ್ದಾರೆ.
|
8 |
+
ಸ್ಥಿರ ಕಣ್ಗಾವಲು ತಂಡದವರು ಮೈಸೂರು ರೈಲ್ವೆ ನಿಲ್ದಾಣ ಚೆಕ್ ಪೋಸ್ಟ್ ನಲ್ಲಿ 11,59,235 ರೂ. ಮೌಲ್ಯದ ವಿದೇಶಿ ಕರೆನ್ಸಿಗಳನ್ನು ವಶಪಡಿಸಿಕೊಂಡಿದ್ದಾರೆ.ಅಬಕಾರಿ ಇಲಾಖೆಯವರು 9,54,31,134 ರೂ. ಮೌಲ್ಯದ 56,817.3 ಲೀ ಮದ್ಯವನ್ನು ಹಾಸನ ಲೋಕಸಭಾ ಕ್ಷೇತ್ರದಲ್ಲಿ ವಶಪಡಿಸಿಕೊಂಡಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
|