CoolCoder44 commited on
Commit
56ed928
·
verified ·
1 Parent(s): 1ec25dc

6736982b69975a2b60d51516f75e21b3d819a756c6987d84ebc69b68468e9dd8

Browse files
Files changed (50) hide show
  1. eesanje/url_46_157_4.txt +8 -0
  2. eesanje/url_46_157_5.txt +8 -0
  3. eesanje/url_46_157_6.txt +12 -0
  4. eesanje/url_46_157_7.txt +8 -0
  5. eesanje/url_46_157_8.txt +8 -0
  6. eesanje/url_46_157_9.txt +10 -0
  7. eesanje/url_46_158_1.txt +7 -0
  8. eesanje/url_46_158_10.txt +6 -0
  9. eesanje/url_46_158_11.txt +14 -0
  10. eesanje/url_46_158_12.txt +5 -0
  11. eesanje/url_46_158_2.txt +9 -0
  12. eesanje/url_46_158_3.txt +7 -0
  13. eesanje/url_46_158_4.txt +9 -0
  14. eesanje/url_46_158_5.txt +8 -0
  15. eesanje/url_46_158_6.txt +6 -0
  16. eesanje/url_46_158_7.txt +10 -0
  17. eesanje/url_46_158_8.txt +14 -0
  18. eesanje/url_46_158_9.txt +6 -0
  19. eesanje/url_46_159_1.txt +10 -0
  20. eesanje/url_46_159_10.txt +7 -0
  21. eesanje/url_46_159_11.txt +6 -0
  22. eesanje/url_46_159_12.txt +7 -0
  23. eesanje/url_46_159_2.txt +7 -0
  24. eesanje/url_46_159_3.txt +5 -0
  25. eesanje/url_46_159_4.txt +12 -0
  26. eesanje/url_46_159_5.txt +16 -0
  27. eesanje/url_46_159_6.txt +7 -0
  28. eesanje/url_46_159_7.txt +11 -0
  29. eesanje/url_46_159_8.txt +8 -0
  30. eesanje/url_46_159_9.txt +10 -0
  31. eesanje/url_46_15_1.txt +7 -0
  32. eesanje/url_46_15_10.txt +13 -0
  33. eesanje/url_46_15_11.txt +14 -0
  34. eesanje/url_46_15_12.txt +8 -0
  35. eesanje/url_46_15_2.txt +12 -0
  36. eesanje/url_46_15_3.txt +6 -0
  37. eesanje/url_46_15_4.txt +11 -0
  38. eesanje/url_46_15_5.txt +8 -0
  39. eesanje/url_46_15_6.txt +14 -0
  40. eesanje/url_46_15_7.txt +7 -0
  41. eesanje/url_46_15_8.txt +9 -0
  42. eesanje/url_46_15_9.txt +14 -0
  43. eesanje/url_46_160_1.txt +7 -0
  44. eesanje/url_46_160_10.txt +5 -0
  45. eesanje/url_46_160_11.txt +5 -0
  46. eesanje/url_46_160_12.txt +7 -0
  47. eesanje/url_46_160_2.txt +9 -0
  48. eesanje/url_46_160_3.txt +10 -0
  49. eesanje/url_46_160_4.txt +6 -0
  50. eesanje/url_46_160_5.txt +7 -0
eesanje/url_46_157_4.txt ADDED
@@ -0,0 +1,8 @@
 
 
 
 
 
 
 
 
 
1
+ ಪೆನ್‌ಡ್ರೈವ್‌ ಪ್ರಕರಣದ ಹಿಂದಿರುವ ಡೈರೆಕ್ಟರ್, ಪ್ರೊಡ್ಯೂಸರ್ ಯಾರು..?
2
+ ಬೆಂಗಳೂರು,ಮೇ5-ರಾಜ್ಯದಲ್ಲಿ ಮತ್ತು ದೇವೇಗೌಡರ ಕುಟುಂಬದಲ್ಲಿ ಬಿರುಗಾಳಿ ಎಬ್ಬಿಸಿರುವ ಪ್ರಜ್ವಲ್‌ ರೇವಣ್ಣ ಅಶ್ಲೀಲ ಸಿಡಿ ಪ್ರಕರಣ ಹಲವು ಆಯಾಮಗಳಿಗೆ ತಿರುಗುತ್ತಿದೆ. ಜೊತೆಗೆ ಒಂದಷ್ಟು ಸಂದೇಹ ಮತ್ತು ಪ್ರಶ್ನೆಗಳನ್ನೂ ಹುಟ್ಟು ಹಾಕಿದೆ. ಅದರಲ್ಲಿ ಒಂದು ಈ ಪ್ರಕರಣಕ್ಕೆ ದುಡ್ಡು ಹಾಕಿದವರು ಯಾರು? ಎಂಬ ಪ್ರಶ್ನೆ.
3
+ ಪ್ರಜ್ವಲ್‌ ವಿರುದ್ದ ಅಶ್ಲೀಲ ವಿಡಿಯೋ ಪ್ರಕರಣ, ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಮಾತ್ರ ದಾಖಲಾಗಿದ್ದವು. ಈಗ ಅತ್ಯಾಚಾರದ ಕೇಸ್‌ ಕೂಡ ದಾಖಲಾಗುವ ಮೂಲಕ ಕಾನೂನಿನ ಕುಣಿಕೆ ಬಿಗಿಯಾಗುತ್ತಿದೆ. ಪ್ರಜ್ವಲ್‌, ಭಾರತಕ್ಕೆ ಆಗಮಿಸುತ್ತಿದ್ದಂತೆಯೇ ಅವರನ್ನು ಬಂಧಿಸುವ ಸಾಧ್ಯತೆಯಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ ಹೊಂದಿರುವವರಿಗೆ ಜರ್ಮನಿಗೆ ಪ್ರವಾಸ ಮಾಡಲು ವೀಸಾದ ಅವಶ್ಯಕತೆಯಿಲ್ಲ ಎಂದು ವಿದೇಶಾಂಗ ಇಲಾಖೆಯ ಸಚಿವಾಲಯ ಹೇಳಿದೆ. ಆ ಮೂಲಕ, ಪ್ರಜ್ವಲ್‌ ಜರ್ಮನಿಗೆ ತೆರಳಲು ಅನುಕೂಲ ಮಾಡಿಕೊಟ್ಟಿಲ್ಲ ಎಂದು ಇಲಾಖೆ ಸ್ಪಷ್ಟ ಪಡಿಸಿದೆ.
4
+ ಇವೆಲ್ಲದರ ನಡುವೆ, ಭಾರೀ ಚರ್ಚೆಯ ವಿಷಯವಾಗಿರುವುದು ಇಷ್ಟೊಂದು ದೊಡ್ಡ ಮಟ್ಟಕ್ಕೆ ಅಶ್ಲೀಲ ಪೆನ್‌ಡ್ರೈವ್‌ ಬಿಡುಗಡೆ ಮಾಡಲು ಬಂಡವಾಳ ಹೂಡಿದ್ದು ಯಾರು ಎನ್ನುವುದು ಮಿಲಿಯನ್‌ ಡಾಲರ್‌ ಪ್ರಶ್ನೆಯಾಗಿದೆ. ಯಾಕೆಂದರೆ, ಇದಕ್ಕೆ ತಗಲುವ ಖರ್ಚು.ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆಗೆ ಎರಡು ದಿನ ಇರುವಾಗ ವ್ಯವಸ್ಥಿತವಾಗಿ ಪೆನ್‌ಡ್ರೈವ್‌ ಮೂಲಕ ಪ್ರಚಾರ ನಡೆಸಿದ್ದು, ಕೋಟ್ಯಂತರ ರೂ. ಬಂಡವಾಳ ಹೂಡಿದ ಹಿಂದಿನ ಸೂತ್ರಧಾರ ಯಾರು ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ.
5
+ ಪ್ರಜ್ವಲ್‌ ರೇವಣ್ಣ ಅಶ್ಲೀಲ ಸಿಡಿ ಓಡಾಡುತ್ತಿದೆ ಎನ್ನುವುದು ಹಾಸನದಲ್ಲಿ ಸುಮಾರು ಒಂದು ವರ್ಷದಿಂದ ಚರ್ಚೆಯಲ್ಲಿದ್ದ ವಿಷಯ. ಈ ಪೆನ್‌ಡ್ರೈವ್‌ ಎಲ್ಲಾದರೂ ಮಾಧ್ಯಮದವರ ಕೈಗೆ ಸಿಕ್ಕಿದರೆ ಎಂದು ಪ್ರಜ್ವಲ್‌, ಕೋರ್ಟಿನಿಂದ ತಡೆಯಾಜ್ಞೆ ತಂದಿದ್ದರು.
6
+ ಆದರೆ ಎಲ್ಲಾ ಲೆಕ್ಕಾಚಾರ ಉಲ್ಟಾಪಲ್ಟಾ ಆಗಿ ದೇಶದಲ್ಲಿ ದೊಡ್ಡ ಮಟ್ಟದ ಸುದ್ದಿಯಾಗಿ ಹೋಗಿದೆ. ಸುಮಾರು ನಲವತ್ತು ಸಾವಿರದಷ್ಟು ಪೆನ್‌ಡ್ರೈವ್‌ ಹಾಸನ ತಲುಪಲಿದೆ ಎನ್ನುವ ಸುದ್ದಿ ಮೊದಲ ಹಂತದ ಚುನಾವಣೆಗೆ ಒಂದು ವಾರದ ಮುಂಚೆಯಿಂದಲೇ ಓಡಾಡುತ್ತಿತ್ತು. ಏಪ್ರಿಲ್‌ 21ರ ಸುಮಾರಿಗೆ ಒಂದಷ್ಟು ಪೆನ್‌ಡ್ರೈವ್‌ ಹಾಸನಕ್ಕೆ ಬಂದಿದ್ದವು ಕೂಡಾ.
7
+ ಇದಾದ ಎರಡು ದಿನಗಳಲ್ಲಿ ಸುಮಾರು ನಲವತ್ತು ಸಾವಿರ ಪೆನ್‌ಡ್ರೈವ್‌ಗಳನ್ನು ಹಾಸನದ ವಿವಿಧ ಭಾಗಗಳಲ್ಲಿ ವ್ಯವಸ್ಥಿತವಾಗಿ ಹಂಚಲಾಗಿತ್ತು. ಬಹಿರಂಗ ಪ್ರಚಾರಕ್ಕೆ ಏಪ್ರಿಲ್‌ 24 ಕೊನೆಯ ದಿನವಾಗಿತ್ತು. ಆದರೆ ಪೆನ್‌ಡ್ರೈವ್‌ ಬಹಿರಂಗವಾಗುವುದು ಖಚಿತವಾಗುತ್ತಿದ್ದಂತೆಯೇ ಏಪ್ರಿಲ್‌ 20ರ ನಂತರ ಪ್ರಜ್ವಲ್‌ ರೇವಣ್ಣ ಬಹಿರಂಗ ಪ್ರಚಾರಕ್ಕೆ ಹೋಗಲೇ ಇಲ್ಲ.
8
+ ಏಪ್ರಿಲ್‌ 19ಕ್���ೆ ಪ್ರತಾಪ್‌ ಸಿಂಹ, ಡಾ.ಅಶ್ವತ್ಥ ನಾರಾಯಣ್‌ ಜೊತೆಗೆ ಸಕಲೇಶಪುರದಲ್ಲಿ ಬಹಿರಂಗ ಪ್ರಚಾರಕ್ಕೆ ಹೋದ ನಂತರ, ಪ್ರಜ್ವಲ್‌ ಎಲ್ಲೂ ಕಾಣಿಸಿಕೊಂಡಿಲ್ಲ. ಈ ನಾಲ್ಕೈದು ದಿನಗಳಲ್ಲಿ ಕಾಂಗ್ರೆಸ್‌ ತನ್ನ ಪ್ರಚಾರದ ವೇಗವನ್ನು ಹೆಚ್ಚಿಸಿಕೊಂಡಿತು. ಏಪ್ರಿಲ್‌ 26ಕ್ಕೆ ಮತದಾನ ನಡೆಸಿದ ನಂತರ ಪ್ರಜ್ವಲ್‌ ವಿದೇಶಕ್ಕೆ ಹಾರಿದ್ದಾರೆ.
eesanje/url_46_157_5.txt ADDED
@@ -0,0 +1,8 @@
 
 
 
 
 
 
 
 
 
1
+ ಹೆಚ್ಚಿದ ಬಿಸಿಲಿನ ಝಳ : ಮತಗಟ್ಟೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ
2
+ ಬೆಂಗಳೂರು,ಮೇ5-ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದ್ದು, ಭಾರತದ ಚುನಾವಣಾ ಆಯೋಗ ಸಕಲ ಸಿದ್ದತೆ ಮಾಡಿಕೊಂಡಿದೆ.
3
+ ಬೇಸಿಗೆಯ ಬಿಸಿಲಿನ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಮತದಾರರಿಗೆ ಅನುಕೂಲವಾಗುವಂತೆ ಹಲವು ಸೌಲಭ್ಯಗಳನ್ನು ಮತಗಟ್ಟೆಯಲ್ಲಿ ಕಲ್ಪಿಸಲಾಗುತ್ತದೆ.
4
+ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆ ಪ್ರಕಾರ, ಮತಗಟ್ಟೆಗಳಲ್ಲಿ ಕುಡಿಯುವ ನೀರು, ವಿದ್ಯುತ್‌, ಪೀಠೋಪಕರಣ, ರ್ಯಾಂಪ್‌ ಸೌಲಭ್ಯಗಳಲ್ಲದೆ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಹಾಗೂ ಮತದಾರರಿಗೆ ಸಹಾಯವಾಗಲು ಸಂಕೇತ ಫಲಕಗಳನ್ನು ಅಳವಡಿಸಲಾಗಿದೆ.
5
+ ಮತಗಟ್ಟೆಯ ಅಕ್ಕಪಕ್ಕದ ಕೊಠಡಿಗಳನ್ನು ವಿಶ್ರಾಂತಿ ಕೊಠಡಿಗಳನ್ನಾಗಿ ಮಾರ್ಪಡಿಸಿ ಸಿದ್ದವಿರಿಸಲಾಗಿದೆ. ಮತಗಟ್ಟೆ ಆವರಣದಲ್ಲಿ ಶಾಮಿಯಾನ ಮತ್ತು ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ.
6
+ ಮತಗಟ್ಟೆ ಆವರಣದಲ್ಲಿ ಶುಶ್ರೂಷಕರು, ಆಶಾ ಕಾರ್ಯಕರ್ತೆಯರೊಂದಿಗೆ ಓಆರ್‌ಎಸ್‌, ವೈದ್ಯಕೀಯ ಕಿಟ್‌ಗಳನ್ನು ವ್ಯವಸ್ಥೆ ಮಾಡಲಾಗುತ್ತದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ತುರ್ತು ಸಂದರ್ಭಗಳಿಗಾಗಿ ಆಂಬ್ಯುಲೆನ್ಸ್ ಸೇವಾ ಸೌಲಭ್ಯವಿರುತ್ತದೆ ಎಂದು ತಿಳಿಸಿದೆ.
7
+ ರಾಜಕೀಯ ಪಕ್ಷಗಳ ತಾತ್ಕಾಲಿಕ ಕಚೇರಿ:ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತದಾನದ ದಿನದಂದು ಮತಗಟ್ಟೆ ಕೇಂದ್ರದಿಂದ 200 ಮೀಟರ್‌ ಹೊರಗಿನ ಜಾಗದಲ್ಲಿ ನೆರಳಿಗಾಗಿ ತಾತ್ಕಾಲಿಕ ಟೆಂಟ್‌ ಹಾಕಿಕೊಂಡು ಪ್ರತಿ ಬೂತ್‌ಗೆ ಕೇವಲ ಒಂದು ಟೇಬಲ್‌ ಎರಡು ಕುರ್ಚಿಗಳನ್ನು ಮಾತ್ರ ಹಾಕಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
8
+ ಯಾವುದೇ ಪಕ್ಷ ಅಥವಾ ಅಭ್ಯರ್ಥಿಯ ಪರವಾಗಿ ಅಥವಾ ವಿರುದ್ಧವಾಗಿ ಮತ ಚಲಾಯಿಸಲು ಯಾವುದೇ ರೀತಿಯ ಪ್ರಭಾವ ಬೀರುವುದನ್ನು ನಿಷೇಧಿಸಲಾಗಿದೆ. ಈ ರೀತಿ ಕೆಲವು ನಿರ್ಬಂಧಗಳನ್ನು ಆಯೋಗ ಅಭ್ಯರ್ಥಿಗಳಿಗೆ ವಿಧಿಸಿದೆ.
eesanje/url_46_157_6.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ 2ನೇ ಹಂತದ ಚುನಾವಣೆಗೆ ಕ್ಷಣಗಣನೆ, ಇಂದು ಸಂಜೆ ಪ್ರಚಾರಕ್ಕೆ ತೆರೆ
2
+ ಬೆಂಗಳೂರು,ಮೇ5-ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್‌ ಶೆಟ್ಟರ್‌, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸೇರಿದಂತೆ 227 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧರಿಸುವ ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳಲಿದೆ.
3
+ ಮತದಾರರು ಅಲ್ಲದ ರಾಜಕೀಯ ಪಕ್ಷಗಳ ಕಾರ್ಯಕರ್ತರು, ಮುಖಂಡರು, ನಾಯಕರು ಆಯಾ ಕ್ಷೇತ್ರ ಬಿಟ್ಟು ತೆರಳಬೇಕಿದೆ. ಮೇ7ರಂದು ಮತದಾನ ನಡೆಯಲಿದ್ದು, ಮತದಾನ ಮುಕ್ತಾಯವಾಗುವ 48 ಗಂಟೆ ಮುಂಚಿನ ಅವಧಿಯನ್ನು ಶೂನ್ಯ ಅವಧಿ ಎಂದು ಘೋಷಿಸಲಾಗಿದ್ದು, ಆ ಅವಧಿಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ಸಾರ್ವಜನಿಕ ಸಭೆಗಳನ್ನು ನಡೆಸಲು ಧ್ವನಿವರ್ಧಕಗಳನ್ನು ಬಳಸಲು ನಿರ್ಬಂಧಿಸಲಾಗಿದೆ.
4
+ ಇಂದು ಸಂಜೆ 6 ಗಂಟೆಯ ನಂತರ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ ಮಾಡಲು ಅವಕಾಶವಿದೆ. ಆದರೆ ಪಕ್ಷದ ಕಾರ್ಯಕರ್ತರು ಮೆರವಣಿಗೆ ನಡೆಸುವಂತಿಲ್ಲ. ಕಲ್ಯಾಣ ಮಂಟಪಗಳು, ಸಮುದಾಯ ಭವನಗಳು, ವಸತಿ ಗೃಹಗಳು ಹಾಗೂ ಅತಿಥಿಗೃಹಗಳನ್ನು ಪರಿಶೀಲಿಸಿ ಹೊರಗಿನಿಂದ ಚುನಾವಣಾ ಪ್ರಚಾರಕ್ಕಾಗಿ ಬಂದವರು ಉಳಿದುಕೊಂಡಿದ್ದಾರೆಯೇ ಇಲ್ಲವೇ ಎಂಬುದನ್ನು ಚುನಾವಣಾಧಿ ಕಾರಿಗಳು ಹಾಗೂ ಪೊಲೀಸ್‌ ಅಧಿ ಕಾರಿಗಳು ಪರಿಶೀಲಿಸಿ ಖಚಿತಪಡಿಸಿಕೊಳ್ಳುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ.
5
+ ಆಯಾ ಕ್ಷೇತ್ರದ ಗಡಿಗಳಲ್ಲಿ ಚೆಕ್‌ಪೋಸ್‌್ಟಗಳನ್ನು ಸ್ಥಾಪಿಸಿ ಕ್ಷೇತ್ರದ ಹೊರಗಿನಿಂದ ಬರುವ ವಾಹನಗಳ ಚಲನವಲನಗಳ ಮೇಲೆ ನಿಗಾವಹಿಸುವಂತೆ ನಿರ್ದೇಶನ ನೀಡಿದೆ. ಆಯಾ ಕ್ಷೇತ್ರದ ಮತದಾರರೇ ಅಲ್ಲವೇ ಎಂಬುದನ್ನು ಪರಿಶೀಲಿಸಲು ಗುರುತಿನ ಚೀಟಿಯನ್ನು ಪರಿಶೀಲಿಸಲು ಸೂಚಿಸಿದೆ. ಸಂಜೆ 6 ಗಂಟೆಯಿಂದ ಮತದಾನ ನಡೆಯುವ ಜಿಲ್ಲೆಗಳಲ್ಲಿ ರಾಜ್ಯದ ಗಡಿಗಳನ್ನು ಮುಚ್ಚಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿ ಕಾರಿ (ಸಿಇಒ) ಕಚೇರಿ ತಿಳಿಸಿದೆ.
6
+ ಮದ್ಯ ಮಾರಾಟಕ್ಕೆ ನಿಷೇಧ:
7
+ ಮತದಾನದ ಅವಧಿ ಮುಗಿಯುವವರೆಗೆ ಮದ್ಯ ಮಾರಾಟಕ್ಕೆ ಅನುಮತಿ ಇಲ್ಲ. ಬೇರೆ ರಾಜ್ಯಗಳಿಂದಲೂ ಮದ್ಯ ತರುವಂತಿಲ್ಲ. ಕರ್ನಾಟಕ ಗಡಿಯಿಂದ 5 ಕಿ.ಮೀ ವ್ಯಾಪ್ತಿಯಲ್ಲಿರುವ ಇತರ ರಾಜ್ಯಗಳ ಮದ್ಯದಂಗಡಿಗಳನ್ನು ಮುಚ್ಚಲು ಸೂಚಿಸಲಾಗಿದೆ. ಬೀದರ್‌, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಉತ್ತರಕನ್ನಡ, ಬೆಳಗಾವಿ ಮತ್ತು ವಿಜಯಪುರ ತೆಲಂಗಾಣ, ಆಂಧ್ರಪ್ರದೇಶ, ಗೋವಾ ಮತ್ತು ಮಹಾರಾಷ್ಟ್ರದೊಂದಿಗೆ ಗಡಿಯನ್ನು ಹಂಚಿಕೊಂಡಿವೆ.
8
+ ಸಾರ್ವತ್ರಿಕ ರಜೆ:ನೆರೆಯ ರಾಜ್ಯಗಳ ರಾಜ್ಯ ಸರ್ಕಾರಗಳಿಗೆ ಮತದಾನ ಮಾಡಲು ಅವಕಾಶ ನೀಡಲು ಎಲ್ಲಾ ಉದ್ಯೋಗಿಗಳು ಮತ್ತು ಕಾರ್ಮಿಕರಿಗೆ ಮೇ 7ರಂದು ವೇತನ ಸಹಿತ ರಜೆ ನೀಡುವಂತೆ ವಿನಂತಿಸಿದೆ. ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ ಕಚೇರಿಗಳು, ಶಿಕ್ಷಣ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯ��� ಸಂಸ್ಥೆಗಳಿಗೆ ಮತದಾನದ ದಿನ ರಾಜ್ಯ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಿದೆ.
9
+ ಅಲ್ಲದೆ, ವ್ಯಾಪಾರ ಉದ್ಯಮಗಳು, ಕೈಗಾರಿಕೆಗಳು ಮತ್ತು ಇತರ ಸಂಸ್ಥೆಗಳು ದಿನಗೂಲಿ ನೌಕರರು ಮತ್ತು ಅವರೊಂದಿಗೆ ಕೆಲಸ ಮಾಡುವ ಕಾಯಂ ಸಿಬ್ಬಂದಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲು ವೇತನ ಸಹಿತ ರಜೆಯನ್ನು ಮಂಜೂರು ಮಾಡುವಂತೆ ಸೂಚಿಸಲಾಗಿದೆ.
10
+ ಉತ್ತರ ಕರ್ನಾಟಕದ ಹಲವು ಮಂದಿ ಮಹಾರಾಷ್ಟ್ರ, ಹೈದರಾಬಾದ್‌ ಮತ್ತಿತರ ಕಡೆ ಕೆಲಸ ಮಾಡುತ್ತಿದ್ದಾರೆ. ಅವರನ್ನು ಕರೆಸಿ ಆಯಾ ಕ್ಷೇತ್ರಕ್ಕೆ ಬಂದು ಮತದಾನ ಮಾಡುವಂತೆ ಮನವೊಲಿಸುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ಯಾವುದೇ ಅಭಿಪ್ರಾಯ ಸಂಗ್ರಹಕ್ಕೆ ಅವಕಾಶವಿಲ್ಲ ಎಂದು ಚುನಾವಣಾಧಿ ಕಾರಿಗಳು ತಿಳಿಸಿದ್ದಾರೆ. ಮತಗಟ್ಟೆ ಅಭಿಪ್ರಾಯ ಸಂಗ್ರಹದ ಮೇಲೆ ಈ ನಿರ್ಬಂಧಗಳನ್ನು ಹೇರಲಾಗಿದೆ. ಏಪ್ರಿಲ್‌ 19ರಿಂದ ಜೂನ್‌ 1ರ ಸಂಜೆ 6.30ರವರೆಗೆ ಈ ನಿಷೇಧವಿದೆ.
11
+ 227 ಅಭ್ಯರ್ಥಿಗಳು:ಕಲಬುರಗಿಯ ಉತ್ತರಕರ್ನಾಟಕ ಭಾಗದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬಾರ್ಗ, ರಾಯಚೂರು, ಬೀದರ್‌, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಲ್ಲಿ ಒಟ್ಟು 227 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಒಟ್ಟು 2,59,52,958 ಮತದಾರರು ಮತದಾನ ಮಾಡುವ ಹಕ್ಕು ಪಡೆದಿದ್ದಾರೆ. ಒಟ್ಟು 28,269 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
12
+ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್‌, ಬಿಜೆಪಿ ಎಲ್ಲಾ 14 ಕ್ಷೇತ್ರಗಳಲ್ಲೂ ಸ್ಫರ್ಧಿಸಿವೆ. ಬಿಎಸ್‌ಪಿ 9, ನೋಂದಾಯಿತ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಂದ 73 ಹಾಗೂ 117 ಸ್ವತಂತ್ರ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಈ ಪೈಕಿ 206 ಪುರುಷರು, 21 ಮಹಿಳಾ ಅಭ್ಯರ್ಥಿಗಳಿದ್ದಾರೆ.
eesanje/url_46_157_7.txt ADDED
@@ -0,0 +1,8 @@
 
 
 
 
 
 
 
 
 
1
+ ಎಚ್‌.ಡಿ.ರೇವಣ್ಣ ಪ್ರಕರಣದಲ್ಲಿ ರಾಜಕೀಯ ಇಲ್ಲ, ನೊಂದ ಕುಟುಂಬಗಳಿಗೆ ನ್ಯಾಯ ಸಿಗಬೇಕು : ಖರ್ಗೆ
2
+ ಕಲಬುರಗಿ,ಮೇ.5-ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಬಂಧನ ಪ್ರಕರಣದಲ್ಲಿ ರಾಜಕೀಯ ಇಲ್ಲ ಎಂದು ಸ್ಪಷ್ಟಪಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೊಂದ ಕುಟುಂಬಗಳಿಗೆ ನ್ಯಾಯ ಸಿಗಬೇಕು, ಕಾನೂನು ಮೀರುವವರಿಗೆ ಪಾಠವಾಗಬೇಕು ಎಂದಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸರ್ಕಾರ ಈಗಾಗಲೇ ಎಸ್‌ಐಟಿ ರಚನೆ ಮಾಡಿದೆ. ಕಾನೂನು ಪ್ರಕಾರ ಎಸ್‌ಐಟಿ ಕ್ರಮ ಕೈಗೊಳ್ಳುತ್ತಾರೆ. ನೆಲದ ಕಾನೂನು ಆಧರಿಸಿ ಕ್ರಮ ಕೈಗೊಳ್ಳುತ್ತಾರೆ. ಬಂಧನ, ಜಾಮೀನು ಇವೆಲ್ಲಾ ನಡೆಯುತ್ತದೆ. ಈಗ ರೇವಣ್ಣ ಅವರ ಬಂಧನವಾಗಿದೆ. ಮುಂದೆ ನೊಂದ ಕುಟುಂಬಗಳಿಗೆ ನ್ಯಾಯ ಸಿಗಬೇಕು. ಇಂತಹ ಹೀನ ಕೆಲಸ ಮಾಡುವವರಿಗೂ ಬುದ್ಧಿ ಬರಬೇಕು ಎಂದರು.
4
+ ಕಾನೂನು ಕಠಿಣವಾಗಿದೆ. ಯಾರಿಗೂ ಅದರಿಂದ ಬಿಡುಗಡೆಯಾಗುವುದಿಲ್ಲ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ಹೀನ ಕೃತ್ಯ ಎಸಗಲು ನಾವು ಹೇಳಿರಲಿಲ್ಲ. ಹತ್ತಾರು ವರ್ಷಗಳಿಂದ ಇದು ನಡೆಯುತ್ತಾ ಬಂದಿದೆ. ಅವರ ಸರ್ಕಾರವೂ ಅಧಿ ಕಾರದಲ್ಲಿತ್ತು. ಮತ್ತೊಬ್ಬರ ಸರ್ಕಾರವೂ ಇತ್ತು.
5
+ ಈಗ ಅದು ಬೇರೆ ವಿಚಾರ. ಪ್ರತಿಯೊಂದರಲ್ಲೂ ರಾಜಕೀಯ ಮಾಡುವುದು ಸರಿಯಲ್ಲ. ಇದರಲ್ಲಿ ಯಾರೂ ರಾಜಕೀಯ ಬೆರೆಸಬಾರದು ಎಂದು ಹೇಳಿದರು.ಪ್ರಜ್ವಲ್‌ ರೇವಣ್ಣ ಅವರ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಅವರು ಕಿರಿಯರಿದ್ದಾರೆ. ನನಗೆ ಅವರಿಗಿಂತಲೂ ಹಿರಿಯರ ಬಗ್ಗೆ ಮಾತನಾಡುವುದು ಸೂಕ್ತ ಎಂದರು.
6
+ ಕಾಂಗ್ರೆಸ್‌ನ ವಿರುದ್ಧ ಪೂರ್ವಾಗ್ರಹ ಪೀಡಿತವಾಗಿರುವವರು ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ನಡೆಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 2 ಸಾವಿರ ರೂ. ಸಿಗುತ್ತಿದೆ, 200 ಯೂನಿಟ್‌ವರೆಗೆ ಬಳಕೆಗೆ ಉಚಿತ ವಿದ್ಯುತ್‌ ದೊರೆತಿದೆ, ಮಹಿಳೆಯರು ಸ್ತ್ರೀಶಕ್ತಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾರೆ, ಯುವನಿಧಿ ಯೋಜನೆಯಡಿ ಪದವೀಧರರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ, ಅನ್ನಭಾಗ್ಯ ಯೋಜನೆಯೂ ಯಶಸ್ವಿಯಾಗಿದೆ. ಆದರೆ ಯಾರ ಉದ್ದೇಶ ಸರಿ ಇರುವುದಿಲ್ಲವೋ ಅವರು ಮಾತ್ರ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತುತ್ತಿದ್ದಾರೆ ಎಂದು ಹೇಳಿದರು.
7
+ ನನ್ನ ನೆಲ, ನನ್ನ ನೀರು :ಕಲಬುರಗಿ ನನ್ನ ಊರು, ನನ್ನ ನೀರು, ನನ್ನ ಭೂಮಿ, ನನ್ನ ಜನ್ಮಭೂಮಿಯಲ್ಲಿ ನಾನು ಇರುವುದನ್ನು ಪ್ರಶ್ನೆ ಮಾಡಲಾಗುತ್ತದೆ. 53 ವರ್ಷ ನಾನಿಲ್ಲಿ ರಾಜಕೀಯ ಮಾಡಿದ್ದೇನೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈವರೆಗೂ 2 ದಿನ ಸಾರ್ವಜನಿಕ ಸಮಾವೇಶಗಳನ್ನು ನಡೆಸಿದ್ದೇನೆ.
8
+ ಇದನ್ನು ಕೇಳುತ್ತಿರುವವರು ಪ್ರಧಾನಿ ನರೇಂದ್ರ ಮೋದಿಯ ಬಗ್ಗೆ ಪ್ರಶ್ನೆ ಮಾಡುವುದಿಲ್ಲ. ಸಂಬಂಧವೇ ಇಲ್ಲದಿರುವ ಮೋದಿ ಈಗಾಗಲೇ ಎರಡು ಬಾರಿ ಕಲಬುರಗಿಗೆ ಬಂದು ಹೋಗಿದ್ದಾರೆ. ಹಲವಾರು ಬಿಜೆಪಿ ನಾಯಕರು ಇಲ್ಲಿ ಪ್ರಚಾರ ಮಾಡಿದ್ದಾರೆ. ಆರ್‌ಎಸ��‌ಎಸ್‌ ನಾಯಕರು ಇಲ್ಲೇ ಟಿಕಾಣಿ ಹೂಡಿದ್ದಾರೆ. ಅವರ ಬಗ್ಗೆ ಯಾರೂ ಪ್ರಶ್ನೆ ಮಾಡುವುದಿಲ್ಲ. ನನ್ನ ಊರಿನಲ್ಲಿ ನಾನಿದ್ದರೆ ಅದಕ್ಕೆ ತಕರಾರುಗಳೇಕೆ? ಎಂದು ಪ್ರಶ್ನಿಸಿದರು.
eesanje/url_46_157_8.txt ADDED
@@ -0,0 +1,8 @@
 
 
 
 
 
 
 
 
 
1
+ ತಾಪಮಾನ ದಾಖಲೆಯ ಏರಿಕೆ, ಇಳಿಮುಖ ಪೂರೈಕೆ, ಗಗನಕ್ಕೇರಿದ ತರಕಾರಿ ಬೆಲೆ
2
+ ಬೆಂಗಳೂರು,ಮೇ.5-ದಾಖಲೆ ಮಟ್ಟದಲ್ಲಿ ಏರುತ್ತಿರುವ ಬಿಸಿಲಿನ ತಾಪ ಹಾಗೂ ಪೂರೈಕೆಯಲ್ಲಿ ತೀವ್ರ ಕುಸಿತವಾಗಿರುವ ಕಾರಣಕ್ಕೆ ಎಲ್ಲ ತರಕಾರಿಗಳ ಬೆಲೆ ಹೆಚ್ಚಾಗಿದ್ದು, ಗ್ರಾಹಕರನ್ನು ಹೌಹಾರುವಂತೆ ಮಾಡುತ್ತಿದೆ.
3
+ ಏರುತ್ತಲೇ ಇರುವ ತರಕಾರಿ ಬೆಲೆ ಜನರ ನಿತ್ಯದ ಜೀವನದಲ್ಲಿ ತಳಮಳಕ್ಕೆ ಕಾರಣವಾಗಿದೆ. ಮಳೆ ಪ್ರಾರಂಭವಾಗುವ ತನಕ ಈ ಬೆಲೆ ಇಳಿಕೆ ಕಾಣುವುದಿಲ್ಲ ಎಂದು ವ್ಯಾಪಾರಸ್ಥರು ಹೇಳುತ್ತಿರುವುದು ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈಗಾಗಲೇ ಒಂದು ಕೆಜಿ ತರಕಾರಿ ಕೊಳ್ಳುವಲ್ಲಿ ಅರ್ಧ ಕೆಜಿ ಖರೀದಿ ಮಾಡುವ ಸ್ಥಿತಿಗೆ ಗ್ರಾಹಕರು ಬಂದಿದ್ದಾರೆ.
4
+ ರಾಜಧಾನಿ ಬೆಂಗಳೂರಿಗೆ ರಾಮನಗರ, ಮಾಗಡಿ, ತುಮಕೂರು, ಬೆಂಗಳೂರು ಗ್ರಾಮಾಂತರ, ಹೊಸಕೋಟೆ, ನಂದಗುಡಿ, ಕನಕಪುರ ಸೇರಿದಂತೆ ವಿವಿಧೆಡೆಯಿಂದ ಪೂರೈಕೆ ಆಗುವ ತರಕಾರಿ ಪ್ರಸ್ತುತ ಗಣನೀಯವಾಗಿ ಇಳಿಮುಖವಾಗಿದೆ. ಬಿರುಬಿಸಿಲು, ಅಂತರ್ಜಲ ಮಟ್ಟ ಕುಸಿತ, ಕೊಳವೆ ಬಾವಿ ಬತ್ತಿರುವುದು ತರಕಾರಿ ಬೆಳೆಗಳ ಇಳುವರಿ ತಗ್ಗಿಸಿದೆ. ಹೀಗಾಗಿ ಪೂರೈಕೆ ಕಡಿಮೆಯಾಗಿದೆ.
5
+ ದಾವಣಗೆರೆ, ಪರ ರಾಜ್ಯಗಳಿಂದ ತರಕಾರಿ ಬರುತ್ತಿದ್ದು, ಸಾಗಾಟದ ವೆಚ್ಚದಿಂದ ಗ್ರಾಹಕರಿಗೆ ಬೆಲೆಯನ್ನು ಇನ್ನಷ್ಟು ಹೊರೆಯಾಗಿಸುತ್ತಿವೆ. ಸಗಟು ಮಾರುಕಟ್ಟೆಯೂ ಬೆಲೆ ಏರಿಕೆಗೆ ನಲುಗಿದೆ.
6
+ ಬೀನ್‌್ಸ ಬೆಳೆಯಲು ಹೆಚ್ಚಿನ ನೀರು ಬೇಕು. ಸದ್ಯದ ಬರ ಪರಿಸ್ಥಿತಿಯಲ್ಲಿ ಹೆಚ್ಚಿನದಾಗಿ ಬೀನ್‌್ಸ ಬೆಳೆಯುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ಬೆಲೆ 200 ರೂ.ಗಳವರೆಗೂ ಏರಿಕೆಯಾಗಿದೆ. ಸೊಪ್ಪು, ಮೂಲಂಗಿ, ನವಿಲುಕೋಸು, ಹೀರೆಕಾಯಿ ಬೆಲೆಗಳು ಹೆಚ್ಚುತ್ತಿವೆ. ಸದ್ಯ ಕೆಜಿಗೆ ಇವುಗಳ ಬೆಲೆ ಸುಮಾರು 60 ರೂಪಾಯಿ ಇದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.
7
+ ಈ ನಡುವೆ ಚಿಲ್ಲರೆ ವ್ಯಾಪಾರಿಗಳು ಸಗಟು ಮಾರುಕಟ್ಟೆಯಿಂದ ತರಕಾರಿ ತಂದು ಮಾರಾಟ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಬೆಲೆ ಹೆಚ್ಚಳದಿಂದ ಗ್ರಾಹಕರು ಖರೀದಿಗೆ ಮುಂದಾಗುತ್ತಿಲ್ಲ. ತಂದ ತರಕಾರಿಗಳು ಒಣಗಿ ಹೋಗುತ್ತವೆ. ಹಾಗಾಗಿ ಕೆಲ ದಿನ ಮಾರಾಟ ಮಾಡದಿರುವುದೇ ಒಳಿತು ಎಂದು ವ್ಯಾಪಾರಸ್ಥರು ಹೇಳುತ್ತಿದ್ದಾರೆ. ಮಳೆ ಆರಂಭವಾಗಿ ಎರಡು ತಿಂಗಳ ಬಳಿಕವೇ ಬೆಲೆ ಇಳಿಯಬಹುದು. ಬೆಲೆ ಏರಿಕೆ ಗ್ರಾಹಕರನ್ನು ಎಷ್ಟು ಕಂಗೆಡಿಸಿದೆಯೋ ಅಷ್ಟೇ ಚಿಲ್ಲರೆ ವ್ಯಾಪಾರಿಗಳನ್ನೂ ಚಿಂತೆಗೆ ನೂಕಿದೆ.
8
+ ತರಕಾರಿ ದರ ಪಟ್ಟಿ (ಪ್ರತಿ ಕೆಜಿಗೆ)ನಾಟಿ ಬೀನ್ಸ್ 180 ರೂ.ರಿಂಗ್‌ ಬೀನ್ಸ್- 140 ರೂ.ಈರುಳ್ಳಿ – 40 ರೂ.ಬೀಟ್ರೂಟ್‌- 80 ರೂ.ಬೆಂಡೆಕಾಯಿ – 80 ರೂ.ನವಿಲುಕೋಸು – 80 ರೂ.ಹೀರೆಕಾಯಿ – 80 ರೂ.ಟೊಮೇಟೋ – 40 ರೂ.ಆಲೂಗೆಡ್ಡೆ- 50 ರೂ.ಮೆಣಸಿನಕಾಯಿ- 90 ರೂ.ಕ್ಯಾಪ್ಸಿಕಂ- 80 ರೂ.
eesanje/url_46_157_9.txt ADDED
@@ -0,0 +1,10 @@
 
 
 
 
 
 
 
 
 
 
 
1
+ : ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅರೆಸ್ಟ್..!
2
+ ಬೆಂಗಳೂರು, ಮೇ 4- ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕರಾದ ಹೆಚ್.ಡಿ.ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ ವಶಕ್ಕೆ ಪಡೆದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ತಿರಸ್ಕೃತವಾದ ಬೆನ್ನಲ್ಲೇ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ತೆರಳಿದ ಎಸ್ ಐಟಿ ತಂಡವು ಅಲ್ಲಿ ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ.
3
+ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರ
4
+ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಹೆಚ್.ಡಿ.ರೇವಣ್ಣ ವಿರುದ್ಧ ದಾಖಲಾಗಿದ್ದ ಮಹಿಳೆ ಅಪಹರಣ ಸಂಬಂಧ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿಂದು ಸುಧೀರ್ಘ ವಿಚಾರಣೆ ನಡೆಯಿತು. ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ವಿಚಾರಣೆ ನಡೆಸಿ, ವಾದ-ಪ್ರತಿವಾಧವನ್ನು ಆಲಿಸಿ, ಈ ತೀರ್ಪು ನೀಡಿದರು.
5
+ ರೇವಣ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಮೂರ್ತಿ.ಡಿ.ನಾಯಕ್ ಅವರು ಎರಡನೇ ಎಫ್.ಐ.ಆರ್ ನಲ್ಲಿ ಎಲ್ಲೂ ರೇವಣ್ಣ ಅವರ ವಿರುದ್ಧ ನೇರ ಆರೋಪವಿಲ್ಲ. ಎರಡನೇ ಆರೋಪಿ ಸತೀಶ್ ಬಾಬಣ್ಣ ಅವರ ಮೇಲೆ ಮಾತ್ರವೇ ಆರೋಪವಿದೆ. ಮಹಿಳೆಯನ್ನ ಸತೀಶ್ ಬಾಬಣ್ಣ ಅವರು ಬಂದು ಕರೆದುಕೊಂಡು ಹೋದರು ಎಂದು ಮಾತ್ರವೇ ಹೇಳದಾಗಿದೆಯೇ ಹೊರತು ರೇವಣ್ಣ ನವರು ಹೇಳಿದಕ್ಕೆ ಕರೆದುಕೊಂಡು ಹೋಗಿದೆಂದು ಎಲ್ಲೂ ತಿಳಿಸಿಲ್ಲ. ಅದೇ ರೀತಿ ಎಫ್.ಐ.ಆರ್ ನಲ್ಲೂ ಮಹಿಳೆಯ ಹೆಸರನ್ನು ಉಲ್ಲೇಖಿಸಿಲ್ಲ. ರೇವಣ್ಣ ವಿರುದ್ಧ ಕೇವಲ ಹೇಳಿದ-ಕೇಳಿದ ಎಂಬತಹ ಆಧಾರದ ರಹಿತ ಅಂಶಗಳಿವೆ ಎಂದರು.
6
+ ದೂರುದಾರರ ಹೇಳಿಕೆ ಬಿಟ್ಟರೆ ಎಫ್.ಐ.ಆರ್ ನಲ್ಲಿ ಏನ್ನೂ ಇಲ್ಲ. ಪ್ರಕರಣವನ್ನ ಅನಗತ್ಯವಾಗಿ ವಿಜೃಂಭಿಸುವ ಯತ್ನವನ್ನ ಎಸ್.ಐ.ಟಿ ಮಾಡುತ್ತಿದೆ. ಜಾಮೀನು ಸಿಗಬಾರದೆಂದು ಸೆಕ್ಷನ್ ೩೬೩, ೩೬೪ಎರ ಅಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ಎ೨ ಆರೋಪಿಗೂ, ರೇವಣ್ಣಗೂ ಯಾವುದೇ ಸಂಬಧವಿಲ್ಲ. ಏಪ್ರಿಲ್ ೨೯ ರಂದು ಘಟನೆ ನಡೆದಿದೆ ಎಂದು ದೂರಿದರೂ, ಮೇ ೨ಕ್ಕೆ ಎಫ್.ಐ.ಆರ್ ದಾಖಲಾಗಿದೆ.
7
+ ಪ್ರಾಸಿಕ್ಯೂಷನ್ ಪರ ವಕೀಲರು ನಿನ್ನೆಯಷ್ಟೆ ರೇವಣ್ಣ ವಿರುದ್ಧ ಜಾಮೀನು ರಹಿತ ಆರೋಪಗಳಿಲ್ಲವೆಂದು ಹೇಳಿದ್ದರು. ಆ ಕಾರಣಕ್ಕೆ ನಮ್ಮ ನಿರೀಕ್ಷಣಾ ಜಾಮೀನು ಕೋರಿಕೆ ಅರ್ಜಿಯನ್ನು ವಾಪಸ್ಸ್ ಪಡೆದಿದ್ದೆವು. ಆದರೆ ಅವರು ಪುನ: ಮತ್ತೊಂದು ನೋಟೀಸ್ ನೀಡಿದ್ದಾರೆ. ಈ ನಡೆಯನ್ನು ಗಮನಿಸಿದರೆ ಅರ್ಜಿದಾರರು ನಮ್ಮನ್ನು ಬಂಧಿಸಬಹುದೆAದು ಆತಂಕವಿದೆ. ತುರ್ತಾಗಿ ಜಾಮೀನು ನೀಡಿದರೆ ಸಂಪೂರ್ಣವಾಗಿ ತನಿಖೆಗೆ ಸಹಕರಿಸಲು ಸಿದ್ಧವಿದ್ದೇವೆ.
8
+ ಬಂಧನದಿದ ರಕ್ಷಣೆ ಕೊಟ್ಟರೆ ತಕ್ಷಣವೇ ರೇವಣ್ಣ ವಿಚಾರಣೆಗೆ ಹಾಜರಾಗುತ್ತಾರೆ ಎಂದು ರೇ���ಣ್ಣ ಪರ ವಕೀಲರು ಪ್ರಬಲ ವಾದ ಮಂಡಿಸಿದರು. ಜಾಮೀನಿಗೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರಿ ಪರ ವಕೀಲರಾದ ಎಸ್.ಪಿ.ಜಗದೀಶ್ ಅವರು ವಾದ ಮಂಡಿಸಿ ಇನ್ ಕ್ಯಾಮರಾ ವಿಚಾರಣೆಗೆ ಮನವಿ ಮಾಡಿದರು. ಈ ಪ್ರಕರಣದಲ್ಲಿ ಮಹಿಳೆಯ ಕಿಡ್ನಾಪ್ ಆಗಿದೆ. ಅವರನ್ನ ಕಿಡ್ನಾಪ್ ಮಾಡಿದು ಯಾರು ? ಬಡ ಮಹಿಳೆಯನ್ನ ಹುಡುಕಲು ಎಸ್.ಐ.ಟಿ ಎಲ್ಲಾ ಪ್ರಯತ್ನ ಮಾಡುತ್ತಿದೆ. ಸಂತ್ರಸ್ತ ಮಹಿಳೆ ದೂರು ನೀಡದಂತೆ ತಡೆಯಲಾಗುತ್ತಿದೆ. ನಮ್ಮ ಪೊಲೀಸರು ಹಗಲು-ರಾತ್ರಿ ಮಹಿಳೆಯನ್ನು ಹುಡುಕುತ್ತಿದ್ದಾರೆ. ದೂರು ನೀಡಿದರೆ ಎಚ್ಚರ ಎಂಬ ಸಂದೇಶ ರವಾನಿಸಿದಂತಿದೆ ಎಂದು ಬಿಹಾರ ರಾಜ್ಯದಂತಾಗುತ್ತದೆ ಎಂದು ಹೇಳಿದರು.
9
+ ರೇವಣ್ಣ ರಾಜಕೀಯ, ಆರ್ಥಿಕವಾಗಿ ಬಲಾಢ್ಯರಾಗಿದ್ದಾರೆ. ಹೀಗಾಗಿ ಜಾಮೀನು ನೀಡಬಾರದೆಂದು ವಕೀಲರು ಪ್ರಬಲ ವಾದ ಮಂಡಿಸಿದರು. ವಾದ-ವಿವಾದ ಆಲಿಸಿದ ನ್ಯಾಯಾಲಯ ಕೆಲಕಾಲ ಕಲಾಪವನ್ನು ಮುಂದೂಡಿ ನಂತರ ತೀರ್ಪನ್ನ ಪ್ರಕಟಿಸಿ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತು.
10
+ ಜಾಮೀನು ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಬಂಧಿಸಿ ಪ್ರಕರಣ ಕುರಿತು ವಿಚಾರಣೆ ನಡೆಸುತ್ತಿದ್ದಾರೆ.
eesanje/url_46_158_1.txt ADDED
@@ -0,0 +1,7 @@
 
 
 
 
 
 
 
 
1
+ ವಿಧಾನಪರಿಷತ್‌ನ 3 ಪದವೀಧರ ಹಾಗೂ 3 ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟ
2
+ ಬೆಂಗಳೂರು,ಮೇ.4-ವಿಧಾನಪರಿಷತ್‌ನ ಮೂರು ಪದವೀಧರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದು, ಮತದಾರರ ಪಟ್ಟಿಗೆ ಹೆಸರುಗಳನ್ನು ನೊಂದಾಯಿಸಲು ಮೇ 6 ಕಡೆಯ ದಿನವಾಗಿದೆ.
3
+ ಕರ್ನಾಟಕ ಈಶಾನ್ಯ ಪದವೀಧರ, ಕರ್ನಾಟಕ ನೈರುತ್ಯ ಪದವೀಧರ, ಬೆಂಗಳೂರು ಪದವೀಧರ, ಕರ್ನಾಟಕ ಆಗ್ನೇಯ ಶಿಕ್ಷಕರ, ಕರ್ನಾಟಕ ನೈರುತ್ಯ ಶಿಕ್ಷಕರ ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಣ ಕ್ಷೇತ್ರಗಳ ತಲಾ ಒಂದು ಸ್ಥಾನಗಳಿಗೆ ಜೂನ್‌ 3 ರಂದು ಚುನಾವಣೆ ನಡೆಯಲಿದೆ.
4
+ ಇದುವರೆಗೂ ಪದವೀಧರರ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆ ಮಾಡದವರು ಮೇ 6 ಸಂಜೆ 5.30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಮತದಾರರ ದಾಖಲಾತಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಪದವೀಧರರು ನಮೂನೆ 18 ರಲ್ಲಿ ಹಾಗೂ ಶಿಕ್ಷಕರು ನಮೂನೆ 19 ರಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
5
+ ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ಕಡೆಯ ದಿನಾಂಕಗಳಿಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಆನಂತರ ನೋಂದಾವಣಿಗೆ ಅವಕಾಶ ಇರುವುದಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿ ಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
6
+ ಬೆಂಗಳೂರು ಪದವೀಧರ ಕ್ಷೇತ್ರ ವ್ಯಾಪ್ತಿಯ ಬೆಂಗಳೂರು ನಗರ, ಬಿಬಿಎಂಪಿ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಯ ಅರ್ಹ ಪದವೀಧರರು ನಮೂನೆ 18 ರಲ್ಲಿ ಮೇ 6 ಸಂಜೆ 5.30ರೊಳಗಾಗಿ ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಬಹುದಾಗಿದೆ.
7
+ ಹಾಗೆಯೇ ಕರ್ನಾಟಕ ಆಗ್ನೇಯ ಶಿಕ್ಷಕರ ವ್ಯಾಪ್ತಿಯ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಯ ಹರಿಹರ, ಜಗಳೂರು, ದಾವಣಗೆರೆ ತಾಲೂಕುಗಳ ವ್ಯಾಪ್ತಿಯ ಅರ್ಹ ಶಿಕ್ಷಕರು ನಮೂನೆ 19 ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 1,00,100 ಮತದಾರರು ಈತನಕ ನೋಂದಾವಣೆಯಾಗಿದ್ದಾರೆ.
eesanje/url_46_158_10.txt ADDED
@@ -0,0 +1,6 @@
 
 
 
 
 
 
 
1
+ ಹುಬ್ಬಳ್ಳಿಯಲ್ಲಿ ಹಿಂದೂ ಅಪ್ರಾಪ್ತೆ ಮೇಲೆ ಅನ್ಯಕೋಮಿನ ಯುವಕ ಅತ್ಯಚಾರ : ಕಾಂಗ್ರೆಸ್‌ ವಿರುದ್ಧ ಬಿಜೆಪಿ ವಾಗ್ದಾಳಿ
2
+ ಬೆಂಗಳೂರು,ಮೇ4-ಹುಬ್ಬಳ್ಳಿಯಲ್ಲಿ ಅನ್ಯಕೋಮಿನ ಯುವಕನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಅಪ್ರಾಪ್ತೆ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ರಾಜ್ಯ ಸರ್ಕಾರವನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. ಕಾಂಗ್ರೆಸ್‌ ಬ್ರದರ್ಸ್‌ಗಳಿಂದ ಹಿಂದೂ ಹೆಣ್ಣುಮಕ್ಕಳ ಮೇಲೆ ಮತ್ತೊಂದು ಅತ್ಯಾಚಾರ ಎಂದು ವಾಗ್ದಾಳಿ ನಡೆಸಿದೆ.
3
+ ಪ್ರಕರಣ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ರಾಜ್ಯ ಬಿಜೆಪಿ, ತಾಲಿಬಾನಿ ಕಾಂಗ್ರೆಸ್‌ ಸರ್ಕಾರದಲ್ಲಿ ಹಿಂದೂಗಳಿಗೆ ಇಲ್ಲ ಸುರಕ್ಷತೆ. ಕಾಂಗ್ರೆಸ್‌ ಬ್ರದರ್ಸ್‌ಗಳಿಂದ ಹಿಂದೂ ಹೆಣ್ಣು ಮಕ್ಕಳ ಮೇಲೆ ಮತ್ತೊಂದು ಅತ್ಯಾಚಾರ ಎಂದು ಗಂಭೀರ ಆರೋಪ ಮಾಡಿದೆ.ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂ ಯುವತಿಯರು ಮನೆಯಿಂದ ಹೊರಬರುವುದೇ ಕಷ್ಟವಾಗಿದೆ. ಈ ಹಿಂದೂ ವಿರೋಧಿ ಸರ್ಕಾರ ತೊಲಗಬೇಕು ಎಂದು ಬಿಜೆಪಿ ಆಕ್ರೋಶ ಹೊರಹಾಕಿದೆ.
4
+ ಹುಬ್ಬಳ್ಳಿ ಫೈಲ್ಸ್!ಮತಾಂಧನಿಂದ ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ. ಹುಬ್ಬಳ್ಳಿಯಲ್ಲಿ ಹಿಂದೂ ಯುವತಿಯರು, ಬಾಲಕಿಯರಿಗಿಲ್ಲ ರಕ್ಷಣೆ.ಭಯೋತ್ಪಾದಕರು, ಅತ್ಯಾಚಾರಿಗಳು, ಮತಾಂಧ ಜಿಹಾದಿಗಳನ್ನು ಬ್ರದರ್ಸ್ ಎನ್ನುವ@INCKarnatakaಕ್ಕೆ ಅಧಿಕಾರ ಕೊಟ್ಟ ತಪ್ಪಿಗೆ ಇಂದು ಹಿಂದೂ ಯುವತಿಯರು ಕೇರಳ ಫೈಲ್ಸ್ ಮಾದರಿಯಲ್ಲಿ ಬಲಿಯಾಗುತ್ತಿದ್ದಾರೆ.…../QO5E9G0yTA
5
+ ಹುಬ್ಬಳ್ಳಿಯಲ್ಲಿ ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಗರ್ಭಿಣಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ. ಸ್ಥಳೀಯರಿಂದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕಾರ್ಯಾಚರಣೆ ನಡೆಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
6
+ ವಶಕ್ಕೆ ಪಡೆಯುವ ಸಂದರ್ಭದಲ್ಲಿ ಆರೋಪಿಯು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ. ಈ ವೇಳೆ ಕಾಲಿಗೆ ಗುಂಡೇಟು ಹೊಡೆದು ಪೊಲೀಸರು ಬಂಧಿಸಿದ್ದಾರೆ.
eesanje/url_46_158_11.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ 2ನೇ ಹಂತದ ಚುನಾವಣೆ ಮೇಲೆ ಪರಿಣಾಮ ಬೀರುತ್ತಾ ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣ..?
2
+ ಬೆಂಗಳೂರು,ಮೇ4-ರಾಜ್ಯಾದ್ಯಂತ ಭಾರೀ ವಿವಾದದ ಬಿರುಗಾಳಿಯನ್ನೇ ಸೃಷ್ಟಿಸಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣನ ಲೈಂಗಿಕ ಹಗರಣದ ಪೆನ್‌ಡ್ರೈವ್‌ ಪ್ರಕರಣ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳ ಮತದಾನದ ಮೇಲೆ ಏನು ಪರಿಣಾಮ ಬೀರಬಹುದೆಂಬ ಲೆಕ್ಕಾಚಾರಗಳು ಆರಂಭವಾಗಿವೆ.
3
+ ಮಧ್ಯಕರ್ನಾಟಕದ ಶಿವಮೊಗ್ಗ, ದಾವಣಗೆರೆ ಹಾಗೂ ಕರಾವಳಿ ಭಾಗದ ಉತ್ತರಕನ್ನಡ ಜಿಲ್ಲೆ ಹೊರತುಪಡಿಸಿದರೆ ಉಳಿದ 11 ಕ್ಷೇತ್ರಗಳು ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗಕ್ಕೆ ಸೇರಿವೆ. ಪ್ರಸ್ತುತ 14 ಲೋಕಸಭಾ ಕ್ಷೇತ್ರಗಳಲ್ಲೂ ಪ್ರಜ್ವಲ್‌ ರೇವಣ್ಣ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ಸ್ವರೂಪ ಪಡೆದುಕೊಳ್ಳುತ್ತಿದ್ದು, ಕಾಂಗ್ರೆಸ್‌ ಮತ್ತು ಬಿಜೆಪಿ ಇದನ್ನೇ ಪ್ರಚಾರದಲ್ಲಿ ಅಸ್ತ್ರ ಮಾಡಿಕೊಂಡಿವೆ.
4
+ ಈ ನಿಟ್ಟಿನಲ್ಲಿ ಪ್ರಜ್ವಲ್‌ ಪ್ರಕರಣ ರಾಜಕೀಯವಾಗಿ ಈ ಭಾಗದಲ್ಲಿ ಪ್ರಮುಖ ಚುನಾವಣಾ ಅಸ್ತ್ರವಾಗಿ ಬಳಕೆಯಾಗುತ್ತಿಲ್ಲ. ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಇದರ ಕುರಿತಾಗಿ ಚರ್ಚೆಗಳು ನಡೆದರೂ ಅದರ ಪರಿಣಾಮ ಏನು ಎಂಬುವುದು ಕೂಡಾ ಪ್ರಮುಖ ಅಂಶವಾಗಿದೆ. ಆದರೆ ನೇಹಾ ಪ್ರಕರಣವನ್ನು ಬಿಜೆಪಿ ಈ ಭಾಗದಲ್ಲಿ ಚುನಾವಣಾ ಅಸ್ತ್ರವನ್ನಾಗಿ ಬಳಕೆ ಮಾಡುತ್ತಿರುವುದಕ್ಕೆ ಕೌಂಟರ್‌ ನೀಡಲು ಪ್ರಜ್ವಲ್‌ ಪ್ರಕರಣವನ್ನು ಕಾಂಗ್ರೆಸ್‌ ನಾಯಕರು ಬಳಕೆ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಅದರ ಜೊತೆ ಜೊತೆಗೆ ವಿವಿಧ ರಾಜ್ಯಗಳ ಚುನಾವಣಾ ಪ್ರಚಾರದಲ್ಲೂ ಈ ಪ್ರಕರಣ ಸದ್ದು ಮಾಡುತ್ತಿದೆ.
5
+ ಕಾಂಗ್ರೆಸ್‌ ಹಾಸನ ಪ್ರಕರಣವನ್ನು ಚುನಾವಣಾ ಚರ್ಚೆಗೂ ಬಳಕೆ ಮಾಡುತ್ತಿದೆ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣವನ್ನು ಬಿಜೆಪಿ ಲವ್‌ ಜಿಹಾದ್‌ ಎಂದು ಬಿಂಬಿಸುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ನೇಹಾ ಕುಟುಂಬವನ್ನು ಭೇಟಿ ಮಾಡಿದ್ದಾರೆ. ಅಲ್ಲದೆ ಬಿಜೆಪಿ ಘಟಾನುಘಟಿ ನಾಯಕರು ಕೂಡಾ ನೇಹಾ ಪ್ರಕರಣದಲ್ಲಿ ಧ್ವನಿ ಎತ್ತಿದ್ದಾರೆ.
6
+ ನೇಹಾ ಪ್ರಕರಣಕ್ಕೆ ಕಾಂಗ್ರೆಸ್‌ ಪಕ್ಷದ ನಾಯಕರ ಒಂದು ಸಮುದಾಯದ ತುಷ್ಟೀಕರಣ ನೀತಿಯೇ ಕಾರಣ ಎಂಬ ಅಭಿಪ್ರಾಯಗಳು ಬಿಜೆಪಿ ನಾಯಕರಿಂದ ವ್ಯಕ್ತವಾಗುತ್ತಿವೆ. ಇದಕ್ಕೆ ಕಾಂಗ್ರೆಸ್‌ ನಾಯಕರು ಪ್ರತ್ಯುತ್ತರ ನೀಡುತ್ತಿದ್ದಾರೆ. ಆದರೆ ಇದೀಗ ಪ್ರಜ್ವಲ್‌ ರೇವಣ್ಣ ಪ್ರಕರಣ ಕಾಂಗ್ರೆಸ್ಗೆ ಪ್ರಬಲ ಅಸ್ತ್ರವಾಗಿ ಸಿಕ್ಕಿದೆ.
7
+ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಿದೆ. ಇದೀಗ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ವಿರುದ್ಧ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿಯ ಮೌನವನ್ನು ಕಾಂಗ್ರೆಸ್‌ ಪ್ರಶ್ನೆ ಮಾಡುತ್ತಿದೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜ್ವಲ್‌ ಪರವಾಗಿ ಮತಯಾಚನೆ ಮಾಡಿದ್ದನ್ನು ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್‌ ಪದೇ ಪದೇ ಪ್ರಸ್ತಾಪ ಮಾಡುತ್ತಿದೆ.
8
+ ಬೆಳಗಾವಿಯಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಸರ್ಕಾರದ ಓಲೈಕೆ ರಾಜಕಾರಣ ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆಗೆ ಕಾರಣವಾಯಿತು ಎಂದು ಆರೋಪಿಸಿದರು. ಈಗ ಪೋಷಕರು ತಮ್ಮ ಮಕ್ಕಳನ್ನು ಶಾಲಾ-ಕಾಲೇಜುಗಳಿಗೆ ಕಳುಹಿಸಲು ಭಯಪಡುತ್ತಿದ್ದಾರೆ ಎಂದು ಹೇಳಿದ್ದರು.
9
+ ಈ ಹಗರಣವು ತಮ್ಮ ಪಕ್ಷಕ್ಕೆ ಮುಜುಗರ ತಂದಿದೆ ಎಂಬುದನ್ನು ಕೆಲವು ರಾಜ್ಯ ಬಿಜೆಪಿ ನಾಯಕರು ಒಪ್ಪಿಕೊಂಡಿದ್ದಾರೆ. ಆದರೆ ಇದು 14 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿಯ ಭವಿಷ್ಯದ ಮೇಲೆ ಪರಿಣಾಮ ಬೀರುವುದಿಲ್ಲ. ಸಂತ್ರಸ್ತೆ ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಇಲ್ಲಿ ಕೊಲೆ ಪ್ರಕರಣ ಪ್ರಮುಖ ವಿಷಯವಾಗಿದೆ ಎಂದು ಹೇಳುತ್ತಾರೆ.
10
+ ಆಡಳಿತಾರೂಢ ಕಾಂಗ್ರೆಸ್‌ ಪ್ರಜ್ವಲ್‌ ಪ್ರಕರಣವನ್ನು ವಿಶೇಷವಾಗಿ ಮಹಿಳೆಯರ ಮತ ಸೆಳೆಯಲು ಬಳಸಿಕೊಳ್ಳುತ್ತಿದೆ. ಹುಬ್ಬಳ್ಳಿಯಲ್ಲೂ ಮಹಿಳಾ ಘಟಕದ ಸದಸ್ಯರು ಪ್ರತಿಭಟನೆ ನಡೆಸಿದರು. ಱಹುಬ್ಬಳ್ಳಿ ಕೊಲೆ ಪ್ರಕರಣವನ್ನು ಬಿಜೆಪಿ ತನ್ನ ಲಾಭಕ್ಕೆ ಬಳಸಿಕೊಳ್ಳುತ್ತಿರುವಾಗ ನಾವು ಪ್ರಜ್ವಲ್‌ ಪ್ರಕರಣವನ್ನು ಪ್ರಸ್ತಾಪಿಸಬೇಕಲ್ಲವೇ? ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್‌ ಪ್ರಶ್ನಿಸಿದ್ದಾರೆ.
11
+ ಬಿಜೆಪಿ ಪರ ಪ್ರಚಾರದಲ್ಲಿ ನಿರತರಾಗಿರುವ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ, ಪ್ರಜ್ವಲ್‌ ಪ್ರಕರಣದಲ್ಲಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿ ತಿರುಗೇಟು ನೀಡಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ್ದ ಅಮಿತ್‌ ಶಾ, ಅತ್ಯಾಚಾರಿಗಳ ಜೊತೆ ಬಿಜೆಪಿ ನಿಲ್ಲುವುದಿಲ್ಲ. ಆರೋಪಿಗಳು ದೇಶ ಬಿಟ್ಟು ಪರಾರಿಯಾಗದಂತೆ ಕಾಂಗ್ರೆಸ್‌ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕಿತ್ತು ಎಂದಿದ್ದರು. ಅವರು ಹುಬ್ಬಳ್ಳಿಯಲ್ಲಿ ನೇಹಾ ಅವರ ಪೋಷಕರನ್ನು ಭೇಟಿಯಾಗಿದ್ದರು.
12
+ ಆದರೆ ರಾಜ್ಯದಲ್ಲಿ ಜೆಡಿಎಸ್‌ ತನ್ನ ಮೈತ್ರಿಕೂಟದ ಪಾಲುದಾರನಾಗಿರುವುದರಿಂದ ಪ್ರಜ್ವಲ್‌ ಪ್ರಕರಣದಲ್ಲಿ ಬಿಜೆಪಿಯನ್ನು ಮಣಿಸಲು ಕಾಂಗ್ರೆಸ್‌ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ. ರಾಹುಲ್‌ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್‌ ನ ಉನ್ನತ ನಾಯಕರು ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದರು, ಈ ವಿಷಯದ ಬಗ್ಗೆ ಅವರ ಮೌನವನ್ನು ಪ್ರಶ್ನಿಸಿದ್ದರು.
13
+ ಮೇ 7ರಂದು ರಾಜ್ಯದಲ್ಲಿ ನಡೆಯಲಿರುವ ಎರಡನೇ ಹಂತದ ಚುನಾವಣೆ ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿಗೆ ಪ್ರಮುಖ ಸಮಸ್ಯೆಯಾಗಿ ಪರಿಣಮಿಸಿದೆ.ಆದರೆ, ಕಾಂಗ್ರೆಸ್‌ ಮತ್ತು ಬಿಜೆಪಿಯ ನಿರೀಕ್ಷೆಗಳ ಮೇಲೆ ಅವು ಎಷ್ಟರ ಮಟ್ಟಿಗೆ ಪ್ರಭಾವ ಬೀರಬಹುದು ಎಂಬುದನ್ನು ಕಾದು ನೋಡಬೇಕು.
14
+ ರಾಷ್ಟ್ರೀಯ ಮಟ್ಟದಲ್ಲಿ ಹಾಗೂ ಅಂತರ��ಷ್ಟ್ರೀಯ ಮಟ್ಟದಲ್ಲಿ ಇದೊಂದು ಚರ್ಚಾ ವಿಚಾರವಾಗಿದೆ. ಅಂತರಾಷ್ಟ್ರೀಯ ಮಾಧ್ಯಮಗಳಲ್ಲೂ ಈ ಸುದ್ದಿ ಪ್ರಚಾರ ಆಗಿದೆ. ಈ ನಿಟ್ಟಿನಲ್ಲಿ ಜೆಡಿಎಸ್‌ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಗೆ ಇದರಿಂದ ಮುಜುಗರ ಉಂಟಾಗುತ್ತಿರುವುದಂತೂ ಸತ್ಯ.
eesanje/url_46_158_12.txt ADDED
@@ -0,0 +1,5 @@
 
 
 
 
 
 
1
+ ಪೆನ್‌ಡ್ರೈವ್‌ ಪ್ರಕರಣ : ಎಸ್‌ಐಟಿ ಮುಂದೆ ಹಾಜರಾದ ದೇವರಾಜೇಗೌಡ
2
+ ಹಾಸನ, ಮೇ 3-ಅಶ್ಲೀಲ ವಿಡಿಯೋ ಪ್ರಕರಣ ತನಿಖೆ ನಡೆಸುತ್ತಿರುವ ಎಸ್‌ಐಟಿ ಮುಂದೆ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಸಂಸದ ಪ್ರಜ್ವಲ್‌ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್‌ ತನ್ನ ಬಳಿ ಇದ್ದ ಪೆನ್‌ಡ್ರೈವ್‌ನ್ನು ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ ಮಾತ್ರ ಕೊಟ್ಟಿದ್ದೆ ಎಂದು ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿ ಹೇಳಿದ್ದನು.
3
+ ಹೊಳೆನರಸೀಪುರ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣದ ಮುಂದಿನ ತನಿಖೆ ಸಂಬಂಧ ವಿಚಾರಣೆಗೆ ಹಾಜರಾಗಿ ತಮ್ಮ ಬಳಿ ಲಭ್ಯವಿರುವ ದಾಖಲೆಗಳ ಜೊತೆ ನೊಟೀಸ್‌ ಸ್ವೀಕರಿಸಿದ ಕೂಡಲೇ ತನಿಖಾಧಿಕಾರಿಗಳ ಮುಂದೆ ವಿಚಾರಣೆ ತನಿಖೆಗೆ ಸಹಕರಿಸುವಂತೆ ಎಸ್‌ಐಟಿ ದೇವರಾಜೇಗೌಡರಿಗೆ ನೋಟೀಸ್‌ ನೀಡಿತ್ತು. ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳ ಮುಂದೆ ನಿನ್ನೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.
4
+ ಈ ಪ್ರಕರಣದ ಪ್ರಮುಖ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪೆನ್‌ಡ್ರೈವ್‌ಗಳನ್ನು ಹಂಚಿರುವವರ ಬಗ್ಗೆ ಹಲವು ಮಾಹಿತಿಗಳನ್ನು ಎಸ್‌ಐಟಿ ಮುಂದೆ ಹೇಳಿರುವುದಾಗಿ ದೇವರಾಜೇಗೌಡ ತಮ್ಮ ಸ್ಟೇಟಸ್‌ನಲ್ಲಿ ಹಾಕಿಕೊಂಡಿದ್ದಾರೆ.
5
+ ಈ ಪ್ರಕರಣದ ತನಿಖೆಗೆ ಎಲ್ಲಾ ಸಹಕಾರ ನೀಡುವುದಾಗಿ ಅಕಾರಿಗಳ ಮುಂದೆ ಹೇಳಿದ್ದೇನೆ. ಪೆನ್‌ಡ್ರೈವ್‌ನಲ್ಲಿರುವ ಸಂತ್ರಸ್ತೆಯರ ಜೊತೆ ಚೆಲ್ಲಾಟ ಮಾಡಿರುವ ರಾಜಕಾರಣಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದೇನೆ ಎಂದು ದೇವರಾಜೇಗೌಡ ಸ್ಟೇಟಸ್‌ನಲ್ಲಿ ಬರೆದುಕೊಂಡಿದ್ದಾರೆ.
eesanje/url_46_158_2.txt ADDED
@@ -0,0 +1,9 @@
 
 
 
 
 
 
 
 
 
 
1
+ ಮಹಿಳೆಯರ ಮೇಲಿನ ದೌರ್ಜನ್ಯ ಕಂಡರೂ ಮೋದಿ ಮೌನ : ರಾಹುಲ್‌ ವಾಗ್ದಾಳಿ
2
+ ಬೆಂಗಳೂರು,ಮೇ.4-ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳನ್ನು ಕಂಡೂ ಹಿರಿಯ ಚುನಾಯಿತ ಪ್ರತಿನಿಧಿ ಮೌನಕ್ಕೆ ಶರಣಾಗಿದ್ದಾರೆ ಎಂದು ಕಾಂಗ್ರೆಸ್‌ನ ವರಿಷ್ಠ ನಾಯಕ ರಾಹುಲ್‌ಗಾಂಧಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
3
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಹಾಸನದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ಬೆಂಬಲವನ್ನೂ ನೀಡಬೇಕು. ನ್ಯಾಯಕ್ಕಾಗಿ ಹೋರಾಟ ನಡೆಸುವ ಅವರಿಗೆ ನಮ್ಮ ಸಹಾನುಭೂತಿ ಮತ್ತು ಬೆಂಬಲದ ಅಗತ್ಯವಿದೆ. ಪಕ್ಷಭೇದ ಮರೆತು ಘೋರ ಅಪರಾಧ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಿ ಸಂತ್ರಸ್ತರಿಗೆ ನ್ಯಾಯ ದೊರಕಿಸುವುದು ಎಲ್ಲರ ಸಂಘಟನಾತ್ಮಕ ಜವಾಬ್ದಾರಿ ಎಂದು ಹೇಳಿದ್ದಾರೆ.
4
+ ಹಾಸನದ ಲೋಕಸಭಾ ಸದಸ್ಯರಿಂದ ನಡೆದಿದೆ ಎನ್ನಲಾದ ಭೀಕರ ಲೈಂಗಿಕ ದೌರ್ಜನ್ಯ ಪ್ರಕರಣ ನನ್ನನ್ನು ಆಘಾತಕ್ಕೊಳಪಡಿಸಿದೆ. ತಾಯಿ, ಸಹೋದರಿ ಸಮಾನರಾದ ನೂರಾರು ಮಹಿಳೆಯರ ಮೇಲೆ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ನಡೆಸಿ, ಅದನ್ನು ವಿಡಿಯೋ ಚಿತ್ರೀಕರಣ ಮಾಡಿಕೊಂಡಿರುವುದು ಕಂಡುಬಂದಿದೆ. ಈ ಮೂಲಕ ಮಹಿಳೆಯರ ಘನತೆಯನ್ನು ಕಸಿದುಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
5
+ ನನಗೆ ಮತ್ತೊಂದು ಆಘಾತವೆಂದರೆ 2023 ರ ಡಿಸೆಂಬರ್‌ನಲ್ಲೇ ಹಾಸನದ ಬಿಜೆಪಿ ಮುಖಂಡ ಜಿ.ದೇವರಾಜೇಗೌಡ, ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರಿಗೆ ಪ್ರಜ್ವಲ್‌ ರೇವಣ್ಣ ಅವರ ಪೂರ್ವಾಪರ ಲೈಂಗಿಕ ದೌರ್ಜನ್ಯದ ಇತಿಹಾಸ ಮತ್ತು ಆತ ಚಿತ್ರೀಕರಿಸಿರುವ ವಿಡಿಯೋಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಅದರ ಹೊರತಾಗಿಯೂ ಬಿಜೆಪಿಯ ಹಿರಿಯ ನಾಯಕರು ಹಾಗೂ ಪ್ರಧಾನಮಂತ್ರಿಯವರು ಸಮೂಹ ಅತ್ಯಾಚಾರಿಯ ಪರವಾಗಿ ಚುನಾವಣಾ ಪ್ರಚಾರ ನಡೆಸಿದ್ದಾರೆ ಎಂದು ರಾಹುಲ್‌ ವಾಗ್ದಾಳಿ ನಡೆಸಿದ್ದಾರೆ.
6
+ ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿಯೇ ಆರೋಪಿ ದೇಶಬಿಟ್ಟು ಪರಾರಿಯಾಗಲು ಅವಕಾಶ ನೀಡಿದೆ. ಈ ಮೂಲಕ ತನಿಖೆಯನ್ನು ಅರ್ಥಹೀನಗೊಳಿಸುವ ಯತ್ನ ನಡೆದಿದೆ. ಆರೋಪಕ್ಕೆ ಗುರಿಯಾಗಿರುವ ಪ್ರಜ್ವಲ್‌ ರೇವಣ್ಣ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರ ಆಶೀರ್ವಾದ ಇರುವುದು ಖಂಡನೀಯ ಎಂದು ಹೇಳಿದ್ದಾರೆ.
7
+ ಕುಸ್ತಿಯಲ್ಲಿ ಒಲಿಂಪಿಕ್‌ ಸೇರಿದಂತೆ ಅಂತಾರಾಷ್ಟ್ರೀಯ ಕ್ರೀಡೆಯಲ್ಲಿ ಪದಕ ಗೆದ್ದಂತಹ ಹರಿಯಾಣದ ಸಹೋದರಿಯರ ಮೇಲಾದ ದೌರ್ಜನ್ಯ, ಮಣಿಪುರದ ಸಹೋದರಿಯರ ಮೇಲಿನ ಕಿರುಕುಳ, ಈಗ ಹಾಸನದ ಪ್ರಕರಣ ಸೇರಿದಂತೆ ಹಲವಾರು ಸಂದರ್ಭಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯವಾದಾಗ ಪ್ರಧಾನಮಂತ್ರಿಯವರು ವೌ��ಕ್ಕೆ ಶರಣಾಗುವ ಮೂಲಕ ಆರೋಪಿಗಳಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ ಎಂದು ರಾಹುಲ್‌ಗಾಂಧಿ ಕಿಡಿ ಕಾರಿದ್ದಾರೆ.
8
+ ಸಂಕಷ್ಟಕ್ಕೊಳಗಾದ ಮಹಿಳೆಯರ ನ್ಯಾಯಕ್ಕಾಗಿ ಹೋರಾಡುವುದು ಕಾಂಗ್ರೆಸ್‌ನ ನೈತಿಕ ಕರ್ತವ್ಯ. ಕರ್ನಾಟಕ ಸರ್ಕಾರ ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ ಮಾಡಿದೆ. ಜೊತೆಗೆ ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ಅನ್ನು ರದ್ದುಗೊಳಿಸಿ ಭಾರತಕ್ಕೆ ಶೀಘ್ರವೇ ಹಸ್ತಾಂತರಿಸಲು ಸಹಕರಿಸುವಂತೆ ಮುಖ್ಯಮಂತ್ರಿಯವರು ಪ್ರಧಾನಿಯವರಿಗೆ ಪತ್ರ ಬರೆದಿದ್ದಾರೆ ಎಂದು ವಿವರಿಸಿದ್ದಾರೆ.
9
+ ರಾಹುಲ್‌ಗಾಂಧಿಯವರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸದ ಪ್ರಜ್ವಲ್‌ ರೇವಣ್ಣ ಅವರಿಂದ ಅತ್ಯಾಚಾರ ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ನಿಷ್ಪಕ್ಷಪಾತ ತನಿಖೆ ನಡೆಸಿ ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳು ಶಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗೆ ಒಪ್ಪಿಸಲಾಗುವುದು. ನೊಂದವರ ಕಣ್ಣೀರು ಒರೆಸುವ ಜೊತೆಗೆ ಅವರ ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ ಜೊತೆಗೆ ನಿಲ್ಲಲಿದೆ ಎಂಬ ವಾಗ್ದಾನವನ್ನು ರಾಹುಲ್‌ಗಾಂಧಿಯವರಿಗೆ ನೀಡುವುದಾಗಿ ತಿಳಿಸಿದ್ದಾರೆ.
eesanje/url_46_158_3.txt ADDED
@@ -0,0 +1,7 @@
 
 
 
 
 
 
 
 
1
+ ಪ್ರಜ್ವಲ್‌ ರೇವಣ್ಣ ಪ್ರಕರಣ : ಎಸ್‌ಐಟಿ ಅಧಿಕಾರಿಗಳ ಜತೆ ಸಿಎಂ ಮಹತ್ವದ ಸಭೆ
2
+ ಬೆಂಗಳೂರು,ಮೇ.4-ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಚಿಸಲಾಗಿರುವ ಎಸ್‌ಐಟಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಗೃಹಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದರು.
3
+ ಪ್ರಕರಣದ ಸಂಬಂಧಪಟ್ಟಂತೆ ಇದುವರೆಗಿನ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿಯವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ನಾಪತ್ತೆಯಾಗಿದ್ದು, ಲುಕ್‌ಔಟ್‌ ನೋಟಿಸ್‌ ಜೊತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.
4
+ ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆ ಸಹಿಸಲಾಗದು ಎಂದು ಮುಖ್ಯಮಂತ್ರಿಯವರು ಅಧಿ ಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ.
5
+ ಸೂಕ್ತ ಕ್ರಮಗಳೊಂದಿಗೆ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗುವುದು. ಸಿಬಿಐ ಸಹಕಾರದೊಂದಿಗೆ ಪ್ರಜ್ವಲ್‌ ರೇವಣ್ಣ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಹೊರಡಿಸುವ ಸಾಧ್ಯತೆ ಇದೆ. ಇದರಿಂದ ತನಿಖೆಗೆ ವೇಗ ಸಿಗಲಿದೆ. ವಿಮಾನ ನಿಲ್ದಾಣಗಳಿಂದ ಮಾಹಿತಿ ಸಿಕ್ಕ ಕೂಡಲೇ ಬಂಧಿಸಿ ಕರೆ ತರುವುದಾಗಿ ಅಧಿಕಾರಿಗಳು ಸಭೆಯಲ್ಲಿ ಮುಖ್ಯಮಂತ್ರಿಯವರಿಗೆ ವಿವರಿಸಿದ್ದಾರೆ.
6
+ ಮಾಹಿತಿ ಪಡೆಯಲು ಬ್ಲೂ ಕಾರ್ನರ್‌ ನೋಟೀಸ್‌ :196 ಸದಸ್ಯ ರಾಷ್ಟ್ರಗಳೊಂದಿಗೆ ಸಹಯೋಗ ಹೊಂದಿರುವ ಅಂತಾರಾಷ್ಟ್ರೀಯ ಪೊಲೀಸ್‌ ಸಂಸ್ಥೆ (ಇಂಟರ್‌ಪೋಲ್‌) ಹಲವಾರು ಸ್ವರೂಪದ ನೋಟೀಸ್‌ಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಶಿಕ್ಷೆಗೆ ಒಳಗಾಗಿರುವ ತಪ್ಪಿತಸ್ಥ ಆರೋಪಿಗಳ ಸ್ಥಳ ಪತ್ತೆ ಮತ್ತು ಬಂಧನಕ್ಕಾಗಿ ರೆಡ್‌ ಕಾರ್ನರ್‌ ನೋಟೀಸ್‌ ಜಾರಿಗೊಳಿಸಲಾಗುತ್ತದೆ. ನಾಪತ್ತೆಯಾಗಿರುವ ಅಪ್ರಾಪ್ತರ ಸ್ಥಳ ಪತ್ತೆ ಮತ್ತು ಸ್ವಯಂ ಗುರುತನ್ನು ಹೇಳಿಕೊಳ್ಳಲು ಸಾಧ್ಯವಾಗದಿರುವವರ ಪತ್ತೆಗಾಗಿ ಎಲ್ಲೋ ಕಾರ್ನರ್‌ ನೋಟೀಸ್‌ ಹೊರಡಿಸಲಾಗುತ್ತದೆ.
7
+ ಬ್ಲೂ ಕಾರ್ನರ್‌ ನೋಟೀಸ್‌ ಅನ್ನು ವ್ಯಕ್ತಿಯ ಗುರುತು, ಸ್ಥಳ ಪತ್ತೆ ಮತ್ತು ಅಪರಾಧ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆತನ ಚಟುವಟಿಕೆಗಳ ಹೆಚ್ಚುವರಿ ಮಾಹಿತಿಯನ್ನು ಕಲೆ ಹಾಕಲು ಹೊರಡಿಸಲಾಗುತ್ತದೆ. ಮೃತಪಟ್ಟವರ ಮಾಹಿತಿ ಸಂಗ್ರಹ ಹಾಗೂ ಗುರುತು ಪತ್ತೆಗೆ ಬ್ಲಾಕ್‌ ನೋಟೀಸ್‌ ಸೇರಿದಂತೆ ಗ್ರೀನ್‌, ಆರೆಂಜ್‌, ಪರ್ಪಲ್‌ ನೋಟೀಸ್‌ಗಳನ್ನು ನಿಗದಿಪಡಿಸಲಾಗಿದೆ.
eesanje/url_46_158_4.txt ADDED
@@ -0,0 +1,9 @@
 
 
 
 
 
 
 
 
 
 
1
+ ರಾಜ್ಯದ 2ನೇ ಹಂತದ ಲೋಕಸಭಾ ಚುನಾವಣೆ, ನಾಳೆ ಬಹಿರಂಗ ಪ್ರಚಾರಕ್ಕೆ ತೆರೆ
2
+ ಬೆಂಗಳೂರು,ಮೇ.4 –ರಾಜ್ಯದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ನಾಳೆ ಸಂಜೆ 6 ಗಂಟೆಗೆ ತೆರೆ ಬೀಳಲಿದೆ.ಮೇ 7 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುಂಚಿತವಾಗಿ ಅಂದರೆ ನಾಳೆ ಸಂಜೆ 6 ಗಂಟೆಯ ನಂತರ ಮತದಾರರಲ್ಲದ ರಾಜಕೀಯ ಪಕ್ಷಗಳ ಕಾರ್ಯಕರ್ತರು, ಮುಖಂಡರು, ನಾಯಕರು ಆಯಾ ಕ್ಷೇತ್ರಬಿಟ್ಟು ತೆರಳಬೇಕಾಗಿದೆ.
3
+ ಹೀಗಾಗಿ ಇಂದು ಮತ್ತು ನಾಳೆ ಅಬ್ಬರದ ಬಿರುಸಿನ ಚುನಾವಣಾ ಪ್ರಚಾರ ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್‌, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಲ್ಲಿ ನಡೆಯಲಿದೆ.
4
+ ಈಗಾಗಲೇ ಎಲ್ಲಾ ಕ್ಷೇತ್ರಗಳಲ್ಲೂ ಪ್ರಮುಖ ರಾಜಕೀಯ ಪಕ್ಷದ ನಾಯಕರು, ಮುಖಂಡರು, ಅಭ್ಯರ್ಥಿಗಳು ಬಿರುಸಿನ ಪ್ರಚಾರ ಕೈಗೊಂಡಿದ್ದು, ಮತದಾರರನ್ನು ಓಲೈಸಲು ನಾನಾ ರೀತಿಯ ಭರವಸೆಗಳನ್ನು ನೀಡುತ್ತಿದ್ದಾರೆ. ಆರೋಪ-ಪ್ರತ್ಯಾರೋಪದ ಮೂಲಕ ಪ್ರಚಾರದ ಅಬ್ಬರ ತಾರಕಕ್ಕೇರಿದೆ.
5
+ ನಾಳೆ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಅಲ್ಲಿಗೆ ರಾಜ್ಯದ ಎಲ್ಲಾ ಕ್ಷೇತ್ರಗಳ ಪ್ರಚಾರಕ್ಕೂ ತೆರೆ ಬಿದ್ದಂತಾಗುತ್ತದೆ. ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೂ ಇದೇ ನಿಯಮ ಅನ್ವಯವಾಗಲಿದೆ. ಆ ಕ್ಷೇತ್ರಕ್ಕೂ ಮೇ 7 ರಂದೇ ಮತದಾನ ನಡೆಯಲಿದೆ. ಸುರಪುರ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್‌ನಿಂದ ತಲಾ ಒಬ್ಬರು ಹಾಗೂ ನಾಲ್ವರು ಪಕ್ಷೇತರರು ಸೇರಿದಂತೆ ಒಟ್ಟು 6 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ.
6
+ ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ತಲಾ 14 ಕ್ಷೇತ್ರಗಳಲ್ಲೂ ಸ್ಪರ್ಧಿಸಿವೆ.ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿಲ್ಲ. ರಾಜಕೀಯ ಪಕ್ಷಗಳು, ಪಕ್ಷೇತರರು ಸೇರಿದಂತೆ ಒಟ್ಟು 227 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ. ಈ ಪೈಕಿ 206 ಪುರುಷ ಹಾಗೂ 21 ಮಹಿಳಾ ಅಭ್ಯರ್ಥಿಗಳು ಚುನಾವಣಾ ಸ್ಪರ್ಧೆಯಲ್ಲಿದ್ದಾರೆ.
7
+ ಒಟ್ಟು 2,59,52,958 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ. ಇದರಲ್ಲಿ 1,29,48,928 ಪುರುಷ, 1,29,66,570 ಮಹಿಳೆಯರಿದ್ದು, 35,465 ಸೇವಾ ಮತದಾರರಿದ್ದಾರೆ. ಯುವ ಮತದಾರರು 6,90,929 ಇದ್ದು, 85 ವರ್ಷ ಮೇಲ್ಪಟ್ಟ 2,29,563 ಮತದಾರರಿದ್ದರೆ, 3,43,966 ದಿವ್ಯಾಂಗ ಮತದಾರರಿದ್ದಾರೆ.
8
+ ಗುಲ್ಬರ್ಗ ಕ್ಷೇತ್ರದಲ್ಲಿ ಅತೀ ಹೆಚ್ಚು 20,98,202 ಮತದಾರರಿದ್ದರೆ, ಉತ್ತರ ಕನ್ನಡ ಕ್ಷೇತ್ರದಲ್ಲಿ 16,41,156 ಮತದಾರರಿದ್ದಾರೆ.14 ಕ್ಷೇತ್ರಗಳಲ್ಲೂ ಒಟ್ಟು 28,269 ಮತಗಟ್ಟೆಗಳನ್ನು ತೆರೆಯಲಾಗುತ್ತದೆ. ಎಡಗೈ ತೋರುಬೆರಳಿಗೆ ಅಳಿಸಲಾಗದ ಶಾಹಿಯನ್ನು ಹಾಕಲಾಗುತ್ತದೆ. ಮತದಾರರಿಗೆ ಈಗಾಗಲೇ ನೀಡಿರುವ ಓಟರ್‌ ಸ್ಲಿಪ್‌ ಹಾಗೂ ಮತದಾರರ ಗುರುತಿನ ಚೀಟಿಯನ್ನು ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ.
9
+ ಒಂದು ವೇಳೆ ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ, ಆಧಾರ್‌ ಕಾರ್ಡ್‌, ಮನ್ರೇಗಾ ಜಾಬ್‌ಕಾರ್ಡ್‌, ಬ್ಯಾಂಕ್‌ ಅಥವಾ ಪೋಸ್ಟ್ ಆಫೀಸ್‌ ಪಾಸ್‌ಬುಕ್‌, ಕಾರ್ಮಿಕ ಇಲಾಖೆ ನೀಡಿರುವ ಆರೋಗ್ಯ ವಿಮಾ ಸ್ಮಾರ್ಟ್‌ ಕಾರ್ಡ್‌, ಡ್ರೈವಿಂಗ್‌ ಲೈಸೆನ್‌್ಸ, ಪ್ಯಾನ್‌ ಕಾರ್ಡ್‌, ಪಾಸ್‌ಪೋರ್ಟ್‌, ಪಿಂಚಣಿ ದಾಖಲೆ ಸೇರಿದಂತೆ ಭಾವಚಿತ್ರವಿರುವ ಕೇಂದ್ರ, ರಾಜ್ಯಸರ್ಕಾರ, ಸಾರ್ವಜನಿಕ ಸಂಸ್ಥೆಗಳು, ಪಬ್ಲಿಕ್‌ ಲಿಮಿಟೆಡ್‌ ಕಂಪನಿಗಳು ನೀಡಿರುವ ಉದ್ಯೋಗ ಗುರುತಿನ ಚೀಟಿಯನ್ನು ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ.
eesanje/url_46_158_5.txt ADDED
@@ -0,0 +1,8 @@
 
 
 
 
 
 
 
 
 
1
+ ರಾಜ್ಯದಲ್ಲಿ 2ನೇ ಹಂತದ ಚುನಾವಣೆ ಟಾರ್ಗೆಟ್ ಮಾಡಿ ‘ಬೆಲೆ ಏರಿಕೆ’ ಬಾಣ ಬಿಟ್ಟ ಕಾಂಗ್ರೆಸ್
2
+ ಬೆಂಗಳೂರು,ಮೇ.4-ರಾಜ್ಯದಲ್ಲಿನ ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡು ಭಾಗದ 14 ಕ್ಷೇತ್ರಗಳಲ್ಲಿ ಮತದಾನಕ್ಕೆ ಮೂರು ದಿನ ಬಾಕಿ ಇರುವ ಸಂದರ್ಭದಲ್ಲಿ ಕಾಂಗ್ರೆಸ್‌ ಬೆಲೆ ಏರಿಕೆಯನ್ನು ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.
3
+ ಮೋದಿಯವರ ಅಚ್ಛೇದಿನ ಅಮೃತ್‌ಕಾಲದಲ್ಲಿ ಗಗನಮುಖಿಯಾಗಿದೆ. ಹೆಚ್ಚಿರುವುದು ಅಭಿವೃದ್ಧಿ ಅಲ್ಲ, ದಿನಬಳಕೆಯ ವಸ್ತುಗಳ ಬೆಲೆ ಎಂದು ದೂಷಿಸಿದರು.ಬೆಲೆ ಏರಿಕೆಯ ಜೊತೆಗೆ ಜಿಎಸ್‌ಟಿಯ ಹೊರೆ ಹೊರಿಸಿ ಜನರ ಬದುಕನ್ನು ಭಾರವಾಗಿಸಿದ್ದೇ ಮೋದಿಯವರ 10 ವರ್ಷಗಳ ಸಾಧನೆ. ಬಂಡವಾಳಶಾಹಿಗಳ ಪರ ನೀತಿ ಹೊಂದಿರುವ ಬಿಜೆಪಿಯನ್ನು ಸೋಲಿಸಿ ಜನಪರವಾಗಿ ಚಿಂತಿಸುವ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಿ ಎಂದು ಮನವಿ ಮಾಡಿಕೊಳ್ಳಲಾಗಿದೆ.
4
+ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರಧಾನಿಯ ವಯಸ್ಸಿಗಿಂತ ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಾಗಿದೆ. ಚಿನ್ನ ಬಡವರ ಕೈ ಸುಡುತ್ತಿದೆ. ಅಡುಗೆ ಎಣ್ಣೆ, ಗ್ಯಾಸ್‌ ಸಿಲಿಂಡರ್‌, ಬೇಳೆ ಕಾಳಿನ ಬೆಲೆ ಕೇಳಿದರೆ ಹಸಿವೆಯೇ ಮರೆತು ಹೋಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
5
+ ಅಚ್ಛೇದಿನ್‌ ಎಂದರೆ ದುಬಾರಿ. ಮೋದಿ ಎಂದರೆ ಮಕ್ಮಲ್‌ ಟೋಪಿ. ನರೇಂದ್ರ ಮೋದಿಯವರು ಕನ್ನಡಿಗರ ಕೈಗೆ ಕೊಟ್ಟಿರುವ ಚೊಂಬನ್ನು ಈ ಚುನಾವಣೆಯಲ್ಲಿ ಮರೆಯದೇ ಅವರ ಕೈಗೆ ವಾಪಸ್‌ ನೀಡಿ ಎಂದು ಕರೆ ನೀಡಿದ್ದಾರೆ.ಎಐಸಿಸಿಯ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ನಮ್ಮ ಓಟು, ನಮ್ಮ ಅಧಿ ಕಾರ ವಿಭಜನೆಯ ನೀತಿ ಅನುಸರಿಸಿರುವ ಶಕ್ತಿಗಳನ್ನು ಸೋಲಿಸಿ. ಬ್ರಿಟಿಷರು ಒಡೆದಾಳುವ ನೀತಿಯನ್ನು ಅನುಸರಿಸುತ್ತಿದ್ದರು. ಕೇಂದ್ರದಲ್ಲಿ ಆಡಳಿತ ನಡೆಸುವವರು ಅದೇ ರೀತಿಯ ನೀತಿಯನ್ನು ಪಾಲನೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
6
+ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರಧಾನಿಯ ವಯಸ್ಸಿಗಿಂತ ಪೆಟ್ರೋಲ್ – ಡೀಸೆಲ್‌ ಬೆಲೆ ಹೆಚ್ಚಾಗಿದೆ. ಚಿನ್ನ ಬಡವರ ಕೈ ಸುಡುತ್ತಿದೆ, ಅಡುಗೆ ಎಣ್ಣೆ, ಗ್ಯಾಸ್ ಸಿಲಿಂಡರ್, ಬೇಳೆಕಾಳಿನ ಬೆಲೆ ಕೇಳಿದರೆ ಹಸಿವೇ ಮರೆತು ಹೋಗುತ್ತದೆ.ಅಚ್ಚೇ ದಿನ್ ಅಂದ್ರೆ ದುಬಾರಿ,ಮೋದಿ ಅಂದ್ರೆ ಮಕ್ಮಲ್ ಟೋಪಿ.ಪ್ರಧಾನಿ@narendramodiಅವರು ಕನ್ನಡಿಗರ…../KWZnm4N6eN
7
+ ಕನ್ನಡಿಗರು ಐಕ್ಯತೆ, ಭಾವೈಕ್ಯ, ಸಮಗ್ರತೆ ಮತ್ತು ಸೌಹಾರ್ದತೆಯಲ್ಲಿ ನಂಬಿಕೆ ಇಟ್ಟಿದ್ದಾರೆ. ಪ್ರಜಾಪ್ರಭುತ್ವದ ಹಬ್ಬವಾಗಿರುವ ಚುನಾವಣೆಯಲ್ಲಿ ಭಾಗವಹಿಸಿ ದ್ವೇಷ ಬಿತ್ತುವ ಶಕ್ತಿಗಳಿಗೆ ಹಾಗೂ ದೆಹಲಿಯಲ್ಲಿ ಕುಳಿತು ಸರ್ವಾಧಿ ಕಾರಿ ಪ್ರವೃತ್ತಿ ಅನುಸರಿಸುತ್ತಿರುವವರಿಗೆ ತಕ್ಕ ಪಾಠ ಕಲಿಸಿ ಎಂದು ಮನವಿ ಮಾಡಿದ್ದಾರೆ.
8
+ ಮೊದಲ ಹಂತದ ಚುನಾವಣೆ ಸೇರಿದಂತೆ ಬಾಕಿ ಉಳಿ�� 14 ಕ್ಷೇತ್ರಗಳ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಜಾಹೀರಾತು ಅಸ್ತ್ರವನ್ನು ಬಳಕೆ ಮಾಡಿದೆ. ಅಡುಗೆ ಎಣ್ಣೆ ಲೀಟರ್‌ಗೆ 180 ರೂ., ಪೆಟ್ರೋಲ್‌ 100 ರೂ., ಡೀಸೆಲ್‌ 85 ರೂ., ತೊಗರಿಬೇಳೆ ಕೆಜಿಗೆ 200 ರೂ. ಇದ್ದರೆ ಡಿಎಪಿ ರಸಗೊಬ್ಬರ 1600 ರೂ., ಅಡುಗೆ ಅನಿಲದ ಪ್ರತಿ ಸಿಲಿಂಡರ್‌ಗೆ 1100 ರೂ. ದರ ಹೆಚ್ಚಾಗಿದೆ. ಅಚ್ಛೇದಿನ್‌ ಎಂದರೆ ದುಬಾರಿ ಎಂಬಂತಾಗಿದೆ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.
eesanje/url_46_158_6.txt ADDED
@@ -0,0 +1,6 @@
 
 
 
 
 
 
 
1
+ ಹೊಳೇನರಸಿಪುರದ ಎಚ್‌.ಡಿ.ರೇವಣ್ಣ ನಿವಾಸದಲ್ಲಿ ಎಸ್‌‍ಐಟಿ ತಂಡ ಸ್ಥಳ ಮಹಜರು
2
+ ಹಾಸನ, ಮೇ.4-ಪ್ರಜ್ವಲ್‌ ರೇವಣ್ಣಗೆ ಸೇರಿದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣ ಸಂಬಂಧ ಸ್ಥಳ ಮಹಜರಿಗೆ ಎಸ್‌‍ಐಟಿ ತಂಡ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದೆ.
3
+ ಹೊಳೇನರಸಿಪುರದಲ್ಲಿರುವ ಎಚ್‌.ಡಿ.ರೇವಣ್ಣ ಅವರ ನಿವಾಸಕ್ಕೆ ನಗರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಎಸ್‌‍ಐಟಿ ತಂಡ ಆಗಮಿಸಲಿರುವ ಹಿನ್ನೆಲೆಯಲ್ಲಿ ಇನ್ಸ್ ಪೆಕ್ಟರ್‌ ಸುರೇಶ್‌ಕುಮಾರ್‌ ಹಾಗೂ ಸಬ್‌ಇನ್‌್ಸಪೆಕ್ಟರ್‌ ಅಜಯ್‌ಕುಮಾರ್‌ ಬೆಳಗ್ಗೆಯೇ ಭೇಟಿ ನೀಡಿ ಬಂದೋಬಸ್ತ್‌ ಮಾಡಿದ್ದರು.
4
+ ಇನ್‌ಸ್ಪೆಕ್ಟರ್‌ ಹಾಗೂ ಸಬ್‌ ಇನ್‌ಸ್ಪೆಕ್ಟರ್‌ ಜೊತೆ ಇಬ್ಬರು ಮಹಿಳಾ ಕಾನ್ಸಸ್ಟೇಬಲ್‌ಗಳು ಇದ್ದರು.ಸಂತ್ರಸ್ತ ಮಹಿಳೆಯ ಸಮುಖದಲ್ಲಿ ಎಸ್‌‍ಐಟಿ ತಂಡ ಸ್ಥಳ ಮಹಜರು ನಡೆಸಲಿದೆ. ರೇವಣ್ಣ ನಿವಾಸದ ಬಳಿ ಬ್ಯಾರಿಕೇಡ್‌ ಹಾಕಿ ಯಾರೂ ಬಾರದಂತೆ ಪೊಲೀಸರು ಬಂದೋಬಸ್ತ್‌ ಮಾಡಿದ್ದರು.
5
+ ಹಾಸನದ ಆರ್‌.ಸಿ. ರಸ್ತೆಯಲ್ಲಿರುವ ಸಂಸದರ ನಿವಾಸದಲ್ಲೂ ಸ್ಥಳ ಮಹಜರು ಮಾಡಲಿರುವ ಹಿನ್ನೆಲೆಯಲ್ಲಿ ಅಲ್ಲಿಯೂ ಸಹ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದೆ.
6
+ ಸಾಕ್ಷಿ ನಾಶದ ಆತಂಕ- ಗೇಟ್‌ಗೆ ಬೀಗ :ಪ್ರಜ್ವಲ್‌ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಎಂಪಿ ನಿವಾಸಕ್ಕೆ ಬೀಗ ಹಾಕಲಾಗಿದೆ. ಸಾಕ್ಷ್ಯನಾಶದ ಆತಂಕದ ಸಂಬಂಧ ಎಂಪಿ ನಿವಾಸದ ಆವರಣಕ್ಕೆ ಪ್ರವೇಶ ನಿರ್ಬಂಧ ವಿಧಿಸಿ ಪೊಲೀಸರು ಬೀಗ ಹಾಕಿದ್ದಾರೆ.
eesanje/url_46_158_7.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ : ವಿಜಯೇಂದ್ರ
2
+ ಹುಬ್ಬಳ್ಳಿ,ಮೇ4-ಅಶ್ಲೀಲ ಪೆನ್‌ಡ್ರೈವ್‌ ಪ್ರಕರಣದಲ್ಲಿ ನಾವು ಯಾವುದೇ ಕಾರಣಕ್ಕೂ ಹಾಸನ ಸಂಸದ ಪ್ರಜ್ವಲ್‌ ರೇವಣ್ಣಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ. ಕಾನೂನಿನ ಪ್ರಕಾರ ಏನು ಶಿಕ್ಷೆಯಾಗಬೇಕೋ ಅದೇ ರೀತಿ ಆಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
3
+ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಸೇರಿದಂತೆ ಪ್ರತಿಯೊಬ್ಬರ ನಿಲುವು ಒಂದೇ ಆಗಿದೆ. ಈ ಪ್ರಕರಣದಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ತಪ್ಪು ಮಾಡಿದ್ದರೆ ಶಿಕ್ಷೆಯಾಗಲೇಬೇಕು. ಬಿಜೆಪಿ ಎಂದಿಗೂ ಸಮರ್ಥನೆ ಮಾಡುವುದಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕೆಂದು ಸ್ವತಃ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರೇ ಹೇಳಿರುವಾಗ ಇಲ್ಲಿ ಬಿಜೆಪಿ ನಿಲುವು ಅಪ್ರಸ್ತುತ ಎಂದು ಸ್ಪಷ್ಟಪಡಿಸಿದರು.
4
+ ನಾನಾಗಲಿ ಅಥವಾ ಪಕ್ಷವಾಗಲಿ ಪ್ರಕರಣವನ್ನು ಎಂಥ ಹಂತದಲ್ಲೂ ಸಮರ್ಥಿಸಿಕೊಂಡಿಲ್ಲ. ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಎಂಬುದಕ್ಕಿಂತ ಕಾಂಗ್ರೆಸ್‌ನವರಿಗೆ ಲೋಕಸಭಾ ಚುನಾವಣೆಯಲ್ಲಿ ಲಾಭವಾದರೆ ಸಾಕು ಎಂಬ ಮನಃಸ್ಥಿತಿಗೆ ಬಂದಿದೆ. ಇದಕ್ಕೆ ನಮ್ಮ ಆಕ್ಷೇಪವಿದೆ ಎಂದು ಹೇಳಿದರು.
5
+ ಎಲ್ಲ 28 ಕ್ಷೇತ್ರಗಳಲ್ಲೂ ಬಿಜೆಪಿ ಪರ ವಾತಾವರಣ ಇದೆ. ದೇಶದ ಒಬಿಸಿ ಮೀಸಲಾತಿಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಡಲು ಸರಕಾರ ಮುಂದಾಗಿದೆ. ಹಿಂದೂ ವಿರೋಧಿ ಕಾಂಗ್ರೆಸ್‌ ಸರಕಾರಕ್ಕೆ ಮತದಾರರಿಂದ ತಕ್ಕ ಉತ್ತರ ಸಿಗಲಿದೆ ಎಂದು ಎಚ್ಚರಿಸಿದರು. ಎರಡ್ಮೂರು ಆತ್ಮಹತ್ಯೆಗಳು ನಡೆದಿವೆ. ಹತ್ಯೆ ಪ್ರಕರಣಗಳು ದಿನೇದಿನೇ ಜಾಸ್ತಿ ಆಗುತ್ತಿವೆ.
6
+ ರಾಜ್ಯದಲ್ಲಿ ಲವ್‌ ಜಿಹಾದ್‌ ಪ್ರಕರಣಗಳು ಜಾಸ್ತಿ ಆಗುತ್ತಿವೆ. ರಾಜ್ಯದ ತಾಯಂದಿರು ಆತಂಕದಲ್ಲಿದ್ದಾರೆ. ಈ ಪ್ರದೇಶದ ಒಬ್ಬ ದಲಿತ ಹೆಣ್ಮಗಳ ಮೇಲೆ ಸದ್ದಾಂ ಹುಸೇನ್‌ ಎಂಬಾತ ನೀಚ ಕೃತ್ಯ ಎಸಗಿದ್ದಾನೆ. ರಾಜ್ಯ ಸರಕಾರ ಕಣ್ಮುಚ್ಚಿ ಕೂತಿದೆ ಎಂದು ಟೀಕಿಸಿದರು.
7
+ ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದಾಗಲೇ ಸರಕಾರವು ದೇಶದ್ರೋಹಿಗಳನ್ನು ಒದ್ದು ಒಳಗೆ ಹಾಕಬೇಕಿತ್ತು. ರಾಜ್ಯ ಸರಕಾರವು ಮೀನಮೇಷ ಮಾಡಿತ್ತು. ರಾಜ್ಯ ಸರಕಾರವು ಅಲ್ಪಸಂಖ್ಯಾತ ಕೊಲೆಗಡುಕರನ್ನು ಬಂಧಿಸಲು ನೂರು ಬಾರಿ ಯೋಚಿಸುತ್ತದೆ. ಲವ್‌ ಜಿಹಾದ್‌ ಪ್ರಕರಣದಡಿ ಸಿಲುಕಿದವರನ್ನು ಬಂಧಿಸಲು ಅಲ್ಪಸಂಖ್ಯಾತರಿಗೆ ನೋವಾಗುತ್ತದೆ ಎಂಬ ಧೋರಣೆ ಹೊಂದಿದಂತಿದೆ ಎಂದರು.
8
+ ಸಿದ್ದರಾಮಯ್ಯನವರ ಸರಕಾರವು ಅಲ್ಪಸಂಖ್ಯಾತರ ತುಷ್ಟೀಕರಣ ನೀತಿ ಹೊಂದಿದ್ದು, ರಾಜ್ಯವು ಕೇರಳ ಮಾದರಿಯಲ್ಲಿ ಸಾಗುವಂತಾಗಿದೆ. ಲವ್‌ ಜಿಹಾದ್‌ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿದೆ. ಮಹಿಳ��ಯರ ವಿರುದ್ಧ ಅಪರಾಧದ ಇಂಥ ದುಷ್ಕೃತ್ಯ ಎಸಗುವ ದೇಶದ್ರೋಹಿಗಳಿಗೆ ನಾವೇನು ಮಾಡಿದರೂ ರಾಜ್ಯ ಸರಕಾರ ಬೆಂಬಲ ಕೊಡುತ್ತದೆ. ನಮ್ಮನ್ಯಾರೂ ಕೂಡ ಏನೂ ಮಾಡಲು ಸಾಧ್ಯವಿಲ್ಲ ಎಂದು ಭಾವಿಸುವಂತಾಗಿದೆ ಎಂದು ಆರೋಪಿಸಿದರು.
9
+ ಈಗ ಬರುತ್ತಿರುವ ಮಾಹಿತಿ ಪ್ರಕಾರ ಈ ಪೆನ್‌ ಡ್ರೈವ್‌ ಮುಂಚಿತವಾಗಿಯೇ ಕಾಂಗ್ರೆಸ್‌ ಸರಕಾರಕ್ಕೆ ಸಿಕ್ಕಿತ್ತು. ಮೊದಲ ಹಂತದ ಚುನಾವಣೆ ಮುಗಿಯುವವರೆಗೆ ಕಾದಿದ್ದು, ಕೊನೆಯ ಒಂದು ದಿನ ಇರುವಾಗ ಬಿಡುಗಡೆ ಮಾಡಿಸಿದ್ದಾರೆಂಬ ಚರ್ಚೆಗಳು ರಾಜ್ಯದಲ್ಲಿ ನಡೆಯುತ್ತಿವೆ. ಇದಕ್ಕೆ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಸರಕಾರ ಉತ್ತರ ಕೊಡಬೇಕು ಎಂದು ಅವರು ಆಗ್ರಹಿಸಿದರು.
10
+ ಇಂಥ ಪ್ರಕರಣದಿಂದ ಚುನಾವಣೆ ಮೇಲೆ ಪರಿಣಾಮ ಆಗುವುದಿಲ್ಲ ಎಂದ ಅವರು, ಈ ಕುರಿತಂತೆ ನನಗೆ ಈ ಕ್ಷಣದವರೆಗೆ ಯಾವುದೇ ಪತ್ರ ಸಿಕ್ಕಿಲ್ಲ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದರು. ಸುದ್ದಿಗೋಷ್ಟಿಯಲ್ಲಿ ಶಾಸಕ ಅರವಿಂದ ಬೆಲ್ಲದ, ಹುಬ್ಬಳ್ಳಿ-ಧಾರವಾಡ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಪ್ರಮುಖರು ಉಪಸ್ಥಿತರಿದ್ದರು.
eesanje/url_46_158_8.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ 2ನೇ ಹಂತದ 14 ಕ್ಷೇತ್ರಗಳ ಪೈಕಿ 12ರಲ್ಲಿ ಕಾಂಗ್ರೆಸ್‌ ಗೆಲುವು ‘ಗ್ಯಾರಂಟಿ’ : ಡಿಕೆಶಿ
2
+ ಬೆಂಗಳೂರು,ಮೇ.4-ಎರಡನೇ ಹಂತದಲ್ಲಿ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷ 12 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿಯವರು ಇಂದು ದಾವಣಗೆರೆ, ಗದಗ್‌ ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ.
3
+ ಕೊನೆ ಹಂತದ ಪ್ರಚಾರ ನಡೆಯುತ್ತಿದೆ. ದಕ್ಷಿಣ ಕರ್ನಾಟಕ ಭಾಗಕ್ಕಿಂತಲೂ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆ ಇದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5 ಕ್ಕೆ 5 ಗೆಲ್ಲುವುದರ ಜೊತೆಗೆ 14 ಕ್ಷೇತ್ರಗಳಲ್ಲಿ 12 ಗೆಲ್ಲಲಿದೆ ಎಂದು ಹೇಳಿದರು.
4
+ ಜನರಿಗೆ ಕಾಂಗ್ರೆಸ್‌ನ ಗ್ಯಾರಂಟಿಗಳು ಮೆಚ್ಚುಗೆಯಾಗಿವೆ. ಬಿಜೆಪಿ ಮತ್ತು ಜೆಡಿಎಸ್‌ನ ಬಹಳಷ್ಟು ನಾಯಕರು ಗ್ರಾಮೀಣ ಮಟ್ಟದಿಂದಲೂ ಕಾಂಗ್ರೆಸ್‌ ಪಕ್ಷಕ್ಕೆ ಸೇರುತ್ತಿದ್ದಾರೆ. ಬೃಹತ್‌ ಕಾರ್ಯಕ್ರಮಗಳಲ್ಲಿ ಮಾಜಿ ಶಾಸಕ ನೆಹರೂ ಓಲೆಕಾರ್‌ ಸೇರಿದಂತೆ ಪ್ರಮುಖ ನಾಯಕರು ನಮ್ಮ ಪಕ್ಷ ಸೇರಿದ್ದಾರೆ. ಕಾಂಗ್ರೆಸ್‌ ಪರವಾದ ಉತ್ತಮ ವಾತಾವರಣವಿದೆ ಎಂದರು.
5
+ ಜೆಡಿಎಸ್‌ನ 12 ಶಾಸಕರು ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದಾರೆ ಎಂಬ ವದಂತಿಗಳು ಸತ್ಯಕ್ಕೆ ದೂರವಾಗಿವೆ. ಈ ಬಗ್ಗೆ ನನ್ನ ಬಳಿ ಯಾರೂ ಚರ್ಚೆ ಮತ್ತು ಸಂಪರ್ಕ ಮಾಡಿಲ್ಲ. ಊಹಾಪೋಹದ ವದಂತಿಗಳನ್ನು ಹರಡಲಾಗುತ್ತಿದೆ. ಜೆಡಿಎಸ್‌ನಲ್ಲಿರುವವರು ಹತಾಶರಾಗಿರುವ ಬಗ್ಗೆ ನಮಗೆ ಮಾಹಿತಿ ಇದೆ. ಜನರು ಕೂಡ ಈ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ ಎಂದು ಹೇಳಿದರು.
6
+ ಜೆಡಿಎಸ್‌ ಕುಟುಂಬದೊಳಗಿನ ಸಮಸ್ಯೆ ತೀವ್ರವಾಗಿದೆ. ವಿಧಾನಸಭಾ ಚುನಾವಣೆಯ ಕಾಲದಿಂದಲೂ ಜೆಡಿಎಸ್‌ ನಾಯಕರ ಹೇಳಿಕೆಗಳನ್ನು ಗಮನಿಸಬೇಕು. ಟಿಕೆಟ್‌ ಹಂಚಿಕೆ ಕುರಿತಂತೆ ನಡೆದ ಚರ್ಚೆಗಳು ವಾತಾವರಣವನ್ನು ಸ್ಪಷ್ಟವಾಗಿ ಮನವರಿಕೆ ಮಾಡಿಕೊಡುತ್ತವೆ ಎಂದರು.
7
+ ಸದ್ಯಕ್ಕೆ ಜೆಡಿಎಸ್‌ನವರು ಬಿಜೆಪಿಯ ಜೊತೆ ಹೊಂದಾಣಿಕೆಯಲ್ಲಿದ್ದಾರೆ. ಅವರು ಒಗ್ಗಟ್ಟಿನಿಂದ ಅಲ್ಲಿಂದ ಹೊರ ಬರುತ್ತಾರೋ? ಅಥವಾ ಬೇರೆ ರೀತಿಯ ತಂತ್ರಗಾರಿಕೆ ಅನುಸರಿಸುತ್ತಾರೋ ಗೊತ್ತಿಲ್ಲ. ಜೆಡಿಎಸ್‌ನ ಶಾಸಕ ಅಥವಾ ನಾಯಕರು ತಮ್ಮನ್ನು ಸಂಪರ್ಕಿಸಿಲ್ಲ ಎಂದು ಸ್ಪಷ್ಟಪಡಿಸಿದರು.
8
+ ಮಳೆ ಬಂದರೆ ಸಾವಿರ ಕೋಟಿ ರೂ. ಉಳಿತಾಯ :ಪರಿಸ್ಥಿತಿ ಏನೇ ಆಗಲಿ, ರಾಜ್ಯದಲ್ಲಿ ಮಳೆ ಬರಲಿ, ಒಂದು ಸುತ್ತು ಮಳೆ ಬಂದರೆ ಸಾವಿರ ಕೋಟಿ ರೂ.ಗಳಷ್ಟು ಉಳಿತಾಯವಾಗುತ್ತದೆ. ಉಚಿತ ವಿದ್ಯುತ್‌ ಉಳಿತಾಯವಾಗುತ್ತದೆ. ಇಲ್ಲವಾದರೆ ಬೋರ್‌ವೆಲ್‌ಗಳಿಂದ ನೀರು ತೆಗೆಯುತ್ತಲೇ ಇರುತ್ತಾರೆ. ಚೆನ್ನಾಗಿ ಮಳೆಯಾಗಲಿ, ಭೂಮಿ ನೆನೆಯಲಿ, ಏನೂ ತೊಂದರೆಯ���ಲ್ಲ ಎಂದರು.
9
+ ಒಕ್ಕಲಿಗ ನಾಯಕತ್ವ ಬೇಡ :ಒಕ್ಕಲಿಗ ಸಮುದಾಯದ ನಾಯಕತ್ವಕ್ಕಾಗಿ ಹಾಸನದ ಪೆನ್‌ಡ್ರೈವ್‌ ಬಹಿರಂಗಗೊಳಿಸಲಾಯಿತು ಎಂದು ಬಿಜೆಪಿಯವರು ಅಪಪ್ರಚಾರವನ್ನು ಸೃಷ್ಟಿಸಿದ್ದಾರೆ. ನನಗೆ ಯಾವ ನಾಯಕತ್ವವೂ ಬೇಡ. ಕಳೆದ ನಾಲ್ಕು ವರ್ಷಗಳ ಹಿಂದೆ ಕಾಂಗ್ರೆಸ್‌ ಅಧ್ಯಕ್ಷನಾಗಿ ಹೈಕಮಾಂಡ್‌ ಮಾಡಿದೆೆ. ಅದರಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಬಿಜೆಪಿ ಮತ್ತು ಜೆಡಿಎಸ್‌ನವರು ಗಂಟೆಗೊಂದು, ಗಳಿಗೆಗೊಂದು ಮಾತು ಬದಲಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
10
+ ಕಾಂಗ್ರೆಸ್‌ನಲ್ಲಿ ನಾನು ಒಕ್ಕಲಿಗ ನಾಯಕ ಎಂದು ಹೇಳಿಕೊಳ್ಳಲು ನನಗಿಷ್ಟವಿಲ್ಲ. ಸಮುದಾಯದಲ್ಲಿ ಹುಟ್ಟಿದ್ದೇನೆ, ಸಮಾಜಕ್ಕೆ ಗೌರವ ಕೊಡಬೇಕು, ರಕ್ಷಣೆ ಕೊಡಬೇಕು, ಸಹಾಯ ಮಾಡಬೇಕು, ಜನ ಅಪೇಕ್ಷಿಸುವಂತೆ ನನ್ನ ಕೈಲಾದ ಸೇವೆಯನ್ನು ಜನರ ಸ್ವಾಭಿಮಾನ, ಗೌರವ ಉಳಿವಿಗೆ ಮಾಡುತ್ತೇನೆ ಎಂದು ಹೇಳಿದರು.
11
+ ಎನ್‌ಡಿಎ ಕೂಟದಿಂದ ಜೆಡಿಎಸ್‌ ಪಕ್ಷವನ್ನು ಕಿತ್ತು ಹಾಕಬೇಕು ಎಂದು ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ಹೇಳಿರುವುದಕ್ಕೆ ನಾನು ಪ್ರತಿಕ್ರಿಯಿಸುವುದಿಲ್ಲ. ಅವರು ಜೆಡಿಎಸ್‌ನಿಂದ ಬಿಜೆಪಿಗೆ ಹೋಗಿದ್ದಾರೆ. ಅವರ ಮೈತ್ರಿ ವಿಚಾರವಾಗಿ ಏನು ಬೇಕಾದರೂ ಮಾಡಿಕೊಳ್ಳಲಿ ಎಂದರು.
12
+ ಪೆನ್‌ಡ್ರೈವ್‌ ಮೂಲ ಗೊತ್ತಿದೆ :ಹಾಸನದಲ್ಲಿ ವರದಿಯಾದ ಲೈಂಗಿಕ ದೌರ್ಜನ್ಯ ಪ್ರಕರಣದ ಮಾದರಿಯಲ್ಲೇ 30 ವರ್ಷಗಳ ಹಿಂದೆ ಇಂಗ್ಲೆಂಡ್‌ನಲ್ಲೂ ಘಟನೆ ನಡೆದಿತ್ತು. ಪ್ರಧಾನಿಯವರ ಮಗನಾಗಿದ್ದ ರೇವಣ್ಣ ಅವರನ್ನು ಹೋಟೆಲ್‌ನಿಂದ ಖಾಲಿ ಮಾಡಿಸಲಾಯಿತು ಎಂಬ ವರದಿ ಇದೆ. ಆದರೆ ಸದ್ಯಕ್ಕೆ ಅದರ ಬಗ್ಗೆ ಪೂರ್ಣ ಮಾಹಿತಿ ತಮ್ಮ ಬಳಿ ಇಲ್ಲ ಎಂದು ಹೇಳಿದರು.
13
+ ಹಾಸನದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂಲ ಯಾವುದು, ಪೆನ್‌ಡ್ರೈವ್‌ಗಳು ಎಲ್ಲಿಂದ ಬಂದವು ಎಂಬ ಮಾಹಿತಿಗಳನ್ನು ನಾವು ಬಿಚ್ಚಬೇಕೇ? ಎಂದು ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದರು.ಉಪ್ಪು ತಿಂದವರು ನೀರು ಕುಡಿಯಬೇಕು ಎಂದು ಹೇಳಿದವರು ನಾವಲ್ಲ, ಅವರ ಕುಟುಂಬವೇ ಬೇರೆ, ನನ್ನ ಕುಟುಂಬವೇ ಬೇರೆ, ಟಿಕೆಟ್‌ ನೀಡುವುದಿಲ್ಲ ಎಂದು ಗಲಾಟೆ ಮಾಡಿದ್ದರು, ತಪ್ಪಾಯಿತು ಎಂದು ಜನರಲ್ಲಿ ಕ್ಷಮೆ ಕೇಳಿದ್ದರು. ಇದೆಲ್ಲವೂ ಜೆಡಿಎಸ್‌ ನಾಯಕರ ಕುಟುಂಬದ ಒಳಬೇಗುದಿಗಳು ಎಂದು ತಿಳಿಸಿದರು.
14
+ ಭವಾನಿ ರೇವಣ್ಣ ಅವರ ವಿಚಾರಣೆ ಮತ್ತು ಎಚ್‌.ಡಿ.ರೇವಣ್ಣ ಅವರು ವಿಚಾರಣೆಗೆ ಗೈರುಹಾಜರಾಗಿರುವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಡಿ.ಕೆ.ಶಿವಕುಮಾರ್‌, ತಾವೀಗ ಚುನಾವಣೆಯ ಗುಂಗಿನಲ್ಲಿದ್ದು, ಆನಂತರ ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು.
eesanje/url_46_158_9.txt ADDED
@@ -0,0 +1,6 @@
 
 
 
 
 
 
 
1
+ ರಾಜ್ಯದ ಹಲವೆಡೆ ತಂಪೆರೆದ ವರುಣ, ಉತ್ತರ ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಬೇಗೆ
2
+ ಬೆಂಗಳೂರು,ಮೇ.4-ರಾಜ್ಯದ ದಕ್ಷಿಣ ಒಳನಾಡಿನ ಕೆಲವೆಡೆ ಚದುರಿದಂತೆ ಮಳೆಯಾಗಿದ್ದರೆ ಕಲ್ಯಾಣ ಕರ್ನಾಟಕ ಕಿತ್ತೂರು ಕರ್ನಾಟಕದ ಭಾಗದಲ್ಲಿ ಬಿಸಿಲ ಬೇಗೆ ತೀವ್ರಗೊಂಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಕಳೆದ 2 ದಿನಗಳಿಂದ ಚದುರಿದಂತೆ ಮಳೆಯಾಗುತ್ತಿದೆ.
3
+ ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೂ ನಾಲ್ಕೈದು ದಿನ ಮಳೆ ಮುಂದುವರೆಯುವ ಸಾಧ್ಯತೆಗಳಿವೆ. ಮೇ 6 ಮತ್ತು 7 ರಂದು ಬೆಂಗಳೂರು ಸುತ್ತಮುತ್ತ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ನಿನ್ನೆ ಮಧ್ಯಾಹ್ನ ಹಾಗೂ ಸಂಜೆ ಹೊಸಕೋಟೆ 6, ಬೆಂಗಳೂರು 2, ಮೈಸೂರು 5, ಮಂಡ್ಯ 3, ಸರಗೂರು 3, ನಂಜನಗೂಡು, ಕುಶಾಲನಗರ, ಕಣ್ಣಾನೂರು ತಲಾ 1 ಮಿಲಿಮೀಟರ್‌ನಷ್ಟು ಅತ್ಯಲ್ಪ ಪ್ರಮಾಣದ ಮಳೆಯಾಗಿದೆ.
4
+ ಗುಡುಗು, ಸಿಡಿಲು, ಮಿಂಚಿನ ಆರ್ಭಟದೊಂದಿಗೆ ಕೆಲವೆಡೆ ಮಳೆಯಾಗಿದ್ದು, ಹಲವೆಡೆ ಬಾಳೆ ಬೆಳೆಗೆ ಹಾನಿಯಾಗಿದೆ. ಕೆಲವೆಡೆ ಮರಗಳು ಮುರಿದುಬಿದ್ದ ವರದಿಯಾಗಿದೆ. ಭರಣಿ ಮಳೆ ಬಿದ್ದಿದ್ದರಿಂದ ರೈತರು ಸಂತುಷ್ಟಗೊಂಡಿದ್ದಾರೆ. ಆದರೆ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾಗದೆ ಒಣಹವೆ ಮುಂದುವರೆದಿದೆ.
5
+ 44 ಡಿ.ಸೆಂ. ತಲುಪಿದ ಗರಿಷ್ಠ ತಾಪಮಾನ :ರಾಯಚೂರು, ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 44 ಡಿ.ಸೆಂ. ದಾಟಿದೆ. ಕಲ್ಯಾಣ ಕರ್ನಾಟಕ ಅಕ್ಷರಶಃ ಬಿಸಿಲ ನಾಡಾಗಿ ಕಂಡುಬರುತ್ತಿದೆ. ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಂ. ಗಿಂತ ಹೆಚ್ಚಾಗಿದೆ.
6
+ ಬೀದರ್‌ 41, ವಿಜಯಪುರ 41.5, ಬಾಗಲಕೋಟೆ 41.7, ಧಾರವಾಡ 39.8, ಗದಗ 40.6, ಕೊಪ್ಪಳ 43.5 ಸೆಂ.ನಷ್ಟು ದಾಖಲಾಗಿದೆ.ಬೆಂಗಳೂರು 37, ಚಾಮರಾಜನಗರ 37.7, ಚಿತ್ರದುರ್ಗ ಹಾಗೂ ದಾವಣಗೆರೆ 38.8, ಹಾಸನ 37, ಮಂಡ್ಯ 38.6, ಮೈಸೂರು 38.2, ಶಿವಮೊಗ್ಗ 38.6, ಹಾವೇರಿ 37.6, ಬೆಳಗಾವಿ ನಗರ 37.5 ಡಿ.ಸೆಂ.ನಷ್ಟು ಗರಿಷ್ಠ ತಾಪಮಾನ ದಾಖಲಾಗಿದೆ.
eesanje/url_46_159_1.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಹಾಸನ ಪೆನ್ ಡ್ರೈವ್ ಪ್ರಕರಣದ ಆರೋಪಿಗಳಿಗೆ ಕೇಂದ್ರ ಸರ್ಕಾರ ರಕ್ಷಣೆ : ಸಿಎಂ ಆರೋಪ
2
+ ಬಾಗಲ ಕೋಟೆ, ಮೇ.3-ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿರುವುದಷ್ಟೇ ಅಲ್ಲ, ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದು, ಕೇಂದ್ರ ಸರ್ಕಾರ ವಿದೇಶಕ್ಕೆ ಪರಾರಿಯಾಗಿರುವ ಆರೋಪಿಯನ್ನು ರಕ್ಷಣೆ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ ಅವರ ವಿಡಿಯೋಗಳು ಸಾರ್ವಜನಿಕವಾಗಿ ಬಹಿರಂಗಗೊಂಡಿವೆ. ಸಂತ್ರಸ್ತೆಯೊಬ್ಬರು ನನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಮಹಿಳೆ ಸುಳ್ಳು ಹೇಳಿಕೆ ನೀಡುವುದಿಲ್ಲ. ಆ ರೀತಿ ಹೇಳುವುದರಿಂದ ಬದುಕು ಹಾಳಾಗುತ್ತದೆ ಎಂದು ಸಂತ್ರಸ್ತರಿಗೆ ಗೊತ್ತಿರುತ್ತದೆ. ನಮ್ಮ ಕಾನೂನು ವ್ಯವಸ್ಥೆಯಲ್ಲಿ ಮಹಿಳೆಯ ಹೇಳಿಕೆ ಮೇಲೆ ನಂಬಿಕೆ ಇಡಲಾಗುತ್ತದೆ ಎಂದು ಹೇಳಿದರು.
4
+ ಬಿಜೆಪಿಯವರು ತಪ್ಪು ಮಾಡಿದ್ದಾರೆ. ಅವರಿಗೆ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಇತ್ತು. ಆದರೂ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡಿದ್ದು, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಪ್ರಜ್ವಲ್‌ಗೆ ಜೆಡಿಎಸ್‌ನವರು ಟಿಕೆಟ್‌ ನೀಡಿದ್ದರು, ಈಗ ಪ್ರಕರಣದ ಬಗ್ಗೆ ತಮ್ಮ ನಿಲುವನ್ನು ಹೇಳಲಿ ಎಂದು ಬಿಜೆಪಿ ನಾಯಕರಿಗೆ ಆಗ್ರಹಿಸಿದರು.
5
+ ತಾವು ಪ್ರಧಾನಿಯವರಿಗೆ ಪತ್ರ ಬರೆದಿದ್ದು, ಪ್ರಜ್ವಲ್‌ಗೆ ಇರುವ ರಾಜತಾಂತ್ರಿಕ ಪಾಸ್‌ಪೋರ್ಟ್‌ ಅನ್ನು ರದ್ದುಗೊಳಿಸುವಂತೆ ಮನವಿ ಮಾಡಿದ್ದೇನೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಂಡರೆ ಪ್ರಜ್ವಲ್‌ ವಿದೇಶದಲ್ಲಿರಲು ಸಾಧ್ಯವಿಲ್ಲ. ಸ್ವದೇಶಕ್ಕೆ ಮರಳಲೇಬೇಕಾಗುತ್ತದೆ ಎಂದು ಹೇಳಿದರು.
6
+ ಪ್ರತಿಯೊಬ್ಬರ ವಿದೇಶಿ ಪ್ರಯಾಣದ ಕುರಿತು ಕೇಂದ್ರ ಸರ್ಕಾರಕ್ಕೆ ಮಾಹಿತಿ ಇದ್ದೇ ಇರುತ್ತದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಪಾಸ್‌ಪೋರ್ಟ್‌ ವೀಸಾ ಪರಿಶೀಲನೆ ನಡೆಯಬೇಕು. ಯಾರ್ಯಾರು, ಯಾವ ದೇಶಕ್ಕೆ ಪ್ರಯಾಣಿಸುತ್ತಾರೆ, ಯಾರೊಂದಿಗೆ ಹೋಗುತ್ತಾರೆ ಎಂಬ ಮಾಹಿತಿ ಪಡೆದುಕೊಳ್ಳಲಾಗುತ್ತದೆ. ಪ್ರಜ್ವಲ್‌ ಪ್ರಯಾಣದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ಇರಲಿಲ್ಲವೇ?, ಹಾಗಿದ್ದರೆ ಯಾರು ಬೇಕಾದರೂ ದೇಶಕ್ಕೆ ಬರಲು, ಹೋಗಲು ಅವಕಾಶವಿದೆಯೇ? ಎಂದು ಪ್ರಶ್ನಿಸಿದರು.
7
+ ಕೇಂದ್ರ ಸರ್ಕಾರ ಪ್ರಜ್ವಲ್‌ ರೇವಣ್ಣನನ್ನು ರಕ್ಷಣೆ ಮಾಡುತ್ತಿದೆ. ಆತ ಎಲ್ಲೇ ಅಡಗಿದ್ದರೂ ರಾಜ್ಯಸರ್ಕಾರ ಬಂಧಿಸಿ ಕರೆತರಲಿದೆ. ಪ್ರಜ್ವಲ್‌ ಪ್ರಕರಣದಲ್ಲಿ ಎಚ್‌.ಡಿ.ಕುಮಾರಸ್ವಾಮಿ ನುಣುಚಿಕೊಳ್ಳುತ್ತಿದ್ದಾರೆ. ಹಾಸನದ ಚುನಾವಣಾ ಪ್ರಚಾರದಲ್ಲಿ ಪ್ರಜ್ವಲ್‌ನನ್ನು ತಮ್ಮ ಪುತ್ರ ಎಂದು ಹೇಳಿಕೊಂಡಿದ್ದರು. ಪ್ರಕರಣ ಬಯಲಿಗೆ ಬರುತ್ತಿದ್ದಂತೆ ನನ್ನ ಕು���ುಂಬ ಬೇರೆ, ರೇವಣ್ಣ ಕುಟುಂಬ ಬೇರೆ ಎಂದು ಜಾರಿಕೊಂಡರು. ಆದರೆ ನಿನ್ನೆ ಎಚ್‌.ಡಿ.ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರು ತಮ್ಮ ಮನೆಗೆ ವಕೀಲರನ್ನು ಕರೆಸಿ ಚರ್ಚೆ ಮಾಡಿದ್ದಾರೆ. ರಾಜಕೀಯ ಅಥವಾ ಕುಕೃತ್ಯ ಏನೇ ಇದ್ದರೂ ಅವರೆಲ್ಲಾ ಒಟ್ಟಿಗೇ ಸೇರಿ ಮಾಡುತ್ತಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.
8
+ ಬಿಜೆಪಿಯವರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ, ಅವರಿಗೆ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಸಂಸದೀಯ ವ್ಯವಸ್ಥೆಗಳ ಮೇಲೆ ನಂಬಿಕೆಯಿಲ್ಲ. ಅಮಾಯಕರಿಗೆ ಕಿರುಕುಳ ನೀಡುವುದು ಅವರ ಉದ್ದೇಶ. ರಾಜಕೀಯಕ್ಕಾಗಿ ಅಮಾಯಕರು ಕಣ್ಣೀರು ಹಾಕಬೇಕು ಎಂದು ಬಯಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.
9
+ ದೇಶದಲ್ಲಿ ಮಾಡಬಾರದ್ದನ್ನು ಬಿಜೆಪಿಯವರು ಮಾಡುತ್ತಾರೆ. ಸಾಮಾಜಿಕ ನ್ಯಾಯ, ಮೀಸಲಾತಿ, ದೇಶದ ಐಕ್ಯತೆ, ಸಮಾನತೆ ಮೇಲೆ ಬಿಜೆಪಿಯವರಿಗೆ ನಂಬಿಕೆಯಿಲ್ಲ. ಸಂವಿಧಾನಕ್ಕೆ ಸಂಪೂರ್ಣ ವಿರುದ್ಧವಾಗಿ ನಡೆದುಕೊಳ್ಳುತ್ತಾರೆೆ ಎಂದು ವಾಗ್ದಾಳಿ ನಡೆಸಿದರು.
10
+ ಸಂತ್ರಸ್ತ ಮಹಿಳೆಯೊಬ್ಬರನ್ನು ಅಪಹರಣ ಮಾಡಲಾಗಿದೆ ಎಂಬ ರೇವಣ್ಣ ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ಕುರಿತು ಪರಿಶೀಲನೆ ನಡೆಸಿ, ನಾಪತ್ತೆಯಾಗಿರುವ ಮಹಿಳೆಯನ್ನು ಕರೆತರುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.
eesanje/url_46_159_10.txt ADDED
@@ -0,0 +1,7 @@
 
 
 
 
 
 
 
 
1
+ ರಾಜ್ಯದ ಹಲವೆಡೆ ಇನ್ನೂ ನಾಲ್ಕೈದು ದಿನ ಮಳೆ ಸಾಧ್ಯತೆ
2
+ ಬೆಂಗಳೂರು, ಮೇ 3-ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಕಡೆಗಳಲ್ಲಿ ಚದುರಿದಂತೆ ನಿನ್ನೆ ಮಳೆಯಾಗಿದ್ದು, ಇನ್ನೂ ನಾಲ್ಕೈದು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ಬಿಸಿಲಿನ ಬೇಗೆಯಿಂದ ಬಸವಳಿದ್ದಿದ್ದ ಬೆಂಗಳೂರಿಗೆ ನಿನ್ನೆ ಸಂಜೆ ಬಿದ್ದ ಮಳೆ ಮುದ ನೀಡಿದೆ. ಕೋಲಾರದ ಕೆಜಿಎಫ್‌, ಮುಳಬಾಗಿಲು, ಚನ್ನಪಟ್ಟಣ, ಬೆಂಗಳೂರಿನ ಪೂರ್ವ ಹಾಗೂ ದಕ್ಷಿಣ ಭಾಗದಲ್ಲಿ ಮಳೆಯಾಗಿದೆ. ಬೆಂಗಳೂರಿನ ಉತ್ತರ ಭಾಗದಲ್ಲಿ ಮಳೆಯಾಗಿಲ್ಲ.
3
+ ಮಿಂಚು, ಗುಡುಗು ಹಾಗೂ ಗಾಳಿ ಸಹಿತ ಮಳೆಯಾಗುವುದು ವಾಡಿಕೆಯಾದರೂ ಮುಂಗಾರು ಪೂರ್ವ ಮಳೆಯು ವ್ಯಾಪಕವಾಗಿ ಬೀಳುವುದಿಲ್ಲ. ಚದುರಿದಂತೆ ಅಲ್ಲಲ್ಲಿ ಮಾತ್ರ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
4
+ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಗುಡುಗು, ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆಗಳಿದ್ದು, ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದೆ. ಅದರಲ್ಲೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ತಾಪಮಾನ ತೀವ್ರವಾಗಿರುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ.
5
+ ಮೇ 7ರವರೆಗೂ ಮಳೆ ಮುಂದುವರೆಯು ಲಕ್ಷಣಗಳಿವೆ. ಬೆಂಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಚಾಮರಾಜನಗರ, ಮೈಸೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಕೆಲವೆಡೆ ಗುಡುಗು, ಮಿಂಚಿನಿಂದ ಕೂಡಿದ ವಾತಾವರಣ ಉಂಟಾಗಬಹುದು.
6
+ ಮಿಂಚು, ಗುಡುಗಿನ ವಾತಾವರಣ ಉಂಟಾದಾಗ ಸಿಡಿಲು ಬಡಿಯುವ ಸಾಧ್ಯತೆ ಇದೆ. ಜನರು ಸುರಕ್ಷಿತವಾಗಿರಬೇಕು. ವಿದ್ಯುತ್‌ ಕಂಬ, ಮರ, ಲೋಹದ ವಸ್ತುಗಳಿಂದ ದೂರವಿರಬೇಕು. ಮೊಬೈಲ್‌ ಬಳಸದಿರುವುದು ಒಳ್ಳೆಯದು. ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿರುಬೇಕು ಎಂಬ ಸಲಹೆ ಮಾಡಲಾಗಿದೆ.
7
+ ಬೆಂಗಳೂರು ಸುತ್ತ ಮುತ್ತ ಮೇ 6 ಮತ್ತು 7 ರಂದು ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ. ಮಳೆಯಾದರೂ ತಾಪಮಾನ ಹೆಚ್ಚಾಗಿಯೇ ಇರುತ್ತದೆ. ಹೀಗಾಗಿ ಜನರು ಅಗತ್ಯ ಮುನ್ನೆಚ್ಚರಿಕೆ ಹಾಗೂ ಸುರಕ್ಷಾತ ಕ್ರಮಗಳನ್ನು ಅನುಸರಿಸುವಂತೆ ಹವಾಮಾನ ಇಲಾಖೆ ಸಲಹೆ ಮಾಡಿದೆ.
eesanje/url_46_159_11.txt ADDED
@@ -0,0 +1,6 @@
 
 
 
 
 
 
 
1
+ ಮಹಿಳೆಯ ಹಿಂದೆ ಬಿದ್ದು ಮನೆಗೆ ಬೆಂಕಿ ಹಚ್ಚಿದ್ದ ಆರೋಪಿ ಬಂಧನ
2
+ ಬೆಂಗಳೂರು, ಮೇ 2- ಮದುವೆಯಾಗುವಂತೆ ವಿವಾಹಿತೆಯನ್ನು ಪೀಡಿಸಿ ಆಕೆ ಮನೆಗೆ ಬೆಂಕಿ ಹಚ್ಚಿದ್ದ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಡಿಜೆ ಹಳ್ಳಿ ನಿವಾಸಿ ಅರ್ಬಾಜ್ ಬಂಧಿತ ಆರೋಪಿ. ಈತ ಹಣ್ಣಿನ ವ್ಯಾಪಾರಿಯಾಗಿದ್ದು, ಮಹಿಳೆಯ ದೂರದ ಸಂಬಂಧಿ.
3
+ ಸಾರಾಯಿಪಾಳ್ಯದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಈ ಮಹಿಳೆ ಪತಿ, ಮಗ ಹಾಗೂ ಮೂವರು ಹೆಣ್ಣು ಮಕ್ಕಳೊಂದಿಗೆ ವಾಸವಾಗಿದ್ದು ಟೈಲರಿಂಗ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಈ ನಡುವೆ ದೂರದ ಸಂಬಂಧಿ ಅರ್ಬಾಜ್ ಎಂಬಾತ ಆಗಾಗ್ಗೆ ಈ ಮಹಿಳೆಗೆ ಫೋನ್ ಮಾಡಿ ಮದುವೆಯಾಗುವಂತೆ ಪೀಡಿಸುತ್ತಿದ್ದ. ಇದೇ ವಿಚಾರಕ್ಕೆ ಆಗಾಗ್ಗೆ ಕರೆ ಮಾಡಿ ಗಲಾಟೆ ಮಾಡುತ್ತಿದ್ದನು.
4
+ ಏ. 11ರಂದು ರಂಜಾನ್ ನಿಮಿತ್ತ ರಾತ್ರಿ ಮಹಿಳೆ ಶಾಪಿಂಗ್‍ಗಾಗಿ ಟ್ಯಾನರಿ ರಸ್ತೆಯ ಡಿಜೆ ಹಳ್ಳಿಯಲ್ಲಿ ವಾಸವಿರುವ ಸಹೋದರಿ ಸಾನಿಯಾ ಅವರ ಮನೆಗೆ ಹೋಗಿ ಅಲ್ಲಿಂದ ರಾತ್ರಿ 2 ಗಂಟೆ ಸುಮಾರಿಗೆ ಶಿವಾಜಿನಗರಕ್ಕೆ ಹೋಗುತ್ತಿದ್ದಾಗ ಅಲ್ಲೇ ಕೆಲಸ ಮಾಡುತ್ತಿದ್ದ ಪತಿಯನ್ನು ಮಾತನಾಡಿಸಿಕೊಂಡು ಬೆಳಗಿನ ಜಾವ 4 ಗಂಟೆಯಲ್ಲಿ ಈ ಮೂವರು ಮನೆಗೆ ವಾಪಸ್ಸಾಗುತ್ತಿದ್ದರು.
5
+ ಆ ಸಂದರ್ಭದಲ್ಲಿ ಆರೋಪಿ ಅರ್ಬಾಜ್ ಮಹಿಳೆಯ ಪತಿಗೆ ಮೊಬೈಲ್ ಕರೆ ಮಾಡಿ ನಿಮ್ಮ ಮನೆಗೆ ಬೆಂಕಿ ಬಿದ್ದಿದೆ ಎಂದು ಹೇಳಿದ್ದಾನೆ. ಇವರೆಲ್ಲರೂ ಮನೆ ಬಳಿ ಹೋಗಿ ನೋಡುವಷ್ಟರಲ್ಲಿ ಅಗ್ನಿಶಾಮಕ ದಳ ಹಾಗೂ ಅಕ್ಕಪಕ್ಕದವರು ಬೆಂಕಿಯನ್ನು ನಂದಿಸಿದ್ದು, ಬೆಂಕಿಯಿಂದ ಮನೆಯಲ್ಲಿದ್ದ ಎಲೆಕ್ಟ್ರಾನಿಕ್ ಉಪಕರಣಗಳು ಸೇರಿದಂತೆ ಎಲ್ಲ ವಸ್ತುಗಳು ಬೆಂಕಿಗಾಹುತಿಯಾಗಿದ್ದವು.
6
+ ಈ ಬಗ್ಗೆ ಅರ್ಬಾಜ್ ಮೇಲೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಅರ್ಬಾಜ್ ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಈತನೇ ಮನೆಗೆ ಬೆಂಕಿ ಹಚ್ಚಿರುವುದು ಗೊತ್ತಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
eesanje/url_46_159_12.txt ADDED
@@ -0,0 +1,7 @@
 
 
 
 
 
 
 
 
1
+ ಪೆನ್‍ಡ್ರೈವ್ ಪ್ರಕರಣ: ಅಂತರ ಕಾಯ್ದುಕೊಳ್ಳಲು ಬಿಜೆಪಿ ಹೈಕಮಾಂಡ್ ಸೂಚನೆ
2
+ ಬೆಂಗಳೂರು,ಮೇ2- ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಪೆನ್‍ಡ್ರೈವ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ ಕಾಯ್ದುಕೊಳ್ಳುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ. ಅಶ್ಲೀಲ ವಿಡಿಯೋ ಪ್ರಕರಣ ಇದೀಗ ದೇಶದಾದ್ಯಂತವಲ್ಲದೆ ವಿದೇಶಗಳಲ್ಲೂ ಸುದ್ದಿಯಾಗಿದೆ. ಈ ಹಿನ್ನೆಲೆಯಲ್ಲಿ ವಿವಾದದ ಸುಳಿಯಲ್ಲಿ ತಾವೂ ಸಿಕ್ಕಿಕೊಳ್ಳದೆ ಎಚ್ಚರಿಕೆ ವಹಿಸುವಂತೆ ಹೈಕಮಾಂಡ್ ಸೂಚನೆ ನೀಡಿದೆ. ಪೆನ್‍ಡ್ರೈವ್ ವಿವಾದದಲ್ಲಿ ಕಾಂಗ್ರೆಸ್ ಜೆಡಿಎಸ್ ಪಕ್ಷದ ಜೊತೆಗೆ ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸುತ್ತಿದೆ.
3
+ ಈ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷದ ನಿಲುವೇನು ಎಂಬ ಪ್ರಶ್ನೆ ಕೇಳಿಬರುತ್ತಿದೆ. ಪ್ರಜ್ವಲ್ ಹಾಗೂ ಬಿಜೆಪಿ ವಿರುದ್ದ ಕಾಂಗ್ರೆಸ್ ದಾಳಿ ನಡೆಸುತ್ತಿದ್ದು, ಪ್ರಜ್ವಲ್ ರೇವಣ್ಣ ಪರ ಪ್ರಧಾನಿ ನರೇಂದ್ರಮೋದಿ ಮತ ಯಾಚಿಸಿದ ಫೋಟೋ ರಿಲೀಸ್ ಮಾಡಿದೆ.
4
+ ಎಐಸಿಸಿ ಮಾಧ್ಯಮ ಮುಖ್ಯಸ್ಥೆ ಸುಪ್ರಿಯಾ ಶ್ರೀನಾಟೆ ಇದೇ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮೋದಿ ಅತ್ಯಾಚಾರಿಗಳನ್ನು ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್ ಜೊತೆಗೆ ನಿಂತುಕೊಂಡಂತೆ ಮೋದಿ ಅತ್ಯಾಚಾರಕ್ಕೆ ಒಳಗಾದ ಮಹಿಳೆಯರ ರಕ್ಷಣೆಗೆ ನಿಂತಿಲ್ಲ ಎಂದು ಆರೋಪಿಸಿದ್ದಾರೆ.
5
+ ಇಡೀ ಪ್ರಕರಣದಲ್ಲಿ ಕರ್ನಾಟಕದ ರಾಕ್ಷಸನೊಬ್ಬ ದೇಶ ಬಿಟ್ಟು ಹೋಗಲು ಬಿಜೆಪಿಯೇ ಅವಕಾಶ ಮಾಡಿಕೊಟ್ಟಿದೆ. ರಾಷ್ಟ್ರೀಯ ಮಹಿಳಾ ಆಯೋಗ ಇದರಲ್ಲಿ ಏನು ಮಾಡುತ್ತಿದೆ? ಸ್ಮೃತಿ ಇರಾನಿ ಈಗ ಮೌನವಾಗಿದ್ದಾರೆ ಯಾಕೆ? ಮೋದಿ ಯಾಕೆ ಬಾಯಿ ಬಿಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
6
+ ಈ ವಿಚಾರವಾಗಿ ರಾಜ್ಯದಲ್ಲಿ ಬಿಜೆಪಿ ನಾಯಕರು ಯಾರೂ ಸಮರ್ಥನೆ ಮಾಡುತ್ತಿಲ್ಲ. ಪ್ರಕರಣದ ಬಗ್ಗೆ ಬಿಜೆಪಿ ಎಷ್ಟು ಸಾಧ್ಯವೋ ಅಷ್ಟರ ಮಟ್ಟಿಗೆ ಅಂತರ ಕಾಯ್ದುಕೊಳ್ಳುತ್ತಿದೆ. ಜೆಡಿಎಸ್ ಎನ್‍ಡಿಎ ಭಾಗ ಅಷ್ಟೇ. ಹಾಗಾಗಿ ಪ್ರಜ್ವಲ್ ಮೈತ್ರಿ ಅಭ್ಯರ್ಥಿ. ಅವರು ಮಾಡಿದ ತಪ್ಪಿಗೆ ನಾವು ಹೊಣೆ ಅಲ್ಲ ಎಂದು ವಾದಿಸುತ್ತಿದೆ.
7
+ ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಖಡಕ್ ಸಂದೇಶ ನೀಡಿದ್ದು, ಈ ವಿಚಾರವಾಗಿ ಅಂತರ ಕಾಯ್ದುಕೊಳ್ಳಲು ಸೂಚನೆ ನೀಡಿದ್ದಾರೆ. ತನಿಖೆ ವಿಚಾರದಲ್ಲಿ ಮಾತಾಡಬಾರದು. ವಿವಾದಾತ್ಮಕ ಹೇಳಿಕೆ ಕೊಡಬಾರದೆಂದು ಸೂಚಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
eesanje/url_46_159_2.txt ADDED
@@ -0,0 +1,7 @@
 
 
 
 
 
 
 
 
1
+ ಪೆನ್‌ಡ್ರೈವ್‌ ಪ್ರಕರಣ : ಹೊಳೇನರಸೀಪುರದಲ್ಲಿ ಎಸ್‌ಐಟಿ ತಂಡ ಪರಿಶೀಲನೆ
2
+ ಹಾಸನ, ಮೇ 3-ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು ಮುಂಜಾನೆ ಐದು ವಾಹನಗಳಲ್ಲಿ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
3
+ ಇಂದು ಮುಂಜಾನೆ 3.15ರ ಸುಮಾರಿಗೆ ಹಾಸನ ಜಿಲ್ಲೆಗೆ ಎಸ್‌ಪಿ ಸೀಮಾ ಲಾಟ್ಕರ್‌ ಅವರ ನೇತೃತ್ವ ತಂಡ ಭೇಟಿ ನೀಡಿ ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆ ಗ್ರಾಮದ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರಿಗೆ ಸೇರಿದ ಫಾರ್ಮ್‌ಹೌಸ್‌ ಹಾಗೂ ತಾಲೂಕಿನ ಘನ್ನಿಕಡ, ಕಾಮೇನಹಳ್ಳಿ ಗ್ರಾಮದ ಬಳಿ ಇರುವ ಎರಡು ಫಾರ್ಮ್‌ಹೌಸ್‌ಗೆಭೇಟಿ ನೀಡಿ ಪರಿಶೀಲನೆ ನಡೆಸಿದೆ.
4
+ ಫಾರ್ಮ್‌ಹೌಸ್‌ನ ಇಂಚಿಂಚು ಸಹ ಪರಿಶೀಲನೆ ನಡೆಸಿದ ತಂಡದ ಅಕಾರಿಗಳು ಅಶ್ಲೀಲ ವಿಡಿಯೋ ಚಿತ್ರೀಕರಣದ ಸ್ಥಳದ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಪಡುವಲಹಿಪ್ಪೆ ಫಾರ್ಮ್‌ಹೌಸ್‌ನಲ್ಲಿ ಅಸ್ಸಾಂ ಹಾಗೂ ಬಿಹಾರ ಮೂಲದ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಹಲವು ನಿಮಿಷಗಳ ಕಾಲ ಆ ಕಾರ್ಮಿಕರಿಂದ ಎಸ್‌ಐಟಿ ಅಧಿಕಾರಿಗಳು ಮಾಹಿತಿಗಳನ್ನು ಕಳೆದುಕೊಂಡಿದ್ದಾರೆ.
5
+ ಸಂಸದ ಪ್ರಜ್ವಲ್‌ ರೇವಣ್ಣ ಎಷ್ಟು ದಿನಕ್ಕೊಮ್ಮೆ ಈ ಫಾರ್ಮ್‌ಹೌಸ್‌ಗೆ ಬರುತ್ತಿದ್ದರು. ಯಾವ ಸಮಯದಲ್ಲಿ ಬರುತ್ತಿದ್ದರು. ಇಲ್ಲಿಗೆ ಬಂದಾಗ ಉಳಿದುಕೊಳ್ಳುತ್ತಿದ್ದರೆ, ಅವರೊಬ್ಬರೇ ಬರುತ್ತಿದ್ದರಾ ಎಂಬಿತ್ಯಾದಿ ಹಲವು ಮಾಹಿತಿಗಳನ್ನು ವಿಶೇಷ ತಂಡ ಕಲೆ ಹಾಕಿದೆ.ವಿಡಿಯೋ ಚಿತ್ರೀಕರಣ ನಡೆದಿದೆ ಎನ್ನುವ ಬಗ್ಗೆ ಎಸ್‌ಐಟಿ ತಂಡ ಮಾಹಿತಿ ಸಂಗ್ರಹಿಸಿರುವ ಜೊತೆಗೆ ಹಲವು ಮಾಹಿತಿಗಳನ್ನು ಸಹ ಕಲೆ ಹಾಕಿ ತಂಡ ತೆರಳಿದೆ.
6
+ ಚುನಾವಣಾ ಮುಗಿದ ಕೆಲವೇ ಗಂಟೆಗಳಲ್ಲಿ ಪ್ರಜ್ವಲ್‌ಗೆ ಸೇರಿದ್ದು ಎನ್ನಲಾದ ಪೆನ್‌ಡ್ರೈವ್‌ ಎಲ್ಲಾ ಕಡೆ ಹರಿದಾಡಿದ್ದು, ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ಮಹಿಳೆಯೊಬ್ಬರು ರೇವಣ್ಣ ಹಾಗೂ ಪ್ರಜ್ವಲ್‌ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದರು.
7
+ ಈ ಪ್ರಕರಣದ ಗಂಭೀರತೆ ಅರಿತು ತನಿಖೆಗಾಗಿ ಎಸ್‌ಐಟಿಗೆ ವಹಿಸಲಾಗಿದ್ದು, ಇಂದು ವಿಶೇಷ ತನಿಖಾ ತಂಡ ಹಾಸನ ಜಿಲ್ಲೆಗೆ ಭೇಟಿ ನೀಡಿ ಹಲವು ಮಾಹಿತಿಗಳನ್ನು ಕಲೆ ಹಾಕಿದೆ.
eesanje/url_46_159_3.txt ADDED
@@ -0,0 +1,5 @@
 
 
 
 
 
 
1
+ ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್‌ ಪಡೆದ ರೇವಣ್ಣ
2
+ ಬೆಂಗಳೂರು,ಮೇ.3-ನಿರೀಕ್ಷಣಾ ಜಾಮೀನು ಕೋರಿ ಶಾಸಕ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ. ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಸಂದರ್ಭದಲ್ಲಿ ಸರ್ಕಾರಿ ವಿಶೇಷ ಅಭಿಯೋಜಕರು ಅತ್ಯಾಚಾರದ ಆರೋಪ ಪ್ರಕರಣ ದಾಖಲಿಸಿಲ್ಲದಿರುವುದರಿಂದ ನಿರೀಕ್ಷಣಾ ಜಾಮೀನಿನ ಅಗತ್ಯವಿಲ್ಲ.
3
+ ಜಾಮೀನು ನೀಡಬಹುದಾದ ಪ್ರಕರಣಗಳನ್ನು ಮಾತ್ರ ದಾಖಲಿಸಲಾಗಿದೆ. ನಿರೀಕ್ಷಣಾ ಅರ್ಜಿ ಊರ್ಜಿತವಾಗುವುದಿಲ್ಲ ಎಂದು ದೃಢೀಕರಿಸಿದ ಹಿನ್ನೆಲೆಯಲ್ಲಿ ರೇವಣ್ಣ ಅವರು ತಮ್ಮ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ.
4
+ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟೀಸ್‌ ನೀಡಿತ್ತು. ಬಂಧನದ ಭೀತಿಯ ಹಿನ್ನೆಲೆಯಲ್ಲಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
5
+ ಅರ್ಜಿ ವಿಚಾರಣೆ ವೇಳೆ ಜಾಮೀನು ರಹಿತ ಸೆಕ್ಷನ್‌ ಹಾಕುತ್ತಾರೆ ಎಂಬ ಬಗ್ಗೆ ತಿಳಿಸಬೇಕೆಂದು ರೇವಣ್ಣ ಪರ ವಕೀಲರು ವಾದ ಮಂಡಿಸಿದರೂ ಈ ದಿನದವರೆಗೆ ಜಾಮೀನುರಹಿತ ಪ್ರಕರಣ ದಾಖಲಿಸಿಲ್ಲ ಎಂದು ಹೈಕೋರ್ಟ್‌ಗೆ ಎಸ್‌ಪಿಪಿ ಮಾಹಿತಿ ನೀಡಿದರು. ಈ ಮಾಹಿತಿಯನ್ನು ಕೋರ್ಟ್‌ ದಾಖಲಿಸಿಕೊಂಡಿತು. ನಂತರ ರೇವಣ್ಣ ಅವರು ತಮ್ಮ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಾಪಸ್‌ ಪಡೆದರು.
eesanje/url_46_159_4.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಪೆನ್‌ಡ್ರೈವ್‌ ಪ್ರಕರಣ : ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ 2ನೇ ನೋಟೀಸ್‌
2
+ ಬೆಂಗಳೂರು, ಮೇ.3-ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಮತ್ತು ರೇವಣ್ಣ ಅವರಿಗೆ 2ನೇ ಬಾರಿಗೆ ನೋಟೀಸ್‌ ನೀಡ ಲಾಗಿದ್ದು, ಅದಕ್ಕೂ ಪ್ರತಿಕ್ರಿಯಿಸದೇ ಇದ್ದರೆ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಮತ್ತು ಪ್ರಜ್ವಲ್‌ ರೇವಣ್ಣ ಅವರಿಗಿ ರುವ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿ ಸಲು ಪ್ರಧಾನಿಯವರಿಗೆ ಪತ್ರ ಬರೆಯಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಆರ್‌ಪಿಸಿ ಸೆಕ್ಷನ್‌ 41-ಎ ಅಡಿ ಈಗಾಗಲೇ ನೋಟೀಸ್‌ ನೀಡಲಾಗಿತ್ತು. ಇದಕ್ಕೆ ಪ್ರಜ್ವಲ್‌ ಪರವಾದ ವಕೀಲರು ಪತ್ರ ಬರೆದು ಒಂದು ವಾರ ಸಮಯ ಕೇಳಿದ್ದರು. ರೇವಣ್ಣ ಅವರೂ ಕಾಲಾವಕಾಶ ಕೇಳಿದ್ದರು. ಕಾನೂನು ಪರಿಶೀಲನೆ ನಡೆಸಿದ ಎಸ್‌ಐಟಿ ಸಮಯಾವಕಾಶ ನೀಡಲು ನಿರಾಕರಿಸಿದೆ.
4
+ ಜೊತೆಯಲ್ಲಿ ಎರಡನೇ ನೋಟೀಸ್‌ ನೀಡಿದೆ. ಅದರನುಸಾರ ಮತ್ತೆ 24 ಗಂಟೆ ಕಾಲಾವಕಾಶ ನೀಡಲಾಗಿದ್ದು, ವಿಚಾರಣೆಗೆ ಇಬ್ಬರೂ ಹಾಜರಾಗಬೇಕು ಎಂದು ಹೇಳಿದರು. ಸಂಸದ ಪ್ರಜ್ವಲ್‌ಗೆ ವಿಶೇಷ ಅವಕಾಶದಲ್ಲಿರುವ ರಾಜತಾಂತ್ರಿಕ ಪಾಸ್‌ಪೋರ್ಟ್‌ ಇದೆ. ಅದನ್ನು ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿಯವರಿಗೆ ಪತ್ರ ಬರೆದಿದ್ದಾರೆ.
5
+ ಪಾಸ್‌ಪೋರ್ಟ್‌ ರದ್ದು ಮಾಡಲು ನ್ಯಾಯಾಲಯದ ಅನುಮತಿ ಅಗತ್ಯ ಎಂಬ ವಿದೇಶಾಂಗ ಸಚಿವಾಲಯದ ಹೇಳಿಕೆ ಸರಿಯಿದೆ. ನಾವು ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಕೇಳುತ್ತಿಲ್ಲ. ನಾವು ರಾಜತಾಂತ್ರಿಕ ಅವಕಾಶಗಳನ್ನಷ್ಟೇ ರದ್ದು ಮಾಡಲು ಮನವಿ ಮಾಡಿದ್ದೇವೆ. ಆ ವಿಷಯವಾಗಿ ಪ್ರಧಾನಿಯವರು ನಿರ್ಧಾರ ತೆಗೆದುಕೊಳ್ಳಬಹುದು ಎಂದು ವಿವರಿಸಿದರು.
6
+ ಪ್ರಜ್ವಲ್‌ ರೇವಣ್ಣ ಅವರ ಫೋಟೊಸಹಿತವಾಗಿ ಲುಕ್‌ಔಟ್‌ ನೋಟೀಸ್‌ ಜಾರಿ ಮಾಡಿದ್ದು, ಎಲ್ಲಾ ವಿಮಾನ ನಿಲ್ದಾಣ ಹಾಗೂ ಬಂದರುಗಳಿಗೆ ರವಾನೆ ಮಾಡಲಾಗಿದೆ. ನಮಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಪ್ರಜ್ವಲ್‌ ಜರ್ಮನಿಗೆ ಪ್ರಯಾಣಿಸಿದ್ದಾನೆ. ಅನಂತರ ಅಲ್ಲಿಂದ ಆತ ಎಲ್ಲಿಗೆ ಹೋಗಿದ್ದಾನೆ ಎಂಬ ವಿವರಗಳಿಲ್ಲ ಎಂದರು.
7
+ ಸದ್ಯಕ್ಕೆ ಪ್ರಜ್ವಲ್‌ ರೇವಣ್ಣಗೆ 2ನೇ ನೋಟೀಸ್‌ ನೀಡಲಾಗಿದ್ದು, ಆತ ಎಲ್ಲಿದ್ದಾನೆ ಎಂದು ಪರಿಶೀಲನೆ ನಡೆಸಲು ರಾಜ್ಯಸರ್ಕಾರದ ಅಧಿಕಾರಿಗಳಿಗೆ ಅಕಾರವಿಲ್ಲ. ಕೇಂದ್ರ ಸರ್ಕಾರ ಅದನ್ನು ಮಾಡಬೇಕು. ನಮ್ಮ ವ್ಯಾಪ್ತಿಯಲ್ಲಿ ನಾವು ಅಧಿಕಾರಿಗಳನ್ನು ಕಳುಹಿಸಿ ಪ್ರಜ್ವಲ್‌ನನ್ನು ವಿದೇಶದಲ್ಲಿ ಬಂಧಿಸಿ ಕರೆತರುವ ಬಗ್ಗೆ ಪ್ರಯತ್ನ ಮಾಡಬಹುದು. ಆದರೆ ನೋಟೀಸ್‌ನ ಅವಧಿ ಮುಗಿದ ಬಳಿಕ ಈ ಪ್ರಕ್ರಿಯೆ ಬಗ್ಗೆ ಪರಿಶೀಲನೆ ನಡೆಯಲಿದೆ.
8
+ ಕಾನೂನಿನ ಪ್ರಕಾರ, ಆರೋಪಿಗಳಿಗೆ ಕಾಲಾವಕಾಶ ನೀಡುವುದು ಅನಿವಾರ್ಯವಿದೆ ಎಂದು ಹೇಳಿದರು.ಈ ನಡುವೆ ಮೈಸೂರಿನ ಪೊಲೀಸ್‌ ಠಾಣೆಯೊಂದರಲ್ಲಿ ಸಂತ್ರಸ್ತೆಯೊಬ್ಬರ ಪುತ್ರನೊ��್ಬ ತಮ್ಮ ತಾಯಿ ಕಾಣೆಯಾಗಿದ್ದಾರೆ ಎಂದು ದೂರು ನೀಡಿರುವ ಬಗ್ಗೆಯೂ ಎಸ್‌ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈಗ ಒಂದೊಂದೇ ವಿಚಾರಗಳು ಹೊರಬರುತ್ತಿವೆ. ಇನ್ನೂ ಕೆಲ ಮಹಿಳೆಯರು ಹೇಳಿಕೆ ನೀಡಬೇಕಿದೆ ಎಂದು ತಿಳಿಸಿದರು.
9
+ ಈ ಪ್ರಕರಣದಲ್ಲಿ ಪೆನ್‌ಡ್ರೈವ್‌ ಬಹಿರಂಗಗೊಳಿಸಿದವರು ಯಾರು? ಇದರ ಹಿಂದೆ ಯಾರಿದ್ದಾರೆ ಎಂಬ ವಿಚಾರಗಳನ್ನು ಎಸ್‌ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಾರೆ. ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುತ್ತಾರೆ. ಪೆನ್‌ಡ್ರೈವ್‌ ಅನ್ನು ಬಹಿರಂಗಗೊಳಿಸಿದವರು ಎಂದು ಹೇಳಲಾದ ಕಾರ್ತಿಕ್‌ ಎಲ್ಲಿದ್ದಾನೆ ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.
10
+ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿರುವ ಬಗ್ಗೆಯೂ ತಮಗೆ ವಿವರ ಇಲ್ಲ ಎಂದು ಸ್ಪಷ್ಟಪಡಿಸಿದರು.ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾನು ಗೃಹಸಚಿವನಾಗಿ ಜವಾಬ್ದಾರಿಯುತವಾಗಿ ಮಾತನಾಡಬೇಕಿದೆ. ಹೀಗಾಗಿ ರಾಜಕೀಯ ಹೇಳಿಕೆಗಳನ್ನು ನೀಡುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ರಾಜಕೀಯವಾಗಿ ಪ್ರತಿಕ್ರಿಯಿಸುತ್ತಾರೆ ಎಂದು ತಿಳಿಸಿದರು.
11
+ ಪೆನ್‌ಡ್ರೈವ್‌ನಲ್ಲಿನ ವಿಡಿಯೋಗಳಲ್ಲಿನ ಸಂತ್ರಸ್ತರ ಬಗ್ಗೆ ಸೂಕ್ಷ್ಮವಾಗಿ ನಡೆದುಕೊಳ್ಳಬೇಕಿದೆ. ಹೇಳಿಕೆ ನೀಡಲು ಧೈರ್ಯವಾಗಿ ಮುಂದೆ ಬನ್ನಿ. ಎಲ್ಲಾ ರೀತಿಯ ರಕ್ಷಣೆಯನ್ನು ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಎಸ್‌ಐಟಿ ಅಧಿಕಾರಿಗಳು ಮನವಿ ಮಾಡುತ್ತಿದ್ದಾರೆ. ಇದು ಮಹಿಳೆಯರು ಮತ್ತು ಅವರ ಜೀವನದ ಪ್ರಶ್ನೆಯಾಗಿರುವುದರಿಂದ ಎಚ್ಚರಿಕೆಯಿಂದ ನಡೆದುಕೊಳ್ಳಲಾಗುತ್ತಿದೆ ಎಂದರು.
12
+ ಸಾವಿರಾರು ವಿಡಿಯೋಗಳು ಇರುವುದರಿಂದ ಎಲ್ಲವನ್ನೂ ಸೂಕ್ಷ್ಮವಾಗಿ ಪರಿಗಣಿಸಬೇಕಿದೆ. ಹೀಗಾಗಿ ಕಾಲಾವಕಾಶವೂ ಅಗತ್ಯ ಎಂದು ಗೃಹಸಚಿವರು ತಿಳಿಸಿದರು.ಸಂತ್ರಸ್ತೆ ನೀಡಿದ ದೂರು ಆಧರಿಸಿ ಅನ್ವಯವಾಗುವ ಸೆಕ್ಷನ್‌ಗಳನ್ನು ದಾಖಲಿಸಲಾಗಿತ್ತು. ನಿನ್ನೆ ಮಹಿಳೆಯೊಬ್ಬರು ನೀಡಿದ ಹೇಳಿಕೆಗಳು ಬೇರೆಬೇರೆ ಸೆಕ್ಷನ್‌ಗಳನ್ನು ಬಳಕೆ ಮಾಡಲು ಅವಕಾಶ ಕಲ್ಪಿಸುತ್ತದೆ. ಹೀಗಾಗಿ ಎಸ್‌ಐಟಿ ಅಕಾರಿಗಳು ಅದರ ಅನುಸಾರ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.
eesanje/url_46_159_5.txt ADDED
@@ -0,0 +1,16 @@
 
 
 
 
 
 
 
 
 
 
 
 
 
 
 
 
 
1
+ ವೀರಶೈವ ಲಿಂಗಾಯತ ಮತಗಳನ್ನು ಕಬಳಿಸಲು ಎಲ್ಲಾ ಪಕ್ಷಗಳಿಂದ ಭಾರಿ ಕಸರತ್ತು
2
+ ಬೆಂಗಳೂರು, ಮೇ.3-ಜಿದ್ದಾಜಿದ್ದಿನ ಕುರುಕ್ಷೇತ್ರವಾಗಿರುವ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳ ಪೈಕಿ ಅಭ್ಯರ್ಥಿಗಳ ಸೋಲು-ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ವೀರಶೈವ ಲಿಂಗಾಯತ ಮತಬುಟ್ಟಿಗೆ ಎಲ್ಲಾ ಪಕ್ಷಗಳೂ ಕೈ ಹಾಕಿವೆ.
3
+ ಇದೇ 7 ರಂದು ಶಿವಮೊಗ್ಗ, ದಾವಣಗೆರೆ, ಉತ್ತರ ಕನ್ನಡ, ಚಿಕ್ಕೋಡಿ, ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಬೀದರ್‌, ವಿಜಾಪುರ ಹಾಗೂ ಕಲಬುರಗಿ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ವೀರಶೈವ ಲಿಂಗಾಯತರೇ ನಿರ್ಣಾಯಕರಾಗಿದ್ದು, ಈ ಸಮುದಾಯವನ್ನು ಸೆಳೆಯಲು ಅಭ್ಯರ್ಥಿಗಳ ಜೊತೆಗೆ ಕಾಂಗ್ರೆಸ್‌ ಮತ್ತು ಎನ್‌ಡಿಎ ಮೈತ್ರಿಕೂಟ ಇನ್ನಿಲ್ಲದ ಕಸರತ್ತು ನಡೆಸಿದೆ.
4
+ ವೀರಶೈವ ಸಮುದಾಯದ ಒಳಪಂಗಡಗಳಿಗೆ ಅನುಗುಣವಾಗಿ ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಹೀಗಾಗಿ ಈ ಸಮುದಾಯವನ್ನು ಸೆಳೆಯಲು ಇನ್ನಿಲ್ಲದ ತಂತ್ರಗಾರಿಕೆಯನ್ನು ರೂಪಿಸಲಾಗುತ್ತದೆ.
5
+ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಕರ್ನಾಟಕ, ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದಲ್ಲಿ ಬಿಜೆಪಿ ಲೆಕ್ಕಾಚಾರವನ್ನು ತಲೆಕೆಳಗೆ ಮಾಡಿ ಭರ್ಜರಿ ಫಸಲು ತೆಗೆದಿದ್ದ ಕಾಂಗ್ರೆಸ್‌ ಈಗಲೂ ಈ ಚುನಾವಣೆಯಲ್ಲೂ ಅದೇ ಫಲಿತಾಂಶ ಬರಬಹುದು ಎಂಬ ನಿರೀಕ್ಷೆ ಇಟ್ಟುಕೊಂಡಿದೆ. ಹೀಗಾಗಿಯೇ ವೀರಶೈವ ಸಮುದಾಯದ ಒಳಪಂಗಡಗಳಾದ ಪಂಚಮಶಾಲಿ, ಗಾಣಿಗ ಮತ್ತು ಸಾಧು ಲಿಂಗಾಯತರಿಗೆ ಜನಸಂಖ್ಯೆಗನುಗುಣವಾಗಿ ಟಿಕೆಟ್‌ ಹಂಚಿಕೆ ಮಾಡಿದೆ.
6
+ ಈವರೆಗೂ ವೀರಶೈವ ಲಿಂಗಾಯತ ಮತಗಳು ತನಗೆ ಯಾವಾಗಲೂ ಕಟ್ಟಿಟ್ಟ ಬುತ್ತಿ ಎಂಬ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಫಲಿತಾಂಶ ಮರ್ಮಾಘಾತ ನೀಡಿತ್ತು.
7
+ ಸಮುದಾಯದ ಪ್ರಭಾವಿ ನಾಯಕ ಬಿ.ಎಸ್‌.ಯಡಿಯೂರಪ್ಪ ರಾಜೀನಾಮೆ ಹಾಗೂ ಆ ಸಮುದಾಯವನ್ನು ಕಡೆಗಣಿಸಿದ್ದರ ಪರಿಣಾಮ ಬಿಜೆಪಿ ಚುನಾವಣೆಯಲ್ಲಿ ಭಾರೀ ಬೆಲೆ ತೆತ್ತಿತ್ತು. ಯಾವಾಗ ತನ್ನ ಸಾಂಪ್ರದಾಯಿಕ ಮತ ಬ್ಯಾಂಕ್‌ ಕೈಬಿಟ್ಟು ಹೋಗಲಿದೆ ಎಂಬುದು ಅರಿವಾಗುತ್ತಿದ್ದಂತೆ ಬಿಜೆಪಿ ತನ್ನ ರಣತಂತ್ರವನ್ನು ಬದಲಾಯಿಸಿದೆ.
8
+ ರಾಜ್ಯದಲ್ಲಿ ಶೇಕಡಾ 17 ರಷ್ಟು ಇದೇ ಸಮುದಾಯ ಜನರಿದ್ದಾರೆ. ಇವರನ್ನು ಬಿಟ್ಟರೆ ಒಕ್ಕಲಿಗರು ಹೆಚ್ಚಾಗಿದ್ದಾರೆ. ರಾಜ್ಯದ ಜನಸಂಖ್ಯೆಯಲ್ಲಿ ಈ ಸಮುದಾಯದ ಪಾತ್ರ ಶೇಕಡಾ 12 ರಷ್ಟಿದೆ.
9
+ ಲಿಂಗಾಯತರು ಇತ್ತೀಚಿನ ಕೆಲವು ದಶಕಗಳಿಗೆ ಬಿಜೆಪಿ ಪಕ್ಷದತ್ತ ಮುಖ ಮಾಡಿದ್ದಾರೆ. ಇನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದರಿಂದ, ಉತ್ತರ ಕರ್ನಾಟಕದಲ್ಲಿ ಮೈತ್ರಿ ಎಷ್ಟರ ಮಟ್ಟಿಗೆ ಕೈ ಹಿಡಿಯಲಿದೆ ಎಂಬುದನ್ನು ಕಾದು ನೋಡಬೇಕಿದೆ. ಅ���ದಹಾಗೆ 2019ರ ಚುನಾವಣೆಯಲ್ಲಿ ಬಿಜೆಪಿ ಈ ಕ್ಷೇತ್ರದಲ್ಲಿ ಕ್ಲೀನ್‌ ಸ್ವೀಪ್‌ ಸಾಧನೆ ಮಾಡಿತ್ತು.
10
+ ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ 37 ಲಿಂಗಾಯತ ಶಾಸಕರು ಗೆದ್ದು ಬೀಗಿದ್ದಾರೆ. 2018ಕ್ಕೆ ಹೋಲಿಸಿದರೆ ಈ ಸಂಖ್ಯೆ ಹೆಚ್ಚಾಗಿದೆ. ಬಿಜೆಪಿ ಕಳೆದ ಚುನಾವಣೆಯಲ್ಲಿ ಕೇವಲ 15 ಲಿಂಗಾಯತ ಅಭ್ಯರ್ಥಿಗಳು ಗೆದ್ದಿದ್ದರು. ಇನ್ನು ಒಟ್ಟಾರೆ ಲಿಂಗಾಯತ ಶಾಸಕರ ಸಂಖ್ಯೆಯು ಹೆಚ್ಚಾಗಿದ್ದು, ಇದರ ಲಾಭವನ್ನು ಪಕ್ಷಗಳು ಹೇಗೆ ಪಡೆಯಲಿವೆ ಎಂಬುದು ದೊಡ್ಡ ಪ್ರಶ್ನೆ ಆಗಿದೆ.
11
+ ಕರ್ನಾಟಕದ 224 ಕ್ಷೇತ್ರಗಳಲ್ಲಿ 90 ಕ್ಷೇತ್ರಗಳಲ್ಲಿ ಲಿಂಗಾಯತ ಸಮುದಾಯವೇ ಡಾಮಿನೆಟೆಡ್‌ ಇದೆ. ಇನ್ನು ಈ ಸಮುದಾಯ ಬಿಜೆಪಿಯಿಂದ ಕಾಂಗ್ರೆಸ್‌ ಕಡೆ ಮುಖ ಮಾಡಿರಲು ಹಲವು ಕಾರಣಗಳಿವೆ. ಲಿಂಗಾಯತ ಸಮುದಾಯದ ಪ್ರಭಾವಿ ಮುಖಂಡ ಬಿಎಸ್‌ ಯಡಿಯೂರಪ್ಪ ಅವರನ್ನು ಸೈಡಲೈನ್‌ ಮಾಡಿದ್ದು, ಪಕ್ಷಕ್ಕೆ ಪೆಟ್ಟು ನೀಡಿದೆ.
12
+ ಈಗ ಮತ್ತೆ ಬಿಜೆಪಿಯತ್ತ ಲಿಂಗಾಯತ ಸಮುದಾಯ ಮುಖ ಮಾಡಿದೆ. ದೇಶದ ವಿಚಾರಕ್ಕೆ ಬಂದಾಗ ಈ ಸಮುದಾಯ ಒಟ್ಟಾಗಿ ನಿಲ್ಲುವುದು ಕಳೆದ ಹಲವು ಚುನಾವಣೆಗಳಲ್ಲಿ ಎದ್ದು ಕಾಣುತ್ತದೆ. ಈಗ ರಣ ರಂಗದಲ್ಲಿ ಮತ್ತೆ ಬಿಎಸ್‌ವೈ ಕಾಣಿಸಿಕೊಂಡಿದ್ದು, ಇವರ ಮಗನಿಗೂ ದೊಡ್ಡ ಜವಾಬ್ದಾರಿಯನ್ನು ನೀಡಲಾಗಿದೆ.
13
+ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಟಿಕೆಟ್‌ ನೀಡದೇ ಇರುವ ಕಾರಣಕ್ಕೆ ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರಿದ್ದ ಲಕ್ಷ್ಮಣ ಸವದಿ, ಜಗದೀಶ್‌ ಶೆಟ್ಟರ್‌ ಪಕ್ಷಕ್ಕೆ ಕೊಂಚ ಪೆಟ್ಟು ಬಿದ್ದಿತ್ತು. ಆದರೆ ಈಗ ರಾಜಕೀಯ ಸಮೀಕರಣ ಬದಲಾಗಿದೆ. ಕಾಂಗ್ರೆಸ್‌ಗೆ ಕೈ ನೀಡಿರುವ ಜಗದೀಶ್‌ ಶೆಟ್ಟರ್‌ ಮತ್ತೆ ಬಿಜೆಪಿ ಬಾವುಟ ಹಿಡಿದಿದ್ದಾರೆ. ಅಲ್ಲದೆ ಬೆಳಗಾವಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಯ ಅಖಾಡದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
14
+ ಜಗದೀಶ್‌ ಶೆಟ್ಟರ್‌ ಘರ್‌ ವಾಪಸಿಯಿಂದ ಪಕ್ಷದಲ್ಲಿ ಕಾಣಿಸಿಕೊಂಡಿದ್ದ ಸಣ್ಣ ಬಿರುಕು ಸಹ ಮುಚ್ಚಿದಂತೆ ಕಾಣುತ್ತದೆ. ಈ ಬಾರಿ ಬಿಜೆಪಿ ಕಳೆದ ಬಾರಿಯಂತೆ ಈ ಬಾಗದಲ್ಲಿ ಕ್ಲೀನ್‌ ಸ್ವೀಪ್‌ ಸಾಧನೆಯನ್ನು ಮಾಡಲು ಎದುರು ನೋಡುತ್ತಿದೆ. ಈ ಬಾರಿ ಬೆಳಗಾವಿ ಕ್ಷೇತ್ರದ ಮೂಲಕ ಮೊದಲ ಬಾರಿಗೆ ಲೋಕಸಭಾ ಪ್ರವೇಶಿಸಲು ಜಗದೀಶ್‌ ಶೆಟ್ಟರ ಎದುರು ನೋಡುತ್ತಿದ್ದಾರೆ.
15
+ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು 9 ಲಿಂಗಾಯತ ಅಭ್ಯರ್ಥಿಗಳಿಗೆ ಅವಕಾಶ ನೀಡಿದರೆ, ಮೂವರು ಒಕ್ಕಲಿಗರಿಗೆ ಚುನಾವಣೆ ಸ್ಪರ್ಧಿಸುವ ಅವಕಾಶ ನೀಡಿದೆ. ಈ ಅಂಕಿ ಅಂಶದಲ್ಲಿ ಕಾಂಗ್ರೆಸ್‌ ಕೊಂಚ ಹಿಂದೆ ಬಿದ್ದಿದೆ. ಕಾಂಗ್ರೆಸ್‌ 5 ಲಿಂಗಾಯತ, 6 ಒಕ್ಕಲಿಗರಿಗೆ ಅವಕಾಶ ನೀಡಿದೆ. ಇನ್ನು ಜೆಡಿಎಸ್‌ ಇಬ್ಬರು ಒಕ್ಕಲಿಗ ಅಭ್ಯರ್ಥಿಗಳಿಗೆ ಮಣೆ ಹಾಕಿದೆ.
16
+ ಕಾಂಗ್ರೆಸ್‌ ಸಹ ಈ ಹಿಂದೆ ಅಹಿಂದ ಮತಗಳನ್ನು ತನ್ನತ್ತ ಸೆಳೆಯಲು ಬೇಕಾದ ಪ್ರಯತ್ನಗಳು ಮಾಡಿಕೊಂಡಿದೆ. ಅಂದಹಾಗೆ ಕಾಂಗ್ರೆಸ್‌ ಲಿಂಗಾಯತ, ಒಕ್ಕಲಿಗರು ಈ ಎರಡು ಸಮ��ದಾಯಕ್ಕಿಂತಲೂ ಹೆಚ್ಚಿನ ಒತ್ತನ್ನು ಬೇರೆ ಸಮುದಾಯಕ್ಕೆ ನೀಡಿ ಮತದಾರರ ಮನವೊಲಿಸುವಲ್ಲಿ ಸಫಲವಾಗಿದೆ. ಕಾಂಗ್ರೆಸ್‌ ಕುರುಬ ಸಮುದಾಯದ ಸಿದ್ಧರಾಮಯ್ಯ ಅವರನ್ನು ಸಿಎಂ ಮಾಡಿದ್ದು, ರಾಷ್ಟ್ರೀಯ ಅಧ್ಯಕ್ಷರನ್ನಾಗಿ ದಲಿತ ಮುಖಂಡ ಮಲ್ಲಿಕಾರ್ಜುನ್‌ ಖರ್ಗೆ ಅವರನ್ನು ನೇಮಕ ಮಾಡಿದ್ದು, ಮಾಸ್ಟರ್‌ ಸ್ಟ್ರೋಕ್‌ ನೀಡಲು ಪ್ಲ್ಯಾನ್‌ ಮಾಡಿದೆ.
eesanje/url_46_159_6.txt ADDED
@@ -0,0 +1,7 @@
 
 
 
 
 
 
 
 
1
+ ಲೋಕಸಭೆ ಚುನಾವಣೆ : ರಾಜ್ಯದಲ್ಲಿ 2262 ಎಫ್‌ಐಆರ್‌ ದಾಖಲು
2
+ ಬೆಂಗಳೂರು, ಮೇ 3– ರಾಜ್ಯದ ಪ್ರಸಕ್ತ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ 448.98 ಕೋಟಿ ರೂ. ಮೊತ್ತದ ನಗದು, ಚಿನ್ನ, ಬೆಳ್ಳಿ, ಡ್ರಗ್ಸ್ , ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಲಾಗಿದ್ದು, ಈ ಸಂಬಂಧ 2262 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.
3
+ ರಾಜ್ಯ ಮುಖ್ಯ ಚುನಾವಣಾಧಿ ಕಾರಿಗಳ ಕಚೇರಿ ಪ್ರಕಟಣೆ ಪ್ರಕಾರ, 2029 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಇಲಾಖೆಯ ಘೋರ ಅಪರಾಧದಡಿಯಲ್ಲಿ 3,298 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಪರವಾನಗಿ ಉಲ್ಲಂಘನೆಯಡಿ 5,392 ಪ್ರಕರಣಗಳನ್ನು ದಾಖಲಿಸಲಾಗಿದೆ. ಎನ್‌ಡಿಪಿಎಸ್‌ ಅಡಿಯಲ್ಲಿ 186 ಪ್ರಕರಣಗಳನ್ನು ಹಾಗೂ ಅಬಕಾರಿ ಕಾಯ್ದೆಯಡಿ 32,902 ಪ್ರಕರಣಗಳನ್ನು ದಾಖಲಿಸಲಾಗಿದೆ.
4
+ ಕಳೆದ ಮಾರ್ಚ್‌ 16 ರಿಂದ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಅಂದಿನಿಂದ ನಿಯಮಬಾಹಿರವಾಗಿ ಸಾಗಾಟ ಮಾಡುವ ಹಣ, ಮದ್ಯ, ಡ್ರಗ್ಸ್ , ಚಿನ್ನ, ಬೆಳ್ಳಿ ಹಾಗೂ ಇತರ ವಸ್ತುಗಳನ್ನು ನಿರಂತರವಾಗಿ ಜಪ್ತಿ ಮಾಡಲಾಗುತ್ತಿದೆ. ನಿನ್ನೆಯವರೆಗೆ ಒಟ್ಟಾರೆ 448.98 ಕೋಟಿ ರೂ.ನಷ್ಟು ನಗದು, ಚಿನ್ನ, ಬೆಳ್ಳಿ ಹಾಗೂ ಇತರ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆೆ.
5
+ ರಾಜ್ಯದಲ್ಲಿ ಮೊದಲ ಹಂತದ 14 ಕ್ಷೇತ್ರಗಳಲ್ಲಿ ಮತದಾನ ಮುಗಿದಿದ್ದು, 2ನೇ ಹಂತದ 14 ಕ್ಷೇತ್ರಗಳಿಗೆ ಮತದಾನ ನಡೆಯಲು ಇನ್ನೂ ನಾಲ್ಕು ದಿನ ಬಾಕಿ ಇದೆ. ರಾಜ್ಯದಲ್ಲಿ 141.10 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್ , ಚಿನ್ನ, ಬೆಳ್ಳಿ, ಉಚಿತ ಉಡುಗೊರೆಗಳನ್ನು ಪೊಲೀಸರು, ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು ವಶಪಡಿಸಿಕೊಂಡಿವೆ.
6
+ ಅಬಕಾರಿ ಇಲಾಖೆಯವರು 178.58 ಕೋಟಿ ರೂ. ವೌಲ್ಯದ ಮದ್ಯ, ಡ್ರಗ್ಸ್ ಅನ್ನು ಹಾಗೂ ಆದಾಯ ತೆರಿಗೆ ಇಲಾಖೆ ಅಧಿ ಕಾರಿಗಳು 49.19 ಕೋಟಿ ರೂ. ವೌಲ್ಯದ ನಗದು, ಚಿನ್ನ, ವಜ್ರದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವಾಣಿಜ್ಯ ತೆರಿಗೆ ಅಧಿ ಕಾರಿಗಳು 80.11 ಕೋಟಿ ರೂ. ಮೊತ್ತದ ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
7
+ ಮಂಗಳೂರು ನಗರ ಸಿಸಿಬಿ ಪೊಲೀಸ್‌ ಠಾಣೆ ತಂಡದವರು, 20,35,000 ರೂ. ವೌಲ್ಯದ 407 ಗ್ರಾಂ ಎಂಡಿಎಂಎ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
eesanje/url_46_159_7.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಪ್ರಜ್ವಲ್‌ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು
2
+ ಬೆಂಗಳೂರು,ಮೇ.3-ಅಶ್ಲೀಲ ಸಿಡಿ ಪ್ರಕರಣದ ಸಂಬಂಧ ಬಂಧನದ ಭೀತಿಯಿಂದ ವಿದೇಶಕ್ಕೆ ಫಲಾಯನ ಮಾಡಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಹಿಂದೆ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗಿತ್ತು. ಇದು ಅವರ ಮೇಲೆ ದಾಖಲಾಗಿರುವ 2 ನೇ ಅತ್ಯಾಚಾರ ಪ್ರಕರಣವಾಗಿದೆ.
3
+ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ವಿಶೇಷ ತನಿಖಾ ದಳದ(ಎಸ್‌ಐಟಿ ) ಅಧಿ ಕಾರಿಗಳು ಪ್ರಜ್ವಲ್‌ ವಿರುದ್ಧ ಐಟಿ ಕಾಯಿದೆ ಅಡಿ ಐಪಿಸಿ ಸೆಕ್ಷನ್‌ 376 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದು ಸೆಕ್ಷನ್‌ 376(2) () (ಪದೇ ಪದೇ ಅತ್ಯಾಚಾರ ಎಸಗುವುದು), 506 (ಕ್ರಿಮಿನಲ್‌ ಬೆದರಿಕೆ), 354A (1)() (ಲೈಂಗಿಕ ಪರವಾಗಿ ಬೇಡಿಕೆ), 354 () (ಮಹಿಳೆಯ ಮೇಲೆ ಆಕ್ರಮಣ ಅಥವಾ ಕ್ರಿಮಿನಲ್‌ ಬಲಪ್ರಯೋಗದ ಅಡಿಯಲ್ಲಿ ಆರೋಪಗಳನ್ನು ಪಟ್ಟಿ ಮಾಡುತ್ತದೆ. ಅವಳನ್ನು ವಸಾ್ತ್ರಪಹರಣ ಮಾಡುವ ಉದ್ದೇಶದಿಂದ), ಮತ್ತು 354(ಸಿ) (ನಗ್ನ ಅಥವಾ ಅರೆ-ನಗ್ನ ಚಿತ್ರಗಳ ಅಪ್ಲೋಡ್‌) ದೂರು ದಾಖಲಿಸಿದೆ.
4
+ ಈ ಹಿಂದೆ ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ನಲ್ಲಿ ತನಿಖಾಧಿ ಕಾರಿಗಳು ದುರ್ಬಲ ಸೆಕ್ಷನ್‌ಗಳನ್ನು ದಾಖಲಿಸಿದ್ದಾರೆ ಎಂದು ಕೆಲವರು ಆಕ್ಷೇಪಿಸಿದ ಹಿನ್ನೆಲೆಯಲ್ಲಿ ಇದೀಗ ಐಪಿಸಿ ಸೆಕ್ಷನ್‌ 370 ರಡಿ ದೂರು ದಾಖಲಿಸಿದೆ.
5
+ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿ ಕಾರಿಗಳು ವಿಡಿಯೋದಲ್ಲಿ ಬರುವ ಯಾವುದೇ ಮಹಿಳೆಯರೂ ಮುಕ್ತವಾಗಿ ಬಂದು ತಮ್ಮ ಬಳಿ ಹೇಳಿಕೆ ದಾಖಲಿಸಬೇಕೆಂದು ಎಸ್‌ಐಟಿ ಅಧಿ ಕಾರಿಗಳು ಮನವಿ ಮಾಡಿದ್ದರು. ಇದರಂತೆ ಸಂತ್ರಸ್ತ ಮಹಿಳೆಯೊಬ್ಬಳು ನೀಡಿದ ಹೇಳಿಕೆ ಆಧಾರದ ಮೇಲೆ ಸಿಆರ್‌ಪಿ ಸೆಕ್ಷನ್‌ 164 ರಡಿ ಹೇಳಿಕೆಯನ್ನು ದಾಖಲಿಸಲಾಗಿದೆ. ಮಹಿಳೆಯ ವಿವರಗಳನ್ನು ತನಿಖಾಧಿ ಕಾರಿಗಳು ಗೌಪ್ಯವಾಗಿ ಇರಿಸಿದ್ದಾರೆ.
6
+ ಮತ್ತೊಂದು ನೋಟೀಸ್‌ :ಈ ಬೆಳವಣಿಗೆಗಳ ನಡುವೆಯೇ ಪ್ರಕರಣದ ಪ್ರಮುಖ ಆರೋಪಿ ಸ್ಥಾನದಲ್ಲಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹಾಗೂ 2ನೇ ಆರೋಪಿ ಪ್ರಜ್ವಲ್‌ ರೇವಣ್ಣಗೆ ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ 2ನೇ ಬಾರಿಗೆ ನೋಟೀಸ್‌ ಜಾರಿ ಮಾಡಿದೆ.
7
+ ಈ ಹಿಂದೆ ಮೊದಲನೇ ನೋಟೀಸ್‌ನಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೂ ಎಸ್‌ಐಟಿ ಸೂಚನೆ ಕೊಟ್ಟಿತ್ತು. ಆದರೆ ವಿದೇಶದಲ್ಲಿರುವ ಕಾರಣ ವಿಚಾರಣೆಗೆ ಹಾಜರಾಗಲು ಒಂದು ವಾರಗಳ ಕಾಲ ಸಮಯಾವಕಾಶ ನೀಡಬೇಕೆಂದು ಪ್ರಜ್ವಲ್‌ ರೇವಣ್ಣ ತಮ್ಮ ವಕೀಲ ಅರುಣ್‌ ಮೂಲಕ ಮನವಿ ಮಾಡಿಕೊಂಡಿದ್ದರು.
8
+ ಇತ್ತ ರೇವಣ್ಣ ಕೂಡ ವಿಚಾರಣೆಗೆ ಹಾಜರಾಗದೆ ನ್ಯಾಯಾಲಯಕ್ಕೆ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಎಸ್‌ಐಟಿ ಮತ್ತೊಂದು ನೋಟೀಸ್‌ ಜಾರಿ ಮಾಡಿದ್ದು, 24 ಗಂಟೆಯೊಳಗೆ ವಿಚಾರಣೆಗೆ ಹಾಜರಾ���ುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನಿನ ಪ್ರಕಾರ, ಕ್ರಮ ಜರುಗಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ತನಿಖಾಧಿ ಕಾರಿಗಳು ನೀಡಿದ್ದಾರೆ ಎಂದು ತಿಳಿದುಬಂದಿದೆ.
9
+ ಎಸ್‌ಐಟಿ ದಾಳಿ:ಎಸ್‌ಐಟಿ ತನಿಖೆಯನ್ನು ಚುರುಕುಗೊಳಿಸಿದ್ದು, ಇನ್ನು ಮುಂದೆ ಹಾಸನದ ವಿವಿಧ ಕಡೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ, ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸೇರಿದ ಮನೆ, ಫಾರಂಹೌಸ್‌ ಸೇರಿದಂತೆ ಮತ್ತಿತರ ಕಡೆ ದಾಳಿ ನಡೆಸಿ ಪ್ರಕರಣ ಸಂಬಂಧ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ.
10
+ ತನಿಖಾ ತಂಡದ ಎಸ್‌ಪಿ ಸೀಮಾ ಲಾಟ್ಕರ್‌ ನೇತೃತ್ವದಲ್ಲಿ 5 ವಾಹನಗಳಲ್ಲಿ ಮುಂಜಾನೆ 3.15ಕ್ಕೆ ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ ಪಡವಲಹಿಪ್ಪೆ ಗ್ರಾಮದಲ್ಲಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಒಡೆತನಕ್ಕೆ ಸೇರಿದ ಫಾರಂಹೌಸ್‌ನಲ್ಲಿ ದಾಳಿ ನಡೆಸಿದೆ.ನಂತರ ಘನ್ನಿಕಡ, ಕಾನೇನಹಳ್ಳಿ ಬಳಿ ಮತ್ತೊಂದು ಫಾರಂಹೌಸ್‌ಗೆ ಅಧಿ ಕಾರಿಗಳು ದಾಳಿ ನಡೆಸಿ ಮಾಹಿತಿಯನ್ನು ಪಡೆದಿದೆ.
11
+ ಪಡವಲಹಿಪ್ಪೆ ಫಾರಂಹೌಸ್‌ನಲ್ಲಿರುವ ಅಸ್ಸಾಂ ಮತ್ತು ಬಿಹಾರಿ ಮೂಲದ ಕಾರ್ಮಿಕರಿಂದ ತನಿಖಾ ತಂಡ ಮಾಹಿತಿಯನ್ನು ಕಲೆ ಹಾಕಿದೆ.ಆರೋಪಿ ಸ್ಥಾನದಲ್ಲಿರುವ ಪ್ರಜ್ವಲ್‌ ರೇವಣ್ಣ ಇಲ್ಲಿಗೆ ಯಾವ ಸಮಯದಲ್ಲಿ ಬರುತ್ತಿದ್ದರು? ವಾರದಲ್ಲಿ ಎಷ್ಟು ಬಾರಿ ಭೇಟಿ ನೀಡುತ್ತಿದ್ದರು? ಇಲ್ಲಿಯೇ ಉಳಿದುಕೊಳ್ಳುತ್ತಿದ್ದರೇ? ಎಂಬೆಲ್ಲಾ ವಿಷಯಗಳನ್ನು ಕಲೆ ಹಾಕಿದೆ.ವಿಡಿಯೋ ಚಿತ್ರೀಕರಣ ಸಂಬಂಧವೂ ತನಿಖಾ ತಂಡ ಮಾಹಿತಿಯನ್ನು ಕಲೆ ಹಾಕಿದೆ.
eesanje/url_46_159_8.txt ADDED
@@ -0,0 +1,8 @@
 
 
 
 
 
 
 
 
 
1
+ ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಎ.ಎಚ್‌.ಆನಂದ್‌ ಬಿಜೆಪಿ ಅಭ್ಯರ್ಥಿಯಾಗುವುದು ಬಹುತೇಕ ಖಚಿತ
2
+ ಬೆಂಗಳೂರು,ಮೇ.3-ಈ ಬಾರಿ ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಎ.ಎಚ್‌.ಆನಂದ್‌ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.ಈ ಕ್ಷೇತ್ರವನ್ನು ಕಳೆದ ಬಾರಿ ಪ್ರತಿನಿಧಿಸಿದ್ದ ಹಾಲಿ ವಿಧಾನಪರಿಷತ್‌ ಸದಸ್ಯ ಅ.ದೇವೇಗೌಡ ಅವರಿಗೆ ಎರಡನೇ ಬಾರಿಗೆ ಟಿಕೆಟ್‌ ನೀಡಲು ಬಿಜೆಪಿ ಒಲವು ತೋರಿಲ್ಲ.
3
+ ಬಿಜೆಪಿಯ ಭದ್ರಕೋಟೆ ಎನಿಸಿರುವ ಕ್ಷೇತ್ರವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಯುವ ಮುಖಂಡರೂ ಆಗಿರುವ ಹಾಗೂ ಪಕ್ಷದಲ್ಲಿ ಹಲವು ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿರುವ ಎ.ಎಚ್‌.ಆನಂದ್‌ ಅವರಿಗೆ ಟಿಕೆಟ್‌ ನೀಡಲು ಪಕ್ಷವು ಒಲವು ತೋರಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿ ಪಕ್ಷದ ನಾಯಕ ಆರ್‌.ಅಶೋಕ್‌ ಸೇರಿದಂತೆ ಪಕ್ಷದ ಎಲ್ಲಾ ನಾಯಕರೂ ಆನಂದ್‌ ಅವರಿಗೆ ಟಿಕೆಟ್‌ ನೀಡಲು ಒಲವು ತೋರಿದ್ದು, ಅವರನ್ನೇ ಅಭ್ಯರ್ಥಿ ಮಾಡಬೇಕೆಂಬ ತೀರ್ಮಾನಕ್ಕೆ ಬಂದಿದ್ದಾರೆ.
4
+ ಒಂದೆರೆಡು ದಿನದಲ್ಲಿ ಆರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡುವ ಸಾಧ್ಯತೆಯಿದ್ದು, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಒಂದೇ ಹೆಸರನ್ನು ಶಿಫಾರಸ್ಸು ಮಾಡುವ ಸಂಭವವಿದೆ. ಕಳೆದ ಬಾರಿಯೇ ಟಿಕೆಟ್‌ ಆಕಾಂಕ್ಷಿಯಾಗಿದ್ದ ಆನಂದ್‌ ಅವರಿಗೆ ಕೆಲವು ಕಾರಣಗಳಿಂದ ಕೊನೆ ಕ್ಷಣದಲ್ಲಿ ಟಿಕೆಟ್‌ ಕೈ ತಪ್ಪಿತ್ತು. ಆದರೂ ಪಕ್ಷವಿರೋಧಿ ಚಟುವಟಿಕೆ ನಡೆಸದೇ ಪಕ್ಷದ ಸೂಚನೆಯಂತೆ ಅಭ್ಯರ್ಥಿಯ ಗೆಲುವಿಗೆ ಸಹಕರಿಸಿದ್ದರು.
5
+ ಕೇಂದ್ರದ ಮಾಜಿ ಸಚಿವರಾಗಿದ್ದ ದಿವಂಗತ ಅನಂತಕುಮಾರ್‌ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಆನಂದ್‌ ಅವರು ಎಬಿವಿಪಿ ಮೂಲಕ ಬಿಜೆಪಿಗೆ ಸೇರ್ಪಡೆಯಾಗಿದ್ದು.
6
+ ಯಡಿಯೂರಪ್ಪನವರು ಈ ಹಿಂದೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಹಮ್ಮಿಕೊಂಡಿದ್ದ ಪಾದಯಾತ್ರೆ, ಬೆಂಗಳೂರಿನಲ್ಲಿ ನಡೆದಿದ್ದ ಹಲವು ರಾಷ್ಟ್ರೀಯ ನಾಯಕರ ಸಮಾವೇಶಗಳು ಸೇರಿದಂತೆ ಮತ್ತಿತರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿಭಾಯಿಸುವ ಮೂಲಕ ಪಕ್ಷದ ನಾಯಕರ ಮೆಚ್ಚುಗೆಗೆ ಪಾತ್ರರಾಗಿದ್ದು.
7
+ ಬಿಜೆಪಿಯ ಮಾಧ್ಯಮ ಮುಖ್ಯಸ್ಥರಾಗಿಯೂ ಅನುಭವ ಹೊಂದಿರುವ ಅವರು ಪಕ್ಷ ನೀಡುವ ಎಲ್ಲಾ ಜವಾಬ್ದಾರಿಗಳನ್ನೂ ಅತ್ಯಂತ ಚಾಣಾಕ್ಷತನದಿಂದ ನಿಭಾಯಿಸುವ ಯುವಕನಾಗಿ ಹೊರಹೊಮ್ಮಿದ್ದರು.ಈ ಎಲ್ಲಾ ಅಂಶಗಳನ್ನೂ ಪರಿಗಣಿಸಿ ಬಿಜೆಪಿ ಈ ಬಾರಿ ಆನಂದ್‌ ಅವರಿಗೆ ಬೆಂಗಳೂರು ಪದವೀಧರ ಕ್ಷೇತ್ರದಿಂದ ಟಿಕೆಟ್‌ ನೀಡುವುದು ಖಚಿತವಾಗಿದೆ.
8
+ ವಿಧಾನಪರಿಷತ್‌ನ ಮೂರು ಶಿಕ್ಷಕರು ಹಾಗೂ ಮೂರು ಪದವೀಧರ ಕ್ಷೇತ್ರಗಳಿಗೆ ಜೂ.3 ರಂದು ಮತದಾನ ನಡೆದು 6 ರಂದು ��ಲಿತಾಂಶ ಪ್ರಕಟಗೊಳ್ಳಲಿದೆ.ಮೇ 9 ರಂದು ಅಧಿಸೂಚನೆ ಹೊರಡಿಸಲಿದ್ದು, ಮೇ 16 ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿ, ಮೇ 17 ಪರಿಶೀಲನೆ ಹಾಗೂ ಮೇ 20 ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದೆ.ಬೆಂಗಳೂರು ಪದವೀಧರ ಕ್ಷೇತ್ರವು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಕ್ಷೇತ್ರಗಳನ್ನು ಒಳಗೊಂಡಿದೆ.
eesanje/url_46_159_9.txt ADDED
@@ -0,0 +1,10 @@
 
 
 
 
 
 
 
 
 
 
 
1
+ ನೋಡ್ತಾ ಇರಿ, ಸಿದ್ರಾಮಣ್ಣನ ವಿರುದ್ದವೂ ಸಿಡಿ ಬಿಡುತ್ತಾರೆ : ರಾಜೂ ಗೌಡ ಸ್ಪೋಟಕ ಹೇಳಿಕೆ
2
+ ಯಾದಗಿರಿ,ಮೇ.3-ನೋಡುತ್ತಿರಿ.. ಲೋಕಸಭಾ ಚುನಾವಣೆ ಮುಗಿಯಲಿ, ಸಿದ್ರಾಮಣ್ಣನ ವಿರುದ್ದವೂ ಏನಾದರೂ ಸಿಡಿ ಬಿಡುತ್ತಾರೆ. ಅವರ ಜೊತೆ ಜಾಸ್ತಿ ಓಡಾಡೋಕೆ ಹೋಗಬೇಡಿ ಎಂದು ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಚಿವ ರಾಜೂ ಗೌಡ ಪೆನ್‌ ಡ್ರೈವ್‌ ವಿದ್ಯಮಾನದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ್ದಾರೆ.
3
+ ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ಹಮ್ಮಿಕೊಂಡ ಬಿಜೆಪಿ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿ, ನೋಡುತ್ತಿರಿ.. ಲೋಕಸಭಾ ಚುನಾವಣೆ ಮುಗಿಯಲಿ, ಸಿದ್ರಾಮಣ್ಣನ ವಿರುದ್ಧವೂ ಏನಾದರೂ ಸಿಡಿ ಬಿಡುತ್ತಾರೆ. ಅವರ ಜೊತೆ ಜಾಸ್ತಿ ಓಡಾಡೋಕೆ ಹೋಗಬೇಡಿ ಎಂದು ಸಿಎಂಗೆ ಎಚ್ಚರಿಸಿದ್ದಾರೆ.
4
+ ವೇದಿಕೆ ಮೇಲೆ ದೀರ್ಘ ದಂಡ ನಮಸ್ಕಾರ ಹಾಕಿ ಮತಯಾಚನೆ ಮಾಡಿದ ಅವರು, ಸಿದ್ದರಾಮಯ್ಯನವರಿಗೂ ಈ ವಿಚಾರಗಳು ಗೊತ್ತು, ಆದರೆ ಮೇಲಿನವರ ಆದೇಶ ಪಾಲಿಸಬೇಕಾಗುತ್ತದೆ. ಡಿಕೆಶಿ ತಮ್ಮ ಎದುರಾಳಿಗಳನ್ನು ಹಣೆಯಲು ಯಾವ ಅಸ್ತ್ರ ಬಳಸಬೇಕು, ಯಾವ ಸಿಡಿ ಬಿಡಬೇಕು ಎನ್ನುವುದು ಅವರಿಗೆ ಚೆನ್ನಾಗಿ ಗೊತ್ತಿದೆ ಎಂದು ಆರೋಪಿಸಿದ್ದಾರೆ.
5
+ ಮಾಧ್ಯಮಗಳಲ್ಲಿ ನಾವು ನೋಡುತ್ತಿದ್ದೇವೆಯೇ ಹೊರತು ಈ ಭಾಗದಲ್ಲಿ ಸಿಡಿ ಸದ್ದು ಮಾಡುತ್ತಿಲ್ಲ. ಪ್ರಜ್ವಲ್‌ ರೇವಣ್ಣ ಅಂತ ಅಲ್ಲಾ, ಯಾರೇ ಮಾಡಲಿ ತಪ್ಪುತಪ್ಪೇ.. ಇದು ಸ್ಯಾಡಿಸ್‌್ಟಗಳು ಮಾಡುವ ಕೆಲಸ. ಮೊನ್ನೆ ರಾಹುಲ್‌ ಗಾಂಧಿ , ಡಿಕೆಶಿ ಮುಖ್ಯಮಂತ್ರಿ ಮತ್ತು ಸಿದ್ದರಾಮಯ್ಯ ರಾಜ್ಯಾಧ್ಯಕ್ಷ ಎಂದು ಹೇಳಿದ್ದರು. ಅವರ ಮನಸ್ಸಿನಲ್ಲೂ ಅದೇ ಇದೆ, ಡಿಕೆಶಿ ಅಣ್ಣ 24 ಗಂಟೆ ರಾಜಕೀಯ ಮಾಡುವ ವ್ಯಕ್ತಿ. ಮುಖ್ಯಮಂತ್ರಿ ಆಗುವುದಕ್ಕೆ ಬೇಕಾದನ್ನು ಮಾಡುತ್ತಾರೆ ಎಂದು ಹೇಳಿದ್ದಾರೆ.
6
+ ರಮೇಶ್‌ ಜಾರಕಿಹೊಳಿ ಮತ್ತು ಪ್ರಜ್ವಲ್‌ ರೇವಣ್ಣ ವಿಚಾರದಲ್ಲಿ ಯಾವಯಾವ ಅಸ್ತ್ರವನ್ನು ಉಪಯೋಗಿಸಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ನೋಡುತ್ತಿರಿ.. ಸಿದ್ರಾಮಣ್ಣನ ವಿರುದ್ದವೂ ಯಾವುದಾದರೂ ಸಿಡಿ ಬಿಡಬಹುದು ಎಂದು ನೀಡಿರುವ ಹೇಳಿಕೆ ವ್ಯಾಪಕ ಚರ್ಚೆಗೆ ಗುರಿಯಾಗುವ ಸಾಧ್ಯತೆಯಿದೆ.
7
+ ಎಂಪಿ ಚುನಾವಣೆ ಆದ ಮೇಲೆ ಸಿದ್ದಾರಾಮಣ್ಣನ ಮೇಲೆ ಏನಾದರೂ ಮಾಡಿ ಅವರನ್ನು ಬ್ಲಾಕ್‌ ಮಾಡಿಸಿ ಬಿಡುತ್ತಾರೆ. ಕೆಲವರನ್ನು ಬೆದರಿಸುವುದು, ಇನ್ನಷ್ಟು ಜನರನ್ನು ಸಿಡಿ ತೋರಿಸಿ ಭಯ ಪಡಿಸುವುದು ಅವರ ರಾಜಕೀಯ ಶೈಲಿ ಎಂದು ರಾಜೂ ಗೌಡ ಹೇಳಿದ್ದಾರೆ.
8
+ ವೋಟಿಂಗ್‌ ಆಗುವ ಎರಡು ದಿನ ಮುನ್ನ ಸಿಡಿ ಹೊರಗೆ ಬಿಟ್ಟರು, ಅವರ ಕೈಯಲ್ಲಿ ಮುಂಚೆನೇ ಪೆನ್‌ ಡ್ರೈವ್‌ ಇತ್ತು ತಾನೆ. ಮುಂಚೆನೇ ಬಿಡಬಹುದಾಗಿತ್ತು, ಮಹಿಳಾ ಸಂತ್ರಸ್ತರ ಕಷ್ಟಕ್ಕೆ ಹೋಗೋಣ ಎನ್ನುವುದು ಅವರಿಗಿಲ್ಲ, ಮೊದಲು ರಾಜಕೀಯ ಲಾಭ ಆಗಬೇಕು. ಸಿದ್ರಾಮಣ್ಣ ನಿಮಗೆ ಬಿಜೆಪಿ ಶತ್ರುವಲ್ಲ, ರಾಜೂ ಗೌಡ ಶತ್ರುವಲ್ಲ, ಪಕ್ಕದಲ್ಲೇ ಇರುವ ಡ���ಕೆ ಅಣ್ಣ ಎಂದು ನರಸಿಂಹ ನಾಯಕ್‌ ಗುರುತರ ಆರೋಪವನ್ನು ಮಾಡಿದ್ದಾರೆ.
9
+ ಸೆರಗೊಡ್ಡಿ ಮತ ಕೇಳಲು ನನಗೆ ತಾಯಿ ಇಲ್ಲ, ತಂದೆಯೂ ಇಲ್ಲ. ನನ್ನ ಪಾಲಿಗೆ ಕಾರ್ಯಕರ್ತರೇ ತಂದೆ-ತಾಯಂದಿರು, ನೀವೇ ಆಶೀರ್ವಾದ ಮಾಡಬೇಕು. ಎಲ್ಲರೂ ಆಶೀರ್ವಾದ ಮಾಡಬೇಕೆಂದು ವೇದಿಕೆ ಮೇಲೆ ದೀರ್ಘ ದಂಡ ನಮಸ್ಕಾರ ಹಾಕಿದರು. ನನ್ನ ತಾಯಿಯನ್ನು ಕಳೆದುಕೊಂಡಾಗ ನಾನು ಸುಮ್ಮನೆ ಕುಳಿತುಕೊಳ್ಳಲಿಲ್ಲ. ತಾಯಿಯನ್ನು ಕಳೆದುಕೊಂಡಾಗಲೂ ಕೆಲಸ ನಿಲ್ಲಿಸಿಲ್ಲ. ಕೊರೋನಾ ಸಂದರ್ಭದಲ್ಲಿ ನಿಮ್ಮನ್ನು ರಕ್ಷಣೆ ಮಾಡುವ ಕೆಲಸ ಮಾಡಿದ್ದೇನೆ. ಹೀಗಾಗಿ ನನ್ನ ಗೆಲ್ಲಿಸಿ ಎಂದು ಮನವಿ ಮಾಡಿಕೊಂಡರು.
10
+ ರಾಜಾ ವೆಂಕಟಪ್ಪ ನಿಧನದಿಂದ ತೆರವಾಗಿದ್ದ ಸುರುಪುರ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಯ ಜೊತೆಗೆ ವಿಧಾನಸಭೆ ಚುನಾವಣೆಯೂ ನಡೆಯಲಿದೆ. ಮೇ. 7 ರಂದು ಮತದಾನ ನಡೆಯಲಿದೆ. ಬಿಜೆಪಿಯಿಂದ ರಾಜೂ ಗೌಡ ಸ್ಪರ್ಧಿಸಿದರೆ, ಇತ್ತ ಕಾಂಗ್ರೆಸ್‌ನಿಂದ ರಾಜಾ ವೆಂಕಟಪ್ಪ ನಾಯಕ ಪುತ್ರ ರಾಜಾ ವೇಣುಗೋಪಾಲ ನಾಯಕರಿಗೆ ಟಿಕೆಟ್‌ ನೀಡಿದೆ.
eesanje/url_46_15_1.txt ADDED
@@ -0,0 +1,7 @@
 
 
 
 
 
 
 
 
1
+ ಶಾಸಕ ಮುನಿರತ್ನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಕಾಂಗ್ರೆಸ್‌‍ ಆಗ್ರಹ
2
+
3
+ ಬೆಂಗಳೂರು,ಸೆ.19-ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅಮಾನತುಗೊಳಿಸಬೇಕು ಹಾಗೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕಾಂಗ್ರೆಸ್‌‍ ಕಾರ್ಯಕರ್ತರು ಹಾಗೂ ಮುಖಂಡರು ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಶೇಖರ್‌ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮುನಿರತ್ನ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.
4
+ ಮುನಿರತ್ನ ಕಾಮುಕನಾಗಿದ್ದು, ಅತ್ಯಾಚಾರಿ, ಹನಿಟ್ರ್ಯಾಪ್‌ನ ರೂವಾರಿಯಾಗಿದ್ದಾನೆ. ಗುತ್ತಿಗೆದಾರರನ್ನು ಶೋಷಣೆ ಮಾಡಿದ್ದು, ಹಣ ವಸೂಲಿ ಮಾಡಿದ್ದಾನೆ. ಗುತ್ತಿಗೆದಾರರ ಜೊತೆ ಸಂಭಾಷಣೆಯಲ್ಲಿ ಹೆಣ್ಣುಮಕ್ಕಳ ವಿಷಯವಾಗಿ, ಪರಿಶಿಷ್ಟರ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾನೆ ಎಂದು ಆಕ್ರೊಶ ವ್ಯಕ್ತಪಡಿಸಿದರು.
5
+ ಜಿ.ಸಿ.ಚಂದ್ರಶೇಖರ್‌ ಮಾತನಾಡಿ, ಮುನಿರತ್ನ ಒಬ್ಬ ಗೂಂಡಾ ಶಾಸಕನಾಗಿದ್ದು, ಆತನ ಬಗ್ಗೆ ದೂರು ನೀಡಲು ಕೂಡ ಭಯ ಪಡುವ ವಾತಾವರಣವಿದೆ. ಹೀಗಾಗಿ ಬಹಳಷ್ಟು ಮಂದಿ ದೂರು ನೀಡಲು ಮುಂದೆ ಬಂದಿಲ್ಲ ಎಂದು ಹೇಳಿದರು.
6
+ ಇಂತಹ ನಾಚಿಕೆಗೆಟ್ಟ ಶಾಸಕನನ್ನು ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಬಿಜೆಪಿ ನಾಯಕರ ನೈತಿಕತೆ ಕೂಡ ಪ್ರಶ್ನಾರ್ಹವಾಗಿದೆ. ಆತನನ್ನು ಗೆಲ್ಲಿಸಿದ ರಾಜರಾಜೇಶ್ವರಿ ನಗರ ಕ್ಷೇತ್ರದ ಜನ ತಲೆತಗ್ಗಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
7
+ ಬಿಜೆಪಿಗೆ ನೈತಿಕತೆ ಇದ್ದರೆ ಕೂಡಲೇ ಮುನಿರತ್ನ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರ ಪಕ್ಷದ ಹಿರಿಯ ನಾಯಕ ಆರ್‌.ಅಶೋಕ್ ವಿರುದ್ಧವೇ ಹನಿಟ್ರ್ಯಾಪ್‌ ಪ್ರಯೋಗ ನಡೆಸಲಾಗಿತ್ತು ಎಂದರೆ ಮುನಿರತ್ನ ಅವರ ಮನಸ್ಥಿತಿ ಅರ್ಥವಾಗುತ್ತದೆ ಎಂದು ಹೇಳಿದರು.ವಿಧಾನಪರಿಷತ್‌ನ ಮುಖ್ಯ ಸಚೇತಕ ಸಲೀಂ ಅಹಮದ್‌, ಬಿಜೆಪಿ ಮುನಿರತ್ನನನ್ನು ವಜಾಗೊಳಿಸಬೇಕು. ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ದೂರು ನೀಡಬೇಕೆಂದು ಒತ್ತಾಯಿಸಿದರು.
eesanje/url_46_15_10.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಶಾಸಕ ಮುನಿರತ್ನ ಜಾಮೀನು ಭವಿಷ್ಯ ನಾಳೆ ನಿರ್ಧಾರ
2
+
3
+ ಬೆಂಗಳೂರು,ಸೆ.18-ಬಿಬಿಎಂಪಿ ಗುತ್ತಿಗೆ ದಾರರಿಗೆ ಜಾತಿ ನಿಂದನೆ, ಪ್ರಾಣ ಬೆದರಿಕೆ ಹಾಕಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ನಾಯ್ಡು ಜಾಮೀನು ಭವಿಷ್ಯ ನಾಳೆ ನಿರ್ಧಾರವಾಗಲಿದೆ.
4
+ ಮುನಿರತ್ನ ಪ್ರಕರಣದ ವಾದ-ಪ್ರತಿವಾದವನ್ನು ಆಲಿಸಿದ ಬೆಂಗಳೂರಿನ 82ನೇ ಎಸಿಸಿಎಂ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ತೀರ್ಪನ್ನು ನಾಳೆಗೆ ಕಾಯ್ದಿರಿಸಿದ್ದಾರೆ. ನ್ಯಾಯಾಲಯ ನೀಡುವ ತೀರ್ಪಿನ ಮೇಲೆ ಮುನಿರತ್ನ ಬಿಡುಗಡೆ ಭವಿಷ್ಯ ನಿರ್ಧಾರವಾಗಲಿದೆ.
5
+ ಇದಕ್ಕೂ ಮುನ್ನ ಶಾಸಕ ಮುನಿರತ್ನ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಹಾಗೂ ಸರ್ಕಾರದ ಪರ ವಿಶೇಷ ಸಾರ್ವಜನಿಕ ಅಭಿಯೋಜಕ(ಎಸ್ಪಿಪಿ) ಪ್ರದೀಪ್ ಪ್ರಬಲ ವಾದ ಮಂಡಿಸಿದರು.
6
+ ಮೊದಲು ಮುನಿರತ್ನ ಪರ ವಾದ ಮಂಡಿಸಿದ ಅಶೋಕ್ ಹಾರನಹಳ್ಳಿಯವರು, ಪೊಲೀಸರು ತಮ ಕಕ್ಷಿದಾರರಿಗೆ ಕನಿಷ್ಟ ನೋಟಿಸ್ ಕೊಡದೆ ಬಂಧಿಸಿದ್ದಾರೆ. ಅಷ್ಟಕ್ಕೂ ಅವರೇನು ದೇಶಬಿಟ್ಟು ಹೋಗುತ್ತಿರಲಿಲ್ಲ. ವಿಚಾರಣೆಗೆ ಬರುವಂತೆ ಸೂಚಿಸಿದ್ದರೆ ಹಾಜರಾಗುತ್ತಿದ್ದರು. ಪೊಲೀಸರು ಆತುರದಲ್ಲಿ ಬಂಧಿಸಿದ್ದಾರೆಂದು ವಾದಿಸಿದರು.
7
+ ಈ ಪ್ರಕರಣ ನಡೆದಿರುವುದು ಶಾಸಕರ ಕಚೇರಿಯಲ್ಲಿ ಸಾರ್ವಜನಿಕವಾಗಿ ಯಾವುದೇ ಒಬ್ಬ ವ್ಯಕ್ತಿಯನ್ನು ನಿಂದಿಸುವುದು, ಉದ್ದೇಶಪೂರ್ವಕವಾಗಿ ಅಪಮಾನ ಮಾಡುವುದು ಕಂಡುಬಂದರೆ ಜಾತಿ ನಿಂದನೆ ಪ್ರಕರಣ ದಾಖಲಿಸಬಹುದು. ಕಚೇರಿಯೊಳಗೆ ನಡೆದಿರುವ ಸಂಭಾಷಣೆ ಆಧಾರದ ಮೇಲೆ ಪ್ರಕರಣ ದಾಖಲಿಸಿರುವುದು ಸರಿಯಲ್ಲ ಎಂದು ನ್ಯಾಯಮೂರ್ತಿಗಳ ಗಮನಕ್ಕೆ ತಂದರು.
8
+ ಇಲ್ಲಿ ಗುತ್ತಿಗೆದಾರರಾಗಿರುವ ಚೆಲುವರಾಜು ಅವರು ತಮ ಕಕ್ಷಿದಾರರ ಜೊತೆ ನಡೆಸಿರುವ ಮೊಬೈಲ್ ಸಂಭಾಷಣೆಯನ್ನು ದಾಖಲಿಸಿಕೊಂಡು ಸಾರ್ವಜನಿಕವಾಗಿ ಹಂಚಿದ್ದಾರೆ. ಅಂದರೆ ಅವರ ಉದ್ದೇಶವೇ ಈ ಪ್ರಕರಣದಲ್ಲಿ ಶಾಸಕರನ್ನು ಸಿಲುಕಿಸಬೇಕೆಂಬ ಹುನ್ನಾರವಿದೆ. ನಾವು ವಿಚಾರಣೆಗೆ ಸಂಪೂರ್ಣ ಸಹಕಾರ ಕೊಡುತ್ತೇವೆ. ಹೀಗಾಗಿ ನ್ಯಾಯಾಲಯ ಜಾಮೀನು ಮಂಜೂರು ಮಾಡುವಂತೆ ಕೋರಿದರು.
9
+ ಮೂರನೇ ವ್ಯಕ್ತಿಯ ಮುಂದೆ ನಿಂದನೆ ಮಾಡಿದಾಗ ಜಾತಿ ನಿಂದನೆ ಪ್ರಕರಣವನ್ನು ದಾಖಲಿಸಲಿ. ಇಲ್ಲಿ ಇಬ್ಬರ ನಡುವೆ ಮಾತ್ರ ಮಾತುಕತೆ ನಡೆದಿದೆ. ಅದನ್ನೇ ದೊಡ್ಡ ವಿವಾದದಂತೆ ಬಿಂಬಿಸಲಾಗುತ್ತಿದೆ. ಹೀಗಾಗಿ ಅವರು ಜಾಮೀನು ಪಡೆಯಲು ಅರ್ಹರು ಎಂದು ವಾದಿಸಿದರು.
10
+ ಇದಕ್ಕೆ ತೀವ್ರ ಆಕ್ಷೇಪಿಸಿದ ಸರ್ಕಾರಿ ಪರ ಅಭಿಯೋಜಕ ಪ್ರದೀಪ್ ಅವರು, ಶಾಸಕರ ಕೊಠಡಿ ಸಾರ್ವಜನಿಕರ ವ್ಯಾಪ್ತಿಗೆ ಒಳಪಡುತ್ತದೆ. ಅವರು ದುರದ್ದೇಶಪೂರ್ವಕವಾಗಿಯೇ ಜಾತಿ ನಿಂದನೆ ಮಾಡಿ ಪ್ರಾಣ ಬೆದರಿಕೆ ಹಾಕಿದ್ದಾರೆ. ಇನ್ನು ಕೆಲವರು ಮಾಹಿತಿಗಳನ್ನು ಬಹಿರಂಗಪಡಿಸಲು ಸಾಧ್ಯವಾಗಿಲ್ಲ ಎಂದರು.
11
+ ಜಾತಿ ನಿಂದನೆ ಮಾಡಿದಾಗ ಸೆಕ್ಷನ್ 17ರಡಿ ನೋಟಿಸ್ ನೀಡದೆ ವಿ���ಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಬಹುದು. ಅಗತ್ಯವಿದ್ದರೆ ತನಿಖಾಧಿಕಾರಿಗಳು ಬಂಧಿಸಬಹುದು. ಇಲ್ಲಿ ಪೊಲೀಸರ ಕ್ರಮ ಕಾನೂನಿನ ಪ್ರಕಾರವಾಗಿಯೇ ನಡೆದಿದೆ ಎಂದು ಸಮರ್ಥಿಸಿಕೊಂಡರು.
12
+ ಮುನಿರತ್ನ ಜೈಲಿನಿಂದ ಹೊರಗೆ ಬಂದರೆ ದೂರುದಾರರಿಗೆ ಮತ್ತೆ ಪ್ರಾಣಬೆದರಿಕೆ ಹಾಕುವುದಿಲ್ಲ ಎನ್ನುವುದಕ್ಕೆ ಗ್ಯಾರಂಟಿಯಾದರೂ ಏನು? ಸಾಕ್ಷಿದಾರರ ಮೇಲೆ ಪ್ರಭಾವ ಬೀರುವುದಿಲ್ಲವೇ? ಹೀಗಾಗಿ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ಕೊಡಬಾರದು.ಪ್ರಕರಣವು ತನಿಖಾ ಹಂತದಲ್ಲಿರುವಾಗ ಜಾಮೀನು ನೀಡದರೆ ಅವರು ಯಾರ ಮೇಲೂ ಪ್ರಭಾವ ಬೀರಬಹುದು.
13
+ ಮುನಿರತ್ನ ಹಿನ್ನಲೆ ಏನೆಂಬುದು ಎಲ್ಲರಿಗೂ ಗೊತ್ತಿದೆ. ಅವರ ಮೇಲೆ ಈಗಾಗಲೇ 8 ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಜಾಮೀನು ನೀಡದಂತೆ ಪ್ರದೀಪ್ ಅವರು ನ್ಯಾಯಾಧೀಶರಿಗೆ ಮನವಿ ಮಾಡಿದರು.
eesanje/url_46_15_11.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಡ್ರಗ್ಸ್ ಹಾವಳಿ ಹತ್ತಿಕ್ಕಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚನೆ : ಸಿಎಂ
2
+ :
3
+ ಬೆಂಗಳೂರು,ಸೆ.18-ನಗರ ಸೇರಿದಂತೆ ರಾಜ್ಯಾದ್ಯಂತ ಹೆಚ್ಚಾಗಿರುವ ಮಾದಕ ವಸ್ತುಗಳ ಹಾವಳಿಯನ್ನು ಹತ್ತಿಕ್ಕಲು ರಾಜ್ಯಮಟ್ಟದಲ್ಲಿ ವಿಶೇಷವಾದ ಕಾರ್ಯಪಡೆ ರಚನೆಯ ಜೊತೆಗೆ ಇನ್ನು ಮುಂದೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
4
+ ಗೃಹ ಕಚೇರಿ ಕೃಷ್ಣದಲ್ಲಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದಕವಸ್ತುಗಳ ನಿಯಂತ್ರಣಕ್ಕೆ ಈಗಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ರಾಜ್ಯಮಟ್ಟದ ಉನ್ನತಾಧಿಕಾರಿ ಗಳ ಸಮಿತಿ ಹಾಗೂ ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ಸಕ್ರಿಯವಾಗಿವೆ. ಇವುಗಳ ಮೇಲೆ ತೀವ್ರವಾಗಿ ನಿಗಾ ವಹಿಸಲು ಗೃಹಸಚಿವರ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ಟಾಸ್ಕ್ಫೋರ್ಸ್ ಅನ್ನು ರಚಿಸಲಾಗುವುದು. ಅದರಲ್ಲಿ ಆರೋಗ್ಯ, ಉನ್ನತ ಶಿಕ್ಷಣ, ಶಾಲಾ ಶಿಕ್ಷಣ, ಸಮಾಜ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವರು ಸದಸ್ಯರಾಗಿರುತ್ತಾರೆ ಎಂದರು.
5
+ ರಾಜ್ಯ ಮತ್ತು ಜಿಲ್ಲಾಮಟ್ಟದ ಸಮಿತಿಗಳು ಪ್ರತಿ ತಿಂಗಳಿಗೊಮೆಯಾದರೂ ಪ್ರಗತಿಪರಿಶೀಲನಾ ಸಭೆ ನಡೆಸಬೇಕು ಎಂದು ಆದೇಶ ಹೊರಡಿಸಲಾಗುವುದು. ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು. ಮಾದಕ ವಸ್ತುಗಳ ಬಳಕೆ, ಮಾರಾಟ, ಸಾಗಾಣಿಕೆ ಸೇರಿದಂತೆ ಎಲ್ಲಾ ರೀತಿಯ ಅಪರಾಧಗಳಿಗೆ ಜಾಮೀನು ರಹಿತ ಪ್ರಕರಣ ದಾಖಲಿಸುವ ಜೊತೆಗೆ ಕನಿಷ್ಠ 10 ರಿಂದ ಗರಿಷ್ಟ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶವಿರುವಂತಹ ಕಾಯ್ದೆಗಳಡಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
6
+ ಸ್ಟೂಡೆಂಟ್ ಪೊಲಿಸಿಂಗ್, ಎನ್ಜಿಒಗಳು ಮತ್ತು ಜನವಸತಿ ಪ್ರದೇಶಗಳ ಸಂಘಟನೆಗಳಲ್ಲಿ ಹೆಚ್ಚು ಜಾಗೃತಿ ಮೂಡಿಸಲಾಗುವುದು. ಮಾದಕ ವಸ್ತುಗಳ ಚಟಕ್ಕೆ ಬಲಿಯಾದವರ ಪುನರ್ವಸತಿಯ ಕೇಂದ್ರಗಳನ್ನು ಮತ್ತಷ್ಟು ಸಬಲೀಕರಣಗೊಳಿಸಲಾಗುವುದು ಎಂದರು.ಮತ್ತೇರಿಸುವಂತಹ ಮಾತ್ರೆಗಳು, ಕೆಮಿನ ಔಷಧಿಗಳು..
7
+ ಈ ರೀತಿಯ ಔಷಧಿಗಳನ್ನು ಅನಧಿಕೃತವಾಗಿ ಮಾರಾಟ ಮಾಡುವ ಔಷಧಿ ಅಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಲಾಗುವುದು. ಉನ್ನತ ಮಟ್ಟದ ಕಾರ್ಯಪಡೆಯಲ್ಲಿ ಆರೋಗ್ಯ ಇಲಾಖೆ ಕಾರ್ಯದರ್ಶಿಗಳು ಸದಸ್ಯರಾಗಿರುತ್ತಾರೆ. ಹೀಗಾಗಿ ವೈದ್ಯರ ಶಿಫಾರಸ್ಸುಗಳಿಲ್ಲದೆ ಅನಧಿಕೃತವಾಗಿ ಹೆಚ್ಚಿನ ಪ್ರಮಾಣದಲ್ಲಿ ಮತ್ತೇರಿಸುವಂತ ಮಾತ್ರೆಗಳನ್ನು ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತಿದೆ ಎಂದರು.
8
+ ಮಾದಕ ವಸ್ತುಗಳ ನಿಯಂತ್ರಣಕ್ಕೆ ಪೊಲೀಸರಿಗೆ ಮುಕ್ತ ಅವಕಾಶವನ್ನು ನೀಡಲಾಗಿದ್ದು, ಹೊಣೆಗಾರಿಕೆಯನ್ನು ನಿಗದಿ ಮಾಡಲಾಗಿದೆ. ಇದನ್ನು ಮೀರಿದವರ ವಿರುದ್ಧ ಅಮಾನತು, ಸೇವೆಯಿಂದ ವಜಾ ಸೇರಿದಂತೆ ಕಠಿಣ ಕ್ರಮಗಳನ್ನು ಜರುಗಿಸಲ��ಗುತ್ತದೆ ಎಂದು ಹೇಳಿದರು.
9
+ ಬೆಂಗಳೂರಿನಲ್ಲಿ ಅತೀ ಹೆಚ್ಚು ಮಾದಕವಸ್ತು ಪ್ರಕರಣಗಳು ದಾಖಲಾಗಿವೆ. ಒಟ್ಟು ಪ್ರಕರಣಗಳ ಪೈಕಿ ಶೇ.50 ರಷ್ಟು ಬೆಂಗಳೂರಿನಲ್ಲಿಯೇ ದಾಖಲಾಗಿವೆ. ಶೇ.22 ರಷ್ಟು ಮಂಗಳೂರಿನಲ್ಲಿ, ಶೇ.11 ರಷ್ಟು ರಾಜ್ಯದ ಇತರ ಭಾಗಗಳಲ್ಲಿ ದಾಖಲಾಗಿವೆ. ಬೆಂಗಳೂರಿನ ಪೂರ್ವ ಭಾಗದ ಮೂಲಕ ಮಾದಕವಸ್ತುಗಳು ಹೆಚ್ಚು ಸರಬರಾಜಾಗುತ್ತಿವೆ ಮತ್ತು ಹೆಚ್ಚು ಮಾದಕವ್ಯಸನ ಅಪರಾಧಗಳು ನಡೆಯುತ್ತಿವೆ ಎಂಬ ವರದಿಗಳಿವೆ.
10
+ ಪೊಲೀಸ್ ಠಾಣಾಧಿಕಾರಿಗಳಿಗೆ ಮಾದಕವಸ್ತುಗಳ ಮಾರಾಟ, ಸರಬರಾಜು ಸೇರಿದಂತೆ ಎಲ್ಲಾ ಮಾಹಿತಿಗಳು ಇದ್ದೇ ಇರುತ್ತವೆ. ಅವರಿಗೆ ಗೊತ್ತಿಲ್ಲದೇ ಯಾವ ಚಟುವಟಿಕೆಗಳೂ ನಡೆಯಲು ಸಾಧ್ಯವಿಲ್ಲ. ಹೀಗಾಗಿ ಇನ್ನು ಮುಂದೆ ಡ್ರಗ್‌್ಸ ಪ್ರಕರಣಗಳು ಕಂಡುಬಂದರೆ ಸಂಬಂಧಪಟ್ಟ ಠಾಣಾಧಿಕಾರಿಗಳು, ಡಿವೈಎಸ್ಪಿ, ಎಸಿಪಿ, ಡಿಸಿಪಿ, ಎಸ್ಪಿಗಳನ್ನು ಹೊಣೆಗಾರರನ್ನಾಗಿ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
11
+ ಒರಿಸ್ಸಾ, ಆಂಧ್ರಪ್ರದೇಶ, ಉತ್ತರಪ್ರದೇಶದಂತಹ ರಾಜ್ಯದಿಂದ ಮಾದಕ ವಸ್ತುಗಳು ಕಳ್ಳಸಾಗಾಣಿಕೆಯಾಗುತ್ತಿವೆ. ಸಮಾಜಕ್ಕೆ ಕಂಠಕವಾಗಿರುವ ಯುವ ಸಮುದಾಯವನ್ನು ಹಾಳು ಮಾಡುತ್ತಿರುವ ಮಾದಕವಸ್ತುಗಳ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಕಠಿಣ ಕ್ರಮ ಜರುಗಿಸಲಾಗುತ್ತಿದೆ ಎಂದರು.
12
+ ಈ ಹಿಂದಿನ ಸರ್ಕಾರ ತೆಗೆದುಕೊಂಡ ಕ್ರಮಗಳು ಸಾಲುವುದಿಲ್ಲ. ದಿನೇದಿನೇ ಈ ಪಿಡುಗು ಹೆಚ್ಚಾಗುತ್ತಿವೆ ಎಂಬುದು ಕಳವಳಕಾರಿ ಎಂದು ಹೇಳಿದರು.2021 ರಲ್ಲಿ 7,511 ಮಂದಿ ಭಾರತೀಯರು, 190 ಮಂದಿ ವಿದೇಶಿಯರು, 2022 ರಲ್ಲಿ 7,737 ಮಂದಿ ಭಾರತೀಯರು, 123 ವಿದೇಶಿಯರು, 2023 ರಲ್ಲಿ 8,016 ಭಾರತೀಯರು, 105 ವಿದೇಶಿಯರು, 2024ರ ಈವರೆಗೂ 1,021 ಭಾರತೀಯರು, 21 ವಿದೇಶಿಯರನ್ನು ಬಂಧಿಸಲಾಗಿದೆ ಎಂದು ಹೇಳಿದರು.
13
+ ಆರೋಗ್ಯ ಇಲಾಖೆಯಲ್ಲಿ ಈ ಕುರಿತು ರಚಿಸಲಾಗಿರುವ ತಜ್ಞರ ಜೊತೆಯೂ ಚರ್ಚಿಸಲಾಗಿದ್ದು, ಮಾದಕ ವ್ಯಸನಗಳ ಕುರಿತು ಹೆಚ್ಚು ಜನಜಾಗೃತಿ ಮೂಡಿಸಬೇಕು ಮತ್ತು ನಿರ್ಮೂಲನಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಲಹೆ ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಗರಿಷ್ಠ ಪ್ರಮಾಣದಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
14
+ ಈ ಸಂದರ್ಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ಡಿಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
eesanje/url_46_15_12.txt ADDED
@@ -0,0 +1,8 @@
 
 
 
 
 
 
 
 
 
1
+ ಗಗನಕ್ಕೇರಿದ ಈರುಳ್ಳಿ-ಬೆಳ್ಳುಳ್ಳಿ ಬೆಲೆ, ದಸರಾ ಹಬ್ಬಕ್ಕೆ ಮತ್ತಷ್ಟು ಏರಿಕೆ
2
+ ,
3
+ ಬೆಂಗಳೂರು,ಸೆ.18-ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ದಿನದಿಂದ ದಿನಕ್ಕೆ ಬಡವರು ಹಾಗೂ ಮಧ್ಯಮವರ್ಗದವರ ಜೀವನ ಬಲು ದುಬಾರಿಯಾಗುತ್ತಿದ್ದು, ಈ ನಡುವೆ ಈರುಳ್ಳಿ ಬೆಲೆ ಏರಿಕೆಯಾಗುತ್ತಲೇ ಹೋಗುತ್ತಿದ್ದು, ಗ್ರಾಹಕರ ಕಣ್ಣಲ್ಲಿ ಕೊಳ್ಳುವಾಗಲೇ ನೀರು ತರಿಸುತ್ತಿದೆ.
4
+ ಈರುಳ್ಳಿಯನ್ನು ವ್ಯಾಪಕವಾಗಿ ಬೆಳೆಯುವ ಉತ್ತರಕರ್ನಾಟಕದ ಹಲವು ಭಾಗಗಳಲ್ಲಿ ಅತಿಯಾದ ಮಳೆಯಾದ ಕಾರಣ ಬೆಳೆಯೆಲ್ಲಾ ನಾಶವಾಗಿದ್ದು, ಮತ್ತೊಂದೆಡೆ ತೇವಾಂಶಕ್ಕೆ ಸಂಗ್ರಹಿಸಿಟ್ಟಿದ್ದ ಈರುಳ್ಳಿ ಇಟ್ಟಲ್ಲೇ ಕೊಳೆತುಹೋಗುತ್ತಿದೆ. ಹಾಗಾಗಿ ಉತ್ಪಾದನೆ ಕುಂಠಿತವಾಗಿದ್ದು, ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ದಿನದಿಂದ ದಿನಕ್ಕೆ ಬೆಲೆ ಏರುತ್ತಲೇ ಇದೆ.
5
+ ಕಳೆದ ಕೆಲವು ತಿಂಗಳ ಹಿಂದೆ 100 ರೂ.ಗೆ ನಾಲ್ಕು ಕೆಜಿ ಗುಣಮಟ್ಟದ ಈರುಳ್ಳಿ ಚಿಲ್ಲರೆಯಾಗಿ ಮಾರಾಟವಾಗುತ್ತಿತ್ತು. ಈಗ ಕೆಜಿಗೆ 60 ರಿಂದ 70 ರೂ.ಗೆ ಮಾರಾಟವಾಗುತ್ತಿದೆ. ಉತ್ತರಕರ್ನಾಟಕದ ಬಳ್ಳಾರಿ, ರಾಯಚೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಭಾಗಗಳಲ್ಲಿ ಹೆಚ್ಚಾಗಿ ಈರುಳ್ಳಿ ಬೆಳೆ ಬೆಳೆಯಲಾಗುತ್ತದೆ. ಆದರೆ ಹೆಚ್ಚಾದ ಮಳೆಯಿಂದ ಬೆಳೆ ನಾಶವಾಗಿ ಉತ್ಪಾದನೆಯಲ್ಲಿ ಭಾರೀ ಕುಸಿತವಾಗಿದೆ.
6
+ ಈ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ನಿಗಧಿತ ಪ್ರಮಾಣದಲ್ಲಿ ಮಾಲು ಬರುತ್ತಿಲ್ಲ. ಪೂರೈಕೆ ಕೂಡ ಕಡಿಮೆಯಾಗಿದ್ದು, ನೆರೆಯ ಮಹಾರಾಷ್ಟ್ರ, ಪುಣೆಯಿಂದಲೂ ಸಹ ಈರುಳ್ಳಿಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ.ಪಿತೃಪಕ್ಷ ಹಾಗೂ ದಸರಾ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟು ದುಬಾರಿಯಾಗುವ ಸಾಧ್ಯತೆಯಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.
7
+ ಬೆಳ್ಳುಳ್ಳಿಯೂ ದುಬಾರಿ :ಈರುಳ್ಳಿ, ಬೆಳ್ಳುಳ್ಳಿ ಒಂದು ರೀತಿಯಲ್ಲಿ ಕಾಂಬಿನೇಷನ್‌ನಂತಿದ್ದು, ಒಗ್ಗರಣೆಗೆ ಎರಡೂ ಕೂಡ ಮುಖ್ಯ. ಇದರಲ್ಲಿ ಯಾವುದೇ ಒಂದು ಇಲ್ಲದಿದ್ದರೂ ಅಡುಗೆ ರುಚಿ ಬರುವುದಿಲ್ಲ. ಈ ನಡುವೆ ಬೆಳ್ಳುಳ್ಳಿ ಕೂಡ ಕೆಜಿಗೆ 400 ರೂ. ತಲುಪಿದೆ.
8
+ ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಹೆಚ್ಚಾದ ಕಾರಣ ಬೆಳೆ ಕುಂಠಿತವಾಗಿದ್ದರೆ ಬಯಲುಸೀಮೆ ಪ್ರದೇಶಗಳಲ್ಲಿ ಮಳೆ ಇಲ್ಲದೆ ನಿಗದಿತ ಪ್ರಮಾಣದಲ್ಲಿ ಮಾರುಕಟ್ಟೆಗೆ ಮಾಲು ಬಾರದಿರುವುದರಿಂದ ಬೆಲೆ ಹೆಚ್ಚಳವಾಗಿದೆ.ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ವರ್ತಕರು ಅಭಿಪ್ರಾಯ ಪಟ್ಟಿದ್ದಾರೆ.
eesanje/url_46_15_2.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಶಾಸಕ ಮುನಿರತ್ನ ವಿರುದ್ಧ ‘ಹನಿ ಟ್ರಾಪ್’ ಆರೋಪ, FIRನಲ್ಲಿವೆ ಶಾಕಿಂಗ್ ಸಂಗತಿಗಳು..!
2
+ ,
3
+ ಬೆಂಗಳೂರು,ಸೆ.19-ಶಾಸಕ ಮುನಿರತ್ನ ವಿರುದ್ಧ ಮತ್ತಷ್ಟು ಗಂಭೀರ ಆರೋಪಗಳು ಕೇಳಿಬಂದಿದ್ದು, ಮಹಿಳೆಯೊಬ್ಬರು ತಮನ್ನು ಹೆದರಿಸಿ, ಬೆದರಿಸಿ ಅತ್ಯಾಚಾರ ಮಾಡಿರುವುದಾಗಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಜೊತೆಗೆ ಎಚ್ಐವಿ ಪೀಡಿತ ಮಹಿಳೆಯೊಬ್ಬರನ್ನು ಬಳಸಿ ರಾಜಕೀಯ ಪ್ರತಿಸ್ಪರ್ಧಿಗೆ ಹನಿಟ್ರ್ಯಾಪ್ ಮಾಡಿರುವ ಗಂಭೀರ ಮಾಹಿತಿಯನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ.
4
+ ಯಶವಂತಪುರದ ಸಮಾಜಸೇವಕಿ ಸುಮಾರು 40 ವರ್ಷದ ಮಹಿಳೆ ಯೊಬ್ಬರು ನೀಡಿರುವ ದೂರಿನ ಆಧಾರದ ಮೇರೆಗೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
5
+ ಐಪಿಸಿ ಸೆಕ್ಷನ್ 354 ಎ (ಲೈಂಗಿಕ ದೌರ್ಜನ್ಯ),354 ಸಿ (ಮಹಿಳೆಯರ ಇಚ್ಛೆಗೆ ವಿರುದ್ಧವಾಗಿ ಚಿತ್ರೆಕರಣ) 376 ಎನ್ (2) (ಸರ್ಕಾರಿ ಸೇವಕನಿಂದ ಅತ್ಯಾಚಾರ), 506 ( ಜೀವ ಬೆದರಿಕೆ), 504 ( ಉದ್ದೇಶಪೂರ್ವಕವಾಗಿ ನಿಂದನೆ) 120(ಬಿ) ಅಪರಾಧಿಕ ಒಳಸಂಚು, ( 149 ) ಕಾನೂನು ಬಾಹಿರ ಸಭೆ, 406 ( ನಂಬಿಕೆ ದೋಹ) , 384 ( ಸುಲಿಗೆ) 308 ( ಹತ್ಯೆ ಮಾಡಲು ಪ್ರಯತ್ನ,) ಐಟಿ ಆಕ್ಟ್ 66,66 ಇ ಸೆಕ್ಷನ್ಗಳನ್ನು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
6
+ ಇದೇ ಪ್ರಕರಣದಲ್ಲಿ ವಿಜಯ್ ಕುಮಾರ್ (ಎ2), ಸುಧಾಕರ (ಎ3), ಕಿರಣ್ ಕುಮಾರ್ (ಎ4), ಲೋಹಿತ್ ಗೌಡ (ಎ5), ಮಂಜುನಾಥ (ಎ6), ಲೋಕಿ (ಎ7) ಎಂಬವರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.
7
+ ಬಿಬಿಎಂಪಿ ಮಾಜಿ ಸದಸ್ಯ ವೇಲುನಾಯ್ಕರ್ ಎಂಬುವವರಿಗೆ ಜಾತಿ ನಿಂದನೆ, ಪ್ರಾಣ ಬೆದರಿಕೆ ಒಡ್ಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿ ನ್ಯಾಯಾಂಗ ಬಂಧನದಲ್ಲಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ಧ ನಿನ್ನೆ ಅತ್ಯಾಚಾರ ಪ್ರಕರಣ ದಾಖಲಾಗಿದೆ.
8
+ ರಾಮನಗರ ಉಪವಿಭಾಗದ ಡಿವೈಎಸ್ಪಿ ದಿನಕರ್ ಶೆಟ್ಟಿ ಪ್ರಕರಣದ ತನಿಖೆ ಕೈಗೊಂಡಿದ್ದಾರೆ. ತನಿಖೆ ಮುಗಿದ ನಂತರ ಮುನಿರತ್ನ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂಜೆಗೆ ತಿಳಿಸಿದ್ದಾರೆ.ದೂರು ನೀಡಿರುವ ಮಹಿಳೆಯನ್ನು ಮುನಿರತ್ನ ಸಂಪರ್ಕಿಸಿ, ಸ್ನೇಹ ಬೆಳೆಸಿ, ಅನುಚಿತವಾಗಿ ನಡೆದುಕೊಳ್ಳುತ್ತಿದ್ದರು ಎಂದು ದೂರಲಾಗಿದೆ.
9
+ ಗೋಡನ್ವೊಂದಕ್ಕೆ ಕರೆಸಿಕೊಂಡ ಮುನಿರತ್ನ ಮಹಿಳೆಯನ್ನು ಬೆದರಿಸಿ ಅತ್ಯಾಚಾರ ಮಾಡಿದ್ದಲ್ಲದೆ, ತಾನು ಹೇಳಿದಂತೆ ಕೇಳಬೇಕು ಮತ್ತು ಈ ವಿಚಾರವನ್ನು ಹೊರಗೆ ಎಲ್ಲೂ ಹೇಳಬಾರದು ಎಂದು ಬೆದರಿಕೆ ಹಾಕಿದ್ದಾನೆ. ಒಂದು ವೇಳೆ ತನ್ನ ವಿರುದ್ಧ ನಡೆದುಕೊಂಡರೆ ನಮಿಬ್ಬರ ಸರಸ ಸಲ್ಲಾಪದ ದೃಶ್ಯಗಳನ್ನು ಸಿಸಿಟಿವಿಯಲ್ಲಿ ಚಿತ್ರೀಕರಿಸಲಾಗಿದ್ದು, ಅದನ್ನು ಬಹಿರಂಗಪಡಿಸುವುದಾಗಿ ಬೆದರಿಸಿದ್ದರು ಎಂದು ಮಹಿಳೆ ದೂರಿದ್ದಾರೆ.
10
+ ದೂರಿನಲ್ಲಿ ಏನಿದೆ? :ಕೋವಿಡ್ ಸಂದರ್ಭದಲ್ಲಿ ಇಬ್ಬರ ನಡುವೆ ಆತೀಯತೆ ಬೆಳೆದಿತ್ತು. ಆಗ್ಗಾಗೆ ವಿಡಿಯೋ ಕಾಲ್ ಮಾಡಿ ಮ���ತನಾಡುತ್ತಿದ್ದರು. ನಗ್ನವಾಗಿ ಇರುವಂತೆ ಕರೆ ಮಾಡಿ ಒತ್ತಾಯಿಸಿದಾಗ ಅದನ್ನು ನಿರಾಕರಿಸ್ದೆಿ. ಒಮೆ ಸ್ಥಳವೊಂದಕ್ಕೆ ಬರಲು ಹೇಳಿದ್ದರು. ನಾನು ಅಲ್ಲಿಗೆ ಹೋದಾಗ ತಬ್ಬಿಕೊಳ್ಳಲು ಮುಂದಾಗಿದ್ದರು. ಅದಕ್ಕೆ ಆಕ್ಷೇಪಿಸಿದಾಗ ರಾಜಕೀಯಕ್ಕೆ ಬರಬೇಕಾದರೆ ಇವೆಲ್ಲಾ ಕಾಮನ್ ಎಂದು ಹೇಳಿದ್ದರು.
11
+ ಬಳಿಕ ಅತ್ಯಾಚಾರವೆಸಗಿದ್ದು, ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿರುವ ವಿಡಿಯೋವನ್ನು ಎಡಿಟ್ ಮಾಡಿ ಹಂಚುತ್ತೇನೆ ಎಂದು ಹೆದರಿಸಿದ್ದರು. ವಿಡಿಯೋ ಇಟ್ಟುಕೊಂಡು ಹಲವು ಬಾರಿ ಮುನಿರತ್ನ ಆತ್ಯಾಚಾರವೆಸಗಿರುವುದಾಗಿ ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
12
+ ಎಫ್ಐಆರ್ನಲ್ಲಿನ ಅಂಶಗಳು :1) ಕೋವಿಡ್ ಸಮಯದಲ್ಲಿ ನನ್ನ ಸೇವೆ ಗುರುತಿಸಿ ಮುನಿರತ್ನ ಕರೆ ಮಾಡಿದ್ದರು2) ನಮಸ್ತೆ ಲೀಡರ್ ನಾನು ನಿಮ ಭಾಗದ ಶಾಸಕ, ಬಂದು ನನ್ನನ್ನು ಭೇಟಿ ಮಾಡಿ ಎಂದಿದ್ದ ಮುನಿರತ್ನ3) ಅದರಂತೆ ಭೇಟಿ ಬಳಿಕ ಇಬ್ಬರ ನಡುವೆ ಆತೀಯತೆ ಬೆಳೆದಿತ್ತು4) ಆಗಾಗ ವೀಡಿಯೊ ಕಾಲ್ ಮೂಲಕ ಮಾತನಾಡುತ್ತಿದ್ದರು5) ಈ ವೇಳೆ ನಗ್ನವಾಗಿ ಕರೆ ಮಾಡುವಂತೆ ಒತ್ತಾಯಿಸಿದಾಗ ನಾನು ನಿರಾಕರಿಸ್ದೆಿ6) ಸ್ಪಾಟ್ ಒಂದಕ್ಕೆ ಬರುವುದಕ್ಕೆ ಹೇಳಿ ನಿನ್ನ ನೋಡಿದರೆ ಮೈ ಜುಮ್ ಎನಿಸುತ್ತೆ ಎಂದೇಳಿ ತಬ್ಬಿಕೊಳ್ಳಲು ಮುಂದಾದರು7) ನಾನು ಆಕ್ಷೇಪಿಸಿದಾಗ ರಾಜಕೀಯಕ್ಕೆ ಬರಬೇಕಾದರೆ ಇದೆಲ್ಲಾ ಕಾಮನ್ ಎಂದರು8) ನಾನು ಕಿರುಚಿಕೊಳ್ಳುತ್ತೇನೆ ಎಂದಾಗ ನಾನು ಶಾಸಕನಿದ್ದೇನೆ, ಅಪಾರ ಜನಬೆಂಬಲವಿದೆ ಸುಮನಿದ್ದರೆ ಸರಿ, ಇಲ್ಲವಾದರೆ ನಿನ್ನ ವಿರುದ್ಧವೇ ಕಂಪ್ಲೆಂಟ್ ನೀಡುತ್ತೇನೆ ಎಂದು ಹೆದರಿಸಿ ಅತ್ಯಾಚಾರ ಎಸಗಿದರು9) ಅತ್ಯಾಚಾರದ ಬಳಿಕ ಈ ರೂಂನಲ್ಲಿ ಸೀಕ್ರೆಟ್ ಕ್ಯಾಮೆರಾಗಳನ್ನು ಇಟ್ಟಿದ್ದು, ಎಲ್ಲಾ ದೃಶ್ಯಗಳು ಸೆರೆಯಾಗಿವೆ, ಅವುಗಳನ್ನು ಎಡಿಟ್ ಮಾಡಿ ಹಂಚುತ್ತೇನೆ, ಹೇಳಿದಂತೆ ಕೇಳಬೇಕು ಎಂದು ಬಲವಂತಪಡಿಸಿ ಹನಿಟ್ರ್ಯಾಪ್ ಮಾಡಲು ಬಳಸಿಕೊಂಡರು10) ಜತೆಗೆ ಚಿತ್ರೀಕರಿಸಿದ ವಿಡಿಯೊಗಳನ್ನು ಟಿವಿಯಲ್ಲಿ ಹಾಕಿ ನನಗೆ ತೋರಿಸಿದ್ದಾರೆ11) ಇದೇ ವಿಡಿಯೋ ಇಟ್ಟುಕೊಂಡು 2020 ರಿಂದ 2022 ರ ಅವಧಿಯಲ್ಲಿ ನಿರಂತರ ಅತ್ಯಾಚಾರ ನಡೆಸಿದ್ದಾರೆ. ಇದೇ ವೇಳೆ ಹನಿಟ್ರ್ಯಾಪ್ಗೂ ಬಳಕೆ ಮಾಡಿಕೊಂಡಿದ್ದಾರೆ12) ಹೇಳಿದಂತೆ ಕೇಳಲಿಲ್ಲ ಎಂದರೆ ಗಂಡ ಮತ್ತು ಮಕ್ಕಳಿಗೆ ವಿಡಿಯೊ ತೋರಿಸುವುದಾಗಿ ಬೆದರಿಕೆ ಹಾಕಿದ್ದಾರೆ.13) ತನಗೆ ಪರಿಚಯ ಇರುವ ಮತ್ತೊಬ್ಬ ಮಹಿಳೆ ಜತೆ ಸೇರಿ ಆತ ಹೇಳಿದವರನ್ನು ಹನಿಟ್ರ್ಯಾಪ್ ಮಾಡಿಸಿದ್ದಾರೆ14) ಮರ್ಯಾದೆ ಹಾಗು ಪ್ರಾಣಕ್ಕೆ ಅಂಜಿ ಶಾಸಕ ಮುನಿರತ್ನ ಹೇಳಿದಂತೆ ಕೇಳಿದ್ದೇನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.15) ಮಹಿಳಾ ಕಾರ್ಪೊರೇಟರ್ ಅವರ ಪತಿಗೆ ಎಚ್ಐವಿ ಪೀಡಿತ ಮಹಿಳೆಯ ಮೂಲಕ ಹನಿಟ್ರ್ಯಾಪ್ ಮಾಡಿಸಿದ್ದರು. ಅವರ ಮಗನಿಗೂ ಹನಿಟ್ರ್ಯಾಪ್ ಮಾಡುವ ಪ್ರಯತ್ನ ಮಾಡಿದ್ದರು.16) ಮುನಿರತ್ನ ಅವರ ವಿರುದ���ಧವಾಗಿ ಧ್ವನಿಯೆತ್ತಿದ ಮಹಿಳೆಯೊಬ್ಬರ ತೇಜೋವಧೆಗಾಗಿ ಷಡ್ಯಂತ್ರ ರೂಪಿಸಿದ್ದರು. ಹಲವರನ್ನು ಗುಂಪುಗೂಡಿಸಿ ಪ್ರವಾಸ ಮಾಡುವಂತೆ ಪುಸಲಾಯಿಸಿದ್ದು, ನಾನಾ ರೀತಿಯ ದೃಶ್ಯಗಳನ್ನು ಚಿತ್ರೀಕರಿಸಿದ್ದಾರೆ.17) ಮಾಜಿ ಶಾಕಸಕರೊಬ್ಬರನ್ನು ಹನಿಟ್ರ್ಯಾಪ್ ಮಾಡಲು ಪ್ರಯತ್ನಿಸಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಅತ್ಯಾಚಾರ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ರಾಮನಗರ ಉಪವಿಭಾಗದ ಪೊಲೀಸರು ಸಂತ್ರಸ್ತ ಮಹಿಳೆಯನ್ನು ಕೃತ್ಯ ನಡೆದ ನಗರದಲ್ಲಿನ ಗೋಡನ್ಗೆ ಕರೆತಂದು ಸ್ಥಳ ಮಹಜರು ನಡೆಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ.
eesanje/url_46_15_3.txt ADDED
@@ -0,0 +1,6 @@
 
 
 
 
 
 
 
1
+ ಒಂದು ಆ್ಯಂಬುಲೆನ್ಸ್ ನೀಡಲಾಗದ ಆರೋಗ್ಯ ಇಲಾಖೆ ವಿರುದ್ಧ ಜೆಡಿಎಸ್ ಆಕ್ರೋಶ
2
+
3
+ ಬೆಂಗಳೂರು,ಸೆ.19– ಒಂದು ಆ್ಯಂಬುಲೆನ್ಸ್ ನೀಡಲು ಕೈಲಾಗದ ದುಸ್ಥಿತಿ ರಾಜ್ಯ ಆರೋಗ್ಯ ಇಲಾಖೆಗೆ ಬಂದಿದೆಯೇ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬದುಕಿದ್ಯಾ ಅಥವಾ ಸತ್ತಿದ್ಯಾ? ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಪ್ರಶ್ನಿಸಿದೆ.
4
+ ತಂದೆಯನ್ನು ಕಳೆದುಕೊಂಡು ನೋವಿನಲ್ಲಿದ್ದ ಆ ಮಕ್ಕಳಿಗೆ ಮೃತದೇಹ ಸಾಗಿಸಲು ಕನಿಷ್ಠ ಆ್ಯಂಬುಲೆನ್‌್ಸಒದಗಿಸದಿರುವುದು ಅಮಾನವೀಯ ಮತ್ತು ರಾಜ್ಯದ ಜನರು ತಲೆ ತಗ್ಗಿಸುವಂತದ್ದು ಎಂದು ಬೇಸರ ವ್ಯಕ್ತಪಡಿಸಿದೆ.
5
+ ಆ್ಯಂಬುಲೆನ್‌್ಸಸಿಗದೆ ತಂದೆಯ ಮೃತದೇಹವನ್ನು ಮಕ್ಕಳು ಬೈಕ್ನಲ್ಲಿ ಕೊಂಡೊಯ್ದ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆಯಲ್ಲಿ ನಡೆದಿದೆ ಎಂದು ಹೇಳಿದೆ.
6
+ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿರುವುದಕ್ಕೆ ಈ ಮನಕಲಕುವ ಘಟನೆಯೇ ಸಾಕ್ಷಿ. ಪಾವಗಡ ಕಾಂಗ್ರೆಸ್ ಶಾಸಕ ಹೆಚ್.ವಿ.ವೆಂಕಟೇಶ್ ಅವರು, ಕ್ಷೇತ್ರದ ಅಭಿವೃದ್ಧಿ ಕಡೆಗಣಿಸಿ, ದ್ವೇಷ ರಾಜಕಾರಣ ಮಾಡುತ್ತಿರುವುದಕ್ಕೆ ಜನರು ನರಳುವಂತಾಗಿದೆ ಎಂದು ಆರೋಪಿಸಿದೆ.
eesanje/url_46_15_4.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಮುನಿರತ್ನ ಪ್ರಕರಣದಲ್ಲಿ ದ್ವೇಷ ರಾಜಕಾರಣ ಮಾಡಿಲ್ಲ : ಗೃಹಸಚಿವ ಪರಮೇಶ್ವರ್
2
+ ' :
3
+ ಬೆಂಗಳೂರು,ಸೆ.19-ಜನಪ್ರತಿನಿಧಿಯಾಗಿ ಶಾಸಕ ಮುನಿರತ್ನ ಅವರು ಮಾಡಿರುವ ಕೃತ್ಯಗಳ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಅದರ ಅನುಸಾರ ಪ್ರಕರಣ ದಾಖಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ನನ್ನ ಬಳಿ ಹೆಚ್ಚಿನ ಮಾಹಿತಿ ಇಲ್ಲ. ಹಾಗಾಗಿ ವ್ಯಾಪಕ ವಿವರಣೆ ನೀಡುವುದಿಲ್ಲ ಎಂದರು.
4
+ ದೂರಿನಲ್ಲಿ ನಮೂದಿಸಿರುವಂತಹ ಕೃತ್ಯ ಮಾಡುವುದನ್ನು ಯಾರೂ ಒಪ್ಪಿಕೊಳ್ಳುವುದಿಲ್ಲ. ಅದರಲ್ಲೂ ಜನಪ್ರತಿನಿಧಿಗಳಾಗಿ ಕಾನೂನುಬಾಹಿರವಾಗಿ ಈ ರೀತಿ ಕೆಲಸಗಳನ್ನು ಮಾಡಿದ್ದಾರೆ ಎಂದರೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.ನಾವು ಯಾವುದೇ ದ್ವೇಷದ ರಾಜಕಾರಣ ಮಾಡಿಲ್ಲ. ನಾಗಮಂಗಲದ ಗಲಭೆ ವಿಚಾರವಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಹಾಗೂ ಮತ್ತಿತರರು ನೀಡಿರುವ ಹೇಳಿಕೆಗಳಿಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ನಾವು ಕಾನೂನುಬಾಹಿರವಾಗಿ ಯಾವುದನ್ನೂ ಮಾಡುವುದಿಲ್ಲ. ದ್ವೇಷ ರಾಜಕಾರಣ ನಮಗೆ ಅಗತ್ಯವೇ ಇಲ್ಲ ಎಂದರು.
5
+ ಒಂದು ದೇಶ, ಒಂದು ಚುನಾವಣೆ ವಿಚಾರವಾಗಿ ಇನ್ನಷ್ಟು ವಿಚಾರಣೆ ನಡೆಯಬೇಕು. ಕನಿಷ್ಠ 2/3 ರಾಜ್ಯಗಳ ಒಪ್ಪಿಗೆ ಬೇಕು. ಮಾಜಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರ ಉನ್ನತಾಧಿಕಾರ ಸಮಿತಿ ವರದಿ ನೀಡಿದೆ. ಮುಂದೆ ಯಾವ ರೀತಿ ಬೆಳವಣಿಗೆಯಾಗಲಿದೆ ಎಂದು ಕಾದುನೋಡಬೇಕಿದೆ.
6
+ ರಾಜ್ಯದ ಅಭಿಪ್ರಾಯ ಕೇಳಿದರೆ ಅದನ್ನು ವಿಧಾನಸಭೆಯಲ್ಲಿ ಚರ್ಚಿಸಬೇಕೇ, ಸಂಪುಟದಲ್ಲಿ ವಿಶ್ಲೇಷಣೆ ನಡೆಸಿ ಸರ್ಕಾರದ ಅಭಿಪ್ರಾಯ ಹೇಳಬಹುದೇ? ಎಂದೆಲ್ಲಾ ಕುರಿತು ಚರ್ಚಿಸಲಾಗುವುದು ಎಂದರು.
7
+ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಿಸುವ ವಿಚಾರವಾಗಿ ಹಲವು ರಾಜ್ಯಗಳಲ್ಲಿ ಬೇರೆ ಬೇರೆ ರೀತಿಯ ವ್ಯವಸ್ಥೆಗಳಿವೆ. ಗುಜರಾತ್ಸರ್ಕಾರ ರಾಜ್ಯಪಾಲರನ್ನು ಕೇವಲ ಸೆರೋನಿಯಲ್ ಎಂದು ಪರಿಗಣಿಸಿದೆ. ಉಳಿದಂತೆ ಆಡಳಿತಾತಕವಾಗಿ ರಾಜ್ಯಪಾಲರು ಯಾವುದೇ ನಿರ್ಧಾರ ತೆಗೆದುಕೊಳ್ಳಲು ಅವಕಾಶ ಇಲ್ಲ. ಈ ಹಿಂದೆ ತಾವು ಉನ್ನತ ಶಿಕ್ಷಣ ಸಚಿವರಾಗಿದ್ದಾಗ ಕುಲಪತಿ ನೇಮಕದ ಅಧಿಕಾರವನ್ನು ಮೊಟಕುಗೊಳಿಸಲಾಗಿತ್ತು.
8
+ ಕರ್ನಾಟಕ ಒಂದೇ ಈ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ. ಹಾಗಾಗಿ ಇದನ್ನು ರಾಜ್ಯಪಾಲರ ವಿರುದ್ಧದ ಸೇಡು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದರು.ಅಭಿಯೋಜನೆಗೆ ಪೂರ್ವಾನುಮತಿ ಸೇರಿದಂತೆ ಹಲವಾರು ಸಂದರ್ಭಗಳಲ್ಲಿ ರಾಜ್ಯಪಾಲರು ಸರ್ಕಾರಕ್ಕೆ ಸ್ಪಷ್ಟನೆಗಳನ್ನು ಕೇಳುತ್ತಾರೆ. ಕಾಲಕಾಲಕ್ಕೆ ಆಡಳಿತ ವ್ಯವಸ್ಥೆ ಕೂಡ ಇದಕ್ಕೆ ಮಾಹಿತಿಯನ್ನು ಒದಗಿಸಲಿದೆ. ಇದರಲ್ಲಿ ಯಾವುದೇ ವಿಶೇಷಗಳಿರುವುದಿಲ್ಲ ಎಂದು ಪ್ರಶ್ನೆಯೊಂದಕ್���ೆ ಉತ್ತರಿಸಿದರು.
9
+ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ರವರು ದೆಹಲಿಗೆ ಭೇಟಿ ನೀಡಿರುವ ವಿಚಾರ ನನಗೆ ಗೊತ್ತಿಲ್ಲ. ನಾನು ಅವರ ದೈನಂದಿನ ಪ್ರವಾಸ ಕಾರ್ಯಕ್ರಮಗಳನ್ನು ಗಮನಿಸುವುದಿಲ್ಲ. ಪಕ್ಷದ ಅಧ್ಯಕ್ಷರು ಎಂಬ ಕಾರಣಕ್ಕೆ ಹೈಕಮಾಂಡ್ ಹಲವು ಸಲಹೆ, ಸೂಚನೆಗಳನ್ನು ನೀಡುತ್ತಿರುತ್ತದೆ. ಈ ಹಿಂದೆ ತಾವು ಅಧ್ಯಕ್ಷರಾಗಿದ್ದಾಗಲೂ ಹಲವು ಬಾರಿ ದೆಹಲಿಗೆ ಹೋಗಿದ್ದೆವು ಎಂದು ಹೇಳಿದರು.
10
+ ಮಾದಕವಸ್ತುಗಳ ಹಾವಳಿಯನ್ನು ಮಟ್ಟ ಹಾಕಲು ಈ ಹಿಂದೆ 2013 ರಿಂದ 2018ರವರೆಗಿನ ಸರ್ಕಾರದಲ್ಲೂ ಹಲವು ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಕಳೆದ ಒಂದೂವರೆ ವರ್ಷದಿಂದೀಚೆಗೆ ಸಮರೋಪಾದಿಯಲ್ಲಿ ಕ್ರಮಗಳನ್ನು ಜರುಗಿಸಲಾಗಿದೆ. ನೂರಾರು ಕೋಟಿ ರೂ. ಮಾದಕವಸ್ತುಗಳನ್ನು ಜಪ್ತಿ ಮಾಡಿ ನಾಶಪಡಿಸಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ. ಸಾವಿರಕ್ಕೂ ಹೆಚ್ಚು ಜನರಿಗೆ ಶಿಕ್ಷೆ ಕೊಡಿಸಲಾಗಿದೆ ಎಂದರು.
11
+ ಇತ್ತೀಚೆಗೆ ಹಾಸ್ಟೆಲ್ಗಳಲ್ಲಿ, ಕಾಲೇಜುಗಳಲ್ಲಿ ಈ ಪಿಡುಗು ಹೆಚ್ಚುತ್ತಿದೆ ಎಂಬ ವರದಿ ಇದೆ. ಅದಕ್ಕಾಗಿ ಕಡಿವಾಣ ಹಾಕಲು ತಮ ನೇತೃತ್ವದಲ್ಲಿ ವಿಶೇಷ ಕಾರ್ಯಪಡೆ ರಚಿಸಲಾಗಿದೆ. ಹಲವು ಸಚಿವರು ಸದಸ್ಯರಾಗಿದ್ದು, ಮಾದಕವಸ್ತುಗಳ ನಿಯಂತ್ರಣಕ್ಕೆ ತೀವ್ರ ನಿಗಾ ವಹಿಸಲಾಗಿದೆ ಎಂದು ಹೇಳಿದರು.
eesanje/url_46_15_5.txt ADDED
@@ -0,0 +1,8 @@
 
 
 
 
 
 
 
 
 
1
+ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿಧಿವಶ
2
+
3
+ ಬೆಂಗಳೂರು, ಸೆ.19-ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಅವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.ಕೆಲವು ದಿನಗಳ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್‌ ಆಗಿ ಮನೆಗೆ ಬಂದಿದ್ದ ಅವರು ವಿಶ್ರಾಂತಿ ಪಡೆಯುತ್ತಿದ್ದರು.
4
+ ಇಂದು ಬೆಳಿಗ್ಗೆ 10 ಗಂಟೆಯ ಸಂದರ್ಭದಲ್ಲಿ ಕೆಂಪಣ್ಣ ಅವರಿಗೆ ಎದೆನೋವು ಕಾಣಿಸಿಕೊಂಡು ಏಕಾಏಕಿ ಹೊಸಕೋಟೆ ಸಮೀಪದ ಜ್ಯೋತಿಪುರದಲ್ಲಿರುವ ಅವರ ಮನೆಯಲ್ಲಿ ಕುಸಿದು ಬಿದ್ದಿದ್ದಾರೆ. ಕುಟುಂಬ ಸದಸ್ಯರು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮುಂದಾದರು. ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.
5
+ ಈ ಹಿಂದೆ ಬಿಜೆಪಿ ಸರ್ಕಾರದ ಸಂದರ್ಭದಲ್ಲಿ ಶೇ.40 ಕಮಿಷನ್‌ ಆರೋಪ ಹೊರಿಸಿ ಅದು ಪ್ರಧಾನಿ ಕಚೇರಿವರೆಗೂ ತಲುಪಿತ್ತು. ಪ್ರತಿಪಕ್ಷವಾಗಿದ್ದ ಕಾಂಗ್ರೆಸ್‌‍ ಇದನ್ನೇ ಅಸ್ತ್ರವಾಗಿ ಬಳಸಿಕೊಂಡಿತ್ತು. ಸರ್ಕಾರ ಬದಲಾದರೂ ಒಂದೂವರೆ ವರ್ಷ ಕಳೆದರೂ ಗುತ್ತಿಗೆದಾರರ ಸಮಸ್ಯೆ ಬಗೆಹರಿದಿಲ್ಲ. ಮತ್ತೆ ಕಮಿಷನ್‌ ಹಾವಳಿ ಇನ್ನೂ ಹೆಚ್ಚಾಗಿದೆಯೆಂದು ಟೀಕಾ ಪ್ರಹಾರ ನಡೆಸಿದ್ದರು.
6
+ ಸಿಎಂ ಸಿದ್ದರಾಮಯ್ಯ ಅವರು ಕೂಡ ಅವರನ್ನು ಕರೆಸಿಕೊಂಡು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಆದರೂ ಗುತ್ತಿಗೆದಾರರು ಇವರ ಬಳಿ ಬಂದು ನೋವು ತೋಡಿಕೊಳ್ಳುತ್ತಿದ್ದರು.ಕಳೆದ ಒಂದು ತಿಂಗಳ ಹಿಂದೆ ಸುದ್ದಿಗೋಷ್ಠಿ ನಡೆಸಿ ಗುತ್ತಿಗೆದಾರರ ಸಮಸ್ಯೆ ಬಗೆಹರಿಯದಿದ್ದಲ್ಲಿ ಕಾಮಗಾರಿಯನ್ನು ನಿಲ್ಲಿಸುವುದಾಗಿ ಸರ್ಕಾರಕ್ಕೆ ಚಾಟಿ ಬೀಸಿದ್ದರು.
7
+ ಕಳೆದ 50 ವರ್ಷಗಳಿಂದ ಅವರು ಗುತ್ತಿಗೆದಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಯಾವುದೇ ಅಂಜಿಕೆ ಅಳುಕಿಲ್ಲದೆ ನೇರವಾಗಿ ಮಾತನಾಡುವ ಗುಣ ಹೊಂದಿದ್ದ ಅವರು ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಮೇಲೆ ಹೊಸ ವರ್ಚಸ್ಸು ನೀಡಿದ್ದರು.ಮೂವರು ಪುತ್ರಿಯರು ಒಬ್ಬ ಪುತ್ರ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಬಿಬಿಎಂಪಿ ಗುತ್ತಿಗೆದಾರರ ಸಂಘ, ನೌಕರರ ಸಂಘ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಸಂತಾಪ ವ್ಯಕ್ತಪಡಿಸಿದೆ.
8
+ ಸಿಎಂ ಸಿದ್ದರಾಮಯ್ಯ ಅವರು ಕೂಡ ಕೆಂಪಣ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿ ಆಸೆ ಆಮಿಷಗಳಿಗೆ ಒಳಗಾಗದೆ ನೇರವಾಗಿದ್ದ ಕೆಂಪಣ್ಣ ಅವರ ಅಗಲಿಕೆ ನನಗೆ ನೋವು ತಂದಿದೆ ಅವರ ಆತಕ್ಕೆ ಶಾಂತಿ ಸಿಗಲಿಯೆಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.ಇವರ ಅಂತ್ಯಕ್ರಿಯೆ ಮಧ್ಯಾಹ್ನ 3 ಗಂಟೆಗೆ ನಡೆಯಲಿವೆಯೆಂದು ಕುಟುಂಬ ಮೂಲಗಳು ತಿಳಿಸಿವೆ.
eesanje/url_46_15_6.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ನಾಗಮಂಗಲದಲ್ಲಿ ‘ಪಾಕಿಸ್ತಾನ್‌ ಜಿಂದಾಬಾದ್‌’ ಘೋಷಣೆ ಕೂಗಿಲ್ಲ : ಗೃಹಸಚಿವ ಪರಮೇಶ್ವರ್‌
2
+ ' '
3
+ ಬೆಂಗಳೂರು,ಸೆ.18-ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂಬ ಘೋಷಣೆ ಕೂಗಿಲ್ಲ, ಈ ಬಗ್ಗೆ ನಮ ಗಮನಕ್ಕೆ ಯಾವ ವಿಚಾರಗಳೂ ಬಂದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ಅವರಿಗೆ ತಪ್ಪು ಮಾಹಿತಿ ಇದ್ದಂತಿದೆ ಎಂದು ಹೇಳಿದರು.
4
+ ನಾಗಮಂಗಲ ಗಲಾಟೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಈ ಬಗ್ಗೆ ಕೆಲವರು ತಪ್ಪು ಹೇಳಿಕೆ ನೀಡಿದ್ದಾರೆ ಎಂದು ನಮ ಅಧಿಕಾರಿಗಳು ಹೇಳುತ್ತಿದ್ದಾರೆ. ಇದನ್ನು ಪುನರ್‌ ಪರಿಶೀಲಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.ಶಾಸಕ ಮುನಿರತ್ನನನ್ನು ಏಕಾಏಕಿ ಬಂಧಿಸಿಲ್ಲ. ಆತನ ವಿರುದ್ಧ ದೂರು ಕೊಟ್ಟಿದ್ದರು. ಇದಕ್ಕೆ ಪೂರಕವಾದ ವಿಡಿಯೋ ನೀಡಿದ್ದರು. ಅದನ್ನು ಆಧರಿಸಿ ಬಂಧಿಸಲಾಗಿದೆ. ಈಗಾಗಲೇ ಧ್ವನಿ ಮಾದರಿಯನ್ನು ಸಂಗ್ರಹಿಸಿ ಎಫ್‌ಎಸ್‌‍ಎಲ್‌ ಪರೀಕ್ಷೆಗೆ ಕಳುಹಿಸಿದ್ದಾರೆ. ವರದಿ ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.
5
+ ಶಾಸಕ ಮುನಿರತ್ನ ಅವರನ್ನು ಏಕಾಏಕಿ ಬಂದಿಸಿಲ್ಲ. ದೂರು ದಾಖಲಾಗಿದೆ. ಬಳಿಕ ಬಂಧಿಸಿದ್ದು, ಧ್ವನಿ ಮಾದರಿಯನ್ನು ಸಂಗ್ರಹಿಸಿ ತನಿಖೆ ನಡೆಸಲಾಗುತ್ತಿದೆ. ಧ್ವನಿ ಮಾದರಿ ಹೊಂದಾಣಿಕೆಯಾದರೆ ಅಗತ್ಯ ಕ್ರಮ ಮುಂದುವರೆಯಲಿದೆ ಎಂದರು.
6
+ ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್‌್ಸ ದಂಧೆಯನ್ನು ತೀವ್ರ ಹತೋಟಿಕೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ. ಡ್ರಗ್‌್ಸ ದಂಧೆಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಈಗ ಮೆಡಿಕಲ್‌ ಶಾಪ್‌ಗಳಲ್ಲಿ ಸಿಗುತ್ತಿರುವ ನೋವು ನಿವಾರಕ ಮಾತ್ರೆಗಳಿಂದ ನಮಗೆ ಆತಂಕವಿದೆ ಎಂದರು.
7
+ ನೋವು ನಿವಾರಕ ಮಾತ್ರೆಗಳನ್ನು ಬೇರೆಬೇರೆ ಕಂಪನಿಗಳು ತಯಾರಿಸುತ್ತಿವೆ. ಅದು ಈಗ ಸುಲಭವಾಗಿ ಕೈಗೆ ಸಿಗುತ್ತಿವೆ. ಯಾವ ರೀತಿ ನಿಯಂತ್ರಿಸಬೇಕು ಎಂಬುದರ ಕುರಿತು ಚರ್ಚಿಸಲು ಮುಖ್ಯಮಂತ್ರಿಯವರು ಸಭೆ ಕರೆದಿದ್ದಾರೆ ಎಂದು ತಿಳಿಸಿದರು.
8
+ ನೋವು ನಿವಾರಕ ಮಾತ್ರೆಗಳನ್ನು ಮೆಡಿಸಿನ್‌ ಎಂದು ಮಾರಾಟ ಮಾಡಲಾಗುತ್ತಿದೆ. ವೈದ್ಯರು ಶಿಫಾರಸ್ಸು ಮಾಡಿರುವುನ್ನು ಸುಲಭವಾಗಿ ಪಡೆಯಲಾಗುತ್ತಿದೆ. ಇದಕ್ಕೆ ಕಾನೂನು ಬೇರೆ ಇದೆ. ಈ ಕುರಿತು ಡ್ರಗ್‌ ಕಂಟೋಲರ್ಸ್‌ಗಳಿಗೆ ಯಾವ ರೀತಿ ಹೇಳಬೇಕಾಗುತ್ತದೆ ಎಂಬುದರ ಕುರಿತು ಚರ್ಚಿಸಲಾಗುವುದು ಎಂದರು.
9
+ ರಾಜ್ಯದಲ್ಲಿ ಗಾಂಜಾ ಸೇರಿದಂತೆ ಇನ್ನಿತರ ಮಾದಕ ದ್ರವ್ಯಗಳನ್ನು ನಿಯಂತ್ರಿಸಿದ್ದೇವೆ. ಪ್ರಕರಣಗಳ ಅಂಕಿ-ಅಂಶಗಳನ್ನು ಗಮನಿಸಿದಾಗ ಬಹಳಷ್ಟು ಕಡಿಮೆಯಾಗಿದೆ. ಎಲ್ಲ ರೀತಿಯ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ. ಸುಮಾರು ಪ್ರಕರಣಗಳಲ್ಲಿ ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದರು.
10
+ ಅಕ್ಟೋಬರ್‌ 3ಕ್ಕೆ ಪಿಎಸ್‌‍ಐ ಪರೀಕ್ಷೆ :ಪಿಎಸ್‌‍ಐ ಪರೀಕ್ಷೆಯನ್ನು ಸೆ.22ರಿಂದ ಸೆ.28ಕ್ಕೆ ಮುಂದೂಡಲಾಗಿತ್ತು. ಸೆ.28ರಂದು ಸಹ ಯುಪಿಎಸ್ಸಿ ಇಂಗ್ಲೀಷ್‌ ಪರೀಕ್ಷೆ ಇದೆ ಎಂಬ ಮಾಹಿತಿ ಗೊತ್ತಾದ ಕೂಡಲೇ, ಆ ದಿನವನ್ನು ಅ.3ಕ್ಕೆ ಮುಂದೂಡಲಾಗಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅ.3ರಂದು ಪರೀಕ್ಷೆ ನಿಗದಿಪಡಿಸಿ ಅಧಿಕೃತವಾಗಿ ಪ್ರಕಟಣೆ ಮಾಡಿದೆ ಎಂದರು.
11
+ ಮೂರು ಜಿಲ್ಲೆಗಳಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಾರಿಸಿರುವುದು ಕಂಡು ಬಂದಿದೆ. ಈ ಪ್ರಕರಣಗಳಲ್ಲಿ ಎಲ್ಲರನ್ನು ಬಂಧಿಸಲಾಗಿದೆ. ಕೇಂದ್ರ ಸರ್ಕಾರ ಪ್ಯಾಲೆಸ್ತೀನ್‌ಗೆ ಬೆಂಬಲಿಸುತ್ತೇವೆ ಎಂದು ಹೇಳಿಕೆ ಕೊಟ್ಟಿದೆ. ಹೀಗಾಗಿ ಇದರಲ್ಲಿ ನಮ ತಪ್ಪೇನಿದೆ ಎಂದು ವಾದಿಸಿದ್ದಾರೆ. ಆದಾಗ್ಯೂ ಸಹ ಅವರನ್ನು ಬಂಧಿಸಿದ್ದೇವೆ. ಯಾರು ಈ ಸಂದರ್ಭದಲ್ಲಿ ನಿಮಗೆ ಪ್ರಚೋದನೆ ಮಾಡಿ, ಬಾವುಟ ಹಾರಿಸಲು ಹೇಳಿದರು ಎಂಬ ಕುರಿತು ಬಂಧಿತರ ವಿಚಾರಣೆ ನಡೆಯುತ್ತಿದೆ. 17ರಿಂದ 21 ವರ್ಷ ವಯಸ್ಸಿನ ಹುಡುಗರು ಇದನ್ನು ಮಾಡಿದ್ದಾರೆ ಎಂದು ಹೇಳಿದರು.
12
+ ನಾಗಮಂಗಲ ಪ್ರಕರಣದಲ್ಲಿ ತನಿಖೆಗೂ ಮುನ್ನ ಕ್ಲೀನ್‌ಚಿಟ್‌ ನೀಡಲಾಗಿದೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿದ ಅವರು, ಇದನ್ನು ದೊಡ್ಡ ಸಮಸ್ಯೆ ಮಾಡುವ ನಿಟ್ಟಿನಲ್ಲಿ ಬಿಜೆಪಿಯವರು ಹೇಳಿಕೆ ನೀಡುತ್ತಿದ್ದಾರೆ. ನಾವು ಕಾನೂನು ಪ್ರಕಾರ ಏನೆಲ್ಲ ಕ್ರಮ ತೆಗೆದುಕೊಳ್ಳಬೇಕು, ಅದೆಲ್ಲವನ್ನು ಕೂಡ ಮುಲಾಜಿಲ್ಲದೆ ಮಾಡಿದ್ದೇವೆ.
13
+ ಮುಂದಿನ ತನಿಖೆಯಲ್ಲಿ ಏನೆಲ್ಲ ವಿಚಾರಗಳು ಹೊರ ಬರುತ್ತವೆ, ಅದರ ಆಧಾರದ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ರೀತಿಯ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ನೂರು ಸಲ ಹೇಳುತ್ತೇನೆ. ದಿನಕ್ಕೆ ಒಬ್ಬೊಬ್ಬರಂತೆ ಬಿಜೆಪಿ ಮುಖಂಡರು ನಾಗಮಂಗಲ ವಿಚಾರದಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಇದರಲ್ಲಿ ಬಿಜೆಪಿಯವರು ತಮದೇ ಆದ ಒಂದು ಡಿಸೈನ್‌ ಮಾಡಿಕೊಂಡಿದ್ದಾರೆ ಎಂದು ಹೇಳಿದರು.
14
+ ಕಳೆದ ವರ್ಷ ಗಣೇಶ ಆಚರಣೆ ವೇಳೆ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಕೋಮು ಸಂಘರ್ಷಗಳಂತಹ ಘಟನೆಗಳು ಸಂಭವಿಸಿಲ್ಲ. ಈ ವರ್ಷವೂ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದೇವೆ. ಅಹಿತಕರ ಘಟನೆ ಆಗಲು ಬಿಡುವುದಿಲ್ಲ ಎಂದು ಈ ಮೊದಲೇ ಹೇಳಿದ್ದೇವೆ. ಬಿಜೆಪಿಯವರು ಎಲ್ಲವನ್ನು ತಿರುಚುತ್ತಿದ್ದಾರೆ. ಇದೆಲ್ಲವನ್ನು ರಾಜ್ಯದ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.
eesanje/url_46_15_7.txt ADDED
@@ -0,0 +1,7 @@
 
 
 
 
 
 
 
 
1
+ ನಾಗಮಂಗಲದಲ್ಲಿ ಧರ್ಮಾಂಧರ ಅಟ್ಟಹಾಸಕ್ಕೆ 2.66 ಕೋಟಿ ರೂ. ನಷ್ಟ, ಬೀದಿಗೆ ಬಂದ ವ್ಯಾಪಾರಿಗಳ ಬದುಕು
2
+ .2.66
3
+ ಮಂಡ್ಯ,ಸೆ.18-ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನಾ ವೇಳೆ ನಡೆದ ಗಲಭೆಯಲ್ಲಿ ಸುಟ್ಟು ಕರಕಲಾದ ಅಂಗಡಿಗಳ ಮಾಲೀಕರು ಹಾಗೂ ಕಾರ್ಮಿಕರ ಬದುಕು ಬೀದಿಗೆ ಬಂದಿದ್ದು, ಒಟ್ಟು 2.66 ಕೋಟಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.ಮಂಡ್ಯ ಜಿಲ್ಲಾಡಳಿತ ಗಲಭೆಯಿಂದ ನಷ್ಟವಾಗಿರುವ ಆಸ್ತಿ ಮೌಲ್ಯವನ್ನು ಅಂದಾಜಿಸುತ್ತಿದ್ದು, ಸದ್ಯ ಇವರಿಗೆ ಸರ್ಕಾರ ಪರಿಹಾರ ನೀಡಲು ಮುಂದಾಗಿದೆ.
4
+ ನಾಗಮಂಗಲದ ಗಲಭೆಯಲ್ಲಿ ಕಿಡಿಗೇಡಿಗಳು ಹಚ್ಚಿದ ಬೆಂಕಿಯಿಂದ ಇಡೀ ಪಟ್ಟಣದಲ್ಲಿ ಅಶಾಂತಿ ಉಂಟಾದರೆ, ಇದರಿಂದ ಹಲವು ಜನರ ಬದುಕು ಬೀದಿಗೆ ಬಂದಿದೆ. ತಮ ಬದುಕು ರೂಪಿಸಿಕೊಳ್ಳಲು ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿಕೆ ಮಾಡಿ ಇಲ್ಲಿನ ಜನರು ತಮಗಿಷ್ಟದ ವ್ಯಾಪಾರ ಮಾಡಿ ಬದುಕು ಕಟ್ಟಿಕೊಂಡಿದ್ದರು. ಇದೀಗ ಕೋಮು ದಳ್ಳುರಿಗೆ ಗಲಭೆಕೋರರು ಹಚ್ಚಿದ ಬೆಂಕಿಯಿಂದ ಇಲ್ಲಿನ ಹಲವು ವ್ಯಾಪಾರಿಗಳ ಕನಸು ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ.
5
+ ಇದರಿಂದ ಈ ವ್ಯಾಪಾರವನ್ನೇ ನಂಬಿಕೊಂಡಿದ್ದ ಜನರ ಬದುಕು ಬೀದಿಗೆ ಬಂದಿದೆ. ಸದ್ಯ ಈ ಜನರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ವೈಯಕ್ತಿಕವಾಗಿ ಒಂದಿಷ್ಟು ಪರಿಹಾರ ನೀಡಿದ್ದಾರೆ. ಈ ಬೆನ್ನಲ್ಲೇ ರಾಜ್ಯಸರ್ಕಾರವೂ ಹಾನಿಗೊಳಗಾದ ಮಾಲೀಕರು ಹಾಗೂ ವ್ಯಾಪಾರಸ್ಥರಿಗೆ ಪರಿಹಾರ ನೀಡಲು ಮುಂದಾಗಿದೆ. ಈ ಸಂಬಂಧ ಮಂಡ್ಯ ಜಿಲ್ಲಾಡಳಿತ ಸಮೀಕ್ಷೆ ಮಾಡಿ ಹಾನಿಯಾದ ಕಟ್ಟಡ ಹಾಗೂ ವಸ್ತುಗಳಿಗೆ ಮೌಲ್ಯವನ್ನು ಅಂದಾಜು ಮಾಡಿ ವರದಿಯೊಂದನ್ನು ಸಿದ್ಧಪಡಿಸಿದೆ.
6
+ ಈ ಸಂಬಂಧ ನಾಗಮಂಗಲ ತಹಸೀಲ್ದಾರ್‌ ನೇತೃತ್ವದಲ್ಲಿ ಪಿಡಬ್ಲ್ಯೂಡಿ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳನ್ನು ಒಳಗೊಂಡಂತೆ ಒಂದು ತಂಡ ರಚನೆ ಮಾಡಲಾಗಿತ್ತು. ಈ ತಂಡ ಎಸ್‌‍ಆರ್‌ ರೇಟ್‌ ಪ್ರಕಾರ ಗಲಭೆಯಿಂದ ಹಾನಿಗೆ ಒಳಗಾಗಿರುವ ಕಟ್ಟರ ಪ್ರಮಾಣ ಮೌಲ್ಯ 1.47 ಕೋಟಿ ರೂ. ಹಾಗೂ ಬೆಂಕಿಯ ಕೆನ್ನಾಲೆಗೆ ಸುಟ್ಟು ಕರಕಲಾದ ಸರಕಿನ ಮೌಲ್ಯ 1.18 ಕೋಟಿ ರೂ. ಎಂದು ಅಂದಾಜು ಮಾಡಲಾಗಿದೆ. ಈ ವರದಿಯನ್ನು ಸರ್ಕಾರಕ್ಕೆ ನೀಡಿ ಸೂಕ್ತ ಪರಿಹಾರ ನೀಡುವಂತೆ ಮಂಡ್ಯ ಡಿಸಿ ಡಾ.ಕುಮಾರ್‌ ಮನವಿ ಮಾಡಿದ್ದಾರೆ.
7
+ ನಾಗಮಂಗಲ ಗಲಭೆಯಿಂದ ಅಪಾರ ಪ್ರಮಾಣ ಕಟ್ಟಡ ಹಾಗೂ ಸರಕುಗಳು ಹಾನಿಯಾಗಿವೆ. ಸರ್ಕಾರ ಈ ವರದಿಯನ್ನು ಆಧರಿಸಿ ಎಷ್ಟು ಪರಿಹಾರವನ್ನು ಘೋಷಣೆ ಮಾಡಲಿದೆಯೋ ಎನ್ನುವುದನ್ನು ಕಾದು ನೋಡಬೇಕಿದೆ.
eesanje/url_46_15_8.txt ADDED
@@ -0,0 +1,9 @@
 
 
 
 
 
 
 
 
 
 
1
+ ದಸರಾಗೆ ಭರದ ಸಿದ್ಧತೆ, ಫಿರಂಗಿಗಳಿಗೆ ಡ್ರೈ ರನ್‌ ಆರಂಭ
2
+
3
+ ಮೈಸೂರು,ಸೆ.18-ನಾಡಹಬ್ಬ ದಸರಾ ಮಹೋತ್ಸವದ ಜಂಬೂ ಸವಾರಿಯ ದಿನ ಅಂಬಾರಿಗೆ ಪುಷ್ಪಾರ್ಚನೆ ಸಲ್ಲಿಸಿ, ರಾಷ್ಟ್ರಗೀತೆ ಮೊಳಗುವಾಗ ಹಾರಿಸುವ 21 ಕುಶಾಲ ತೋಪುಗಳ ತಾಲೀಮಿಗೆ ಬಳಸುವ ಫಿರಂಗಿಗಳ ಡ್ರೈ ರನ್‌ ಆರಂಭಗೊಂಡಿದೆ.ಅರಮನೆ ಆವರಣದ ಆನೆ ಬಾಗಿಲಿನಲ್ಲಿ ಒಂದು ತಿಂಗಳ ಕಾಲ ಈ ತಾಲೀಮು ನಡೆಯಲಿದೆ.
4
+ ದಸರಾ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯಂದು ಗಣ್ಯರು ಅಂಬಾರಿಗೆ ಪುಷ್ಪಾರ್ಚನೆ ಮಾಡುವಾಗ ರಾಷ್ಟ್ರಗೀತೆ ಹಾಡಲಾಗುತ್ತದೆ. ಈ ಸಂದರ್ಭದಲ್ಲಿ ಅರಮನೆಯ ಪಕ್ಕದ ಮಾರಮ ದೇವಾಲಯದ ಪಾರ್ಕಿಂಗ್‌ ಪ್ರದೇಶದಲ್ಲಿ ರಾಜಪರಂಪರೆಯಂತೆ ಸಾಂಪ್ರದಾಯಿಕ 21 ಸುತ್ತು ಕುಶಾಲತೋಪು ಹಾರಿಸಲಾಗುತ್ತದೆ. ಇದಕ್ಕಾಗಿ ಪ್ರತಿದಿನ ನುರಿತ ಸಿಬ್ಬಂದಿ ತಾಲೀಮು ನಡೆಸುತ್ತಾರೆ.
5
+ ಸಿಎಆರ್‌ ಪೊಲೀಸ್‌‍ ತಂಡದ ಎಸಿಪಿ ನೇತೃತ್ವದಲ್ಲಿ, ಪ್ರತಿದಿನ ಎಎಸ್‌‍ಐ ಸಿದ್ದರಾಜು ಮುಂದಾಳತ್ವದಲ್ಲಿ ಅರಮನೆ ಆನೆ ಬಾಗಿಲಿನಲ್ಲಿರುವ 7 ಫಿರಂಗಿಗಳ ಮೂಲಕ ಕುಶಾಲತೋಪು ಸಿಡಿಸುವ ತಾಲೀಮು ನಡೆಯಲಿದೆ. ಮೂರು ಬಾರಿ ಸಿಡಿಮದ್ದು ಸಿಡಿಸುವ ತಾಲೀಮು ಇದಾಗಿದೆ. ಒಂದೊಂದು ಫಿರಂಗಿಗೂ ಐವರು ಸಿಎಆರ್‌ ಪೊಲೀಸರು ಕಾರ್ಯ ನಿರ್ವಹಿಸಲಿದ್ದಾರೆ.
6
+ ಸೆ.25ರ ಬಳಿಕ ಮೂರು ಬಾರಿ ಗಜಪಡೆ, ಅಶ್ವಪಡೆ ಮುಂದೆ ಸಿಡಿಮದ್ದು ಸಿಡಿಸಿ ತಾಲೀಮು ನಡೆಸಲು ನಿರ್ಧರಿಸಲಾಗಿದೆ.ಮೊದಲ ತಾಲೀಮಿನಲ್ಲಿ ಒಂದು ಸುತ್ತಿನ ಸಿಡಿಮದ್ದು ಸಿಡಿತದ ಬಳಿಕ ಕೆಲ ನಿಮಿಷ ವಿಶ್ರಾಂತಿ ನೀಡಿ, ಎರಡನೇ ಸುತ್ತಿನ ಸಿಡಿಮದ್ದು ತಾಲೀಮು ನಡೆಸಲಾಗುತ್ತದೆ. ಆನೆ, ಕುದುರೆಗಳ ವರ್ತನೆಯನ್ನು ಪರಿಶೀಲಿಸಿ ಮೂರನೇ ಸುತ್ತಿನ ತಾಲೀಮು ನಡೆಯಲಿದೆ.
7
+ ಎರಡನೇ ತಾಲೀಮಿನಲ್ಲಿ ಪ್ರತಿ ಸುತ್ತು ಕುಶಾಲತೋಪು ಸಿಡಿಸುವ ಸಮಯಾವಕಾಶದಲ್ಲಿ ಕಡಿತ ಮಾಡಲಾಗುತ್ತದೆ. ಮೂರನೇ ತಾಲೀಮಿನಲ್ಲಿ ಒಂದೇ ನಿಮಿಷದೊಳಗೆ ಮೂರು ಸುತ್ತಿನ ಸಿಡಿಮದ್ದು ಸಿಡಿಸಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
8
+ ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು :ನಾಡಹಬ್ಬ ದಸರಾದಲ್ಲಿ ವಿಶ್ವ ವಿಖ್ಯಾತ ಜಂಬೂಸವಾರಿ ಪ್ರಮುಖ ಆಕರ್ಷಣೆಯಾಗಿದ್ದು, ಅಂತಹ ಜಂಬೂಸವಾರಿಯಲ್ಲಿ ಅಂಬಾರಿ ಹೊರುವ ಆನೆಗಳಿಗೂ ಅಷ್ಟೇ ಪ್ರಾಮುಖ್ಯ.18 ಬಾರಿ ಅಂಬಾರಿ ಹೊತ್ತ ಆನೆ ದೋಣ ಹಾಗೂ 3 ಬಾರಿ ಅಂಬಾರಿ ಹೊತ್ತ ರಾಜೇಂದ್ರನನ್ನು ಈ ಸಮಯದಲ್ಲಿ ಸರಿಸಲೇಬೇಕಾಗಿದೆ.
9
+ ಅಂಬಾರಿಯನ್ನು ಹೊತ್ತು ಯಶಸ್ವಿ ದಸರಾಗೆ ಕೈಜೋಡಿಸಿದ್ದ ಆನೆ ದ್ರೋಣ ಹಾಗೂ ರಾಜೇಂದ್ರ ಇಂದು ನಮೊಂದಿಗಿಲ್ಲದೇ ಇದ್ದರೂ ಅವುಗಳ ನೆನಪು ಮಾತ್ರ ಅಚ್ಚಳಿಯದೆ ಉಳಿದಿದೆ. ದ್ರೋಣ ಹಾಗೂ ರಾಜೇಂದ್ರನ ಸಮಾಧಿಗಳು ಹೆಚ್‌.ಡಿ ಕೋಟೆ ತಾಲೂಕು ಬಳ್ಳೆಹಾಡಿ ಗ್ರಾಮದಲ್ಲಿದ್ದು, ದಸರಾ ಸಮಯದಲ್ಲಿ ಸಮಾಧಿಗಳಿಗೆ ಪೂಜೆ ಸಲ್ಲಿಸಲಾಗುತ್ತದೆ.ರಾಜೇಂದ್ರ ಆನೆಯನ್ನು ಗಂಧದಗುಡಿ ಸಿನಿಮಾದಲ್ಲಿ ಬಳಸಿಕೊಂಡಿದ್ದನ್ನು ಇಲ್��ಿ ಸರಿಸಿಕೊಳ್ಳಬಹುದಾಗಿದೆ.
eesanje/url_46_15_9.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ : ಉಪಕುಲಪತಿಗಳ ನೇಮಕಾತಿ ಸರ್ಕಾರದ ಸುಪರ್ದಿಗೆ
2
+
3
+ ಬೆಂಗಳೂರು,ಸೆ.18-ಇನ್ನು ಮುಂದೆ ರಾಜ್ಯದ ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳ ನೇಮಕಾತಿಯನ್ನು ರಾಜ್ಯ ಸರ್ಕಾರವೇ ನೇರವಾಗಿ ನೇಮಕಾತಿ ಮಾಡಲು ಮುಂದಾಗಿದ್ದು, ಈವರೆಗೆ ರಾಜ್ಯಪಾಲರಿಗಿದ್ದ ಅಧಿಕಾರಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ.
4
+ ರಾಜ್ಯದ ವಿಶ್ವವಿದ್ಯಾನಿಲಯಗಳ ಉಪಕುಲಾಧಿಪತಿಗಳೂ ಆಗಿರುವ ರಾಜ್ಯಪಾಲರು ಉಪಕುಲಪತಿ ನೇಮಕಾತಿ ಮಾಡುವ ಅಧಿಕಾರವನ್ನು ಹೊಂದಿದ್ದರು. ಅದರೆ ಸರ್ಕಾರ ಶಿಫಾರಸ್ಸು ಮಾಡುವ ಹೆಸರುಗಳಿಗೆ ಅಂಕಿತ ಹಾಕುವುದು ಅವರ ಕರ್ತವ್ಯವಾಗಿತ್ತು. ಇದೀಗ ರಾಜ್ಯ ಸರ್ಕಾರ ಉಪಕುಲಪತಿಗಳ ನೇಮಕಾತಿ ವಿಶ್ವವಿದ್ಯಾಲಯದಲ್ಲಿ ರಾಜ್ಯಪಾಲರಿಗಿದ್ದ ಅಧಿಕಾರವನ್ನು ಹಿಂಪಡೆದು ಸಚಿವ ಸಂಪುಟದ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿಗಳು ನೇಮಕಾತಿ ಮಾಡುವ ವಿಶೇಷ ಅಧಿಕಾರವನ್ನು ಪಡೆಯಲಿದ್ದಾರೆ.
5
+ ಮಂಗಳವಾರ ಕಲಬುರಗಿಯಲ್ಲಿ ನಡೆ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ 2024ಕ್ಕೆ ಅನುಮೋದನೆ ನೀಡಿದೆ. ರಾಜ್ಯ ಸರ್ಕಾರವೇ ಕುಲಪತಿ ನೇಮಕಾತಿ ಮಾಡುವ ಅಧಿಕಾರವನ್ನು ಹೊಂದಿದೆ.
6
+ ಮಸೂದೆ ಮಂಡನೆ: ಮೂಲಗಳ ಪ್ರಕಾರ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಮಂಡಲದ ಉಭಯ ಸದನಗಳಾದ ವಿಧಾನಸಭೆ ಮತ್ತು ವಿಧಾನಪರಿಷತ್ನಲ್ಲಿ ರಾಜ್ಯಪಾಲರ ಅಧಿಕಾರವನ್ನು ಹಿಂಪಡೆಯುವ ಮಸೂದೆಯನ್ನು ಮಂಡಿಸಲು ಸರ್ಕಾರ ಮುಂದಾಗಿದೆ.
7
+ ಈ ಮಸೂದೆಯನ್ನು ಎರಡು ಸದನಗಳಲ್ಲಿ ಮಂಡಿಸಿ ರಾಜ್ಯ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಇನ್ನು ಮುಂದೆ ಉಪಕುಲಪತಿಗಳನ್ನು ಸರ್ಕಾರವೇ ನೇರವಾಗಿ ನೇಮಕಾತಿ ಮಾಡಲಿದೆ. ಹೆಚ್ಚಿನ ಸಂದರ್ಭಗಳಲ್ಲಿ ರಾಜ್ಯಪಾಲರು ಆ ರಾಜ್ಯದ ವಿವಿಗಳ ಪದನಿಮಿತ್ತ ಕುಲಪತಿಗಳಾಗಿರುತ್ತಾರೆ. ಸಚಿವ ಸಂಪುಟದ ಶಿಫಾರಸ್ಸು, ಮಂತ್ರಿ ಪರಿಷತ್ನ ಸಹಾಯ ಮತ್ತು ಸಲಹೆಯೊಂದಿಗೆ ಕಾರ್ಯ ನಿರ್ವಹಿಸಬೇಕು.
8
+ ವಿಶ್ವವಿದ್ಯಾನಿಲಯದ ಆಡಳಿತದಲ್ಲಿ ನೇರವಾಗಿ ರಾಜ್ಯಪಾಲರು ಹಸ್ತಕ್ಷೇಪ ಮಾಡಲು ಅವಕಾಶವಿಲ್ಲ. ಉಪಕುಲಪತಿ, ಸಿಂಡಿಕೇಟ್ ಸದಸ್ಯರ ನೇಮಕಾತಿ ಸೇರಿದಂತೆ ಹಲವು ವಿಷಯಗಳಲ್ಲಿ ಸರ್ಕಾರದ ಶಿಫಾರಸ್ಸನ್ನು ಅಂಗೀಕರಿಸುವುದು ಇಲ್ಲವೇ ಕಾರಣ ಕೇಳಿ ವಾಪಸ್ ಕಳುಹಿಸುವ ಅಧಿಕಾರವನ್ನು ಹೊಂದಿದ್ದಾರೆ. ಶಿಕ್ಷಣವು ರಾಜ್ಯ ಪಟ್ಟಿಯಲ್ಲಿ ಬರುವುದರಿಂದ ಕೇಂದ್ರ ಮತ್ತು ರಾಜ್ಯಗಳ ಕೊಂಡಿಯಂತೆ ಇವರು ಕೆಲಸ ಮಾಡಬೇಕು.
9
+ ವಿವಾದಗಳ ಆಗರ: ಕೇಂದ್ರದಲ್ಲಿ 2014ರಿಂದ ಪ್ರಧಾನಿ ನರೇಂದ್ರಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿಶ್ವವಿದ್ಯಾನಿಲಯಗಳಲ್ಲಿ ರಾಜ್ಯಪಾಲರು ನೇರವಾಗಿ ಇಲ್ಲವೇ ಪರೋಕ್ಷವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಸೇರಿದಂತೆ ಅನ��ಕ ರಾಜ್ಯಗಳಲ್ಲಿ ಸರ್ಕಾರದ ಶಿಫಾರಸ್ಸುಗಳನ್ನೇ ಕಾರ್ಯಾಂಗದ ಮುಖ್ಯಸ್ಥರಾಗಿರುವ ರಾಜ್ಯಪಾಲರು ತಿರಸ್ಕರಿಸಿದ್ದರು.
10
+ ಕೇರಳದಲ್ಲಿ 8 ವಿಶ್ವವಿದ್ಯಾನಿಲಯಗಳಿಗೆ ಉಪಕುಲಪತಿಗಳನ್ನು ಅಲ್ಲಿನ ಸರ್ಕಾರ ನೇಮಕ ಮಾಡಿತ್ತು. ಆದರೆ ರಾಜ್ಯಪಾಲ ಅರೀಫ್ ಮೊಹಮದ್ ಖಾನ್ ಅವರು ಕಾರಣ ಕೇಳಿ ವಾಪಸ್ ಕಳುಹಿಸಿದ್ದರು. ಸಿಂಡಿಕೇಟ್ ಸದಸ್ಯರು ಮತ್ತು ಉಪಕುಲಪತಿಗಳ ಪಟ್ಟಿಯನ್ನು ಸರ್ಕಾರ ಕಳುಹಿಸಿದರೆ ರಾಜಭವನದಲ್ಲಿ ಬೇರೊಂದು ಹೆಸರುಗಳ ಪಟ್ಟಿ ಸಿದ್ದವಾಗುತ್ತಿತ್ತು. ಹೀಗಾಗಿ ರಾಜಭವನ ಮತ್ತು ಸರ್ಕಾರದ ನಡುವೆ ಕೇರಳದಲ್ಲಿ ಈಗಲೂ ತಿಕ್ಕಾಟ ನಡೆಯುತ್ತಲೇ ಇದೆ.
11
+ ತಮಿಳುನಾಡಿನಲ್ಲಿ ಅಲ್ಲಿನ ರಾಜ್ಯಪಾಲರ ಆರ್.ಎನ್.ರವಿ ಮತ್ತು ಮುಖ್ಯಮಂತ್ರಿ ಎನ್.ಕೆ.ಸ್ಟಾಲಿನ್ ನಡುವೆ ಪ್ರತಿದಿನ ಒಂದಿಲ್ಲೊಂದು ಸಂರ್ಘ ನಡೆಯುತ್ತಲೇ ಇದೆ. ಭ್ರಷ್ಟಾಚಾರದ ಆರೋಪದ ಮೇಲೆ ಇಡಿಯು ಸಚಿವ ಸೆಂಥಿ ಬಾಲಾಜಿ ಅವರನ್ನು ಬಂಧಿಸಿತ್ತು.
12
+ ಪುನಃ ಅವರನ್ನು ಸಂಪುಟಕ್ಕೆ ತೆಗೆದುಕೊಂಡಾಗ ರಾಜ್ಯಪಾಲ ರವಿ ತಮಗಿರುವ ವಿಶೇಷ ಅಧಿಕಾರವನ್ನು ಬಳಸಿ ಸೆಂಥಿ ಬಾಲಾಜಿ ಅವರನ್ನು ಸಂಪುಟದಿಂದಲೇ ವಜಾಗೊಳಿಸಿದ್ದರು. ಬಳಿಕ ನ್ಯಾಯಾಲಯದ ಮಧ್ಯಪ್ರವೇಶದಿಂದಾಗಿ ಈ ಸಮಸ್ಯೆ ಸುಖಾಂತ್ಯ ಕಂಡಿತ್ತು. ಹಠಕ್ಕೆ ಬಿದ್ದ ತಮಿಳುನಾಡು ಸರ್ಕಾರ ವಿವಿ ಉಪಕುಲಪತಿಗಳ ನೇಮಕಾತಿಗೆ ರಾಜ್ಯಪಾಲರಿಗಿದ್ದ ಅಧಿಕಾರವನ್ನೇ ಅಧಿವೇಶನದಲ್ಲಿ ಮಸೂದೆ ಮಂಡಿಸಿ ಹಿಂಪಡೆದುಕೊಂಡಿತ್ತು.
13
+ ಇತ್ತ ಪಶ್ಚಿಮ ಬಂಗಾಳದಲ್ಲೂ ಸಿಎಂ ಮಮತ ಬ್ಯಾನರ್ಜಿ ಮತ್ತು ರಾಜ್ಯಪಾಲ ಸಿ.ವಿ.ಆನಂದ ಬೋಸ್ ನಡುವೆ ಸಂಘರ್ಷ ಈಗಲೂ ನಿಂತಿಲ್ಲ. ಸರ್ಕಾರದ ಪ್ರತಿಯೊಂದು ವಿಷಯದಲ್ಲೂ ಹಸ್ತಕ್ಷೇಪ ಮಾಡುತ್ತಿದ್ದರಿಂದ ರಾಜ್ಯಪಾಲರಿಗಿದ್ದ ಅಧಿಕಾರವನ್ನು ಹಿಂಪಡೆದಿತ್ತು.
14
+ ಕಾಕತಾಳೀಯ ಎಂಬಂತೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು, ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಇದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗಿದ್ದು, ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ. ಈಗ ರಾಜ್ಯಪಾಲರ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ಸಿಡಿದೆದ್ದಿದ್ದು ಹಂತ ಹಂತವಾಗಿ ಅಧಿಕಾರವನ್ನು ಕಿತ್ತು ಹಾಕುವ ಅಜೆಂಡಾಕ್ಕೆ ಚಾಲನೆ ಕೊಟ್ಟಿದೆ.
eesanje/url_46_160_1.txt ADDED
@@ -0,0 +1,7 @@
 
 
 
 
 
 
 
 
1
+ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿಲ್ಲ: ನಾರಾಯಣ ಸ್ವಾಮಿ
2
+ ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಇಂದಿಲ್ಲಿ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದ ಸರ್ಕಾರವೇ ಅಲ್ಲ. ಅದು ಹೇಳಿದ್ದು ಒಂದು, ಮಾಡಿದ್ದು ಮತ್ತೊಂದು. ಗ್ಯಾರಂಟಿ ಕಾರ್ಯಕ್ರಮ ಕೊಟ್ಟರು. ಆದರೆ ಅವುಗಳು ಜನರಿಗೆ ತಲುಪಿಸುವ ಕುರಿತು ಗ್ಯಾರಂಟಿ ನೀಡಲಿಲ್ಲ ಎಂದು ಟೀಕಿಸಿದರು.
3
+ ದಲಿತ ಸಮುದಾಯಗಳಿಗೆ ಕಾಂಗ್ರೆಸ್ ಸರ್ಕಾರವು ಯಾವುದೇ ಗ್ಯಾರಂಟಿ ನೀಡಲಿಲ್ಲ. ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟ ೨೫,೩೮೬ ಕೋಟಿ ರೂ.ಗಳನ್ನು ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿ ದಲಿತರಿಗೆ ದ್ರೋಹ ಎಸಗಿದೆ ಎಂದರು. ಈ ಪ್ರಶ್ನೆಗೆ ಮುಖ್ಯಮಂತ್ರಿಯಾಗಲೀ, ಉಳಿದವರಾಗಲೀ ಉತ್ತರ ಕೊಡಲು ಸಿದ್ಧರಿಲ್ಲ. ದಲಿತರನ್ನು ಬಡವರನ್ನಾಗಿಯೇ ಉಳಿಸುವ, ಬರೀ ವೋಟ್ಗೆ ಮಾತ್ರ ಬಳಕೆ ಮಾಡಿ, ಗುಲಾಮರನ್ನಾಗಿಸುವುದು ಕಾಂಗ್ರೆಸ್ನ ಕುತಂತ್ರವಾಗಿದೆ. ಇದು ದಲಿತರಿಗೆ ಮಾಡಿದ ಮೋಸ ಎಂದರು.
4
+ ಇದು ಲೋಕಸಭೆ ಚುನಾವಣೆ. ಇಲ್ಲಿ ದೇಶ ಮತ್ತು ಅಂತಾರಾಷ್ಟ್ರೀಯ ವಿಚಾರಗಳು ಚರ್ಚೆಗೆ ಬರಬೇಕು. ಆದರೆ ಸಿದ್ಧರಾಮಯ್ಯ ಈ ಚುನಾವಣೆಯನ್ನೂ ರಾಜ್ಯದ ಚುನಾವಣೆ ಎಂದು ಭಾವಿಸಿದ್ದಾರೆ. ದೇಶದ ಬಗ್ಗೆ ಚಕಾರವೆತ್ತದೇ, ಬರೀ ಗ್ಯಾರಂಟಿ ಬಗ್ಗೆ ಮಾತನಾಡುತ್ತಾರೆ ಅಲ್ಲದೇ ಮುಂಜಾನೆಯಿಂದ ಸಂಜೆವರೆಗೂ ಬರೀ ಸುಳ್ಳು ಹೇಳುತ್ತಾರೆ. ಪ್ರಧಾನಿ ಮೋದಿ ವಿರುದ್ಧ ಬರೀ ಅಪಪ್ರಚಾರ ಮಾಡುತ್ತಾರೆ. ಕಾಂಗ್ರೆಸ್ನವರು ದೇಶಕ್ಕಾಗಿ ಏನು ಮಾಡಿದ್ದಾರೆ ಹೇಳಬೇಕು. ಈ ಬಗ್ಗೆ ಮಾತನಾಡದೇ ಕ್ಷುಲ್ಲಕ ವಿಚಾರಗಳನ್ನು ಪ್ರಸ್ತಾಪಿಸಿ, ಬರೀ ಪ್ರಧಾನಿ ಮೋದಿ ಹಾಗೂ ಬಿಜೆಪಿಯನ್ನು ನಿಂದಿಸುವ ಕೆಲಸ ಮಾಡುತ್ತಿದ್ದಾರೆ ಎಂದರು. ಕಾಂಗ್ರೆಸ್ನವರಿಗೆ ಬಿಜೆಪಿಯನ್ನಾಗಲೀ, ಮೋದಿಯನ್ನಾಗಲೀ ಟೀಕಿಸಲು ನೈತಿಕ ಹಕ್ಕಿಲ್ಲ ಎಂದರು.
5
+ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸುತ್ತಾರೆ ಎಂದು ಆರೋಪಿಸುತ್ತಾರೆ. ಆದರೆ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಅವರೇ ಸ್ಪಷ್ಟನೆ ನೀಡಿದ್ದಾರೆ ಎಂದರು.ಕಾಂಗ್ರೆಸ್ನವರಿಗೆ ಹತಾಶೆ: ಸೋಲಿನ ಹತಾಶೆಯಿಂದ ಕಾಂಗ್ರೆಸ್ ನಾಯಕರು ವಿನಾಕಾರಣ ಏನೇನೋ ಬಡಬಡಿಸುತ್ತಿದ್ದಾರೆ ಎಂದು ಮಾಜಿ ಸಚಿವ ಎನ್.ಮಹೇಶ ಆರೋಪಿಸಿದರು. ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ಅವರನ್ನು ಏಕವಚನದಲ್ಲಿ ಕರೆದಿರುವುದು, ಇನ್ನೋರ್ವ ಕಾಂಗ್ರೆಸ್ ಧುರೀಣ ರಾಜು ಕಾಗೆ ಮೋದಿ ಅವರ ಬಗ್ಗೆ ಅವಳಹೇಳನಕಾರಿ ಮಾತು ಹೇಳಿರುವುದು ಇದಕ್ಕೆ ಸಾಕ್ಷಿ ಎಂದರು. ಯುವಜನರು ಪ್ರೀತಿಯಿಂದ ಮೋದಿ- ಮೋದಿ ಎನ್ನುತ್ತಾರೆ. ಇದು ಹತ್ತು ವರ್ಷ ಸ್ವಚ್ಛ ಆಡಳಿತ ನ��ಡಿ ವಿಶ್ವಾಸ ಗಳಿಸಿದ್ದರ ಫಲ ಎಂದರು.
6
+ ಸಂವಿಧಾನ ಬದಲಾಯಿಸಲು ಅದೇನು ಪಠ್ಯಪುಸ್ತಕವೇ ಎಂದು ಪ್ರಶ್ನಿಸಿದ ಅವರು ಕಾಂಗ್ರೆಸ್ ತುರ್ತು ಪರಿಸ್ಥಿತಿ ಸಮಯದಲ್ಲಿ ಸಂವಿಧಾನವನ್ನೇ ಅಮಾನತು ಮಾಡಿ ಅಪಚಾರವೆಸಗಿದೆ ಎಂದು ಆರೋಪಿಸಿದರು. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ವಿಡಿಯೋ ತುಣುಕುಗಳು ಅಂತರ್ಜಾಲದಲ್ಲಿ ಪ್ರಸಾರವಾಗದಂತೆ ನಿರ್ಬಂಧ ವಿಧಿಸಬೇಕೆಂದು ಮಹೇಶ್ ಒತ್ತಾಯಿಸಿದರು.
7
+ ಮಹೇಂದ್ರ ಕೌತಾಳ, ಬಸವರಾಜ ಅಮ್ಮಿನಭಾವಿ, ಗುರು ಪಾಟೀಲ, ಪರಶುರಾಮ ಪೂಜಾರ ಮೊದಲಾದವರು ಉಪಸ್ಥಿತರಿದ್ದರು.
eesanje/url_46_160_10.txt ADDED
@@ -0,0 +1,5 @@
 
 
 
 
 
 
1
+ ಮೇ 5ಕ್ಕೆ ನೀಟ್ ಪರೀಕ್ಷೆ : 23 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೊಂದಣಿ
2
+ ನವದೆಹಲಿ, ಮೇ 2- ವೈದ್ಯಕೀಯ ಕೋರ್ಸ್‍ಗಳ ಸೀಟಿಗಾಗಿ ನಡೆಯಲಿರುವ ನೀಟ್ ಪರೀಕ್ಷೆಗೆ ಈಗಾಗಲೇ ಎಲ್ಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಪಡೆಯಲು ಇಂದು ಅಂತರ್ಜಾಲದಲ್ಲಿ ಅವಕಾಶ ನೀಡಿದ್ದು, ಮೇ 5ರಂದು ಮಧ್ಯಾಹ್ನ 2 ಗಂಟೆಯಿಂದ 5 ಗಂಟೆವರೆಗೆ ಒಂದೇ ಹಂತದಲ್ಲಿ ದೇಶಾದ್ಯಂತ ಪರೀಕ್ಷೆ ನಡೆಯಲಿದೆ.
3
+ ಪ್ರಸ್ತುತ ಅಂದಾಜಿನ ಪ್ರಕಾರ, ಸುಮಾರು 23,81,833 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಭಾರತದಾದ್ಯಂತ 571 ನಗರಗಳಲ್ಲಿ ಮತ್ತು ದೇಶದ ಹೊರಗಿನ 14 ನಗರಗಳಲ್ಲಿ ಪರೀಕ್ಷೆ ನಡೆಯಲಿದೆ. ಇಂಗ್ಲಿಷ್, ಹಿಂದಿ, ಅಸ್ಸಾಮಿ, ಬಂಗಾಳಿ, ಒಡಿಯಾ, ಕನ್ನಡ, ಪಂಜಾಬಿ, ಉರ್ದು, ಮಲಯಾಳಂ, ತೆಲುಗು, ತಮಿಳು ಭಾಷೆ ಸೇರಿದಂತೆ ವಿವಿಧ ಭಾಷೆಗಳಲ್ಲಿ ಪ್ರಶ್ನೆಪತ್ರಿಕೆ ಇರಲಿದೆ.
4
+ ಈಗಾಗಲೇ ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳು ಪ್ರವೇಶ ಪತ್ರ ಪಡೆಯಲು ಅಂತರ್ಜಾಲದಲ್ಲಿ ಒಮ್ಮೆಲೆ ಮುಗಿಬಿದ್ದಿರುವುದರಿಂದ ಸರ್ವರ್ ಕೂಡ ನಿಧಾನಗೊಂಡಿದೆ. ಆದರೂ ಇಂದು ರಾತ್ರಿವರೆಗೂ ಅವಕಾಶ ಕೊಟ್ಟಿರುವುದರಿಂದ ಬಹುತೇಕ ಎಲ್ಲರೂ ಪ್ರವೇಶಪತ್ರವನ್ನು ಡೌನ್‍ಲೋಡ್ ಮಾಡಿಕೊಳ್ಳುವುದು ಅಗತ್ಯವಾಗಿದೆ.ಅಂತರ್ಜಾಲದ ಮೂಲಕ ಪ್ರಶ್ನೆಪತ್ರಿಕೆ ಡೌನ್‍ಲೋಡ್ ಆಗಲಿದ್ದು, ಯಾವುದೇ ಅಕ್ರಮ ನಡೆಯದಂತೆ ಪಾರದರ್ಶಕ ಹಾಗೂ ಆಧುನಿಕ ತಂತ್ರಜ್ಞಾನ ಬಳಸಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಅತಿ ದೊಡ್ಡ ಪರೀಕ್ಷೆಯನ್ನು ನಡೆಸುತ್ತಿದೆ.
5
+ ವೈದ್ಯರಾಗುವ ಕನಸು ಹೊತ್ತು ಲಕ್ಷಾಂತರ ವಿದ್ಯಾರ್ಥಿಗಳು ಈಗ ನೀಟ್ ಪರೀಕ್ಷೆ ಬರೆಯುತ್ತಿದ್ದಾರೆ. ಅದರಲ್ಲಿ ಈಗ ದೇಶಾದ್ಯಂತ ಕೇವಲ 2 ರಿಂದ 3 ಲಕ್ಷ ಸೀಟ್‍ಗಳು ಮಾತ್ರ ಲಭ್ಯವಿವೆ. ವರ್ಷದಿಂದ ವರ್ಷಕ್ಕೆ ವೈದ್ಯಕೀಯ ಸೀಟುಗಳು ಹೆಚ್ಚಾಗುತ್ತಿವೆ. ಅದರ ಜತೆಗೆ ಆಕಾಂಕ್ಷಿಗಳ ಸಂಖ್ಯೆಯೂ ಕೂಡ ಹೆಚ್ಚುತ್ತಿದೆ.
eesanje/url_46_160_11.txt ADDED
@@ -0,0 +1,5 @@
 
 
 
 
 
 
1
+ ಮತದಾನ ಮುಗಿದರು ನಿಲ್ಲದ ಜಪ್ತಿ : 1.69 ಕೆಜಿ ಚಿನ್ನ ವಶ
2
+ ಬೆಂಗಳೂರು,ಮೇ.2- ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ಮತದಾನ ಮುಗಿದಿದ್ದರೂ ಚಿನ್ನ ಹಾಗೂ ನಗದನ್ನು ವಶಪಡಿಸಿಕೊಳ್ಳುವುದು ಮಾತ್ರ ನಿಂತಿಲ್ಲ. ಆದಾಯ ತೆರಿಗೆ ಇಲಾಖೆಯವರು 1,09,89,064 ರೂ. ಮೌಲ್ಯದ 1.69 ಕೆಜಿ ಚಿನ್ನವನ್ನು ಚಾಮರಾಜಪೇಟೆಯ ಸಾರಸ್ವತ ಬ್ಯಾಂಕ್ ಲಾಕರ್‍ನಲ್ಲಿ ವಶಪಡಿಸಿಕೊಂಡಿದ್ದಾರೆ.
3
+ ಹೆಸರಘಟ್ಟ ಮುಖ್ಯರಸ್ತೆಯ ಎಜಿಬಿ ಲೇಔಟ್‍ನಲ್ಲಿ 46 ಲಕ್ಷ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ ಇಲ್ಲಿಯವರೆಗೆ 448.71 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್, ಚಿನ್ನ, ಬೆಳ್ಳಿ, ವಜ್ರ, ಉಚಿತ ಉಡುಗೊರೆ ಹಾಗೂ ಇತರ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
4
+ ಈ ಸಂಬಂಧ 2249 ಎಫ್‍ಐಆರ್‍ಗಳನ್ನು ದಾಖಲಿಸಲಾಗಿದೆ. 2011 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಪೊಲೀಸ್ ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು, 140.85 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್, ಚಿನ್ನ, ಬೆಳ್ಳಿ, ಉಚಿತ ಉಡುಗೊರೆಗಳನ್ನು ವಶಪಡಿಸಿಕೊಂಡಿವೆ.
5
+ ಅಬಕಾರಿ ಇಲಾಖೆಯವರು 178.56 ಕೋಟಿ ರೂ. ಮೊತ್ತದ ಮದ್ಯ, ಡ್ರಗ್ಸ್ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದರೆ ಆದಾಯ ತೆರಿಗೆ ಅಧಿಕಾರಿಗಳು 48.19 ಕೋಟಿ ರೂ. ಮೊತ್ತದ ನಗದು, ಚಿನ್ನ, ವಜ್ರವನ್ನು ವಶಪಡಿಸಿಕೊಂಡಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು 80.11 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್, ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
eesanje/url_46_160_12.txt ADDED
@@ -0,0 +1,7 @@
 
 
 
 
 
 
 
 
1
+ ಧರ್ಮಸ್ಥಳ: 123 ಜೋಡಿ ದಾಂಪತ್ಯ ಜೀವನಕ್ಕೆ ಪದಾರ್ಪಣೆ
2
+ ಬೆಳ್ತಂಗಡಿ, ಮೇ.2- ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ನಿನ್ನೆ ಮದುವೆ ಮನೆಯ ಸಂಭ್ರಮ-ಸಡಗರ. ಸಂಜೆ ಗಂಟೆ 6.45ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 39 ಜೊತೆ ಅಂತರ್ಜಾತಿಯ ವಿವಾಹ ಸೇರಿದಂತೆ ಒಟ್ಟು 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದರು. ನಿನ್ನೆ ಬೆಳಿಗ್ಗೆಯಿಂದಲೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಅವರ ಬೀಡಿನಲ್ಲಿ ವಧುವಿಗೆ ಸೀರೆ, ರವಿಕೆ ಮತ್ತು ವರನಿಗೆ ಧೋತಿ, ಶಾಲು ವಿತರಿಸಿದರು.
3
+ ಸಂಜೆ 6 ಗಂಟೆಯಿಂದ ವಧು-ವರ ಜೋಡಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಭವ್ಯ ಮೆರವಣಿಗೆಯಲ್ಲಿ ಅಮೃತವರ್ಷಿಣಿ ಸಭಾಭವನಕ್ಕೆ ಹೋದರು. ಮುಹೂರ್ತಕ್ಕೆ ಅರ್ಧ ಗಂಟೆ ಮುಂಚಿತವಾಗಿ ಹೆಗ್ಗಡೆ ದಂಪತಿ ಮತ್ತು ಚಲನಚಿತ್ರ ನಟ ದೊಡ್ಡಣ್ಣ ದಂಪತಿ ಮಂಗಳಸೂತ್ರ ವಿತರಿಸಿದರು. ಆಯಾ ಜಾತಿ-ಮತ ಸಂಪ್ರದಾಯದಂತೆ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಲಾಯಿತು. ಸಂಜೆ ಗಂಟೆ 6.45ಕ್ಕೆ ಸರಿಯಾಗಿ ಗೋಧೂಳಿಲಗ್ನ ಸುಮುಹೂರ್ತದಲ್ಲಿ ವೇದಿಕೆಯಿಂದ ವೇದ-ಮಂತ್ರ ಘೋಷ ಪಠಣದೊಂದಿಗೆ ವರನು ವಧುವಿಗೆ ಮಂಗಳಸೂತ್ರ ಧಾರಣೆ ಮಾಡಿದರು.
4
+ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು:ಚಲನಚಿತ್ರನಟ ದೊಡ್ಡಣ್ಣ ಮಾತನಾಡಿ, ತಾಯಿ-ತಂದೆ ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ಸಂಸ್ಕಾರ ನೀಡಿ ಸಮಾಜದ ಸಜ್ಜನರಾಗಿ, ಉತ್ತಮ ಚಾರಿತ್ರ್ಯವಂತರಾಗಿ ಮತ್ತು ಸಭ್ಯ-ಸುಸಂಸ್ಕøತ ನಾಗರಿಕರಾಗಿ ರೂಪಿಸಬೇಕು. ತನ್ಮೂಲಕ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗಬೇಕು ಎಂದು ಚಲನಚಿತ್ರನಟ ದೊಡ್ಡಣ್ಣ ನೂತನ ದಂಪತಿಗಳಿಗೆ ಕಿವಿಮಾತು ಹೇಳಿದರು.
5
+ ತಾಯಿ-ತಂದೆ ಮಾಡಿದ ದಾನ-ಧರ್ಮ, ಸತ್ಕಾರ್ಯದ ಪುಣ್ಯ ಅವರ ಮಕ್ಕಳಿಗೂ ಲಭಿಸುತ್ತದೆ. ಯಾವುದೇ ನೀತಿ, ಧರ್ಮ, ಸಂಸ್ಕಾರ ಕಲಿಯಲು ವಯಸ್ಸಿನ ಇತಿ-ಮಿತಿ ಇಲ್ಲ. ರಾಮಾಯಣ ಮತ್ತು ಮಹಾಭಾರತದಂತಹ ಪೌರಾಣಿಕ ಕೃತಿಗಳ ಅಧ್ಯಯನದೊಂದಿಗೆ ಸ್ವಾಧ್ಯಾಯ ಮಾಡಬೇಕು. ದೇವಸ್ಥಾನಕ್ಕೆ ಹೋಗುವಾಗ ಸಂಚಾರಿ ದೂರವಾಣಿ ಕೊಂಡುಹೋಗಬಾರದು. ದೇವರ ಎದುರು ಕಣ್ಣು ಮುಚ್ಚಬಾರಾದು. ತೆರೆದ ಕಣ್ಣುಗಳಿಂದ ಏಕಾಗ್ರತೆಯೊಂದಿಗೆ ದೇವರ ದರ್ಶನ, ಧ್ಯಾನ ಮಾಡಬೇಕು ಎಂದು ಅವರು ಕಿವಿಮಾತು ಹೇಳಿದರು.ಪ್ರೀತಿ-ವಿಶ್ವಾಸ, ಪರೋಪಕಾರ ಸೇವಾಕಳಕಳಿ, ಸಾಮಾಜಿಕ ಬದ್ಧತೆ ಮೊದಲಾದ ಮಾನವೀಯಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
6
+ ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಸಾಮೂಹಿಕ ವಿವಾಹ ಅಂದರೆ ಸರಳ ವಿವಾಹ. ಸಾಮೂಹಿಕ ವಿವಾಹದಿಂದಾಗಿ ವರದಕ್ಷಿಣೆ ಪಿಡುಗು ಮತ್ತು ಮದುವೆಗಾಗುವ ದುಂದುವೆಚ್ಚ ಕಡಿಮೆಯಾಗಿದೆ. ನೂತನ ದಂಪತಿಗಳು ಸತ್ಸಂಗ ಮಾಡಿ ಸಂಸಾರವನ್ನು ಹೊಣೆಗಾರಿಕೆ ಮತ್ತು ಜವಬ್ದಾರಿಯಿಂದ ಅರ್ಥಪೂರ್ಣವಾಗಿ ನಿರ್ವಹಿಸಬೇಕು. ಮದುವೆಯ ಪಾವಿತ್ರ್ಯತೆಯನ್ನು ಕಾಪಾಡಿಕೊಂಡು ಸಂಸ್ಕಾರಯುತ ಜೀವನ ನಡೆಸಬೇಕು. ಗ್ರಾಮೀಣ ಪ್ರದೇಶವನ್ನು ತ್ಯಜಿಸಿ ನಗರಕ್ಕೆ ವಲಸೆ ಹೋಗುವುದನ್ನು ತಡೆಯಬೇಕು ಎಂದು ಕಿವಿಮಾತು ಹೇಳಿದರು.
7
+ ಸಾಮೂಹಿಕ ವಿವಾಹಕ್ಕೆ ಅನೇಕ ಮಂದಿ ದಾನಿಗಳು ಸೀರೆ, ಮಂಗಳಸೂತ್ರ ಹಾಗೂ ಹೂಮಾಲೆಯನ್ನು ಉದಾರವಾಗಿ ದಾನ ನೀಡಿದ್ದಾರೆ. ನಿರೀಕ್ಷೆಗಿಂತಲೂ ಮಿಗಿಲಾಗಿ ದಾನ ಹರಿದುಬರುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಶಾಂತಾ ದೊಡ್ಡಣ್ಣ ಮತ್ತು ಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು. ಹರ್ಷೇಂದ್ರಕುಮಾರ್ ಸ್ವಾಗತಿಸಿದರು. ರತ್ನವರ್ಮ ಜೈನ್ ಧನ್ಯವಾದವಿತ್ತರು. ಶ್ರೀನಿವಾಸ ರಾವ್ ಧರ್ಮಸ್ಥಳ ಮತ್ತು ಪೂಜಾ ಪಕ್ಕಳ ಕಾರ್ಯಕ್ರಮ ನಿರ್ವಹಿಸಿದರು. ನೂತನ ದಂಪತಿಗಳು ದೇವರ ದರ್ಶನ ಮಾಡಿ ಅನ್ನಪೂರ್ಣ ಭೋಜನಾಲಯದಲ್ಲಿ ಮದುವೆ ಊಟ ಮಾಡಿದರು.
eesanje/url_46_160_2.txt ADDED
@@ -0,0 +1,9 @@
 
 
 
 
 
 
 
 
 
 
1
+ ಪ್ರಜ್ವಲ್ ರೇವಣ್ಣ ಅತ್ಯಾಚಾರಿ ಎಂದು ಬಿಜೆಪಿಯ ಎಲ್ಲಾ ನಾಯಕರಿಗೂ ಗೊತ್ತಿತ್ತು: ರಾಹುಲ್ ಗಾಂಧಿ
2
+ ಶಿವಮೊಗ್ಗ,ಮೇ.2- ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು ಸಂವಿಧಾನದ ಮೇಲೆ ಆಕ್ರಮಣ ಮಾಡಿದ್ದು, ಇದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕ್ಷಮೆ ಯಾಚಿಸಬೇಕೆಂಬುದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ ಅವರು, ದಲಿತರು, ಹಿಂದುಳಿದ ವರ್ಗದವರು, ಆದಿವಾಸಿಗಳು, ಶೋಷಿತರ ಪರವಾಗಿ ಮಾತನಾಡುವವರು ನಕ್ಸಲರು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹೇಳಿದ್ದಾರೆ. ಈ ಮೂಲಕ ಸಂವಿಧಾನದ ಮೇಲೆ ಆಕ್ರಮಣ ಮಾಡಲಾಗಿದೆ ಎಂದು ಹೇಳಿದರು.
3
+ ಹಾಸನದ ಎನ್‍ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 400 ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಇದು ಒಂದು ಲೈಂಗಿಕ ಹಗರಣವಲ್ಲ. ಇದೊಂದು ಸಮೂಹ ಅತ್ಯಾಚಾರ ಪ್ರಕರಣವಾಗಿದೆ. ಅಂತಹ ವ್ಯಕ್ತಿಯ ಪರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಕರ್ನಾಟಕಕ್ಕೆ ಬಂದು ಮತಯಾಚನೆ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಅವರಿಗೆ ನೀಡಿದ ಮತ ನನಗೆ ನೀಡಿದಂತೆ ಎಂದು ಹೇಳಿದ್ದಾರೆ. ಈ ಕಾರಣಕ್ಕಾಗಿ ಪ್ರಧಾನಿ ಮತ್ತು ಬಿಜೆಪಿಯವರು ರಾಜ್ಯ ಮತ್ತು ದೇಶದ ಜನರ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.
4
+ ಪ್ರಜ್ವಲ್ ರೇವಣ್ಣ ಅತ್ಯಾಚಾರಿ ಎಂದು ಬಿಜೆಪಿಯ ಎಲ್ಲಾ ನಾಯಕರಿಗೂ ಗೊತ್ತಿತ್ತು. ಆದರೂ ಆತನೊಂದಿಗೆ ಪ್ರಧಾನಿ ವೇದಿಕೆ ಹಂಚಿಕೊಂಡಿದ್ದಾರೆ. ಮತಯಾಚನೆ ಮಾಡಿದ್ದಾರೆ. ಈ ಮೂಲಕ ದೇಶದ ಪ್ರತಿಯೊಬ್ಬ ಮಹಿಳೆಗೂ ಅಪಮಾನ ಮಾಡಿದ್ದಾರೆ. ಇದಕ್ಕಾಗಿ ನರೇಂದ್ರ ಮೋದಿ ಅಮಿತ್ ಶಾ ಸೇರಿದಂತೆ ಬಿಜೆಪಿಯ ಎಲ್ಲಾ ನಾಯಕರೂ ದೇಶದ ಮಹಿಳೆಯರಿಗೆ ಕೈ ಮುಗಿದು ತಲೆಬಾಗಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.
5
+ ಜಗತ್ತಿನಲ್ಲೇ ಇಂತಹ ಘಟನೆಯನ್ನು ನೋಡಿರಲಿಲ್ಲ. ವಿಶ್ವದಲ್ಲೇ ಸಮೂಹ ಅತ್ಯಾಚಾರಿಯ ಪರವಾಗಿ ಪ್ರಧಾನಿ ಮತಯಾಚಿಸಿದ್ದಾರೆ ಎಂಬ ವಿಚಾರ ಚರ್ಚೆಯಾಗುತ್ತಿದೆ. ಬಿಜೆಪಿಯವರಿಗೆ ಅಧಿಕಾರ ಬೇಕು ಎಂದಾದರೆ ಅವರು ಏನು ಬೇಕಾದರೂ ಮಾಡಲು ಸಿದ್ಧರಿರುತ್ತಾರೆ. ಇದು ಅವರ ಸಿದ್ಧಾಂತ ಕೂಡ ಎಂದು ಕಿಡಿಕಾರಿದರು.
6
+ ಪ್ರಧಾನಿಯವರ ಬಳಿ ಗುಪ್ತಚರ ಸಂಸ್ಥೆ, ವಿದೇಶಾಂಗ ಸಚಿವಾಲಯ ಸೇರಿದಂತೆ ಹಲವಾರು ಸಂಸ್ಥೆಗಳಿದ್ದರೂ ಪ್ರಜ್ವಲ್ ರೇವಣ್ಣ ಅವರನ್ನು ವಿದೇಶಕ್ಕೆ ಪರಾರಿಯಾಗಲು ಅವಕಾಶ ಮಾಡಿಕೊಟ್ಟಿದ್ದಾರೆ. ನಮ್ಮ ಸರ್ಕಾರ ಈ ಹಗರಣದಲ್ಲಿ ನಿಷ್ಪಕ್ಷಪಾತವಾದ ಕ್ರಮಗಳನ್ನು ಕೈಗೊಂಡು ಸಂತ್ರಸ್ತರಿಗೆ ನ್ಯಾಯ ದೊರಕಿಸಲು ಬದ್ಧವಾಗಿದೆ. ಜನರು ಬದಲಾವಣೆ ಬಯಸುವ ಸಮಯ ಬಂದಿದೆ ಎಂದರು.
7
+ ಕಳೆದ 10 ವರ್ಷಗಳಿಂದಲೂ ಕೇವಲ 22 ಜನರಿಗಾಗಿ ಮೋದಿ ಕೆಲಸ ಮಾಡಿದ್ದಾರೆ. ಬಜೆಟ್‍ನ ಹಣವನ್ನು ಅದಾನಿ ಅಂಬಾನಿಯಂತಹ ಜನರ ಜೇಬಿಗೆ ಹಾಕಿದ್ದಾರೆ. ಅವರ 16 ಲಕ್ಷ ಕೋಟಿ ರೂ. ಸಾಲವನ್ನು ಮನ್ನಾ ಮಾಡಿದ್ದಾರೆ. ಮೋದಿ ಕೆ���ವೇ ವ್ಯಕ್ತಿಗಳನ್ನು ಕೋಟ್ಯಾೀಶರರನ್ನಾಗಿ ಮಾಡುತ್ತಿದ್ದರೆ, ನಮ್ಮ ಉದ್ದೇಶ ದೇಶದ ಪ್ರತಿಯೊಬ್ಬರನ್ನೂ ಲಕ್ಷಾಪತಿಗಳನ್ನಾಗಿ ಮಾಡುವುದು ಎಂದು ಹೇಳಿದರು.
8
+ ರಾಜ್ಯದ ಕಾಂಗ್ರೆಸ್ ಸರ್ಕಾರ ಪಂಚಖಾತ್ರಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ಗೃಹಲಕ್ಷ್ಮಿಯ ಮಾದರಿಯಲ್ಲೇ ರಾಷ್ಟ್ರಮಟ್ಟದಲ್ಲಿ ಮಹಾಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗುವುದು. ನಾವು ಅಕಾರಕ್ಕೆ ಬರುತ್ತಿದ್ದಂತೆ ಇದನ್ನು ಅನುಷ್ಠಾನಕ್ಕೆ ತಂದು ದೇಶದ ಪ್ರತಿ ಬಡ ಕುಟುಂಬಕ್ಕೂ ಆರ್ಥಿಕ ನೆರವು ನೀಡಲು ಈಗಾಗಲೇ ಪಟ್ಟಿ ಸಿದ್ಧಗೊಳಿಸಲಾಗುತ್ತಿದೆ. ಪ್ರತಿ ಕುಟುಂಬದಿಂದಲೂ ಒಬ್ಬ ಮಹಿಳೆಯ ಹೆಸರನ್ನು ಪಡೆದುಕೊಳ್ಳಲಾಗುತ್ತಿದ್ದು, ಆಕೆಯ ಖಾತೆಗೆ ವರ್ಷಕ್ಕೆ 1 ಲಕ್ಷ ರೂ.ಗಳನ್ನು ಪ್ರತಿ ತಿಂಗಳು 8,500 ರೂ.ಗಳನ್ನು ಬ್ಯಾಂಕ್ ಖಾತೆಗೆ ನೇರವಾಗಿ ಪಾವತಿಸಲಾಗುವುದು. ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮಿಯ ಫಲಾನುಭವಿಗಳಿಗೆ ವಾರ್ಷಿಕ 24 ಸಾವಿರ ರೂ.ಗಳ ಜೊತೆಗೆ ಮಹಾಲಕ್ಷ್ಮಿಯ 1 ಲಕ್ಷ ರೂ. ಸೇರಿ ವರ್ಷಕ್ಕೆ 1.24 ಲಕ್ಷ ರೂ. ಪಾವತಿಯಾಗಲಿದೆ ಎಂದು ಹೇಳಿದರು.
9
+ ಯುವನಿಧಿ ಯೋಜನೆಯಡಿ ರಾಜ್ಯದ ಪದವೀಧರ ನೌಕರರಿಗೆ ತಿಂಗಳಿಗೆ 3 ಸಾವಿರ ರೂ. ದೊರೆಯುತ್ತಿದೆ. ರಾಷ್ಟ್ರಮಟ್ಟದಲ್ಲಿ ಯುವನ್ಯಾಯ ಯೋಜನೆಯಡಿ ವರ್ಷಕ್ಕೆ ಒಂದುಲಕ್ಷ ರೂ. ನೀಡಲಾಗುತ್ತಿದ್ದು, ತರಬೇತಿಯೊಂದಿಗೆ ಉದ್ಯೋಗ ಖಾತ್ರಿ ಕೂಡ ಒದಗಿಸಲಾಗುವುದು ಎಂದರು.
eesanje/url_46_160_3.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಪ್ರಜ್ವಲ್ ಕೈ ಹಿಡಿದು ಮತಯಾಚನೆ ಮಾಡಿದ್ದಕ್ಕೆ ಮೋದಿ ಅವರನ್ನು ಪ್ರಶ್ನೆ ಮಾಡುತ್ತಿದ್ದೇವೆ: ಡಿ.ಕೆ.ಶಿವಕುಮಾರ್
2
+ ಕಲಬುರಗಿ,ಮೇ 2- ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜ್ವಲ್ ರೇವಣ್ಣ ಅವರ ಕೈ ಹಿಡಿದು ಅವರ ಪರ ಮತಯಾಚನೆ ಮಾಡಿದ್ದಕ್ಕೆ ನಾವು ಪೆನ್ ಡ್ರೈವ್ ವಿಚಾರದಲ್ಲಿ ಪ್ರಧಾನಿ ಮೋದಿ ಅವರನ್ನು ಪ್ರಶ್ನೆ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
3
+ ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪೆನ್ ಡ್ರೈವ್ ವಿಚಾರದಲ್ಲಿ ಪ್ರಧಾನಮಂತ್ರಿ ಗಳನ್ನು ಯಾಕೆ ಎಳೆದು ತರುತ್ತೀರಿ ಎಂಬ ಕುಮಾರಸ್ವಾಮಿ ಅವರ ಅಸಮಾಧಾನಕ್ಕೆ ಪ್ರತಿಕ್ರಿಯಿಸಿದರು.ಪ್ರಧಾನಮಂತ್ರಿಗಳು ಪ್ರಜ್ವಲ್ ರೇವಣ್ಣ ಪರ ಮತಯಾಚನೆ ಮಾಡಿದ್ದಾರಲ್ಲ. ಅವರದೇ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿರುವ ಕಾರಣ ನಾವು ಪ್ರಧಾನಿಗಳನ್ನು ಪ್ರಶ್ನೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
4
+ ಪ್ರಜ್ವಲ್ ಬಂಧಿಸಲು ಆಗದಿದ್ದರೆ ಅಧಿಕಾರ ಬಿಟ್ಟು ಹೋಗಲಿ ಎಂದು ಆರ್.ಅಶೋಕ್ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕರು ಬೇರೆ ವಿಚಾರಗಳಲ್ಲಿ ವಾಗ್ದಾಳಿ ಮಾಡುತ್ತಿದ್ದವರು ಈ ಪ್ರಕರಣಗಳಲ್ಲಿ ಏಕೆ ಮಾತನಾಡುತ್ತಿಲ್ಲ ಎಂದು ತಿರುಗೇಟು ನೀಡಿದರು.
5
+ ಬಿಜೆಪಿಯ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ, ಶೋಭಾ ಕರಂದ್ಲಾಜೆ, ಸಿ.ಟಿ.ರವಿ, ಸುನೀಲ್ ಕುಮಾರ್ ಸೇರಿದಂತೆ ಪ್ರಮುಖ ನಾಯಕರನ್ನು ಆರ್.ಅಶೋಕ್‍ರವರು ಕರೆದುಕೊಂಡು ಹೋಗಿ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ಮಹಿಳೆಯರ ಬಗ್ಗೆ ಗೌರವ ಇದೆ ಎನ್ನುವ ಕುಮಾರಸ್ವಾಮಿ ಹಾಗೂ ದೇವೇಗೌಡರು ಕೂಡ ಸಂತ್ರಸ್ತರ ಮನೆಗೆ ಹೋಗಿ ಧೈರ್ಯ ತುಂಬಬೇಕು. ಸಂತ್ರಸ್ತರನ್ನು ಏಕೆ ಭೇಟಿ ಮಾಡುತ್ತಿಲ್ಲ? ಎಂದು ಪ್ರಶ್ನಿಸಿದರು.
6
+ ಪ್ರಜ್ವಲ್ ಅವರನ್ನು ಏಕೆ ಬಂಧಿಸಿಲ್ಲ ಎಂಬ ಬಗ್ಗೆ ಗೃಹ ಸಚಿವರು ಉತ್ತರ ನೀಡುತ್ತಾರೆ. 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲದಿಂದ ಪ್ರಜ್ವಲ್ ಗೆದ್ದಿದ್ದಾರೆ ಎಂದು ಆರ್.ಅಶೋಕ್ ಹೇಳಿದ್ದಾರೆ. ಅದು ನಿಜ. ಅವರು ನಮ್ಮ ಬೆಂಬಲದಿಂದ ಗೆದ್ದಿರುವ ಕಾರಣದಿಂದಾಗಿಯೇ ಪ್ರಶ್ನೆ ಮಾಡುತ್ತಿದ್ದೇವೆ. ಈಗ ನಿಮ್ಮ ಬೆಂಬಲದೊಂದಿಗೆ ಅಭ್ಯರ್ಥಿ ಯಾಗಿದ್ದಾರಲ್ಲ ನೀವು ಏಕೆ ಮೌನ ವಾಗಿದ್ದೀರಿ? ಎಂದು ಪ್ರಶ್ನಿಸಿದರು.
7
+ ಹಾಸನದ ಪೆನ್‍ಡ್ರೈವ್‍ಗಳ ವಿಚಾರದಲ್ಲಿ ಕಾರ್ತಿಕ್ ಎಂಬಾತನನ್ನು ಮಲೇಷಿಯಾದಲ್ಲಿ ಅಡಗಿಸಿಡಲಾಗಿದೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ. ನಮ್ಮ ಬ್ರದರ್ ಆ ರೀತಿ ಹೇಳಿದ್ದಾರಲ್ಲಾ ಹಾಗಿದ್ದರೆ ಎಲ್ಲಾ ವಿಚಾರಗಳೂ ಗೊತ್ತಿರಬೇಕು. ಕೇಂದ್ರ ಸರ್ಕಾರಕ್ಕೆ ಹೇಳಿ ಕಾರ್ತಿಕ್‍ನನ್ನು ವಿದೇಶಕ್ಕೆ ಕಳುಹಿಸಿದವರ್ಯಾರು ಎಂಬ ಮಾಹಿತಿ ಪಡೆದುಕೊಳ್ಳಲಿ ಮತ್ತು ಆತನನ್ನು ಕರೆತರಲಿ ಎಂದು ಸವಾಲು ಹಾಕಿದರು.
8
+ ಕಾರ್ತಿಕ್‍ರನ್ನು ವಿದೇಶಕ್ಕೆ ಕಳುಹಿಸಲು ನನಗೆ ತಲೆ ಕೆಟ್ಟಿದೆಯಾ? ನಾನು ನೇರವಾಗಿ ಹೋರಾಟ ಮಾಡುತ್ತೇನೆ. ಯಾರನ್ನೋ ತೋಟದಲ್ಲಿ ಬಚ್ಚಿಟ್ಟು ರಾಜಕಾರಣ ಮಾಡುವ ಅಗತ್ಯ ನನಗಿಲ್ಲ. ಅವರಿಗೆ ಆ ಅವಶ್ಯಕತೆ ಇದೆ. ಬಿಜೆಪಿ ನಾಯಕರಿಗೆ ಪೆನ್ ಡ್ರೈವ್ ನೀಡಿರುವುದಾಗಿ ಕಾರ್ತಿಕ್ ಹೇಳಿದ್ದಾನೆ. ಇನ್ನು ವಕೀಲ ದೇವರಾಜೇಗೌಡರು ನನಗೆ ಕುಮಾರಣ್ಣ ಹಾಗೂ ಗೌಡರ ಮೇಲೆ ಅಭಿಮಾನವಿದೆ. ಹೀಗಾಗಿ ಅವರನ್ನು ಭೇಟಿ ಮಾಡಿ ಎಲ್ಲಾ ವಿಷಯ ತಿಳಿಸಿದ್ದೆ ಎಂದು ಹೇಳಿದ್ದಾರೆ.
9
+ ಎರಡನೇ ಹಂತದ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದ ಐದು ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದು, ಈ ಐದೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ. ಈ ಭಾಗಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ಕೊಟ್ಟಿರುವ ಕೊಡುಗೆ ಬಗ್ಗೆ ಜನರಿಗೆ ಅರಿವಿದೆ. ಅವರ ಸೋಲಿಗೆ ನಾವೆಲ್ಲೆ ಪಶ್ಚಾತಾಪ ಪಟ್ಟಿದ್ದೇವೆ. ಹೀಗಾಗಿ ಅವರ ಸೇವೆಗೆ ಈ ಭಾಗದ ಜನ ಉಪಕಾರ ಸ್ಮರಣೆ ಮಾಡಲಿದ್ದಾರೆ ಎಂದು ತಿಳಿಸಿದರು.
10
+ ಸುರಪುರ ಉಪಚುನಾವಣೆಯಲ್ಲಿ ಕಾಂಗ್ರೆಸ್ 50 ಸಾವಿರ ಮತಗಳ ಅಂತರದಿಂದ ಗೆಲ್ಲುವ ವಾತಾವರಣವಿದೆ. ಕಳೆದ ಚುನಾವಣೆ ಬಳಿಕ ಬಿಜೆಪಿ ಅಭ್ಯರ್ಥಿ ತಮ್ಮ ಕಾರ್ಯಕರ್ತರಿಗೆ 2 ವರ್ಷ ನಾನು ಇರುವುದಿಲ್ಲ, ಯಾರೂ ಮನೆಕಡೆ ಬರಬೇಡಿ ಎಂದು ಹೇಳಿದ್ದರು. ಇನ್ನು ಅವರ ಕಾರ್ಯಕರ್ತರೂ ಕೂಡ ನಮ್ಮ ಪಾಲಿಕೆ ಚುನಾವಣೆ ಸಮಯದಲ್ಲಿ ಅವರೇ ನಮ್ಮ ಜೊತೆ ಇರಲಿಲ್ಲ. ಈಗ ನಾವು ಯಾಕೆ ಅವರ ಪರ ಚುನಾವಣೆ ಮಾಡಬೇಕು ಎಂದು ಸುಮ್ಮನಿದ್ದಾರೆ ಎಂದು ಜನ ತಿರುಗೇಟು ನೀಡುತ್ತಿದ್ದಾರೆ ಎಂದರು.
eesanje/url_46_160_4.txt ADDED
@@ -0,0 +1,6 @@
 
 
 
 
 
 
 
1
+ ರಾಜಕೀಯ ಲಾಭಕ್ಕೆ ಷಡ್ಯಂತ್ರ : ಸೂರಜ್ ರೇವಣ್ಣ
2
+ ಹಾಸನ,ಮೇ.2- ಹಾಸನದ ಪೆನ್‍ಡ್ರೈವ್ ಪ್ರಕರಣದಲ್ಲಿ ರಾಜಕೀಯ ಲಾಭಕ್ಕಾಗಿ ಷಡ್ಯಂತ್ರ ನಡೆಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಆರೋಪಿಸಿದರು. ಹೊಳೆನರಸೀಪುರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ದುರ್ಬಲಗೊಳಿಸಬೇಕು. ಸಂಕಷ್ಟಕ್ಕೆ ಸಿಲುಕಿಸಬೇಕೆಂದು ಷಡ್ಯಂತ್ರ ನಡೆಸಲಾಗಿದೆ. ರಾಜಕೀಯಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ ಎಂದರು.
3
+ ರೇವಣ್ಣ ಅವರ ವಿರುದ್ಧ ಸಾವಿರ ಎಫ್‍ಐಆರ್ ಬೇಕಾದರೂ ಹಾಕಲಿ, ಅವರೇನು ಎಂಬುದು ಜನರಿಗೆ ಗೊತ್ತಿದೆ, ರೇವಣ್ಣ ಅವರು ಏನೆಂಬುದು ಹಾಸನ ಜಿಲ್ಲೆ ಹಾಗೂ ಹೊಳೆನರಸೀಪುರ ತಾಲೂಕಿನ ಜನರಿಗೆ ಗೊತ್ತಿದೆ. ರೇವಣ್ಣ ಅವರು ಈ ರೀತಿಯ ರಾಜಕಾರಣ ಮಾಡಿದವರಲ್ಲ. ರಾಜಕೀಯ ದುರುದ್ದೇಶದಿಂದ ಈ ರೀತಿಯ ಮಾಡಲಾಗುತ್ತಿದೆ. ತಮ್ಮ ಕುಟುಂಬದ ವಿರುದ್ಧ ಆರೋಪಗಳನ್ನು ಹೊರಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
4
+ ಪೆನ್‍ಡ್ರೈವ್ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈ ವಿಚಾರವಾಗಿ ಸರ್ಕಾರ ಎಸ್‍ಐಟಿ ತನಿಖೆಗೆ ವಹಿಸಿದೆ. ಅದರ ಬಗ್ಗೆ ಹೆಚ್ಚು ಪ್ರತಿಕ್ರಿಯಿಸುವುದಿಲ್ಲ . ಸಂಸದ ಪ್ರಜ್ವಲ್ ರೇವಣ್ಣ ಅವರ ಬಗ್ಗೆ ಯಾವ ಮಾಹಿತಿಯೂ ಇಲ್ಲ ಎಂದು ಹೇಳಿದರು. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ಬಗ್ಗೆ ಹಾಸನದಲ್ಲಿ ಯಾವುದೇ ಪ್ರತಿರೋಧವಿಲ್ಲ ಎಂದರು. ಯಾರು ಏನು ಬೇಕಾದರೂ ಹೇಳಲಿ, ತನಿಖೆಯ ಬಳಿಕ ಸತ್ಯಾಂಶ ಗೊತ್ತಾಗಲಿದೆ ಎಂದರು.
5
+ ಜೆಡಿಎಸ್ ಕಾರ್ಯಕರ್ತರಲ್ಲಿ ಯಾವುದೇ ಗೊಂದಲವಿಲ್ಲ, ನಿನ್ನೆ ಕೂಡ ಪಕ್ಷದ ಕಾರ್ಯಕರ್ತರ ಸಭೆಯನ್ನು ನಡೆಸಿದ್ದೇವೆ. ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ ಎಂದು ತಿಳಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಬಗ್ಗೆ ಸೂರಜ್, ಯಾರು ಏನು ಬೇಕಾದರೂ ಮಾಡಿಕೊಳ್ಳಲಿ, ಎಸ್‍ಐಟಿ ರಚನೆಯಾಗಿದೆ, ಅದು ಯಾವ ಉದ್ದೇಶಕ್ಕೋಸ್ಕರ ರಚನೆಯಾಗಿದೆ, ಅದರಲ್ಲಿ ಏನು ಸಾಬೀತಾಗುತ್ತದೋ ಕಾದು ನೋಡೋಣ ಎಂದರು.
6
+ ಡಿ.ಕೆ.ಶಿವಕುಮಾರ್‍ರವರನ್ನು ಜನವರಿಯಲ್ಲಿ ಅನುದಾನ ಹಾಗೂ ಎಲ್‍ಓಸಿ ವಿಷಯವಾಗಿ ನಮ್ಮ ಜಿಲ್ಲೆಯ ಪ್ರತಿನಿಧಿಯಾಗಿ ಭೇಟಿ ಮಾಡಿದ್ದೆ. ಈಗ ಹೇಗೆ ಭೇಟಿ ಮಾಡಲು ಸಾಧ್ಯ? ಕಳೆದ ಒಂದೂವರೆ ತಿಂಗಳಿನಿಂದ ಚುನಾವಣಾ ಕಾರ್ಯದಲ್ಲಿ ನಿರತರಾಗಿದ್ದೆವು, ಬೆಂಗಳೂರಿನ ಕಡೆ ಹೋಗಿಲ್ಲ, ಡಿ.ಕೆ.ಶಿವಕುಮಾರ್‍ರನ್ನಷ್ಟೇ ಅಲ್ಲ ಬೇರೆ ಯಾವ ರಾಜಕಾರಣಿಯನ್ನೂ ಭೇಟಿಯಾಗುವ ಸಂದರ್ಭ ಬಂದಿಲ್ಲ. ಈ ಹಿಂದೆ ನಮ್ಮ ಜಿಲ್ಲೆ ಅಭಿವೃದ್ಧಿಯ ವಿಚಾರವಾಗಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು ನಿಜ ಎಂದು ಹೇಳಿದರು.
eesanje/url_46_160_5.txt ADDED
@@ -0,0 +1,7 @@
 
 
 
 
 
 
 
 
1
+ ರಾಜಕೀಯ ಲೆಕ್ಕಾಚಾರ ಚರ್ಚೆ ಜೊತೆಗೆ ಬೆಟ್ಟಿಂಗ್ ಭರಾಟೆ
2
+ ಬೆಂಗಳೂರು,ಮೇ.2- ಇದೇ ಮೇ 7 ರಂದು ಚುನಾವಣೆ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರದ ಅಬ್ಬರ ಜೋರಾಗಿದ್ದರೆ, ಈಗಾಗಲೇ ಚುನಾವಣೆ ಮುಗಿದಿರುವ 14 ಕ್ಷೇತ್ರಗಳಲ್ಲಿ ಸೋಲು-ಗೆಲುವಿನ ಲೆಕ್ಕಾಚಾರದ ಜೊತೆಗೆ ಬೆಟ್ಟಿಂಗ್ ಭರಾಟೆಯೂ ಜೋರಾಗಿದೆ. ಚುನಾವಣೆ ಮುಗಿದ ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ ಕ್ಷೇತ್ರಗಳಲ್ಲಿ ಈಗ ಸೋಲು-ಗೆಲುವಿನ ಲೆಕ್ಕಾಚಾರ ನಡೆಯುತ್ತಿದೆ.
3
+ ಹಲವು ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಬೆಟ್ಟಿಂಗ್‍ಗಳ ಚರ್ಚೆಯೂ ಜೋರಾಗಿದೆ. ಜನರು ಇನ್ನೂ ಮತದಾನದ ಗುಂಗಿನಿಂದ ಹೊರಬಂದಂತಿಲ್ಲ. ಪಾರ್ಕ್, ಹೋಟೆಲ್, ಅಂಗಡಿ, ಬಸ್ ನಿಲ್ದಾಣ, ಆಸ್ಪತ್ರೆ, ಜನನಿಬಿಡ ಪ್ರದೇಶಗಳು ಎಲ್ಲಾ ಕಡೆಯೂ ಚುನಾವಣೆಯ ಮಾತುಗಳೇ, ಸೋಲು-ಗೆಲುವಿನ ಲೆಕ್ಕಾಚಾರಗಳೇ, ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ. ಮೈತ್ರಿ ಅಭ್ಯರ್ಥಿಯ ಗೆಲುವು ಖಚಿತ ಎಂಬ ಚರ್ಚೆಗಳೇ ನಡೆದಿವೆ.
4
+ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ, ಹೆಚ್ಚು ಮತದಾನವಾಗಿರುವ ಕ್ಷೇತ್ರಗಳಲ್ಲಿ ಯಾವ ಪಕ್ಷ ಗೆಲ್ಲಲಿದೆ, ಯಾವ ಅಭ್ಯರ್ಥಿ ಈ ಬಾರಿ ಫೇವರಿಟ್ ಎಂಬ ಚರ್ಚೆಗಳ ಜೊತೆಗೆ ಜೂನ್ 4 ರಂದು ಪ್ರಕಟವಾಗುವ ಫಲಿತಾಂಶಕ್ಕೆ ಬಾಜಿ ಕಟ್ಟುವುದು ಕೂಡ ಕಂಡುಬರುತ್ತಿದೆ. ಯಾವ ಕ್ಷೇತ್ರಗಳಲ್ಲಿ ಜೋರಾಗಿ ಚುನಾವಣೆ ನಡೆದಿದೆ, ಯಾರ್ಯಾರು ಎಷ್ಟೆಷ್ಟು ಹಣ ಹಂಚಿದರು, ಎಲ್ಲೆಲ್ಲಿ ಕಡಿಮೆ ಮತದಾನ ಆಗಿದೆ, ಯಾರು ಗೆಲ್ಲಬಹುದು, ಯಾರು ಸೋಲಬಹುದು… ಇತ್ಯಾದಿ ಚರ್ಚೆಗಳು ಎಲ್ಲಾ ಕಡೆ ಕೇಳಿಬರುತ್ತಲೇ ಇವೆ.
5
+ ಬೆಳಿಗ್ಗೆ ವಾಕ್ ಮಾಡುವ ಪ್ರದೇಶಗಳಿಂದ ಹಿಡಿದು ರಾತ್ರಿ ನಿದ್ದೆ ಮಾಡುವವರೆಗೂ ಕೂಡ ರಾಜಕೀಯದ್ದೇ ಚರ್ಚೆ. ಹೈ ಪ್ರೊಫೈಲ್ ಕ್ಷೇತ್ರಗಳಾದ ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ, ತುಮಕೂರು ಕ್ಷೇತ್ರಗಳಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿಯೇ ಸಾಗಿದೆ. ಜೊತೆಗೆ ಬಾಜಿ ಕಟ್ಟುವುದೂ ಕೂಡ ಹೆಚ್ಚಾಗಿ ಕಂಡುಬರುತ್ತಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಡಾ.ಮಂಜುನಾಥ್ ಅವರು ಗೆಲ್ಲುತ್ತಾರೆ ಎಂಬ ಅಭಿಪ್ರಾಯವನ್ನು ಹಲವರು ವ್ಯಕ್ತಪಡಿಸಿದರು. ಸುರೇಶ್ ಸೋಲಲು ಸಾಧ್ಯವೇ ಇಲ್ಲ ಎಂಬ ಅಭಿಪ್ರಾಯ ಹಲವರದ್ದಾಗಿದೆ. ಈ ನಿಟ್ಟಿನಲ್ಲಿ ಬಹುತೇಕ ಕಡೆ ಚರ್ಚೆಗಳು ಸಾಗಿವೆ.
6
+ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲೂ ಕೂಡ ರಾಜಕೀಯ ಲೆಕ್ಕಾಚಾರಗಳು, ಸೋಲು-ಗೆಲುವಿನ ಮಾತುಕತೆಗಳೇ ನಡೆಯುತ್ತಿವೆ. ಮಳೆ ಬಂದಿಲ್ಲ. ಬೇಸಿಗೆ ವಿಪರೀತವಾಗಿದೆ. ರೈತಾಪಿ ವರ್ಗ ಸೇರಿದಂತೆ ಜನರಿಗೆ ಕೆಲಸವೂ ಕಡಿಮೆ. ಈಗ ರಾಜಕೀಯ ಚರ್ಚೆಗೆ ವೇದಿಕೆಯಾಗಿದೆ. ಎಲ್ಲಾ ಕ್ಷೇತ್ರಗಳಲ್ಲಿ ಎನ್‍ಡಿಎ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ನೇರ ಸ್ಪರ್ಧೆ ಇದ್ದು, ಭಾರೀ ಪ್ರಚಾರ, ಜಿದ್ದಾಜಿದ್ದಿನ ಪೈಪೋಟಿ ನಡೆಯಿತು.ಬೃಹತ್ ಸಮಾವೇಶಗಳು, ರೋಡ್ ಶೋ, ರ್ಯಾಲಿಗಳ ಮೂಲಕ ಶಕ್ತಿ ಪ್ರದರ್ಶನ ಮಾಡಲಾಯಿತು. ಬಿಜೆಪಿ-ಜೆಡಿಎಸ್ ಮೈತ್ರಿ ಕಾಂಗ್ರೆಸ್‍ನ ಭಾರೀ ಸಮಾವೇಶಗಳು ನಡೆದವು. ಹಲವು ಪಕ್ಷೇತರರು ಕಣದಲ್ಲಿ ಉಳಿದರೆ ಇನ್ನೂ ಕೆಲವರು ಚುನಾವಣೆಗೂ ಮುನ್ನವೇ ಕಣದಿಂದ ಹಿಂದೆ ಸರಿದರು. ಹೀಗಾಗಿ ಚುನಾವಣೆಯಲ್ಲಿ ಎನ್‍ಡಿಎ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿತು.
7
+ ಈ ನೇರ ಸ್ಪರ್ಧೆಯಲ್ಲಿ ಫಲಿತಾಂಶ ಏನಾಗಲಿದೆ ಎಂಬ ಕುತೂಹಲ ತೀವ್ರಗೊಂಡಿದೆ. ರಾಜಕೀಯ ಲೆಕ್ಕಾಚಾರಗಳು ಬಿರುಸಾಗಿವೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬಾರ್, ಕ್ಲಬ್, ಹೋಟೆಲ್‍ಗಳಲ್ಲಿ ಲಕ್ಷಾಂತರ ರೂಪಾಯಿ ಬೆಟ್ಟಿಂಗ್ ನಡೆಯುತ್ತಿದೆ. ಫಲಿತಾಂಶ ಪ್ರಕಟವಾಗಲು ಇನ್ನೂ 32 ದಿನ ಬಾಕಿ ಇರುವಂತೆಯೇ ಸೋಲು-ಗೆಲುವಿನ ಲೆಕ್ಕಾಚಾರ ಬಿರುಸುಗೊಂಡಿರುವುದರ ಜೊತೆಗೆ ತಮ್ಮತಮ್ಮ ಅಭ್ಯರ್ಥಿಗಳ ಗೆಲುವಿನ ವಿಶ್ವಾಸದ ಬಗ್ಗೆ ಬೆಂಬಲಿಗರು, ಕಾರ್ಯಕರ್ತರು ಬಾಜಿ ಕಟ್ಟುವುದೂ ಕೂಡ ಹೆಚ್ಚಾಗುತ್ತಿದೆ.