CoolCoder44 commited on
Commit
45dc190
·
verified ·
1 Parent(s): a1f315a

c99a96cf06f50600bf3b254cc9537e4e1515aa72830e6d31c39dece5148f0a4a

Browse files
Files changed (50) hide show
  1. eesanje/url_46_244_1.txt +9 -0
  2. eesanje/url_46_244_10.txt +8 -0
  3. eesanje/url_46_244_11.txt +8 -0
  4. eesanje/url_46_244_12.txt +9 -0
  5. eesanje/url_46_244_2.txt +9 -0
  6. eesanje/url_46_244_3.txt +8 -0
  7. eesanje/url_46_244_4.txt +5 -0
  8. eesanje/url_46_244_5.txt +11 -0
  9. eesanje/url_46_244_6.txt +6 -0
  10. eesanje/url_46_244_7.txt +6 -0
  11. eesanje/url_46_244_8.txt +6 -0
  12. eesanje/url_46_244_9.txt +10 -0
  13. eesanje/url_46_245_1.txt +11 -0
  14. eesanje/url_46_245_10.txt +9 -0
  15. eesanje/url_46_245_11.txt +5 -0
  16. eesanje/url_46_245_12.txt +10 -0
  17. eesanje/url_46_245_2.txt +8 -0
  18. eesanje/url_46_245_3.txt +7 -0
  19. eesanje/url_46_245_4.txt +8 -0
  20. eesanje/url_46_245_5.txt +5 -0
  21. eesanje/url_46_245_6.txt +6 -0
  22. eesanje/url_46_245_7.txt +9 -0
  23. eesanje/url_46_245_8.txt +14 -0
  24. eesanje/url_46_245_9.txt +10 -0
  25. eesanje/url_46_246_1.txt +13 -0
  26. eesanje/url_46_246_10.txt +4 -0
  27. eesanje/url_46_246_11.txt +5 -0
  28. eesanje/url_46_246_12.txt +3 -0
  29. eesanje/url_46_246_2.txt +13 -0
  30. eesanje/url_46_246_3.txt +9 -0
  31. eesanje/url_46_246_4.txt +9 -0
  32. eesanje/url_46_246_5.txt +7 -0
  33. eesanje/url_46_246_6.txt +11 -0
  34. eesanje/url_46_246_7.txt +7 -0
  35. eesanje/url_46_246_8.txt +8 -0
  36. eesanje/url_46_246_9.txt +8 -0
  37. eesanje/url_46_247_1.txt +7 -0
  38. eesanje/url_46_247_10.txt +13 -0
  39. eesanje/url_46_247_11.txt +9 -0
  40. eesanje/url_46_247_12.txt +10 -0
  41. eesanje/url_46_247_2.txt +9 -0
  42. eesanje/url_46_247_3.txt +7 -0
  43. eesanje/url_46_247_4.txt +13 -0
  44. eesanje/url_46_247_5.txt +7 -0
  45. eesanje/url_46_247_6.txt +8 -0
  46. eesanje/url_46_247_7.txt +10 -0
  47. eesanje/url_46_247_8.txt +7 -0
  48. eesanje/url_46_247_9.txt +5 -0
  49. eesanje/url_46_248_1.txt +10 -0
  50. eesanje/url_46_248_10.txt +11 -0
eesanje/url_46_244_1.txt ADDED
@@ -0,0 +1,9 @@
 
 
 
 
 
 
 
 
 
 
1
+ ಕಾಂಗ್ರೆಸ್‍ನತ್ತ ಕೆ.ಆರ್.ಪೇಟೆ ಮಾಜಿ ಶಾಸಕ ನಾರಾಯಣಗೌಡ..!?
2
+ ಬೆಂಗಳೂರು,ಫೆ.8- ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದತೆ ಕಾಂಗ್ರೆಸ್ ಮತ್ತೊಂದು ಸುತ್ತಿನ ಆಪರೇಷನ್ ಹಸ್ತಕ್ಕೆ ಕೈ ಹಾಕಿದ್ದು, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ನಾಯಕರನ್ನು ಕರೆದುಕೊಳ್ಳಲು ತಯಾರಿ ನಡೆಸಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಸಿ.ನಾರಾಯಣಗೌಡ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ ಕೀಯವಾಗಿ ಭೇಟಿ ಮಾಡಿದ್ದು ಸಮಾಲೋಚನೆ ನಡೆಸಿರುವುದು ಕುತೂಹಲ ಕೆರಳಿಸಿದೆ.
3
+ ಕಾಂಗ್ರೆಸ್ ಸರ್ಕಾರ ರಚನೆಯಾದ ಆರಂಭದಲ್ಲಿ ಜೆಡಿಎಸ್ ಪಕ್ಷದ ಪ್ರಮುಖ ನಾಯಕರನ್ನು ಪಕ್ಷಕ್ಕೆ ಸೆಳೆದುಕೊಳ್ಳಲಾಗಿತ್ತು. ಆ ವೇಳೆ ಹತ್ತಾರು ನಾಯಕರು ಕಾಂಗ್ರೆಸ್ ಸೇರಿದ್ದರು. ಇದಕ್ಕೆ ಕಾಂಗ್ರೆಸ್‍ನಲ್ಲಿಯೇ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಒಂದಿಷ್ಟು ಕಾಲ ಆಪರೇಷನ್ ಹಸ್ತವನ್ನು ಸ್ಥಗಿತಗೊಳಿಸಲಾಗಿತ್ತು. ಬಿಜೆಪಿಯಿಂದ ವಲಸೆ ಬಂದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್‍ಶೆಟ್ಟರ್ ಮರಳಿ ಮಾತೃಪಕ್ಷಕ್ಕೆ ಹೋಗಿದ್ದು ಕಾಂಗ್ರೆಸ್ ನಾಯಕರನ್ನು ಮುಜುಗರಕ್ಕೀಡು ಮಾಡಿತ್ತು.
4
+ ಹೀಗಾಗಿ ರೊಚ್ಚಿಗೆದ್ದಿರುವ ಕಾಂಗ್ರೆಸ್ ನಾಯಕರು ಈ ಬಾರಿ ಬಿಜೆಪಿಯ ಬುಟ್ಟಿಗೆ ಕೈಹಾಕಲು ಮುಂದಾಗಿದ್ದಾರೆ. ಜೆಡಿಎಸ್-ಬಿಜೆಪಿಯ ಮೈತ್ರಿಯಿಂದಾಗಿ ಅಸಮಾಧಾನಗೊಂಡಿರುವ ಆಯಾ ಪಕ್ಷಗಳ ಹಲವು ನಾಯಕರು ಪರ್ಯಾಯ ರಾಜಕೀಯದತ್ತ ಗಮನ ಹರಿಸಿದ್ದು, ಅಂತವರಿಗೆ ಕಾಂಗ್ರೆಸ್ ಮುಕ್ತ ಆಹ್ವಾನ ನೀಡುತ್ತಿದೆ. ಕೆ.ಸಿ.ನಾರಾಯಣಗೌಡ ಸೇರಿದಂತೆ ಬಿಜೆಪಿಯ ಬಹಳಷ್ಟು ನಾಯಕರು ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ. ಎರಡನೇ ಸುತ್ತಿನ ಆಪರೇಷನ್ ಹಸ್ತ ನಡೆಯುವ ಸಾಧ್ಯತೆಗಳು ದಟ್ಟವಾಗಿವೆ.
5
+ ಭಾರತ ಅಮೆರಿಕವನ್ನು ದುರ್ಬಲವಾಗಿ ಪರಿಗಣಿಸಿದೆ : ಹ್ಯಾಲೆ
6
+ ಈ ಮೊದಲು ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಪಕ್ಷ ತೊರೆದವರ ವಿರುದ್ಧ ತನಿಖೆ ನಡೆಸುತ್ತದೆ ಎಂಬ ಆತಂಕ ಇತ್ತು. ಹೀಗಾಗಿ ಬಹಳಷ್ಟು ನಾಯಕರು ಉಸಿರುಗಟ್ಟುವ ವಾತಾವರಣವಿದ್ದರೂ, ರಾಜಕೀಯ ಪ್ರಾತಿನಿಧ್ಯ ದೊರೆಯದಿದ್ದರೂ ಕೂಡ ಅನಿವಾರ್ಯವಾಗಿ ಬಿಜೆಪಿಯಲ್ಲೇ ಮುಂದುವರೆದಿದ್ದರು.
7
+ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಸಮಯ ಹತ್ತಿರ ಬರುತ್ತಿದ್ದು, ಕೇಂದ್ರ ತನಿಖಾ ಸಂಸ್ಥೆಗಳ ಮೇಲೆ ಬಿಜೆಪಿಯ ಹಿಡಿತ ತಗ್ಗಲಿದೆ. ಈ ಸಂದರ್ಭವನ್ನು ಬಳಸಿಕೊಂಡು ಪಕ್ಷಾಂತರ ಮಾಡಲು ಸಾಕಷ್ಟು ನಾಯಕರು ತಯಾರಿದ್ದಾರೆಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
8
+ ರಾಜ್ಯಾದ್ಯಂತ ಹುಕ್ಕಾ ಬಳಕೆ ನಿಷೇಧಿಸಿ ಆರೋಗ್ಯ ಇಲಾಖೆ ಆದೇಶ
9
+ ಆದರೆ ಪಕ್ಷಕ್ಕೆ ಸೇರಿಸಿಕೊಳ್ಳುವಾಗ ನಾಯಕರ ಹಿನ್ನೆಲೆ, ಸೈದ್ಧಾಂತಿಕ ನಿಲುವು ಮತ್ತು ಬದ್ಧತೆಯನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಹೈ���ಮಾಂಡ್ ಸೂಚನೆ ನೀಡಿದೆ. ಹೀಗಾಗಿ ರಾಜ್ಯನಾಯಕರು ಪಕ್ಷ ಸೇರ್ಪಡೆಯನ್ನು ಕ್ರಮಬದ್ಧವಾಗಿ ಪರಿಶೀಲಿಸಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
eesanje/url_46_244_10.txt ADDED
@@ -0,0 +1,8 @@
 
 
 
 
 
 
 
 
 
1
+ ಬಿಜೆಪಿಯ ಬೇಡಿಕೆಯಂತೆ ಬಜೆಟ್ ವೇಳೆ ಶ್ವೇತ ಪತ್ರ ಹೊರಡಿಸುತ್ತೇವೆ : ಸಿಎಂ ಸಿದ್ದರಾಮಯ್ಯ
2
+ ನವದೆಹಲಿ,ಫೆ.7- ಬಿಜೆಪಿಯ ಬೇಡಿಕೆಯಂತೆ ಕೇಂದ್ರದಿಂದ ರಾಜ್ಯಕ್ಕಾಗಿರುವ ಆರ್ಥಿಕ ತಾರತಮ್ಯದ ಕುರಿತು ಬಜೆಟ್ ವೇಳೆ ಶ್ವೇತ ಪತ್ರ ಹೊರಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸರ್ಕಾರದ ಆಯವ್ಯಯವೇ ಶ್ವೇತಪತ್ರವಿದ್ದಂತೆ. ಆದರೂ ಬಿಜೆಪಿಯವರು ಪ್ರತ್ಯೇಕವಾದ ಮಾಹಿತಿ ಕೇಳುತ್ತಿದ್ದಾರೆ. ಅವರ ಬೇಡಿಕೆಗನುಗುಣವಾಗಿ ಶ್ವೇತಪತ್ರ ಹೊರಡಿಸುತ್ತೇವೆ ಎಂದು ಹೇಳಿದರು.’
3
+ ರಾಜ್ಯಸರ್ಕಾರದ ಎಲ್ಲಾ ಶಾಸಕರು, ಸಚಿವರು ದೆಹಲಿಯಲ್ಲಿ ಐತಿಹಾಸಿಕವಾದ ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ತಾರತಮ್ಯದ ವಿರುದ್ಧ ಗಮನ ಸೆಳೆಯುವುದು ನಮ್ಮ ಮೂಲ ಉದ್ದೇಶವಾಗಿದೆ ಎಂದರು. 2017-18 ರಲ್ಲಿದ್ದ ಬಜೆಟ್ ಗಾತ್ರ 2024-25 ರ ವೇಳೆಗೆ ದ್ವಿಗುಣಗೊಂಡಿದೆ. ಹೀಗಾಗಿ ತೆರಿಗೆ ಹಾಗೂ ಅನುದಾನದ ಹಂಚಿಕೆಯೂ ಹೆಚ್ಚಾಗಬೇಕಿತ್ತು. 14 ನೇ ಹಣಕಾಸು ಆಯೋಗದಲ್ಲಿದ್ದಷ್ಟೇ ಪ್ರಮಾಣದ ತೆರಿಗೆ ಹಂಚಿಕೆಯಾಗಿದೆ.
4
+ ಇದರಿಂದ ರಾಜ್ಯಕ್ಕೆ 1.87 ಲಕ್ಷ ಕೋಟಿ ರೂ. ನಷ್ಟವಾಗಿದೆ. 14 ನೇ ಹಣಕಾಸು ಆಯೋಗದ ಮಾನದಂಡಗಳನ್ನೇ ಅನುಸರಿಸಿದರು. 14 ನೇ ಹಣಕಾಸು ಆಯೋಗದ ವೇಳೆಗೆ 62,098 ಕೋಟಿ ರೂ. ತೆರಿಗೆ ಪಾಲು ಹೆಚ್ಚಾಗಬೇಕಿತ್ತು. ಆದರೆ ಮಲತಾಯಿ ಧೋರಣೆಯಿಂದಾಗಿ ಭಾರಿ ಅನ್ಯಾಯವಾಗಿದೆ ಎಂದು ಟೀಕಿಸಿದರು.
5
+ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನಕ್ಸಲರ ಓಡಾಟ, ಹೈಅಲರ್ಟ್ ಘೋಷಣೆ
6
+ ರಾಜ್ಯಸರ್ಕಾರ ಕೇಂದ್ರದ ಎಲ್ಲಾ ಯೋಜನೆಗಳೊಂದಿಗೆ ಶೇ.50 ರಷ್ಟು ಪಾಲು ಹೊಂದಿದೆ. ಆ ಯೋಜನೆಗಳಿಗೂ ಸರಿಯಾಗಿ ಅನುದಾನ ಬಿಡುಗಡೆ ಮಾಡುತ್ತಿಲ್ಲ. 13 ಸಾವಿರ ಕೋಟಿ ರೂ. ಮಾತ್ರ ದೊರೆಯುತ್ತಿದೆ. ಎಲ್ಲಾ ವಿಷಯದಲ್ಲೂ ಕೇಂದ್ರ ಸರ್ಕಾರ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.ಇಂದು ಸೆಸ್ ಹಾಗೂ ಸರ್‍ಚಾರ್ಜ್‍ನಲ್ಲಿ ರಾಜ್ಯಕ್ಕೆ ಯಾವುದೇ ಪಾಲು ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
7
+ ನಮ್ಮ ಸಾಂಕೇತಿಕ ಪ್ರತಿಭಟನೆ ಹೊರತಾಗಿಯೂ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡದೇ ಇದ್ದರೆ ಹೋರಾಟವನ್ನು ಮುಂದುವರೆಸುತ್ತೇವೆ. ಜನತಾ ನ್ಯಾಯಾಲಯದಲ್ಲಿ ಕೇಂದ್ರದ ತಾರತಮ್ಯವನ್ನು ಪ್ರಶ್ನೆ ಮಾಡುತ್ತೇವೆ ಎಂದು ಹೇಳಿದರು.
8
+ ರಾಜ್ಯಕ್ಕೆ ಏಕೆ ಹಣ ಬಿಡುಗಡೆ ಮಾಡುತ್ತಿಲ್ಲ ಎಂಬುದಕ್ಕೆ ಕೇಂದ್ರ ಸರ್ಕಾರವೇ ಉತ್ತರ ನೀಡಬೇಕು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಬಡವರಿಗೆ ಅಕ್ಕಿ ನೀಡುತ್ತೇವೆ ಎಂದರೆ ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಅಕ್ಕಿ ನೀಡದೇ ಬಡವರ ವಿರೋಯಾಗಿ ನಡೆದುಕೊಂಡಿದೆ ಎಂದು ಟೀಕಿಸಿದರು.
eesanje/url_46_244_11.txt ADDED
@@ -0,0 +1,8 @@
 
 
 
 
 
 
 
 
 
1
+ ರಾಜ್ಯದ ಪರ ಧ್ವನಿ ಎತ್ತದೇ ಬಿಜೆಪಿ ನಾಯಕರು ನೈತಿಕತೆ ಕಳೆದುಕೊಂಡಿದ್ದಾರೆ : ಡಿಕೆಶಿ
2
+ ನವದೆಹಲಿ,ಫೆ.7- ರಾಜ್ಯದ ಪರವಾಗಿ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತದೇ ಇರುವ ಬಿಜೆಪಿ ನಾಯಕರು ಹಾಗೂ ಸಂಸದರು ಗಾಂಧಿ ಪ್ರತಿಮೆಯೆದುರು ಧರಣಿ ಮಾಡುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ ಜಂತರ್ ಮಂತರ್‍ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನಮ್ಮ ಪ್ರತಿಭಟನೆಯನ್ನು ಟೀಕಿಸುವವರು ರಾಜ್ಯಕ್ಕೆ ನೀಡಿದ ಕೊಡುಗೆಯೇನು ಎಂದು ಹೇಳಬೇಕಿದೆ. ನಾವು ಭಾವನಾತ್ಮಕ ವಿಚಾರದ ಮೇಲೆ ರಾಜಕಾರಣ ಮಾಡುತ್ತಿಲ್ಲ. ಜನರ ಬದುಕಿಗಾಗಿ ರಾಜಕಾರಣ ಮಾಡುತ್ತಿದ್ದೇವೆ ಎಂದು ತಿರುಗೇಟು ನೀಡಿದರು.
3
+ ಬಿಜೆಪಿಯ ಯಾವ ನಾಯಕರು ಕೇಂದ್ರದ ತಾರತಮ್ಯದ ವಿರುದ್ಧ ಧ್ವನಿ ಎತ್ತುತ್ತಿಲ್ಲ. ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಜನ 25 ಸಂಸದರನ್ನು ಬಿಜೆಪಿಗೆ ಗೆಲ್ಲಿಸಿಕೊಟ್ಟಿದ್ದರು. ಆದರೆ ಅವರ್ಯಾರು ರಾಜ್ಯದ ಧ್ವನಿಯಾಗಲಿಲ್ಲ. ಇಂದು ಕಾಂಗ್ರೆಸ್ ರಾಜ್ಯದ ಧ್ವನಿಯನ್ನು ದೆಹಲಿಯಲ್ಲಿ ಪ್ರತಿಧ್ವನಿಸುತ್ತಿದೆ ಎಂದು ಹೇಳಿದರು.
4
+ ಕಾಂಗ್ರೆಸ್‍ನ ಪ್ರತಿಭಟನೆಯನ್ನು ಟೀಕಿಸುವವರು ಮೊದಲು ಪ್ರಧಾನಿ ನರೇಂದ್ರ ಮೋದಿ ಎದುರು ನಿಂತು ರಾಜ್ಯಕ್ಕಾಗುತ್ತಿರುವ ಅನ್ಯಾಯದ ಬಗ್ಗೆ ಉಸಿರು ಬಿಡಲಿ ಎಂದು ಸವಾಲು ಹಾಕಿದರು. ಹಣಕಾಸು ಆಯೋಗವೇ ಅನುದಾನ ಹಂಚಿಕೆ ಮಾಡುತ್ತದೆ ಎಂದು ಸಮರ್ಥನೆ ಮಾಡಿಕೊಳ್ಳುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‍ರವರು ಕರ್ನಾಟಕವನ್ನು ಪ್ರತಿನಿಸುತ್ತೇವೆ ಎಂಬುದನ್ನು ಮರೆತಿದ್ದಾರೆ. ಎಲ್ಲವೂ ಆಯೋಗವೇ ಮಾಡುವುದಾದರೆ ಕೇಂದ್ರ ಸರ್ಕಾರದ ಅಸ್ತಿತ್ವವಾದರೂ ಏಕೆ? ಅನ್ಯಾಯವಾದಾಗ ಅದನ್ನು ಸರಿಪಡಿಸುವುದು ಕೇಂದ್ರದ ಜವಾಬ್ದಾರಿ ಅಲ್ಲವೇ ಎಂದು ತಿರುಗೇಟು ನೀಡಿದರು.
5
+ ತೆರೆದ ಬಾವಿಗೆ ಬಿದ್ದ 2 ವರ್ಷದ ಮಗು ಪ್ರಾಣಾಪಾಯದಿಂದ ಬಚಾವ್
6
+ ಬರ ನಿರ್ವಹಣೆಗೆ ಒಂದು ರೂಪಾಯಿ ಹಣ ನೀಡಿಲ್ಲ. ಮುಖ್ಯಮಂತ್ರಿಯವರು ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ್ದಾರೆ. ರಾಜ್ಯದ ಸಚಿವರು ಕೇಂದ್ರದ ಸಚಿವರನ್ನು ಭೇಟಿ ಮಾಡಿ ಒತ್ತಡ ಹಾಕಿದ್ದಾರೆ. ಈವರೆಗೂ ಹಣ ಬಿಡುಗಡೆ ಮಾಡಿಲ್ಲ ಎಂಬುದು ಸತ್ಯವಲ್ಲವೇ ಎಂದರು.
7
+ ಹಿಂದೆ ನಿರ್ಮಲಾ ಸೀತಾರಾಮನ್‍ರವರೇ ಮಂಡಿಸಿದ ಬಜೆಟ್‍ನಲ್ಲಿ ಭದ್ರಾ ಮೇಲಂ್ದಡೆ ಯೋಜನೆಗೆ 5,300 ಕೋಟಿ ರೂ. ಘೋಷಿಸಿರಲಿಲ್ಲವೇ? ಅದರಲ್ಲಿ ಏಕೆ ಹಣ ಬಿಡುಗಡೆ ಮಾಡಲಿಲ್ಲ. ರೈಲ್ವೆ ಯೋಜನೆ, ಪೆರಿಫರಲ್ ಯೋಜನೆಗೆ ಘೋಷಿಸಿದ್ದ ಹಣವನ್ನು ಏಕೆ ತಡೆಹಿಡಿಯಲಾಯಿತು ಎಂದು ಪ್ರಶ್ನಿಸಿದರು.
8
+ ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲವಾಗಿದೆ. ಅದಕ್ಕಾಗಿ ದೆಹಲಿಗೆ ಬಂದು ಪ್ರತಿಭಟನೆ ಮಾಡಬೇಕಿದೆ. ಬೆಂಗಳೂರಿನಲ್ಲಿ ಪ್ರತಿಭಟಿಸಿದರೆ ಕಿವಿಗ��� ಹಾಕಿಕೊಳ್ಳುವುದಿಲ್ಲ ಎಂದು ಆಕ್ಷೇಪಿಸಿದರು.ಇದು ರಾಜಕೀಯ ಸ್ಟಂಟ್ ಅಲ್ಲ. ಆ ರೀತಿ ಸ್ಟಂಟ್ ಮಾಡಲು ನಮ್ಮಲ್ಲಿ ಯಾರೂ ಸಿನಿಮಾ ನಿರ್ದೇಶಕರಿಲ್ಲ. ಅವರೆಲ್ಲಾ ಅವರ ಪಕ್ಷದಲ್ಲೇ ಇದ್ದಾರೆ ಎಂದು ಹೇಳಿದರು.
eesanje/url_46_244_12.txt ADDED
@@ -0,0 +1,9 @@
 
 
 
 
 
 
 
 
 
 
1
+ ಮೇಕೆದಾಟು ಯೋಜನೆ ವಿಚಾರದಲ್ಲಿ ಪ್ರಧಾನಿ ಮಧ್ಯಪ್ರವೇಶಕ್ಕೆ ಗೌಡರ ಆಗ್ರಹ
2
+ ನವದೆಹಲಿ,ಫೆ.7- ಕೇಂದ್ರ ಸರಕಾರವು 30 ಟಿಎಂಸಿ ಅಡಿ ನೀರು ಸಂಗ್ರಹ ಸಾಮಥ್ರ್ಯದ ಕರ್ನಾಟಕದ ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮನವಿ ಮಾಡಿದ್ದಾರೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸುಪ್ರೀಂ ಕೋರ್ಟ್‍ನಲ್ಲಿ ತಮಿಳುನಾಡು ಪರ ವಾದ ಮಂಡಿಸಿದ ಹಿರಿಯ ವಕೀಲರೇ ಮೆಟ್ಟೂರು ಜಲಾಶಯಕ್ಕೆ ಮೇಲ್ಭಾಗದಲ್ಲಿ ಕರ್ನಾಟಕ ಜಲಾಶಯ ನಿರ್ಮಾಣ ಮಾಡಬಹುದು ಎಂದು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
3
+ ಪ್ರಧಾನಿಗಳು ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಮಧ್ಯಪ್ರವೇಶ ಮಾಡಬೇಕು. ಕರ್ನಾಟಕದ ಕುಡಿಯುವ ನೀರಿನ ಸಂಕಷ್ಟವನ್ನು ಪರಿಹಾರ ಮಾಡಬೇಕು. ಇದಷ್ಟೇ ಎಲ್ಲರಿಗೂ ನನ್ನ ಪ್ರಾರ್ಥನೆ ಎಂದು ಮಾಜಿ ಪ್ರಧಾನಿಗಳು ಕೈ ಜೋಡಿಸಿ ಮನವಿ ಮಾಡಿಕೊಂಡಿದ್ದಾರೆ.ಮೇಕೆದಾಟು ಯೋಜನೆಯ ವಿಷಯವನ್ನು ಪ್ರಸ್ತಾಪ ಮಾಡಿದ ಗೌಡರು, ತಮಿಳುನಾಡು ಸ್ನೇಹಿತರು ಅನ್ಯತಾ ಭಾವಿಸಬಾರದು ಎನ್ನುತ್ತಲೇ ರಾಜ್ಯದ ಕುಡಿಯುವ ನೀರಿನ ಸಮಸ್ಯೆಯನ್ನು ಎಳೆಎಳೆಯಾಗಿ ಬಿಡಿಸಿಟ್ಟಿದ್ದಾರೆ.
4
+ ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದ ಅವರು, ತಾತ್ಕಾಲಿಕ ರಾಜಕೀಯ ಲಾಭಕ್ಕಾಗಿ ಇಂಥ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.
5
+ ಕಾಂಗ್ರೆಸ್ ಪಕ್ಷದ ಸದಸ್ಯರ ಆಕ್ಷೇಪಣೆ, ಗದ್ದಲದ ನಡುವೆಯೂ ತಮ್ಮ ಮಾತುಗಳನ್ನು ಮುಂದುವರಿಸಿದ ಅವರು; ಜಂತರ್‍ಮಂತರ್‍ನಲ್ಲಿ ಕಾಂಗ್ರೆಸ್‍ನವರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಅವರು ನನ್ನನ್ನೂ ಸೇರಿ ಎಲ್ಲರನ್ನೂ ಬರುವಂತೆ ಕರೆದಿದ್ದಾರೆ. ಈ ದೇಶದ ರಾಜಕೀಯ ಪರಿಸ್ಥಿತಿ ಹೇಗಾಗಿದೆ ಎಂದರೆ, ರಾಜಕೀಯ ಲಾಭಕ್ಕಾಗಿ ಅನಗತ್ಯ ವೆಚ್ಚದ ಅನುತ್ಪಾದಕ ವೆಚ್ಚಗಳನ್ನು ಯಥೇಚ್ಛವಾಗಿ ಮಾಡಲಾಗುತ್ತಿದೆ. ನಾನೆಂದೂ ಇಂಥದ್ದನ್ನು ಮಾಡಿಲ್ಲ ಎಂದರು.
6
+ ಕುವೈತ್‍ನಿಂದ ಸಮುದ್ರ ಮೂಲಕ ಬೋಟ್‍ನಲ್ಲಿ ಮುಂಬೈಗೆ ಬಂದ ಮೂವರು ವಶಕ್ಕೆ
7
+ ಪ್ರಧಾನಿ ನರೇಂದ್ರಮೋದಿ ಗ್ಯಾರಂಟಿಗಳು ಬಹಳ ವಿಭಿನ್ನವಾಗಿವೆ. ಅವುಗಳ ಬಗ್ಗೆ ನನಗೆ ಗೊತ್ತಿದೆ. ಹಣ ಇಲ್ಲ, ಪ್ರತಿಭಟನೆ ಮಾಡುತ್ತೇವೆ ಎಂದು ನಮ್ಮನ್ನೆಲ್ಲ ಕರೆಯುತ್ತಾರೆ. ಆದರೆ, ಕೇರಳದಲ್ಲಿ ಇದೇ ಉದ್ದೇಶಕ್ಕೆ ಅಲ್ಲಿನ ಎಲ್ ಡಿಎಫ್ ಸರಕಾರ ಕರೆದರೆ ಕಾಂಗ್ರೆಸ್ ನವರು ಬಹಿಷ್ಕಾರ ಹಾಕುತ್ತಾರೆ. ಇದು ರಾಜಕೀಯ ಪರಿಸ್ಥಿತಿ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
8
+ ಹಾವೇರಿಜಿಲ್ಲೆ ಯಲಗಚ್ಚು ಗ್ರಾಮದ ಬಸವರಾಜ ವೆಂಕಟ ಎಂಬ ಯುವಕನ ಆತ್ಮಾಹುತಿ ವಿಚಾರವನ್ನು ಪ್ರಸ್ತಾಪಿಸಿದ ಗೌಡರು, ಟಿಕೆಟ್ ಇಲ್ಲದ ಕಾರಣಕ್ಕೆ ತಾಯಿ ಮಗನನ್ನು ಧಾರವಾಡದ ಬಳಿ ರೈಲಿನಿಂದ ಕೆಳಗಿಳಿಸಲಾಗುತ್ತದೆ. ಅಲ್ಲಿ ತಾಯಿ ಮತ್ತು ತನಗೆ ಊಟಕ್ಕಾಗಿ ಆ ಯುವಕ ಅಲೆಯುತ್ತಾನೆ. ಕೆಲಸ ಹುಡುಕುತ್ತಾನೆ. ಸಿಗುವುದಿಲ್ಲ. ಕೊನೆಗೆ ಆ ನತದೃಷ್ಟ ಯುವಕ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ. ಇದು, ಕರ್ನಾಟಕದ ಗ್ಯಾರಂಟಿಗಳ ನೈಜಸ್ಥಿತಿ ಎಂದು ಮಾಜಿ ಪ್ರಧಾನಿಗಳು ತಿಳಿಸಿದ್ದಾರೆ.
9
+ ಕಾಡುಗೊಲ್ಲ ಸಮುದಾಯದ ಬಗ್ಗೆ ಪ್ರಸ್ತಾಪ:ಅನೇಕ ಮೀಸಲಾತಿ ವರದಿಗಳ ಬಗ್ಗೆ ನನಗೆ ಗೊತ್ತಿದೆ. ಅದೇ ರೀತಿ ಕರ್ನಾಟಕದಲ್ಲಿಯೂ ಕಾಂತರಾಜು ಸಮಿತಿ ವರದಿ ಬಗ್ಗೆ ಚರ್ಚೆ ನಡೆಯುತ್ತಿದೆ. ರಾಜ್ಯದಲ್ಲಿ ಕಾಡುಗೊಲ್ಲ ಸಮುದಾಯ ಮೀಸಲು ಸೌಲಭ್ಯದಿಂದ ವಂಚಿತರಾಗಿದ್ದಾರೆ. 2014ರಿಂದಲೂ ಇವರನ್ನು ಎಸ್ಟಿ ಪ್ರವರ್ಗಕ್ಕೆ ಸೇರಿಸಬೇಕೆಂದು ಮನವಿ ಮಾಡಿದರು.
eesanje/url_46_244_2.txt ADDED
@@ -0,0 +1,9 @@
 
 
 
 
 
 
 
 
 
 
1
+ ಜನತಾದರ್ಶನಕ್ಕೆ ಹರಿದುಬಂದ ಜನಸಾಗರ
2
+ ಬೆಂಗಳೂರು,ಫೆ.8- ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವ ಸಲುವಾಗಿ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಜನತಾದರ್ಶನಕ್ಕೆ ಜನಸಾಗರವೇ ಹರಿದುಬಂದಿತ್ತು. ಇದೇ ಮೊದಲ ಬಾರಿಗೆ ವಿಧಾನಸೌಧದಲ್ಲಿ ಅತ್ಯಂತ ಅಚ್ಚುಕಟ್ಟು ಹಾಗೂ ವ್ಯವಸ್ಥಿತವಾಗಿ ಜನಸ್ಪಂದನವನ್ನು ಆಯೋಜಿಸಲಾಗಿತ್ತು.
3
+ ಈ ಮೊದಲೆಲ್ಲಾ ಮುಖ್ಯಮಂತ್ರಿಯವರು ಗೃಹಕಚೇರಿ ಕೃಷ್ಣಾದಲ್ಲಿ ಜನಸ್ಪಂದನ ಆಯೋಜಿಸುತ್ತಿದ್ದರು. ಅಲ್ಲಿ ಇಕ್ಕಟ್ಟಾದ ಜಾಗ, ವಾಹನ ನಿಲುಗಡೆ ಸಮಸ್ಯೆ, ಮೂಲಸೌಲಭ್ಯಗಳ ಕೊರತೆ ತೀವ್ರವಾಗಿರುತ್ತಿತ್ತುಮತ್ತು ದೂರದೂರಿನಿಂದ ಬರುವ ಜನಸಾಮಾನ್ಯರ ಸಂಚಾರಕ್ಕೂ ಸಮಸ್ಯೆಯಾಗುತ್ತಿತ್ತು. ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಎಂಬಂತೆ ವಿಧಾನಸೌಧದಲ್ಲಿ ನಡೆಯುತ್ತಿರುವ ಜನತಾದರ್ಶನಕ್ಕೆ ಸಾಕಷ್ಟು ಮುಂಜಾಗ್ರತೆ ವಹಿಸಲಾಗಿದೆ.
4
+ ಮೆಜೆಸ್ಟಿಕ್ ಮತ್ತು ರೈಲ್ವೆ ನಿಲ್ದಾಣ, ಕೆ.ಆರ್.ಮಾರುಕಟ್ಟೆಯಿಂದ ವಿಧಾನಸೌಧದವರೆಗೂ ಜನತಾದರ್ಶನಕ್ಕೆ ಬರುವವರಿಗೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿತ್ತು. ವಿಧಾನಸೌಧದಲ್ಲಿ ಸುಮಾರು 40 ಕ್ಕೂ ಹೆಚ್ಚು ಇಲಾಖೆಗಳು ಪ್ರತ್ಯೇಕ ಕೌಂಟರ್‍ಗಳನ್ನು ಸ್ಥಾಪಿಸಿ ಜನರ ಅರ್ಜಿಗಳನ್ನು ನೋಂದಾವಣಿ ಮಾಡಿಕೊಂಡವು. ಸಾರ್ವಜನಿಕರ ಅರ್ಜಿಗಳನ್ನು ಪರಿಶೀಲಿಸಿ ಸಂಬಂಧಪಟ್ಟ ಇಲಾಖೆಗೆ ರವಾನಿಸಲು ಮತ್ತು ಸಣ್ಣಪುಟ್ಟ ಸಮಸ್ಯೆಗಳಿದ್ದರೆ ತಕ್ಷಣವೇ ಬಗೆಹರಿಸಲು ಅನುಕೂಲವಾಗುವಂತೆ ಸಲಹೆ ನೀಡಲು ನೋಡೆಲ್ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು.
5
+ ಗಂಭೀರ ಸಮಸ್ಯೆಗಳು ಮತ್ತು ಅಧಿಕಾರಿಗಳ ಕೈಮೀರಿದ ಸಮಸ್ಯೆಗಳನ್ನು ಮುಖ್ಯಮಂತ್ರಿಯವರ ಬಳಿ ಹೇಳಿಕೊಳ್ಳಲು ಅವಕಾಶ ದೊರೆತಿದ್ದರಿಂದ ಸಾವಿರಾರು ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟರು. ವೈದ್ಯಕೀಯ ಚಿಕಿತ್ಸೆ, ಪಿಂಚಣಿ, ಗೃಹಲಕ್ಷ್ಮಿ ಯೋಜನೆಯ ಅಲಭ್ಯತೆ, ಮನೆ, ಉದ್ಯೋಗ ಸೇರಿದಂತೆ ನಾನಾ ರೀತಿಯ ಸಮಸ್ಯೆಗಳು ಜನತಾದರ್ಶನದಲ್ಲಿ ಕಂಡುಬಂದವು.
6
+ ಶ್ವೇತಪತ್ರಕ್ಕೆ ಪ್ರತಿಯಾಗಿ ಕಪ್ಪುಪತ್ರ ಬಿಡುಗಡೆ ಮಾಡಿದ ಖರ್ಗೆ
7
+ ಎಲ್ಲರಿಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿತ್ತು. ವಿಧಾನಸೌಧದ ಗೇಟ್ ನಂ.4 ರ ಮೂಲಕ ಸಾರ್ವಜನಿಕರ ಪ್ರವೇಶಕ್ಕೆ ಅನುವು ಮಾಡಿಕೊಡಲಾಗಿತ್ತು. ಅಲ್ಲಿ ಸರದಿ ಸಾಲು ಕಂಡುಬಂದಿತು. ತಾತ್ಕಾಲಿಕ ಟೆಂಟ್‍ಗಳನ್ನು ಹಾಕಿ ಜನಸಾಮಾನ್ಯರಿಗೆ ನೆರಳಿನ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 7 ಸಾವಿರ ಆಸನ ವ್ಯವಸ್ಥೆ ಮಾಡಲಾಗಿತ್ತು. ಹಿರಿಯ ನಾಗರಿಕರಿಗೆ ಖಾಲಿ ಖುರ್ಚಿ ವ್ಯವಸ್ಥೆಗಳಿದ್ದವು. ಕುಡಿಯುವ ನೀರು ಹಾಗೂ ಶೌಚಾಲಯದ ವ್ಯವಸ್ಥೆ ಮಾಡಲಾಗಿತ್ತು.
8
+ ವಿಕಲ ಚೇತನರು, ಹಿರಿಯ ನಾಗರಿಕರು, ಗರ್ಭಿಣಿಯರು ಮತ್ತು ಮಕ್ಕಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಮುಖ್ಯಮಂತ್ರಿಯವರು ಅವರ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಆಲಿಸಿದರು. ಎಲ್ಲಾ ಇಲಾಖೆಗಳ ಆಯುಕ್ತರು, ಕಾರ್ಯದರ್ಶಿಗಳು, ಅಪರ ಮುಖ್ಯ ಕಾರ್ಯದರ್ಶಿಗಳು ಸ್ಥಳದಲ್ಲೇ ಹಾಜರಿದ್ದು, ಜನರ ಸಮಸ್ಯೆ ಪರಿಹಾರಕ್ಕೆ ನೆರವಾಗಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಅವಯಲ್ಲಿ ನಡೆಸಿದ ಜನತಾದರ್ಶನವು ಅಪಾರ ಜನಪ್ರಿಯತೆ ಪಡೆದುಕೊಂಡಿದ್ದವು. 2013 ರಿಂದ 2018 ರವರೆಗೂ ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ಮಾಸಿಕ ಜನತಾದರ್ಶನಗಳನ್ನು ನಡೆಸುತ್ತಿದ್ದರು.
9
+ ಎರಡನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿದು 8 ತಿಂಗಳು ಕಳೆದಿದ್ದು, ಎರಡನೇ ಬಾರಿಗೆ ಜನತಾದರ್ಶನ ನಡೆಸುತ್ತಿದ್ದಾರೆ. ಇದಕ್ಕೂ ಮೊದಲು ಜಿಲ್ಲಾಮಟ್ಟದಲ್ಲಿ ಜಿಲ್ಲಾ ಸಚಿವರು, ಕ್ಷೇತ್ರಮಟ್ಟದಲ್ಲಿ ಶಾಸಕರು ಜನತಾದರ್ಶನಗಳನ್ನು ನಿರಂತರವಾಗಿ ನಡೆಸುತ್ತಿದ್ದಾರೆ. ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಪ್ರತಿ ತಿಂಗಳಿಗೊಮ್ಮೆ ವಿಶೇಷವಾಗಿ ಜನರ ಸಮಸ್ಯೆ ಆಲಿಸಲು ಸೂಚಿಸಲಾಗಿದೆ. ಅದರ ಹೊರತಾಗಿ ಇಂದು ನಡೆದ ರಾಜ್ಯಮಟ್ಟದ ಜನಸ್ಪಂದನಕ್ಕೆ ಸಾವಿರಾರು ಜನ ಬಂದಿದ್ದು ಅಚ್ಚರಿ ಮೂಡಿಸಿತ್ತು.
eesanje/url_46_244_3.txt ADDED
@@ -0,0 +1,8 @@
 
 
 
 
 
 
 
 
 
1
+ ರಾಜ್ಯಾದ್ಯಂತ ಹುಕ್ಕಾ ಬಳಕೆ ನಿಷೇಧಿಸಿ ಆರೋಗ್ಯ ಇಲಾಖೆ ಆದೇಶ
2
+ ಬೆಂಗಳೂರು,ಫೆ.8- ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಮತ್ತು ತಂಬಾಕು ರಹಿತ ಹುಕ್ಕಾ ಬಳಕೆಯನ್ನು ನಿಷೇಧಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಸಾರ್ವಜನಿಕ ಆರೋಗ್ಯದ ವಿಷಯದಲ್ಲಿ ಕಳವಳ ವ್ಯಕ್ತಪಡಿಸುತ್ತಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ತಂಬಾಕು ರಹಿತ ಎಂದು ಹೇಳಿಕೊಂಡು ನಡೆಯುತ್ತಿದ್ದ ಅನಾರೋಗ್ಯಕರ ಹುಕ್ಕಾ ಹಾವಳಿಗೆ ಕಡಿವಾಣ ಹಾಕಿದ್ದಾರೆ.
3
+ ಸಾರ್ವಜನಿಕರ ಆರೋಗ್ಯವನ್ನು ಕಾಪಾಡಲು ಮತ್ತು ತಂಬಾಕು ಸಂಬಂಧಿತ ರೋಗಗಳ ಹೆಚ್ಚಳವನ್ನು ತಡೆಯುವ ನಿಟ್ಟಿನಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆಯನ್ನು ನಿಷೇಸಿರುವುದಾಗಿ ಆರೋಗ್ಯ ಇಲಾಖೆ ಆದೇಶದಲ್ಲಿ ತಿಳಿಸಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿರುವ ಗ್ಲೋಬಲ್ ಅಡಲ್ಸ್ ಟೊಬ್ಯಾಕೊ ಸರ್ವೇ 2016-17, ಅಧ್ಯ ಯನದ ಪ್ರಕಾರ, ಕರ್ನಾಟಕದಲ್ಲಿ 22.8% ವಯಸ್ಕರು ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಾರೆ. ಈ ಪೈಕಿ ಶೇ.8.8ರಷ್ಟು ಮಂದಿ ಧೂಮಪಾನಿಗಳಾಗಿದ್ದಾರೆ. ಕರ್ನಾಟಕದಲ್ಲಿ ಶೇ.23.9ರಷ್ಟು ವಯಸ್ಕರು ಸಾರ್ವಜನಿಕ ಸ್ಥಳಗಳಲ್ಲಿ ಒಟ್ಟಾಗಿ ಧೂಮಪಾನ ಮಾಡುತ್ತಾರೆ.
4
+ ಯುವ ಜನತೆಯು ಇತ್ತೀಚಿನ ವರ್ಷಗಳಲ್ಲಿ ತಂಬಾಕು ಉತ್ಪನ್ನಗಳತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. 13 ರಿಂದ15 ವರ್ಷ ವಯಸ್ಸಿನ ಸುಮಾರು ಐದನೇ ಒಂದು ಭಾಗದಷ್ಟು ವಿದ್ಯಾರ್ಥಿಗಳು ಹಲವು ಬಗೆಯ ತಂಬಾಕು ಸೇವಿಸುತ್ತಿದ್ದಾರೆ. ತಂಬಾಕು ಒಳಗೊಂಡ ಶಿಶಾ ಮತ್ತು ಹರ್ಬಲ್ ಶಿಶಾ ಇವೆಲ್ಲವೂ ವಿಷಕಾರಿ ಹೊಗೆಯನ್ನು ಹೊರಸೂಸುವುದರಿಂದ ಕ್ಯಾನ್ಸರ್, ಹೃದ್ರೋಗ ಹಾಗೂ ಶ್ವಾಸಕೋಶದ ಕಾಯಿಲೆಗಳಿಗೆ ಕಾರಣವಾಗುತ್ತದೆ ಎಂಬ ಮಹತ್ವದ ಅಂಶ ಸಂಶೋಧನೆಯಿಂದ ತಿಳಿದುಬಂದಿದೆ.
5
+ ಇಂದು ಪಾಕ್ ಚುನಾವಣೆ : ನವಾಜ್ ಷರೀಷ್‍ಗೆ ಅಧಿಕಾರ ಸಾಧ್ಯತೆ
6
+ 35 ರಿಂದ 69 ವರ್ಷ ವಯಸ್ಸಿನ ವ್ಯಕ್ತಿಗಳಲ್ಲಿನ ತಂಬಾಕು ಸಂಬಂಧಿತ ಕಾಯಿಲೆಗಳ ಚಿಕಿತ್ಸೆಗಾಗಿ ರಾಜ್ಯ ಸರ್ಕಾರವು 2011ರಲ್ಲಿ 983 ಕೋಟಿ ರೂ. ವ್ಯಯಿಸಿದೆ. ಹೋಟೆಲ್‍ಗಳು, ರೆಸ್ಟೋರೆಂಟ್‍ಗಳು, ಪಬ್‍ಗಳು, ಬಾರ್‍ಗಳು, ಲಾಂಜ್‍ಗಳು, ಕೆಫೆಗಳು, ಕ್ಲಬ್‍ಗಳು ಮತ್ತು ಇತರ ಸ್ಥಳಗಳಲ್ಲಿ ಹುಕ್ಕಾ ಬಳಕೆ, ಮಾರಾಟ ಮತ್ತು ಸೇವೆಯ ನಿಷೇಧವು ಯುವಜನರನ್ನು ಮಾದಕ ವ್ಯಸನದಿಂದ ಮತ್ತು ತಂಬಾಕಿನ ಹಾನಿಕಾರಕ ಪರಿಣಾಮಗಳಿಂದ ರಕ್ಷಿಸುವಲ್ಲಿ ನಿರ್ಣಾಯಕ ಕ್ರಮವಾಗಿದೆ.
7
+ ಮುಂದುವರೆದ ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ
8
+ ಹುಕ್ಕಾ ಸೇವನೆಯ ಅಪಾಯಗಳು ಸಿಗರೇಟ್ ಸೇವನೆಗಿಂತ ಹಲವು ಪಟ್ಟು ಹೆಚ್ಚಾಗಿರುವುದು ಅಧ್ಯಯನಗಳಿಂದ ದೃಢಪಟ್ಟಿದೆ. ಹುಕ್ಕಾ ಹೊಗೆಯು ನಿಕೋಟಿನ್, ಟಾರ್ ಮತ್ತು ಭಾರವಾದ ಲೋಹ ಸೇರಿದಂತೆ ಅನೇಕ ಹಾನಿಕಾರಕ ಪದಾರ್ಥಗಳನ್ನು ಹೊಂದಿದೆ. ಹುಕ್ಕಾ ಸೇವಿಸುವವರು ವಿವಿಧ ರೀತಿಯ ಕ್ಯಾನ್ಸರ್ ಮತ್ತು ಹೃದ್ರೋಗ ಸೇರಿದಂತೆ ಹಲವು ಗಂಭೀರ ಕಾಯಿಲೆಗಳಿಗೆ ತುತ್ತಾಗುವ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ.
eesanje/url_46_244_4.txt ADDED
@@ -0,0 +1,5 @@
 
 
 
 
 
 
1
+ ಚಿಕ್ಕಮಗಳೂರಲ್ಲಿ ಡೆಂಘೀಗೆ ವಿದ್ಯಾರ್ಥಿನಿ ಸಾವು
2
+ ಚಿಕ್ಕಮಗಳೂರು, ಫೆ.8- ನಗರದಲ್ಲಿ ಡೆಂಘೀ ಪ್ರಕರಣ ಪತ್ತೆಯಾಗಿದ್ದು, ವಿದ್ಯಾರ್ಥಿನಿಯೊಬ್ಬರು ಡೆಂಘೀಯಿಂದ ಮೃತಪಟ್ಟಿದ್ದಾರೆ. ಮಹಮ್ಮದ್ ಖಾನ್ ಗಲ್ಲಿ ನಿವಾಸಿ ಸಹರಾ ಬಾನು (18) ಡೆಂಘೀಯಿಂದ ಮೃತಪಟ್ಟ ವಿದ್ಯಾರ್ಥಿನಿ. ಎಂಇಎಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಳೆದ ಎರಡು ತಿಂಗಳಿನಿಂದ ಜ್ವರದಿಂದ ಬಳಲುತ್ತಿದ್ದು, ನಿನ್ನೆ ಸಂಜೆ ಮೃತಪಟ್ಟಿದ್ದಾರೆ.
3
+ ಕಳೆದ ನಾಲ್ಕು ತಿಂಗಳ ಹಿಂದೆ ಯುಜಿಡಿ ಪೈಪ್ ಬದಲಾವಣೆ ಮಾಡಲು ರಸ್ತೆ ಅಗೆದು ತಿಂಗಳುಗಟ್ಟಲೆಯಾದರೂ ರಸ್ತೆ ದುರಸ್ತಿ ಮಾಡದೆ ಇದ್ದುದರಿಂದ ಚರಂಡಿಯಲ್ಲಿ ಮಣ್ಣು, ಕಸ, ಕಡ್ಡಿ, ಕೊಳಚೆ ನೀರು ತುಂಬಿ ನಾರುತ್ತಿತ್ತು. ಈ ಬಗ್ಗೆ ಸ್ಥಳೀಯರು ನಗರಸಭೆ ಗಮನಕ್ಕೂ ತಂದಿದ್ದರು. ಇಂದಿಗೂ ಸಹ ಈ ರಸ್ತೆ ಸಂಪೂರ್ಣವಾಗಿ ದುರಸ್ತಿಯಾಗಿಲ್ಲ. ಕೆಲಸ ವಹಿಸಿಕೊಂಡ ಕಂಟ್ರಾಕ್ಟರ್ ದೂರು ನೀಡಿದಾಗ ಬೇಕಾಬಿಟ್ಟಿಯಾಗಿ ಬಂದು ಅರ್ಧಂಬರ್ಧ ಕೆಲಸ ನಿರ್ವಹಿಸುತ್ತಾರೆ.
4
+ ಅಮಿತ್ ಶಾ, ನಡ್ಡಾ ಭೇಟಿಯಾದ ಚಂದ್ರಬಾಬು ನಾಯ್ಡು
5
+ ಇಲ್ಲಿನ ನಗರಸಭಾ ಸದಸ್ಯರು ಎಷ್ಟು ಬಾರಿ ಹೇಳಿದರೂ ನಿವಾಸಿಗಳು ಕಸವನ್ನು ಚರಂಡಿಗೆ ತಂದು ಸುರಿಯುತ್ತಾರೆ. ನಗರಸಭೆ ಕಟ್ಟುನಿಟ್ಟಿದ ಕ್ರಮ ಕೈಗೊಳ್ಳಬೇಕಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಆಗಮಿಸಿ ಮೃತರ ಅಂತಿಮ ದರ್ಶನ ಪಡೆದು ಸಾಂತ್ವನ ಹೇಳಿದರು.
eesanje/url_46_244_5.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಕಾಂಗ್ರೆಸ್ ಗ್ಯಾರಂಟಿಗಳನ್ನು ಈಡೇರಿಸಲಾಗದೇ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ : ವಿಜಯೇಂದ್ರ
2
+ ಬೆಂಗಳೂರು,ಫೆ.7- ಕಾಂಗ್ರೆಸ್ ಸುಳ್ಳು ಭರವಸೆಗಳನ್ನು ಕೊಟ್ಟು, ನಾಟಕವಾಡಿ ಅಧಿಕಾರಕ್ಕೆ ಬಂದಿದೆ. ಈಗ ಈ ಗ್ಯಾರಂಟಿಯನ್ನು ಪೂರ್ಣ ಜಾರಿ ಮಾಡದೇ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು.ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಇಂದು ಬಿಜೆಪಿ ಶಾಸಕರು, ಪರಿಷತ್ ಸದಸ್ಯರು ನಡೆಸಿದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಯಾವ ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲ್ಲದ ಸ್ಥಿತಿ ಇದೆ. ಹೀಗಾಗಿ ದೆಹಲಿ ಚಲೋ ನಾಟಕ ಮಾಡುತ್ತಿದ್ದಾರೆ ಎಂದು ದೂರಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ.
3
+ ರೈತರ ಸಂಕಷ್ಟಕ್ಕೆ ಸ್ಪಂದಿಸದ ದುಷ್ಟ ಸರ್ಕಾರ ಇದು. ಸರಿಯಾಗಿ ಅಧಿಕಾರ ನಡೆಸಲಾಗದೇ ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಕಿಡಿಕಾರಿದರು. ಕೃಷ್ಣ ಮೇಲ್ದಂಡೆಗೆ ಇವರು ಒಂದು ರೂಪಾಯಿ ಕೊಟ್ಟಿಲ್ಲ. ಮತದಾರರ ಕಣ್ಣಿಗೆ ಮಣ್ಣೆರಚಿ ಅಧಿಕಾರಕ್ಕೆ ಬಂದಿದ್ದಾರೆ. ಇವರ ಮೇಕೆದಾಟು ಹೋರಾಟ, ದೆಹಲಿ ಚಲೋ ಕೇವಲ ನಾಟಕ. ಮಹದಾಯಿಗೆ ಇವರ ಬಳಿ ದುಡ್ಡಿಲ್ಲ. ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ 7,800 ಕೋಟಿ ರೂ. ಬಿಡುಗಡೆ ಮಾಡಿದ ಹಣವನ್ನು ತಡೆದಿದ್ದಾರೆ. ಮುಂದಿನ ಲೋಕಸಭೆಯಲ್ಲಿ ಸೋಲಿಸಿ ಮನೆಗೆ ನಿಮ್ಮನ್ನು ಚಲೋ ಮಾಡಿಸುತ್ತೇವೆ ಎಂದು ವಾಗ್ದಾಳಿ ನಡೆಸಿದರು.
4
+ ವಿಧಾನಸಭೆಯ ಪ್ರತಿಪಕ್ಷದ ನಾಯಕ ಅಶೋಕ್ ಮಾತನಾಡಿ, ಬೋರ್ವೆಲ್, ಪಂಪ್ಸೆಟ್ ದರ ಏರಿಕೆ, ಹಾಲು ಉತ್ಪಾದÀಕರಿಗೆ 34 ರೂ, ಗ್ರಾಹಕರಿಗೆ 44 ರೂ ಉಳಿದ 10 ರೂ. ಯಾರ ಪಾಲಿಗೆ? ಹಾಲಿನ ಪೊ್ರೀತ್ಸಾಹಧನ 710 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ, ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
5
+ ಕಾಂಗ್ರೆಸ್ನ ಪ್ರತಿಭಟನೆಯಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ. ನಾವು 400 ಸೀಟು ಗೆದ್ದೆ ಗೆಲ್ಲುತ್ತೇವೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ, ಕಾಂಗ್ರೆಸ್ನವರು ಸುಖಾಸುಮ್ಮನೆ ಕೇಂದ್ರದ ವಿರುದ್ಧ ಆರೋಪ ಮಾಡುತ್ತಾರೆ, ಸಂಸದರಿಗೆ ಪತ್ರ ತಲುಪುವ ಮುನ್ನವೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಮಾಡುತ್ತಾರೆ. ಕೇವಲ ಪ್ರಚಾರಕ್ಕಾಗಿ ದೆಹಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ ಎಂದು ಟೀಕಿಸಿದರು.
6
+ ಡಿಕೆಶಿ ಆಪ್ತರಿಗೆ ಐಟಿ ಶಾಕ್
7
+ ಕಾಂಗ್ರೆಸ್ ಪಕ್ಷದ ಡಿಎನ್ಎಯಲ್ಲೇ ಜಿನ್ನಾ ಸಂಸ್ಕೃತಿ ಅಂಟಿಕೊಂಡಿದೆ. ಮಾನ ಮರ್ಯಾದೆ ಇರುವ ಪಕ್ಷ ದೇಶ ವಿಭಜನೆಯ ಮಾತು ಯಾವತ್ತೂ ಆಡಿರಲಿಲ್ಲ. ಕಾಂಗ್ರೆಸ್ನವರಿಗೆ ನಾಚಿಕೆ ಆಗಲ್ವಾ, ಮಾನ ಮರ್ಯಾದೆ ಇದ್ಯಾ ನಮ್ಮ ಹಣ ಎಲ್ಲಾ ಉತ್ತರ ಪ್ರದೇಶಕ್ಕೆ ಹೋಗುತ್ತದೆ ಅಂತಾ ಹೇಳುತ್ತೀರಲ್ವಾ ಎಂದು ಆಕ್ರೋಶ ವ್ಯಕ್ತಪಡಿಸಿದರು.
8
+ ಕಾಂಗ್ರೆಸ್ನ ಗುರಿ ಪ್ರಧಾನಿ ನರೇಂದ್ರ ಮೋದಿ. ಅವರು ಹತ್ತು ವರ್ಷ ಏನು ಬಿಡುಗಡೆ ಮಾಡಿದ್ದಾರೆ, ನೀವೇನು ಬಿಡುಗಡೆ ಮಾಡಿದ್ದೀರಿ ದಾಖಲೆ ಮುಂದಿಡಿ, ಬರಕ್ಕೆ ಹಣ ಬಿಡುಗಡೆ ಮಾಡಲು 9 ತಿಂಗಳು ತೆಗೆದುಕೊಂಡಿದ್ದಾರೆ. ಅದಕ್ಕೆ ದಾಖಲೆ ನನ್ನ ಹತ್ತಿರ ಇದೆ ಎಂದು ಹೇಳಿದರು.ಇವರ (ಕಾಂಗ್ರೆಸ್ನವರ) ಸ್ನೇಹಿತ ಸ್ಟಾಲಿನ್ಗೆ (ತಮಿಳುನಾಡಿಗೆ) ನೀರು ಬಿಡುವಾಗ ಬಾಯಿ ಮುಚ್ಚಿಕೊಂಡಿದ್ದರು. ದೇಶದ್ರೋಹ, ಬರ ಹಣ ಬಿಡುಗಡೆ ವಿಳಂಬ ಮುಚ್ಚಿಟ್ಟುಕೊಳ್ಳಲು ಬಾಯಿ ಬಾಯಿ ಬಡಿದುಕೊಳ್ಳುತ್ತಿದ್ದಾರೆ. ಡಿಕೆ ಸುರೇಶ್ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು ಎಲ್ಲರೂ ದೆಹಲಿಗೆ ಹೋಗಿದ್ದಾರೆ ಎಂದು ಆರೋಪಿಸಿದರು.
9
+ ಕ್ಯಾಬಿನೆಟ್ ದರ್ಜೆ ಕೊಡಲು ನಿಮಗೆ ದುಡ್ಡು ಇದೆ. ಅದಕ್ಕೆ ನಿಮಗೆ ಮೋದಿ ದುಡ್ಡು ಕೊಡುತ್ತಾರಾ? ಕೇಂದ್ರ ಸರ್ಕಾರ ವಿರುದ್ಧ ಆರೋಪ ಮಾಡುವ ಸಿದ್ದರಾಮಯ್ಯ 15ನೇ ಹಣಕಾಸು ಆಯೋಗದಲ್ಲಿ ಹೋಗಿ ಕೂತಿದ್ರಲ್ಲಾ ಆಗ ಯಾಕೆ ಬಾಯಿ ಬಿಡಲಿಲ್ಲ? ಎಂದು ಪ್ರಶ್ನಿಸಿದರು.
10
+ ವಿಧಾನಪರಿಷತ್ನ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿ, ಜನಸ್ವಂದನ ರಾಜ್ಯ ಸರ್ಕಾರದ ನಾಟಕವಾಗಿದೆ. ಗ್ರಾಮ, ತಾಲ್ಲೂಕು ಮಟ್ಟದಲ್ಲಿ ಆಡಳಿತ ವಿಫಲವಾದ ಕಾರಣ ರಾಜ್ಯಮಟ್ಟದಲ್ಲಿ ಜನಸ್ಪಂದನ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ನಿವಾರಿಸಲು ಹಣವಿಲ್ಲ. ಆದರೆ ಅಲ್ಪಸಂಖ್ಯಾತರಿಗೆ ಹತ್ತು ಸಾವಿರ ಕೋಟಿ ಬಿಡುಗಡೆ ಮಾಡಲು ಸರ್ಕಾರದ ಬಳಿ ಹಣ ಇದೆ ಎಂದು ದೂರಿದರು.
11
+ ಜನರಿಗೆ ಮುಖ ತೋರಿಸಲು ಆಗದಂತಹ ಪರಿಸ್ಥಿತಿಯಲ್ಲಿ ಸರ್ಕಾರ ಇದೆ. ಜನರ ದಾರಿ ತಪ್ಪಿಸಲು, ವಿಷಯಾಂತರ ಮಾಡಲು ದೆಹಲಿಯಲ್ಲಿ ಧರಣಿ ಮಾಡಲಾಗುತ್ತಿದೆ. ದೆಹಲಿಗೆ ಹೋಗಿ ಪ್ರತಿಭಟನೆ ಮಾಡುವ ಮೂಲಕ ಹೊಸ ನಾಟಕ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
eesanje/url_46_244_6.txt ADDED
@@ -0,0 +1,6 @@
 
 
 
 
 
 
 
1
+ ಡಿಕೆಶಿ ಆಪ್ತರಿಗೆ ಐಟಿ ಶಾಕ್
2
+ ಬೆಂಗಳೂರು,ಫೆ.7- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪರಮಾಪ್ತ ಹಾಗೂ ಗುತ್ತಿಗೆದಾರ ವಿ.ಆರ್.ಪಾಟೀಲ್ ಅವರ ಕಚೇರಿ ಮತ್ತು ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗೋವಾ ಹಾಗೂ ಹುಬ್ಬಳ್ಳಿಯಿಂದ ನಾಲ್ಕು ವಾಹನಗಳಲ್ಲಿ ಬಂದ 20ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ಬೆಳಗ್ಗೆಯೇ ಕೊಪ್ಪಳ ಜಿಲ್ಲೆ ಹೊಸ ಲಿಂಗಾಪುರ ಗ್ರಾಮದಲ್ಲಿರುವ ವಿ.ಆರ್.ಪಾಟೀಲ್ ಒಡೆತನಕ್ಕೆ ಸೇರಿದ ನಿವಾಸ, ಕಚೇರಿ, ಖಾಸಗಿ ಶಾಲೆಗಳು, ನಿವಾಸ ಸೇರಿದಂತೆ ಹಲವು ಕಡೆ ದಾಳಿ ನಡೆಸಿದ್ದಾರೆ.
3
+ ಕೊಪ್ಪಳದಲ್ಲಿರುವ ಶಾರದಾ ಇಂಟನ್ರ್ಯಾಷನಲ್ ಸ್ಕೂಲ್ ಮಾಲೀಕರಾದ ವಿ.ಆರ್ ಪಾಟೀಲ್ ಅವರ ಮನೆ ಹಾಗೂ ಕಚೇರಿಗಳ ಮೇಲೂ ದಾಳಿ ನಡೆಸಲಾಗಿದೆ. ದಾಳಿ ಸಂದರ್ಭದಲ್ಲಿ ಸ್ಥಳೀಯ ಪೊಲೀಸರ ನೆರವನ್ನು ಪಡೆಯಲಾಗಿತ್ತು. ಮೂಲತಃ ಗುತ್ತಿಗೆದಾರರಾಗಿರುವ ವಿ.ಆರ್.ಪಾಟೀಲ್ ಬೃಹತ್ ಕಾಮಗಾರಿಗಳನ್ನು ನಡೆಸುತ್ತಿದ್ದಾರೆ.
4
+ ಲೋಕೋಪಯೋಗಿ, ನೀರಾವರಿ ಸೇರಿದಂತೆ ವಿವಿಧ ಇಲಾಖೆಯಡಿ ಬರುವ ಕಾಮಗಾರಿಗಳನ್ನು ಹಲವಾರು ವರ್ಷಗಳಿಂದ ನಡೆಸುತ್ತಿದ್ದಾರೆ. ಕಳೆದ ವಾರ ಕೊಪ್ಪಳಕ್ಕೆ ಭೇಟಿ ಕೊಟ್ಟಿದ್ದ ಡಿ.ಕೆ.ಶಿವಕುಮಾರ್, ತಮ್ಮ ಆಪ್ತರಾಗಿರುವ ವಿ.ಆರ್.ಪಾಟೀಲ್ ಮನೆಗೂ ಭೇಟಿ ನೀಡಿದ್ದರು. ಇದರ ಜಾಡು ಹಿಡಿದು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.
5
+ ಕರ್ನಾಟಕದ ಇತಿಹಾಸದಲ್ಲಿ ಇಷ್ಟು ದೊಡ್ಡ ನಾಟಕ ಮಾಡುವ ಸರ್ಕಾರ ಇನ್ನೊಂದಿಲ್ಲ : ಬೊಮ್ಮಾಯಿ
6
+ ಮತ್ತೊಂದೆಡೆ ಬೆಂಗಳೂರಿನ ಹಲವು ಕಡೆಯೂ ಕೆಲವು ಐಟಿ ಕಂಪನಿಗಳ ಮೇಲೆ ದಾಳಿ ನಡೆಸಲಾಗಿದೆ. ತೆರಿಗೆ ವಂಚನೆ ಮಾಡಿದ ಆರೋಪದ ಹಿನ್ನಲೆಯಲ್ಲಿ ಪ್ರತಿಷ್ಠಿತ ನಾಲ್ಕಕ್ಕೂ ಹೆಚ್ಚು ಐಟಿ ಕಂಪನಿಗಳ ಮೇಲೆ ಜಂಟಿ ದಾಳಿ ನಡೆಸಲಾಗಿದೆ. ಸುಮಾರು ಎಂಟಕ್ಕೂ ಹೆಚ್ಚು ಸ್ಥಳಗಳಲ್ಲಿ ಗೋವಾ ಮತ್ತು ಬೆಂಗಳೂರಿನ ಐಟಿ ತಂಡ ಮುಂಜಾನೆಯೇ ದಾಳಿ ನಡೆಸಿ ಕೆಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ ಎಂದು ತಿಳಿದುಬಂದಿದೆ.
eesanje/url_46_244_7.txt ADDED
@@ -0,0 +1,6 @@
 
 
 
 
 
 
 
1
+ ವಿಧಾನಸೌಧಕ್ಕೆ ಬೀಗ ಜಡಿಯಲು ಯತ್ನ
2
+ ಬೆಂಗಳೂರು,ಫೆ.7- ರಾಜ್ಯ ಸರ್ಕಾರದ ವೈಫಲ್ಯವನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಚೇರಿಗೆ ಬೀಗ ಹಾಕಲು ವಿಫಲ ಪ್ರಯತ್ನ ನಡೆಸಿದ ಪ್ರಸಂಗ ಜರುಗಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಉಪನಾಯಕ ಅರವಿಂದ್ ಬೆಲ್ಲದ್, ವಿಧಾನ ಪರಿಷತ್ನ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ, ಮುಖ್ಯ ಸಚೇತಕ ಎನ್.ರವಿಕುಮಾರ್, ಶಾಸಕರಾದ ಮುನಿರತ್ನ, ಚನ್ನಬಸಪ್ಪ, ರವಿಸುಬ್ರಹ್ಮಣ್ಯ, ಎಚ್.ಕೆ.ಕುಮಾರಸ್ವಾಮಿ ಸೇರಿದಂತೆ ಅನೇಕರು ಗಾಂ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.
3
+ ಪ್ರತಿಭಟನೆ ನಡೆದ ಬಳಿಕ ಶಾಸಕರು ಹಾಗೂ ಬಿಜೆಪಿ ಕಾರ್ಯಕರ್ತರು ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಚೇರಿಗೆ ಬೀಗ ಹಾಕುವ ಪ್ರಯತ್ನ ಮಾಡಿದರು. ಆದರೆ ಪೊಲೀಸರು ಇದಕ್ಕೆ ಅವಕಾಶ ಕೊಡದೆ ತಡೆ ಹಿಡಿದರು. ಒಂದು ಹಂತದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಅಶೋಕ್ ಅವರು ಪೊಲೀಸರನ್ನು ತಳ್ಳಿ ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಸಿಎಂ ಕಚೇರಿಗೆ ಬೀಗ ಹಾಕಲು ಮುಂದಾದರು.
4
+ ಸಕಾಲದಲ್ಲಿ ಪೊಲೀಸರು ಮಧ್ಯಪ್ರವೇಶಿಸಿದರು. ನಂತರ ಬಿಜೆಪಿ ಕಾರ್ಯಕರ್ತರು ಶಾಸಕರ ಭವನದಿಂದ ಪ್ರವೇಶಿಸುವ ದಕ್ಷಿಣ ದ್ವಾರಕ್ಕೆ ಬೀಗ ಜಡಿಯಲು ಮುಂದಾದರು. ಈ ವೇಳೆ ಭದ್ರತೆಗೆ ನಿಂತಿದ್ದ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತಳ್ಳಾಟ, ಮಾತಿನ ಚಕಮಕಿ ನಡೆದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು.
5
+ ಕರ್ನಾಟಕದ ಇತಿಹಾಸದಲ್ಲಿ ಇಷ್ಟು ದೊಡ್ಡ ನಾಟಕ ಮಾಡುವ ಸರ್ಕಾರ ಇನ್ನೊಂದಿಲ್ಲ : ಬೊಮ್ಮಾಯಿ
6
+ ನಾವು ಪ್ರವೇಶ ದ್ವಾರಕ್ಕೆ ಬೀಗ ಹಾಕುತ್ತೇವೆ ಎಂದು ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದರೆ ಪೊಲೀಸರು ನಾವು ಅವಕಾಶ ಕೊಡುವುದಿಲ್ಲ. ಕೇವಲ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದೀರಿ. ಈಗ ಪ್ರತಿಭಟನೆ ನಡೆಸುತ್ತೇವೆ ಎಂದರೆ ಅದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದರು.ಪೊಲೀಸರ ಮಾತಿಗೂ ಜಗ್ಗದೆ ಬೀಗ ಜಡಿಯಲು ಮುಂದಾಗುತ್ತಿದ್ದಂತೆ ಮಧ್ಯಪ್ರವೇಶ ಮಾಡಿದ ಪೊಲೀಸರು ಶಾಸಕರು ಮತ್ತು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು.
eesanje/url_46_244_8.txt ADDED
@@ -0,0 +1,6 @@
 
 
 
 
 
 
 
1
+ ರಾಜ್ಯಸಭೆ ಚುನಾವಣೆಗೆ ನಾಳೆ ಅಧಿಸೂಚನೆ
2
+ ಬೆಂಗಳೂರು,ಫೆ.7- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕ ಸ್ಥಾನಗಳಿಗೆ ನಡೆಯುವ ದ್ವೆವಾರ್ಷಿಕ ಚುನಾವಣೆಗೆ ನಾಳೆ ಅಧಿಸೂಚನೆ ಹೊರಬೀಳಲಿದೆ.ಏಪ್ರಿಲ್ 2 ರಂದು ರಾಜ್ಯಸಭಾ ಸ್ಥಾನದಿಂದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಎಲ್.ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್ ಹಾಗೂ ಸಯ್ಯದ್ ನಾಸಿರ್ ಹುಸೇನ್‍ರವರು ನಿವೃತ್ತಿಯಾಗಲಿದ್ದಾರೆ.
3
+ ರಾಜೀವ್ ಚಂದ್ರಶೇಖರ್ ಬಿಜೆಪಿಯಿಂದ ಚುನಾಯಿತರಾಗಿದ್ದರು. ಉಳಿದ ಮೂವರು ಕಾಂಗ್ರೆಸ್‍ನಿಂದ ಸ್ರ್ಪಸಿ ಚುನಾಯಿತರಾಗಿದ್ದರು. ಇವರ ನಿವೃತ್ತಿಯಿಂದ ತೆರವಾಗುವ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.ಏಪ್ರಿಲ್‍ನಲ್ಲಿ ನಿವೃತ್ತಿಯಿಂದ ತೆರವಾಗಲಿರುವ ಕರ್ನಾಟಕದ ನಾಲ್ಕು ಸ್ಥಾನಗಳು ಸೇರಿದಂತೆ ವಿವಿಧ ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಭಾರತದ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿಯನ್ನು ಜನವರಿ 29 ರಂದು ಪ್ರಕಟಿಸಿತ್ತು.
4
+ ಪ್ರಕಟಿತ ವೇಳಾಪಟ್ಟಿಯಂತೆ ನಾಳೆ ಚುನಾವಣಾ ಅಸೂಚನೆ ಪ್ರಕಟಗೊಳ್ಳಲಿದ್ದು, ನಾಳೆಯಿಂದಲೇ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಬಹುದಾಗಿದೆ. ಫೆ.15 ನಾಮಪತ್ರಗಳ ಸಲ್ಲಿಕೆಗೆ ಕಡೆದಿನವಾಗಿದ್ದು, ಫೆ.16 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.
5
+ ರಾಜ್ಯಕ್ಕಾಗುತ್ತಿರುವ ಅನ್ಯಾಯ ಖಂಡಿಸಿ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ
6
+ ಫೆ.20 ರವರೆಗೂ ಉಮೇದುವಾರಿಕೆ ವಾಪಸ್ ಪಡೆಯಲು ಕಾಲಾವಕಾಶವಿದೆ. ನಾಲ್ಕಕ್ಕಿಂತ ಹೆಚ್ಚು ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರೆ ಫೆ.27 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ.ಅಂದು ಸಂಜೆ 5 ಗಂಟೆ ನಂತರ ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.
eesanje/url_46_244_9.txt ADDED
@@ -0,0 +1,10 @@
 
 
 
 
 
 
 
 
 
 
 
1
+ ರಾಜ್ಯಕ್ಕಾಗುತ್ತಿರುವ ಅನ್ಯಾಯ ಖಂಡಿಸಿ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ
2
+ ನವದೆಹಲಿ,ಫೆ.7- ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ನಿರಂತರ ಅನ್ಯಾಯವನ್ನು ಖಂಡಿಸಿ ರಾಜ್ಯಸರ್ಕಾರ ದೆಹಲಿಯ ಜಂತರ್ ಮಂತರ್‍ನಲ್ಲಿಂದು ನನ್ನ ತೆರಿಗೆ ನನ್ನ ಹಕ್ಕು ಧ್ಯೇಯದ ಹೋರಾಟ ನಡೆಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯಸರ್ಕಾರ ಸಂಪುಟದ ಎಲ್ಲಾ ಸಚಿವರು, ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರು, ರಾಜ್ಯಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯರು ಹಾಗೂ ಪ್ರಮುಖರು ಭಾಗವಹಿಸಿದ್ದರು.
3
+ ಐತಿಹಾಸಿಕವಾಗಿ ನಡೆದ ಈ ಪ್ರತಿಭಟನೆಯಲ್ಲಿ ಕೇಂದ್ರಸರ್ಕಾರ ಅನುಸರಿಸುತ್ತಿರುವ ತಾರತಮ್ಯವನ್ನು ಎಳೆಎಳೆಯಾಗಿ ವಿವರಿಸಿದರು. ದಕ್ಷಿಣ ಭಾರತದ ರಾಜ್ಯಗಳ ಪೈಕಿ ಮೊದಲ ಬಾರಿಗೆ ಕರ್ನಾಟಕ ಕೇಂದ್ರದ ವಿರುದ್ಧ ಸಿಡಿದೆದ್ದಿದೆ. ಜಂತರ್ ಮಂತರ್‍ನಲ್ಲಿ ಪ್ರತಿಭಟನೆ ನಡೆಸುವ ಮೂಲಕ ರಣಕಹಳೆ ಊದಿರುವ ಕಾಂಗ್ರೆಸ್ ನಾಯಕರು ನಮ್ಮ ತೆರಿಗೆಯ ಹಕ್ಕನ್ನು ನಮಗೆ ಕೊಡಲೇಬೇಕೆಂದು ಬಲವಾಗಿ ಪ್ರತಿಪಾದಿಸಿದ್ದಾರೆ.
4
+ ಕರ್ನಾಟಕ ರಾಜ್ಯಕ್ಕೆ ನ್ಯಾಯ ಕೊಡಿಸಿ, ಬೇಕೇ ಬೇಕು ನ್ಯಾಯ ಬೇಕು ಎಂಬ ಘೋಷಣೆಗಳ ಮೂಲಕ ಕೇಂದ್ರಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಯಾದಿಯಾಗಿ ಎಲ್ಲಾ ನಾಯಕರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಒಕ್ಕೂಟ ವ್ಯವಸ್ಥೆಯಲ್ಲಿ ಈ ರೀತಿಯ ತಾರತಮ್ಯಖಂಡನೀಯ. ದೇಶದಲ್ಲೇ ಅತೀ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳ ಪೈಕಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆದರೆ ತೆರಿಗೆ ಹಂಚಿಕೆಯಲ್ಲಿ ಕೊನೆಯ ಸ್ಥಾನ ಪಡೆದಿದೆ. ಕೇಂದ್ರ ಸರ್ಕಾರ ವಿತಂಡವಾದಗಳ ಮೂಲಕ ತನ್ನ ಮಲತಾಯಿ ಧೋರಣೆಯನ್ನು ಸಮರ್ಥಿಸಿಕೊಳ್ಳುತ್ತಿರುವುದು ಖಂಡನೀಯ ಎಂದು ನಾಯಕರು ವಾಗ್ದಾಳಿ ನಡೆಸಿದರು.
5
+ ಕರ್ನಾಟಕದಿಂದ 4.30 ಲಕ್ಷ ಕೋಟಿ ರೂ. ತೆರಿಗೆ ಹಾಗೂ ಸೆಸ್‍ಗಳನ್ನು ಸಂಗ್ರಹಿಸುವ ಕೇಂದ್ರ ಸರ್ಕಾರ ರಾಜ್ಯಕ್ಕೆ ಮರಳಿ 50 ಸಾವಿರ ಕೋಟಿ ರೂ.ಗಳನ್ನು ಮಾತ್ರ ನೀಡುತ್ತಿದೆ. ನಮ್ಮ ಸಂಪನ್ಮೂಲವನ್ನೆಲ್ಲಾ ಉತ್ತರ ಭಾರತದ ರಾಜ್ಯಗಳಿಗೆ ಖರ್ಚು ಮಾಡಲಾಗುತ್ತಿದೆ ಎಂದು ಆರೋಪಿಸಿದರು.
6
+ ಬಜೆಟ್ ಗಾತ್ರಕ್ಕನುಗುಣವಾಗಿ ತೆರಿಗೆ ಪಾಲು ಏರಿಕೆಯಾಗಿಲ್ಲ. 14, 15 ನೇ ಹಣಕಾಸು ಆಯೋಗದಿಂದ ಭಾರೀ ತಾರತಮ್ಯವಾಗಿದೆ. 11 ಸಾವಿರ ಕೋಟಿ ರೂ. ವಿಶೇಷ ಅನುದಾನವನ್ನು ರದ್ದುಪಡಿಸಲಾಗಿದೆ ಎಂದು ಟೀಕಿಸಿದರು.ಪ್ರತಿಭಟನೆ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಹಣಕಾಸು, ಗೃಹ ಸಚಿವರ ಭೇಟಿಗೆ ಸಮಯ ಕೇಳಲಾಗಿತ್ತು. ಪ್ರತಿಭಟನೆ ಪಕ್ಷಾತೀತವಾಗಿದ್ದು, ಜೆಡಿಎಸ್-ಬಿಜೆಪಿಯ ಸಂಸದರೂ ಭಾಗವಹಿಸಬೇಕೆಂದು ಮುಖ್ಯಮಂತ್ರಿ ಪತ್ರ ಬರೆದಿದ್ದರು. ಆದರೆ ವಿಪಕ್ಷಗಳ ಯಾವ ನಾಯಕರೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿರಲಿಲ್ಲ.
7
+ ರಾಜ್ಯದ ಪರ ಧ್ವನಿ ಎತ್ತದೇ ಬಿಜೆಪಿ ನಾಯಕರು ನೈತಿಕತೆ ಕಳೆದುಕೊಂಡಿದ್ದಾರೆ : ಡಿಕೆಶಿ
8
+ ಕೇಂದ್ರದ ತಾರತಮ್ಯದ ವಿರುದ್ಧ ಕರ್ನಾಟಕದ ಬಳಿಕ ಕೇರಳ ಹಾಗೂ ತಮಿಳುನಾಡು ಸರ್ಕಾರಗಳೂ ಕೂಡ ಪ್ರತಿಭಟನೆಗೆ ಮುಂದಾಗಿರುವುದು ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ತೆರಿಗೆ ಹಾಗೂ ಆರ್ಥಿಕ ಅನುದಾನ ಹಂಚಿಕೆ, ಹಣಕಾಸು ಆಯೋಗದ ಜವಾಬ್ದಾರಿ ಇದರಲ್ಲಿ ರಾಜ್ಯಸರ್ಕಾರದ ಪಾತ್ರ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಪಾದಿಸಿದ್ದಾರೆ.
9
+ ಈ ಹೇಳಿಕೆ ಮೂಲಕ ಆರ್ಥಿಕ ಇಲಾಖೆ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ. ಪ್ರತಿ ತಿಂಗಳು ಅನುದಾನ ಹಂಚಿಕೆ ಹಾಗೂ ತೆರಿಗೆ ಸಂಗ್ರಹದ ಬಗ್ಗೆ ಕೇಂದ್ರ ಹಣಕಾಸು ಸಚಿವಾಲಯ ಮಾಹಿತಿ ಬಹಿರಂಗಪಡಿಸುತ್ತದೆ. ಆದರೂ ಹಂಚಿಕೆಯಲ್ಲಿ ತಮ್ಮ ಪಾತ್ರ ಇಲ್ಲ ಎಂದು ಹೇಳುತ್ತಿರುವುದು ನಂಬಲರ್ಹವಲ್ಲ ಎಂದು ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾದಾಗ ಇದಕ್ಕೂ, ಕೇಂದ್ರ ಸರ್ಕಾರಕ್ಕೂ ಸಂಬಂಧವಿಲ್ಲ.
10
+ ತೈಲ ಕಂಪನಿಗಳು ದರ ಪರಿಷ್ಕರಣೆ ಮಾಡುತ್ತವೆ ಎಂದು ನುಣುಚಿಕೊಳ್ಳುತ್ತದೆ. ಅದೇ 2 ರೂ. ದರ ಕಡಿಮೆ ಮಾಡಿದರೆ ಖುದ್ದು ಪ್ರಧಾನಿಯವರೇ ಹೇಳಿಕೆ ನೀಡಿ ರಾಜಕೀಯ ಲಾಭ ಪಡೆದುಕೊಳ್ಳಲು ಯತ್ನಿಸುತ್ತಾರೆ. ಜನರಿಗೆ ಅನ್ಯಾಯವಾದಾಗ ಅದಕ್ಕೂ ತಮಗೂ ಸಂಬಂಧವಿಲ್ಲ ಎಂದು ಜಾರಿಕೊಳ್ಳುವುದು. ಅದೇ ಸಣ್ಣಪುಟ್ಟ ಲಾಭವಾಗುವುದಾದರೆ ಅದನ್ನು ದೊಡ್ಡದಾಗಿ ಬಿಂಬಿಸಿ ರಾಜಕೀಯ ಲಾಭ ಪಡೆದುಕೊಳ್ಳುವ ಹುನ್ನಾರ ನಡೆಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
eesanje/url_46_245_1.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ
2
+ ಡೆಹ್ರಾಡೂನ್,ಫೆ.6- ಎಲ್ಲಾ ಜಾತಿ ಹಾಗೂ ಧರ್ಮದವರಿಗೆ ಸಮಾನ ನಾಗರಿಕ ಹಕ್ಕುಗಳನ್ನು ನೀಡುವ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಉತ್ತರಾಖಂಡ ರಾಜ್ಯದ ವಿಧಾನಸಭೆ ಯಲ್ಲಿ ಮಂಡಿಸಲಾಗಿದೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಈ ಮಸೂದೆಯನ್ನು ಸದನದಲ್ಲಿ ಮಂಡಿಸಿದ್ದು, ನಾಳೆ ಅಂಗೀಕರಿಸಬಹುದು. ಈ ಮೂಲಕ ಸ್ವಾತಂತ್ರ್ಯಾನಂತರ ಏಕರೂಪ ನಾಗರಿಕ ಸಂಹಿತೆ ಕಾಯ್ದೆ ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ಎಂಬ ಖ್ಯಾತಿಗೆ ಉತ್ತರಾಖಂಡ ಭಾಜನವಾಗಲಿದೆ. ಗೋವಾದಲ್ಲಿ ಮಾತ್ರವೇ ಈ ನಿಯಮ ಜಾರಿಯಲ್ಲಿದೆ. ಆದರೆ ಅದು ಪೋರ್ಚುಗೀಸರ ಕಾಲದಿಂದಲೂ ಇದೆ. ಸ್ವಾತಂತ್ರ್ಯಾನಂತರದ ಗೋವಾ ಸರ್ಕಾರ ಯಾವುದೇ ಹೊಸ ಕಾಯ್ದೆ ರೂಪಿಸಿರಲಿಲ್ಲ.
3
+ ಸಿಎಂ ಧಾಮಿ ಸಂವಿಧಾನದ ಮೂಲ ಪ್ರತಿಯೊಂದಿಗೆ ಸದನಕ್ಕೆ ಆಗಮಿಸಿದ್ದರು. ಅದೇ ಸಮಯದಲ್ಲಿ, 10 ರಷ್ಟು ಮೀಸಲಾತಿಗೆ ಸಂಬಂಧಿಸಿದ ಆಯ್ಕೆ ಸಮಿತಿಯ ವರದಿಯನ್ನು ರಾಜ್ಯ ಚಳವಳಿಗಾರರಿಗೆ ಮಂಡಿಸಲಾಯಿತು. ವಿಧಾನಸಭೆಯ ವಿಶೇಷ ಅಧಿವೇಶನ ಸೋಮವಾರ ಆರಂಭವಾಗಿದ್ದು,ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚರಿಕ ಕ್ರಮವಾಗಿ ಇಡೀ ರಾಜ್ಯದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
4
+ ಇಂದಿನಿಂದ ಕೇಂದ್ರದ ಭಾರತ್ ಬ್ರಾಂಡ್ ಅಕ್ಕಿ ಮಾರುಕಟ್ಟೆಗೆ
5
+ ಈ ಮಸೂದೆಗೆ ಪ್ರತಿಪಕ್ಷದ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿ ಸದನದಲ್ಲಿ ಗದ್ದಲ ಎಬ್ಬಿಸಿದರೆ, ಇದಕ್ಕೆ ಪ್ರತಿಯಾಗಿ ಬಜೆಪಿ ಸದಸ್ಯರು ಜೈ ಶ್ರೀರಾಮ, ಭಾರತ್ ಮಾತಾಕಿ ಜೈ ಘೋಷಣೆಗಳನ್ನು ಕೂಗಿದರು. ಬಳಿಕ ವಿಧಾನಸಭೆಯ ಸಭಾಧ್ಯಕ್ಷರು ಸದನವನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು. ಉತ್ತರಾಖಂಡ್ ವಿಧಾನಸಭೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಹೊಂದಿರುವ ಕಾರಣ ಏಕರೂಪ ನಾಗರಿಕ ಸಂಹಿತೆ ಮಸೂದೆ ಅಂಗೀಕಾರಕ್ಕೆ ಯಾವುದೇ ಸಮಸ್ಯೆ ಇಲ್ಲ.
6
+ ಮತ್ತೊಂದೆಡೆ, ಹಲ್ದ್ವಾನಿಯಲ್ಲಿ ಭಾರೀ ಪೊಲೀಸ್ ಮತ್ತು ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಯುಸಿಸಿಗೆ ಸಂಬಂಧಿಸಿದಂತೆ ಮುಸ್ಲಿಂ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಭಾರೀ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಬಂಭುಲ್ಪುರ, ಇಂದಿರಾ ನಗರ, ಗಾಂ ನಗರ, ಶನಿ ಬಜಾರ್ನಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಎಸ್ಪಿ ಸಿಟಿ, ಸಿಒ ಅವರೇ ಗಸ್ತು ತಿರುಗುತ್ತಿದ್ದಾರೆ.
7
+ ಇನ್ನು ಮುಂದೆ ರಾಜ್ಯದಲ್ಲಿ ಮದುವೆ, ವಿಚ್ಛೇದನ, ಆಸ್ತಿ ಹಕ್ಕು- ಮೊದಲಾದ ವಿಷಯಗಳಿಗೆ ಸಂಬಂಧಿಸಿದಂತೆ ಎಲ್ಲ ಧರ್ಮಗಳಿಗೂ ಒಂದೇ ಕಾನೂನು ಅನ್ವಯವಾಗಲಿದೆ. ಈವರೆಗೂ ಆಯಾ ಧರ್ಮಗಳು ಬೇರೆ ಬೇರೆ ವೈಯಕ್ತಿಕ ಕಾನೂನು ಅನುಸರಿಸುತ್ತಿದ್ದವು. ಇದು ಸಮಾಜದಲ್ಲಿ ಗೊಂದಲಕ್ಕೆ ಕಾರಣವಾಗುತ್ತಿತ್ತು.
8
+ ಎಲ್ಲಾ ಧರ್ಮೀಯರಿಗೂ ವಿವಾಹ, ವಿಚ್ಛೇದನ, ಆಸ್ತಿ, ಭೂಮಿ ಮತ್ತು ಉತ್ತರಾಧಿಕಾರ ಕುರಿತು ವಿವಿಧ ಧರ್ಮಗಳಲ್ಲಿ ಪ್ರತ್ಯೇಕ ನಿಯಮಗಳಿವೆ. ಅದನ್ನೆಲ್ಲೆ ರದ್ದುಪಡಿಸಿ ಒಂದೇ ಕಾನೂನು ರೂಪಿಸುವುದೇ ಏಕರೂಪ ನಾಗರಿಕ ಸಂಹಿತೆ.
9
+ ಸಿದ್ದರಾಮಯ್ಯ 10 ಸಾವಿರ ರೂ. ದಂಡ ವಿಧಿಸಿದ ನ್ಯಾಯಾಲಯ
10
+ ಚಿಂತಿಸುವ ಅಗತ್ಯವಿಲ್ಲ :ಬೆಳಗ್ಗೆಯೇ ವಿಧೇಯಕ ಮಂಡಿಸುವ ಮುನ್ನ ಸಿಎಂ ಧಾಮಿ, ದೇವಭೂಮಿ ಉತ್ತರಾಖಂಡದ ನಾಗರಿಕರಿಗೆ ಸಮಾನ ಹಕ್ಕು ನೀಡುವ ಉದ್ದೇಶದಿಂದ ಇಂದು ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡಿಸಲಾಗುವುದು. ಯುಸಿಸಿ ಜಾರಿಗೆ ಮುಂದಾಗಿರುವ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವುದು ರಾಜ್ಯದ ಸಮಸ್ತ ಜನತೆಗೆ ಹೆಮ್ಮೆಯ ಕ್ಷಣ. ಜೈ ಹಿಂದ್, ಜೈ ಉತ್ತರಾಖಂಡ ಎಂದಿದ್ದಾರೆ.
11
+ ವಾಸ್ತವವಾಗಿ, ಅಧಿವೇಶನದ ಆರಂಭದ ಮೊದಲು, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಯುಸಿಸಿ ಎಲ್ಲಾ ವರ್ಗಗಳಿಗೆ ಒಳಿತಾಗುತ್ತದೆ ಮತ್ತು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ. ಸದನದಲ್ಲಿ ಮಸೂದೆಯನ್ನು ಸಕಾರಾತ್ಮಕ ರೀತಿಯಲ್ಲಿ ಚರ್ಚಿಸುವಂತೆ ಅವರು ಇತರ ರಾಜಕೀಯ ಪಕ್ಷಗಳ ಸದಸ್ಯರನ್ನು ವಿನಂತಿಸಿದರು. ಮಂಗಳವಾರ ಸದನದಲ್ಲಿ ಮಂಡನೆಯಾದ ನಂತರ ಮಸೂದೆಯ ಬಗ್ಗೆ ಚರ್ಚೆ ನಡೆಯಲಿದೆ.
eesanje/url_46_245_10.txt ADDED
@@ -0,0 +1,9 @@
 
 
 
 
 
 
 
 
 
 
1
+ ನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿಗೆ ಜೆಡಿಎಸ್ ಉಪಾಧ್ಯಕ್ಷ ಸ್ಥಾನ
2
+ ಬೆಂಗಳೂರು, ಫೆ.6-ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿ ಅವರು ಜೆಡಿಎಸ್ ಸೇರ್ಪಡೆಯಾದರು. ಜೆಪಿಭವನದಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರಾದ ಹೆಚ್.ಕೆ. ಕುಮಾರಸ್ವಾಮಿ, ಶಾಸಕ ನೇಮಿರಾಜ್ ನಾಯಕ್, ಮಾಜಿ ಸಂಸದ ಅನಿಲ್ ಲಾಡ್ ಮುಂತಾದ ಮುಖಂಡರು ಮಿರ್ಜಿ ಅವರಿಗೆ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು. ಪಕ್ಷ ಸೇರಿದ ಬೆನ್ನಲ್ಲೇ ಜ್ಯೋತಿ ಪ್ರಕಾಶ್ ಮಿರ್ಜಿ ಅವರಿಗೆ ಹಿರಿಯ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ.
3
+ ರಾಜ್ಯ ಪದಾಧಿಕಾರಿಗಳ ನೇಮಕ: ಪಕ್ಷದ ಕೋರ್ ಕಮಿಟಿ ತೀರ್ಮಾನದಂತೆ ನೂತನ ಪದಾಧಿಕಾರಿಗಳನ್ನು ಹೆಚ್.ಡಿ.ಕುಮಾರಸ್ವಾಮಿ ಅವರು ನೇಮಕ ಮಾಡಿದ್ದಾರೆ. ಮಾಜಿ ಶಾಸಕ ಡಾ.ಕೆ.ಅನ್ನದಾನಿ ಅವರನ್ನು ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ, ರಶ್ಮಿ ರಾಮೇಗೌಡ ಅವರನ್ನು ಮಹಿಳಾ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ, ರಾಜು ನಾಯಕ ಅವರನ್ನು ಯುವ ಜನತಾದಳದ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.
4
+ ಕಾರ್ಯಾಧ್ಯಕ್ಷರಾಗಿ ಮಾಜಿ ಸಚಿವರಾದ ಅಲ್ಕೊಡ್ ಹನುಮಂತಪ್ಪ, ಸಾ.ರಾ.ಮಹೇಶ್, ಶಾಸಕ ಸಿ.ಬಿ.ಸುರೇಶ್ ಬಾಬು, ಭೀಮಗೌಡ ಬಸನಗೌಡ ಪಾಟೀಲ್, ದೊಡ್ಡಪ್ಪಗೌಡ ಶಿವಲಿಂಗಪ್ಪಗೌಡ ನರಿಬೋಳ ಅವರನ್ನು ನೇಮಿಸಿದ್ದಾರೆ. ಹಿರಿಯ ಉಪಾಧ್ಯಕ್ಷರಾಗಿ ಮಾಜಿ ಶಾಸಕರಾದ ಡಾ.ಶ್ರೀನಿವಾಸ ಮೂರ್ತಿ, ರವೀಂದ್ರ ಶ್ರೀಕಂಠಯ್ಯ, ಸೋಮಣ್ಣಗೌಡ ಪಾಟೀಲ್, ಜ್ಯೋತಿ ಪ್ರಕಾಶ್ ಮಿರ್ಜಿ ಅವರನ್ನು ನೇಮಕ ಮಾಡಲಾಗಿದೆ.
5
+ 1 ಕೋಟಿ ರೂ. ಲಂಚಕ್ಕೆ ಬೇಡಿಕೆ ಇಟ್ಟವರ ವಿರುದ್ಧ ಪ್ರಕರಣ ದಾಖಲು
6
+ ಉಪಾಧ್ಯಕ್ಷರಾಗಿ ಶಾಸಕರಾದ ಕರೆಮ್ಮ ಜಿ.ನಾಯಕ, ಟಿ. ಎ.ಶರವಣ, ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪ, ಚೌಡರೆಡ್ಡಿ ತೂಪಲ್ಲಿ , ರಾಜಾ ವೆಂಕಟಪ್ಪ ನಾಯಕ ದೊರೆ, ಕೆ.ಬಿ.ಪ್ರಸನ್ನ ಕುಮಾರ್, ಸುನೀತಾ ಚೌಹಾಣ್ ಅವರು ನೇಮಕಗೊಂಡಿದ್ದಾರೆ.
7
+ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಸಚಿವ ವೆಂಕಟರಾವ್ ನಾಡಗೌಡರು, ಖಜಾoಚಿಯಾಗಿ ಬಿ.ಎನ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾಗಿ ಎ. ಪಿ.ರಂಗನಾಥ್, ಅರ್ ಪ್ರಕಾಶ್, ಸಯ್ಯದ್ ರೋಷನ್ ಅಬ್ಬಾಸ್, ರೆಹಮತುಲ್ಲಾ ಖಾನ್, ಸುಧಾಕರ್ ಲಾಲ್, ಶಿವಕುಮಾರ ನಾಟೀಕಾರ್, ಶಾರದಾ ಅಪ್ಪಾಜಿಗೌಡ, ರೂತ್ ಮನೋರಮಾ, ಮಲ್ಲೇಶ್ ಬಾಬು, ವೀರಭದ್ರಪ್ಪ ಹಾಲರವಿ ಅವರನ್ನು ನೇಮಿಸಲಾಗಿದೆ.
8
+ ಕಾರ್ಯದರ್ಶಿಗಳಾಗಿ ಮಹಂತಯ್ಯಮಠ, ಶಂಸಿ ತಬ್ರಾಜ್, ಐಲಿನ್ ಜಾನ್ ಮಠಪತಿ, ಬಿ.ಕಾಂತರಾಜ್, ಡಾ.ವಿಜಯ ಕುಮಾರ್, ಡಾ.ಶೀಲಾ ನಾಯಕ್, ರೋಷನ್ ಬಾವಾಜಿ, ಚಂದ್ರಕಾಂತ್ ಶೇಕಾ, ಕನ್ಯಾಕುಮಾರಿ, ಸಿದ್ದಬಸಪ್ಪ ಯಾದವ್ ಅವರನ್ನು ನೇಮಿಸಲಾಗಿದೆ.
9
+ ಶಿಕ್ಷಕರ ಕ್ಷೇತ್ರದ ಉಪ ಚ��ನಾವಣೆ ಉಸ್ತುವಾರಿ: ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಕಣದಲ್ಲಿರುವ ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಅವರ ಗೆಲುವಿಗೆ ಶ್ರಮಿಸಲು ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಮಾಜಿ ಶಾಸಕ ಇ.ಕೃಷ್ಣಪ್ಪ, ಬೆಂಗಳೂರು ನಗರದ ಮಾಜಿ ಅಧ್ಯಕ್ಷ ಆರ್ ಪ್ರಕಾಶ್ ಅವರನ್ನು ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ.
eesanje/url_46_245_11.txt ADDED
@@ -0,0 +1,5 @@
 
 
 
 
 
 
1
+ ಹಾಸನ-ಮೈಸೂರು ಹೆದ್ದಾರಿಯಲ್ಲಿ ಪುಂಡರ ವೀಲಿಂಗ್ ‘ಹುಚ್ಚಾಟ’
2
+ ಹಾಸನ: ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡರ ಹುಚ್ಚಾಟ ಹೆಚ್ಚಾಗಿದ್ದು, ನಡುರಸ್ತೆಯಲ್ಲಿ ವೀಲ಼ಿಂಗ್ ಮಾಡಿ ವಾಹನ ಸವಾರರಿಗೆ ಕಾಟ ಕೊಟ್ಟಿರುವ ಘಟನೆ ಹಾಸನ-ಮೈಸೂರು ರಾಷ್ಟ್ರೀಯ ಹೆದ್ದಾರಿ 373 ರಲ್ಲಿ ನಡೆದಿದೆ. ತ್ರಿಬಲ್ ರೈಡಿಂಗ್ ಮಾಡುತ್ತಾ ಇಡಿ ರಸ್ತೆ ಆವರಿಸಿಕೊಂಡ ಯುವಕರು ಮೂರ್ನಾಲ್ಕು ಬೈಕ್‌ನಲ್ಲಿ ಒಟ್ಟೊಟ್ಟಿಗೆ ರಸ್ತೆಯಲ್ಲಿ ಹುಚ್ಚಾಟ ಪ್ರದರ್ಶಿಸಿದ್ದಾರೆ.
3
+ ಮಹಿಳೆಯನ್ನು ಕೊಂದು, ಶವದ ಜೊತೆ ಸಂಭೋಗ ಮಾಡಿದ್ದ ವಿಕೃತ ಕಾಮಿಗಳ ಬಂಧನ
4
+ ಯುವಕರ ಹುಚ್ಚಾಟದ ವೀಡಿಯೋ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ನಿತ್ಯವೂ ಇಂತಹ ವ್ಹೀಲಿಂಗ್ ಪುಂಡರಿಂದ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿದೆ. ಸ್ವಲ್ಪ‌ ಯಡವಟ್ಟಾದರೂ ಪ್ರಾಣಕ್ಕೆ ಅಪಾಯವಾಗುತ್ತದೆ ಎಂದು ತಿಳಿದಿದ್ದರು, ಬೈಕ್‌ನಲ್ಲಿ ಮನಬಂದಂತೆ ಓಡಾಡುತ್ತಾ ರಸ್ತೆಯಲ್ಲಿ ಬರುವ ಇತರೆ ವಾಹನಗಳಿಗೆ ಸೈಡ್ ಕೂಡದೆ ಪುಂಡಾಟವಾಡುತ್ತಿದ್ದು, ವ್ಹೀಲಿಂಗ್ ಪುಂಡರಿಗೆ ಬ್ರೇಕ್ ಹಾಕುವಂತೆ ಪೋಲಿಸರಿಗೆ ಸ್ಥಳೀಯರ ಆಗ್ರಹಿಸಿದ್ದಾರೆ.
5
+ ಕಿಲೋಮೀಟರ್‌ಗಟ್ಟಲೆ ವ್ಹೀಲಿಂಗ್ ಮಾಡುತ್ತಾ ಜನರಿಗೆ ತೊಂದರೆ ಕೊಡ್ತಿರುವ ಪುಂಡರಿಗೆ ಖಾಕಿ ಬಿಸಿ ಮುಟ್ಟಿಸುವಂತೆ ಒತ್ತಾಯಿಸಿದ್ದಾರೆ
eesanje/url_46_245_12.txt ADDED
@@ -0,0 +1,10 @@
 
 
 
 
 
 
 
 
 
 
 
1
+ 10 ವರ್ಷಗಳಲ್ಲಿ ಏಕೆ ಮೋದಿ ಗ್ಯಾರಂಟಿ ನೀಡಿರಲಿಲ್ಲ..? : ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು,ಫೆ.5- ರಾಜ್ಯಸ ರ್ಕಾರ ಜಾರಿಗೆ ತರುವಂತಹ ಜನಪರವಾದ ಪಂಚಖಾತ್ರಿ ಯೋಜನೆಗಳನ್ನು ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಏಕೆ ಜಾರಿಗೊಳಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿಂದು ಸಾರಿಗೆ ಸಂಸ್ಥೆಗೆ 100 ಅಶ್ವಮೇಧ ಬಸ್‍ಗಳನ್ನು ಸಮರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಸರ್ಕಾರ ರೂಪಿಸಿದ್ದ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ಟೀಕಿಸುತ್ತಿದ್ದರು.
3
+ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವೇ ಇಲ್ಲ ಎಂದು ಹೇಳುತ್ತಿದ್ದರು. ಜಾರಿ ಮಾಡಿದ ಮೇಲೆ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಪ್ರಚಾರ ಮಾಡಿದರು. ಎಲ್ಲವೂ ಯಶಸ್ವಿಯಾದ ಬಳಿಕ ಲೋಕಸಭಾ ಚುನಾವಣೆ ನಂತರ ಗ್ಯಾರಂಟಿಗಳನ್ನು ಸ್ಥಗಿತಗೊಳಿಸುತ್ತಾರೆ ಎಂದು ಹೇಳುತ್ತಿದ್ದಾರೆ. ದಿನಕ್ಕೊಂದು ಸುಳ್ಳು ಹೇಳಿ ಜನರನ್ನು ದಿಕ್ಕು ತಪ್ಪಿಸುವ ಬಿಜೆಪಿಯವರ ಮಾತನ್ನು ಜನ ನಂಬುವುದಿಲ್ಲ ಎಂದರು.
4
+ ಪ್ರಧಾನಿ ನರೇಂದ್ರಮೋದಿ ಕೂಡ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದರು. ಈಗ ಮೋದಿ ಗ್ಯಾರಂಟಿ ನನ್ನ ಯೋಜನೆಗಳನ್ನು ಕಾಪಿ ಮಾಡುತ್ತಿದ್ದಾರೆ. ಈ 10 ವರ್ಷಗಳಲ್ಲಿ ಏಕೆ ಮೋದಿ ಗ್ಯಾರಂಟಿ ನೀಡಿರಲಿಲ್ಲ? ಬಿಜೆಪಿ ಸರ್ಕಾರವಿರುವ ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳಲ್ಲಿ ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿಯಂತಹ ಯೋಜನೆಗಳು ಜಾರಿಯಾಗುತ್ತಿಲ್ಲ. ಕ್ಯೂ ನಹಿ ದಿಯಾ ಮೋದಿ ಜೀ.. ಎಂದು ವಾಗ್ದಾಳಿ ನಡೆಸಿದರು.
5
+ ಲೋಕಸಭೆ ಚುನಾವಣೆಗೂ ಮುನ್ನ ನರೇಂದ್ರ ಮೋದಿಯವರು ವಿದೇಶದಲ್ಲಿರುವ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕುವುದಾಗಿ ಹೇಳಿದರು. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಲಾಗಿತ್ತು. ಅಚ್ಚೇ ದಿನ್ ಬರುತ್ತದೆ ಎಂದು ಹೇಳಿದ್ದರು. ಯಾವುದನ್ನೂ ಈಡೇರಿಸಲಿಲ್ಲ. ಬದಲಾಗಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ರಸಗೊಬ್ಬರದ ಬೆಲೆಗಳು ದುಬಾರಿಯಾಗಿದೆ.
6
+ ಯಾವ ಕ್ಷೇತ್ರಕ್ಕೂ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿಲ್ಲ : ವಿಜಯೇಂದ್ರ ಸ್ಪಷ್ಟನೆ
7
+ ರಾಜ್ಯ ಸರ್ಕಾರ ನೀಡುತ್ತಿರುವ ಯೋಜನೆಗಳನ್ನು ಬಿಟ್ಟಿ ಭಾಗ್ಯ ಎಂದು ಬಿಜೆಪಿಯವರು ಕೀಳುಮಟ್ಟದಲ್ಲಿ ಟೀಕೆ ಮಾಡುತ್ತಾರೆ. ಮೋದಿಯವರಿಗೆ, ಬಿಜೆಪಿಯವರಿಗೆ ಕಣ್ಣು ಕಾಣುವುದಿಲ್ಲವೇ? ಕನಿಷ್ಠ ಜ್ಞಾನ ಇಲ್ಲವೇ? ಜನಪರ ಯೋಜನೆಗಳನ್ನು ಅರ್ಥ ಮಾಡಿಕೊಳ್ಳುವ ಸಾಮಥ್ರ್ಯ ಇಲ್ಲವೇ ಎಂದು ಪ್ರಶ್ನಿಸಿದರು.
8
+ ರಾಜ್ಯದಲ್ಲಿ ನಾಲ್ಕೂವರೆ ಕೋಟಿ ಜನರಿಗೆ ಸರ್ಕಾರದ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಮಹಿಳೆಯರು, ಗೃಹಲಕ್ಷ್ಮಿ, ಶಕ್ತಿ ಯೋಜನೆಯಿಂದ ಆಗುತ್ತಿರುವ ಆರ್ಥಿಕ ಉಳಿತಾಯವನ್ನು ಬೇರೆ ಬಾಬ್ತುಗಳಿಗೆ ಖರ್ಚು ಮಾಡುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಆರ್ಥಿಕ ಅಭಿವೃದ್���ಿಯಾಗಿದೆ. ಜಿಎಸ್‍ಟಿ ಸಂಗ್ರಹ ಹೆಚ್ಚಾಗಿದೆ ಎಂದರು. ಬಿಜೆಪಿ ಸರ್ಕಾರದವರು 3,800 ಬಸ್ ಸಂಚಾರ ಸೇವೆಯನ್ನು ಸ್ಥಗಿತಗೊಳಿಸಿದ್ದರು. ಇದರಿಂದ ಜನರಿಗೆ ತೊಂದರೆಯಾಗಿದೆ. ನಮ್ಮ ಸರ್ಕಾರ 5 ಸಾವಿರಕ್ಕೂ ಹೆಚ್ಚು ಬಸ್‍ಗಳನ್ನು ಸಾರಿಗೆ ಸಂಸ್ಥೆಗೆ ಒದಗಿಸುವ ಮೂಲಕ ಉತ್ಕøಷ್ಟ ಹಾಗೂ ಸುರಕ್ಷಿತ ಸೇವೆ ಒದಗಿಸಲು ಸಮರ್ಥವಾಗಿದೆ ಎಂದರು.
9
+ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದ್ದು, ಬೇರೆ ಬೇರೆ ರಾಜ್ಯಗಳು ವಿವರಗಳನ್ನು ಪಡೆದುಕೊಳ್ಳುತ್ತಿದ್ದಾರೆ ಎಂದರು. ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್‍ಗಳನ್ನು ವಿತರಿಸಲಾಗುತ್ತಿತ್ತು.
10
+ ಇದರಿಂದ ಯಾರು ಎಷ್ಟು ಬಳಕೆ ಮಾಡಿದ್ದಾರೆ ಎಂಬ ಲೆಕ್ಕ ಸಿಗುತ್ತದೆ. ಸಾರಿಗೆ ಸಂಸ್ಥೆಗಳು ಈ ಯೋಜನೆಯಿಂದ ಆರ್ಥಿಕವಾಗಿ ಸದೃಢವಾಗಿವೆ. ಮಹಿಳೆಯರ ಸುರಕ್ಷಿತೆಗಾಗಿ ಪ್ರತ್ಯೇಕ ಪಿಂಕ್ ಬಸ್‍ಗಳನ್ನು ಬಿಡುವ ಆಲೋಚನಗಳಿವೆ ಎಂದು ಹೇಳಿದರು.ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೆಎಸ್‍ಆರ್‍ಟಿಸಿ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
eesanje/url_46_245_2.txt ADDED
@@ -0,0 +1,8 @@
 
 
 
 
 
 
 
 
 
1
+ ಗೃಹಿಣಿ ಕೊಲೆ ಪ್ರಕರಣಕ್ಕೆ ಹೊಸ ತಿರುವು : ಅಪ್ಪ-ಮಗನಿಂದಲೇ ಹತ್ಯೆ
2
+ ಬೆಂಗಳೂರು, ಫೆ.6- ಕೆಆರ್‍ಪುರಂನಲ್ಲಿ ನಡೆದಿದ್ದ ಗೃಹಿಣಿ ಕೊಲೆ ಪ್ರಕರಣ ತಿರುವು ಪಡೆದುಕೊಂಡಿದ್ದು, ಅಪ್ಪ- ಮಗ ಸೇರಿ ಕೊಲೆ ಮಾಡಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಜಸ್ಟೀಸ್ ಬೀಮಯ್ಯ ಲೇಔಟ್, ದರ್ಗಾ ಬಳಿಯ ಮನೆಯೊಂದರಲ್ಲಿ ನೇತ್ರಾವತಿ ಅವರು ಪತಿ ಚಂದ್ರಪ್ಪ ಹಾಗೂ 17 ವರ್ಷದ ಮಗನೊಂದಿಗೆ ವಾಸವಾಗಿದ್ದರು.
3
+ ಪತ್ನಿಯ ನಡತೆಯ ಬಗ್ಗೆ ಗಂಡ ಅನುಮಾನ ವ್ಯಕ್ತಪಡಿಸಿ ಆಗಾಗ್ಗೆ ಗಲಾಟೆ ಮಾಡುತ್ತಿದ್ದನು. ಇದೇ ವಿಚಾರವಾಗಿ ಹಲವಾರು ಬಾರಿ ಮನೆಯಲ್ಲಿ ಗಲಾಟೆಯೂ ನಡೆದಿತ್ತು. ಹೆತ್ತ ತಾಯಿಯ ನಡತೆಯ ವಿಷಯವಾಗಿ ತಂದೆಯಿಂದ ಪ್ರಚೋದನೆಗೊಂಡ ಮಗ ಫೆ. 2ರಂದು ತಂದೆಯೊಂದಿಗೆ ಸೇರಿಕೊಂಡು ರಾಡಿನಿಂದ ನೇತ್ರಾವತಿ(40) ಅವರನ್ನು ಕೊಲೆ ಮಾಡಿರುತ್ತಾರೆ.
4
+ ನೇತ್ರಾವತಿ ಮೃತಪಟ್ಟಿ ರುವುದನ್ನು ತಿಳಿದು ತಂದೆಯನ್ನು ರಕ್ಷಿಸಲು ಮಗ ತಾನೆ ರಾಡಿನಿಂದ ಹೊಡೆದು ಕೊಲೆ ಮಾಡಿದ್ದಾಗಿ ಪೊಲೀಸರಿಗೆ ಶರಣಾಗಿದ್ದನು. ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರಿಗೆ ಕೊಲೆಗೆ ಬಳಸಲಾಗಿದ್ದ ರಾಡಿನ ಮೇಲೆ ಎರಡು ರೀತಿಯ ಫಿಂಗರ್ ಪ್ರಿಂಟ್‍ಗಳು ಪತ್ತೆಯಾಗಿದ್ದು ಕಂಡು ಆಶ್ಚರ್ಯಗೊಂಡರು. ಈ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿದ ಪೊಲೀಸರು ನೇತ್ರಾವತಿ ಅವರ ಪತಿ ಚಂದ್ರಪ್ಪನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಕೊಲೆಯ ಸತ್ಯಂಶ ಬಯಲಾಗಿದೆ.
5
+ ಅಕ್ರಮ ಸಂಬಂಧಕ್ಕೆ ಕೊಲೆ…!ಚಂದ್ರಪ್ಪ ಅವರನ್ನು ತೀವ್ರ ವಿಚಾರಣೆ ನಡೆಸಿದಾಗ ಪತ್ನಿ ನೇತ್ರಾಳಿಗೆ ಅಕ್ರಮ ಸಂಬಂಧದ ಜೊತೆಗೆ ಕುಡಿತದ ಚಟವಿತ್ತು. ಕೆಲವೊಮ್ಮೆ ಮೂರ್ನಾಲ್ಕು ದಿನಗಳ ಕಾಲ ಮನೆಗೆ ಬರುತ್ತಿರಲಿಲ್ಲ. ಮನೆಯಲ್ಲಿ ಮಗ, ನಾನು ಊಟವಿಲ್ಲದೆ ಉಪವಾಸವಿರು ತ್ತಿದ್ದೆವು. ಈ ಬಗ್ಗೆ ಪ್ರಶ್ನಿಸಿದರೆ ನಮ್ಮ ಜೊತೆಯೇ ಬಾಯಿ ಜೋರು ಮಾಡಿ ಜಗಳ ಮಾಡುತ್ತಿದ್ದಳು. ಹಾಗಾಗಿ ಮಗನ ಜೊತೆ ಸೇರಿಕೊಂಡು ಕೊಲೆ ಮಾಡಲು ನಿರ್ಧಾರ ಮಾಡಿದ್ದಾಗಿ ಪೊಲೀಸರ ಮುಂದೆ ಚಂದ್ರಪ್ಪ ತಿಳಿಸಿದ್ದಾರೆ.
6
+ ಜೈಲಿಗೆ ಹೋದರೆ ವಿದ್ಯಾಭ್ಯಾಸ ಸಿಗುತ್ತೆ:ಕೊಲೆ ಬಳಿಕ ಅಪ್ಪ, ಮಗ ಇಬ್ಬರು ಮಾತನಾಡಿಕೊಂಡಿದ್ದು, ಅಪ್ರಾಪ್ತರು ಜೈಲಿಗೆ ಹೋದರೆ ಶಿಕ್ಷೆ ಕಡಿಮೆಯಾಗುತ್ತೆ. ಅಲ್ಲದೆ, ಅವರೇ ವಿದ್ಯಾಭ್ಯಾಸ ಕೊಡಿಸುತ್ತಾರೆ ಎಂದು ಅಪ್ಪನನ್ನು ಮಗ ಮನವೊಲಿಸಿದ್ದ.ನಾನು ಜೈಲಿನಿಂದ ಹೊರ ಬರುವಷ್ಟರಲ್ಲಿ ನೀನು ಹಣ ಸಂಪಾದಿಸು ಎಂದು ಹೇಳಿ ತಂದೆಯನ್ನು ಹೊರಗೆ ಕಳುಹಿಸಿ ಅಪ್ಪನನ್ನು ರಕ್ಷಿಸಿ ನಂತರ ಆತನೇ ಠಾಣೆಗೆ ಹೋಗಿ ಕೊಲೆ ಮಾಡಿದ್ದಾಗಿ ಶರಣಾಗಿ ದ್ದನು. ಇದೀಗ ಪೊಲೀಸರ ತನಿಖೆ ಯಿಂದಾಗಿ ಅಪ್ಪ ಸಿಕ್ಕಿಬಿದ್ದಿದ್ದಾರೆ.
7
+ ನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿಗೆ ಜೆಡಿಎಸ್ ಉಪಾಧ್ಯಕ್ಷ ಸ್ಥಾನ
8
+ ಈ ಕಾರ್ಯಾಚರಣೆಯನ್ನು ವೈಟ್‍ಫೀಲ್ಡ್ ವಿಭಾಗದ ಉಪಪೊಲೀಸ್ ಆಯುಕ್ತರಾದ ಡಾ. ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಸಹಾಯಕ ಪೊಲೀಸ್ ಆಯುಕ್ತರಾದ ರೀನಾ, ಸುವರ್ಣಾ ಹಾಗೂ ಇನ್ಸ್‍ಪೆಕ್ಟರ್ ಮತ್ತು ಸಿಬ್ಬಂದಿ ಯಶಸ್ವಿಯಾಗಿ ಭೇದಿಸಿದ್ದಾರೆ.
eesanje/url_46_245_3.txt ADDED
@@ -0,0 +1,7 @@
 
 
 
 
 
 
 
 
1
+ ದೆಹಲಿ ಚಲೋಗೆ ಕಾಂಗ್ರೆಸ್ ಸಜ್ಜು
2
+ ಬೆಂಗಳೂರು,ಫೆ.6- ಕೇಂದ್ರ ಸರ್ಕಾರದ ತಾರತಮ್ಯದ ವಿರುದ್ಧ ನಾಳೆ ದೆಹಲಿಯಲ್ಲಿ ನಡೆಯ ಲಿರುವ ಪಕ್ಷಾತೀತ ಪ್ರತಿಭಟನೆಗೆ ಸಾಕಷ್ಟು ಪೂರ್ವ ತಯಾರಿಗಳು ನಡೆಯುತ್ತಿವೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈಗಾಗಲೇ ದೆಹಲಿಗೆ ಭೇಟಿ ನೀಡಿ ನಿನ್ನೆ ರಾತ್ರಿಯೇ ಎಲ್ಲಾ ಪೂರ್ವ ತಯಾರಿಗಳನ್ನು ಖುದ್ದು ಪರಿಶೀಲಿಸಿದ್ದಾರೆ. ಹಿರಿಯ ಸಚಿವರಾದ ಎಚ್.ಕೆ. ಪಾಟೀಲ್, ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಹಲವರು ದೆಹಲಿಯಲ್ಲಿ ಬೀಡು ಬಿಟ್ಟು ಸಿದ್ಧತೆಗಳನ್ನು ಗಮನಿಸುತ್ತಿದ್ದಾರೆ.
3
+ ಕಾಂಗ್ರೆಸ್ ಪಕ್ಷದ ಶಾಸಕರು, ಸಚಿವರು, ವಿಧಾನಪರಿಷತ್ ಸದಸ್ಯರು ಪ್ರತಿಭಟನೆಗೆ ಗೈರು ಹಾಜರಾಗಬಾರದೆಂದು ಕಟ್ಟಪ್ಪಣೆ ಮಾಡಲಾಗಿದ್ದು, ಕೆಲವರಿಗೆ ಡಿ.ಕೆ.ಶಿವಕುಮಾರ್‍ರವರೇ ನೇರವಾಗಿ ಕರೆ ಮಾಡಿ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಸೂಚನೆ ನೀಡುತ್ತಿದ್ದಾರೆ. ತುರ್ತು ಸಂದರ್ಭವಿಲ್ಲದೇ ಅನಗತ್ಯವಾಗಿ ಯಾರೂ ಗೈರು ಹಾಜರಾಗಬಾರದು. ದೆಹಲಿಯಲ್ಲಿ ನಡೆಯುತ್ತಿರುವ ಬಲಪ್ರದರ್ಶನದಲ್ಲಿ ತಪ್ಪದೇ ಪಾಲ್ಗೊಳ್ಳಬೇಕೆಂದು ಸಲಹೆ ಮಾಡುತ್ತಿದ್ದಾರೆಂದು ತಿಳಿದುಬಂದಿದೆ.
4
+ ಕಾಂಗ್ರೆಸ್‍ನ ಪ್ರತಿಭಟನೆಯಿಂದ ವಿಚಲಿತವಾಗಿರುವ ಬಿಜೆಪಿ ನಾಯಕರು ಜನರ ದಿಕ್ಕು ತಪ್ಪಿಸಲು ನಾನಾ ರೀತಿಯ ಸರ್ಕಸ್ ಮಾಡುತ್ತಿದ್ದಾರೆ. ಆದರೆ ಅದ್ಯಾವುದಕ್ಕೂ ಆಸ್ಪದ ಕೊಡದಂತೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಅನುವಾಗಬೇಕೆಂದು ಕಾಂಗ್ರೆಸ್ ನಾಯಕರು ಸೂಚನೆ ನೀಡಿದ್ದಾರೆ. ದೆಹಲಿಯ ಜಂತರ್ ಮಂತರ್‍ನಲ್ಲಿ ವೇದಿಕೆ ಸೇರಿದಂತೆ ಎಲ್ಲಾ ಶಿಷ್ಟಾಚಾರಗಳ ಮೇಲೂ ನಿಗಾ ವಹಿಸಲಾಗಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಜೆಪಿಯ ಸಂಸದರಿಗೆ, ಕೇಂದ್ರ ಸಚಿವರಿಗೆ ಪತ್ರ ಬರೆದು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿರುವುದು ಗಮನ ಸೆಳೆದಿದೆ. ಅನಿರೀಕ್ಷಿತವಾದ ಮುಖ್ಯಮಂತ್ರಿಯವರ ಆಹ್ವಾನ ಬಿಜೆಪಿ ಸಂಸದರಿಗೆ ಬಿಸಿ ತುಪ್ಪವಾಗಿದೆ.
5
+ ಇಂದಿನಿಂದ ಕೇಂದ್ರದ ಭಾರತ್ ಬ್ರಾಂಡ್ ಅಕ್ಕಿ ಮಾರುಕಟ್ಟೆಗೆ
6
+ ಕೇಂದ್ರದಿಂದ ರಾಜ್ಯಕ್ಕೆ ಯಾವುದೇ ಅನ್ಯಾಯವಾಗಿಲ್ಲ ಎಂಬ ಸಮರ್ಥನೆ ಮಾಡಿಕೊಳ್ಳಲು ಸಾಕಷ್ಟು ಪ್ರಯತ್ನಗಳೂ ಕೂಡ ನಡೆದಿವೆ. ಖುದ್ದು ಪ್ರಧಾನಿ ನರೇಂದ್ರಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‍ರವರೇ ಸಂಸತ್‍ನಲ್ಲಿ ಹೇಳಿಕೆ ನೀಡಿ, ಅನ್ಯಾಯವಾಗಿಲ್ಲ ಎಂಬ ವಾದ ಮಂಡಿಸಿದ್ದಾರೆ. ಆದರೆ 2023-24 ನೇ ಬಜೆಟ್‍ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ ಅನುದಾನ ಏಕೆ ಬಿಡುಗಡೆ ಮಾಡಿಲ್ಲ, ನೀರಾವರಿ, ಪೆರಿಫೆರಲ್ ರಿಂಗ್ ರಸ್ತೆ ಹಾಗೂ ಹಣಕಾಸು ಆಯೋಗದ ವಿಶೇಷ ಅನುದಾನವನ್ನು ರದ್ದುಗೊಳಿಸಿದ್ದೇಕೆ ಎಂಬ ಪ್ರಶ್ನೆಯನ್ನು ಕಾಂಗ್ರೆಸ್ ಅಂಕಿಅಂಶಗಳ ಸಮೇತ ಮುಂದಿಟ್ಟಿದೆ.
7
+ ಇದಕ್ಕೆ ರಾಜಕೀಯವಾಗಿ ಉತ್ತರಿಸುತ್ತಿರುವ ಬಿಜೆಪಿಯವರು ಅಂಕಿ ಅಂಶಗಳ ಸಹಿತವಾದ ಟೀಕೆಗಳಿಗೆ ಪ್��ತಿಕ್ರಿಯಿಸಲಾಗದೆ ಪರದಾಡುತ್ತಿದ್ದಾರೆ. ನಾಳೆ ದೆಹಲಿಯಲ್ಲಿ ಪ್ರತಿಭಟನೆ ಮೂಲಕ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಂಡಿದೆ.
eesanje/url_46_245_4.txt ADDED
@@ -0,0 +1,8 @@
 
 
 
 
 
 
 
 
 
1
+ ಕಮಿಷನರ್ ಪೋಲೀಸರ ಕ್ರಮಗಳಿಂದ ಸಂಚಾರ ದಟ್ಟಣೆ ಸುಧಾರಣೆ : ದಯಾನಂದ್
2
+ ಬೆಂಗಳೂರು, ಫೆ.6- ಅತ್ಯಾಧುನಿಕ ತಂತ್ರಜ್ಞಾನವನ್ನು ಸಮಂಜಸವಾಗಿ ಬಳಸಿಕೊಳ್ಳುತ್ತಿರುವುದರಿಂದ ನಗರದ ಸಂಚಾರ ದಟ್ಟಣೆ ಗಣನೀಯವಾಗಿ ಸುಧಾರಿಸಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷದಿಂದ ನಗರದ ಸಂಚಾರ ದಟ್ಟಣೆ ನಿರ್ವಹಣೆಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಅದರ ಪ್ರತಿಫಲ ಎಂಬಂತೆ ವಿದೇಶಿ ಸಂಸ್ಥೆಯಾದ ಟಾಮ್ ವರದಿ ಸಾಕ್ಷಿಯಾಗಿದೆ.
3
+ ಇದು ಕಾಕತಾಳೀಯವಲ್ಲ, ನಾವು ಕೈಗೊಂಡ ಆನೇಕ ಕ್ರಮಗಳಿಂದ ವಿಶ್ವದಲ್ಲೇ ಅತೀ ಹೆಚ್ಚು ಸಂಚಾರ ದಟ್ಟಣೆಯಲ್ಲಿ ಎರಡನೇ ಸ್ಥಾನ ಹೊಂದಿದ್ದ ಬೆಂಗಳೂರು ಈಗ 6ನೇ ಸ್ಥಾನಕ್ಕೆ ಬಂದಿದೆ ಎಂದರು. 2022ನೇ ವರ್ಷದಲ್ಲಿ ನಗರದಲ್ಲಿ ಪ್ರತಿ ಗಂಟೆಗೆ ಸರಾಸರಿ 14 ಕಿ.ಮೀ. ಸಂಚರಿಸಲಾಗುತ್ತಿತ್ತು. 2023ರಲ್ಲಿ ಅದು 18 ಕಿ.ಮೀ.ಗೆ ಹೆಚ್ಚಳವಾಗಿದೆ. ಈ ಮೂಲಕ ಪ್ರಯಾಣದ ವೇಗವೂ ಪ್ರತಿ ಗಂಟೆಗೆ 4 ಕಿ.ಮೀ. ಹೆಚ್ಚಳವಾಗಿದೆ.
4
+ ಸಂಚಾರ ದಟ್ಟಣೆಯ ವಿಶ್ವದ ಟಾಪ್ 10 ನಗರಗಳಲ್ಲಿ ಸಂಚಾರದ ವೇಗವನ್ನು 2023ರಲ್ಲಿ ಒಂದು ನಿಮಿಷ ಕಡಿಮೆ ಮಾಡಿರುವುದರಲ್ಲಿ ಬೆಂಗಳೂರು ನಗರ ಏಕೈಕವಾಗಿದೆ ಎಂದು ಆಯುಕ್ತರು ವಿವರಿಸಿದರು.
5
+ ಈ ಸಾಧನೆಗೆ ನಾವು ಕೈಗೊಂಡ ಸುಧಾರಣೆಗಳು ಕಾರಣವಾಗಿದ್ದು, ಅವುಗಳಲ್ಲಿ ಪ್ರಮುಖವಾಗಿ ಅತಾಧುನಿಕ ತಂತ್ರಜ್ಞಾನ ಬಳಕೆ, ಪೀಕ್ ಅವರ್ ಗೂಡ್ಸ್ ವಾಹನಗಳ ನಿಷೇಧ, ಜಂಕ್ಷನ್‍ಗಳ ಸುಧಾರಣೆ , ಬಸ್ ನಿಲ್ದಾಣಗಳ ಸ್ಥಳಾಂತರ, ರಸ್ತೆ ತಿರುವುಗಳ ಮುಚ್ಚುವಿಕೆ, ಟ್ರಾಫಿಕ್ ಸಿಗ್ನಲ್‍ಗಳ ಬದಲಾವಣೆ ಮುಖ್ಯವಾಗಿದೆ ಎಂದು ಹೇಳಿದರು.
6
+ ನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿಗೆ ಜೆಡಿಎಸ್ ಉಪಾಧ್ಯಕ್ಷ ಸ್ಥಾನ
7
+ ಹೆಬ್ಬಾಳ ಜಂಕ್ಷನ್, ಟಿನ್ ಪ್ಯಾಕ್ಟರಿ, ಗೊರಗುಟ್ಟೆ ಪಾಳ್ಯ, ಸಾರಕ್ಕಿ ಯಂತಹ ಜಂಕ್ಷನ್‍ಗಳಲ್ಲಿ ನಿರ್ದಿಷ್ಟ ದಟ್ಟಣೆ ನಿರ್ವಹಣೆ ಮತ್ತು ಸುಧಾರಿತ ಮೆಟ್ರೋ ಸಂಪರ್ಕ ಜಾಲದ ವಿಸ್ತರಣೆ ಬಿಬಿಎಂಪಿಯಿಂದ ರಸ್ತೆ ಸೌಕರ್ಯ ಸುಧಾರಣೆ, ಟ್ರಾಫಿಕ್ ಡೆನ್ಸಿಟಿ ಕಾರಿಡಾರ್‍ಗಳ ರಚನೆ ಸಹಕಾರಿಯಾಗಿದೆ ಎಂದು ತಿಳಿಸಿದರು.
8
+ ಮುಂದಿನ ದಿನಗಳಲ್ಲಿ ಮತ್ತಷ್ಟು ಸುಧಾರಣೆ ತರಲು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಎಐ) ಆಧಾರಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆ, ಡಾಟಾ ಅನಲಿಟಿಕ್ಸ್ ಸೆಂಟರ್‍ನ ಸಹಾಯ ಮತ್ತು ಡ್ರೋಣ್ ಕ್ಯಾಮೆರಾಗಳ ಬಳಕೆ ಮಾಡಿಕೊಳ್ಳಲಾಗುವುದು. ಜೊತೆಗೆ ಪ್ರಮುಖ ಸಂಶೋಧನಾ ಸಂಸ್ಥೆಗಳು ಎನ್‍ಜಿಓಗಳ ಸಹಯೋಗವನ್ನು ಪಡೆಯಲಾಗುವುದೆಂದು ಆಯುಕ್ತರು ವಿವರಿಸಿದರು.
eesanje/url_46_245_5.txt ADDED
@@ -0,0 +1,5 @@
 
 
 
 
 
 
1
+ ಪಟಾಕಿ ಘಟಕ ಸ್ಫೋಟ, ಹಲವರ ಸಾವು 40ಕ್ಕೂ ಹೆಚ್ಚುಮಂದಿಗೆ ಗಾಯ
2
+ ಭೋಪಾಲ್, ಫೆ.6: ಜಿಲ್ಲೆಯ ಹರ್ದಾ ಪಟ್ಟಣದ ಪಟಾಕಿ ಕಾರ್ಖಾನೆಯೊಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಹಲವರು ಮೃತಪಟ್ಟು 40 ಮಂದಿ ಗಾಯಗೊಂಡಿದ್ದಾರೆ. ಘಟಕದ ಸುತ್ತಮುತ್ತ ಹಲವಾರು ಜನರು ಸಿಲುಕಿರುವ ಆತಂಕವಿದೆ ಎಂದು ಅವರು ಸ್ತಳೀಯ ಪೊಲೀಸರು ತಿಳಿಸಿದ್ದಾರೆ. ಘಟನೆಯ ಕೆಲವು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದು, ಪಟಾಕಿ ಸ್ಪೋಟಗೊಲ್ಳುತ್ತಿರುವ ಮತ್ತು ಜನರು ತಮ್ಮನ್ನು ರಕ್ಷಿಸಿಕೊಳ್ಳಲು ಓಡುತ್ತಿರುವ ದೃಶ್ಯಗಳು ಕಂಡುಬಂದಿದೆ.
3
+ ಬೆಂಕಿಯನ್ನು ನಂದಿಸಲು ಇಂದೋರ್ ಮತ್ತು ಭೋಪಾಲ್‍ನಿಂದ ಅಗ್ನಿಶಾಮಕ ದಳಗಳನ್ನು ಕೂಡ ಧಾವಿಸಿದ್ದು , ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸ್ಥಳಕ್ಕೆ ಭೇಟಿ ನೀಡಿರುವ ಜಿಲ್ಲಾಧಿಕಾರಿ ರಿಷಿ ಗಾರ್ಗ್ ತಿಳಿಸಿದ್ದಾರೆ. ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ದೂರವಾಣಿ ಮೂಲಕ ಅಧಿಕಾರಿಗಳೊಂದಿಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಸಚಿವ ಉದಯ್ ಪ್ರತಾಪ್ ಸಿಂಗ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಜಿತ್ ಕೇಸರಿ ಮತ್ತು ಗೃಹರಕ್ಷಕ ದಳ ಮಹಾನಿರ್ದೇಶಕ ಅರವಿಂದ್ ಕುಮಾರ್ ಅವರು ಹೆಲಿಕಾಪ್ಟರ್ ಮೂಲಕ ಹರ್ದಾಗೆ ಧಾವಿಸಿದ್ದಾರೆ.
4
+ ಹಾಸನ-ಮೈಸೂರು ಹೆದ್ದಾರಿಯಲ್ಲಿ ಪುಂಡರ ವೀಲಿಂಗ್ ‘ಹುಚ್ಚಾಟ’
5
+ ಇಂದೋರ್, ಭೋಪಾಲ್ ಮತ್ತು ರಾಜ್ಯ ರಾಜಧಾನಿಯ ಏಮ್ಸ್‍ನಲ್ಲಿರುವ ಆಸ್ಪತ್ರೆಗಳಲ್ಲಿನ ಸುಟ್ಟಗಾಯಗಳ ಘಟಕಗಳಿಗೆ ತುರ್ತು ಪರಿಸ್ಥಿತಿಗೆ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಲು ಸೂಚಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಭೆಯನ್ನೂ ಕರೆದಿದ್ದಾರೆ.
eesanje/url_46_245_6.txt ADDED
@@ -0,0 +1,6 @@
 
 
 
 
 
 
 
1
+ ವಿಶ್ವಗುರು ಮಾಡುವುದೆಲ್ಲಾ ಬರಿ ಸ್ಟಂಟ್ ಅಷ್ಟೇ : ಬಿ.ಕೆ.ಹರಿಪ್ರಸಾದ್ ಲೇವಡಿ
2
+ ದೆಹಲಿ,ಫೆ.6- ಫ್ಯಾನ್ಸಿ ಡ್ರೆಸ್ ಹಾಕಿಕೊಂಡು ತಿರುಗುವವರಿಗೆ ವಿಪಕ್ಷಗಳು ಮಾಡುವುದೆಲ್ಲಾ ರಾಜಕೀಯ ಸ್ಟಂಟ್ ರೀತಿಯೇ ಕಾಣುತ್ತದೆ ಎಂದು ಕಾಂಗ್ರೆಸ್‍ನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಅವರ ಪಕ್ಷದ ವಿಶ್ವಗುರು ಮಾಡುವುದೆಲ್ಲಾ ಸ್ಟಂಟ್ ಆಗಿರುವುದರಿಂದ ಬೇರೆಯವರನ್ನೂ ಅದೇ ರೀತಿ ಕಾಣಬಯಸುತ್ತಾರೆ. ಆದರೆ ಕಾಂಗ್ರೆಸ್‍ನವರು ಯಾವುದೇ ಸ್ಟಂಟ್ ಮಾಡುವುದಿಲ್ಲ ಎಂದು ಹೇಳಿದರು.
3
+ ಕೇಂದ್ರ ಸರ್ಕಾರದ ತಾರತಮ್ಯದ ವಿರುದ್ಧ ನಾಳೆ ದೆಹಲಿಯಲ್ಲಿ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಈ ಪ್ರತಿಭಟನೆಯನ್ನು ಬೆಂಗಳೂರಿನಲ್ಲಿಯೂ ಮಾಡಬಹುದಿತ್ತು. ಆದರೆ ಪಕ್ಷ ಮತ್ತು ಸರ್ಕಾರ ದೆಹಲಿಯಲ್ಲೇ ಪ್ರತಿಭಟನೆ ಮಾಡುವ ನಿರ್ಧಾರ ತೆಗೆದುಕೊಂಡಿದೆ. ಅದರಲ್ಲಿ ತಾವು ಭಾಗವಹಿಸುವುದಾಗಿ ತಿಳಿಸಿದರು.
4
+ ಕೇಜ್ರಿವಾಲ್ ಆಪ್ತ, ರಾಜ್ಯಸಭಾ ಸದಸ್ಯ ಸೇರಿ ಹಲವರ ಮನೆಗಳ ಮೇಲೆ ಇಡಿ ರೇಡ್
5
+ ಬಿಜೆಪಿಗರು ಪ್ರತಿಭಟನೆಯನ್ನು ವಿರೋಧಿಸುವ ಬದಲು ರಾಜ್ಯಕ್ಕಾಗುತ್ತಿರುವ ಅನ್ಯಾಯದ ವಿರುದ್ಧ ಮಾತನಾಡಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‍ನಲ್ಲಿ ರಾಜ್ಯವನ್ನು ಸಂಪೂರ್ಣವಾಗಿ ಕಡೆಗಣಿಸಿ ಮಲತಾಯಿ ಧೋರಣೆಯನ್ನು ಅನುಸರಿಸಲಾಗಿದೆ. ಇದರ ಬಗ್ಗೆ ಬಿಜೆಪಿಯವರು ಏಕೆ ಧ್ವನಿ ಎತ್ತುತ್ತಿಲ್ಲ ಎಂದು ಪ್ರಶ್ನಿಸಿದರು.
6
+ ಹಣಕಾಸು ಆಯೋಗಗಳು ನಿಯಮಾನುಸಾರ ಅನುದಾನ ಹಂಚಿಕೆ ಮಾಡಬೇಕಿತ್ತು. ಆದರೆ ಕೇಂದ್ರದ ಹಸ್ತಕ್ಷೇಪದಿಂದ ರಾಜ್ಯಕ್ಕೆ ದೊರೆಯುವ ಪಾಲು ಕಡಿಮೆಯಾಗಿದೆ. ಕರ್ನಾಟಕಕ್ಕೆ ನೂರು ರೂಪಾಯಿ ಪೈಕಿ ಹದಿಮೂರು ರೂಪಾಯಿ ಮಾತ್ರ ವಾಪಸ್ ನೀಡಲಾಗುತ್ತಿದೆ. ಅದೇ ಬಿಹಾರಕ್ಕೆ 900 ರೂಪಾಯಿ ಕೊಡುತ್ತಿರುವುದೇಕೆ ಎಂಬುದಷ್ಟೇ ನಮ್ಮ ಪ್ರಶ್ನೆ. ತಾರತಮ್ಯವನ್ನು ಸರಿಪಡಿಸಿದರೆ ಚರ್ಚೆಯೇ ಇರುತ್ತಿರಲಿಲ್ಲವಲ್ಲಾ ಎಂದು ಹೇಳಿದರು.
eesanje/url_46_245_7.txt ADDED
@@ -0,0 +1,9 @@
 
 
 
 
 
 
 
 
 
 
1
+ ರಾಜ್ಯದ ಸಂಸದರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು,ಫೆ.6- ಕೇಂದ್ರಸರ್ಕಾರದಿಂದ ರಾಜ್ಯಕ್ಕಾಗುತ್ತಿರುವ ಆರ್ಥಿಕ ಅನುದಾನ ವಿರೋಧಿಸಿ ನಾಳೆ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎಲ್ಲಾ ಸಂಸದರು, ರಾಜ್ಯಸಭಾ ಸದಸ್ಯರು, ಕೇಂದ್ರ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
3
+ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಶಿ, ಭಗವಂತ್ ಖೂಬಾ, ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ನಿರ್ಮಲಾ ಸೀತಾರಾಮನ್, ರಾಜೀವ್ ಚಂದ್ರಶೇಖರ್, ಕಾಂಗ್ರೆಸ್‍ನ ರಾಜ್ಯಸಭಾ ಸದಸ್ಯರು, ಸಂಸದರು, ಜೆಡಿಎಸ್‍ನ ಸದಸ್ಯ ಪ್ರಜ್ವಲ್ ರೇವಣ್ಣ, ಪಕ್ಷೇತರ ಸದಸ್ಯರಾದ ಸುಮಲತಾ ಹಾಗೂ ಬಿಜೆಪಿಯ ಎಲ್ಲಾ ಸಂಸದರಿಗೂ ಸಿದ್ದರಾಮಯ್ಯ ಖುದ್ದು ಸಹಿ ಮಾಡಿರುವ ಪತ್ರ ರವಾನಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದೆ.
4
+ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಕೇಂದ್ರದ ವಿತ್ತ ಸಚಿವರಾಗಿರುವ@nsitharamanಅವರು, ರಾಜ್ಯಸಭೆಯ ವಿಪಕ್ಷ ನಾಯಕರಾದ@khargeಅವರು, ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ@H_D_Devegowda, ಕರ್ನಾಟಕದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ@,@Rajeev_GoI,@, ಎ.ನಾರಾಯಣಸ್ವಾಮಿ, ಮಾಜಿ…../7cVmaDzMHb
5
+ ಒಂದು ವಿಶೇಷ ಸಂದರ್ಭದಲ್ಲಿ ಈ ಪತ್ರವನ್ನು ತಮಗೆ ಬರೆಯುತ್ತಿದ್ದೇನೆ. ಕೇಂದ್ರ ಸರ್ಕಾರದಿಂದ ಆಗುತ್ತಿರುವ ನಿರಂತರ ಅನ್ಯಾಯ ಮತ್ತು ಕರ್ನಾಟಕದ ವಿಚಾರವಾಗಿ ಕೇಂದ್ರ ಸರ್ಕಾರ ತೋರಿಸುತ್ತಿರುವ ಮಲತಾಯಿ ಧೋರಣೆಯು ತಮಗೆ ಈಗಾಗಲೇ ತಿಳಿದ ವಿಷಯವಾಗಿ. ಇದರ ವಿರುದ್ಧ ಪ್ರತಿಭಟಿಸಲು ಮತ್ತು ದೇಶದ ಗಮನ ಸೆಳೆಯಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.
6
+ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಂಪುಟದ ಎಲ್ಲಾ ಸಚಿವರು, ಶಾಸಕರು ಮತ್ತು ಸಂಸದರು ಸೇರಿ ಫೆ.7 ರಂದು ದೆಹಲಿಯ ಜಂತರ್ ಮಂತರ್‍ನಲ್ಲಿ ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿವರಿಸಿದ್ದಾರೆ.
7
+ ಕೇಜ್ರಿವಾಲ್ ಆಪ್ತ, ರಾಜ್ಯಸಭಾ ಸದಸ್ಯ ಸೇರಿ ಹಲವರ ಮನೆಗಳ ಮೇಲೆ ಇಡಿ ರೇಡ್
8
+ ಕರ್ನಾಟಕಕ್ಕೆ ತೆರಿಗೆ ಪಾಲಿನ ಹಂಚಿಕೆಯಲ್ಲಿ ಆಗುತ್ತಿರುವ ಭಾರೀ ಅನ್ಯಾಯ, ಬರ ಪರಿಹಾರ ನೀಡದೇ ಇರುವುದು, ವಿವಿಧ ಯೋಜನೆಗಳಿಗೆ ಅನುಮತಿ ಮತ್ತು ನೆರವು ನೀಡುವಲ್ಲಿ ತೋರಿಸುತ್ತಿರುವ ನಿರ್ಲಕ್ಷ್ಯ, ವಿಳಂಬ ಇತ್ಯಾದಿಗಳು ರಾಜ್ಯದಲ್ಲಿ ಜನ ಜೀವನವನ್ನು ವಿಪರೀತವಾಗಿ ಬಾಸುತ್ತಿದೆ. ಈ ವಿಚಾರವನ್ನು ಜವಾಬ್ದಾರಿಯುತವಾದ ಚುನಾಯಿತ ಪ್ರತಿನಿಗಳಾದ ತಾವು ಅರಿತುಕೊಂಡಿದ್ದೀರಾ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
9
+ ರಾಜ್ಯಕ್ಕಾಗಿ ನಡೆಯುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಅದರ ಯಶಸ್ಸಿಗೆ ಸಹಕರಿಸಬೇಕು ಎಂದು ಎಲ್ಲ�� ಸಂಸದರಿಗೂ, ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರ ಸಚಿವರಿಗೂ ಪತ್ರಮುಖೇನ ಮನವಿ ಮಾಡಿದ್ದಾರೆ.
eesanje/url_46_245_8.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಬಿಜೆಪಿಯಲ್ಲಿ ಹೆಚ್ಚಿದ ಆಕಾಂಕ್ಷಿಗಳು : ಅಭ್ಯರ್ಥಿ ಆಯ್ಕೆ ಕಗ್ಗಂಟು
2
+ ಬೆಂಗಳೂರು,ಫೆ.6-ಬರಲಿರುವ ಲೋಕಸಭೆ ಚುನಾವಣೆಯಲ್ಲಿ 25 ಕ್ಕೂ ಹೆಚ್ಚು ಸ್ಥಾನಗಳನ್ನುಗೆಲ್ಲುವ ಗುರಿ ಇಟ್ಟುಕೊಂಡಿರುವ ಬಿಜೆಪಿಗೆ ಪ್ರತಿ ಯೊಂದು ಕ್ಷೇತ್ರದಲ್ಲೂ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಅಭ್ಯರ್ಥಿಗಳ ಆಯ್ಕೆಗೆ ಕಗ್ಗಂಟಾಗಿ ಪರಿಣಮಿಸಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಒಂದರಿಂದ ಐದಕ್ಕೂ ಹೆಚ್ಚು ಆಕಾಂಕ್ಷಿಗಳಿರುವುದರಿಂದ ಯಾರಿಗೆ ಟಿಕೆಟ್ ನೀಡಬೇಕು ಎಂಬುದೇ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ. ಕೆಲವು ಹಾಲಿ ಸದಸ್ಯರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇರುವುದರಿಂದ ಇಂತಹ ಕ್ಷೇತ್ರಗಳ ಮೇಲೆ ಒಂದು ಡಜನ್‍ಗೂ ಅಕ ಆಕಾಂಕ್ಷಿಗಳು ಸ್ರ್ಪಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
3
+ ಪಕ್ಷದಿಂದ ಟಿಕೆಟ್ ಸಿಗಬಹುದೆಂಬ ಖಚಿತ ಭರವಸೆ ಹಿನ್ನೆಲೆಯಲ್ಲಿ ಕೆಲವು ಆಕಾಂಕ್ಷಿಗಳು ಕ್ಷೇತ್ರದಲ್ಲಿ ಒಂದು ಸುತ್ತಿನ ಮತದಾರರ ಭೇಟಿ ಮಾಡುವ ಕೆಲಸಕ್ಕೂ ಕೈ ಹಾಕಿದ್ದಾರೆ. ಪ್ರತಿಷ್ಠಿತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ತೇಜಸ್ವಿ ಸೂರ್ಯರಿಗೆ ಪುನಃ ಟಿಕೆಟ್ ಖಾತರಿ ಎಂದು ಹೇಳಲಾಗುತ್ತಿದೆ. ಈ ಕ್ಷೇತ್ರದಿಂದ 6 ಬಾರಿ ಗೆದ್ದಿದ್ದ ಕೇಂದ್ರದ ಮಾಜಿ ಸಚಿವ ಅನಂತಕುಮಾರ್ ಪತ್ನಿ ತೇಜಸ್ವಿನಿ ಅನಂತ್‍ಕುಮಾರ್, ಕೇಂದ್ರದ ವಿದೇಶಾಂಗ ವ್ಯವಹಾರಗಳ ಸಚಿವ ಜಯಶಂಕರ್‍ರ ಹೆಸರು ಕೇಳಿಬಂದಿದೆ.
4
+ ಬೆಂಗಳೂರು ಉತ್ತರದಲ್ಲಿ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ, ಈ ಹಿಂದೆ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಈಗ ಡಿ.ವಿ.ಸದಾನಂಗೌಡ ಮತ್ತೆ ಸ್ಪರ್ಧೆ ಮಾಡುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಈ ಕ್ಷೇತ್ರಕ್ಕೆ ಕೇಂದ್ರಸಚಿವೆ ಶೋಭಾ ಕರಂದ್ಲಾಜೆ, ಸಿ.ಟಿ.ರವಿ ಕಣ್ಣಿಟ್ಟಿದ್ದಾರೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರಕ್ಕೆ ಟಿಕೆಟ್ ಸ್ಪರ್ಧೆ ಕಂಡುಬರುತ್ತಿಲ್ಲ.
5
+ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಹಾಲಿ ಸಂಸದ ಬಿ.ಎನ್.ಬಚ್ಚೇಗೌಡ ಸ್ರ್ಪಧಿಸುವುದಿಲ್ಲ ಎಂದು ಹೇಳಿರುವುದರಿಂದ ಮಾಜಿ ಸಚಿವ ಡಾ.ಕೆ.ಸುಧಾಕರ್ ಈಗಾಗಲೇ ನನಗೇ ಟಿಕೆಟ್ ಎಂದು ಹೇಳಿಕೊಂಡು ಪ್ರಚಾರ ಆರಂಭಿಸಿದ್ದಾರೆ.ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಪುತ್ರ ಅಲೋಕ್ ವಿಶ್ವನಾಥ್ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದಾರೆ.
6
+ ಕೇಜ್ರಿವಾಲ್ ಆಪ್ತ, ರಾಜ್ಯಸಭಾ ಸದಸ್ಯ ಸೇರಿ ಹಲವರ ಮನೆಗಳ ಮೇಲೆ ಇಡಿ ರೇಡ್
7
+ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿರುವುದರಿಂದ ಕೋಲಾರ ಕ್ಷೇತ್ರವನ್ನು ದಳಪತಿಗೆ ಬಿಟ್ಟುಕೊಟ್ಟರೆ, ಹಾಲಿ ಸಂಸದ ಮುನಿಸ್ವಾಮಿಗೆ ಟಿಕೆಟ್ ತಪ್ಪುವುದು ಗ್ಯಾರಂಟಿ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಬಿಜೆಪಿ ವಕ್ತಾರ ಅಶ್ವತ್ಥ ನಾರಾಯಣ ಹೆಸರು ಕೇಳಿಬಂದಿವೆ. ಒಂದು ವೇಳೆ ಈ ಕ್ಷೇತ್ರವನ್ನು ಜೆಡಿಎಸ್ ಉಳಿಸಿಕೊಂಡರೆ ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅಭ್ಯರ್ಥಿಯಾದರೂ ಅಚ್ಚರಿಯಿಲ್ಲ.
8
+ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಉಳಿಸಿಕೊಂಡರೆ ಹಾಲಿ ಸಂಸದೆ ಸುಮಲತಾ ಅಂಬರೀಶ್ ರಾಜಕೀಯ ಪರಿಸ್ಥಿತಿ ಡೋಲಾಯಮಾನವಾಗಬಹುದು. ಮೈಸೂರು-ಕೊಡಗು ಕ್ಷೇತ್ರಕ್ಕೆ ಬಹುತೇಕ ಹಾಲಿ ಸಂಸದ ಪ್ರತಾಪಸಿಂಹಗೆ ಟಿಕೆಟ್ ಖಚಿತ ಎನ್ನಲಾಗುತ್ತಿದೆ. ಚಾಮರಾಜನಗರ ಮೀಸಲು ಕ್ಷೇತ್ರಕ್ಕೆ ಹಾಲಿ ಸಂಸದ ವಿ.ಶ್ರೀನಿವಾಸ್ ಅವರ ಅಳಿಯಂದಿರಲ್ಲಿ ಒಬ್ಬರು ಕಣಕ್ಕಿಳಿಯಬಹುದು.
9
+ ತುಮಕೂರು ಕ್ಷೇತ್ರಕ್ಕೆ ಮಾಜಿ ಸಚಿವರಾದ ವಿ.ಸೋಮಣ್ಣ ಹಾಗೂ ಜೆ.ಸಿ.ಮಾಧುಸ್ವಾಮಿ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ. ಇಲ್ಲಿ ಯಾರಿಗೆ ಟಿಕೆಟ್ ಕೈತಪ್ಪಿದರೂ ಒಳಹೊಡೆತ ತಪ್ಪಿದ್ದಲ್ಲ ಎಂಬ ಭೀತಿಯಿದೆ. ಚಿತ್ರದುರ್ಗದಲ್ಲಿ ಹಾಲಿ ಸಚಿವ ನಾರಾಯಣಸ್ವಾಮಿ ಮುಂದುವರೆಯುವುದು ಖಚಿತ.
10
+ ಮಧ್ಯಕರ್ನಾಟಕದ ರಾಜಧಾನಿ ಎನಿಸಿರುವ ದಾವಣಗೆರೆಯಲ್ಲಿ ಹಿಂದೆಂದಿಗಿಂತಲೂ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ್‍ಗೆ ಟಿಕೆಟ್ ಕೊಡಬಾರದು ಎಂದು ಜಿಲ್ಲಾ ಘಟಕ ಒತ್ತಾಯಿಸಿದೆ. ಉಳಿದಂತೆ ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ, ಚಿಕ್ಕಮಗಳೂರು-ಉಡುಪಿಯಲ್ಲಿ ಶೋಭಾ ಕರಂದ್ಲಾಜೆ ಮುಂದುವರೆಯಲಿದ್ದಾರೆ. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನಳಿನ್‍ಕುಮಾರ್ ಕಟೀಲ್‍ಗೆ ಟಿಕೆಟ್ ಕೈ ತಪ್ಪುವ ಲಕ್ಷಣಗಳು ಗೋಚರಿಸಿವೆ.
11
+ ಸಂಘ ಪರಿವಾರದ ಹಿನ್ನೆಲೆಯ ಬ್ರಿಜೇಶ್ ಚೌತಗೆ ಟಿಕೆಟ್ ಸಿಗಬಹುದು. ಪಕ್ಕದ ಉತ್ತರ ಕನ್ನಡದಲ್ಲಿ ಅನಂತಕುಮಾರ್ ಹೆಗ್ಡೆಗೆ ಮತ್ತೊಮ್ಮೆ ಮಣೆ ಹಾಕುವ ಸಾಧ್ಯತೆಯಿದೆ. ಚಿಕ್ಕೋಡಿಯಲ್ಲಿ ಹಾಲಿ ಸಂಸದ ಅಣ್ಣಾ ಸಾಯೆಬ್ ಜೊಲ್ಲೆ ಮುಂದುವರೆದರೆ, ಬೆಳಗಾವಿಯಲ್ಲಿ ಮಂಗಳ ಸುರೇಶ್ ಬದಲಿಗೆ ಹೊಸ ಅಭ್ಯರ್ಥಿ ಕಣಕ್ಕಿಳಿಯಬಹುದು.
12
+ ಕೋವಿಡ್ ಲಸಿಕೆಗಳಿಂದ ಹೃದಯಘಾತವಾಗುತ್ತಿಲ್ಲ : ರುಶಿಕೇಶ್
13
+ ಧಾರವಾಡ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಮಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಈ ಕ್ಷೇತ್ರವನ್ನು ಹಾಲಿ ಸಚಿವ ಪ್ರಹ್ಲಾದ್ ಜೋಶಿ ಪ್ರತಿನಿಸುತ್ತಿದ್ದಾರೆ. ಹಾವೇರಿ ಕ್ಷೇತ್ರಕ್ಕೆ ಕೆ.ಎಸ್.ಈಶ್ವರಪ್ಪ ಪುತ್ರ ಕಾಂತೇಶ್, ವಕೀಲ ಸಂದೀಪ್ ಪಾಟೀಲ್ ಹೆಸರು ಕೇಳಿಬಂದಿವೆ.
14
+ ಬಳ್ಳಾರಿಯಲ್ಲಿ ಶ್ರೀರಾಮಲು, ಕೊಪ್ಪಳದಲ್ಲಿ ಹಾಲಿ ಶಾಸಕ ಗಾಲಿ ಜನಾರ್ಧನರೆಡ್ಡಿ, ರಾಯಚೂರಿನಲ್ಲಿ ಅಮರೇಶ್ ನಾಯಕ್, ಸ್ಪರ್ಧೆಗಿಳಿಯುವುದು ಖಚಿತ. ಬೀದರ್‍ನಲ್ಲಿ ಸಚಿವ ಭಗವಂತ್ ಖೂಬಾಗೆ ಟಿಕೆಟ್ ನೀಡಬಾರದೆಂಬ ಒತ್ತಡ ಕೇಳಿಬಂದಿದೆ. ಬಾಗಲಕೋಟೆಯಲ್ಲಿ ಹಾಲಿ ಸಂಸದ ಗದ್ದಿಗೌಡರ್ ಹಿಂದೇಟು ಹಾಕಿದ್ದರೆ, ಕಲಬುರ್ಗಿಯಲ್ಲಿ ಡಾ.ಉಮೇಶ್ ಜಾದವ್‍ಗೆ ಮಣೆ ಹಾಕುವ ಸಂಭವವಿದೆ.
eesanje/url_46_245_9.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಸಿದ್ದರಾಮಯ್ಯ 10 ಸಾವಿರ ರೂ. ದಂಡ ವಿಧಿಸಿದ ನ್ಯಾಯಾಲಯ
2
+ ಬೆಂಗಳೂರು,ಫೆ.6- ಸಾರ್ವಜನಿಕರಿಗೆ ತೊಂದರೆ ಕೊಟ್ಟು ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ನಾಲ್ವರಿಗೆ 10 ಸಾವಿರ ದಂಡ ಹಾಗೂ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಹೈ ಕೋರ್ಟ್‍ನ ಜನಪ್ರತಿನಿಧಿ ನ್ಯಾಯಾಲಯ ಕಟ್ಟು ನಿಟ್ಟಿನ ಸೂಚನೆ ನೀಡಿದೆ.
3
+ ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ, ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸಚಿವರಾದ ರಾಮಲಿಂಗ ರೆಡ್ಡಿ, ಎಂ.ಬಿ.ಪಾಟೀಲ್ ಅವರುಗಳಿಗೆ ದಂಡ ವಿಧಿಸಿದೆ.
4
+ ಸಿದ್ದರಾಮಯ್ಯ ಅವರು ಮಾರ್ಚ್ 6 ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.ತಮ್ಮ ವಿರುದ್ದ ದಾಖಲಾಗಿದ್ದ ಅರ್ಜಿಯ ವಿಚಾರಣೆಯನ್ನು ರದ್ದು ಪಡಿಸಬೇಕು ಎಂದು ಸಿದ್ದರಾಮಯ್ಯ ಸೇರಿದಂತೆ ನಾಲ್ವರು ಹೈಕೋರ್ಟ್‍ನ ಜನಪ್ರತಿ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ, 10 ಸಾವಿರ ದಂಡ ವಿಧಿಸಿ ಅರ್ಜಿಗಳನ್ನು ವಜಾಗೊಳಿಸಿದೆ.
5
+ ಅಲ್ಲದೆ ಸಂಬಂಧಪಡದ ಪೊಲೀಸ್ ಅಧಿಕಾರಿಯನ್ನು ಪ್ರತಿವಾದಿಯನ್ನಾಗಿ ಮಾಡಿದ್ದಕ್ಕೆ ಎಲ್ಲರಿಗೂ ತಲಾ 10 ಸಾವಿರ ರೂ. ದಂಡ ವಿಧಿಸಿದೆ.ಮಾ.6ರಂದು ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಹೈಕೋರ್ಟ್ ಸೂಚಿಸಿದೆ. ಅದೇ ರೀತಿ ಮಾ.7ರಂದು ರಾಮಲಿಂಗ ರೆಡ್ಡಿ, ಮಾ.11 ಸುರ್ಜೆವಾಲಾ, ಮಾ.15ರಂದು ಎಂ.ಬಿ. ಪಾಟೀಲ್ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಹಾಜರಾಗಲು ಸೂಚಿಸಿದೆ.
6
+ ಕೇಜ್ರಿವಾಲ್ ಆಪ್ತ, ರಾಜ್ಯಸಭಾ ಸದಸ್ಯ ಸೇರಿ ಹಲವರ ಮನೆಗಳ ಮೇಲೆ ಇಡಿ ರೇಡ್
7
+ ಜನಪ್ರತಿನಿಧಿಗಳು ಕಾನೂನು ಪಾಲಿಸಿದರೆ ಜನರು ಕೂಡಾ ಪಾಲಿಸುತ್ತಾರೆ. ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರೆ ಜನರಿಗೆ ಸಂಕಷ್ಟ ಎದುರಾಗುತ್ತದೆ. ಸಿಟಿ ಲೈಫ್ ಈಸ್ ಟಾರ್ಚರ್, ಪ್ರತಿಭಟನೆಗಳಿಂದ ಜನರಿಗೆ ಮತ್ತಷ್ಟು ತ್ರಾಸದಾಯಕ. ಜನಪ್ರತಿನಿಧಿಯಾದ ಕಾರಣಕ್ಕೆ ರಸ್ತೆ ಅಡ್ಡಗಟ್ಟುವುದನ್ನು ಒಪ್ಪಲು ಸಾಧ್ಯವಿಲ್ಲ. ಜನ ನಾಯಕರಾದವರು ಮೊದಲು ಕಾನೂನು ಪಾಲಿಸಬೇಕು ಎಂದು ನ್ಯಾ. ಕೃಷ್ಣ ಎಸ್ ದೀಕ್ಷಿತ್‍ರಿದ್ದ ಹೈಕೋರ್ಟ್ ಪೀಠ ತುಸು ಖಾರವಾಗಿಯೇ ಪ್ರತಿಕ್ರಿಯಿಸಿತು.
8
+ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರರಕಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಳೆದ 2022ರ ಏಪ್ರಿಲ್ 14ರಂದು ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾ��ಗ್ರೆಸ್ ನಾಯಕರು ರೇಸ್ ಕೋರ್ಸ್ ರಸ್ತೆಯಲ್ಲಿ ಪ್ರತಿಭಟಿಸಿದ್ದರು.ಅನುಮತಿ ಪಡೆದವರಿಗೆ ಮಾತ್ರ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟಿಸಲು ಅವಕಾಶ ನೀಡಲಾಗುತ್ತದೆ. ಬೇರೆ ಕಡೆ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾದಲ್ಲಿ ದೂರು ದಾಖಲಿಸಲಾಗುತ್ತದೆ.
9
+ ಭಾರತದ ಸಮುದ್ರ ರಕ್ಷಣೆಗೆ ಬಂತು ಅಮೆರಿಕದ MQ9- ಡ್ರೋನ್
10
+ ಪ್ರಕರಣವೇನು? :ಬೊಮ್ಮಾಯಿ ನೇತೃತ್ವದ ಬಿಜೆಪಿ ಅಧಿಕಾರದಲ್ಲಿದ್ದ ಸಮಯದಲ್ಲಿ ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದ. ಇದರಲ್ಲಿ ಆಗಿನ ಸಚಿವ ಕೆ.ಎಸ್ ಈಶ್ವರಪ್ಪ ಹೆಸರು ಕೇಳಿಬಂದಿತ್ತು. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಪೊಲೀಸರು ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಕೊಟ್ಟಿದ್ದು, ಕಾನೂನು ಸುವ್ಯಸ್ಥೆಗೆ ಭಂಗ ಉಂಟು ಮಾಡಿದ್ದು, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ಇತ್ಯಾದಿ ಆರೋಪಗಳಡಿಯಲ್ಲಿ ಪ್ರಕರಣ ದಾಖಲಿಸಿದ್ದರು.ಈ ಪ್ರಕರಣ ರದ್ದು ಕೋರಿ ಸಿದ್ದರಾಮಯ್ಯ, ರಾಮಲಿಂಗ ರೆಡ್ಡಿ, ಎಂ.ಬಿ ಪಾಟೀಲ, ಸುರ್ಜೆವಾಲ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
eesanje/url_46_246_1.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ತಾಕತ್ತು, ದಮ್ಮು ಇದ್ದರೆ ಶ್ವೇತಪತ್ರ ಹೊರಡಿಸಿ : ಬಿಜೆಪಿ
2
+ ಬೆಂಗಳೂರು, ಫೆ.5- ಜಲ ಜೀವನ್ ಮಿಷನ್, ಅಮೃತ್ ಯೋಜನೆ, ಸ್ಮಾರ್ಟ್ ಸಿಟಿ, ಪಿಎಂ ಆವಾಸ್ ಯೋಜನೆ ಸೇರಿದಂತೆ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಇದುವರೆಗೆ ನೀಡಿದ ಅನುದಾನವನ್ನು ಎಷ್ಟರ ಮಟ್ಟಿಗೆ ಬಳಸಿಕೊಂಡಿದ್ದೀರಾ ಎಂಬ ಶ್ವೇತಪತ್ರ ಹೊರಡಿಸುವ ತಾಕತ್ತು, ದಮ್ಮು ನಿಮ್ಮಲ್ಲಿದೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರತಿಪಕ್ಷ ಬಿಜೆಪಿ ಬಹಿರಂಗ ಸವಾಲು ಹಾಕಿದೆ.
3
+ ಸಿದ್ದರಾಮಯ್ಯ ಅವರ ಅರೋಪಕ್ಕೆ ಅಂಕಿ-ಅಂಶಗಳ ಸಮೇತ ದಾಖಲೆಯ ಮೂಲಕವೇ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಸಾಲು ಸಾಲು ಪೋಸ್ಟ್ ಮಾಡಿರುವ ಬಿಜೆಪಿ, ಅಷ್ಟಕ್ಕೂ ಕೇಂದ್ರ ಸರ್ಕಾರ ಅನುದಾನ ನೀಡುತ್ತಿಲ್ಲ ಎಂದು ಪಟಾಲಂ ಕಟ್ಟಿಕೊಂಡು ಬೊಬ್ಬೆ ಹೊಡೆಯುತ್ತಿರುವ ಸಿದ್ದರಾಮಯ್ಯನವರೇ, ಕನ್ನಡಿಗರ ಶ್ರಮದ ತೆರಿಗೆ ಹಣವನ್ನು ವಾಮಮಾರ್ಗದಲ್ಲಿ ಸಂಗ್ರಹಿಸಿ, ತೆಲಂಗಾಣ, ಛತ್ತಿಸ್‍ಗಢ, ಮಧ್ಯಪ್ರದೇಶ, ರಾಜಸ್ಥಾನದ ಚುನಾವಣೆಗೆ ನೀಡಿದ ನಿಮಗೆ ಈ ವಿಚಾರದ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ ಎಂದು ವಾಗ್ದಾಳಿ ನಡೆಸಿದೆ.
4
+ ಪಿಎಂ ಗತಿ ಶಕ್ತಿ ಯೋಜನೆ, ಸಾಗರಮಾಲಾ ಯೋಜನೆ, ಬಡವರಿಗೆ ಸ್ವಂತ ಮನೆ ಖಾತರಿಪಡಿಸುವ ಪಿಎಂ ಆವಾಸ್ ಯೋಜನೆಯಡಿ ರಾಜ್ಯಕ್ಕೆ 1 ಲಕ್ಷ ಕೋಟಿ ರೂ.ಗೂ ಅಕ ನೆರವು 2014ರ ನಂತರ ಹರಿದುಬಂದಿದೆ. ಕೊರೊನಾದ ಪ್ರಕ್ಷುಬ್ಧ ಪರಿಸ್ಥಿತಿಯಲ್ಲಿ ಮೋದಿ ಸರ್ಕಾರ ಕರ್ನಾಟಕಕ್ಕೆ ಉಚಿತವಾಗಿ ನೀಡಿದ ಲಸಿಕೆಯೇ 10 ಕೋಟಿಗೂ ಹೆಚ್ಚು. ಆ ಪ್ರಮಾಣದಲ್ಲಿ ನಿಮ್ಮ ಪಕ್ಷದ ಸರ್ಕಾರಗಳು ಪೋಲಿಯೋ ಲಸಿಕೆಗಳನ್ನೂ ನೀಡಿಲ್ಲ ಎಂಬ ಅಂಶ ನಿಮ್ಮ ತಲೆಯಲ್ಲಿರಲಿ ಎಂದು ತಿರುಗೇಟು ನೀಡಿದೆ.
5
+ ಕಳೆದ 5 ವರ್ಷಗಳಲ್ಲಿ ಮೋದಿ ಸರ್ಕಾರ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳಿಗೆ ನೀಡಿರುವುದು 30,000 ಕೋಟಿ. ಕರ್ನಾಟಕದ ರೈತರ ಜೇಬಿಗೆ ಬಂದ ಕಿಸಾನ್ ಸಮ್ಮಾನದ ಮೌಲ್ಯ 10,990 ಕೋಟಿ. ಕಾಂಗ್ರೆಸ್ ಸರ್ಕಾರಗಳಿಗೆ 67 ವರ್ಷಗಳಲ್ಲಿ ಯೋಚಿಸಲೂ ಸಾಧ್ಯವಾಗದಿದ್ದ ಆಯುಷ್ಮಾನ್ ಭಾರತ ಯೋಜನೆಯ ಲಾಭವನ್ನು ಪಡೆದ ಕನ್ನಡಿಗರು 62,00,000 ಕ್ಕೂ ಅಧಿಕ. ಕರ್ನಾಟಕಕ್ಕೆ ಮೊದಲ ಐಐಟಿ ನೀಡಿದ್ದು ಸಹ ಮೋದಿ ಸರ್ಕಾರ ಎಂಬುದು ನಿಮಗೆ ತಿಳಿದಿತ್ತೇ ಮುಖ್ಯಮಂತ್ರಿ ಸಾಹೇಬರೇ ಎಂದು ಬಿಜೆಪಿ ವ್ಯಂಗ್ಯವಾಡಿದೆ.
6
+ ಯಾವ ಕ್ಷೇತ್ರಕ್ಕೂ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿಲ್ಲ : ವಿಜಯೇಂದ್ರ ಸ್ಪಷ್ಟನೆ
7
+ ರೈಲ್ವೆ ಇಲಾಖೆ ಸಾಧನೆಯೇ ಕಾಂಗ್ರೆಸ್ ಅವಧಿಯಲ್ಲಿ ಇಷ್ಟು ಅತ್ಯಲ್ಪವಾಗಿರುವಾಗ ನಿಮ್ಮ ಪಕ್ಷದವರು ಅಧಿಕಾರ ನಡೆಸುವಾಗ ಮೆಟ್ರೋಗೋಸ್ಕರ ಯಶಸ್ವಿಯಾಗಿ ಅಳವಡಿಸಿದ ಹಳಿಯ ಉದ್ದ ಕೇವಲ 7 ಕಿಮೀ. 2014 ರಿಂದ 2023 ನಡುವೆ ಬರೋಬ್ಬರಿ 73 ಕಿಲೋ ಮೀಟರ್ ಮೆಟ್ರೋ ಹಳಿ ಅಳವಡಿಸಲಾಗಿದೆ. ಅಂದರೆ ಇದು ನಿಮ್ಮ ಪಕ್ಷದವರು ನಿರ್ಮಿಸಿದ್ದಕ್ಕಿಂತ 10 ಪಟ್ಟಿಗೂ ಹೆಚ್ಚು ಅಧಿಕ. ಕಾಂಗ್ರೆಸ್‍ನ 67 ವರ್ಷಗಳ ಆಡಳಿತದಲ್ಲಿ ಕರ್ನಾಟಕದಲ್ಲಿ ನಿರ್ಮಾಣ��ಾದ ವಿಮಾನ ನಿಲ್ದಾಣಗಳು ಕೇವಲ 7. ಆದರೆ 2014ರಲ್ಲಿ ದೇಶದ ಜನ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆದ ನಂತರ ಕರ್ನಾಟಕವೊಂದರಲ್ಲೇ 14 ವಿಮಾನ ನಿಲ್ದಾಣಗಳನ್ನು ನಿರ್ಮಿಸಿರುವುದು ಮೋದಿ ಸರ್ಕಾರ ಎಂದು ಬಲವಾಗಿ ಸಮರ್ಥಿಸಿಕೊಂಡಿದೆ.
8
+ 2009 ರಿಂದ 2014ರ ವರೆಗೆ ರಾಜ್ಯದ ರೈಲ್ವೆ ಯೋಜನೆಗಳಿಗೆ ನಿಮ್ಮ ಸರ್ಕಾರ ನೀಡಿದ್ದ 835 ಕೋಟಿಗಿಂತ ಮೋದಿ ಸರ್ಕಾರ ನೀಡಿರುವ 11,000 ಕೋಟಿ ಎಷ್ಟು ಪಟ್ಟು ಹೆಚ್ಚು ಎಂಬುದನ್ನು ನೀವೇ ಸ್ವಲ್ಪ ಲೆಕ್ಕ ಹಾಕಿ ಹೇಳಿಬಿಡಿ. ಬ್ರಿಟೀಷರು ಭಾರತವನ್ನು ಬಿಟ್ಟು ಹೋದಲ್ಲಿಂದ ಹಿಡಿದು 2014 ರಲ್ಲಿ ಕಾಂಗ್ರೆಸ್ ಅಕಾರ ಬಿಟ್ಟು ತೊಲಗುವವರೆಗೆ, 67 ವರ್ಷಗಳಲ್ಲಿ ಕರ್ನಾಟಕದಲ್ಲಿ ಆದ ರೈಲ್ವೆ ವಿದ್ಯುದೀಕರಣ ಕೇವಲ 16 ಕಿಲೋಮೀಟರ್. ಆದರೆ ಕಾಂಗ್ರೆಸ್ಸನ್ನು ಉಚ್ಛಾಟಿಸಿ ಬಂದ ಮೋದಿ ಸರ್ಕಾರ ಮಾಡಿದ ರೈಲ್ವೆ ವಿದ್ಯುದೀಕರಣ ಬರೋಬ್ಬರಿ 3265 ಕಿಮೀ ಎಂದು ಹೇಳಿದೆ.
9
+ 2004-2014ರ ವರೆಗೆ ಯುಪಿಎ ಅಕಾರದಲ್ಲಿದ್ದಾಗ ಕಲ್ಲಿದ್ದಲು ಹಗರಣ, 2ಜಿ ಹಗರಣ, ಕಾಮನ್‍ವೆಲ್ತ್ ಹಗರಣಗಳಂಥ ಭಾನಗಡಿಗಳ ನಡುವೆ ಕರ್ನಾಟಕಕ್ಕೆ ನೀಡಲು ಅಂದಿನ ಕೇಂದ್ರ ಸರ್ಕಾರದ ಬಳಿ ಇದ್ದದ್ದೇ 81,795 ಕೋಟಿ. ಇದಕ್ಕೆ ಹೋಲಿಸಿದರೆ ಮೋದಿ ಸರ್ಕಾರ ನೀಡಿರುವ 2,82,791 ಕೋಟಿ ಶೇ.245 ರಷ್ಟು ಹೆಚ್ಚು ಎಂಬುದನ್ನು ಕಾಂಗ್ರೆಸ್ ಯಾವತ್ತೂ ಮರೆಮಾಚಲು ಸಾಧ್ಯವಿಲ್ಲ. ಕರ್ನಾಟಕದ ಅಭಿವೃದ್ಧಿಗೆ ಈಗ ಹಿಂದೆಂದಿಗಿಂತಲೂ ಹೆಚ್ಚು ಸಿಕ್ಕಿದೆ ಎಂಬುದನ್ನು ತಿರುಚಲು ನೀವು ಎಷ್ಟೇ ಪ್ರಯತ್ನಿಸಿದರೂ ಅಸಾಧ್ಯ ಎಂಧು ಕಿಡಿಕಾರಿದೆ.
10
+ ಇದಲ್ಲದೆ ನಿರ್ದಿಷ್ಟ ಯೋಜನೆಗಳಿಗಾಗಿ ನೀಡಲಾದ ಅಭಿವೃದ್ಧಿ ಹಣ ಅದೆಷ್ಟು ಪಾಲು ಅಕ ಎಂಬುದನ್ನು ಲೆಕ್ಕ ಹಾಕಲು ಸ್ವಯಂಘೋಷಿತ ಆರ್ಥಿಕ ತಜ್ಞರಾದ ತಮಗೆ ಅಸಾಧ್ಯವಲ್ಲ. ಯುಪಿಎ ಅವಯಲ್ಲಿ ರಾಜ್ಯಕ್ಕೆ ಬಂದ 60,779 ಕೋಟಿಗಿಂತಲೂ ಮೋದಿ ಸರ್ಕಾರ ನೀಡಿದ 2,08,882 ಕೋಟಿ ಹೆಚ್ಚು ಎಂಬುದನ್ನು ಅರಿಯಲು ಅರ್ಥಶಾಸ್ತ್ರ ಗೊತ್ತಿರಲೇಬೇಕೆಂದು ಇಲ್ಲ, ಲೆಕ್ಕ ಗೊತ್ತಿದ್ದರೂ ಸಾಕು. ನಮ್ಮ ರಾಜ್ಯದಲ್ಲಿ ನಿಮ್ಮ ಪಕ್ಷದವರು 1947 ರಿಂದ 2014ರ ವರೆಗೆ ನಿರ್ಮಾಣ ಮಾಡಿದ ರಸ್ತೆ ಕೇವಲ 6750 ಕಿಲೋ ಮೀಟರ್. ಮೋದಿ ಸರ್ಕಾರ 2014ರ ನಂತರ ಕರ್ನಾಟಕದಲ್ಲಿ ಮಾಡಿದ ರಸ್ತೆ ನಿರ್ಮಾಣ ಒಟ್ಟು 13,500 ಕಿಲೋ ಮೀಟರ್. ಸಿದ್ದರಾಮಯ್ಯನವರೇ, ಮೊದಲು ನಾಲ್ಕು ಗಂಟೆಗೂ ಹೆಚ್ಚು ಸಮಯ ತಗಲುತ್ತಿದ್ದ ನಿಮ್ಮ ತವರೂರಿಗೆ ಕೇವಲ ಒಂದೂವರೆ ಗಂಟೆಯಲ್ಲೇ ನೀವಿಂದು ಹೋಗುತ್ತಿರುವ ಆ ರಸ್ತೆಯನ್ನು ಮಾಡಿಸಿದ್ದೂ ಸಹ ಮೋದಿ ಸರ್ಕಾರವೇ ಎಂದು ಕುಹಕವಾಡಿದೆ.
11
+ ಫ್ರಾನ್ಸ್‌ನಲ್ಲಿ ಯುಪಿಐ ಪಾವತಿ ಮಾದರಿ ಅಳವಡಿಕೆ
12
+ ತಮ್ಮ ಆಡಳಿತದ ದಯನೀಯ ವೈಫಲ್ಯವನ್ನು ಮರೆಮಾಚಿಕೊಳ್ಳಲು ಸಿಎಂ ಸಿದ್ದರಾಮಯ್ಯ ಅವರು ಸದಾ ಆರೋಪಿಸುವುದು ಕೇಂದ್ರ ಸರ್ಕಾರವನ್ನು. ಕರ್ನಾಟಕದ ಇತಿಹಾಸದಲ್ಲಿಯೇ ಹಿಂದೆಂದೂ ಕಂಡು ಕೇಳರಿಯದಂತಹ ಆಡಳಿತ ವಿರೋ ಅಲೆ ಸದ್ಯ ಕಾಂಗ್ರೆಸ್ ಸರ್ಕಾರಕ್ಕಿದೆ. ಆಡಳಿತ ವಿರೋಧಿ ಅಲೆಯಿಂದ ಜನರ ಗಮನವನ್ನು ಬೇರೆಡೆ ಸೆ��ೆಯಲು ಕಾಂಗ್ರೆಸ್ ಮತ್ತು ಸಿಎಂ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದೆ.
13
+ ಜೀವನ ಪೂರ್ತಿ ಪರರನ್ನು ಬೊಟ್ಟು ಮಾಡಿ ಜಾರಿಕೊಳ್ಳಲು ಯತ್ನಿಸುತ್ತಿರುವ ಸಿದ್ದರಾಮಯ್ಯನವರೇ, ಈ ಮಾಹಿತಿ ನಿಮ್ಮ ಸರ್ಕಾರದ ಬಳಿ ಇಲ್ಲದಿರುವುದು ನಿಮ್ಮ ಆಡಳಿತದ ಅಸಾಮಥ್ರ್ಯ ತೋರಿಸುತ್ತದಷ್ಟೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ನೀಡಿದ್ದಕ್ಕಿಂತ ಮೂರು ಪಟ್ಟು ಅಧಿಕ ತೆರಿಗೆಪಾಲು ಮತ್ತು ಅನುದಾನಗಳನ್ನು ನೀಡಿದ್ದು ಹಾಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎಂದು ಸಿದ್ದರಾಮಯ್ಯ ಅವರ ಆರೋಪಕ್ಕೆ ಬಿಜೆಪಿ ದಾಖಲೆಗಳ ಮೂಲಕವೇ ಪ್ರತಿ ಸವಾಲು ಹಾಕಿದೆ.
eesanje/url_46_246_10.txt ADDED
@@ -0,0 +1,4 @@
 
 
 
 
 
1
+ ಡಿಡಿಯಲ್ಲಿ ರಾಮಾಯಣ ಮರುಪ್ರಸಾರ
2
+ ಬೆಂಗಳೂರು,ಫೆ.4- ದೇಶದ ಜನರ ಮನ ಗೆದ್ದಿದ್ದ ರಮಾನಂದ್ ಸಾಗರ್ ಅವರ ನಿರ್ದೇಶನದ ರಾಮಾಯಣವನ್ನು ಮರುಪ್ರಸಾರ ಮಾಡುವುದಾಗಿ ರಾಷ್ಟ್ರೀಯ ವಾಹಿನಿ ಡಿಡಿ ನ್ಯಾಷನಲ್ ಘೋಷಣೆ ಮಾಡಿದೆ. ಅದರಂತೆ ನಾಳೆಯಿಂದಲೇ ನೀವು ಪ್ರತಿದಿನ ಸಂಜೆ 6 ಗಂಟೆಗೆ ಹಾಗೂ ಮರುದಿನ ಮಧ್ಯಾಹ್ನ 12 ಗಂಟೆಗೆ ರಾಮಾಯಣವನ್ನು ಮತ್ತೆ ವೀಕ್ಷಿಸಬಹುದಾಗಿದೆ ಎಂದು ಡಿಡಿ ತಿಳಿಸಿದೆ.
3
+ ಈ ಮೆಗಾ ಸೀರಿಯಲ್‍ನಲ್ಲಿ ರಾಮನಾಗಿ ನಟಿಸಿದ್ದ ಅರುಣ್ ಗೋವಿಲ್, ಸೀತೆಯಾಗಿ ನಟಿಸಿದ್ದ ದೀಪಿಕಾ ಚಿಕಾಲಿಯಾ ಹಾಗೂ ಲಕ್ಷ್ಮಣ ಪಾತ್ರದಲ್ಲಿ ನಟಿಸಿದ್ದ ಸುನೀಲ್ ಲೆಕ್ರಿ ಅವರಿಗೆ ಜನವರಿ 22 ರಂದು ನಡೆದ ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಯಲ್ಲಿ ಅಧಿಕೃತ ಆಹ್ವಾನ ನೀಡಲಾಗಿತ್ತು.
4
+ ಅಯೋಧ್ಯೆಗೆ ಹೋಗಿದ್ದ ಇವರನ್ನು ಸ್ಥಳೀಯ ಜನ ಖುಷಿಯಿಂದಲೇ ಸ್ವಾಗತಿಸಿದ್ದರು. ಇದೀಗ ಸೀರಿಯಲ್ ಅನ್ನು ಮರು ಪ್ರಸಾರ ಮಾಡುವುದಾಗಿ ಡಿಡಿ ನ್ಯಾಷನಲ್ ಘೋಷಣೆ ಮಾಡಿದೆ.
eesanje/url_46_246_11.txt ADDED
@@ -0,0 +1,5 @@
 
 
 
 
 
 
1
+ ಭಾನುವಾರವೂ ಬಜೆಟ್ ತಯಾರಿಯಲ್ಲಿ ಸಿಎಂ ಬ್ಯುಸಿ
2
+ ಬೆಂಗಳೂರು,ಫೆ.4- ಭಾನುವಾರದ ರಜಾ ದಿನವೂ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ತಯಾರಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ. ಇಂದ ಬೆಳಗ್ಗೆ ಎಲ್ಲಾ ಕಾರ್ಯಕ್ರಮಗಳನ್ನು ಬದಿಗಿರಿಸಿ ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ. ರಾಜ್ಯಕ್ಕೆ ದೃಢವಾದ ಮತ್ತು ಪ್ರಗತಿ ಪರ ಬಜೆಟ್‍ನ್ನು ನೀಡುವುದು ನಮ್ಮ ಬದ್ದತೆ. ಈ ವಿಷಯವಾಗಿ ಆಳವಾದ ಅಧ್ಯಯನ ನಡೆಸಲಾಗುತ್ತಿದೆ.
3
+ ವೈಫಲ್ಯಗಳನ್ನು ಮರೆಮಾಚಲು ಕೇಂದ್ರ ರುದ್ಧ ಗೂಬೆ ಕೂರಿಸುವ ಪ್ರಯತ್ನ : ಬಿಜೆಪಿ ವಾಗ್ದಾಳಿ
4
+ ಹಿಂದಿನ ಅವಧಿಯಲ್ಲಿ ನೀಡಿದ್ದ ಭರವಸೆಗಳ ಅನುಷ್ಠಾನ ಮತ್ತು ಭವಿಷ್ಯದ ಬಜೆಟ್‍ನಲ್ಲಿ ಅಳವಡಿಸಬೇಕಾದ ಭರವಸೆಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
5
+ . . .##KarnatakaBudget2425pic../
eesanje/url_46_246_12.txt ADDED
@@ -0,0 +1,3 @@
 
 
 
 
1
+ ‘ಅಶ್ವಮೇಧ’ ಬಸ್‍ಗಳಿಗೆ ನಾಳೆ ಸಿಎಂ ಸಿದ್ದರಾಮಯ್ಯ ಚಾಲನೆ
2
+ ಬೆಂಗಳೂರು,ಫೆ.4- ರಾಜ್ಯ ರಸ್ತೆ ಸಾರಿಗೆ ನಿಗಮದ ಅಶ್ವಮೇಧ ಕ್ಲಾಸಿಕ್ ಹೊಸ ವಿನ್ಯಾಸದ ಬಸ್‍ಗಳಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಕೆಎಸ್‍ಆರ್‍ಟಿಸಿಯು ಅಶ್ವಮೇಧ ಹೊಸ ವಿನ್ಯಾಸದ 800 ಬಸ್‍ಗಳನ್ನು ಮೇ ಅಂತ್ಯದೊಳಗೆ ಸಾರ್ವಜನಿಕ ಸೇವೆಗೆ ಒದಗಿಸಲು ಉದ್ದೇಶಿಸಿದೆ.
3
+ ಮೊದಲ ಹಂತದಲ್ಲಿ ನಾಳೆ ನೂರು ಬಸ್‍ಗಳಿಗೆ ವಿಧಾನಸೌಧ ಮುಂಭಾಗ ಚಾಲನೆ ನೀಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಸಚಿವರು, ಶಾಸಕರು ಹಾಗೂ ಕೆಎಸ್‍ಆರ್‍ಟಿಸಿಯ ಹಿರಿಯ ಅಕಾರಿಗಳು ಭಾಗವಹಿಸಲಿದ್ದಾರೆ ಎಂದು ಕೆಎಸ್‍ಆರ್‍ಟಿಸಿ ಪ್ರಕಟಣೆ ತಿಳಿಸಿದೆ.
eesanje/url_46_246_2.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ತೆರಿಗೆ ಪಾಲು ಹಂಚಿಕೆಯಲ್ಲಿ ಕೇಂದ್ರದಿಂದ 1.87 ಲಕ್ಷ ಕೋಟಿ ಅನ್ಯಾಯ : ಸಿಎಂ
2
+ ಬೆಂಗಳೂರು,ಫೆ.5- ಕರ್ನಾಟಕ ರಾಜ್ಯದಿಂದ ಕೇಂದ್ರಕ್ಕೆ ವಾರ್ಷಿಕ 4.30 ಲಕ್ಷ ಕೋಟಿ ರೂ. ತೆರಿಗೆ, ಸರ್‍ ಚಾರ್ಜ್, ಸೆಸ್ ರೂಪದಲ್ಲಿ ಆದಾಯ ಕ್ರೂಢೀ ಕರಣ ವಾಗುತ್ತಿದೆ. ಅದರಲ್ಲಿ ಶೇ.12ರಷ್ಟನ್ನು ರಾಜ್ಯಕ್ಕೆ ಮರಳಿಸ ಲಾಗುತ್ತಿದ್ದು, ಸುಮಾರು 1,87,867 ಕೋಟಿ ರೂ. ಕಳೆದ ಐದು ವರ್ಷಗಳಿಂದ ನಷ್ಟವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
3
+ ಕೇಂದ್ರದಿಂದ ರಾಜ್ಯಕ್ಕೆ ಆಗಿರುವ ಆರ್ಥಿಕ ತಾರತಮ್ಯ ಕುರಿತಂತೆ ವಿಧಾನಸೌಧದಲ್ಲಿಂದು ಸುದೀರ್ಘ ಪತ್ರಿಕಾಗೋಷ್ಠಿ ನಡೆಸಿ ಎಳೆ ಎಳೆಯಾಗಿ ಮಾಹಿತಿ ಬಿಚ್ಚಿಟ್ಟರು. 2017ರಿಂದ 2023-24ರವರೆಗೆ ಜಿಎಸ್‍ಟಿ ನಷ್ಟದಿಂದ 59,274 ಕೋಟಿ 15ನೇ ಹಣಕಾಸು ಆಯೋಗದ ತೆರಿಗೆ ಪಾಲು ಹಂಚಿಕೆಯಲ್ಲಿ 62,098 ಕೋಟಿ ಸೆಸ್, ಸಬ್‍ಚಾರ್ಜ್‍ಗಳ ಮೂಲಕ 55,000 ಕೋಟಿ, ವಿಶೇಷ ಅನುದಾನ ಕೊಡದೆ ವಂಚನೆಯಾಗಿರುವುದು 11,495 ಕೋಟಿ ಸೇರಿ ಒಟ್ಟು 1.87 ಲಕ್ಷ ಕೋಟಿ ಆರ್ಥಿಕವಾಗಿ ರಾಜ್ಯಕ್ಕೆ ನಷ್ಟವಾಗಿದೆ ಎಂದು ವಿವರಿಸಿದರು.
4
+ 2013-14ನೇ ಸಾಲಿನಲ್ಲಿ 1,41,270 ಕೋಟಿ ಸೆಸ್ ಮತ್ತು ಸರ್‍ಚಾರ್ಜ್‍ಗಳ ಮೊತ್ತ ವಸೂಲಿಯಾಗುತ್ತಿತ್ತು. 2023-24ನೇ ಸಾಲಿಗೆ ಅದು ಐದು ಪಟ್ಟು ಹೆಚ್ಚಾಗಿ, 5,52,789 ಕೋಟಿಯಷ್ಟಾಗಿದೆ. ಆದರೆ ಇದರಲ್ಲಿ ರಾಜ್ಯಕ್ಕೆ ಯಾವುದೇ ಪಾಲು ನೀಡುತ್ತಿಲ್ಲ ಎಂದು ಆಕ್ಷೇಪಿಸಿದರು. ಕೇಂದ್ರ ಸರ್ಕಾರದ ಬಜೆಟ್ 2017-18ನೇ ಸಾಲಿನಲ್ಲಿ 21.46 ಲಕ್ಷ ಕೋಟಿಯಷ್ಟು ಇತ್ತು. ಆಗ 47,990 ಕೋಟಿ ರೂ.ಗಳು ಕೇಂದ್ರದಿಂದ ತೆರಿಗೆ ಪಾಲು ಮತ್ತು ಕೇಂದ್ರದ ಪ್ರಾಯೋಜಿತ ಯೋಜನೆಗಳಡಿ ಬರುತ್ತಿತ್ತು.
5
+ 2024-25ನೇ ಸಾಲಿಗೆ ಬಜೆಟ್‍ನ ಗಾತ್ರ 45.03 ಲಕ್ಷ ಕೋಟಿಯಷ್ಟಾಗಿದೆ. ಇದರ ಪ್ರಮಾಣಕ್ಕೆ ಅನುಗುಣವಾಗಿ ರಾಜ್ಯಕ್ಕೆ ಅನುದಾನ ಹೆಚ್ಚಾಗಿಲ್ಲ. ಕೇವಲ 50,257 ಕೋಟಿ ರೂ. ಮಾತ್ರ ದೊರೆತಿದೆ. ಬಜೆಟ್ ಪ್ರಮಾಣಕ್ಕೆ ಅನುಗುಣವಾಗಿ 5 ವರ್ಷಗಳ ಹಿಂದೆ 2.2ರಷ್ಟು ಅನುದಾನ ಹಂಚಿಕೆಯಾಗಿದ್ದು, ಈ ವರ್ಷಕ್ಕೆ 1.23ಕ್ಕೆ ಕುಸಿದಿದೆ.
6
+ ಯಾವ ಕ್ಷೇತ್ರಕ್ಕೂ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿಲ್ಲ : ವಿಜಯೇಂದ್ರ ಸ್ಪಷ್ಟನೆ
7
+ ಅವೈಜ್ಞಾನಿಕ ಜಿಎಸ್‍ಟಿಯಿಂದ ರಾಜ್ಯಕ್ಕೆ ಆಗುತ್ತಿರುವ ನಷ್ಟದ ಪರಿಹಾರವನ್ನು ಕೇಂದ್ರ ಸರ್ಕಾರ ಭರ್ತಿ ಮಾಡಿಕೊಡುವುದನ್ನು ನಿಲ್ಲಿಸಿದೆ. ದೇಶದಲ್ಲೇ 2ನೇ ಅತಿಹೆಚ್ಚು ತೆರಿಗೆ ಪಾವತಿಸುವ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಆದಾಯ ತೆರಿಗೆ, ಕಾಪೆರ್ರೇಟ್ ತೆರಿಗೆ, ಜಿಎಸ್‍ಟಿ, ಪೆಟ್ರೋಲ್, ಡೀಸೆಲ್, ಕಸ್ಟಮ್ ತೆರಿಗೆ, ಹೆದ್ದಾರಿ ಟೋಲ್‍ಗಳು, ಬಂದರು, ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣಗಳಿಂದ ಕೇಂದ್ರಕ್ಕೆ 4.37 ಲಕ್ಷ ಕೋಟಿ ರೂ. ಆದಾಯ ರವಾನೆಯಾಗುತ್ತಿದೆ. ಇದರಲ್ಲಿ ಕನಿಷ್ಟವೆಂದರೂ ರಾಜ್ಯಕ್ಕೆ ವರ್ಷಕ್ಕೆ ಒಂದು ಲಕ್ಷ ಕೋಟಿ ರೂ. ಮರುಪಾವತಿಯಾಗಬೇಕಿತ್ತು. 50 ಸಾವಿರ ಕೋಟಿ ರೂ. ನೀಡುವ ಭರವಸೆ ಮಾತ್ರ ದೊರೆತಿದೆ ಎಂದು ವಿಶ್ಲೇಷಿಸಿದರು.
8
+ ಕೇಂದ್ರ ಸಚಿವ ನಿರ್ಮ��ಾ ಸೀತಾರಾಮನ್ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಕಳೆದ ಬಜೆಟ್‍ನಲ್ಲಿ ಭದ್ರ ಮೇಲ್ದಂಡೆಗೆ 5,300 ಕೋಟಿ ಕೆರೆಗಳ ಪುನರ್ ಅಭಿವೃದ್ಧಿಗೆ 3000 ಕೋಟಿ, ಪೆರಿಪರಲ್ ರಿಂಗ್ ರಸ್ತೆ 3000 ಕೋಟಿ, 15ನೇ ಹಣಕಾಸು ಆಯೋಗದ ಮಧ್ಯಂತರ ವರದಿ ಪ್ರಕಾರ 5 ಸಾವಿರ ಕೋಟಿ ಸೇರಿದಂತೆ ಸಾಕಷ್ಟು ಅನುದಾನ ನಿರ್ಮಲಾ ಸೀತಾರಾಮನ್ ಅವರ ಮೂಲಕವೇ ರಾಜ್ಯಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ ಅದೆಲ್ಲವನ್ನೂ ತಿರಸ್ಕಾರ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
9
+ ಬಿಜೆಪಿಗೆ ಮನವಿ:ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಫೆ.7ರಂದು ಬೆಳಗ್ಗೆ 11 ಗಂಟೆಗೆ ಜಂತರ್‍ಮಂತರ್‍ನಲ್ಲಿ ಕರ್ನಾಟಕದ ಎಲ್ಲಾ ಸಚಿವರು, ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು, ಪ್ರತಿಭಟನೆ ನಡೆಸುತ್ತಿದ್ದೇವೆ. ಇದು ಬಿಜೆಪಿ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ರಾಜಕೀಯ ಪ್ರತಿಭಟನೆ ಅಲ್ಲ. ಬದಲಾಗಿ ರಾಜ್ಯಕ್ಕಾಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ. ಹೀಗಾಗಿ ಬಿಜೆಪಿಯ ಶಾಸಕರು, ಸಂಸದರೂ ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
10
+ ಮಧ್ಯ ಚಿಲಿಯಲ್ಲಿ ಕಾಡ್ಗಿಚ್ಚಿಗೆ 112 ಮಂದಿ ಸಾವು
11
+ ರಾಜ್ಯದಿಂದ ಕೇಂದ್ರದಲ್ಲಿ ಸಚಿವರಾಗಿರುವವರು, 27 ಮಂದಿ ಸಂಸದರು, ಬಿಜೆಪಿಯ ರಾಜ್ಯ ನಾಯಕರಾದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಆರ್.ಅಶೋಕ್ ಸೇರಿದಂತೆ ಯಾರಿಗೂ ಪ್ರಧಾನಮಂತ್ರಿ ನರೇಂದ್ರಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಮುಂದೆ ನಿಂತು ಮಾತನಾಡುವ ಧೈರ್ಯವಿಲ್ಲ. ಹೀಗಾಗಿ ರಾಜ್ಯಕ್ಕೆ ಅನ್ಯಾಯವಾಗುತ್ತಲೇ ಇದೆ. ಇಲ್ಲಿ ಸುಳ್ಳು ಆರೋಪ ಮಾಡುವ ಬದಲು ದೆಹಲಿಗೆ ಬಂದು ನಮ್ಮ ಜೊತೆ ಕೈಜೋಡಿಸಲಿ ಎಂದು ಸವಾಲು ಹಾಕಿದರು.
12
+ ಕೇಂದ್ರದಿಂದ ಸಾಲದ ಪ್ರಮಾಣ ಕೂಡ ಹೆಚ್ಚಾಗಿದೆ. ಇದು ಆರ್ಥಿಕ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರಿದೆ. ಹಣದುಬ್ಬರವನ್ನು ತಪ್ಪಿಸುವ ಬದಲು ನಿಯಮಾವಳಿಗಳನ್ನು ಬದಲಾವಣೆ ಮಾಡಿ ಸರ್ವಾಕಾರ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ. ರಾಜ್ಯದ ಪಂಚಖಾತ್ರಿ ಯೋಜನೆಗಳಿಂದ ಜಿಎಸ್‍ಟಿ ಸಂಗ್ರಹ ಮತ್ತಷ್ಟು ಹೆಚ್ಚಾಗಿದೆ ಎಂದು ಸಿದ್ಧರಾಮಯ್ಯ ವಿವರಿಸಿದರು.
13
+ ಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜ್ ಮತ್ತಿತರರು ಉಪಸ್ಥಿತರಿದ್ದರು.
eesanje/url_46_246_3.txt ADDED
@@ -0,0 +1,9 @@
 
 
 
 
 
 
 
 
 
 
1
+ ಅಶ್ಲೀಲ ಫೋಟೋ ಇದೆ ಎಂದು ಸ್ನೇಹಿತನಿಂದ 65 ಲಕ್ಷರೂ. ಪೀಕಿದ ಆರೋಪಿ ವಶಕ್ಕೆ
2
+ ಬೆಂಗಳೂರು, ಫೆ.5- ಸ್ನೇಹಿತನ ಮುಗ್ಧತೆಯನ್ನೇ ಬಂಡವಾಳ ಮಾಡಿಕೊಂಡು ಆತನಿಂದ ಹಂತ ಹಂತವಾಗಿ 65 ಲಕ್ಷ ಹಣ ಪಡೆದು ವಿಶ್ವಾಸದ್ರೋಹ ಬಗೆದಿದ್ದ ಇಬ್ಬರು ಸಹೋದರರ ಪೈಕಿ ಒಬ್ಬನನ್ನು ವಿಧಾನಸೌಧ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಮೂಲತಃ ಶಿವಮೊಗ್ಗದ ಮಣಿಕಂಠ ಎಂಬುವವರು ವಿಧಾನಸೌಧ ರಸ್ತೆಯಲ್ಲಿರುವ ಸಾಫ್ಟ್‍ವೇರ್ ಕಂಪೆನಿಯೊಂದರಲ್ಲಿ ಸಾಫ್ಟ್‍ವೇರ್ ಉದ್ಯೋಗಿ.
3
+ ಅಕ್ಷಯ್ ಕುಮಾರ್ ಹಾಗೂ ಈತನ ಅಣ್ಣ ಭರತ್ 18 ವರ್ಷಗಳಿಂದ ಮಣಿಕಂಠ ಅವರಿಗೆ ಸ್ನೇಹಿತನಾಗಿದ್ದು, ಸಹೋದರರು ಹಾಗೂ ಮತ್ತಿತರರು ಸೇರಿಕೊಂಡು ವೈಯಕ್ತಿಕ ಫೋಟೋಗಳನ್ನು ಅಪರಿಚಿತ ವ್ಯಕ್ತಿಯೊಬ್ಬ ನಿನ್ನ ಮೊಬೈಲ್‍ನಿಂದ ತೆಗೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಹೇಳುತ್ತಿದ್ದು, ನೀನು ಆತನಿಗೆ 12 ಲಕ್ಷ ಕೊಟ್ಟರೆ ಫೋಟೋಗಳನ್ನು ವಾಪಸ್ ಪಡೆದುಕೊಳ್ಳಬಹುದೆಂದು ತಿಳಿಸಿದ್ದಾರೆ.
4
+ ಇದರಿಂದ ಹೆದರಿದ ಮಣಿಕಂಠ ಅವರು 11.20 ಲಕ್ಷ ರೂ.ಗಳನ್ನು ಸಾಲವಾಗಿ ಪಡೆದು ಅಕ್ಷಯ್‍ಕುಮಾರ್‍ಗೆ ಕೊಟ್ಟಿದ್ದಾನೆ. ಈತನ ಬಳಿ ಸಾಕಷ್ಟು ಹಣವಿದೆ ಎಂದು ಅರಿತು ಮತ್ತೆ ಸಹೋದರರು ಹಾಗೂ ಇನ್ನಿತರರ ಜತೆ ಸೇರಿ ಮತ್ತಷ್ಟು ಹಣ ಕೇಳುತ್ತಿದ್ದಾರೆ ಎಂದು ಒತ್ತಾಯಿಸಿದ್ದರಿಂದ ಮಣಿಕಂಠ ಅವರು ಕೋಟಕ್ ಮಹೀಂದ್ರ ಬ್ಯಾಂಕ್‍ನಿಂದ 10 ಲಕ್ಷ ಹಣವನ್ನು ಸಾಲವಾಗಿ ಪಡೆದು ಕಳೆದ ಏ.25ರಂದು ಕೊಟ್ಟಿದ್ದಾರೆ.
5
+ ಯಾವ ಕ್ಷೇತ್ರಕ್ಕೂ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿಲ್ಲ : ವಿಜಯೇಂದ್ರ ಸ್ಪಷ್ಟನೆ
6
+ ತದನಂತರವೂ ಸಹ ಇವರು ಹಣ ಕೇಳುವುದನ್ನು ಮುಂದುವರೆಸಿದ್ದರಿಂದ ಮಾನಕ್ಕೆ ಹೆದರಿ ಸ್ನೇಹಿತರಿಂದ 4 ಲಕ್ಷ , ಅವರ ತಂದೆ ಹಾಗೂ ಅಕ್ಕನಿಂದ 8 ಲಕ್ಷ ಪಡೆದುಕೊಂಡು 12 ಲಕ್ಷ ಹಣವನ್ನು ಹೊಂದಿಸಿಕೊಟ್ಟಿದ್ದಾರೆ. ಈ ನಡುವೆ ಆರೋಪಿ ಅಕ್ಷಯ್‍ಕುಮಾರ್‍ನ ಗೆಳತಿಯೊಬ್ಬರು ಮಣಿಕಂಠ ಅವರಿಗೆ ಮೊಬೈಲ್‍ಗೆ ಕರೆ ಮಾಡಿ ಅಪರಿಚಿತ ವ್ಯಕ್ತಿ ಹಣ ಕೊಡುವಂತೆ ಕೇಳುತ್ತಿದ್ದರಿಂದ ಅಕ್ಷಯ್‍ಕುಮಾರ್ ನನ್ನಿಂದ 5 ಲಕ್ಷ ಲೋನ್ ತೆಗೆಸಿದ್ದು, ನಾವು ಅವರಿಗೆ ಹಣ ಕೊಟ್ಟಿದ್ದಾಗಿ ತಿಳಿಸಿದ್ದಾರೆ.
7
+ ಮಣಿಕಂಠ ಅವರು ತನ್ನ ಸ್ನೇಹಿತ ಅಖಿಲೇಶ್ ಅವರಿಂದ 5 ಲಕ್ಷ ಹಣವನ್ನು ಸಾಲವಾಗಿ ಪಡೆದು ಆಕೆಗೆ ಕೊಟ್ಟಿದ್ದಾರೆ. ಇದಲ್ಲದೆ, ಆರೋಪಿ ಅಕ್ಷಯ್‍ಕುಮಾರ್‍ನು ಮಣಿಕಂಠ ಅವರ ಅಕ್ಕನಿಗೆ ಮೆಸೇಜ್ ಮಾಡಿ ನಿಮ್ಮ ತಮ್ಮನಿಗೆ ತೊಂದರೆಯಾಗಿದೆ ಎಂದು ಸುಳ್ಳು ಹೇಳಿ 12.20 ಲಕ್ಷ ಹಣವನ್ನು ತನ್ನ ಸ್ನೇಹಿತ ಪ್ರವೀಣ್ ಖಾತೆಗೆ ಹಾಕಿಸಿಕೊಂಡಿದ್ದಾನೆ.
8
+ ಇಷ್ಟಕ್ಕೇ ಸುಮ್ಮನಾಗದ ಅಕ್ಷಯ್‍ಕುಮಾರ್ ಅಪರಿಚಿತ ವ್ಯಕ್ತಿಯು ನಿನ್ನ ಮೊಬೈಲ್ ಸ್ಕ್ಯಾನ್ ಮಾಡಿ ಟ್ರ್ಯಾಪ್ ಮಾಡುತ್ತಿದ್ದಾನೆ. ಅದಕ್ಕೆ 15 ಲಕ್ಷ ಹಣ ಕೊಡುವಂತೆ ಬಲವಂತಪಡಿಸಿದ್ದರಿಂದ ಮಣಿಕಂಠ ಅವರು ತನ್ನ ಅಕ್ಕ, ತಾಯಿ ಹಾಗೂ ಮತ್ತೊಬ್ಬರಿಂದ 15 ಲಕ್ಷ ಹಣವನ್ನು ಹೊ��ದಿಸಿಕೊಂಡು ಅಕ್ಷಯ್‍ಕುಮಾರ್‍ಗೆ ಕೊಟ್ಟಿದ್ದಾರೆ. ಇದೇ ರೀತಿ ಹಂತ ಹಂತವಾಗಿ ಅಕ್ಷಯ್‍ಕುಮಾರ್ ಇನ್ನಿತರರೊಂದಿಗೆ ಸೇರಿಕೊಂಡು ಗೆಳೆಯ ಮಣಿಕಂಠ ಅವರಿಗೆ ಪೀಡಿಸಿ ಒಟ್ಟು 65 ಲಕ್ಷ ಹಣ ಪಡೆದುಕೊಂಡಿದ್ದಾನೆ.
9
+ ಆಗಾಗ್ಗೆ ಹಣ ಕೇಳುತ್ತಿದ್ದರಿಂದ ಅನುಮಾನಗೊಂಡು ಮಣಿಕಂಠ ಅವರು ತನ್ನ ಸ್ನೇಹಿತರಾದ ಅಕ್ಷಯ್‍ಕುಮಾರ್, ಭರತ್ ಹಾಗೂ ಇನ್ನಿತರರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಸಹೋದರರ ಪೈಕಿ ಒಬ್ಬನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
eesanje/url_46_246_4.txt ADDED
@@ -0,0 +1,9 @@
 
 
 
 
 
 
 
 
 
 
1
+ ಯುಪಿಎ ಅವಧಿಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿಲ್ಲ : ಗೃಹ ಸಚಿವ ಪರಮೇಶ್ವರ್
2
+ ಬೆಂಗಳೂರು, ಫೆ.5- ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ಅನುದಾನ ನೀಡುವ ವಿಚಾರದಲ್ಲಿ ರಾಜ್ಯಕ್ಕೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮನಮೋಹನ್ ಸಿಂಗ್ ಅವರು ಆರ್ಥಿಕ ತಜ್ಞರಾಗಿ ಬ್ಯಾಲೆನ್ಸ್ ಮಾಡುತ್ತಿದ್ದರು. ಈ ಹಿಂದೆ ಪ್ರವಾಹ ಉಂಟಾದಾಗ ವೈಮಾನಿಕ ಸಮೀಕ್ಷೆ ನಡೆಸಿ ಎರಡು ಸಾವಿರ ಕೋಟಿ ರೂ. ಮಂಜೂರು ಮಾಡಿದ್ದರು. ಅವರ ಅವಧಿಯಲ್ಲಿ ಅನ್ಯಾಯವಾಗಿತ್ತು ಎನ್ನುವುದಾದರೆ ಬಿಜೆಪಿಯವರು ಆರೋಪ ಸಾಭೀತುಪಡಿಸಲಿ ಎಂದು ಸವಾಲು ಹಾಕಿದರು.
3
+ ಜಿಎಸ್‍ಟಿ ಜಾರಿಯಾದ ನಂತರ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ನಮ್ಮ ರಾಜ್ಯಕ್ಕೆ ಬರಬೇಕಾದ ಜಿಎಸ್‍ಟಿ ಪಾಲು ಸಂಪೂರ್ಣವಾಗಿ ಸಿಕ್ಕಿಲ್ಲ. ಬರ ಪರಿಹಾರಕ್ಕೆ 17 ಸಾವಿರ ಕೋಟಿ ರೂ. ಕೇಳಿದರು ಈವರೆಗೂ ಕೊಟ್ಟಿಲ್ಲ. ಎನ್‍ಡಿಆರ್‍ಎಫ್ ಫಂಡ್ ಸಹ ಬಂದಿಲ್ಲ. ಆದರೂ ನಾವು ಇದನ್ನೆಲ್ಲ ರಾಜಕೀಯ ಮಾಡೋದಿಕ್ಕೆ ಹೋಗಿಲ್ಲ. ರಾಜ್ಯಕ್ಕೆ ಆಗಿರುವ ಅನ್ಯಾಯದ ಕುರಿತು ನಾವು ದೆಹಲಿಗೆ ಹೋಗಿ ಪ್ರತಿಭಟನೆ ನಡೆಸುತ್ತೇವೆ. ದೇಶದ ಜನತೆಗೆ ಗೊತ್ತಾಗಲಿ ಎಂದು ಅವರು ಹೇಳಿದರು.
4
+ 716 ಕೋಟಿ ಹಾಲು ಪ್ರೋತ್ಸಾಹ ಧನ ಬಾಕಿ ಕೊಡಿ : ವಿಜಯೇಂದ್ರ ತಿರುಗೇಟು
5
+ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಜನರಿಗೆ ಗೊತ್ತಾಗಿದೆ. ವಿಶೇಷ ಅನುದಾನವನ್ನು ನಾವು ಕೇಳಿಲ್ಲ. ಆದರೆ, ನಮಗೆ ಬರಬೇಕಾದ ಪಾಲು ಕೊಟ್ಟರೆ ಸಾಕು. ಯುಪಿಎ ಮತ್ತು ಎನ್‍ಡಿಎ ಅವಧಿಯ ಅನುದಾನ ಬಗ್ಗೆ ಕೇಂದ್ರ ಸರರ್ಕಾರ ಶ್ವೇತಪತ್ರ ಹೊರಡಿಸಲಿ. ರಾಜ್ಯದ್ದು ನಾವು ಹೊರಡಿಸುತ್ತೇವೆ ಎಂದು ಅವರು ಆಗ್ರಹಿಸಿದರು.
6
+ ರಾಜಸ್ವ ಸಂಗ್ರಹ ಕಡಿಮೆಯಾಗಿದೆ. ಹೀಗಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿದೆ ಎಂಬ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ದೇಶದಲ್ಲಿ ಕರ್ನಾಟಕ ಎರಡನೇ ದೊಡ್ಡ ಟ್ಯಾ್ಸï ಪೇಯರ್ ಅಲ್ಲ ಎಂಬುದನ್ನು ಅವರು ಹೇಳಲಿ. ನಂತರ ರಾಜಸ್ವ ಸಂಗ್ರಹದ ಬಗ್ಗೆ ಚರ್ಚಿಸೋಣ. ನಮಗೆ ಬರಗಾಲ ಇದೆ. ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ ಅಷ್ಟೇ ಎಂದು ತಿರುಗೇಟು ನೀಡಿದರು.
7
+ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಯಾಗಿಲ್ಲ:ಪ್ರತಿಭಟನೆ ಮಾಡುವುದಿದ್ದರೆ ಫ್ರೀಡಂಪಾರ್ಕ್‍ನಲ್ಲಿ ಶಾಂತಿಯುತವಾಗಿ ಮಾಡಲಿ. ಮನೆಗೆ ಯಾರಾದರೂ ನುಗ್ಗುತ್ತಾರೆ ಅಂದಾಗ ಪೊಲೀಸರು ಸುಮ್ಮನೆ ಇರುವುದಿಲ್ಲ. ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಬೇಕು. ಆ ಕೆಲಸವನ್ನು ಪೊಲೀಸರು ಮಾಡಿದ್ದಾರೆ. ಸಂಸದ ಡಿ.ಕೆ.ಸುರೇಶ್ ಅವರ ಮನೆಗೆ ಮುತ್ತಿಗೆ ಹಾಕುತ್ತೇವೆ ಅಂತ ಬಂದಾಗ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಪೊಲೀಸರಿಂದ ಯಾರ ಮೇಲೂ ಹಲ್ಲೆಯಾಗಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
8
+ ಫ್ರಾನ್ಸ್‌ನಲ್ಲಿ ಯುಪಿಐ ಪಾವತಿ ಮಾದರಿ ಅಳವಡಿಕೆ
9
+ ರಾಜ್ಯದ ದುಡ್ಡನ್ನು ಗ್ಯಾರಂಟಿಗೆ ದಾನ ಮಾಡಿರುವುದರಿಂದ ಹಣವಿಲ್ಲ. ಹೀಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂಬ ಮಾಜಿ ಸಚಿವ ಮುನಿರತ್ನ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮುನಿರತ್ನ ಯಾವಾಗ ಆರ್ಥಿಕ ತಜ್ಞರಾದರೋ ಗೊತ್ತಿಲ್ಲ. ನಾವ್ಯಾರೂ ಆರ್ಥಿಕ ತಜ್ಞರಲ್ಲ. ಮುನಿರತ್ನ ಹೇಳಿದ್ದಾರೆ ಎಂದ ಮೇಲೆ ಕೇಳೋಣ ಎಂದರು.
eesanje/url_46_246_5.txt ADDED
@@ -0,0 +1,7 @@
 
 
 
 
 
 
 
 
1
+ ಯಾವ ಕ್ಷೇತ್ರಕ್ಕೂ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿಲ್ಲ : ವಿಜಯೇಂದ್ರ ಸ್ಪಷ್ಟನೆ
2
+ ಬೆಂಗಳೂರು,ಫೆ.5- ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಯಾವುದೊಂದು ಕ್ಷೇತ್ರಕ್ಕೂ ಪಕ್ಷದ ವರಿಷ್ಠರು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವುದು ನಿಜ. ಈವರೆಗೂ ಯಾವುದೇ ಕ್ಷೇತ್ರಕ್ಕೂ ಹೆಸರು ಅಂತಿಮಗೊಂಡಿಲ್ಲ. ಇದು ಹಾಲಿ ಸಂಸದರಿಗೂ ಅನ್ವಯವಾಗುತ್ತದೆ ಎಂದು ತಿಳಿಸಿದರು.
3
+ ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂಬುದರ ಕುರಿತು ಕಾರ್ಯಕರ್ತರ ಅಭಿಪ್ರಾಯ ಪಡೆದು, ರಾಜ್ಯ ಘಟಕ ಶಿಫಾರಸ್ಸು ಮಾಡಿದ ನಂತರ ವರಿಷ್ಠರು ಅಂತಿಮಗೊಳಿಸುತ್ತಾರೆ. ಈ ಕ್ಷಣದ ವರೆಗೂ ನಾವು 28 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರನ್ನು ಅಂತಿಮ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
4
+ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ನನ್ನನ್ನೇ ಅಭ್ಯರ್ಥಿ ಮಾಡಿದ್ದಾರೆಂಬ ಮಾಜಿ ಸಚಿವ ಡಾ.ಕೆ.ಸುಧಾಕರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲರೂ ಕೂತು ಚರ್ಚೆ ಮಾಡುತ್ತೇವೆ. ಅಂತಿಮವಾಗಿ ಯಾರು ಅಭ್ಯರ್ಥಿ ಆಗಬೇಕೆಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಪರೋಕ್ಷವಾಗಿ ತಿರುಗೇಟು ನೀಡಿದರು.
5
+ ಇದೇ ತಿಂಗಳ 9 ಮತ್ತು 10ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. 10ರಂದು ಅವರು ಬೆಂಗಳೂರಿಗೆ ಬರುತ್ತಿದ್ದು, ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು.
6
+ ದ್ವೇಷ ಭಾಷಣ ಮಾಡಿದ್ದ ಮುಫ್ತಿ ಸಲ್ಮಾನ್ ಅರೆಸ್ಟ್, ಬೆಂಬಲಿಗರ ಹೈಡ್ರಾಮಾ
7
+ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಅಮಿತ್ ಷಾ ಅವರು ಕ್ಲಸ್ಟರ್ ಸಭೆ ನಡೆಸಲಿದ್ದಾರೆ. ನಾವು ರಾಜ್ಯದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ನೀಡುತ್ತೇವೆ ಇದನ್ನು ವರಿಷ್ಠರ ಗಮನಕ್ಕೆ ತರಲಾಗುತ್ತದೆ. ಬಳಿಕವಷ್ಟೇ ಯಾರು ಎಲ್ಲಿಗೆ ಸ್ಪರ್ಧೆ ಎಂಬುದು ಅಂತಿಮವಾಗಲಿದೆ ಎಂದು ಹೇಳಿದರು.
eesanje/url_46_246_6.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಕಮಲ ತೊರೆದವರ ಚಿತ್ತ ಮತ್ತೆ ಬಿಜೆಪಿಯತ್ತ
2
+ ಬೆಂಗಳೂರು,ಫೆ.5- ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಒಂದೊಂದು ಕ್ಷೇತ್ರವು ಅತಿ ಮುಖ್ಯ ಎಂಬುದನ್ನು ಪರಿಗಣಿಸಿರುವ ಬಿಜೆಪಿ ಪಕ್ಷ ಬಿಟ್ಟು ಹೋಗಿದ್ದ ಹಲವರನ್ನು ಪುನಃ ಮಾತೃಪಕ್ಷದತ್ತ ಸೆಳೆಯಲು ಘರ್ ವಾಪ್ಸಿ ಕಾರ್ಯಾಚರಣೆಗೆ ಧುಮುಕಿದೆ. ಇದರ ಮೊದಲ ಪ್ರಯತ್ನವಾಗಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಗಾಣಿಗ ಲಿಂಗಾಯಿತ ಸಮುದಾಯದ ಪ್ರಭಾವಿ ನಾಯಕ ಮಾಜಿ ಡಿಸಿಎಂ ಹಾಗೂ ಹಾಲಿ ಶಾಸಕ ಲಕ್ಷ್ಮಣ್ ಸವದಿಯನ್ನು ಸೆಳೆಯಲು ಬಿಜೆಪಿ ಮುಂದಾಗಿದೆ.
3
+ ಇನ್ನೊಂದೆಡೆ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಲುಕಿ ಬಿಜೆಪಿಯಿಂದ ದೂರ ಉಳಿದಿದ್ದ ಮಾಜಿ ಶಾಸಕ ಜನಾರ್ಧನ ರೆಡ್ಡಿ ಕೂಡ ಬಿಜೆಪಿಯತ್ತ ಮುಖ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದ ಬೆನ್ನಲ್ಲೇ ಇದೀಗ ಹಲವರನ್ನು ಸಂಪರ್ಕಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪಕ್ಷದತ್ತ ಸೆಳೆದುಕೊಳ್ಳಲು ಸದ್ದಿಲ್ಲದೆ ಕಾರ್ಯಾಚರಣೆ ನಡೆಸಿದ್ದಾರೆ.
4
+ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ, ಮಹದೇವಪ್ಪ ಯದವಾಡ, ಎಸ್.ಐ.ಚಿಕ್ಕನಗೌಡರ್, ದೊಡ್ಡನಗೌಡ ಪಾಟೀಲ್ ನರಿಬೋಳ ಸೇರಿದಂತೆ ಅನೇಕರನ್ನು ಸೆಳೆಯುವಲ್ಲಿ ವಿಜಯೇಂದ್ರ ಯಶಸ್ವಿಯಾಗಿದ್ದಾರೆಂದು ತಿಳಿದುಬಂದಿದೆ. ಸ್ವಕ್ಷೇತ್ರದಲ್ಲೇ ಸ್ವಪಕ್ಷೀಯರಿಂದಲೇ ತೀವ್ರ ಭಿನ್ನಮತ ಎದುರಿಸುತ್ತಿರುವ ಹಾಲಿ ಕೇಂದ್ರ ಸಚಿವ ಭಗವಂತ ಕೂಬಾಗೆ ಟಿಕೆಟ್ ನೀಡಬಾರದೆಂದು ಪಕ್ಷದೊಳಗಿನ ಒಂದು ಬಣ ಪಟ್ಟು ಹಿಡಿದಿದೆ.
5
+ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ವಪಕ್ಷೀಯರ ವಿರುದ್ಧವೇ ಕೆಲಸ ಮಾಡಿರುವ ಭಗವಂತ ಕೂಬಾಗೆ ಟಿಕೆಟ್ ನೀಡದೆ ಬೇರೊಬ್ಬರನ್ನು ಅಭ್ಯರ್ಥಿಯನ್ನಾಗಿ ಮಾಡಬೇಕೆಂದು ಜಿಲ್ಲಾ ಬಿಜೆಪಿ ಘಟಕ ಒತ್ತಾಯ ಮಾಡಿದೆ. ಹಾಗೊಂದು ವೇಳೆ ತೀವ್ರ ವಿರೋಧ ವ್ಯಕ್ತವಾದರೆ ಲಕ್ಷ್ಮಣ್ ಸವದಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ.
6
+ ದ್ವೇಷ ಭಾಷಣ ಮಾಡಿದ್ದ ಮುಫ್ತಿ ಸಲ್ಮಾನ್ ಅರೆಸ್ಟ್, ಬೆಂಬಲಿಗರ ಹೈಡ್ರಾಮಾ
7
+ ಮೂಲಗಳ ಪ್ರಕಾರ ಸವದಿ ತಮ್ಮ ಪುತ್ರನಿಗೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಿದರೆ ಬಿಜೆಪಿಗೆ ಹಿಂತಿರುಗುವ ಬಗ್ಗೆ ಚಿಂತನೆ ನಡೆಸುವ ಆಶ್ವಾಸನೆಯನ್ನು ಕೊಟ್ಟಿದ್ದಾರೆ. ಆದರೆ ಹಾಲಿ ಸಂಸದ ಅಣ್ಣ ಸಾಹೇಬ್ ಜೊಲ್ಲೆ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವುದರಿಂದ ಟಿಕೆಟ್ ಪಡೆಯುವುದು ತುಸು ಕಷ್ಟಕರ. ಹಾಗಾಗಿ ಸವದಿ ಬೀದರ್‍ನಿಂದ ಸ್ಪರ್ಧೆ ಮಾಡುವ ಸಂಭವವಿದೆ.
8
+ ಇನ್ನು ಗಾಲಿ ಜನಾರ್ಧನ ರೆಡ್ಡಿಯನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರೆ ಕೊಪ್ಪಳ, ರಾಯಚೂರು ಹಾಗೂ ಬಳ್ಳಾರಿ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬಹುದು ಎಂಬ ಹಿನ್ನಲೆಯಲ್ಲಿ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವ ಲಕ್ಷಣಗಳು ಗೋಚರಿಸಿವೆ. ಒಂದು ವೇಳೆ ಜನಾರ್���ನ ರೆಡ್ಡಿ ಬಿಜೆಪಿಗೆ ಪುನಃ ವಾಪಸ್ ಆದರೆ ಬರುವ ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳದಿಂದ ಸ್ಪರ್ಧೆ ಮಾಡಬಹುದು. ಹಾಲಿ ಸಂಸದ ಕರಡಿ ಸಂಗಣ್ಣ ಅವರಿಗೆ ವಯಸ್ಸಿನ ಕಾರಣ ಟಿಕೆಟ್ ಕೈ ತಪ್ಪಬಹುದು.
9
+ ಇನ್ನೂ ಬುದ್ದಿ ಕಲಿಯದ ಮಾಲ್ಡಿವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು
10
+ ಚಾಮರಾಜನಗರ ಕ್ಷೇತ್ರದಿಂದ ಹಾಲಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಪುನಃ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿರುವುದರಿಂದ ಶೀಘ್ರದಲ್ಲೇ ಅವರ ಅಳಿಯ ಹಾಗೂ ಸರ್ಕಾರಿ ಸೇವೆಗೆ ಗುಡ್ ಬಾಯ್ ಹೇಳಿರುವ ಡಾ.ರವಿಕುಮಾರ್ ಕಮಲವನ್ನು ಮುಡಿಗೇರಿಸಿಕೊಳ್ಳಲಿದ್ದಾರೆ. ಇನ್ನು ಮೂಡಿಗೆರೆಯ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ, ಆಯನೂರು ಮಂಜುನಾಥ್ ಹೆಸರುಗಳು ಕೂಡ ಕೇಳಿಬರುತ್ತಿದೆ. ಒಂದು ಕಾಲದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪರಮಾಪ್ತರಾಗಿದ್ದ ಅಯನೂರು ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ಸೇರ್ಪಡೆಯಾಗಿದ್ದರು.
11
+ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಭಾವಿ ನಾಯಕರಾಗಿರುವ ಸಂಘ ಪರಿವಾರ ಹಿನ್ನಲೆಯಲ್ಲಿ ಅರುಣ್ ಪುತ್ತೀಲ ಅವರು ಕೂಡ ಸದ್ಯದಲ್ಲೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಹೀಗೆ ಪಕ್ಷದಿಂದ ವಿಮುಖರಾಗಿದ್ದ ಒಬ್ಬೊಬ್ಬರನ್ನೇ ಬಿಜೆಪಿಗೆ ಸೆಳೆಯಲು ಖುದ್ದು ಮಾಜಿ ಸಿಎಂ ಯಡಿಯೂರಪ್ಪ ಹಾಗೂ ವಿಜಯೇಂದ್ರ ಸದ್ದಿಲ್ಲದೆ ಅಖಾಡಕ್ಕೆ ಧುಮುಕಿದ್ದಾರೆ.
eesanje/url_46_246_7.txt ADDED
@@ -0,0 +1,7 @@
 
 
 
 
 
 
 
 
1
+ 716 ಕೋಟಿ ಹಾಲು ಪ್ರೋತ್ಸಾಹ ಧನ ಬಾಕಿ ಕೊಡಿ : ವಿಜಯೇಂದ್ರ ತಿರುಗೇಟು
2
+ ಬೆಂಗಳೂರು,ಫೆ.5- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ಯಾರಿಗೆ ಲಾಟರಿ ಇಲ್ಲವೇ ಯಾರಿಗೆ ಬಂಪರ್ ಎಂಬುದನ್ನು ತೀರ್ಮಾನಿಸುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ಗೆ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಆಕಸ್ಮಿಕವಾಗಿ ಅಧಿಕಾರಕ್ಕೆ ಬಂದಿದೆ. ಜನರ ಮೂಗಿಗೆ ಗ್ಯಾರಂಟಿ ಎಂಬ ತುಪ್ಪ ಸವರಿ ಗೆದ್ದು ಬಂದಿದ್ದೀರಿ. ಲೋಕಸಭೆ ಚುನಾವಣೆಯಲ್ಲಿ ಲಾಟರಿನೋ ಅಥವಾ ಬಂಪರೋ ಗೊತ್ತಾಗುತ್ತದೆ ಎಂದು ವ್ಯಂಗ್ಯವಾಡಿದರು.
3
+ ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆಯಿಂದ ಜನ ಮಾತ್ರವಲ್ಲ ಜಾನುವಾರುಗಳು ಸರ್ಕಾರಕ್ಕೆ ಶಾಪ ಹಾಕುತ್ತಿದೆ. ಜನರ ಕೋಪ ಮಾತ್ರವಲ್ಲ, ಜಾನುವಾರುಗಳ ಕೋಪಕ್ಕೆ ರಾಜ್ಯ ಸರ್ಕಾರ ಬಲಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡುತ್ತಿದ್ದರು. ಅದರ ಪರಿಣಾಮ ಬಿಜೆಪಿ ಆಡಳಿತದಲ್ಲಿದ್ದಾಗ 26 ಲಕ್ಷ ಗ್ರಾಮೀಣ ರೈತರಿಂದ 80-85 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿತ್ತು. ಈ ಸರ್ಕಾರ 716 ಕೋಟಿ ರೂ. ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದೆ.
4
+ ಪಾಕಿಸ್ತಾನ : ಠಾಣೆ ಮೇಲೆ ದಾಳಿ ನಡೆಸಿ 10 ಪೊಲೀಸರನ್ನು ಕೊಂದ ಉಗ್ರರು
5
+ ಇದರ ಪರಿಣಾಮ 80-85 ಲಕ್ಷ ಲೀಟರ್ ಹಾಲು ಸಂಗ್ರಹಣೆ ಆಗುತ್ತಿತ್ತು. ಈಗ 10 ಲಕ್ಷ ಲೀಟರ್‍ಗೆ ಇಳಿದಿದೆ ಎಂದರು. ರೈತರ ಪ್ರೋತ್ಸಾಹ ಧನ ಉಳಿಸಿಕೊಂಡ ಪಾಪದ ಸರ್ಕಾರ ಇದು. ಮಾನ ಮಾರ್ಯಾದೆ ಇದ್ದರೇ ಬಾಕಿ ಉಳಿಸಿಕೊಂಡಿರುವ ಕೂಡಲೇ ಪ್ರೋತ್ಸಾಹ ಧನ ಬಿಡುಗಡೆ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದರು.
6
+ ರಾಜಸ್ವ ಸ್ವೀಕೃತಿ ಟಾರ್ಗೆಟ್ 2,38,000 ಮಾಡುತ್ತೇವೆ ಎಂದಿದ್ದರು. ಶೇ.67ರಷ್ಟು ಮಾತ್ರ ಸಂಗ್ರಹ ಮಾಡಿದ್ದಾರೆ. ನಮ್ಮ ಸರ್ಕಾರ ಇದ್ದಾಗ ಶೇ. 82ರಷ್ಟು ಸಂಗ್ರಹ ಮಾಡಿದ್ದೇವು. ನಿಮ್ಮದೇ ಸರ್ಕಾರ ಟಾರ್ಗೆಟ್ ರೀಚ್ ಮಾಡಲು ಸಾಧ್ಯವಾಗಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇದೇ 10ರಂದು ಬೆಂಗಳೂರಿಗೆ ಬರುತ್ತಿದ್ದಾರೆ. ಕ್ಲಸ್ಟರ್‍ನ ಸಭೆ ಹಾಗೂ ಕೋರ್ ಕಮಿಟಿ ಸಭೆ ನಡೆಸಲಿದ್ದು, ಸಂಜೆ 5 ಗಂಟೆಗೆ ಮೈಸೂರಿನ ಸುತ್ತೂರು ಮಠಕ್ಕೂ ಭೇಟಿ ನೀಡಲಿದ್ದಾರೆ. ಇನ್ನು ಎಲ್ಲಾ ಕಾರ್ಯಕ್ರಮ ಅಂತಿಮಗೊಂಡಿಲ್ಲ. ಆದರೆ ಕೋರ್ ಕಮಿಟಿ ಸಭೆ ಮಾತ್ರ ಬೆಂಗಳೂರಿನಲ್ಲಿ ನಡೆಯುತ್ತದೆ ಎಂದು ತಿಳಿಸಿದರು.
7
+ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಹಾಸನ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳನ್ನು ಬಿಜೆಪಿಯೇ ಉಳಿಸಿಕೊಳ್ಳಲಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಇದು ನಾಲ್ಕು ಗೋಡೆಗಳ ಮಧ್ಯೆ ಮಾತನಾಡಬೇಕಾದ ವಿಚಾರ. ನಾಲ್ಕು ಗೋಡೆ ಮಧ್ಯೆ ಕುಳಿತು ಬಗೆಹರಿಸುತ್ತೇವೆ ಎಂದು ಹೇಳಿದರು.
eesanje/url_46_246_8.txt ADDED
@@ -0,0 +1,8 @@
 
 
 
 
 
 
 
 
 
1
+ ಗರ್ಭಗುಡಿಗಳು ಒಂದು ಸಮುದಾಯಕ್ಕೆ ಸೀಮಿತ ಎಂಬುದನ್ನು ಒಪ್ಪಿಕೊಳ್ಳಲಾಗುವುದಿಲ್ಲ: ಕಾಂಗ್ರೆಸ್
2
+ ಬೆಂಗಳೂರು, ಜ.4- ದೇವಾಲಯಗಳ ಗರ್ಭಗುಡಿಗಳು ಒಂದು ಸಮುದಾಯಕ್ಕೆ ಸೀಮಿತ ಎಂಬುದನ್ನು ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಅಸಮಧಾನವನ್ನು ಹೊರ ಹಾಕುವ ಮೂಲಕ ಕಾಂಗ್ರೆಸ್ ಪಕ್ಷ ಬಹುಸಂಖ್ಯಾತರ ಒಲೈಕೆಗೆ ಮುಂದಾಗಿದೆ.
3
+ ಚಿತ್ರದುರ್ಗದ ಬಾಗೂರಿನ ದೇವಸ್ಥಾನದಲ್ಲಿ ಕನಕಗುರು ಪೀಠದ ಶ್ರೀಗಳ ಗರ್ಭಗುಡಿ ಪ್ರವೇಶಕ್ಕೆ ಅಡ್ಡಿ ಪಡಿಸಿದ ಪ್ರಕರಣವನ್ನು ಆಧಾರವನ್ನಾಗಿಟ್ಟು ಕೊಂಡು ಕಾಂಗ್ರೆಸ್ ತನ್ನ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದು, ದೇವಸ್ಥಾನಗಳು ಎಲ್ಲರಿಗೂ ಸೇರಿವೆ, ಎಲ್ಲರೂ ಅಲ್ಲಿ ಸಮಾನರು ಎಂದಿದೆ.
4
+ ನಾರಾಯಣಗುರುಗಳು, ಬಸವಣ್ಣ, ಕನಕದಾಸರಂತಹ ಮಹಾನ್ ಸಮಾಜ ಸುಧಾರಕರು, ದಾರ್ಶನಿಕರನ್ನು ಪಡೆದ ನಾಡು ಕರ್ನಾಟಕ. ಅಸ್ಪಶ್ಯತೆಯ ವಿರುದ್ಧ ಸಮಾನತೆಯ ತತ್ವವನ್ನು ಸ್ಥಾಪಿಸಲು ಕರ್ನಾಟಕ ಪ್ರಖರ ಚಳವಳಿ ಕಟ್ಟಿದೆ. ಬಸವಣ್ಣರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ನಮ್ಮ ಸರ್ಕಾರಕ್ಕೆ ಬಸವಣ್ಣನ ಆಶಯಗಳೇ ಆದರ್ಶ ಎಂದಿದ್ದಾರೆ.
5
+ ವೈಫಲ್ಯಗಳನ್ನು ಮರೆಮಾಚಲು ಕೇಂದ್ರ ರುದ್ಧ ಗೂಬೆ ಕೂರಿಸುವ ಪ್ರಯತ್ನ : ಬಿಜೆಪಿ ವಾಗ್ದಾಳಿ
6
+ ಕನಕ ಗುರು ಪೀಠದ ಈಶ್ವರಾನಂದಪುರಿ ಸ್ವಾಮಿಗಳಿಗೆ ಮುಜರಾಯಿ ಇಲಾಖೆಗೆ ಸಂಬಂಧಿಸಿದ ದೇವಾಲಯದ ಒಳಾವಾರಣಕ್ಕೆ ಪ್ರವೇಶಿಸದಂತೆ ತಡೆದಿರುವುದು ಹಾಗೂ ಸ್ವಾಮಿಗಳು ಬಂದಿದ್ದಾಕ್ಕಾಗಿ ದೇವಾಲಯವನ್ನು ಸ್ವಚ್ಛಗೊಳಿಸಿರುವ ಪ್ರಕರಣವನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ನಾವು ಮನುಸ್ಮತಿಯ ಕಾಲದಲ್ಲಿಲ್ಲ, ಸಂವಿಧಾನದ ಕಾಲದಲ್ಲಿದ್ದೇವೆ. ಇದನ್ನು ಸಹಿಸಿದರೆ ಬಸವಣ್ಣ, ನಾರಾಯಣಗುರು, ಅಂಬೇಡ್ಕರ್ ರಂತಹ ಮಹನೀಯರಿಗೆ ಅವಮಾನಿಸಿದಂತೆಯೇ ಸರಿ ಎಂದು ಕಾಂಗ್ರೆಸ್ ಹೇಳಿದೆ.
7
+ ಕೇವಲ ಒಂದು ಸಮುದಾಯಕ್ಕೆ ಮಾತ್ರ ಗರ್ಭಗುಡಿಯ ಪ್ರವೇಶಕ್ಕೆ ಅವಕಾಶವಿದೆ ಎನ್ನುವ ಸಂಗತಿ ಶ್ರೀಗಳಿಂದಲೂ ತಿಳಿದುಬಂದಿದೆ, ಅ ದೇವಾಲಯದ ಅರ್ಚಕರೂ ತಿಳಿಸಿದ್ದಾರೆ, ಇದನ್ನು ಸಹಿಸಲು ಸಾಧ್ಯವಿಲ್ಲ,ದೇವರ ಮುಂದೆ ಸರ್ವರೂ ಸಮಾನರು. ಕೇವಲ ಒಂದು ಸಮುದಾಯಕ್ಕೆ ಮಾತ್ರ ದೇವರು ಮೀಸಲಲ್ಲ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
8
+ ಈ ಘಟನೆಯ ಕುರಿತು ಸಚಿವ ರಾಮಲಿಂಗಾರೆಡ್ಡಿಯವರು ವರದಿ ಕೇಳಿದ್ದಾರೆ, ವರದಿ ಬಂದನಂತರ ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಸ್ಪಷ್ಟ ಪಡಿಸಿದೆ.
eesanje/url_46_246_9.txt ADDED
@@ -0,0 +1,8 @@
 
 
 
 
 
 
 
 
 
1
+ ಕೇಂದ್ರಿಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ
2
+ ಬೆಂಗಳೂರು, ಫೆ.4- ನಗರದ ಯಶವಂತಪುರದಲ್ಲಿರುವ ಕೇಂದ್ರಿಯ ವಿದ್ಯಾಲಯಕ್ಕೆ ಬಾಂಬ್ ಇಡಲಾಗಿದೆ ಎಂದು ಹೇಳಿ ಆಗಂತಕನೊಬ್ಬ ಆತಂಕ ಸೃಷ್ಟಿಸಿ ಘಟನೆ ನಡೆದಿದೆ. ಇ-ಮೇಲ್ ಮೂಲಕ ಯಶವಂತಪುರದಲ್ಲಿರುವ ಕೇಂದ್ರಿಯ ವಿದ್ಯಾಲಯದ ಭಾರತೀಯ ವಿದ್ಯಾಸಂಸ್ಥೆಗೆ ಸಂದೇಶ ಬಂದಿದ್ದು, ಬೆಳಗ್ಗೆ 10.20ಕ್ಕೆ ಸ್ಪೋಟಗೊಳ್ಳಲಿದೆ ಎಂದು ಅದರಲ್ಲಿತ್ತು.
3
+ ಭಾನುವಾರ ರಜೆ ಕಾರಣ ಮಕ್ಕಳು ಶಾಲೆಗೆ ಬಂದಿರಲಿಲ್ಲ. ಆದರೆ ಶಾಲೆಯ ಇ-ಮೇಲ್ ಪ್ರಾಂಶುಪಾಲರಿಗೆ ಮತ್ತು ಅಧಿಕಾರಿಗಳಿಗೆ ತಿಳಿಯುತ್ತಿತ್ತು. ಅದರಂತೆ ಇಂದು ಮುಂಜಾನೆ ಇ-ಮೇಲ್ ಬಂದಿದೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
4
+ ಸ್ಥಳಕ್ಕೆ ದಾವಿಸಿದ ಯಶವಂತಪುರ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಂಪೂರ್ಣವಾಗಿ ಶಾಲೆ ಕೊಠಡಿ ಹಾಗೂ ಆವರಣವನ್ನು ಪರಿಶೀಲನೆ ನಡೆಸಿದಾಗ ಇದು ಹುಸಿ ಬೆದರಿಕೆ ಎಂದು ಗೊತ್ತಾಗಿದೆ. ಕೇಂದ್ರಿಯ ವಿದ್ಯಾಲಯವಾಗಿರುವುದರಿಂದ ಬಹುತೇಕ ಇಲ್ಲಿ ಭಾರತೀಯ ಸೇನೆಯ ಯೋಧರ ಮಕ್ಕಳು, ಕೇಂದ್ರ ಸರ್ಕಾರಿ ನೌಕರರ ಮಕ್ಕಳು ಇಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುತ್ತಿದ್ದಾರೆ.
5
+ ಅವರಲ್ಲಿ ಆತಂಕ ಮೂಡಿಸಲು ಈ ಕುಚೋದ್ಯ ಕೃತ್ಯವನ್ನು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೇಂದ್ರಿಯ ವಿದ್ಯಾಲಯ ಪ್ರಿನ್ಸಿಪಾಲ್ ಅಮೃತಬಾಲ ಅವರು ನೀಡಿರುವ ದೂರನ್ನು ದಾಖಲಿಸಿಕೊಂಡಿರುವ ಯಶವಂತಪುರ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಶಾಲೆಯ ವೆಬ್‍ಸೈಟ್‍ಗೆ ಬಂದಿರುವ ಇ-ಮೇಲ್ ವಿಳಾಸದ ಬಗ್ಗೆ ಸೈಬರ್ ಕ್ರೈಂ ವಿಭಾಗದ ತಜ್ಞರ ಸಹಕಾರವನ್ನು ಕೂಡ ಕೊರಲಾಗಿದೆ.
6
+ ಜೈ ಶ್ರೀರಾಮ್ ಹೇಳುವಷ್ಟೇ ಗಟ್ಟಿಯಾಗಿ ಜೈ ಕರ್ನಾಟಕ ಹೇಳಿ : ಪ್ರಿಯಾಂಕ್ ಖರ್ಗೆ
7
+ ಕಳೆದ 2023ರ ಡಿಸೆಂಬರ್ 1ರಂದು ಇದೇ ರೀತಿ ಬೆಂಗಳೂರಿನ ಹಲವಾರು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು. ಇದರಿಂದಾಗಿ ಶಾಲೆ ಆಡಳಿತ ಮಂಡಳಿಗಳು ಬೆಚ್ಚಿ ಬಿದ್ದಿದ್ದವು. ನಗರದ 30ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿತ್ತು. ಮಕ್ಕಳು, ಆಡಳಿತ ಮಂಡಳಿ ಮತ್ತು ಪೋಷಕರು ಆತಂಕಕ್ಕೀಡಾಗಿದ್ದರು.ಪೊಲೀಸರು ಶಾಲೆಗಳಿಗೆ ದೌಡಾಯಿಸಿದ್ದು, ಬಾಂಬ್ ತಪಾಸಣೆ ದಳಗಳೂ ಬಂದಿದ್ದವು. ಎಲ್ಲಾ ಶಾಲೆಗಳಿಂದ ಮಕ್ಕಳನ್ನು ಹೊರಗೆ ಕಳುಹಿಸಲಾಗಿದ್ದು, ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.
8
+ ಈ ಮೇಲ್ ಮೂಲಕ ಈ ಬಾಂಬ್ ಬೆದರಿಕೆ ಬಂದಿದೆ ಎಂದು ಹೇಳಲಾಗಿದ್ದು, ಬೆಳಗ್ಗೆ ಮೇಲ್ ಚೆಕ್ ಮಾಡುವಾಗ ಈ ವಿಷಯ ಗೊತ್ತಾಗಿದೆ. ಇದು ತಿಳಿಯುತ್ತಿದ್ದಂತೆಯೇ ಕೂಡಲೇ ಮಕ್ಕಳನ್ನು ಹೊರಗೆ ಕಳುಹಿಸಲಾಗಿತ್ತು. ಆಗಷ್ಟೇ ಒಳಗೆ ಬರುತ್ತಿದ್ದ ಮಕ್ಕಳನ್ನು ಒಳಗೆ ಬರದಂತೆ ಸೂಚಿಸಲಾಗಿತ್ತು. ಈ ವೇಳೆ ಹೆತ್ತವರು ಕೂಡಾ ಮಕ್ಕಳನ್ನು ಬಿಡಲು ಆಗಮಿಸಿದವರು ಅಲ್ಲೇ ಇದ್ದಿದ್ದರಿಂದ ಆತಂಕದ ವಾತಾವರಣ ಹೆಚ್ಚಾಯಿತು. ಕೆಲವರು ವಿಷಯ ತಿಳಿಯುತ್ತಿದ್ದಂತೆಯೇ ಓಡಿ ಬಂದಿದ್ದರು.
eesanje/url_46_247_1.txt ADDED
@@ -0,0 +1,7 @@
 
 
 
 
 
 
 
 
1
+ ನಕಲಿ ಸಿಮ್ ಕಾರ್ಡ್ ದಂಧೆ : ಐವರ ಬಂಧನ
2
+ ಧರ್ಮಸ್ಥಳ, ಫೆ.4- ಅಕ್ರಮವಾಗಿ ಮೊಬೈಲ್ ಸಿಮ್ ಕಾರ್ಡ್‍ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ ಗ್ಯಾಂಗನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಮೂಲದ ರಮೀಝ್(20), ಅಕ್ಬರ್ ಅಲಿ(24), ಮೊಹಮ್ಮದ್ ಮುಸ್ತಫಾ(22), ಮೊಹಮ್ಮದ್ ಸಾಕ್(27) ಹಾಗೂ ಮತ್ತೊಬ್ಬ ಅಪ್ರಾಪ್ತನನ್ನು ಬಂಧಿಸಲಾಗಿದೆ.
3
+ ಆರೋಪಿಯಲ್ಲಿ ಒಬ್ಬನಾದ ಅಕ್ಬರ್ ಅಲಿ ದುಬೈನಲ್ಲಿ ಕೆಲಸ ಮಾಡುತ್ತಿದ್ದ ಹಲವರ ಹೆಸರುಗಳಲ್ಲಿ ನಕಲಿ ದಾಖಲೆಗಳನ್ನು ಕೊಟ್ಟು ಸಿಮ್ ಕಾರ್ಡ್ ಪಡೆದಿದ್ದ. ಇದಕ್ಕೆ ಇತರ ಆರೋಪಿಗಳು ಸಹಕರಿಸಿದ್ದರು ಎಂದು ತಿಳಿದು ಬಂದಿದೆ. ಎರಡು ವರ್ಷ ದುಬೈನಲ್ಲಿದ್ದು, ಕಳೆದ ನಾಲ್ಕು ತಿಂಗಳ ಅಷ್ಟೇ ಆತ ತನ್ನೂರಿಗೆ ಬಂದಿದ್ದ ಪ್ರಾಥಮಿಕ ಮಾಹಿತಿಯ ಪ್ರಕಾರ ಅಕ್ಬರ್ ಅಲಿ ವಿದೇಶದಲ್ಲಿದ್ದುಕೊಂಡೆ ತನ್ನ ಸ್ನೇಹಿತ ಮೊಹಮ್ಮದ್ ಮುಸ್ತಫಾವನಿಂದ ಪಡೆದುಕೊಂಡಿದ್ದ.
4
+ ಆರೋಪಿ ರಮೀಝ್ ಮತ್ತು ಮೊಹಮ್ಮದ್ ಸಾಕ್ ಈ ಸಿಮ್ ಕಾರ್ಡ್‍ಗಳನ್ನು ನಕಲಿ ದಾಖಲೆಗಳನ್ನು ನೀಡಿ ಪಡೆಯಲು ಕಮಿಷನ್ ಕೂಡ ನೀಡುತ್ತಿದ್ದರು. ನಂತರ ಅಕ್ಬರ್ ಅಲಿ ಹೇಳಿದಂತೆ ಸಿಮ್ ಕಾರ್ಡ್‍ಗಳನ್ನು ಬೆಂಗಳೂರಿನ ವ್ಯಕ್ತಿಗಳಿಗೆ ಖಾಸಗಿ ಬಸ್‍ಗಳ ಮೂಲಕ ಕಳಿಸಿಕೊಡುತ್ತಿದ್ದ ಎಂದು ಪೊಲೀಸ್ ತನಿಖೆ ವೇಳೆ ತಿಳಿಸಿದ್ದಾರೆ.
5
+ ದಕ್ಷಿಣ ಭಾರತದ ರಾಜ್ಯಗಳು ಬಿಜೆಪಿಗೆ ಸಂಕಟವಾಗಿವೆ : ಡಿಸಿಎಂ ಡಿಕೆಶಿ
6
+ ಪ್ರಸ್ತುತ ಈ ಸಿಮ್ ಕಾರ್ಡ್‍ಗಳನ್ನು ಯಾವ ಉದ್ದೇಶಕ್ಕೆ ಪಡೆಯಲಾಗುತ್ತಿತ್ತು ಮತ್ತು ಯಾರ ಕೈಗೆ ನೀಡಲಾಗುತ್ತಿತ್ತು ಎಂಬುದು ಬಾರಿ ಕುತೂಹಲ ಕೆರಳಿಸಿದೆ. ಬಂತ ಆರೋಪಿಗಳಿಂದ 42 ಅಕ್ರಮ ಸಿಮ್ ಕಾರ್ಡ್‍ಗಳನ್ನು ವಶಪಡಿಸಿಕೊಂಡಿದ್ದು, ಇದರ ಹಿಂದೆ ವ್ಯವಸ್ಥಿತ ಜಾಲವಿದೆ ಎಂದು ಮೂಲಗಳು ತಿಳಿಸಿವೆ. ಈ ಸಿಮ್ ಕಾರ್ಡ್‍ಗಳನ್ನು ಬಳಸಿಕೊಂಡು ದೇಶ-ದ್ರೋಹ ಕೃತಿಗಳನ್ನು ನಡೆಸಿ ಅದು ಪತ್ತೆಯಾಗದಂತೆ ಮಾಡುವುದು ಇದರ ಉದ್ದೇಶ ಎಂದು ಹೇಳಲಾಗುತ್ತಿದೆ.
7
+ ಒಟ್ಟಾರೆ ಮಂಗಳೂರಿನಲ್ಲಿ ಇಂತಹ ಜಾಲವಿರುವುದು ಗೊತ್ತಾಗುತ್ತಿದ್ದಂತೆ ಪೊಲೀಸರು ಅ¯ರ್ಟ್ ಆಗಿದ್ದಾರೆ.ಮೊಬೈಲ್ ಮಳಿಗೆಗಳು ಹಾಗೂ ದೂರಸಂಪರ್ಕ ಕಂಪೆನಿಗಳಿಗೆ ಸರಿಯಾದ ದಾಖಲೆಗಳನ್ನು ಪರಿಶೀಲಿಸದೇ ಸಿಮ್ ಕಾರ್ಡ್‍ಗಳನ್ನು ನೀಡದಿರುವಂತೆ ಎಚ್ಚರಿಕೆ ನೀಡಲಾಗಿದೆ. ಬಂತರ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದ್ದು, ಅಕ್ರಮ ಸಿಮ್ ಕಾರ್ಡ್‍ನ ಹಿಂದಿನ ರಹಸ್ಯ ಸದ್ಯದಲ್ಲಿಯೇ ಬಹಿರಂಗಗೊಳ್ಳಬೇಕಿದೆ.
eesanje/url_46_247_10.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ರಾಜಕೀಯಕ್ಕೆ ಬರ್ತಾರಾ ಡಾ.ಮಂಜುನಾಥ್..?
2
+ ಬೆಂಗಳೂರು,ಫೆ.3- ರಾಜಕೀಯ ಪ್ರವೇಶ ಮಾಡುವ ಆಲೋಚನೆ ಮಾಡಿಲ್ಲ ಎಂದು ಜಯದೇವ ಆಸ್ಪತ್ರೆಯ ನಿವೃತ್ತ ನಿರ್ದೇಶಕರಾದ ಡಾ.ಸಿ.ಎನ್. ಮಂಜುನಾಥ್ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯಕೀಯ ವೃತ್ತಿಯಲ್ಲಿ ಮುಂದುವರೆಯುವುದಾಗಿ ಹೇಳಿದರು.
3
+ ರಾಜಕೀಯ ಪ್ರವೇಶ ಅಥವಾ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಊಹಾಪೋಹವನ್ನು ಅವರು ಅಲ್ಲೆಗೆಳೆದರು. ಕೆಂಪೇಗೌಡ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮಾಡುವ ಉದ್ದೇಶವನ್ನು ಒಕ್ಕಲಿಗರ ಸಂಘ ಹೊಂದಿದ್ದು, ಅದರ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಒಕ್ಕಲಿಗರ ಸಂಘದ ಕೋರಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬೆಂಗಳೂರಿನ ಹೃದಯ ಭಾಗದಲ್ಲಿ ಕೆಂಪೇಗೌಡ ಆಸ್ಪತ್ರೆ ಇದೆ. ಅದರ ಅಭಿವೃದ್ಧಿಗೆ ಉಪಯುಕ್ತ ಸಲಹೆ ಕೊಡಲು ಸಂತೋಷವಾಗುತ್ತದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಬೇಕು. ಸಲಹೆಗಳೇ ಅತ್ಯಂತ ಬದಲಾವಣೆ ತರುತ್ತವೆ ಎಂದು ಮಂಜುನಾಥ್ ತಿಳಿಸಿದರು.
4
+ ಜಯದೇವ ಆಸ್ಪತ್ರೆಯ ನಿರ್ದೇಶಕ ಸ್ಥಾನದಿಂದ ನಿವೃತ್ತಿಯಾದ ನಂತರ ಹಲವು ಸಂಘಸಂಸ್ಥೆಗಳು ಪ್ರೀತಿ, ಅಭಿಮಾನದಿಂದ ಸನ್ಮಾನಿಸುತ್ತಿವೆ. ರಾಜ್ಯ ಒಕ್ಕಲಿಗರ ಸಂಘವು ಇಂದು ದೊಡ್ಡ ಮಟ್ಟದಲ್ಲಿ ನನ್ನನ್ನು ಸನ್ಮಾನಿಸಿದೆ. ಈ ಸನ್ಮಾನದಿಂದ ಸಂತೋಷವಾಗಿದೆ ಎಂದರು.
5
+ ಕಿಮ್ಸ್ ಆಸ್ಪತ್ರೆ ಸಂಪೂರ್ಣ ಜವಾಬ್ದಾರಿಗೆ ಮನವಿ:ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ.ಹನುಮಂತಯ್ಯ ಮಾತನಾಡಿ, ಕೆಂಪೇಗೌಡ ವೈದ್ಯಕೀಯ ಮಹಾವಿದ್ಯಾಲಯ, ಕೆಂಪೇಗೌಡ ಆಸ್ಪತ್ರೆ, ಸಂಘದ ಅೀಧಿನದಲ್ಲಿರುವ ವೈದ್ಯಕೀಯ ವಿದ್ಯಾಲಯಗಳು ಆಸ್ಪತ್ರೆಗಳು ಸೇರಿದಂತೆ ಮುಂದಿನ ದಿನಗಳಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸಂಪೂರ್ಣ ಜವಾಬ್ದಾರಿ ಅಥವಾ ಮೇಲು ಉಸ್ತುವಾರಿಯನ್ನು ಡಾ.ಮಂಜುನಾಥ್ ಅವರಿಗೆ ನೀಡಲು ಜ.31ರಂದು ನಡೆದ ಸಮಿತಿ ಸಭೆಯಲ್ಲಿ ಒಮ್ಮತ ತೀರ್ಮಾನ ಮಾಡಲಾಗಿದೆ.
6
+ ವಿಶೇಷ ಅನುಭವವುಳ್ಳ ಮಂಜುನಾಥ್ ಅವರು ತುಂಬು ಮನಸ್ಸಿನಿಂದ ನಮ್ಮ ಮನವಿಯನ್ನು ಸ್ವೀಕರಿಸುತ್ತಾರೆ ಎಂಬ ವಿಶ್ವಾಸವಿದೆ. ನಮ್ಮ ಸಂಘದ ಸಂಸ್ಥೆಗಳನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು ಹಾಗೂ ಹೊಸ ವೈದ್ಯಕೀಯ ಸೌಲಭ್ಯಗಳನ್ನು ಪ್ರಾರಂಭಿಸಲು ಅವರ ಅನುಭವ ಮತ್ತು ಮಾರ್ಗದರ್ಶನದ ಅವಶ್ಯಕತೆ ಇದೆ. ಅವರ ಅನುಭವದ ಸದುಪಯೋಗವನ್ನು ಪಡೆದುಕೊಳ್ಳಲು ಸಂಘದ ಆಡಳಿತ ಮಂಡಳಿಯು ಉತ್ಸುಕವಾಗಿದ್ದು, ಈ ಸಂಬಂಧ ಅವರಿಗೆ ಮನವಿ ಸಲ್ಲಿಸಿರುವುದಾಗಿ ಹೇಳಿದರು.
7
+ ಈಗಷ್ಟೇ ಅವರು ನಿವೃತ್ತರಾಗಿದ್ದಾರೆ. ನಮ್ಮ ಮನವಿಗೂ ಸ್ಪಂಸಿದ್ದಾರೆ. ಜಯದೇವ ಆಸ್ಪತ್ರೆ ರೀತಿಯಂತೆ ನಮ್ಮ ಆಸ್ಪತ್ರೆಯನ್ನು ರಾಷ್ಟ್ರೀಯ , ಅಂತಾರಾಷ್ಟ್ರೀಯ ಮಟ್ಟಕ್ಕೆ ಹೆಸರು ಗಳಿಸಲು ಮಂಜುನಾಥ್ ಅವರ ಸೇವೆಯ ಅಗತ್ಯವಿದೆ ಎಂದರು.
8
+ ವೈದ್ಯಕೀಯ ಸೇವೆ ಆದರ್ಶವಾಗಿರಬೇಕುಬೆಂಗಳೂರು,ಫೆ.3- ಯಾವುದೇ ಫಲಾಪೇಕ್ಷೆ, ನಿರೀಕ್ಷೆ ಇಲ್ಲದೆ ಸೇವೆ ಮಾಡಬೇಕು. ಸೇವೆಯು ಪ್ರದರ್ಶನವಾಗದೆ ಆದರ್ಶವಾಗಿರಬೇಕು ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಪದ್ಮಭೂಷಣ, ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು. ಕುವೆಂಪು ಕಲಾಕ್ಷೇತ್ರದಲ್ಲಿ ರಾಜ್ಯ ಒಕ್ಕಲಿಗರ ಸಂಘ ಹೂಮಳೆ ಸುರಿಸಿ ಮಾಡಿದ ಗೌರವಪೂರ್ವಕ ಸನ್ಮಾನವನ್ನು ಸ್ವೀಕರಿಸಿ ಅವರು ಮಾತನಾಡಿದರು.
9
+ ಸೇವೆಯು ಯಾವಾಗಲೂ ಪ್ರದರ್ಶನವಾಗಿರಬಾರದು. ಕರುಣೆ, ಮಾನವೀಯತೆ, ಬದ್ದತೆಯಿಂದ ಕೂಡಿರಬೇಕು. ಆಗ ನಿವೃತ್ತಿಯ ನಂತರವು ಸಮಾಜ ಗೌರವಿಸುತ್ತದೆ ಎಂದರು. ಪ್ರತಿಯೊಬ್ಬರಿಗೂ ಯಾವುದೇ ಪದವಿಯಿಂದ ನಿವೃತ್ತಿ ಅನಿವಾರ್ಯ. ಆದರೆ ನೆನಪುಗಳು ಮಾತ್ರ ಅಮರವಾಗಿರುತ್ತದೆ. ಆಸ್ಪತ್ರೆ ದೇವಾಲಯವಿದ್ದಂತೆ.
10
+ ಆಸ್ಪತ್ರೆಯ ಗೋಡೆಗಳಿಗೆ ದೇವಾಲಯಕ್ಕಿಂತಲೂ ಹೆಚ್ಚಿನ ಪ್ರಾರ್ಥನೆ ಸಲ್ಲಿಸಿರುತ್ತಾರೆ. ಬಡ ರೋಗಿಗಳ ಕಣ್ಣೀರು ಶೇ.1ರಷ್ಟಿದ್ದರೆ ಅದರ ಹಿಂದಿನ ನೋವು 99ರಷ್ಟು ಇರುತ್ತದೆ. ಹೀಗಾಗಿ ಕರುಣೆ, ಹೃದಯವಂತಿಕೆ, ಮಾನವೀಯತೆ, ದೂರದೃಷ್ಟಿಯಿಂದ ಕೆಲಸ ಮಾಡಬೇಕು. ಕೆಲಸ ಮಾಡುವ ಸ್ಥಳದಲ್ಲಿ ಉತ್ತಮ ವಾತಾವರಣವಿದ್ದು, ಪರಸ್ಪರ ಉತ್ತಮ ಸಂಬಂಧವಿರಬೇಕು. ಅನುದಾನಕ್ಕಿಂತ ಅನುಷ್ಠಾನ ಮುಖ್ಯ. ಸಹಾಯ ಮಾಡುವುದೇ ಧರ್ಮ ಎಂದು ಹೇಳಿದರು.
11
+ ಇತ್ತೀಚೆಗೆ ಸಂಬಂಧಗಳು ಪೇಪರ್ ತಟ್ಟೆಯಂತೆ ಹರಿದು ಹೋಗುತ್ತಿವೆ. ಅಸೂಯೆ, ಅನುಮಾನ, ಅಹಂಕಾರ ಇರಬಾರದು. ಮಾಡುವ ಸಾಧನೆ ಸಾಮಾನ್ಯ ಜನರಿಗೆ ತಲುಪಿದಾಗ ಗೌರವ ಭಾವನೆ ತನ್ನಿಂದ ತಾನೆ ಬರುತ್ತದೆ ಎಂದು ಹೇಳಿದರು.
12
+ 17-18 ವರ್ಷಗಳ ಕಾಲ ಜಯದೇವ ಆಸ್ಪತ್ರೆಯಲ್ಲಿ 75 ಲಕ್ಷ ಹೊರರೋಗಿಗಳಿಗೆ ಚಿಕಿತ್ಸೆ, 8 ಲಕ್ಷ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಎಷ್ಟು ಪಾರಿತೋಷಕ ಪಡೆದೆ ಎನ್ನುವುದಕ್ಕಿಂತ ಎಷ್ಟು ಜನರ ಮನೆಯಲ್ಲಿ ಬೆಳಕು, ರೋಗಿಗಳ ಮುಖದಲ್ಲಿ ನಗುವನ್ನು ತಂದಿದ್ದೇವೆ ಎಂಬುದು ಮುಖ್ಯ ಎಂದರು. ಜಯದೇವ ಆಸ್ಪತ್ರೆಯಲ್ಲಿ ಖಾಸಗಿ ಪಂಚತಾರಾ ಆಸ್ಪತ್ರೆಯಲ್ಲಿ ಶ್ರೀಮಂತರಿಗೆ ಸಿಗುವ ಚಿಕಿತ್ಸೆಯನ್ನು ಬಡವರಿಗೂ ನೀಡಲಾಗುತ್ತಿದೆ. ನಾವು ಸ್ವೀಕರಿಸುವ ಪ್ರಮಾಣ ವಚನದಂತೆ ನಡೆದುಕೊಂಡರೆ ದೇಶ ಮುಂದುವರೆಯಲಿದೆ. ರಾಷ್ಟ್ರ ಕವಿ ಕುವೆಂಪು ಹೇಳುವಂತೆ ನಾವು ಹುಟ್ಟುವಾಗಲು ವಿಶ್ವಮಾನವರು, ಹೋಗುವಾಗಲು ವಿಶ್ವಮಾನವರು. ನಡುವೆಯೂ ವಿಶ್ವಮಾನವರೆನಿಸಿಕೊಳ್ಳಬೇಕು ಎಂದು ಹೇಳಿದರು. ಒಕ್ಕಲಿಗರ ಸಂಘವು ಉತ್ತಮ ಕೆಲಸ ಮಾಡುತ್ತಿದೆ. ಬೆಂಗಳೂರಿನ ಹೃದಯ ಭಾಗದಲ್ಲಿದ್ದು, ಸಂಘ ಮತ್ತು ಸಂಸ್ಥೆಗಳು ನಮ್ಮದು ಎಂಬ ಮನೋಭಾವನೆ ಮೂಡಿಬಂದರೆ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಯಲಿದೆ ಎಂದರು.
13
+ ಕೆಂಪೇಗೌಡ ಆಸ್ಪತ್ರೆಯ ಪ್ರಾಂಶುಪಾಲ ಡಾ.ಭಗವಾನ್ ಅವರು ಮಂಜುನಾಥ್ ಅವರ ಸಾಧನೆಯ ಕಿರುಪರಿಚಯ ಮಾಡಿಕೊಟ್ಟರು. ಇದೇ ಸಂದರ್ಭದಲ್ಲಿ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ.ಹನುಮಂತಯ್ಯ, ಪದಾಕಾರಿಗಳು ಹಾಗೂ ನಿರ್ದ��ಶಕರು, ಕೆಂಪೇಗೌಡ ವೈದ್ಯಕೀಯ ಕಾಲೇಜು, ಆಸ್ಪತ್ರೆಯ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಮಂಜುನಾಥ್ ಅವರಲ್ಲಿ ಮನವಿ ಮಾಡಿದರು. ಸಂಘದ ಅಧ್ಯಕ್ಷರಾದ ಡಿ.ಹನುಮಂತಯ್ಯ, ಗೌರವಾಧ್ಯಕ್ಷರಾದ ಬಿ.ಕೆಂಚಪ್ಪಗೌಡರು, ಉಪಾಧ್ಯಕ್ಷರಾದ ಎಲ್.ಶ್ರೀನಿವಾಸ್, ಸಿ.ದೇವರಾಜು, ಪ್ರಧಾನಕಾರ್ಯದರ್ಶಿ ಹೆಚ್.ಸಿ.ಜಯಮುತ್ತು, ಸಹಾಯಕ ಕಾರ್ಯದರ್ಶಿ ವೆಂಕಟರಾಮೇಗೌಡರು, ಖಜಾಚಿ ಸಿ.ಎಂ.ಮಾರೇಗೌಡ, ಕಾರ್ಯಾಧ್ಯಕ್ಷ ಬಿ.ಪಿ.ಮಂಜೇಗೌಡರು, ನಿರ್ದೇಶಕರಾದ ಎನ್. ಬಾಲಕೃಷ್ಣ, ಟಿ.ಕೋನಪ್ಪರೆಡ್ಡಿ, ಅಶೋಕ್ ಹೆಚ್.ಎನ್. ಎಲುವಳ್ಳಿ ಎನ್. ರಮೇಶ್, ಡಾ.ಟಿ.ಹೆಚ್. ಆಂಜನಪ್ಪ, ಕೆ.ಎಸ್.ಸುರೇಶ್, ಎಂ.ಪುಟ್ಟಸ್ವಾಮಿ, ಡಾ. ವಿ.ನಾರಾಯಣಸ್ವಾಮಿ, ಗಂಗಾಧರ್ ಸಿ.ಜಿ., ರಘಗೌಡರು ಎಸ್.ಎಸ್., ಡಾ. ಡಿ.ಕೆ.ರಮೇಶ್, ಹನುಂತರಾಯಪ್ಪ ಆರ್, ಲೋಕೇಶ್ ಬಿ.ನಾಗರಾಜಯ್ಯ ಮತಿತ್ತರರು ಉಪಸ್ಥಿತರಿದ್ದರು.
eesanje/url_46_247_11.txt ADDED
@@ -0,0 +1,9 @@
 
 
 
 
 
 
 
 
 
 
1
+ ಚರ್ಚೆಗೆ ಗ್ರಾಸವಾದ ಈಶ್ವರಾನಂದ ಪುರಿ ಸ್ವಾಮೀಜಿ ಹೇಳಿಕೆ
2
+ ಬೆಂಗಳೂರು,ಫೆ.3- ಮುಜರಾಯಿ ದೇವಸ್ಥಾನದಲ್ಲಿ ಗರ್ಭಗುಡಿ ಪ್ರವೇಶಕ್ಕೆ ಅವಕಾಶ ನೀಡದೆ ಅಸ್ಪೃಶ್ಯತೆ ಹಾಗೂ ತಾರತಮ್ಯ ಮಾಡಲಾಯಿತು ಎಂದು ಚಿತ್ರದುರ್ಗದ ಕನಕಪೀಠದ ಈಶ್ವರಾನಂದ ಪುರಿ ಸ್ವಾಮೀಜಿ ನೀಡಿರುವ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಶ್ರೀಗಳು ನಿನ್ನೆ ನೀಡಿದ ಹೇಳಿಕೆಗೆ ದೇವಸ್ಥಾನದ ಅರ್ಚಕರು ಸ್ಪಷ್ಟನೆ ನೀಡಿ ನಮ್ಮಲ್ಲಿ ಆ ರೀತಿ ಯಾವುದೇ ತಾರತಮ್ಯವಿಲ್ಲ. ಪ್ರತಿ ವರ್ಷ ವೈಕುಂಠ ಏಕಾದಶಿ ದರ್ಶನಕ್ಕೆ ನಾವೇ ಶ್ರೀಗಳನ್ನು ಆಹ್ವಾನ ಮಾಡುತ್ತೇವೆ. ದೇವಸ್ಥಾನದಿಂದ ಸಕಲ ಗೌರವ, ಸನ್ಮಾನಗಳನ್ನು ಮಾಡಿ ವಿನಯಪೂರಕವಾಗಿ ಕಳುಹಿಸಿಕೊಡುತ್ತೇವೆ. ಆದರೂ ಸ್ವಾಮೀಜಿ ಯಾವ ಕಾರಣಕ್ಕೆ ವಿವಾದಿತ ಹೇಳಿಕೆ ನೀಡಿದರು ಎಂದಿದ್ದಾರೆ.
3
+ ಅದರ ನಂತರ ಮತ್ತೆ ಇಂದು ಬೆಳಿಗ್ಗೆ ಈಶ್ವರಾನಂದ ಪುರಿ ಸ್ವಾಮೀಜಿಗಳು ತಮ್ಮ ಹೇಳಿಕೆಯನ್ನು ಪುನರ್ ಉಚ್ಛರಿಸಿದ್ದಾರೆ. ದೇವಸ್ಥಾನದಲ್ಲಿ ಅಸ್ಪೃಶ್ಯತೆ, ತಾರತಮ್ಯ ನಡೆದಿದ್ದು ನಿಜ. ಕೆಲ ವರ್ಷಗಳ ಹಿಂದೆ ಕುರುಬ ಸಮುದಾಯದ ಸ್ವಾಮೀಜಿಯೊಬ್ಬರು ದೇವಸ್ಥಾನಕ್ಕೆ ಭೇಟಿ ನೀಡಿ ಗರ್ಭಗುಡಿ ಪ್ರವೇಶಿಸಿದ ಹಿನ್ನೆಲೆಯಲ್ಲಿ ಇಡೀ ದೇವಸ್ಥಾನವನ್ನೇ ಸ್ವಚ್ಚಗೊಳಿಸಲಾಗಿತ್ತು ಎಂಬ ಮಾಹಿತಿ ತಿಳಿದು ತಮ್ಮ ಮನಸಿಗೆ ನೋವಾಯಿತು. ತಮಗೂ ಈ ಕಹಿ ಅನುಭವ ಆಗಿದೆ ಎಂದಿದ್ದಾರೆ.
4
+ ಮುಂದಿನ ವಾರದಿಂದ 29 ರೂ.ಗೆ ಸಿಗಲಿದೆ ಭಾರತ್ ಬ್ರಾಂಡ್ ಅಕ್ಕಿ
5
+ ಅರ್ಚಕರ ಕುಟುಂಬದ ಮಹಿಳೆಯರನ್ನು ಗರ್ಭಗುಡಿಗೆ ಬಿಡಲಾಗಿದ್ದು, ಮಠಾೀಧಿಶರಾದ ನಮ್ಮನ್ನು ಗರ್ಭಗುಡಿಯ ಹೊರಗಿನ ಪ್ರಾಗಂಣ ದಲ್ಲಿ ನಿಲ್ಲಿಸಲಾಗಿತ್ತು. 21 ನೇ ಶತಮಾನದಲ್ಲಿ ಆಧುನಿಕ, ವೈಜ್ಞಾನಿಕ ಯುಗದಲ್ಲಿ ಇರುವ ನಮ್ಮ ನಡುವೆ ಇಂತಹ ಆಚರಣೆಗಳು ಮನಸ್ಸಿಗೆ ತುಂಬಾ ನೋವುಂಟು ಮಾಡುತ್ತವೆ ಎಂದಿದ್ದಾರೆ. ಇದು ನನ್ನೊಬ್ಬನ ಅನುಭವ ಮಾತ್ರವಲ್ಲ. ಬಹಳಷ್ಟು ಮಂದಿ ಮಠಾೀಧಿಶರಿಗೂ ಆಗಿದೆ. ಆದರೆ ಯಾರೂ ಬಾಯಿಬಿಟ್ಟು ಮಾತನಾಡುತ್ತಿಲ್ಲ. ಮಾಧ್ಯಮಗಳ ಮುಂದೆ ವಿಚಾರ ಪ್ರಸ್ತಾಪ ಮಾಡುವುದಿಲ್ಲ. ನಾನು ಒಂದು ಹೆಜ್ಜೆ ಮುಂದೆ ಹೋಗಿ ಹೇಳಿದ್ದೇನೆ ಎಂದಿದ್ದಾರೆ.
6
+ ಮುಜರಾಯಿ ಅಷ್ಟೇ ಅಲ್ಲ ಯಾವುದೇ ದೇವಸ್ಥಾನಗಳಲ್ಲಿ ಜಾತಿ, ಅಸ್ಪೃಶ್ಯತೆ, ಅಸಮಾನತೆ ಆಚರಣೆಯಾಗಬಾರದು. ಬಸವಣ್ಣ, ಕನಕದಾಸರ ಆಶಯದಂತೆ ಸಹಬಾಳ್ವೆಯ ಪರಿಪಾಠ ಇರಬೇಕು ಎಂದು ಹೇಳಿದರು. ಶ್ರೀಗಳ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
7
+ ರಾಜ್ಯದಲ್ಲಿ 35 ಸಾವಿರಕ್ಕೂ ಹೆಚ್ಚು ಮುಜರಾಯಿ ದೇವಸ್ಥಾನಗಳಿವೆ. ಎಲ್ಲಿಯೂ ಅಸ್ಪೃಶ್ಯತೆ ಆಚರಣೆಯಾಗುತ್ತಿಲ್ಲ. ಇತ್ತೀಚೆಗೆ ಈ ಪ್ರಕರಣ ವರದಿಯಾಗಿರುವುದು ನನ್ನ ಗಮನಕ್ಕೆ ಬಂದಿದೆ. ಇಲಾಖೆಯ ಆಯುಕ್ತರಿಗೆ ಸ್ಪಷ್ಟ ಸೂಚನೆ ನೀಡಿದ್ದು, ��ಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ.
8
+ ದೆಹಲಿ ಸಿಸಿಬಿ ಪೊಲೀಸರಿಂದ ಕೇಜ್ರಿಗೆ ನೋಟಿಸ್
9
+ ಜೊತೆಗೆ ಅಸ್ಪೃಶ್ಯತೆ ಮತ್ತು ತಾರತಮ್ಯವನ್ನು ಆಚರಣೆ ಮಾಡಬಾರದು ಎಂದು ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಈಗಾಗಲೇ ಚಾಲ್ತಿಯಲ್ಲಿರುವ ನಾಮಫಲಕಗಳನ್ನು ಮತ್ತಷ್ಟು ಗೋಚರ ಸ್ಥಿತಿಯಲ್ಲಿ ಪ್ರದರ್ಶಿಸಲು ಕ್ರಮ ಕೈಗೊಳ್ಳಲಾಗುವುದು. ಧಾರ್ಮಿಕ ಕೇಂದ್ರಗಳಲ್ಲಿ ತಾರತಮ್ಯವನ್ನು ನಿವಾರಿಸುವುದಾಗಿ ಭರವಸೆ ನೀಡಿದ್ದಾರೆ.
eesanje/url_46_247_12.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಮೋದಿ ದೇಶದ ಜನರನ್ನು ಸಾಲದ ಸುಳಿಗೆ ಸಿಲುಕಿಸಿದ್ದಾರೆ: ರಾಮಲಿಂಗಾರೆಡ್ಡಿ
2
+ ಬೆಂಗಳೂರು,ಫೆ.3- ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಾಲ ಮಾಡಿ ತುಪ್ಪ ತಿನ್ನು ಎನ್ನುವಂತೆ ದೇಶದ ಜನರನ್ನು ಸಾಲದ ಸುಳಿವಿಗೆ ಸಿಲುಕಿಸುವುದನ್ನು ಬಿಟ್ಟರೆ ಬೇರೆ ಯಾವ ಸಾಧನೆಯನ್ನೂ ಮಾಡಿಲ್ಲ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಕಿಡಿಕಾರಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1947ರಿಂದ 2017 ರವರೆಗೆ 67 ವರ್ಷಗಳ ಕಾಲ ದೇಶದ ಒಟ್ಟು ಸಾಲ 52 ಲಕ್ಷ ಕೋಟಿ ರೂ. ಮಾತ್ರ. ಅಂದಿನಿಂದ ಈವರೆಗೆ ಕೇವಲ ಹತ್ತು ವರ್ಷದಲ್ಲಿ ನರೇಂದ್ರಮೋದಿಯವರು ಸಾಲದ ಪ್ರಮಾಣವನ್ನು 150 ಲಕ್ಷ ಕೋಟಿಗೆ ಹೆಚ್ಚಿಸಿದ್ದಾರೆ. 11 ಲಕ್ಷ ಕೋಟಿ ರೂ. ಬಡ್ಡಿಯನ್ನೇ ಪಾವತಿಸಬೇಕಾಗುತ್ತದೆ ಎಂದು ವಿವರಿಸಿದರು. ಪ್ರತಿಯೊಂದಕ್ಕೂ ಮೋದಿಯವರನ್ನು ವೈಭವೀಕರಿಸಿದವರಿಗೆ ಸಾಲ ಮಾಡಿ ತುಪ್ಪ ತಿನ್ನುತ್ತಿರುವುದು ಕಂಡುಬಂದಿಲ್ಲ. ದೇಶದ ಜನರನ್ನು ಸಾಲದ ಸುಳಿಗೆ ಸಿಲುಕಿಸಲಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
4
+ ಪಾಕ್ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದ ಹಿಂದೂಗಳು
5
+ ದೇವಸ್ಥಾನಗಳಲ್ಲಿ ತಾರತಮ್ಯ ಸಲ್ಲ:ಚಿತ್ರದುರ್ಗದ ಬಾಗೂರಿನ ದೇವಸ್ಥಾನದಲ್ಲಿ ಕನಕಪೀಠದ ಈಶ್ವರಾನಂದ ಪುರಿ ಸ್ವಾಮೀಜಿಯವರಿಗೆ ಗರ್ಭಗುಡಿಯೊಳಗೆ ಪ್ರವೇಶಕ್ಕೆ ಅವಕಾಶ ಕೊಡದೆ ತಾರತಮ್ಯ ಮಾಡಿರುವ ಕುರಿತು ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು.
6
+ ಕೆಲವು ದೇವಸ್ಥಾನಗಳಲ್ಲಿ ಭಕ್ತರನ್ನು ಗರ್ಭಗುಡಿಯೊಳಗೂ ಬಿಟ್ಟು ದೇವರ ಮೂರ್ತಿ ದರ್ಶನಕ್ಕೆ ಅವಕಾಶ ಮಾಡಿಕೊಡುತ್ತಾರೆ. ತಾವು ಇತ್ತೀಚೆಗೆ ಶ್ರೀಶೈಲಕ್ಕೆ ಭೇಟಿ ನೀಡಿದಾಗ ಗರ್ಭಗುಡಿಗೆ ಕರೆದುಕೊಂಡು ಹೋಗಿದ್ದರು. ದೇವರ ಲಿಂಗ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿದ್ದರು. ಆದರೆ ಬಹಳಷ್ಟು ದೇವಸ್ಥಾನಗಳಲ್ಲಿ ಗರ್ಭಗುಡಿಯೊಳಗೆ ಬಿಡುವುದಿಲ್ಲ ಎಂದು ನಮ್ಮ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ. ಬಾಗೂರು ದೇವಸ್ಥಾನದ ಪಟ್ಟಣದಲ್ಲಿ ಸ್ವಾಮೀಜಿ ಹೋದ ಬಳಿಕ ದೇವಾಲಯ ಸ್ವಚ್ಛಗೊಳಿಸಿರುವುದು ಸರಿಯಲ್ಲ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
7
+ ದೇವಸ್ಥಾನಗಳಿಗಾಗಿ ಅನುದಾನ :ರಾಜ್ಯದಲ್ಲಿ ರಾಮಮಂದಿರ, ಹನುಮಮಂದಿರ, ದುರ್ಗಾ ದೇವಸ್ಥಾನಗಳ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಬಜೆಟ್ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದು ಬಿಜೆಪಿಯ ರಾಜಕಾರಣಕ್ಕೆ ತಿರುಗೇಟು ಎಂದು ಭಾವಿಸುವ ಅಗತ್ಯವಿಲ್ಲ. ಆಯಾ ಇಲಾಖೆಗಳು ತಮ್ಮ ಪಾಲಿನ ಜವಾಬ್ದಾರಿಯನ್ನು ಪ್ರತಿ ವರ್ಷವೂ ನಿಭಾಯಿಸುತ್ತವೆ.
8
+ ತಾಜ್‍ಮಹಲ್‍ನಲ್ಲಿ ಉರುಸ್ ಆಚರಣೆ ಪ್ರಶ್ನಿಸಿದ ಹಿಂದೂ ಮಹಾಸಭಾ
9
+ ನಾವು ಅದೇ ರೀತಿಯ ಪ್ರಸ್ತಾವನೆ ಸಲ್ಲಿಸಿದ್ದೇವೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ತಾವು ಯಾವ್ಯಾವ ದೇವಸ್ಥಾನಗಳಿಗೆ ಎಷ್ಟು ಅನುದಾನ ನೀಡುತ್ತೇವೆ ಎಂಬ ಮಾಹಿತಿಯನ್ನು ಬಹಿರಂಗಪಡಿಸುವುದಾಗಿ ಹೇಳಿದರು. ರಾಮಮ��ದಿರ ಹಾಗೂ ರಾಮನ ಭಕ್ತಿ ಬಿಜೆಪಿಗೆ ಹೊಸದು ಎನ್ನಿಸುತ್ತದೆ. ಆದರೆ ದೇಶದ ಜನರಿಗೆ ಇದು ಹಳೆಯದು. ಅದರಲ್ಲೂ ಕಾಂಗ್ರೆಸ್ ಪಕ್ಷದಿಂದ ಪ್ರಧಾನಿಯಾಗಿದ್ದ ರಾಜೀವ್‍ಗಾಂಧಿಯವರು 1980 ರಲ್ಲಿ ರಾಮಮಂದಿರದ ಬಾಗಿಲು ತೆರೆದು ಪೂಜೆಗೆ ಅವಕಾಶ ಮಾಡಿಕೊಟ್ಟರು.
10
+ ಆದರೆ ಬಿಜೆಪಿಯವರು ಇದನ್ನು ರಾಜಕೀಯವಾಗಿ ಬಳಸಿಕೊಂಡು ಮತ ಪಡೆಯಲು ಹುನ್ನಾರ ನಡೆಸಿದರು. ಆದರೆ ನಾವು ಧರ್ಮವನ್ನು ರಾಜಕೀಯಕ್ಕೆ ಬಳಸುವುದಿಲ್ಲ. ರಾಮನವಮಿಯಲ್ಲಿ ಮಜ್ಜಿಗೆ, ಪಾನಕ ಹಂಚಿ ನಮ್ಮ ಆಚರಣೆಗಳನ್ನು ನಾವು ಮಾಡಿಕೊಳ್ಳುತ್ತೇವೆ ಎಂದರು.
eesanje/url_46_247_2.txt ADDED
@@ -0,0 +1,9 @@
 
 
 
 
 
 
 
 
 
 
1
+ ಕಿಯೋನಿಕ್ಸ್ ನಲ್ಲಿ 430 ಕೋಟಿ ರೂ ಅವ್ಯವಹಾರ : ಪ್ರಿಯಾಂಕ ಖರ್ಗೆ
2
+ ಬೆಂಗಳೂರು,ಫೆ.4- ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ಕಿಯೋನಿಕ್ಸ್ ಮೂಲಕ ನಡೆದಿರುವ ಖರೀದಿಯಲ್ಲಿ 430 ಕೋಟಿ ರೂ.ಗಳಿಗೂ ಹೆಚ್ಚಿನ ಅವ್ಯವಹಾರ ನಡೆದಿದೆ. ಇದನ್ನು ಹೆಚ್ಚಿನ ತನಿಖೆಗೊಳಪಡಿಸಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.
3
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡುಮೂರು ತಿಂಗಳ ಹಿಂದೆ ಬಾಕಿ ಬಿಲ್ ಪಾವತಿಯಾಗುತ್ತಿಲ್ಲ ಎಂದು ಕೆಲವು ಗುತ್ತಿಗೆದಾರರು ಪ್ರತಿಭಟನೆ ನಡೆಸಿದ್ದರು. ಆಗ ಬಿಜೆಪಿಯ ಸಿ.ಎನ್.ಅಶ್ವಥ್ ನಾರಾಯಣ, ಆರ್.ಅಶೋಕ್ ಮತ್ತಿತರರು ನನ್ನ ರಾಜೀನಾಮೆ ಕೇಳಿದ್ದರು. ನಾನು ದಾಖಲೆಗಳ ಸಹಿತ ವಿಷಯ ಜನರ ಮುಂದಿಟ್ಟ ನಂತರ ಅವರ ಬಾಯಿ ಬಂದ್ ಆಗಿದೆ ಎಂದರು.
4
+ ಇದು ಕಳೆದ ನಾಲ್ಕುವರೆ ವರ್ಷಗಳ ಅವಧಿಯಲ್ಲಿ ಬಿಜೆಪಿ ಆಡಳಿತದಲ್ಲಿದ್ದಾಗಲೇ ನಡೆದ ಆಡಿಟ್ ವರದಿ. ಇದನ್ನು ಅಶ್ವಥ್ ನಾರಾಯಣ ಅವರೇ ಓದಿಲ್ಲ. ಬಾಯಿಗೆ ಬಂದಂತೆ ಆರೋಪ ಮಾಡಿದರು. ನಮ್ಮ ಸರ್ಕಾರ ಬಂದು 6 ತಿಂಗಳು ಕಳೆದಿರಲಿಲ್ಲ. ಯಾವುದೇ ಖರೀದಿಯೂ ಆಗಿರಲಿಲ್ಲ. ಆದರೂ ನಮ್ಮ ರಾಜೀನಾಮೆ ಕೇಳಿದ್ದರು. ಅವರು ಮಾಡಿದ ತಪ್ಪಿಗೆ ನಾನು ರಾಜೀನಾಮೆ ನೀಡಬೇಕು ಎಂಬುದು ಬಿಜೆಪಿಯವರ ವಾದವಾಗಿತ್ತು ಎಂದು ಹೇಳಿದರು.
5
+ ದಕ್ಷಿಣ ಭಾರತದ ರಾಜ್ಯಗಳು ಬಿಜೆಪಿಗೆ ಸಂಕಟವಾಗಿವೆ : ಡಿಸಿಎಂ ಡಿಕೆಶಿ
6
+ ಲೆಕ್ಕ ಪರಿಶೋಧಕರು 2018ರಿಂದ 2022ರ ಅವವರೆಗಿನ ಖರೀದಿ ವಹಿವಾಟುಗಳಲ್ಲಿನ ಲೋಪದೋಷಗಳ ಬಗ್ಗೆ 45 ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದ್ದರು. ಅದನ್ನು ಆಧರಿಸಿ ನಾವು ಆಂತರಿಕ ಲೆಕ್ಕಪರಿಶೋಧನೆ ನಡೆಸಿದ್ದೇವೆ. ಶೇ.3ರಷ್ಟು ಮಾತ್ರ ಪರಿಶೀಲನೆಯಾಗಿದೆ. ಅದರಲ್ಲೇ 430 ಕೋಟಿ ರೂ.ಗೂ ಹೆಚ್ಚಿನ ಅವ್ಯವಹಾರ ಕಂಡುಬಂದಿದೆ. ಉಳಿದ ಶೇ.97ರಷ್ಟು ಪರಿಶೀಲನೆಯಾಗಬೇಕಿದೆ. ಅದಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿಯವರ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ಸರ್ಕಾರ ರಚಿಸಿದೆ ಎಂದು ಹೇಳಿದರು.
7
+ ಕಿಯೋನಿಕ್ಸ್‍ನ ಅವ್ಯವಹಾರದಲ್ಲಿ ಫಲಾನುಭವಿಗಳ್ಯಾರು? ರಾಜಕಾರಣಿಗಳ ಮತ್ತು ಅಧಿಕಾರಿಗಳ ಪಾತ್ರವೆಷ್ಟು ಎಂಬುದನ್ನು ಪರಿಶೀಲಿಸಲಾಗುತ್ತದೆ. ಗುತ್ತಿಗೆದಾರರ ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ನಾಯಕರು ಈಗ ಉಸಿರೇ ಬಿಡುತ್ತಿಲ್ಲ. 430 ಕೋಟಿ ಯಾರ ಮನೆಯ ದುಡ್ಡು ಬಿಜೆಪಿಯವರು ಯಾರದೋ ದುಡ್ಡಿನಲ್ಲಿ ಯಲ್ಲಮ್ಮನ ಜಾತ್ರೆಯಲ್ಲ ಬಿಜೆಪಿ ಜಾತ್ರೆ ಮಾಡಿಕೊಂಡಿದ್ದಾರೆ. ಈ ಹಣದಲ್ಲಿಯೇ ಅವರು ಶಾಸಕರ ಖರೀದಿಯ ಆಪರೇಷನ್ ಕಮಲ ಮಾಡಿದ್ದಾರೆಯೇ ಎಂದು ಪ್ರಶ್ನಿಸಿದರು.
8
+ ಡಿ.ಕೆ.ಸುರೇಶ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು
9
+ ಕೆಲವರು ಮಾಧ್ಯಮದವರ ಹೆಸರಿನಲ್ಲಿಯೂ ಕಿಯೋನಿಕ್ಸ್‍ನಲ್ಲಿ ಹಣ ಲೂಟಿ ಹೊಡೆದಿದ್ದಾರೆ. ಎಲ್ಲವೂ ಪರಿಶೀಲನೆ ನಡೆಯುತ್ತಿದೆ ಎಂದರು.
eesanje/url_46_247_3.txt ADDED
@@ -0,0 +1,7 @@
 
 
 
 
 
 
 
 
1
+ ವೈಫಲ್ಯಗಳನ್ನು ಮರೆಮಾಚಲು ಕೇಂದ್ರ ರುದ್ಧ ಗೂಬೆ ಕೂರಿಸುವ ಪ್ರಯತ್ನ : ಬಿಜೆಪಿ ವಾಗ್ದಾಳಿ
2
+ ಬೆಂಗಳೂರು,ಫೆ.4- ರಾಜ್ಯ ಸರ್ಕಾರ ತನ್ನ ವೈಫಲ್ಯಗಳನ್ನು ಮರೆಮಾಚಲು ಕೇಂದ್ರ ಸರ್ಕಾರದ ವಿರುದ್ಧ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ತನ್ನ ಸಾಮಾಜಿಕ ಜಾಲತಾಣದಲ್ಲಿ ಸಮರ ಸಾರಿರುವ ಬಿಜೆಪಿ, ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ಉಲ್ಲೇಖಿಸಿದೆ.
3
+ ಬಿಜೆಪಿಗರ ಮರ್ಯಾದೆ ಪ್ರಶ್ನಿಸಿರುವ ಮಾನ್ಯ ಸಿದ್ದರಾಮಯ್ಯ ಅವರೇ, ಮೊನ್ನೆ ನಿಮ್ಮ ಮುಖ್ಯಮಂತ್ರಿಗಳು ರಾಷ್ಟ್ರಪತಿಗಳಿಗೆ ಏಕವಚನ ಬಳಸುವ ಮೂಲಕ ರಾಜ್ಯದ ಮಾನ ಕಳೆದಿದ್ದಾರೆ, ಅದರ ಹಿಂದೆಯೇ ನಿಮ್ಮ ಸಹೋದರ ಡಿ.ಕೆ.ಸುರೇಶ್ ತಾವೊಬ್ಬ ಸಂಸದ ಎನ್ನುವುದನ್ನೂ ಮರೆತು ದೇಶ ವಿಭಜನೆ ಬಗ್ಗೆ ಮಾತನಾಡಿ, ಕರ್ನಾಟಕಕ್ಕೆ ಕಪ್ಪು ಮಸಿ ಬಳಿದಿದ್ದಾರೆ.
4
+ ಇದು ಸಾಲದು ಎಂಬಂತೆ ಹಾಸನದಲ್ಲಿ ಮಾಧ್ಯಮ ಗೋಷ್ಠಿ ಕರೆದು ನಿಮ್ಮ ಪಕ್ಷದ ಮಾಜಿ ಸಚಿವ ಬಿ.ಶಿವರಾಮ್ ಅವರು ಅಭಿವೃದ್ಧಿಯ ಬಾಗಿಲು ಮುಚ್ಚಿ ಪರ್ಸಂಟೇಜ್ ದಂಧೆಗಿಳಿದಿರುವ ನಿಮ್ಮ ಸರ್ಕಾರದ ಯೋಗ್ಯತೆಯನ್ನು ಜಗಜಹೀರು ಮಾಡಿದ್ದಾರೆ. ಈಗ ಹೇಳಿ ಮರ್ಯಾದೆ ಯಾರಿಗಿದೆ ಎಂದು ಬಿಜೆಪಿ ಪ್ರಶ್ನಿಸಿದೆ.
5
+ ದಕ್ಷಿಣ ಭಾರತದ ರಾಜ್ಯಗಳು ಬಿಜೆಪಿಗೆ ಸಂಕಟವಾಗಿವೆ : ಡಿಸಿಎಂ ಡಿಕೆಶಿ
6
+ ಮಾನ್ಯ ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯಕ್ಕೆ ಕೊಟ್ಟಿರುವ ಕೊಡುಗೆಗಳ ಶೇ.10ರಷ್ಟು ಭಾಗವನ್ನೂ 60 ವರ್ಷಗಳ ಕಾಲ ಆಡಳಿತ ನಡೆಸಿದ ನಿಮ್ಮ ಕಾಂಗ್ರೆಸ್ ನೀಡಲಾಗಿಲ್ಲ ಎಂಬುದಕ್ಕೆ ನೂರಾರು ನಿದರ್ಶನಗಳಿವೆ ಎಂದು ವಾಗ್ದಾಳಿ ನಡೆಸಿದೆ.
7
+ ನಿಮ್ಮ ವೈಫಲ್ಯ, ಆಡಳಿತದ ಅರಾಜಕತೆಯ ಸ್ಥಿತಿಯನ್ನು ಮರೆಮಾಚಲು ಹೋಗಿ ಕೇಂದ್ರದ ಮೇಲೆ ಗೂಬೆ ಕೂರಿಸಲು ಹೋಗಬೇಡಿ, ಅದು ನಿಮಗೇ ತಿರುಗುಬಾಣವಾಗಲಿದೆ ಎಂದು ಎಚ್ಚರಿಕೆ ನೀಡಿದೆ. ವರ್ಗಾವಣೆ ದಂಧೆಯಲ್ಲಿ ಮೈಸೂರಿನಿಂದ ರಾಜ್ಯದ ತುಂಬಾ ತಮ್ಮ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿರುವ ಮಜಾವಾದಿ ಸಿದ್ದರಾಮಯ್ಯ ಅವರ ಪುತ್ರ ಗಳಿಸಿರುವ ಬಿರುದುಗಳು: ಹಲೋ ಅಪ್ಪ, ಡಾಕ್ಟರ್ ಚೀಟಿ, ವೈಎಸ್‍ಟಿ, ಟ್ರಾನ್ಸ್‍ಫರ್ ಕಿಂಗ್, ತಂದೆಗೆ ತಕ್ಕ ಮಗ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರ ಕೀರ್ತಿ ಪತಾಕೆಯ ಬಾವುಟವನ್ನು ಡಾ.ಯತೀಂದ್ರ ಹಾರಿಸುತ್ತಿದ್ದಾರೆ ಎಂದು ಬಿಜೆಪಿ ಅಪಹಾಸ್ಯ ಮಾಡಿದೆ.
eesanje/url_46_247_4.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಜೈ ಶ್ರೀರಾಮ್ ಹೇಳುವಷ್ಟೇ ಗಟ್ಟಿಯಾಗಿ ಜೈ ಕರ್ನಾಟಕ ಹೇಳಿ : ಪ್ರಿಯಾಂಕ್ ಖರ್ಗೆ
2
+ ಬೆಂಗಳೂರು,ಫೆ.4- ಬಿಜೆಪಿಯವರು ಜೈ ಶ್ರೀರಾಮ್ ಹೇಳುವಷ್ಟೇ ಗಟ್ಟಿಯಾಗಿ ಜೈ ಕರ್ನಾಟಕ ಎಂದು ಹೇಳಲಿ. ರಾಜ್ಯದಿಂದ ಆಯ್ಕೆಯಾಗಿರುವ 25 ಮಂದಿ ಸಂಸದರು ನಾಡಿನ ಪರವಾಗಿ ಸಂಸತ್‍ನ ಒಳಗೆ ದನಿ ಏರಿಸಿ ಮಾತನಾಡಲಿ. ರಾಜ್ಯ ಸರ್ಕಾರ ಅವರ ಬೆನ್ನಿಗಿದೆ ಭಯ ಬೇಡ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್ ನೀಡಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆ.7ರಂದು ದೆಹಲಿಯಲ್ಲಿ ನಾಡಿನ ಪರವಾಗಿ ಕಾಂಗ್ರೆಸ್ ನಡೆಸಲಿರುವ ಪ್ರತಿಭಟನೆಗೆ ಬಿಜೆಪಿಯವರು ಬೆಂಬಲ ನೀಡಬೇಕು. ನಿಜವಾಗಿಯೂ ಅವರಿಗೆ ಕನ್ನಡಿಗರು, ಕರ್ನಾಟಕದ ಬಗ್ಗೆ ಕಾಳಜಿ ಇದುದ್ದೇ ಆದರೆ ನಮ್ಮ ಜತೆ ಕೈ ಜೋಡಿಸಲಿ ಎಂದು ಸವಾಲು ಹಾಕಿದರು.
4
+ ನಾವು ಸಂಸತ್‍ನ ಹೊರಗೆ ಪ್ರತಿಭಟನೆ ಮಾಡುತ್ತೇವೆ. ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು, ಸಂಸತ್ ಒಳಗೆ ದನಿ ಎತ್ತಲಿ. ಅವರಿಗೆ ಯಾವುದೇ ಭಯ ಬೇಡ. ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ನಮ್ಮ ಸಂಸದರ ಬೆನ್ನಿಗೆ ನಿಲ್ಲಲಿದೆ. ಮೋದಿಯ ಭಯದಿಂದಾಗಿ ಮೌನವಾಗಿದ್ದು, ರಾಜ್ಯಕ್ಕೆ ಅನ್ಯಾಯ ಮಾಡಬೇಡಿ ಎಂದು ಹೇಳಿದರು.
5
+ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ನಮಗೆ 44 ಸಾವಿರ ಕೋಟಿ ನೀಡಿದರೆ ಉತ್ತರಪ್ರದೇಶಕ್ಕೆ 2.18 ಲಕ್ಷ ಕೋಟಿ, ಮಧ್ಯಪ್ರದೇಶ, ಬಿಹಾರಕ್ಕೆ 2 ಲಕ್ಷ ಕೋಟಿ ರೂ. ನೀಡಲಾಗಿದೆ. ಇದು ಅನ್ಯಾಯವಲ್ಲವೇ? ಬರ ಬಾತ ಪ್ರದೇಶಗಳಿಗೆ ನಾವು ಕೇಳಿದ್ದು ಬರೀ 18 ಸಾವಿರ ಕೋಟಿ ರೂಪಾಯಿ. ಅದನ್ನೂ ನೀಡುತ್ತಿಲ್ಲ. ಉದ್ಯೋಗ ಖಾತ್ರಿ ಯೋಜನೆ ಮಾನವ ದಿನಗಳ ಪ್ರಮಾಣವನ್ನು 100ರಿಂದ 150 ದಿನಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದೇವೆ. ನಾಲೈದು ಬಾರಿ ದೆಹಲಿಗೆ ಹೋಗಿ ಸಚಿವರ ಕಚೇರಿ ಬಾಗಿಲು ಕಾದಿದ್ದಾಗಿದೆ. ಯಾವುದೂ ಪ್ರಯೋಜನವಾಗಿಲ್ಲ ಎಂದರು.
6
+ ದಕ್ಷಿಣ ಭಾರತದ ರಾಜ್ಯಗಳು ಬಿಜೆಪಿಗೆ ಸಂಕಟವಾಗಿವೆ : ಡಿಸಿಎಂ ಡಿಕೆಶಿ
7
+ ಬಿಜೆಪಿಯವರು ರಾಜ್ಯದಲ್ಲಿ ಯಾವ ಕಾರಣಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಡಿಸೆಂಬರ್‍ವರೆಗೆ ಐಟಿ ರಫ್ತಿನಲ್ಲಿ ಬೆಂಗಳೂರಿನಿಂದ ಬಂದ ಆದಾಯ 3.29 ಲಕ್ಷ ಕೋಟಿ. ಇದರಲ್ಲಿ ಒಂದು ರೂಪಾಯಿ ಕೂಡ ರಾಜ್ಯಕ್ಕೆ ವಾಪಸ್ ಕೊಟ್ಟಿಲ್ಲ. ಹೋಗಲಿ ಈ ಹಣವನ್ನು ಉತ್ತರ ಭಾರತದ ರಾಜ್ಯಗಳಿಗೆ ಕೊಟ್ಟು ಶಾಲಾಕಾಲೇಜು, ಆಸ್ಪತ್ರೆಯಂತಹ ಜನಪರ ಕೆಲಸಗಳನ್ನಾದರೂ ಮಾಡುತ್ತಾರೆಯೇ ಎಂದರೆ ಅದು ಇಲ್ಲ. ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಾರೆ ಎಂದು ಕಿಡಿಕಾರಿದರು.
8
+ ಮೋದಿ ಗ್ಯಾರಂಟಿ ಎಂಬ ಪ್ರಚಾರದ ವಿರುದ್ಧ ಕಡಿಕಾರಿದ ಪ್ರಿಯಾಂಕ್ ಖರ್ಗೆ, ಜಲಜೀವನ್ ಮಿಷನ್ ಸೇರಿದಂತೆ ಕೇಂದ್ರದ ಎಲ್ಲ ಯೋಜನೆಗಳಲ್ಲೂ ರಾಜ್ಯದ್ದು ಶೇ.50ರಷ್ಟು ಪಾಲಿದೆ. ಆದರೂ ಮೋದಿ ಗ್ಯಾರಂಟಿ ಎಂದು ಬಿಂಬಿಸಿಕೊಳ್ಳುತ್ತಾರೆ ಇವರ ಪ್ರಚಾರ ಮಾತ್ರ ಶೇ.100ರಷ್ಟು. ಪ್ರತಿ ಯೋಜನೆಯಲ್ಲೂ ಕನ್ನಡಿಗರ ಬೆವರಿದೆ ಎಂದು ಹೇಳಿದರು.
9
+ ಮಂಡ್ಯದ ಕೆರಗೋಡಿನಲ್ಲಿ ರಾಷ್ಟ್ರಧ್ವಜ ಹಾರಿಸಿರುವುದರಲ್ಲಿ ತಪ್ಪೇನಿದೆ? ಬಿಜೆಪಿಯವರು ಕದ್ದು ಮುಚ್ಚಿ ನಾಟಕ ಆಡುವುದರ ಬದಲಾಗಿ ಬಹಿರಂಗವಾಗಿ ನಮಗೆ ರಾಷ್ಟ್ರ ಧ್ವಜದ ಮೇಲೆ ಗೌರವವಿಲ್ಲ. ಭಗವಧ್ವಜವೇ ಬೇಕು ಎಂದು ಘೋಷಣೆ ಮಾಡಿಕೊಳ್ಳಲಿ. ಸ್ವತಂತ್ರ ಬಂದಾಗ 1947ರಲ್ಲಿ ಆರ್‍ಎಸ್‍ಎಸ್ ಮುಖವಾಣಿ ಆರ್ಗನೈಸರ್‍ನಲ್ಲಿ ತ್ರಿವರ್ಣ ಧ್ವಜ ಅಪಶಕುನ ಎಂದು ಸಂಪಾದಕೀಯ ಬರೆಯಲಾಗಿತ್ತು.
10
+ ಮಾಜಿ ಸಚಿವ ಈಶ್ವರಪ್ಪ ಅವರು ನಮಗೆ ರಾಷ್ಟ್ರ ಧ್ವಜಗಿಂತಲೂ ಭಗವಧ್ವಜವೇ ಮುಖ್ಯ ಎಂದು ಈ ಹಿಂದೆ ಹೇಳಿದ್ದರು. ಈಗಲೂ ಅದೇ ವಾದವನ್ನು ಬಹಿರಂಗವಾಗಿ ಹೇಳಿ ಕೆರಗೋಡಿನ ಧ್ವಜ ಪ್ರಕರಣದಲ್ಲಿ ಪ್ರತಿಭಟನೆ ಮಾಡಲಿ ಎಂದು ಸವಾಲು ಹಾಕಿದರು.
11
+ ನಾಳೆ ಜೆಡಿಎಸ್ ಕೋರಕಮಿಟಿ ಸಭೆ : ಲೋಕಸಭೆ-ರಾಜ್ಯಸಭೆ ಚುನಾವಣೆ ಕುರಿತ ಚರ್ಚೆ
12
+ ನಿರುದ್ಯೋಗದ ಬಗ್ಗೆ ಬಿಜೆಪಿ ಎಂದೂ ಪ್ರತಿಭಟನೆ ಮಾಡಿಲ್ಲ. ಭದ್ರ ಮೇಲ್ದಂಡೆ, ಮೇಕೆದಾಟು, ಮಹದಾಯಿ ಸೇರಿದಂತೆ ನೀರಾವರಿ ಯೋಜನೆಗಳ ಅನ್ಯಾಯ ಪ್ರಶ್ನಿಸಿಲ್ಲ. ಕಲಬುರಗಿ ರೈಲ್ವೆ ವಿಭಾಗೀಯ ಕಚೇರಿಗೆ ಸಮರ್ಪಕ ಅನುದಾನ ಇಲ್ಲ. ಇದರ ಬಗ್ಗೆ ಮಾತೇ ಆಡುವುದಿಲ್ಲ ಎಂದು ಕಿಡಿಕಾರಿದರು.
13
+ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಮೋದಿಯವರ ಗಾರ್ಡನ್‍ನಲ್ಲಿ ಬೆಳೆಯುವುದಿಲ್ಲ. ಎಲ್ಲ ಭಾರತೀಯ ರೈತರು ಬೆಳೆಯುತ್ತಾರೆ. ಸಂಪನ್ಮೂಲಗಳು ಎಲ್ಲರಿಂದಲೂ ಕ್ರೂಢೀಕರಣವಾಗುತ್ತದೆ. ಅದೇ ರೀತಿ ಸಮಾನವಾಗಿ ಹಂಚಿಕೆಯೂ ಆಗಬೇಕು ಎಂದು ಕುಮಾರಸ್ವಾಮಿಯವರ ಟೀಕೆಗೆ ಖಾರವಾಗಿ ಪ್ರತಿಕ್ರಿಯಿಸಿದರು.
eesanje/url_46_247_5.txt ADDED
@@ -0,0 +1,7 @@
 
 
 
 
 
 
 
 
1
+ ಕ್ಯಾನ್ಸರ್ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು ಬೃಹತ್ ಜಾಗೃತಿ ಜಾಥ
2
+ ಬೆಂಗಳೂರು, ಫೆ.4- ಆರಂಭಿಕ ಹಂತದಲ್ಲಿ ಮಾರಕ ಕ್ಯಾನ್ಸರ್ ಪತ್ತೆ ಮಾಡುವುದರಿಂದ ರೋಗವನ್ನು ಗುಣಪಡಿಸಬಹುದಲ್ಲದೆ, ರೋಗಿಗಳ ಜೀವವನ್ನು ಉಳಿಸಬಹುದಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
3
+ ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ಸರ್ಜಿಕಲ್ ಸೊಸೈಟಿ ಆಫ್ ಇಂಡಿಯಾ, ಸಂಕಲ್ಪ ಚೇಸ್ ಕ್ಯಾನ್ಸರ್ ಫೌಂಡೇಷನ್ ರೀಸರ್ಚ್ ಟ್ರಸ್ಟ್, ನವೋದಯ ಇನ್ ಬೆಂಗಳೂರು, ಆರೋಗ್ಯ ಇಲಾಖೆ ಸಹಯೋಗದಲ್ಲಿ 5ಕಿಲೋ ಮೀಟರ್ ವಾಕಥಾನ್‍ಗೆ ಚಾಲನೆ ನೀಡಿ ಮಾತನಾಡಿದ ಅವರು,ಬದಲಾದ ಆಹಾರ ಪದ್ದತಿ, ಒತ್ತಡದ ಜೀವನ ಮತ್ತು ಬೊಜ್ಜು, ಕಲುಷಿತ ಪರಿಸರ, ವ್ಯಾಯಾಮವಿಲ್ಲದಿರುವುದು. ಹೀಗೆ ಹಲವು ಕಾರಣದಿಂದ ಕ್ಯಾನ್ಸರ್ ರೋಗ ಬರುತ್ತದೆ ಪ್ರಪಂಚದಲ್ಲಿ ಅತ್ಯಂತ ಹಾನಿಕಾರಕವಾಗಿರುವ ಕಾಯಿಲೆಗಳಲ್ಲಿ ಕ್ಯಾನ್ಸರ್‍ರೋಗ ಒಂದಾಗಿದೆ ಎಂದರು.
4
+ ಕೋಲ್ಕತಾಗೆ ಶೀಘ್ರರೈಲು ಸಂಪರ್ಕ : ಸಿಎಂ ಮಾಣಿಕ್ ಸಹಾ
5
+ ಪ್ರತಿಯೊಬ್ಬರು ಪ್ರತಿದಿನ ಒಂದು ಅವರ ಜೀವನಕ್ಕಾಗಿ ಸಮಯ ಮೀಸಲು ಇಡಬೇಕು. ಯೋಗ, ವಾಕಿಂಗ್, ವ್ಯಾಯಾಮ ಮಾಡುವುದರಿಂದ ಆರೋಗ್ಯವಂತರಾಗಿ ಇರಬಹುದು. ವಿಶ್ವ ಕ್ಯಾನ್ಸರ್ ದಿನದಂದು ಕ್ಯಾನ್ಸರ್ ಮುಕ್ತ ಸಮಾಜ, ರಾಜ್ಯ ನಮ್ಮದಾಗಲಿ ಎಂದು ಆರೋಗ್ಯ ಇಲಾಖೆ ಶ್ರಮಿಸುತ್ತಿದೆ ಎಂದು ಹೇಳಿದರು. ಸರ್ಜಿಕಲ್ ಸೊಸೈಟಿಯ ಬೆಂಗಳೂರು ಅದ್ಯಕ್ಷ ರಾಜಶೇಖರ್ ಸಿ.ಜಾಕ ಮಾತನಾಡಿ.ಆರೋಗ್ಯವಂತರಾಗಿರಲು ಪ್ರತಿಯೊಬ್ಬರು ಒಂದು ಗಂಟೆಯಾದರೂ ಗಂಟೆ ವಾಕಿಂಗ್ ಮಾಡಬೇಕು.
6
+ ಕ್ಯಾನ್ಸರ್ ಮೊದಲನೇಯ ಹಂತದಲ್ಲಿ ಪತ್ತೆ ಮಾಡಿದರೆ, ಬೇಗನೆ ಚಿಕಿತ್ಸೆ ನೀಡಿ ರೋಗಿಯ ಜೀವನ ಉಳಿಸಬಹುದು.ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಹೆಚ್ಚು ಕಂಡು ಬರುತ್ತಿರುವುದರಿಂದ ಸ್ತನ ಕ್ಯಾನ್ಸರ್ ಕುರಿತು ಅರಿವು ಮೂಡಿಸಲು ನಾನು ಪುಸ್ತಕ ಹೊರತಂದ್ದೀನೆ. ಕನ್ನಡ, ಮರಾಠಿ,ಗುಜರಾತ್, ಬೆಂಗಾಲಿ, ತಮಿಳು,ತೆಲುಗು 9ಭಾಷೆಯಲ್ಲಿ ಮುದ್ರಣಗೊಂಡಿದೆ.
7
+ ಆತಂಕಪಡದೆ ಸೂಕ್ತ ಸಮಯದಲ್ಲಿ ಆರೋಗ್ಯ ತಪಾಸಣೆ ಮಾಡಿಕೊಂಡು ವೈದ್ಯರ ಸಲಹೆಯಿಂದ ಕ್ಯಾನ್ಸರ್ ರೋಗ ಮುಕ್ತ ಮಾಡಬಹುದು ಎಂದು ಹೇಳಿದರು.
eesanje/url_46_247_6.txt ADDED
@@ -0,0 +1,8 @@
 
 
 
 
 
 
 
 
 
1
+ ಡಿ.ಕೆ.ಸುರೇಶ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು
2
+ ಬೆಂಗಳೂರು,ಫೆ.4- ದಕ್ಷಿಣ ಭಾರತದ ಪ್ರತ್ಯೇಕತೆಯ ಬಗ್ಗೆ ಹೇಳಿಕೆ ನೀಡಿದ್ದ ಸಂಸದ ಡಿ.ಕೆ.ಸುರೇಶ್ ಅವರ ಸದಾಶಿವನಗರದಲ್ಲಿರುವ ಮನೆಗೆ ಬಿಜೆಪಿ ಕಾರ್ಯಕರ್ತರು ನುಗ್ಗಿ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇಂದು ಬೆಳಗ್ಗೆ ಅರಮನೆ ಮೈದಾನದ ಕಡೆಯಿಂದ ಬಳ್ಳಾರಿ ರಸ್ತೆಯನ್ನು ಏಕಾಏಕಿ ದಾಟಿ 50ಕ್ಕೂ ಹೆಚ್ಚು ಯುವ ಕಾರ್ಯಕರ್ತರು ಡಿ.ಕೆ.ಸುರೇಶ್ ಅವರ ಮನೆಯತ್ತ ನುಗ್ಗಿದರು.
3
+ ಪರಿಸ್ಥಿತಿಯನ್ನು ನಿಭಾಯಿಸಲು ಪೊಲೀಸರು ಪರದಾಡಬೇಕಾಯಿತು. ಡಿ.ಕೆ.ಸುರೇಶ್ ಅವರ ಮನೆಯ ಎದುರಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮನೆ ಇರುವುದರಿಂದ ಅಲ್ಲಿಗೆ ದಿನನಿತ್ಯ ಆಗಮಿಸುವ ಜನಸಂದಣಿಯನ್ನು ನಿಯಂತ್ರಿಸಲು ಪೊಲೀಸ್ ಭದ್ರತೆ ಇತ್ತು. ಹೀಗಾಗಿ ನುಗ್ಗಿ ಬರುತ್ತಿದ್ದ ಕಾರ್ಯಕರ್ತರನ್ನು ತಡೆಯಲು ಸಾಧ್ಯವಾಗಿದೆ. ಇಲ್ಲವಾಗಿದ್ದರೆ ದಿಢೀರ್ ನಡೆದ ಪ್ರತಿಭಟನೆ ಬೇರೆ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಯೂ ಇತ್ತು.
4
+ ಬಳ್ಳಾರಿ ರಸ್ತೆ ದಾಟಿ ಬಂದ ಕೆಲ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದಂತೆ ಉಳಿದವರು ಓಡಲಾರಂಭಿಸಿದರು. ಪೊಲೀಸರು ಅವರ ಬೆನ್ನಟ್ಟಿ ಹಿಡಿದು ವಶಕ್ಕೆ ಪಡೆದುಕೊಂಡರು. ಆರಂಭದಲ್ಲೇ ಡಿ.ಕೆ.ಸುರೇಶ್ ಅವರ ಮನೆಯೊಳಗೆ ನುಗ್ಗಿದ ಕೆಲವರು ಧರಣಿ ನಡೆಸಿ ಜೈಶ್ರೀರಾಮ್ ಘೋಷಣೆ ಕೂಗಿದರು.ಈ ದಿಢೀರ್ ಪ್ರತಿಭಟನೆ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಿಸಿತು. ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಲು ಪರದಾಡಬೇಕಾಯಿತು.
5
+ ಫೆ.1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ ಬಳಿಕ ರಾಜ್ಯಕ್ಕೆ ಅನ್ಯಾಯವಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಅದಕ್ಕೆ ಪ್ರತಿಕ್ರಿಯಿಸುವ ಸಂದರ್ಭದಲ್ಲಿ ಸಂಸದ ಡಿ.ಕೆ.ಸುರೇಶ್, ಕೇಂದ್ರದಿಂದ ನಿರಂತರವಾಗಿ ಅನ್ಯಾಯವಾಗುತ್ತಿದೆ. ಇದರಿಂದಾಗಿ ಒಕ್ಕೂಟ ವ್ಯವಸ್ಥೆಯ ಮೇಲೆ ನಂಬಿಕೆ ಕುಸಿಯಲಿದೆ. ದಕ್ಷಿಣ ಭಾರತದ ರಾಜ್ಯಗಳು ಪ್ರತ್ಯೇಕತೆಯ ಒತ್ತಾಯ ಮಾಡುವ ಪರಿಸ್ಥಿತಿ ಬರಬಹುದೆಂದು ದೂರಿದ್ದರು.
6
+ ಕೋಲ್ಕತಾಗೆ ಶೀಘ್ರರೈಲು ಸಂಪರ್ಕ : ಸಿಎಂ ಮಾಣಿಕ್ ಸಹಾ
7
+ ದಕ್ಷಿಣ ಭಾರತ ರಾಜ್ಯಗಳ ಆರ್ಥಿಕ ಸಂಪನ್ಮೂಲಗಳನ್ನು ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚು ಖರ್ಚು ಮಾಡಲಾಗುತ್ತಿದೆ ಎಂದು ಡಿ.ಕೆ.ಸುರೇಶ್ ಆರೋಪಿಸಿದ್ದರು. ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂಬ ಆರೋಪವನ್ನು ನಗಣ್ಯಗೊಳಿಸಿ ಡಿ.ಕೆ.ಸುರೇಶ್ ಅವರ ಹೇಳಿಕೆಯನ್ನು ಮುಂದಿಟ್ಟುಕೊಂಡು ಬಿಜೆಪಿ ದೇಶಾದ್ಯಂತ ಗದ್ದಲ ಎಬ್ಬಿಸುತ್ತಿದೆ.
8
+ ಡಿ.ಕೆ.ಸುರೇಶ್ ಅವರ ನಿವಾಸದ ಎದುರು ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂಬ ಮುನ್ಸೂಚನೆ ಇದ್ದಾಗಿಯೂ ಸೂಕ್ತ ಬಂದೋಬಸ್ತ್ ಮಾಡದೆ ಇರುವ ಬಗ್ಗೆ ಆಕ್ರೋಶಗಳು ಕೇಳಿಬಂದಿವೆ. ಸಂಸದ ಡಿ.ಕೆ.ಸುರೇಶ್ ಮಾತನಾಡಿ, ಬಿಜೆಪಿಯವರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ. ರಾಜ್ಯ ಸರ್ಕಾರವು ಅದಕ್ಕೆ ಸಹಕಾರ ನೀಡುತ್ತಿದೆ ಎಂದು ಸಿಡಿಮಿಡಿ ವ್ಯಕ್ತಪಡಿಸಿದ್ದಾರೆ.
eesanje/url_46_247_7.txt ADDED
@@ -0,0 +1,10 @@
 
 
 
 
 
 
 
 
 
 
 
1
+ ದಕ್ಷಿಣ ಭಾರತದ ರಾಜ್ಯಗಳು ಬಿಜೆಪಿಗೆ ಸಂಕಟವಾಗಿವೆ : ಡಿಸಿಎಂ ಡಿಕೆಶಿ
2
+ ಬೆಂಗಳೂರು,ಫೆ.4-ಕರ್ನಾಟಕದ ಬೆನ್ನಲ್ಲೇ ದಕ್ಷಿಣ ಭಾರತದ ರಾಜ್ಯಗಳು ಕೂಡ ಹಂತ ಹಂತವಾಗಿ ಕೇಂದ್ರ ಸರ್ಕಾರದ ತಾರತಮ್ಯದ ವಿರುದ್ಧ ಪ್ರತಿಭಟನೆಗೆ ಮುಂದಾಗುತ್ತಿರುವುದರಿಂದ ಬಿಜೆಪಿಯವರಿಗೆ ಸಂಕಟ ತಡೆಯಲಾಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
3
+ ಕರ್ನಾಟಕಕ್ಕೆ ಆಗಿರುವ ತಾರತಮ್ಯದ ವಿರುದ್ಧ ಇದೇ ಫೆ.7ರಂದು ದೆಹಲಿಯಲ್ಲಿ ರಾಜ್ಯದ ಎಲ್ಲ ಶಾಸಕರು, ಸಂಸದರು, ವಿಧಾನಪರಿಷತ್ ಹಾಗೂ ರಾಜ್ಯಸಭಾ ಸದಸ್ಯರು ಮುಖ್ಯಮಂತ್ರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಇದರ ಬೆನ್ನಲ್ಲೇ ಕೇರಳ ರಾಜ್ಯದವರು ಕೂಡ ತಮ್ಮಗಾಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಪರಿಸ್ಥಿತಿಯನ್ನು ಎದುರಿಸಲಾಗದೆ ಇಕ್ಕಟ್ಟಿಗೆ ಸಿಲುಕಿದೆ ಎಂದರು.
4
+ ಕಾಂಗ್ರೆಸ್ ಸರ್ಕಾರದ ಪ್ರತಿಭಟನೆಗೆ ಪ್ರತಿಯಾಗಿ ರಾಜ್ಯದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ನಾಚಿಕೆಗೇಡಿನ ವಿಚಾರ. ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಬರಬಾತ ಪ್ರದೇಶಗಳ ರೈತರ ಖಾತೆಗಳಿಗೆ 2 ಸಾವಿರ ರೂ.ಗಳನ್ನು ರೈತರ ಖಾತೆಗೆ ಜಮೆ ಮಾಡಿದೆ.
5
+ ರಾಜ್ಯದಿಂದ 27 ಸಂಸದರು ಆಯ್ಕೆಯಾಗಿದ್ದಾರೆ. ಇವರಿಗೆ ಕನಿಷ್ಟ ಕೇಂದ್ರ ಗೃಹಸಚಿವ ಅಮಿತ್ ಷಾ ನೇತೃತ್ವದ ಪ್ರಕೃತಿ ವಿಕೋಪ ಪರಿಹಾರ ನಿಧಿ ಹಂಚಿಕೆಯ ಉನ್ನತ ಅಧಿಕಾರಿ ಸಮಿತಿ ಸಭೆ ಮಾಡಿಸಿ ಹಣ ಬಿಡುಗಡೆ ಮಾಡಿಸಲು ಸಾಧ್ಯವಾಗಿಲ್ಲ. ಇಲ್ಲಿ ಯಾವ ನೈತಿಕತೆ ಇಟ್ಟುಕೊಂಡು ಪ್ರತಿಭಟನೆ ಮಾಡುತ್ತಾರೆ ಎಂದು ಪ್ರಶ್ನಿಸಿದರು. ರಾಜ್ಯ ಸರ್ಕಾರ ಬರ ಬಾತ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಎಲ್ಲದಕ್ಕೂ ಅಗತ್ಯ ನೆರವನ್ನು ಒದಗಿಸಿದೆ. ಕೇಂದ್ರದ ಜವಾಬ್ದಾರಿ ಏನು ಎಂದು ಕಿಡಿಕಾರಿದರು.
6
+ ಹಿಮಪಾತದಿಂದಾಗಿ ಕಾಶ್ಮೀರದಿಂದ ವಿಮಾನ ಸಂಚಾರ ಸ್ಥಗಿತ
7
+ ಬಜೆಟ್ ಅನುದಾನ ಸೇರಿದಂತೆ ಹಲವಾರು ವಿಚಾರಗಳಲ್ಲಿ ರಾಜ್ಯಕ್ಕೆ ತಾರತಮ್ಯವಾಗುತ್ತಿದೆ. ಈ ಹಿಂದೆ ಮನಮೋಹನ್ ಸಿಂಗ್ ಸರ್ಕಾರ ಅನುದಾನ ಕೊಟ್ಟಿಲ್ಲ ಎಂದು ಬಿಜೆಪಿಯವರು ವಾದಿಸುತ್ತಿದ್ದಾರೆ. ಅದರ ಅರ್ಥ ಆಗಲೂ ಅನ್ಯಾಯವಾಗಿತ್ತು ಈಗಲೂ ಅನ್ಯಾಯ ಮಾಡುತ್ತಿದ್ದೇವೆ ಎಂದರ್ಥವಲ್ಲವೇ?
8
+ ಬಿಜೆಪಿಯವರು ಕೇಂದ್ರದಿಂದ ಅನ್ಯಾಯವಾಗುತ್ತಿದೆ ಎಂಬುದನ್ನು ಒಪ್ಪಿಕೊಂಡಂತಾಗಿದೆ. ಮನಮೋಹನ್ ಸಿಂಗ್ ಸರ್ಕಾರ ಅನ್ಯಾಯ ಮಾಡಿದ್ದೇ ಆಗಿದ್ದರೆ ಅದಕ್ಕೆ ಜನ ಪಾಠ ಕಲಿಸಿಯಾಗಿದೆ. 50 ಸಂಸದರ ಸಂಖ್ಯೆಗೆ ಸೋತಿದ್ದೇವೆ. 300 ಸ್ಥಾನ ಗೆದ್ದಿರುವ ಬಿಜೆಪಿಯವರು ರಾಜ್ಯಕ್ಕೆ ನೀಡಿದ ಕೊಡುಗೆ ಏನು? ಎಂದು ಪ್ರಶ್ನಿಸಿದರು.ಭದ್ರ ಮೇಲ್ದಂಡೆ ಯೋಜನೆಗಾಗಿ 5300 ಕೋಟಿ ರೂ.ಗಳನ್ನು ಮುಂದಿನ ಬಜೆಟ್‍ನಲ್ಲಿ ಘೋಷಣೆ ಮಾಡಿದ್ದು ನಿಜವಲ್ಲವೇ? ಅದರಲ್ಲಿ ಈವರೆಗೂ ಎಷ್ಟು ಹಣ ಬಿಡುಗಡೆ ಮಾಡಿದ್ದಾರೆ? ���ೆರಿಗೆ ಪಾಲಿನಲ್ಲಿ ಎಷ್ಟು ಹಣ ನೀಡಲಾಗಿದೆ ಎಂಬುದನ್ನು ಬಿಜೆಪಿಯವರೇ ಹೇಳಲಿ ಎಂದು ಸವಾಲು ಹಾಕಿದರು.
9
+ ಈ ಹಿಂದೆ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಯಾವ ಲಾಭವಾಗಿದೆ ಎಂಬುದನ್ನು ಮೊದಲು ಜನರಿಗೆ ತಿಳಿಸಿ. ಬೆಂಗಳೂರಿನ ಮೆಟ್ರೋಗೆ ಹಣ ನೀಡದಿರುವುದೇಕೆ ಎಂದು ಪ್ರಶ್ನಿಸಿದರು. ಪ್ರಧಾನಮಂತ್ರಿ ನರೇಂದ್ರಮೋದಿಯವರು ಈ ಹಿಂದೆ ಕಾಂಗ್ರೆಸ್‍ನ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿರಲಿಲ್ಲವೇ? ಈಗ ಅವರಿಗೆ ಜ್ಞಾನೋದಯವಾಗಿದೆಯೇ? ಮೋದಿ ಗ್ಯಾರಂಟಿ ಎಂದು ಏಕೆ ಹೇಳಿಕೊಂಡು ತಿರುಗುತ್ತಿದ್ದಾರೆ. ನಮ್ಮ ಭರವಸೆಯ ನಕಲಲ್ಲವೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಹೇಳಿಕೆಗೆ ತಿರುಗೇಟು ನೀಡಿದರು.
10
+ ವಿಜಯೇಂದ್ರ ಏಳು ತಿಂಗಳಿನಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಲಾಟರಿ ಪಡೆದುಕೊಂಡಿದ್ದಾರೆ. ಅವರ ತಂದೆಯ ಪ್ರಭಾವದಿಂದಾಗಿ ಅವಕಾಶ ಗಿಟ್ಟಿಸಿರುವ ವಿಜಯೇಂದ್ರ ಹುಮ್ಮಸ್ಸಿನಲ್ಲಿ ಮಾತನಾಡುತ್ತಿದ್ದಾರೆ. ನಾನೇಕೆ ಅವರನ್ನು ಅಧೈರ್ಯಗೊಳಿಸಲಿ ಎಂದು ಹೇಳಿದರು.
eesanje/url_46_247_8.txt ADDED
@@ -0,0 +1,7 @@
 
 
 
 
 
 
 
 
1
+ ನಾಳೆ ಜೆಡಿಎಸ್ ಕೋರಕಮಿಟಿ ಸಭೆ : ಲೋಕಸಭೆ-ರಾಜ್ಯಸಭೆ ಚುನಾವಣೆ ಕುರಿತ ಚರ್ಚೆ
2
+ ಬೆಂಗಳೂರು, ಫೆ.4- ರಾಜ್ಯಸಭೆ, ಲೋಕಸಭೆ ಚುನಾವಣೆ ಸಿದ್ಧತೆ, ಪಕ್ಷದ ಪದಾಧಿಕಾರಿಗಳ ನೇಮಕ, ವಿಧಾನ ಮಂಡಲದ ಅಧಿವೇಶನ ಸೇರಿದಂತೆ ಹಲವು ಮಹತ್ವದ ವಿಚಾರಗಳನ್ನು ಕುರಿತು ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳಲು ನಾಳೆ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಲಿದೆ.
3
+ ಜೆ.ಪಿ.ಭವನದಲ್ಲಿ ನಾಳೆ ಮಧ್ಯಾಹ್ನ ಕೋರ್ ಕಮಿಟಿ ಅಧ್ಯಕ್ಷರಾದ ಮಾಜಿ ಸಚಿವ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿಈ ಸಭೆ ನಡೆಯಲಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭಾಗವಹಿಸಲಿದ್ದಾರೆ. ಖಾಲಿ ಇರುವ ಜಿಲ್ಲಾಧ್ಯಕ್ಷರ ನೇಮಕ, ರಾಜ್ಯ ಪದಾಧಿಕಾರಿಗಳ ನೇಮಕದ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
4
+ ಇತ್ತೀಚೆಗೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದ್ದರೂ ಅಂತಿಮ ನಿರ್ಣಯ ಕೈಗೊಂಡಿರಲಿಲ್ಲ. ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ರ್ಪಧಿಸಿದ್ದ ಎ.ಪಿ.ರಂಗನಾಥ್ ಅವರ ಗೆಲುವಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಶ್ರಮ ವಹಿಸುವ ಬಗ್ಗೆ ಮಾರ್ಗದರ್ಶನ ಮಾಡಲಾಗುತ್ತದೆ.
5
+ ಅದೇ ರೀತಿ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಹಾಗೂ ಬೆಂಬಲಿಸುವ ಕುರಿತಂತೆ ಸಮಾಲೋಚನೆ ನಡೆಸಲಾಗುತ್ತದೆ. ಮುಂಬರುವ ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಲಿದ್ದು, ಶಾಸಕರು ಹಾಗೂ ಮುಖಂಡರಿಗೆ ಕೆಲವು ಜವಾಬ್ದಾರಿಗಳನ್ನು ವಹಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
6
+ ಕೋಲ್ಕತಾಗೆ ಶೀಘ್ರರೈಲು ಸಂಪರ್ಕ : ಸಿಎಂ ಮಾಣಿಕ್ ಸಹಾ
7
+ ಎನ್‍ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರಿರುವುದರಿಂದ ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಈಗಿನಿಂದಲೇ ಶ್ರಮ ವಹಿಸಿ ಕೆಲಸ ಮಾಡುವ ಬಗ್ಗೆ ಮಾರ್ಗದರ್ಶನ ಮಾಡಲಾಗುತ್ತದೆ. ವಿಧಾನಮಂಡಲದ ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳ ಕುರಿತು ಜನಪರ ಧ್ವನಿ ಎತ್ತಲು ಗಂಭೀರ ಚರ್ಚೆ ನಡೆಸಲಾಗುತ್ತದೆ ಎಂದು ಮೂಲಗಳು ಹೇಳಿವೆ.
eesanje/url_46_247_9.txt ADDED
@@ -0,0 +1,5 @@
 
 
 
 
 
 
1
+ ಅಡ್ವಾಣಿಯವರಿಗೆ ಭಾರತರತ್ನ ನೀಡಿರುವುದು ಸ್ವಾಗತಾರ್ಹ : ಸಿಎಂ ಸಿದ್ದರಾಮಯ್ಯ
2
+ ದಾವಣಗೆರೆ,ಫೆ.3- ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಯವರಿಗೆ ಭಾರತ ರತ್ನ ನೀಡುವುದು ಸ್ವಾಗತಾರ್ಹ. ಆದರೆ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರಿಗೆ ಭಾರತ ರತ್ನ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಡ್ವಾಣಿಯವರಿಗೆ ಪ್ರಶಸ್ತಿ ಕೊಡಲಿ ಪಾಪ, ಬೇಡ ಎಂದು ಹೇಳಿದವರ್ಯಾರು ಎಂದರು.
3
+ ತುಮಕೂರಿನ ಸಿದ್ದಗಂಗಾ ಸ್ವಾಮೀಜಿಯವರಿಗೆ ಭಾರತ ರತ್ನ ಕೊಡುವಂತೆ ತಾವು ಪತ್ರ ಬರೆದಿದ್ದೆವು ಎಂದು ಸ್ಮರಿಸಿಕೊಂಡರು. ನಗರೋತ್ಥಾನ ಯೋಜನೆಯಡಿ ಕಾಮಗಾರಿಗಳ ಬಿಲ್ ಪಾವತಿಸಲು ವಿಳಂಬ ಮಾಡಲಾಗುತ್ತಿದೆ ಎಂಬ ಆರೋಪದ ಕುರಿತು ದೂರು ನೀಡಿದರೆ ವಿಚಾರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. ಲೋಕಸಭೆ ಚುನಾವಣೆಗೆ ಶೀಘ್ರವೇ ಅಭ್ಯರ್ಥಿಗಳನ್ನು ಪ್ರಕಟಿಸಲಾಗುವುದು. ಈ ಕುರಿತಂತೆ ರಾಜ್ಯಾದ್ಯಂತ ಸಮೀಕ್ಷೆ ನಡೆಯುತ್ತಿದೆ ಎಂದು ಹೇಳಿದರು.
4
+ ಮುಂದಿನ ವಾರದಿಂದ 29 ರೂ.ಗೆ ಸಿಗಲಿದೆ ಭಾರತ್ ಬ್ರಾಂಡ್ ಅಕ್ಕಿ
5
+ ಬೆಳಗಾವಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ. ನಮ್ಮ ಪಕ್ಷದಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಆದರೆ ಅಂತಿಮವಾಗಿ ಸ್ಥಳೀಯ ನಾಯಕರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು. ಬಾಗೂರು ದೇವಸ್ಥಾನದ ಗರ್ಭಗುಡಿಗೆ ಈಶ್ವರಾನಂದ ಪುರಿ ಸ್ವಾಮೀಜಯವರ ಪ್ರವೇಶಕ್ಕೆ ಅವಕಾಶ ನೀಡಿಲ್ಲ ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದರು.
eesanje/url_46_248_1.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬಿಜೆಪಿಗೆ ತಿರುಗೇಟು ನೀಡಲು ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ
2
+ ಬೆಂಗಳೂರು,ಫೆ.3- ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ಅನ್ಯಾಯದ ಬಗ್ಗೆ ಸಂಸದ ಡಿ.ಕೆ.ಸುರೇಶ್‍ರವರ ಹೇಳಿಕೆಯನ್ನು ವಿವಾದ ಮಾಡಿ ರಾಷ್ಟ್ರಮಟ್ಟದಲ್ಲಿ ರಾಜಕೀಯಕ್ಕೆ ಬಳಸಿಕೊಳ್ಳಲು ಮುಂದಾಗಿರುವ ಬಿಜೆಪಿಗೆ ಮರ್ಮಾಘಾತ ನೀಡಲು ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಜ್ಜುಗೊಂಡಿರುವ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಮತ್ತಷ್ಟು ಆಕ್ರೋಶಗಳನ್ನು ಹೊರಹಾಕಲಾಗಿದೆ.
3
+ ಕಾಂಗ್ರೆಸ್‍ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ವಿರುದ್ಧ ಕೆಂಡಾಮಂಡಲದ ಟೀಕೆಗಳನ್ನು ನಡೆಸಲಾಗಿದೆ. ಸಂಸ್ಥಾನಗಳನ್ನು ವಿಲೀನಗೊಳಿಸಿ, ರಾಜ್ಯಗಳನ್ನು ಸೇರಿಸಿ ಭಾರತ ಎಂಬ ಒಕ್ಕೂಟವನ್ನು ನಿರ್ಮಿಸಿದ್ದು ಕಾಂಗ್ರೆಸ್, ಪ್ರತ್ಯೇಕತೆಯನ್ನು ಕಾಪಾಡಿಕೊಂಡಿದ್ದ ಸಿಕ್ಕಿಂ ರಾಜ್ಯವನ್ನು ಭಾರತದೊಳಗೆ ಸೇರಿಸಿದ್ದು ಕಾಂಗ್ರೆಸ್, ದೇಶಕ್ಕೆ ರಾಷ್ಟ್ರ ಧ್ವಜ ಕೊಟ್ಟಿದ್ದು ಕಾಂಗ್ರೆಸ್, ಸಂವಿಧಾನವನ್ನು ಭಾರತಕ್ಕೆ ವಿಧಿಸಿಕೊಂಡಿದ್ದು ಕಾಂಗ್ರೆಸ್, ಭಾಷೆ, ಸಂಸ್ಕøತಿಗಳ ವೈವಿಧ್ಯತೆಯನ್ನು ಹೊಂದಿರುವ ರಾಜ್ಯಗಳ ಐಕ್ಯತೆಯನ್ನು ಕಾಪಾಡಿಕೊಂಡು ಬಂದಿದ್ದು ಕಾಂಗ್ರೆಸ್ ಎಂದು ತಿರುಗೇಟು ನೀಡಲಾಗಿದೆ.
4
+ ಭಾರತ ರೂಪುಗೊಳ್ಳುವಾಗ ಹುಟ್ಟಿಯೇ ಇರದ ಬಿಜೆಪಿಯಿಂದ ದೇಶ ಕಟ್ಟಿದ ಕಾಂಗ್ರೆಸ್ ಪಕ್ಷವು ದೇಶದ ಐಕ್ಯತೆಯ ಬಗ್ಗೆ ಪಾಠ ಕೇಳುವ ಅಗತ್ಯವಿಲ್ಲ ಎಂದು ವಾಗ್ದಾಳಿ ನಡೆಸಲಾಗಿದೆ. ಕಳೆದ ಹತ್ತು ವರ್ಷದಲ್ಲಿ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದ್ದರೂ ಕರ್ನಾಟಕದ ಯಾವೊಬ್ಬ ಬಿಜೆಪಿ ಸಂಸದರೂ ಬಾಯಿ ಬಿಡದೆ ಗುಲಾಮಗಿರಿ ಮಾಡಿಕೊಂಡಿರುವಾಗ, ಕಾಂಗ್ರೆಸ್ ಪಕ್ಷದ ಏಕೈಕ ಸಂಸದ ಡಿ.ಕೆ.ಸುರೇಶ್ ದನಿ ಎತ್ತಿದ್ದಾರೆ, ಬಿಜೆಪಿಗೆ ನಿಜಕ್ಕೂ ರಾಜ್ಯದ ಬಗ್ಗೆ ಕಾಳಜಿ ಇದ್ದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಎದುರು ಧೈರ್ಯದಿಂದ ನಿಂತು ನ್ಯಾಯ ಕೇಳಲಿ ಎಂದು ಕಾಂಗ್ರೆಸ್ ಸವಾಲು ಹಾಕಿದೆ.
5
+ ಕೇಂದ್ರದ ವಿರುದ್ಧ ರಾತ್ರಿಯಿಡೀ ಪ್ರತಿಭಟನೆ ನಡೆಸಿದ ದೀದಿ
6
+ ಬಿಜೆಪಿಗೆ ಠಕ್ಕರ್ :ಕೇಂದ್ರದಿಂದಾಗುತ್ತಿರುವ ತಾರತಮ್ಯಗಳಿಗೆ ರಾಜ್ಯದ ಮಟ್ಟಿಗೆ ಚರ್ಚೆಗಳನ್ನು ಮಾಡುವ ಮೂಲಕ ಕಾಂಗ್ರೆಸ್ ಮೃದು ಧೋರಣೆ ಅನುಸರಿಸುತ್ತಿತ್ತು. ಸಂಸದ ಡಿ.ಕೆ.ಸುರೇಶ್ ಬಜೆಟ್‍ನಲ್ಲಿ ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ಅನ್ಯಾಯದ ವಿರುದ್ಧ ಆಕ್ರೋಶ ಹೊರಹಾಕುವಾಗ ವ್ಯಕ್ತಪಡಿಸಿದ ಅಭಿಪ್ರಾಯವನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಂಡು ದೇಶಾದ್ಯಂತ ಕಾಂಗ್ರೆಸ್‍ಗೆ ಮುಜುಗರ ಉಂಟುಮಾಡಲು ಮುಂದಾಗಿದೆ. ಇದಕ್ಕೆ ಅಷ್ಟೇ ನಿರ್ದಾಕ್ಷಿಣ್ಯವಾಗಿ ತಿರುಗೇಟು ನೀಡಲು ಕಾಂಗ್ರೆಸ್ ಕೂಡ ರಣತಂತ್ರ ರೂಪಿಸಿದೆ.
7
+ ದೆಹಲಿಯಲ್ಲಿ ಫೆ.7 ರಂದು ಮುಖ್ಯಮಂತ್ರಿ ನೇತೃತ್ವದಲ್ಲಿ ಸಚಿವರು, ಶಾಸಕರು, ಸಂಸದರು, ವಿಧಾನಪರಿಷತ್ ಮತ್ತು ರಾಜ್ಯಸಭೆಯ ಸದಸ್ಯರು ಒಟ್ಟಾಗಿ ಪ್ರತಿ��ಟನೆ ನಡೆಸುವ ಮೂಲಕ ಕೇಂದ್ರ ಸರ್ಕಾರ ಹಾಗೂ ಬಿಜೆಪಿಯನ್ನು ಮುಜುಗರಕ್ಕೀಡು ಮಾಡಲು ಪ್ರತಿತಂತ್ರ ರೂಪಿಸಲಾಗಿದೆ. ಡಿ.ಕೆ.ಸುರೇಶ್‍ರ ಹೇಳಿಕೆಯನ್ನು ಬಿಜೆಪಿ ನಾಯಕರು ನಿನ್ನೆ ಸಂಸತ್‍ನಲ್ಲಿ ಪ್ರಸ್ತಾಪಿಸಿ, ಕಾಂಗ್ರೆಸ್ ಪಕ್ಷ ದೇಶ ವಿಭಜಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.
8
+ ಈ ಮೂಲಕ ವಿವಿಧ ರಾಜ್ಯಗಳಿಗೆ ಬಜೆಟ್‍ನಲ್ಲಾಗಿರುವ ಅನ್ಯಾಯವನ್ನು ಮರೆಮಾಚುವ ಪ್ರಯತ್ನಗಳಾಗಿತ್ತು. ಹಲವಾರು ಬಾರಿ ಕೇಂದ್ರದಿಂದ ರಾಜ್ಯಕ್ಕೆ ಆರ್ಥಿಕ ಹಾಗೂ ಇತರ ವಿಚಾರಗಳಲ್ಲಿ ಸಾಕಷ್ಟು ತಾರತಮ್ಯಗಳಾಗಿತ್ತು. ಕಳೆದ ಬಜೆಟ್‍ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ ಅನುದಾನವನ್ನೇ ನೀಡದೇ ಮರೆಮಾಚಲಾಗಿದೆ. ಮೇಕೆದಾಟು, ಮಹಾದಾಯಿ ನೀರಾವರಿ ಯೋಜನೆಗಳಿಗೆ ಅಗತ್ಯ ಅನುಮತಿ ನೀಡದೇ ಸತಾಯಿಸಲಾಗುತ್ತಿದೆ.
9
+ ತಾಜ್‍ಮಹಲ್‍ನಲ್ಲಿ ಉರುಸ್ ಆಚರಣೆ ಪ್ರಶ್ನಿಸಿದ ಹಿಂದೂ ಮಹಾಸಭಾ
10
+ ಬರ ಪರಿಹಾರಕ್ಕೆ ಆರ್ಥಿಕ ನೆರವು ನೀಡುವಂತೆ ಮನವಿ ಸಲ್ಲಿಸಿ 4 ತಿಂಗಳು ಕಳೆದರೂ ರಾಷ್ಟ್ರಮಟ್ಟದಲ್ಲಿ ಉದ್ದೇಶಪೂರ್ವಕವಾಗಿ ಸಭೆಯನ್ನೇ ನಡೆಸದೆ ಜಾರಿಕೊಳ್ಳುವ ಪ್ರಯತ್ನವೂ ನಡೆದಿದೆ. ಈ ಎಲ್ಲಾ ಗಂಭೀರ ವಿಚಾರಗಳನ್ನೂ ಮರೆಮಾಚಿ ಡಿ.ಕೆ.ಸುರೇಶ್‍ರ ಹೇಳಿಕೆಯನ್ನೇ ವಿವಾದ ಮಾಡಲು ಯತ್ನಿಸಿದ ಬಿಜೆಪಿಗೆ ಕಾಂಗ್ರೆಸಿಗರು ದೆಹಲಿ ಪ್ರತಿಪ್ರಭನೆಯ ಮಾಸ್ಟರ್‍ಸ್ಟ್ರೋಕ್ ನೀಡಿದ್ದಾರೆ. ಇದು ಮುಂದಿನ ವಾರಪೂರ್ತಿ ರಾಜಕೀಯ ಆರೋಪ-ಪ್ರತ್ಯಾರೋಪಗಳು, ಹಗ್ಗ-ಜಗ್ಗಾಟಗಳಿಗೆ ಕಾರಣವಾಗಲಿದ್ದು, ಲೋಕಸಭೆ ಚುನಾವಣೆಗೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬ ಕುತೂಹಲ ಹೆಚ್ಚಿಸಿದೆ.
eesanje/url_46_248_10.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ರಂಗೇರಿದ ರಾಜ್ಯಸಭೆ : ಜೆಡಿಎಸ್-ಬಿಜೆಪಿ ಮೈತ್ರಿಯ 5ನೇ ಅಭ್ಯರ್ಥಿ ಕಣಕ್ಕೆ
2
+ ಬೆಂಗಳೂರು,ಫೆ.2- ಮುಂಬರುವ ರಾಜ್ಯಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‍ಗೆ ಠಕ್ಕರ್ ಕೊಡಲು ಮುಂದಾಗಿರುವ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 5ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದೆ.ಫೆ.27ರಂದು ನಡೆಯಲಿರುವ ರಾಜ್ಯಸಭೆಯ ನಾಲ್ಕು ಸ್ಥಾನಗಳ ಚುನಾವಣೆಯಲ್ಲಿ ಈಗಿನ ಬಲಾಬಲದ ಪ್ರಕಾರ ಆಡಳತಾರೂಢ ಕಾಂಗ್ರೆಸ್‍ನಿಂದ ಮೂವರು ಹಾಗೂ ಬಿಜೆಪಿಯಿಂದ ಓರ್ವ ಅಭ್ಯರ್ಥಿ ಸುಲಭವಾಗಿ ಗೆಲ್ಲಲಿದ್ದಾರೆ.
3
+ ಕಾಂಗ್ರೆಸ್ ಶಾಸಕರ ಅಸಮಾಧಾನವನ್ನು ಬಂಡವಾಳ ಮಾಡಿಕೊಳ್ಳಲು ಮುಂದಾಗಿರುವ ದೋಸ್ತಿಗಳು 5ನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಚುನಾವಣಾ ಕಾವು ಹೆಚ್ಚಿಸಲು ತೆರೆಮರೆಯಲ್ಲಿ ಕಸರತ್ತು ಆರಂಭಿಸಿದ್ದಾರೆ.ಈಗಾಗಲೇ ಬಿಜೆಪಿ ನಾಯಕರು ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಉಭಯ ಪಕ್ಷಗಳಿಂದ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಒಮ್ಮತದ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಾಜಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಅವರನ್ನೇ ಮೈತ್ರಿ ಪಕ್ಷದ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವ ಬಗ್ಗೆ ಎರಡು ಪಕ್ಷಗಳಲ್ಲಿ ಚಿಂತನೆ ನಡೆದಿದೆ.
4
+ ಈ ಹಿಂದೆ ಮಾಜಿ ಸಚಿವ ವಿ.ಸೋಮಣ್ಣ ಅವರನ್ನು ಕಣಕ್ಕಿಳಿಸುವ ಬಗ್ಗೆ ಮಾತುಕತೆ ನಡೆಸಲಾಗಿತ್ತು. ವೀರಶೈವ ಲಿಂಗಾಯಿತ ಸಮುದಾಯದ ಪ್ರಭಾವಿ ನಾಯಕರಾಗಿರುವ ಅವರನ್ನೇ ಅಭ್ಯರ್ಥಿ ಮಾಡಿದರೆ ಅದೇ ಸಮುದಾಯದ ಕೆಲವು ಶಾಸಕರಿಂದ ಅಡ್ಡ ಮತದಾನ ನಡೆಸಬಹುದೆಂಬ ಲೆಕ್ಕಚಾರ ಪಕ್ಷದ ವಲಯದಲ್ಲಿತ್ತು. ಆದರೆ ಕೊನೆಕ್ಷಣದಲ್ಲಿ ಸೋಮಣ್ಣ ನಾನು ಹರಕೆ ಕುರಿಯಾಗಲಾರೆ ಎಂದು ಹಿಂದೆ ಸರಿದ ಪರಿಣಾಮ ಕುಪೇಂದ್ರ ರೆಡ್ಡಿ ಅವರನ್ನು ಅಭ್ಯರ್ಥಿ ಮಾಡಲು ತೀರ್ಮಾನಿಸಲಾಗಿದೆ ಎಂದು ಗೊತ್ತಾಗಿದೆ.
5
+ : ನಟಿ ಪೂನಂ ಪಾಂಡೆ ಇನ್ನಿಲ್ಲ..!
6
+ 5ನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಬಿಜೆಪಿ ವಲಯದಲ್ಲೂ ಒಪ್ಪಿಗೆ ಸಿಕ್ಕಿದೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಧಾಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಬಹುತೇಕರು ಕುಮಾರಸ್ವಾಮಿಯವರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗಿದೆ.
7
+ ರಾಜ್ಯಸಭೆ ಚುನಾವಣೆ ಲೆಕ್ಕಾಚಾರ:ಕರ್ನಾಟಕ ವಿಧಾನಸಭೆಯ ಒಟ್ಟು ಸಂಖ್ಯೆ 224. ಓರ್ವ ಆಂಗ್ಲೋ ಇಂಡಿಯನ್ ಅಭ್ಯರ್ಥಿ ನಾಮಕರಣಗೊಂಡರೂ ಅವರಿಗೆ ಮತದಾನದ ಹಕ್ಕು ಇರುವುದಿಲ್ಲ. ಪ್ರಸ್ತುತ ವಿಧಾನಸಭೆಯ ಬಲಾಬಲದಲ್ಲಿ ಆಡಳಿತಾರೂಢ ಕಾಂಗ್ರೆಸ್ 135 ಜೊತೆಗೆ ಇಬ್ಬರು ಪಕ್ಷೇತರ ಶಾಸಕರ ಬೆಂಬಲವೂ ಇದೆ.
8
+ ವಿಜಯನಗರ ಜಿಲ್ಲೆ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕಿ ಲತಾ ಮಲ್ಲಿಕಾರ್ಜುನ್ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಕೆ.ಪಿ.ಪುಟ್ಟಸ್ವಾಮಿ ಬಾಹ್ಯ ಬೆಂಬಲ ನೀಡಿದ್ದಾರೆ. ಬಿಜೆಪಿ 66 ಹಾಗೂ ಜೆಡಿಎಸ್ 19 ಶಾಸಕರನ್ನು ಹೊಂದಿದೆ. ರಾಜ್ಯಸಭೆ ಚುನಾವಣೆಯಲ್ಲಿ ಓರ್ವ ಅಭ್ಯರ್ಥಿ ಗೆಲ್ಲಬೇಕಾದರೆ 45 ಮತಗಳನ್ನು ಪಡೆಯಬೇಕು. ಕಾಂಗ್ರೆಸ್ ಮೂರು ಸ್ಥಾನವನ್ನು ಸುಲಭವಾಗಿ ಗೆಲ್ಲಲಿದೆ.
9
+ ಬಿಜೆಪಿ ಅಭ್ಯರ್ಥಿ 45 ಮತಗಳನ್ನು ಪಡೆದರೆ ಹೆಚ್ಚುವರಿಯಾಗಿ ಉಳಿಯುವ 21 ಮತಗಳು ಹಾಗೂ ಜೆಡಿಎಸ್‍ನ 19 ಮತಗಳು ಸೇರಿದರೆ 40 ಮತಗಳಾಗುತ್ತವೆ. ಜೊತೆಗೆ ಲತಾ ಮಲ್ಲಿಕಾರ್ಜುನ್ ಮತ್ತು ಪುಟ್ಟಸ್ವಾಮಿ ಮನವೊಲಿಸಿದರೆ 42 ಮತಗಳನ್ನು ಮೈತ್ರಿ ಅಭ್ಯರ್ಥಿ ಪಡೆಯುತ್ತಾರೆ. ಇದೇ ಸಂದರ್ಭದಲ್ಲಿ ಕೆಲವು ಅಸಮಾಧಾನಿತ ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡಿದರೆ ಫಲಿತಾಂಶದಲ್ಲಿ ಏನು ಬೇಕಾದರೂ ಆಗಬಹುದು.
10
+ ಸಂಸತ್ತಿನಲ್ಲಿ ಸೊರೆನ್ ಬಂಧನ ವಿಷಯ ಪ್ರಸ್ತಾಪಿಸಲು ಇಂಡಿಯಾ ಒಕ್ಕೂಟ ನಿರ್ಧಾರ
11
+ ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರಿಗೆ ವಿಪ್ ಜಾರಿ ಮಾಡುವಂತಿಲ್ಲ. ಆದರೆ ಮತದಾನದ ವೇಳೆ ಆಯಾ ಪಕ್ಷದ ಚುನಾವಣಾ ಏಜೆಂಟರಿಗೆ ಕಡ್ಡಾಯವಾಗಿ ತೋರಿಸಿ ಮತ ಚಲಾಯಿಸಬೇಕು. ಏಜೆಂಟರಿಗೆ ತೋರಿಸದೆ ಮತ ಹಾಕಿದರೆ ಅದನ್ನು ಅಸಿಂಧುಗೊಳಿಸುವಂತೆ ಏಜೆಂಟರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಬಹುದು. ಈ ಹಿಂದೆ ಜೆಡಿಎಸ್‍ನ ಏಳು ಶಾಸಕರು ಅಡ್ಡ ಮತದಾನ ನಡೆಸುವ ನಿದರ್ಶನವೂ ಇದೆ. ಈಗ ಇದು ಪುನರಾವರ್ತನೆಯಾಗಲಿದೆಯೇ ಎಂಬುದು ಯಕ್ಷ ಪ್ರಶ್ನೆಯಾಗಿದೆ.