CoolCoder44 commited on
Commit
538bbcb
·
verified ·
1 Parent(s): 0dd10d1

a283a571925924354d4ef0cb08ddb86f3034145b48067abab501eab81590bf31

Browse files
Files changed (50) hide show
  1. eesanje/url_46_2_4.txt +13 -0
  2. eesanje/url_46_2_5.txt +8 -0
  3. eesanje/url_46_2_6.txt +8 -0
  4. eesanje/url_46_2_7.txt +8 -0
  5. eesanje/url_46_2_8.txt +10 -0
  6. eesanje/url_46_2_9.txt +15 -0
  7. eesanje/url_46_300_1.txt +9 -0
  8. eesanje/url_46_300_10.txt +8 -0
  9. eesanje/url_46_300_11.txt +7 -0
  10. eesanje/url_46_300_12.txt +12 -0
  11. eesanje/url_46_300_2.txt +12 -0
  12. eesanje/url_46_300_3.txt +6 -0
  13. eesanje/url_46_300_4.txt +8 -0
  14. eesanje/url_46_300_5.txt +6 -0
  15. eesanje/url_46_300_6.txt +8 -0
  16. eesanje/url_46_300_7.txt +10 -0
  17. eesanje/url_46_300_8.txt +12 -0
  18. eesanje/url_46_300_9.txt +14 -0
  19. eesanje/url_46_301_1.txt +10 -0
  20. eesanje/url_46_301_10.txt +6 -0
  21. eesanje/url_46_301_11.txt +9 -0
  22. eesanje/url_46_301_12.txt +6 -0
  23. eesanje/url_46_301_2.txt +5 -0
  24. eesanje/url_46_301_3.txt +8 -0
  25. eesanje/url_46_301_4.txt +6 -0
  26. eesanje/url_46_301_5.txt +23 -0
  27. eesanje/url_46_301_6.txt +8 -0
  28. eesanje/url_46_301_7.txt +17 -0
  29. eesanje/url_46_301_8.txt +6 -0
  30. eesanje/url_46_301_9.txt +9 -0
  31. eesanje/url_46_302_1.txt +7 -0
  32. eesanje/url_46_302_10.txt +5 -0
  33. eesanje/url_46_302_11.txt +11 -0
  34. eesanje/url_46_302_12.txt +9 -0
  35. eesanje/url_46_302_2.txt +9 -0
  36. eesanje/url_46_302_3.txt +9 -0
  37. eesanje/url_46_302_4.txt +9 -0
  38. eesanje/url_46_302_5.txt +8 -0
  39. eesanje/url_46_302_6.txt +7 -0
  40. eesanje/url_46_302_7.txt +9 -0
  41. eesanje/url_46_302_8.txt +9 -0
  42. eesanje/url_46_302_9.txt +8 -0
  43. eesanje/url_46_303_1.txt +7 -0
  44. eesanje/url_46_303_10.txt +8 -0
  45. eesanje/url_46_303_11.txt +6 -0
  46. eesanje/url_46_303_12.txt +6 -0
  47. eesanje/url_46_303_2.txt +10 -0
  48. eesanje/url_46_303_3.txt +11 -0
  49. eesanje/url_46_303_4.txt +7 -0
  50. eesanje/url_46_303_5.txt +5 -0
eesanje/url_46_2_4.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಸಚಿವ ಮಹದೇವಪ್ಪ ಸೇರಿ ಹಲವು ಕಾಂಗ್ರೆಸ್ಸಿಗರಿಗೂ ಮುಡಾ ಉರುಳು
2
+
3
+ ಮೈಸೂರು, ಅ.4-ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತಂದೊಡ್ಡಿರುವ ಸ್ನೇಹಮಯಿ ಕೃಷ್ಣ, ಈಗ ಜಾರಿ ನಿರ್ದೇಶನಾಲಯಕ್ಕೆ ಮಹತ್ವದ ದಾಖಲೆಗಳನ್ನು ನೀಡುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌.ಸಿ.ಮಹದೇವಪ್ಪ ಹಾಗೂ ಇತರ ಕಾಂಗ್ರೆಸ್‌‍ ನಾಯಕರು ನಿದ್ದೆಗೆಡುವಂತೆ ಮಾಡಿದ್ದಾರೆ.
4
+ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಡಾ ಪ್ರಕರಣದಲ್ಲಿ ಹಣ ಅಕ್ರಮ ವ್ಯವಹಾರ ನಡೆದಿದೆ ಎಂಬ ಆರೋಪದ ಬಗ್ಗೆ ಇಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇನೆ. ಪ್ರಬಲ ಸಾಕ್ಷ್ಯವನ್ನೂ ನೀಡಿದ್ದೇನೆ ಎಂದರು.
5
+ ಕೋಟ್ಯಂತರ ರೂಪಾಯಿಗಳ ಲಂಚದ ಹಣವನ್ನು ಬಳಕೆ ಮಾಡಿ ಸೆಟ್‌್ಲಮೆಂಟ್‌ ಡಿಡ್‌ಗಳ ಮೂಲಕ ನಿವೇಶನ ಪಡೆದಿದ್ದಾರೆ. ಇದನ್ನೂ ಇಡಿ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌.ಸಿ.ಮಹದೇವಪ್ಪ, ಅವರ ಸಹೋದರರ ಪುತ್ರ ನವೀನ್‌ ಬೋಸ್‌‍ ಹೆಸರಿಗೆ ಇರುವ ಸೆಟ್ಲ್ ಮೆಂಟ್ ಡೀಡ್‌ ಹಾಗೂ ಮುಡಾದ ಅಧ್ಯಕ್ಷರಾಗಿದ್ದ ಮರಿಗೌಡ ಮತ್ತು ಅವರ ಸಹೋದರ ಶಿವಣ್ಣ ಹೆಸರಿಗೆ ನೋಂದಣಿಯಾಗಿರುವ ದಾಖಲಾತಿಗಳನ್ನು ನೀಡಿದ್ದೇನೆ. ಇದರ ವಿರುದ್ಧವೂ ತನಿಖೆಯಾಗಬೇಕು ಎಂದು ಒತ್ತಾಯಿಸಿರುವುದಾಗಿ ಹೇಳಿದರು.
6
+ ಹೆಚ್‌.ಸಿ.ಮಹದೇವಪ್ಪ ಅವರ ಸಹೋದರನ ಮಗ ನವೀನ್‌ ಬೋಸ್‌‍ ಎಂಬುವವರು ಮಂಜುನಾಥ್‌ ಎಂಬುವವರಿಂದ ಹಾಗೂ ಇದೇ ಮಂಜುನಾಥ್‌ರಿಂದ ಮರಿಗೌಡರು ತಮ ಸಹೋದರ ಶಿವಣ್ಣನ ಹೆಸರಿಗೆ ಸೆಟ್ಲಮೆಂಟ್‌ ಡಿಡ್‌ ಮಾಡಿಕೊಂಡಿದ್ದಾರೆ ಎಂದರು.ನಿನ್ನೆ ಜಾರಿ ನಿರ್ದೇಶನಾಲಯ ಕಚೇರಿಗೆ ಭೇಟಿ ನೀಡಿ 500 ಪುಟಗಳ ದಾಖಲೆಗಳನ್ನು ನೀಡಿದ್ದೇನೆ.
7
+ ಹೆಚ್ಚಿನ ದಾಖಲೆಗಳು ಕನ್ನಡದಲ್ಲಿ ಇರುವುದರಿಂದ ಅಧಿಕಾರಿಗಳು ಕೇಳಿ ಮಾಹಿತಿ ಪಡೆದು, ಬರೆದುಕೊಂಡಿದ್ದಾರೆ. ತಮ ಕುಟುಂಬದ ಕುರಿತು ವಿವರಣೆ ಪಡೆದುಕೊಂಡಿದ್ದಾರೆ. ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಇಸಿಐಆರ್‌ ಎಂದು ದಾಖಲು ಮಾಡಿಕೊಂಡಿದೆ. ತನಿಖೆಯ ಉದ್ದೇಶಕ್ಕಾಗಿ ಇಸಿಐಆರ್‌ ದಾಖಲಿಸಿದ್ದೇವೆ. ಅದನ್ನು ಯಾರಿಗೂ ನೀಡುವುದಿಲ್ಲ ಎಂದು ತಿಳಿಸಿದ್ದಾರೆ ಎಂದರು.
8
+ ಸುಮಾರು ಆರು ಗಂಟೆಗಳ ಕಾಲ ಇಡಿ ಅಧಿಕಾರಿಗಳು ತಮಿಂದ ವಿವರಣೆ ಹಾಗೂ ಹೇಳಿಕೆ ಪಡೆದುಕೊಂಡಿದ್ದಾರೆ. ಕೊನೆಯಲ್ಲಿ ನಿಮ ನಿರೀಕ್ಷೆಗೆ ತಕ್ಕ ಹಾಗೆ ನ್ಯಾಯ ದೊರಕಿಸುತ್ತೇವೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ಇದು ತಮಗೆ ತೃಪ್ತಿ ನೀಡಿದೆ ಎಂದು ಹೇಳಿದರು.
9
+ ಶ್ರೀಮತಿ ಪಾರ್ವತಿಯವರು ಪಡೆದುಕೊಂಡಿರುವ 14 ನಿವೇಶನಗಳ ಮಹಜರು ಇಂದು ನಡೆದಿದೆ. ಅದರಲ್ಲಿ ತಾವು ಭಾಗವಹಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು, ಪಂಚರ ಸಮುಖದಲ್ಲಿ ಪಂಚನಾಮೆ ನಡೆದಿದೆ. ಮೊದಲ ಹಂತದಲ್ಲಿ ಲೋಕಾಯುಕ್ತ ಪೊಲೀಸರು ಮುಡಾದಿಂದ ದಾಖಲಾತಿಗಳನ್ನು ಪಡೆದುಕೊಂಡಿದ್ದಾರೆ. ಮತ್ತಷ್ಟು ದಾಖಲಾತಿಗಳನ್ನು ಪಡೆಯಬ��ಕಿದೆ. ಸ್ಥಳ ಮಹಜರು ನಡೆಯುತ್ತಿದೆ. ಅದರ ಬಳಿಕ ಆರೋಪಿಗಳಿಗೆ ನೋಟಿಸ್‌‍ ನೀಡಿ, ವಿಚಾರಣೆ ನಡೆಸಬಹುದು ಎಂದರು.
10
+ ಮುಡಾದಲ್ಲಿ 2015ರಿಂದ ಅವೈಜ್ಞಾನಿಕ ಅಧಿಸೂಚನೆ ನೆಪ ಮಾಡಿಕೊಂಡು ಅಕ್ರಮವಾಗಿ ನಿವೇಶನ ಪಡೆದಿರುವವರು, ಅದಕ್ಕೆ ಸಹಕರಿಸಿ ವಿವಿಧ ಅಧಿಕಾರಿಗಳಿಗೆ ಶಿಕ್ಷೆ ಕೊಡಿಸುವುದು ತಮ ಉದ್ದೇಶವಾಗಿದೆ. ಕೆಲ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಅಕ್ರಮವಾಗಿ ನಿವೇಶನ ಹಂಚಿದ್ದಾರೆ ಮತ್ತು ತಮ ಕುಟುಂಬದ ಸದಸ್ಯರ ಹೆಸರಿಗೂ ಪಡೆದುಕೊಂಡಿದ್ದಾರೆ. ಸಿದ್ದರಾಮಯ್ಯ ಅವರ ಪ್ರಕರಣ ಒಂದು ಉದಾಹರಣೆ ಮಾತ್ರ ಎಂದರು.
11
+ 14 ನಿವೇಶನಗಳನ್ನು ವಾಪಸ್‌‍ ನೀಡಿರುವುದೇ ಪ್ರಕರಣಕ್ಕೆ ಪ್ರಬಲ ಸಾಕ್ಷಿಯಾಗಿದೆ. ಇದರಿಂದ ತನಿಖೆಗೆ ಯಾವುದೇ ರೀತಿಯ ಹಿನ್ನಡೆಯೂ ಆಗುವುದಿಲ್ಲ. ಮತ್ತಷ್ಟು ಪುರಾವೆಗಳು ಸಿಕ್ಕಂತೆ ಆಗಿದೆ ಎಂದರು.
12
+ ಕಳ್ಳರು ಕಳ್ಳರು ಒಂದಾಗಿದ್ದಾರೆ. 50:50ರ ಅನುಪಾತದಲ್ಲಿ ನಿವೇಶನ ಪಡೆದವರು ಒಂದಾಗಿ ಕೂಡ ರಚಿಸಿಕೊಂಡು ನನ್ನ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದಾರೆ. ಮೂರು ತಿಂಗಳಿನಿಂದ ಸುಮನಿದ್ದ ಜಿ.ಟಿ.ದೇವೇಗೌಡರು ನಿನ್ನೆ ಅದರಲ್ಲೂ ದಸರಾದಂತಹ ಪವಿತ್ರ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರ ಪರವಾಗಿ ಮಾತನಾಡಿರುವುದು ಸರಿಯಲ್ಲ ಎಂದರು.
13
+ ಅಕ್ರಮವಾಗಿ ನಿವೇಶನ ಪಡೆದವು ತಮ ವಿರುದ್ಧ ಹಲವು ರೀತಿಯ ಸಂಚು ರೂಪಿಸುತ್ತಿದ್ದಾರೆ. ಜಿ.ಟಿ.ದೇವೇಗೌಡರಷ್ಟೇ ಅಲ್ಲ ಈ ಭಾಗದ ಅನೇಕ ಜನಪ್ರತಿನಿಧಿಗಳು ಹಗರಣದಲ್ಲಿ ಭಾಗಿಯಾಗಿದ್ದಾರೆ. ನೇರವಾಗಿ ಯಾರೂ ನಿವೇಶನ ಪಡೆದಿಲ್ಲ. ಸಿದ್ದರಾಮಯ್ಯ ತಮ ಭಾವಮೈದುನನ ಹೆಸರಿನಲ್ಲಿ ನಿವೇಶನ ಪಡೆದಂತೆ ಎಲ್ಲಾ ಜನ ಪ್ರತಿನಿಧಿಗಳು ತಮ ಕುಟುಂಬದ ಸದಸ್ಯರು, ಸ್ನೇಹಿತರ ಹೆಸರಿನಲ್ಲಿ ನಿವೇಶನ ಪಡೆದಿದ್ದಾರೆ. ಈ ಅಕ್ರಮಗಳನ್ನು ಹಂತ ಹಂತವಾಗಿ ಬಯಲಿಗೆ ತರುತ್ತೇನೆ ಎಂದರು.
eesanje/url_46_2_5.txt ADDED
@@ -0,0 +1,8 @@
 
 
 
 
 
 
 
 
 
1
+ ಮುಂದುವರೆದ ಮಳೆ : ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
2
+ :
3
+ ಬೆಂಗಳೂರು. ಅ.4-ರಾಜ್ಯದಲ್ಲಿ ನಿನ್ನೆ ಸಾಧಾರಣ ಮಳೆಯಾಗಿದ್ದು, ಇನ್ನೂ ಎರಡು ದಿನ ಹೆಚ್ಚಿನ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ. ಹವಾಮಾನ ಇಲಾಖೆ ರಾಜ್ಯದ ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
4
+ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.ಕೆಲವೆಡೆ ವ್ಯಾಪಕ ಪ್ರಮಾಣದ ಮಳೆಯಾದರೆ, ಕೆಲವೆಡೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
5
+ ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಚದುರಿದಂತೆ ಕೆಲವೆಡೆ ಮಳೆಯಾಗುತ್ತಿದೆ.ನಿನ್ನೆ ಕೂಡ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ ಬಿದ್ದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಮುಷ್ಠಿಗೇರಿಯಲ್ಲಿ 85.5ಮಿ.ಮೀ.ನಷ್ಟು ಅತಿ ಹೆಚ್ಚು ಮಳೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲೂ ಹಗುರದಿಂದ ಸಾಧಾರಣ ಮಳೆಯಾಗಿದ್ದು, ದಾಸರಹಳ್ಳಿ ವಲಯದ ಬಾಗಲಗುಂಟೆಯಲ್ಲಿ 15 ಮಿ.ಮೀ.ನಷ್ಟು ಮಳೆಯಾಗಿದೆ.
6
+ ರಾಜ್ಯದಲ್ಲಿ ಮಳೆ ಚೇತರಿಕೆಯಾಗಿದ್ದರೂ ಮಳೆ ಕೊರತೆ ಮಾತ್ರ ನೀಗಿಲ್ಲ. ಸೆಪ್ಟೆಂಬರ್ನಂತೆ ಅಕ್ಟೋಬರ್ನಲ್ಲೂ ಮಳೆ ಅಭಾವ ಕಂಡುಬಂದಿದೆ. ಕಳೆದ ಒಂದು ವಾರದಿಂದ ವಾಡಿಕೆ ಮಳೆಯಾಗಿಲ್ಲ. ಹಾಗೆಯೇ ಕಳೆದ ನಾಲ್ಕು ದಿನಗಳಿಂದಲೂ ವಾಡಿಕೆ ಪ್ರಮಾಣದ ಮಳೆಯಾಗಿಲ್ಲ.
7
+ ಸೆಪ್ಟೆಂಬರ್ನಲ್ಲೂ ವಾಡಿಕೆಗಿಂತ ಮಳೆ ಕಡಿಮೆಯಾಗಿ ಹಲವು ಜಿಲ್ಲೆಗಳಲ್ಲಿ ಮುಂಗಾರು ಹಂಗಾಮಿನ ವಿವಿಧ ಬೆಳೆಗಳು ತೇವಾಂಶದ ಕೊರತೆಯಿಂದ ಒಣಗುತ್ತಿವೆ.ಇತ್ತೀಚೆಗೆ ಮಳೆ ಚೇತರಿಕೆಯಾಗಿ ರೈತರಲ್ಲಿ ಆಶಾಭಾವನೆ ಮೂಡಿಸಿತ್ತು. ಆದರೆ, ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ.
8
+ ಸ್ಥಳೀಯ ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೆಡೆ ಮಿಂಚು, ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಗಳಿವೆ.
eesanje/url_46_2_6.txt ADDED
@@ -0,0 +1,8 @@
 
 
 
 
 
 
 
 
 
1
+ ದಿನೇಶ್‌ ಗುಂಡೂರಾವ್‌ ವಿರುದ್ಧ ಹಿಂದೂ ಸಂಘಟನೆಗಳ ಹೋರಾಟದ ಎಚ್ಚರಿಕೆ
2
+ '
3
+ ಬೆಂಗಳೂರು,ಅ.3-ಆರ್ಎಸ್ಎಸ್ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಹಾಗೂ ಪ್ರಬಲ ಹಿಂದೂ ಧರ್ಮ ಪ್ರತಿಪಾದಕರಾಗಿದ್ದ ವೀರ್ ಸಾರ್ವಕರ್ ಕೂಡ ಮಾಂಸ ಸೇವನೆ ಮಾಡುತ್ತಿದ್ದರೆಂಬ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ತೀವ್ರ ವಿವಾದ ಸೃಷ್ಟಿಸಿದೆ.
4
+ ತಕ್ಷಣವೇ ದಿನೇಶ್ ಗುಂಡೂ ರಾವ್ ತಮ್ಮ ಹೇಳಿಕೆಗೆ ಕ್ಷಮೆ ಕೇಳ ಬೇಕು, ಇಲ್ಲದಿದ್ದರೆ ಅವರ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಬಲಪಂಥೀಯ ಸಂಘಟನೆಗಳು ಎಚ್ಚರಿಕೆ ಕೊಟ್ಟಿವೆ.
5
+ ಗಾಂಽ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರೂ ಆಗಿರುವ ದಿನೇಶ್ ಗುಂಡೂರಾವ್, ವೀರ್ ಸಾರ್ವಕರ್ ಬ್ರಾಹ್ಮಣ ಸಮುದಾಯದವರು ಅವರು ಕೂಡ ಮಾಂಸಾಹಾರ ಸೇವಿಸುತ್ತಿದ್ದರು.
6
+ ಈ ಮೂಲಕ ಅವರೊಬ್ಬ ಮಾರ್ಡನಿಸ್ಟ್ ಆಗಿದ್ದರು ಎಂಬ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದರು. ವೀರ್ ಸಾರ್ವಕರ್ ಮೂಲಭೂತವಾದಿ ಆಗಿದ್ದರು. ವಿಶೇಷವೆಂದರೆ ಮೂಲಭೂತವಾದ ನಮ್ಮ ದೇಶದ ಸಂಸ್ಕೃತಿಯಲ್ಲ. ವೀರ್ ಸಾರ್ವಕರ್ ಯುರೋಪ್ನಿಂದ ಪ್ರಭಾವಿತರಾಗಿದ್ದರೆಂದು ಹೇಳಿದ್ದರು.
7
+ ರಾಷ್ಟ್ರಪಿತ ಮಹಾತ್ಮ ಗಾಂಽೕಜಿಯವರು ಸಸ್ಯಹಾರಿ ಆಗಿದ್ದರು. ನಮ್ಮ ಸಂಸ್ಕೃತಿ ಸಂಪ್ರದಾಯಗಳ ಬಗ್ಗೆ ನಂಬಿಕೆ ಇಟ್ಟುಕೊಂಡಿದ್ದರು. ದೇಶದಲ್ಲಿಂದು ದೊಡ್ಡ ಸಂಪ್ರದಾಯವಾದಿಗಳಿದ್ದಾರೆ. ಆದರೆ ಸಂಪ್ರದಾಯವಾದಿಗಳಲ್ಲ, ಮೂಲಭೂತವಾದಿಗಳೂ ಅಲ್ಲ. ಇದನ್ನು ನಾವು ಅರಿತುಕೊಳ್ಳಬೇಕಿದೆ ಎಂದು ವೀರ್ ಸಾರ್ವಕರ್ ಹಾಗೂ ಗಾಂಽ ಬಗ್ಗೆ ತುಲನೆ ಮಾಡಿದ್ದರು.
8
+ ಸಚಿವ ಈ ಹೇಳಿಕೆ ತೀವ್ರ ವಿವಾದವನ್ನು ಸೃಷ್ಟಿಸಿದೆ. ಹಿಂದೂ ಧರ್ಮದ ಐಕಾನ್ನಂತಿರುವ ವೀರ್ ಸಾರ್ವಕರ್ ಬಗ್ಗೆ ಲಘುವಾಗಿ ಮಾತನಾಡಿರುವ ದಿನೇಶ್ ಗುಂಡೂರಾವ್ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಅವರ ವಿರುದ್ಧ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಬಿಜೆಪಿ ಹಾಗೂ ಬಲಪಂಥೀಯ ಸಂಘಟನೆಗಳು ಗುಂಡೂರಾವ್ಗೆ ಎಚ್ಚರಿಕೆ ಕೊಟ್ಟಿದ್ದಾರೆ.
eesanje/url_46_2_7.txt ADDED
@@ -0,0 +1,8 @@
 
 
 
 
 
 
 
 
 
1
+ ನೈತಿಕತೆಯ ಪಾಠ ಮಾಡುವ ಬಿಜೆಪಿಯ ನಾಯಕರು ಮೊದಲು ರಾಜೀನಾಮೆ ನೀಡಲಿ : ಪ್ರಿಯಾಂಕ ಖರ್ಗೆ
2
+ :
3
+ ಬೆಂಗಳೂರು,ಅ.3-ನೈತಿಕತೆಯ ಪಾಠ ಮಾಡಿದ ಬಿಜೆಪಿಯ ನಾಯಕರು ಮೊದಲು ತಮ ತಪ್ಪುಗಳಿಗಾಗಿ ರಾಜೀನಾಮೆ ನೀಡಲಿ. ನಂತರ ಬೇರೆಯವರ ಬಗ್ಗೆ ಮಾತನಾಡಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ ಖರ್ಗೆ ತಿರುಗೇಟು ನೀಡಿದ್ದಾರೆ.
4
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರ ರಾಜೀನಾಮೆ ಕೇಳುವ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ರವರ ಭೂಹಗರಣದ ಬಗ್ಗೆ ನಿನ್ನೆ ದಾಖಲಾತಿ ಕೇಳಿದ ಹಗರಣವನ್ನು ಬಯಲು ಮಾಡಿದ್ದೇವೆ. ಈವರೆಗೂ ನೈತಿಕತೆಯ ಪಾಠ ಮಾಡುತ್ತಿದ್ದ ಆರ್‌.ಅಶೋಕ್‌ ಮೊದಲು ತಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದರು.
5
+ ನಂತರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ಕೊಡಬೇಕಾಗುತ್ತದೆ. ಆಮೇಲೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರದಿ ಬರುತ್ತದೆ. ಹೀಗೆ ಬಿಜೆಪಿಯಲ್ಲಿ ರಾಜೀನಾಮೆಯ ಸರಣಿ ಮುಂದುವರೆದರೆ ನಂತರ ಕೆ.ಎಸ್‌‍.ಈಶ್ವರಪ್ಪ ಹೇಳಿದಂತೆ ಬಿಜೆಪಿ ಸ್ವಚ್ಛವಾಗಲಿದೆ ಎಂದು ಹೇಳಿದರು.
6
+ ಜಾರಿ ನಿರ್ದೇಶನಾಲಯವೇ ನೀಡಿರುವ ಅಂಕಿ ಅಂಶಗಳನ್ನು ನೋಡಿದರೆ ಅದು ಎಷ್ಟು ದುರುಪಯೋಗವಾಗುತ್ತಿದೆ ಎಂದು ಸ್ಪಷ್ಟವಾಗುತ್ತದೆ. 5,297 ಪ್ರಕರಣಗಳು ದಾಖಲಾಗಿದ್ದು, ಶಿಕ್ಷೆಯಾಗಿರುವುದು ಕೇವಲ 40 ಕ್ಕೆ ಮಾತ್ರ. 4 ಪ್ರಕರಣಗಳು ಸಕ್ರಿಯವಾಗಿವೆ. ಮನಿಲ್ಯಾಂಡ್ರಿಂಗ್‌ ಕಾಯ್ದೆಯನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳ ಲಾಗುತ್ತಿದೆ. ಕೇಂದ್ರ ಗೃಹಸಚಿವ ಅಮಿತ್‌ ಷಾ ನೀಡಿರುವ ಮಾಹಿತಿಯೇ ಇದನ್ನು ಸ್ಪಷ್ಟಪಡಿಸಿದೆ ಎಂದರು.
7
+ ಕರ್ನಾಟಕದಲ್ಲೂ ಸಿಬಿಐ, ಐಟಿ, ಇಡಿ ಗಳನ್ನು ರಾಜಕೀಯಕ್ಕೆ ಬಳಸಲಾಗುತ್ತಿದೆ. ರಾಜಭವನವನ್ನು ಸ್ವಂತ ಕಚೇರಿಯ ಹಾಗೆ ಬಿಜೆಪಿಯವರು ಬಳಸುತ್ತಿದ್ದಾರೆ. ನನ್ನನ್ನೂ ಸೇರಿದಂತೆ ಕಾಂಗ್ರೆಸಿಗರ ಪ್ರಕರಣಗಳು ಬಂದಾಗ 24 ಗಂಟೆಯಲ್ಲಿ ರಾಜ್ಯಪಾಲರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಆದರೆ ಬಿಜೆಪಿಯ ವಿರುದ್ಧ ದೂರು ನೀಡಿದರೆ ಅದು ರಾಜಭವನದಲ್ಲೇ ಉಳಿದುಹೋಗುತ್ತದೆ ಎಂದು ಆಕ್ಷೇಪಿಸಿದರು.
8
+ ಸಾವರ್ಕರ್‌, ಮಹಾತಗಾಂಧೀಜಿ ಹಾಗೂ ನಾಥೂರಾಮ್‌ ಗೂಡ್ಸೆ ಕುರಿತಂತೆ ಸಚಿವ ದಿನೇಶ್‌ ಗುಂಡೂರಾವ್‌ ನೀಡಿರುವ ಹೇಳಿಕೆ ಬಗ್ಗೆ ಚರ್ಚೆಗೆ ನಾವು ಸಿದ್ಧರಿದ್ದೇವೆ. ಬಿಜೆಪಿಯವರು ವಾಟ್‌್ಸಆ್ಯಪ್‌ ಯೂನಿವರ್ಸಿಟಿಯಲ್ಲಿ ಓದಿಕೊಂಡು ಬಂದಿದ್ದಾರೆ. ನೈಜ ಇತಿಹಾಸ ತಿಳಿದುಕೊಳ್ಳಲು ಪ್ರಯತ್ನಿಸುವುದಿಲ್ಲ. ಸಾವರ್ಕರ್‌ ಬ್ರಿಟಿಷರಿಂದ ಪಿಂಚಣಿ ತೆಗೆದುಕೊಂಡಿದ್ದು ಸುಳ್ಳೇ ಎಂದು ಪ್ರಶ್ನಿಸಿದರು. ಬಿಜೆಪಿಯವರು ಇತಿಹಾಸವನ್ನು ತಿಳಿದುಕೊಂಡು ಚರ್ಚೆಗೆ ಬರಲಿ. ನಾನು ಮತ್ತು ದಿನೇಶ್‌ಗುಂಡೂರಾವ್‌ ಈ ವಿಚಾರವಾಗಿ ಮಾತನಾಡಲು ಸಿದ್ಧರಿದ್ದೇವೆ ಎಂದರು.
eesanje/url_46_2_8.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಮುಡಾ ಹಗರಣ : ಇ.ಡಿ.ಗೆ 500 ಪುಟಗಳ ದಾಖಲೆ ಸಲ್ಲಿಕೆ
2
+ : 500-
3
+ ಬೆಂಗಳೂರು,ಅ.3-ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯಕ್ಕೆ ನೀಡಿದ್ದ ದೂರರ್ಜಿಗೆ ಪೂರಕವಾಗಿ 500 ಪುಟಗಳ ದಾಖಲೆಗಳನ್ನು ಸಲ್ಲಿಸಲಾಗಿದೆೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.
4
+ ನಗರದಲ್ಲಿಂದು ಜಾರಿ ನಿರ್ದೇಶನಾಲಯದ ಕಚೇರಿಗೆ ಹಾಜರಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲೇ ದೂರರ್ಜಿಯ ಜೊತೆ ದಾಖಲೆಗಳನ್ನು ನೀಡಿದ್ದೇನೆ. ಇಂದು ಹೊಸದಾಗಿ ದಾಖಲೆಗಳನ್ನು ನೀಡುವ ಅಗತ್ಯವಿರಲಿಲ್ಲ. ಆದರೆ ಜಾರಿ ನಿರ್ದೇಶನಾಲಯವು ನಮ ಕುಟುಂಬದ ಮಾಹಿತಿಯನ್ನು ಪಡೆಯಲು ಸಮನ್‌್ಸ ನೀಡಿತ್ತು ಎಂದು ಹೇಳಿದರು.
5
+ ಲಭ್ಯವಿರುವ ಮಾಹಿತಿ ಪ್ರಕಾರ ಜಾರಿ ನಿರ್ದೇಶನಾಲಯ ದೂರುದಾರರ ಎಲ್ಲಾ ಮಾಹಿತಿಗಳನ್ನು ಮೊದಲು ಪಡೆದು ನಂತರ ವಿಚಾರಣೆ ಮುಂದುವರೆಸಲಿದೆ ಎಂದು ತಿಳಿದುಬಂದಿದೆ. ಹೀಗಾಗಿ ಸಮನ್ಸ್ ನಲ್ಲಿ ಕೇಳಿದ್ದ ಮಾಹಿತಿಗಳನ್ನು ತಾವು ಸಲ್ಲಿಸುವುದಾಗಿ ಹೇಳಿದರು.
6
+ ಮುಖ್ಯಮಂತ್ರಿಯವರ ಪತ್ನಿ ಪಾರ್ವತಿಯವರು ತಪ್ಪನ್ನು ಒಪ್ಪಿಕೊಂಡು ಮುಡಾಗೆ 14 ನಿವೇಶನಗಳನ್ನು ವಾಪಸ್‌‍ ನೀಡಿದ್ದಾರೆ. ಇದು ನಮ ತನಿಖೆಗೆ ಸಹಕಾರಿಯಾಗಿದೆ ಎಂದರು.ವಾಸ್ತವವಾಗಿ ಆ 14 ನಿವೇಶನಗಳು ಮತ್ತು ಕೆಸರೆ ಗ್ರಾಮದ ಭೂಮಿ ಮುಡಾಗೆ ಸೇರಿದೆ. ಈಗ ಪಾರ್ವತಿಯವರು 14 ನಿವೇಶನಗಳನ್ನು ಮುಡಾಗೆ ವಾಪಸ್‌‍ ನೀಡಲು ಅವಕಾಶವಿಲ್ಲ ಎಂದು ಹೇಳಿದರು.
7
+ ದೂರುದಾರರಾದ ಸ್ನೇಹಮಯಿ ಕೃಷ್ಣ ಮತ್ತು ಪ್ರದೀಪ್‌ರವರು ಮಧ್ಯಮ ವರ್ಗದ ಕುಟುಂಬದವರಾಗಿದ್ದು, ಅವರಿಗೆ ಅಷ್ಟೊಂದು ವಕೀಲರನ್ನು ನೇಮಿಸಿಕೊಳ್ಳುವ ಆರ್ಥಿಕ ಚೈತನ್ಯ ಇಲ್ಲ. ಹೀಗಾಗಿ ಅವರಿಬ್ಬರ ಹಿಂದೆ ಕಾಣದ ಕೈಗಳ ಕೈವಾಡವಿದೆ. ಆದಾಯ ಮೂಲಗಳ ಬಗ್ಗೆಯೂ ತನಿಖೆ ನಡೆಸಬೇಕು ಎಂದು ವಕೀಲರೊಬ್ಬರು ದೂರು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಸ್ನೇಹಮಯಿ ಕೃಷ್ಣ, ಮುಖ್ಯಮಂತ್ರಿಯ ವಿರುದ್ಧ ಸಾಮಾನ್ಯ ಕುಟುಂಬದ ವ್ಯಕ್ತಿಯೂ ತನ್ನ ಹಕ್ಕು ಚಲಾಯಿಸಿ ಹೋರಾಟ ನಡೆಸಲು ಸಂವಿಧಾನ ಅವಕಾಶ ಕಲ್ಪಿಸಿದೆ. ಮುಖ್ಯಮಂತ್ರಿ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ ಎಂಬ ಕಾರಣಕ್ಕೆ ಈ ರೀತಿಯ ಅನಗತ್ಯ ಆರೋಪಗಳು ಸರಿಯಲ್ಲ ಎಂದರು.
8
+ ಇಲ್ಲಿ ಕಾಣದ ಕೈಗಳಿವೆ ಎಂಬುದು ಮುಖ್ಯ ಪ್ರಶ್ನೆಯಲ್ಲ. ನಾವು ಮಾಡಿರುವ ಆರೋಪ ಸತ್ಯವೋ, ಸುಳ್ಳೋ ಎಂಬುದು ಆದ್ಯತೆ ಪಡೆಯಬೇಕು. ನಾನು ಯಾವುದೇ ರೀತಿಯ ತನಿಖೆಗಾದರೂ ಸಿದ್ಧನಿದ್ದೇನೆ ಎಂದು ತಿಳಿಸಿದರು.
9
+ ತಮ ವಿರುದ್ಧ ನ್ಯಾಯಾಲಯ ಜಾಮೀನುರಹಿತ ವಾರೆಂಟ್‌ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸ್ನೇಹಮಯಿ ಕೃಷ್ಣ 2015 ರಿಂದಲೂ ತಮ ವಿರುದ್ಧ ಪ್ರಕರಣ ನಡೆಯುತ್ತಿದೆ. ಇತ್ತೀಚೆಗೆ ಲೋಕಾಯುಕ್ತ ಪೊಲೀಸರು ಸ್ಥಳ ಪರಿಶೀಲನೆ ನಡೆಸಲು ಕರೆದಾಗ ನಾನು ಅದರಲ್ಲಿ ಭಾಗವಹಿಸಿದ್ದೆ. ನ್ಯಾಯಾಲಯದ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಲಿಲ್ಲ. ಹೀಗಾಗಿ ಎಂಬಿಡಬ್ಲ್ಯೂ ಆಗಿದೆ. ನ್ಯಾಯಾಲಯಕ್ಕೆ ಹಾಜರಾಗುತ್ತೇನೆ. ಅದಕ್ಕೆ ದಾಖಲೆಗಳನ್ನು ಸಲ್ಲಿಸಿ ಜಾಮೀನು ರಹಿತ ಬಂಧನ ಆದೇಶವನ್ನು ತೆರವುಗೊಳಿಸಿಕೊಳ್ಳಲಾಗುವುದು ಎಂದರು.
10
+ ಲೋಕಾಯುಕ್ತ ಪೊಲೀಸರು ಆರಂಭಿಸಿರುವ ತನಿಖೆಗೆ ಸಹಕರಿಸುವುದು ದೂರುದಾರನಾಗಿ ನನ್ನ ಕರ್ತವ್ಯ. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂಬುದು ನಮ ವಾದವಾಗಿತ್ತು. ಈ ಬಗ್ಗೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಅದರ ವಿಚಾರಣೆ ಶೀಘ್ರವೇ ನಡೆಯಲಿದೆ. ಆ ವೇಳೆ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವುದು ಎಷ್ಟು ಅಗತ್ಯ ಎಂದು ನಮ ವಕೀಲರು ವಾದಿಸಲಿದ್ದಾರೆ. ನ್ಯಾಯಾಲಯ ನಮ ವಾದವನ್ನು ಪರಿಗಣಿಸಲಿದೆ ಎಂಬ ವಿಶ್ವಾಸವಿದೆ ಎಂದರು.
eesanje/url_46_2_9.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ಭೂ ಕಬಳಿಕೆ ಸಾಬೀತಾದರೆ ರಾಜೀನಾಮೆ ಕೊಡಲು ಸಿದ್ಧ : ಸಿಎಂಗೆ ಅಶೋಕ್‌ ಸವಾಲು
2
+
3
+ ಬೆಂಗಳೂರು,ಅ.3– ಒಂದು ವೇಳೆ ನಾನು ನಿಯಮಬಾಹಿರವಾಗಿ ಬಿಡಿಎಗೆ ಸೇರಿದ ಜಮೀನನ್ನು ಭೂ ಕಬಳಿಕೆ ಮಾಡಿರುವುದು ಸಾಬೀತಾದರೆ ವಿರೋಧ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದನಿದ್ದೇನೆ. ನಿಮಗೆ ನೈತಿಕತೆ ಇದ್ದರೆ ಸಿಎಂ ಸಿದ್ದರಾಮಯ್ಯನವರಿಂದ ರಾಜೀನಾಮೆಯನ್ನು 24 ಗಂಟೆಗಳ ಒಳಗೆ ಕೊಡಿಸುತ್ತೀರಾ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಕಾಂಗ್ರೆಸ್‌‍ಗೆ ಬಹಿರಂಗ ಸವಾಲು ಹಾಕಿದ್ದಾರೆ.
4
+ ತಮ ವಿರುದ್ಧ ಸಚಿವರಾದ ಡಾ.ಜಿ.ಪರಮೇಶ್ವರ್‌, ಕೃಷ್ಣಭೈರೇಗೌಡ, ಎಚ್‌.ಕೆ.ಪಾಟೀಲ್‌, ಸತೀಶ್‌ ಜಾರಕಿಹೊಳಿ ಅವರುಗಳು ಮಾಡಿದ ಆರೋಪಕ್ಕೆ ಪತ್ರಿಕಾಗೋಷ್ಠಿಯಲ್ಲಿ ತಿರುಗೇಟು ನೀಡಿದ ಅವರು ನನ್ನ ಪ್ರಕರಣವೇ ಬೇರೆ, ಸಿಎಂ ಸಿದ್ದರಾಮಯ್ಯನವರಪ್ರಕರಣವೇ ಬೇರೆ ಎಂದು ಸಮರ್ಥಿಸಿಕೊಂಡರು.
5
+ ಹಾಗೊಂದು ವೇಳೆ ಭೂ ಕಬಳಕೆ ಮಾಡಿರುವುದು ರುಜುವಾತಾದರೆ ಒಂದೇ ಒಂದು ಕ್ಷಣವೂ ಕೂಡ ವಿರೋಧ ಪಕ್ಷದಲ್ಲಿ ಕೂರದೆ ರಾಜೀನಾಮೆ ನೀಡುತ್ತೇನೆ. ನಾನು 24 ಗಂಟೆ ಗಡುವು ಕೊಡುತ್ತೇನೆ. ಮುಡಾ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯನವರಿಂದ ರಾಜೀನಾಮೆ ಕೊಡಿಸುತ್ತೀರಾ ಎಂದು ಪ್ರಶ್ನಿಸಿದರು.
6
+ ಒಂದು ವೇಳೆ ಸಿದ್ದರಾಮಯ್ಯ ರಾಜೀನಾಮೆ ನೀಡದಿದ್ದರೆ ಕಡೆಪಕ್ಷ ನೀವಾದರೂ ರಾಜೀನಾಮೆ ಕೊಡಲು ಸಿದ್ದರಿದ್ದೀರಾ? ನಾವು ರಾಮನ ಭಂಟ ಹನುಮಂತನಂತೆ ಸಿಎಂ ಬೆಂಬಲಕ್ಕೆ ಇದ್ದೇವೆ ಎಂದು ಹೇಳಿಕೊಳ್ಳುತ್ತೀರಿ. ಈ ಮೂಲಕವಾದರೂ ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳಿ ಎಂದು ಆಗ್ರಹಿಸಿದರು.
7
+ ಕಾಂಗ್ರೆಸ್‌‍ನವರು ನಾವು ಒಂದು ವರ್ಷ ಅಧಿಕಾರದಲ್ಲಿರುತ್ತೇವೆ ಎಂದು ಭಾವಿಸಿದ್ದಾರೆ. ಕಾಲಚಕ್ರ ಉರುಳತ್ತದೆ ಎಂಬುದನ್ನು ಮರೆಯಬೇಡಿ. ಕರ್ನಾಟಕದಲ್ಲಿ 30 ವರ್ಷಗಳಿಂದ ಯಾವುದೇ ಒಂದು ಪಕ್ಷ ಸತತವಾಗಿ ಅಧಿಕಾರಕ್ಕೆ ಬಂದಿಲ್ಲ. ಇದು ನಿಮ ಗಮನದಲ್ಲಿ ಇರಲಿ ಎಂದು ಎಚ್ಚರಿಕೆ ಕೊಟ್ಟರು.
8
+ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಹಂತಕ್ಕೆ ಬಂದಿರುವುದರಿಂದ ಇದನ್ನು ಮರೆಮಾಚಲು ನನ್ನ ವಿರುದ್ಧ ಭೂ ಕಬಳಿಕೆ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ಪ್ರಕರಣದಲ್ಲಿ ನನ್ನನ್ನು ಯಾಕೆ ಹೋಲಿಕೆ ಮಾಡ್ತೀರಾ..? ಇದು ಅರಿಶಿನ ಕುಂಕುಮ ಕೊಟ್ಟು ತೆಗೆದುಕೊಂಡ ಜಮೀನು ಅಲ್ಲ. ಹಣ ಕೊಟ್ಟು ಜಮೀನು ತೆಗೆದುಕೊಂಡಿದ್ದೇನೆ. ಯಾರೋ ದಾಖಲೆ ಕೊಟ್ಟರು ಎಂದು ನನ್ನ ಮೇಲೆ ಆರೋಪ ಮಾಡುತ್ತೀರಾ ಎಂದು ಕಾಂಗ್ರೆಸ್‌‍ ನೈತಿಕತೆ ಪ್ರಶ್ನೆ ಮಾಡಿದರು.
9
+ ನಿವೇಶನ ಏಕೆ ವಾಪಸ್‌‍ ಕೊಟ್ಟರು ಎಂದು ನಾಲ್ಕು ಜನ ಮಂತ್ರಿಗಳು ಮಾತನಾಡಿದ್ದಾರೆ. ಸಿದ್ದರಾಮಯ್ಯ ಮೇಲೆ ಹೈಕೋರ್ಟ್‌ ಈಗಾಗಲೇ ಆಪಾದಿತ ಮಾಡಿದೆ. ಮೇಲ್ನೋಟಕ್ಕೆ ಅರೋಪ ಕಂಡುಬಂದಿದೆ. ಹೈಕೋರ್ಟ್‌, ಜನಪ್ರತಿನಿಧಿ ನ್ಯಾಯಾಲಯ ಸಹ ತನಿಖೆಗೆ ಆದೇಶ ಕೊಟ್ಟಿದೆ. ಸಿದ್ದರಾಮಯ್ಯ ಈಗ ನ್ಯಾ��ಾಲಯದ ಆದೇಶ ಬಂದ ಮೇಲೆ ನಿವೇಶನ ವಾಪಸ್‌‍ ಮಾಡಿದ್ದಾರೆ ಎಂದು ಟೀಕಿಸಿದರು.
10
+ ನ್ಯಾಯಾಲಯದ ಆದೇಶ ಬರುವ ಮೊದಲೇ ನಾನು ಸೈಟ್‌ ವಾಪಸ್‌‍ ಮಾಡಿದ್ದೇನೆ. ಆದರೆ ಸಿದ್ದರಾಮಯ್ಯ ಆದೇಶ ಬಂದ ಮೇಲೆ ವಾಪಸ್‌‍ ಮಾಡಿದ್ದಾರೆ ಎಂದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನನ್ನನ್ನು ಆರೋಪ ಮುಕ್ತ ಮಾಡಿದೆ. ಹೈಕೋರ್ಟ್‌ ಸಹ ರಿಲೀಫ್‌ ಕೊಟ್ಟಿದೆ. ಪ್ರಕರಣ ದಾಖಲು ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳಿದೆ. ನ್ಯಾಯಾಲಯ ದೊಡ್ಡದೋ..? ಕಾಂಗ್ರೆಸ್‌‍ ದೊಡ್ಡದೋ..? ಎಂದು ತರಾಟೆಗೆ ತೆಗೆದುಕೊಂಡರು.
11
+ ರಾಮಸ್ವಾಮಿ ಯಾರು..? ಬೇನಾಮಿ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಮಿಸ್ಟರ್‌ ಕೃಷ್ಣ ಬೈರೇಗೌಡ್ರೆ ಕೋಲಾರದಲ್ಲಿ ಇರುವ ನಿಮ ತಂದೆ ಆಸ್ತಿ ಯಾರಿಗೆ ಬಂದಿದೆ? ನಿಮಗೆ ಆಸ್ತಿ ಬರುತ್ತದೆಯೇ ಇಲ್ಲವೇ? ಎಂದು ಪ್ರಶ್ನಿಸಿದರು. ಮುನಿ ವೆಂಕಟಪ್ಪ ವಿಲ್‌ ಮಾಡಿ ಅವರ ಮಕ್ಕಳಿಗೆ ಕೊಟ್ಟಿದ್ದಾರೆ. ನಿವೇಶನ ನನಗೆ ಕೊಡುವಾಗ ಮುನಿ ವೆಂಕಟಪ್ಪ ಮಕ್ಕಳು 20 ಜನ ಸಹಿ ಮಾಡಿದ್ದಾರೆ. ಹೀಗಿದ್ದ ಮೇಲೆ ಬೇನಾಮಿ ಹೇಗೆ ಆಗುತ್ತದೆ ಎಂದು ಆಕ್ರೊಶಗೊಂಡರು.
12
+ ಅಕ್ರಮವಾಗಿ ಯಡಿಯೂರಪ್ಪನವರ ಮೇಲೆ ಡಿನೋಟಿಫೈ ಮಾಡಿದ್ದಾರೆ ಎಂದು ಕಾಂಗ್ರೆಸ್‌‍ ಸಚಿವರು ಆರೋಪಿಸಿದ್ದಾರೆ. ರಿಂಗ್‌ರೋಡ್‌ ಹತ್ತಿರ 1 ಎಕರೆ ಹತ್ತಿರ ಜಮೀನು ಖರೀದಿ ಮಾಡಿದ್ದೇನೆ ಎಂದು ಎಸ್‌‍. ಎಮ್‌.ಕೃಷ್ಣ ಅವರು, ನಮ ಸರ್ಕಾರ ಇದ್ದಾಗ ರಿಂಗ್‌ ರೋಡ್‌ ಗೆ ಹೊರತಾಗಿ ಉಳಿದ ಜಮೀನು ಬಿಡಬೇಕು ಎಂದಿದ್ದರು. ಆಗ ಅವರು ಕೇಂದ್ರ ಸಚಿರಾಗಿದ್ದಾರು ಎಂದು ಹೇಳಿದರು.
13
+ ಬಿಡಿಎ ಸ್ವತ್ತು ಜಮೀನು ಸ್ವಾಧೀನ ಹೇಗೆ ಮಾಡಿದ್ದೀರಿ ಎಂದು ಸಚಿವರು ಪ್ರಶ್ನೆ ಮಾಡಿದ್ದಾರೆ. ಬಿಡಿಎ ಪತ್ರದ ಮೂಲಕ ನಮಗೆ ಬಿಟ್ಟು ಕೊಟ್ಟಿದೆ ಎಂದು ಸಮರ್ಥನೆ ಮಾಡಿಕೊಂಡರು.ಮುಡಾದಲ್ಲಿ ಸಿದ್ದರಾಮಯ್ಯ 60/40 ನಿವೇಶನ ಪಡೆದ್ದಿದ್ದಾರೆ. ಇಲ್ಲಿ ಶೇ.60ರಷ್ಟು ಸಿದ್ದರಾಮಯ್ಯಗೆ ಶೇ.40ರಷ್ಟು ಮಾತ್ರವೇ ಸರ್ಕಾರಕ್ಕೆ. ಆದರೆ ನಿವೇಶನದಲ್ಲಿ ಶೇ.70ಸರ್ಕಾರಕ್ಕೆ , ಶೇ.30 ನಮಗೆ ನೀಡಿದ್ದಾರೆ ಎಂದು ತಿಳಿಸಿದರು.
14
+ ರಿಂಗ್‌ ರೋಡ್‌ಗೆ ಬೇಕಾದ ಭೂಮಿ ಬಳಕೆ ಆಗಿದೆ. ಉಳಿದ ಭೂಮಿ ಮಾಲೀಕರಿಗೆ ನೀಡಲಾಗಿದೆ ಎಂದು ಬಿಡಿಎ ಪತ್ರ ಬರೆದಿದೆ. ಗೃಹಸಚಿವ ಪರಮೇಶ್ವರ್‌ ಅವರು ಈ ಭೂಮಿ ಬಿಡಿಎದ್ದು ಎಂದು ಹೇಳುತ್ತಾರೆ, ಯಾವುದಪ್ಪ ಬಿಡಿಎ ಸೈಟ್‌ ಎಂದು ಅಶೋಕ್‌ ವ್ಯಂಗ್ಯವಾಡಿದರು.
15
+ ಕೃಷ್ಣ ಬೈರೇಗೌಡರ ಹತ್ತಿರ ಹಣ ಅಂತಸ್ತು ಇದೆ. ಬಹಳ ಗೌರವಾನ್ವಿತ ಮನುಷ್ಯ, ಹೆಚ್‌.ಕೆ.ಪಾಟೀಲ್‌ ಬಹಳ ಹಿರಿಯರು. ಪರಮೇಶ್ವರ್‌ ಬಹಳ ಸಜ್ಜನ ರಾಜಕಾರಣಿ, ಸತೀಶ್‌ ಜಾರಕಿಹೊಳಿ ಒಬ್ಬರೇ ಸುಮನೇ ಕುಳಿತಿದ್ದರು. ಏಕೆಂದರೆ ಅವರಿಗೆ ಗೊತ್ತಿತ್ತು ಅನಿಸುತ್ತದೆ ಇದು ಬುರುಡೆ ಪ್ರಕರಣ ಎಂದು ಕುರುಹಕವಾಡಿದರು.
eesanje/url_46_300_1.txt ADDED
@@ -0,0 +1,9 @@
 
 
 
 
 
 
 
 
 
 
1
+ ಬೆಳಗಾವಿ ಅಧಿವೇಶನಕ್ಕೆ ಕಾರ್ಯತಂತ್ರ : ಬಿಜೆಪಿ-ಜೆಡಿಎಸ್ ನಾಯಕರ ಸಭೆ
2
+ ಬೆಂಗಳೂರು,ಡಿ.1- ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನ ಹಾಗೂ ಲೋಕಸಭೆ ಚುನಾವಣೆ ಕಾರ್ಯತಂತ್ರ ಕುರಿತಂತೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ.
3
+ ರೇಸ್‍ಕೋರ್ಸ್ ರಸ್ತೆಯಲ್ಲಿರುವ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಸೇರಿದ ಫ್ಲಾಟ್‍ನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಕೆಲವೇ ಕೆಲವು ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದರು.
4
+ ಸುಮಾರು 2 ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಅಧಿವೇಶನದ ವೇಳೆ ಸರ್ಕಾರದ ವಿರುದ್ಧ ಒಗ್ಗಟ್ಟಿನಿಂದ ಹೋರಾಟ ಮಾಡಬೇಕು. ಸರ್ಕಾರದ ವೈಫಲ್ಯವನ್ನು ಈ ಅಧಿವೇಶನದಲ್ಲಿ ಎತ್ತಿ ತೋರಿಸಿ ಜನರಿಗೆ ಮನವರಿಕೆ ಮಾಡಿಕೊಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ.
5
+ ಸರ್ಕಾರದ ವಿರುದ್ಧ ಸ್ವಪಕ್ಷೀಯರು ಮಾಡುತ್ತಿರುವ ಆರೋಪಗಳು ಭ್ರಷ್ಟಾಚಾರ, ಶಾಸಕರೇ ಪತ್ರ ಬರೆದಿರುವುದು ಬರ ನಿರ್ವಹಣೆಯಲ್ಲಿ ವೈಫಲ್ಯ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಲು ಉಭಯ ಪಕ್ಷದ ನಾಯಕರು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ. ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಲಾಗುತ್ತಿದೆ. 10 ಕೆ.ಜಿ. ಅಕ್ಕಿಯನ್ನು ಕೊಡದೆ, ಫಲಾನುಭವಿಗಳ ಖಾತೆಗೆ ಹಣವನ್ನೂ ಹಾಕದೆ ಮೋದಿ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಎಂಬ ಅಪಪ್ರಚಾರ ನಡೆಸಲಾಗಿದೆ.
6
+ ದುಬೈನಲ್ಲಿ ಮೊಳಗಿತು ‘ಭಾರತ್ ಮಾತಾ ಕೀ ಜೈ’ ಘೋಷಣೆ
7
+ ಗೃಹಲಕ್ಷ್ಮಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನ ಮಾಡುತ್ತಿಲ್ಲ. ನವೆಂಬರ್ ತಿಂಗಳು ಮುಗಿದರೂ ಶೇ. 50 ರಷ್ಟು ಫಲಾನುಭವಿಗಳಿಗೆ ಹಣ ಸಂದಾಯವಾಗಿಲ್ಲ. ಇನ್ನು ಅಧಿಕಾರಕ್ಕೆ ಬಂದ ಮೊದಲ ಸಂಪುಟದಲ್ಲಿ 5 ಗ್ಯಾರಂಟಿಗಳನ್ನು ಅನುಷ್ಠಾನ ಮಾಡುವುದಾಗಿ ಘೋಷಣೆ ಮಾಡಲಾಗಿತ್ತು.
8
+ ಪದವೀಧರರಿಗೆ ಪ್ರತಿ ತಿಂಗಳು ಮಾಸಾಶನ ನೀಡುವ ಯುವನಿಧಿ ಯೋಜನೆ ಈಗಲೂ ಅನುಷ್ಠಾನವಾಗಿಲ್ಲ. ಇದರ ಬಗ್ಗೆಯೂ ಸರ್ಕಾರದ ಕಿವಿ ಹಿಂಡುವ ಕೆಲಸವನ್ನು ಮಾಡಬೇಕೆಂಬ ಅಭಿಪ್ರಾಯ ಕೇಳಿಬಂದಿದೆ. ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ಲೋಕಸಭೆ ಚುನಾವಣೆಗೆ ಸಿದ್ಧತೆಯನ್ನು ಕೈಗೊಳ್ಳಬೇಕು. 2 ರಿಂದ 3 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ 2024 ರ ಲೋಕಸಭೆ ಚುನಾವಣೆಗೆ ಸಿದ್ಧತೆಯನ್ನು ಆರಂಭಿಸಬೇಕು.
9
+ ಕ್ಷೇತ್ರ ಹಂಚಿಕೆ ಸರ್ಕಾರದ ವಿರುದ್ಧ ಜನಾಂಧೋಲನ ರೂಪಿಸುವುದು, ಚುನಾವಣೆ ಕಾರ್ಯತಂತ್ರ, ಜಂಟಿ ಪ್ರಚಾರ ಹೀಗೆ ಹಲವು ವಿಷಯಗಳ ಬಗ್ಗೆ ಕುಮಾರಸ್ವಾಮಿ, ಅಶೋಕ್ ಮತ್ತು ವಿಜಯೇಂದ್ರ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
eesanje/url_46_300_10.txt ADDED
@@ -0,0 +1,8 @@
 
 
 
 
 
 
 
 
 
1
+ ಶಿಶು ಮಾರಾಟ ದಂಧೆ : 250ಕ್ಕೂ ಹೆಚ್ಚು ಶಿಶುಗಳ ಮಾರಾಟ ಬೆಳಕಿಗೆ
2
+ ಬೆಂಗಳೂರು,ನ.30- ಹಸುಗೂಸು ಮಾರಾಟ ದಂಧೆಯ ಆರೋಪಿಗಳು ಕಳೆದ ಆರು ವರ್ಷಗಳಲ್ಲಿ 250ಕ್ಕೂ ಹೆಚ್ಚು ನವಜಾತ ಶಿಶುಗಳನ್ನು ಮಾರಾಟ ಮಾಡಿದ್ದಾರೆಂಬುದು ಸಿಸಿಬಿ ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಮಾರಾಟ ಮಾಡಿರುವ ಮಕ್ಕಳ ಪೈಕಿ 50ರಿಂದ 60 ಮಕ್ಕಳನ್ನು ಕರ್ನಾಟಕದಲ್ಲಿ ಹಾಗೂ ಉಳಿದ ಮಕ್ಕಳನ್ನು ತಮಿಳುನಾಡಿಗೆ ಮಾರಾಟ ಮಾಡಿರುವುದು ಗೊತ್ತಾಗಿದೆ. ಹಸುಗೂಸು ಮಾರಾಟ ಸಂಬಂಧ ಬಂಧಿತರಾಗಿರುವ 10 ಆರೋಪಿಗಳನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದಾಗ ಈ ಮಾಹಿತಿ ಹೊರಬಂದಿದೆ.
3
+ ಆರೋಪಿಗಳು ಈ ವಿಚಾರವನ್ನು ಬಾಯ್ಬಿಡುತ್ತಿದ್ದಂತೆ ಸಿಸಿಬಿ ಪೊಲೀಸರು ಮತ್ತಷ್ಟು ಕಾರ್ಯಪ್ರವೃತ್ತರಾಗಿ ಕರ್ನಾಟಕದಲ್ಲಿ ಮಾರಾಟವಾಗಿರುವ ಮಕ್ಕಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು, ಸದ್ಯ 10 ಮಕ್ಕಳ ಸುಳಿವು ಸಿಕ್ಕಿದ್ದು, ಉಳಿದ ಮಕ್ಕಳನ್ನು ಎಲ್ಲಿ, ಯಾರಿಗೆ ಮಾರಾಟ ಮಾಡಿದ್ದಾರೆಂಬ ಬಗ್ಗೆ ವಿವರಗಳನ್ನು ಪಡೆಯುತ್ತಿದ್ದಾರೆ.
4
+ ಮೊಬೈಲ್‍ ಬಳಕೆ ವಿಚಾರಕ್ಕೆ ರೊಚ್ಚಿಗೆದ್ದು ಮಗನನ್ನೇ ಕೊಂದ ಅಪ್ಪ
5
+ ಆಗ ಗಾರ್ಮೆಂಟ್ಸ್ ಉದ್ಯೋಗಿ- ಈಗ ಕೋಟ್ಯಾಶ್ವರಿ:ಕರ್ನಾಟಕದ ಗ್ಯಾಂಗ್ ಲೀಡರ್ ಮಹಾಲಕ್ಷ್ಮಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದುಕೊಂಡು 2015ರಿಂದ 17ರವರೆಗೂ ಗಾರ್ಮೆಂಟ್ಸ್‍ನಲ್ಲಿ 8 ಸಾವಿರ ಸಂಬಳಕ್ಕೆ ಕೆಲಸ ಮಾಡುತ್ತಿದ್ದಳು. 2017ರಿಂದಲೂ ಶಿಶು ಮಾರಾಟ ದಂಧೆಯಲ್ಲಿ ತೊಡಗಿಕೊಂಡಿರುವ ಈಕೆ ಇದೀಗ ಸ್ವಂತ ಮನೆ, ಕಾರು ಹಾಗೂ ಚಿನ್ನಾಭರಣಗಳನ್ನು ಹೊಂದಿದ್ದು, ಕೋಟ್ಯಾೀಧಿಶ್ವರಿಯಾಗಿದ್ದಾಳೆ.
6
+ ಈಕೆಗೆ ಪರಿಚಯವಾದ ಮಹಿಳೆಯೊಬ್ಬಳು ಅಂಡಾಣು ಕೊಟ್ಟರೆ ಹಣ ಕೊಡುವುದಾಗಿ ಹೇಳಿದ್ದರಿಂದ ಮಹಾಲಕ್ಷ್ಮಿ ಅಂಡಾಣು ದಾನ ಮಾಡಿ 20 ಸಾವಿರ ಪಡೆದುಕೊಂಡಿದ್ದಳು. ನಂತರದ ದಿನಗಳಲ್ಲಿ ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಅಂಡಾಣು ಕೊಡುವವರನ್ನು ಪತ್ತೆ ಮಾಡಿ ಅವರಿಂದ ಕಮೀಷನ್ ಪಡೆಯುವ ಕೆಲಸ ಮಾಡಿಕೊಂಡಿದ್ದಳು ಎಂಬುವುದು ತನಿಖೆಯಿಂದ ತಿಳಿದುಬಂದಿದೆ.
7
+ ಆರೋಪಿಗಳು ಸಿಕ್ಕಿದ್ದೇ ರೋಚಕ:ಮದ್ಯವ್ಯಸನಿಯೊಬ್ಬ ಬಾಯ್ಬಿಟ್ಟಿದ್ದ ಮಹತ್ವದ ಸುಳಿವು ಆಧರಿಸಿ ಸಿಸಿಬಿ ಪೊಲೀಸರು ಮಕ್ಕಳು ಕೊಳ್ಳುವ ಪೊಷಕರ ಸೋಗಿನಲ್ಲಿ ಬೇಟೆಗಿಳಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಈ ಪ್ರಕರಣದಲ್ಲಿ ವೈದ್ಯರು ಸೇರಿದಂತೆ ಸರ್ಕಾರಿ ಅಧಿಕಾರಿಗಳವರೆಗೂ ಶಾಮೀಲಾಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.
8
+ ಮಾರಾಟಾಗುವ ಮಕ್ಕಳ ನಕಲಿ ದಾಖಲೆ ಸೃಷ್ಟಿಸಿರುವುದು ಸೇರಿದಂತೆ ಒಂದೊಂದೇ ವಿಚಾರಗಳು ಬೆಳಕಿಗೆ ಬರುತ್ತಿದ್ದು, ಸಿಸಿಬಿ ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಿದ್ದಾರೆ.
eesanje/url_46_300_11.txt ADDED
@@ -0,0 +1,7 @@
 
 
 
 
 
 
 
 
1
+ ಆಸ್ತಿ ವಿವರ ಸಲ್ಲಿಸದ ಶಾಸಕರು, ಪರಿಷತ್ ಸದಸ್ಯರ ಪಟ್ಟಿ ಬಹಿರಂಗಪಡಿಸಿದ ಲೋಕಾಯುಕ್ತ
2
+ ಬೆಂಗಳೂರು,ನ.30- ಆಸ್ತಿ ವಿವರ ಸಲ್ಲಿಸದ ಕರ್ನಾಟಕದ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಪಟ್ಟಿಯನ್ನು ಲೋಕಾಯುಕ್ತ ಬಹಿರಂಗಡಿಸಿದೆ. ತಕ್ಷಣವೇ ಕರ್ನಾಟಕ ಲೋಕಾಯುಕ್ತ ಕಾಯ್ದೆ ಪ್ರಕಾರ ಜನಪ್ರತಿನಿಧಿಗಳು ತಮ್ಮ ಆಸ್ತಿ ವಿವರಗಳನ್ನು ಸಲ್ಲಿಸದಿದ್ದರೆ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನು ನೀಡಲಾಗಿದೆ.
3
+ ಆಯ್ಕೆಯಾದ ಮೂರು ತಿಂಗಳೊಳಗೆ ಸದಸ್ಯರು ತಮ್ಮ ಆಸ್ತಿ ವಿವರನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕೆಂಬ ನಿಯಮ ಇದೆ. ಆದರೆ ಶಾಸಕರು ಹಾಗೂ ಪರಿಷತ್ ಸದಸ್ಯರು ಇದುವರೆಗೂ ಲೋಕಾಯುಕ್ತ ಕಚೇರಿಗೆ ಆಸ್ತಿ ವಿವರವನ್ನು ಸಲ್ಲಿಸಿಲ್ಲ.
4
+ ಇದೀಗ ಅಂತಿಮವಾಗಿ ಲೋಕಾಯುಕ್ತ ಆಸ್ತಿ ವಿವರ ಸಲ್ಲಿಸದ ಶಾಸಕರುಗಳ ಹೆಸರುಗಳ ಪಟ್ಟಿಯನ್ನು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. ಕಳೆದ ಬಾರಿ ಸಚಿವರಾಗಿದ್ದ ಶ್ರೀರಾಮುಲು, ಕೆ.ಸಿ.ನಾರಾಯಣಗೌಡ, ಎಸ್.ಅಂಗಾರ ಆಸ್ತಿ ವಿವರ ಸಲ್ಲಿಸದೇ ನಿಮಯ ಉಲ್ಲಂಘಿಸಿದ್ದರು. ಈ ಬಾರಿ ಸಚಿವರಾದ ರಹೀಂ ಖಾನ್, ಕೆ.ಎನ್.ರಾಜಣ್ಣ, ಜಮೀರ್ ಅಹಮದ್ ಖಾನ್, ರಾಮಲಿಂಗ ರೆಡ್ಡಿ, ಕೆ.ಎಚ್.ಮುನಿಯಪ್ಪ ಅವರು ಸಹ ಆಸ್ತಿ ವಿವರ ಸಲ್ಲಿಸಿಲ್ಲ. ಹೀಗೆ ಕಳೆದ ವಿಧಾನಸಭೆ ಅವಯ 81 ಮಂದಿ ಶಾಸಕರಿಂದ ಆಸ್ತಿ ವಿವರ ಸಲ್ಲಿಸದೇ ಲೋಪ ಎಸಗಿದ್ದಾರೆ.
5
+ ಈ ಬಾರಿ ಅಂದರೆ 2023ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಅವಧಿಯ 51 ಮಂದಿ ಶಾಸಕರ ಆಸ್ತಿ ವಿವರ ಸಲ್ಲಿಕೆ ಆಗಿಲ್ಲ. ಹಾಗೇ 21 ವಿಧಾನ ಪರಿಷತ್ ಸದಸ್ಯರು ಸಹ ಆಸ್ತಿ ವಿವರ ಸಲ್ಲಿಕೆ ಮಾಡಿಲ್ಲ. ಇನ್ನು ಸಚಿವ ಮಧು ಬಂಗಾರಪ್ಪ ಹಾಗೂ ಮಾಜಿ ಸಚಿವ ಮುರಿಗೇಶ್ ನಿರಾಣಿ ಸೇರಿದಂತೆ ಹಲವು ಗಡುವು ಮುಗಿದ ಅಂದರೆ ಜೂನ್ 30 ರ ಬಳಿಕ ಆಸ್ತಿ ವಿವರ ಸಲ್ಲಿಕೆ ಮಾಡಿದ್ದಾರೆ. ಅವಧಿ ಮುಗಿದ ಬಳಿಕ 10 ಶಾಸಕರು, ಓರ್ವ ವಿಧಾನ ಪರಿಷತ್ ಸದಸ್ಯ ಆಸ್ತಿ ವಿವರ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
6
+ ಎಲ್ಲಾ 224 ಶಾಸಕರಿಗೂ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಅವರು ಜೂನ್ 30 ಡೆಡ್‍ಲೈನ್ ನೀಡಿದ್ದರು. ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಅವರು ಎಲ್ಲಾ ಪಕ್ಷದ ಶಾಸಕರ ಆಸ್ತಿ ವಿವರ ಪಡೆದು ಸಲ್ಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಮೌಖಿಕ ಸೂಚನೆ ನೀಡಿದ್ದರು.
7
+ ಕಳೆದ ಬಾರಿ ಆಸ್ತಿ ವಿವರ ಸಲ್ಲಿಸಿದ್ದೇವೆಂದು ಸುಮ್ಮನಿರುವಂತಿಲ್ಲ. ಪುನರ್ ಆಯ್ಕೆಯಾದ ಶಾಸಕರು ಮತ್ತೊಮ್ಮೆ ಆಸ್ತಿ ವಿವರ ಸಲ್ಲಿಸಬೇಕು. ಮೊದಲ ಬಾರಿ ಆಯ್ಕೆಯಾದ ಶಾಸಕರು ಕೂಡ ಆಸ್ತಿ ವಿವರ ಸಲ್ಲಿಸಬೇಕು. ಒಂದು ವೇಳೆ ಜೂ.30ರೊಳಗೆ ಶಾಸಕರು ತಮ್ಮ ಆಸ್ತಿ ವಿವರ ಸಲ್ಲಿಸದಿದ್ದರೆ ಶಿಸ್ತು ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು.
eesanje/url_46_300_12.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಸಗಿ ಆಸ್ಪತ್ರೆಯಷ್ಟೆ ಉತ್ತಮ ಆರೋಗ್ಯ ಸೇವೆ ದೊರೆಯಬೇಕು : ಸಿಎಂ
2
+ ಬೆಂಗಳೂರು, ನ.30- ಪ್ರತಿಯೊಂದು ಜಿಲ್ಲಾ ಕೇಂದ್ರಗಳಲ್ಲೂ ಎಂಆರ್‍ಐ ಸೌಲಭ್ಯಗಳು ದೊರೆಯಬೇಕು, ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಸಗಿ ಆಸ್ಪತ್ರೆಯಷ್ಟೆ ಉತ್ತಮ ಆರೋಗ್ಯ ಸೇವೆ ದೊರೆಯಲಿದೆ ಎಂಬ ಭಾವನೆ ಮೂಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಹೇಳಿದರು.
3
+ ವಿಧಾನಸೌಧದ ಮೆಟ್ಟಿಲುಗಳ ಮೇಲೆ 108 ಆರೋಗ್ಯ ಕವಚ ಯೋಜನೆಯಡಿ ತುರ್ತು ಸೇವೆಗೆ 262 ಆ್ಯಂಬುಲೆನ್ಸ್‍ಗಳನ್ನು ಆರೋಗ್ಯ ಇಲಾಖೆಗೆ ಸೇರ್ಪಡೆ ಮಾಡಿದ ಬಳಿಕ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜನರ ಆರೋಗ್ಯ ರಕ್ಷಣೆ ಮಾಡುವ ಜವಾಬ್ದಾರಿಯನ್ನು ಸರ್ಕಾರ ಹೊಂದಿದೆ. ಗ್ರಾಮೀಣ, ನಗರ, ಜಾತಿ, ಧರ್ಮ ಬೇಧವಿಲ್ಲದೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುತ್ತಿದೆ. ನಾವು ಎಲ್ಲರಿಗೂ ಉತ್ತಮ ಆರೋಗ್ಯ ಸೇವೆ ನೀಡಿದರೆ ಮಾನವ ಸಂಪನ್ಮೂಲ ಹೆಚ್ಚಾಗಲು ಸಾಧ್ಯ. ಮಾನವ ಸಂಪನ್ಮೂಲ ಹೆಚ್ಚಾದರೆ ಉತ್ಪಾದನೆ ಹೆಚ್ಚಾಗುತ್ತದೆ, ಜಿಡಿಪಿ ವೃದ್ಧಿಯಾಗುತ್ತದೆ ಎಂದರು.
4
+ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಸೇವೆ ಆರಂಭಿಸಿದರು. ಯೋಜನೆಯಡಿ ಕೇಂದ್ರ ಸರ್ಕಾರ ಶೇ.60ರಷ್ಟು, ರಾಜ್ಯ ಸರ್ಕಾರ ಶೇ.40ರಷ್ಟು ಹಣ ಖರ್ಚು ಮಾಡುತ್ತಿವೆ. ಒಟ್ಟಾರೆ ಯೋಜನೆಯ ಉದ್ದೇಶ ಎಲ್ಲರಿಗೂ ಉತ್ತಮ ಆರೋಗ್ಯ ಸೇವೆ ಒದಗಿಸುವುದಾಗಿದೆ. ಅಪಘಾತ, ಹೆರಿಗೆ, ಹೃದಯಾಘಾತ ಸೇರಿದಂತೆ ಇತರ ತುರ್ತು ಸಂದರ್ಭಗಳಲ್ಲಿ ಚಿಕಿತ್ಸೆ ಸಿಗದೆ ಯಾರು ಸಾವನ್ನಪ್ಪಬಾರದು ಎಂದು 2008ರಲ್ಲಿ ತುರ್ತು ಆ್ಯಂಬುಲೇನ್ಸ್‍ಗಳನ್ನು ಆರೋಗ್ಯ ಸೇವೆಗೆ ಸಮರ್ಪಿಸಲಾಗಿದೆ.
5
+ ಯುವಜನರ ಸಬಲೀಕರಣಕ್ಕೆ ಎನ್‍ಇಪಿ ಪೂರಕ : ನಾರಾಯಣ ಮೂರ್ತಿ
6
+ ರಾಜ್ಯದಲ್ಲಿ 236 ತಾಲ್ಲೂಕುಗಳಿದ್ದು, ಏಳು ಕೋಟಿ ಜನಸಂಖ್ಯೆ ಇದೆ. ತುರ್ತು ಸೇವೆಗೆ 840 ಆ್ಯಂಬುಲೇನ್ಸ್‍ಗಳ ಅಗತ್ಯ ಇದೆ. ಪ್ರಸ್ತುತ 740 ಆ್ಯಂಬುಲೆನ್ಸ್‍ಗಳಿವೆ. ಈಗ ಪ್ರತಿ ತಾಲ್ಲೂಕಿಗೆ ನಾಲ್ಕು ಆ್ಯಂಬುಲೆನ್ಸ್‍ಗಳಿವೆ ಎನ್ನಲಾಗಿದೆ. ರಸ್ತೆ ಅಪಘಾತದಲ್ಲಿ ಒಂದು ಗಂಟೆಯಲ್ಲಿ ಗೋಲ್ಡನ್ ಅವರ್‍ನಲ್ಲಿ ಚಿಕಿತ್ಸೆ ದೊರೆತರೆ ಜೀವ ಉಳಿಸಲು ಸಾಧ್ಯ. ಪ್ರಾಥಮಿಕ ಚಿಕಿತ್ಸೆ ಬಳಿಕ ರೋಗಿಗೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ವೈದ್ಯರು ನಿರ್ಧರಿಸುತ್ತಾರೆ. ಹೊಸ ಆ್ಯಂಬುಲೆನ್ಸ್‍ನಲ್ಲಿ ನುರಿತ ಶೂಶ್ರೂಶಕರು, ತರಬೇತಿ ಪಡೆದ ತಂತ್ರಜ್ಞರು ಇರಲಿದ್ದಾರೆ. ಆತ್ಯಾಧುನಿಕ ಜೀವ ರಕ್ಷಕ ಸಲಕರಣೆಗಳನ್ನು ಅಳವಡಿಸಲಾಗಿದೆ. ಅಗತ್ಯದಷ್ಟು ಆ್ಯಂಬುಲೆನ್ಸ್‍ಗಳ ಸಂಖ್ಯೆಯನ್ನು ಹೆಚ್ಚಿಸಲು ಆರ್ಥಿಕ ನೆರವು ನೀಡಲಾಗುವುದು ಎಂದರು.
7
+ ರಾಷ್ಟ್ರೀಯ ಆರೋಗ್ಯ ಅಭಿಯಾನದಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಎಂಆರ್‍ಐ ಸೌಲಭ್ಯ ಇರಬೇಕು, ಕೆಲ ಜಿಲ್ಲೆಗಳಲ್ಲಿ ಇವೆ, ಇನ್ನೂ ಕೆಲ ಜಿಲ್ಲೆಗಳಲ್ಲಿ ಇಲ್ಲ. ಇತ್ತೀಚೆಗೆ ತಾವು ಪ್ರಗತಿ ಪರಿಶೀಲನೆ ನಡೆಸಿದಾಗ ಎಲ್ಲಾ ಜಿಲ್ಲೆಗಳಲ್ಲೂ ಎಂಆರ್‍ಐ ಸೇವೆ ದೊರಕುವಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ, ಈ ಪ್ರಕ್ರಿಯೆ ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ. ಹಳೆಯ, ಕೊಳೆಯಾದ ಬಟ್ಟೆ ಹಾಕಿಕೊಂಡು ಹಾಕಿಕೊಂಡು ಬರುವ ಬಡವರನ್ನು ಮಾನವೀಯ ದೃಷ್ಟಿಯಲ್ಲಿ ನೋಡಿ ತಾರತಮ್ಯ ಇಲ್ಲದಂತೆ ಉತ್ತಮ ಆರೋಗ್ಯ ಸೇವೆ ಒದಗಿಸಬೇಕು ಎಂದು ಕರೆ ನೀಡಿದರು.
8
+ ಖಾಸಗಿ ಆಸ್ಪತ್ರೆಗಳಿಗೆ ಅಥವಾ ಪ್ರಾಯೋಗಲಯಗಳಿಗೆ ಹೋದರೆ ದುಬಾರಿ ಖರ್ಚಾಗಲಿದೆ. ನಾನು ಮುಖ್ಯಮಂತ್ರಿಯಾದ ಬಳಿಕ 25 ಕೋಟಿ ರೂಪಾಯಿಗಳನ್ನು ಆರೋಗ್ಯ ಚಿಕಿತ್ಸೆಗಾಗಿಯೇ ಪರಿಹಾರ ನಿಯಿಂದ ನೆರವು ನೀಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ 20-30 ಲಕ್ಷ ರೂಪಾಯಿ ಖರ್ಚಾಗಿರುವ ಬಿಲ್‍ಗಳನ್ನು ಸಾರ್ವಜನಿಕರು ಸಲ್ಲಿಸುತ್ತಿದ್ದಾರೆ. ನಾನು ಗರಿಷ್ಠ ಐದು ಲಕ್ಷದವರೆಗೂ, ಅಂದರೆ ಸುಮಾರು ನಾಲ್ಕನೇ ಒಂದು ಭಾಗದಷ್ಟು ವೆಚ್ಚದ ನೆರವನ್ನು ನೀಡುತ್ತೇನೆ ಎಂದರು.
9
+ ಜನರಿಗೆ ಖಾಸಗಿ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಸಿಗಲಿದೆ ಎಂಬ ಭಾವನೆ ಇದೆ. ಸರ್ಕಾರಿ ಆಸ್ಪತ್ರೆಗಳಲ್ಲೂ ಉತ್ತಮ ಸೇವೆ ಸಿಗಲಿದೆ ಎಂಬ ಭಾವನೆ ಮೂಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಜಯದೇವ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಸಿಗುವುದಾದರೆ ಬೇರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಯಾಕೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು.ಇದಕ್ಕೆ ಪೂರಕವಾಗಿ ಸಿಬ್ಬಂದಿಗಳ ಕೊರತೆಯನ್ನು ನಿಗಿಸಲು ಸರ್ಕಾರ ನೇಮಕಾತಿ ಪ್ರಕ್ರಿಯೆಗಳನ್ನು ಕೈಗೊಳ್ಳುತ್ತಿದೆ.
10
+ ಸೂರತ್ ರಾಸಾಯನಿಕ ಘಟಕದಲ್ಲಿ ಅಗ್ನಿ ಅವಘಡ, 7 ಕಾರ್ಮಿಕರ ಶವ ಪತ್ತೆ
11
+ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗಿಂತಲೂ ವೈದ್ಯರ ಸಂಖ್ಯೆ ಹೆಚ್ಚಿದೆ. ಪದವಿ ಪಡೆದು ಹೊರ ಬಂದ ವೈದ್ಯರಿಗೆ ಒಂದು ವರ್ಷ ಗ್ರಾಮೀಣ ಸೇವೆ ಕಡ್ಡಾಯ ಎಂದು ನಿಯಮ ಇತ್ತು. ಇದರಿಂದಾಗಿ ಹುದ್ದೆಗಳಿಗಿಂತಲೂ ವೈದ್ಯರ ಸಂಖ್ಯೆ ಹೆಚ್ಚಾಗಿದೆ. ಸರ್ಕಾರ ನೇರವಾಗಿ ಖಾಲಿ ಹುದ್ದೆಗಳಿಗೆ ವೈದ್ಯರನ್ನು ನೇಮಿಸಿಕೊಳ್ಳಲು ನಿರ್ಧರಿಸಿದೆ ಎಂದರು.
12
+ ಆರೋಗ್ಯ ಇಲಾಖೆ ಉತ್ತರ ಕರ್ನಾಟಕ ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದತ್ತ ಹೆಚ್ಚಿನ ಗಮನ ಹರಿಸಬೇಕು. ಹಿಂದುಳಿದ ಭಾಗಗಳ ಬಗ್ಗೆ ಭಾಷಣ ಹೊಡೆದರೆ ಆಗುವುದಿಲ್ಲ, ಅಗತ್ಯ ಸೌಲಭ್ಯ ದೊರಕಿಸಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕಿದೆ ಎಂದರು.
eesanje/url_46_300_2.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ದೇಶದಲ್ಲಿ ಏಡ್ಸ್ ಮುಕ್ತಗೊಳಿಸಲು ಸಿಎಂ ಸಿದ್ದು ಕರೆ
2
+ ಬೆಂಗಳೂರು, ಡಿ.1- ಮುಂದಿನ ಐದು ವರ್ಷಗಳಲ್ಲಿ ದೇಶ ಮತ್ತು ರಾಜ್ಯವನ್ನು ಏಡ್ಸ್ ಮುಕ್ತಗೊಳಿಸಲು ಎಲ್ಲರೂ ಕೈ ಜೋಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ ವತಿಯಿಂದ ಆಯೋಜಿಸಿದ್ದ ವಿಶ್ವ ಏಡ್ಸ್ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
3
+ ಹೆಚ್‍ಐವಿ ಮಾರಕ ಸಾಂಕ್ರಾಮಿಕ ರೋಗ. ಇದನ್ನು ತಡೆಗಟ್ಟುವುದು ಎಲ್ಲರ ಜವಾಬ್ದಾರಿಯಾಗಿದೆ. 1981ರಲ್ಲಿ ಮೊದಲು ಇದು ಕಾಣಿಸಿಕೊಂಡಿತ್ತು. 1986 ಭಾರತದಲ್ಲಿ, 1996 ರಾಜ್ಯದಲ್ಲಿ ಕಾಣಿಸಿಕೊಂಡಿದೆ. ಇತ್ತೀಚೆಗೆ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಸೋಂಕು ಹರಡುವುದು ಕಡಿಮೆಯಾಗಿದೆ. ಆದರೆ ಸೋಂಕನ್ನು ಶೂನ್ಯಕ್ಕೆ ತರುವ ಘೋಷಣೆ ಇನ್ನೂ ಸಾಧ್ಯವಾಗಿಲ್ಲ ಎಂದರು.
4
+ ಸೋಂಕಿನ ಪ್ರಮಾಣದಲ್ಲಿ ಜಗತ್ತಿನಲ್ಲಿ ನಾವು ಮೂರನೇ ಸ್ಥಾನದಲ್ಲಿದ್ದೇವೆ. ಅದಕ್ಕಾಗಿ ಹೆಚ್ಚು ಜಾಗೃತರಾಗಿರುವ ಅಗತ್ಯವಿದೆ. ಸೋಂಕು ಹರಡುವಿಕೆಯ ಬಗ್ಗೆ ತಪ್ಪು ಕಲ್ಪನೆಗಳಿವೆ. ಮಾತನಾಡುವುದರಿಂದ ಸೋಂಕು ಹರಡುವುದಿಲ್ಲ. ರಕ್ತ, ಲಾಲಾ ರಸದ ಮೂಲಕ ಹರಡುತ್ತದೆ. ಸೋಂಕು ತಗಲಿದ ಬಳಿಕ ಅನುಭವಿಸುವ ಬದಲು ಮುಂಜಾಗ್ರತೆ ಅಗತ್ಯ ಎಂದರು.
5
+ ಐದು ವರ್ಷದಲ್ಲಿ ಭಾರತ ಮತ್ತು ರಾಜ್ಯ ಏಡ್ಸ್ ಮುಕ್ತವಾಗಬೇಕು. ಇಂದಿನ ದಿನ ಆಚರಣೆಗೆ ನಾನು ಶುಭಾಷಯ ಕೋರುವುದಿಲ್ಲ, ರೋಗ ತೊಲಗಲಿ ಎಂದು ಆಶಿಸುತ್ತೇನೆ. ಹೆಚ್‍ಐವಿ ನಿಯಂತ್ರಣ ಕಾಯ್ದೆಯನ್ನು 2017ರಲ್ಲಿ ನಮ್ಮ ಸರ್ಕಾರ ಜಾರಿಗೆ ತಂದಿತ್ತು ಎಂದು ಸ್ಮರಿಸಿಕೊಂಡರು. ಏಡ್ಸ್ ರೋಗ ನಿಯಂತ್ರಣ ಅಭಿಯಾನದ ರಾಯಭಾರಿಯಾಗಿದ್ದ ನಟಿ ಸಂಜನಾ ಗಲ್ರಾನಿಯವರನ್ನು ಇದೇ ವೇಳೆ ಅಭಿನಂದಿಸಿದರು.
6
+ ಈ ವೇಳೆ ಸಂಜನಾ ಅವರನ್ನು ಶ್ರೀಮತಿ ಎಂದು ಸಂಬೋಸಿದ ಮುಖ್ಯಮಂತ್ರಿಯವರು, ಸಾರಿ , ಕುಮಾರಿ ಸಂಜನಾ.. ಶ್ರೀಮತಿ ಎಂದು ಬಿಟ್ಟೆ, ನನಗೆ ಗೊತ್ತಿರಲಿಲ್ಲ. ಶ್ರೀಮತಿನಾ ಎಂದು ಪ್ರಶ್ನಿಸಿದರು. ಸಂಜನಾ ತಾವು ಶ್ರೀಮತಿ ಎಂದು ಒಪ್ಪಿಕೊಂಡರು.
7
+ ಇದೇ ವೇಳೆ ಹೆಚ್‍ಐವಿ ಸೋಂಕನ್ನು ಜಯಿಸಿದ ತ್ಯಾಗರಾಜು ಅವರನ್ನು ಮುಖ್ಯಮಂತ್ರಿ ವೇದಿಕೆಯಲ್ಲಿ ಅಭಿನಂದಿಸಿದರು. ಸೋಂಕಿನೊಂದಿಗೆ ತ್ಯಾಗರಾಜ್ ಇಪ್ಪತ್ತಾರು ವರ್ಷ ಬದುಕಿದ್ದಾರೆ, ಅವರಿಗೀಗ ಅರವತ್ತಾರು ವರ್ಷ ಎಂದು ಭುಜ ತಟ್ಟಿದರು. ಇವರಿಂದ ಕಾರ್ಯಕ್ರಮದಲ್ಲಿ ಮಾತಮಾಡಿಸಿ, ಇತರರಿಗೂ ಮಾರ್ಗದರ್ಶನವಾಗಲಿ ಎಂದರು. ನಿಮ್ಮ ಶ್ರೀಮತಿಯವರಿಗೆ ಸೋಂಕು ಇದೆಯಾ? ಎಂದು ಮುಖ್ಯಮಂತ್ರಿ ಕೇಳಿ ತಿಳಿದುಕೊಂಡರು. ತಮ್ಮ ಪತ್ನಿಗೆ ಸೋಂಕು ಇದೆ, ನಮ್ಮ ಮಕ್ಕಳಿಗೆ ಇಲ್ಲ ಎಂದು ತ್ಯಾಗರಾಜ್ ಹೇಳಿದರು.
8
+ ಗುರುಪತ್‍ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚು : ಭಾರತೀಯ ಅಧಿಕಾರಿ ಕೈವಾಡ ಕುರಿತ ತನಿಖೆಗೆ ಸಮ್ಮತಿ
9
+ ಹುಟ್ಟಿನಿಂದಲೇ ಸೋಂಕು ಬಾತನಾಗಿದ್ದ 25 ವರ್ಷದ ಪ್ರಶಾಂತ್ ಮಾತನಾಡಿ, ತಾನು ಕಲಬುರಗಿಯವನು. ನಾಲ್ಕನೆ ತರಗತಿಯಲ್ಲಿ ರಕ್ತ ಪರೀಕ್ಷೆ ಮಾಡಿದಾಗ ಸೋಂಕು ಪತ್ತೆಯಾಯಿತು. ಆರಂಭದಲ್ಲಿ ತುಂಬಾ ಕಷ್ಟವಾಗುತ್ತಿತ್ತು. ತಾರತಮ್ಯ ಹೆಚ್ಚಿತ್ತು. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದು ಆರೋಗ್ಯವಾಗಿದ್ದೇನೆ. ಸೋಂಕಿತರು ನಿಯಮಿತವಾಗಿ ಔಷ ಸೇವಿಸಿ ಆತಂಕವಿಲ್ಲದೆ ಜೀವನ ನಡೆಸಿ ಎಂದುಸಲಹೆ ನೀಡಿದರು.ನಟ ಪ್ರೇಮ್ ಎದ್ದು ಬಂದು ಪ್ರಶಾಂತ್ ಹೆಗಲ ಮೇಲೆ ಕೈ ಇಟ್ಟು ನಿಜವಾದ ರಾಯಬಾರಿ ಮತ್ತು ಹಿರೋ ಈತ ಎಂದರು.
10
+ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ರಾಜ್ಯ ಏಡ್ಸ್ ಪ್ರಿವೆನ್ ಷನ್ ಸೊಸೈಟಿ ಪ್ರಾರಂಭವಾಗಿ 25 ವರ್ಷಗಳಾಗಿದ್ದು, ಈ ವರ್ಷ ರಜತ ಮಹೋತ್ಸವ ಆಚರಿಸಲಾಗುತ್ತಿದೆ. ಸೋಂಕು ನಿಯಂತ್ರಣಕ್ಕೆ ಬದ್ಧತೆಯಿಂದ ಕೆಲಸ ಮಾಡಿದ ಎಲ್ಲರನ್ನು ಅಭಿನಂದಿಸುವುದಾಗಿ ಹೇಳಿದರು.
11
+ 2013-14ರಲ್ಲಿ ಸೋಂಕಿತರ ಪ್ರಮಾಣ ಶೇ. 1.77 ರಷ್ಟಿತ್ತು. ಗರ್ಭಿಣಿಯರಲ್ಲಿ ಶೇ. 0.3ರಷ್ಟಿದ್ದ ಸೋಂಕಿನ ಪ್ರಮಾಣ ಈಗ ಶೇ.0.21ರಷ್ಟಾಗಿದೆ 2023-24 ಸಾಲಿನಲ್ಲಿ ಸೋಂಕಿನ ಪ್ರಮಾಣ ಶೇ. 0.36 ಇಳಿಕೆಯಾಗಿದೆ. ರಾಜ್ಯದಲ್ಲಿ 3,82,910 ಮಂದಿ ನೋಂದಣಿಯಾಗಿದ್ದರು. 1.85 ಲಕ್ಷ ಮಂದಿ ಎಆರ್ ಟಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರು ಆತಂಕ ಪಡಬೇಕಿಲ್ಲ, ಸುರಕ್ಷಿತ ಕ್ರಮಗಳ ಮೂಲಕ ಮುಂಜಾಗ್ರತೆ ಅವಶ್ಯ ಎಂದರು.
12
+ ಏಡ್ಸ್ ನಿರ್ಮೂಲನೆಯಲ್ಲಿ ಶ್ರಮಿಸಿದ ವ್ಯಕ್ತಿ ಮತ್ತು ಸಂಸ್ಥೆಗಳನ್ನು ಇದೇ ವೇಳೆ ಸನ್ಮಾನಿಸಲಾಯಿತು.ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಲಿ ಅಧ್ಯಕ್ಷರೂ ಆದ ಶಾಸಕ ಅಜಯ್ ಸಿಂಗ್, ನಟ ಪ್ರೇಮ್, ನಟಿ ಸಂಜನಾ ಗಲ್ರಾನಿ, ಹಿರಿಯ ಅಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
eesanje/url_46_300_3.txt ADDED
@@ -0,0 +1,6 @@
 
 
 
 
 
 
 
1
+ ಶಾಲೆಗಳಿಗೆ ಬೆದರಿಕೆ ಇ-ಮೇಲ್ ಕಳುಹಿಸುವ ಮುಜಾಹಿದ್ದೀನ್ ಯಾರು..?
2
+ ಬೆಂಗಳೂರು,ಡಿ.1- ಬೆಂಗಳೂರು ನಗರ ಸೇರಿದಂತೆ ಹೊರವಲಯದ ಕೆಲವು ಖಾಸಗಿ ಶಾಲೆಗಳಿಗೆ ಮುಜಾಹಿದ್ದೀನ್ ಹೆಸರಿನಲ್ಲಿ ಕಳುಹಿಸಿರುವ ಇ-ಮೇಲ್‍ನಲ್ಲಿ ಕೆಲವು ಉಗ್ರವಾದದ ಪದಬಳಕೆ ಮಾಡಲಾಗಿರುವುದು ಆತಂಕ ಸೃಷ್ಟಿಸಿದೆ. ಇಷ್ಟು ಶಾಲೆಗಳಿಗೆ ಒಂದೇ ಕಡೆಯಿಂದ ಇ-ಮೇಲ್ ಕಳುಹಿಸಿರುವ ಸಾಧ್ಯತೆ ಇದ್ದು, ಇದೊಂದು ಬೆದರಿಕೆಯ ತಂತ್ರವಾಗಿದ್ದು , ; ಬೆಂಗಳೂರು ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿ ಹಲವು ಆಯಾಮಗಳಲ್ಲಿ ಈಗ ತನಿಖೆ ಆರಂಭಿಸಿದ್ದಾರೆ.
3
+ ಸಮಾಜದಲ್ಲಿ ಭೀತಿಯ ವಾತಾವರಣ ಸೃಷ್ಟಿಸುವ ಸಲುವಾಗಿಯೇ ಶಾಲೆಗಳನ್ನೇ ಕೇಂದ್ರೀಕರಿಸಲಾಗಿದೆ. ಪೊಲೀಸರು ಈಗಾಗಲೇ ರಾಷ್ಟ್ರೀಯ ತನಿಖಾ ತಂಡಗಳನ್ನು ಸಂಪರ್ಕಿಸಿದ್ದು, ಇದರ ಹಿಂದಿನ ಸಂಘಟನೆಗಳು ಅಥವಾ ವ್ಯಕ್ತಿಗಳು ಯಾರು ಎಂಬುದನ್ನು ಪತ್ತೆ ಹಚ್ಚುತ್ತಿದ್ದಾರೆ.
4
+ ಗುರುಪತ್‍ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚು : ಭಾರತೀಯ ಅಧಿಕಾರಿ ಕೈವಾಡ ಕುರಿತ ತನಿಖೆಗೆ ಸಮ್ಮತಿ
5
+ ಇ-ಮೇಲ್ ಡೊಮೈನ್‍ನಲ್ಲಿ ಮುಜಾಹಿದ್ದೀನ್ ಎಂಬ ಹೆಸರಿದೆ. ಆದರೆ ಕಳುಹಿಸಿದವರ ಪೂರ್ಣ ವಿವರವಿಲ್ಲದ ಕಾರಣ ಸೈಬರ್ ಅಪರಾಧ ಪೊಲೀಸರು ಆಧುನಿಕ ತಂತ್ರಜ್ಞಾನದ ಮೊರೆ ಹೋಗಿದ್ದಾರೆ. ಬೆಂಗಳೂರಿನಲ್ಲಿ ಕುಳಿತು ಅಥವಾ ಬೇರೆ ಕಡೆಯಿಂದ ಇಮೇಲ್ ಕಳುಹಿಸಲಾಗಿದೆಯೇ, ಇದು ಪೂರ್ವನಿಯೋಜಿತ ಕೃತ್ಯವೇ ಎಂಬುದರ ಬಗ್ಗೆ ನಗರ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
6
+ ಬಿಬ್ಲೇ ಡೊಮೈನ್‍ನಿಂದ ಮೇಲ್‍ನಿಂದ ಇದನ್ನು ಕಳುಹಿಸಲಾಗಿದ್ದು, ಇದರಲ್ಲಿ ಯಾರು ಕಳುಹಿಸುತ್ತಿದ್ದಾರೆ ಎಂಬುದು ತಿಳಿಯುವುದಿಲ್ಲ ಮತ್ತು ಅವರ ಐಪಿ ಕೂಡ ಸಿಗುವುದಿಲ್ಲ. ಹಾಗಾಗಿ ಪೊಲೀಸರಿಗೆ ಇದೊಂದು ಸವಾಲಾಗಿದೆ.
eesanje/url_46_300_4.txt ADDED
@@ -0,0 +1,8 @@
 
 
 
 
 
 
 
 
 
1
+ ಸಮಾಜಘಾತುಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಆರ್.ಅಶೋಕ್ ಆಗ್ರಹ
2
+ ಬೆಂಗಳೂರು,ಡಿ.1- ಶಾಲೆಗಳಿಗೆ ಇಮೇಲ್ ಮೂಲಕ ಕಳುಹಿಸಿರುವ ಟೈಪ್ ಮಾಡಿದ್ದ ರೀತಿ ನೋಡಿದರೆ ಇದೊಂದು ಹೈಲೆವಲ್ ಟೆರರಿಸ್ಟ್ ತರಹ ಕಾಣುತ್ತದೆ. ಅಲ್ಲಾಹುಗೆ ತೊಂದರೆ ಮಾಡುತ್ತಿದ್ದೀರಿ ಎಂದು ಬರೆಯಲಾಗಿದೆ. ಇಂತಹ ಸಮಾಜಘಾತುಕರ ವಿರುದ್ಧ ಯಾವುದೇ ಮುಲಾ ಜಿಲ್ಲದೆ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬೈನಲ್ಲಿ ಗಲಾಟೆ ಮಾಡಿದ್ದೀರಿ, ಮುಸ್ಲಿಮರಿಗೆ ಅಪಮಾನ ಮಾಡಲಾಗುತ್ತದೆ. ನೀವು ಮುಸ್ಲಿಂ ಧರ್ಮಕ್ಕೆ ಮತಾಂತರವಾಗಬೇಕು ಹೀಗೆ ಗಂಭೀರ ವಿಷಯಗಳನ್ನು ಇಮೇಲ್‍ನಲ್ಲಿ ಬರೆಯಲಾಗಿದೆ.
4
+ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಜರುಗಿಸಲಿ ಎಂದು ಒತ್ತಾಯಿಸಿದರಲ್ಲದೆ, ಒಂದೇ ಹಂತದಲ್ಲಿ ಇಷ್ಟು ಶಾಲೆಗಳಿಗೆ ಒಬ್ಬರೇ ಇಮೇಲ್ ಮಾಡಿ ಬಾಂಬ್ ಬೆದರಿಕೆ ಹಾಕಿರುವುದರ ಹಿಂದೆ ದೊಡ್ಡ ಷಡ್ಯಂತರ ಅಡಗಿದೆ ಎಂದು ಅನುಮಾನವನ್ನು ವ್ಯಕ್ತಪಡಿಸಿದರು.
5
+ ಗುರುಪತ್‍ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚು : ಭಾರತೀಯ ಅಧಿಕಾರಿ ಕೈವಾಡ ಕುರಿತ ತನಿಖೆಗೆ ಸಮ್ಮತಿ
6
+ ಇಮೇಲ್ ಎಲ್ಲಿಂದ ಬಂದಿದೆ? ಯಾರಿಂದ ಬಂದಿದೆ? ಇವರ ಉದ್ದೇಶವೇನು? ಎಂಬುದನ್ನು ಪತ್ತೆ ಹಚ್ಚಬೇಕು. ಈಗಿನ ತಂತ್ರಜ್ಞಾನದಲ್ಲಿ ಇದನ್ನು ಪತ್ತೆ ಮಾಡುವುದು ಅಷ್ಟೇನೂ ಕಷ್ಟಕರವಲ್ಲ. ಪೊಲೀಸರು ಸೈಬರ್ ತಂತ್ರಜ್ಞರ ಸಹಾಯದಿಂದ ಮೇಲ್ ಎಲ್ಲಿಂದ ಬಂದಿದೆ ಎಂಬುದನ್ನು ಮೊದಲು ಪತ್ತೆ ಹಚ್ಚಲಿ ಎಂದು ಒತ್ತಾಯಿಸಿದರು. ಮುಂಬೈ ತಾಜ್‍ಹೋಟೆಲ್ ಮೇಲಿನ ದಾಳಿ ಮಾದರಿಯಲ್ಲೇ ನಗರದ ಶಾಲೆಗಳ ಮೇಲೆ ದಾಳಿ ನಡೆಸಲು ಬೆದರಿಕೆ ಸಂದೇಶಗಳು ಬಂದಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ.
7
+ ಭಾರತೀಯರು ಮುಸ್ಲಿಮರನ್ನು ಅವಹೇಳನ ಮಾಡುತ್ತಿದ್ದಾರೆ ಎಂದು ಈ ರೀತಿ ಸಂದೇಶ ಕಳುಹಿಸುತ್ತಿದ್ದಾರೆ ಎಂಬ ಮಾಹಿತಿ ಇದೆ. ಇಂತಹ ಸಮಾಜಘಾತುಕರನ್ನು ಎಡೆಮುರಿ ಕಟ್ಟಿದಾಗ ಮಾತ್ರ ಮುಂದೆ ಇಂತಹ ಪ್ರಕರಣಗಳು ಮರುಕಳುಹಿಸುವುದಿಲ್ಲ ಎಂದು ಅಶೋಕ್ ತಿಳಿಸಿದರು.
8
+ ಇದು ಭಾರತೀಯರಿಗೆ ಬೆದರಿಕೆಯೊಡ್ಡುವ ಸಂದೇಶವಾಗಿದೆ. ಯಾರು ಈ ರೀತಿ ಸಂದೇಶ ಕಳುಹಿಸಿದ್ದಾರೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬೆದರಿಕೆ ಸಂದೇಶದಿಂದ ಪೊಷಕರು ಆತಂಕಕ್ಕೊಳಗಾಗಿದ್ದಾರೆ. ಮೊದಲು ಮಕ್ಕಳ ಸುರಕ್ಷತೆಗೆ ಒತ್ತು ಕೊಡಬೇಕು ಎಂದು ಸಲಹೆ ನೀಡಿದರು.
eesanje/url_46_300_5.txt ADDED
@@ -0,0 +1,6 @@
 
 
 
 
 
 
 
1
+ ಬಾಂಬ್ ಬೆದರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಪರಮೇಶ್ವರ್
2
+ ತುಮಕೂರು, ಡಿ.1- ಶಾಲೆಗಳಲ್ಲಿ ಬಾಂಬ್ ಬೆದರಿಕೆ ಪ್ರಕರಣದ ಕುರಿತು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಪೊಲೀಸ್ ಅೀಧಿಕ್ಷಕರಿಗೆ ಕರೆ ಮಾಡಿ ಮಾಹಿತಿ ಪಡೆದರು.
3
+ ಬೆದರಿಕೆ ಕರೆ ಬಂದಿರುವ ಎಲ್ಲ ಕಡೆ ಸಿಐಡಿ ಅಧಿಕಾರಿ, ಸಿಬ್ಬಂದಿ ಹಾಗೂ ಎಲ್ಲ ಸ್ಕ್ವಾಡ್‍ಗಳನ್ನು ಕಳುಹಿಸಿ ತಪಾಸಣೆ ನಡೆಸಬೇಕು, ಕಟ್ಟೆಚ್ಚರ ವಹಿಸುವಂತೆ ನಿರ್ದೇಶಿಸಿದರು.
4
+ ಬೆದರಿಕೆ ಬಂದಿರುವ 15 ಶಾಲೆಗಳಲ್ಲಿಯೂ ಪೊಲೀಸ್ ಅಧಿಕಾರಿಗಳು ತಪಾಸಣೆ ನಡೆಸಲಿದ್ದಾರೆ. ಕಳೆದ ವರ್ಷವೂ ಇದೇ ರೀತಿ ಕರೆ ಬಂದಿತ್ತು ಎನ್ನಲಾಗುತ್ತಿದೆ. ಪ್ರಕರಣವನ್ನು ಲಘುವಾಗಿ ತೆಗೆದುಕೊಂಡಿಲ್ಲ. ಗಂಭೀರವಾಗಿ ಪರಿಗಣಿಸಲಾಗಿದೆ. ಬಾಂಬ್ ಬೆದರಿಕೆಯ ಇಮೇಲ್ ಬಗ್ಗೆ ಪರಿಶೀಲಿಸುವಂತೆ ಸಿಐಡಿ ಅಧಿಕಾರಿಗಳಿಗೆ ಸೂಚಿಸಿದರು.
5
+ ಸೆಂಬರ್‌ನಲ್ಲಿ 18 ದಿನ ಬ್ಯಾಂಕ್‍ ರಜೆ
6
+ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮೂಲ ಪತ್ತೆ ಹಚ್ಚುವವರೆಗೂ ಬಿಡುವುದಿಲ್ಲ. ತುಮಕೂರಿನಿಂದ ಬೆಂಗಳೂರಿಗೆ ವಾಪಸ್ ಆದ ನಂತರ ಇಲಾಖೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಪೋಷಕರು ಮಕ್ಕಳು ಆತಂಕ ಪಡುವುದು ಬೇಡ ಎಂದರು.
eesanje/url_46_300_6.txt ADDED
@@ -0,0 +1,8 @@
 
 
 
 
 
 
 
 
 
1
+ : ಬೆಂಗಳೂರಿನ 15 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ
2
+ ಬೆಂಗಳೂರು,ಡಿ.1- ಇಂದು ಬೆಳ್ಳಂಬೆಳಗ್ಗೆ ರಾಜ್ಯ ರಾಜಧಾನಿ ಹಾಗೂ ಹೊರವಲಯದಲ್ಲಿನ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಕಿಡಿಗೇಡಿಗಳು ಇಮೇಲ್ ಮೂಲಕ ಕಳುಹಿಸಿರುವ ಸಂದೇಶದಿಂದ ಕೆಲಕಾಲ ಆತಂಕ ಉಂಟಾಗಿತ್ತು. ಇಂದು ಬೆಳಗ್ಗೆ ಎಂದಿನಂತೆ ಶಾಲಾ ಆಡಳಿತ ಮಂಡಳಿ ಶಾಲೆಗೆ ಬಂದು ಇಮೇಲ್ ಪರಿಶೀಲಿಸಿದಾಗ ಬಾಂಬ್ ಬೆದರಿಕೆ ಸಂದೇಶ ಬಂದಿರುವುದು ಗೊತ್ತಾಗಿದೆ. ತಕ್ಷಣ ಶಾಲಾ ಕೊಠಡಿಗಳಿಂದ ಮಕ್ಕಳನ್ನು ಹೊರಗೆ ಕರೆತಂದು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
3
+ ಬಸವೇಶ್ವರನಗರದ ನ್ಯಾಷಲ್ ಶಾಲೆ, ವಿದ್ಯಾಶಿಲ್ಪ ಶಾಲೆ, ಸದಾಶಿವನಗರದ ನೀವ್ ಶಾಲೆ, ಹೆಬ್ಬಗೋಡಿಯ ಎಬಿನೇಜರ್ ಶಾಲೆ, ಸರ್ಜಾಪುರದ ಗ್ರೀನ್‍ವುಡ್ ಹೈಸ್ಕೂಲ್, ದೊಮ್ಮಸಂದ್ರದ ಇನ್ವೇಚರ್ ಶಾಲೆ, ಸಿಂಗೇನ ಅಗ್ರಹಾರ ಸಮೀಪದ ಶಾಲೆ, ಚಾಮರಾಜಪೇಟೆಯ ಭವನ್ ಬೆಂಗಳೂರು ಪ್ರೆಸ್ ಸ್ಕೂಲ್, ಆನೆಕಲ್ ವ್ಯಾಪ್ತಿಯ ಐದು ಶಾಲೆಗಳು, ನಾಗದೇವಹಳ್ಳಿಯ ಚಿತ್ರಕೂಟ ಶಾಲೆ, ಯಲಹಂಕ ವ್ಯಾಪ್ತಿಯ ಖಾಸಗಿ ಶಾಲೆಗಳು, ಬನ್ನೇರುಘಟ್ಟ ಬಳಿಯ ಗ್ಲೋಬಲ್ ಇಂಟರ್‍ನ್ಯಾಷನಲ್ ಶಾಲೆ ಸೇರಿದಂತೆ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಇಮೇಲ್ ಮೂಲಕ ರವಾನೆಯಾಗಿದೆ.
4
+ ಭಾರತದ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಚೀನಾ
5
+ ಎಲ್ಲರೂ ಇಸ್ಲಾಂಗೆ ಮತಾಂತರಗೊಳ್ಳಲು ತಯಾರಿಗಿರಿ ಇಲ್ಲದಿದ್ದರೆ ಸಾಯಲು ಸಿದ್ದವಾಗಿ ಎಂಬ ಸಂದೇಶವನ್ನು ಮುಜಾಹಿದ್ದೀನ್ ಎಂಬ ಹೆಸರಿನಲ್ಲಿ ಬೆದರಿಕೆ ಕರೆ ಬಂದಿದೆ ಎಂಬುದು ತಿಳಿದುಬಂದಿದೆ.
6
+ ಶಾಲೆಗಳತ್ತ ಪೋಷಕರ ದೌಡು:ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ಪೋಷಕರು ಶಾಲೆಗಳತ್ತ ದೌಡಾಯಿಸಿ ಮಕ್ಕಳನ್ನು ವಾಪಸ್ ಮನೆಗೆ ಕರೆದುಕೊಂಡು ಹೋಗುತ್ತಿದ್ದ ದೃಶ್ಯ ಕಂಡುಬಂತು.
7
+ ಬಾಂಬ್ ನಿಷ್ಕ್ರಿಯ ದಳ:ಸ್ಥಳಕ್ಕೆ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಮತ್ತು ಪೊಲೀಸರು ಶಾಲೆಗಳಿಗೆ ಧಾವಿಸಿ ಶಾಲಾ ಕೊಠಡಿಗಳು ಸೇರಿದಂತೆ ಶೌಚಾಲಯ ಹಾಗೂ ಶಾಲಾ ಸುತ್ತಮುತ್ತ ಪರಿಶೀಲಿಸಿದರಾದರೂ ಸದ್ಯಕ್ಕೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ.
8
+ ಶಾಲೆಗಳಿಗೆ ರಜೆ:ಬಾಂಬ್ ಬೆದರಿಕೆ ಸಂದೇಶ ಬಂದ ಶಾಲೆಗಳ ಆಡಳಿತ ಮಂಡಳಿಗಳು ಮಕ್ಕಳ ಪೋಷಕರಿಗೆ ಕರೆ ಮಾಡಿ ಶಾಲೆಗೆ ರಜೆ ನೀಡಿ ಮಕ್ಕಳನ್ನು ಕಳುಹಿಸಿದರು. ಕಳೆದ ಒಂದು ವರ್ಷದಿಂದ ನಿರಂತರವಾಗಿ ಬೆದರಿಕೆ ಕರೆಗಳು, ಸಂದೇಶಗಳು ಬರುತ್ತಿವೆ. ಕಳೆದ ವರ್ಷ ಒಂದೇ ದಿನ 30 ಶಾಲೆಗಳಿಗೆ ಇಮೇಲ್ ಬೆದರಿಕೆ ಹಾಕಲಾಗಿತ್ತು. ಇದೀಗ ಕಿಡಿಗೇಡಿಗಳು ಅದೇ ಚಾಳಿ ಮುಂದುವರೆಸಿದ್ದಾರೆ.
eesanje/url_46_300_7.txt ADDED
@@ -0,0 +1,10 @@
 
 
 
 
 
 
 
 
 
 
 
1
+ ನಿಗಮ ಮಂಡಳಿಯಲ್ಲಿ ಕಾರ್ಯಕರ್ತರಿಗೂ ಅವಕಾಶ ಕಲ್ಪಿಸಿ : ಸತೀಶ್ ಜಾರಕಿಹೊಳಿ
2
+ ಬೆಂಗಳೂರು, ನ.30- ನಿಗಮ ಮಂಡಳಿಗಳಲ್ಲಿ ಕಾರ್ಯಕರ್ತರಿಗೂ ಅವಕಾಶ ನೀಡಬೇಕು ಮತ್ತು ಶೀಘ್ರ ನೇಮಕಾತಿಯಾದರೆ ಸೂಕ್ತ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸಬರಿಗೆ ನಿಗಮ ಮಂಡಳಿ ಅವಕಾಶ ಇಲ್ಲವೇ ಇಲ್ಲ ಎಂದು ಮೊದಲೇ ಹೇಳಲಾಗಿತ್ತು. ಈಗಲೂ ಅದನ್ನೇ ಹೇಳುತ್ತಿದ್ದಾರೆ. ಮೊದಲ ಸಲ ಆಯ್ಕೆಯಾದವರಿಗೆ ಅವಕಾಶ ಇಲ್ಲ. ಮೂರು ನಾಲ್ಕು ಬಾರಿ ಗೆದ್ದವರಿಗೆ ನಿಗಮ ಮಂಡಳಿ ನೀಡಲು ಪಕ್ಷ ಬದ್ದವಾಗಿದೆ.
3
+ ಹಿರಿಯರಿಗೆ ಅವಕಾಶ ಮಾಡಿಕೊಟ್ಟರೆ ಭಿನ್ನಮತಗಳು ಇರುವುದಿಲ್ಲ. ನಮ್ಮ ಜಿಲ್ಲೆಯಲ್ಲಿ ಮೂವರು ಹಿರಿಯರಿದ್ದಾರೆ. ಅವರಿಗೆ ನಿಗಮ ಮಂಡಳಿ ಕೊಟ್ಟೇ ಕೊಡ್ತಾರೆ ಎಂಬ ವಿಶ್ವಾಸವಿದೆ. ಶೀಘ್ರವಾಗಿ ನಿಗಮ ಮಂಡಳಿ ನೇಮಕವಾಗಬೇಕು. ಸದನ ಪ್ರಾರಂಭ ಆಗುವ ಮೊದಲೇ ನೇಮಕವಾದರೆ ಒಳ್ಳೆಯದು ಎಂದರು.
4
+ ಕಾರ್ಯಕರ್ತರಿಗೂ ಅವಕಾಶ ಮಾಡಿಕೊಡಬೇಕು, ಪಕ್ಷಕ್ಕೆ ಕಾರ್ಯಕರ್ತರೆ ಆಧಾರ ಸ್ಥಂಬ, ಸಹಜವಾಗಿ ಕಾರ್ಯಕರ್ತರಿಂದಲೂ ಬೇಡಿಕೆ ಇದೆ. ಶಾಸಕರು ಹಾಗೂ ಕಾರ್ಯಕರ್ತರಿಗೆ ಅಧಿವೇಶನಕ್ಕೆ ಮೊದಲೇ ನೇಮಕಾತಿ ಮಾಡಿ, ಆದೇಶ ನೀಡಿದರೆ ಸೂಕ್ತ. ಆದರೆ ಮುಖ್ಯಮಂತ್ರಿ ಮತ್ತು ಅಧ್ಯಕ್ಷರು ಈ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.
5
+ ಡಯಾಲಿಸಿಸ್ ಕೇಂದ್ರಗಳು ಸ್ಥಗಿತ, ಆರೋಗ್ಯ ಸೇವೆ ವ್ಯತ್ಯಯ
6
+ ಬೆಳಗಾವಿ ಅಧಿವೇಶನದಲ್ಲಿ ಉತ್ತರಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಯೇ ಆಗಿಲ್ಲ. ಈ ಬಾರಿಯಾದರೂ ಚರ್ಚೆಯಾಗುತ್ತಾ ನೋಡಬೇಕಿದೆ ಎಂದು ಹೇಳಿದರು. ನಿಗಮ ಮಂಡಳಿ ನೇಮಕಾತಿ ವೇಳೆಯಲ್ಲಿ ಹಿರಿಯರ ಅಭಿಪ್ರಾಯ ಪಡೆದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಸಮಧಾನಕ್ಕೆ ದನಿಗೂಡಿಸಿದ ಸತೀಶ್ ಜಾರಕಿಹೊಳಿ, ಹೌದು, ಪರಮೇಶ್ವರ್ ಅಭಿಪ್ರಾಯ ಕೇಳಬೇಕಿತ್ತು. ಅವರು ಎಂಟು ವರ್ಷ ಅವರು ಅಧ್ಯಕ್ಷರಾಗಿದ್ದವರು. ಪಕ್ಷದ ಭಾಗವಾಗಿದ್ದರು. ಅವರ ಸಲಹೆ ಕೂಡ ಪಡೆಯಬೇಕಿತ್ತು ಎಂದರು.
7
+ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದ ಕುರಿತು ಪ್ರತಿಕ್ರಿಯಿಸಿದ ಅವರು, ಸಚಿವ ಸಂಪುಟದಲ್ಲಿ ಸಹಮತದಿಂದಲೇ ಈ ನಿರ್ಣಯವಾಗಿದೆ. ಸಂಖ್ಯಾಬೆಂಬಲ ಇಲ್ಲದಿದ್ದರೆ ನಿರ್ಣಯ ಅಂಗೀಕಾರಗೊಳ್ಳುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
8
+ ಗುತ್ತಿಗೆದಾರರ ಬಿಲ್‍ಗಳು ಬಾಕಿ ಉಳಿದಿರುವ ಕುರಿತು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ತಗಾದೆ ಇಲ್ಲ. ಬಿಬಿಎಂಪಿಯಲ್ಲಿ ಬಿಲ್ ಬಾಕಿ ಇರುವ ಕುರಿತಂತೆ ಕೆಲವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಆ ವಿಷಯವಾಗಿ ವಿಚಾರಣೆಯಾಗಿದೆ. ನಮ್ಮ ಇಲಾಖೆಯಲ್ಲಿ ಸಾಧ್ಯವಾದಷ್ಟು ಬಾಕಿಯನ್ನು ಪಾವತಿಸಲಾಗುತ್��ಿದೆ ಎಂದು ತಿಳಿಸಿದರು.
9
+ ಶಿಶು ಮಾರಾಟ ದಂಧೆ : 250ಕ್ಕೂ ಹೆಚ್ಚು ಶಿಶುಗಳ ಮಾರಾಟ ಬೆಳಕಿಗೆ
10
+ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಅಸಮಾಧಾನ ವಿಚಾರವಾಗಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಕ್ಷೇತ್ರದ ಸಮಸ್ಯೆ ಇರಬಹುದು. ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಶಾಸಕರು ಚರ್ಚೆ ನಡೆಸಿದ್ದಾರೆ. ಈಗ ಅದು ಮುಗಿದು ಹೋದ ಕಥೆಯಾಗಿದೆ. ತಮ್ಮ ನಿರ್ದಿಷ್ಟ ಸಮಸ್ಯೆಗಳು ಮತ್ತು ಯಾರಿಂದ ಸಮಸ್ಯೆ ಎಂಬ ಬಗ್ಗೆ ಖುದ್ದು ಬಿ.ಆರ್.ಪಾಟೀಲ್ ಅವರೇ ಹೇಳಬೇಕು. ಸರ್ಕಾರ ಎಂದ ಮೇಲೆ ಪ್ರತಿನಿತ್ಯ ಸಮಸ್ಯೆಗಳು ಉದ್ಭವಿಸುತ್ತಲೇ ಇರುತ್ತವೆ. ಅವುಗಳನ್ನು ಬಗೆ ಹರಿಸಿ ಮುಂದೆ ಹೋಗಬೇಕಾಗುತ್ತದೆ. ಈ ಮೊದಲು ಶಾಸಕಾಂಗ ಸಭೆ ಕರೆದು ಬಗೆ ಹರಿಸುವ ಯತ್ನ ನಡೆಸಲಾಗಿತ್ತು. ಮುಂದೆಯೂ ಈ ರೀತಿಯ ಸಮಸ್ಯೆಗಳು ಬರಬಹುದು ಎಂದರು.
eesanje/url_46_300_8.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ನಾಳೆ ಅಶೋಕ್, ವಿಜಯೇಂದ್ರ ದೆಹಲಿಗೆ
2
+ ಬೆಂಗಳೂರು,ನ.30- ನೂತನ ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ನಾಳೆ ದೆಹಲಿಗೆ ತೆರಳಲಿದ್ದು, ಪಕ್ಷದ ಪ್ರಮುಖರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ವಿಜಯೇಂದ್ರ ಅವರ ಮೊದಲ ದೆಹಲಿ ಭೇಟಿ ಇದಾಗಿದೆ.
3
+ ಅಲ್ಲದೆ ಅಶೋಕ್ ಕೂಡ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾದ ಬಳಿಕ ಪಕ್ಷದ ಹಿರಿಯರನ್ನು ಭೇಟಿ ಮಾಡುತ್ತಿರುವುದು ಇದೇ ಮೊದಲು. ಪ್ರಧಾನಿ ನರೇಂದ್ರಮೋದಿ, ಕೇಂದ್ರ ಗೃಹಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಹಲವರನ್ನು ಭೇಟಿಯಾಗಿ ಪಕ್ಷದ ಬೆಳವಣಿಗೆ ಕುರಿತಂತೆ ಚರ್ಚೆ ನಡೆಸಲಿದ್ದಾರೆ.
4
+ ತಮ್ಮನ್ನು ಅತ್ಯಂತ ಜವಾಬ್ದಾರಿಯುತ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ವರಿಷ್ಠರಿಗೆ ಕೃತಜ್ಞತೆ ಸಲ್ಲಿಸಲು ವಿಜಯೇಂದ್ರ ದೆಹಲಿಗೆ ಭೇಟಿ ನೀಡುತ್ತಿದ್ದಾರೆ ಎನ್ನಲಾಗಿದೆ. ಅಶೋಕ್ ಕೂಡ ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾಗಿರುವುದರಿಂದ ತಮ್ಮ ಮೇಲೆ ವಿಶ್ವಾಸವಿಟ್ಟು ಮಹತ್ವದ ಜವಾಬ್ದಾರಿಯನ್ನು ನೀಡಿರುವ ಪಕ್ಷದ ನಾಯಕರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ.
5
+ ಮೊಬೈಲ್‍ ಬಳಕೆ ವಿಚಾರಕ್ಕೆ ರೊಚ್ಚಿಗೆದ್ದು ಮಗನನ್ನೇ ಕೊಂದ ಅಪ್ಪ
6
+ ದೆಹಲಿಯ ಭೇಟಿ ಸಂದರ್ಭದಲ್ಲಿ ವಿಜಯೇಂದ್ರ ಮತ್ತು ಅಶೋಕ್, ವಿಧಾನಸಭೆಯ ಪ್ರತಿಪಕ್ಷದ ಉಪನಾಯಕ ಹಾಗೂ ವಿಧಾನಪರಿಷತ್‍ನ ಪ್ರತಿಪಕ್ಷದ ನಾಯಕ, ಉಪನಾಯಕ, ಮುಖ್ಯ ಸಚೇತಕರು, ಸೇರಿದಂತೆ ಪ್ರಮುಖ ಹುದ್ದೆಗಳ ಬಗ್ಗೆ ನೇಮಕ ಮಾಡುವ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
7
+ ಇದೇ ಸಂದರ್ಭದಲ್ಲಿ ಹೊಸ ರಾಜ್ಯಾಧ್ಯಕ್ಷರ ನೇಮಕವಾಗಿರುವ ಹಿನ್ನಲೆಯಲ್ಲಿ ವಿಜಯೇಂದ್ರ ಪಕ್ಷಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವ ಬಗ್ಗೆಯೂ ಸಲಹೆಯನ್ನು ಪಡೆಯಲಿದ್ದಾರೆ. ನಿಕಟಪೂರ್ವ ಅಧ್ಯಕ್ಷ ನಳೀನ್‍ಕುಮಾರ್ ಅಧಿಕಾರ ಅವಧಿಯಲ್ಲಿ ನೇಮಕವಾಗಿದ್ದ ಪದಾಕಾರಿಗಳನ್ನು ಬದಲಾಯಿಸಿ ಸೇವಾ ಹಿರಿತನ, ಪ್ರದೇಶವಾರು, ಸಾಮಾಜಿಕ ನ್ಯಾಯ ನೀಡುವ ನಿಟ್ಟಿನಲ್ಲಿ ಎಲ್ಲ ಸಮುದಾಯಗಳನ್ನು ಒಳಗೊಂಡ ಸಮನ್ವಯ ಸಾಸುವ ಪದಾಕಾರಿಗಳ ನೇಮಕಾತಿಗೆ ಒಲವು ತೋರಿದ್ದಾರೆ.
8
+ ಮೂಲ, ವಲಸಿಗ, ಆರ್‍ಎಸ್‍ಎಸ್, ಸಂಘ ಪರಿವಾರ ಎನ್ನದೆ ಪಕ್ಷ ನಿಷ್ಠರಿಗೆ ಮಾತ್ರ ಪಟ್ಟಿಯಲ್ಲಿ ಮಣೆ ಹಾಕಿ ಬಿಜೆಪಿಯನ್ನು ತಳಮಟ್ಟದಿಂದ ಸಂಘಟಿಸುವ ಲೆಕ್ಕಾಚಾರದಲ್ಲಿ ವಿಜಯೇಂದ್ರ ಇದ್ದಾರೆ. ಆ ಬಣ, ಈ ಬಣ ಎನ್ನದೆ ಬಿಜೆಪಿಯೇ ಮೂಲ ಬಣ ಎಂಬುದಕ್ಕೆ ಒತ್ತು ಕೊಟ್ಟಿರುವ ವಿಜೇಂದ್ರ ಯಾರಿಗೂ ಅಸಮಾಧಾನವಾಗದಂತೆ ಎಲ್ಲರನ್ನು ಸಮಾಧಾನಪಡಿಸುವ ಸಮತೋಲನ ಕಾಪಾಡುವ ಪಟ್ಟಿಯನ್ನು ಸಿದ್ದಪಡ���ಸುವ ಲೆಕ್ಕಾಚಾರದಲ್ಲಿದ್ದಾರೆ.
9
+ ಇನ್ನು ಬರಲಿರುವ ಲೋಕಸಭೆ ಚುನಾವಣೆಗೆ ಪಕ್ಷವನ್ನು ಬಲಪಡಿಸುವುದು, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಕಾರಣ ಕ್ಷೇತ್ರಗಳ ಹಂಚಿಕೆ, ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ ರೂಪಿಸುವುದು ಸೇರಿದಂತೆ ಹಲವಾರು ಕಾರ್ಯತಂತ್ರಗಳ ಬಗ್ಗೆಯೂ ಹಿರಿಯ ನಾಯಕರಿಂದ ಸಲಹೆಗಳನ್ನು ಪಡೆದುಕೊಳ್ಳಲಿದ್ದಾರೆ.
10
+ ತೆಲಂಗಾಣ ಚುನಾವಣೆ : ಮತ ಚಲಾಯಿಸಿದ ಸ್ಟಾರ್ ನಟರು
11
+ ವಿಜಯೇಂದ್ರ ಮತ್ತು ಅಶೋಕ್ ನೇಮಕಾತಿಗೆ ಮಾಜಿ ಸಚಿವರಾದ ವಿ.ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಶಾಸಕ ಅರವಿಂದ ಬೆಲ್ಲದ್ ಮತ್ತಿತರರು ಅಪಸ್ವರ ತೆಗೆದಿದ್ದಾರೆ. ಭಿನ್ನಮತೀಯ ಬಣ ಡಿ.7ರಂದು ನವದೆಹಲಿಗೆ ತೆರಳುತ್ತಿದ್ದು, ವರಿಷ್ಠರಿಗೆ ದೂರು ನೀಡಲಿದ್ದಾರೆ. ಇದಕ್ಕೂ ಮುನ್ನವೇ ದೆಹಲಿಗೆ ತೆರಳುತ್ತಿರುವ ವಿಜಯೇಂದ್ರ ಮತ್ತು ಅಶೋಕ್ ಪಕ್ಷದೊಳಗೆ ವರಿಷ್ಠರ ತೀರ್ಮಾನವನ್ನು ಯಾರೊಬ್ಬರು ಪ್ರಶ್ನೆ ಮಾಡದಂತೆ ಸೂಚನೆ ನೀಡಬೇಕೆಂದು ಮನವಿ ಮಾಡುವ ಸಾಧ್ಯತೆ ಇದೆ.
12
+ ವಿಧಾನಸಭೆ ಚುನಾವಣೆಗೂ ಮುನ್ನವೇ ಕೆಲವರು ಈ ರೀತಿ ತಮ್ಮ ಬಾಯಿಯನ್ನು ಸಡಿಲ ಮಾಡಿದ್ದರಿಂದಲೇ ನಮಗೆ ಒಡೆತ ಬಿದ್ದಿತ್ತು ಪುನಃ ಇದು ಪುನರಾವರ್ತನೆಯಾದರೆ ಮತ್ತೆ ಹಿನ್ನಡೆಯಾಗಲಿದೆ. ಭಿನ್ನಮತೀಯರ ಬಾಯಿಗೆ ಕಡಿವಾಣ ಹಾಕುವಂತೆ ದೂರು ನೀಡುವ ಸಾಧ್ಯತೆ ಇದೆ.
eesanje/url_46_300_9.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಆ್ಯಂಬುಲೆನ್ಸ್ ಸೇವೆ ಅವ್ಯವಸ್ಥೆ : ಡಿಸಿಎಂ ಡಿಕೆಶಿ ಆಕ್ರೋಶ
2
+ ಬೆಂಗಳೂರು,ನ.30- ಆರೋಗ್ಯ ಕವಚ ಯೋಜನೆಯಡಿ ಒದಗಿಸಲಾಗುತ್ತಿರುವ 108 ತುರ್ತು ಆ್ಯಂಬುಲೆನ್ಸ್ ಸೇವೆಯ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‍ಗುಂಡೂರಾವ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
3
+ ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ನಡೆದ ಕಾರ್ಯಕ್ರಮದಲ್ಲಿ 262 ಆ್ಯಂಬುಲೆನ್ಸ್‍ಗಳನ್ನು ಆರೋಗ್ಯ ಕವಚ ಯೋಜನೆಗೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆ್ಯಂಬುಲೆನ್ಸ್ ಸೇವೆಯಲ್ಲಿ ತೊಡಗಿಸಿಕೊಂಡಿರುವ ಚಾಲಕರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
4
+ ಕನಕಪುರಕ್ಕೆ ಮೆಡಿಕಲ್ ಕಾಲೇಜು ಬೇಕು ಎಂದು ನಾನು ಏಕೆ ಕೇಳಿಕೊಳ್ಳುತ್ತೇನೆ ಎಂದರೆ 108 ಚಾಲಕರದ್ದು ಒಂದು ಚೇಸ್ಟೆ ಇದೆ. ಮಳವಳ್ಳಿ ಕಡೆಯಿಂದ ಅನೇಕರು ಬರುತ್ತಾರೆ. ಅಪಘಾತ ಅಥವಾ ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು. ಆದರೆ, ಖಾಸಗಿ ಆಸ್ಪತ್ರೆಗಳ ಜತೆ ಹೊಂದಾಣಿಕೆ ಮಾಡಿಕೊಂಡು ಆ್ಯಂಬುಲೆನ್ಸ್ ಚಾಲಕರು ರೋಗಿಗಳನ್ನು ಅಲ್ಲಿಗೆ ಕರೆದುಕೊಂಡು ಹೋಗುತ್ತಾರೆ.
5
+ ಡಯಾಲಿಸಿಸ್ ಕೇಂದ್ರಗಳು ಸ್ಥಗಿತ, ಆರೋಗ್ಯ ಸೇವೆ ವ್ಯತ್ಯಯ
6
+ ಅಲ್ಲಿ ಸಾವಿರಾರು ರೂ.ಗಳ ಚಿಕಿತ್ಸಾ ವೆಚ್ಚವಾಗುತ್ತದೆ. ತುರ್ತು ಸಂದರ್ಭದಲ್ಲಿ ಪೋಷಕರು ಅಥವಾ ಸಂಬಂಧಿಕರಿಗೆ ಪ್ರಾಣ ರಕ್ಷಣೆಯೇ ಮುಖ್ಯವಾಗುತ್ತದೆ. ಆದರೆ, ಜೀವ ಉಳಿದ ಬಳಿಕ ಹಣ ಭರಿಸಲಾಗದೆ ಪರದಾಡುತ್ತಾರೆ. ಶಾಸಕರ ಬಳಿ ಸರ್ಕಾರದಿಂದ ನೆರವು ಕೊಡಿಸುವಂತೆ ಮನವಿ ಮಾಡುತ್ತಾರೆ.
7
+ ನಾವುಗಳು ಮುಖ್ಯಮಂತ್ರಿಯವರ ಬಳಿ ಅರ್ಜಿಗಳನ್ನು ತೆಗೆದುಕೊಂಡು ಹೋಗಿ ಹಣ ಕೊಡಿಸಬೇಕು. ನಾನೇ ಪ್ರತಿ ತಿಂಗಳು 20 ಲಕ್ಷ ರೂ.ಗಳನ್ನು ಈ ರೀತಿಯ ವೆಚ್ಚಗಳಿಗೆ ನೆರವು ನೀಡುವ ಪರಿಸ್ಥಿತಿ ಇದೆ. ಇದಕ್ಕೆಲ್ಲಾ ಕಡಿವಾಣ ಹಾಕಬೇಕಿದೆ ಎಂದರು.
8
+ ಸರ್ಕಾರದ ಆಸ್ಪತ್ರೆಗಳು ಯಾವುದಕ್ಕೂ ಕಡಿಮೆ ಇಲ್ಲ. ನಾರಾಯಣ ಹೃದಯಾಲಯದಲ್ಲಿರುವಂತೆ ಆಧುನಿಕ ಸೌಲಭ್ಯಗಳು ಜಯದೇವ ಆಸ್ಪತ್ರೆಯಲ್ಲೂ ಇವೆ. ಖುದ್ದು ನಾನೇ ಬೌರಿಂಗ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದೇನೆ. ವಿಕ್ಟೋರಿಯಾ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆದಿದ್ದೇನೆ. ಆ್ಯಂಬುಲೆನ್ಸ್ ಚಾಲಕರು ಜಯನಗರ, ವಿಕ್ಟೋರಿಯಾ, ಬೌರಿಂಗ್‍ನಂತಹ ಆಸ್ಪತ್ರೆಗಳಿಗೆ ರೋಗಿಗಳನ್ನು ಕರೆತರುವುದಿಲ್ಲ. ಈ ನಿಟ್ಟಿನಲ್ಲಿ ಚಾಲಕರಿಗೆ ಸೂಕ್ತ ತರಬೇತಿ ನೀಡಬೇಕು. ಅಗತ್ಯ ತಿಳುವಳಿಕೆಯೊಂದಿಗೆ ಕರ್ತವ್ಯಕ್ಕೆ ನಿಯೋಜಿಸಬೇಕು ಎಂದರು.
9
+ ಸರ್ಕಾರಿ ಅಧಿಕಾರಿಗಳು ಪ್ರಾಥಮಿಕ ಆರೋಗ್ಯ ಸೇವೆಯ ಸುಧಾರಣೆಗೆ ಆದ್ಯತೆ ನೀಡಬೇಕೆಂದು ಡಿ.ಕೆ.ಶಿವಕುಮಾರ್ ಸಲಹೆ ನೀಡಿದರು. ಆರೋಗ್ಯ ಸಚಿವ ದಿನೇಶ್‍ಗುಂಡೂರಾವ್ ಮಾತನಾಡಿ, ಆ್ಯಂಬುಲೆನ್ಸ್ ತುರ್ತು ಗತಿಯಲ್ಲಿ ಸೇವೆಗೆ ಲಭ್ಯವಾ���ಬೇಕು. ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿ ಜೀವ ಉಳಿಸುವ ಕೆಲಸ ಮಾಡಬೇಕು. ಆ್ಯಂಬುಲೆನ್ಸ್ ಸಿಬ್ಬಂದಿಗಳು ರೋಗಿಗಳನ್ನು ಕರೆದುಕೊಂಡು ಹೋಗುವ ಹಾದಿಯ ಮಧ್ಯೆಯೇ ಹತ್ತಿರದ ಆಸ್ಪತ್ರೆಗೆ ಯಾವ ರೀತಿ ಸಮಸ್ಯೆಯಾಗಿದೆ ಎಂಬ ಮಾಹಿತಿ ನೀಡಿ ಸೂಕ್ತ ಚಿಕಿತ್ಸೆಗೆ ವೈದ್ಯರನ್ನು ಸಜ್ಜುಗೊಳಿಸಿಕೊಳ್ಳುವಂತೆ ಸಲಹೆ ನೀಡಬೇಕು ಎಂದು ಹೇಳಿದರು.
10
+ 108 ಸೇವೆಯ ಬಗ್ಗೆ ಸಾಕಷ್ಟು ದೂರುಗಳಿವೆ. ಅವುಗಳನ್ನು ಸರಿಪಡಿಸಲು ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು. 2008ರಲ್ಲಿ ಆರಂಭವಾದ ಈ ಸೇವೆಗಳು ಕಾಲಕ್ಕನುಗುಣವಾದಂತಹ ತಂತ್ರಜ್ಞಾನ ಮತ್ತು ಆಧುನಿಕತೆಯನ್ನು ಅಳವಡಿಸಿಕೊಂಡಿಲ್ಲ. ಗುಣಮಟ್ಟ ವೃದ್ಧಿಯಲ್ಲಿ ಕುಂಟಿತವಾಗಿದೆ. ಸಮಯಕ್ಕೆ ಸರಿಯಾಗಿ ತಲುಪದಿರುವ ಬಗ್ಗೆಯೂ ಸಾಕಷ್ಟು ದೂರುಗಳಿವೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಸರಿಪಡಿಸಿ ದೇಶದಲ್ಲೇ ನಂ.1 ಸೇವೆಯನ್ನಾಗಿಸುವ ಗುರಿಯೊಂದಿಗೆ ಕೆಲಸ ಮಾಡಲಾಗುವುದು ಎಂದರು.
11
+ ಇಂದು ಸಮರ್ಪಣೆಗೊಂಡ 262 ಆ್ಯಂಬುಲೆನ್ಸ್‍ಗಳಲ್ಲಿ 105 ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ್ದು, 152 ಸಾಮಾನ್ಯ ಸೌಲಭ್ಯಗಳನ್ನು ಹೊಂದಿವೆ. ಹಳೆಯ ಆ್ಯಂಬುಲೆನ್ಸ್‍ಗಳನ್ನು ಬದಲಾವಣೆ ಮಾಡಲಾಗುವುದು. ನವಜಾತ ಶಿಶುಗಳಿಗಾಗಿಯೇ ಪ್ರತ್ಯೇಕ ಆ್ಯಂಬುಲೆನ್ಸ್ ಒದಗಿಸಲು ಚಿಂತನೆ ನಡೆದಿದೆ. ಅಪಘಾತದ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಹೆದ್ದಾರಿಗಳ ಪಕ್ಕದಲ್ಲಿ ಟ್ರಾಮಾಕೇರ್ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
12
+ ಹೊಸ ಆ್ಯಂಬುಲೆನ್ಸ್‍ಗಲ್ಲಿ ಜೀವ ರಕ್ಷಣೆಗೆ ಅತ್ಯಗತ್ಯವಾದ ಆಧುನಿಕ ಸಲಕರಣೆಗಳನ್ನು ಅಳವಡಿಸಲಾಗಿದೆ. ಬಿಎಲ್‍ಎಸ್ ಆ್ಯಂಬುಲೆನ್ಸ್‍ಗಳಲ್ಲಿ ಮೂಲಭೂತ ಜೀವ ರಕ್ಷಕ ಸಲಕರಣೆಗಳನ್ನು ಒಳಗೊಂಡಿದ್ದರೆ, ಎಎಲ್‍ಎಸ್ ಆ್ಯಂಬುಲೆನ್ಸ್‍ಗಳು ಟ್ರಾನ್ಸ್‍ಫೋರ್ಟ್ ವೆಂಟಿಲೇಟರ್‍ಗಳನ್ನು ಒಳಗೊಂಡಿವೆ.
13
+ ತೆಲಂಗಾಣ ಚುನಾವಣೆ : ಮತ ಚಲಾಯಿಸಿದ ಸ್ಟಾರ್ ನಟರು
14
+ ಪ್ರಸ್ತುತ ನಗರ ಪ್ರದೇಶದಲ್ಲಿ 20 ನಿಮಿಷದಲ್ಲಿ, ಗ್ರಾಮೀಣ ಪ್ರದೇಶದಲ್ಲಿ 30ನಿಮಿಷಗಳಲ್ಲಿ ಆ್ಯಂಬುಲೆನ್ಸ್‍ಗಳು ಸ್ಥಳಕ್ಕೆ ತಲುಪುತ್ತಿವೆ. ಆ ಸಮಯವನ್ನು ಮತ್ತಷ್ಟು ಕಡಿತಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
eesanje/url_46_301_1.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಡಯಾಲಿಸಿಸ್ ಕೇಂದ್ರಗಳು ಸ್ಥಗಿತ, ಆರೋಗ್ಯ ಸೇವೆ ವ್ಯತ್ಯಯ
2
+ ಬೆಂಗಳೂರು,ನ.30- ವೇತನ ಪಾವತಿ ಹಾಗೂ ಪರಿಷ್ಕರಣೆಗೆ ಒತ್ತಾಯಿಸಿ ಡಯಾಲಿಸಿಸ್ ಕೇಂದ್ರಗಳ ಸಿಬ್ಬಂದಿಗಳು ಅನಿರ್ದಿಷ್ಠಾವಧಿ ಮುಷ್ಕರ ಆರಂಭಿಸಿರುವುದ ರಿಂದಾಗಿ ಆರೋಗ್ಯ ತುರ್ತು ಪರಿಸ್ಥಿತಿ ನಿರ್ಮಾಣ ವಾಗಿದೆ. ರಾಜ್ಯದಲ್ಲಿರುವ 202 ಡಯಾಲಿಸಿಸ್ ಕೇಂದ್ರಗಳಲ್ಲಿ ಸುಮಾರು 700ಕ್ಕೂ ಹೆಚ್ಚು ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಕಳೆದ ನಾಲ್ಕು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂಬ ಆರೋಪವಿದೆ.
3
+ ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕೆಲಸವನ್ನು ಸ್ಥಗಿತಗೊಳಿಸಿ ಸಿಬ್ಬಂದಿಗಳು ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಅನಿರ್ದಿಷ್ಠಾವಧಿ ಮುಷ್ಕರ ಆರಂಭಿಸಿದ್ದಾರೆ. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಉಚಿತ ಡಯಾಲಿಸಿಸ್ ಸೌಲಭ್ಯದ ಸಲುವಾಗಿ ರಾಜ್ಯಾದ್ಯಂತ ಕೇಂದ್ರಗಳನ್ನು ಆರಂಭಿಸಿತ್ತು. ಕೋವಿಡ್ ವೇಳೆಯಲ್ಲಿ ಈ ಕೇಂದ್ರಗಳ ಸಿಬ್ಬಂದಿಗಳಿಗೆ ಅರ್ಧ ವೇತನ ನೀಡಲಾಗಿತ್ತು. ಅನಂತರ ಅದನ್ನು ಹೆಚ್ಚಿಸಿಲ್ಲ. ಕಳೆದ ನಾಲ್ಕು ತಿಂಗಳುಗಳಿಂದಲೂ ವೇತನವನ್ನೇ ನೀಡಿಲ್ಲ ಎಂದು ಆರೋಪಿಸಲಾಗಿದೆ.
4
+ ಸರ್ಕಾರದ ಸೇವೆ ಹಾಗೂ ಕಾಮಗಾರಿಯನ್ನು ಗುತ್ತಿಗೆ ಪಡೆಯಬೇಕಾದರೆ ಆ ಸಂಸ್ಥೆ ತನ್ನ ಸಿಬ್ಬಂದಿಗಳಿಗೆ ಇಎಸ್‍ಐ, ಪಿಎಫ್ ಸೌಲಭ್ಯ ಒದಗಿಸುವುದು ಕಡ್ಡಾಯವಾಗಿದೆ. ಆದರೆ, ಡಯಾಲಿಸಿಸ್ ಕೇಂದ್ರಗಳ ನಿರ್ವಹಣೆಯ ಜವಾಬ್ದಾರಿ ಹೊಂದಿರುವ ಕೆಎಸ್‍ಕೆಎಜಿ ಸಂಜೀವಿನಿ ಸಂಸ್ಥೆ 20 ತಿಂಗಳಿನಿಂದಲೂ ಇಎಸ್‍ಐ, ಪಿಎಫ್ ಸೌಲಭ್ಯಗಳನ್ನು ಒದಗಿಸಿಲ್ಲ ಎಂದು ಆರೋಪಿಸಲಾಗಿದೆ.
5
+ ಯುವಜನರ ಸಬಲೀಕರಣಕ್ಕೆ ಎನ್‍ಇಪಿ ಪೂರಕ : ನಾರಾಯಣ ಮೂರ್ತಿ
6
+ ಕಳೆದ ಆಗಸ್ಟ್ 2-3ರಂದು ಈ ವಿಷಯವಾಗಿ ಫ್ರೀಡಂಪಾರ್ಕ್‍ನಲ್ಲಿ ಎರಡು ದಿನಗಳ ಸಾಂಕೇತಿಕ ಪ್ರತಿಭಟನೆ ನಡೆಸಲಾಗಿತ್ತು. ಆಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‍ಗುಂಡೂರಾವ್ ಒಂದು ತಿಂಗಳ ಒಳಗಾಗಿ ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈವರೆಗೂ ಈಡೇರಿಲ್ಲ.
7
+ ಕಿರಿಯ ಅಧಿಕಾರಿಗಳಿಂದ ಆಯುಕ್ತರವರೆಗೂ ಎಲ್ಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ ಉದ್ದೇಶ ಪೂರ್ವಕವಾಗಿಯೇ ನಮ್ಮನ್ನು ಕಡೆಗಣಿಸುತ್ತಿವೆ ಎಂದು ಕಿಡಿಕಾರಿದ್ದಾರೆ.
8
+ ಹಿಂದಿನ ಸರ್ಕಾರ ನೀಡಿದ್ದ ಗುತ್ತಿಗೆಯನ್ನು ರದ್ದುಪಡಿಸುವುದು ಅಥವಾ ನವೀಕರಿಸುವ ನಿಟ್ಟಿನಲ್ಲಿ ಸರ್ಕಾರ ಮತ್ತು ಸಂಸ್ಥೆಯ ನಡುವಿನ ಹಗ್ಗಜಗ್ಗಾಟದಿಂದ ಸಿಬ್ಬಂದಿಗಳು ಪರದಾಡುವಂತಾಗಿದೆ. ನೀಡುವ ಕಡಿಮೆ ವೇತನವನ್ನೇ ನಾಲ್ಕು ತಿಂಗಳುಗಳಿಂದ ತಡೆಹಿಡಿಯಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸಿಬ್ಬಂದಿಗಳು ಕಟುಂಬ ನಿರ್ವಹಣೆ ಮಾಡುವುದು ಹೇಗೆ? ಕೆಲಸ ಮಾಡುವುದಾದರೂ ಹೇಗೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ.
9
+ ಬಡವರ ಅನುಕೂಲಕ್ಕಾಗಿ ಆರಂಭಿಸಿರುವ ಡಯಾಲಿಸಿಸ��� ಸೇವೆಯನ್ನು ಉದ್ದೇಶ ಪೂರ್ವಕವಾಗಿಯೇ ಕಡೆಗಣಿಸಲಾಗುತ್ತಿದೆ. ದಿನವೊಂದಕ್ಕೆ ಎರಡೂವರೆಯಿಂದ ಮೂರು ಸಾವಿರ ಡಯಾಲಿಸಿಸ್ ಸೈಕಲ್‍ಗಳು ನಡೆಯುತ್ತಿವೆ. ಬಡವರ್ಗದವರಿಗೆ ಸಾವಿರಾರು ರೂ.ಗಳ ಉಳಿತಾಯವಾಗುತ್ತಿದೆ. ಆದರೆ, ಕಾಂಗ್ರೆಸ್ ಸರ್ಕಾರ ಪಂಚಖಾತ್ರಿಗಳ ಯೋಜನೆ ಬೆನ್ನಹತ್ತಿ ಉಚಿತ ಡಯಾಲಿಸಿಸ್‍ನಂತಹ ಸೇವೆಗಳನ್ನು ಕಡೆಗಣಿಸುತ್ತಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
10
+ ಪಂಚಖಾತ್ರಿಗಳಿಗೆ ನೀಡಲು ಸರ್ಕಾರದ ಬಳಿ ಹಣವಿದೆ. ಬಡವರ ಸೇವೆ ಮಾಡುವ ಸಿಬ್ಬಂದಿಗಳಿಗೆ ವೇತನ ನೀಡಲು ಹಣ ಇಲ್ಲವೇ ಎಂದು ಕಿಡಿಕಾರಿರುವ ಪ್ರತಿಭಟನಾಕಾರರು ತಮ್ಮ ಬೇಡಿಕೆ ಈಡೇರುವವರೆಗೂ ಧರಣಿಯನ್ನು ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
eesanje/url_46_301_10.txt ADDED
@@ -0,0 +1,6 @@
 
 
 
 
 
 
 
1
+ 3607.19 ಕೋಟಿ ರೂ. ಬಂಡವಾಳ ಹೂಡಿಕೆಯ 62 ಯೋಜನೆಗಳಿಗೆ ಅನುಮೋದನೆ
2
+ ಬೆಂಗಳೂರು, ನ.29-ಬೃಹತ್ ಮತ್ತು ಕೈಗಾರಿಕೆ, ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವ ಎಂ. ಬಿ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ 141ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಒಟ್ಟು 3,607.19 ಕೋಟಿ ರೂ.ಬಂಡವಾಳ ಹೂಡಿಕೆಯ 62 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ 10,755 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.
3
+ 50 ಕೋಟಿ ರೂ.ಗೂ ಹೆಚ್ಚಿನ ಬಂಡವಾಳ ಹೂಡಿಕೆಯ 8 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ ರಾಜ್ಯದಲ್ಲಿ 2,088.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಯಾಗಲಿದೆ. ಇವುಗಳಿಂದ 6,360 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.
4
+ 15 ಕೋಟಿ ರೂ. ಗಳಿಂದ 50 ಕೋಟಿ ರೂ. ಮೊತ್ತದ ಒಳಗಿನ ಬಂಡವಾಳ ಹೂಡಿಕೆಯ 51 ಹೊಸ ಯೋಜನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇವುಗಳಿಂದ 941.40 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ. ಅಂದಾಜು 4,395 ಜನರಿಗೆ ಉದ್ಯೋಗಗಳು ಲಭ್ಯವಾಗಲಿವೆ. ಹೆಚ್ಚುವರಿ ಬಂಡವಾಳ ಹೂಡಿಕೆಯ 3 ಯೋಜನೆಗಳಿಗೆ ಸಭೆಯು ಅನುಮೋದಿಸಿದ್ದು ಇದರಿಂದ 577.35 ಕೋಟಿ ರೂ. ಬಂಡವಾಳ ಹೂಡಿಕೆ ಆಗಲಿದೆ.
5
+ ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-11-2023)
6
+ ಸಭೆಯಲ್ಲಿ ಸರ್ಕಾರದ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತಗುಂಜನ್ ಕೃಷ್ಣ, ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ರವಿ ಬಿ.ಪಿ. ಕೆ.ಐ.ಎ.ಡಿ.ಬಿ ಮುಖ್ಯ ಕಾರ್ಯನಿರ್ವಾಹಕ ಅಕಾರಿ ಡಾ. ಎಂ. ಮಹೇಶ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ತಾಂತ್ರಿಕ ನಿರ್ದೇಶಕ ಆರ್. ರಮೇಶ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಕಾರಿಗಳು ಹಾಜರಿದ್ದರು.
eesanje/url_46_301_11.txt ADDED
@@ -0,0 +1,9 @@
 
 
 
 
 
 
 
 
 
 
1
+ ಪೊಲೀಸರೊಂದಿಗೆ ಜನಸ್ನೇಹಿ ವಾತಾವರಣ ಸೃಷ್ಠಿ : ಪರಮೇಶ್ವರ್
2
+ cದೂರುಗಳನ್ನೇ ದಾಖಲಿಸುತ್ತಿರಲಿಲ್ಲ. ಆದರೆ, ತಮ್ಮ ಸರ್ಕಾರ ಜನಸ್ನೇಹಿ ವಾತಾವರಣ ನಿರ್ಮಿಸಿದ್ದು, ಪ್ರತಿಯೊಂದು ದೂರುಗಳೂ ದಾಖಲಾಗುತ್ತಿವೆ. ಹೀಗಾಗಿ ಅಪರಾಧಗಳ ಸಂಖ್ಯೆ ಹೆಚ್ಚು ಎಂದು ಕಂಡುಬರುವಂತಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷಗಳು ಅಪರಾಧಗಳ ಸಂಖ್ಯೆ ಹೆಚ್ಚಾಗಿವೆ ಎಂದು ಬೊಂಬ್ಡ ಹೊಡೆಯುತ್ತಿವೆ. ಆದರೆ, ಇದು ಆಧಾರ ರಹಿತ ಎಂದರು. ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಜನರನ್ನು ನಿರ್ಲಕ್ಷಿಸಲಾಗಿತ್ತು. ಪೊಲೀಸ್ ಠಾಣೆಗೆ ಬಂದು ದೂರು ನೀಡಲು ಸಾರ್ವಜನಿಕರು ಹೆದರುತ್ತಿದ್ದರು. ಒಂದೊಮ್ಮೆ ಠಾಣೆಗೆ ಹೋಗಿ ದೂರು ನೀಡಿದರೂ ಅವು ದಾಖಲಾಗುತ್ತಿರಲಿಲ್ಲ. ಆದರೆ, ನಮ್ಮ ಸರ್ಕಾರ ಸ್ಪಷ್ಟ ನಿಯಮಾವಳಿಗಳನ್ನು ಜಾರಿ ಮಾಡಿದೆ. ಜನರನ್ನು ವಿಶ್ವಾಸದಿಂದ ಕಾಣಬೇಕು. ಪ್ರತಿಯೊಂದು ದೂರನ್ನೂ ತಕ್ಷಣ ದಾಖಲಿಸಿ ಕ್ರಮ ಕೈಗೊಳ್ಳಬೇಕು. ಸೈಬರ್ ಅಪರಾಧಗಳಲ್ಲಿ ಈ ಹಿಂದೆಲ್ಲ ದೂರುಗಳೇ ದಾಖಲಾಗುತ್ತಿರಲಿಲ್ಲ.
4
+ ನಾವು ಯಾವುದನ್ನೂ ನಿರ್ಲಕ್ಷಿಸುತ್ತಿಲ್ಲ. ಪ್ರತಿಯೊಂದು ಪ್ರಕರಣದ ದೂರು ಸ್ವೀಕರಿಸುತ್ತೇವೆ. ಅವನ್ನು ದಾಖಲಿಸಿ ನಂತರ ಸಂಬಂಧಿಸಿದ ಠಾಣೆಗಳಿಗೆ ಮುಂದಿನ ಕ್ರಮಕ್ಕಾಗಿ ರವಾನೆ ಮಾಡುತ್ತಿದ್ದೇವೆ. ಹೀಗಾಗಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿವೆ. ಕೆಳಹಂತದ ಪೆಪೊಲೀಸ್ ಠಾಣೆಗಳಲ್ಲಿ ಜನರಿಗೆ ಸರಿಯಾದ ಸ್ಪಂದನೆ ಸಿಗುತ್ತಿಲ್ಲ ಎಂದು ನಿನ್ನೆ ನಡೆದ ಜನತಾ ದರ್ಶನದಲ್ಲಿ ಹೆಚ್ಚು ದೂರುಗಳು ಕೇಳಿಬಂದ ಬಗ್ಗೆ ಪ್ರತಿಕ್ರಿಯಿಸಿದ ಅವರು, ದೂರುಗಳು ದಾಖಲಾಗುವುದರಿಂದಾಗಿ ಈ ರೀತಿಯ ಚರ್ಚೆಗಳು ಸಹಜ ಎಂದರು.
5
+ ಭರ್ತಿ 5 ವರ್ಷಗಳ ಗೃಹಲಕ್ಷ್ಮಿ ಹಣದ ಕಂತನ್ನು ಚಾಮುಂಡೇಶ್ವರಿಗೆ ಸಮರ್ಪಿಸಿದ ಸರ್ಕಾರ
6
+ ಭ್ರೂಣಹತ್ಯೆ ಪ್ರಕರಣಗಳ ಬಗ್ಗೆ ತನಿಖೆ ಪ್ರಗತಿಯಲ್ಲಿದೆ. ಅದು ಮುಗಿದ ಬಳಿಕ ಯಾರು ಭಾಗಿಯಾಗಿದ್ದಾರೆ, ಎಷ್ಟು ಕೃತ್ಯಗಳು ನಡೆದಿವೆ ಎಂಬ ಮಾಹಿತಿ ತಿಳಿಸಲಾಗುವುದು. ಸದ್ಯಕ್ಕೆ ಇದೊಂದು ವ್ಯವಸ್ಥಿತ ಜಾಲವಾಗಿ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದೆ ಎಂದು ಹೇಳಿದರು.
7
+ ಭರ್ತಿ 5 ವರ್ಷಗಳ ಗೃಹಲಕ್ಷ್ಮಿ ಹಣದ ಕಂತನ್ನು ಚಾಮುಂಡೇಶ್ವರಿಗೆ ಸಮರ್ಪಿಸಿದ ಸರ್ಕಾರ
8
+ ನಿಗಮ ಮಂಡಳಿಗಳ ನೇಮಕಾತಿಗೆ ಸಂಬಂಧಿಸಿದಂತೆ ಚರ್ಚೆಗಳು ಪ್ರಗತಿಯಲ್ಲಿವೆ. ಪಕ್ಷದ ಹಿರಿಯ ಸಚಿವರ ಅಭಿಪ್ರಾಯ ಕೇಳಿದರೆ ಚೆನ್ನಾಗಿತ್ತು. ನಾನು ಎಂಟು ವರ್ಷ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಇಂತಹ ಸಂದರ್ಭದಲ್ಲಿ ಯಾರಿಗೆಲ್ಲ ಅವಕಾಶ ಕೊಟ್ಟರೆ ಪಕ್ಷ ಸಂಘಟನೆಗೆ ಸಹಾಯವಾಗಲಿದೆ ಎಂಬ ಮಾಹಿತಿ ತಮಗಿದೆ. ರಾಜ್ಯದ ಪ್ರಮುಖ ನಾಯಕರು ಹೈಕಮಾಂಡ್ ನಾಯಕರ ಒಪ್ಪಿಗೆ ಪಡೆದು ನೇಮಕಾತಿ ಮಾಡುತ್ತಿದ್ದಾರೆ ಎಂದು ಹೇಳಿದರು.
9
+ ತೆಲಂಗಾಣ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ�� ಪಂಚಖಾತ್ರಿಗಳ ಜಾಹಿರಾತು ನೀಡಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
eesanje/url_46_301_12.txt ADDED
@@ -0,0 +1,6 @@
 
 
 
 
 
 
 
1
+ ಬಂಧಿತ ವಿದೇಶಿ ಡ್ರಗ್ಸ್ ಪೆಡ್ಲರ್ ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ
2
+ ಬೆಂಗಳೂರು, ನ.28- ಹೊಸವರ್ಷಕ್ಕೆ ಸುಮಾರು 25 ಕೋಟಿ ಮೌಲ್ಯದ ಡ್ರಗ್ಸ್ ಮಾರಾಟ ಮಾಡಲು ಬಂಧಿತ ವಿದೇಶಿ ಡ್ರಗ್ಸ್ ಪೆಡ್ಲರ್ ಬೆಂಜಮಿನ್ ಯೋಜಿಸಿದ್ದ ಎಂದು ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ತಿಳಿದು ಬಂದಿದೆ.
3
+ ಇತ್ತೀಚೆಗೆ ಮನೆಯೊಂದರಲ್ಲಿ ಡ್ರಗ್ಸ್ ತಯಾರಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಬೆಂಜಮಿನ್ ನನ್ನು ಬಂಧಿಸಿ 10 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದರು. ವಿಚಾರಣೆ ವೇಳೆ ಸುಮಾರು 25 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಸರಬರಾಜು ಮಾಡಲು ಎಲ್ಲಾ ತಯಾರಿಯನ್ನು ಮಾಡಿದ್ದ ಸುಮಾರು 350 ಗ್ರಾಹಕರು ಈತನ ಸಂಪರ್ಕದಲ್ಲಿದ್ದರು ಎಂಬ ಸ್ಪೋಟಕ ಮಾಹಿತಿ ಬಯಲಿಗೆ ಬಂದಿದೆ.
4
+ ಬಿಜೆಪಿ ಅಸಮಾಧಾನಿತರೊಂದಿಗೆ ವರಿಷ್ಠರ ಸಮಾಲೋಚನೆ
5
+ ಹೊಸ ವರ್ಷಕ್ಕೆ ಡ್ರಗ್ಸ್ ಮಾರಾಟದ ಯೋಜನೆ ರೂಪಿಸಿದ್ದ ಸಂದರ್ಭದಲ್ಲಿ ಸಿಸಿಬಿ ಪೊಲೀಸರ ಕೈಗೆ ಈತ ಸಿಕ್ಕಿ ಬಿದ್ದಿದ್ದ. ಆ್ಯಪ್ ಮೂಲಕ ಗ್ರಾಹಕರನ್ನು ಸಂಪರ್ಕಿಸಿ ಯಾವುದೇ ಸಾಕ್ಷ್ಯಗಳು ಸಿಗದಂತೆ ಈ ದಂಧೆಯನ್ನು ನಡೆಸಲಾಗಿತ್ತು. ದೆಹಲಿ ಹಾಗೂ ಮುಂಬೈಯಿಂದ ರೈಲಿನ ಮೂಲಕ ಡ್ರಗ್ಸ್ ತಯಾರಿಕಾ ಸಾಮಾಗ್ರಿಗಳನ್ನು ತರಿಸುತ್ತಿದ್ದ ಎಂದು ಹೇಳಲಾಗಿದೆ.
6
+ ಮುಂದಿನ ಡಿಸೆಂಬರ್ ವೇಳೆಗೆ 25 ಕೋಟಿ ಮೌಲ್ಯದ ಡ್ರಗ್ಸ್ ತಯಾರಿಕೆಗೆ ಪ್ಲಾನ್ ಮಾಡಿದ್ದ. ಪ್ರಸ್ತುತ ಈತನ ಸಂಪರ್ಕದಲ್ಲಿದ್ದವರ ಬಗ್ಗೆ ಸಿಸಿಬಿ ಮಾಹಿತಿ ಕಲೆ ಹಾಕುತ್ತಿದ್ದು, ಈ ದಂಧೆಯಲ್ಲಿ ಯಾರ್ಯಾರು ಇದ್ದಾರೆಂಬುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
eesanje/url_46_301_2.txt ADDED
@@ -0,0 +1,5 @@
 
 
 
 
 
 
1
+ ಚಿತ್ರದುರ್ಗ : ಕಾರಿನಲ್ಲಿ ಸಾಗಿಸುತ್ತಿದ್ದ 8 ಕೋಟಿ ರೂ. ಹಣ ಜಪ್ತಿ
2
+ ಚಿತ್ರದುರ್ಗ,ನ.30- ಕಾರಿನಲ್ಲಿ ಸಾಗಿಸುತ್ತಿದ್ದ 8 ಕೋಟಿ ಜಪ್ತಿ ಮಾಡಲಾಗಿದ್ದು, ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ ತಿಳಿಸಿದ್ದಾರೆ. ತಡರಾತ್ರಿವರೆಗೂ ನಾವು ನೋಟುಗಳನ್ನು ಎಣಿಸುವ ಕಾರ್ಯದಲ್ಲಿ ತೊಡಗಿದ್ದೆವು. ಕಾರಿನ ಚಾಲಕ ಸುನೀಲ್ ಮತ್ತು ಅವರ ಜೊತೆ ಇದ್ದ ಹರೀಶ್ ಎಂಬುವರವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
3
+ 500 ಮುಖಬೆಲೆಯ ನೋಟುಗಳ ಜೊತೆಗೆ 200 ಮತ್ತು 100 ಮುಖಬೆಲೆಯ ನೋಟುಗಳಿದ್ದು, ಇದನ್ನು ಎಲ್ಲಿಗೆ ಕೊಂಡೊಯ್ಯಲಾಗುತ್ತಿತ್ತು ಎಂಬ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ ಎಂದಿದ್ದಾರೆ. ಪ್ರಸ್ತುತ ವಿಚಾರಣೆ ವೇಳೆ ನಾವು ಅಡಿಕೆ ವ್ಯಾಪಾರಿಗಳಾಗಿದ್ದು, ಶಿವಮೊಗ್ಗದ ಸುರೇಶ್ ಎಂಬುವರಿಗೆ ಹಣ ನೀಡಿದ್ದರು. ನಾವು ಅಡಿಕೆ ಮಾರಲು ಸಾಧ್ಯವಾಗದ ಕಾರಣ ಆ ಹಣವನ್ನು ವಾಪಸ್ ಕೊಡಲು ತೆಗೆದುಕೊಂಡು ಹೋಗುತ್ತಿದ್ದೆವು ಎಂದು ಹೇಳಿದ್ದಾರೆ.
4
+ ಮುಜರಾಯಿ ದೇವಾಲಯಗಳ ಪೂಜೆಗೆ ಅರ್ಚಕರ ಮಕ್ಕಳ ನೇಮಕ
5
+ ಆದರೆ ಇದರ ಬಗ್ಗೆ ಸಂಪೂರ್ಣ ತನಿಖೆ ನಡೆಸಿದಾಗ ಮಾತ್ರ ನಿಖರವಾದ ಮಾಹಿತಿ ದೊರೆಯಲಿದೆ. ಪ್ರಸ್ತುತ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿದರು. ಕಳೆದ ರಾತ್ರಿ ಇನ್ನೋವಾ ಕಾರಿನಲ್ಲಿ ಯಾವುದೇ ದಾಖಲೆ ಇಲ್ಲದೆ ಅಪಾರ ಪ್ರಮಾಣದ ಹಣ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಲ್ಯಾಡಿಹಳ್ಳಿ ಬಳಿ ಕಾರನ್ನು ತಡೆದು ಪರಿಶೀಲಿಸಿದಾಗ 8 ಕೋಟಿ ನಗದು ಪತ್ತೆಯಾಗಿದೆ.
eesanje/url_46_301_3.txt ADDED
@@ -0,0 +1,8 @@
 
 
 
 
 
 
 
 
 
1
+ ಮುಜರಾಯಿ ದೇವಾಲಯಗಳ ಪೂಜೆಗೆ ಅರ್ಚಕರ ಮಕ್ಕಳ ನೇಮಕ
2
+ ಬೆಂಗಳೂರು,ನ.30- ಮುಜರಾಯಿ ಇಲಾಖೆಯ ಸಿ ಗ್ರೇಡ್ ದೇವಾಲಯಗಳಲ್ಲಿ ಪೂಜೆ ಸಲ್ಲಿಸುವ ಅರ್ಚಕರಿಗೆ ವಯಸ್ಸಾಗಿದ್ದರೆ ಅಥವಾ ಅನಾರೋಗ್ಯಪೀಡಿತರಾಗಿ ಸೇವೆ ಸಲ್ಲಿಸಲಾಗದಿದ್ದರೆ ಅವರ ಮಕ್ಕಳನ್ನೇ ಈ ಹುದ್ದೆಗೆ ನೇಮಕಾತಿ ಮಾಡುವ ಕುರಿತು ರಾಜ್ಯ ಸರ್ಕಾರದ ಮಹತ್ವದ ಆದೇಶ ಹೊರಡಿಸಿದೆ.
3
+ ರಾಜ್ಯದಲ್ಲಿ 34 ಸಾವಿರಕ್ಕೂ ಅಧಿಕ ಸಿ ಗ್ರೇಡ್ ದೇವಾಲಯಗಳಿವೆ. ಸಿ ಗ್ರೇಡ್ ದೇವಾಲಯಗಳಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವವರು ನಿಧನರಾದರೆ ಮಾತ್ರ ಅಂಥವರ ಮಕ್ಕಳನ್ನು ಅನುಕಂಪದ ಆಧಾರದ ಮೇಲೆ ಅರ್ಚಕರ ಹುದ್ದೆಗೆ ನೇಮಕ ಮಾಡಲಾಗುತ್ತಿತ್ತು. ಆದರೆ ಇನ್ನು ಮುಂದೆ ಅನಾರೋಗ್ಯಕ್ಕೆ ತುತ್ತಾದರೂ, ಇಲ್ಲವೇ ವಯೋಸಹಜ ಸಮಸ್ಯೆಗಳಿಂದ ಅರ್ಚಕ ವೃತ್ತಿ ಮಾಡಲಾಗದಿದ್ದರೆ ಅಂಥವರ ಮಕ್ಕಳನ್ನು ದೇವಾಲಯಗಳಲ್ಲಿ ನೇಮಕಾತಿ ಮಾಡಿಕೊಳ್ಳಲು ಸಿದ್ದರಾಮಯ್ಯನವರ ಸರ್ಕಾರ ಆದೇಶ ಹೊರಡಿಸಿದೆ.
4
+ ಸಿ ವರ್ಗಗಳ ದೇವಾಲಯಗಳಲ್ಲಿ ವಂಶ ಪಾರಂಪರ್ಯ ವಾಗಿ ಪೂಜಾ ಕೈಂಕರ್ಯಗಳನ್ನು ಕಾರ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಅರ್ಚಕರು ನಿಧನರಾದರೆ ಅಥವಾ ವಯಸ್ಸಾಗಿದ್ದರೆ, ತೀವ್ರ ರೀತಿಯ ಅನಾರೋಗ್ಯದ ನಿಮಿತ್ತ ಅರ್ಚಕರಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗದ ಸಂದರ್ಭಗಳಲ್ಲಿ ಅವರ ಅನುವಂಶಿಕ ಹಕ್ಕನ್ನು ಕಾನೂನುಬದ್ಧ ವಾರಸುದಾರರಿಗೆ ವಹಿಸಲು ಅವಕಾಶ ಕಲ್ಪಿಸಲಾಗಿದೆ. ಇದನ್ನು ಆಯಾ ತಾಲೂಕುಗಳ ತಹಸೀಲ್ದಾರ್ ಹಂತದಲ್ಲಿ ವರ್ಗಾವಣೆ ಮಾಡಲು ಅಧಿಕಾರ ನೀಡಿ ಆದೇಶ ಹೊರಡಿಸಲಾಗಿದೆ.
5
+ ನ್ಯೂಜೆರ್ಸಿಯಲ್ಲಿ ಅಜ್ಜ, ಅಜ್ಜಿ, ಚಿಕ್ಕಪ್ಪನನ್ನು ಕೊಂದ ಭಾರತೀಯ ವಿದ್ಯಾರ್ಥಿ
6
+ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ಸಿ ವರ್ಗಗಳ ದೇವಾಲಯಗಳ ಅರ್ಚಕರು ಮರಣ ಹೊಂದಿದ ಸಂದರ್ಭದಲ್ಲಿ ಅವರ ಅನುವಂಶಿಕ ಹಕ್ಕನ್ನು ಅವರ ಕಾನೂನುಬದ್ಧ ವಾರಸುದಾರರಿಗೆ ವರ್ಗಾಯಿಸುವ ಬಗ್ಗೆ ತಹಸೀಲ್ದಾರ್ ಅವರಿಗೆ ಅಧಿಕಾರ ನೀಡಲಾಗಿದೆ.
7
+ ಆದರೆ ಅರ್ಚಕರು ವಯಸ್ಸಾದ ಸಂದರ್ಭದಲ್ಲಿ ಹಾಗೂ ತೀವ್ರ ರೀತಿಯ ಅನಾರೋಗ್ಯದ ನಿಮಿತ್ತ ಅರ್ಚಕರಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗದೆ ಇರುವ ಸಂದರ್ಭಗಳಲ್ಲೂ ಅವರ ಅನುವಂಶಿಕ ಹಕ್ಕನ್ನು ಕಾನೂನುಬದ್ಧ ವಾರಸುದಾರರಿಗೆ ವಹಿಸಲು ಅವಕಾಶ ಕಲ್ಪಿಸುವಂತೆ ಅರ್ಚಕ ಸಂಘ ಕೋರಿತ್ತು. ಸಂಘದ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಪರಿಶೀಲಿಸಿ ಈ ನಿರ್ಧಾರಕ್ಕೆ ಮುಂದಾಗಿದೆ
8
+ ಷರತ್ತುಗಳು:ಅರ್ಚಕರು ವಯಸ್ಸಾದ ಸಂದರ್ಭದಲ್ಲಿ ಅಥವಾ ತೀವ್ರ ರೀತಿ ಅನಾರೋಗ್ಯದ ಸಂಬಂಧ ವೈದ್ಯಕೀಯ ಧೃಢೀಕರಣ ಪಡೆಯತಕ್ಕದ್ದು, ಕಾನೂನುಬದ್ಧ ವಾರಸುದಾರರು ಅರ್ಚಕರು ಹುದ್ದೆಗೆ ಕಾಯ್ದೆ ಅಥವಾ ನಿಯಮಗಳಲ್ಲಿ ನಿಗಪಡಿಸಿರುವ ಅರ್ಹತೆ ಹೊಂದಿರಬೇಕು.
eesanje/url_46_301_4.txt ADDED
@@ -0,0 +1,6 @@
 
 
 
 
 
 
 
1
+ ದಾಸ ಶ್ರೇಷ್ಠ ಚಿಂತನೆಗಳಿಂದ ಉತ್ತಮ ಸಮಾಜ ನಿರ್ಮಾಣ : ಎಚ್‍ಡಿಡಿ
2
+ ಬೆಂಗಳೂರು, ನ.30-ದಾಸ ಶ್ರೇಷ್ಠರಾದ ಕನಕದಾಸರ ಆದರ್ಶ ಚಿಂತನೆಗಳನ್ನು ನಾವೆಲ್ಲರೂ ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣದೆಡೆಗೆ ಸಾಗೋಣ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕರೆ ನೀಡಿದ್ದಾರೆ.
3
+ ತಮ್ಮ ಕೀರ್ತನೆಗಳ ಮೂಲಕ ಜಾತಿ, ಮತಗಳ ಭೇದಭಾವ ಯಾಕೆ ಇರುವುದೊಂದೇ ಅದು ಮನುಷ್ಯ ಜಾತಿ ಎಂಬುದನ್ನು ಜಗತ್ತಿಗೆ ಸಾರಿದ ಕನಕದಾಸರ ಜಯಂತಿಯಂದು ಅಗಣಿತ ನಮನಗಳನ್ನು ಸಲ್ಲಿಸುವುದಾಗಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ತಿಳಿಸಿದ್ದಾರೆ.ಕನಕದಾಸರ ಆದರ್ಶ ಚಿಂತನೆಗಳನ್ನು ನಾವೆಲ್ಲರೂ ಸ್ಮರಿಸೋಣ ಮತ್ತು ಅವುಗಳನ್ನು ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣ ಮಾಡಲು ಮುಂದಾಗೋಣ ಎಂದಿದ್ದಾರೆ.
4
+ ಶಂಕರ್ ನಾಗ್ ನಂತರ ಸಿಲ್ವರ್ ಪೀಕಾಕ್ ಪ್ರಶಸ್ತಿ ಪಡೆದ ರಿಷಭ್ ಶೆಟ್ಟಿ
5
+ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಕುಲ ಕುಲ ಕುಲವೆಂದು ಒಡೆದಾಡದಿರಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಎಂದು ಹೇಳಿರುವ ದಾಸಶ್ರೇಷ್ಠರಾದ ಕನಕದಾಸರ ಜಯಂತಿಯಂದು ನಾಡಿನ ಸಮಸ್ತ ಜನತೆಗೆ ಶುಭಾಷಯಗಳನ್ನು ಕೋರಿದ್ದಾರೆ.
6
+ ಇಂತಹ ಅನೇಕ ಪದಗಳ ಮೂಲಕ ಮನುಕುಲವನ್ನು ತಿದ್ದಿ ತೀಡಿದ ದಾಸೋತ್ತಮರಿಗೆ ನಮನಗಳನ್ನು ಸಲ್ಲಿಸುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ತಿಳಿಸಿದ್ದಾರೆ.
eesanje/url_46_301_5.txt ADDED
@@ -0,0 +1,23 @@
 
 
 
 
 
 
 
 
 
 
 
 
 
 
 
 
 
 
 
 
 
 
 
 
1
+ 26ನೇ ಬೆಂಗಳೂರು ಟೆಕ್ ಸಮ್ಮಿಟ್ ಉಧ್ಘಾಟನೆ, ಇಲ್ಲಿದೆ ಹೈಲೈಟ್ಸ್
2
+ ಬೆಂಗಳೂರು,ನ.29- ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಸೇರಿದಂತೆ ತಾಂತ್ರಿಕ ವಲಯದಲ್ಲಿ ಜಾಗತಿಕ ಆಶೋತ್ತರಗಳನ್ನು ತಲುಪಲು ಪೂರಕ ವಾತಾವರಣ ನಿರ್ಮಾಣ, ವೇಗ ವರ್ಧಕ ಸಂಶೋಧನೆಗಳು, ನವೋದ್ಯಮಗಳಿಗೆ ಬೆಂಬಲ, ಪ್ರತಿಭೆಗಳಿಗೆ ಪ್ರೋತ್ಸಾಹ ಸೇರಿದಂತೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
3
+ ನಗರದಲ್ಲಿಂದು ನಡೆದು 26ನೇ ಬೆಂಗಳೂರು ತಾಂತ್ರಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 5500ಕ್ಕೂ ಹೆಚ್ಚು ಐಟಿ ಕಂಪನಿಗಳು ಬಂದಿವೆ. 750ಕ್ಕೂ ಹೆಚ್ಚು ಬಹುರಾಷ್ಟ್ರೀಯ ಕಂಪನಿಗಳಿವೆ. ದೇಶದ ರಫ್ತು ವಹಿವಾಟಿನಲ್ಲಿ 85 ಬಿಲಿಯನ್ ಡಾಲರ್ ಕೊಡುಗೆಯನ್ನು ರಾಜ್ಯ ನೀಡುತ್ತಿದೆ ಎಂದು ಹೇಳಿದರು.
4
+ ಮಾಹಿತಿ ತಂತ್ರಜ್ಞಾನ ಕ್ಷೇತ್ರದಿಂದ 12 ಲಕ್ಷ ವೃತ್ತಿಪರ ಉದ್ಯೋಗ ಅವಕಾಶಗಳು ದೊರೆತಿವೆ. ಪರೋಕ್ಷವಾಗಿ 31 ಲಕ್ಷ ಉದ್ಯೋಗಗಳು ಸೃಷ್ಟಿಯಾಗಿವೆ. ದೇಶದ ಸಾಫ್ಟ್ವೇರ್ ರಫ್ತಿನಲ್ಲಿ ಶೇ.40ರಷ್ಟು ಪಾಲು ಹೊಂದಿವೆ. ಜಾಗತಿಕ ಮಾಹಿತಿ ತಂತ್ರಜ್ಞಾನ ಕೇಂದ್ರ ಸ್ಥಾನದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಬೆಂಗಳೂರು ದೇಶದ ಸಿಲಿಕಾನ್ ವ್ಯಾಲಿ ಎನಿಸಿಕೊಂಡಿದೆ. ಜಾಗತಿಕವಾಗಿ ತಂತ್ರಜ್ಞಾನ ಮತ್ತು ಸಂಶೋಧನೆಗಳಲ್ಲಿ ಆದ್ಯ ಸ್ಥಾನ ಪಡೆದಿದೆ ಎಂದು ವಿವರಿಸಿದರು.
5
+ ವಿಶ್ವದ ಗಂಭೀರ ಸಮಸ್ಯೆಗಳಿಗೆ ಪರಿಹಾರ ದೊರಕಿಸುವಂತಹ ಅನ್ವೇಷಣೆಗಳಿಗೆ, ಹೊಸ ಆಲೋಚನೆಗಳು ಮತ್ತು ಆಶೋತ್ತರಗಳಿಗೆ ಬೆಂಗಳೂರು ಮುಂದಾಳಾಗಿರುತ್ತದೆ. ಜಾಗತಿಕ ನವೋದ್ಯಮ ಪೂರಕ ಪರಿಸರದ ಸೂಚ್ಯಂಕದಲ್ಲಿ 8ನೇ ಸ್ಥಾನದಲ್ಲಿದೆ ಎಂದರು. ಮಾಹಿತಿ ತಂತ್ರಜ್ಞಾನದಲ್ಲಷ್ಟೇ ಅಲ್ಲದೆ ಬಂಡವಾಳ ಹೂಡಿಕೆಯಲ್ಲೂ ಕರ್ನಾಟಕ ಮುಂಚೂಣಿಯಲ್ಲಿದೆ. ಕಳೆದ ಮೂರು ವರ್ಷಗಳಿಂದ ನೀತಿ ಆಯೋಗ ಸಿದ್ದಪಡಿಸುತ್ತಿರುವ ಸೂಚ್ಯಂಕದಲ್ಲಿ ನಿರಂತರವಾಗಿ ಮೇಲ್ಪಂಕ್ತಿಯನ್ನು ಕಾಯ್ದುಕೊಂಡು ಬಂಡವಾಳ ಹೂಡಿಕೆ, ಪ್ರತಿಭೆ ಮತ್ತು ಅವಕಾಶಗಳು ಕೊನೆಯ ಭಾಗದವರೆಗೂ ಉತ್ತಮ ಸೌಲಭ್ಯಗಳನ್ನು ತಲುಪಿಸುವುದು ಹಾಗೂ ಸಂಶೋಧನಾ ಆಧರಿತ ವ್ಯಾಪಾರೋದ್ಯಮಗಳಿಗೆ ಅನಿಯಮಿತವಾದಂತಹ ಬೆಂಬಲವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
6
+ ಶಿಶು ಮಾರಾಟ ಪ್ರಕರಣದಲ್ಲಿ ನಕಲಿ ವೈದ್ಯನ ಸೆರೆ
7
+ ಏಕಗವಾಕ್ಷಿ ಅನುಮೋದನೆ, ಕೇಂದ್ರಿತ ತಪಾಸಣಾ ವ್ಯವಸ್ಥೆ, ಭೂ ಮಂಜೂರಾತಿ ವ್ಯವಸ್ಥೆ ಸೇರಿದಂತೆ ಹಲವು ಕೈಗಾರಿಕಾಸ್ನೇಹಿ ಕ್ರಮಗಳು ಚಾಲ್ತಿಯಲ್ಲಿವೆ ಎಂದರು. 1997ರಲ್ಲೇ ಮೊದಲ ಬಾರಿಗೆ ಮಾಹಿತಿ ತಂತ್ರಜ್ಞಾನ ನೀತಿಯನ್ನು ರೂಪಿಸಲಾಗಿತ್ತು. ಮಾಹಿತಿ ತಂತ್ರಜ್ಞಾನ ಕ್ಷೇತ್ರ ಇಂದು ಜಿಡಿಪಿಯಲ್ಲಿ ಶೇ.25ರಷ್ಟು ಪಾಲು ಹೊಂದಿದೆ. ಜೈವಿಕ ತಂತ್ರಜ್ಞಾನಕ್ಕೂ 2001ರಲ್ಲೇ ನೀತಿ ರೂಪಿಸಲಾಗಿತ್ತು.
8
+ 2015ರಲ್ಲಿ ನವೋದ್ಯಮ ನೀತಿಯನ್ನು ರಚಿಸುವ ಮೂಲಕ ದೇಶದ ಎಲ್ಲಾ ರಾಜ್ಯಗಳಿಗೂ ಮ��ದರಿಯಾಗಿದೆ ಎಂದು ವಿವರಿಸಿದ್ದಾರೆ. ಅನಿಮೇಷನ್, ವಿಷ್ಯುಲ್ ಎಫೆಕ್ಟ್, ಗೇಮಿಂಗ್, ಕಾಮಿಕ್ಸ್ಗಳಿಗೆ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ನೀತಿಯೊಂದನ್ನು ಕೂಡ ರೂಪಿಸಲಾಗಿದೆ. ಉದ್ಯಮ, ಕೈಗಾರಿಕೆ ಹಾಗೂ ಶಿಕ್ಷಣ ಸಂಸ್ಥೆಗಳ ನಡುವೆ ಪರಸ್ಪರ ಸಹಯೋಗದ ಮೂಲಕ ಮಾನವ ಸಂಪನ್ಮೂಲ ಅಭಿವೃದ್ಧಿ, ಸಂಶೋಧನೆಗಳಿಗೆ ನೆರವು ನೀಡಲಾಗುತ್ತಿದೆ ಎಂದರು.
9
+ ಹಲವಾರು ಸವಾಲುಗಳಿಗೆ ಡಿಜಿಟಿಲ್ ಅಭಿಯಾನ ಪರಿಹಾರ ಒದಗಿಸಲಿದೆ. ಪ್ರತಿಯೊಬ್ಬರಿಗೂ ತಂತ್ರಜ್ಞಾನದ ಸೌಲಭ್ಯ ಕಲ್ಪಿಸುವುದು ನಮ್ಮ ಗುರಿ. ದತ್ತಾಂಶ ಮತ್ತು ವಿಶ್ಲೇಷಣೆಯ ಪ್ರಯೋಜನಗಳನ್ನು ಆಡಳಿತಾತ್ಮವಾಗಿ ಬಳಸಿಕೊಳ್ಳುವುದು, ಬೆಂಗಳೂರು ಹೊರತಾಗಿ ಅಭಿವೃದ್ಧಿಗಳಿಗೆ ಆದ್ಯತೆ ನೀಡುವುದು ನಮ್ಮಗ ಗುರಿಯಾಗಿದೆ ಎಂದು ಹೇಳಿದರು. 26ನೇ ಬೆಂಗಳೂರು ಟೆಕ್ ಸಮ್ಮೇಳನ ಹಲವು ಮಿತಿಗಳನ್ನು ದಾಟುವ ಗುರಿಯನ್ನು ಹೊಂದಿದೆ. ಪ್ರಾದೇಶಿಕ ಮತ್ತು ಕ್ಷೇತ್ರವಾರು ಮಿತಿಗಳನ್ನು ದಾಟುವುದು ನಮ್ಮ ಗುರಿಯಾಗಿದೆ ಎಂದು ಅವರು ತಿಳಿಸಿದರು.
10
+ ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಬಿ.ಪಾಟೀಲ್, ಪ್ರಿಯಾಂಕ ಖರ್ಗೆ, ಮಧುಬಂಗಾರಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಉದ್ಯಮಿಗಳಾದ ಮಾರ್ಕ್ ಪೇಪರ್ ಮಾಸ್ಟರ್, ಕ್ರಿಷ್ ಗೋಪಾಲಕೃಷ್ಣ, ಕಿರಣ್ ಮುಜುಂದಾರ್ ಷಾ, ನಿವೃತ್ತಿ ರೈ, ಅರವಿಂದ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
11
+ ಬೆಂಗಳೂರು ಟೆಕ್ ಸಮ್ಮೇಳನದಲ್ಲಿ ಜೈವಿಕ ತಂತ್ರ ನೀತಿ ಅನಾವರಣನಗರದಲ್ಲಿ ನಡೆಯುತ್ತಿರುವ ಬೆಂಗಳೂರು ಟೆಕ್ ಸಂದರ್ಭದಲ್ಲಿ ಜೈವಿಕ ತಂತ್ರಜ್ಞಾನ ನೀತಿ ಹಾಗೂ ಎವಿಜಿಸಿ-ಎಕ್ಸ್ಆರ್ ಕರುಡನ್ನ ಅನಾವರಣಗೊಳಿಸಲಾಯಿತು. 2023ರಿಂದ 28ರ ನಡುವಿನ ಐದು ವರ್ಷಗಳ ಅವಯಲ್ಲಿ 30 ಸಾವಿರ ಹೊಸ ಗುಣಮಟ್ಟದ ಉದ್ಯೋಗಗಳನ್ನು ಸೃಷ್ಟಿಸುವ ಅನಿಮೇಷನ್, ವಿಷ್ಯುಲ್ ಎಫೆಕ್ಟ್ಸ್, ಗೇಮಿಂಗ್, ಕಾಮಿಕ್ಸ್, ಎಕ್ಸ್ಟೆಂಡೆಡ್ ರಿಯಾಲಿಟಿ(ಎವಿಜಿಸಿ-ಎಕ್ಸ್ಆರ್) ನೀತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು.
12
+ ರಾಜ್ಯದ ಮಾಹಿತಿ ತಂತ್ರಜ್ಞಾನ ವಲಯವನ್ನು ಮತ್ತಷ್ಟು ಸದೃಢಗೊಳಿಸುವ ಗುರಿ ಹೊಂದಿರುವ ಈ ನೀತಿ ಎವಿಜಿಸಿ-ಎಕ್ಸ್ಆರ್ ವಲಯದಲ್ಲಿ ಜಾಗತಿಕವಾಗಿ ಕರ್ನಾಟಕವನ್ನು ಮುಂಚೂಣಿಗೆ ತರುವ ವಿಶ್ವಾಸ ವ್ಯಕ್ತಪಡಿಸಿದೆ. ಕೌಶಲ್ಯಾಭಿವೃದ್ಧಿಗೆ ಆದ್ಯತೆ, ರಾಜ್ಯದ ವಹಿವಾಟು ವಲಯದ ರಫ್ತಿನಲ್ಲಿ ಶೇ.80ರಷ್ಟು ಪಾಲು ಹೊಂದುವ ನಿರೀಕ್ಷೆಗಳನ್ನು ಸ್ಪಷ್ಟಪಡಿಸಿದೆ.
13
+ ಕೌಶಲ್ಯಾಭಿವೃದ್ಧಿ ಸಲಹಾ ಸಮಿತಿ, ಕೈಗಾರಿಕಾ ಆಧರಿತ ಪಠ್ಯಕ್ರಮ, ಶಿಕ್ಷಣ ಸಂಸ್ಥೆಗಳು-ಕೈಗಾರಿಕೆಗಳ ಸಹಭಾಗಿತ್ವದಲ್ಲಿ ವೃತ್ತಿಪರ ತರಬೇತಿ, ನವೋದ್ಯಮ ಮತ್ತು ಉದ್ಯೋಗ ಸೃಷ್ಟಿಯ ಹೆಸರಿನಲ್ಲಿ ಪ್ರತಿಭೆಗಳ ಅನ್ವೇಷಣೆ, ಜೇಷ್ಠತಾ ಕೇಂದ್ರ ಸ್ಥಾಪನೆ ಸೇರಿದಂತೆ ಆರು ಉದ್ದೇಶಗಳನ್ನು ನೀತಿ ಹೊಂದಿದೆ. ವಿಶೇಷ ಆರ್ಥಿಕ ವಲಯ, ಗೇಮಿಂಗ್ ಕ್ಷೇತ್ರಕ್ಕೆ ಜೇಷ್ಠತಾ ಕೇಂದ್ರ, ಡಿಜಿಟಲ್ ಕೇಂದ್ರಗಳ ಉನ್ನತೀಕರಣ, ಎವಿಜಿಸಿ-ಎಕ್ಸ್ಆರ್ ವಲಯದಲ್ಲಿ ಸಂಶೋಧನಾ ಸಂಸ್ಥೆ ಸ್ಥಾಪನೆ ಸೇರಿದಂತೆ ಹಲವಾರು ಮೂಲ ಸೌಕರ್ಯಾಭಿವೃದ್ಧಿಗೆ ಒತ್ತು ನೀಡಲಾಗಿದೆ.
14
+ ಮಾರುಕಟ್ಟೆ ಮತ್ತು ವಹಿವಾಟು ವಲಯದ ನಡುವೆ ಸಂಪರ್ಕಕೊಂಡಿಯಾಗುವುದಾಗಿ ಸರ್ಕಾರ ಭರವಸೆ ನೀಡಿದೆ. ಜೈವಿಕ ತಂತ್ರಜ್ಞಾನ ನೀತಿಯಲ್ಲಿ ಕರ್ನಾಟಕ ಮಹತ್ವದ ಗುರಿಗಳೊಂದಿಗೆ ಮುಂದಡಿ ಇಡುವ ಸಂಕಲ್ಪ ಮಾಡಿದೆ.
15
+ 2025ರ ವೇಳೆಗೆ ಭಾರತ ಜೈವಿಕ ಆರ್ಥಿಕತೆಯಲ್ಲಿ 150 ಬಿಲಿಯನ್ ಡಾಲರ್, 2030ರ ವೇಳೆಗೆ 300 ಬಿಲಿಯನ್ ಡಾಲರ್ ಆಶೋತ್ತರವನ್ನು ಹೊಂದಿದೆ. ಇದಕ್ಕೆ ಬೆಂಬಲವಾಗಿ ಕರ್ನಾಟಕ ಜೈವಿಕ ವಲಯದ ಸಂಶೋಧನೆ ಮತ್ತು ಅಭಿವೃದ್ಧಿಗೆ 200 ಕೋಟಿ ರೂ. ಹೂಡಿಕೆ ಮಾಡುವ ಗುರಿಯನ್ನು ಹೊಂದಿದೆ. ಸುಮಾರು 60ಕ್ಕೂ ಹೆಚ್ಚಿನ ಗೃಹ ಉತ್ಪನ್ನಗಳತ್ತ ಗಮನಹರಿಸಿದೆ.ಕನಿಷ್ಟ 27.1 ಬಿಲಿಯನ್ ಡಾಲರ ಜೈವಿಕ ಆರ್ಥಿಕತೆಯನ್ನು ರಾಜ್ಯ ಹೊಂದಿದೆ. 5ರಿಂದ ಎಕರೆ ಪ್ರದೇಶದಲ್ಲಿ ಹೈಟೆಕ್ ಬಯೋ ಕ್ಲಸ್ಟರ್ ಸೇರಿದಂತೆ ಹಲವು ಕ್ರಮಗಳ ಬಗ್ಗೆಯೂ ಪ್ರಸ್ತಾಪಿಸಲಾಗಿದೆ.
16
+ ಗಮನ ಸೆಳೆದ ಐಟಿ ಸಮ್ಮಿಟ್ಐಟಿ-ಬಿಟಿ, ಎಐ ಸೇರಿದಂತೆ ಭವಿಷ್ಯದ ಪ್ರವರ್ಧಮಾನ ತಂತ್ರಜ್ಞಾನಗಳ ಬಗ್ಗೆ ಇಂದಿನಿಂದ ಆರಂಭಗೊಂಡಿ ರುವ 26ನೇ ಬೆಂಗಳೂರು ಟೆಕ್ ಸಮ್ಮೇಳನದಲ್ಲಿ ಮಹತ್ವದ ವಿಚಾರಗಳ ವಿನಿಮಯಗಳಾಗಿವೆ.ಸಮ್ಮೇಳನದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೆಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ಬೆಳೆದು ಬಂದ ಹಾದಿಯನ್ನು ಸ್ಮರಿಸಿಕೊಂಡರು.
17
+ 1999ರಲ್ಲಿ ಎಸ್.ಎಂ.ಕೃಷ್ಣ ಅವರ ಸರ್ಕಾರ ಬೆಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ಅಭಿವೃದ್ಧಿಗೆ ಅಡಿಗಲ್ಲು ಹಾಕಿತು. ಬೆಂಗಳೂರು ಟೆಕ್ ಸಮ್ಮೇಳನ ದೇಶದಲ್ಲೇ ಅಷ್ಟೇ ಅಲ್ಲ, ಏಷ್ಯಾಖಂಡದ ಅತಿದೊಡ್ಡದಾದ ಸಮಾವೇಶವಾಗಿದೆ. ಈ ಬಾರಿಯ ಸಮಾವೇಶದಲ್ಲಿ ಗಡಿಗಳನ್ನು ದಾಟುವ ಧ್ಯೇಯ ಹೊಂದಿರುವುದು ಸೂಕ್ತವಾಗಿದೆ. ಮೊಟ್ಟೆಯ ಗೋಡೆಯನ್ನು ದಾಟದೇ ಇದ್ದರೆ ಮರಿಗಳು ಹೊರ ಬರುವುದಿಲ್ಲ. ಗಡಿಗಳನ್ನು ದಾಟದೇ ಇದ್ದರೆ ಯಾವುದೇ ಸಾಮ್ರಾಜ್ಯವೂ ನಿರ್ಮಾಣವಾಗುವುದಿಲ್ಲ. ಹೀಗಾಗಿ ಪ್ರತಿಯೊಬ್ಬರಿಗೂ ಅಂತಹ ಧ್ಯೇಯೋದ್ದೇಶಗಳು ಅಗತ್ಯ ಎಂದರು.
18
+ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಅಮೆರಿಕ, ಜರ್ಮನಿಯ ನಂತರ ಕೃತಕ ಬುದ್ದಿಮತೆಯಲ್ಲಿ ಭಾರತ ಮುಂಚೂಣಿಯಲ್ಲಿದೆ. ಅದರಲ್ಲೂ ಬೆಂಗಳೂರು ಐಟಿ-ಬಿಟಿ, ರಕ್ಷಣೆ, ಬಾಹ್ಯಾಕಾಶ ಸೇರಿದಂತೆ ವಿವಿಧ ವಲಯಗಳಲ್ಲಿನ ಉತ್ಪಾದನೆ ಮತ್ತು ರಫ್ತಿನಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಅಂಕಿ-ಅಂಶಗಳ ಸಹಿತ ವಿವರಿಸಿದರು. ವಿದೇಶಿ ಬಂಡವಾಳ ಹೂಡಿಕೆ ಭವಿಷ್ಯದ ನೀಲನಕ್ಷೆ ಸೇರಿದಂತೆ ಹಲವಾರು ವಲಯಗಳಲ್ಲಿ ಕರ್ನಾಟಕ ಮುಂದಿದೆ ಎಂದರು.
19
+ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ , ಕರ್ನಾಟಕ ಸಂಶೋಧನೆ ಮತ್ತು ಆರ್ಥಿಕ ಅಭಿವೃದ್ಧಿ ಹಾದಿಯಲ್ಲಿ ಸುದೀರ್ಘ ಪ್ರಯಾಣ ಮಾಡಿದೆ. ಅನಿರೀಕ್ಷಿತವಾದ ಸಾಧ್ಯತೆಗಳನ್ನ��� ನಿಭಾಯಿಸುವಲ್ಲೂ ಮುಂಚೂಣಿಯಲ್ಲಿದ್ದೇವೆ. ಕ್ರಿಯಾತ್ಮಕ ಮತ್ತು ಸ್ವಾವಲಂಬಿತ ಪರಿಸರ ಸೃಷ್ಟಿಸುವಲ್ಲಿ ಮಹತ್ವದ ಎತ್ತರದಲ್ಲಿದ್ದೇವೆ. ಬಂಡವಾಳ ಆಕರ್ಷಣೆ, ಉದ್ಯಮ ಶೀಲತೆ, ನೀತಿ ನಿರೂಪಣೆಗಳ ಮೂಲಕ ಪ್ರಗತಿಯ ಹಾದಿಯಲ್ಲಿ ಅಪತ್ಯ ಸೃಷ್ಟಿಸುತ್ತಿದ್ದೇವೆ. ಸುಸ್ಥಿರತೆ ಮತ್ತು ಒಳಗೊಳ್ಳುವಿಕೆಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
20
+ ಕರ್ನಾಟಕ ಮಾಹಿತಿ ತಂತ್ರಜ್ಞಾನ ರಫ್ತಿನಲ್ಲಿ ಶೇ.40ರಷ್ಟು, ಬಯೋತಂತ್ರಜ್ಞಾನ ವಲಯದಲ್ಲಿ ಶೇ.30ರಷ್ಟು, ಇಎಸ್ಡಿಎಂ ವಲಯದಲ್ಲಿ ಶೇ.64ರಷ್ಟು ಪಾಲು ಹೊಂದಿದೆ. ರಾಜ್ಯದಲ್ಲಿ 52 ವಿಶ್ವವಿದ್ಯಾಲಯಗಳು, 234 ಇಂಜಿನಿಯರಿಂಗ್ ಕಾಲೇಜುಗಳು, 1777 ಮಾಹಿತಿ ತಂತ್ರಜ್ಞಾನ ಕಂಪೆನಿಗಳು ಇವೆ. 10 ಕೈಗಾರಿಕಾ ವಲಯಗಳಿವೆ. ಡಿಫೆನ್ಸ್ಪಾರ್ಕ್, ಇವಿ ಪಾರ್ಕ್ ಸೇರಿದಂತೆ ಹಲವಾರು ಕ್ಷೇತ್ರಗಳ ಮೂಲಕ ಹೂಡಿಕೆಗೆ ವ್ಯಾಪಕ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
21
+ ಮಾಹಿತಿ ತಂತ್ರಜ್ಞಾನ ವಿಷನ್ ಗ್ರೂಪ್ನ ಅಧ್ಯಕ್ಷ ಕ್ರಿಷ್ ಗೋಪಾಲಕೃಷ್ಣ ಮಾತನಾಡಿ, ಜಾಗತಿಕವಾದ ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಕರ್ನಾಟಕ ಶೇ.9ರಷ್ಟು ಪಾಲು ಪಡೆದಿದ್ದು, 200 ಬಿಲಿಯನ್ ಡಾಲರ್ ವಹಿವಾಟು ನಡೆಸಿದೆ. 2030ರ ವೇಳೆಗೆ 350 ಬಿಲಿಯನ್ ಡಾಲರ್ ಗುರಿಯನ್ನು ಹೊಂದಿದೆ. ವೇಗ ವರ್ಧಕ ಹಾಗೂ ನಿರಂತರ ಬೆಳವಣಿಗೆಗಳನ್ನು ಕಾಯ್ದುಕೊಂಡಿದೆ. ತಂತ್ರಜ್ಞಾನದ ಪರಿವರ್ತನೆಗೆ ಸ್ಪಂದಿಸುತ್ತಿದೆ. 2022ರ ನವೆಂಬರ್ನಲ್ಲಿ ಆರಂಭಗೊಂಡ ಚಾಟ್ ಜಿಪಿಟಿ ಅಪ್ಲಿಕೇಶನ್ ಆಧಾರಿದ ತಂತ್ರಜ್ಞಾನ ಹೆಚ್ಚು ಜನಪ್ರಿಯಗೊಂಡಿದೆ ಎಂದರು.
22
+ ಜೈವಿಕ ತಂತ್ರಜ್ಞಾನ ವಲಯದ ವಿಷನ್ ಗ್ರೂಪ್ನ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಮಾತನಾಡಿ, ಜೈವಿಕ ತಂತ್ರಜ್ಞಾನ 2030ರ ವೇಳೆಗೆ 150 ಬಿಲಿಯನ್ ಡಾಲರ್ ವಹಿವಾಟು ದಾಖಲಿಸಲಿದೆ. ಪ್ರಸ್ತುತ 80 ಬಿಲಿಯನ್ ಡಾಲರ್ ವಹಿವಾಟು ನಡೆಸುತ್ತಿದೆ ಎಂದು ತಿಳಿಸಿದರು.ಬೆಂಗಳೂರು ಐಟಿ-ಬಿಟಿಗಳಿಗೆ ಅಪೇಕ್ಷಣೀಯ ಸ್ಥಳವಾಗಿದೆ. ಜೈವಿಕ ತಂತ್ರಜ್ಞಾನದ ಅಭಿವೃದ್ಧಿಯಲ್ಲಿ ಕೃಷಿ ವಿಶ್ವವಿದ್ಯಾಲಯಗಳ ಕೊಡುಗೆ ಅಪಾರವಾದದ್ದು, ದತ್ತಾಂಶ ವಿಶ್ಲೇಷಣೆ, ದತ್ತಾಂಶ ಆಧರಿಸಿದ ತಂತ್ರಜ್ಞಾನ, ಕೃತಕ ಬುದ್ದಿಮತ್ತೆಗಳ ವಲಯದಲ್ಲಿ ವಿಫಲ ಹೂಡಿಕೆಗಳಾಗುತ್ತಿವೆ. ಜೈವಿಕ ತಂತ್ರಜ್ಞಾನ ಜೀವನ ಶೈಲಿ, ಔಷ, ಪೌಷ್ಠಿಕತೆ ಸೇರಿದಂತೆ ಹಲವು ವಲಯಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಹೇಳಿದರು.
23
+ ಶಿವಪ್ರಸಾದ್ ಪ್ರಕಾಶ್ ಮಾತನಾಡಿ, ಭವಿಷ್ಯದಲ್ಲಿ ಜೆನ್ಎಐ, ಕ್ಲೈಮೆಟ್ಕೆ, ಫಿನ್ಟೆಕ್ ತಂತ್ರಜ್ಞಾನಗಳು ಜನ ಜೀವನದ ಹಾಸುಹೊಕ್ಕುಗಳಾಗಲಿದೆ. ಜೆನ್ಎಐನಲ್ಲಿ ಜಾಗತಿಕವಾಗಿ ಈಗಾಗಲೇ 25 ಸಾವಿರ ಬಿಲಿಯನ್ ಡಾಲರ್ ಹೂಡಿಕೆಯಾಗಿದೆ. ನಮ್ಮ ದೇಶದಲ್ಲಿ ಈವರೆಗೂ ಆ ಬಗ್ಗೆ ಹೆಚ್ಚು ಆಸಕ್ತಿ ತೋರಿದ್ದಿಲ್ಲ. ಆದರೆ, ಈ ಬಗ್ಗೆ ಗಮನ ಹರಿಸುವುದು ಅನಿವಾರ್ಯವಾಗಿದೆ ಎಂದರು.ಸಮ್ಮೇಳನದಲ್ಲಿ ಜೈವಿಕ ತಂತ್ರಜ್ಞಾನ ಹಾಗೂ ಎವಿಜಿಸಿ-ಎಕ್ಸ್ಆರ್ ಕರಡು ನೀತಿಗಳನ್ನು ಪ್ರಕಟಿಸಲಾಯಿತು.
eesanje/url_46_301_6.txt ADDED
@@ -0,0 +1,8 @@
 
 
 
 
 
 
 
 
 
1
+ ಶಿಶು ಮಾರಾಟ ಪ್ರಕರಣದಲ್ಲಿ ನಕಲಿ ವೈದ್ಯನ ಸೆರೆ
2
+ ಬೆಂಗಳೂರು, ನ.29- ಹಸುಗೂಸು ಮಾರಾಟ ದಂಧೆ ಬಗ್ಗೆ ತನಿಖೆ ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ಮಹಿಳಾ ಏಜೆಂಟ್ ಹಾಗೂ ನಕಲಿ ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಈ ಪ್ರಕರಣದ ಏಜೆಂಟ್ ಆಗಿದ್ದ ರಮ್ಯಾಳನ್ನು ಹೆಬ್ಬಾಳದಲ್ಲಿ ಹಾಗೂ ನಕಲಿ ವೈದ್ಯನೊಬ್ಬನನ್ನು ರಾಜಾಜಿನಗರದಲ್ಲಿ ಬಂಸಲಾಗಿದೆ. ಈಗ ಈ ಪ್ರಕರಣದಲ್ಲಿ ಬಂತರ ಸಂಖ್ಯೆ 10ಕ್ಕೇರಿದೆ.
3
+ ಶಿಶು ಮಾರಾಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದು, ಬಂತರಾಗಿರುವ ಒಬ್ಬೊಬ್ಬರನ್ನು ಪ್ರತ್ಯೇಕವಾಗಿ ವಿಚಾರಣೆಗೊಳಪಡಿಸಿದಾಗ ಅನೇಕ ವಿಚಾರಗಳು ಬಯಲಾಗುತ್ತಿವೆ. ರಮ್ಯಾ ಸಂಬಂ ಯುವತಿಯೊಬ್ಬರು ಮದುವೆಗೂ ಮೊದಲೇ ಗರ್ಭಿಣಿಯಾಗಿದ್ದರಿಂದ ಆಕೆ ಅಬಾಷನ್ಗೆ ಓಡಾಡುತ್ತಿದ್ದಾಗ ಆಕೆಯನ್ನು ಒಂಭತ್ತು ತಿಂಗಳು ರಮ್ಯಾ ಆರೈಕೆ ಮಾಡಿ ಮಗುವನ್ನು ಪಡೆದುಕೊಂಡಿದ್ದಳು. ಬಳಿಕ ಇದೇ ಗ್ಯಾಂಗ್ ಜೊತೆ ಸೇರಿ ಆ ಶಿಶುವನ್ನು ಮಾರಾಟ ಮಾಡಿದ್ದಳು.
4
+ ಮೇಲ್ಮನವಿ ಹಿಂಪಡೆಯಲು ಹೈಕೋರ್ಟ್ ಸಮ್ಮತಿ : ಡಿಕೆಶಿ ಸದ್ಯನಿರಾಳ
5
+ ಮಗು ಹೆತ್ತುಕೊಟ್ಟಿದ್ದ ಸಂಬಂ ಯುವತಿಗೆ ರಮ್ಯಾ ಹಣ ನೀಡಿ ನಂತರ ಹೊಸ ವರನನ್ನು ನೋಡಿ ಆ ಯುವತಿಗೆ ಮದುವೆ ಕೂಡ ಮಾಡಿಸಿದ್ದಾಳೆ.ಈಗಾಗಲೇ ಹಸುಗೂಸು ಮಾರಾಟ ಪ್ರಕರಣದಲ್ಲಿ ಬಂತರಾಗಿರುವ ಆರೋಪಿಗಳು ರಮ್ಯಾ ಹೆಸರು ಬಾಯ್ಬಿಟ್ಟಿದ್ದರು. ಆ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಹೆಬ್ಬಾಳದಲ್ಲಿ ರಮ್ಯಾಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
6
+ ಈ ಪ್ರಕರಣದಲ್ಲಿ ಮೊದಲು ಬಂತರಾದ ನಾಲ್ವರು ಆರೋಪಿಗಳು ವಿಚಾರಣೆ ವೇಳೆ ಹಲವು ಮಾಹಿತಿಗಳು ಹಾಗೂ ಹೆಸರನ್ನು ಬಾಯ್ಬಿಟ್ಟಿದ್ದರು. ಇವರ ಮಾಹಿತಿ ಮೇರೆಗೆ ಉಳಿದ ಆರೋಪಿಗಳನ್ನು ಬಂಸಲಾಗಿದ್ದು, ಒಟ್ಟಾರೆ ಈ ಪ್ರಕರಣದಲ್ಲಿ ಈಗ ಹತ್ತು ಮಂದಿ ಖಾಕಿ ಬಲೆಗೆ ಬಿದ್ದಿದ್ದಾರೆ.
7
+ ನಕಲಿ ವೈದ್ಯ ಆರೆಸ್ಟ್:ಎಂಬಿಬಿಎಸ್ ಉತ್ತೀರ್ಣ ಆಗದಿದ್ದರೂ ರಾಜಾಜಿನಗರದಲ್ಲಿ ಕ್ಲೀನಿಕ್ ನಡೆಸುತ್ತಿದ್ದ ನಕಲಿ ವೈದ್ಯನೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಈ ನಕಲಿ ವೈದ್ಯ ಕ್ಲೀನಿಕ್ನಲ್ಲಿ ತನ್ನ ಹೆಸರು ಹಾಕಿಕೊಂಡಿದ್ದಲ್ಲದೆ, ರೋಗಿಗಳಿಗೆ ಟ್ರೀಟ್ಮೆಂಟ್ ಕೊಡುತ್ತಿದ್ದನು.ಹಸುಗೂಸು ಮಾರಾಟಕ್ಕೆ ದಾಖಲೆಗಳನ್ನು ಮಾಡಿಕೊಡುತ್ತಿದ್ದ ಹಾಗೂ ಜನ್ಮದಾಖಲೆ ಸೇರಿ ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಡುತ್ತಿದ್ದ ಎಂಬ ಬಗ್ಗೆ ಸಿಸಿಬಿ ಪೊಲೀಸರಿಗೆ ಲಭ್ಯವಾದ ಮಾಹಿತಿ ಮೇರೆ ಇದೀಗ ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
8
+ ರಾಜರಾಜೇಶ್ವರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಜರಾಜೇಶ್ವರಿ ದೇವಸ್ಥಾನದ ಬಳಿ ತಮಿಳುನಾಡು ಮೂಲದವರು ಒಂದು ಗಂಡು ಮಗುವನ್ನು ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ದೇವಸ್ಥಾನದ ಬಳಿ ನಿಂತಿದ್ದ ಕೆಂಪು ಬಣ್ಣದ ಸ್ವಿಫ್ಟ್ ಕಾರನ್ನು ಪರಿಶೀಲಿಸಿ ಕಾರಿನಲ್ಲಿದ್ದ ತಮಿಳುನಾಡು ಮೂಲದ ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷನನ್ನು ವಶಕ್ಕೆ ಪಡೆದು ಅವರ ಬಳಿ ಇದ್ದ 20 ದಿನದ ಗಂಡು ಮಗುವನ್ನು ರಕ್ಷಿಸಿದ್ದರು.
eesanje/url_46_301_7.txt ADDED
@@ -0,0 +1,17 @@
 
 
 
 
 
 
 
 
 
 
 
 
 
 
 
 
 
 
1
+ ಮೇಲ್ಮನವಿ ಹಿಂಪಡೆಯಲು ಹೈಕೋರ್ಟ್ ಸಮ್ಮತಿ : ಡಿಕೆಶಿ ಸದ್ಯನಿರಾಳ
2
+ ಬೆಂಗಳೂರು,ನ.29- ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಹಿಂಪಡೆದ ಕಾರಣ, ತಮ್ಮ ವಿರುದ್ಧದ ಅಕ್ರಮ ಆಸ್ತಿ ಪ್ರಕರಣ ಕುರಿತು ಸಿಬಿಐ ತನಿಖೆ ನಡೆಸುವುದನ್ನು ಪ್ರಶ್ನಿಸಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ಮತ್ತು ಮೇಲ್ಮನವಿಯನ್ನು ಹಿಂಪಡೆಯಲು ಹೈಕೋರ್ಟ್ ಅನುಮತಿಸಿದೆ. ನ್ಯಾಯಾಲಯದ ಈ ಆದೇಶದಿಂದಾಗಿ ಕಾನೂನು ಹೋರಾಟದಲ್ಲಿ ಡಿ.ಕೆ.ಶಿವಕುಮಾರ್ಗೆ ತಾತ್ಕಲಿಕ ಜಯ ಸಿಕ್ಕಿದ್ದು, ಸಿಬಿಐನ ಮುಂದಿನ ನಡೆಯ ಮೇಲೆ ಪ್ರಕರಣದ ಭವಿಷ್ಯ ನಿಂತಿದೆ.
3
+ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಅನುಮತಿ ನೀಡಿದ್ದ ಹಿಂದಿನ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ, ಸಲ್ಲಿಸಿದ್ದ ಮೇಲ್ಮನವಿ ಹಾಗೂ ರಿಟ್ ಅನ್ನು ಡಿಕೆಶಿ ವಾಪಸ್ ಪಡೆದಿದ್ದಾರೆ. ಏತನ್ಮಧ್ಯೆ ಸಿಬಿಐ ಅನುಮತಿ ವಾಪಸ್ ಪಡೆದ ಸರ್ಕಾರದ ಕ್ರಮ ಆಕ್ಷೇಪಿಸಿ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪರಿಗಣಿಸಿಲ್ಲ.
4
+ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ದ್ವಿಸದಸ್ಯ ಪೀಠ, ನಾವು ಪ್ರಕರಣದ ಅರ್ಹತೆ ಕುರಿತು ತೀರ್ಮಾನ ನೀಡುತ್ತಿಲ್ಲ. ಸಚಿವ ಸಂಪುಟದ ನಿರ್ಧಾರವನ್ನು ಯಾರು ಬೇಕಾದರೂ ಪ್ರಶ್ನಿಸಬಹುದು. ಅದು ಸಿಬಿಐ ಇರಬಹುದು ಇಲ್ಲವೇ ಸಾರ್ವಜನಿಕರು ಬೇಕಾದರೂ ರಿಟ್ ಅರ್ಜಿ ಸಲ್ಲಿಸಲಿ. ಆಗ ಹೈಕೋರ್ಟ್ ಅರ್ಜಿಯನ್ನು ಪರಿಗಣಿಸಿ ಸಿಬಿಐ ವಿಚಾರಣೆ ಮಾಡಬೇಕೆ ಎಂಬದನ್ನು ತೀರ್ಮಾನ ಮಾಡುತ್ತದೆಂದು ಆದೇಶದಲ್ಲಿ ಉಲೇಖ ಮಾಡಿದೆ.
5
+ ಮಧ್ಯಂತರ ಅರ್ಜಿ ಸಲ್ಲಿಸಿದ್ದ ಅರ್ಜಿದಾರರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಈ ಪ್ರಕರಣದಲ್ಲಿ ಪ್ರತಿ ವಾದಿಯಾಗಲು ಬಯಸಿಲ್ಲ. ಕೇವಲ ಮಾಧ್ಯಮದ ವರದಿ ಆಧರಿಸಿ ಮಧ್ಯಂತರದ ಅರ್ಜಿ ಸಲ್ಲಿಸಿದ್ದಾರೆ. ಇಲ್ಲಿಯವರೆಗೂ ಸರ್ಕಾರದ ತೀರ್ಮಾನವನ್ನು ಯಾರು ಪ್ರಶ್ನಿಸಿಲ್ಲ. ಸಿಬಿಐ ಹಾಗೂ ಯತ್ನಾಳ್ ಅವರ ವಾದವನ್ನು ನಾವು ಒಪ್ಪಲು ಸಾಧ್ಯವಿಲ್ಲ. ಖಾಜಿ ಲೆಂಡಫ್ ದೋರ್ಜಿ ಪ್ರಕರಣದಲ್ಲಿ ಸರ್ಕಾರದ ಕ್ರಮವನ್ನು ಪ್ರಶ್ನಿಸಲಾಗಿತ್ತು. ಈ ಹಿನ್ನಲೆಯಲ್ಲಿ ಅರ್ಜಿ ಹಿಂಪಡೆಯಲು ಅವಕಾಶ ಕಲ್ಪಿಸಿದ್ದೇವೆ ಎಂದು ಆದೇಶದಲ್ಲಿ ಹೇಳಿದರು.
6
+ ಮೇಲ್ಮನವಿ ಹಿಂಪಡೆದುಕೊಳ್ಳಲು ಅರ್ಜಿದಾರರಿಗೆ ಅವಕಾಶವಿದೆ ಎಂದು ಹೇಳಿದ ನ್ಯಾಯಾಲಯ, ಪಂಜಾಬ್ ಸರ್ಕಾರ ವರ್ಸಸ್ ಗುರುದೇವ್ ಪ್ರಕರಣವನ್ನು ಆದೇಶದಲ್ಲಿ ಉಲ್ಲೇಖಿಸಿದೆ. ಅರ್ಜಿ ವಿಚಾರಣೆ ಆರಂಭಕ್ಕೂ ಮುನ್ನ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಸಚಿವ ಸಂಪುಟದಲ್ಲಿ ತೆಗೆದುಕೊಂಡ ಪ್ರಸ್ತಾವನೆಯನ್ನು ನ್ಯಾಯಾಲಯದ ಗಮನಕ್ಕೆ ತಂದರು. ನಂತರ ಡಿ.ಕೆ.ಶಿವಕುಮಾರ್ ಪರವಾಗಿ ಹಿರಿಯ ವಕೀಲರಾದ ಕಪಿಲ್ ಸ���ಬಾಲ್, ಅಭಿಷೇಕ್ ಮನು ಸಿಂಘ್ವಿ, ಉದಯ ಹೊಳ್ಳ ವಾದ ಮಂಡಿಸಿದರು.
7
+ ಹೆಣ್ಣು ಭ್ರೂಣ ಹತ್ಯೆ ಪ್ರಕರಣ, ಪೊಲೀಸರ ವಿರುದ್ಧ ಯತ್ನಾಳ್ ಆಕ್ರೋಶ
8
+ ವಾದ ಪ್ರಾರಂಭಿಸಿದ ಅಭಿಷೇಕ್ ಮನು ಸಿಂಘ್ವಿ ಸಚಿವ ಸಂಪುಟ ಸಭೆಯಲ್ಲಿ ಅರ್ಜಿದಾರರಾದ ಡಿ.ಕೆ.ಶಿವಕುಮಾರ್ ವಿರುದ್ದ ಸಿಬಿಐ ತನಿಖೆಗೆ ನೀಡಿದ್ದ ಪೂರ್ವಾನುಮತಿಯನ್ನು ಹಿಂಪಡೆದ ಸರ್ಕಾರದ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡರು. ಸಿಬಿಐ ತನಿಖೆಗೆ ನೀಡಿದ್ದ ಪೂರ್ವಾನುಮತಿಯನ್ನು ಸರ್ಕಾರ ಹಿಂಪಡೆದಿದೆ. ಇದು ಸರಿಯೋ , ತಪೊ್ಪೀ ಎಂಬುದನ್ನು ನ್ಯಾಯಾಲಯ ತೀರ್ಮಾನಿಸಲಿ. ಹೀಗಾಗಿ ನಾವು ರಿಟ್ ಮತ್ತು ಮೇಲ್ಮನವಿ ಅರ್ಜಿಯನ್ನು ವಾಪಸ್ ಹಿಂಪಡೆಯುತ್ತೇವೆ ಎಂದು ನ್ಯಾಯಾೀಶರ ಗಮನಕ್ಕೆ ತಂದರು.
9
+ ಈ ವೇಳೆ ಡಿಕೆಶಿ ಪರ ವಕೀಲರಾದ ಕಪಿಲ್ ಸಿಬಾಲ್ ಅವರು ದೆಹಲಿ ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಆಕ್ಟ್ ಪ್ರಕಾರ, ಹಿಂದಿನ ಸರ್ಕಾರ ನೀಡಿದ್ದ ಪೂರ್ವಾನುಮತಿಯನ್ನು ಹಿಂಪಡೆಯಲು ಕಾನೂನಿನಲ್ಲಿ ಅವಕಾಶವಿದೆ. ಈ ಕಾಯ್ದೆ ಪ್ರಕಾರ ಸರ್ಕಾರದ ಅನುಮತಿ ಇಲ್ಲದೆ ತನಿಖೆ ಮಾಡುವಂತಿಲ್ಲ. ಶಾಸನಬದ್ದವಾಗಿ ನೀಡಿದ್ದ ಅನುಮತಿಯನ್ನು ಸರ್ಕಾರ ಹಿಂಪಡೆದಿದೆ. ಇದನ್ನು ಸಿಬಿಐ ಪ್ರಶ್ನಿಸಲಿ. ನಮ್ಮ ಅಭ್ಯಂತರವಿಲ್ಲ. ನಾವು ನಮ್ಮ ರಿಟ್ ಅರ್ಜಿಯನ್ನು ಹಿಂಪಡೆಯಲು ಸಿದ್ದರಿದ್ದೇವೆ ಎಂದು ಹೇಳಿದರು.
10
+ ಸರ್ಕಾರ ತೀರ್ಮಾನ ತೆಗೆದುಕೊಂಡ ಮೇಲೆ ನಾವು ವಾದ ಮಾಡುವ ಪ್ರಶ್ನೆಯೇ ಇಲ್ಲ. ಸರ್ಕಾರ ಒಮ್ಮೆ ನಿರ್ಧಾರ ತೆಗೆದುಕೊಂಡ ಮೇಲೆ ತನಿಖೆಯನ್ನು ನಿಲ್ಲಿಸಬೇಕು. ಇದರಂತೆ ಅರ್ಜಿ ಇತ್ಯರ್ಥವಾಗಬೇಕು. ಸರ್ಕಾರದ ಅನುಮತಿ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ಈಗ ಮೇಲ್ಮನವಿ ಅರ್ಜಿ ಅಗತ್ಯವಿಲ್ಲ. ಈಗ ಸಲ್ಲಿಸಲಾಗಿರುವ ಮೇಲ್ಮನವಿ ಅರ್ಜಿಯನ್ನು ಹಿಂಪಡೆಯುತ್ತೇವೆ ಎಂದು ತಿಳಿಸಿದರು.
11
+ ಇತ್ತೀಚೆಗೆ ಸಿಬಿಐ ಪ್ರಕರಣಗಳು ಯಾವ ಕಾರಣದಿಂದ ನಡೆಯುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಸಂಪುಟದ ತೀರ್ಮಾನವಾದ ಮೇಲೆ ಯಾವುದೆ ತನಿಖಾ ಸಂಸ್ಥೆಗಳು ಮುಂದುವರೆಸುವಂತಿಲ್ಲ ಎಂಬುದನ್ನು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು.
12
+ ಸಿಬಿಐ ಪರ ವಾದ:ಇನ್ನು ಸಿಬಿಐ ಪರವಾಗಿ ಹಾಜರಾದ ವಕೀಲ ಪ್ರಸನ್ನಕುಮಾರ್ ಅವರು, ಈಗಾಗಲೇ ತನಿಖೆ ಮುಕ್ತಾಯದ ಹಂತಕ್ಕೆ ಬಂದಿದೆ. ಇಂತಹ ಸಮಯದಲ್ಲಿ ಕ್ಯಾಬಿನೆಟ್ ಈ ರೀತಿ ನಿರ್ಧಾರ ಮಾಡೋದು ಕಾನೂನು ಬಾಹಿರ ಎಂದು ವಾದ ಮಂಡಿಸಿದರು.ಈಗಾಗಲೇ ತನಿಖೆ ಅಂತಿಮ ಹಂತದಲ್ಲಿದೆ. ಸರ್ಕಾರದ ನಿರ್ಧಾರದ ಮೂಲಕ ತನಿಖೆಯನ್ನು ನಿಷಲಗೊಳಿಸಲಾಗುತ್ತಿದೆ. ಸರ್ಕಾರದ ಈ ನಿರ್ಧಾರ ಕಾನೂನು ಬಾಹಿರವಾಗಿದೆ. ಸರ್ಕಾರದ ಈ ಆದೇಶ ನಮಗೆ ಪರಿಣಾಮ ಬೀರಲ್ಲ ಎಂದು ಸ್ಪಷ್ಟಪಡಿಸಿದರು.
13
+ ಸರ್ಕಾರ ನಿರ್ಧಾರ ಹೈಕೋರ್ಟ್ ಆದೇಶವನ್ನು ನಿಷ್ಪಲಗೊಳಿಸುತ್ತಿದೆ. ಸಿಬಿಐ ತನಿಖೆ ಈಗಾಗಲೇ ಮುಕ್ತಾಯದ ಹಂತದಲ್ಲಿದೆ. ಈ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಕೂಡ ಸ್ಪಷ್ಟವಾಗಿದ್ದು, ಒಮ್ಮೆ ನೀಡಿದ್ದ ಒಪ್ಪಿಗೆಯ���್ನು ಸರ್ಕಾರ ಹಿಂಪಡೆಯಲು ಸಾಧ್ಯವಿಲ್ಲ ಎಂದರು. ಆಗ ಸುಪ್ರೀಂಕೋರ್ಟ್ ತೀರ್ಪು ಓದುವಂತೆ ಸಿಬಿಐ ಪರ ವಕೀಲರಿಗೆ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಸೂಚಿಸಿದರು. 1994ರಲ್ಲಿ ಸುಪ್ರೀಂ ತೀರ್ಪಿನಂತೆ ತನಿಖೆ ಮುಂದುವರೆಸಬಹುದಾಗಿದೆ. ತನಿಖೆ ಮುಕ್ತಾಯ ಹಂತದಲ್ಲಿರುವಾಗ ಸರ್ಕಾರಕ್ಕೆ ಮಧ್ಯಪ್ರವೇಶಿಸಲು ಅವಕಾಶವಿಲ್ಲ ಎಂದು ತಿಳಿಸಿದರು.
14
+ ಕಾನೂನುಬಾಹಿರ ಕ್ರಮ:ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಲ್ಲಿಸಿದ್ದ ಮಧ್ಯಂತರ ಅರ್ಜಿ ಪರವಾಗಿ ವಾದ ಮಂಡಿಸಿದ ವಕೀಲ ವೆಂಕಟೇಶ್ ಅವರು, ಇಲ್ಲಿ ಸುಪ್ರೀಂಕೋರ್ಟ್ ಆದೇಶವನ್ನು ಸ್ಪಷ್ಟವಾಗಿ ಉಲ್ಲಂಘಿಸಲಾಗಿದೆ. ತನಿಖೆಯ ಹಾದಿಯನ್ನು ತಪ್ಪಿಸಲು ಯತ್ನ ನಡೆದಿದೆ. ತನಿಖೆ ಅರ್ಧಕ್ಕೆ ನಿಲ್ಲಲು ಅವಕಾಶ ನೀಡಬಾರದು. ಸಿಬಿಐ ತನಿಖೆ ಮುಂದುವರಿಯಬೇಕು. ಕ್ಯಾಬಿನೆಟ್ ಇಷ್ಟೊಂದು ವೇಗವಾಗಿ ನಿರ್ಧಾರ ತೆಗೆದುಕೊಂಡಿದ್ದು ನಾವು ನೋಡಿಲ್ಲ. ಇಡೀ ಸಂಪುಟ ಡಿಸಿಎಂ ಪರ ನಿಂತು ಆದೇಶ ಮಾಡಿದೆ ಸರ್ಕಾರ ಆದೇಶ ಉಲ್ಲಂಘನೆ ಮಾಡಬಹುದೇ ಎಂದು ಪ್ರಶ್ನೆ ಮಾಡಿದರು.ಅಂತಿಮವಾಗಿ ಎಲ್ಲರ ವಾದ-ವಿವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಹಾಗೂ ಕೃಷ್ಣದೀಕ್ಷಿತ್ ಅವರಿದ್ದ ಪೀಠ ಮೇಲ್ಮನವಿ ಅರ್ಜಿಯನ್ನು ಹಿಂಪಡೆಯಲು ಅವಕಾಶ ಕಲ್ಪಿಸಿತ್ತು.
15
+ ನಾನು ಯಾವುದೇ ತಪ್ಪು ಮಾಡಿಲ್ಲಬೆಂಗಳೂರು,ನ.29- ನಾನು ಯಾವುದೇ ತಪ್ಪು ಮಾಡಿಲ್ಲ. ಪಕ್ಷದ ಕೆಲಸ ಮಾಡಿದ್ದೇನೆ. ಎಲ್ಲ ಆರೋಪ ಮತ್ತು ಆಚಾರಗಳಿಗೆ ಸೂಕ್ತ ಕಾಲದಲ್ಲಿ ಉತ್ತರ ನೀಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
16
+ ನ್ಯಾಯಾಲಯದ ಆದೇಶ ಹೊರಬಿದ್ದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬೆಂಗಳೂರು ಟೆಕ್ ಸಮ್ಮೇಳನದಲ್ಲಿ ಭಾಗವಹಿಸಿದ್ದೆ. ಬಂಡವಾಳ ಹೂಡಿಕೆ ಸಮಾವೇಶದ ಕುರಿತು ಚರ್ಚೆ ನಡೆಸಲಾಗುತ್ತಿತ್ತು. ನ್ಯಾಯಾಲ ಯದಲ್ಲಿ ಏನಾಗಿದೆ ಎಂದು ಗೊತ್ತಿಲ್ಲ. ಮಾಹಿತಿ ಇಲ್ಲದೆ ಪ್ರತಿಕ್ರಿಯಿ ಸುವುದು ಸರಿಯಲ್ಲ ಎಂದರು. ಇದು ಕೋರ್ಟ್ನ ವಿಚಾರ ಆದಷ್ಟು ದೂರ ಇರುವುದು ಒಳ್ಳೆಯದು. ನನ್ನ ವಕೀಲರು ಹೇಳುವವರೆಗೂ ನಾನು ಯಾವುದೇ ಮಾತನಾಡುವುದಿಲ್ಲ ಎಂದು ಪ್ರತಿಕ್ರಿಯಿಸಿದರು.
17
+ ಶಾಸಕ ಯತ್ನಾಳ್ ಸೇರಿದಂತೆ ಹಲವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಅವರು, ಯಾರು ಏನು ಬೇಕಾದರೂ ಮಾತನಾಡಿಕೊಳ್ಳಲ್ಲಿ, ಎಲ್ಲರ ಆಚಾರ, ವಿಚಾರ ಮತ್ತು ಮನಸ್ಸಿನಲ್ಲಿ ಏನಿದೆ ಎಂಬುದನ್ನು ನಮ್ರತೆಯಿಂದ ಗಮನಿಸಿದ್ದೇನೆ. ಸೂಕ್ತ ಕಾಲದಲ್ಲಿ ಉತ್ತರ ನೀಡುತ್ತೇನೆ ಎಂದರು. ನಾನೇನು ತಪ್ಪು ಮಾಡಿಲ್ಲ ಎಂದು ಒತ್ತಿ ಹೇಳಿದ ಅವರು, ಪಕ್ಷದ ಕೆಲಸ ಮಾಡಿದ್ದೇನೆ. ಅದರ ಪರಿಣಾಮ ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದೇನೆ. ಮುಂದೆಯೂ ತೊಂದರೆ ಕೊಡುತ್ತೇವೆ ಎನ್ನುವುದಾದರೆ ಆ ಭಗವಂತ ಇದ್ದಾನೆ. ನಾಡಿನ ಜನರಿದ್ದಾರೆ ಎಂದು ಭಾವನಾತ್ಮಕವಾಗಿ ಹೇಳಿದರು. ನನಗೆ ತೊಂದರೆ ಕೊಡಲು ಹೊರಟ್ಟಿದ್ದಕ್ಕೆ ರಾಜ್ಯದಲ್ಲಿ ಏನಾಗಿದೆ ಎಂದ��� ಜನ ನೋಡಿದ್ದಾರೆ. ನನ್ನ ಬೆಂಬಲಕ್ಕೆ ನಿಂತ ಮತ್ತು ನನ್ನ ಪರವಾಗಿ ಪ್ರಾರ್ಥಿಸಿದ ಕೋಟ್ಯಂತರ ಜನರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದರು.
eesanje/url_46_301_8.txt ADDED
@@ -0,0 +1,6 @@
 
 
 
 
 
 
 
1
+ ಹೆಣ್ಣು ಭ್ರೂಣ ಹತ್ಯೆ ಪ್ರಕರಣ, ಪೊಲೀಸರ ವಿರುದ್ಧ ಯತ್ನಾಳ್ ಆಕ್ರೋಶ
2
+ ಬೆಂಗಳೂರು,ನ.29- ಮೈಸೂರು ಹಾಗೂ ಮಂಡ್ಯದಲ್ಲಿ ನಡೆದ ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಬಿಜೆಪಿ ಮುಖಂಡ ಬಸವನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರಹಾಕಿದ್ದಾರೆ.
3
+ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಭ್ರೂಣ ಹತ್ಯೆ ಪ್ರಕರಣದಲ್ಲಿ ರಾಜ್ಯದ ಒಬ್ಬ ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಂದ ಅಸಹಾಯಕ ಮಾತುಗಳನ್ನು ನಿರೀಕ್ಷಿಸಿರಲಿಲ್ಲ.
4
+ ಚೀನಾದಲ್ಲಿ ಹೊಸ ಮಾದರಿ ಸೋಂಕು, ಕರ್ನಾಟಕ ಸೇರಿ 5 ರಾಜ್ಯಗಳಿಗೆ ಕೇಂದ್ರ ಕಟ್ಟುನಿಟ್ಟಿನ ಸೂಚನೆ
5
+ ಗೃಹ, ಪೊಲೀಸ್ ಹಾಗೂ ಬೇಹುಗಾರಿಕೆ ಇಲಾಖೆಯ ಸಾಮೂಹಿಕ ವೈಫಲ್ಯವೇ ಭ್ರೂಣ ಹತ್ಯೆಗೆ ಕಾರಣವಾಗಿದೆ. ಈ ಇಲಾಖೆಗಳು ಸರಿಯಾಗಿ ಕಾರ್ಯ ನಿರ್ವಹಿಸಿದ್ದರೆ ಭ್ರೂಣ ಹತ್ಯೆ ತಡೆಯಬಹುದಿತ್ತು ಎಂದು ಬರೆದುಕೊಂಡಿದ್ದಾರೆ.
6
+ ಸೊಪ್ಪು, ಹಣ್ಣು ಮಾರುವವರನ್ನು ಎತ್ತಂಗಡಿ ಮಾಡುವುದನ್ನು ಬಿಟ್ಟು, ಸಿವಿಲ್ ವ್ಯಾಜ್ಯಗಳಲ್ಲಿ ಮೂಗು ತೂರಿಸುವುದನ್ನು ಬಿಟ್ಟು, ಕೊಟ್ಟಿರುವ ಗಸ್ತು ವಾಹನದಲ್ಲಿ ವಸೂಲಿ, ಹಫ್ತಾ ತೆಗೆಯುವುದು ಬಿಟ್ಟು, ಕಟ್ಟುನಿಟ್ಟಾಗಿ ಕೆಲಸ ಮಾಡಿದ್ದರೆ ಕಂದಮ್ಮಗಳ ಮಾರಣಹೋಮ ತಪ್ಪುತಿತ್ತು ಎಂದು ಕಿಡಿಕಾರಿದ್ದಾರೆ.
eesanje/url_46_301_9.txt ADDED
@@ -0,0 +1,9 @@
 
 
 
 
 
 
 
 
 
 
1
+ ಡಿ.15ರೊಳಗೆ ಕೆಎಸ್‌ಆರ್‌ಟಿಸಿ ಕಾರ್ಗೋ ಸೇವೆ ಆರಂಭ
2
+ ಬೆಂಗಳೂರು, ನ.29-ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು(ಕೆಎಸ್‍ಆರ್‍ಟಿಸಿ) ಸಾರಿಗೆಯೇತರ ಆದಾಯ ವೃದ್ಧಿಸಿಕೊಳ್ಳಲು ಮುಂದಾಗಿದ್ದು, ಡಿಸೆಂಬರ್ 15ರೊಳಗೆ ಕಾರ್ಗೋ ಸೇವೆ ಆರಂಭಿಸಲಿದೆ.ಪಾರ್ಸೆಲ್‍ಗಳನ್ನು ಒಂದು ನಗರದಿಂದ ಮತ್ತೊಂದು ನಗರಕ್ಕೆ ಸಾಗಾಣಿಕೆ ಮಾಡುವ ಕಾರ್ಗೋ ಸೇವೆಗಾಗಿ 20 ಲಾರಿ ಟ್ರಕ್‍ಗಳನ್ನು ಖರೀದಿಸಿದ್ದು, ಸದ್ಯದಲ್ಲಿ ಅಧಿಕೃತ ಚಾಲನೆ ನೀಡಲಿದೆ.
3
+ ಬಸ್ ಸೇವೆಯಲ್ಲಿ ಪ್ರಯಾಣಿಕರ ವಿಶ್ವಾಸಕ್ಕೆ ಪಾತ್ರವಾಗಿರುವ ಕೆಎಸ್‍ಆರ್‍ಟಿಸಿಯು ಪ್ರಥಮ ಬಾರಿಗೆ ಟ್ರಕ್‍ಗಳ ಮೂಲಕ ಪಾರ್ಸೆಲ್ ಸೇವೆಗೆ ಮುಂದಾಗಿದೆ. ಕಾರ್ಗೋ ಪಾರ್ಸೆಲ್ ಸೇವೆಗೂ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯುವ ನಿರೀಕ್ಷೆಯಲ್ಲಿ ಕೆಎಸ್‍ಆರ್‍ಟಿಸಿ ಇದೆ.ಪಾರ್ಸಲ್ ಸಾಗಾಣಿಕೆಗೆ ಕೃಷಿ, ಟೆಕ್ಸ್‍ಟೈಲ್ಸ್,ಅಟೊಮೊಬೈಲ್ ಸೇರಿದಂತೆ ಹಲವು ಕ್ಷೇತ್ರಗಳಿಂದ ಸಾಕಷ್ಟು ಬೇಡಿಕೆ ಇದೆ. ಐದಾರು ಟನ್‍ನಷ್ಟು ಸಾಗಾಟ ಮಾಡುವ ಟ್ರಕ್‍ಗಳಿಗೆ ಬೇಡಿಕೆ ಹೆಚ್ಚಿದೆ.
4
+ ರಾಜ್ಯದೆಲ್ಲೆಡೆ ಡಿಪೋ, ನಿಲ್ದಾಣಗಳಿರುವುದರಿಂದ ಕಾರ್ಗೋ ಸೇವೆ ಸುಲಭವಾಗಲಿದೆ.ಸದ್ಯಕ್ಕೆ ಪಾರ್ಸೆಲ್‍ಗಳಿಗೆ ಬೇಡಿಕೆ ಹೆಚ್ಚಿರುವ ಮಾರ್ಗಗಳಲ್ಲಿ ಕಾರ್ಗೋ ಸೇವೆಗೆ ಟ್ರಕ್ ಬಳಕೆ ಮಾಡುವುದಾಗಿ ಕೆಎಸ್‍ಆರ್‍ಟಿಸಿ ತಿಳಿಸಿದೆ. ಆರಂಭಿಕ ಹಂತದಲ್ಲಿ 20 ಟ್ರಕ್‍ಗಳ ಮೂಲಕ ಕಾರ್ಗೋ ಪ್ರಾರಂಭಿಸಲಿದ್ದು, ಸಾರ್ವಜನಿಕರಿಂದ ಬೇಡಿಕೆ ಹೆಚ್ಚಾದಂತೆ ಟ್ರಕ್‍ಗಳ ಸಂಖ್ಯೆಯನ್ನೂ ಹೆಚ್ಚಿಸಲು ಉದ್ದೇಶಿಸಲಾಗಿದೆ.
5
+ ಸುರಂಗದಲ್ಲಿದ್ದಾಗ ವಾಕ್, ಯೋಗ ಮಾಡುತ್ತಿದ್ದರಂತೆ ಕಾರ್ಮಿಕರು
6
+ ಈಗಾಗಲೇ ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಲಗೇಜ್(ಪಾರ್ಸಲ್)ಸಾಗಾಣಿಕೆ ಮಾಡುವ ಮೂಲಕ ಆದಾಯ ಹೆಚ್ಚಿಸಿಕೊಳ್ಳುವ ಕಾರ್ಯಾರಂಭ ಮಾಡಿದೆ. 109 ಕೇಂದ್ರಗಳಲ್ಲಿ ಸಣ್ಣ ಪ್ರಮಾಣದ ಪಾರ್ಸೆಲ್‍ಗಳನ್ನು ಬಸ್ ಮೂಲಕ ಕೊಂಡೊಯ್ಯುವ ಕಾರ್ಯವನು ಪ್ರಾರಂಭ ಮಾಡಿತ್ತು. ಆನಂತರ ಎಲ್ಲಾ ಬಸ್ ನಿಲ್ದಾಣಗಳಿಗೆ ವಿಸ್ತರಣೆ ಮಾಡಲಾಗಿತ್ತು. ಪಾರ್ಸಲ್ ಸೇವೆಯಿಂದ ವಾರ್ಷಿಕ 4 ಕೋಟಿ ರೂ.ವರೆಗೆ ಆದಾಯವೆದೆ ಎಂದು ಕೆಎಸ್‍ಆರ್‍ಟಿಸಿ ಮೂಲಗಳು ತಿಳಿಸಿವೆ.
7
+ ಕೆಎಸ್‍ಆರ್‍ಟಿಸಿಯು ಕಾರ್ಗೊ ಸೇವೆ ಕೈಗೊಳ್ಳಲು ಖಾಸಗಿ ಏಜೆನ್ಸಿಗಳ ಜೊತೆಗೆ ಒಡಂಬಡಿಕೆ ಮಾಡಿಕೊಂಡಿದ್ದು, ಬರುವ ಆದಾಯದಲ್ಲಿ ಕೆಎಸ್‍ಆರ್‍ಟಿಸಿಗೆ ಶೇ. 80, ಖಾಸಗಿ ಏಜೆನ್ಸಿಗೆ ಶೇ. 20 ರಷ್ಟು ಪಾಲುದಾರಿಕೆ ನಿಗದಿಯಾಗಿತ್ತು. ಇದರಿಂದ ಕೆಎಸ್‍ಆರ್‍ಟಿಸಿ ವಾರ್ಷಿಕ ಸು. 13.20 ಕೋಟಿ ರೂ. ಆದಾಯವಿದೆ.
8
+ ಬಸ್‍ಗಳಲ್ಲಿ ಸಾಗಿಸುವ ಪಾರ್ಸೆಲ್‍ಗಳನ್ನು ಸಂಬಂಧಪಟ್ಟವರು ಬಸ್ ನಿಲ್ದಾಣಗಳಿಗೆ ಬಂದು ಕೊಂಡೊಯ್ಯಬೇಕಿತ್ತು. ಆದರೆ, ಕಾರ್ಗೋ ಟ್ರಕ್ ಆರಂಭಗೊಂಡರೆ ನಿಗದಿತ ಸ್ಥಳಕ್ಕೇ ತಲುಪಿಸಲಿದೆ. ಹೀಗಾಗಿ ವ್ಯವಸ್ಥಿತ ಮತ್ತು ಸಮರ್ಪಕವಾದ ಪಾರ್ಸೆಲ್ ಸೇವೆ ಆರಂಭಿಸುವ ಮೂಲಕ ಪ್ರಸ್ತುತ ಗಳಿಸುತ್ತಿರುವ ಆದಾ��ವನ್ನು ಹತ್ತು ಪಟ್ಟು ಹೆಚ್ಚಿಸುವ ಉದ್ದೇಶವನ್ನು ಕೆಎಸ್‍ಆರ್‍ಟಿಸಿ ಹೊಂದಿದೆ.
9
+ ಪ್ರಸ್ತುತ 800 ಬಸ್‍ಗಳಲ್ಲಿ ಪಾರ್ಸೆಲ್ ಸೇವೆ ಇದ್ದು, ಇನ್ನು ಮುಂದೆ ಖರೀದಿಸಲಾಗುವ ಎಲ್ಲಾ ಬಸ್‍ಗಳಲ್ಲೂ ಪಾರ್ಸೆಲ್ ಕೊಂಡೊಯ್ಯುವ ವ್ಯವಸ್ಥೆ ಇರುತ್ತದೆ. ಈ ಸೇವೆಯನ್ನು ಮುಂದಿನ ನಾಲ್ಕು ವರ್ಷಗಳಲ್ಲಿ 4000 ಬಸ್‍ಗಳಿಗೆ ವಿಸ್ತರಿಸುವ ಉದ್ದೇಶವಿದೆ. ಹೀಗಾಗಿ ಬಸ್ ಮತ್ತು ಟ್ರಕ್ ಎರಡರಲ್ಲೂ ಪಾರ್ಸಲ್ ಸೇವೆ ದೊರೆಯಲಿದೆ ಎಂದು ಕೆಎಸ್‍ಆರ್‍ಟಿಸಿ ಮೂಲಗಳು ತಿಳಿಸಿವೆ.
eesanje/url_46_302_1.txt ADDED
@@ -0,0 +1,7 @@
 
 
 
 
 
 
 
 
1
+ ಹೆಣ್ಣು ಭ್ರೂಣ ಹತ್ಯೆ ಪ್ರಕರಣ : ವೈದ್ಯರು, ಸಹಚರರ ಸೆರೆ
2
+ ಬೆಂಗಳೂರು, ನ.28- ಹೆಣ್ಣು ಲಿಂಗ ಭ್ರೂಣ ಪತ್ತೆ ಮಾಡಿ ಗರ್ಭಪಾತ ಮಾಡುತ್ತಿದ್ದ ವೈದ್ಯರು ಮತ್ತು ಸಹಚರರನ್ನು ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಳೆ ಮದ್ರಾಸ್ ರಸ್ತೆಯಲ್ಲಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ವೇಳೆಯಲ್ಲಿ ಅನುಮಾನಾಸ್ಪದವಾಗಿ ಬರುತ್ತಿದ್ದ ಒಂದು ಮಾರುತಿ ಸುಜುಕಿ ಬ್ರೀಜಾ ಕಾರನ್ನು ತಡೆದು, ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ವಿಚಾರಿಸಿದ್ದಾರೆ.
3
+ ಆ ಇಬ್ಬರು ವ್ಯಕ್ತಿಗಳು ತಾವು ಗರ್ಭಿಣಿಯಾಗಿರುವ ಮಹಿಳೆಯರಿಗೆ ಅಕ್ರಮವಾಗಿ ಸ್ಕ್ಯಾನ್ ಮಾಡಿಸಿ, ಹೊಟ್ಟೆಯಲ್ಲಿ ಇರುವ ಮಗು ಗಂಡು ಅಥವಾ ಹೆಣ್ಣು ಎಂಬುದನ್ನು ಪತ್ತೆ ಮಾಡಿಸುತ್ತೇವೆ. ಹೆಣ್ಣು ಮಗು ಆಗಿದ್ದರೆ ತಮಗೆ ತಿಳಿದಿರುವ ಆಸ್ಪತ್ರೆಗಳಲ್ಲಿ ಗರ್ಭಪಾತ ಮಾಡಿಸುವುದಾಗಿ ತಿಳಿಸಿರುತ್ತಾರೆ. ಆ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು, ಸುದೀರ್ಘವಾಗಿ ವಿಚಾರಣೆ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿ ವ್ಯಕ್ತಿಗಳು ನೀಡಿದ ಮಾಹಿತಿ ಮೇರೆಗೆ ಇತರೆ 9 ಮಂದಿ ಸೇರಿದಂತೆ, ಒಟ್ಟು 11 ಮಂದಿ ಈ ಪ್ರಕರಣದಲ್ಲಿ ಭಾಗಿಯಾಗಿರುವುದು ತನಿಖೆಯಿಂದ ಧೃಡಪಟ್ಟಿರುತ್ತದೆ.
4
+ ಬಿಜೆಪಿ ಅಸಮಾಧಾನಿತರೊಂದಿಗೆ ವರಿಷ್ಠರ ಸಮಾಲೋಚನೆ
5
+ ಬಂಧಿತರಾಗಿರುವವರ ಪೈಕಿ 4 ಮಂದಿ ಏಜೆಂಟ್‍ಗಳಾಗಿದ್ದು, ಮೈಸೂರಿನ ಉದಯಗಿರಿಯಲ್ಲಿರುವ ಆಸ್ಪತ್ರೆಯ ಇಬ್ಬರು ವೈದ್ಯರು ಮತ್ತು ಆಸ್ಪತ್ರೆಯ ಒಬ್ಬರು ವ್ಯವಸ್ಥಾಪಕಿ, ಒಬ್ಬರು ಸ್ವಾಗತಕಾರರು ಹಾಗೂ ಒಬ್ಬರು ಲ್ಯಾಬ್ ಟೆಕ್ನೀಷಿಯನ್.
6
+ ಇವರುಗಳನ್ನು ವಿಚಾರಣೆ ಮಾಡಿದಾಗ, ವೈದ್ಯರು ಮತ್ತು ಇತರೆ ವ್ಯಕ್ತಿಗಳು ಜೊತೆ ಸೇರಿ ಮೈಸೂರು ನಗರದ ಉದಯಗಿರಿಯಲ್ಲಿರುವ ಆಸ್ಪತ್ರೆ ಮತ್ತು ಮೈಸೂರು ನಗರ ಡಾ.ರಾಜ್‍ಕುಮಾರ್ ರಸ್ತೆಯಲ್ಲಿರುವ ಆಯುರ್ವೇದಿಕ್ ಪೈಲ್ಸ್ ಡೇ ಕೇರ್ ಸೆಂಟರ್‍ನಲ್ಲಿ ಅನಕೃತವಾಗಿ ಸುಮಾರು 3 ವರ್ಷಗಳಿಂದ ಗರ್ಭಪಾತ ಮಾಡಿಸುತ್ತಿದ್ದು, ಕಳೆದ 3 ತಿಂಗಳ ಅವಧಿಯಲ್ಲಿ ಸುಮಾರು 242 ಗರ್ಭಿಣಿಯರಿಗೆ ಗರ್ಭಪಾತ ಮಾಡಿಸಿರುವುದು ತನಿಖೆಯಿಂದ ತಿಳಿದು ಬಂದಿರುತ್ತದೆ. ಅಲ್ಲದೆ, ಈ ಪ್ರಕರಣದಲ್ಲಿ ಆರೋಪಿಗಳು ಕೋಟ್ಯಾಂತರ ರೂಗಳ ಹಣಕಾಸಿನ ವ್ಯವಹಾರವನ್ನು ಸಹ ಮಾಡಿರುತ್ತಾರೆ.
7
+ ಬಂಧಿತರ ಪೈಕಿ ಇಬ್ಬರು ಆರೋಪಿಗಳ ವಿರುದ್ಧ ಈಗಾಗಲೆ ದಾವಣಗೆರೆಯ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿ ಇರುತ್ತದೆ. ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಪ್ರಶಾಂತ್ ಮತ್ತು ಸಿಬ್ಬಂದಿಗಳ ತಂಡ ಆರೋಪಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
eesanje/url_46_302_10.txt ADDED
@@ -0,0 +1,5 @@
 
 
 
 
 
 
1
+ ಟರ್ಮಿನಲ್ ಒಳಗೆ ಪ್ರವೇಶಿಸಿದ್ದ ಮಹಿಳೆ ಬಂಧನ
2
+ ಬೆಂಗಳೂರು,ನ.27- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಕಲಿ ಟಿಕೆಟ್ ತೋರಿಸಿ ಭದ್ರತಾ ನಿಯಂತ್ರಣ ದಾಟಿ ಟರ್ಮಿನಲ್ ಒಳಗೆ ಪ್ರವೇಶಿಸಿದ್ದ ಮಹಿಳಾ ಪ್ರಯಾಣಿಕರೊಬ್ಬರನ್ನು ಬಂಧಿಸಲಾಗಿದೆ. ಹರ್‍ಪೀತ್ ಕೌರ್ ಸೈನಿ ಬಂಧಿತ ಮಹಿಳಾ ಪ್ರಯಾಣಿಕರು. ಇವರ ವಿರುದ್ದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿರುತ್ತಾರೆ.
3
+ ನ.26ರಂದು ಹರಪೀತ್ ಕೌರ್ ಸೈನಿ ಅವರು ಸ್ನೇಹಿತನನ್ನು ವಿಮಾನ ನಿಲ್ದಾಣಕ್ಕೆ ಬಿಡಲು ಬಂದಿದ್ದರು. ಡಿಪಾರ್ಚರ್ ಗೇಟ್‍ನಲ್ಲಿ ಇ-ಟಿಕೆಟ್ ತೋರಿಸಿ ಟರ್ಮಿನಲ್ ಒಳಗೆ ಕಳುಹಿಸಿ ಒಳಪ್ರವೇಶಿಸಿ ನಂತರ ಹರ್‍ಪೀತ್ ಅವರು ತನ್ನ ಲ್ಯಾಪ್‍ಟಾಪ್‍ನ್ನು ಸಿಟಿಸೈಡ್‍ನಲ್ಲಿ ಮರೆತು ಹೋಗಿರುವುದಾಗಿ ಏರ್‍ಲೈನ್ಸ್ ಸಿಬ್ಬಂದಿಗೆ ತಿಳಿಸಿದ್ದಾರೆ.
4
+ ಪಿಟಿಬಿಯಿಂದ ಹಿಂತಿರುಗಿ ಚೆಕ್‍ಇನ್ ಕೌಂಟರ್‍ನಲ್ಲಿ ಇಂಡಿಗೋ ಏರ್‍ಲೈನ್ಸ್ ಸಿಬ್ಬಂದಿಯವರು ಹರಪೀತ್ ಸಿಬ್ಬಂದಿಯವರು ಹರ್‍ಪೀತ್ ಅವರ ಬಳಿ ಇದ್ದ ಟಿಕೆಟ್ ಪರಿಶೀಲಿಸಿದಾಗ ನಕಲಿ ಟಿಕೆಟ್ ಎಂಬುದು ಕಂಡುಬಂದಿದೆ. ಆ ಬಗ್ಗೆ ಆ ಮಹಿಳೆಯನ್ನು ವಿಚಾರಿಸಿದಾಗ, ತನ್ನ ಸ್ನೇಹಿತರಾದ ಆಯುಷ್ ಶರ್ಮ ಎಂಬುವರು ಇಪಿಎಸ್‍ಸಿವರೆಗೆ ಬಿಟ್ಟು ಬರುವ ಸಲುವಾಗಿ ಟರ್ಮಿನಲ್ ಒಳಗೆ ಪ್ರವೇಶಿಸಲು ತಾನೇ ಸ್ವತಃ ಇ-ಟಿಕೆಟ್‍ನ್ನು ಎಡಿಟ್ ಮಾಡಿದ್ದಾಗಿ ತಿಳಿಸಿದ್ದಾರೆ.
5
+ ನಕಲಿ ಟಿಕೆಟ್ ತೋರಿಸಿ ಭದ್ರತಾ ನಿಯಂತ್ರಣವನ್ನು ದಾಟಿ ಟರ್ಮಿನಲ್ ಒಳ ಪ್ರವೇಶಿಸಿರುವ ಬಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ಏರ್‍ಲೈನ್ಸ್ ಸಿಬ್ಬಂದಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೆಪೊಲೀಸರು ಮಹಿಳಾ ಪ್ರಯಾಣಿರನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
eesanje/url_46_302_11.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಜಿಲ್ಲೆಗಳ ಪ್ರಗತಿ ಪರಿಶೀಲನೆ ಕುರಿತ ಡಿಐಎಸ್ ತಂತ್ರಾಂಶ ಲೋಕಾರ್ಪಣೆ
2
+ ಬೆಂಗಳೂರು, ನ.27- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನತಾದರ್ಶನ ನಡೆಸಿದ ಸಂದರ್ಭ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಫೋರ್ಟಲ್ 2.0 ಹಾಗೂ ಜಿಲ್ಲೆಗಳ ಪ್ರಗತಿ ಪರಿಶೀಲನೆ ಕುರಿತಂತೆ ಡಿ.ಐ.ಎಸ್ ತಂತ್ರಾಂಶವನ್ನು ಲೋಕಾರ್ಪಣೆ ಮಾಡಿದರು.
3
+ ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯ ಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಇ-ಆಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಇದ್ದರು.
4
+ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್ 2.0: ರಾಜ್ಯದ ಆಯವ್ಯಯದಲ್ಲಿ ಕೈಗೊಂಡ ಎಲ್ಲಾ ಇಲಾಖೆಗಳ 1 ಕೋಟಿ ರೂ.ಗಿಂತ ಹೆಚ್ಚಿನ ಕಾಮಗಾರಿಗಳ ಪ್ರಗತಿಯನ್ನು ಸಮಯಬದ್ದವಾಗಿ ಮೇಲ್ವಿಚಾರಣೆ ಮಾಡಲು ಕಾಂಟ್ರಾಕ್ಟ್ ಮ್ಯಾನೇಜಮೆಂಟ್ ಮಾಡ್ಯೂಲ್‍ನಲ್ಲಿ ಡ್ಯಾಷ್‍ಬೋರ್ಡ್‍ನ್ನು ಇ-ಆಡಳಿತ ಇಲಾಖೆಯ ವತಿಯಿಂದ ಸಿದ್ದಪಡಿಸಲಾಗಿದೆ.
5
+ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಲಸಂಪನ್ಮೂಲ ಇಲಾಖೆ, ಲೋಕೋಪಯೋಗಿ ಇಲಾಖೆ ಮತ್ತು ಅದರ ವ್ಯಾಪ್ತಿಯಲ್ಲಿರುವ ಎಲ್ಲಾ ಮಂಡಳಿಗಳು ಮತ್ತು ನಿಗಮಗಳಡಿ ನೀಡಲಾದ 50 ಲಕ್ಷ ರೂ. ಮತ್ತು ಅದಕ್ಕಿಂತ ಹೆಚ್ಚಿನ ಮೌಲ್ಯದ ಎಲ್ಲಾ ಟೆಂಡರ್‍ಗಳಿಗೆ ಮೂರು ತಿಂಗಳ ಅವಗೆ ಪ್ರಾಯೋಗಿಕ ಆಧಾರದ ಮೇಲೆ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್‍ನಲ್ಲಿ ಗುತ್ತಿಗೆ ನಿರ್ವಹಣಾ ಮಾಡ್ಯೂಲ್‍ನ್ನು ಹೆಚ್ಚಿನ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
6
+ ಭಾರತೀಯ ರಾಯಭಾರಿಯನ್ನು ತಡೆದ ಖಲಿಸ್ತಾನಿಗಳು
7
+ ಅದರಂತೆ ಇ-ಪ್ರೊಕ್ಯೂರ್‍ಮೆಂಟ್ ವೇದಿಕೆಯಲ್ಲಿ ಒಟ್ಟು 40,000 ಟೆಂಡರ್ ಗಳು ಪ್ರಕಟಿಸಲಾಗಿದ್ದು ಈ ಪೈಕಿ ಆಯ್ಕೆಯಾದ 3 ಇಲಾಖೆಗಳ ರೂ 50 ಲಕ್ಷಕ್ಕಿಂತ ಹೆಚ್ಚು ಮೌಲ್ಯದ ಕೇವಲ 3165 ಟೆಂಡರ್ ಗಳನ್ನು ಈ ಯೋಜನೆಗಾಗಿ ಗುರುತಿಸಲಾಗಿದೆ. ಸದರಿ ಇಲಾಖೆಗಳಿಂದ ಕಾಂಟ್ರಾಕ್ಟ್ ಮ್ಯಾನೇಜ್ಮೆಂಟ್ ಸಿಸ್ಟಮ್ ದಲ್ಲಿ ಕಡ್ಡಾಯವಾಗಿ ತಂತ್ರಾಂಶದ ಮೂಲಕ ಮಾಹಿತಿಯನ್ನು ಡ್ಯಾಶ್ ಬೋರ್ಡ್ ದಲ್ಲಿ ಅಳವಡಿಸಲಾಗುವುದು.
8
+ ಡಿಐಎಸ್ ತಂತ್ರಾಂಶ:ಮುಖ್ಯಮಂತ್ರಿಗಳು ಸೆಪ್ಟಂಬರ್ 12- 13ರಂದು ನಡೆದ ಜಿಲ್ಲಾಧಿಕಾರಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಮ್ಮೇಳನದಲ್ಲಿ ಜಿಲ್ಲೆಗಳಿಗೆ ಸಂಬಂಧಪಟ್ಟಂತೆ, 28 ವಿಷಯಗಳ ಬಗ್ಗೆ ಪರಿಶೀಲನೆ ನಡೆಸಿ ಪ್ರತಿ ತಿಂಗಳೂ ವರದಿಯನ್ನು ಸಲ್ಲಿಸಲು ಎಲ್ಲಾ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ ಹಾಗೂ ಅಭಿವೃದ್ಧಿ ಆಯುಕ್ತರಿಗೆ ಸದರಿ ವರದಿಗಳನ್ನು ವಿಶ್ಲೇಷಿಸಿ ಮಂಡಿಸುವಂತೆ ಸೂಚಿಸಲಾಗಿದೆ. ಅದರಂತೆ, ಕ್ರಮ ವಹಿಸಿ, ಇ-ಆಡಳಿತ ಇಲಾಖೆಯಿಂದ ಡಿಐಎಸ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ.
9
+ ಈ ತಂತ್ರಾಂಶದ ಮೂಲ��� ಎಲ್ಲಾ ಜಿಲ್ಲಾ ಉಸ್ತುವಾರಿ ಅಧಿಕಾರಿಗಳು ಆನ್‍ಲೈನ್ ವರದಿಯನ್ನು ಸಲ್ಲಿಸಲು ಅನುವು ಮಾಡಿಕೊಡಲಾಗಿದೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಇತರೆ ಇಲಾಖಾ ಕಾರ್ಯದರ್ಶಿಗಳಿಗೆ ಹಾಗೂ ಜಿಲ್ಲಾಧಿಕಾರಿ /ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಜಿಲ್ಲೆಯಲ್ಲಿರುವ ಸಮಸ್ಯೆಗಳ ಕುರಿತು ಮಾಹಿತಿ ದಾಖಲಿಸಬಹುದು. ಸದರಿ ಸಮಸ್ಯೆಗಳಿಗೆ ಇಲಾಖಾ ಕಾರ್ಯದರ್ಶಿ/ ಜಿಲ್ಲಾಧಿಕಾರಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಈ ತಂತ್ರಾಂಶದ ಮೂಲಕವೇ ತೆಗೆದುಕೊಂಡ ಕ್ರಮದ ಕುರಿತು ವರದಿ ಸಲ್ಲಿಸಬಹುದಾಗಿದೆ. ಸಲ್ಲಿಸಲಾಗಿರುವ ಜಿಲ್ಲಾ ವರದಿಗಳ ಕುರಿತ ಎಮ್‍ಐಎಸ್ ವರದಿಗಳನ್ನು ಮುಂತ್ರಿಗಳು ಈ ತಂತ್ರಾಂಶದಲ್ಲಿ ವೀಕ್ಷಿಸಬಹುದಾಗಿದೆ.
10
+ ನಾಸಾ ಕಣ್ಣಿಗೆ ಬಿದ್ದ ‘ದುಷ್ಟ ಕಣ್ಣು’
11
+ ತಂತ್ರಾಂಶದ ಬಳಕೆ ಬಗ್ಗೆ ಎಲ್ಲಾ ಇಲಾಖಾ/ಜಿಲ್ಲಾ ಸಮಾಲೋಚಕರಿಗೆ ತರಬೇತಿಯನ್ನು ಸಹ ನೀಡಲಾಗಿದೆ. ತಂತ್ರಾಂಶದ ಲಿಂಕ್ ಅನ್ನು ಇ-ಕಛೇರಿ ಮುಖಪುಟದಲ್ಲಿ ನೀಡಲಾಗಿದ್ದು, ಅಲ್ಲಿಂದಲೇ ಬಳಕೆದಾರರು ತಂತ್ರಾಂಶ ಪ್ರವೇಶಿಸಬಹುದಾಗಿದೆ.
eesanje/url_46_302_12.txt ADDED
@@ -0,0 +1,9 @@
 
 
 
 
 
 
 
 
 
 
1
+ ಅಚ್ಚುಕಟ್ಟಾಗಿ ನೆರವೇರಿದ ಸಿಎಂ ಜನಸ್ಪಂದನ
2
+ ಬೆಂಗಳೂರು,ನ.27- ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾದರ್ಶನ ನಡೆಸುವ ಮೂಲಕ ಸಾವಿರಾರು ಜನರ ದೂರುದುಮ್ಮಾನಗಳಿಗೆ ಸ್ಪಂದಿಸಿದರು. ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರು ನಡೆಸುತ್ತಿದ್ದ ಜನತಾ ದರ್ಶನದಷ್ಟೇ ವಿಶ್ವಾಸರ್ಹತೆಯನ್ನು 2ನೇ ಅಧಿಕಾರಾವಧಿಯ ಜನತಾ ದರ್ಶನ ವೂ ಉಳಿಸಿಕೊಂಡಿದ್ದು, ಸಮಸ್ಯೆಗೆ ಸ್ಪಂದಿಸಲು ಈ ಮೊದಲಿಗಿಂತಲೂ ಕ್ರಮಬದ್ದವಾದ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ.
3
+ ಜನತಾದರ್ಶನಕ್ಕೆ ರಾಜ್ಯದ ನಾನಾ ದಿಕ್ಕುಗಳಿಂದಲೂ ಜನಸಾಮಾನ್ಯರು ಆಗಮಿಸಿದ್ದರು. ಎಲ್ಲರ ಅರ್ಜಿಗಳನ್ನು ಅಧಿಕಾರಿಗಳು ಪರಿಶೀಲಿಸಿ ಜನಸಂಪರ್ಕ ಇಲಾಖೆಯ ತಂತ್ರಾಂಶದಲ್ಲಿ ದಾಖಲಿಸಿ ಕ್ರಮ ಸಂಖ್ಯೆ ನೀಡಿದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಯೊಬ್ಬರ ಅರ್ಜಿಗಳನ್ನು ಪಡೆದು ಗಂಭೀರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವ ಮೂಲಕ ಪರಿಹಾರ ದೊರಕಿಸುವ ಪ್ರಯತ್ನ ನಡೆಸಿದರು.
4
+ ವಿವಿಧ ಇಲಾಖೆಗಳ ಅಕಾರಿಗಳು, ಸಿಬ್ಬಂದಿಗಳು, ಸ್ಥಳದಲ್ಲೇ ಮೊಕ್ಕಾಂ ಹೂಡಿದರು. ಹೀಗಾಗಿ ಆಯಾ ಇಲಾಖೆಗಳ ಮತ್ತು ಪ್ರಾದೇಶಿಕವಾದ ಸಮಸ್ಯೆಗಳ ಬಗ್ಗೆ ಸಮನ್ವಯತೆಯೊಂದಿಗೆ ತುರ್ತು ಪರಿಹಾರ ದೊರಕಿಸುವ ಪ್ರಯತ್ನ ನಡೆಸಲಾಯಿತು. ಜನತಾ ದರ್ಶನಕ್ಕಾಗಿ ಸಾವಿರಾರು ಜನ ಸಾಲುಗಟ್ಟಿ ಬಂದಿದ್ದರು. ದೂರದ ಊರುಗಳಿಂದ ಬಂದವರಿಗೆ ಸ್ಥಳದಲ್ಲಿ ಕುಡಿಯುವ ನೀರು ಸೇರಿದಂತೆ ಹಲವು ರೀತಿಯ ಮೂಲಸೌಲಭ್ಯಗಳನ್ನು ಕಲ್ಪಿಸಲಾಗಿತ್ತು.
5
+ ಡಿಸಂಬರ್‌ನಲ್ಲಿ ಆಗಲಿವೆ ಹಲವಾರು ಮಹತ್ವದ ಬದಲಾವಣೆಗಳು
6
+ ಪಾರ್ಕಿಂಗ್ ಸೇರಿದಂತೆ ನಾನಾ ರೀತಿಯ ವ್ಯವಸ್ಥೆಗಳಿಗೆ ಕುಮಾರಕೃಪ ಹಾಗೂ ಇತರ ಸ್ಥಳಗಳನ್ನು ಬಳಸಿಕೊಳ್ಳಲಾಗಿತ್ತು. ಸಾವಿರಾರು ಜನ ಆಗಮಿಸಿದ್ದರಿಂದ ಜನದಟ್ಟಣೆ ಹೆಚ್ಚಾಗಿತ್ತು. ಅರ್ಜಿದಾರರ ಸಾಲು ಕುಮಾರಕೃಪ ಅತಿಥಿಗೃಹದವರೆಗೂ ಮುಂದುವರೆದಿತ್ತು.
7
+ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಾಳ್ಮೆಯಿಂದಲೇ ಪ್ರತಿಯೊಬ್ಬರ ಅಹವಾಲನ್ನು ಸ್ವೀಕರಿಸಿ ಪರಿಹಾರ ದೊರಕಿಸುವ ಪ್ರಯತ್ನ ಮಾಡಿದರು. ಮುಖ್ಯಮಂತ್ರಿ ಕಚೇರಿಯ ಹಿರಿಯ, ಕಿರಿಯ ಅಧಿಕಾರಿಗಳು ಸಕ್ರಿಯವಾಗಿ ಜನತಾದರ್ಶನದಲ್ಲಿ ತೊಡಗಿಸಿಕೊಂಡಿದ್ದರು. 20ಕ್ಕೂ ಹೆಚ್ಚು ಕೌಂಟರ್‍ಗಳನ್ನು ನಿರ್ಮಿಸಲಾಗಿತ್ತು.
8
+ ಭಾರೀ ಭದ್ರತೆ 600 ಮಂದಿ ಪೊಲೀಸರ ನಿಯೋಜನೆಬೆಂಗಳೂರು, ನ.27- ಗೃಹ ಕಚೇರಿ ಕೃಷ್ಣಾದಲ್ಲಿ ಆಯೋಜಿಸಿದ್ದ ಸಿಎಂ ಜನಸ್ಪಂದನ ಕಾರ್ಯಕ್ರಮದ ಬಂದೋಬಸ್ತ್‍ಗೆ ಅಧಿಕಾರಿಗಳು ಸೇರಿದಂತೆ 600ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.ಕಾರ್ಯಕ್ರಮ ಸ್ಥಳದಲ್ಲಿ ಯಾವುದೇ ಸಣ್ಣ ಪುಟ್ಟ ಲೋಪಗಳು ಆಗದಂತೆ ಸಿಬ್ಬಂದಿ ಕರ್ತವ್ಯದಲ್ಲಿದ್ದರು.
9
+ ಇಬ್ಬರು ಡಿಸಿಪಿ, 4 ಮಂದಿ ಎಸಿಪಿ, 10 ಮಂದಿ ಇನ್ಸ್‍ಪೆಕ್ಟರ್‍ಗಳು, 15ಕ್ಕೂ ಹೆಚ್ಚು ಪಿಎಸ್‍ಐಗಳು, 550 ಮಂದಿ ಹೆ���್ ಕಾನ್ಸ್‍ಟೆಬಲ್‍ಗಳು, ಕಾನ್ಸ್‍ಟೆಬಲ್‍ಗಳು ಹಾಗೂ ಹೋಂ ಗಾಡ್ರ್ಸ್‍ಗಳು ಬಂದೋಬಸ್ತ್‍ನಲ್ಲಿದ್ದರು.
eesanje/url_46_302_2.txt ADDED
@@ -0,0 +1,9 @@
 
 
 
 
 
 
 
 
 
 
1
+ 40 ಶಾಸಕರಿಗೆ ನಿಗಮ ಭಾಗ್ಯ, ಚಳಿಗಾಲದ ಅಧಿವೇಶನದೊಳಗೆ ಆದೇಶ
2
+ ಬೆಂಗಳೂರು,ನ.28- ಶಾಸಕರು, ವಿಧಾನಪರಿಷತ್ ಸದಸ್ಯರೂ ಸೇರಿದಂತೆ 39 ಮಂದಿಯನ್ನು ಮೊದಲ ಹಂತದಲ್ಲಿ ನಿಗಮ ಮಂಡಳಿಗೆ ನೇಮಿಸಲು ನಿರ್ಧರಿಸಲಾಗಿದ್ದು, ವಿಧಾನಮಂಡಲ ಅಧಿವೇಶನಕ್ಕೂ ಮೊದಲೇ ನಿರ್ಣಯ ಹೊರ ಬೀಳುವ ನಿರೀಕ್ಷೆಗಳಿವೆ. ನಗರಕ್ಕೆ ಆಗಮಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಇಂದು ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.
3
+ ಈಗಾಗಲೇ ಎರಡು ಸುತ್ತಿನ ಚರ್ಚೆಗಳು ನಡೆದಿದ್ದು, ಇಂದು ನಡೆಯುವ ಸಭೆ ಬಹುತೇಕ ಅಂತಿಮ ಎಂದು ಹೇಳಲಾಗಿದೆ. ಎರಡು-ಮೂರಕ್ಕೂ ಹೆಚ್ಚು ಬಾರಿ ಶಾಸಕರಾಗಿ ಆಯ್ಕೆಯಾಗಿರುವವರನ್ನು ನಿಗಮ ಮಂಡಳಿಗಳಿಗೆ ಪರಿಗಣಿಸಲಾಗುತ್ತಿದೆ. ಇದರಲ್ಲಿ ನಾಲ್ಕೈದು ಮಂದಿ ವಿಧಾನಪರಿಷತ್ ಸದಸ್ಯರೂ ಸೇರಿದ್ದಾರೆ.
4
+ ಚೀನಾ ನ್ಯೂಮೋನಿಯ ಆತಂಕ, ಭಾರತದಲ್ಲಿ ಹೈ ಅಲರ್ಟ್ ಘೋಷಣೆ
5
+ ಸಚಿವ ಸಂಪುಟದಲ್ಲಿ ಅವಕಾಶ ಸಿಗದೆ ಅಸಮಾಧಾನಗೊಂಡಿರುವ ಶಾಸಕರನ್ನು ಸಮಾಧಾನಪಡಿಸಲು ನಿಗಮ ಮಂಡಳಿಗಳ ನೇಮಕಾತಿಗೆ ಕಾಂಗ್ರೆಸ್ ಚಾಲನೆ ನೀಡಿದೆ. ಮೂಲಗಳ ಪ್ರಕಾರ ಪ್ರಕಾಶ್‍ಕೋಳಿವಾಡ, ವಿಜಯಾನಂದ ಕಾಶಪ್ಪನವರ್, ಎಂ.ವೈ.ಪಾಟೀಲ್, ಅಲ್ಲಂಪ್ರಭು ಪಾಟೀಲ್, ಬಸನಗೌಡ ದದ್ದಲ್, ಯಶವಂತರಾಯ ಗೌಡ ವಿಠಲಗೌಡ ಪಾಟೀಲ್, ಹಂಪನಗೌಡ ಬಾದರ್ಲಿ, ರಾಘವೇಂದ್ರ ಹಿಟ್ನಾಳ್, ಪ್ರಸಾದ್ ಅಬ್ಬಯ್ಯ, ಶ್ರೀನಿವಾಸ್ ಮಾನೆ, ಜಿ.ಎನ್.ಗಣೇಶ್, ಈ ತುಕಾರಾಮ್, ಟಿ.ರಘುಮೂರ್ತಿ, ಬೇಳೂರು ಗೋಪಾಲಕೃಷ್ಣ, ಟಿ.ಡಿ.ರಾಜೇಗೌಡ, ಡಾ.ರಂಗನಾಥ್, ಎಸ್.ಆರ್.ಶ್ರೀನಿವಾಸ್, ಕೆ.ವೈ.ನಂಜೇಗೌಡ, ರಿಜ್ವಾನ್ ಅರ್ಷದ್, ಪ್ರಿಯಾಕೃಷ್ಣ, ಬಿ.ಶಿವಣ್ಣ, ಎಚ್.ಸಿ.ಬಾಲಕೃಷ್ಣ, ಕೆ.ಎಂ.ಶಿವಲಿಂಗೇಗೌಡ, ವಿನಯ್‍ಕುಲಕರ್ಣಿ, ನರೇಂದ್ರಸ್ವಾಮಿ ಅವರ ಹೆಸರುಗಳು ಸಂಭವನೀಯರ ಪಟ್ಟಿಯಲ್ಲಿ ಸೇರಿವೆ.
6
+ ಮೊದಲರೆಡು ಸಭೆಗಳಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರುಗಳ ನಡುವೆ ಹೊಂದಾಣಿಕೆಯಾಗಿರಲಿಲ್ಲ. ಇನ್ನೂ ಕೆಲವು ಹಿರಿಯರ ಹೆಸರುಗಳು ಬಿಟ್ಟುಹೋಗಿದ್ದವು. ಬಹಳಷ್ಟು ಮಂದಿ ತಮಗೆ ನಿಗಮ ಮಂಡಳಿ ಬೇಡ. ಎರಡೂವರೆ ವರ್ಷಗಳ ಬಳಿಕ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಗೊಂದಲ ಉಂಟಾಗಿತ್ತು.
7
+ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಕೆ.ಸಿ.ವೇಣುಗೋಪಾಲ್ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಜತೆ ಚರ್ಚೆ ನಡೆಸಿ ಬಹುತೇಕ ಸ್ಪಷ್ಟ ನಿರ್ಣಯ ರೂಪಿಸಿದ್ದಾರೆ ಎನ್ನಲಾಗಿದೆ.ಹೈಕಮಾಂಡ್‍ನ ಸಂದೇಶದೊಂದಿಗೆ ರಾಜ್ಯಕ್ಕೆ ಆಗಮಿಸಿರುವ ರಣದೀಪ್ ಸಿಂಗ್ ಸುರ್ಜೇವಾಲ ಅವರು ಇಂದು ನಡೆಯುವ ಸಭೆಯಲ್ಲಿ ಸಂಭವನೀಯ ಪಟ್ಟಿಗೆ ಅಂಕಿತ ಹಾಕಲಿದ್ದು, ಇನ್ನೆರಡು ದಿನಗಳಲ್ಲಿ ನೇಮಕಾತಿ ಪ್ರಕ್ರಿಯೆಗಳು ಆರಂಭಗೊಳ್ಳುವ ಸಾಧ್ಯತೆ ಇದೆ.
8
+ ಅಮೆರಿಕ ನೆಲೆಗ��� ಛಾಯಾಚಿತ್ರ ತೆಗೆದಿದೆಯಂತೆ ಉತ್ತರ ಕೊರಿಯಾ ಉಪಗ್ರಹ
9
+ ಆರ್ಥಿಕವಾಗಿ ಸುಸ್ಥಿಯಲ್ಲಿರುವ 90ಕ್ಕೂ ಹೆಚ್ಚು ನಿಗಮ ಮಂಡಳಿಗಳಿಗೆ ನೇಮಕಾತಿ ನಡೆಯುವುದು ಖಚಿತವಾಗಿದೆ.ಮೊದಲ ಹಂತದಲ್ಲಿ 40ಕ್ಕೂ ಹೆಚ್ಚು ನಿಗಮ ಮಂಡಳಿಗಳಿಗೆ ಶಾಸಕರನ್ನು ನೇಮಿಸಲಾಗುತ್ತಿದ್ದು, ಎರಡನೇ ಹಂತದಲ್ಲಿ ಕಾರ್ಯಕರ್ತರು, ಪ್ರಮುಖ ನಾಯಕರನ್ನು ಪರಿಗಣಿಸುವ ಸಾಧ್ಯತೆ ಇದೆ. ಕಾರ್ಯಕರ್ತರ ನೇಮಕಾತಿಯ ಕುರಿತಂತೆಯೂ ಇಂದಿನ ಸಭೆಯಲ್ಲಿ ಚರ್ಚೆಯಾಗಲಿದೆ ಎಂದು ಹೇಳಲಾಗಿದೆ.
eesanje/url_46_302_3.txt ADDED
@@ -0,0 +1,9 @@
 
 
 
 
 
 
 
 
 
 
1
+ ನ್ಯಾಯಾಂಗ ಆಯೋಗಕ್ಕೆ ಬಿಜೆಪಿ ಸರ್ಕಾರದ 40% ಕಮಿಷನ್ ಕುರಿತ ದಾಖಲೆಗಳ ಸಲ್ಲಿಕೆ : ಕೆಂಪಣ್ಣ
2
+ ಬೆಂಗಳೂರು, ನ.28- ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಮಾಡಲಾಗದ ಶೇ.40ರಷ್ಟು ಕಮಿಷನ್ ಆರೋಪವನ್ನು ಸಾಬೀತು ಪಡಿಸುವಂತಹ ದಾಖಲೆಗಳನ್ನು ನ್ಯಾಯಾಂಗ ಆಯೋಗಕ್ಕೆ ಸಲ್ಲಿಸಲಾಗಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ತಿಳಿಸಿದ್ದಾರೆ.
3
+ ಶೇ.40ರಷ್ಟು ಕಮಿಷನ್ ಹಗರಣದ ತನಿಖೆಗಾಗಿ ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚನೆ ಮಾಡಲಾಗಿದೆ. ಇಂದು ಆಯೋಗದ ಮುಂದೆ ಹಾಜರಾದ ಕೆಂಪಣ್ಣ ಸೇರಿದಂತೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ದಾಖಲೆಗಳನ್ನು ಹಾಜರು ಪಡಿಸಿದರು.
4
+ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆಂಪಣ್ಣ, ತಾವು ಹಿಂದೆ ಸರ್ಕಾರದಲ್ಲಿ ನಡೆಯುತ್ತಿರುವ ಶೇ.40ರಷ್ಟು ಕಮಿಷನ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಆರೋಪ ಮಾಡಿದ್ದೇವು. ಇಂದು ಆಯೋಗದ ಮುಂದೆ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿದ್ದೇವೆ. ಯಾವೆಲ್ಲಾ ದಾಖಲೆ ನೀಡಿದ್ದೇವೆ, ಎಷ್ಟು ಪ್ರಮಾಣದ ದಾಖಲೆ ನೀಡಿದ್ದೇವೆ ಎಂಬ ಬಗ್ಗೆ ನಾವು ಬಹಿರಂಗ ಪಡಿಸುವುದಿಲ್ಲ. ಈಗಾಗಲೇ ಆಯೋಗಕ್ಕೆ ಸಲ್ಲಿಸಿರುವುದರಿಂದ ಇನ್ನೂ ಮುಂದೆ ನ್ಯಾಯಮೂರ್ತಿಯವರೇ ಮಾಹಿತಿ ನೀಡಬೇಕು ಎಂದರು.
5
+ ಚೀನಾ ನ್ಯೂಮೋನಿಯ ಆತಂಕ, ಭಾರತದಲ್ಲಿ ಹೈ ಅಲರ್ಟ್ ಘೋಷಣೆ
6
+ ತಮ್ಮ ಬಳಿ ಇನ್ನೂ ಹೆಚ್ಚುವರಿ ದಾಖಲೆಗಳನ್ನು ನೀಡುವಂತೆ ಆಯೋಗ ಕೇಳಿದೆ. ಅವುಗಳನ್ನು 10 ದಿನಗಳ ಒಳಗಾಗಿ ಒದಗಿಸುತ್ತೇವೆ. ಕೆಲವು ಮಾಹಿತಿಗಳಿಗಾಗಿ ಮಾಹಿತಿ ಹಕ್ಕು ಕಾಯ್ದೆ ಅಡಿ ಅರ್ಜಿ ಸಲ್ಲಿಸಲಾಗಿದೆ. ಅದು ನಮ್ಮ ಕೈ ಸೇರಲು ಕೆಲ ಸಮಯಾವಕಾಶ ಬೇಕಿದೆ. ಅದಕ್ಕಾಗಿ 10 ದಿನಗಳ ಬಳಿಕ ಮತ್ತೆ ಆಯೋಗದ ಮುಂದೆ ಹಾಜರಾಗುತ್ತೇವೆ ಎಂದರು.
7
+ ನಾವು ಗುತ್ತಿಗೆದಾರರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ನಾವು ಯಾವುದೇ ಪಕ್ಷಕ್ಕೆ ಸೇರಿಲ್ಲ. ಯಾರ ವಿರುದ್ಧವೂ ಇಲ್ಲ. ವ್ಯವಸ್ಥೆ ಕುರಿತು ನಮ್ಮ ಹೋರಾಟ ನಡೆಯುತ್ತಿದೆ. ನಮ್ಮ ಸಂಘಟನೆಯಲ್ಲಿ ಎಲ್ಲಾ ಪಕ್ಷಕ್ಕೆ ಸೇರಿದವರು ಇದ್ದಾರೆ ಎಂದರು.
8
+ ಡೀಪ್‍ಫೇಕ್ ವಿಡಿಯೋ ಬಗ್ಗೆ ಮೌನ ಮುರಿದ ರಶ್ಮಿಕಾ
9
+ ಇಂದು ಸಲ್ಲಿಸಿರುವ ದಾಖಲೆಗಳಲ್ಲಿ ಲೋಕಪಯೋಗಿ, ಸಣ್ಣ, ಬೃಹತ್ ನೀರಾವರಿ, ಪಂಚಾಯತ್ ರಾಜ್, ಆರೋಗ್ಯ ಸೇರಿ ಎಲ್ಲಾ ಇಲಾಖೆಗಳಿಗೆ ಸೇರಿದ ದಾಖಲೆಗಳನ್ನು ನೀಡಲಾಗಿದೆ ಎಂದು ಹೇಳಿದರು. ಪ್ರಸ್ತುತ ಸರ್ಕಾರಕ್ಕೆ ಸೇರಿದ ಒಂದೆರಡು ಪ್ರಕರಣಗಳ ದಾಖಲೆಗಳನ್ನು ನೀಡಲಾಗಿದೆ ಎಂದರು.
eesanje/url_46_302_4.txt ADDED
@@ -0,0 +1,9 @@
 
 
 
 
 
 
 
 
 
 
1
+ 86 ವರ್ತಕರ ಮೇಲೆ ದಾಳಿ, 64 ಕೋಟಿ ತೆರಿಗೆ ವಂಚನೆ ಪತ್ತೆ
2
+ ಬೆಂಗಳೂರು, ನ.28- ಕಬ್ಬಿಣ, ಉಕ್ಕು ಹಾಗೂ ಸ್ಕ್ರ್ಯಾಪ್ ವಲಯದಲ್ಲಿನ 86 ವರ್ತಕರ ಮೇಲೆ ದಾಳಿನಡೆಸಿರುವ ವಾಣಿಜ್ಯ ತೆರಿಗೆ ಇಲಾಖೆ 64 ಕೋಟಿ ರೂಪಾಯಿಗಳ ತೆರಿಗೆ ವಂಚನೆಯನ್ನು ಪತ್ತೆ ಹಚ್ಚಿದೆ. ವಾಣಿಜ್ಯ ತೆರಿಗೆ ಇಲಾಖೆಯ ದಕ್ಷಿಣ ವಲಯ ಜಾರಿ ವಿಭಾಗ ಬೆಂಗಳೂರು ಹಾಗೂ ಸುತ್ತಮುತ್ತ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದೆ. ನಕಲಿ ಹೂಡುವಳಿ, ತೆರಿಗೆ ಜಮೆಯನ್ನು (ಐಟಿಸಿ) ಬಳಸಿಕೊಂಡು ಸರ್ಕಾರದ ಬೊಕ್ಕಸಕ್ಕೆ ತೆರಿಗೆಯನ್ನು ವಂಚಿಸಿ ನಷ್ಟ ಉಂಟುಮಾಡುತ್ತಿರುವುದನ್ನು ಪತ್ತೆ ಹಚ್ಚಲಾಗಿದೆ.
3
+ ಈ ಜಾಲ ನಕಲಿ ಬಿಲ್‍ಗಳನ್ನು ವ್ಯವಸ್ಥಿತವಾಗಿ ಸೃಷ್ಟಿಸಿ ತೆರಿಗೆಯನ್ನು ತಪ್ಪಿಸುತ್ತಿತ್ತು, ಎಲ್ಲಾ ವಂಚಕರ ಸಮಗ್ರ ತಪಾಸಣೆ ನಡೆಸಲು ಕಳೆದೆರಡು ತಿಂಗಳ ಅವಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ, ಸದರಿ ವಂಚಕರ ವ್ಯಾಪಾರ ಸ್ಥಳಗಳ ಹೆಚ್ಚಿನ ತಪಾಸಣೆಯನ್ನೂ ಮುಂದುವರೆಸಲಾಗಿದೆ ಎಂದು ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ.ಶಿಖಾ ತಿಳಿಸಿದ್ದಾರೆ.
4
+ ಈ ವರ್ತಕರು ಹೂಡುವಳಿ ತೆರಿಗೆ ಜಮೆಯನ್ನು ಕೃತಕವಾಗಿ ಸೃಷ್ಟಿಸುತ್ತಿದ್ದ ವ್ಯವಸ್ಥಿತ ರೀತಿಯು ಕುತೂಹಲಕಾರಿಯಾಗಿದೆ. ಇಲಾಖೆಯಿಂದ ಈಗಾಗಲೇ ನೋಂದಣಿ ಅಮಾನತ್ತಿನಲ್ಲಿರುವ ಅಥವಾ ರದ್ದುಗೊಂಡಿರುವ ಜಿಎಸ್‍ಟಿಎನ್ ಸಂಖ್ಯೆಗಳನ್ನು ಬಳಸಿಕೊಂಡು ಅವುಗಳಿಂದ ಕೃತಕ ಖರೀದಿ ಬಿಲ್ಲುಗಳನ್ನು ಸೃಷ್ಟಿಸಿ ಅವುಗಳಿಂದ ಐಟಿಸಿಯನ್ನು ಪಡೆದುಕೊಂಡು ತೆರಿಗೆಯನ್ನು ಪಾವತಿಸದೇ ವಂಚಿಸುತ್ತಿದ್ದರು ಎಂದು ತಿಳಿಸಿದ್ದಾರೆ.
5
+ ಬಿಜೆಪಿ ಅಸಮಾಧಾನಿತರೊಂದಿಗೆ ವರಿಷ್ಠರ ಸಮಾಲೋಚನೆ
6
+ ಇದರ ಜೊತೆಗೆ ಕೆಲವೊಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ ಅವುಗಳ ಮೂಲಕ ಮೋಸದಿಂದ ಜಿಎಸ್‍ಟಿ ನೋಂದಣಿ ಮಾಡಿಸಿ, ಯಾವುದೇ ವ್ಯವಹಾರ ಸ್ಥಳಗಳನ್ನು ಹೊಂದಿಲ್ಲದೆ ನಕಲಿ ಬಿಲ್ಲುಗಳನ್ನು ನೀಡುವುದರ ಮೂಲಕವೂ ತೆರಿಗೆ ತಪ್ಪಿಸಲಾಗುತ್ತಿತ್ತು ಎಂದು ವಿವರಿಸಿದ್ದಾರೆ.
7
+ ಈ ಜಾಲ ನಕಲಿ ಬಿಲ್‍ಗಳ ಮೂಲಕ 352 ಕೋಟಿ ರೂಪಾಯಿಗಳ ವಹಿವಾಟು ನಡೆಸಿದೆ. ಅದರಿಂದ ಸರ್ಕಾರಕ್ಕೆ 64 ಕೋಟಿ ರೂಪಾಯಿಗಳ ತೆರಿಗೆ ವಂಚನೆಯಾಗಿದೆ. ನಕಲಿ ಬಿಲ್ ತಯಾರಿಕೆ ಹಾಗೂ ತೆರಿಗೆ ವಂಚನೆ ಶಿಕ್ಷಾರ್ಹ ಅಪರಾಧವಾಗಿದೆ. ಜುಲ್ಮಾನೆ ವಿಧಿಸುವಿಕೆ, ಸರಕುಗಳ ಮುಟ್ಟುಗೋಲು, ಸ್ವತ್ತುಗಳ ಮತ್ತು ಬ್ಯಾಂಕ್ ಖಾತೆಗಳ ಮುಟ್ಟುಗೋಲು ಮುಂತಾದ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
8
+ ಅಮೆರಿಕ ನೆಲೆಗಳ ಛಾಯಾಚಿತ್ರ ತೆಗೆದಿದೆಯಂತೆ ಉತ್ತರ ಕೊರಿಯಾ ಉಪಗ್ರಹ
9
+ ತೆರಿಗೆ ವಂಚನೆಯನ್ನು ತಡೆಯುವ ನಿಟ್ಟಿನಲ್ಲಿ ಇಲಾಖೆ ನಿರಂತರ ಪ್ರಯತ್ನ ನಡೆಸುತ್ತಿದೆ. ಅದರ ಭಾಗವಾಗಿ ಈ ರೀತಿಯ ಮೋಸಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತಿದೆ. ತೆರಿಗೆ ವಂಚನೆಗೆ ಸಂಬಂಧಿಸಿದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡು ಬಂದರೂ ಮಾಹಿತಿ ನೀಡುವಂತೆ ಸಾರ್ವಜನಿಕರಲ���ಲಿ ಮನವಿ ಮಾಡಿದ್ದಾರೆ.
eesanje/url_46_302_5.txt ADDED
@@ -0,0 +1,8 @@
 
 
 
 
 
 
 
 
 
1
+ ಡಿಕೆಶಿ ಸಿಬಿಐ ಪ್ರಕರಣ : ಸಚಿವ ಸಂಪುಟದ ತೀರ್ಮಾನ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್
2
+ ಬೆಂಗಳೂರು,ನ.28- ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲಿನ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಪೂರ್ವಾನುಮತಿಯನ್ನು ಹಿಂಪಡೆದಿರುವ ರಾಜ್ಯ ಸಚಿವ ಸಂಪುಟದ ತೀರ್ಮಾನವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೈಕೋರ್ಟ್‍ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.
3
+ ವಿಶೇಷವೆಂದರೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಹೈಕೋರ್ಟ್‍ನ ಮುಖ್ಯನ್ಯಾಯಮೂರ್ತಿ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಇದರ ಬೆನ್ನಲ್ಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದು, ಸಚಿವ ಸಂಪುಟದಲ್ಲಿ ಡಿ.ಕೆ.ಶಿವಕುಮಾರ್ ಮೇಲಿನ ಅಕ್ರಮ ಆಸ್ತಿ ಪ್ರಕರಣವನ್ನು ಸಿಬಿಐ ತನಿಖೆ ವಾಪಸ್ ಪಡೆದಿರುವುದು ಸರ್ಕಾರದ ಕ್ರಮ ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ.
4
+ ತಮ್ಮ ಅರ್ಜಿಯನ್ನು ಸೀಮಿತವಾಗಿ ವಿಚಾರಣೆ ನಡೆಸಬೇಕೆಂದು ಮನವಿ ಮಾಡಿರುವ ಯತ್ನಾಳ್, ಈಗಾಗಲೇ ಪ್ರಕರಣವು ಅಂತಿಮ ಹಂತದಲ್ಲಿದೆ. ಸ್ವತಃ ಸಿಬಿಐ ತನಿಖಾ ತಂಡ 80ರಿಂದ 90ರಷ್ಟು ವಿಚಾರಣೆ ಮುಗಿದಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ಕೊಟ್ಟಿದೆ. ಆದರೆ, ಸಚಿವ ಸಂಪುಟವು ವಿಚಾರಣೆ ಮುಕ್ತಾಯ ಹಂತದಲ್ಲಿರುವಾಗ ಪೂರ್ವಾನುಮತಿಯನ್ನು ವಾಪಸ್‍ಪಡೆದಿರುವುದು ವಿಚಾರಣೆಯನ್ನು ನಿಷಲಗೊಳಿಸುವ ಯತ್ನವಾಗಿದೆ. ಇದು ಕಾನೂನು ಬಾಹಿರವಾಗಿದ್ದು, ತಮ್ಮ ಮೇಲ್ಮನವಿ ಅರ್ಜಿಯನ್ನು ನ್ಯಾಯಾಲಯವು ಗಂಭೀರವಾಗಿ ಪರಿಗಣಿಸಬೇಕೆಂದು ಮನವಿ ಮಾಡಿದ್ದಾರೆ.
5
+ ಬಿಜೆಪಿ ಅಸಮಾಧಾನಿತರೊಂದಿಗೆ ವರಿಷ್ಠರ ಸಮಾಲೋಚನೆ
6
+ ಸಂಪುಟದ ತೀರ್ಮಾನವನ್ನು ನೋಡಿದರೆ ಪ್ರಕರಣವನ್ನು ಮೊಟಕುಗೊಳಿಸುವ ದುರುದ್ದೇಶ ಹೊಂದಿದೆ. ಒಂದು ಬಾರಿ ತನಿಖಾ ಸಂಸ್ಥೆಗೆ ರಾಜ್ಯ ಸರ್ಕಾರ ವಹಿಸಿದ ಮೇಲೆ ಅದನ್ನು ಹಿಂಪಡೆಯುವ ಅಧಿಕಾರ ಯಾವುದೇ ಸರ್ಕಾರಕ್ಕೆ ಇರುವುದಿಲ್ಲ. ಸರ್ಕಾರದ ನಡೆ ಪೂರ್ವಾಗ್ರಹ ಪೀಡಿತವಾಗಿದೆ ಎಂದು ಮೇಲ್ಮನವಿಯಲ್ಲಿ ಉಲ್ಲೇಖಿಸಲಾಗಿದೆ.
7
+ ತಮ್ಮ ಮೇಲ್ಮನವಿಯಲ್ಲಿ ಸಿಕ್ಕಿಂ ಪ್ರಕರಣವನ್ನು ಉಲ್ಲೇಖ ಮಾಡಿರುವ ಯತ್ನಾಳ್, ಅಂದು ಅಲ್ಲಿನ ಸರ್ಕಾರ ಮುಖ್ಯಮಂತ್ರಿ ವಿರುದ್ಧ ಸಿಬಿಐ ತನಿಖೆಗೆ ಆದೇಶ ನೀಡಿತ್ತು. ಬಳಿಕ ಮತ್ತೊಂದು ಸರ್ಕಾರ ಬಂದಾಗ ಪ್ರಕರಣವನ್ನು ಹಿಂಪಡೆಯಿತು.
8
+ ಅಂತಿಮವಾಗಿ ಸುಪ್ರೀಂಕೋರ್ಟ್ ಒಂದು ಬಾರಿ ವಿಚಾರಣೆಗೆ ಆದೇಶ ನೀಡಿದ ನಂತರ ಹಿಂಪಡೆಯಲು ಯಾವುದೇ ಸರ್ಕಾರಗಳಿಗೆ ಅವಕಾಶವಿಲ್ಲ ಎಂದು ತೀರ್ಪು ಕೊಟ್ಟಿದೆ. ಇದು ಕೂಡ ಅಕ್ರಮ ಆಸ್ತಿ ಪ್ರಕರಣವಾಗಿರುವುದರಿಂದ ಸಂಪುಟದ ತೀರ್ಮಾನವು ಸಂಪೂರ್ಣವಾಗಿ ಕಾನೂನಿಗೆ ವಿರುದ್ಧವಾಗಿದೆ. ತಮ್ಮ ಮನವಿಯನ್ನು ನ್ಯಾಯಾಲಯ ಪರಿಗಣಿಸಿ ವಿಚಾರಣೆ ನಡೆಸಬೇಕೆಂದು ಅವರು ಮನವಿ ಮಾಡಿದ್ದಾರೆ.
eesanje/url_46_302_6.txt ADDED
@@ -0,0 +1,7 @@
 
 
 
 
 
 
 
 
1
+ ದೇಶದಲ್ಲಿ ಬ್ರಾಂಡ್ ಬೆಂಗಳೂರನ್ನು ನಂ.1 ಆಗಿಸಬೇಕಿದೆ : ಸಿದ್ದರಾಮಯ್ಯ
2
+ ಬೆಂಗಳೂರು, ನ.28- ದೇಶದಲ್ಲಿ ಬ್ರಾಂಡ್ ಬೆಂಗಳೂರನ್ನು ನಂಬರ್ ಒನ್ ಆಗಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಮುನಿಸಿಪಾಲಿಕಾ-2023 17 ನೇ ಅಂತಾರಾಷ್ಟ್ರೀಯ ಸಮ್ಮೇಳನ ಹಾಗೂ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶ ಸುಸ್ಥಿರವಾಗಿ ಬೆಳೆಯಬೇಕಾದರೆ ನಗರ-ಗ್ರಾಮೀಣ ಭಾರತವೂ ಸುಸ್ಥಿರ ಬೆಳವಣಿಗೆ ಕಾಣಬೇಕು. ರಾಜ್ಯದ 316 ನಗರಗಳಿಗೆ ಅಗತ್ಯ ಎಲ್ಲಾ ನಾಗರಿಕ ಸವಲತ್ತುಗಳನ್ನು ನಮ್ಮ ಸರ್ಕಾರ ಒದಗಿಸುತ್ತಿದೆ ಎಂದರು.
3
+ ರಾಜ್ಯದಲ್ಲಿ ಶೇ.38 ರಷ್ಟು ಮಂದಿ ನಗರ ಪ್ರದೇಶಗಳಲ್ಲಿ ನೆಲೆಸಿದ್ದಾರೆ. ಇವರೆಲ್ಲರಿಗೂ ಟ್ರಾಫಿಕ್ ಕಿರಿಕಿರಿ ಇಲ್ಲದ, ಸುಗಮ ಸಂಚಾರ, ಅಗತ್ಯ ಕಸ ವಿಲೇವಾರಿ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ ಸೇರಿ ನಾಗರಿಕ ಸವಲತ್ತುಗಳನ್ನು ಒದಗಿಸುವುದು ಸವಾಲಿನ ಕೆಲಸ. ಇದನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿ ಎಂದರು.
4
+ ನಾವು ನಗರ ಪ್ರದೇಶದ ಕುಡಿಯುವ ನೀರಿಗೆ 9 ಸಾವಿರ ಕೋಟಿ ಕೊಡಲು ನಿರ್ಧರಿಸಿರುವುದು ಸೇರಿದಂತೆ ನಗರ ಜೀವನಮಟ್ಟ ಇನ್ನಷ್ಟು ಸುಗಮಗೊಳಿಸಲು ಅಗತ್ಯ ಇರುವ ಎಲ್ಲಾ ವಲಯಗಳಿಗೂ ಸರ್ಕಾರ ಅಗತ್ಯ ಅನುದಾನವನ್ನು ಒದಗಿಸುತ್ತಿದೆ ಎಂದರು.
5
+ ಜನರ ನಿದ್ದೆ ಕೆಡಿಸಿದ್ದ ನರಭಕ್ಷಕ ಹುಲಿ ಸೆರೆ
6
+ ಈ ಬಾರಿ ನಾವು ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ತೆರೆಯುತ್ತಿದ್ದೇವೆ. ಬೆಲೆ ಏರಿಕೆ ಹೆಚ್ಚಾಗಿದ್ದರೂ ಹಿಂದಿನ ದರದಲ್ಲೇ ಬಡವರು, ಮಧ್ಯಮ ವರ್ಗದವರಿಗೆ ಊಟ-ಉಪಹಾರದ ವ್ಯವಸ್ಥೆ ಕಲ್ಪಿಸಿದ್ದೇವೆ ಎಂದು ವಿವರಿಸಿದರು.
7
+ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್, ಪೌರಾಡಳಿತ ಸಚಿವ ರಹೀಮ್ ಖಾನ್, ಶಾಸಕ ತಮ್ಮಯ್ಯ, ಎಂಎಲ್ಸಿ ಎಸ್.ರವಿ, ಆಸ್ಟ್ರೇಲಿಯಾ ವ್ಯಾಪಾರ ಮತ್ತು ಹೂಡಿಕೆ ಆಯೋಗದ ಅಧ್ಯಕ್ಷೆ ಕ್ಯಾಥರಿನ್ ಗಲೇಘರ್ ನಾಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಡಿಎ ಆಯುಕ್ತ ಕಮಿಷನರ್ ಜಯರಾಮ್ ಮತ್ತಿತರರು ಭಾಗವಹಿಸಿದ್ದರು.
eesanje/url_46_302_7.txt ADDED
@@ -0,0 +1,9 @@
 
 
 
 
 
 
 
 
 
 
1
+ ಭರ್ತಿ 5 ವರ್ಷಗಳ ಗೃಹಲಕ್ಷ್ಮಿ ಹಣದ ಕಂತನ್ನು ಚಾಮುಂಡೇಶ್ವರಿಗೆ ಸಮರ್ಪಿಸಿದ ಸರ್ಕಾರ
2
+ ಮೈಸೂರು, ನ.28- ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಯ ಭರ್ತಿ ಐದು ವರ್ಷಗಳ ಕಂತನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಇಂದು ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಸಮರ್ಪಿಸಿದರು.
3
+ ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ 59 ತಿಂಗಳ ಕಂತಿನ ಹಣ ಒಟ್ಟು 1.18 ಲಕ್ಷ ರೂ.ಗಳನ್ನು ಸಚಿವೆ ಹೆಬ್ಬಾಳ್ಕರ್ ವೈಯಕ್ತಿಕವಾಗಿ ನೀಡಿದ್ದಾರೆ. ಇಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು, ಸಚಿವರ ಪರವಾಗಿ ಹಣದ ಚೆಕ್ ಅರ್ಪಿಸುವ ಮೂಲಕ ಸರ್ಕಾರದ ಹರಕೆ ತೀರಿಸಿದರು.
4
+ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನಸಭಾ ಚುನಾವಣೆಗೂ ಪೂರ್ವ ಮೇ 9 ರಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ದಿನೇಶ್ ಗೂಳಿಗೌಡ ಹಾಗೂ ಇತರ ಕಾಂಗ್ರೆಸ್ ನಾಯಕರು ಚಾಮುಂಡಿ ದೇವಿ ಸನ್ನಿಯಲ್ಲಿ ಗ್ಯಾರಂಟಿ ಕಾರ್ಡ್ ಗಳನ್ನಿಟ್ಟು ಹರಕೆ ಕಟ್ಟಿದ್ದರು.
5
+ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಶಕ್ತಿ ನೀಡುವಂತೆ ತಾಯಿಯಲ್ಲಿ ಬೇಡಿಕೊಂಡಿದ್ದರು. ಅದರಂತೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಅಭೂತಪೂರ್ವ ಜಯಭೇರಿ ಬಾರಿಸಿ ಅಧಿಕಾರವನ್ನು ಹಿಡಿದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಕಳೆಯುವುದರೊಳಗೆ ಭರವಸೆ ನೀಡಿದ್ದಂತೆ ಐದರಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ.
6
+ ಚೀನಾ ನ್ಯೂಮೋನಿಯ ಆತಂಕ, ಭಾರತದಲ್ಲಿ ಹೈ ಅಲರ್ಟ್ ಘೋಷಣೆ
7
+ ಆಗಸ್ಟ್ 30 ರಂದು ದೇವಿಯ ದರ್ಶನ ಮಾಡಿ ಹರಕೆ, ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗಿತ್ತು, ಅದೇ ದಿನ ದೇವಿಗೆ ಮೊದಲ ಕಂತಿನ ಹಣವನ್ನು ಸಮರ್ಪಿಸಲಾಗಿತ್ತು ಎಂದು ತಿಳಿಸಿದ್ದಾರೆ. ಪ್ರತಿ ತಿಂಗಳು ತಾಯಿ ಚಾಮುಂಡೇಶ್ವರಿ ದೇವಿಗೆ ಗೃಹಲಕ್ಷ್ಮಿ ಕಂತನ್ನು ನೀಡುವಂತೆ ಶಾಸಕ ದಿನೇಶ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಲ್ಲಿ ಮನವಿ ಮಾಡಿದ್ದರು. ಅವರು ತಕ್ಷಣ ಈ ಕುರಿತು ಕ್ರಮ ವಹಿಸುವಂತೆ ಸೂಚಿಸಿದ್ದರು. ಮೊದಲ ಕಂತು ಸಮರ್ಪಿಸಿದ್ದ ಬಳಿಕ ಉಳಿದ 59 ತಿಂಗಳ ಹಣವನ್ನು ಒಮ್ಮೆಲೆ ದೇವಿಗೆ ನಾನು ವೈಯಕ್ತಿಕವಾಗಿ ಸಲ್ಲಿಸುತ್ತಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
8
+ ಇದುವರೆಗೆ ರಾಜ್ಯಾದ್ಯಂತ 1 ಕೋಟಿ 17 ಲಕ್ಷ ಯಜಮಾನಿಯರು ಗೃಹಲಕ್ಷ್ಮಿ ಯೋಜನೆ ಮೂಲಕ ಹಣ ಪಡೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 1 ಕೋಟಿ 10 ಲಕ್ಷ ಯಜಮಾನಿಯರ ಖಾತೆಗಳಿಗೆ ನೇರವಾಗಿ ಹಣ ಜಮಾ ಆಗುತ್ತಿದೆ. ಯೋಜನೆಗಾಗಿ ನಮ್ಮ ಸರ್ಕಾರ 11,200 ಕೋಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಸುಮಾರು 2,100 ಕೋಟಿ ರೂ.ಗಳನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತಿದೆ. ಇದುವರೆಗೆ ಸುಮಾರು 6 ಸಾವಿರ ಕೋಟಿ ರೂ. ಜಮಾ ಆಗಿದೆ ಎಂದು ಸಚಿವರು ವಿವರಿಸಿದ್ದಾರೆ.
9
+ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಮಾಡಿದ ವಾಗ್ದಾನದಂತೆ ದೇವಿಗೆ ಹಣ ಸಲ್ಲಿಸುತ್ತಿದ್ದೇವೆ. ಮುಂದಿನ ಐದು ವರ್ಷ ಕೂಡ ನಿರಂತರವಾಗಿ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಲಿವೆ. ಮಾತ್ರವಲ್ಲ 2028 ರ ವಿಧಾನಸಭೆ ಚುನಾವಣೆಯಲ್ಲೂ ನಾವು ಮತ್ತೆ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆಗಳನ್ನು ಪುನಃ, ಪುನಃ ಮುಂದುವರಿಸಲಿದ್ದೇವೆ. ಯೋಜನೆ 3 ತಿಂಗಳಿಗೆ ನಿಲ್ಲುತ್ತದೆ, 6 ತಿಂಗಳಿಗೆ ಸ್ಥಗಿತವಾಗುತ್ತದೆ. ಲೋಕಸಭಾ ಚುನಾವಣೆಯ ನಂತರ ಮುಕ್ತಾಯವಾಗುತ್ತದೆ ಎಂದು ವಿರೋಧ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಅವುಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.
eesanje/url_46_302_8.txt ADDED
@@ -0,0 +1,9 @@
 
 
 
 
 
 
 
 
 
 
1
+ ರಾಜ್ಯದಲ್ಲಿ ನಾಳೆಯಿಂದ 2 ದಿನ ಮಳೆ ಸಾಧ್ಯತೆ
2
+ ಬೆಂಗಳೂರು, ನ.28- ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ನಾಳೆಯಿಂದ ಎರಡು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಆದರೆ, ಭಾರೀ ಮಳೆಯಾ ಗುವ ಮುನ್ಸೂಚನೆಗಳಿಲ್ಲ. ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ್ಗೆ ಬಲವಾದ ಮೇಲ್ಮೈ ಗಾಳಿ ಬೀಸಲಿದೆ. ಕೆಲವೆಡೆ ಚದುರಿದಂತೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.
3
+ ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದು ತೀವ್ರ ಸ್ವರೂಪ ಪಡೆದು ಲಘು ಚಂಡಮಾರುತ ಉಂಟಾಗುವ ಸಂಭವವಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ತಮಿಳುನಾಡು ಕರಾವಳಿಗೆ ಹೊಂದಿಕೊಂಡಂತಿರುವ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಆದರೆ, ರಾಜ್ಯದ ದಕ್ಷಿಣ ಹಾಗೂ ಪೂರ್ವ ಭಾಗದ ಕೆಲವು ಜಿಲ್ಲೆಗಳಲ್ಲಿ ಗುರುವಾರದವರೆಗೂ ಹಗುರದಿಂದ ಸಾಧಾರಣಾ ಮಳೆಯಾಗುವ ಲಕ್ಷಣಗಳಿವೆ ಎಂದು ಹೇಳಿದ್ದಾರೆ.
4
+ ಅಮೆರಿಕ ನೆಲೆಗಳ ಛಾಯಾಚಿತ್ರ ತೆಗೆದಿದೆಯಂತೆ ಉತ್ತರ ಕೊರಿಯಾ ಉಪಗ್ರಹ
5
+ ವಾಯುಭಾರ ಕುಸಿತವು ಚಂಡಮಾರುತದ ಸ್ವರೂಪ ಪಡೆದರೂ ರಾಜ್ಯದ ಮೇಲೆ ಅದರ ಪರಿಣಾಮ ಹೆಚ್ಚಾಗಿರುವುದಿಲ್ಲ. ತಮಿಳುನಾಡು ಕರಾವಳಿ ಸನಿಹಕ್ಕೆ ಬರುತ್ತಿದ್ದಂತೆ ಚಂಡಮಾರುತವು ಪೂರ್ವ ಹಾಗೂ ಈಶಾನ್ಯದ ಕಡೆಗೆ ತಿರುವು ಪಡೆದು ಚಲಿಸುವ ಸಾಧ್ಯತೆಗಳು ಹೆಚ್ಚಾಗಿವೆ.
6
+ ಹೀಗಾಗಿ ಅದರ ಪ್ರಭಾವದಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಉಂಟಾಗಬಹುದು. ಒಂದೆರಡು ಕಡೆ ಚದುರಿದಂತೆ ತುಂತುರು ಮಳೆ ನಿರೀಕ್ಷಿಸಬಹುದು. ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ವಿರಳ. ವಾಯುಭಾರ ಕುಸಿತ ಯಾವ ರೀತಿ ಮಾರ್ಪಾಡಾಗಲಿದೆ ಎಂಬುದರ ಮೇಲೆ ಮಳೆ ಬರುವಿಕೆಯೂ ಅವಲಂಭಿತವಾಗಿದೆ ಎಂದು ತಜ್ಞರು ತಿಳಿಸಿದ್ದಾರೆ.
7
+ ನೈರುತ್ಯ ಮುಂಗಾರಿನಂತೆ ಈಶಾನ್ಯ ಹಿಂಗಾರು ಮಳೆಯೂ ಕೈಕೊಟ್ಟಿದೆ. ಇದರಿಂದ ಮುಂಗಾರು ಹಂಗಾಮಿನಂತೆ ಹಿಂಗಾರು ಹಂಗಾಮಿನಲ್ಲೂ ಬರದ ಕರಾಳ ಛಾಯೆ ಮುಂದುವರೆದಿದೆ. ಇದರಿಂದ ಹಿಂಗಾರಿನಲ್ಲೂ ವಾಡಿಕೆ ಪ್ರಮಾಣದ ಮಳೆಯಾಗಿಲ್ಲ. ಬಿತ್ತನೆಯಾಗಿದ್ದ ಅಲ್ಪ, ಸ್ವಲ್ಪ ಬೆಳೆಗಳು ತೇವಾಂಶದ ಕೊರತೆಯಿಂದ ಒಣಗುತ್ತಿವೆ.
8
+ ಮದ್ರಾಸ್ ಐಐಟಿ ವಿದ್ಯಾರ್ಥಿ ಆತ್ಮಹತ್ಯೆ, ಪ್ರೊಫೇಸರ್ ಅಮಾನತು
9
+ ರಾಜ್ಯದಲ್ಲಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗಿದೆ. ಅಲ್ಲದೆ, ಒಣ ಹವೆ ಎಲ್ಲೆಡೆ ಮುಂದುವರೆದಿದೆ.ಪ್ರತಿಕೂಲ ಹವಾಮಾನದಿಂದ ಚಳಿಗಾಲ ಶುರುವಾಗಿ ತಿಂಗಳಾದರೂ ವಾಡಿಕೆಯಂತೆ ಇಬ್ಬನಿಯೂ ಬೀಳುತ್ತಿಲ್ಲ ಎಂದು ರೈತ ಸಮುದಾಯ ಆತಂಕಗೊಂಡಿದೆ. ಸಂಜೆ ಹಾಗೂ ಮುಂಜಾನೆ ಸಾಕಷ್ಟು ಇಬ್ಬನಿ ಬೀಳುತ್ತಿತ್ತು. ಇಬ್ಬನಿಗೆ ಕೆಲವೊಂದು ಬೆಳೆಗಳು ಕಾಳು ಕಟ್ಟುತ್ತಿದ್ದವು. ಆದರೆ, ಮೋಡ ಮುಸುಕಿದ ವಾತಾವರಣದಿಂದ ಇಬ್ಬನಿ ಕಡಿಮೆಯಾಗಿದೆ. ಅಲ್ಲದೆ, ಬೆಳೆಗಳಿಗೆ ಕೀಟ ಹಾಗೂ ರೋಗ ���ಾವಳಿ ಹೆಚ್ಚಾಗಿದೆ. ಹೀಗಾಗಿ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.
eesanje/url_46_302_9.txt ADDED
@@ -0,0 +1,8 @@
 
 
 
 
 
 
 
 
 
1
+ ಉರ್ದು ಶಾಲೆ ಸ್ಥಳಾಂತರ ಮಾಡುವಂತೆ ಒತ್ತಡ : ಸಿಎಂಗೆ ದೂರು
2
+ ಬೆಂಗಳೂರು,ನ.27- ಕನ್ನಡ ಶಾಲೆಯ ಜೊತೆಯಲ್ಲಿ ನಡೆಯುತ್ತಿರುವ ಉರ್ದು ಶಾಲೆಯನ್ನು ಸ್ಥಳಾಂತರ ಮಾಡುವಂತೆ ಒತ್ತಡ ಹಾಕಲಾಗುತ್ತಿದೆ ಎಂದು ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯನವರಲ್ಲಿ ಮನವಿ ಮಾಡಿದರು.
3
+ ಇಂದು ಬೆಳಗ್ಗೆ ಜನತಾದರ್ಶನಕ್ಕೆ ಆಗಮಿಸಿದ ಶಾಲಾಭಿವೃದ್ಧಿ ಸಮಿತಿಯ ನಾಲ್ವರು ಸದಸ್ಯರು ಲಿಖಿತದೂರು ನೀಡಿದರು. 12 ವರ್ಷಗಳ ಹಿಂದೆ ಮಳೆ ಬಂದು ನೀರು ನುಗ್ಗಿದ ಕಾರಣಕ್ಕೆ ಹರಿಹರದ ಗಂಗಾನಗರದಲ್ಲಿರುವ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯನ್ನು ತಳವಾರ ಕೇರಿಯ ಕನ್ನಡ ಶಾಲೆಗೆ ಸ್ಥಳಾಂತರಿಸಲು ಸೂಚಿಸಲಾಗಿತ್ತು.
4
+ ಬಡ್ಡಿ ದಂಧೆಗೆ ಕಡಿವಾಣ ಹಾಕಲು ಕ್ರಮ : ಗೃಹ ಸಚಿವ ಪರಮೇಶ್ವರ್
5
+ ಆಗಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೌಖಿಕ ಆದೇಶ ಮೇಲೆ ಶಾಲೆ ಸ್ಥಳಾಂತರಗೊಂಡಿದೆ. ಕನ್ನಡ ಶಾಲೆಯಲ್ಲಿ ಆರು ಕೊಠಡಿಗಳಿವೆ. ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ. ಆದರೆ ಸ್ಥಳೀಯ ಶಾಸಕರಾದ ಬಿಜೆಪಿಯ ಹರೀಶ್ ಅವರು ಶಾಲೆಯನ್ನು ಬೇರೆಡೆ ಸ್ಥಳಾಂತರ ಮಾಡಲು ಬಿಇಒ ಒತ್ತಡ ಹಾಕಿಸುತ್ತಿದ್ದಾರೆ. ಪಕ್ಕದಲ್ಲೇ ದೇವಸ್ಥಾನವಿದೆ.
6
+ ಹಾಗಾಗಿ ಉರ್ದು ಶಾಲೆ ಇಲ್ಲಿರುವುದು ಬೇಡ ಎನ್ನುತ್ತಿದ್ದಾರೆಂದು ಇಸ್ಮಾಯಿಲ್ ಜಬೀವುಲ್ಲಾ ದೂರು ನೀಡಿದರು. ರಾಣೆಬೆನ್ನೂರಿನ ಜೀವಬೆಳಕು ಅಂಧ ಮಕ್ಕಳ ಶಾಲೆಗೆ ಸಿಎ ನಿವೇಶನ ಮಂಜೂರಾಗಿದೆ. 9 ಲಕ್ಷ ರೂ. ಪಾವತಿ ಮಾಡುವಂತೆ ಸೂಚನೆ ಕೊಟ್ಟಿದ್ದಾರೆ. ಹಣ ಪಾವತಿ ಮಾಡಲು ಶಾಲೆ ಆಡಳಿತ ಮಂಡಳಿಗೆ ಶಕ್ತಿ ಇಲ್ಲ ವಿನಾಯ್ತಿ ಕೊಡಿ ಎಂದು ಸಿಎಂಗೆ ಮನವಿ ಸಲ್ಲಿಸಲಾಯಿತು. ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಸಿದ್ದರಾಮಯ್ಯ ಭರವಸೆ ಕೊಟ್ಟರು.
7
+ ರಾಮನಗರ ಜಿಲ್ಲೆಯ ರಾಜಮ್ಮ ಎಂಬುವರು ತಮ್ಮ ಜಮೀನನ್ನು ಮೈದುನ ಒತ್ತುವರಿ ಮಾಡಿಕೊಂಡಿದ್ದಾರೆ. ಜಮೀನಿನಲ್ಲಿದ್ದ ಬಾವಿಯನ್ನು ಮುಚ್ಚಿದ್ದಾರೆ. ತಮಗೆ ಗಂಡುಮಕ್ಕಳಿಲ್ಲ. ಹೆಣ್ಣು ಮಕ್ಕಳು ಮದುವೆಯಾಗಿ ಗಂಡನ ಮನೆಯಲ್ಲಿದ್ದಾರೆ. ಒತ್ತುವರಿಯಾಗಿರುವ ಜಮೀನನ್ನು ಬಿಡಿಸಿಕೊಡುವಂತೆ ಮನವಿ ಮಾಡಿಕೊಂಡರು. ಆನ್‍ಲೈನ್‍ನಲ್ಲಿ ಹಾಜರಿದ್ದಂಥ ರಾಮನಗರ ಜಿಲ್ಲಾಧಿಕಾರಿಯವರಿಗೆ ಮುಖ್ಯಮಂತ್ರಿ ತಕ್ಷಣವೇ ಸ್ಪಂದಿಸುವಂತೆ ಸೂಚನೆ ಕೊಟ್ಟರು.
8
+ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ಆಧಾರಿತ ಶುಶ್ರೂಕರು ದಿನಗೂಲಿ ಆಧಾರದಲ್ಲಿ ನೀಡುತ್ತಿರುವ ವೇತನವನ್ನು ಹೆಚ್ಚಿಸುವಂತೆ ಮನವಿ ಮಾಡಿದರು. ಜನತಾದರ್ಶನದಲ್ಲಿ ಬಹುತೇ ಅರ್ಜಿಗಳು ಜಮೀನು ಒತ್ತುವರಿ, ನಿವೇಶನ ಕಬಳಿಕೆಯಂತಹ ಗಂಭೀರ ಸಮಸ್ಯೆಗಳಿಗೆ ಸಂಬಂಧಿಸಿದ್ದಾಗಿದ್ದವು.
eesanje/url_46_303_1.txt ADDED
@@ -0,0 +1,7 @@
 
 
 
 
 
 
 
 
1
+ ಸಿಎಂಗೆ ಜನತಾ ದರ್ಶನದಲ್ಲಿ ಎದುರಾಗುವ ಪ್ರಶ್ನೆಗಳ ಪಟ್ಟಿ ಮಾಡಿದ ಬಿಜೆಪಿ
2
+ ಬೆಂಗಳೂರು,ನ.27- ತನ್ನಿಂದ ಕೊಡಲು ಅಕ್ಕಿಯೇ ಇಲ್ಲ ಎನ್ನುತ್ತಿರುವ ಎಐಸಿಸಿಯೂ ಕಲೆಕ್ಷನ್ ಆಸೆಗೆ ಟನ್‍ಗಟ್ಟಲೆ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುವ ಹಂತಕ್ಕೆ ತಲುಪಿದೆ ಎಂದು ಬಿಜೆಪಿ ತೀವ್ರ ವಾಗ್ದಳಿ ನಡೆಸಿದೆ.
3
+ ಈ ಕುರಿತು ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಸಾಲು ಸಾಲು ಪೋಸ್ಟ್ ಮಾಡಿರುವ ಬಿಜೆಪಿ, ಅಕ್ಕಿ ಹೆಸರಿನಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ಮೋಸದ ರಾಜಕಾರಣ ಮಾತ್ರ ಮಾಡುತ್ತಿಲ್ಲ, ಕಳ್ಳತನಕ್ಕೇ ಇಳಿದುಬಿಟ್ಟಿದೆ ಎಂದು ಟೀಕಾ ಪ್ರಹಾರ ನಡೆಸಿದೆ.
4
+ ಕನ್ನಡಿಗರ ಕಿವಿ ಮೇಲೆ ಹೂವಿಟ್ಟು ಛೀ ಥೂ ಎನಿಸಿಕೊಳ್ಳುತ್ತಿರುವ ರಾಜ್ಯದ ಮುಖ್ಯಮಂತ್ರಿ@siddaramaiahಅವರಿಗೆ ಜನತಾ ದರ್ಶನದಲ್ಲಿ ಎದುರಾಗುವ ಪ್ರಶ್ನೆಗಳು:▪ ಮೋದಿ ಸರ್ಕಾರದ 5 ಕೆಜಿ ಅಕ್ಕಿ ನೀವು ಕೊಡುತ್ತಿಲ್ಲ ಏಕೆ?▪ ನೀವೇ ಹೇಳಿದ ಹತ್ತು ಕೆಜಿ ಅಕ್ಕಿ ಕೊಟ್ಟಿಲ್ಲ ಏಕೆ?▪ ಗೃಹ ಲಕ್ಷ್ಮಿ ಹೆಸರಲ್ಲಿ ಸ್ವಾಭಿಮಾನಿ ಮಹಿಳೆಯರನ್ನು…
5
+ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಇಂಧನ ಇಲಾಖೆ ಮಾತ್ರವಲ್ಲ. ಸಚಿವ ಕೆ.ಹೆಚ್.ಮುನಿಯಪ್ಪ ಅವರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲೂ ಹೆಗ್ಗಣಗಳ ಕಾಟ ಜೋರಾಗಿದೆ. ಲಂಚ ಕೊಡುವುದಕ್ಕಾಗಿಯೇ ಅಕ್ರಮ ಅಕ್ಕಿ ಮಾರಾಟ ಮಾಡುತ್ತಿರುವುದು ಈಗೇನೂ ಗುಟ್ಟಾಗಿ ಉಳಿದಿಲ್ಲ ಎಂದು ಹೇಳಿದೆ.
6
+ ಮಾ.30ರೊಳಗೆ ಸಿದ್ಧವಾಗಲಿದೆ ಅಂತಿಮ ಕರಡು : ಅಜಯ್ ಮಿಶ್ರಾ
7
+ ಕನ್ನಡಿಗರ ಕಿವಿ ಮೇಲೆ ಹೂವಿಟ್ಟು ಛೀ ಥೂ ಎನಿಸಿಕೊಳ್ಳುತ್ತಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜನತಾ ದರ್ಶನದಲ್ಲಿ ಎದುರಾಗುವ ಪ್ರಶ್ನೆಗಳನ್ನು ಬಿಜೆಪಿ ಮುಂದಿಟ್ಟಿದೆ.
eesanje/url_46_303_10.txt ADDED
@@ -0,0 +1,8 @@
 
 
 
 
 
 
 
 
 
1
+ ಮಾನವೀಯತೆಯೇ ಸಂವಿಧಾನದ ಆಶಯ : ಸಿದ್ದರಾಮಯ್ಯ
2
+ ಶಾಲೆಗಳಲ್ಲಿ ಸಂವಿಧಾನ ಪೀಠಿಕೆಯನ್ನು ಬೋಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಸಂವಿಧಾನದ ಪ್ರಸ್ತಾವನೆಯನ್ನು ಓದುವುದರಿಂದ ಮಕ್ಕಳಿಗೆ ಸಂವಿಧಾನದ ಅರಿವಾಗುತ್ತದೆ. ಸರ್ಕಾರದ ಈ ಕ್ರಮದಿಂದ ಇಂದಿನ ಮಕ್ಕಳು ಮುಂದಿನ ಪ್ರಜೆಗಳಾಗಿ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ನಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
3
+ ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು, ದೇಶದ ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆಯೇ ಸಂವಿಧಾನದ ಆಶಯ ಎಂದು ತಿಳಿಸಿದರು. ಇಂದು ಸಂವಿಧಾನ ಅಂಗೀಕರಾವಾದ ದಿನ. 1949ರ ನವೆಂಬರ್ 26ರಂದು ಭಾರತದ ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿದ್ದ ಡಾ.ಬಾಬುರಾಜೇಂದ್ರ ಪ್ರಸಾದ್ ಅವರಿಗೆ ಭಾರತದ ಸಂವಿಧಾನವನ್ನು ಸಲ್ಲಿಸಿದ ನಂತರ ಸಂವಿಧಾನ ಅಂಗೀಕಾರವಾಯಿತು. ಆದ್ದರಿಂದ ಈ ದಿನವನ್ನು ಸಂವಿಧಾನ ದಿನವೆಂದು ಇಡೀ ದೇಶದಲ್ಲಿ ಆಚರಿಸಲಾಗುತ್ತದೆ ಎಂದರು.
4
+ ಬಿಜೆಪಿಯಿಂದ ಸಂವಿಧಾನ ಹತ್ತಿಕ್ಕುವ ಕಾರ್ಯ ನಡೆಯುತ್ತಿದೆ : ಖರ್ಗೆ
5
+ ಡಾ.ಬಾಬು ರಾಜೇಂದ್ರ ಪ್ರಸಾದ್, ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನಾ ಸಮಿತಿಯ ಎಲ್ಲ ಸದಸ್ಯರನ್ನು ಇಂದು ನೆನಪಿಸಿಕೊಳ್ಳಬೇಕು. ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು ಎಂದು ಹೇಳಿದರು.
6
+ ಭಾರತದ ಸಂವಿಧಾನ ಶ್ರೇಷ್ಠವಾದುದು. ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ, ಸರಿಯಾದವರ ಕೈಗಳಲ್ಲಿ ಸಂವಿಧಾನವಿರದಿದ್ದರೆ ಸಂವಿಧಾನ ಸಾರ್ಥಕವಾಗುವುದಿಲ್ಲ ಎಂದು ಅಂಬೇಡ್ಕರ್ ಎಚ್ಚರಿಕೆಯ ಮಾತುಗಳನ್ನು ನುಡಿದಿದ್ದರು. ಸಂವಿಧಾನದ ಪರವಾಗಿರುವವರ ಕೈಗಳಲ್ಲಿ ಸಂವಿಧಾನ ಇದ್ದಾಗ ಮಾತ್ರ, ಅದರ ಧ್ಯೇಯೋದ್ದೇಶಗಳನ್ನು ಸಾಸಿದಂತಾಗುತ್ತದೆ ಎಂದರು.
7
+ ರಾಷ್ಟ್ರಕವಿ ಕುವೆಂಪು ಹೇಳಿದಂತೆ, ಸರ್ವ ಜನಾಂಗದ ಶಾಂತಿಯ ತೋಟ ಎನ್ನುವಂತಹ ಸಮಾಜ ನಿರ್ಮಾಣವಾಗಬೇಕೆಂದು ಮಹಾತ್ಮಾ ಗಾಂ, ಜವಾಹರ್ ಲಾಲ್ ನೆಹರೂ ಕನಸು ಕಂಡಿದ್ದರು ಎಂದು ಹೇಳಿದರು.ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಸಂವಿಧಾನ ಪ್ರಸ್ತಾವನೆಯ ಭಾಗವನ್ನು ಮುಖ್ಯಮಂತ್ರಿಗಳು ಬೋಸಿದರು.
8
+ ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ , ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
eesanje/url_46_303_11.txt ADDED
@@ -0,0 +1,6 @@
 
 
 
 
 
 
 
1
+ ಕಂಬಳ ನೋಡಿ ಹಿಂತಿರುಗುತ್ತಿದ್ದಾಗ ಕಾರು ಅಪಘಾತ, ಇಬ್ಬರ ಸಾವು
2
+ ಕುಣಿಗಲ್, ನ.26- ಬೆಂಗಳೂರಿನ ಅರಮನೆಯ ಮೈದಾನದಲ್ಲಿ ನಡೆಯುತ್ತಿರುವ ಕಂಬಳ ನೋಡಿಕೊಂಡು ವಾಪಸ್ ಊರಿಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬೋರ್‍ವೆಲ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಕೊತ್ತಗೆರೆಯಲ್ಲಿಂದು ಮುಂಜಾನೆ ನಡೆದಿದೆ.
3
+ ಮಂಗಳೂರಿನ ಬಜ್ಪೆ ಮೂಲದ ಕಿಶಾನ್ ಶೆಟ್ಟಿ(20) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಭಟ್ಟರ ತೊಟದ ನಿವಾಸಿ ಫಿಲೀಪ್ ನೇರಿ ಲೋಬೋ(32) ಮೃತಪಟ್ಟ ದುರ್ದೈವಿಗಳು. ಹರೀಶ್‍ಶೆಟ್ಟಿ, ನಿತೇಶ್ ಭಂಡಾರಿ, ಪ್ರೀತಿ ಲೋಭೋ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
4
+ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕಂಬಳ ವಿಕ್ಷೀಸಿ ಸ್ವಿಫ್ಟ್ ಕಾರಿನಲ್ಲಿ ಮಂಗಳೂರಿಗೆ ಹಿಂದಿರುಗುತ್ತಿದ್ದಾಗ ರಾತ್ರಿ 1.30 ಸುಮಾರಿನಲ್ಲಿ ಕೊತ್ತಗೆರೆ ಸಮೀಪ ಎದುರಿನಿಂದ ಬಂದ ಬೋರ್‍ವೆಲ್ ಲಾರಿಗೆ ಕಾರು ನಿಯಂತ್ರಣ ಕಳೆದುಕೊಂಡು ಡಿಕ್ಕಿ ಹೊಡೆದಿದೆ.
5
+ ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟದಲ್ಲಿ ಇಸ್ರೇಲ್ ಕೈ ಜೋಡಿಸುತ್ತದೆ
6
+ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಉಳಿದ ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯರು ರಕ್ಷಿಸಿ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಪಟ್ಟಣ ಠಾಣೆಯ ಸಿಪಿಐ ನವೀನ್‍ಗೌಡ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ನೆರವಿನಿಂದ ನಜ್ಜುಗುಜ್ಜಾದ ಕಾರಿನ ಬಾಗಿಲನ್ನು ಆರೆಯಿಂದ ಮೀಟಿ ಶವಗಳನ್ನು ಹೊರತೆಗಿದಿದ್ದಾರೆ. ಕುಣಿಗಲ್ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈ ಗೊಂಡಿದ್ದಾರೆ.
eesanje/url_46_303_12.txt ADDED
@@ -0,0 +1,6 @@
 
 
 
 
 
 
 
1
+ ನಾಳೆ ಸಿಎಂ ಜನತಾ ದರ್ಶನ
2
+ ಬೆಂಗಳೂರು, ನ.26- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಬೆಳಿಗ್ಗೆ 9.30 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಜನರ ಬಳಿಗೇ ಆಡಳಿತ ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಪ್ರತಿ ತಿಂಗಳು ಜನತಾ ದರ್ಶನ ನಡೆಸುವಂತೆ ಸೂಚಿಸಿದ್ದರು. ಇದೀಗ ಸ್ವತಃ ಮುಖ್ಯಮಂತ್ರಿ ಅವರು ಜನತಾದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
3
+ ಜನತಾ ದರ್ಶನದ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಎಲ್ಲಾ ಉಪ ವಿಭಾಗಗಳ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಹಾಜರಿರಲು ಸರ್ಕಾರ ನಿರ್ದೇಶನ ನೀಡಿದೆ.
4
+ ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟದಲ್ಲಿ ಇಸ್ರೇಲ್ ಕೈ ಜೋಡಿಸುತ್ತದೆ
5
+ ಈ ಸಂಬಂಧ ಮುಖ್ಯಮಂತ್ರಿಯವರ ಅಪರ ಮುಖ್ಯಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್ ಎಲ್ಲಾ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ನಾಳೆ ಕೇಂದ್ರ ಸ್ಥಾನದಲ್ಲಿ ಹಾಜರಿದ್ದು, ಮುಖ್ಯಮಂತ್ರಿಯವರ ಕಚೇರಿಯಿಂದ ಮಾಡುವ ಕರೆಗಳನ್ನು ಸ್ವೀಕರಿಸಿ ಅಹವಾಲುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಕುರಿತು ಅಗತ್ಯ ಕ್ರಮ ವಹಿಸಬೇಕು ಎಂದು ಸೂಚಿಸಿದ್ದಾರೆ.
6
+ ರಾಜ್ಯದ ವಿವಿಧ ಸ್ಥಳಗಳಿಂದ ಅಹವಾಲುಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಜನತಾ ದರ್ಶನಕ್ಕೆ ಆಗಮಿಸಲಿದ್ದಾರೆ. ಜನತಾ ದರ್ಶನದ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ನೇರವಾಗಿ ಸಂಪರ್ಕಿಸಿ ಅಹವಾಲುಗಳ ಕುರಿತು ಸೂಕ್ತ ಪರಿಹಾರೋಪಾಯಗಳನ್ನು ಒದಗಿಸುವ ನಿಟ್ಟಿನಲ್ಲಿ ನಿರ್ದೇಶನ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
eesanje/url_46_303_2.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬಡ್ಡಿ ದಂಧೆಗೆ ಕಡಿವಾಣ ಹಾಕಲು ಕ್ರಮ : ಗೃಹ ಸಚಿವ ಪರಮೇಶ್ವರ್
2
+ ತುಮಕೂರು, ನ.27- ಬಡ್ಡಿದಂಧೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಇಂತಹ ವ್ಯವಹಾರಕ್ಕೆ ಕಡಿವಾಣ ಹಾಕಲು ಎಸ್‍ಪಿಗೆ ಸೂಚಿಸಿರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದರು. ಸದಾಶಿವನಗರದಲ್ಲಿ ಮೂವರು ಮಕ್ಕಳನ್ನು ಸಾಯಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಬಂಧ ಇಂದು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಐದು ಮಂದಿಯ ಸಾವಿನ ಬಗ್ಗೆ ಮಾಹಿತಿ ಪಡೆದುಕೊಂಡರು.
3
+ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಡಿಮೆ ಹಣಕ್ಕೆ ಐದು ಮಂದಿ ಸಾಯೋದು ಸಾಮಾನ್ಯ ವಿಷಯವಲ್ಲ. ಅಮಾಯಕರಿಗೆ ಸಾಲಕೊಟ್ಟು ಹೆಚ್ಚಿನ ಬಡ್ಡಿ ವಸೂಲಿ ಮಾಡುವುದಲ್ಲದೆ, ಕಿರುಕುಳ ನೀಡಿ ಅವರನ್ನು ನೋಯಿಸಿರುವುದು ಬೇಸರದ ಸಂಗತಿ ಎಂದರು.ಮುಂದೆ ಇಂತಹ ಘಟನೆಗಳು ಮರುಕಳಿಸಬಾರದು, ಐದು ಮಂದಿ ಸಾವಿಗೆ ಕಾರಣರಾದವರಿಗೆ ತಕ್ಕ ಶಿಕ್ಷೆಯಾಗಬೇಕು, ಮೀಟರ್ ಬಡ್ಡಿ ದಂಧೆಗೆ ಕಡಿವಾಣಹಾಕಬೇಕು ಎಂದರು.
4
+ ಎರಡು ಎಫ್‍ಐಆರ್ ದಾಖಲು: ಮೃತ ಗರೀಬ್‍ಸಾಬ್ ಅವರ ಸಹೋದರ ನೀಡಿದ ದೂರಿನ ಮೇರೆಗೆ ತಿಲಕ್‍ಪಾರ್ಕ್ ಠಾಣೆ ಪೊಲೀಸರು ಎರಡು ಪ್ರಕರಣ ದಾಖಲಿಸಿದ್ದಾರೆ. ಮೊದಲ ಎಫ್‍ಐಆರ್‍ನಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾದರೆ, ಎರಡನೇ ಎಫ್‍ಐಆರ್‍ನಲ್ಲಿ ಬಡ್ಡಿ ದಂಧೆ, ಕಿರುಕುಳ ಪ್ರಕರಣ ದಾಖಲಾಗಿದೆ. ಗರೀಬ್‍ಸಾಬ್ ಅವರು ತಮ್ಮ ಮಕ್ಕಳ ವಿದ್ಯಾಭ್ಯಾಸ ಹಾಗೂ ತನ್ನ ವ್ಯವಹಾರಕ್ಕಾಗಿ ನೆರೆಮನೆ ನಿವಾಸಿ ಕಲಂದರ್ ಹಾಗೂ ಇತರರು ನನಗೆ ಸಾಲ ಕೊಡಿಸಿ ಮೀಟರ್ ಬಡ್ಡಿ ವಸೂಲಿ ಮಾಡಿ ಕಿರುಕುಳ ನೀಡಿದ್ದಾರೆಂದು ಡೆತ್‍ನೋಟ್‍ನಲ್ಲಿ ಬರೆಯಲಾಗಿದೆ.
5
+ ನ್ಯೂಜಿಲ್ಯಾಂಡ್ ಪ್ರಧಾನಿಯಾದ ಕ್ರಿಸ್ಟೋಫರ್ ಲಕ್ಸನ್ ಪ್ರಮಾಣ
6
+ ವಶಕ್ಕೆ: ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‍ನೋಟ್‍ನಲ್ಲಿ ನಮೂದಾಗಿದ್ದ ಕಲಂದರ್, ಈತನ ಪುತ್ರ ಶಾಬಾಜ್, ನೆರೆಮನೆ ನಿವಾಸಿ ಶಬಾನಾ, ಈಕೆಯ ಪುತ್ರಿ ಸಾನಿಯಾಳನ್ನು ತಿಲಕ್‍ಪಾರ್ಕ್ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
7
+ ಘಟನೆ ವಿವರ:ಮೂಲತಃ ಶಿರಾ ತಾಲ್ಲೂಕಿನ ಚಿಕ್ಕನಹಳ್ಳಿಯವರಾದ ಗರೀಬ್‍ಸಾಬ್ ಅವರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತುಮಕೂರಿಗೆ ಕುಟುಂಬದೊಂದಿಗೆ ಬಂದು ಸದಾಶಿವನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಿದ್ದರು. ಗರೀಬ್‍ಸಾಬ್ ಅವರು ಸದಾಶಿವನಗರದಲ್ಲಿ ಜೀವನೋಪಾಯಕ್ಕಾಗಿ ಕಬಾಬ್ ಅಂಗಡಿ ನಡೆಸುತ್ತಿದ್ದರು. ವ್ಯವಹಾರಕ್ಕಾಗಿ ಈ ನಡುವೆ ಅವರು ಸಾಲ ಮಾಡಿಕೊಂಡಿದ್ದರು.
8
+ ಪಡೆದ ಸಾಲಕ್ಕೆ ಬಡ್ಡಿ ಕೊಡುತ್ತಿದ್ದರು, ಈ ನಡುವೆ ಇವರ ಮನೆ ಕೆಳಗೆ ವಾಸವಾಗಿದ್ದ ವ್ಯಕ್ತಿ ಗರೀಬ್ ಕುಟುಂಬದವರಿಗೆ ಮಾನಸಿಕ ಹಿಂಸೆ ನೀಡುತ್ತಿದ್ದರೆಂದು ಹೇಳಲಾಗಿದೆ. ಒಂದು ಕಡೆ ಸಾಲಬಾದೆ, ಮತ್ತೊಂದೆಡೆ ನೆರೆ ಮನೆಯವರ ಕಿರುಕುಳದಿಂದ ನೊಂದಿದ್ದ ಕುಟುಂಬ ನಿನ್ನೆ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರ��ಸಿದೆ. ಅದರಂತೆ ಡೆತ್‍ನೋಟ್ ಹಾಗೂ ಮೊಬೈಲ್‍ನಲ್ಲಿ ವಿಡಿಯೋ ಮಾಡಿ ತಮಗಾಗಿರುವ ನೋವಿನ ಬಗ್ಗೆ ಹೇಳಿಕೊಂಡಿದ್ದಾರೆ.
9
+ ನಂತರ ಗರೀಬ್ ಸಾಬ್ (32), ಪತ್ನಿ ಸುಮಯ್ಯ (30) ರೊಂದಿಗೆ ಸೇರಿ ಮೊದಲು ಮಕ್ಕಳಾದ ಹಾಜೀರಾ (14), ಮಹಮ್ಮದ್ ಶುಬಾನ್(10) ಮತ್ತು ಮೊಹಮ್ಮದ್ ಮುನೀರ್(8)ನನ್ನು ಸಾಯಿಸಿ ನಂತರ ದಂಪತಿ ನೇಣಿಗೆ ಶರಣಾಗಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ತಿಲಕ್‍ಪಾರ್ಕ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸ್ಥಳದಲ್ಲಿ ದೊರೆತ ಡೆತ್‍ನೋಟ್ ಹಾಗೂ ಮೊಬೈಲ್ ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
10
+ ಮರಣೋತ್ತರ ಪರೀಕ್ಷೆ:ಇಂದು ಐದು ಮಂದಿಯ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ನಂತರ ವಾರಸುದಾರರಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಯಿತು.
eesanje/url_46_303_3.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಡಿ.1ರಂದು ಬಿ.ವೈ.ವಿಜಯೇಂದ್ರ ದೆಹಲಿ ಪ್ರವಾಸ
2
+ ಬೆಂಗಳೂರು,ನ.27- ಪಕ್ಷದೊಳಗೆ ಉಂಟಾಗಿರುವ ಅಸಮಾಧಾನವನ್ನು ಹೋಗಲಾಡಿಸಲು ಮುಂದಾಗಿರುವ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಡಿ.1ರಂದು ದೆಹಲಿಗೆ ತೆರಳಲಿದ್ದಾರೆ. ವಿಜಯೇಂದ್ರ ಜೊತೆಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಕೂಡ ತೆರಳುತ್ತಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಗೃಹ ಸಚಿವ ಅಮಿತ್ ಷಾ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮತ್ತಿತರರನ್ನು ಭೇಟಿಯಾಗಲಿದ್ದಾರೆ.
3
+ ವಿಶೇಷವೆಂದರೆ ಡಿ.7ರಂದು ಬಿಜೆಪಿಯ ಅಸಮಾಧಾನಿತ ಒಂದು ಬಣ ದೆಹಲಿಗೆ ತೆರಳಿ ಕೆಲವು ಬಿಜೆಪಿ ನಾಯಕರ ವಿರುದ್ಧ ದೂರು ನೀಡಲು ಮುಂದಾಗಿರುವ ಬೆನ್ನಲ್ಲೇ ಅದಕ್ಕೂ ಮುನ್ನವೇ ವಿಜಯೇಂದ್ರ ವರಿಷ್ಠರನ್ನು ಭೇಟಿ ಮಾಡುತ್ತಿರುವುದು ಮಹತ್ವ ಪಡೆದುಕೊಂಡಿದೆ.
4
+ ಮೇಲ್ನೋಟಕ್ಕೆ ಇದೊಂದು ಸೌಹಾರ್ದಯುತ ಭೇಟಿ ಎಂದು ಹೇಳಲಾಗುತ್ತಿದ್ದರೂ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಯ್ಕೆಯಾದ ನಂತರ ಬಿಜೆಪಿಯ ಒಂದು ಬಣ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದೆ.
5
+ ಇದು ಲೋಕಸಭೆ ಚುನಾವಣೆಯಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಭಿನ್ನಮತವನ್ನು ಪ್ರಾರಂಭದಲ್ಲೇ ಚಿವುಟಿ ಹಾಕಲು ವಿಜಯೇಂದ್ರ ಶತಪ್ರಯತ್ನ ನಡೆಸಿದ್ದಾರೆ. ಅಸಮಾಧಾನಗೊಂಡಿರುವವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಮಾತುಕತೆ ನಡೆಸುವ ಪ್ರಯತ್ನ ಮಾಡುತ್ತಿದ್ದರಾದರೂ ಅದು ಕೈಗೂಡಿಲ್ಲ. ಸದ್ಯಕ್ಕೆ ರಮೇಶ್ ಜಾರಕಿಹೊಳಿ, ಅರವಿಂದ ಬೆಲ್ಲದ್ ಮೌನಕ್ಕೆ ಜಾರಿದ್ದರೆ ಸೋಮಣ್ಣ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಬಹಿರಂಗವಾಗಿಯೇ ಸೆಡ್ಡು ಹೊಡೆದಿದ್ದಾರೆ.
6
+ ಇದು ಪಕ್ಷದ ಸಂಘಟನೆಗೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಭಿನ್ನಮತೀಯರನ್ನು ಭೇಟಿಯಾಗಿ ಮಾತುಕತೆ ನಡೆಸಬೇಕೆಂದು ವರಿಷ್ಠರ ಬಳಿ ಖುದ್ದು ವಿಜಯೇಂದ್ರ ಮನವಿ ಮಾಡಲಿದ್ದಾರೆ ಎಂದು ಗೊತ್ತಾಗಿದೆ. ಬಿವೈ ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಬೆನ್ನಲ್ಲೇ ತೀವ್ರ ಅಸಮಾಧಾನಗೊಂಡಿರುವ ಬಿಜೆಪಿ ಹಿರಿಯ ನಾಯಕ ವಿ.ಸೋಮಣ್ಣ, ಅತೃಪ್ತಗೊಂಡಿರುವ ನಾಯಕರ ಒಗ್ಗೂಡಿಸಲು ಮುಂದಾಗಿದ್ದಾರೆ.
7
+ ನ್ಯೂಜಿಲ್ಯಾಂಡ್ ಪ್ರಧಾನಿಯಾದ ಕ್ರಿಸ್ಟೋಫರ್ ಲಕ್ಸನ್ ಪ್ರಮಾಣ
8
+ ಡಿಸೆಂಬರ್ 7 ಮತ್ತು 9ರ ನಡುವೆ ಯಾವುದೇ ಸಮಯದಲ್ಲಿ ಹೈಕಮಾಂಡ್ ತಮ್ಮನ್ನು ಕರೆಸಿ, ಮಾತುಕತೆ ನಡೆಸುವ ಸಾಧ್ಯತೆಗಳಿರುವುದರಿಂದ ಈ ಸಂದರ್ಭದಲ್ಲಿ ಅತೃಪ್ತ ನಾಯಕರನ್ನೂ ತಮ್ಮೊಂದಿಗೆ ಕರೆದುಕೊಂಡು ಹೋಗಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾತನಾಡಿದ್ದ ಅವರು, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಬೆಲ್ಲದ್, ಅರವಿಂದ ಲಿಂ���ಾವಳಿ, ರಮೇಶ ಜಾರಕಿಹೊಳಿ ಅವರೊಂದಿಗೆ ಹೈಕಮಾಂಡ್ ನಾಯಕರ ಭೇಟಿ ಮಾಡುತ್ತೇನೆ ಎಂದಿದ್ದರು.
9
+ ಡಿಸೆಂಬರ್ 6ರಂದು ಗುರುಭವನ ಉದ್ಘಾಟನೆ ಬೆನ್ನಲ್ಲೇ ಮಠದ ಬಳಿ ಸೋಮಣ್ಣ ಅವರು ರ್ಯಾಲಿ ನಡೆಸುತ್ತಿದ್ದಾರೆ. ಈ ವೇಳೆ ವಿಜಯೇಂದ್ರ ನೇಮಕದ ಬಗ್ಗೆ ಮೌನ ಮುರಿಯುತ್ತೇನೆ ಎಂದು ತಿಳಿಸಿದ್ದಾರೆ. ಈ ನಡುವೆ ಸೋಮಣ್ಣ ಅವರಿಗೆ ಹಳೆ ಮೈಸೂರು ಭಾಗದ ವೀರಶೈವ-ಲಿಂಗಾಯತ ನಾಯಕ, ತುಮಕೂರು ಸಂಸದ ಜಿ.ಎಸ್.ಬಸವರಾಜ್ ಅವರ ಬೆಂಬಲವೂ ದೊರೆತಿದೆ.
10
+ 2019ರ ಲೋಕಸಭೆ ಚುನಾವಣೆಯಲ್ಲಿ ತುಮಕೂರಿನಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ವಿರುದ್ಧ ಗೆಲುವು ಸಾಸಲು ಸೋಮಣ್ಣ ನನಗೆ ಸಹಾಯ ಮಾಡಿದ್ದರು. 2024ರಲ್ಲಿ ತುಮಕೂರಿನಿಂದ ಸ್ರ್ಪಧಿಸಲು ಹೈಕಮಾಂಡ್ ಅವರಿಗೆ ಟಿಕೆಟ್ ನೀಡಿದರೆ ನಾನು ಅವರನ್ನು ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ.
11
+ ಈ ನಡುವೆ ಧಾರ್ಮಿಕ ಮುಖಂಡರ ಮೂಲಕ ಬಿಜೆಪಿ ತೊರೆಯದಂತೆ ಸೋಮಣ್ಣ ಅವರ ಮನಸ್ಸು ಪರಿವರ್ತಿಸಲು ವಿರೋಧ ಪಕ್ಷದ ನಾಯಕರಾಗಿರುವ ಆರ್.ಅಶೋಕ್ ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಲೋಕಸಭೆ ಚುನಾವಣೆಗೂ ಮುನ್ನಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗುತ್ತಾರೆಯೇ ಎಂಬುದನ್ನು ಕಾದುನೋಡಬೇಕಿದೆ.
eesanje/url_46_303_4.txt ADDED
@@ -0,0 +1,7 @@
 
 
 
 
 
 
 
 
1
+ ಜನತಾ ದರ್ಶನದ ಮೂಲಕ ಜನರ ನೋವುಗಳಿಗೆ ಸ್ಪಂದಿಸಿದ ಸಿಎಂ
2
+ ಬೆಂಗಳೂರು,ನ.27- ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾದರ್ಶನ ನಡೆಸುವ ಮೂಲಕ ಸಾವಿರಾರು ಜನರ ದೂರುದುಮ್ಮಾನಗಳಿಗೆ ಸ್ಪಂದಿಸಿದರು. ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರು ನಡೆಸುತ್ತಿದ್ದ ಜನತಾ ದರ್ಶನದಷ್ಟೇ ವಿಶ್ವಾಸರ್ಹತೆಯನ್ನು 2ನೇ ಅಧಿಕಾರಾವಧಿಯ ಜನತಾ ದರ್ಶನವೂ ಉಳಿಸಿಕೊಂಡಿದ್ದು, ಸಮಸ್ಯೆಗೆ ಸ್ಪಂದಿಸಲು ಈ ಮೊದಲಿಗಿಂತಲೂ ಕ್ರಮಬದ್ದವಾದ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ.
3
+ ಜನತಾದರ್ಶನಕ್ಕೆ ರಾಜ್ಯದ ನಾನಾ ದಿಕ್ಕುಗಳಿಂದಲೂ ಜನಸಾಮಾನ್ಯರು ಆಗಮಿಸಿದ್ದರು. ಎಲ್ಲರ ಅರ್ಜಿಗಳನ್ನು ಅಧಿಕಾರಿಗಳು ಪರಿಶೀಲಿಸಿ ಜನಸಂಪರ್ಕ ಇಲಾಖೆಯ ತಂತ್ರಾಂಶದಲ್ಲಿ ದಾಖಲಿಸಿ ಕ್ರಮ ಸಂಖ್ಯೆ ನೀಡಿದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಯೊಬ್ಬರ ಅರ್ಜಿಗಳನ್ನು ಪಡೆದು ಗಂಭೀರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವ ಮೂಲಕ ಪರಿಹಾರ ದೊರಕಿಸುವ ಪ್ರಯತ್ನ ನಡೆಸಿದರು.
4
+ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಸ್ಥಳದಲ್ಲೇ ಮೊಕ್ಕಾಂ ಹೂಡಿದರು. ಹೀಗಾಗಿ ಆಯಾ ಇಲಾಖೆಗಳ ಮತ್ತು ಪ್ರಾದೇಶಿಕವಾದ ಸಮಸ್ಯೆಗಳ ಬಗ್ಗೆ ಸಮನ್ವಯತೆಯೊಂದಿಗೆ ತುರ್ತು ಪರಿಹಾರ ದೊರಕಿಸುವ ಪ್ರಯತ್ನ ನಡೆಸಲಾಯಿತು.
5
+ ಭಾರತೀಯರ ಯೋಗಕ್ಷೇಮಕ್ಕೆ ತಿಮ್ಮಪ್ಪನ ಮೊರೆ ಹೋದ ಮೋದಿ
6
+ ಜನತಾ ದರ್ಶನಕ್ಕಾಗಿ ಸಾವಿರಾರು ಜನ ಸಾಲುಗಟ್ಟಿ ಬಂದಿದ್ದರು. ದೂರದ ಊರುಗಳಿಂದ ಬಂದವರಿಗೆ ಸ್ಥಳದಲ್ಲಿ ಕುಡಿಯುವ ನೀರು ಸೇರಿದಂತೆ ಹಲವು ರೀತಿಯ ಮೂಲಸೌಲಭ್ಯಗಳನ್ನು ಕಲ್ಪಿಸಲಾಗಿತ್ತು. ಪಾರ್ಕಿಂಗ್ ಸೇರಿದಂತೆ ನಾನಾ ರೀತಿಯ ವ್ಯವಸ್ಥೆಗಳಿಗೆ ಕುಮಾರಕೃಪ ಹಾಗೂ ಇತರ ಸ್ಥಳಗಳನ್ನು ಬಳಸಿಕೊಳ್ಳಲಾಗಿತ್ತು. ಸಾವಿರಾರು ಜನ ಆಗಮಿಸಿದ್ದರಿಂದ ಜನದಟ್ಟಣೆ ಹೆಚ್ಚಾಗಿತ್ತು. ಅರ್ಜಿದಾರರ ಸಾಲು ಕುಮಾರಕೃಪ ಅತಿಥಿಗೃಹದವರೆಗೂ ಮುಂದುವರೆದಿತ್ತು.
7
+ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಾಳ್ಮೆಯಿಂದಲೇ ಪ್ರತಿಯೊಬ್ಬರ ಅಹವಾಲನ್ನು ಸ್ವೀಕರಿಸಿ ಪರಿಹಾರ ದೊರಕಿಸುವ ಪ್ರಯತ್ನ ಮಾಡಿದರು. ಮುಖ್ಯಮಂತ್ರಿ ಕಚೇರಿಯ ಹಿರಿಯ, ಕಿರಿಯ ಅಧಿಕಾರಿಗಳು ಸಕ್ರಿಯವಾಗಿ ಜನತಾದರ್ಶನದಲ್ಲಿ ತೊಡಗಿಸಿಕೊಂಡಿದ್ದರು. 20ಕ್ಕೂ ಹೆಚ್ಚು ಕೌಂಟರ್‍ಗಳನ್ನು ನಿರ್ಮಿಸಲಾಗಿತ್ತು.
eesanje/url_46_303_5.txt ADDED
@@ -0,0 +1,5 @@
 
 
 
 
 
 
1
+ ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
2
+ ಬೆಂಗಳೂರು,ನ.27- ಕೇಂದ್ರ ಸರ್ಕಾರದ ರೈತ ಮತ್ತು ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸಂಯುಕ್ತ ಹೋರಾಟ-ಕರ್ನಾಟಕ ಸಂಘಟನೆ ರಾಜಭವನ ಚಲೋ ಹಮ್ಮಿಕೊಂಡಿದೆ. ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿ ಇನ್ನಿತರ ಸಂಘಟನೆಗಳ ವತಿಯಿಂದ ಕಾರ್ಮಿಕ ಸಂಘಟನೆಯ ರಾಜ್ಯಾಧ್ಯಕ್ಷ ಕೆ.ವಿ.ಭಟ್ ನೇತೃತ್ವದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
3
+ ಕೃಷಿ ಕಾಯ್ದೆಗಳ ರದ್ದತಿ, ಬೆಂಬಲ ಬೆಲೆಗೆ ಕಾನೂನಿನ ಸ್ವರೂಪ, ಕಾರ್ಮಿಕ ಕಾಯ್ದೆಗಳ ರದ್ದತಿ, ಬೆಲೆ ಏರಿಕೆಗೆ ಕಡಿವಾಣ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ಫ್ರೀಡಂಪಾರ್ಕ್‍ನಲ್ಲಿ ನಿನ್ನೆಯಿಂದ ನಡೆಯುತ್ತಿರುವ ಪ್ರತಿಭಟನೆ ಇಂದು ತೀವ್ರಗೊಂಡಿದೆ.
4
+ ಪ್ರಧಾನಿ ಮೋದಿ ಶ್ಲಾಘನೆ ಖುಷಿ ತಂದಿದೆ : ವರ್ಷಾ
5
+ ಮಹಾಧರಣಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ, ಹೆಚ್.ಆರ್ ಬಸವರಾಜಪ್ಪ, ಹಾಗೂ ಭೂಮಿ ಮತ್ತು ವಸತಿ ಸಮಿತಿಯ ಕುಮಾರ್ ಸಮತಲ, ಕೆಪಿಆರ್‍ಎಸ್ ಸಂಘಟನೆಯ ಯಶವಂತ್, ಎಐಕೆಕೆಎಂಎಸ್ ಸಂಘಟನೆಯ ಹೆಚ್.ಆರ್ ಶಿವಪ್ರಸಾದ್ ಹಾಗೂ ಇನ್ನಿತರ ಸಂಘಟನೆಯ ನಾಯಕರುಗಳು ಭಾಗವಹಿಸಿದ್ದರು.