CoolCoder44 commited on
Commit
66ca80f
·
verified ·
1 Parent(s): 806b6d8

31cb9152e087b40fd16d16480eb218bad81af88fcc3a5afbd674f010278747ab

Browse files
Files changed (50) hide show
  1. eesanje/url_46_65_4.txt +4 -0
  2. eesanje/url_46_65_5.txt +4 -0
  3. eesanje/url_46_65_6.txt +11 -0
  4. eesanje/url_46_65_7.txt +4 -0
  5. eesanje/url_46_65_8.txt +5 -0
  6. eesanje/url_46_65_9.txt +9 -0
  7. eesanje/url_46_66_1.txt +7 -0
  8. eesanje/url_46_66_10.txt +5 -0
  9. eesanje/url_46_66_11.txt +8 -0
  10. eesanje/url_46_66_12.txt +6 -0
  11. eesanje/url_46_66_2.txt +5 -0
  12. eesanje/url_46_66_3.txt +7 -0
  13. eesanje/url_46_66_4.txt +18 -0
  14. eesanje/url_46_66_5.txt +13 -0
  15. eesanje/url_46_66_6.txt +4 -0
  16. eesanje/url_46_66_7.txt +5 -0
  17. eesanje/url_46_66_8.txt +5 -0
  18. eesanje/url_46_66_9.txt +3 -0
  19. eesanje/url_46_67_1.txt +4 -0
  20. eesanje/url_46_67_10.txt +4 -0
  21. eesanje/url_46_67_11.txt +6 -0
  22. eesanje/url_46_67_12.txt +9 -0
  23. eesanje/url_46_67_2.txt +9 -0
  24. eesanje/url_46_67_3.txt +5 -0
  25. eesanje/url_46_67_4.txt +8 -0
  26. eesanje/url_46_67_5.txt +6 -0
  27. eesanje/url_46_67_6.txt +7 -0
  28. eesanje/url_46_67_7.txt +4 -0
  29. eesanje/url_46_67_8.txt +5 -0
  30. eesanje/url_46_67_9.txt +6 -0
  31. eesanje/url_46_68_1.txt +6 -0
  32. eesanje/url_46_68_10.txt +11 -0
  33. eesanje/url_46_68_11.txt +3 -0
  34. eesanje/url_46_68_12.txt +9 -0
  35. eesanje/url_46_68_2.txt +4 -0
  36. eesanje/url_46_68_3.txt +5 -0
  37. eesanje/url_46_68_4.txt +6 -0
  38. eesanje/url_46_68_5.txt +5 -0
  39. eesanje/url_46_68_6.txt +7 -0
  40. eesanje/url_46_68_7.txt +7 -0
  41. eesanje/url_46_68_8.txt +5 -0
  42. eesanje/url_46_68_9.txt +9 -0
  43. eesanje/url_46_69_1.txt +8 -0
  44. eesanje/url_46_69_10.txt +5 -0
  45. eesanje/url_46_69_11.txt +8 -0
  46. eesanje/url_46_69_12.txt +8 -0
  47. eesanje/url_46_69_2.txt +12 -0
  48. eesanje/url_46_69_3.txt +12 -0
  49. eesanje/url_46_69_4.txt +4 -0
  50. eesanje/url_46_69_5.txt +9 -0
eesanje/url_46_65_4.txt ADDED
@@ -0,0 +1,4 @@
 
 
 
 
 
1
+ ರೇಣುಕಾಸ್ವಾಮಿ ಕೊಲೆ ಪ್ರಕರಣ: ಆಗಸ್ಟ್ ಎರಡನೆ ವಾರದಲ್ಲಿ ದೋಷಾರೋಪಣೆ ಸಲ್ಲಿಕೆ
2
+ ಬೆಂಗಳೂರು, ಜು.24- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಮುಂದಿನ ಆಗಸ್ಟ್ ತಿಂಗಳ 2ನೇ ವಾರದಲ್ಲಿ ನ್ಯಾಯಾಲಯಕ್ಕೆ ಪ್ರಾಥಮಿಕ ದೋಷಾರೋಪಣೆ ಸಲ್ಲಿಸಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣ್ನೋತ್ತರ ಪರೀಕ್ಷೆ ವರದಿ, ಆರೋಪಿಗಳ ಹೇಳಿಕೆಗಳು, ಪೊಲೀಸರು ಸಂಗ್ರಹಿಸಿರುವ 180 ಕ್ಕೂ ಹೆಚ್ಚು ಸಾಕ್ಷಗಳನ್ನೊಳಗೊಂಡಂತೆ ಪ್ರಾಥಮಿಕ ದೋಷಾರೋಪ ಪಟ್ಟಿಯನ್ನ ಸಲ್ಲಿಸಲು ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
3
+ ರೇಣುಕಾಸ್ವಾಮಿ ಕೊಲೆ ನಡೆದು ಎರಡು ತಿಂಗಳು ಕಳೆದಿದೆ. ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ 17 ಮಂದಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೈದರಾಬಾದಿಗೆ ಕಳುಹಿಸಿರುವ ವಿಡಿಯೋ ದಾಖಲೆಗಳ ವರದಿ ಬರಬೇಕಾಗಿದೆ. ಮೊಬೈಲ್ ರೀಟ್ರಿವ್ ವರದಿ ಪೊಲೀಸರ ಕೈಗೆ ಸಿಗಬೇಕಾಗಿದೆ. ಈ ಎಲ್ಲಾ ಮಾಹಿತಿಗಳು ಲಭ್ಯವಾದ ನಂತರ ಹೆಚ್ಚುವರಿ ದೋಷಾರೋಪ ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.
4
+ ನಟ ದರ್ಶನ್ ಸೇರಿದಂತೆ ಆರೋಪಿಗಳ್ಯಾರೂ ಈವರೆಗೆ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ. ಚಾರ್ಜ್ ಶೀಟ್ ಸಲ್ಲಿಕೆಯಾದ ನಂತರ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
eesanje/url_46_65_5.txt ADDED
@@ -0,0 +1,4 @@
 
 
 
 
 
1
+ ಮಂಡ್ಯದ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ಮೀಸಲು
2
+ ಬೆಂಗಳೂರು ಜ. 24- ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ರೂಪಾಯಿಗಳನ್ನು ಮೀಸಲಿರಿಸಲಾಗಿದ್ದು, 30 ಕೋಟಿ ರೂಪಾಯಿಗಳ ಬಿಡುಗಡೆಗೆ ಪ್ರಸ್ತಾವನೆ ಸಲಿಕೆಯಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.
3
+ ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಮಂಡ್ಯ ಶಾಸಕ ರವಿಕುಮಾರ್ ಗಣಿಗ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಡಿಸೆಂಬರ್ 20 21ರಂದು ಆಯೋಜಿಸಲಾಗಿರುವ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ಬಿಡುಗಡೆ ಮಾಡುವ ಕುರಿತು ಪರಿಶೀಲಿಸಲಾಗುತ್ತಿದೆ. ಈಗಾಗಲೇ 2024 25ನೇ ಸಾಲಿನ ಕ್ರಿಯಾ ಯೋಜನೆಯಲ್ಲಿ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ಮೀಸಲಿರಿಸಲಾಗಿದೆ ಎಂದು ಹೇಳಿದರು.
4
+ ಆರಂಭದಲ್ಲಿ ಸಭಾಧ್ಯಕ್ಷರು ಪ್ರಶ್ನೆ ಕೇಳಲು ಶಾಸಕರನ್ನು ಆಹ್ವಾನಿಸುವ ಸಂದರ್ಭದಲ್ಲಿ ರವಿಕುಮಾರ್ ಗಾಣಿಗ ಎಂದು ಉಲ್ಲೇಖಿಸಿದರು. ಇದಕ್ಕೆ ಸ್ಪಷ್ಟನೆ ನೀಡಿದ ಶಾಸಕರು, ಅದು ಗಾಣಿಗ ಗಣಿಗ ಎಂದು ತಿದ್ದುಪಡಿ ಮಾಡಿದರು. ಇದಕ್ಕೂ ಮೊದಲು ಉಮೇಶ್ ಕತ್ತಿ ಅವರ ಹೆಸರನ್ನು ಕೂಗುವಾಗಲೂ ಸಭಾಧ್ಯಕ್ಷರು ಉಮೇಶ್ ಹುಕ್ಕೇರಿ ಎಂದು ಹೇಳಿದಾಗ, ಬಿಜೆಪಿಯ ಶಾಸಕರು ಲೋಪವನ್ನು ಸರಿಪಡಿಸಿದರು.
eesanje/url_46_65_6.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಪಕ್ಷಬೇಧ ಮರೆತು ಸಮಾಜ ಕಲ್ಯಾಣ ಇಲಾಖೆಯ ವಿರುದ್ಧ ಆಕ್ರೋಶ
2
+ ಬೆಂಗಳೂರು, ಜು.24- ಸಮಾಜ‌ ಕಲ್ಯಾಣ ಇಲಾಖೆಯ ರೈಸ್ ಸಂಸ್ಥೆಯಿಂದ ನಡೆಯುತ್ತಿರುವ ವಸತಿ ಶಾಲೆಗಳಲ್ಲಿನ ಶಿಕ್ಷಣ ಗುಣಮಟ್ಟ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯಲ್ಲಿ ಸಾಕಷ್ಟು ಲೋಪಗಳಾಗಿವೆ ಎಂದು ಆಡಳಿತ ಪಕ್ಷವು ಸೇರಿದಂತೆ ಎಲ್ಲಾ ಶಾಸಕರು ಪಕ್ಷಬೇಧ ಮರೆತು ಸಮಾಜ ಕಲ್ಯಾಣ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
3
+ ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಶಾಸಕಿ ರೂಪಕಲಾ, ಸಮಾಜ ಕಲ್ಯಾಣ ಇಲಾಖೆಯಲ್ಲಿ ನಡೆಯುತ್ತಿರುವ ವಸತಿ ಶಾಲೆಗಳ ಲೋಪಗಳನ್ನು ವಿವರಿಸಿದರು. ಸಿಬ್ಬಂದಿಗಳ ಕೊರತೆ, ಶೈಕ್ಷಣಿಕ ವಾತಾವರಣ, ಸುರಕ್ಷತೆ ಸೇರಿದಂತೆ ಹಲವಾರು ಸಮಸ್ಯೆಗಳಿವೆ ಎಂದು ಸದನದ ಗಮನಕ್ಕೆ ತಂದರು. ಬೇಡಿಕೆಗೆ ಅನುಸಾರವಾಗಿ ವಸತಿ ಶಾಲೆಗಳಲ್ಲಿ ಪ್ರವೇಶಕ್ಕೆ ಅವಕಾಶ ಇಲ್ಲ ಎಂಬ ವಿಚಾರವನ್ನು ವಿವರಿಸಿದರು. ಕ್ರೈಸ್ ಸಂಸ್ಥೆಯ ಶಾಲೆಗಳಿಗೆ ಮುರಾರ್ಜಿ ವಸತಿ ಶಾಲೆಯ ನಿರ್ವಹಣೆಗೆ ನೀಡುವಷ್ಟೇ ಅನುದಾನ ನೀಡಲಾಗುತ್ತಿದೆ. ಆದರೂ ಗುಣಮಟ್ಟದಲ್ಲಿ ಸಮಾಜ ಕಲ್ಯಾಣ ಶಾಲೆಗಳು ಕಳಪೆಯಾಗಿವೆ ಎಂದು ಆರೋಪಿಸಿದರು. ಇಲಾಖೆಯ ಉಪನಿರ್ದೇಶಕರೆ ಗುತ್ತಿಗೆದಾರರಾಗಿದ್ದಾರೆ. ಸಮುದಾಯ ಭವನಗಳ ನಿರ್ಮಾಣಕ್ಕೆ ವರ್ಷಕ್ಕೆ 1,300 ಕೋಟಿ ಖರ್ಚು ಮಾಡಲಾಗುತ್ತಿದೆ. ಶೋಷಿತರ ಶಿಕ್ಷಣ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡುವುದನ್ನು ಸರ್ಕಾರ ರೂಢಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.
4
+ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರ ಪರವಾಗಿ ಉತ್ತರ ನೀಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಇತ್ತೀಚಿಗೆ ನಡೆದ ಎಸ್‌ಸಿಪಿ ಮತ್ತು ಟಿಎಸ್ ಪಿ ಪರಿಷತ್ ಸಭೆಯಲ್ಲಿ ಕ್ರೈಸ್ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಅನುದಾನ ನೀಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳನ್ನು ಹಾಸ್ಟೆಲ್ ಗಳಿಗೆ ಭೇಟಿ ನೀಡಲು ಸೂಚಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಆರೋಗ್ಯ ವಿಚಾರದಲ್ಲಿ ರಾಜಿ ಇಲ್ಲ ಎಂದು ಹೇಳಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ 68 ಭಾರತ ರತ್ನ ಡಾ. ಬಿಆರ್ ಅಂಬೇಡ್ಕರ್ ಸರ್ಕಾರಿ ವಸತಿ ಶಾಲೆಗಳನ್ನು ನಿರ್ವಹಿಸಲಾಗುತ್ತಿದೆ, ಇಲ್ಲಿ ಒಂದರಿಂದ ಐದನೇ ತರಗತಿ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲಾಗುತ್ತಿದ್ದು, ಒಟ್ಟು 8500 ವಿದ್ಯಾರ್ಥಿಗಳ ಪ್ರವೇಶಕ್ಕೆ ಮಂಜೂರಾತಿ‌ ಇದೆ.
5
+ ವಾರ್ಷಿಕ ಸರಾಸರಿ ಆರು ಸಾವಿರದಿಂದ 6,500 ವಿದ್ಯಾರ್ಥಿಗಳು ದಾಖಲಾಗುತ್ತಿದ್ದಾರೆ. ಪ್ರಸಕ್ತ ವರ್ಷ 6059 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ 821 ವಸತಿ ಶಾಲೆಗಳು ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ವಾರ್ಷಿಕವಾಗಿ 2,11,920 ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆರರಿಂದ 12ನೇ ತರಗತಿಯವರೆ��ೂ 1,91,448 ವ್ಯಾಸಂಗ ಮಾಡುತ್ತಿದ್ದಾರೆ. ಪ್ರತಿ ವರ್ಷ 40,555 ವಿದ್ಯಾರ್ಥಿಗಳು ದಾಖಲಾಗುತ್ತಿದ್ದಾರೆ ಎಂದು ವಿವರಿಸಿದರು.
6
+ ಚರ್ಚೆಯಲ್ಲಿ ಭಾಗವಹಿಸಿದ್ದ ಶಾಸಕ ಸುರೇಶ್ ಕುಮಾರ್, ಹಿರಿಯೂರಿನ ವಸತಿ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿ ಹಾಗೂ ಹಾವೇರಿ ಜಿಲ್ಲೆಯ ಮುರಾರ್ಜಿ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳಿಗೆ ಮನೆಯ ವಾತಾವರಣ ಇಲ್ಲದೆ ಖಿನ್ನತೆ ಕಾಡುತ್ತಿದೆ. ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು. ಬಂಗಾರಪೇಟೆ ಕ್ಷೇತ್ರದ ನಾರಾಯಣಸ್ವಾಮಿ ಸರ್ಕಾರ ಶಿಕ್ಷಣದ ಉದ್ದೇಶಕ್ಕಾಗಿ ಕ್ರೈಸ್ ಶಾಲೆಗಳನ್ನು ಆರಂಭಿಸಿತ್ತು. ಆದರೆ ಈಗ ಅಲ್ಲಿ ಕಟ್ಟಡ ನಿರ್ಮಾಣ ಸೇರಿದಂತೆ ಇತರೆ ಗುತ್ತಿಗೆದಾರರದೇ ಆಡಳಿತವಾಗುದೆ ಎಂದು ಆರೋಪಿಸಿದರು.
7
+ ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಕಮಿಟಿ ಹೆಸರಿನಲ್ಲಿ ಗುತ್ತಿಗೆ ವ್ಯವಹಾರಗಳೇ ವ್ಯಾಪಕವಾಗಿವೆ. ಕ್ರೈಸ್ ಶಾಲೆಗಳಲ್ಲಿ 20% ರಷ್ಟು ಖಾಯಂ ಶಿಕ್ಷಕರಿದ್ದರೆ, ಶೇಕಡ 80 ರಷ್ಟು ಹೊರಗುತ್ತಿಗೆಯ ಬೋಧಕ ಸಿಬ್ಬಂದಿ ಇದ್ದಾರೆ. ಹೆಣ್ಣು ಮಕ್ಕಳ ಹಾಸ್ಟೆಲ್ ಗಳಿಗೆ ಮಹಿಳೆಯರನ್ನೇ ವಾರ್ಡನ್ ಗಳನ್ನಾಗಿ ನೇಮಿಸಬೇಕು. ಒಟ್ಟಾರೆ ಶಿಕ್ಷಣ ಸಂಸ್ಥೆಗಳನ್ನು ನಿರ್ವಹಿಸುವಲ್ಲಿ ಸಮಾಜ ಕಲ್ಯಾಣ ಇಲಾಖೆ ವೈಪಲ್ಯ ಕಂಡಿದೆ ಎಂದು ಗಂಭೀರ ಆರೋಪ ಮಾಡಿದರು.
8
+ ಸಕಲೇಶಪುರದ ಸಿಮೆಂಟ್ ಮಂಜು, ಕಂಪ್ಲಿ ಕ್ಷೇತ್ರದ ಗಣೇಶ್ ಮತಿತರರು ಚರ್ಚೆಯಲ್ಲಿ ಭಾಗವಹಿಸಿದ್ದರು. ಸಚಿವ ಸಚಿವ ಪ್ರಿಯಾಂಕ ಖರ್ಗೆ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ, ದೈಹಿಕ ಆರೋಗ್ಯ ಹಾಗೂ ಶಿಕ್ಷಣ ಗುಣಮಟ್ಟದ ಅಭಿವೃದ್ಧಿಗೆ ರೋಟರಿ ಸಂಸ್ಥೆಯೊಂದಿಗೆ ಕೌನ್ಸಿಲಿಂಗ್ ಹಾಗೂ ಇತರ ಸೌಲಭ್ಯಗಳನ್ನು ಕಲ್ಪಿಸಲು ಪ್ರಸ್ತಾವನೆ ಇದೆ. ಮುಂದಿನ ಎರಡು ತಿಂಗಳಲ್ಲಿ ಸಚಿವ ಸಂಪುಟದ ಅನುಮೋದನೆ ಪಡೆದು ಇದನ್ನು ಜಾರಿಗೆ ತರಲಾಗುವುದು. ಇಂಟರ್ನೆಟ್ ಹಾಗೂ ಇತರ ಅತ್ಯಾಧುನಿಕ ಸೌಲಭ್ಯಗಳಿಗಾಗಿ ಆತ್ಮಹತ್ಯೆಯ ಪ್ರಚೋದನೆಗಳಿಗೆ ಅವಕಾಶ ಹೆಚ್ಚಾಗುತ್ತಿವೆ. ಈ ಹಿಂದೆ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ರೇಣುಕಾ ಚಿದಂಬರಂ ಅವರ ನೇತೃತ್ವದಲ್ಲಿ ಸಮಿತಿ ರಚಿಸಿ ಪ್ರವೇಶ, ವಸತಿ ಶಾಲೆಗಳ ನಿರ್ವಹಣೆ, ಸುರಕ್ಷತೆಯ ಬಗ್ಗೆ ಪ್ರಮಾಣಿಕೃತ ವ್ಯವಸ್ಥೆ ಜಾರಿಗೊಳಿಸಲು ವೈಜ್ಞಾನಿಕ ವರದಿ ಪಡೆಯಲಾಗಿತ್ತು.
9
+ ಹಿಂದಿನ ಸರ್ಕಾರ ಅದನ್ನು ಜಾರಿಗೊಳಿಸಲಿಲ್ಲ. ಹಾಸ್ಟೆಲ್ ಗಳಲ್ಲಿ 1:7 ಅಥವಾ 1:9 ಅನುಪಾತದಲ್ಲಿ ಶೌಚಾಲಯ ಇರಬೇಕು. ಕೆಲವು ಕಡೆ 1: 21 ಅನುಪಾತದಲ್ಲಿ ಶೌಚಾಲಯಗಳಿವೆ. ಸಮುದಾಯ ಭವನಗಳಿಗೆ ಸರ್ಕಾರ ಒಂದು ಸಾವಿರ ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ. ಹಿಂದೆ ನಾನು ಸಮಾಜ ಕಲ್ಯಾಣ ಸಚಿವನಾಗಿದ್ದಾಗ 14,000 ಸಮುದಾಯ ಭವನಗಳ ಮಂಜುರಾತಿಯನ್ನು ರದ್ದು ಮಾಡಿದ್ದೆ. ಈಗಲೂ ಭವನಗಳ ನಿರ್ಮಾಣಕ್ಕಾಗಿ 600 ಕೋಟಿ ಬಾಕಿ ಅಗತ್ಯ ಇದೆ.
10
+ ಈ ���ದನಕ್ಕೆ ಧೈರ್ಯವಿದ್ದರೆ ಎಲ್ಲಾ ಶಾಸಕರು ಒಟ್ಟಾಗಿ ಸಮುದಾಯ ಭವನಗಳ ನಿರ್ಮಾಣವನ್ನು ತಿರಸ್ಕರಿಸಿದರೆ ಅಷ್ಟು ಹಣವನ್ನು ವಸತಿ ಶಾಲೆಗಳ ಸುಧಾರಣೆಗೆ ಬಳಕೆ ಮಾಡಲು ಸರ್ಕಾರ ಸಿದ್ಧವಿದೆ ಎಂದು ಹೇಳಿದರು. ಅಷ್ಟರಲ್ಲಿ ಸದನಕ್ಕೆ ಆಗಮಿಸಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ, ವಸತಿ ಶಾಲೆಗಳ ಸುಧಾರಣೆಗೆ ಕ್ರಮ ಕೈಗೊಳ್ಳುತ್ತದೆ. ಈ ಬಜೆಟ್ ನಲ್ಲಿ 20 ವಸತಿ ಶಾಲೆಗಳನ್ನು ಮಂಜೂರು ಮಾಡಲಾಗಿದೆ. 60 ಹೋಬಳಿಗಳಲ್ಲಿ ವಸತಿ ಶಾಲೆಗಳಿಲ್ಲ ಇವುಗಳಿಗೆ ಹಂತ ಹಂತವಾಗಿ ಮಂಜೂರು ಮಾಡುವುದಾಗಿ ಹೇಳಿದರು.
11
+ ಸದ್ಯಕ್ಕೆ ತಮ್ಮ ಕ್ಷೇತ್ರದಲ್ಲಿ ಒಂದು ಸಾವಿರ ವಿದ್ಯಾರ್ಥಿಗಳು ಪ್ರವೇಶಕ್ಕೆ ಅರ್ಜಿ ಸಲ್ಲಿಸಿದ್ದಾರೆ ಅವರ ಪಾಡೇನು ಎಂದು ಶಾಸಕ ಕಂಪ್ಲಿ ಗಣೇಶ್ ಪ್ರಸ್ತಾಪಿಸಿ, ಸರ್ಕಾರದ ನಿಖರ ಉತ್ತರಕ್ಕೆ ಪಟ್ಟು ಹಿಡಿದಾಗ ಗಲಿಬಿಲಿಯ ವಾತಾವರಣ ನಿರ್ಮಾಣವಾಯಿತು.
eesanje/url_46_65_7.txt ADDED
@@ -0,0 +1,4 @@
 
 
 
 
 
1
+ ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳಿಗೆ ಯಾವುದೇ ರೀತಿಯ ಹೊರೆಯಾಗುವುದಿಲ್ಲ: ಸಚಿವ ರಾಮಲಿಂಗಾರೆಡ್ಡಿ
2
+ ಬೆಂಗಳೂರು,ಜು.24- ಬಜೆಟ್‌ನಲ್ಲಿ ಸಾಕಷ್ಟು ಅನುದಾನದ ಲಭ್ಯತೆ ಇರುವುದರಿಂದ ಶಕ್ತಿ ಯೋಜನೆಯಡಿ ಸಾರಿಗೆ ಸಂಸ್ಥೆಗಳಿಗೆ ಯಾವುದೇ ರೀತಿಯ ಹೊರೆಯಾಗುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಸ್ಪಷ್ಟಪಡಿಸಿದ್ದಾರೆ. ವಿಧಾನಪರಿಷತ್‌ನಲ್ಲಿ ಸದಸ್ಯೆ ಭಾರತಿ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್‌ನಲ್ಲಿ 1,400 ಕೋಟಿ ಅನುದಾನವನ್ನು ನೀಡಿದ್ದಾರೆ. ಹಣಕಾಸಿನ ಲಭ್ಯತೆ ಮೇಲೆ ನಾವು ಸಾರಿಗೆ ನಿಗಮಗಳಿಗೆ ಹಣವನ್ನು ನೀಡುತ್ತೇವೆ. ಹೀಗಾಗಿ ಯಾವುದೇ ಸಂಸ್ಥೆಗೂ ಹೊರೆಯಾಗುವುದಿಲ್ಲ ಎಂದು ಪುನರುಚ್ಚರಿಸಿದರು.
3
+ ಕರ್ನಾಟಕ ವಾಹನ ತೆರಿಗೆ ಕಾಯಿದೆಗೆ ವಿನಾಯಿತಿ ನೀಡಿದ್ದರಿಂದ ನನಗೆ 600 ಕೋಟಿ ಹೆಚ್ಚುವರಿ ಅನುದಾನ ಸಿಗಲಿದೆ. ಅಲ್ಲದೆ, ಬಸ್‌‍ ಖರೀದಿ ಮಾಡಲು 580 ಕೋಟಿ ಅನುದಾನವೂ ಸಿಗಲಿದೆ. ಸಂಸ್ಥೆಯು ಈಗ ಸುಧಾರಣೆಯತ್ತ ಸಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.ಹತ್ತು ವರ್ಷಗಳ ಹಿಂದೆ ಟಿಕೆಟ್‌ ದರವನ್ನು ಹೆಚ್ಚಳ ಮಾಡಲಾಗಿತ್ತು. ಬಿಎಂಟಿಸಿಯಲ್ಲಿ ನಾಲ್ಕು ವರ್ಷಗಳಿಂದ ನಾವು ಟಿಕೆಟ್‌ ದರವನ್ನು ನಾವು ಪರಿಷ್ಕರಣೆ ಮಾಡಿಲ್ಲ. ಈ ಮೊದಲು ನೌಕರರಿಗೆ ನಿಗಮದಲ್ಲಿ ವೇತನ ನೀಡಲು ಹಿಂದೆಮುಂದೆ ನೋಡಬೇಕಾದ ಪರಿಸ್ಥಿತಿ ಇತ್ತು. ಈಗ ಸಾಕಷ್ಟು ಸುಧಾರಣೆಯಾಗಿದೆ ಎಂದರು.
4
+ ಬಾಕಿ ಇರುವ 1,413 ಕೋಟಿ ಹಣವನ್ನು ಹಂತಹಂತವಾಗಿ ಪಾವತಿ ಮಾಡುತ್ತೇವೆ. ನನಗೆ ಆಯವ್ಯವದಲ್ಲಿ ಹಣ ಇರುವುದರಿಂದ ಸಮಸ್ಯೆ ಪ್ರಶ್ನೆ ಉದ್ಭವಿಸುವುದೇ ಇಲ್ಲ ಹಾಗೂ ಶಕ್ತಿ ಯೋಜನೆ ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
eesanje/url_46_65_8.txt ADDED
@@ -0,0 +1,5 @@
 
 
 
 
 
 
1
+ ಚೊಂಬು, ತಟ್ಟೆ, ಚಮಚ ವಿಚಾರ ವಿಧಾನಸಭೆಯಲ್ಲಿ ಸ್ವಾರಸ್ಯರಕರ ಚರ್ಚೆ
2
+ ಬೆಂಗಳೂರು, ಜು.24-ಚೊಂಬು, ತಟ್ಟೆ, ಚಮಚ ವಿಚಾರ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿ ಸ್ವಾರಸ್ಯರಕರ ಚರ್ಚೆಗೆ ಎಡೆ ಮಾಡಿಕೊಟ್ಟಿತು. ಇಂದು ಬೆಳಿಗ್ಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರು ಸಭಾಧ್ಯಕ್ಷ ಯು.ಟಿ. ಖಾದರ್ ಅವರನ್ನು ಉದ್ದೇಶಿಸಿ ನಗುತ್ತೀರಿ ಎಂದರು. ಆಗ ಸಭಾಧ್ಯಕ್ಷರು ನಗುತ್ತಿದ್ದರೂ ಅಗುವುದಿಲ್ಲವೆಂದರೆ ಹೇಗೆ? ಎಂದು ಹೇಳಿದರು.ಬಿಜೆಪಿ ಶಾಸಕ ವಿ.ಸುನಿಲ್ ಕುಮಾರ್ ಅವರು ನಿಮ್ಮ ನಗು, ಕೋಪ ನಮಗೆ ಅರ್ಥವಾಗುವುದಿಲ್ಲ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಭಾಧ್ಯಕ್ಷರು ಕಳೆದ ಅಧಿವೇಶನದಲ್ಲಿ ಮೊದಲು ಅಧಿವೇಶನಕ್ಕೆ ಬಂದ ಶಾಸಕರಿಗೆ ನಮ್ಮ ಕಚೇರಿಯಲ್ಲಿ ಪ್ರಶಸ್ತಿ ಕೊಡಲಾಗುತ್ತಿದೆ, ಪಡೆದುಕೊಳ್ಳಿ ಎಂದು ಹೇಳಿದರು.
3
+ ಆಗ ಬಿಜೆಪಿ ಶಾಸಕ ಆರಗಜ್ಞಾನೇಂದ್ರ ಅವರು, ಅಧಿವೇಶನಕ್ಕೆ ಮೊದಲು ಬಂದವರಿಗೆ ಪ್ರಶಸ್ತಿ ಕೊಡುತ್ತೀರಿ. ಹಾಗೆಯೇ ಅಧಿವೇಶನ ನಡೆಯುವಾಗ ದಿನದ ಕಲಾಪ ಮುಗಿಯುವವರೆಗೂ ಸದನದಲ್ಲಿ ಹಾಜರಿದ್ದ ಶಾಸಕರಿಗೆ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿದರು.ಅದಕ್ಕೆ ಸಮ್ಮತಿಸಿದ ಸಭಾಧ್ಯಕ್ಷರು, ಕ್ಯಾಮೇರಾದಲ್ಲಿ ದಾಖಲಾಗುತ್ತದೆ. ಸದನದಲ್ಲಿ ದಿನದ ಕೊನೆಯ ಕಲಾಪದವರೆಗೂ ಇದ್ದ ಶಾಸಕರಿಗೂ ಕೊಡುತ್ತೇವೆ. ರಾಷ್ಟ್ರ ಲಾಂಛನವುಳ್ಳ ಕಪ್ಪುಗಳನ್ನು ಕೊಟ್ಟಿದ್ದೇವೆ. ಹಲವು ಶಾಸಕರು ಹೆಚ್ಚು ಪ್ರಶಸ್ತಿಗೆ ಭಾಜನರಾಗಿರುವುದರಿಂದ ಪ್ಲೇಟ್ ಕೊಡುತ್ತೇವೆ ಎಂದರು.
4
+ ಆಗ ಸುನಿಲ್ ಕುಮಾರ್ ಅವರು ಈ ಸರ್ಕಾರದಲ್ಲಿ ಕಪ್ಪು, ಲೋಟ ಅಷ್ಟೇ ಎಂದು ಛೇಡಿಸಿದರು. ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿ ತೃಪ್ತಿಯಾಗುವಂತೆ ಕೊಡುತ್ತೇವೆ ಎಂದು ತಿಳಿಸಿದರು. ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಮಾತನಾಡಿ ಚೊಂಬು ಕೊಟ್ಟವರು ನೀವು, ನಾವು ಕಪ್ಪು ಕೊಟ್ಟಿದ್ದೇವೆ ಎಂದರು. ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಮಾತನಾಡಿ, ಕಪ್ಪು, ಸಾಸರ್ ಆಯಿತು. ಚಮಚ ಕೊಡಬೇಡಿ ಎಂದಾಗ ನಗೆಯ ಅಲೆ ಸದನದಲ್ಲಿ ತೇಲಿ ಬಂತು.
5
+ ಸಭಾಧ್ಯಕ್ಷ ಯು.ಟಿ. ಖಾದರ್ ಮಾತನಾಡಿ, ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರನ್ನು ಒಟ್ಟಿಗೆ ಸೇರಿಸಿಯೇ ನಾವು ಪ್ರಶಸ್ತಿ ಕೊಡುವುದು ಎಂದು ಹೇಳಿ ಈ ವಿಚಾರದ ಚರ್ಚೆಗೆ ತೆರೆ ಎಳೆದರು.
eesanje/url_46_65_9.txt ADDED
@@ -0,0 +1,9 @@
 
 
 
 
 
 
 
 
 
 
1
+ ವಿಧಾನಸಭೆಯಲ್ಲಿ ಮೂಡ ಪ್ರಸ್ತಾಪ: ಏರಿದ ಧನಿಯಲ್ಲಿ ಮಾತಿನ ಚಕಮಕಿ
2
+ ಬೆಂಗಳೂರು,ಜು.24- ಮೈಸೂರಿನ ಮೂಡ ಹಗರಣದ ಬಗ್ಗೆ ಚರ್ಚೆ ಮಾಡಲು ಅವಕಾಶ ನೀಡಬೇಕೆಂದು ವಿಧಾನ ಸಭೆಯಲ್ಲಿ ಬಿಜೆಪಿ ಪಟ್ಟುಹಿಡಿದ ಕಾರಣ ಆಡಳಿತ ಮತ್ತು ಪ್ರತಿಪಕ್ಷ ನಡುವೆ ಕೆಲಕಾಲ ಏರಿದ ಧ್ವನಿಯಲ್ಲಿ ಮಾತಿನ ಚಕಮಕಿ ನಡೆಯಿತು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ನಿಲುವಳಿ ಸೂಚನೆ ಪೂರ್ವಬಾವಿ ಪ್ರಸ್ತಾಪ ಮಾಡಲು ಅವಕಾಶ ನೀಡಬೇಕು, ಪ್ರಶ್ನೋತ್ತರ ಬದಿಗೊತ್ತಿ ಅವಕಾಶ ನೀಡಬೇಕು ಎಂದು ಸ್ಪೀಕರ್ ಯು.ಟಿ ಖಾದರ್ ಅವರಲ್ಲಿ ಮನವಿ ಮಾಡಿದರು.
3
+ ಸಿಎಂ ಅವರ ಮೇಲೆ ಆರೋಪವಿದೆ ಮೂರ್ನಾಲ್ಕು ಸಾವಿರ ಕೋಟಿ ಹಗರಣವಾಗಿದೆ, ಚರ್ಚೆ ಮಾಡದಿದ್ದರೆ ಜನತೆ ಮುಚ್ಚಿ ಹಾಕುತ್ತಿದ್ದಾರೆ ಎಂದು ಮಾತನಾಡಿಕೊಳ್ಳುತ್ತಾರೆ ಎಂದರು. ಆಗ ಸಭಾಧ್ಯಕ್ಷರು, ಅಷ್ಟೊಂದು ಮಹತ್ವದ ವಿಚಾರವಾಗಿದ್ದರೆ ಅಧಿವೇಶನದ ಮೊದಲ ದಿನವೇ ನೋಟಿಸ್ ನೀಡಬೇಕಿತ್ತು. 10 ದಿನ ಏಕೆ ತಡ ಮಾಡಿದ್ದೀರಿ , ಈ ವಿಚಾರದಲ್ಲಿ ಮನವರಿಕೆ ಮಾಡಿಕೊಡುವ ಅಗತ್ಯವಿಲ್ಲ . 2 ವರ್ಷದ ಹಳೆಯ ವಿಚಾರ, ಆರೋಪದ ಬಗ್ಗೆ ನ್ಯಾಯಾಂಗ ಆಯೋಗ ತನಿಖೆ ನಡೆಸುತ್ತಿದೆ, ನೀವು ಗಡಿಬಿಡಿ ಮಾಡಬೇಡಿ, ಕೆಟ್ಟ ಸಂಪ್ರದಾಯ ಬೇಡ, ಪ್ರಶ್ನೋತ್ತರ ಕಲಾಪಕ್ಕೆ ಸಹಕಾರ ನೀಡಿ ಎಂದು ಕೋರಿದರು.
4
+ ಬಿಜೆಪಿ ಶಾಸಕ ಸುನೀಲ್ಕುಮಾರ್ ಮಾತನಾಡಿ, ಆಯೋಗದಲ್ಲಿ ತನಿಖೆ ನಡೆಯುತ್ತಿದ್ದರೆ ಸದನದಲ್ಲಿ ಚರ್ಚೆ ಮಾಡುವುದು ಬೇಡ ಎಂದಾದರೆ ಸದನ ನಡೆಸುವುದು ಏಕೆ ಮುಂದೂಡಿ ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕರು ಎದ್ದುನಿಂತು ಪ್ರತಿಯಾಗಿ ಮಾತನಾಡಲು ಮುಂದಾದಾಗ ಬಿಜೆಪಿ ಶಾಸಕರೂ ಸಹ ಮಾತನಾಡಲು ಮುಂದಾಗುತ್ತಿದ್ದಂತೆ ಗದ್ದಲದ ವಾತಾವರಣ ಸೃಷ್ಟಿಯಾಯಿತು.
5
+ ಬಿಜೆಪಿ ಶಾಸಕ ಅಶ್ವತ್ಥನಾರಾಯಣ ಮಾತನಾಡಿ, ಮೂಡ ವಿಚಾರ ಚರ್ಚೆ ಮಾಡದಿದ್ದರೆ ಪ್ರತಿಪಕ್ಷ, ಆಡಳಿತ ಪಕ್ಷದ ಜೊತೆ ಕೈಜೋಡಿಸಿದ್ದಾರೆ ಎಂಬ ಅಪವಾದ ಬರುತ್ತದೆ. ಮುಖ್ಯಮಂತ್ರಿಯವರ ಮೇಲೆ ನೇರ ಆರೋಪ ಇರುವುದರಿಂದ ಚರ್ಚೆಗೆ ಅವಕಾಶ ಕೊಡಬೇಕು ಎಂದರು. ಸಚಿವ ಭೈರತಿ ಸುರೇಶ್ ಮಾತನಾಡಿ, ಇಡೀ ಜಾತಕವಿದೆ ಎಂದು ಕಡತವೊಂದನ್ನು ಪ್ರದರ್ಶಿಸಿದರು.ಆ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಸಚಿವ ಎಚ್.ಕೆ.ಪಾಟೀಲ್, ಪ್ರಶ್ನೋತ್ತರ ಪ್ರಾರಂಭವಾಗಲಿ, ಅನಗತ್ಯ ಗೊಂದಲ ಬೇಡ, ಪ್ರತಿಪಕ್ಷ ಆರೋಪಿಸುತ್ತಿರುವ ವಿಚಾರದ ಬಗ್ಗೆ ತನಿಖಾ ಆಯೋಗ ನೇಮಕವಾಗಿದೆ. ಅದನ್ನು ಸ್ವಾಗತಿಸುವುದನ್ನು ಬಿಟ್ಟು ಗೊಂದಲ ಸೃಷ್ಟಿಸುವುದು ಬೇಡ ಎಂದರು.
6
+ ಬಿಜೆಪಿಯ ಅರಗ ಜ್ಞಾನೇಂದ್ರ ಮಾತನಾಡಿ, ಮೂಡ ಹಗರಣದ ಕಡತವನ್ನು ನೀವೇಕೆ ತುಂಬಿಕೊಂಡು ಬಂದಿದ್ದೀರ ಎಂದು ಕಾಂಗ್ರೆಸ್ ಶಾಸಕರನ್ನು ಛೇಡಿಸಿದರು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಎಲ್ಲಾ ಪಕ್ಷದವರೂ ಇದ್ದಾರೆ ಎಂದು ಹೇಳುತ್ತಾರೆ. ಅದು ಬಹಿರಂಗವಾಗಲಿ, ಚರ್ಚೆಗೆ ಅವಕಾಶ ಕೊಡಿ ಎಂದರು.
7
+ ಮತ್ತೆ ಮಾತನಾಡಿದ ಕಾನೂನು ಸಚಿವರು, ಹಳೆ ವಿಚಾರವನ್ನು ನಿ��ುವಳಿ ಸೂಚನೆಯಡಿ ಪ್ರಸ್ತಾಪಿಸಲು ಆಗುವುದಿಲ್ಲ ಎಂದು ಹೇಳಿದರು.ಸಚಿವ ಭೈರತಿ ಸುರೇಶ್ ಮಾತನಾಡಿ, ಬಿಜೆಪಿ ಮಾಡಿರುವ ಅನಾಚಾರದ ಬಗ್ಗೆ ಒಂದು ಬಂಡಿ ಇದೆ. ಕೇವಲ ಒಬ್ಬರನ್ನು ಗುರಿ ಮಾಡುವುದಲ್ಲ. ಸುಳ್ಳು ವಿಳಾಸ ನೀಡಿ ಎಕರೆಗಟ್ಟಲೆ ಪಡೆದಿದ್ದಾರೆ ಎಂದು ಆರೋಪಿಸಿದರು. ಅಶ್ವತ್ಥನಾರಾಯಣ ಮಾತನಾಡಿ, ಸದನದಲ್ಲಿ ಚರ್ಚೆಯಾಗದಿದ್ದರೆ ಮ್ಯಾಚ್ ಫಿಕ್ಸಿಂಗ್ ಆಗಿದೆ ಎನ್ನುತ್ತಾರೆ. ಅದಕ್ಕಾಗಿ ಅವಕಾಶ ಕೊಡಿ ಎಂದರು.
8
+ ವಿರೋಧಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಮಾತನಾಡಿ, ಮುಖ್ಯಮಂತ್ರಿ ಮೇಲೆ ನೇರ ಆರೋಪವಿದೆ. ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು. ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಯಾರ್ಯಾರು ಅಡ್ಜಸ್ಟ್ಮೆಂಟ್ ಮಾಡಿಕೊಂಡಿದ್ದಾರೆ ಎಂಬುದನ್ನು ಜನರಿಗೆ ತೋರಿಸಿ ಅಂತವರನ್ನು ಮನೆಗೆ ಕಳುಹಿಸಿ. ಮುಂದಿನ ಚುನಾವಣೆಯಲ್ಲಿ ಪ್ರಾಮಾಣಿಕರನ್ನು ಆಯ್ಕೆ ಮಾಡಬೇಕು ಎಂದರು. ಆಡಳಿತ ಹಾಗೂ ಪ್ರತಿಪಕ್ಷದ ನಾಯಕರನ್ನು ಸಮಾಧಾನಪಡಿಸಿದ ಸಭಾಧ್ಯಕ್ಷರು ಗಡಿಬಿಡಿ ಬೇಡ ಎಂದು ಪ್ರಶ್ನೋತ್ತರ ಕಲಾಪಕ್ಕೆ ಅನುವು ಮಾಡಿಕೊಟ್ಟರು.
9
+ ಆಗ ಅಶೋಕ್ ಸೇರಿದಂತೆ ಬಿಜೆಪಿ ಸದಸ್ಯರು ಎದ್ದುನಿಂತು ಪ್ರಶ್ನೋತ್ತರ ಕಲಾಪದ ನಂತರ ಅವಕಾಶ ಮಾಡಿಕೊಡುತ್ತೀರ ಎಂಬ ಬಗ್ಗೆ ಸ್ಪಷ್ಟನೆಯನ್ನು ಸಭಾಧ್ಯಕ್ಷರಿಂದ ಕೇಳಬಯಸಿದರು. ಸುದೀರ್ಘ ಒತ್ತಾಯದ ನಂತರ ಈಗ ಪ್ರಶ್ನೋತ್ತರ ಕಲಾಪ ನಡೆಯಲಿ. ಅನಂತರ ಆ ಬಗ್ಗೆ ಪರಿಶೀಲನೆ ಮಾಡೋಣ ಎಂದಾಗ ಬಿಜೆಪಿ ಶಾಸಕರು ಸುಮನಾದರು.
eesanje/url_46_66_1.txt ADDED
@@ -0,0 +1,7 @@
 
 
 
 
 
 
 
 
1
+ ಪರಿಷತ್ ಪ್ರತಿಪಕ್ಷ ನಾಯಕರಾಗಿ ಛಲವಾದಿ : ಅಧಿಕೃತ ಪ್ರಕಟಣೆ
2
+ ಬೆಂಗಳೂರು,ಜು.24- ವಿಧಾನಪರಿಷತ್ನ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಛಲವಾದಿ ನಾರಾಯಣಸ್ವಾಮಿಯವರ ಹೆಸರನ್ನು ಸಭಾಪತಿ ಬಸವರಾಜ ಹೊರಟ್ಟಿಯವರು ಅಧಿಕೃತವಾಗಿ ಸದನದಲ್ಲಿ ಪ್ರಕಟಿಸಿದರು. ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿಯವರು ನಾರಾಯಣಸ್ವಾಮಿಯವರ ಹೆಸರನ್ನು ವಿರೋಧಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಿಸುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಅವರನ್ನು ಕರೆತಂದು ವಿರೋಧಪಕ್ಷದ ನಾಯಕನ ಸ್ಥಾನದಲ್ಲಿ ಕೂರಿಸಿದರು.
3
+ ನಂತರ ಛಲವಾದಿ ನಾರಾಯಣಸ್ವಾಮಿಯವರಿಗೆ ಸಚಿವರು ಸೇರಿದಂತೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ನ ಸದಸ್ಯರು ಪಕ್ಷಭೇದ ಮರೆತು ಅಭಿನಂದನೆ ಸಲ್ಲಿಸಿದರು. ಉಪಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ, ಪ್ರಜಾಪ್ರಭುತ್ವದ ಸೌಂದರ್ಯ ಮತ್ತೆ ಮರುಕಳಿಸಿದೆ ಎಂಬುದಕ್ಕೆ ನಾರಾಯಣಸ್ವಾಮಿಯವರ ಆಯ್ಕೆಯೇ ನಿದರ್ಶನ.
4
+ ಪ್ರತಿಯೊಂದು ಸಮುದಾಯಕ್ಕೆ ಸಾಮಾಜಿಕ ನ್ಯಾಯ ಸಿಗಬೇಕೆಂಬುದು ಸಂವಿಧಾನದ ಆಶಯ. ತಳಸಮುದಾಯದಿಂದ ಬಂದಿರುವ ಅವರಿಗೆ ಅತ್ಯಂತ ಮಹತ್ವದ ಜವಾಬ್ದಾರಿಯನ್ನು ನೀಡಲಾಗಿದೆ. ಇದಕ್ಕೆ ಚ್ಯುತಿ ಬಾರದಂತೆ ಕೆಲಸ ಮಾಡುತ್ತಾರೆಂಬ ವಿಶ್ವಾಸವಿದೆ. ಚಿಂತಕರ ಚಾವಡಿ ಎಂದು ಕರೆಯುವ ಮೇಲನೆಯಲ್ಲಿ ಇನ್ನಷ್ಟು ಗುಣಮಟ್ಟದ ಚರ್ಚೆಯಾಗಲಿ. ಸರ್ಕಾರ ತಪ್ಪುದಾರಿಯಲ್ಲಿ ನಡೆದಾಗ ಸರಿದಾರಿಗೆ ತರುವ ಕೆಲಸವನ್ನು ಮಾಡಲಿ ಎಂದು ಆಶಿಸಿದರು. ಕಂದಾಯ ಸಚಿವ ಕೃಷ್ಣಭೈರೇಗೌಡ ಮಾತನಾಡಿ, ನಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧಪಕ್ಷದ ನಾಯಕರನ್ನು ಛಾಯಾ ಮುಖ್ಯಮಂತ್ರಿ ಎಂದು ಕರೆಯುತ್ತಾರೆ.
5
+ ಸರ್ಕಾರ ತಪ್ಪು ಮಾಡಿದಾಗ ಕಿವಿ ಹಿಂಡಿ ಎಚ್ಚರಿಸುವ ಕೆಲಸ ವಿರೋಧಪಕ್ಷದ ನಾಯಕರಿಂದ ಆಗಬೇಕು. ಕರ್ನಾಟಕದ ವಿಧಾನಪರಿಷತ್ಗೆ ಶತಮಾನಗಳ ಇತಿಹಾಸವಿದೆ. ಹಿಂದೆ ಮೈಸೂರು ರಾಜರ ಆಡಳಿತದಲ್ಲಿ ಈ ವ್ಯವಸ್ಥೆ ಇತ್ತು. ಈಗ ಅದನ್ನು ನಾವೂ ಕೂಡ ಅಳವಡಿಸಿಕೊಂಡಿದ್ದೇವೆ ಎಂದರು. ವಿರೋಧಪಕ್ಷದ ನಾಯಕರು ಸರ್ಕಾರಕ್ಕೆ ನಿರಂತರವಾಗಿ ಎಚ್ಚರಿಕೆ ಕೊಡುವ ಕೆಲಸ ಮಾಡಲಿ. ಒಳ್ಳೆಯ ಕೆಲಸ ಮಾಡಿದಾಗ ಹೊಗಳಬೇಕು, ತಪ್ಪು ಮಾಡಿದಾಗ ಕಿವಿ ಹಿಂಡುವ ಕೆಲಸ ಮಾಡಲಿ. ಆದರೆ ವಿರೋಧಕ್ಕಾಗಿ ವಿರೋಧಿಸುವುದು ಬೇಡ ಎಂದು ಮನವಿ ಮಾಡಿದರು.
6
+ ಜೆಡಿಎಸ್ನ ಎಸ್.ಎಲ್.ಭೋಜೇಗೌಡ ಮಾತನಾಡಿ, ಛಲವಾದಿ ನಾರಾಯಣಸ್ವಾಮಿಯವರ ಆಯ್ಕೆ ಅತ್ಯುತ್ತಮವಾಗಿದೆ. ಅವರು ಈ ಸ್ಥಾನಕ್ಕೆ ಅರ್ಹರೂ ಹೌದು. ಸಮಾಜಮುಖಿಯಾಗಿ ಕೆಲಸ ಮಾಡಬೇಕು. ಸದನದಲ್ಲಿ ಗುಣಮಟ್ಟದ ಚರ್ಚೆಯಾಗಬೇಕೆಂಬ ಮಾತುಗಳಿವೆ. ಅದಕ್ಕೆ ಪ್ರತಿಪಕ್ಷದ ನಾಯಕರು ಕೈಜೋಡಿಸಲಿ ಎಂದು ಕಿವಿಮಾತು ಹೇಳಿದರು. ಸಭಾನಾಯಕ ಬೋಸರಾಜು ಮಾತನಾಡಿ, ಛಲವಾದಿ ನಾರಾಯಣಸ್ವಾಮಿಯವರು ಹೋರಾಟದ ಹಿನ್ನೆಲೆಯಲ್ಲಿ ಬಂದವರು. ಅವರೂ ನಾವೂ ಒಂದೇ ಪಕ್ಷದಲ್ಲಿದ್ದವರು. ಈಗ ಅತ್ಯಂತ ಮಹತ್ವದ ವಿರೋಧಪಕ್ಷದ ಸ್ಥಾನದಲ್ಲಿ ಕುಳಿತಿದ್ದಾರೆ. ಇದರಲ್ಲಿ ಅವರು ಯಶಸ್ವಿಯಾಗಲಿ ಎಂದು ಆಶಿಸಿದರು.
7
+ ಬಿ.ಕೆ.ಹರಿಪ್ರಸಾದ್ ಮಾತನಾಡಿ, ಪ್ರತಿಪಕ್ಷದ ನಾಯಕನ ಸ್ಥಾನ ಅತ್ಯಂತ ಮಹತ್ವದ್ದು. ಮುಖ್ಯಮಂತ್ರಿ ಬಿಟ್ಟರೆ ಅತಿ ಹೆಚ್ಚು ಜವಾಬ್ದಾರಿ ಅವರಿಗಿರುತ್ತದೆ. ಸರ್ಕಾರ ತಪ್ಪು ಮಾಡಿದಾಗ ಛಾಟಿ ಬೀಸಬೇಕು. ಹಾಗೆಂದ ಮಾತ್ರಕ್ಕೆ ಎಲ್ಲವನ್ನೂ ವಿರೋಧಿಸಬಾರದು ಎಂದು ಸಲಹೆ ಮಾಡಿದರು. ಸಿ.ಟಿ.ರವಿ ಮಾತನಾಡಿ, ಪಕ್ಷವು ಅವರಿಗೆ ಅತ್ಯಂತ ಮಹತ್ವದ ಹುದ್ದೆ ನೀಡಿದೆ. ಜನರ ಆಶಯಕ್ಕೆ ತಕ್ಕಂತೆ ಅವರು ಕೆಲಸ ಮಾಡಬೇಕು ಎಂದು ಹೇಳಿದರು. ಸದಸ್ಯರಾದ ಶಶಿಲ್ ನಮೋಶಿ, ಉಮಾಶ್ರೀ, ಸಲೀಂ ಅಹಮದ್, ಸಂಕನೂರು, ಶರವಣ ಸೇರಿದಂತೆ ಅನೇಕರು ಮಾತನಾಡಿದರು.
eesanje/url_46_66_10.txt ADDED
@@ -0,0 +1,5 @@
 
 
 
 
 
 
1
+ ಭೂಕಬಳಿಕೆ: ಕೋಕಾ ಕೇಸ್ ದಾಖಲು
2
+ ಬೆಂಗಳೂರು,ಜು.22-ಭೂ ಕಬಳಿಕೆದಾರರ ವಿರುದ್ಧ ಸಿಐಡಿ ಪೊಲೀಸರು ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯಿದೆ-2 ಸಾವಿರ (ಕೋಕಾ)ದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭೂ ಕಬಳಿಕೆದಾರರ ತಂಡದ ಮುಖ್ಯಸ್ಥ ಜಾನ್‍ಮೋಸಸ್‍ನನ್ನು ಬಂಧಿಸಿ ಸಿಐಡಿ ಪೊಲೀಸರ ವಶಕ್ಕೆ ಪಡೆದು ಈತನ ವಿರುದ್ಧ ಕಾಯ್ದೆ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಕಲಿ ದಾಖಲಾತಿ ಸೃಷ್ಠಿಸಿದ ವ್ಯಕ್ತಿಗಳಿಂದ ನ್ಯಾಯಾಲಯಗಳಲ್ಲಿ ದಾವೆಗಳನ್ನು ಹೂಡಿಸಿ ಪಡೆದ ಆದೇಶಗಳ ಮೂಲಕ ಅಮಾಯಾಕರ ಆಸ್ತಿಗಳನ್ನು ಕಬಳಿಸುತ್ತಿರುವ ಕುಖ್ಯಾತ ಜಾನ್ ಮೋಸಸ್ ಹಾಗೂ ಆತನ ಸಹಚರರ ವಿರುದ್ಧ ಸಿಐಡಿ ಪೊಲೀಸರು ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
3
+ ಹಲಸೂರು ಗೇಟ್ ಪೊಲೀಸ್ ಠಾಣೆಗೆ ಲಘು ವ್ಯವಹಾರಗಳ ನ್ಯಾಯಾಲಯದ ರಿಜಿಸ್ಟ್ರಾರ್‍ರವರು ದೂರು ನೀಡಿದ್ದು, ಈ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಐಡಿ ಘಟಕಕ್ಕೆ ವಹಿಸಲಾಗಿದೆ. ಸಿಐಡಿ ಘಟಕ ತನಿಖೆ ಕೈಗೊಂಡ ಸಮಯದಲ್ಲಿ ಇದೇ ರೀತಿಯ ಅನೇಕ ಅಪರಾಧಗಳು ಬೆಳಕಿಗೆ ಬಂದಿದ್ದು, 100ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
4
+ ಈ ಎಲ್ಲಾ ಪ್ರಕರಣಗಳಲ್ಲಿ ಜಾನ್ ಮೋಸಸ್ ಹಾಗೂ ಆತನ ಸಹಚರರ ಚಟುವಟಿಕೆಗಳು ಬಹಿರಂಗಗೊಂಡಿದ್ದು, ಅವುಗಳಲ್ಲಿ 51 ಪ್ರಕರಣಗಳಲ್ಲಿ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯದಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ. ಉಳಿದ ಪ್ರಕರಣಗಳು ಪ್ರಸ್ತುತ ತನಿಖಾ ಹಂತದಲ್ಲಿರುತ್ತದೆ. ಈ ಸಂಘಟಿತ ಅಪರಾಗಳ ತಂಡ ಎಸಗಿರುವ ಕೃತ್ಯಗಳಿಂದ ಬಡವರ ಜಮೀನು, ನಿವೇಶನ, ಮನೆಗಳನ್ನು ಕಬಳಿಸಿದ್ದಲ್ಲದೆ ಅವರನ್ನು ಬೆದರಿಸಿ ಒತ್ತಾಯಪೂರ್ವಕವಾಗಿ ಕೋಟ್ಯಂತರ ಹಣವನ್ನು ಪಡೆದು ಮೋಸಮಾಡಿರುವುದು ತನಿಖೆಯಿಂದ ಗೊತ್ತಾಗಿದೆ.
5
+ ತನಿಖಾಕಾಧಿರಿಗಳಾದ ಡಿವೈಎಸ್ಪಿ ಪುನೀತ್‍ಕುಮಾರ್, ಇನ್ಸ್‍ಪೆಕ್ಟರ್ ಶಿವಕುಮಾರ್ ಅವರು ತನಿಖೆ ಕೈಗೊಂಡು ಸಕ್ಷಮ ಪ್ರಾಕಾರದಿಂದ ಪೂರ್ವಾನುಮತಿ ಕೋಕಾ ಕಾಯ್ದೆ ಅಳವಡಿಸಿಕೊಂಡಿರುತ್ತಾರೆ.
eesanje/url_46_66_11.txt ADDED
@@ -0,0 +1,8 @@
 
 
 
 
 
 
 
 
 
1
+ ಮಹಿಳಾಗೆ ಅತ್ಯಾಚಾರದ ಬೆದರಿಕೆ: 1.50 ಲಕ್ಷ ಸುಲಿಗೆ ಮಾಡಿದ್ದ ನಕಲಿ ಪೊಲೀಸ್ ಸೆರೆ
2
+ ಬೆಂಗಳೂರು,ಜು.22- ಮಹಿಳಾ ಥೆರಫಿಸ್ಟ್‍ಗೆ ತಾನೊಬ್ಬ ಪೊಲೀಸ್ ಎಂದು ಪರಿಚಯಿಸಿಕೊಂಡು ಹಣ ನೀಡದಿದ್ದರೆ ಅತ್ಯಾಚಾರವೆಸಗುವುದಾಗಿ ಹೆದರಿಸಿ 1.50 ಲಕ್ಷ ರೂ. ಪಡೆದು ಪರಾರಿಯಾಗಿದ್ದ ವಂಚಕನನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹೇಂದ್ರಕುಮಾರ್ (33) ಬಂಧಿತ ನಕಲಿ ಪೊಲೀಸ್. ಈತ ಸುರೇಶ ಎಂಬ ಹೆಸರಿನಲ್ಲಿ ಆನ್ಲೈನ್‍ನಲ್ಲಿ ಥೆರಪಿಗಾಗಿ ಪಶ್ಚಿಮ ಬಂಗಾಳ ಮೂಲದ 25 ವರ್ಷದ ಮಹಿಳಾ ಥೆರಫಿಸ್ಟಗೆ ಬುಕ್ ಮಾಡಿದ್ದನು.
3
+ ಥೆರಪಿಗಾಗಿ ರಾಮಮೂರ್ತಿ ನಗರದ ಅಪಾರ್ಟ್‍ಮೆಂಟ್ ಬಳಿ ರಾತ್ರಿ 10.30 ರ ಸುಮಾರಿನಲ್ಲಿ ಬಂದಿದ್ದಾಗ ಕಾರಿನಲ್ಲಿ ಆರೋಪಿ ಸ್ವಲ್ಪ ದೂರ ಕರೆದೊಯ್ದು ಬ್ಲಾಕ್‍ಮೇಲ್ ಮಾಡಿದ್ದಾರೆ. ತಾನೊಬ್ಬ ಪೊಲೀಸ್, 10 ಲಕ್ಷ ನೀಡದಿದ್ದರೆ ಅತ್ಯಾಚಾರ ಮಾಡುವುದಾಗಿ ಬೆದರಿಸಿದ್ದಾನೆ. ಆತನ ವರ್ತನೆಯಿಂದ ಭಯಗೊಂಡ ಮಹಿಳಾ ಥೆರಪಿಸ್ಟ್ ಸ್ನೇಹಿತರಿಗೆ ಕರೆ ಮಾಡಿ 1.50 ಲಕ್ಷ ರೂ.ವನ್ನು ಆರೋಪಿಗೆ ವರ್ಗಾವಣೆ ಮಾಡಿಸಿದ್ದಾರೆ.
4
+ ತದನಂತರ ರಾತ್ರಿಯಿಡೀ ಹೆಬ್ಬಾಳ ಸೇರಿದಂತೆ ಹಲವೆಡೆ ಕಾರಿನಲ್ಲಿ ಸುತ್ತಾಡಿಸಿ ಬೆಳಗಿನ ಜಾವ ಏರ್‍ಫೋರ್ಟ್ ಬಳಿ ಮಹಿಳಾ ಥೆರಫಿಸ್ಟ್‍ಗೆ ಇಳಿಸಿ ನೀನು ಊರಿಗೆ ಹಿಂದಿರುಗಬೇಕು, ಇಲ್ಲದಿದ್ದರೆ ಕೇಸ್ ಹಾಕುವುದಾಗಿ ಬೆದರಿಸಿದ್ದಾನೆ.ವಂಚಕನ ಮಾತಿಗೆ ಹೆದರದೆ ಮಹಿಳಾ ಥೆರಫಿಸ್ಟ್ ರಾಮಮೂರ್ತಿನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ತನಿಖೆ ಕೈಗೊಂಡು ಡಾಗ್ ಬ್ರೀಡಿಂಗ್ ಕೆಲಸ ಮಾಡುತ್ತಿದ್ದ ವಂಚಕ ಮಹೇಂದ್ರನನ್ನು ಬಂಧಿಸಿದ್ದಾರೆ.
5
+ ಆರೋಪಿ ಮೋಜಿನ ಜೀವನಕ್ಕಾಗಿ ಹಣ ಹೊಂದಿಸಲು ಈ ರೀತಿ ಹಣ ಸುಲಿಗೆ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದುದು ವಿಚಾರಣೆಯಿಂದ ಗೊತ್ತಾಗಿದೆ. ಈ ವಂಚಕ ಈ ಹಿಂದೆಯೂ ಇದೇ ರೀತಿ ಕೃತ್ಯವೆಸಗಿದ್ದು, ಈತನ ವಿರುದ್ಧ ಮಾರತಳ್ಳಿ, ಪುಲಕೇಶಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
6
+ ವಿದ್ಯಾರ್ಥಿನಿಯ ಅಪಹರಿಸಿದ್ದ ನಾಲ್ವರಿಗೆ ನೋಟಿಸ್..ಬೆಂಗಳೂರು,ಜು.22- ಬಸ್‍ಗಾಗಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಪ್ರಜ್ಞೆತಪ್ಪಿಸಿ ಅಪಹರಿಸಿಕೊಂಡು ಹೋಗಿದ್ದ ನಾಲ್ವರಿಗೆ ವಿಚಾರಣೆಗಾಗಿ ಹಾಜರಾಗುವಂತೆ ಪೀಣ್ಯ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.ಕಳೆದ ತಿಂಗಳು 17 ವರ್ಷದ ಪಿಯು ವಿದ್ಯಾರ್ಥಿನಿ ತುಮಕೂರಿಗೆ ಹೋಗಲು ಜಾಲಹಳ್ಳಿ ಕ್ರಾಸ್ ಬಳಿ ಬಸ್‍ಗಾಗಿ ಕಾಯುತ್ತಿದ್ದಾಗ ಇಬ್ಬರು ಯುವಕರು, ಇಬ್ಬರು ಯುವತಿಯರು ಈಕೆ ಬಳಿ ಹೋಗಿ ರಾಸಾಯನಿಕ ಸಿಂಪಡಿಸಿ, ಮಾಸ್ಕ್ ಹಾಕಿ ಪ್ರಜ್ಞೆ ತಪ್ಪಿಸಿ ಕಾರಿನಲ್ಲಿ ಅಪಹರಿಸಿಕೊಂಡು ಮೈಸೂರಿಗೆ ಹೋಗಿ ರಸ್ತೆಬದಿ ಕಾರು ನಿಲ್ಲಿಸಿ ಇವರೆಲ್ಲಾ ಟೀ ಕುಡಿಯಲು ಹೋಗಿದ್ದಾರೆ.
7
+ ಆ ಸಂದರ್ಭದಲ್ಲಿ ವಿದ್ಯಾರ್ಥಿನಿಗೆ ಪ್ರಜ್ಞೆ ಬಂದಿದ್ದರೂ ಪ್ರಜ್ಞೆ ತಪ್ಪಿದಂತೆ ನಟಿಸಿ ���ಾರಿನಲ್ಲಿ ಯಾರೂ ಇಲ್ಲದಿರುವುದು ಗೊತ್ತಾದ ತಕ್ಷಣ ಇಳಿದು ಅಲ್ಲಿಂದ ತಪ್ಪಿಸಿಕೊಂಡು ಹೋಗಿ ಮೈಸೂರಿನ ಲಷ್ಕರ್ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಾಗ ಕೃತ್ಯ ನಡೆದ ಸ್ಥಳ ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿದ್ದಾಗಿದೆ ಎಂಬುದು ತಿಳಿದು ಪ್ರಕರಣವನ್ನು ಪೀಣ್ಯ ಠಾಣೆಗೆ ವರ್ಗಾಹಿಸಿದ್ದಾರೆ.
8
+ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೀಣ್ಯ ಠಾಣೆ ಪೊಲೀಸರು ಘಟನಾ ಸ್ಥಳದ ಸುತ್ತಮುತ್ತಲಿನ ರಸ್ತೆಗಳಲ್ಲಿರುವ ಸಿಸಿ ಕ್ಯಾಮೆರಾ ಪರಿಶೀಲಿಸಿ, ಅಪಹರಣ ಮಾಡಲಾಗಿದ್ದ ಕಾರಿನ ನಂಬರ್ ಪತ್ತೆಹಚ್ಚಿ ನಾಲ್ವರಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
eesanje/url_46_66_12.txt ADDED
@@ -0,0 +1,6 @@
 
 
 
 
 
 
 
1
+ ಕಾರ್ಗಿಲ್ ವಿಜಯ ದಿವಸ್‍ನಲ್ಲಿ ಪ್ರಧಾನಿ ಮೋದಿ ಭಾಗಿ
2
+ ನವದೆಹಲಿ,ಜು.22- ಇದೇ 26 ರಂದು ಲಡಾಖ್‍ನಲ್ಲಿ ನಡೆಯಲಿರುವ 25ನೇ ವರ್ಷದ ಕಾರ್ಗಿಲ್ ವಿಜಯ್ ದಿವಸ್‍ನಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ ಮತ್ತು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ.ಕಾರ್ಗಿಲ್ ವಿಜಯ್ ದಿವಸ್‍ನ 25 ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಜುಲೈ 26 ರಂದು ಲಡಾಖ್‍ಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.ಲೆಫ್ಟಿನೆಂಟ್ ಗವರ್ನರ್ ಬ್ರಿಗ್ (ನಿವೃತ್ತ) ಬಿ ಡಿ ಮಿಶ್ರಾ ಅವರು ಮೋದಿ ಭೇಟಿಯ ವ್ಯವಸ್ಥೆಗಳನ್ನು ಪರಿಶೀಲಿಸಿದರು.
3
+ 1999 ರ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ವಿಜಯದ ರಜತ್ ಜಯಂತಿ ಯನ್ನು ಗುರುತಿಸಲು ಕಾರ್ಗಿಲ್ ಜಿಲ್ಲೆಯ ದ್ರಾಸ್‍ನಲ್ಲಿ ಜುಲೈ 24 ರಿಂದ 26 ರವರೆಗೆ ವಿಜಯ ದಿವಸ್ ಕಾರ್ಯಕ್ರಮ ಆಯೋಜಿಸಲಾಗಿದೆ. ದ್ರಾಸ್‍ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಭೇಟಿಯ ವ್ಯವಸ್ಥೆಗಳ ಕುರಿತು ಚರ್ಚಿಸಲು ಮಿಶ್ರಾ ಅವರು ಇಲ್ಲಿನ ಲೆಫ್ಟಿನೆಂಟ್ ಗವರ್ನರ್ ಅವರ ಕಾರ್ಯದರ್ಶಿಯಲ್ಲಿ ಸಭೆ ನಡೆಸಿದರು ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.
4
+ ಜು.26 ರಂದು ಮೋದಿ ಅವರು ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಕಾರ್ಗಿಲ್ ವಿಜಯ್ ದಿವಸ್‍ನ 25 ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಲೆಫ್ಟಿನೆಂಟ್ ಗವರ್ನರ್ ಸಭೆಗೆ ತಿಳಿಸಿದರು. ಹೆಲಿಪ್ಯಾಡ್‍ನಲ್ಲಿ ಭದ್ರತೆ ಮತ್ತು ಸ್ವಾಗತ, ಅವರ ವಾಹನ ಯಾತ್ರೆಗೆ ಅಗತ್ಯ ವ್ಯವಸ್ಥೆಗಳು, ಸ್ಮಾರಕದಲ್ಲಿ ಪುಷ್ಪಾರ್ಚನೆ ಸಮಾರಂಭದ ವಿಧಾನ, ಯುದ್ಧ ವಿಧವೆಯರೊಂದಿಗೆ ಸಂವಾದ ಮತ್ತು ಹೆಲಿಪ್ಯಾಡ್‍ನಲ್ಲಿ ಹಸಿರು ಕೋಣೆಯನ್ನು ಸಿದ್ಧಪಡಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ವಕ್ತಾರರು ತಿಳಿಸಿದ್ದಾರೆ.
5
+ ಲೆಫ್ಟಿನೆಂಟ್ ಗವರ್ನರ್ ಅವರು 8 ಪರ್ವತ ವಿಭಾಗದ ಜನರಲ್ ಆಫೀಸರ್ ಕಮಾಂಡಿಂಗ್ ಮೇಜರ್ ಜನರಲ್ ಸಚಿನ್ ಮಲಿಕ್ ಅವರನ್ನು ಡ್ರಾಸ್ ಬ್ರಿಗೇಡ್ ಹೆಲಿಪ್ಯಾಡ್‍ನಲ್ಲಿನ ವ್ಯವಸ್ಥೆಗಳ ಬಗ್ಗೆ ವಿಚಾರಿಸಿದರು ಎಂದು ಅವರು ಹೇಳಿದರು. ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಸಮಯೋಚಿತವಾಗಿ ಪೂರ್ಣಗೊಳಿಸುವಂತೆ ಮಿಶ್ರಾ ಸಂಬಂಧ ಪಟ್ಟ ಅ„ಕಾರಿಗಳಿಗೆ ಸೂಚಿಸಿದರು ಎಂದು ವಕ್ತಾರರು ತಿಳಿಸಿದ್ದಾರೆ.
6
+ ಲೆಫ್ಟಿನೆಂಟ್ ಗವರ್ನರ್ ಅವರು ಜು.24 ರಂದು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಲಿದ್ದಾರೆ ಎಂದು ಅವರು ಹೇಳಿದರು. 26 ರಂದು ಬೆಳಿಗ್ಗೆ ದ್ರಾಸ್ ಬ್ರಿಗೇಡ್ ಹೆಲಿಪ್ಯಾಡ್‍ಗೆ ಪ್ರಧಾನಿ ಬಂದಿಳಿಯಲಿದ್ದಾರೆ ಮತ್ತು ಸೇನಾ ಅ„ಕಾರಿಗಳು ಅವರನ್ನು ಬರಮಾಡಿಕೊಳ್ಳಲಿದ್ದಾರೆ ಎಂದು ಮೇಜರ್ ಜನರಲ್ ಮಲಿಕ್ ಹೇಳಿದ್ದಾರೆ. ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ತೆರಳುವ ಮುನ್ನ ಮೋದಿ ಗ್ರೀನ್ ರೂಂನಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಹೇಳಿದರು.
eesanje/url_46_66_2.txt ADDED
@@ -0,0 +1,5 @@
 
 
 
 
 
 
1
+ ಡಿಸಿಎಂ ಭೇಟಿ ಮಾಡಿದ ದರ್ಶನ ಪತ್ನಿ, ಸಹೋದರ
2
+ ಬೆಂಗಳೂರು,ಜು.24- ನಟ ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್‌ ತೂಗುದೀಪ್‌ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನುಭೇಟಿ ಮಾಡಿದ್ದಾರೆ.ಇಂದು ಬೆಳಿಗ್ಗೆ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ಆಗಮಿಸಿದ ಇಬ್ಬರು ಸುದೀರ್ಘ ಮಾತುಕತೆ ನಡೆಸಿದ್ದಾರೆ.
3
+ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ ಅವರ ಪರವಾಗಿ ರಾಜ್ಯಾದ್ಯಂತ ಅಭಿಮಾನ ಹೆಚ್ಚುತ್ತಲೇ ಇದೆ. ನಿನ್ನೆ ರಾಮನಗರದಲ್ಲಿ ಕರಗ ಉತ್ಸವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾತನಾಡುವಾಗ ದರ್ಶನ್‌ ಅಭಿಮಾನಿಗಳು ಡಿ ಬಾಸ್‌‍ ಎಂದು ಘೋಷಣೆ ಕೂಗಿದ್ದರು.
4
+ ಇದಕ್ಕೆ ಸ್ಪಂದಿಸಿದ ಡಿ.ಕೆ.ಶಿವಕುಮಾರ್‌, ನಾವು ಕಾನೂನಿಗೆ ಬೆಲೆ ನೀಡಬೇಕು. ಹಾಗೆಯೇ ತಪ್ಪು ಮಾಡಿದವರನ್ನು ರಕ್ಷಣೆ ಮಾಡುವುದಿಲ್ಲ. ದರ್ಶನ್‌ ಪ್ರಕರಣದಲ್ಲಿ ನ್ಯಾಯೋಚಿತ ರೀತಿ ನಡೆದುಕೊಳ್ಳಲಾಗುವುದು. ದರ್ಶನ್‌ರವರ ಪತ್ನಿ ತಮಭೇಟಿ ಗೆ ಸಮಯ ಕೇಳಿದ್ದಾರೆ ಎಂದು ಹೇಳಿದ್ದರು. ಅದರಂತೆ ಇಂದು ಬೆಳಿಗ್ಗೆ ವಿಜಯಲಕ್ಷ್ಮಿ ಹಾಗೂ ದಿನಕರ್‌ ತೂಗುದೀಪ್‌ ಅವರು ಡಿ.ಕೆ.ಶಿವಕುಮಾರ್‌ ಅವರನ್ನುಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ.
5
+ ವಿಜಯಲಕ್ಷ್ಮಿ ಮತ್ತು ದಿನಕರ್‌ ಅವರಭೇಟಿ ವಿಚಾರ ಯಾವ ಕಾರಣಕ್ಕೆ ಎಂಬ ಅನುಮಾನಗಳು ಮೂಡಿವೆ. ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ದರ್ಶನ್‌ ಮತ್ತು ಅವರ ತಂಡ ಈವರೆಗೂ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ. ಇತ್ತ ಪೊಲೀಸರು ಪ್ರಕರಣದ ತನಿಖೆಯನ್ನುಾಗಶಃ ಮುಗಿಸಿದ್ದು, ಮೊದಲ ಹಂತದ ಚಾರ್ಜ್‌ಶೀಟ್‌ ಸಲ್ಲಿಸಲು ತಯಾರಿ ನಡೆಸಿದ್ದಾರೆ. ಈ ಹಂತದಲ್ಲಿ ಡಿ.ಕೆ.ಶಿವಕುಮಾರ್‌ ಮತ್ತು ದರ್ಶನ್‌ ಕುಟುಂಬದ ಸದಸ್ಯರ ಭೇಟಿ ಕುತೂಹಲ ಕೆರಳಿಸಿದೆ.
eesanje/url_46_66_3.txt ADDED
@@ -0,0 +1,7 @@
 
 
 
 
 
 
 
 
1
+ ಹುಬ್ಬಳ್ಳಿ: ಧರ್ಮದರ್ಶಿ ಕೊಲೆ ಆರೋಪಿ ಸೆರೆ
2
+ ಹುಬ್ಬಳ್ಳಿ, ಜು.23- ನಗರದ ಎಪಿಎಂಸಿಯಲ್ಲಿರುವ ದಕ್ಷಿಣ ವೈಷ್ಣೋದೇವಿ ದೇವಸ್ಥಾನದ ಧರ್ಮದರ್ಶಿ ದೇವೇಂದ್ರಪ್ಪ ಮಹಾದೇವಪ್ಪ ವನಹಳ್ಳಿ ಎಂಬವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಸಿದಂತೆ ಹತ್ಯೆಗೈದ ಆರೋಪಿಯನ್ನು ಪ್ರಕರಣ ದಾಖಲಾದ 24 ಗಂಟೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹುಧಾ ಮಹಾನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೇಳಿದರು.
3
+ ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯ ಕಮರಿಪೇಟ್‍ನ ನಿವಾಸಿ ಸಂತೋಷ್ ತಿಪ್ಪಣ್ಣಾ ಬೋಜಗಾರ (44) ಎಂಬ ಆರೋಪಿಯನ್ನು ನಗರದ ಚೆನ್ನಮ್ಮ ವೃತ್ತದಲ್ಲಿ ಬಂಧಿಸಲಾಗಿದೆ.ದೇವಸ್ಥಾನದ ಧರ್ಮದರ್ಶಿಯನ್ನು ಹತ್ಯೆ ಮಾಡಿದ್ದು, ಆರೋಪಿಯ ಕೆಲ ಸಂಬಂಧಿಕರು ಕೊಲೆಯಾದ ವ್ಯಕ್ತಿಯೊಂದಿಗೆ ಸೇರಿಕೊಂಡು ಆರೋಪಿತನಿಗೆ ಹಾಗೂ ಆತನ ಕುಟುಂಬದವರಿಗೆ ಕೆಲವು ಪೂಜೆಗಳನ್ನು ಮಾಡಿಸುವ ಮೂಲಕ ನಮ್ಮ ಕುಟುಂಬಕ್ಕೆ ಹಾನಿ ಉಂಟು ಮಾಡಿದ್ದಾರೆಂಬವುದನ್ನು ಈತ ಗಟ್ಟಿಯಾಗಿ ನಂಬಿದ್ದನು. ಇದರಿಂದ ದೇವೇಂದ್ರಪ್ಪ ಕೊಲೆಗೆ ಸಂಚು ರೂಪಿಸಿ ಕೊಲೆ ಮಾಡಿರುವುದಾಗಿ ಆರೋಪಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ ಎಂದು ತಿಳಿಸಿದರು.
4
+ ಇದೇ ಹಿನ್ನೆಲೆಯಲ್ಲಿಯೇ ದೇವೇಂದ್ರಪ್ಪನ ಹತ್ಯೆಗೆ 2022 ರಲ್ಲಿ ಮಾರ್ಚ್‍ನಲ್ಲಿ ಕೊಲೆಗೂ ಯತ್ನಿಸಿದ್ದನು. ಈ ಸಂಬಂಧಿಸಿದಂತೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ನಡೆಸಿದ ತನಿಖೆ ವೇಳೆ ಆರೋಪಿ ಗುರುತು ಸಿಕ್ಕಿರಲಿಲ್ಲ. ಈ ಆರೋಪಿ ಸೆರೆಯಾದ ನಂತರದಲ್ಲಿ ಎರಡು ಪ್ರಕರಣದ ಕೆಲ ತಾಂತ್ರಿಕ ಸಾಕ್ಷ್ಯಧಾರಗಳಿಂದ ಈತನೇ 2022 ರಲ್ಲಿಯೂ ಕೊಲೆಗೆ ಯತ್ನಿಸಿದ್ದನು ಎಂದು ತಿಳಿದು ಬಂದಿದೆ. ಅಲ್ಲದೇ, ಆರೋಪಿಯೂ ಇದನ್ನು ಒಪ್ಪಿಕೊಂಡಿದ್ದಾನೆ ಎಂದರು.
5
+ 6 ವರ್ಷದ ಸಂಚುಆರೋಪಿಯು ಕಳೆದ ಆರುವರೆ ವರ್ಷದಿಂದ ಕೊಲೆ ಮಾಡಬೇಕೆಂದು ನಿರ್ಧಾರ ಮಾಡಿದ್ದನು. ಈ ಹಿನ್ನೆಲೆಯಲ್ಲಿ ದೇವೇಂದ್ರಪ್ಪನ ಚಲನವಲನಗಳ ಮೇಲೆ ನಿರಂತರ ನಿಗಾವಹಿಸಿದ್ದನು. ಅಲ್ಲದೇ, ಒಂಟಿಯಾಗಿ ಸಿಕ್ಕಾಗ ಕೊಲೆ ಮಾಡುವ ಉದ್ದೇಶದಿಂದ ಆತನ ಮನೆ, ದೇವಸ್ಥಾನ ಸುತ್ತ ಓಡಾಡಿದ್ದು, ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ ಎಂದರು.
6
+ ಆರೋಪಿಯ ಬಂಧನಕ್ಕಾಗಿ ಪ್ರಕರಣ ದಾಖಲಾದ 24 ಗಂಟೆಯಲ್ಲಿ ಬಂಧನ ಮಾಡಿದ್ದು, 180 ಕ್ಕೂ ಹೆಚ್ಚು ಸಿಸಿ ಕ್ಯಾಮರಾ ಪರಿಶೀಲಿಸಿ ಆರೋಪಿಯ ಗುರುತು ಪತ್ತೆ ಹಚ್ಚಿ, ಸಂಶಯಾಸ್ಪದ ವ್ಯಕ್ತಿಯ ಮಾಹಿತಿ ನೀಡುವಂತೆ ಮನವಿ ಮಾಡಿದ್ದೇವು. ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಚೆನ್ನಮ್ಮ ಸರ್ಕಲ್ ಸುತ್ತಮುತ್ತಲಿನಲ್ಲಿ ಆರೋಪಿ ಓಡಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಬಂಧಿಸಲಾಗಿದೆ ಎಂದರು.
7
+ ಆರೋಪಿಯನ್ನು ಬಂಧನ ಮಾಡುವಲ್ಲಿ ಡಿಸಿಪಿ ಮಹಾನಿಂಗ ನಂದಗಾವಿ, ಅಪರಾಧ ವಿಭಾಗದ ಡಿಸಿಪಿ ರವೀಶ್ ಎಸ್, ನವನಗರ ಠಾಣೆಯ ಇನ್ಸ್‍ಪೆಕ್ಟರ್ ಸಮ್ಮಿವುಲ್ಲಾ ಹಾಗೂ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆಯಿಂದ ಪ್ರಕರಣ ಬೇಧಿಸಿದ್ದು, ತ್ವರಿತ ಕಾರ್ಯವನ್ನು ಪ್ರಶಂಸಿಸಿ 50 ಸಾವಿರ ಬಹುಮಾನ ಘೋಷಣೆ ಮಾಡಲಾಗಿದೆ ಎಂದರು.
eesanje/url_46_66_4.txt ADDED
@@ -0,0 +1,18 @@
 
 
 
 
 
 
 
 
 
 
 
 
 
 
 
 
 
 
 
1
+ ಜ್ಯುವೆಲರಿ ಅಂಗಡಿಯಲ್ಲಿ ಬುರ್ಕಾ ಧರಿಸಿ ಸರಗಳ್ಳತನ- ಮಹಿಳೆಯರ ಬಂಧನ
2
+ ಬೆಂಗಳೂರು, ಜು.23- ಚಿನ್ನಾಭರಣ ಮಳಿಗೆಗೆ ಗ್ರಾಹಕರಂತೆ ಬುರುಕ ಧರಿಸಿಕೊಂಡು ಹೋಗಿ ಕೆಲಸಗಾರರ ಗಮನ ಸೆಳೆದು ಚಿನ್ನದ ಸರವನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿ 4.75 ಲಕ್ಷ ರೂ. ಬೆಲೆಬಾಳುವ 78 ಗ್ರಾಂ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.
3
+ ಕುಮಾರಸ್ವಾಮಿ ಲೇಔಟ್ ವ್ಯಾಪ್ತಿಯ ಚಿನ್ನಾಭರಣ ಮಳಿಗೆಯೊಂದಕ್ಕೆ ಬುರ್ಕಾ ಧರಿಸಿದ್ದ ಇಬ್ಬರು ಮಹಿಳೆಯರು ಆಭರಣ ಖರೀದಿಸುವ ಗ್ರಾಹಕರಂತೆ ಹೋಗಿದ್ದು, ಅಲ್ಲಿನ ಕೆಲಸಗಾರ ಆಭರಣ ತೋರಿಸುತ್ತಿದ್ದಾಗ ಅವರುಗಳ ಗಮನ ಸೆಳೆದು ಸರವನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದರು.
4
+ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ವಿವಿಧ ಆಯಾಮಗಳಲ್ಲಿ ಮಾಹಿತಿ ಕಲೆಹಾಕಿ ವಿಸ್ರೋ ಲೇಔಟ್‍ನ ದೇವರಕೆರೆ ಪಕ್ಕದ ಖಾಲಿ ಜಾಗದಲ್ಲಿ ಇಂಡಿಗೋ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಚಿನ್ನದ ಸರ ಕಳ್ಳತನ ಮಾಡಿರುವುದಾಗಿ ತಿಳಿಸಿದ್ದಾರೆ.
5
+ ಇಬ್ಬರು ಮಹಿಳೆಯರು ಹಾಗೂ ಒಬ್ಬ ಪುರುಷನನ್ನು ಪೊಲೀಸ್ ಅಭಿರಕ್ಷೆಗೆ ಪಡೆಯಲಾಗಿದ್ದು, ಮತ್ತೊಬ್ಬ ಮಹಿಳೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಕಳವು ಮಾಡಿದ ಚಿನ್ನದ ಸರವನ್ನು ಚಿತ್ರದುರ್ಗ ಜಿಲ್ಲೆಯ ಭರಮಸಾಗರದಲ್ಲಿರುವ ಜ್ಯುವೆಲರಿ ವರ್ಕ್‍ಶಾಪ್‍ಗೆ ನೀಡಿದ್ದಾಗಿ ತಿಳಿಸಿದ ಮೇರೆಗೆ ಪೊಲೀಸರು ವರ್ಕ್‍ಶಾಪ್‍ನಿಂದ ಆಭರಣವನ್ನು ಜಪ್ತಿ ಮಾಡಿದ್ದಾರೆ. ಕುಮಾರಸ್ವಾಮಿ ಲೇಔಟ್ ಠಾಣೆ ಇನ್ಸ್‍ಪೆಕ್ಟರ್ ಹಾಗೂ ಸಿಬ್ಬಂದಿ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
6
+ ಮೂವರು ಸರಗಳ್ಳರ ಬಂಧನ 100 ಗ್ರಾಂ ಚಿನ್ನಾಭರಣ ಜಪ್ತಿಬೆಂಗಳೂರು, ಜು.23- ದಕ್ಷಿಣ ವಿಭಾಗದ ಸುಬ್ರಮಣ್ಯಪುರ ಹಾಗೂ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಮೂವರು ಸರಗಳ್ಳರನ್ನು ಬಂಧಿಸಿ 2.90 ಲಕ್ಷ ಮೌಲ್ಯದ 100 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
7
+ ಸುಬ್ರಮಣ್ಯಪುರ: ಪ್ಲಂಬರ್ ಎಂದು ಹೇಳಿಕೊಂಡು ಮನೆಯೊಂದಕ್ಕೆ ಹೋಗಿ ಮಹಿಳೆಗೆ ಪಿಸ್ತೂಲಿನ ಹಿಂಭಾಗದಿಂದ ತಲೆಗೆ ಹೊಡೆದು ಹೆದರಿಸಿ 73 ಗ್ರಾಂ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಯೊಬ್ಬನನ್ನು ಸುಬ್ರಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕೃತ್ಯ ನಡೆಸಿ ಪರಾರಿಯಾಗುತ್ತಿದ್ದ ವೇಳೆ ತಕ್ಷಣ ಸಾರ್ವಜನಿಕರೊಬ್ಬರು 112ಗೆ ಕರೆ ಮಾಡಿ ಮಾಹಿತಿ ನೀಡಿದ ಮೇರೆಗೆ ಹೊಯ್ಸಳ ಸಿಬ್ಬಂದಿ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯಿಂದ 5.50 ಲಕ್ಷ ರೂ. ಮೌಲ್ಯದ 73 ಗ್ರಾಂ ಚಿನ್ನದ ಮಾಂಗಲ್ಯ ಸರ ಕೃತ್ಯಕ್ಕೆ ಬಳಸಿದ ನಕಲಿ ಪಿಸ್ತೂಲ್ ಹಾಗೂ ಬಾಲ್ಸ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ಸ್‍ಪೆಕ್ಟರ್ ರಾಜು ನೇತೃತ್ವದ ಸಿಬ್ಬಂದಿ ತಂಡ ಈ ಕಾರ್ಯಾಚರಣೆ ಕೈಗೊಂಡಿದ್ದರು.
8
+ ಪುಟ್ಟೇನಹಳ್ಳಿ: ಬೆಳಗಿನ ಜಾವ ಮಹಿಳೆಯೊಬ್ಬರು ಮನೆ ಬಳಿ ವಾಯು ವಿಹಾರ ಮಾಡುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದು ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂ„ಸಿ 2.40 ಲಕ್ಷ ರೂ. ಮೌಲ್ಯದ 27 ಗ್ರಾಂ ಆಭರಣವನ್ನು ವಶಪಡಿಸಿಕೊಂಡಿದ್ದಾರೆ.
9
+ ಆರೋಪಿಗಳು ಮಾಂಗಲ್ಯಸರವನ್ನು ಕಿತ್ತುಕೊಳ್ಳುವ ಬರದಲ್ಲಿ ಸರದ ಅರ್ಧ ತುಂಡು ಮಹಿಳೆಯ ಕೈಯಲ್ಲಿ ಉಳಿದುಕೊಂಡಿದೆ. ಈ ಬಗ್ಗೆ ಅವರು ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಎಲ್ ಅಂಡ್ ಟಿ ಸೌತ್ ಸಿಟಿ ಅಪಾರ್ಟ್‍ಮೆಂಟ್ ಮುಂದಿನ ರಸ್ತೆಯಲ್ಲಿ ಆರೋಪಿಗಳಿಬ್ಬರನ್ನು ದ್ವಿಚಕ್ರ ವಾಹನ ಸಮೇತ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಪೀಣ್ಯದಲ್ಲಿರುವ ಜ್ಯುವೆಲರಿ ಅಂಗಡಿಯಲ್ಲಿ ಚಿನ್ನದ ಮಾಂಗಲ್ಯ ಸರವನ್ನು ಅಡವಿಟ್ಟಿರುವುದಾಗಿ ತಿಳಿಸಿದ ಮೇರೆಗೆ ಪೆÇಲೀಸರು 2.40 ಲಕ್ಷ ಮೌಲ್ಯದ 27 ಗ್ರಾಂ ಮಾಂಗಲ್ಯ ಸರವನ್ನು ವಶಪಡಿಸಿಕೊಂಡಿದ್ದಾರೆ.ಇನ್ಸ್‍ಪೆಕ್ಟರ್ ರವಿಕುಮಾರ್ ನೇತೃತ್ವದ ಸಿಬ್ಬಂದಿ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದೆ.
10
+ ಮನೆಗಳವು: ಭಾವ-ಭಾಮೈದುನನ ಸೆರೆ – 14.37 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ
11
+ ಬೆಂಗಳೂರು, ಜು.23- ಮನೆಗಳ ಬೀಗ ಮೀಟಿ ಕಳ್ಳತನ ಮಾಡುತ್ತಿದ್ದ ಭಾವ-ಭಾಮೈದುನನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿ 14.37 ಲಕ್ಷ ರೂ. ಮೌಲ್ಯದ 110 ಗ್ರಾಂ ಚಿನ್ನಾಭರಣ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕೋಲಾರ ಮೂಲದ ಸಿಮ್‍ಸೇನ್(23) ಮತ್ತು ಈತನ ಭಾವ ಶರತ್ ಕುಮಾರ್ ಬಂಧಿತ ಆರೋಪಿಗಳು. ಸಿಮ್‍ಸೇನ್ ನಗರದಲ್ಲಿ ಆಟೋ ಚಾಲಕ ವೃತ್ತಿ ಮಾಡುತ್ತಿದ್ದು ಶರತ್ ಕುಮಾರ್ ಪೇಂಟರ್.
12
+ ಲಿಂಗರಾಜು ಪುರದ ಗಂಗಮ್ಮ ದೇವಸ್ಥಾನ ಸಮೀಪದ ಮನೆಯೊಂದರ ಬಾಗಿಲನ್ನು ಮುರಿದು ಒಳನುಗ್ಗಿ ಹಣ, ಆಭರಣ ಕಳವು ಮಾಡಿಕೊಂಡು ಹೋಗಿದ್ದ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಕೈಗೊಂಡು ಜಾನಕಿರಾಮ ಲೇಔಟ್‍ನಲ್ಲಿ ಆರೋಪಿಯೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
13
+ ಕಳವು ಮಾಡಿದ ವಸ್ತುಗಳನ್ನು ತನ್ನ ಭಾವನಿಗೆ ಕೊಟ್ಟಿರುವುದಾಗಿ ತಿಳಿಸಿದ ಮೇರೆಗೆ ಗೆ ಹೋಗಿ ಗೂಂಡಾ ಕಾಯ್ದೆಯಡಿ ಬಂಧಿತನಾಗಿ ಕಾರಾಗೃಹದಲ್ಲಿರುವ ಆರೋಪಿ ಭಾವನನ್ನು ಬಾಡಿ ವಾರೆಂಟ್ ಮುಖೆನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಂದ 110 ಗ್ರಾಂ ಚಿನ್ನಾಭರಣ, ನಾಲ್ಕು ದ್ವಿಚಕ್ರ ವಾಹನ, ಎರಡು ಲ್ಯಾಪ್‍ಟಾಪ್, 7 -ಫೋನ್ ವಶಪಡಿಸಿಕೊಂಡಿದ್ದಾರೆ.
14
+ ಮೊದಲನೇ ಆರೋಪಿ ವಿರುದ್ಧ ಬಾಣಸವಾಡಿ ಆವಲಹಳ್ಳಿಯಲ್ಲಿನ ಮನೆಗಳ್ಳತನ ಕಾಡುಗೋಡಿ, ಕೊಡಿಗೇಹಳ್ಳಿ ಹಾಗೂ ಆವಲಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ದ್ವಿಚಕ್ರ ವಾ��ನ ಕಳವು ಪ್ರಕರಣಗಳು ದಾಖಲಾಗಿರುತ್ತವೆ.ಇನ್ಸ್‍ಪೆಕ್ಟರ್ ಅರುಣ್ ಸಾಳುಂಕೆ ಹಾಗೂ ಸಿಬ್ಬಂದಿ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.ಎಂಟು ಮಂದಿ ದ್ವಿಚಕ್ರ ವಾಹನ ಚೋರರ ಬಂಧನ: 36.96 ಲಕ್ಷ ಮೌಲ್ಯದ 37 ವಾಹನಗಳ ಜಪ್ತಿಬೆಂಗಳೂರು, ಜು.23- ನಗರದ ಪೊಲೀಸರು ಎಂಟು ಮಂದಿ ದ್ವಿಚಕ್ರ ವಾಹನ ಚೋರರನ್ನು ಬಂಧಿಸಿ 36.96 ಲಕ್ಷ ರೂ. ಮೌಲ್ಯದ 37 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
15
+ ಬಾಗಲಗುಂಟೆ: ಮನೆ ಮುಂದೆ ನಿಲ್ಲಿಸಿದಂತಹ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ಹಾಸನ, ಮಂಡ್ಯದಲ್ಲಿ ಮಾರಾಟ ಮಾಡಿದ್ದ ಮೂವರು ಆರೋಪಿಗಳನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿ 20 ಲಕ್ಷ ಮೌಲ್ಯದ 16 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಕಳ್ಳತನ ಮಾಡಿದ ದ್ವಿಚಕ್ರ ವಾಹನಗಳನ್ನು ಖರೀದಿಸಿದ್ದ ವ್ಯಕ್ತಿಗಳಿಂದ 15 ದ್ವಿಚಕ್ರ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಆರೋಪಿಗಳ ಬಂಧನದಿಂದ 15 ದ್ವಿಚಕ್ರ ವಾಹನ ಪ್ರಕರಣಗಳು ಪತ್ತೆಯಾಗಿವೆ. ಇನ್ಸ್‍ಪೆಕ್ಟರ್ ಹನುಮಂತರಾಜು ಹಾಗೂ ಸಿಬ್ಬಂದಿ ತಂಡ ಪ್ರಕರಣವನ್ನು ಭೇದಿಸಿದೆ.
16
+ ಗಿರಿನಗರ: ಬೀಗ ಹಾಕಿ ನಿಲ್ಲಿಸಿದಂತಹ ದ್ವಿಚಕ್ರ ವಾಹನಗಳ ಹ್ಯಾಂಡಲ್‍ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿ 10.71 ಲಕ್ಷ ರೂ. ಮೌಲ್ಯದ ಎಂಟು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ರಾತ್ರಿ ವೇಳೆ ಕಳ್ಳತನ ಮಾಡಿದ್ದ ಆರು ದ್ವಿಚಕ್ರ ವಾಹನಗಳನ್ನು ಬ್ಯಾಡರಹಳ್ಳಿ ಹಾಗೂ ಹೇರೋಹಳ್ಳಿಯ ಕೆರೆ ಪಕ್ಕದ ಜಾಗದಲ್ಲಿ ನಿಲ್ಲಿಸಲಾಗಿತ್ತು. ಅಲ್ಲದೆ ಮತ್ತೊಂದು ದ್ವಿಚಕ್ರ ವಾಹನವನ್ನು ಆವಲಹಳ್ಳಿಯ ಬಸ್ ನಿಲ್ದಾಣದಲ್ಲಿ ನಿಲ್ಲಿಸಿರುವುದಾಗಿ ಆರೋಪಿಗಳು ತಿಳಿಸಿದ ಮೇರೆಗೆ ಏಳು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇವರ ಬಂಧನದಿಂದ ಎಂಟು ಪ್ರಕರಣಗಳು ಪತ್ತೆಯಾಗಿವೆ.ಇನ್ಸ್‍ಪೆಕ್ಟರ್ ಸತೀಶ್‍ಕುಮಾರ್ ಮತ್ತು ಸಿಬ್ಬಂದಿಗಳು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
17
+ ಸಿ.ಕೆ. ಅಚ್ಚುಕಟ್ಟು:ಮನೆ ಮುಂದೆ ನಿಲ್ಲಿಸಿದಂತಹ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡಿ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಇಬ್ಬರನ್ನು ಸಿಕೆ ಅಚ್ಚುಕಟ್ಟು ಠಾಣೆ ಪೆÇಲೀಸರು ಬಂ„ಸಿ 5.43 ಲಕ್ಷ ಬೆಲೆಬಾಳುವ 9 ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯ ಅರಬಿಕ್ ಕಾಲೇಜು ಬಳಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ದ್ವಿಚಕ್ರ ವಾಹನ ಕಳ್ಳತನ ಮಾಡಿರುವುದಾಗಿ ತಿಳಿಸಿದ ಮೇರೆಗೆ ಖಾಲಿ ಜಾಗದ ಬಳಿ ನಿಲ್ಲಿಸಿದಂತಹ ಒಟ್ಟು 9 ದ್ವಿಚಕ್ರ ವಾಹನಗಳನ್ನು ಇನ್ಸ್‍ಪೆಕ್ಟರ್ ಗಿರೀಶ್ ನಾಯಕ್ ಹಾಗೂ ಸಿಬ್ಬಂದಿ ತಂಡ ವಶಪಡಿಸಿಕೊಂಡಿದೆ.
18
+ ಕುಮಾರಸ್ವಾಮಿ ಲೇಔಟ್:ಅನುಮಾನಾಸ್ಪದವಾಗಿ ದ್ವಿಚಕ್ರ ವಾಹನದಲ್ಲಿ ತಿರುಗಾಡುತ್ತಿದ್ದ ಆರೋಪಿಯೊಬ್ಬನನ್ನು ದ್ವಿಚಕ್ರ ವಾಹನ ಸಮೇತ ಬಂ„ಸಿ ವಿಚ��ರಣೆಗೊಳಪಡಿಸಿದಾಗ ನಗರದ ವಿವಿಧ ಕಡೆ ದ್ವಿಚಕ್ರ ವಾಹನ ಕಳ್ಳತನ ಮಾಡಿರುವುದಾಗಿ ತಿಳಿಸಿದ್ದು, ಆತನಿಂದ 80 ಸಾವಿರ ಮೌಲ್ಯದ ನಾಲ್ಕು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯು ಕಳ್ಳತನ ಮಾಡಿದ ದ್ವಿಚಕ್ರ ವಾಹನಗಳನ್ನು ಮುನಿಯಪ್ಪ ಕಾಂಪೌಂಡ್‍ನ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಬಗ್ಗೆ ತಿಳಿಸಿದ ಮೇರೆಗೆ ಮೂರು ದ್ವಿಚಕ್ರ ವಾಹನ ಸೇರಿ ನಾಲ್ಕು ವಾಹನಗಳನ್ನು ಕುಮಾರಸ್ವಾಮಿ ಲೇಔಟ್ ಠಾಣೆ ಪೆÇಲೀಸರು ವಶಪಡಿಸಿಕೊಂಡಿದ್ದಾರೆ. ಇನ್ಸ್‍ಪೆಕ್ಟರ್ ಜಗದೀಶ್ ಹಾಗೂ ಸಿಬ್ಬಂದಿ ಈ ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.
eesanje/url_46_66_5.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಕೇಂದ್ರ ಬಜೆಟ್‌: ಕರ್ನಾಟಕಕ್ಕೆ ಯಾವುದೇ ಯೋಜನೆ ಇಲ್ಲ, ಆಂಧ್ರ, ಬಿಹಾರಕ್ಕೆ ಮಣೆ
2
+ ಬೆಂಗಳೂರು,ಜು.23- ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬಜೆಟ್‍ನಲ್ಲಿ ಕರ್ನಾಟಕಕ್ಕೆ ಹಿಂದೆಂದಿಗಿಂತಲೂ ಮಲತಾಯಿ ಧೋರಣೆ ಅನುಸರಿಸಲಾಗಿದ್ದು, ಈ ಬಾರಿ ಹೊಸದಾಗಿ ಒಂದೇ ಒಂದು ಯೋಜನೆಗಳನ್ನು ರಾಜ್ಯಕ್ಕೆ ನೀಡಿಲ್ಲ. ಕೇವಲ ಬೆಂಗಳೂರು-ಹೈದರಾಬಾದ್ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿರುವುದನ್ನು ಹೊರತುಪಡಿಸಿದರೆ ರಾಜ್ಯಕ್ಕೆ ನೆನೆಗುದಿಗೆ ಬಿದ್ದಿರುವ ಯಾವುದೇ ಯೋಜನೆಗಳನ್ನು ಪ್ರಸ್ತಾಪಿಸಿಲ್ಲ.
3
+ ಈ ಬಾರಿಯ ಬಜೆಟ್‍ನಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಯೋಜನೆಗಳನ್ನು ಪ್ರಧಾನಿ ನರೇಂದ್ರಮೋದಿ ಸರ್ಕಾರ ನೀಡಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಅಂದರೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿರುವ ವಿಎಸ್‍ಐಎಲ್ ಕಾರ್ಖಾನೆ ಪುನರಾರಂಭಕ್ಕೆ ವಿಶೇಷ ಪ್ಯಾಕೇಜ್, ಭದ್ರ ಮೇಲ್ದಂಡೆ ಯೋಜನೆ ಅನುಷ್ಠಾನ, ಮೇಕೆದಾಟು, ಕಳಸಾ ಬಂಡೂರಿ, ರೈಲ್ವೆ, ನೀರಾವರಿ ಸೇರಿದಂತೆ ಹಲವಾರು ಯೋಜನೆಗಳಿಗೆ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂಬ ನಿರೀಕ್ಷೆ ಹುಸಿಯಾಗಿದೆ.
4
+ ತನ್ನ ಮಿತ್ರ ಪಕ್ಷಗಳನ್ನು ಓಲೈಕೆ ಮಾಡಿಕೊಳ್ಳುವ ಅನಿವಾರ್ಯತೆಗೆ ಸಿಲುಕಿದ್ದ ಕೇಂದ್ರ ಸರ್ಕಾರ, ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನದಡಿ ಹಣಕಾಸಿನ ನೆರವು ನೀಡಿದೆ. ತನ್ನ ಪಕ್ಷವೇ ಆಡಳಿತದಲ್ಲಿರುವ ಇಲ್ಲವೇ ಕಾಂಗ್ರೆಸ್ ಸೇರಿದಂತೆ ಪ್ರಾದೇಶಿಕ ಪಕ್ಷಗಳು ಅಧಿಕಾರದಲ್ಲಿರುವ ಯಾವುದೇ ರಾಜ್ಯಗಳಿಗೆ ಹೊಸ ಯೋಜನೆಗಳನ್ನು ಘೋಷಿಸಿಲ್ಲ.
5
+ ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ 19 ಸ್ಥಾನಗಳನ್ನು ಗೆದ್ದಿದ್ದರಿಂದ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಇಲ್ಲದಿದ್ದರೂ ಕಡೆಪಕ್ಷ ಒಂದಿಷ್ಟು ಹೊಸ ಯೋಜನೆಗಳು ಸಿಗಲಿವೆ ಎಂಬ ಕನ್ನಡಿಗರ ನಿರೀಕ್ಷೆ ಹುಸಿಯಾಗಿದೆ. ಬೆಳೆಯುತ್ತಿರುವ ಬೆಂಗಳೂರಿನ ಸಂಚಾರ ದಟ್ಟಣೆಯನ್ನು ನಿವಾರಿಸಲು ಸಬರ್ಬನ್ ರೈಲು, ಮೆಟ್ರೊ ರೈಲು ವಿಸ್ತರಣೆ, ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಭಾಗಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮೇಕೆದಾಟು ಯೋಜನೆಗೆ ಅನುದಾನ ನೀಡಬೇಕೆಂಬ ರಾಜ್ಯ ಸರ್ಕಾರದ ಬೇಡಿಕೆಯನ್ನು ಕೇಂದ್ರ ಸರ್ಕಾರ ಸಾರಾಸಗಟಾಗಿ ತಿರಸ್ಕರಿಸಿದೆ.
6
+ ಬಜೆಟ್ ಮಂಡನೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಕೇಂದ್ರ ಸಚಿವರಾದ ಕುಮಾರಸ್ವಾಮಿ, ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ ಮತ್ತು ರಾಜ್ಯವನ್ನು ಪ್ರತಿನಿ„ಸುವ ಸಂಸದರನ್ನು ಭೇಟಿಯಾಗಿದ್ದರು. ಸಾಲದಕ್ಕೆ ಪ್ರಧಾನಿ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಸಚಿವರನ್ನು ಭೇಟಿಯಾಗಿ ರಾಜ್ಯದ ನೆನೆಗುದಿಗೆ ಬಿದ್ದಿರುವ ಯೋಜನೆಗಳಿಗೆ ಅನುದಾನ ನೀಡಬೇಕೆಂದು ಮನವಿ ಮಾಡಿದ ಪ್ರಸ್ತಾವನೆ ಹೊಳೆಯಲ್ಲಿ ಹುಣಸೆಹಣ್ಣು ತೊಳೆದಂತಾಗಿದೆ.
7
+ ಸಿಡಿದೆದ್ದ ಕನ್ನಡಿ��ರು:ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದಂತೆಯೇ ಲೋಕಸಭೆಯಲ್ಲಿ ಮಾತ್ರವಲ್ಲ, ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲೂ ಭಿನ್ನ ದನಿ ಕೇಳಿ ಬಂತು. ಅದರಲ್ಲೂ ಆಂಧ್ರಪ್ರದೇಶ ಹಾಗೂ ಬಿಹಾರ ರಾಜ್ಯಗಳಿಗೆ ಮೋದಿ ಸರ್ಕಾರದ ಬಜೆಟ್‍ನಲ್ಲಿ ಸಾಲು ಸಾಲು ಯೋಜನೆಗಳು, ಲಕ್ಷ ಕೋಟಿ ಮೊತ್ತದ ಅನುದಾನಗಳನ್ನು ಘೋಷಣೆ ಮಾಡುತ್ತಿದ್ದಂತೆಯೇ ನೆಟ್ಟಿಗರು ರೊಚ್ಚಿಗೆದಿದ್ದಾರೆ.
8
+ ಆಂಧ್ರ, ಬಿಹಾರಕ್ಕೆ ಮಣೆ ಏಕೆ?:ಬಿಜೆಪಿ ಸಾರಥ್ಯದ ಎನ್‍ಡಿಎ ಸರ್ಕಾರಕ್ಕೆ ಬೆಂಬಲ ನೀಡಿರುವ ಜೆಡಿಯು ಹಾಗೂ ಟಿಡಿಪಿ ಪಕ್ಷಗಳು ಲೋಕಸಭೆಯಲ್ಲಿ ನಿರ್ಣಾಯಕ ಸಂಖ್ಯಾ ಬಲ ಹೊಂದಿವೆ. ಈ ಪಕ್ಷಗಳು ತಮ್ಮ ಬೆಂಬಲ ವಾಪಸ್ ಪಡೆದರೆ ಸರ್ಕಾರವೇ ಬಿದ್ದು ಹೋಗುತ್ತದೆ. ಹೀಗಾಗಿ, ಟಿಡಿಪಿ ನಾಯಕ, ಆಂಧ್ರ ಪ್ರದೇಶ ಸಿಎಂ ಚಂದ್ರ ಬಾಬು ನಾಯ್ಡು ಹಾಗೂ ಜೆಡಿಯು ನಾಯಕ, ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನ ಮೆಚ್ಚಿಸಲು ಮೋದಿ ಸರ್ಕಾರ ಆಂಧ್ರ ಪ್ರದೇಶ ಹಾಗೂ ಬಿಹಾರಕ್ಕೆ ಭಾರೀ ಅನುದಾನ ನೀಡುತ್ತಿದೆ ಎಂದು ಹರಿಹಾಯ್ದಿದ್ದಾರೆ.
9
+ ಐತ-ಪಿಂಚಲು ಹೆಸರಿನ -ಫೆಸ್‍ಬುಕ್‍ನಲ್ಲಿ, ಕರ್ನಾಟಕಕ್ಕೆ ಮೂರು ನಾಮ ಹಾಕಲಾಗಿದೆ ಎಂದು ಬಿಂಬಿಸುವ ಪೋಸ್ಟ್ ಮಾಡಿದ್ದು, ಏನ್ರಪ್ಪಾ ಈ ಸಲ ಬಜೆಟ್ ಕೇವಲ ಆಂಧ್ರ ಮತ್ತು ಬಿಹಾರಕ್ಕೆ ಸೀಮಿತವೇ? ಕರ್ನಾಟಕಕ್ಕೆ ಏನೂ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ. ಹಾಗೆ ನೋಡಿದರೆ ಕೇಂದ್ರ ಬಜೆಟ್‍ಗೆ ಮುನ್ನವೇ ಆಂಧ್ರ ಹಾಗೂ ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡುವುದಿಲ್ಲ ಎಂದು ಮೋದಿ ಸರ್ಕಾರ ಹೇಳಿತ್ತು. ಆದರೆ ಬಜೆಟ್‍ನಲ್ಲಿ ಘೋಷಣೆ ಮಾಡಲಾದ ಯೋಜನೆಗಳ ಪೈಕಿ ಬಹುಪಾಲು ಯೋಜನೆಗಳು ಬಿಹಾರ ಹಾಗೂ ಆಂಧ್ರ ಪ್ರದೇಶ ರಾಜ್ಯದ ಕಡೆಗೇ ಹೋಗಿವೆ.
10
+ ಕರ್ನಾಟಕದ ಮಟ್ಟಿಗೆ ಹೇಳುವುದಾದರೆ ಬೆಂಗಳೂರು – ಹೈದರಾಬಾದ್ ನಡುವಣ ಹೆದ್ದಾರಿ ಅಭಿವೃದ್ದಿಯ ಪ್ರಸ್ತಾಪವಾಗಿದೆ. ಇನ್ನುಳಿದಂತೆ ಯಾವುದೂ ಮೇಲ್ನೋಟಕ್ಕೆ ಕಾಣದಿರೋದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.
11
+ ಪತ್ರಕರ್ತೆ ಸ್ಮಿತಾ ಪ್ರಕಾಶ್ ಅವರಂತೂ ಏನನ್ನೂ ಹೇಳದೆ ಕೇವಲ ಒಂದು -ಫೋಟೋ ಪ್ರಕಟಿಸಿ ಬಜೆಟ್ ಎಂದು ಬರೆದಿದ್ದಾರೆ. ಈ ಫೋಟೋದಲ್ಲಿ ಮೋದಿ ಅವರಿಗೆ ನಾಯ್ಡು ಹಾಗೂ ನಿತೀಶ್ ಕೈ ಮುಗಿಯುವ ಚಿತ್ರಣವಿದೆ!ಗಬ್ಬರ್ ಎಂಬುವರು ಮೋದಿ ಹಾಗೂ ನಿರ್ಮಲಾ ಸೀತಾರಾಮನ್ ದೇಶದ ಷೇರು ಮಾರುಕಟ್ಟೆಯ ಅಂತಿಮ ಸಂಸ್ಕಾರಕ್ಕೆ ಸಿದ್ದತೆ ನಡೆಸುತ್ತಿದ್ದಾರೆ ಎಂದು ನೆಟ್ಟಿಗರೊಬ್ಬರು ಬಿಂಬಿಸಿದ್ದಾರೆ.
12
+ ಇನ್ನು ಸಂಬಳದಾರರು ಪ್ರತಿ ಬಜೆಟ್‍ನಲ್ಲೂ ಪಂಚಾಯತ್ ವೆಬ್ ಸಿರೀಸ್ ಗ್ರಾಮಸ್ಥರ ರೀತಿ ಅನುದಾನ ಕೇಳುವಂತೆ ಆಗುತ್ತಿದೆ ಎಂದು ಕೆಲವು ನೆಟ್ಟಿಗರು ಲೇವಡಿ ಮಾಡಿದ್ದಾರೆ.ಮುಕೇಶ್ ಅಂಬಾನಿ ಅವರು ತಮ್ಮ ಮಗನ ಮದುವೆಯಲ್ಲಿ ಜನರಿಗೆ ಊಟಕ್ಕೆ ಬಡಿಸುವ ರೀತಿಯಲ್ಲಿ ಕೇಂದ್ರ ಸರ್ಕಾರವು ಮಧ್ಯಮ ವರ್ಗದವರ ಜೊತೆ ನಡೆದುಕೊಳ್ತಿದೆ ಎಂದು ರೋಷನ್ ರಾಜ್ ಎಂಬ ನೆಟ್ಟಿಗರು ವಿಡಿಯೋ ಸಮೇತ ಟ್ವೀಟ್ ಮಾಡಿದ್ದಾರೆ.
13
+ ಒಟ್ಟಿನಲ್ಲಿ ಆದಾಯ ತೆರಿಗೆ ಪಾವತಿದಾರರು ಹಾಗೂ ಮಧ್ಯಮ ವರ್ಗದವರು ಈ ಬಾರಿಯೂ ಬಜೆಟ್‍ನಿಂದ ತಮಗೆ ನಿರಾಸೆಯಾಗಿದೆ ಎಂದೇ ಅಭಿಪ್ರಾಯ ಹೊರಹಾಕಿದ್ದಾರೆ.
eesanje/url_46_66_6.txt ADDED
@@ -0,0 +1,4 @@
 
 
 
 
 
1
+ ಆಶಾದಾಯಕ ಬಜೆಟ್: ರಮೇಶ್ ಚಂದ್ರ ಲಹೋಟಿ
2
+ ಬೆಂಗಳೂರು, ಜು.23- ಯುವಕರ ಉದ್ಯೋಗಕ್ಕೆ ಉತ್ತೇಜನ, ಶಿಕ್ಷಣಕ್ಕೆ ಒತ್ತು, ಕೈಗಾರಿಕೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಮತ್ತು ತೆರಿಗೆಯಲ್ಲಿ ದಂಡವನ್ನು ಹಿಂಪಡೆದಿರುವುದರಿಂದ ಕೇಂದ್ರ ಬಜೆಟ್ ಒಟ್ಟಾರೆ ಆಶಾದಾಯಕವಾಗಿದೆ ಎಂದು ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ ತಿಳಿಸಿದರು.
3
+ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಬಜೆಟ್ ನೋಡಿದರೆ ಎನ್‍ಡಿಎ ಮಾದರಿ ಕಾಣುತ್ತದೆ. ಆದರೆ, ಕರ್ನಾಟಕಕ್ಕೆ ಅಷ್ಟಾಗಿ ಅನುದಾನ ಸಿಗದಿರುವುದು ಬೇಸರ ಮೂಡಿಸಿದೆ ಎಂದು ಹೇಳಿದರು. ವಿಶೇಷವಾಗಿ ಈ ಬಾರಿ ಎಂಎಸ್‍ಎಂಇಗಳಿಗೆ ಉತ್ತೇಜನ, ಕೃಷಿಗೆ ಒತ್ತು, ಮಹಿಳಾ ಉದ್ಯೋಗಿಗಳಿಗೆ ಹೊಸ ಅವಕಾಶಗಳು ಮತ್ತು ಉದ್ಯೋಗ ಸೃಷ್ಟಿಗೆ ಹೊಸ ಆಯಾಮ ನೀಡಿರುವುದನ್ನು ಸ್ವಾಗತಿಸುತ್ತದೆ ಎಂದರು.
4
+ ಮುದ್ರಾ ಯೋಜನೆ ಸಾಲವನ್ನು 20 ಲಕ್ಷಕ್ಕೆ ಏರಿಸಿರುವುದು, ಸೋಲಾರ್ ಪ್ಯಾನಲ್‍ಗಳ ಮೇಲಿನ ತೆರಿಗೆ ಇಳಿಕೆ ಸೇರಿದಂತೆ ಕೆಲವು ಅಗತ್ಯ ವಸ್ತುಗಳ ಮೇಲಿನ ಸಬ್ಸಿಡಿಯನ್ನು ಮುಂದುವರೆಸಿರುವುದರಿಂದ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಹಿರಿಯ ಉಪಾಧ್ಯಕ್ಷ ಬಾಲಕೃಷ್ಣ, ಉಪಾಧ್ಯಕ್ಷೆ ಉಮಾರೆಡ್ಡಿ, ನಿಕಟಪೂರ್ವ ಅಧ್ಯಕ್ಷ ಡಾ.ಐ.ಎಸ್.ಪ್ರಸಾದ್ ಮತ್ತಿತರರಿದ್ದರು.
eesanje/url_46_66_7.txt ADDED
@@ -0,0 +1,5 @@
 
 
 
 
 
 
1
+ ರೈತರ ಸಾಲಮನ್ನ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: ಸಚಿವ ಕೆ.ಎನ್.ರಾಜಣ್ಣ
2
+ ಬೆಂಗಳೂರು,ಜು.23- ರೈತರ ಸಾಲಮನ್ನ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ವಿಧಾನಪರಿಷತ್‍ನಲ್ಲಿ ಸದಸ್ಯ ಸಿ.ಟಿ.ರವಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರೈತರಿಗೆ ಸಾಲ ಸೇರಿದಂತೆ ಅವರಿಗೆ ಆರ್ಥಿಕ ನೆರವು ನೀಡಲು ಸರ್ಕಾರ ಬದ್ಧವಾಗಿದೆ. ಆದರೆ ರೈತರ ಸಾಲಮನ್ನ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಪುನರುಚ್ಚರಿಸಿದರು.
3
+ ರಾಜ್ಯ ಸರ್ಕಾರ ಪ್ರಸಕ್ತ ಸಾಲಿನಲ್ಲಿ ಸಹಕಾರ ಸಂಘಗಳ ಮೂಲಕ ರೈತರಿಗೆ 25 ಸಾವಿರ ಕೋಟಿ ಅಲ್ಪಾವಧಿ, ಮಧ್ಯಮಾವಧಿ ಸಾಲವನ್ನು ನೀಡುತ್ತಿದೆ. ಹಣಕಾಸಿನ ಲಭ್ಯತೆ ನೋಡಿಕೊಂಡು ರೈತರಿಗೆ ಸಾಲ ನೀಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು. ಈ ಹಿಂದೆ ಯುಪಿಎ ಆಡಳಿತದಲ್ಲಿದ್ದಾಗ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು 75 ಕೋಟಿ ಸಾಲವನ್ನು ಮನ್ನ ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು 50 ಸಾವಿರವರೆಗೂ ರೈತರ ಸಾಲ ಮನ್ನ ಮಾಡಿದ್ದರು.
4
+ ಸಮ್ಮಿಶ್ರ ಸರ್ಕಾರ ಇದ್ದಾಗ ಕುಮಾರಸ್ವಾಮಿ ಅವರು ಒಂದು ಲಕ್ಷ ಸಾಲ ಮನ್ನ ಮಾಡಿದ್ದಾರೆ. ಈಗ ಕೇಂದ್ರದಲ್ಲಿ ನಿಮ್ಮದೇ ಸರ್ಕಾರವಿದೆ. ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿರುವ ಸಾಲವನ್ನು ಮನ್ನಾ ಮಾಡುವಂತೆ ಒತ್ತಡ ಹಾಕಿ ಎಂದು ಸವಾಲು ಎಸೆದರು. ಅರ್ಜಿ ಹಾಕಿದ ಎಲ್ಲರಿಗೂ ಸಾಲ ಕೊಡಲು ಸಾಧ್ಯವಿಲ್ಲ. ಹಣಕಾಸಿನ ಲಭ್ಯತೆ ಮೇಲೆ ಸಾಲ ವಿತರಣೆ ಮಾಡುವ ವ್ಯವಸ್ಥೆ ಎಲ್ಲರ ಕಾಲದಲ್ಲೂ ಇದೆ. ಆದ್ಯತೆ ಮೇರೆಗೆ ಸಾಲವನ್ನು ನೀಡುತ್ತಾರೆ. ಇದರಲ್ಲಿ ಸರ್ಕಾರದ ಹಸ್ತಕ್ಷೇಪ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
5
+ ಈ ವೇಳೆ ಸಿ.ಟಿ.ರವಿ ಮಾತನಾಡಿ, ಬಜೆಟ್‍ನಲ್ಲಿ ಸಾಲ ಮನ್ನ ಮಾಡಿರುವುದಾಗಿ ನೀವೇ ಘೋಷಣೆ ಮಾಡಿದ್ದೀರಿ. ಈಗ ಮಾತು ತಪ್ಪುತ್ತಿರುವುದು ಏಕೆ ಎಂದು ಪ್ರಶ್ನೆ ಮಾಡಿದರು.ಈ ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.
eesanje/url_46_66_8.txt ADDED
@@ -0,0 +1,5 @@
 
 
 
 
 
 
1
+ ಅನುದಾನ ತಾರತಮ್ಯ: ಆಡಳಿತ- ಪ್ರತಿಪಕ್ಷ ವಾಕ್ಸಮರ
2
+ ಬೆಂಗಳೂರು,ಜು.22- ಲೋಕೋಪ ಯೋಗಿ ಇಲಾಖೆ ಅಡಿ ಅನುದಾನ ಹಂಚಿಕೆಯಲ್ಲಿ ರಾಜಕೀಯ ತಾರತಮ್ಯ ಮಾಡಲಾಗುತ್ತಿದೆ ಎಂಬ ವಿಷಯ ಆಡಳಿತ ಹಾಗೂ ಪ್ರತಿಪಕ್ಷ ಶಾಸಕರ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಹೈದ್ರಾಬಾದ್, ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನದಡಿ ಪ್ರತ್ಯೇಕ ಅನುದಾನ ನೀಡಿದಂತೆ ಹೆಚ್ಚು ಮಳೆ ಸುರಿದು ರಸ್ತೆ ಹಾಳಾಗುವ ಕರಾವಳಿ ಭಾಗಕ್ಕೂ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಒತ್ತಾಯಿಸಿದರು.
3
+ ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಬಿಜೆಪಿಯ ಸುರೇಶ್‍ಗೌಡ, ಅನುದಾನವನ್ನು ಒಂದು ಪಕ್ಷದ ಶಾಸಕರಿಗೆ ಹೆಚ್ಚು ನೀಡಲಾಗುತ್ತಿದೆ. ಬಿಜೆಪಿ-ಜೆಡಿಎಸ್‍ನವರಿಗೆ ತಾರತಮ್ಯವಾಗುತ್ತಿದೆ. ಇದನ್ನು ಸರಿಪಡಿಸದೇ ಇದ್ದರೆ ನಾವು ಧರಣಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಇದನ್ನು ಒಪ್ಪದ ಕಾಂಗ್ರೆಸ್ ಶಾಸಕರು ಬಿಜೆಪಿ ಆಡಳಿತದ ಅವಧಿಯಲ್ಲಿ ಕಾಂಗ್ರೆಸ್ ಶಾಸಕರಿಗೆ ಕಡಿಮೆ ಅನುದಾನ ನೀಡಲಾಗುತ್ತಿತ್ತು ಎಂದು ತಿರುಗೇಟು ನೀಡಿ ವಾಗ್ವಾದಕ್ಕಿಳಿದರು.
4
+ ಈ ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಶಾಸಕರ ನಡುವೆ ಮಾತಿನ ಚಕಮಕಿ ನಡೆಯಿತು. ಬಿಜೆಪಿಯ ಸುನಿಲ್‍ಕುಮಾರ್‍ರವರು ರಸ್ತೆ ದುರಸ್ತಿಗೆ ಎನ್‍ಡಿಆರ್‍ಎ-ïನಡಿ 30 ಸಾವಿರ, ಮನೆ ನಿರ್ಮಾಣಕ್ಕೆ 1.25 ಲಕ್ಷ ರೂ. ನೀಡಲಾಗುತ್ತಿದೆ. ಇದು ಯಾವುದಕ್ಕೂ ಸಾಲುವುದಿಲ್ಲ. ಮಳೆಗಾಲದಲ್ಲಿ ಹಾನಿಗೊಳಗಾದ ರಸ್ತೆ, ಮನೆಗಳಿಗೆ ವಿಶೇಷ ಪ್ಯಾಕೇಜ್ ನೀಡಿ ಎಂದು ಒತ್ತಾಯಿಸಿದರಲ್ಲದೆ ಹಿಂದೆ ಮಹದೇವಪ್ಪ ಲೋಕೋಪಯೋಗಿ ಸಚಿವ ರಾಗಿದ್ದಾಗ ತಾರತಮ್ಯ ಮಾಡದೆ ಅನುದಾನ ಹಂಚಿದ್ದರು. ಈಗ ತಾರತಮ್ಯ ಹೆಚ್ಚಾಗಿದೆ ಎಂದು ಹೇಳಿದರು.ವಿರೋಧ ಪಕ್ಷದ ಶಾಸಕ ಆರ್.ಅಶೋಕ್ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗದಂತೆ ಎಚ್ಚರಿಕೆ ವಹಿಸುವಂತೆ ತಾಕೀತು ಮಾಡಿದರು.
5
+ ಉತ್ತರ ನೀಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಳೆಗಾಲದ ನಂತರ ಹಾಳಾದ ರಸ್ತೆಗಳನ್ನು ದುರಸ್ತಿ ಮಾಡಲಾಗುವುದು. ಸದ್ಯಕ್ಕೆ ತಾತ್ಕಾಲಿಕವಾಗಿ ಸಂಚಾರ ಸುಗಮಗೊಳ್ಳಲು ಅಗತ್ಯ ಕೆಲಸ ನಿರ್ವಹಿಸುವುದಾಗಿ ಹೇಳಿದರಲ್ಲದೆ ಅನುದಾನ ಹಂಚಕೆಯಲ್ಲಿ ನಮ್ಮ ಸರ್ಕಾರ ಯಾವುದೇ ತಾರತಮ್ಯ ಮಾಡಿಲ್ಲ. ಸಿಐಆರ್‍ಎ-ïನ ಅನುದಾನವನ್ನು ಎಲ್ಲರಿಗೂ ಸಮಾನವಾಗಿ ಹಂಚಿಕೆ ಮಾಡಲಾಗಿದೆ ಎಂದು ವಿವರಿಸಿದರು.
eesanje/url_46_66_9.txt ADDED
@@ -0,0 +1,3 @@
 
 
 
 
1
+ ಮೈಸೂರಿನ ಮಾಲ್‍ನಲ್ಲಿ ಪಾಕ್ ಪರ ಘೋಷಣೆ
2
+ ಮೈಸೂರು,ಜು.22-ನಗರದ ಟಿಆರ್‍ಸಿ ಮಾಲ್‍ನಲ್ಲಿ ರಾತ್ರಿ 9:55 ಸಮಯದಲ್ಲಿ ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ. ನಗರದ ಗೋಕುಲಮ್ ರಸ್ತೆಯಲ್ಲಿರುವ ಪ್ರತಿಷ್ಠಿತ ಬಿಎಮïಎಲ್ ಮಾಲ್ ನಲ್ಲಿ ಬ್ಯಾಡ್ ನ್ಯೂಸ್ ಚಿತ್ರವು ಡಿಆರ್‍ಸಿ ಫಿಲಂಸ್ ನಲ್ಲಿ ರಿಲೀಸ್ ಆಗಿದ್ದು, ಫಿಲಂ ಪ್ರಾರಂಭದಲ್ಲಿ ಒಂದೇ ಮಾತರಂ ಹಾಡು ಬರುವಾಗ ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ.
3
+ ಘೋಷಣೆ ಕೂಗಿದ ನಂತರ ಪರ ವಿರೋ„ಗಳ ಮಾತಿನ ಚಕಮಕಿ ಜೋರಾಗಿ ನಡೆದಿದ್ದು, ಸ್ಥಳಕ್ಕೆ ಡಿಆರ್‍ಸಿ ಫಿಲಂ ಸೆಕ್ಯೂರಿಟಿ ಹಾಗೂ ಪೊಲೀಸರು ಮಧ್ಯಸ್ಥಿಕೆ ವಹಿಸಿ ಘೋಷಣೆ ಕೂಗಿದವರನ್ನು ವಶಕ್ಕೆ ಪಡೆದಿದ್ದಾರೆ.ಈ ಪ್ರಕರಣವು ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಇನ್‍ಸ್ಪೆಕ್ಟರ್‍ಕುಮಾರ್ ನೇತೃತ್ವದಲ್ಲಿ ವಿಚಾರಣೆ ಮುಂದುವರೆಯಲಿದೆ.
eesanje/url_46_67_1.txt ADDED
@@ -0,0 +1,4 @@
 
 
 
 
 
1
+ ಸೇನೆ ಬಂದಿದೆ ಉತ್ತರಿಸಿ: ಡಿಕೆಶಿಗೆ ಎಚ್‍ಡಿಕೆ ತಿರುಗೇಟು..
2
+ ಬೆಂಗಳೂರು, ಜು.22- ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದ ಸ್ಥಳದಲ್ಲಿ ಸೇನೆಯ 40ಕ್ಕೂ ಹೆಚ್ಚು ವೀರಯೋಧರು ಧಾವಿಸಿ, ರಕ್ಷಣಾ ಕಾರ್ಯಕ್ಕೆ ಮತ್ತಷ್ಟು ವೇಗ ನೀಡಿದ್ದಾರೆ. ಇದಕ್ಕೆ ಡಿಸಿಎಂ ಅವರ ಆಕ್ಷೇಪಣೆ ಇದೆಯಾ? ಈ ಬಗ್ಗೆ ಅವರೇ ಉತ್ತರಿಸಬೇಕು ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
3
+ ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಜಿಲ್ಲಾಡಳಿತ ರಕ್ಷಣಾ ಕಾರ್ಯ ಮಾಡುತ್ತಿಲ್ಲವೆಂದು ನಾನು ಹೇಳಿಲ್ಲ. ಸರ್ಕಾರವನ್ನೂ ಟೀಕಿಸಿಲ್ಲ. ಆದರೂ, ನೊಂದ ಕುಟುಂಬಗಳ ಕಣ್ಣೀರಿಗೆ ಓಗೊಟ್ಟು ವೀರಯೋಧರು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದಿದ್ದಾರೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ನಾನು ಎನ್ನುವುದು ಅಹಂಕಾರ, ನಾವು ಎನ್ನುವುದು ಸಂಸ್ಕಾರ. ಇಷ್ಟು ಸರಳ ಸಾಮರಸ್ಯ ತತ್ವವೂ ಡಿಸಿಎಂ ಆಗಿರುವ ವ್ಯಕ್ತಿಗೆ ತಿಳಿದಿಲ್ಲ ಎಂದರೆ, ಇದಕ್ಕಿಂತ ತಿಳಿಗೇಡಿತನ ಇನ್ನೊಂದಿಲ್ಲ ಎಂದು ಟೀಕಿಸಿದ್ದಾರೆ.
4
+ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು 7 ಜನ ಸಾವನ್ನಪ್ಪಿದ್ದ ಶಿರೂರು ಗ್ರಾಮಕ್ಕೆ ನಾನು ಶನಿವಾರ ಭೇಟಿ ನೀಡಿದಾಗ ಈ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದರು. ಮಿಲಿಟರಿಯನ್ನು ಕರೆತಂದು ಫೀಲ್ಡಿಗೆ ಇಳಿಸಬೇಕಾಗಿತ್ತು. ಅವರೊಬ್ಬರೇ ಬಂದು ಏನು ಮಾಡುತ್ತಾರೆ ಎಂದು ಲಘುವಾಗಿ ಮಾತನಾಡಿದ್ದರು. ಡಿಸಿಎಂ ಅವರು ನನ್ನ ಬಗ್ಗೆ ಲಘುವಾಗಿ ಮಾತನಾಡುವ ಭರದಲ್ಲಿ ನಮ್ಮ ಹೆಮ್ಮೆಯ ಸೇನೆಯನ್ನೂ ಹೀಗಳೆದಿದ್ದರು. ಇದು ದುರ್ದೈವದ ಸಂಗತಿ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
eesanje/url_46_67_10.txt ADDED
@@ -0,0 +1,4 @@
 
 
 
 
 
1
+ ಪಾಲಿಟೆಕ್ನಿಕ್ ಕಾಲೇಜು ಮಂಜೂರಿಗೆ ಸಮಿತಿ ರಚನೆ : ಸಚಿವ ಎಂ.ಸಿ.ಸುಧಾಕರ್
2
+ ಬೆಂಗಳೂರು,ಜು.22- ರಾಜ್ಯದಲ್ಲಿ ಪಾಲಿಟೆಕ್ನಿಕ್ ಕಾಲೇಜುಗಳನ್ನು ಅಗತ್ಯವಿರುವ ಕಡೆ ಪ್ರಾರಂಭಿಸುವ ಬಗ್ಗೆ ಸಮಿತಿಯನ್ನು ರಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಹೇಳಿದರು.ವಿಧಾನಪರಿಷತ್‍ನಲ್ಲಿ ಸದಸ್ಯ ಬಸನಗೌಡ ಬಾದರ್ಲಿ ಅವರು ರಾಯಚೂರು ಜಿಲ್ಲೆ ಸಿಂಧನೂರಿಗೆ ಮಂಜೂರಾಗಿದ್ದ ಪಾಲಿಟೆಕ್ನಿಕ್ ಕಾಲೇಜನ್ನು ಬೆಳಗಾವಿ ಜಿಲ್ಲೆ ಕಾಗವಾಡಕ್ಕೆ ಸ್ಥಳಾಂತರ ಮಾಡಲಾಗಿದೆ. ನಮ್ಮದು ಹಿಂದುಳಿದ ಪ್ರದೇಶದ ಏಕಿಂಥ ತಾರತಮ್ಯ ಎಂದು ಪ್ರಶ್ನೆ ಮಾಡಿದರು.
3
+ ಇದಕ್ಕೆ ಉತ್ತರಿಸಿದ ಸಚಿವ ಸುಧಾಕರ್, ಹಿಂದಿನ ಸರ್ಕಾರ ಅವೈಜ್ಞಾನಿಕವಾಗಿ ಪಾಲಿಟೆಕ್ನಿಕ್ ಕಾಲೇಜುಗಳನ್ನು ಮಂಜೂರು ಮಾಡಿದೆ. ಇದರಿಂದ ಸಿಗಬೇಕಾದ ಕಾಲೇಜುಗಳಿಗೆ ಸಿಕ್ಕಿಲ್ಲ. ಹೀಗಾಗಿ ಸಮಿತಿ ರಚನೆ ಮಾಡಲಾಗಿದೆ.
4
+ ಈ ವರದಿ ಬಂದ ನಂತರ ಕಾಲೇಜುಗಳಿಗೆ ಪಾಲಿಟೆಕ್ನಿಕ್ ಮಂಜೂರು ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದರು.ಅನುದಾನಿತ ಕಾಲೇಜುಗಳಿಗೆ ಪಾಲಿಟೆಕ್ನಿಕ್ ಕಾಲೇಜು ಅವಶ್ಯಕತೆ ಇದೆ ಎಂಬುದನ್ನು ಸಮಿತಿ ಅಧ್ಯಯನ ನಡೆಸಿ ವರದಿ ನೀಡುತ್ತದೆ. ಈ ವರದಿ ಬಂದ ನಂತರ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.
eesanje/url_46_67_11.txt ADDED
@@ -0,0 +1,6 @@
 
 
 
 
 
 
 
1
+ 14 ಲಕ್ಷ ಅಕ್ರಮ ಸಕ್ರಮ ಅರ್ಜಿಗಳು ಬಂದಿದ್ದು, ಶೇ.95ರಷ್ಟ ವಿಲೇವಾರಿ : ಸಚಿವ ಕೃಷ್ಣಭೈರೇಗೌಡ
2
+ ಬೆಂಗಳೂರು,ಜು.22- ಅಕ್ರಮ ಸಕ್ರಮ ಯೋಜನೆಯ 94 ಸಿ ಮತ್ತು 94 ಸಿಸಿ ಅಡಿ 14 ಲಕ್ಷ ಅರ್ಜಿಗಳು ಬಂದಿದ್ದು, ಶೇ.95ರಷ್ಟನ್ನು ವಿಲೇವಾರಿ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.ವಿಧಾನಸಭೆಯ ಪರಶ್ನೋತ್ತರದ ಅವಧಿಯಲ್ಲಿ ಅಗರಿ ಬೊಮ್ಮನಹಳ್ಳಿಯ ಶಾಸಕ ನೇಮಿರಾಜ ನಾಯಕ್ ತಮ್ಮ ಕ್ಷೇತ್ರದಲ್ಲಿರುವ ಸರ್ಕಾರಿ ಜಮೀನುಗಳ ಬಗ್ಗೆ ತಪ್ಪು ಮಾಹಿತಿ ನೀಡಲಾಗಿದೆ.
3
+ ಅಕ್ರಮ ಸಕ್ರಮ ಯೋಜನೆಯಡಿ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ ನೀಡಬೇಕೆಂದು ಒತ್ತಾಯಿಸಿದಾಗ ಉತ್ತರಿಸಿದ ಸಚಿವರು, 2016ರಲ್ಲಿ ಸಿದ್ದರಾಮಯ್ಯನವರ ಸರ್ಕಾರ ಎರಡು ಬಾರಿ, ಹಿಂದಿನ ಬಿಜೆಪಿ ಸರ್ಕಾರ ಸೇರಿ 2023ರವರೆಗೂ ಏಳೆಂಟು ವರ್ಷಗಳ ಕಾಲ ಅಕ್ರಮ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.ಅಗರಿಬೊಮ್ಮನಹಳ್ಳಿಯಲ್ಲಿ 94 ಸಿ ಎರಡು, 94 ಸಿಸಿ ಅಡಿ 50ಕ್ಕೂ ಹೆಚ್ಚು ಅರ್ಜಿಗಳು ಬಾಕಿ ಉಳಿದಿವೆ. ಅರ್ಜಿ ಸಲ್ಲಿಸಿದ್ದರೆ ಮಾತ್ರ ಬಾಕಿ ಎಂದು ಪರಿಗಣಿಸಲಾಗುವುದು ಎಂದರು.
4
+ ಶಾಸಕರು ಪದೇ ಪದೇ ಮತ್ತೆ ಅರ್ಜಿಗಳನ್ನು ಆಹ್ವಾನಿಸುವಂತೆ ಒತ್ತಾಯಿಸಿದಾಗ ಮಧ್ಯಪ್ರವೇಶಿಸಿದ ಸಭಾಧ್ಯಕ್ಷರು, ಸರ್ಕಾರಿ ಜಾಗವನ್ನು ಬಡವರಿಂದ ಒತ್ತುವರಿ ಮಾಡಿಕೊಂಡು ಅದರಿಂದ ಲಾಭ ಮಾಡಿಕೊಳ್ಳಲು ರಿಯಲ್ ಎಸ್ಟೇಟ್ ವ್ಯವಹಾರದವರು ಲಾಭ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ. ಎಲ್ಲದಕ್ಕೂ ಅಧಿವೇಶನದಲ್ಲೇ ಉತ್ತರ ನೀಡಲಾಗುವುದಿಲ್ಲ ಎಂದು ತಿಳಿ ಹೇಳಿದರು.
5
+ ಸಚಿವ ಕೃಷ್ಣಭೈರೇಗೌಡ ಅಗರಿಬೊಮ್ಮನಹಳ್ಳಿಯಲ್ಲಿ 70 ಸಾವಿರಕ್ಕೂ ಹೆಚ್ಚು ಎಕರೆ ಸರ್ಕಾರಿ ಭೂಮಿ ಇತ್ತು ಎಂದು ಶಾಸಕರು ಹೇಳುತ್ತಿದ್ದಾರೆ. ಆದರೆ ಹಂಚಿಕೆ ಮಾಡಿ ಈಗ ಉಳಿದಿರುವುದು 38 ಸಾವಿರ ಮಾತ್ರ. ರಾಜ್ಯ ಸರ್ಕಾರ, ಸರ್ಕಾರಿ ಜಮೀನುಗಳನ್ನು ಗುರುತಿಸಿ, ನಿಗಾವಹಿಸಿ ಸಂರಕ್ಷಿಸಲು ಆನ್‍ಲೈನ್ ಆಪ್ ವ್ಯವಸ್ಥೆ ಮಾಡಿದೆ. ಅದರ ಅನುಸಾರ 14.5 ಲಕ್ಷ ಜಾಗದಲ್ಲಿ ಸರ್ಕಾರಿ ಭೂಮಿ ಗುರುತಿಸಲಾಗಿದೆ. ಅವುಗಳಲ್ಲಿ ಲ್ಯಾಂಡ್ ಬೀಟ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಆಪ್‍ನಲ್ಲಿ ಭೂಮಿಯ ಸರ್ವೇ ನಂಬರ್ ಮತ್ತು ಆಕಾರ್ ಹಾಗೂ ನಕ್ಷೆಯ ವಿರಗಳಿರುತ್ತವೆ.
6
+ ಕಂದಾಯ ಅಧಿಕಾರಿಗಳು ನಕ್ಷೆ ಆಧರಿಸಿ ಸರ್ಕಾರಿ ಭೂಮಿಯಲ್ಲಿ ನಡೆದು, ಒತ್ತುವರಿಯಾಗಿದೆ ಎಂದು ಗುರುತಿಸಿ ತಹಸೀಲ್ದಾರ್‍ಗೆ ವರದಿ ಮಾಡಬೇಕು. ಒತ್ತುವರಿಯಾಗಿದ್ದರೆ ಅದನ್ನು ತಕ್ಷಣವೇ ತೆರವು ಮಾಡಿ ಬೇಲಿ ಹಾಕಿ ಸಂರಕ್ಷಿಸಬೇಕು ಎಂದು ಸೂಚಿಸಿರುವುದಾಗಿ ತಿಳಿಸಿದರು. ಸ್ಮಶಾನ ಸೇರಿದಂತೆ ಇತರ ಭೂಮಿಯನ್ನು ಸಂರಕ್ಷಿಸುವ ಉಸ್ತುವಾರಿಯನ್ನು ಸರ್ಕಾರವೇ ನಿಗಾವಹಿಸುತ್ತಿದೆ ಎಂದು ಹೇಳಿದರು.
eesanje/url_46_67_12.txt ADDED
@@ -0,0 +1,9 @@
 
 
 
 
 
 
 
 
 
 
1
+ ವಿಧಾನಸಭೆ: ಧರಣಿಯನ್ನು ಹಿಂಪಡೆದ ಪ್ರತಿಪಕ್ಷಗಳು
2
+ ಬೆಂಗಳೂರು, ಜು.22- ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಕಳೆದ ಗುರುವಾರದಿಂದ ವಿಧಾನಸಭೆಯಲ್ಲಿ ನಡೆಸುತ್ತಿದ್ದ ಧರಣಿಯನ್ನು ಪ್ರತಿಪಕ್ಷಗಳು ಇಂದು ವಾಪಸ್ಸು ಪಡೆದವು.
3
+ ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡ ಕೂಡಲೇ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಗಿಳಿದು ಧರಣಿ ಮುಂದುವರೆಸಿದರು. ಈ ಸಂದರ್ಭದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಶುಕ್ರವಾರ ಸದನಕ್ಕೆ ಸಕಾಲಕ್ಕೆ ಆಗಮಿಸಿದ ಶಾಸಕರ ಹೆಸರನ್ನು ವಾಚಿಸಿದರು.
4
+ ಮುಖ್ಯಮಂತ್ರಿಯವರು ಗುರುವಾರ ಉತ್ತರ ನೀಡುವಾಗ ನೀವು ಧರಣಿ ಆರಂಭಿಸಿದ್ದೀರಿ. ಈಗಾಗಲೇ ನೀವು ಪ್ರಸ್ತಾಪ ಮಾಡಿದ ವಿಚಾರದ ಬಗ್ಗೆ ಮುಖ್ಯಮಂತ್ರಿ ಉತ್ತರ ಕೊಟ್ಟಿದ್ದಾರೆ. ಸದನದ ಕಾರ್ಯಕಲಾಪಗಳ ಪಟ್ಟಿಯಲ್ಲಿ ಪ್ರಶ್ನೋತ್ತರ, ಗಮನ ಸೆಳೆಯುವ ಸೂಚನೆ, ಸಾರ್ವಜನಿಕ ಮಹತ್ವದ ವಿಚಾರಗಳಿವೆ. ಇಂದು ಗಮನ ಸೆಳೆಯುವ ಸೂಚನಗೆ ಆದ್ಯತೆ ಕೊಡಲಾಗಿದೆ. ಧರಣಿ ವಾಪಸ್ ಪಡೆದ ಸುಗಮ ಕಲಾಪ ನಡೆಸಲು ಸಹಕಾರ ನೀಡುವಂತೆ ಕೋರಿದರು.
5
+ ಆಗ ವಿರೋಧಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿದೆ. ಆ ಹಣ ಮರಳಿ ಖಜಾನೆಗೆ ಬರಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಈ ವಿಚಾರವನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯಬೇಕು ಎಂಬ ಉದ್ದೇಶದಿಂದ ಸದನದ ಹೊರಗೆ ಹೋರಾಟ ಮಾಡಿದ್ದೇವೆ. ಮುಖ್ಯಮಂತ್ರಿಯವರು ವಾಲ್ಮೀಕಿ ನಿಗಮದ ಹಗರಣ ಬಿಟ್ಟು ಉಳಿದೆಲ್ಲಾ ವಿಚಾರಕ್ಕೂ ಉತ್ತರ ಕೊಟ್ಟಿದ್ದಾರೆ. ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಹೋರಾಟ ಮಾಡಿದ್ದೇವೆ. ಧರಣಿಯ ನಡುವೆ ಶುಕ್ರವಾರ ಸದನದಲ್ಲಿ ಮಾತನಾಡಿದ ವಿಚಾರವನ್ನು ಪತ್ರಿಕೆಗಳಲ್ಲಿ ಜಾಹೀರಾತು ನೀಡಲಾಗಿದೆ. ಇದು ಸದನಕ್ಕೆ ಅಗೌರವ ತರುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
6
+ ಮಳೆಯ ಅನಾಹುತದ ವಿಚಾರದ ಬಗ್ಗೆ ಹೆಚ್ಚು ಚರ್ಚೆಯಾಗಬೇಕಿತ್ತು. ಶುಕ್ರವಾರ ನಾವು ಧರಣಿಯಲ್ಲಿದ್ದೆವು. ನೀವು ಆ ವಿಚಾರದ ಚರ್ಚೆಗೆ ಅವಕಾಶ ಮಾಡಿಕೊಟ್ಟಿರಿ ಎಂದಾಗ ಆಡಳಿತ ಪಕ್ಷದ ಕೋನರೆಡ್ಡಿ, ಸಿಎಂ ರಾಜೀನಾಮೆ ಏಕೆ ಕೊಡಬೇಕು ಎಂದು ಆಕ್ಷೇಪ ಎತ್ತಿದರು.
7
+ ಇದಕ್ಕೆ ವಸತಿ ಸಚಿವ ಜಮೀರ್ ಅಹಮ್ಮದ್ ಧ್ವನಿಗೂಡಿಸಿ ಮಾತನಾಡಿದರು. ಮತ್ತೆ ಮಾತು ಮುಂದುವರೆಸಿದ ಆರ್.ಅಶೋಕ್ ಮಳೆಹಾನಿ ಪೀಡಿತ ಪ್ರದೇಶಗಳಿಗೆ ನಾನು ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಸೇರಿ ಹಲವರು ಭೇಟಿ ನೀಡಿದ್ದೇವೆ. ರಾಜ್ಯದಲ್ಲಿ ಡೆಂೀ ಹಾವಳಿ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಡೆಂಗ್ಯೂ ಮರಣಮೃದಂಗ ಭಾರಿಸುತ್ತಿದೆ. ಮುಡಾ ಹಗರಣ ತೆಗೆದುಕೊಳ್ಳಬೇಕು. ನಿಯಮ 69ರಡಿ ಸಾರ್ವಜನಿಕ ಮಹತ್ವದ ವಿಚಾರ ಚರ್ಚೆ���ಾಗಬೇಕು.
8
+ ಶೂನ್ಯ ವೇಳೆ ಈ ಎಲ್ಲಾ ವಿಚಾರಗಳ ಬಗ್ಗೆ ಚರ್ಚಿಸುವ ಉದ್ದೇಶದಿಂದ ಸಭಾಧ್ಯಕ್ಷರ ವಿನಂತಿ ಮೇರೆಗೆ ಧರಣಿಯನ್ನು ವಾಪಸ್ ಪಡೆಯುತ್ತೇವೆ. ಆದರೆ ಮುಖ್ಯಮಂತ್ರಿ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮಾಡುತ್ತೇವೆ ಎಂದು ಹೇಳಿ ತಮ್ಮ ಸ್ವಸ್ಥಾನಗಳತ್ತ ತೆರಳಿ, ನಂತರ ಸದನದಿಂದ ಹೊರನಡೆದರು.
9
+ ಬಿಜೆಪಿಯ ಶಾಸಕ ಸುನಿಲ್‍ಕುಮಾರ್ ಮಾತ್ರ ಪ್ರಶ್ನೋತ್ತರ ಕಲಾಪದಲ್ಲಿ ಪಾಲ್ಗೊಂಡು ಪ್ರಶ್ನೆ ಕೇಳಿದರು.ಕಾಂಗ್ರೆಸ್‍ನ ನಯನಾ ಮೋಟಮ್ಮ ಅವರು ತಾವು ನೀಡಿರುವ ನಿಯಮ 69 ರ ಸೂಚನೆಯ ಬಗ್ಗೆ ಚರ್ಚಿಸಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಬಿಜೆಪಿ-ಜೆಡಿಎಸ್ ಶಾಸಕರು ಸದನದಿಂದ ಹೊರಹೋಗುತ್ತಿರುವುದನ್ನು ಗಮನಿಸಿದ ಆಡಳಿತ ಪಕ್ಷದ ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು.ಇದ್ಯಾವುದಕ್ಕೂ ಕಿವಿಗೊಡದ ಸಭಾಧ್ಯಕ್ಷರ ಪ್ರಶ್ನೋತ್ತರ ಕಲಾಪಕ್ಕೆ ಅನುವು ಮಾಡಿಕೊಟ್ಟರು.
eesanje/url_46_67_2.txt ADDED
@@ -0,0 +1,9 @@
 
 
 
 
 
 
 
 
 
 
1
+ ಕೆಲಸದ ಅವಧಿ ವಿಸ್ತರಣೆಗೆ ಐಟಿ-ಬಿಟಿ ಉದ್ಯೋಗಿಗಳ ಆಕ್ಷೇಪ
2
+ ಬೆಂಗಳೂರು,ಜು.22- ಖಾಸಗಿ ಸಂಸ್ಥೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವ ಮಸೂದೆ ಮಂಡನೆಗೆ ಸಿದ್ದತೆ ನಡೆಸಿರುವ ರಾಜ್ಯ ಸರ್ಕಾರ ಇದೀಗ, ಐಟಿ- ಬಿಟಿ ಉದ್ಯೋಗಗಳಿಗೆ ಕೆಲಸದ ಅವಧಿಯನ್ನು 12ರಿಂದ 14 ಗಂಟೆಗೆ ವಿಸ್ತರಿಸುವ ಕುರಿತು ತಿದ್ದುಪಡಿ ತರಲು ಮುಂದಾಗಿದೆ. ಆದರೆ ಸರ್ಕಾರದ ಈ ಕ್ರಮಕ್ಕೆ ಕಾರ್ಮಿಕ ವಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
3
+ ರಾಜ್ಯ ಸರ್ಕಾರವು ಕರ್ನಾಟಕ ಶಾಪ್ಸ್ ಆ್ಯಂಡ್ ಎಶ್ಟಾಬ್ಲಿಶ್‍ಮೆಂಟ್ ಆ್ಯಕ್ಟ್‍ಗೆ ತಿದ್ದುಪಡಿ ತಂದು, ರಾಜ್ಯದಲ್ಲಿ ಐಟಿ, ಐಟಿ ಆಧಾರಿತ ಸೇವೆಗಳು ಹಾಗೂ ಬಿಪಿಒಗಳ ಕೆಲಸದ ಅವ„ಯನ್ನು 12ರಿಂದ 14 ತಾಸುಗಳಿಗೆ ಹೆಚ್ಚಿಸುವ ಪ್ರಸ್ತಾಪ ಇಟ್ಟುಕೊಂಡಿದೆ. ಶೀಘ್ರದಲ್ಲೇ ಅಧಿವೇಶನದಲ್ಲಿ ಈ ಕುರಿತು ವಿಧೇಯಕ ಮಂಡಿಸಿ, ಕಾಯ್ದೆಗೆ ತಿದ್ದುಪಡಿ ತರುವ ಉದ್ದೇಶವಿದೆ ಎಂದು ಮೂಲಗಳು ತಿಳಿಸಿವೆ.
4
+ ಐಟಿ ಕ್ಷೇತ್ರದ ಉತ್ತೇಜನಕ್ಕಾಗಿ ರಾಜ್ಯ ಸರ್ಕಾರ ಇಂತಹ ಪ್ರಸ್ತಾಪ ಹೊಂದಿದೆ ಎಂದು ಹೇಳಲಾಗಿದೆ. ಈ ತಿದ್ದುಪಡಿಯಲ್ಲಿ ಐಟಿ ಕಂಪನಿಗಳು ದಿನಕ್ಕೆ 14 ಗಂಟೆ ಕಾರ್ಯನಿರ್ವಹಿಸುವ (12 ಗಂಟೆ ಕೆಲಸ ಹಾಗೂ 2 ಗಂಟೆ ಹೆಚ್ಚುವರಿ ಕೆಲಸ) ಪ್ರಸ್ತಾಪವನ್ನು ಸೇರಿಸಲು ಉದ್ದೇಶಿಸಿದೆ. ಪ್ರಸ್ತುತ ಕಾರ್ಮಿಕ ಕಾನೂನಿನ ಅನ್ವಯ ಹೆಚ್ಚುವರಿ ಒಂದು ಗಂಟೆ ಒಳಗೊಂಡು 9 ಗಂಟೆಗಳ ಕಾಲ ಕೆಲಸ ನಿರ್ವಹಿಸಲು ಅನುಮತಿಸಲಾಗಿದೆ.
5
+ ಐಟಿ ವಲಯದ ನೂತನ ಪ್ರಸ್ತಾಪವು, ಐಟಿ/ಐಟಿಇಎಸ್/ಬಿಪಿಒ ವಲಯಗಳಲ್ಲಿ ದಿನಕ್ಕೆ 12 ಗಂಟೆಗಳಿಗೂ ಹೆಚ್ಚು ಸಮಯ ಹಾಗೂ ನಿರಂತರ ಮೂರು ನಿರಂತರ ತಿಂಗಳುಗಳಲ್ಲಿ 125 ಗಂಟೆಗಳು ಮೀರಬಾರದು ಎಂದು ತಿಳಿಸಲಾಗಿದೆ. ಐಟಿ ಕಂಪನಿಗಳ ಪ್ರಸ್ತಾಪದ ಬಗ್ಗೆ ರಾಜ್ಯ ಸರ್ಕಾರ ಚರ್ಚಿಸಿ ಶೀಘ್ರದಲ್ಲೇ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಈ ಪ್ರಸ್ತಾಪವು ಸಂಪುಟದಲ್ಲಿ ಚರ್ಚೆಯಾಗುವ ಸಂಭವವಿದೆ.
6
+ ತೀವ್ರ ವಿರೋಧ:ಸರ್ಕಾರದ ತೀರ್ಮಾನಕ್ಕೆ ಕರ್ನಾಟಕ ರಾಜ್ಯ ಐಟಿ, ಐಟಿ ಆಧಾರಿತ ಸೇವೆಗಳ ಉದ್ಯೋಗಿಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ಐಟಿ ಕಂಪನಿಗಳ 14 ಗಂಟೆ ಕೆಲಸದ ಪ್ರಸ್ತಾಪಕ್ಕೆ ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ಉದ್ಯೋಗಿಗಳ ಸಂಘ(ಕೆಐಟಿಯು) ಭಾರೀ ವಿರೋಧ ವ್ಯಕ್ತಪಡಿಸಿದೆ. ಈ ತಿದ್ದುಪಡಿಯು ಪ್ರಸ್ತುತ ಮೂರು ಪಾಳಿಗಳಲ್ಲಿರುವ ಪದ್ಧತಿಯ ಬದಲಿಗೆ ಎರಡು ಪದ್ಧತಿಯನ್ನು ಅನುಮತಿಸುವುದಾಗಿದೆ. ಇದರಿಂದ ಮೂರನೇ ಒಂದು ಭಾಗದಷ್ಟು ಕಾರ್ಮಿಕರನ್ನು ವಜಾಗೊಳಿಸುವ ಹುನ್ನಾರ ವಾಗಿದೆ ಎಂದು ಕೆಐಟಿಯು ತಿಳಿಸಿದೆ.
7
+ ಕೆಸಿಸಿಐ ವರದಿಯ ಪ್ರಕಾರ ಐಟಿ ವಲಯದ ಶೇ.45ರಷ್ಟು ಉದ್ಯೋಗಿಗಳು ಒತ್ತಡದಂತ ಮಾನಸಿಕ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಶೇ.55ರಷ್ಟು ಮಂದಿ ದೈಹಿಕ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಈಗ ಜಾರಿಗೆ ತರಲು ಹೊರಟಿರುವ ತಿದ್ದುಪಡಿ ಉದ್ಯೋಗಿಗಳನ್ನು ಮತ್ತಷ್ಟು ಆಘಾತಕ್ಕೆ ದೂಡುತ್ತದೆ ಎಂದ�� ಕೆಐಟಿಯು ತಿಳಿಸಿದೆ.
8
+ ಐಟಿ ಉದ್ಯೋಗಿಗಳ ಕೆಲಸವನ್ನು ನಾಲ್ಕು ಗಂಟೆ ಹೆಚ್ಚಿಸುವುದರಿಂದ ನೌಕರರ ಖಾಸಗಿ ಹಾಗೂ ವೃತ್ತಿ ಜೀವನದ ಮೇಲೆ ಭಾರಿ ಪರಿಣಾಮ ಬೀರಲಿದೆ. ಉದ್ಯೋಗಿಗಳು ವೃತ್ತಿ ಮಾಡುವ ಬದಲು ಮಷೀನ್‍ಗಳಾಗಿ ಬದಲಾಗುತ್ತಾರೆ. ಅವರ ಆರೋಗ್ಯದ ಮೇಲೂ ನಕಾರಾತ್ಮಕ ಪರಿಣಾಮ ಬೀರಲಿದೆ. ಹಾಗಾಗಿ, ರಾಜ್ಯ ಸರ್ಕಾರವು ಪ್ರಸ್ತಾಪವನ್ನು ಪರಿಷ್ಕರಿಸಬೇಕು ಎಂದು ಒಕ್ಕೂಟ ಆಗ್ರಹಿಸಿದೆ.
9
+ ಸಾಮಾಜಿಕ ಜಾಲತಾಣಗಳಲ್ಲೂ ಈ ಕುರಿತು ವಿರೋಧ ವ್‍ಯಕ್ತವಾಗುತ್ತಿದೆ. ಐಟಿ ಕ್ಷೇತ್ರಗಳಲ್ಲಿ ಕೆಲಸ ಮಾಡುವವರು ಈಗಾಗಲೇ ಒತ್ತಡ, ಬಿಪಿ, ಶುಗರ್ ಸೇರಿ ಹಲವು ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಈಗ 14 ಗಂಟೆಗೆ ನೌಕರರ ಕೆಲಸದ ಅವಧಿಯನ್ನು ಹೆಚ್ಚಿಸಿದರೆ ನೌಕರರು ಹಣಕ್ಕಿಂತ ಹೆಚ್ಚು ಕಾಯಿಲೆಗಳನ್ನು ಗಳಿಸುತ್ತಾರೆ ಎಂಬುದಾಗಿ ಜನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
eesanje/url_46_67_3.txt ADDED
@@ -0,0 +1,5 @@
 
 
 
 
 
 
1
+ ಸಂಚಾರ ನಿಯಮ ಉಲ್ಲಂಘನೆ 748 ಪ್ರಕರಣ ದಾಖಲು 3.78 ಲಕ್ಷ ದಂಡ ಸಂಗ್ರಹ
2
+ ಬೆಂಗಳೂರು,ಜು.22- ಸಂಚಾರ ಉಲ್ಲಂಘನೆ ಮಾಡುವ ವಾಹನ ಸವಾರರು, ಚಾಲಕರ ವಿರುದ್ಧ ಉತ್ತರ ವಿಭಾಗದ ಸಂಚಾರಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ಒಟ್ಟು 748 ಪ್ರಕರಣಗಳನ್ನು ದಾಖಲಿಸಿ 3.78 ಲಕ್ಷ ರೂ. ದಂಡ ಸಂಗ್ರಹಿಸಿದ್ದಾರೆ.
3
+ ಜು.14 ರಿಂದ 20 ರವರೆಗೆ ನಡೆಸಿದ ಕಾರ್ಯಾಚರಣೆಯ ವೇಳೆ ಏಕಮುಖ ಸಂಚಾರವಿದ್ದರೂ ವಿರುದ್ಧ ದಿಕ್ಕಿನಿಂದ ಸಂಚಾರ, ಪ್ರಕಾಶಮಾನವಾದ ಹೆಡ್‍ಲೈಟ್, ನಂಬರ್‍ಪ್ಲೇಟ್ ಡಿಫಕ್ಟ್, ನೋ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲುಗಡೆ, ಆಟೋ ಚಾಲಕರು ಸಮವಸ ಧರಿಸದಿರುವುದು, ಪುಟ್‍ಪಾತ್‍ನಲ್ಲಿ ಪಾರ್ಕಿಂಗ್ ಸೇರಿದಂತೆ ವಿವಿಧ ಸಂಚಾರ ನಿಯಮ ಉಲ್ಲಂಸಿರುವುದು ಕಂಡುಬಂದಿದೆ.
4
+ ಒಂದು ವಾರದ ಕಾರ್ಯಾಚರಣೆಯಲ್ಲಿ ಸಂಚಾರ ಉಲ್ಲಂಘನೆ ಮಾಡಿದ ಒಟ್ಟು 748 ಪ್ರಕರಣಗಳನ್ನು ದಾಖಲಿಸಿ 3,78,900 ರೂ. ದಂಡ ಸಂಗ್ರಹಿಸ ಲಾಗಿದೆ. ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಹಾಗೂ ಸಂಚಾರ ನಿಯಮಗಳ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು.
5
+ ಮುಂದಿನ ದಿನಗಳಲ್ಲಿಯೂ ಕಾರ್ಯಾಚರಣೆ ಮುಂದುವರೆ ಯಲಿದೆ ಎಂದು ಉತ್ತರ ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಸಿರಿಗೌಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
eesanje/url_46_67_4.txt ADDED
@@ -0,0 +1,8 @@
 
 
 
 
 
 
 
 
 
1
+ ಉತ್ತರ ಕರ್ನಾಟಕಕ್ಕೀಗ ಜಲ ಕಂಟಕ
2
+ ಬೆಳಗಾವಿ,ಜು.22- ಪಶ್ಚಿಮ ಘಟ್ಟ ತೀರವಾದ ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕದ ಬೆಳಗಾವಿ ಇತರೆ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ನದಿ, ಹಳ್ಳ-ಕೊಳ್ಳ, ಜಲಾಶಯಗಳು ತುಂಬಿ ಹರಿಯುತ್ತಿರುವ ಪರಿಣಾಮ ಪ್ರವಾಹದ ಭೀತಿ ಎದುರಾಗಿದೆ. ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದ್ದು, ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಗ್ರಾಮಗಳ ಹೊಲ ಗದ್ದೆಗಳು ಜಲಾವೃತವಾಗಿವೆ. ನದಿಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಹಲವರನ್ನು ಸ್ಥಳಾಂತರ ಮಾಡಲಾಗುತ್ತಿದೆ.
3
+ ಘಟಪ್ರಭಾ ನದಿಗೆ ಜಲಾಶಯದಿಂದ 30,000 ಕ್ಯೂಸೆಕ್ ನೀರು ಬಿಡಲಾಗಿದೆ. ಮಲಪ್ರಭಾ ನದಿಗೆ 15,000 ಕ್ಯೂಸೆಕ್ ನೀರು ಬಿಡಲಾಗಿದೆ. ಇದರಿಂದಾಗಿ ಬೆಳಗಾವಿ ಸಹಿತ ಬಾಗಲಕೋಟೆ, ಬಿಜಾಪುರ, ಧಾರವಾಡ ಜಿಲ್ಲೆಗಳ ನದಿ ತೀರದ ಗ್ರಾಮಗಳು ಮುಳುಗಡೆಯಾಗುವ ಆತಂಕ ಎದುರಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ 17 ಸೇತುವೆಗಳು ಸಂಪೂರ್ಣ ಮುಳುಗಡೆಯಾಗಿದ್ದು, 34 ಗ್ರಾಮಗಳ ಸಂಪರ್ಕ ಕಡಿತಗೊಂಡಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ.ಜಿಲ್ಲೆಯ ಚಿಕ್ಕೋಡಿ, ಖಾನಾಪುರ, ಮೂಡಲಗಿ, ಗೋಕಾಕ್, ನಿಪ್ಪಾಣಿ ತಾಲೂಕಿನ ಸೇತುವೆಗಳು ಸಂಪೂರ್ಣ ಜಲಾವೃತಗೊಂಡಿವೆ. ಇದರಿಂದಾಗಿ ಗ್ರಾಮಗಳಿಗೆ ನೀರು ನುಗ್ಗುತ್ತಿದ್ದು, ಪ್ರವಾಹ ಭೀತಿ ಆರಂಭವಾಗಿದೆ.
4
+ ಜಿಲ್ಲೆಯಲ್ಲಿ ಇನ್ನೂ ಎರಡು-ಮೂರು ದಿನ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಸಂಭಾವ್ಯ ಅನಾಹುತಗಳನ್ನು ತಪ್ಪಿಸಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
5
+ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಎಸ್ಪಿ ಡಾ. ಭೀಮಾಶಂಕರ ಗುಳೇದ ಜಿಲ್ಲಾಯಲ್ಲಿ ಮಿಂಚಿನ ಸಂಚಾರ ಕೈಗೊಂಡಿದ್ದು, ಮಳೆ ಬಾಧಿತ ಖಾನಾಪುರ, ಚಿಕ್ಕೋಡಿ, ಅಥಣಿ, ರಾಯಭಾಗ ತಾಲೂಕಿನ ನದಿ ತೀರದ ಪ್ರದೇಶಗಳಿಗೆ ಭೇಟಿ ನೀಡಿದರು.
6
+ ನೀರಿನಿಂದಾವೃತ ಕಾಡುವಾಸಿಗಳ ಅನುಕೂಲಕ್ಕೆ ತತ್‍ಕ್ಷಣ ಅಗತ್ಯ ಸೇವೆಗಳಾದ ಮೆಡಿಕಲ್ ಕಿಟï, ಹಾಲಿನ ಪುಡಿ, ಕ್ಯಾಂಡಲï, ಮ್ಯಾಚ್‍ಬಾಕ್ಸ್ ಸಹಿತ ಅಗತ್ಯ ಸಹಾಯ ಒದಗಿಸಲು ಜಿಲ್ಲಾಡಳಿತ ಕ್ರಮ ವಹಿಸಿದೆ. ಮಳೆ ಪ್ರಮಾಣ ಮುಂದುವರೆದಿದ್ದು ಜನಜೀವನ, ಉದ್ಯೋಗ ವ್ಯಾಪಾರ ತೀವ್ರ ಕ್ಷೀಣಿಸಿದೆ. ಕಾರವಾರ, ಕರಾವಳಿ, ಮಲೆನಾಡು, ಕೊಡಗು, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದೆ.
7
+ ಕಾರವಾರ ಜಿಲ್ಲೆ ಅಂಕೋಲಾ ತಾಲ್ಲೂಕಿನ ಶಿರೂರಿನ ಬಳಿ ಗುಡ್ಡ ಕುಸಿದು 10 ಜನ ಮಣ್ಣಿನಡಿ ಸಿಲುಕಿಕೊಂಡಿದ್ದು, 7 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಎನ್‍ಡಿಆರ್‍ಎ-ï, ಎಸ್‍ಪಿಆರ್‍ಎ-ï ತಂಡದೊಂದಿಗೆ ಸೇನಾ ಸಿಬ್ಬಂದಿ ಕೂಡ ಕಾರ್ಯಾಚರಣೆಗೆ ಕೈಜ���ಡಿಸಿದ್ದಾರೆ. ನಿರಂತರ ಮಳೆಯ ನಡುವೆಯೂ ಕಾರ್ಯಾಚರಣೆ ಮುಂದುವರೆದಿದೆ.
8
+ ಕಾವೇರಿ ಜಲಾನಯನ ಪ್ರದೇಶದಲ್ಲಿ ಅಬ್ಬರದ ಮಳೆಗೆ ಜಲಾನಯನ ಪ್ರದೇಶದ ಜಲಾಶಯಗಳು ಭರ್ತಿಯಾಗಿವೆ. ಭದ್ರಾ, ತುಂಗಾ, ತುಂಗಾಭದ್ರಾ ಜಲಾಶಯಗಳು ಕೂಡ ಭರ್ತಿ ಹಂತದಲ್ಲಿವೆ. ಜಲಾಶಯಗಳಿಂದ ಅಪಾರ ಪ್ರಮಾಣದಲ್ಲಿ ನದಿಗೆ ನೀರನ್ನು ಹೊರಬಿಡಲಾಗುತ್ತಿದೆ. ಹಲವೆಡೆ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.ಕೆಲವೆಡೆ ಮಳೆ ತಗ್ಗಿದ್ದರೂ ಜಲಾಶಯಗಳಿಂದ ಭಾರಿ ಪ್ರಮಾಣದಲ್ಲಿ ನೀರನ್ನು ಹೊರಬಿಡುತ್ತಿರುವುದರಿಂದ ಪ್ರವಾಹದ ಭೀತಿ ಎದುರಾಗಿದೆ. ಜಲಾಶಯಗಳು, ಜಲಪಾತಗಳನ್ನು ನೋಡಲು ಪ್ರವಾಸಿಗರ ದಂಡು ಹರಿದುಬರುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹಲವೆಡೆ ಪ್ರವಾಸಿಗರ ವೀಕ್ಷಣೆಗೆ ನಿಬರ್ಂಧ ವಿ„ಸಲಾಗಿದೆ.
eesanje/url_46_67_5.txt ADDED
@@ -0,0 +1,6 @@
 
 
 
 
 
 
 
1
+ ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿದೆ ನಕಲಿ ವೈದ್ಯರ ಹಾವಳಿ
2
+ ಬೆಂಗಳೂರು,ಜು.22- ರಾಜ್ಯದಲ್ಲಿ ದಿನದಿಂದ ದಿನಕ್ಕೆ ನಕಲಿ ವೈದ್ಯರ ಹಾವಳಿ ಹೆಚ್ಚಾಗುತ್ತಿದ್ದು, ಅಂಥವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಿ ಜೈಲಿಗಟ್ಟುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಸಿದ್ದಾರೆ.
3
+ ವಿಧಾನಪರಿಷತ್‍ನ ಪ್ರಶ್ನೋತ್ತರದಲ್ಲಿ ಸದಸ್ಯ ತಿಪ್ಪಣ್ಣ ಕನಕನೂರು ಅವರು ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗುತ್ತಿದೆ. ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದರು.ಆಗ ದಿನೇಶ್ ಗುಂಡೂರಾವ್ ರಾಜ್ಯದಲ್ಲಿ ನಕಲಿ ವೈದ್ಯರು ಹೆಚ್ಚಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇದು ಅತ್ಯಂತ ಗಾಬರಿ ಪಡುವ ವಿಷಯವೂ ಹೌದು. ಇದನ್ನು ನಿಯಂತ್ರಿಸುವುದು ಸರ್ಕಾರದ ಜವಾಬ್ದಾರಿ ಎಂದರು.
4
+ ನಕಲಿ ವೈದ್ಯರನ್ನು ಬಂಧಿಸಿದಾಗ ಇಲ್ಲವೇ ಅವರ ಮೇಲೆ ಕ್ರಮ ಜರುಗಿಸಿದಾಗ ನಮ್ಮ ಜನಪ್ರತಿನಿಧಿಗಳು ನಮ್ಮ ಮೇಲೆ ಒತ್ತಡ ಹಾಕುತ್ತಾರೆ. ಆರ್ಯುವೇದಿಕ್, ಅಲೋಪತಿ ಮತ್ತು ಪಾರಂಪರಿಕ ಕ್ಲಿನಿಕ್ ನಡೆಸುವವರ ಮೇಲೆ ಕ್ರಮ ಕೈಗೊಳ್ಳಲು ಮುಂದಾದರೆ ನಮಗೆ ಒತ್ತಡ ಬರುತ್ತವೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.
5
+ ಇಂತಹ ನಕಲಿ ವೈದ್ಯರ ವಿರುದ್ಧ ಬಿಗಿಯಾದ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇದರ ವಿರುದ್ಧ ದಾಖಲಿಸಿ ನಂತರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗೆ ಹಾಕುತ್ತೇವೆ ಎಂದು ವಿವರಿಸಿದರು.ಅಲೋಪತಿ ನಡೆಸುತ್ತಿರುವವರು ಆಸ್ಪತ್ರೆ ಮುಂಭಾಗ, ಬ್ಲೂ ಕಲರ್ ಮತ್ತು ಆರ್ಯುವೇದ ಆಸ್ಪತ್ರೆ ನಡೆಸುತ್ತಿರುವವರು ಗ್ರೀನ್ ಕಲರ್ ಬೋರ್ಡ್‍ಗಳನ್ನು ಕಡ್ಡಾಯವಾಗಿ ಅಳವಡಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಇದರಿಂದ ನಕಲಿ ವೈದ್ಯರನ್ನು ಪತ್ತೆಹಚ್ಚಲು ಅನುಕೂಲವಾಗುತ್ತದೆ. ಇಂಥವರ ಬಗ್ಗೆ ವಿಶೇಷ ನಿಗಾ ವಹಿಸಲು ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ ಎಂದರು.
6
+ ಆಗ ತಿಪ್ಪಣ್ಣ ಅವರು ಕಲಬುರಗಿ ಜಿಲ್ಲೆಯಲ್ಲೇ 23 ನಕಲಿ ವೈದ್ಯರಿದ್ದಾರೆ. ನೀವು ಏನೇ ಕ್ರಮ ಜರುಗಿಸಿದರೂ ಮತ್ತೆ ಅವರು ಕ್ಲಿನಿಕ್‍ಗಳನ್ನು ಆರಂಭಿಸುತ್ತಾರೆ ಇದರಿಂದ ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ ಎಂದು ಸಚಿವರ ಗಮನಸೆಳೆದರು. ನೀವು ಏನೇ ಹೇಳಬೇಕಾದರೂ ದಾಖಲೆಗಳನ್ನು ಇಟ್ಟುಕೊಂಡು ಹೇಳಿ. ನಕಲಿ ವೈದ್ಯರು ಕ್ಲಿನಿಕಲ್‍ಗಳನ್ನು ಪ್ರಾರಂಭಿಸಿದರೆ ಎ-ïಐಆರ್ ದಾಖಲಿಸಲು ತಕ್ಷಣವೇ ಸೂಚನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ಇವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದರು.
eesanje/url_46_67_6.txt ADDED
@@ -0,0 +1,7 @@
 
 
 
 
 
 
 
 
1
+ ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ
2
+ ಬೆಂಗಳೂರು,ಜು.22- ಕಾವೇರಿ ನದಿ ಪಾತ್ರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಮುಂದಿನ ವರ್ಷದಿಂದ ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಕಾರ್ಯಕ್ರಮವನ್ನು ಆಯೋಜಿಸುವುದಾಗಿ ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
3
+ ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ತಾವು ಕೆಆರ್‍ಎಸ್‍ಗೆ ಭೇಟಿ ನೀಡಿ ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರ ಜೊತೆ ಪರಿಶೀಲನೆ ನಡೆಸಿದ್ದು, ಬಾಗಿನ ಅರ್ಪಿಸಿದ್ದೇವೆ. ಕಾವೇರಿ ನೀರು ಬಿಡುಗಡೆ ಕುರಿತು ಮಾಹಿತಿ ಪಡೆದುಕೊಂಡಿದ್ದೇವೆ ಎಂದರು.
4
+ ನೀರು ನಿರ್ವಹಣಾ ಸಮಿತಿ ಜು.11 ರಿಂದ 31 ರವರೆಗೆ ಪ್ರತಿದಿನ 1 ಟಿಎಂಸಿಯಂತೆ 20 ಟಿಎಂಸಿ ನೀರು ಹರಿಸಲು ಆದೇಶ ನೀಡಿತ್ತು. ಈವರೆಗೂ ಬಿಳುಗುಂಡ್ಲುವಿಗೆ 30 ಟಿಎಂಸಿ ಹರಿದುಹೋಗಿದೆ ಎಂದು ವಿವರಿಸಿದರು.ಸಾಮಾನ್ಯ ವರ್ಷದಲ್ಲಿ ತಮಿಳುನಾಡಿಗೆ 40.14 ಟಿಎಂಸಿ ನೀರು ಬಿಡಬೇಕು. ಪ್ರಸಕ್ತ ಉತ್ತಮ ಮಳೆಯಾಗುತ್ತಿರುವುದರಿಂದ 51 ಸಾವಿರ ಕ್ಯೂಸೆಕ್ಸ್ ನೀರು ಹರಿಯುತ್ತಿದೆ. 60 ಟಿಎಂಸಿಯಷ್ಟು ನೀರು ಬಿಡುವ ಅವಕಾಶಗಳಿವೆ ಎಂದು ಹೇಳಿದರು.
5
+ ಜೊತೆಗೆ ರೈತರ ಬೆಎಗಳಿಗೆ ನೀರು ಬಿಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೃಷಿ ಸಚಿವರು ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರ ಮತ್ತು 1.81 ಲಕ್ಷ ರೈತರಿಗೆ ಬ್ಯಾಂಕ್‍ನ ಆರ್ಥಿಕ ನೆರವಿಗೆ ಸೂಚನೆ ನೀಡಿದ್ದಾರೆ. ಕಾವೇರಿ ನದಿಪಾತ್ರದಲ್ಲಿ 1,457 ಕೆರೆಗಳಿದ್ದು, ಅವುಗಳನ್ನು ತುಂಬಿಸಲು ಕಾಲುವೆಗಳನ್ನು ತೆರೆಯಲಾಗಿದೆ ಎಂದರು.
6
+ ಪ್ರತಿವರ್ಷ ಉತ್ತಮ ಮಳೆಯಾಗಲಿ, ನಮ್ಮ ಜಲಾಶಯಗಳು ತುಂಬಲಿ ಎಂಬ ಆಶಯಕ್ಕಾಗಿ ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಕಾರ್ಯಕ್ರಮವನ್ನು ಮುಂದಿನ ವರ್ಷದಿಂದ ನಡೆಸಲು 5, 6 ಜಾಗಗಳನ್ನು ಗುರುತಿಸಲು ಪರಿಶೀಲನಾ ಕಾರ್ಯ ನಡೆಯುತ್ತಿದೆ. ಧಾರ್ಮಿಕ ದತ್ತಿ, ಜಲಸಂಪನ್ಮೂಲ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆಗಳು ಸ್ಥಳ ಪರಿಶೀಲನೆ ಹಾಗೂ ಕಾರ್ಯಕ್ರಮ ಆಯೋಜನೆ ಬಗ್ಗೆ ತಯಾರಿ ನಡೆಸುತ್ತಿವೆ ಎಂದು ಹೇಳಿದರು.
7
+ ಕೆಆರ್‍ಎಸ್‍ನ ಬೃಂದಾವನ ಉದ್ಯಾನವನವನ್ನು ಪಿಪಿಪಿ ಮಾದರಿಯಲ್ಲಿ ಉನ್ನತೀಕರಣಗೊಳಿಸಲು ಟೆಂಡರ್ ಕರೆಯಲಾಗಿದೆ ಎಂದು ಇದೇ ಸಂದರ್ಭದಲ್ಲಿ ಅವರು ಹೇಳಿದರು.
eesanje/url_46_67_7.txt ADDED
@@ -0,0 +1,4 @@
 
 
 
 
 
1
+ ಮಾಜಿ ಸಚಿವ ನಾಗೇಂದ್ರಗೆ ಆ.3 ರವರೆಗೆ ನ್ಯಾಯಾಂಗ ಬಂಧನ
2
+ ಬೆಂಗಳೂರು,ಜು.22- ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದ ಆರೋಪಿ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಆ. 3 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್‍ರವರು ವಾದ-ವಿವಾದ ಆಲಿಸಿ ನಾಗೇಂದ್ರ ಅವರನ್ನು ಆ.3ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿದರು.
3
+ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಜು.10 ರಂದು ಬಂ„ಸಿ ಆರು ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆಗೆ ಪಡೆದಿದ್ದರು. ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಐದು ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
4
+ ಇಂದಿಗೆ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ಮತ್ತೆ ಕಸ್ಟಡಿಗೆ ಕೇಳದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ವಹಿಸಿದ್ದರು. ಆರೋಪಿ ಪರ ವಕೀಲರಾದ ಶ್ಯಾಂ ಸುಂದರ್ ಅವರು ನಾಗೇಂದ್ರ ಅವರಿಗೆ ಹೃದಯ ಸಂಬಂಧ ಖಾಯಿಲೆ ಇದೆ. ಅವರಿಗೆ ವೈದ್ಯಕೀಯ ಸಹಾಯ ಬೇಕು, ಜೈಲಾಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದರು.
eesanje/url_46_67_8.txt ADDED
@@ -0,0 +1,5 @@
 
 
 
 
 
 
1
+ ಡೆಂಗ್ಯೂ ಪರೀಕ್ಷೆ ಉಚಿತ ಮಾಡುವಂತೆ ಆರ್.ಅಶೋಕ್ ಸರ್ಕಾರಕ್ಕೆ ಒತ್ತಾಯ
2
+ ಬೆಂಗಳೂರು,ಜು.22- ನಗರ ಸೇರಿದಂತೆ ರಾಜ್ಯದಲ್ಲಿ ಡೆಂಗ್ಯೂ ರೋಗ ಪ್ರಕರಣಗಳು ಹೆಚ್ಚಾಗಿದ್ದು, ಡೆಂಗ್ಯೂ ಪರೀಕ್ಷೆಯನ್ನು ಸರ್ಕಾರದಿಂದ ಉಚಿತವಾಗಿ ಮಾಡುವಂತೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ವಿಧಾನಸಭೆಯಲ್ಲಿ ಒತ್ತಾಯಿಸಿದರು.
3
+ ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪ ಮಾಡಿದ ಅವರು, ಬೆಂಗಳೂರಿನಲ್ಲಿ 300 ರಿಂದ 400 ಪ್ರಕರಣಗಳು ವರದಿಯಾಗುತ್ತಿವೆ. ರಾಜ್ಯದಲ್ಲಿ ಡೆಂಗ್ಯೂಗೆ 10 ಮಂದಿ ಮೃತಪಟ್ಟಿದ್ದಾರೆ. ಸತ್ತವರಲ್ಲಿ ಮಕ್ಕಳೇ ಹೆಚ್ಚಿದ್ದಾರೆ. ಇದುವರೆಗೆ ರಾಜ್ಯದಲ್ಲಿ 14,223 ಪ್ರಕರಣಗಳು ವರದಿಯಾಗುತ್ತಿವೆ. ಪ್ರತಿದಿನ 400 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿವೆ. ಒಂದು ವರ್ಷದೊಳಗಿನ 238 ಮಕ್ಕಳಿಗೆ ಈ ರೋಗ ಕಂಡುಬಂದಿದೆ ಎಂದರು.
4
+ ಬೆಂಗಳೂರಿನಲ್ಲಿ 3, ಶಿವಮೊಗ್ಗದಲ್ಲಿ 2, ಧಾರವಾಡ, ಹಾಸನ, ಮೈಸೂರಿನಲ್ಲಿ ಡೆಂಗ್ಯೂ ರೋಗದಿಂದ ಮೃತಪಟ್ಟಿದ್ದಾರೆ. ಡೆಂಗ್ಯೂ ಪರೀಕ್ಷೆಗೆ ಸರ್ಕಾರ 300 ರೂ. ನಿಗದಿ ಮಾಡಿದ್ದರು. ಖಾಸಗಿ ಆಸ್ಪತ್ರೆಗಳಲ್ಲಿ 600 ರಿಂದ 700 ರೂ ನಿಗದಿ ಮಾಡಿ, ಲಂಗುಲಗಾಮಿಲ್ಲದೆ ರೋಗಿಗಳಿಂದ ಹೆಚ್ಚಿನ ದರ ಪಡೆಯಲಾಗುತ್ತಿದೆ. ಸೊಳ್ಳೆ ನಿಯಂತ್ರಣಕ್ಕೆ -Áಗಿಂಗ್ ಮಾಡಲಾಗುತ್ತಿಲ್ಲ. ನೀರು ನಿಲ್ಲುವ ಜಾಗಕ್ಕೆ ಔಷಧಿ ಸಿಂಪಡಣೆ ಮಾಡುತ್ತಿಲ್ಲ. ಒಟ್ಟಾರೆ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ. ಬೆಂಗಳೂರಿನಲ್ಲೇ ಶೇ.60 ರಿಂದ 70 ರಷ್ಟು ಡೆಂಗ್ಯೂ ರೋಗ ಹೆಚ್ಚಾಗಿದೆ. ಕಸ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ. ಇದರಿಂದ ಡೆಂೀ, ಮಲೇರಿಯಾ ಹೆಚ್ಚಾಗುತ್ತಿದೆ ಎಂದರು.
5
+ ಸೊಳ್ಳೆಪರದೆ ಕೊಟ್ಟರೆ ಡೆಂಗ್ಯೂ ನಿಯಂತ್ರಣವಾಗುತ್ತದೆಯೇ? ಹಗಲಿನ ವೇಳೆ ಆ ಸೊಳ್ಳೆ ಕಚ್ಚುತ್ತದೆ ಎಂದಾಗ ಆರೋಗ್ಯಸಚಿವ ದಿನೇಶ್‍ಗುಂಡೂರಾವ್ ಮಾತನಾಡಿ, ಸೊಳ್ಳೆ ಪರದೆ ಕೊಡುವ ಬಗ್ಗೆ ತೀರ್ಮಾನವಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಈ ವಿಚಾರವನ್ನು ನಿಲುವಳಿ ಸೂಚನೆ ಬದಲಾಗಿ ನಿಯಮ 69 ರಡಿ ಚರ್ಚೆಗೆ ಕೊಡುವುದಾಗಿ ಸಭಾಧ್ಯಕ್ಷ ಯು.ಟಿ.ಖಾದರ್ ಪ್ರಕಟಿಸಿದರು.
eesanje/url_46_67_9.txt ADDED
@@ -0,0 +1,6 @@
 
 
 
 
 
 
 
1
+ ರಾಜ್ಯದಲ್ಲಿ ಔಷಧಿಗಳ ಕೊರತೆ ಇಲ್ಲ: ದಿನೇಶ್ ಗುಂಡೂರಾವ್
2
+ ಬೆಂಗಳೂರು,ಜು.22- ರಾಜ್ಯದಲ್ಲಿ ಎಲ್ಲಿಯೂ ಔಷಧಿಗಳ ಕೊರತೆ ಇಲ್ಲ. ಎಷ್ಟು ಬೇಡಿಕೆ ಇದೆಯೋ ಅಷ್ಟನ್ನು ಪೂರೈಕೆ ಮಾಡಿದ್ದೇವೆ ಎಂದು ಆರೋಗ್ಯ ಮತ್ತು ಕುಟುಂಬಲ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.
3
+ ವಿಧಾನಪರಿಷತ್‍ನಲ್ಲಿಂದು ಸದಸ್ಯ ಪಿ.ಎಸ್.ನಾರಾಯಣ ಅವರ ಪ್ರಶ್ನೆಗೆ ಉತ್ತರಿಸಿದ ದಿನೇಶ್ ಗುಂಡೂರಾವ್, ಯಾವುದೇ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಉಂಟಾಗದಂತೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಲಭ್ಯತೆ ಆಧಾರದ ಮೇಲೆ ಪೂರೈಕೆ ಮಾಡುತ್ತಿದ್ದೇವೆ. ಒಂದು ವೇಳೆ ನಿರ್ಧಿಷ್ಟ ಕಡೆ ಕೊರತೆ ಇದ್ದರೆ ನಮ್ಮ ಗಮನಕ್ಕೆ ತಂದರೆ ತತ್‍ಕ್ಷಣವೇ ಪೂರೈಕೆ ಮಾಡುವ ಆಶ್ವಾಸನೆ ನೀಡಿದರು.
4
+ ನಮ್ಮ ಇಲಾಖೆಯಲ್ಲಿ ಹಲವಾರು ಹುದ್ದೆಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡಲು ಇಲಾಖೆ ಮುಂದಾಗಿದೆ. ಈಗಾಗಲೇ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆಯೂ ಮಾತುಕತೆ ನಡೆಸಿದ್ದೇವೆ. ಅನುಮೋದನೆ ಸಿಕ್ಕ ತಕ್ಷಣ ಹುದ್ದೆಗಳ ಭರ್ತಿಗೆ ಮುಂದಾಗುತ್ತೇವೆ ಎಂದು ತಿಳಿಸಿದರು.
5
+ ಇನ್ನು ಮುಂದೆ ಇಲಾಖೆ ಅಧಿಕಾರಿಗಳು ಎಲ್ಲೇ ಕೆಲಸ ಮಾಡಿದರೂ ಲಾಗಿನ್ ಆಗುವ ವ್ಯವಸ್ಥೆಯನ್ನು ಜಾರಿಗೊಳಿಸಿದ್ದೇವೆ. ಅದು ಗ್ರಾಮೀಣ ಭಾಗದಿಂದ ಹಿಡಿದು ಬೆಂಗಳೂರಿನವರೆಗೂ ಜಾರಿಯಲ್ಲಿರುತ್ತದೆ. ಸಿಬ್ಬಂದಿಗಳು ಕಡ್ಡಾಯವಾಗಿ ಕೆಲಸದ ಸಮಯ, ಹಾಜರಾತಿ, ಬೆರಳಚ್ಚು ನೀಡಲೇಬೇಕು. ಇಲ್ಲದಿದ್ದರೆ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.
6
+ ಇಲಾಖೆಯಲ್ಲಿ ಮೊದಲ ಬಾರಿಗೆ ಸಿಬ್ಬಂದಿಗಳ ವರ್ಗಾವಣೆಗೆ ಕೌನ್ಸಿಲಿಂಗ್ ವ್ಯವಸ್ಥೆ ಮಾಡಿದ್ದೇವೆ. ಇಲ್ಲಿ ಎಲ್ಲವೂ ಪಾರದರ್ಶಕವಾಗಿ ನಡೆಯುತ್ತದೆ. ಯಾವುದೇ ಕಾರಣಕ್ಕೂ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ಇಲ್ಲ ಎಂದು ಗುಂಡೂರಾವ್ ಸ್ಪಷ್ಟಪಡಿಸಿದರು.
eesanje/url_46_68_1.txt ADDED
@@ -0,0 +1,6 @@
 
 
 
 
 
 
 
1
+ 10 ಕೋಟಿ ವೆಚ್ಚದಲ್ಲಿ ಕೃಷಿ ಮಾರುಕಟ್ಟೆಗಳ ಅಭಿವೃದ್ಧಿ : ಕೃಷಿ ಸಚಿವ ಚೆಲುವರಾಯಸ್ವಾಮಿ
2
+ ನಾಗಮಂಗಲ,ಜು.22- ಕೃಷಿಗೆ ಸಂಬಂಧಿಸಿದಂತೆ ಕೊಬ್ಬರಿ ಮಾರಾಟ ರೈತರಿಗೆ ಎಲ್ಲಾ ರೀತಿಯಲ್ಲೂ ಅನುಕೂಲವಾಗುವ ನಿಟ್ಟಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಕೃಷಿ ಸಚಿವರಾದ ಚೆಲುವರಾಯಸ್ವಾಮಿ ತಿಳಿಸಿದರು.
3
+ ಪಟ್ಟಣದ ವರವಲಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆಯ ಪ್ರಾಹಂಗಣದಲ್ಲಿ ಮೂರು ಕೋಟಿ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಮುಕ್ತ ಹರಾಜು ಕಟ್ಟೆ ಕಾಂಕ್ರೀಟ್ ರಸ್ತೆ ಚರಂಡಿ ಹಾರುವ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ರೈತರು ಬೆಳೆಯುವ ಎಲ್ಲಾ ರೀತಿಯ ತರಕಾರಿಗಳು ಉತ್ಪನ್ನಗಳನ್ನು ಮಾರಾಟ ಮಾಡಲು ತೊಂದರೆಯಾಗದ ರೀತಿಯಲ್ಲಿ ಕೃಷಿ ಪ್ರಾಹಂಗಣದಲ್ಲಿ ಮುಕ್ತಾರಾಜುಕಟ್ಟೆ ಮೂಲಸೌಕರ್ಯ ಕಲ್ಪಿಸುವುದು ರೈತರು ಬೆಳೆಯುವ ಉತ್ಪನ್ನಗಳ ಮಾರಾಟಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.
4
+ ಮಳೆಯಾಶ್ರಿತ ಪ್ರದೇಶವಾದರೂ ಇಲ್ಲಿನ ರೈತರು ರಾಗಿಹುರಳಿ ತರಕಾರಿ ಜೊತೆಗೆ ಹೈನುಗಾರಿಕೆ ತೆಂಗು ಕೃಷಿ ಅವಲಂಬಿಸಿಕೊಂಡು ಅಧಿಕ ಪ್ರಮಾಣದಲ್ಲಿ ಕೊಬ್ಬರಿ ಉತ್ಪಾದನೆ ಮಾಡುತ್ತಿದ್ದಾರೆ ಆದ್ದರಿಂದ ರೈತರ ಕೊಬ್ಬರಿ ಮಾರುಕಟ್ಟೆಗೆ ಅನುಕೂಲ ಮಾಡಿಕೊಡುವ ಸಲುವಾಗಿ ಕೊಬ್ಬರಿ ಹರಾಜು ಮಾರುಕಟ್ಟೆ ಮಾದರಿಯಲ್ಲಿಯೇ ತಾಲೂಕಿನ ಕದಬಳ್ಳಿ ಅದ್ದಿಹಳ್ಳಿ ಸರ್ಕಲ್ ಮತ್ತು ನಾಗಮಂಗಲದ ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಮಾತನಾಡಿದರು.
5
+ ರೈತರಿಗೆ ಕೃಷಿ ಇಲಾಖೆಯಿಂದ ಹಲವು ಸವಲತ್ತುಗಳು ಕೃಷಿ ಪರಿಕರಗಳು ಪಡೆಯುವ ಪ್ರತಿಯೊಬ್ಬ ರೈತರು ಪಡೆಯುವ ಉದ್ದೇಶದಿಂದ ಇಲಾಖೆಯ ಸವಲತ್ತುಗಳನ್ನು ಯೋಜನೆಗಳು ತರುತ್ತಿದ್ದರು ಪರಿಪೂರ್ಣವಾಗಿ ರೈತರ ಯೋಜನೆಗಳಿಂದ ಕೆಲವರು ವಂಚಿತರಾಗಿದ್ದು ಇಂತಹ ಈ ಸೌಲಭ್ಯಗಳಿಂದ ಪ್ರತಿಯೊಬ್ಬ ರೈತನಿಗೂ ಕೃಷಿ ಸವಲತ್ತುಗಳನ್ನು ಸಿಗುವ ದೃಷ್ಟಿಯಿಂದ ಅಧಿಕಾರಿಗಳೊಂದಿಗೆ ಚರ್ಚಿಸಿ ಸೌವಲತ್ತುಗಳನ್ನು ಪಡೆಯುವ ವ್‍ಯವಸ್ಥೆ ಮಾಡಲಾಗುವುದೆಂದು ತಿಳಿಸಿದರು.
6
+ ತಾಲೂಕು ದಂಡಾಧಿಕಾರಿಗಳು ನಹಿಮ್ ಉನ್ನಿಸಾ.ಎಪಿಎಂಸಿ ಆಡಳಿತ ಅ„ಕಾರಿ ರೇವತಿ ಬಾಯಿ ಕಾರ್ಯದರ್ಶಿ ಎಸ್‍ಎಂ ಸರ್ವಜ್ಞ ಕಾರ್ಯಪಲಕ ಇಂಜಿನಿಯರ್ ಟಿ.ಸತೀಶ್ ಎಇಇ ಗೌರೀಶ್. ಎಸ್‍ಎಲ್ ಬಿ ನಿರ್ದೇಶಕ ತಿಮ್ಮರಾಯಿ ಗೌಡ. ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ನರಸಿಂಹಮೂರ್ತಿ ಎಚ್.ಡಿ ಕೃಷ್ಣೆಗೌಡ, ಪ್ರಸನ್ನ ಆರ್.ಕೆ.ಕೃಷ್ಣೇಗೌಡ, ಸಂಪತ್‍ಕುಮಾರ್, ಶ್ರೀನಿವಾಸ್, ಮರಿಸ್ವಾಮಿ, ರಮೇಶ್ ಹಾಗೂ ಅನೇಕ ಮುಖಂಡರು ಹಾಜರಿದ್ದರು.
eesanje/url_46_68_10.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಉತ್ತರ ಕನ್ನಡದ ಗುಡ್ಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
2
+ ಕಾರವಾರ (ಅಂಕೋಲಾ): ಇಲ್ಲಿನ ರಾಷ್ಟ್ತ್ರೀಯ ಹೆದ್ದಾರಿಯ ಶಿರೂರು ಗ್ರಾಮದ ಬಳಿ ಗುಡ್ಡ ಕುಸಿದು ಏಳು ಜನರು ಧಾರುಣ ಸಾವನ್ನಪ್ಪಿದ ಸ್ಥಳಕ್ಕೆ ಕೇಂದ್ರ ಸರಕಾರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಗ್ಗೆ ದೆಹಲಿಯಿಂದ ಹುಬ್ಬಳ್ಳಿಗೆ ಬಂದು ರಸ್ತೆ ಮಾರ್ಗವಾಗಿ ಶಿರೂರು ಗುಡ್ಡ ತಲುಪಿದ ಕೇಂದ್ರ ಸಚಿವರು, ಜಿಲ್ಲಾಧಿಕಾರಿ ಸೇರಿ ಇನ್ನಿತರೆ ಅಧಿಕಾರಿಗಳಿಂದ ದುರಂತದ ಬಗ್ಗೆ ಮಾಹಿತಿ ಪಡೆದುಕೊಂಡರು.
3
+ ಗುಡ್ಡ ಕುಸಿತ, ಪರಿಹಾರ ಕಾರ್ಯ, ನೊಂದವರಿಗೆ ನೆರವು, ಹೆದ್ದಾರಿಯಲ್ಲಿ ಮಣ್ಣು ತೆರವು, ಗಂಗಾವಳಿ ನದಿ ಪ್ರವಾಹ ಹಾಗೂ ಮಳೆ ಪರಿಸ್ಥಿತಿಗಳ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
4
+ ಮಳೆಯ ನಡುವೆಯೇ ಗುಡ್ಡ ಕುಸಿತ ಭೀಕರತೆಯನ್ನು ವೀಕ್ಷಿಸಿದ ಸಚಿವರು; ಮಣ್ಣು ತೆರವು ಮತ್ತಿತರೆ ಪರಿಹಾರ ಕಾರ್ಯಗಳ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕೈಗೊಂಡಿರುವ ಕ್ರಮಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.
5
+ ||ಮೃತರ ಕುಟುಂಬಗಳ ಜತೆ ಸರ್ಕಾರ ನಿಲ್ಲಬೇಕು ಎಂದ ಕೇಂದ್ರ ಸಚಿವರು||
6
+ ರಾಜ್ಯ ಸರಕಾರವು ಗುಡ್ಡ ಕುಸಿತದಲ್ಲಿ ಜೀವ ಕಳೆದುಕೊಂಡಿರುವ ಕುಟುಂಬಗಳ ಜತೆ ನಿಲ್ಲಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು. ಸ್ಥಳದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪರಿಹಾರ ಕಾರ್ಯದಲ್ಲಿ ರಾಜಕರಣ ಮಾಡಬಾರದು. ಕೇಂದ್ರ ಸರಕಾರವು ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ರಾಜ್ಯ ಸರ್ಕಾರವು ತನ್ನ ಪಾಲಿನ ಕೆಲಸವನ್ನು ಮಾಡಬೇಕು. ರಾಜಕೀಯದಿಂದ ಉಪಯೋಗ ಇಲ್ಲ. ನೊಂದ ಕುಟುಂಬಗಳಿಗೆ ದೊಡ್ಡ ಪ್ರಮಾಣದಲ್ಲಿ ಪರಿಹಾರ ಕೊಡಬೇಕು ಹಾಗೂ ಮನೆಗಳನ್ನು ಕಳೆದುಕೊಂಡವರಿಗೆ ಮರು ವಸತಿ ಕಲ್ಪಿಸಬೇಕು ಎಂದು ಎಂದರು.
7
+ ಒಂದೇ ಕುಟುಂಬದಲ್ಲಿ ಐವರು, ಇನ್ನೂ ಇಬ್ಬರು ಈ ದುರಂತದಲ್ಲಿ ಜೀವ ಕಳೆದುಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಎಲ್ಲರೂ ಶ್ರಮ ಜೀವಿಗಳು. ಇಬ್ಬರು ಮಕ್ಕಳು ಬಲಿಯಾಗಿರುವುದು ದುಃಖ ತಂದಿದೆ ಎಂದು ಕೇಂದ್ರ ಸಚಿವರು ಹೇಳಿದರು. ಯಾಕೆ ಈ ದುರಂತ ಸಂಭವಿಸಿತು? ಅದಕ್ಕೆ ಕಾರಣಗಳು ಏನು? ಕಾಮಗಾರಿಯಲ್ಲಿ ಸಮಸ್ಯೆ ಇದೆಯಾ? ಎಂಬ ಪರಿಶೀಲನೆ ನಡೆಸಲಾಗುವುದು ಹಾಗೂ ಸಂಬಂಧಪಟ್ಟ ಸಚಿವರ ಗಮನಕ್ಕೂ ತರಲಾಗುವುದು. ಮೊದಲು ಪರಿಹಾರ ಕಾರ್ಯ ಮುಗಿಯಲಿ. ಇದರಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಅವರು ಮನವಿ ಮಾಡಿದರು.
8
+ ಈ ಘಟನೆ ಪರಿಹಾರ ಕಾರ್ಯ ವಿಳಂಬವಾಗಿ ಸಾಗುತ್ತಿದೆ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಈ ಬಗ್ಗೆ ನಾನು ಅಧಿಕಾರಿಗಳಿಗೆ ದೋಷ ಕೊಡಲಾರೆ. ಅವರು ಮಳೆಯ ನಡುವೆಯೂ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಈ ದುರಂತ ಊಹೆಗೂ ನಿಲುಕದ್ದು. ಜನತೆಗೆ ಮೂಲಸೌಕರ್ಯ ಕಲ್ಪಿಸು��� ಸಂದರ್ಭದಲ್ಲಿ ಅವೈಜ್ಞಾನಿಕ ಕಾಮಗಾರಿಗಳಿಂದ ಇಂಥ ಘಟನೆಗಳು ಮರುಕಳಿಸುತ್ತಿವೆ ಎಂದು ಕೇಂದ್ರ ಸಚಿವರು ಹೇಳಿದರು.
9
+ ರಾಜ್ಯ ಸರಕಾರದ ಯಾವೊಬ್ಬ ಸಚಿವರು, ಮುಖ್ಯಮಂತ್ರಿಗಳು ಸ್ಥಳಕ್ಕೆ ಭೇಟಿ ನೀಡದಿರುವ ಬಗ್ಗೆ ಸ್ಥಳೀಯರಿಗೆ ಬೇಸರವಿದೆ ಎಂದು ಮಾಧ್ಯಮಗಳು ಗಮನ ಸೆಳೆದಾಗ; ಈ ಬಗ್ಗೆ ನಾನು ಚರ್ಚೆ ನಡೆಸಲಾರೆ. ನಾನು ಬಂದಿದ್ದೇನೆ. ಕೇಂದ್ರದಿಂದ ಏನು ಸಹಾಯ ಮಾಡಿಸಬಹುದೋ ಅದನ್ನು ಮಾಡಿಸುತ್ತೇನೆ. ಇಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರಗಳದ್ದು ಜವಾಬ್ದಾರಿ ಇದೆ ಎಂದು ಉತ್ತರಿಸಿದರು.
10
+ ಭಾರೀ ಮಳೆಯಿಂದ ಹಾಸನ, ಮಂಗಳೂರು, ಚಿಕ್ಕಮಗಳೂರು, ಕೊಡಗು ಸೇರಿ ಕರಾವಳಿ ಮಲೆನಾಡು ಭಾಗದಲ್ಲಿ ಕೃಷಿ ಬೆಳೆ ನಷ್ಟವಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಗಮನ ಹರಿಸಬೇಕು ಎಂದು ಕುಮಾರಸ್ವಾಮಿ ಅವರು ಹೇಳಿದರು.
11
+ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಜೆಡಿಎಸ್ ನಾಯಕ ಸೂರಜ್ ನಾಯಕ್ ಸೋನಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಜೆಡಿಎಸ್ ಮುಖಂಡರು ಸಚಿವರ ಜತೆಯಲ್ಲಿ ಇದ್ದರು.
eesanje/url_46_68_11.txt ADDED
@@ -0,0 +1,3 @@
 
 
 
 
1
+ 14 ವರ್ಷದಿಂದ ತಲೆಮರೆಸಿಕೊಂಡಿದ್ದ ರೌಡಿ ಸೆರೆ
2
+ ಬೆಂಗಳೂರು,ಜು.20- ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಯೋಹಾನ್ ಅಲಿಯಾಸ್ ಪಾಪು(36) ಬಂಧಿತ ರೌಡಿ. ಈತನ ವಿರುದ್ಧ ಚಂದ್ರಲೇಔಟ್, ಅನ್ನಪೂರ್ಣೇಶ್ವರಿನಗರ, ಬಾಗಲಗುಂಟೆ ಪೊಲೀಸ್ ಠಾಣೆಗಳಲ್ಲಿ ರೌಡಿ ಪಟ್ಟಿ ತೆರೆಯಲಾಗಿದೆ.
3
+ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಆರೋಪಿ ಯೋಹಾನ್ ವಿರುದ್ಧ 2010ನೇ ಸಾಲಿನಲ್ಲಿ ಎಲ್‍ಪಿಆರ್ ಪ್ರಕರಣ ದಾಖಲಾಗಿದೆ. 2012ರಿಂದ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಆರೋಪಿ ಪತ್ತೆಗಾಗಿ ತಂಡವನ್ನು ರಚಿಸಲಾಗಿತ್ತು. ಈ ತಂಡ ಆರೋಪಿಯ ಬಗ್ಗೆ ಹಲವು ಮಾಹಿತಿಗಳನ್ನು ಕಲೆ ಹಾಕಿ ಬಂಧಿಸಿ ವೈಯಾಲಿ ಕಾವಲ್ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಸಿಸಿಬಿ ಸಂಘಟಿತ ಅಪರಾಧ ದಳದ(ಪಶ್ಚಿಮ) ಅಧಿಕಾರಿ ಮತ್ತು ಸಿಬ್ಬಂದಿ ಈ ಕಾರ್ಯಾಚರಣೆ ಕೈಗೊಂಡಿದ್ದರು.
eesanje/url_46_68_12.txt ADDED
@@ -0,0 +1,9 @@
 
 
 
 
 
 
 
 
 
 
1
+ ರಾಜ್ಯದಲ್ಲಿ ವಾಡಿಕೆಗಿಂತ ಶೇ.50ರಷ್ಟು ಅಧಿಕ ಮಳೆ: ಮೂರು ದಿನ ಆರೆಂಜ್ ಅಲರ್ಟ್
2
+ ಬೆಂಗಳೂರು, ಜು.20-ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕಾಗಿದ್ದು, ಜುಲೈ ಒಂದರಿಂದ ಇದುವರೆಗೆ ವಾಡಿಕೆಗಿಂತ ಶೇ.50ರಷ್ಟು ಹೆಚ್ಚು ಮಳೆಯಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಹವಾಮಾನ ಮುನ್ಸೂನೆಗಳಿವೆ. ಕರಾವಳಿ ಜಿಲ್ಲೆಗಳಿಗೆ ಇಂದೂ ಕೂಡ ರೆಡ್ ಅಲರ್ಟ್ ನೀಡಲಾಗಿದ್ದು, ನಾಳೆಯಿಂದ ಮೂರು ದಿನಗಳ ಆರೆಂಜ್ ಅಲರ್ಟ್‍ನ್ನು ಹವಾಮಾನ ಇಲಾಖೆ ನೀಡಿದೆ.
3
+ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಮಲೆನಾಡು ಕರಾವಳಿ ಭಾಗದಲ್ಲಿ ಮಳೆ ಮುಂದುವರೆಯಲಿದ್ದು, ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನಲ್ಲಿ ಎಂದಿನಂತೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
4
+ ಜುಲೈ ಒಂದರಿಂದ ಇಂದಿನವರೆಗೆ ರಾಜ್ಯದಲ್ಲಿ 174 ಮಿ.ಮೀ.ನಷ್ಟು ವಾಡಿಕೆ ಮಳೆ ಪ್ರಮಾಣವಿದ್ದು, 262 ಮಿ.ಮೀ.ನಷ್ಟು ಮಳೆಯಾಗಿದೆ. ಜೂನ್ ಒಂದರಿಂದ ಇದುವರೆಗೆ ರಾಜ್ಯದಲ್ಲಿ 373 ಮಿ.ಮೀ.ವಾಡಿಕೆ ಮಳೆ ಪ್ರಮಾಣವಿದ್ದು, 464 ಮಿ.ಮೀ.ನಷ್ಟು ಮಳೆಯಾಗಿದ್ದು, ಶೇ. 24ರಷ್ಟು ಅ„ಕ ಮಳೆಯಾಗಿದೆ.
5
+ ರಾಜ್ಯದಲ್ಲಿ ಜುಲೈ ಒಂದರಿಂದ ಇದುವರೆಗೆ ದಕ್ಷಿಣ ಒಳನಾಡಿನಲ್ಲಿ ಶೇ.43, ಉತ್ತರ ಒಳನಾಡಿನಲ್ಲಿ ಶೇ.20, ಮಲೆನಾಡಿನಲ್ಲಿ ಶೇ.52 ಹಾಗೂ ಕರಾವಳಿಯಲ್ಲಿ ಶೇ.65ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.ಜುಲೈ 27ರವರೆಗೆ ರಾಜ್ಯದಲ್ಲಿ ಕರಾವಳಿ ಹಾಗೂ ಮಲೆನಾಡಿನಲ್ಲಿ ಅ„ಕ ಮಳೆ ಮುಂದುವರೆಯಲಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆ ಮುಂದುವರೆಯಲಿದೆ. ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಆಗಾಗ್ಗೆ ತಂಪಾದ ಮೇಲ್ಮೈಗಾಳಿ ಬೀಸುವುದರಿಂದ ಚಳಿಯ ಅನುಭವವಾಗಲಿದೆ. ನಿರಂತರ ಮಳೆಯಾಗುತ್ತಿರುವುದರಿಂದ ಮುಂಗಾರು ಹಂಗಾಮಿನ ವಿವಿಧ ಬೆಳೆಗಳ ಬಿತ್ತನೆ ಕಾರ್ಯದಲ್ಲಿ ರೈತರು ನಿರತರಾಗಿದ್ದಾರೆ.
6
+ ಭರ್ತಿಯತ್ತ ಜಲಾಶಯಗಳು: ರಾಜ್ಯದ ಪ್ರಮುಖ ಜಲಾಶಯಗಳಿಗೆ ಒಳ ಹರಿವು ಸಾಕಷ್ಟು ಪ್ರಮಾಣದಲ್ಲಿದ್ದು, ಆಲಮಟ್ಟಿ, ನಾರಾಯಣಪುರ, ಕೆಆರ್‍ಎಸ್, ಕಬಿನಿ, ಹಾರಂಗಿ, ಹೇಮಾವತಿ ಜಲಾಶಯಗಳಲ್ಲಿ ಭರ್ತಿಯಾಗುವ ಮಟ್ಟಕ್ಕೆ ನೀರು ಸಂಗ್ರಹವಾಗಿದೆ. ಆದರೆ, ಒಳ ಹರಿವು ಹೆಚ್ಚಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಹೊರ ಹರಿವನ್ನೂ ಹೆಚ್ಚಿಸಲಾಗಿದೆ.
7
+ ಒಂದೇ ದಿನದಲ್ಲಿ ರಾಜ್ಯದ 14 ಜಲಾಶಯಗಳಿಗೆ 43.4 ಟಿಎಂಸಿ ಅಡಿಯಷ್ಟು ನೀರು ಬಂದಿದೆ. ಕಾವೇರಿ ಕೊಳ್ಳದ ಜಲಾಶಯಗಳಿಗೆ 10.8, ಕೃಷ್ಣಾ ಕೊಳ್ಳದ ಜಲಾಶಯಗಳಿಗೆ 22.4 ಹಾಗೂ ಜಲ ವಿದ್ಯುತ್ ಉತ್ಪಾದಿಸುವ ಜಲಾಶಯಗಳಿಗೆ 102 ಟಿಎಂಸಿ ಅಡಿಯಷ್ಟು ನೀರು ಬಂದಿದೆ. ಲಿಂಗನಮಕ್ಕಿ, ಸೂಪ ಹಾಗೂ ವಾರಾಹಿ ಜಲಾಶಯಗಳಲ್ಲಿ ಶೇ.49ರಷ್ಟು ನೀರು ಸಂಗ್ರಹವಾಗಿದ್ದು, ಒಟ್ಟು 1,18,413 ಕ್ಯುಸೆಕ್ಸ್ ಒಳಹರಿವು ಇದೆ. ಜಲಾಶಯದಿಂದ ನೀರು ಬಿಡಲಾಗುತ್ತಿಲ್ಲ.
8
+ ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳಲ್ಲಿ ಶೇ.88ರಷ್ಟು ನೀರು ಸಂಗ್ರಹವಾಗಿದೆ. 1.25 ಲಕ್ಷ ಕ್ಯುಸೆಕ್ಸ್‍ನಷ್ಟು ಒಳಹರಿವು ಇದ್ದು, 45 ಸಾವಿರ ಕ್ಯುಸೆಕ್ಸ್‍ಗೂ ಹೆಚ್ಚು ಹೊರ ಹರಿವಿದೆ. ಕೃಷ್ಣಾ ಕೊಳ್ಳದ ಜಲಾಶಯಗಳಲ್ಲಿ ಒಟ್ಟಾರೆ ಶೇ.68ರಷ್ಟು ನೀರು ಸಂಗ್ರಹವಾಗಿದೆ. 2.58 ಲಕ್ಷ ಕ್ಯುಸೆಕ್ಸ್‍ಗೂ ಅ„ಕ ಪ್ರಮಾಣದ ಒಳ ಹರಿವಿದೆ. 73 ಸಾವಿರ ಕ್ಯುಸೆಕ್ಸ್‍ಗೂ ಹೆಚ್ಚು ನೀರನ್ನು ಜಲಾಶಯಗಳಿಂದ ಹೊರ ಬಿಡಲಾಗುತ್ತಿದೆ.
9
+ ಹೆಚ್ಚು ಕಡಿಮೆ ಸಾಕಷ್ಟು ಪ್ರಮಾಣದಲ್ಲಿ ಒಳಹರಿವು ಮುಂದುವರೆಯುವ ಸಾಧ್ಯತೆ ಇದೆ. ಮಳೆ ಕೂಡ ಮುಂದುವರೆಯುವ ಮುನ್ಸೂಚನೆ ಇರುವುದರಿಂದ ಈ ತಿಂಗಳ ಅಂತ್ಯದೊಳಗೆ ಜಲ ವಿದ್ಯುತ್ ಉತ್ಪಾದಿಸುವ ಜಲಾಶಯಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಲಾಶಯಗಳು ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುವ ಸಾಧ್ಯತೆಗಳಿವೆ.
eesanje/url_46_68_2.txt ADDED
@@ -0,0 +1,4 @@
 
 
 
 
 
1
+ ರೀಲ್ಸ್ ಮಾಡಿದರೆ ಅಮಾನತ್ತು: ಸಾರಿಗೆ ಸಿಬಂದ್ದಿಗೆ ಎಚ್ಚರಿಕೆ
2
+ ಬೆಂಗಳೂರು,ಜು.21- ಸಾರಿಗೆ ಬಸ್‍ಗಳಲ್ಲಿ ಇನ್ನು ಮುಂದೆ ಚಾಲಕರು ಅಥವಾ ನಿರ್ವಾಹಕರು ಅನಪೇಕ್ಷಣಿಯವಾಗಿ ಮೊಬೈಲ್ ಬಳಕೆ ಹಾಗೂ ರೀಲ್ಸ್ ಗಳನ್ನು ಮಾಡಿದರೆ ಸೇವೆಯಿಂದ ಅಮಾನತ್ತುಗೊಳಿಸುವ ಎಚ್ಚರಿಕೆಯನ್ನು ಸಾರಿಗೆ ಇಲಾಖೆ ನೀಡಿದೆ. ಕೆಎಸ್‍ಆರ್‍ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಕಲ್ಯಾಣ ಸಾರಿಗೆ ಸಮುಚ್ಚಯಗಳಲ್ಲಿನ ಸಿಬ್ಬಂದಿಗಳು ಇತ್ತೀಚೆಗೆ ರೀಲ್ಸ್ ಮಾಡಿ ಖ್ಯಾತಿಗಳಿಸುವ ಉಮೇದಿಗೆ ಬಿದ್ದಿದ್ದಾರೆ.
3
+ ಕೆಎಸ್‍ಆರ್‍ಟಿಸಿ ಚಾಲಕರೊಬ್ಬರು ಮಳೆ ಸುರಿಯುವಾಗ ಛತ್ರಿ ಹಿಡಿದುಕೊಂಡು ಬಸ್ ಚಾಲನೆ ಮಾಡಿ ರೀಲ್ಸ್ ಚಿತ್ರೀಕರಿಸಿದ್ದರು. ಈ ವಿಡಿಯೋವನ್ನು ಮುಂದಿಟ್ಟುಕೊಂಡು ವಿಪಕ್ಷಗಳ ಮುಖಂಡರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಸಿದ್ದರಾಮಯ್ಯನವರ ಸರ್ಕಾರ ಅ„ಕಾರಕ್ಕೆ ಬಂದ ಬಳಿಕ ಪಂಚಖಾತ್ರಿ ಯೋಜನೆಗಳಿಗೆ ಹೆಚ್ಚಿನ ಹಣ ಖರ್ಚು ಮಾಡುತ್ತಿದೆ. ಸಾರಿಗೆ ಸೇರಿದಂತೆ ಇತರ ನಾಗರಿಕ ಸೌಲಭ್ಯಗಳನ್ನು ನಿರ್ಲಕ್ಷಿಸಲಾಗಿದೆ. ಬಸ್‍ಗಳು ಸೋರುತ್ತಿವೆ ಎಂದು ಕೆಂಡ ಕಾರಿದ್ದರು.
4
+ ಈ ಕುರಿತು ಎಚ್ಚರಿಕೆ ಕೊಟ್ಟ ನಂತರವೂ ಚಾಲನೆಯ ಸಂದರ್ಭದಲ್ಲೇ ಬಹಳಷ್ಟು ಚಾಲಕರು ರೀಲ್ಸ್‍ಗಳನ್ನು ಮಾಡಿದ್ದರು. ಹೀರೋ ಗಿರಿ ತೋರಿಸುವ ಚಾಲಕರು, ನಿರ್ವಾಹಕರ ಈ ಹುಚ್ಚಾಟಗಳಿಂದ ಪ್ರಯಾಣಿಕರು ಪರದಾಡುವಂತಾಗಿತ್ತು. ಈ ಸಂಬಂಧ ಹಲವಾರು ದೂರುಗಳು, ಆಕ್ಷೇಪಗಳು ಸಲ್ಲಿಕೆಯಾಗಿದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಾರಿಗೆ ಇಲಾಖೆ ಇನ್ನು ಮುಂದೆ ಸಾರಿಗೆ ಸಂಸ್ಥೆ ಸಿಬ್ಬಂದಿಗಳು ಕರ್ತವ್ಯದ ವೇಳೆ ಅನಪೇಕ್ಷಣೀಯವಾಗಿ ಮೊಬೈಲ್ ಬಳಕೆ ಹಾಗೂ ರೀಲ್ಸ್ ಮಾಡುವುದು ಕಂಡುಬಂದರೆ ಶಿಸ್ತುಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.
eesanje/url_46_68_3.txt ADDED
@@ -0,0 +1,5 @@
 
 
 
 
 
 
1
+ ಮಳೆ ಹಾನಿ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
2
+ ಬೆಂಗಳೂರು,ಜು.21- ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಉತ್ತರಕನ್ನಡ ಜಿಲ್ಲೆಯ ವಿವಿಧೆಡೆಗಳಲ್ಲಿ ಸಂಭವಿಸಿದ ಮಳೆ ಹಾನಿಗಳ ಪ್ರದೇಶಗಳ ವೀಕ್ಷಣೆ ನಡೆಸಿದರು. ಭಾನುವಾರ ರಜಾದಿನ ಕೂಡ ವಿಶ್ರಾಂತಿ ಪಡೆಯದೆ ಸಿಎಂ ಅವರು ಜಿಲ್ಲಾ ಪ್ರವಾಸ ಕೈಗೊಂಡಿದ್ದು ಗಮನಸೆಳೆಯಿತು.
3
+ ಕಳೆದ ಹತ್ತು ದಿನಗಳಿಂದ ನಿರಂತವಾಗಿ ಮಳೆ ಸುರಿಯುತ್ತಿದ್ದು, ದಕ್ಷಿಣಕನ್ನಡ, ಉತ್ತರಕನ್ನಡ, ಉಡುಪಿ, ಮೈಸೂತು, ಕೊಡುಗು ಸೇರಿದಂತೆ ಹಲವು ಪ್ರದೇಶಗಳಲ್ಲಿ ನೆರೆಯ ವಾತಾವರಣ ಸೃಷ್ಟಿಯಾಗಿದೆ.ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರಿಂದ ಸಂಪುಟದ ಸಚಿವರು, ಶಾಸಕರು, ಮುಖ್ಯಮಂತ್ರಿಗಳು ಬೆಂಗಳೂರಿನಲ್ಲೇ ಉಳಿದಿದ್ದರು. ಈ ನಡುವೆ ಉತ್ತರಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನಲ್ಲಿ ಶಿರೂರಿನಲ್ಲಿ ಭೂ ಕುಸಿತವಾಗಿ ಭಾರೀ ಪ್ರಮಾಣದ ಹಾನಿ ಸಂಭವಿಸಿದೆ.
4
+ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಥಳಕ್ಕೆ ಭೇಟಿ ನೀಡಿದ್ದರು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗ್ಗೆ ವಿಶೇಷ ವಿಮಾನದಲ್ಲಿ ಗೋವಾಕ್ಕೆ ತೆರಳಿ ಅಲ್ಲಿಂದ ರಸ್ತೆ ಮೂಲಕ ಶಿರೂರಿಗೆ ಭೇಟಿ ನೀಡಿದ್ದಾರೆ. ಮಳೆಯಿಂದ ಸಂಕಷ್ಟಕ್ಕೀಡದ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದ್ದಾರೆ. ಬಳಿಕ ಜಿಲ್ಲಾಡಳಿತದ ಅಧಿಕಾರಿಗಳು, ನೌಕಾದಳ, ಕರ್ನಾಟಕ ವಿದ್ಯುತ್ ಉತ್ಪಾದನಾ ಸಂಸ್ಥೆ, ರಾಷ್ಟ್ರೀಯ ವಿದ್ಯುತ್ ಉತ್ಪಾದನಾ ಸಂಸ್ಥೆ-ಕೈಗಾ ಅ„ಕಾರಿಗಳ ಜೊತೆ ಸಭೆ ನಡೆಸಲಿದ್ದು, ಹೆದ್ದಾರಿ ನಿರ್ಮಾಣದಲ್ಲಿನ ಲೋಪದೋಷಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
5
+ ರಾಷ್ಟ್ರೀಯ ಸಂಸ್ಥೆಗಳಾದ ನೌಕಾದಳ, ಕೈಗಾ ಅ„ಕಾರಿಗಳು ರಾಜ್ಯ ಸರ್ಕಾರದ ಅಧಿಕಾರಿಗಳ, ಶಾಸಕರ, ಸಚಿವರ ಮಾತಿಗೆ ಮನ್ನಣೆ ನೀಡುತ್ತಿಲ್ಲ ಎಂಬ ಆಕ್ಷೇಪಗಳಿರುವುದರಿಂದ ಇಂದು ಮುಖ್ಯಮಂತ್ರಿಯವರೇ ಸ್ಥಳಕ್ಕೆ ಭೇಟಿ ನೀಡಿ ಸಭೆ ನಡೆಸಿದ್ದಾರೆ.
eesanje/url_46_68_4.txt ADDED
@@ -0,0 +1,6 @@
 
 
 
 
 
 
 
1
+ ನಾನು ಕರ್ನಾಟಕಕ್ಕೆ ಬರುತ್ತೇನೆ ಎಂದರೆ ಕಾಂಗ್ರೆಸ್‍ನವರಿಗೆ ಕೈಕಾಲು ನಡುಗುತ್ತೆ
2
+ ಬೆಂಗಳೂರು, ಜು.21-ನಾನು ಕರ್ನಾಟಕಕ್ಕೆ ಬರುತ್ತೇನೆ ಎಂದರೆ ಕಾಂಗ್ರೆಸ್‍ನವರಿಗೆ ಕೈಕಾಲು ನಡುಗುತ್ತೆ ಎಂದು ಕೇಂದ್ರ ಉಕ್ಕು ಹಾಗೂ ಭಾರೀ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಪಲು ಗ್ರಾಮದಲ್ಲಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ನಾನು ಬರುವುದನ್ನೇ ಸಹಿಸುವುದಿಲ್ಲ ಎಂದರೆ, ನನ್ನಿಂದ ಏನು ನಿರೀಕ್ಷೆ ಮಾಡುತ್ತಾರೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
3
+ ನಾನು ಕರ್ನಾಟಕಕ್ಕೆ ಬರಲೇ ಬಾರದು ಎಂಬ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ತೊಂದರೆ ಉಂಟಾದ ಕಡೆ ಸ್ಥಳ ಪರಿಶೀಲನೆ ಮಾಡುವುದು ಜನಪ್ರತಿನಿಧಿಯಾಗಿ ನನ್ನ ಧರ್ಮ. ಆದರೆ, ಮಂಡ್ಯಕ್ಕೆ ಹೋದರೂ ಬೇಡ ಎನ್ನುತ್ತಾರೆ. ಉತ್ತರ ಕರ್ನಾಟಕಕ್ಕೆ ಹೋಗುತ್ತೇನೆ ಎಂದರೆ ಅಲ್ಲಿಗೂ ಬೇಡ ಅಂತಾರೆ. ಸದ್ಯ ಹಾಸನಕ್ಕೆ ಬರಬೇಡಿ ಎನ್ನಲಿಲ್ಲ ಎಂದು ಮೂದಲಿಸಿದ್ದಾರೆ.
4
+ ಉತ್ತರ ಕನ್ನಡ ಜಿಲ್ಲೆಯ ಶಿರೂರು ಬಳಿ ಗುಡ್ಡ ಕುಸಿತ ಸ್ಥಳಕ್ಕೆ ನಿನ್ನೆ ಹೋದಾಗ 5 ಕಿ.ಮೀ.ದೂರದಲ್ಲೇ ತಡೆಗೋಡೆ ಇಟ್ಟು ಏನೂ ಚಿತ್ರೀಕರಣ ಮಾಡದಂತೆ ಆದೇಶ ಮಾಡಿದ್ದರು. ಆದರೆ, ಸಕಲೇಶಪುರದಲ್ಲಿ ಜಿಲ್ಲಾಡಳಿತ ಸೂಕ್ಷ್ಮವಾಗಿ ನೋಡಲು ಸ್ಪಲ್ಪ ಸಹಕಾರ ಕೊಟ್ಟಿದ್ದಾರೆ ಎಂದಿದ್ದಾರೆ.
5
+ ದರೋಡೆ ನಿಲ್ಲಿಸಲು ಮಿಲಿಟರಿ:ನಾನು ಯಾರನ್ನೂ ಟೀಕೆ ಮಾಡುವುದಿಲ್ಲ. ಕೆಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ವಿಶ್ವಾಸದಲ್ಲಿ ಕೆಲಸ ಮಾಡಬೇಕು. ಆದರೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಮಿಲಿಟರಿ ತರಬೇಕೆಂದು. ಮಿಲಿಟರಿ ತರಲು ಏಕೆ ಹೇಳಿದ್ದಾರೆ ಎಂಬುದರ ಯೋಚನೆ ಮಾಡುತ್ತಿದ್ದೇನೆ. ಅವರು ಮಿಲಿಟರಿ ಏಕೆ ತರಲು ಹೇಳಿದ್ದಾರೆಂದರೆ, ರಾಜ್ಯದಲ್ಲಿ ಭಯೋತ್ಪಾದಕ ಚಟುವಟಿಕೆಗಿಂತಲೂ ಚೆನ್ನಾಗಿ ದರೋಡೆ ನಡೆಯುತ್ತಿದೆ. ದರೋಡೆ ನಿಲ್ಲಿಸಲು ಮಿಲಿಟರಿ ಕರೆ ತರಲು ಹೇಳಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
6
+ ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಅವರು, ಮಳೆ ಹಾನಿಗೆ ಸಂಬಂ„ಸಿದಂತೆ ಯಾವ ಸರ್ಕಾರವೂ ಹತ್ತು ಲಕ್ಷ ರೂ. ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಅವರಿಗೆ ಸಮಯ ಸಿಕ್ಕರೆ ಕೊಡಗಿಗೆ ಭೇಟಿ ನೀಡಲಿ. ನಾನು ಮುಖ್ಯಮಂತ್ರಿಯಾಗಿದ್ದಾಗ ಹತ್ತು ಲಕ್ಷ ರೂ.ವೆಚ್ಚದಲ್ಲಿ ಮನೆ ನಿರ್ಮಿಸಿದ್ದೇವೆ. ಒಂದು ಲಕ್ಷ ರೂ. ಪರಿಹಾರ ಕೊಟ್ಟಿದ್ದೇವೆ. 50 ಸಾವಿರ ರೂ.ಗಳನ್ನು ಪದಾರ್ಥ ಕೊಳ್ಳಲು ಕೊಟ್ಟಿದ್ದೇವೆ. ಗೊತ್ತಿಲ್ಲದಿದ್ದರೆ ಹೋಗಿ ನೋಡಿಕೊಂಡು ಬರಲಿ ಎಂದು ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
eesanje/url_46_68_5.txt ADDED
@@ -0,0 +1,5 @@
 
 
 
 
 
 
1
+ ಡಿ.ಕೆ.ಶಿವಕುಮಾರ್ ಟೀಕೆಗೆ ಅಶೋಕ್ ತಿರುಗೇಟು
2
+ ಹಾಸನ, ಜು.21- ಉಪಮುಖ್ಯಮಂತ್ರಿಗಳೇ ಮನೆ ಬಿಟ್ಟು ಹೊರಗೆ ಬನ್ನಿ. ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೊಲ್ಲಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದರೆ ಏನೂ ಪ್ರಯೋಜನ ಆಗಲ್ಲ ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.
3
+ ಕೇಂದ್ರ ಸಚಿವರು ಬಂದರೆ ಪರಿಹಾರ ಸಿಗುತ್ತಿಲ್ಲ ಎನ್ನುತ್ತೀರಾ. ನೀವಾದರೂ ಬನ್ನಿ. ನಿಮಗೆ ಯೋಗ್ಯತೆ ಇಲ್ಲವೆ. ನೀವು ಬಂದು ಬೇರೆಯವರಿಗೆ ಬುದ್ಧಿ ಹೇಳಿ ಎಂದರು. ನೀವು ಕೊಡುತ್ತಿರುವುದು ಹಣ. ನೀವು ನಯಾಪೈಸಾ ಪರಿಹಾರ ಕೊಟ್ಟಿಲ್ಲ. ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಇಲ್ಲಿಗೆ ಬರಲು ಹಕ್ಕಿದೆ. ಕೇಳಲು ಹಕ್ಕಿದೆ.
4
+ ಕುಮಾರಸ್ವಾಮಿಯವರು ಕೇಂದ್ರ ಮಂತ್ರಿ ರಾಷ್ಟ್ರೀಯ ಹೆದ್ದಾರಿ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ನಾವೆಲ್ಲಾ ಒಕ್ಕೂಟದ ವ್ಯವಸ್ಥೆಯಲ್ಲಿದ್ದೇವೆ ಎಂದು ಅಶೋಕ್ ತಿರುಗೇಟು ನೀಡಿದರು. ಕುಮಾರಸ್ವಾಮಿ ಅವರ ಕೈಯಲ್ಲಿ ಆಗುವುದಿಲ್ಲ ಎಂದಾದರೆ ನೀವು ಬಂದು ಕೆಲಸ ಮಾಡಿ ಜನರ ಕಷ್ಟಗಳಿಗೆ ಸ್ಪಂದಿಸಿ. ಕೇಂದ್ರ ಸಚಿವರಾದ ಕುಮಾರಸ್ವಾಮಿಯವರು ದೇಶವನ್ನೆಲ್ಲಾ ಸುತ್ತಬೇಕು. ಅದರ ನಡುವೆ ಕರ್ನಾಟಕಕ್ಕೆ ಆದ್ಯತೆ ನೀಡಿ ಬರುತ್ತಿದ್ದಾರೆ. ನಿಮಗೆ ಏಕೆ ಬರಲು ಆಗುತ್ತಿಲ್ಲ. ಈ ಸರ್ಕಾರ ಸತ್ತು ಹೋಗಿದೆ. ಬದುಕಿದ್ದರೆ ತಾನೇ ಏನಾದರೂ ಕೇಳಲು ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
5
+ ಹಗರಣಗಳಲ್ಲಿ ಸರ್ಕಾರ ಮುಳುಗಿ ಹೋಗಿದ್ದು, ಅದರಿಂದ ಉತ್ತರ ಕೊಡಲು ಆಗುತ್ತಿಲ್ಲ. ಮೊದಲು ಸರ್ಕಾರ ಬದುಕಿದೆ ಎಂಬುದನ್ನು ತೋರಿಸಲಿ ಎಂದು ಟೀಕಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಸ್ವರೂಪ್ ಪ್ರಕಾಶ್, ಸಿ.ಎನ್. ಬಾಲಕೃಷ್ಣ, ಎಚ್.ಕೆ. ಸುರೇಶ್, ಮಾಜಿ ಶಾಸಕರಾದ ಎಚ್.ಕೆ. ಕುಮಾರಸ್ವಾಮಿ, ಕೆ.ಎಸ್. ಲಿಂಗೇಶ್ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.
eesanje/url_46_68_6.txt ADDED
@@ -0,0 +1,7 @@
 
 
 
 
 
 
 
 
1
+ ನಾಳೆ ಸದನದಲ್ಲಿ ಮುಡಾ ಪ್ರತಿಧ್ವನಿ
2
+ ಬೆಂಗಳೂರು,ಜು.21- ಕಳೆದ ವಾರವಿಡೀ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ವಿಧಾನಸಭೆಯ ಕಲಾಪವನ್ನು ಆಪೋಶನ ತೆಗೆದುಕೊಂಡಿದ್ದು, ನಾಳೆಯಿಂದ ನಡೆಯುವ 2ನೇ ವಾರದ ಕಲಾಪದಲ್ಲಿ ಮುಡಾ ಹಂಚಿಕೆ ಹಗರಣವು ಸೇರ್ಪಡೆಯಾಗುವ ಸಾಧ್ಯತೆ ಇದೆ.ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ ಅಕ್ರಮವಾಗಿ 89.60 ಕೋಟಿ ರೂ. ವರ್ಗಾವಣೆಯಲ್ಲಿ ಎಸ್‍ಐಟಿ, ಸಿಬಿಐ, ಜಾರಿನಿರ್ದೇಶನಾಲಯಗಳು ತನಿಖೆ ನಡೆಸುತ್ತಿವೆ. ಹಗರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ನಾಗೇಂದ್ರ ಆದಿಯಾಗಿ ಎಲ್ಲಾ ಪ್ರಮುಖ ಆರೋಪಿಗಳ ಬಂಧನವಾಗಿದೆ.
3
+ ವಿರೋಧ ಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ರಾಜೀನಾಮೆನೀಡಬೇಕೆಂದು ಒತ್ತಾಯಿಸಿ ವಿಧಾನಸಭೆಯಲ್ಲಿ 2 ದಿನಗಳ ಕಾಲ ಧರಣಿ ನಡೆಸಿದೆ. ಒಂದು ವಾರದ ನಡೆದ ಚರ್ಚೆಗೆ ಸಿದ್ದರಾಮಯ್ಯನವರು ಲಿಖಿತವಾಗಿ ಉತ್ತರ ನೀಡಿ, ಯೂನಿಯನ್ ಬ್ಯಾಂಕ್ ರಾಷ್ಟ್ರೀಕೃತವಾಗಿದ್ದು, ಅಲ್ಲಿ ಹಣದ ಕಳ್ಳತನ ನಡೆದಿದೆ. ಇದಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೊಣೆ ಹೊರುತ್ತಾರೆಯೇ ಎಂದು ತಿರುಗೇಟು ನೀಡುವ ಮೂಲಕ ವಿರೋಧ ಪಕ್ಷಗಳಿಗೆ ಸಡ್ಡು ಹೊಡೆದಿದ್ದಾರೆ.
4
+ ಜೊತೆಗೆ ಬಿಜೆಪಿ ಅವಧಿಯಲ್ಲಿ ನಡೆದ 21 ಹಗರಣಗಳ ಪಟ್ಟಿಯನ್ನು ಮುಂದಿಟ್ಟು ತಿರುಗೇಟು ನೀಡಿದ್ದಾರೆ. ಬಹುತೇಕ ಈ ವಿಚಾರ ಮುಗಿದ ಅಧ್ಯಾಯದಂತಾಗಿದೆ. ಆದರೂ ವಿರೋಧ ಪಕ್ಷಗಳು ಸೋಮವಾರ ಕಲಾಪದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರವನ್ನೇ ಮುಂದುವರೆಸುತ್ತಾರೆಯೇ ಅಥವಾ ಹೊಸ ವಿಚಾರಗಳತ್ತ ಗಮನಹರಿಸುತ್ತಾರೆಯೇ ಎಂಬುದು ಕಾದು ನೋಡಬೇಕಿದೆ.
5
+ ಮೂಲಗಳ ಪ್ರಕಾರ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮುಡಾ ಹಗರಣದ ಚರ್ಚೆಗೆ ಆಸಕ್ತಿ ವಹಿಸಿವೆ. ವಿರೋಧ ಪಕ್ಷಗಳು ನಿಲುವಳಿ ಸೂಚನೆಯಡಿ ಈ ವಿಚಾರವನ್ನು ಪ್ರಸ್ತಾಪಿಸಿದರೆ ಈಗಾಗಲೇ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿರುವುದರಿಂದ ಚರ್ಚೆಗೆ ಅವಕಾಶ ಇಲ್ಲ ಎಂದು ನಿಲುವಳಿಯನ್ನು ತಳ್ಳಿ ಹಾಕುವ ಸಾಧ್ಯತೆಗಳಿವೆ.ಸಾರ್ವಜನಿಕ ಮಹತ್ವದ ವಿಚಾರವನ್ನಾಗಿ ಚರ್ಚೆಗೆ ಅವಕಾಶ ನೀಡುವ ಪರಿಸ್ಥಿತಿಗಳು ಕ್ಷೀಣವಾಗಿವೆ. ವಿಪಕ್ಷಗಳು ಕಳೆದ ವಾರ ಪೂರ್ತಿ ನಿಗಮದ ಹಗರಣ ಬಿಟ್ಟು ಬೇರೆ ಯಾವುದೇ ಗಂಭೀರ ವಿಚಾರಗಳನ್ನು ಪ್ರಸ್ತಾಪಿಸಿಲ್ಲ.ಮುಡಾ ಹಗರಣವೊಂದು ಮುನ್ನಲೆಗೆ ಬಂದರೆ ಮಿಕ್ಕಾ ಎಲ್ಲಾ ವಿಚಾರಗಳು ನೇಪಥ್ಯಕ್ಕೆ ಸರಿಯುವ ಆತಂಕವಿದೆ. ರಾಜ್ಯದಲ್ಲಿ ವ್ಯಾಪಕ ಮಳೆಯಿಂದಾಗಿ ನೆರೆ ಪರಿಸ್ಥಿತಿ ಉಂಟಾಗಿದೆ. ಸುಮಾರು 1 ಸಾವಿರಕ್ಕೂ ಹೆಚ್ಚು ಕಡೆ ಭೂ ಕುಸಿತಗಳಾಗಿವೆ.
6
+ ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿವೆ. ರಸ್ತೆ, ಸೇತುವೆ, ವಿದ್ಯುತ್ ಕಂಬ, ಶಾಲಾ ಕಟ್ಟಡಗಳು ಹಾನಿಗೊಳಗಾಗಿವೆ. ಹತ್ತಕ್ಕೂ ಹೆಚ್ಚು ಜೀವಹಾನಿಯಾಗಿದೆ. ಜಾನುವಾರುಗಳ ಹಾನಿಯ ಬಗ್ಗೆ ಸಮೀಕ್ಷೆ ನಡೆಯುತ್ತಿವೆ. ಜನರಸಾಮಾನ್ಯರ ಮನೆ ಕುಸಿದು ಬದುಕು ಬೀದಿಗೆ ಬಿದ್ದಿದೆ. ಪರಿಸ್ಥಿತಿ ಗಂಭೀರವಾಗಿದ್ದರೂ ವಿಧಾನಸಭೆಯಲ್ಲಿ ಈ ಬಗ್ಗೆ ಹೆಚ್ಚಿನ ಚರ್ಚೆಗಳಾಗಿಲ್ಲ. ಉತ್ತರಕನ್ನಡ ಜಿಲ್ಲೆ ಶಿರೂರಿನಲ್ಲಿ ಭೂಕುಸಿತವಾಗಿ ಹೆದ್ದಾರಿ ಬಂದಾಗಿದ್ದು, ಏಳೆಂಟು ಮಂದಿ ಜೀವ ಹಾನಿಯಾಗಿದೆ. ಈ ವಿಚಾರವನ್ನು ಆಡಳಿತ ಪಕ್ಷದ ಶಾಸಕರೇ ಪ್ರಸ್ತಾಪಿಸಿದ್ದರು.
7
+ ವಿರೋಧ ಪಕ್ಷಗಳು ಜನಸಾಮಾನ್ಯರನ್ನು ಕಾಡುತ್ತಿರುವ ಗಂಭೀರ ವಿಚಾರಗಳ ಬಗ್ಗೆ ಚಕಾರ ಎತ್ತದೆ ರಾಜಕೀಯ ಕಾರಣಕ್ಕಾಗಿ ವಾಲ್ಮೀಕಿ ನಿಗಮ ಹಾಗೂ ಮುಡಾದಂತಹ ವಿಷಯಗಳನ್ನು ಪ್ರಸ್ತಾಪಿಸುತ್ತಿದ್ದಾರೆ ಎಂದು ಆಡಳಿತ ಪಕ್ಷ ತಿರುಗೇಟು ನೀಡುತ್ತಿದೆ. ಒಟ್ಟಿನಲ್ಲಿ ನಾಳೆಯಿಂದ ನಡೆಯುವ ವಿಧಾನಮಂಡಲ ಕಲಾಪ ಮತ್ತಷ್ಟು ಕಾವೇರುವ ಸಾಧ್ಯತೆ ಇದೆ. ಗಲಾಟೆ, ಗದ್ದಲದ ನಡುವೆ ಕೆಲ ಮಸೂದೆಗಳು ಚರ್ಚೆಯಾಗದೆ ಅಂಗೀಕಾರಗೊಳ್ಳುವ ದುಗುಡವೂ ಕಾಡುತ್ತಿದೆ.
eesanje/url_46_68_7.txt ADDED
@@ -0,0 +1,7 @@
 
 
 
 
 
 
 
 
1
+ ರಾಜ್ಯದಲ್ಲಿ ಐದು ದಿನ ಭಾರೀ ಮಳೆ ಮುನ್ಸೂಚನೆ
2
+ ಬೆಂಗಳೂರು, ಜು.21- ವಾತಾವರಣದಲ್ಲಿ ಸಾಕಷ್ಟು ಬದಲಾವಣೆಗಳಾಗಿರುವ ಹಿನ್ನೆಲೆಯಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕಾಗಿದ್ದು, ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ. ಕೇರಳದ ಕರಾವಳಿಯಿಂದ ಮಹಾರಾಷ್ಟ್ರದವರೆಗೂ ಮೇಲುಬ್ಬರ ನಿರ್ಮಾಣವಾಗಿದೆ. ಅಲ್ಲದೇ ಮೇಲ್ಮೈ ಸುಳಿಗಾಳಿಯು ಉಂಟಾಗಿದೆ.
3
+ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ವಾತಾವರಣದಲ್ಲಾಗಿರುವ ಈ ರೀತಿಯ ಬದಲಾವಣೆಯಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಬೀಳುತ್ತಿರುವ ಭಾರೀ ಮಳೆ ಮುಂದುವರೆಯಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಮಳೆ ಹೆಚ್ಚಾಗುವ ಮುನ್ಸೂಚನೆಗಳಿವೆ.
4
+ ನಿರಂತರ ಭಾರೀ ಮಳೆಯಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅತಿವೃಷ್ಟಿ ಉಂಟಾಗಿದ್ದು, ಗುಡ್ಡ ಕುಸಿತ, ಮನೆ, ರಸ್ತೆ, ವಿದ್ಯುತ್ ಸಂಪರ್ಕಗಳಿಗೆ ಹಲವೆಡೆ ಹಾನಿಯಾಗಿದೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯಿಂದ ಕಾವೇರಿ, ಕಪಿಲಾ, ಹೇಮಾವತಿ, ನೇತ್ರಾವತಿ, ಕೃಷ್ಣಾ, ತುಂಗಾಭದ್ರಾ ಮೊದಲಾದ ನದಿಗಳು ಮೈದುಂಬಿ ಹರಿಯುತ್ತಿವೆ. ಕಾವೇರಿ ಮತ್ತು ಕೃಷ್ಣಾ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಮಳೆ ಹೆಚ್ಚಾಗುವ ಮುನ್ಸೂಚನೆ ಇರುವುದರಿಂದ ನದಿಗಳ ನೀರಿನ ಪ್ರಮಾಣವೂ ಹೆಚ್ಚಾಗಲಿದೆ.
5
+ ಜಲ ವಿದ್ಯುತ್ ಉತ್ಪಾದಿಸುವ ಉದ್ದೇಶದ ಜಲಾಶಯಗಳನ್ನು ಹೊರತುಪಡಿಸಿ ಉಳಿದ ರಾಜ್ಯದ ಪ್ರಮುಖ ಜಲಾಶಯಗಳು ಭರ್ತಿಯಾಗುವ ಹಂತ ತಲುಪಿವೆ. ಸಾಕಷ್ಟು ಒಳಹರಿವು ಇರುವುದರಿಂದ ಹೆಚ್ಚಿನ ಪ್ರಮಾಣದ ನೀರನ್ನು ಕೃಷ್ಣಾ ಹಾಗೂ ಕಾವೇರಿ ಕೊಳ್ಳದ ಜಲಾಶಯಗಳಿಂದ ನದಿ ಬಿಡಲಾಗುತ್ತಿದೆ. ಹೀಗಾಗಿ ರಾಜ್ಯವು ಅತಿವೃಷ್ಟಿಯ ಜೊತೆಗೆ ಪ್ರವಾಹ ಪರಿಸ್ಥಿತಿ ಎದುರಿಸುವಂತಾಗಿದೆ.
6
+ ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಜೋರಾದ ಗಾಳಿಯೊಂದಿಗೆ ಅತಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ವಾರಾಂತ್ಯಕ್ಕೆ ಮಳೆ ಕಡಿಮೆಯಾಗುವ ಮುನ್ಸೂಚನೆಗಳಿವೆ.
7
+ ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಲಕ್ಷಣಗಳಿವೆ. ಕರಾವಳಿಯಂತೆ ದಕ್ಷಿಣ ಒಳನಾಡಿನಲ್ಲೂ ಬಲವಾದ ಮೇಲ್ಮೈ ಗಾಳಿ ಬೀಸಲಿದೆ. ಜತೆಗೆ ಮೋಡ ಕವಿದ ವಾತಾವರಣವಿದ್ದು, ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿದೆ. ಹೀಗಾಗಿ ರಾಜ್ಯ ಅತಿವೃಷ್ಟಿ, ಪ್ರವಾಹದ ಸಂಕಷ್ಟಕ್ಕೆ ಸಿಲುಕಿದೆ.
eesanje/url_46_68_8.txt ADDED
@@ -0,0 +1,5 @@
 
 
 
 
 
 
1
+ ಕೇರಳದ 14 ವರ್ಷದ ಬಾಲಕನಿಗೆ ನಿಫಾ ಸೋಂಕು
2
+ ತಿರುವಂತನಪುರಂ,ಜು.21- ಕೇರಳದಲ್ಲಿ ನಿಫಾ ಸೋಂಕು ಕಾಣಿಸಿಕೊಂಡಿದೆ. ಮಲಪ್ಪುರಂ ಜಿಲ್ಲೆಯ 14 ವರ್ಷದ ಬಾಲಕನಿಗೆ ನಿಫಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಪಕ್ಷಿಗಳು ಅಥವಾ ಪ್ರಾಣಿಗಳು ಕಚ್ಚಿದ ಹಣ್ಣುಗಳನ್ನು ಜನ ತಿನ್ನದಂತೆ ರಾಜ್ಯ ಆರೋಗ್ಯ ಇಲಾಖೆ ಜನರಿಗೆ ಎಚ್ಚರಿಕೆ ನೀಡಿದೆ.
3
+ ನಿಫಾ ವೈರಸ್ ಸೋಂಕು ಹಂದಿಗಳು ಮತ್ತು ಹಣ್ಣಿನ ಬಾವಲಿಗಳಂತಹ ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಝೂನೋಟಿಕ್ ಕಾಯಿಲೆಯಾಗಿದೆ. ನಿಫಾ ಸಾಮಾನ್ಯವಾಗಿ ಪ್ರಾಣಿಗಳಿಂದ ಅಥವಾ ಕಲುಷಿತ ಆಹಾರದ ಮೂಲಕ ಮನುಷ್ಯರಿಗೆ ಹರಡುತ್ತದೆ.
4
+ ಇದರ ರೋಗಲಕ್ಷಣಗಳು ತೀವ್ರವಾದ ಜ್ವರ, ವಾಂತಿ ಮತ್ತು ಉಸಿರಾಟದ ಸೋಂಕನ್ನು ಒಳಗೊಂಡಿರುತ್ತವೆ, ಆದರೆ ತೀವ್ರತರವಾದ ಪ್ರಕರಣಗಳಲ್ಲಿ ರೋಗಗ್ರಸ್ತವಾಗುವಿಕೆಗಳು ಮತ್ತು ಮೆದುಳಿನ ಉರಿಯೂತವು ಕೋಮಾಗೆ ಕಾರಣವಾಗುತ್ತದೆ. ನಿಪಾಗೆ ಯಾವುದೇ ಲಸಿಕೆ ಇಲ್ಲ.
5
+ ಖಾಸಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್‍ನಲ್ಲಿರುವ ಬಾಲಕನಿಗೆ ಸೋಂಕು ತಗುಲಿರುವುದನ್ನು ಪುಣೆಯ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ ವೈರಾಲಜಿ ದೃಢಪಡಿಸಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.ಅವರನ್ನು ಕೋಝಿಕ್ಕೋಡ್‍ನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗುವುದು. ಸಂಪರ್ಕ ಪತ್ತೆಹಚ್ಚುವಿಕೆ ಪ್ರಾರಂಭವಾಗಿದೆ. ಹೆಚ್ಚಿನ ಅಪಾಯದ ಸಂಪರ್ಕಗಳನ್ನು ಈಗಾಗಲೇ ಪ್ರತ್ಯೇಕಿಸಲಾಗಿದೆ ಮತ್ತು ಅವರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಾರ್ಜ್ ತಿಳಿಸಿದ್ದಾರೆ.
eesanje/url_46_68_9.txt ADDED
@@ -0,0 +1,9 @@
 
 
 
 
 
 
 
 
 
 
1
+ ತಾಕತ್ತಿದ್ದರೆ ಇ.ಡಿ ವಿರುದ್ಧ ಸಿದ್ದರಾಮಯ್ಯ ದೂರು ನೀಡಲಿ : ಆರ್. ಅಶೋಕ್ ಸವಾಲು
2
+ ಬೆಂಗಳೂರು,ಜು.20- ಒಂದು ವೇಳೆ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಲೋಕಸಭೆ ಚುನಾವಣೆಗೆ ಬಳಕೆ ಮಾಡಿಕೊಂಡಿಲ್ಲ ಎನ್ನುವುದಾದರೆ ಜಾರಿ ನಿರ್ದೇಶನಾಲಯ (ಇ.ಡಿ) ವಿರುದ್ಧ ತಾಕತ್ತಿದ್ದರೆ ದೂರು ದಾಖಲಿಸಲಿ ಎಂದು ರಾಜ್ಯ ಸರ್ಕಾರಕ್ಕೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಬಹಿರಂಗ ಸವಾಲು ಎಸೆದಿದ್ದಾರೆ.
3
+ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರದ ಹಣವನ್ನು ಲೋಕಸಭೆ ಚುನಾವಣೆಗೆ ಬಳಕೆ ಮಾಡಿದೆ ಎಂದು ಇ.ಡಿ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಇದನ್ನು ನಿರಾಕರಿಸುವುದಾದರೆ ಇ.ಡಿ ವಿರುದ್ಧ ದೂರು ದಾಖಲಿಸುವ ತಾಕತ್ತು ಇಲ್ಲವೇ ಎಂದು ಪ್ರಶ್ನೆ ಮಾಡಿದರು.
4
+ ಇ.ಡಿ ವಶದಲ್ಲಿರುವ ಮಾಜಿ ಸಚಿವ ನಾಗೇಂದ್ರ ನನ್ನ ಹೆಸರು ಬಾಯಿಬಿಟ್ಟರೆ ಬುಡಕ್ಕೆ ಬರಬಹುದು ಎಂಬ ಆತಂಕದಿಂದಲೇ ನೋಟಿಸ್ ನೀಡುವ ಮೊದಲೇ ಜಾಮೀನು ತೆಗೆದುಕೊಳ್ಳಲು ಮುಂದಾಗಿದ್ದಾರೆ.ನನ್ನ ಹೆಸರು ಹೇಳಿ ಎಂದು ನಾಗೇಂದ್ರ ಮೇಲೆ ಇ.ಡಿಯವರು ಒತ್ತಡ ಹಾಕುತ್ತಿದ್ದಾರೆ ಎಂದು ಹೇಳಿರುವುದು ನಾಚಿಕೆಗೇಡಿನ ಸಂಗತಿ. ಒಬ್ಬ ಅಧಿಕಾರಿ ಕನಿಷ್ಟ ಎಂದರೂ 50 ಲಕ್ಷ ನುಂಗಬಹುದು. ನಿಗಮದ ಅಧಿಕಾರಿಗಳಾದ ಪದ್ಮನಾಭ ಮತ್ತು ಪರಶುರಾಮ ನಡೆಸಿರುವ ಸಂಭಾಷಣೆ ಬಿಡುಗಡೆಯಾದ ಮೇಲೂ ನಾಗೇಂದ್ರನನ್ನು ಸಮರ್ಥಿಸಿಕೊಳ್ಳುತ್ತಿರುವ ಸಿದ್ದರಾಮಯ್ಯನವರ ಮರ್ಮ ಎಲ್ಲರಿಗೂ ಅರ್ಥವಾಗುತ್ತದೆ ಎಂದು ವ್ಯಂಗ್ಯವಾಡಿದರು.
5
+ 40 ಕೋಟಿ ಚೆಕ್ ಕೊಟ್ಟಿರುವುದು ಸುಳ್ಳೇ? ದೂರವಾಣಿ ಸಂಭಾಷಣೆ ನಡೆಸಿರುವುದು ಸುಳ್ಳೇ? ಡೆತ್‍ನೋಟ್ ಕೂಡ ಸುಳ್ಳು ಎಂದು ಹೇಳಬೇಕಿತ್ತು. ಬರೀ ಪದ್ಮನಾಭ ಎಂದು ಸಿಎಂ ಹೇಳಿದರೂ ಅಲ್ಲಿಂದ ಮುಂದಕ್ಕೆ ಹೋಗಲೇ ಇಲ್ಲ ಎಂದು ತರಾಟೆಗೆ ತೆಗೆದುಕೊಂಡರು.
6
+ ನಾವು ವಾಲ್ಮೀಕಿ ಹಗರಣದ ಬಗ್ಗೆ ಮಾತನಾಡಿದರೆ ಸಿದ್ದರಾಮಯ್ಯನವರು ಬಿಜೆಪಿ ಹಗರಣದ ಬಗ್ಗೆ ಮಾತನಾಡುತ್ತಿದ್ದಾರೆ. ಅ„ಕಾರಕ್ಕೆ ಬಂದು ಒಂದು ವರ್ಷವಾಯಿತು. ನಮ್ಮ ಮೇಲೆ 40% ಆರೋಪ ಮಾಡಿದ್ದೀರಿ. 15 ತಿಂಗಳು ಏನು ಮಾಡುತ್ತಿದ್ದೀರಿ? ನೀವು, ರಾಹುಲ್ ಗಾಂ„ ಡಿ.ಕೆ.ಶಿವಕುಮಾರ್ ಕಟಕಟೆಯಲ್ಲಿ ನಿಂತಿರಲಿಲ್ಲವೇ ಎಂದು ಪ್ರಶ್ನೆ ಮಾಡಿದರು. ಬಿಜೆಪಿ ಸರ್ಕಾರದ ಹಗರಣಗಳನ್ನು ತನಿಖೆ ಮಾಡಿಸುತ್ತೇವೆ ಎಂದು ಹೇಳಿದ್ದೀರಿ. ಬಂದ ಮೂರು ತಿಂಗಳಲ್ಲಿ ಅಫಿಡೆವಿಟ್ ಸಲ್ಲಿಸಿದಾಯಿತು. ಮೂರಾಯ್ತು, ಆರಾಯ್ತು, 15 ತಿಂಗಳಾಯ್ತು ವರದಿ ಎಲ್ಲಿ ಹೋಯ್ತು ಎಂದು ಪ್ರಶ್ನೆಗಳ ಪ್ರಶ್ನೆ ಮಾಡಿದರು.
7
+ ಸಿದ್ದರಾಮಯ್ಯನವರೇ ನಿಮಗೆ ಉಳಿದಿರುವುದು ಕೇವಲ ಮೂರುವರೆ ವರ್ಷ ಮಾತ್ರ. ನಮ್ಮ ಮೇಲೆ ನೀವು 20 ಹಗರಣಗಳ ಆರೋಪ ಮಾಡಬಹುದು. ನಾವು ನಿಮ್ಮ ಮೇಲೆ 70 ಹಗರಣಗಳ ಸಾಕ್ಷಿ ಸಮೇತ ಬುಕ್ ಬಿಡುಗಡೆ ಮಾಡುತ್ತೇವೆ. ಇದು ಸಿಎಜಿ ವರದಿಯ ಲೆಕ್ಕಗಳೆಂದು ಅಶೋಕ್ ಪು��್ತಕವನ್ನು ಬಿಡುಗಡೆ ಮಾಡಿದರು.ನಿಗಮದಲ್ಲಿರುವ ಹಣವನ್ನು ಕರ್ನಾಟಕದ ಬಾರ್‍ಗಳಿಗೆ ಹಾಕಿಸಿದರೆ ಗೊತ್ತಾಗಬಹುದೆಂಬ ಕಾರಣದಿಂದ ತೆಲಂಗಾಣದ ಬಾರ್‍ಗೆ ಹಾಕಿಸಿದ್ದೀರಿ. ಹಣವನ್ನು ಡ್ರಾ ಮಾಡಿಕೊಂಡಿದ್ದೀರಿ. ರಾಜ್ಯ ಸರ್ಕಾರವೇ ಹಣವನ್ನು ತುಂಬಬೇಕು. ಜೈಲಿನಲ್ಲಿರುವ ನಾಗೇಂದ್ರನನ್ನು ಏಕೆ ಬಿಡಿಸಿಕೊಂಡು ಬಂದಿಲ್ಲ ಎಂದು ಪ್ರಶ್ನಿಸಿದರು.
8
+ ಎಸ್‍ಐಟಿ ರಚನೆ ಮಾಡಿದ್ದೇ ಈ ಹಗರಣವನ್ನು ಮುಚ್ಚಿ ಹಾಕಲು. ಇದು ನಿಜವಾದ ಎಸ್‍ಐಟಿಯೇ ಅಲ್ಲ. ಸಿದ್ದರಾಮಯ್ಯ, ಶಿವಕುಮಾರ್, ಸುರ್ಜೆವಾಲ ಕೃಪಾಪೆÇೀಷಿತ ನಾಟಕ ಮಂಡಳಿ. ಒಂದು ತಿಂಗಳಾದರೂ ಹಗರಣದ ಪ್ರಮುಖ ಆರೋಪಿಗಳಿಗೆ ನೋಟಿಸ್ ಕೊಡಲಿಲ್ಲ. ಸಾಹೇಬ್ರು ಹೇಳಿದ ಮೇಲೆ ನಾವೇನು ಮಾಡುವುದು ಎಂದು ವಿಚಾರಣೆಯನ್ನು ಕಬೋರ್ಡ್‍ಗೆ ಹಾಕಲು ಅ„ಕಾರಿಗಳು ಮುಂದಾಗಿದ್ದರು ಎಂದು ದೂರಿದರು.ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಜೈಲಿಗೆ ಹಾಕಲಾಯಿತು. ಆದರೆ ವಾಲ್ಮೀಕಿ ಹಗರಣವನ್ನು ಮುಚ್ಚಲು ಮುಂದಾಗಿದ್ದರು. ಸಿದ್ದರಾಮಯ್ಯನವರು ಎಷ್ಟು ಹತಾಶರಾಗಿದ್ದಾರೆ ಎಂದರೆ ಸುದ್ದಿಗೋಷ್ಟಿಯಲ್ಲಿ ಕೇಂದ್ರ ಸರ್ಕಾರದ ಪ್ರಹ್ಲಾದ್ ಜೋಷಿ, ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೆಸರೇಳಿದ್ದಾರೆ. ಹಣವನ್ನು ನುಂಗಿ ನೀರು ಕುಡಿದಿರುವ ಇವರು ಈಗ ಕಂಡ ಕಂಡವರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.
9
+ ನಾಳೆ ಭೇಟಿ: ರಾಜ್ಯದಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶದಲ್ಲಿ ನಾನು ಮತ್ತು ಕುಮಾರಸ್ವಾಮಿ ನಾಳೆ ಭೇಟಿ ಕೊಡುತ್ತೇವೆ. ಅನೇಕ ಕಡೆ ಅನಾಹುತ ಸಂಭವಿಸಿದರೂ ಸಂಬಂಧಪಟ್ಟ ಸಚಿವರು ಭೇಟಿ ನೀಡಿಲ್ಲ. ಜನರು ತತ್ತರಿಸಿ ಹೋಗಿದ್ದಾರೆ. ಮಳೆ ಬಂದು 15 ದಿನವಾಗಿದೆ. ಸರ್ಕಾರದ ಕತ್ತೆ ಕಾಯುತ್ತಿದೆಯೇ ಎಂದು ಪ್ರಶ್ನಿಸಿದರು.
eesanje/url_46_69_1.txt ADDED
@@ -0,0 +1,8 @@
 
 
 
 
 
 
 
 
 
1
+ ಧಾರಾಕಾರ ಮಳೆಗೆ ಧರೆಗುರುಳಿದ ಮನೆಗಳು
2
+ ಬೆಂಗಳೂರು,ಜು.20- ಕಳೆದ 15 ದಿನಗಳಿಂದ ರಾಜ್ಯದಲ್ಲಿ ಧಾರಕಾರ ಮಳೆ ಸುರಿಯುತ್ತಿದ್ದು, ಹುಬ್ಬಳ್ಳಿ, ಬೆಳಗಾವಿ, ಹಾಸನ, ಶಿವಮೊಗ್ಗ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಮನೆಗಳು ಕುಸಿದುಬಿದ್ದು ಅಪಾರ ನಷ್ಟ ಉಂಟಾಗಿದೆ. ಬೆಳಗಾವಿಯಲ್ಲಿ ಮಳೆಯಿಂದಾಗಿ ಅನಾಹುತಗಳು ಹೆಚ್ಚಾಗಿವೆ. ಎರಡು ಗ್ರಾಮಗಳಲ್ಲಿ ಮನೆ ಕುಸಿದು ಕುಟುಂಬಸ್ಥರು ಬೀದಿ ಪಾಲಾಗಿದ್ದಾರೆ.
3
+ ಅದರಲ್ಲೂ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹೊಸಟ್ಟಿಯಲ್ಲಿ ಮನೆ ಕುಸಿಯುವ ಮುನ್ನ 2 ಇಟ್ಟಿಗೆಗಳು ಬಿದ್ದಿದ್ದು ಎಚ್ಚೆತ್ತ ಕುಟುಂಬಸ್ಥರು ಓಡಿ ಆಚೆ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.ಅದೃಷ್ಟವಶಾತ್ ಎರಡು ಇಟ್ಟಿಗೆಗಳಿಂದಾಗಿ ಇಡೀ ಕುಟುಂಬ ಸಾವಿನ ದವಡೆಯಿಂದ ಪಾರಾಗಿದೆ.
4
+ ಪರಿಹಾರದ ನಿರೀಕ್ಷೆ: ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ಅನಾಹುತಗಳು ಹೆಚ್ಚಾಗ್ತಿವೆ. ಸದ್ಯ ಬಿದ್ದ ಮನೆಯಲ್ಲಿಯೇ ನಿಂಗಪ್ಪ ಕಮತಗಿ ಕುಟುಂಬ ಬೇರೆ ದಾರಿ ಇಲ್ಲದೆ ವಾಸಿಸುವಂತಾಗಿದೆ. ಮನೆಯ ಒಂದು ಗೋಡೆ ಉರುಳಿ ಬಿದ್ದು ಅವಾಂತರವಾಗಿದೆ. ಮನೆಯ 11 ಜನ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಕಮತಗಿ ಕುಟುಂಬ ಸರ್ಕಾರದಿಂದ ಸಿಗುವ ಪರಿಹಾರದ ನಿರೀಕ್ಷೆಯಲ್ಲಿದೆ.
5
+ ಶಿವಮೊಗ್ಗ:ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯ ಹಿನ್ನಲೆಯಲ್ಲಿ ಶಾಲಾ ಕಾಲೇಜು ಹಾಗೂ ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಆಯಾ ತಾಲೂಕಿನ ತಹಶೀಲ್ದಾರ್‍ಗಳು ರಜೆ ಘೋಷಣೆ ಮಾಡಿದ್ದಾರೆ. ಧಾರಾಕಾರ ಮಳೆಗೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಗಾಂಧಿನಗರದಲ್ಲಿ 3 ಮನೆಗಳು ಧರೆಗುರುಳಿವೆ.
6
+ ನವಲಗುಂದ: ಪಟ್ಟಣದಬಸವೇಶ್ವರ ನಗರದ ನಿವಾಸಿಯಾದ ಗೌರಮ್ಮ ಅನುರಾಜ್ ಕುಂಕುಮಗಾರ ಅವರ ಮನೆ ಸತತ ಮಳೆಯಿಂದಾಗಿ ರಾತ್ರಿ ಮನೆ ಕುಸಿದು ಮನೆಯಲ್ಲಿನ ಸಂಪೂರ್ಣ ವಸ್ತುಗಳು ಹಾಳಾಗಿವೆ.
7
+ ಹಾಸನ: ಭಾರೀ ಮಳೆಯ ಪರಿಣಾಮ ಮನೆ ಹಾಗೂ ಕೊಟ್ಟಿಗೆ ಕುಸಿದುಬಿದ್ದು ಮೂರು ಹಸುಗಳು ದಾರುಣವಾಗಿ ಮೃತಪಟ್ಟಿದ್ದು, ಅದೃಷ್ಟವಶಾತ್ ಮನೆ ಮಾಲೀಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೇಲೂರು ತಾಲ್ಲೂಕು ಮಾದೀಹಳ್ಳಿ ಹೋಬಳಿ ಸಂಕೇನಹಳ್ಳಿ ಗ್ರಾಮದ ಅಣ್ಣಪ್ಪ ಶೆಟ್ಟಿ ಮತ್ತು ರತ್ನಮ್ಮ ಎಂಬವರ ಮನೆ ಇಂದು ಮುಂಜಾನೆ ಇದ್ದಕ್ಕಿದ್ದಂತೆ ನೆಲಕ್ಕುರಳಿದೆ. ಮನೆಗೆ ಹೊಂದಿಕೊಂಡಂತಿದ್ದ ಕೊಟ್ಟಿಗೆಯಲ್ಲಿ ಮಲಗಿದ್ದ ಮೂರು ಹಸುಗಳುಸಾವನ್ನಪ್ಪಿವೆ.
8
+ ಮನೆಯಲ್ಲಿದ್ದ ಟಿ.ವಿ. ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳು, ದವಸ ಧಾನ್ಯಗಳು ಮಣ್ಣುಪಾಲಾಗಿವೆ. ಮನೆ ಗೋಡೆ ನೆಲಕ್ಕುರುಳಿದ ರಭಸಕ್ಕೆ ಕೊಟ್ಟಿಗೆಯಲ್ಲಿದ್ದ ಮೂರು ಹಸುಗಳು ಸಾವನ್ನಪ್ಪಿದ್ದು ಮಣ್ಣಿನಡಿ ಸಿಲುಕಿದರು ಹಸುಗಳ ದೇಹ ಕಂಡು ಮಾಲಕಿ ರತ್ನಮ್ಮ ದುಃಖಿಸುವ ದೃಶ್ಯ ಕರುಳು ಚುರುಕ್ ಎನ್ನಿಸುವಂತಿತ್ತು.
eesanje/url_46_69_10.txt ADDED
@@ -0,0 +1,5 @@
 
 
 
 
 
 
1
+ ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ಭಕ್ತಾದಿಗಗಳಿಗೆ ಕಡ್ಡಾಯ ವಸ್ತ್ರಸಂಹಿತೆ
2
+ ಶೃಂಗೇರಿ: ಶೃಂಗೇರಿ ಶ್ರೀ ಶಾರದಾ ಪೀಠವು ಆಗಸ್ಟ್ 15 – 2024 ರಿಂದ ಶ್ರೀ ಶಾರದಮ್ಮನವರ ದರ್ಶನಕ್ಕೆ ಹಾಗೂ ಗುರುಗಳ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಭಾರತೀಯ ಸಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಸೂಚಿಸಿ ಆಡಳಿತಾಧಿಕಾರಿಗಳು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
3
+ ಭಾರತೀಯ ಸಾಂಪ್ರದಾಯಕವಲ್ಲದ ಉಡುಗೆಯನ್ನು ತೊಟ್ಟು ಬಂದವರಿಗೆ ಶ್ರೀ ಶಾರದಾಂಬೆ ದೇವಸ್ಥಾನದ ಅರ್ಧ ಮಂಟಪದ ಒಳಗೆ ಪ್ರವೇಶವಿರುವುದಿಲ್ಲ. ಅಂತವರು ಹೊರಗಿನ ಪ್ರಕಾರದಿಂದಲೇ ದೇವರ ದರ್ಶನವನ್ನು ಪಡೆಯಬೇಕಾಗುತ್ತದೆ.
4
+ ಪುರುಷರಾದಲ್ಲಿ ಧೋತಿ ಶಲ್ಯ ಮತ್ತು ಉತ್ತರೀಯ ಹಾಗೂ ಮಹಿಳೆಯರು ಸೀರೆ ರವಿಕೆ, ಸಲ್ವಾರ್ – ದುಪಟ್ಟ ಅಥವಾ ಲಂಗ ದಾವಣಿಗಳಂತ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ದೇವರ ದರ್ಶನ ಮಾಡಬಹುದು.
5
+ ಶೃಂಗೇರಿ ಮಠದ ಈ ಆದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಕ್ತರು ವ್ಯಾಪಕ ಬೆಂಬಲ ವ್ಯಕ್ತಪಡಿಸಿದ್ದಾರೆ. ಅರ್ಧಂಬರ್ಧ ಬಟ್ಟೆ ತೊಟ್ಟು ಕೆಲವು ಬುದ್ಧಿಹೀನರು ಪಿಕ್ನಿಕ್ ಸ್ಪಾಟ್ ನಂತೆ ದೇವಾಲಯಗಳನ್ನು ಪ್ರವೇಶಿಸುತ್ತಾರೆ. ಇಂತಹ ನಿಯಮಗಳಿಂದ ಅದಕ್ಕೆ ಕಡಿವಾಣ ಹಾಕಬಹುದು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
eesanje/url_46_69_11.txt ADDED
@@ -0,0 +1,8 @@
 
 
 
 
 
 
 
 
 
1
+ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಕಳಪೆ ಮೊಟ್ಟೆ ತಿಂದು ನೋಡಿ ಎಂದ ಸಭಾಪತಿ
2
+ ಬೆಂಗಳೂರು,ಜು.19- ಅಂಗನವಾಡಿಗಳಲ್ಲಿ ಮಕ್ಕಳಿಗೆ ಪೂರೈಕೆಯಾಗುತ್ತಿರುವ ಕಳಪೆ ಆಹಾರದ ಕುರಿತು ಒಂದು ಬಾರಿ ಸಚಿವರು ಮೊಟ್ಟೆ ತಿಂದು ನೋಡಿದರೆ ಅಲ್ಲಿನ ಪರಿಸ್ಥಿತಿ ಹೇಗಿದೆ ಎಂಬುದು ನಿಮಗೆ ಅರ್ಥವಾಗುತ್ತದೆ ಎಂದು ಸಭಾಪತಿ ಹೊರಟ್ಟಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸೂಚಿಸಿದ ಪ್ರಸಂಗ ವಿಧಾನಪರಿಷತ್‌ನಲ್ಲಿ ನಡೆಯಿತು.
3
+ ಪ್ರಶ್ನೋತ್ತರ ಸಂದರ್ಭದಲ್ಲಿ ಸದಸ್ಯೆ ಹೇಮಲತಾ ನಾಯಕ್‌ ಅವರು ಅಂಗನವಾಡಿಗಳಿಗೆ ಪೂರೈಕೆಯಾಗುತ್ತಿ ರುವ ಆಹಾರ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಗಮನ ಸೆಳೆದರು.
4
+ ಮಕ್ಕಳಿಗೆ ನಮ ಸರ್ಕಾರ ಪೌಷ್ಟಿಕಾಂಶವುಳ್ಳ ಗುಣಮಟ್ಟದ ಆಹಾರವನ್ನು ಪೂರೈಕೆ ಮಾಡುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಸಂಬಂಧ ಜಿಲ್ಲಾಧಿಕಾರಿಗಳು, ಸಿಇಒಗಳ ಜೊತೆ ಸಭೆ ನಡೆಸಿದ್ದರೆಂದು ಹೇಳಿದರು. ಇದಕ್ಕೆ ಆಕ್ಷೇಪಿಸಿದ ಹೇಮಲತಾ ನಾಯಕ್‌ ಅನೇಕ ಅಂಗನವಾಡಿಗಳಲ್ಲಿ ಕಳಪೆ ಗುಣಮಟ್ಟದ ಆಹಾರಗಳನ್ನು ಪೂರೈಕೆ ಮಾಡಲಾಗುತ್ತಿದೆ. ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ಸೇರಿದಂತೆ ಎಲ್ಲವೂ ಕಳಪೆಯಾಗಿವೆ. ತಿನ್ನಲು ಯೋಗ್ಯವಾಗಿಲ್ಲ ಎಂದು ಅಸಮಾಧಾನ ಹೊರಹಾಕಿದರು.
5
+ ಆಗ ಹೆಬ್ಬಾಳ್ಕರ್‌ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಳ್ಳಲು ಮುಂದಾದಾಗ ಮಧ್ಯಪ್ರವೇಶಿಸಿದ ಬಸವರಾಜ ಹೊರಟ್ಟಿ, ನೀವು ಮೊಟ್ಟೆಯನ್ನು ತಿನ್ನುತ್ತೀರಾ? ಒಂದು ಬಾರಿ ತಿಂದರೆ ನಿಮಗೆ ಗೊತ್ತಾಗುತ್ತದೆ ಎಂದು ಅಂಗನವಾಡಿಗಳ ವಸ್ತುಸ್ಥಿತಿಯನ್ನು ವಿವರಿಸುವ ಪ್ರಯತ್ನ ಮಾಡಿದರು.
6
+ ಆಗ ಸಚಿವರು ನಾನು ಮೊಟ್ಟೆಯನ್ನು ಇದುವರೆಗೂ ತಿಂದಿಲ್ಲ. ಅದನ್ನು ಕೈಯಲ್ಲೂ ಮುಟ್ಟುವುದಿಲ್ಲ. ಲೋಪದೋಷಗಳಿದ್ದರೆ ಸರಿಪಡಿಸುತ್ತೇವೆ ಎಂದು ಭರವಸೆ ನೀಡಿದರು.ಈ ವೇಳೆ ಹೊರಟ್ಟಿ ಅವರು, ಸದಸ್ಯರ ಜೊತೆಗೂಡಿ ಅಂಗನವಾಡಿ ಕೇಂದ್ರಗಳಿಗೆ ಭೇಟಿ ಕೊಟ್ಟು ಸಮಸ್ಯೆಗಳನ್ನು ಇತ್ಯರ್ಥಪಡಿಸಿ, ಎಲ್ಲಿ ಸಮಸ್ಯೆಗಳಿವೆಯೋ ಅಂತಹ ಕಡೆ ಆದ್ಯತೆ ಮೇರೆಗೆ ಗಮನಹರಿಸಿ ಎಂದು ಸಲಹೆ ಮಾಡಿದರು.
7
+ ಈ ಸಂದರ್ಭದಲ್ಲಿ ಹೇಮಲತಾ ನಾಯಕ್ ಅವರು ಸದನಕ್ಕೆ ಕಳಪೆ ಗುಣಮಟ್ಟದಿಂದ ಕೂಡಿರುವ ಮೊಟ್ಟೆಗಳನ್ನು ಬ್ಯಾಗ್ನಲ್ಲಿ ಹಾಕಿಕೊಂಡು ಸದನದಲ್ಲಿ ಪ್ರದರ್ಶಿಸಲು ಬಂದಿದ್ದರು. ಆದರೆ ಸಭಾಪತಿಗಳು ಅದಕ್ಕೆ ಅವಕಾಶ ಕೊಡಲಿಲ್ಲ.
8
+ ಇದಕ್ಕೆ ಮುನ್ನ ಮಾತನಾಡಿದ ಸಚಿವೆ ಹೆಬ್ಬಾಳ್ಕರ್‌, ಇದು ಅಂಗನವಾಡಿ ಕೇಂದ್ರಗಳು ಪ್ರಾರಂಭವಾಗಿ 49 ವರ್ಷಗಳಾಗಿವೆ. ದೇವರ ದಯೆಯಿಂದ ಎಲ್ಲಿಯೂ ಕೂಡ ಕಹಿಯಾದ ಘಟನೆ ನಡೆದಿಲ್ಲ. ಒಂದು ವೇಳೆ ಎಲ್ಲಾದರೂ ಸಮಸ್ಯೆಗಳಿದ್ದರೆ ಸರಿಪಡಿಸುತ್ತೇವೆ ಎಂದು ಭರವಸೆ ಕೊಟ್ಟರು.
eesanje/url_46_69_12.txt ADDED
@@ -0,0 +1,8 @@
 
 
 
 
 
 
 
 
 
1
+ ಶಿರೂರು ಗುಡ್ಡ ಕುಸಿತ : ಅಧಿಕಾರಿಗಳ ಆರೋಪ- ಪ್ರತ್ಯಾರೋಪ, ಸಂತ್ರಸ್ತರು ಅತಂತ್ರ
2
+ ಬೆಂಗಳೂರು,ಜು.19-ಉತ್ತರಕನ್ನಡ ಅಂಕೋಲ ಬಳಿಯ ಶಿರೂರು ಬಳಿ ಗುಡ್ಡ ಕುಸಿದು ನದಿಯಲ್ಲಿ ಕೊಚ್ಚಿ ಹೋಗಿ ಏಳು ಮಂದಿ ಮೃತಪಟ್ಟು ಅಪಾರ ಹಾನಿ ಉಂಟಾಗಿದೆ. ಸಂತ್ರಸ್ತರು ಅತಂತ್ರ ಸ್ಥಿತಿಯಲ್ಲಿದ್ದರೆ, ಇತ್ತ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ.
3
+ ಶಿರೂರಿನ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಭೂಕುಸಿತದಿಂದ ಜೀವಹಾನಿಗಳಾಗಿ ಶವಗಳನ್ನು ಹೊರತೆಗೆಯುವ ಕಾರ್ಯದಲ್ಲಿ ರಾಜ್ಯ ಸರ್ಕಾರ ತೊಡಗಿದೆ. ತಮ ಪ್ರಾಣ ಪಣಕ್ಕಿಟ್ಟು ಜಿಲ್ಲಾಡಳಿತ ಹಾಗೂ ಸಿಬ್ಬಂದಿ ಮೃತದೇಹಗಳಿಗಾಗಿ ಕಾರ್ಯಾಚರಣೆಯಲ್ಲಿ ಹಗಲಿರುಳು ತೊಡಗಿದ್ದಾರೆ.
4
+ ಈ ಭಾಗದಲ್ಲಿ ಸತತ ಮಳೆ ಸುರಿಯುತ್ತಿದ್ದು, ಕಾರ್ಯಾಚರಣೆಗೆ ಅಡ್ಡಿಯಾಗಿದ್ದರೂ ಸಹ ತಮ ಪ್ರಾಣವನ್ನು ಲೆಕ್ಕಿಸದೆ ಸ್ಥಳೀಯರ ನೆರವಿಗಾಗಿ ಧಾವಿಸಿದ್ದಾರೆ. ಮಳೆ ಜೋರಾಗಿ ಮತ್ತೆ ಗುಡ್ಡ, ಜೆಸಿಬಿಯೂ ಕುಸಿಯುವ ಆತಂಕದಲ್ಲಿ ರಾಜ್ಯ ಸರ್ಕಾರ ತಮ ಜವಾಬ್ದಾರಿಯನ್ನು ಮರೆಯದೆ ಪರಿಸ್ಥಿತಿ ಸರಿದೂಗಿಸಲು ಯತ್ನಿಸುತ್ತಿದೆ. ಆದರೆ ಇತ್ತ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದವರು ರಸ್ತೆ ಮಧ್ಯೆ ಬಿದ್ದಿರುವ ಮಣ್ಣನ್ನು ತೆರವುಗೊಳಿಸುತ್ತೇವೆ. ಮೊದಲು ರಸ್ತೆ ಕ್ಲಿಯರ್‌ ಆಗಬೇಕೆಂದು ಒತ್ತಡ ಹಾಕುತ್ತಿದ್ದಾರೆ.
5
+ ಒಂದು ವೇಳೆ ಈ ಮಣ್ಣಿನಡಿ ಯಾರಾದರೂ ಸಿಲುಕಿಕೊಂಡಿದ್ದರೆ ಮಣ್ಣು ತೆರವು ವೇಳೆ ಜೆಸಿಬಿ ತಾಗಿದರೆ ಎಂಬ ಆತಂಕ ಜಿಲ್ಲಾಡಳಿತದ್ದು, ಹಾಗಾಗಿ ರಾಜ್ಯಸರ್ಕಾರ ಹಾಗೂ ಕೇಂದ್ರ ಸರ್ಕಾರದ ಸಂಘರ್ಷದಿಂದ ಅಲ್ಲಿನ ಸ್ಥಳೀಯರು ಪರದಾಡುವಂತಾಗಿದ್ದಾರೆ.
6
+ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದವರು ಮನಸೋ ಇಚ್ಛೆ ಗುಡ್ಡ ಕೊರೆದು ರಸ್ತೆ ನಿರ್ಮಿಸಿರುವುದೇ ಇಂದಿನ ಅನಾಹುತಕ್ಕೆ ಕಾರಣವಾಗಿದೆ ಎಂಬುದು ರಾಜ್ಯ ಸರ್ಕಾರದ ಆರೋಪವಾಗಿದೆ. ಪ್ರಕೃತಿ ವಿಕೋಪದಿಂದ ಉಂಟಾಗಿರುವ ಶಿರೂರು ಅನಾಹುತಕ್ಕೆ ಕೇಂದ್ರ ಸ್ಪಂದಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.
7
+ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಹೆದ್ದಾರಿ ಮಾನದಂಡಗಳನ್ನು ಪಾಲಿಸಿಲ್ಲ. ಟೋಲ್‌ ಸಂಗ್ರಹವೇ ಅವರ ಏಕೈಕ ಉದ್ದೇಶದಿಂದ ರಸ್ತೆ ನಿರ್ಮಾಣ ಮಾಡುತ್ತಿದ್ದಾರೆ. ನಂತರ ಸಂಭವಿಸುವ ಅಪಾಯಗಳಿಗೆ ರಾಜ್ಯ ಸರ್ಕಾರವೇ ಉತ್ತರ ಕೊಡಬೇಕು. ಆದರೆ ಕೇಂದ್ರ ಸರ್ಕಾರ ಹೆದ್ದಾರಿಗಳಲ್ಲಿ ಟೋಲ್‌ ಸಂಗ್ರಹಿಸುವುದಷ್ಟೇ ಅವರ ಮಾನದಂಡವಾಗಿದೆಯೇ ಹೊರತು ಯಾವುದೇ ಜವಾಬ್ದಾರಿ ತೆಗೆದುಕೊಳ್ಳುತ್ತಿಲ್ಲ.
8
+ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಜಿಲ್ಲಾಧಿಕಾರಿ ಮನವಿ ಮಾಡಿದರೂ ಸ್ಪಂದಿಸದೆ, ಕೇವಲ ಹೆದ್ದಾರಿ ಮಧ್ಯೆ ಬಿದ್ದಿರುವ ಮಣ್ಣು ತೆರವುಗೊಳಿಸಲಷ್ಟೇ ಯೋಚಿಸುತ್ತಿದೆ. ಈ ಭಾಗದಲ್ಲಷ್ಟೇ ಅಲ್ಲದೆ ಇದೇ ರೀತಿಯ ಅಪಾಯಕರ ಹೆದ್ದಾರಿಗಳಿವೆ. ಅದನ್ನು ಗುರುತಿಸಿ ಮಾಹಿತಿ ಸಂ���್ರಹಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜೊತೆ ಸಭೆ ನಡೆಸಿ ಮುಂದಾಗುವ ಅಪಾಯವನ್ನು ತಪ್ಪಿಸಬೇಕಿದೆ.
eesanje/url_46_69_2.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಸಿಎಂ ಸಿದ್ಧರಾಮಯ್ಯ ಕುಟುಂಬಸ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು
2
+ ಬೆಂಗಳೂರು,ಜು.20- ರಾಜಕೀಯ ಪ್ರಭಾವದಿಂದ ತಮ್ಮ ಪತ್ನಿಯ ಹೆಸರಿಗೆ ಕಾನೂನು ಬಾಹಿರವಾದ ಬದಲಿ ನಿವೇಶನಗಳ ಹಂಚಿಕೆಯ ಕಾರ್ಯದಲ್ಲಿ 40 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತ ಸರ್ಕಾರಕ್ಕೆ ನಷ್ಟ ಉಂಟು ಮಾಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತಿತರ ಅವರ ಕುಟುಂಬದ ವರ್ಗದವರ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.
3
+ ಸಿದ್ಧರಾಮಯ್ಯ ಅವರ ಪತ್ನಿ ಬಿ. ಎಂ. ಪಾರ್ವತಿ, ಬಾವಮೈದುನ ಬಿ. ಎಂ. ಮಲ್ಲಿಕಾರ್ಜುನ ಸ್ವಾಮಿ, ಮೂಡಾ ಮಾಜಿ ಅಧ್ಯಕ್ಷರುಗಳಾದ ಬಸವೇಗೌಡ, ಹೆಚ್. ವಿ. ರಾಜೀವ್ ಮತ್ತು ಅಂದಿನ ಆಯುಕ್ತರಾಗಿದ್ದ ಡಿ. ಬಿ. ನಟೇಶ್ ರವರುಗಳ ವಿರುದ್ಧವೂ ಸಹ ದೂರು ದಾಖಲು. ಆರೋಪಕ್ಕೆ ಅಗತ್ಯವಿರುವ ಎಲ್ಲಾ 383 ಪುಟಗಳ ದಾಖಲೆಗಳೊಂದಿಗೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಇಂದು ಲೋಕಾಯುಕ್ತ ಕಚೇರಿಗೆ ತೆರಳಿ ಸಿಎಂ ವಿರುದ್ಧ ದೂರು ನೀಡಿದ್ದಾರೆ.
4
+ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ ತನ್ನ ದೇವನೂರು 3ನೇ ಹಂತದ ಬಡಾವಣೆ ನಿರ್ಮಾಣಕ್ಕೆಂದು 1997 ರಂದು ಮೈಸೂರು ತಾಲ್ಲೂಕು ಕಸಬಾ ಹೋಬಳಿಯ ಕೆಸರೆ ಗ್ರಾಮ ಮತ್ತು ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ನೂರಾರು ಎಕರೆ ಜಮೀನುಗಳನ್ನು ಭೂಸ್ವಾಧಿ„ೀನ ಮಾಡಿಕೊಂಡಿರುತ್ತದೆ. ಇದರ ಪೈಕಿ ಕೆಸರೆ ಗ್ರಾಮದ ಸರ್ವೆ ನಂ: 464 ರ 3.16 ಎಕರೆ ಜಾಗವನ್ನು ಅದರ ಮಾಲೀಕ ನಿಂಗ ಬಿನ್ ಜವರ ಅವರಿಂದ ಭೂಸ್ವಾಧಿನ ಪಡಿಸಿಕೊಂಡು, ಪರಿಹಾರದ ರೂಪದಲ್ಲಿ 3,24,700 ರೂ.ಗಳನ್ನು ಸದರಿ ಮಾಲೀಕರಿಗೆ ಬಿಡುಗಡೆ ಮಾಡಿರುತ್ತದೆ.
5
+ ಅದಾದ ನಂತರ 1998 ರಂದು ನಗರಾಭಿವೃದ್ಧಿ ಇಲಾಖೆಯು ಸದರಿ ಕೆಸರೆ ಗ್ರಾಮದ ಸರ್ವೆ ನಂ: 464 ರ 3.16 ಎಕರೆ ವಿಸ್ತೀರ್ಣದ ಜಾಗವನ್ನು ಭೂಸ್ವಾಧಿ„ೀನ ಪ್ರಕ್ರಿಯೆಯಿಂದ ಕೈಬಿಟ್ಟಿರುವಆದೇಶವನ್ನು ಹೊರಡಿಸುತ್ತದೆ. ಈ ಅವಧಿಯಲ್ಲಿ ಸಿದ್ಧರಾಮಯ್ಯನವರು ಅಂದಿನ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿಗಳಾಗಿರುತ್ತಾರೆ ಹಾಗೂ ಅವರ ಅತ್ಯಾಪ್ತರಾಗಿರುವ ಬಸವೇಗೌಡ ಅವರು ಮೂಡಾ ಅಧ್ಯಕ್ಷರಾಗಿರುತ್ತಾರೆ.
6
+ 2004 ರಂದು ಕೆಸರೆ ಗ್ರಾಮದ ಸರ್ವೆ ನಂ: 464 ರ 3.16 ಎಕರೆ ವಿಸ್ತಿರ್ಣದ ಸ್ವತ್ತಿನ ಮಾಲೀಕರಾದ ನಿಂಗ ಬಿನ್ ಜವರ ಎಂಬುವವರ ಮಗನಾದ ಒ. ದೇವರಾಜು ಅವರಿಂದ ಸಿದ್ಧರಾಮಯ್ಯನವರ ಭಾವಮೈದುನ (ಪತ್ನಿಯ ಸಹೋದರ) ಮಲ್ಲಿಕಾರ್ಜುನ ಸ್ವಾಮಿ ಬಿನ್ ಮರಿಲಿಂಗಯ್ಯ ನವರು ಕ್ರಯಕ್ಕೆ ಪಡೆದು ತಮ್ಮ ಹೆಸರಿಗೆ ನೊಂದಣಿ ಮಾಡಿಸಿಕೊಳ್ಳುತ್ತಾರೆ. 2005 ರಂದು ಸದರಿ ಜಮೀನನ್ನು ವ್ಯವಸಾಯ ಪ್ರದೇಶದಿಂದ ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತನೆ ಮಾಡಿಸಿಕೊಳ್ಳಲಾಗುತ್ತದೆ.
7
+ ಆದರೆ, ಸದರಿ ಜಮೀನಿನ ಮಾಲೀಕರಾದ ನಿಂಗ ಬಿನ್ ಜವರ ರವರು ಮರಣ ಹೊಂದಿದ್ದರೂ ಸಹ ಅವರ ಹೆಸರಿನಲ್ಲಿಯೇ ಜಿಲ್ಲಾಧಿಕಾರಿಗಳ ಕಛೇರಿಯಿಂದ ಭೂ ಪರಿವರ್ತನೆ ಮಾಡಲಾಗಿರುತ್ತದೆ. ಈ ಅವಧಿಯಲ್ಲಿ ಸಿದ್ಧರಾಮಯ್ಯನವರು (2004 ರಿಂದ 2006) ಅಂದಿನ ಮುಖ್ಯಮಂ��್ರಿ ಧರ್ಮಸಿಂಗ್ ಅವರ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದರು.
8
+ 2010 ರಂದು ಸಿದ್ಧರಾಮಯ್ಯನವರ ಭಾವಮೈದುನ ಮಲ್ಲಿಕಾರ್ಜುನ ಸ್ವಾಮಿ ಅವರು ಸದರಿ ಸ್ವತ್ತನ್ನು ತಮ್ಮ ಸಹೋದರಿ ಪಾರ್ವತಿ (ಸಿದ್ಧರಾಮಯ್ಯನವರ ಧರ್ಮಪತ್ನಿ) ಯವರ ಹೆಸರಿಗೆ ದಾನ ಪತ್ರದ ಮೂಲಕ ದಾನವಾಗಿ ನೀಡುತ್ತಾರೆ. ದಾನ ಪತ್ರದ ಮೂಲಕ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಬಂದಿದ್ದ ಸ್ವತ್ತಿಗೆ ಬದಲಾಗಿ, ಈಗಾಗಲೇ ಅಭಿವೃದ್ಧಿಯಾಗಿರುವ ಮೂಡಾದ ಇನ್ನೊಂದು ಬಡಾವಣೆಯಲ್ಲಿ ಬದಲಿ ನಿವೇಶನಗಳನ್ನು ಮಂಜೂರು ಮಾಡುವಂತೆ 2014 ರಲ್ಲಿ ಪಾರ್ವತಿಯವರು ಅರ್ಜಿ ಸಲ್ಲಿಸುತ್ತಾರೆ.
9
+ ಪಾರ್ವತಿಯವರ ಅರ್ಜಿಯನ್ನು ಪುರಸ್ಕರಿಸಿದ ನಗರಾಭಿವೃದ್ಧಿ ಇಲಾಖೆಯು ಬದಲಿ ನಿವೇಶನಗಳನ್ನು ಮಂಜೂರು ಮಾಡುವ ಬಗ್ಗೆ ಅನುಮೋದನೆ ನೀಡಿ ಸರ್ಕಾರಿ ಆದೇಶವನ್ನು ಹೊರಡಿಸುತ್ತದೆ 2017ರ ಡಿಸಂಬರ್‍ನಲ್ಲಿ ಮೂಡಾದಲ್ಲಿ ನಡೆದ ಪ್ರಾ„ಕಾರದ ಸಭೆಯಲ್ಲಿ (ವಿಷಯದ ಸಂಖ್ಯೆ – 30) ಅರ್ಜಿದಾರರಿಗೆ ಈಗಾಗಲೇ ಅಭಿವೃದ್ಧಿ ಪಡಿಸಿರುವ ಬಡಾವಣೆಯಲ್ಲಿ 38,284 ಚ. ಅಡಿ ವಿಸ್ತೀರ್ಣದ ಸ್ವತ್ತುಗಳನ್ನು ನಿವೇಶನಗಳ ರೂಪದಲ್ಲಿ ಮಂಜೂರು ಮಾಡುವ ನಿರ್ಣಯವನ್ನು ಕೈಗೊಳ್ಳಲಾಗುತ್ತದೆ.
10
+ ಮಾರುಕಟ್ಟೆ ಬೆಲೆ ಪ್ರತಿ ಚ. ಅಡಿಗೆ ?. 5,000/- ಗಳಷ್ಟು ಇರುವ ಮೈಸೂರಿನ ದೇವನೂರು 3ನೇ ಹಂತದ ಬಡಾವಣೆ ಯಲ್ಲಿನ ನಿವೇಶನಗಳ ಬದಲಾಗಿ ಪ್ರತಿ ಚ. ಅಡಿಗೆ ?. 12,000/- ಗಳಿಗಿಂತಲೂ ಹೆಚ್ಚಿರುವ ಮೈಸೂರಿನ ಅತ್ಯಂತ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾಗಿರುವ ವಿಜಯನಗರ 03 ಮತ್ತು 04ನೇ ಹಂತದ ಬಡಾವಣೆಗಳಲ್ಲಿ ಒಟ್ಟು 38,284 ಚ. ಅಡಿ ವಿಸ್ತೀರ್ಣದ 14 ನಿವೇಶನಗಳನ್ನು ಬದಲಿ ನಿವೇಶನದ ಹೆಸರಿನಲ್ಲಿ ಪಾರ್ವತಿಯವರ ಹೆಸರಿಗೆ 2021-2022 ರಲ್ಲಿ ಕಾನೂನಿನ ಎಲ್ಲಾ ನಿಯಮಗಳನ್ನು ಮೀರಿ ಹಂಚಿಕೆ ಮಾಡಲಾಗಿದೆ.
11
+ ನಗರಾಭಿವೃದ್ಧಿ ಇಲಾಖೆಯ ನಿಯಮಗಳನ್ವಯ – ಯಾವ ಬಡಾವಣೆಯ ನಿರ್ಮಾಣಕ್ಕೆಂದು ಪ್ರಾಧಿಕಾರವು ಸ್ಥಳೀಯರ ಸ್ವತ್ತುಗಳನ್ನು ಭೂಸ್ವಾಧಿ„ೀನ ಪಡಿಸಿಕೊಳ್ಳುತ್ತದೆಯೋ, ಅಂತಹ ಸ್ವತ್ತುಗಳ ಮಾಲೀಕರಿಗೆ ಅದೇ ಬಡಾವಣೆಯಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಬೇಕು ಅಥವಾ ಆ ಬಡಾವಣೆಯ ನಂತರ ಪ್ರಾಧಿಕಾರವು ಅಭಿವೃದ್ಧಿ ಪಡಿಸುವ ಬಡಾವಣೆಯಲ್ಲಿ ಬದಲಿ ನಿವೇಶನಗಳನ್ನು ಹಂಚಿಕೆ ಮಾಡಬಹುದಾಗಿರುತ್ತದೆ. ಆದರೆ, ಎಂತಹ ಸಂದರ್ಭದಲ್ಲಿಯೂ ಸಹ ಉದ್ದೇಶಿತ ಬಡಾವಣೆಯ ನಿವೇಶನಗಳಿಗೆ ಬದಲಾಗಿ, ಆ ಬಡಾವಣೆಗಿಂತಲೂ ಮುಂಚಿತವಾಗಿ ಅಭಿವೃದ್ಧಿ ಪಡಿಸಿರುವ ಬಡಾವಣೆಗಳಲ್ಲಿ ಬದಲಿ ನಿವೇಶನಗಳನ್ನು ಹಂಚಿಕೆ ಮಾಡುವುದು ಅಪರಾಧವಾಗಿರುತ್ತದೆ.
12
+ ಆದರೆ, ಈ ಪ್ರಕರಣದಲ್ಲಿ ಪಾರ್ವತಿಯವರಿಗೆ ವಾಸ್ತವವಾಗಿ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಹಂಚಿಕೆಯಾಗಿದ್ದ ನಿವೇಶನಗಳಿಗೆ ಬದಲಾಗಿ, ಅದಕ್ಕಿಂತಲೂ ಹತ್ತಾರು ವರ್ಷಗಳ ಹಿಂದೆಯೇ ಮೂಡಾ ಅಭಿವೃದ್ಧಿ ಪಡಿಸಿರುವ ವಿಜಯನಗರ 3 ಮತ್ತು 4ನೇ ಹಂತದ ಬಡಾವಣೆಗಳಲ್ಲಿನ ಅತ್ಯಂತ ಆಯಕಟ್ಟಿನ ಸ್ಥಳಗಳಲ್���ಿರುವ ದುಬಾರಿ ನಿವೇಶನಗಳನ್ನು ಬದಲಿ ನಿವೇಶನದ ಹೆಸರಿನಲ್ಲಿ ಹಂಚಿಕೆ ಮಾಡಲಾಗಿದೆ ಎಂದು ರಮೇಶ್ ಅವರು ಗಂಭೀರ ಆರೋಪ ಮಾಡಿದ್ದಾರೆ.
eesanje/url_46_69_3.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಪಕ್ಷ ಸಂಘಟನೆಯಲ್ಲಿ ಯಾವುದೇ ರಾಜಿ ಇಲ್ಲ: ಡಿಸಿಎಂ ಎಚ್ಚರಿಕೆ
2
+ ಬೆಂಗಳೂರು,ಜು.20- ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಪ್ರತಿಷ್ಠೆಯನ್ನು ಬದಿಗಿಟ್ಟು ಕೆಲಸ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಟ್ಟಪ್ಪಣೆ ಮಾಡಿದ್ದಾರೆ.
3
+ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿಂದು ರಾಜ್ಯದ ಎಲ್ಲಾ ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್‍ನ ಅಧ್ಯಕ್ಷರೊಂದಿಗೆ ಸಮಾಲೋಚನಾ ಸಭೆ ನಡೆಸಿದ ಅವರು, ಕೆಲಸ ಮಾಡದೇ ಲೆಟರ್‍ಹೆಡ್‍ಗಾಗಿ ಪದಾಧಿಕಾರಿಗಳ ಸ್ಥಾನ ಪಡೆದಿರುವವರನ್ನು ಮುಲಾಜಿಲ್ಲದೇ ಕಿತ್ತೊಗೆಯುವುದಾಗಿ ಎಚ್ಚರಿಸಿದ್ದಾರೆ.
4
+ ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಾಗಲಿದೆ. ತಳಮಟ್ಟದಲ್ಲಿ ಪಕ್ಷವನ್ನು ಸಂಘಟಿಸಲು ಸ್ಥಳೀಯ ನಾಯಕತ್ವ ಬಹಳ ಮುಖ್ಯ. ಹೀಗಾಗಿ ಪಕ್ಷದ ಪದಾಧಿಕಾರಿಗಳು, ಶಾಸಕರು, ಸಂಸದರು, ಸಚಿವರು ಪರಸ್ಪರ ಅನ್ಯೋನ್ಯತೆಯಿಂದ ಕೆಲಸ ಮಾಡಬೇಕು. ಶಾಸಕರು, ಪಕ್ಷದ ಅಧ್ಯಕ್ಷರು ಸಹಕಾರ ನೀಡುವುದಿಲ್ಲ ಎಂಬ ಆರೋಪ ಮಾಡುತ್ತಿದ್ದಾರೆ. ಇದು ಸರಿಯಲ್ಲ. ವ್ಯಕ್ತಿಗತ ಪ್ರತಿಷ್ಠೆಗಳೇನೇ ಇದ್ದರೂ ಅದನ್ನು ಬದಿಗಿಟ್ಟು ಪಕ್ಷದ ಹಿತದೃಷ್ಟಿಯಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು ಎಂದು ಹೇಳಿದರು.
5
+ ಕೆಲವು ಕಡೆ ಪಕ್ಷ ಸಂಘಟನೆ ಕಾರ್ಯ ನೀರಸವಾಗಿದೆ. ಹಲವು ಬಾರಿ ಎಚ್ಚರಿಕೆ ನೀಡಿದ ಹೊರತಾಗಿಯೂ ನಾಯಕರು ಎಚ್ಚೆತ್ತುಕೊಂಡಿಲ್ಲ. ಇನ್ನು ಮುಂದೆ ಪದೇ ಪದೇ ಎಚ್ಚರಿಕೆ ನೀಡುತ್ತಾ ಕುಳಿತುಕೊಳ್ಳುವುದಿಲ್ಲ. ಕೆಲಸ ಮಾಡದೇ ಇರುವವರನ್ನು ನಿರ್ದಾಕ್ಷಿಣ್ಯವಾಗಿ ಜವಾಬ್ದಾರಿಯಿಂದ ವಿಮುಕ್ತಿಗೊಳಿಸಲಾಗುವುದು ಎಂದರು.
6
+ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಮುಂದಿನ ಬಿಬಿಎಂಪಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಪ್ರತಿಷ್ಠೆಯ ಪ್ರಶ್ನೆ. ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿಕೊಂಡು ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಹಿಡಿಯುವುದು ನಮ್ಮ ಆದ್ಯತೆ. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ತಾಕೀತು ಮಾಡಿದ್ದಾರೆ.
7
+ ಹೆಸರಿಗಷ್ಟೇ ಅಧ್ಯಕ್ಷರು, ಪದಾಧಿಕಾರಿಗಳಾಗಿದ್ದುಕೊಂಡು ಬೂತ್‍ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡದಿದ್ದರೆ ಸಂದರ್ಭ ಬಂದಾಗ ಅಧಿಕಾರ ಕೊಡಿ ಎಂಬುವವರನ್ನು ಇನ್ನು ಮುಂದೆ ಪರಿಗಣಿಸುವುದಿಲ್ಲ. ಪ್ರತಿ ಹಂತದಲ್ಲೂ ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಪಡೆದ ಬಳಿಕವೇ ಅಧಿಕಾರ ಹಂಚಿಕೆ ಮಾಡಲಾಗುತ್ತದೆ. ಕೆಲಸ ಮಾಡದೇ ಗುಂಪುಗಾರಿಕೆ ಮಾಡಿಕೊಂಡಿರುವವರಿಗೆ ಯಾವುದೇ ಅವಕಾಶ ಸಿಗುವುದಿಲ್ಲ. ಪಕ್ಷದ ಪದಾಧಿಕಾರಿಗಳ ಹುದ್ದೆಯಲ್ಲೂ ಮುಂದುವರೆಯಲು ಸಾಧ್ಯವಿಲ್ಲ. ನನ್ನನ್ನೂ ಒಳಗೊಂಡಂತೆ ಎಲ್ಲರೂ ಪಕ್ಷದ ಸಂಘಟನೆಗೆ ಮೊದಲ ಆದ್ಯತೆ ನೀಡಬೇಕು ಎಂದು ನಿರ್ದೇಶ���ಸಿದ್ದಾರೆ.
8
+ ಇನ್ನು ಮುಂದೆ ಕಾಂಗ್ರೆಸ್ ಕಚೇರಿಗೆ ಸಚಿವರು ನಿಯಮಿತವಾಗಿ ಭೇಟಿ ನೀಡುತ್ತಿರುತ್ತಾರೆ. ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರು ನೋಂದಣಿ ಮಾಡಿಸಿಕೊಂಡು ಸಚಿವರನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ನೀಡಿದವರ ಸಮಸ್ಯೆಗಳಿಗೆ ಪರಿಹಾರ ದೊರೆತಿರುವ ಬಗ್ಗೆ ಜಿಲ್ಲಾಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಗಮನ ಹರಿಸಬೇಕು.
9
+ ಮಳೆಗಾಲದಿಂದಾಗಿ ನೆರೆ ಪರಿಸ್ಥಿತಿ ಉಂಟಾಗಿದೆ. ಸಮಸ್ಯೆ ಇರುವ ಸ್ಥಳಗಳಿಗೆ ಭೇಟಿ ನೀಡಿ ಕಾರ್ಯಕರ್ತರ ಜೊತೆಗೂಡಿ ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸಬೇಕು ಎಂದು ಸಲಹೆ ನೀಡಿದ್ದಾರೆ. ನಿಗಮ ಮಂಡಳಿಗಳಿಗೆ ಬಾಕಿ ಇರುವ ಅಧ್ಯಕ್ಷರ ಹುದ್ದೆಗಳಿಗೆ ಹಾಗೂ ಸದಸ್ಯರ ಸ್ಥಾನಕ್ಕೆ ನೇಮಕಾತಿ ಪ್ರಕ್ರಿಯೆಗಳು ನಡೆಯುತ್ತಿವೆ. ಪಕ್ಷಕ್ಕಾಗಿ ಕೆಲಸ ಮಾಡಿದ ಪ್ರಾಮಾಣಿಕರನ್ನು ಗುರುತಿಸಿ ಅವರಿಗೆ ಅವಕಾಶ ಕಲ್ಪಿಸಲು ಸಹಕಾರ ನೀಡುವಂತೆ ಡಿ.ಕೆ.ಶಿ ಮನವಿ ಮಾಡಿದ್ದಾರೆ.
10
+ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ್‍ಕುಮಾರ್ ಸೊರಕೆ, ಕಾರ್ಯಾಧ್ಯಕ್ಷರಾದ ವಿನಯ್ ಕುಲಕರ್ಣಿ, ಜಿ.ಸಿ.ಚಂದ್ರಶೇಖರ್, ಮಂಜುನಾಥ್ ಭಂಡಾರಿ, ತನ್ವೀರ್ ಸೇಠ್, ವಸಂತಕುಮಾರ್, ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್ ಬಾಬು, ಪ್ರಧಾನ ಕಾರ್ಯದರ್ಶಿ ವಿಜಯ್ ಮುಳಗುಂದ್ ಮತ್ತಿತರರು ಉಪಸ್ಥಿತರಿದ್ದರು.
11
+ ಇದಕ್ಕೂ ಮುನ್ನ ಪಕ್ಷದ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಪುನರ್ ಸಂಘಟಿಸಲು, ಕೆಲ ನಾಯಕರಿಗೆ ಬಡ್ತಿ ನೀಡಲು ಹಾಗೂ ನಿಷ್ಠಾವಂತರನ್ನು ಗುರುತಿಸಿ ಅಧಿಕಾರದ ಅವಕಾಶ ನೀಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ.
12
+ ಬಿಬಿಎಂಪಿ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ಸಂಬಂಧಪಟ್ಟಂತೆ ಯಾವ ಕ್ಷಣದಲ್ಲಾದರೂ ನ್ಯಾಯಾಲಯದ ಆದೇಶ ಬರಬಹುದು. ಅದಕ್ಕೂ ಪೂರ್ವ ಸಿದ್ಧತೆ ಮಾಡಿಕೊಡಲಾಗಿದೆ ಎಂದು ಹೇಳಿದರು. ಪಕ್ಷಕ್ಕೆ ಸ್ವಂತ ಕಚೇರಿ, ಕಟ್ಟಡ ನೀಡಬೇಕು. ಒಂದು ವೇಳೆ ಬಾಡಿಗೆ ಕಟ್ಟಡವಿದ್ದರೆ ಶಾಸಕರು, ಸಚಿವರಾದಿಯಾಗಿ ಜಿಲ್ಲಾ ನಾಯಕರು ಪಕ್ಷದ ಕಚೇರಿಯಲ್ಲೇ ಸಭೆ ನಡೆಸಬೇಕು. ಯಾವುದೇ ಶಾಸಕರು ತಮ್ಮ ಮನೆಯಲ್ಲಿ ಪಕ್ಷದ ಸಭೆಗಳನ್ನು ನಡೆಸಬಾರದು ಎಂದು ಆದೇಶಿಸಿದರು.
eesanje/url_46_69_4.txt ADDED
@@ -0,0 +1,4 @@
 
 
 
 
 
1
+ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ರಘು ತಾಯಿ ನಿಧನ
2
+ ಬೆಂಗಳೂರು,ಜು.20- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ರಘು ಅವರ ತಾಯಿ ಮಂಜುಳಮ್ಮ(75) ಇಂದು ಮುಂಜಾನೆ ನಿಧನರಾಗಿದ್ದಾರೆ.
3
+ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಂಜುಳಮ್ಮ ಅವರನ್ನು ಮತ್ತೊಬ್ಬ ಮಗ ಮುರುಳಿ ಅವರು ಕೋಳಿಬುರುಜನ ಹಟ್ಟಿಯ ತಮ್ಮ ಮನೆಯಲ್ಲಿ ಆರೈಕೆ ಮಾಡುತ್ತಿದ್ದರು. ಇಂದು ಮುಂಜಾನೆ 5 ಗಂಟೆಯಲ್ಲಿ ಮಂಜುಳಮ್ಮ ಮೃತಪಟ್ಟಿದ್ದಾರೆ.
4
+ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ದರ್ಶನ್ ಅಂಡ್ ಗ್ಯಾಂಗ್‍ನಲ್ಲಿ ರಘು 4ನೇ ಆರೋಪಿ. ಈತ ಚಿತ್ರದುರ್ಗದ ದರ್ಶನ್ ಅಭಿಮಾನಿಗಳ ಸಂಘದ ಅಧ್ಯಕ್ಷನಾಗಿದ್ದು, ಈ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ.
eesanje/url_46_69_5.txt ADDED
@@ -0,0 +1,9 @@
 
 
 
 
 
 
 
 
 
 
1
+ ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
2
+ ಹುಬ್ಬಳ್ಳಿ,ಜು.20- ರಾಜ್ಯದ ಹಲವೆಡೆ ಅತೀವೃಷ್ಟಿಯಿಂದಾಗಿ ಹಲವರು ಸಾವನ್ನಪ್ಪಿದ್ದಾರೆ. ಅನೇಕರು ಮನೆ ಕಳೆದುಕೊಂಡಿದ್ದಾರೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಸೇರಿದಂತೆ ಸಂಬಂಧಪಟ್ಟ ಸಚಿವರು ಸ್ಥಳಕ್ಕೆ ತೆರಳಿ ಸಂತ್ರಸ್ತರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯ ಮಾಡಬೇಕಿತ್ತು. ಆದರೆ ಈ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿಯಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.
3
+ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಅನಾಹುತದಿಂದ ಉತ್ತರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡ್ಡ ಕುಸಿದು ಏಳಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ಇದುವರೆಗೆ ಸರ್ಕಾರದ ಸಿಎಂ ಹಾಗೂ ಯಾವ ಸಚಿವರು ಅಲ್ಲಿಗೆ ಭೇಟಿ ನೀಡಿಲ್ಲ. ನಾನು ಮೂರು ದಿನಗಳ ಹಿಂದೆಯೇ ಅಲ್ಲಿಗೆ ಭೇಟಿ ಕೊಡಲು ಯೋಜಿಸಿದ್ದೆ. ಆದರೆ ದೆಹಲಿಯಲ್ಲಿ ಇಲಾಖೆಯ ನಿಗದಿತ ಕಾರ್ಯಕ್ರಮದ ನಿಮಿತ್ತ ಬರಲು ಆಗಲಿಲ್ಲ. ಇಂದು ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸ ಮಾಡುತ್ತಿದ್ದೇನೆ. ನಾಳೆ ಸಕಲೇಶಪುರಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸುವುದಾಗಿ ತಿಳಿಸಿದರು.
4
+ ಮಳೆಯಿಂದಾಗಿ ಹಲವಾರು ಮನೆಗಳನ್ನು ಕಳೆದುಕೊಂಡಿದ್ದಾರೆ ಹಾಗೂ ಮನೆಗಳಿಗೆ ನೀರು ನುಗ್ಗಿದೆ. ಆದರೆ ಕಂದಾಯ ಸಚಿವರು ಜಿಲ್ಲಾ„ಕಾರಿಗಳಿಗೆ ವಿಡಿಯೋ ಕಾನರೆನ್ಸ್ ಮೂಲಕ ಸೂಚನೆ ಕೊಡುತ್ತಿದ್ದಾರೆ. ಏನಾದರೂ ಕೇಳಿದರೆ ಪಿಡಿ ಖಾತೆಯಲ್ಲಿ ಹಣವಿದೆ ಎನ್ನುತ್ತಿದ್ದಾರೆ. ಹಣ ಇಟ್ಟರೆ ಸಾಲದು. ಸ್ಥಳಕ್ಕೆ ತೆರಳಿ ಪರಿಶೀಲಿಸಿ ಜನರಿಗೆ ಧೈರ್ಯ ತುಂಬುವ, ಸಾಂತ್ವನ ಹೇಳುವ ಕಾರ್ಯ ಮಾಡಬೇಕಿತ್ತು. ಇವರ ಈ ನಡೆಯಿಂದ ಸರ್ಕಾರಕ್ಕೆ ಜನರ ಮೇಲಿರುವ ಕಾಳಜಿ ಎಷ್ಟಿದೆ ಎಂಬುದು ಗೊತ್ತಾಗುತ್ತದೆ ಎಂದು ಕುಟುಕಿದರು.
5
+ ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ ಏನೇ ಇರಲಿ. ಜನ ಸಂಕಷ್ಟ ಅನುಭವಿಸುತ್ತಿರುವ ಈ ಸಂದರ್ಭದಲ್ಲೂ ಘಟನಾ ಸ್ಥಳಕ್ಕೆ ಭೇಟಿ ಕೊಟ್ಟು ಅಲ್ಲಿನ ವಸ್ತುಸ್ಥಿತಿ ಪರಿಶೀಲಿಸದಿರುವುದು ದುರ್ದೈವದ ಸಂಗತಿ. ಈ ಸರ್ಕಾರ ಆಡಳಿತ ಹೇಗೆ ನಡೆಸಬೇಕೆಂಬುದು ಮರೆತು ಹೋಗಿದೆ ಎಂದು ಟೀಕಿಸಿದರು.
6
+ ಮುಡಾದಲ್ಲಿ ಸಿಎಂ ನೇರ ಕೈವಾಡ :ಮುಡಾ ಹಗರಣದಲ್ಲಿ ಮುಖ್ಯಮಂತ್ರಿಯವರ ನೇರ ಕೈವಾಡವಿದೆ. 1992ರಲ್ಲಿ ಆರಂಭಿಕವಾಗಿ ನೋಟಿಫಿಕೇಶನ್ ಆಗಿದೆ. 1993ರಲ್ಲಿ ಮೃತರ ಮಗನ ಹೆಸರಲ್ಲಿ ಖಾತೆ ಆಗಿದೆ. 1998ರಲ್ಲಿ ಮೃತರ ಹೆಸರಲ್ಲಿ ಡಿನೋಟಿಫಿಕೇಶನ್ ಆಗಿದೆ. ಇದನ್ನು ಮಾಡಿಸಿದವರು ಯಾರು? ಎಂದು ಪ್ರಶ್ನಿಸಿದರು.
7
+ ವೈಫಲ್ಯ ಮುಚ್ಚಿಕೊಳ್ಳಲು ತನಿಖೆಯ ಗುಮ್ಮ :ಈಗ ಸಿದ್ದರಾಮಯ್ಯ ವಿಪಕ್ಷಗಳಿಗೆ ತನಿಖೆಯ ಗುಮ್ಮ ಬಿಡುತ್ತಿದ್ದಾರೆ. 2012ರಲ್ಲಿ ಬಿಜೆಪಿ ಆಡಳಿತದಲ್ಲಿನ 21 ಹಗರಣಗಳ ಬಗ್ಗೆ ಮಾತನಾಡುವವರು ಐದು ವರ್ಷಗಳ ಹಿಂದೆ ತಮ್ಮ ಹಾಗೂ ಈಗಿನ ಒಂದು ವರ್ಷದ ಆಡಳಿತದಲ್ಲಿ ಈ ಬಗ್ಗೆ ಏಕೆ ಸುಮ್ಮನಿದ್ದರು. ತಾವು ಮಾಡಿದ ತಪ್ಪುಗಳನ್ನು ಮುಚ್ಚಿಕೊಳ್ಳಲು ವಿಪಕ್ಷಗಳ ಮೇಲೆ ತನಿಖೆಯ ಗುಮ್ಮ ಬಿಡುತ್ತಿದ್ದಾರೆ ಎಂದು ಹರಿಹಾಯ್ದರು.
8
+ ಅಧಿಕಾರಿಗಳು ಅಕ್ರಮ ಮಾಡಿದರೂ ಅದಕ್ಕೆ ಸರ್ಕಾರವೇ ಹೊಣೆ. ಇವರ ದೌರ್ಬಲ್ಯಗಳಿಂದ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲದಂತಾಗಿದೆ. ನಿಗಮದ ಅಧಿಕಾರಿ ಬರೆದ ಡೆತ್‍ನೋಟ್‍ನಲ್ಲಿ ಮಂತ್ರಿಗಳು ಮೌಖಿಕವಾಗಿ ಆದೇಶ ಮಾಡಿದ್ದರು ಎಂದು ಹೇಳಿದ್ದಾರೆ. ಇದರ ಬಗ್ಗೆ ಮಂತ್ರಿಗಳಿಗೆ ಗೊತ್ತಿರಲಿಲ್ಲವೇ?, ಸಿಎಂ ಈ ರೀತಿ ಉಡಾಫೆ ಉತ್ತರ ಕೊಡುವುದು ಸರಿಯಲ್ಲ. ವಿಧಾನಸಭೆ ಕಲಾಪದಲ್ಲಿ ಯಾರೋ ಬರೆದುಕೊಟ್ಟದ್ದನ್ನು ಓದಿದ್ದಾರೆ. ನಮ್ಮ ರಾಜ್ಯದಲ್ಲಿ ಈ ರೀತಿಯ ಆಡಳಿತ ನಿರೀಕ್ಷಿಸಿರಲಿಲ್ಲ ಎಂದರು.
9
+ ಇ.ಡಿ ಯವರು ಸಿಎಂ ಹೆಸರು ಹೇಳುವಂತೆ ಬಂ„ತರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂಬ ಮಾಹಿತಿ ಅವರಿಗೆ ಎಲ್ಲಿಂದ ಬಂದಿತು? ಇ.ಡಿ ಯವರ ತನಿಖೆ ವಿಚಾರಗಳು ಸಿಎಂ ಹೇಗೆ ಗೊತ್ತಾಯಿತು?, ಅವರು ಏನೂ ತಪ್ಪು ಮಾಡದಿದ್ದರೆ, ಪ್ರಕರಣದಲ್ಲಿ ಭಾಗಿಯಾಗಿರದಿದ್ದರೆ ಅವರು ಏಕೆ ಊಹೆ ಮಾಡಿಕೊಂಡು ನಾಲ್ಕು ಸಚಿವರ ಕೈಯಿಂದ ಉತ್ತರ ಕೊಡಿಸಿದ್ದು? ಅವರಿಗೆ ಇಂತಹ ಪರಿಸ್ಥಿತಿ ಏಕೆ ಬಂದಿತು? ಎಂದು ಪ್ರಶ್ನಿಸಿದರು.