056a758f30f12b774ed6a40176887a7c63e57864496b15d14a53ba5937fa030b
Browse files- eesanje/url_46_95_8.txt +9 -0
- eesanje/url_46_95_9.txt +12 -0
- eesanje/url_46_96_1.txt +5 -0
- eesanje/url_46_96_10.txt +13 -0
- eesanje/url_46_96_11.txt +5 -0
- eesanje/url_46_96_12.txt +7 -0
- eesanje/url_46_96_2.txt +12 -0
- eesanje/url_46_96_3.txt +7 -0
- eesanje/url_46_96_4.txt +6 -0
- eesanje/url_46_96_5.txt +5 -0
- eesanje/url_46_96_6.txt +6 -0
- eesanje/url_46_96_7.txt +9 -0
- eesanje/url_46_96_8.txt +6 -0
- eesanje/url_46_96_9.txt +8 -0
- eesanje/url_46_97_1.txt +4 -0
- eesanje/url_46_97_10.txt +7 -0
- eesanje/url_46_97_11.txt +8 -0
- eesanje/url_46_97_12.txt +5 -0
- eesanje/url_46_97_2.txt +4 -0
- eesanje/url_46_97_3.txt +4 -0
- eesanje/url_46_97_4.txt +12 -0
- eesanje/url_46_97_5.txt +9 -0
- eesanje/url_46_97_6.txt +4 -0
- eesanje/url_46_97_7.txt +10 -0
- eesanje/url_46_97_8.txt +10 -0
- eesanje/url_46_97_9.txt +9 -0
- eesanje/url_46_98_1.txt +6 -0
- eesanje/url_46_98_10.txt +7 -0
- eesanje/url_46_98_11.txt +5 -0
- eesanje/url_46_98_12.txt +6 -0
- eesanje/url_46_98_2.txt +6 -0
- eesanje/url_46_98_3.txt +9 -0
- eesanje/url_46_98_4.txt +9 -0
- eesanje/url_46_98_5.txt +7 -0
- eesanje/url_46_98_6.txt +4 -0
- eesanje/url_46_98_7.txt +6 -0
- eesanje/url_46_98_8.txt +5 -0
- eesanje/url_46_98_9.txt +4 -0
- eesanje/url_46_99_1.txt +4 -0
- eesanje/url_46_99_10.txt +8 -0
- eesanje/url_46_99_11.txt +7 -0
- eesanje/url_46_99_12.txt +9 -0
- eesanje/url_46_99_2.txt +5 -0
- eesanje/url_46_99_3.txt +6 -0
- eesanje/url_46_99_4.txt +7 -0
- eesanje/url_46_99_5.txt +6 -0
- eesanje/url_46_99_6.txt +7 -0
- eesanje/url_46_99_7.txt +7 -0
- eesanje/url_46_99_8.txt +8 -0
- eesanje/url_46_99_9.txt +11 -0
eesanje/url_46_95_8.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯದ ಏಳು ಜಿಲ್ಲೆಗಳಲ್ಲಿ ಹೊಸ ಕೃಷಿ ತರಬೇತಿ ಕೇಂದ್ರ ಸ್ಥಾಪನೆ
|
2 |
+
ಬೆಳಗಾವಿ ಜೂ 26-ರಾಜ್ಯದಲ್ಲಿ ಈ ವರ್ಷ 7 ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ ತಿಳಿಸಿದ್ದಾರೆ.ಬೆಳಗಾವಿ ಸುವರ್ಣ ಸೌಧ ಸಭಾಂಗಣದಲ್ಲಿ ಕೃಷಿ ಮತ್ತು ಜಲಾನಯನ ಇಲಾಖೆಗಳ ವಿಭಾಗ ಮಟ್ಟದ ಸಭೆ ನಡೆಸಿ ಅವರು ಮಾತನಾಡಿದರು.
|
3 |
+
ಕೃಷಿಕರಿಗೆ ಯೋಜಿತ ತರಬೇತಿ ನೀಡಿ ಸಾಮರ್ಥ್ಯ ಅಭಿವೃದ್ಧಿಗೆ ಕ್ರಮವಹಿಸಲಾಗುತ್ತಿದೆ. ವಿಜಯ ನಗರ ಯಾದಗಿರಿ, ಗದಗ , ಕೋಲಾರ, ಚಾಮರಾಜನಗರ, ರಾಮನಗರ, ಉಡುಪಿ ಜಿಲ್ಲೆಗಳಲ್ಲಿ ಕೃಷಿ ಹೊಸ ತರಬೇತಿ ಕೇಂದ್ರ ಪ್ರಾರಂಭ ಮಾಡಲಾಗುವುದು ಎಂದರು.
|
4 |
+
ಇಲಾಖೆಯಲ್ಲಿ ತರಬೇತಿ ಹಾಗೂ ಗುಣ ನಿಯಂತ್ರಣಕ್ಕೆ ಒತ್ತು ನೀಡಲಾಗುತ್ತಿದೆ. ಪ್ರಯೋಗಾಲಯಗಳನ್ನು ಎನ್.ಎ.ಬಿ.ಎಲ್ . ಮಾನ್ಯತೆಗೆ ಒಳಪಡಿಸಲಾಗುವುದು. ಬೈಲಹೊಂಗಲ ಪರತಂತ್ರ ಜೀವಿ ಪ್ರಯೋಗಾಲಯ ಉನ್ನತೀಕರಣಕ್ಕೆ ಕ್ರಮ ವಹಿಸಲಾಗುವುದು ಎಂದರು.
|
5 |
+
ಕಬ್ಬಿನಲ್ಲಿ ಕೀಟ ನಿಯಂತ್ರಣಕ್ಕೆ ಅವಶ್ಯವಿರುವ ಟ್ರೈಕೋಗ್ರಾಮಾ ಪರತಂತ್ರ ಜೀವಿಯ ಉತ್ಪಾದನೆಯಲ್ಲಿ ನೂತನ ತಾಂತ್ರಿಕತೆ ಅಳವಡಿಕೆಗೆ ಸೂಚಸಿದ ಅವರು, ಮುಂದಿನ 6 ತಿಂಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸಿ ರೈತರಿಗೆ ಒದಗಿಸುವಂತೆ ನಿರ್ದೇಶನ ನೀಡಿದರು.
|
6 |
+
ಪ್ರತಿ ಸಾಲಿನಲ್ಲಿ ಜಿಲ್ಲೆಗೆ ಅವಶ್ಯವಿರುವ ಬಿತ್ತನೆ ಬೀಜವನ್ನು ಆಯಾ ಜಿಲ್ಲೆಗಳ ಬೀಜೋತ್ಪಾದನಾ ಕೇಂದ್ರ ಮತ್ತು ಪ್ರಗತಿಪರ ರೈತರ ಹೊಲದಲ್ಲೇ ಉತ್ಪಾದಿಸುವಂತೆ ಅವರು ತಿಳಿಸಿದರು.ಅಧಿಕಾರಿಗಳು ಪರಸ್ಪರ ಸಮನ್ವಯದಿಂದ, ಜವಾಬ್ದಾರಿಯುತವಾಗಿ ಕೆಲಸ ಮಾಡಿ ಎಂದು ಸಚಿವರು ಸೂಚಿಸಿದರು.
|
7 |
+
ಬಿತ್ತನೆ ಬೀಜ ರಸಗೊಬ್ಬರಗಳನ್ನು ಬೇಡಿಕೆಗಿಂತಲೂ ಹೆಚ್ಚು ಸರಬರಾಜು ಮಾಡಲಾಗಿದೆ. ಗೊಂದಲ ಇಲ್ಲದಂತೆ ವಿತರಣೆಮಾಡಿ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೆರವನ್ನೂ ಪಡೆಯಿರಿ ಎಂದು ನಿರ್ದೇಶನ ನೀಡಿದರು. ರೈತರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಜೊತೆಗೆ ಹೊಸ ಆವಿಷ್ಕಾರ, ವಿಜ್ಞಾನ, ತಂತ್ರಜ್ಞಾನಗಳ ಬಗ್ಗೆ ಅರಿವು ಮೂಡಿಸಿ, ಕೃಷಿ ಜಮೀನುಗಳಿಗೆ ಅವುಗಳನ್ನು ವರ್ಗಾವಣೆ ಮಾಡಿ ಎಂದು ತಿಳಿಸಿದರು.
|
8 |
+
ಬೆಳೆ ವಿಮೆ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ, ನೋಂದಣಿ ಜಾಸ್ತಿ ಮಾಡಿ, ಜೊತೆಗೆ ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆಗೆ ಗಮನ ಹರಿಸಿ. ಕೃಷಿಯನ್ನು ಲಾಭದಾಯಕ ವೃತ್ತಿಯನ್ನಾಗಿ ಪರಿವರ್ತಿಸಿ ಎಂದು ಸಲಹೆ ನೀಡಿದರು.ಹೈಟೆಕ್ ಹಾರ್ವೆಸ್ಟ್ ಹಬ್, ಕೃಷಿ ನವೋದ್ಯಮಗಳಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.ಇದರಿಂದಾಗುವ ಪರಿಣಾಮಕಾರಿ ಬದಲಾವಣೆಗಳ ಬಗ್ಗೆ ಕೃಷಿಕರಿಗೆ ಮಾಹಿತಿ ನೀಡಿ ಎಂದು ಅವರು ಹೇಳಿದರು.
|
9 |
+
ಸುಸ್ಥಿರ, ಸಮಗ್ರ ಕೃಷಿ ಬಗ್ಗೆ ತರಬೇತಿ, ಮಾರ್ಗದರ್ಶನ ನೀಡಿ ಬಜೆಟ್ನಲ್ಲಿ ಘೋಷಿಸಿರುವ ಎಲ್ಲಾ ಯೋಜನೆಗಳನ್ನು ಶೀಘ್ರದಲ್ಲೇ ಅನುಷ್ಠಾನಗೊಳಿಸಿ ಎಂದು ನಿರ��ದೇಶನ ನೀಡಿದರು.ಕೃಷಿ ಆಯುಕ್ತ ವೈ.ಎಸ್.ಪಾಟೀಲ್, ಜಲಾನಯನ ಇಲಾಖೆ ಆಯುಕ್ತ ಗಿರೀಶ್, ನಿರ್ದೇಶಕ ಪದ್ಮಯ್ಯ ನಾಯಕ್, ಕೃಷಿ ನಿರ್ದೇಶಕ ಡಾ. ಜಿ.ಟಿ ಪುತ್ರ, ಅಪರ ನಿರ್ದೇಶಕ ವೆಂಕಟರಮಣ ರೆಡ್ಡಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
|
eesanje/url_46_95_9.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ತರಾಟೆ
|
2 |
+
ಬೆಂಗಳೂರು, ಜೂ.26-ಕರ್ನಾಟಕ ಗಣಿ ಪರಿಸರ ಪುನಶ್ಚೇತನ ಯೋಜನೆಗಳಿಗೆ ವರ್ಷ ಕಳೆದರೂ ವಿಸ್ತೃತ ಯೋಜನಾ ವರದಿ ತಯಾರಾಗದೇ ಇರುವ ಬಗ್ಗೆ ಅಸಹನೆ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲಾಖೆಯ ಕಾರ್ಯದರ್ಶಿಯವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಗಂಭೀರ ಎಚ್ಚರಿಕೆ ನೀಡಿದ್ದಾರೆ.
|
3 |
+
ಮುಂದಿನ ಒಂದು ವಾರದೊಳಗಾಗಿ ವಿಸ್ತೃತ ಯೋಜನಾ ವರದಿಗಳನ್ನು ಪೂರ್ಣಗೊಳಿಸಿ ಅನುಮೋದನೆಗೆ ಸಲ್ಲಿಸಬೇಕು ಎಂದು ವಿಧಾನಸೌಧದಲ್ಲಿ ನಡೆದ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆದೇಶಿಸಿದ್ದಾರೆ.
|
4 |
+
ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ (ಕೆಎಂಇಆರ್ಸಿ)ದ ಅಡಿ ಗಣಿ ಪ್ರದೇಶಗಳ ಪುನಶ್ಚೇತನ ಯೋಜನೆ ಸಿಇಪಿಎಂಐಜೆಡ್ಗಾಗಿ 24,996.30 ಕೋಟಿ ರೂ. ಒದಗಿಸಲಾಗಿದೆ. ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಈ ಹಣ ಖರ್ಚು ಮಾಡಬೇಕು.
|
5 |
+
ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ.ಸುದರ್ಶನ್ ರೆಡ್ಡಿ ಅವರ ನೇತೃತ್ವದ ಸಮಿತಿ 7,978.78 ಕೋಟಿ ರೂ. ಮೊತ್ತದ 358 ಯೋಜನೆಗಳನ್ನು ಅನುಮೋದಿಸಿದೆ. ಈ ಪೈಕಿ ಒಟ್ಟು 3469.41 ಕೋಟಿ ರೂ. ವೆಚ್ಚದ 182 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. 135 ಯೋಜನೆಗಳಿಗೆ ಟೆಂಡರ್ ಕರೆಯಲಾಗಿದ್ದು, 47 ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗಿದೆ. 23 ಕಾಮಗಾರಿಗಳನ್ನು ವಿವಿಧ ಸಂಸ್ಥೆಗಳಿಗೆ ವಹಿಸಲಾಗಿದೆ ಎಂದು ಸಭೆಯಲ್ಲಿ ವಿವರಿಸಲಾಯಿತು.
|
6 |
+
ಯೋಜನೆಗಳ ಸಕಾಲಿಕ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಂಬಂಧಿಸಿದ ಇಲಾಖೆಯಲ್ಲಿ ಯೋಜನಾ ಮೇಲ್ವಿಚಾರಣೆ ಘಟಕ ಸ್ಥಾಪಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.ವರ್ಷ ಕಳೆದರೂ ಡಿಪಿಆರ್ ಆಗದೇ ಇದ್ದುದಕ್ಕೆ ಕಾರ್ಯದರ್ಶಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿಯವರು ಅಧಿಕಾರಿಗಳ ವಿಳಂಬ ಧೋರಣೆಯನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.
|
7 |
+
ಇದು ವಿಶೇಷ ಕಾರ್ಯಕ್ರಮವಾಗಿದ್ದು, ಟೆಂಡರ್ನ ವಾಡಿಕೆಯ ಷರತ್ತುಗಳು ಅನ್ವಯಿಸುವುದಿಲ್ಲ. ಟೆಂಡರ್ನಲ್ಲಿ ನಿಗಮವು ವಾರದೊಳಗೆ ಬಿಲ್ ಪಾವತಿಸಲಾಗುವುದರಿಂದ ಯಾವುದೇ ಮುಂಗಡ ನೀಡಲಾಗದು ಎಂಬುದನ್ನು ಗುತ್ತಿಗೆದಾರರಿಗೆ ಸ್ಪಷ್ಟವಾಗಿ ತಿಳಿಸಲು ಸೂಚಿಸಿದರು.
|
8 |
+
ರೈಲ್ವೆ ಯೋಜನೆಗಳಿಗೆ 5271.96 ಕೋಟಿ ರೂ., ಕುಡಿಯುವ ನೀರಿನ ಯೋಜನೆಗಳಿಗೆ 4929.84 ಕೋಟಿ ರೂ., ಆರೋಗ್ಯ ಕ್ಷೇತ್ರಕ್ಕೆ 1915.78 ಕೋಟಿ ರೂ., ಪರಿಸರ ಪುನಃಸ್ಥಾಪನೆಗೆ 2655.17 ಕೋಟಿ ರೂ., ರಸ್ತೆಗಳು ಮತ್ತು ಸಂವಹನ ಯೋಜನೆಗಳಿಗೆ 2559.17 ಕೋಟಿ ರೂ., ವಸತಿ ಯೋಜನೆಗಳಿಗೆ 1193.98 ಕೋಟಿ ರೂ. ನಿಗದಿ ಪಡಿಸಲಾಗಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು.
|
9 |
+
ವಸತಿ ಯೋಜನೆಗಳಡಿ ಲಾನುಭವಿಗಳನ್ನು ಶೀಘ್ರವೇ ಗುರುತಿಸಲು ಮುಖ್ಯಮಂತ್ರಿ ಆದೇಶಿಸಿದರು. ಸಣ್ಣ ನೀರಾವರಿ ಇಲಾಖೆ 14 ಯೋಜನೆಗಳ ಪೈಕಿ 7 ಯೋಜನೆಗಳ ಕಾಮಗಾರಿ ಆರಂಭಿಸಲಾಗಿದೆ. ಉಳಿದ 7 ಯೋಜನೆಗಳ ಟೆಂಡರ್ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ ಕಾಮಗಾರಿ ಅನುಷ್ಠಾನ ಮಾಡುವಂತೆ ತಾಕೀತು ಮಾಡಿದರು.
|
10 |
+
ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಶಾಲೆಗಳ ಕಟ್ಟಡ ದುರಸ್ತಿ, ಕೊಠಡಿ, ಪ್ರಯೋಗಾಲಯ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು. ಅಂಗನವಾಡಿ ಕಟ್ಟಡ, ವಿದ್ಯಾರ್ಥಿ ನಿಲಯಗಳು ಮತ್ತಿತರ ಯೋಜನೆಗಳಿಗೆ ಒತ್ತು ನೀಡಬೇಕು. ಲಭ್ಯವಿರುವ ಅನುದಾನದಲ್ಲಿ ಈ ನಾಲ್ಕೂ ಜಿಲ್ಲೆಗಳನ್ನು ಮಾದರಿ ಜಿಲ್ಲೆಗಳಾಗಿ ಅಭಿವೃದ್ಧಿ ಪಡಿಸಬೇಕಿದೆ ಎಂದು ಹೇಳಿದರು.
|
11 |
+
ಗಣಿ ಬಾಧಿತ ಜಿಲ್ಲೆಗಳಲ್ಲಿ ಮಾಲಿನ್ಯದ ಪ್ರಮಾಣ ಕಳೆದ ವರ್ಷಕ್ಕೆ ಹೋಲಿಸಿದರೆ ಕಡಿಮೆಯಾಗಿದ್ದು, ತೃಪ್ತಿಕರ ಹಂತಕ್ಕೆ ತಲುಪಿದೆ ಎಂದು ಅಧಿಕಾರಿಗಳು ವಿವರಿಸಿದರು.ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾರ್ಯದರ್ಶಿ ಡಾ. ಕೆ.ವಿ.ತ್ರಿಲೋಕಚಂದ್ರ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
|
12 |
+
ಕುದುರೆಮುಖ ಕಬ್ಬಿಣದ ಅದಿರು ಕಂಪನಿಗೆ ಬಳ್ಳಾರಿಯ ಬಳಿ ಮಂಜೂರಾಗಿದ್ದ ಜಮೀನಿಗೆ ಇತ್ತೀಚೆಗೆ ತಡೆ ನೀಡಲಾಗಿದೆ. ಕುದುರೆಮುಖ ಕಂಪನಿಯನ್ನು ಪುನಶ್ಚೇತನಗೊಳಿಸಬೇಕು ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಯತ್ನಿಸುತ್ತಿರುವುದರ ಹಂತದಲ್ಲೇ ಮುಖ್ಯಮಂತ್ರಿಗಳು ಗಣಿ ಭೂಪ್ರದೇಶ ಪುನಶ್ಚೇತನ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿರುವುದು ಗಮನ ಸೆಳೆದಿದೆ.
|
eesanje/url_46_96_1.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಮಂಗಳೂರು : ಮಳೆಗೆ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು
|
2 |
+
ಮಂಗಳೂರು, ಜೂನ್ 26:ರಾತ್ರಿಯಿಡೀ ಸುರಿದ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರದಲ್ಲಿ ಮನೆಯ ಗೋಡೆ ಕುಸಿದು ಬಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
|
3 |
+
ಯಾಸಿರ್ (45), ಅವರ ಪತ್ನಿ ಮರಿಯಮ (40) ಹಾಗೂ ಮಕ್ಕಳಾದ ರಿಯಾನ ಮತ್ತು ರಿಫಾನ ಮೃತ ದುರ್ದೈವಿಗಳಾಗಿದ್ದಾರೆ.ಈ ಪ್ರದೇಶದಲ್ಲಿ ರಾತ್ರಿ ಇಡೀ ಭಾರಿ ಮಳೆ ಸುರಿದಿದ್ದು,ಅಬೂಬಕ್ಕರ್ ಎಂಬವರ ಮನೆಯ ಗೋಡೆ ಯಾಸಿರ್ ಅವರ ಮನೆ ಗೊಡೆ ಮೇಲೆ ಬಿದ್ದು ಅದು ಕೂಡ ಕುಸಿದಿದೆ.ಸ್ಥಳೀಯರು ನೆರವಿಗೆ ದಾವಿಸಿ ಅವಶೇಷಡಿ ಸಿಲುಕಿದ್ದವರನ್ನು ರಕ್ಷಿಸಲು ಮುಂದಾಗಿದ್ದಾರೆ.
|
4 |
+
ಅಗ್ನಿಶಾಮಕ ಸಿಬ್ಬಂದಿ ಹಾಗು ಪೊಲೀಸರು ಬರುವಷ್ಟರಲ್ಲಿ ಮನೆಯಲ್ಲಿದ್ದ ನಾಲ್ವರು ಕೊನೆಯುಸಿರೆಳೆದಿದ್ದಾರೆ.ಎಲ್ಲಾ ಮೃತದೇಹವನ್ನು ಹೊರತೆಗೆದು ಆಸ್ಪತ್ತೆಗೆ ಸಾಗಿಸಲಾಗಿದೆ.
|
5 |
+
ಘಟನೆ ನಡೆದಾಗ ಎಲ್ಲರೂ ಮಲಗಿದ್ದರು ಅವರ ಮೇಲೆ ಇಟ್ಟಿಗೆ ಮಣ್ಣು ಬಿದ್ದು ಅವಶೇಷದಿಂದ ಹೊರಬರಲಾಗದೆ ಕೊನೆಯುಸಿರೆಳೆದಿದ್ದಾರೆ,ಘಟನೆಗೆ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
|
eesanje/url_46_96_10.txt
ADDED
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ತುಮಕೂರು ಬಂದ್ ಯಶಸ್ವಿ
|
2 |
+
ತುಮಕೂರು, ಜೂ.25-ಜಿಲ್ಲೆಯ ಪಾಲಿನ ಹೇಮಾವತಿ ನೀರನ್ನು ಪ್ರತ್ಯೇಕ ಎಕ್್ಸಪ್ರೆಸ್ ಲಿಂಕ್ ಕೆನಾಲ್ ಮೂಲಕ ರಾಮನಗರ ಜಿಲ್ಲೆಗೆ ಕೊಂಡೊಯ್ಯುವ ಯೋಜನೆ ವಿರೋಧಿಸಿ ಇಂದು ಕರೆ ನೀಡಿದ್ದ ಜಿಲ್ಲಾ ಬಂದ್ ಬಹುತೇಕ ಯಶಸ್ವಿಯಾಗಿ ನಡೆಯಿತು.ವಿವಿಧ ರೈತಪರ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಸಂಘ ಸಂಸ್ಥೆಗಳು, ಮಹಿಳಾ ಸಂಘಟನೆಗಳು ಹಾಗೂ ಬಿಜೆಪಿ-ಜೆಡಿಎಸ್ ಜಿಲ್ಲಾ ಘಟಕಗಳು ಸೇರಿದಂತೆ ವಿವಿಧ ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿದವು.
|
3 |
+
ಬಹುತೇಕ ಅಂಗಡಿಗಳನ್ನು ಬಂದ್ ಮಾಡಿ ವರ್ತಕರು ಸ್ವಯಂಪ್ರೇರಿತವಾಗಿ ಬೆಂಬಲ ಸೂಚಿಸಿದರು. ಅಗತ್ಯ ಸೇವೆಗಳು ಎಂದಿನಂತೆ ಇದ್ದವು. ಜನರ ಓಡಾಟ ಹಾಗೂ ವಾಹನಗಳ ಸಂಚಾರ ವಿರಳವಾಗಿತ್ತು.
|
4 |
+
ನಗರದ ಟೌನ್ಹಾಲ್ ವೃತ್ತದ ಬಳಿ ಹೋರಾಟ ಸಮಿತಿ ಸದಸ್ಯರು, ರೈತರು, ಸಂಘ ಸಂಸ್ಥೆಗಳು, ಕಾರ್ಯಕರ್ತರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಜನರು ಸಮಾವೇಶಗೊಂಡು ಖಾಲಿ ಕೊಡಗಳನ್ನು ಹಿಡಿದು ಮಾನವ ಸರಪಳಿ ನಿರ್ಮಿಸಿ, ಉರುಳುಸೇವೆ ಮಾಡಿ ಯೋಜನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
|
5 |
+
ಮಹಿಳಾ ಮುಖಂಡರು ಸಹ ಖಾಲಿ ಕೊಡಗಳನ್ನು ಪ್ರದರ್ಶಿಸಿ ರಕ್ತಕೊಟ್ಟೆವು, ಹೇಮಾವತಿ ಬಿಡೆವು ಎಂಬ ಘೋಷವಾಕ್ಯದೊಂದಿಗೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ಕಾಮಗಾರಿ ನಡೆಸಬಾರದೆಂದು ಆಕ್ರೋಶ ಹೊರಹಾಕಿದವು.
|
6 |
+
ಈ ವೇಳೆ ಮಾಜಿ ಸಚಿವ ಸೊಗಡು ಶಿವಣ್ಣ ಮಾತನಾಡಿ, ಜಿಲ್ಲೆಯಾದ್ಯಂತ ಶಾಂತಿಯುತ ಬಂದ್ಗೆ ಕರೆ ಕೊಟ್ಟಿದ್ದೆವು. ಅದರಂತೆ ಹೇಮಾವತಿ ನಾಲಾ ವಲಯದ ತಾಲ್ಲೂಕು ವಲಯದಲ್ಲಿ ಬಂದ್ ಯಶಸ್ವಿಯಾಗಿದೆ.ನಮ ನೀರು, ನಮ ಹಕ್ಕು ಘೋಷಣೆಯಡಿಯಲ್ಲಿ ಹೋರಾಟ ರೂಪಿಸಿದ್ದೇವೆ.
|
7 |
+
ಉಪಮುಖ್ಯಮಂತ್ರಿಗಳು ಮಾಗಡಿ ಹಾಗೂ ರಾಮನಗರಕ್ಕೆ ನೀರು ಕೊಡಲು ಪೈಪ್ಲೈನ್ ಪ್ರಾರಂಭ ಮಾಡಿದ್ದಾರೆ. ಇದರಿಂದ ಗುಬ್ಬಿ, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಶಿರಾ, ಮಧುಗಿರಿ, ಕೊರಟಗೆರೆ, ತುಮಕೂರು ಗ್ರಾಮಾಂತರ ಹಾಗೂ ನಗರಕ್ಕೆ ನೀರಿನ ಸಮಸ್ಯೆ ಉಂಟಾಗಲಿದೆ. ಕಾಮಗಾರಿ ನಿಲ್ಲಿಸುವವರೆಗೂ ನಮ ಹೋರಾಟ ನಿರಂತರವಾಗಿರುತ್ತದೆ ಎಂದು ಎಚ್ಚರಿಸಿದರು.
|
8 |
+
ಬಿ.ಎಚ್.ರಸ್ತೆ, ಎಂ.ಜಿ.ರಸ್ತೆ, ಹೊರಪೇಟೆ, ರಾಮಪ್ಪ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ ಮೂಲಕ ಪ್ರತಿಭಟನಾ ರ್ಯಾಲಿಯೊಂದಿಗೆ ಜಿಲ್ಲಾಧಿಕಾರಿ ಕಚೇರಿ ತಲುಪಿದ ಪ್ರತಿಭಟನಾಕಾರರು ಡಿಸಿ ಮುಖಾಂತರ ರಾಜ್ಯಪಾಲರಿಗೆ ಯೋಜನೆಯನ್ನು ರದ್ದುಗೊಳಿಸುವಂತೆ ಮನವಿ ಸಲ್ಲಿಸಿದರು.
|
9 |
+
|
10 |
+
ಈ ಹೋರಾಟಕ್ಕೆ ಜಿಲ್ಲಾ ವರ್ತಕರು, ಹಮಾಲಿಗಳ ಸಂಘ, ರೈಸ್ಮಿಲ್ ಮಾಲೀಕರು, ಚಿತ್ರಮಂದಿರ ಮಾಲೀಕರು, ಖಾಸಗಿ ಬಸ್ಸು, ಟೆಂಪೊ ಮಾಲೀಕರು ಸೇರಿದಂತೆ ವಿವಿಧ ಸಂಘದವರು ಬೆಂಬಲ ಸೂಚಿಸಿದರು.
|
11 |
+
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ಯಾವುದೇ ರಜೆ ನೀಡಿರಲಿಲ್ಲ. ಎಂದಿನಂ��ೆ ತರಗತಿಗಳು ನಡೆದವು. ನಗರದಲ್ಲಿ ಬಸ್ಸು, ಆಟೋಗಳ ಸಂಚಾರ ಮಾಮೂಲಿಯಾಗಿತ್ತು. ನಾಡು-ನುಡಿ-ಜಲದ ವಿಚಾರದಲ್ಲಿ ಆಟೋ ಚಾಲಕರು ಮುಂಚೂಣಿಯಲ್ಲಿದ್ದು, ಇಂದೂ ಕೂಡ ಹೇಮಾವತಿ ನೀರಿಗಾಗಿ ನಗರದ ಆಟೋ ಚಾಲಕರು ಧ್ವನಿಯೆತ್ತಿ ಬಂದ್ನಲ್ಲಿ ಭಾಗವಹಿಸಿದ್ದರು.
|
12 |
+
ಹೇಮಾವತಿ ನಾಲಾ ವಲಯದ ಗುಬ್ಬಿ, ಚಿಕ್ಕನಾಯಕನಹಳ್ಳಿ, ತುಮಕೂರು, ತುರುವೇಕೆರೆ, ಗ್ರಾಮಾಂತರ ಕ್ಷೇತ್ರಗಳಲ್ಲೂ ಸಹ ಪ್ರತಿಭಟನೆ ನಡೆಯಿತು.ತುರುವೇಕೆರೆಯಲ್ಲಿ ತಾಲೂಕು ರೈತ ಸಂಘ, ಹಸಿರು ಸೇನೆ ಮತ್ತು ಪ್ರಗತಿಪರ ಸಂಘಟನೆಗಳು ರೈತರೊಂದಿಗೆ ಬಂದ್ ನಡೆಸಿದವು. ಅಂಗಡಿ ಮಾಲೀಕರು ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
|
13 |
+
ತುಮಕೂರಿನಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಸದಾಶಿವಯ್ಯ, ಮಹೇಶ್, ಪ್ರಭಾಕರ್, ಟೂಡಾ ಮಾಜಿ ಅಧ್ಯಕ್ಷ ಶ್ರೀಧರ್, ಕನ್ನಡ ಸೇನೆಯ ಧನಿಯಾಕುಮಾರ್, ಕರ್ನಾಟಕ ರಕ್ಷಣಾ ವೇದಿಕೆಯ ಅರುಣ್ಕುಮಾರ್, ರೈತ ಸಂಘದ ಮುಖಂಡರಾದ ಗೋವಿಂದರಾಜು, ಹೋಟೆಲ್ ಮಾಲೀಕರ ಸಂಘದ ಗುರುಬಳುಕರಾಯ್, ದಲಿತ ಸಂಘಟನೆಯ ನರಸಿಂಹಯ್ಯ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಅವರು ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಿದ್ದರು. ಬಂದ್ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದೆ ಬಹುತೇಕ ಶಾಂತಿಯುತವಾಗಿ ನಡೆಯಿತು.
|
eesanje/url_46_96_11.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಹಾಲಿನ ಬೆಲೆ ಏರಿಕೆ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ
|
2 |
+
ಬೆಂಗಳೂರು, ಜೂ.25-ನೆರೆ ರಾಜ್ಯಗಳಿಗೆ ಹೋಲಿಗೆ ಮಾಡಿದರೆ ನಮ ರಾಜ್ಯದಲ್ಲಿ ಹಾಲಿನ ಬೆಲೆ ಕಡಿಮೆ ಇದೆ ಎಂದು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದರ ಪರಿಷ್ಕರಣೆಯ ಬಗ್ಗೆ ಕೆಎಂಎಫ್ ಜೊತೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದರು.
|
3 |
+
ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹಾಲಿನ ದರ ಏರಿಕೆ ಕುರಿತು ಯಾವುದೇ ಮಾಹಿತಿ ಇಲ್ಲ. ದರ ಏರಿಕೆ ಕುರಿತು ಕೆ.ಎಂ. ಎಫ್. ತೀರ್ಮಾನಿಸುತ್ತದೆ. ಅದು ಸರ್ಕಾರದ ತೀರ್ಮಾನವಲ್ಲ. ನೆರೆಯ ರಾಜ್ಯಗಳ ದರಕ್ಕೆ ಅನುಗುಣವಾಗಿ ಏರಿಕೆ ಮಾಡಲು ತೀರ್ಮಾನಿಸಿರಬಹುದು. ಈ ಬಗ್ಗೆ ಕೂಡಲೇ ಮಾಹಿತಿ ಪಡೆಯುವುದಾಗಿ ತಿಳಿಸಿದರು. ಜೊತೆ ಕೆಎಂಎಫ್ ಅಧ್ಯಕ್ಷರೊಂದಿಗೆ ದೂರವಾಣಿಯಲ್ಲಿ ಚರ್ಚೆ ನಡೆಸಿದರು.
|
4 |
+
ರಾಜ್ಯದಲ್ಲಿ ಹಾಲಿನ ಸಂಗ್ರಹ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪ್ರತಿ ಲೀಟರ್ ಹಾಲಿನ ಪಟ್ಟಣಕ್ಕೆ 50 ಎಂಎಲ್ ಹಾಲನ್ನೂ ಹೆಚ್ಚುವರಿಯಾಗಿ ಸೇರಿಸಿ, ಅದಕ್ಕೆ ತಗಲುವ 2.10 ರೂಪಾಯಿ ವೆಚ್ಚದಲ್ಲಿ 2 ರೂಪಾಯಿಗಳನ್ನು ಗ್ರಾಹಕರಿಂದ ಪಡೆಯಲು ನಿರ್ಧರಿಸಲಾಗಿದೆ. ಇದರಿಂದ ನಷ್ಟವಾಗುವ 10 ಪೈಸೆಯನ್ನು ಹಾಗೂ ಏಜೆಂಟರಿಗೆ ನೀಡಬೇಕಾದ 10 ಪೈಸೆ ಸೇರಿ 20 ಪೈಸೆ ನಷ್ಟವನ್ನು ಕೆಎಂಎಫ್ ಭರಿಸಲಿದೆ ಎಂದು ಅದರ ಅಧ್ಯಕ್ಷ ಭೀಮಾನಾಯಕ್ ತಿಳಿಸಿದ್ದಾರೆ.
|
5 |
+
ಸಂಗ್ರಹಿಸಿದ ಹಾಲನ್ನು ಪೌಡರ್ ಮಾಡಿ ದಾಸ್ತಾನು ಮಾಡುವುದರಿಂದ ಅದು ನಿರರ್ಥಕ ವೆಚ್ಚವಾಗುತ್ತದೆ. ಸಂಸ್ಥೆಯ ಉಳಿವಿಗೆ ಹೆಚ್ಚುವರಿ ಹಾಲನ್ನು ಗ್ರಾಹಕರಿಗೆ ಮಾರಾಟ ಮಾಡಲು ನಿರ್ಧರಿಸಲಾಗಿದೆ. ಹಾಲಿನ ಸಂಗ್ರಹ ತಗ್ಗಿದರೆ 50 ಎಂಎಲ್ ಸೇರ್ಪಡೆಯನ್ನು ಹಿಂಪಡೆಯಲಾಗುತ್ತದೆ ಎಂದು ತಿಳಿಸಿದ್ದಾರೆ. ಈ ಕುರಿತು ಭೀಮಾನಾಯಕ್ ಅವರು ಮುಖ್ಯಮಂತ್ರಿಯವರಿಗೂ ದೂರವಾಣಿಯಲ್ಲಿ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
|
eesanje/url_46_96_12.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಡಿಸೆಂಬರ್ನಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
|
2 |
+
ಬೆಂಗಳೂರು, ಜೂನ್ 25-ಸಕ್ಕರೆ ನಾಡು ಮಂಡ್ಯದಲ್ಲಿ 2024ನೇ ಸಾಲಿನಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
|
3 |
+
ಗೃಹ ಕಚೇರಿ ಕೃಷ್ಣಾದಲ್ಲಿಂದು ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿದರು.
|
4 |
+
ಈ ಹಿಂದೆ ಜೂನ್ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಡಿಸೆಂಬರ್ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ರಾಜ್ಯದ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.
|
5 |
+
ಸರ್ಕಾರ ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಆಯ್ಕೆಯಾದ ಕೂಡಲೇ ಮಾಹಿತಿ ನೀಡಲಾಗುವುದು. ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿನವರು ಸಾಹಿತಿಗಳ ಪಟ್ಟಿ ಒದಗಿಸಿದ ನಂತರ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮಗೊಳಿಸಲು ತೀರ್ಮಾನಿಸಲಾಯಿತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
|
6 |
+
ಮಂಡ್ಯದಲ್ಲಿ 48 ನೇ ಸಾಹಿತ್ಯ ಸಮ್ಮೇಳನ 1974 ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ, 63 ನೇ ಸಾಹಿತ್ಯ ಸಮ್ಮೇಳನ 1994 ರಲ್ಲಿ ಡಾ. ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಇದೀಗ ಮೂರನೇ ಬಾರಿ ಸಮ್ಮೇಳನ ಆಯೋಜಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು. ಎಲ್ಲರೂ ಸೇರಿ ಸಮ್ಮೇಳನವನ್ನು ಯಶಸ್ವಿಯಾಗಿ ಅಯೋಜಿಸುವ ವಿಶ್ವಾಸ ನನಗಿದೆ ಎಂದು ತಿಳಿಸಿದರು.
|
7 |
+
ಸಭೆಯಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯ ಶಾಸಕರು, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್ ಅಹ್ಮದ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್ ಜೋಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್ ಮತ್ತು ಸರ್ಕಾರದ ಇತರ ಹಿರಿಯ ಅಽಕಾರಿಗಳು ಉಪಸ್ಥಿತರಿದ್ದರು.
|
eesanje/url_46_96_2.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಡಿಕೆ ಸೊಕ್ಕು ಮುರಿಯಲೆಂದೇ ಸಿದ್ದರಾಮಯ್ಯ ಡಿಸಿಎಂ ಹುದ್ದೆ ಸೃಷ್ಟಿಯ ಗುಲ್ಲೆಬ್ಬಿಸಿದ್ದಾರೆ : ವಿಜಯೇಂದ್ರ ಆರೋಪ
|
2 |
+
ನವದೆಹಲಿ,ಜೂ.26-ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸೊಕ್ಕು ಮುರಿಯಬೇಕೆಂದೇ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂಬ ಸಿಎಂ ಸಿದ್ದರಾಮಯ್ಯನವರ ಪಾತ್ರವಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
|
3 |
+
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಒಂದು ಬಣ ಡಿ.ಕೆ.ಶಿವಕುಮಾರ್ ಅವರನ್ನು ರಾಜಕೀಯವಾಗಿ ಕಟ್ಟಿ ಹಾಕಲು ವ್ಯವಸ್ಥಿತ ಷಡ್ಯಂತರ ರೂಪಿಸಿದೆ. ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂಬುದು ಸಿದ್ದರಾಮಯ್ಯ ಬಣದ ಸಚಿವರು ಹಾಗೂ ಶಾಸಕರ ಒತ್ತಾಸೆ. ನನಗೆ ಭರವಸೆ ಇದ್ದು, ಇದರಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗುತ್ತಾರೆ ಎಂದರು.
|
4 |
+
ಶಿವಕುಮಾರ್ ವಿರುದ್ಧ ಆಡಳಿತ ಪಕ್ಷದಲ್ಲಿ ಸಾಕಷ್ಟು ರಾಜಕೀಯ ಪಿತೂರಿಗಳು ನಡೆಯುತ್ತಿವೆ. ಒಂದು ಬಣ ಅವರ ರಾಜಕೀಯ ಏಳಿಗೆಯನ್ನು ಸಹಿಸಿಕೊಳ್ಳುತ್ತಿದೆ. ಹೀಗಾಗಿ ಸಿದ್ದರಾಮಯ್ಯನವರು ಹೈಕಮಾಂಡ್ ಮೇಲೆ ಒತ್ತಡ ಹಾಕಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಿಕೊಳ್ಳಬಹುದು ಎಂದು ಭವಿಷ್ಯ ನುಡಿದರು.
|
5 |
+
ರಾಜ್ಯದಲ್ಲಿ ಬೆಲೆ ಏರಿಕೆಯ ಪರ್ವ ನಡೆಯುತ್ತಿದೆ. ರಾಜ್ಯದ ಜನರಿಗೆ ಬರೆ ಎಳೆಯುವ ಕೆಲಸ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಕಳೆದ ವಾರ ಸಿಎಂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದಾರೆ. ನಾವು ಪ್ರಶ್ನೆ ಮಾಡಿದರೆ ಉದ್ಧಟತನದ ಉತ್ತರ ಹೇಳುತ್ತಾರೆ. ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಸಿಎಂ ಸಿದ್ದರಾಮಯ್ಯ ಯಾಕಿಷ್ಟು ಕಟುವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದರು.
|
6 |
+
ಟ್ರ್ಯಾಕ್ಟರ್ ಟಿಲ್ಲರ್ ಬಳಸುವ ರೈತರೂ ತೊಂದರೆ ಅನುಭವಿಸುತ್ತಿದ್ದಾರೆ. ಬಿತ್ತನೆ ಬೀಜದ ದರ ಶೇ.40- 50ರಷ್ಟು ಹೆಚ್ಚಾಗಿದೆ. ಇಂಥ ಸಂಕಷ್ಟದ ಸಂದರ್ಭದಲ್ಲೂ ಜನರಿಗೆ ಸ್ಪಂದಿಸುತ್ತಿಲ್ಲ. ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಸರಕಾರ ಯಾಕೆ ಇಷ್ಟು ಕಟುವಾಗಿ ನಡೆದುಕೊಳ್ಳುತ್ತಿದೆ ಎಂದು ಕಟುವಾಗಿ ಪ್ರಶ್ನಿಸಿದರು.
|
7 |
+
ಕಾಂಗ್ರೆಸ್ಸಿಗರು ಸಾಕಷ್ಟು ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಸಿಎಂ ಸಿದ್ದರಾಮಯ್ಯರನ್ನು ನೋಡಿದರೆ ಅಯ್ಯೋ ಎನ್ನಿಸುತ್ತಿದೆ. ಆಡಳಿತ ಪಕ್ಷದ ಶಾಸಕರು ತಲೆ ಎತ್ತಿ ಓಡಾಡಲು ಆಗುತ್ತಿಲ್ಲ. ಅಭಿವೃದ್ಧಿಗೆ ಹಣ ಕೊಡಿ ಎಂದು ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಆಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
|
8 |
+
ರಾಜ್ಯದ ಕಾಂಗ್ರೆಸ್ ಸರಕಾರವು ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದ್ದರೂ ಸಹ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳುತ್ತಿದೆ. ಮತ್ತೊಂದೆಡೆ ಅಭಿವೃದ್ಧಿ ಶೂನ್ಯತೆ ರಾಜ್ಯವನ್ನು ಕಾಡುವಂತಾಗಿದೆ. ಅಭಿ��ೃದ್ಧಿ ಇಲ್ಲದೆ ಶಾಸಕರು ತಲೆ ಎತ್ತಿಕೊಂಡು ಓಡಾಡಲು ಆಗುತ್ತಿಲ್ಲ ಎಂದು ವಿಶ್ಲೇಷಿಸಿದರು.
|
9 |
+
ರಾಜೀನಾಮೆಗೆ ಒತ್ತಾಯ:ವಾಲೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ ಸಂಬಂಧ ಹಣಕಾಸು ಸಚಿವರಾದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜವಾಬ್ದಾರಿ ಹೊರಬೇಕು. ಈ ಸಂಬಂಧ ಶರಣಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷರು ಕೂಡಲೇ ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ಇದೇ 28ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಇದೇ ವೇಳೆ ವಿಜಯೇಂದ್ರ ತಿಳಿಸಿದರು.
|
10 |
+
ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣ ಪೋಲಾಗಿದ್ದು ದುರ್ಬಳಕೆಯಾಗಿದೆ. ಕಾಂಗ್ರೆಸ್ ಸರಕಾರವು ಈ ಹಣವನ್ನು ದೋಚಿದೆ ಎಂದು ಟೀಕಿಸಿದರು.ಕರ್ನಾಟಕ ರಾಜ್ಯ ಸರಕಾರವು ಜನರಿಗೆ ಶಾಪವಾಗಿ ಪರಿಣಮಿಸಿದೆ ಎಂದು ಆಕ್ಷೇಪಿಸಿದ ಅವರು, ನಿಗಮದ ಹಗರಣ ಸಂಬಂಧ ಯೂನಿಯನ್ ಬ್ಯಾಂಕ್ ಆಫ್ ಇಂಡಿಯ ಪತ್ರದನ್ವಯ ಸಿಬಿಐ ತನಿಖೆ ನಡೆಯುತ್ತಿದೆ. ರಾಜ್ಯ ಸರಕಾರ ಆತುರಾತುರವಾಗಿ ಎಸ್ಐಟಿಯನ್ನೂ ರಚಿಸಿ ತಮಗೆ ಬೇಕಾದಂತೆ ತನಿಖೆ ನಡೆಸುತ್ತಿದೆ ಎಂದು ಆರೋಪಿಸಿದರು.
|
11 |
+
ಎಸ್ಐಟಿ ತೇಪೆ ಹಚ್ಚುವ ಕೆಲಸ ಮಾಡುತ್ತಿದೆ. ಅಲ್ಲಿ-ಇಲ್ಲಿ ಅಧಿಕಾರಿ ಮನೆಯಲ್ಲಿ ಒಂದಷ್ಟು ಹಣ ಲಭಿಸಿದೆ ಎನ್ನುವ ಮೂಲಕ ಕಣ್ಣೊರೆಸುವ ತಂತ್ರವನ್ನು ರಾಜ್ಯ ಸರಕಾರ ಮಾಡುತ್ತಿದೆ ಎಂದು ದೂರಿದರು.
|
12 |
+
ಸಚಿವ ನಾಗೇಂದ್ರ ಅವರು ರಾಜೀನಾಮೆ ಕೊಟ್ಟಿದ್ದಾರೆ. ತೆಲಂಗಾಣಕ್ಕೆ ಬೇನಾಮಿ ಖಾತೆಗೆ ಹಣ ವರ್ಗಾವಣೆ ಮಾಡಿ ವಿತ್ಡ್ರಾ ಮಾಡಿದ್ದಾರೆ. ಈ ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಹಿಂದೆಯೂ ಕಾಂಗ್ರೆಸ್ ಸರಕಾರ ಇದ್ದಾಗ ಇಂಥ ಅನೇಕ ಹಗರಣಗಳನ್ನು ಅವರದೇ ಎಸಿಬಿ ಮೂಲಕ ಮುಚ್ಚಿ ಹಾಕಿದ್ದರು ಎಂದು ಆರೋಪಿಸಿದರು.
|
eesanje/url_46_96_3.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿ ರೈತರ ವಿರೋಧಿ : ಡಿಕೆಶಿ ವಾಗ್ದಾಳಿ
|
2 |
+
ಬೆಂಗಳೂರು, ಜೂ.26– ಬಿಜೆಪಿ ರೈತರ ವಿರೋಧಿ ಎಂದು ವಾಗ್ದಾಳಿ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಲಿನ ಬೆಲೆಯನ್ನು ಯಾರು, ಏನೇ ಹೇಳಲಿ ರೈತರ ಹಿತದೃಷ್ಟಿಯಿಂದ ಮತ್ತಷ್ಟು ಹೆಚ್ಚಿಸಬೇಕಿತ್ತು ಎಂದು ಪ್ರತಿಪಾದಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹಾಲಿನ ಬೆಲೆಯನ್ನು ಏರಿಸುವುದರ ಮೂಲಕ ತಮ್ಮ ರೈತ ವಿರೋಧಿ ನಿಲುವನ್ನು ಬಯಲು ಮಾಡಿಕೊಂಡಿದ್ದಾರೆ.
|
3 |
+
ರೈತರು ಹಸುಗಳನ್ನು ಸಾಕಲಾರದೆ ಮಾರಾಟ ಮಾಡುತ್ತಿದ್ದಾರೆ. ಪ್ರತಿ ಪ್ಯಾಕೆಟ್ ಹಾಲಿನ ಬೆಲೆ 2 ರೂ. ಹೆಚ್ಚಿಸಿರುವುದನ್ನು ವಿವಾದ ಮಾಡಿ ಗೊಂದಲ ಮಾಡುತ್ತಿರುವವರು ರೈತರ ಸಂಕಷ್ಟಗಳನ್ನು ಒಮ್ಮೆ ಬಂದು ಕೇಳಲಿ ಎಂದು ತಿರುಗೇಟು ನೀಡಿದರು.
|
4 |
+
ಹಾಲಿನ ದರ ಹೆಚ್ಚಳದಿಂದ ರೈತರಿಗೆ ಲಾಭವಾಗಲಿದೆ. ಕೆಎಂಎಫ್ ಎಂದರೆ ಅದು ರೈತರ ಸಂಸ್ಥೆ. ಅಲ್ಲಿ ವರ್ತಕರು ಯಾರೂ ಇಲ್ಲ. ಬಿಜೆಪಿಯವರು ಉದ್ದೇಶಪೂರ್ವಕವಾಗಿ ವಿವಾದ ಮಾಡಿ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ರೈತರ ಹಿತರಕ್ಷಣೆಗಾಗಿ 2 ರೂ.ಗಿಂತಲೂ ಹೆಚ್ಚಾಗಿ ದರ ಹೆಚ್ಚಿಸಬೇಕಿತ್ತು ಎಂದರು.
|
5 |
+
ಪಶು ಆಹಾರದ ಬೆಲೆ ತೀವ್ರವಾಗಿದೆ. ಇದಕ್ಕೆ ತೆರಿಗೆ ಪದ್ಧತಿ ಕಾರಣ. ಬಿಜೆಪಿಯವರು ಇದರ ಬಗ್ಗೆ ಮಾತನಾಡುವುದಿಲ್ಲ. ಹಸು ಸಾಕಾಣಿಕೆ ದುಬಾರಿಯಾಗಿದೆ. ನೆರೆ ರಾಜ್ಯವಾದ ಮಹಾರಾಷ್ಟ್ರದಲ್ಲಿ ಪ್ರತೀ ಲೀಟರ್ಗೆ ಹಾಲಿನ ಬೆಲೆ ಎಷ್ಟಿದೆ ಎಂದು ಬಿಜೆಪಿಯವರಿಗೆ ಗೊತ್ತಿದೆಯೇ?, ಗುಜರಾತಿನ ಅಮೂಲ್ ಹಾಲಿನ ದರವೂ ನಮಗಿಂತ ಹೆಚ್ಚಿದೆ. ರೈತರಿಗೆ ಅನುಕೂಲ ಆಗುವುದನ್ನು ಬಿಜೆಪಿಯವರಿಂದ ಸಹಿಸಿಕೊಳ್ಳಲಾಗುತ್ತಿಲ್ಲ. ಅದಕ್ಕಾಗಿ ವಿವಾದ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.
|
6 |
+
ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಹುಲ್ಗಾಂಧಿ ಆಯ್ಕೆಯಾಗಿರುವುದರಿಂದ ದೇಶದ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಲು ಅವಕಾಶವಾಗುತ್ತದೆ. ಜನರ ಬಯಕೆ ರಾಹುಲ್ಗಾಂಧಿ ವಿಪಕ್ಷ ನಾಯಕರಾಗಬೇಕು ಎಂಬುದಾಗಿತ್ತು. ಸೋನಿಯಾಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜನರ ಭಾವನೆಗಳಿಗೆ ಸ್ಪಂದಿಸಿ ರಾಹುಲ್ಗಾಂಧಿ ಜವಾಬ್ದಾರಿ ಒಪ್ಪಿಕೊಳ್ಳುವಂತೆ ಮಾಡಿದ್ದಾರೆ. ಇದಕ್ಕಾಗಿ ಅವರಿಗೆ ಧನ್ಯವಾದ ಹೇಳುವುದಾಗಿ ತಿಳಿಸಿದರು.
|
7 |
+
ಮುಂದಿನ ದಿನಗಳಲ್ಲಿ ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಉಳಿವಿಗೆ ರಾಹುಲ್ಗಾಂಧಿ ಹೋರಾಟ ನಡೆಸುವ ವಿಶ್ವಾಸವಿದೆ ಎಂದು ಹೇಳಿದರು.
|
eesanje/url_46_96_4.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಸಿಎಂ ಭದ್ರತಾ ವಾಹನಕ್ಕೆ ಅಡ್ಡಿಪಡಿಸಿದ ಬೈಕ್ ಸವಾರನ ವಿರುದ್ಧ ದೂರು
|
2 |
+
ಮೈಸೂರು,ಜೂ. 26-ಮುಖ್ಯಮಂತ್ರಿಗಳ ಕಾನ್ವೇ ಸಾಗಲು ಅಡಚಣೆ ಮಾಡಿ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಬೈಕ್ ಸವಾರನ ವಿರುದ್ಧ ಮೈಸೂರಿನ ಕೆಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರುಣ ಗ್ರಾಮದ ಕುಂಬ್ರಳ್ಳಿ ನಿವಾಸಿ ಶಿವು(30) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.ಜೂ.23ರಂದು ಮುಖ್ಯಮಂತ್ರಿಗಳ ಕಾನ್ವೇ ಏರ್ಪೋರ್ಟ್ನಿಂದ ನಜರ್ಬಾದ್ನಲ್ಲಿರುವ ರಿಫ್ರೆಷ್ ಮೆಂಟ್ ಕಡೆಗೆ ಸಾಗುತ್ತಿತ್ತು.
|
3 |
+
ಕಾನ್ವೇ ಸಾಗುವ ಹಾದಿಯಾದ ಮೈಸೂರು-ನಂಜನಗೂಡು ಹೆದ್ದಾರಿಯ ರಾಜಹಂಸ ಜಂಕ್ಷನ್ ಬಳಿ ಬ್ಯಾರಿಕೇಡ್ಗಳಮ್ಮಿ ಅಳವಡಿಸಿ ಗನ್ಹೌಸ್ ರಸ್ತೆಯಿಂದ ಬರುವ ವಾಹನಗಳನ್ನ ನಿಯಂತ್ರಿಸುವ ಕರ್ತವ್ಯದಲ್ಲಿ ಸಂಚಾರಿ ಸಿಬ್ಬಂದಿಗಳಾದ ಅಣ್ಣಯ್ಯ ಹಾಗೂ ಉಪೇಂದ್ರ ಅವರು ನಿರತರಾಗಿದ್ದರು.
|
4 |
+
ಈ ವೇಳೆ ಶಿವು ತನ್ನ ಯಮಹಾ ಬೈಕ್ನಲ್ಲಿ ಅತಿವೇಗವಾಗಿ ಹಾಗೂ ಅಜಾಗರೂಕತೆಯಿಂದ ಬರುತ್ತಿದ್ದ. ಇದನ್ನು ಗಮನಿಸಿದ ಅಣ್ಣಯ್ಯ ಹಾಗೂ ಉಪೇಂದ್ರ ಅವರು ಬೈಕ್ ನಿಲ್ಲಿಸುವಂತೆ ಸೂಚನೆ ನೀಡಿದರು. ಆದರೆ ಇದ್ಯಾವುದನ್ನೂ ಲೆಕ್ಕಿಸದ ಶಿವು ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಉಪೇಂದ್ರ ಅವರಿಗೆ ಡಿಕ್ಕಿ ಹೊಡೆದು ನಂತರ ಬ್ಯಾರಿಕೇಡ್ಗಳನ್ನು ಭೇದಿಸಿ ಸಿಎಂ ಕಾನ್ವಾಯ್ ಬರುತ್ತಿದ್ದ ವಿರುದ್ಧ ದಿಕ್ಕಿನಲ್ಲಿ ಅತಿವೇಗವಾಗಿ ಚಲಿಸಿ ನಂತರ ನಿಯಂತ್ರಣ ತಪ್ಪಿ ಬಿದ್ದಿದ್ದಾನೆ.
|
5 |
+
ಇದರಿಂದಾಗಿ ಸಿಎಂ ಕಾನ್ವೇ ಸುಗಮವಾಗಿ ಸಾಗಲು ಕೆಲಕಾಲ ಅಡಚಣೆಯಾಗಿದೆ. ಬೈಕ್ನಿಂದ ಬಿದ್ದು ಗಾಯಗೊಂಡ ಶಿವುನನ್ನು ಕಾನ್ವೇ ಜೊತೆ ಬರುತ್ತಿದ್ದ ಅಂಬ್ಯುಲ್ಸೆ್ ಮೂಲಕ ಗೋಪಾಲಗೌಡ ಆಸ್ಪತ್ರೆಗೆ ಸಾಗಿಸಲಾಗಿದೆ.
|
6 |
+
ಸಿಎಂ ಕಾನ್ವೇಗೆ ಅಡ್ಡಿಪಡಿಸಿ ಕರ್ತವ್ಯ ನಿರತ ಪೊಲೀಸ್ಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಶಿವು ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಸಂಚಾರಿ ಪೇದೆ ಅಣ್ಣಯ್ಯ ಕೆಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
|
eesanje/url_46_96_5.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ರಾಜ್ಯದಲ್ಲಿ ತಿಂಗಳ ಅಂತ್ಯದವರೆಗೆ ಮುಂದುವರೆಯಲಿದೆ ಮಳೆ
|
2 |
+
ಬೆಂಗಳೂರು, ಜೂ.26-ವಾತಾವರಣದಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ.ಹವಾಮಾನ ಮುನ್ಸೂಚನೆ ಪ್ರಕಾರ, ಜೂನ್ ತಿಂಗಳ ಅಂತ್ಯದವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
|
3 |
+
ಅರಬ್ಬಿ ಸಮುದ್ರದಲ್ಲಿ ಟ್ರಬ್ ನಿರ್ಮಾಣವಾಗಿದ್ದು, ಬಂಗಾಳಕೊಲ್ಲಿಯಲ್ಲಿ ಮೇಲೈ ಸುಳಿಗಾಳಿ ಉಂಟಾಗಿದೆ. ಇದರಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
|
4 |
+
ಕಳೆದ ಮೂರ್ನಾಲ್ಕು ದಿನಗಳಿಂದ ಕರಾವಳಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ ಕೆಲವೆಡೆ ಹೊರತುಪಡಿಸಿ ರಾಜ್ಯದಲ್ಲಿ ಭಾರಿ ಮಳೆಯಾಗಿಲ್ಲ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಜ್ಞರು ತಿಳಿಸಿದ್ದಾರೆ.
|
5 |
+
ರಾಜ್ಯದಲ್ಲಿ ಕಳೆದ ಒಂದು ವಾರದಿಂದಲೂ ಭಾರಿ ಮಳೆ ಮುನ್ನೆಚ್ಚರಿಕೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಕೆಲವೆಡೆ 2 ವಾರಗಳಿಂದಲೂ ಮಳೆಯಾಗಿಲ್ಲ. ಕೆಲವೆಡೆ ಮಾತ್ರ ಉತ್ತಮ ಮಳೆಯಾಗಿದ್ದು, ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಿದೆ.ಮೋಡದ ಜೊತೆಗೆ ಬಲವಾದ ಮೇಲೈ ಗಾಳಿ ಬೀಸುತ್ತಿದೆ. ಹೀಗಾಗಿ ರಾಜ್ಯದ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ವಿರಳ ಎಂದು ತಜ್ಞರು ಹೇಳಿದ್ದಾರೆ.
|
eesanje/url_46_96_6.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಪೆನ್ಡ್ರೈವ್ ಪ್ರಕರಣದಲ್ಲಿ ಪ್ರೀತಂಗೌಡ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ : ಗೃಹಸಚಿವ ಪರಮೇಶ್ವರ್
|
2 |
+
ಬೆಂಗಳೂರು, ಜೂ.26-ಹಾಸನದ ಪೆನ್ಡ್ರೈವ್ ಪ್ರಕರಣದಲ್ಲಿ ದೂರು ಬಂದ ಹಿನ್ನೆಲೆಯಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ತನಿಖೆಯ ಬಳಿಕ ಸತ್ಯಾಸತ್ಯ ಆಧರಿಸಿ ಅಗತ್ಯ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ದಾಖಲಿಸಿದ ಬಳಿಕ ತನಿಖೆ ನಡೆಸಲಾಗುತ್ತದೆ. ಅವರ ಪಾತ್ರ ಇರುವುದು ಕಂಡುಬಂದರೆ ಸೂಕ್ತ ಕಾನೂನು ಕ್ರಮಗಳನ್ನು ಮುಂದುವರೆಸಲಾಗುವುದು ಎಂದು ಸ್ಪಷ್ಟಪಡಿಸಿದರು.
|
4 |
+
ತುಮಕೂರಿನಿಂದ ಪೈಪ್ಲೈನ್ ಮೂಲಕ ಹೇಮಾವತಿ ನೀರು ಸರಬರಾಜು ಮಾಡುವ ಯೋಜನೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕುಡಿಯುವ ನೀರಿಗೆ ಯಾವ ನದಿಯಿಂದಾದರೂ ನೀರು ತೆಗೆದುಕೊಂಡು ಹೋಗಬಹುದು. ಇದಕ್ಕೆ ಯಾವುದೇ ಅಡಚಣೆ ಇರುವುದಿಲ್ಲ. ಕೃಷ್ಣದಿಂದ ಕಾವೇರಿಗೆ, ಕಾವೇರಿಯಿಂದ ಕೃಷ್ಣಗೆ ನೀರು ತೆಗೆದುಕೊಂಡು ಹೋಗಲು ಅವಕಾಶವಿದೆ. ಹಾಗಾಗಿ ಮಾಗಡಿ ಶಾಸಕ ಬಾಲಕೃಷ್ಣ ಅವರು ಅರ್ಥ ಮಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದ್ದಾರೆ.
|
5 |
+
ಯೋಜನೆ ವಿವಾದಕ್ಕೆ ಗುರಿಯಾಗಿದೆ. ಇದನ್ನು ಸರಿಪಡಿಸಲು ನಾವೆಲ್ಲಾ ಪ್ರಯತ್ನಿಸುತ್ತಿದ್ದೇವೆ. ನೀರಾವರಿ ಸಚಿವರು ಸಭೆ ಕರೆದಿದ್ದು, ಜಿಲ್ಲೆಯ ಜನರಿಗೆ ದೊರೆಯಬೇಕಾದ ನೀರಿಗೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸುವುದಾಗಿ ಭರವಸೆ ನೀಡಿದ್ದಾರೆ.
|
6 |
+
ತಾಂತ್ರಿಕವಾಗಿ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ಚರ್ಚೆಗಳಾಗುತ್ತಿವೆ. ಈ ಬಗ್ಗೆ ತಾಂತ್ರಿಕ ಸಮಿತಿ ರಚಿಸುವಂತೆ ಜಿಲ್ಲೆಯ ಶಾಸಕರು ಒತ್ತಾಯಿಸಿದರು. ಸಚಿವರು ಅದಕ್ಕೆ ಒಪ್ಪಿಗೆ ಸೂಚಿಸಿದರು. ಸಮಿತಿ ರಚಿಸಿ ಹೊರಗೆ ನಡೆದ ಬಳಿಕ ಸಮಸ್ಯೆಯನ್ನು ಯಾವ ರೀತಿ ಬಗೆಹರಿಸಬೇಕು ಎಂದು ನಾವು ಪರಿಶೀಲಿಸುತ್ತೇವೆ ಎಂದು ಹೇಳಿದರು.
|
eesanje/url_46_96_7.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಆಸ್ತಿ ವಿಚಾರಕ್ಕೆ ವಿಚ್ಛೇದಿತ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ಪತಿ-ಮಗ..!
|
2 |
+
ಶಿಡ್ಲಘಟ್ಟ, ಜೂ.26-ವಿಚ್ಛೇದಿತ ಪತ್ನಿಯನ್ನು ಪತಿ ಹಾಗೂ ಆತನ ಎರಡನೆ ಪತ್ನಿಯ ಪುತ್ರ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಸೊಣ್ಣೆನಹಳ್ಳಿ ಗ್ರಾಮದಲ್ಲಿ ಬೆಳಿಗ್ಗೆ ನಡೆದಿದೆ.ಪದ್ಮಮ್ಮ ( 45) ಭೀಕರವಾಗಿ ಕೊಲೆಯಾದ ಮಹಿಳೆ.
|
3 |
+
ಮೃತಳ ಪತಿ ಮುನಿರೆಡ್ಡಿ (58) ಕೊಲೆ ಮಾಡಿದ ನಂತರ ಸ್ವತಃ ಪೊಲೀಸರಿಗೆ ಶರಣಾಗಿದ್ದಾನೆ. ಕೊಲೆಯಲ್ಲಿ ಭಾಗಿಯಾದ ಮುನಿರೆಡ್ಡಿಯ ಮತ್ತೊಬ್ಬ ಪತ್ನಿಯ ಪುತ್ರ (20) ಗಿರೀಶ್ ತಲೆ ಮರೆಸಿಕೊಂಡಿದ್ದಾನೆ.ಮುನಿರೆಡ್ಡಿ ಹಾಗೂ ಪದ್ಮಮ್ಮ ನಡುವೆ ಕೌಟುಂಬಿಕ ವಿಚಾರವಾಗಿ ಗಲಾಟೆ ನಡೆದು ಇಬ್ಬರೂ ವಿಚ್ಛೇದನ ಪಡೆದು ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಪದ್ಮಮ್ಮಗೆ ಇಬ್ಬರು ಪುತ್ರರಿದ್ದರು. ಇಬ್ಬರೂ ಪುತ್ರರೂ ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟಿದ್ದು, ಒಬ್ಬಂಟಿಯಾಗಿ ಅದೇ ಗ್ರಾಮದಲ್ಲಿ ವಾಸಿಸುತ್ತಿದ್ದಳು.
|
4 |
+
ವಿಚ್ಛೇದನ ಪಡೆದ ಮುನಿರೆಡ್ಡಿ ಮತ್ತೊಂದು ಮದುವೆಯಾಗಿದ್ದು, ಒಂದು ಹೆಣ್ಣು ಒಂದು ಹಾಗೂ ಒಂದು ಗಂಡು ಮಗು ಇದೆ. ಈ ಮಧ್ಯೆ ಪದ್ಮಮ್ಮಳಿಗೆ ಜೀವನಾಂಶಕ್ಕಾಗಿ ನೀಡಿದ ಜಮೀನನ್ನು ವಾಪಸ್ ಮಾಡುವಂತೆ ಮುನಿರೆಡ್ಡಿ ತಗಾದೆ ತೆಗೆದಿದ್ದಾನೆ ಎನ್ನಲಾಗಿದೆ.
|
5 |
+
ನಿನಗೆ ಮಕ್ಕಳಿಲ್ಲವಲ್ಲ ಜಮೀನು ಇಟ್ಟುಕೊಂಡು ಏನು ಮಾಡ್ತೀಯಾ ಎಂದು ಜಮೀನು ವಾಪಸ್ ಮಾಡು ಎಂದು ಆಗಾಗ್ಗೆ ಪೀಡಿಸುತ್ತಿದ್ದು, ಇದು ಪದ್ಮಮ್ಮ ಮತ್ತು ಮುನಿರೆಡ್ಡಿ ನಡುವೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿತ್ತು.
|
6 |
+
ಮುನಿರೆಡ್ಡಿ ಹಾಗೂ ಆತನ ಮಗ ಗಿರೀಶ್ ಬೆಳಗ್ಗೆಯೇ ಪದ್ಮಮ್ಮಳ ಮನೆಗೆ ತೆರಳಿದ್ದು, ಶೌಚ ಕಾರ್ಯ ಮುಗಿಸಿ ಮನೆಯೊಳಗೆ ಬಂದ ಪದ್ಮಮ್ಮಳ ಮೇಲೆ ಏಕಾಏಕಿ ಮಚ್ಚಿನಿಂದ ದಾಳಿ ನಡೆಸಿ ಕೊಚ್ಚಿ ಕೊಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಪದ್ಮಮ್ಮ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
|
7 |
+
ಘಟನೆ ನಂತರ ಗಿರೀಶ್ ತಲೆ ಮರೆಸಿಕೊಂಡಿದ್ದು, ಮುನಿರೆಡ್ಡಿ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ. ಅಲ್ಲಿಂದ ಶಿಡ್ಲಘಟ್ಟ ಗ್ರಾಮಾಂತರ ಠಾಣೆಗೆ ಆರೋಪಿ ಮುನಿರೆಡ್ಡಿಯನ್ನು ಕರೆ ತರಲಾಗಿದೆ.
|
8 |
+
ವಿಷಯ ತಿಳಿಯುತ್ತಿದ್ದಂತೆ ಸಿಪಿಐ ಎಂ.ಶ್ರೀನಿವಾಸ್, ಗ್ರಾಮಾಂತರ ಠಾಣೆ ಎಸ್ಐ ಸತೀಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಬೆರಳಚ್ಚು ತಜ್ಞರ ತಂಡ ಆಗಮಿಸಿ ಪರಿಶೀಲಿಸಿದೆ. ನಗರದಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
|
9 |
+
ಎಸ್ಪಿ ಡಿ.ಎಲ್.ನಾಗೇಶ್, ಎಎಸ್ಪಿ ರಾಜ ಇಮಾಮ್ ಖಾಸಿಂ, ಡಿವೈಎಸ್ಪಿ ಮುರಳೀಧರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
|
eesanje/url_46_96_8.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಬೇವಿನ ಮರದಲ್ಲಿ ಜಿನುಗಿದ ಹಾಲು, ಪೂಜೆ ಮಾಡಲು ಮುಗಿಬಿದ್ದ ಜನ
|
2 |
+
ಗೌರಿಬಿದನೂರು, ಜೂ.26-ನಗರದ ಬೈಪಾಸ್ ರಸ್ತೆಯ ವಿನಾಯಕ ವೃತ್ತದ ಬಳಿ ರಸ್ತೆಯ ಬದಿಯಲ್ಲಿನ ಬೇವಿನ ಮರವೊಂದರಲ್ಲಿ ಹಾಲು ಬರುತ್ತಿದ್ದು, ಈ ವಿಸ್ಮಯ ನೋಡಲು ಜನರು ತಂಡೋಪತಂಡವಾಗಿ ಆಗಮಿಸುತ್ತಿದ್ದು, ಮರಕ್ಕೆ ಪೂಜೆ ಸಲ್ಲಿಸುತ್ತಿದ್ದಾರೆ.
|
3 |
+
ವಿನಾಯಕ ವೃತ್ತದ ಡಿ.ಪಾಳ್ಯ ರಸ್ತೆಯ ಬದಿಯಲ್ಲಿನ ಬೇವಿನ ಮರದ ರೆಂಬೆಯಿಂದ ಬೆಳಗಿನ ಜಾವದಿಂದ ಒಂದೇ ಸಮನೆ ಮರದಲ್ಲಿ ಹಾಲು ಜಿನುಗುತ್ತಿದ್ದು, ಈ ಸುದ್ದಿ ನಗರದೆಲ್ಲೆಡೆ ಹಬ್ಬಿ ಬೇವಿನ ಮರದಲ್ಲಿ ಹಾಲು ಬರುವುದನ್ನು ವೀಕ್ಷಿಸಲು ಮುಗಿಬಿದ್ದರು.
|
4 |
+
ಸಂಕಷ್ಟಹರ ಚತುರ್ಥಿ ದಿನದಂದೇ ಈ ಘಟನೆ ನಡೆಯುತ್ತಿರುವುದು ವಿಶೇಷ ಎಂದು ಕೆಲವರು ಈ ಹಾಲನ್ನು ಕೈಯಲ್ಲಿ ಹಿಡಿದು ಕುಡಿಯುತ್ತಿದ್ದರು. ಇನ್ನು ಮಹಿಳೆಯರು ಇದೊಂದು ಪವಾಡ ಎಂದು ವಿಶೇಷ ಪೂಜೆ ಸಲ್ಲಿಸಿ ಭಕ್ತಿಯಿಂದ ಮೆರೆದರು.
|
5 |
+
ಎಲ್ಲ ಮರಗಳಲ್ಲಿನ ಬೇರುಗಳು ನೀರನ್ನು ಭೂಮಿಯಿಂದ ಮೇಲಕ್ಕೆ ತೆಗೆದುಕೊಂಡು ಹೋಗಲು ಸಹಾಯ ಮಾಡುತ್ತವೆ. ಇದರಲ್ಲಿ ಇರುವ ಕೋಶಗಳು ಮರದ ಎಲ್ಲ ರಂಬೆ ಕೊಂಬೆಗಳಿಗೆ ನೀರನ್ನು ರವಾನಿಸುತ್ತವೆ. ಹೀಗೆ ನೀರು ಪೂರೈಸುವ ಕೋಶಗಳು ಅಪರೂಪಕ್ಕೆ ಎಂಬಂತೆ ನಾಶವಾದಾಗ , ಇಂಥ ಘಟನೆಗಳು ನಡೆಯುತ್ತವೆ.
|
6 |
+
ಹೀಗೆ ಕೋಶಗಳು ತನ್ನ ಕ್ರಿಯೆಯನ್ನು ಕಡಿಮೆ ಮಾಡಿದಾಗ ಮರದ ಒಳಗಿರುವ ನೀರಿನ ಅಂಶ ಹೊರಗೆ ಬರುತ್ತದೆ. ಸಹಜವಾಗಿ ಮರದಲ್ಲಿ ಬುರುಗು ಇರುವುದರಿಂದ ಬುರುಗು ಮಿಶ್ರಿತ ನೀರು ಹಾಲಾಗಿ ಕಾಣುತ್ತದೆ. ಅಲ್ಲದೆ, ಕೋಶಗಳು ನಾಶವಾಗಿರುವುದರಿಂದ ಸಹಜವಾಗಿ ನೀರನ್ನು ಮೇಲೆಕ್ಕೆ ಒಯ್ಯಲಾಗದೆ ನೀರು ಹಾಲಿನಂತಾಗಿ ಜಿನುಗತ್ತದೆ. ಜೊತೆಗೆ ಹವಾಮಾನ ವೈಪರೀತ್ಯವೂ ಸಹ ಈ ಪ್ರಕ್ರಿಯೆಗೆ ಕಾರಣವಾಗಿದೆ ಎನ್ನುತ್ತಾರೆ ಜೀವಶಾಸ ಉಪನ್ಯಾಸಕ ಟಿ.ಜಯರಾಂಮ್.
|
eesanje/url_46_96_9.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಹಾಲಿನ ದರ ಹೆಚ್ಚಳ ಮಾಡಿಲ್ಲ, ಹೆಚ್ಚುವರಿ ಹಾಲಿಗೆ 2 ರೂ. ಹೆಚ್ಚಿಸಲಾಗಿದೆ ಅಷ್ಟೇ : ಸಿಎಂ ಸ್ಪಷ್ಟನೆ
|
2 |
+
ನಂದಿನ ಹಾಲಿನ ಪ್ಯಾಕೇಟ್ ಗಳಲ್ಲಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚಳ ಮಾಡಿ, ಹೆಚ್ಚುವರಿ ಹಾಲಿಗೆ 2 ರೂ. ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಅರ್ಧಲೀಟರ್ ಹಾಲಿನ ಪ್ಯಾಕೇಟ್ ನಲ್ಲಿ ಮುಂದೆ 550 ಎಂಎಲ್ ಹಾಲು ಹಾಗೂ ಲೀಟರ್ ಪ್ಯಾಕೇಟ್ ನಲ್ಲಿ 1,050 ಎಂಎಲ್ ಹಾಲು ಸಿಗಲಿದೆ. ಹಾಲಿನ ದರ ಹೆಚ್ಚಳವಾಗಿಲ್ಲ ಎಂದು ಅವರು ಹೇಳಿದ್ದಾರೆ.
|
3 |
+
ಹಾಲು ಸಂಗ್ರಹಣಾ ಕೇಂದ್ರಗಳಲ್ಲಿ ಯಾವುದೇ ಕಾರಣಕ್ಕೂ ರೈತರು ಹೆಚ್ಚುವರಿಯಾಗಿ ತರುತ್ತಿರುವ ಹಾಲನ್ನು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಕೆಎಂಎಫ್ ಸಂಸ್ಥೆ ಪ್ಯಾಕೇಟ್ ಗಳಲ್ಲಿ ಹಾಲಿನ ಪ್ರಮಾಣವನ್ನು ಹೆಚ್ಚಳ ಮಾಡುವ ತೀರ್ಮಾನ ಮಾಡಿದೆ ಎಂದು ಅವರು ಹೇಳಿದ್ದಾರೆ.
|
4 |
+
ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಈ ಬಾರಿ ಹಾಲಿನ ಉತ್ಪಾದನೆ ಶೇ.15 ಹೆಚ್ಚಳವಾಗಿದೆ. ಹಿಂದಿನ ವರ್ಷಗಳಲ್ಲಿ ಈ ವೇಳೆಗೆ ನಿತ್ಯ ಸರಾಸರಿ 90 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣ ಈ ಬಾರಿ ಸರಾಸರಿ 99 ಲಕ್ಷ ಲೀಟರ್ ಗೆ ಏರಿಕೆಯಾಗಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುವ ಹಾಲನ್ನು ರೈತರಿಂದ ಖರೀದಿ ಮಾಡಬೇಕು, ಯಾವುದೇ ಕಾರಣಕ್ಕೂ ಅವರಿಂದ ಹಾಲು ಪಡೆಯಲು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಒಂದು ಲೀಟರ್ ಹಾಲಿನ ಪ್ಯಾಕೇಟಿಗೆ ಹೆಚ್ಚುವರಿಯಾಗಿ 50 ಮಿ.ಲೀ ಹಾಲನ್ನು ಸೇರಿಸಿ, ಈ ಹೆಚ್ಚುವರಿ ಹಾಲಿನ ಬೆಲೆ 2 ರೂಪಾಯಿಯನ್ನು ಮಾತ್ರ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆ. ಹಾಲಿನ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿರುವುದಿಲ್ಲ.
|
5 |
+
ಈವರೆಗೆ 1,000 ಮಿ.ಲೀ ಹಾಲಿಗೆ ರೂ.42 ಹಾಗೂ 500 ಮಿ.ಲೀ ಹಾಲಿಗೆ ರೂ.22 ದರವನ್ನು ನಿಗದಿಪಡಿಸಲಾಗಿತ್ತು, ಇನ್ನು ಮುಂದೆ 1,050 ಮಿ.ಲೀ ಹಾಗೂ 550 ಮಿ.ಲೀ ಹಾಲಿನ ಪ್ಯಾಕೇಟ್ ಗಳನ್ನು ಮಾರಾಟ ಮಾಡಲಾಗುತ್ತಿದ್ದು, ಅದಕ್ಕೆ ಕ್ರಮವಾಗಿ ರೂ.44 ಹಾಗೂ ರೂ.24 ದರ ನಿಗದಿಪಡಿಸಲಾಗುತ್ತದೆ. ಇದು ನಾಡಿನ ಲಕ್ಷಾಂತರ ಹೈನುಗಾರರ ಹಿತದೃಷ್ಟಿಯಿಂದ ಕೆ.ಎಂ.ಎಫ್ ಸಂಸ್ಥೆಯು ತೆಗೆದುಕೊಂಡ ನಿರ್ಣಯವಾಗಿದ್ದು, ಹೆಚ್ಚುವರಿಯಾಗಿ ಉದ್ಪಾದನೆಯಾಗುತ್ತಿರುವ ಹಾಲನ್ನು ಗ್ರಾಹಕರಿಗೆ ನೇರವಾಗಿ ತಲುಪಿಸುವ ಸದುದ್ದೇಶವನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.
|
6 |
+
ಈಗಾಗಲೇ ಗರಿಷ್ಟ ಪ್ರಮಾಣದ ಹಾಲನ್ನು ಹಾಲಿನ ಪೌಡರ್ ತಯಾರಿಕೆ ಮಾಡುವ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತಿದೆ. ನಿತ್ಯ ಸುಮಾರು 30 ಲಕ್ಷ ಲೀಟರ್ ಹಾಲು ಪೌಡರ್ ತಯಾರಿಕೆಗಾಗಿ ಬಳಸಲ್ಪಡುತ್ತಿದ್ದು, 250 ಮೆಟ್ರಿಕ್ ಟನ್ ಹಾಲಿನ ಪೌಡರ್ ತಯಾರಿಸಲಾಗುತ್ತಿದೆ. ಇದು ಹಾಲಿನ ಪೌಡರ್ ಗೆ ಇರುವ ಬೇಡಿಕೆಗೆ ಅನುಗುಣವಾಗಿದೆ.
|
7 |
+
ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ವೇಳೆ ರಾಜ್ಯದಲ್ಲಿ ನಿತ್ಯ ಸರಾಸರಿ 72 ಲಕ್ಷ ಲೀಟರ್ ಗಳಷ್ಟು ಹಾಲು ಸಂಗ್ರಹವಾಗುತ್ತಿತ್ತು. ಈ ಹಿಂದೆ ಹಾಲಿನ ಬೆಲೆಯಲ್ಲಿ ರೂ.3 ಹೆಚ್ಚಳ ಮಾಡಿ ಆ ಹೆಚ್ಚುವರಿ ಹಣವನ್ನು ರೈತರಿಗೆ ನೇರವಾಗಿ ವರ್ಗಾಯಿಸುವ ಪ್ರೋತ್ಸಾಹದಾಯಕ ಕ್ರಮ ಕೈಗೊಂಡಿದ್ದರಿಂದ ಹೈನೋದ್ಯಮವು ಹಿಂದಿಗಿಂತ ಲಾಭ ತಂದುಕೊಡುವ ಉದ್ಯೋಗವಾಯಿತು ಜೊತೆಗೆ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಜಾನುವಾರುಗಳಿಗೆ ಹಸಿರು ಮೇವು ಲಭ್ಯವಾಗುತ್ತಿದೆ. ಈ ಎರಡು ಕಾರಣಗಳಿಂದಾಗಿ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಇಂದು ನಿತ್ಯ ಸರಿಸುಮಾರು 1 ಕೋಟಿ ಲೀಟರ್ ತಲುಪುವ ಹಂತಕ್ಕೆ ಬಂದಿದೆ ಎಂದು ಅವರು ವಿವರಿಸಿದ್ದಾರೆ.
|
8 |
+
ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತಿರುವ ಹಾಲನ್ನು ರೈತರಿಂದ ಖರೀದಿಸಿ, ಗ್ರಾಹಕರಿಗೂ ಹೊರೆಯಾಗದ ರೀತಿಯಲ್ಲಿ ಮಾರಾಟ ಮಾಡುವ ಸಲುವಾಗಿ ಕೆ.ಎಂ.ಎಫ್ ಸಂಸ್ಥೆ ಈ ನಿರ್ಧಾರ ಕೈಗೊಂಡಿದೆ ಎಂದು ಅವರು ಹೇಳಿದ್ದಾರೆ.
|
eesanje/url_46_97_1.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಡಿಕೆಶಿಗೆ ಅವರಿಗೆ ನಾನು ಆಭಾರಿಯಾಗಿದ್ದೇನ : ಎಚ್ಡಿಕೆ ವ್ಯಂಗ್ಯ
|
2 |
+
ನವದೆಹಲಿ, ಜೂ.25-ಜನರ ಕುಂದು-ಕೊರತೆ ಆಲಿಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚನ್ನಪಟ್ಟಣ ಪ್ರವಾಸ ಕೈಗೊಂಡಿರುವುದಕ್ಕೆ ಆಭಾರಿಯಾಗಿದ್ದೇನೆ ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಕ್ಷೇತ್ರಕ್ಕೆ ಶಿವಕುಮಾರ್ ಹೋಗಿದ್ದಾರೆ.
|
3 |
+
ಜನರ ಸಂಕಷ್ಟ ಏನೆಂಬುದನ್ನು ಕೇಳಲಿ. ನಾನು ರಾಜಕಾರಣಕ್ಕೆ ಬಂದಿದ್ದು ತಡವಾಗಿದೆ ನಿಜ. ಕುಮಾರಸ್ವಾಮಿ ಅವರಿಗಿಂತ ನಾನೇ ಹಿರಿಯ ಎಂದು ಶಿವಕುಮಾರ್ ಹೇಳಿದ್ದಾರೆ ಎಂದರು.ಚನ್ನಪಟ್ಟಣ ಮತ್ತು ನನ್ನ ನಡುವಿನ ಸಂಬಂಧ ಈಗ ಪ್ರಾರಂಭವಾಗಿಲ್ಲ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು 1985ರಲ್ಲಿ ಸ್ಪರ್ಧಿಸಿದಾಗ ನಾನು ಚುನಾವಣೆ ಉಸ್ತುವಾರಿ ವಹಿಸಿದೆ.
|
4 |
+
ಆಗ ದೇವೇಗೌಡರ ಬದಲು ನಾನೇ ಸಾತನೂರಿನಲ್ಲಿ ಸ್ಪರ್ಧೆ ಮಾಡಿದ್ದರೆ, 1989ರಲ್ಲಿ ಶಿವಕುಮಾರ್ ಶಾಸಕರಾಗುತ್ತಿರಲಿಲ್ಲ ಎಂದು ಹೇಳಿದರು.ನಮ್ಮ ತಂದೆಯವರು ತೆರವು ಮಾಡಿದ ಸಾತನೂರು ಕ್ಷೇತ್ರದ ಸ್ಪರ್ಧೆಗೆ ಒಪ್ಪಿಗೆ ಕೊಟ್ಟಿದ್ದರೆ ನಾನೇ ಸ್ಪರ್ಧೆ ಮಾಡಿ ಶಾಸಕನಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ವಿಚಾರದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದರು.
|
eesanje/url_46_97_10.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಜಿ.ಪಂ., ತಾ.ಪಂ. ಚುನಾವಣೆ ವಿಳಂಬ : ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ದಾಖಲಿಸಿದ ಚುನಾವಣಾ ಆಯೋಗ
|
2 |
+
ಬೆಂಗಳೂರು,ಜೂ.25-ನ್ಯಾಯಾಲಯಕ್ಕೆ ನೀಡಿದ ಭರವಸೆಯಂತೆ ನಿಗದಿತ ಅವಽಯಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲು ಅಂತಿಮಗೊಳಿಸದ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ಆರೋಪದಡಿ ಪ್ರಕರಣ ದಾಖಲಿಸಿದೆ.
|
3 |
+
ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠ ನಿನ್ನೆ ವಿಚಾರಣೆ ನಡೆಸಿದ್ದು, ಸರ್ಕಾರ ತನ್ನ ವಾದ ಮಂಡಿಸಲು ಕಾಲಾವಕಾಶ ಕೋರಿದೆ. ಅದರಂತೆ ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿದೆ.
|
4 |
+
ಅರ್ಜಿ ವಿಚಾರಣೆ ವೇಳೆ ರಾಜ್ಯ ಚುನಾವಣಾ ಆಯೋಗದ ಪರವಾದ ಮಂಡಿಸಿದ ಹಿರಿಯ ವಕೀಲ ಕೆ.ಎನ್.ಣೀಂದ್ರ, ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ಸರ್ಕಾರ ನಡೆದುಕೊಂಡಿಲ್ಲ. ಆದ್ದರಿಂದ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
|
5 |
+
ಈ ವೇಳೆ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವಕೇಟ್ ಜನರಲ್ ಪ್ರತಿಮಾ ಹೊನ್ನಾಪುರ, ಈ ವಿಚಾರವಾಗಿ ಅಡ್ವಕೇಟ್ ಜನರಲ್ ವಾದ ಮಂಡಿಸಲಿದ್ದಾರೆ. ಹಾಗಾಗಿ, ಕಾಲಾವಕಾಶ ನೀಡಬೇಕು ಎಂದು ಕೋರಿದರು. ಮನವಿ ಪರಿಗಣಿಸಿದ ನ್ಯಾಯಪೀಠ, ವಿಚಾರಣೆಯನ್ನು ಜು.11ಕ್ಕೆ ಮುಂದೂಡಿತು.
|
6 |
+
ಭರವಸೆ ನೀಡಿದ್ದ ಸರ್ಕಾರ:ಈ ಹಿಂದೆ ಶೀಘ್ರವಾಗಿ ಚುನಾವಣೆ ನಡೆಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಕೊಡಗು ಜಿಲ್ಲೆ ಹೊರತುಪಡಿಸಿ ಉಳಿದ 30 ಜಿಲ್ಲೆಗಳ ಕ್ಷೇತ್ರ ಪುನರ್ವಿಂಗಡಣೆ ಅಧಿಸೂಚನೆಯನ್ನು ಡಿಸೆಂಬರ್ 19ರಂದು ಪ್ರಕಟಿಸಲಾಗುವುದು. ಮುಂದಿನ ಏಳು ದಿನಗಳಲ್ಲಿ ಕೊಡಗು ಜಿಲ್ಲೆಯ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ ಪ್ರಕಟಿಸಲಾಗುವುದು. ಅದಾದ ಏಳು ದಿನಗಳಲ್ಲಿ ಮೀಸಲಾತಿ ಕರಡು ಅಽಸೂಚನೆ ಹೊರಡಿಸಲಾಗುವುದು ಎಂದು ಹೈಕೋರ್ಟ್ಗೆ ಭರವಸೆ ನೀಡಿತ್ತು.
|
7 |
+
ಅಲ್ಲದೇ, ಮೀಸಲು ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶ ನೀಡಲಾಗುವುದು. ಅದಾದ ಎರಡು ವಾರಗಳಲ್ಲಿ ಮೀಸಲಾತಿ ಅಂತಿಮಗೊಳಿಸಲಾಗುವುದು ಎಂದು ರಾಜ್ಯಸರ್ಕಾರ 2023 ರ ಡಿ.19 ರಂದು ಉಚ್ಛ ನ್ಯಾಯಾಲಯಕ್ಕೆ ಭರವಸೆ ನೀಡಿತ್ತು. ಭರವಸೆಯಂತೆ ನಡೆದುಕೊಳ್ಳದಿದ್ದರೆ ಚುನಾವಣಾ ಆಯೋಗ ನ್ಯಾಯಾಲಯದ ಮೊರೆ ಹೋಗಬಹುದು ಎಂದು ಹೇಳಿತ್ತು.
|
eesanje/url_46_97_11.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
“ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಟಿ ಕುರಿತ ಚರ್ಚೆಯಿಂದ ಕೆಲವರಿಗೆ ಖುಷಿಯಾಗುತ್ತಿದೆ, ಅದಕ್ಕೆ ನಾನೇಕೆ ಅಡ್ಡಿಪಡಿಸಲಿ”
|
2 |
+
ಮಂಗಳೂರು, ಜೂ.25-ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಗೆ ನಡೆಯುತ್ತಿರುವ ಚರ್ಚೆಯಿಂದ ಕೆಲವರಿಗೆ ಖುಷಿಯಾಗುತ್ತಿದೆ. ಅದಕ್ಕೆ ನಾನೇಕೆ ಅಡ್ಡಿಪಡಿಸಲಿ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ವಿಚಾರವಾಗಿ ಚರ್ಚೆಯಾಗಿದೆ. ಪ್ರಚಾರ ಸಿಗುತ್ತದೆ. ಹೀಗಾಗಿ ಈ ಬಗ್ಗೆ ಎಲ್ಲರೂ ಪ್ರತಿಕ್ರಿಯೆ ನೀಡುತ್ತಾರೆ. ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿ ಅಗತ್ಯತೆ ಇದೆಯೋ, ಇಲ್ಲವೋ ಎಂಬ ಬಗ್ಗೆ ಪಕ್ಷ ನಿರ್ಧರಿಸುತ್ತದೆ.
|
4 |
+
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅಥವಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಲಿದ್ದಾರೆ ಎಂದು ಹೇಳಿದರು.
|
5 |
+
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ದೊಡ್ಡದೊಡ್ಡವರು ಶಾಸಕರಾಗಿ ಅಧಿಕಾರ ಅನುಭವಿಸಿದ್ದಾರೆ. ಆದರೆ ಕ್ಷೇತ್ರಕ್ಕೆ ಅಭಿವೃದ್ಧಿ ಕೆಲಸಗಳಾಗಿಲ್ಲ. ನಾನು ಆ ಜಿಲ್ಲೆಯವನು. ಈ ಮೊದಲು ನಾನು ಸ್ಪರ್ಧಿಸಿದ್ದ ಸಾತನೂರು ಕ್ಷೇತ್ರದ ಬಹುಭಾಗ ಚನ್ನಪಟ್ಟಣ ತಾಲ್ಲೂಕಿಗೆ ಸೇರಿತ್ತು. ಜನ ಅವಕಾಶ ಕೊಟ್ಟಿದ್ದಾರೆ. ಕ್ಷೇತ್ರಕ್ಕೆ ಸಹಾಯ ಮಾಡಬೇಕೆಂಬುದು ತಮ ಇರಾದೆ ಎಂದರು.
|
6 |
+
ಬಡವರಿಗೆ ಸಹಾಯ ಮಾಡುವುದು ನಮ ಉದ್ದೇಶ. ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಲು ತಮ ಸಹೋದರನಿಗೆ ಆಸಕ್ತಿಯಿಲ್ಲ. ಜನ ವಿಶ್ರಾಂತಿ ಪಡೆಯಲು ಆದೇಶ ನೀಡಿದ್ದಾರೆ. ಅದರಂತೆ ವಿಶ್ರಾಂತಿಯಲ್ಲಿದ್ದಾರೆ. ಅಭ್ಯರ್ಥಿ ಯಾರು ಎಂಬುದನ್ನು ಪಕ್ಷ ನಿರ್ಧರಿಸಲಿದೆ.ಡಿ.ಕೆ.ಸುರೇಶ್ರವರು ಪಕ್ಷದ ಕೆಲಸ ಮಾಡಬೇಕು ಎಂಬ ಆಸಕ್ತಿ ಹೊಂದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ 80 ಸಾವಿರ ಮತ ನೀಡಿದ್ದಾರೆ. ಹೀಗಾಗಿ ನಂಬಿದವರ ಕೈಬಿಡಬಾರದು ಎಂಬುದು ನಮ ಉದ್ದೇಶ ಎಂದರು.
|
7 |
+
ಯಾವತ್ತೂ ಇಲ್ಲದವರು ಈಗ ಚನ್ನಪಟ್ಟಣಕ್ಕೆ ಬರುತ್ತಿದ್ದಾರೆ ಎಂದು ಎಚ್.ಡಿ.ಕುಮಾರಸ್ವಾಮಿಯವರು ಮಾಡಿದ ಟೀಕೆಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಎಚ್.ಡಿ.ಕುಮಾರಸ್ವಾಮಿ ಚನ್ನಪಟ್ಟಣ ನೋಡುವ ಮೊದಲೇ ನಾನು ನೋಡಿದ್ದೇನೆ. ಅವರಿಗಿಂತ ಮೊದಲೇ ನಾನು ರಾಜಕೀಯಕ್ಕೆ ಬಂದವನು.
|
8 |
+
1985 ರಲ್ಲಿ ನಾನು ಕುಮಾರಸ್ವಾಮಿಯವರ ತಂದೆ ಎಚ್.ಡಿ.ದೇವೇಗೌಡರ ವಿರುದ್ಧ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೆ. 1995 ರಲ್ಲಿ ಕುಮಾರಸ್ವಾಮಿ ರಾಜಕೀಯಕ್ಕೆ ಬಂದರು ಎಂದು ಹೇಳಿದ್ದಾರೆ.ನಾವು ಹಿಂದೂ ಧರ್ಮ ಪಾಲನೆ ಮಾಡುತ್ತೇವೆ. ಧರ್ಮ, ಸಂಸ್ಕೃತಿ ಪಾಲನೆ ನಮ ಹಕ್ಕು. ಹೀಗಾಗಿ ಕುಟುಂಬ ಸಮೇತರಾಗಿ ಸುಬ್ರಹಣ್ಯ ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ಸ್ಪಷ್ಟಪಡಿಸಿದರು.
|
eesanje/url_46_97_12.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ರಾಮನಗರಕ್ಕೆ ಕಾವೇರಿ ನೀರಿನ ಕನಸು ನನಸಾಗಿದೆ : ಹೆಚ್ಡಿಕೆ
|
2 |
+
ಬೆಂಗಳೂರು, ಜೂ.25– ರಾಮನಗರ ಜಿಲ್ಲೆಗೆ ಕಾವೇರಿ ನದಿಯಿಂದ ಕುಡಿಯುವ ನೀರು ಪೂರೈಸುವ ಕನಸು ನನಸಾಗಿದೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
|
3 |
+
ಈ ಸಂಬಂಧ ಎಕ್್ಸನಲ್ಲಿ ಪೋಸ್ಟ್ ಮಾಡಿರುವ ಅವರು, ರಾಮನಗರ ಜಿಲ್ಲೆಗೆ ಕಾವೇರಿ ತಾಯಿ ಪದಾರ್ಪಣೆ ಮಾಡಿದ್ದಾಳೆ. ಈ ನೆಲದ ಜನರ ಕನಸು ನನಸಾಗಿದೆ ಎಂದು ಹೇಳಿದ್ದಾರೆ.
|
4 |
+
ಕಳೆದ 2018ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ 458 ಕೋಟಿ ರೂ. ವೆಚ್ಚದಲ್ಲಿ ಟಿ.ಕೆ.ಹಳ್ಳಿಯಿಂದ ರಾಮನಗರ ಜಿಲ್ಲೆಗೆ ಕಾವೇರಿ ನೀರು ಪೂರೈಸುವ ಮಹತ್ವಾಕಾಂಕ್ಷಿ ಯೋಜನೆಗೆ ಅನುಮೋದನೆ ನೀಡಿದ್ದೆ.
|
5 |
+
ಈ ಯೋಜನೆ ಇದೀಗ ಸಾಕಾರಗೊಂಡಿದ್ದು, ಪ್ರಾಯೋಗಿಕವಾಗಿ ಬೋಳಪ್ಪನಹಳ್ಳಿ ಗುಡ್ಡಕ್ಕೆ ಕಾವೇರಿ ನೀರು ಹರಿದು ಬಂದಿದೆ ಎಂದಿದ್ದಾರೆ.ಇದು ನನಗಷ್ಟೇ ಅಲ್ಲ, ಇಡೀ ಜಿಲ್ಲೆಯ ಜನರ ಸಂಭ್ರಮಕ್ಕೆ ಕಾರಣವಾಗಿದೆ. ನನಗೆ ರಾಜಕೀಯ ಜನ ಕೊಟ್ಟ ಈ ನೆಲದ ಋಣ ತೀರಿಸಲು ಮತ್ತಷ್ಟು ಶ್ರಮಿಸುತ್ತೇನೆ ಎಲ್ಲರಿಗೂ ಶುಭವಾಗಲಿ ಎಂದು ತಿಳಿಸಿದ್ದಾರೆ.
|
eesanje/url_46_97_2.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಪ್ರಜ್ವಲ್ ಪೆನ್ಡ್ರೈವ್ ಪ್ರಕರಣದಲ್ಲಿ ಪ್ರೀತಂಗೌಡಗೆ ನೋಟಿಸ್ ಸಾಧ್ಯತೆ..?
|
2 |
+
ಬೆಂಗಳೂರು, ಜೂ.25– ಮಾಜಿ ಶಾಸಕ, ಬಿಜೆಪಿ ಮುಖಂಡ ಪ್ರೀತಂಗೌಡ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಯಾವುದೇ ಕ್ಷಣದಲ್ಲಾದರೂ ಎಸ್ಐಟಿ ನೋಟಿಸ್ ನೀಡಲಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯದ ವಿಡಿಯೋ ಮಾಡಿ ವೈರಲ್ ಮಾಡಿರುವ ಬಗ್ಗೆ ಸಿಐಡಿಯಲ್ಲಿ ಪ್ರಕರಣ ದಾಖಲಾಗಿದೆ.
|
3 |
+
ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಬಿಜೆಪಿ ಮುಖಂಡ ಪ್ರೀತಂಗೌಡ, ಆಪ್ತರಾದ ಕಿರಣ್, ಶರತ್ ವಿರುದ್ಧ ಸಿಐಡಿ ಸೈಬರ್ ಕ್ರೈಮ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಪೆನ್ಡ್ರೈವ್ ಖರೀದಿ ಮಾಡಿಸಿ ಹಂಚಿಸಿದ್ದ ಆರೋಪ ಪ್ರೀತಂಗೌಡ ಅವರ ಮೇಲಿದೆ. ಹಾಗಾಗಿ ಎಸ್ಐಟಿ ನೋಟಿಸ್ ನೀಡುವ ಸಾಧ್ಯತೆ ಇದೆ.
|
4 |
+
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಸನ ಜಿಲ್ಲೆಯಾದ್ಯಂತ ಪ್ರಜ್ವಲ್ ರೇವಣ್ಣಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಹರಿದಾಡಿದ್ದವು.ಈ ಪ್ರಕರಣ ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಹೆಚ್ಚಿನ ತನಿಖೆಗಾಗಿ ಎಸ್ಐಟಿ ತನಿಖೆ ಮಾಡಿದೆ.
|
eesanje/url_46_97_3.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ನಿರ್ಮಾಪಕ ಉಮಾಪತಿಗೌಡಗೆ ಬೆದರಿಕೆ ಹಾಕಿದ್ದ ದರ್ಶನ್ ಅಭಿಮಾನಿ ಬಂಧನ, ಬಿಡುಗಡೆ
|
2 |
+
ಬೆಂಗಳೂರು, ಜೂ.25– ನಿರ್ಮಾಪಕ ಉಮಾಪತಿ ಗೌಡ ಅವರಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ನಟ ದರ್ಶನ್ ಅಭಿಮಾನಿಯೊಬ್ಬನನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದ್ದಾರೆ.
|
3 |
+
ಕಮಲಾನಗರದ ನಿವಾಸಿ ಚೇತನ್(36) ಎಂಬಾತನನ್ನು ಬಂಧಿಸಿ ಬಿಡುಗಡೆ ಮಾಡಲಾಗಿದೆ. ಈತ ದರ್ಶನ್ ಅಭಿಮಾನಿ. ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಬಂಧಿತರಾದ ನಂತರ ಉಮಾಪತಿ ಗೌಡ ಪ್ರತಿಕ್ರಿಯೆ ನೀಡಿದ್ದಕ್ಕೆ ಈತ ಕೋಪಗೊಂಡಿದ್ದನು.
|
4 |
+
ಸಾಮಾಜಿಕ ಜಾಲತಾಣದಲ್ಲಿ ಉಮಾಪತಿ ಅವರಿಗೆ ಬೆದರಿಕೆ ಹಾಕಿದ್ದನು. ಅಲ್ಲದೆ, ದರ್ಶನ್ ಅಭಿಮಾನಿಗಳನ್ನು ಪ್ರಚೋದಿಸುತ್ತಿದ್ದನು. ಈ ಬಗ್ಗೆ ಉಮಾಪತಿ ಗೌಡ ಅವರು ಬಸವೇಶ್ವರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಕಮಲಾನಗರದ ಚೇತನ್ನನ್ನು ಬಂಧಿಸಿ ವಿಚಾರಣೆಗೊಳಪಡಿಸಿ ನಂತರ ಬಿಡುಗಡೆ ಮಾಡಿದ್ದಾರೆ.
|
eesanje/url_46_97_4.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ರೇಣುಕಾಸ್ವಾಮಿ ಕೊಲೆ ಪ್ರಕರಣ ಚಾರ್ಜ್ಶೀಟ್ ಸಲ್ಲಿಕೆಗೆ ಪೊಲೀಸರ ಸಿದ್ಧತೆ
|
2 |
+
ಬೆಂಗಳೂರು, ಜೂ.25-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಇತರರು ಈಗಾಗಲೇ ಪರಪ್ಪನ ಅಗ್ರಹಾರ ಕಾರಾಗೃಹ ಸೇರಿದ್ದು, ಇತ್ತ ವಿಜಯನಗರ ಉಪವಿಭಾಗದ ಪೊಲೀಸರು ಆದಷ್ಟು ಶೀಘ್ರ ಚಾರ್ಜ್ಶೀಟ್ ಸಲ್ಲಿಕೆಗೆ ತಯಾರಿ ನಡೆಸುತ್ತಿದ್ದಾರೆ.
|
3 |
+
ಪೊಲೀಸರು ವಿಶ್ರಾಂತಿ ಪಡೆಯದೆ ತಮಗಿರುವ ಸಮಯಾ ವಕಾಶದಲ್ಲಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಲು ಶರವೇಗದಲ್ಲಿ ಹಲವು ಹೊಸ ಸಾಕ್ಷ್ಯಗಳನ್ನು ಸಂಗ್ರಹಿಸಲು ಹಗಲಿರುಳೆನ್ನದೆ ಶ್ರಮಿಸುತ್ತಿದ್ದಾರೆ.
|
4 |
+
ತಂಡ ರಚನೆ:ಪೊಲೀಸರು ಪ್ರತ್ಯೇಕ ತಂಡಗಳನ್ನಾಗಿ ರಚಿಸಿಕೊಂಡು ಪರಸ್ಪರ ಸಹಕಾರದೊಂದಿಗೆ ಕರ್ತವ್ಯದಲ್ಲಿ ತೊಡಗಿದ್ದಾರೆ.ಈಗಾಗಲೇ ದರ್ಶನ್ ಹಾಗೂ ಆತನ ಗ್ಯಾಂಗ್ಅನ್ನು ಬಂಧಿಸಿ ಸತತ 12 ದಿನಗಳ ಕಾಲ ತಮ ಕಸ್ಟಡಿಗೆ ಪಡೆದು ವಿಚಾರಣೆಗೆ ಒಳಪಡಿಸಿ ಸಾಕಷ್ಟು ಹೇಳಿಕೆಗಳನ್ನು ದಾಖಲಿಸಿ ಬರೋಬ್ಬರಿ 139 ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.
|
5 |
+
ಸದ್ಯ ಆರೋಪಿಗಳೆಲ್ಲರೂ ನ್ಯಾಯಂಗ ಬಂಧನದ ಬಳಿಕವೂ ಈ ಪ್ರಕರಣಕ್ಕೆ ಸಂಬಂಧಿಸಿದ ಮತ್ತಷ್ಟು ಸಾಕ್ಷ್ಯಗಳನ್ನು ಕಲೆ ಹಾಕುತ್ತಿದ್ದಾರೆ.ಈ ಪ್ರಕರಣವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಕಾರ್ಯಪ್ರವೃತ್ತರಾಗಿದ್ದು, ಒಂದು ತಂಡ ಆನ್ಫೀಲ್್ಡನಲ್ಲಿ ಇನ್ನೊಮೆ ಸಾಕ್ಷ್ಯ ಸಂಗ್ರಹಿಸುತ್ತಿದ್ದರೆ, ಮತ್ತೊಂದು ತಂಡ ಡಿಜಿಟಲ್ ಸಾಕ್ಷ್ಯ, ಇನ್ನೊಂದು ತಂಡ ಪೇಪರ್ ವರ್ಕ್ ಮತ್ತು ಚಾರ್ಜ್ಶೀಟ್ ತಯಾರಿಯಲ್ಲಿ ನಿರತವಾಗಿದೆ.
|
6 |
+
ಅನುಭವಿಗಳ ನೆರವು:ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ತಯಾರಿಕೆಗೆ ಕೆಲವು ಅನುಭವಿಗಳ ನೆರವನ್ನೂ ಸಹ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
|
7 |
+
ಟೆಕ್ನಿಕಲ್ ಸಾಕ್ಷ್ಯ:ಇದರ ನಡುವೆ ಮಹತ್ವದ ಟೆಕ್ನಿಕಲ್ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿರುವ ತನಿಖಾ ತಂಡಗಳು ಎಲ್ಲ 17 ಆರೋಪಿಗಳ ಮೊಬೈಲ್ಗಳ ಡಾಟಾ ರಿಟ್ರೀವ್ ಕಾರ್ಯ ನಡೆಸಲಾಗಿದೆ.ಸಿಐಡಿ ಟೆಕ್ನಿಕಲ್ ಸೆಲ್ನಲ್ಲಿ ದರ್ಶನ್, ಪವಿತ್ರಾಗೌಡ, ಪವನ್ ಹಾಗೂ ವಿನಯ್ ಮೊಬೈಲ್ ಸೇರಿದಂತೆ ಇನ್ನೂ ಕೆಲವು ಆರೋಪಿಗಳ ಮೊಬೈಲ್ ಡೇಟಾ ರಿಟ್ರೀವ್ ನಡೆಸಿ ಸಾಕ್ಷ್ಯಗಳ ಸಂಗ್ರಹ ಕಾರ್ಯ ತ್ವರಿತಗತಿಯಲ್ಲಿ ನಡೆಯುತ್ತಿದೆ.
|
8 |
+
ಸಿಸಿಟಿವಿ ದೃಶ್ಯ ಸಂಗ್ರಹ:ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಸಿಟಿವಿ ದೃಶ್ಯಾವಳಿಗಳು ಸಹ ಮಹತ್ವದ ಕಾರ್ಯ ನಿರ್ವಹಿಸಿದ್ದು, ಅದರಲ್ಲಿನ ದೃಶ್ಯಗಳ ಸಂಗ್ರಹದಲ್ಲಿ ತನಿಖಾ ತಂಡ ತೊಡಗಿದೆ.ಇದುವರೆಗೂ 62 ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಂಗ್ರಹಿಸಲಾಗುತ್ತಿದೆ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿ ಪಟ್ಟಣಗೆರೆ ಶೆಡ್ಗೆ ಕರೆತಂದ ಮಾರ್ಗಗಳಲ್ಲಿನ ಸಿಸಿ ಕ್ಯಾಮೆರಾಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.
|
9 |
+
ಅಲ್ಲದೆ, ಪಟ್ಟಣಗೆರೆ ಶೆಡ್ನಿಂದ ಸು���ನಹಳ್ಳಿ, ರಾಜಕಾಲುವೆವರೆಗೂ ರೇಣುಕಾಸ್ವಾಮಿ ಶವ ಸಾಗಿಸಲಾದ ಮಾರ್ಗದಲ್ಲಿನ 36 ಸಿಸಿಟಿವಿ ದೃಶ್ಯಗಳ ಸಂಗ್ರಹ ಮಾಡಲಾಗಿದೆ. ಮೃತದೇಹ ತೆಗೆದುಕೊಂಡು ಹೋಗಿದ್ದ ಕಾರ್ತಿಕ್ ಮತ್ತು ಆತನ ತಂಡದ ಒಂದು ಕಾರನ್ನು ಪ್ರದೋಶ್ ಮತ್ತು ವಿನಯ್ ತಂಡ ಹಿಂದೆ ಹಿಂಬಾಲಿಸಿಕೊಂಡು ಬಂದಿದ್ದರು.
|
10 |
+
ಪಟ್ಟಣಗೆರೆ ಶೆಡ್ನಿಂದ ಆರ್ಆರ್ ನಗರ ಮುಖ್ಯಸ್ತೆಯಿಂದ ನಾಯಂಡಹಳ್ಳಿ ಜಂಕ್ಷನ್ಗೆ ಬಂದಿದ್ದ ಕಾರುಗಳು, ನಾಯಂಡಹಳ್ಳಿಯಿಂದ ಸುಮನಹಳ್ಳಿ ಮಾರ್ಗವಾಗಿ ಆರೋಪಿಗಳು ಹೋಗಿದ್ದರು.ಸುಮನಹಳ್ಳಿ ಮಾರ್ಗವಾಗಿ ನೇರವಾಗಿ ಹೋಗಿ ರಾಜ್ಕುಮಾರ್ ರಸ್ತೆ ಕಡೆಗೆ ಕಾರನ್ನು ತಿರುಗಿಸಿಕೊಂಡಿದ್ದರು. ನಂತರ ಸುಮನಹಳ್ಳಿ ಬ್ರಿಡ್್ಜನ ರಾಜಕಾಲುವೆ ಬಳಿ ತಲುಪಿದ್ದರು.ಇಲ್ಲಿನ ಅಪಾರ್ಟಮೆಂಟ್ ರಸ್ತೆಯಲ್ಲಿ ಹೋಗಿ ಯು ಟರ್ನ್ ತೆಗೆದುಕೊಂಡು ಮುಂದೆ ಸಾಗಿ ರಸ್ತೆ ಕೊನೆಗೆ ಹೋಗಿ ಮತ್ತೆ ಯು ಟರ್ನ್ ತೆಗೆದುಕೊಂಡಾಗ ಮೊದಲು ಹೋಗಿದ್ದ ಪ್ರದೋಶ್ ಮತ್ತು ವಿನಯ್ ಕಾಲುವೆಗೆ ಮೊಬೈಲ್ ಬಿಸಾಡಿದ್ದ.
|
11 |
+
ಆ ಬಳಿಕ ಮೃತದೇಹ ತೆಗೆದುಕೊಂಡು ಹಿಂದೆ ಬರುತ್ತಿದ್ದ ಆರೋಪಿಗಳು ರಾಜಕಾಲುವೆಗೆ ಎಸೆದು ಪರಾರಿಯಾಗುವಾಗ ಒಂದೇ ದಾರಿಯಲ್ಲಿ ಹೋಗಿ ಬರುವಾಗ ಬದಲಿ ಮಾರ್ಗಗಳನ್ನು ಬದಲಿಸಿದ್ದುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಈ ಪ್ರಕರಣದಲ್ಲಿ ಆರೋಪಿಗಳ ಬಂಧನದ ವೇಳೆ ಹಾಗೆಯೇ ತನಿಖೆ ಸಮಯದಲ್ಲಿಯೂ ಸಾಕಷ್ಟು ಒತ್ತಡಗಳು ಬಂದಿದ್ದವು. ಹಾಗಾಗಿ ಇದನ್ನೆಲ್ಲ ಪರಿಗಣಿಸಿ ಆದಷ್ಟು ಶೀಘ್ರದಲ್ಲಿ ಚಾರ್ಜ್ಶೀಟ್ ಹಾಕಲು ಸಿದ್ಧತೆ ನಡೆಸಲಾಗುತ್ತಿದೆ.
|
12 |
+
ತಮಗೆ ದೊರೆತಿರುವ 50 ರಿಂದ 60 ದಿನಗಳೊಳಗೆ ಚಾರ್ಜ್ಶೀಟ್ ಸಿದ್ಧತೆಗೆ ಯೋಜನೆ ಹಾಕಲಾಗಿದೆ. ಒಂದು ವೇಳೆ ಚಾರ್ಜ್ಶೀಟ್ ಸಲ್ಲಿಸಲು ತಡ ಮಾಡಿದರೆ ಸಾಕ್ಷ್ಯಗಳ ಮೇಲೆ ಆರೋಪಿಗಳು ಪ್ರಭಾವ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ವಿಜಯನಗರ ಉಪವಿಭಾಗದ ಪೊಲೀಸರು ಬಹಳ ಜಾಗರೂಕತೆಯಿಂದ ಹಗಲಿರುಳೆನ್ನದೆ ಕರ್ತವ್ಯ ನಿರತರಾಗಿದ್ದಾರೆ.
|
eesanje/url_46_97_5.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ತಕ್ಷಣವೇ ಹಾಲಿನ ದರ ಏರಿಕೆ ಹಿಂಪಡೆಯದಿದ್ದರೆ ಉಗ್ರ ಹೋರಾಟ : ಬಿಜೆಪಿ ಎಚ್ಚರಿಕೆ
|
2 |
+
ಬೆಂಗಳೂರು, ಜೂ.25-ಹೆಚ್ಚಿಸಿರುವ ಹಾಲಿನ ದರವನ್ನು ತಕ್ಷಣವೇ ಹಿಂಪಡೆಯದಿದ್ದರೆ ರಾಜ್ಯಸರ್ಕಾರದ ವಿರುದ್ಧ ರಾಜ್ಯಾದ್ಯಂತ ಬೀದಿಗಿಳಿದು ಉಗ್ರ ಹೋರಾಟ ನಡೆಸುವುದಾಗಿ ಪ್ರತಿಪಕ್ಷ ಬಿಜೆಪಿ ಎಚ್ಚರಿಕೆ ಕೊಟ್ಟಿದೆ.ಲೋಕಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಕಾಂಗ್ರೆಸ್, ಮತದಾರರ ಮೇಲಿರುವ ಸಿಟ್ಟನ್ನು ಬೆಲೆ ಏರಿಕೆ ಮಾಡುವ ಮೂಲಕ ಜನವಿರೋಧಿ ನೀತಿ ಅನುಸರಿಸುತ್ತದೆ ಎಂದು ಕಿಡಿಕಾರಿದೆ.
|
3 |
+
ಈ ಸಂಬಂಧ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಹಾಲಿನ ದರ ಹೆಚ್ಚಳ ಮಾಡಿರುವ ಸರ್ಕಾರದ ವಿರುದ್ಧ ಕೆಂಡ ಕಾರಿದ್ದಾರೆ.
|
4 |
+
ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ತಮ ಪೋಸ್ಟ್ನಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನಿಮಗೆ ಬಡವರು, ಮಾಧ್ಯಮ ವರ್ಗದ ಜನರ ಮೇಲೆ ಕಿಂಚಿತ್ತಾದರೂ ಕನಿಕರ ಇದ್ದರೆ, ಈ ಕೂಡಲೇ ಹಾಲಿನ ದರ ಏರಿಕೆ ಆದೇಶವನ್ನು ಹಿಂಪಡೆಯಿರಿ ಎಂದು ಒತ್ತಾಯಿಸಿದ್ದಾರೆ.
|
5 |
+
ತುರ್ತು ಪರಿಸ್ಥಿತಿ ಹೇರಿಕೆಯ ವಾರ್ಷಿಕೋತ್ಸವ ಸಂಭ್ರಮಿಸಲು ಕಾಂಗ್ರೆಸ್ ಸರ್ಕಾರ ನಂದಿನಿ ಹಾಲಿನ ದರವನ್ನು ಲೀಟರ್ಗೆ ಎರಡು ರೂಪಾಯಿ ಹೆಚ್ಚಳ ಮಾಡಿ ವಿಕೃತ ಸಂತೋಷ ಅನುಭವಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
|
6 |
+
ಸಿಎಂ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ಮೇಲೆ ಕೇವಲ 13 ತಿಂಗಳಿನಲ್ಲಿ ಹಾಲಿನ ದರವನ್ನು ಎರಡು ಬಾರಿ ಹೆಚ್ಚಿಸಿದ್ದೀರಿ. ಕಳೆದ ವರ್ಷ ಆಗಸ್ಟ್ನಲ್ಲಿ 3 ರೂಪಾಯಿ ಹೆಚ್ಚಳವಾಗಿದ್ದ ಹಾಲಿನ ಬೆಲೆ ಈಗ ಮತ್ತೊಮೆ 2 ರೂಪಾಯಿ ಹೆಚ್ಚಾಗಿದೆ. ರಾಜ್ಯದ ಬಡವರು, ಮಾಧ್ಯಮ ವರ್ಗದ ಜನ ಈಗಾಗಲೇ ಪೆಟೋಲ್ ಡೀಸೆಲ್ ಬೆಲೆ ಏರಿಕೆ, ಗಗನಕ್ಕೇರಿರುವ ತರಕಾರಿ ಬೆಲೆಗಳಿಂದ ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಾಲಿನ ದರ ಏರಿಸಿ ಮತ್ತೊಮೆ ಬಡವರ ಗಾಯದ ಮೇಲೆ ಬರೆ ಎಳೆದಿದ್ದೀರಿ ಎಂದು ಅಶೋಕ್ ಟೀಕಾ ಪ್ರಹಾರ ನಡೆಸಿದ್ದಾರೆ.
|
7 |
+
ಸರ್ಕಾರದ ವಿರುದ್ಧ ನಿರಂತರ ಹೋರಾಟ :ರಾಜ್ಯಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಮ ಎಕ್್ಸ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ ಕರ್ನಾಟಕ ಸರ್ಕಾರ ಜನ ಸಾಮಾನ್ಯ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು ಉಕ್ಕಿಸಲು ಮುಂದಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
|
8 |
+
ಇತ್ತ ಬಡವರಿಗೂ ಉಪಕಾರಿಯಾಗಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕೂ ಹಸನಾಗಿಸಲಿಲ್ಲ, ಇದೀಗ ನಂದಿನಿ ಹಾಲಿನ ದರ ಹೆಚ್ಚಿಸಿ ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ದರವನ್ನು 2 ರೂ 10 ಪೈಸೆ ಹೆಚ್ಚಳ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
|
9 |
+
ಈ ರಾಜ್ಯದ ಜನರ ಬದು���ಿನೊಂದಿಗೆ ಚೆಲ್ಲಾಟವಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದು ಕೊಂಡಿದೆ. ಈ ಜನವಿರೋಧಿ ಸರ್ಕಾರ ಕೆಳಗಿಳಿಸುವವರೆಗೂ ಬಿಜೆಪಿಯ ಜನಪರ ಹೋರಾಟ ನಿರಂತರ ಸಾಗಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.
|
eesanje/url_46_97_6.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಮಂಗಳಮುಖಿಯ ಕಿರುಕುಳದಿಂದ ನೊಂದ ಬಾಲಕ ಆತ್ಮಹತ್ಯೆ
|
2 |
+
ಮೈಸೂರು, ಜೂ.25– ಮಂಗಳಮುಖಿಯ ಕಿರುಕುಳದಿಂದ ನೊಂದ ಅಪ್ರಾಪ್ತ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ. ರಾಹುಲ್ ಮೌರ್ಯ (17) ಮೃತಪಟ್ಟ ಬಾಲಕ.
|
3 |
+
ಹುಣಸೂರಿನ ಕಿರಾಜಾಜಿ ಸರ್ಕಲ್ ಬಳಿ ಎಳೆನೀರು ವ್ಯಾಪಾರ ಮಾಡುತ್ತಿದ್ದ ರಾಹುಲ್ ಮೌರ್ಯಗೆ ಮಂಗಳಮುಖಿ ಜೊತೆ ಸ್ನೇಹವಾಗಿತ್ತು. ಆಗಾಗ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ರಾಹುಲ್ ಮೌರ್ಯ ಕಳೆದ ನಾಲ್ಕು ತಿಂಗಳ ಹಿಂದೆ ನಾಪತ್ತೆಯಾಗಿದ್ದನು. ಈ ನಡುವೆ ತಾಯಿ ಜೊತೆ ಫೋನ್ನಲ್ಲಿ ಮಾತನಾಡುತ್ತಿದ್ದ. ಆದರೆ ತಾನು ಇರುವ ಜಾಗ ತಿಳಿಸಿರಲಿಲ್ಲ.
|
4 |
+
ಜೂ.21ರಂದು ರಾಹುಲ್ ಮೌರ್ಯ ಊರಿಗೆ ಹಿಂದುರುಗಿದ್ದನು. ಈ ಮಧ್ಯೆ ಮಂಗಳಮುಖಿಯರು ಈತನ ಮನೆಗೆ ಬಂದು, ನಮ್ಮ ಹುಡುಗಿಯೊಬ್ಬಳನ್ನು ಕರೆದುಕೊಂಡು ಹೋಗಿದ್ದಾನೆ ಎಂದು ಜಗಳವಾಡಿದ್ದಾರೆ. ಇದರಿಂದ ನೊಂದ ರಾಹುಲ್ ಮೌರ್ಯ ಸಾವಿಗೆ ಶರಣಾಗಿದ್ದಾನೆ. ಈ ಕುರಿತು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
|
eesanje/url_46_97_7.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಹಾಲಿನ ದರ ಪ್ರತಿ ಲೀಟರ್ಗೆ 2ರೂ. ಹೆಚ್ಚಳ, ನಾಳೆಯಿಂದಲೇ ಹೊಸ ದರ ಜಾರಿ
|
2 |
+
ಬೆಂಗಳೂರು, ಜೂ.25-ಪೆಟ್ರೋಲ್, ಡೀಸೆಲ್ ದರ ಏರಿಕೆ ಬೆನ್ನಲ್ಲೇ ದಿನನಿತ್ಯ ಬಳಕೆಯ ನಂದಿನಿ ಹಾಲಿನ ದರ ಹೆಚ್ಚಳ ಮಾಡುವ ಮೂಲಕ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ನಾಳೆಯಿಂದ ತಟ್ಟಲಿದೆ.ನಂದಿನಿ ಹಾಲಿನ ಅರ್ಧ ಮತ್ತು ಒಂದು ಲೀಟರ್ ಹಾಲಿನ ಪ್ಯಾಕೆಟ್ನಲ್ಲಿ 50 ಮಿಲಿ ಹೆಚ್ಚುವರಿ ಹಾಲನ್ನು ಸೇರಿಸಿದ್ದು, ಪ್ರತಿ ಲೀಟರ್ಗೆ 2ರೂ.ನಂತೆ ನಾಳೆಯಿಂದ ಹೆಚ್ಚಳ ಮಾಡಿರುವುದಾಗಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ಅಧ್ಯಕ್ಷ ಭೀಮಾನಾಯಕ್ ತಿಳಿಸಿದ್ದಾರೆ.
|
3 |
+
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರ್ಧ ಲೀಟರ್ ಹಾಲಿನ ಪ್ಯಾಕೆಟ್ ಜತೆಗೆ 50 ಮಿಲಿ ಹಾಲನ್ನು ಹೆಚ್ಚುವರಿಯಾಗಿ ಸೇರಿಸಿದ್ದು, ಹೆಚ್ಚುವರಿ ನೀಡಲಾಗುವ ಹಾಲಿಗೆ ತಗಲುವ ವೆಚ್ಚವನ್ನು ಮಾತ್ರ ಹೆಚ್ಚಳ ಮಾಡಲಾಗಿದೆಯೇ ಹೊರತು ಹಾಲಿನ ದರದಲ್ಲಿ ಏರಿಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
|
4 |
+
ಪ್ರತಿ ಅರ್ಧ ಲೀಟರ್ ಹಾಲಿನ ಪ್ಯಾಕೆಟ್ ದರವನ್ನು 2ರೂ. ಹೆಚ್ಚಳ ಮಾಡಲಾಗಿದೆ. ಇದರಿಂದ ಗ್ರಾಹಕರಿಗೂ ಹೆಚ್ಚುವರಿ ಹಾಲು ದೊರೆತಂತಾಗಿದೆ ಎಂದು ಸಮರ್ಥಿಸಿಕೊಂಡರು. ಪ್ರತಿ ಅರ್ಧ ಲೀಟರ್ ಟೋನ್ಡ್ ಹಾಲಿನ ದರ 22 ರಿಂದ 24ರೂ., ಒಂದು ಲೀಟರ್ ಹಾಲಿನ ದರ 42 ರಿಂದ 44ರೂ., ಹೋಮೋಜಿನೈಸ್ಡ್ ಟೋನ್ಡ್ ಹಾಲಿನ ದರ ಅರ್ಧ ಲೀಟರ್ಗೆ 22 ರಿಂದ 44ರೂ., ಒಂದು ಲೀಟರ್ಗೆ 43ರೂ. ನಿಂದ 45ರೂ., ಹೋಮೋಜಿನೈಸ್ಡ್ ಹಸುವಿನ ಹಾಲು ಅರ್ಧ ಲೀಟರ್ಗೆ 24ರೂ. ನಿಂದ 26ರೂ., ಒಂದು ಲೀಟರ್ಗೆ 46ರೂ. ನಿಂದ 48ರೂ., ಸ್ಪೆಷಲ್ ಹಾಲು ಅರ್ಧ ಲೀಟರ್ಗೆ 25ರೂ. ನಿಂದ 27ರೂ., ಒಂದು ಲೀಟರ್ಗೆ 48ರೂ. ನಿಂದ 50ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದರು.
|
5 |
+
ಸಮೃದ್ಧಿ ಹಾಲು ಅರ್ಧ ಲೀಟರ್ಗೆ 26ರೂ. ನಿಂದ 28ರೂ., ಒಂದು ಲೀಟರ್ಗೆ 51ರೂ. ನಿಂದ 53ರೂ., ಹೋಮೋಜಿನೈಸ್ಡ್ ಶುಭಂ ಹಾಲು ಅರ್ಧ ಲೀಟರ್ಗೆ 25ರೂ. ನಿಂದ 27ರೂ., ಒಂದು ಲೀಟರ್ಗೆ 49ರೂ. ನಿಂದ 51ರೂ., ಸಂತೃಪ್ತಿ ಹಾಲು ಅರ್ಧ ಲೀಟರ್ಗೆ 28ರೂ. ನಿಂದ 30ರೂ., ಒಂದು ಲೀಟರ್ಗೆ 55ರೂ. ನಿಂದ 57ರೂ., ಶುಭಂ ಟೋನ್ಡ್ ಹಾಲು ಅರ್ಧ ಲೀಟರ್ಗೆ 26ರೂ.ನಿಂದ 28ರೂ., ಒಂದು ಲೀಟರ್ಗೆ 49ರೂ. ನಿಂದ 51ರೂ., ಡಬಲ್ ಟೋನ್್ಡ ಹಾಲು ಅರ್ಧ ಲೀಟರ್ಗೆ 21ರೂ. ನಿಂದ 23ರೂ., ಒಂದು ಲೀಟರ್ಗೆ 41ರೂ. ನಿಂದ 43ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದು ಹೇಳಿದರು.
|
6 |
+
ಹೆಚ್ಚಳ ಮಾಡಿರುವ ದರವು ನಾಳೆಯಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ. ಒಕ್ಕೂಟಗಳಲ್ಲಿ ಹಳೆಯ ದರ ಮುದ್ರಿತವಾಗಿರುವ ಹಾಲಿನ ಪ್ಯಾಕೆಟ್ಗಳ ದಾಸ್ತಾನು ಮುಗಿಯುವವರೆಗೂ ಹಳೆಯ ದರದಲ್ಲಿ ಮುದ್ರಿತ ಹಾಲಿನ ಪ್ಯಾಕೆಟ್ಗಳು ಸರಬರಾಜಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಅವರು ಕೋರಿದ್ದಾರೆ.
|
7 |
+
ಪರಿಷ್ಕೃತ ದರವು ಒಂದು ಲೀಟರ್ಗೆ 44ರೂ. 10 ಪೈಸೆಯಾಗಲಿದೆ. ಗ್ರಾಹಕರ ಹಿತದೃಷ್ಟಿಯಿಂದ 44ರೂ.ಗೆ ಮಾರಾಟ ಮಾಡಲಾಗುವುದು. ಆದರೆ, ಮೊಸರು ಹಾಗೂ ಇತರೆ ನಂದಿ���ಿ ಉತ್ಪನ್ನಗಳ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಹೊರರಾಜ್ಯಗಳ ಹಾಲಿನ ದರಕ್ಕೆ ಹೋಲಿಸಿದರೆ ನಮ ರಾಜ್ಯದ ಹಾಲಿನ ದರವು ಕಡಿಮೆಯಿದೆ ಎಂದು ಅವರು ತಿಳಿಸಿದರು.
|
8 |
+
ಸುಗ್ಗಿ ಕಾಲವಾಗಿರುವುದರಿಂದ ಎಲ್ಲ ಜಿಲ್ಲಾ ಹಾಲು ಒಕ್ಕೂಟಗಳ ವ್ಯಾಪ್ತಿಯಲ್ಲಿ ಹಾಲಿನ ಶೇಖರಣೆ ಹೆಚ್ಚಾಗುತ್ತಿದೆ. 98, 87,000ದಷ್ಟು ಹಾಲನ್ನು ಶೇಖರಣೆ ಮಾಡುತ್ತಿದ್ದೇವೆ. ಸದ್ಯದಲ್ಲೇ ಹಾಲಿನ ಶೇಖರಣೆ ಪ್ರಮಾಣ ಒಂದು ಕೋಟಿ ಲೀಟರ್ ತಲುಪಲಿದೆ. ಹಾಲು ಉತ್ಪಾದನೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ 28 ಲಕ್ಷ ರೈತರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.
|
9 |
+
ಸುಮಾರು 30 ಲಕ್ಷ ಲೀಟರ್ ಹಾಲನ್ನು ಪೌಡರ್ ಉತ್ಪಾದಿಸಲು ಕಳುಹಿಸುತ್ತಿದ್ದೇವೆ. ಇದರಿಂದ ಹಾಲು ಒಕ್ಕೂಟಗಳು ಹಾಲು ಉತ್ಪಾದಕರಿಗೆ ಸಕಾಲಕ್ಕೆ ಹಣ ಪಾವತಿ ಮಾಡಲು ತೊಂದರೆಯಾಗುತ್ತಿದೆ. ಇದನ್ನು ತಪ್ಪಿಸಲು ಪ್ರತಿ ಲೀಟರ್ ಹಾಲಿನ ದರವನ್ನು 42ರೂ.ನಿಂದ 44ರೂ.ಗೆ ಹೆಚ್ಚಳ ಮಾಡಿದ್ದೇವೆ ಎಂದು ಅವರು ತಿಳಿಸಿದರು.
|
10 |
+
ಸುದ್ದಿಗೋಷ್ಠಿಯಲ್ಲಿ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್, ಮಂಡಳಿ ನಿರ್ದೇಶಕರಾದ ವೀರಭದ್ರಬಾಬು ಬರಮಣ್ಣನವರ್, ಮಾರುಕಟ್ಟೆ ನಿರ್ದೇಶಕ ರಘುನಂದನ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
|
eesanje/url_46_97_8.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ರೇಣುಕಾಸ್ವಾಮಿ ಪ್ರಕರಣದ ಮೂವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್
|
2 |
+
ಬೆಂಗಳೂರು, ಜೂ.25– ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳೆಲ್ಲಾ ಒಟ್ಟಿಗೇ ಇದ್ದರೆ ಸರಿ ಕಾಣಿಸುವುದಿಲ್ಲ ಎಂಬ ಕಾರಣಕ್ಕಾಗಿ ಮೂವರು ಆರೋಪಿಗಳನ್ನು ತುಮಕೂರಿಗೆ ಸ್ಥಳಾಂತರಿಸಲಾಗಿದೆ. ನಟ ದರ್ಶನ್ ಅವರನ್ನು ಸ್ಥಳಾಂತರಿಸಬೇಕೇ ಅಥವಾ ಪರಪ್ಪನ ಅಗ್ರಹಾರ ಜೈಲಿನಲ್ಲೇ ಮುಂದುವರೆಸಬೇಕೆ ಎಂಬ ಬಗ್ಗೆ ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮೂವರ ಸ್ಥಳಾಂತರಕ್ಕೆ ಬಂಧೀಖಾನೆ ಅಧಿಕಾರಿಗಳು ಹಾಗೂ ತನಿಖಾಧಿಕಾರಿಗಳು ನಿರ್ಧಾರ ತೆಗೆದುಕೊಂಡಿದ್ದಾರೆ. ದರ್ಶನ್ ಅವರ ಸ್ಥಳಾಂತರಿಸುವ ಚರ್ಚೆಯ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದರು.ಸಂಪುಟ ಪುನರ್ ರಚನೆ ಬಗ್ಗೆ ಕೆಲವು ಶಾಸಕರು ಬೇಡಿಕೆ ಇಟ್ಟಿರುವ ಬಗ್ಗೆ ತಾವು ಪ್ರತಿಕ್ರಿಯಿಸುವುದಿಲ್ಲ. ಹೈಕಮಾಂಡ್ ಈ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು.
|
4 |
+
ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕೆ ನಡೆದ ನೀಟ್ ಪರೀಕ್ಷೆ ಅಕ್ರಮದಿಂದ ದೇಶದಲ್ಲಿ ಲಕ್ಷಾಂತರ ಮಕ್ಕಳ ಭವಿಷ್ಯ ಹಾಳಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ದೆಹಲಿಯಲ್ಲಿ ಬೊಬ್ಬೆ ಹೊಡೆಯುತ್ತಿದ್ದಾರೆ. ರಾಹುಲ್ಗಾಂಧಿಯವರು ಕಾಂಗ್ರೆಸ್ನ ಮುಖಂಡರಿಗೆ ಈ ಬಗ್ಗೆ ವಿವರಣೆ ನೀಡಿದ್ದಾರೆ. ಕೇಂದ್ರ ಸರ್ಕಾರ ಈ ವಿಚಾರವಾಗಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
|
5 |
+
ಮರು ಪರೀಕ್ಷೆ ನಡೆಸುವುದು ಅಥವಾ ತಪ್ಪು ಮಾಡಿದವರಿಗೆ ಶಿಕ್ಷೆ ಕೊಡಿಸುವ ಭರವಸೆ ನೀಡಬೇಕಿದೆ. ಪ್ರಕರಣದ ತನಿಖೆಯಾಗಬೇಕು. ಈ ಬಗ್ಗೆ ಜವಾಬ್ದಾರಿ ಸ್ಥಾನದಲ್ಲಿರುವ ಪ್ರಧಾನಮಂತ್ರಿ ಹಾಗೂ ಶಿಕ್ಷಣ ಸಚಿವರಾಗಲೀ ತೀರ್ಮಾನ ಪ್ರಕಟಿಸಬೇಕಿತ್ತು ಎಂದು ಹೇಳಿದರು.ವಿದ್ಯಾರ್ಥಿಗಳು ಗೊಂದಲದಲ್ಲಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಯಶಸ್ಸು ಗಳಿಸಿದ ವಿದ್ಯಾರ್ಥಿಗಳ ಪ್ರವೇಶ ಈ ವೇಳೆಗೆ ಆರಂಭವಾಗಬೇಕಿತ್ತು. ಇಂಜಿನಿಯರಿಂಗ್ ಪ್ರವೇಶದಲ್ಲೂ ಗೊಂದಲಗಳಿವೆ. ಈ ಎಲ್ಲದಕ್ಕೂ ಉತ್ತರ ಕೊಟ್ಟು, ಸ್ಪಷ್ಟನೆ ನೀಡಬೇಕಿದೆ ಎಂದರು.
|
6 |
+
ವಿದ್ಯಾರ್ಥಿಗಳಿಗೆ ಸುಲಭವಾಗಿ ಸೀಟು ಸಿಕ್ಕುವಂತೆ ಪರೀಕ್ಷಾ ಪದ್ಧತಿಯನ್ನು ಜಾರಿಗೆ ತರಬೇಕಿದೆ. ಕರ್ನಾಟಕದಲ್ಲಿ, ದೇಶದಲ್ಲೇ ಮೊದಲ ಬಾರಿಗೆ ಯಶಸ್ವಿಯಾಗಿ ಸಿಇಟಿಯನ್ನು ನಡೆಸಲಾಗಿತ್ತು. ನೀಟ್ ಬದಲಾಗಿ ರಾಜ್ಯಗಳಿಗೆ ಪರೀಕ್ಷೆ ನಡೆಸುವ ಅಧಿಕಾರ ನೀಡಬೇಕು. ಬೇರೆ ರಾಜ್ಯಗಳ ವಿದ್ಯಾರ್ಥಿಗಳು ತಮಗಿಷ್ಟ ಬಂದ ಕಾಲೇಜಿನಲ್ಲಿ ಓದಲು ಬಯಸಿದರೆ ಪರೀಕ್ಷೆ ಬರೆದು ಸೀಟು ಪಡೆದುಕೊಳ್ಳುತ್ತಾರೆ. ಅದಕ್ಕೆ ವ್ಯವಸ್ಥಿತವಾಗಿ ಅವಕಾಶವನ್ನು ಕಲ್ಪಿಸಬೇಕು ಎಂದು ಅಭಿಪ್ರಾಯ ಪಟ್ಟರು.
|
7 |
+
ಹೇಮಾವತಿ ನಾಲಾ ತಿರುವು ಯೋಜನೆಗ�� ಸಂಬಂಧಪಟ್ಟಂತೆ ಜಲಸಂಪನೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿನ್ನೆ ಸಭೆ ನಡೆಸಿ ಚರ್ಚಿಸಿದ್ದಾರೆ. ತುಮಕೂರು ಜಿಲ್ಲೆಯ ಜನರಿಗೆ ನೀರಿನ ಹಂಚಿಕೆಯಲ್ಲಿ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದರು. ಅದಕ್ಕೆ ಸಭೆಯಲ್ಲಿದ್ದ ನೀರಾವರಿ ತಜ್ಞರು ಹಾಗೂ ವಿವಿಧ ಸಂಘಟನೆಗಳು ಸಹಮತ ವ್ಯಕ್ತಪಡಿಸಿದರು. ಈಗ ಪ್ರತಿಭಟನೆಯ ಮಾರ್ಗ ಹಿಡಿದಿದ್ದಾರೆ. ಮುಂದಿನ ಕ್ರಮಗಳ ಬಗ್ಗೆ ಡಿ.ಕೆ.ಶಿವಕುಮಾರ್ರವರ ಜೊತೆ ಚರ್ಚೆ ನಡೆಸುವುದಾಗಿ ತಿಳಿಸಿದರು.
|
8 |
+
ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಯ ಬಗ್ಗೆ ನಡೆಯುತ್ತಿರುವ ಚರ್ಚೆಗೆ ಪ್ರತಿಕ್ರಿಯಿಸಲು ಪರಮೇಶ್ವರ್ ನಿರಾಕರಿಸಿದರು.ನಿಗಮ ಮಂಡಳಿಗಳ ನಿರ್ದೇಶಕರ ಆಯ್ಕೆಗೆ ತಮ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಇದಕ್ಕೂ ಮೊದಲು ನಿಗಮಮಂಡಳಿ ನೇಮಕಾತಿ ಸೇರಿದಂತೆ ಹಲವು ಸಂದರ್ಭಗಳಲ್ಲಿ ತಮ ಅಭಿಪ್ರಾಯ ಕೇಳಿಲ್ಲ ಎಂದು ನಾನು ಹೇಳಿದ್ದೆ.
|
9 |
+
ಆ ಉದ್ದೇಶಕ್ಕಾಗಿ ಈಗ ಸಮಿತಿ ಮಾಡಿದ್ದಾರೆಯೇ? ಅಥವಾ ಹೆಚ್ಚು ಜವಾಬ್ದಾರಿಯಿಂದ ಕೆಲಸ ಮಾಡಲಿ ಎಂಬ ಕಾರಣಕ್ಕೆ ಸಮಿತಿ ಮಾಡಿದ್ದಾರೋ? ಗೊತ್ತಿಲ್ಲ. ಮುಖ್ಯಮಂತ್ರಿಯವರು ಕೊಟ್ಟ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ. ಎಂಟೂವರೆ ವರ್ಷಗಳ ಕಾಲ ಪಕ್ಷದ ಅಧ್ಯಕ್ಷನಾಗಿ ಕೆಲಸ ಮಾಡಿದ ಅನುಭವ ಇದೆ. ನಿಗಮ ಮಂಡಳಿಗಳ ಅಧ್ಯಕ್ಷ ಹಾಗೂ ನಿರ್ದೇಶಕರುಗಳ ನೇಮಕಾತಿ ಮಾಡಿಯೂ ಅನುಭವ ಇದೆ. ಒಂದು ತಿಂಗಳ ಮೊದಲೇ ಪಟ್ಟಿಯನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.
|
10 |
+
ಬೆಂಗಳೂರಿನಲ್ಲಿ ಬಿಬಿಎಂ ವಿದ್ಯಾರ್ಥಿನಿ ಪ್ರಭುದ್ದ ಅವರ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ವಿದ್ಯಾರ್ಥಿನಿಯ ತಾಯಿ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂದು ತಮನ್ನೂ ಸೇರಿದಂತೆ ಹಲವರ ಬಳಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.
|
eesanje/url_46_97_9.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟಿಸುತ್ತಿರುವುದು ವಿಪರ್ಯಾಸ : ಬೊಮ್ಮಾಯಿ
|
2 |
+
ನವದೆಹಲಿ,ಜೂ.25– ಕಳೆದ ಐವತ್ತು ವರ್ಷದಲ್ಲಿ ಪ್ರಜಾಪ್ರಭುತ್ವ ಬಹಳಷ್ಟು ಗಟ್ಟಿಯಾಗಿದೆ. ತುರ್ತು ಪರಿಸ್ಥಿತಿ ಹೇರಿ ಸಂವಿಧಾನ ತಿರುಚಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದ ಕಾಂಗ್ರೆಸ್ ಸಂಸತ್ನಲ್ಲಿ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟನೆ ಮಾಡಿರುವುದು ವಿಪರ್ಯಾಸ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮಾಯಿ ಹೇಳಿದ್ದಾರೆ.
|
3 |
+
ನವದೆಹಲಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಐವತ್ತು ವರ್ಷದ ಹಿಂದೆ ಇಡೀ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದು ಇದೊಂದು ಕರಾಳ ದಿನ. ಅಂದಿನ ಪ್ರಧಾನಿ ಇಂದಿರಾಗಾಂಧಿಯವರು ಪಧಾನಮಂತ್ರಿ ಸ್ಥಾನ ಉಳಿಸಿಕೊಳ್ಳಲು ಬಹಳ ಘೋರವಾಗಿ ನಡೆದುಕೊಂಡರು. ಆಗ ಸರ್ಕಾರದ ವಿರುದ್ಧ ಯಾರು ಮಾತನಾಡವಂತೆ ಮಾಡಿದರು.
|
4 |
+
ಮಾನವ ಹಕ್ಕುಗಳು ಹಾಗೂ ರಾಜಕೀಯ ಸ್ವಾತಂತ್ರ್ಯ ಎರಡನ್ನೂ ಮೊಟಕುಗೊಳಿಸಲಾಗಿತ್ತು ಮತ್ತು ಪತ್ರಿಕಾ ಸ್ವಾತಂತ್ರ್ಯ ಸಂಪೂರ್ಣ ತೆಗೆದು ಹಾಕಲಾಗಿತ್ತು. ಪತ್ರಿಕೆಗಳ ಮೇಲೆ ಸಂಪೂರ್ಣ ನಿರ್ಬಂಧ ಹೇರಲಾಗಿತ್ತು. ಏನಾದರೂ ಸುದ್ದಿ ಪ್ರಕಟಿಸಬೇಕೆಂದರೆ ಸರ್ಕಾರದ ಅನುಮತಿ ಪಡೆದು ಪ್ರಕಟಿಸಬೇಕಿತ್ತು ಎಂದು ಹೇಳಿದರು.
|
5 |
+
ಕಾಂಗ್ರೆಸ್ಗೆ ಸಂವಿಧಾನದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಇಡೀ ಸಂವಿಧಾನವನ್ನು ತಿರುಚಿ ಹಕ್ಕುಗಳನ್ನು ಮೊಟಕುಗೊಳಿಸಿದ್ದಂತಹ ಕಾಂಗ್ರೆಸ್ ಲೋಕಸಭೆಯಲ್ಲಿ ಸಂವಿಧಾನದ ಉಳಿವಿನ ಬಗ್ಗೆ ಮಾತನಾಡಿರುವುದು ಹಾಸ್ಯಾಸ್ಪದ. ಅದೂ ಕೂಡ ಮೊಟಕುಗೊಳಿಸಿರುವ ಸಂವಿಧಾನ, ಸಂಪೂರ್ಣವಾದ ಸಂವಿಧಾನವಿಲ್ಲ. ಅವರು ಐವತ್ತು ವರ್ಷದ ಹಿಂದೆ ಇದೇ ಸಂವಿಧಾನವನ್ನು ನಾವು ತಿರುಚಿದ್ದೆವು. ಪ್ರಜಾಪ್ರಭುತ್ವದ ಕೊಲೆ ಮಾಡಿದ್ದೆವು ಎಂದು ನೆನಪು ಮಾಡಿಕೊಳ್ಳಬೇಕು. ಎಲ್ಲ ಹಕ್ಕುಗಳ ಹರಣ ಮಾಡಿದ್ದೇವೆ ಎಂದು ನೆನಪು ಮಾಡಿಕೊಳ್ಳದಿರುವುದು ಕಾಂಗ್ರೆಸ್ನ ಭಂಡತನ ಎಂದು ಹೇಳಿದರು.
|
6 |
+
ಐವತ್ತು ವರ್ಷದಲ್ಲಿ ಪ್ರಜಾಪ್ರಭುತ್ವ ಬಹಳಷ್ಟು ಗಟ್ಟಿಯಾಗಿವೆ. ಅದಕ್ಕೆ ಸುಪ್ರೀಂ ಕೋರ್ಟಿನ ತೀರ್ಪುಗಳು ಹಾಗೂ ಅಂದಿನ ಸಂಸತ್ತಿನಲ್ಲಿ ಇನ್ನು ಮುಂದೆ ಯಾರೂ ತುರ್ತು ಪರಿಸ್ಥಿತಿ ಹೇರಬಾರದು ಎಂದು ತಿದ್ದುಪಡಿ ಮಾಡಿದರು. ಅದರ ಪ್ರಕಾರ, ಯಾರೂ ಕೂಡ ಮೂಲ ಸಂವಿಧಾನ ತಿರುಚುವುದು ಹಾಗೂ ಹಕ್ಕುಗಳನ್ನು ಮೊಟಕುಗೊಳಿಸಲು ಸಾಧ್ಯವಿಲ್ಲ ಎನ್ನವುದು ಬಹಳ ಸ್ಪಷ್ಟವಾಗಿದೆ. ಕಾಂಗ್ರೆಸ್ ಪಕ್ಷ ಇದನ್ನು ದೊಡ್ಡ ಬಂಡವಾಳ ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆ.
|
7 |
+
ಜನರಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುತ್ತಿದೆ. ನಮದು ಅತ್ಯಂತ ಶೇಷ್ಠವಾದ ಸಂವಿಧಾನ, ಹಲವಾರು ದೇಶಗಳಲ್ಲಿ ನೋಡಿದಾಗ ಇದು ಅತ್ಯಂತ ಸಂವೇದನಾಶೀಲ ಇರುವ ಸಂವಿಧಾನ ಹಾಗೂ ಜನರ ಹಕ್ಕುಗಳ ರಕ್ಷಣೆ ಮಾಡುವ ಸಂವಿಧಾನ ಇರುವುದರಿಂದ ಕಾಂಗ್ರೆಸ್ನವರು ಭ್ರಮೆಯನ್ನು ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆ ಭ್ರಮೆ ಜನರಲ್ಲಿ ಇಲ್ಲ.
|
8 |
+
ಹೀಗಾಗಿ ಜನರು ಮತ್ತೊಮೆ ನರೇಂದ್ರಮೋದಿಯವರನ್ನು ಆಯ್ಕೆ ಮಾಡಿದ್ದಾರೆ ಎಂದು ಹೇಳಿದರು.ಸಂವಿಧಾನ ವಿರೋಧಿಗಳೇ ಸಂಸತ್ನಲ್ಲಿ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟನೆ ಮಾಡುತ್ತಿರುವುದು ಅತ್ಯಂತ ವಿಪರ್ಯಾಸದ ಸಂಗತಿ ಎಂದು ಹೇಳಿದರು. ಕಳೆದ ಹತ್ತು ವರ್ಷದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂಬ ಕಾಂಗ್ರೆಸ್ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ದೇಶದಲ್ಲಿ ಯಾವ ಹಕ್ಕು ಹರಣವಾಗಿದೆ.
|
9 |
+
ವ್ಯಕ್ತಿ ಸ್ವಾತಂತ್ರ್ಯ ಹರಣವಾಗಿದೆಯಾ, ಪತಿಕಾ ಸ್ವಾತಂತ್ರ್ಯವಾಗಿದೆಯಾ, ಪ್ರತಿಭಟನೆ ಮಾಡುತ್ತಿದ್ದಾರೆ ಎಂದರೆ ಪ್ರಜಾಪ್ರಭುತ್ವ ಇದೆ ಎಂದರ್ಥ. ಇದೊಂದು ನೆಪ ಅವರಿಗೆ ಮತ್ತ ಬ್ಯಾಂಕ್ಗಳನ್ನು ಸೃಷ್ಟಿಸಲು ಆಧಾರರಹಿತ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
|
eesanje/url_46_98_1.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಶೆಟ್ಟರ್ ರಾಜೀನಾಮೆಯಿಂದ ತೆರವಾದ ಪರಿಷತ್ ಸ್ಥಾನದ ಉಪ ಚುನಾವಣೆ ಅಧಿಸೂಚನೆ ಪ್ರಕಟ
|
2 |
+
ಬೆಂಗಳೂರು, ಜೂ.25-ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತರೆವಾಗಿರುವ ವಿಧಾನಪರಿಷತ್ನ ಒಂದು ಸದಸ್ಯ ಸ್ಥಾನದ ಉಪ ಚುನಾವಣೆ ಅಧಿಸೂಚನೆ ಪ್ರಕಟವಾಗಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ.
|
3 |
+
ಇಂದಿನಿಂದ ಜುಲೈ ಎರಡರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ನಾಮಪತ್ರ ಸಲ್ಲಿಕೆಗೆ ಜುಲೈ 2 ಕಡೆಯ ದಿನವಾಗಿದೆ. ವಿಧಾನಸಭೆ ಸದಸ್ಯರಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಈ ಉಪ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಆಯ್ಕೆಯಾಗುವ ಸದಸ್ಯರ ಅವಧಿಯು 2028ರ ಜೂ.14 ರವರೆಗೆ ಇರಲಿದೆ.
|
4 |
+
ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಟಿಕೆಟ್ ನೀಡಲಿಲ್ಲ ಎಂಬ ಕಾರಣಕ್ಕೆ ಅಸಮಾಧಾನಗೊಂಡು ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ನಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರು ಪರಾಭವಗೊಂಡಿದ್ದರು. ನಂತರ ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದರು.
|
5 |
+
ಈಗ ಮತ್ತೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಮರಳಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶೆಟ್ಟರ್ ಚುನಾಯಿತರಾಗಿದ್ದಾರೆ. ಒಂದು ಸ್ಥಾನಕ್ಕೆ ಉಪ ಚುನಾವಣೆ ನಡೆಯುವುದರಿಂದ ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿ ಚುನಾಯಿತರಾಗಲಿದ್ದಾರೆ. ಹೀಗಾಗಿ ಜೆಡಿಎಸ್ ಮತ್ತು ಬಿಜೆಪಿ ಈ ಉಪಚುನಾವಣೆಯಿಂದ ದೂರ ಉಳಿಯುವ ಸಾಧ್ಯತೆಗಳಿವೆ.
|
6 |
+
ಈ ಉಪ ಚುನಾವಣೆಗೆ ಸಲ್ಲಿಕೆಯಾಗುವ ನಾಮಪತ್ರಗಳ ಪರಿಶೀಲನೆ ಜು.3ರಂದು ನಡೆಯಲಿದ್ದು, ನಾಮಪತ್ರ ವಾಪಸ್ಸಿಗೆ ಜು.5ರವರೆಗೂ ಅವಕಾಶವಿದೆ. ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿ ಉಳಿದರೆ, ಜು.12ರಂದು ಬೆಳಿಗ್ಗೆ 9ರಿಂದ ಸಂಜೆ ನಾಲ್ಕು ಗಂಟೆವರೆಗೆ ಮತದಾನ ನಡೆಯಲಿದೆ. ಅಂದು 5 ಗಂಟೆಯ ನಂತರ ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಜು.16ರವೇಳೆಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
|
eesanje/url_46_98_10.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ವಿಧಾನ ಪರಿಷತ್ ಸದಸ್ಯರಾಗಿ 17 ಮಂದಿ ಪ್ರಮಾಣ ವಚನ ಸ್ವೀಕಾರ
|
2 |
+
ಬೆಂಗಳೂರು, ಜೂ.24-ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್ಗೆ ಅವಿರೋಧವಾಗಿ ಆಯ್ಕೆಯಾಗಿರುವ 11 ಮಂದಿ, ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ಆಯ್ಕೆಯಾಗಿರುವ 6 ಮಂದಿ ಸೇರಿದಂತ ಒಟ್ಟು 17 ಮಂದಿ ವಿಧಾನ ಪರಿಷತ್ ನೂತನ ಸದಸ್ಯರಾಗಿ ಇಂದು ಪ್ರಮಾವಣ ವಚನ ಸ್ವೀಕರಿಸಿದರು.
|
3 |
+
ವಿಧಾನಸೌಧದ ಬ್ಯಾಂಕ್ವೆಟ್ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನ ಸದಸ್ಯರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.ವಿಧಾನಸಭೆಯ ಸದಸ್ಯರಿಂದ 11 ಮಂದಿ, ಶಿಕ್ಷಕರ ಕ್ಷೇತ್ರಗಳಿಂದ ಮೂವರು ಹಾಗೂ ಪದವೀಧರ ಕ್ಷೇತ್ರಗಳಿಂದ ಮೂವರು ಸದಸ್ಯರು ಚುನಾಯಿತರಾಗಿದ್ದರು.
|
4 |
+
ಆಡಳಿತಾರೂಢ ಕಾಂಗ್ರೆಸ್ನಿಂದ ಸಚಿವ ಎನ್.ಎಸ್.ಬೋಸರಾಜು, ಕೆ.ಗೋವಿಂದರಾಜು, ಎ.ವಸಂತಕುಮಾರ್, ಡಾ.ಯತೀಂದ್ರ ಸಿದ್ದರಾಮಯ್ಯ, ಐವಾನ್ ಡಿಸೋಜ, ಜಗದೇವ ಗುತ್ತೇದಾರ್, ಬಲ್ಕೀಸ್ ಬಾನು, ಡಿ.ಟಿ.ಶ್ರೀನಿವಾಸ, ರಾಮೋಜಿಗೌಡ, ಡಾ. ಚಂದ್ರಶೇಖರ ಬಸವರಾಜ ಪಾಟೀಲ ಸೇರಿದಂತೆ 10 ಮಂದಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
|
5 |
+
|
6 |
+
ಬಿಜೆಪಿಯಿಂದ ಸಿ.ಟಿ.ರವಿ, ಎನ್.ರವಿಕುಮಾರ್, ಮೂಳೆ ಮಾರುತಿರಾವ್, ಡಾ.ಧನಂಜಯ ಸರ್ಜಿ ಸೇರಿದಂತೆ ನಾಲ್ಕು ಮಂದಿ ಹಾಗೂ ಜೆಡಿಎಸ್ನಿಂದ ಟಿ.ಎನ್.ಜವರಾಯಿಗೌಡ, ಎಸ್.ಎಲ್.ಭೋಜೇಗೌಡ, ಕೆ. ವಿವೇಕಾನಂದ ಸೇರಿದಂತೆ ಮೂವರು ಮೇಲನೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
|
7 |
+
ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಶಾಸಕರು, ರಾಜಕೀಯ ಪಕ್ಷಗಳ ಮುಖಂಡರು, ಅಭಿಮಾನಿಗಳು ಹಾಗೂ ಕುಟುಂಬದವರು ಹಾಜರಿದ್ದು, ನೂತನ ಮೇಲನೆ ಸದಸ್ಯರನ್ನು ಅಭಿನಂದಿಸಿದರು.
|
eesanje/url_46_98_11.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
|
2 |
+
ಕಲಬುರಗಿ, ಜೂ.24-ಇಲ್ಲಿನ ವಿಮಾನನಿಲ್ದಾಣ ಸ್ಫೋಟಿಸುವುದಾಗಿ ಅನಾಮಧೇಯ ವ್ಯಕ್ತಿ ಇ-ಮೇಲ್ ಮಾಡಿದ್ದು ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.ವಿಮಾನ ನಿಲ್ದಾಣದ ಕಟ್ಟಡದಲ್ಲಿ ಬಾಂಬ್ ಇಡಲಾಗಿದೆ ಎಂದು ವಿಮಾನ ನಿಲ್ದಾಣ ನಿರ್ದೇಶಕ ಚಿಲಕಾ ಮಹೇಶ್ ಅವರಿಗೆ ಇ ಮೇಲ್ ಬಂದಿದೆ.
|
3 |
+
ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ, ಬಾಂಬ್ ನಿಷ್ಕ್ರಿಯ ದಳ, ಶ್ವಾನದಳದೊಂದಿಗೆ ಸ್ಥಳಕ್ಕೆ ದೌಡಾಯಿಸಿ ವಿಮಾನನಿಲ್ದಾಣವನ್ನು ಪರಿಶೀಲಿಸಿದರಾದರೂ ಯಾವುದೇ ಬಾಂಬ್ ಪತ್ತೆಯಾಗಿಲ್ಲ.
|
4 |
+
ಇದು ಹುಸಿ ಸಂದೇಶವೆಂದು ಅರಿತು ನಿಟ್ಟುಸಿರು ಬಿಡುವಂತಾಯಿತು. ಇದರಿಂದಾಗಿ ಕೆಲಕಾಲ ವಿಮಾನ ಪ್ರಯಾಣಿಕರಲ್ಲೂ ಸಹ ಗೊಂದಲ ಉಂಟಾಯಿತು. ಅಲ್ಲದೆ, ವಿಮಾನ ಪ್ರಯಾಣಿಕರ ಬ್ಯಾಗ್ಗಳನ್ನೂ ಸಹ ಸಿಬ್ಬಂದಿ ತಪಾಸಣೆ ನಡೆಸಿದರು.
|
5 |
+
ಈ ಹಿಂದೆಯೂ ಈ ರೀತಿಯ ಹುಸಿ ಸಂದೇಶಗಳು ಬೆಂಗಳೂರಿನ ವಿಮಾನನಿಲ್ದಾಣ, ಆಸ್ಪತ್ರೆಗಳು, ಶಾಲಾ-ಕಾಲೇಜುಗಳಿಗೆ ಬಂದಿದ್ದವು. ಕಳೆದ ತಿಂಗಳು ಬೆಂಗಳೂರಿನ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿತ್ತು.
|
eesanje/url_46_98_12.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಕರಾವಳಿ-ಮಲೆನಾಡು ಭಾಗದಲ್ಲಿ ಮುಂದಿನ 3 ದಿನ ಭಾರಿ ಮಳೆ ಮುನ್ಸೂಚನೆ
|
2 |
+
ಬೆಂಗಳೂರು, ಜೂ.24-ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ.ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಧಾರವಾಡ, ಹಾವೇರಿ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳನ್ನು ಹವಾಮಾನ ಇಲಾಖೆ ನೀಡಿದೆ.
|
3 |
+
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅತ್ಯಧಿಕ ಪ್ರಮಾಣದ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚೇತರಿಕೆ ಕಂಡಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ರಾಜ್ಯದ ಒಳನಾಡಿನಲ್ಲಿ ಮಳೆಯಾಗಿಲ್ಲ.
|
4 |
+
ಚದುರಿದಂತೆ ಕೆಲವೆಡೆ ಮಳೆಯಾಗಿರುವುದನ್ನು ಹೊರತುಪಡಿಸಿದರೆ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗಿಲ್ಲ.ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಉತ್ತಮ ಮಳೆಯಾಗಿಲ್ಲ. ಹವಾಮಾನ ಮುನ್ಸೂಚನೆ ಪ್ರಕಾರ, ಜೂ.27 ರಂದು ರಾಜ್ಯದಲ್ಲಿ ಮುಂಗಾರು ಪ್ರಬಲವಾಗಿದ್ದು, ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ.
|
5 |
+
ಅರಬ್ಬೀ ಸಮುದ್ರದಲ್ಲಿ ಟ್ರಪ್ ನಿರ್ಮಾಣವಾಗಿರುವುದರಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಲಿದೆ. ಆದರೆ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಬಲವಾದ ಮೇಲೈ ಗಾಳಿ ಬೀಸಲಿದೆ. ಕೆಲವೆಡೆ ಚದುರಿದಂತೆ ಮಳೆಯಾಗುವ ನಿರೀಕ್ಷೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
|
6 |
+
ಜೂ.1 ರಿಂದ ಈತನಕ ರಾಜ್ಯದಲ್ಲಿ ವಾಡಿಕೆ ಪ್ರಮಾಣದ ಮಳೆಯಾಗಿದೆ. ಆದರೆ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಒಳನಾಡಿನಲ್ಲಿ ಮಾತ್ರ ಹೆಚ್ಚು ಮಳೆಯಾಗಿದೆ. ಅಧಿಕ ಮಳೆಯಾಗುವ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಹವಾಮಾನ ಇಲಾಖೆ ನಿರ್ದೇಶನ ನೀಡಿದೆ.
|
eesanje/url_46_98_2.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಜನ ವಿಶ್ರಾಂತಿ ನೀಡಿದ್ದಾರೆ, ಯಾವುದೇ ಚುನಾವಣೆಗೂ ಸ್ಪರ್ಧಿಸಲ್ಲ : ಡಿ.ಕೆ.ಸುರೇಶ್
|
2 |
+
ಬೆಂಗಳೂರು, ಜೂ.24-ಜನಾದೇಶದಂತೆ ನಾನು ವಿಶ್ರಾಂತಿ ಪಡೆಯುತ್ತೇನೆ. ಚನ್ನಪಟ್ಟಣ ಉಪಚುನಾವಣೆ ಸೇರಿದಂತೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಸ್ಪಷ್ಟಪಡಿಸಿದ್ದಾರೆ.
|
3 |
+
ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾನು ಸಾಕಷ್ಟು ಒತ್ತಡದಲ್ಲಿದ್ದೆ. ವಿಶ್ರಾಂತಿಯ ಅಗತ್ಯವಿತ್ತು. ಲೋಕಸಭಾ ಚುನಾವಣೆಯಲ್ಲಿ ಜನ ತಮಗೆ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಅದರಂತೆ ನಡೆದುಕೊಳ್ಳುತ್ತೇನೆ. ಮತ್ತೊಂದು ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಇರಾದೆ ಇಲ್ಲ ಎಂದಿದ್ದಾರೆ.
|
4 |
+
ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಬೇಕು ಎಂದು ಯಾರೂ ನನ್ನ ಬಳಿ ಚರ್ಚೆ ಮಾಡಿಲ್ಲ. ಎಐಸಿಸಿ ಅಧ್ಯಕ್ಷರೂ ಕೂಡ ಪ್ರಸ್ತಾಪಿಸಿಲ್ಲ. ಪಕ್ಷ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ. ನಾನು ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಕೆಲಸ ಮಾಡುತ್ತೇನೆ ಎಂದು ಹೇಳಿದರು.
|
5 |
+
ಎಚ್.ಡಿ.ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಬಳಿಕ ಈಗಷ್ಟೇ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕ್ಷೇತ್ರ ತೆರವಾದ ಬಳಿಕ ಅದಕ್ಕೆ ಉಪಚುನಾವಣೆ ಘೋಷಣೆಯಾಗಬೇಕಿದೆ. ಸದ್ಯಕ್ಕೆ ಅಲ್ಲಿಂದ ಸ್ಪರ್ಧೆ ಮಾಡುವ ಪ್ರಸ್ತಾಪ ನನ್ನ ಮುಂದಿಲ್ಲ ಎಂದರು.
|
6 |
+
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ಹೇಳಿಕೆಗೆ ತಾವು ಪ್ರಾಮುಖ್ಯತೆ ನೀಡುವುದಿಲ್ಲ. ನಟ, ನಿರ್ಮಾಪಕರಾಗಿರುವ ಅವರ ಹೇಳಿಕೆಗಳು ಯಾವಾಗ ಬೇಕಾದರೂ ಬದಲಾಗಬಹುದು. ಅದಕ್ಕೆಲ್ಲಾ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.
|
eesanje/url_46_98_3.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಚನ್ನಪಟ್ಟಣಕ್ಕೆ ಒಂದೇ ವಾರದಲ್ಲಿ 2 ಬಾರಿ ಡಿಕೆಶಿ ಭೇಟಿ
|
2 |
+
ಬೆಂಗಳೂರು, ಜೂ.24– ಉಪಚುನಾವಣೆ ನಡೆಯುವ ಮೂರು ವಿಧಾನಸಭಾ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದ್ದಾರೆ.
|
3 |
+
ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರ ಡಿ.ಕೆ. ಸಹೋದರರಿಗೆ ಪ್ರತಿಷ್ಠೆಯ ಕಣವಾಗಿದೆ. ಈಗಾಗಲೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಿದ್ದಕ್ಕೆ ಚನ್ನಪಟ್ಟಣದಲ್ಲಿ ನಿಂತು ಸೇಡು ತೀರಿಸಿಕೊಳ್ಳಲು ಕಾಂಗ್ರೆಸ್ ಪಡೆ ಹವಣಿಸುತ್ತಿದೆ.ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಯಾರು ಎಂಬ ಸುಳಿವನ್ನೂ ಕಾಂಗ್ರೆಸ್ ಬಿಟ್ಟುಕೊಟ್ಟಿಲ್ಲ.
|
4 |
+
ಕಳೆದ ಒಂದು ವಾರದಲ್ಲಿ ಡಿ.ಕೆ.ಶಿವಕುಮಾರ್ರವರು ಎರಡನೇ ಬಾರಿಗೆ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಕಳೆದ ವಾರ ಕ್ಷೇತ್ರಕ್ಕೆ ಭೇಟಿ ನೀಡಿದ ವೇಳೆ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದ ಡಿ.ಕೆ.ಶಿವಕುಮಾರ್ರವರು ಕಾಂಗ್ರೆಸ್ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿದರು.
|
5 |
+
ಇಂದು ಎರಡನೇ ಬಾರಿಗೆ ಭೇಟಿ ನೀಡುತ್ತಿದ್ದು, ಜನಸ್ಪಂದನ ನಡೆಸಿದ್ದಾರೆ. ಲೋಕಸಭಾ ಚುನಾವಣೆಗೂ ಮೊದಲು ಜನಸ್ಪಂದನ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್ ಒತ್ತು ನೀಡಿದ್ದರು. ಬೆಂಗಳೂರಿನಲ್ಲಿ 28 ಲೋಕಸಭಾ ಕ್ಷೇತ್ರಗಳಲ್ಲೂ ಜನಸ್ಪಂದನ ಕಾರ್ಯಕ್ರಮಗಳು ಸರಣಿಯಾಗಿ ನಡೆದಿದ್ದವು. ನೀತಿ ಸಂಹಿತೆ ಹಿನ್ನೆಲೆಯಲಿ ಕಳೆದ ಮೂರು ತಿಂಗಳಿನಿಂದಲೂ ಜನಸ್ಪಂದನ ನಡೆದಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಡೆಸುವ ಜನಸ್ಪಂದನವೂ ಸ್ಥಗಿತಗೊಂಡಿತ್ತು.
|
6 |
+
ಚುನಾವಣಾ ಪ್ರಕ್ರಿಯೆ ಸ್ಥಗಿತಗೊಂಡ ಬಳಿಕ ಮೊಟ್ಟಮೊದಲನೆಯದಾಗಿ ಡಿ.ಕೆ.ಶಿವಕುಮಾರ್ರವರು ಚನ್ನಪಟ್ಟಣದಿಂದಲೇ ಜನಸ್ಪಂದನವನ್ನು ಆರಂಭಿಸಿದ್ದಾರೆ.ಈ ಮೂಲಕ ಮುಂದೆ ನಡೆಯುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲೇಬೇಕು ಎಂಬ ಹಠಕ್ಕೆ ಬಿದ್ದಿರುವುದು ಸ್ಪಷ್ಟವಾಗುತ್ತಿದೆ.
|
7 |
+
ಉಪಚುನಾವಣೆಯಲ್ಲಿ ಅಭ್ಯರ್ಥಿಯ ವಿಷಯವಾಗಿ ಸಾಕಷ್ಟು ಚರ್ಚೆಗಳು ನಡೆದಿದ್ದವು. ಒಂದು ಹಂತದಲ್ಲಿ ಡಿ.ಕೆ.ಶಿವಕುಮಾರ್ರವರು ತಾವೇ ಅಭ್ಯರ್ಥಿಯಾಗುವುದಾಗಿ ಹೇಳುವ ಮೂಲಕ ರಾಜಕೀಯವಾಗಿ ತೀರಾ ಕುತೂಹಲ ಕೆರಳಿಸಿದ್ದರು.
|
8 |
+
ನಂತರದ ದಿನಗಳಲ್ಲಿ ತಮ ಹೇಳಿಕೆಯನ್ನು ಬದಲಾವಣೆ ಮಾಡಿದ್ದು, ಯಾರೇ ಸ್ಪರ್ಧೆ ಮಾಡಿದರೂ ನಾನೇ ಅಭ್ಯರ್ಥಿ ಎಂದು ಹೇಳುವ ಮೂಲಕ ಕ್ಷೇತ್ರವನ್ನು ಎಷ್ಟರ ಮಟ್ಟಿಗೆ ಗಂಭೀರವಾಗಿ ತೆಗೆದುಕೊಳ್ಳಲಾಗಿದೆ ಎಂಬುದರ ಮುನ್ಸೂಚನೆ ನೀಡಿದರು.
|
9 |
+
ಮೂಲಗಳ ಪ್ರಕಾರ, ಮಾಜಿ ಸಂಸದ ಡಿ.ಕೆ.ಸುರೇಶ್ ಕ್ಷೇತ್ರದಲ್ಲಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಕೂಡ ಪ್ರಬಲ ಅಭ್ಯರ್ಥಿಯ ಹುಡುಕಾಟ ನಡೆಸಿದೆ.ಮಾಜಿ ಸಚಿವ ಸಿ.��ಿ.ಯೋಗೇಶ್ವರ್ ಈಗಾಗಲೇ ವಿಧಾನಪರಿಷತ್ ಸದಸ್ಯರಾಗಿದ್ದಾರೆ. ಮತ್ತೆ ಅವರೇ ಸ್ಪರ್ಧೆ ಮಾಡುವ ಬಗ್ಗೆ ನಾನಾ ರೀತಿಯ ವ್ಯಾಖ್ಯಾನಗಳು ನಡೆಯುತ್ತಿವೆ.
|
eesanje/url_46_98_4.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪೋಕ್ಸೊ ಪ್ರಕರಣದ ಅಪರಾಧಿಯ ಜೀವಾವಧಿ ಶಿಕ್ಷೆಯನ್ನು 10 ವರ್ಷಕ್ಕೆ ಮಾರ್ಪಡಿಸಿದ ಹೈಕೋರ್ಟ್
|
2 |
+
ಬೆಂಗಳೂರು, ಜೂ.24– ಪೋಕ್ಸೋ ಕಾಯ್ದೆಯಡಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿಗೆ ಶಿಕ್ಷೆಯ ಪ್ರಮಾಣವನ್ನು 10 ವರ್ಷಕ್ಕೆ ಮಾರ್ಪಡಿಸಿ ಹೈಕೋರ್ಟ್ ದ್ವಿಸದಸ್ಯರ ಪೀಠ ತೀರ್ಪು ನೀಡಿದೆ. ಇದೇ ವೇಳೆ ನ್ಯಾಯಾಲಯವು ಆರೋಪಿಗೆ ಗರಿಷ್ಠ ದಂಡವನ್ನು ವಿಧಿಸುವಾಗ ಸರಿಯಾದ ಕಾರಣಗಳನ್ನು ನೀಡಬೇಕೆಂದು ಹೇಳಿದೆ.
|
3 |
+
ಚಿಕ್ಕಮಗಳೂರಿನ ಆರೋಪಿಗೆ ಹೈಕೋರ್ಟ್ ಈ ಹಿಂದೆ ಪೋಕ್ಸೊ ಕಾಯ್ದೆಯಡಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ನ ದ್ವಿಸದಸ್ಯ ಪೀಠಕ್ಕೆ ಮೇಲನವಿ ಅರ್ಜಿ ಸಲ್ಲಿಸಲಾಗಿತ್ತು.ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿಗಳಾದ ಶ್ರೀನಿವಾಸ್ ಹರೀಶ್ಕುಮಾರ್ ಮತ್ತು ಸಿ.ಎಂ.ಜೋಶಿ ಅವರನ್ನೊಳಗೊಂಡ ದ್ವಿಸದ್ಸಯ ಪೀಠ ಜೀವಾವಧಿ ಶಿಕ್ಷೆಯನ್ನು 10 ವರ್ಷಕ್ಕೆ ಕಡಿತ ಮಾಡಿದೆ.ಅಲ್ಲದೆ ಆರೋಪಿಗೆ ವಿಧಿಸಲಾಗಿದ್ದ 5 ಸಾವಿರ ರೂ. ದಂಡವನ್ನು 25 ಸಾವಿರಕ್ಕೆ ಹೆಚ್ಚಳ ಮಾಡಿದೆ.
|
4 |
+
ಪ್ರಕರಣದ ಹಿನ್ನಲೆ:
|
5 |
+
ಆರೋಪಿಯು 2016 ಜೂನ್ನಲ್ಲಿ ತನ್ನ ನೆರೆಹೊರೆಯ ಅಪ್ರಾಪ್ತ ಬಾಲಕಿಯ ಜೊತೆ ಸ್ನೇಹ ಬೆಳೆಸಿ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದ. ಡಿಎನ್ಎ ಪರೀಕ್ಷೆಯು ಆರೋಪಿಯನ್ನು ಜೈವಿಕ ತಂದೆ ಎಂದು ದೃಢಪಡಿಸಿದೆ.ಪೊಲೀಸರು ತಮ ತನಿಖೆಯ ನಂತರ ಎಫ್ಐಆರ್ ದಾಖಲಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
|
6 |
+
2018ರ ಜೂನ್ 11ರಂದು ಜಿಲ್ಲಾ ಕೇಂದ್ರ ಪಟ್ಟಣದ ಚಿಕ್ಕಮಗಳೂರಿನ ವಿಶೇಷ ನ್ಯಾಯಾಲಯವು ಆರೋಪಿಗೆ ಪೋಕ್ಸೋ ಕಾಯ್ದೆಯ ಸೆಕ್ಷನ್ 6ರಡಿ ಜೀವಾವಧಿ ಶಿಕ್ಷೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ಆರೋಪಿಗೆ 5,000 ರೂ. ವಿಧಿಸಿ ತೀರ್ಪು ನೀಡಿತ್ತು.ಆರೋಪಿ ಈ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಸೂಕ್ತ ದಾಖಲೆಗಳೊಂದಿಗೆ ಬಾಲಕಿಯ ವಯಸ್ಸು ಸಾಬೀತಾಗಿಲ್ಲ ಎಂದು ವಾದಿಸಿದ್ದರು.
|
7 |
+
ಪ್ರಕರಣವನ್ನು ಪರಿಶೀಲಿಸಿದ ದ್ವಿಸದಸ್ಯ ಪೀಠ, ಮೌಖಿಕ ಸಾಕ್ಷ್ಯವು ಹುಡುಗಿಯ ಒಪ್ಪಿಗೆಯನ್ನು ಸೂಚಿಸಿದೆ ಎಂಬುದನ್ನು ಗಮನಿಸಿತು. ಆದರೂ ಘಟನೆಯ ಸಮಯದಲ್ಲಿ ಆಕೆಯ ನಿಜವಾದ ವಯಸ್ಸು 12 ಅನ್ನು ಗಮನಿಸಿದರೆ ಅದು ಕಾನೂನುಬದ್ಧವಾಗಿ ಅಪ್ರಸ್ತುತವಾಗಿದೆ. ಈ ಒಪ್ಪಿಗೆಯ ಸೂಚನೆಯು ಕಾಯಿದೆಯ ಸೆಕ್ಷನ್ 6ರಡಿ ಗರಿಷ್ಠ ಶಿಕ್ಷೆ ವಿಧಿಸುವುದನ್ನು ವಿರೋಧಿಸುತ್ತದೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.
|
8 |
+
ವಿಶೇಷ ನ್ಯಾಯಾಲಯವು ಗರಿಷ್ಠ ಜೀವಾವಧಿ ಶಿಕ್ಷೆಯನ್ನು ವಿಧಿಸಲು ಸಾಕಷ್ಟು ಕಾರಣಗಳನ್ನು ಒದಗಿಸಿಲ್ಲ ಎಂಬುದನ್ನು ಗಮನಿಸಿದೆ. ಅಪರಾಧದ ದಿನಾಂಕದಂದು ಕಾನೂನಿನ ಪ್ರಕಾರ, ಕಾಯಿದೆಯ ಸೆಕ್ಷನ್ 6 ಕನಿಷ್ಠ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಗರಿಷ್ಠ ಜೀವಾವಧಿ ಶಿಕ್ಷೆಗೆ ಅವಕಾಶ ನೀಡುತ್ತದೆ.
|
9 |
+
ವಿಶೇಷ ನ್ಯಾಯಾಲಯದ ತೀರ್ಪಿನಲ್ಲಿ ಗೈರುಹಾಜರಾದ ಗರಿಷ್ಠ ಶಿಕ್ಷೆಯನ್ನು ವಿಧಿಸಲು ಮಾನ್ಯ ಕಾರಣಗಳ ಅಗತ್ಯವಿದೆ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಪರಿಣಾಮವಾಗಿ, ನ್ಯಾಯಾ ಲಯವು ತನ್ನ ಆದೇಶದಲ್ಲಿ ಜೀವಾವಧಿ ಶಿಕ್ಷೆಯಿಂದ 10 ವರ್ಷಗಳ ಜೈಲು ಶಿಕ್ಷೆಗೆ ಮಾರ್ಪಡಿಸಿದೆ.
|
eesanje/url_46_98_5.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಪಾರ್ಟಿಯಲ್ಲಿ ಎಣ್ಣೆ ಹಂಚಿಕೆ ವಿಷಯಕ್ಕೆ ನಡೀತಾ ಆಕಾಶ್ ಮಠಪತಿ ಕೊಲೆ..?
|
2 |
+
ಹುಬ್ಬಳ್ಳಿ, ಜೂ.24-ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಪುತ್ರ ಆಕಾಶ್ ಕೊಲೆ ಹಿಂದಿನ ಕಾರಣ ಬಹಿರಂಗಗೊಂಡಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ-ಹುಬ್ಬಳ್ಳಿ ಠಾಣೆ ಪೋಲಿಸರು ಎಂಟು ಜನರನ್ನು ಬಂಧಿಸಿ, ತೀವ್ರ ವಿಚಾರಣೆ ನಡೆಸಿದಾಗ ಆರೋಪಿಗಳು ಬಾಯಿಬಿಟ್ಟಿದ್ದಾರೆ.
|
3 |
+
ಕೊಲೆಯಾದ ಆಕಾಶ್ ಸ್ನೇಹಿತ ರಾಹುಲ್ ಪೊಲೀಸರ ಮುಂದೆ ಕೊಲೆಗೆ ಮದ್ಯ ಹಂಚಿಕೆಯಿಂದ ಶುರುವಾದ ಗಲಾಟೆ ಕಾರಣ ಅಂತ ಹೇಳಿದ್ದಾನೆ ಎನ್ನಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಆಕಾಶ್ ಹಾಗೂ ಸ್ನೇಹಿತರು ಲೋಹಿಯಾ ನಗರದ ಪವನ್ ಶಾಲೆಯ ಹಿಂಭಾಗ ಪಾರ್ಟಿ ಮಾಡತ್ತಿದ್ದರು. ಮದ್ಯ ಹಂಚಿಕೆಯಲ್ಲಿ ವ್ಯತ್ಯಾಸವಾಗಿದೆ.
|
4 |
+
ಕೊಲೆಯಾದ ಆಕಾಶ್ ಮಠಪತಿ ಮದ್ಯವನ್ನು ಜಾಸ್ತಿ ಹಾಕಿಕೊಂಡಿದ್ದಾರೆ. ನಿನಗೆ ಯಾಕೆ ಜಾಸ್ತಿ ಎಂದು ಕೇಳಿದಾಗ ಸ್ನೇಹಿತರ ನಡುವೆ ಗಲಾಟೆ ನಡೆದಿದೆ. ಈ ವೇಳೆ ರಾಹುಲ್ ಆಕಾಶ್ನ ಕಪಾಳಕ್ಕೆ ಹೊಡೆದಿದ್ದಾನೆ. ಕೂಡಲೆ ಆಕಾಶ್ ಕೆಳಗೆ ಬಿದ್ದಿದ್ದಾನೆ. ಕುಡಿಯುವ ವಿಚಾರಕ್ಕೆ ನಾನು ಹೊಡೆದಿದ್ದೇನೆ ಎಂದು ರಾಹುಲ್ ತಪ್ಪೊಪ್ಪಿಕೊಂಡಿದ್ದಾನೆ.
|
5 |
+
ಆಕಾಶ್ ಕೆಳಗೆ ಬಿದ್ದ ತಕ್ಷಣ ರಾಹುಲ್ ಅಲ್ಲಿಂದ ಓಡಿ ಹೋಗಿದ್ದಾನೆ. ಕುಡಿದ ಮತ್ತಿನಲ್ಲಿ ಆಕಾಶ್ ಮೃತಪಟ್ಟಿರುವ ಬಗ್ಗೆ ಸ್ನೇಹಿತರ ಗಮನಕ್ಕೆ ಬಂದಿರಲಿಲ್ಲ. ಅರ್ಜುನ್ ಮಳಗಿ, ಸಂಜು ಕೊಪ್ಪದ, ರಾಹುಲ್ ಕಾಂಬ್ಳೆ, ವಿನಾಯಕ ತಾಳಿಕೊಟಿ, ಮನೋಜ್, ಚಮಕ್ ಅಲಿಯಾಸ್ ಮೌನೇಶ್, ಮಹೇಶ್ ಹಾಗೂ ಕಾರ್ತಿಕ ಬಂಧಿತ ಆರೋಪಿಗಳು. ಶೇಖರಯ್ಯ ಮಠಪತಿ ಆಕಾಶ್ ಪತ್ನಿ, ಅತ್ತೆ ಮತ್ತು ಮಾವನ ವಿರುದ್ಧವೂ ದೂರು ನೀಡಿದ್ದರು.
|
6 |
+
ಮೃತ ಆಕಾಶ್ನದ್ದು ಪ್ರೇಮ ವಿವಾಹ. ಆಕಾಶ್ ಮತ್ತು ಪತ್ನಿ ಕಾವ್ಯ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ವಾಸವಾಗಿದ್ದರು.ಹುಬ್ಬಳ್ಳಿಯಲ್ಲಿ ಕಳೆದ 3 ತಿಂಗಳಲ್ಲಿ ಮೂರು ಕೊಲೆಗಳಾದವು. ಏಪ್ರಿಲ್ ತಿಂಗಳಲ್ಲಿ ಬಿವಿಬಿ ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ ಕೊಲೆಯಾಗಿತ್ತು. ನಂತರ ಈ ಪ್ರಕರಣ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಮೇ ತಿಂಗಳಲ್ಲಿ ವೀರಾಪುರ ಓಣಿಯಲ್ಲಿ ಅಂಜಲಿಅಂಬಿಗೇರ ಕೊಲೆಯಾಗಿದೆ.
|
7 |
+
ಈ ಎರಡೂ ಪ್ರಕರಣದಿಂದ ಬೆಚ್ಚಿ ಬಿದ್ದಿರುವ ಹುಬ್ಬಳ್ಳಿ ಜನತೆ ಮತ್ತೊಂದು ಕೊಲೆಯ ಸುದ್ದಿ ಕೇಳಿದ್ದಾರೆ. ಅದು, ಆಟೋ ಚಾಲಕರ ಪರವಾಗಿ ಸತತ ಹೋರಾಟ ಮಾಡುತ್ತ ಬಂದಿರುವ ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಹಿರೇಮಠ ಪುತ್ರ ಆಕಾಶ್ ಕೊಲೆ. ಸರಣಿ ಕೊಲೆಗಳಾಗಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಹುಬ್ಬಳ್ಳಿ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ.
|
eesanje/url_46_98_6.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ : ಸೂರಜ್ ರೇವಣ್ಣ 8 ದಿನಗಳ ಪೊಲೀಸ್ ಕಸ್ಟಡಿಗೆ
|
2 |
+
ಬೆಂಗಳೂರು, ಜೂ.24-ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯ ಎಂಟು ದಿನಗಳ ಕಾಲ ಸಿಐಡಿ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
|
3 |
+
ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಹಿನ್ನೆಲೆಯಲ್ಲಿ ಬಂಧನವಾಗಿದ್ದ ಸೂರಜ್ ರೇವಣ್ಣ ಅವರನ್ನು ನಿನ್ನೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದರು.
|
4 |
+
ಹೆಚ್ಚಿನ ವಿಚಾರಣೆಗಾಗಿ 14 ದಿನಗಳ ಕಾಲ ಕಸ್ಟಡಿಗೆ ನೀಡಬೇಕೆಂದು ಸಿಐಡಿಪೊಲೀಸರು ಮನವಿ ಮಾಡಿದ ಹಿನ್ನೆಲೆಯಲ್ಲಿ ನ್ಯಾಯಾ„ೀಶರಾದ ಶಿವಕುಮಾರ್ರವರು 8 ದಿನಗಳ ಕಾಲ ಸೂರಜ್ ಅವರನ್ನು ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿದರು.
|
eesanje/url_46_98_7.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಜೈಲಲ್ಲಿರುವ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ ಮತ್ತು ನಟ ವಿನೋದ ಪ್ರಭಾಕರ್
|
2 |
+
ಬೆಂಗಳೂರು, ಜೂ.24-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಖೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ನೋಡಲು ಅವರ ಪತ್ನಿ ವಿಜಯಲಕ್ಷ್ಮೀ ಹಾಗೂ ವಿನೋದ ಪ್ರಭಾಕರ್ ಅವರು ಜೈಲಿಗೆ ಆಗಮಿಸಿದ್ದರು.
|
3 |
+
ಜೈಲಿನಲ್ಲಿರುವ ತಮ ಪತಿಯನ್ನು ಭೇಟಿ ಮಾಡಲು ಆಗಮಿಸಿದ್ದ ವಿಜಯಲಕ್ಷ್ಮೀ ಹಾಗೂ ದರ್ಶನ್ ಪುತ್ರ ಮಾಧ್ಯಮದವರ ಕ್ಯಾಮೆರಾಗಳನ್ನು ನೋಡಿ ತುಸು ದೂರದಲ್ಲೇ ಕಾರು ನಿಲ್ಲಿಸಿದ್ದರು.ಅಲ್ಲಿಗೆ ತೆರಳಿದ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಸಿಬ್ಬಂದಿ ಅವರನ್ನು ಜೈಲಿನ ಬಳಿ ಕರೆದೊಯ್ದು ಜೈಲಿನ ಒಳಗೆ ಪ್ರವೇಶಿಸಲು ಅವಕಾಶ ಮಾಡಿಕೊಟ್ಟರು ಎನ್ನಲಾಗಿದೆ.
|
4 |
+
ನಂತರ ದರ್ಶನ್ ಆಪ್ತ ಸ್ನೇಹಿತ ನಟ ವಿನೋದ್ ಪ್ರಭಾಕರ್ ಕೂಡ ಆಗಮಿಸಿ ಗೇಟಿನ ಹೊರಗೆ ಕಾರು ನಿಲ್ಲಿಸಿ ಸಾಮಾನ್ಯ ಜನರಂತೆ ನಡೆದುಕೊಂಡು ಹೋಗಿದ್ದಾರೆ.ತಪಾಸಣೆ ಮಾಡಿ ನಂತರ ಜೈಲಿನ ಒಳಗೆ ದರ್ಶನ್ ಅವರನ್ನು ನೋಡಲು ಸಿಬ್ಬಂದಿ ಅವಕಾಶ ಮಾಡಿಕೊಟ್ಟರು ಎಂದು ತಿಳಿದುಬಂದಿದೆ.
|
5 |
+
ಇನ್ನು ಹಲವು ಅಭಿಮಾನಿಗಳು, ಸ್ನೇಹಿತರು ಅವರನ್ನು ನೋಡಲು ಬರುತ್ತಿದ್ದಾರೆ. ಕೆಲವರು ಹೊರಗಡೆ ಕಾಯುತ್ತಿದ್ದಾರೆ. ಈ ಪ್ರಕರಣದಲ್ಲಿ ಜೈಲಿನಲ್ಲಿರುವ ದರ್ಶನ್ ಸೇರಿದಂತೆ ಹಲವು ಆರೋಪಿಗಳನ್ನು ತುಮಕೂರು ಜೈಲಿಗೆ ಸ್ಥಳಾಂತರಿಸಲು ಪೊಲೀಸರು ಮನವಿ ಮಾಡಿರುವ ಅರ್ಜಿ ಇಂದು ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ.
|
6 |
+
ಈ ಪ್ರಕರಣದ ಆರೋಪಿಗಳು ಒಂದೇ ಕಡೆ ಇರವುದು ಸುರಕ್ಷಿತವಲ್ಲ. ಕೆಲವರನ್ನು ತುಮಕೂರು ಜೈಲಿಗೆ ಸ್ಥಳಾಂತರಿಸುವಂತೆ ಎಸ್ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದ್ದರು.ಇವರ ಮನವಿಗೆ ದರ್ಶನ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
|
eesanje/url_46_98_8.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಸಾರ್ವಜನಿಕ ಸ್ಥಳದಲ್ಲಿ ಲಾಂಗ್ ಝಳಪಿಸಿ ವಿಡಿಯೋ ಮಾಡಿದ್ದ ಪುಡಾರಿಗಳು ಅರೆಸ್ಟ್
|
2 |
+
ಚಿಕ್ಕಮಗಳೂರು,ಜೂನ್.24-ಸಾರ್ವಜನಿಕ ಸ್ಥಳದಲ್ಲಿ ಲಾಂಗ್ ಝಳಪಿಸುತ್ತ ಸೆರೆಹಿಡಿದ ಚಿತ್ರವನ್ನು ಸಾಮಾಜಿಕ ಜಾಲತಾನದಲ್ಲಿ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡ ಆರೋಪದ ಮೇಲೆ ಯುವಕರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
|
3 |
+
ಎನ್.ಆರ್.ಪುರ ಪಟ್ಟಣದ 6ನೇ ವಾರ್ಡ್ ಬೆಟ್ಟಗೆರೆ ನಿವಾಸಿಗಳಾದ ಮೆಕಾನಿಕ್ ಸೈಯದ್ ಸಲ್ಮಾನ್ (22) ಮತ್ತು ಕಾರ್ಪೆಂಟರ್ ಮಹಮ್ಮದ್ ಸಾದಿಕ್ (25) ಬಂಧಿತರು.
|
4 |
+
ಇಬ್ಬರು ಆರೋಪಿಗಳು ಕಪ್ಪು ಕಾರಿನಲ್ಲಿ ಲಾಂಗ್ ಇರಿಸಿಕೊಂಡು ಹೆದರಿಕೆ ಹುಟ್ಟಿಸುವ ರೀತಿಯಲ್ಲಿ ಶೆಟ್ಟಿಕೊಪ್ಪ ಗ್ರಾಮದ ಕಡೆಯಿಂದ ಬರುತ್ತಿದ್ದಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಇನ್ಸ್ಪೆಕ್ಟರ್ ಗುರುದತ್ ಕಾಮತ್ ನೇತೃತ್ವದಲ್ಲಿ ಪೊಲೀಸರು ಕಾರ್ಯಚರಣೆ ನಡೆಸಿ ತಾಲ್ಲೂಕಿನ ಸೌತಿಕೆರೆ ಗ್ರಾಮದ ಬಳಿ ಕಾರನ್ನು ತಡೆದು ಪರಿಶೀಲಿಸಿದಾಗ ಲಾಂಗ್ ಕಂಡುಬಂದಿತ್ತು.
|
5 |
+
ಆಯುಧ ಮತ್ತು ಕಾರು ವಶಪಡಿಸಿಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಯುವರಾಜ್, ದೇವರಾಜ್, ಚೈತ್ರಾ ಪಾಲ್ಗೊಂಡಿದ್ದರು.
|
eesanje/url_46_98_9.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಲೋಕಸಭೆಯಲ್ಲಿ ಹೆಚ್ಡಿಕೆ ಕನ್ನಡಲ್ಲಿ ಪ್ರಮಾಣ ವಚನ ಸ್ವೀಕಾರ
|
2 |
+
ನವದೆಹಲಿ, ಜೂ.24-ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಲೋಕಸಭಾ ಸದಸ್ಯರಾಗಿ ಕನ್ನಡ ಭಾಷೆಯಲ್ಲಿ ಪ್ರಮಾವಣ ವಚನ ಸ್ವೀಕರಿಸಿದರು.
|
3 |
+
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದ ಅವರು, ಇಂದು ಲೋಕಸಭೆಯಲ್ಲಿ ದೇವರ ಹೆಸರಿನಲ್ಲಿ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಸ್ವೀಕಾರ ಮಾಡಿದರು. ಈ ಸಂಬಂಧ ಎಕ್್ಸನಲ್ಲಿ ಪೋಸ್ಟ್ ಮಾಡಿರುವ ಕುಮಾರಸ್ವಾಮಿ ಅವರು, 18ನೇ ಲೋಕಸಭೆಯ ಸದಸ್ಯನಾಗಿ, ಮಂಡ್ಯ ಮಹಾಜನತೆಯ ಪ್ರತಿನಿಧಿಯಾಗಿ ಲೋಕಸಭೆಯ ಹಂಗಾಮಿ ಸಭಾಧ್ಯಕ್ಷರಾದ ಭತೃಹರಿ ಮಹತಾಬ್ ಅವರ ಸಮಕ್ಷಮದಲ್ಲಿ ನನ್ನ ಮಾತೃಭಾಷೆಯಾದ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದೆ.
|
4 |
+
ಇದು ನನ್ನ ಬದುಕಿನ ಅವಿಸರಣೀಯ, ಹೆಮೆಯ ಕ್ಷಣ ಎಂದಿದ್ದಾರೆ.ಭಾರತದ ಪ್ರಜಾಪ್ರಭುತ್ವದ ದೇಗುಲದಲ್ಲಿ ಈ ಧನ್ಯತೆಯ ಕ್ಷಣಕ್ಕೆ ಕಾರಣೀಭೂತರಾದ ಮಂಡ್ಯ ಲೋಕಸಭಾ ಕ್ಷೇತ್ರದ ಎಲ್ಲಾ ತಂದೆ-ತಾಯಂದಿರು, ಅಣ್ಣ-ತಮಂದಿರು, ಅಕ್ಕ-ತಂಗಿಯರು ಹಾಗೂ ಸಮಸ್ತ ಕನ್ನಡಿಗರಿಗೆ ಧನ್ಯವಾದಗಳನ್ನು ಅರ್ಪಿಸುವುದಾಗಿ ಹೇಳಿದ್ದಾರೆ.
|
eesanje/url_46_99_1.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಹುಬ್ಬಳ್ಳಿಯಲ್ಲಿ ಮತ್ತೊಂದು ಮರ್ಡರ್, ಚರಂಡಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆ
|
2 |
+
ಹುಬ್ಬಳ್ಳಿ,ಜೂ.24-ನಗರದಲ್ಲಿ ಮೊನ್ನೆ ಆಟೋ ಚಾಲಕರ ಸಂಘದ ಅಧ್ಯಕ್ಷನ ಪುತ್ರ ಆಕಾಶ್ ಮಠಪತಿ ಕೊಲೆ ಮಾಡಿದ ಬೆನ್ನಲ್ಲೇ ಇದೀಗ ಮತ್ತೊಬ್ಬ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.ನಗರದ ಇಂದಿರಾನಗರದ ಚರಂಡಿಯಲ್ಲಿ ಸುಮಾರು 40 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆ ಆಗಿದೆ. ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
|
3 |
+
ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಕೇಸ್ ದಾಖಲಾಗಿದೆ.ವಿದ್ಯಾರ್ಥಿನಿ ನೇಹಾ ನಿರಂಜನ್ ಹಿರೇಮಠ್ ಕೊಲೆ ಹಾಗೂ ಅಂಜಲಿ ಅಂಬೇಗರ್ ಕೊಲೆ ಪ್ರಕರಣಗಳು ನಡೆದು ಹುಬ್ಬಳ್ಳಿ ಕೊತಕೊತ ಕುದಿಯುತ್ತಿರುವ ಬೆನ್ನಲ್ಲೇ ಆಟೋ ಚಾಲಕ ಅಧ್ಯಕ್ಷನ ಪುತ್ರ ಮಠಪತಿ ಕೊಲೆ ನಡೆದಿತ್ತು.
|
4 |
+
ಇದೀಗ ಮತ್ತೊಬ್ಬ ವ್ಯಕ್ತಿಯ ಮೃತದೇಹ ಚರಂಡಿಯಲ್ಲಿ ಕೊಲೆ ಮಾಡಿದ ಶಂಕೆಯಲ್ಲಿ ಪತ್ತೆಯಾಗಿರುವುದು ಹುಬ್ಬಳ್ಳಿ ಮಂದಿ ಭೀತಿಗೊಳಗಾಗಿದ್ದಾರೆ.
|
eesanje/url_46_99_10.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿ ರಾಜಕಾರಣ ರಾಷ್ಟ್ರಹಿತಕ್ಕಾಗಿ : ಸಿ.ಟಿ. ರವಿ
|
2 |
+
ಬೆಂಗಳೂರು,ಜೂನ್.23-ರಾಷ್ಟ್ರಹಿತವನ್ನು ಬಿಟ್ಟುಕೊಡದೆ ರಾಷ್ಟ್ರಹಿತದ ಹಿನ್ನೆಲೆಯಲ್ಲೇ ಬಿಜೆಪಿ ರಾಜಕಾರಣ ಮಾಡುತ್ತ ಬಂದಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಏರ್ಪಡಿಸಿದ್ದ ಜಗನ್ನಾಥ ರಾವ್ ಜೋಶಿಯವರ ಜನ ದಿನ ಮತ್ತು ಶ್ಯಾಮಪ್ರಸಾದ ಮುಖರ್ಜಿಯವರ ಬಲಿದಾನ ದಿವಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
|
3 |
+
ಮಧ್ಯಪ್ರದೇಶದಲ್ಲಿ ಸಂಸದರಾಗಿ ಆಯ್ಕೆಯಾಗಿದ್ದ ಜಗನ್ನಾಥ ರಾವ್ ಜೋಶಿ ಅವರು ಕಾರ್ಯಕರ್ತರಿಗೆ ಪ್ರೇರಕರು. ಅವರ ಹೆಸರನ್ನೀ ಈ ಭವನಕ್ಕೂ ಇಟ್ಟಿದ್ದೇವೆ ಎಂದು ವಿವರಿಸಿದರು. ಸಂಘಟಕ, ಮಾರ್ಗದರ್ಶಕರಾಗಿ ಪಕ್ಷದ ರಾಜ್ಯ ಮತ್ತು ದೇಶದ ಸಂಘಟನೆಯ ನಾಯಕತ್ವ ವಹಿಸಿ ಅವರು ಕರ್ನಾಟಕ ಕೇಸರಿ ಎಂಬ ಹೆಸರಿಗೆ ತಕ್ಕಂತೆ ಬದುಕಿದವರು ಎಂದು ತಿಳಿಸಿದರು.
|
4 |
+
ನರಗುಂದದಲ್ಲಿ ಅವರು ಹುಟ್ಟಿದ ಮನೆಯನ್ನು ಸಾರಕವಾಗಿ ಪರಿವರ್ತನೆ ಮಾಡಲಾಗಿದೆೆ. ಅಲ್ಲಿ ಅವರ ಬದುಕಿನ ಸಂಗತಿಗಳ ಚಿತ್ರಣ ಲಭಿಸುತ್ತದೆ. ವರ್ತಮಾನ ಮತ್ತು ಭವಿಷ್ಯದ ಪೀಳಿಗೆಗೂ ಅವರ ಜೀವನಾನುಭವ ಸಿಗಲಿ ಎಂದು ಸಾರಕ ಮಾಡಲಾಗಿದೆ ಎಂದು ಹೇಳಿದರು.
|
5 |
+
ಶ್ಯಾಮಪ್ರಸಾದ ಮುಖರ್ಜಿಯವರು ತಕ್ಕಮಟ್ಟಿನ ಶ್ರೀಮಂತ ಮನೆತನದಲ್ಲಿ ಅವರ ಜನ ಆಗಿತ್ತು. ಕಿರಿಯ ವಯಸ್ಸಿಗೇ ಕಲ್ಕತ್ತ ವಿಶ್ವವಿದ್ಯಾಲಯದ ಕುಲಪತಿಯಾಗಿ ಅವರು ಕೆಲಸ ಮಾಡಿದ್ದರು. ಹಿಂದೂ ಮಹಾಸಭೆಯ ಕಾರ್ಯಕಾರಿ ಅಧ್ಯಕ್ಷ, ಅಧ್ಯಕ್ಷರಾಗಿದ್ದರು. ರಾಷ್ಟ್ರೀಯ ಸರಕಾರದಲ್ಲಿ ಸಚಿವರಾಗಿದ್ದರು. ಇವರು ಕೇವಲ ಸುಶಿಕ್ಷಿತ, ವಾಗಿಯಲ್ಲ; ರಾಜನೀತಿ ಕ್ಷೇತ್ರದ ಕುಶಲ ಸಂಘಟಕನೂ ಆಗಿದ್ದು, ಅಪ್ರತಿಮ ರಾಷ್ಟ್ರವಾದಿಯಾಗಿ ಕಾರ್ಯನಿರ್ವಹಿಸಿದವರು ಎಂದು ವಿಶ್ಲೇಷಿಸಿದರು. ರಾಷ್ಟ್ರಹಿತದ ಜೊತೆ ಯಾವತ್ತೂ ರಾಜಿ ಮಾಡಿಕೊಳ್ಳದ ವ್ಯಕ್ತಿತ್ವ ಅವರದು ಎಂದು ತಿಳಿಸಿದರು.
|
6 |
+
ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಜನಸಂಘದ ಸಂಸ್ಥಾಪಕ ದಿವಂಗತ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿವಸ ಹಾಗೂ ಕರ್ನಾಟಕದ ಕೇಸರಿ ದಿವಂಗತ ಜಗನ್ನಾಥ ರಾವ್ ಜೋಷಿ ಅವರ ಜನ್ಮ ಜಯಂತಿಯನ್ನು ಆಚರಿಸಲಾಯಿತು.ಭಾರತದ ಏಕತೆಯ ರಕ್ಷಣೆಯಲ್ಲಿ ದಿವಂಗತ ಶಾಮ ಪ್ರಸಾದ್ ಮುಖರ್ಜಿಯವರ ಪಾತ್ರ ಅತ್ಯಂತ ಅಮೂಲ್ಯವಾದದ್ದು. ಬಂಗಾಳವನ್ನು ಮತ್ತು…../gSJaABu2a9
|
7 |
+
370ನೇ ವಿಧಿ ರದ್ದು ಮಾಡುವ ಜನಸಂಘದ ಮೊದಲ ಹೋರಾಟ ನಡೆದು 69 ವರ್ಷಗಳ ಬಳಿಕ, ಅವರ ಬಲಿದಾನವಾಗಿ 69 ವರ್ಷಗಳ ನಂತರ ನಾವು 370ನೇ ವಿಧಿ ರದ್ದುಪಡಿಸಿ, ಕಾಶೀರಕ್ಕೂ ಭಾರತದ ಸಂವಿಧಾನ, ಕಾಶೀರಕ್ಕೂ ಮೀಸಲಾತಿ ಅನುಕೂಲ, ಕಾಶೀರದ ಜನರೂ ಭಾರತೀಯತೆಯ ಒಂದು ಭಾಗ ಎಂಬುದನ್ನು ನರೇಂದ್ರ ಮೋದಿಯವರ ನೇತೃತ್ವದಲ್ಲಿ ಈಡೇರಿಸಿದ್ದೇವೆ ಎಂದು ತಿಳಿಸಿದರು.
|
8 |
+
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಸುನೀಲ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ಶಾಸಕ ಬಸವರಾಜ್ ಮತ್ತಿಮೂಡ್, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ವಿಭಾಗ ಸಂಘಟನಾ ಕಾರ್ಯದರ್ಶಿ ಉದಯ್ ಕುಮಾರ್ ಶೆಟ್ಟಿ, ವಿಭಾಗ ಪ್ರಭಾರಿ ರಾಜೇಶ್ ಕಾವೇರಿ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಪಕ್ಷದ ಪ್ರಮುಖರು ಕಾರ್ಯಕರ್ತರು ಮತ್ತು ಕಾರ್ಯಾಲಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
|
eesanje/url_46_99_11.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ನಾಳೆ ಪರಿಷತ್ನ 17 ನೂತನ ಪರಿಷತ್ ಸದಸ್ಯರ ಪ್ರಮಾಣ ವಚನ
|
2 |
+
ಬೆಂಗಳೂರು, ಜೂ.23-ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್ಗೆ ಅವಿರೋಧವಾಗಿ ಆಯ್ಕೆಯಾಗಿರುವ, ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ಆಯ್ಕೆಯಾಗಿರುವ ಒಟ್ಟು 17 ಮಂದಿ ವಿಧಾನ ಪರಿಷತ್ನ ನೂತನ ಸದಸ್ಯರು ನಾಳೆ ಪ್ರಮಾವಣ ವಚನ ಸ್ವೀಕರಿಸಲಿದ್ದಾರೆ.
|
3 |
+
ವಿಧಾನಸೌಧದ ಬ್ಯಾಂಕ್ವೆಟ್ಹಾಲ್ನಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನ ಸದಸ್ಯರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ.ವಿಧಾನಸಭೆಯ ಸದಸ್ಯರಿಂದ 11 ಮಂದಿ, ಶಿಕ್ಷಕರ ಕ್ಷೇತ್ರಗಳಿಂದ ಮೂವರು ಹಾಗೂ ಪದವೀಧರ ಕ್ಷೇತ್ರಗಳಿಂದ ಮೂವರು ಸದಸ್ಯರು ಚುನಾಯಿತರಾಗಿದ್ದಾರೆ.
|
4 |
+
ಆಡಳಿತಾರೂಢ ಕಾಂಗ್ರೆಸ್ನಿಂದ ಸ್ಫರ್ಧಿಸಿ ಸಚಿವ ಎನ್.ಎಸ್.ಬೋಸರಾಜು, ಕೆ.ಗೋವಿಂದರಾಜು, ಎ.ವಸಂತಕುಮಾರ್, ಡಾ.ಯತೀಂದ್ರ ಸಿದ್ದರಾಮಯ್ಯ, ಐವಾನ್ ಡಿಸೋಜ, ಜಗದೇವ ಗುತ್ತೇದಾರ್, ಬಲ್ಕೀಸ್ ಬಾನು, ಡಿ.ಟಿ.ಶ್ರೀನಿವಾಸ, ರಾಮೋಜಿಗೌಡ, ಡಾ. ಚಂದ್ರಶೇಖರ ಬಸವರಾಜ ಪಾಟೀಲ ಸೇರಿದಂತೆ 10 ಮಂದಿ ಚುನಾಯಿತರಾಗಿದ್ದಾರೆ.
|
5 |
+
ಬಿಜೆಪಿಯಿಂದ ಸ್ಪರ್ಧಿಸಿ ಸಿ.ಟಿ.ರವಿ, ಎನ್.ರವಿಕುಮಾರ್, ಮೂಳೆ ಮಾರುತಿರಾವ್, ಡಾ.ಧನಂಜಯ ಸರ್ಜಿ ಸೇರಿದಂತೆ ನಾಲ್ಕು ಮಂದಿ ಆಯ್ಕೆಯಾಗಿದ್ದಾರೆ.
|
6 |
+
ಜೆಡಿಎಸ್ನಿಂದ ಟಿ.ಎನ್.ಜವರಾಯಿಗೌಡ, ಎಸ್.ಎಲ್.ಭೋಜೇಗೌಡ, ಕೆ. ವಿವೇಕಾನಂದ ಸೇರಿದಂತೆ ಮೂವರು ಚುನಾಯಿತರಾಗಿದ್ದಾರೆ.ಆಡಳಿತ ಪಕ್ಷದ 10 ಮಂದಿ ಹಾಗೂ ವಿರೋಧ ಪಕ್ಷಗಳ 7 ಮಂದಿ ಸದಸ್ಯತ್ವದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
|
7 |
+
ಮೂರು ರಾಜಕೀಯ ಪಕ್ಷಗಳ ಸದಸ್ಯರು ಪ್ರಮಾಣ ವಚನ ಸ್ವೀಕರಿಸುವುದರಿಂದ ಸಚಿವರು, ಶಾಸಕರು, ರಾಜಕೀಯ ಪಕ್ಷಗಳ ಮುಖಂಡರು, ನೂತನ ಸದಸ್ಯರ ಕುಟುಂಬದವರು, ಅಭಿಮಾನಿಗಳು ಹಾಜರಿದ್ದು, ಅಭಿನಂದಿಸಲಿದ್ದಾರೆ.
|
eesanje/url_46_99_12.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸೂರಜ್ ರೇವಣ್ಣ ಅರೆಸ್ಟ್
|
2 |
+
ಹಾಸನ, ಜೂ.23-ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣರನ್ನು ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಹೊಳೆನರಸೀಪುರದ ಠಾಣೆಯಲ್ಲಿ ನಿನ್ನೆ ಸಂಜೆ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.
|
3 |
+
ಈ ಸಂಬಂಧ ಪ್ರಕರಣದ ಬಗ್ಗೆ ವಿವರಣೆ ನೀಡಲು ಸೂರಜ್ ರೇವಣ್ಣ ಸೆನ್ ಪೊಲೀಸ್ ಠಾಣೆಗೆ ನಿನ್ನೆ ಸಂಜೆ ಹೋಗಿದ್ದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.ಇಂದು ಮುಂಜಾನೆ 4 ಗಂಟೆವರೆಗೂ ಅವರ ವಿಚಾರಣೆ ನಡೆಸಿದ ತನಿಖಾಧಿಕಾರಿಗಳು ಬಳಿಕ ಬಂಧಿಸಿದ್ದಾರೆ.
|
4 |
+
ಪ್ರಕರಣದ ವಿಚಾರಣೆಗಾಗಿ ಸಕಲೇಶಪುರ ಡಿವೈಎಸ್ಪಿ ಪ್ರಮೋದ್ ಕುಮಾರ್ ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಹಾಸನದ ಮಾಜಿ ಸಂಸದ, ಸೂರಜ್ ರೇವಣ್ಣ ಸಹೋದರ ಪ್ರಜ್ವಲ್ ರೇವಣ್ಣ ಈಗಾಗಲೇ ಎಸ್ಐಟಿ ಕಸ್ಟಡಿಯಲ್ಲಿದ್ದಾರೆ. ಅವರು ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ. ಈಗ ಸೂರಜ್ ರೇವಣ್ಣ ಸಹ ಬಂಧನವಾಗಿದ್ದು, ರೇವಣ್ಣ ಅವರ ಇಬ್ಬರು ಪುತ್ರರು ಗಂಭೀರ ಆರೋಪ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
|
5 |
+
ಇಂದು ಮುಂಜಾನೆ 4 ಗಂಟೆವರೆಗೂ ಸೂರಜ್ ರೇವಣ್ಣ ವಿಚಾರಣೆಯನ್ನು ಠಾಣೆಯಲ್ಲಿ ನಡೆಸಿದ್ದ ತನಿಖಾಧಿಕಾರಿ ಬಳಿಕ ನಗರದ ಸೆನ್ ಠಾಣೆಯಲ್ಲೇ ಸೂರಜ್ ಮಲಗಲು ವ್ಯವಸ್ಥೆ ಮಾಡಿದ್ದರು. ಇಂದು ಅವರ ವಿಚಾರಣೆ ಮುಂದುವರೆಯಲಿದೆ. ಅದಕ್ಕೂ ಮೊದಲು ಅವರನ್ನು ಪೊಲೀಸರು ಬಂಧಿಸಿದ್ದಾರೆ.
|
6 |
+
ಸದ್ಯ ಹಾಸನದ ಸೆನ್ ಠಾಣೆಯಲ್ಲಿ ಸೂರಜ್ ರೇವಣ್ಣ ಇದ್ದಾರೆ. ವೈದ್ಯಕೀಯ ಪರೀಕ್ಷೆ ಬಳಿಕ ಅವರನ್ನು ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಿ ಮತ್ತೆ ತಮ ವಶಕ್ಕೆ ಪಡೆಯಲಿದ್ದಾರೆ. ಇಂದು ಕೋರ್ಟ್ ರಜೆ ಇರುವ ಕಾರಣ ನ್ಯಾಯಾಧೀಶರ ನಿವಾಸಕ್ಕೆ ಕರೆದುಕೊಂಡು ಹೋಗಿ ಹಾಜರುಪಡಿಸಲಿದ್ದಾರೆ.
|
7 |
+
ಭದ್ರತೆ:ಸೂರಜ್ ಬಂಧನದ ಹಿನ್ನೆಲೆಯಲ್ಲಿ ಸೆನ್ ಠಾಣೆ ಮುಂದೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದ್ದು, 3 ಕೆಎಸ್ಆರ್ಪಿ ತುಕಡಿಯನ್ನು ನಿಯೋಜಿಸಲಾಗಿದೆ.ಸೂರಜ್ ರೇವಣ್ಣ ಹಾಲಿ ವಿಧಾನ ಪರಿಷತ್ ಸದಸ್ಯರಾಗಿರುವ ಕಾರಣ ಅವರ ವಿರುದ್ಧದ ಪ್ರಕರಣದ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ನಡೆಯುವ ಸಾಧ್ಯತೆ ಇದೆ.
|
8 |
+
ಸದ್ಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾದ ಎಫ್ಐಆರ್ ಕೂಡ ವರ್ಗಾವಣೆ ಅಗುವ ನಿರೀಕ್ಷೆ ಇದ್ದು, ಈ ಕುರಿತು ಪೊಲೀಸರು ಕಾನೂನು ತಜ್ಞರ ಜೊತೆ ಚರ್ಚೆ ನಡೆೆಸಿದ್ದಾರೆ.
|
9 |
+
ಕಾರು ತೆಗೆದುಕೊಂಡು ಹೋದ ಚಾಲಕ :ನಿನ್ನೆ ಸಂಜೆ ಸೂರಜ್ ತಮ ಮೇಲಿನ ಆರೋಪದ ಬಗ್ಗೆ ದಾಖಲಾಗಿರುವ ಪ್ರಕರಣ ಸಂಬಂಧ ವಿಚಾರಿಸಲು ಠಾಣೆಗೆ ಕಾರಿನಲ್ಲಿ ಬಂದಿದ್ದರು. ಇಂದು ಮುಂಜಾನೆ ಅವರನ್ನು ಬಂಧಿಸಿದ ಕಾರಣ ಠಾಣೆ ಮುಂದೆ ನಿಲ್ಲಿಸಲಾಗಿದ್ದ ಕಾರನ್ನು ಇಂದು ಬೆಳಿಗ್ಗ��� ಅವರ ಚಾಲಕ ತೆಗೆದುಕೊಂಡು ಮನೆಗೆ ಹೋಗಿದ್ದಾರೆ.ಸೂರಜ್ ರೇವಣ್ಣ ವಿರುದ್ಧ ದೂರು ನೀಡಿರುವ ಸಂತ್ರಸ್ತ ಯುವಕನಿಗೆ ಇಂದು ವೈದ್ಯಕೀಯ ಪರೀಕ್ಷೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ನಡೆಯಿತು.
|
eesanje/url_46_99_2.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಯಡಿಯೂರಪ್ಪ
|
2 |
+
ಬೆಳ್ತಂಗಡಿ,ಜೂ.24-ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ. ನಿನ್ನೆ ಧರ್ಮಸ್ಥಳಕ್ಕೆ ಆಗಮಿಸಿದ ಅವರು, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
|
3 |
+
ಇಂದು ಬೆಳಗ್ಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜೊತೆಯಲ್ಲಿ ದೇವರ ದರ್ಶನ ಪಡೆದ ನಂತರ ದೇವಾಲಯದಲ್ಲಿ ಡಾ ಡಿ. ವೀರೇಂದ್ರ ಹೆಗ್ಗಡೆಯವರು ಯಡಿಯೂರಪ್ಪನವರನ್ನು ಗೌರವಿಸಿದರು.
|
4 |
+
ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು ಬಹಳ ವರ್ಷಗಳ ನಂತರ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ. ನಮ್ಮ ಭಾಗದಲ್ಲಿ ಬರಗಾಲವಿದ್ದು, ಮಳೆಯಾಗಿ ಸಮೃದ್ಧಿಯಿಂದ ಬೆಳೆಯಾಗಲಿ ಎಂದು ಮಂಜುನಾಥನಲ್ಲಿ ಪ್ರಾರ್ಥಿಸಿದ್ದೇನೆ ಎಂದ ಅವರು ವೀರೇಂದ್ರ ಹೆಗ್ಗಡೆಯವರ ಜೊತೆಗೆ ದೇವರ ದರ್ಶನ ಮಾಡಲು ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ ಎಂದಿದ್ದಾರೆ.
|
5 |
+
ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಸೇರಿದಂತೆ ಇನ್ನು ಅನೇಕರು ಜೊತೆಯಲ್ಲಿದ್ದರು.
|
eesanje/url_46_99_3.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ವಿಧಾನಪರಿಷತ್ನ ಒಂದು ಸದಸ್ಯ ಸ್ಥಾನಕ್ಕೆ ಜೂ. 25ರಂದು ಅಧಿಸೂಚನೆ
|
2 |
+
ಬೆಂಗಳೂರು, ಜೂ.23-ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತರೆವಾಗಿರುವ ವಿಧಾನಪರಿಷತ್ನ ಒಂದು ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು, ಜೂ. 25ರಂದು ಅಧಿಸೂಚನೆ ಹೊರಬೀಳಲಿದೆ.
|
3 |
+
ಅಂದಿನಿಂದ ಜುಲೈ ಎರಡರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ನಾಮಪತ್ರ ಸಲ್ಲಿಕೆಗೆ ಜುಲೈ 2 ಕಡೆಯ ದಿನವಾಗಿದೆ. ವಿಧಾನಸಭೆ ಸದಸ್ಯರಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಈ ಉಪ ಚುನಾವಣೆ ನಡೆಯಲಿದೆ. 2028ರ ಜೂ.14 ರವರೆಗೆ ಈ ಚುನಾವಣೆಯಲ್ಲಿ ಆಯ್ಕೆಯಾಗುವ ಸದಸ್ಯರ ಅವಧಿ ಇರಲಿದೆ.
|
4 |
+
ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಟಿಕೆಟ್ ನೀಡಲಿಲ್ಲ ಎಂದು ಅಸಮಾಧಾನಗೊಂಡು ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಅವರು ಪರಾಭವಗೊಂಡಿದ್ದರು. ನಂತರ ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದರು.
|
5 |
+
ಈಗ ಮತ್ತೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಮರಳಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶೆಟ್ಟರ್ ಚುನಾಯಿತರಾಗಿದ್ದಾರೆ.ಒಂದು ಸ್ಥಾನಕ್ಕೆ ಉಪ ಚುನಾವಣೆ ನಡೆಯುವುದರಿಂದ ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿ ಚುನಾಯಿತರಾಗಲಿದ್ದಾರೆ. ಹೀಗಾಗಿ ಜೆಡಿಎಸ್ ಮತ್ತು ಬಿಜೆಪಿ ಈ ಉಪಚುನಾವಣೆಯಿಂದ ದೂರ ಉಳಿಯುವ ಸಾಧ್ಯತೆಗಳಿವೆ.
|
6 |
+
ಈ ಉಪ ಚುನಾವಣೆಗೆ ಸಲ್ಲಿಕೆಯಾಗುವ ನಾಮಪತ್ರಗಳ ಪರಿಶೀಲನೆ ಜು.3ರಂದು ನಡೆಯಲಿದ್ದು, ನಾಮಪತ್ರ ವಾಪಸ್ಸಿಗೆ ಜು.5ರವರೆಗೂ ಅವಕಾಶವಿದೆ. ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿ ಉಳಿದರೆ, ಜು.12ರಂದು ಬೆಳಿಗ್ಗೆ 9ರಿಂದ ಸಂಜೆ ನಾಲ್ಕು ಗಂಟೆವರೆಗೆ ಮತದಾನ ನಡೆಯಲಿದೆ. ಅಂದು 5 ಗಂಟೆಯ ನಂತರ ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಜು.16ರವೇಳೆಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
|
eesanje/url_46_99_4.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಸೆಡ್ಡುಹೊಡೆದ ಈಶ್ವರ್ ಖಂಡ್ರೆ
|
2 |
+
ಬೆಂಗಳೂರು, ಜೂ.23-ಕುದುರೆಮುಖ ಕಬ್ಬಿಣದ ಅದಿರು ಸಂಸ್ಥೆಗೆ ಗಣಿಗಾರಿಕೆ ನಡೆಸಲು ಬಳ್ಳಾರಿ ಬಳಿ ಮಂಜೂರು ಮಾಡಲಾಗಿದ್ದ 401 ಎಕರೆಯನ್ನು ಹಸ್ತಾಂತರಿಸುವುದನ್ನು ತಡೆಹಿಡಿಯಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಭೂಮಿ ನೀಡುವಂತೆ ಕುದುರೆಮುಖ ಕಬ್ಬಿಣದ ಅದಿರು ಸಂಸ್ಥೆ 2018 ರ ಮಾ. 16 ರಂದು ಮನವಿ ಸಲ್ಲಿಸಿತ್ತು. 2018 ರ ಜು. 27 ರಂದು ನೋಡೆಲ್ ಅಧಿಕಾರಿಗಳು ಆಕ್ಷೇಪಣೆ ಸಲ್ಲಿಸಿದ್ದರು. 2020 ರ ಫೆ.18 ರಂದು ಅರಣ್ಯ ಇಲಾಖೆ ಈ ವಿಚಾರವಾಗಿ ತನ್ನ ನಿಲುವನ್ನು ಸರ್ಕಾರಕ್ಕೆ ಸಲ್ಲಿಸಿದೆ ಎಂದರು.
|
4 |
+
ಸಲ್ಲಿಕೆಯಾದ ವರದಿಯಲ್ಲಿ ವಲಯ ಅರಣ್ಯಾಧಿಕಾರಿ, ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಹೆಚ್ಚುವರಿ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಿದರೆ ನೈಸರ್ಗಿಕ ಕಾಡು ನಾಶವಾಗುತ್ತದೆ. ಜಲಮೂಲ ಹಾಗೂ ನೀರಿನ ಹರಿವಿಗೆ ಹಾನಿಯಾಗುವುದರಿಂದ ಗಣಿಗಾರಿಕೆಗೆ ಅನುಮೋದನೆ ನೀಡಬಾರದು ಎಂದು ನಿವೇದಿಸಿಕೊಂಡಿದ್ದಾರೆ ಎಂದು ಹೇಳಿದರು. ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಯವರು 2020ರ ಅ. 9 ರಂದು ಅರಣ್ಯಾಧಿಕಾರಿಗಳು ನೀಡಿದ ಅಭಿಪ್ರಾಯವನ್ನು ಬದಿಗೊತ್ತಿ ಮೊದಲ ಹಂತದ ಗಣಿಗಾರಿಕೆಗೆ ಅನುಮತಿ ನೀಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
|
5 |
+
2021 ಜೂ. 24 ರಂದು ಕೇಂದ್ರ ಸರ್ಕಾರ ಕೆಲ ಷರತ್ತುಗಳೊಂದಿಗೆ ಗಣಿಗಾರಿಕೆಗೆ ಪರವಾನಗಿಗೆ ಅನುಮತಿ ನೀಡಿದೆ. ಅದರ ಆಧಾರದ ಮೇಲೆ ನೈಜ್ಯ ಬೆಲೆ 32 ಕೋಟಿ ರೂ. ಹಾಗೂ ಪರಿಹಾರ ಕಾಮಗಾರಿಗಳಿಗೆ 147 ಕೋಟಿ ರೂ. ಸೇರಿ ಸರಿಸುಮಾರು 194 ಕೋಟಿ ರೂ.ಗಳನ್ನು ಪಾವತಿಸಲಾಗಿದೆ. ಈ ಹಣ ಕೇಂದ್ರ ಸರ್ಕಾರದ ಬಳಿ ಇರಲಿದ್ದು, ರಾಜ್ಯಕ್ಕೆ ಶೇ.90 ರಷ್ಟು ಪಾಲು ದೊರೆಯಲಿದೆ. ಇದರ ಬಳಿಕ 2ನೇ ಹಂತದ ಅನುಮತಿ ದೊರೆಯಲಿದೆ ಎಂದು ಹೇಳಿದರು.
|
6 |
+
ಕುದುರೆಮುಖ ಕಬ್ಬಿಣದ ಅದಿರು ಕಂಪನಿಯವರು ಹಿಂದೆ ಗಣಿಗಾರಿಕೆ ನಡೆಸುವ ವೇಳೆ ಅನೇಕ ಷರತ್ತುಗಳನ್ನು ಹಾಗೂ ಇತರ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಇದಕ್ಕಾಗಿ ದಂಡ ವಿಧಿಸಲಾಗಿದೆ. ಕಂಪನಿ ಷರತ್ತುಗಳನ್ನು ಪೂರೈಸುವವರೆಗೂ ಕುದುರೆಮುಖ ಸಂಸ್ಥೆಗೆ ಗಣಿಗಾರಿಕೆ ನಡೆಸಲು 401 ಎಕರೆ ಭೂಮಿಯನ್ನು ಹಸ್ತಾಂತರಿಸಬಾರದು ಎಂದು ತಡೆಹಿಡಿದಿದ್ದೇನೆ ಎಂದರು.
|
7 |
+
ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿಯವರು ಕುದುರೆಮುಖ ಕಬ್ಬಿಣದ ಅದಿರು ಸಂಸ್ಥೆಯನ್ನು ಪುನಶ್ಚೇತನಗೊಳಿಸುವುದಾಗಿ ಹೇಳಿದರು. ಸಚಿವ ಈಶ್ವರ್ ಖಂಡ್ರೆಯವರ ಹೇಳಿಕೆ ಇದಕ್ಕೆ ಹಿನ್ನಡೆ ಉಂಟುಮಾಡಿದಂತಾಗಿದೆ.
|
eesanje/url_46_99_5.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಪರಪ್ಪನ ಅಗ್ರಹಾರ ಜೈಲಲ್ಲಿ ಊಟ, ನಿದ್ದೆ ಮಾಡದೆ ರಾತ್ರಿ ಕಳೆದ ದರ್ಶನ್
|
2 |
+
ಬೆಂಗಳೂರು,ಜೂ.23-ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಚಿತ್ರನಟ ದರ್ಶನ್ ಸರಿಯಾಗಿ ಊಟ ಮಾಡದೆ ಹಾಗೂ ನಿದ್ದೆ ಮಾಡದೆ ರಾತ್ರಿ ಕಳೆದಿದ್ದಾರೆ.ದರ್ಶನ್ ಹಾಗೂ ನಾಲ್ವರು ಆರೋಪಿಗಳನ್ನು ನ್ಯಾಯಾಲಯ ನಿನ್ನೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತ್ತು. ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಯಿತು.
|
3 |
+
ದರ್ಶನ್ ಜೈಲು ಸೇರುತ್ತಿದ್ದಂತೆ ವಿಚಾರಣಾಧೀನ ಕೈದಿ ನಂಬರ್ ನೀಡಿ ಬ್ಯಾರೆಕ್ಗೆ ಕಳುಹಿಸಲಾಯಿತು. ನಿನ್ನೆ ರಾತ್ರಿ ಊಟಕ್ಕೆ ಚಪಾತಿ, ಅನ್ನ-ಸಾಂಬಾರ್, ಮಜ್ಜಿಗೆ ಜೈಲೂಟ ನೀಡಲಾಯಿತು. ಆದರೆ ದರ್ಶನ್ ಸರಿಯಾಗಿ ಊಟ ಮಾಡಿಲ್ಲ.
|
4 |
+
ಪೊಲೀಸ್ ಕಸ್ಟಡಿ ವಿಚಾರಣೆಯಲ್ಲಿ ಹಣ್ಣುಗಾಯಿ ನೀರುಗಾಯಿ ಆಗಿದ್ದ ದರ್ಶನ್ ಅವರು, ಮೊದಲ ದಿನ ರಾತ್ರಿ ಸರಿಯಾಗಿ ಊಟ, ನಿದ್ರೆ ಮಾಡದೆ ಜೈಲಿನಲ್ಲಿ ಸುಮನೆ ಕುಳಿತಿದ್ದರು. ತಡರಾತ್ರಿ ನಿದ್ರೆಗೆ ಜಾರಿದರು ಎಂದು ತಿಳಿದುಬಂದಿದೆ. ಬೆಳಗ್ಗೆ 6 ಗಂಟೆಗೆ ಎದ್ದು ಅವರು ನಿತ್ಯಕರ್ಮ ಮುಗಿಸಿ ಚಿಂತಾಕ್ರಾಂತರಾಗಿಯೇ ಕುಳಿತಿದ್ದರು. ಜೈಲಿನ ಮೆನು ಪ್ರಕಾರ ಅವರಿಗೆ ಬೆಳಗಿನ ತಿಂಡಿ ಪಲಾವ್ ನೀಡಲಾಯಿತು.
|
5 |
+
13 ವರ್ಷಗಳ ಹಿಂದೆ 2011ರಲ್ಲಿ ತನ್ನ ಪತ್ನಿ ವಿಜಯಲಕ್ಷ್ಮಿ ಅವರ ಮೇಲೆ ಹಲ್ಲೆ ಮಾಡಿ ಹಲವು ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಈಗ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ.
|
6 |
+
ರೇಣುಕಾಸ್ವಾಮಿ ಹಲ್ಲೆ ಪ್ರಕರಣದಲ್ಲಿ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಈವರೆಗೆ ನಟ ದರ್ಶನ್ , ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸದ್ಯ ಎಲ್ಲಾ ಆರೋಪಿಗಳು ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದಾರೆ.
|
eesanje/url_46_99_6.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಚನ್ನಪಟ್ಟಣ ಅಭ್ಯರ್ಥಿ ಆಯ್ಕೆಗೆ ಯಾವುದೇ ಆತುರವಿಲ್ಲ : ಹೆಚ್ಡಿಕೆ
|
2 |
+
ಬೆಂಗಳೂರು,ಜೂ.23-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿ ಆಯ್ಕೆ ಮಾಡಲು ಆತುರವಿಲ್ಲ ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಕುಮಾರಸ್ವಾಮಿ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಧಾನವಾಗಿ ಮೈತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡೋಣ. ಸದ್ಯಕ್ಕೆ ಅಭ್ಯರ್ಥಿ ಆಯ್ಕೆ ಮಾಡುವ ಆತುರ ನಮಗಿಲ್ಲ ಎಂದರು.
|
3 |
+
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರನ್ನು ಸ್ಪರ್ಧಿಸಬೇಡಿ ಎಂದು ತಡೆದಿರುವವರು ಯಾರು ಎಂದು ಪ್ರಶ್ನಿಸಿದರು.
|
4 |
+
ಚನ್ನಪಟ್ಟಣಕ್ಕೆ ಶಿವಕುಮಾರ್ ಭೇಟಿ ಕೊಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರು ಹೋದರೆ ತಪ್ಪೇನಿದೆ? ಅವರನ್ನು ಹಿಡಿದುಕೊಂಡಿರುವವರು ಯಾರು? ಈಗಲಾದರೂ ಚನ್ನಪಟ್ಟಣದ ಬಗ್ಗೆ ಕಾಳಜಿ ಬಂದಿದ್ದು, ಗಮನಹರಿಸುತ್ತಿರುವುದಕ್ಕೆ ಅಭಿನಂದಿಸೋಣ ಎಂದು ಹೇಳಿದರು.
|
5 |
+
ಡಿ.ಕೆ.ಶಿವಕುಮಾರ್ ರಾಜ್ಯ ಸರ್ಕಾರದಲ್ಲಿ ಉಪಮುಖ್ಯಮಂತ್ರಿಗಳಾಗಿದ್ದಾರೆ. ಅವರನ್ನು ಚನ್ನಪಟ್ಟಣಕ್ಕೆ ಹೋಗಬೇಡಿ ಎಂದು ಹೇಳಲು ಆಗುತ್ತದೆಯೇ ಎಂದು ಪ್ರಶ್ನಿಸಿದರು.ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರಾಭವಗೊಂಡಿರುವುದಕ್ಕೆ ಚನ್ನಪಟ್ಟಣದಲ್ಲಿ ಗೆಲುವು ಸಾಧಿಸಿ ಸೇಡು ತೀರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಗಮನ ಸೆಳೆದಾಗ ಅವರು ರಾಜಕಾರಣ ಮಾಡುತ್ತಾರೆ. ಮಾಡಲಿ ಬನ್ನಿ ಎಂದಷ್ಟೇ ಹೇಳಿದರು.
|
6 |
+
ಎಚ್ಡಿಕೆ ಗರಂ:ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ಮೇಲಿನ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ನನಗೆ ಆ ರೀತಿಯ ಪ್ರಶೆ ಕೇಳುತ್ತೀರಾ? ಅಂತಹ ವಿಚಾರಗಳಿಗೆ ನಾನು ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದು ಗರಮಾದರು.
|
7 |
+
ಆರೋಪ ಕೇಳಿಬಂದಿದ್ದು ಕಾನೂನು ರೀತಿ ಕ್ರಮ ಆಗಲಿದೆ. ಅವರ ಮೇಲಿನ ಆರೋಪಕಕ್ಕೂ ನಮಗೂ ಏನು ಸಂಬಂಧ? ಈ ವಿಚಾರದ ಬಗ್ಗೆ ಅನಂತರ ಮಾತನಾಡೋಣ ಬನ್ನಿ ಎಂದರು.
|
eesanje/url_46_99_7.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿಗಳ ಮೊಬೈಲ್ಗಳ ಪರಿಶೀಲನೆ
|
2 |
+
ಬೆಂಗಳೂರು, ಜೂ.23-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು ಇದುವರೆಗೂ 139 ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಇದೀಗ ಆರೋಪಿಗಳ ಮೊಬೈಲ್ಗಳನ್ನು ಪರಿಶೀಲನೆಗೆ ಒಳಪಡಿಸಲಿದ್ದಾರೆ.ಈ ಪ್ರಕರಣದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸಿ 12 ದಿನಗಳ ಕಾಲ ತಮ ಕಸ್ಟಡಿಯಲ್ಲಿಟ್ಟುಕೊಂಡು ಸುದೀರ್ಘ ವಿಚಾರಣೆ ನಡೆಸಿರುವ ವಿಜಯನಗರ ಉಪವಿಭಾಗದ ಪೊಲೀಸರು ಹಲವು ಸ್ಥಳಗಳಲ್ಲಿ ಮಹಜರು ನಡೆಸಿ ನೂರಾರು ಸಾಕ್ಷ್ಯಗಳನ್ನು ಜಪ್ತಿ ಮಾಡಿದ್ದಾರೆ.
|
3 |
+
ಪ್ರಮುಖ ಸಾಕ್ಷ್ಯ ಕಲೆ ಹಾಕಲು ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಮೊಬೈಲ್ಗಳನ್ನು ಈಗಾಗಲೇ ವಶಕ್ಕೆ ಪಡೆದಿರುವ ಪೊಲೀಸರು ಇದೀಗ ಅವುಗಳನ್ನು ಎಫ್ಎಸ್ಎಲ್ಗೆ ಕಳುಹಿಸಿ ಡಾಟಾ ರಿಟ್ರೀವ್ ಮಾಡಿಸಲಾಗುತ್ತಿದೆ.ರೇಣುಕಾಸ್ವಾಮಿ ಕೊಲೆಯಾದ ದಿನ ಬಂಧಿತರಾಗಿರುವ ಆರೋಪಿಗಳ ಪೈಕಿ ಯಾರ್ಯಾರು ಎಲ್ಲಿದ್ದರು, ಯಾರಿಗೆ ಕರೆ ಮಾಡಿದರು, ಅಂದು ಘಟನೆಯ ವಿಡಿಯೋ ಮಾಡಲಾಗಿತ್ತೇ?, ಯಾರು ಯಾರಿಗೆ ಎಷ್ಟು ಹಣ ಕಳುಹಿಸಿದರು ಎಬೆಂಲ್ಲಾ ಮಾಹಿತಿಗಾಗಿ ಆರೋಪಿಗಳ ಮೊಬೈಲ್ ಪರಿಶೀಲನೆ ಮಾಡಲಾಗುತ್ತಿದ್ದು, ಇದರಿಂದ ಇನ್ನಷ್ಟು ವಿಷಯಗಳು ಬೆಳಕಿಗೆ ಬರಲಿವೆ.
|
4 |
+
ಆರೋಪಿ ರಾಘವೇಂದ್ರ ಹಾಗೂ ಕೊಲೆಯಾಗಿರುವ ರೇಣುಕಾಸ್ವಾಮಿ ಮೊಬೈಲ್ಗಳು ಸುಮನಹಳ್ಳಿ ರಾಜಕಾಲುವೆಗೆ ಎಸೆದಿರುವುದರಿಂದ ಸತತ ಹುಡುಕಾಟ ನಡೆಸಿದರೂ ಆ ಮೊಬೈಲ್ಗಳು ಇದುವರೆಗೂ ಪತ್ತೆಯಾಗಿಲ್ಲ.
|
5 |
+
ಸಿಮ್ ಖರೀದಿ:ಈ ಇಬ್ಬರ ಮೊಬೈಲ್ಗಳು ದೊರೆಯದ ಕಾರಣ ಅವರ ಸಿಮ್ಗಳನ್ನು ಹೊಸದಾಗಿ ಪಡೆದು ಅದರಲ್ಲಿ ಇರುವಂತಹ ಸಂದೇಶಗಳು, ಕರೆ ಮಾಹಿತಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
|
6 |
+
ಒಂದು ವೇಳೆ ಆ ಎರಡು ಮೊಬೈಲ್ಗಳು ಸಿಕ್ಕಿದ್ದಲ್ಲಿ ಪೊಲೀಸರ ತನಿಖೆಗೆ ಸಾಕಷ್ಟು ಸಹಕಾರಿ ಆಗಲಿದೆ.ಈ ಪ್ರಕರಣದಲ್ಲಿ ಈಗಾಗಲೇ 139 ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದು, ಈ ಪೈಕಿ ಕೆಲವು ವಸ್ತುಗಳನ್ನು ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರ ವರದಿ ಬಂದಲ್ಲಿ ಇನ್ನಷ್ಟು ವಿವರಗಳು ಲಭ್ಯವಾಗಲಿವೆ.
|
7 |
+
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಇದುವರೆಗೂ 17 ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯ ಮುಂದೆ ಹಾಜರು ಪಡಿಸಿದಾಗ ನ್ಯಾಯಾಲಯ ಎಲ್ಲಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.ಒಟ್ಟಾರೆ ಈ ಪ್ರಕರಣದಲ್ಲಿ ದೊರೆತಿರುವ ಎಲ್ಲಾ ಸಾಕ್ಷ್ಯಗಳನ್ನು ಹೇಗೆ ಕ್ರೂಢೀಕರಿಸಿ ಪೊಲೀಸರು, ಹೇಗೆ ಚಾರ್ಜ್ಶೀಟ್ ತಯಾರಿಸುತ್ತಾರೆ ಎಂಬುದರ ಮೇಲೆ ದರ್ಶನ್ ಪ್ರಕರಣ ನಿಂತಿದೆ.
|
eesanje/url_46_99_8.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆಗೆ
|
2 |
+
ಬೆಂಗಳೂರು, ಜೂ.23-ಜೆಡಿಎಸ್ನ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ದೌರ್ಜನ್ಯ ಆರೋಪವನ್ನು ರಾಜ್ಯಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆರ್.ಹಿತೇಂದ್ರ ಅವರು ಸಿಐಡಿಯ ವಿಶೇಷ ಘಟಕ ಮತ್ತು ಆರ್ಥಿಕ ಅಪರಾಧಗಳ ವಿಭಾಗಕ್ಕೆ ಇಂದು ಬೆಳಿಗ್ಗೆ ತುರ್ತು ಸಂದೇಶ ರವಾನೆ ಮಾಡಿದ್ದು, ಹಾಸನ ಜಿಲ್ಲೆ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ.
|
3 |
+
ಈ ಬಗ್ಗೆ ಹಾಸನ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳಿಗೂ ಮಾಹಿತಿ ನೀಡಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಡತವನ್ನು ತಕ್ಷಣವೇ ಸಿಐಡಿಯ ತನಿಖಾಧಿಕಾರಿಗಳಿಗೆ ಖುದ್ದು ಹಸ್ತಾಂತರಿಸುವಂತೆ ಆದೇಶಿಸಲಾಗಿದೆ. ವಿಚಾರಣೆ ಮುಗಿದ ಬಳಿಕ ವರದಿ ನೀಡುವಂತೆ ಸಿಐಡಿಗೆ ಸಲಹೆ ನೀಡಲಾಗಿದೆ.
|
4 |
+
ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಕೊಳ್ಳಂಗಿ ಗ್ರಾಮದ ಜೆಡಿಎಸ್ ಯುವ ಕಾರ್ಯಕರ್ತನೊಬ್ಬ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸಹಾಯ ಕೇಳಿಕೊಂಡು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ತಾವು ಭೇಟಿ ಮಾಡಿದ ವೇಳೆ, ತಮನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಅಮಾನುಷ ಹಾಗೂ ಅಸಹಜವಾಗಿ ತಮೊಂದಿಗೆ ವರ್ತಿಸಲಾಗಿದೆ ಎಂದು ದೂರಿದ್ದರು.
|
5 |
+
ಈ ಕುರಿತು ಐಪಿಸಿ 377 (ಅಸಹಜ ಲೈಂಗಿಕ ಕ್ರಿಯೆ), 342 (ಬಲವಂತವಾಗಿ ಕೂಡಿ ಹಾಕುವುದು), 506 (ಜೀವ ಬೆದರಿಕೆ) ಮತ್ತು 34 ಸೆಕ್ಷನ್ಗಳಡಿ ಪ್ರಕರಣ ದಾಖಲಿಸಲಾಗಿದೆ. ನಿನ್ನೆ ಪ್ರಕರಣದ ವಿಚಾರಣೆ ನಡೆಸಿದ ಗ್ರಾಮಾಂತರ ಠಾಣೆ ಪೊಲೀಸರು ಇಂದು ಮುಂಜಾನೆ ಸೂರಜ್ ರೇವಣ್ಣ ಅವರನ್ನು ಬಂಧಿಸಿದ್ದಾರೆ.
|
6 |
+
ಇದಕ್ಕೂ ಮೊದಲು ಸೂರಜ್ ರೇವಣ್ಣ ಅವರ ಆಪ್ತ ಶಿವಕುಮಾರ್ ಎಂಬುವರು ಹೊಳೆನರಸೀಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸಹಾಯ ಕೇಳಿಕೊಂಡು ಬಂದ ವ್ಯಕ್ತಿ ತಮನ್ನು ಹಾಗೂ ಸೂರಜ್ ರೇವಣ್ಣ ಅವರನ್ನು ಬ್ಲಾಕ್ಮೇಲ್ ಮಾಡುತ್ತಿದ್ದು, 5 ಕೋಟಿ ರೂ. ಗಳನ್ನು ನೀಡದೇ ಇದ್ದರೆ ಸುಳ್ಳು ಆರೋಪ ಮಾಡಿ, ಪ್ರಕರಣ ದಾಖಲಿಸುವುದಾಗಿ ಬೆದರಿಸುತ್ತಿದ್ದಾರೆ ಎಂದು ಆರೋಪಿಸಿದರು. ಈ ಕುರಿತು ಪ್ರಕರಣ ದಾಖಲಿಸಲಾಗಿದೆ.
|
7 |
+
ನಿನ್ನೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ಹೇಳಿಕೆ ಪ್ರಕಾರ, ಸಂತ್ರಸ್ತ ಯುವಕನಾಗಲೀ, ಸೂರಜ್ ರೇವಣ್ಣ ಆಗಲೀ ಅಧಿಕೃತವಾಗಿ ದೂರು ನೀಡಿರಲಿಲ್ಲ. ಆದರೆ ಸಂತ್ರಸ್ತ ಯುವಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಡಾ.ಜಿ.ಪರಮೇಶ್ವರ್, ಡಿಜಿಪಿ, ಹಾಸನದ ಎಸ್ಪಿ ಅವರಿಗೆ ಪತ್ರ ಬರೆದು ತಮಗಾಗಿರುವ ಅನ್ಯಾಯಗಳ ಬಗ್ಗೆ ವಿವರಣೆ ನೀಡಿದರು.
|
8 |
+
ಪತ್ರ ಬರೆಯುವುದರಿಂದ ಪ್ರಕರಣದ ಮಾಹಿತಿ ನೀಡಲು ಸಾಧ್ಯ. ದೂರು ಬಂದರೆ ಪ್ರಕರಣ ದಾಖಲಿಸಿ, ತನಿಖೆ ನಡೆಸಿ, ಸಾಕ್ಷ್ಯ ಸಂಗ್ರಹಿಸುವುದಾಗಿ ಹೇಳಿದ್ದರು. ಇಂದು ಏಕಾಏಕಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ.ಈ ಮೊದಲು ಸೂರಜ್ ರೇವಣ್ಣ ಅವರ ಸಹೋದರ ಹಾಗೂ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಎಸ್ಐಟಿ ತನಿಖೆ ನಡೆಯುತ್ತಿದೆ. ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪಕ್ಕೆ ಗುರಿಯಾಗಿರುವ ಪ್ರಜ್ವಲ್ ರೇವಣ್ಣ ಕೆಲಕಾಲ ವಿದೇಶದಲ್ಲಿ ತಲೆಮರೆಸಿಕೊಂಡಿದ್ದರು. ಇತ್ತೀಚೆಗೆ ಭಾರತಕ್ಕೆ ಬಂದ ಅವರನ್ನು ಬಂಧಿಸಲಾಗಿದೆ.
|
eesanje/url_46_99_9.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯಸರ್ಕಾರ ಸುಭದ್ರವಾಗಿದೆ, ಬಹುಮತವಿಲ್ಲದೆ ಕೇಂದ್ರ ಸರ್ಕಾರ ಅತಂತ್ರವಾಗಿದೆ : ಚೆಲುವರಾಯಸ್ವಾಮಿ
|
2 |
+
ಮಂಡ್ಯ, ಜೂ.23-ರಾಜ್ಯಸರ್ಕಾರ ಸುಭದ್ರವಾಗಿದ್ದು, ಬಹುಮತವಿಲ್ಲದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅತಂತ್ರವಾಗಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ವ್ಯಾಖ್ಯಾನಿಸಿದ್ದಾರೆ. ರಾಜ್ಯಸರ್ಕಾರ ಪತನಗೊಳ್ಳಲಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಪದೇ ಪದೇ ಟೀಕೆ ಮಾಡುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, 112 ಸ್ಥಾನಗಳಿಗೆ ಎದುರಾಗಿ ಕಾಂಗ್ರೆಸ್ 136 ಶಾಸಕರನ್ನು ಹೊಂದಿದೆ. ನಮ ಸರ್ಕಾರ ಸುಭದ್ರವಾಗಿದೆ. ಕೇಂದ್ರದಲ್ಲಿ ಬಿಜೆಪಿ 240 ಸ್ಥಾನಗಳನ್ನು ಮಾತ್ರ ಪಡೆದಿದೆ. ನಿತೀಶ್ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಅವರ ಬೆಂಬಲದಲ್ಲಿ ಸರ್ಕಾರ ರಚಿಸಿದೆ.
|
3 |
+
ಕಾಂಗ್ರೆಸ್ ಕೇಂದ್ರದಲ್ಲಿ ಸರ್ಕಾರ ರಚಿಸುವ ಯತ್ನವನ್ನು ಮಾಡಲಿಲ್ಲ. ಬಿಜೆಪಿಗೆ ಅವಕಾಶ ಬಿಟ್ಟುಕೊಟ್ಟಿದೆ. ಮೋದಿಯವರ ಸರ್ಕಾರ ಕಳೆದ ಹತ್ತು ವರ್ಷದಲ್ಲಿ ಮಾಡದೇ ಇರುವುದನ್ನು ಈ ಅವಧಿಯಲ್ಲಿ ಮಾಡುತ್ತದೆ ಎಂದು ಪ್ರಯತ್ನಿಸುತ್ತಿದೆ. ಸಂತೋಷ. ಒಟ್ಟಿನಲ್ಲಿ ಅಭಿವೃದ್ಧಿಯಾಗಬೇಕು ಎಂದು ಹೇಳಿದರು.
|
4 |
+
ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ, ಮಾಜಿ ಸದಸ್ಯ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದರಿಂದ ನಮಗೂ ಮುಜುಗರವಾಗಿದೆ. ಆದರೆ ಯಾರೂ, ಏನೂ ಮಾಡಲು ಸಾಧ್ಯವಿಲ್ಲ. ಕಾನೂನು ಪ್ರಕಾರ, ಕ್ರಮಗಳಾಗುತ್ತವೆ. ಸೂರಜ್ ಪ್ರಕರಣದಲ್ಲಿ ದೂರು, ಪ್ರತಿದೂರು ದಾಖಲಾಗಿವೆೆ. ಎರಡು ಪ್ರಕರಣಗಳೂ ತನಿಖೆಯಾಗಲಿವೆ ಎಂದರು.
|
5 |
+
ದೂರು ಕೊಟ್ಟ ಮೇಲೆ ಪ್ರಕರಣ ದಾಖಲಿಸಬೇಕು. ನಂತರ ಸತ್ಯಾಂಶ ತನಿಖೆಯಲ್ಲಿ ಬೆಳಕಿಗೆ ಬರಲಿದೆ. ಈ ವಿಚಾರದಲ್ಲಿ ಹೆಚ್ಚು ಚರ್ಚೆಯಾಗದೇ ಇರುವುದು ಒಳ್ಳೆಯದು ಎಂದು ಹೇಳಿದರು.
|
6 |
+
ದಿನಬೆಳಗಾದರೆ ಪೆನ್ಡ್ರೈವ್ ಇದೆ ಎಂದು ಹೇಳುತ್ತಿದ್ದವರು ನಾವಲ್ಲ. ಬಡವರ ಮಕ್ಕಳು ನಾವು, ನೆಮದಿಯಾಗಿರಬಾರದೆ, ಏನು ಮಾತನಾಡದೇ ಇದ್ದರೂ ಇಂತಹ ವಿಚಾರದಲ್ಲೇ ನಮನ್ನೇ ಏಕೆ ಪ್ರಶ್ನಿಸಲಾಗುತ್ತದೆ? ಎಂದು ಅಸಮಾಧಾನ ವ್ಯಕ್ತಪಡಿಸಿದರು.
|
7 |
+
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ರಾಜಕಾರಣದಲ್ಲಿ ವೈಯಕ್ತಿಕವಾಗಿ ಟೀಕೆ ಮಾಡುವ ಬದಲಾಗಿ ವಿಷಯಾಧಾರಿತ ಟೀಕೆ ಮಾಡುವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಲವು ಬಾರಿ ಸಲಹೆ ನೀಡಿದ್ದರು. ಕೇಂದ್ರ ಸಚಿವರಾಗಿರುವ ಕುಮಾರಸ್ವಾಮಿಯವರು ಈಗಲಾದರೂ ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸಲಿ ಎಂದು ಹೇಳಿದರು.
|
8 |
+
ಕಾಂಗ್ರೆಸ್ ಶಾಸಕ ಉದಯ್ ಅವರ ಗನ್ಮ್ಯಾನ್ ಮೇಲೆ ದರ್ಶನ್ ಅವರ ಅಂಗರಕ್ಷಕರು ಹಲ್ಲೆ ಮಾಡಿದ್ದಾರೆ ಎಂದು ಮಾಧ್ಯಮದವರು ಹೇಳಿದ್ದಾರೆ. ಆದರೆ ಯಾವುದೇ ದೂರು ದಾಖಲಾಗಿಲ್ಲ. ಒಂದು ವೇಳೆ ಘಟನೆ ನಡೆದಿದ್ದರೆ ಪೊಲೀಸ್ ಇಲಾಖೆಯವರು ಸುಮನೇ ಇರುತ್ತಿರಲಿಲ್�� ಎಂದು ಹೇಳಿದರು. ಹಾಗೂ ಸುಮನಾಗದಿದ್ದರೆ ಬಹುಷಃ ಸಣ್ಣ ಘಟನೆಯೆಂದು ರಾಜಿ ಸಂಧಾನ ನಡೆದಿರಬಹುದೇನೋ? ಗೊತ್ತಿಲ್ಲ ಎಂದರು.
|
9 |
+
ಈ ಹಿಂದೆ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಕುದುರೆಮುಖ ಹಾಗೂ ಬಳ್ಳಾರಿಯ ಕುಮಾರಬೆಟ್ಟದಲ್ಲಿನ ಗಣಿಗಾರಿಕೆ ಬೇಡ ಎಂದು ಹೇಳುತ್ತಿದ್ದರು. ಈಗ ಕೇಂದ್ರ ಸಚಿವರಾದ ಬಳಿಕ ಗಣಿಗಾರಿಕೆ ಪುನರ್ ಆರಂಭಕ್ಕೆ ಪ್ರಯತ್ನಿಸುತ್ತಿದ್ದಾರೆ. ಇಂತಹ ವಿಚಾರದಲ್ಲಿ ಜನರ ಒಳಿತನ್ನು ಗಮನದಲ್ಲಿಟ್ಟುಕೊಳ್ಳಬೇಕು. ಕುಮಾರಬೆಟ್ಟಕ್ಕೆ ಕೈ ಇಟ್ಟವರು ಸಂಕಷ್ಟ ಅನುಭವಿಸಿದ್ದಾರೆ. ಆ ಬಗ್ಗೆಯೂ ಗಮನ ಹರಿಸಲಿ. ಕಾನೂನು ಪ್ರಕಾರವಾಗಿ ಯಾವುದೇ ಯೋಜನೆ ಕೈಗೆತ್ತಿಕೊಂಡರೂ ರಾಜ್ಯಸರ್ಕಾರ ಸಹಕರಿಸಲಿದೆ ಎಂದರು.
|
10 |
+
ರಾಜ್ಯದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯ ಬಗ್ಗೆ ಚರ್ಚೆಯಿಲ್ಲ. ಯಾವುದೇ ನಿರ್ಧಾರವಾದರೂ ಹೈಕಮಾಂಡ್ ಮಾತ್ರ ತೆಗೆದುಕೊಳ್ಳಲು ಸಾಧ್ಯ. ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅನ್ಯೋನ್ಯತೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದರು.
|
11 |
+
ಕೆಆರ್ಎಸ್ನಲ್ಲಿ ನೀರಿನ ಸಂಗ್ರಹ ಕಡಿಮೆ ಇದೆ. ಕೊಳವೆ ಬಾವಿಯಲ್ಲಿ ಮಳೆಗಾಗಿ 110 ಅಡಿ ಮೇಲ್ಪಟ್ಟು ನೀರು ನಿಂತರೆ ಆಗ ಕೃಷಿಗೆ ನೀರೊದಗಿಸುವ ಬಗ್ಗೆ ಚರ್ಚೆ ಮಾಡಬಹುದು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಕೃಷಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
|