CoolCoder44 commited on
Commit
4485ca6
·
verified ·
1 Parent(s): c3aa4fe

ecbe22fb77f4c51aea0cf0aa91c91ca5dc24d3db8aac93e787ef1c3d0f93a69e

Browse files
Files changed (50) hide show
  1. eesanje/url_46_225_10.txt +8 -0
  2. eesanje/url_46_225_11.txt +6 -0
  3. eesanje/url_46_225_12.txt +4 -0
  4. eesanje/url_46_225_2.txt +9 -0
  5. eesanje/url_46_225_3.txt +13 -0
  6. eesanje/url_46_225_4.txt +7 -0
  7. eesanje/url_46_225_5.txt +9 -0
  8. eesanje/url_46_225_6.txt +11 -0
  9. eesanje/url_46_225_7.txt +6 -0
  10. eesanje/url_46_225_8.txt +10 -0
  11. eesanje/url_46_225_9.txt +11 -0
  12. eesanje/url_46_226_1.txt +5 -0
  13. eesanje/url_46_226_10.txt +6 -0
  14. eesanje/url_46_226_11.txt +15 -0
  15. eesanje/url_46_226_12.txt +7 -0
  16. eesanje/url_46_226_2.txt +7 -0
  17. eesanje/url_46_226_3.txt +10 -0
  18. eesanje/url_46_226_4.txt +8 -0
  19. eesanje/url_46_226_5.txt +7 -0
  20. eesanje/url_46_226_6.txt +5 -0
  21. eesanje/url_46_226_7.txt +6 -0
  22. eesanje/url_46_226_8.txt +11 -0
  23. eesanje/url_46_226_9.txt +9 -0
  24. eesanje/url_46_227_1.txt +10 -0
  25. eesanje/url_46_227_10.txt +6 -0
  26. eesanje/url_46_227_11.txt +9 -0
  27. eesanje/url_46_227_12.txt +5 -0
  28. eesanje/url_46_227_2.txt +5 -0
  29. eesanje/url_46_227_3.txt +6 -0
  30. eesanje/url_46_227_4.txt +9 -0
  31. eesanje/url_46_227_5.txt +7 -0
  32. eesanje/url_46_227_6.txt +6 -0
  33. eesanje/url_46_227_7.txt +11 -0
  34. eesanje/url_46_227_8.txt +5 -0
  35. eesanje/url_46_227_9.txt +11 -0
  36. eesanje/url_46_228_1.txt +7 -0
  37. eesanje/url_46_228_10.txt +6 -0
  38. eesanje/url_46_228_11.txt +10 -0
  39. eesanje/url_46_228_12.txt +6 -0
  40. eesanje/url_46_228_2.txt +7 -0
  41. eesanje/url_46_228_3.txt +7 -0
  42. eesanje/url_46_228_4.txt +7 -0
  43. eesanje/url_46_228_5.txt +6 -0
  44. eesanje/url_46_228_6.txt +4 -0
  45. eesanje/url_46_228_7.txt +6 -0
  46. eesanje/url_46_228_8.txt +9 -0
  47. eesanje/url_46_228_9.txt +9 -0
  48. eesanje/url_46_229_1.txt +9 -0
  49. eesanje/url_46_229_10.txt +5 -0
  50. eesanje/url_46_229_11.txt +11 -0
eesanje/url_46_225_10.txt ADDED
@@ -0,0 +1,8 @@
 
 
 
 
 
 
 
 
 
1
+ ರಾಜ್ಯಸಭೆ ಚುನಾವಣೆ: ಬಿಜೆಪಿಗೆ ಅಡ್ಡಮತದಾನ ಭೀತಿ
2
+ ಬೆಂಗಳೂರು,ಫೆ.24- ರಾಜ್ಯಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ತನ್ನ ಅಧಿಕೃತ ಅಭ್ಯರ್ಥಿಯನ್ನು ಗೆಲ್ಲಿಸುವುದರ ಜೊತೆಗೆ ಜೆಡಿಎಸ್‍ನ 5 ನೇ ಅಭ್ಯರ್ಥಿ ಗೆಲುವಿಗೆ ರಣತಂತ್ರ ರೂಪಿಸುತ್ತಿರುವ ಬಿಜೆಪಿಗೆ ಅಡ್ಡಮತದಾನದ ಭೀತಿ ಎದುರಾಗಿದೆ. ಕಾಂಗ್ರೆಸ್‍ನಲ್ಲಿ ಅಸಮಾಧಾನಗೊಂಡಿರುವ ಕೆಲವು ಶಾಸಕರ ಮೂಲಕ ಅಡ್ಡಮತದಾನ ಮಾಡಿಸಿ ಜೆಡಿಎಸ್ ಬೆಂಬಲಿತ ಕುಪೇಂದ್ರ ರೆಡ್ಡಿಯವರನ್ನು ಗೆಲ್ಲಿಸಲು ಮುಂದಾಗಿದ್ದ ಬಿಜೆಪಿಗೆ ತನ್ನ ಕಾರ್ಯತಂತ್ರವೇ ತಿರುಗುಬಾಣವಾಗುವ ಸಾಧ್ಯತೆ ಇದೆ.
3
+ ಬಿಜೆಪಿಯಲ್ಲಿ ಇದ್ದರೂ ಕಾಂಗ್ರೆಸ್ ಜೊತೆ ಒಡನಾಟವಿಟ್ಟುಕೊಂಡಿರುವ ಬೆಂಗಳೂರು ನಗರದ ಯಶವಂತಪುರ ವಿಧಾನಸಭೆ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಶಾಸಕ ಅರೆಬೈಲು ಶಿವರಾಂ ಹೆಬ್ಬಾರ್ ಮೇಲೆ ಅನುಮಾನದ ಶಂಕೆ ವ್ಯಕ್ತವಾಗಿದೆ. ಈ ಇಬ್ಬರೂ ಶಾಸಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂಪರ್ಕದಲ್ಲಿದ್ದು, ರಾಜ್ಯಸಭಾ ಚುನಾವಣೆ ವೇಳೆ ಪಕ್ಷದ ಅಧಿಕೃತ ಅಭ್ಯರ್ಥಿ ಬದಲಿಗೆ ಕೈ ಅಭ್ಯರ್ಥಿಗೆ ಮತ ಹಾಕಬಹುದೆಂಬ ಅನುಮಾನ ಬಿಜೆಪಿ ವಲಯದಲ್ಲೇ ಕಾಡುತ್ತಿದೆ. ಹೀಗಾಗಿ ಈ ಇಬ್ಬರ ಚಲನವಲನದ ಮೇಲೆ ಬಿಜೆಪಿ ಹದ್ದಿನ ಕಣ್ಣಿಟ್ಟಿದ್ದು ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧವಾಗಿ ಮತ ಚಲಾಯಿಸದಂತೆ ಕೊನೆ ಕ್ಷಣದವರೆಗೂ ಮನವೊಲಿಸುವ ಕಸರತ್ತು ನಡೆಸುತ್ತಿದೆ.
4
+ ಕನ್ನಡ ಅನುಷ್ಠಾನಕ್ಕೆ ಸಹಕರಿಸದ ಅಧಿಕಾರಿ ಅಮಾನತು
5
+ ಬಿಜೆಪಿ ಅದಿಕೃತ ಅಭ್ಯರ್ಥಿ ನಾರಾಯಣ ಸ ಭಾಂಡಗೆ 46 ಮತಗಳನ್ನು ನಿಗದಿಪಡಿಸಿರುವ ಬಿಜೆಪಿ ಉಳಿಯಲಿರುವ ಹೆಚ್ಚುವರಿ 20 ಮತಗಳನ್ನು ಜೆಡಿಎಸ್‍ನ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ವರ್ಗಾವಣೆ ಮಾಡಲಿದೆ.ಎಸ್.ಟಿ.ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ಸೂಚಿಸುವುದಿಲ್ಲ ಎಂದು ಪರೋಕ್ಷವಾಗಿ ಪಕ್ಷದ ನಾಯಕರಿಗೆ ತಮ್ಮ ತೀರ್ಮಾನವನ್ನು ತಿಳಿಸಿದ್ದಾರೆಂದು ತಿಳಿದುಬಂದಿದೆ.ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಬಿಜೆಪಿ ಮತದಾನದ ವೇಳೆ ಒಟ್ಟು 3 ತಂಡಗಳನ್ನು ರಚನೆ ಮಾಡಿದೆ. ಬೆಳಿಗ್ಗೆ 8 ಗಂಟೆಗೆ ಎಲ್ಲಾ ಶಾಸಕರು ಕಡ್ಡಾಯವಾಗಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್‍ರವರ ಕೊಠಡಿಗೆ ಆಗಮಿಸಿ ಅಲ್ಲಿಯೇ ಬೆಳಗಿನ ಉಪಾಹಾರ ಸೇವಿಸುವಂತೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೂಚಿಸಿದ್ದಾರೆ.
6
+ ನಾರಾಯಣ ಸ ಭಾಂಡಗೆ ಚಲಾಯಿಸಲಿರುವ ಶಾಸಕರ ಪಟ್ಟಿಯಲ್ಲಿ ಶಿವರಾಂ ಹೆಬ್ಬಾರ್ ಮತ್ತು ಎಸ್.ಟಿ.ಸೋಮಶೇಖರ್ ಅವರುಗಳ ಹೆಸರುಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.ಯಾವುದೇ ಕಾರಣಕ್ಕೂ ಕುಪೇಂದ್ರ ರೆಡ್ಡಿಗೆ ನಾನು ಬೆಂಬಲ ನೀಡುವುದಿಲ್ಲ ಎಂದು ಎಸ್.ಟಿ.ಸೋಮಶೇಖರ್ ಹೇಳಿರುವ ಕಾರಣ ಬಿಜೆಪಿ ಈ ತಂತ್ರವನ್ನು ರೂಪಿಸಿದೆ. ಜೆಡಿಎಸ್ ಅಭ್ಯರ್ಥಿಗೆ ಹೆಚ್ಚುವರಿ ಮತಗಳನ್ನು ಬಿಜೆಪಿಯ ಸಂಘ ಪರಿವಾರದ ಹಿನ್ನೆಲೆಯುಳ್ಳ ಶಾಸಕರು ಮತ ಹಾಕಲಿದ್ದಾರೆ. ಒಂದೇ ಒಂದು ಮತವೂ ಕೂಡ ಅಡ್ಡಮತದಾನವಾಗದಂತೆ ನೋಡಿಕೊಳ್ಳಬೇಕು ಎಂದು ಖುದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹಸಚಿವ ಅಮಿತ್ ಷಾ ಅವರುಗಳು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
7
+ ರಾಜ್ಯದಲ್ಲೂ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ ಬ್ಯಾನ್..!
8
+ ಎರಡು ಪಕ್ಷಗಳ ಶಾಸಕರನ್ನು ರೆಸಾರ್ಟ್‍ಗೆ ಕರೆದೊಯ್ಯುವ ಬಗ್ಗೆ ಪಕ್ಷದ ವಲಯದಲ್ಲಿ ತೀರ್ಮಾನವಾಗಿಲ್ಲ. ಸೋಮವಾರ ವಿಧಾನಮಂಡಲದ ಎರಡೂ ಸದನಗಳ ಕಾರ್ಯಕಲಾಪ ಮುಗಿದ ನಂತರ ವಿಜಯೇಂದ್ರ, ಆರ್.ಅಶೋಕ್ ಮತ್ತು ಎಚ್.ಡಿ.ಕುಮಾರಸ್ವಾಮಿ ಚರ್ಚಿಸಿ ನಿರ್ಧಾರಕ್ಕೆ ಬರಲಿದ್ದಾರೆ ಎನ್ನಲಾಗಿದೆ.
eesanje/url_46_225_11.txt ADDED
@@ -0,0 +1,6 @@
 
 
 
 
 
 
 
1
+ ರಾಜ್ಯದಲ್ಲೂ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ ಬ್ಯಾನ್..!
2
+ ಬೆಂಗಳೂರು,ಫೆ.24- ಮಕ್ಕಳು, ಮಹಿಳೆಯರು ಹಾಗೂ ತಿಂಡಿ ಪ್ರಿಯರು ಬಾಯಿ ಚಪ್ಪರಿಸಿಕೊಂಡು ತಿನ್ನುವ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿ ರಾಜ್ಯದಲ್ಲೂ ಬ್ಯಾನ್ ಆಗುವ ಸಾಧ್ಯತೆಗಳಿವೆ. ಅತಿಯಾದ ಕಲರ್ ಬಳಕೆ ಹಾಗೂ ರಾಸಾಯನಿಕ ಬೆರಕೆ ಹೊಂದಿರುವ ಚೈನೀಸ್ ತಿಂಡಿಯಾದ ಗೋಬಿ ಮಂಚೂರಿಯನ್ನು ಗೋವಾದಲ್ಲಿ ಈಗಾಗಲೇ ನಿಷೇಧಿಸಲಾಗಿದೆ.
3
+ ಅದೇ ರೀತಿ ತಮಿಳುನಾಡಿನ ಸರ್ಕಾರಿ ಪ್ರಯೋಗಾಲಯದಲ್ಲಿ ಕಾಟನ್ ಕ್ಯಾಂಡಿ (ಬಾಂಬೆ ಮಿಠಾಯಿ) ಯಲ್ಲಿ ರೋಡಮೈನ್-ಬಿ ಕ್ಯಾನ್ಸರ್‍ಕಾರಕ ಅಂಶ ಇರುವುದು ದೃಢಪಟ್ಟಿರುವುದರಿಂದ ಕ್ಯಾಂಡಿಯನ್ನು ಅಲ್ಲಿ ಬ್ಯಾನ್ ಮಾಡಲಾಗಿದೆ. ಹೀಗಾಗಿ ಕ್ಯಾನ್ಸರ್‍ಕಾರಕ ಅಂಶಗಳಿರುವ ಕಾಟನ್ ಕ್ಯಾಂಡಿ ಮತ್ತು ನಗರದ ಬಹುತೇಕ ರಸ್ತೆ ಬದಿಗಳಲ್ಲಿ ಮಾರಾಟ ಮಾಡುವ ಗೋಬಿ ಮಂಚೂರಿ ಮೇಲೆ ಆಹಾರ ಮತ್ತು ಸುರಕ್ಷತಾ ಇಲಾಖೆ ಅಧಿಕಾರಿಗಳ ಕಣ್ಣು ಬಿದ್ದಿದೆ.
4
+ ಕನ್ನಡ ಅನುಷ್ಠಾನಕ್ಕೆ ಸಹಕರಿಸದ ಅಧಿಕಾರಿ ಅಮಾನತು
5
+ ಬೀದಿ ಬದಿ ಹಾಗೂ ಹೋಟೆಲ್‍ಗಳಲ್ಲಿ ಮಾರಾಟ ಮಾಡುವ ಗೋಬಿ ಮಂಚೂರಿ ಮತ್ತು ರಸ್ತೆಗಳಲ್ಲಿ ಮಾರುವ ಕಾಟನ್ ಕ್ಯಾಂಡಿಗಳ ಕಲರ್ ಜೆಲ್ಲಿಗಳ ಸ್ಯಾಂಪಲ್ ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ.ಬೆಂಗಳೂರು ಸೇರಿದಂತೆ ರಾಜ್ಯದ್ಯಾಂತ ಸಂಗ್ರಹಿಸಿರುವ ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿಯ ಟೆಸ್ಟಿಂಗ್ ವರದಿ 10 ದಿನಗಳ ಬಳಿಕ ಹೊರ ಬೀಳಲಿದೆ. ಒಂದು ವೇಳೆ ಈ ಎರಡು ತಿಂಡಿಗಳಲ್ಲಿ ರಾಸಾಯನಿಕ ಅಂಶ ಇರುವುದು ದೃಢಪಟ್ಟರೆ ರಾಜ್ಯದಲ್ಲೂ ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿಯನ್ನು ಬ್ಯಾನ್ ಮಾಡಲಾಗುವುದು ಎಂದು ಅಕಾರಿಗಳು ತಿಳಿಸಿದ್ದಾರೆ.
6
+ ಈಗಾಗಲೇ ಗೋವಾದಲ್ಲಿ ಗೋಬಿ ಮಂಚೂರಿಯಲ್ಲಿ ರಾಸಾಯನಿಕ ಅಂಶ ಇರುವುದು ಹಾಗೂ ತಮಿಳುನಾಡಿನ ವರದಿಯಲ್ಲಿ ಕಾಟನ್ ಕ್ಯಾಂಡಿಯಲ್ಲಿ ಕ್ಯಾನ್ಸರ್‍ಕಾರಕ ಅಂಶ ಇರುವುದು ಸಾಬೀತಾಗಿರುವುದರಿಂದ ನಮ್ಮ ವರದಿಯಲ್ಲೂ ಇದೇ ಫಲಿತಾಂಶ ಬರುವ ಸಾಧ್ಯತೆ ಇರುವುದರಿಂದ ಇನ್ನು ಮುಂದೆ ಜನ ಬಾಯಿ ಚಪ್ಪರಿಸಿಕೊಂಡು ತಿನ್ನುವ ಗೋಬಿ ಮಂಚೂರಿ ಬ್ಯಾನ್ ಆಗೋದು ಬಹುತೇಕ ಖಚಿತ ಎನ್ನುವಂತಾಗಿದೆ.
eesanje/url_46_225_12.txt ADDED
@@ -0,0 +1,4 @@
 
 
 
 
 
1
+ ನಾಳೆ ಕಾನ್‍ಸ್ಟೆಬಲ್ ಲಿಖಿತ ಪರೀಕ್ಷೆ: ವಸ್ತ್ರ ಸಂಹಿತೆ ಪಾಲಿಸಲು ಆದೇಶ
2
+ ಕೆಜಿಎಫ್,ಫೆ.24 – ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1137 ಸಿವಿಲ್ ಕಾನ್‍ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ನಾಳೆ ನಡೆಯಲಿದೆ. ಅದರಂತೆ, ಕೆಜಿಎಫ್ ಪೊಲೀಸ್ ಜಿಲ್ಲೆಯ ಎರಡು ಪರೀಕ್ಷಾ ಕೇಂದ್ರಗಳಲ್ಲಿ ನಾಳೆ ಬೆಳಗ್ಗೆ 11 ರಿಂದ 12.30 ಗಂಟೆಯ ತನಕ ಸುಮಾರು 3000 ಮಂದಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
3
+ ಅರ್ಹ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮೊಬೈಲ್ ಎಸ್‍ಎಂಎಸ್ ಮೂಲಕ ಮಾಹಿತಿ ಬರಲಿದೆ. ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್‍ಸೈಟ್‍ನಿಂದಲೂ ಕರೆಪತ್ರ ಡೌನ್‍ಲೋಡ್ ಸಹ ಮಾಡಿಕೊಳ್ಳಬಹುದು ಎಂದು ಪೊಲೀಸ್ ನೇಮಕಾತಿ ಪ್ರಾಧಿಕಾರವು ಪ್ರಕಟಣೆಯಲ್ಲಿ ತಿಳಿಸಿದೆ. ಅಭ್ಯರ್ಥಿಗಳು ಶೂ ಧರಿಸಿ ಪರೀಕ್ಷಾ ಕೇಂದ್ರದೊಳಗೆ ಹೋಗುವುದನ್ನು ನಿಷೇಧಿಸಲಾಗಿದೆ. ವಸ್ತ್ರ ಸಂಹಿತೆ ನಿಯಮವನ್ನೂ ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ವಸ್ತ್ರ ಸಂಹಿತೆ ಪಾಲಿಸುವುದು ಕಡ್ಡಾಯವಾಗಿರುತ್ತದೆ ಎಂದು ಪೊಲೀಸ್ ನೇಮಕಾತಿ ವಿಭಾಗದ ಡಿಐಜಿಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು ತಿಳಿಸಿದ್ದಾರೆ.
4
+ ಮಹಿಳಾ ಅಭ್ಯರ್ಥಿಗಳು ಮಂಗಳಸೂತ್ರ, ಕಾಲುಂಗರ ಹೊರತುಪಡಿಸಿ ಲೋಹದ ಆಭರಣ ಧರಿಸದಂತೆ ವಸ್ತ್ರ ಸಂಹಿತೆ ವಿಧಿಸಲಾಗಿದೆ. ಸಿವಿಲ್ ಕಾನ್‍ಸ್ಟೆಬಲ್ (ಪುರುಷ, ಮಹಿಳಾ, ತೃತೀಯ ಲಿಂಗ) ಹಾಗೂ ಸೇವಾನಿರತ ಮತ್ತು ಬ್ಯಾಕ್‍ಲಾಗ್ ಸೇರಿದಂತೆ 1137 ಹುದ್ದೆಗಳ ನೇಮಕಾತಿಗೆ ರಾಜ್ಯವ್ಯಾಪ್ತಿ ಪರೀಕ್ಷೆಯು ಏಕಕಾಲದಲ್ಲಿ ನಡೆಯಲಿದೆ.
eesanje/url_46_225_2.txt ADDED
@@ -0,0 +1,9 @@
 
 
 
 
 
 
 
 
 
 
1
+ ಸರ್ಕಾರ ಪತನದ ಕನಸು ಈಡೇರಲ್ಲ: ಸಚಿವ ಎಂ.ಬಿ.ಪಾಟೀಲ್
2
+ ಬೆಂಗಳೂರು,ಫೆ.25- ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ-ಜೆಡಿಎಸ್ ಕನಸು ಈಡೇರುವುದಿಲ್ಲ, ಆಪರೇಷನ್ ಕಮಲ ನಡೆಸಿದರೂ ಯಾರೂ ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವನ್ನು ಪತನ ಮಾಡಲು ಮತ್ತು ಹೊಸ ಸರ್ಕಾರ ರಚಿಸಲು ಬಿಜೆಪಿ-ಜೆಡಿಎಸ್‍ಗೆ 50 ಶಾಸಕರು ಬೇಕು. ನಮ್ಮ ಪಕ್ಷದಿಂದ ಅಷ್ಟು ಶಾಸಕರು ಆಪರೇಷನ್ ಕಮಲಕ್ಕೆ ಸಿಲುಕಿ ಪಕ್ಷಾಂತರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
3
+ ಬಿಜೆಪಿಯ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರ ಪತನವಾಗಲಿದೆ ಎಂಬ ಭ್ರಮೆಯಲ್ಲಿಯೇ ಇರಲಿ. ರಾಜ್ಯದ ಜನ ಅವರ ಪಕ್ಷವನ್ನು ಸೋಲಿಸಿ ಕಾಂಗ್ರೆಸ್ 135 ಸ್ಥಾನ ಗೆಲ್ಲಿಸಿದ್ದಾರೆ. ಇದನ್ನು ಮರೆತು ಪದೇ ಪದೇ ಸರ್ಕಾರ ಪತನಗೊಳ್ಳುತ್ತದೆ ಎಂಬ ಭಾವನೆ ಬಿತ್ತಲು ಯತ್ನಿಸುತ್ತಿದ್ದಾರೆ. ಅದು ಯಶಸ್ವಿಯಾಗುವುದಿಲ್ಲ ಎಂದರು.ಶೋಭಾ ಕರಂದ್ಲಾಜೆಯವರು ವಾಪಸ್ ಹೋಗಬೇಕೆಂದು ಅವರ ಕ್ಷೇತ್ರದಲ್ಲಿಯೇ ಜನ ಪ್ರತಿಭಟನೆ ಮಾಡುತ್ತಿದ್ದಾರೆ.
4
+ ಅವರ ಪಕ್ಷದವರೇ ವಿರೋಧ ಮಾಡುತ್ತಿದ್ದಾರೆ. ಅವರು ನಮ್ಮ ಸರ್ಕಾರವನ್ನು ಪತನಗೊಳಿಸುವ ಮಾತನಾಡುತ್ತಿರುವುದು ಹಾಸ್ಯಾಸ್ಪದ. ಮೊದಲು ಶೋಭಕ್ಕ ತಮ್ಮ ಟಿಕೆಟ್ ಅನ್ನು ಗಟ್ಟಿ ಮಾಡಿಕೊಳ್ಳಲಿ, ಅನಂತರ ಸರ್ಕಾರ ರಚಿಸಲು 50 ಮಂದಿ ಶಾಸಕರನ್ನು ಎಲ್ಲಿಂದ ಕರೆತರುತ್ತಾರೆ ಎಂದು ಹೇಳಲಿ ಎಂದರು.
5
+ ದೇಶದ ಅತೀ ಉದ್ದದ ಕೇಬಲ್ ಸೇತುವೆಯನ್ನು ಲೋಕಾರ್ಪಣೆ ಮಾಡಿದ ಮೋದಿ
6
+ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನಕ್ಕೆ ಅವಕಾಶವಿಲ್ಲ. ಮತದಾನ ಮಾಡುವವರು ಅದನ್ನು ಮತಗಟ್ಟೆಯಲ್ಲಿರುವ ಏಜೆಂಟ್‍ಗೆ ತೋರಿಸಿ ಹಾಕಬೇಕಿದೆ. ಹೀಗಾಗಿ ಅಡ್ಡಮತದಾನ ಮಾಡುವ ಸಾಧ್ಯತೆ ಇಲ್ಲ. ನಾವು ಒಟ್ಟಾಗಿ ಇರಬೇಕು ಎಂಬ ಕಾರಣಕ್ಕಾಗಿ ಖಾಸಗಿ ಹೋಟೆಲ್‍ನಲ್ಲಿ ಶಾಸಕಾಂಗ ಸಭೆ ನಡೆಸುತ್ತಿದ್ದೇವೆ. ಇದು ಅಡ್ಡಮತದಾನದ ಭಯಕ್ಕಾಗಿ ಅಲ್ಲ ಎಂದು ಸ್ಪಷ್ಟಪಡಿಸಿದರು.
7
+ ಕಾಂಗ್ರೆಸ್ ಪಕ್ಷ ತನ್ನ ಮೂರು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಜೊತೆಗೆ ನಮ್ಮ ಹೆಚ್ಚುವರಿ ಮತಗಳೂ ಇವೆ. ವಿರೋಧಪಕ್ಷಗಳಿಂದಲೂ ಒಂದೆರಡು ಮತಗಳು ಹೆಚ್ಚುವರಿಯಾಗಿ ಬರುವ ನಿರೀಕ್ಷೆಗಳಿವೆ ಎಂದರು.
8
+ ವಿದೇಶಿ ಹಡಗನ್ನು ಜಪ್ತಿ ಮಾಡುವಂತೆ ಒರಿಸ್ಸಾ ಹೈಕೋರ್ಟ್ ಆದೇಶ
9
+ ಈ ಬಾರಿ ಅಡ್ಡ ಮತದಾನ ಮಾಡಿದರೆ ಶಾಸಕ ಸ್ಥಾನದಿಂದ ಅನರ್ಹಗೊಳ್ಳುತ್ತಾರೆ. ಆ ಬಳಿಕ ಮತ್ತೊಮ್ಮೆ ಉಪಚುನಾವಣೆಗೆ ಹೋಗಬೇಕು. ಅಂತಹ ತಾಕತ್ತು ಯಾರಿಗಿದೆ? ಸದ್ಯದ ಪರಿಸ್ಥಿತಿಯಲ್ಲಿ ಯಾರೂ ರಿಸ್ಕ್ ತೆಗೆದುಕೊಳ್ಳಲು ಬಯಸುವುದಿಲ್ಲ. ಜೆಡಿಎಸ್-ಬಿಜೆಪಿಯವರು ಎಷ್ಟೇ ಪ್ರಯತ್ನ ಮಾಡಿದರೂ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತದ���ರರಿಂದ ಅಡ್ಡಮತದಾನ ಮಾಡಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಕಾಂಗ್ರೆಸ್ ಪಕ್ಷವನ್ನು ಸಿ.ಟಿ.ರವಿ ಕ್ರಿಮಿನಲ್ ಪಕ್ಷ ಎಂದು ಕರೆದಿದ್ದಾರೆ. ಇಂತಹ ಹೇಳಿಕೆಗಳಿಂದಾಗಿಯೇ ಜನ ಅವರನ್ನು ಸೋಲಿಸಿ ಮನೆಗೆ ಕಳುಹಿಸಿದ್ದಾರೆ. ಆದರೂ ಇನ್ನೂ ಬುದ್ಧಿ ಕಲಿತಿಲ್ಲ ಎಂದರು.
eesanje/url_46_225_3.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಆನೆ ದಾಳಿಯಿಂದ ಜೀವ ಹಾನಿ: ಕರ್ನಾಟಕಕ್ಕೆ ಮೊದಲ ಸ್ಥಾನ
2
+ ಬೆಂಗಳೂರು, ಫೆ.25- ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ಸ್ರ್ಪಧಿಸುತ್ತಿರುವ ವಯನಾಡು ಅರಣ್ಯ ಪ್ರದೇಶದಲ್ಲಿ ಆನೆ ದಾಳಿ ಸಂಘರ್ಷದಿಂದ ಮೃತಪಟ್ಟ ಇಬ್ಬರಿಗೆ ಕರ್ನಾಟಕ ಸರ್ಕಾರದಿಂದ ಪರಿಹಾರ ಪಾವತಿಸಿದ್ದಕ್ಕೆ ವ್ಯಾಪಕ ಟೀಕೆಗಳು ಕೇಳಿ ಬಂದಿವೆ, ಅದರ ನಡುವೆ ಆನೆಗಳು ಕೇರಳಕ್ಕೆ ತಲುಪಿದ ಬಗ್ಗೆ ಅಲ್ಲಿನ ಅರಣ್ಯ ಅಧಿಕಾರಿಗಳು ಸುದೀರ್ಘ ಮಾಹಿತಿ ನೀಡಿದ್ದಾರೆ.
3
+ ಕೇರಳದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ವಾರ್ಡನ್ ಡಿ ಜಯಪ್ರಸಾದ್ ಮಾಹಿತಿ ನೀಡಿದ್ದು, ಆನೆ ದಾಳಿಯಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ ನಂತರ ವಯನಾಡ್‍ನಲ್ಲಿ ಪ್ರತಿಭಟನೆಗಳು ತೀವ್ರಗೊಂಡಿವೆ. ಅರಣ್ಯ ಅಧಿಕಾರಿಗಳು ವನ್ಯ ಜೀವಿ ಸಂಘರ್ಷ ತಡೆಯಲು ಸಂಘಟಿತ ಪ್ರಯತ್ನ ಮಾಡುತ್ತಿದ್ದಾರೆ. ಮಾನವ-ಪ್ರಾಣಿ ಸಂಘರ್ಷವನ್ನು ತಡೆಗಟ್ಟಲು ಕಂದಾಯ, ಎಲ್‍ಎಸ್‍ಜಿಡಿ ಮತ್ತು ಪೋಲೀಸ್‍ನಂತಹ ಇತರ ಹಲವು ಇಲಾಖೆಗಳ ಸಕ್ರಿಯ ಸಹಭಾಗಿತ್ವ ಅಗತ್ಯ ಎಂದು ತಿಳಿಸಿದ್ದಾರೆ.
4
+ ಹುಲಿಗಳು ಮತ್ತು ಆನೆಗಳಿಗೆ ಸ್ಮಾರ್ಟ್-ಬೇಲಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವುದು ಸೇರಿದಂತೆ ಅನೇಕ ಕ್ರಮಗಳನ್ನು ಕೈಗೊಂಡಿದ್ದೇವೆ. ವಯನಾಡಿನ ಚೆತಲಯಂ ವ್ಯಾಪ್ತಿಯಲ್ಲಿ ಒಂದು ಮಾದರಿಯನ್ನು ಸ್ಥಾಪಿಸಲಾಗುವುದು. ಕೇರಳ ಅರಣ್ಯ ಇಲಾಖೆಯು ವಯನಾಡ್‍ಗೆ ಆಗಮಿಸಿರುವ ಪರಿಸರ ಮತ್ತು ಅರಣ್ಯ ಸಚಿವಾಲಯದ ತಂಡದ ಎದುರು ಸ್ಥಳೀಯರು ಕರ್ನಾಟಕ, ತಮಿಳುನಾಡು ಮತ್ತು ನೆರೆಯ ಅರಣ್ಯ ಪ್ರದೇಶಗಳಲ್ಲಿ ವನ್ಯ ಜೀವಿಗಳು ಸ್ಥಳಾಂತರವಾಗುತ್ತಿರುವ ಕುರಿತು ಅಧ್ಯಯನ ನಡೆಸುವಂತೆ ಒತ್ತಾಯಿಸಿದ್ದಾರೆ. ಒಂದು ವೇಳೆ ಸಾಮಥ್ರ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವನ್ಯ ಜೀವಿಗಳನ್ನು ಸ್ಥಳಾಂತರಿಸಿದರೆ ಪರಿಶೀಲನೆ ನಡೆಸುವುದಾಗಿ ಸಚಿವಾಲಯದ ತಂಡ ಭರವಸೆ ನೀಡಿದೆ.
5
+ ಸರ್ಕಾರಗಳ ಬಹುತೇಕ ನಿರ್ಧಾರಗಳು ತಾತ್ಕಾಲಿಕ ಪರಿಹಾರಗಳಿಗೆ ಸೀಮಿತವಾಗಿವೆ. ಸಮಸ್ಯೆಗೆ ವೈಜ್ಞಾನಿಕ ಪರಿಹಾರವನ್ನು ಹುಡುಕುತ್ತಿಲ್ಲ ಎಂದು ಪ್ರಾಣಿಗಳ ಮಾಹಿತಿ ಸಂಗ್ರಹಣೆ ಮತ್ತು ಸಂರಕ್ಷಣೆಯಲ್ಲಿ ವಿವಿಧ ಸರ್ಕಾರಗಳೊಂದಿಗೆ ನಿಕಟವಾಗಿ ಕೆಲಸ ಮಾಡುವ ಆನೆ ತಜ್ಞರು ಆಕ್ಷೇಪಿಸಿದ್ದಾರೆ.
6
+ ಅಯೋಧ್ಯೆ ಮಂದಿರಕ್ಕೆ 25 ಕೆಜಿ ಚಿನ್ನ -25 ಕೋಟಿ ರೂ ದೇಣಿಗೆ
7
+ ಪ್ರಸ್ತುತ ವಯನಾಡ್‍ನಲ್ಲಿರುವ ಬೇಲೂರು ಮಖಾನಾ ಆನೆಯನ್ನು ಕರ್ನಾಟಕದ ಬೇಲೂರಿನಲ್ಲಿ ಸೆರೆ ಹಿಡಿಯಲಾಯಿತು, ಬಂಡೀಪುರದಿಂದ ತಂದು ವಯನಾಡಿಗೆ ಬಿಡಲಾಗಿದೆ. ವಯನಾಡ್‍ನಲ್ಲಿ ಈಗಾಗಲೇ ಇತರ ಆನೆಗಳು ಇದ್ದಿದ್ದರಿಂದ ಹೊಸದಾಗಿ ಬಂದ ಆನೆ ಜನವಸತಿ ಪ್ರದೇಶಕ್ಕೆ ತೆರಳುವುದು ಅನಿವಾರ್ಯವಾಗಿತ್ತು. ಮುನ್ನಾರ್‍ನ ಆರಿಕೊಂಬನ್ ಆನೆಯನ್ನು ಮೊದಲು ಪೆರಿಯಾರ್ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಯಿತು, ಅಲ್ಲಿ ಈಗಾಗಲೇ ಹೆಚ್ಚು ಆನೆಗಳಿದ್ದರಿಂದ ಅದು ಕಾಡಿನಿಂದ ಹೊರ ಬರದಲು ಪ್ರಾರಂಭಿಸಿದಾಗ, ಮತ್ತೆ ಸೆರೆಹಿಡಿದು ಕಲಕ್ಕಾಡ್-ಮುಂಡಂತುರೈ ಮೀಸಲು ಪ್ರದೇಶಕ್ಕೆ ಕಳುಹಿಸಲಾಯಿತು. ಅದು ಅಲ್ಲಿಯೂ ನೆಲೆ ನಿಂತಿಲ್ಲ. ಸಹಜವಾಗಿ ಹೊರ ಬಂದಿದೆ. ಇದರಿಂದ ವನ್ಯ ಜೀವಿ ಮತ್ತು ಮಾನವ ಸಂಘರ್ಷವಾಗಿದೆ ಎಂದು ತಜ್ಞರು ವ್ಯಾಖ್ಯಾನಿಸಿದ್ದಾರೆ. ಪ್ರಸ್ತುತ ಅಂದಾಜಿನ ಪ್ರಕಾರ, ಕೇರಳವು ಸರಿಸುಮಾರು 2,000 ರಿಂದ 2,500 ಆನೆಗಳನ್ನು ಹೊಂದಿದೆ.
8
+ ಕೇರಳ ರಾಜ್ಯ ಅರಣ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ ಕಳೆದ ಮೂರು ವರ್ಷಗಳಿಂದ ವನ್ಯ ಜೀವಿ ಸಂಘರ್ಷದಿಂದ ಮಾನವ ಸಾವುಗಳು ಗಮನಾರ್ಹವಾಗಿ ಕಡಿಮೆಯಾಗಿದೆ. 2021-2022ರಲ್ಲಿ ದಾಖಲಾದ ಸಂಖ್ಯೆಗಳಿಗೆ ಹೋಲಿಸಿದರೆ 2023-2024ರ ಅವಧಿಯಲ್ಲಿ ಕೇರಳದಲ್ಲಿ ಆನೆಗಳ ದಾಳಿಯಿಂದ ಸಾವನ್ನಪ್ಪಿದವರ ಸಂಖ್ಯೆ ಕಡಿಮೆಯಾಗಿದೆ.
9
+ 2023-2024ರ ಅವಧಿಯಲ್ಲಿ ಆನೆ ದಾಳಿಗೆ 17 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 2022-2023ರಲ್ಲಿ 27 ಮತ್ತು 2021-2022ರಲ್ಲಿ 35 ಸಾವುಗಳು ವರದಿಯಾಗಿವೆ. ಮಾನವ-ಪ್ರಾಣಿ ಸಂಘರ್ಷ ಹೆಚ್ಚಾಗಿರುವ ಒಡಿಶಾ, ಜಾರ್ಖಂಡ್ ಮತ್ತು ಕರ್ನಾಟಕದಂತಹ ರಾಜ್ಯಗಳಿಗೆ ಹೋಲಿಸಿದರೆ ಈ ಸಂಖ್ಯೆಗಳು ತುಂಬಾ ಕಡಿಮೆಯಾಗಿದೆ.ಜಾರ್ಖಂಡ್ ಅರಣ್ಯ ಇಲಾಖೆ ಮೂಲಗಳ ಪ್ರಕಾರ, ಆನೆಗಳ ದಾಳಿಯಲ್ಲಿ ವಾರ್ಷಿಕವಾಗಿ ಸರಾಸರಿ 100 ಕ್ಕೂ ಹೆಚ್ಚು ಜನರು ಸಾಯುತ್ತಾರೆ. ಕರ್ನಾಟಕ ಅರಣ್ಯ ಇಲಾಖೆಯು ಕಳೆದ ಐದು ವರ್ಷಗಳಲ್ಲಿ ಮಾನವ-ಆನೆ ಸಂಘರ್ಷದಿಂದ 148 ಮಾನವ ಸಾವುನೋವುಗಳು ವರದಿಯಾಗಿವೆ ಎಂದು ತಿಳಿಸಿದೆ.
10
+ ಒಡಿಶಾ, ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಐದು ವರ್ಷಗಳ ಅವಧಿಯಲ್ಲಿ ಮಾನವ-ಪ್ರಾಣಿ ಸಂಘರ್ಷಗಳಲ್ಲಿ ಕ್ರಮವಾಗಿ 499, 385 ಮತ್ತು 358 ಜನರನ್ನು ಕಳೆದುಕೊಂಡಿವೆ ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯವು ಸಂಸತ್‍ನಲ್ಲಿ ಉತ್ತರಿಸಿದೆ. ಕೇರಳ ಅರಣ್ಯ ಇಲಾಖೆಯು ಕಳೆದ ಐದು ವರ್ಷಗಳಲ್ಲಿ, ರಾಜ್ಯದಲ್ಲಿ ಕಾಡುಹಂದಿಗಳ ದಾಳಿಯಿಂದ ಸಾವುಗಳು ಗಣನೀಯವಾಗಿ ಹೆಚ್ಚಿವೆ ಎಂದು ತಿಳಿಸಿದೆ.
11
+ ದೇಶದ ಅತೀ ಉದ್ದದ ಕೇಬಲ್ ಸೇತುವೆಯನ್ನು ಲೋಕಾರ್ಪಣೆ ಮಾಡಿದ ಮೋದಿ
12
+ 2016-2017ರಲ್ಲಿ ಕಾಡುಹಂದಿ ದಾಳಿಯಲ್ಲಿ ನಾಲ್ಕು ಮಾನವ ಸಾವುನೋವುಗಳು ವರದಿಯಾಗಿದ್ದವು, 2023-2024ರ ವೇಳೆಗೆ ಈ ಸಂಖ್ಯೆ 11ಕ್ಕೆ ಏರಿದೆ. ಹುಲಿ ದಾಳಿಯಿಂದ ಕಳೆದ ನಾಲ್ಕು ವರ್ಷಗಳಿಂದ ವರ್ಷಕ್ಕೆ ಒಂದು ಸಾವು ಸಂಭವಿಸಿದೆ. 2023-2024ರಲ್ಲಿ ಭಾರತೀಯ ಗೌರ್ ದಾಳಿಯಿಂದಾಗಿ ಮೂರು ಸಾವುಗಳು ವರದಿಯಾಗಿವೆ. ಕಾಡು ಪ್ರಾಣಿಗಳ ದಾಳಿಯಲ್ಲಿ ಗಾಯಗೊಂಡವರ ಪ್ರಕರಣಗಳು ಕಡಿಮೆಯಾಗಿದೆ.
13
+ 2020-2021ರ ಅವಯಲ್ಲಿ ಅತಿ ಹೆಚ್ಚು ಗಾಯಗಳು ವರದಿಯಾಗಿದ್ದು, 988 ಪ್ರಕರಣಗಳು ದಾಖಲಾಗಿವೆ. 2021-2022 ಅವಧಿಯಲ್ಲಿ ಈ ಸಂಖ್ಯೆ 758 ಕ್ಕೆ ಇಳಿದಿದೆ ಎಂದು ದತ್ತಾಂಸ ತಿಳಿಸಿದೆ. ಪ್ರಸ್ತುತ ದತ್ತಾಂಶವು ಕಾಡು ಪ್ರಾಣಿಗಳ ದಾಳಿಯಿಂದ ಸಾವನ್ನಪ್ಪಿದವರ ಸಂಖ್ಯೆಯಲ್ಲಿ ಹಾವು ಕಡಿತದ ಸಾವುಗಳನ್ನು ಒಳಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇರಳದಲ್ಲಿ ಗುಡ್ಡಗಾಡು ಜಿಲ್ಲೆ ವಯನಾಡ್ ಮಾನವ-ಪ್ರಾಣಿ ಸಂಘರ್ಷದ ಪ್ರಮುಖ ಪ್ರದೇಶವಾಗಿದೆ. ಕಣ್ಣೂರಿನ ಅರಾಲಂ, ಕೊಯಮತ್ತೂರು-ಪಾಲಕ್ಕಾಡ್ ಗಡಿ ಪ್ರದೇಶಗಳು ಮತ್ತು ಇಡುಕ್ಕಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಇದೇ ರೀತಿಯ ಪ್ರಕರಣಗಳು ವರದಿಯಾಗಿವೆ.
eesanje/url_46_225_4.txt ADDED
@@ -0,0 +1,7 @@
 
 
 
 
 
 
 
 
1
+ ಪಕ್ಷಾತೀತವಾಗಿ ಮಹಿಳಾ ನೌಕರರ ಸಂಘ ಮುನ್ನಡೆಯಲಿ: ಲಕ್ಷ್ಮೀ ಹೆಬ್ಬಾಳ್ಕರ್
2
+ ಬೆಂಗಳೂರು, ಫೆ.24- ಮಹಿಳೆ ಎಲ್ಲಾ ರಂಗದಲ್ಲೂ ಉತ್ತಮ ಸಾಧನೆ ಮಾಡುತ್ತಿದ್ದಾಳೆ. ಇಂದು ನಾನು ಉದ್ಘಾಟಿಸಿರುವ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಪಕ್ಷಾತೀತವಾಗಿ ನಡೆಯಲಿ. ರಾಜಕೀಯ ಚಟುವಟಿಕೆಯಿಂದ ಸಂಪೂರ್ಣ ದೂರ ಇರಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದರು.
3
+ ನಗರದ ಟೌನ್‍ಹಾಲ್‍ನಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಉದ್ಘಾಟಿಸಿ ಮಾತನಾಡಿದ ಸಚಿವರು, ಇದೊಂದು ಅರ್ಥಪೂರ್ಣ ಸಂಘಟನೆಯಾಗಲಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟಕ್ಕೂ ಸಂಘಟನೆ ವಿಸ್ತರಣೆಯಾಗಲಿ ಎಂದು ಹಾರೈಸಿದರು. ಸಾಮಾಜಿಕ ಕಾಳಜಿ ಬದ್ಧತೆಯಿಂದ ಕೆಲಸ ಮಾಡಿ, ಎಲ್ಲರನ್ನೂ ಸಮಾನವಾಗಿ ತೆಗೆದುಕೊಂಡು ಹೋಗಿ, ಧೈರ್ಯದಿಂದ ಮುಂದೆ ಹೋಗಿ. ಸಂಘದೊಂದಿಗೆ ನಾವಿದ್ದೇವೆ. ಹೋರಾಟಕ್ಕೆ ಮತ್ತೊಂದು ಹೆಸರೇ ಹೆಣ್ಣು ಎಂದು ಹೇಳಿದರು.
4
+ ಸರ್ಕಾರದ ಬಹುನಿರೀಕ್ಷಿತ ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಲು ಸರ್ಕಾರಿ ನೌಕರರ ಶ್ರಮ ಸಾಕಷ್ಟಿದೆ. ನೌಕರರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದ ಫಲವಾಗಿ ಇಂದು ಯೋಜನೆಗಳು ಯಶಸ್ವಿಯಾಗಿವೆ. ನಮ್ಮ ರಾಜ್ಯದಲ್ಲಿ ಶೇ.52ರಷ್ಟು ಸರ್ಕಾರಿ ಮಹಿಳಾ ನೌಕರರಿದ್ದು, ಇದು ಇಡೀ ದೇಶಕ್ಕೆ ಮಾದರಿಯಾಗಿರುವ ವಿಚಾರ ಎಂದು ಸಚಿವರು ಹೇಳಿದರು.
5
+ ದ್ವೇಷ ಭಾವನೆ ಸೃಷ್ಟಿಸುವುದರಿಂದ ದೇಶಕ್ಕೆ ಉಳಿಗಾಲವಿಲ್ಲ; ಡಾ.ಜಿ.ಪರಮೇಶ್ವರ್
6
+ 12ನೇ ಶತಮಾನದಲ್ಲಿ ಬಸವಣ್ಣನವರು ಮಹಿಳೆಯರಿಗೆ ಉತ್ತಮ ಸ್ಥಾನ ನೀಡಿದ್ದರು. ಬಸವಣ್ಣನವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ನಡೆಯುತ್ತಿದ್ದೇವೆ. ಬಸವ ತತ್ವದಡಿಯಲ್ಲಿಯೇ ರಾಜ್ಯ ಸರ್ಕಾರ ಕಾರ್ಯ ನಿರ್ವಹಿಸುತ್ತಿದ್ದು, ಹೀಗಾಗಿ ಬಸವಣ್ಣನವರನ್ನು ಸರ್ಕಾರ ಸಾಂಸ್ಕøತಿಕ ರಾಯಭಾರಿ ಎಂದು ಘೋಷಿಸಿದೆ ಎಂದು ಹೇಳಿದರು.
7
+ ಸಮಾರಂಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಸಚಿವರಾದ ಮೋಟಮ್ಮ, ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ರೋಶನಿ ಗೌಡ, ಗೌರವಾಧ್ಯಕ್ಷರಾದ ಗೀತಾಮಣಿ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸೇರಿದಂತೆ ಸಂಘದ ಪದಾಕಾರಿಗಳು, ನೂರಾರು ಮಹಿಳಾ ನೌಕರರು ಉಪಸ್ಥಿತರಿದ್ದರು.
eesanje/url_46_225_5.txt ADDED
@@ -0,0 +1,9 @@
 
 
 
 
 
 
 
 
 
 
1
+ ಬಿಬಿಎಂಪಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಾವ ತಪ್ಪಿಸಲು ಅಧಿಕಾರಿಗಳಿಗೆ ಸೂಚನೆ
2
+ ಬೆಂಗಳೂರು,ಫೆ.24- ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರಿನ ಅಭಾವ ಉದ್ಬವವಾಗದಂತೆ ಪಾಲಿಕೆ ಹಾಗೂ ಜಲಮಂಡಳಿಯು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಬಿಬಿಎಂಪಿ ಆಡಳಿತಗಾರ ರಾಕೇಶ್ ಸಿಂಗ್ ಅವರು ಅಧಿಕಾರಿಗಳಿಗೆ ಇಂದಿಲ್ಲಿ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರಿನ ಅಭಾವ ಕುರಿತು ಇಂದು ಪಾಲಿಕೆ ಕೇಂದ್ರ ಕಛೇರಿಯ ಸಭಾಂಗಣ-01ರಲ್ಲಿ ನಡೆದ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ ಪಟ್ಟಿ ಮಾಡಿಕೊಂಡು ಅಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು.
3
+ ನೀರಿನ ಅಭಾವ ಹೆಚ್ಚಿರುವ ಕಡೆ ಜಲಮಂಡಳಿ ಅಧಿಕಾರಿಗಳ ಜೊತೆ ಸಮನ್ವಯ ಮಾಡಿಕೊಂಡು ನಾಗರಿಕರಿಗೆ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಎಲ್ಲಾ ವಲಯ ಆಯುಕ್ತರು ನಿಮ್ಮ ಪ್ರದೇಶದಲ್ಲಿ ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ, ಎಷ್ಟು ಅನುದಾನದ ಅಗತ್ಯವಿದೆ ಎಂಬುದರ ಮಾಹಿಯನ್ನು ಕೊಡಿ, ಕೂಡಲೆ ಅಗತ್ಯ ಅನುದಾನವನ್ನು ಒದಗಿಸಲಾಗುವುದು. 110 ಹಳ್ಳಿಗಳಿಗೆ ನಿರಿನ ಸಮಸ್ಯೆ ಬಗೆಹರಿಸಲು ಜಲಮಂಡಳಿಯ ಅಧಿಕಾರಿ/ಸಿಬ್ಬಂದಿಗಳನ್ನು ವಲಯ ಆಯುಕ್ತರ ಅೀಧಿನದಲ್ಲಿ ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
4
+ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆ ಎದುರಾಗಬಾರದು. ಈ ನಿಟ್ಟಿನಲ್ಲಿ ಕೂಡಲೆ ಸೂಕ್ತ ಕ್ರಮಗಳನ್ನು ಕೈಗೊಂಡು ಎಲ್ಲಿಯೂ ನೀರಿನ ಅಭಾವ ಬಾರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆಯ ಆಯಾ ವಲಯಗಳಿಗೆ ಬೋರ್ ವೆಲ್‍ಗಳನ್ನು ಕೊರೆಯಲು 131 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಈ ಸಂಬಂಧ ಕೂಡಲೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾರ್ಯಾದೇಶ ನೀಡಿ ಬೋರ್ ವೆಲ್‍ಗಳನ್ನು ಕೊರೆದು ನೀರಿನ ಅಭಾವವನ್ನು ಕಡಿಮೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.
5
+ ನಗರದಲ್ಲಿ ಎಲ್ಲೆಲ್ಲಿ ಕುಡಿಯುವ ನೀರಿನ ಘಟಕಗಳು ನಿಂತಿವೆ, ಕೂಡಲೆ ಬೋರ್ ವೆಲ್‍ಗಳನ್ನು ಹಾಕಿ ಆರ್‍ಒ ಫ್ಲಾಂಟ್ ಗಳಿಗೆ ನೀರಿನ ವ್ಯವಸ್ಥೆ ಮಾಡಬೇಕು. ಆರ್‍ಒ ಫ್ಲಾಂಟ್ ಗಳಿಗೆ ನೀರಿನ ವ್ಯವಸ್ಥೆ ಮಾಡುವವರೆಗೆ ತಾತ್ಕಾಲಿಕವಾಗಿ ನೀರಿನ ಟ್ಯಾಂಕರ್ ಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
6
+ ಜಲಮಂಡಳಿಯ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ರವರು ಮಾತನಾಡಿ, ಬೆಂಗಳೂರು ವ್ಯಾಪ್ತಿಯಲ್ಲಿ ವಾರ್ಷಿಕವಾಗಿ 19 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗುತ್ತಿದ್ದು, ಪ್ರತಿನಿತ್ಯ ಸುಮಾರು 1472 ಎಂ.ಎಲï.ಡಿ ನಿರನ್ನು ಸರಬರಾಜು ಮಾಡಲಾಗುತ್ತಿದೆ. ಫೆಬ್ರವರಿಯಿಂದ ಜುಲೈ 2024 ರವರೆಗೆ ಅಂದಾಜು 9.48 ಟಿಎಂಸಿ ನೀರು ಅವಶ್ಯಕತೆಯಿದೆ ��ಂದು ಹೇಳಿದರು.
7
+ ನಗರದಲ್ಲಿ ಜಳಮಂಡಳಿಯಿಂದ 10.84 ಲಕ್ಷ ನೀರಿನ ಸಂಪರ್ಕ ಹೊಂದಿವೆ. ನಗರದಲ್ಲಿ 10955 ಕೊಳವೆ ಬಾವಿಗಳಲ್ಲಿ 1214 ಕೊಳವೆ ಬಾವಿಗಳು ಬತ್ತಿದ್ದು, 3700 ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಈ ಸಂಬಧ ಸರಿಪಡಿಸಬಹುದಾದ ಕೊಳವೆ ಬಾವಿಗಳನ್ನು ಗುರುತಿಸಿ ಅಂತಹವುಗಳನ್ನು ಫ್ಲಷಿಂಗ್, ರೀಡ್ರಿಲ್ ಮಾಡಲು ಕ್ರಮವಹಿಸಲಾಗುತ್ತಿದೆ ಎಂದರು. ನಗರದಲ್ಲಿ ನೀರಿನ ಸಮಸ್ಯೆ ಹೆಚ್ಚಿರುವ 257 ಸ್ಥಳಗಳನ್ನು ಗುರುತಿಸಿದ್ದು, ಆ ಪ್ರದೇಶಗಳಿಗೆ ನೀರಿನ ಸರಬರಾಜು ಮಾಡಲು 68 ಟ್ಯಾಂಕರ್‍ಗಳ ಜೊತೆಗೆ 18 ಹೊಸ ಟ್ಯಾಂಕರ್‍ಗಳನ್ನು ಖರೀದಿಸಲು ಮತ್ತು 200 ಖಾಸಗಿ ಟ್ಯಾಂಕರ್ ಗಳನ್ನು ಬಾಡಿಗೆಗೆ ಪಡೆಯಲು ಕ್ರಮವಹಿಸಲಾಗಿದೆ ಎಂದು ಅವರು ಹೇಳಿದರು.
8
+ ಸಿಂಟೆಕ್ಸ್ ಟ್ಯಾಂಕ್‍ಗಳ ವ್ಯವಸ್ಥೆ ಮಾಡಿ:ನಗರದ ಆರ್‍ಆರ್ ನಗರ ವಲಯದಲ್ಲಿ ಈಗಾಗಲೇ ಪ್ರಮುಖ ಸ್ಥಳದಲ್ಲಿ ಸಿಂಟೆಕ್ಸ್ ಟ್ಯಾಂಕ್‍ಗಳನ್ನು ಅಳವಡಿಸಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ಎಲ್ಲಾ ವಲಯಗಳಲ್ಲಿಯೂ ಪ್ರಮುಖ ಸ್ಥಳ, ಕೊಳಗೇರಿ ಪ್ರದೇಶ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಸಿಂಟೆಕ್ಸ್ ಟ್ಯಾಂಕ್‍ಗಳನ್ನು ಅಳವಡಿಸಿ ಜಲಮಂಡಳಿಯಿಂದ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ.
9
+ 110 ಹಳ್ಳಿಗಳಲ್ಲಿ ನೀರಿನ ಸಮಸ್ಯೆ: ಬಿಬಿಎಂಪಿ ವ್ಯಾಪ್ತಿಗೆ ಬರುವ 110 ಹಳ್ಳಿಗಳಲ್ಲಿ ಹೆಚ್ಚು ಸಮಸ್ಯೆ ಇದ್ದು, ಹಳ್ಳಿಗಳಿಗೆ ಹೆಚ್ಚು ಒತ್ತು ನೀಡಿ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕಿದೆ. ಅಗತ್ಯವಿರುವ ಕಡೆ ಆದ್ಯತೆ ಮೇರೆಗೆ ಬೋರ್‍ವೆಲ್‍ಗಳನ್ನು ಕೊರೆಯಬೇಕು. ಜೊತೆಗೆ ನೀರಿನ ಟ್ಯಾಂಕರ್ ಗಳ ವ್ಯವಸ್ಥೆ ಮಾಡಿಕೊಂಡು ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. 110 ಹಳ್ಳಿಗಳಲ್ಲಿ ನೀರಿನ ಅಭಾವವನ್ನು ನೀಗಿಸುವ ಸಲುವಾಗಿ ಜಲಮಂಡಳಿ ಅಧಿಕಾರಿ ಮತ್ತು ಸಿಬ್ಬಂದಿಗಳು ವಲಯ ಆಯುಕ್ತರ ಅೀಧಿನದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.ಸಭೆಯಲ್ಲಿ ಯೋಜನಾ ವಿಭಾಗದ ವಿಶೇಷ ಆಯುಕ್ತ ಡಾ. ಕೆ. ಹರೀಶ್ ಕುಮಾರ್, ಎಲ್ಲಾ ವಲಯ ಆಯುಕ್ತರುಗಳು, ವಲಯ ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು, ಪಾಲಿಕೆ ಮತ್ತು ಜಲಮಂಡಳಿ ಅಧಿಕಾರಿಗಳು ಹಾಜರಿದ್ದರು.
eesanje/url_46_225_6.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ದ್ವೇಷ ಭಾವನೆ ಸೃಷ್ಟಿಸುವುದರಿಂದ ದೇಶಕ್ಕೆ ಉಳಿಗಾಲವಿಲ್ಲ; ಡಾ.ಜಿ.ಪರಮೇಶ್ವರ್
2
+ ಬೆಂಗಳೂರು,ಫೆ.24- ಅಯೋಧ್ಯೆಯಿಂದ ಮರಳುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಬೆದರಿಕೆ ಹಾಕಲಾಗಿದೆ ಎಂಬ ಪ್ರಕರಣವನ್ನು ಅನಗತ್ಯವಾಗಿ ವೈಭವೀಕರಿಸಲಾಗುತ್ತಿದೆ. ಭಾವನಾತ್ಮಕ ವಿಚಾರಗಳನ್ನು ಕೆಣಕಿ ವ್ಯವಸ್ಥೆ ಹಾಳು ಮಾಡುವುದರಿಂದ ದೇಶಕ್ಕೆ ಉಳಿಗಾಲ ಇರುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಸಿದ್ದಾರೆ.
3
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 75 ವರ್ಷಗಳಿಂದಲೂ ದೇಶ ಸೌಹಾರ್ದಯುತವಾಗಿ ನಡೆದುಕೊಂಡು ಬರುತ್ತಿದೆ. ಬಿಜೆಪಿಯವರು ಈವರೆಗೂ ಅಭಿವೃದ್ಧಿ ವಿಚಾರವನ್ನು ಚರ್ಚೆ ಮಾಡುತ್ತಿಲ್ಲ. ಬೇರೆ ಧರ್ಮದವರನ್ನು ದ್ವೇಷಿಸುವುದು, ಅದಕ್ಕಾಗಿ ಪ್ರಚೋದಿಸುವಂತಹ ಭಾವನಾತ್ಮಕ ವಿಚಾರಗಳನ್ನೇ ಪ್ರಸ್ತಾಪಿಸುತ್ತಿದ್ದಾರೆ. ಇದು ದೇಶಕ್ಕೆ ಒಳ್ಳೆಯದಲ್ಲ. ದ್ವೇಷ ಭಾವನೆಯನ್ನು ವ್ಯಾಪಕವಾಗಿ ಬಿತ್ತಲಾಗುತ್ತಿದೆ. 75 ವರ್ಷಗಳಿಂದಲೂ ಇಲ್ಲದೇ ಇರುವಂತಹ ಅಸಹನೀಯ ವಾತಾವರಣವನ್ನುಸೃಷ್ಟಿಸಲು ಯತ್ನಿಸಲಾಗುತ್ತಿದೆ ಎಂದು ದೂರಿದರು.
4
+ ವರ್ಗಾವಣೆ ಮಾಡಿ ಇಲ್ಲವೇ ದಯಾ ಮರಣಕ್ಕೆ ಅವಕಾಶ ನೀಡಿ: ಪತ್ರ ಬರೆದ ಪೊಲೀಸರು
5
+ ಅಯೋಧ್ಯೆಯಿಂದ ಮೈಸೂರಿಗೆ ಪ್ರಯಾಣಿಸುತ್ತಿದ್ದ ಆಸ್ತ ರೈಲನ್ನು ಹೊಸಪೇಟೆಯಲ್ಲಿ ನೀರು ತುಂಬಿಸಿಕೊಳ್ಳಲು ನಿಲ್ಲಿಸಿದ್ದಾರೆ. ಅದೇ ಸಂದರ್ಭದಲ್ಲಿ ಮತ್ತೊಂದು ಫ್ಲಾಟ್‍ಫಾರಂನಲ್ಲಿ ಬೇರೊಂದು ರೈಲು ನಿಂತಿದೆ. ಅದರಲ್ಲಿ ನಿಂತಿದ್ದ ಮುಸಲ್ಮಾನ ವ್ಯಕ್ತಿಯೊಬ್ಬ ಸ್ಕೈವಾಕ್‍ನಲ್ಲಿ ದಾಟಿ ಆ ಕಡೆಗೆ ಹೋಗುವ ಬದಲಾಗಿ ನಿಂತಿದ್ದ ರೈಲುಗಳ ನಡುವಿನಿಂದಲೇ ಹಾದು ಹೋಗಿದ್ದಾರೆ. ಆತ ಗಡ್ಡ ಬಿಟ್ಟಿದ್ದ. ಮುಸಲ್ಮಾನ್ ಎಂದು ಗೊತ್ತಾಗುತ್ತಿದ್ದಂತೆ ಆತನನ್ನು ಛೇಡಿಸಿ, ಬೈದು, ಗಲಾಟೆ ಮಾಡಿದ್ದಾರೆ. ಆತ ರೈಲನ್ನು ಸುಟ್ಟುಹಾಕುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ದೂರು ನೀಡಲಾಗಿದೆ. ಪ್ರಕರಣ ದಾಖಲಾಗಿದೆ. ರೈಲಿನಲ್ಲಿ ಅಷ್ಟೊಂದು ಜನ ಇದ್ದಾಗ ಒಬ್ಬ ವ್ಯಕ್ತಿ ಸುಟ್ಟು ಹಾಕುತ್ತೇನೆ ಎಂದು ಹೇಳಿಕೆ ನೀಡಿದ್ದಾನೆಯೋ, ಇಲ್ಲವೋ ಗೊತ್ತಿಲ್ಲ. ಪರಿಶೀಲನೆ ನಡೆಯುತ್ತಿದೆ. ಆತ ಪಾಕಿಸ್ತಾನದ ಪರವಾಗಿ ಮಾತನಾಡಿದ್ದ ಎಂದೆಲ್ಲಾ ವೈಭವೀಕರಣ ಮಾಡಿದ್ದಾರೆ ಎಂದು ದೂರಿದರು.
6
+ ಆತ ರಕ್ಷಣಾ ಇಲಾಖೆಯಲ್ಲಿ ಕೆಲಸ ಮಾಡಿ ನಿವೃತ್ತನಾದ ಬಳಿಕ ರೈಲ್ವೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾನೆ. ಆತನನ್ನು ಬಂಧಿಸಿ ಬಿಟ್ಟು ಕಳುಹಿಸಿಲ್ಲ. ಠಾಣೆಯ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಆನಂತರವೂ ಆತ ಎಲ್ಲಿ ಹೋಗುತ್ತಾನೆ. ಚಲನವಲನಗಳೇನು ಎಂಬ ಬಗ್ಗೆ ನಿಗಾ ವಹಿಸಲಾಗುತ್ತದೆ ಎಂದರು.ಬಿಜೆಪಿಯವರಿಗೆ ಬೇರ ಸಮುದಾಯದವರ ಮೇಲೆ ದ್ವೇಷ ಸೃಷ್ಟಿಸಿ ಅಶಾಂತಿ ನಿರ್ಮಿಸುವುದೇ ಅವರ ಉದ್ದೇಶ. ಇದರಿಂದ ದೇಶಕ್ಕೆ ಉಳಿಗಾಲ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
7
+ ನಿನ್ನೆ ಉ���ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರ ನೇತೃತ್ವದಲ್ಲಿ ನಡೆದ ಭೋಜನಾಕೂಟದಲ್ಲಿ ಲೋಕಸಭೆ ಚುನಾವಣೆ ತಯಾರಿ ಬಗ್ಗೆ ಚರ್ಚೆಗಳಾಗಿವೆ ಎಂದರು. ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ ಈಗಾಗಲೇ ಒಂದು ಬಾರಿ ಸ್ಕ್ರೀನಿಂಗ್ ಕಮಿಟಿಯಲ್ಲಿ ಚರ್ಚೆಯಾಗಿದೆ. 2ನೇ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡು ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸ್ಸು ಮಾಡಲಾಗುತ್ತದೆ. ಸಚಿವರ ಸ್ಪರ್ಧೆಯ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು. ನಿನ್ನೆಯ ಸಭೆಯಲ್ಲಿ ಇಂತಹ ಯಾವುದೇ ವಿಷಯ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.
8
+ ನಮ್ಮ ಪಕ್ಷದಲ್ಲಿ ಲೋಕಸಭೆ ಚುನಾವಣೆಯ ಬಗ್ಗೆ ತಯಾರಿ ನಡೆದಿದೆ. ಕಾರ್ಯಕರ್ತರು ಸಜ್ಜುಗೊಂಡಿದ್ದಾರೆ. ತುಮಕೂರು ಲೋಕಸಭೆ ಚುನಾವಣೆ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಯಾವ ಪಕ್ಷಕ್ಕೆ ಹೋಗುತ್ತದೆ ಎಂಬುದು ನಮಗೆ ಮುಖ್ಯವಲ್ಲ ಎಂದರು.
9
+ ಎಸ್.ಪಿ.ಮುದ್ದಹನುಮೇಗೌಡ ಮರು ಸೇರ್ಪಡೆಗೆ ಯಾರಿಗೂ ಅಸಮಾಧಾನವಿಲ್ಲ. ಶಾಸಕರಾದ ಷಡಾಕ್ಷರಿ, ಟಿ.ಬಿ.ಜಯಚಂದ್ರ ಅವರು ಎಸ್.ಪಿ.ಮುದ್ದಹನುಮೇಗೌಡರು ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಗೈರುಹಾಜರಾಗಿದ್ದರು ಎಂದ ಮಾತ್ರಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂಬುದು ಸರಿಯಲ್ಲ. ಪಕ್ಷ ತೀರ್ಮಾನ ಮಾಡಿದ ಮೇಲೆ ನಾವೆಲ್ಲಾ ಕೆಲಸ ಮಾಡಲೇಬೇಕಿದೆ ಎಂದು ತಿಳಿಸಿದರು. ರಾಜ್ಯಸಭಾ ಚುನಾವಣೆಯಲ್ಲಿ ಯಾರು, ಯಾರಿಗೆ ಮತ ಹಾಕಬೇಕು ಎಂಬುದನ್ನು ರಾಜ್ಯನಾಯಕರು ನಿರ್ಧರಿಸಿ ಶಾಸಕರಿಗೆ ಸೂಚನೆ ನೀಡಲಿದ್ದಾರೆ. ಅದರಂತೆ ಮತದಾನ ನಡೆಯಲಿದೆ ಎಂದರು.
10
+ ಮಂಡ್ಯಗೆ ಸುಮಲತಾ, ಬೆಂ.ಗ್ರಾಮಾಂತರಕ್ಕೆ ಡಾ.ಮಂಜುನಾಥ್‌ಗೆ ಬಿಜೆಪಿ ಟಿಕೆಟ್..!
11
+ ವಿರೋಧಪಕ್ಷದ ಅಭ್ಯರ್ಥಿಗಳು ಕಾಂಗ್ರೆಸ್ ಶಾಸಕರಿಗೆ ಆಮಿಷವೊಡ್ಡಿ ಮತ ಸೆಳೆಯಲು ಅಡ್ಡ ಮತದಾನ ಹಾಕಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎಂಬುದರ ಕುರಿತು ಈಗಾಗಲೇ ಶಾಸಕರು ದೂರು ನೀಡಿದ್ದಾರೆ. ಅದರ ಬಗ್ಗೆ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಕಾನೂನಾತ್ಮಕವಾಗಿ ತಮ್ಮದೇ ಆದ ಕ್ರಮ ಕೈಗೊಳ್ಳುತ್ತಾರೆ. ಕುಪೇಂದ್ರ ರೆಡ್ಡಿಯವರನ್ನು ವಿಚಾರಣೆ ಮಾಡಬೇಕೆ ಅಥವಾ ಬೇಡವೇ ಎಂಬುದನ್ನು ಪೊಲೀಸರು ನಿರ್ಧರಿಸುತ್ತಾರೆ. ಜೊತೆಗೆ ದೂರಿನ ಅಂಶಗಳ ಮೇಲೆ ನಿರಂತರವಾಗಿ ನಿಗಾ ವಹಿಸುತ್ತಾರೆ. ಇನ್ನು ಪಕ್ಷವಾಗಿ ಕಾಂಗ್ರೆಸ್ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕೊ ಅದರ ಬಗ್ಗೆ ಈಗಾಗಲೇ ಗಮನ ಹರಿಸಿದೆ ಎಂದು ಹೇಳಿದರು.
eesanje/url_46_225_7.txt ADDED
@@ -0,0 +1,6 @@
 
 
 
 
 
 
 
1
+ ವರ್ಗಾವಣೆ ಮಾಡಿ ಇಲ್ಲವೇ ದಯಾ ಮರಣಕ್ಕೆ ಅವಕಾಶ ನೀಡಿ: ಪತ್ರ ಬರೆದ ಪೊಲೀಸರು
2
+ ಬೆಂಗಳೂರು,ಫೆ.24- ಪತಿ-ಪತ್ನಿಯರು ಒಂದೇ ಘಟಕ ಇಲ್ಲವೇ ಒಂದೇ ಜಿಲ್ಲೆಯಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಲು ನಿರಾಕರಿಸುತ್ತಿರುವುದರಿಂದ ರೋಸಿ ಹೋಗಿರುವ ರಾಜ್ಯದ ಪೊಲೀಸರು ವರ್ಗಾವಣೆ ಮಾಡಿ ಇಲ್ಲವೇ ಸಾಮೂಹಿಕ ದಯಾ ಮರಣಕ್ಕೆ ಅವಕಾಶ ನೀಡಿ ಎಂದು ಒತ್ತಾಯಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
3
+ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸುಮಾರು ಮೂರು ವರ್ಷಗಳಿಂದ ಪತಿ-ಪತ್ನಿ ಹಾಗೂ ಯಾವುದೇ ಅಂತರ್ ಜಿಲ್ಲಾ ವರ್ಗಾವಣೆ ಇಲ್ಲದೆ ಸಿಬ್ಬಂದಿಗಳು ಪರಿತಪಿಸುತ್ತಿದ್ದಾರೆ. ಪತಿ-ಪತ್ನಿಯರು ಒಂದೇ ಘಟಕ ಇಲ್ಲವೇ ಒಂದೇ ಜಿಲ್ಲೆಯಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡುವಂತೆ ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿದೆ ಕೆಸಿಎಸ್‍ಆರ್ ನಿಯಮವೂ ಇದೇ ಹೇಳಿದರೂ ಮೇಲಾಧಿಕಾರಿಗಳು ನಿಯಮ ಪಾಲಿಸದಿರುವುದು ನಮಗೆ ಭಾರಿ ಅನ್ಯಾಯ ಮಾಡಿದಂತಾಗಿದೆ ಎಂದು ನೊಂದ ಪೊಲೀಸರು ಪತ್ರದಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ.
4
+ ಸಂವಿಧಾನಕ್ಕೆ ತದ್ವಿರುದ್ಧವಾಗಿ ನಡೆದುಕೊಳ್ಳುವವರನ್ನು ಕಿತ್ತೊಗೆಯಬೇಕಿದೆ: ಸಿಎಂ ಸಿದ್ದರಾಮಯ್ಯ
5
+ ಮೂರು ವರ್ಷ ಕಳೆದರೂ ಅಂತರ್ ಜಿಲ್ಲಾ ವರ್ಗಾವಣೆ ಮಾಡುತ್ತಿಲ್ಲ ಎಂದು ನಾವು ಗೃಹ ಸಚಿವರಿಗೆ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಮಾಧ್ಯಮಗಳ ಮುಂದೆ ಮಾತ್ರ ಶೀಘ್ರದಲ್ಲೇ ವರ್ಗಾವಣೆ ಮಾಡುತ್ತೇವೆ ಎಂದು ಹೇಳಿ ಕೈ ತೊಳೆದುಕೊಳ್ಳುತ್ತಿದ್ದಾರೆ.
6
+ ನಾವುಗಳು ಕಳೆದ 10 ರಿಂದ 15 ವರ್ಷಗಳಿಂದ ತಂದೆ-ತಾಯಿ, ಹೆಂಡತಿ ಮಕ್ಕಳನ್ನು ಬಿಟ್ಟು ಜೀವನ ಸಾಗಿಸುವಂತಾಗಿದೆ. ಹೀಗಾಗಿ ನಮ್ಮ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕೆಲವು ಪ್ರಕರಣಗಳು ವಿಚ್ಛೇದನದ ಹಂತ ತಲುಪಿವೆ ಎಂದು ಅವರುಗಳು ತಮ್ಮ ಗೋಳು ಹಂಚಿಕೊಂಡಿದ್ದಾರೆ. ಇನ್ನು ಮದುವೆಯಾಗಿ 5 ವರ್ಷ ಕಳೆದರೂ ಪತಿ-ಪತ್ನಿ ಒಂದೇ ಕಡೆ ಕೆಲಸ ಮಾಡಲು ಸಾಧ್ಯವಾಗದಿರುವುದರಿಂದ ಮಕ್ಕಳು ಆಗುತ್ತಿಲ್ಲ. ನಮ್ಮದು ಶಿಸ್ತಿನ ಇಲಾಖೆ ಬೇರೆ ಇಲಾಖೆಯವರಂತೆ ಪ್ರತಿಭಟನೆ ಮಾಡಲು ಅವಕಾಶವಿರುವುದಿಲ್ಲ. ಹೀಗಾಗಿ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ನೆಮ್ಮದಿ ಹಾಳಾಗಿ ನಮ್ಮ ಆರೋಗ್ಯದಲ್ಲಿ ಏರುಪೇರಾಗಿದೆ ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ನಮಗೆ ವರ್ಗಾವಣೆ ಭಾಗ್ಯ ಕಲ್ಪಿಸಿ ಇಲ್ಲವೇ ಸಾಮೂಹಿಕ ದಯ ಮರಣಕ್ಕೆ ಅನುಮತಿ ನೀಡಿ ಎಂದು ನೂರಾರು ಪೊಲೀಸರು ರಾಷ್ಟ್ರಪತಿಗಳಿಗೆ ದಯಾ ಮರಣ ಪತ್ರ ಬರೆದು ಒತ್ತಾಯಿಸಿದ್ದಾರೆ.
eesanje/url_46_225_8.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಮಂಡ್ಯಗೆ ಸುಮಲತಾ, ಬೆಂ.ಗ್ರಾಮಾಂತರಕ್ಕೆ ಡಾ.ಮಂಜುನಾಥ್‌ಗೆ ಬಿಜೆಪಿ ಟಿಕೆಟ್..!
2
+ ಬೆಂಗಳೂರು,ಫೆ.24- ಕಳೆದ ಬಾರಿಯಂತೆಯೂ ಈ ಬಾರಿಯೂ ಮತದಾನಕ್ಕೂ ಮುನ್ನವೇ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿರುವ ಸಕ್ಕರೆನಾಡು ಮಂಡ್ಯ ಲೋಕಸಭಾ ಕ್ಷೇತ್ರ ಬಹುತೇಕ ಬಿಜೆಪಿ ಪಾಲಾಗುವ ಸಾಧ್ಯತೆಯಿದೆ.ಜಿದ್ದಾಜಿದ್ದಿನ ಕಣವಾಗಿರುವ ಈ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡಲು ಬಿಜೆಪಿ ವರಿಷ್ಠರು ಹಿಂದೇಟು ಹಾಕಿದ್ದು, ಹಾಲಿ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರೇ ಕಮಲ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಗಳು ನಿಚ್ಛಳವಾಗಿದೆ.
3
+ ವರಿಷ್ಠರಿಂದ ಹಸಿರು ನಿಶಾನೆ ಸಿಗುತ್ತಿದ್ದಂತೆ ಸುಮಲತಾ ಅಂಬರೀಶ್ ಮಂಡ್ಯದಲ್ಲಿ 8 ವಿಧಾನಸಭಾ ಕ್ಷೇತ್ರಗಳ ಪಕ್ಷದ ಸಭೆ ನಡೆಸಿರುವುದು ಇದಕ್ಕೆ ಪುಷ್ಠಿ ನೀಡಿದಂತಿದೆ. ಮೂರು ದಿನಗಳ ಹಿಂದೆ ನವದೆಹಲಿಗೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಗೃಹಸಚಿವ ಅಮಿತ್ ಷಾ ಜೊತೆ ಸೀಟು ಹೊಂದಾಣಿಕೆ ಕುರಿತಂತೆ ಮಾತುಕತೆ ನಡೆಸಿದ್ದರು.
4
+ ರಾಜ್ಯದಲ್ಲೂ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ ಬ್ಯಾನ್..!
5
+ 28 ಲೋಕಸಭಾ ಕ್ಷೇತ್ರಗಳ ಪೈಕಿ ಜೆಡಿಎಸ್ ತನ್ನ ಭದ್ರ ಕೋಟೆ ಎನಿಸಿರುವ ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಅಥವಾ ತುಮಕೂರು ಕ್ಷೇತ್ರಗಳನ್ನು ಬಿಟ್ಟುಕೊಡಬೇಕೆಂಬ ಪ್ರಸ್ತಾವನೆಯನ್ನು ಕುಮಾರಸ್ವಾಮಿಯವರು ಅಮಿತ್ ಷಾ ಮುಂದಿಟ್ಟಿದ್ದರು. ಜೆಡಿಎಸ್‍ನ ಈ ಬೇಡಿಕೆಯನ್ನು ಸಾರಾಸಗಟಾಗಿ ತಳ್ಳಿ ಹಾಕಿದ ಅಮಿತ್ ಷಾ ಹಾಸನ ಮತ್ತು ಕೋಲಾರದಲ್ಲಿ ಜೆಡಿಎಸ್ ಚಿನ್ಹೆಯಡಿ ಅಧಿಕೃತ ಅಭ್ಯರ್ಥಿಗಳು ಸ್ರ್ಪಧಿಸಬೇಕು. ಉಳಿದಂತೆ ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ.
6
+ ಅದರಲ್ಲೂ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡಲು ಅಮಿತ್ ಷಾ ಒಪ್ಪದೆ ಬಿಜೆಪಿ ಅಭ್ಯರ್ಥಿಯೇ ಕಣಕ್ಕಿಳಿಯಲಿದ್ದಾರೆ ಎಂಬ ಸುಳಿವನ್ನು ನೀಡಿದ್ದಾರೆ. ನಾವು ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಟ್ಟರೆ ಸೋಲುವ ಸಾಧ್ಯತೆಯಿದೆ. ಹೀಗಾಗಿ ಹಾಲಿ ಅಭ್ಯರ್ಥಿ ಸುಮಲತಾ ಅಂಬರೀಶ್‍ರವರೇ ಬಿಜೆಪಿಯಿಂದ ಕಣಕ್ಕಿಳಿಯಲಿದ್ದಾರೆ. ಈ ಕ್ಷೇತ್ರದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ಉಳಿದಿದ್ದನ್ನು ನಮಗೆ ಬಿಡಿ ಎಂದು ಅಮಿತ್ ಷಾ ಹೇಳಿದ್ದಾಗಿ ತಿಳಿದುಬಂದಿದೆ.
7
+ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಟ್ಟರೆ ಇಲ್ಲಿ ಕೂಡ ಹಿನ್ನೆಡೆಯಾಗಬಹುದು. ಈ ಕ್ಷೇತ್ರದಿಂದ ಜೆಡಿಎಸ್ ಚಿನ್ಹೆಯಡಿ ಬಿಜೆಪಿ ಬೆಂಬಲದೊಂದಿಗೆ ಖ್ಯಾತ ವೈದ್ಯ ಡಾ.ಸಿ.ಎನ್.ಮಂಜುನಾಥ್‍ರನ್ನು ಕಣಕ್ಕಿಳಿಸಿದರೆ ಫಲಿತಾಂಶ ಏನು ಬೇಕಾದರೂ ಆಗಬಹುದು. ಕ್ಷೇತ್ರದಲ್ಲಿ ಡಿಕೆ ಸಹೋದರರಿಗೆ ಪ್ರಬಲ ಸ್ಪರ್ಧೆಯೊಡ್ಡಬೇಕಾದರೆ ಮೈತ್ರಿ ಪಕ್ಷದಿಂದಲೂ ಪ್ರಬಲ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕು.
8
+ ನಾವು ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಡಾ.ಸಿ.ಎನ್.ಮಂಜುನಾಥ್ ಅಭ್ಯರ್ಥಿಯಾದರೆ ಫಲಿತಾಂಶದ ಬಗ್ಗೆ ನಾನು ಗ್ಯಾರಂಟಿ ಕೊಡುತ್ತೇನೆ. ಅವರಿಗೆ ಚಿನ್ಹೆಗಿಂತ ಅವರೇ ಒಂದು ದೊಡ್ಡ ಚಿನ್ಹೆಯಾಗಿದ್ದಾರೆ. ಮತದಾರರಿಗೂ ಅವರ ಬಗ್ಗೆ ಸಕಾರಾತ್ಮಕವಾದ ಅಭಿಪ್ರಾಯವಿದೆ. ಹೀಗಾಗಿ ಮಂಜುನಾಥ್‍ರವರನ್ನು ಮನವೊಲಿಸುವಂತೆ ಕುಮಾರಸ್ವಾಮಿಗೆ ಅಮಿತ್ ಷಾ ಸಲಹೆ ಕೊಟ್ಟಿದ್ದಾರೆ.
9
+ ಕನ್ನಡ ಅನುಷ್ಠಾನಕ್ಕೆ ಸಹಕರಿಸದ ಅಧಿಕಾರಿ ಅಮಾನತು
10
+ ಅಂತಿಮವಾಗಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಜೆಡಿಎಸ್ ಎರಡೂ ಕಡೆ ಸ್ಪರ್ಧೆ ಮಾಡಿದರೆ, ಮೂರು ಕ್ಷೇತ್ರಗಳಲ್ಲಿ ಎರಡು ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳು, ಉಳಿದ ಕಡೆ ಅಂದರೆ 23 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ.
eesanje/url_46_225_9.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಸಂವಿಧಾನಕ್ಕೆ ತದ್ವಿರುದ್ಧವಾಗಿ ನಡೆದುಕೊಳ್ಳುವವರನ್ನು ಕಿತ್ತೊಗೆಯಬೇಕಿದೆ: ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು,ಫೆ.24- ಸಂವಿಧಾನದ ಆಶಯಗಳಿಗೆ ತದ್ವಿರುದ್ಧವಾಗಿ ನಡೆದುಕೊಳ್ಳುವವರನ್ನು ಅಧಿಕಾರದಿಂದ ಕಿತ್ತೊಗೆಯಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶದಲ್ಲಿ ಮಾತನಾಡಿದ ಅವರು, ಭಾರತದ ಸಂವಿಧಾನ ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾಗಿದೆ. ಸಾಮಾಜಿಕ, ಆರ್ಥಿಕ ವ್ಯವಸ್ಥೆಯನ್ನು ಒಳಗೊಂಡಂತೆ ಸಮಗ್ರ ಸುಧಾರಣೆ ಹಾಗೂ ಆಡಳಿತಾತ್ಮಕ ದೃಷ್ಟಿಯನ್ನು ಒಳಗೊಂಡು ಸಂವಿಧಾನ ರಚನೆಯಾಗಿದೆ. ಅದರಲ್ಲಿ ಸಮಾನತೆ, ಭ್ರಾತೃತ್ವ, ರಾಷ್ಟ್ರೀಯತೆಯನ್ನು ಪ್ರತಿಪಾದಿಸಲಾಗಿದೆ ಎಂದರು.
3
+ ಆದರೆ ಸಂವಿಧಾನದ ವಿರೋಧಿಗಳು ಅನಗತ್ಯವಾಗಿ ಅಪಪ್ರಚಾರ ನಡೆಸಿದ್ದಾರೆ. ಸಂವಿಧಾನ ಜಾರಿಗೆ ಬಂದ ದಿನದಿಂದಲೂ ಅದರ ವಿರುದ್ಧ ಷಡ್ಯಂತ್ರಗಳು ನಡೆಯುತ್ತಲೇ ಇವೆ. ಸಂವಿಧಾನಕ್ಕೆ ಅಪಾಯವಾಗುವ ಸನ್ನಿವೇಶವನ್ನು ಯಾರೂ ಸಹಿಸಬಾರದು. ಸಂವಿಧಾನದ ರಕ್ಷಣೆಯಿಂದ ಮಾತ್ರ ನಾವು ಉಳಿಯಲು ಸಾಧ್ಯ. ಅದಕ್ಕೆ ಅಪಾಯವಾದರೆ ನಾವು ಎಲ್ಲರೂ ಕಷ್ಟಕ್ಕೆ ಸಿಲುಕುತ್ತೇವೆ ಎಂಬುದನ್ನು ಯುವಜನರಾದಿಯಾಗಿ ಎಲ್ಲರೂ ಅರ್ಥ ಮಾಡಿಕೊಳ್ಳಬೇಕು.
4
+ ಭಾರತ ಹಲವು ಧರ್ಮ, ಜಾತಿ, ಭಾಷೆ, ಸಂಸ್ಕøತಿಯ ವೈವಿಧ್ಯತೆಯ ನಾಡು. ಸಂವಿಧಾನ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡಿದೆ. ಸಂವಿಧಾನ ರಚನೆ ಕರಡು ಸಮಿತಿಯಲ್ಲಿ ಭಾಷಣ ಮಾಡಿದ ಅಂಬೇಡ್ಕರ್‍ರವರು ವೈವಿಧ್ಯತೆಯ ವೈರುಧ್ಯದ ವ್ಯವಸ್ಥೆಗೆ ನಾವು ಕಾಲಿಡುತ್ತಿದ್ದೇವೆ. ಸಂವಿಧಾನದಿಂದ ರಾಜಕೀಯ ಅವಕಾಶಗಳು ಸಿಗಬಹುದು. ಆದರೆ ಆರ್ಥಿಕ, ಸಾಮಾಜಿಕ ಸಮಾನತೆ ಸೃಷ್ಟಿಯಾಗದೇ ಇದ್ದರೆ ಸಂಕಟಕ್ಕೆ ಒಳಗಾದವರು ಪ್ರಜಾಪ್ರಭುತ್ವ ರಾಜಕೀಯ ವ್ಯವಸ್ಥೆಯನ್ನು ಧ್ವಂಸ ಮಾಡುತ್ತಾರೆ ಎಂದು ಅಂಬೇಡ್ಕರ್ ಎಚ್ಚರಿಸಿದ್ದರು ಎಂದರು.
5
+ ನಾಳೆ ಕಾನ್‍ಸ್ಟೆಬಲ್ ಲಿಖಿತ ಪರೀಕ್ಷೆ: ವಸ್ತ್ರ ಸಂಹಿತೆ ಪಾಲಿಸಲು ಆದೇಶ
6
+ ಸಂವಿಧಾನದ ಆಶಯಗಳನ್ನು ಪಾಲಿಸುವುದು ಪ್ರತಿಯೊಂದು ಸರ್ಕಾರಗಳ ಕರ್ತವ್ಯ. ಸಂವಿಧಾನವನ್ನು ಬದಲಾವಣೆ ಮಾಡಲಿಕ್ಕಾಗಿಯೇ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಹೇಳುವವರಿಂದ ಅದರ ಆಶಯಗಳನ್ನು ಜಾರಿಗೆ ತರಲು ಸಾಧ್ಯ ಇಲ್ಲ.
7
+ ಅಮೆರಿಕದ ಮಾಜಿ ಅಧ್ಯಕ್ಷ ಅಬ್ರಹಾಂ ಲಿಂಕನ್ ಸಂಸತ್ ಮತ್ತು ನ್ಯಾಯ ವ್ಯವಸ್ಥೆಗೆ ಪ್ರಜೆಗಳು ಮಾಲೀಕರು. ಒಂದು ವೇಳೆ ಅದು ವೈಪಲ್ಯವಾದರೆ ಸಂವಿಧಾನವನ್ನು ಕಿತ್ತೊಗೆಯುವುದಕ್ಕೆ ಆಸಕ್ತಿ ತೋರಿಸಬಾರದು. ಸಂವಿಧಾನಕ್ಕೆ ವಿರುದ್ಧವಾಗಿರುವವರನ್ನು ಕಿತ್ತೊಗೆಯುವ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.ನಮ್ಮ ದೇಶದಲ್ಲೂ ಸಂವಿಧಾನ ಬದಲಾವಣೆ ಮಾಡುತ್ತೇವೆ ಎನ್ನುವ ಜನರಿಂದ ಸಂವಿಧಾನದ ಆಶಯಗಳು ಈಡೇರಲು ಸಾಧ್ಯವೇ? ಸಾಮಾಜಿಕ ಅಸಮಾನತೆ, ವರ್ಗ ಸಂಘರ್ಷಗಳು ನಿವಾರಣೆ ಸಾಧ್ಯವೇ ಎಂ���ು ಪ್ರಶ್ನಿಸಿದರು.
8
+ ಸಚಿವ ಎಚ್.ಸಿ.ಮಹದೇವಪ್ಪ ಮಾತನಾಡಿ, ಜ.26 ರಿಂದ ಆರಂಭಗೊಂಡ ಸಂವಿಧಾನದ ಜಾಥಾ ರಾಜ್ಯದ 5,600 ಕ್ಕೂ ಹೆಚ್ಚು ಪಂಚಾಯತ್‍ಗಳಲ್ಲಿ ಸಂಚರಿಸಿದೆ. ಜನರಿಂದ ಅಭೂತಪೂರ್ವ ಸ್ಪಂದನೆ ದೊರೆತಿದೆ. ಇಂದು ಮತ್ತು ನಾಳೆ ಎರಡೂ ದಿನ ಚಿಂತಕರು, ತಜ್ಞರು ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾಹಿತಿ ನೀಡಲಿದ್ದಾರೆ ಎಂದು ಹೇಳಿದರು.
9
+ ಸಂವಿಧಾನ ಜಾರಿಯಾಗಿ 75 ವರ್ಷ ಕಳೆದರೂ ಅದರ ಪೂರ್ಣ ಆಶಯಗಳು ಈಡೇರಿಲ್ಲ. ಕೃಷಿಕರು, ಕಾರ್ಮಿಕರು ಈಗಲೂ ಅವಕಾಶಕ್ಕಾಗಿ ಆಕಾಶದತ್ತ ನೋಡುವ ಪರಿಸ್ಥಿತಿ ಇದೆ. ಸಂವಿಧಾನವನ್ನು ಒಪ್ಪದ ವ್ಯಕ್ತಿಗಳ ಕೈಲಿ ರಾಜಕೀಯ ವ್ಯವಸ್ಥೆ ಇದ್ದಿದ್ದರಿಂದಾಗಿ ಅದು ಪೂರ್ಣ ಪ್ರಮಾಣದ ಸಾಕಾರಗೊಂಡಿಲ್ಲ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಉತ್ತಮ ಸ್ತಬ್ಧ ಚಿತ್ರಕ್ಕೆ ಪ್ರಶಸ್ತಿ ನೀಡಲಾಯಿತು. ಅತ್ಯುತ್ತಮ ಚಟುವಟಿಕೆಗಾಗಿ ತುಮಕೂರು, ದಾವಣಗೆರೆ, ಮೈಸೂರು, ಕೊಡಗು, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲಾಕಾರಿಗಳಿಗೆ ನಗದು ಪುರಸ್ಕಾರ ನೀಡಲಾಯಿತು ಹಾಗೂ ಸಂವಿಧಾನ ಪೀಠಿಕೆ ವಾಚನದಲ್ಲಿ ಭಾಗವಹಿಸಿದ್ದ ಮಕ್ಕಳಿಗೂ ಪ್ರಶಸ್ತಿ ನೀಡಲಾಯಿತು.
10
+ ರಾಜ್ಯದಲ್ಲೂ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ ಬ್ಯಾನ್..!
11
+ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ವಾಚಿಸಿದರು. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ, ಹೈಕೋರ್ಟ್‍ನ ನಿವೃತ್ತ ನ್ಯಾಯ ಮೂರ್ತಿ ಎಚ್.ಎನ್.ನಾಗಮೋಹನ್ ದಾಸ್, ಸಚಿವರಾದ ಪ್ರಿಯಾಂಕ್ ಖರ್ಗೆ, ಶಾಸಕರಾದ ಎಸ್.ಟಿ.ಸೋಮಶೇಖರ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
eesanje/url_46_226_1.txt ADDED
@@ -0,0 +1,5 @@
 
 
 
 
 
 
1
+ ಕನ್ನಡ ಅನುಷ್ಠಾನಕ್ಕೆ ಸಹಕರಿಸದ ಅಧಿಕಾರಿ ಅಮಾನತು
2
+ ಬೆಂಗಳೂರು,ಫೆ.24- ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಆದೇಶ ಪಾಲಿಸದೆ ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಮಹದೇವಪುರ ವಲಯದ ಹಿರಿಯ ಆರೋಗ್ಯ ಪರಿವೀಕ್ಷಕ ಕೆ.ಎಲ್.ವಿಶ್ವನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ನಗರದಲ್ಲಿ ಅಂಗಡಿ ಮುಂಗಟ್ಟುಗಳು ಹಾಗೂ ವಾಣಿಜ್ಯ ಮಳಿಗೆಗಳ ಮೇಲೆ ಹಾಕಲಾಗುವ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಗೆ ಪ್ರಾಶಸ್ತ್ರ ನೀಡಬೇಕು ಒಂದು ವೇಳೆ ಈ ನಿಯಮ ತಪ್ಪುವ ಮಾಲೀಕರ ಮೇಲೆ ಕ್ರಮ ಕೈಗೊಳ್ಳಬೇಕು ಹಾಗೂ ಅನ್ಯಭಾಷೆಯಲ್ಲಿರುವ ಫಲಕಗಳನ್ನು ಬಟ್ಟೆಯಿಂದ ಮುಚ್ಚಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಆದೇಶ ಹೊರಡಿಸಿದ್ದರು.
3
+ ಕನ್ನಡ ಅನುಷ್ಠಾನ ಜಾರಿಗೊಳಿಸದ ಮಳಿಗೆಗಳ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರವನ್ನು ಆಯಾ ವಲಯಗಳ ಹಿರಿಯ ಆರೋಗ್ಯ ಪರಿವೀಕ್ಷಕರಿಗೆ ನೀಡಲಾಗಿತ್ತು. ಆದರೆ, ಮಹದೇವಪುರ ವಲಯದ ಹಿರಿಯ ಆರೋಗ್ಯ ಪರಿವೀಕ್ಷಕ ವಿಶ್ವನಾಥ್ ಅವರು ಆಯುಕ್ತರ ಆದೇಶಕ್ಕೂ ಕಿಮ್ಮತ್ತು ನೀಡದೆ ಬೇಜವಬ್ದಾರಿತನ ಪ್ರದರ್ಶಿಸಿರುವುದು ಕಂಡು ಬಂದಿದೆ.
4
+ ಮಂಡ್ಯ ಕ್ಷೇತ್ರದಿಂದ ಸುಮಲತಾ ಕಣಕ್ಕೆ ಇಳಿಯುವುದು ಫಿಕ್ಸ್..!
5
+ ವಿಶ್ವನಾಥ್ ಅವರ ಈ ಬೇಜವಬ್ದಾರಿತನವನ್ನು ಗಂಭೀರವಾಗಿ ಪರಿಗಣಿಸಿರುವ ಮಹದೇವಪುರ ವಲಯ ಜಂಟಿ ಆಯುಕ್ತರು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ಆದೇಶದ ಮೇರೆಗೆ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಮಾನತುಗೊಂಡಿರುವ ವಿಶ್ವನಾಥ್ ಅವರಿಗೆ ಕೆಸಿಎಸ್‍ಆರ್ ನಿಯಮದಂತೆ ಜೀವಾನಾಧರ ಭತ್ಯೆ ನೀಡಬೇಕು ಹಾಗೂ ಅವರು ಕೇಂದ್ರ ಸ್ಥಾನಬಿಟ್ಟು ಬೇರೆಡೆಗೆ ತೆರಳದಂತೆ ನೋಡಿಕೊಳ್ಳಬೇಕು ಎಂದು ಆರೋಗ್ಯ ವೈದ್ಯಾಧಿಕಾರಿಗಳಿಗೆ ಜಂಟಿ ಆಯುಕ್ತರು ಸೂಚನೆ ನೀಡಿದ್ದಾರೆ.
eesanje/url_46_226_10.txt ADDED
@@ -0,0 +1,6 @@
 
 
 
 
 
 
 
1
+ ಮಾರ್ವಾಡಿ ಮನೆಗಳಲ್ಲಿ ಕಳ್ಳತನ ಮಾಡುತಿದ್ದ ಅಸ್ಸಾಂ ವ್ಯಕ್ತಿ ವಶಕ್ಕೆ
2
+ ಬೆಂಗಳೂರು, ಫೆ.23- ಅಸ್ಸಾಂನಿಂದ ನಗರಕ್ಕೆ ರೈಲಿನಲ್ಲಿ ಬಂದು ಮಾರ್ವಾಡಿ ಮನೆಗಳಲ್ಲೇ ಕಳ್ಳತನ ಮಾಡಿ ವಾಪಸ್ ತನ್ನ ಊರಿಗೆ ಪರಾರಿಯಾಗುತ್ತಿದ್ದ ಅಸ್ಸಾಂ ಕಳ್ಳನನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಪತ್ತೆಹಚ್ಚಿ ಸುಮಾರು ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಈ ಆರೋಪಿಯು ನಗರದಲ್ಲಿ ಕಳ್ಳತನ ಮಾಡಿದ ಚಿನ್ನಾಭರಣಗಳನ್ನು ಅಸ್ಸಾಂನಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡಿ ಬಂದ ಹಣದಿಂದ ಕಾರು ಹಾಗೂ ಬಟ್ಟೆಗಳನ್ನು ಖರೀದಿಸಿ ವಿಲಾಸಿ ಜೀವನ ನಡೆಸುತ್ತಿದ್ದನು.
3
+ ನಗರದಲ್ಲಿನ ಮಾರ್ವಾಡಿ ಮನೆಗಳೇ ಈತ ಟಾರ್ಗೇಟ್. ಅಸ್ಸಾಂನಿಂದ ನಗರಕ್ಕೆ ರೈಲಿನಲ್ಲಿ ಬಂದು ಮೆಜೆಸ್ಟಿಕ್‍ನ ಲಾಡ್ಜ್‍ನಲ್ಲಿ ರೂಂ ಮಾಡಿ ರಾತ್ರಿ ಉಳಿದುಕೊಂಡು ಬೆಳಗಾಗುತ್ತಿದ್ದಂತೆ ಬೈಕ್‍ನಲ್ಲಿ ಸುತ್ತಾಡುತ್ತ ಬೀಗ ಹಾಕಿರುವ ಮಾರ್ವಾಡಿ ಮನೆಗಳನ್ನು ಗುರುತಿಸಿ ಕಳ್ಳತನ ಮಾಡುತ್ತಿದ್ದನು. ಇತ್ತೀಚೆಗೆ ಶೇಷಾದ್ರಿಪುರಂನ ಮಾರ್ವಾಡಿ ಒಬ್ಬರ ಮನೆಯ ಕಿಟಕಿ ಮುರಿದು ಒಳನುಗ್ಗಿ ಸುಮಾರು 2.1 ಕೆಜಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು ಅಸ್ಸಾಂಗೆ ಪರಾರಿಯಾಗಿದ್ದನು.
4
+ ಹೊತ್ತಿ ಉರಿದ ಪ್ಲಾಸ್ಟಿಕ್ ಗೋದಾಮು: ವಾಹನಗಳು ಬೆಂಕಿಗಾಹುತಿ
5
+ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಸುಮಾರು 250ಕ್ಕೂ ಹೆಚ್ಚು ಸಿಸಿ ಟಿವಿಗಳನ್ನು ಪರಿಶೀಲಿಸಿ ಕೊನೆಗೂ ಆರೋಪಿಯನ್ನು ಪತ್ತೆಹಚ್ಚಿ ಅಸ್ಸಾಂಗೆ ಹೋಗಿ ಆತನನ್ನು ವಶಕ್ಕೆ ಪಡೆದು ನಗರಕ್ಕೆ ಕರೆತಂದಿದ್ದಾರೆ. ಈ ಆರೋಪಿ ಈ ಮಾರ್ವಾಡಿ ಮನೆ ಕಳ್ಳತನ ಮಾಡುವ ಮೊದಲು ಅಂದೇ ಸದಾಶಿವನಗರದ ಮನೆಯಲ್ಲಿ ಕಳ್ಳತನ ಮಾಡಲು ನುಗ್ಗಿದ್ದಾಗ ಅಲ್ಲಿ ಏನೂ ಸಿಕ್ಕಿರಲಿಲ್ಲ.
6
+ ಇದೀಗ ಶೇಷಾದ್ರಿಪುರಂ ಠಾಣೆ ಪೊಲೀಸರು ವಶಕ್ಕೆ ಪಡೆದಿರುವ ಆರೋಪಿಯನ್ನು ಹೆಚ್ಚಿನ ವಿಚಾರಣೆಗೊಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
eesanje/url_46_226_11.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ವಿಧಾನಸಭೆಯಲ್ಲಿ ವಿಪಕ್ಷ ಧರಣಿ: ಸೋಮವಾರಕ್ಕೆ ಕಲಾಪ ಮುಂದೂಡಿಕೆ
2
+ ಬೆಂಗಳೂರು, ಫೆ.23- ಕರ್ನಾಟಕದ ಹಿತರಕ್ಷಣೆ ಮಾಡುವಲ್ಲಿ ಕೇಂದ್ರ ಸರ್ಕಾರದಿಂದ ಅನ್ಯಾಯವಾಗಿದೆ ಎಂದು ರಾಜ್ಯ ಸರ್ಕಾರ ಆರೋಪಿಸಿ ವಿಧಾನಸಭೆಯಲ್ಲಿ ನಿನ್ನೆ ಕೈಗೊಂಡ ನಿರ್ಣಯವನ್ನು ವಿರೋಧಿಸಿ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಆರಂಭಿಸಿರುವ ಧರಣಿಯನ್ನು ಸದನದಲ್ಲಿ ಇಂದೂ ಮುಂದುವರೆಸಿ ಗದ್ದಲ ಎಬ್ಬಿಸಿದ್ದರಿಂದ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಯಿತು.
3
+ ಇಂದು ಬೆಳಿಗ್ಗೆ ಸದನ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಗಿಳಿದು ಧರಣಿ ಮುಂದುವರೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಆಗ ಅಶೋಕ್ ಮಾತನಾಡಿ, ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರದ ವಿರುದ್ಧ ಏಕಾಏಕಿ ನಿರ್ಧಾರ ಕೈಗೊಳ್ಳಲಾಗಿದೆ. ಈ ನಿರ್ಣಯವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
4
+ ಸಭಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಕಳೆದ ಬಾರಿ ನಡೆದ ಕಾರ್ಯಕಲಾಪಗಳ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯಿಸಿದಂತೆ ಎಲ್ಲಾ ಮಸೂದೆಗಳನ್ನು ಅಂಗೀಕರಿಸಲು ಕಾರ್ಯಕಲಾಪ ನಡೆಸಲು ಸಹಕಾರ ನೀಡಿದ್ದೇವೆ. ಸಭಾಧ್ಯಕ್ಷರ ಸಲಹೆ ಮೇರೆಗೆ ಕಾರ್ಯ ಕಲಾಪ ಸುಗಮವಾಗಿ ನಡೆಯಲು ಸಮ್ಮತಿಸಿದ್ದೇವೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕದ್ದುಮುಚ್ಚಿ ಮಾಡುವುದು ಏನಿತ್ತು ಎಂದು ಪ್ರಶ್ನಿಸಿದರು.
5
+ ಗ್ಯಾರಂಟಿ ಯೋಜನೆಗೆ ಕಾರ್ಮಿಕ ಇಲಾಖೆಯ ಸೆಸ್ ಹಣ ಬಳಕೆ ಇಲ್ಲ: ಲಾಡ್
6
+ ಕೇಂದ್ರ ಸರ್ಕಾರದ ವಿರುದ್ಧ ಸದನದ ಹೊರಗೆ ಮಾತನಾಡಬಹುದು. ಆದರೆ, ಸದನಲ್ಲಿ ನಿರ್ಣಯ ಮಂಡಿಸಲು ನಿಯಮಾವಳಿ ಪಾಲಿಸಬೇಕು. ನಿನ್ನೆ ತಂದಂತಹ ನಿರ್ಣಯ ಕಾರ್ಯಸೂಚಿಯಲ್ಲೂ ಇಲ್ಲ. ನಿಯಮಾವಳಿ ಪ್ರಕಾರ ಇಲ್ಲ. ಕಾರ್ಯಕಲಾಪಗಳ ಸಲಹಾ ಸಮಿತಿ ಸಭೆಯಲ್ಲಿ ಪ್ರಸ್ತಾಪವಾಗಿಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
7
+ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು ನಿಯಮಾವಳಿಗಳನ್ನು ಗಾಳಿಗೆ ತೂರಿ ಸಂವಿಧಾನ ವಿರೋಧಿ ನಿರ್ಣಯ ಮಂಡಿಸಿದ್ದಾರೆ ಎಂದು ಟೀಕಿಸಿದರು. ಆಗ ಮಾತನಾಡಿದ ಎಚ್.ಕೆ.ಪಾಟೀಲ್ ಅವರು, ಕರ್ನಾಟಕದ ಹಿತ ರಕ್ಷಣೆ ಮಾಡುವ ಅಂಶಗಳು ನಿರ್ಣಯದಲ್ಲಿವೆ. ಕೇಂದ್ರದಿಂದ ರಾಜ್ಯಕ್ಕಾಗಿರುವ ಅನ್ಯಾಯವನ್ನಷ್ಟೇ ಹೇಳಿದ್ದೇವೆ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ನಾಡಿನ ಏಳು ಕೋಟಿ ಜನರ ಮತ್ತು ಸದನದ ಒಕ್ಕೊರಲ ಧ್ವನಿ ಇದರಲ್ಲಿ ಅಡಗಿದೆ ಎಂದು ಸಮರ್ಥಿಸಿಕೊಂಡರು.
8
+ ಬಿಜೆಪಿ ಶಾಸಕರು ಮಾಡಿದ ಆರೋಪವನ್ನು ತಳ್ಳಿ ಹಾಕಿದರಲ್ಲದೆ, ಧರಣಿ ನಡೆಸುತ್ತಿರುವ ಪ್ರತಿಪಕ್ಷಗಳ ಶಾಸಕರ ಧೋರಣೆಯನ್ನು ಖಂಡಿಸಿದರು. ಜೊತೆಗೆ ನಿರ್ಣಯ ಮಂಡಿಸಲು ನಿಮ್ಮ ಪರವಾನಗಿ ತೆಗೆದುಕೊಳ್ಳಬೇಕಿಲ್ಲ ಎಂದು ತಿರುಗೇಟು ನೀಡಿದರು. ಕಾಯ್ದೆ, ಕಾನೂನು ಮತ್ತು ನಿಯಮಾವಳಿ ಪ್ರಕಾರವೇ ನಿರ್ಣಯ ಮಂಡಿಸಿದ್ದೇವೆ. ಕರ್ನಾಟಕದ ಹ���ತರಕ್ಷಣೆಗೆ ಸಂಬಂಧಿಸಿದ ಅಂಶಗಳು ನಿರ್ಣಯದಲ್ಲಿವೆ. ಅನ್ಯಾಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಅಂಕಿ-ಅಂಶಗಳ ಸಹಿತ ಮಂಡನೆ ಮಾಡಿ ಅನುಮೋದನೆ ಪಡೆದಿದ್ದೇವೆ. ನಿಮಗೆ ರಾಜಕೀಯ ಬೇಕೋ? ಜನರ ಹಿತರಕ್ಷಣೆ ಬೇಕೋ ಎಂಬುದನ್ನು ನೀವೇ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದರು.
9
+ ಆಗ ಕಂದಾಯ ಸಚಿವ ಕೃಷ್ಣಭೈರೇಗೌಡ ದನಿಗೂಡಿಸಿ ನಿಮ್ಮ ಸರ್ಕಾರ ಇz್ದದ್ದಾಗ ಗೋಹತ್ಯೆ ನಿಷೇಧ ಕಾನೂನು ಸೇರಿದಂತೆ ಏನೆಲ್ಲೇ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂಬುದು ನಮಗೂ ಗೊತ್ತಿಗೆ. ಆಗ ನೀವು ಯಾವ ನಿಯಮಾವಳಿಯನ್ನು ಪಾಲಿಸಿದ್ದೀರಿ ಎಂದು ಪ್ರಶ್ನಿಸಿದ್ದಲ್ಲದೆ ನೀವು ನಮಗೆ ಪಾಠ ಮಾಡಲು ಬರಬೇಡಿ ಎಂದರು.ಮತ್ತೆ ಅಶೋಕ್ ಮಾತನಾಡಿ, ಕೇಂದ್ರವನ್ನು ಟೀಕಿಸಲು ಗ್ರಾಮ ಪಂಚಾಯ್ತಿ, ಜಿಲ್ಲೆ ಪಂಚಾಯ್ತಿ, ಲೋಕಸಭೆ, ವಿಧಾನಸಭೆ ಇದೆ. ಲೋಕಸಭೆಯಲ್ಲಿ ನಿಮ್ಮ ಸಂಸದರು ಏನು ಮಾಡುತ್ತಿದ್ದಾರೆ? ಅಲ್ಲಿ ಮಾತನಾಡುವ ಧೈರ್ಯವಿಲ್ಲದೆ, ಬಾಯಿ ಮುಚ್ಚಿಕೊಂಡಿದ್ದಾರೆ ಎಂದಾಗ ಕಾಂಗ್ರೆಸ್ ಶಾಸಕರು ನಿಮ್ಮ ಸಂಸದರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
10
+ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಕೇಂದ್ರ ಮತ್ತು ರಾಜ್ಯದ ನಡುವೆ ಅನುದಾನ ಹಂಚಿಕೆ, ಅಧಿಕಾರಕ್ಕೆ ಸಂಬಂಧಿಸಿದಂತೆ ಕಳೆದ 75 ವರ್ಷಗಳಿಂದಲೂ ಚರ್ಚೆ ನಡೆಸಲಾಗುತ್ತಿದೆ. ಒಟ್ಟು55 ವರ್ಷಗಳ ಕಾಲ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಆಡಳಿತ ನಡಸಿವೆ ಎಂದು ಹೇಳುತ್ತಿದ್ದರು.ಪ್ರತಿಯಾಗಿ ಆಡಳಿತ ಪಕ್ಷದ ಶಾಸಕರು ಅದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಸದನದಲ್ಲಿ ಕಾವೇರಿದ ವಾತಾವರಣ ಉಂಟಾಯಿತು. ಆಡಳಿತ ಮತ್ತು ಪ್ರತಿಪಕ್ಷಗಳ ಶಾಸಕರ ನಡುವೆ ವಾಗ್ವಾದ ನಡೆದು ಇಡೀ ಸದನ ಗೊಂದಲದ ಗೂಡಾದ ಹಿನ್ನೆಲೆಯಲ್ಲಿ ಸಭಾಧ್ಯಕ್ಷರು ಕಲಾಪವನ್ನು ಕೆಲ ಕಾಲ ಮುಂದೂಡಿದರು.
11
+ ಮತ್ತೆ ಸದನ ಸಮಾವೇಶಗೊಂಡಾಗ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಧರಣಿ ಮುಂದುವರೆಸಿದರು. ಆಗ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಕಾರ್ಯಕಲಾಪಗಳ ಪಟ್ಟಿಯಲ್ಲಿ ಪ್ರಶ್ನೋತ್ತರ, ಗಮನ ಸೆಳೆಯುವ ಸೂಚನೆ ಸೇರಿದಂತೆ ಸಾಕಷ್ಟು ಮಹತ್ವದ ವಿಚಾರಗಳಿವೆ. ಕಾರ್ಯಕಲಾಪಗಳ ಪಟ್ಟಿ ಪ್ರಕಾರ ಸದನ ನಡೆಸಬೇಕು ಎಂದು ಕೋರಿದರು. ಆಗ ಅಶೋಕ್ ಮಾತನಾಡಿ, ಸದನದ ಕಾರ್ಯಕಲಾಪಗಳನ್ನು ನಡೆಸಲು ನಾವು ಸಹಕರಿಸುತ್ತೇವೆ. ಆದರೆ, ಕೇಂದ್ರ ಸರ್ಕಾರದ ವಿರುದ್ಧ ಏಕಾಏಕಿ ಮಂಡನೆ ಮಾಡಿ ಅಂಗೀಕರಿಸಿರುವ ನಿರ್ಣಯವನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ನಮಗೂ ನಿರ್ಣಯ ಮಂಡನೆಗೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
12
+ ಈ ಹಂತದಲ್ಲಿ ಆಡಳಿತ ಮತ್ತು ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು ಸದನಲ್ಲಿ ಕಾವೇರಿದ ವಾತಾವರಣ ಉಂಟಾಯಿತು. ಪ್ರತಿಪಕ್ಷಗಳ ಸದಸ್ಯರು ಧರಣಿ ಮುಂದುವರೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸಭಾಧ್ಯಕ್ಷರು ಕಾರ್ಯಕಲಾಪ ನಡೆಸಲು ಸಹಕರಿಸುವಂತೆ ಮನವಿ ಮಾಡಿದರು. ಆಗಲೂ ಗದ್ದಲ ಮುಂದುವರೆಯಿತು.ಗದ್ದಲದ ನಡುವೆ ಸಭಾಧ್ಯಕ್ಷರು ಕಾರ್ಯದರ್ಶಿಯವರ ವರದಿ ಮಂಡನೆ ಹಾಗೂ ಸಭೆಯ ಮುಂದಿಡಲಾಗುವ ಕಾಗದ ಪತ್ರಗಳ ಮಂಡನೆಗೆ ಅವಕಾಶ ನೀಡಿ ಶಾಸನ ರಚನಾ ಕಲಾಪ ಕೈಗೆತ್ತಿಕೊಂಡು ವಿಧೇಯಕ ಮಂಡನೆ ಹಾಗೂ ಅನುಮೋದನೆಗೆ ಅವಕಾಶ ಕಲ್ಪಿಸಿದರು.
13
+ ಡಾ.ಮಂಜುನಾಥ್ ಸ್ಪರ್ಧೆ ಕುರಿತಂತೆ ಸೂಕ್ತ ಸಮಯದಲ್ಲಿ ನಿರ್ಧಾರ: ಎಚ್‍ಡಿಕೆ
14
+ ಗದ್ದಲ-ಗೊಂದಲದ ನಡುವೆಯೂ ಅಶೋಕ್ ಅವರು ಸಿದ್ಧಪಡಿಸಿದ ನಿರ್ಣಯವನ್ನು ಮಂಡಿಸಿದರು. ಆಗ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ 2024ನೇ ಸಾಲಿನ ಕರ್ನಾಟಕ ವಿಧಾನ ಮಂಡಲ(ಅನರ್ಹತಾ ನಿವಾರಣಾ) (ತಿದ್ದುಪಡಿ) ವಿಧೇಯಕ ಮಂಡಿಸಿ ಅನುಮೋದನೆ ಪಡೆಯುವಲ್ಲಿ ಯಶಸ್ವಿಯಾದರು.
15
+ ನಂತರ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, 2024ನೇ ಸಾಲಿನ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕವನ್ನುಮಂಡಿಸಿ ಅನುಮೋದನೆ ಪಡೆದರು. ಬಳಿಕ ಸಭಾಧ್ಯಕ್ಷರು ವಿಧಾನ ಪರಿಷತ್ತಿನಿಂದ ಅನುಮೋದನೆಗೊಂಡಿರುವ 7 ವಿಧೇಯಕಗಳ ಮಾಹಿತಿಯನ್ನು ಸದನದ ಮುಂದಿಟ್ಟರು. ಆ ನಂತರ ಸದನಲ್ಲಿ ಗೊಂದಲದ ವಾತಾವರಣ ತಿಳಿಯಾಗುವ ಸೂಚನೆಗಳು ಕಂಡುಬರದ ಹಿನ್ನೆಲೆಯಲ್ಲಿ ಸದನದ ಕಲಾಪವನ್ನು ಸೋಮವಾರಕ್ಕೆ ಮುಂದೂಡಿದರು.
eesanje/url_46_226_12.txt ADDED
@@ -0,0 +1,7 @@
 
 
 
 
 
 
 
 
1
+ ಹೊತ್ತಿ ಉರಿದ ಪ್ಲಾಸ್ಟಿಕ್ ಗೋದಾಮು: ವಾಹನಗಳು ಬೆಂಕಿಗಾಹುತಿ
2
+ ಬೆಂಗಳೂರು, ಫೆ.23- ಪ್ಲಾಸ್ಟಿಕ್ ಗೋದಾಮಿನಲ್ಲಿ ಇಂದು ಮುಂಜಾನೆ ಹೊತ್ತಿಕೊಂಡ ಬೆಂಕಿ ಪಕ್ಕದಲ್ಲೇ ಇದ್ದ ಪಾರ್ಕಿಂಗ್ ಸ್ಥಳಕ್ಕೆ ವ್ಯಾಪಿಸಿದ್ದರಿಂದ ಅಲ್ಲಿ ನಿಲ್ಲಿಸಲಾಗಿದ್ದ ಸುಮಾರು 30ರಿಂದ 35 ವಾಹನಗಳು ಸುಟ್ಟು ಕರಕಲಾಗಿರುವ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
3
+ ಗಂಗೊಂಡನಹಳ್ಳಿಯ ಗೋದಾಮುವೊಂದರಲ್ಲಿ ಹಳೇ ಪ್ಲಾಸ್ಟಿಕ್ ಸಾಮಗ್ರಿಗಳನ್ನು ಸಂಗ್ರಹಿಸಿಡಲಾಗಿತ್ತು. ಗೋದಾಮಿಗೆ ಹೊಂದಿಕೊಂಡಂತೆ ಇದರ ಪಕ್ಕದಲ್ಲಿಯೇ ವಾಹನಗಳನ್ನು ರಾತ್ರಿ ವೇಳೆ ಪೇ- ಪಾರ್ಕಿಂಗ್ ಮಾಡಲಾಗುತ್ತಿತ್ತು. ಚಾಲಕರು ತಮ್ಮ ಮನೆಯ ಬಳಿ ವಾಹನಗಳನ್ನು ನಿಲ್ಲಿಸಲು ಜಾಗದ ಅಭಾವ ಇರುವ ಕಾರಣ ಈ ಸ್ಥಳದಲ್ಲಿ ದಿನಕ್ಕೆ 30 ರೂ. ನೀಡಿ ರಾತ್ರಿ ವೇಳೆ ತಮ್ಮ ವಾಹನಗಳನ್ನು ನಿಲ್ಲಿಸುತ್ತಿದ್ದರು.
4
+ ನಿನ್ನೆ ಈ ಸ್ಥಳದಲ್ಲಿ ಸುಮಾರು 30-35 ವಾಹನಗಳನ್ನು ನಿಲುಗಡೆ ಮಾಡಲಾಗಿತ್ತು. ಇಂದು ಮುಂಜಾನೆ 1.30ರ ಸುಮಾರಿನಲ್ಲಿ ಈ ಪ್ಲಾಸ್ಟಿಕ್ ಗೋದಾಮಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.ಬೆಂಕಿಯ ಕೆನ್ನಾಲಿಗೆ ಪಾರ್ಕಿಂಗ್ ಸ್ಥಳದಲ್ಲಿದ್ದ ಪ್ರಯಾಣಿಕರ ಆಟೋಗಳು, ಗೂಡ್ಸ್‍ವಾಹನ, ವ್ಯಾನ್‍ಗೂ ವ್ಯಾಪಿಸಿದ್ದರಿಂದ ನೋಡನೋಡುತ್ತಿದ್ದಂತೆ ಎಲ್ಲಾ ವಾಹನಗಳು ಹೊತ್ತಿ ಉರಿಯುತ್ತಿದ್ದವು.
5
+ ಗ್ಯಾರಂಟಿ ಯೋಜನೆಗೆ ಕಾರ್ಮಿಕ ಇಲಾಖೆಯ ಸೆಸ್ ಹಣ ಬಳಕೆ ಇಲ್ಲ: ಲಾಡ್
6
+ ತಕ್ಷಣ ಸುದ್ದಿ ತಿಳಿದ ಏಳು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿದ ಸಿಬ್ಬಂದಿ ಬೆಂಕಿಯನ್ನು ತಹಬದಿಗೆ ತರಲು ಹರಸಾಹಸ ಪಟ್ಟು ಇಂದು ಬೆಳಗ್ಗೆ 8 ಗಂಟೆವರೆಗೂ ಸತತ ಪ್ರಯತ್ನದಿಂದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಸ್ಥಳದಲ್ಲಿ ಪ್ರಯಾಣಿಕರ ಆಟೋಗಳು, ಲಗೇಜ್ ಆಟೋಗಳು ಹಾಗೂ ಬಟ್ಟೆ ವ್ಯಾಪಾರಿಗಳ ವಾಹನಗಳನ್ನು ನಿಲ್ಲಿಸಲಾಗಿತ್ತು.
7
+ ಜೀವನೋಪಾಯಕ್ಕಾಗಿ ತಮ್ಮ ವೃತ್ತಿಗನುಸಾರವಾಗಿ ಇಟ್ಟುಕೊಂಡಿದ್ದ ವಾಹನಗಳನ್ನು ಕಳೆದುಕೊಂಡಿರುವ ಚಾಲಕರು ಕಣ್ಣೀರು ಹಾಕಿದ್ದಾರೆ. ಚಂದ್ರಾಲೇಔಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮೇಲ್ನೋಟಕ್ಕೆ ಶಾರ್ಟ್‍ಸಕ್ಯೂರ್ಟ್‍ನಿಂದ ಬೆಂಕಿ ಹತ್ತಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
eesanje/url_46_226_2.txt ADDED
@@ -0,0 +1,7 @@
 
 
 
 
 
 
 
 
1
+ ಸಚಿವರಿಗೆ ಡಿಸಿಎಂ ಡಿಕೆಶಿ ಭೋಜನಕೂಟ
2
+ ಬೆಂಗಳೂರು,ಫೆ.24- ಲೋಕಸಭೆ ಹಾಗೂ ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಬಲಾಬಲ ಕ್ರೋಡೀಕರಣಕ್ಕಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಡರಾತ್ರಿ ಸದಾಶಿವನಗರದ ಮನೆಯಲ್ಲಿ ಸಂಪುಟದ ಸಚಿವರ ಜೊತೆ ಭೋಜನಕೂಟ ಏರ್ಪಡಿಸಿ ಚರ್ಚೆ ನಡೆಸಿದ್ದಾರೆ. 8 ಜನ ಸಚಿವರನ್ನುಹೊರತುಪಡಿಸಿದರೆ ಉಳಿದ ಎಲ್ಲರೂ ನಿನ್ನೆಯ ಭೋಜನಕೂಟದಲ್ಲಿ ಭಾಗವಹಿ ಸಿದ್ದರು. ಈ ವೇಳೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಮಹತ್ವದ ಚರ್ಚೆಯಾಗಿದೆ.
3
+ ಕೆಲವು ಕ್ಷೇತ್ರಗಳಲ್ಲಿ 2-3 ಕ್ಕಿಂತಲೂ ಹೆಚ್ಚಿನ ಅಭ್ಯರ್ಥಿಗಳಿದ್ದಾರೆ. ಹೀಗಾಗಿ ಅವರ ನಡುವೆ ಚರ್ಚೆ ನಡೆಸಿ ಯಾವುದೇ ಅಸಮಾಧಾನಕ್ಕೆ ಅವಕಾಶವಿಲ್ಲದಂತೆ ಸೌಹಾರ್ದಯುತವಾಗಿ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಪ್ರಮುಖ ವಿಚಾರವಾಗಿ ಚರ್ಚೆಯಾಗಿದೆ. ಜೊತೆಗೆ ಪಕ್ಷ ಸಂಘಟನೆಗೆ ಸಂಬಂಧಪಟ್ಟಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆಗಳಾಗಿವೆ.
4
+ ಜಿಲ್ಲಾ ಉಸ್ತುವಾರಿ ಸಚಿವರು ಚುನಾವಣಾ ಹೊಣೆಗಾರಿಕೆ ಒಪ್ಪಿಕೊಳ್ಳಬೇಕು. ರಾಜ್ಯಮಟ್ಟದಲ್ಲಿ ಅಷ್ಟೇ ಅಲ್ಲದೆ, ರಾಷ್ಟ್ರಮಟ್ಟದಲ್ಲೂ ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರಲು ಶ್ರಮಿಸಬೇಕಿದೆ. ಹೀಗಾಗಿ ಹೈಕಮಾಂಡ್‍ನ ಸಂದೇಶದನುಸಾರ ಎಲ್ಲರೂ ಬದ್ಧತೆಯಿಂದ ಕೆಲಸ ಮಾಡಬೇಕು. ಆಂತರಿಕವಾಗಿ ಸಣ್ಣಪುಟ್ಟ ಭಿನ್ನಮತಗಳಿದ್ದರೂ ಅದರ ಬಗ್ಗೆ ತಲೆಕೆಡಿಸಿಕೊಳ್ಳಬಾರದೆಂದು ಸಲಹೆ ನೀಡಲಾಗಿದೆ.
5
+ ಮಂಡ್ಯ ಕ್ಷೇತ್ರದಿಂದ ಸುಮಲತಾ ಕಣಕ್ಕೆ ಇಳಿಯುವುದು ಫಿಕ್ಸ್..!
6
+ ಜಿಲ್ಲಾ ನಾಯಕರುಗಳ ನಡುವೆ ಹೊಂದಾಣಿಕೆ ಮೂಡಿಸುವುದು ಉಸ್ತುವಾರಿ ಸಚಿವರ ಜವಾಬ್ದಾರಿ. ಈಗಾಗಲೇ ನಿಗಮ ಮಂಡಳಿಗಳ ನೇಮಕಾತಿಯಿಂದಾಗಿ ಶಾಸಕರ ನಡುವಿನ ಅಸಮಾಧಾನವನ್ನು ಸರಿಪಡಿಸಲಾಗಿದೆ. ಕಾರ್ಯಕರ್ತರ ನಿಗಮ ಮಂಡಳಿ ನೇಮಕಾತಿಗೆ ಸಚಿವರು ಶೀಘ್ರವೇ ಪಟ್ಟಿಯನ್ನು ರವಾನಿಸಬೇಕು ಮತ್ತು ಕೆಳಹಂತದ ಸಮಿತಿಗಳ ನೇಮಕಾತಿಗೂ ಕಾರ್ಯಕರ್ತರ ಹೆಸರುಗಳನ್ನು ಸೂಚಿಸಬೇಕೆಂದು ನಿನ್ನೆಯ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಸಚಿವರಿಗೆ ಸೂಚನೆ ನೀಡಿದ್ದಾರೆ.
7
+ ಬಿಜೆಪಿ ಅನುಸರಿಸುತ್ತಿರುವ ರಾಜಕೀಯ ತಂತ್ರಗಾರಿಕೆಗೆ ಪ್ರತಿತಂತ್ರ ರೂಪಿಸುವುದು ಅತ್ಯಗತ್ಯ. ಸುಳ್ಳು ಮತ್ತು ಭಾವನಾತ್ಮಕ ರಾಜಕಾರಣಕ್ಕೆ ಎಲ್ಲಾ ಸಚಿವರೂ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಸಚಿವರಿಗೆ ಸಲಹೆ ಕೊಡಲಾಗಿದೆ. ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರುಖ್ ಅಬ್ದುಲ್ಲಾ ಸಭೆಯಲ್ಲಿ ಭಾಗವಹಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ ಸಿಂಗ್ ಕೂಡ ಔತಣಕೂಟದಲ್ಲಿ ಉಪಸ್ಥಿತರಿದ್ದರು. ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಎಸ್.ಎಸ್.ಮಲ್ಲಿಕಾರ್ಜುನ್, ರಹೀಂ ಖಾನ್, ಭೈರತಿ ಸುರೇಶ್, ಕೃಷ್ಣಭೈರೇಗೌಡ ಸೇರಿದಂತೆ ಕೆಲವು ಸಚಿವರ ಗೈರು ಹಾಜರಿ ಎದ್ದುಕಾಣುತ್ತಿತ್ತು.
eesanje/url_46_226_3.txt ADDED
@@ -0,0 +1,10 @@
 
 
 
 
 
 
 
 
 
 
 
1
+ ರಾಜ್ಯಸರ್ಕಾರ ಬೆದರಿಸಲು ಪ್ರಕರಣ ದಾಖಲಿಸಿದೆ : ಕುಪೇಂದ್ರರೆಡ್ಡಿ
2
+ ಬೆಂಗಳೂರು,ಫೆ.24- ಪ್ರಜಾಪ್ರಭುತ್ವದಲ್ಲಿ ಯಾರು, ಯಾರನ್ನು ಬೇಕಾದರೂ ಭೇಟಿ ಮಾಡಿ ಮತ ಕೇಳುವ ಅವಕಾಶಗಳಿವೆ. ತಮ್ಮನ್ನು ಬೆದರಿಸಲು ರಾಜ್ಯಸರ್ಕಾರ ದುರುದ್ದೇಶಪೂರ್ವಕವಾಗಿ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಪ್ರಕರಣ ದಾಖಲಿಸಿದೆ ಎಂದು ರಾಜ್ಯಸಭಾ ಚುನಾವಣೆಯ ಎನ್‍ಡಿಎ ಅಭ್ಯರ್ಥಿ ಕುಪೇಂದ್ರರೆಡ್ಡಿ ಆರೋಪಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರು ನೀಡಿರುವುದು ಮತ್ತು ಕೇಸು ದಾಖಲಿಸುವ ಕ್ರಮ ಕೂಡ ಕ್ರಮಬದ್ಧವಾಗಿಲ್ಲ. ಕಾಂಗ್ರೆಸ್ ಪಕ್ಷದ ಶಾಸಕರು ದೂರು ನೀಡಿದ್ದಾರೆ. ಅದರಲ್ಲಿ ಫೆ.22 ರಂದು ನಡೆಯಲಿರುವ ಚುನಾವಣೆಯಲ್ಲಿ ಎಂದು ನಮೂದಿಸಲಾಗಿದೆ. ರಾಜ್ಯಸಭೆ ಚುನಾವಣೆಯಿರುವುದು ಫೆ.27 ರಂದು. 22 ರಂದು ಯಾವ ಚುನಾವಣೆ ನಡೆಯಲಿದೆ ಎಂಬ ಬಗ್ಗೆ ನನಗಂತೂ ಮಾಹಿತಿ ಇಲ್ಲ. ಆತುರಾತುರವಾಗಿ ದೂರು ಕೊಡುವಾಗ ಈ ರೀತಿಯ ಲೋಪಗಳು ಕಂಡುಬಂದಿವೆ.
4
+ ಸರ್ಕಾರಿ ನೌಕರರಿಗೆ ಸಂಬಳ ನೀಡಲು ಸಿಎಂ ಬಳಿ ಹಣವಿಲ್ಲ: ಅನಂತಕುಮಾರ್ ಹೆಗಡೆ
5
+ ವಾಸ್ತವವಾಗಿ ಚುನಾವಣೆಗೆ ಸಂಬಂಧಪಟ್ಟಂತೆ ಯಾವುದೇ ತಕರಾರುಗಳಿದ್ದರೂ ಅದನ್ನು ಆಯೋಗಕ್ಕೆ ಲಿಖಿತವಾಗಿ ತಿಳಿಸಬೇಕು. ಆಯೋಗ ಪೊಲೀಸ್ ಆಯುಕ್ತರಿಗೆ ದೂರನ್ನು ರವಾನಿಸುತ್ತಲಿದೆ. ಆಯುಕ್ತರು ಪರಿಶೀಲನೆ ನಡೆಸಿ ಮೇಲ್ನೋಟಕ್ಕೆ ಸತ್ಯಾಂಶ ಕಂಡುಬಂದಿದ್ದರೆ ಮ್ಯಾಜಿಸ್ಟ್ರೇಟ್‍ರ ಅನುಮತಿ ಪಡೆದು ಪ್ರಕರಣ ದಾಖಲಿಸಬೇಕು. ಆದರೆ ಇಲ್ಲಿ ಏಕಾಏಕಿ ಶಾಸಕರು ದೂರು ನೀಡುತ್ತಾರೆ. ಸೆಕ್ಷನ್ 506 ಸೇರಿದಂತೆ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ. ಇದು ಸಂಪೂರ್ಣ ನಿಯಮ ಬಾಹಿರವಾಗಿದೆ. ಈ ನಿಟ್ಟಿನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಹೇಳಿದರು.
6
+ ನನ್ನನ್ನು ಬೆದರಿಸುವ ಸಲುವಾಗಿಯೇ ಪ್ರಕರಣ ದಾಖಲಿಸಲಾಗಿದೆ. ಒಮ್ಮೆ ರಾಜ್ಯಸಭಾ ಸದಸ್ಯನಾಗಿ ಕೆಲಸ ಮಾಡಿದ್ದೇನೆ. ವಿಧಾನಸಭೆ ಚುನಾವಣೆಯಲ್ಲಿ ಸ್ರ್ಪಧಿಸಿದ್ದೇನೆ. ನೆಲದ ಕಾನೂನಿನ ಅರಿವು ನನಗೂ ಇದೆ. ಇಂತಹ ಬೆದರಿಕೆಯ ತಂತ್ರಗಳಿಗೆ ನಾನು ಬಗ್ಗುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಮತ ಕೇಳಲು ಎಲ್ಲರಿಗೂ ಅವಕಾಶಗಳಿವೆ. ಯಾರು, ಯಾರನ್ನು ಬೇಕಾದರೂ ತಮಗೆ ಮತ ನೀಡುವಂತೆ ಮನವಿ ಮಾಡಬಹುದು.
7
+ ಒಂದು ವೇಳೆ ಈ ರೀತಿ ಮತ ಕೇಳಿದ್ದಕ್ಕೆಲ್ಲಾ ಪ್ರಕರಣ ದಾಖಲಿಸುತ್ತಾ ಹೋದರೆ ಮುಂದಿನ ದಿನಗಳಲ್ಲಿ ಚುನಾವಣೆ ಮತ್ತು ರಾಜಕೀಯ ಬೇರೆಯದೇ ಸ್ವರೂಪವನ್ನು ಪಡೆದುಕೊಳ್ಳುತ್ತದೆ ಎಂದು ಹೇಳಿದರು. ನನಗೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಇದೆ. ಈ ಹಿಂದೆ ನಾನು ಸ್ರ್ಪಧಿಸಿದ್ದಾಗ ಇದೇ ಕಾಂಗ್ರೆಸ್ಸಿಗರು ತಮ್ಮ ಪಕ್ಷದ ಶಾಸಕರನ್ನು ಸೆಳೆದುಕೊಂಡು ಅಡ್ಡ ಮತದಾನ ಮಾಡಿಸಿ ನನ್ನನ್ನು ಸೋಲಿಸಿದರು. ಮತ್ತೊಂದು ಬಾರಿ ಜೆಡಿಎಸ್‍ನ ಆರೇಳು ಶಾಸಕರನ್ನು ಕಾಂಗ್ರೆಸಿಗರು ಸೆಳೆದುಕೊಂಡಿದ್ದರು. ಅದನ್ನು ಶಾಸಕರ ಖರೀ��ಿ ಎಂದು ಹೇಳಲು ಸಾಧ್ಯವೇ ಎಂದು ಕುಪೇಂದ್ರರೆಡ್ಡಿ ಪ್ರಶ್ನಿಸಿದರು.
8
+ ಮಂಡ್ಯ ಕ್ಷೇತ್ರದಿಂದ ಸುಮಲತಾ ಕಣಕ್ಕೆ ಇಳಿಯುವುದು ಫಿಕ್ಸ್..!
9
+ ನಾನು ಈ ಬಾರಿ ಗೆಲ್ಲುತ್ತೇನೆ ಎಂಬ ವಿಶ್ವಾಸದಲ್ಲೇ ಸ್ಪರ್ಧೆ ಮಾಡಿದ್ದೇನೆ. ಸೋಲು-ಗೆಲುವು ಅನಂತರದ ವಿಚಾರ. ಈ ಬಾರಿಯೂ ಸೋಲಿಸುವುದಾದರೆ ಸೋಲಿಸಲಿ ಎಂದು ಹೇಳಿದ ಕುಪೇಂದ್ರರೆಡ್ಡಿಯವರು, ಕಾಂಗ್ರೆಸ್‍ನಲ್ಲೂ ನನಗೆ ಬಹಳಷ್ಟು ಸ್ನೇಹಿತರಿದ್ದಾರೆ. ಅವರಿಂದ ನಾನು ಆತ್ಮಸಾಕ್ಷಿ ಮತ ಕೇಳುತ್ತೇನೆ ಎಂದು ಹೇಳಿದರು.
10
+ ಹಿನ್ನೆಲೆ: ರಾಜ್ಯಸಭೆ ಚುನಾವಣೆಯಲ್ಲಿ 4 ಸ್ಥಾನಗಳನ್ನು ಮಾತ್ರ ಗೆಲ್ಲಲು ಅವಕಾಶವಿದ್ದು, ಜೆಡಿಎಸ್-ಬಿಜೆಪಿ ಜಂಟಿಯಾಗಿ ಕುಪೇಂದ್ರರೆಡ್ಡಿಯವರನ್ನು 5ನೇ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿವೆ. ಕಾಂಗ್ರೆಸ್‍ನ ಶಾಸಕ ಗಣಿಗ ರವಿಕುಮಾರ್ ವಿಧಾನಸೌದ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸಂಖ್ಯಾಬಲದ ಕೊರತೆಯಿದ್ದರೂ ಕುಪೇಂದ್ರರೆಡ್ಡಿಯವರು ಪಕ್ಷೇತರ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸೇರಿದಂತೆ ಹಲವು ಶಾಸಕರನ್ನು ಸಂಪರ್ಕಿಸಿ ಆಮಿಷವೊಡ್ಡುತ್ತಿದ್ದು, ಅಡ್ಡ ಮತದಾನಕ್ಕೆ ಪ್ರೇರೇಪಿಸುತ್ತಿದ್ದಾರೆ ಎಂದು ದೂರಿದ್ದಾರೆ. ಇದರ ಆಧಾರದ ಮೇಲೆ ಪ್ರಕರಣವೂ ದಾಖಲಾಗಿದೆ.
eesanje/url_46_226_4.txt ADDED
@@ -0,0 +1,8 @@
 
 
 
 
 
 
 
 
 
1
+ ಮಂಡ್ಯ ಕ್ಷೇತ್ರದಿಂದ ಸುಮಲತಾ ಕಣಕ್ಕೆ ಇಳಿಯುವುದು ಫಿಕ್ಸ್..!
2
+ ಬೆಂಗಳೂರು,ಫೆ.24- ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮತ್ತೆ ಸ್ರ್ಪಧಿಸುವುದಾಗಿ ಸಂಸದೆ ಸುಮಲತಾ ಅಂಬರೀಶ್ ಹೇಳಿಕೆ ನೀಡಿದ ಬೆನ್ನಲ್ಲೇ ಜೆಡಿಎಸ್-ಬಿಜೆಪಿ ಮೈತ್ರಿಗೆ ಠಕ್ಕರ್ ನೀಡುವ ಬೆಳವಣಿಗೆಗಳು ಕಂಡುಬರುತ್ತಿವೆ.ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದ ಜೆಡಿಎಸ್‍ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಗೃಹಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದ ಬಳಿಕ ಮಂಡ್ಯ ಸೇರಿದಂತೆ 3 ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟುಕೊಡಲಾಗುತ್ತದೆ ಎಂಬ ಮಾಹಿತಿ ಹರಿದಾಡುತ್ತಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಸುಮಲತಾ ಅಂಬರೀಶ್, ತಾವು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ರ್ಪಧಿಸುವುದಾಗಿ ಹೇಳಿದ್ದಾರೆ.
3
+ ಜೆಡಿಎಸ್-ಬಿಜೆಪಿ ನಡುವೆ ಸ್ಥಾನ ಹೊಂದಾಣಿಕೆಯ ಬಗ್ಗೆ ಕೇಳಿಬರುತ್ತಿರುವ ಚರ್ಚೆಗಳು ಯಾವುದೂ ಖಚಿತವಾಗಿಲ್ಲ. ಎಲ್ಲವೂ ಅಂತೆಕಂತೆ ಸ್ವರೂಪದಲ್ಲಿವೆ. ಅಕೃತ ಘೋಷಣೆವರೆಗೂ ಎಲ್ಲವೂ ವದಂತಿಗಳು ಮಾತ್ರಎಂದಿದ್ದಾರೆ. ನಾನು ಸ್ರ್ಪಧಿಸಲು ಹಲವು ಆಯ್ಕೆಗಳಿವೆ. ನಾನು ಎಲ್ಲಿ ನಿಲ್ಲಬೇಕು, ಯಾವ ರೂಪದಲ್ಲಿ ಟಿಕೆಟ್ ಪಡೆದುಕೊಳ್ಳಬೇಕು ಎಂಬುದೇ ಆಗಿದ್ದರೆ ಹಲವು ಸುಲಭ ಮಾರ್ಗಗಳಿವೆ. ಆದರೆ ಇಲ್ಲಿ ಪ್ರಮುಖ ಪ್ರಶ್ನೆ ಇರುವುದು ಮಂಡ್ಯದಲ್ಲಿ ಬಿಜೆಪಿ ಬೆಳವಣಿಗೆಗಾಗಿ ಪಕ್ಷವನ್ನು ಪ್ರಭಲವಾಗಿ ಕಟ್ಟಲು ನಾನು ಟಿಕೆಟ್ ಕೇಳುತ್ತಿದ್ದೇನೆ. ನನಗೆ ಅವಕಾಶ ಸಿಗುತ್ತದೆ ಎಂಬ ವಿಶ್ವಾಸದಲ್ಲಿ ಕೊನೆ ಕ್ಷಣದವರೆಗೂ ಇರುತ್ತೇನೆ. ಹೈಕಮಾಂಡ್ ಕೂಡ ಮಂಡ್ಯವನ್ನು ಬಿಜೆಪಿಗೆ ಉಳಿಸಿಕೊಡಲಿದೆ ಎಂಬ ವಿಶ್ವಾಸವಿದೆ ಎಂದರು.
4
+ ಸರ್ಕಾರಿ ನೌಕರರಿಗೆ ಸಂಬಳ ನೀಡಲು ಸಿಎಂ ಬಳಿ ಹಣವಿಲ್ಲ: ಅನಂತಕುಮಾರ್ ಹೆಗಡೆ
5
+ ಈ ನಡುವೆ ಸುಮಲತಾ ಅಂಬರೀಶ್ ಬೆಂಗಳೂರಿನಲ್ಲಿ ತಮ್ಮ ಬೆಂಬಲಿಗರ ಸಭೆ ಕರೆದಿದ್ದು, ಚುನಾವಣೆ ಸ್ಪರ್ಧೆ ಬಗ್ಗೆ ಸ್ಪಷ್ಟ ನಿಲುವು ತೆಗೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಮಲತಾ ಅಂಬರೀಶ್‍ರವರ ಬೆಂಬಲಿಗ ಶಶಿ, ಕಳೆದ 5 ವರ್ಷಗಳಿಂದ ಮಂಡ್ಯದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ಬಿಜೆಪಿ ಹೈಕಮಾಂಡ್ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಶ್‍ರವರಿಗೇ ಟಿಕೆಟ್ ಸಿಗಲಿದೆ ಎಂಬ ವಿಶ್ವಾಸವಿದೆ ಎಂದರು.
6
+ ಇತ್ತೀಚೆಗೆ ಸುಮಲತಾ ಅಂಬರೀಶ್‍ರವರು ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿದಾಗ ನೀಡಿದ ಭರವಸೆ ಪ್ರಕಾರ ಮಂಡ್ಯವನ್ನು ಬಿಜೆಪಿ ತನ್ನಲ್ಲೇ ಉಳಿಸಿಕೊಳ್ಳಲಿದೆ ಎಂಬ ನಿರೀಕ್ಷೆಗಳಿವೆ ಎಂದು ಹೇಳಿದರು. ಸುಮಲತಾ ಅಂಬರೀಶ್‍ರವರು ಅನಿರೀಕ್ಷಿತವಾಗಿ ರಾಜಕೀ���ಕ್ಕೆ ಬಂದವರು. ಅವರನ್ನು ರಾಜಕೀಯದಲ್ಲೇ ಉಳಿಸಿಕೊಳ್ಳಬೇಕು ಎಂಬುದು ನಮ್ಮೆಲ್ಲರ ಆಶಾಭಾವನೆ. ಒಂದು ವೇಳೆ ಬಿಜೆಪಿ ಮಂಡ್ಯ ಕ್ಷೇತ್ರವನ್ನು ಉಳಿಸಿಕೊಳ್ಳದೇ ಹೋದರೆ ಪ್ಲಾನ್ ಬಿ ಸಿದ್ಧವಿದೆ. ಏನೇ ಆದರೂ ಸುಮಲತಾ ಅಂಬರೀಶ್ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣದಲ್ಲಂತೂ ಇದ್ದೇ ಇರುತ್ತಾರೆ.
7
+ ಚರ್ಚೆಯಿಲ್ಲದೆ ವಿಧಾನಸಭೆಯಲ್ಲಿ 2 ವಿಧೇಯಕಗಳ ಅಂಗೀಕಾರ
8
+ ಈ ಹಿಂದೆ 2019 ರಲ್ಲಿ ಸುಮಲತಾ ಅಂಬರೀಶ್‍ರವರಿಗೆ ಯಾವ ಪಕ್ಷವೂ ಟಿಕೆಟ್ ನೀಡಲಿಲ್ಲ. ಪಕ್ಷೇತರವಾಗಿ ಸ್ರ್ಪಸಿದ ಅವರಿಗೆ ಜನ ಬೆಂಬಲ ನೀಡಿ ಗೆಲ್ಲಿಸಿದ್ದಾರೆ. ಈ ಬಾರಿ ಕೂಡ ಜನಬೆಂಬಲ ದೊರೆಯುತ್ತದೆ ಎಂದು ಹೇಳಿದರು.
eesanje/url_46_226_5.txt ADDED
@@ -0,0 +1,7 @@
 
 
 
 
 
 
 
 
1
+ ಸರ್ಕಾರಿ ನೌಕರರಿಗೆ ಸಂಬಳ ನೀಡಲು ಸಿಎಂ ಬಳಿ ಹಣವಿಲ್ಲ: ಅನಂತಕುಮಾರ್ ಹೆಗಡೆ
2
+ ಕಾರವಾರ ಫೆ.24: ರಾಜ್ಯ ಸರ್ಕಾರ ದಿವಾಳಿಯಾಗಿದ್ದು ,ರಾಜ್ಯ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಾಗ್ದಾಳಿ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಯೋಜನೆಗಳಿಗೆ, ಶಾಸಕರಿಗೆ ಅನುದಾನ ಕೊಡಲು ಹಣ ಇಲ್ಲ ಅಂತಾರೆ. ಹಿಂದುಳಿದವರು, ಎಸ್‍ಸಿ, ಎಸ್‍ಟಿ ವರ್ಗದವರಿಗೆ ನೀಡಿದ್ದ 11 ಸಾವಿರ ಕೋಟಿ ರೂ. ನಾಪತ್ತೆಯಾಗಿದೆ. ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.
3
+ ರಾಜ್ಯ ಲೂಟಿ ಹೊಡೆದು, ದಿವಾಳಿ ಮಾಡಿ, ಮತ ಪಡೆಯಲು ಹೊರಟಿದ್ದಾರೆ. ಇಂತಹ ದರಿದ್ರ ಸರ್ಕಾರ ನಾನೆಲ್ಲೂ ನೋಡಿಲ್ಲ. ನಮಗೆ ಕೇಂದ್ರ ಸರ್ಕಾರ ತೆರಿಗೆ ಹಣ ಕೊಟ್ಟಿಲ್ಲವೆಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ತಮಿಳುನಾಡು, ಆಂಧ್ರ, ಕೇರಳಕ್ಕೆ ಇಲ್ಲದ ವೇದನೆ ಇವರಿಗೆ ಏಕೆ?ಅವರಿಗೆ ಎಲ್ಲವೂ ಸರಿಹೋಗುತ್ತಿದೆ. ಸಿದ್ದರಾಮುಲ್ಲ ಖಾನ್‍ಗೆ ಏಕೆ ತೊಂದರೆ? ಎಂದು ಪ್ರಶ್ನಿಸಿದ್ದಾರೆ.
4
+ ಚರ್ಚೆಯಿಲ್ಲದೆ ವಿಧಾನಸಭೆಯಲ್ಲಿ 2 ವಿಧೇಯಕಗಳ ಅಂಗೀಕಾರ
5
+ ಶೇ ಶೇ.99 ರಷ್ಟು ಹಿಂದೂಗಳು ತೆರಿಗೆ ಕಟ್ಟುತ್ತಾರೆ. ನಮ್ಮ ಹಣ ತೆಗೆದುಕೊಂಡು ಹೋಗಿ ಮಸೀದಿ, ಚರ್ಚ್‍ಗೆ ಏಕೆ ನೀಡಿದ್ದೀರಿ? ನಮ್ಮ ತೆರಿಗೆ ಹಣ ನಮಗೆ ನೀಡಿ. ರಾಜ್ಯದ ದೇವಸ್ಥಾನಗಳ ಜೀರ್ಣೂದಾರಕ್ಕೆ ಹಣ ನೀಡಲು ಸರ್ಕಾರದಲ್ಲಿ ದುಡ್ಡಿಲ್ಲ. ಆದರೆ ಮಸೀದಿಗೆ ಕೊಡಲು ರಾಜ್ಯ ಸರ್ಕಾರದ ಬಳಿ ದುಡ್ಡಿದೆ ಎಂದು ಕಿಡಿಕಾರಿದರು.ಹಿಂದೂಗಳು ಕಟ್ಟಿರುವ ತೆರಿಗೆ ಹಣದಿಂದ ರಾಜ್ಯ ಸರ್ಕಾರ ನಡೆಯುತ್ತಿದೆ. ಹಿಂದೂಗಳ ತೆರಿಗೆ, ಹಿಂದೂಗಳ ಹಕ್ಕು ಅಂತಾ ನಾವು ಕುಳಿತರೇ ಸ್ಥಿತಿ ಏನಾಗುತ್ತೆ? ಸಣ್ಣಬುದ್ಧಿ ಮಾಡಲ್ಲ, ಹಿಂದೂ ಸಮಾಜದ ಬಗ್ಗೆ ಹೇಳುವವರು, ಕೇಳುವವರು ಇಲ್ಲವಾ? ಎಂದು ಪ್ರಶ್ನಿಸಿದರು.
6
+ ನರೇಂದ್ರ ಮೋದಿಗೆ ವೋಟು ಕೊಡುವವರು ಧರ್ಮಕ್ಕಾಗಿ ಕೊಡುತ್ತಾರೆ. ಒಂದು ಸಾವಿರ ವರ್ಷದಿಂದ ನಮ್ಮ ಮೇಲೆ ಯಾರು ದಬ್ಬಾಳಿಕೆ ನಡೆಸುತ್ತಿದ್ದರೂ, ಅದಕ್ಕೆ ಪ್ರತಿಯಾಗಿ ರಾಮಮಂದಿರ ಕಟ್ಟಿ ನಿಲ್ಲಿಸಿದ್ದೇವೆ. ಪಂಜಾಬ್ ಗಡಿತಲ್ಲಿ ರೈತರ ಹೆಸರಿನಲ್ಲಿ ಖಲಿಸ್ತಾನಿಗಳು ಗಲಾಟೆ ಮಾಡುತ್ತಾರೆ. ಇಡೀ ದೇಶದಲ್ಲಿ ಇಲ್ಲದಿರುವ ಗಲಾಟೆ, ಅನ್ಯಾಯ ಅವರಿಗೇನಾಗಿದೆ? ರೈತರ ಹೋರಾಟವಲ್ಲ, ಖಲಿಸ್ತಾನಿಗಳ ಹೋರಾಟ ಎಂದು ದೂರಿದ್ದಾರೆ. ವಿವಾದಾತ್ಮಕ ಹೇಳಿಕೆ ನೀಡಿದರು.
7
+ ಪ್ತಧಾನಿ ಮೋದಿಯವರ ಕೆಲಸ ನೋಡಿ ಎಷ್ಟೋ ದೇಶಗಳು ಅವರನ್ನು ಕೊಂಡಾಡುತ್ತಿವೆ. ಅಷ್ಟೇ ಹೊಟ್ಟೆ ಕಿಚ್ಚು ಪಡುವವರೂ ಇದ್ದಾರೆ. ಇದಕ್ಕೆಲ್ಲೆ ಮುಕ್ತಿ ಬೇಕಂದರೆ ದೇಶದಲ್ಲಿ ಮತ್ತೆ ಬಿಜೆಪಿ ಗೆಲ್ಲಬೇಕು ಎಂದು ಹೇಳಿದರು.
eesanje/url_46_226_6.txt ADDED
@@ -0,0 +1,5 @@
 
 
 
 
 
 
1
+ ಚಿನ್ನ -ಬೆಳ್ಳಿ ಅಂಗಡಿ ಮಾಲೀಕರಿಗೆ ಅನಗತ್ಯ ಕಿರುಕುಳ ನೀಡಬೇಡಿ
2
+ ಬೆಂಗಳೂರು ಫೆ.23- ಚಿನ್ನ ಬೆಳ್ಳಿ ಆಭರಣ ಮಾಲೀಕರಿಗೆ ಹಾಗೂ ಗಿರವಿ ಅಂಗಡಿಯವರಿಗೆ ಅನಗತ್ಯವಾಗಿ ಕಿರುಕುಳ ನೀಡದಂತೆ ಸಂಬಂಧಪಟ್ಟ ಪೊಲೀಸರಿಗೆ ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. ವಿಧಾನ ಪರಿಷತ್ ಶಾಸಕರಾದ ಟಿ. ಎ. ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಆಭರಣ ತಯಾರು ಮಾಡುವವರಿಗೆ ಅನಗತ್ಯವಾಗಿ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಸದಸ್ಯರು ನನ್ನ ಗಮನಕ್ಕೆ ತಂದಿದ್ದಾರೆ. ನಾಳೆ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ಇದೆ. ಈ ಸಂದರ್ಭದಲ್ಲಿ ಸೂಕ್ತ ನಿರ್ದೇಶನ ನೀಡುವುದಾಗಿ ತಿಳಿಸಿದರು.
3
+ ಅನಗತ್ಯವಾಗಿ ಪೊಲೀಸರು ಕಿರುಕುಳ ನೀಡುವುದಿಲ್ಲ ಎಂಬ ಆಶಾಭಾವನೆಯನ್ನು ಇಟ್ಟುಕೊಂಡಿದ್ದೇನೆ. ಆಭರಣಗಳಲ್ಲಿ ವ್ಯತ್ಯಾಸವಾದಾಗ ಗ್ರಾಹಕರು ದೂರು ನೀಡುತ್ತಾರೆ. ಇಲ್ಲವೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಬೇಕು ಎಂದಾಗ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡುತ್ತಾರೆ. ಆದರೂ ಸದಸ್ಯರ ಕಳಕಳಿಯನ್ನು ಅರ್ಥಮಾಡಿಕೊಂಡು ಅವರಿಗೆ ಕಿರುಕುಳ ನೀಡುವುದನ್ನು ತಪ್ಪಿಸುವುದಾಗಿ ಹೇಳಿದರು.
4
+ ವೀಲಿಂಗ್ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಅಪ್‍ಲೋಡ್ : ಸವಾರ ಪೊಲೀಸ್ ವಶಕ್ಕೆ
5
+ ಇದಕ್ಕೂ ಮುನ್ನ ಮಾತನಾಡಿದ ಶರವಣ, ಚಿನ್ನ ಬೆಳ್ಳಿ ಆಭರಣ ಅಂಗಡಿ ಮಾಲೀಕರ ಮೇಲೆ ದಿನೇ ದಿನೇ ದೌರ್ಜನ್ಯ ಹೆಚ್ಚುತ್ತಲೇ ಇದೆ. ಸರ್ಕಾರ ಇದರ ಬಗ್ಗೆ ಗಮನಹರಿಸಬೇಕೆಂದು ಶರವಣ ಮನವಿ ಮಾಡಿದರು.ಪೊಲೀಸ್ ಅಧಿಕಾರಿಗಳು ಸೂಕ್ತ ತನಿಖೆ ಮಾಡುವ ಮೊದಲೇ, ಅಂಗಡಿ ಮಾಲೀಕರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿದ್ದಾರೆ. ಅವರಿಗೂ ಸ್ವಾಭಿಮಾನವಿದೆ, ಬದುಕುವ ಹಕ್ಕಿದೆ ಅದಕ್ಕೆ ಭಂಗ ಮಾಡದೆ. ಅವರಿಗೆ ಕಿರುಕುಳ ನೀಡುತ್ತಿರುವ ಪೊಲೀಸ್ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜ್ಯುವೆಲರಿ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಟಿ. ಎ. ಶರವಣ ಅವರು ಗೃಹಮಂತ್ರಿಗಳನ್ನು ಕೈಮುಗಿದು ಮನವಿ ಮಾಡಿಕೊಂಡರು.
eesanje/url_46_226_7.txt ADDED
@@ -0,0 +1,6 @@
 
 
 
 
 
 
 
1
+ ಚರ್ಚೆಯಿಲ್ಲದೆ ವಿಧಾನಸಭೆಯಲ್ಲಿ 2 ವಿಧೇಯಕಗಳ ಅಂಗೀಕಾರ
2
+ ಬೆಂಗಳೂರು ಫೆ.23- ಬಗರ್‍ಹುಕುಂ ಸಾಗುವಳಿ ಮಂಜೂರಾತಿ ಸಮಿತಿಗೆ ಶಾಸಕರಿಗೆ ಪರ್ಯಾಯವಾಗಿ ಸದಸ್ಯರ ನೇಮಕಾತಿಗೆ ಅನುಕೂಲವಾಗುವಂತೆ ತಿದ್ದುಪಡಿ ಮಾಡಲಾಗಿರುವ ಕರ್ನಾಟಕ ಭೂ ಕಂದಾಯ ವಿಧೇಯಕಕ್ಕೆ ಗದ್ದಲದ ನಡುವೆ ಅಂಗೀಕಾರ ದೊರೆಯಿತು.
3
+ ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನಸಭೆಯಲ್ಲಿ ಮಸೂದೆಯ ಪರ್ಯಾಲೋಚನೆಗೆ ಮನವಿ ಮಾಡಿದರು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ವಿಧಾನಸಭಾಧ್ಯಕ್ಷರು ಸೇರಿದಂತೆ ಹಿರಿಯ ಶಾಸಕರಿಗೆ ಕಾರ್ಯದೊತ್ತಡದಿಂದಾಗಿ ಅಥವಾ ಬೇರೆ ಬೇರೆ ಕಾರ್ಯಗಳಿಗೆ ತಮ್ಮ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಮಂಜೂರಾತಿ ಸಮಿತಿ ಸಭೆಯಲ್ಲಿ ಭಾಗವಹಿಸಲು ಕಷ್ಟಸಾಧ್ಯವಾಗುತ್ತದೆ. ಅಂತಹ ವೇಳೆ ಶಾಸಕರ ಲಿಖಿತ ಸಹಮತದ ಮೇರೆಗೆ ಸಮಿತಿಯ ಪರ್ಯಾಯ ಸದಸ್ಯರನ್ನು ನೇಮಿಸಲು ಈ ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
4
+ ವೀಲಿಂಗ್ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಅಪ್‍ಲೋಡ್ : ಸವಾರ ಪೊಲೀಸ್ ವಶಕ್ಕೆ
5
+ ಜೊತೆಗೆ ತಮ್ಮ ಕ್ಷೇತ್ರದಲ್ಲಿ ಲಭ್ಯ ಇರುವ ಸರ್ಕಾರಿ ಜಮೀನಿನ ಬಗ್ಗೆಯೂ ಮಾಹಿತಿ ಪಡೆದುಕೊಳ್ಳಲು ಶಾಸಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು. ವಿಧೇಯಕ ಮಂಡನೆ ವೇಳೆ ಬಿಜೆಪಿ-ಜೆಡಿಎಸ್ ಶಾಸಕರು ಪ್ರತಿಭಟನೆ ನಡೆಸುತ್ತಿದ್ದರು. ಹೀಗಾಗಿ ಯಾವುದೇ ಚರ್ಚೆ ಇಲ್ಲದೆ ವಿಧೇಯಕ ಮಂಡನೆಯಾಯಿತು. ಸಭಾಧ್ಯಕ್ಷ ಯು.ಟಿ.ಖಾದರ್ ಚರ್ಚೆಯಲ್ಲಿ ಭಾಗವಹಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ.
6
+ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಕರ್ನಾಟಕ ವಿಧಾನಮಂಡಲ ಅನರ್ಹತಾ ನಿವಾರಣಾ ತಿದ್ದುಪಡಿ ವಿಧೇಯಕವನ್ನು ಪರ್ಯಾಲೋಚನೆಗೆ ಮನವಿ ಮಾಡಿದರು.ವಿಧಾನಪರಿಷತ್ ಮತ್ತು ವಿಧಾನಸಭೆಯ ಸದಸ್ಯರು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರ ಸಲಹೆಗಾರರು, ಯಾವುದೇ ಆಯೋಗದ ಅಧ್ಯಕ್ಷರು, ಸದಸ್ಯರು, ರಾಜ್ಯ ಪರಿವರ್ತನಾ ಸಂಸ್ಥೆಯ ಉಪಾಧ್ಯಕ್ಷರ ಹುದ್ದೆಗೆ ನೇಮಕಗೊಂಡ ಸಂದರ್ಭದಲ್ಲಿ ಅನರ್ಹತೆಗೆ ಒಳಗಾಗುವ ಅವಕಾಶದಿಂದ ವಿನಾಯ್ತಿ ನೀಡಲಾಗಿದೆ ಎಂದು ವಿವರಿಸಿದರು. ಈ ವಿಧೇಯಕ ಕೂಡ ಯಾವುದೇ ಚರ್ಚೆ ಇಲ್ಲದೆ ಅಂಗೀಕಾರಗೊಂಡಿತು.
eesanje/url_46_226_8.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಎಸ್‍ಸಿ/ಎಸ್‍ಟಿ ಅನುಧಾನ ಗ್ಯಾರಂಟಿಗೆ ಬಳಕೆ: ಆಡಳಿತ – ಪ್ರತಿಪಕ್ಷ ಶಾಸಕರ ವಾಕ್ಸಮರ
2
+ ಬೆಂಗಳೂರು ಫೆ.23- ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಎಸ್.ಸಿ. ಎಸ್. ಟಿಪಿ- ಟಿ.ಎಸ್.ಪಿ ಅನುದಾನವನ್ನ ಬಳಕೆ ಮಾಡಿಕೊಳ್ಳುತ್ತಿರುವ ವಿಷಯ ವಿಧಾನಪರಿಷತ್‍ನಲ್ಲಿ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಕೆಲಕಾಲ ಭಾರೀ ವಾಕ್ಸಮರ ನಡೆಯಿತು.
3
+ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಕೇಳಿದ ಪ್ರಶ್ನೆಗೆ, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರು ಉತ್ತರಿಸಿ, ಗ್ಯಾರಂಟಿಗಳ ಅನುಷ್ಠಾನಕ್ಕೆ ಎಸ್.ಸಿ. ಎಸ್. ಟಿಪಿ- ಟಿ.ಎಸ್.ಪಿ ಹಣ ಬಳಕೆ ಮಾಡಿಕೊಂಡಿಲ್ಲ. ನಮ್ಮ ಪ್ರತಿಪಕ್ಷದ ಸದಸ್ಯರು ಅನಗತ್ಯವಾಗಿ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ನಮ್ಮ ಇಲಾಖೆಯಲ್ಲಿ ಮೀಸಲಿಟ್ಟಿದ್ದ ಅನುದಾನವನ್ನು ಬಳಕೆ ಮಾಡಿಲ್ಲ ಎಂದು ಹೇಳುವ ಮೂಲಕ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು. ಕಾಯ್ದೆಯ ಸೆಕ್ಷನ್ 7ಡಿಗೆ ತಿದ್ದುಪಡಿ ಮಾಡಲಾಗಿದೆ.
4
+ ದಲಿತರ ಹಣವನ್ನು ದಲಿತರಿಗೇ ಬಳಕೆ ಮಾಡುತ್ತಿದ್ದೇವೆ. ಇದರಲ್ಲಿ ಒಂದೊಂದು ಪೈಸೆಯೂ ದುರುಪಯೋಗವಾಗಿಲ್ಲ ಎಂದು ಸ್ಪಷ್ಟನೆ ನೀಡಿದರು. ವಾಸ್ತವವಾಗಿ ಹಿಂದಿನ ಸರ್ಕಾರವೇ ಈ ಹಣವನ್ನು ಬೇರೆ ಉದ್ದೇಶಗಳಿಗೆ ಬಳಕೆ ಮಾಡಿದೆ. ಇಲ್ಲಿ ಮೀಸಲಿಟ್ಟ ಹಣವನ್ನು ಬೇರೆ ಯಾವುದೇ ಕಾರ್ಯಕ್ರಮಗಳಿಗೂ ಬಳಕೆ ಮಾಡಬಾರದೆಂಬ ನಿಯಮವಿದೆ. ಆದರೂ ಹಿಂದಿನ ಸರ್ಕಾರ ನಿಯಮ ಉಲ್ಲಂಘಿಸಿ ಬೇರೆ ಕೆಲಸಗಳಿಗೆ ಬಳಕೆ ಮಾಡಲಾಗಿದೆ. ನಿಮ್ಮ ಬಿಜೆಪಿ ಸರ್ಕಾರ ಸೆಕ್ಷನ್ 7ಡಿಗೆ ತಿದ್ದುಪಡಿ ಮಾಡಿತ್ತು. ನಾವು ಕೂಡ ಅದನ್ನೇ ಮಾಡಿದ್ದೇವೆ ಎಂದು ಸಮರ್ಥನೆ ಮಾಡಿಕೊಂಡರು.
5
+ ವಿಧಾನಸಭೆಯಲ್ಲಿ ವಿಪಕ್ಷ ಧರಣಿ: ಸೋಮವಾರಕ್ಕೆ ಕಲಾಪ ಮುಂದೂಡಿಕೆ
6
+ ಗೃಹ ಲಕ್ಷ್ಮಿ ಯೋಜನೆಗೆ 3,156.31 ಕೋಟಿ, ಅನ್ನ ಭಾಗ್ಯಕ್ಕೆ 853.32 ಕೋಟಿ, ಗೃಹ ಜ್ಯೋತಿ ಗೆ 1,464.34.ಕೋಟಿ, ಶಕ್ತಿ ಯೋಜನೆಗೆ 686.38 ಕೋಟಿ, ಯುವನಿಧಿಗೆ 1.67 ಕೋಟಿ ಖರ್ಚು ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಎಸ್.ಸಿ. ಎಸ್. ಟಿಪಿ- ಟಿ.ಎಸ್.ಪಿ ಯೋಜನೆಯಡಿ ಮೀಸಲಾದ ಅನುದಾನದಲ್ಲಿ ಐದು ಗ್ಯಾರಂಟಿಗಳಿಗೆ ಒಟ್ಟು 6, 162.02 ಕೋಟಿ ಬಳಕೆ ಮಾಡಲಾಗಿದೆ.
7
+ ಪ್ರತಿಯೊಂದು ಗ್ಯಾರಂಟಿಗಳಲ್ಲಿ ಎಸ್ಸಿ,ಎಸ್ಟಿ ಫಲಾನುಭವಿ ಗೃಹ ಲಕ್ಷ್ಮಿ ಗ್ಯಾರಂಟಿ ಫಲಾನುಭವಿಗಳ ಸಂಖ್ಯೆ:ಎಸ್.ಸಿ – 21,74,519, ಎಸ್.ಟಿ – 8,62,846ಅನ್ನ ಭಾಗ್ಯ ಗ್ಯಾರಂಟಿ ಫಲಾನುಭವಿಗಳ ಸಂಖ್ಯೆ:ಎಸ್.ಸಿ – 59,15,002ಎಸ್.ಟಿ – 25,90,678ಗೃಹ ಜ್ಯೋತಿ ಗ್ಯಾರಂಟಿ ಫಲಾನುಭವಿಗಳ ಸಂಖ್ಯೆಎಸ್.ಸಿ – 8,57,324ಎಸ್.ಟಿ – 3,68,997ಯುವನಿಧಿ ಗ್ಯಾರಂಟಿ ಫಲಾನುಭವಿಗಳ ಸಂಖ್ಯೆಎಸ್.ಸಿ – 21, 986ಎಸ್.ಟಿ – 9,220
8
+ ಶಕ್ತಿ ಗ್ಯಾರಂಟಿಯಲ್ಲಿ ಒಟ್ಟು 153,27 ಟಿಕೆಟ್ ಉಚಿತವಾಗಿ ನೀಡಲಾಗಿದೆ. ಅದರಲ್ಲಿ ಎಸ್ಸಿ, ಎಸ್ಟಿ ಮಾಹಿತಿ ಸಂಗ್ರಹ ಮಾಡುವುದು ಕಷ್ಟವಾಗಿದೆ. ಶಕ್ತಿ ಯೋಜನೆಗೆ 2800.00 ಕೋಟಿ ಅನುದಾನ ಒ��ಗಿಸಲಾಗಿದೆ. ಹಾಗಾಗಿ ಎಸ್.ಸಿ, ಎಸ್.ಟಿ ಫಲಾನುಭವಿಗಳ ಸಂಖ್ಯೆಯ ಮಾಹಿತಿಯಿದ್ದು ಹಣ ದುರ್ಬಳಕೆ ಆಗಿಲ್ಲ ಎಂದು ವಿವರಿಸಿದರು.
9
+ ಕಳೆದ ಬಾರಿ ಪ್ರಶ್ನೆ ಕೇಳಿದಾಗ ಗ್ಯಾರಂಟಿಗಳಿಗೆ ಹಣ ಬಳಕೆ ಮಾಡಿಲ್ಲ ಎಂದು ಹೇಳಿದ್ದರು ಈಗ ಬಳಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. ದಲಿತರ ಮೂಲಕವೇ ದಲಿತರ ಸಮಾದಿ ಕಟ್ಟುವ ಕೆಲಸ ಸರ್ಕಾರ ಮಾಡುತ್ತಿದೆ. ಗ್ಯಾರಂಟಿಗಳಿಗೆ ಹಣ ಘೋಷಣೆ ನಿಮ್ಮ ತೇವಲಿಗೆ ಘೋಷಣೆ ಮಾಡಿದ್ದೀರಾ ಎಂದು ಪ್ರಶ್ನಿಸಿದರು. ಮಹಾದೇವಪ್ಪ ನಿಮಗೆ ಅಳಿಯ ಯಾರು, ಮಗಳ ಗಂಡ ಯಾರು ಗೊತ್ತಿಲ್ಲ ಅನಿಸುತ್ತದೆ. ಮಹಾದೇವಪ್ಪ ಅವರ ಪರಮಾತ್ಮ ಆಡಿಸಿದಂತೆ ಆಡುವವರು.
10
+ ಹೊತ್ತಿ ಉರಿದ ಪ್ಲಾಸ್ಟಿಕ್ ಗೋದಾಮು: ವಾಹನಗಳು ಬೆಂಕಿಗಾಹುತಿ
11
+ ನಿಮ್ಮ ಪರಮಾತ್ಮ ಯಾರು ಎಂದು ನಮಗೆ ಗೊತ್ತಿದೆ ಎಂದು ಹಾಸ್ಯ ಮಾಡಿದರು. ಎಸ್.ಸಿ. ಎಸ್. ಟಿಪಿ- ಟಿ.ಎಸ್.ಪಿ ಯೋಜನೆಯಡಿ ಮೀಸಲಾದ ಅನುದಾನದಲ್ಲಿ ಗ್ಯಾರಂಟಿಗಳಿಗೆ ಬಳಕೆ ಮಾಡಲಾಗಿದೆ. ಪ್ರತಿಯೊಂದು ಗ್ಯಾರಂಟಿಗಳಲ್ಲಿ ಎಸ್ಸಿ,ಎಸ್ಟಿ ಫಲಾನುಭವಿಗಳ ಸಂಖ್ಯೆ ಎಷ್ಟು ಆ ಫಲಾನುಭವಿಗಳಿಗೆ ನೀಡಲಾದ ವೆಚ್ಚ ಎಷ್ಟು…? ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟ ಹಣ ಗ್ಯಾರಂಟಿಗೆ ಬಳಕೆ ಮಾಡಿಕೊಂಡಿದ್ದಲ್ಲಿ ಒಂದು ವೇಳೆ ಎಸ್ಸಿ, ಎಸ್ಟಿ ಫಲಾನುಭವಿಗಳ ಮಾಹಿತಿ ಇಲ್ಲದೆ ಹೋದರೆ ಹಣ ದುರ್ಬಳಕೆ ಮಾಡಿಕೊಂಡಂತೆ ಅಲ್ಲವೇ ಇದು ದಲಿತರಿಗೆ ಮಾಡಿದ ಅನ್ಯಾಯ ಎಂದ ಛಲವಾದಿ ನಾರಾಯಣಸ್ವಾಮಿ ಬೇಸರ ವ್ಯಕ್ತಪಡಿಸಿದರು.
eesanje/url_46_226_9.txt ADDED
@@ -0,0 +1,9 @@
 
 
 
 
 
 
 
 
 
 
1
+ ವೀಲಿಂಗ್ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಅಪ್‍ಲೋಡ್ : ಸವಾರ ಪೊಲೀಸ್ ವಶಕ್ಕೆ
2
+ ಬೆಂಗಳೂರು, ಫೆ.23- ಔಟರ್ ರಿಂಗ್ ರಸ್ತೆ-ಪ್ಲೈಓವರ್‍ಗಳ ಮೇಲೆ ಸಾರ್ವಜನಿಕರ ಪ್ರಾಣಕ್ಕೆ ಹಾನಿಯಾಗುವಂತೆ ದ್ವಿ ಚಕ್ರ ವಾಹನಗಳಲ್ಲಿ ವೀಲಿಂಗ್ ಮಾಡುತ್ತಾ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತಿದ್ದ ಸವಾರನನ್ನು ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ಪತ್ತೆಹಚ್ಚಿದ್ದಾರೆ. ವೀಲಿಂಗ್ ಮಾಡುತ್ತ ಸಹಚರರ ಮೂಲಕ ವಿಡಿಯೋಗಳನ್ನು ಅಪ್‍ಲೋಡ್ ಮಾಡುತ್ತಿದ್ದವರನ್ನು ಪತ್ತೆ ಮಾಡಲು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯಕ್ತರು ಒಂದು ತಂಡವನ್ನು ನೇಮಿಸಿದ್ದರು.
3
+ ಈ ತಂಡವು ನಿನ್ನೆ ಕಾರ್ಯಾಚರಣೆ ನಡೆಸಿ ಸುಮನಹಳ್ಳಿ ಪ್ಲೈ ಓವರ್ ಮೇಲೆ ಮೀಲಿಂಗ್ ಮಾಡುತ್ತಿದ್ದ ಸವಾರನನ್ನು ದ್ವಿಚಕ್ರ ವಾಹನ ಸಮೇತ ವಶಕ್ಕೆ ಪಡೆದು ಆತನ ವಿರುದ್ದ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದೆ. ಆರೋಪಿ ಹೊಂಡಾ ಡಿಯೋ ವಾಹನದಲ್ಲಿ ವೀಲಿಂಗ್ ಮಾಡುತ್ತಾ ಸದರಿ ವೀಲಿಂಗ್ ದೃಶ್ಯಾವಳಿಗಳನ್ನು ತನ್ನ ಸ್ನೇಹಿತರುಗಳಿಂದ ವಿಡಿಯೋ/ರೀಲ್ಸ್ ಮಾಡಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವುದು ವಿಚಾರಣೆಯಿಂದ ತಿಳಿದುಬಂದಿರುತ್ತೆ.
4
+ ಹೊತ್ತಿ ಉರಿದ ಪ್ಲಾಸ್ಟಿಕ್ ಗೋದಾಮು: ವಾಹನಗಳು ಬೆಂಕಿಗಾಹುತಿ
5
+ ಈ ಬಗ್ಗೆ ತನಿಖೆ ಮುಂದಿವರೆಸಿ ಆರೋಪಿ ಹಾಗೂ ಆತನಿಗೆ ಸಹಕರಿಸಿದ ಇತರರ ವಿರುದ್ದ ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಲಿದ್ದಾರೆ. ಈ ಕಾರ್ಯಾಚರಣೆಯನ್ನು ಪಶ್ಚಿಮ ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಸಹಾಯಕ ಪೊಲೀಸ್ ಆಯುಕ್ತ ಸದಾನಂದ ಎ. ತಿಪ್ಪಣ್ಣವರ ನೇತೃತ್ವದಲ್ಲಿ ಇನ್ಸ್‍ಪೆಕ್ಟರ್ ಯೋಗೇಶ್ ಹಾಗೂ ಸಿಬ್ಬಂದಿಗಳ ತಂಡ ಕೈಗೊಂಡಿರುತ್ತೆ.
6
+ ವೀಲಿಂಗ್: ಸವಾರ ಪೊಲೀಸ್ ವಶಕ್ಕೆಬೆಂಗಳೂರು, ಫೆ.23- ವೀಲಿಂಗ್ ಮಾಡುವವರನ್ನು ಪತ್ತೆಹಚ್ಚಿಲು ಹಲಸೂರು ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡು ಸವಾರನ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಸ್ವಾಮಿ ವಿವೇಕಾನಂದ ರಸೆ ್ತಯಲ್ಲಿ ಠಾಣಾ ಸಿಬ್ಬಂದಿ ಗಸ್ತಿನಲ್ಲಿರುವಾಗ ಸವಾರನೊಬ್ಬ ಈ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದಾಗ ವಾಹನ ಸಮೇತ ಆತನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿ ಎಫ್‍ಐಆರ್ ದಾಖಲಿಸಿಕೊಂಡು ಕಾನೂನು ರೀತಿ ಕ್ರಮ ಕೈಗೊಳ್ಳಲಾಗಿದೆ ಎಂದು ಪೂರ್ವ ಸಂಚಾರ ವಿಭಾಗದ ಉಪಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಆರ್. ಜೈನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
7
+ ರಸ್ತೆ ಹಂಪ್ಸ್ ಎಗರಿ ಬಿದ್ದು ಡೆಲಿವರಿ ಬಾಯ್ ಸಾವುಬೆಂಗಳೂರು, ಫೆ.23- ಅತಿ ವೇಗವಾಗಿ ಬರುತ್ತಿದ್ದ ಸ್ಕೂಟರ್ ರಸ್ತೆ ಹಂಪ್ಸ್ ಬಳಿ ಬ್ರೇಕ್ ಹಾಕಿದಾಗ ಹಾರಿ ಬಿದ್ದು ಅಮೆಜಾನ್ ಡೆಲಿವರಿ ಬಾಯ್ ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀ���್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೊಮ್ಮಸಂದ್ರ ನಿವಾಸಿ ಅಭಿಷೇಕ್ (26) ಮೃತಪಟ್ಟ ಡೆಲಿವರಿ ಬಾಯ್.ಕೋನಪ್ಪ ಅಗ್ರಹಾರ ಜಂಕ್ಷನ್ ಕಡೆಯಿಂದ ಹೊಸೂರು ರಸ್ತೆ ಜಂಕ್ಷನ್ ಕಡೆಗೆ ರಾತ್ರಿ 10.40ರ ಸುಮಾರಿನಲ್ಲಿ ಅಭಿಷೇಕ್ ತನ್ನ ಸ್ಕೂಟರ್‍ನಲ್ಲಿ ಅತಿ ವೇಗವಾಗಿ ಹೋಗುತ್ತಿದ್ದರು.
8
+ ಮಾರ್ವಾಡಿ ಮನೆಗಳಲ್ಲಿ ಕಳ್ಳತನ ಮಾಡುತಿದ್ದ ಅಸ್ಸಾಂ ವ್ಯಕ್ತಿ ವಶಕ್ಕೆ
9
+ ಬೆರಟೇನ ಅಗ್ರಹಾರದ ಮೆಟ್ರೋ ನಿಲ್ದಾಣದ ಬಳಿ ರಸ್ತೆ ಹಂಪ್ ಇರುವುದು ಗಮನಿಸಿ ತಕ್ಷಣ ಬ್ರೇಕ್ ಹಾಕಿದ್ದರಿಂದ ನಿಯಂತ್ರಣ ತಪ್ಪಿ ಸುಮಾರು 35 ರಿಂದ 40 ಅಡಿ ದೂರ ಹಾರಿ ಬಿದ್ದಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆತನನ್ನು ಸಾರ್ವಜನಿಕರು ತಕ್ಷಣ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು ಪರೀಕ್ಷಿಸಿ ದಾರಿಮಧ್ಯೆಯೇ ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ. ಸುದ್ದಿ ತಿಳಿದು ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಠಾಣೆ ಪೊಲೀಸರು ಸ್ತಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
eesanje/url_46_227_1.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಸಿದ್ದು ದ್ವಿಮುಖ ನೀತಿ: ವಿಜಯೇಂದ್ರ ಟೀಕೆ
2
+ ಬೆಂಗಳೂರು ಫೆ.23- ಕೇಂದ್ರ ಬಿಜೆಪಿ ಸರಕಾರವನ್ನು ಮತ್ತು ನರೇಂದ್ರ ಮೋದಿಯವರನ್ನು ನಿರಂತರವಾಗಿ ಟೀಕಿಸುವ ರಾಜ್ಯದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ದ್ವಿಮುಖ ನೀತಿಯನ್ನು ಅನಾವರಣಗೊಳಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಟೀಕಿಸಿದರು.ಮಲ್ಲೇಶ್ವರದ ಹವ್ಯಕ ಭವನದಲ್ಲಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯುತ್ ನಿಯಂತ್ರಣ ಪ್ರಾಧಿಕಾರ ವಿದ್ಯುತ್ ದರ ಏರಿಸಿದೆ ಎನ್ನುವ ಮುಖ್ಯಮಂತ್ರಿಗಳು ಹಣಕಾಸು ಆಯೋಗವು ತೆರಿಗೆ ಹಂಚಿಕೆಯನ್ನು ನಿರ್ಧರಿಸಿದ್ದನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ ಎಂದು ಆಕ್ಷೇಪಿಸಿದರು.
3
+ ಮೋದಿಜೀ ಅವರ ಬಗ್ಗೆ ದೇಶ ಮಾತ್ರವಲ್ಲದೆ ಜಗತ್ತಿನಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇದು ಕಾಂಗ್ರೆಸ್ಸಿಗರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು. ದೇಶದ ಹಿತದೃಷ್ಟಿ, ದೇಶದ ರಕ್ಷಣೆಗಾಗಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕೆಂದು ಜನರು ಬಯಸಿದ್ದಾರೆ. ರಾಜ್ಯದಲ್ಲೂ 28ಕ್ಕೆ 28 ಸೀಟುಗಳನ್ನು ಬಿಜೆಪಿ- ಜೆಡಿಎಸ್ ಪಕ್ಷಗಳು ಗೆಲ್ಲಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಕಾರ್ಯಕರ್ತರು, ಪ್ರಮುಖರು ಮೋದಿಯವರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬೇಕಿದೆ ಎಂದು ತಿಳಿಸಿದರು.
4
+ ಡಾ.ಮಂಜುನಾಥ್ ಸ್ಪರ್ಧೆ ಕುರಿತಂತೆ ಸೂಕ್ತ ಸಮಯದಲ್ಲಿ ನಿರ್ಧಾರ: ಎಚ್‍ಡಿಕೆ
5
+ ಬಿಜೆಪಿ ರಾಜ್ಯದಲ್ಲಿ ಎಲ್ಲ 28 ಸ್ಥಾನಗಳನ್ನು ಗೆಲ್ಲಲಿದೆ ಎಂಬ ಆತಂಕ ಕಾಂಗ್ರೆಸ್ ಸರ್ಕಾರಕ್ಕಿದೆ ಈ ದುಷ್ಟ, ಭ್ರಷ್ಟ, ದುರಹಂಕಾರಿ ಕಾಂಗ್ರೆಸ್ ಪಕ್ಷಕ್ಕೆ ಪಾಠ ಕಲಿಸಲು ಮುಂದಾಗಬೇಕು ಎಂದ ಅವರು, ಗೆಲುವಿನ ಸವಾಲನ್ನು ಸವಾಲಾಗಿ ಸ್ವೀಕಾರ ಮಾಡೋಣ ಎಂದು ಕರೆ ನೀಡಿದರು. ಪಂಚರಾಜ್ಯಗಳ ಚುನಾವಣೆಯಲ್ಲಿ ಪಕ್ಷದ ಪರಾಭವದಿಂದ ಕಾಂಗ್ರೆಸ್ ಪಕ್ಷಕ್ಕೆ ಆತಂಕ ಉಂಟಾಗಿದೆ ಎಂದ ಅವರು, ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರು ನಾವೇ ಮೋದಿ ಎಂದು ಭಾವಿಸಿ ಹಗಲಿರುಳೆನ್ನದೆ ದುಡಿಯಬೇಕು. ಅಭ್ಯರ್ಥಿಯ ಬಗ್ಗೆ ತಲೆ ಕೆಡಿಸಿಕೊಳ್ಳದಿರಿ. ಅಭ್ಯರ್ಥಿ ಯಾರೇ ಇದ್ದರೂ ಕಮಲದ ಹೂವನ್ನು ಗೆಲ್ಲಿಸಲು ಮುಂದಾಗಿ ಎಂದು ಮನವಿ ಮಾಡಿದರು.
6
+ ಒಬಿಸಿ ಮೋರ್ಚಾದ ಪದಾಧಿಕಾರಿಗಳು ತಾವು ಬಿಜೆಪಿ ಕಾರ್ಯಕರ್ತರು ಎಂಬುದನ್ನು ಮರೆಯಬಾರದು. ಮೋದಿಜೀ ಅವರ ಬಗೆಗಿನ ಹೆಮ್ಮೆಯನ್ನು ಕಾರ್ಯರೂಪಕ್ಕೆ ತರಬೇಕು. ನಮ್ಮ ಪದಾಧಿಕಾರಿಗಳು ತಮ್ಮ ಬೂತ್ ಕಡೆ ಗಮನ ಹರಿಸಬೇಕು. ಮತದಾರರ ಪಟ್ಟಿ, ಬೂತ್ ಕಡೆ ಗಮನ ಕೊಡಬೇಕು. ಎಷ್ಟು ಹೆಸರು ಸೇರ್ಪಡೆ ಆಗಿದೆ. ಎಷ್ಟು ಹೆಸರು ರದ್ದಾಗಿದೆ ಎಂಬ ಕಡೆ ಗಮನಿಸಬೇಕು ಎಂದು ಸೂಚಿಸಿದರು.
7
+ 100 ಮತ ಬಂದಿದ್ದರೆ ಅದನ್ನು 200 ಮಾಡುವುದು ಹೇಗೆ? 500 ಮತ ಬಂದಿದ್ದರೆ ಅದನ್ನು ಮತ್ತಷ್ಟು ಹೆಚ್ಚಿಸುವ ಕಡೆ ಗಮನ ಹರಿಸಬ��ಕಿದೆ. ಕ್ಷೇತ್ರಕ್ಕೆ ತೆರಳಿ ಬೂತ್ ಬಲಪಡಿಸುವ ಕಡೆ ಯೋಜನೆ ಮತ್ತು ಕಾರ್ಯಕ್ರಮ ರೂಪಿಸಬೇಕು ಎಂದು ತಿಳಿಸಿದರು. ಸೂರ್ಯ ಚಂದ್ರ ಇರುವುದು ಹೇಗೆ ಸತ್ಯವೋ ಮೋದಿಜೀ ಅವರು ಮತ್ತೊಮ್ಮೆ ಪ್ರಧಾನಿ ಆಗುವುದೂ ಅಷ್ಟೇ ಸತ್ಯ ಎಂದು ನುಡಿದ ವಿಜಯೇಂದ್ರ ಅವರು, ರಾಜ್ಯದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡತಕ್ಕ ಲೋಕಸಭಾ ಚುನಾವಣಾ ಫಲಿತಾಂಶ ಕರ್ನಾಟಕದಲ್ಲೂ ಬರಲಿದೆ. 28ಕ್ಕೆ 28 ಸ್ಥಾನ ನಮ್ಮದಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
8
+ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಕೇವಲ 8-9 ತಿಂಗಳಲ್ಲಿ ತನ್ನ ಜನಪ್ರಿಯತೆಯನ್ನು ಕಳೆದುಕೊಂಡಿದೆ. ರಾಜ್ಯಕ್ಕೆ ಸಂಬಂಸಿ ಯಾವುದೇ ಅಭಿವೃದ್ಧಿ ಯೋಜನೆಗಳನ್ನು ಅದು ಪ್ರಕಟಿಸಿಲ್ಲ ಎಂದು ಟೀಕಿಸಿದ ಅವರು, ನಮ್ಮ ಸರಕಾರವು ಉತ್ತರ ಕರ್ನಾಟಕದ 7800 ಕೋಟಿ ಮೊತ್ತದ ನೀರಾವರಿ ಯೋಜನೆಗೆ ಅನುಮೋದನೆ ಕೊಟ್ಟಿತ್ತು. ಅದರ ಅನುಷ್ಠಾನಕ್ಕೆ ಕಾಂಗ್ರೆಸ್ ಮುಂದಾಗಿಲ್ಲ. ಖಜಾನೆಯಲ್ಲಿ ದುಡ್ಡಿಲ್ಲದಿರುವುದು ಇದಕ್ಕೆ ಕಾರಣ ಎಂದು ವಿಶ್ಲೇಷಿಸಿದರು.
9
+ ಗ್ಯಾರಂಟಿ ಯೋಜನೆಗೆ ಕಾರ್ಮಿಕ ಇಲಾಖೆಯ ಸೆಸ್ ಹಣ ಬಳಕೆ ಇಲ್ಲ: ಲಾಡ್
10
+ ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಯಶ್‍ಪಾಲ್ ಸುವರ್ಣ, ಒಬಿಸಿ ಮೋರ್ಚಾ ರಾಜ್ಯ ಪ್ರಭಾರಿ ಎಸ್.ಕೆ.ಕವೆರೇಂಧನ್, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ್ ತಪಸ್ವಿ, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅವ್ವಣ್ಣ ಮ್ಯಾಕರಿ, ಬಿ.ಸೋಮಶೇಖರ್ ಉಪಸ್ಥಿತರಿದ್ದರು.
eesanje/url_46_227_10.txt ADDED
@@ -0,0 +1,6 @@
 
 
 
 
 
 
 
1
+ ಆರ್ಥಿಕ ಸಬಲರಿಂದಲೇ ಕಾರ್ಮಿಕರಾಗಿ ನೋಂದಣಿ: ಸಂತೋಷ್ ಲಾಡ್
2
+ ಬೆಂಗಳೂರು ಫೆ.23- ಫೆರಾರಿ ಕಾರು, ಜಿಎಸ್‍ಟಿ ಪಾವತಿಸುವವರು, ಜಮೀನುದಾರರು ಸೇರಿದಂತೆ ಆರ್ಥಿಕ ಸುಸ್ಥಿತಿಯಲ್ಲಿರುವವರೇ ಕಾರ್ಮಿಕ ಇಲಾಖೆಯ ತಮ್ಮ ಹೆಸರುಗಳನ್ನು ನೋಂದಣಿ ಮಾಡಿಕೊಂಡಿದ್ದಾರೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಬಹಿರಂಗಪಡಿಸಿದ್ದಾರೆ. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‍ನ ಯು.ಬಿ.ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಾರ್ಮಿಕ ಇಲಾಖೆಯಡಿ ಹೆಚ್ಚಿನ ಸವಲತ್ತುಗಳು ಸಿಗುತ್ತಿರುವ ಕಾರಣ ಇತ್ತೀಚಿನ ವರ್ಷಗಳಲ್ಲಿ ಅತ್ಯಂತ ಸ್ಥಿತಿವಂತರೇ ನಮ್ಮ ಇಲಾಖೆಯಡಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಂಬೇಡ್ಕರ್ ಕಾರ್ಮಿಕ ಸೇವಾ ಕೇಂದ್ರದ ಮೂಲಕ ತನಿಖೆ ಮಾಡಿಸುತ್ತೇವೆ ಎಂದು ಹೇಳಿದರು.
3
+ 2007ರಲ್ಲಿ ಕಾರ್ಮಿಕರ ಮಂಡಳಿ ಸ್ಥಾಪನೆಯಾಗಿತ್ತು. ಪ್ರಾರಂಭದಲ್ಲಿ ಮೂರು ಲಕ್ಷ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದರು. 2007ರಲ್ಲಿ ಇದರ ಸಂಖ್ಯೆ 12 ಲಕ್ಷ ಇದ್ದು ಕಾರ್ಮಿಕರ ಸಂಖ್ಯೆ ಇದ್ದಕ್ಕಿದ್ದಂತೆ 39 ಲಕ್ಷಕ್ಕೆ ಏರಿಕೆಯಾಯಿತು. ಇದೀಗ ಇದು 51 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದರು. ಕೆಲವು ಕಾರ್ಮಿಕರ ನೋಂದಣಿಗೆ ಒತ್ತಡಗಳು ಇರುತ್ತವೆ. 51 ಲಕ್ಷದಲ್ಲಿ 46 ಲಕ್ಷ ಕಾರ್ಮಿಕರು ಅರ್ಹರಿದ್ದರೆ ಉಳಿದವರು ಅನರ್ಹರಾಗಿದ್ದಾರೆ.
4
+ ಹಾವೇರಿ ಜಿಲ್ಲೆಯಲ್ಲಿ 3 ಲಕ್ಷ ಕಾಮಿಕರಲ್ಲಿ 2.7 ಲಕ್ಷ ಕಾರ್ಮಿಕರು ಅನರ್ಹರಿದ್ದಾರೆ. ಹೀಗಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ನೋಂದಣಿಯಾಗಿರುವ ಕಾರ್ಮಿಕರು ಅರ್ಹರೋ ಅಥವಾ ಅನರ್ಹರೋ ಎಂಬುದನ್ನು ಅಂಬೇಡ್ಕರ್ ಸೇವಾ ಕೇಂದ್ರದ ಮೂಲಕ ತನಿಖೆ ಮಾಡಿಸುತ್ತೇವೆ ಎಂದರು. ನಮ್ಮ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇರುವುದರಿಂದ ಹೊರಗುತ್ತಿಗೆ ಪಡೆದುಕೊಂಡು ತನಿಖೆ ಮಾಡಿಸುತ್ತೇವೆ. ಯಾವುದೇ ಒಬ್ಬ ಕಾರ್ಮಿಕ ನೋಂದಣಿ ಮಾಡಿಕೊಳ್ಳಬೇಕಾದರೆ ಗ್ರಾಮಪಂಚಾಯ್ತಿಯ ಪಿಡಿಒ ಇಂದ ಹಿಡಿದು ವಿವಿಧ ಹಂತಗಳಲ್ಲಿ ಪರಿಶೀಲನೆಯಾದ ಬಳಿಕವೇ ಈ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ಆದರೆ ಸರ್ಕಾರದ ಸವಲತ್ತುಪಡೆಯುವ ಏಕೈಕ ಉದ್ದೇಶದಿಂದಲೇ ಆರ್ಥಿಕವಾಗಿ ಸದೃಢ ಇರುವವರು ಇದರಲ್ಲಿ ಸೇರಿಕೊಂಡಿದ್ದಾರೆ. ತನಿಖೆ ನಡೆದ ನಂತರ ಇದರ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಹೇಳಿದರು.+
5
+ ಭಾರತವು 10 ಟ್ರಿಲಿಯನ್‍ಡಾಲರ್ ಆರ್ಥಿಕತೆಯ ಹಾದಿಯಲ್ಲಿದೆ-ಡಬ್ಲೂಇಎಫ್
6
+ ನಿಜವಾದ ಫಲಾನುಭವಿಗಳಿಗೆ ಸರ್ಕಾರದ ಸವಲತ್ತು ಸಿಗಬೇಕೆಂಬುದು ನಮ್ಮ ಉದ್ದೇಶ. ತನಿಖೆಯಲ್ಲಿ ಅನರ್ಹರು ಇದ್ದರೆ ಮುಲಾಜಿಲ್ಲದೆ ತೆಗೆದು ಹಾಕುತ್ತೇವೆ. ಒಂದು ವೇಳೆ ಇದರಲ್ಲಿ ಅಧಿಕಾರಿಗಳು ಶಾಮೀಲಾಗಿರುವುದು ಕಂಡುಬಂದರೆ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ಕೊಟ್ಟರು.
eesanje/url_46_227_11.txt ADDED
@@ -0,0 +1,9 @@
 
 
 
 
 
 
 
 
 
 
1
+ ಎಂಎಸ್‍ಐಎಲ್‍ನಲ್ಲಿ ಎಸ್‍ಸಿ, ಎಸ್‍ಟಿ ಮೀಸಲಾತಿಗೆ ಶಿಫಾರಸ್ಸು
2
+ ಬೆಂಗಳೂರು,ಫೆ.22- ಎಂಎಸ್‍ಐಎಲ್ ಸಂಸ್ಥೆಯಡಿ ಪರಿಶಿಷ್ಟ ಜಾತಿ, ಪಂಗಡದವರಿಗೂ ಅವಕಾಶ ಕಲ್ಪಿಸಲು ಎಂ ಪ್ಯಾನಲ್ ಮಾಡಿಸಿಕೊಳ್ಳಲು ಕಡ್ಡಾಯವಾಗಿ ಮೀಸಲಾತಿ ಅಳವಡಿಸಿಕೊಳ್ಳಬೇಕೆಂದು ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಶಿಫಾರಸ್ಸು ಮಾಡಿದೆ. ವಿಧಾನಸಭೆಯಲ್ಲಿಂದು ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಮಂಡಿಸಿದ ಸಮಿತಿಯ 2023-24 ನೇ ಸಾಲಿನ 16 ನೇ ವಿಧಾನಸಭೆಯ 2 ನೇ ವರದಿಯಲ್ಲಿ ಈ ಶಿಫಾರಸ್ಸು ಮಾಡಲಾಗಿದೆ.
3
+ ಸಂಸ್ಥೆಯಡಿ ನಡೆಯುತ್ತಿರುವ ಎಲ್ಲಾ ಘಟಕಗಳಲ್ಲಿ ಹೊರಗುತ್ತಿಗೆ ಯಲ್ಲಿ ಪಡೆಯುತ್ತಿರುವ ಮಾನವ ಸಂಪನ್ಮೂಲವನ್ನು ಕಡ್ಡಾಯವಾಗಿ ಮೀಸಲಾತಿ ಅನುಸರಿಸಬೇಕು. ಬಡವರು ಹಾಗೂ ಎಸ್‍ಸಿ/ಎಸ್ಟಿ ಜನಾಂಗದವರು ವಾಸಿಸುತ್ತಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಜನವಸತಿ ಕೇಂದ್ರ ತೆರೆಯಲು ಶಿಫಾರಸ್ಸು ಮಾಡಿದೆ. ರಾಜ್ಯದ ಗಡಿಭಾಗದಲ್ಲಿ ಹೊರರಾಜ್ಯದ ಸೇಂದಿ ಕುಡಿದು ಆರೋಗ್ಯ ಹಾಳು ಮಾಡಿಕೊಳ್ಳುವುದನ್ನು ತಪ್ಪಿಸಲು ಎಂಎಸ್‍ಐಎಲ್ ಮಳಿಗೆಗಳನ್ನು ತೆರೆಯಲು ಸೂಚಿಸಿದೆ.
4
+ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ನಿವೇಶನಗಳನ್ನು ಶೇ.24.1 ರಷ್ಟು ಎಸ್‍ಸಿ/ಎಸ್ಟಿ ಜನಾಂಗದವರಿಗೆ ಮೀಸಲಿಡಬೇಕು. ಮೂಲೆ ನಿವೇಶನಗಳು ಹಾಗೂ ವಾಣಿಜ್ಯ ಉದ್ದೇಶಗಳಿಗಾಗಿ ನಿವೇಶನ ಹರಾಜು ಮಾಡುವಾಗ ಎಸ್‍ಸಿ/ಎಸ್ಟಿ ಮೀಸಲು ಬಿಂದುಗಳನ್ನು ಗುರುತಿಸಿ ಪ್ರಕಟಿಸುವಂತೆ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ. ಎಂಎಸ್‍ಎಂಇ ಯಲ್ಲೂ ಎಸ್‍ಸಿ/ಎಸ್ಟಿ ಜನಾಂಗದವರಿಗೆ ಶೇ.24.1 ರಷ್ಟು ಸೌಲಭ್ಯಗಳನ್ನು ಮೀಸಲಿಡಬೇಕು ಎಂದು ತಿಳಿಸಲಾಗಿದೆ.
5
+ ಎಸ್‍ಸಿ/ಎಸ್ಟಿ ಜನಾಂಗದವರನ್ನು ಕುಶಲಕರ್ಮಿಗಳನ್ನಾಗಿಸಲು ಪರಿಣಾಮಕಾರಿ ಕ್ರಮ ರೂಪಿಸಬೇಕು. ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲೂ ಸಮಾಜ ಕಲ್ಯಾಣ ಇಲಾಖೆಯಿಂದ ಒಂದು ಬಾರಿಗೆ ವಿಶೇಷ ಅನುದಾನವನ್ನು ಪಡೆಯಲು ಶಿಫಾರಸ್ಸು ಮಾಡಬೇಕು ಎಂದು ಉಲ್ಲೇಖಿಸಲಾಗಿದೆ.
6
+ ರಾಜಕಾರಣಕ್ಕೆ ಬರಲ್ಲ, ಚುನಾವಣೆಗೆ ನಿಲ್ಲಲ್ಲ : ಡಾಲಿ ಧನಂಜಯ್
7
+ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಕಲ್ಲು ಗಣಿ ಅಥವಾ ಮರಳು ಗಣಿ ಹಂಚಿಕೆ ಮಾಡುವ ಸಂದರ್ಭದಲ್ಲಿ ಹೆಚ್ಚಿನ ಉತ್ಪನ್ನಗಳು ಸಿಗುವ ಬ್ಲಾಕ್‍ಗಳನ್ನು ಇತರೆ ಸಮುದಾಯದವರಿಗೆ ನೀಡಿ ಕಡಿಮೆ ಪ್ರಮಾಣದ ಉತ್ಪನ್ನ ಲಭಿಸುವ ಬ್ಲಾಕ್‍ಗಳನ್ನು ಎಸ್‍ಸಿ/ಎಸ್ಟಿ ಜನಾಂಗದವರಿಗೆ ಹಂಚಿಕೆ ಮಾಡುತ್ತಿರುವುದು ಸಾಮಾಜಿಕ ನ್ಯಾಯದ ವಿರುದ್ಧವಾಗಿದೆ. ಬ್ಲಾಕ್‍ಗಳ ಹಂಚಿಕೆಯನ್ನು ಕಡ್ಡಾಯವಾಗಿ ರೋಸ್ಟರ್ ಮಾದರಿಯಲ್ಲಿ ಹಂಚಿಕೆ ಮಾಡಬೇಕೆಂದು ಶಿಫಾರಸ್ಸು ಮಾಡಲಾಗಿದೆ.
8
+ ಗಣಿಗಳಿಗೆ ಸಂಬಂಧಿಸಿದಂತೆ ಎಲ್ಲಾ ಜಿಲ್ಲೆಗಳ ಹಂತದಲ್ಲಿ ಪರವಾನಗಿ ನೀಡದ ಎಸ್‍ಸಿ/ಎಸ್ಟಿ ಜನಾಂಗದವರಿಗೆ 2 ವಾರಗಳಲ್ಲಿ ಪರವಾನಗಿ ನೀಡಬೇಕು. ಗಣಿಗೆ ಸಂಬಂಧಿಸಿದಂತೆ ಟೆಂಡರ್ ಮತ್ತು ಲೀ��್ ಎರಡರಲ್ಲಿಯೂ ಕಡ್ಡಾಯವಾಗಿ ಮೀಸಲಾತಿ ಅನುಸರಿಸಬೇಕು ಎಂದು ವರದಿ ಶಿಫಾರಸ್ಸು ಮಾಡಿದೆ.
9
+ ಬಿಬಿಎಂಪಿ ವ್ಯಾಪ್ತಿಯಲ್ಲಿ ಗುತ್ತಿಗೆ ಅವ ಮುಗಿದಿದ್ದರೂ ಶೌಚಾಲಯ ಟೆಂಡರ್ ಅನ್ನುಮುಂದುವರೆಸಲಾಗುತ್ತಿದ್ದು, ಕೂಡಲೇ ರದ್ದುಪಡಿಸಿ ಮೀಸಲಾತಿ ಅನ್ವಯ ಕ್ರಮ ಕೈಗೊಳ್ಳಬೇಕು. ಎಸ್‍ಸಿ/ಎಸ್ಟಿ ಜನಾಂಗದವರು ಜಾಹೀರಾತು ವಲಯದಲ್ಲಿ ತೊಡಗಿಸಿಕೊಳ್ಳಲು ಕಡ್ಡಾಯವಾಗಿ ಶೇ.24.1 ರಷ್ಟನ್ನು ಮೀಸಲಾತಿ ನೀಡಬೇಕು. ಮುಖ್ಯ ವಾಣಿಜ್ಯ ಸ್ಥಳಗಳಲ್ಲಿ ರೋಸ್ಟರ್ ಬಿಂದುಗಳ ರೀತಿಯಲ್ಲಿ ಟೆಂಡರ್ ಕಡತಗಳನ್ನು ಎಸ್‍ಸಿ/ಎಸ್ಟಿ ಜನಾಂಗದವರಿಗೆ ಮೀಸಲಾತಿ ನೀಡಬೇಕೆಂದು ಶಿಫಾರಸ್ಸು ಮಾಡಲಾಗಿದೆ.
eesanje/url_46_227_12.txt ADDED
@@ -0,0 +1,5 @@
 
 
 
 
 
 
1
+ ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್‍ಗೆ
2
+ ಬೆಂಗಳೂರು, ಫೆ.22- ಬಿಜೆಪಿಯಲ್ಲಿರುವ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಇಂದು ಮರಳಿ ಕಾಂಗ್ರೆಸ್‍ಗೆ ಸೇರ್ಪಡೆಯಾಗುತ್ತಿದ್ದಾರೆ. ಈಗಾಗಲೇ ಹಲವು ಬಾರಿ ಪಕ್ಷಾಂತರ ಮಾಡಿರುವ ಎಸ್.ಪಿ.ಮುದ್ದ ಹನುಮೇ ಗೌಡರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತ್ತೆ ಕಾಂಗ್ರೆಸ್‍ನತ್ತ ಮುಖ ಮಾಡಿದ್ದಾರೆ.ಸಂಜೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೇ ಎಸ್.ಪಿ. ಮುದ್ದಹನುಮೇಗೌಡ ಅವರನ್ನು ಕಾಂಗ್ರೆಸ್‍ಗೆ ಬರ ಮಾಡಿಕೊಳ್ಳಲಿದ್ದಾರೆ.
3
+ “ನಷ್ಟ ಸರಿದೂಗಿಸಲು ವಿದ್ಯುತ್ ದರ ಏರಿಕೆ ಪರಿಹಾರವಲ್ಲ”
4
+ ಎಸ್.ಪಿ. ಮುದ್ದಹನುಮೇಗೌಡ ಅವರ ಸೇರ್ಪಡೆಗೆ ಸಂಬಂಧಪಟ್ಟಂತೆ ತುಮಕೂರು ಜಿಲ್ಲಾ ರಾಜಕಾರಣದಲ್ಲಿ ಸಾಕಷ್ಟು ವಿರೋಧಗಳು ಕಂಡು ಬಂದಿವೆ. ಎಸ್.ಪಿ. ಮುದ್ದಹನುಮೇಗೌಡ ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗುವ ತಯಾರಿಯಲ್ಲಿದ್ದಾರೆ. ಈ ಹಿಂದೆ ಕಾಂಗ್ರೆಸ್‍ನಿಂದಲೇ ಸಂಸದರಾಗಿದ್ದ ಎಸ್.ಪಿ.ಮುದ್ದಹನುಮೇಗೌಡ 2019 ರಲ್ಲಿ ಜೆಡಿಎಸ್-ಕಾಂಗ್ರೆಸ್‍ನ ಮೈತ್ರಿ ಕಾರಣಕ್ಕೆ ಟಿಕೆಟ್ ವಂಚಿತರಾಗಿದ್ದರು. ಅನಂತರ ಜೆಡಿಎಸ್-ಬಿಜೆಪಿ ಎರಡೂ ಪಕ್ಷಗಳಿಗೂ ಹಲವು ಬಾರಿ ಪಕ್ಷಾಂತರ ಮಾಡಿದ್ದರು. ಈಗ ಮತ್ತೆ ಕಾಂಗ್ರೆಸ್‍ಗೆ ಸೇರ್ಪಡೆಯಾಗುತ್ತಿದ್ದು, ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ರ್ಪಧಿಸಲು ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಪಕ್ಷದ ಕಾರ್ಯಕರ್ತರು, ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
5
+ ಅದರ ಹೊರತಾಗಿಯೂ ಮೇಲ್ಮಟ್ಟದ ನಾಯಕರು ಎಸ್.ಪಿ. ಮುದ್ದಹನುಮೇಗೌಡ ಅವರನ್ನು ಕರೆ ತಂದಿದ್ದು, ಲೋಕಸಭೆ ಚುನಾವಣೆಯಲ್ಲಿ ಸ್ರ್ಪಧಿಸುವ ಅವಕಾಶ ನೀಡುತ್ತಿದ್ದಾರೆ ಎಂದು ಹೇಳಲಾಗಿದೆ. ಇದರ ಬೆನ್ನಲ್ಲೇ ಬಿಜೆಪಿಯಲ್ಲಿ ಹೊಂದಿಕೊಳ್ಳಲಾಗದೆ ಅಸಹನೆಯಿಂದ ಕುದಿಯುತ್ತಿರುವ ಕೆಲವು ಶಾಸಕರು ಕಾಂಗ್ರೆಸ್‍ಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
eesanje/url_46_227_2.txt ADDED
@@ -0,0 +1,5 @@
 
 
 
 
 
 
1
+ ಗ್ಯಾರಂಟಿ ಯೋಜನೆಗೆ ಕಾರ್ಮಿಕ ಇಲಾಖೆಯ ಸೆಸ್ ಹಣ ಬಳಕೆ ಇಲ್ಲ: ಲಾಡ್
2
+ ಬೆಂಗಳೂರು ಫೆ.23- ಕಾರ್ಮಿಕ ಇಲಾಖೆಯ ಸೆಸ್ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಸದಸ್ಯ ಪ್ರಕಾಶ್ ಸಿಂಗ್ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸೆಸ್ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗುತ್ತದೆ ಎಂಬ ಆಧಾರ ರಹಿತ ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ನಮ್ಮ ಇಲಾಖೆಯಲ್ಲೇ 10 ಸಾವಿರ ಕೋಟಿ ಅನುದಾನವಿದೆ. ಹೀಗಾಗಿ ಸೆಸ್ ಹಣವನ್ನು ಬಳಕೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಉದ್ಭವಿಸುವುದಿಲ್ಲ ಎಂದು ಪುನರುಚ್ಚರಿಸಿದರು.
3
+ ಕಾರ್ಮಿಕ ಇಲಾಖೆಯ ಸೆಸ್ ಹಣವನ್ನು ಗ್ಯಾರಂಟಿ ಯೋಜನೆಗೆ ಕೊಡುತ್ತಿಲ್ಲ. ಕಾರ್ಮಿಕ ಇಲಾಖೆಯಲ್ಲಿ 10 ಸಾವಿರ ಕೋಟಿ ಅನುದಾನ ಇದೆ. ಸದ್ಯ ಇಲಾಖೆಯಲ್ಲಿ ಇರುವುದು 6500 ಕೋಟಿ ಮಾತ್ರ.2500 ಕೋಟಿ ವಿದ್ಯಾರ್ಥಿ ವೇತನಕ್ಕೆ ಕೊಡಬೇಕಾಗುತ್ತದೆ. ಮೊದಲು 2 ಲಕ್ಷ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿತ್ತು. ಹೀಗಾಗಿ ಹೆಚ್ಚು ವಿದ್ಯಾರ್ಥಿ ವೇತನ ಕೊಡಲಾಗುತ್ತಿತ್ತು. ಈಗ 12 ಲಕ್ಷ ಕಾರ್ಮಿಕ ಮಕ್ಕಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಿದ್ದಾರೆ. ಹೀಗಾಗಿ ಹಿಂದೆ ಇದ್ದಷ್ಟು ವಿದ್ಯಾರ್ಥಿ ವೇತನ ಕೊಡಲು ಸಾಧ್ಯವಿಲ್ಲ. ಹೀಗಾಗಿ ಕಾರ್ಮಿಕ ಮಕ್ಕಳ ವಿದ್ಯಾರ್ಥಿ ವೇತನ ಕಡಿಮೆ ಮಾಡಲಾಗಿದೆ. ಇದನ್ನ ಸದ್ಯ ಜಾಸ್ತಿ ಮಾಡಲು ಸಾಧ್ಯವಿಲ್ಲ ಎಂದು ಸಚಿವ ಸಂತೋಷ ಲಾಡ್ ಸ್ಪಷ್ಟನೆ ನೀಡಿದರು.
4
+ ಬಿಬಿಎಂಪಿ ಬಜೆಟ್‍ಗೆ ದಿನಗಣನೆ : ಎಸ್‍ಎಎಸ್ ತೆರಿಗೆ ಪದ್ಧತಿಗೆ ಕೊಕ್ ಸಾಧ್ಯತೆ
5
+ ಇದಕ್ಕೂ ಮುನ್ನ ಬಿಜೆಪಿ ಪ್ರತಾಪ್ ಸಿಂಹ ನಾಯಕ್ ಮಾತನಾಡಿ, ಕಾರ್ಮಿಕ ಮಕ್ಕಳ ವಿದ್ಯಾರ್ಥಿ ವೇತನ ಈ ಸರ್ಕಾರ ಕಡಿಮೆ ಮಾಡಿದೆ. 25 ಸಾವಿರ ಇದ್ದ ವಿದ್ಯಾರ್ಥಿ ವೇತನಕ್ಕೆ 4600 ರೂ ಕೊಡಲಾಗುತ್ತಿದೆ. 8 ಸಾವಿರ ಇರುವ ವಿದ್ಯಾರ್ಥಿ ವೇತನ 1 ಸಾವಿರಕ್ಕೆ ಇಳಿದಿದೆ. ವಿದ್ಯಾರ್ಥಿ ವೇತನ ಜೊತೆಗೆ ವೈದ್ಯಕೀಯ ವೆಚ್ಚವನ್ನು ಕಡಿತ ಮಾಡಲಾಗಿದೆ. ಕಾರ್ಮಿಕ ಮಕ್ಕಳಿಗೆ ಮಾಡುವುದು ಸರಿಯಲ್ಲ. ಈ ಸಮಸ್ಯೆ ಪರಿಹಾರ ಮಾಡಿ ಎಂದು ಕೋರಿಕೊಂಡರು.
eesanje/url_46_227_3.txt ADDED
@@ -0,0 +1,6 @@
 
 
 
 
 
 
 
1
+ ವಿದಾನಸಭೆಯಲ್ಲಿ ಮೋದಿ ಮೋದಿ ಘೋಷಣೆ
2
+ ಬೆಂಗಳೂರು ಫೆ.23- ವಿಧಾನಸಭೆಯ ಸಭಾಂಗಣದ ಒಳಗೂ ಬಿಜೆಪಿ ಶಾಸಕರು ಮೋದಿ ಮೋದಿ ಎಂದು ಘೋಷಣೆ ಕೂಗಿದರು. ರಾಜ್ಯ ಸರ್ಕಾರ ಕೇಂದ್ರದ ಅನುದಾನದ ತಾರತಮ್ಯದ ವಿರುದ್ಧ ನಿರ್ಣಯ ಮಂಡಿಸಿದ್ದನ್ನು ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ವಿಧಾನಸಭೆಯ ಒಳಗೆ ಧರಣಿ ನಡೆಸಿ ಕೋಲಾಹಲ ಸೃಷ್ಟಿಸಿದರು.ಧರಣಿ ನಿರತ ಪ್ರತಿಪಕ್ಷಗಳ ಸದಸ್ಯರ ತರಹೇವಾರಿ ಘೋಷಣೆಗಳು, ಧಿಕ್ಕಾರಗಳನ್ನು ಕೂಗಿದರು. ಕಾಂಗ್ರೆಸ್‍ನ ಟೀಕೆಗಳು, ಬಳಸುವ ಭಾಷೆ, ಸಂಸ್ಕøತಿ ಇವುಗಳ ಬಗ್ಗೆ ಅನುಕಂಪ ಸೂಚಿಸುವಂತಹ ಛೇ.. ಛೇ.. ಎಂದು ಹೇಳುವ ಮೂಲಕ ಮೂದಲಿಸಿದರು.
3
+ ಏನಿಲ್ಲ ಏನಿಲ್ಲ ಎಂಬ ಟ್ರೋಲ್ ಹಾಡನ್ನು ಶಾಸಕರು ಧರಣಿ ನಡೆಸುವ ವೇಳೆ ಹಾಡಿದ್ದು ಗಮನಸೆಳೆಯಿತು. ಇದಕ್ಕೆ ಪ್ರತಿಕ್ರಿಯಿಸಿದ ಸಭಾಧ್ಯಕ್ಷ ಯು.ಟಿ.ಖಾದರ್, ಶಾಸಕರು ಹಾಡುಗಾರಿಕೆ ಮೂಲಕ ತಮ್ಮ ಪ್ರತಿಭೆ ಪ್ರದರ್ಶನ ಮಾಡಿದ್ದಾರೆ. ಅವರಿಗಾಗಿ ಒಂದು ದಿನ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ವಿಧಾನಸಭೆ ಸಚಿವಾಲಯದ ವತಿಯಿಂದ ಆಯೋಜಿಸಲಾಗುವುದು ಎಂದು ಹೇಳಿದರು.
4
+ ಬಿಬಿಎಂಪಿ ಬಜೆಟ್‍ಗೆ ದಿನಗಣನೆ : ಎಸ್‍ಎಎಸ್ ತೆರಿಗೆ ಪದ್ಧತಿಗೆ ಕೊಕ್ ಸಾಧ್ಯತೆ
5
+ ಸರ್ಕಾರದ ವಿಧೇಯಕಗಳ ಮಂಡನೆ, ಪರ್ಯಾಲೋಚನೆ, ಚರ್ಚೆಗಳಿಗೆ ಅಡ್ಡಿಪಡಿಸುವಂತೆ ಜೋರಾಗಿ ಘೋಷಣೆಗಳನ್ನು ಕೂಗಲಾರಂಭಿಸಿದರು. ಗದ್ದಲದ ನಡುವೆಯೇ ಎರಡು ವಿಧೇಯಕಗಳು ಯಾವುದೇ ಚರ್ಚೆ ಇಲ್ಲದೆ ಅಂಗೀಕಾರಗೊಂಡವು. ಸಭಾಧ್ಯಕ್ಷರು ವಿಧೇಯಕಗಳ ಮೇಲಿನ ಚರ್ಚೆಯಲ್ಲಿ ಭಾಗವಹಿಸುವಂತೆ ಹಲವಾರು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಕೊನೆಗೆ ದನಿ ಮತದ ಮೂಲಕವೇ ವಿಧೇಯಕಗಳಿಗೆ ಅಂಗೀಕಾರ ದೊರೆತಿದೆ ಎಂದು ಘೋಷಿಸಲಾಯಿತು.
6
+ ಗದ್ದಲ ನಡುವೆಯೇ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರದ ನಿರ್ಣಯಕ್ಕೆ ಪ್ರತಿಯಾಗಿ ಖಂಡನಾ ನಿರ್ಣಯವನ್ನು ಮಂಡಿಸಿ ಸೇಡು ತೀರಿಸಿಕೊಂಡರು. ಎಷ್ಟೇ ಪ್ರಯತ್ನಪಟ್ಟರೂ ಗದ್ದಲ, ಧರಣಿ ತಹಬದಿಗೆ ಬರದೇ ಇದ್ದುದರಿಂದ ಸಭಾಧ್ಯಕ್ಷ ಯು.ಟಿ.ಖಾದರ್ ಕಲಾಪದಲ್ಲಿ ಇಂದಿನ ಪ್ರಶ್ನೋತ್ತರ ಸೂಚನೆ, ಗಮನಸೆಳೆಯುವ ಸೂಚನೆ ಹಾಗೂ ಶೂನ್ಯವೇಳೆ ಕಲಾಪಗಳನ್ನು ಸೋಮವಾರ ಬೆಳಗ್ಗೆ 9.30ಕ್ಕೆ ಮುಂದೂಡಿದರು.
eesanje/url_46_227_4.txt ADDED
@@ -0,0 +1,9 @@
 
 
 
 
 
 
 
 
 
 
1
+ ಡಾ.ಮಂಜುನಾಥ್ ಸ್ಪರ್ಧೆ ಕುರಿತಂತೆ ಸೂಕ್ತ ಸಮಯದಲ್ಲಿ ನಿರ್ಧಾರ: ಎಚ್‍ಡಿಕೆ
2
+ ಬೆಂಗಳೂರು, ಫೆ.23- ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ರ್ಪಧಿಸಬೇಕು ಎಂಬ ಬಗ್ಗೆ ಒತ್ತಡವಿದ್ದು, ಈ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ಮಂಜುನಾಥ್ ಅವರು ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಬಗ್ಗೆ ರಾಜ್ಯಾದ್ಯಂತ ಜನರಲ್ಲಿ ಒಳ್ಳೆಯ ಭಾವನೆ ಇದೆ. ಅವರು ಸಹ ಸಭೆ ಸಮಾರಂಭಗಳಲ್ಲಿ ಭಾಗವಹಿಸಿದಾಗ ಲೋಕಸಭೆ ಚುನಾವಣೆಗೆ ಸ್ರ್ಪಧಿಸುವಂತೆ ಜನರು ಕೂಡ ಒತ್ತಡ ಹಾಕುತ್ತಿದ್ದಾರೆ ಎಂದರು.ಮಂಜುನಾಥ್ ಅವರು ಚುನಾವಣೆಗೆ ಸ್ರ್ಪಧಿಸುವ ವಿಚಾರದಲ್ಲಿ ಬಹಿರಂಗವಾಗಿ ಇದುವರೆಗೂ ಏನನ್ನೂ ಹೇಳಿಲ್ಲ. ರಾಜಕೀಯ ಪ್ರವೇಶ ಮಾಡುವ ಬಗ್ಗೆ ತೀರ್ಮಾನ ಮಾಡಿಲ್ಲ ಎಂದು ಹೇಳುತ್ತಿದ್ದಾರೆ. ಸಮಯ ಬಂದಾಗ ಈ ಎಲ್ಲಾ ವಿಚಾರ ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
4
+ ಪ್ರೇಕ್ಷಣೀಯ ಸ್ಥಳವಾಗಿ ಬದಲಾಗಲಿದೆ ಫ್ರೀಡಂಪಾರ್ಕ್
5
+ ಫೆ.27ರಂದು ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸದಸ್ಯ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಜೆಡಿಎಸ್‍ನಿಂದ ಮಾಜಿ ಸಂಸದ ಕುಪೇಂದ್ರರೆಡ್ಡಿ ಅವರನ್ನು ಕಣಕ್ಕಿಳಿಸಿದ್ದು, ಅವರಿಗೆ ಗೆಲುವು ತಂದುಕೊಡಬೇಕು ಎಂಬ ಗುರಿಯನ್ನಿಟ್ಟುಕೊಂಡು ಕಾರ್ಯತಂತ್ರ ರೂಪಿಸಲಾಗುತ್ತಿದೆ. ನಮ್ಮ ಆಸೆ ಈಡೇರಲಿದೆಯೇ ಎಂಬುದು ಅಂದು ಸಂಜೆ ಬಹಿರಂಗವಾಗಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
6
+ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಸ್ಥಾನ ಗೆಲ್ಲಬೇಕೆಂಬ ನಿಟ್ಟಿನಲ್ಲಿ ಅನುಸರಿಸಬೇಕಾದ ಕಾರ್ಯತಂತ್ರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ದೆಹಲಿ ಭೇಟಿ ಸಂದರ್ಭದಲ್ಲಿ ಸುದೀರ್ಘವಾಗಿ ಚರ್ಚಿಸಲಾಗಿದೆ. ಅಮಿತ್ ಷಾ ಅವರು ಸಹ ಹಲವು ಸಲಹೆ- ಸೂಚನೆಗಳನ್ನು ನೀಡಿದ್ದಾರೆ ಎಂದು ಅವರು ಹೇಳಿದರು.
7
+ ಬಿಬಿಎಂಪಿ ಬಜೆಟ್‍ಗೆ ದಿನಗಣನೆ : ಎಸ್‍ಎಎಸ್ ತೆರಿಗೆ ಪದ್ಧತಿಗೆ ಕೊಕ್ ಸಾಧ್ಯತೆ
8
+ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಜಂಟಿ ಹೋರಾಟ ಮಾಡಲಿದ್ದು, ಏನೇ ತೀರ್ಮಾನ ಕೈಗೊಂಡರೂ ಉಭಯ ಪಕ್ಷಗಳ ನಾಯಕರು ಚರ್ಚಿಸಿ ಒಮ್ಮತದ ನಿರ್ಣಯ ಕೈಗೊಳ್ಳಲಾಗುವುದು. ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಸೋಮವಾರ ಬಿಜೆಪಿ ಹಮ್ಮಿಕೊಳ್ಳಲಿರುವ ರಾಜಭವನ ಚಲೋ ಕಾರ್ಯಕ್ರಮದಲ್ಲಿ ನಾವು ಭಾಗಿಯಾಗುತ್ತೇವೆ ಎಂದು ಸ್ಪಷ್ಟಪಡಿಸಿದರು.
9
+ ಆರೋಗ್ಯ ಸರಿ ಇಲ್ಲದ ಕಾರಣ ವಿಧಾನಸಭೆಯ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿ���ಿದರು.
eesanje/url_46_227_5.txt ADDED
@@ -0,0 +1,7 @@
 
 
 
 
 
 
 
 
1
+ ಪ್ರೇಕ್ಷಣೀಯ ಸ್ಥಳವಾಗಿ ಬದಲಾಗಲಿದೆ ಫ್ರೀಡಂಪಾರ್ಕ್
2
+ ಬೆಂಗಳೂರು,ಫೆ.23- ಪ್ರತಿಭಟನೆಗಳಿಗೆಂದೇ ಮೀಸಲಾಗಿರುವ ಸ್ವಾತಂತ್ರ್ಯ ಉದ್ಯಾನವನವನ್ನು ಪ್ರೇಕ್ಷಣೀಯ ಸ್ಥಳವನ್ನಾಗಿ ಪರಿವರ್ತಿಸಲು ಬಿಬಿಎಂಪಿ ಪ್ಲಾನ್ ಮಾಡಿದೆ. ಪ್ರತಿನಿತ್ಯ ಪ್ರತಿಭಟನೆ ನಡೆಸಲಾಗುತ್ತಿರುವ ಉದ್ಯಾನವನವನ್ನು ಪ್ಷೇಕ್ಷಣೀಯ ಸ್ಥಳವನ್ನಾಗಿ ಪರಿವರ್ತಿಸಿ ಅದರಿಂದ ಆದಾಯ ಬರುವಂತೆ ನೋಡಿಕೊಳ್ಳುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ.
3
+ 21 ಹೆಕ್ಟೆರ್ ಪ್ರದೇಶದಲ್ಲಿ ವಿಸ್ತಾರಗೊಂಡಿರುವ ಸ್ವಾತಂತ್ರ್ಯ ಉದ್ಯಾನವನವನ್ನು ನವೀಕರಣ ಮಾಡಿ ಪ್ರೇಕ್ಷಣೀಯ ಸ್ಥಳವನ್ನಾಗಿ ಅಭಿವೃದ್ಧಿಪಡಿಸಲು ಬಿಬಿಎಂಪಿ 5 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಉದ್ಯಾನವನವನ್ನು ನವೀಕರಣ ಮಾಡಿ ಪ್ರೇಕ್ಷಣೀಯ ಸ್ಥಳದ ಜೊತೆ ಹೆರಿಟೇಜ್ ಹಬ್ ಮಾಡುವುದರ ಜೊತೆಗೆ ಫ್ರೀಡಂ ಪಾರ್ಕ್‍ನಲ್ಲಿ ಅಸ್ತಿತ್ವದಲ್ಲಿರುವ ಕಟ್ಟಡಗಳ ನವೀಕರಣ, ಹಳೆಯ ಸೆಂಟ್ರಲ್ ಜೈಲ್ ರಚನೆಗಳು, ವಿದ್ಯುತೀಕರಣ ಹಾಗೂ ದುರಸ್ತಿಗಾಗಿ ಬಿಬಿಎಂಪಿ ಯೋಜನೆ ರೂಪಿಸಿದೆ.
4
+ ಅಭಿವೃದ್ಧಿಯಾದ ಉದ್ಯಾನವನಕ್ಕೆ ಹೆಚ್ಚು ಜನರನ್ನು ಆಕರ್ಷಿಸುವ ಉದ್ದೇಶದಿಂದ ರಾಮಚಂದ್ರ ರಸ್ತೆಯಿಂದ ಫ್ರೀಡಂ ಪಾರ್ಕ್‍ಗೆ ಎರಡನೇ ಪ್ರವೇಶ ದ್ವಾರ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. ಫ್ರೀಡಂ ಪಾರ್ಕ್‍ನ ಅಸ್ತಿತ್ವದಲ್ಲಿರುವ ರಚನೆಗಳ ನವೀಕರಣ ಮತ್ತು ವಿದ್ಯುದ್ದೀಕರಣಕ್ಕಾಗಿ ಟೆಂಡರ್ ಕರೆಯಲಾಗಿದ್ದು, ಸಂಪೂರ್ಣ ಕಾಮಗಾರಿಗೆ 5 ಕೋಟಿ ರೂಪಾಯಿ ವೆಚ್ಚ ಆಗಬಹುದು ಎಂದು ಅಂದಾಜಿಸಲಾಗಿದೆ.
5
+ ಬೆಂಗಳೂರಿನಲ್ಲಿ ಹೊಸ 372 ಸಾರ್ವಜನಿಕ ಶೌಚಾಲಯ ನಿರ್ಮಿಸಲು ಚಿಂತನೆ : ಡಿ.ಕೆ.ಶಿವಕುಮಾರ್
6
+ ಈ ಹಿಂದೆ ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ಉದ್ಯಾನವನವನ್ನು ನವೀಕರಿಸಲಾಗಿತ್ತು. ಆ ಸಮಯದಲ್ಲಿ ಖಾಲಿ ಇದ್ದ ಸ್ಥಳದಲ್ಲಿ ಆಂಫಿ ಥಿಯೇಟರ್, ಹೊರ ಸಭಾಂಗಣ ಹಾಗೂ ಗಾರ್ಡನ್ ಅನ್ನು ಹೊಸದಾಗಿ ನಿರ್ಮಾಣ ಮಾಡಲಾಗಿತ್ತು. ಆದ್ರೆ ಕಳಪೆ ಕಾಮಗಾರಿಯಿಂದ ಎಲ್ಲವೂ ಸಂಪೂರ್ಣವಾಗಿ ಹಾಳಾಗಿದೆ. ಜೊತೆಗೆ ಪಾರ್ಕ್ ಒಳಗಿರುವ ಹಳೆಯ ಜೈಲು ಕುಸಿಯುವ ಹಂತದಲ್ಲಿದೆ ಎನ್ನುವ ಮಾಹಿತಿ ಇದೆ.
7
+ ಉದ್ಯಾನವನ ನವೀಕರಿಸಲು ಬಿಬಿಎಂಪಿ 8 ಕೋಟಿ ರೂಪಾಯಿ ವೆಚ್ಚ ಆಗಲಿದೆ ಎಂದು ಅಂದಾಜಿಸಿತ್ತು. ಆದರೆ ಇದೀಗ ನವೀಕರಣಕ್ಕೆ 5 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಹೀಗಾಗಿ ಆಂಫಿಥಿಯೇಟರ್‍ವೊಳಗೆ ಹವಾನಿಯಂತ್ರಣ ಮತ್ತು ಅಕೌಸ್ಟಿಕ್ಸ್ ಯೋಜನೆಗಳನ್ನು ಬಿಬಿಎಂಪಿ ಕೈಬಿಟ್ಟಿದೆ ಎಂದು ತಿಳಿದುಬಂದಿದೆ.
eesanje/url_46_227_6.txt ADDED
@@ -0,0 +1,6 @@
 
 
 
 
 
 
 
1
+ ಬೆಂಗಳೂರಿನಲ್ಲಿ ಹೊಸ 372 ಸಾರ್ವಜನಿಕ ಶೌಚಾಲಯ ನಿರ್ಮಿಸಲು ಚಿಂತನೆ : ಡಿ.ಕೆ.ಶಿವಕುಮಾರ್
2
+ ಬೆಂಗಳೂರು ಫೆ.23- ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸುವ ಸದುದ್ದೇಶದಿಂದ ಬೆಂಗಳೂರಿನಲ್ಲಿ ಹೊಸದಾಗಿ 372 ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲು ಆಲೋಚಿಸಿದ್ದೇವೆ ಎಂದು ಬೆಂಗಳೂರು ಮಹಾನಗರ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
3
+ ಬಿಜೆಪಿಯ ಭಾರತಿ ಶೆಟ್ಟಿಯವರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ಬೆಂಗಳೂರಿನಲ್ಲಿ 907 ಸಾರ್ವಜನಿಕ ಶೌಚಾಲಯಗಳಿವೆ. ಹೆಚ್ಚುವರಿಯಾಗಿ ಇನ್ನು 372 ನೂತನ ಶೌಚಾಲಯಗಳನ್ನು ಆರಂಭಿಸಲು ಚಿಂತನೆ ನಡೆಸಿದ್ದೇವೆ. ಸ್ಥಳದ ಲಭ್ಯತೆ ನೋಡಿಕೊಂಡು ಶೀಘ್ರದಲ್ಲೇ ಒಂದು ನಿರ್ಧಾರಕ್ಕೆ ಬರಲಿದ್ದೇವೆ ಎಂದು ತಿಳಿಸಿದರು.ಶೌಚಾಲಯಗಳನ್ನು ಉಚಿತವಾಗಿ ನೀಡಬೇಕೆಂದು ಸದಸ್ಯರು ಸಲಹೆ ಕೊಟ್ಟಿದ್ದಾರೆ. ಆದರೆ ಇದನ್ನು ಉಚಿತವಾಗಿ ನೀಡಿದರೆ ನಿರ್ವಹಣೆ ಮಾಡುವುದು ಕಷ್ಟಸಾಧ್ಯ. ಕಡೇಪಕ್ಷ ಎಲ್ಲ ಶೌಚಾಲಯಗಳಲ್ಲೂ ಏಕರೂಪ ಮಾದರಿಯ ದರವನ್ನು ನಿಗದಿಪಡಿಸಲು ಅಧಿಕಾರಿಗಳ ಜೊತೆ ಚರ್ಚೆ ಮಾಡುವುದಾಗಿ ಹೇಳಿದರು.
4
+ ಅಯೋಧ್ಯೆ ರೈಲಿಗೆ ಬೆಂಕಿ ಬೆದರಿಕೆ: ಪರಿಷತ್‍ನಲ್ಲಿ ಪ್ರತಿಧ್ವನಿ
5
+ ಕಡೆಪಕ್ಷ ಸಾರ್ವಜನಿಕ ಶೌಚಾಲಯಗಳ ಸ್ಥಿತಿಗತಿ ಹೇಗಿರುತ್ತದೆ ಎಂಬುದು ಸದಸ್ಯೆ ಭಾರತಿ ಶೆಟ್ಟಿ ಅವರು ಹೋಗಿ ನೋಡಿರುವುದು ಅಭೀನಂದನೀಯ. ಏಕೆಂದರೆ ಇಂತಹ ಸಾರ್ವಜನಿಕ ಶೌಚಾಲಯಗಳಿಗೆ ಜನಪ್ರತಿನಿಧಿಗಳು ಹೋಗುವುದೂ ಇಲ್ಲ. ತಲೆಕೆಡಿಸಿಕೊಳ್ಳುವುದೂ ಇಲ್ಲ. ನಾನು ಕನಕಪುರಕ್ಕೆ ಹೋಗುವ ವೇಳೆ ಅಲ್ಲಲ್ಲಿ ಭೇಟಿ ಕೊಡುತ್ತೇನೆ. ಶೌಚಾಲಯಗಳಲ್ಲಿ ಅನೇಕ ರೀತಿಯ ಸಮಸ್ಯೆಗಳಿರುವುದು ನನ್ನ ಗಮನಕ್ಕೆ ಬಂದಿದೆ. ಹೊಸದಾಗಿ ಶೌಚಾಲಯ ನಿರ್ಮಾಣ ಮಾಡುವ ಸಂದರ್ಭದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡುವುದಾಗಿ ತಿಳಿಸಿದರು.
6
+ ಇವುಗಳನ್ನು ಟಿಪಿಟಿ ಮಾದರಿಯಲ್ಲಿ ನಿರ್ಮಿಸಬೇಕೆ ಅಥವಾ ಸರ್ಕಾರದ ಮಟ್ಟದಲ್ಲೇ ನಿರ್ಮಾಣ ಮಾಡಬೇಕೇ? ಎಂಬುದರ ಬಗ್ಗೆಯೂ ಚರ್ಚೆ ಮಾಡುತ್ತೇವೆ. ದರ ಕಡಿಮೆ ಮಾಡುವ ಬಗ್ಗೆ ಸದಸ್ಯರು ಮನವಿ ಮಾಡಿಕೊಂಡಿದ್ದಾರೆ. ಸಭೆಯಲ್ಲಿ ಇದರ ಬಗ್ಗೆ ಪ್ರಸ್ತಾಪ ಮಾಡಿ ಸೂಕ್ತವಾದ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
eesanje/url_46_227_7.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಸಾರಾಯಿ ನಿಷೇಧದಿಂದ ಸಂಕಷ್ಟಪೀಡಿತ ಕುಟುಂಬಗಳಿಗೆ ನೆರವಿಗೆ ಒತ್ತಾಯ
2
+ ಬೆಂಗಳೂರು ಫೆ.23- ಸಾರಾಯಿ ನಿಷೇಧದಿಂದ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರ ಮಾನವೀಯತೆಯಿಂದ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಪಕ್ಷಬೇಧ ಮರೆತು ವಿಧಾನಪರಿಷತ್‍ನಲ್ಲಿ ಒತ್ತಾಯಿಸಲಾಯಿತು. ಬಿ.ಕೆ.ಹರಿಪ್ರಸಾದ್ ಅವರು ಪ್ರಶ್ನೋತ್ತರ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಿ 2006ರಲ್ಲಿ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಏಕಾಏಕಿ ಸಾರಾಯಿ ಮಾರಾಟ ನಿಷೇಧ ಮಾಡಿದ ಪರಿಣಾಮ ಅನೇಕ ಕುಟುಂಬಗಳು ಬೀದಿಗೆ ಬಿದ್ದಿವೆ. ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
3
+ ದೂರದೃಷ್ಟ ಇಲ್ಲದೆ ಅವರಿಗೆ ಯಾವುದೇ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸದೆ ಉಪಕಸುಬನ್ನು ಏಕಾಏಕಿ ನಿಲ್ಲಿಸಿದ ಪರಿಣಾಮ ಇಂದು ಬೀದಿಗೆ ಬಂದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಅತಿಹೆಚ್ಚು ತೆರಿಗೆ ಕಟ್ಟುವವರು ಮದ್ಯ ಮಾರಾಟ ಮಾಡುವವರು. ಕುಡಿಯುವವರಿಗೆ ಸರ್ಕಾರ ಸವಲತ್ತುಕೊಡುತ್ತದೆ. ಮಾರಾಟ ಮಾಡುವವರಿಗೆ ಕಡೇಪಕ್ಷ ಯಾವ ಸೌಲಭ್ಯಗಳಿಲ್ಲ. ಸಾರಾಯಿ ಮಾರುವವರ ಕುಟುಂಬಗಳ ಪರಿಸ್ಥಿತಿ ಹೇಳತೀರದು. ನಾವು ಎಲ್ಲವನ್ನೂ ಮೌನದಿಂದಲೇ ನೋಡಿಕೊಂಡು ಹೋಗುತ್ತೇವೆ. ಬೇರೆಯವರಾಗಿದ್ದರೆ ರಕ್ತಪಾತವಾಗುತ್ತಿತ್ತು ಎಂದು ಆತಂಕ ವ್ಯಕ್ತಪಡಿಸಿದರು.
4
+ ತಮಿಳುನಾಡಿನಲ್ಲೂ ಸಾರಾಯಿ ನಿಷೇಧ ಮಾಡಲಾಯಿತು. ಆದರೆ ಅವರು ಒಂದು ವರ್ಷ ಅವಕಾಶ ಕಲ್ಪಿಸಿ ಈ ಉಪಕಸುಬು ಮಾಡುತ್ತಿದ್ದ ಕುಟುಂಬಗಳಿಗೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಿದ್ದರು. ನಮ್ಮಲ್ಲಿ ಇದೇ ವ್ಯವಸ್ಥೆ ಏಕಿಲ್ಲ ಎಂದು ಪ್ರಶ್ನಿಸಿದರು. ಪ್ರಸಕ್ತ ವರ್ಷ 36 ಸಾವಿರ ಕೋಟಿ ಆದಾಯವನ್ನು ರಾಜ್ಯ ಬೊಕ್ಕಸಕ್ಕೆ ನೀಡಿದ್ದಾರೆ. ಎಂದೂ ಕೂಡ ಇವರು ಬೀದಿಗೆ ಬಂದವರಲ್ಲ. ಪ್ರತಿಭಟನೆಯನ್ನೂ ಕೂಡ ನಡೆಸುವವರಲ್ಲ. ಕುಡಿಯುವವರಿಗೆ ಸವಲತ್ತು ಕೊಡುವ ಸರ್ಕಾರ ಕಡೇಪಕ್ಷ ಮಾರಾಟ ಮಾಡುವವರಿಗೂ ಪುನರ್ವಸತಿ ರೂಪಿಸಬೇಕು ಎಂದರು.
5
+ ಎಂಎಸ್‍ಐಎಲ್ ಮಳಿಗೆಗಳಲ್ಲಿ ಸಾರಾಯಿ ಮಾರಾಟ ನಿಷೇಧದಿಂದ ಸಂಕಷ್ಟಕ್ಕೊಳಗಾಗಿರುವ ಕುಟುಂಬದವರಿಗೆ ಸರ್ಕಾರ ಉದ್ಯೋಗವನ್ನಾದರೂ ನೀಡಲಿ ಎಂದು ಮನವಿ ಮಾಡಿದರು. 1946ರಿಂದ ಈವರೆಗೂ ತೆರಿಗೆ ಕಟ್ಟದವರಿಂದ ವಸೂಲಿ ಮಾಡಲು ಮುಂದಾಗಿದ್ದಾರೆ. ಅದರಲ್ಲಿ ಯಾರು ಬದುಕಿದ್ದಾರೋ, ಸತ್ತಿದ್ದಾರೋ ಎಂಬುದು ಗೊತ್ತಿಲ್ಲ. ಕನಿಷ್ಠಪಕ್ಷ ಅಸಲು ಮತ್ತು ಬಡ್ಡಿಯನ್ನು ಸರ್ಕಾರ ಮನ್ನಾ ಮಾಡಲಿ ಎಂದು ಒತ್ತಾಯಿಸಿದರು.
6
+ ರೌಡಿಗಳ ಅಟ್ಟಹಾಸ ಅಡಗಿಸಲು ಇಲಾಖೆ ಸಮರ್ಥವಾಗಿದೆ: ಗೃಹ ಸಚಿವ ಪರಮೇಶ್ವರ್
7
+ ಇದಕ್ಕೆ ಉತ್ತರಿಸಿದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಸಾರಾಯಿ ಮಾರಾಟ ನಿಷೇಧದಿಂದ ಸಂಕಷ್ಟಕ್ಕೊಳಗಾದವರಿಗೆ ಸುವರ್ಣ ಕಾಯಕ ಯೋಜನೆಯನ್ನು ಜಾರಿ ಮಾಡಲಾಯಿತು. ಇದರಡಿ ಉದ್ಯೋಗ ತರಬೇತಿ ಸೇರಿದಂತೆ ವಿವಿಧ ರೀತಿಯ ತರಬೇತಿಗಳನ್ನು ನೀಡುತ್ತಿದ್ದರೂ ಅನೇಕರು ಇದರ ಲಾಭ ಪಡೆಯಲು ಮುಂದೆ ಬರಲಿಲ್ಲ. ಬಂದವರಲ್ಲಿ ಕೆಲವರಿಗೆ ವಯಸ್ಸೇ ಮುಗಿದು ಹೋಯಿತು ಎಂದರು.
8
+ ನಾವು ಇಲಾಖೆ ವತಿಯಿಂದ 4 ಮತ್ತು 5ನೇ ಕರ ಯೋಜನೆಯಡಿ ತೆರಿಗೆ ಕಟ್ಟಲು ನಾವು ವಿನಾಯ್ತಿ ಕೊಟ್ಟಿದ್ದೇವು. ಆದರಲ್ಲಿ ಕೆಲವರು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದರೆ ಉಳಿದಕಡೆ ಕೆಲವು ಆಸ್ತಿಯನ್ನು ಹರಾಜು ಹಾಕಲಾಗಿದೆ. ಅಸಲು ಮತ್ತು ಬಡ್ಡಿ ಮನ್ನಾ ಮಾಡಬೇಕೆಂದರೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಬೇಕು ಎಂದರು.
9
+ ಆಗ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ, ಈ ಹಿಂದೆ ಮಾಜಿ ಮುಖ್ಯಮಂತ್ರಿ ವಿರೇಂದ್ರ ಪಾಟೀಲ್ ಅವರು ಕಳ್ಳಭಟ್ಟಿ ಪ್ರಕರಣ ತಡೆಯುವುದಕ್ಕಾಗಿ ಶೇಂದಿ ನಿಷೇಧ ಮಾಡಿದರು. ಯಡಿಯೂರಪ್ಪನವರು ಉಪಮುಖ್ಯಮಂತ್ರಿಯಾಗಿದ್ದಾಗ ಕೆಲವು ಸ್ತ್ರೀ ಸಂಘಟನೆಗಳು ಸಾರಾಯಿಯನ್ನು ಎಲ್ಲೆಂದರಲ್ಲಿ ಗಲ್ಲಿಗಲ್ಲಿಗಳಲ್ಲಿ ಮಾರಾಟ ಮಾಡುತ್ತಿದ್ದಾರೆ. ಮಕ್ಕಳು ಸಹ ಕುಡಿಯುವ ದುಶ್ಚಟಕ್ಕೆ ಬಿದ್ದಿದ್ದಾರೆ. ಇದನ್ನು ನಿಷೇಧ ಮಾಡಬೇಕೆಂದು ಮನವಿ ಮಾಡಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಸಾರಾಯಿ ನಿಷೇಧ ಮಾಡಲಾಗಿತ್ತು. ಸಾರಾಯಿ ಮಾರಾಟ ಕುಟುಂಬಗಳಿಗೆ ಈಗಿನ ಸರ್ಕಾರ ಎಂಎಸ್‍ಐಎಲ್‍ನಲ್ಲಿ ಉದ್ಯೋಗ ನೀಡಬೇಕೆಂದು ಮನವಿ ಮಾಡಿದರು.
10
+ ಅಯೋಧ್ಯೆ ರೈಲಿಗೆ ಬೆಂಕಿ ಬೆದರಿಕೆ: ಪರಿಷತ್‍ನಲ್ಲಿ ಪ್ರತಿಧ್ವನಿ
11
+ ಕೆಲವು ಕಡೆ ನೀರಾ ಬಳಕೆ ಮಾಡುತ್ತಿದ್ದಾರೆ. ಇದಕ್ಕೆ ಸರ್ಕಾರ ಅವಕಾಶ ಯಾಕೆ ಕಲ್ಪಿಸಬಾರದು ಎಂದು ಪ್ರಶ್ನೆ ಮಾಡಿದರು. ನಿಮಗೆ ನೀರಾ ಕುಡಿದು ಅಭ್ಯಾಸವಿದೆಯೇ ಎಂದು ಪ್ರಶ್ನಿಸಿದರು. ನಾನು ನೀರಾ ಕುಡಿಯಬೇಕೆಂದು ಕೆಲವು ಸಂದರ್ಭದಲ್ಲಿ ಪ್ರಯತ್ನಪಟ್ಟೆ ಆದರೆ ಅದು ಕುಡಿದ ನಂತರ ಎಲ್ಲಿ ಕಿಕ್ ಹೊಡೆದು ಅಮಲು ತಂದುಬಿಡುತ್ತದೆಯೋ ಎಂದು ಕುಡಿಯಲಿಲ್ಲ. ನಿಮ್ಮಷ್ಟು ದಷ್ಟಪುಷ್ಟನಾಗಿದ್ದರೆ ಕುಡಿಯುತ್ತಿದ್ದೆ ಎಂದು ಹಾಸ್ಯ ಚಟಾಕಿ ಹಾರಿಸಿದರು.
eesanje/url_46_227_8.txt ADDED
@@ -0,0 +1,5 @@
 
 
 
 
 
 
1
+ ಅಯೋಧ್ಯೆ ರೈಲಿಗೆ ಬೆಂಕಿ ಬೆದರಿಕೆ: ಪರಿಷತ್‍ನಲ್ಲಿ ಪ್ರತಿಧ್ವನಿ
2
+ ಬೆಂಗಳೂರು ಫೆ.23- ಮೈಸೂರು- ಅಯೋಧ್ಯೆಧಾಮ, ರೈಲು ಸುಟ್ಟು ಹಾಕುವುದಾಗಿ ಬೆದರಿಸಿದ್ದ ದಾಳಿ ಪ್ರಕರಣ ವಿಧಾನಪರಿಷತ್‍ನಲ್ಲಿ ಪ್ರತಿಧ್ವನಿಸಿತು. ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಸಭಾಧ್ಯಕ್ಷರಾದ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪವನ್ನು ಪ್ರಾರಂಭಿಸಲು ಮುಂದಾದರು. ಆಗ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಅವರು ವಿಷಯ ಪ್ರಸ್ತಾಪಿಸಿದರು.
3
+ ಹೊಸಪೇಟೆ ಬಳಿ ಅಯೋಧ್ಯೆ ರೈಲಿಗೆ ನುಗ್ಗಿದ ದುಷ್ಕರ್ಮಿಗಳು ರಾಮ ಭಕ್ತರಿಗೆ ಧಮಕಿ ಹಾಕಿದ್ದಾರೆ. ರೈಲಿಗೆ ಬೆಂಕಿಹಾಕುವುದಾಗಿ ಬೆದರಿಸಿದ್ದಾರೆ. ಈ ಕುರಿತು ಸರ್ಕಾರದಿಂದ ಈವರೆಗೆ ಯಾವುದೇ ಉತ್ತರ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸದಸ್ಯರಾದ ಬಿ.ಕೆ.ಹರಿಪ್ರಸಾದ್ ಅವರು ಗೋದ್ರಾ ಹತ್ಯಾಕಾಂಡ ಬಗ್ಗೆ ಮಾತನಾಡಿದ್ದರು. ಈಗ ಈ ಘಟನೆ ನಡೆದಿದೆ, ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಮತ್ತೆ ಬಿಟ್ಟು ಕಳುಹಿಸಿದ್ದಾರೆ ಎಂದು ಕಿಡಿಕಾರಿದರು.
4
+ ರಸ್ತೆ ಅಪಘಾತದಲ್ಲಿ ಬಿಆರ್‌ಎಸ್ ಶಾಸಕಿ ಲಾಸ್ಯ ನಂದಿತಾ ಸಾವು
5
+ ಆಗ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಏನು ಇದಕ್ಕೊಂದು ರೀತಿ ನೀತಿ ಬೇಡವೆ. ಕಲಾಪದಲ್ಲಿ ನಿಯಮ ಇದೆ, ಯಾವ ನಿಯಮದಲ್ಲಿ ಪ್ರಶ್ನಿಸಬೇಕು ಎಂಬುದು ಗೊತ್ತಿಲ್ಲವೇ? ಎಂದು ಗರಂ ಆದರು. ಈ ವೇಳೆ ಆಡಳಿತ ವಿಪಕ್ಷ ಸದಸ್ಯರ ನಡುವೆ ವಾಕ್ಸಮರ ನಡೆಯಿತು. ಶೂನ್ಯವೇಳೆಯಲ್ಲಿ ಚರ್ಚೆಗೆ ಅವಕಾಶ ಕೊಡುತ್ತೇನೆ,ಈಗ ಬೇಡ ಎಂದು ಸಭಾಪತಿ ಬಸವರಾಜ ಹೊರಟ್ಟಿ ಗದ್ದಲಕ್ಕೆ ತೆರೆ ಎಳೆದರು.
eesanje/url_46_227_9.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ರೌಡಿಗಳ ಅಟ್ಟಹಾಸ ಅಡಗಿಸಲು ಇಲಾಖೆ ಸಮರ್ಥವಾಗಿದೆ: ಗೃಹ ಸಚಿವ ಪರಮೇಶ್ವರ್
2
+ ಬೆಂಗಳೂರು ಫೆ.23- ಬೆಂಗಳೂರು ಮಹಾ ನಗರದಲ್ಲಿ ರೌಡಿಗಳ ಅಟ್ಟಹಾಸವನ್ನು ಹತ್ತಿಕ್ಕಲು ಪೊಲೀಸರು ಸಮರ್ಥವಾಗಿದ್ದು, ಪ್ರತಿಯೊಬ್ಬರಿಗೂ ಸುರಕ್ಷತೆ ಒದಗಿಸಲು ಗೃಹ ಇಲಾಖೆ ಸಮರ್ಥವಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನ ಪರಿಷತ್‍ನಲ್ಲಿ ಹೇಳಿದ್ದಾರೆ. ಸದಸ್ಯ ನಾಗರಾಜ್ ಯಾದವ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರು ನಗರದಲ್ಲಿ ರೌಡಿಗಳ ಚಲನವಲನಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಪ್ರತಿ ಮೂರ್ನಾಲ್ಕು ತಿಂಗಳಿಗೊಮ್ಮೆ ಅವರ ಮನೆಗಳ ಮೇಲೆ ದಾಳಿ ನಡೆಸುತ್ತಾರೆ.
3
+ ಕಾನೂನು ಮೀರಿ ವರ್ತನೆ ಮಾಡಿದರೆ ಕಾನೂನಿನ ಪ್ರಕಾರವೇ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟರು. ಇತ್ತೀಚೆಗೆ ನಮ್ಮ ನಗರ ಪೊಲೀಸ್ ಆಯುಕ್ತರೇ ಏಕಾಏಕಿ ರೌಡಿಗಳ ಮನೆ ಮೇಲೆ ದಾಳಿ ನಡೆಸಿದ್ದರು. ಮನೆಗಳಲ್ಲಿದ್ದ ಬಂದೂಕು, ಲಾಂಗ್ ಸೇರಿದಂತೆ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಆಯಾ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ರೌಡಿಶೀಟರ್‍ಗಳ ಚಲನವಲನಗಳ ಬಗ್ಗೆ ಕಣ್ಣಿಡುವಂತೆ ಸೂಚನೆ ಕೊಡಲಾಗಿದೆ ಎಂದರು.
4
+ ಬೆಂಗಳೂರು ನಗರದಲ್ಲಿ ನಿರ್ಭಯ ಯೋಜನೆಯಡಿ ನಾವು ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಂಡಿದ್ದೇವೆ. 655 ಕೋಟಿ ವೆಚ್ಚದಲ್ಲಿ ನಗರದಾದ್ಯಂತ 7500 ಸಿಸಿ ಕ್ಯಾಮೆರಾಗಳನ್ನು ಅಳವಿಡಿಸಿದ್ದೇವೆ. ಇತ್ತೀಚೆಗೆ ಸಿಟಿ ಕಮಾಂಡ್ ಕಂಟ್ರೋಲ್ ರೂಮ್ ತೆರೆದಿದ್ದೇವೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲೂ ಈ ಕ್ಯಾಮೆರಾಗಳು 24*7 ಕಾರ್ಯ ನಿರ್ವಹಿಸುತ್ತವೆ ಎಂದು ಹೇಳಿದರು.
5
+ ಮೃತ ರೈತನ ಸಹೋದರಿಗೆ 1 ಕೋಟಿ ರೂ ಪರಿಹಾರ ಘೋಷಿಸಿದ ಪಂಜಾಬ್ ಸರ್ಕಾರ
6
+ ನಗರದ ಯಾವುದೇ ಪ್ರದೇಶಗಳಲ್ಲೂ ಸಿಸಿ ಕ್ಯಾಮೆರಾಗಳ ಕಾರ್ಯ ನಿರ್ವಹಣೆ ಕುರಿತಂತೆ ಕಂಟ್ರೋಲ್ ರೂಮ್ ಮೂಲಕವೇ ನಿಯಂತ್ರಣ ಮಾಡುವ ವ್ಯವಸ್ಥೆಯೂ ಇದೆ. ಎಲ್ಲಾದರೂ ಸಿಸಿ ಕ್ಯಾಮೆರಾಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸದಿದ್ದರೆ ಇಲ್ಲಿಂದಲೇ ನಿರ್ದೇಶನ ನೀಡಬಹುದು. ಇದರಿಂದ ಅಪರಾಧ ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದರು.
7
+ ಇತ್ತೀಚೆಗೆ ಸೇಫ್ಟಿ ಹೈಲ್ಯಾಂಡ್ ಎಂಬ ವಿನೂತನ ಯೋಜನೆಯನ್ನು ಜಾರಿ ಮಾಡಿದ್ದೇವೆ. ಇದರಡಿ ಯಾರದರೂ ಹಲ್ಲೆ ನಡೆಸುವುದು, ಬ್ಯಾಗ್ ಕಿತ್ತುಕೊಂಡು ಹೋಗುವುದು, ನಡುರಸ್ತೆಯಲ್ಲೇ ಆಭರಣ ದೋಚುವುದು ಕಂಡುಬಂದರೆ ತಕ್ಷಣವೇ ಟೆಲಿಫೋನ್‍ನಂತೆ ಒಂದು ಬಟನ್ ಒತ್ತಿದರೆ ಸಾಕು ಕೇವಲ 5 ನಿಮಿಷದೊಳಗೆ ಸ್ಥಳಕ್ಕೆ ಪೊಲೀಸರು ಆಗಮಿಸುತ್ತಾರೆ. ಅಲ್ಲದೆ ಇದರಲ್ಲಿ ಪ್ರತಿಯೊಂದು ಮಾಹಿತಿಗಳು ದಾಖಲಾಗುವುದರಿಂದ ಅಪರಾಧ ಎಸಗಿದವರು ಅಷ್ಟು ಸುಲಭವಾಗಿ ತಲೆಮರೆಸಿಕೊಳ್ಳಲು ಸಾಧ್ಯವಿಲ್ಲ ಎಂದರು.
8
+ ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದ ವಿದೇಶಿಯೊಬ್ಬರು ತಮ್ಮ ಪರ್ಸ್ ಕಳೆದುಕೊಂಡಿದ್ದರು. ಕೂಡಲೇ ಅವರು ಬಟನ್ ಒತ್ತಿದ ಪರಿಣಾಮ ಪೊಲ���ಸರು ಕ್ಷಣಾರ್ಧದಲ್ಲಿ ಅಪರಾಧಿಯನ್ನು ಹಿಡಿಯಲು ಸಾಧ್ಯವಾಯಿತು. ಹೀಗಾಗಿ ಸಾರ್ವಜನಿಕರು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕೆಂದು ಪರಮೇಶ್ವರ್ ಮನವಿ ಮಾಡಿದರು.
9
+ ಇಡೀ ರಾಷ್ಟ್ರದಲ್ಲೇ ಸೈಬರ್ ಕ್ರೈಂ ಠಾಣೆಗಳನ್ನು ಆರಂಭಿಸಿದ ಮೊದಲ ನಗರ ಬೆಂಗಳೂರು. ಪ್ರಾರಂಭದಲ್ಲಿ ಸೈಬರ್ ಅಪರಾಧ ಎಸಗಿದವರ ವಿರುದ್ಧ ರ್ನಿಷ್ಟ ಠಾಣೆಗಳಲ್ಲಿ ಮಾತ್ರ ದೂರು ನೀಡಲು ಅವಕಾಶವಿತ್ತು. ಇದನ್ನು ಬದಲಾಯಿಸಿ ಎಲ್ಲಾ ಠಾಣೆಗಳಲ್ಲೂ ದೂರು ನೀಡುವ ಅವಕಾಶ ಕಲ್ಪಿಸಿದ್ದೇವೆ. ಇದಕ್ಕಾಗಿ ಹೊಯ್ಸಳದವರಿಗೆ ವಿಶೇಷ ತರಬೇತಿಯನ್ನು ನೀಡಲಾಗುತ್ತದೆ.
10
+ ಮೃತ ರೈತನ ಸಹೋದರಿಗೆ 1 ಕೋಟಿ ರೂ ಪರಿಹಾರ ಘೋಷಿಸಿದ ಪಂಜಾಬ್ ಸರ್ಕಾರ
11
+ ಸಾರ್ವಜನಿಕರ ರಕ್ಷಣೆಗಾಗಿ ನಾವು 112 ಸಹಾಯವಾಣಿಯನ್ನು ಆರಂಭಿಸಿದ್ದೇವೆ. ಇದಕ್ಕೆ ಸರಿಯಾದ ಮಾಹಿತಿ ಕೊಟ್ಟರೆ ಅಪರಾಧ ಸ್ಥಳಕ್ಕೆ ತಕ್ಷಣವೇ ಪೊಲೀಸರು ಆಗಮಿಸಿ ಅಪರಾಧಿಗಳನ್ನು ಹಿಡಿಯಲು ಅನುಕೂಲವಾಗುತ್ತದೆ. ಒಟ್ಟಿನಲ್ಲಿ ಬೆಂಗಳೂರುಮಹಾನಗರದಲ್ಲಿ ಅಪರಾಧ ನಿಯಂತ್ರಣಕ್ಕೆ ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಎಲ್ಲರಿಗೂ ಸುರಕ್ಷತೆ ಒದಗಿಸುವುದೇ ನಮ್ಮ ಇಲಾಖೆಯ ಪ್ರಮುಖ ಉದ್ದೇಶವಾಗಿದೆ ಎಂದು ಪರಮೇಶ್ವರ್ ಹೇಳಿದರು.
eesanje/url_46_228_1.txt ADDED
@@ -0,0 +1,7 @@
 
 
 
 
 
 
 
 
1
+ “ನಷ್ಟ ಸರಿದೂಗಿಸಲು ವಿದ್ಯುತ್ ದರ ಏರಿಕೆ ಪರಿಹಾರವಲ್ಲ”
2
+ ಬೆಂಗಳೂರು,ಫೆ.22- ವಿದ್ಯುತ್ ಸರಬರಾಜು ಕಂಪನಿಗಳ ಪರ್ಯಾಯ ಮೂಲಗಳಿಂದ ಸಂಪನ್ಮೂಲ ಕ್ರೋಡೀಕರಿಸಿ ಅನಗತ್ಯ ಖರ್ಚು ಮಾಡುವುದನ್ನು ನಿಲ್ಲಿಸಿ ಎಂದು ಸಲಹೆ ನೀಡಿರುವ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಅಧ್ಯಕ್ಷ ಪಿ.ರವಿಕುಮಾರ್ ನಷ್ಟ ಸರಿದೂಗಿಸಲು ವಿದ್ಯುತ್ ದರ ಏರಿಕೆ ಪರಿಹಾರವಲ್ಲ ಎಂದು ತಿಳಿಸಿದ್ದಾರೆ.
3
+ ಹುಬ್ಬಳ್ಳಿಯ ನವನಗರದಲ್ಲಿರುವ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಎಸ್ಕಾಂ) ಕಾಪೆರ್ರೇಟ್ ಕಚೇರಿಯಲ್ಲಿ ನಡೆದ ಕೆಇಆರ್‍ಸಿ ಸಾರ್ವಜನಿಕ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಸ್ಕಾಂ ಪ್ರಸ್ತಾಪಿತ ಶೇ. 0.57 ದರ ಏರಿಕೆಯ ವಿಚಾರವಾಗಿ ಪ್ರತಿಕ್ರಿಯಿಸಿದರು. ನಷ್ಟವನ್ನು ಸರಿದೂಗಿಸಲು ವಿದ್ಯುತ್ ದರ ಏರಿಕೆಯೊಂದೇ ಪರಿಹಾರವಲ್ಲ. ದರ ಏರಿಸಿದರೆ ಗ್ರಾಹಕರಿಗೆ ದೊಡ್ಡ ಹೊರೆಯಾಗುತ್ತದೆ. ಎಸ್ಕಾಂ ವಿತರಣಾ ನಷ್ಟವನ್ನು ತಡೆಯಬೇಕು, ಅನಗತ್ಯ ವೆಚ್ಚಗಳನ್ನು ನಿರ್ಬಂಧಿಸಬೇಕು ಎಂದು ಅವರು ಸಲಹೆ ನೀಡಿದರು.
4
+ ಶೀಘ್ರದಲ್ಲಿ ಗ್ರಾಹಕರ ಕುಂದುಕೊರತೆಗಳನ್ನು ಪರಿಹರಿಸಲು ಗ್ರಾಹಕರ ಹಿತರಕ್ಷಣಾ ವೇದಿಕೆ ಪ್ರಾರಂಭಿಸುವ ಭರವಸೆ ನೀಡಿದರು. ವಿದ್ಯುತ್ ಉತ್ಪಾದಿಸಲು ಸೋಲಾರ್ ರೂಪ್ ಟಾಪ್ ಫೋಟೋ ವೋಲ್ಟಾಯಿಕ್ (ಎಸ್‍ಆರ್‍ಟಿಪಿವಿ) ಹೊಂದಿದ್ದು, ಅದನ್ನು ಎಸ್ಕಾಂಗೆ ನೀಡುತ್ತೇವೆ ಎಂದು ಈ ಸಂದರ್ಭದಲ್ಲಿ ಗ್ರಾಹಕರು ಹೇಳಿದರು. ಬಳಕೆಯಾಗುವುದಕ್ಕಿಂತ ಹೆಚ್ಚಿನ ಯೂನಿಟ್‍ಗಳನ್ನು ಉತ್ಪಾದಿಸಿದರೂ ಎಸ್ಕಾಂ ನಿರಂತರವಾಗಿ ದರ ಮತ್ತು ಸ್ಥಿರ ಶುಲ್ಕವನ್ನು ಹೆಚ್ಚಿಸುತ್ತಿರುವುದರಿಂದ ಎಸ್‍ಆರ್‍ಟಿಪಿವಿಗಳಿಂದ ಪ್ರಯೋಜನವಾಗುತ್ತಿಲ್ಲ ಎಂದು ಗ್ರಾಹಕರು ದೂರಿದ್ದಾರೆ.
5
+ ಅನಂತ್ ಅಂಬಾನಿ ಮದುವೆಗೆ, ಬಿಲ್‍ಗೇಟ್ಸ್, ಜುಕರ್ಬರ್ಗ್ ಸೇರಿದಂತೆ ಜಾಗತಿಕ ಉದ್ಯಮಿಗಳಿಗೆ ಆಹ್ವಾನ
6
+ ಈ ಮಧ್ಯೆ ಬಿಲ್ ಸಮಸ್ಯೆ ಬಗ್ಗೆ ಒಪ್ಪಿಕೊಂಡ ಅವರು, ಈ ಸಮಸ್ಯೆಯನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು. ವಿದ್ಯುತ್ ದರ ಹೆಚ್ಚಳ ಹಿನ್ನೆಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಬಂಡವಾಳ ಹೂಡಲು ಅನೇಕರು ಹಿಂದೇಟು ಹಾಕುತ್ತಿದ್ದಾರೆ ಎಂದು ಕೈಗಾರಿಕಾ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ನಾಗರಾಜು ಎಲಿಗಾರ್ ಹೇಳಿದರು. ಕೆಲವು ಕೈಗಾರಿಕೆಗಳು ಮಹಾರಾಷ್ಟ್ರ, ತಮಿಳುನಾಡಿಗೆ ಸ್ಥಳಾಂತರಗೊಳ್ಳುತ್ತಿವೆ. ಅಲ್ಲಿ ಕೈಗಾರಿಕೆಗಳಿಗೆ ಅಗ್ಗದ ದರದಲ್ಲಿ ವಿದ್ಯುತ್ ನೀಡಲಾಗುತ್ತ್ತದೆ ಎಂದು ಹೇಳಿದ್ದಾರೆ.
7
+ ವಿದ್ಯುಚ್ಛಕ್ತಿಯು ಎಲ್ಲಾ ಕೈಗಾರಿಕೆಗಳಿಗೆ ಅಗತ್ಯವಾಗಿದೆ. ಕೈಗಾರಿಕೆಗಳಲ್ಲಿ ಒಟ್ಟು ವೆಚ್ಚದ ಶೇ.15 ರಿಂದ 20 ರಷ್ಟನ್ನು ವಿದ್ಯುತ್‍ಗಾಗಿ ಖರ್ಚು ಮಾಡುತ್ತಾರೆ. ಆದ್ದರಿಂದ ಎಸ್ಕಾಂಗಳು ವಿದ್ಯುತ್ ದರ ಕಡಿಮೆ ಮಾಡಬೇಕು. ಇಲ್ಲವಾದರೆ ಅಸ್ತಿತ್ವದಲ್ಲಿರುವ ಕೈಗಾರಿಕೆಗಳು ಸಹ ಇತರ ರಾಜ್ಯಗಳಿಗೆ ಸ್ಥಳಾಂತರಗೊಳ್ಳುತ್ತವೆ ಎಂದು ಎಚ್ಚರಿಕೆ ನೀಡಿದರು.
eesanje/url_46_228_10.txt ADDED
@@ -0,0 +1,6 @@
 
 
 
 
 
 
 
1
+ ರಾಜ್ಯಸಭೆ ಚುನಾವಣೆ : ಅಮಿತ್ ಷಾ ಜೊತೆ ಕುಮಾರಸ್ವಾಮಿ ಮಾತುಕತೆ
2
+ ದೆಹಲಿ,ಫೆ.22- ಮುಂಬರುವ ಲೋಕಸಭೆ ಚುನಾವಣೆ ಹಾಗೂ ಪ್ರಸಕ್ತ ರಾಜ್ಯಸಭೆ ಚುನಾವಣೆ ಕಾರ್ಯತಂತ್ರ ಕುರಿತಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಷಾ ಇಂದು ಮಾತುಕತೆ ನಡೆಸಿದ್ದಾರೆ. ನವದೆಹಲಿ ನಿವಾಸದಲ್ಲಿ ಅಮಿತ್ ಷಾ ಕುಮಾರಸ್ವಾಮಿ ಭೇಟಿಯಾಗಿ ಸುಮಾರು ಅರ್ಧಗಂಟೆ ಕಾಲ ರಾಜ್ಯಸಭೆ ಚುನಾವಣೆ ಕಾರ್ಯತಂತ್ರ, ಲೋಕಸಭೆ ಚುನಾವಣೆ ಸಿದ್ಧತೆ, ಬಿಜೆಪಿ-ಜೆಡಿಎಸ್ ನಡುವೆ ಕ್ಷೇತ್ರಗಳ ಹಂಚಿಕೆ, ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
3
+ ನಿನ್ನೆ ಸಂಜೆ ದೆಹಲಿಗೆ ಜೆಡಿಎಸ್ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರೊಂದಿಗೆ ತೆರಳಿದ್ದ ಕುಮಾರಸ್ವಾಮಿಯವರು ಅಮಿತ್ ಷಾರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ವಿಧಾನಪರಿಷತ್‍ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿಗೆ ಉಂಟಾಗಿರುವ ಸೋಲಿನ ಪರಾಮರ್ಶೆಯನ್ನು ಮಾಡಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಎನ್‍ಡಿಎ 2ನೇ ಅಭ್ಯರ್ಥಿ ಕುಪೇಂದ್ರರೆಡ್ಡಿಯವರ ಗೆಲುವಿನ ಸಾಧ್ಯಾಸಾಧ್ಯತೆಗಳ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದಾರೆ.
4
+ ಸದನದಲ್ಲಿ ಸಚಿವರು, ಅಧಿಕಾರಿಗಳು ಹಾಜರಿಲ್ಲ : ಅಶೋಕ್ ಆಕ್ಷೇಪ
5
+ ಲೋಕಸಭೆ ಚುನಾವಣೆಯಲ್ಲಿ ಉಭಯ ಪಕ್ಷಗಳ ನಡುವೆ ಕ್ಷೇತ್ರ ಹಂಚಿಕೆ ಹಾಗೂ ಎನ್‍ಡಿಎ ಅಭ್ಯರ್ಥಿಗಳ ಆಯ್ಕೆ ಕುರಿತಂತೆಯೂ ಸಮಾಲೋಚನೆ ನಡೆಸಿದ್ದಾರೆ. ಅಲ್ಲದೆ ಪ್ರಚಲಿತ ರಾಜಕೀಯ ವಿದ್ಯಮಾನಗಳು ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ಎನ್‍ಡಿಎ ಅಭ್ಯರ್ಥಿಗಳು ಗೆಲ್ಲಲು ಬೇಕಾದ ಕಾರ್ಯತಂತ್ರ, ಚುನಾವಣೆ ಸಿದ್ಧತೆ ಕಾರ್ಯತಂತ್ರದ ಬಗ್ಗೆಯೂ ಸಮಾಲೋಚನೆ ನಡೆಸಿದ್ದಾರೆ.
6
+ ಜೆಡಿಎಸ್‍ಗೆ ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳನ್ನು ಬಿಟ್ಟುಕೊಟ್ಟು ಉಳಿದ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆಯೂ ಉಭಯ ನಾಯಕರು ಸಮಾಲೋಚನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
eesanje/url_46_228_11.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಮಲ್ಲಿಕಾರ್ಜುನ ಖರ್ಗೆಯವರೇ ಬಿಜೆಪಿಗೆ ಬರುವ ಸಾಧ್ಯತೆ ಇದೆ : ಯತ್ನಾಳ್
2
+ ಬೆಂಗಳೂರು, ಫೆ.22- ವಿಧಾನಸಭೆಯಲ್ಲಿ ಬಜೆಟ್ ಮೇಲೆ ಚರ್ಚೆಯ ನಡುವೆ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಮತ್ತೊಮ್ಮೆ ಗಮನ ಸೆಳೆಯುವ ಹೇಳಿಕೆ ನೀಡಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಬಿಜೆಪಿಗೆ ಬರುವ ಸಾಧ್ಯತೆ ಇದೆ ಎಂದು ಹೇಳಿದರು. ಬಿಜೆಪಿ ಉಪನಾಯಕ ಅರವಿಂದ ಬೆಲ್ಲದ್ ಬಜೆಟ್ ಮೇಲೆ ಚರ್ಚೆ ಮಾಡುವಾಗ, ಸಿದ್ದರಾಮಯ್ಯ ಅವರ ಸರ್ಕಾರ ಸಾಲ ಮಾಡಿ ತುಪ್ಪ ತಿನ್ನುವಂತಹ ಬಜೆಟ್ ಮಂಡಿಸಿದೆ.
3
+ ರೈತರ ಮೇಲಷ್ಟೆ ಅಲ್ಲ ಮುಖ್ಯಮಂತ್ರಿಯವರು ಡಿ.ಕೆ.ಶಿವಕುಮಾರ್ ಮೇಲಿನ ಸಿಟ್ಟಿಗೆ ನೀರಾವರಿ ಇಲಾಖೆಗೆ ಕಡಿಮೆ ಅನುದಾನ ಕಡಿತ ಮಾಡಿದ್ದಾರೆ. ಸಚಿವ ಪ್ರಿಯಾಂಕ ಖರ್ಗೆಗೆ ರಾಜ್ಯದ ಉದಯೋನ್ಮುಖ ನಾಯಕ ಎನ್ನುತ್ತಿದ್ದಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಎಷ್ಟು ಬಾಕಿ ಉಳಿಸಿತ್ತು ಎಂದು ಹೇಳಿ ಎಂದು ಸವಾಲು ಹಾಕಿದರು.
4
+ ಸಚಿವ ಪ್ರಿಯಾಂಕ್ ಖರ್ಗೆ ಇದಕ್ಕೆ ಧ್ವನಿಗೂಡಿಸಿದರು. ಮಧ್ಯ ಪ್ರವೇಶಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಶೇ.40ರಷ್ಟು ಕಮಿಷನ್ ತನಿಖೆ ಪೂರ್ಣಗೊಳಿಸಿ. ಈ ಸರ್ಕಾರ ಬಂದು ಒಂಬತ್ತು ತಿಂಗಳಾಯಿತು. ಪಿಎಸ್‍ಐ ಹಗರಣದ್ದು ತನಿಖೆ ಪೂರ್ಣಗೊಂಡಿಲ್ಲ ಎಂದಾಗ, ಪ್ರಿಯಾಂಕ್ ಖರ್ಗೆ, ಬಹಿರಂಗವಾಗಿ ಹೇಳಿಕೆ ನೀಡಿದ್ದ ಯತ್ನಾಳ್ ಅವರು ಪಿಎಸ್‍ಐ ಹಗರಣದ ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ವೀರಪ್ಪ ಆಯೋಗದ ಮುಂದೆ ಹೇಳಿಕೆ ನೀಡಿಲ್ಲ. ನಾವು ನಿಮ್ಮ ಹೇಳಿಕೆ ಕಾಯುತ್ತಿದ್ದೇವೆ. ತನಿಖೆಗೆ ನಿಮ್ಮ ಸಹಕಾರ ಬೇಕಿದೆ ಎಂದು ಮನವಿ ಮಾಡಿದರು.
5
+ ವಿದ್ಯುತ್ ಕಂಬದಿಂದ ಬಿದ್ದು ಲೈನ್‍ಮನ್ ಸಾವು
6
+ ಇನ್ನು ಶೇ.40ರಷ್ಟು ಹಗರಣದಲ್ಲಿ ಎಷ್ಟು ನುಂಗಿದ್ದಾರೆ ಎಂದರೆ, ಅದರ ಆಳ ಅಗಲವೇ ಗೊತ್ತಾಗುತ್ತಿಲ್ಲ. ಎಂದು ಪ್ರಿಯಾಂಕ್ ಖರ್ಗೆ ಆತಂಕ ವ್ಯಕ್ತ ಪಡಿಸಿದರು. ಬಸನಗೌಡ ಪಾಟೀಲ್ ಯತ್ನಾಳ್ ಈ ಸರ್ಕಾರ ಬಂದಾಗ ಶುರುವಾಗಿರುವ ಶೇ.40ರಷ್ಟು ಕಮಿಷನ್ ಬಗ್ಗೆಯೂ ತನಿಖೆಯಾಗಬೇಕು. ಸಿಬಿಐಗೆ ವಹಿಸಿ ಎಂದರು. ಆಗ ಕಾಂಗ್ರೆಸ್ ಶಾಸಕರು ಯತ್ನಾಳ್ ಅವರನ್ನು ಕೆಣಕಿದಾಗ, ಸರ್ವಪಕ್ಷದ ಅಧಿಕೃತ ವಿರೋಧ ಪಕ್ಷದ ನಾಯಕ ನಾನೇ ಎಂದು ಯತ್ನಾಳ್ ಸೆಟೆದು ನಿಂತರು.
7
+ ಮುಂದುವರೆದ ಚರ್ಚೆಯಲ್ಲಿ ಅರವಿಂದ್ ಬೆಲ್ಲದ್ ಪ್ರಿಯಾಂಕ್ ಖರ್ಗೆ ಕಾಂಗ್ರೆಸ್‍ನಿಂದ ತಾವು ಮುಖ್ಯಮಂತ್ರಿಯಾಗುವುದಾಗಿ ಹೇಳಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಯಾಗಬಹುದು ಎಂದಾಗ ಬಸನಗೌಡ ಪಾಟೀಲ್ ಯತ್ನಾಳ್, ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿವೆ. ಕಾಂಗ್ರೆಸ್ ನ ಕಮಲ್ ನಾಥ್ ಬಿಜೆಪಿಗೆ ಬರುತ್ತಿದ್ದಾರೆ. ಮುಂದೆ ಮತ್ತಷ್ಟು ಮಂದಿ ಬರುತ್ತಾರೆ. ಮಲ್ಲಿಕಾರ್ಜುನ ಖರ್ಗೆ ಕೂಡ ಬಿಜೆಪಿಗೆ ಬರುತ್ತಾರೆ ಎಂದರು.
8
+ ಆಗ ಪ್ರಿಯಾಂಕ್ ಖರ್ಗೆ, ನಮ್ಮ ಹೆಣ ಕೂಡ ಬಿಜೆಪಿಗೆ ಹೋಗಲ್ಲ. ಅದು ನಮ್ಮ ರಕ್ತದಲ್ಲೇ ಇಲ್ಲ. ಸಂವಿಧಾನ ಹೇಗೆ ನಿಮ್ಮ ರಕ್ತದಲ್ಲಿ ಇಲ್ಲವೋ ಹಾಗೇ, ಆರ್ ಎಸ್ ಎಸ್ ನಮ್ಮ ರಕ್ತದಲ್ಲಿ ಇಲ್ಲ ಎಂದರು. ಯತ್ನಾಳ್, ಸಂವಿಧಾನವನ್ನು ಸಮರ್ಪಕವಾಗಿ ಜಾರಿ ಮಾಡುತ್ತಿರುವುದು ನಾವೇ ಎಂದು ಸಮರ್ಥಿಸಿಕೊಂಡರು. ಪ್ರಿಯಾಂಕ್ ಖರ್ಗೆ, ನೀವು ಹೇಗೆ ಸಂವಿಧಾನ ಸರಿಯಾಗಿ ಜಾರಿ ಮಾಡಿದ್ದೀರಾ ಸರ್, ಒಂದು ಧರ್ಮಕ್ಕೆ ಮಾತ್ರ ಆದ್ಯತೆ ನೀಡುವುದು ಸಂವಿಧಾನ ಬದ್ಧವೇ ಎಂದು ಪ್ರಶ್ನಿಸಿದರು.
9
+ ಶಿಕ್ಷಕರ ಕ್ಷೇತ್ರದ ಗೆಲುವು ಲೋಕಸಭೆಗೆ ದಿಕ್ಸೂಚಿ : ಸಿಎಂ
10
+ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಎದ್ದು ನಿಂತು, ಅರವಿಂದ್ ಬೆಲ್ಲದ್ ಅವರು ಸಾಲದ ಬಗ್ಗೆ ಹೇಳಿದ್ದಾರೆ, ಅದರ ಬಗ್ಗೆ ನಾನು ಸ್ಪಷ್ಟನೆ ನೀಡಬೇಕು ಎಂದು ಮಾತನಾಡಲು ಅವಕಾಶ ಕೇಳಿದರು. ಅದಕ್ಕೆ ಚರ್ಚೆಯಲ್ಲಿ ಭಾಗವಹಿಸಿದ್ದ ಅರವಿಂದ್ ಬೆಲ್ಲದ್ ಅವಕಾಶ ನೀಡಲಿಲ್ಲ. ನಾನು ಯೀಡ್ಲ್ ಆಗಿಲ್ಲ ಎಂದು ಪ್ರದೀಪ್ ಈಶ್ವರ್ ಹೇಳಿದರು. ಮಾತನಾಡುವ ಸರದಿಯಲ್ಲಿ ಇರುವವರು ಅರವಿಂದ್ ಬೆಲ್ಲದ್ ಅವರು ಯೀಲ್ಡ್ ಆಗಬೇಕಿರುವುದು ಅವರು ನೀವಲ್ಲ ಎಂದು ಹಿರಿಯ ಶಾಸಕರು ಪ್ರದೀಪ್ ಈಶ್ವರ್‍ಗೆ ತಿಳಿ ಹೇಳಿದರು.
eesanje/url_46_228_12.txt ADDED
@@ -0,0 +1,6 @@
 
 
 
 
 
 
 
1
+ ಸದನದಲ್ಲಿ ಸಚಿವರು, ಅಧಿಕಾರಿಗಳು ಹಾಜರಿಲ್ಲ : ಅಶೋಕ್ ಆಕ್ಷೇಪ
2
+ ಬೆಂಗಳೂರು,ಫೆ.22- ಸದನದಲ್ಲಿ ಸಚಿವರು, ಅಧಿಕಾರಿಗಳು ಹಾಜರಿಲ್ಲ. ಹೀಗಾದರೆ ಸದನ ಏಕೆ ನಡೆಸಬೇಕು ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ತೀವ್ರ ಆಕ್ಷೇಪವನ್ನು ವಿಧಾನಸಭೆಯಲ್ಲಿಂದು ವ್ಯಕ್ತಪಡಿಸಿದರು. ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡಾಗ ಅಶೋಕ್‍ರವರು ಆಡಳಿತ ಪಕ್ಷದ ಮುಂದಿನ ಎರಡೂ ಸಾಲುಗಳು ಖಾಲಿ ಇವೆ. ಮಂತ್ರಿಗಳಿಲ್ಲ, ಅಧಿಕಾರಿಗಳೂ ಇಲ್ಲ. ಹೀಗಾದರೆ ಏಕೆ ಅಧಿವೇಶನ ನಡೆಸಬೇಕು, ನಮಗೂ ಕಾರ್ಯಕ್ರಮಗಳಿವೆ, ಪ್ರವಾಸ ಹೋಗಬೇಕಿತ್ತು. ಅಧಿವೇಶನ ಮುಖ್ಯವಲ್ಲವೇ ಎಂದು ತರಾಟೆಗೆ ತೆಗೆದುಕೊಂಡರು.
3
+ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯೇ? ಅವರದೇ ಆದ ಅಜೆಂಡಾ ಹಮ್ಮಿಕೊಂಡಿದ್ದಾರೆ. ನಮಗೆಲ್ಲಾ ಜ್ವರ, ನೆಗಡಿ, ತಲೆನೋವು, ಗಂಟಲುನೋವು, ಕಣ್ಣಿನ ಸೋಂಕು ಉಂಟಾಗಿದೆ. ಪ್ರತಿದಿನ 7 ಗಂಟೆ ಅಧಿವೇಶನದಲ್ಲಿ ಕೂರುತ್ತಿದ್ದೇವೆ. 8 ಗಂಟೆ ಅಧಿವೇಶನ ನಡೆಸಲು ನಮಗೇನು ತಕರಾರಿಲ್ಲ. ಸಮಯಕ್ಕೆ ಸರಿಯಾಗಿ ಸಚಿವರು ಬರಬೇಕಲ್ಲವೇ? ನಿರಂತರವಾಗಿ ಎಸಿಯಲ್ಲಿ ಕೂರುವುದರಿಂದರ ಆರೋಗ್ಯವೂ ಹದಗೆಡುತ್ತಿದೆ ಎಂದರು. ಆಗ ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ನನಗೂ ಆರೋಗ್ಯ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಾಗುವ ಪರಿಸ್ಥಿತಿ ಉಂಟಾಗಿದೆ ಎಂದು ಹೇಳಿದರು.
4
+ ಪಿಯುಸಿ, ಎಸ್‍ಎಸ್‍ಎಲ್‍ಸಿ ಪರೀಕ್ಷೆ ದಿನಾಂಕ ಪ್ರಕಟ
5
+ ಸಭಾಧ್ಯಕ್ಷ ಯು.ಟಿ.ಖಾದರ್ ಮಾತನಾಡಿ, ಬಜೆಟ್ ಮೇಲಿನ ಚರ್ಚೆ ನಡೆಯುವಾಗ ಮಂತ್ರಿಗಳಿರಬೇಕಲ್ಲವೇ? ಸಾಲಿನಲ್ಲಿ ಮಂತ್ರಿಗಳ್ಯಾರು ಇಲ್ಲ ಎಂದರೆ ಹೇಗೆ. ಇಂದು ವಿಧಾನಸೌಧದಲ್ಲಿ ಸರ್ಕಾರದ ಕಾರ್ಯಕ್ರಮ ಇರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಲ್ಲಿದ್ದಾರೆ. ತದನಂತರ ಸದನಕ್ಕೆ ಆಗಮಿಸುತ್ತಾರೆ. ಕಲಾಪ ಆರಂಭಿಸೋಣ ಎಂದರು. ಆಗಲೂ ವಿರೋಧ ಪಕ್ಷದವರು ಆಕ್ಷೇಪ ವ್ಯಕ್ತಪಡಿಸಿದಾಗ ಸಭಾಧ್ಯಕ್ಷರು ಸರಿಯಾದ ಸಮಯಕ್ಕೆ ಶಾಸಕರು, ಸಚಿವರು ಆಗಮಿಸಿ ಸದನದಲ್ಲಿರಬೇಕು, ಇದು ನಮಗೆ ಕೊಡುವ ಗೌರವವಲ್ಲ, ನಾಡಿನ ಜನತೆಗೆ ಕೊಡುವ ಗೌರವ ಎಂದರು.
6
+ ವಿರೋಧಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಮಾತನಾಡಿ, ಅಧಿವೇಶನದ ನಡೆಯುವಾಗ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಾರದಲ್ಲವೇ? ಎಂದರು ಆಗ ಸಭಾಧ್ಯಕ್ಷರು ಸಂಪ್ರದಾಯ ತಪ್ಪಿಸಲಾಗದು, ಎಲ್ಲಾ ರೋಗಕ್ಕೂ ಮದ್ದಿದೆ. ಟೆನ್ಶನ್‍ಗೆ ಮದ್ದಿಲ್ಲ ಎಂದು ಹೇಳಿ ಮುಂದಿನ ಕಾರ್ಯಕಲಾಪಕ್ಕೆ ಅನುವು ಮಾಡಿಕೊಟ್ಟರು.
eesanje/url_46_228_2.txt ADDED
@@ -0,0 +1,7 @@
 
 
 
 
 
 
 
 
1
+ ಡಿಕೆಶಿ ಗಡ್ಡದ ಕುರಿತು ಮೇಲ್ಮನೆಯಲ್ಲಿ ಸ್ವಾರಸ್ಯಕರ ಚರ್ಚೆ
2
+ ಬೆಂಗಳೂರು,ಫೆ.22- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗಡ್ಡ ಬಿಟ್ಟಿರುವ ವಿಷಯ ವಿಧಾನಪರಿಷತ್‍ನಲ್ಲಿ ಕೆಲ ಹೊತ್ತು ಸ್ವಾರಸ್ಯಕರ ಚರ್ಚೆಗೆ ಗ್ರಾಸವಾಯಿತು. ಬಜೆಟ್ ಮೇಲಿನ ಚರ್ಚೆಯಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ಅವರು ಮಾತನಾಡುತ್ತಿದ್ದಾಗ ತಮ್ಮ ಸರ್ಕಾರ ಕೈಗೊಂಡಿರುವ ಸಾಧನೆಗಳನ್ನು ವಿವರಿಸುತ್ತಿದ್ದರು.
3
+ ಅಂದು ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಹಗಲು ರಾತ್ರಿ ಎನ್ನದೆ ಗಲ್ಲಿ ಗಲ್ಲಿಗಳನ್ನು ಸುತ್ತಿ , ನಾವು ಅಧಿಕಾರಕ್ಕೆ ಬಂದರೆ ಏನೆಲ್ಲಾ ಕಾರ್ಯಕ್ರಮಗಳನ್ನು ಜಾರಿಗೆ ತರಲಿದ್ದೇವೆ ಎಂಬುದರ ಕುರಿತು ಜನತೆಗೆ ಆಶ್ವಾಸನೆ ಕೊಟ್ಟಿದ್ದರು. ಅದರಲ್ಲೂ ನಮ್ಮ ಉಪಮುಖ್ಯಮಂತ್ರಿಗಳಾದ ಶಿವಕುಮಾರ್ ಅವರ ಪಾತ್ರ ಬಹುದೊಡ್ಡದು ಎಂದು ಹೇಳುತ್ತಿದ್ದಂತೆ, ಪ್ರತಿಪಕ್ಷದ ನಾಯಕದ ಕೋಟಾ ಶ್ರೀನಿವಾಸ್ ಪೂಜಾರಿ ಎಲ್ಲಾ ಓಕೆ ನಿಮ್ಮ ಡಿಸಿಎಂ ಅವರು ಗಡ್ಡ ಬಿಟ್ಟಿರುವುದು ಏಕೆ ಎಂದು ಕಾಲೆಳೆದರು.
4
+ ಸಭಾಪತಿಗಳೇ, ರಾಜ್ಯದಲ್ಲಿಂದು ಡಿ.ಕೆ.ಶಿವಕುಮಾರ್ ಗಡ್ಡ ಬಿಟ್ಟಿರುವ ವಿಷಯ ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ. ಅವರು ಗಡ್ಡ ಬಿಟ್ಟಿರುವುದರ ಬಗ್ಗೆ ಒಂದೊಂದು ರೀತಿಯ ವ್ಯಾಖ್ಯಾನಗಳು ಕೇಳಿಬರುತ್ತಿವೆ. ತಮ್ಮ ಉದ್ದೇಶ ಈಡೇರುವವರೆಗೂ ಅವರು ಗಡ್ಡ ತೆಗೆಯುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಆ ಉದ್ದೇಶವಾದರೂ ಏನು? ಅದು ಈಡೇರುತ್ತದೆಯೋ ಇಲ್ಲವೋ ಈಡೇರಲು ಕೆಲವರು ಅವಕಾಶ ಕೊಡುತ್ತಾರೆಯೇ? ಇಲ್ಲವೇ ಹೀಗೆ ಗಡ್ಡ ಬಿಟ್ಟುಕೊಂಡೇ ಇರುತ್ತಾರೆಯೇ? ಎಂಬುದು ರಾಜ್ಯದ ಜನತೆಯಲ್ಲೂ ಕುತೂಹಲ ಮೂಡಿಸಿದೆ ಎಂದು ಕಿಚಾಯಿಸಿದರು.
5
+ ಅನಂತ್ ಅಂಬಾನಿ ಮದುವೆಗೆ, ಬಿಲ್‍ಗೇಟ್ಸ್, ಜುಕರ್ಬರ್ಗ್ ಸೇರಿದಂತೆ ಜಾಗತಿಕ ಉದ್ಯಮಿಗಳಿಗೆ ಆಹ್ವಾನ
6
+ ಆಗ ಪರಿಷತ್‍ನ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು, ಡಿ.ಕೆ.ಶಿವಕುಮಾರ್ ಏಕೆ ಗಡ್ಡ ಬಿಟ್ಟಿದ್ದಾರೆ ಎಂಬುದನ್ನು ನಾನು ಹೇಳುತ್ತೇನೆ. ಅವರು ಮುಖ್ಯಮಂತ್ರಿ ಆಗುವವರೆಗೂ ಗಡ್ಡ ತೆಗೆಯುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಈಗ ತಮ್ಮ ಗುರಿ ತಲುಪುತ್ತೇನೆಯೋ ಇಲ್ಲವೋ ಎಂಬ ಆತಂಕ ಅವರಿಗೆ ಶುರುವಾಗಿದೆ. ಹೀಗಾಗಿಯೇ ಗಡ್ಡ ತೆಗೆಯಲು ಹಿಂದೆ-ಮುಂದೆ ನೋಡುತ್ತಿದ್ದಾರೆ ಎಂದರು.
7
+ ಇದಕ್ಕೆ ಆಕ್ಷೇಪಿಸಿದ ಸದಸ್ಯೆ ಉಮಾಶ್ರೀ, ನಿಮ್ಮ ಪ್ರಧಾನಿ ನರೇಂದ್ರಮೋದಿ ಅವರೂ ಗಡ್ಡ ಬಿಟ್ಟಿದ್ದಾರೆ. ಹಾಗಾದರೆ ಅವರು ಹಿಂದೆ ಪ್ರಧಾನಿಯಾಗುವವರೆಗೂ ಗಡ್ಡ ತೆಗೆಯುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆಯೇ? ಮೊದಲು ನಿಮ್ಮ ಮೋದಿಯವರಿಗೆ ಗಡ್ಡ ತೆಗೆಯಲು ಹೇಳಿ ಎಂದು ತಿರುಗೇಟು ನೀಡಿದರು.
eesanje/url_46_228_3.txt ADDED
@@ -0,0 +1,7 @@
 
 
 
 
 
 
 
 
1
+ ಆರ್ಥಿಕ ಸಂಕಷ್ಟದಲ್ಲಿರುವ ಸರ್ಕಾರದಿಂದ ಶ್ರೀಮಂತ ದೇವಾಲಯಕ್ಕೆ ಕನ್ನ ; ವಿಜಯೇಂದ್ರ
2
+ ಬೆಂಗಳೂರು, ಫೆ.22- ಆರ್ಥಿಕ ಸಂಕಷ್ಟದಲ್ಲಿರುವ ಸರಕಾರ, ಶ್ರೀಮಂತ ದೇವಾಲಯಕ್ಕೂ ಕನ್ನ ಹಾಕುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದೇವಸ್ಥಾನದ ಹಣಕ್ಕೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಒಂದು ಹುಂಡಿ ಇಡಿ. ಸರಕಾರ ನಡೆಸಲು ನಮ್ಮ ಕೈಯಲ್ಲಿ ಆಗುತ್ತಿಲ್ಲ. ಹಣಕಾಸಿನ ತೊಂದರೆ ಇದೆ ಎಂದು ತಿಳಿಸಿ ಬಂದ ದಾನಿಗಳಿಂದ ಹಣ ಸಂಗ್ರಹಿಸಬಹುದು ಎಂದು ಮುಖ್ಯಮಂತ್ರಿಗಳಿಗೆ ಸಲಹೆ ನೀಡು ವುದಾಗಿ ತಿಳಿಸಿದರು.
3
+ ಅತ್ಯಂತ ಶ್ರೀಮಂತ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಅತ್ಯಂತ ಹೆಚ್ಚು ತೆರಿಗೆಯನ್ನು ಸಂಗ್ರಹ ಮಾಡುತ್ತದೆ. ಇಂಥ ಕರ್ನಾಟಕ ರಾಜ್ಯದ ಪರಿಸ್ಥಿತಿ ಹೀಗಾಗಿದೆ ಎಂಬುದು ನಿಜಕ್ಕೂ ದುರದೃಷ್ಟ. ಸರಕಾರ ಈ ಮಟ್ಟಕ್ಕೆ ಇಳಿದಿರುವುದು ನಿಜಕ್ಕೂ ತಲೆತಗ್ಗಿಸುವ ವಿಚಾರ ಎಂದು ಬೇಸರ ವ್ಯಕ್ತಪಡಿಸಿದರು.
4
+ ಗ್ಯಾರಂಟಿಗೆ ನಮ್ಮ ಟೀಕೆ ಇಲ್ಲ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಗ್ಯಾರಂಟಿಗಳನ್ನು ಘೋಷಿಸಿದ್ದು, ಅದನ್ನು ಅನುಷ್ಠಾನಕ್ಕೆ ತರುವುದು ಅವರ ಕರ್ತವ್ಯವಾಗಿದೆ. ಅವರು ಕೊಟ್ಟಿರುವ ಭರವಸೆಗಳನ್ನು ಈಡೇರಿಸಬೇಕಿದೆ. ಆದರೆ, ಅದರ ಅರ್ಥ ರಾಜ್ಯದಲ್ಲಿ ಅಭಿವೃದ್ಧಿ ಮಾಡಬಾರದು ಎಂದಲ್ಲ ಎಂದು ತಿಳಿಸಿದರು.
5
+ ನಾವು ಶಾಸಕರು ಕ್ಷೇತ್ರಕ್ಕೆ ಹೋದಾಗ ರಸ್ತೆಗಳು, ಶಾಲಾ ಕೊಠಡಿ, ಆಸ್ಪತ್ರೆಗಳ ಬಗ್ಗೆ ಜನರು ನಮ್ಮನ್ನು ಕೇಳುತ್ತಾರೆ. ಆದರೆ, 224 ಕ್ಷೇತ್ರಗಳ ಯಾವುದೇ ಒಬ್ಬ ಶಾಸಕರು ತಮ್ಮ ಕ್ಷೇತ್ರದಲ್ಲಿ ಈ ವಿಚಾರದಲ್ಲಿ ಮಾತನಾಡಲು ಸಾಧ್ಯವೇ ಇಲ್ಲ. ಯಾಕೆಂದರೆ, ರಾಜ್ಯ ಸರಕಾರ ಒಂದು ರೂಪಾಯಿಯನ್ನೂ ಅನುದಾನವಾಗಿ ಕೊಡುತ್ತಿಲ್ಲ ಎಂದು ಟೀಕಿಸಿದರು.
6
+ ಬೈಜೂಸ್ ಸಂಸ್ಥಾಪಕ ರವೀಂದ್ರನ್ ವಿರುದ್ಧ ಲುಕೌಟ್ ನೋಟಿಸ್ ವಿಸ್ತರಣೆ
7
+ ರಾಜ್ಯ ಸರಕಾರವು ಯಾವುದೇ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡುತ್ತಿಲ್ಲ. ಒಂದು ರೂಪಾಯಿ ಅನುದಾನವನ್ನೂ ಕೊಡುತ್ತಿಲ್ಲ ಎಂದು ಟೀಕಿಸಿದರು. ಸರಕಾರಿ ನೌಕರರಿಗೆ ಸಂಬಳ ಕೊಡತಕ್ಕಂಥ ಸಾಧ್ಯತೆ ಕಡಿಮೆ ಆಗುತ್ತಿದೆ. ಅಂಥ ದಾರುಣ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿವರಿಸಿದರು.
eesanje/url_46_228_4.txt ADDED
@@ -0,0 +1,7 @@
 
 
 
 
 
 
 
 
1
+ 55 ಲಕ್ಷ ವಿದ್ಯಾರ್ಥಿಗಳಿಗೆ ರಾಗಿಮಾಲ್ಟ್ ವಿತರಣೆ
2
+ ಬೆಂಗಳೂರು,ಫೆ.22- 55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಟಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಸಾಯಿ ಶ್ಯೂರ್ ರಾಗಿ ಹೆಲ್ತ ಮಿಕ್ಸ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 2013 ರಲ್ಲಿ ನಮ್ಮ ಸರ್ಕಾರ ಬಂದಾಗ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು.
3
+ ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ಮೂ ಹೆಚ್ಚುವರಿಯಾಗಿ ಉತ್ಪಾದನೆ ಮಾಡಲು ಸಾಧ್ಯವಿರಲಿಲ್ಲ. ಹೀಗಾಗಿ ಆ ಕೂಡಲೇ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ಹಾಲು ಕೊಡುವ ಕ್ಷೀರಭಾಗ್ಯ ಯೋಜನೆಯನ್ನು ಆರಂಭಿಸಿದೆ. ಕೆಎಂಎಫ್ ಮೂಲಕ ಮಕ್ಕಳಿಗೆ ಹಾಲು ಹೋಗುತ್ತದೆ. ಈ ಹಾಲಿನ ಹಣವನ್ನು ಸರ್ಕಾರ ಕೆಎಂಎಫ್ ಗೆ ನೀಡುತ್ತದೆ. ಆ ಮೂಲಕ ಕೆಎಂಎಫ್ ಗೆ ಹಾಲು ಸರಬರಾಜು ಮಾಡುವ ರೈತರಿಗೆ ನೆರವಾಗುವ ತೀರ್ಮಾನ ಮಾಡಿದೆವು. ಇದರ ಜತೆಗೆ ಕಳೆದ ಬಜೆಟ್‍ನಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡುವ ಕಾರ್ಯಕ್ರಮ ಶುರು ಮಾಡಿದೆವು ಎಂದು ವಿವರಿಸಿದರು.
4
+ ಈಗ ಅತ್ಯಂತ ಪೌಷ್ಟಿಕವಾದ ರಾಗಿ ಮಾಲ್ಟ ಕೊಡುವ ಕಾರ್ಯಕ್ರಮ ಶುರುವಾಗಿದೆ. ಇದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ಮಕ್ಕಳಿಗೆ ರಕ್ತಹೀನತೆ ಬರಲೇಬಾರದು. ಪೌಷ್ಟಿಕಾಂಶ ಕೊರತೆ ಆಗಲೇ ಬಾರದು. ಆಗ ಮಾತ್ರ ಮಕ್ಕಳು ಮಾನಸಿಕವಾಗಿ ಸದೃಢವಾಗಿ ಓದಿನಲ್ಲಿ ಹೆಚ್ಚು ಚುರುಕಾಗುತ್ತಾರೆ. ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳುತ್ತಾರೆ. ಶ್ರೀಮಂತರ ಮಕ್ಕಳ ರೀತಿ ಬಡವರು, ಶ್ರಮಿಕರು, ದಲಿತ, ಶೂದ್ರರ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯಬೇಕು. ಏಕೆಂದರೆ ಮಕ್ಕಳೇ ದೇಶದ, ಸಮಾಜದ ಭವಿಷ್ಯವನ್ನು ರೂಪಿಸುತ್ತಾರೆ ಎನ್ನುತ್ತಾ ಬುದ್ಧ, ಬಸವ, ಅಂಬೇಡ್ಕರ್ ಮಾತುಗಳನ್ನು ಉಲ್ಲೇಖಿಸಿದರು.
5
+ ಬೈಜೂಸ್ ಸಂಸ್ಥಾಪಕ ರವೀಂದ್ರನ್ ವಿರುದ್ಧ ಲುಕೌಟ್ ನೋಟಿಸ್ ವಿಸ್ತರಣೆ
6
+ ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಹೆಚ್ಚಾಗಲು ಸಾಧ್ಯ. ಜ್ಞಾನದ ಬೆಳವಣಿಗೆ ಶಿಕ್ಷಣದಿಂದ ಸಾಧ್ಯ. ಶಿಕ್ಷಣ ಅಂದರೆ ಕೇವಲ ಓದು, ಬರಹ ಕಲಿಸುವುದಲ್ಲ. ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ವೈಚಾರಿಕತೆಯುಳ್ಳ ಶಿಕ್ಷಣ ಅಗತ್ಯ. ಉನ್ನತ ಶಿಕ್ಷಣ ಪಡೆದ ವೈದ್ಯರು, ಎಂಜಿನಿಯರ್‍ಗಳೂ ಈಗ ಮೌಢ್ಯಕ್ಕೆ ಜೋತು ಬಿದ್ದಿದ್ದಾರೆ. ಬಸವಾದಿ ಶರಣರು ಮೌಢ್ಯಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು. ವೈಚಾರಿಕ ಶಿಕ್ಷಣದಿಂದ ಮಾತ್ರ ಮೌಢ್ಯ ಮುಕ್ತ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದರು.
7
+ 2023-24ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಬಹು ಪೌಷ್ಟಿಕಾಂಶವುಳ್ಳ ಸಾಯಿ ಶ್ಯೂರ್ ರಾಗಿ ಮಾಲ್ಟ ಹೆಲ್ತ ಮಿಕ್���್ ವಿತರಿಸುವ ಕಾರ್ಯಕ್ರಮದಲ್ಲಿ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೇರಿ ಇಲಾಖಾ ಅಕಾರಿಗಳು ಉಪಸ್ಥಿತರಿದ್ದರು.
eesanje/url_46_228_5.txt ADDED
@@ -0,0 +1,6 @@
 
 
 
 
 
 
 
1
+ ಬೆಂಗಳೂರು : ನೇಣುಬಿಗಿದುಕೊಂಡು ವೃದ್ಧ ದಂಪತಿ ಆತ್ಮಹತ್ಯೆ
2
+ ಬೆಂಗಳೂರು,ಫೆ.22- ವೃದ್ಧ ದಂಪತಿ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬನಶಂಕರಿ 3ನೇ ಹಂತ, ಇಟ್ಟಮಡು ಮುಖ್ಯರಸ್ತೆ ಕೃಷ್ಣಯ್ಯ ಲೇಔಟ್‍ನ 19ನೇ ಕ್ರಾಸ್‍ನ ನಿವಾಸಿ ಕೃಷ್ಣ ನಾಯ್ಡು(84) ಮತ್ತು ಸರೋಜಮ್ಮ(74) ಮೃತಪಟ್ಟ ದಂಪತಿ.
3
+ ಈ ಮನೆಯ ಮೂರನೇ ಮಹಡಿಯಲ್ಲಿ ದಂಪತಿ ವಾಸವಾಗಿದ್ದರೆ, ನೆಲಮಹಡಿಯಲ್ಲಿ ಮಗ ಅಶೋಕ್‍ಕುಮಾರ್ ಹಾಗೂ ಸೊಸೆ ಕುಟುಂಬ ವಾಸವಿದೆ. ದಂಪತಿಯ ಮಗಳು ಮದುವೆಯಾಗಿದ್ದು, ಬೇರೆ ಕಡೆ ನೆಲೆಸಿದ್ದಾರೆ. ರಾತ್ರಿ ವಾಸವಿದ್ದ ಮನೆಯ ಒಂದು ಕಿಟಕಿಗೆ ಪಂಚೆಯಿಂದ ಕೃಷ್ಣ ನಾಯ್ಡು ನೇಣು ಬಿಗಿದುಕೊಂಡರೆ, ಮತ್ತೊಂದು ಕಿಟಕಿಗೆ ಸೀರೆಯಿಂದ ಸರೋಜಮ್ಮ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
4
+ ಬೈಜೂಸ್ ಸಂಸ್ಥಾಪಕ ರವೀಂದ್ರನ್ ವಿರುದ್ಧ ಲುಕೌಟ್ ನೋಟಿಸ್ ವಿಸ್ತರಣೆ
5
+ ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಈ ವೃದ್ಧ ದಂಪತಿ ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಗ್ಗೆ ಸೊಸೆ ಮೂರನೇ ಮಹಡಿಗೆ ಹೋದಾಗ ಇವರು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ತಕ್ಷಣ ಪತಿ ಅಶೋಕ್ ಕುಮಾರ್‍ಗೆ ತಿಳಿಸಿದ್ದಾರೆ.
6
+ ಅಶೋಕ್‍ಕುಮಾರ್ ಪೊಲೀಸರಿಗೆ ವಿಷಯ ತಿಳಿಸಿದ್ದು, ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ದಂಪತಿಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
eesanje/url_46_228_6.txt ADDED
@@ -0,0 +1,4 @@
 
 
 
 
 
1
+ ಮೇಲ್ಮನೆಯಲ್ಲಿ ಚಿನ್ನ ಲೇಪಿತ ಬ್ಯಾಡ್ಜ್ ಕುರಿತು ಚರ್ಚೆ
2
+ ಬೆಂಗಳೂರು,ಫೆ.22- ವಿಧಾನಪರಿಷತ್ ಸದಸ್ಯರಿಗೆ ಚಿನ್ನದ ಲೇಪವಿರುವ ಬ್ಯಾಡ್ಜ್ ನೀಡಿರುವುದರ ಕುರಿತು ಪರಿಷತ್‍ನಲ್ಲಿ ತುಸು ಕಾಲ ಸ್ವಾರಸ್ಯಕರ ಚರ್ಚೆ ನಡೆಯಿತು. ಕಲಾಪದ ಮಧ್ಯೆ ಜೆಡಿಎಸ್‍ನ ಟಿ.ಎ.ಶರವಣ, ಸಭಾಪತಿಯವರಿಗೆ ನಿಮಗೆ ನಾನು ವಿಶೇಷವಾದ ಅಭಿನಂದನೆ ಸಲ್ಲಿಸುತ್ತೇನೆ. ಏಕೆಂದರೆ ನಿವೃತ್ತಿಯಾಗಲಿರುವ ಪರಿಷತ್ ಸದಸ್ಯರಿಗೆ ಉಪಹಾರಕೂಟ, ಇಂದು ಫೋಟೋ ಸೆಷನ್ ಕಲ್ಪಿಸಿದ್ದಾರೆ. ಜೊತೆಗೆ ನಮ್ಮೆಲ್ಲರಿಗೂ ಗಂಡಭೇರುಂಡ ಇರುವ ಚಿನ್ನದ ಲೇಪವಿರುವ ಬ್ಯಾಡ್ಜ್ ಕೊಟ್ಟಿದ್ದೀರಿ. ಇದಕ್ಕಾಗಿ ನಾನು ನಿಮಗೆ ಧನ್ಯವಾದ ಹೇಳುತ್ತೇನೆ ಎಂದರು.
3
+ ರಾಜ್ಯಸಭೆ ಚುನಾವಣೆ : ಅಮಿತ್ ಷಾ ಜೊತೆ ಕುಮಾರಸ್ವಾಮಿ ಮಾತುಕತೆ
4
+ ಚಿನ್ನದ ಲೇಪನವಿರುವ ಬ್ಯಾಡ್ಜ್‍ನ್ನು ಎಲ್ಲ ಸದಸ್ಯರಿಗೂ ಕೊಟ್ಟಿರುವುದಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದಾಗ, ಸಭಾಪತಿ ಹೊರಟ್ಟಿ ಅವರು, ನನಗೆ ಎಲ್ಲರೂ ಕೇಳುತ್ತಿದ್ದಾರೆ ನೀವೇ ಮಾಡಿಸಿಕೊಡಿ ಎಂದು ಕಾಲೆಳೆದರು. ಅದಕ್ಕೆ ಶರವಣ ಅವರು ನಾನು ಬೆಳ್ಳಿಯಲ್ಲಿ ಹಾಕಿ ಚಿನ್ನದ ಲೇಪ ಹಾಕಿಸಿಕೊಡುತ್ತೇನೆ ಎಂದರು. ಆಗ ಹೊರಟ್ಟಿ ಮಧ್ಯಾಹ್ನ ನನ್ನ ಕಚೇರಿಗೆ ಬಾ ನಿನಗೆ ಒಂದು ಕೆಲಸ ಕೊಡಬೇಕಾಗಿದೆ ಎಂದು ಹೇಳಿದರು.
eesanje/url_46_228_7.txt ADDED
@@ -0,0 +1,6 @@
 
 
 
 
 
 
 
1
+ ವಿಧಾನಸಭೆ ಕಲಾಪ ವೀಕ್ಷಿಸಿದ ಬೀದಿಬದಿ ವ್ಯಾಪಾರಿಗಳು
2
+ ಬೆಂಗಳೂರು, ಫೆ.22- ಬೀದಿಬದಿ ವ್ಯಾಪಾರಿಗಳು ಇಂದು ವಿಧಾನಸಭೆ ಕಾರ್ಯಕಲಾಪವನ್ನು ವೀಕ್ಷಿಸಿದರು. ಬೀದಿಬದಿ ವ್ಯಾಪಾರಿಗಳ ಒಕ್ಕೂಟದ ಪತ್ರಿನಿಧಿಗಳು ಇಂದು ಸದನದ ಕಾರ್ಯ ಕಲಾಪ ವೀಕ್ಷಿಸುತ್ತಿದ್ದು, ಅವರನ್ನು ಸ್ವಾಗತಿಸುವುದಾಗಿ ಸಭಾಧ್ಯಾಕ್ಷ ಯು.ಟಿ.ಖಾದರ್ ತಿಳಿಸಿದರು. ನಿನ್ನೆ ಅನಿವಾಸಿ ಭಾರತೀಯರು ಸದನದ ಕಾರ್ಯಕಲಾಪ ವೀಕ್ಷಿಸಿದ್ದರು. ಇಂದು ಬೀದಿಬದಿ ವ್ಯಾಪಾರಿಗಳು ಸದನದ ಗ್ಯಾಲರಿಗೆ ಆಗಮಿಸಿ ಕಾರ್ಯಕಲಾಪ ವೀಕ್ಷಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸಣ್ಣ-ಪುಟ್ಟ ವ್ಯಾಪಾರದ ಮೂಲಕ ಕುಟುಂಬ ನಿರ್ವಣೆ ಮಾಡುತ್ತಿದ್ದಾರೆ. ಅವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಅವರು ಹೇಳಿದರು.
3
+ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಪಟ್ಟಣ ಪ್ರದೇಶಗಳಲ್ಲಿ ವಿಶೇಷವಾಗಿ ಮಹಾನಗರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬೀದಿಬದಿ ವ್ಯಾಪಾರಿಗಳಿದ್ದಾರೆ. ಅದರಲ್ಲೂ ಬೆಂಗಳೂರಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರಿಗೆ ಕಾನೂನು ರೀತಿ ರಕ್ಷಣೆ ಮಾನವೀಯತೆಯ ನೆರವು ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ನೆರವು ನೀಡುತ್ತಿವೆ ಎಂದರು.
4
+ ರಾಜ್ಯಸಭೆ ಚುನಾವಣೆ : ಅಮಿತ್ ಷಾ ಜೊತೆ ಕುಮಾರಸ್ವಾಮಿ ಮಾತುಕತೆ
5
+ ಶ್ರಮ ಜೀವಿಗಳಾಗಿದ್ದು, ಅವರಲ್ಲಿ ಆತ್ಮಸ್ಥೆ ೈರ್ಯ ತುಂಬುವ ನಿಟ್ಟಿನಲ್ಲಿ ತಾವು ಸದನ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟಿರುವುದು ಪ್ರಶಂಸನೀಯ ಎಂದರು ಹೇಳಿದರು. ಇದಕ್ಕೆ ದನಿಗೂಡಿಸಿದ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಅವರು ಅತ್ಯಂತ ದುರ್ಬಲ ವರ್ಗದವರಾದ ಬೀದಿ ಬದಿ ವ್ಯಾಪಾರಿಗಳಿಗೆ ಸದನ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟಿರುವುದು ನಿಜವಾದ ಪ್ರಜಾಪ್ರಭುತ್ವವನ್ನು ಎತ್ತಿ ತೋರಿಸುತ್ತಿದೆ.
6
+ ಇದಕ್ಕಾಗಿ ಸಭಾಧ್ಯಕ್ಷರನ್ನು ಅಭಿನಂದಿಸುವುದಾಗಿ ತಿಳಿಸಿದರು. ಉತ್ತರ ಕರ್ನಾಟಕ ಸೇರಿದಂತೆ ಬೇರೆ ಬೇರೆ ಭಾಗಗಳಿಂದ ಬೆಂಗಳೂರಿಗೆ ಬಂದು ಬೀದಿ ಬದಿ ತಿಂಡಿ-ತಿನಿಸು ಮಾರಾಟ ಮಾಡುವ ಮೂಲಕ ಜೀವನ ಸಾಗಿಸುತ್ತಿದ್ದಾರೆ. ಅವರೊಂದು ರೀತಿ ಅನ್ನದಾತರು ಎಂದರು ಹೇಳಿದರು.
eesanje/url_46_228_8.txt ADDED
@@ -0,0 +1,9 @@
 
 
 
 
 
 
 
 
 
 
1
+ 7ನೇ ವೇತನ ಆಯೋಗ ವರದಿ ಜಾರಿಗೆ ಒತ್ತಾಯ
2
+ ಬೆಂಗಳೂರು, ಫೆ.22- ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ 7ನೇ ವೇತನ ಆಯೋಗದ ವರದಿಯನ್ನು ಶೀಘ್ರವೇ ಜಾರಿಗೆ ತರಬೇಕು ಎಂದು ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ವಿಧಾನಸಭೆಯಲ್ಲಿಂದು ಒತ್ತಾಯಿಸಿದರು. ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರ್ಕಾರ ರೂಪಿಸುವ ಯೋಜನೆಗಳನ್ನು ಜಾರಿಗೆ ತರುವುದೇ ಸರ್ಕಾರಿ ನೌಕರರು ಅವರನ್ನು ಚೆನ್ನಾಗಿ ನೋಡಿಕೊಂಡರೆ ಸರ್ಕಾರಕ್ಕೂ ಅನುಕೂಲವಾಗಲಿದೆ ಎಂದರು.
3
+ ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚಿನ ವೇತನ ದೊರೆಯುತ್ತಿದೆ. ಇದಕ್ಕೆ ಹೋಲಿಸಿದರೆ, ರಾಜ್ಯ ಸರ್ಕಾರಿ ನೌಕರರಿಗೆ ವೇತನದಲ್ಲಿ ತಾರತಮ್ಯವಾಗುತ್ತಿದೆ. ಇದನ್ನು ಸರಿಪಡಿಸಬೇಕು. ಮುಖ್ಯಮಂತ್ರಿಗಳು ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವ ಸಂದರ್ಭದಲ್ಲಿ ವೇತನ ಆಯೋಗದ ವರದಿ ಜಾರಿ ಕುರಿತು ಸ್ಪಷ್ಟವಾದ ಘೋಷಣೆ ಮಾಡಬೇಕು ಎಂದು ಅವರು ಆಗ್ರಹಿಸಿದರು.
4
+ ರಾಜ್ಯದ ಹದಿಮೂರು ಜಿಲ್ಲೆಗಳಲ್ಲಿ ತೆಂಗು ಬೆಳೆಗಾರರು ಹೆಚ್ಚಿನ ಪ್ರಮಾಣದಲ್ಲಿ ಕೊಬ್ಬರಿ ಬೆಳೆಯುತ್ತಿದ್ದು, ಬೆಲೆ ಕುಸಿತದಿಂದ ಕಂಗಾಲಾಗುತ್ತಿದ್ದಾರೆ. ಸರ್ಕಾರ ಅವರ ನೆರವಿಗೆ ಧಾವಿಸಿ ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ 15 ಸಾವಿರ ರೂ. ನಿಗದಿಪಡಿಸಿ ಖರೀದಿಸಬೇಕು ಎಂದರು.
5
+ ರಾಜ್ಯಸಭೆ ಚುನಾವಣೆ : ಅಮಿತ್ ಷಾ ಜೊತೆ ಕುಮಾರಸ್ವಾಮಿ ಮಾತುಕತೆ
6
+ ಖರೀದಿ ಕೇಂದ್ರಗಳಲ್ಲಿ ರೈತರ ನೋಂದಣಿ ಪ್ರಕ್ರಿಯೆಯಲ್ಲಿ ಆಗಿರುವ ಅನ್ಯಾಯ ಸರಿಪಡಿಸಲು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಮುಂದಾಗಿರುವುದು ಸ್ವಾಗತಾರ್ಹ. ಹೊಸದಾಗಿ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿರುವುದಾಗಿ ಹೇಳಿರುವುದು ನಿಜವಾದ ಕೊಬ್ಬರಿ ಬೆಳೆಗಾರರಿಗೆ ಸ್ವಲ್ಪ ಮಟ್ಟಿನ ಸಮಾಧಾನ ತಂದಿದೆ ಎಂದು ಹೇಳಿದರು.
7
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 15ನೇ ಬಾರಿಗೆ ಬಜೆಟ್ ಮಂಡಿಸಿರುವುದಕ್ಕೆ ಅವರನ್ನು ಅಭಿನಂದಿಸುತ್ತೇನೆ. ಆದರೆ, ಗ್ಯಾರಂಟಿ ಯೋಜನೆಗಳಿಗೆ ನೀಡಿರುವಷ್ಟು ಒತ್ತನ್ನು ಅಭಿವೃದ್ಧಿಗೆ ಕೊಟ್ಟಿಲ್ಲ. ಇವೆರಡರ ನಡುವೆ ಸಮತೋಲನ ಕಾಯ್ದುಕೊಳ್ಳಬೇಕಾಗಿತ್ತು. ಆ ಕೆಲಸವಾಗಿಲ್ಲ. ಇದರಿಂದಾಗಿ ನಾವು ಸೇರಿದಂತೆ ಕಾಂಗ್ರೆ, ಬಿಜೆಪಿ ಶಾಸಕರು ಹಳ್ಳಿಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಮತದಾರರ ಪ್ರಶ್ನೆಗಳಿಗೆ ಉತ್ತರ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
8
+ ಒಂದು ರೂ.ನಲ್ಲಿ ಗ್ಯಾರಂಟಿಗೆ 75 ಪೈಸೆ ಕೊಟ್ಟರೆ, ಅಭಿವೃದ್ಧಿಗೆ 25 ಪೈಸೆ ನೀಡುವಂತಾಗಿದೆ. ಇದುವರೆಗೆ ಅಭಿವೃದ್ಧಿ ಶೂನ್ಯವಾಗಿದೆ ಎಂದು ಅವರು ಟೀಕಿಸಿದರು. ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಕಾಂಗ್ರೆಸ್ ನಾಯಕರು ನಡೆಸಿದ ಹೋರಾಟ ಕೇವಲ ಅಧಿಕಾರಕ್ಕೆ ಬರುವ ತಂತ್ರಗಾರಿಕೆಯಾಗಿದೆ. ಈ ಯೋಜನೆ ಶೀಘ್ರ ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳಬೇಕು.
9
+ ಬರಪರಿಸ್ಥಿತಿಯಿಂದ ಜನರು ಗುಳೆ ಹೋಗುವ ಪರಿಸ್ಥಿತಿ ಇದೆ. ಗುಳೆ ಹೊರಟವರ ��ುಟುಂಬದ ಮಕ್ಕಳಿಗೂ ಶಿಕ್ಷಣ ನೀಡುವಂತಾಗಬೇಕು. ಶಾಲೆ ಬಿಟ್ಟ ಮಕ್ಕಳನ್ನು ಮರಳಿಶಾಲೆಗೆ ಕರತರಬೇಕು. ಮನ್ರೇಗಾ ಕೂಲಿ ಹಣವನ್ನು 316 ರೂ.ಗಳಿಂದ 500 ರೂ.ಗಳಿಗೆ ಹೆಚ್ಚಿಸಬೇಕು. ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ಮುಂದಾಗಬೇಕು ಎಂದು ಹೇಳಿದರು.
eesanje/url_46_228_9.txt ADDED
@@ -0,0 +1,9 @@
 
 
 
 
 
 
 
 
 
 
1
+ ಕರ್ನಾಟಕ ಗ್ರಾಮ ಸ್ವರಾಜ್ ವಿಧೇಯಕ ಅಂಗೀಕಾರ
2
+ ಬೆಂಗಳೂರು,ಫೆ.22- ಗ್ರಾಮಪಂಚಾಯ್ತಿಗಳ ಭೌಗೋಳಿಕ ವಿಸ್ತೀರ್ಣಕ್ಕೆ ಅನುಕೂಲ ಕಲ್ಪಿಸುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‍ರಾಜ್ ತಿದ್ದುಪಡಿ ವಿಧೇಯಕ 2024ನ್ನು ವಿಧಾನಪರಿಷತ್‍ನಲ್ಲಿ ಅಂಗೀಕಾರ ನೀಡಲಾಯಿತು. ವಿಧಾನಸಭೆಯಲ್ಲಿ ಅಂಗೀಕೃತಗೊಂಡಿದ್ದ ವಿಧೇಯಕವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಪರಿಷತ್‍ನಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಂಡರು.
3
+ ವಿಧೇಯಕದ ಮೇಲೆ ಮಾತನಾಡಿದ ಅವರು, 2024ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ತಿದ್ದುಪಡಿಯಿಂದ ಗ್ರಾಮಪಂಚಾಯ್ತಿಗಳ ಬೌಗೋಳಿಕ ವಿಸ್ತೀರ್ಣಕ್ಕೆ ಇದು ಅನುಕೂಲವಾಗಲಿದೆ ಎಂದು ಹೇಳಿದರು. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರ ಕರ್ನಾಟಕ ಜಿಲ್ಲೆಗಳನ್ನು ಗಮನದಲ್ಲಿಟ್ಟುಕೊಂಡು ಈ ವಿಧೇಯಕವನ್ನು ತಿದ್ದುಪಡಿ ಮಾಡಲಾಗಿದೆ. ಗ್ರಾಮಪಂಚಾಯ್ತಿಗಳ ಭೌಗೋಳಿಕ ವಿಸ್ತೀರ್ಣವನ್ನು ನಿಗದಿಪಡಿಸಲು ಅನುಕೂಲವಾಗುತ್ತದೆ ಎಂದರು.
4
+ ಕೊಡಗು ಜಿಲ್ಲೆಯು ಸಂಪೂರ್ಣವಾಗಿ ಮಲೆನಾಡಿನಂತೆ ಕಡಿಮೆ ಜನಸಾಂದ್ರತೆ ಹೊಂದಿರುವ ಜನಸಂಖ್ಯೆಯು ಚದುರಿದ ಗುಡ್ಡಗಾಡು ಪ್ರದೇಶವಾಗಿದ್ದು, ಕೆಲ ಸಂದರ್ಭಗಳಲ್ಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರವು ಭೌಗೋಳಿಕವಾಗಿ 100ಕಿ.ಮೀ.ವರೆಗೆ ವ್ಯಾಪಿಸಿದೆ ಭೌಗೋಳಿಕವಾಗಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಭೂ ವಿಸ್ತೀರ್ಣವು ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಆಡಳಿತದ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿದೆ ಎಂದು ಹೇಳಿದ್ದಾರೆ.
5
+ ಸದನದಲ್ಲಿ ಸಚಿವರು, ಅಧಿಕಾರಿಗಳು ಹಾಜರಿಲ್ಲ : ಅಶೋಕ್ ಆಕ್ಷೇಪ
6
+ ಕರ್ನಾಟಕ ಪಂಚಾಯತ್‍ರಾಜ್ ಗಡಿ ನಿರ್ಧರಣಾ ಆಯೋಗವು ಕೊಡಗಿನ ಸಾರ್ವಜನಿಕರ ಮನವಿಯ ಮೇರೆಗೆ ಅಗತ್ಯ ತಿದ್ದಪಡಿಯನ್ನು ಶಿಫಾರಸ್ಸು ಮಾಡಿದೆ. ಆದ್ದರಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್-1993ನ್ನು ತಿದ್ದುಪಡಿ ಮಾಡುವುದು ಅವಶ್ಯವೆಂದು ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ.
7
+ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಮಲೆನಾಡು ಪ್ರದೇಶಗಳಲ್ಲಿ ಪ್ರತಿ 18,000 ಜನಸಂಖ್ಯೆಗೆ ಒಂದು ಜಿಲ್ಲಾ ಪಂಚಾಯಿತಿ ಕ್ಷೇತ್ರವಿದೆ. ಉತ್ತರಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ 18,000ದಿಂದ 25,000 ಜನಸಂಖ್ಯೆಗೆ ಒಂದು ಕ್ಷೇತ್ರಕ್ಕೆ ಅವಕಾಶವಿದೆ. ಈ ತಿದ್ದುಪಡಿ ಮೂಲಕ ಕೊಡಗು ಜಿಲ್ಲೆಯಲ್ಲಿ 18,000 ಜನಸಂಖ್ಯೆಗೆ ಒಂದು ಕ್ಷೇತ್ರಕ್ಕೆ ಅವಕಾಶ ನೀಡಲಾಗುತ್ತಿದೆ.
8
+ ವಿದ್ಯುತ್ ಕಂಬದಿಂದ ಬಿದ್ದು ಲೈನ್‍ಮನ್ ಸಾವು
9
+ ಕರ್ನಾಟಕ ಪಂಚಾಯತ್ ರಾಜ್ ಗಡಿ ನಿರ್ಧರಣಾ ಆಯೋಗವು ಕೊಡಗಿನ ಸಾರ್ವಜನಿಕರ ಮನವಿಯ ಮೇರೆಗೆ ಅಗತ್ಯ ತಿದ್ದುಪಡಿಯನ್ನು ಶಿಫಾರಸ್ಸು ಮಾಡಿದೆ. ಆದ್ದರಿಂದ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅನಿಯಮ 1993 ಅನ್ನು ತಿದ್ದುಪಡಿ ಮಾಡುವುದು ಅವಶ್ಯ ಎಂದು ಈ ವಿಧೇಯಕ ತರಲಾಗಿದೆ. ಈ ವಿಧೇಯಕದ ಮೇಲೆ ಸದಸ್ಯರಾದ ಕೆ.ಎಸ್.ತಿಪ್ಪೇಸ್ವಾಮಿ, ತೇಜಸ್ವಿನಿ ರಮೇಶ್, ಬಿ.ಕೆ.ಹರಿಪ್ರಸಾದ್, ನಾಗರಾಜ್ ಯಾದವ್ ಹಾಗೂ ಪ್ರತಿಪಕ್ಷದ ನಾಯಕ ಕೋಟಾಶ್ರೀನಿವಾಸ್ ಪೂಜಾರಿ ಮಾತನಾಡಿ, ಸರ್ಕಾರಕ್ಕೆ ಕೆಲವು ಸಲಹೆಗಳನ್ನು ನೀಡಿದರು. ಬಳಿಕ ಸಭಾಧ್ಯಕ್ಷರು ಧ್ವನಿಮತದ ಮೂಲಕ ವಿಧೇಯಕಕ್ಕೆ ಅಂಗೀಕಾರ ನೀಡಿದರು.
eesanje/url_46_229_1.txt ADDED
@@ -0,0 +1,9 @@
 
 
 
 
 
 
 
 
 
 
1
+ ಶಿಕ್ಷಕರ ಕ್ಷೇತ್ರದ ಗೆಲುವು ಲೋಕಸಭೆಗೆ ದಿಕ್ಸೂಚಿ : ಸಿಎಂ
2
+ ಬೆಂಗಳೂರು,ಫೆ.21-ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿರುವುದು ಮುಂಬರುವ ಲೋಕಸಭೆ ಚುನಾವಣೆಗೂ ಇದು ದಿಕ್ಸೂಚಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಪರಿಷತ್‍ನಲ್ಲಿ ರಾಜ್ಯಪಾಲರ ಭಾಷಣಕ್ಕೆ ಉತ್ತರ ನೀಡಿದ ಅವರು, ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಗೆದ್ದಿರುವುದು ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಜನ ಸಾರಾಸಗಾಟಾಗಿ ತಿರಸ್ಕಾರ ಮಾಡಿದ್ದಾರೆ. ಇದು ಮುಂಬರುವ ಲೋಕಸಭೆ ಚುನಾವಣೆಗೂ ದಿಕ್ಸೂಚಿಯಾಗಲಿದೆ ಎಂದು ಹೇಳಿದರು.
3
+ ನೀವು ಏನೇ ಮೈತ್ರಿ ಮಾಡಿಕೊಂಡರೂ ಕರ್ನಾಟಕದ ಜನ ನಿಮ್ಮನ್ನು ಒಪ್ಪುವುದಿಲ್ಲ ಎಂಬುದು ಫಲಿತಾಂಶದಿಂದಲೆ ಸಾಬೀತಾಗಿದೆ. ಲೋಕಸಭೆ ಚುನಾವಣೆಯಲ್ಲಿ ನಾವು ನಿಮ್ಮ ಮೈತ್ರಿಯನ್ನು ಮಣಿಸಿ ಹೆಚ್ಚಿನ ಸ್ಥಾನವನ್ನು ಗೆಲ್ಲಲಿದ್ದೇವೆ. ಕರ್ನಾಟಕ ಜನ ಎಂದಿಗೂ ಕೋಮುವಾದವನ್ನು ಒಪ್ಪುವುದಿಲ್ಲ ಎಂದು ಜೆಡಿಎಸ್-ಬಿಜೆಪಿ ಮೈತ್ರಿ ವಿರುದ್ಧ ವಾಗ್ದಾಳಿ ನಡೆಸಿದರು. ಪುಟ್ಟಣ್ಣನವರ ಫಲಿತಾಂಶ ನಿಮಗೆ ಎಚ್ಚರಿಕೆಯ ಗಂಟೆ. ನೀವಿಬ್ಬರೂ ಮೈತ್ರಿಯಾದರೂ ಶಿಕ್ಷಕರ ಕ್ಷೇತ್ರದಲ್ಲಿ ಸೋಲು ಅನುಭವಿಸಲಿದ್ದೀರಿ. ಮುಂದಿನ ಚುನಾವಣೆಗಳಿಗೂ ಇದು ಮಾರ್ಗಸೂಚಿಯಾಗಲಿದೆ ಎಂದು ಎಚ್ಚರಿಸಿದರು.
4
+ ಕಳೆದ 10 ವರ್ಷಗಳಲ್ಲಿ 13 ಸಾವಿರ ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ : ಬೊಮ್ಮಾಯಿ
5
+ ಆಗ ಬಿಜೆಪಿಯ ರವಿಕುಮಾರ್ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಘಡ ಸೇರಿದಂತೆ ಅನೇಕ ಕಡೆ ಕಾಂಗ್ರೆಸ್ ಸೋತಿದೆ. ಅಲ್ಲಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬಂದಿದೆ. ಹಾಗಾದರೆ ಇದು ಯಾವ ಮುನ್ಸೂಚನೆಯನ್ನು ನೀಡುತ್ತದೆ ಎಂದು ಪ್ರಶ್ನೆ ಮಾಡಿದರು. ಇದಕ್ಕೆ ತಿರುಗೇಟು ನೀಡಿದ ಸಿಎಂ, ನೀವು ಕರ್ನಾಟಕದ ಬಗ್ಗೆ ಮಾತನಾಡಿ, ಅಲ್ಲಿನ ರಾಜ್ಯಗಳ ಫಲಿತಾಂಶದ ಬಗ್ಗೆ ಮಾತನಾಡುವುದು ಬೇಡ. ಮೊದಲು ಕರ್ನಾಟಕದ ಬಗ್ಗೆ ಮಾತನಾಡಿ. ಮುಂದಿನ ಲೋಕಸಭೆ ಚುನಾವಣೆಯಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಸ್ಥಾನಗಳನ್ನು ಗೆಲ್ಲಲಿದ್ದೇವೆ ಎಂದು ಹೇಳಿದರು.
6
+ ಪುಟ್ಟಣ್ಣ 1500 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಜೆಡಿಎಸ್ ಮೈತ್ರಿಗೆ ಸೋಲಾಗಿದೆ. ನಾವು ನಿಮ್ಮ ಹಾಗೆ ಸುಳ್ಳು ಹೇಳುವುದಿಲ್ಲ. 28ರ ಪೈಕಿ 20 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದರು.ಆಗ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರದು ವೈಯಕ್ತಿಕ ಗೆಲುವು. ಈ ಫಲಿತಾಂಶ ಲೋಕಸಭೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಇದು ಸ್ಥಳೀಯ ವಿಷಯಗಳ ಮೇಲೆ ನಡೆದಿರುತ್ತದೆ. ನಾವು 28ರಲ್ಲಿ 28 ಕ್ಷೇತ್ರಗಳನ್ನೂ ಗೆಲ್ಲುತ್ತೇವೆ ಎಂದು ಆತ್ಮವಿಶ್ವಾಸದಿಂದ ನುಡಿದರು.ಇದಕ್ಕೆ ಸಿದ್ದರಾಮಯ್ಯನವರು, ಓಯ್ ಸುಮ್ಮನೆ ಕುತ್ಕೊಳಪ್ಪ, ನೀನು ದಕ್ಷಿಣಕನ್ನಡ ಕ್ಷೇತ್ರದಲ್ಲಿ ನಿಂ��್ಕೋ ಯಾರು ಗೆಲ್ಲುತ್ತಾರೆ ನೋಡೋಣ ಎಂದು ಸವಾಲು ಹಾಕಿದರು.
7
+ ನೀವು ನಿಂತುಕೊಳ್ಳಿ. ಗೆದ್ದು ಲೋಕಸಭೆಗೆ ಹೋಗಿ ಚರ್ಚೆ ಮಾಡಲು ಸಮರ್ಥರಿದ್ದೀರಾ ಎಂದು ಪ್ರಶ್ನಿಸಿದರು.ನಾನು ಇಲ್ಲಿದ್ದರೂ ಸಮರ್ಥನೆ, ಲೋಕಸಭೆಗೆ ಹೋದರೂ ಸಮರ್ಥನೆ. ಅಂತಾರಾಷ್ಟ್ರೀಯ ಸಂಸ್ಥೆಗೆ ಹೋದರೂ ಅಲ್ಲಿಯೂ ಸಮರ್ಥನಿದ್ದೇನೆ ಎಂದು ಸಿದ್ದರಾಮಯ್ಯ ತಿರುಗೇಟು ಕೊಟ್ಟರು. ಈ ವೇಳೆ ನೂತನ ಪರಿಷತ್ ಸದಸ್ಯ ಪುಟ್ಟಣ್ಣ ಮಾತನಾಡಿ, ಬಿಜೆಪಿ ಬಿಡಲು ಕಾರಣ ಏನೆಂಬುದನ್ನು ಸದನದಲ್ಲಿ ಬಹಿರಂಗಪಡಿಸಿದರು.ನಾನು ಬಿಜೆಪಿ ಬಿಡಲು ಏನು ಕಾರಣ ಗೊತ್ತಾ.. ಹಿಂದಿನ ಬಿಜೆಪಿ ಸರ್ಕಾರದಲ್ಲಿ 140 ದಿನ ಅನುದಾನಿತ ಕಾಲೇಜಿನ ಶಿಕ್ಷಕರು ಧರಣಿ ಮಾಡಿದರು. ಮೂರು ಮಂದಿ ಶಿಕ್ಷಕರು ಆತ್ಮಹತ್ಯೆ ಮಾಡಿಕೊಂಡ್ರು. ಈ ವೇಳೆ ನಾನು, ಸಂಕನ್ಹೂರ್ ಶಿಕ್ಷಕರ ಸಚಿವರ ಜೊತೆ ಸಭೆ ಮಾಡಿ ಎಂದು ಹೇಳಿದ್ದೆ.
8
+ ಸರ್ಕಾರದಿಂದ ಕಂದಾಯ ವೆಚ್ಚ ದುರ್ಬಳಕೆ : ಬೊಮ್ಮಾಯಿ ಆರೋಪ
9
+ 3 ಮಂದಿ ಶಿಕ್ಷಕರು ಸಾವನ್ನಪ್ಪಿದ್ದಾರೆ, ಇನ್ನು ಕೆಲವರು ಸಾವನ್ನಪ್ಪುವ ಸಾಧ್ಯತೆ ಇದೆ. ಸಭೆ ಮಾಡಿ ಅವರಿಗೆ ಸಾಂತ್ವನ ಹೇಳಿ ಎಂದು ಮನವಿ ಮಾಡಿದ್ದೆ, ಆದರೆ ಸಭೆ ಮಾಡೊಲ್ಲ ಎಂದು ಸಚಿವರು ಹೇಳಿದ್ರು. ಆ ಕ್ಷಣದಲ್ಲೆ ನಿರ್ಧಾರ ಮಾಡ್ದೆ, ಈ ಪಕ್ಷದಲ್ಲಿ ನಾನು ಇರೊದಿಲ್ಲ ಎಂದು. ಈ ಬಾರಿ ಕಾಂಗ್ರೆಸ್‍ನಿಂದ ನಿಂತು ಗೆಲುವು ಸಾಧಿಸಿದ್ದೇನೆ. ಶಿಕ್ಷಕರು ನನ್ನ ಕೈ ಹಿಡಿದಿದ್ದಾರೆ ಎಂದು ಹೇಳಿದರು.
eesanje/url_46_229_10.txt ADDED
@@ -0,0 +1,5 @@
 
 
 
 
 
 
1
+ ಕಳೆದ 10 ವರ್ಷಗಳಲ್ಲಿ 13 ಸಾವಿರ ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ : ಬೊಮ್ಮಾಯಿ
2
+ ಬೆಂಗಳೂರು,ಫೆ.21- ರಾಜ್ಯದಲ್ಲಿ ಕಳೆದ 10 ವರ್ಷಗಳಲ್ಲಿ 13 ಸಾವಿರ ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಅವರು, ಈ ಹಿಂದೆ ಸ್ವತಂತ್ರ ನಂತರದಿಂದ 2014 ರವರೆಗೂ ರಾಜ್ಯದಲ್ಲಿ 6,500 ಕಿ.ಮೀ. ಮಾತ್ರ ಹೆದ್ದಾರಿ ಇತ್ತು. ಅದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸರ್ಕಾರ 13 ಸಾವಿರ ಕಿ.ಮೀ.ಗಳಿಗೆ ಹೆಚ್ಚಿಸಿದೆ ಎಂದರು.
3
+ ಇದಕ್ಕೆ ಆಡಳಿತ ಪಕ್ಷದ ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು. ಶಿವಮೊಗ್ಗ-ತುಮಕೂರು ರಸ್ತೆ, ಬೆಂಗಳೂರು-ಮಂಗಳೂರು ರಸ್ತೆ ಅಪೂರ್ಣವಾಗಿ ಹಲವಾರು ವರ್ಷಗಳಿಂದಲೂ ನೆನೆಗುದಿಗೆ ಬಿದ್ದಿದೆ ಎಂದು ತಿರುಗೇಟು ನೀಡಿದರು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕುಂಠಿತಗೊಳ್ಳಲು ರಾಜ್ಯಸರ್ಕಾರವೇ ಕಾರಣ. ಭೂಸ್ವಾೀಧಿನಾಕಾರಿಗಳನ್ನು ನೇಮಿಸಿ ಭೂಮಿಯನ್ನು ಹಸ್ತಾಂತರಿಸಿದರೆ ಹೆದ್ದಾರಿ ನಿರ್ಮಾಣ ಕಾಮಗಾರಿ ಚುರುಕಾಗಿ ನಡೆಯಲಿದೆ ಎಂದು ಬಸವರಾಜ ಬೊಮ್ಮಾಯಿ ವಿವರಿಸಿದರು.
4
+ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ : ಕಾಂಗ್ರೆಸ್ ಸರ್ಕಾರದ ಮತ್ತೊಂದು ಎಡವಟ್ಟು
5
+ 1,017 ಸಾವಿರ ಕೋಟಿ ವೆಚ್ಚದ ಸಾಗರ್ ಮಾಲ ಯೋಜನೆಯನ್ನು ಶೇ.50/50 ವೆಚ್ಚದ ಅನುಪಾತದಡಿ ಕೈಗೆತ್ತಿಕೊಳ್ಳಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
eesanje/url_46_229_11.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಸರ್ಕಾರದಿಂದ ಕಂದಾಯ ವೆಚ್ಚ ದುರ್ಬಳಕೆ : ಬೊಮ್ಮಾಯಿ ಆರೋಪ
2
+ ಬೆಂಗಳೂರು,ಫೆ.21- ಕರ್ನಾಟಕ ಸರ್ಕಾರ ಆದಾಯಕ್ಕಿಂತಲೂ ಶೇ.103 ರಷ್ಟು ಕಂದಾಯ ವೆಚ್ಚವನ್ನು ಬಳಕೆ ಮಾಡುವುದಾಗಿ ಹೇಳುವ ಮೂಲಕ ನಾಡಿನ ಆರ್ಥಿಕ ಶಿಸ್ತನ್ನು ಹಾಳುಗೆಡವಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದರು. ಅಂಕಿ ಅಂಶಗಳ ಸಹಿತ ವಿಧಾನಸಭೆಯಲ್ಲಿಂದು ಬಜೆಟ್‍ನ ಲೋಪದೋಷಗಳ ವಿಶ್ಲೇಷಣೆ ನಡೆಸಿದ ಅವರು, ಕಲ್ಯಾಣ ಕಾರ್ಯಕ್ರಮಗಳಿಗೆ ಹಣ ನೀಡಬೇಕು. ಆದರೆ ಅದಕ್ಕೆ ಪೂರಕವಾದ ಆದಾಯವೂ ಅಗತ್ಯವಿದೆ.
3
+ ಈ ಬಜೆಟ್‍ನಲ್ಲಿ ಯೋಜನೆ ಆಧರಿತ ವೆಚ್ಚಗಳಡಿ ಶೇ.42 ರಷ್ಟು ಖರ್ಚು ಮಾಡಲಾಗುತ್ತಿದೆ. ಇದು ಪಂಚಖಾತ್ರಿಯಂತಹ ಯೋಜನೆಗಳಿಗೆ ಬಳಕೆಯಾಗುತ್ತಿದೆ ಮತ್ತು ನಿರಂತರವಾಗಿ ವೆಚ್ಚಗಳ ಬಾಬ್ತಾಗಿರುವ ವೇತನ, ಪಿಂಚಣಿ, ಸಾಲ ಮತ್ತು ಬಡ್ಡಿ ಪಾವತಿಗಳಿಗೆ ಶೇ.61 ರಷ್ಟು ಕಂದಾಯ ವೆಚ್ಚ ನಿಗದಿಯಾಗಿದೆ.
4
+ ಕಳೆದ ಬಜೆಟ್‍ಗಳಲ್ಲಿ ಇದು ಶೇ.56 ಮತ್ತು ಶೇ.48 ರಷ್ಟಿತ್ತು. ಪ್ರಸ್ತುತ ಯೋಜನೇತರ ಮತ್ತು ಯೋಜನೇತರ ಆಧರಿತ ವೆಚ್ಚಗಳಿಂದ ಶೇ.61ರಷ್ಟು ಬಳಕೆಯಾಗುತ್ತಿದೆ. ಬಂಡವಾಳ ವೆಚ್ಚವನ್ನು ಹಿಂದಿನ ವರ್ಷಕ್ಕಿಂತಲೂ 1 ಸಾವಿರ ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಸೇರಿಸಿ ಒಟ್ಟು 55 ಸಾವಿರ ಕೋಟಿ ರೂ.ಗಳಿಗೆ ನಿಗದಿ ಮಾಡಿದ್ದಾರೆ ಎಂದು ವಿವರಿಸಿದರು. ಕಂದಾಯ ಇಲಾಖೆಯ ಮುದ್ರಾಂಕ ಶುಲ್ಕ, ಅಬಕಾರಿ ಹಾಗೂ ಮೋಟಾರು ವಾಹನ ತೆರಿಗೆ ಹೆಚ್ಚಳದಿಂದ 13 ಸಾವಿರ ಕೋಟಿ ರೂ.ಗಳು ಹೆಚ್ಚುವರಿ ಹಣ ಸಂದಾಯವಾಗುತ್ತಿದೆ. ಈ ಹಿಂದೆ ತಮ್ಮ ಸರ್ಕಾರ 8 ಸಾವಿರ ಕೋಟಿ ರೂ.ಗಳ ಹೆಚ್ಚುವರಿ ಆದಾಯ ಸಂಗ್ರಹಿಸಿತ್ತು.
5
+ ಒಟ್ಟಾರೆ ಹೆಚ್ಚುವರಿಯಾದ 26 ಸಾವಿರ ಕೋಟಿ ರೂ.ಗಳು ಕಂದಾಯ ವೆಚ್ಚಕ್ಕೆ ಬಳಕೆಯಾಗುತ್ತಿವೆ ಎಂದು ವಿವರಿಸಿದರು. 7ನೇ ವೇತನ ಆಯೋಗಕ್ಕೆ 20 ಸಾವಿರ ಕೋಟಿ ರೂ.ಗಳ ಅನುದಾನದ ಅಗತ್ಯವಿದೆ. ಅದನ್ನು ಈ ಬಜೆಟ್‍ನಲ್ಲಿ ಎಲ್ಲಿಯೂ ನಮೂದಿಸಿಲ್ಲ. ಕಂದಾಯ ವೆಚ್ಚವೇ ದುಬಾರಿಯಾಗಿರುವುದರಿಂದ ಅಭಿವೃದ್ಧಿಗೆ ಹಣವೇ ಇಲ್ಲದಂತಾಗಿದೆ ಎಂದು ಬಸವರಾಜ ಬೊಮ್ಮಾಯಿ ವಿಶ್ಲೇಷಿಸಿದರು.
6
+ ಲೋಕಸಭಾ ಚುನಾವಣೆಯಲ್ಲಿ ಹೊಸ ಮುಖಗಳ ಪ್ರಯೋಗಕ್ಕೆ ಬಿಜೆಪಿ ಬ್ರೇಕ್
7
+ ಈ ಸರ್ಕಾರ 1.05 ಲಕ್ಷ ಕೋಟಿ ರೂ.ಗಳ ಸಾಲ ಮಾಡುತ್ತಿದೆ. ಸಾಲವನ್ನು ಬಂಡವಾಳ ವೆಚ್ಚದ ಬದಲಾಗಿ ಕಂದಾಯ ವೆಚ್ಚ ವಾಗಿ ಬಳಕೆ ಮಾಡುತ್ತಿರುವುದು ಸರಿಯಲ್ಲ. ಸಾಲದ ಬಾಬ್ತಿನಲ್ಲೂ ಶೇ.90 ರಷ್ಟನ್ನು ಮಾರುಕಟ್ಟೆ ಮೂಲಗಳಿಂದ ದುಬಾರಿ ಬಡ್ಡಿದರದಲ್ಲಿ ಸಂಗ್ರಹಿಸಲಾಗುತ್ತಿದೆ. ಇದು ರಾಜ್ಯದ ಆರ್ಥಿಕತೆಗೆ ಭಾರೀ ಹಾನಿಯನ್ನುಂಟು ಮಾಡಲಿದೆ ಎಂದು ಎಚ್ಚರಿಸಿದರು.
8
+ ಸಂಪನ್ಮೂಲ ಕ್ರೋಡೀಕರಣದಲ್ಲಿ 12 ಸಾವಿರ ಕೋಟಿ ರೂ. ಕೊರತೆಯಾಗಿದೆ. ತತ್ಸಮಾನವಾಗಿ ವೆಚ್ಚದಲ್ಲೂ ಕೂಡ 10 ಸಾವಿರ ಕೋಟಿ ರೂ. ಕಡಿಮೆಯಿದೆ. ಸಾಮಾಜಿಕ ಸೇವೆಗೆ 96 ಸಾವಿರ ಕೋಟಿ ರೂ. ನಿಗದಿ ಮಾಡಿದ್ದಾರೆ. ಆರ್ಥಿಕ ವೆಚ್ಚಗಳನ್ನು ಕಡಿಮೆ ಮಾಡಲಾಗಿದೆ ಎಂದು ಹೇಳಿದರು. ವಿದೇಶಿ ಬಂಡವಾಳ ಹೂಡಿಕೆ ಶೇ. 40 ರಷ್ಟು ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ನೋಂದಣಿಯಾಗಿದ್ದ 30 ಕಂಪನಿಗಳು ಸಿಂಗಾಪುರ ಸೇರಿದಂತೆ ಬೇರೆ ಬೇರೆ ದೇಶಗಳಿಗೆ ಹೋಗಿವೆ. ಈ ರೀತಿಯ ಕಂಪನಿಗಳಿಂದಲೇ ಸರ್ಕಾರಕ್ಕೆ ಹೆಚ್ಚಿನ ಆದಾಯ ಬರುತ್ತಿತ್ತು ಎಂದರು.
9
+ ಆರ್ಥಿಕತೆಯಲ್ಲಿ ಸಾಮಥ್ರ್ಯ ಮತ್ತು ಹಂಚಿಕೆ ಸರಿಸಮಾನವಾಗಿರಬೇಕು. ತೆರಿಗೆ ಸಂಗ್ರಹ ಸಾಮಥ್ರ್ಯ ದಕ್ಷವಾಗಿರುವುದರ ಜೊತೆಗೆ ಹಂಚಿಕೆಯಲ್ಲೂ ಅಷ್ಟೇ ನ್ಯಾಯಯುತವಾಗಿರಬೇಕು. ಹೀಗಿದ್ದಾಗ ಮಾತ್ರ ಆರ್ಥಿಕತೆ ಸಮಾನವಾಗಿರುತ್ತದೆ. ಆದರೆ ರಾಜ್ಯದಲ್ಲಿ ಅದು ಕಂಡುಬರುತ್ತಿಲ್ಲ ಎಂದು ಹೇಳಿದರು.
10
+ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ : ಕಾಂಗ್ರೆಸ್ ಸರ್ಕಾರದ ಮತ್ತೊಂದು ಎಡವಟ್ಟು
11
+ ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸುತ್ತಿರುವ ರಾಜ್ಯಸರ್ಕಾರ ನಾಡಿನ ಮೂಲ ಸೌಕರ್ಯಾಭಿವೃದ್ಧಿಯಲ್ಲಿ ಕೇಂದ್ರದ ಕೊಡುಗೆಗಳನ್ನು ಮರೆಮಾಚುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರೈಲ್ವೆ, ಸ್ಮಾರ್ಟ್ ಸಿಟಿಗೆ ತಲಾ 7 ಸಾವಿರ ಕೋಟಿ ರೂ., ಆಯುಷ್ಮಾನ್ ಭಾರತ್, ಜಲಜೀವನ್ ಮಿಷನ್ ಸೇರಿದಂತೆ ಹಲವು ಬಾಬ್ತುಗಳಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಸಾಕಷ್ಟು ಕೊಡುಗೆ ನೀಡಿದೆ. ಆದಾಯ, ಕಸ್ಟಮ್ಸ್ ಮತ್ತು ವೃತ್ತಿ ತೆರಿಗೆಗಳಲ್ಲಿ ಸಂಗ್ರಹವಾಗುವ ಸಂಪನ್ಮೂಲವನ್ನು ಕೇಂದ್ರ, ರಕ್ಷಣೆ, ರೈಲ್ವೆಯಂತಹ ತನ್ನದೇ ವೆಚ್ಚಗಳಿಗೆ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಹೇಳಿದರು.