60fc1a4be857d863c132fbc142df10b2390b5776e95ec6903d202b15f4123654
Browse files- eesanje/url_46_188_11.txt +5 -0
- eesanje/url_46_188_12.txt +7 -0
- eesanje/url_46_188_2.txt +5 -0
- eesanje/url_46_188_3.txt +4 -0
- eesanje/url_46_188_4.txt +9 -0
- eesanje/url_46_188_5.txt +15 -0
- eesanje/url_46_188_6.txt +5 -0
- eesanje/url_46_188_7.txt +4 -0
- eesanje/url_46_188_8.txt +7 -0
- eesanje/url_46_188_9.txt +9 -0
- eesanje/url_46_189_1.txt +11 -0
- eesanje/url_46_189_10.txt +6 -0
- eesanje/url_46_189_11.txt +5 -0
- eesanje/url_46_189_12.txt +8 -0
- eesanje/url_46_189_2.txt +4 -0
- eesanje/url_46_189_3.txt +7 -0
- eesanje/url_46_189_4.txt +8 -0
- eesanje/url_46_189_5.txt +5 -0
- eesanje/url_46_189_6.txt +6 -0
- eesanje/url_46_189_7.txt +5 -0
- eesanje/url_46_189_8.txt +5 -0
- eesanje/url_46_189_9.txt +8 -0
- eesanje/url_46_18_1.txt +7 -0
- eesanje/url_46_18_10.txt +11 -0
- eesanje/url_46_18_11.txt +7 -0
- eesanje/url_46_18_12.txt +6 -0
- eesanje/url_46_18_2.txt +8 -0
- eesanje/url_46_18_3.txt +7 -0
- eesanje/url_46_18_4.txt +7 -0
- eesanje/url_46_18_5.txt +6 -0
- eesanje/url_46_18_6.txt +11 -0
- eesanje/url_46_18_7.txt +5 -0
- eesanje/url_46_18_8.txt +8 -0
- eesanje/url_46_18_9.txt +7 -0
- eesanje/url_46_190_1.txt +8 -0
- eesanje/url_46_190_10.txt +7 -0
- eesanje/url_46_190_11.txt +4 -0
- eesanje/url_46_190_12.txt +6 -0
- eesanje/url_46_190_2.txt +9 -0
- eesanje/url_46_190_3.txt +10 -0
- eesanje/url_46_190_4.txt +7 -0
- eesanje/url_46_190_5.txt +5 -0
- eesanje/url_46_190_7.txt +5 -0
- eesanje/url_46_190_8.txt +6 -0
- eesanje/url_46_190_9.txt +5 -0
- eesanje/url_46_191_1.txt +6 -0
- eesanje/url_46_191_10.txt +8 -0
- eesanje/url_46_191_11.txt +8 -0
- eesanje/url_46_191_12.txt +7 -0
- eesanje/url_46_191_2.txt +8 -0
eesanje/url_46_188_11.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಕೆಪಿಎಸ್ಸಿ ಸದಸ್ಯತ್ವ ಕೊಡಿಸುವುದಾಗಿ 4.10 ಕೋಟಿ ವಂಚಿಸಿದ್ದ ನಾಲ್ವರ ಬಂಧನ
|
2 |
+
ಬೆಂಗಳೂರು, ಏ.2-ಕೆಪಿಎಸ್ಸಿ ಸದಸ್ಯತ್ವ ಕೊಡಿಸುವುದಾಗಿ ಮಹಿಳೆಯನ್ನು ನಂಬಿಸಿ 4.10 ಕೋಟಿ ರೂ. ಪಡೆದುಕೊಂಡು ಸಿಎಂ, ರಾಜ್ಯಪಾಲರ ನಕಲಿ ಸಹಿ ಇರುವ ನಡಾವಳಿ ಪತ್ರವನ್ನು ನೀಡಿ ವಂಚಿಸಿದ್ದ ಏಳು ಮಂದಿಯ ಪೈಕಿ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
|
3 |
+
ರಿಯಾಜ್ ಅಹಮ್ಮದ್ (41), ಯೂಸುಫ್ ಸುಬ್ಬೇಕಟ್ಟೆ (47), ಚಂದ್ರಪ್ಪ (44) ಮತ್ತು ರುದ್ರೇಶ್ (35) ಬಂತ ವಂಚಕರು. ಪ್ರಮುಖ ಆರೋಪಿ ರಿಯಾಜ್ ಎಂಬಾತ ತಮ್ಮ ಸ್ನೇಹಿತರಾದ ಯುಸೂಫ್, ಚೇತನ್ ಶಂಕರ್, ಚಂದ್ರಪ್ಪ, ಮಹೇಶ್, ರುದ್ರೇಶ ಮತ್ತು ಹರ್ಷವರ್ಧನ ರೊಂದಿಗೆ ಸೇರಿಕೊಂಡು ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಸದಸ್ಯತ್ವ ಕೊಡಿಸುವುದಾಗಿ ನೀಲಮ್ಮ ಎಂ ಬೆಳಮಗಿ(54) ಎಂಬುವವರಿಗೆ ನಂಬಿಸಿ ಅದಕ್ಕೆ 5ಕೋಟಿ ಕೊಡಬೇಕಾಗುವುದು ಎಂದು ಹೇಳಿದ್ದಾರೆ.
|
4 |
+
ಇವರ ಮಾತನ್ನು ನಂಬಿದ ನೀಲಮ್ಮ ಅವರು ಹಂತ ಹಂತವಾಗಿ ಒಟ್ಟು 4.10 ಕೋಟಿ ರೂ.ಗಳನ್ನು ನಗದು ರೂಪದಲ್ಲಿ ಹಾಗೂ ಬ್ಯಾಂಕ್ ಖಾತೆಯ ಮೂಲಕ ವರ್ಗಾವಣೆ ಮಾಡಿದ್ದಾರೆ.ಈ ವಂಚಕರು ಹಣವನ್ನು ಪಡೆದುಕೊಂಡು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯತ್ವ ಸಂಬಂಧ ಮುಖ್ಯಮಂತ್ರಿ ಟಿಪ್ಪಣಿ, ನಡಾವಳಿ, ನಕಲಿ ಸಹಿಗಳನ್ನು ಮಾಡಿ, ರಾಜ್ಯಪಾಲರ ಹೆಸರಿನಲ್ಲಿ ಸುಳ್ಳು ರಾಜ್ಯಪತ್ರವನ್ನು ಸೃಷ್ಟಿಸಿ ಮೋಸ ಮಾಡಿರುವುದು ನೀಲಮ್ಮ ಅವರಿಗೆ ಗೊತ್ತಾಗಿದೆ.
|
5 |
+
ತಕ್ಷಣ ಅವರು ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ವಂಚಕರ ಜಾಲದ ಬಗ್ಗೆ ಮಾಹಿತಿಗಳನ್ನು ಕಲೆಹಾಕಿ ಪ್ರಮುಖ ಆರೋಪಿ ಸೇರಿದಂತೆ ನಾಲ್ಕು ಮಂದಿಯನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿ ಉಳಿತ ಆರೋಪಿಗಳ ಪತ್ತೆಗಾಗಿ ಶೋಧ ಮುಂದುವರೆಸಿದ್ದಾರೆ. ಈ ಕಾರ್ಯಾಚರಣೆಯನ್ನು ಸಿಸಿಬಿ ಆರ್ಥಿಕ ಅಪರಾಧ ದಳದ ಅಧಿಕಾರಿ ಮತ್ತು ಸಿಬ್ಬಂದಿ ಯಶಸ್ವಿಯಾಗಿ ಕೈಗೊಂಡಿರುತ್ತಾರೆ.
|
eesanje/url_46_188_12.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಕೆಪಿಸಿಸಿ ಪುನಾರಚನೆ ಬೆನ್ನಲ್ಲೇ ಶುರುವಾಯ್ತು ಅಸಮಾಧಾನ
|
2 |
+
ಬೆಂಗಳೂರು,ಏ.2-ಕೆಪಿಸಿಸಿ ಪದಾಧಿಕಾರಿಗಳ ಬದಲಾವಣೆಯ ಬೆನ್ನಲ್ಲೇ ಅಸಮಾಧಾನ ಹೊಗೆಯಾಡಲಾರಂಭಿಸಿದ್ದು, ಜಿಲ್ಲಾಧ್ಯಕ್ಷರ ಬದಲಾವಣೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.ಇಂದು ಬೆಳಿಗ್ಗೆ ಪ್ರಕಟಿಸಲಾದ ಪಟ್ಟಿಯಲ್ಲಿ ಕಾಂಗ್ರೆಸ್ ಪಕ್ಷ 43 ಉಪಾಧ್ಯಕ್ಷರು, 138 ಮಂದಿ ಪ್ರಧಾನ ಕಾರ್ಯದರ್ಶಿಗಳನ್ನು ನಿಯೋಜಿಸಿದೆ.
|
3 |
+
ನಿನ್ನೆ 7 ಜಿಲ್ಲೆಗಳ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗಿತ್ತು. ಅದಕ್ಕೂ ಮುನ್ನ ಐವರು ಕಾರ್ಯಾಧ್ಯಕ್ಷರುಗಳನ್ನು ನೇಮಿಸಲಾಗಿದೆ. ರಾಜ್ಯ ನಾಯಕರು ಸಾಮಾಜಿಕ ನ್ಯಾಯವನ್ನು ಆಧಾರವಾಗಿಟ್ಟುಕೊಂಡು ನೇಮಕಾತಿ ಮಾಡಿದ್ದಾರೆ. ಆದರೆ ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಹಾಗೂ ಸ್ಥಳೀಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂಬ ಆಕ್ಷೇಪಗಳು ಕೇಳಿಬಂದಿವೆ.
|
4 |
+
ಉಡುಪಿ ಮತ್ತು ರಾಯಚೂರು ಜಿಲ್ಲಾಧ್ಯಕ್ಷ ಬದಲಾವಣೆಗೆ ಸ್ಥಳೀಯವಾಗಿ ಆಕ್ಷೇಪಗಳು ಕೇಳಿಬಂದಿವೆ. ರಾಯಚೂರು ಜಿಲ್ಲಾಧ್ಯಕ್ಷರ ನೇಮಕದ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂಬ ಆರೋಪ ಕೇಳಿಬಂದಿದ್ದರೆ, ಉಡುಪಿ ಜಿಲ್ಲಾಧ್ಯಕ್ಷರ ನೇಮಕಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ ಎಂದು ತಿಳಿದುಬಂದಿದೆ.
|
5 |
+
ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಈ ನೇಮಕಾತಿಗಳು ಭಾರೀ ಸಂಚಲನ ಸೃಷ್ಟಿಸಿವೆ. ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರು, ನಿಗಮ ಮಂಡಳಿಗಳಲ್ಲಿ ಅವಕಾಶ ಸಿಗದೇ ಇದ್ದವರಿಗೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಆಕಾಂಕ್ಷಿಗಳಾಗಿ ಕೊನೆ ಕ್ಷಣದಲ್ಲಿ ಟಿಕೆಟ್ ತಪ್ಪಿಸಿಕೊಂಡವರಿಗೆ ಪದಾಧಿಕಾರಿಗಳ ಪಟ್ಟಿಯಲ್ಲಿ ಅವಕಾಶ ಕಲ್ಪಿಸಲಾಗಿದೆ.
|
6 |
+
ನಾಯಕತ್ವದ ನಿರ್ಧಾರಗಳನ್ನು ಪ್ರಶ್ನಿಸಿ ತಿರುಗಿಬಿದ್ದಿರುವ ಕೆಲ ಪ್ರಮುಖರನ್ನು ನೂತನ ಪಟ್ಟಿಯಿಂದ ಕೈಬಿಡಲಾಗಿದೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ವಂಚಿತರಾಗಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ವಿರುದ್ಧ ಕಣಕ್ಕಿಳಿಯುವ ಬಂಡಾಯ ಅಭ್ಯರ್ಥಿಯಾಗಿ ಮುನ್ಸೂಚನೆ ನೀಡಿದ್ದ ವೀಣಾ ಕಾಶಪ್ಪನವರ್ ಅವರಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.ಮಂಡ್ಯದಲ್ಲಿ ಬಂಡಾಯ ಸಾರಿ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದ ಡಾ.ರವೀಂದ್ರ ಅವರಿಗೆ ಪದಾಧಿಕಾರಿ ಹುದ್ದೆಯಿಂದ ಕೊಕ್ ನೀಡಲಾಗಿದೆ.
|
7 |
+
ಕೋಲಾರದಲ್ಲಿ ಅವಕಾಶ ವಂಚಿತರಾದ ಮುದ್ದು ಗಂಗಾಧರ್ ಅವರಿಗೆ ಕಾರ್ಯದರ್ಶಿ ಹುದ್ದೆಯಿಂದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಲಾಗಿದೆ. ಹಲವಾರು ನೇಮಕಾತಿಗಳು ಅತೃಪ್ತರನ್ನು ಸಮಾಧಾನಪಡಿಸುವ ಸಲುವಾಗಿ ನಡೆದಿದ್ದು, ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕತೆಗೆ ಆದ್ಯತೆ ನೀಡಲಾಗಿದೆ. ಅದರ ಹೊರತಾಗಿಯೂ ಕೆಲವರಿಗೆ ಅವಕಾಶ ಸಿಕ್ಕಿಲ್ಲ. ���ತ್ತೆ ಕೆಲವು ಕಡೆ ಪಕ್ಷನಿಷ್ಠರಿಗೆ ಮಣೆ ಹಾಕಿಲ್ಲ ಎಂಬ ದೂರುಗಳು ಕಂಡುಬಂದಿವೆ.ಯಥಾರೀತಿ ಕುಟುಂಬ ರಾಜಕಾರಣ ಮತ್ತು ಪ್ರಭಾವಿಗಳ ಮಕ್ಕಳಿಗೆ ಆದ್ಯತೆ ನೀಡಲಾಗಿದೆ ಎಂಬ ಟೀಕೆಗಳು ಕೇಳಿಬಂದಿವೆ.
|
eesanje/url_46_188_2.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ನನಗೂ ಯಾರ ಅವಶ್ಯಕತೆ ಇಲ್ಲ : ಡಿಕೆಶಿಗೆ ಸುಮಲತಾ ತಿರುಗೇಟು
|
2 |
+
ಬೆಂಗಳೂರು, ಏ.4-ಕೆಪಿಸಿಸಿ ಅಧ್ಯಕ್ಷರು ಈಗಾಗಲೇ ಹೇಳಿಕೆ ನೀಡಿ ಸುಮಲತಾ ಅವಶ್ಯಕತೆ ತಮಗೆ ಇಲ್ಲ ಎಂದು ಹೇಳಿದ್ದಾರೆ. ಅದೇ ರೀತಿ ತಮಗೂ ಯಾರ ಅವಶ್ಯಕತೆಯೂ ಇಲ್ಲ ಎಂದು ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಮಂಡ್ಯಕ್ಕೆ ತೆರಳುವ ಮುನ್ನಾ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಅವಶ್ಯಕತೆ ಅವರಿಗೆ ಇಲ್ಲ ಎಂದು ಹೇಳಿದಂತೆಯೇ, ನನಗೂ ಯಾರ ಅವಶ್ಯಕತೆಯೂ ಇಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
|
3 |
+
ನಾನು ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದರೆ ಸುಮಲತಾ ಏಕೆ ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳಬೇಕು ಎಂದು ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸುಮಲತಾ, ಯಾರು ಕುಂಬಳ ಕಾಯಿ ಕಳ್ಳ ಎಂದು ದೇಶಕ್ಕೆ ಗೊತ್ತಿದೆ. ಈ ಹಂತದಲ್ಲಿ ಅವರು ಒಂದು ರೀತಿ ಹೇಳಿಕೆ ನೀಡುವುದು, ನಾನು ಮತ್ತೊಂದು ರೀತಿ ಹೇಳುವುದು ಬೇಕಿಲ್ಲ. ಮಂಡ್ಯಲೋಕಸಭಾ ಕ್ಷೇತ್ರ ಕುರಿತು ನನ್ನ ನಿರ್ಧಾರವನ್ನು ಅಲ್ಲಿ ಸಭೆ ನಡೆಸಿದ ಬಳಿಕವೇ ಪ್ರಕಟಿಸುತ್ತೇನೆ ಎಂದು ಹೇಳಿದರು.
|
4 |
+
ಮೊನ್ನೆ ತಮ್ಮನ್ನು ಭೇಟಿ ಮಾಡಿದ ಮಂಡ್ಯದ ಕಾರ್ಯಕರ್ತರು ಮೂರ್ನಾಲ್ಕು ರೀತಿಯ ಅಭಿಪ್ರಾಯಗಳನ್ನು ನೀಡಿದ್ದಾರೆ. ಕೆಲವು ನಾಯಕರ ಜೊತೆಗೆ ರಹಸ್ಯ ಸಭೆ ನಡೆದಿದೆ. ಅದನ್ನೆಲ್ಲಾ ಬಹಿರಂಗ ಪಡಿಸಲಾಗುವುದಿಲ್ಲ. ಕೆಲವರು ಪಕ್ಷೇತರವಾಗಿ ಸ್ಪರ್ಧಿಸಬೇಕು ಎಂದು ಒತ್ತಡ ಹೇರುತ್ತಿದ್ದಾರೆ. ಜೆಡಿಎಸ್ನ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮ್ಮನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಈ ಎಲ್ಲವನ್ನೂ ದೃಷ್ಟಿಯಲ್ಲಿಟ್ಟುಕೊಂಡೇ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಸ್ಪಷ್ಟ ಪಡಿಸಿದರು.
|
5 |
+
ನಾವು ಅಧಿಕಾರಕ್ಕೆ ರಾಜಕೀಯವಾಗಿ ಅಂಟಿಕೊಂಡಿಲ್ಲ. ತಮ್ಮ ಪತಿ ಕೇಂದ್ರ ಸಚಿವರಾಗಿದ್ದಾಗ ಕಾವೇರಿ ವಿವಾದ ಸೃಷ್ಟಿಯಾಗಿತ್ತು. ಎರಡೇ ತಿಂಗಳಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. 2018ರಲ್ಲಿ ಕಾಂಗ್ರೆಸ್ ಕೊಟ್ಟ ಬಿ-ಫಾರಂ ಅನ್ನು ವಾಪಸ್ ನೀಡಿದ್ದರು. ಅವರಂತೆಯೇ ನಾವು ಸ್ವಾರ್ಥ ರಾಜಕಾರಣ ಮತ್ತು ಅಧಿಕಾರಕ್ಕೆ ಅಂಟಿಕೊಂಡಿಲ್ಲ ಎಂದ ಸುಮಲತಾ, ಇಂದು ಮಂಡ್ಯದ ಸಭೆಗೆ ತಮ್ಮೊಂದಿಗೆ ದರ್ಶನ್ ಮತ್ತು ಅಭಿಷೇಕ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
|
eesanje/url_46_188_3.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಟಿಕೆಟ್ ಮೂಲಕ ಕೆಎಸ್ಆರ್ಟಿಸಿಯಿಂದ ಮತದಾನ ಜಾಗೃತಿ
|
2 |
+
ಬೆಂಗಳೂರು, ಏ.3-ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಸಿದಂತೆ ಕೆಎಸ್ಆರ್ಟಿಸಿ ಪ್ರಯಾಣಿಕರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಮತದಾನ ನಮ್ಮೆಲ್ಲರ ಹಕ್ಕು. ಏ. 26 ಮತ್ತು ಮೇ 7 ರಂದು ತಪ್ಪದೇ ಮತದಾನ ಮಾಡಿ ಎಂಬ ಸಂದೇಶವನ್ನು ಕೆಎಸ್ಆರ್ಟಿಸಿ ನೀಡುತ್ತಿದೆ.
|
3 |
+
ಪ್ರಯಾಣಿಕರಿಗೆ ನೀಡುವ ಟಿಕೆಟ್ನಲ್ಲಿ ಈ ಮಾಹಿತಿ ಮುದ್ರಿಸಲಾಗುತ್ತಿದೆ. ಕಳೆದ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲೂ ಇದೇ ರೀತಿ ಕೆಎಸ್ಆರ್ಟಿಸಿಯು ಮತದಾನದ ಬಗ್ಗೆ ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸಿತ್ತು.
|
4 |
+
ಚುನಾವಣಾ ಆಯೋಗವು ಮತದಾರರಲ್ಲಿ ಮತದಾನದ ಮಹತ್ವದ ಬಗ್ಗೆ ಜಾಥಾ ಸೇರಿದಂತೆ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಯಲ್ಲಿ ಗರಿಷ್ಠ ಪ್ರಮಾಣದಲ್ಲಿ ಮತದಾನ ಮಾಡಬೇಕು ಎಂಬುದು ಆಯೋಗದ ಆಶಯವಾಗಿದೆ.
|
eesanje/url_46_188_4.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಘಟಾನುಘಟಿ ನಾಯಕರ ಶಕ್ತಿ ಪ್ರದರ್ಶನ : ನಾಮಪತ್ರ ಸಲ್ಲಿಕೆ ಭರಾಟೆ
|
2 |
+
ಬೆಂಗಳೂರು, ಏ.3-ಪ್ರಸಕ್ತ ಲೋಕಸಭಾ ಚುನಾವಣೆಯ ಮೊದಲ ಹಂತದ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ನಾಳೆ ಕಡೆಯ ದಿನವಾಗಿದ್ದು, ಇಂದು ವಿವಿಧ ರಾಜಕೀಯ ಪಕ್ಷಗಳ ಹಾಗೂ ಸ್ವತಂತ್ರ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿತ್ತು. ಘನಾಘಟಿ ನಾಯಕರು ನಾಮಪತ್ರ ಸಲ್ಲಿಕೆ ಮೂಲಕ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಇದರಿಂದ ಲೋಕಸಭಾ ಚುನಾವಣಾ ಕಣ ರಂಗೇರತೊಡಗಿದೆ.
|
3 |
+
ನಾಮಪತ್ರ ಸಲ್ಲಿಕೆಗೂ ಮುನ್ನ ದೇವಾಲಯಗಳಲ್ಲಿ ಕೆಲವು ಅಭ್ಯರ್ಥಿಗಳು ಪೂಜೆ ಸಲ್ಲಿಸಿ,ಅನಂತರ ರೋಡ್ ಶೋ ನಡೆಸಿದರು. ಶಕ್ತಿ ಪ್ರದರ್ಶನ ಮೂಲಕ ಕೆಲವರು ನಾಮಪತ್ರ ಸಲ್ಲಿಸಿದ್ದರೆ, ಮತ್ತೆ ಕೆಲವರು ಯಾವುದೇ ಶಕ್ತಿ ಪ್ರದರ್ಶನವಿಲ್ಲದೆ, ಸರಳವಾಗಿ ಉಮೇದುವಾರಿಕೆ ಸಲ್ಲಿಸಿದರು. ಬಹಳಷ್ಟು ಅಭ್ಯರ್ಥಿಗಳು ರೋಡ್ ಶೋ, ಸಾರ್ವಜನಿಕ ಸಭೆ ಬಳಿಕ ಆಯಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
|
4 |
+
ರೋಡ್ ಶೋ ಹಾಗೂ ನಾಮಪತ್ರ ಸಲ್ಲಿಸುವ ವೇಳೆ ಆಯಾ ಪಕ್ಷದ ನಾಯಕರು, ಮುಖಂಡರು ಅಭ್ಯರ್ಥಿಗಳಿಗೆ ಸಾಥ್ ನೀಡಿದರು. ಇಂದು ಉಮೇದುವಾರಿಕೆ ಸಲ್ಲಿಸಿದವರಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮೈಸೂರು ರಾಜ ವಂಶಸ್ಥ ಯದುವೀರ್ ಕೃಷ್ಣರಾಜದತ್ತ ಒಡೆಯರ್, ಮಾಜಿ ಸಚಿವ ವಿ.ಸೋಮಣ್ಣ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಪ್ರಮುಖರಾಗಿದ್ದಾರೆ.
|
5 |
+
ಮಾರ್ಚ್ 28ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದ್ದು, ನಿನ್ನೆಯವರೆಗೆ 152 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಅದರಲ್ಲಿ 135 ಪುರುಷ, 17 ಮಹಿಳಾ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ. ಬಿಜೆಪಿಯಿಂದ 9, ಕಾಂಗ್ರೆಸ್ನಿಂದ 8, ಬಿಎಸ್ಪಿಯಿಂದ 5 ಹಾಗೂ ಜೆಡಿಎಸ್ನಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
|
6 |
+
ರಾಜಕೀಯ ಪಕ್ಷಗಳು ಅಧಿಕೃತವಾಗಿ ಅಭ್ಯರ್ಥಿಗಳನ್ನು ಘೋಷಿಸಿದ್ದರೂ ಇನ್ನೂ ಕೆಲವರು ತಮ್ಮ ಉಮೇದುವಾರಿಕೆ ಸಲ್ಲಿಸಿಲ್ಲ. ಕೆಲವರು ಶುಭದಿನ, ಮುಹೂರ್ತಕ್ಕಾಗಿ ನಾಳೆವರೆಗೂ ಕಾಯುತ್ತಿದ್ದಾರೆ. ಈಗಾಗಲೇ ಕೆಲವರು ಸಾಂಕೇತಿಕವಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದು, ಮತ್ತೊಮ್ಮೆ ರೋಡ್ ಶೋ ನಡೆಸಿ ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸುವವರೂ ಇದ್ದಾರೆ.
|
7 |
+
ಶೋಭಾಕರಂದ್ಲಾಜೆ ಅವರು ಸಂಜಯನಗರದ ರಾಧಾಕೃಷ್ಣ ದೇವಾಲಯ ಮತ್ತು ಮೈಸೂರು ಬ್ಯಾಂಕ್ ವೃತ್ತದ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ರೋಡ್ ಶೋ ನಡೆಸಿದರು. ಬಳಿಕ ನಗರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಉಮೇದುವಾರಿಕೆಯನ್ನು ಚುನಾವಣಾಕಾರಿಗಳಿಗೆ ಸಲ್ಲಿಸಿದರು.
|
8 |
+
ಮೈಸೂರಿ�� ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಯದುವೀರ್ ಕೃಷ್ಣರಾಜದತ್ತ ಒಡೆಯರ್, ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
|
9 |
+
ತುಮಕೂರು ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ರೋಡ್ ಶೋ ನಡೆಸಿದ ಬಳಿಕ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜ್, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರು ನಾಮಪತ್ರ ಸಲ್ಲಿಸಿದರು. ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ತಮ್ಮ ನಾಮಪತ್ರ ಸಲ್ಲಿಸಿದರು.ಮೈಸೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಅವರು ಬಿಬಿಎಂಪಿ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
|
eesanje/url_46_188_5.txt
ADDED
@@ -0,0 +1,15 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿಯಲ್ಲಿ ಮುಂದುವರೆದ ‘ರಾಜಾಹುಲಿ’ ಪರ್ವ
|
2 |
+
ಬೆಂಗಳೂರು,ಎ.3- ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದಿಂದ ಹೊರಗುಳಿದಿದ್ದಾರೆ ಮತ್ತು ಚುನಾವಣಾ ರಾಜಕೀಯದಲ್ಲಿ ಸಕ್ರಿಯರಾಗದಿದ್ದರೂ ಕರ್ನಾಟಕದಲ್ಲಿ ಪಕ್ಷದ ವ್ಯವಹಾರಗಳಲ್ಲಿ ಅವರ ವರ್ಚಸ್ಸು ಕಡಿಮೆಯಾಗದೆ ಉಳಿದಿದೆ. ಏಕೆಂದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಉಳಿವಿಗಾಗಿ ಕೇಂದ್ರ ನಾಯಕತ್ವ ಅನುಭವಿ ರಾಜಕಾರಣಿ ಯಡಿಯೂರಪ್ಪ ಹಿಂದೆ ಬಿದ್ದಿದೆ.
|
3 |
+
ಇದು ಅಭ್ಯರ್ಥಿಗಳ ಆಯ್ಕೆಯಾಗಿರಲಿ ಅಥವಾ ಬಹು ಕ್ಷೇತ್ರಗಳಲ್ಲಿ ತಲೆದೋರಿರುವ ಭಿನ್ನಾಭಿಪ್ರಾಯ ಶಮನಗೊಳಿಸುತ್ತಿರಲಿ, ಪಕ್ಷದ 81 ವರ್ಷ ವಯಸ್ಸಿನ ಯಡಿಯೂರಪ್ಪ ಮ್ಯಾನ್ ಆಫ್ ದಿ ಸೀಸನ್ ಆಗಿ ಕಂಡುಬರುತ್ತಾರೆ. ಅಂದಹಾಗೆ ಇವರಲ್ಲಿ ನಿಜವಾಗಿಯೂ ರಾಜಕೀಯ ಪಣ ಹೆಚ್ಚಿದೆ. ಏಕೆಂದರೆ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರ ರಾಜ್ಯಾಧ್ಯಕ್ಷ ಸ್ಥಾನವನ್ನು ಭದ್ರಪಡಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಅನುಭವಿಗಳ ಮಾತುಗಳನ್ನು ನಿರ್ಲಕ್ಷಿಸಿ ಬೇರೆಯವರಿಗೆ ಟಿಕೆಟ್ ನೀಡಿದ್ದನ್ನು ಪ್ರಶ್ನಿಸುತ್ತಿರುವ ಟೀಕಾಕಾರರನ್ನು ಮೌನಗೊಳಿಸಬೇಕಾಗಿದೆ.
|
4 |
+
ಈಗಾಗಲೇ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವ ಯಡಿಯೂರಪ್ಪ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಾಜ್ಯದಲ್ಲಿ ಪ್ರಮುಖ ವ್ಯಕ್ತಿಯನ್ನಾಗಿ ಬಿಜೆಪಿ ಕೇಂದ್ರ ನಾಯಕರು ಮಾಡಿದ್ದಾರೆ. ಒಂದು ಕಾಲದಲ್ಲಿ ನಿರ್ಲಕ್ಷ್ಯಕ್ಕೊಳಗಾಗಿದ್ದ ಯಡಿಯೂರಪ್ಪ ಅವರಿಗೆ ಈಗ ಇಷ್ಟೊಂದು ಪ್ರಾಮುಖ್ಯತೆ ಯಾಕೆ ನೀಡುತ್ತಾರೆ ಎಂಬುದಕ್ಕೆ ಕಾರಣ ಹುಡುಕಲು ಕಾಲವಿಲ್ಲ. ತಳಮಟ್ಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ನಾಲ್ಕು ಬಾರಿಯ ಮುಖ್ಯಮಂತ್ರಿ ಜನಾಕರ್ಷಣೆಯನ್ನು ಹೊಂದಿದ್ದಾರೆ ಮತ್ತು ವಿಶೇಷವಾಗಿ ರಾಜಕೀಯವಾಗಿ ಪ್ರಭಾವಿ ಲಿಂಗಾಯತ ಸಮುದಾಯದ ನಡುವೆ ಸಂಪರ್ಕವನ್ನು ಹೊಂದಿದ್ದಾರೆ. ಯಡಿಯೂರಪ್ಪ ಫ್ಯಾಕ್ಟರ್ ಸದುಪಯೋಗಪಡಿಸಿಕೊಳ್ಳಲು ಪಕ್ಷ ಮುಂದಾಗಿರುವುದು ಸ್ಪಷ್ಪವಾಗಿದೆ.
|
5 |
+
ಈ ತಿಂಗಳ ಆರಂಭದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಪ್ರಧಾನ ಮಂತ್ರಿ ಅವರನ್ನು ಅದ್ಧೂರಿಯಾಗಿ ಹೊಗಳಿದ್ದರು.
|
6 |
+
ಶಿವಮೊಗ್ಗ ಒಂದು ವಿಶೇಷವಾದ ನಾಡು:ಜನಸಂಘದ ದಿನಗಳಲ್ಲಿ ನಮ್ಮ ಬಗ್ಗೆ ಯಾರಿಗೂ ತಿಳಿದಿಲ್ಲ, ಪುರಸಭೆ ಮಟ್ಟದಲ್ಲಿಯೂ ನಮಗೆ ಸದಸ್ಯರಿಲ್ಲದಿದ್ದಾಗ – ಅಂತಹ ಸಮಯದಲ್ಲಿ ಯಡಿಯೂರಪ್ಪ ಅವರು ತಮ್ಮ ರಾಜಕೀಯ ಉಚ್ಛ್ರಾಯ ಸ್ಥಿತಿಗೆ ಬಂದರು. ಇದು ಅವರ ತಪೋಭೂಮಿ ಎಂದು ಮೋದಿ ಹೇಳಿದ್ದರು.ಕೆಲವು ರಾಜಕೀಯ ವೀಕ್ಷಕರು ಮತ್ತು ಬಿಜೆಪಿ ಒಳಗಿನವರ ಪ್ರಕಾರ, ಕಳೆದ ವರ್ಷ ಮೇನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ಅವರನ್ನು ಬದಿಗೆ ತಳ್ಳಲು ಪಕ್ಷ ಪ್ರಯತ್ನಿಸಿತು. ಇದರಿಂದಾಗಿ 224 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಾ���ಗ್ರೆಸ್ ಕೆಳಗಿಳಿಸಿತ್ತು. ಪಕ್ಷ ಕೇವಲ 66 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು.
|
7 |
+
ಭ್ರಷ್ಟಾಚಾರ ಸಮಸ್ಯೆ, ಅಲ್ಪಸಂಖ್ಯಾತರ ಮತಗಳನ್ನು ಕಾಂಗ್ರೆಸ್ ಕ್ರೋಢೀಕರಿಸಿದದ್ದು ಮತ್ತು ಲಿಂಗಾಯತರ ಒಂದು ವಿಭಾಗವು ಬಿಜೆಪಿಯಿಂದ ದೂರ ಸರಿದದ್ದು ಬಿಜೆಪಿ ಸೋಲಿಗೆ ಪ್ರಮುಖ ಅಂಶಗಳಾಗಿವೆ. ಇದರಿಂದ ಎಚ್ಚೆತ ಬಿಜೆಪಿ ಹೈಕಮಾಂಡ್ ಕಳೆದ ವರ್ಷ ನವೆಂಬರ್ನಲ್ಲಿ ವಿಜಯೇಂದ್ರ ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ಮತ್ತೊಮ್ಮೆ ಯಡಿಯೂರಪ್ಪ ಅವರ ಮೇಲೆ ನಂಬಿಕೆ ಇಟ್ಟುಕೊಳ್ಳಲು ಪ್ರಾರಂಭಿಸಿತು.
|
8 |
+
ಶಿವಮೊಗ್ಗದಲ್ಲಿ ಹಿರಿಯ ಪುತ್ರ ಬಿವೈ ರಾಘವೇಂದ್ರ, ಬೆಂಗಳೂರು ಉತ್ತರದಲ್ಲಿ ಶೋಭಾ ಕರಂದ್ಲಾಜೆ, ದಾವಣಗೆರೆಯಲ್ಲಿ ಸಂಸದ ಜಿ ಎಂ ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ, ಹಾವೇರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಚಿತ್ರದುರ್ಗದಲ್ಲಿ ಗೋವಿಂದ ಎಂ ಕಾರಜೋಳ. ಸೇರಿದಂತೆ ಹಲವು ನಿಷ್ಠಾವಂತರಿಗೆ ಟಿಕೆಟ್ ಸಿಕ್ಕಿದ್ದರಿಂದ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಡಿಯೂರಪ್ಪನವರ ಛಾಪು ಸ್ಪಷ್ಟವಾಗಿ ಗೋಚರಿಸುತ್ತಿದೆ.
|
9 |
+
ಸಂಸದ ಪ್ರತಾಪ್ ಸಿಂಹ ಅವರ ಕ್ಷೇತ್ರಕ್ಕೆ ಮೈಸೂರು ಸ್ಥಾನಕ್ಕೆ ಹಿಂದಿನ ಮೈಸೂರು ರಾಜಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಆಯ್ಕೆ ಮಾಡುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಲಾಗುತ್ತದೆ. ಆದರೆ, ಟಿಕೆಟ್ ಸಿಗದಿದ್ದ ಹಲವು ಆಕಾಂಕ್ಷಿಗಳಿಂದಲೂ ಯಡಿಯೂರಪ್ಪ ಮುಖಭಂಗ ಅನುಭವಿಸಬೇಕಾಯಿತು. ತುಮಕೂರಿನ ಜೆಸಿ ಮಾಧುಸ್ವಾಮಿ, ಮಾಜಿ ಶಾಸಕರಾದ ಎಂಪಿ ರೇಣುಕಾಚಾರ್ಯ, ಚಿತ್ರದುರ್ಗದ ಎಸ್ಎ ರವೀಂದ್ರನಾಥ, ಕೊಪ್ಪಳದಿಂದ ಸಂಸದ ಕರಡಿ ಸಂಗಣ್ಣ, ಬೆಳಗಾವಿಯ ಕೆಲ ಮುಖಂಡರು ತಮ್ಮ ಉಮೇದುವಾರಿಕೆಗೆ ಬೆಂಬಲ ನೀಡದ ಹಿನ್ನೆಲೆಯಲ್ಲಿ ಅವರ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
|
10 |
+
ಬೀದರ್ ಮತ್ತು ಚಿತ್ರದುರ್ಗದಂತಹ ಕ್ಷೇತ್ರಗಳಲ್ಲಿ ಪಕ್ಷವು ಭಿನ್ನಾಭಿಪ್ರಾಯವನ್ನು ಎದುರಿಸಿತು. ಪಕ್ಷದ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಂಡಾಯವೆದ್ದು, ರಾಘವೇಂದ್ರ ಅಭ್ಯರ್ಥಿಯಾಗಿರುವ ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ರ್ಪಧಿಸುವುದಾಗಿ ಘೋಷಿಸಿದ್ದಾರೆ. ಪಕ್ಕದ ಹಾವೇರಿಯಿಂದ ತಮ್ಮ ಪುತ್ರ ಕೆ.ಇ.ಕಾಂತೇಶ್ಗೆ ಟಿಕೆಟ್ ಸಿಗದಿರಲು ಯಡಿಯೂರಪ್ಪ ಅವರ ಮೇಲೆ ಆರೋಪ ಮಾಡಿದ್ದಾರೆ. ಯಡಿಯೂರಪ್ಪ ಅತೃಪ್ತ ನಾಯಕರನ್ನು ಭೇಟಿ ಮಾಡಿ ಕೆಲವರನ್ನು ಖುದ್ದು ಭೇಟಿ ಮಾಡಿ ಸಮಾಧಾನ ಹೇಳಿದ್ದರು.
|
11 |
+
ಯಡಿಯೂರಪ್ಪ ಅವಶ್ಯಕತೆ ಬಿಜೆಪಿಗೆ ಹೆಚ್ಚಾಗಿ ಲಾಭದಾಯಕವಾಗಿದೆ, ಆದರೆ ಇದು ಕೆಲವೊಮ್ಮೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಇದು ಎರಡು ಅಂಚಿನ ಕತ್ತಿಯಂತೆ. ಪಕ್ಷದೊಳಗೆ ಮತ್ತು ಮತದಾರರಲ್ಲಿ, ವಿಶೇಷವಾಗಿ ಲಿಂಗಾಯತರಲ್ಲಿ ಅವರ ವರ್ಚಸ್ಸು ಮತ್ತು ಮನವಿಯನ್ನು ಅಲ್ಲಗಳೆಯುವಂತಿಲ್ಲ. ಅದೇ ಸಮಯದಲ್ಲಿ, ಇದು ಸ್ವಜನಪಕ್ಷಪಾತ ಮತ್ತು ಪಕ್ಷಪಾತದ ಆರೋಪಗಳ ನಡುವೆ ಪಕ್ಷದೊಳಗೆ ಘರ್ಷಣೆ ಮತ್ತು ಬಿರುಕುಗಳಿಗೆ ಕಾರಣವಾಗಿದೆ.
|
12 |
+
ಯಡಿಯೂರಪ್ಪ ಅಂಶವು ನಿಸ್ಸಂಶಯವಾಗಿ, ಬಲವಾದ ನಾಯಕತ್ವದ ಅನಿವಾರ್ಯತೆ ಮತ್ತು ಜನಮನವನ್ನು ಸೂಚಿಸುತ್ತದೆ. ಆದರೆ, ಲಿಂಗಾಯತ ಮತಗಳ ಮೇಲೆ ಕೇಂದ್ರೀಕರಿಸುವುದರಿಂದ ಒಕ್ಕಲಿಗರಂತಹ ಇತರ ಸಮುದಾಯಗಳ ನಡುವೆ ತನ್ನ ಸಾಮಾಜಿಕ ನೆಲೆಯನ್ನು ವಿಸ್ತರಿಸುವುದನ್ನು ಸ್ವಲ್ಪಮಟ್ಟಿಗೆ ಸೀಮಿತಗೊಳಿಸಿದೆ ಎಂದು ಪಕ್ಷದ ಪದಾಧಿಕಾರಿಯೊಬ್ಬರು ಹೇಳುತ್ತಾರೆ.
|
13 |
+
ಈಶ್ವರಪ್ಪ ಮತ್ತು ದಿವಂಗತ ಎಚ್.ಎನ್.ಅನಂತ್ ಕುಮಾರ್ ಅವರಂತಹ ಇತರ ನಾಯಕರ ಬೆಂಬಲದೊಂದಿಗೆ ಯಡಿಯೂರಪ್ಪ ಅವರು ಕರ್ನಾಟಕದಲ್ಲಿ ಬಿಜೆಪಿ ಕಟ್ಟುವಲ್ಲಿ ಪ್ರಮುಖರು. ವಿವಾದಗಳು ಮತ್ತು ಭ್ರಷ್ಟಾಚಾರ ಆರೋಪಗಳ ಹೊರತಾಗಿಯೂ ಅವರ ನಾಯಕತ್ವದಲ್ಲಿ ಪಕ್ಷವು ಸಾಧನೆ ಮಾಡಿದೆ. ಸತತ ಚುನಾವಣೆಗಳಲ್ಲಿ ಹಾಗೂ ಅವರನ್ನು ಬದಿಗೊತ್ತಿದಾಗಲೆಲ್ಲಾ ಪ್ರದರ್ಶನ ದುರ್ಬಲವಾಗಿತ್ತು. ಇದನ್ನು ಮನಗಂಡ ಹೈಕಮಾಂಡ್ ಮತ್ತೆ ಅವರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದೆ. 2023ರ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಆರಂಭದಲ್ಲಿ ಯಡಿಯೂರಪ್ಪ ಇಲ್ಲದೆ ಲಿಂಗಾಯತ ಬೆಂಬಲ ಪಡೆಯಲು ತನ್ನೆಲ್ಲ ಪ್ರಯತ್ನ ಮಾಡಿತ್ತು, ಆದರೆ ಅದರ ಬಗ್ಗೆ ಹೆಚ್ಚು ವಿಶ್ವಾಸವಿರಲಿಲ್ಲ, ನಂತರದ ಹಂತದಲ್ಲಿ ಹಿರಿಯ ನಾಯಕನನ್ನೇ ಕಣಕ್ಕಿಳಿಸಬೇಕಾಯಿತು ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ.
|
14 |
+
ಕೆಲವು ಇತರ ಸಮುದಾಯಗಳಿಂದ ಬೆಂಬಲವನ್ನು ಬೆಳೆಸಲುಸಹ ಅಪೇಕ್ಷಿತ ಫಲಿತಾಂಶಗಳನ್ನು ನೀಡಿತು. ಯಡಿಯೂರಪ್ಪ ಅವರು ಜುಲೈ 26, 2021 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. 75 ವರ್ಷಕ್ಕಿಂತ ಮೇಲ್ಪಟ್ಟವರನ್ನು ದೂರವಿಡುವ ಬಿಜೆಪಿಯಲ್ಲಿ ಅಲಿಖಿತ ನಿಯಮದೊಂದಿಗೆ ಅವರು ಉನ್ನತ ಹುದ್ದೆಯಿಂದ ನಿರ್ಗಮಿಸಲು ವಯಸ್ಸನ್ನು ಪ್ರಾಥಮಿಕ ಅಂಶವೆಂದು ಉಲ್ಲೇಖಿಸಲಾಗಿತ್ತು.
|
15 |
+
ಅಲ್ಲದೆ, ವಿಧಾನಸಭೆ ಚುನಾವಣೆಗೂ ಮುನ್ನ ಹೊಸ ನಾಯಕತ್ವಕ್ಕೆ ದಾರಿ ಮಾಡಿಕೊಡಲು ಬಿಜೆಪಿ ಕೇಂದ್ರ ನಾಯಕತ್ವ ಬಯಸಿತ್ತು. ವಿಧಾನಸಭಾ ಚುನಾವಣೆಗೆ ಮುನ್ನ ಯಡಿಯೂರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಅತ್ಯಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಒಟ್ಟು 28 ಸ್ಥಾನಗಳ ಪೈಕಿ 25 ಸ್ಥಾನಗಳನ್ನು ಗೆದ್ದುಕೊಂಡಿತ್ತು, ಆದರೆ ಪಕ್ಷದ ಬೆಂಬಲಿತ ಪಕ್ಷೇತರ ಅಭ್ಯರ್ಥಿಯೊಬ್ಬರು ವಿಜಯಶಾಲಿಯಾಗಿದ್ದರು.
|
eesanje/url_46_188_6.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಅಮಿತ್ ಶಾಗೆ ಸಿಎಂ ಸಿದ್ದರಾಮಯ್ಯ ಸವಾಲು
|
2 |
+
ಮೈಸೂರು, ಏ.3- ಕೇಂದ್ರ ಬರ ಪರಿಹಾರ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ರಾಜೀನಾಮೆ ಕೊಡುತ್ತೇನೆ. ನೀವು ಇದರಲ್ಲಿ ಸುಳ್ಳು ಹೇಳಿದ್ದರೆ ರಾಜೀನಾಮೆ ಕೊಡ್ತೀರಾ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ಸವಾಲು ಹಾಕಿದ್ದಾರೆ.
|
3 |
+
ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಆರು ತಿಂಗಳಿನಿಂದ ಬರ ಪರಿಹಾರಕ್ಕಾಗಿ ವರದಿ ಕೊಡುತ್ತಲೇ ಬಂದಿದ್ದೇವೆ. ಕಳೆದ ಡಿಸೆಂಬರ್ 23ರಂದೇ ಸಭೆ ಕರೆದು ತೀರ್ಮಾನ ಮಾಡುತ್ತೇನೆ ಎಂದಿದ್ದರು. ಇದಲ್ಲದೆ, ಕೇಂದ್ರ ಅಧ್ಯಯನ ಸಮಿತಿಯೂ ಕೂಡ ವರದಿ ಕೊಟ್ಟಿತ್ತು. ಇದೆಲ್ಲವನ್ನೂ ನಾನು ಸಾಬೀತು ಮಾಡಲು ಸಿದ್ಧವಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ.
|
4 |
+
ಸತ್ಯಕ್ಕೆ ತಲೆ ಒಡೆದಂತೆ ಅಮಿತ್ ಷಾ ಅವರು ಸುಳ್ಳು ಹೇಳುತ್ತಿದ್ದಾರೆ. ನಾವು ಇದರ ಬಗ್ಗೆ ಈಗಾಗಲೇ ಸುಪ್ರೀಂಕೋರ್ಟ್ಗೆ ದಾವೆ ಹೂಡಿದ್ದೇವೆ. ವಿವರವನ್ನೂ ಕೂಡ ಸಲ್ಲಿಸಿದ್ದೇವೆ. ಇವೆಲ್ಲ ಸುಳ್ಳೆಂದರೆ ನಾನು ರಾಜೀನಾಮೆ ಕೊಡಲು ಸಿದ್ಧ. ಅಮಿತ್ ಷಾ ಅವರೇ ನೀವು ಹೇಳಿರುವುದು ಸುಳ್ಳಾದರೆ ರಾಜೀನಾಮೆ ನೀಡುತ್ತೀರಾ ಎಂದು ಪ್ರಶ್ನಿಸಿದ್ದಾರೆ.
|
5 |
+
ಎನ್ಡಿಆರ್ಎಫ್ ಶಿಫಾರಸಿನನ್ವಯ ಐದು ವರ್ಷಕ್ಕೆ ಹಣ ಮೀಸಲಿಟ್ಟಿರುತ್ತಾರೆ. ಖರ್ಚು-ವೆಚ್ಚದ ಬಗ್ಗೆ ಹಣಕಾಸು ಆಯೋಗ ಶಿಫಾರಸು ಮಾಡುತ್ತದೆ. ಆದರೆ, ಕೇಂದ್ರ ಸರ್ಕಾರ ಇದರಲ್ಲಿ ಮಲತಾಯಿ ಧೋರಣೆ ತಳೆಯುತ್ತಿದೆ. ಇದನ್ನೆಲ್ಲ ಅರಿತಿರುವ ಜನರು ಬಿಜೆಪಿ ಸರಿಯಾದ ಬುದ್ಧಿ ಕಲಿಸುತ್ತಾರೆ ಎಂದು ಸಿಎಂ ಕಿಡಿಕಾರಿದ್ದಾರೆ.
|
eesanje/url_46_188_7.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ವಿಶ್ವದ ಹಿರಿಯ ವ್ಯಕ್ತಿ ಪೆರೆಜ್ ಮೋರಾ ಇನ್ನಿಲ್ಲ
|
2 |
+
ಕ್ಯಾರಕಾಸ್,ಏ.3- ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎಂಬ ಕೀರ್ತಿಗೆ ಪಾತ್ರರಾಗಿದ್ದ ವೆನೆಜುವೆಲಾದ ಜುವಾನ್ ವಿಸೆಂಟೆ ಪೆರೆಜ್ ಮೋರಾ ಎಂಬುವರು ವಿಧವಶರಾಗಿದ್ದಾರೆ. ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎಂದು ಮೋರಾ 2022ರಲ್ಲಿ ಗಿನ್ನಿಸ್ ದಾಖಲೆ ಸೇರಿದ್ದರು. ಅವರು 114 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
|
3 |
+
ಜುವಾನ್ ವಿಸೆಂಟೆ ಪೆರೆಜ್ ಮೊರಾ ಅವರು 114 ನೇ ವಯಸ್ಸಿನಲ್ಲಿ ಶಾಶ್ವತತೆಗೆ ದಾಟಿದ್ದಾರೆ ಎಂದು ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ಹೇಳಿದ್ದಾರೆ.ಪೆರೆಜ್ ಅವರು 112 ವರ್ಷ ಮತ್ತು 253 ದಿನಗಳ ವಯಸ್ಸಿನವರಾಗಿದ್ದಾಗ ಫೆಬ್ರವರಿ 4, 2022 ರಂದು ಜೀವಂತವಾಗಿರುವ ಅತ್ಯಂತ ಹಿರಿಯ ವ್ಯಕ್ತಿ ಎಂದು ಅಧಿಕೃತವಾಗಿ ದಾಖಲಾಗಿದ್ದರು.
|
4 |
+
11 ಮಕ್ಕಳ ತಂದೆಯಾಗಿದ್ದ ಅವರು, 2022 ರ ಹೊತ್ತಿಗೆ 41 ಮೊಮ್ಮಕ್ಕಳು, 18 ಮರಿ ಮ್ಮಕ್ಕಳು ಮತ್ತು 12 ಮರಿ-ಮೊಮ್ಮಕ್ಕಳನ್ನು ಹೊಂದಿದ್ದರು. ಅವರು ಮೇ 27, 1909 ರಂದು ಆಂಡಿಯನ್ ರಾಜ್ಯದ ಟಾಚಿರಾದಲ್ಲಿ ಎಲ್ ಕೋಬ್ರೆ ಪಟ್ಟಣದಲ್ಲಿ ಜನಿಸಿದ್ದರು ಮತ್ತು 10 ಮಕ್ಕಳಲ್ಲಿ ಒಂಬತ್ತನೆಯವರಾಗಿದ್ದರು. ಐದು ವರ್ಷ ವಯಸ್ಸಿನಲ್ಲಿ, ಅವರು ತಮ್ಮ ತಂದೆ ಮತ್ತು ಸಹೋದರರೊಂದಿಗೆ ಕೃಷಿಯಲ್ಲಿ ಕೆಲಸ ಮಾಡಲು ಪ್ರಾರಂಭಿಸಿದರು ಮತ್ತು ಕಬ್ಬು ಮತ್ತು ಕಾಫಿ ಕೊಯ್ಲು ಮಾಡಲು ಸಹಾಯ ಮಾಡಿದರು ಎಂದು 2022 ರ ಗಿನ್ನೆಸ್ ಹೇಳಿಕೆ ತಿಳಿಸಿದೆ.ಪೆರೆಜ್ ಶೆರಿಫ್ ಆಗಲು ಹೋದರು ಮತ್ತು ಕೃಷಿಯಲ್ಲಿ ಕೆಲಸ ಮಾಡುವಾಗ ಭೂಮಿ ಮತ್ತು ಕುಟುಂಬ ವಿವಾದಗಳನ್ನು ಪರಿಹರಿಸುವ ಜವಾಬ್ದಾರಿಯನ್ನು ಹೊಂದಿದ್ದರು.
|
eesanje/url_46_188_8.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಅಮಿತ್ ಶಾ
|
2 |
+
ಬೆಂಗಳೂರು,ಏ.2-ದೇಶಾದ್ಯಂತ ಮೋದಿ ಘೋಷಣೆ ಮೊಳಗುತ್ತಿದೆ. ಮತ್ತೊಮ್ಮೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಇಂದಿಲ್ಲಿ ಹೇಳಿದ್ದಾರೆ.ಅರಮನೆ ಮೈದಾನದಲ್ಲಿಂದು ನಡೆದ ಬಿಜೆಪಿ ಶಕ್ತಿಕೇಂದ್ರದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು,ಯುಪಿಎ ಅವಧಿಯಲ್ಲಿ ಭಾರತವನ್ನು ಭ್ರಷ್ಟಾಚಾರದ ಕೂಪಕ್ಕೆ ತಳ್ಳಿದ ಕಾಂಗ್ರೆಸ್ ಇಂದು ಭ್ರಷ್ಟರ ಕೂಟ ಕಟ್ಟಿಕೊಂಡು ಮೋದಿ ವಿರುದ್ಧ ಅಪಪ್ರಚಾರ ನಡೆಸುತ್ತಿದೆ.
|
3 |
+
ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಈಗ ಮೋದಿ ಪರಿವಾರ ಮತ್ತು ಭ್ರಷ್ಟರ ಕೂಟದ ನಡುವೆ ಹೋರಾಟ ನಡೆಯುತ್ತಿದೆ. ಆದರೆ, ದೇಶದ ಮತದಾರರು ಪಾರದರ್ಶಕ ಆಡಳಿತ ನೀಡಿರುವ ಮೋದಿ ಅವರ ಪರ ನಿಂತಿದ್ದಾರೆ ಎಂದರು. ದೇಶವನ್ನು ಭ್ರಷ್ಟಾಚಾರದ ಕೂಪವನ್ನಾಗಿ ಮಾಡಿದ ಕಾಂಗ್ರೆಸ್ ನೇತೃತ್ವದ ಯುಪಿಎ ಆಡಳಿತವನ್ನು ಜನ ಇನ್ನೂ ಮರೆತಿಲ್ಲ. 2ಜಿ ಹಗರಣ, ಅಗಸ್ಟ ಹೆಲಿಕಾಪ್ಟರ್ ಹಗರಣ, ಕಲ್ಲಿದ್ದಲು ಹಗರಣ, ಕಾಮನ್ವೆಲ್ತ್ ಹಗರಣ ಸೇರಿದಂತೆ ಸಾಲು ಸಾಲು ಭ್ರಷ್ಟಾಚಾರ ನಡೆಸಿದ್ದವರು ಈಗ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.
|
4 |
+
ವಿಶ್ವದಲ್ಲಿ ಭಾರತದ ಆರ್ಥಿಕತೆಯನ್ನು ಐದನೆ ಸ್ಥಾನಕ್ಕೆ ತಂದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ. ಈ ಹಿಂದೆ ಲಕ್ಷಾಂತರ ಕೋಟಿ ಲೂಟಿ ಹೊಡೆದಿದ್ದರೋ ಅವರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ನಾವು ಹೇಳಿದ್ದೆವು. ಅದನ್ನು ಇಂದು ನೀವು ನೋಡುತ್ತಿದ್ದೀರಿ. ಮೋದಿ ವಿರುದ್ಧ ಅಪಪ್ರಚಾರಕ್ಕಾಗಿ ಕೆಲವೊಂದು ವ್ಯವಸ್ಥಿತ ತಂತ್ರಗಾರಿಕೆ ನಡೆಸುತ್ತಿದ್ದಾರೆ. ಆದರೆ, ಇದು ಜನರ ಮುಂದೆ ನಡೆಯುವುದಿಲ್ಲ. ಮೂರನೆ ಬಾರಿಗೆ ಮೋದಿ ಪ್ರಧಾನಿಯಾಗುವುದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದರು.
|
5 |
+
ಕಾಂಗ್ರೆಸ್ನವರು ನಮ್ಮ 2019ರ ಪ್ರಣಾಳಿಕೆ ಬಗ್ಗೆ ವ್ಯಂಗ್ಯವಾಡಿದ್ದರು. ಆದರೆ, ಇಂದು ಅದನ್ನೆಲ್ಲ ಈಡೇರಿಸಿದ್ದೇವೆ. ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಮಾಡಿದ್ದೇವೆ. ಕಾಶ್ಮೀರ ಭಾರತ ನಮ್ಮ ಅವಿಭಾಜ್ಯಅಂಗ ಎಂದು ಸಾಬೀತುಪಡಿಸಿ ಈಗ 371 ಕಾಯ್ದೆಯನ್ನು ರದ್ದುಪಡಿಸಿದ್ದೇವೆ. ನಿರಾಶ್ರಿತ ಹಿಂದೂಗಳಿಗೆ ಸಿಎಎ ಜಾರಿ ಮಾಡಿದ್ದೇವೆ. ರೈತರ ಉತ್ಪನ್ನಗಳಿಗೆ ಬೆಲೆ ಆಯೋಗ ರಚಿಸಿ ನೀಡುತ್ತಿದ್ದೇವೆ. ಇವೆಲ್ಲ ನಮ್ಮ ಭರವಸೆಗಳ ಈಡೇರಿಕೆ ಅಲ್ಲವೆ ಎಂದು ಪ್ರಶ್ನಿಸಿದರು.
|
6 |
+
ಕಾಂಗ್ರೆಸ್ನವರು ರಾಮಮಂದಿರ ಉದ್ಘಾಟನೆಯನ್ನು ಬಹಿಷ್ಕರಿಸಿದರು. ತುಷ್ಟೀಕರಣ ರಾಜಕಾರಣ ಮಾಡಿದರು. ಆದರೆ ನಾವು ನೂರಾರು ವರ್ಷಗಳ ಕನಸನ್ನು ಸಾಕಾರಗೊಳಿಸಿದ್ದೇವೆ. ಭವ್ಯ ರಾಮಮಂದಿರ ಕಂಗೊಳಿಸುತ್ತಿದೆ ಎಂದು ಹೇಳಿದರು.
|
7 |
+
ಪ್ರತಿಯೊಬ್ಬರೂ ಮನೆ ಮನೆಗೆ ತೆರಳಿ ನಮ್ಮ ಬಿಜೆಪಿಯ ಮೋದಿ ಗ್ಯಾರಂಟಿಗಳು ಮತ್ತು ದೇಶ ಒಗ್ಗೂಡಿಸುವ, ಸುಭದ್ರಗೊಳಿಸುವ ನಿಟ್ಟಿನಲ್ಲಿ ತಿಳಿಸಬೇಕು. ಕರ್ನಾಟಕದ 28 ಕ್ಷೇತ್ರಗಳನ���ನು ಗೆಲ್ಲಲು ನೀವೆಲ್ಲ ಸಂಕಲ್ಪ ತೊಡಬೇಕು ಎಂದು ಕರೆ ನೀಡಿದರು.
|
eesanje/url_46_188_9.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮಿತಿಮೀರಿದ ಬಿಸಿಲು, ಗಗನಕ್ಕೇರಿದ ತರಕಾರಿ ಬೆಲೆ, ಶತಕ ಬಾರಿಸಿದ ಬೀನ್ಸ್
|
2 |
+
ಬೆಂಗಳೂರು, ಏ.2-ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಕೊಳವೆ ಬಾವಿಗಳು ನೀರಿಲ್ಲದೆ ಬತ್ತುತ್ತಿದ್ದು, ಕುಡಿಯುವ ನೀರಿಗೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿ ತರಕಾರಿಗಳ ಬೆಲೆ ಗಗನಕ್ಕೇರುತ್ತಿದೆ.
|
3 |
+
ರಾಜ್ಯಾದ್ಯಂತ ಈ ಬಾರಿ ಬರಗಾಲ ಆವರಿಸಿದ್ದು, ಮಳೆ ಬಾರದೆ ಬಿಸಿಲ ಝಳಕ್ಕೆ ಜನ-ಜಾನುವಾರುಗಳು ಬಸವಳಿಯು ವಂತಾಗಿದೆ. ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೊಳವೆ ಬಾವಿಗಳು ಒಣಗಿದ್ದು, ಕುಡಿಯಲು ನೀರಿಲ್ಲದಂತಾಗಿದೆ. ಇನ್ನು ರೈತರು ಬೆಳೆ ಉಳಿಸಿಕೊಳ್ಳಲು ಹರಸಾಹಸ ಪಡುವಂತಾಗಿದೆ. ಕೆಲ ರೈತರು ಅಡಿಕೆ ಗಿಡಗಳನ್ನು ಉಳಿಸಿಕೊಳ್ಳಲು ದುಪ್ಪಟ್ಟು ಹಣ ನೀಡಿ ಟ್ಯಾಂಕರ್ಗಳ ಮೂಲಕ ನೀರು ಹಾಯಿಸುತ್ತಿದ್ದಾರೆ.
|
4 |
+
ಸಾಮಾನ್ಯವಾಗಿ ತರಕಾರಿ ಬೆಳಗೆ ಹೆಚ್ಚು ನೀರಿನ ಅವಶ್ಯಕತೆ ಇದೆ . ಜೊತೆಗೆ ಬಿಸಿಲಿನ ತಾಪ ಹೆಚ್ಚಾಗಿದ್ದು, ಇಳುವರಿ ಬರುತ್ತಿಲ್ಲ. ಹಾಗಾಗಿ ರೈತರು ತರಕಾರಿ ಬೆಳೆಯಲು ಹಿಂದೇಟು ಹಾಕಿದ್ದು, ಉತ್ಪಾದನೆಯಲ್ಲಿ ಭಾರೀ ಇಳಿಮುಖವಾಗಿದ್ದು, ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ನುಗ್ಗೆಕಾಯಿ ಹೊರತುಪಡಿಸಿದರೆ ಎಲ್ಲಾ ತರಕಾರಿಗಳ ಬೆಲೆ ಹೆಚ್ಚಳವಾಗಿದೆ. ಅದರಲ್ಲೂ ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಬಳಸುವ ಸೌತೆಕಾಯಿ, ನಿಂಬೆಹಣ್ಣು, ಕ್ಯಾರೆಟ್ , ಬೀನ್ಸ್ ಬೆಲೆ ಹೆಚ್ಚಾಗಿದೆ.
|
5 |
+
ಈಗ ನುಗ್ಗೆಕಾಯಿ ಸೀಸನ್ ಆಗಿರುವುದ ರಿಂದ 10 ರೂ.ಗೆ ಮೂರರಿಂದ ನಾಲ್ಕು ಮಾರಾಟವಾಗುತ್ತಿದೆ. ಮೂಲಂಗಿ, 35ರೂ., ಹಾಗಲಕಾಯಿ 50, ಬೆಂಡೆಕಾಯಿ 40, ಹಿರೇಕಾಯಿ 40, ಬೀಟ್ರೂಟ್ 30, ಟೊಮ್ಯಾಟೋ 25, ಎಲೆಕೋಸು, 30, ನವಿಲುಕೋಸು, 40, ನಾಟಿ ಬೀನ್ಸ್ 80, ಈರುಳ್ಳಿ 30 ರೂ.ಗೆ ಮಾರಾಟ ಮಾಡಲಾಗುತ್ತಿದೆ.
|
6 |
+
ಇನ್ನು ಸೊಪ್ಪುಗಳ ಬೆಲೆಯಲ್ಲೂ ಸಹ ಏರಿಕೆಯಾಗಿದೆ . ಕೊತ್ತಂಬರಿ ಕಟ್ ಒಂದಕ್ಕೆ 25 ರೂ., ಸಬ್ಬಸ್ಸಿಗೆ 30, ಪಾಲಕ್ 25, ಮೆಂತ್ಯೆ, 30 ರೂ. ಇದೆ.ಬೀನ್ಸ್ , ಸೌತೆಕಾಯಿ ಹಾಗೂ ನಿಂಬೆಹಣ್ಣಿನ ಬೆಲೆ ದಿನೇ ದಿನೇ ಏರುತ್ತಲೇ ಇದೆ. ಸೌತೆಕಾಯಿ ಕೆಜಿಗೆ 35 ರಿಂದ 40 ರೂ.ಗೆ ಮಾರಾಟ ಮಾಡಲಾಗುತ್ತಿದೆ. ನಿಂಬೆಹಣ್ಣು ದಪ್ಪ 10 ರೂ.ಗೆ ಒಂದು ಹಣ್ಣನ್ನು ಮಾರಲಾಗುತ್ತಿದೆ. ಕೆಲವು ತರಕಾರಿ ಅಂಗಡಿಗಳ ಮಾಲೀಕರು ಬೀನ್ಸ್ ಬೆಲೆ 100 ರೂ. ನಿಗದಿ ಮಾಡಿ ಮಾರಾಟ ಮಾಡುತ್ತಿದ್ದಾರೆ .
|
7 |
+
ಬಿಸಿಲಿನ ಪ್ರಮಾಣ ಹೆಚ್ಚಾಗಿರುವುದರಿಂದ ತರಕಾರಿಗಳು ಬೆಳಗ್ಗೆ ತಂದರೆ ಸಂಜೆ ವೇಳೆಗೆ ಬಾಡಿ ಹೋಗುತ್ತಿವೆ. ಸೊಪ್ಪಂತೂ ಮಧ್ಯಾಹ್ನಕ್ಕೇ ಬಾಡಿ ಹೊಗುತ್ತದೆ. ಜನರು ಫ್ರೆಶ್ ಆಗಿರುವ ತರಕಾರಿ ಕೇಳುತ್ತಾರೆ. ಈ ಬಿಸಿಲಿನಲ್ಲಿ ಫ್ರೆಶ್ ಎಲ್ಲಿಂದ ತಂದು ಮಾರೋದು. ಕೆಲ ಜಿಲ್ಲೆಗಳಲ್ಲಿ ದಿನಕ್ಕೆ ಎರಡು ಬಾರಿ ಮಾರುಕಟ್ಟೆ ನಡೆದರೆ, ಇನ್ನು ಕೆಲ ಜಿಲ್ಲೆಗಳಲ್ಲಿ ದಿನಕ್ಕೆ ಒಂದೇ ಬಾರಿ ಮಾರುಕಟ್ಟೆ ನಡೆಯುತ್ತದೆ.
|
8 |
+
ಒಂದೇ ಬಾರಿ ಮಾರುಕಟ್ಟೆ ಇರುವ ರೈತರು ದಿನ ಪೂರ್ತಿ ತರಕಾರಿ ಕಿತ್ತು ರಾತ್ರಿ ಚೀಲ ಮಾಡಿ ಬೆಳಗ್ಗೆ ಮಾರುಕಟ್ಟೆಗೆ ತಂದು ಮಾರಬೇಕು. ಇನ್ನು ಕೆಲ ಭಾಗಗಳಲ್ಲಿ ಮುಂಜಾನೆಯಿಂದ ಕೊಯ್ಲು ಮಾಡಿ ಸಂಜೆ ವೇಳೆಗೆ ಮಾರುಕಟ್ಟೆಗೆ ತಂದು ಮಾರಾಟ ಮಾಡಬೇಕು.
|
9 |
+
ಈ ನಡುವೆ ಚಿಲ್ಲರೆ ವ್ಯಾಪಾರಿಗಳು ಮಾರುಕಟ್ಟೆಯಿಂದ ತಂದು ಮಾರುವಷ್ಟರಲ್ಲಿ ಬಿಸಿಲಿಗೆ ಬಾಡಿ ಹೋಗುತ್ತಿವೆ. ಜಾಸ್ತಿ ತಂದರೆ ಮಾರಾಟವಾಗದೆ ಬಾಡಿ ಹೋಗಿ ಲಾಸ್ ಆಗುತ್ತದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಇದೇ ರೀತಿ ಬಿಸಿಲು ಹೆಚ್ಚಾದರೆ ಎಲ್ಲಾ ತರಕಾರಿಗಳ ಬೆಲೆ ಮತ್ತಷ್ಟು ಹೆಚ್ಚಾಗಲಿದೆ.
|
eesanje/url_46_189_1.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಅಮಿತ್ ಶಾ ಅವರೇ, ರಾಜ್ಯದಲ್ಲಿ ನಿಮಗೆ ಮತ ಕೇಳುವ ನೈತಿಕ ಹಕ್ಕಿಲ್ಲ : ಸಿದ್ದು ವಾಗ್ದಾಳಿ
|
2 |
+
ಮೈಸೂರು,ಏ.2-ರಾಜ್ಯದಲ್ಲಿ ಭೀಕರ ಪರಿಸ್ಥಿತಿಯಿದ್ದು, ಐದು ತಿಂಗಳಾದರೂ ಒಂದು ರೂಪಾಯಿ ಪರಿಹಾರ ನೀಡದಿರುವ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ರಾಜ್ಯದ ಜನರ ಮತ ಕೇಳುವ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಉನ್ನತಾಧಿಕಾರ ಸಮಿತಿಗೆ ಅಮಿತ್ ಶಾ ಅವರೇ ಅಧ್ಯಕ್ಷರಾಗಿದ್ದು, ಸಭೆ ಮಾಡಿ ರಾಜ್ಯದ ಬರ ಪರಿಸ್ಥಿತಿಗೆ ಹಣ ಬಿಡುಗಡೆ ಮಾಡಬೇಕಿತ್ತು. ಅಕ್ಟೋಬರ್ನಿಂದ ಈವರೆಗೂ ರಾಜ್ಯಸರ್ಕಾರ ಮೂರು ಬಾರಿ ಮನವಿ ಸಲ್ಲಿಸಿದೆ. ಕೇಂದ್ರ ಅಧ್ಯಯನ ತಂಡವೊಂದು ಪರಿಶೀಲನೆ ನಡೆಸಿ, ವರದಿ ನೀಡಿದೆ.
|
4 |
+
ನಾನು ಡಿಸೆಂಬರ್ 19 ರಂದು ಪ್ರಧಾನಿಯವರನ್ನು, 20 ರಂದು ಅಮಿತ್ ಶಾರನ್ನು ಭೇಟಿ ಮಾಡಿದ್ದೆ. 23 ರಂದು ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ಪರಿಹಾರ ನೀಡುವ ಬಗ್ಗೆ ನಿರ್ಧರಿಸುತ್ತೇವೆ ಎಂದಿದ್ದರು.
|
5 |
+
ಐದು ತಿಂಗಳಾದರೂ ಒಂದೂ ರೂಪಾಯಿ ಹಣ ನೀಡಿಲ್ಲ. ಅಮಿತ್ ಶಾ ಅವರೇನು ಅವರ ಮನೆಯಿಂದ ತಂದುಕೊಡುತ್ತಿದ್ದರೇ? ಅಥವಾ ರಾಜ್ಯಕ್ಕೆ ನೀಡುವ ಭಿಕ್ಷೆಯೇ? ನಮ್ಮ ತೆರಿಗೆಯ ಹಣವನ್ನು ನಮಗೇ ಕೊಡಲು ಹಿಂದೇಟು ಹಾಕುತ್ತಿರುವುದೇಕೆ? ಎಂದು ಕಿಡಿಕಾರಿದರು.
|
6 |
+
ನಾವು ನಮ್ಮ ಪಾಲು ಕೇಳಿದರೆ ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು ಬಿಜೆಪಿಯ ವಕ್ತಾರರಂತೆ ಸಮರ್ಥಿಸಿಕೊಳ್ಳುತ್ತಾರೆ. ರಾಜ್ಯದ ಮೇಕೆದಾಟು, ಮಹಾದಾಯಿ ಯೋಜನೆಗಳಿಗೆ ಅನುಮತಿ ನೀಡಿಲ್ಲ. ಹಣಕಾಸು ಆಯೋಗದ ಮಧ್ಯಂತರ ವರದಿಯ ಅನುಸಾರ ರಾಜ್ಯಕ್ಕೆ ಆರ್ಥಿಕ ನೆರವು ನೀಡಿಲ್ಲ. ಇದು ಕನ್ನಡಿಗರಿಗೆ ಮಾಡಿದ ಅನ್ಯಾಯವಲ್ಲವೇ? ಮುಂದಿನ ಚುನಾವಣೆಯಲ್ಲಿ ಜನ ಇದಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದರು.
|
7 |
+
ಮಂಡ್ಯದಲ್ಲಿ ತಾವು ಸ್ಪರ್ಧೆ ಮಾಡಿರುವುದು ದೇವರ ಇಚ್ಛೆ ಎಂದು ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈ ಹಿಂದೆ ಮಗನನ್ನು ಕಣಕ್ಕಿಳಿಸಿದ್ದರಲ್ಲಾ ಅದು ಯಾರ ಇಚ್ಛೆ ಎಂದು ತಿರುಗೇಟು ನೀಡಿದರು.
|
8 |
+
ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಮಗನನ್ನು ಗೆಲ್ಲಿಸಿಕೊಳ್ಳಲಾಗಲಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ ಹಾಕಿತ್ತು ಎಂದು ಹೇಳುವ ಕುಮಾರಸ್ವಾಮಿ, ಮೈಸೂರಿನಲ್ಲಿ ಜೆಡಿಎಸ್ನವರು ಯಾರಿಗೆ ಚೂರಿ ಹಾಕಿದ್ದರು ಎಂದು ಹೇಳುತ್ತಾರೆಯೇ? ಒಂದು ವೇಳೆ ಮಂಡ್ಯದಲ್ಲಿ ನಾವು ಜೆಡಿಎಸ್ಗೆ ಚೂರಿ ಹಾಕಿದ್ದೇವೆ ಎಂಬ ಸಂಭವನೀಯತೆಯನ್ನು ಒಪ್ಪಿಕೊಳ್ಳುವುದಾದರೆ ಮೈಸೂರಿನಲ್ಲಿ ಜೆಡಿಎಸ್ನವರ ದ್ರೋಹವನ್ನು ಒಪ್ಪಿಕೊಳ್ಳಬೇಕಲ್ಲವೇ? ಎಲ್ಲಿಯೇ ಆದರೂ ಸಿದ್ಧಾಂತ ಒಂದೇ ಅಲ್ಲವೇ ಎಂದು ಪ್ರಶ್ನಿಸಿದರು.
|
9 |
+
ಹಾಸನದಲ್ಲಿ ನಾನು ಹೋಗಿ ಪ್ರಚಾರ ಮಾಡದೇ ಇದ್ದರೆ ಜೆಡಿಎಸ್ನ ಪ್ರಜ್ವಲ್ ರೇವಣ್ಣ ಗೆಲ್ಲುತ್ತಿರಲಿಲ್ಲ. ಆ ಸಂದರ್ಭದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಇದ್ದಿದ್ದರಿಂದಾಗಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಬೇಕಾಯಿತು. ಈ ಬಾರಿ ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಮೂರು ಕ್ಷೇತ್ರಗಳಲ್ಲಿ ಸ್ರ್ಪಧಿಸಿರುವ ಜೆಡಿಎಸ್ ಎಲ್ಲಾ ಕಡೆ ಸೋಲಲಿದೆ ಎಂದರು.
|
10 |
+
ಹಾಸನದಲ್ಲಿ ಕಾಂಗ್ರೆಸ್ಸಿಗರೆಲ್ಲಾ ಒಟ್ಟಾಗಿದ್ದಾರೆ. ಜನ ನಮ್ಮ ಪರವಾಗಿದ್ದು, ಪ್ರಜ್ವಲ್ ರೇವಣ್ಣ ಅವರನ್ನು ಸೋಲಿಸಲು ನಿರ್ಧರಿಸಿದ್ದಾರೆ ಎಂದು ಹೇಳಿದರು. ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ 12, 13 ಮತ್ತು 14ನೇ ತಾರೀಖಿನಂದು ನಾವು ಪ್ರಚಾರ ನಡೆಸಲಿದ್ದು, ರಾಜ್ಯಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಸಂಚಾರ ಮಾಡುತ್ತೇವೆ ಎಂದರು.
|
11 |
+
ನಾಳೆ ಚಾಮರಾಜನಗರ ಮತ್ತು ಮೈಸೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸುತ್ತೇನೆ. ನಮ್ಮ ಭಾಗದಲ್ಲಿ ಪ್ರಚಾರ ಮುಗಿಸಿ ನಂತರ ಇತರ ಭಾಗಗಳಿಗೆ ತೆರಳುತ್ತೇನೆ ಎಂದು ಹೇಳಿದರು.
|
eesanje/url_46_189_10.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಕರ್ನಾಟಕಕ್ಕೆ ಇಂದು ಚುನಾವಣಾ ಚಾಣಕ್ಯ ಅಮಿತ್ ಷಾ ಆಗಮನ
|
2 |
+
ಬೆಂಗಳೂರು,ಏ.1-ಬಿಜೆಪಿ ಚುನಾವಣಾ ಚಾಣುಕ್ಯ ಎಂದೇ ಕರೆಯುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಪ್ರಸಕ್ತ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಮೊದಲ ಬಾರಿ ರಾಜ್ಯದಲ್ಲಿ ಭಾಗಿಯಾಗುತ್ತಿದ್ದಾರೆ.
|
3 |
+
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಸ್ರ್ಪಧಿ ಗಿಳಿಯುತ್ತಿವೆ. ಎನ್ಡಿಎ ಅಭ್ಯರ್ಥಿಗಳ ಪರ ಷಾ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ನಾಳೆ ಸಂಜೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರ ಪರವಾಗಿ ರೋಡ್ ಶೋನಲ್ಲಿ ಪಾಲ್ಗೊಂಡು ಮತ ಯಾಚನೆ ಮಾಡಲಿದ್ದಾರೆ.
|
4 |
+
ಬೆಂಗಳೂರು ಹಾಗೂ ಚನ್ನಪಟ್ಟಣದಲ್ಲಿ ತಲಾ ಒಂದು ಕಾರ್ಯಕ್ರಮ ನಿಗದಿಯಾಗಿವೆ. ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಷಾ ಇಂದು ತಡರಾತ್ರಿ ನಗರಕ್ಕೆ ಆಗಮಿಸಲಿದ್ದಾರೆ.
|
5 |
+
ಇಂದು ರಾತ್ರಿ ನಗರಕ್ಕೆ ಆಗಮಿಸಲಿರುವ ಷಾ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದು, ನಾಳೆ ಮಧ್ಯಾಹ್ನ ಅರಮನೆ ಮೈದಾನದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಶಕ್ತಿಕೇಂದ್ರ ಪ್ರಮುಖ್ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ. ನಂತರ ಹೆಲಿಕಾಪ್ಟರ್ ಮೂಲಕ ಚನ್ನಪಟ್ಟಣಕ್ಕೆ ತೆರಳಲಿದ್ದಾರೆ.
|
6 |
+
ನಾಳೆ ಸಂಜೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಚನ್ನಪಟ್ಟಣದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಚನ್ನಪಟ್ಟಣದ ಚಿಕ್ಕಮಗಳೂರಿನಿಂದ ಡಿ.ಟಿ.ರಾಮು ವೃತ್ತದವರೆಗೂ ನಡೆಯುವ ರೋಡ್ ಶೋನಲ್ಲಿ ಭಾಗಿಯಾಗಲಿದ್ದಾರೆ. ಬಿಜೆಪಿ ಅಭ್ಯರ್ಥಿ ಮಂಜುನಾಥ್ ಸೇರಿದಂತೆ ಬಿಜೆಪಿ-ಜೆಡಿಎಸ್ ನಾಯಕರು ಷಾ ಅವರೊಂದಿಗೆ ರೋಡ್ ಶೋನಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ.
|
eesanje/url_46_189_11.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಶಿವಕುಮಾರ ಸ್ವಾಮೀಜಿಗೆ ಪ್ರಧಾನಿ ಮೋದಿ ನಮನ
|
2 |
+
ನವದೆಹಲಿ,ಏ.1-ಪರಮಪೂಜ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ಅವರಿಗೆ ನಮನಗಳು. ನಿಸ್ವಾರ್ಥ ಮತ್ತು ಕರುಣೆಯ ನೈಜ ಸಾಕಾರಮೂರ್ತಿಗಳಾಗಿದ್ದ ಶ್ರೀಗಳು ಸಮಾಜ ಸೇವೆಗೆ ಅಪ್ರತಿಮ ಕೊಡುಗೆಗಳನ್ನು ನೀಡಿದ್ದಾರೆ.
|
3 |
+
ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಅವರ ಕೆಲಸವು ಲಕ್ಷಾಂತರ ಜನರ ಜೀವನವನ್ನು ತಲುಪಿದೆ ಮತ್ತು ಸಮರ್ಪಣೆ ಹಾಗೂ ಮಾನವೀಯ ಸೇವೆಗೆ ಅತ್ಯುನ್ನತ ಉದಾಹರಣೆಯಾಗಿದೆ.
|
4 |
+
ನಮ್ಮ ಸಮಾಜದ ಕುರಿತಾಗಿ ಶ್ರೀಗಳ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ನಿರಂತರ ಕಾರ್ಯಮಗ್ನರಾಗಿರುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಕನ್ನಡ ಬಾಷೆಯಲ್ಲಿ ಸಾಮಾಜಿಕ ಜಾಲ ತಾಣದ ಎಕ್ಸ್ ನಲ್ಲಿ ನವನಮನ ಸಲ್ಲಿಸಿದ್ದಾರೆ.
|
5 |
+
ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ಅವರಿಗೆ ನಮನಗಳು. ನಿಸ್ವಾರ್ಥ ಮತ್ತು ಕರುಣೆಯ ನೈಜ ಸಾಕಾರಮೂರ್ತಿಗಳಾಗಿದ್ದ ಶ್ರೀಗಳು ಸಮಾಜ ಸೇವೆಗೆ ಅಪ್ರತಿಮ ಕೊಡುಗೆಗಳನ್ನು ನೀಡಿದ್ದಾರೆ. ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಅವರ ಕೆಲಸವು ಲಕ್ಷಾಂತರ ಜನರ ಜೀವನವನ್ನು ತಲುಪಿದೆ ಮತ್ತು ಸಮರ್ಪಣೆ ಹಾಗೂ…
|
eesanje/url_46_189_12.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಸಿದ್ದಗಂಗಾ ಮಠದಲ್ಲಿ ಕರ್ನಾಟಕ ರತ್ನ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತ್ಯುತ್ಸವ ಆಚರಣೆ
|
2 |
+
ತುಮಕೂರು,ಏ.1-ತ್ರಿವಿಧ ದಾಸೋಹಿ, ಕರ್ನಾಟಕ ರತ್ನ, ಲಿಂಗೈಕ್ಯ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರ 117ನೇ ಜಯಂತ್ಯುತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದ ಹಿನ್ನಲೆಯಲ್ಲಿ ಶ್ರೀಗಳ ಗದ್ದುಗೆಗೆ ಇಂದು ಮುಂಜಾನೆ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಹರಗುರು ಚರಮೂರ್ತಿಗಳು ಪೂಜೆ ಸಲ್ಲಿಸಿದರು.ಶ್ರೀಮಠದ ಆವರಣದಲ್ಲಿರುವ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ವಿವಿಧ ಬಗೆಯ ಹೂವುಗಳು ಹಾಗೂ ಹಣ್ಣು ಹಂಪಲುಗಳಿಂದ ಶೃಂಗರಿಸಲಾಗಿತ್ತು.
|
3 |
+
ಮುಂಜಾನೆಯೇ ಅಭಿಷೇಕ, ಪೂಜೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ವಿವಿಧ ಮಠಾೀಶರ ಸಮ್ಮುಖದಲ್ಲಿ ನೆರವೇರಿಸಲಾಯಿತು. ನಂತರ ಶ್ರೀಗಳ ಪುತ್ಥಳಿಯನ್ನು ರುದ್ರಾಕ್ಷಿ ಮಂಟಪದಲ್ಲಿಟ್ಟು ವಿವಿಧ ಜಾನಪದ ಕಲಾತಂಡಗಳೊಂದಿಗೆ ಮಠದ ಆವರಣದಲ್ಲಿ ಮೆರವಣಿಗೆ ನಡೆಸಲಾಯಿತು.ನಂತರ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಿತು.
|
4 |
+
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವಂತೆ, ರಾಜಕೀಯ ಮುಖಂಡರಿಗೆ, ಶಾಸಕರಿಗೆ, ಸಚಿವರಿಗೆ ವೇದಿಕೆ ಕಾರ್ಯಕ್ರಮಕ್ಕೆ ಆಹ್ವಾನವಿರಲಿಲ್ಲ. ಬೆಳಗ್ಗೆಯೇ ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಪರಮೇಶ್ವರ್ ಅವರು ಶ್ರೀಮಠಕ್ಕೆ ಭೇಟಿ ನೀಡಿ ಶಿವಕುಮಾರಸ್ವಾಮೀಜಿಯವರ ಗದ್ದುಗೆಯ ದರ್ಶನ ಪಡೆದು ಪೂಜೆ ಸಲ್ಲಿಸಿ ನಂತರ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.
|
5 |
+
ಈ ವೇಳೆ ಮಾತನಾಡಿದ ಅವರು, ಅನ್ನ, ಅಕ್ಷರ, ದಾಸೋಹ ಸೇವೆ ಮಾಡುವುದು ಪುಣ್ಯದ ಕೆಲಸ. ಅದನ್ನು ಶಿವಕುಮಾರಸ್ವಾಮೀಜಿಯವರು ಮಾಡಿದ್ದಾರೆ. ಅವರ ಸೇವೆ ಅಜರಾಮರ. ರಾಜ್ಯದ ವಿವಿಧ ಭಾಗಗಳಿಂದ ಬಂದ ಬಡಮಕ್ಕಳು ಶ್ರೀಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇಲ್ಲಿ ಓದಿದವರು ಜೀವನ ಕಟ್ಟಿಕೊಂಡು ಉನ್ನತ ಹುದ್ದೆಯಲ್ಲಿದ್ದಾರೆ. ದೇಶ, ವಿದೇಶಗಳಲ್ಲಿ ಉನ್ನತ ಹುದ್ದೆಯಲ್ಲಿದ್ದಾರೆ ಎಂದರು.
|
6 |
+
ಶಿವಕುಮಾರ ಸ್ವಾಮೀಜಿಯವರಿಗೆ ಭಾರತರತ್ನ ಬೇಕಿಲ್ಲ. ಆದರೆ ಅವರ ಸೇವೆ ಗುರುತಿಸಿ ಭಾರತರತ್ನ ಕೊಡಬೇಕೆಂದು ಭಕ್ತರ ಒತ್ತಾಯವಾಗಿದೆ. ಕೇಂದ್ರ ಸರ್ಕಾರ ಯಾಕೋ ಏನೋ ತಲೆ ಕೆಡಿಸಿಕೊಳ್ಳುತ್ತಿಲ್ಲ. ಈಗಲಾದರೂ ಶ್ರೀಗಳಿಗೆ ಭಾರತ ರತ್ನ ನೀಡಲಿ ಎಂದು ಒತ್ತಾಯಿಸಿದರು.
|
7 |
+
ವಿವಿಧ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಶ್ರೀ ಮಠಕ್ಕೆ ಆಗಮಿಸಿದ್ದು, ಸರತಿ ಸಾಲಿನಲ್ಲಿ ನಿಂತು ಗದ್ದುಗೆಯ ದರ್ಶನ ಪಡೆದರು. ನಂತರ ಪ್ರತಿಯೊಬ್ಬ ಭಕ್ತರಿಗೂ ದಾಸೋಹ ಕಲ್ಪಿಸಲಾಗಿದ್ದು, ಶ್ರೀ ಮಠದ ವಿವಿಧೆಡೆ ಪ್ರಸಾದವನ್ನು ನೀಡಲಾಯಿತು.
|
8 |
+
ಪ್ರತಿ ವರ್ಷದಂತೆ ನಾಮಕರಣಕ್ಕೆ ಹೆಸರು ನೋಂದಾಯಿಸಿಕೊಂಡಿರುವ ಪೋಷಕರು ತಮ್ಮ ಮಕ್ಕಳಿಗೆ ಶಿವಕುಮಾರಸ್ವಾಮೀಜಿಯವರ ಹೆಸರನ್ನು ನಾಮಕರಣ ಮಾಡಿದರು. ಒಟ್ಟು 117 ಮಕ್ಕಳಿಗೆ ಇಂದು ಶಿವಕುಮಾರ ಸ್ವಾಮೀಜಿಗಳ ಹೆಸರನ್ನು ನಾಮಕರಣ ಮಾಡಲಾಯಿತು. ಈ ವೇಳೆ ಉತ್ತರಾಧಿಕಾರಿ ಶಿವಸಿದ್ದೇಶ್ವರ ಸ್ವಾಮೀಜಿ, ಮಂಡರಗಿಯ ಅನ್ನದಾನೇಶ್ವರ ಶ್ರೀಗಳು, ಧಾರವಾಡದ ಮುರುಘಾ ಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಗದುಗಿನ ವೀರಶೈವ ಪುಣ್ಯಾಶ್ರಮದ ಕಲ್ಲಯ್ಯ ಅಜ್ಜ ಸೇರಿದಂತೆ ವಿವಿಧ ಮಠಾೀಶರುಗಳು ಪಾಲ್ಗೊಂಡಿದ್ದರು.
|
eesanje/url_46_189_2.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ನಾಮಪತ್ರ ಸಲ್ಲಿಕೆಗೆ ಇನ್ನೆರಡು ದಿನ ಬಾಕಿ, ರಾಜ್ಯದಲ್ಲಿ ಈವರೆಗೆ 96 ಅಭ್ಯರ್ಥಿಗಳಿಂದ ಉಮೇದುವಾರಿಕೆ
|
2 |
+
ಬೆಂಗಳೂರು,ಏ.2-ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇನ್ನೆರಡು ದಿನ ಮಾತ್ರ ಬಾಕಿ ಉಳಿದಿದ್ದು, ನಿನ್ನೆಯವರೆಗೆ 96 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಮಾ.28ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಏ.4ರವರೆಗೆ ಉಮೇದುವಾರಿಕೆ ಸಲ್ಲಿಸಲು ಕಾಲಾವಕಾಶವಿದೆ. ಮೊದಲ ದಿನ 114, ನಿನ್ನೆ 55 ನಾಮಪತ್ರಗಳು ಸಲ್ಲಿಕೆಯಾಗಿದ್ದವು.
|
3 |
+
ನಿನ್ನೆ 49 ಮಂದಿ ನಾಮಪತ್ರ ಸಲ್ಲಿಸಿದ್ದು, ಅದರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ. ನಿನ್ನೆಯವರೆಗೆ ಬಿಜೆಪಿ 8, ಕಾಂಗ್ರೆಸ್ 6, ಜೆಡಿಎಸ್ ಒಬ್ಬ ಅಭ್ಯರ್ಥಿ ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. ಸಲ್ಲಿಕೆಯಾಗಿರುವ ನಾಮಪತ್ರಗಳಲ್ಲಿ 89 ಪುರುಷ, ಏಳು ಮಹಿಳೆಯರು ನಾಮಪತ್ರ ಸಲ್ಲಿಸಿದ್ದಾರೆ.
|
4 |
+
ಇಂದು ಮಂಗಳವಾರವಾದ ಕಾರಣ ಪ್ರಮುಖ ರಾಜಕೀಯ ಪಕ್ಷಗಳು ಹಾಗೂ ಸ್ವತಂತ್ರ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಲು ಹೆಚ್ಚು ಉತ್ಸಾಹ ತೋರಿಲ್ಲ. ನಾಳೆ ಹಾಗೂ ಗುರುವಾರ ಹೆಚ್ಚಿನ ಸಂಖ್ಯೆಯಲ್ಲಿ ನಾಮಪತ್ರ ಸಲ್ಲಿಸಲಾಗುತ್ತದೆ.
|
eesanje/url_46_189_3.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಅನುದಾನ ಮುಖ್ಯವಲ್ಲ, ಅನುಷ್ಠಾನ ಮುಖ್ಯ : ಡಾ.ಸಿ.ಎನ್.ಮಂಜುನಾಥ್
|
2 |
+
ಬೆಂಗಳೂರು, ಏ.2-ಅನುದಾನ ಮುಖ್ಯವಲ್ಲ, ಆದರೆ ಅನುಷ್ಠಾನ ಮುಖ್ಯ. ಅದಕ್ಕಾಗಿಯೇ ನಮ್ಮ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿ ಯೋಜನೆಗಳಿಂದ ಇಂದು ಉಜ್ವಲ ಭಾರತದ ಗುರಿಯನ್ನು ಹೊಂದಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ತಿಳಿಸಿದ್ದಾರೆ.
|
3 |
+
ನಾನು ಹೃದ್ರೋಗ ಚಿಕಿತ್ಸಾ ವೈದ್ಯನಾಗಿ ಹೇಳುವುದಾದರೆ, ಆರೋಗ್ಯ ಕ್ಷೇತ್ರದಲ್ಲಿ ಕಳೆದ 10 ವರ್ಷಗಳಲ್ಲಿ ಆಗಿರುವ ಬದಲಾವಣೆ ಅಪ್ರತಿಮವಾಗಿದೆ. ಈ ಹಿಂದೆ ರಕ್ತನಾಳದಲ್ಲಿ ಸಮಸ್ಯೆ ಕಂಡುಬಂದಾಗ ನಾವು ಸ್ಟೆಂಟ್ಗಳನ್ನು ಅಳವಡಿಸುತ್ತಿದ್ದೆವು. ಆಗ ಅದು ಒಂದು ಲಕ್ಷ ರೂ.ನಿಂದ 70 ಸಾವಿರದವರೆಗೆ ಇತ್ತು. ಆದರೆ, ಇಂದು 20 ರಿಂದ 25 ಸಾವಿರ ರೂ.ಗಳಿಗೆ ದೊರೆಯುತ್ತದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಯೋಜನೆಗಳೇ ಕಾರಣ ಎಂದು ಹೇಳಿದರು.
|
4 |
+
ಕೇವಲ ಆರೋಗ್ಯ, ಸ್ವಚ್ಛ ಭಾರತ, ಉಜ್ವಲ ಯೋಜನೆ, ಕಿಸಾನ್ ಸಮೃದ್ಧಿ ಯೋಜನೆ ಸೇರಿದಂತೆ ಹಲವಾರು ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೆ ತಂದು ಜನರ ಬದುಕಿನಲ್ಲಿ ಹೊಸ ಬದಲಾವಣೆ ತರಲಾಗಿದೆ ಎಂದು ತಿಳಿಸಿದರು.
|
5 |
+
ರಕ್ಷಣಾ ವಲಯದಲ್ಲೂ ಶೇ.49ರಷ್ಟು ಹೂಡಿಕೆಗೆ ಮುಕ್ತ ಅವಕಾಶ ನೀಡಿರುವುದರಿಂದ ಸ್ವಾವಲಂಬಿ ಭಾರತಕ್ಕೆ ದೊಡ್ಡ ಆಯಾಮ ಸಿಕ್ಕಿದೆ. ಹಿಂದೆ ನಾವು ಶಸ್ತ್ರಾಸ್ತ್ರಗಳಿಗಾಗಿ ವಿದೇಶಗಳನ್ನು ಅವಲಂಬಿಸುತ್ತಿದ್ದೆವು. ಆದರೆ, ಈಗ ನಾವು ನಮ್ಮಲ್ಲಿ ಉತ್ಪಾದಿಸಿದ ಶಸ್ತ್ರಾಸ್ತ್ರಗಳನ್ನು ರಫ್ತು ಮಾಡುತ್ತಿದ್ದೇವೆ. ಕೇಂದ್ರ ಸರ್ಕಾರದ ಯೋಜನೆಗಳು ನೇರವಾಗಿ ಸಾಮಾನ್ಯರಿಗೆ ಮುಟ್ಟಿವೆ. ಇದನ್ನು ಜನರಿಗೆ ತಿಳಿಸಿ ಮತ ಕೇಳೋಣ ಎಂದು ನುಡಿದರು.
|
6 |
+
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ಬಾರಿ 400ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲುವ ಗುರಿ ಹೊಂದಿದ್ದಾರೆ. ಅದರಲ್ಲಿ ನಮ್ಮ ಬೆಂಗಳೂರು ದಕ್ಷಿಣ, ಕೇಂದ್ರ, ಉತ್ತರ, ಚಿಕ್ಕಬಳ್ಳಾಪುರ ಅಭ್ಯರ್ಥಿಗಳು ಸೇರಿದಂತೆ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾಗಿ ನಾನು ಕೂಡ ಗೆದ್ದು ಆ ಪಟ್ಟಿಯಲ್ಲಿರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
|
7 |
+
ನಾನು ಯಾವಾಗಲೂ ಚಿಕಿತ್ಸೆ ಮೊದಲು, ಹಣ ಪಾವತಿ ನಂತರ ಎನ್ನುತ್ತಿದ್ದೆ. ಆದರೆ, ಈಗ ಸಾರ್ವತ್ರಿಕ ಜೀವನ ಆರಂಭಿಸಿದ್ದೇನೆ. ಮತ ಮೊದಲು, ಸೇವೆ ನಿರಂತರ ಎಂಬ ಧ್ಯೇಯವಾಕ್ಯವನ್ನು ಮುಂದಿಟ್ಟುಕೊಂಡಿದ್ದೇನೆ. ಇದೇ ವೇಳೆ ನಾವು ಹೆಚ್ಚು ಟೀಕೆಗಳನ್ನು ಮಾಡದೆ ನಮ್ಮ ಸಾಧನೆಗಳನ್ನು ಜನರಿಗೆ ತಿಳಿಸೋಣ. ಏಕೆಂದರೆ, ಟೀಕೆಗಳು ಸಾಯುತ್ತವೆ, ಆದರೆ ಸಾಧನೆ ಜೀವಂತವಾಗಿರುತ್ತದೆ ಎಂದು ಡಾ.ಮಂಜುನಾಥ್ ಹೇಳಿದರು.
|
eesanje/url_46_189_4.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಇನ್ನುಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸಲ್ಲ : ಸಿಎಂ ಸಿದ್ದು ಘೋಷಣೆ
|
2 |
+
ಮೈಸೂರು,ಏ.2-ವಯೋಸಹಜ ಕಾರಣಗಳಿಂದಾಗಿ ಇನ್ನುಮುಂದೆ ತಾವು ಯಾವುದೇ ಚುನಾವಣೆಗೂ ಸ್ಪರ್ಧಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೀಗ 77 ವರ್ಷ. ಇನ್ನೂ 4 ವರ್ಷ ಸಮಯವಿದೆ. ಅದು ಮುಗಿಯುವ ವೇಳೆಗೆ 81 ವರ್ಷ ಆಗಲಿದ್ದು, ಆ ಸಂದರ್ಭಕ್ಕೆ ಆರೋಗ್ಯವೂ ಉತ್ತಮವಾಗಿರುವುದಿಲ್ಲ, ಹರ್ಷದಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಅದಕ್ಕಾಗಿ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದರು.
|
3 |
+
1978 ರಲ್ಲಿ ತಾವು ರಾಜಕೀಯಕ್ಕೆ ಬಂದಿದ್ದು, 50 ವರ್ಷ ಕಳೆಯುತ್ತಿದೆ. ಇಷ್ಟು ಸಾಕು. ಮೇಲ್ನೋಟಕ್ಕೆ ನನಗೆ ವಯಸ್ಸಾಗಿದೆ ಎಂದು ಕಾಣದೇ ಇದ್ದರೂ ನನ್ನ ಒಳಗಿನ ಆರೋಗ್ಯದ ಸಾಮರ್ಥ್ಯ ನನಗೆ ಗೊತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
|
4 |
+
ನಿನ್ನೆ ವರುಣಾ ಕ್ಷೇತ್ರದಲ್ಲಿ ಭಾಷಣ ಮಾಡುವಾಗ ಬಿಜೆಪಿಯವರು ಅಧಿಕಾರಕ್ಕೆ ಬಂದರೆ ನಮ್ಮ ಕಾರ್ಯಕ್ರಮಗಳನ್ನು ನಿಲ್ಲಿಸಿಬಿಡುತ್ತಾರೆ. ಹಾಗಾಗಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ನಮ್ಮನ್ನು ಅಧಿಕಾರದಲ್ಲಿ ಮುಂದುವರೆಯಲು ಅವಕಾಶ ಮಾಡಿಕೊಡಿ ಎಂದು ಕೇಳಿದ್ದೇನೆ.
|
5 |
+
ಕಳೆದ ವಿಧಾನಸಭಾ ಚುನಾವಣೆಯಲ್ಲಿ 48 ಸಾವಿರ ಮತಗಳ ಲೀಡ್ ಇತ್ತು. ಈ ಬಾರಿ 60 ಸಾವಿರಕ್ಕಿಂತಲೂ ಹೆಚ್ಚಿನ ಲೀಡ್ ನೀಡುವಂತೆ ಮನವಿ ಮಾಡಿದ್ದೇನೆ ಎಂದರು.ನಾವು ಜನರ ಬದುಕಿನ ಆಧಾರದ ಮೇಲೆ ಮತ ಕೇಳುತ್ತೇವೆ. ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಜನ ನಮ್ಮ ಕಾರ್ಯಕ್ರಮಗಳನ್ನು ನೋಡಿ ಮತ ಹಾಕುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
|
6 |
+
ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗೆ ಎಷ್ಟೇ ಹಣಕಾಸಿನ ಅಗತ್ಯವಿದ್ದರೂ ಒದಗಿಸಲು ನಮ್ಮ ಸರ್ಕಾರ ಸಿದ್ಧವಿದೆ. ಮೈಸೂರಿನಲ್ಲಿ ಆಸ್ತಿ ತೆರಿಗೆ ಹೆಚ್ಚಿಸದೇ ಇದ್ದರೂ ಸುಳ್ಳು ವರದಿಯಾಗಿದೆ. ತಮ್ಮಷ್ಟಕ್ಕೇ ತಾವು ಊಹೆ ಮಾಡಿಕೊಂಡು ವರದಿ ಮಾಡುವುದು ಅಪಾಯಕಾರಿ ಎಂದರು.
|
7 |
+
ಮಾಜಿ ಸಚಿವ ಜನಾರ್ಧನ ರೆಡ್ಡಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರ ಬಳಿ ಸೂಕ್ತ ದಾಖಲೆಗಳಿದ್ದರೆ ನ್ಯಾಯಾಲಯಕ್ಕೆ ಹೋಗಲಿ. ಈ ಹಿಂದೆ ಗಣಿ ಹಗರಣದ ಬಗ್ಗೆ ಲೋಕಾಯುಕ್ತರಾಗಿದ್ದ ಸಂತೋಷ್ ಹೆಗ್ಡೆ, ವರದಿ ನೀಡಿ ಜನಾರ್ದನ ರೆಡ್ಡಿ ಬಳ್ಳಾರಿಯನ್ನು ರಿಪಬ್ಲಿಕ್ ಮಾಡುತ್ತಿದ್ದಾರೆ ಎಂದು ದೂರಿದ್ದರು. ವರದಿಯಲ್ಲಿ ಸಂತೋಷ್ ಲಾಡ್ ಅಥವಾ ಬಿ.ನಾಗೇಂದ್ರ ಅವರ ಹೆಸರು ಇರಲಿಲ್ಲ. ವರದಿಯ ಬಗ್ಗೆ ತಾವು ವಿಧಾನಸಭೆಯಲ್ಲಿ ಚರ್ಚೆ ಮಾಡಿದಾಗ ಯಡಿಯೂರಪ್ಪ ಮತ್ತು ಗಣಿ ಉದ್ಯಮಿಗಳು ನನ್ನ ವಿರುದ್ಧ ಜಗಳಕ್ಕೆ ಬಂದರು. ಆದ ಕಾರಣಕ್ಕೆ ತಾವು ಬಳ್ಳಾರಿಯವರೆಗೂ ಪಾದಯಾತ್ರೆ ಮಾಡಿದ್ದಾಗಿ ತಿಳಿಸಿದರು.
|
8 |
+
ಅಮಿತ್ ಶಾ ಕುರಿತು ತಮ್ಮ ಪುತ್ರ ಯತೀಂದ್ರ ನೀಡಿದ್ದ ಹೇಳಿಕೆಗೆ ನೋಟೀಸ್ ಬಂದಿದೆ. ಅದಕ್ಕೆ ಉತ್���ರ ನೀಡಲಾಗಿದೆ. ಅದರ ಬಗ್ಗೆ ಹೆಚ್ಚಿನ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು.ಕೆಪಿಎಸ್ಸಿಯಲ್ಲಿ ನೇಮಕಾತಿಯ ದಾಖಲಾತಿಗಳು ಕಡಿಮೆಯಾಗಿರುವ ಬಗ್ಗೆ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.ತಮಗೆ ಯಾವುದೇ ಆತಂಕವಿಲ್ಲ. ಹಾಗಾಗಿ ಸದಾಕಾಲ ಶಾಂತವಾಗಿರುತ್ತೇನೆ ಎಂದು ಹೇಳಿದರು.
|
eesanje/url_46_189_5.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಈಶ್ವರಪ್ಪಗೆ ಅಮಿತ್ ಷಾ ಕರೆ, ದೆಹಲಿಗೆ ಬರುವಂತೆ ಬುಲಾವ್
|
2 |
+
ಬೆಂಗಳೂರು,ಏ.2-ಯಡಿಯೂರಪ್ಪ ವಿರುದ್ಧ ತಿರುಗಿಬಿದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯವಾಗಿ ಸ್ಪರ್ಧಿಸಲು ಮುಂದಾಗಿರುವ ಈಶ್ವರಪ್ಪ ಅವರಿಗೆ ಕೇಂದ್ರ ಸಚಿವ ಅಮಿತ್ ಷಾ ಅವರು ಕರೆ ಮಾಡಿದ್ದ ಹಿನ್ನೆಲೆಯಲ್ಲಿ ನಾಳೆ ಈಶ್ವರಪ್ಪ ದೆಹಲಿಗೆ ತೆರಳಲಿದ್ದಾರೆ.
|
3 |
+
ನನ್ನ ಮಗ ಕಾಂತೇಶ್ಗೆ ಹಾವೇರಿಯಲ್ಲಿ ಟಿಕೆಟ್ ತಪ್ಪಿಸಿದ್ದಾರೆ. ನಾನು ಶಿವಮೊಗ್ಗದಲ್ಲಿ ಸ್ಪರ್ಧಿಸಿ ಬಿಎಸ್ವೈ ಪುತ್ರ ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸುತ್ತೇನೆ ಎಂದು ಶಪಥ ಮಾಡಿರುವ ಈಶ್ವರಪ್ಪ, ಕಳೆದ 15 ದಿನಗಳಿಂದ ಪ್ರಚಾರ ನಡೆಸುತ್ತಿದ್ದಾರೆ.
|
4 |
+
ಈಶ್ವರಪ್ಪ ಬಂಡಾಯ ಶಮನಕ್ಕೆ ಬಿಜೆಪಿ ಹೈಕಮಾಂಡ್ ನಾಯಕರು ಮುಂದಾಗಿದ್ದಾರೆ. ಈಶ್ವರಪ್ಪ ಅವರಿಗೆ ಕರೆ ಮಾಡಿರುವ ಅಮಿತ್ ಷಾ ಅವರು ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ. ನಾನು ದೆಹಲಿಗೆ ಬರುತ್ತೇನೆ. ಆದರೆ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ.ನಾನು ಸ್ಪರ್ಧಿಸುತ್ತೇನೆ. ಗೆದ್ದು ಬಿಜೆಪಿಗೆ ಮರಳುತ್ತೇನೆ. ನಿಮ್ಮ ಬೆಂಬಲವಿರಲಿ ಎಂದು ಈಶ್ವರಪ್ಪ ಅವರು ಅಮಿತ್ ಷಾ ಅವರಿಗೆ ಹೇಳಿದ್ದಾರೆಂದು ತಿಳಿದುಬಂದಿದೆ.
|
5 |
+
ದೆಹಲಿಗೆ ಬಂದಾಗ ಇಲ್ಲಿ ಏನೇನಾಗಿದೆ ಎಂಬುದರ ಬಗ್ಗೆ ಹೇಳುತ್ತೇನೆ ಎಂದು ಈಶ್ವರಪ್ಪ ಹೇಳಿದ್ದಾರೆ. ಒಟ್ಟಾರೆ ಶಿವಮೊಗ್ಗದ ಬಂಡಾಯ ತೀವ್ರಗೊಂಡಿದೆ. ಇದರ ಶಮನಕ್ಕೆ ಹೈಕಮಾಂಡ್ ಎಂಟ್ರಿಯಾಗಿದೆ. ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಕೊಪ್ಪಳ ಕ್ಷೇತ್ರಗಳ ಬಂಡಾಯವನ್ನು ಶಮನಗೊಳಿಸಿದ್ದ ಬಿಜೆಪಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಶಮನಕ್ಕೆ ಮುಂದಾಗಿದೆ. ಮುಂದೇನಾಗಲಿದೆಯೋ ಕಾದು ನೋಡಬೇಕು.
|
eesanje/url_46_189_6.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಸಮಿತಿ ಪುನಾರಚನೆ
|
2 |
+
ಬೆಂಗಳೂರು,ಏ.2-ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಸಮಿತಿಯನ್ನು ಪುನರ್ ರಚಿಸಲಾಗಿದ್ದು, 7 ಜಿಲ್ಲಾಧ್ಯಕ್ಷರು, 43 ಉಪಾಧ್ಯಕ್ಷರು, 138 ಪ್ರಧಾನ ಕಾರ್ಯದರ್ಶಿಗಳನ್ನು ನಿಯೋಜಿಸಲಾಗಿದೆ. ಜೊತೆಗೆ ಮಾಧ್ಯಮ ಮತ್ತು ಸಂವಹನ ಘಟಕಕ್ಕೆ ಅಧ್ಯಕ್ಷರಾಗಿದ್ದ ಸಚಿವ ಪ್ರಿಯಾಂಕ ಖರ್ಗೆ ಅವರ ಬದಲಾಗಿ ಇದೇ ಘಟಕದಲ್ಲಿ ಉಪಾಧ್ಯಕ್ಷರಾಗಿದ್ದ ರಮೇಶ್ ಬಾಬು ಅವರಿಗೆ ಬಡ್ತಿ ನೀಡಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
|
3 |
+
ವಿಧಾನಸಭೆ ಟಿಕೆಟ್ ವಂಚಿತೆ ಐಶ್ವರ್ಯ ಮಹದೇವ್ ಅವರನ್ನು ಸಹ ಅಧ್ಯಕ್ಷರನ್ನಾಗಿ, ಇ.ಸತ್ಯಪ್ರಕಾಶ್ರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.ಸಾಮಾಜಿಕ ಜಾಲತಾಣಕ್ಕೆ ವಿಜಯ್ ಮತ್ತಿಕಟ್ಟಿ, ನಿಖಿತ್ ರಾಜ್ ಮೌಲ್ಯ ಅವರನ್ನು ಸಹ ಅಧ್ಯಕ್ಷರನ್ನಾಗಿ ನಿಯೋಜಿಸಲಾಗಿದೆ. ಖಜಾಂಚಿಯನ್ನಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ರವರ ಆಪ್ತ ವಿನಯ್ ಕಾರ್ತಿಕ್ ಮುಂದುವರೆದಿದ್ದಾರೆ.
|
4 |
+
ಬಳ್ಳಾರಿ ನಗರ ಜಿಲ್ಲೆಗೆ ಹಿರಿಯ ನಾಯಕ ಅಲ್ಲಮ ವೀರಭದ್ರಪ್ಪ ಅವರ ಪುತ್ರ ಪ್ರಶಾಂತ್, ಬೆಂಗಳೂರು ಪೂರ್ವಕ್ಕೆ ಕೆ.ನಂದಕುಮಾರ್, ಹಾವೇರಿಗೆ ಸಂಜೀವ್ ಕುಮಾರ್ ನೀರಲಂಗಿ, ಕೊಪ್ಪಳಕ್ಕೆ ಅಮರೇಗೌಡ ಬಯ್ಯಾಪುರ, ಉಡುಪಿಗೆ ಕೃಷ್ಣ ಹೆಗ್ಡೆ, ರಾಯಚೂರಿಗೆ ಬಸವರಾಜ್ ಇಟಗಿ, ಶಿವಮೊಗ್ಗಕ್ಕೆ ಆರ್.ಪ್ರಸನ್ನಕುಮಾರ್ ಜಿಲ್ಲಾಧ್ಯಕ್ಷರಾಗಿದ್ದಾರೆ.
|
5 |
+
ಉಪಾಧ್ಯಕ್ಷರು :ಬಿ.ಎಲ್.ಶಂಕರ್, ಅಜಯ್ಕುಮಾರ್ ಸರ್ನಾಯಕ್, ಮೆಹಬೂಬ ಸೌದಾಗರ್, ಆನಂದ್ ನ್ಯಾಮೆಗೌಡ, ವಿ.ಎಸ್.ಉಗ್ರಪ್ಪ, ಒಬೆದುಲ್ಲಾ ಶರೀಫ್, ಎಂ.ನಾರಾಯಣಸ್ವಾಮಿ, ವೆಂಕಟರಮಣಯ್ಯ, ಆರ್.ವಿ.ವೆಂಕಟೇಶ್, ಎಂ.ಸಿ.ವೇಣುಗೋಪಾಲ್, ಪಿ.ಆರ್.ರಮೇಶ್, ಎನ್.ಕೃಷ್ಣರಾಜು, ಜಾನ್ವೆಸ್ಲೆ, ಐವಾನ್ ಡಿಸೋಜ, ರಮಾನಾಥ್ ರೈ, ಕೆ.ಶಿವಮೂರ್ತಿ, ಮೋಹನ್ ಲಿಂಬಿಕಾಯಿ, ವಿ.ಆರ್.ಸುದರ್ಶನ್, ಸೂರಜ್ ಹೆಗ್ಡೆ ಸೇರಿದಂತೆ 43 ಮಂದಿಯನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.
|
6 |
+
ಪ್ರಧಾನ ಕಾರ್ಯದರ್ಶಿ :ದಯಾನಂದ್ ಎಸ್.ಪಾಟೀಲ್, ಮುರಳಿ ಕೃಷ್ಣ, ಉಮೇಶ್ ಬಾಬು, ಸುಧಾಕರ್ ಬಡಿಗೆ, ಜಿ.ಎ.ಬಾವ, ಅಗಾ ಸುಲ್ತಾನ್, ಜಿ.ಶೇಖರ್, ಎಂ.ರಾಮಚಂದ್ರಪ್ಪ, ಮತೀಲ್ಡಾ ಡಿಸೋಜ, ಪ್ರವೀಣ್ ಪೀಟರ್, ಎಚ್.ನಾಗೇಶ್, ಎಸ್.ಮನೋಹರ್, ವಿಜಯ್ ಕೆ. ಮುಳಗೊಂದ್, ಮಂಜುಳಾ ನಾಯ್ಡು, ಹುಚ್ಚಪ್ಪ, ಮಿಲಿಂದ್ ಧರ್ಮಸೇನ, ಭಾವನ ರಾಮಣ್ಣ, ಕೆಂಚೇಗೌಡ, ಮದನ್ಪಟೇಲ್, ಗುರಪ್ಪ ನಾಯ್ಡು, ಎಸ್.ಎ.ಹುಸೇನ್, ಎಂ.ಉದಯಶಂಕರ್, ಡಾ.ಬಿ.ತಿಪ್ಪೇಸ್ವಾಮಿ, ಮಿಥುನ್ ರೈ, ರಕ್ಷಿತ್ ಶಿವರಾಂ, ರಾಜ್ಗೋಪಾಲ ರೆಡ್ಡಿ, ಸ್ವಾಮಿ ಮಳಗಿ, ರಾಜೇಶ್ವರಿ ಪಾಟೀಲ್, ಡಾ.ಡಿ.ಸಿ.ಮುದ್ದುಗಂಗಾಧರ್, ಸಿ.ಆರ್.ಮನೋಹರ್, ಎಂ.ನಾರಾಯಣಸ್ವಾಮಿ, ನಿಕೇತ್ರಾಜ್ ಮೌರ್ಯ, ನಿವೇದಿತ್ ಆಳ್ವ, ಪೂರ್ಣಿಮಾ ಶ್ರೀನಿವಾಸ್, ಸೌಮ್ಯರೆಡ್ಡಿ ಸೇರಿದಂತೆ 138 ಮಂದಿಯನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಿಯೋಜಿಸಲಾಗಿದೆ.
|
eesanje/url_46_189_7.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಚನ್ನಪಟ್ಟಣದಲ್ಲಿ ಇಂದು ಅಮಿತ್ ಷಾ ರೋಡ್ ಶೋ, ಮೊಳಗಲಿದೆ ಚುನಾವಣಾ ರಣಕಹಳೆ
|
2 |
+
ಬೆಂಗಳೂರು,ಏ.2-ಗೊಂಬೆ ನಾಡು ಎಂದೇ ಪ್ರಸಿದ್ದವಾಗಿರುವ ಚನ್ನಪಟ್ಟಣದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಷಾ ಅವರು ರೋಡ್ ಶೋ ನಡೆಸುವ ಮೂಲಕ ಚುನಾವಣಾ ರಣ ಕಹಳೆ ಮೊಳಗಿಸಲಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರ ಪರವಾಗಿ ರೋಡ್ ಶೋ ನಡೆಸಿ ಮತಯಾಚನೆ ಮಾಡಲಿದ್ದಾರೆ.
|
3 |
+
ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಮೊದಲ ಚುನಾವಣಾ ರ್ಯಾಲಿಯಲ್ಲಿ ಅಮಿತ್ ಷಾ ಪಾಲ್ಗೊಳ್ಳುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಎನ್ಡಿಎ ಅಭ್ಯರ್ಥಿಗಳ ಪರವಾಗಿ ಷಾ ಪ್ರಚಾರ ಕೈಗೊಳ್ಳಲಿದ್ದಾರೆ.
|
4 |
+
ಇಂದು ಸಂಜೆ 5.30ಕ್ಕೆ ಮಂಗಳವಾರಪೇಟೆಯಿಂದ ಚನ್ನಪಟ್ಟಣದ ಡಿ.ಟಿ.ರಾಮು ವೃತ್ತದವರೆಗೂ ನಡೆಯುವ ರೋಡ್ ಶೋ ನಡೆಯಲಿದೆ. ಅಮಿತ್ ಷಾ ಅವರಲ್ಲದೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಮೊದಲಾದ ಎನ್ಡಿಎ ನಾಯಕರು ಕ್ಷೇತ್ರದ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಪರವಾಗಿ ರೋಡ್ ಶೋನಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
|
5 |
+
ಚನ್ನಪಟ್ಟಣದಲ್ಲಿ ಚುನಾವಣಾ ಕಹಳೆ ಮೊಳಗಿಸುವ ಮೂಲಕ ಜೆಡಿಎಸ್-ಬಿಜೆಪಿ ನಾಯಕರ ಜಂಟಿ ಚುನಾವಣಾ ಪ್ರಚಾರಕ್ಕೂ ನಾಂದಿ ಹಾಡಲಿದ್ದಾರೆ. ಈಗಾಗಲೇ ಸ್ಥಳೀಯವಾಗಿ ಆಯಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸಮನ್ವಯ ಸಭೆಗಳನ್ನು ನಡೆಸಿ ಚುನಾವಣಾ ಪ್ರಚಾರದಲ್ಲಿ ಉಭಯ ಪಕ್ಷಗಳ ನಾಯಕರು ಪಾಲ್ಗೊಳ್ಳುತ್ತಿದ್ದಾರೆ.
|
eesanje/url_46_189_8.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಲೋಕಾಯುಕ್ತಕ್ಕೆ ಶಾಸಕರ ಆಸ್ತಿ ವಿವರ ಸಲ್ಲಿಸಲು ಜೂ.30ರ ಗಡುವು
|
2 |
+
ಬೆಂಗಳೂರು,ಏ.2-ಹದಿನಾರನೇ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕರು 2023-24ನೇ ಸಾಲಿಗೆ ಸಂಬಂಧಿಸಿದ ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಜೂನ್ 30ರೊಳಗೆ ಕರ್ನಾಟಕ ಲೋಕಾಯುಕ್ತಕ್ಕೆ ಸಲ್ಲಿಸಬೇಕಿದೆ.
|
3 |
+
ನಿಗದಿತ ನಮೂನೆಯಲ್ಲಿ ಶಾಸಕರು ಕಳೆದ ಆರ್ಥಿಕ ಸಾಲಿನ ತಮ್ಮ ಮತ್ತು ಕುಟುಂಬದ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಲೋಕಾಯುಕ್ತರಿಗೆ ನೇರವಾಗಿ ಸಲ್ಲಿಸುವಂತೆ ವಿಧಾನಸಭೆ ಕಾಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
|
4 |
+
ಶಾಸಕರು ತಮ್ಮ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಿರುವ ಮಾಹಿತಿಯನ್ನು ವಿಧಾನಸಭೆ ಸಚಿವಾಲಯಕ್ಕೆ ನೀಡುವಂತೆ ತಿಳಿಸಿದ್ದಾರೆ. ಲೋಕಾಯುಕ್ತರು ಮಾ.22ರಂದು ಪತ್ರ ಬರೆದು ಶಾಸಕರು ಆಸ್ತಿ ವಿವರ ಸಲ್ಲಿಸಲು ಸೂಚಿಸಿರುತ್ತಾರೆ. ಹೀಗಾಗಿ ಎಲ್ಲ ಸದಸ್ಯರಿಗೆ ವಿಧಾನಸಭೆ ಸಚಿವಾಲಯ ಈ ಮಾಹಿತಿಯನ್ನು ರವಾನಿಸಿದೆ.
|
5 |
+
ಕರ್ನಾಟಕ ಲೋಕಾಯುಕ್ತ ಅಧಿನಿಯಮ 1984 ಕಲಂ 7ರ ಉಪ ಕಲಂ(1) ಅಡಿ ಉಲ್ಲೇಖಿಸಿರುವಂತೆ ಪ್ರತಿಯೊಬ್ಬ ವಿಧಾನಸಭೆಯ ಸದಸ್ಯರು ಆಯಾ ವರ್ಷದ ಜೂ.30ರೊಳಗೆ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಸಲ್ಲಿಸಬೇಕಾಗಿದೆ.
|
eesanje/url_46_189_9.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಕರ್ನಾಟಕ ಪೊಲೀಸರ ದಕ್ಷತೆ, ಕಾರ್ಯವೈಖರಿಯನ್ನು ಕೊಂಡಾಡಿದ ರಜನೀಶ್ ಗೋಯಲ್
|
2 |
+
ಬೆಂಗಳೂರು,ಏ.2-ಕರ್ನಾಟಕ ಪೊಲೀಸರು ಕಾರ್ಯವೈಖರಿ, ನಿಪುಣತೆ, ದಕ್ಷತೆಯಿಂದ ಇಡೀ ರಾಷ್ಟ್ರದಲ್ಲೇ ಒಳ್ಳೆಯ ಹೆಸರು ಪಡೆದಿದ್ದಾರೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್ ಹೇಳಿದ್ದಾರೆ.
|
3 |
+
ಕೋರಮಂಗಲದ ಕೆಎಸ್ಆರ್ಪಿ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ನಮ್ಮ ಪೊಲೀಸರ ಕಾರ್ಯವೈಖರಿ ಹಾಗೂ ದಕ್ಷತೆ ಬಗ್ಗೆ ನಮಗೆ ಹೆಮ್ಮೆ ಇದ್ದು, ರಾಷ್ಟ್ರದಲ್ಲೇ ಒಳ್ಳೆಯ ಹೆಸರು ಪಡೆದಿದೆ. ಇದಕ್ಕೆ ಉದಾಹರಣೆ ಎಂಬಂತೆ ಕೆಲ ವರ್ಷಗಳ ಹಿಂದೆ ಮೈಸೂರಿನಲ್ಲಿ ನಡೆದ ಘಟನೆಯೊಂದರಲ್ಲೇ ಯಾವುದೇ ಪ್ರಮುಖ ಸಾಕ್ಷಿ ಇಲ್ಲದಿದ್ದರೂ ಕೇವಲ ಎರಡು ಬಸ್ ಟಿಕೆಟ್ಗಳನ್ನೇ ಆಧರಿಸಿ ಪ್ರಕರಣವನ್ನು ಭೇದಿಸುವಲ್ಲಿ ಸಫಲರಾಗಿದ್ದಾರೆ ಎಂದು ಶ್ಲಾಘಿಸಿದರು.
|
4 |
+
ಅಪರಾಧ ಪ್ರಕರಣಗಳು ಎಷ್ಟೇ ಜಟಿಲವಾಗಿದ್ದರೂ ಅದನ್ನು ಬಹಳ ಸಫಲವಾಗಿ ನಿಭಾಯಿಸುವಲ್ಲಿ ಪೊಲೀಸ್ ಇಲಾಖೆಯಲ್ಲಿನ ನಾಯಕತ್ವಕ್ಕೆ ನನ್ನ ಅಭಿನಂದನೆಗಳು ಎಂದರು. ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯನ್ನು ಬಹಳ ಯಶಸ್ವಿಯಾಗಿ ಒಂದೇ ಒಂದು ಮರುಮತದಾನ ನಡೆಯದಂತೆ ನಡೆಸಿಕೊಟ್ಟಿದ್ದೀರಿ. ಇದು ಇಡೀ ರಾಷ್ಟ್ರಕ್ಕೆ ಮಾದರಿಯಾಗಿದೆ.
|
5 |
+
ಈಗ ಲೋಕಸಭಾ ಚುನಾವಣೆ ಎದುರಿಸಲು ಸಿದ್ಧರಾಗಿದ್ದೇವೆ. ತಾವೆಲ್ಲರೂ ಮುಕ್ತ ಮತ್ತು ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಿಕೊಡುತ್ತೀರೆಂದು ನನಗೆ ವಿಶ್ವಾಸವಿದೆ. ಇದಕ್ಕಾಗಿ ಎಲ್ಲರೂ ಶ್ರಮಪಡಬೇಕು ಎಂದು ಅವರು ತಿಳಿಸಿದರು.
|
6 |
+
ರಾಜ್ಯ ಅಭಿವೃದ್ಧಿ ಹೊಂದಬೇಕಾದರೆ ರಾಜ್ಯ ಶಾಂತಿ ಯುತವಾಗಿರಬೇಕು. ಅದಕ್ಕಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಬರದಂತೆ ನೋಡಿಕೊಳ್ಳುವುದು ಪೊಲೀಸರ ಜವಾಬ್ದಾರಿ. ಇದರಿಂದ ನಮ್ಮ ರಾಜ್ಯ ಉನ್ನತೀಕರಣಗೊಂಡು ಅಗ್ರ ಸ್ಥಾನಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದರು.
|
7 |
+
2018ರಿಂದ ಸತತ ಏಳು ವರ್ಷಗಳಿಂದ ಈ ಕಾರ್ಯಕ್ರಮಕ್ಕೆ ಬರುತ್ತಿದ್ದೇನೆ. ಅದಕ್ಕೆ ಅವಕಾಶ ಕೊಟ್ಟ ಭಗವಂತನಿಗೆ ಚಿರ ಋಣಿ. ಗೃಹ ಕಾರ್ಯದರ್ಶಿಯಾಗಿ ತಮ್ಮ ಮುಂದಿರುವ ಸವಾಲುಗಳು, ಕೆಲಸದ ಒತ್ತಡ, ಜವಾಬ್ದಾರಿಯನ್ನು ಚೆನ್ನಾಗಿ ಅರ್ಥೈಸಿಕೊಂಡಿದ್ದೇನೆ. ಸರ್ಕಾರದ ಮಟ್ಟದಲ್ಲಿ ತಮಗೆ ಬೇಕಾದಂತಹ ಮೂಲಸೌಕರ್ಯಗಳು, ಹೊಸ ವಾಹನಗಳು, ಆಧುನಿಕ ತಂತ್ರಜ್ಞಾನ ಮತ್ತು ಹೊಸ ಸಿಬ್ಬಂದಿಗಳ ನೇಮಕ, ಸಿಬ್ಬಂದಿ ತರಬೇತಿ ಅವಶ್ಯಕತೆಗಳನ್ನು ಪೂರೈಸಲು ಪ್ರಯತ್ನಿಸಿದ್ದೇನೆ ಎಂದರು.
|
8 |
+
ಕಾರ್ಯಕ್ರಮದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ಪೊಲೀಸ್ ಮಹಾನಿರ್ದೇಶಕ ಅಲೋಕ್ಮೋಹನ್, ಕೆಎಸ್ಆರ್ಪಿಯ ಎಡಿಜಿಪಿ ಉಮೇಶ್ಕುಮಾರ್ ಮತ್ತು ಹಿರಿಯ-ಕಿರಿಯ ಪೊಲೀಸ್ ಅಕಾರಿಗಳು, ನಿವೃತ್ತ ಪೊಲೀಸ್ ಅಕಾರಿಗಳ ಕುಟುಂಬಸ್ಥರು ಭಾಗವಹಿಸಿದ್ದರು.
|
eesanje/url_46_18_1.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಪ್ರಜಾಪ್ರಭುತ್ವ ದಿನದ ಅಂಗವಾಗಿ 31 ಜಿಲ್ಲೆಗಳಲ್ಲಿ 2500 ಕಿ.ಮೀ ಬೃಹತ್ ಮಾನವ ಸರಪಳಿಗೆ
|
2 |
+
2500 31
|
3 |
+
ಬೆಂಗಳೂರು,ಸೆ.15-ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಇಂದು ರಾಜ್ಯಾದ್ಯಂತ ಬೀದರ್ನಿಂದ ಚಾಮರಾಜನಗರದವರೆಗೂ 31 ಜಿಲ್ಲೆಗಳಲ್ಲಿ 2,500 ಕಿ.ಮೀ. ಮಾನವ ಸರಪಳಿಯನ್ನು ನಿರ್ಮಿಸಲಾಗಿದೆ. ಪ್ರಜಾಪ್ರಭುತ್ವದ ಆಶಯಗಳಾದ ಸಮಾನತೆ, ಅಸ್ಪಶ್ಯತೆ ನಿವಾರಣೆ, ಸೌಹಾರ್ದತೆ, ಭಾವೈಕ್ಯತೆ, ಕೋಮುವಾದ ಹತ್ತಿಕ್ಕುವುದು ಸೇರಿದಂತೆ ಹಲವು ಆಶಯಗಳೊಂದಿಗೆ ಇಂದು ನಡೆದ ಮಾನವಸರಪಳಿಯಲ್ಲಿ 25 ಲಕ್ಷಕ್ಕೂ ಹೆಚ್ಚು ಅಧಿಕ ಮಂದಿ ಭಾಗವಹಿಸಿದ್ದರು.
|
4 |
+
ಶಾಲಾ ಮಕ್ಕಳು, ಶಿಕ್ಷಕರು, ಶೈಕ್ಷಣಿಕ ಸಂಸ್ಥೆಗಳ ಎಲ್ಲರನ್ನೂ ತೊಡಗಿಸಿಕೊಳ್ಳಲಾಗಿತ್ತು. ಭಾರೀ ಉದ್ದದ ಈ ಮಾನವ ಸರಪಳಿ ನಿರ್ಮಾಣ ವಿಶ್ವದಾಖಲೆಗೆ ಸೇರ್ಪಡೆಯಾಗಿದೆ.ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಸಂಸ್ಥೆಯ ಪ್ರತಿನಿಧಿ ಶೈಲಜಾ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ವಿಶ್ವ ದಾಖಲೆಯ ಪ್ರಮಾಣಪತ್ರವನ್ನು ವಿತರಿಸಿದರು.ಕಾರ್ಯಕ್ರಮದಲ್ಲಿ ವಿಶೇಷ ಅಂಚೆಚೀಟಿಯನ್ನು ಬಿಡುಗಡೆ ಮಾಡಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತ ಅಂತಾರಾಷ್ಟ್ರೀಯ ವಿಚಾರ ಸಂಕೀರಣವು ನಡೆಯಿತು.
|
5 |
+
ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ನಡೆದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಈ ವೇಳೆ ಪ್ರಜಾಪ್ರಭುತ್ವ ದಿನದ ರಾಯಭಾರಿ ಹರೇಕಳ ಹಾಜಪ್ಪ, ಪೌರ ಕಾರ್ಮಿಕ ತಾಯಂದಿರಾದ ನಾಗಲಕ್ಷಿ, ಮಂಜುಳ ಹಾಗೂ ತೃತೀಯ ಲಿಂಗಿ ಪ್ರಿಯಾಂಕ ಮತ್ತು ಇಬ್ಬರು ವಿಶೇಷ ಚೇತನ ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಡ-ಬಲದಲ್ಲಿ ನಿಂತು ಪ್ರಜಾಪ್ರಭುತ್ವ ದಿನವನ್ನು ಅರ್ಥಪೂರ್ಣಗೊಳಿಸಿದರು.
|
6 |
+
ಸಭಾಪತಿ ಬಸವರಾಜ ಹೊರಟ್ಟಿ, ಉಪಸಭಾಪತಿ ರುದ್ರಪ್ಪ ಲಮಾಣಿ, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹಮದ್, ಯು.ಬಿ.ವೆಂಕಟೇಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
|
7 |
+
ವಿಶ್ವಸಂಸ್ಥೆಯ ಭಾರತೀಯ ಪ್ರತಿನಿಧಿ ಕೆ.ಪಿ.ಅಶ್ವಿನಿಯವರಿಗೆ ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂವಿಧಾನದ ಪೀಠಿಕೆಯನ್ನು ವಿತರಿಸಿದರು. ಜೊತೆಗೆ ವಿಶ್ವ ಪ್ರಜಾಪ್ರಭುತ್ವ ದಿನದ ಅಂಗವಾಗಿ 10 ಸಾವಿರ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೂ ಇದೇ ವೇಳೆ ಸಿದ್ದರಾಮಯ್ಯ ಚಾಲನೆ ನೀಡಿದರು.
|
eesanje/url_46_18_10.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸಿಎಂ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ
|
2 |
+
ಬೆಂಗಳೂರು,ಸೆ.14-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಯಾರ ಜಾಗದಲ್ಲಿ ಮನೆಯನ್ನು ಕಟ್ಟಿದ್ದರು ಎಂಬುದನ್ನು ಬಹಿರಂಗಪಡಿಸಲಿ ಎಂದು ಕೇಂದ್ರದ ಭಾರಿ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಿಂದ 15 ನಿವೇಶನ ಪಡೆದಿರುವುದು ಒಂದು ಭಾಗವಾದರೆ, ದಲಿತರ, ವಿಕಲಚೇತನರಿಗೆ ಹಂಚಿಕೆಯಾಗಿದ್ದ ನಿವೇಶನದಲ್ಲಿ ಅಕ್ರಮವಾಗಿ ಮನೆ ಕಟ್ಟಿದ್ದರು ಎಂದು ಆರೋಪಿಸಿದರು.
|
4 |
+
ಮಾತೆತ್ತಿದರೆ ತಮದು ತೆರೆದ ಪುಸ್ತಕ ಎನ್ನುವ ಅವರು, ಮನೆ ಕಟ್ಟಿದ್ದ ಜಾಗ ಯಾರದೆಂಬುದನ್ನು ಹೇಳಲಿ. ಸಾಕಮ ಎಂಬುವರ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಮನೆ ಕಟ್ಟಿದ್ದರು. ಆ ಮನೆ ಮಾರಾಟವಾಗಿದ್ದರೂ ಇದು ಯಾರ ಸ್ವಾಧೀನದಲ್ಲಿದೆ ಎಂಬುದು ಗೊತ್ತಿದೆ, ಈ ಸಂಬಂಧ ದಾಖಲೆಗಳು ತಮ ಬಳಿ ಇವೆ ಎಂದು ಹೇಳಿದರು.
|
5 |
+
ಆಕ್ರೋಶ : ರೈತರ ಹೆಸರಿನಲ್ಲಿ ಗ್ರಾಹಕರಿಗೆ ಹೊರೆಯಾಗುವಂತೆ ಹಾಲಿನ ದರ ಹೆಚ್ಚಳ ಮಾಡಲು ರಾಜ್ಯಸರ್ಕಾರ ಮುಂದಾಗಿದೆ. ಆದರೆ ವಿವಿಧ ಜಿಲ್ಲೆಗಳಲ್ಲಿ ಪ್ರತಿ ಲೀಟರ್ಗೆ ಒಂದೂವರೆಯಿಂದ ಎರಡು ರೂಪಾಯಿವರೆಗೂ ಕಡಿಮೆ ಮಾಡಲಾಗಿದೆ. ರೈತರ ಹಿತ ಕಾಪಾಡುವ ಸರ್ಕಾರ ಏಕೆ ರೈತರ ಹಾಲಿನ ಖರೀದಿ ದರವನ್ನು ಕಡಿಮೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
|
6 |
+
ಹಾಲಿನ ದರ ಏರಿಕೆಯಿಂದ ರೈತರಿಗೂ ಅನುಕೂಲವಿಲ್ಲ. ಗ್ರಾಹಕರಿಗೂ ಲಾಭವಿಲ್ಲ. ಆದರೆ ಸರ್ಕಾರ ಮಾತ್ರ ಹಾಲಿನ ದರ ಏರಿಕೆ ಮಾಡುತ್ತಿದೆ ಎಂದು ಹೇಳಿದರು.ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರತಿ ಲೀಟರ್ ಹಾಲಿಗೆ ಎರಡು ರೂಪಾಯಿ ಪ್ರೋತ್ಸಾಹ ಧನ ನೀಡುವುದನ್ನು ಪ್ರಾರಂಭಿಸಿದರು. ಆನಂತರ 5 ರೂಪಾಯಿಗೆ ಏರಿಕೆಯಾಗಿತ್ತು. ತಾವು ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಅದನ್ನು ಪ್ರತೀ ಲೀಟರ್ಹಾಲಿಗೆ 6 ರೂ. ಪ್ರೋತ್ಸಾಹಧನ ನೀಡಲು ತೀರ್ಮಾನಿಸಲಾಗಿತ್ತು. ಅಷ್ಟರಲ್ಲಿ ಮೈತ್ರಿ ಸರ್ಕಾರವನ್ನೇ ಪತನಗೊಳಿಸಿದರು ಎಂದರು.
|
7 |
+
ರೈತರ ಸಾಲಮನ್ನಾ ಮಾಡಿದವರು ಯಾರು?, ಎಚ್.ಡಿ.ದೇವೇಗೌಡರು ಪ್ರಧಾನಿಯಾಗಿದ್ದಾಗ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಶಕ್ತಿ ತುಂಬಿದರು. ಇಷ್ಟಾದರೂ ರೈತರಿಗೆ ಏನು ಮಾಡಿದ್ದೀರಿ ಎಂದು ಕೇಳುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
|
8 |
+
ಓಲೈಕೆ ರಾಜಕಾರಣದ ಬಗ್ಗೆ ಎಚ್ಚರಿಕೆಯಿಂದ ಇರಿ:ನಿನ್ನೆ ನಾಗಮಂಗಲಕ್ಕೆ ಭೇಟಿ ನೀಡಿದ್ದು, ಸರ್ವಜನಾಂಗದ ಶಾಂತಿಯ ತೋಟ ನೆಮದಿಯಿಂದ ಇರಬೇಕೆಂಬ ಉದ್ದೇಶದಿಂದಲೇ ಹೊರತು ಬೆಂಕಿ ಹಚ್ಚಲು ಹೋಗಿರಲಿಲ್ಲ. ನಾಗಮಂಗಲದ ಎರಡೂ ಸಮುದಾಯದವರನ್ನು ಭೇಟಿ ಮಾಡಿ ಅವರ ಸಂಕಷ್ಟವನ್ನು ಆಲಿಸಿದ್ದೇನೆ. ಓಲೈಕೆ ರಾಜಕಾರಣ ಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ.
|
9 |
+
ನಾಗಮಂಗಲದಲ್ಲಿ ಸ್ಥಳ ಪರಿಶೀಲನೆ ಮಾಡಿ ಆಗಿರ���ವ ಅನಾಹುತದ ಬಗ್ಗೆ ಮಾಹಿತಿ ಪಡೆದಿದ್ದೇನೆ. ನಾಡಿನ ಜನತೆಗೆ ಕೈ ಜೋಡಿಸಿ ಮನವಿ ಮಾಡುತ್ತೇನೆ. ನಮದು ಪ್ರಗತಿ ಪರ ರಾಜ್ಯ, ಓಲೈಕೆ ಮಾಡುವವರ ಬಗ್ಗೆ ಎಚ್ಚರಿಕೆ ವಹಿಸಿ ಎಂದರು.
|
10 |
+
ನಾನು ಕೇಂದ್ರ ಸಚಿವನಾಗಿರುವುದನ್ನು ಸಹಿಸಲಾಗುತ್ತಿಲ್ಲ. ಕರ್ನಾಟಕಕ್ಕೆ ಬಂದರೆ ಸಹಿವುದಿಲ್ಲ, ಮುಗಿದೇ ಹೋಯಿತು ಎನ್ನುತ್ತಿದ್ದರು. ಅಂತಹ ಸಂದರ್ಭದಲ್ಲೇ ಕೇಂದ್ರ ಸಚಿವನಾಗಿರುವುದು ಅವರಿಗೆ ನೋವು ತಂದಿದೆ. ಇದಕ್ಕೆ ಔಷಧಿಯನ್ನು ಎಲ್ಲಿಂದ ತರಲಿ ಎಂದು ಪರೋಕ್ಷವಾಗಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
|
11 |
+
ವಾರಕ್ಕೊಮೆ ಬರುವುದು ನಾನು ಗಲಾಟೆ ಮಾಡಿಸುವುದಕ್ಕಲ್ಲ, ಯಾರ್ಯಾರಿಗೆ, ಯಾವ್ಯಾವಾಗ ಧಮ್ಕಿ ಹಾಕಿ ಆಸ್ತಿಗಳನ್ನು ಲೂಟಿ ಮಾಡಿದ್ದಾರೆ, ಅವರ ಹಿನ್ನೆಲೆ ಏನು ಎಂದು ಜಗಜ್ಜಾಹೀರಾಗಿದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಹೇಳಿಕೆಗೆ ತಿರುಗೇಟು ನೀಡಿದರು.ಮಾಗಡಿ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ, ನಾನೇನು ಮಾಡಿದ್ದೇನೆಂದು ಜನರೇ ಉತ್ತರ ಕೊಡುತ್ತಾರೆ. 2009 ರಿಂದ 2013 ರ ನಡುವೆ ನಡೆದ ಅವ್ಯವಹಾರವನ್ನು ಏಕೆಮುಚ್ಚಿ ಹಾಕಿದರು ಎಂದು ಪ್ರಶ್ನಿಸಿದರು.
|
eesanje/url_46_18_11.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಹಾಲಿನ ದರ ಹೆಚ್ಚಳದ ಮುನ್ಸೂಚನೆ ನೀಡಿದ ಸಚಿವ ಕೆ.ಎನ್.ರಾಜಣ್ಣ
|
2 |
+
. .
|
3 |
+
ತುಮಕೂರು, ಸೆ.14– ರಾಜ್ಯದ ರೈತರಿಗೆ ಈಗಾಗಲೇ ಪ್ರತಿ ಲೀಟರ್ ಹಾಲಿಗೆ 31ರೂ.ಗಳಿಗೆ ನೀಡಲಾಗುತ್ತಿದೆ ಹಾಗೂ ಗ್ರಾಹಕರಿಗೆ ಒಂದು ಲೀಟರ್ಗೆ 41ರೂ. ದರದಲ್ಲಿ ಮಾರಾಟ ಮಾಡಲಾಗುತ್ತಿದ್ದು, ಹೀಗಿರುವಾಗ ದರ ಪರಿಷ್ಕರಿಸುವ ಸಂಬಂಧ ಚಿಂತನೆ ನಡೆಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಇಂದಿಲ್ಲಿ ತಿಳಿಸಿದರು.
|
4 |
+
ಬಿಸಿಸಿ ಬ್ಯಾಂಕ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹಾಲಿನ ದರ ಹೆಚ್ಚಳ ಮಾಡಿ ರೈತರಿಗೆ ನೀಡಲಾಗುವುದು. ಶೂನ್ಯ ಬಡ್ಡಿ ದರದಲ್ಲಿ 50 ಸಾವಿರದವರೆಗೆ ಅಲ್ಪಾವಧಿ ಸಾಲವನ್ನು ನೀಡಲಾಗುವುದು. ಅಲ್ಪಾವಧಿ, ಮಧ್ಯಮಾವಧಿ ಸಾಲ 15 ಲಕ್ಷ ರೂ. ವರೆಗೆ, ಶೇ.3ರ ಬಡ್ಡಿದರದಲ್ಲಿ ನೀಡಲಾಗುತ್ತಿದೆ.
|
5 |
+
ತುಮಕೂರು ಜಿಲ್ಲಾ ಸಹಕಾರ ಬ್ಯಾಂಕ್ 1630 ಕೋಟಿ ಠೇವಣಿಯನ್ನು ಸಂಗ್ರಹ ಮಾಡಿದೆ. ಸಾವಿರ ಕೋಟಿ ರೂ. ಕೃಷಿಯೇತರ ಸಾಲ, 759 ಕೋಟಿ ಕೃಷಿ ಸಾಲ ನೀಡಿದೆ. ಅಪೆಕ್್ಸ ಬ್ಯಾಂಕ್ನಿಂದ ತೆಗೆದುಕೊಂಡ ಸಾಲವನ್ನು ಸಹ ಬ್ಯಾಂಕ್ ಮರುಪಾವತಿ ಮಾಡಲಾಗುತ್ತಿದೆ ಎಂದರು.
|
6 |
+
ಮುಂದಿನ ದಿನಗಳಲ್ಲಿ ವಿಎಸ್ಎಸ್ಎನ್ಗಳ ಮೂಲಕವೇ ಚಿನ್ನಾಭರಣ ಸಾಲವನ್ನು ನೀಡಲು ಸಹಕಾರಿ ಬ್ಯಾಂಕ್ಗಳಿಗೂ ತಿಜೋರಿ ನೀಡಲಾಗುತ್ತಿದೆ. ರೈತರಿಗೆ ಶೇ.11 ಹಾಗೂ ಇತರರಿಗೆ ಶೇ.12ರ ಬಡ್ಡಿ ದರದಲ್ಲಿ ಚಿನ್ನಾಭರಣ ಸಾಲ ನೀಡಲಾಗುವುದು. ಇದರಿಂದ ಜಿಲ್ಲೆಯಲ್ಲಿರುವ ಪಾನ್ ಬ್ರೋಕರ್ಗಳ ಸಂಖ್ಯೆ ಇಳಿಮುಖವಾಗಲಿದೆ ಎಂದರು.
|
7 |
+
ಸಿಎಂ ಸಿದ್ದರಾಮಯ್ಯ ಅವರ ಬದಲಾವಣೆ ಯಾಗುವುದಿಲ್ಲ. ಅವರೇ ಮುಂದುವರೆಯಲಿ ದ್ದಾರೆ. ಇದರಲ್ಲಿ ಯಾವುದೇ ಸಂಶಯ ಬೇಡ. ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯನವರ ಪರ ಇದೆ. ಈ ವಿಚಾರದಲ್ಲಿ ಹೈಕಮಾಂಡ್ ಬಲಿಷ್ಠವಾಗಿದೆ. ಮಧುಗಿರಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಲು ಶ್ರಮಿಸುತ್ತೇನೆ. ಏಕಶಿಲಾ ಬೆಟ್ಟಕ್ಕೆ ಕೇಬಲ್ ಕಾರ್ ಅಳವಡಿಸುವ ಕೆಲಸ ನನ್ನ ಅವಧಿಯಲ್ಲೇ ಮುಗಿಸುತ್ತೇನೆ ಎಂದರು. ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಬ್ಯಾಂಕ್ ಅಧಿಕಾರಿಗಳು ಇದ್ದರು.
|
eesanje/url_46_18_12.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಕಾರಾಗೃಹ ಇಲಾಖೆಗೆ ಮೇಜರ್ ಸರ್ಜರಿ
|
2 |
+
|
3 |
+
ಬೆಂಗಳೂರು, ಸೆ.14-ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ಗೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ರಾಜಾತಿಥ್ಯ ನೀಡಲಾಗಿದೆ ಎಂಬ ಹಿನ್ನೆಲೆಯಲ್ಲಿ ಕಾರಾಗೃಹದ 43 ಮಂದಿ ಅಧಿಕಾರಿ ಮತ್ತು ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ.
|
4 |
+
ಸರ್ಕಾರ ಕಾರಾಗೃಹ ಇಲಾಖೆಗೆ ಸರ್ಜರಿ ಮಾಡಿದ್ದು, ಜೈಲರ್ಗಳು, ಮುಖ್ಯ ವೀಕ್ಷಕರು, ವೀಕ್ಷಕರು, ವಾರ್ಡರ್ ಸೇರಿದಂತೆ 43 ಮಂದಿ ಸಿಬ್ಬಂದಿಯವರನ್ನು ರಾಜ್ಯದ ವಿವಿಧ ಕಾರಾಗೃಹಗಳಿಗೆ ವರ್ಗಾವಣೆ ಮಾಡಿದೆ.
|
5 |
+
ದರ್ಶನ್ಗೆ ರಾಜಾತಿಥ್ಯ ನೀಡಲಾಗಿದೆ ಎಂಬ ಫೋಟೊಗಳು ಬಹಿರಂಗವಾಗುತ್ತಿದ್ದಂತೆ ಸರ್ಕಾರ ಭಾರಿ ಮುಜುಗರಕ್ಕೆ ಈಡಾಗಿತ್ತು. ಈ ನಡುವೆ ಕಾರಾಗೃಹದ 9 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತಲೆದಂಡವು ಆಗಿದೆ.
|
6 |
+
ಬಳಿಕ ನಟ ದರ್ಶನ್ನನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕ್ಕೆ ಹಾಗೂ ಇತರರನ್ನು ಬೇರೆಬೇರೆ ಕಾರಾಗೃಹಗಳಿಗೆ ಸ್ಥಳಾಂತರಿಸಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ಶೀಟ್ ಸಲ್ಲಿಕೆಯಾಗಿದ್ದು, ದರ್ಶನ್ ಜಾಮೀನಿಗಾಗಿ ಸದ್ಯದಲ್ಲೇ ಅರ್ಜಿ ಸಲ್ಲಿಸಲಿದ್ದಾರೆ.
|
eesanje/url_46_18_2.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಸಿಎಂ ಸೇರಿದಂತೆ ಗಣ್ಯರಿದ್ದ ವೇದಿಕೆಯತ್ತ ನುಗ್ಗಿ ಬಂದ ಅಪರಿಚಿತ, ಕೆಲಕಾಲ ಆತಂಕ
|
2 |
+
|
3 |
+
ಬೆಂಗಳೂರು,ಸೆ.15-ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ಅಪರಚಿತನೊಬ್ಬ ಬ್ಯಾರಿಕೇಡ್ ಹಾರಿ ಮುಖ್ಯಮಂತ್ರಿ ಸೇರಿದಂತೆ ಗಣ್ಯರಿದ್ದ ವೇದಿಕೆಯತ್ತ ನುಗ್ಗಿದ್ದು, ಭಾರಿ ಆತಂಕ ಮೂಡಿಸಿದ್ದು, ಭದ್ರತಾ ವ್ಯವಸ್ಥೆಗೆ ಸವಾಲೊಡ್ಡಿತ್ತು.
|
4 |
+
ವಿಧಾನಸೌಧದ ಪೂರ್ವದ್ವಾರದಲ್ಲಿನ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆಯನ್ನು ನಿರ್ಮಿಸಲಾಗಿತ್ತು. ಸಾಕಷ್ಟು ಭದ್ರತೆಯನ್ನು ಆಯೋಜಿಸಲಾಗಿತ್ತು. ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಭಾಷಣ ಮಾಡುತ್ತಿದ್ದರು. ಈ ವೇಳೆ ಆಕಾಶನೀಲಿ ಅಂಗಿ ಹಾಗೂ ಕಾಖಿ ಬಣ್ಣದ ಪ್ಯಾಂಟ್ ಧರಿಸಿದ್ದ ವ್ಯಕ್ತಿಯೊಬ್ಬ ಕನ್ನಡದ ಶಾಲು ಧರಿಸಿಕೊಂಡಿದ್ದು, ಸಾರ್ವಜನಿಕರ ಗ್ಯಾಲರಿಯಿಂದ ಏಕಾಏಕಿ ವೇದಿಕೆಯತ್ತ ನುಗ್ಗಿದ್ದಲ್ಲದೆ, ಎತ್ತರದ ವೇದಿಕೆ ಏರಲು ನೆಗೆದಿದ್ದಾನೆ. ತಕ್ಷಣವೇ ಎಚ್ಚೆತ್ತುಕೊಂಡು ಅಂಗರಕ್ಷಕರು ವೇದಿಕೆ ಯಲ್ಲಿದ್ದ ಗಣ್ಯರ ಬಳಿ ಬರಲು ಸಾಧ್ಯವಾಗದಂತೆ ಅಪರಿಚಿತ ವ್ಯಕ್ತಿಯನ್ನು ಆರಂಭದಲ್ಲೇ ನಿರ್ಬಂಧಿಸಿದ್ದಾರೆ.
|
5 |
+
ಈ ಹಂತದಲ್ಲಿ ವ್ಯಕ್ತಿ ತನ್ನ ಕೈಯಲ್ಲಿದ್ದ ಶಾಲನ್ನು ಮುಖ್ಯಮಂತ್ರಿ ಸಿದ್ದರಾಮಯ, ವಿಧಾನಸಭಾ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಸಚಿವರುಗಳಾದ ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್ ಅವರುಗಳ ಕಡೆಗೆ ಎಸೆದಿದ್ದಾನೆ. ಅದನ್ನು ವೇದಿಕೆಯಲ್ಲಿದ್ದ ಕೆಲವು ಅಧಿಕಾರಿಗಳು ತಡೆದಿದ್ದಾರೆ.
|
6 |
+
ಏಕಾಏಕಿ ಅಪರಿಚಿತ ವ್ಯಕ್ತಿ ನುಗ್ಗಿಬಂದಿದ್ದು, ಒಂದು ಕ್ಷಣ ಆಘಾತಕಾರಿಯಾಗಿ ಗಲಿಬಿಲಿ ಮೂಡಿಸಿದೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವೇದಿಕೆಯಲ್ಲಿ ಯಾವುದೋ ಕಾಗದಪತ್ರವನ್ನು ಗಮನಿಸುತ್ತಿದ್ದರು. ಹೀಗಾಗಿ ಅವರು ವೇದಿಕೆಯತ್ತ ನುಗ್ಗಿಬಂದ ವ್ಯಕ್ತಿಯನ್ನು ಗುರುತಿಸಲು ಸಮಯ ಬೇಕಾಯಿತು. ಉಳಿದಂತೆ ಕೆಲವರು ಆತಂಕದಿಂದ ದಿಢೀರನೇ ಮೇಲೆ ಎದ್ದು ನಿಂತಿದ್ದರು.
|
7 |
+
ಪೊಲೀಸರು ಅಪರಿಚಿತ ವ್ಯಕ್ತಿಯನ್ನು ಹಿಡಿದು ಎಳೆದೊಯ್ದರು. ತಕ್ಷಣವೇ ಪೊಲೀಸರು ಅಪರಿಚಿತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಪರಿಚಿತನ ಕೈಯಲ್ಲಿ ಶಾಲು ಹೊರತುಪಡಿಸಿ ಬೇರೆ ಯಾವುದೇ ವಸ್ತುಗಳೂ ಕಂಡುಬರಲಿಲ್ಲ. ವ್ಯಕ್ತಿಯ ಹೆಸರಿದ್ದ ಶಾಲನ್ನು ಸಿಬ್ಬಂದಿಗಳು ತೆಗೆದು ಸಿದ್ದರಾಮಯ್ಯ ಅವರ ಮುಂದೆಯೇ ಇಟ್ಟಿದ್ದರು. ನಂತರ ಅದನ್ನು ಗನ್ಮ್ಯಾನ್ಗಳು ಪಕ್ಕಕ್ಕೆ ಎತ್ತಿಟ್ಟರು.
|
8 |
+
ಅಪರಿಚಿತ ವ್ಯಕ್ತಿಯನ್ನು ಎಳೆದೊಯ್ಯುವಾಗ ಆತ ಧರಿಸಿದ್ದ ಶಾಲು ಕೂಡ ಬಿದ್ದುಹೋಯಿತು. ಒಂದು ಕ್ಷಣ ಈ ಘಟನೆ ಎಲ್ಲರನ್ನೂ ದಿಗೂಢರನ್ನಾಗಿ ಮಾಡಿತು.ಉತ್ಕೃಷ್ಟವಾದ ಭದ್ರತಾ ವಲಯವಾಗಿರುವ ವಿಧಾನಸೌಧ ಮುಂಭಾಗದಲ್ಲಿಯೇ ಈ ರೀತಿಯ ಘಟನೆ ನಡೆದಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.ಅಪರಿಚಿತನನ್ನು ವ���ಕ್ಕೆ ಪಡೆದ ಬಳಿಕ ಕಾರ್ಯಕ್ರಮ ಎಂದಿನಂತೆ ಮುಂದುವರೆದಿದ್ದು, ಯಾವುದೇ ವಿಚಲಿತ ವಾತಾವರಣ ಕಂಡುಬರಲಿಲ್ಲ.
|
eesanje/url_46_18_3.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿ ಶಾಸಕ ಮುನಿರತ್ನ ಎರಡು ದಿನ ಪೊಲೀಸ್ ಕಸ್ಟಡಿಗೆ
|
2 |
+
|
3 |
+
ಬೆಂಗಳೂರು,ಸೆ.15– ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ವೈಯಾಲಿಕಾವಲ್ ಠಾಣೆ ಪೊಲೀಸರು ಬಂಧಿಸಿರುವ ಆರ್ಆರ್ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ನ್ಯಾಯಾಧೀಶರು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.
|
4 |
+
ಮಾಜಿ ಕಾರ್ಪೋರೇಟರ್ ವೇಲು ನಾಯ್ಕರ್ ಅವರು ನೀಡಿರುವ ಪ್ರಕರಣದಲ್ಲಿ ಇವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಈ ಸಂಜೆಗೆ ತಿಳಿಸಿದರು. ವೈಯಾಲಿಕಾವಲ್ ಠಾಣೆಯಲ್ಲಿ ಅವರ ವಿರುದ್ಧ ಎರಡು ಪ್ರಕರಣಗಳು ದಾಖಲಾಗುತ್ತಿದ್ದಂತೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದರು. ಅವರ ಬೆನ್ನು ಹತ್ತಿದ ಪೊಲೀಸರು ಅವರ ಮೊಬೈಲ್ ಲೊಕೇಶನ್ ಆಧರಿಸಿ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ನಂಗಲಿ ಗ್ರಾಮದ ಬಳಿ ಅವರನ್ನು ವಶಕ್ಕೆ ತೆಗೆದುಕೊಂಡರು.
|
5 |
+
ನಂತರ ಅವರನ್ನು ಬೆಂಗಳೂರಿಗೆ ಕರೆತಂದು ಬಂಧಿಸಿ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆಗೊಳಪಡಿಸಿ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ಒಂದು ವಾರ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಧೀಶರಲ್ಲಿ ಮನವಿ ಮಾಡಿದರು. ಆಗ ವಿಚಾರಣೆ ನಡೆಸಿದ ನ್ಯಾಯಾಧೀಶರು ಎರಡು ದಿನಗಳ ಕಾಲ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿದರು.
|
6 |
+
ಜಾತಿ ನಿಂದನೆ ಮಾಡಿರುವುದಾಗಿ ಬಿಬಿಎಂಪಿಯ ಮಾಜಿ ಸದಸ್ಯ ವೇಲು ನಾಯ್ಕರ್ ಅವರು ವೈಯಾಲಿಕಾವಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
|
7 |
+
ತ್ಯಾಜ್ಯ ವಿಲೇವಾರಿ ಗುತ್ತಿಗೆಯಲ್ಲಿ 30 ಲಕ್ಷ ರೂ. ಕಮೀಷನ್ ಕೊಡುವಂತೆ ಒತ್ತಾಯಿಸಿ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರು ಸಹ ವೈಯಾಲಿಕಾವಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಈ ಪ್ರಕರಣದಲ್ಲಿ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
|
eesanje/url_46_18_4.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ದುರಹಂಕಾರ ಬಿಟ್ಟು ತೆಪ್ಪಗಿರುವಂತೆ ನಟ ದರ್ಶನ್ಗೆ ಜೈಲರ್ ಎಚ್ಚರಿಕೆ
|
2 |
+
|
3 |
+
ಬೆಂಗಳೂರು, ಸೆ.15-ಜೈಲಿನೊಳಗೆ ನೀಡಿರುವ ಸೌಲಭ್ಯಗಳ ವಿಚಾರದಲ್ಲಿ ಗಲಾಟೆ ಸಷ್ಟಿಸಬೇಡಿ ಎಂದು ಚಿತ್ರ ನಟ ದರ್ಶನ್ಗೆ ಬಳ್ಳಾರಿ ಕಾರಾಗಹದ ಜೈಲರ್ ಎಚ್ಚರಿಕೆ ನೀಡಿದ್ದಾರೆ.
|
4 |
+
ನೀವು ಈ ದುರಹಂಕಾರದ ಮತ್ತು ಹಠಮಾರಿ ಧೋರಣೆಯನ್ನು ಮುಂದುವರಿಸಿದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಜೈಲರ್ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.
|
5 |
+
ಜೈಲಿನೊಳಗೆ ಇರುವುದನ್ನು ಮಾತ್ರ ನೀಡಬಹುದು ಎಂದು ಜೈಲರ್ ತಿಳಿಸಿದ್ದರಿಂದ ದರ್ಶನ್ ಅವರು ಜೈಲು ಸಿಬ್ಬಂದಿಯೊಂದಿಗೆ ಆಗಾಗ್ಗೆ ವಾಗ್ವಾದ ನಡೆಸುತ್ತಿದ್ದರು ಮತ್ತು ಹೆಚ್ಚುವರಿ ಸೌಲಭ್ಯಗಳು ಬೇಕಾದರೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಸೂಚಿಸಿದರು ಎಂದು ಮೂಲಗಳು ತಿಳಿಸಿವೆ.
|
6 |
+
ದರ್ಶನ್ ಬಂಧನದಲ್ಲಿ ಅವರ ನಡವಳಿಕೆ ಮತ್ತು ಜೈಲು ನಿಯಮಗಳಿಗೆ ಬದ್ಧವಾಗಿರುವುದನ್ನು ನ್ಯಾಯಾಲಯ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಜೈಲರ್ ನೆನಪಿಸಿದ್ದಾರೆ. ಜೈಲು ಅಧಿಕಾರಿಗಳೊಂದಿಗೆ ಸಹಕರಿಸುವ ಬದಲು ದರ್ಶನ್ ಶಿಸ್ತಿನ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಜೈಲರ್ ಅವರಿಗೆ ತಿಳಿಸಿದ್ದಾರೆ.
|
7 |
+
ಜಾಮೀನು ಅರ್ಜಿ ಇನ್ನೂ ನ್ಯಾಯಾಲಯಕ್ಕೆ ಸಲ್ಲಿಕೆಯಾಗದ ಕಾರಣ ದರ್ಶನ್ ಜೈಲಿನಲ್ಲಿ ಹತಾಶೆಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ವಿಶಿಷ್ಟ ಪ್ರಕರಣಗಳಲ್ಲಿ, ಕೊಲೆ ಆರೋಪಿಗಳಿಗೆ 90 ದಿನಗಳ ನಂತರ ಅಥವಾ ಚಾರ್ಜ್ ಶೀಟ್ ಸಲ್ಲಿಸಿದ ನಂತರ ಜಾಮೀನು ನೀಡಲಾಗುತ್ತದೆ. ಆದರೆ, ದರ್ಶನ್ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ವೇಳೆ ಬೆಂಗಳೂರು ಕಾರಾಗಹದಲ್ಲಿ ಐಷಾರಾಮಿ ಸೌಲಭ್ಯ ಪಡೆಯುತ್ತಿರುವ ಫೋಟೋಗಳು ಹರಿದಾಡುತ್ತಿದ್ದ ಪರಿಣಾಮ ಅವರ ಜಾಮೀನು ಅರ್ಜಿ ವಿಚಾರಣೆ ವಿಳಂಬವಾಗಿತ್ತು.
|
eesanje/url_46_18_5.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
2045ರ ವೇಳೆಗೆ ಭಾರತದಲ್ಲಿ ದುಡಿಯುವ ವಯಸ್ಸಿನ ಜನಸಂಖ್ಯೆ 179 ಮಿಲಿಯನ್ಗೆ ಏರಿಕೆ
|
2 |
+
179 2045
|
3 |
+
ನವದೆಹಲಿ,ಸೆ.15-ಮುಂಬರುವ 2045ರ ವೇಳೆಗೆ ದೇಶದ ದುಡಿಯುವ ವಯಸ್ಸಿನ ಜನಸಂಖ್ಯೆ 179 ಮಿಲಿಯನ್ ತಲುಪಲಿದೆ ಎಂದು ಅಂದಾಜಿಸಲಾಗಿದೆ.ಇದು ದೇಶದ ಆರ್ಥಿಕ ಬೆಳವಣಿಗೆಗೆ ಗಮನಾರ್ಹವಾದ ಬೆನ್ನೆಲುಬಾಗಬಹುದು, ವಿಶೇಷವಾಗಿ ದೇಶದ ಹಲವಾರು ಭಾಗಗಳಲ್ಲಿ ಜನಸಂಖ್ಯಾ ವಿಶ್ವಕ್ಕೆ ಪ್ರತಿಕೂಲವಾಗಿದೆ ಎಂದು ಹೊಸ ವರದಿ ಹೇಳಿದೆ.
|
4 |
+
ಈ ಸಮಯದಲ್ಲಿ, ಭಾರತದ ದುಡಿಯುವ ವಯಸ್ಸಿನ ಜನಸಂಖ್ಯೆಯು ಸುಮಾರು 961 ಮಿಲಿಯನ್ ಮತ್ತು ನಿರುದ್ಯೋಗ ದರವು ಐದು ವರ್ಷಗಳ ಕನಿಷ್ಠ ಮಟ್ಟದಲ್ಲಿದೆ.ಭಾರತದ ದುಡಿಯುವ ವಯಸ್ಸಿನ ಜನಸಂಖ್ಯೆಯು (ವಯಸ್ಸು 25-64) ಒಟ್ಟು ಜನಸಂಖ್ಯೆಯ ಅನುಪಾತವಾಗಿ ಏರುತ್ತಿದೆ, ಇದು ಉಳಿತಾಯ ಮತ್ತು ಹೂಡಿಕೆಗಳಿಗೆ ಧನಾತಕವಾಗಿರುತ್ತದೆ ಎಂದು ಜಾಗತಿಕ ಹೂಡಿಕೆ ಸಂಸ್ಥೆ ಜೆಫರೀಸ್ ಹೇಳಿದೆ.
|
5 |
+
ಭಾರತದಲ್ಲಿ ಮಹಿಳೆಯರ ಕಾರ್ಮಿಕ ಬಲದ ಭಾಗವಹಿಸುವಿಕೆ ದರಗಳಲ್ಲಿ ಏರಿಕೆ ಪ್ರಾರಂಭವಾಗಿದೆ, ಇದು ಜನಸಂಖ್ಯೆಯ ಜೊತೆಗೆ ಕಾರ್ಮಿಕ ಬಲದ ವಿಸ್ತರಣೆಗೆ ಪ್ರಮುಖ ಪ್ರೇರಕ ಶಕ್ತಿಯಾಗಿದೆ.
|
6 |
+
2030 ರ ವೇಳೆಗೆ ಕಾರ್ಮಿಕ ಬಲದ ಸೇರ್ಪಡೆಯು 6 ಮಿಲಿಯನ್ಗೆ ನಿಧಾನವಾಗುವ ನಿರೀಕ್ಷೆಯಿದೆ ಆದರೆ ಕಷಿ ಉದ್ಯೋಗಗಳಿಂದ ಈ ಅಂತರವನ್ನು ತುಂಬಬೇಕು ಎಂದು ಜೆಫರೀಸ್ ತನ್ನ ಇತ್ತೀಚಿನ ಟಿಪ್ಪಣಿಯಲ್ಲಿ ಹೇಳಿದೆ.
|
eesanje/url_46_18_6.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸಮಾಜವನ್ನು ಒಡೆಯುವ ವಿಚ್ಛಿದ್ರಕಾರಕ ದುಷ್ಟ ಶಕ್ತಿಗಳ ಷಡ್ಯಂತ್ರ ಸೋಲಿಸೋಣ : ಸಿಎಂ ಕರೆ
|
2 |
+
2,500-- ' '
|
3 |
+
ಬೆಂಗಳೂರು,ಸೆ.15- ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ, ಮನುಷ್ಯರನ್ನು ವಿಭಜಿಸುವ ವಿಚ್ಛಿದ್ರಕಾರಕ ದುಷ್ಟ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದು ನಿಲ್ಲಿ ಎಂದು ಸಿ.ಎಂ.ಸಿದ್ದರಾಮಯ್ಯ ಕರೆ ನೀಡಿದರು. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಚಾರಿತ್ರಿಕ ಮಾನವ ಸರಪಳಿ ಚಳವಳಿಯನ್ನು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ನಮ ಸಂವಿಧಾನ ಎತ್ತಿ ಹಿಡಿದಿರುವ ಬಹುತ್ವವನ್ನು ನಾವು ಬದುಕಿನಲ್ಲಿ ಆಚರಿಸೋಣ. ಆ ಮೂಲಕ ಸಮಾಜ ಒಡೆಯುವ ದುಷ್ಟರ ಷಡ್ಯಂತ್ರ ಸೋಲಿಸೋಣ. ಪ್ರಜಾಪ್ರಭುತ್ವ ಗಟ್ಟಿಗೊಳಿಸೋಣ ಎಂದರು.
|
4 |
+
ನಮ ದೇಶದ ಆಧ್ಯಾತಿಕ ಜ್ಞಾನಿಗಳಾದ ಬುದ್ದ, ಬಸವಣ್ಣನ ಕಾಲದಲ್ಲೇ ನಮಲ್ಲಿ ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆ ಇತ್ತು. ಅಲ್ಲಮಪ್ರಭುಗಳ ಆಧ್ಯಾತಿಕ ಸಾಹಿತ್ಯಿಕ ಆಸ್ಥಾನವಾದ ಅನುಭವ ಮಂಟಪ ಮೊದಲ ಪ್ರಜಾಪ್ರಭುತ್ವದ ಸಾಂಸ್ಥಿಕ ಸಂಕೇತ ಎಂದು ಹೇಳಿದರು.
|
5 |
+
1949ರ ನವೆಂಬರ್ 25ನೇ ತಾರೀಕಿನಂದು ಬಾಬಾ ಸಾಹೇಬರು ಮಾಡಿದ ಭಾಷಣವನ್ನು ಪ್ರಸ್ತಾಪಿಸಿದ ಅವರು, ಆರ್ಥಿಕ-ಸಾಮಾಜಿಕ ಪ್ರಜಾಪ್ರಭುತ್ವ ಎಲ್ಲರಿಗೂ ಸಿಕ್ಕಾಗ ಮಾತ್ರ ರಾಜಕೀಯ ಸ್ವಾತಂತ್ರಕ್ಕೆ ಅರ್ಥ ಬರುತ್ತದೆ. ತಾರತಮ್ಯ ಭಾರತದಲ್ಲಿ ಆಚರಣೆಯಲ್ಲಿ ಇರುವವರೆಗೂ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಇಲ್ಲ ಎಂದರು.
|
6 |
+
ಸಂವಿಧಾನದ ಪೀಠಿಕೆಯಲ್ಲಿ ಅತ್ಯಂತ ದೊಡ್ಡ ಮಾನವೀಯ ಮೌಲ್ಯಗಳಿವೆ. ಹೀಗಾಗಿಯೇ ಪ್ರತಿ ಶಾಲಾ ಕಾಲೇಜುಗಳಲ್ಲಿ ಇದನ್ನು ಓದಿಸುವ, ಅರ್ಥೈಸುವ, ಪಾಲಿಸುವ ಪ್ರಯತ್ನ ಮುನ್ನಡೆಸಿದ್ದೇವೆ ಎಂದು ಹೇಳಿದರು.ನಮ ರಾಷ್ಟ್ರಗೀತೆ ಮತ್ತು ನಮ ನಾಡಗೀತೆಯಲ್ಲಿರುವ ಭಾರತ ಮತ್ತು ಕರ್ನಾಟಕ ನಮದಾಗಬೇಕು. ಯಾವುದೇ ತಾರತಮ್ಯ ಇಲ್ಲದ ಶಾಂತಿಯ ತೋಟ ನಮದಾಗಬೇಕು ಎಂದರು.
|
7 |
+
ಸಮಾಜದಲ್ಲಿರುವ ಅಸಮಾನತೆ ತೊಡೆದು ಹಾಕುವವರೆಗೂ ದೇಶಕ್ಕೆ ಸಿಕ್ಕ ಸ್ವಾತಂತ್ರ್ಯಕ್ಕೆ ಅರ್ಥ ಇರುವುದಿಲ್ಲ. ನಮ ಸರ್ಕಾರ ಸಮಾನತೆ ಸಾಧಿಸುವ ದಿಕ್ಕಿನಲ್ಲಿ, ಎಲ್ಲಾ ಜಾತಿ-ಎಲ್ಲಾ ಧರ್ಮದ ಬಡವರಿಗೆ, ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇವೆ. ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ ವಿಚ್ಛಿದ್ರಕಾರಕ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಬೇಕು. ಬನ್ನಿ ಎದ್ದು ನಿಲ್ಲೋಣ ಎಂದು ಕರೆ ನೀಡಿದರು.
|
8 |
+
ಏಕತೆ ಭಜನೆ ಮಾಡುವ ವಿಚ್ಛಿದ್ರಕಾರಕ ದುಷ್ಟ ಶಕ್ತಿಗಳು ಸಾಮಾಜಿಕ ನ್ಯಾಯ, ಸಮಾನತೆಯ ವಿರೋಧಿಗಳು. ಇವರು ಸಮಾಜದ ಶತ್ರುಗಳು ಇವರನ್ನು ಮೆಟ್ಟಿ ನಿಲ್ಲದ ಹೊರತು ಮಹಿಳೆಯರ, ದಲಿತರ, ಹಿಂದುಳಿದವರ ಹಕ್ಕುಗಳು, ಅವಕಾಶಗಳು ಸಿಗಲು ಸಾಧ್ಯವಾಗುವುದಿಲ್ಲ ಎಂದರು.
|
9 |
+
ಈ ಬಿಜೆಪಿ ಮತ್ತು ಇವರ ಜೊತೆಗಿರುವ ವಿಚ್ಛಿದ್ರಕಾರಕ ಶಕ್ತಿಗಳು ���ಡವರ, ಮಧ್ಯಮ ವರ್ಗದ ವಿರೋಧಿಗಳು. ಇವರು ಬಡವರ ಪರವಾದ ಕಾರ್ಯಕ್ರಮಗಳು ಜಾರಿ ಆಗಲು ಬಿಡುವುದಿಲ್ಲ. ಆದ್ದರಿಂದ ಇವರನ್ನು ನಾವು ಸೋಲಿಸಬೇಕು ಎಂದು ಹೇಳಿದರು.20 ಲಕ್ಷಕ್ಕೂ ಹೆಚ್ಚು ಮಂದಿಯ ಮಾನವ ಸರಪಳಿ ರಚಿಸಿರುವುದೇ ದುಷ್ಟಶಕ್ತಿಗಳಿಗೆ ಎಚ್ಚರಿಕೆ ನೀಡಿ ಮನುಷ್ಯ ಸಮಾಜವನ್ನು ಬೆಸೆಯುವುದಾಗಿದೆ ಎಂದರು.
|
10 |
+
ಉದ್ಘಾಟನೆ ಸಂದರ್ಭದಲ್ಲಿ ಪ್ರಜಾಪ್ರಭುತ್ವ ದಿನದ ರಾಯಭಾರಿ ಹರೇಕಳ ಹಾಜಪ್ಪ, ಪೌರ ಕಾರ್ಮಿಕ ತಾಯಂದಿರಾದ ನಾಗಲಕ್ಷ್ಮಿ, ಮಂಜುಳ ಹಾಗೂ ತೃತೀಯ ಲಿಂಗಿ ಪ್ರಿಯಾಂಕ ಮತ್ತು ಇಬ್ಬರು ವಿಶೇಷ ಚೇತನ ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಡ-ಬಲದಲ್ಲಿ ನಿಂತು ಪ್ರಜಾಪ್ರಭುತ್ವ ದಿನವನ್ನು ಅರ್ಥಪೂರ್ಣಗೊಳಿಸಿದರು.
|
11 |
+
ಶಾಸಕರಾದ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಉಪಸಭಾಪತಿ ರುದ್ರಪ್ಪ ಲಮಾಣಿ, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನ ಪ.ರಿಷತ್ ಸದಸ್ಯರಾದ ಸಲೀಂ ಅಹಮದ್, ಯು.ಬಿ.ವೆಂಕಟೇಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
|
eesanje/url_46_18_7.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗಧಿ
|
2 |
+
|
3 |
+
ಕೊಡಗು,ಸೆ.15-ಕನ್ನಡ ನಾಡಿನ ಜೀವನದಿ ಕಾವೇರಿಯ ತೀರ್ಥೋದ್ಭವಕ್ಕೆ ಮುಹೂರ್ತ ನಿಗಧಿಯಾಗಿದೆ.ಕಾವೇರಿ ನದಿಯ ಉಗಮಸ್ಥಾನ ತಲಕಾವೇರಿಯಲ್ಲಿ ಈ ಬಾರಿಯ ಪವಿತ್ರ ತೀರ್ಥೋದ್ಭವ ಅ.17 ಮುಂಜಾನೆ 7.40ರ ಶುಭಲಗ್ನದಲ್ಲಿ ನೆರವೇರಲಿದೆ.
|
4 |
+
ತೀರ್ಥೋದ್ಭವ ಹಿನ್ನೆಲೆಯಲ್ಲಿ ಸೆ.26 ರಿಂದಲೇ ವಿವಿಧ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಲಿವೆ. ಅಂದು ಬೆಳಿಗ್ಗೆ 8.45 ಕ್ಕೆ ಪತ್ತಾಯಕ್ಕೆ ಅಕ್ಕಿ ಹಾಕುವ ಕಾರ್ಯಕ್ರಮ ನಡೆಯಲಿದ್ದು, ಅ.4 ರ ಬೆಳಿಗ್ಗೆ 10.20ಕ್ಕೆ ಆಜ್ಞಾ ಮುಹೂರ್ತ, 14ರ ಬೆಳಿಗ್ಗೆ 11.35ಕ್ಕೆ ಅಕ್ಷಯಪಾತ್ರೆ ಇರಿಸುವುದು, ಅದೇ ದಿನ ಸಂಜೆ 4.15ಕ್ಕೆ ಕಾಣಿಕೆಡಬ್ಬ ಇಡುವ ಕಾರ್ಯಕ್ರಮ ನಡೆಯಲಿದೆ ಎಂದು ಧರ್ಮದಾಯದತ್ತಿ ಇಲಾಖೆ ತಿಳಿಸಿದೆ.
|
5 |
+
ತೀರ್ಥಕುಂಡಿಕೆಯಲ್ಲಿ ಅ.17 ರಂದು ಕಾವೇರಿ ಮಾತೆ ತೀರ್ಥರೂಪದಲ್ಲಿ ಉಗಮವಾಗಲಿದ್ದಾಳೆ. ಪ್ರತಿ ವರ್ಷ ಈ ಅದ್ಭುತ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ.
|
eesanje/url_46_18_8.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ನಾನು ಮನೆಯಲ್ಲಿ ಕೂರಲ್ಲ, ಜನಪರ ಹೋರಾಟ ಮಾಡುತ್ತೇನೆ : ದೇವೇಗೌಡರು
|
2 |
+
, :
|
3 |
+
ಬೆಂಗಳೂರು, ಸೆ.14-ನಾನು ಮನೆಯಲ್ಲಿ ಇನ್ನು ಸುಮ್ಮನೆ ಮಲಗುವುದಿಲ್ಲ. ಪಕ್ಷ ಸಂಘಟನೆ ಹಾಗೂ ಜನಪರ ಹೋರಾಟವನ್ನು ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗುಡುಗಿದ್ದಾರೆ.ಜೆಪಿ ಭವನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಕಡೆಗಳಲ್ಲಿ ಪ್ರವಾಸವನ್ನು ಮಾಡುತ್ತೇನೆ. ಆಗಾಗ್ಗೆ ಪಕ್ಷದ ಕಚೇರಿಗೂ ಬರುತ್ತೇನೆ. ಎನ್ಡಿಎ ಮೈತ್ರಿ ಕೂಟದಲ್ಲಿ ನಾವು ಸೇರಿದ್ದು, ಜೆಡಿಎಸ್ ಪಕ್ಷ ಮೈತ್ರಿಗೆ ಯಾವುದೇ ಕಳಂಕ ತರುವುದಿಲ್ಲ ಎಂದರು.
|
4 |
+
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಹಾಗೂ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಕೂತು ಯಾವ ದೇವೇಗೌಡರು ಹೋರಾಟ ಮಾಡಿದ್ದರೋ ಅದೇ ದೇವೇಗೌಡರು ಈಗ ಮತ್ತೆ ಹೋರಾಟಕ್ಕೆ ಅಣಿಯಾಗಿ ನಿಂತಿದ್ದಾರೆ ಎಂದು ಹೇಳಿದರು.
|
5 |
+
62 ವರ್ಷ ಶಾಸಕನಾಗಿ, ವಿರೋಧ ಪಕ್ಷದ ನಾಯಕನಾಗಿ, ಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ಕೆಲಸ ಮಾಡಿದ್ದೇನೆ. ಮೂರು ತಿಂಗಳ ಕಾಲ ಮನೆಯಲ್ಲಿಯೇ ಮಲಗಿಸಿ ಬಿಟ್ರಿ ಎಂದು ಮಾರ್ಮಿಕವಾಗಿ ನುಡಿದ ಅವರು, ನಾನು ಈ ದೇಶದಲ್ಲಿ ತಲೆ ಮರೆಸಿಕೊಳ್ಳುವ ರಾಜಕಾರಣಿ ಆಗಿದ್ನಾ? ಎಂದು ಪ್ರಶ್ನಿಸಿದರು.
|
6 |
+
ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು ಮೂರು ತಿಂಗಳ ಕಾಲ ಮನೆಯ ಬಳಿ ತುಂಬಾ ತೊಂದರೆ ತೆಗೆದುಕೊಂಡಿದ್ದೀರಿ. ದೇವೇಗೌಡರ ಮುಖದಲ್ಲಿ ಏನಾದರೂ ಬದಲಾವಣೆ ಆಗಿದೆಯೇ? ಇನ್ನು ಮುಂದೆ ದೇವೇಗೌಡರ ಹೋರಾಟ ಪ್ರಾರಂಭವಾಗುತ್ತದೆ ಎಂದರು.
|
7 |
+
ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿರುವುದರಿಂದ ಅವರು ಪ್ರತಿದಿನ ಪಕ್ಷದ ಕಚೇರಿಗೆ ಬರಲು ಆಗುವುದಿಲ್ಲ. ಅವರಿಗೆ ಜವಾಬ್ದಾರಿ ಹೆಚ್ಚು ಇರುತ್ತದೆ. ಆ ಕಾರಣಕ್ಕಾಗಿಯೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ಬಾಬು ಹಾಗೂ ಪಕ್ಷದ ಯುವ ಘಟಕದ ರಾಜ್ಯಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಸದಸ್ಯತ್ವ ಅಭಿಯಾನದ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ಅವರು ಹೇಳಿದರು.
|
8 |
+
ಪ್ರತಿ ಜಿಲ್ಲೆಗೆ ಹೋಗಿ ಸದಸ್ಯತ್ವದ ಬಗ್ಗೆ ಗಂಭೀರವಾಗಿ ಅಭಿಯಾನವನ್ನು ಅವರು ಮಾಡುತ್ತಿದ್ದಾರೆ. ಇದನ್ನು ನಾನು ಸೂಕ್ಷ್ಮವಾಗಿ ಗಮನಿಸಿದ್ದೇನೆ ಎಂದು ಗೌಡರು ತಿಳಿಸಿದರು.
|
eesanje/url_46_18_9.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ರಾಹುಲ್ ಗಾಂಧಿ ಒಬ್ಬ ಅಪ್ರಬುದ್ಧ : ನಾರಾಯಣಸ್ವಾಮಿ ಕಿಡಿ
|
2 |
+
|
3 |
+
ಬೆಂಗಳೂರು,ಸೆ.14- ರಾಹುಲ್ ಗಾಂಧಿಯವರು ನಾಯಕರಲ್ಲ. ಒಬ್ಬ ಅಪ್ರಬುದ್ಧ ವ್ಯಕ್ತಿ ಎಂದು ವಿಧಾನಪರಿಷತ್ನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಳು ಬಿದ್ದ ಮನೆಗೆ ಉಳಿದವನೇ ನಾಯಕ ಎಂಬಂತೆ ಅವರು ಮುಖಂಡರಾಗಿದ್ದಾರೆ. ನೆಹರೂ ಅವರು ತಾವು ಮೀಸಲಾತಿ ವಿರೋಧಿ ಎಂದಿದ್ದರು. ಇಂದಿರಾಗಾಂಧಿ, ರಾಜೀವ್ ಗಾಂಧಿಯವರೂ ಅದನ್ನೇ ಮುಂದುವರೆಸಿದ್ದರು.
|
4 |
+
ಈಗ ರಾಹುಲ್ ಗಾಂಧಿಯವರು ಈ ಪರಂಪರೆಯನ್ನು ಮುಂದುವರೆಸಿದ್ದಾರೆ ಎಂದು ಟೀಕಿಸಿದರು.ರಾಹುಲ್ ಗಾಂಧಿಯವರು ಲೋಕಸಭೆಯ ವಿಪಕ್ಷ ನಾಯಕರಾಗಿದ್ದು, ಅವರನ್ನು ನಾನು ಗೌರವಿಸಲೇಬೇಕು. ಈ ಗೌರವ ಬೇರೆ; ಭಾರತ ದೇಶದಲ್ಲಿ ತಾವು ಅಧಿಕಾರಕ್ಕೆ ಬಂದಾಗ ಮೀಸಲಾತಿಯನ್ನು ರದ್ದು ಮಾಡುವ ಪ್ರಯತ್ನ ಮಾಡುತ್ತೇವೆ ಎಂದು ಅಮೆರಿಕದಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಆಕ್ಷೇಪಿಸಿದರು.
|
5 |
+
ಕಾಂಗ್ರೆಸ್ ಪಕ್ಷ ದಲಿತ ವಿರೋಧಿಯಾಗಿತ್ತು; ಮೀಸಲಾತಿಯ ವಿರೋಧಿಯಾಗಿತ್ತು. ಆದರೆ, ವೋಟ್ ಬ್ಯಾಂಕಿಗಾಗಿ ಅವರು ತಾವು ಮೀಸಲಾತಿ, ಸಂವಿಧಾನದ ಪರ ಎಂದಿದ್ದರು ಎಂದು ನುಡಿದರು. ರಾಹುಲ್ ಗಾಂಧಿಯವರು ಹೋದಲ್ಲೆಲ್ಲ ಕೈಯಲ್ಲಿ ಹಿಡಿದ ಕೆಂಪು ಪುಸ್ತಕವನ್ನು ನಾವು ಬೈಬಲ್ ಅಂದುಕೊಂಡಿದ್ದೆವು. ಅದು ಸಂವಿಧಾನ ಎಂದರು. ನಾವು ದಲಿತ ಸಮುದಾಯದವರೆಲ್ಲ ಒಟ್ಟಾಗಿದ್ದೇವೆ. ಈಗ ಆ ಪುಸ್ತಕ ಅಲ್ಲಾಡಿಸಲಿ ಎಂದು ಸವಾಲು ಹಾಕಿದರು.
|
6 |
+
ಮೀಸಲಾತಿ ತೆಗೆಯಿರಿ ಬನ್ನಿ ನೋಡೋಣ. ನಿಮಗೆ ತಾಕತ್ತಿದ್ದರೆ ಮೀಸಲಾತಿ ತೆಗೆಯಿರಿ ನೋಡೋಣ. ನಮ ಪಕ್ಷದ ವಿರುದ್ಧ ಗೂಬೆ ಕೂರಿಸುತ್ತಿದ್ದೀರಲ್ಲವೇ? ಎಂದ ಅವರು, ಬಿಜೆಪಿ ಮೀಸಲಾತಿ ವಿರೋಧಿಯಲ್ಲ. ಅದನ್ನು ರದ್ದು ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
|
7 |
+
ದಲಿತರ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿದ್ದು ನಾವು. ದಲಿತರ ಸಬಲೀಕರಣಕ್ಕೆ ನಾವು ಶಕ್ತಿ ತುಂಬಿದ್ದೇವೆ. ನೀವು ಎಸ್ಇಪಿ, ಟಿಎಸ್ಪಿ ಹಣ ಹೆಚ್ಚು ಕೊಟ್ಟದ್ದಾಗಿ ಹೇಳಿದಿರಿ. ಒಂದು ಕಡೆ ಲೆಕ್ಕ ತೋರಿಸಿ ಇನ್ನೊಂದು ಕಡೆ ಅದನ್ನೆಲ್ಲ ಕಿತ್ತುಕೊಂಡಿದ್ದೀರಿ ಎಂದು ಆಕ್ಷೇಪಿಸಿದರು.
|
eesanje/url_46_190_1.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಮತ್ತೆ ಮೈಸೂರಿನತ್ತ ಸಿಎಂ ಸಿದ್ದರಾಮಯ್ಯ, ತವರು ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಕಾರ್ಯತಂತ್ರ
|
2 |
+
ಮೈಸೂರು,ಏ.1-ತವರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಲೇಬೇಕೆಂಬ ಹಠಕ್ಕೆ ಬಿದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನಿಂದ ಮೂರು ದಿನಗಳ ಕಾಲ ಮೈಸೂರು ಮತ್ತು ಚಾಮರಾಜನಗರ ಪ್ರವಾಸ ಮಾಡಲಿದ್ದಾರೆ.ಮೈಸೂರು-ಕೊಡುಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಮೂಲಕ ಸಂಭವನೀಯ ಮುಜುಗರವನ್ನು ತಪ್ಪಿಸಿಕೊಳ್ಳಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.
|
3 |
+
ಹೀಗಾಗಿ ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ. ಕಳೆದ ವಾರ ಮೂರು ದಿನಗಳ ಕಾಲ ಮೈಸೂರಿನಲ್ಲಿ ಠಿಕ್ಕಾಣಿ ಹೂಡಿದ್ದ ಮುಖ್ಯಮಂತ್ರಿಯವರು ವಿವಿಧ ಹಂತಗಳಲ್ಲಿ ಚರ್ಚೆ ನಡೆಸಿದ್ದರು.
|
4 |
+
ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿರುವ ಯದುವೀರ್ ಕೃಷ್ಣರಾಜ ಒಡೆಯರ್ ವಿರುದ್ಧವಾಗಿ ಕಾಂಗ್ರೆಸ್ನ ಯಾವ ನಾಯಕರೂ ಹಗುರವಾದ ಹೇಳಿಕೆಗಳನ್ನು ನೀಡಬಾರದು. ನಮ್ಮ ಹೋರಾಟ ಏನಿದ್ದರೂ ಬಿಜೆಪಿಯ ವಿರುದ್ಧ ಎಂದು ಸ್ಪಷ್ಟ ಸಂದೇಶ ರವಾನಿಸಿದ್ದರು.
|
5 |
+
ಇದರಿಂದ ಸ್ಥಳೀಯ ನಾಯಕರು ಮನಸೋಇಚ್ಚೆ ಮಾತನಾಡಿ ಮುಜುಗರ ಸೃಷ್ಟಿಸುವುದಲ್ಲದೆ ಕಾಂಗ್ರೆಸ್ಗೆ ಹಿನ್ನಡೆಯಾಗುವಂತೆ ಮಾಡುವ ಸಾಧ್ಯತೆಗಳು ಕ್ಷೀಣವಾಗಿದೆ. ನಾಳೆಯಿಂದ ಕೈಗೊಳ್ಳುವ ಪ್ರವಾಸದಲ್ಲಿ ಚಾಮರಾಜನಗರ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆಗಳನ್ನು ನೀಡುತ್ತಿದ್ದಾರೆ. ಅಲ್ಲಿ ಸಚಿವ ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.
|
6 |
+
ಈ ಎರಡೂ ಕ್ಷೇತ್ರಗಳು ಮುಖ್ಯಮಂತ್ರಿಯವರಿಗೆ ಅತ್ಯಂತ ಪ್ರತಿಷ್ಠೆಯ ಕಣಗಳು ಎಂದು ವಿಶ್ಲೇಷಿಸಲಾಗುತ್ತಿದೆ. ನಾಳೆ ಚಾಮರಾಜನಗರದಲ್ಲಿನ ಶಂಕರಮಠಕ್ಕೆ ಭೇಟಿ ನೀಡುವ ಸಿದ್ದರಾಮಯ್ಯ ಅವರು ಬಳಿಕ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
|
7 |
+
ಸಂಜೆ ಮೈಸೂರಿನಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಸಲಿದ್ದು, ಆ ಬಳಿಕ ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಬುಧವಾರ ಸುತ್ತೂರು ಮಠಕ್ಕೆ ಭೇಟಿ ನೀಡಿ ಆ ಬಳಿಕ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾಗಲಿದ್ದಾರೆ.
|
8 |
+
ಮೂರು ದಿನಗಳ ಜಿಲ್ಲಾ ಪ್ರವಾಸದಲ್ಲಿ ಚುನಾವಣೆ ನಿರ್ವಹಣೆ, ಆರ್ಥಿಕ ಸಂಪನ್ಮೂಲ ಕ್ರೂಢೀಕರಣ ಹಾಗೂ ಒಗ್ಗಟ್ಟಿನ ಹೋರಾಟಕ್ಕೆ ಜಿಲ್ಲಾ ನಾಯಕರಿಗೆ ಅಗತ್ಯ ಸಲಹೆಸೂಚನೆಗಳನ್ನು ಮುಖ್ಯಮಂತ್ರಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
|
eesanje/url_46_190_10.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ರಂಗೇರತೊಡಗಿದೆ ಲೋಕಸಭಾ ಚುನಾವಣೆ, ರೋಡ್ ಶೋ,ರ್ಯಾಲಿಗಳಿಗೆ ರಾಜಕೀಯ ಪಕ್ಷಗಳು ಸಜ್ಜು
|
2 |
+
ಬೆಂಗಳೂರು,ಮಾ.31-ಲೋಕಸಭಾ ಚುನಾವಣಾ ಪ್ರಚಾರದ ಭರಾಟೆ ರಂಗೇರತೊಡಗಿದೆ. ಅಬ್ಬರದ ಪ್ರಚಾರ, ಬೃಹತ್ ಮೆರವಣಿಗೆ, ರೋಡ್ ಶೋ, ರ್ಯಾಲಿ ನಡೆಸಲು ರಾಜಕೀಯ ಪಕ್ಷಗಳು ಸಜ್ಜಾಗಿವೆ.ಈಗಾಗಲೇ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ, ಆಶೀರ್ವಾದ ಪಡೆಯುವುದರ ಜೊತೆಗೆ ಮಠ-ಮಂದಿರಗಳಿಗೆ ತೆರಳಿ ಮಠಾೀಶರ ಆಶೀರ್ವಾದ ಪಡೆಯುತ್ತಿದ್ದಾರೆ.
|
3 |
+
ಕಾರ್ಯಕರ್ತರು, ಬೆಂಬಲಿಗರು ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮನೆಮನೆಗಳಿಗೆ ತೆರಳಿ ಕರಪತ್ರಗಳನ್ನು ಹಂಚುತ್ತಾ ಈಗಾಗಲೇ ಪ್ರಚಾರ ಶುರುವಿಟ್ಟುಕೊಂಡಿದ್ದಾರೆ.ಬೆಳ್ಳಂಬೆಳಿಗ್ಗೆ ಪಾರ್ಕು, ಬಸ್ನಿಲ್ದಾಣ, ಹೋಟೆಲ್ ಮುಂತಾದ ಕಡೆ ಅಭ್ಯರ್ಥಿಗಳು ತೆರಳಿ ಅಲ್ಲಿಗೆ ಭೇಟಿ ನೀಡುವ ಜನರೊಂದಿಗೆ ಬೆರೆತು ಮಾತುಕತೆ ನಡೆಸುವ ಮೂಲಕ ಮತಯಾಚನೆ ಮಾಡುತ್ತಿದ್ದಾರೆ.
|
4 |
+
ತಾಲೂಕು, ಹೋಬಳಿ, ಗ್ರಾಮಮಟ್ಟದಲ್ಲಿ ವಿವಿಧ ಸಮುದಾಯಗಳ ಮುಖಂಡರುಗಳ ಭೇಟಿ ಮಾಡಿ ಸಮಾಲೋಚನೆ ನಡೆಸುತ್ತಿದ್ದಾರೆ.ಗ್ರಾಮಗ್ರಾಮಗಳಲ್ಲಿ ಇರುವ ದೇವಾಲಯಗಳಿಗೆ ಭೇಟಿ ನೀಡಿ ಅಲ್ಲಿನ ದೇವಸ್ಥಾನಗಳ ಅಭಿವೃದ್ಧಿಗೆ ಭರವಸೆ, ಆರ್ಥಿಕ ಸಹಾಯ ನೀಡುತ್ತಿರುವುದು ಕಂಡುಬರುತ್ತಿದೆ.
|
5 |
+
ನೇರವಾಗಿ ಹಣ ನೀಡಿದರೆ ಆಯೋಗದ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ಗ್ರಾಮಗಳ ದೇವಸ್ಥಾನದ ಅಭಿವೃದ್ಧಿ ನೆಪದಲ್ಲಿ ಆರ್ಥಿಕ ನೆರವನ್ನು ಅಭ್ಯರ್ಥಿಗಳು ನೀಡುವ ಮೂಲಕ ಮತಗಳನ್ನು ಸೆಳೆಯುವ ತಂತ್ರ ಅನುಸರಿಸುತ್ತಿದ್ದಾರೆ.ಮಹಿಳಾ ಸಂಘಟನೆ, ಸ್ತ್ರೀಶಕ್ತಿ ಸಂಘ, ಸ್ವಸಹಾಯ ಸಂಘಗಳ ಮುಖಂಡರೊಂದಿಗೆ ಚರ್ಚೆ ನಡೆಸಿ, ಬೆಂಬಲ ನೀಡುವಂತೆ ಮನವಿ ಮಾಡುತ್ತಿದ್ದಾರೆ.
|
6 |
+
ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರತಿದಿನ ಪ್ರವಾಸ, ಪ್ರಚಾರ, ಮುಖಂಡರು, ಕಾರ್ಯಕರ್ತರ ಭೇಟಿ, ಅನ್ಯಪಕ್ಷಗಳ ಮುಖಂಡರು, ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ.ಕ್ಷೇತ್ರದಲ್ಲಿ ಸಂಚರಿಸಿ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹರಿಸುವ ಭರವಸೆ ನೀಡುವ ಮೂಲಕ ಮತಯಾಚನೆಯಲ್ಲಿ ತೊಡಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಎಲ್ಲಾ ಸ್ಥಳಗಳಿಗೂ ಅಭ್ಯರ್ಥಿಗಳು ತಲುಪಲು ಸಾಧ್ಯವಾಗದ ಕಾರಣ ತಮ್ಮ ಬೆಂಬಲಿಗರ ಮೂಲಕ ಪ್ರಚಾರ ಶುರುವಿಟ್ಟುಕೊಂಡಿದ್ದಾರೆ.
|
7 |
+
ಕ್ಷೇತ್ರ ವ್ಯಾಪ್ತಿಯ ವಿಧಾನಸಭೆಯ ಶಾಸಕರು ಅಥವಾ ಮಾಜಿ ಶಾಸಕರ ಮೂಲಕ ಸಭೆ, ಸಮಾರಂಭಗಳನ್ನು ಆಯೋಜಿಸಿ ಗೆಲುವಿನ ರಣತಂತ್ರ ರೂಪಿಸುತ್ತಿದ್ದಾರೆ. ಮೊದಲ ಹಂತದ ಚುನಾವಣೆಗೆ ಕೇವಲ 26 ದಿನಗಳು ಬಾಕಿ ಇವೆ. ಕೆಲವು ಕ್ಷೇತ್ರಗಳಲ್ಲಿ ಇನ್ನೂ ಬಂಡಾಯ ಬಗೆಹರಿದಿಲ್ಲ. ಎಲ್ಲವೂ ಇಕ್ಕಟ್ಟು-ಬಿಕ್ಕಟ್ಟು ಬಗೆಹರಿದು ಬಿ ಫಾರಂ ಪಡೆದ ಅಭ್ಯರ್ಥಿಗಳು ತಮ್ಮತಮ್ಮ ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರಕ್ಕೆ ಯೋಜನೆಗಳನ್ನು ರೂಪಿಸಿದ್ದಾರೆ. ಕೇಂದ್ರದ ನಾಯ��ರೊಂದಿಗೆ ಬೃಹತ್ ರ್ಯಾಲಿ, ಮೆರವಣಿಗೆ, ರೋಡ್ಶೋ ಕಾರ್ಯಕ್ರಮಗಳ ಆಯೋಜನೆಯಲ್ಲಿ ತೊಡಗಿದ್ದಾರೆ.
|
eesanje/url_46_190_11.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಆರ್ಟಿಪಿಎಸ್ 4 ಘಟಕಗಳು ಬಂದ್, ರಾಜ್ಯದಲ್ಲಿ ವಿದ್ಯುತ್ ಕೊರತೆ ಭೀತಿ
|
2 |
+
ರಾಯಚೂರು, ಮಾ.31:ಇಲ್ಲಿನ ಶಕ್ತಿ ನಗರದಲ್ಲಿರುವ ಆರ್ಟಿಪಿಎಸ್ ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ನಾಲ್ಕು ಘಟಕಗಳು ನಿಂತಿದ್ದು ವಿದ್ಯುತ್ ಉತ್ಪಾದನೆಯಲ್ಲಿ ವ್ಯತ್ಯಯವಾಗಿದೆ.ಇಲ್ಲಿರುವ 8 ಘಟಕದಲ್ಲಿ 4 ಕೈಕೊಟ್ಟಿದ್ದು ಈಗ ತುರ್ತಾಗಿ ಎರಡು ಘಟಕಗಳ ದುರಸ್ತಿ ಕಾರ್ಯ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
|
3 |
+
ಒಟ್ಟು 1720 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಸಾಮಥ್ರ್ಯವಿರೊ ಈಗ ಪ್ರಸ್ತುತ 903 ಮೆ.ವ್ಯಾ.ವಿದ್ಯುತ್ ಮಾತ್ರ ಉತ್ಪಾದನೆ ಮಾಡಲಾಗಿದೆ.ರಾಜ್ಯಕ್ಕೆ ಸುಮಾರು 40% ವಿದ್ಯುತ್ ಪೂರೈಕೆ ಮಾಡುವ ಇಲ್ಲಿನ ಘಟಕಗಳು ಕಳೆದ ಎರಡು ದಿನಗಳಿಂದ ಬಾಯ್ಲರ್ ಟ್ಯೂಬ್ ಲೀಕೇಜ್ ಹಾಗೂ ಬಂಕ್ಲರ್ ಸಮಸ್ಯೆಯಿಂದ 1,2,3 ಮತ್ತು 6 ಸೇರಿ ಒಟ್ಟು ನಾಲ್ಕು ಘಟಕಗಳು ಬಂದ್ ಆಗಿವೆ.
|
4 |
+
ಸದ್ಯ ಸಿಬ್ಬಂದಿ 2 6ನೇ ಘಟಕಗಳ ದುರಸ್ತಿ ಕಾರ್ಯ ನಡೆಸುತ್ತಿದ್ದಾರೆ ಆದರೆ ಇದು ಯಾವಾಗ ದುರಸ್ತಿಯಾಗುತ್ತೆ ಎಂಬುದು ಹೇಳಲು ಸಾಧ್ಯವಿಲ್ಲ ಹೀಗಾಗಿ ರಾಜ್ಯದಲ್ಲಿ ಮುಂದಿನ ಕೆಲ ದಿನಗಳ ಕಾಲ ವಿದ್ಯುತ್ ಸಮಸ್ಯೆ ಎದುರಾಗುವ ಭೀತಿ ಇದೆ.
|
eesanje/url_46_190_12.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಬೆಂಗಳೂರಲ್ಲಿ ಕಳೆದ 15 ವರ್ಷಗಳಲ್ಲೇ ಅತ್ಯಧಿಕ ತಾಪಮಾನ ದಾಖಲೆ
|
2 |
+
ಬೆಂಗಳೂರು,ಮಾ.31-ರಾಜಧಾನಿ ಬೆಂಗಳೂರು ನಗರದಲ್ಲಿ ಸೂರ್ಯನ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ತಲುಪುತ್ತಿದ್ದು,ರಾಯಚೂರು ಜಿಲ್ಲೆಯಲ್ಲಿ ಅತ್ಯಕ 44.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿ ಮಧ್ಯಾಹ್ನ ಹೊತ್ತು ಜನರು ಹೈರಾಣರಾಗಿದ್ದಾರೆ.
|
3 |
+
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಬೆಂಗಳೂರಿನಲ್ಲಿ ಇದು ಕಳೆದ 15 ವರ್ಷಗಳಲ್ಲೇ ದಾಖಲೆಯ ತಾಪಮಾನ ಏರಿಕೆ ,ಮುಂದಿನ ಮೂರು ದಿನಗಳ ಕಾಲ ಕರ್ನಾಟಕದಾದ್ಯಂತ ಬಿಸಿಗಾಳಿ ಎಚ್ಚರಿಕೆ ನೀಡಲಾಗಿದೆ.
|
4 |
+
ರಾಯಚೂರು ಜಿಲ್ಲೆಯಲ್ಲಿ 18 ಸ್ಥಳಗಳು, ಕಲಬುರಗಿ ಜಿಲ್ಲೆಯಲ್ಲಿ 16 ಸ್ಥಳಗಳು, ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ತಲಾ 5 ಸ್ಥಳಗಳು, ವಿಜಯಪುರ ಜಿಲ್ಲೆಯಲ್ಲಿ 3 ಸ್ಥಳಗಳು, ಬೀದರ್ ಜಿಲ್ಲೆಯಲ್ಲಿ 2 ಸ್ಥಳಗಳು, ಕೊಪ್ಪಳ ಮತ್ತು ಬಾಗಲಕೋಟೆಯಲ್ಲಿ ತಲಾ 1 ಸ್ಥಳಗಳಲ್ಲಿ ತಾಪಮಾನ 42 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚು ದಾಖಲಾಗಿದೆ.ಇ ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ ಮತ್ತು ಕೊಪ್ಪಳದಲ್ಲಿ ಎಲ್ಲೂ ಅಲರ್ಟ್ ಘೋಷಿಸಲಾಗಿದೆ.
|
5 |
+
ಮುಂದಿನ ದಿನದಲ್ಲಿ ಕರ್ನಾಟಕದ ಒಳನಾಡಿನಾದ್ಯಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಏರಿಕೆಯಾಗಲಿದೆ ಮತ್ತು ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಉಷ್ಣ ಹವೆ ಎಚ್ಚರಿಕೆ ಸಹ ನೀಡಲಾಗಿದೆ ಎಂದು ಹವಾಮಾನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
|
6 |
+
ಹೆಚ್ಚು ಬಿಸಿಲಿನ ವೇಳೆ ಹೊಗೆ ಹೆಚ್ಚು ಓಡಾಡಬೇಡಿ ಎಂದು ಸಲಹೆ ನೀಡಿದ್ದಾರೆ. ಮುಂದಿನ ಮಾ. 22, 1931 ರಂದು ಬೆಂಗಳೂರಿನ ಸಾರ್ವಕಾಲಿಕ ದಾಖಲೆ 38.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು.
|
eesanje/url_46_190_2.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಕಡಿತ, ಇಂದಿನಿಂದಲೇ ಜಾರಿ : ಇಲ್ಲಿದೆ ಕಂಪ್ಲೀಟ್ ಮಾಹಿತಿ
|
2 |
+
ಬೆಂಗಳೂರು,ಏ.1-ಹದಿನೈದು ವರ್ಷಗಳ ಬಳಿಕ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ವಿದ್ಯುತ್ ಬಳಕೆಯ ದರವನ್ನು ಕಡಿತ ಮಾಡಲಾಗಿದ್ದು, ಇಂದಿನಿಂದಲೇ ಜಾರಿಗೆ ಬರಲಿದ್ದು, ಮೇ ತಿಂಗಳಿನಲ್ಲಿ ನೀಡಲಾಗುವ ಬಿಲ್ಗಳಿಗೆ ಅನ್ವಯವಾಗಲಿದೆ.
|
3 |
+
ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ(ಕೆಇಆರ್ಸಿ) ಕಳೆದ ಜನವರಿ ಮತ್ತು ಫೆಬ್ರವರಿಯಲ್ಲಿ ವಾರ್ಷಿಕ ಪ್ರಕ್ರಿಯೆಗಳನ್ನು ನಡೆಸಿ ಎಸ್ಕಾಂಗಳ ಪ್ರತಿಪಾದನೆ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ ಫೆ.22ರಂದು ಹೊರಡಿಸಿರುವ ಆದೇಶದ ಪ್ರಕಾರ ಹಿಂದಿನಿಂದ ಗೃಹ ಬಳಕೆಯ ವಿದ್ಯುತ್ ಮೇಲೆ 1 ರೂ. 10 ಪೈಸೆ ಕಡಿತವಾಗಲಿದೆ.
|
4 |
+
ಈ ಮೊದಲು 1ರಿಂದ 100 ರೂ. ಒಳಗಿನ ವಿದ್ಯುತ್ ದರಕ್ಕೆ 4 ರೂ.ಗಿಂತಲೂ ಹೆಚ್ಚಿನ ದರ ಇತ್ತು. 100 ರೂ. ಮೇಲ್ಪಟ್ಟ ವಿದ್ಯುತ್ ಬಳಕೆಗೆ ಶೂನ್ಯ ಯೂನಿಟ್ನಿಂದಲೇ 7 ರೂ. ಅನ್ವಯವಾಗುತ್ತಿತ್ತು. ಗೃಹ ಜ್ಯೋತಿ ಯೋಜನೆ ಜಾರಿಯಲ್ಲಿ ಇದ್ದುದ್ದರಿಂದ 200 ಯೂನಿಟ್ ಒಳಗಿನ ವಿದ್ಯುತ್ ಬಳಕೆಯ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಾಗಿರಲಿಲ್ಲ. ಆದರೆ ಗೃಹಜ್ಯೋತಿ ವ್ಯಾಪ್ತಿಯಿಂದ ಹೊರಗುಳಿದ ಗ್ರಾಹಕರಿಗೆ ವಿದ್ಯುತ್ ಶಾಕ್ ಜೋರಾಗೇ ತಗುಲಿತ್ತು.
|
5 |
+
ಈ ಬಾರಿ ನಡೆದ ವಿಚಾರಣೆಯಲ್ಲಿ ಎಸ್ಕಾಂಗಳು 2024-25ನೇ ಸಾಲಿಗೆ 69,474.75 ಕೋಟಿ ರೂ.ಗಳ ವಾರ್ಷಿಕ ಕಂದಾಯದ ಅಗತ್ಯತೆಯನ್ನು ಪ್ರಸ್ತಾಪಿಸಿದರು. ಇದರಿಂದ 4,863.85 ಕೋಟಿ ರೂ.ಗಳ ಕಂದಾಯ ಕೊರತೆ ಕಂಡುಬಂದಿತ್ತು. ಇದನ್ನು ಸರಿದೂಗಿಸಲು ಪ್ರತಿ ಯೂನಿಟ್ಗೆ 49ರಿಂದ 163 ಪೈಸೆಗಳವರೆಗೆ ಸರಾಸರಿ 66 ಪೈಸೆಯಷ್ಟು ವಿದ್ಯುತ್ ದರ ಹೆಚ್ಚಳಕ್ಕೆ ಮನವಿ ಮಾಡಿದ್ದವು. ಆದರೆ ಕರ್ನಾಟಕ ವಿದ್ಯುಚ್ಛಕ್ತಿ ಆಯೋಗ 64,944.54 ಕೋಟಿ ಕಂದಾಯ ಅಗತ್ಯತೆಗೆ ಅನುಮೋದನೆ ನೀಡಿದೆ.
|
6 |
+
ಇದರಿಂದ 290.76 ಕೋಟಿ ರೂ. ಕಂದಾಯ ಹೆಚ್ಚಳ ಪ್ರಸ್ತಾಪವಾಗಿದೆ. ಇದರ ಆಧಾರದ ಮೇಲೆ ಗೃಹ ಬಳಕೆ, ವಾಣಿಜ್ಯ, ಕೈಗಾರಿಕೆ, ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳು, ಏತನೀರಾವರಿ, ಅಪಾರ್ಟ್ಮೆಂಟ್ಗಳು, ಕೈಗಾರಿಕಾ ಸ್ಥಾವರಗಳಲ್ಲಿ ವಿದ್ಯುತ್ ಬಳಕೆಯಾಗುವ ವಿದ್ಯುತ್ನ ದರವನ್ನು ವಿವಿಧ ಹಂತಗಳಲ್ಲಿ ಕಡಿತಗೊಳಿಸಲಾಗಿದೆ.
|
7 |
+
ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೆ ದರ ಇಳಿಕೆಯಾಗಿರುವುದರಿಂದ ಪ್ರತಿ ಯೂನಿಟ್ಗೆ ನೀಡಲಾಗುತ್ತಿದ್ದ 50 ಪೈಸೆ ರಿಯಾಯ್ತಿಯನ್ನು ಮುಂದುವರೆಸುವುದಿಲ್ಲ ಎಂದು ತಿಳಿಸಲಾಗಿದೆ. ನಗರ, ಗ್ರಾಮೀಣ ಪ್ರವರ್ಗಗಳನ್ನು ವಿಲೀನಗೊಳಿಸಿದ್ದ ನಿರ್ಧಾರವನ್ನು ಪರಿಷ್ಕರಿಸಲಾಗಿದ್ದು, ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮತ್ತು ಕೈಗಾರಿಕೆ, ಖಾಸಗಿ ಆಸ್ಪತ್ರೆ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಪ್ರತಿ ಯೂನಿಟ್ಗೆ 30 ಪೈಸೆ ರಿಯಾಯ್ತಿಯನ್ನು ಅನುಮೋದಿಸಲಾಗಿದೆ.
|
8 |
+
ನವೀಕರಿಸಬಹುದಾದ ಇಂಧನ ಮೂಲಗಳಿಂದ ಖರೀದಿಸುವ ವಿದ್ಯುತ್ನ ಪ್ರತಿ ಯೂನಿಟ್ಗೆ 50 ಪೈಸೆ ಹೆಚ್ಚಿನ ದರ���ನ್ನು ಮುಂದುವರೆಸಲಾಗಿದೆ ಎಂದು ಕೆಇಆರ್ಸಿ ತಿಳಿಸಿದೆ. ಏ.1ರಿಂದ ಪ್ರೀಪೇಮೆಂಟ್ ಮೀಟರ್ನ್ನು ಅನುಮೋದಿಸಲು ಅಗತ್ಯವಾದ ವ್ಯವಸ್ಥೆಯನ್ನು ಸೂಚಿಸಬೇಕು. ಜೂ.1ರಿಂದ ಎಲ್ಟಿ ಗ್ರಾಹಕರಿಗೆ ಸ್ವಯಂ ಮಾಪಕ ಓದುವಿಕೆಯನ್ನು ಸಾಧ್ಯವಾಗಿಸಲು ಅಗತ್ಯ ಸಾಫ್ಟ್ವೇರ್ ಅಳವಡಿಸಿಕೊಳ್ಳಬೇಕೆಂದು ಸೂಚಿಸಲಾಗಿದೆ.
|
9 |
+
ಪ್ರತಿ ಯೂನಿಟ್ಗೆ ದರ ಇಳಿಕೆಯ ಪ್ರಮಾಣ:ಎಲ್ಟಿ ಗೃಹ ಬಳಕೆ 1.10 ರೂ.ಎಚ್ಪಿ ವಾಣಿಜ್ಯ 1.25 ರೂ.ಎಚ್ಟಿ ಕೈಗಾರಿಕೆ 50 ಪೈಸೆಎಚ್ಟಿ ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳು 40 ಪೈಸೆಖಾಸಗಿ ಏತನೀರಾವರಿ 2 ರೂ.ಖಾಸಗಿ ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳು 50 ಪೈಸೆಕೈಗಾರಿಕಾ ಸ್ಥಾವರಗಳು 1 ರೂ.ವಾಣಿಜ್ಯ ಸ್ಥಾವರಗಳು 50 ಪೈಸೆಅಪಾರ್ಟ್ಮೆಂಟ್ಗಳು ಸೇರಿದಂತೆ ವಾಣಿಜ್ಯ, ಕೈಗಾರಿಕೆ, ಖಾಸಗಿ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳ ಬೇಡಿಕೆ ಶುಲ್ಕವನ್ನು ಪ್ರತಿ ಕಿಲೋ ವ್ಯಾಟ್ಗೆ 10 ರೂ. ಇಳಿಸಲಾಗಿದೆ.
|
eesanje/url_46_190_3.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಲೋಕಸಭೆ ಚುನಾವಣೆ : ರಾಜ್ಯದಲ್ಲಿ ಈವರೆಗೆ 59 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
|
2 |
+
ಬೆಂಗಳೂರು, .ಏ.1:ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಮೊದಲ ಹಂತದಲ್ಲಿ ಏ.26ರಂದು ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಹಾಗೂ ಪಕ್ಷೇತರರು ಸೇರಿದಂತೆ ಈವರೆಗೆ 59 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
|
3 |
+
ಇಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪಿಸಿ ಮೋಹನ್ ಅವರು ಭರ್ಜರಿ ಮೆರವಣಿಗೆ ಮೂಲಕ ಶಕ್ತಿ ಪ್ರದರ್ಶನದೊಂದಿಗೆ ಉಮೇದುವಾರಿಗೆ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ, ಡಿ.ವಿ. ಸದಾನಂದ ಗೌಡ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಪಕ್ಷ ನಾಯಕ ಆರ್ ಆಶೋಕ್ ಸೇರಿದಂತೆ ಆನೇಕ ಮುಖಂಡರು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಭಾಗವಹಿಸಿದರು.
|
4 |
+
ಬೆಂಗಳೂರು-ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಇಂದು ನಾಮಪತ್ರ ಸಲ್ಲಿಸಿದರು. ಸಚಿವ ರಾಮಲಿಂಗಾರೆಡ್ಡಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಸೇರಿದಂತೆ ಅನೇಕ ಮುಖಂಡರು ಈ ಸಂದರ್ಭದಲ್ಲಿ ಸಾಥ್ ನೀಡಿದರು.
|
5 |
+
ಶಾಸಕರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶಾಸಕರು ಮಾಜಿ ಶಾಸಕರು ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು. ಹೈ-ಹೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟ ರಮಣೆಗೌಡ (ಸ್ಟಾರ್ ಚಂದ್ರು) ಅವರು ಇಂದು ತಮ್ಮ ಉಮೇದುವಾರಿಕೆ ಸಲ್ಲಿಸಿದರು.
|
6 |
+
ಮಂಡ್ಯದ ಕಾಳಿಕಾಂಬದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಭಾರಿ ಮೆರಣಿಗೆ ಮೂಲಕ ಆಗಮಿಸಿ ಜಿಲ್ಲಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಚೆಲುವರಾಯ ಸ್ವಾಮಿ, ಎಐಸಿಸಿ ಕಾರ್ಯದರ್ಶಿ ರೋಜಿ ಎಮ್ಜಾನ್ ಶಾಸಕರಾದ ಗಣಿಗ ರವಿ, ರಮೇಶ ಬಂಡಿ ಸಿದ್ದೇಗೌಡ, ದಿನೇಶ್ ಗೂಳಿಗೌಡ, ಮರಿ ತಿಬ್ಬೇಗೌಡ ಸೇರಿದಂತೆ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಮುಖಂಡರು ಪಾಲ್ಗೊಂಡಿದ್ದರು.
|
7 |
+
ಹಾಸನ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ನಾಮಪತ್ರ ಸಲ್ಲಿಸಿದ್ದು, ಉಸ್ತುವಾರಿ ಸಚಿವ ರಾಜಣ್ಣ, ಎಐಸಿಸಿ ಕಾರ್ಯದರ್ಶಿ ರೋಜಿ ಎಮ್ಜಾನ್ ಶಾಸಕರಾದ ಶಿವಲಿಂಗೇಗೌಡ, ಎಂ . ಆನಂದ್ , ಮಾಜಿ ಸಚಿವರು, ಶಾಸಕರು ಮುಖಂಡರು ಪಾಲ್ಗೊಂಡಿದ್ದರು. ಈಗಾಗಲೇ ಬೆಂ.ಗ್ರಾ. ಲೋಕಸಭಾ ಕ್ಷೇತ್ರದಿಂದ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.
|
8 |
+
ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅಬ್ಬರ ಅರ್ಭಟವಿಲ್ಲದೆ ಸರಳವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇನ್ನುಳಿದಂತೆ ನಾಳೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್��ಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಸಲಿದ್ದಾರೆ. ಏ.3ರಂದು ಬೆಂ. ಕೇಂದ್ರ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಮತ್ತು ಬೆಂ.ಉತ್ತರ ಕ್ಷೇತ್ರದ ಅಭ್ಯರ್ಥಿ ಪ್ರೊ. ರಾಜುಗೌಡ ನಾಮಪತ್ರ ಸಲ್ಲಿಸಲಿದ್ದಾರೆ.
|
9 |
+
ಮೈಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಯದುವೀರ್ ಕೃಷ್ಣದತ್ತ ಒಡೆಯರ್, ಚಾಮರಾಜ ನಗರದ ಬಿಜೆಪಿ ಅಭ್ಯರ್ಥಿ ಬಾ¯ರಾಜ್, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕೋಟಾ ಶ್ರೀನಿವಾಸ ಪೂಜಾರಿ, ತುಮಕೂರಿನ ವಿ ಸೋಮಣ್ಣ, ಏ.3 ರಂದು ನಾಮಪತ್ರ ಸಲ್ಲಿಸಲಿದ್ದು, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಡಿ.ವಿ. ಸದಾನಂದ ಗೌಡ, ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಪಕ್ಷ ನಾಯಕ ಆರ್ ಅಶೋಕ್ ಪಾಲ್ಗೊಳ್ಳಲಿದ್ದಾರೆ.
|
10 |
+
ಏ.4 ರಂದು ತುಮಕೂರು ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಸ್.ಪಿ. ಮುದ್ದು ಹನುಮೇಗೌಡ, ಮಂಡ್ಯ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿರುವ ಮಾಜಿ ಮುಖ್ಯಮುಂತ್ರಿ ಎಚ್.ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ.
|
eesanje/url_46_190_4.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಭಯಾನಕ ಬಿಸಿಲು..!
|
2 |
+
ಬೆಂಗಳೂರು, ಏ.1-ಬೇಸಿಗೆ ಸುಡು ಬಿಲಿಸಿನಿಂದಾಗಿ ವಾತಾವರಣದಲ್ಲಿರುವ ತೇವಾಂಷದಲ್ಲಿ ಗಣನೀಯ ಕುಸಿತವಾಗಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಉಂಟುಮಾಡುತ್ತಿದೆ.ತೇವಾಂಶ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜನರಲ್ಲಿ ಆಯಾಸ, ಬಳಲಿಕೆ ಹೆಚ್ಚಾಲಿದೆ. ಅದರಲ್ಲೂ ವಯಸ್ಸಾದ ಹಿರಿಯ ನಾಗರಕರು ಹಾಗು ಮಕ್ಕಳು ಹೆಚ್ಚು ತೊಂದರೆ ಒಳಗಾಗುತ್ತಾರೆಂದು ಆರೋಗ್ಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
|
3 |
+
ರಾಜ್ಯದಲ್ಲಿ ಮುಂಗಾರು ಹಿಂಗಾರು ಮಳೆ ಕೈಕೊಟ್ಟು ತೀವ್ರ ಸ್ವರೂಪದ ಬರ ಪರಿಸ್ಥತಿ ಆವರಿಸಿದೆ. ಇದರ ಬೆನ್ನಲ್ಲೆ ಕಳೆದ ಮೂರು ತಿಂಗಳಿಂದ ಮುಂಗಾರು ಪೂರ್ವ ಮಳೆ ವಾಡಿಕೆ ಪ್ರಮಾಣದಲ್ಲಿ ಆಗಿಲ್ಲ.ಮಾರ್ಚ್ನಲ್ಲಿ ಕರಾವಳಿ, ಮಲೆನಾಡು ಸೇರಿದಂತ ಒಂದೆರಡು ಕಡೆ ಸಾಧಾರಾಣ ಮಳೆಯಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.
|
4 |
+
ಹವಮಾನ ಮುನ್ಸೂಚನೆ ಪ್ರಕಾರ ರಾಜ್ಯದಲ್ಲಿ ಮುಂದಿನ ಒಂದುವಾರದಲ್ಲಿ ಮಳೆಯಾಗುವ ಸಾಧ್ಯತೆಗಳಿಲ್ಲ. ಒಣ ಹವೆ ಮುಂದುವರೆಯಲಿದ್ದು, ತಾಪಮಾನದಲ್ಲಿ ಸರಾಸರಿ 2 ಡಿಗ್ರಿ ಸೆಂಟಿಗ್ರೇಡ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್. ಪ್ರಕಾಶ್ ತಿಳಿಸಿದರು.
|
5 |
+
ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ 36 ಡಿಗ್ರಿ ಸೆಂಟಿಗ್ರೇಡ್ ನಷ್ಟು ಉಷ್ಣಾಂಶ ದಾಖಲಾಗುತ್ತಿದೆ. ಈ ವಾರದಲ್ಲಿ 37 ರಿಂದ 38 ಡಿ.ಸೆ. ತಲುಪುವ ನಿರೀಕ್ಷೆಯಿದೆ. ಸದ್ಯಕ್ಕೆ ಮಳೆಬರುವಂತಹ ಲಕ್ಷಣಗಳು ಕಂಡುಬರುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
|
6 |
+
ಮಧ್ಯಾಹ್ನದ ವೇಳೆ ತೇವಾಂಶ ಶೇ.25ಕ್ಕೆ ಇಳಿಕೆ ಯಾಗಲಿದೆ. ಇದರಿಂದ ಜನರಲ್ಲಿ ಸಹಜವಾಗಿ ಬಳಲಿಕೆ ಕಂಡುಬರಲಿದೆ. ಒಣಹವೆ ಇರುವುದರಿಂದ ಕೆಲವೆಡೆ ಬಿಸಿ ಗಾಳಿ ಕಂಡುಬರುತ್ತಿದೆ ಎಂದರು.ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಬಾಗಲಕೋಟೆಯಲ್ಲಿ 41.2 ಡಿ.ಸೆ.ನಷ್ಟು ಗರಿಷ್ಠ ತಾಪಮಾನ ದಾಖಲಾಗಿದ್ದರೇ, ಮಡಿಕೇರಿಯಲ್ಲಿ 33 ಡಿ.ಸೆ.ನಷ್ಟಿದೆ.
|
7 |
+
ಉಳಿದಂತೆ ಚಾಮರಾಜನಗರ 37.3, ಮಂಡ್ಯ-ಮೈಸೂರು 36.6, ಶಿವಮೊಗ್ಗ 37.8, ಬೆಳಗಾವಿ 36.5, ಬೀದರ್ 38.4, ವಿಜಪುರ 38.5, ಕೊಪ್ಪಳ 39.7, ರಾಯಚೂರು 39.6, ಬೆಂಗಳೂರು 35.4ರಷ್ಟು ಗರಿಷ್ಠ ತಾಪಮಾನ ದಾಖಲಾಗುತ್ತಿದೆ.
|
eesanje/url_46_190_5.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ತಂಬಾಕು ನಿಷೇಧ ವಿಧಿಸುವ ಉಪಸಮಿತಿ ಅವಧಿ 6 ತಿಂಗಳು ವಿಸ್ತರಣೆ
|
2 |
+
ಬೆಂಗಳೂರು,ಏ.1-ತಂಬಾಕು ಸೇವನೆಯಿಂದ ಆಗುತ್ತಿರುವ ದುಷ್ಪರಿಣಾಮಗಳನ್ನು ತಡೆಗಟ್ಟುವ ಸಂಬಂಧ ತಂಬಾಕು ಮತ್ತು ಅದರ ಉತ್ಪನ್ನಗಳ ಮೇಲೆ ನಿರ್ಬಂಧ ಹಾಗೂ ನಿಷೇಧ ವಿಧಿಸುವ ಕುರಿತು ವರದಿ ನೀಡಲು ರಚಿತವಾಗಿರುವ ವಿಧಾನಸಭೆಯ ಅರ್ಜಿ ಸಮಿತಿಯ ಉಪಸಮಿತಿಯ ಅವಧಿಯನ್ನು ಆರು ತಿಂಗಳ ಕಾಲ ವಿಸ್ತರಿಸಲಾಗಿದೆ.
|
3 |
+
ಅರ್ಜಿ ಸಮಿತಿಯ ಉಪಸಮಿತಿಯ ಅವಧಿಯನ್ನು ಮಾ.21ರಿಂದ 6 ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ವಿಧಾನಸಭೆಯ ಅಧಿಕೃತ ಪ್ರಕಟಣೆ ತಿಳಿಸಿದೆ.
|
4 |
+
ಕಳೆದ ಡಿ.21ರಂದು ಅರ್ಜಿ ಸಲ್ಲಿಕೆಯ ಉಪಸಮಿತಿಯನ್ನು ರಚಿಸಿ ಮೂರು ತಿಂಗಳ ಒಳಗೆ ವರದಿ ನೀಡಲು ಸೂಚಿಸಲಾಗಿತ್ತು. ತಂಬಾಕು ಉತ್ಪನ್ನಗಳ ಮೇಲೆ ನಿಬಂಧನೆ, ನಿರ್ಬಂಧ ಮತ್ತು ನಿಷೇಧ ವಿಸುವ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಿ ವರದಿ ನೀಡಲು ಈ ಉಪಸಮಿತಿಯನ್ನು ರಚಿಸಲಾಗಿತ್ತು.
|
5 |
+
ಸರ್ಕಾರದ ಕೆಲವು ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಇನ್ನು ಕೆಲವು ಇಲಾಖೆಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿ ವರದಿ ನೀಡಲು 6 ತಿಂಗಳ ಕಾಲಾವಕಾಶವನ್ನು ಉಪಸಮಿತಿ ಕೋರಿದ್ದ ಹಿನ್ನಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಉಪಸಮಿತಿ ಅವಧಿಯನ್ನು ವಿಸ್ತರಿಸಿದ್ದಾರೆ.
|
eesanje/url_46_190_7.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಸುಮಲತಾ ನಿವಾಸಕ್ಕೆ ಭೇಟಿ ನೀಡಿದ ಹೆಚ್ಡಿ ಕುಮಾರಸ್ವಾಮಿ
|
2 |
+
ಬೆಂಗಳೂರು,ಮಾ.31- ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ.ಕುಮಾರಸ್ವಾಮಿ ಭಾನುವಾರ ಜೆಪಿ ನಗರದ ನಿವಾಸದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಭೇಟಿಯಾಗಿದ್ದು, ಮಹತ್ವದ ಮಾತುಕತೆ ನಡೆಸಿದ್ದಾರೆ.
|
3 |
+
ಈ ಸಂದರ್ಭದಲ್ಲಿ, ಸುಮಲತಾ ಅಂಬರೀಶ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಕೂಡ ಇದ್ದರು. ಅಭಿಷೇಕ್ ಅಂಬರೀಶ್, ರಾಕ್ಲೈನ್ ವೆಂಕಟೇಶ್ ಅವರು ಮನೆಯ ದ್ವಾರದಲ್ಲೇ ನಿಂತು ಎಚ್ಡಿಕೆ ಅವರನ್ನು ಬರಮಾಡಿಕೊಂಡು ಮನೆಯೊಳಗೆ ಕರೆದೊಯ್ದರು. ಈ ವೇಳೆ ಎಚ್ಡಿಕೆ ಅವರು ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಹೂಗುಚ್ಛ ನೀಡಿ, ಲೋಕಸಭೆ ಚುನಾವಣೆ ವಿಚಾರವಾಗಿ ಆರೋಗ್ಯಕರ ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.
|
4 |
+
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಅಂಬರೀಶ್ ಅಣ್ಣನ ಮನೆ ನನಗೆ ಹೊಸದೇನೂ ಅಲ್ಲ. ನಾನು ಅಂಬರೀಶ್ ಒಟ್ಟಿಗೆ ಉಂಡು, ಬೆಳೆದವರು. ಸುಮಲತಾ ಅವರೊಂದಿಗೆ ಭೇಟಿ ಅತ್ಯಂತ ಸೌಹಾರ್ದಯುತವಾಗಿತ್ತು. ಅವರೊಂದಿಗೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದು, ಏಪ್ರಿಲ್ 4 ರಂದು ನಾಮಪತ್ರ ಸಲ್ಲಿಸಲಿದ್ದು, ಬೆಂಬಲಿಸುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.
|
5 |
+
ಸಂಸದೆ ಸುಮಲತಾ ಅಂಬರೀಶ್ ಮಾತನಾಡಿ, ಕುಮಾರಸ್ವಾಮಿ ಅವರೊಂದಿಗೆ ಆರೋಗ್ಯಕರ ಚರ್ಚೆಯಾಗಿದೆ. ಹಳೆಯದನ್ನು ಮನಸ್ಸಿನಲ್ಲಿಟ್ಟುಕೊಳ್ಳದೆ ಮಂಡ್ಯ ಕ್ಷೇತ್ರದಲ್ಲಿ ಸಹಕಾರ ನೀಡುವಂತೆ ಕೋರಿದ್ದಾರೆ. ಏಪ್ರಿಲ್ 3 ರಂದು ಮಂಡ್ಯದಲ್ಲಿ ಸಭೆ ಕರೆದಿರುವ ಬಗ್ಗೆ ಅವರಿಗೆ ಹೇಳಿದ್ದೇನೆ. ಅಂದಿನ ಸಭೆಯಲ್ಲಿ ದರ್ಶನ್, ಅಭಿಷೇಕ್ ಇರಲಿದ್ದು, ಬೆಂಬಲಿಗರು, ಹಿತೈಷಿಗಳೊಂದಿಗೆ ಚರ್ಚಿಸಿದ ಬಳಿಕ ಅಂತಿಮ ನಿರ್ಧಾರ ತಿಳಿಸುವುದಾಗಿ ಹೇಳಿರುವುದಾಗಿ ಸುಮಲತಾ ಹೇಳಿದರು.
|
eesanje/url_46_190_8.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
“ಮಂಜುನಾಥ್ ಗೆದ್ದರೆ ದೇಶದ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಬದಲಾವಣೆಯಾಗಲಿದೆ”
|
2 |
+
ಬೆಂಗಳೂರು,ಮಾ.31-ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಡಾ.ಸಿ.ಎನ್. ಮಂಜುನಾಥ್ ಕಣಕ್ಕಿಳಿದಿದ್ದಾರೆ. ಕ್ಷೇತ್ರದ ಮತದಾರರು ಅವರಿಗೆ ಮತ ನೀಡುವ ಮೂಲಕ ಶಕ್ತಿ ತುಂಬಿದರೆ ದೇಶದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ ತರುವುದು ನಿಶ್ಚಿತ ಎಂದು ಅನಸೂಯ ಮಂಜುನಾಥ್ ತಿಳಿಸಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಾರಿಯ ಚುನಾವಣೆಯಲ್ಲಿ ತಮ್ಮ ಪತಿ ಗೆಲ್ಲುವ ವಿಶ್ವಾಸವಿದೆ. ಕೇಂದ್ರ ಗೃಹ ಸಚಿವ ಅಮಿತ್ಶಾ ಅವರ ಅಪೇಕ್ಷೆ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರ ಒತ್ತಾಯದ ಮೇರೆಗೆ ಮಂಜುನಾಥ್ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಧುಮುಕಿದ್ದಾರೆ ಎಂದರು.
|
4 |
+
ಸ್ಪರ್ಧೆಯ ಬಗ್ಗೆ ಸಂತೋಷವೂ ಇದೆ, ಹಾಗೆಯೇ ನೋವು ಸಹ ಇದೆ. ರಾಜಕೀಯದಲ್ಲಿ ಟೀಕೆ ಬರುತ್ತದೆ ಡಾ.ಮಂಜುನಾಥ್ ಬಹಳ ಸೂಕ್ಷ್ಮ ಮನಸ್ಸಿನವರು. ಚುನಾವಣೆಯನ್ನು ಹೇಗೆ ತೆಗೆದುಕೊಳ್ಳುತ್ತಾರೆ ಎನ್ನುವ ಬಗ್ಗೆ ಆತಂಕವಿದೆ ಎಂದು ತಿಳಿಸಿದ್ದಾರೆ.
|
5 |
+
ಜಯದೇವ ಆಸ್ಪತ್ರೆ ನಿರ್ದೇಶಕರಾಗಿದ್ದಾಗ ಅವರು ದೊಡ್ಡ ಅಭಿಯಾನ ನಡೆಸಿ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಂಡಿದ್ದಾರೆ. ಈ ಸಾಧನೆಯ ಹಿಂದೆ ನನ್ನ ಶಕ್ತಿಯಿದೆ. ಆದರೆ ಲೋಕಸಭೆ ಚುನಾವಣೆಯಲ್ಲಿ ಅವರ ಗೆಲುವಿಗೆ ನನ್ನ ಶಕ್ತಿ ಮಾತ್ರ ಸಾಲದು. ರಾಜ್ಯದ ಜನತೆ ಅವರಿಗೆ ತಮ್ಮ ಶಕ್ತಿ ತುಂಬುವ ಅವಶ್ಯಕತೆಯಿದೆ ಎಂದರು.
|
6 |
+
ಚುನಾವಣೆಯಲ್ಲಿ ಮಂಜುನಾಥ್ ಅವರನ್ನು ಗೆಲ್ಲಿಸಿದರೆ ಜಯದೇವ ಮಾದರಿಯಲ್ಲಿ ದೇಶದ ಆರೋಗ್ಯ ಕ್ಷೇತ್ರದ ಬದಲಾವಣೆ ತರುವುದು ನಿಶ್ಚಿತ ಎಂದು ಭರವಸೆ ನೀಡಿದರು. ಡಾ.ಮಂಜುನಾಥ್ ಅವರ ಪರವಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ವಿಭಿನ್ನವಾಗಿ ಪ್ರಚಾರ ಮಾಡುತ್ತೇನೆ. ಈಗಿನ ಚುನಾವಣೆಯ ಪ್ರಚಾರ ಶೈಲಿ ಬದಲಾಗಿದೆ. ಅದಕ್ಕೆ ತಕ್ಕಂತೆ ಪ್ರಚಾರ ಕಾರ್ಯ ನಡೆಸಲು ಕಾರ್ಯತಂತ್ರ ರೂಪಿಸಲಾಗುತ್ತಿದೆ. ಮಂಜುನಾಥ್ ಅವರು ಚುನಾ
|
eesanje/url_46_190_9.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಚುನಾವಣಾ ಅಧಿಕಾರಿಗಳಿಗೆ 40 ಸ್ಟಾರ್ ಪ್ರಚಾರಕರ ಪಟ್ಟಿ ಸಲ್ಲಿಸಿದ ಕಾಂಗ್ರೆಸ್
|
2 |
+
ಬೆಂಗಳೂರು,ಮಾ.31-ಮೊದಲ ಹಂತದಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ 40 ಮಂದಿಯ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದೆ.
|
3 |
+
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷರಾದ ಸೋನಿಯಾಗಾಂಧಿ, ರಾಹುಲ್ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ಪ್ರಿಯಾಂಕ ಗಾಂಧಿ, ರಣದೀಪ್ ಸಿಂಗ್ ಸುರ್ಜೇವಾಲ, ಜಯರಾಂ ರಮೇಶ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಶಾಸಕರಾದ ಲಕ್ಷ್ಮಣ್ ಸವದಿ, ಯುವ ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ಕುಮಾರ್ ಸೊರಕೆ, ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರಿಗೆ ಅವಕಾಶ ನೀಡಲಾಗಿದೆ.
|
4 |
+
ಸಚಿವರಲ್ಲಿ ಕೆ.ಜೆ.ಜಾರ್ಜ್, ಡಾ.ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ, ಜಮೀರ್ ಅಹಮ್ಮದ್ ಖಾನ್, ಮಧು ಬಂಗಾರಪ್ಪ, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆಪ್ರಚಾರಕರ ಪಟ್ಟಿಯಲ್ಲಿದ್ದಾರೆ.
|
5 |
+
ಹಿರಿಯ ನಾಯಕರಾದ ಆರ್.ವಿ.ದೇಶಪಾಂಡೆ, ಎಚ್.ಎಂ.ರೇವಣ್ಣ, ಸಿಂಧ್ಯಾ, ಡಿ.ಸೋಮಶೇಖರ್, ಎಲ್.ಹನುಮಂತಯ್ಯ, ಸಯ್ಯದ್ ನಾಸಿರ್ ಹುಸೇನ್, ಜಿ.ಸಿ.ಚಂದ್ರಶೇಖರ್, ಪಿ.ಟಿ.ಪರಮೇಶ್ವರ್ ನಾಯಕ್, ತನ್ವೀರ್ ಸೇಠ್, ಪುಷ್ಪಾ ಅಮರ್ ನಾಥ್, ಉಮಾಶ್ರೀ ಹಾಗೂ ಎಐಸಿಸಿಯ ಕೆಲ ನಾಯಕರು ಸ್ಟಾರ್ ಪ್ರಚಾರಕರಾಗಿದ್ದಾರೆ.
|
eesanje/url_46_191_1.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಏ.4ರಂದು ಬಿಜೆಪಿ ಪ್ರಮುಖ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
|
2 |
+
ಬೆಂಗಳೂರು,ಮಾ.30-ಹೃದಯ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಏ.4ರಂದು ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಏ.3ರಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
|
3 |
+
ಪ್ರಸಕ್ತ ಲೋಕಸಭಾ ಚುನಾವಣೆಯ ಮೊದಲ ಹಂತದ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಏ.1ರಿಂದ ಏ.4ರ ನಡುವೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಲಿದ್ದಾರೆ.
|
4 |
+
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸಂಸದ ಪಿ.ಸಿ.ಮೋಹನ್ ಏ.1ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಮೈಸೂರು ಕ್ಷೇತ್ರದ ಅಭ್ಯರ್ಥಿ ರಾಜ ವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಎಸ್.ಬಾಲರಾಜ್, ತುಮಕೂರು ಕ್ಷೇತ್ರದ ಅಭ್ಯರ್ಥಿ ಮಾಜಿ ಸಚಿವ ವಿ.ಸೋಮಣ್ಣ, ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಏ.3ರಂದು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
|
5 |
+
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್, ದಕ್ಷಿಣಕನ್ನಡ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳ, ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಏ.4ರಂದು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.
|
6 |
+
ನಾಮಪತ್ರ ಸಲ್ಲಿಕೆಗೂ ಮುನ್ನ ದೇವಾಲಯದಲ್ಲಿ ಬಿಜೆಪಿ ಅಭ್ಯರ್ಥಿಗಳು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ರೋಡ್ ಶೋ ನಡೆಸಲಿದ್ದಾರೆ. ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿ ಆನಂತರ ಬಹಿರಂಗ ಸಭೆ ನಡೆಸುವ ಸಾಧ್ಯತೆ ಇದೆ.
|
eesanje/url_46_191_10.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಲೋಕಸಭೆ ಕಣದಲ್ಲಿ ಮೂವರು ಹಾಲಿ ಶಾಸಕರು ಹಾಗೂ ಓರ್ವ ವಿಧಾನಪರಿಷತ್ ಸದಸ್ಯ, ಎದುರಾಗುವುದೇ ಉಪಚುನಾವಣೆ ಅನಿವಾರ್ಯತೆ..?
|
2 |
+
ಬೆಂಗಳೂರು,ಮಾ.30-ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮೂವರು ಹಾಲಿ ಶಾಸಕರು, ಒಬ್ಬರು ವಿಧಾನಪರಿಷತ್ ಸದಸ್ಯರು ಕಣದಲ್ಲಿದ್ದು, ಗೆಲುವು ಸಾಧಿಸಿದರೆ ಈ ಕ್ಷೇತ್ರಗಳಿಗೆ ಮತ್ತೊಮ್ಮೆ ಉಪಚುನಾವಣೆ ನಡೆಯುವ ಅನಿವಾರ್ಯತೆ ಎದುರಾಗಲಿದೆ.
|
3 |
+
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚನ್ನಪಟ್ಟಣ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೆಡಿಎಸ್ನಿಂದ ಸ್ಪರ್ಧಿಸಿದರೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಶಿಗ್ಗಾವಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಣದಲ್ಲಿದ್ದಾರೆ.
|
4 |
+
ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸಂಡೂರು ಕ್ಷೇತ್ರದ ಶಾಸಕ ಇ.ತುಕರಾಂ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ವಿಧಾನಪರಿಷತ್ ಸದಸ್ಯರು ಮತ್ತು ವಿರೋಧ ಪಕ್ಷದ ನಾಯಕರೂ ಆಗಿರುವ ಕೋಟಾ ಶ್ರೀನಿವಾಸ್ ಪೂಜಾರಿ ಸ್ಪರ್ಧೆ ಮಾಡಿದ್ದಾರೆ.
|
5 |
+
ಈ ನಾಲ್ವರು ಹಾಲಿ ಶಾಸಕರು ಪ್ರಬಲ ಅಭ್ಯರ್ಥಿಗಳಾಗಿದ್ದು, ತೀವ್ರ ಪೈಪೋಟಿ ನೀಡುತ್ತಿದ್ದಾರೆ. ಮಂಡ್ಯದಲ್ಲಿ ಕುಮಾರಸ್ವಾಮಿ ಅವರಿಗೆ ಕ್ರಾಂಗೆಸ್ನಿಂದ ವೆಂಕಟರಮಣೇಗೌಡ ಉರುಫ್ ಸ್ಟಾರ್ ಚಂದ್ರು ಪ್ರತಿಸ್ರ್ಪಧಿಯಾಗಿದ್ದರೆ , ಹಾವೇರಿಯಲ್ಲಿ ಬಸವರಾಜ ಬೊಮ್ಮಾಯಿ ಅವರಿಗೆ ಕಾಂಗ್ರೆಸ್ನ ಕಾರ್ಯಕರ್ತ ಆನಂದಸ್ವಾಮಿ ಗಡ್ಡದೇವರ ಮಠ ಪೈಪೋಟಿ ನೀಡುತ್ತಿದ್ದಾರೆ.
|
6 |
+
ಬಳ್ಳಾರಿಯಲ್ಲಿ ಮಾಜಿ ಸಚಿವ ಶ್ರೀರಾಮುಲು ಬಿಜೆಪಿ ಅಭ್ಯರ್ಥಿಯಾಗಿ ತುಕರಾಂ ಅವರ ವಿರುದ್ಧ ಮತ ಯಾಚನೆ ನಡೆಸುತ್ತಿದ್ದಾರೆ. ಉಡುಪಿ-ಚಿಕ್ಕಮಗಳೂರಿನಲ್ಲಿ ಮಾಜಿ ಸಂಸದ ಹಾಗೂ ಇತ್ತೀಚೆಗಷ್ಟೇ ಬಿಜೆಪಿಯಿಂದ ಕಾಂಗ್ರೆಸ್ ಸೇರಿದ್ದ ಜಯಪ್ರಕಾಶ್ ಹೆಗ್ಡೆ ಕಣದಲ್ಲಿದ್ದು, ತೀವ್ರ ಪೈಪೋಟಿ ಏರ್ಪಟ್ಟಿದೆ. ಹಾಲಿ ಶಾಸಕರು ಗೆಲುವು ಕಂಡರೆ ವಿಧಾನಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಬೇಕಾಗಿದ್ದು, ಉಪಚುನಾವಣೆಗೆ ಅನಿವಾರ್ಯವಾಗಲಿದೆ.
|
7 |
+
ಹಾಲಿ ಸಂಸದರ ಪೈಕಿ ಬಿಜೆಪಿ ಬೆಳಗಾವಿಯಲ್ಲಿ ಮಂಗಳಾ ಅಂಗಡಿ, ಕೊಪ್ಪಳದಲ್ಲಿ ಕರಡಿ ಸಂಗಣ್ಣ, ಬಳ್ಳಾರಿಯಲ್ಲಿ ವೈ.ದೇವೇಂದ್ರಪ್ಪ, ಹಾವೇರಿಯಲ್ಲಿ ಶಿವಕುಮಾರ್ ಉದಾಸಿ, ಉತ್ತರಕನ್ನಡದಲ್ಲಿ ಅನಂತಕುಮಾರ್ ಹೆಗಡೆ, ದಾವಣಗೆರೆಯಲ್ಲಿ ಜಿ.ಎಂ.ಸಿದ್ದೇಶ್ವರ್, ಉಡುಪಿ-ಚಿಕ್ಕಮಗಳೂರಿನಲ್ಲಿ ಶೋಭಾ ಕರಂದ್ಲಾಜೆ, ದಕ್ಷಿಣ ಕನ್ನಡದಲ್ಲಿ ನಳೀನ್ಕುಮಾರ್ ಕಟೀಲ್, ಚಿತ್ರದುರ್ಗದಲ್ಲಿ ಎ.ನಾರಾಯಣಸ್ವಾಮಿ, ತುಮಕೂರಿನಲ್ಲಿ ಜಿ.ಎಸ್.ಬಸವರಾಜ್, ಮೈಸೂರಿನಲ್ಲಿ ಪ್ರತಾಪ್ ಸಿಂಹ, ಚಾಮರಾಜನಗರದಲ್ಲಿ ಶ್ರೀನಿವಾಸಪ್ರಸಾದ್, ಬೆಂಗಳೂರು ಉತ್ತರದಲ್ಲಿ ಡಿ.ವಿ.ಸದಾನಂದಗೌಡ, ಚಿಕ್ಕಬಳ್ಳಾಪುರದಲ್ಲಿ ಬಿ.ಎನ್.ಬಚ್ಚೇಗೌಡ, ಕೋಲಾರದಲ್ಲಿ ಎಸ್.ಮುನಿಸ್ವಾಮಿ ಅವರನ್ನು ಬದಲಾಯಿಸಿದೆ.
|
8 |
+
ಶ್ರೀ���ಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಪಡೆದರೆ ಶೋಭಾ ಕರಂದ್ಲಾಜೆ ಕ್ಷೇತ್ರ ಬದಲಾವಣೆಯಾಗಿದೆ. ಬದಲಾವಣೆಯಾಗಿರುವವರ ಪೈಕಿ ಕೇಂದ್ರ ಸಚಿವರಾಗಿದ್ದ ಎ.ನಾರಾಯಣಸ್ವಾಮಿ ಅವಕಾಶ ವಂಚಿತರಾಗಿದ್ದಾರೆ.ಇನ್ನು ಕಾಂಗ್ರೆಸ್ನಿಂದ ಹಾಲಿ ಸಂಸದ ಡಿ.ಕೆ.ಸುರೇಶ್ ಮರುಸ್ಪರ್ಧಿಸಿದ್ದರೆ, ಚಿಕ್ಕೋಡಿಯಲ್ಲಿ ಪ್ರಿಯಾಂಕ ಜಾರಕಿಹೊಳಿ, ಬೆಳಗಾವಿಯಲ್ಲಿ ಮೃಣಾಳ್ ಹೆಬ್ಬಾಳ್ಕರ್, ಬಾಗಲಕೋಟೆಯಲ್ಲಿ ಸಂಯುಕ್ತ.ಎಸ್ ಪಾಟೀಲ್, ಬೀದರ್ನಲ್ಲಿ ಸಾಗರ್ ಖಂಡ್ರೆ, ಚಾಮರಾಜನಗರದಲ್ಲಿ ಸುನೀಲ್ ಬೋಸ್, ಬೆಂಗಳೂರು ದಕ್ಷಿಣದಲ್ಲಿ ಸೌಮ್ಯ ರೆಡ್ಡಿ, ದಾವಣಗೆರೆಯಿಂದ ಪ್ರಭಾ ಮಲ್ಲಿಕಾರ್ಜುನ್, ಬೆಂಗಳೂರು ಗ್ರಾಮಾಂತರದಿಂದ ಡಿ.ಕೆ.ಸುರೇಶ್, ಶಿವಮೊಗ್ಗದಿಂದ ಗೀತಾ ಶಿವರಾಜ್ಕುಮಾರ್, ಸಚಿವರ ಕುಟುಂಬದ ಸದಸ್ಯರಾಗಿ ಕಣದಲ್ಲಿದ್ದಾರೆ.
|
eesanje/url_46_191_11.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಸಮನ್ವಯ ಸವಾಲ್ : ಜೆಡಿಎಸ್ ಜೊತೆ ಕೈ ಜೋಡಿಸುವರೇ ತಳಮಟ್ಟದ ಬಿಜೆಪಿ ಕಾರ್ಯಕರ್ತರು..?
|
2 |
+
ಬೆಂಗಳೂರು,ಮಾ.30-ಲೋಕಸಭೆ ಚುನವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಗುರಿ ಇಟ್ಟುಕೊಂಡಿರುವ ಬಿಜೆಪಿಗೆ ಜೆಡಿಎಸ್ನೊಂದಿಗೆ ಸಮನ್ವಯ ಸಾಸುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಮೇಲ್ನೋಟಕ್ಕೆ ನಾವು ಒಂದಾಗಿದ್ದೇವೆ ಎಂದು ಹೇಳುತ್ತಿದ್ದರೂ ತಳಮಟ್ಟದಲ್ಲಿ ಕಾರ್ಯಕರ್ತರು ಜೆಡಿಎಸ್ ಜೊತೆ ಕೈ ಜೋಡಿಸಲಿದ್ದಾರೆಯೇ ಎಂಬ ಪ್ರಶ್ನೆಗೆ ಪಕ್ಷಕ್ಕೆ ಕಾಡುತ್ತಿದೆ.
|
3 |
+
ಕಳೆದ ವಿಧಾನಸಭೆಯಲ್ಲಿ ಸೆಣಸಾಡಿಸಿದ್ದ ಹಾವು-ಮುಂಗುಸಿಯಂತೆ ಜೆಡಿಎಸ್ನೊಂದಿಗೆ ಹೊಂದಾಣಿಕೆ ಮಾಡಿಕೊಂಡು ಮೈತ್ರಿಯನ್ನು ಮುನ್ನಡೆಸುವುದು ಬಿಜೆಪಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಜೆಡಿಎಸ್ ಮತ್ತು ಬಿಜೆಪಿ ನಾಯಕರು 2023ರ ವಿಧಾನಸಭಾ ಚುನಾವಣೆಯಲ್ಲಿ ಪರಸ್ಪರ ವಿರುದ್ಧ ಸ್ರ್ಪಧಿಸಿದ್ದರು. ಇದಾದ ಒಂದು ವರ್ಷದೊಳಗೆ ಪಕ್ಷಗಳು ಒಟ್ಟಾಗಿ ಕೆಲಸ ಮಾಡುವುದು ಸುಲಭವಲ್ಲ. ಉನ್ನತ ನಾಯಕರು ಕೈ ಜೋಡಿಸುವಷ್ಟು ಸುಲಭದಲ್ಲಿ ತಳಮಟ್ಟದ ಮುಖಂಡರು, ಕಾರ್ಯಕರ್ತರು ಕೈ ಜೋಡಿಸುವುದಿಲ್ಲ. ಅದಲ್ಲದೇ ಈ ಬಾರಿ ಅಲ್ಪಸಂಖ್ಯಾತರ ಮತಗಳು ಕ್ರೋಡೀಕರಣಗೊಳ್ಳಲಿದ್ದು, ಕಾಂಗ್ರೆಸ್ ಚುನಾವಣೆಯಲ್ಲಿ ಮೇಲುಗೈ ಸಾಧಿಸಬಹುದು ಎಂದು ಹೇಳಲಾಗುತ್ತಿದೆ.
|
4 |
+
ಬಿಜೆಪಿ ಈ ಬಾರಿ 15 ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ಅದರಲ್ಲಿ ಪ್ರಮುಖವಾಗಿ ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ಚಿತ್ರದುರ್ಗದಿಂದ ಗೋವಿಂದ ಕಾರಜೋಳ ಮತ್ತು ತುಮಕೂರಿನಿಂದ ವಿ.ಸೋಮಣ್ಣ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಮೂವರು ಕೂಡ ಹಿರಿಯ ನಾಯಕರಾಗಿದ್ದು, ಕಣಕ್ಕಿಳಿದಿರುವ ಕ್ಷೇತ್ರಗಳಲ್ಲಿ ಹೊರಗಿನವರು ಎಂದು ಪರಿಗಣಿಸಲಾಗಿದೆ. ಇಲ್ಲಿ ಸ್ಥಳೀಯರು ಮತ್ತು ಹೊರಗಿನವರೆಂಬ ಸಮರ ನಡೆಯುತ್ತಿದ್ದು, ಬಿಜೆಪಿ ನಾಯಕರ ನಿರ್ಧಾರಗಳಿಗೆ ಸ್ಥಳೀಯ ಮುಖಂಡರು ಅತೃಪ್ತಿ ಹೊರಹಾಕುತ್ತಿದ್ದಾರೆ.
|
5 |
+
ಇನ್ನು ನಮ್ಮ ಅಭ್ಯರ್ಥಿಗಳು ಯಾರು ಹೊರಗಿನವರಲ್ಲ ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಎಂಎಲ್ಸಿ ರವಿಕುಮಾರ್ ಹೇಳಿದ್ದಾರೆ. ಜಗದೀಶ್ ಶೆಟ್ಟರ್ ಮತ್ತು ವಿ.ಸೋಮಣ್ಣ ಅಕ್ಕಪಕ್ಕದ ಕ್ಷೇತ್ರದವರೇ ಆಗಿದ್ದು, ಗೋವಿಂದ ಕಾರಜೋಳ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿದ್ದಾರೆ. ಇವರೆಲ್ಲರೂ ಕನ್ನಡಿಗರೇ ಇಲ್ಲಿನ ಭಾಷೆ ಮತ್ತು ಸಂಸ್ಕೃತಿಯನ್ನು ತಿಳಿದಿದ್ದಾರೆ. ಇದು ಸಮಸ್ಯೆಯಾಗುವುದಿಲ್ಲ ಎಂದಿದ್ದಾರೆ.
|
6 |
+
ಒಂದು ಕಡೆ ಟಿಕೆಟ್ ವಂಚಿತರು ಹಾಗೂ ಅವರ ಬೆಂಬಲಿಗರು ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಅತೃಪ್ತರನ್ನು ಯಡಿಯೂರಪ್ಪ ಸೇರಿ ಬಿಜೆಪಿಯ ಹಿರಿಯ ನಾಯಕರು ಸಮಾಧಾನ ಮಾಡುತ್ತಿದ್ದಾರೆ. ಮೈಸೂರು-ಕೊಡಗು, ಬೆಂಗಳೂರು ಉತ್ತರ, ದಾವಣಗೆರೆ ಮತ್ತು ಚಿಕ್ಕಬಳ್ಳಾಪುರದಲ್ಲಿ ಭಿನ್ನಮತ ಬಹುತೇಕ ಶಮನವಾಗಿದ್ದರೆ, ಉತ್ತರ ಕನ್ನಡ, ಚಿತ್ರದುರ್ಗ, ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ಪಕ್ಷಕ್ಕೆ ಸವಾಲು ಎದುರಾಗಿದೆ.
|
7 |
+
25 ಬಿಜೆಪಿ ಅಭ್ಯರ್ಥಿಗಳಲ್ಲಿ ಒಂಬತ್ತು ಮಂದಿ ಲಿಂಗಾಯತರು, ನಾಲ್ವರು ಎಸ್ಸಿಗಳು, ಮೂವರು ಬ್ರಾಹ್ಮಣರು, ಮೂವರು ಒಕ್ಕಲಿಗರು, ಇಬ್ಬರು ಎಸ್ಟಿ, ಒಬ್ಬರು ಬಂಟ್ ಮತ್ತು ಮೂವರು ಇತರೆ ಹಿಂದುಳಿದ ವರ್ಗದವರಿಗೆ ಟಿಕೆಟ್ ನೀಡಲಾಗಿದೆ. ಪಟ್ಟಿಯಲ್ಲಿ ಒಂಬತ್ತು ಲಿಂಗಾಯತರಿಗೆ ಟಿಕೆಟ್ ನೀಡಿ ಒಕ್ಕಲಿಗರಿಗೆ ಕೇವಲ ಮೂರು ಟಿಕೆಟ್ಗಳನ್ನು ನೀಡಿರುವುದರಿಂದ ಒಕ್ಕಲಿಗ ಸಂಘದ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
|
8 |
+
ಇನ್ನು ಜೆಡಿಎಸ್ ಕೂಡ ಇಬ್ಬರು ಒಕ್ಕಲಿಗರನ್ನು ಕಣಕ್ಕಿಳಿಸುತ್ತಿರುವುದರಿಂದ ಒಕ್ಕಲಿಗರ ಪ್ರಾಬಲ್ಯ ಐದಕ್ಕೇರಲಿದೆ ಎಂಬುದು ಬಿಜೆಪಿ ನಾಯಕರ ಮಾತು. ಒಕ್ಕಲಿಗ ಸಮುದಾಯಕ್ಕೆ ಐದು ಟಿಕೆಟ್ ಕೊಡುತ್ತಿರುವುದು ಕಡಿಮೆ ಪ್ರಾತಿನಿಧ್ಯವೇನಲ್ಲ. ಆದರೆ, ಹಳೇ ಮೈಸೂರು ಭಾಗದಲ್ಲಿ ಮಾಜಿ ಸಿಎಂ ಡಿವಿ ಸದಾನಂದಗೌಡ ಹಾಗೂ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನಿರಾಕರಿಸಿದ ಕಾರಣಕ್ಕೆ ಒಕ್ಕಲಿಗ ಪ್ರಾತಿನಿಧ್ಯದ ಬಗ್ಗೆ ಕೆಲ ಮುಖಂಡರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
|
eesanje/url_46_191_12.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಲೋಕಸಭೆ ಚುನಾವಣೆ : ರಾಜ್ಯದಲ್ಲಿ ಎಣ್ಣೆ ಹೊಳೆ, ಹಣದ ಮಳೆ, ಆಭರಣಗಳ ಕಳೆ
|
2 |
+
ಬೆಂಗಳೂರು, ಮಾ.30-ಪ್ರಸಕ್ತ ಲೋಕಸಭಾ ಸಾರ್ವತ್ರಿಕ ಚುನಾವಣಾ ಘೋಷಣೆಯಾಗಿ ಎರಡು ವಾರ ಕಳೆಯುವ ಮುನ್ನವೇ ರಾಜ್ಯದಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ, ವಜ್ರಾಭರಣಗಳು ಹಾಗೂ ಮದ್ಯವನ್ನು ಜಪ್ತಿ ಮಾಡಲಾಗಿದೆ.
|
3 |
+
ಮಾ.16 ರಂದು ಚುನಾವಣಾ ವೇಳಾಪಟ್ಟಿ ಘೋಷಣೆಯಾಗಿ ಅಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಚುನಾವಣೆ ಹಿನ್ನೆಲೆಯಲ್ಲಿ ಕ್ಷಿಪ್ರ ಪಡೆಗಳು, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್, ಆದಾಯ ಹಾಗೂ ಅಬಕಾರಿ ಅಧಿಕಾರಿಗಳು ತಪಾಸಣೆ ವೇಳೆ ಕೋಟ್ಯಂತರ ರೂ. ಮೌಲ್ಯದ ಮದ್ಯ, ನಗದು, ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.ಒಟ್ಟು 8,63,337.38 ಲೀಟರ್ನಷ್ಟು ಭಾರೀ ಪ್ರಮಾಣದಲ್ಲಿ ಮದ್ಯವನ್ನು ಜಪ್ತಿ ಮಾಡಲಾಗಿದೆ. ಇದರ ಮೌಲ್ಯವನ್ನು 27,27,59,762 ರೂ. ಎಂದು ಅಂದಾಜಿಸಲಾಗಿದೆ.
|
4 |
+
ಅದೇ ರೀತಿ 15.32 ಕೆ.ಜಿ. ಚಿನ್ನ 59.04 ಕೆ.ಜಿ. ಬೆಳ್ಳಿ, 21.17 ಕ್ಯಾರೆಟ್ ವಜ್ರದ ಆಭರಣಗಳನ್ನು ವಶಪಡಿಸಿಕೊಂಡಿದ್ದು, ಇದರ ಮೌಲ್ಯ 62,42,20,710 ರೂ. ಎಂದು ಅಂದಾಜಿಸಲಾಗಿದೆ. ಇದಲ್ಲದೆ, 20,85,73,387 ರೂ.ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
|
5 |
+
ಕಳೆದ ಲೋಕಸಭಾ ಚುನಾವಣೆಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ನಗದು, ಚಿನ್ನಾಭರಣ ಹಾಗೂ ಮದ್ಯವನ್ನು ಜಪ್ತಿ ಮಾಡುತ್ತಿರುವುದು ಕಂಡುಬರುತ್ತಿದೆ. ಬೆಂಗಳೂರು ನಗರದ ಎಸ್.ಜೆ.ಪಾರ್ಕ್ ಪೊಲೀಸ್ ಠಾಣೆ ತಂಡದವರು 10.20 ಲಕ್ಷ ರೂ. ಮೌಲ್ಯದ 17.425 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
|
6 |
+
ಸ್ಥಿರ ಕಣ್ಗಾವಲು ತಂಡದವರು 6 ಲಕ್ಷ ಮೌಲ್ಯದ 128.74 ಗ್ರಾಂ ಚಿನ್ನದ ಆಭರಣಗಳು ಮತ್ತು ಹವಳವನ್ನು ವಶಪಡಿಸಿಕೊಂಡಿರುವುದಲ್ಲದೆ 14,63,530 ರೂ. ನಗದು ಸೇರಿದಂತೆ ಒಟ್ಟು 20,63,530 ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ತುಮಕೂರು ಜಿಲ್ಲೆಯ ಬಟ್ವಾಡಿ ಚೆಕ್ ಪೋಸ್ಟ್ ನಲ್ಲಿ ಜಪ್ತಿ ಮಾಡಿದ್ದಾರೆ.
|
7 |
+
ಅಬಕಾರಿ ಇಲಾಖೆಯವರು 7,344 ಲೀಟರ್ ಭಾರತೀಯ ನಿರ್ಮಿತ ವಿದೇಶಿ ಮದ್ಯವನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಜಪ್ತಿ ಮಾಡಿದ್ದು, ಇದರ ಮೌಲ್ಯ 29,50,486 ರೂ. ಎಂದು ಅಂದಾಜಿಸಲಾಗಿದೆ.8,970 ಲೀಟರ್ ಬೀಯರ್ ಅನ್ನು ವೈಟ್ಫೀಲ್ಡ್ ಬಳಿ ವಶಪಡಿಸಿಕೊಂಡಿದ್ದು, ಇದರ ಮೌಲ್ಯ 29,92,910 ರೂ. ಎಂದು ಅಂದಾಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
|
eesanje/url_46_191_2.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿಯಿಂದ ತನಿಖಾ ಸಂಸ್ಥೆಗಳ ದುರುಪಯೋಗ : ಜಿ.ಪರಮೇಶ್ವರ್
|
2 |
+
ಬೆಂಗಳೂರು, ಮಾ.30-ವಿರೋಧ ಪಕ್ಷಗಳನ್ನು ಸದೆಬಡಿದು ಮತ್ತೆ ಅಧಿಕಾರ ಕ್ಕೆ ಬರುವ ಮನಸ್ಥಿತಿಯಿಂದ ಬಿಜೆಪಿಯವರು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತನಿಖಾ ಸಂಸ್ಥೆಗಳ ಕಾರ್ಯ ನಿರಂತರವಾಗಿ ನಡೆಯುತ್ತದೆ. ಆದರೆ, ಇಷ್ಟುದಿನ ಸುಮ್ಮನಿದ್ದು ಚುನಾವಣೆ ಸಂದರ್ಭದಲ್ಲಿ ಆಸಕ್ತಿ ತೋರಿಸಿರುವುದು ಯಾಕೆ? ಆದಾಯ ತೆರಿಗೆ ಇಲಾಖೆಯವರು ಈಗ ತೆರಿಗೆ ಕಟ್ಟುವಂತೆ ನೋಟೀಸ್ ನೀಡುತ್ತಿರುವುದರ ಅರ್ಥವೇನು? ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಯಾವ ಉದ್ದೇಶಕ್ಕಾಗಿ ಸೀಜ್ ಮಾಡಲಾಗಿತ್ತು? ಎಂದು ಪ್ರಶ್ನಿಸಿದರು.
|
3 |
+
ಎಲೆಕ್ಟ್ರೋಲ್ ಬಾಂಡ್ಸ್ ಕೊಡಬಹುದು, ಹಣ ಕೊಡುವಂತಿಲ್ಲ ಎಂದು ಕಳೆದ ಚುನಾವಣೆಯಲ್ಲಿ ಹೇಳಲಾಗಿತ್ತು. ಇದಕ್ಕೆ ಚುನಾವಣೆ ಆಯೋಗ ಅನುಮತಿ ನೀಡಿತ್ತು. ಎಲ್ಲ ಪಾರ್ಟಿಯವರು ಎಲೆಕ್ಟ್ರೋಲ್ ಬಾಂಡ್ಸ್ಗಳನ್ನು ಡೊನೇಷನ್ ಮಾದರಿಯಾಗಿ ತೆಗೆದುಕೊಂಡರು. ಈಗ ಎಲೆಕ್ಟ್ರೋಲ್ ಬಾಂಡ್ಸ್ ತೆಗೆದುಕೊಂಡಿರುವುದು ತಪ್ಪು ಎನ್ನಲಾಗುತ್ತಿದೆ. ಬಿಜೆಪಿಯವರು ಹೆಚ್ಚು ಬಾಂಡ್ಸ್ಗಳನ್ನು ತೆಗೆದುಕೊಂಡಿದ್ದು, ರೂ. 8200 ಕೋಟಿ ರೂ. ಗೂ ಹೆಚ್ಚು ತೆಗೆದುಕೊಂಡಿದ್ದಾರೆ. ನಮ್ಮ ಪಕ್ಷಕ್ಕೆ 1800 ಕೋಟಿ ರೂ. ಬಂದಿದೆ.
|
4 |
+
ಬಿಜೆಪಿಯವರು ರೂ. 8200 ಕೋಟಿ ರೂ. ಪೈಕಿ, 6600 ಕೋಟಿ ರೂ. ಲೆಕ್ಕ ಕೊಟ್ಟಿದ್ದು, ಬಾಕಿ ಹಣದ ಲೆಕ್ಕ ತೋರಿಸಿಲ್ಲ. ಇದಕ್ಕಿದ್ದಂತೆ 1800 ಕೋಟಿ ರೂ. ತೆರಿಗೆ ಕಟ್ಟುವಂತೆ ನಮ್ಮ ಪಕ್ಷಕ್ಕೆ ನೋಟೀಸ್ ಕೊಡುವುದಾದರೆ, ಬಿಜೆಪಿಯವರು ಲೆಕ್ಕ ತೋರಿಸಿರುವ 6600 ಕೋಟಿ ರೂ. ಗೂ ನೋಟಿಸ್ ನೀಡಲಿ. ಬರೀ ಕಾಂಗ್ರೆಸ್ನವರಿಗೆ ನೋಟೀಸ್ ನೀಡಿರುವುದು, ರಾಜಕೀಯ ದುರುದ್ದೇಶ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
|
5 |
+
ತುಮಕೂರಿನಿಂದ ಸ್ರ್ಪಧಿಸುವಂತೆ ದೇವೇಗೌಡರನ್ನು ನಾವ್ಯಾರು ಕರೆದಿರಲಿಲ್ಲ:ಕಳೆದ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡ ಅವರನ್ನು ತೂಮಕೂರಿನಿಂದ ಸ್ರ್ಪಧಿಸುವಂತೆ ಯಾರೂ ಕರೆದಿರಲಿಲ್ಲ. ಆಗ ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೆ ದೇವೇಗೌಡ ಅವರು ತುಮಕೂರಿನಿಂದ ಸ್ರ್ಪಧಿಸುತ್ತಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಬರುತ್ತಿದೆ. ನೀವು ಬರುತ್ತೀರಾ? ಎಂದು ಖುದ್ದಾಗಿ ಕೇಳಿದ್ದೆ. ನಾನು ಇನ್ನು ತೀರ್ಮಾನ ಮಾಡಿಲ್ಲಪ್ಪ. ಬೆಂಗಳೂರು ಉತ್ತರ ಕ್ಷೇತ್ರದಿಂದ ನಿಲ್ಲಲು ತೀರ್ಮಾನ ಮಾಡಿಕೊಂಡಿದ್ದೇನೆ ಎಂದಿದ್ದರು. ತದನಂತರ ನಮ್ಮ ಹೈಕಮಾಂಡ್ ಜೊತೆ ಏನು ಮಾತನಾಡಿಕೊಂಡರೋ ಆ ಭಾಗ ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
|
6 |
+
ದೇವೇಗೌಡ ಅವರು ತುಮಕೂರಿನಿಂದ ಸ್ರ್ಪಧಿಸುತ್ತಾರೆ ಎಂದು ಹೈಕಮಾಂಡ್ನಿಂದ ಸೂಚನೆ ಬಂತು. ನಾವೆಲ್ಲ ಪ್ರಾಮಾಣಿಕವಾ���ಿ ದೇವೇಗೌಡ ಅವರ ಗೆಲುವಿಗಾಗಿ ಕೆಲಸ ಮಾಡಿದ್ದೇವೆ. ಪ್ರಧಾನ ಮಂತ್ರಿಯಾಗಿದ್ದವರು ನಮ್ಮ ಕ್ಷೇತ್ರದಿಂದ ಸ್ರ್ಪಧಿಸುತ್ತಾರೆ ಅಂದಾಗ ಗೆಲ್ಲಿಸಿಕೊಳ್ಳಬೇಕು ಎಂಬುದು ನಮ್ಮ ಉದ್ದೇಶವಾಗಿತ್ತು. ಆದರೆ, ದೇವೇಗೌಡ ಪರವಾಗಿ ಜೆಡಿಎಸ್ ಪಕ್ಷದವರೇ ಕೆಲಸ ಮಾಡಲಿಲ್ಲ ಎಂದು ಹೇಳಿದರು.
|
7 |
+
ದೇವೇಗೌಡ ಅವರ ಬಗ್ಗೆ ಅಪಾರವಾದ ಗೌರವವಿದೆ. ನಮ್ಮ ರಾಜ್ಯದಿಂದ ಪ್ರಧಾನಿಯಾದ ಏಕೈಕ ವ್ಯಕ್ತಿ. ಅವರ ವ್ಯಕ್ತಿತ್ವದ ಬಗ್ಗೆ ನಮಗೆ ಹೆಮ್ಮೆ ಇದೆ. ನಾವ್ಯಾರೂ ಅವರನ್ನು ಕರೆದುಕೊಂಡು ಹೋಗಿ ಸೋಲಿಸಿಲ್ಲ ಎಂದರು. ಎಚ್ಡಿಕೆ ಅವರ ಆರೋಗ್ಯದ ವಿಚಾರವಾಗಿ ಶಾಸಕ ಬಂಡಿಸಿದ್ದೇಗೌಡ ಅವರ ಹೇಳಿಕೆಯ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಪರಮೇಶ್ವರ್, ಚುನಾವಣೆ ಸಂದರ್ಭದಲ್ಲಿ ಯಾರೊಬ್ಬರೂ ವೈಯಕ್ತಿಕ ವಿಚಾರಗಳನ್ನು ಮಾತನಾಡಬಾರದು. ನಮ್ಮ ಮಾತಿನ ಮೇಲೆ ನಮಗೆ ನಿಯಂತ್ರಣ ಇದ್ದರೆ ಒಳ್ಳೆಯದು. ನಾನೇ ಇರಲಿ, ಬೇರೆ ಯಾರೇ ಇರಲಿ ಅದು ಸೂಕ್ತವಲ್ಲ ಎಂದು ಹೇಳಿದರು.
|
8 |
+
ಕೋಲಾರದಲ್ಲಿ ಎರಡು ಗುಂಪು ಆಗಿರುವುದು ನಿಜ. ಇನ್ನೂ ಸಮಯ ಇದೆ. ಒಟ್ಟಾಗಿ ಕೆಲಸ ಮಾಡುತ್ತಾರೆ. ಕೋಲಾರದಲ್ಲಿ ಈಗಲೂ ಒಳ್ಳೆಯ ವಾತಾವರಣವಿದ್ದು, ಯಾರಿಗೆ ಟಿಕೆಟ್ ಕೊಟ್ಟರೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.
|