8bee7e1dea8e2e1a5cdb9593f73670fa705c05792d96b392ea641f3881363ab5
Browse files- eesanje/url_46_91_6.txt +3 -0
- eesanje/url_46_91_7.txt +7 -0
- eesanje/url_46_91_8.txt +6 -0
- eesanje/url_46_91_9.txt +9 -0
- eesanje/url_46_92_1.txt +9 -0
- eesanje/url_46_92_10.txt +6 -0
- eesanje/url_46_92_11.txt +7 -0
- eesanje/url_46_92_12.txt +12 -0
- eesanje/url_46_92_2.txt +9 -0
- eesanje/url_46_92_3.txt +7 -0
- eesanje/url_46_92_4.txt +7 -0
- eesanje/url_46_92_5.txt +9 -0
- eesanje/url_46_92_6.txt +8 -0
- eesanje/url_46_92_7.txt +7 -0
- eesanje/url_46_92_8.txt +6 -0
- eesanje/url_46_92_9.txt +10 -0
- eesanje/url_46_93_1.txt +4 -0
- eesanje/url_46_93_10.txt +6 -0
- eesanje/url_46_93_11.txt +8 -0
- eesanje/url_46_93_12.txt +15 -0
- eesanje/url_46_93_2.txt +6 -0
- eesanje/url_46_93_3.txt +7 -0
- eesanje/url_46_93_4.txt +5 -0
- eesanje/url_46_93_5.txt +14 -0
- eesanje/url_46_93_6.txt +9 -0
- eesanje/url_46_93_7.txt +15 -0
- eesanje/url_46_93_8.txt +3 -0
- eesanje/url_46_93_9.txt +6 -0
- eesanje/url_46_94_1.txt +7 -0
- eesanje/url_46_94_10.txt +6 -0
- eesanje/url_46_94_11.txt +5 -0
- eesanje/url_46_94_12.txt +9 -0
- eesanje/url_46_94_2.txt +19 -0
- eesanje/url_46_94_3.txt +4 -0
- eesanje/url_46_94_4.txt +6 -0
- eesanje/url_46_94_5.txt +9 -0
- eesanje/url_46_94_6.txt +5 -0
- eesanje/url_46_94_7.txt +7 -0
- eesanje/url_46_94_8.txt +12 -0
- eesanje/url_46_94_9.txt +7 -0
- eesanje/url_46_95_1.txt +10 -0
- eesanje/url_46_95_10.txt +7 -0
- eesanje/url_46_95_11.txt +6 -0
- eesanje/url_46_95_12.txt +10 -0
- eesanje/url_46_95_2.txt +4 -0
- eesanje/url_46_95_3.txt +6 -0
- eesanje/url_46_95_4.txt +7 -0
- eesanje/url_46_95_5.txt +5 -0
- eesanje/url_46_95_6.txt +11 -0
- eesanje/url_46_95_7.txt +15 -0
eesanje/url_46_91_6.txt
ADDED
@@ -0,0 +1,3 @@
|
|
|
|
|
|
|
|
|
1 |
+
ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ಅನಾರೋಗ್ಯದಿಂದ ನಿಧನ
|
2 |
+
ಬೆಂಗಳೂರು,ಜೂ.30-ಮಾಜಿ ಮುಖ್ಯಮಂತ್ರಿವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ (50) ಅನಾರೋಗ್ಯದಿಂದ ನಿಧನವಾಗಿದ್ದಾರೆ.ಅನಾರೋಗ್ಯದಿಂದಾಗಿ ಏಕಾಏಕಿ ಬಳಲಿದ್ದ ಅವರು, ನಿನ್ನೆ ಸಂಜೆ ಅಸ್ವಸ್ಥರಾಗಿದ್ದರು. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
|
3 |
+
ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವೀರಪ್ಪಮೊಯ್ಲಿ ಅವರ ಮೂರನೇ ಪುತ್ರಿಯಾಗಿದ್ದ ಹಂಸ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಿದ್ದರು. ಜನಾನುರಾಗಿ ಎಂಬ ಹೆಸರು ಪಡೆದಿದ್ದ ಅವರು, ತಮದೇ ಆದ ಚೌಕಟ್ಟಿನಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.
|
eesanje/url_46_91_7.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಹೈದರಾಬಾದ್ ಫಿಲಂ ಸಿಟಿ ಮಾದರಿಯಲ್ಲಿ ಕರ್ನಾಟಕದಲ್ಲೂ ಚಿತ್ರನಗರಿ ನಿರ್ಮಾಣ : ಸಿಎಂ ಸಿದ್ದರಾಮಯ್ಯ
|
2 |
+
ಬೆಂಗಳೂರು,ಜೂ.30– ವರನಟ ಡಾ.ರಾಜ್ಕುಮಾರ್ ಅವರ ಕನಸಿನಂತೆ ರಾಜ್ಯದಲ್ಲಿ ಚಿತ್ರನಗರಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದ ಶಿವಾನಂದ ಸರ್ಕಲ್ ಬಳಿ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆಯ ತೆಲಂಗಾಣದ ಹೈದರಾಬಾದ್ನಲ್ಲಿ ಫಿಲಂ ಸಿಟಿ ಇದೆ. ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಚಿತ್ರನಗರಿ ನಿರ್ಮಿಸಬೇಕೆಂಬುದು ಡಾ.ರಾಜ್ಕುಮಾರ್ ಅವರ ಕನಸು. ಬಹಳ ವರ್ಷಗಳಿಂದಲೂ ಇದಕ್ಕಾಗಿ ಪ್ರಯತ್ನಗಳು ನಡೆಯುತ್ತಿವೆ ಎಂದರು.
|
3 |
+
ಈ ಹಿಂದೆ ನಮದೇ ಸರ್ಕಾರ ಮೈಸೂರಿನ ಕಡಕೋಳದ ಹಿಮಾವು ಬಳಿ 100 ಎಕರೆಯನ್ನು ಚಿತ್ರನಗರಿಗಾಗಿ ನೀಡಿದೆ. ಅಲ್ಲಿ ಖಾಸಗಿ ಹಾಗೂ ಸರ್ಕಾರದ ಸಹಭಾಗಿತ್ವದಲ್ಲಿ ಪಿಪಿಪಿ ಮಾದರಿಯಲ್ಲಿ ಸುಸಜ್ಜಿತವಾದ ಫಿಲಂಸಿಟಿ ನಿರ್ಮಿಸಲು ಅಗತ್ಯ ಇರುವ ಎಲ್ಲಾ ಕ್ರಮಗಳನ್ನೂ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
|
4 |
+
ಚಿತ್ರರಂಗದ ಬೆಳವಣಿಗೆಗೆ ಅಗತ್ಯ ಇರುವ ಎಲ್ಲಾ ಸಹಕಾರಗಳನ್ನು ನಮ ಸರ್ಕಾರ ನೀಡಲಿದೆ. ಸಂಕಷ್ಟದ ಸಂದರ್ಭದಲ್ಲೂ ನಿರ್ಮಾಪಕರು ಚಲನಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ಅವರಿಗೆ ಧನ್ಯವಾದಗಳು ಎಂದರು.ಚಲನಚಿತ್ರ ನಿರ್ಮಾಪಕರ ಸಂಘದ ಕಟ್ಟಡಕ್ಕೆ ಈವರೆಗೂ ಸರ್ಕಾರದಿಂದ ಆರ್ಥಿಕ ಸಹಾಯ ಕೇಳಿರಲಿಲ್ಲ. ಈಗಷ್ಟೇ ಕೇಳಿದ್ದಾರೆ. ಸರ್ಕಾರದಿಂದ ಅಗತ್ಯ ನೆರವು ನೀಡಲಾಗುವುದು. ಚಿತ್ರರಂಗದ ಅಭಿವೃದ್ಧಿಗೆ ಮೊದಲಿನಿಂದಲೂ ಸರ್ಕಾರ ನೆರವು ನೀಡಲಾಗುತ್ತಿದೆ. ಮುಂದೆ ಕೂಡ ಅದೇ ರೀತಿಯ ಬೆಂಬಲ ಮುಂದುವರೆಯಲಿದೆ ಎಂದು ಹೇಳಿದರು.
|
5 |
+
ಅನ್ಯಭಾಷೆಗಳ ಮಾದರಿಯಲ್ಲಿ ಕನ್ನಡ ಭಾಷೆಯಲ್ಲೂ ಓಟಿಟಿ ವೇದಿಕೆ ಸೃಷ್ಟಿಸುವ ಬೇಡಿಕೆ ಕುರಿತು ಪರಿಶೀಲಿಸಲಾಗುವುದು. ಸಂಬಂಧಪಟ್ಟವರ ಜೊತೆ ಈ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದರು.ಕನ್ನಡ ಭಾಷೆಯ ಚಿತ್ರಗಳಿಗೆ ನಮ ಸರ್ಕಾರ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲಾಗುವುದು. ರಾಜ್ಯದಲ್ಲಿ ಫಿಲಂಸಿಟಿ ಮಾಡಲೇಬೇಕಿದೆ. ರಾಜ್ಕುಮಾರ್ ಅವರ ಕನಸನ್ನು ನನಸು ಮಾಡುತ್ತೇವೆ ಎಂದು ಹೇಳಿದರು.
|
6 |
+
ಕಳೆದ ಎರಡು ದಿನಗಳಿಂದ ತಾವು ದೆಹಲಿಯಲ್ಲಿದ್ದು, ಪ್ರಧಾನಮಂತ್ರಿಯವರು ನಿನ್ನೆ ಸಂಜೆ ಭೇಟಿಗೆ ಸಮಯ ನೀಡಿದ್ದರು. ಅವರನ್ನು ನಿನ್ನೆ ಭೇಟಿ ಮಾಡಿ ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚಿನ ಸಂಪನೂಲ ನೀಡಬೇಕು ಮತ್ತು ಬಾಕಿ ಇರುವ ಆರ್ಥಿಕ ನೆರವನ್ನು ನೀಡಬೇಕು ಎಂದು ಮನವಿ ನೀಡಿದ್ದೇವೆ. ಜೊತೆಗೆ ನೀರಾವರಿ, ಮೆಟ್ರೋ ಸೇರಿದಂತೆ ಹಲವಾರು ಯೋಜನೆಗಳಿಗೆ ನೆರವು ಕೇಳಿ ಪ್ರಧಾನಿಯವರ ಪ್ರಸ್ತಾವನೆ ಮಂಡಿಸಿದ್ದೇವೆ ಎಂದರು.
|
7 |
+
ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿಯೇ ದೆಹಲಿಯಿಂದ ಆಗಮಿಸಿದ್ದಾಗಿ ಮುಖ್ಯಮಂತ್ರಿ ತಿಳಿಸಿದರು.ರಾಜ್ಯಸಭಾ ಸದಸ್ಯ ಜಗ್ಗೇಶ್, ನಟ ಶಿವರಾಜ್ಕುಮಾರ್, ನಟ ಹಾಗೂ ಸಂಗೀತ ನಿರ್ದೇಶಕ ಸಾಧುಕೋಕಿಲ, ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ಸಚಿವ ಭೈರತಿ ಸುರೇಶ್, ಡಾ.ರಾಜಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
|
eesanje/url_46_91_8.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಸಿಎಂ, ಡಿಸಿಎಂ ಹುದ್ದೆಗಳ ಬಗ್ಗೆ ಯಾರೇ ಚರ್ಚೆ ಮಾಡಿದರೂ ಶಿಸ್ತು ಕ್ರಮ : ‘ಕೈ’ಕಮಾಂಡ್ ಎಚ್ಚರಿಕೆ
|
2 |
+
ಬೆಂಗಳೂರು,ಜೂ.30-ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹುದ್ದೆಗಳ ಬಗ್ಗೆ ರಾಜ್ಯದಲ್ಲಿ ಇನ್ನು ಮುಂದೆ ಯಾರೇ ಚರ್ಚೆ ಮಾಡಿದರೂ ಹೈಕಮಾಂಡ್ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ರವಾನಿಸಿದೆ.ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರವರು ಹೈಕಮಾಂಡ್ ಜೊತೆ ಚರ್ಚೆ ನಡೆಸಿದ್ದು, ಅದರ ಪ್ರಯುಕ್ತ ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಹುದ್ದೆಗಳ ಬಗ್ಗೆ ಇನ್ನು ಮುಂದೆ ಯಾವುದೇ ಸಚಿವರಾಗಲೀ, ಶಾಸಕರಾಗಲೀ ಹೇಳಿಕೆ ನೀಡಿದರೆ ನೋಟೀಸ್ ನೀಡುವುದೂ ಸೇರಿದಂತೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಹೈಕಮಾಂಡ್ ಎಚ್ಚರಿಕೆಯ ಸಂದೇಶ ರವಾನಿಸಿದೆ.
|
3 |
+
ವಿಶೇಷವಾಗಿ ಸಚಿವರು ತಮಗೆ ವಹಿಸಿರುವ ಇಲಾಖೆಗಳ ಜವಾಬ್ದಾರಿಗಳಿಗೆ ಮಾತ್ರವೇ ಮಾಧ್ಯಮಗಳಿಗೆ ಹೇಳಿಕೆ ನೀಡಬೇಕು. ಅದನ್ನು ಹೊರತುಪಡಿಸಿ ಪಕ್ಷದ ವಿಚಾರವಾಗಿ ಅನಗತ್ಯವಾಗಿ ಗೊಂದಲ ಸೃಷ್ಟಿಸುವ ಪ್ರಶ್ನೆ ಮಾಡಿದರೆ ಕಠಿಣ ಕ್ರಮ ಜರುಗಿಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದ್ದಾರೆ.
|
4 |
+
ಮುಖ್ಯಮಂತ್ರಿ ಬದಲಾವಣೆ ಕುರಿತು ಡಿ.ಕೆ.ಶಿವಕುಮಾರ್ ಆಪ್ತರು ಸೇರಿದಂತೆ ಕೆಲ ಸಚಿವರು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಇನ್ನು ಸಿದ್ದರಾಮಯ್ಯ ಅವರ ಬಣ ಪದೇಪದೇ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಬಗ್ಗೆ ಪ್ರಸ್ತಾಪಿಸುತ್ತಲೇ ಬರುತ್ತಿದ್ದಾರೆ. ಇದು ಸಹಜವಾಗಿಯೇ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿಯವರ ನಡುವೆ ಅನಗತ್ಯವಾಗಿ ಗೊಂದಲದ ವಾತಾವರಣ ಸೃಷ್ಟಿಸುತ್ತಿದೆ.
|
5 |
+
ಯಾವುದೇ ಹುದ್ದೆಗಳ ಸೃಷ್ಟಿಯ ಬಗ್ಗೆ ಇನ್ನು ಮುಂದೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ರಾಜ್ಯನಾಯಕರು ಈ ಬಗ್ಗೆ ಹೇಳಿಕೆ ನೀಡಬಾರದು ಎಂದು ತಾಕೀತು ಮಾಡಲಾಗಿದೆ. ಅದನ್ನು ಮೀರಿ ಸಚಿವರು, ಶಾಸಕರು ಹೇಳಿಕೆ ನೀಡುವುದನ್ನು ಮುಂದುವರೆಸಿದರೆ ಶಿಸ್ತು ಸಮಿತಿಗೆ ದೂರನ್ನು ರವಾನಿಸಬೇಕಾಗುತ್ತದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಎಚ್ಚರಿಕೆ ನೀಡಿದ್ದಾರೆ.
|
6 |
+
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪ್ರತ್ಯೇಕವಾಗಿ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. ನಿಮ ಬೆಂಬಲಿಗರಿಗೆ ಸ್ಪಷ್ಟ ಸೂಚನೆ ಕೊಡಿ, ಯಾವುದೇ ಗೊಂದಲದ ಹೇಳಿಕೆ ಬರದಂತೆ ನೋಡಿಕೊಳ್ಳಿ, ನಾಳೆ ಪಕ್ಷ ಶಿಸ್ತು ಉಲ್ಲಂಘಿಸಿದವರ ವಿರುದ್ಧ ಕ್ರಮಕ್ಕೆ ಮುಂದಾದರೆ ಹಿಂಬಾಲಕರು ಎಂಬ ಕಾರಣಕ್ಕೆ ರಕ್ಷಣೆಗೆ ಬರಬೇಡಿ ಎಂದು ತಾಕೀತು ಮಾಡಿದ್ದಾರೆ ಎಂದು ತಿಳಿದುಬಂದಿದೆ.
|
eesanje/url_46_91_9.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕನ್ನಡ ಚಲನಚಿತ್ರರಂಗದ ಬೆಳವಣಿಗೆ ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಲು ಶೀಘ್ರದಲ್ಲೇ ಸಭೆ : ಸಿಎಂ
|
2 |
+
ಬೆಂಗಳೂರು,ಜೂ.30– ಕನ್ನಡ ಚಲನಚಿತ್ರರಂಗದ ಬೆಳವಣಿಗೆ ಹಾಗೂ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಶೀಘ್ರದಲ್ಲೇ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.ಶಿವಾನಂದ ವೃತ್ತದ ಬಳಿ ನಿರ್ಮಿಸಲಾಗಿರುವ ಕನ್ನಡ ಚಲನಚಿತ್ರರಂಗದ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಅವರು, ಚಿತ್ರರಂಗದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಅಗತ್ಯ ಪರಿಹಾರ ಕಂಡುಕೊಳ್ಳಲು ಚಲನಚಿತ್ರ ವಾಣಿಜ್ಯ ಮಂಡಳಿ ಸಮುಖದಲ್ಲಿ ಕಲಾವಿದರು, ನಿರ್ಮಾಪಕರು, ಚಿತ್ರಮಂದಿರಗಳ ಮಾಲೀಕರು ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರಮುಖರ ಜೊತೆ ಚರ್ಚೆ ನಡೆಸಲಾಗುವುದು.
|
3 |
+
ಹಿರಿಯ ಕಲಾವಿದರಿಗೆ ನೆರವು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಸುವುದಾಗಿ ಹೇಳಿದರು.ಸಭೆಯ ದಿನಾಂಕ ಮತ್ತು ಸಮಯದ ಬಗ್ಗೆ ಪ್ರಸ್ತಾಪವಾದಾಗ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸಾಧು ಕೋಕಿಲಾ ಭಾನುವಾರ ಸಭೆ ಕರೆಯಬೇಡಿ ಎಂದು ಸಲಹೆ ನೀಡಿದರು.
|
4 |
+
ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯನವರು ಭಾನುವಾರವೇ ನಿಮಗೆ ಒಳ್ಳೆಯ ದಿನ. ಭಾನುವಾರ ಬೆಳಿಗ್ಗೆ 11 ಗಂಟೆಗೆ ಸಭೆ ಸೇರಿ, 1 ಗಂಟೆಗೆ ಸಭೆ ಮುಗಿಸೋಣ ಎಂದು ಹೇಳಿದರು.ಮಾತು ಮುಂದುವರೆಸಿದ ಮುಖ್ಯಮಂತ್ರಿಗಳು, ತಾಂತ್ರಿಕ ಹಾಗೂ ವಿಜ್ಞಾನದ ಬೆಳವಣಿಗೆಯಿಂದ ಚಲನಚಿತ್ರರಂಗಕ್ಕೆ ತೊಂದರೆಯಾಗಿದೆ. ಕಲಾವಿದರಿಗೆ, ತಂತ್ರಜ್ಞರಿಗೆ ಅವಕಾಶಗಳು ಸಿಗಬೇಕು ಎಂಬ ಕಾರಣಕ್ಕೆ ನಿರ್ಮಾಪಕರು ಚಿತ್ರ ನಿರ್ದೇಶಿಸುತ್ತಿದ್ದಾರೆ. ಲಾಭಕ್ಕಾಗಿ ಚಿತ್ರ ಮಾಡುತ್ತಿಲ್ಲ ಎಂದು ಹೇಳಿದರು.
|
5 |
+
ಕಳೆದ ನಾಲ್ಕು ವರ್ಷಗಳಿಂದಲೂ ಚಲನಚಿತ್ರಗಳಿಗೆ ಪ್ರಶಸ್ತಿಗಳನ್ನು ನೀಡಿಲ್ಲ ಎಂಬ ಮಾಹಿತಿ ಇದೆ. ತಕ್ಷಣವೇ ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ. ಮುಂದಿನ ದಿನಗಳಲ್ಲಿ ಪ್ರಶಸ್ತಿಗಳನ್ನು ಆಯಾ ವರ್ಷವೇ ನೀಡಲಾಗುವುದು ಎಂದು ಭರವಸೆ ನೀಡಿದರು.
|
6 |
+
ಮೊಬೈಲ್ಗಿಂತಲೂ ಚಿತ್ರಮಂದಿರದಲ್ಲಿ ಚಲನಚಿತ್ರ ನೋಡುವ ಅನುಭವ ಸೊಗಸು. ಸಾಮಾಜಿಕ ಕಳಕಳಿಯ ಹಾಗೂ ಸಾಮಾಜಿಕ ಪರಿಣಾಮ ಬೀರುವ ಚಿತ್ರಗಳನ್ನು ನಿರ್ಮಿಸಬೇಕು. ಉತ್ತಮ ಚಿತ್ರಗಳನ್ನು ನಿರ್ಮಿಸಿದರೆ ಜನ ನೋಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಫಿಲಂಸಿಟಿ ನಿರ್ಮಾಣಕ್ಕೆ ಶೀಘ್ರವೇ ಶಂಕುಸ್ಥಾಪನೆ ನೆರವೇರಿಸಲಾಗುವುದು. ಈಗಾಗಲೇ ಜಮೀನು ಹಸ್ತಾಂತರಿಸಲಾಗಿದೆ. ಅದಕ್ಕೆ ಯಾವುದೇ ತೊಡಕುಗಳಿಲ್ಲ. ಪಿಪಿಪಿ ಮಾದರಿಯಲ್ಲಿ ಚಿತ್ರನಗರಿ ನಿರ್ಮಿಸುವುದಾಗಿ ಹೇಳಿದರು.
|
7 |
+
ಚಲನಚಿತ್ರಗಳ ಸಂಖ್ಯೆ ಹೆಚ್ಚಾಗುತ್ತಿದೆ, ಚಿತ್ರಮಂದಿರಗಳ ಸಂಖ್ಯೆ ಕಡಿಮೆಯಾಗುತ್ತಿದೆ. ರಾಜ್ಯಸರ್ಕಾರ ಚಿತ್ರರಂಗದ ಬೆಳವಣಿಗೆಗೆ ನೆರವು ನೀಡಲು ಹಿಂದೆ ಬೀಳುವುದಿಲ್ಲ. ನೂತನ ಕಟ್ಟಡ ಸೇರಿದಂತೆ ಎಲ್ಲಾ ರೀತಿಯ ಬೆಂಬಲ ನೀಡುತ್ತೇನೆ ಎಂದ ಅವರು, ರಾಜ್ಯದಲ್ಲಿ ಕನ್ನಡದ ವಾತಾವರಣ ನಿರ್ಮಿಸಬೇಕು ಎಂದು ಕರೆ ನೀಡಿದರು.
|
8 |
+
ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷ ಸಾ.ರಾ.ಗೋವಿಂದು ಅವರು, ಕೇರಳದ ಮಾದರಿಯಲ್ಲಿ ರಾಜ್ಯಸರ್ಕಾರವೇ ಓಟಿಟಿ ವೇದಿಕೆ ನಿರ್ಮಾಣ ಮತ್ತು ನಿಯಮಾವಳಿಗಳನ್ನು ರಚಿಸಬೇಕು. ವಾರ್ತಾ ಇಲಾಖೆಯಿಂದ ಆನ್ಲೈನ್ ಟಿಕೆಟ್ ಬುಕ್ಕಿಂಗ್ಗೆ 45 ಲಕ್ಷ ರೂ. ವೆಚ್ಚದಲ್ಲಿ ಯೋಜನೆ ತಯಾರಿಸಿ ಚಾಲನೆ ನೀಡಲಾಗಿತ್ತು. ಆದರೆ ಇದ್ದಕ್ಕಿದ್ದಂತೆ ಅದು ಸ್ಥಗಿತಗೊಂಡಿದೆ. ಅದಕ್ಕೆ ಪುನರ್ ಚಾಲನೆ ನೀಡಬೇಕು ಎಂದು ಮನವಿ ಮಾಡಿದರು.
|
9 |
+
ಸಚಿವ ಭೈರತಿ ಸುರೇಶ್, ಶಾಸಕ ರಿಜ್ವಾನ್ ಹರ್ಷದ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸುರೇಶ್, ನಟ ಶಿವರಾಜ್ಕುಮಾರ್, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ರಾಜ್ಯಸಭಾ ಸದಸ್ಯರೂ ಆಗಿರುವ ನಟ ಜಗ್ಗೇಶ್, ನಿರ್ಮಾಪಕರಾದ ಬಾಮಾ ಹರೀಶ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
|
eesanje/url_46_92_1.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ನ್ಯಾಯ ಪಾಲಿಸಿದರೆ ಅದು ನಿಮನ್ನು ರಕ್ಷಿಸುತ್ತೆ : ಡಿಜಿಪಿ ಕಮಲ್ಪಂಥ್
|
2 |
+
ಬೆಂಗಳೂರು, ಜೂ.29-ಯಾವಾಗಲೂ ನ್ಯಾಯವನ್ನು ಕಾಪಾಡಬೇಕು, ನ್ಯಾಯವನ್ನು ಎತ್ತಿ ಹಿಡಿದರೆ ಆ ನ್ಯಾಯ ನಿಮನ್ನು ಕಾಪಾಡುತ್ತದೆ ಎಂದು ಗೃಹರಕ್ಷಕ ದಳ ಮತ್ತು ಅಗ್ನಿಶಾಮಕ ದಳದ ಡಿಜಿಪಿ ಕಮಲ್ಪಂಥ್ ಇಂದಿಲ್ಲಿ ತಿಳಿಸಿದರು.ಕೋರಮಂಗಲದ ಕೆಎಸ್ಆರ್ಪಿ ಪರೇಡ್ ಮೈದಾನದಲ್ಲಿ ಹಮಿಕೊಂಡಿದ್ದ ಬೀಳ್ಕೊಡುಗೆ ಕವಾಯತಿನಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.
|
3 |
+
ಧರ್ಮೋ ರಕ್ಷತಿ ರಕ್ಷಿತಃ ಅಂದರೆ ನ್ಯಾಯವನ್ನು ಕಾಪಾಡಿದರೆ ಆ ನ್ಯಾಯ ನಿಮನ್ನು ಕಾಪಾಡುತ್ತದೆ. ನ್ಯಾಯ ಕೊಂದರೆ ಅದು ನಿಮನ್ನು ಕೊಲ್ಲುತ್ತದೆ ಎಂದು ವಿವರವಾಗಿ ತಿಳಿಸಿದರು.ಕರ್ನಾಟಕ ರಾಜ್ಯ ಪೊಲೀಸ್ಗೆ ಇಡೀ ದೇಶದಲ್ಲೇ ಉತ್ತಮವಾದ ಹೆಸರಿದೆ. ಹಾಗಾಗಿ ನೀವೆಲ್ಲರೂ ಅದಕ್ಕೆ ಬದ್ಧರಾಗಿ, ಜವಾಬ್ದಾರಿಯಿಂದ ಕರ್ತವ್ಯ ನಿಭಾಯಿಸಿ ಎಂದರು.
|
4 |
+
ಪೊಲೀಸ್ ಇಲಾಖೆಗೆ ತರುಣರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಇಲಾಖೆಯನ್ನು ಅವರು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತಾರೆಂಬ ನಂಬಿಕೆ ನನಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
|
5 |
+
1990ರಲ್ಲಿ ಕರ್ನಾಟಕ ಪೊಲೀಸ್ ಕೇಡರ್ ಅಧಿಕಾರಿಯಾಗಿ ಆಯ್ಕೆಯಾಗಿ ಕರ್ನಾಟಕ ಪೊಲೀಸ್ ಸೇವೆಗೆ ಬಂದಾಗ ರಾಜ್ಯದ ಪರಿಸ್ಥಿತಿ ಹಾಗೂ ದೇಶದ ಪರಿಸ್ಥಿತಿ ಹೇಗಿತ್ತು ಎಂಬುವುದನ್ನು ವಿವರಿಸಿದ ಅವರು ನಾನು ಪೊಲೀಸ್ ಸೇವೆಗೆ ಸೇರುವುದು ನಮ ತಾಯಿಗೆ ಇಷ್ಟವಿರಲಿಲ್ಲ. ನಾನು ಅಖಿಲ ಭಾರತ ಪೊಲೀಸ್ ಸೇವೆಗೆ ಆಯ್ಕೆಯಾದಾಗ ಬಹಳ ಆತಂಕ ಇತ್ತು. ಏಕೆಂದರೆ ನನಗೆ ಭಾಷೆಯ ಸಮಸ್ಯೆಯಾಗಿತ್ತು.
|
6 |
+
ನಾನು ಹಿರಿಯ ಹಾಗೂ ಕಿರಿಯ ಅಧಿಕಾರಿಗಳು, ರಾಜ್ಯದ ಜನರಿಂದ ಭಾಷೆ ಕಲಿತೆ. ಕರ್ನಾಟಕ ರಾಜ್ಯದ ಜನರು ನನಗೆ ಸಹಕಾರ ನೀಡಿದರು ಎಂದು ಸರಿಸಿದರು.ನಾನು ಪೊಲೀಸ್ ಇಲಾಖೆಗೆ ಸೇರಿದ ಸಂದರ್ಭದಲ್ಲಿ ಕೆಎಸ್ಆರ್ಪಿ ತುಕಡಿಗಳು ಹೇಗೆ ಕರ್ತವ್ಯ ನಿರ್ವಹಿಸಿದರು ಎಂಬುದನ್ನು ವಿವರಿಸಿದ ಅವರು, ಮೆಣಸಿನ ಹಾಡ್ಯದಲ್ಲಿ ನಡೆದ ನಕ್ಸಲ್ ಕಾರ್ಯಾಚರಣೆ ವೇಳೆ 600 ಮಂದಿ ಸಿಬ್ಬಂದಿ ಜೊತೆ ಆ ಸ್ಥಳಕ್ಕೆ ಹೋಗಿ ಸಂಜೆಯೇ ಅಲರ್ಟ್ ಆದೆವು. ಬೆಳಗಾಗುತ್ತಿದ್ದಂತೆ ಕಾರ್ಯಾಚರಣೆ ಆರಂಭಿಸಿದಾಗ ಬಹಳ ಆತಂಕ ಇತ್ತು. ಹಗಲಿರುಳು ಕರ್ತವ್ಯ ನಿಭಾಯಿಸಿದೆವು.ಏಕೆಂದರೆ ನಾವು ಒಬ್ಬ ನಾಗರಿಕನಿಗೂ ತೊಂದರೆಯಾಗದಂತೆ ಕಾರ್ಯಾಚರಣೆ ಮಾಡಬೇಕಾಗಿತ್ತು ಎಂದು ಅಂದಿನ ಘಟನೆಯನ್ನು ಮೆಲುಕು ಹಾಕಿದ್ದರು.
|
7 |
+
ಕರ್ನಾಟಕದಲ್ಲಿನ ಸಾಮ್ಯತೆ, ಸೌಜನ್ಯತೆ, ಸಂಸ್ಕೃತಿ, ಸಭ್ಯತೆ ಬೇರೆಲ್ಲೂ ಇಲ್ಲ. ರಾಜ್ಯದ ಜನತೆ ನಮಗೆ ನೀಡಿದ ಪ್ರೀತಿ, ವಿಶ್ವಾಸದಿಂದ ಉತ್ತಮ ಸೇವೆ ಸಲ್ಲಿಸಲು ಅವಕಾಶವಾಯಿತು ಎಂದರು.ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿದಾಗ ಇದ್ದಂತಹ ಸಮಸ್ಯೆಯನ್ನು ಎಲ್ಲಾ ಸಿಬ್ಬಂದಿಯ ಸಹಕಾರದಿಂದ ಬಗೆಹರಿಸಲು ಸಾಧ್ಯವಾಯಿತು. ಒಬ್ಬ ವ್ಯಕ್ತಿಯಿಂದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ. ಕಾನ್ಸ್ಟೆಬಲ್ನಿಂದ ಎಸ್ಪಿ ವರೆಗೂ ತಂಡವಾಗಿ ಕೆಲಸ ಮಾಡಿದಾಗ ಮಾತ್ರ ಉತ್ತಮ ರೀತಿಯಲ್ಲಿ ಆ ಸಮಸ್ಯೆ ಬಗೆಹರಿಯುತ್ತದೆ. ನಾನು ಎನ್ನದೇ ಪ್ರತಿಯೊಬ್ಬರೂ ಇಲಾಖೆಯಲ್ಲಿ ಒಗ್ಗೂಡಿ ಕರ್ತವ್ಯ ನಿಭಾಯಿಸಬೇಕೆಂದರು.
|
8 |
+
ನಾನು ಸಿದ್ಧಾಂತ ಇಟ್ಟುಕೊಂಡು 34 ವರ್ಷ ಸುದೀರ್ಘವಾಗಿ ಕರ್ನಾಟಕದಲ್ಲಿ ಸೇವೆ ಸಲ್ಲಿಸಿರುವುದು ತೃಪ್ತಿ ತಂದಿದೆ. ಸಿಬಿಐನಲ್ಲೂ ಕರ್ತವ್ಯ ನಿಭಾಯಿಸಿದೆ. ನ್ಯಾಯ, ನೀತಿ, ಪ್ರಾಮಾಣಿಕತೆಯಿಂದ ಕೆಲಸ ಮಾಡಲು ನನಗೆ ಎಲ್ಲಾ ಹಿರಿಯ- ಕಿರಿಯ ಅಧಿಕಾರಿಗಳು ಸಹಕಾರ ಕೊಟ್ಟರು. ರಾಜ್ಯದ ಜನರು ಒಳ್ಳೆಯವರು. ಅವರ ಪ್ರೀತಿ- ವಿಶ್ವಾಸದಿಂದ ನಾನು ಉತ್ತಮ ಸೇವೆ ಸಲ್ಲಿಸಲು ಅವಕಾಶವಾಯಿತು.
|
9 |
+
ಸರ್ಕಾರ ನನಗೆ ಹಲವಾರು ಜವಾಬ್ದಾರಿಗಳನ್ನು ಕೊಟ್ಟಿತು. ಆ ಜವಾಬ್ದಾರಿಗಳನ್ನು ನಾನು ಪ್ರಾಮಾಣಿಕತೆಯಿಂದ ನಿಭಾಯಿಸಿದ್ದೇನೆಂಬ ತೃಪ್ತಿ ನನಗಿದೆ.ಇಷ್ಟು ವರ್ಷ ಸುದೀರ್ಘ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ರಾಜ್ಯದ ಜನತೆಗೆ ಹಾಗೂ ಇಲಾಖೆಯ ಎಲ್ಲಾ ಹಿರಿಯ- ಕಿರಿಯ ಅಧಿಕಾರಿಗಳಿಗೆ ವಂದನೆ ಸಲ್ಲಿಸುವುದಾಗಿ ಕಮಲ್ಪಂಥ್ ಹೇಳಿದರು.
|
eesanje/url_46_92_10.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಬೌದ್ಧ ಸಮುದಾಯದ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಲಿದೆ : ಸಚಿವ ಜಮೀರ್ ಅಹಮದ್
|
2 |
+
ಮೈಸೂರು, ಜೂ.29-ರಾಜ್ಯ ಸರ್ಕಾರ ಬೌದ್ಧ ಸಮುದಾಯದ ಜತೆಯಿದ್ದು, ಅವರ ಬೇಡಿಕೆಗಳಿಗೆ ಸ್ಪಂದಿಸಲಿದೆ ಎಂದು ಅಲ್ಪಸಂಖ್ಯಾ ತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
|
3 |
+
ಸರಸ್ವತಿಪುರಂನಲ್ಲಿ ಮಹಾಬೋಧಿ ಮೈತ್ರಿ ಮಂಡಲವು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ನೀಡಲಾದ ಒಂದು ಕೋಟಿ ರೂ. ಅನುದಾನದಲ್ಲಿ ನಿರ್ಮಿಸಲಾದ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದ ಅವರು, ಬೌದ್ಧ ಸಮುದಾಯವು ರಾಜ್ಯದಲ್ಲಿ ನೆಲೆಸಿರುವುದರ ಜತೆಗೆ ಶಿಕ್ಷಣ ಕ್ಷೇತ್ರದಲ್ಲೂ ಉತ್ತಮ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಶಿಕ್ಷಣಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಯಾವುದೇ ರೀತಿಯ ನೆರವು ನೀಡಲು ಸಿದ್ಧ ಎಂದು ಹೇಳಿದರು.
|
4 |
+
ಇದೇ ಸಂದರ್ಭದಲ್ಲಿ ಮಹಾಬೋಧಿ ಮೈತ್ರಿಮಂಡಲದ ಸರಸ್ವತಿಪುರಂ, ಹುಣಸೂರು, ಬೈಲಕುಪ್ಪೆ, ಟಿ.ನರಸೀಪುರ ಶಾಖೆಗಳ ಶಿಕ್ಷಣ ಸಂಸ್ಥೆ ಕಟ್ಟಡ ನಿರ್ಮಾಣ ಹಾಗೂ ಇತರೆ ಸೌಲಭ್ಯಕ್ಕೆ ನೀಡಲಾದ 1.62 ಕೋಟಿ ರೂ. ಅನುದಾನದ ಚೆಕ್ಅನ್ನು ಸಚಿವರು ಖುದ್ದು ಬೆಂಗಳೂರಿನಿಂದ ಬಂದು ಆನಂದ ಬಂತೇಜಿ ಅವರಿಗೆ ಹಸ್ತಾಂತರ ಮಾಡಿದರು.
|
5 |
+
ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಅಗತ್ಯ ಲ್ಯಾಪ್ಟಾಪ್ ಖರೀದಿಸಲು 2 ಲಕ್ಷ ನೆರವನ್ನು ವೈಯಕ್ತಿಕವಾಗಿ ನೀಡಿದರು.ಎನ್ಸಿಸಿ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಪಡೆಯಲು ಇಲಾಖೆಯಿಂದ ನೆರವು ಕೊಡಿಸಲಾಗುವುದು. ಸಾಧ್ಯವಾಗದಿದ್ದರೆ ವೈಯಕ್ತಿಕ ವಾಗಿ ನೀಡಲಾಗುವುದು ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಸಚಿವರಿಗೆ ಗೌರವ ಪ್ರಶಸ್ತಿ ನೀಡಿ ಸನಾನಿಸಲಾಯಿತು.
|
6 |
+
ಆನಂದ ಬಂತೇಜಿ, ಇತ್ತೀಕಾ ಮಹಾಧೀರಾ, ಸಿದ್ಧಾರ್ಥ್ ವಾಟ್ಸಾಯನ್ ಉಪಸ್ಥಿತರಿದ್ದರು.ಗುರುಪುರ ಕ್ಯಾಂಪ್ಗೆ ಭೇಟಿ : ಸಚಿವ ಜಮೀರ್ ಅಹಮದ್ ಖಾನ್, ಹುಣಸೂರು ಗುರುಪುರ ಕ್ಯಾಂಪ್ನ ಗುಡ್ ಮೆಡ್ ತಾಂತ್ರಿಕ ವಿಶ್ವವಿದ್ಯಾಲಯ ಸೊಸೈಟಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಅಲ್ಲಿನ ಬೌದ್ಧ ಬಿಕ್ಕುಗಳೊಂದಿಗೆ ಸಂವಾದ ನಡೆಸಿದರು.
|
eesanje/url_46_92_11.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಗುಜರಾತ್ ಗಿಫ್ಟ್ ಸಿಟಿ ಮಾದರಿಯಲ್ಲಿ ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್ ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
|
2 |
+
ಬೆಂಗಳೂರು, ಜೂ.29-ಅಹಮದಾಬಾದ್ ಸಬರಮತಿ ದಂಡೆಯಲ್ಲಿ ಗುಜರಾತ್ ಇಂಟರ್ ನ್ಯಾಷನಲ್ ಫೈನಾನ್ಸ್ ಟೆಕ್-ಸಿಟಿ (ಗಿಫ್ಟ್ ಸಿಟಿ) ಮಾದರಿಯಲ್ಲಿ ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್ ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಐಟಿ, ಎಲೆಕ್ಟ್ರಾನಿಕ್ಸ್ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ರನ್ನು ಭೇಟಿ ಮಾಡಿ ಹಲವು ಪ್ರಸ್ತಾವನೆಗಳನ್ನು ಸಲ್ಲಿಸಿದ್ದಾರೆ.
|
3 |
+
ಕರ್ನಾಟಕ ಐಟಿ, ಬಿಟಿ, ಏರೋಸ್ಪೇಸ್, ಆಟೋಮೋಟಿವ್, ಜವಳಿ ಮತ್ತು ಭಾರೀ ಕೈಗಾರಿಕಾ ಕ್ಷೇತ್ರದಲ್ಲಿ ಆರ್ಥಿಕವಾಗಿ ಅಭೂತಪೂರ್ವ ಬೆಳವಣಿಗೆ ಕಾಣುತ್ತಿದೆ. ರಾಜ್ಯ ಈ ಕ್ಷೇತ್ರಗಳ ಅಭಿವೃದ್ಧಿಗೆ ಸೂಕ್ತ ಸ್ಥಳವಾಗಿದ್ದು, ಹೂಡಿಕೆಗೆ ಅಗಾಧ ಅವಕಾಶವಿದೆ. ಟೆಕ್ ಹಬ್ ಮತ್ತು ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಎಂದು ಬೆಂಗಳೂರು ಗುರುತಿಸಿಕೊಂಡಿದೆ.
|
4 |
+
ಬೆಂಗಳೂರು ಸೆಮಿಕಂಡಕ್ಟರ್ ಮತ್ತು ಎಲೆಕ್ಟ್ರಾನಿಕ್ಸ್ ಡೊಮೇನ್, ಫಿನ್ಟೆಕ್ ಸ್ಪೇಸ್, ಎಂಟಪ್ರೈರ್ಸ್ ಟೆಕ್, ಇ-ಕಾಮರ್ಸ್ ಮತ್ತು ಎಡ್-ಟೆಕ್ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ. ಗಿಫ್ಟ್ ಸಿಟಿ ನಿರ್ಮಾಣದಿಂದ ಆರ್ಥಿಕ ಬೆಳವಣಿಗೆಗೆ ಉತ್ತೇಜನ ದೊರೆಯಲಿದ್ದು, ಹಲವಾರು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಯತೇಚ್ಚವಾಗಿ ವಿದೇಶಿ ಹೂಡಿಕೆಗಳೂ ಬರಲಿವೆ. ಇದಕ್ಕಾಗಿ ಮುಂದಿನ ಬಜೆಟ್ನಲ್ಲಿ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.
|
5 |
+
4.5 ಶತಕೋಟಿ ಡಾಲರ್ ಮೌಲ್ಯದ ಎಲೆಕ್ಟ್ರಾನಿಕ್ ರಫ್ತುಗಳೊಂದಿಗೆ ರಾಜ್ಯವು ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ, ಶೇ.46ರಷ್ಟು ರಾಷ್ಟ್ರೀಯ ಪಾಲನ್ನು ಹೊಂದಿದ್ದು, ಭಾರತದ ಕೈಗಾರಿಕಾ ಉತ್ಪಾದನೆಗೆ ಶೇ.10ರಷ್ಟು ಕೊಡುಗೆ ನೀಡುತ್ತಿದೆ.
|
6 |
+
300 ಕ್ಕೂ ಹೆಚ್ಚು ರಫ್ತು-ಆಧಾರಿತ ಉತ್ಪಾದನಾ ಘಟಕಗಳಿಗೆ ನೆಲೆಯಾಗಿದೆ, ಭಾರತದಲ್ಲಿ ಕರ್ನಾಟಕವು ಅತಿದೊಡ್ಡ ಚಿಪ್ ವಿನ್ಯಾಸ ಕೇಂದ್ರವನ್ನು ಹೊಂದಿದೆ. 100ಕ್ಕೂ ಹೆಚ್ಚು ಫ್ಯಾಬಲ್ಲೆಸ್ ಚಿಪ್ ವಿನ್ಯಾಸ ಕೇಂದ್ರಗಳನ್ನು ಹೊಂದಿದೆ. ಭಾರತದಲ್ಲಿ ಏರೋಸ್ಪೇಸ್ ಮತ್ತು ರಕ್ಷಣಾ ಸಾಧನಗಳ ಪ್ರಮುಖ ತಯಾರಕ ಸ್ಥಾನವಾಗಿದೆ ಎಂದು ವಿವರಿಸಿದ್ದಾರೆ.
|
7 |
+
ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡುವ ಕೈಗಾರಿಕೆ ಹಾಗೂ ಕಂಪನಿಗಳಿಗೆ ರಾಜ್ಯ ಸರ್ಕಾರ ಭೂಮಿಯ ಮೇಲೆ ಶೇ.25ರಷ್ಟು ಬಂಡವಾಳ ಸಬ್ಸಿಡಿ, ಯಂತ್ರೋಪಕರಣಗಳ ಮೇಲೆ ಶೇ.20ರಷ್ಟು ಬಂಡವಾಳ ಸಬ್ಸಿಡಿ, ಸ್ಟ್ಯಾಂಪ್ ಡ್ಯೂಟಿ ಮತ್ತು ನೋಂದಣಿ ಶುಲ್ಕಗಳು, ಭೂ ಪರಿವರ್ತನೆ ಮತ್ತು ವಿದ್ಯುತ್ ಸುಂಕದ ಮರುಪಾವತಿ ಸೇರಿ ಹಲವು ಸೌಲಭ್ಯಗಳನ್ನು ನೀಡುತ್ತಿದೆ ಎಂದು ತಿಳಿಸಿದ್ದಾರೆ.
|
eesanje/url_46_92_12.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸಿಎಂ, ಡಿಸಿಎಂ ಹುದ್ದೆಯ ವಿವಾದದ ಕುರಿತು ಡಿಕೆಶಿ ಖಡಕ್ ವಾರ್ನಿಂಗ್
|
2 |
+
ಬೆಂಗಳೂರು, ಜೂ.29-ಉಪಮುಖ್ಯಮಂತ್ರಿ ಹುದ್ದೆಯೂ ಇಲ್ಲ, ಮುಖ್ಯಮಂತ್ರಿ ಬದಲಾವಣೆ ಬಗ್ಗೆಯೂ ಚರ್ಚೆ ಇಲ್ಲ. ನಾನು ಮಾಡಿರುವ ಕೆಲಸಕ್ಕೆ ಪಕ್ಷ ತೀರ್ಮಾನ ಮಾಡಲಿದೆ. ನನಗೆ ಯಾರ ಶಿಫಾರಸು ಅಗತ್ಯ ಇಲ್ಲ. ಸಿಎಂ ಹಾಗೂ ಡಿಸಿಎಂ ಹುದ್ದೆಗಳ ಬಗ್ಗೆ ಇನ್ನು ಮುಂದೆ ಯಾರೂ ಬಹಿರಂಗ ಹೇಳಿಕೆ ನೀಡಬಾರದು. ಇಲ್ಲಿಗೇ ಮುಗಿಯಬೇಕು, ಇನ್ನೂ ಮುಂದೆಯೂ ಚರ್ಚೆ ಮುಂದುವರೆದರೆ ಪಕ್ಷದವರಿಗೆ ನೋಟೀಸ್ ನೀಡಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
|
3 |
+
ನಗರದ ತಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಇಲ್ಲ, ಮುಖ್ಯಮಂತ್ರಿ ಪ್ರಶ್ನೆ ಇಲ್ಲ. ದಯವಿಟ್ಟು ನಾನು ಮನವಿ ಮಾಡುತ್ತೇನೆ. ನನಗೆ ಯಾರ ಶಿಫಾರಸಿನ ಅವಶ್ಯಕತೆ ಇಲ್ಲ. ನಾವು ಮಾಡಿರುವ ಕೆಲಸಕ್ಕೆ ನಮ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.
|
4 |
+
ಪಕ್ಷದ ಹಿತದೃಷ್ಟಿಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಾನು ಕುಳಿತುಕೊಂಡು ಚರ್ಚೆ ಮಾಡಿ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಇನ್ನೂ ಮುಂದೆ ಈ ವಿಷಯವಾಗಿ ಶಾಸಕರಾಗಲಿ, ಸಚಿವರಾಗಲಿ, ಸ್ವಾಮಿಗಳಾಗಲಿ ಮಾತನಾಡುವ ಅವಶ್ಯಕತೆ ಇಲ್ಲ. ಅವರ ಆಶೀರ್ವಾದ ಇದ್ದರೆ ಒಳಗಿನಿಂದಲೇ ಹರಸಲಿ ಸಾಕು, ಅದನ್ನ ಬಿಟ್ಟು ಇನ್ನು ಮುಂದೆ ಚರ್ಚೆ ಮಾಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.
|
5 |
+
ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಹುದ್ದೆ ಕುರಿತು ಯಾವ ಮಂತ್ರಿಯೂ ಬಹಿರಂಗವಾಗಿ ಚರ್ಚೆ ಮಾಡಬೇಕಾಗಿಲ್ಲ. ನಮ ಪಕ್ಷದ ಶಾಸಕರೂ ಕೂಡ ಪ್ರಸ್ತಾಪ ಮಾಡಬಾರದು, ಹಾಗೂ ಮುಂದುವರೆದರೆ ಎಐಸಿಸಿ ಅಥವಾ ತಾವು ವಿಧಿ ಇಲ್ಲದೆ ನೋಟೀಸ್ ನೀಡಬೇಕಾಗುತ್ತದೆ. ಪಕ್ಷಕ್ಕೆ ಶಿಸ್ತು ಮುಖ್ಯ. ಶಿಸ್ತಿಲ್ಲದೆ ಯಾರೂ ಇಲ್ಲ. ಪಕ್ಷವನ್ನು ಎಷ್ಟು ಶ್ರಮ ಪಟ್ಟಿದ್ದೇವೆ, ಏನೆಲ್ಲಾ ಮಾಡಿದ್ದೇವೆ ಎಂಬುದು ನಮಗೆ ಗೊತ್ತಿದೆ. ಇವತ್ತು ಇವರ್ಯಾರೂ ಮಾತನಾಡುವ ಅವಶ್ಯಕತೆ ಇಲ್ಲ ಎಂದು ತಿರುಗೇಟು ನೀಡಿದರು.
|
6 |
+
ದೆಹಲಿಯಲ್ಲಿ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಲಿಫ್್ಟನಲ್ಲಿ ಹೋಗುವಾಗ ವಿಶ್ವ ಒಕ್ಕಲಿಗರ ಸಂಸ್ಥಾನದ ಶ್ರೀ ಚಂದ್ರಶೇಖರ ಸ್ವಾಮೀಜಿ ಅವರ ಹೇಳಿಕೆ ಬಗ್ಗೆ ಚರ್ಚೆ ಮಾಡಿದ್ದು, ಹೇಳಿಕೊಟ್ಟು ಹೇಳಿಸಿದ್ದಾರೆ ಎಂದು ಮುಖ್ಯಮಂತ್ರಿ ಹೇಳುತ್ತಾರೆ, ಅದಕ್ಕೆ ಗೃಹ ಸಚಿವರು ಹೌದು ಎಂದು ತಲೆಯಾಡಿಸುತ್ತಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಮಗೆ ಗೊತ್ತಿಲ್ಲ. ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಬಾಯಿಗೆ ಬೀಗ ಹಾಕಿಕೊಂಡು ಇದ್ದರೆ ಪಕ್ಷಕ್ಕೆ ಒಳ್ಳೆಯದಾಗುತ್ತದೆ ಎಂದು ಸಿಟ್ಟಾಗಿ ಹೇಳಿದರು.
|
7 |
+
ಈವರೆಗೂ ಯಾವ ಸ್ವಾಮೀಜಿಯವರೂ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಹು���್ದೆ ಕುರಿತು ಹೇಳಿಕೆ ನೀಡಿರಲಿಲ್ಲ. ಈಗಷ್ಟೇ ಸ್ವಾಮೀಜಿ ಮಾತನಾಡಿದ್ದಾರೆ. ನಮ ರಾಜಕಾರಣದ ಸುದ್ದಿಗೆ ಮಠಾಧೀಶರು ಬರುವುದು ಬೇಡ ಎಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದರು.ದೆಹಲಿಯಲ್ಲಿ ನಡೆದ ಸಂಸದರ ಸಭೆಯ ಕುರಿತು ವಿವರಣೆ ನೀಡಿದ ಡಿ.ಕೆ.ಶಿವಕುಮಾರ್ ಅವರು, ಇಬ್ಬರು ಸಂಸದರು ಖಾಸಗಿ ಕಾರ್ಯಕ್ರಮದಿಂದಾಗಿ ಸಭೆಯಲ್ಲಿ ಭಾಗವಹಿಸಿರಲಿಲ್ಲ.
|
8 |
+
ಉಳಿದಂತೆ ಎಲ್ಲರೂ ಭಾಗವಹಿಸಿದ್ದರು. ರಾಜಕಾರಣ ಬದಿಗಿಟ್ಟು ರಾಜ್ಯದ ಅಭಿವೃದ್ಧಿಗೆ ಸಹಕರಿಸುವುದಾಗಿ ತಿಳಿಸಿದ್ದಾರೆ. ರಾಜ್ಯದ ಸಚಿವರು, ಅಽಕಾರಿಗಳು ದೆಹಲಿಗೆ ಬಂದು ತಮ್ಮನ್ನು ಭೇಟಿ ಮಾಡಿದರೆ ಕೇಂದ್ರದಿಂದ ಅಗತ್ಯ ನೆರವು ಕೊಡಿಸುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದು ಹೇಳಿದರು.
|
9 |
+
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎರಡು ಗಂಟೆ ಸಭೆಯಲ್ಲಿ ಭಾಗವಹಿಸಿದ್ದು ದೊಡ್ಡ ಸಾಧನೆ. ಭದ್ರಾ ಮೇಲ್ದಂಡೆ ಯೋಜನೆಗೆ ಈ ಮೊದಲು ಘೋಷಿಸಿದ್ದ 5300 ಕೋಟಿ ರೂಪಾಯಿಗಳ ವಿಶೇಷ ಅನುದಾನದ ವಿಷಯದಲ್ಲಿ ತಾವು ಈಗಲೂ ಬದ್ಧ ಎಂದು ಸಚಿವೆ ಭರವಸೆ ನೀಡಿದ್ದಾರೆ. ಆದರೆ ಕೆಲ ತಾಂತ್ರಿಕ ಸಮಸ್ಯೆ ಇದೆ ಎಂದು ಹೇಳಿದ್ದಾರೆ. ಈವರೆಗೂ ಅದರ ಬಗ್ಗೆ ಮಾಹಿತಿ ನೀಡಿರಲಿಲ್ಲ. ಕೇಂದ್ರ ಸರ್ಕಾರಕ್ಕೆ ಅಗತ್ಯ ಇರುವ ರೀತಿಯಲ್ಲೆಲ್ಲಾ ಬರೆದುಕೊಟ್ಟಿದ್ದೇವೆ. ಮುಂದೆ ಕೂಡ ಅಗತ್ಯ ಮಾಹಿತಿ ಒದಗಿಸುತ್ತೇವೆ ಎಂದು ಹೇಳಿದರು.
|
10 |
+
ಇನ್ನೂ ಮಹದಾಯಿ ವಿಚಾರದಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಯವರು ಸಂಸದರಾಗಿ ದೆಹಲಿಗೆ ಹೋಗಿದ್ದಾರೆ. ಅವರಿಗೆ ಎಲ್ಲಾ ಮಾಹಿತಿಗಳು ಬೆರಳ ತುದಿಯಲ್ಲಿ ಇದೆ. ಅವರು ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಚರ್ಚೆ ಮಾಡಿ ಇತ್ಯರ್ಥ ಪಡಿಸಬಹುದು ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
|
11 |
+
ನಿನ್ನೆ ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವರನ್ನು ಭೇಟಿ ಮಾಡಿದ್ದೆವು. ಅವರು ಎಲ್ಲೆಲ್ಲಿ ಅಡಚಣೆ ಇದೆ ಎಂದು ತಿಳಿಸಿದ್ದಾರೆ. ಕೆಲವು ಕಡೆ ರೈತರು ಮಾರ್ಗ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ. ಇನ್ನೂ ಕೆಲವು ಕಡೆ ದೇವಸ್ಥಾನಗಳು ಅಡ್ಡ ಬರಲಿದ್ದು, ಅದನ್ನು ಮುಟ್ಟಬಾರದು ಎಂದು ಒತ್ತಾಯಿಸಲಾಗುತ್ತಿದೆ. ಆದರೆ ಅದೆಲ್ಲಾ ಸಾಧ್ಯವಿಲ್ಲ. ನಾವು ಸ್ಥಳೀಯರ ಜೊತೆ ಚರ್ಚೆ ಮಾಡಿ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಹೇಳಿದರು.
|
12 |
+
ಇಂದು ಸಂಜೆ ಮುಖ್ಯಮಂತ್ರಿಯವರು ಮತ್ತು ತಾವು ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಿದ್ದೇವೆ. ಈ ವೇಳೆ ಮುಖ್ಯಮಂತ್ರಿಯವರು ವಿಶೇಷ ಮನವಿಯನ್ನು ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.
|
eesanje/url_46_92_2.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಹುಬ್ಬಳ್ಳಿ-ಧಾರವಾಡ ಪಾಲಿಕೆಗೆ ಮೇಯರ್ ಆಗಿ ರಾಮಣ್ಣ ಬಡಿಗೇರ-ಉಪಮೇಯರ್ ಆಗಿ ದುರ್ಗಾಮಾ ಆಯ್ಕೆ
|
2 |
+
ಹುಬ್ಬಳ್ಳಿ,ಜೂ.29-ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಆಗಿ ಮಹಾನಗರ ಪಾಲಿಕೆ ಸದಸ್ಯ ರಾಮಣ್ಣ ಬಡಿಗೇರ ಹಾಗೂ ಉಪಮೇಯರ್ ಆಗಿ ಸದಸ್ಯೆ ದುರ್ಗಮಾ ಬೀಜವಾಡ ಆಯ್ಕೆಯಾಗಿದ್ದಾರೆ.
|
3 |
+
ಕಾಂಗ್ರೆಸ್ನಿಂದ ಮೇಯರ್ ಸ್ಥಾನಕ್ಕೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಾರ್ಡ್ ನಂ.33 ಇಮ್ರಾನ್ ಯಲಿಗಾರ, ಹಾಗೂ ವಾರ್ಡ್ ನಂಬರ್ 50ರ ಸದಸ್ಯೆ ಉಪಮೇಯರ್ ಸ್ಧಾನಕ್ಕೆ ಮಂಗಳಾ ಮೋಹನ ಹಿರೇಮನಿ ಸ್ಪರ್ಧೆ ಮಾಡಿದ್ದರು.
|
4 |
+
ಪಕ್ಷಗಳ ಬಲಾಬಲ :ಬಿಜೆಪಿ-39 ಕಾಂಗ್ರೆಸ್-33 ಎಐಎಂಐಎಂ- 3, ಜೆಡಿಎಸ್ 1 ಪಕ್ಷೇತರ, 6 ಮತ ಲೆಕ್ಕಾಚಾರ 90, ಚಲಾವಣೆಯಾಗಲಿರುವ ಒಟ್ಟು ಮತಗಳು 48, ಬಿಜೆಪಿ ಬಳಿಯಿರುವ ಮತಗಳು (ಪಾಲಿಕೆ ಸದಸ್ಯರು ಸಂಸದ ಶಾಸಕರು ವಿಧಾನಪರಿಷತ್ ಸದಸ್ಯರು ಪಕ್ಷೇತರರು ಸೇರಿ) 37.ಸರಸ್ವತಿ ಧೋಂಗಡಿ ಅವರ ಸದಸ್ಯತ್ವ ಅನರ್ಹತೆಯಿಂದ ಬಿಜೆಪಿ ಬಲ 39ರಿಂದ 38ಕ್ಕೆ ಕುಸಿದಿತ್ತು. ಅವರ ಅನರ್ಹತೆ ಆದೇಶವನ್ನು ನ್ಯಾಯಾಲಯ ರದ್ದುಪಡಿಸಿದ್ದರಿಂದ ಬಿಜೆಪಿ ಬಲ ಯಥಾಸ್ಥಿತಿಗೆ ಬಂದಿದೆ.
|
5 |
+
ಉಪ ಮೇಯರ್ ಸ್ಥಾನಕ್ಕೆ ಬಿಜೆಪಿಯಲ್ಲಿ ದುರ್ಗಮ್ಮ ಶಶಿಕಾಂತ ಬಿಜವಾಡ, ಚಂದ್ರಿಕಾ ಮೇಸ್ತ್ರಿ ಅವರು ಪ್ರಮುಖ ಆಕಾಂಕ್ಷಿಗಳಿದ್ದರು. ಪಂಚತಾರಾ ಹೊಟೇಲ್ನಲ್ಲಿ ಸಭೆಭಾರತೀಯ ಜನತಾ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಬರದಂತೆ ಹಾಗೂ ಕುದುರೆ ವ್ಯಾಪಾರ ನಡೆಯದಂತೆ ನಿನ್ನೆನೇ ನಗರದ ಗೋಕುಲ ರಸ್ತೆಯಲ್ಲಿನ ಪಂಚತಾರಾ ಹೊಟೇಲ್ನಲ್ಲಿಬಿಜೆಪಿ ಸದಸ್ಯರನ್ನ ವಾಸ್ತವ್ಯ ಹೂಡಿದ್ದರು.
|
6 |
+
ಇದರಿಂದಾಗಿ ಕಳೆದ ಎರಡು ದಿನಗಳಿಂದ ಬಿಜೆಪಿಯಲ್ಲಿ ಚಟುವಟಿಕೆಗಳು ಗರಿಗೆದ್ದವು. ಅಗತ್ಯ ಸಂಖ್ಯಾಬಲ ಇರುವ ಬಿಜೆಪಿಯಲ್ಲಿ ಮೇಯರ್ ಸ್ಥಾನಕ್ಕೆ ಯಾರು ಅಭ್ಯರ್ಥಿ ಯಾಗಲಿದ್ದಾರೆ ಎಂಬುದು ಕುತೂಹಲ ಮೂಡಿಸಿತ್ತು.
|
7 |
+
ಬಿಜೆಪಿಯಲ್ಲಿ ಮೇಯರ್ ಸ್ಥಾನಕ್ಕೆ ರಾಮಣ್ಣ ಬಡಿಗೇರ, ತಿಪ್ಪಣ್ಣ ಮಜ್ಜಗಿ, ಸತೀಶ ಹಾನಗಲ್, ಬೀರಪ್ಪ ಖಂಡೇಕಾರ, ಉಮೇಶಗೌಡ ಕೌಜಗೇರಿ ಅವರ ಹೆಸರುಗಳು ಮುಂಚೂಣಿಯಲ್ಲಿದ್ದವು. ಇದರಲ್ಲಿ ಪಕ್ಷದ ವರಿಷ್ಠರು ರಾಮಣ್ಣ ಬಡಿಗೇರಗೆ ಮಣೆ ಹಾಕಿದರು.
|
8 |
+
ವೈಯಕ್ತಿಕ ವರ್ಚಸ್ಸು, ಪಕ್ಷ ನಿಷ್ಠೆ, ಉತ್ತಮ ಆಡಳಿತದ ಮೂಲಕ ಪಕ್ಷಕ್ಕೆ ಹೆಸರು ತರುವುದು, ಅನುಭವ, ಹಿರಿತನ ಆದರಿಸಿ ಅಭ್ಯರ್ಥಿ ಆಯ್ಕೆ ಮಾಡಲು ಕಸರತ್ತ ಸಹ ನಡೆಸಲಾಗಿತ್ತು.ಈಗಾಗಲೇ ಹಿರಿಯ ಪಾಲಿಕೆ ಸದಸ್ಯ ರಾಮಣ್ಣ ಬಡಿಗೇರ್ ಅವರು ನಾಲ್ಕು ಬಾರಿ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
|
9 |
+
ರಾಮಣ್ಣ ಬಡಿಗೇರ ವಿಧಾನಸಭೆಯ ಉಪನಾಯಕ ಶಾಸಕ ಅರವಿಂದ್ ಬೆಲ್ಲದವರ ಶಿಷ್ಯ ಸಹ ಆಗಿದ್ದು ಇನ್ನೊಂದು ಕಡೆ ಶಾಸಕ ಮಹೇಶ್ ಟೆಂಗಿನಕಾಯಿ ಬೀರಪ್ಪ ಖಂಡೆಕಾರ ಪರವಾಗಿ ಬ್ಯಾಟಿಂಗ್ ಮಾಡಿದ್ದರು ಎನ್ನಲಾಗಿದೆ.
|
eesanje/url_46_92_3.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಹಲವು ಸ್ಫೋಟಕ ಮಾಹಿತಿ ಬೆಳಕಿಗೆ
|
2 |
+
ಬೆಂಗಳೂರು, ಜೂ.29-ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಹಲವು ಸ್ಫೋಟಕ ಮಾಹಿತಿ ಬೆಳಕಿಗೆ ಅಭಿವೃದ್ಧಿ ನಿಗಮ ಹಗರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಹಲವು ಸ್ಫೋಟಕ ವಿಚಾರಗಳನ್ನು ಬಯಲಿಗೆಳಿದಿದೆ.ಯಾರದ್ದೋ ಕಂಪೆನಿ ಹೆಸರಿನಲ್ಲಿ ಇನ್ಯಾರೋ ಖಾತೆ ತೆರೆದು ಕೋಟಿ ಕೋಟಿ ಹಣ ವರ್ಗಾವಣೆ ಮಾಡಿರುವುದು ಎಸ್ಐಟಿ ತನಿಖೆಯಿಂದ ಬೆಳಕಿಗೆ ಬಂದಿದೆ.
|
3 |
+
ಕಂಪೆನಿಗಳ ಅಸಲಿ ಮಾಲೀಕರ ಗಮನಕ್ಕೆ ಬಾರದ ರೀತಿಯಲ್ಲಿ ಅದೇ ಕಂಪೆನಿ ಹೆಸರಿನಲ್ಲಿ ನಕಲಿ ಖಾತೆ ತೆರೆದು ಕೋಟಿ ಕೋಟಿ ಹಣ ವಹಿವಾಟು ಮಾಡಿರುವುದನ್ನು ಪತ್ತೆಹಚ್ಚಿರುವ ಎಸ್ಐಟಿ, ನಕಲಿ ಅಕೌಂಟ್ನ ಅಸಲಿ ಮಾಲೀಕರನ್ನು ಪತ್ತೆ ಮಾಡಿ ಅವರನ್ನು ಕರೆಸಿ ವಿಚಾರಣೆ ನಡೆಸಿದಾಗ ಅಸಲಿ ಸತ್ಯ ಗೊತ್ತಾಗಿದೆ.
|
4 |
+
ತಮ ಕಂಪೆನಿ ಹೆಸರಿನಲ್ಲಿ ನಕಲಿ ಖಾತೆ ತೆರೆದಿರುವುದು ಕಂಪೆನಿಯ ಅಸಲಿ ಮಾಲೀಕರ ಗಮನಕ್ಕೆ ಬಂದಿಲ್ಲ. ಅದರಲ್ಲೂ ಆ ಖಾತೆಯಲ್ಲಿ ಕೋಟಿ ಕೋಟಿ ಹಣ ಇತ್ತೇ ಎಂಬುವುದು ತಿಳಿದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
|
5 |
+
ಈ ಸಂಬಂಧ ಕಂಪೆನಿ ಮಾಲೀಕರು ದೂರು ನೀಡಿದ್ದು, ನಾಲ್ಕು ಎಫ್ಐಆರ್ ದಾಖಲಾಗಿದೆ. ಒಂದೊಂದು ಅಕೌಂಟ್ನಲ್ಲಿ ಸುಮಾರು 5 ಕೋಟಿಯಂತೆ ನಾಲ್ಕು ಖಾತೆಗಳಲ್ಲಿ 20 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದ್ದು, ಪುನಃ ಆ ಖಾತೆಗಳಿಂದ ಹಣ ಡ್ರಾ ಮಾಡಿಕೊಳ್ಳಲಾಗಿದೆ.ಈ ಖಾತೆಗಳಿಗೆ ವಾಲೀಕಿ ನಿಗಮದ ಅಧಿಕೃತ ಖಾತೆಯಿಂದ ಹಣ ವರ್ಗಾವಣೆಯಾಗಿರುವುದು ಎಸ್ಐಟಿ ತನಿಖೆಯಿಂದ ಗೊತ್ತಾಗಿದೆ.
|
6 |
+
ನಗರದ ಠಾಣೆಗಳಲ್ಲಿ ದಾಖಲಾಗಿರುವ ನಾಲ್ಕು ಎಫ್ಐಆರ್ ಗಳು ಎಸ್ಐಟಿಗೆ ವರ್ಗಾವಣೆಯಾಗಿದ್ದು, ಈ ಹಗರಣದಲ್ಲಿ ಸಿಲುಕಿರುವ ಇನ್ನಷ್ಟು ಮಂದಿಗೆ ಆತಂಕ ಶುರುವಾಗಿದೆ.ವಾಲೀಕಿ ನಿಗಮ ಹಗರಣದ ಆರೋಪಿಗಳು ಒಂದೊಂದೇ ಸತ್ಯ ಬಾಯ್ಬಿಡುತ್ತಿದ್ದಾರೆ. ನಿಗಮದ ಕೋಟ್ಯಾಂತರ ಹಣ ವಹಿವಾಟಿಗೆ ಬರೋಬ್ಬರಿ 193 ಅಕೌಂಟ್ಗಳನ್ನು ಬಳಸಿಕೊಂಡಿರುವುದನ್ನು ಎಸ್ಐಟಿ ಪತ್ತೆಹಚ್ಚಿದೆ.
|
7 |
+
ಈ ಎಲ್ಲಾ ಯೋಜನೆಯ ಮಾಸ್ಟರ್ ಮೈಂಡ್ ಹೈದ್ರಾಬಾದ್ ಮೂಲದ ಸತ್ಯನಾರಾಯಣ ವರ್ಮಾ ಎಂಬುವುದು ಗೊತ್ತಾಗಿದೆ.ನಕಲಿ ಅಕೌಂಟ್ಗಳನ್ನು ಸೃಷ್ಟಿಸಿ ವಹಿವಾಟು ಮಾಡಿದ ಆರೋಪದ ಮೇಲೆ ಮತ್ತೊಬ್ಬ ಆರೋಪಿಯನ್ನು ಎಸ್ಐಟಿ ಬಂಧಿಸಿದೆ. ಈತ ಕೋಟಿಕೋಟಿ ಹಣ ವಹಿವಾಟು ಮಾಡಲು ಸಹಾಯ ಮಾಡಿದ್ದ ಎಂಬುವುದು ತನಿಖೆಯಿಂದ ಬೆಳಕಿಗೆ ಬಂದಿದೆ.
|
eesanje/url_46_92_4.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಪ್ರಮುಖ ಜಲಾಶಯಗಳಿಗೆ ಒಳ ಹರಿವಿನ ಪ್ರಮಾಣ ಹೆಚ್ಚಳ
|
2 |
+
ಬೆಂಗಳೂರು, ಜೂ.29-ಕಳೆದ ನಾಲ್ಕೈದು ದಿನಗಳಿಂದ ಕೇರಳದ ವಯನಾಡು, ಕೊಡಗು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಬಿದ್ದ ಮಳೆಯಿಂದಾಗಿ ಪ್ರಮುಖ ಜಲಾಶಯಗಳ ನೀರಿನ ಒಳ ಹರಿವು ಗಣನೀಯವಾಗಿ ಹೆಚ್ಚಾಗಿದೆ. ಶೇ. 3ರಷ್ಟು ನೀರಿನ ಸಂಗ್ರಹ ಹೆಚ್ಚಾಗಿದೆ.ಅಂದರೆ, ಸುಮಾರು 18 ಟಿಎಂಸಿ ಅಡಿಯಷ್ಟು ನೀರು ಜಲಾಶಯಗಳಿಗೆ ಹರಿದು ಬಂದಿದೆ.ಕೇರಳ, ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಏರಿಕೆಯಾಗಿದ್ದ ಒಳಹರಿವಿನ ಪ್ರಮಾಣ ನಾಳೆಯಿಂದ ಇಳಿಮುಖವಾಗುವ ಸಾಧ್ಯತೆ ಹೆಚ್ಚಾಗಿದೆ.
|
3 |
+
ಕರ್ನಾಟಕ ರಾಜ್ಯ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ರಾಜ್ಯದ 14 ಪ್ರಮುಖ ಜಲಾಶಯಗಳಲ್ಲಿ ಪ್ರಸ್ತುತ ಶೇ. 24ರಷ್ಟು ನೀರು ಸಂಗ್ರಹವಾಗಿದೆ. ಅಂದರೆ, 217.83 ಟಿಎಂಸಿ ಅಡಿ ನೀರು ಜಲಾಶಯಗಳಲ್ಲಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 171.98 ಅಡಿ ನೀರಿತ್ತು. ಕಳೆದ ವರ್ಷಕ್ಕಿಂತ ಸುಮಾರು 46 ಟಿಎಂಸಿಯಷ್ಟು ಹೆಚ್ಚುವರಿ ನೀರು ಸಂಗ್ರಹವಾಗಿದೆ.ಕಾವೇರಿ ಜಲಾನಯನ ಭಾಗದ ಹಾರಂಗಿ, ಹೇಮಾವತಿ, ಕೆಆರ್ಎಸ್ ಹಾಗೂ ಕಬಿನಿ ಜಲಾಶಯಗಳಿಗೆ ಕಳೆದ ಮೂರು ದಿನಗಳಿಂದ ಒಳಹರಿವು ಹೆಚ್ಚಳವಾಗಿದೆ. ಈ ನಾಲ್ಕು ಜಲಾಶಯಗಳಿಂದ ಒಟ್ಟು 43 ಸಾವಿರ ಕ್ಯುಸೆಕ್ಸ್ ಗೂ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿದೆ.
|
4 |
+
ಹಾರಂಗಿ ಜಲಾಶಯಕ್ಕೆ ಒಂದೂವರೆ ಸಾವಿರ ಕ್ಯುಸೆಕ್ಸ್ ಗೂ ಅಧಿಕ ನೀರು ಬರುತ್ತಿದೆ. ಹೇಮಾವತಿ ಜಲಾಶಯಕ್ಕೆ 5 ಸಾವಿರ ಕ್ಯುಸೆಕ್್ಸಗೂ ಹೆಚ್ಚು, ಕೆಆರ್ಎಸ್ ಜಲಾಶಯಕ್ಕೆ 18 ಸಾವಿರ ಕ್ಯುಸೆಕ್್ಸಗೂ ಅಧಿಕ ಹಾಗೂ ಕಬಿನಿ ಜಲಾಶಯಕ್ಕೆ 17 ಸಾವಿರ ಕ್ಯುಸೆಕ್್ಸಗೂ ಅಧಿಕ ಪ್ರಮಾಣದ ಒಳಹರಿವಿದೆ.
|
5 |
+
ನಿನ್ನೆ 20 ಸಾವಿರ ಕ್ಯುಸೆಕ್ಸ್ ಗಿಂತ ಹೆಚ್ಚಿದ್ದ ಕಬಿನಿ ಜಲಾಶಯದ ಒಳಹರಿವು ಇಂದು 17 ಸಾವಿರ ಕ್ಯುಸೆಕ್್ಸಗೆ ಇಳಿಕೆಯಾಗಿದೆ. ಶೇ.73ರಷ್ಟು ನೀರು ಸಂಗ್ರಹವಾಗಿದೆ. 19.52 ಟಿಎಂಸಿ ಸಾಮರ್ಥ್ಯದ ಈ ಜಲಾಶಯದಲ್ಲಿ ಪ್ರಸ್ತುತ 14.31 ಟಿಎಂಸಿಯಷ್ಟು ನೀರಿದೆ.ಆದರೆ, ಕೆಆರ್ಎಸ್ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ನಿನ್ನೆ 13 ಸಾವಿರ ಕ್ಯುಸೆಕ್್ಸನಷ್ಟಿದ್ದ ಒಳಹರಿವು ಇಂದು 18 ಸಾವಿರ ಕ್ಯುಸೆಕ್ಸ್ಗಿಂತ ಹೆಚ್ಚಾಗಿದೆ. ಶೇ.36ರಷ್ಟು ನೀರು ಸಂಗ್ರಹವಾಗಿದೆ. ಕಾವೇರಿ ನದಿ ಪಾತ್ರದ ಜಲಾಶಯಗಳಲ್ಲಿ ಶೇ.42ರಷ್ಟು ನೀರು ಸಂಗ್ರಹವಾಗಿದೆ.
|
6 |
+
ಜಲ ವಿದ್ಯುತ್ ಉತ್ಪಾದಿಸುವ ಲಿಂಗನಮಕ್ಕಿ, ಸೂಪಾ ಹಾಗೂ ವಾರಾಹಿ ಜಲಾಶಯಗಳಲ್ಲಿ ಶೇ.18ರಷ್ಟು ನೀರಿದೆ. ಕಳೆದ ವರ್ಷಕ್ಕಿಂತ 13 ಟಿಎಂಸಿ ನೀರು ಹೆಚ್ಚಾಗಿದೆ. ಮೂರು ಜಲಾಶಯಗಳಿಗೆ 14 ಸಾವಿರ ಕ್ಯುಸೆಕ್ಸ್ ಗೂ ಅಧಿಕ ಪ್ರಮಾಣದ ಒಳಹರಿವು ಇದೆ. ಇದರಲ್ಲಿ ಲಿಂಗನಮಕ್ಕಿ ಜಲಾಶಯಕ್ಕೆ 9 ಸಾವಿರ ಕ್ಯುಸೆಕ್್ಸಗೂ ಅಧಿಕ ಪ್ರಮಾಣದ ನೀರು ಬರುತ್ತಿದೆ.ಕೃಷ್ಣಾ ಕೊಳ್ಳದ 7 ಪ್ರಮುಖ ಜಲಾಶಯಗಳಲ್ಲೂ ಒಳ ಹರಿವು ಹೆಚ್ಚಾಗಿದೆ.
|
7 |
+
ಒಟ್ಟಾರೆ 18 ಸಾವಿರ ಕ್ಯುಸೆಕ್ಸ್ ಗಿಂತ ಅಧಿಕ ಒಳಹರಿವು ಕಂಡುಬರುತ್ತಿ���ೆ. ಶೇ. 22 ರಷ್ಟು ಮಾತ್ರ ನೀರು ಸಂಗ್ರಹವಾಗಿದೆ. ಕಳೆದ ವರ್ಷಕ್ಕಿಂತ 20 ಟಿಎಂಸಿಯಷ್ಟು ಹೆಚ್ಚು ನೀರು ಸಂಗ್ರಹವಾಗಿದೆ. ಹೀಗಾಗಿ ಕಳೆದ ವರ್ಷಕ್ಕಿಂತ ಈ ವರ್ಷ ಮಳೆ ಹಾಗೂ ನೀರಿನ ಸಂಗ್ರಹದ ಪ್ರಮಾಣ ಸುಧಾರಿಸಿದೆ. ಆದರೂ ಉತ್ತರ ಕರ್ನಾಟಕ ಸೇರಿದಂತೆ ಒಳನಾಡಿನಲ್ಲಿ ನಿರೀಕ್ಷಿತ ಪ್ರಮಾಣದ ಮಳೆಯಾಗಿಲ್ಲ. ಜಲಾಶಯಗಳಿಗೂ ನೀರು ಬಂದಿಲ್ಲ.
|
eesanje/url_46_92_5.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯದಲ್ಲಿ ಮರಣ ಮೃದಂಗ ಬಾರಿಸುತ್ತಿದೆ ಡೆಂಘೀ, ಚಿಕೂನ್ಗುನ್ಯಾ
|
2 |
+
ಬೆಂಗಳೂರು,ಜೂ.29-ರಾಜಧಾನಿ ಸೇರಿದಂತೆ ರಾಜ್ಯದಲ್ಲಿ ಡೆಂಘೀ ಮರಣ ಮೃದಂಗ ಬಾರಿಸುತ್ತಿದೆ. ರಾಜ್ಯದಲ್ಲಿ ಇದುವರೆಗೂ ಏಳು ಮಂದಿ ಈ ಮಾರಕ ರೋಗಕ್ಕೆ ಬಲಿಯಾಗಿರುವುದು ಪತ್ತೆಯಾಗಿದೆ.
|
3 |
+
ರಾಜಧಾನಿ ಬೆಂಗಳೂರಿನಲ್ಲಿ 27 ವರ್ಷದ ಯುವಕ ಹಾಗೂ 80 ವರ್ಷದ ವೃದ್ದೆ ಮೃತಪಟ್ಟಿರುವುದು ಖಚಿತವಾಗುತ್ತಿದ್ದಂತೆ ಡೆಂಘೀ ಬಗ್ಗೆ ಅಗತ್ಯ ಎಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಜ್ವರದಿಂದ ಬಳಲುತ್ತಿದ್ದ ಸಿ.ವಿ. ರಾಮನ್ ನಗರದ ವಾಸಿ ಅಭಿಲಾಷ್ (27) ಜೂನ್25 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಗ ಅವರಿಗೆ ಡೆಂಘೀ ಸೋಂಕು ಇರುವುದು ದಢಪಟ್ಟಿತ್ತು. ಅವರು ಚಿಕಿತ್ಸೆ ಫಲಕಾರಿಯಾಗದೇ ಜೂ.27 ರಂದು ಮತಪಟ್ಟಿದ್ದರು.
|
4 |
+
ಅದೇ ರೀತಿ ತಮಿಳುನಾಡಿನ ಮೂಲದ ನೀರಜಾದೇವಿ (80) ಡೆಂಘೀಗೆ ಬಲಿಯಾಗಿದ್ದಾರೆ. ಇವರು ಸ್ತನ ಕ್ಯಾನ್ಸರ್ ಚಿಕಿತ್ಸೆಗಾಗಿ ನಗರಕ್ಕೆ ಬಂದಿದ್ದರು. ಜೂನ್ 20 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಈ ವೇಳೆ ಅವರಿಗೆ ಡೆಂಘೀ ಇರುವುದು ತಿಳಿದುಬಂದು ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಮೃತಪಟ್ಟಿದ್ದರು.
|
5 |
+
ರಾಜ್ಯದಲ್ಲಿ ಈವರೆಗೆ ಒಟ್ಟು 5,749 ಡೆಂಘೀ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ ಬಿಬಿಎಂಪಿ ಹೊರತು ಪಡಿಸಿ ರಾಜ್ಯದಲ್ಲಿ 4,364 ಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ. ಅದರಲ್ಲೂ ಸಿಲಿಕಾನ್ ಸಿಟಿಯಂತೂ ಡೆಂಘೀ ಸೋಂಕಿನಿಂದ ನರಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
|
6 |
+
ಬಿಬಿಎಂಪಿ ವ್ಯಾಪ್ತಿಯಲ್ಲೇ ಕಳೆದ 2023ರಲ್ಲಿ ಜನವರಿಯಿಂದ ಜೂನ್ ವರೆಗೆ ಒಟ್ಟು 732 ಪ್ರಕರಣಗಳು ದಾಖಲಾಗಿದ್ದವು. ಆದರೆ ಈ ಬಾರಿ 1385 ಪ್ರಕರಣಗಳು ವರದಿಯಾಗಿವೆ. ಕಳೆದ ಬಾರಿಗಿಂತ ದುಪ್ಪಟ್ಟಾಗಿರುವ ಡೆಂಘೀ ಪ್ರಕರಣಗಳು ಆರೋಗ್ಯ ಇಲಾಖೆಗೆ ತಲೆನೋವಾಗಿದೆ.
|
7 |
+
ಇನ್ನುರಾಜ್ಯದಲ್ಲಿ ಡೆಂಘೀಗೆ ಒಟ್ಟು 5 ಮಂದಿ ಬಲಿಯಾಗಿದ್ದಾರೆ. ಡೆಂಘೀ ಜೊತೆ ಚಿಕನ್ಗುನ್ಯಾ ಕೂಡ ಹೆಚ್ಚುತ್ತಿರುವುದು ಆತಂಕ ದುಪ್ಪಟ್ಟು ಮಾಡಿದೆ. ರಾಜ್ಯದಲ್ಲಿ ಈವರೆಗೂ ಒಟ್ಟು 897 ಚಿಕನ್ ಗುನ್ಯಾ ಪ್ರಕರಣಗಳು ವರದಿಯಾಗಿರುವುದೂ ಬೆಳಕಿಗೆ ಬಂದಿರುವುದು ಇಷ್ಟೆಲ್ಲಾ ಆತಂಕಕ್ಕೆ ಕಾರಣವಾಗಿದೆ.
|
8 |
+
ಡೆಂಘೀಗೆ ಬಾಲಕಿ ಬಲಿ..ಚಿಕ್ಕಮಗಳೂರು, ಜೂ.29- ಡೆಂಘೀ ಮಹಾಮಾರಿಗೆ ಆರು ವರ್ಷದ ಬಾಲಕಿ ಮೃತಪಟ್ಟಿದ್ದು, ಸ್ಥಳೀಯ ಜನತೆ ಆತಂಕಗೊಂಡಿದ್ದಾರೆ. ಕಡೂರು ತಾಲ್ಲೂಕಿನ ಸಖರಾಯಪಟ್ಟಣ ದಲ್ಲಿ ಸಾನಿಯಾ(6) ಡೆಂಘೀ ಸೋಂಕಿನಿಂದ ಮೃತಪಟ್ಟ ಬಾಲಕಿ.ಹಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕಿ ಸಾನಿಯಾಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾನಿಯಾ ಮೃತಪಟ್ಟಿದ್ದಾಳೆ.
|
9 |
+
ತಂದೆಯ ಮನವಿ: ಡೆಂಘಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಸೂಕ್ತ ಸೌಲಭ್ಯ ದೊರಕುವಂತಾಗಬೇಕು. ತಮ ಮಗಳಿಗೆ ಆದ ಸ್ಥಿತಿ ಬೇರೆ ಮಕ್ಕಳಿಗೆ ಆಗಬಾರದು ಎಂದು ಸಾನಿಯಾ ತಂದೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.ಸರ್ಕಾರ ನಮಗೆ ಪರಿಹಾರ ಕೊಡುವುದು ಬೇಡ. ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಘಿ ಸೇರಿದಂತೆ ವಿವಿಧ ಮಾರಣಾಂತಿಕ ಖಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ದೊರೆಯುವಂತಾಗಬೇಕು ಎಂದು ಮನವಿ ಮಾಡಿದ್ದಾರೆ.ಸಖರಾಯಪಟ್ಟಣದಲ್ಲಿ ಡೆಂಘಿಗೆ ಬಾಲಕಿ ಮೃತಪಟ್ಟಿ ವಿಷಯ ತಿಳಿದು ಸುತ್ತಮುತ್ತಲ ನಿವಾಸಿಗಳು ಆತಂಕಗೊಂಡಿದ್ದಾರೆ.
|
eesanje/url_46_92_6.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ತೀವ್ರ ಚರ್ಚೆಯಾಗುತ್ತಿದೆ ಸ್ವಾಮೀಜಿ ಕುರಿತು ಸಿಎಂ ಸಿದ್ದರಾಮಯ್ಯವರು ಆಡಿದ “ಮಾತು”
|
2 |
+
ಬೆಂಗಳೂರು,ಜೂ.29-ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಬಿಟ್ಟುಕೊಡಬೇಕು ಎಂದು ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಕುಮಾರ ಚಂದ್ರಶೇಖರ್ ಸ್ವಾಮೀಜಿ ಅವರಿಗೆ ಹೇಳಿಕೊಟ್ಟು ಹೇಳಿಸಲಾಗಿದೆ ಎಂದು ಮುಖ್ಯಮಂತ್ರಿಯವರು ಸಚಿವರೊಂದಿಗೆ ಮಾತನಾಡಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
|
3 |
+
ಸಂಪುಟದ ಹಲವು ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ನಿನ್ನೆ ಮಧ್ಯಾಹ್ನ ಕೇಂದ್ರ ಗೃಹಸಚಿವ ಅಮಿತ್ ಷಾ ಅವರನ್ನು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೊಂದಿಗೆ ಭೇಟಿ ಮಾಡಿದ್ದರು. ಅಲ್ಲಿಂದ ವಾಪಸ್ ಬರುವಾಗ ಸಿದ್ದರಾಮಯ್ಯ ಅವರ ಜೊತೆ ಪರಮೇಶ್ವರ್, ಇಂಧನ ಸಚಿವ ಕೆ.ಜೆ.ಜಾರ್ಜ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಲಿಫ್ಟ್ ನಲ್ಲಿದ್ದರು. ಆಗ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರ ಹೇಳಿಕೆಯನ್ನು ಪ್ರಸ್ತಾಪಿಸಲಾಗಿದೆ.
|
4 |
+
ಸ್ವಾಮೀಜಿಯವರಿಗೆ ಹೇಳಿಕೊಟ್ಟು ಮಾತನಾಡಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದರೆ, ಅದಕ್ಕೆ ಸಚಿವ ಪರಮೇಶ್ವರ್ ಹೌದು ಎಂಬಂತೆ ತಲೆಯಾಡಿಸಿದ್ದಾರೆ. ಈ ಕುರಿತು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
|
5 |
+
ನಾಡಪ್ರಭು ಕೆಂಪೇಗೌಡರ 515ನೇ ಜಯಂತಿಯ ಕಾರ್ಯಕ್ರಮದ ವೇದಿಕೆಯಲ್ಲಿ ಚಂದ್ರಶೇಖರ ಸ್ವಾಮೀಜಿ ಅಧಿಕಾರ ಬಿಟ್ಟುಕೊಡಿ ಎಂದು ಸಿದ್ದರಾಮಯ್ಯನವರಿಗೆ ಹೇಳುತ್ತಿದ್ದಂತೆ ವಾತಾವರಣವೇ ಬದಲಾಯಿತು. ವೇದಿಕೆಯಲ್ಲಿದ್ದ ಸಿದ್ದರಾಮಯ್ಯನವರ ಮುಖಚರ್ಯೆ ಬದಲಾಗಿತ್ತು.
|
6 |
+
ವೇದಿಕೆಯಿಂದ ಕೆಳಗೆ ಇಳಿಯುತ್ತಿದ್ದಂತೆಯೇ ಮಾಧ್ಯಮದವರ ಪ್ರಶ್ನೆಗೆ ಅಸಹನೆಯಿಂದಲೇ ಪ್ರತಿಕ್ರಿಯಿಸಿದ ಸಿದ್ದರಾಮಯ್ಯನವರು, ನಮದು ಪ್ರಜಾಪ್ರಭುತ್ವದ ದೇಶ. ಕಾಂಗ್ರೆಸ್ ಹೈಕಮಾಂಡ್ನ ಪಕ್ಷ. ಪಕ್ಷದ ತೀರ್ಮಾನದಂತೆ ನಾವು ನಡೆದುಕೊಳ್ಳುತ್ತೇವೆ ಎಂದು ಹೇಳಿದ್ದರು.ಅದರ ಬೆನ್ನಲ್ಲೇ ಮೊದಲಿನಿಂದಲೂ ಹೆಚ್ಚುವರಿ ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿಯ ಬಗ್ಗೆ ಬಹಿರಂಗ ಹೇಳಿಕೆ ನೀಡುತ್ತಿದ್ದ ಕೆ.ಎನ್.ರಾಜಣ್ಣ ಸಿದ್ದರಾಮಯ್ಯನವರ ಪರವಾಗಿ ಬ್ಯಾಟಿಂಗ್ ಮಾಡಿದ್ದರು.
|
7 |
+
ಈ ವಿಚಾರಗಳು ವ್ಯಾಪಕ ಚರ್ಚೆಯಾಗುತ್ತಿರುವ ನಡುವೆ ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಅವರ ನಡುವಿನ ಸಂಭಾಷಣೆ ಕುತೂಹಲ ಕೆರಳಿಸಿದೆ. ಕೆಂಪೇಗೌಡ ಜಯಂತಿ ಮುಗಿದ ಬೆನ್ನಲ್ಲೇ ಅವರಿಬ್ಬರು ದೆಹಲಿಗೆ ತೆರಳಿದರು. ಅಲ್ಲಿ ಜೊತೆ ಜೊತೆಯಾಗಿಯೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದಾರೆ. ಆದರೆ ಸಿದ್ದರಾಮಯ್ಯನವರು ಸ್ವಾಮೀಜಯವರ ಹೇಳಿಕೆ ವಿಷಯವಾಗಿ ಅನುಮಾನ ವ್ಯಕ್ತಪಡಿಸಿರುವುದು ಸರ್ಕಾರದಲ್ಲಿ ಯಾವುದೂ ಸರಿಯಿಲ್ಲ ಎಂಬುದನ್ನು ಬಿಂಬಿಸುತ್ತಿದೆ.
|
8 |
+
ಮೇಲ್ನೋಟಕ್ಕೆ ಎಲ್ಲರೂ ಒಟ್ಟಾಗಿದ್ದೇವೆ, ಭಿನ್ನಮತ ಇಲ್ಲ ಎಂದು ಪ್ರತಿಪಾದಿಸಲಾಗುತ್ತಿದೆ. ಆದರೆ ಒಳಗೊಳಗೆ ಒಬ್ಬರ ಮೇಲೆ ಮತ್ತೊಬ್ಬರು ಮಸಲತ್ತು ನಡೆಸುತ್ತಿರುವಂತೆ ಬೆಂಗಳೂರಿನಲ್ಲಿ ಮಾತನಾಡಿರುವ ಡಿ.ಕೆ.ಶಿವಕುಮಾರ್ ಅವರು, ಇನ್ನು ಮುಂದೆ ಮುಖ್ಯಮಂತ್ರಿ ಅಥವಾ ಉಪಮುಖ್ಯಮಂತ್ರಿ ಹುದ್ದೆಗಳ ಬಗ್ಗೆ ಯಾರಾದರೂ ಬಹಿರಂಗ ಹೇಳಿಕೆ ನೀಡಿದರೆ ನೋಟಿಸ್ ನೀಡುವುದಾಗಿ ಎಚ್ಚರಿಸಿದ್ದಾರೆ. ಆದರೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡುವೆಯೇ ಅನುಮಾನದ ಹೊಗೆಯಾಡುತ್ತಿರುವುದು ವಿಪಕ್ಷಗಳಿಗೆ ಆಹಾರವಾಗಿದೆ.
|
eesanje/url_46_92_7.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
“ಬೆಲೆ ಏರಿಕೆ ಗ್ಯಾರಂಟಿ” ಸರ್ಕಾರದ ವಿರುದ್ಧ ಪ್ರೀಡಂಪಾರ್ಕ್ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ
|
2 |
+
ಬೆಂಗಳೂರು,ಜೂ.29-ಹಾಲಿನ ದರ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಇಂದು ನಗರದ ಪ್ರೀಡಂಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದುರ.ಬಿಜೆಪಿ ರೈತಮೋರ್ಚಾ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ರೈತಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ನಡಹಳ್ಳಿ, ವಿಧಾನಪರಿಷತ್ ಸದಸ್ಯ ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ನೂರಾರು ಸಂಖ್ಯೆಯ ಕಾರ್ಯಕರ್ತರು ಭಾಗಿಯಾಗಿದ್ದರು.
|
3 |
+
ನಗರದ ಫ್ರೀಡಂಪಾರ್ಕ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾನಿರತರು ಹಾಲಿನ ಪಾಕೆಟ್ ಪ್ರದರ್ಶಿಸಿದ್ದಲ್ಲದೆ ಹಸು ಹಿಡಿದುಕೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದ ಪ್ರತಿಭಟನಾನಿರತರು ಹಾಲಿನ ದರ, ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಮಾಡಿ ಜನಸಾಮಾನ್ಯರಿಗೆ ಬರ ಭಾಗ್ಯ ಕೊಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
|
4 |
+
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರೈತಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ನಡಹಳ್ಳಿ ಅವರು, ಲೀಟರ್ಗೆ 50 ಎಮ್ಎಲ್ ಹೆಚ್ಚಿಗೆ ಕೊಡಿ ಎಂದು ಯಾರದರೂ ಒತ್ತಾಯ ಮಾಡಿದ್ದರಾ? ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮರ್ಥನೆ ಮಾಡುವಂತಹ ಮೊಂಡು ವಾದ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
|
5 |
+
2008ರಲ್ಲಿ ಯಡಿಯೂರಪ್ಪ ಹಾಲು ಉತ್ಪಾದಕ ರೈತರಿಗೆ ಪ್ರೊತ್ಸಾಹ ಧನ ಕೊಟ್ಟಿದ್ದರು. ಈ ಸರ್ಕಾರ ಸಂಪೂರ್ಣವಾಗಿ ನಿಲ್ಲಿಸಿದೆ. ರೈತರಿಗೆ 5 ರೂ. ನೇರವಾಗಿ ಖಾತೆಗೆ ಹಾಕಬೇಕು. ನಮ ಸರ್ಕಾರ ಬಂದರೆ 7 ರೂ. ಕೊಡುತ್ತೇವೆ ಅಂದಿದ್ದರು. ಆದರೆ ಈ ಸರ್ಕಾರ 5 ರೂ. ಸಹ ಕೊಡುತ್ತಿಲ್ಲ ಎಂದು ವ್ಯಂಗ್ಯವಾಡಿದರು.
|
6 |
+
ರೈತರಿಗೆ ಬಾಕಿ ಉಳಿಸಿಕೊಂಡಿರುವ ಹಣವನ್ನು ಅವರ ಖಾತೆಗಳಿಗೆ ಹಾಕಬೇಕು. ಬೆಲೆ ಹೆಚ್ಚಿಸುವ ಬದಲು ಪ್ರೋತ್ಸಾಹ ಧನ ಕೊಡಬೇಕು ಎಂದು ಅವರು ಆಗ್ರಹಿಸಿದರು. ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಮಾತನಾಡಿ, ಸರ್ಕಾರ ತನ್ನ ಉದ್ದಟತನ ತೋರಿಸುತ್ತಿದೆ. ಹಾಲಿನ ಬೆಲೆ ಏರಿಸಿ ರೈತರಿಗೆ ಬೆಂಬಲ ನೀಡದೆ ಅವರ ಜೊತೆ ಚೆಲ್ಲಾಟ ಆಡುತ್ತಿದೆ ಎಂದು ರೈತರಿಗೆ ಬರೆ ಹಾಕುವ ಸರ್ಕಾರದ ನೀತಿ ನಿರ್ಧಾರಗಳನ್ನು ಸರ್ಕಾರ ಬದಲಾಯಿಸಬೇಕು ಎಂದು ಒತ್ತಾಯಿಸಿದರು.
|
7 |
+
ಬೀಜ ಗೊಬ್ಬರದ ಬೆಲೆ ಗಗನಕ್ಕೇರಿದೆ. ರೈತ ವಿರೋಧಿ ಸರ್ಕಾರ ರಾಜ್ಯದಲ್ಲಿದೆ. ಹಾಲಿನಬೆಲೆ ಏರಿಸಿ ಗ್ರಾಹಕರಿಗೆ ಬರೆ ಹಾಕಿದೆ. ಡೀಸೆಲ್ ಪೆಟ್ರೋಲ್ ಬೆಲೆ ಜಾಸ್ತಿಯಾಗಿದೆ. ರೈತ, ಮಹಿಳಾ,ಯುವಕರ ವಿರೋಧಿ ಸರ್ಕಾರ ಇದು ಸಿಎಂ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದರು.
|
eesanje/url_46_92_8.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಮನಸ್ಸಿನಲ್ಲಿ ಇದ್ದದ್ದನ್ನು ನೇರವಾಗಿ ಹೇಳಿದ್ದೇನೆ, ಒತ್ತಡದಲ್ಲಿ ಹೇಳಿಕೆ ನೀಡಿಲ್ಲ : ಚಂದ್ರಶೇಖರನಾಥ ಸ್ವಾಮೀಜಿ
|
2 |
+
ಬೆಂಗಳೂರು,ಜೂ.29– ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಿ ಎಂದು ನೀಡಿರುವ ಹೇಳಿಕೆ ಹಿಂದೆ ಯಾರ ಒತ್ತಡವೂ ಇರಲಿಲ್ಲ. ಮನಸ್ಸಿನಲ್ಲಿ ಇದ್ದದ್ದನ್ನು ನೇರವಾಗಿ ಹೇಳಿರುವುದಾಗಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದ್ದಾರೆ.
|
3 |
+
ಖಾಸಗಿ ವಾಹಿನಿಯೊಂದಿಗೆ ಮಾತನಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪರಿಶ್ರಮ ಅರಿತು ಪ್ರೀತಿಯಿಂದ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಟ್ಟರೆ ಒಳ್ಳೆಯದು ಎಂದರು.
|
4 |
+
ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಿ ಎಂದು ನಿಗದಿಪಡಿಸಲು ನಾವು ಯಾರು ಎಂದ ಅವರು, ಸಿದ್ಧರಾಮಯ್ಯನವರ ನಂತರ ಮುಖ್ಯಮಂತ್ರಿಯಾಗುವುದು ಡಿ.ಕೆ.ಶಿವಕುಮಾರ್ ಸರದಿಯೇ ಹೊರತು ಬೇರೆಯವರಲ್ಲ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ 6 ತಿಂಗಳೋ, ವರ್ಷವೋ ಕಳೆದ ನಂತರ ಯಾರೂ ಬೇಕಾದರೂ ಮುಖ್ಯಮಂತ್ರಿಯಾಗಲಿ ಎಂದು ಅವರು ಹೇಳಿದರು.
|
5 |
+
ನಾನು ಸಮುದಾಯವನ್ನು ಇಟ್ಟುಕೊಂಡು ಡಿ.ಕೆ.ಶಿವಕುಮಾರ್ಗೆ ಮುಖ್ಯಮಂತ್ರಿ ಸ್ಥಾನ ಕೇಳಿಲ್ಲ. ಮುಂದಿನ ಸರದಿ ಇರುವುದು ಡಿ.ಕೆ.ಶಿವಕುಮಾರ್ರದೇ ಹೊರತು ಬೇರೆ ಸಮುದಾಯದವರಲ್ಲ. ಜಾತಿ, ಜನಾಂಗ, ಸಮುದಾಯದ ಬಗ್ಗೆ ಮಾತನಾಡುವುದಿಲ್ಲ. ನಮ ವೈಯಕ್ತಿಕ ಅಭಿಪ್ರಾಯವನ್ನು ಅಂದು ಹೇಳಿದ್ದೇವೆ. ಮನಸ್ಸಿನಲ್ಲಿತ್ತು. ಅದನ್ನು ಹೇಳಿದ್ದೇವೆ. ದೇವರ ದಯೆಯಿಂದ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದರೆ ಒಳ್ಳೆಯದು.
|
6 |
+
ಈಗಾಗಲೇ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾರೆ. ಈ ಸಮಯ ಬಿಟ್ಟರೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗಲು ಬೇರೆ ಸಮಯ ಬರುವುದಿಲ್ಲ. ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಇದು ಕಾರ್ಯ ಸಾಧ್ಯವಾಗುತ್ತದೆ. ಹಾಗಾಗಿ ಈ ವಿಚಾರವನ್ನು ಪ್ರಸ್ತಾಪಿಸಿರುವುದಾಗಿ ಸ್ವಾಮೀಜಿ ತಿಳಿಸಿದರು.
|
eesanje/url_46_92_9.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಏಕವಚನದಲ್ಲಿ ಸ್ವಾಮೀಜಿಯನ್ನು ನಿಂದಿಸಿ ಸಿದ್ದರಾಮಯ್ಯ ಹಿಂದೂ ವಿರೋಧಿ ಧೋರಣೆ ಪ್ರದರ್ಶಿಸಿದ್ದಾರೆ : ಬಿಜೆಪಿ
|
2 |
+
ಬೆಂಗಳೂರು, ಜೂ.29-ಸಿದ್ದರಾಮಯ್ಯ ಅವರೇ ಡಿಕೆಶಿ ಜೊತೆ ವೈಮನಸ್ಸಿದ್ದರೆ ನಾಲ್ಕು ಗೋಡೆಗಳ ಮಧ್ಯೆ ಪರಿಹರಿಸಿಕೊಳ್ಳಿ. ಸ್ವಾಮೀಜಿಗಳ ಬಗ್ಗೆ ಅಗೌರವದಿಂದ ಮಾತನಾಡಿದರೆ ನಿಮಗೆ ಶೋಭೆ ತರುವುದಿಲ್ಲ ಎಂದು ಬಿಜೆಪಿ ಹೇಳಿದೆ.
|
3 |
+
ಸಿಎಂ ಸ್ಥಾನವನ್ನು ಡಿ.ಕೆ.ಶಿವಕುಮಾರ್ ಅವರಿಗೆ ಬಿಟ್ಟುಕೊಡುವಂತೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಮನವಿ ಮಾಡಿದ ಬೆನ್ನಲ್ಲೇ ವ್ಯಕ್ತಿಯೊಬ್ಬರೊಂದಿಗೆ ಸಿದ್ದರಾಮಯ್ಯ ಅವರು ನಡೆಸಿರುವ ಮಾತುಕತೆ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ಸಿದ್ದರಾಮಯ್ಯ ಅವರು ಆಡಿರುವ ಮಾತುಗಳಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.
|
4 |
+
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕೇಸರಿ, ಕುಂಕುಮ ಕಂಡರೆ ದ್ವೇಷ ಕಾರುವ ಸಿಎಂ ಸಿದ್ದರಾಮಯ್ಯನವರು ಈಗ ಒಕ್ಕಲಿಗ ಸ್ವಾಮೀಜಿಗಳ ವಿರುದ್ಧ ಏಕವಚನ ಪ್ರಯೋಗ ಮಾಡಿ ನಿಂದಿಸುವ ಮೂಲಕ ಮತ್ತೊಮ್ಮೆ ತಮ್ಮ ಹಿಂದೂ ವಿರೋಧಿ ಧೋರಣೆ ಪ್ರದರ್ಶನ ಮಾಡಿದ್ದಾರೆ.
|
5 |
+
ಸ್ವಾಮಿ ಸಿದ್ದರಾಮಯ್ಯನವರೇ, ನಿಮ್ಮ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ವೈಮನಸ್ಯವಿದ್ದರೆ ಅದನ್ನ ಪಕ್ಷದ ವೇದಿಕೆಯಲ್ಲಿ ನಾಲ್ಕು ಗೋಡೆಗಳ ಮಧ್ಯೆ ಪರಿಹರಿಸಿಕೊಳ್ಳಿ. ಅದು ಬಿಟ್ಟು, ಸ್ವಾಮೀಜಿಗಳು ವ್ಯಕ್ತಪಡಿಸಿದ ಅಭಿಪ್ರಾಯದ ಬಗ್ಗೆ ಈ ರೀತಿ ಅಗೌರವದಿಂದ ಮಾತನಾಡುವುದು ನಿಮಗೆ ಶೋಭೆ ತರುವುದಿಲ್ಲ. ಒಕ್ಕಲಿಗ ಸಮುದಾಯ ಇದನ್ನು ತೀವ್ರವಾಗಿ ಖಂಡನೆ ಮಾಡುತ್ತದೆ ಎಂದು ಹೇಳಿದ್ದಾರೆ.
|
6 |
+
ಕೇಸರಿ, ಕುಂಕುಮ ಕಂಡರೆ ದ್ವೇಷ ಕಾರುವ ಸಿಎಂ@siddaramaiahನವರು ಈಗ ಒಕ್ಕಲಿಗ ಸ್ವಾಮೀಜಿಗಳ ವಿರುದ್ಧ ಏಕವಚನ ಪ್ರಯೋಗ ಮಾಡಿ ನಿಂದಿಸುವ ಮೂಲಕ ಮತ್ತೊಮ್ಮೆ ತಮ್ಮ ಹಿಂದೂ ವಿರೋಧಿ ಧೋರಣೆ ಪ್ರದರ್ಶನ ಮಾಡಿದ್ದಾರೆ.ಸ್ವಾಮಿ ಸಿದ್ದರಾಮಯ್ಯನವರೇ, ನಿಮ್ಮ ಮತ್ತು ಡಿಸಿಎಂ@DKShivakumarನಡುವೆ ವೈಮನಸ್ಯವಿದ್ದರೆ ಅದನ್ನ ಪಕ್ಷದ ವೇದಿಕೆಯಲ್ಲಿ…../
|
7 |
+
ಮತ್ತೊಂದು ಪ್ಟೋ್ನಲ್ಲಿ ಗೃಹ ಸಚಿವ ಪರಮೇಶ್ವರ್ ವಿರುದ್ಧವೂ ಕಿಡಿಕಾರಿದ್ದಾರೆ. ದಿಕ್ಕು ದೆಸೆಯಿಲ್ಲದ ನೀತಿಗಳಿಂದ ಪಾಪರ್ ಆಗಿರುವ ಕಾಂಗ್ರೆಸ್ ಸರ್ಕಾರದ ಬಳಿ ಸಂತ್ರಸ್ತೆ ಕುಟುಂಬಕ್ಕೆ ಪರಿಹಾರ ನೀಡುವುದಕ್ಕೂ ದುಡ್ಡಿಲ್ಲ. ಹುಬ್ಬಳ್ಳಿಯಲ್ಲಿ ಕೊಲೆಗೀಡಾಗಿದ್ದ ಅಂಜಲಿ ಅಂಬಿಗೇರ ಮನೆಗೆ ಮೇ 20 ರಂದು ಡಾ. ಪರಮೇಶ್ವರ್ ಭೇಟಿ ನೀಡಿ, ಪರಿಹಾರದ ಭರವಸೆ ನೀಡಿದ್ದರು. ಚುನಾವಣೆ ನೀತಿ ಸಂಹಿತೆ ಮುಗಿದು ತಿಂಗಳು ಕಳೆಯುತ್ತಾ ಬಂದರೂ ಕಾಂಗ್ರೆಸ್ ಸರ್ಕಾರಕ್ಕೆ ಕೊಟ್ಟ ಮಾತು ಮರೆತು ಹೋಗಿದೆ.
|
8 |
+
ಬಣ್ಣ ಬಣ್ಣದ ಕಾಗೆ ಹಾರಿಸಿ ಜನರಿಗೆ ಟೋಪಿ ಹಾಕುವುದು, ವಿಶ್ವಾಸ ದೋಹ ಬಗೆಯುವುದೇ ಸಿದ್ದರಾಮಯ್ಯನವರ ಸರ್ಕಾರ ಕೊಡುವ ಗ್ಯಾರಂ���ಿ. ಮೊದಲೇ ನೀಚಕೃತ್ಯದಿಂದ ನೊಂದಿರುವ ಸಂತ್ರಸ್ತೆ ಕುಟುಂಬಕ್ಕೆ ಪರಿಹಾರ ನೀಡದಷ್ಟು ದಯನೀಯ ಸ್ಥಿತಿಗೆ ಸರ್ಕಾರ ತಲುಪಿರುವುದು ಕನ್ನಡಿಗರ ದೌರ್ಭಾಗ್ಯ ಎಂದು ಕಿಡಿಕಾರಿದ್ದಾರೆ.
|
9 |
+
ಬೆಲೆ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಪ್ಟೋ್ ಮಾಡಿದ್ದು, ಸರ್ಕಾರದ ಕುರಿತು ವ್ಯಂಗ್ಯವಾಡಿದೆ. ಇಂಧನ, ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡಿ ರಾಜ್ಯದ ಜನರ ನೆಮ್ಮದಿಗೆ ಕೊಳ್ಳಿಯಿಟ್ಟಿರುವ ಸಿಎಂ ಸಿದ್ದರಾಮಯ್ಯ ಅವರು ಇದೀಗ ಹೊಸ ಸಂಶೋಧನೆಗೆ ಇಳಿದಿದ್ದಾರೆ. 25 ಸಾವಿರ ಎಕರೆ ಸಾರ್ವಜನಿಕ ಆಸ್ತಿ ಅಡವಿಡಲು ಆಳ ಅಧ್ಯಯನ ನಡೆಸಿದ ಕಾಂಗ್ರೆಸ್ ಸರ್ಕಾರವೀಗ, ಬಸ್ ಪ್ರಯಾಣ ದರ ಸೇರಿ ಬೆಲೆ ಏರಿಕೆಗೆ ಇನ್ನೇನಾದರೂ ಉಳಿದಿದೆಯಾ? ಅಂತ ದುರ್ಬಿನ್ ಹಾಕಿಕೊಂಡು ಶೋಧನೆಯಲ್ಲಿ ತೊಡಗಿದೆ.
|
10 |
+
ಕಾಂಗ್ರೆಸ್ ಅಂದ್ರೆ ಜನರ ಜೇಬಿಗೆ ಕತ್ತರಿ ಖಚಿತ. ಕರುನಾಡು ದಿವಾಳಿ ಖಂಡಿತ. ಹಾಗೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಕನ್ನಡಿಗರು ದಂಗೆ ಏಳುವುದೂ ನಿಶ್ಚಿತ ಎಂದು ಲೇವಡಿ ಮಾಡಿದೆ.
|
eesanje/url_46_93_1.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರ : ಕೆಆರ್ಎಸ್ ಒಳಹರಿವು ಹೆಚ್ಚಳ
|
2 |
+
ಮೈಸೂರು,ಜೂ.29-ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಕೃಷ್ಣರಾಜ ಜಲಶಾಯಕ್ಕೆ 18,644 ಕ್ಯೂಸೆಕ್ ಒಳಹರಿವು ಹೆಚ್ಚಳವಾಗಿದೆ. ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಜಲಾಶಯದಲ್ಲಿ 92.80 ಅಡಿ ನೀರು ಸಂಗ್ರಹವಾಗಿದೆ. 124.8 ಅಡಿ ಗರಿಷ್ಠ ಮಟ್ಟದ ಕೆಆರ್ಎಸ್ ಡ್ಯಾಮ್ 93 ಅಡಿ ತಲುಪುವ ಸನ್ನಿಹದಲ್ಲಿದೆ.
|
3 |
+
ಕಳೆದ ಮೂರ್ನಾಲ್ಕು ದಿನಗಳಿಂದ ಕಾವೇರಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರದಿಂದ ಕೆಆರ್ಎಸ್ಗೆ ಒಳಹರಿವು ದಿನದಿಂದ ದಿನಕ್ಕೆ ಅಧಿಕವಾಗುತ್ತಿದೆ.
|
4 |
+
ನಿನ್ನೆ 13,437 ಕ್ಯೂಸೆಕ್ ಒಳಹರಿವು ಇತ್ತು. ಇಂದು ಒಳಹರಿವಿನ ಪ್ರಮಾಣ 18,644 ಕ್ಯೂಸೆಕ್ಗೆ ಏರಿಕೆಯಾಗಿದೆ. ಇದೇ ರೀತಿ ಮಳೆಯ ಪ್ರಮಾಣ ಹೆಚ್ಚಾಗಿ ಒಳಹರಿವಿನ ಪ್ರಮಾಣ ಹೆಚ್ಚಾದರೆ ಜಲಾಶಯದಲ್ಲಿ ನೀರು ಸಂಗ್ರಹವು ಹೆಚ್ಚಾಗುತ್ತದೆ. ಸದ್ಯ ಒಳಹರಿವು 478 ಕ್ಯೂಸೆಕ್ ಮಾತ್ರ ಇದೆ.
|
eesanje/url_46_93_10.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಸಂಚಾರಿ ನಿಯಮ ಪಾಲಿಸದವರ ವಿರುದ್ಧ ಕಠಿಣ ಕ್ರಮವಾಗಲಿ : ಹೆಚ್.ಡಿ.ಕೆ.
|
2 |
+
ಬೆಂಗಳೂರು, ಜೂ.28-ಸಂಚಾರಿ ನಿಯಮಗಳನ್ನು ಪಾಲಿಸದೇ ನಿರ್ಲಕ್ಷ್ಯ ವಹಿಸುವವರ ವಿರುದ್ಧ ಸಂಬಂಧಿಸಿದ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
|
3 |
+
ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಹಾವೇರಿ ಜಿಲ್ಲೆಯ ಬ್ಯಾಡಗಿ ಬಳಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 13 ಜನ ದುರ್ಮರಣ ಹೊದಿರುವ ಸುದ್ದಿ ಕೇಳಿ ನನಗೆ ತೀವ್ರ ದುಃಖ ಉಂಟಾಗಿದೆ ಎಂದಿದ್ದಾರೆ.
|
4 |
+
ಹಾವೇರಿ ಜಿಲ್ಲೆಯ ಬ್ಯಾಡಗಿ ಬಳಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 13 ಜನ ದುರ್ಮರಣ ಹೊಂದಿರುವ ಸುದ್ದಿ ಕೇಳಿ ನನಗೆ ತೀವ್ರ ದುಃಖ ಉಂಟಾಗಿದೆ. ತಾಯಿ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ಮರಳಿ ಊರಿಗೆ ಹೋಗುತ್ತಿರುವಾಗ ಈ ದುರಂತ ಸಂಭವಿಸಿದೆ.ಮೃತಪಟ್ಟ ಎಲ್ಲರ ಆತ್ಮಕ್ಕೂ ಚಿರಶಾಂತಿ ಸಿಗಲಿ ಹಾಗೂ ಗಾಯಾಳುಗಳು ಆದಷ್ಟು ಬೇಗ…
|
5 |
+
ಅಪಘಾತದಲ್ಲಿ ಗಾಯಗೊಂಡಿರುವವರಿಗೆ ರಾಜ್ಯ ಸರ್ಕಾರ ಸೂಕ್ತ ಚಿಕಿತ್ಸೆ ಕೊಡಿಸಬೇಕು ಎಂದು ಒತ್ತಾಯಿಸಿರುವ ಅವರು, ಲಾರಿ ಚಾಲಕ ದೋಷಪೂರಿತ ಪಾರ್ಕಿಂಗ್ ಮಾಡಿರುವುದೇ ಅಪಘಾತಕ್ಕೆ ಕಾರಣವೆಂದು ಹಾವೇರಿ ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿದ್ದಾರೆ. ಚಾಲಕರು ಸಂಚಾರಿ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಈ ಗ್ಗೆ ನಿರ್ಲಕ್ಷ್ಯ ತೋರಿ ಜೀವಕ್ಕೆ ಎರವಾಗುತ್ತಿರುವುದು ನೋವಿನ ಸಂಗತಿ ಎಂದು ತಿಳಿಸಿದ್ದಾರೆ.
|
6 |
+
ತಾಯಿ ಸವದತ್ತಿ ಶ್ರೀ ರೇಣುಕಾ ಯಲ್ಲಮನ ದರ್ಶನ ಪಡೆದು ಮರಳಿ ಊರಿಗೆ ಹೋಗುತ್ತಿರುವಾಗ ಈ ಅಪಘಾತದ ದುರಂತ ಸಂಭವಿಸಿದೆ. ಮೃತಪಟ್ಟಿರುವ ಎಲ್ಲರ ಆತಕ್ಕೆ ಚಿರಶಾಂತಿ ಸಿಗಲಿ ಹಾಗೂ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.
|
eesanje/url_46_93_11.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಚನ್ನಪಟ್ಟಣ ಉಪಚುನಾವಣೆಯಲ್ಲಿ ತೊಡೆತಟ್ಟಲಿರುವ “ಮೈತ್ರಿ ವೀರ” ಯಾರು..?
|
2 |
+
ಬೆಂಗಳೂರು,ಜೂ.28-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜ್ಯದ ಗಮನ ಸೆಳೆಯುತ್ತಿದ್ದು, ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದರ ಬಗ್ಗೆ ಭಾರೀ ಕುತೂಹಲ ಮೂಡಿಸಿದೆ. ಈ ನಡುವೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯು ಕ್ಷೇತ್ರದಲ್ಲಿ ಪಕ್ಷದ ಚಿಹ್ನೆ ವಿನಿಮಯ ಮಾಡುವ ಹೊಸ ತಂತ್ರಗಾರಿಕೆ ಹೆಣೆದಿದೆ. ಇದರಿಂದಾಗಿ ಈ ಕ್ಷೇತ್ರಕ್ಕೆ ಜೆಡಿಎಸ್ ಪಕ್ಷದ ಚಿಹ್ನೆ ದೊರೆಯುತ್ತಿರುವುದು ಬಹುತೇಕ ಫಿಕ್ಸ್ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.
|
3 |
+
ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಈಗ ರಾಜ್ಯದ ಜನರ ಕಣ್ಣು ಉಪ ಚುನಾವಣೆಯ ಮೇಲೆ ನೆಟ್ಟಿದೆ. ಶಾಸಕರು ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಹಾವೇರಿಯ ಶಿಗ್ಗಾಂವಿ, ರಾಮನಗರದ ಚನ್ನಪಟ್ಟಣ, ವಿಜಯನಗರದ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ.
|
4 |
+
ಹೆಚ್.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣಕ್ಕೆ ಡಿ.ಕೆ.ಶಿವಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಇದರಿಂದಾಗಿ ಪ್ರತಿಷ್ಠೆಯ ಕ್ಷೇತ್ರವಾಗಿದೆ. ಡಿಕೆ ಬ್ರದರ್ಸ್ ಸೋಲಿಸಲು ಮೈತ್ರಿ ಪಕ್ಷ ಚಿಹ್ನೆ ವಿನಿಯಮದಡಿ ಕಣಕ್ಕಿಳಿಯುವ ಬಗ್ಗೆ ಚಿಂತನೆ ನಡೆಸಿದೆ. ಆದರೆ ಮೈತ್ರಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಲವರ ಹೆಸರಿದ್ದು, ಯಾರಿಗೆ ಟಿಕೆಟ್ ಸಿಗುತ್ತದೆ ಎಂಬುದು ಕಾದು ನೋಡಬೇಕಿದೆ.
|
5 |
+
ಜೆಡಿಎಸ್ ಚಿಹ್ನೆಯಿಂದಲೇ ಸ್ಪರ್ಧೆ:ಚನ್ನಪಟ್ಟಣ ಜೆಡಿಎಸ್ ಪಕ್ಷದ ಭದ್ರಕೋಟೆ. ಈ ಕ್ಷೇತ್ರ ಹೇಳಿ ಕೇಳಿ ಪ್ರಸ್ತುತ ಕೇಂದ್ರ ಸಂಪುಟ ಸಚಿವರಾಗಿರುವ ಹೆಚ್.ಡಿ.ಕುಮಾರಸ್ವಾಮಿ ನಿಕಟಪೂರ್ವ ಶಾಸಕರಾಗಿದ್ದ ಕ್ಷೇತ್ರವಾಗಿದೆ. ಅಲ್ಲದೇ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಅವರಿಗೆ ಟಾಂಗ್ ಕೊಡಬೇಕಾದರೆ ಈ ಕ್ಷೇತ್ರದಲ್ಲಿ ಬಲಿಷ್ಠ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕು.
|
6 |
+
ಈ ಕ್ಷೇತ್ರದಲ್ಲಿ ಜೆಡಿಎಸ್ ಚಿಹ್ನೆಯಡಿ ಮೈತ್ರಿ ಸ್ಪರ್ಧೆ ಬಹುತೇಕ ಖಚಿತ ಎನ್ನಲಾಗುತ್ತಿದೆ. ಇದರಿಂದಾಗಿ ನಿಖಿಲ್ ಕುಮಾರಸ್ವಾಮಿ ಅಥವಾ ಜಯಮುತ್ತು ಅವರನ್ನೇ ಅಭ್ಯರ್ಥಿಯನ್ನಾಗಿಸಬೇಕೆಂಬ ಕೂಗು ಪಕ್ಷದಲ್ಲಿ ಕೇಳಿ ಬರುತ್ತಿದೆ.
|
7 |
+
ಮತ್ತೊಂದೆಡೆ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರನ್ನು ಜೆಡಿಎಸ್ ಚಿಹ್ನೆಯಿಂದ ನಿಲ್ಲಿಸುವ ತಂತ್ರವೂ ಚಾಲ್ತಿಯಲ್ಲಿದೆ ಎಂದು ಹೇಳಲಾಗುತ್ತಿದೆ.ಸದ್ಯದ ಪರಿಸ್ಥಿತಿಯಲ್ಲಿ ಚನ್ನಪಟ್ಟಣ ಉಪ ಚುನಾವಣೆ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್ ನಡುವಿನ ಹಣಾಹಣಿಯಾಗಿದೆ. ಅಭ್ಯರ್ಥಿಗಳಾಗಿ ಕಣಕ್ಕೆ ಯಾರೇ ಬಂದರೂ ಇಬ್ಬರಿಗೂ ಇದು ಪ್ರತಿಷ್ಠೆಯ ಚುನಾವಣೆ.
|
8 |
+
ಡಿ.ಕೆ.ಶಿವಕುಮಾರ್ ಅವರು ಶತಾಯಗತಾಯ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಬಾವುಟ ಹಾರಿಸಬೇಕೆಂಬ ಪಣ ತೊಟ್ಟಿದ್ದರೆ, ಕ್ಷ���ತ್ರವನ್ನು ಉಳಿಸಿಕೊಳ್ಳಲೇಬೇಕಿರುವುದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಅನಿವಾರ್ಯ. ಹೀಗಾಗಿ ಉಪಚುನಾವಣಾ ಕಣ ರಂಗೇರಿದೆ.
|
eesanje/url_46_93_12.txt
ADDED
@@ -0,0 +1,15 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಆರ್.ಅಶೋಕ್ ವಿರುದ್ಧ ಸ್ವಪಕ್ಷದಲ್ಲೇ ಅಸಮಾಧಾನ, ಪ್ರತಿಪಕ್ಷದ ನಾಯಕನಾಗಿ ಬೇರೊಬ್ಬರ ಆಯ್ಕೆಗೆ ಚರ್ಚೆ
|
2 |
+
ಬೆಂಗಳೂರು,ಜೂ.28-ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಕಾರ್ಯವೈಖರಿಯ ಬಗ್ಗೆ ಸ್ವಪಕ್ಷದಲ್ಲೇ ಅಸಮಾಧಾನ ವ್ಯಕ್ತವಾಗಿದ್ದು, ಹುದ್ದೆಯಿಂದ ತೆರವುಗೊಳಿಸಿ ಬೇರೊಬ್ಬರನ್ನು ನೇಮಕ ಮಾಡುವ ಬಗ್ಗೆ ಪಕ್ಷದಲ್ಲಿ ಚರ್ಚೆ ಆರಂಭವಾಗಿದೆ.ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವಲ್ಲಿ ವಿಫಲರಾಗಿರುವ ಅಶೋಕ್ ಬದಲಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಸರ್ಕಾರದ ವಿರುದ್ಧ ದಾಖಲೆಗಳ ಸಮೇತ ಛಾಟಿ ಬೀಸುವ ಯುವ ನಾಯಕನನ್ನು ನೇಮಿಸುವ ಬಗ್ಗೆ ಚಿಂತನೆ ನಡೆದಿದೆ.
|
3 |
+
ಅಶೋಕ್ ಅವರ ಸ್ಥಾನಕ್ಕೆ ಕಾರ್ಕಳದ ಬಿಜೆಪಿ ಶಾಸಕ ಸುನಿಲ್ಕುಮಾರ್ ಅವರನ್ನು ನೇಮಕ ಮಾಡಲಾಗುತ್ತದೆ ಎಂಬ ಗುಸುಗುಸು ಕೇಳಿ ಬರುತ್ತಿದೆ. ಜುಲೈನಲ್ಲಿ ಅಧಿವೇಶನ ಪ್ರಾರಂಭವಾಗುವ ನಿರೀಕ್ಷೆಯಿದ್ದು, ಅಷ್ಟರಲ್ಲಿ ವಿಜಯೇಂದ್ರ ಹೆಸರನ್ನು ಅಂತಿಮಗೊಳಿಸಬಹುದು ಎಂದು ಹೇಳಲಾಗುತ್ತಿದೆ.
|
4 |
+
ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾದ ನಂತರ ಅಶೋಕ್ ಸರ್ಕಾರದ ವೈಫಲ್ಯಗಳನ್ನು ಸದನದ ಒಳಗೆ ಮತ್ತು ಹೊರಗೆ ಜನರಿಗೆ ಮನವರಿಕೆ ಮಾಡಿಕೊಡುವಲ್ಲಿ ವಿಫಲರಾಗಿದ್ದಾರೆ ಎಂಬ ಮಾತುಗಳು ಪಕ್ಷದ ವಲಯದಲ್ಲೇ ಕೇಳಿಬಂದಿದೆ.
|
5 |
+
ಹೀಗಾಗಿ ಮುಂದಿನ ಮಳೆಗಾಲದ ಅಧಿವೇಶನದ ಒಳಗೆ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಅಶೋಕ್ ಬದಲಿಗೆ ಹಿಂದುಳಿದ ವರ್ಗಗಳ ನಾಯಕ ಆರ್ಎಸ್ಎಸ್ ಹಿನ್ನಲೆಯ ಸುನೀಲ್ಕುಮಾರ್ ನೇಮಕವಾಗಬಹುದೆಂಬ ಗುಸುಗುಸು ಬಿಜೆಪಿ ಪಾಳೆಯದಲ್ಲಿ ಕೇಳಿಬರುತ್ತಿದೆ.
|
6 |
+
ಈ ಹಿಂದೆ ಪ್ರತಿಪಕ್ಷದ ನಾಯಕರಾಗಿದ್ದ ಯಡಿಯೂರಪ್ಪ, ಸಿದ್ದರಾಮಯ್ಯ, ಕುಮಾರಸ್ವಾಮಿ, ಜಗದೀಶ್ ಶೆಟ್ಟರ್ ಸೇರಿದಂತೆ ಅನೇಕರು ಸರ್ಕಾರವನ್ನು ಸದನದಲ್ಲಿ ದಾಖಲೆಗಳನ್ನಿಟ್ಟು ಮುಜುಗರಕ್ಕೆ ಸಿಲುಕಿಸುತ್ತಿದ್ದರು. ಆದರೆ ಅಶೋಕ್ ಇದುವರೆಗೂ ಇಂತಹ ಒಂದೇ ಒಂದು ಅವಕಾಶವನ್ನು ಸದ್ಬಳಕೆ ಮಾಡಿಕೊಂಡಿಲ್ಲ ಎಂಬ ಅಸಮಾಧಾನ ಶಾಸಕರಲ್ಲಿ ಮಡುಗಟ್ಟಿದೆ.
|
7 |
+
ಕಾನೂನು ಸುವ್ಯವಸ್ಥೆ , ರಾಜ್ಯದಲ್ಲಿ ನಡೆದ ಸರಣಿ ಕೊಲೆಗಳು, ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ಕೇಳಿಬಂದ ಹಗರಣ, ಸರ್ಕಾರದ ವೈಫಲ್ಯಗಳ ಬಗ್ಗೆ ಸದನದಲ್ಲಿ ಸಮರ್ಥವಾಗಿ ಮಾತನಾಡುವಲ್ಲಿ ಅಶೋಕ್ ವಿಫಲರಾಗುತ್ತಿದ್ದಾರೆ ಎನ್ನಲಾಗುತ್ತಿದೆ.
|
8 |
+
ಹೀಗಾಗಿ ಬಹುತೇಕ ಶಾಸಕರು ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರುಗಳಿಗೆ ಎದುರೇಟು ನೀಡುವ ನಾಯಕನೊಬ್ಬನನ್ನು ಛಾಯಾ ಮುಖ್ಯಮಂತ್ರಿ ಎಂದೇ ಕರೆಯಲ್ಪಡುವ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಕೂರಿಸಬೇಕೆಂಬ ಒಕ್ಕೊರಲಿನ ಆಗ್ರಹ ಮಾಡುತ್ತಿದ್ದಾರೆ.
|
9 |
+
ಈ ಹಿಂದೆ ಬಿಜೆಪಿ ಸರ್ಕಾರದ ಕೆಲವು ಹಗರಣಗಳ ಬಗ್ಗೆ ಅಂದು ಸಿದ್ದರಾಮಯ್ಯನವರು ಗಂಟೆಗಟ್ಟಲೇ ಮಾತನಾಡಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಅ���್ಲದೆ ಸಾಕಷ್ಟು ಬಾರಿ ಮುಜುಗರಕ್ಕೂ ಸಿಲುಕಿಸಿದ ನಿದರ್ಶನಗಳೂ ಇವೆ. ಆದರೆ ಅಶೋಕ್ ಅವರು ಈವರೆಗೂ ಸದನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಒಂದೇ ಒಂದು ಪ್ರಸಂಗವೂ ಜರುಗಿಲ್ಲ. ಬದಲಿಗೆ ಕೆಲವು ಸಂದರ್ಭಗಳಲ್ಲಿ ಅವರೇ ಮುಜುಗರಕ್ಕೀಡಾದ ಪ್ರಸಂಗವೂ ಜರುಗಿದೆ. ಹೀಗಾಗಿ ಅವರ ಸ್ಥಾನಕ್ಕೆ ಕುತ್ತು ಎಂಬ ಮಾತು ಜಗನ್ನಾಥ ಭವನದಿಂದಲೇ ರಿಂಗಣಿಸುತ್ತಿದೆ.
|
10 |
+
ಶೀಘ್ರದಲ್ಲೇ ಆಯ್ಕೆ:ಇನ್ನು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾಗಿರುವುದರಿಂದ, ಪ್ರತಿಪಕ್ಷ ಬಿಜೆಪಿಯು ಪರಿಷತ್ತಿನಲ್ಲಿ ಅವರ ಸ್ಥಾನಕ್ಕೆ ಮತ್ತೊಬ್ಬರನ್ನು ನೇಮಿಸಲು ಮುಂದಾಗಿದೆ.ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಮತ್ತೊಬ್ಬ ಎಂಎಲ್ಸಿ ಎನ್.ರವಿಕುಮಾರ್ ಅವರ ಹೆಸರು ಕೂಡ ಕೇಳಿಬರುತ್ತಿದೆ.
|
11 |
+
ವಿರೋಧ ಪಕ್ಷದ ನಾಯಕರಾಗಿದ್ದ ಪೂಜಾರಿ ಅವರು ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಅದರಂತೆ ಅವರು ಪರಿಷತ್ತಿಗೆ ರಾಜೀನಾಮೆ ನೀಡಿದರು. ಆಡಳಿತಾರೂಢ ಕಾಂಗ್ರೆಸ್ನ್ನು ಸಮರ್ಥವಾಗಿ ಎದುರಿಸಬಲ್ಲ ಮೇಲನೆಗೆ ಬಿಜೆಪಿ ಈಗ ಪ್ರಬಲ ವಿರೋಧ ಪಕ್ಷದ ನಾಯಕನನ್ನು ಹುಡುಕುತ್ತಿದೆ.
|
12 |
+
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಒಕ್ಕಲಿಗರಾಗಿದ್ದಾರೆ, ಸಿ.ಟಿ.ರವಿ ಕೂಡ ಒಕ್ಕಲಿಗರಾಗಿರುವುದರಿಂದ ಪರಿಷತ್ ಪ್ರತಿಪಕ್ಷ ನಾಯಕನ ಸ್ಥಾನ ನೀಡುವ ಸಾಧ್ಯತೆ ಕಡಿಮೆ. ಒಬಿಸಿ ಸಮುದಾಯಕ್ಕೆ ಸೇರಿದ ರವಿಕುಮಾರ್ ಅವರು ಜನಪ್ರಿಯ ಮುಖಂಡರಾಗಿದ್ದಾರೆ, ಇದರೊಂದಿಗೆ ಸದನದಲ್ಲಿ ಒಕ್ಕಲಿಗ ಮತ್ತು ಒಬಿಸಿ ಸಮುದಾಯಗಳಿಗೆ ಸಮಾನ ಪ್ರಾತಿನಿಧ್ಯ ನೀಡಿರುವುದಾಗಿ ಪಕ್ಷ ಹೇಳಿಕೊಳ್ಳಬಹುದು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲಿಂಗಾಯತ. ಅಲ್ಲದೆ ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಕೂಡ ಲಿಂಗಾಯತರಾಗಿದ್ದಾರೆ.
|
13 |
+
ರವಿಕುಮಾರ್ ಅವರನ್ನು ಪರಿಷತ್ ಪ್ರತಿಪಕ್ಷ ನಾಯಕನಾಗಿ ನೇಮಕ ಮಾಡಲು ಹಲವು ನಾಯಕರು ಮತ್ತು ಎಂಎಲ್ಸಿಗಳು ಉತ್ಸುಕರಾಗಿದ್ದಾರೆ. ಪಕ್ಷದ ನೆಲೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಅವರು ಶ್ರಮಿಸಿದ್ದಾರೆ. ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಲು ಪಕ್ಷದ ಹೈಕಮಾಂಡ್ ಉತ್ಸುಕವಾಗಿದೆ ಎಂದು ಪಕ್ಷದ ಪ್ರಮುಖರೊಬ್ಬರು ತಿಳಿಸಿದ್ದಾರೆ.
|
14 |
+
ಬಿಜೆಪಿ-ಜೆಡಿಎಸ್ ಮೈತ್ರಿಕೂಟದಲ್ಲಿ ಸದನದಲ್ಲಿ ಕಾಂಗ್ರೆಸ್ಗಿಂತ ಹೆಚ್ಚಿನ ಶಾಸಕರಿದ್ದಾರೆ. ರಾಜ್ಯದಲ್ಲಿ ಪೂರ್ಣ ಬಹುಮತದ ಸರ್ಕಾರವಿದ್ದು, ಹೀಗಾಗಿ ಪ್ರಬಲ ವಿರೋಧ ಪಕ್ಷದ ನಾಯಕರನ್ನು ನೇಮಕ ಮಾಡಲು ಬಿಜೆಪಿ ಮೇಲೆ ಒತ್ತಡವಿದೆ. ಈ ಹಿಂದೆ ಸಚಿವರಾಗಿ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಸಿ.ಟಿ.ರವಿ ಪಕ್ಷಕ್ಕೆ ಮತ್ತ���ಂದು ಆಯ್ಕೆಯಾಗಲಿದ್ದಾರೆ ಎನ್ನಲಾಗಿದೆ.
|
15 |
+
ಒಕ್ಕಲಿಗ ನಾಯಕರಾಗಿರುವ ಸಿ,ಟಿ ರವಿ ಅವರು ಕೂಡ ಒಂದು ವಿಭಾಗದ ಬೆಂಬಲ ಪಡೆದಿದ್ದಾರೆ. ಮತ್ತೊಬ್ಬ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ಕೂಡ ರೇಸ್ನಲ್ಲಿದ್ದಾರೆ. ದೆಹಲಿಯಲ್ಲಿರುವ ವಿಜಯೇಂದ್ರ ಅವರು ಹಿರಿಯ ನಾಯಕರ ಜೊತೆ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ ಎಂದು ಹೇಳಲಾಗಿದೆ.
|
eesanje/url_46_93_2.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಮುಖ್ಯಮಂತ್ರಿ ಬದಲಾಯಿಸುವುದಾದರೆ ವೀರಶೈವ ಸಮುದಾಯದವರನ್ನೇ ಸಿಎಂ ಮಾಡಿ
|
2 |
+
ಬೆಳಗಾವಿ,ಜೂ.28-ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುವುದಾದರೆ ವೀರಶೈವ ಸಮುದಾಯದವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಶ್ರೀಶೈಲ ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿಯವರು ಒತ್ತಾಯಿಸಿದ್ದಾರೆ.
|
3 |
+
ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಲಿಂಗಾಯತ ಸಮುದಾಯ ಪ್ರಮುಖ ಪಾತ್ರ ವಹಿಸಿದೆ. ಪೂರ್ವನಿರ್ಧರಿತ ಒಡಂಬಡಿಕೆಗಳಿದ್ದರೆ ಅದರ ಪ್ರಕಾರ ನಡೆದುಕೊಳ್ಳುವುದಕ್ಕೆ ನಮ ಅಭ್ಯಂತರವಿಲ್ಲ ಎಂದಿದ್ದಾರೆ.
|
4 |
+
ಮುಖ್ಯಮಂತ್ರಿ ಬದಲಾವಣೆ, ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಯ ಸಂದರ್ಭದಲ್ಲಿ ವೀರಶೈವ ಸಮುದಾಯವನ್ನು ಕಡೆಗಣಿಸಬಾರದು ಎಂದರು.ಎಂ.ಡಿ.ಪಾಟೀಲ್, ಎಸ್.ಎಸ್.ಮಲ್ಲಿಕಾರ್ಜುನ್ ಸೇರಿದಂತೆ ಸಮುದಾಯದ ಎಲ್ಲಾ ಸಚಿವರು ಸರ್ಕಾರದಲ್ಲಿ ತಮ ಕೆಲಸ ಮಾಡುತ್ತಿದ್ದಾರೆ. ಅವರನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.
|
5 |
+
ಈ ನಿಟ್ಟಿನಲ್ಲಿ ಕಾಶಿ ಪೀಠ, ಉಜ್ಜಯಿನಿ ಪೀಠ ಸೇರಿ ಪಂಚಪೀಠಗಳ ಜೊತೆ ಈ ಕುರಿತು ಚರ್ಚೆ ನಡೆಸಿದ್ದೇವೆ. ಅವರೂ ಕೂಡ ಈ ಬೇಡಿಕೆಗೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು. ನಿನ್ನೆ ಕೆಂಪೇಗೌಡ ಜಯಂತಿಯ ವೇಳೆ ಮಾತನಾಡಿದ ಚಂದ್ರಶೇಖರ ಸ್ವಾಮೀಜಿ ಮಾತನಾಡಿ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ಅನುಭವಿಸಿದ್ದಾರೆ.
|
6 |
+
ಮುಂದಿನ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಅಧಿಕಾರ ಬಿಟ್ಟುಕೊಟ್ಟು ಸಹಕಾರ ನೀಡಬೇಕೆಂದು ಹೇಳಿದ್ದರು. ಇದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಈಗ ಅದರ ಬೆನ್ನಲ್ಲೇ ಪಂಚಪೀಠಗಳಿಂದ ವೀರಶೈವ ಸಮುದಾಯಕ್ಕೆ ಮುಖ್ಯಮಂತ್ರಿ ಹುದ್ದೆಯ ಬೇಡಿಕೆ ಬಂದಿರುವುದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.
|
eesanje/url_46_93_3.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಮಾನ-ಮರ್ಯಾದೆ ಇದ್ದಿದ್ರೆ ವೇದಿಕೆಯಲ್ಲೇ ಸಿಎಂ ರಾಜೀನಾಮೆ ನೀಡಬೇಕಿತ್ತು : ಆರ್.ಅಶೋಕ
|
2 |
+
ಕೋಲಾರ, ಜೂ.28: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸಚಿವ ಬಿ.ನಾಗೇಂದ್ರ 20% ತಿಂದಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ 80% ತಿಂದಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಈ ಕುರಿತು ಸದನದಲ್ಲೂ ಆಗ್ರಹಿಸುತ್ತೇವೆ. ಸಿಎಂ ರಾಜೀನಾಮೆ ನೀಡುವವರೆಗೂ ಹೋರಾಡುತ್ತೇವೆ ಎಂದು ತಿಳಿಸಿದರು.
|
3 |
+
ಕಾಂಗ್ರೆಸ್ ಸರ್ಕಾರ ಉಚಿತಗಳ ಹೆಸರಲ್ಲಿ ಬೆಲೆ ಏರಿಕೆ ಮಾಡಿದೆ. ಹಾಲಿನ ಬೆಲೆ ಏರಿಕೆ ಮಾಡಿದ್ದು ಏಕೆ ಎಂದು ಪ್ರಶ್ನೆ ಮಾಡಿದರೆ ಹೆಚ್ಚು ಹಾಲು ನೀಡಿದ್ದೇವೆ ಎನ್ನುತ್ತಾರೆ. ಆದರೆ ಹೆಚ್ಚಾದ ಹಣವನ್ನು ರೈತರಿಗೆ ಕೊಡುವುದಿಲ್ಲ. ಬಡವರು ಕೂಲಿ ಮಾಡಿ ದುಡಿದು ಮದ್ಯ ಸೇವಿಸಲು ಹೋದರೆ ಅದಕ್ಕೂ ದರ ಏರಿಕೆ ಮಾಡಿದ್ದಾರೆ. ಶ್ರೀಮಂತರು ಕುಡಿಯುವ ಮದ್ಯದ ದರವನ್ನು ಇಳಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ. ಆದರೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಮಾತ್ರ ಅಭಿವೃದ್ಧಿಯಾಗುತ್ತಿದ್ದಾರೆ ಎಂದರು.
|
4 |
+
ರೈತರಿಗೆ 800 ಕೋಟಿ ರೂ. ಹಾಲಿನ ಪ್ರೋತ್ಸಾಹಧನ ನೀಡಬೇಕಿದೆ. ರೈತರು ಬರ ಪರಿಹಾರ, ಪ್ರೋತ್ಸಾಹಧನ ಇಲ್ಲದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸರ್ಕಾರಕ್ಕೆ ಕುಡಿಯುವ ನೀರು ಕೊಡಲು ಕೂಡ ಯೋಗ್ಯತೆ ಇಲ್ಲದೆ ಕಲುಷಿತ ನೀರು ಕುಡಿದು ಜನರು ಸತ್ತಿದ್ದಾರೆ. ಡೆಂಘೀ ರೋಗ ಹರಡುತ್ತಿದ್ದು, ಅದಕ್ಕೆ ಚಿಕಿತ್ಸೆ ನೀಡಲು ಸರ್ಕಾರದ ಬಳಿ ಹಣವಿಲ್ಲ. ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜನರು ಕಾಂಗ್ರೆಸ್ಗೆ ಬುದ್ಧಿ ಕಲಿಸಬೇಕು ಎಂದರು.
|
5 |
+
ತೈಲ ದರ ಏರಿಕೆಯಾಗಿ ಎಲ್ಲ ದರಗಳು ಏರಿದೆ. ಹಾಲು ಉತ್ಪಾದನೆ ಹೆಚ್ಚಳವಾದರೆ ಅದನ್ನು ಬೇರೆ ರೀತಿ ಬಳಸಿಕೊಳ್ಳಬಹುದು. ಅದನ್ನು ಬಿಟ್ಟು ಹಾಲಿನ ದರ ಏರಿಸಿದ್ದಾರೆ. ಇನ್ನು ಲಿಕ್ಕರ್ ದರ ಕೂಡ ಏರಿಸುತ್ತಾರೆ. ಅವೈಜ್ಞಾನಿಕ ಗ್ಯಾರಂಟಿಗಳನ್ನು ಜಾರಿ ಮಾಡಿ, ಅದಕ್ಕೆ ಹಣ ಹೊಂದಿಸಲು ಸಾಧ್ಯವಾಗದೆ ತೆರಿಗೆ ವಿಧಿಸಿ ಜನರ ರಕ್ತ ಹೀರುತ್ತಿದ್ದಾರೆ ಎಂದು ದೂರಿದರು.
|
6 |
+
ಮರ್ಯಾದೆ ಇದ್ದಿದ್ದರೆ ರಾಜೀನಾಮೆ ಕೊಡಬೇಕಿತ್ತುಒಕ್ಕಲಿಗ ಸ್ವಾಮೀಜಿಯವರು ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲು ಹೇಳಿದ್ದಾರೆ. ಸಿದ್ದರಾಮಯ್ಯ ಧರ್ಮಾತ್ಮ ಅಲ್ಲ ಎಂದೇ ಸ್ವಾಮೀಜಿ ಪರೋಕ್ಷವಾಗಿ ಹೇಳಿದ್ದರೂ, ಡಿ.ಕೆ.ಶಿವಕುಮಾರ್ ಮೌನವಾಗಿದ್ದರು. ಸಿದ್ದರಾಮಯ್ಯ ಚಾಕು ಹಾಕಿದರೆ, ಡಿ.ಕೆ.ಶಿವಕುಮಾರ್ ಚೂರಿ ಹಾಕ���ತ್ತಾರೆ. ಮಾನ ಮರ್ಯದೆ ಇದ್ದಿದ್ದರೆ ಸಿದ್ದರಾಮಯ್ಯ ವೇದಿಕೆಯಲ್ಲೇ ರಾಜೀನಾಮೆ ನೀಡಿ ಹೋಗಬೇಕಿತ್ತು ಎಂದರು.
|
7 |
+
ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಕಾಟದಿಂದ ತಪ್ಪಿಸಿಕೊಳ್ಳಲು ಡಿ.ಕೆ.ಸುರೇಶ್ ಅವರನ್ನು ಸೋಲಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಡಿ.ಕೆ.ಶಿವಕುಮಾರ್ ಸ್ವಾಮೀಜಿ ಕೈಯಲ್ಲಿ ಹೇಳಿಕೆ ಕೊಡಿಸಿದ್ದಾರೆ. ಇದರ ನಡುವೆ ಮೂರು ಡಿಸಿಎಂ ಬೇಕೆಂದು ಸಚಿವರು ಹೇಳುತ್ತಿದ್ದಾರೆ. ಕಾಂಗ್ರೆಸ್ ಶಾಸಕರ ಶಾಪದಿಂದಲೇ ಸರ್ಕಾರ ಬೀಳಲಿದೆ ಎಂದರು.
|
eesanje/url_46_93_4.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ರಾಜ್ಯದ 4 ಸಾರಿಗೆ ನಿಗಮಗಳ ನಿವೃತ್ತ ನೌಕರರ ವೇತನ ಪರಿಷ್ಕರಿಸಿ ಸರ್ಕಾರ ಆದೇಶ
|
2 |
+
ಬೆಂಗಳೂರು,ಜೂ.28– ಸಾರ್ವಜನಿಕ ಸಾರಿಗೆ ಬಸ್ ದರ ಏರಿಕೆ ಮಾಡುವ ಪ್ರಸ್ತಾಪದ ಮಧ್ಯೆಯೇ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ವೇತನ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
|
3 |
+
2023ರ ಮಾರ್ಚ್ನಲ್ಲಿ ನಿವೃತ್ತಿಯಾದ ನೌಕರರಿಗೆ ಶೇ.15ರಷ್ಟು ಹೆಚ್ಚುವರಿ ನಿವೃತ್ತಿ ವೇತನ ಇನ್ನು ಮುಂದೆ ಸಿಗಲಿದೆ. 2023ರ ಮಾರ್ಚ್ನಲ್ಲಿ ನಿವೃತ್ತಿ ಹೊಂದಿದ ಅಧಿಕಾರಿ ಮತ್ತು ನೌಕರರಿಗೆ 2019ರ ಡಿಸೆಂಬರ್ 31ರಂದು ಅವರು ಪಡೆಯುತ್ತಿದ್ದ ಮೂಲವೇತನ ಪರಿಗಣಿಸಿ ಶೇ.15ರಷ್ಟು ಹೆಚ್ಚಿಸಿ ವೇತನ ಶ್ರೇಣಿ ಪರಿಷ್ಕರಿಸಲು ಆದೇಶ ಹೊರಡಿಸಲಾಗಿದೆ.
|
4 |
+
ನಾಲ್ಕು ನಿಗಮಗಳಿಗೆ 220 ಕೋಟಿ ರೂ:ನಿವೃತ್ತಿಯಾದ ನೌಕರರಿಗೆ ವೇತನ ಪರಿಷ್ಕರಣೆಯ ಹೆಚ್ಚಿಸಿದ ಹಣ ನೀಡಲು ನಾಲ್ಕು ಸಾರಿಗೆ ನಿಗಮಗಳಿಗೆ ಅಂದಾಜು 220 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ.
|
5 |
+
2023ರ ಮಾರ್ಚ್ 1ರಂದು ಸಂಸ್ಥೆಯ ಸೇವೆಯಲ್ಲಿದ್ದ ಅಧಿಕಾರಿ ನೌಕರರಿಗೆ 2020ರ ಜನವರಿ 1 ರಿಂದ 2023ರ ಫೆಬ್ರವರಿ 28ರ ಅವಧಿಯನ್ನು ನೋಷನಲ್ ಆಗಿ ಪರಿಗಣಿಸಿ ವೇತನ ನಿಗದಿಪಡಿಬೇಕು. ಈ ವರ್ಷದ ಕೊನೆಯಲ್ಲಿ ನಿವೃತ್ತಿ ನೌಕರರಿಗೆ ವೇತನ ಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
|
eesanje/url_46_93_5.txt
ADDED
@@ -0,0 +1,14 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕೇಂದ್ರದಿಂದ ಅನುದಾನ ಹೆಚ್ಚಳಕ್ಕೆ ಒತ್ತಡ ಹೇರುವಂತೆ ಸಂಸದರಿಗೆ ಸಿಎಂ ಮನವಿ
|
2 |
+
ನವದೆಹಲಿ, ಜೂ.28-ರಾಜ್ಯಕ್ಕೆ ಅನುದಾನ ಹಂಚಿಕೆ ಸಂದರ್ಭದಲ್ಲಿ 1971ರ ಜನಸಂಖ್ಯೆಯನ್ನೇ ಮಾನದಂಡ ವಾಗಿ ಪರಿಗಣಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ಸಂಸದರಿಗೆ ಮನವಿ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
|
3 |
+
ನವದೆಹಲಿಯಲ್ಲಿ ನಿನ್ನೆ ನಡೆದ ಸಂಸದರ ಸಭೆಯ ಕುರಿತು ಇಂದು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, 15ನೇ ಹಣಕಾಸು ಆಯೋಗ ಅನುದಾನ ಹಂಚಿಕೆಗೆ 2011ರ ಜನಸಂಖ್ಯೆ ಪರಿಗಣಿಸಿದೆ, ನಮ ರಾಜ್ಯದಲ್ಲಿ ಜನಸಂಖ್ಯೆಯನ್ನು ಸಮರ್ಥವಾಗಿ ನಿಯಂತ್ರಿಸಲಾಗಿದೆ. ಹಾಗಾಗಿ 1971ರ ಜನಗಣತಿಯನ್ನು ಪರಿಗಣಿಸುವಂತೆ ಒತ್ತಡ ಹೇರುವಂತೆ ಒತ್ತಾಯಿಸಿದ್ದೇವೆ ಎಂದು ಹೇಳಿದರು.
|
4 |
+
ರಾಜ್ಯದಿಂದ ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ನೀಡುತ್ತಿದ್ದೇವೆ. ನಮಗೆ ವಾಪಾಸ್ ಬರುವುದು ಶೇ.12ರಷ್ಟು ಮಾತ್ರ. ಇದರಲ್ಲಿ ದೊಡ್ಡ ಅನ್ಯಾಯವಾಗಿದೆ, ಸರಿ ಪಡಿಸಿ ಎಂದಿದ್ದೇವೆ. 16ನೇ ಹಣಕಾಸು ಆಯೋಗದ ಮುಂದೆ ವಾದ ಮಾಡಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
|
5 |
+
15ನೇ ಹಣಕಾಸು ಆಯೋಗದಲ್ಲಿ ಎರಡು ವರದಿ ನೀಡಿದೆ. 2021ರಲ್ಲಿ ಮೊದಲ ವರದಿ ನೀಡಿದೆ. ಅದು ಆ ವರ್ಷಕ್ಕೆ ಸೀಮಿತವಾಗಿತ್ತು. 2020-21ರ ವರದಿಯಲ್ಲಿ 5495 ಕೋಟಿ ಅನುದಾನ ಕೊಡಬೇಕು ಎಂದು ಪ್ರಸ್ತಾಪಿಸಲಾಗಿತ್ತು, ಜೊತೆಗೆ ಮೀಜೋರಾಂ 546 ಕೋಟಿ, ತೆಲಂಗಾಣಕ್ಕೆ 723 ಕೋಟಿ ರೂಪಾಯಿ ವಿಶೇಷ ಅನುದಾನ ನೀಡಬೇಕು ಎಂದು ಹೇಳಲಾಗಿತ್ತು. ಅದನ್ನು ಕೊಟ್ಟಿಲ್ಲ.
|
6 |
+
14ನೇ ಹಣಕಾಸು ಆಯೋಗದಲ್ಲಿ ಶೇ.4.7 ರಷ್ಟು ಅನುದಾನ ಬಂದಿದ್ದರೆ, 15ನೇ ಆಯೋಗದಲ್ಲಿ ಶೇ.3.6ರಷ್ಟು ಕಡಿಮೆಯಾಗಿದೆ. ಅದನ್ನು ನ್ನಿನೆ ಸಂಸದರ ಗಮನಕ್ಕೆ ತಂದಿದ್ದೇವೆ. ಅನುದಾನ ಹಂಚಿಕೆಯ ಮಾನದಂಡಗಳನ್ನು ಸರಿಯಾಗಿಲ್ಲ. ಸಂಸದರು ಕೇಂದ್ರ ಸರ್ಕಾರ ಹಾಗೂ ಆರ್ಥಿಕ ಇಲಾಖೆ ಮೇಲೆ ಒತ್ತಡ ತರಬೇಕು ಎಂದು ಒತ್ತಾಯಿಸಿದ್ದೇವೆ.
|
7 |
+
ಹಿಂದಿನ ಸರ್ಕಾರದಲ್ಲೂ ಇದು ಚರ್ಚೆಯಾಗಿ, ಹಣ ಪಡೆಯಲು ಪ್ರಯತ್ನವೂ ನಡೆದಿತ್ತು. ಕೇಂದ್ರ ಸರ್ಕಾರ ಎರಡನೇ ವರದಿಯಲ್ಲಿ ವಿಶೇಷ ಅನುದಾನದ ಪ್ರಸ್ತಾಪ ಮಾಡಿಲ್ಲ ಎಂದು ಹೇಳಿ ಹಣ ಕೊಟ್ಟಿಲ್ಲ. ಆದರೆ ಮೊದಲ ವರದಿಯನ್ನು ತಿರಸ್ಕರಿಸಿಲ್ಲ. ಜೊತೆಗೆ ಎರಡನೇ ವರದಿಯಲ್ಲಿ ಫೆರಿಫರಲ್ ರಿಂಗ್ ರಸ್ತೆ ಹಾಗೂ ಬೆಂಗಳೂರಿನ ಅಂತರ್ಜಲ ವೃದ್ಧಿಗಾಗಿ ಕೆರೆ ಅಭಿವೃದ್ಧಿಗೆ ತಲಾ ಮೂರು ಸಾವಿರದಂತೆ ಒಟ್ಟು ಆರು ಸಾವಿರ ಕೋಟಿ ಕೊಡುತ್ತೇವೆ ಎಂದು ಹೇಳಿದ್ದರು.
|
8 |
+
ಕೊಟ್ಟಿಲ್ಲ. ಅದಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜಕೀಯ ವಾಗಿ ಹೇಳಿಕೆ ನೀಡಿ ಜಾರಿಕೊಳ್ಳುತ್ತಿದ್ದಾರೆ. ಎಲ್ಲಾ ಸೇರಿ ಒಟ್ಟು 11,495 ಹಣ ಬಾಕಿ ಇದೆ. ಇದಕ್ಕೆ ಒತ್ತಡ ಹೇರಲು ಸಂಸದರಿಗೆ ಮನವಿ ಮಾಡಿದ್ದೇವೆ ಎಂದು ಹೇಳಿದರು.
|
9 |
+
ಮೇಟ್ರೋ ಮೂರನೇ ಹಂತದ 15600 ಕೋಟಿ ರೂಪಾಯಿ ಯೋಜನೆ ಮಂಜೂರು ಮಾಡಿಸಬೇಕು. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ���ಿ ರಾಜ್ಯಕ್ಕೆ 700 ಕೋಟಿ ಬರಬೇಕಿದೆ. ರಾಯಚೂರಿನಲ್ಲಿ ಏಮ್ಸೌ ಸ್ಥಾಪನೆಗೆ ಮನವಿ ಮಾಡಿದ್ದೇವೆ. ಎನ್ಡಿಆರ್ಎಫ್ ಅಡಿ ಪರಿಹಾರ ನೀಡುವ ಪ್ರಮಾಣವನ್ನು ಪರಿಷ್ಕರಣೆ ಮಾಡಲು ಒತ್ತಾಯಸಿದ್ದೇವೆ. ದೇಶದಲ್ಲಿ 12 ರಾಜ್ಯಗಳು ಹೆಚ್ಚು ಬರಕ್ಕೆ ತುತ್ತಾಗುತ್ತವೆ. ಅದರಲ್ಲಿ ಕರ್ನಾಟಕವೂ ಪ್ರಮುಖವಾಗಿದ್ದು, ಹೆಚ್ಚಿನ ಪರಿಹಾರ ಮತ್ತು ಇನ್ಪುಟ್ ಸಬ್ಸಿಡಿ ಪ್ರಮಾಣ ಹೆಚ್ಚಿಸಬೇಕು ಎಂದು ಮನವಿ ಮಾಡಿರುವುದಾಗಿ ವಿವರಿಸಿದರು.
|
10 |
+
ಪಶ್ಚಿಮಘಟ್ಟಕ್ಕೆ ಸಂಬಂಧಿಸಿದಂತೆ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು. ವರದಿಯಿಂದ ರೈತರಿಗೆ ಹಾಗೂ ಅರಣ್ಯ ಪ್ರದೇಶದಲ್ಲಿ ವಾಸಿಸುವರಿಗೆ ಅನುಕೂಲವಾಗುವುದಿಲ್ಲ ಎಂದು ಹೇಳಿದ್ದೇವೆ. ಈ ವಿಚಾರ ನ್ಯಾಯಾಲಯದಲ್ಲಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಜನರ ಅಭಿಪ್ರಾಯವನ್ನು ನಾವು ವಿವರಸಿದ್ದೇವೆ ಎಂದು ತಿಳಿಸಿದರು.
|
11 |
+
ರೈಲ್ವೆ ಬಗ್ಗೆಯೂ ಪ್ರಸ್ತಾಪ ಮಾಡಿದ್ದೇವೆ. ರೈಲ್ವೆಯಿಂದ ಬರುವ ಆದಾಯ ಸಂಪೂರ್ಣ ಕೇಂದ್ರ ಸರ್ಕಾರದ್ದಾಗಿದೆ, ಆದರೂ ರಾಜ್ಯದಲ್ಲಿ ಹೆಚ್ಚು ರೈಲ್ವೆ ಮಾರ್ಗಗಳಾಲಿ ಎಂದು ಜಾಗ ನೀಡುತ್ತಿದೆ. ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ವೆಚ್ಚದಲ್ಲಿ ಶೇಕಡವಾರು ಭರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈಗ ಆ ಪ್ರಮಾಣ ಶೇ.50ರಷ್ಟಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಾಕಿ ಇರುವ ಯೋಜನೆಗಳನ್ನು ಪೂರ್ಣಗೊಳಿಸಿ ಮತ್ತಷ್ಟು ಯೋಜನೆಗಳನ್ನು ಆರಂಭಿಸಲು ಒತ್ತಾಯಿಸಿದ್ದೇವೆ ಎಂದರು.
|
12 |
+
ಗ್ರಾಮ ಸಡಕ್ ಯೋಜನೆಯ ರಸ್ತೆಗಳು ಬೇರೆ ರಾಜ್ಯಕ್ಕೆ ಹೊಲಿಸಿದರೆ ನಮಲ್ಲಿ ಕಡಿಮೆ ಇವೆ. ಇಂದು ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರನ್ನು ಭೇಟಿ ಮಾಡಿ ವಿವರಿಸುತ್ತೇನೆ.ಅಲ್ಪಸಂಖ್ಯಾತರಿ ಅಭಿವೃದ್ಧಿಗೆ 659 ಕೋಟಿ ರೂಪಾಯಿ ವೆಚ್ಚದಲ್ಲಿ 52 ಯೋಜನೆಗಳನ್ನು ಮಾಡಲಾಗಿದೆ, ಬುಡಕಟ್ಟು ಜನರ ಅಭಿವೃದ್ಧಿಗೆ ಅನುದಾನ ಕೊಡಿಸಲು ಪ್ರಸ್ತಾಪಿಸಲಾಗಿದೆ. ಕೆಲವು ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದಕ್ಕೆ ಅನುಮತಿ ನೀಡುವಂತೆ ಕೇಳಿದ್ದೇವೆ.
|
13 |
+
ಮೀನುಗಾರಿಕೆ ಇಲಾಖೆಯಡಿ ಉತ್ತರ ಕನ್ನಡ ಜಿಲ್ಲೆಯ ಮಾಜಳ್ಳಿಯಲ್ಲ ಹೊಸ ಬಂದರು ಮಾಡಬೇಕು, ಮಂಗಳೂರಿನಲ್ಲಿರುವ ಮೀನುಗಾರಿಗೆ ಬಂದರು ವಿಸ್ತರಣೆ ಮಾಡಲು 2023ರಿಂದ ಬೇಡಿಕೆ ಸಲ್ಲಿಸಿದ್ದೇವೆ. ಅದಕ್ಕೆ ಮಂಜೂರಾತಿ ಕೊಡಿಸಲು ಕೇಳಿಕೊಂಡಿದ್ದೇವೆ.
|
14 |
+
ಬಾಕಿ ಯೋಜನೆಗಳ ಸಂಪೂರ್ಣ ವಿವರಣೆಯ ಕಿರು ಹೊತ್ತಿಗೆಯನ್ನು ಸಂಸದರಿಗೆ ನೀಡಿದ್ದೇವೆ. ಚುನಾವಣೆ ಮುಗಿದೆ. ಇಂದು ನಡೆಯುತ್ತಿರುವ ಸಭೆ ವಿಧಾನಮಂಡಲ ಅಥವಾ ಸಂಸತ್ ಅಧಿವೇಶನ ಅಲ್ಲ. ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಮನವಿ ಮಾಡಿದ್ದೇನೆ ಎಂದು ವಿವರಿಸಿದರು.
|
eesanje/url_46_93_6.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಜನ ನೀಡಿರುವ ಸ್ನೇಹ-ಅಭಿಮಾನ ದೊಡ್ಡದು : ಡಾ.ಬಿ.ಆರ್.ಮಮತಾ
|
2 |
+
ಬೆಂಗಳೂರು, ಜೂ.28-ನಾನು ಹೆಜ್ಜೆಯಿಟ್ಟಿರುವಲ್ಲೆಲ್ಲಾ ಜನ ನೀಡಿರುವ ಸ್ನೇಹ ದೊಡ್ಡದು. ಅದು ನನ್ನಲ್ಲಿ ಧನ್ಯತಾ ಭಾವ ತುಂಬಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮಹಾ ನಿರೀಕ್ಷಕರಾದ ಡಾ. ಬಿ.ಆರ್. ಮಮತಾ ಅವರು ಹೇಳಿದರು.
|
3 |
+
ಜೂ.30ರಂದು ನಿವೃತ್ತರಾಗುತ್ತಿರುವ ಮಮತಾ ಅವರಿಗೆ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಎಂಬ ಮಾತಿನಂತೆ ನನ್ನ ಸ್ನೇಹಿತರು, ಹಿರಿಯರು, ಮಾರ್ಗದರ್ಶಕರು ಅಧಿ ಕಾರಿಗಳು ನನ್ನನ್ನು ರೂಪಿಸಿದ್ದಾರೆ. ಚಿತ್ರದುರ್ಗದ ಕುಗ್ರಾಮ ಪಿಟ್ಲಾಳಿಯ ನಂಟು ಸದಾ ಉಳಿಸಿಕೊಂಡು ಬೆಳೆದುಬಂದ ಬಗೆಯನ್ನು ವಿವರಿಸಿದ ಮಮತಾ ಅವರು ಮೊದಲು ಆಸೆಪಟ್ಟಂತೆ ವೈದ್ಯರಾಗದೇ ಪತ್ರಕರ್ತೆಯಾಗಿದ್ದು, ವಿಪ್ರೋ ಸಂಸ್ಥೆಯಲ್ಲಿ ಕೆಲಸ ಮಾಡಿದ್ದನ್ನು ಸ್ಮರಿಸಿದರು. ನಂತರ ವಾರ್ತಾ ಇಲಾಖೆಗೆ ಅನಿರೀಕ್ಷಿತವಾಗಿ ಸೇರಿ ಐಎಎಸ್ವರೆಗಿನ ತಮ್ಮ ವೃತ್ತಿ ಜೀವನದ ಪಯಣವನ್ನು ವಿವರಿಸಿದರು.
|
4 |
+
ಸರ್ಕಾರದ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಂ.ಆರ್.ಶ್ರೀನಿವಾಸಮೂರ್ತಿ ಮಾತನಾಡಿ, ಸೇವೆಗೆ ಸೇರಿದ ನಂತರವೂ ಮಮತಾ ಅವರು ತಮ್ಮ ಶಿಕ್ಷಣವನ್ನೂ ಮುಂದುವರೆಸಿದ್ದು ವಿಶೇಷ. ದೇಶ-ವಿದೇಶಗಳನ್ನು
|
5 |
+
ಸುತ್ತಿ ತಮ್ಮ ಜ್ಞಾನವನ್ನು ಬೆಳೆಸಿಕೊಂಡರು. ಇದು ಎಲ್ಲರೂ ಕಲಿಯಬೇಕಾದ ಪಾಠ. ಕಾನೂನು ಮೀರಿ ಅದರ ಆಂತರ್ಯ ಅರ್ಥಮಾಡಿಕೊಂಡು ಜನರಿಗೆ ಉಪಯೋಗವಾಗುವಂತೆ ನಡೆದುಕೊಂಡವರು ಮಮತಾ. ಸರ್ಕಾರಿ ವ್ಯವಸ್ಥೆಯ ಕುಂದು-ಕೊರತೆಗಳ ನಡುವೆಯೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಬಹುದೆಂದು ನಿರೂಪಿಸಿರುವುದು ಅವರ ದಕ್ಷತೆಗೆ ಸಾಕ್ಷಿಯಾಗಿದೆ. ಸರ್ಕಾರಿ ಸೇವೆಯಲ್ಲಿ ಸಾರ್ಥಕವಾದ ಸೇವೆ ಸಲ್ಲಿಸಿದ್ದಾರೆ ಎಂದರು.
|
6 |
+
ಸರ್ಕಾರದ ನಿವೃತ್ತ ಪ್ರಧಾನ ಕಾರ್ಯದರ್ಶಿ ಎಂ.ಕೆ.ಶಂಕರಲಿಂಗೇಗೌಡ ಮಾತನಾಡಿ, ಅಭಿಪ್ರಾಯ ರೂಪಿಸುವಲ್ಲಿ ವಾರ್ತಾ ಇಲಾಖೆ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ವಾರ್ತಾಧಿ ಕಾರಿ ಮಮತಾ ಅವರು ತಂತ್ರಜ್ಞಾನದ ಬಗ್ಗೆ ಹೆಚ್ಚಿನ ಜ್ಞಾನ ಹೊಂದಿದ್ದರು. ಮುಖ್ಯಮಂತ್ರಿಗಳ ಕಚೇರಿಯಲ್ಲಿ ಐಟಿ ವಿಭಾಗದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ತಂತ್ರಜ್ಞಾನ ಆಗಷ್ಟೇ ಬೆಳೆಯುತ್ತಿದ್ದ ಸಂದರ್ಭದಲ್ಲಿ ಸರ್ಕಾರದ ಕಣ್ಣು ಮತ್ತು ಕಿವಿಗಳಾಗಿ ಸಾರ್ವಜನಿಕರೊಂದಿಗೆ ಸಂಪರ್ಕ ಸಾಧಿಸಿದ್ದರು. ನಿವೃತ್ತಿ ನಂತರವೂ ಕ್ರಿಯಾಶೀಲರಾಗಿರುವಂತೆ ಸಲಹೆ ನೀಡಿದರು.
|
7 |
+
ಮಮತಾ ಅವರು ಗುರಿ ಸಾಧಿಸುವ ಛಾತಿವುಳ್ಳವರಾಗಿದ್ದಾರೆ. ಕಳಂಕರಹಿತರಾಗಿ, ಪ್ರಾಮಾಣಿಕತೆ, ಸರಳತೆಯಿಂದ ಕೆಲಸ ನಿರ್ವಹಿಸಿದವರು. ತಾವು ಎಲ್ಲೇ ಕಾರ್ಯನಿರ್ವಹಿಸಿದರೂ ಅವರು ಮಾಡಿದ ಕೆಲಸಕ್ಕೆ ನ್ಯಾಯ ಒದಗಿಸಿ ಕೊಟ್ಟಿದ್ದಾರೆ ಎಂದು ಎನ್.ಆರ್. ವಿಶುಕುಮಾರ್ ತಿಳಿಸಿದರು.
|
8 |
+
ಆಪ್ತ ಸ್ನೇಹಿತೆ, ಹಿರಿಯ ಪತ್ರಕರ್ತರಾದ ನಾಹೀದ್ ಅತಾವುಲ್ಲಾ ಮಾತನಾಡಿ ,ಮಮತಾ ಅವರು ನನಗೆ ಅಧಿ ಕಾರಿಗಿಂತಲೂ ಸ್ನೇಹಿತೆಯಾಗಿ ಹೆಚ್ಚು ಆಪ್ತರು. ಅಧಿ ಕಾರಶಾಹಿ ಹೇಗೆ ಕೆಲಸ ಮಾಡಬೇಕೆನ್ನುವುದಕ್ಕೆ ಮಮತಾ ಅತ್ಯುತ್ತಮ ಉದಾಹರಣೆ ಎಂದರು.
|
9 |
+
ಗಾಂಧಿ ಭವನದ ಅಧ್ಯಕ್ಷರಾದ ವೂಡೆ.ಪಿ.ಕೃಷ್ಣ ಮಾತನಾಡಿ, ವಾರ್ತಾ ಇಲಾಖೆಯಿಂದ ಐಎಎಸ್ಗೆ ಬಡ್ತಿ ಪಡೆದ ಮೊದಲ ಅಧಿ ಕಾರಿಯಾದ ಮಮತಾ ಅವರ ಸಂವಹನ ಕೌಶಲ್ಯ ಅತ್ಯುತ್ತಮ. ಸರಳತೆ ಹಾಗೂ ದಕ್ಷತೆ ಅವರ ವಿಶೇಷ ಗುಣಗಳು. ಮುದ್ರಾಂಕ ಇಲಾಖೆಯಲ್ಲಿ ತಂತ್ರಜ್ಞಾನ ಅಭಿವೃದ್ಧಿಗೆ ಕಾರಣೀಭೂತರು ಎಂದರು. ವಾರ್ತಾ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಹೆಚ್. ಬಿ.ದಿನೇಶ್ ಕಾರ್ಯಕ್ರಮ ನಿರೂಪಿಸಿದರು.
|
eesanje/url_46_93_7.txt
ADDED
@@ -0,0 +1,15 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ಪ್ರಧಾನಿ ಬಳಿ ಮತ್ತೆ ಮನವಿ : ಸಿಎಂ
|
2 |
+
ನವದೆಹಲಿ, ಜೂ.28-ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನಾಳೆ ಸಂಜೆ ಭೇಟಿ ಮಾಡುತ್ತಿದ್ದು, ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ಮತ್ತೆ ಮನವಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
|
3 |
+
ನಿನ್ನೆ ಸಂಸದರ ಸಭೆ ನಡೆಸಿದ ಕುರಿತಂತೆ ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕಾವೇರಿ ನದಿ ನೀರಿನ ವಿವಾದ ಈಗಾಗಲೇ ನ್ಯಾಯಾಧಿಕರಣದಲ್ಲಿ ಇತ್ಯರ್ಥವಾಗಿದೆ. ತೀರ್ಪಿನಂತೆ ತಮಿಳುನಾಡಿಗೆ ಸಾಮಾನ್ಯ ವರ್ಷದಲ್ಲಿ 179 ಟಿಎಂಸಿ ನೀರು ಹರಿಸಲು ಕರ್ನಾಟಕ ಒಪ್ಪಿಕೊಂಡಿದೆ.
|
4 |
+
ಹೆಚ್ಚುವರಿ ನೀರಿನ ಸಂಗ್ರಹಕ್ಕೆ ನಮ ನೆಲದಲ್ಲಿ ನಮ ಹಣದಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟಲು ನಾವು ಯೋಜನೆ ರೂಪಿಸಿದ್ದೇವೆ. ತಮಿಳುನಾಡು ರಾಜಕೀಯ ಕಾರಣಕ್ಕೆ ತಕರಾರು ತೆಗೆದು ಸುಪ್ರೀಕೋರ್ಟ್ ಮೊರೆ ಹೋಗಿದೆ. ಆದರೂ ಯಾವ ನ್ಯಾಯಾಲಯದಲ್ಲೂ ತಡೆಯಾಜ್ಞೆ ಇಲ್ಲ. ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಕಿದೆ ಎಂದು ವಿವರಿಸಿದರು.
|
5 |
+
ಕಳೆದ ವರ್ಷ ಡಿಸೆಂಬರ್ 19ರಂದು ಪ್ರಧಾನ ಮಂತ್ರಿಯವರನ್ನು ಭೇಟಿ ಮಾಡಿದಾಗ ಮೇಕೆದಾಟು ಯೋಜನೆಯನ್ನು ಪ್ರಸ್ತಾಪಿಸಲಾಗಿತ್ತು. ನಾಳೆಯ ಭೇಟಿಯಲ್ಲಿಯೂ ಮತ್ತೆ ಪ್ರಸ್ತಾಪ ಮಾಡುತ್ತೇವೆ. ತಮಿಳುನಾಡು ಜೊತೆ ಸಭೆ ಕರೆಯಿರಿ ಎಂದು ನಾವು ಹೇಳುವುದಿಲ್ಲ. ಕೇಂದ್ರ ಸರ್ಕಾರ ತಮಿಳುನಾಡು ಸರ್ಕಾರದ ಮನವೋಲಿಸಬೇಕು ಅಥವಾ ಅನುಮತಿ ನೀಡುವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
|
6 |
+
ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದಲ್ಲಿ ಡಿಎಂಕೆ ಮಿತ್ರ ಪಕ್ಷವಾಗಿದೆ. ಹಾಗಾಗಿ ಕಾಂಗ್ರೆಸ್ ಸರ್ಕಾರ ಡಿಎಂಕೆಯವರ ಜೊತೆ ಚರ್ಚಿಸಬೇಕು ಎಂದು ಬಿಜೆಪಿ ಹೇಳುತ್ತಿರುವುದು ಅರ್ಥಹೀನ. ಗೋವಾದಲ್ಲಿ ಬಿಜೆಪಿ ಸರ್ಕಾರ ಇದೆ. ಅವರು ಮಾತನಾಡಿ ಮಹಾದಾಯಿ ಯೋಜನೆಗೆ ಅನುಮತಿ ಕೊಡಿಸುತ್ತಾರೆಯೇ ಎಂದು ಮರು ಪ್ರಶ್ನಿಸಿದರು.
|
7 |
+
ಮಹದಾಯಿ ಕುಡಿಯುವ ನೀರಿನ ಯೋಜನೆ 2018ರಲ್ಲಿ ಇತ್ಯರ್ಥವಾಗಿದೆ. ನ್ಯಾಯಾಲಯದಲ್ಲಿ ಪ್ರಕರಣ ಇದೆ ನಿನ್ನೆ ಸಭೆಗೂ ಮುನ್ನಾ ಕೇಂದ್ರ ಸಚಿವರು ನೀಡಿರುವ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ. ಅದು ತಪ್ಪು ಮಾಹಿತಿ. ವಿವಾದ ಕುರಿತು ನ್ಯಾಯಾಧೀಕರಣದ ತೀರ್ಪು ನೀಡಿದೆ, ಅದು ಅಧಿಸೂಚನೆಯೂ ಆಗಿದೆ. ಅದರ ಆಧಾರದ ಮೇಲೆ ನಾವು ಮಹದಾಯಿ ಯೋಜನೆಗೆ ವಿಸ್ತ್ರ ಯೋಜನಾ ವರದಿ ಸಿದ್ದಪಡಿಸಿ, ಟೆಂಡರ್ ಕರೆದಿದ್ದೇವೆ.
|
8 |
+
ಅದಕ್ಕೆ ಅರಣ್ಯ ಮತ್ತು ಪರಿಸರ ಇಲಾಖೆಯ ಅನುಮತಿ ಮಾತ್ರ ಬಾಕಿ ಇದೆ. ಅದಕ್ಕೆ ನ್ಯಾಯಾಲಯದಲ್ಲಿ ಪ್ರಕರಣ ಇದೆ ಎಂದು ನೆಪ ಹೇಳಬೇಡಿ ಕೇಂದ್ರದಿಂದ ಅನುಮತಿ ಕೊಡಿಸಿ ಎಂದು ಕೇಂದ್ರ ಸಚಿವರು ಹಾಗೂ ಸಂಸದರದಲ್ಲಿ ಮನವಿ ಮಾಡಿದ್ದೇವೆ ಎಂದರು.
|
9 |
+
ಭದ್ರ ಮೇಲ್ಡಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ 2023-24ರ ಆರ್ಥಿಕ ವರ್ಷದಲ್ಲಿ ಘೋಷಣೆ ಮಾಡಿದ್ದರು. ಹಣ ಬಿಡುಗಡೆಯಾಗಿಲ್ಲ. ರಾಜ್ಯದಿಂದ ತಾಂತ್ರಿಕ ಸಮಸ್ಯೆ ಇದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಆ ರೀತಿ ಸಮಸ್ಯೆ ಇದೆ ಎಂದು ಈವರೆಗೂ ನಮಗೆ ಹೇಳಿರಲಿಲ್ಲ, ಅಸಲಿಗೆ ಯಾವುದೇ ಸಮಸ್ಯೆಯೂ ಇಲ್ಲ. ಹಣ ಬಿಡುಗಡೆ ಮಾಡುವಂತೆ ನಾವು ಪತ್ರ ಬರೆದಿದ್ದೇವೆ. ಹಣ ಸಿಗಲಿದೆ ಎಂಬ ಆಶಾಭಾವನೆ ಇದೆ. ಅದೇ ರೀತಿಕೃಷ್ಣ ನ್ಯಾಯಾಧೀಕರಣ ತೀರ್ಪಿನ ಅಧಿಸೂಚನೆಗೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಲು ಆಗ್ರಹಿಸಿದ್ದೇವೆ ಎಂದು ಹೇಳಿದರು.
|
10 |
+
ರಾಜಕೀಯಕ್ಕಾಗಿ ಕೇಂದ್ರ ಸಚಿವರ ಪತ್ರ:ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪತ್ರ ಬರೆದು ಕರ್ನಾಟಕದಲ್ಲಿ ವಿತ್ತಿಯ ಕೊರತೆ ಹೆಚ್ಚಾಗಿದೆ ಎಂದು ಹೇಳಿರುವುದರ ಹಿಂದೆ ರಾಜಕೀಯ ಅಡಗಿದೆ.ವಿತ್ತಿಯ ಶೇ.2.1ರಿಂದ ಶೇ.3ಕ್ಕೆ ಹೋಗಿದೆ ಎಂಬುದು ತಪ್ಪು ಮಾಹಿತಿ. ವಿತ್ತಿಯ ಜವಾಬ್ದಾರಿ ಶೇ.3ರಷ್ಟಿರಬೇಕು ಎಂಬ ನಿಯಮ ಇದೆ. ರಾಜ್ಯದಲ್ಲಿ ವಿತ್ತಿಯ ಕೊರತೆ ಶೇ.2.6ರಷ್ಟಿದ್ದು, ಕಾನೂನು ರೀತಿ ಮಿತಿಯಲ್ಲಿದೆ. ಕೇಂದ್ರ ಸರ್ಕಾರ ವಿತ್ತಿಯ ಕೊರತೆ ನಿರ್ವಹಣೆಯಲ್ಲಿ ಕಾನೂನಿನ ಪ್ರಕಾರ ನಡೆದುಕೊಳ್ಳುತ್ತಿದೆಯೇ ಎಂದು ಪ್ರಶ್ನಿಸಿದರು.
|
11 |
+
ನಮಲ್ಲಿ ಕಂದಾಯ ವೆಚ್ಚ ಹೆಚ್ಚಾಗಿರುವುದು ನಿಜ. ಇದರಿಂದಾಗಿ ಕಂದಾಯ ಕೊರತೆ ಹೆಚ್ಚಾಗಿದೆ. ಮುಂದಿನ ವರ್ಷ ಇದನ್ನು ಸರಿ ಪಡಿಸಿಕೊಳ್ಳಲಾಗುವುದು. ಒಟ್ಟು ಸಾಲ ಜಿಡಿಪಿಯ ಶೇ.25ರ ಒಳಗೆ ಇರಬೇಕು ಎಂದಿದೆ. ನಮ ಆರ್ಥಿಕ ಸ್ಥಿತಿ ನಿಯಮ ಅನುಸಾರ ಮಿತಿಯಲ್ಲಿದೆ. ಕೇಂದ್ರ ಸಚಿವರ ಪತ್ರಕ್ಕೆ ಸವಿಸ್ತಾರವಾಗಿ ಉತ್ತರ ನೀಡಲಾಗುವುದು ಎಂದು ಹೇಳಿದರು.
|
12 |
+
ಪೆಟ್ರೋಲ್ ಡಿಸೇಲ್ ದರ ಹೆಚ್ಚಿಸಿದವರು ಕೇಂದ್ರ ಸರ್ಕಾರ. ಕೇಂದ್ರ ಅಬಕಾರಿ ತೆರಿಗೆಯನ್ನು ಹೆಚ್ಚಿಸಿದ್ದು ನರೇಂದ್ರ ಮೋದಿಯವರು ಹೀಗಾಗಿ ತೈಲ ಬೆಲೆ ಮತ್ತು ಅಗುಗೆ ಅನಿಲ ಹೆಚ್ಚಾಗಿದೆ. ನಮ ಸರ್ಕಾರ ಹಾಲಿನ ದರ ಹೆಚ್ಚಿಸಿಲ್ಲ. ಹಾಲಿನ ಸಂಗ್ರಹ ಹೆಚ್ಚಾಗಿದೆ. ಅದಕ್ಕಾಗಿ ಹಾಲಿನ ಪ್ರಮಾಣವನ್ನು ಹೆಚ್ಚು ಮಾಡಿ ಅದಕ್ಕೆ ತಗಲುವ ವೆಚ್ಚವನ್ನು ಗ್ರಾಹಕರಿಂದ ಪಡೆಯುತ್ತಿದ್ದೇವೆ. ಹಿಂದೆ ಮೂರು ರೂಪಾಯಿ ದರ ಹೆಚ್ಚಿಸಿದಾಗಲೂ ಅದನ್ನು ಸಂಪೂರ್ಣ ರೈತರಿಗೆ ನೀಡಿದ್ದೇವೆ ಎಂದು ಸ್ಪಷ್ಟನೆ ನೀಡಿದರು.
|
13 |
+
ಬೆಲೆ ಹೆಚ್ಚಿಸಲಾಗುತ್ತಿದೆ ಎಂದು ಬಿಜೆಪಿ ಅನಗತ್ಯವಾಗಿ ಆರೋಪ ಮಾಡುತ್ತಿದೆ. ಕಳೆದ ಐದಾರು ವರ್ಷದಿಂದ ಕಂದಾಯ ಇಲಾಖೆಯಲ್ಲಿ ಮಾರ್ಗಸೂಚಿ ಬೆಲೆ ಪರಿಷ್ಕರಣೆಯಾಗಿರಲಿಲ್ಲ. ಅದಕ್ಕಾಗಿ ಹೆಚ್ಚಿಸಿದ್ದೇವೆ ಎಂದು ಸಮರ್ಥಿಸಿಕೊಂಡರು.
|
14 |
+
ರಾಜ್ಯದಲ್ಲಿ ಹಣದುಬ್ಬರ ಹೆಚ್ಚಾಗಿದೆ. ರಾಷ್ಟ್ರೀಯ ಸರಾಸರಿಗಿಂತ ರಾಜ್ಯದಲ್ಲಿ ಹಣದುಬ್ಬರ ಕಡಿಮೆ ಇದೆ. ಶೇ.80ರಷ್ಟು ಹಣದುಬ್ಬರಕ್ಕೆ ಕೇಂದ್ರ ಸರ್ಕಾರ ಕಾರಣವಾಗಿದೆ ಎಂದು ದೂರಿದರು.ಬರ ಪರಿಹಾರಕ್ಕೆ ನ್ಯಾಯಾಲಯಕ್ಕೆ ಮೇಲನವಿ ಸಲ್ಲಿಸಿ ಕಾನೂನು ಸಂಘರ್ಷದಿಂದ ಆರ್ಥಿಕ ನೆರವು ಪಡೆದುಕೊಳ್���ಲಾಗಿದೆ. ಹಾಗಿದ್ದರೆ ಕೇಂದ್ರ ಸಚಿವರ ಜವಾಬ್ದಾರಿ ಏನು ಎಂದು ಪ್ರಶ್ನಿಸಿದರು.ವಾಲೀಕಿ ಅಭಿವೃದ್ಧಿ ನಿಗಮ ಎಸ್ಐಟಿ ತನಿಖೆಯಾಗಿದೆ, ನಿಷ್ಪಕ್ಷಪಾತ ತನಿಖೆ ನಡೆಯುತ್ತಿದೆ.
|
15 |
+
ಬ್ಯಾಂಕ್ ಹಗರಣವಾಗಿರುವುದರಿಂದ ಸಿಬಿಐ ತನಿಖೆಯೂ ನಡೆಯುತ್ತಿದೆ. ನಾವು ಪೊಲೀಸ್ರಿಗೆ ದೂರು ನೀಡಿದ್ದೇವೆ. ಅದರ ತನಿಖೆ ಮಾಡುತ್ತಿದ್ದಾರೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಒಂದು ಪ್ರಕರಣವನ್ನೂ ಸಿಬಿಐಗೆ ವಹಿಸಿಲ್ಲ. ಅಧಿಕಾರದಲ್ಲಿ ಇಲ್ಲದಿದ್ದಾಗ ಸಿಬಿಐ ತನಿಖೆ ಬೇಕು ಎನ್ನುತ್ತಾರೆ ಎಂದು ತಿರುಗೇಟು ನೀಡಿದರು.
|
eesanje/url_46_93_8.txt
ADDED
@@ -0,0 +1,3 @@
|
|
|
|
|
|
|
|
|
1 |
+
ಹಾವೇರಿ ಭೀಕರ ಅಪಘಾತ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಣೆ
|
2 |
+
ನವದೆಹಲಿ, ಜೂ.28-ಹಾವೇರಿಯ ಬ್ಯಾಡಗಿಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
|
3 |
+
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ತಾವು ದೆಹಲಿಯಲ್ಲಿದ್ದರು, ಗುಪ್ತದಳದ ಅಧಿಕಾರಿಗಳು ಈಗಷ್ಟೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರ ಕುಟುಂಬದ ಸದಸ್ಯರಿಗೆ ಪರಿಹಾರ ನೀಡಲಿದೆ ಎಂದು ಹೇಳಿದರು.
|
eesanje/url_46_93_9.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಸೀಮಿತ ಅವಧಿಯ ಪರಿಷ್ಕೃತ ವೇತನ ನಿಗದಿಗೆ ಕೆಎಸ್ಆರ್ಟಿಸಿ ಅಸ್ತು
|
2 |
+
ಬೆಂಗಳೂರು,ಜೂ.28– ಕಳೆದ 2020ರ ಜನವರಿ 1ರಿಂದ 2023ರ ಫೆ.28ರವರೆಗಿನ ಅವಧಿಯಲ್ಲಿ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ ಮತ್ತು ನೌಕರರಿಗೆ ಉಪದಾನ ಹಾಗೂ ನಿವೃತ್ತಿ ಗಳಿಕೆ ನಗದೀಕರಣ ಪಾವತಿ ಮಾಡಲು ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ಧರಿಸಿದೆ.
|
3 |
+
ಈ ಅವಧಿಯನ್ನು ನೋಷನಲ್ ಆಗಿ ಪರಿಗಣಿಸಿ ವೇತನ ನಿಗದಿಪಡಿಸಿ ಅಂತಿಮ ಆರ್ಥಿಕ ಸೌಲಭ್ಯಗಳನ್ನು ಪಾವತಿ ಮಾಡಲು ಕೆಎಸ್ಆರ್ಟಿಸಿ ನಿರ್ಧರಿಸಿದೆ. ನಿಗದಿಪಡಿಸಿದ ವೇತನವನ್ನು ಅಧಿಕಾರಿ ಮತ್ತು ಅಂತಿಮ ದಿನಾಂಕದಿಂದ ಪಡೆಯುತ್ತಿದ್ದ ಮೂಲ ವೇತನವನ್ನು ಪರಿಗಣಿಸಿ ಅಂತಿಮ ಆರ್ಥಿಕ ಸೌಲಭ್ಯಗಳಾದ ಉಪದಾನ ಮತ್ತು ನಿವೃತ್ತಿ ಗಳಿಕೆ ರಜೆ ನಗದೀಕರಣಗಳನ್ನು ಮಾತ್ರ ಲೆಕ್ಕಾಚಾರ ಮಾಡಿ ಪಾವತಿಸಲು ಅನುಮೋದನೆ ನೀಡಲಾಗಿದೆ.
|
4 |
+
ನಿವೃತ್ತ ನೌಕರರಿಗೆ ಸಂಬಂಧಿಸಿದಂತೆ ನೌಕರರಿಗೆ ಪರಿಷ್ಕೃತ ವೇತನ ನಿಗದಿ ಪಟ್ಟಿಗಳನ್ನು ಆ.31ರೊಳಗೆ ತಯಾರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶ ವಿ.ಅನ್ಬುಕುಮಾರ್ ತಿಳಿಸಿದ್ದಾರೆ.
|
5 |
+
ಗಳಿಕೆ ರಜೆ ನಗದೀಕರಣ ಬಿಲ್ನಲ್ಲಿ ಶಾಸನಬದ್ಧ ಕಡಿತಗಳನ್ನು ಹಾಗೂ ಅಧಿಕಾರಿ ನೌಕರರಿಂದ ಬರಬೇಕಾದ ಬಾಕಿ ಮೊತ್ತವಿದ್ದಲ್ಲಿ ಕಡಿತಗೊಳಿಸಿ ಪಾವತಿಸಬೇಕಾದ ನಿವ್ವಳ ಮೊತ್ತದ ಕ್ಲೈಮ್ಗಳನ್ನು ಸೆ.30ರೊಳಗೆ ಸಿದ್ಧಪಡಿಸಲು ಸೂಚಿಸಿದ್ದಾರೆ.
|
6 |
+
ಈ ಕ್ಲೈಮ್ಗಳನ್ನು ಸಾಧ್ಯವಾದರೆ ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಪಾವತಿಸಲು ಆಯಾ ಸಂಸ್ಥೆಗಳು ತಮ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದ್ದಾರೆ.
|
eesanje/url_46_94_1.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಚನ್ನಪಟ್ಟಣ ಉಪಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸಲ್ಲ : ಡಿಕೆಶಿ ಸ್ಪಷ್ಟನೆ
|
2 |
+
ಬೆಂಗಳೂರು, ಜೂ.28-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯ ಬಗ್ಗೆ ಕುತೂಹಲ ಇರುವ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ .ಕೆ.ಶಿವಕುಮಾರ್ ಅವರು ತಮ್ಮ ಕುಟುಂಬದಿಂದ ಬೇರೆ ಯಾರೂ ಚುನಾವಣಾ ರಾಜಕೀಯಕ್ಕೆ ಬರುವುದಿಲ್ಲ ಎಂದು ಹೇಳುವ ಮೂಲಕ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ನಡೆಸಿದ್ದಾರೆ.
|
3 |
+
ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಡಿ.ಕೆ.ಶಿವಕುಮಾರ್, ನಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಆಗಾಗ್ಗೆ ಈ ಕುರಿತು ಗೊಂದಲಗಳು ಸೃಷ್ಟಿಯಾಗುತ್ತಿವೆ. ಅಂತಹ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.
|
4 |
+
ಚನ್ನಪಟ್ಟಣ ಚುನಾವಣೆಯಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ ಅಭ್ಯರ್ಥಿಯಾಗಲಿದ್ದಾರೆ ಎಂಬ ವದಂತಿಗಳು ಆರಂಭದಲ್ಲಿದ್ದವು. ಆದರೆ ಡಿ.ಕೆ.ಸುರೇಶ್ ಅದನ್ನು ಸಂಪೂರ್ಣವಾಗಿ ಅಲ್ಲಗಳೆದಿದ್ದಾರೆ. ಜನ ತಮಗೆ ವಿಶ್ರಾಂತಿ ಪಡೆಯಲು ಸೂಚಿಸಿದ್ದು, ಅದರಂತೆ ತಾವು ಚುನಾವಣಾ ರಾಜಕೀಯದಿಂದ ದೂರ ಉಳಿದು ವಿಶ್ರಾಂತಿ ಪಡೆಯುವುದಾಗಿ ಸ್ಪಷ್ಟಪಡಿಸಿದ್ದಾರೆ.
|
5 |
+
ಅದರ ಜೊತೆಯಲ್ಲೇ ಚನ್ನಪಟ್ಟಣ ಕ್ಷೇತ್ರಕ್ಕೆ ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಿ, ಅಚ್ಚರಿ ಮೂಡಿಸಿದ್ದರು. ಇದಕ್ಕೆ ನಾನಾ ರೀತಿಯ ವ್ಯಾಖ್ಯಾನಗಳು ಕೇಳಿಬಂದಿದ್ದವು.ಡಿ.ಕೆ.ಶಿವಕುಮಾರ್ರವರ ಪುತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ ಅದೆಲ್ಲವುದಕ್ಕೂ ಡಿ.ಕೆ.ಶಿವಕುಮಾರ್ ತೆರೆ ಎಳೆದಿದ್ದಾರೆ. ತಮ ಕುಟುಂಬದಿಂದ ಬೇರೆ ಯಾರೂ ಚುನಾವಣಾ ರಾಜಕೀಯಕ್ಕೆ ಬರುವುದಿಲ್ಲ ಎಂದು ಖಡಾಖಂಡಿತವಾಗಿ ಸ್ಪಷ್ಟಪಡಿಸಿದ್ದಾರೆ. ಇದರ ಬಳಿಕ ಚನ್ನಪಟ್ಟಣಕ್ಕೆ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಕಾಡಲಾರಂಭಿಸಿದೆ.
|
6 |
+
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ಸೋಲು ಕಂಡ ಬಳಿಕ ಡಿ.ಕೆ.ಶಿವಕುಮಾರ್ ಅವರಿಗೆ ತವರು ಜಿಲ್ಲೆಯಲ್ಲೇ ಹಿನ್ನಡೆಯಾಗಿತ್ತು. ಇದನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿರುವ ಡಿ.ಕೆ. ಸಹೋದರರು ಚನ್ನಪಟ್ಟಣದಲ್ಲಿ ಗೆದ್ದೇ ಗೆಲ್ಲಬೇಕು ಎಂಬ ಹಠಕ್ಕೆ ಬಿದ್ದು ತಂತ್ರಗಾರಿಕೆ ರೂಪಿಸುತ್ತಿದ್ದಾರೆ.
|
7 |
+
ಡಿ.ಕೆ.ಶಿವಕುಮಾರ್ ಈಗಾಗಲೇ ಎರಡು ಬಾರಿ ಕ್ಷೇತ್ರದಲ್ಲಿ ಜನಸ್ಪಂದನ ನಡೆಸಿದ್ದಾರೆ. ಪದೇಪದೇ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಚನ್ನಪಟ್ಟಣದಲ್ಲಿ ಗೆದ್ದು ಮತ್ತೆ ತಮ ಅಧಿಪತ್ಯವನ್ನು ಉಳಿಸಿಕೊಳ್ಳಬೇಕು ಎಂಬ ಹೋರಾಟಕ್ಕೆ ಮುಂದಾಗಿದ್ದಾರೆ.ಅಚ್ಚರಿ ಹಾಗೂ ಕುತೂಹಲದ ಅಭ್ಯರ್ಥಿ ಯಾರು ಎಂಬ ಪ್ರಶ್ನೆಯ ನಡುವೆ, ಯಾರೇ ಕಣಕ್ಕಿಳಿದರೂ ಅವರನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಡಿ.ಕೆ.ಸುರೇಶ್ ಪದೇಪದೇ ಹೇಳುತ್ತಿದ್ದಾರೆ.ಡಿ.ಕೆ.ಶಿವಕುಮಾರ್ ತಮ ಕುಟುಂಬದ ಸದಸ್ಯರು ಸ್ಪರ್ಧಿಸುವುದಿಲ್ಲ ಎಂದು ಹೇಳಿದ ಬಳಿಕ ಹೊರಗಿನ ಅಭ್ಯರ್ಥಿಯ ಹುಡುಕಾಟವು ತೀವ್ರವಾಗಿ ನಡೆದಿದೆ.
|
eesanje/url_46_94_10.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಏಕವಚನದಲ್ಲೇ “ಬುದ್ದಿವಂತ ಅರ್ಥಶಾಸ್ತ್ರಜ್ಞ” ಸಿದ್ದರಾಮಯ್ಯ ವಿರುದ್ಧ ಅಶೋಕ್ ಹಿಗ್ಗಾಮುಗ್ಗಾ ವಾಗ್ದಾಳಿ
|
2 |
+
ಬೆಂಗಳೂರು,ಜೂ.27-ಬಡವರಿಗೆ ಸಹಾಯ ಮಾಡುವ ಜ್ಞಾನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಲ್ಲ. ಅದೇನಾದರೂ ಇದ್ದರೆ ದುಡ್ಡು ಹೊಡೆಯುವ ಜ್ಞಾನ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.ಜಾಸ್ತಿ ಹಾಲು ಕೊಡಬೇಕೆಂದು ನಿಮನ್ನು ಯಾರು ಕೇಳಿದರು? ಯಾರಾದರೂ ಬಂದು ಕೇಳಿದ್ದರಾ? ಅರ್ಜಿ ಕೊಟ್ಟು 50 ಎಂಎಲ್ ಜಾಸ್ತಿ ಕೊಡಿ ಎಂದು ಒತ್ತಾಯಿಸಿದವರ್ಯಾರು? ಎಂದು ಪ್ರಶ್ನಿಸಿದ್ದಾರೆ.
|
3 |
+
ಈ ಸರ್ಕಾರ ಹಾಲನ್ನು ಹಾಲಾಹಲ ಮಾಡಿದೆ. ವರ್ಷದ ಹಿಂದೆ 3 ರೂ. ಈಗ 2 ರೂ. ಏರಿಕೆ ಆಗಿದೆ. ಮೊದಲ ಶೇ.80ರಷ್ಟು ಹಣ ರೈತರಿಗೆ ಕೊಡುತ್ತೇವೆ ಎಂದರು, 10 ಪೈಸೆ ಹಣವನ್ನೂ ಕೊಟ್ಟಿಲ್ಲ. 50 ಎಂಎಲ್ಗೆ 2 ರೂ. ಜಾಸ್ತಿ ಮಾಡಿದ್ದೀನಿ ಎನ್ನತ್ತೀರಾ? ಅಪ್ಪಾ ಬುದ್ದಿವಂತ ಅರ್ಥಶಾಸ್ತ್ರಜ್ಞರೇ ದೇಶಕ್ಕೆ ಅರ್ಥ ಹೇಳಿ ಕೊಡೋಕೆ ಹೋಗ್ತಿದ್ದೀಯ ಎಂದು ಏಕವಚನದಲ್ಲೇ ವಾಗ್ದಾಳಿ ಮಾಡಿದ್ದಾರೆ.
|
4 |
+
ಕೆಂಪೇಗೌಡ ಜಯಂತಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡದಿರುವುದಕ್ಕೆ ಕಿಡಿಕಾರಿದ ಅವರು, ಕುಮಾರಸ್ವಾಮಿ ಕೇಂದ್ರ ಸಚಿವರು. ಈ ಸಮಾಜದ ಪ್ರಶ್ನಾತೀಥ ನಾಯಕರು. ನಾವಿನ್ನು ಬೆಳೆಯಬೇಕು. ಮಾಜಿ ಪ್ರಧಾನಿ ದೇವೇಗೌಡರು ಎತ್ತರಕ್ಕೆ ಬೆಳೆದಿದ್ದಾರೆ. ಮಾಜಿ ಪ್ರಧಾನಿಗಳಿಗೆ ಗೌರವ ಕೊಡಬೇಕಿತ್ತು. ಗೌರವ ಕೊಡೋದು ಸರ್ಕಾರದ ಕೆಲಸ ಎಂದರು.
|
5 |
+
ಕೆಂಪೇಗೌಡರ ಜಯಂತಿ ರಾಜಕೀಯ ವೇದಿಕೆ ಆಗಬಾರದು. ಇದು ದ್ವೇಷದ ರಾಜಕಾರಣಸರ್ಕಾರ ದ್ವೇಷ ರಾಜಕಾರಣದಿಂದ ಹೊರ ಬರಬೇಕು. ಸರ್ಕಾರ ಜನರ ದುಡ್ಡಲ್ಲಿ ಜಯಂತಿ ಮಾಡುತ್ತಿದೆ. ಕಾಂಗ್ರೆಸ್ ಅವರು ಸ್ವಂತ ದುಡ್ಡಲ್ಲಿ ಮಾಡಲಿ ಆಗ ಯಾರನ್ನ ಬೇಕಾದರೂ ಕರೆಯಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
|
6 |
+
ಚನ್ನಪಟ್ಟಣ ಕ್ಷೇತ್ರಕ್ಕೆ ಮೈತ್ರಿ ಒಂದೇ ಅಭ್ಯರ್ಥಿ ಕುಮಾರಸ್ವಾಮಿ ಹೇಳಿದ್ದಾರೆ. ನಾವು ಗೆಲ್ಲಬೇಕು ಅಷ್ಟೇ ಗೆಲ್ಲುವವರು ಯಾರಾದರೂ ಪರವಾಗಿಲ್ಲ ಅಂದಿದ್ದಾರೆ. ಡಿಸಿಎಂ ಅವರಿಗೆ ಚನ್ನಪಟ್ಟಣ ಬಗ್ಗೆ ಪ್ರೀತಿ ಬಂದಿದೆ. ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ಗೆ ಮೂರು ನಾಮ ಹಾಕಬೇಕು. ಆಗ ಈ ಬೆಲೆ ಏರಿಕೆ ಎಲ್ಲ ನಿಲ್ಲುತ್ತವೆ. ಕಾಂಗ್ರೆಸ್ಗೆ ಬಿಪಿ, ಶುಗರ್ ಲೆವಲ್ ಏರಿಕೆ ಆಗಿದೆ. ಹೀಗಾಗಿ ಶಾಕ್ ಟ್ರೀಟ್ಮೆಂಟ್ ಕೊಡಬೇಕು ಎಂದು ಅಪಹಾಸ್ಯ ಮಾಡಿದರು.
|
eesanje/url_46_94_11.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ನಾಡಪ್ರಭು ಕೆಂಪೇಗೌಡರ ಆಳ್ವಿಕೆ ಪ್ರೇರಣೆ ಮತ್ತು ಮಾದರಿ : ಸಿಎಂ
|
2 |
+
ಬೆಂಗಳೂರು, ಜೂ.27- ನಾಡಪ್ರಭು ಕೆಂಪೇಗೌಡ ಅವರ ಆಳ್ವಿಕೆಯ ಮಾದರಿ ಮತ್ತು ಪ್ರೇರಣೆ ಎಂದು ಮುಖ್ಯಮಂತ್ರಿಸಿದ್ದರಾಮಯ್ಯ ತಿಳಿಸಿದ್ದಾರೆ.ವಿಧಾನಸೌಧದ ಮುಂದಿರುವ ಕೆಂಪೇಗೌಡರ ಪ್ರತಿಮೆಗೆ 515 ನೇ ಜಯಂತಿ ಅಂಗವಾಗಿ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದವರಾಗಿದ್ದು, ಜನಾನುರಾಗಿ ಆಡಳಿತಗಾರ.
|
3 |
+
ಕೃಷ್ಣದೇವರಾಯನ ಕಾಲದಲ್ಲಿ ಬೆಂಗಳೂರನ್ನು ಸಂಸ್ಥಾಪನೆ ಮಾಡಿದರು. ನೂರಾರು ಕೆರೆಕಟ್ಟೆಗಳನ್ನು ನಿರ್ಮಿಸಿದರು. ಇಂದು ಬೆಂಗಳೂರಿನಲ್ಲಿ ಹೆಚ್ಚು ಕೆರೆಗಳು ಹಾಗೂ ದೇವಸ್ಥಾನಗಳಿರಲು ಕೆಂಪೇಗೌಡರೇ ಕಾರಣ ಎಂದರು.
|
4 |
+
ವೃತ್ತಿ ಆಧಾರದ ಮೇಲೆ ಬೆಂಗಳೂರಿನಲ್ಲಿ ಪೇಟೆಗಳನ್ನು ನಿರ್ಮಿಸಿದರು. ಚಿಕ್ಕಪೇಟೆ, ದೊಡ್ಡಪೇಟೆ, ನಗರ್ತಪೇಟೆ, ತಿಗಳರ ಪೇಟೆ, ಬಳೆಪೇಟೆ ನಿರ್ಮಾಣ ಮಾಡಿ ವ್ಯಾಪಾರ ಕೇಂದ್ರವನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದರು. ಇಂದು ಬೆಂಗಳೂರು ವಿಶ್ವವಿಖ್ಯಾತವಾಗಲು ಕೆಂಪೇಗೌಡರೇ ಕಾರಣ ಎಂದು ಹೇಳಿದರು.
|
5 |
+
ತಾವು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರದ ವತಿಯಿಂದ ಕೆಂಪೇಗೌಡರ ಜಯಂತಿ ಆಚರಿಸಲು ನಿರ್ಧಾರ ಕೈಗೆತ್ತಿಕೊಂಡಿದ್ದಲ್ಲದೆ, ಕೆಂಪೇಗೌಡರ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಿದರು. ಅಂದಿನಿಂದ ಇಂದಿನವರೆಗೂ ನಿರಂತರವಾಗಿ ಸರ್ಕಾರದಿಂದ ನಾಡಪ್ರಭುಗಳ ಜಯಂತಿ ಆಚರಣೆಯಾಗುತ್ತಿದೆ ಎಂದರು.
|
eesanje/url_46_94_12.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ದೆಹಲಿಯಲ್ಲಿ ಮುಖಾಮುಖಿಯಾಗಲಿದ್ದಾರೆ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಸಿಎಂ ಸಿದ್ದರಾಮಯ್ಯ
|
2 |
+
ಬೆಂಗಳೂರು, ಜೂ.27-ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯ ಪ್ರವಾಸದ ವೇಳೆ ಕೇಂದ್ರ ಬೃಹತ್ ಮತ್ತು ಉಕ್ಕು ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಲಿದ್ದಾರೆ.
|
3 |
+
ವಿಧಾನಸಭೆ ಚುನಾವಣೆ ಬಳಿಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ಆರಂಭಿಸಿದರು. ಅದು ರಾಜಕೀಯ ಎಲ್ಲೆಯನ್ನೂ ಮೀರಿ ಟೀಕೆಗಳು ನಡೆದಿದ್ದವು. ವೈಯಕ್ತಿಕ ತೇಜೋವಧೆಗಳಾಗಿದ್ದವು. ಬೆಂಗಳೂರಿನಲ್ಲಿ ನಡೆದ ಒಂದೆರಡು ಸಭೆಗಳಲ್ಲಿ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಮುಖಾಮುಖಿಯಾಗಿದ್ದರು.
|
4 |
+
ವಿಧಾನಮಂಡಲದ ಅಧಿವೇಶನದಲ್ಲಿ ಚರ್ಚೆ ಮಾಡಿದಗಿಂತಲೂ ಜಗಳ ಮಾಡಿದ್ದೇ ಹೆಚ್ಚು. ಲೋಕಸಭಾ ಚುನಾವಣೆ ವೇಳೆಗೆ ಕುಮಾರಸ್ವಾಮಿ ತಮ ಪಕ್ಷ ಜೆಡಿಎಸ್ ಹಾಗೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಬಳಿಕವಂತೂ ಅಧಿಕೃತ ವಿರೋಧಪಕ್ಷದ ನಾಯಕರಂತೆಯೇ ಟೀಕೆ ಮಾಡಲಾರಂಭಿಸಿದ್ದರು. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯನವರನ್ನು ಅವಕಾಶ ಸಿಕ್ಕಾಗಲೆಲ್ಲಾ ಟೀಕಿಸಿ ಸಮರ್ಥ ವಿಪಕ್ಷವಾಗಿ ಕೆಲಸ ಮಾಡುತ್ತಿದ್ದರು.
|
5 |
+
ಹಾಲಿನ ದರ ಏರಿಕೆ ವಿಚಾರವಾಗಿ ನಿನ್ನೆ ಕೂಡ ಕುಮಾರಸ್ವಾಮಿ ರಾಜ್ಯಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಅದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕುಮಾರಸ್ವಾಮಿಯವರಿಗೆ ವಿಷಯ ಸರಿಯಾಗಿ ತಿಳಿದಿಲ್ಲ. ಮೊದಲು ಸರಿಯಾದ ಮಾಹಿತಿ ತಿಳಿದುಕೊಳ್ಳಲಿ ಎಂದು ತಿರುಗೇಟು ನೀಡಿಯೂ ಆಗಿತ್ತು.
|
6 |
+
ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ರಾಜ್ಯದಲ್ಲಿ ಪ್ರಭಾವಿ ನಾಯಕರಾಗಿದ್ದು, ಬೇರೆಲ್ಲಾ ಮುಖಂಡರು ಅವರನ್ನು ಭೇಟಿ ಮಾಡಲು ಸಮಯಾವಕಾಶ ಕೇಳಬೇಕಿತ್ತು.ಕಾಲದ ಮಹಿಮೆ ಎಂಬಂತೆ ಈಗ ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದಾರೆ. ಅವರ ಭೇಟಿಗೆ ಸಿದ್ದರಾಮಯ್ಯ ಅವರು ಸಮಯ ಕೇಳಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅಲ್ಲಿ ಸಂಸದರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅನಂತರ ಕರ್ನಾಟಕವನ್ನು ಕೇಂದ್ರದಲ್ಲಿ ಪ್ರತಿನಿಧಿಸುವ ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಕಾರ್ಮಿಕ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಲಿದ್ದಾರೆ.
|
7 |
+
ಕರ್ನಾಟಕದಲ್ಲಿ ಪ್ರತಿನಿಧಿಸುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಇದೇ ವೇಳೆ ಮುಖ್ಯಮಂತ್ರಿಯವರು ಭೇಟಿ ಮಾಡಲು ಸಮಯ ಕೇಳಿದ್ದಾರೆ. ಕರ್ನಾಟಕದಿಂದ ಹಲವಾರು ಯೋಜನೆಗಳ ಪ್ರಸ್ತಾವನೆ ಕೇಂದ್ರ ಸರ್ಕಾರಗಳ ಮುಂದಿವೆ. ನಿರ್ಮಲಾ ಸೀತಾರಾಮನ್ ಅವರ��� ಹೊಸದಾಗಿ ಬಜೆಟ್ ಮಂಡಿಸಲು ತಯಾರಿ ನಡೆಸಿದ್ದು, ಅದರಲ್ಲಿ ರಾಜ್ಯಕ್ಕೆ ಹೆಚ್ಚಿನ ಆದ್ಯತೆ ದೊರೆಯುವಂತೆ ಮಾಡಲು ಮುಖ್ಯಮಂತ್ರಿ ಮುಂದಾಗಿದ್ದಾರೆ.
|
8 |
+
ಕಳೆದ ಎರಡು ವರ್ಷಗಳ ಹಿಂದಿನ ಬಜೆಟ್ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,100 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವುದಾಗಿ ಘೊಷಿಸಲಾಗಿತ್ತು. ಆ ಹಣ ಇನ್ನೂ ಬಾಕಿ ಇದೆ. ಜೊತೆಗೆ 14ನೇ ಹಣಕಾಸು ಯೋಜನೆಯಲ್ಲಿ ಬೆಂಗಳೂರಿನ ಕೆರೆಗಳ ಅಭಿವೃದ್ಧಿ ಮತ್ತು ಹೊರವರ್ತುಲ ರಸ್ತೆಗೆ ತಲಾ 3 ಸಾವಿರ ಕೋಟಿ ರೂ.ಗಳನ್ನು ಪ್ರಸ್ತಾಪಿಸಲಾಗಿತ್ತು. ಆದರೆ ಅದು ನೆನೆಗುದಿಗೆ ಬಿದ್ದಿದೆ. ಮತ್ತೊಂದೆಡೆ ನೀರಾವರಿ ಯೋಜನೆಗಳಾದ ಮೇಕೆದಾಟು, ಮಹಾದಾಯಿಗೆ ಕೇಂದ್ರದ ಅನುಮತಿ ಹಾಗೂ ಆರ್ಥಿಕ ನೆರವಿನ ಅಗತ್ಯವಿದ್ದು, ಇದರ ಬಗ್ಗೆಯೂ ಪ್ರಸ್ತಾಪವಾಗಲಿದೆ.
|
9 |
+
ಭದ್ರಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸಬೇಕೆಂಬ ಪ್ರಸ್ತಾವನೆ ಹಲವು ವರ್ಷಗಳಿಂದಲೂ ನೆನೆಗುದಿಗೆ ಬಿದ್ದಿದೆ. ಹಾಗೆಯೇ ಮೆಟ್ರೋ ರೈಲನ್ನು ತುಮಕೂರಿನವರೆಗೂ ಹಾಗೂ ಬೆಂಗಳೂರು ದಕ್ಷಿಣ ಹಾಗೂ ಪೂರ್ವಾಭಿಮುಖವಾಗಿ ಮತ್ತಷ್ಟು ದೂರ ವಿಸ್ತರಿಸುವ ಪ್ರಸ್ತಾಪಗಳಿದ್ದು, ಅದಕ್ಕೂ ಕೇಂದ್ರದ ಮುಂದೆ ಪ್ರಸ್ತಾವನೆ ಸಲ್ಲಿಸುವ ಸಾಧ್ಯತೆಗಳಿವೆ. ಜೊತೆಗೆ ತೆರಿಗೆ ಹಂಚಿಕೆಯಲ್ಲಿ ನ್ಯಾಯೋಚಿತ ಪಾಲು ಪಡೆದುಕೊಳ್ಳಲು ಸಹಕಾರ ನೀಡುವಂತೆ ಸಂಸದರಿಗೆ ಮನವಿ ಮಾಡಲಿರುವ ಸಿದ್ದರಾಮಯ್ಯ ಅವರು ಇದೇ ವೇಳೆ ಕೇಂದ್ರ ಸಚಿವರ ಮುಂದೆ ಪ್ರಸ್ತಾವನೆ ಮಂಡಿಸಲು ತಯಾರಿ ನಡೆಸಿದ್ದಾರೆ.
|
eesanje/url_46_94_2.txt
ADDED
@@ -0,0 +1,19 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
: ಹಾವೇರಿ ಬಳಿ ಭೀಕರ ಅಪಘಾತ, ಲಾರಿಗೆ ಟಿಟಿ ವಾಹನ ಡಿಕ್ಕಿ, 13 ಜನ ದುರ್ಮರಣ
|
2 |
+
ಹಾವೇರಿ, ಜೂ.28- ಸವದತ್ತಿ ರೇಣುಕಾ ಯಲ್ಲಮ ದೇವಿ ದರ್ಶನ ಪಡೆದು ಟಿಟಿ ವಾಹನದಲ್ಲಿ ಹಿಂದಿರುಗುತ್ತಿದ್ದಾಗ ಭೀಕರ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ ಒಂದೇ ಕುಟುಂಬದ ನಾಲ್ವರು ಸೇರಿದಂತೆ 13 ಮಂದಿ ಮೃತಪಟ್ಟಿರುವ ದಾರುಣ ಘಟನೆ ಇಂದು ನಸುಕಿನ ಜಾವ ಸಂಭವಿಸಿದೆ.
|
3 |
+
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಗೆ ಅತೀ ವೇಗವಾಗಿ ಬರುತ್ತಿದ್ದ ಟಿಟಿ ವಾಹನ ಡಿಕ್ಕಿ ಹೊಡೆದಿದ್ದರಿಂದ ಈ ದುರಂತ ಸಂಭವಿಸಿದೆ.
|
4 |
+
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಬಳಿ ಎಮಿಹಟ್ಟಿ ಗ್ರಾಮದ ನಾಗೇಶ (50) ವಿಶಾಲಾಕ್ಷಿ (40), ಆದರ್ಶ್ (23), ಪರಶುರಾಮ್ (45), ಭಾಗ್ಯ (40), ಸುಭದ್ರಾಬಾಯಿ (65), ಪುಣ್ಯ (50), ಮಂಜುಳಾ ಬಾಯಿ (62), ಮಾನಸ (24), ರೂಪಾ (40), ಮಂಜುಳಾ (50) ಹಾಗೂ ಎರಡು ಅವಳಿ ಮಕ್ಕಳು ಮೃತಪಟ್ಟಿದ್ದು, ಇವರಿಬ್ಬರ ಹೆಸರು ಸದ್ಯಕ್ಕೆ ತಿಳಿದುಬಂದಿಲ್ಲ.
|
5 |
+
ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು, ಅವರುಗಳು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಎಮಿಹಟ್ಟಿ ಗ್ರಾಮದಿಂದ 15 ಮಂದಿ ಕಳೆದ ಸೋಮವಾರ ವಿವಿಧ ದೇವಸ್ಥಾನಗಳ ಪ್ರವಾಸಕ್ಕೆಂದು ಟಿಟಿ ವಾಹನದಲ್ಲಿ ತೆರಳಿದ್ದರು.ನಿನ್ನೆ ಸವದತ್ತಿ ರೇಣುಕಾ ಯಲ್ಲಮ ದೇವಿ ದರ್ಶನ ಪಡೆದು 15 ಮಂದಿ ವಾಪಾಸ್ ತಮ ಗ್ರಾಮಕ್ಕೆ ಮರಳುತ್ತಿದ್ದರು.
|
6 |
+
ಇಂದು ನಸುಕಿನ ಜಾವ 4 ಗಂಟೆಯ ಸುಮಾರಿನಲ್ಲಿ ಈ ಟಿಟಿ ವಾಹನ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಪುಣಿ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದಾಗ ರಸ್ತೆ ಬದಿ ಲಾರಿ ನಿಲ್ಲಿಸಿರುವುದು ಟಿಟಿ ಚಾಲನೆ ಮಾಡುತ್ತಿದ್ದ ಚಾಲಕನ ಗಮನಕ್ಕೆ ಬಾರದೆ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ.
|
7 |
+
ಡಿಕ್ಕಿ ರಭಸಕ್ಕೆ ಟಿಟಿ ವಾಹನದ ಅರ್ಧಭಾಗ ಲಾರಿ ಹಿಂಬದಿಗೆ ಸಿಕ್ಕಿಕೊಂಡು ಸ್ಥಳದಲ್ಲೇ 11 ಮಂದಿ ಸಾವನ್ನಪ್ಪಿದರೆ, ಇನ್ನಿಬ್ಬರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.ಮೃತರ ಪೈಕಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟರೆ ಉಳಿದವರೆಲ್ಲರೂ ಸಂಬಂಧಿಕರು. ಮೃತರಲ್ಲಿ ಇಬ್ಬರು ಅವಳಿ ಮಕ್ಕಳು ತಾಯಿ ಎದುರೇ ಪ್ರಾಣ ಬಿಟ್ಟಿವೆ.
|
8 |
+
ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಹಾವೇರಿ ಠಾಣೆ ಪೊಲೀಸರು ಹಾಗೂ ಎಸ್ಪಿ ಅಂಶಕುಮಾರ್ ಮತ್ತು ತಂಡ ಪರಿಶೀಲನೆ ನಡೆಸಿ, ಟಿಟಿ ವಾಹನದೊಳಗೆ ಸಿಕ್ಕಿಕೊಂಡಿದ್ದ ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಟ್ಟರು.ಎಲ್ಲಾ ಮೃತದೇಹಗಳನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿಡಲಾಗಿದೆ.
|
9 |
+
ಆಂಬುಲೆನ್ಸ್ ಸಿಬ್ಬಂದಿ ಕಣ್ಣೀರು:ಯಾವುದೇ ಸಾವಾಗಲಿ, ನಮಗೆ ಅವರು ಪರಿಚಯವಿಲ್ಲದಿದ್ದರೂ ಮೃತದೇಹ ನೋ��ಿದಾಗ ಕಣ್ಣೀರು ಬರುತ್ತದೆ. ಮೃತದೇಹಗಳನ್ನು ಸಾಗಿಸಲು ಬಂದಿದ್ದ ಆಂಬುಲೆನ್ಸ್ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಈ ಭೀಕರತೆ ಕಂಡು ಮಮಲ ಮರುಗಿದ್ದಾರೆ. ಅವಳಿ ಮಕ್ಕಳ ಮೃತದೇಹಗಳನ್ನು ಆಂಬುಲೆನ್ಸ್ ನಲ್ಲಿ ಇಡುತ್ತಿದ್ದಾಗ ಕೈಯಲ್ಲಿ ಹಿಡಿದು ಕಣ್ಣೀರು ಹಾಕಿದ್ದು, ಎಂತವರ ಮನವೂ ಕರಗುವಂತಿತ್ತು.
|
10 |
+
ಮೃತದೇಹಗಳು ಛಿದ್ರಛಿದ್ರ :ಅಪಘಾತದ ರಭಸಕ್ಕೆ ಮೃತದೇಹಗಳು ಛಿದ್ರಛಿದ್ರವಾಗಿವೆ. ಕೆಲವೊಂದು ದೇಹ ಅಪ್ಪಚ್ಚಿಯಾಗಿವೆ.
|
11 |
+
ಎಮಿಹಟ್ಟಿ ಗ್ರಾಮದಲ್ಲಿ ನೀರವ ಮೌನ :ಸೋಮವಾರ ದೇವರ ದರ್ಶನಕ್ಕೆ ಹೋಗಿದ್ದ ಸಂಬಂಧಿಕರೆಲ್ಲಾ ಇಂದು ವಾಪಾಸ್ ಬರುತ್ತಾರೆಂದು ಕುಟುಂಬಸ್ಥರು ಕಾಯುತ್ತಿದ್ದಾಗ ಬರಸಿಡಿಲಿನಂತೆ ಬಂದ ಸಾವಿನ ಸುದ್ದಿಯಿಂದ ಎಮೆಹಟ್ಟಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.
|
12 |
+
ಹಾವೇರಿಗೆ ಸಂಬಂಧಿಕರ ಆಗಮನ :ಅಪಘಾತದಲ್ಲಿ ತಮವರು ಮೃತಪಟ್ಟಿದ್ದಾರೆಂಬ ಸುದ್ದಿ ತಿಳಿಯುತ್ತಿದ್ದಂತೆ ಮೃತರ ಕುಟುಂಬಸ್ಥರು ಹಾವೇರಿಗೆ ಬಂದಿದ್ದು, ಆಸ್ಪತ್ರೆಯಲ್ಲಿ ಮೃತದೇಹಗಳನ್ನು ಕಂಡು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
|
13 |
+
ಹೊಸ ಟಿಟಿ ಖರೀದಿ :ನಾಗೇಶ ಅವರು ಹೊಸ ಟಿಟಿ ಖರೀದಿಸಿದ್ದರು. ನಾಗೇಶ ಅವರ ಮಗ ಆದರ್ಶ ಟಿಟಿ ಚಾಲನೆ ಮಾಡುತ್ತಿದ್ದನು. ಹೊಸದಾಗಿ ವಾಹನ ಖರೀದಿಸಿದ್ದರಿಂದ ಸಂಬಂಧಿಕರನ್ನೆಲ್ಲಾ ಕರೆದುಕೊಂಡು ದೇವರ ದರ್ಶನಕ್ಕೆ ಹೋಗಿ ವಾಪಾಸ್ ಬರುವಾಗ ಈ ದುರಂತ ಸಂಭವಿಸಿರುವುದು ವಿಪರ್ಯಾಸ.ನಾಗೇಶ್ ಎಂಬುವರ ಕುಟುಂಬದ ನಾಲ್ವರು ಮೃತಪಟ್ಟಿರುವುದು ದುರದೃಷ್ಟಕರ.
|
14 |
+
ಮನೆಯೇ ಸರ್ವನಾಶ :ತಮವರನ್ನು ಕಳೆದುಕೊಂಡ ಮೃತನ ಸಹೋದರ ಕಣ್ಣೀರು ಹಾಕುತ್ತಾ ಮನಯೇ ಸರ್ವನಾಶವಾಯಿತೆಂದು ಗೋಳಾಡುತ್ತಿದ್ದುದು ಕರಳು ಕಿತ್ತುಬರುವಂತಿತ್ತು.
|
15 |
+
ಅತೀವೇಗವೇ ಕಾರಣ :ಊರಿಗೆ ಬೇಗ ಹೋಗಬೇಕೆನ್ನುವ ಆತುರದಲ್ಲಿ ನಿದ್ದೆಗೆಟ್ಟು ಅತಿವೇಗವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲನೆ ಮಾಡಿಕೊಂಡು ಬಂದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ನಿದ್ದೆ ಮಂಪರಿನಿಂದಾಗಿ ಈ ಅಪಘಾತ ಸಂಭವಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಹಾವೇರಿ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
|
16 |
+
ಸೂಕ್ತ ಚಿಕಿತ್ಸೆ, ತ್ವರಿತ ಪರಿಹಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಒತ್ತಾಯ :ಹುಬ್ಬಳ್ಳಿ,ಜೂ.28- ಹಾವೇರಿ ಜಿಲ್ಲೆ ಗುಂಡೇನಹಳ್ಳಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರ ತ್ವರಿತವಾಗಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದ್ದಾರೆ.
|
17 |
+
ಈ ಭೀಕರ ಅಪಘಾತದಲ್ಲಿ 13 ಜನರು ಸಾವಿಗೀಡಾದ ಸುದ್ದಿ ತಿಳಿದು ಸಚಿವ ಜೋಶಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.ದೇವರು ಮೃತರ ಆತಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬಸ್ಥರಿಗೆ ನೋವು ಸಹಿಸಿಕೊಳ್ಳು ಶಕ್ತಿ ನೀಡಲೆಂದು ಸಚಿವರು ಪ್ರಾರ್ಥಿಸಿದ್ದಾರೆ.
|
18 |
+
ರಾಜ್ಯ ಸರ್ಕಾರ ಈ ಕೂಡಲೇ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಆದ್ಯತೆ ನೀಡಬೇಕು ಹಾಗೂ ಮೃತರ ಕುಟುಂಬಕ್ಕೆ ತ್ವರಿತ ಪರಿಹಾರ ನೀಡಲು ಮುಂದಾಗಬೇಕೆಂದು ಒತ್ತಾಯಿಸಿ ಸಚಿವ ಪ್ರಲ್ಹಾದ ಜೋಶಿ ಟ್ವೀಟ್ ಮಾಡಿದ್ದಾರೆ.
|
19 |
+
|
eesanje/url_46_94_3.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಕೆಂಪೇಗೌಡರ ಜಯಂತಿಗೆ ಎಚ್ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಜೆಡಿಎಸ್ ಪ್ರತಿಭಟನೆ
|
2 |
+
ಬೆಂಗಳೂರು, ಜೂ.27– ರಾಜ್ಯ ಸರ್ಕಾರ ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆಸಿದ ನಾಡಪ್ರಭು ಕೆಂಪೇಗೌಡರ ಜಯಂತಿ ಸಮಾರಂಭಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಲಿಲ್ಲ ಎಂದು ಆರೋಪಿಸಿ ಜೆಡಿಎಸ್ ಇಂದು ಪ್ರತಿಭಟನೆ ನಡೆಸಿತು.
|
3 |
+
ಜೆಡಿಎಸ್ ಕೇಂದ್ರ ಕಚೇರಿ ಜೆಪಿಭವನದ ಬಳಿ ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ರಮೇಶ್ಗೌಡ, ಮಾಜಿ ಅಧ್ಯಕ್ಷ ಆರ್.ರಮೇಶ್ಗೌಡ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು. ಕೆಲ ಕಾಲ ಪ್ರತಿಭಟನೆ ನಡೆಸಿದ ಕೆಲವು ಜೆಡಿಎಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.
|
4 |
+
ಕೆಂಪೇಗೌಡರ ಜಯಂತಿ ಕಾರ್ಯಕ್ರಮಕ್ಕೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನು ಆಹ್ವಾನಿಸದಿರುವುದಕ್ಕೆ ವಿರೋಧ ವ್ಯಕ್ತ ಪಡಿಸಲಾಗಿತ್ತು. ಅಲ್ಲದೆ, ಕುಮಾರಸ್ವಾಮಿ ಅವರು ಹೇಳಿಕೆ ನೀಡಿ, ದೆಹಲಿಯಲ್ಲೇ ಕೆಂಪೇಗೌಡರಿಗೆ ಗೌರವ ಸಮರ್ಪಣೆ ಮಾಡಲಾಗುವುದು. ಕೆಂಪೇಗೌಡರು ನಿರ್ಮಿಸಿದ ಕೆರೆಗಳನ್ನು ಸಂರಕ್ಷಣೆ ಮಾಡಲಿ ಎಂದಿದ್ದರು.
|
eesanje/url_46_94_4.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಬೆಂಗಳೂರಿನ ಸಂಚಾರದಟ್ಟಣೆಯನ್ನು ಸುಧಾರಿಸಲು 150 ಕಿ.ಮೀ. ಹೊಸ ರಸ್ತೆ ಯೋಜನೆ
|
2 |
+
ಬೆಂಗಳೂರು, ಜೂ.27– ನಾಡಪ್ರಭು ಕೆಂಪೇಗೌಡ ನಿರ್ಮಿತ ಮಹಾನಗರಿ ಬೆಂಗಳೂರಿನ ಸಂಚಾರದಟ್ಟಣೆಯನ್ನು ಸುಧಾರಿಸಲು 150 ಕಿ.ಮೀ.ನಷ್ಟು ಹೊಸ ಕಾರ್ಯಯೋಜನೆಯನ್ನು ಸಿದ್ಧಗೊಳಿಸಲಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
|
3 |
+
ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ, ಬಿಬಿಎಂಪಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಉತ್ಸವದಲ್ಲಿ ಮಾತನಾಡಿದ ಅವರು, 150 ಕಿ.ಮೀ. ಯೋಜನೆಯಲ್ಲಿ ಮೇಲ್ಸೇತುವೆ, ಕೆಳ ಸೇತುವೆ ಹಾಗೂ ಸುರಂಗ ಮಾರ್ಗದ ರಸ್ತೆಗಳು ಒಳಗೊಂಡಿರುತ್ತವೆ ಎಂದು ಹೇಳಿದರು.
|
4 |
+
ಪೆರಿಫೆರಲ್ ರಿಂಗ್ ರಸ್ತೆ ನೆನೆಗುದಿಗೆ ಬಿದ್ದಿದೆ. ಏಳೆಂಟು ಬಾರಿ ಟೆಂಡರ್ ಕರೆದರೂ ಅದನ್ನು ಕೈಗೆತ್ತಿಕೊಳ್ಳಲು ಯಾರೂ ಮುಂದೆ ಬರುತ್ತಿಲ್ಲ. ಹೀಗಾಗಿ ಯೋಜನೆಯ ಸ್ವರೂಪವನ್ನು ಬದಲಾಯಿಸಿ ಬ್ಯುಸಿನೆಸ್ ಕಾರಿಡಾರನ್ನಾಗಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದೆ ಎಂದರು.
|
5 |
+
ಬ್ರ್ಯಾಂಡ್ ಬೆಂಗಳೂರಿನ ಮೂಲಕ ಬೆಂಗಳೂರಿಗೆ ಹೊಸ ಸ್ವರೂಪ ನೀಡಲು ಕ್ರಮ ಕೈಗೊಳ್ಳಲಾಗಿದೆ. 70 ಸಾವಿರ ಸಲಹೆಗಳನ್ನು ಸ್ವೀಕರಿಸಲಾಗಿದೆ ಎಂದು ಹೇಳಿದರು. ನಾಡಪ್ರಭು ಕೆಂಪೇಗೌಡರ ಕುರಿತು ಶಾಲಾ-ಕಾಲೇಜುಗಳಲ್ಲಿ ಚರ್ಚಾಗೋಷ್ಠಿ, ಅಧ್ಯಯನ ಹಾಗೂ ಇತರ ಚಟುವಟಿಕೆಗಳಿಗೆ ಪ್ರತೀ ತಾಲ್ಲೂಕಿಗೆ ಬಿಬಿಎಂಪಿಯಿಂದ 1 ಲಕ್ಷ ರೂ.ಗಳನ್ನು ನೀಡಲಾಗುತ್ತಿದೆ ಎಂದರು.
|
6 |
+
ವ್ಯಕ್ತಿಯ ಹಿಂದೆ ಎಷ್ಟು ಜನ ಇದ್ದಾರೆ ಎಂಬುದು ಮುಖ್ಯ ಅಲ್ಲ. ಅವರು ಯಾವ ರೀತಿ ಜನಾನುರಾಗಿಯಾಗಿ ಕೆಲಸ ಮಾಡುತ್ತಾರೆ ಎಂಬುದಕ್ಕೆ ಕೆಂಪೇಗೌಡರು ಉದಾಹರಣೆ ಎಂದರು. ಬೆಂಗಳೂರಿನಲ್ಲಿ ಒಂದು ಕೋಟಿ ನಲ್ವತ್ತು ಲಕ್ಷ ಜನ ವಾಸಿಸುತ್ತಿದ್ದಾರೆ. ರಾಜ್ಯದ ಜನಸಂಖ್ಯೆಯಲ್ಲಿ ಶೇ.25 ರಷ್ಟು ಸಾಂದ್ರತೆ ನಗರದಲ್ಲಿದೆ. ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಅಭಿವೃದ್ಧಿ ಮಾಡಲಾಗುವುದು ಎಂದು ಹೇಳಿದರು. ಅವಕಾಶಗಳು ಯಾರನ್ನೂ ಹುಡುಕಿಕೊಂಡು ಬರುವುದಿಲ್ಲ. ಸಂಘಸಂಸ್ಥೆಗಳು ಅವಕಾಶಗಳನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
|
eesanje/url_46_94_5.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದ ಸ್ವಾಮೀಜಿ, ಸಿದ್ದರಾಮಯ್ಯ ಹೇಳಿದ್ದೇನು..?
|
2 |
+
ಬೆಂಗಳೂರು, ಜೂ.27-ಮುಖ್ಯಮಂತ್ರಿ ಅಧಿಕಾರ ಹಸ್ತಾಂತರ ಹೈಕಮಾಂಡ್ನ ನಿರ್ಧಾರ. ನಾವು ಪಕ್ಷದ ವರಿಷ್ಠರು ನೀಡುವ ಸೂಚನೆಯಂತೆ ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿಯವರು ಮಾತನಾಡಿ, ಸಿದ್ದರಾಮಯ್ಯನವರು ದೊಡ್ಡ ಮನಸ್ಸು ಮಾಡಿ ಅಧಿಕಾರವನ್ನು ಡಿ.ಕೆ.ಶಿವಕುಮಾರ್ರವರಿಗೆ ಬಿಟ್ಟುಕೊಡ ಬೇಕು ಎಂದು ಮನವಿ ಮಾಡಿದರು.
|
3 |
+
ಇದಕ್ಕೆ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ನಮ ಕಾಂಗ್ರೆಸ್ ಹೈಕಮಾಂಡ್ನ ಪಕ್ಷ. ಪ್ರಜಾಪ್ರಭುತ್ವದಲ್ಲಿ ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಆ ರೀತಿ ನಡೆದುಕೊಳ್ಳಬೇಕು ಎಂದು ಹೇಳಿದರು.
|
4 |
+
ಅಧಿಕಾರ ಹಸ್ತಾಂತರ ಸೇರಿದಂತೆ ಯಾವುದೇ ಬೆಳವಣಿಗೆಗಳಾದರೂ ಹೈಕಮಾಂಡ್ ನಿರ್ಧಾರವೇ ಅಂತಿಮ. ಅದನ್ನು ಪಾಲಿಸಬೇಕು ಎಂದು ಅನ್ಯಮನಸ್ಕರಾಗಿ ಹೇಳಿ ತೆರಳಿದರು.ಇದಕ್ಕೂ ಮುನ್ನ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು, ನಾಡಪ್ರಭು ಕೆಂಪೇಗೌಡ ಅವರ ಜಾತ್ಯತೀತ ನಿಲುವು ಆದರ್ಶನೀಯ. ಪ್ರತಿಯೊಬ್ಬರೂ ಅದನ್ನು ಅರ್ಥೈಸಿಕೊಂಡು ಸಮಾಜದಲ್ಲಿ ಮನುಷ್ಯರಾಗಿ ಬದುಕಬೇಕು ಎಂದು ಕರೆ ನೀಡಿದರು.
|
5 |
+
ಕೆಂಪೇಗೌಡರ ಜಯಂತಿಯನ್ನು ಸರ್ಕಾರದಿಂದ ಆಚರಿಸಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಸಲಹೆ ನೀಡಿದ್ದರು. ಅವರ ಸಲಹೆ ಮೇರೆಗೆ ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲಾಯಿತು ಎಂದು ಹೇಳಿದರು.
|
6 |
+
ನಾಡಿನ ಜನತೆ ಸಂಭ್ರಮದಿಂದ ಕೆಂಪೇಗೌಡ ಜಯಂತಿಯನ್ನು ಆಚರಿಸುತ್ತಿದ್ದಾರೆ. ನಾಡಪ್ರಭುಗಳ ಆಡಳಿತ ಎಲ್ಲರಿಗೂ ಪ್ರೇರಣೆ. ಅವರ ಸಮಾಜಮುಖಿ ಕೆಲಸ ಹಾಗೂ ಮಾದರಿ ಆಡಳಿತ ಶ್ಲಾಘನೀಯ. ಕೆಂಪೇಗೌಡರು ಒಕ್ಕಲಿಗ ಸಮುದಾಯದಲ್ಲಿ ಹುಟ್ಟಿದ್ದರು. ಆಡಳಿತದಲ್ಲಿ ಎಂದೂ ಜಾತಿ, ಧರ್ಮ ಬೇಧ ಮಾಡಲಿಲ್ಲ. ಎಲ್ಲಾ ಜನಾಂಗದ ಅಭಿವೃದ್ಧಿಗೆ ಪ್ರಯತ್ನಿಸಿದರು.
|
7 |
+
ಅವರ ದೂರದೃಷ್ಟಿಯಿಂದಾಗಿ ಬೆಂಗಳೂರು ನಿರ್ಮಾಣಗೊಂಡು ಇಂದು ವಿಶ್ವ ಪ್ರಸಿದ್ಧಿಯಾಗಿದೆ. ಇಲ್ಲಿ ಹಲವು ಜಾತಿ, ಧರ್ಮದವರು ಒಟ್ಟಿಗೆ ವಾಸಿಸುತ್ತಿದ್ದಾರೆ ಎಂದು ವಿವರಿಸಿದರು.ಕಾರ್ಯಕ್ರಮದಲ್ಲಿ ಗಾಂಧಿ ಸಾರಕ ಸಂಸ್ಥೆ, ಸುಮಂಗಲಿ ಸೇವಾಶ್ರಮ ಹಾಗೂ ಬಸವನಗುಡಿ ಸೊಸೈಟಿಯ ಶಿಕ್ಷಣ ಸಂಸ್ಥೆಯ ಅಂಗಸಂಸ್ಥೆಯಾದ ಸೈನ್ಸ್ ಫೋರಂಗೆ ನಾಡಪ್ರಭು ಕೆಂಪೇಗೌಡರ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.
|
8 |
+
ಗಾಂಧಿಸಾರಕ ಸಂಸ್ಥೆಯಿಂದ ವೊಡೆ ಪಿ. ಕೃಷ್ಣ, ಸುಮಂಗಲಿ ಸೇವಾಶ್ರಮದ ಸುಶೀಲಮ, ಶಾಂತಮ, ಸೈನ್ಸ್ ಫೋರಂನ ವೆಂಕಟಶಿವಾರೆಡ್ಡಿ, ವಿ.ಎನ್.ಸುಬ್ರಹಣ್ಯ ಅವರನ್ನು ಸನಾನಿಸಲಾಯಿತು.
|
9 |
+
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಶ್ರೀಕ್ಷೇತ್ರ ಪಟ್ಟನಾಯಕನಹಳ್ಳಿ ಸ್ಫಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ಶ್ರೀ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಎಚ್.ಮುನಿಯಪ್ಪ, ಕೃಷ್ಣ ಭೈರೇಗೌಡ, ಶಿವರಾಜ್ ತಂಗಡಗಿ, ಶಾಸಕರಾದ ರಿಜ್ವಾನ್ ಹರ್ಷದ್, ವಿಶ್ವನಾಥ್, ವಿಧಾನಪರಿಷತ್ ಸದಸ್ಯರಾದ ಪುಟ್ಟಣ್ಣ, ಗೋವಿಂದರಾಜು, ಸಲೀಂ ಅಹಮದ್, ರಾಮೋಜಿ ಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತರಾಯಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
|
eesanje/url_46_94_6.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ 1.04 ಕೋಟಿ ರೂ. ವಂಚನೆ
|
2 |
+
ಹುಬ್ಬಳ್ಳಿ,ಜೂ.27-ಕ್ರಿಪ್ಟೋ ಕರೆನ್ಸಿ ಖರೀದಿಸಿದರೆ ಹೆಚ್ಚಿನ ಲಾಭ ಪಡೆಯಬಹು ದೆಂದು ನಗರದ ಉದ್ಯಮಿ ಮತ್ತು ಅವರ ಇಬ್ಬರು ಸ್ನೇಹಿತರಿಗೆ ವೆಬ್ ಲಿಂಕ್ ಕಳುಹಿಸಿ, 1.04 ಕೋಟಿ ವರ್ಗಾಯಿಸಿಕೊಂಡು ವಂಚಿ ಸಿರುವ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
|
3 |
+
ಉದ್ಯಮಿ ಶಿವಾನಂದ ಪಾವುಸ್ಕರ್ ಮತ್ತು ಅವರ ಸ್ನೇಹಿತರಾದ ಪ್ರವೀಣ ಕುಲಕರ್ಣಿ, ಸುಜೀತ್ ಕಲಬುರಗಿ ವಂಚನೆಗೆ ಒಳಗಾದವರು. ಫೇಸ್ಬುಕ್ನಲ್ಲಿ ಕ್ರಿಪ್ಟೋ ಕರೆನ್ಸಿ ಕುರಿತು ಜಾಹೀರಾಜು ನೋಡಿ, ಅಲ್ಲಿನ ಮೊಬೈಲ್ ನಂಬರ್ಗೆ ಕರೆ ಮಾಡಿದ್ದರು. ಛಾಯಾಸಿಂಗ್ ಹೆಸರಿನ ವ್ಯಕ್ತಿ ಪರಿಚಯವಾಗಿದ್ದ.
|
4 |
+
ಬಳಿಕ ಅವನು ಕೆಲವು ವೆಬ್ಸೈಟ್ಗಳ ಲಿಂಕ್ ಕಳುಹಿಸಿ, ಅದರಲ್ಲಿರುವ ವಿಯಾಕಾ ಕ್ರಿಪ್ಟೋ ಆ್ಯಪ್ ಅಳವಡಿಸಿಕೊಳ್ಳಲು ಸೂಚಿಸಿದ. ಅದನ್ನು ನಂಬಿದ ಮೂವರು ಮೊಬೈಲ್ಗಳಿಗೆ ಆ್ಯಪ್ ಅಳವಡಿಸಿಕೊಂಡರು.
|
5 |
+
ಆಗ ಶಿವಾನಂದ ಖಾತೆಯಿಂದ 68.99 ಲಕ್ಷ, ಸುಜಿತ್ ಖಾತೆಯಿಂದ 14.85 ಲಕ್ಷ ಹಾಗೂ ಪ್ರವೀಣ ಖಾತೆಯಿಂದ 21.05 ಲಕ್ಷ ಬೇರೊಂದು ಖಾತೆಗೆ ವರ್ಗವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
|
eesanje/url_46_94_7.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಭಾರಿ ಮಳೆಯಿಂದ ಜಲಾಶಯಗಳ ಒಳಹರಿವು ಹೆಚ್ಚಳ
|
2 |
+
ಬೆಂಗಳೂರು, ಜೂ.27– ಮುಂಗಾರು ಮಳೆ ರಾಜ್ಯದ ಕರಾವಳಿ, ಮಲೆನಾಡು ಹಾಗೂ ಕೇರಳದ ವೈನಾಡಿನಲ್ಲಿ ಆರ್ಭಟಿಸುತ್ತಿರುವ ಹಿನ್ನೆಲೆಯಲ್ಲಿ ನದಿಗಳು ಮೈದುಂಬಿ ಹರಿಯುತ್ತಿದ್ದು, ಜಲಾಶಯಗಳ ಹರಿವು ಗಣನೀಯವಾಗಿ ಹೆಚ್ಚಳವಾಗಿದೆ.
|
3 |
+
ಜಲವಿದ್ಯುತ್ ಉತ್ಪಾದಿಸುವ ಮೂರು ಜಲಾಶಯಗಳಿಗೆ ಒಟ್ಟು 24 ಸಾವಿರ ಕ್ಯೂಸೆಕ್್ಸಗೂ ಹೆಚ್ಚು ನೀರು ಹರಿದುಬರುತ್ತಿದೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಲಿಂಗನಮಕ್ಕಿ ಜಲಾಶಯಕ್ಕೆ 19 ಸಾವಿರಕ್ಕೂ ಅಧಿಕ ಕ್ಯೂಸೆಕ್ಸ್ ನೀರು ಹರಿದುಬರುತ್ತಿದ್ದರೆ ಸೂಪಾ ಜಲಾಶಯಕ್ಕೆ 2,800ಕ್ಕೂ ಹೆಚ್ಚು ಕ್ಯೂಸೆಕ್್ಸ ಹಾಗೂ ವರಾಹಿ ಜಲಾಶಯಕ್ಕೆ 1,600ಕ್ಕೂ ಹೆಚ್ಚು ಕ್ಯೂಸೆಕ್್ಸ ನೀರು ಒಳಹರಿವಿದೆ.
|
4 |
+
ಕಾವೇರಿ ನದಿಪಾತ್ರದ ಹಾರಂಗಿ ಜಲಾಶಯಕ್ಕೆ 1,400 ಕ್ಯೂಸೆಕ್ಸ್ ಗೂ ಹೆಚ್ಚು, ಹೇವಾಮತಿ ಜಲಾಶಯ 4,000 ಕ್ಕೂ ಹೆಚ್ಚು, ಕೆಆರ್ಎಸ್ ಜಲಾಶಯಕ್ಕೆ 3,800 ಕ್ಕೂ ಹೆಚ್ಚು ಹಾಗೂ ಕಬಿನಿ ಜಲಾಶಯಕ್ಕೆ 17,000 ಕ್ಯೂಸೆಕ್ಸ್ ನಷ್ಟು ಒಳಹರಿವಿದೆ.
|
5 |
+
ಕೃಷ್ಣ ಕೊಳ್ಳದ ಭದ್ರಾ ಜಲಾಶಯಕ್ಕೆ 4,000, ಘಟಪ್ರಭಾ ಜಲಾಶಯಕ್ಕೆ 27,000, ಆಲಮಟ್ಟಿ ಜಲಾಶಯಕ್ಕೆ 4,000 ಕ್ಯೂಸೆಕ್ಸ್ ನಷ್ಟು ಒಳಹರಿವಿದೆ. ಒಟ್ಟಾರೆ 12,000ಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಕೃಷ್ಣ ಕೊಳ್ಳದ ವ್ಯಾಪ್ತಿಯ ಜಲಾಶಯಗಳಿಗೆ ಒಳಹರಿವಿದೆ.
|
6 |
+
ಶೇ.1 ರಷ್ಟು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಶೇಖರಣೆಯಲ್ಲಿ ಹೆಚ್ಚಳ ಕಂಡುಬಂದಿದೆ. ಇನ್ನು ಮೂರ್ನಾಲ್ಕು ದಿನ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಒಳಹರಿವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.
|
7 |
+
ಕಾವೇರಿ ಕೊಳ್ಳದಲ್ಲಿ ಶೇ.16, ಕೃಷ್ಣ ಕೊಳ್ಳದಲ್ಲಿ ಶೇ.21 ಹಾಗೂ ಜಲವಿದ್ಯುತ್ ಉತ್ಪಾದಿಸುವ ಜಲಾಶಯಗಳಲ್ಲಿ ಪ್ರಸ್ತುತ ಶೇ.15 ರಷ್ಟು ನೀರು ಸಂಗ್ರಹವಾಗಿದೆ.ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಜಲಾಶಯಗಳ ನೀರಿನ ಸಂಗ್ರಹದ ಪ್ರಮಾಣ ಹೆಚ್ಚಳವಾಗಿರುವುದು ಕಂಡುಬಂದಿದೆ.
|
eesanje/url_46_94_8.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಡಿಸಿಎಂ ಹುದ್ದೆ ಬೇಕೆನ್ನುವವರು ಹೈಕಮಾಂಡ್ ಬಳಿ ಹೋಗಿ ಚರ್ಚಿಸಿ : ಡಿಕೆಶಿ ಖಡಕ್ ಎಚ್ಚರಿಕೆ
|
2 |
+
ಬೆಂಗಳೂರು, ಜೂ.27-ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಬೇಕು ಎನ್ನುವವರು ಮಾಧ್ಯಮಗಳಲ್ಲಿ ಹೇಳಿಕೆ ನೀಡುವ ಬದಲಾಗಿ ಹೈಕಮಾಂಡ್ ಜೊತೆ ಚರ್ಚಿಸಿ ಬೇಡಿಕೆಯನ್ನು ಈಡೇರಿಸಿಕೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
|
3 |
+
ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ವಿಧಾನಸೌಧದ ಮುಂಭಾಗದ ಮುಂದಿರುವ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತ್ರಿಕೆಗಳಿಗೆ ಹೇಳಿಕೆ ನೀಡುವವರು ದೆಹಲಿಗೆ ಹೋಗಿ ಹೈಕಮಾಂಡ್ ಬಳಿ ಮಾತನಾಡಿ, ತಮಗೆ ಬೇಕಾದ ಪರಿಹಾರ ಪಡೆದುಕೊಂಡು ಬರಲಿ. ಮಾಧ್ಯಮಗಳಿಗೆ ಬಹಿರಂಗ ಹೇಳಿಕೆ ನೀಡುವ ಅವಶ್ಯಕತೆ ಇಲ್ಲ ಎಂದು ತಾಕೀತು ಮಾಡಿದರು.
|
4 |
+
ಮಾಧ್ಯಮಗಳು, ಪತ್ರಿಕೆಗಳು ಪರಿಹಾರ ನೀಡುವುದಿಲ್ಲ. ಪ್ರಚಾರ ಮಾತ್ರ ನೀಡುತ್ತವೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕು ಎನ್ನುವವರೂ ಕೂಡ ಸಮಯ ವ್ಯರ್ಥ ಮಾಡಬಾರದು. ಎಲ್ಲಿಂದ ಪರಿಹಾರ ಪಡೆಯಬೇಕೋ, ಅಲ್ಲಿಂದ ಪಡೆದುಕೊಳ್ಳಲಿ. ಹೇಳಿಕೆ ನೀಡುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದರು.
|
5 |
+
ವೈದ್ಯರ ಬಳಿ ಹೋದರೆ ಒಂದಿಷ್ಟು ಔಷಧ ಸಿಗುತ್ತದೆ, ವಕೀಲರ ಬಳಿ ಹೋದರೆ ಕಾನೂನು ಸಲಹೆ ಸಿಗುತ್ತದೆ. ಹೀಗಾಗಿ ಬೇಡಿಕೆಗಳ ಬಗ್ಗೆ ಚರ್ಚೆ ಮಾಡುವವರು ಎಲ್ಲಿ ಬೇಕೋ ಅಲ್ಲಿ ಪರಿಹಾರ ಪಡೆದುಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.
|
6 |
+
ನೂತನ ಸಂಸದರನ್ನು ದೆಹಲಿಯಲ್ಲಿ ಭೇಟಿ ಮಾಡುತ್ತಿದ್ದೇವೆ. ಈಗಲಾದರೂ ರಾಜ್ಯದಿಂದ ಆಯ್ಕೆಯಾದವರು ಬಾಯಿ ಬಿಟ್ಟು ಮಾತನಾಡಿ, ಕರ್ನಾಟಕದ ಹಿತಾಸಕ್ತಿ ಪಾಲನೆಗೆ ಕೆಲಸ ಮಾಡಲಿ. ಹೀಗಾಗಿ ಸಂಸದರ ಜೊತೆ ಚರ್ಚೆ ಮಾಡುತ್ತೇವೆ ಎಂದರು.
|
7 |
+
ಕೆಂಪೇಗೌಡರ ಆಚಾರ, ವಿಚಾರ, ಪ್ರಚಾರಕ್ಕೆ ಅನುದಾನ :ನಾಡಪ್ರಭು ಕೆಂಪೇಗೌಡರ ಆಚಾರ, ವಿಚಾರ, ಪ್ರಚಾರಕ್ಕೆ ಶಾಲಾ-ಕಾಲೇಜುಗಳಲ್ಲಿ ಅಧ್ಯಯನ ವಿಚಾರ ಸಂಕಿರಣ ಹಾಗೂ ಚರ್ಚಾ ಸ್ಪರ್ಧೆ ನಡೆಸಲು ಒಂದು ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗುವುದು.ಜಯಂತಿ ಕಾರ್ಯಕ್ರಮವನ್ನು ದೊಡ್ಡದಾಗಿ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 25 ಸಾವಿರ ರೂ.ಗಳನ್ನುಮಾತ್ರ ನೀಡಲಾಗುತ್ತದೆ. ಬಿಬಿಎಂಪಿಯಿಂದ ಹೆಚ್ಚುವರಿಯಾಗಿ 1 ಲಕ್ಷ ರೂ.ಗಳನ್ನು ನೀಡಲಾಗುತ್ತಿದೆ. ಕೆಂಪೇಗೌಡರು ಒಂದು ಜಾತಿಗೆ ಸೀಮಿತವಾದವರಲ್ಲ. ಅವರು ನಿರ್ಮಿಸಿದ ಬೆಂಗಳೂರಿನಲ್ಲಿ ಇಂದು ಎಲ್ಲಾ ಜಾತಿಯ ಜನರೂ ಇದ್ದಾರೆ ಎಂದು ಹೇಳಿದರು.
|
8 |
+
ದೇವನಹಳ್ಳಿಯಲ್ಲಿ 10 ಎಕರೆ, ಮಾಗಡಿ ರಸ್ತೆಯಲ್ಲಿ 5 ಎಕರೆ ಸ್ಥಳ ನಿಗದಿ ಮಾಡಲಾಗಿದ್ದು, ಬೆಂಗಳೂರು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದಿಂದ ಅಲ್ಲಿ ಭವ್ಯ ಕಟ್ಟಡಗಳನ್ನು ನಿರ್ಮಿಸಲಾಗುವುದು ಎಂದರು.
|
9 |
+
ತಪ್ಪು ಸರಿಪಡಿಸುತ್ತೇವೆ :ಕೆಂಪೇಗೌಡರ ಜಯಂತಿ ಕಾರ್ಯಕ್ರಮಕ್ಕೆ ಆಹ್��ಾನಿಸದೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ಅಪಮಾನ ಮಾಡಲಾಗಿದೆ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಅವರು, ರಾಜಕಾರಣ ಮಾಡುವವರು ಮಾಡಲಿ, ನಾವು ಯಾರನ್ನೂ ಅಗೌರವಿಸುವುದಿಲ್ಲ ಎಂದರು.
|
10 |
+
ಮಾಜಿ ಮುಖ್ಯಮಂತ್ರಿಗಳ ಪೈಕಿ ಎಸ್.ಎಂ.ಕೃಷ್ಣ, ಸದಾನಂದಗೌಡರು, ದೇವೇಗೌಡರು, ಕುಮಾರಸ್ವಾಮಿ ಆಗಿದ್ದಾರೆ. ಆ ಸಮಾಜದವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವುದು ಶಿಷ್ಟಾಚಾರ. ನಾನು ಸ್ವಲ್ಪ ಕಾರ್ಯದೊತ್ತಡದಲ್ಲಿದ್ದೆ. ಅಧಿಕಾರಿಗಳು ಶಿಷ್ಟಾಚಾರವನ್ನು ಪಾಲಿಸಿಲ್ಲ ಎಂದು ಹೇಳಿದರು.
|
11 |
+
ದೇವೇಗೌಡರು ಹಾಸನವನ್ನು, ಕುಮಾರಸ್ವಾಮಿಯವರು ಮಂಡ್ಯವನ್ನು ತವರು ಕ್ಷೇತ್ರ ಮಾಡಿಕೊಂಡಿದ್ದಾರೆ. ಪ್ರಾಧಿಕಾರ ಬೆಂಗಳೂರಿನ ವ್ಯಾಪ್ತಿಯಲ್ಲಿ ಶಿಷ್ಟಾಚಾರವನ್ನು ಪಾಲಿಸಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರನ್ನು ಪ್ರತಿನಿಧಿಸುತ್ತಿದ್ದಾರೆ. ಅವರ ಹೆಸರನ್ನು ಹಾಕಲಾಗಿದೆ. ದೇವೇಗೌಡರು ಮತ್ತು ಕುಮಾರಸ್ವಾಮಿಯವರು ಅವರ ಹೆಸರನ್ನು ಹಾಕಬಾರದು ಎಂಬ ಉದ್ದೇಶವಿಲ್ಲ. ಮುಂದಿನ ಬಾರಿ ತಪ್ಪನ್ನು ಸರಿಪಡಿಸಲಾಗುವುದು ಎಂದರು.
|
12 |
+
ಕೆಂಪೇಗೌಡರ ಜಯಂತಿಗೆ ಬೇರೆ ಸಮುದಾಯದ ಸ್ವಾಮೀಜಿಗಳನ್ನು ಕರೆಯಲು ಸೂಚನೆ ನೀಡಿದ್ದೇವೆ. ಕೆಂಪೇಗೌಡರು ಒಕ್ಕಲಿಗರಿಗೆ ಮಾತ್ರ ಆಸ್ತಿಯಲ್ಲ. ಅವರು ನಿರ್ಮಿಸಿದ ಬೆಂಗಳೂರು ಎಲ್ಲರಿಗೂ ಸೇರಿದೆ. ವೃತ್ತಿ ಆಧಾರಿತವಾಗಿ ಬೆಂಗಳೂರು ನಿರ್ಮಿಸಿದ ಧೀಮಂತರು ಕೆಂಪೇಗೌಡರು ಎಂದು ಹೇಳಿದರು.
|
eesanje/url_46_94_9.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
: ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡುವಂತೆ ವೇದಿಕೆಯಲ್ಲೇ ಸಿದ್ದುಗೆ ಸ್ವಾಮೀಜಿ ಒತ್ತಾಯ
|
2 |
+
ಬೆಂಗಳೂರು, ಜೂ.27– ಎಲ್ಲರೂ ಮುಖ್ಯಮಂತ್ರಿಗಳಾಗಿದ್ದಾರೆ. ಡಿ.ಕೆ.ಶಿವಕುಮಾರ್ರವರಿಗೆ ಅವಕಾಶ ಸಿಕ್ಕಿಲ್ಲ. ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಬಿಟ್ಟುಕೊಟ್ಟು ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಒತ್ತಾಯಿಸಿದ್ದಾರೆ.
|
3 |
+
ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ, ಬಿಬಿಎಂಪಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಉತ್ಸವದಲ್ಲಿ ಮಾತನಾಡಿದ ಅವರು, ಬೆಂಗಳೂರನ್ನು ವಿಭಜಿಸಲು ಈ ಮೊದಲು ಚರ್ಚೆ ನಡೆದಿತ್ತು. ಹೋರಾಟದಿಂದ ಅದನ್ನು ಸ್ಥಗಿತಗೊಳಿಸಲಾಯಿತು. ಈಗ ಮತ್ತೆ ಅಂತಹುದೇ ಚರ್ಚೆ ನಡೆಯುತ್ತಿದೆ. ಇದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
|
4 |
+
ಬೆಂಗಳೂರು ವಿಭಜಿಸಬೇಕು ಎಂದಾದರೆ ಉತ್ತರಕರ್ನಾಟಕ, ದಕ್ಷಿಣ ಕರ್ನಾಟಕ ಎಂದು ಎರಡು ಭಾಗ ಮಾಡಿ ಉತ್ತರ ಕರ್ನಾಟಕವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಆಗ ಆ ಭಾಗದಿಂದ ಬೆಂಗಳೂರಿಗೆ ವಲಸೆ ಬರುವುದು ತಪ್ಪುತ್ತದೆ ಎಂದು ಹೇಳಿದರು.
|
5 |
+
ಎಲ್ಲರೂ ಮುಖ್ಯಮಂತ್ರಿಗಳಾಗಿ ಅಧಿಕಾರ ಅನುಭವಿಸಿದ್ದಾರೆ. ನಮ ಡಿ.ಕೆ.ಶಿವಕುಮಾರ್ರವರು ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಮುಖ್ಯಮಂತ್ರಿಗಳಾಗಿ ಸಾಕಷ್ಟು ಅನುಭವ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಡಿ.ಕೆ.ಶಿವಕುಮಾರ್ರವರಿಗೆ ಬಿಟ್ಟುಕೊಟ್ಟು, ಒಳ್ಳೆಯದಾಗಲಿ ಎಂದು ಅನುಗ್ರಹಿಸಬೇಕು. ಸಿದ್ದರಾಮಯ್ಯ ಅವರಿಂದ ಮಾತ್ರ ಇದು ಸಾಧ್ಯವಾಗುತ್ತದೆ. ಡಿ.ಕೆ.ಶಿವಕುಮಾರ್ರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ಅವರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.
|
6 |
+
ಈ ವೇಳೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ರವರು ವೇದಿಕೆಯಲ್ಲಿದ್ದರು ಎಂಬುದು ಗಮನಾರ್ಹ.ನಂತರ ಮಾತನಾಡಿದ ಪಟ್ಟನಾಯ್ಕನಹಳ್ಳಿ ಶ್ರೀಕ್ಷೇತ್ರ ಶ್ರೀ ಸ್ಫಟಿಕಪುರ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಡಾ.ನಂಜಾವಧೂತ ಸ್ವಾಮೀಜಿಯವರು, ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಪ್ರಾಧಿಕಾರ ರಚನೆ ಸೇರಿದಂತೆ ಹಲವು ಬೇಡಿಕೆಗಳಿಗೆ ಸಿದ್ದರಾಮಯ್ಯನವರು ಸ್ಪಂದಿಸಿದ್ದಾರೆ ಎಂದು ಶ್ಲಾಘಿಸಿದರು.
|
7 |
+
ಜಗಜ್ಯೋತಿ ಬಸವೇಶ್ವರರ ಫೋಟೋ ಹಾಕಿದಂತೆ ಬೆಂಗಳೂರಿನ ವ್ಯಾಪ್ತಿಗಳಲ್ಲಾದರೂ ಸರ್ಕಾರಿ ಕಚೇರಿಗಳಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರವನ್ನು ಅಳವಡಿಸಬೇಕು. ಕೆಜಿ ಯಿಂದ ಪಿಜಿ ಯವರೆಗೂ ನಾಡಪ್ರಭು ಅವರ ಪಠ್ಯವನ್ನು ಅಳವಡಿಸಬೇಕು ಎಂದು ಒತ್ತಾಯಿಸಿದರು.
|
eesanje/url_46_95_1.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಶನಿವಾರ ಪಿಎಂ ಮೋದಿ ಭೇಟಿಯಾಗಲಿದ್ದಾರೆ ಸಿಎಂ ಸಿದ್ದರಾಮಯ್ಯ
|
2 |
+
ಬೆಂಗಳೂರು, ಜೂ.27-ಸಂಸದರ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ಹಲವು ಸಚಿವರುಗಳ ಜೊತೆಗೆ ನಾಡಿದ್ದು ಸಂಜೆ ವಿಶೇಷವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
|
3 |
+
ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಅಂಗವಾಗಿ ವಿಧಾನಸೌಧದದ ಮುಂಭಾಗ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂತನವಾಗಿ ಆಯ್ಕೆಯಾಗಿರುವ ಸಂಸದರು ಹಾಗೂ ರಾಜ್ಯಸಭಾ ಸದಸ್ಯರ ಸಭೆಯನ್ನು ದೆಹಲಿಯಲ್ಲಿ ಕರೆಯಲಾಗಿದೆ.
|
4 |
+
ತಾವು ಅದರಲ್ಲಿ ಭಾಗವಹಿಸುತ್ತಿದ್ದು, ರಾಜ್ಯದಿಂದ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಯೋಜನೆಗಳ ಪಟ್ಟಿ ನೀಡುತ್ತೇನೆ. ಅವುಗಳ ಮಂಜೂರಾತಿಗೆ ಹಾಗೂ ಹಣ ಬಿಡುಗಡೆಗೆ ಪ್ರಯತ್ನಿಸುವಂತೆ ಮನವಿ ಮಾಡುತ್ತೇನೆ ಎಂದು ಹೇಳಿದರು.
|
5 |
+
ಜೊತೆಗೆ ಹಲವಾರು ಕೇಂದ್ರ ಸಚಿವರು, ಕೇಂದ್ರದ ರಾಜ್ಯ ಸಚಿವರುಗಳನ್ನು ಭೇಟಿ ಮಾಡುತ್ತೇನೆ. ವಿಶೇಷವಾಗಿ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್ ಗಟ್ಕರಿ, ಆರ್ಥಿಕ ಸಚಿವರಾದ ನಿರ್ಮಲಾ ಸೀತಾರಾಮನ್, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ರನ್ನು ಭೇಟಿಯಾಗಲಿದ್ದೇನೆ.
|
6 |
+
ಕೇಂದ್ರ ಗೃಹಸಚಿವ ಅಮಿತ್ ಶಾ ಇನ್ನೂ ಸಮಯ ನೀಡಬೇಕಿದೆ. ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ರನ್ನು ಭೇಟಿಯಾಗಲಿದ್ದೇನೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜೂ.29 ರಂದು ರಾತ್ರಿ 8 ಗಂಟೆಗೆ ಭೇಟಿಯಾಗಲು ಸಮಯ ನೀಡಿದ್ದಾರೆ ಎಂದು ತಿಳಿಸಿದರು.
|
7 |
+
ಕೇಂದ್ರ ಸರ್ಕಾರ ಮಂಡಿಸುತ್ತಿರುವ ಬಜೆಟ್ಗೆ ರಾಜ್ಯದಿಂದ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಲಾಗಿದೆ. ತಮ ಭಾಷಣದ ಪ್ರತಿಯನ್ನು ಕಂದಾಯ ಸಚಿವ ಕೃಷ್ಣಭೈರೇಗೌಡ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಡೆಸಿದ ಸಭೆಯಲ್ಲಿ ಮಂಡಿಸಿದ್ದಾರೆ ಎಂದು ಹೇಳಿದರು.
|
8 |
+
ರಾಹುಲ್ಗಾಂಧಿಯವರು ಪಾದಯಾತ್ರೆ ಹಾಗೂ ವಿವಿಧ ಕಾರ್ಯಕ್ರಮಗಳ ಮೂಲಕ ದೇಶಾದ್ಯಂತ ಸಂಚಾರ ಮಾಡಿ ಸಮಸ್ಯೆಗಳ ಬಗ್ಗೆ ಅರಿತುಕೊಂಡಿದ್ದಾರೆ. ಸಂಸತ್ನಲ್ಲಿ ವಿರೋಧಪಕ್ಷದ ನಾಯಕರಾಗಿ ಜನರ ಧ್ವನಿಯಾಗಿ ಸಮರ್ಥವಾಗಿ ಕೆಲಸ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
|
9 |
+
ಸಂಪ್ರದಾಯದಂತೆ ನಿನ್ನೆ ಲೋಕಸಭೆಯ ಸ್ಪೀಕರ್ ಆಯ್ಕೆ ಚುನಾವಣೆ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ ಒಟ್ಟಾಗಿ ಸ್ಪೀಕರ್ ಓಂಬಿರ್ಲಾ ಅವರನ್ನು ಕರೆದುಕೊಂಡು ಹೋಗಿ ಪೀಠಾಸೀನರನ್ನಾಗಿಸಿದ್ದಾರೆ ಎಂದು ಹೇಳಿದರು.
|
10 |
+
ಭಾರತ ಬಹುತ್ವದ ರಾಷ್ಟ್ರ. ವಿವಿಧ ಜಾತಿ, ಧರ್ಮ, ಭಾಷೆಗಳ ಜನ ವಾಸಿಸುತ್ತಿದ್ದಾರೆ. ಹಾಗಾಗಿ ಹಿಂದೂ ರಾಷ್ಟ್ರ ಮಾಡಲು ಸಾಧ್ಯವಿಲ್ಲ. ನೋಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ���ಯಸೇನ್ ಹೇಳಿದಂತೆ ಲೋಕಸಭೆಯ ಚುನಾವಣೆ ಫಲಿತಾಂಶ ಭಾರತ ಹಿಂದೂರಾಷ್ಟ್ರ ಅಲ್ಲ ಎಂಬ ಅಭಿಪ್ರಾಯ ಸರಿಯಾಗಿದೆ ಎಂದರು.
|
eesanje/url_46_95_10.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
: ಗೃಹ ಸಚಿವರ ತವರಲ್ಲೇ ವ್ಯವಸ್ಥಿತ ಮಕ್ಕಳ ಮಾರಾಟ ಜಾಲ ಪತ್ತೆ
|
2 |
+
ಬೆಂಗಳೂರು, ಜೂ.26-ಮಕ್ಕಳನ್ನು ಕಳ್ಳತನ ಮಾಡಿ ಸಂತಾನಹೀನ ದಂಪತಿಗಳಿಗೆ ಮಾರಾಟ ಮಾಡುತ್ತಿದ್ದ ವ್ಯವಸ್ಥಿತ ಜಾಲವೊಂದನ್ನು ಪತ್ತೆ ಹಚ್ಚಿರುವ ತುಮಕೂರು ಜಿಲ್ಲೆಯ ಪೊಲೀಸರು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಸಿಬ್ಬಂದಿಗಳನ್ನು ಬಂಧಿಸಿದ್ದಾರೆ.
|
3 |
+
ಈ ಬೃಹತ್ ಜಾಲದಲ್ಲಿ ಕೆಲದಿನಗಳ ಹಿಂದೆ ಕುಣಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಎಎನ್ಎಂ ಆಗಿ ಕೆಲಸ ಮಾಡುತ್ತಿರುವ ಯು.ಡಿ.ಮಹೇಶ್, ಮೆಹಬೂಬ್ ಷರೀಫ್ ಎಂಬ ಚಿಕ್ಕನಾಯ್ಕನಹಳ್ಳಿ ತಾಲ್ಲೂಕಿನ ಇಬ್ಬರನ್ನು, ಜಾತ್ರೆಗಳಲ್ಲಿ ಹಚ್ಚೆ ಬರೆಯುವ ಗುಬ್ಬಿ ತಾಲ್ಲೂಕಿನ ಚಿಕ್ಕಗುಡ್ಡ ಗ್ರಾಮದ ಕೆ.ಎನ್.ರಾಮಕೃಷ್ಣ, ತುಮಕೂರಿನ ಭಾರತಿ ನಗರದ ಹನುಮಂತರಾಜು, ನಾಗಮಂಗಲ ಮುಬಾರಕ್ ಪಾಶ, ದೊಡ್ಡೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುವ ಪೂರ್ಣಿಮಾ, ಶಿರಾ ನಗರದ ಸೌಜನ್ಯ ಅವರನ್ನು ಬಂಧಿಸಲಾಗಿದೆ.
|
4 |
+
ಕಳೆದ ಜೂ.9 ರಂದು ಗುಬ್ಬಿ ನಗರದ ಚನ್ನಬಸವೇಶ್ವರ ದೇವಸ್ಥಾನದ ಬಳಿ ಮಹದೇವಿ ಎಂಬುವರು ಮಲಗಿದ್ದಾಗ ಆಕೆಯ 11 ತಿಂಗಳ ಗಂಡುಮಗುವನ್ನು ಕದ್ದೊಯ್ಯಲಾಗಿತ್ತು. ದೂರು ಆಧರಿಸಿ ತನಿಖೆ ನಡೆಸಿದ ಗುಬ್ಬಿ ಪೊಲೀಸರು ತಾಂತ್ರಿಕ ಸಹಾಯದ ಆಧಾರದಲ್ಲಿ ಮಗುವನ್ನು ಕಳ್ಳತನ ಮಾಡಿದ ರಾಮಕೃಷ್ಣ ಹಾಗೂ ಹನುಮಂತರನ್ನು ಬಂಧಿಸಿದ್ದರು.
|
5 |
+
ಹೆಚ್ಚಿನ ವಿಚಾರಣೆ ನಡೆಸಿದಾಗ ಆರೋಪಿಗಳು ಮಗುವನ್ನು ಬೆಳ್ಳೂರು ಕ್ರಾಸ್ನ ಮುಬಾರಕ್ ಅವರಿಗೆ 1.75 ಲಕ್ಷ ರೂ.ಗಳಿಗೆ ಮಾರಾಟ ಮಾಡಿದ್ದಾಗಿ ವಿವರಿಸಿದ್ದಾರೆ.ಅವಿವಾಹಿತ ಹೆಣ್ಣುಮಕ್ಕಳು ಗರ್ಭ ಧರಿಸುವುದನ್ನು ಪತ್ತೆ ಹಚ್ಚುತ್ತಿದ್ದ ಈ ಜಾಲ ಅವರಿಗೆ ಹಣದ ಆಮಿಷ ತೋರಿಸಿ ಹೆರಿಗೆ ನಂತರ ಮಗುವನ್ನು ಪಡೆದುಕೊಂಡು ಸಂತಾನಹೀನ ದಂಪತಿಗಳಿಗೆ 2 ರಿಂದ 3 ಲಕ್ಷ ರೂ.ಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
|
6 |
+
ಆರೋಪಿಗಳು ಈವರೆಗೂ 9 ಮಕ್ಕಳನ್ನು ಮಾರಾಟ ಮಾಡಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸರು 5 ಮಕ್ಕಳನ್ನು ಸಂರಕ್ಷಿಸಿದ್ದಾರೆ. ಒಂದು ಮಗು ಮೃತಪಟ್ಟಿದ್ದು, ಇನ್ನೊಂದನ್ನು ಪೋಷಕರಿಗೆ ವಾಪಸ್ ನೀಡಲಾಗಿದೆ.ಸಂರಕ್ಷಿಸಲಾದ 5 ಮಕ್ಕಳಲ್ಲಿ 4 ಮಕ್ಕಳು ಕಲ್ಯಾಣ ಕೇಂದ್ರದ ಆಶಯದಲ್ಲಿ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಆರೋಪಿಗಳು ಮಕ್ಕಳನ್ನು ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
|
7 |
+
ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆಯಾಗಿತ್ತು. ಇದೀಗ ಗೃಹಸಚಿವರ ತವರು ಜಿಲ್ಲೆಯಲ್ಲೇ ಇಂತಹ ಜಾಲ ಕಂಡುಬಂದಿರುವುದು ಆತಂಕ ಮೂಡಿಸಿದೆ.
|
eesanje/url_46_95_11.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಹಾಲಿನ ದರ ಹೆಚ್ಚಿಸಿಲ್ಲ, ಕಾಫಿ, ಟೀ ಬೆಲೆ ಹೇಗೆ ಹೆಚ್ಚಾಗುತ್ತೆ..? : ಸಿಎಂ ಸಿಡಿಮಿಡಿ
|
2 |
+
ಬೆಂಗಳೂರು, ಜೂ.26-ಹಾಲಿನ ದರವೇ ಹೆಚ್ಚಳವಾಗಿಲ್ಲ. ಹಾಗಿದ್ದರೂ ಹೋಟೆಲ್ನವರು ಕಾಫಿ, ಟೀ ಬೆಲೆಯನ್ನು ಹೇಗೆ ಹೆಚ್ಚಳ ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಡಿಮಿಡಿ ವ್ಯಕ್ತಪಡಿಸಿದ್ದಾರೆ.ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ ಬೆಲೆ ಹೆಚ್ಚಳವಾಗಿಲ್ಲ ಎಂದು ಪುನರುಚ್ಚರಿಸಿದರು.
|
3 |
+
ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ 90 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿತ್ತು. ಈಗ ಅದು 99 ಲಕ್ಷ ಲೀಟರ್ಗೆ ಹೆಚ್ಚಾಗಿದೆ. ಹೆಚ್ಚುವರಿ ಹಾಲಿನ ಮಾರುಕಟ್ಟೆ ಕಲ್ಪಿಸಬೇಕು. ರೈತರು ಹೈನುಗಾರರು ಉತ್ಪಾದಿಸಿದ ಹಾಲನ್ನು ಖರೀದಿಸುವುದಿಲ್ಲ ಎಂದು ನಿರಾಕರಿಸಲು ಸಾಧ್ಯವೇ? ಅಥವಾ ಹಾಲನ್ನು ಚೆಲ್ಲಿಬಿಡಲಾಗುತ್ತದೆಯೇ? ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
|
4 |
+
ಹೆಚ್ಚುವರಿ ಹಾಲಿಗೆ ಮಾರುಕಟ್ಟೆ ಕಲ್ಪಿಸುವ ಸಲುವಾಗಿ ಅರ್ಧ ಲೀಟರ್ ಮತ್ತು ಒಂದು ಲೀಟರ್ ಹಾಲಿನ ಪೊಟ್ಟಣಕ್ಕೆ 50 ಎಂಎಲ್ ಅನ್ನು ಹೆಚ್ಚುವರಿಯಾಗಿ ಸೇರಿಸಿ ಅದಕ್ಕೆ ತಗಲುವ ವೆಚ್ಚವನ್ನು ಗ್ರಾಹಕರಿಂದ ಪಡೆಯಲಾಗುತ್ತಿದೆ. ಹೀಗಿರುವಾಗ ಹಾಲಿನ ದರ ಎಲ್ಲಿ ಹೆಚ್ಚಾಗಿದೆ ಎಂದು ತಿರುಗೇಟು ನೀಡಿದರು.ಬಿಜೆಪಿಯವರು ರಾಜಕೀಯ ಕಾರಣಕ್ಕಾಗಿ ಹೇಳಿಕೆ ನೀಡುತ್ತಿದ್ದಾರೆ. ಅವರು ಹೇಳುವುದನ್ನು ನಂಬುವವರಿಗಾದರೂ ವಿವೇಚನೆ ಬೇಡವೇ? ಎಂದು ಪ್ರಶ್ನಿಸಿದರು.
|
5 |
+
ಹೋಟೆಲ್ನವರು ಕಾಫಿ, ಟೀ ಬೆಲೆ ಹೆಚ್ಚಿಸುವ ಅಗತ್ಯವಿಲ್ಲ. ಏಕೆಂದರೆ ಹಾಲಿನ ಬೆಲೆ ಹೆಚ್ಚಳವಾಗಿಲ್ಲ ಎಂದು ಹೇಳಿದರು. ರಾಹುಲ್ಗಾಂಧಿಯವರು ಲೋಕಸಭೆಯ ವಿರೋಧಪಕ್ಷದ ನಾಯಕರಾಗಬೇಕು ಎಂದು ಕಾಂಗ್ರೆಸ್ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಾನು ಪ್ರಸ್ತಾಪ ಮಾಡಿದ್ದೆ. ಪಕ್ಷದ ಇತರ ನಾಯಕರು ಇದನ್ನೇ ಪ್ರತಿಪಾದಿಸಿದ್ದರು. ಈಗ ರಾಹುಲ್ಗಾಂಧಿ ಜವಾಬ್ದಾರಿ ಒಪ್ಪಿಕೊಂಡಿದ್ದಾರೆ. ಅವರಿಗೆ ಅಭಿನಂದನೆಗಳು ಎಂದರು.
|
6 |
+
ಬಿಜೆಪಿ ಹಾಗೂ ನರೇಂದ್ರ ಮೋದಿಯವರ ಸರ್ಕಾರವನ್ನು ಸಂಸತ್ನಲ್ಲಿ ಎದುರಿಸಲು ರಾಹುಲ್ಗಾಂಧಿಯವರ ಅಗತ್ಯವಿತ್ತು. ದೇಶದ ಹಿತದೃಷ್ಟಿಯಿಂದ ರಾಹುಲ್ಗಾಂಧಿ ಜವಾಬ್ದಾರಿ ವಹಿಸಿಕೊಂಡಿರುವುದು ಸಾಗತಾರ್ಹ ಎಂದರು. ದೆಹಲಿಯಲ್ಲಿ ನಡೆಯುವ ಸಂಸದರ ಸಭೆಯಲ್ಲಿ ಭಾಗವಹಿಸುವ ಬಗ್ಗೆ ಹೋಗುವಾಗ ಹೇಳುತ್ತೇನೆ ಎಂದು ತೆರಳಿದರು.
|
eesanje/url_46_95_12.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮಾದಕ ವ್ಯಸನಿಗಳಿಂದ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ : ಗೃಹಸಚಿವ ಪರಮೇಶ್ವರ್
|
2 |
+
ಬೆಂಗಳೂರು, ಜೂ.26-ದೇಶದಲ್ಲಿ 5 ಕೋಟಿಗೂ ಹೆಚ್ಚು ಜನ ಮಾದಕ ವ್ಯಸನಕ್ಕೆ ಅಂಟಿಕೊಂಡಿದ್ದು, ಇದರಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಆತಂಕ ವ್ಯಕ್ತಪಡಿಸಿದರು.ನಗರದ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಪೊಲೀಸ್ ಇಲಾಖೆಯು ವಿವಿಧ ಶಿಕ್ಷಣ ಸಂಸ್ಥೆಗಳೊಂದಿಗೆ ಜಂಟಿಯಾಗಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಾದಕವಸ್ತು ವ್ಯಸನ ಮತ್ತು ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
|
3 |
+
ವಿಶ್ವದೆಲ್ಲೆಡೆ ಮಾದಕ ದ್ರವ್ಯ ಆಧುನಿಕ ಪಿಡುಗು ಆಗಿದ್ದು, ಯುವ ಸಮುದಾಯವನ್ನೇ ಹಾಳು ಮಾಡುತ್ತಿದೆ. ಮಾದಕ ವಸ್ತುಗಳ ವ್ಯಸನದ ಸಮಸ್ಯೆಯನ್ನು ಅರ್ಥೈಸಿಕೊಂಡ ವಿಶ್ವಸಂಸ್ಥೆಯು 1987ರಲ್ಲಿ ಮಾದಕ ವಸ್ತು ವಿರೋಧಿ ದಿನವನ್ನು ಜೂ.26ರಂದು ಆಚರಿಸಲು ನಿರ್ಣಯಿಸಿತು. ಮಾದಕ ದ್ರವ್ಯ ಸಮಾಜಕ್ಕೆ ದೊಡ್ಡ ರೋಗವಾಗಿ ಅಂಟಿಕೊಳ್ಳುತ್ತಿದ್ದು, ಯುವ ಪೀಳಿಗೆ ಸಂಕಷ್ಟಕ್ಕೆ ಸಿಲುಕದಂತೆ ಜಾಗೃತಿ ಮೂಡಿಸಬೇಕಿದೆ ಎಂದರು.
|
4 |
+
ಭಾರತವು ಮಾದಕ ವಸ್ತುಗಳ ಸಮಸ್ಯೆಯಲ್ಲಿ ಸಿಲುಕುತ್ತಿದೆ. 5 ಕೋಟಿ ಜನ ಮಾದಕ ವ್ಯಸನಕ್ಕೆ ಅಂಟಿಕೊಂಡಿದ್ದಾರೆ. ಯುವಕರು ಹಾಳಾದರೆ, ದೇಶ ಸಂಕಷ್ಟಕ್ಕೆ ಸಿಲುಕಿದಂತಾಗುತ್ತದೆ. ಭಾರತ ಅತಿ ಹೆಚ್ಚು ಯುವಕರನ್ನು ಹೊಂದಿರುವ ದೇಶ. ಬಹಳ ಎಚ್ಚರಿಕೆಯಿಂದ ದೇಶದ ಮುಂದಿನ ಭವಿಷ್ಯವನ್ನು ನೋಡಿಕೊಳ್ಳಬೇಕಿದೆ ಎಂದು ಹೇಳಿದರು.
|
5 |
+
ಕೊಲೆ ಪ್ರಕರಣಗಳನ್ನು ಪತ್ತೆ ಹಚ್ಚುವಾಗ 17 ರಿಂದ 20 ವರ್ಷದೊಳಗಿನವರೇ ಭಾಗಿಯಾಗುತ್ತಿರುವುದು ಬೆಳಕಿಗೆ ಬರುತ್ತಿದೆ. ತಪ್ಪಿತಸ್ಥರನ್ನು ತಪಾಸಣೆಗೆ ಒಳಪಡಿಸಿದಾಗ ಮಾದಕ ವ್ಯಸನಿಯಾಗಿದ್ದರು ಎಂಬುದು ಗೊತ್ತಾಗುತ್ತಿದೆ. ಮಾದಕ ವ್ಯಸನದಿಂದ ಸಮಾಜಕ್ಕೆ ಅಪಾಯವಿದ್ದು, ಪಾಲಕರು ತಮ ಮಕ್ಕಳ ಚಟುವಟಿಕೆಗಳ ಮೇಲೆ ನಿಗಾವಹಿಸಬೇಕು. ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಹೆಚ್ಚು ಜಾಗೃತಿ ಮೂಡಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
|
6 |
+
ರಾಜ್ಯ ಸರ್ಕಾರವು ಡ್ರಗ್್ಸ ಮುಕ್ತ ಕರ್ನಾಟಕ ನಿರ್ಮಾಣದ ಘೋಷಣೆ ಮಾಡಿದೆ. ಸಂಪೂರ್ಣವಾಗಿ ಡ್ರಗ್ಸ್ ಮಟ್ಟ ಹಾಕುವ ನಿಟ್ಟಿನಲ್ಲಿ ಇಲಾಖೆಯು ಯುದ್ಧವನ್ನೇ ಸಾರಿದೆ. 40 ಕೋಟಿ ರೂ. ಮೌಲ್ಯದ ಡ್ರಗ್್ಸ ನಾಶಪಡಿಸಲಾಗಿದ್ದು, 10 ಟನ್ ಗಾಂಜಾ ಸುಟ್ಟು ಹಾಕಲಾಗಿದೆ. ಇಷ್ಟೊಂದು ಪ್ರಮಾಣದ ಡ್ರಗ್್ಸ ಯುವಕರ ಕೈಸೇರಿದ್ದರೆ ಎಷ್ಟು ಕುಟುಂಬಗಳು ಹಾಳಾಗುತ್ತಿದ್ದವೋ ಎಂದು ಆತಂಕ ವ್ಯಕ್ತಪಡಿಸಿದರು.
|
7 |
+
ಡ್ರಗ್್ಸನಿಂದ ದೂರ ಇರುತ್ತೇವೆ ಎಂದು ಪ್ರತಿಯೊಬ್ಬರೂ ಸಂಕಲ್ಪ ಮಾಡಿಕೊಳ್ಳಬೇಕು. ಐಟಿ ಕಂಪನಿಗಳು ಕೈಗಾರಿಕೆಗಳು ಡ್ರಗ್ಸ್ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಹೇಳಿದರು.
|
8 |
+
ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾತನಾಡಿ, ಪ್ರತಿ ವರ್�� ಮಾದಕ ವ್ಯಸನದ ವಿರುದ್ಧ ಜಾಗೃತಿ ಮೂಡಿಸಲು ಅಂತಾರಾಷ್ಟ್ರೀಯ ದಿನಾಚರಣೆ ನಡೆಸಲಾಗುತ್ತದೆ. ಈ ವರ್ಷ `ಸಾಕ್ಷಿ ಅಸ್ಪಷ್ಟ ನಿಯಂತ್ರಣ ಅವಶ್ಯ’ ಧ್ಯೇಯದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ರಾಜ್ಯವನ್ನು ಮಾದಕವ್ಯಸನ ಮುಕ್ತಗೊಳಿಸಲು ದೃಢ ಸಂಕಲ್ಪದೊಂದಿಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಿದರು.
|
9 |
+
ಕಾರ್ಯಕ್ರಮದಲ್ಲಿ ಮಾದಕ ವ್ಯಸನದ ವಿರುದ್ಧವಾಗಿ ಜಾಗೃತಿ ಪ್ರಾತಿಕ್ಷಿಕೆಗಳು ನಡೆದವು. ನಿರಂತರ ಕಾರ್ಯಾಚರಣೆಯಿಂದಾಗಿ ವಶಪಡಿಸಿಕೊಳ್ಳಲಾಗಿರುವ 42 ಕೋಟಿ ರೂ. ಮೌಲ್ಯದ 1,227 ಕೆಜಿ ಪ್ರಮಾಣದ ಗಾಂಜಾ, ಕೊಕೈನ್ನಂತಹ ಮಾದಕ ವಸ್ತುಗಳನ್ನು ನಾಶಪಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.
|
10 |
+
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ. ಕೆ.ಗೋವಿಂದರಾಜ್, ಶಾಸಕ ರಿಜ್ವಾನ್ ಅರ್ಷದ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಸಿಐಡಿ ವಿಭಾಗದ ಡಿಜಿಪಿ ಡಾ. ಎಂ.ಎ.ಸಲೀಂ, ಎಡಿಜಿಪಿ ಪ್ರಣಬ್ ಮೋಹಾಂತಿ, ಆದರ್ಶ ಡೆವಲಪರ್ಸ್ನ ವ್ಯವಸ್ಥಾಪಕ ನಿರ್ದೇಶಕ ಜಯಶಂಕರ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
|
eesanje/url_46_95_2.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಕೆಂಪೇಗೌಡರ 515ನೇ ಜಯಂತಿ : ನಾಡಪ್ರಭುಗೆ ಕೇಂದ್ರ ಸಚಿವರಿಂದ ಗೌರವ ಸಮರ್ಪಣೆ
|
2 |
+
ಬೆಂಗಳೂರು, ಜೂ.27-ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಅಂಗವಾಗಿ ಕರ್ನಾಟಕ ಭವನದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಣೆಯನ್ನು ಕೇಂದ್ರ ಭಾರಿ ಮತ್ತು ಉಕ್ಕು ಕೈಗಾರಿಕ ಸಚಿವ ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ರೈಲ್ವೆ, ಜಲಶಕ್ತಿ ಖಾತೆ ಸಚಿವ ವಿ.ಸೋಮಣ್ಣ ಮತ್ತು ಸಂಸದ ಮಲ್ಲೇಶ್ಬಾಬು ನೆರವೇರಿಸಿದರು.
|
3 |
+
ನ್ಯಾಯ, ನೀತಿ, ನಿಷ್ಠೆ ಮತ್ತು ದೂರದೃಷ್ಟಿ ಈ ನಾಲ್ಕು ಆಧಾರಸ್ತಂಭಗಳ ಮೇಲೆ ಆಡಳಿತ ನಡೆಸಿದ ನಾಡಪ್ರಭುಗಳು ಅಮರ ಅಜರಾಮರ ಎಂದು ಕುಮಾರಸ್ವಾಮಿ ಬಣ್ಣಿಸಿದ್ದಾರೆ. ಎಲ್ಲರಿಗೂ ಕೆಂಪೇಗೌಡರ 515ನೇ ಜಯಂತಿಯ ಶುಭಾಶಯಗಳನ್ನು ಎಕ್ಸ್ ಮೂಲಕ ಕೋರಿರುವ ಅವರು, ಕನ್ನಡಿಗರ ಸ್ವಾಭಿಮಾನ, ಶೌರ್ಯ ಹಾಗೂ ಸಹಿಷ್ಣತೆಯ ಪ್ರತೀಕವಾಗಿದ್ದರು.
|
4 |
+
ಕೆಂಪೇಗೌಡರು ನಮೆಲ್ಲರ ಪಾಲಿನ ಪ್ರಾತಃ ಸರಣೀಯರು. ಇಡೀ ಜಗತ್ತೇ ನಿಬ್ಬೆರಗಾಗಿ ಇಂದು ಬೆಂಗಳೂರನ್ನು ನೋಡುತ್ತಿದೆ ಎಂದರೆ ಅದಕ್ಕೆ ನಾಡಪ್ರಭುಗಳು ಹಾಕಿಕೊಟ್ಟಿರುವ ಹೆಜ್ಜೆ ಗುರುತುಗಳೇ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ.
|
eesanje/url_46_95_3.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಒಕ್ಕಲಿಗರ ಸಂಘದಿಂದ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಆಚರಣೆ
|
2 |
+
ಬೆಂಗಳೂರು, ಜೂ.27-ವಿವಿಧ ಜಾನಪದ ಕಲಾತಂಡಗಳ ಕಲಾಪ್ರದರ್ಶನ ಸೇರಿದಂತೆ ವೈವಿಧ್ಯಮಯ ಮೆರವಣಿಗೆಯೊಂದಿಗೆ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿಯನ್ನು ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಅದ್ಧೂರಿಯಾಗಿ ಇಂದು ಆಚರಿಸಲಾಯಿತು.
|
3 |
+
ಸಂಘದ ಆವರಣದಲ್ಲಿರುವ ಅಶ್ವಾರೂಢ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ನೆರವೇರಿಸುವುದರೊಂದಿಗೆ ಜಯಂತಿ ಆಚರಣೆ ಮಾಡಲಾಯಿತು.
|
4 |
+
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಪಟ್ಟನಾಯ್ಕನಹಳ್ಳಿಯ ಸ್ಫಟಿಕಪುರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವದೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ.ಹನುಮಂತಯ್ಯ, ಪ್ರಧಾನ ಕಾರ್ಯದರ್ಶಿ ಎಚ್.ಸಿ.ಜಯಮುತ್ತು, ಗೌರವಾಧ್ಯಕ್ಷ ಬಿ.ಕೆಂಚಪ್ಪಗೌಡ,
|
5 |
+
ಉಪಾಧ್ಯಕ್ಷರಾದ ಎಲ್.ಶ್ರೀನಿವಾಸ್, ಸಿ.ದೇವರಾಜು, ಖಜಾಂಚಿ ಸಿ.ಮಾರೇಗೌಡ, ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ನೆಲ್ಲಿಗೆರೆ ಬಾಲು, ನಿರ್ದೇಶಕರಾದ ಬಿ.ಪಿ.ಮಂಜೇಗೌಡ, ಅಶೋಕ್ ಜಯರಾಂ, ಆರ್.ಪ್ರಕಾಶ್, ಟಿ.ಕೋನಪ್ಪರೆಡ್ಡಿ, ಪುಟ್ಟಸ್ವಾಮಿ ಮೊದಲಾದವರ ಸಮುಖದಲ್ಲಿ ಜಯಂತಿ ಆಚರಿಸಲಾಯಿತು.
|
6 |
+
ಬಳಿಕ ಅಶ್ವಾರೂಢ ಕೆಂಪೇಗೌಡ ವೇಷಧಾರಿ, ನಂದಿಧ್ವಜ, ವೀರಭದ್ರ ಕುಣಿತ, ಗಾರುಡಿ ಗೊಂಬೆ, ಡೊಳ್ಳು ಕುಣಿತ, ತಮಟೆ, ಪಾಳೆಗಾರ ವೇಶ, ಪೂಜಾ ಕುಣಿತ, ಪಟಕುಣಿತ, ಮೈಸೂರು ನಗಾರಿ, ಮಂಗಳವಾದ್ಯದೊಂದಿಗೆ ಸಂಘದ ಆವರಣದಿಂದ ಕಂಠೀರವ ಕ್ರೀಡಾಂಗಣದವರೆಗೆ ಮೆರವಣಿಗೆ ನಡೆಸಲಾಯಿತು.
|
eesanje/url_46_95_4.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಕರಾವಳಿಯಲ್ಲಿ ಮಳೆ ಅಬ್ಬರಕ್ಕೆ ಮತ್ತಿಬ್ಬರು ಬಲಿ, ವಿದ್ಯುತ್ ತಂತಿ ತಗುಲಿ ಆಟೋ ಚಾಲಕರಿಬ್ಬರ ಮೃತ್ಯು
|
2 |
+
ಬೆಂಗಳೂರು, ಜೂ.27-ರಾಜ್ಯದ ಮಲೆನಾಡು, ಕರಾವಳಿ, ಕೊಡಗು ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ.ಭಾರಿ ಮಳೆಯ ಆರ್ಭಟಕ್ಕೆ ನಿನ್ನೆಯಷ್ಟೇ ಮಂಗಳೂರಿನ ಮನೆಯೊಂದರ ಕಾಂಪೌಂಡ್ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದು, ಇಂದು ಭಾರಿ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಂಗಳೂರಿನ ಪಾಂಡೇಶ್ವರಿ ರೋ ಸಾರಿಯೋ ಶಾಲೆಯ ಬಳಿ ಇಬ್ಬರು ಆಟೋ ಚಾಲಕರು ಮೃತಪಟ್ಟಿದ್ದಾರೆ.
|
3 |
+
ರಾಜು-ದೇವರಾಜು ಮೃತ ಆಟೋ ಚಾಲಕರೆಂದು ಗುರುತಿಸಲಾಗಿದೆ. ರಾತ್ರಿ ಭಾರಿ ಮಳೆ ಬಿದ್ದ ಪರಿಣಾಮ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರಾಜು ಆಟೋಚಾಲಕ ಒದ್ದಾಡುತ್ತಿದ್ದ. ಅವರನ್ನು ಬಚಾವ್ ಮಾಡಲು ಮುಂದಾದ ಮತ್ತೊಬ್ಬ ಆಟೋ ಚಾಲಕನಿಗೂ ವಿದ್ಯುತ್ ಸ್ಪರ್ಶಗೊಂಡು ಇಬ್ಬರೂ ಸಾವನ್ನಪ್ಪಿದ್ದಾರೆ.ದಕ್ಷಿಣ ಕನ್ನಡ ಘಟ್ಟಪ್ರದೇಶಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ.
|
4 |
+
ಕುಕ್ಕೆ ಸುಬ್ರಹಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದ್ದು, ಪ್ರವಾಸಿಗರಿಗೆ ಎಚ್ಚರಿಕೆ ನೀಡಲಾಗಿದೆ. ಕುಮಾರಧಾರ ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಡೆಯಾಗಿದ್ದು, ಸುಬ್ರಹಣ್ಯ ದೇವಾಲಯದ ಆವರಣದ ನದಿಗಿಳಿಯದಂತೆ ಭಕ್ತಾದಿಗಳಿಗೆ ಸೂಚನೆ ನೀಡಲಾಗಿದೆ.ಭಾರಿ ಮಳೆಯಾಗುತ್ತಿದ್ದರೂ ನದಿ ದಡದಲ್ಲಿ ಭಕ್ತಾದಿಗಳು ತೀರ್ಥ ಸ್ನಾನ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ತಡೆಯಲು ಕುಮಾರಧಾರ ನದಿ ತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿಗಳು ಮತ್ತು ಹೋಂಗಾರ್ಡ್್ಸ ಅನ್ನು ನಿಯೋಜನೆ ಮಾಡಲಾಗಿದೆ.
|
5 |
+
ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಆಗುಂಬೆ, ಚಾರ್ಮುಡಿ, ಶಿರಾಡಿ ಘಾಟ್ನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಎಚ್ಚರಿಕೆ ನೀಡಲಾಗಿದೆ.ದಕ್ಷಿಣ ಕನ್ನಡ ಹಾಗೂ ಕೊಡಗಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಂಟ್ವಾಳ ತಾಲ್ಲೂಕಿನಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕಳೆದೆರಡು ದಿನಗಳಿಂದ ಮಳೆ ಬಿಟ್ಟೂ ಬಿಡದಂತೆ ಸುರಿಯುತ್ತಿದೆ. ರಸ್ತೆಗಳು, ಹೊಲಗದ್ದೆಗಳೆಲ್ಲಾ ಜಲಾವೃತವಾಗಿವೆ.
|
6 |
+
ಬಿಸಿ ರೋಡ್ ಜಂಕ್ಷನ್ ಸಹಿತ ಹಲವು ಪ್ರದೇಶಗಳಲ್ಲಿ ನಡೆದಾಡಲೂ ಆಗದಂತೆ ಪರಿಸ್ಥಿತಿ ನಿರ್ಮಾಣವಾಗಿದೆ. ಶಿವಮೊಗ್ಗ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಕಟ್ಟೆಚ್ಚರ ವಹಿಸಲಾಗಿದೆ.
|
7 |
+
ಇತ್ತ ಮಡಕೇರಿ, ಬಾಗಮಂಡಲ ಮತ್ತಿತರೆಡೆ ಮಳೆ ಅಬ್ಬರ ಮುಂದುವರೆದಿದೆ. ನಗರದ ಸುಲೆಮಾನ್ ಎಂಬುವರ ಮನೆಯ ಹಿಂದೆ ಮಣ್ಣು ಕುಸಿದಿದ್ದು, ನಗರಸಭೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮಣ್ಣು ತೆರವುಗೊಳಿಸಿದ್ದಾರೆ. ಮಳೆ ಹೆಚ್ಚಾಗುವ ಸಾಧ್ಯತೆಯಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಸನ್ನದ್ಧ ಸ್ಥಿತಿಯಲ್ಲಿದ್ದು, ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ.ಕಬಿನಿ, ಕಾವೇರಿ ಅ��ೆಕಟ್ಟುಗಳ ಒಳಹರಿವು ಜಾಸ್ತಿಯಾಗಿದೆ.
|
eesanje/url_46_95_5.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
41 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಪೊಲೀಸರು
|
2 |
+
ಬೆಂಗಳೂರು, ಜೂ.26– ಮಾದಕ ದ್ರವ್ಯ ಮಾರಾಟ ಹಾಗೂ ಸರಬರಾಜು ವಿರುದ್ಧ ಸಮರ ಸಾರಿರುವ ಬೆಂಗಳೂರು ನಗರ ಪೊಲೀಸರು ವಿವಿಧ ಪ್ರಕರಣಗಳಲ್ಲಿ ಕಳೆದ ಫೆಬ್ರವರಿ 10ರಿಂದ ಜೂ. 24ರವರೆಗೆ ವಶಪಡಿಸಿಕೊಳ್ಳಲಾದ 41,73,22,900 ಮೌಲ್ಯದ ವಿವಿಧ ಮಾದಕ ದ್ರವ್ಯಗಳನ್ನು ಇಂದು ನಾಶ ಮಾಡಲಾಯಿತು.
|
3 |
+
ನಗರದಲ್ಲಿ ಇತ್ತೀಚೆಗೆ ಮಾದಕ ದ್ರವ್ಯಗಳ ಮಾರಾಟ ದಂಧೆ ವ್ಯಾಪಕವಾಗಿ ನಡೆಯುತ್ತಿದ್ದು, ಇದರ ಮೇಲೆ ಹದ್ದಿನ ಕಣ್ಣಿಟ್ಟಿರುವ ನಗರ ಪೊಲೀಸರು ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಮಾರಾಟ, ಸರಬರಾಜಿನಲ್ಲಿ ತೊಡಗಿದ್ದವರನ್ನು ಬಂಧಿಸಿ ಅಪಾರ ಪ್ರಮಾಣದ ಗಾಂಜಾ, ಚರಸ್ಸು, ಕೊಕೈನ್, ಎಂಡಿಎಂಎ ಪೌಡರ್ ಸೇರಿದಂತೆ ಮತ್ತಿತರ ಗಾಂಜಾ ವಸ್ತುಗಳನ್ನು ವಶಕ್ಕೆ ಪಡೆದು ನೆಲಮಂಗಲ ತಾಲೂಕಿನ ದಾಬಸ್ಪೇಟೆ ಕೈಗಾರಿಕಾ ಪ್ರದೇಶದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಮುಖದಲ್ಲಿ ನಾಶ ಮಾಡಲಾಯಿತು.
|
4 |
+
ಯುವ ಜನತೆಯನ್ನು ಟಾರ್ಗೆಟ್ ಮಾಡಿಕೊಂಡು ಮಾದಕ ದ್ರವ್ಯ ಮಾರಾಟ ಮಾಡುವವರ ವಿರುದ್ಧ ನಗರ ಪೊಲೀಸರು ಕ್ರಮ ಕೈಗೊಂಡಿದ್ದು, ಮಾದಕ ದ್ರವ್ಯ ಮುಕ್ತ ಬೆಂಗಳೂರನ್ನು ನಿರ್ಮಾಣ ಮಾಡಲು ಪಣ ತೊಟ್ಟಿದ್ದಾರೆ. ಇದಕ್ಕೆ ಸಾರ್ವಜನಿಕರ ಸಹಕಾರವೂ ಅತ್ಯಗತ್ಯವಾಗಿದೆ.
|
5 |
+
ನಗರ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳು ಹಾಗೂ ಗಾಂಜಾ ಮಾರಾಟ, ಸಾಗಾಟ ಕಂಡು ಬಂದರೆ ಪೊಲೀಸರಿಗೆ ಮಾಹಿತಿ ನೀಡಿದರೆ ಅಂತಹವರ ವಿರುದ್ಧ ನಿರ್ಧಾಕ್ಷಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
|
eesanje/url_46_95_6.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸದ್ಯದಲ್ಲೇ ಆಟೋ ಬಾಡಿಗೆ, ಹೋಟೆಲ್ ತಿಂಡಿ ದರ ಏರಿಕೆ “ಗ್ಯಾರಂಟಿ”
|
2 |
+
ಬೆಂಗಳೂರು,ಜೂ.26-ಡೀಸೆಲ್, ಪೆಟ್ರೋಲ್ ಹಾಗೂ ಹಾಲಿನ ದರ ಏರಿಕೆಯಾಗಿರು ಬೆನ್ನಲ್ಲೇ, ಆಟೋ ಪ್ರಯಾಣ ದರ, ಹೋಟೆಲ್ಗಳಲ್ಲಿ ತಿಂಡಿ-ತಿನಿಸುಗಳ ಬೆಲೆ ಕೂಡ ಹೆಚ್ಚಾಗಲಿದ್ದು, ಹೋಟೆಲ್ಗಳನ್ನೇ ನೆಚ್ಚಿಕೊಂಡಿರುವ ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ ಬೀಳಲಿದೆ.ಬೆಲೆ ಏರಿಕೆ ಒತ್ತಡ ಎದುರಿಸುತ್ತಿರುವ ಹೋಟೆಲ್ ಉದ್ಯಮ ತನ್ನ ಮೇಲಿನ ಆರ್ಥಿಕ ಹೊರೆಯನ್ನು ಗ್ರಾಹಕರ ಮೇಲೆ ವರ್ಗಾಯಿಸಲು ಮುಂದಾಗಿದೆ. ಇದು ಜನಸಾಮಾನ್ಯರಿಗೆ ಮತ್ತಷ್ಟು ಹೊರೆಯಾಗಲಿದೆ.
|
3 |
+
ವಿದ್ಯುತ್ ಶುಲ್ಕ, ತರಕಾರಿ, ಬೇಳೆಕಾಳುಗಳ ದರ ಏರಿಕೆ ಬಿಸಿಯ ಮಧ್ಯೆ ಇದೀಗ ಹಾಲಿನ ಬೆಲೆ ಹೆಚ್ಚಾಗಿರುವುದರಿಂದ ಹೋಟೆಲ್ ಉದ್ಯಮಕ್ಕೆ ಹೊಡೆತ ಬಿದಿದ್ದು, ಆರ್ಥಿಕ ನಷ್ಟದಿಂದ ಹೊರಬರಲು ಶೇ.10ರಷ್ಟು ದರ ಏರಿಸಲು ಹೋಟೆಲ್ ಮಾಲೀಕರು ತೀರ್ಮಾನಿಸಿದ್ದಾರೆ.ಇಡ್ಲಿ-ವಡೆ, ದೋಸೆ, ರೈಸ್ಬಾತ್, ಚೌಚೌ ಬಾತ್ ತಿಂಡಿಗೆ 5 ರೂ., ಕಾಫಿ, ಟೀ ದರವನ್ನು 1ರಿಂದ 2 ರೂ. ಏರಿಸಲು ಚಿಂತಿಸಲಾಗಿದೆ. ಹಾಲು, ತುಪ್ಪ, ಬೆಣ್ಣೆ ಹಾಗೂ ಇತರೆ ಆಹಾರ ಪದಾರ್ಥಗಳ ಬೆಲೆ ಹೆಚ್ಚಳದ ಹಿನ್ನೆಲೆಯಲ್ಲಿ ತಿಂಡಿಗಳ ಬೆಲೆ ಹೆಚ್ಚಳ ಅನಿವಾರ್ಯ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.
|
4 |
+
ಕೆಲವೊಂದು ಹೋಟೆಲ್ಗಳು ಈಗಾಗಲೇ ದರ ಹೆಚ್ಚಳ ಮಾಡಿವೆ. ಇನ್ನು ಕೆಲ ಹೋಟೆಲ್ಗಳ ಮಾಲೀಕರ ದರ ಏರಿಕೆ ಬದಲಿಗೆ ಪರ್ಯಾಯ ಮಾರ್ಗ ಕಂಡುಕೊಂಡಿದ್ದಾರೆ.ಕಳೆದ ವರ್ಷ ಸಿಲಿಂಡರ್ಗೆ ನೀಡುತ್ತಿದ್ದ ರಿಯಾಯಿತಿ ರದ್ದುಗೊಳಿಸಲಾಗಿದೆ. ಕಳೆದ ಕೆಲವು ತಿಂಗಳಿನಿಂದ ತೊಗರಿ, ಉದ್ದು, ಹೆಸರು ಬೇಳೆ ಸೇರಿದಂತೆ ಬೇಳೆ ಕಾಳುಗಳ ದರ ಏರಿಕೆ ಕಂಡಿದ್ದು ನೇರವಾಗಿ ಹೋಟೆಲ್ಗಳ ಆರ್ಥಿಕ ಹೊರೆಗೆ ಕಾರಣವಾಗಿತ್ತು.
|
5 |
+
ಕಳೆದ ಹದಿನೈದು ಇಪ್ಪತ್ತು ದಿನಗಳಿಂದ ಟೊಮೆಟೊ, ಕ್ಯಾರೆಟ್, ಬೀನ್್ಸ ಬೆಲೆ ಶತಕ ದಾಟಿರುವುದು ಮತ್ತಷ್ಟು ಹೊಡೆತ ನೀಡಿದೆ. ಬೆಲೆ ಹೆಚ್ಚಿಸುತ್ತಿರುವುದು ಉದ್ಯಮಕ್ಕೆ ಪೆಟ್ಟು ಕೊಟ್ಟಿದೆ. ಹೀಗಾಗಿ ಬೆಲೆ ಏರಿಕೆ ಅನಿವಾರ್ಯ ಎಂದು ಕೆಲವು ಹೋಟೆಲ್ ಮಾಲೀಕರು ಹೇಳಿದ್ದಾರೆ.
|
6 |
+
ಕಳೆದೊಂದು ತಿಂಗಳಿಂದ ಲಾಭವನ್ನೇ ಕಂಡಿಲ್ಲ. ಕೆಲ ತಿನಿಸುಗಳನ್ನು ಮಾಡಿ ನಷ್ಟ ಅನುಭವಿಸಿದ್ದಾರೆ. ಸಾಮಾನ್ಯ ಜನರು ಬರುವುದೇ ದರ್ಶಿನಿಗಳಿಗೆ. ಆದ್ದರಿಂದ ನಮಗೆ ಏಕಾಏಕಿ ಬೆಲೆ ಹೆಚ್ಚಿಸಲೂ ಆಗುವುದಿಲ್ಲ. ಆದರೆ ಈಗ ಅನಿವಾರ್ಯತೆಗೆ ಸಿಲುಕಿದ್ದೇವೆ ಎಂದು ಮಾಲೀಕರು ಅಳಲು ತೋಡಿಕೊಂಡಿದ್ದಾರೆ.
|
7 |
+
ಹೋಟೆಲ್ ಉತ್ಪನ್ನಗಳ ಜೊತೆಗೆ ಬೇಕರಿ ಖಾದ್ಯಗಳ ಬೆಲೆಯೂ ಹೆಚ್ಚಾಗುತ್ತಿದೆ. ಕೇಕ್, ಪೇಡಾ, ಖೋವಾ, ಬ್ರೆಡ್, ಬನ್ ಸೇರಿದಂತೆ ಸಿಹಿ ತಿನಿಸುಗಳ ಬೆಲೆಯೂ ಹೆಚ್ಚಾಗಲಿದೆ.ಕಳೆದ ಆರು ತಿಂಗಳ ಹಿಂದೆ ಏರಿಕೆಯಾಗಿದ್ದ ಮೈದಾ ಹಿಟ್ಟು ಬೆಲೆ ಇಳಿದಿಲ್ಲ. ನಾವು ತಯಾರಿಸುವ ಎಲ್ಲ ಖಾದ್ಯಗಳಿಗೂ ಹಾಲು ಅತ್ಯವಶ್ಯ. ಹೀಗಾಗಿ ಬೇಕರಿ ತಿನಿಸುಗಳ ಬೆಲೆ ಏರಿಸಬ���ಕಾಗುತ್ತದೆ ಎಂದು ಬೇಕರಿ ವರ್ತಕರು ತಿಳಿಸಿದ್ದಾರೆ. ಇದರಿಂದ ಬೇಕರಿ ತಿನಿಸುಗಳ ಬೆಲೆ ಕೂಡ ಶೀಘ್ರದಲ್ಲೇ ಏರಲಿದೆ.
|
8 |
+
ಕಳೆದ ಆರು ತಿಂಗಳ ಹಿಂದೆ ಏರಿಕೆಯಾಗಿದ್ದ ಮೈದಾ ಹಿಟ್ಟು ಬೆಲೆ ಇಳಿದಿಲ್ಲ. ನಾವು ತಯಾರಿಸುವ ಎಲ್ಲ ಖಾದ್ಯಗಳಿಗೂ ಹಾಲು ಅತ್ಯವಶ್ಯ. ಹೀಗಾಗಿ ಬೇಕರಿ ತಿನಿಸುಗಳ ಬೆಲೆ ಏರಿಸಬೇಕಾಗುತ್ತದೆ ಎಂದು ಬೇಕರಿ ವರ್ತಕರು ತಿಳಿಸಿದ್ದಾರೆ. ಇದರಿಂದ ಬೇಕರಿ ತಿನಿಸುಗಳ ಬೆಲೆ ಕೂಡ ಶೀಘ್ರದಲ್ಲೇ ಏರಲಿದೆ.
|
9 |
+
ಪ್ರಮಾಣಕ್ಕೆ ಕತ್ತರಿ: ಕೆಲವು ಹೋಟೆಲ್ಗಳು ದರ ಹೆಚ್ಚಿಸಿದರೆ ಗ್ರಾಹಕರ ಸಂಖ್ಯೆ ಕಡಿಮೆಯಾಗುವ ಆತಂಕದ ಹಿನ್ನೆಲೆಯಲ್ಲಿ ಊಟ, ತಿಂಡಿಯ ಪ್ರಮಾಣವನ್ನೇ ಕಡಿಮೆ ಮಾಡಿದ್ದಾರೆ. ಅಂದರೆ ದೋಸೆ, ಇಡ್ಲಿ, ವಡೆಯ ಗಾತ್ರವನ್ನು ಕುಗ್ಗಿಸಲಾಗಿದೆ. ಹಾಗೆಯೇ, ರೈಸ್ಬಾತ್, ಚೌಚೌಬಾತ್ ನೀಡುವ ಬೌಲ್ ಅನ್ನು ತುಸು ಚಿಕ್ಕ ಗಾತ್ರಕ್ಕೆ ಬದಲಿಸಿದ್ದಾರೆ.
|
10 |
+
ಮನವಿ:ಇದರ ಬೆನ್ನಲ್ಲೇ ಡೀಸೆಲ್ ಮತ್ತು ಪೆಟ್ರೋಲ್ ದರ ಹೆಚ್ಚಳವಾಗಿರುವುದರಿಂದ ಆಟೋ ಚಾಲಕರ ಸಂಘ ದರವನ್ನು ಪರಿಷ್ಕರಣೆ ಮಾಡುವಂತೆ ಸಾರಿಗೆ ಇಲಾಖೆಗೆ ಮನವಿ ಮಾಡಿದೆ.
|
11 |
+
ಕಳೆದ ಹಲವು ತಿಂಗಳಿನಿಂದ ದರ ಪರಿಷ್ಕರಣೆಯಾಗಿಲ್ಲ. ಇಂಧನ ಬೆಲೆ ಏರಿಯಾಗಿರುವುದರಿಂದ ನಿರ್ವಹಣೆ ಮಾಡುವುದು ಕಷ್ಟಕರವಾಗುತ್ತಿದ್ದು, ಆಟೋ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಿಕೊಡುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ಆಟೋ ಚಾಲಕರ ಸಂಘ ಪತ್ರ ಬರೆದು ಮನವಿ ಮಾಡಿಕೊಂಡಿದೆ.
|
eesanje/url_46_95_7.txt
ADDED
@@ -0,0 +1,15 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬನ್ನೇರುಘಟ್ಟ ಉದ್ಯಾನವನದಲ್ಲಿ ಚಿರತೆ ಸಫಾರಿಗೆ ಸಚಿವ ಈಶ್ವರ ಖಂಡ್ರೆ ಚಾಲನೆ
|
2 |
+
ಬೆಂಗಳೂರು, ಜೂ.26-ಹುಲಿ ಸಫಾರಿ, ಸಸ್ಯಾಹಾರಿ ಪ್ರಾಣಿಗಳ ಸಫಾರಿ, ಸಿಂಹ ಸಫಾರಿ, ಕರಡಿ ಸಫಾರಿ ಇರುವ ಬನ್ನೇರುಘಟ್ಟ ಉದ್ಯಾನದಲ್ಲಿ ನೂತನ ವಾಗಿ ನಿರ್ಮಿಸಿರುವ ಚಿರತೆ ಸಫಾರಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಚಾಲನೆ ನೀಡಿದರು.
|
3 |
+
ಇದು ದಕ್ಷಿಣ ಭಾರತದ ಪ್ರಥಮ ಮತ್ತು ದೇಶದಲ್ಲಿಯೇ ಅತಿ ದೊಡ್ಡ ಚಿರತೆ ಸಫಾರಿ ಆಗಿದೆ. ಪ್ರಸ್ತುತ 8 ಚಿರತೆಗಳನ್ನು ತೆರೆದ ವನ ಪ್ರದೇಶದಲ್ಲಿ ಸಫಾರಿಗೆ ಬಿಡಲಾಗಿದೆ. ಇದು ಈ ಉದ್ಯಾನದ ಮತ್ತೊಂದು ಆಕರ್ಷಣೆಯಾಗಿದ್ದು, ಪ್ರವಾಸಿಗರು ಮತ್ತು ಸಂದರ್ಶಕರನ್ನು ಸೆಳೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
|
4 |
+
ಈ ಚಿರತೆ ಸಫಾರಿ ಪ್ರದೇಶವು ನೈಸರ್ಗಿಕ ಬಂಡೆಗಳಿಂದ ಹಾಗೂ ಅರೆ-ಎಲೆ ಉದುರುವ ಕಾಡುಗಳಿಂದ ಕೂಡಿದೆ. ಕೇಂದ್ರ ಮೃಗಾಲಯ ಪ್ರಾಧಿ ಕಾರದ ಮಾರ್ಗಸೂಚಿಗಳ ಪ್ರಕಾರ, 20 ಹೆಕ್ಟೇರ್ ಪ್ರದೇಶವನ್ನು ಗುರುತಿಸಿ ರೈಲ್ವೆ ಬ್ಯಾರಿಕೇಡ್ ಹಾಕಲಾಗಿದೆ.
|
5 |
+
ಒಟ್ಟು 4.5 ಕೋಟಿ ರೂ. ವೆಚ್ಚದಲ್ಲಿ ಸುರಕ್ಷಿತ ವಿನ್ಯಾಸ ರೂಪಿಸಲಾಗಿದೆ. ಈ ಇಡೀ ಪ್ರದೇಶಕ್ಕೆ 4.5 ಮೀಟರ್ ಎತ್ತರದ ಲಂಬ ಚೈನ್ ಲಿಂಕ್ ಜಾಲರಿ ಅಳವಡಿಸಲಾಗಿದ್ದು, ಎಂಎಸ್ ಶೀಟ್ಗಳನ್ನು 1.5 ಮೀಟರ್ ಎತ್ತರವಿರುವ 30ಡಿಗ್ರಿ ಇಳಿಜಾರಿನ ಕೋನದಲ್ಲಿ ಹಾಕುವ ಮೂಲಕ ಚಿರತೆಗಳು ಹೊರಗೆ ಬಾರದಂತೆ ಎಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.
|
6 |
+
ಬನ್ನೇರುಘಟ್ಟ ಸುತ್ತ ಮುತ್ತ ಬೆಟ್ಟಗುಡ್ಡಗಳಿದ್ದು, ಇದು ಚಿರತೆಗಳು ವಾಸಿಸಲು ಉತ್ತಮ ತಾಣವಾಗಿದೆ. ಹೀಗಾಗಿಯೇ ಇಲ್ಲಿ ಹೆಚ್ಚಿನ ಸಂಖ್ಯೆ ಚಿರತೆಗಳೂ ಇವೆ. ಈ ಪೈಕಿ ಹೊಲ, ಗದ್ದೆಗಳಲ್ಲಿ ಹೆಣ್ಣು ಚಿರತೆಗಳು ಮರಿ ಹಾಕಿ ಹೋಗುವ ಸಂದರ್ಭದಲ್ಲಿ ಅಂತಹ ಮರಿಗಳನ್ನು ತಂದು ಉದ್ಯಾನದಲ್ಲಿ ಪಾಲನೆ ಮಾಡಲಾಗುತ್ತದೆ. ಪ್ರಸ್ತುತ ಉದ್ಯಾನದಲ್ಲಿ 14 ಚಿರತೆಗಳಿವೆ ಎಂದೂ ಮಾಹಿತಿ ನೀಡಿದರು. ಸ್ವಾಗತ ಕಮಾನನ್ನೂ ಉದ್ಘಾಟಿಸಿದರು.
|
7 |
+
ಈ ಸಂದರ್ಭದಲ್ಲಿ ಕರ್ನಾಟಕ ಮೃಗಾಲಯ ಪ್ರಾಧಿ ಕಾರದ ಸದಸ್ಯ ಕಾರ್ಯದರ್ಶಿ ಡಾ. ಸುನೀಲ್ ಪನ್ವಾರ್, ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯ ನಿರ್ವಾಹಕ ನಿರ್ದೇಶಕ ಎ.ವಿ. ಸೂರ್ಯಸೇನ್ ಮತ್ತಿತರರು ಉಪಸ್ಥಿತರಿದ್ದರು.
|
8 |
+
ಮೃಗಾಲಯಗಳು ಮನರಂಜನೆ ಜೊತೆಗೆ, ಜ್ಞಾನಮಂದಿರವಾಗಬೇಕುರಾಜ್ಯದ ಮೃಗಾಲಯಗಳು ವನ್ಯಜೀವಿಗಳ ಪಾಲನೆಗೆ ಹೆಸರಾಗಿದ್ದು, ಇದು ಜ್ಞಾನಮಂದಿರವೂ ಆಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.ಬೆಂಗಳೂರು ಹೊರವಲಯ ಬನ್ನೇರುಘಟ್ಟದ ಜೈವಿಕ ಉದ್ಯಾನದಲ್ಲಿಂದು ದಕ್ಷಿಣ ಭಾರತದ ಮೊದಲ ಹಾಗೂ ದೇಶದ ಅತಿ ದೊಡ್ಡ ಚಿರತೆ ಸಫಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೈವಿಕ ಉದ್ಯಾನಕ್ಕೆ ಬರುವ ಜನರು ವನ್ಯ ಜೀವಿಗಳನ್ನು ನೋಡಿ ಸಂತೋಷ ಪಡುತ್ತಾರೆ. ಜೊತೆಗೆ ಅವರಿಗೆ ಇಲ���ಲಿರುವ ಪ್ರತಿಯೊಂದು ಪ್ರಬೇಧದ ವೃಕ್ಷಗಳ ಬಗ್ಗೆ ತಿಳಿಸಿ ಜನರು ಕನಿಷ್ಠ 10 ಪ್ರಬೇಧದ ವೃಕ್ಷ ಗುರುತಿಸುವಂತೆ ಅವರಲ್ಲಿ ಅರಿವು ಮೂಡಿಸಬೇಕು ಎಂದರು.
|
9 |
+
ಮೃಗಾಲಯಕ್ಕೆ ಬರುವ ಪ್ರತಿಯೊಬ್ಬರಿಗೂ ಪ್ರಾಣವಾಯು- ಆಮ್ಲಜನಕ ನೀಡುವ ವೃಕ್ಷಗಳ ಮಹತ್ವದ ಬಗ್ಗೆ ತಿಳಿಸಿ, ಅವರು ಮನೆಗೆ ತೆರಳುವಾಗ ಒಂದು ಸಸಿ ಖರೀದಿಸಿ ತೆಗೆದುಕೊಂಡು ಹೋಗಿ ತಮ್ಮ ಮನೆಯ ಮುಂದೆ ನೆಟ್ಟು, ಪೋಷಿಸುವಂತೆ ಪ್ರೀರೇಪಿಸಬೇಕು. ರೈತರಿಗೆ ರಿಯಾಯಿತಿ ದರದಲ್ಲಿ ಸಸಿಗಳನ್ನು ನೀಡುವ ರೀತಿಯಲ್ಲೇ ಮೃಗಾಲಯಕ್ಕೆ ಬರುವ ಸಂದರ್ಶಕರಿಗೂ ರಿಯಾಯಿತಿ ದರದಲ್ಲಿ ಸಸಿಗಳನ್ನು ಪೂರೈಸಬೇಕು ಎಂದು ಸೂಚನೆ ನೀಡಿದರು.
|
10 |
+
ಬನ್ನೇರುಘಟ್ಟದಲ್ಲಿರುವ ವೇದಾ ಎಂಬ ಹೆಣ್ಣಾನೆ ಕಳೆದ ಜನವರಿ 26ರ ಗಣರಾಜ್ಯ ದಿನದಂದು ಗಂಡಾನೆ ಮರಿಗೆ ಜನ್ಮ ನೀಡಿದ್ದು, ಭಾರತ ಗಣತಂತ್ರದ ದಿನ ಹುಟ್ಟಿದ ಈ ಆನೆಗೆ ಸ್ವರಾಜ್ ಎಂದು ನಾಮಕರಣ ಮಾಡಲಾಯಿತು. ಈಶ್ವರ ಖಂಡ್ರೆ ಅವರು ಫಲಕ ಅನಾವರಣ ಮಾಡಿ ಆನೆಗೆ ಸ್ವರಾಜ್ ಎಂದು ಹೆಸರಿಟ್ಟರು.
|
11 |
+
ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ 26 ಆನೆಗಳಿದ್ದು, ಇಲ್ಲಿ ವರ್ಷಕ್ಕೆ 2ರಿಂದ 3 ಮರಿಗಳ ಜನನವಾಗುತ್ತದೆ. ಈ ಆನೆ ಮರಿಗಳಿಗೆ ಹಾಲುಣಿಸುವ ಕೇಂದ್ರವನ್ನೂ ಇಂದು ಉದ್ಘಾಟಿಸಲಾಯಿತು. ಉದ್ಯಾನದಲ್ಲಿ ಜನಿಸುವ ಆನೆಮರಿಗಳ ಪೈಕಿ ಸುಮಾರು 3 ವರ್ಷದ ಮರಿಗಳನ್ನು ಹಾಲುಣಿಸಲು ತಾಯಿಯಿಂದ ಬೇರ್ಪಡಿಸಿ, ಮಾವುತರ ಜೊತೆ ಬಾಂಧವ್ಯ ಬೆಸೆಯಲು 10 ಲಕ್ಷ ರೂ. ವೆಚ್ಚದಲ್ಲಿ ನವೀಕರಿಸಲಾಗಿರುವ ಹಾಲುಣಿಸುವ ಕೇಂದ್ರಕ್ಕೆ ಸ್ಥಳಾಂತರಿಸಲಾಗುತ್ತದೆ, ಅಲ್ಲಿ ಮಾವುತರು ಮತ್ತು ಕಾವಾಡಿಗಳು ಆನೆ ಮರಿಗಳಿಗೆ 24 ಗಂಟೆಯೂ ವಿಶೇಷ ಆರೈಕೆ ಮಾಡುತ್ತಾರೆ ಎಂದು ಈಶ್ವರ ಖಂಡ್ರೆ ಹೇಳಿದರು.
|
12 |
+
ಈ ಕೇಂದ್ರದಲ್ಲಿ ಆನೆ ಮರಿಗಳ ಮುಕ್ತ ಸಂಚಾರಕ್ಕಾಗಿ ಒಂದು ಸಣ್ಣ ಕ್ರಾಲ್ ಮತ್ತು ಮರಿಗಳ ಮೇಲೆ ನಿಗಾ ಇಡಲು ಅಸ್ತಿತ್ವದಲ್ಲಿರುವ ಆನೆ ಕಟ್ಟಡದ ಮೇಲೆ ಕಾವಾಡಿಗಳಿಗೆ ಒಂದು ಕೋಣೆಯನ್ನು ನಿರ್ಮಿಸಲಾಗಿದೆ. ಈ ಕೇಂದ್ರವನ್ನೂ ಇಂದು ಉದ್ಘಾಟಿಸಲಾಗಿದೆ ಎಂದರು.
|
13 |
+
ಚಿಟ್ಟೆ ಉದ್ಯಾನವನದಲ್ಲಿ ಶಿಶು ಆರೈಕೆ ಕೊಠಡಿ:ಬನ್ನೇರುಘಟ್ಟ ಉದ್ಯಾನಕ್ಕೆ ಬರುವ ಸಂದರ್ಶಕರ ಪೈಕಿ, ಮಹಿಳೆಯರು, ಹಾಲುಣಿಸುವ ತಾಯಂದಿರೂ ಇರುತ್ತಾರೆ. ಹೀಗಾಗಿ ಶಿಶು ಆರೈಕೆ ಕೋಣೆಯನ್ನು ಸಹ ಇಲ್ಲಿ ನಿರ್ಮಿಸಲಾಗಿದ್ದು, ಪುಟ್ಟ ಶಿಶುಗಳು, ಅಂಬೆಗಾಲಿಡುವ ಕಂದಮ್ಮಗಳು ಮತ್ತು ಚಿಕ್ಕ ಮಕ್ಕಳ ವೈಯಕ್ತಿಕ ಅಗತ್ಯಗಳನ್ನು ಪೂರೈಸಲು ಚಿಟ್ಟೆ ಉದ್ಯಾನದಲ್ಲಿ ಶಿಶು ಆರೈಕೆ ಕೊಠಡಿ ನಿರ್ಮಿಸಲಾಗಿದ್ದು, ಇದನ್ನು ಇಂದು ಉದ್ಘಾಟಿಸಲಾಗಿದೆ. ಮುಂದಿನ ವರ್ಷದ ಡಿಸೆಂರ್ಬ ಒಳಗೆ ಇನ್ನೂ ಎರಡು ಶಿಶು ಆರೈಕೆ ಕೊಠಡಿಗಳನ್ನು ಇಲ್ಲಿ ನಿರ್ಮಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.
|
14 |
+
ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಸ್ಕೈವಾಕ್ ಮತ್ತು ಐದು ಪ್ರಾಣಿ ಆವರಣಗಳಿಗೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು. ಬನ್ನೇರುಘಟ್ಟ ಜೈವಿಕ ಉದ್ಯಾನ 1974 ರಿಂದ ಪ್ರವಾಸಿಗರಿಗೆ ವಿವಿಧ ಸೌಲಭ್ಯ ನೀಡಲಾಗುತ್ತಿದ್ದು, ಇದನ್ನು ಹೆಚ್ಚು ಆಕರ್ಷಣೀಯಗೊಳಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೃಗಾಲಯದಿಂದ ಚಿಟ್ಟೆ ಉದ್ಯಾನವನಕ್ಕೆ ಸಂಪರ್ಕವನ್ನು ಕಲ್ಪಿಸಲು ಸ್ಕೈವಾಕ್ ವಿನ್ಯಾಸಗೊಳಿಸಲಾಗಿದೆ ಈ ಸ್ಕೈವಾಕ್ನಲ್ಲಿ ನಡಯುವ ಪ್ರವಾಸಿಗರಿಗೆ ಅರಣ್ಯ ದರ್ಶನವೂ ಆಗುತ್ತದೆ. ಹತ್ತಿರದಿಂದಪಕ್ಷಿಗಳನ್ನು ನೋಡಲು ಅವಕಾಶವೂ ಆಗುತ್ತದೆ.
|
15 |
+
ಎಮು ಮತ್ತು ರಿಯಾಗೆ 50 ಲಕ್ಷ ರೂ.ಗಳ ವೆಚ್ಚದಲ್ಲಿ ಹೊಸ ನೈಸರ್ಗಿಕ ಆವರಣ, 1.5 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಹಂಟಿಂಗ್ ಚೀತಾ ಆವರಣ, 1.5 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಹಮದ್ರಿಯಾಸ್ ಮತ್ತು ಆಲಿವ್ ಬಾಬೂನ್ ಆವರಣ ಮತ್ತು 1.5 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಭಾರತೀಯ ಬೂದು ತೋಳ ಆವರಣವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ.
|