e574042d101fe3059254d71f8ce54e4129e2e4fe36ca8a52d19e45036a560aad
Browse files- eesanje/url_46_326_6.txt +7 -0
- eesanje/url_46_326_7.txt +17 -0
- eesanje/url_46_326_8.txt +8 -0
- eesanje/url_46_326_9.txt +5 -0
- eesanje/url_46_327_1.txt +7 -0
- eesanje/url_46_327_10.txt +9 -0
- eesanje/url_46_327_11.txt +12 -0
- eesanje/url_46_327_12.txt +7 -0
- eesanje/url_46_327_2.txt +6 -0
- eesanje/url_46_327_3.txt +6 -0
- eesanje/url_46_327_4.txt +6 -0
- eesanje/url_46_327_5.txt +9 -0
- eesanje/url_46_327_6.txt +14 -0
- eesanje/url_46_327_7.txt +9 -0
- eesanje/url_46_327_8.txt +14 -0
- eesanje/url_46_327_9.txt +8 -0
- eesanje/url_46_328_1.txt +14 -0
- eesanje/url_46_328_10.txt +7 -0
- eesanje/url_46_328_11.txt +7 -0
- eesanje/url_46_328_12.txt +6 -0
- eesanje/url_46_328_2.txt +18 -0
- eesanje/url_46_328_3.txt +11 -0
- eesanje/url_46_328_4.txt +8 -0
- eesanje/url_46_328_5.txt +6 -0
- eesanje/url_46_328_6.txt +10 -0
- eesanje/url_46_328_7.txt +9 -0
- eesanje/url_46_328_8.txt +7 -0
- eesanje/url_46_328_9.txt +10 -0
- eesanje/url_46_329_1.txt +13 -0
- eesanje/url_46_329_10.txt +5 -0
- eesanje/url_46_329_11.txt +8 -0
- eesanje/url_46_329_12.txt +13 -0
- eesanje/url_46_329_2.txt +5 -0
- eesanje/url_46_329_3.txt +6 -0
- eesanje/url_46_329_4.txt +11 -0
- eesanje/url_46_329_5.txt +8 -0
- eesanje/url_46_329_6.txt +9 -0
- eesanje/url_46_329_7.txt +6 -0
- eesanje/url_46_329_8.txt +8 -0
- eesanje/url_46_329_9.txt +5 -0
- eesanje/url_46_32_1.txt +9 -0
- eesanje/url_46_32_10.txt +11 -0
- eesanje/url_46_32_11.txt +10 -0
- eesanje/url_46_32_12.txt +10 -0
- eesanje/url_46_32_2.txt +10 -0
- eesanje/url_46_32_3.txt +11 -0
- eesanje/url_46_32_4.txt +8 -0
- eesanje/url_46_32_5.txt +10 -0
- eesanje/url_46_32_6.txt +8 -0
- eesanje/url_46_32_7.txt +10 -0
eesanje/url_46_326_6.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಸಾಂಸ್ಕೃತಿಕ ನಗರಿಗೆ ಹರಿದುಬಂದ ಪ್ರವಾಸಿಗರ ಸಾಗರ
|
2 |
+
ಮೈಸೂರು,ಅ.23- ನಾಡಹಬ್ಬ ಮೈಸೂರು ದಸರಾ ಹಾಗೂ ಸಾಲು ಸಾಲು ರಜೆ ಹಿನ್ನಲೆಯಲ್ಲಿ ಸಾಂಸ್ಕøತಿಕ ನಗರಿಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಮಧುವಣಗಿತ್ತಿಯಂತೆ ಸಾಂಸ್ಕøತಿಕ ನಗರಿ ಶೃಂಗಾರಗೊಂಡಿದೆ. ಶನಿವಾರದಿಂದಲೇ ನಗರಕ್ಕೆ ಪ್ರವಾಸಿಗರು ಆಗಮಿಸುತ್ತಿದ್ದು, ಹೋಟೆಲ್, ವಸತಿಗೃಹಗಳು, ಪರಿವೀಕ್ಷಣ ಮಂದಿರಗಳು ಭರ್ತಿಯಾಗಿವೆ.
|
3 |
+
ಈ ಬಾರಿ ಹೊರರಾಜ್ಯಗಳ ವಾಹನಗಳಿಗೆ ತೆರಿಗೆ ವಿನಾಯ್ತಿ ನೀಡಿರುವ ಹಿನ್ನಲೆಯಲ್ಲಿ ತಮಿಳುನಾಡು, ಕೇರಳದಿಂದ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿದ್ದಾರೆ. ಅದರಲ್ಲೂ ವಿದ್ಯುತ್ ದೀಪಾಲಂಕಾರ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಕುಪ್ಪಣ್ಣ ಪಾರ್ಕ್ನಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈ ಬಾರಿ ಹೂವಿನಲ್ಲಿ ಪಂಚಖಾತ್ರಿ ಯೋಜನೆಗಳ ಅನಾವರಣಗೊಂಡಿರುವುದು ವಿಶೇಷ.
|
4 |
+
ಮಣಿಪುರದಲ್ಲಿ ಸ್ಪೋಟಕಗಳೊಂದಿಗೆ ಉಗ್ರನ ಬಂಧನ
|
5 |
+
ಚಾಮರಾಜೇಂದ್ರ ಮೃಗಾಲಯ, ಕೆಆರ್ಎಸ್, ಚಾಮುಂಡಿ ಬೆಟ್ಟ ಸೇರಿದಂತೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ಭೇಟಿ ನೀಡಿದ್ದಾರೆ.
|
6 |
+
ಭರ್ಜರಿ ವ್ಯಾಪಾರ:ದಸರಾ ಹಿನ್ನಲೆಯಲ್ಲಿ ವಸ್ತುಪ್ರದರ್ಶನದ ಆವರಣ ಸೇರಿದಂತೆ ನಗರದೆಲ್ಲೆಡೆ ಗೃಹಾಲಂಕಾರ, ಮಕ್ಕಳ ಆಟಿಕೆ ಸಾಮಗ್ರಿಗಳ ಅಂಗಡಿಗಳು ತೆರೆದಿದ್ದು, ವ್ಯಾಪಾರ ಕೂಡ ಜೋರಾಗಿ ನಡೆದಿದೆ. ಹೋಟೆಲ್ಗಳಲ್ಲಿ ವಿವಿಧ ಬಗೆಯ ಖಾದ್ಯಗಳಿಗೆ ಭಾರೀ ಬೇಡಿಕೆ ಹೆಚ್ಚಿದೆ. ಒಟ್ಟಿನಲ್ಲಿ ಸರಣಿ ರಜೆ ಹಿನ್ನಲೆಯಲ್ಲಿ ಸಾಂಸ್ಕøತಿಕ ನಗರಿ ಈ ಬಾರಿ ಜನಸ್ತೋಮದಿಂದ ತುಂಬಿ ತುಳುಕುತ್ತಿದೆ.
|
7 |
+
ಟ್ರಾಫಿಕ್ಜಾಮ್:ರಾಜ್ಯದ ವಿವಿಧ ಜಿಲ್ಲೆ, ತಾಲ್ಲೂಕು ಕೇಂದ್ರ ಹಾಗೂ ಹೊರರಾಜ್ಯಗಳಿಂದ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ ಹಿನ್ನಲೆಯಲ್ಲಿ ನಗರದ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ರಾಜಧಾನಿ ಬೆಂಗಳೂರಿನಿಂದ ಮೈಸೂರಿಗೆ ಕೆಎಸ್ಆರ್ಟಿಸಿ ಹೆಚ್ಚಿನ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಎಲ್ಲ ಬಸ್ಸುಗಳು ಸಹ ತುಂಬಿ ತುಳುಕುತ್ತಿವೆ. ಇಂದು ಮತ್ತಷ್ಟು ಜನಜಂಗುಳಿ ಹೆಚ್ಚಾಗಲಿದೆ.
|
eesanje/url_46_326_7.txt
ADDED
@@ -0,0 +1,17 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸಂಸದೆ ಶೋಭಾ ಕರಂದ್ಲಾಜೆಗೆ ಬಿಜೆಪಿ ರಾಜ್ಯಾಧ್ಯಕ್ಷೆ ಪಟ್ಟ..?
|
2 |
+
ಬೆಂಗಳೂರು,ಅ.23- ಕೇಂದ್ರ ಸಚಿವೆ ಹಾಗೂ ಬಿಜೆಪಿಯ ಫೈರ್ ಬ್ರಾಂಡ್ ನಾಯಕಿ ಎಂದೇ ರಾಜಕೀಯ ವಲಯದಲ್ಲಿ ಗುರುತಿಸಿಕೊಂಡಿರುವ ಹಾಲಿ ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಿಸಲು ಪಕ್ಷದ ಹೈಕಮಾಂಡ್ ಒಲವು ತೋರಿದೆ.
|
3 |
+
ಶೋಭಾ ಕರಂದ್ಲಾಜೆ ನೇಮಕವಾದರೆ ಮೊದಲ ಬಾರಿಗೆ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಮಹಿಳೆಯೊಬ್ಬರು ಅಧಿಕಾರ ವಹಿಸಿಕೊಂಡಂತಾಗುತ್ತದೆ. 2 ದಿನಗಳೊಳಗಾಗಿ ನೇಮಕಾತಿ ಆಗಬಹುದು ಎಂಬ ನಿರೀಕ್ಷೆಯನ್ನು ರಾಜ್ಯ ಬಿಜೆಪಿ ನಾಯಕರು ಹೊಂದಿದ್ದಾರೆ. ಶೀಘ್ರವೇ ಘೋಷಣೆ ಆಗಬಹುದು ಎಂಬ ನಿರೀಕ್ಷೆಯನ್ನೂ ಇರಿಸಿಕೊಂಡಿದ್ದಾರೆ.
|
4 |
+
ಬಿಜೆಪಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಮುನ್ನೆಲೆಯಲ್ಲಿದ್ರೂ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತ್ರ, ಆ ಬಗ್ಗೆ ಗೊತ್ತೇ ಇಲ್ಲ ಎಂದೇ ದಸರಾ ಮಹೋತ್ಸವದಲ್ಲಿ ಭಾಗಿಯಾಗಿದ್ದಾರೆ.
|
5 |
+
ಈ ಸಂಬಂಧ ಮಾಜಿ ಸಿಎಂ .ಯಡಿಯೂರಪ್ಪ ಸೇರಿದಂತೆ ಪ್ರಮುಖರ ಅಭಿಪ್ರಾಯ ಕೇಳಲಾಗಿದ್ದು,ಪಕ್ಷ ಸಂಘಟನೆ ದೃಷ್ಟಿಯಿಂದ ಬಿವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಲು ಪರಿಗಣಿಸುವಂತೆ ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಇದಕ್ಕೆ ಬಿಜೆಪಿಯ ಒಂದು ಬಣ ತೀವ್ರ ವಿರೋಧ ವ್ಯಕ್ತಪಡಿಸಿರುವುದರಿಂದ ಬಿಜೆಪಿ ಹೈಕಮಾಂಡ್ ಶೋಭಾ ಕರಂದ್ಲಾಜೆ ನೇಮಿಸಿದರೆ ಹೆಚ್ಚಿನ ವಿರೋಧ ಇರುವುದಿಲ್ಲ ಎನ್ನುವ ಲೆಕ್ಕಾಚಾರಕ್ಕೆ ಬಂದಿದೆ. ಬಿಎಸ್ವೈ ಕೂಡ ಶೋಭಾ ಅವರ ನೇಮಕಕ್ಕೆ ಒಮ್ಮತ ಮೂಡಬಹುದು ಎನ್ನಲಾಗಿದೆ.
|
6 |
+
ಇನ್ನು ನೇರವಾಗಿ ದೆಹಲಿಯಿಂದಲೇ ಅಧ್ಯಕ್ಷರ ಹೆಸರನ್ನು ಹೈಕಮಾಂಡ್ ಘೋಷಣೆ ಮಾಡಲಿದೆ. ಆದರೆ, ರಾಜ್ಯ ಬಿಜೆಪಿ ನಾಯಕರಿಗೆ ಈ ನೇಮಕಾತಿ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಇಲ್ಲದಷ್ಟು, ವರಿಷ್ಠರು ಗೌಪ್ಯತೆ ಕಾಯ್ದುಕೊಂಡಿದ್ದಾರೆ. ಶೋಭಾ ಕರಂದ್ಲಾಜೆ ಹೆಸರು ಮುಂಚೂಣಿಗೆ ಬರುತ್ತಿದ್ದಂತೆಯೇ ಒಕ್ಕಲಿಗ ಕೋಟಾವೇ ಮಾನದಂಡವಾದರೆ ನಾವ್ಯಾಕೆ ಆಗಬಾರದು ಎಂಬ ಪ್ರಶ್ನೆಯನ್ನು ಪಕ್ಷದ ಒಕ್ಕಲಿಗ ನಾಯಕರು ಹೊಂದಿದ್ದಾರೆ.
|
7 |
+
ಇಸ್ರೇಲ್ ವೈಮಾನಿಕ ದಾಳಿಯಲ್ಲಿ 30 ಮಂದಿ ಪ್ಯಾಲೆಸ್ತೇನಿಯರ ಸಾವು
|
8 |
+
ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟದ ಮೇಲೆ ಹಲವು ನಾಯಕರ ಕಣ್ಣು ಹಾಕಿದ್ದರು. ರಾಜ್ಯಾಧ್ಯಕ್ಷ ರೇಸ್ನಲ್ಲಿ ಸಿ.ಟಿ.ರವಿ, ಬಿ.ವೈ.ವಿಜಯೇಂದ್ರ, ಬಸನಗೌಡ ಪಾಟೀಲ್ ಯತ್ನಾಳ್, ಅಶ್ವತ್ಥ್ ನಾರಾಯಣ, ವಿ.ಸೋಮಣ್ಣದಿಂದಲೂ ಸರ್ವಪ್ರಯತ್ನ ನಡೆದಿದೆ. ಈ ಈ ಹಿನ್ನಲೆಯಲ್ಲಿ ನಾಯಕರ ನಡುವೆ ಪಕ್ಷದ ಅಧ್ಯಕ್ಷಗಿರಿಗಾಗಿ ತೀವ್ರ ಪೈಪೋಟಿ ನಡೆದಿದ್ದು, ನಾಯಕರ ಮಧ್ಯೆ ಬಣ ನಿರ್ಮಾಣವಾಗಿದೆ. ಹೀಗಾಗಿ ಮಹಿಳಾ ಅಧ್ಯಕ್ಷೆ ಮೂಲಕ ಬಣ ಬಡಿದಾಟಕ್ಕೆ ಕಡಿವಾಣ ಹಾಕಲು ಬಿಜೆಪಿ ಹೈಕಮಾಂಡ್ ���್ಲ್ಯಾನ್ ರೂಪಿಸಿದೆ. ಇನ್ನೂ ಬಹುಮುಖ್ಯವಾಗಿ ಶೋಭಾ ಕರಂದ್ಲಾಜೆ ಹೆಸರಿಗೆ ಮಾಜಿ ಸಿಎಂ ಯಡಿಯೂರಪ್ಪ ವಿರೋಧಿಸಲ್ಲ ಎನ್ನುವುದು ವರಿಷ್ಠರ ತಂತ್ರವಾಗಿದೆ.
|
9 |
+
ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಯಡಿಯೂರಪ್ಪ ಸಹಕಾರ ಅವಶ್ಯಕ. ಹಾಗಾಗಿ ವಿಜಯೇಂದ್ರ ಬದಲಿಗೆ ಬಿಎಸ್ವೈ ಅವರ ಹಿರಿಯ ಪುತ್ರ ಬಿ.ವೈ.ರಾಘವೇಂದ್ರ ಅವರಿಗೆ ಪ್ರಮುಖ ಜವಾಬ್ದಾರಿ ನೀಡಲು ಹೈಕಮಾಂಡ್ ಪರಿಶೀಲಿಸಿತ್ತು. ಈ ಪ್ರಸ್ತಾಪವನ್ನು ಬಿಎಸ್ವೈ ಸ್ಪಷ್ಟವಾಗಿ ತಳ್ಳಿ ಹಾಕಿದ್ದರು ಎಂದು ಹೇಳಲಾಗಿತ್ತು.
|
10 |
+
ಶೋಭಾ ನಿಯೋಜನೆ ಸಂಬಂಧದಲ್ಲಿ ಬಿಎಸ್ವೈ ಅವರನ್ನು ಸಂಪರ್ಕಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿಪ್ರಾಯ ಪಡೆದಿದ್ದಾರೆ ಎಂದು ಉನ್ನತ ಮೂಲಗಳು ಹೇಳುತ್ತವೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರ್ನಾಟಕ ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿದ್ದಾರೆ. ಇವರು ಒಕ್ಕಲಿಗ ಸಮುದಾಯಕ್ಕೆ ಸೇರಿದವರು. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಒಕ್ಕಲಿಗ ಸಮುದಾಯದ ಮತಗಳು ಪ್ರಮುಖ ಪಾತ್ರ ವಹಿಸಿದ್ದವು.
|
11 |
+
ಅದೇ ಒಕ್ಕಲಿಗ ಸಮುದಾಯಕ್ಕೆ ಸೇರಿದ ಕೇಂದ್ರ ಸಚಿವೆ ಶೋಭಾ ಅವರನ್ನು ಕರ್ನಾಟಕ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಒಕ್ಕಲಿಗರ ಮತಗಳು ಸಿಗಬಹುದು ಎನ್ನುವ ಲೆಕ್ಕಾಚಾರ ಹೈಕಮಾಂಡ್ದ್ದಾಗಿದೆ ಎಂದು ಹೇಳಲಾಗಿದೆ. ಜೆಡಿಎಸ್ ಕೂಡ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಕಾರಣ ಒಕ್ಕಲಿಗರ ಮತಗಳನ್ನು ಸೆಳೆಯುವುದು ಸುಲಭವಾಗಲಿದೆ ಎಂದು ಹೇಳಲಾಗಿದೆ.
|
12 |
+
1980 ರಿಂದ ಇಲ್ಲಿಯವರೆಗೆ ಹಳೇ ಮೈಸೂರು ಭಾಗದ ಒಕ್ಕಲಿಗರಿಗೆ ಸೂಕ್ತ ಪ್ರಾತಿನಿಧ್ಯ ಸಿಗುತ್ತಿಲ್ಲ. ಈ ಸಂಬಂಧ ಕೇಂದ್ರ ಬಿಜೆಪಿಯ ವರಿಷ್ಠರು ರಾಜ್ಯ ಬಿಜೆಪಿಯಿಂದ ವರದಿ ಪಡೆದಿದ್ದಾರೆ. ಈವರೆಗೆ ಸಮುದಾಯದ ಆಧಾರವಾಗಿ ನೋಡುವುದಾದರೆ ಒಕ್ಕಲಿಗ ಸಮುದಾಯದಿಂದ ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಒಬ್ಬರೇ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರು.
|
13 |
+
ಕೊಡವ ಸಮುದಾಯದ ಎ.ಕೆ.ಸುಬ್ಬಯ್ಯ ಅವರು ಬಿಜೆಪಿಯ ಮೊದಲ ಅಧ್ಯಕ್ಷರಾಗಿದ್ದವರು. ನಂತರ ವೀರಶೈವ ಲಿಂಗಾಯತ ಸಮುದಾಯದ ಬಿ.ಎಸ್. ಯಡಿಯೂರಪ್ಪ 3 ಬಾರಿ ಅಧ್ಯಕ್ಷರಾಗಿದ್ದಾರೆ. ಅದೇ ಸಮುದಾಯದ ಬಿ.ಬಿ. ಶಿವಪ್ಪ, ಬಸವರಾಜ ಪಾಟೀಲ್ ಸೇಡಂ, ಜಗದೀಶ ಶೆಟ್ಟರ್ ಅಧ್ಯಕ್ಷರಾಗಿದ್ದಾರೆ. ಕುರುಬ ಸಮುದಾಯದ ಕೆ.ಎಸ್. ಈಶ್ವರಪ್ಪ ಎರಡು ಬಾರಿ ಅಧ್ಯಕ್ಷರಾಗಿದ್ದರು. ಬ್ರಾಹ್ಮಣ ಸಮುದಾಯದ ಅನಂತಕುಮಾರ್, ಪ್ರಲ್ಹಾದ ಜೋಶಿ ತಲಾ ಒಂದು ಬಾರಿ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಿದ್ದರು.
|
14 |
+
ಒಕ್ಕಲಿಗರು ಬಿಜೆಪಿಗೆ ಮತ ನೀಡುವುದಿಲ್ಲ ಎಂದು ನಿರ್ಧರಿಸಿದ್ದ ಬಿಜೆಪಿ ಆ ಸಮುದಾಯವನ್ನು ಅಧ್ಯಕ್ಷ ಪಟ್ಟಕ್ಕೆ ಹೆಚ್ಚು ಪರಿಗಣಿಸುತ್ತಿರಲಿಲ್ಲ. ಆದರೆ, ಈ ವಿಧಾನಸಭೆ ಚುನಾವಣೆಯಲ್ಲಿ ಆಶಾಕಿರಣ ಕಂಡುಬಂದಿದೆ. ಒಕ್ಕಲಿಗ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಬಿಜೆಪಿ ಗಣನ��ಯ ಸಾಧನೆ ಮಾಡಿದೆ. ಹೆಚ್ಚಿನ ಮತವನ್ನು ಗಳಿಕೆ ಮಾಡಿದೆ. ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರದಲ್ಲೂ ಸಾಕಷ್ಟು ಮತಗಳು ಲಭಿಸಿವೆ.
|
15 |
+
ಗೆಲ್ಲುವಷ್ಟು ಮತ ಸಿಕ್ಕಿಲ್ಲವಾದರೂ ಒಕ್ಕಲಿಗ ಮತವನ್ನು ಬಿಜೆಪಿ ಪಡೆದಿದ್ದರಿಂದ ಜೆಡಿಎಸ್ ಸೋತಿದೆ. ಅಲ್ಲಿನ ಮತದಾರರ ವಿಶ್ವಾಸವನ್ನು ಉಳಿಸಿಕೊಂಡರೆ ಮುಂದಿನ ಚುನಾವಣೆಗಳಲ್ಲಿ ಲಾಭ ಕಟ್ಟಿಟ್ಟ ಬುತ್ತಿ ಎಂಬ ತೀರ್ಮಾನಕ್ಕೆ ಕಮಲ ಪಕ್ಷ ಬಂದಿದೆ. ಹೀಗಾಗಿ ಒಕ್ಕಲಿಗರನ್ನೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪರಿಗಣಿಸಬೇಕು ಎಂಬ ಚರ್ಚೆ ನಡೆಯುತ್ತಿದೆ.
|
16 |
+
ಗೋವಾದ ವಿಮಾನ ನಿಲ್ದಾಣದಲ್ಲಿ 4 ಕೋಟಿ ಮೌಲ್ಯದ ಚಿನ್ನ, ಐಫೋನ್ ವಶ
|
17 |
+
ಈಗಾಗಲೇ ಜತೆಗಿರುವ ವೀರಶೈವ ಲಿಂಗಾಯತ ಸಮುದಾಯವನ್ನು ಕಡೆಗಣಿಸಬಾರದು ಎಂಬ ಎಚ್ಚರಿಕೆ ಸಹ ವರಿಷ್ಠರಲ್ಲಿ ಮೂಡಿದೆ. ಲಿಂಗಾಯತ ಸಮುದಾಯಕ್ಕೆ ಕಾರ್ಯಾಧ್ಯಕ್ಷ ಹುದ್ದೆಯನ್ನು ಸೃಜಿಸುವ ಚಿಂತನೆ ಸಹ ನಡೆದಿದೆ. ಒಂದು ವೇಳೆ ಅದೂ ಆಗದಿದ್ದರೆ ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿ ಹೆಚ್ಚಿನ ಆದ್ಯತೆ ನೀಡುವ ತೀರ್ಮಾನಕ್ಕೆ ಬರಲಾಗಿದೆ.
|
eesanje/url_46_326_8.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಶೇ.25ರಷ್ಟು ಮುಂಗಾರು ಮಳೆ ಕೊರತೆ, ಹಿಂಗಾರು ಕೂಡ ದುರ್ಬಲ
|
2 |
+
ಬೆಂಗಳೂರು, ಅ.22- ನೈರುತ್ಯ ಮುಂಗಾರು ಅವ ಮುಗಿದಿದ್ದು, ಹಿಂಗಾರು ಮಳೆ ಆರಂಭಗೊಂಡಿದೆ. ಆದರೆ, ಮುಂಗಾರಿನಂತೆ ಹಿಂಗಾರು ಮಳೆಯು ಕೈಕೊಟ್ಟಿದೆ. ಮುಂಗಾರು ಅವಯಲ್ಲಿ ರಾಜ್ಯದಲ್ಲಿ ಶೇ.25ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಜೂನ್ ಒಂದರಿಂದ ಸೆಪ್ಟೆಂಬರ್ ಅಂತ್ಯವರೆಗೆ ರಾಜ್ಯದಲ್ಲಿ 852 ಮಿ.ಮೀ. ವಾಡಿಕೆ ಮಳೆ ಪ್ರಮಾಣವಿದ್ದು, ಕೇವಲ 642 ಮಿ.ಮೀ.ನಷ್ಟು ಮಾತ್ರ ಮಳೆಯಾಗಿದೆ.
|
3 |
+
ಇದರಿಂದ ರಾಜ್ಯ ತೀವ್ರ ಸ್ವರೂಪದ ಬರಕ್ಕೆ ತುತ್ತಾಗಿದೆ. 216 ತಾಲ್ಲೂಕುಗಳನ್ನು ರಾಜ್ಯ ಸರ್ಕಾರ ಬರಪೀಡಿತವೆಂದು ಘೋಷಣೆ ಮಾಡಿದೆ. ಮುಂಗಾರು ಹಂಗಾಮಿನಲ್ಲಿ ಬಿತ್ತಿದ್ದ ಬಹುತೇಕ ಬೆಳೆಗಳು ಹಾನಿಗೀಡಾಗಿವೆ. ಆಗಸ್ಟ್ ನಿಂದ ನಿರಂತರ ಮಳೆ ಕೊರತೆ ರಾಜ್ಯದಲ್ಲಿ ಕಂಡುಬಂದಿದೆ. ರೈತರು ಕಂಗಾಲಾಗಿದ್ದಾರೆ.
|
4 |
+
ಚದುರಿದಂತೆ ಅಲ್ಲಲ್ಲಿ ಮಳೆಯಾಗುತ್ತಿದ್ದರೂ ವಾಡಿಕೆ ಪ್ರಮಾಣದ ಮಳೆಯಾಗಿಲ್ಲ. ಮುಂಗಾರು ನಿರ್ಗಮನವಾಗಿದ್ದು, ಹಿಂಗಾರು ಮಳೆ ಆರಂಭವಾಗಿದೆ. ಅಂದರೆ ಮುಂಗಾರಿನಂತೆ ಹಿಂಗಾರು ಮಳೆಯೂ ಕೂಡ ವಾಡಿಕೆಗಿಂತ ಎರಡು ವಾರ ವಿಳಂಬವಾಗಿದೆ. ಹಿಂಗಾರಿನ ಆರಂಭವೂ ದುರ್ಬಲವಾಗಿರುವುದರಿಂದ ವಾಡಿಕೆ ಪ್ರಮಾಣದ ಮಳೆಯಾಗದೆ ಒಣ ಹವೆ ಮುಂದುವರೆದಿದೆ.
|
5 |
+
ಬ್ರೇಕಿಂಗ್ : ಮೈಸೂರು ದಸರಾ ಮೇಲೆ ಉಗ್ರರ ಕಣ್ಣು, ಹೈಅಲರ್ಟ್ ಘೋಷಣೆ..!
|
6 |
+
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಜೂನ್ ಒಂದರಿಂದ ಸೆಪ್ಟೆಂಬರ್ ಅಂತ್ಯದವರೆಗೆ ದಕ್ಷಿಣ ಒಳನಾಡಿನಲ್ಲಿ ಶೇ.26ರಷ್ಟು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಶೇ.19ರಷ್ಟು ಹಾಗೂ ಅತಿ ಹೆಚ್ಚು ಮಳೆಯಾಗುತ್ತಿದ್ದ ಮಲೆನಾಡಿನಲ್ಲಿ ಶೇ.39ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಜನವರಿ ಒಂದರಿಂದ ನಿನ್ನೆವರೆಗಿನ ಮಾಹಿತಿ ಪರಿಗಣಿಸಿದರೂ ಶೇ.25ರಷ್ಟು ವಾಡಿಕೆಗಿಂತ ಕಡಿಮೆಯಾಗಿದೆ.
|
7 |
+
ಕಳೆದ ಒಂದು ವಾರದಲ್ಲಿ ಶೇ.87ರಷ್ಟು ಮಳೆ ಕೊರತೆ ರಾಜ್ಯದಲ್ಲಿದ್ದು, ಅಲ್ಪ-ಸ್ವಲ್ಪ ಉಳಿದಿರುವ ಬೆಳೆಯೂ ರೈತರ ಕೈಸೇರುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇನ್ನು ಅಕ್ಟೋಬರ್ ಒಂದರಿಂದ ನಿನ್ನೆವರೆಗೆ ಮಾಹಿತಿ ಪರಿಗಣಿಸಿದರೂ 100 ಮಿ.ಮೀ.ನಷ್ಟು ವಾಡಿಕೆ ಮಳೆ ಇದ್ದು, ಕೇವಲ 40ಮಿ.ಮೀ.ನಷ್ಟು ಮಾತ್ರ ಮಳೆಯಾಗಿದೆ. ಇದರಿಂದ ಶೇ.60ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.
|
8 |
+
ಈ ಅವಯಲ್ಲಿ ದಕ್ಷಿಣ ಒಳನಾಡಿನಲ್ಲಿ ಶೇ.55ರಷ್ಟು, ಉತ್ತರ ಒಳನಾಡಿನಲ್ಲಿ ಶೇ.89ರಷ್ಟು, ಮಲೆನಾಡಿನಲ್ಲಿ ಶೇ.36ರಷ್ಟು ಹಾಗೂ ಕರಾವಳಿಯಲ್ಲಿ ಶೇ.12ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೂ ಒಂದು ವಾರ ಕಾಲ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಗಳು ಇಲ್ಲ. ಚದುರಿದಂತೆ ಅಲ್ಲಲ್ಲಿ ಹಗರದಿಂದ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
|
eesanje/url_46_326_9.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಕರೆಮಾಡಿ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
|
2 |
+
ಬೆಂಗಳೂರು, ಅ.22- ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು.
|
3 |
+
ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಶುಭ ಅಷ್ಟಮಿ ದಿನ, ನನಗೆ ಅಷ್ಟೆ ೈಶ್ವರ್ಯ ಒಲಿದ ಸಂಭ್ರಮ ಎಂದು ತಿಳಿಸಿದ್ದಾರೆ.
|
4 |
+
ಬ್ರೇಕಿಂಗ್ : ಮೈಸೂರು ದಸರಾ ಮೇಲೆ ಉಗ್ರರ ಕಣ್ಣು, ಹೈಅಲರ್ಟ್ ಘೋಷಣೆ..!
|
5 |
+
ಶಸ್ತ್ರ ಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿರುವ ಈ ಸಂದರ್ಭದಲ್ಲಿ ನನಗೆ ದೂರವಾಣಿ ಕರೆ ಮಾಡಿ ನನ್ನ ಆರೋಗ್ಯ ಕುಶಲೋಪರಿ ವಿಚಾರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಕಾಳಜಿ ಮತ್ತು ಶುಭ ಹಾರೈಕೆ ನನ್ನ ಆತ್ಮಸ್ಥೆ ೈರ್ಯವನ್ನು ಹೆಚ್ಚಿಸಿದ್ದು, ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ಜನಸೇವೆಗೆ ಮರಳುತ್ತೇನೆ ಎಂದು ತಿಳಿಸಿದ್ದಾರೆ.
|
eesanje/url_46_327_1.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಬಿಟ್ ಕಾಯಿನ್ ನೆಪದಲ್ಲಿ ಕೋಟ್ಯಾಂತರ ರೂ. ದೋಖಾ : ಅಪ್ಪ-ಮಗ ಸೇರಿ ಮೂವರ ಬಂಧನ
|
2 |
+
ಬೆಂಗಳೂರು, ಅ.21- ಬಿಟ್ ಕಾಯಿನ್ ನೆಪದಲ್ಲಿ ಹಣ ದ್ವಿಗುಣ ಮಾಡಿಕೊಡುತ್ತೇವೆಂದು ಜನರಿಂದ ಕೋಟ್ಯಾಂತರ ಹಣ ಪಡೆದು ಮೋಸ ಮಾಡುತ್ತಿದ್ದ ಅಪ್ಪ- ಮಗ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸತೀಶ್ ಹಾಗೂ ಮಗ ಶ್ರೀಕಾಂತ್ ಮತ್ತು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ದೀಪಕ್ ಬಂಧಿತ ವಂಚಕರು.
|
3 |
+
ಆರೋಪಿಗಳಿಂದ ಆರು ಕಂಪ್ಯೂಟರ್ಗಳು, ನಾಲ್ಕು ಮೊಬೈಲ್, ಎರಡು ಲ್ಯಾಪ್ಟಾಪ್ ಹಾಗೂ ಇನ್ನಿತರ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ಗಾಂ ಬಜಾರ್, ಅವೆನ್ಯೂ ರಸ್ತೆ, ಬಳೇಪೇಟೆ ಹಾಗೂ ಬಸವನಗುಡಿಯಲ್ಲಿರುವ ಸೊಸೈಟಿಯಲ್ಲಿ ಸತೀಶ್ದಾರರಾಗಿದ್ದಾರೆ.
|
4 |
+
ಬಿಟ್ ಕಾಯಿನ್ ನೆಪದಲ್ಲಿ ಸಾರ್ವಜನಿಕರಿಗೆ ಆಮಿಷವೊಡ್ಡಿ ನಿಮ್ಮ ಹಣ ಡಬಲ್ ಮಾಡುತ್ತೇವೆಂದು ಆಸೆ ತೋರಿಸಿ 5.50 ಕೋಟಿ ಹಣ ಪಡೆದು ವಂಚಿಸಿದ್ದಾರೆಂಬುದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ. 2020-22ರಲ್ಲಿ ಜಿಜಿಗೇಮಿಂಗ್ ಆ್ಯಪ್ ತರುತ್ತೇವೆಂದು ನಂಬಿಸಿದ್ದ ವಂಚಕರು, ಈ ಆ್ಯಪ್ ಮೂಲಕ ಜನರಿಗೆ ಬಿಟ್ ಕಾಯಿನ್ ಆಸೆ ತೋರಿಸಿ ಜನರಿಗೆ ದಿನಕ್ಕೆ 10 ಸಾವಿರ ರೂ. ಹೂಡಿಕೆ ಮಾಡಿದರೆ ತಿಂಗಳಲ್ಲಿ 45 ಸಾವಿರ ಲಾಭ ಬರುತ್ತದೆ ಎಂದು ಹೇಳಿ ನಂಬಿಸುತ್ತಿದ್ದರು.
|
5 |
+
ಛತ್ತೀಸ್ಗಢದಲ್ಲಿ ಇಬ್ಬರು ನಕ್ಸಲೀಯರ ಹತ್ಯೆ
|
6 |
+
ಸಾರ್ವಜನಿಕರ ನಂಬಿಕೆ ಗಳಿಸಲು ಪ್ರತಿಷ್ಠಿತ ಹೊಟೇಲ್ಗೆ ಶ್ರೀಕಾಂತ್ ಹೂಡಿಕೆದಾರರನ್ನು ಕರೆಸಿ ಮೋಸ ಮಾಡುತ್ತಿದ್ದ ಆರೋಪ ಸಹ ಕೇಳಿ ಬಂದಿದೆ. ಇವರಿಂದ ಮೋಸಕ್ಕೊಳಗಾಗಿ ದ್ದವರು ಹಾಗೂ ಬ್ಯಾಂಕ್ ವಂಚನೆ ಸಂಬಂಧ ವಂಚನೆಗೊಳಗಾದವರು ಪೊಲೀಸರಿಗೆ ದೂರು ನೀಡಿದ್ದರು.
|
7 |
+
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಿಸಿಬಿ ಪೊಲೀಸರು ತನಿಖೆ ಕೈಗೊಂಡು ಅಪ್ಪ- ಮಗ ಸೇರಿದಂತೆ ಮೂವರನ್ನು ಬಂಧಿಸಿ ವಿಚಾರಣೆಗೊಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
|
eesanje/url_46_327_10.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮೈಸೂರಿಗೂ ಮೆಟ್ರೋ ರೈಲು : ಪ್ರಧಾನಿ ಮೋದಿ ಘೋಷಣೆ
|
2 |
+
ನವದೆಹಲಿ,ಅ.20- ಸಾಂಸ್ಕøತಿಕ ನಗರಿ ಮೈಸೂರಿಗೂ ಮೆಟ್ರೋ ರೈಲು ಯೋಜನೆ ವಿಸ್ತರಿಸುವುದಾಗಿ ಪ್ರಧಾನಿ ನರೇಂದ್ರಮೋದಿ ಘೋಷಣೆ ಮಾಡಿದ್ದಾರೆ. ನಮ್ಮ ಮೆಟ್ರೊದ ನೇರಳೆ ಮಾರ್ಗಗಳಾದ ಬೈಯಪ್ಪನಹಳ್ಳಿ – ಕೃಷ್ಣರಾಜಪುರ ಹಾಗೂ ಕೆಂಗೇರಿ-ಚಲ್ಲಘಟ್ಟ ನಡುವಿನ ಮೆಟ್ರೊ ಮಾರ್ಗಗಳನ್ನು ವಿಡಿಯೋ ಕಾನರೆನ್ಸ್ ಮೂಲಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
|
3 |
+
ದೇಶದಲ್ಲಿ ಮೆಟ್ರೊ ಮತ್ತು ನಮೋ ರೈಲುಗಳು ಕ್ರಾಂತಿಯನ್ನು ಉಂಟು ಮಾಡಲಿವೆ. ನೋಯ್ಡಾ, ಗಾಜಿಯಾಬಾದ್, ಮೀರತ್, ಲಖ್ನೋ, ಆಗ್ರಾ, ಕಾನ್ಪುರದಂತಹ ನಗರಗಳಲ್ಲಿ ಮೆಟ್ರೊ ಸಂಚರಿಸಲಿವೆ. ಇದೇ ರೀತಿ ಬೆಂಗಳೂರು ಮತ್ತು ಮೈಸೂರನ್ನು ಮೆಟ್ರೊ ನಗರಗಳನ್ನಾಗಿ ಪರಿವರ್ತಿಸುವುದಾಗಿ ಪ್ರಕಟಿಸಿದರು. ದೇಶದ ಅನೇಕ ಕಡೆ ಸುಗಮ ಸಂಚಾರಕ್ಕಾಗಿ ಮೆಟ್ರೊ ರೈಲು ಯೋಜನೆಯನ್ನು ಅನುಷ್ಠಾನ ಮಾಡಲಾಗಿದೆ. ಈಗ 2ನೇ ಹಂತದ ನಗರಗಳಲ್ಲೂ ಇದರ ಅವಶ್ಯಕತೆ ಕಂಡುಬರುತ್ತಿದೆ ಎಂದು ಹೇಳಿದರು.
|
4 |
+
ಭಾರತ ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿಯಲ್ಲಿ ಹೊಸ ದಿಕ್ಕಿನತ್ತ ಮುಖ ಮಾಡಿದೆ. ಚಂದ್ರಯಾನದ ಮೂಲಕ ಚಂದ್ರನನ್ನು ತಲುಪಿದೆ. ವಿಶ್ವದಲ್ಲಿ ನಮ್ಮ ದೇಶ ಪ್ರಕಾಶಿಸುತ್ತಿದೆ. ಜಿ-20 ಶೃಂಗಸಭೆಯನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡಿ ಜಗತ್ತಿನ ಗಮನ ಸೆಳೆದಿದ್ದೇವೆ. ಏಷ್ಯನ್ ಕ್ರೀಡಾಕೂಟದಲ್ಲಿ ನಮ್ಮ ಕ್ರೀಡಾಪಟುಗಳು 107 ಪದಕಗಳನ್ನು ಗೆದ್ದಿದ್ದಾರೆಂದು ದೇಶದ ಸಾಧನೆಯನ್ನು ಕೊಂಡಾಡಿದರು.
|
5 |
+
ಕಮಿಷನ್ ಹೊಡೆಯುವುದರಲ್ಲಿ ಸಿಎಂ-ಡಿಸಿಎಂ ಪೈಪೋಟಿ : ಡಿವಿಎಸ್ ಆರೋಪ
|
6 |
+
ಪ್ಲಾಟ್ಫಾರಂನಲ್ಲಿ ಸ್ಕ್ರೀನ್ವಿಂಡೋವನ್ನು ಮೆಡ್ ಇಂಡಿಯಾ ಯೋಜನೆಯಲ್ಲೇ ರೂಪಿಸಲಾಗಿದೆ. ನಮೋ ಭಾರತ್ ರೈಲಿನಲ್ಲಿ ಗಾಳಿಗಿಂತಲೂ ಕಡಿಮೆ ಶಬ್ದ ಇದೆ. ಸುಖಕರ ಪ್ರಯಾಣಕ್ಕೆ ಪೂರಕವಾಗಿದೆ. ಮೊದಲ ಹಂತದಲ್ಲಿ ದೆಹಲಿ, ಉತ್ತರಪ್ರದೇಶ, ಹರಿಯಾಣ ಹಾಗೂ ರಾಜಸ್ಥಾನಗಳನ್ನು ನಮೋ ಭಾರತ್ ರೈಲು ಸಂಪರ್ಕಿಸಲಿದೆ ಎಂದು ತಿಳಿಸಿದರು.
|
7 |
+
ಮೂರನೇ ದಶಕದಲ್ಲಿ ಭಾರತೀಯ ರೈಲ್ವೆಗೆ ಕಾಯಕಲ್ಪ ನೀಡುವ ಅಗತ್ಯವಿದೆ. ಚಿಕ್ಕಕನಸು ಕಾಣಲು ನನಗೆ ಸಾಧ್ಯವಿಲ್ಲ. ಸಾಯುತ್ತ ತೆಳಲುವುದಿಲ್ಲ. ಈ ದಶಕದ ಕೊನೆಯಲ್ಲಿ ಭಾರತದ ರೈಲ್ವೆ ವಿಶ್ವದ ಯಾವುದೇ ರೈಲು ವ್ಯವಸ್ಥೆಗಿಂತಲೂ ಕಡಿಮೆ ಇರುವುದಿಲ್ಲ ಎಂದು ಭರವಸೆ ನೀಡಿದರು.
|
8 |
+
ದೇಶದ ಮೊದಲ ರ್ಯಾಪಿಡ್-ಎಕ್ಸ್ ಪ್ರೆಸ್ ರೈಲಿಗೆ ಮೋದಿ ಚಾಲನೆ
|
9 |
+
ನಮೋ ಭಾರತ್ ಶುರುವಾಗಿದೆ. ಇದಕ್ಕೂ ಮೊದಲು ವಂದೇ ಭಾರತ್ ಯೋಜನೆಯಡಿ ಆಧುನಿಕ ಸೌಲಭ್ಯ ಒದಗಿಸಲಾಗಿದೆ. ಅಮೃತ್ ಭಾರತ್, ಒಂದೇ ಭಾರತ್ ಸೇರಿದಂತೆ ಹಲವು ಯೋಜನೆಗಳ ಮೂಲಕ ಸಂಪರ್ಕ ಯೋಜನೆಗಳು ಸುಧಾರಿಸಲಾಗುತ್ತಿದೆ. ಬಹುಮಾದರಿ ಸೌಲಭ್ಯಗಳ ಮೂಲಕ ಸಂಪರ್ಕವನ್ನು ಹೆಚ್ಚಿಸಲಾಗುತ್ತಿದೆ ಎಂದು ಹೇಳಿದರು.
|
eesanje/url_46_327_11.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಲೋಕಸಭಾ ಚುನಾವಣೆಗೂ ಮುನ್ನವೇ ರಾಜ್ಯ ಸಚಿವ ಸಂಪುಟ ಪುನಾರಚನೆ..?
|
2 |
+
ಬೆಂಗಳೂರು,ಅ.20- ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ತೆರೆಮೆರೆಯಲ್ಲಿ ಚಟುವಟಿಕೆಗಳು ನಡೆಯುತ್ತಿವೆ ಎಂಬ ವದಂತಿಯ ನಡುವೆ ಆಡಳಿತರೂಢ ಪಕ್ಷದ ಶಾಸಕರನ್ನು ಭದ್ರಪಡಿಸಿಕೊಳ್ಳಲು ಸಚಿವ ಸಂಪುಟ ಪುನಾರಚನೆಯ ತುಪ್ಪವನ್ನು ಮೂಗಿಗೆ ಸವರುವಂತಹ ಪ್ರಯತ್ನವನ್ನು ಹೈಕಮಾಂಡ್ ಮಾಡಿದೆ.
|
3 |
+
ಇತ್ತೀಚೆಗೆ ಬೆಂಗಳೂರಿಗೆ ದಿಢೀರ್ ಆಗಮಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
|
4 |
+
ನಿಗಮಮಂಡಳಿ ನೇಮಕಾತಿ, ಸಚಿವ ಸಂಪುಟ ಪುನಾರಚನೆ ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಮಾಲೋಚನೆ ನಡೆದಿದೆ ಎಂದು ಹೇಳಲಾಗಿದೆ. ಅದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ನ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೆವಾಲ ಕೆಲವು ಶಾಸಕರನ್ನು ಸಂಪರ್ಕಿಸಿದ್ದು ಮುಂದಿನ ಸಚಿವ ಸಂಪುಟ ಪುನಾರಚನೆ ವೇಳೆ ನಿಮಗೆ ಅವಕಾಶ ಸಿಗಲಿದೆ ಎಂದು ಹೇಳಿರುವ ಮಾಹಿತಿಗಳಿವೆ.
|
5 |
+
ನಿಜ್ಜರ್ ಹತ್ಯೆ ಹೇಳಿಕೆ ಮುನ್ನ ಭಾರತದೊಂದಿಗೆ ಚರ್ಚೆ ನಡೆಸಿದ್ದೇವೆ ; ಕೆನಡಾ
|
6 |
+
ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾದ ಬೆನ್ನಲ್ಲೇ ಸರ್ಕಾರದ ವಿರುದ್ಧ ಹೋರಾಟ ಮತ್ತು ಚಟುವಟಿಕೆಗಳು ತೀವ್ರಗೊಂಡಿದೆ ಈಗಾಗಲೇ ಹಲವು ಬಾರಿ ಡಿ.ಕೆ.ಶಿವಕುಮಾರ್ ಅವರು ಬಹಿರಂಗ ಹೇಳಿಕೆ ನೀಡಿ ಸರ್ಕಾರ ಪತನಗೊಳಿಸುವ ಸಂಚು ನಡೆದಿದೆ ಎಂದು ಆರೋಪಿಸಿದರು.
|
7 |
+
ಬಿಜೆಪಿಯ ಒಂದು ತಂಡ ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿ ಆಮಿಷವೊಡ್ಡುವ ಕೆಲಸ ಮಾಡುತ್ತಿದೆ. ನಮ್ಮ ಶಾಸಕರು ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತಿದ್ದಾರೆ. ಸಮಯ ಬಂದಾಗ ಎಲ್ಲವನ್ನು ಬಹಿರಂಗಪಡಿಸುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
|
8 |
+
ರಾಜ್ಯ ಮಟ್ಟದಲ್ಲಿ ನಾಯಕರುಗಳು ಶಾಸಕರನ್ನು ಸಂಪರ್ಕಿಸಿ ಅಭಿಪ್ರಾಯ ಕ್ರೂಢೀಕರಿಸುವ ಪ್ರಯತ್ನ ಮಾಡಿದ್ದಾರೆ. ಈಗಾಗಲೇ ಒಂದು ಸುತ್ತು ಜಿಲ್ಲಾ ಮಟ್ಟದಲ್ಲಿ ಶಾಸಕರು ಮತ್ತು ಸಚಿವರ ಸಭೆ ನಡೆಸಲಾಗಿದೆ. ಅದರ ಹೊರತಾಗಿಯೂ ಕೆಲವರು ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುತ್ತಿಲ್ಲ ಎಂಬ ಹೇಳಿಕೆಗಳನ್ನು ಬಹಿರಂಗವಾಗಿ ನೀಡಿ ಆಕ್ಷೇಪಿಸುತ್ತಿದ್ದಾರೆ.
|
9 |
+
ಇದು ಮುಜುಗರದ ಸನ್ನಿವೇಶವಾಗಿದೆ. ಮತ್ತೊಂದೆಡೆ ಸರ್ಕಾರ ಪತನಗೊಳಿಸಲು ತೆರೆಮರೆಯಲ್ಲಿ ಸದ್ದಿಲ್ಲದೆ ನಡೆಯುತ್ತಿರುವ ಆಪರೇಷನ್ ಕಮಲದ ಕಸರತ್ತು ಕಾಂಗ್ರೆಸಿಗರ ನಿದ್ದೆಗೆಡಿಸಿದೆ. ದೇಶದಲ್ಲೇ ಅದರಲ್ಲೂ ದಕ್ಷಿಣ ಭಾರತದಲ್ಲಿ ಪ್ರಮುಖ ರಾಜ್ಯವಾಗಿರುವ ಕರ್ನಾಟಕದಲ್ಲಿ ಆಡಳಿತದಲ್ಲಿರುವುದು ಕಾಂಗ್ರೆಸ್ಗೆ ಜೀವ ಕಣವಾಗಿದೆ. ಇಲ್ಲಿಯ ಸರ್ಕಾರವನ್ನು ಕಳೆದುಕೊಂಡರೆ ಕಾಂಗ್ರೆಸ್ ಅಸ್ತಿತ್ವವೇ ಪ್ರಶ್ನಾರ್ಹವಾಗುವ ಆತಂಕವಿದೆ.
|
10 |
+
ಈ ಹಿನ್ನಲೆಯಲ್ಲಿ ಪ್ರತಿ ಬೆಳವಣಿಗೆಯ ಮೇಲೂ ಕಟ್ಟೆಚ್ಚರ ವಹಿಸಬೇಕು. ಯಾವುದೇ ಸಂದರ್ಭದಲ್ಲೂ ಸರ್ಕಾರವನ್ನು ಬಿಟ್ಟುಕೊಡಬಾರದು. ಆಪರೇಷನ್ ಕಮಲ ಸೇರಿದಂತೆ ಎಂಥದ್ದೇ ಚಟುವಟಿಕೆಗಳಿದ್ದರೂ ತಿರುಗೇಟು ನೀಡಬೇಕೆಂದು ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚಿಸಿದೆ ಎಂದು ಹೇಳಲಾಗಿದೆ. ಇದು ಸಾಲದು ಎಂಬಂತೆ ಕೆಲವು ಶಾಸಕರನ್ನು ಸಂಪರ್ಕಿಸಿ ಸಚಿವ ಸಂಪುಟ ಪುನಾರಚನೆ ವೇಳೆ ಅವಕಾಶ ನೀಡಲಾಗುವುದು. ಬಿಜೆಪಿ ಮತ್ತು ಜೆಡಿಎಸ್ನ ಯಾವುದೇ ಆಮಿಷಗಳಿಗೆ ಒಳಗಾಗಬೇಡಿ ಎಂದು ಹೈಕಮಾಂಡ್ ನಾಯಕರು ಮನವೊಲಿಸುತ್ತಿದ್ದಾರೆ ಎಂದು ಹೇಳಲಾಗಿದೆ.
|
11 |
+
ಮಧ್ಯಪ್ರದೇಶ ಚುನಾವಣೆ : ಫೈನಲ್ ಆಯ್ತು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ
|
12 |
+
ಈ ಬಗ್ಗೆ ಕೆಲವು ಶಾಸಕರು ತಮ್ಮ ಅಭಿಪ್ರಾಯಗಳನ್ನು ಹೇಳಿಕೊಂಡಿದ್ದು, ಸಚಿವ ಸಂಪುಟ ಪುನಾರಚನೆ ನಿಗದಿಯಂತೆ ಸರ್ಕಾರದ ಎರಡೂವರೆ ವರ್ಷಗಳ ಬಳಿಕ ನಡೆಯಲಿದೆ. ಈ ನಡುವೆ ಕ್ಷಿಪ್ರ ಬೆಳವಣಿಗಳಾದರೆ ಹೈಕಮಾಂಡ್ ಯಾವ ರೀತಿಯ ನಿರ್ಧಾರವನ್ನಾದರೂ ತೆಗೆದುಕೊಳ್ಳಬಹುದು. ಲೋಕಸಭೆ ಚುನಾವಣೆಗೂ ಮುನ್ನವೇ ಸಂಪುಟ ಪುನಾರಚನೆಯಾದರೆ ಅಚ್ಚರಿಪಡಬೇಕಿಲ್ಲ ಎಂದು ಮೂಲಗಳು ತಿಳಿಸಿವೆ.
|
eesanje/url_46_327_12.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ವಿಜಯದಶಮಿ ನಂತರ ಜೆಡಿಎಸ್ ಪುನರ್ ಸಂಘಟನೆ : ಕುಮಾರಸ್ವಾಮಿ
|
2 |
+
ಬೆಂಗಳೂರು,ಅ.19- ವಿಜಯದಶಮಿ ಮುಗಿದ ನಂತರ ಪಕ್ಷದ ಮತ್ತೊಂದು ಸಭೆ ನಡೆಸಿ ಪಕ್ಷದ ಪುನರ್ ಸಂಘಟನೆ ಬಗ್ಗೆ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಹಂಗಾಮಿ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.
|
3 |
+
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷವು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಹಲವು ನಿರ್ಣಯಗಳನ್ನು ಮಾಡಲು ತೀರ್ಮಾನಿಸಲಾಗಿದೆ. ಹೀಗಾಗಿ ವಿಜಯದಶಮಿ ನಂತರ ಮತ್ತೊಂದು ಸಭೆ ಮಾಡಲಾಗುವುದು ಎಂದರು.
|
4 |
+
ರಾಜ್ಯ ಸರ್ಕಾರದ ಲೋಪ ದೋಷಗಳ ಬಗ್ಗೆ ಪ್ರಸ್ತಾಪ ಮಾಡಿ ಜನಪರ ಹೋರಾಟ ಮಾಡುವುದು, ಅಧಿವೇಶನದಲ್ಲಿ ಮಾತನಾಡಲು ಅವಕಾಶ ಸಿಕ್ಕಿರಲಿಲ್ಲ. ಯಾವ ಇಲಾಖೆಯಡಿ ಏನೇನು ಲೂಟಿಯಾಗಿದೆ ಎಲ್ಲ ಅಂಶಗಳನ್ನು ಬಹಿರಂಗಪಡಿಸುವುದಾಗಿ ಹೇಳಿದರು.
|
5 |
+
ಸಾಕಲಾಗದೆ ಕಂದನನ್ನು ಕೆರೆಗೆ ಎಸೆದ ಕರುಣೆಯಿಲ್ಲದ ತಂದೆ
|
6 |
+
ವಿಧಾನಸಭೆ ಚುನಾವಣೆ ನಂತರ ಕೆಲವು ರಾಜಕೀಯ ಘಟನೆಗಳು ನಡೆದಿರುವ ಹಿನ್ನಲೆಯಲ್ಲಿ ಹಳೆಯ ರಾಜ್ಯ ಘಟಕವನ್ನು ವಿಸರ್ಜನೆ ಮಾಡಿ ಇಂದು ಹಡಹಾಕ್ ಸಮಿತಿ ರಚನೆ ಮಾಡಲಾಗುತ್ತಿದ್ದು, ಆ ಮೂಲಕ ಪಕ್ಷ ಪುನಶ್ಚೇತನ ಮಾಡಲಾಗುತ್ತದೆ ಎಂದು ತಿಳಿಸಿದರು.
|
7 |
+
ಹಂಗಾಮಿ ಅಧ್ಯಕ್ಷರ ಜವಾಬ್ದಾರಿಯನ್ನು ನನಗೆ ನೀಡಿದ್ದು, ಎಲ್ಲರ ಜೊತೆಗೂಡಿ ಪಕ್ಷ ಸಂಘಟನೆ ಮಾಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು. ಸಭೆಯಲ್ಲಿ 30 ಜಿಲ್ಲೆಯ ಪಕ್ಷದ ಜಿಲ್ಲಾಧ್ಯಕ್ಷರು ಪಾಲ್ಗೊಂಡಿದ್ದರು.
|
eesanje/url_46_327_2.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಸಿದ್ದರಾಮಯ್ಯನವರು ಪಾಕಿಸ್ತಾನ ಟೀಮ್ ಬೆಂಬಲಿಸಲು ಹೋಗಿದ್ರಾ..? : ಎಚ್ಡಿಕೆ ವ್ಯಂಗ್ಯ
|
2 |
+
ಬೆಂಗಳೂರು,ಅ.21- ರಾಜ್ಯದಲ್ಲಿ ಬರ ಪರಿಸ್ಥಿತಿ, ವಿದ್ಯುತ್ ಅಭಾವ ಸೇರಿದಂತೆ ಸಾಕಷ್ಟು ಸಮಸ್ಯೆಗಳಿದ್ದರೂ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ಕಾರ್ಯದರ್ಶಿಗಳು ನಿನ್ನೆ ಕ್ರಿಕೆಟ್ ಪಂದ್ಯಾವಳಿ ವೀಕ್ಷಣೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು. ಭಾರತ- ಪಾಕಿಸ್ತಾನ ನೋಡಲಿ ಎನ್ನಬಹುದಿತ್ತು. ಆದರೆ ಪಂದ್ಯವಿದ್ದದು ಪಾಕಿಸ್ತಾನ, ಆಸ್ಟ್ರೇಲಿಯ ನಡುವೆ. ಯಾರಿಗೆ ಬೆಂಬಲ ವ್ಯಕ್ತಪಡಿಸಿ ಹೋಗಿದ್ದರು ಎಂದು ಪ್ರಶ್ನಿಸಿದರು. ತಾವು ಕ್ರೀಡೆಗಳ ವಿರೋಯಲ್ಲ. ನಮ್ಮ ಬೆಂಬಲವೂ ಇದೆ. ಆದರೆ ಬರಗಾಲ, ವಿದ್ಯುತ್ ಅಭಾವದ ಸಂದರ್ಭದಲ್ಲಿ ಸಮಯ ಅವಕಾಶ ಮಾಡಿಕೊಂಡು 8 ಗಂಟೆ ಪಂದ್ಯ ವೀಕ್ಷಿಸಿದ್ದಾರೆ ಎಂದರು.
|
3 |
+
ಟೀಕೆ ಮಾಡುವುದಿಲ್ಲ:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ದೊಡ್ಡ ಹಡಗಿಗೆ ಯಾರು ಯಾರನ್ನು ತುಂಬಿಸಿಕೊಳ್ಳುತ್ತಾರೋ ತುಂಬಿಸಿಕೊಳ್ಳಲಿ ಎಂದು ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ತಿಳಿಸಿದರು. ನಾವು ರಾಜ್ಯದ ಜನತೆಯ ಸಮಸ್ಯೆಗಳ ಪರಿಹಾರದ ಬಗ್ಗೆ ಗಮನಹರಿಸುತ್ತೇವೆ. ಮುಂದೆ ಏನಾಗುತ್ತೋ ಗೊತ್ತಿಲ್ಲ ಎಂದು ಮಾರ್ಮಿಕವಾಗಿ ಹೇಳಿದರು.
|
4 |
+
ಯಶಸ್ವಿಯಾಗಿ ಗಗನಯಾನ ಪರೀಕ್ಷಾ ಹಾರಾಟ ನಡೆಸಿದ ಇಸ್ರೋ
|
5 |
+
ಬೇಗ ಬಿಚ್ಚಡಲಿ:ಉಪಮುಖ್ಯಮಂತ್ರಿಗಳು ಯಾರ್ಯಾರದೋ ಏನೇನೋ ಬಿಚ್ಚಿಡುವುದಾಗಿ ಹೇಳಿದ್ದಾರೆ . ಆದಷ್ಟು ಬೇಗ ಬಿಚ್ಚಿಡಲಿ. ನಮಗೆ ಭಯವಿಲ್ಲ. ಬಿಚ್ಚಿಡುವ ಮುನ್ನ ಇನ್ನೇನಾದರೂ ಆದರೆ ಏನು ಮಾಡುವುದು? ಬೇಗ ಬಿಚ್ಚಿಡಲಿ ಎಂದು ಮಾರ್ಮಿಕವಾಗಿ ಹೇಳಿದರು. ನಾನು ನಕಲಿ ಸ್ವಾಮಿ ಅಲ್ಲ. ಮಾಹಿತಿ ಇಲ್ಲದೆ ಇಂಧನ ಇಲಾಖೆ ವಿಚಾರ ಪ್ರಸ್ತಾಪಿಸಿಲ್ಲ. ಅಂಕಿ ಅಂಶಗಳ ಆಧಾರದ ಮೇಲೆ ಪ್ರಸ್ತಾಪಿಸಿದ್ದೇನೆ.
|
6 |
+
ಬಟ್ಟೆ ಹರಿದುಕೊಂಡು ಓಡಾಡಬೇಕಾಗುತ್ತದೆ ಎಂದು ಹೇಳಿದ್ದಾರೆ. ಮುಂದೆ ಯಾರು ಆ ರೀತಿ ಓಡಾಡುತ್ತಾರೆ ಎಂಬುದನ್ನು ಕಾದು ನೋಡೋಣ ಎಂದರು. ಮಾಜಿ ಸಚಿವ ಬಂಡೆಪ್ಪ ಕಾಶಂಪುರ್, ಮಾಜಿ ಶಾಸಕರಾದ ಸುರೇಶ್ ಗೌಡ, ಕೋನರೆಡ್ಡಿ ತೂಪಲ್ಲಿ, ರಮೇಶ್ ಗೌಡ ಹಾಗೂ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಜೆಡಿಎಸ್ ಕಚೇರಿ ಜೆಪಿಭವನದಲ್ಲಿ ಹಮ್ಮಿಕೊಂಡಿದ್ದ ಆಯ್ದ ಪೂಜೆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಭಾಗಿಯಾಗಿದ್ದರು.
|
eesanje/url_46_327_3.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳ ಭರ್ತಿಗೆ ಸಿಎಂಗೆ ಖರ್ಗೆ ಪತ್ರ
|
2 |
+
ಬೆಂಗಳೂರು,ಅ.21- ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ನೇರ ನೇಮಕಾತಿ ಹಾಗೂ ಬಡ್ತಿ ಮೂಲಕ ತುಂಬ ಬೇಕಾಗಿರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಕೋರಿ ಎಲ್ಲಾ ಸಚಿವರಿಗೆ ಹಾಗೂ ಮುಖ್ಯಮಂತ್ರಿಯವರು ಹೊಂದಿರುವ ಖಾತೆಗಳಿಗೆ ಸಂಬಂಧಿಸಿದಂತೆ ಸಚಿವಾಲಯ ಮುಖ್ಯಸ್ಥರಿಗೆ ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.
|
3 |
+
ಭಾರತ ಸಂವಿಧಾನ ಅನುಚ್ಚೇದ 371(ಜೆ) ಅಡಿ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಪರಾಮರ್ಶಿಸುವ ಕುರಿತು ರಚಿಸಲಾಗಿರುವ ಉಪ ಸಮಿತಿ ವತಿಯಿಂದ ಸಚಿವರ ಗಮನ ಸೆಳೆಯಲಾಗಿದೆ. 2023ರ ಆಗಸ್ಟ್ 17ರಂದು ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ತೆಗೆದುಕೊಳ್ಳಲಾದ ತೀರ್ಮಾನದಂತೆ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಸ್ಥಳೀಯ ವೃಂದದಲ್ಲಿ ಮೀಸಲಿರಿಸಿರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಬೇಕಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
|
4 |
+
ಛತ್ತೀಸ್ಗಢದಲ್ಲಿ ಇಬ್ಬರು ನಕ್ಸಲೀಯರ ಹತ್ಯೆ
|
5 |
+
ಭಾರತ ಸಂವಿಧಾನ ಅನುಚ್ಛೇದ 371 (ಜೆ) ಅಡಿಯಲ್ಲಿ ಇಲಾಖಾವಾರು ಭರ್ತಿ ಮಾಡಲು ಬಾಕಿ ಇರುವ ನೇರ ನೇಮಕಾತಿ ಹಾಗೂ ಮುಂಬಡ್ತಿಯಲ್ಲಿ ಹುದ್ದೆಗಳ ವಿವರಗಳನ್ನು ಪತ್ರದ ಜೊತೆ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ನೇರ ನೇಮಕಾತಿ ಮೂಲಕ 28,023 ಹುದ್ದೆಗಳನ್ನು ಭರ್ತಿ ಮಾಡಬೇಕಿದ್ದು, ಇವಗಳಲ್ಲಿ 12,945 ಹುದ್ದೆಗಳನ್ನು ಭರ್ತಿ ಮಾಡುವ ಕ್ರಮ ಲೋಕಸೇವಾ ಆಯೋಗ ಹಾಗೂ ಇನ್ನಿತರ ಸಂಸ್ಥೆಗಳ ಮೂಲಕ ನಡೆಯುತ್ತಿದೆ. ಉಳಿದಂತೆ 15,078 ಹುದ್ದೆಗಳು ಖಾಲಿ ಇದ್ದು ಭರ್ತಿ ಪ್ರಕ್ರಿಯೆ ಆರಂಭಗೊಳ್ಳಬೇಕಿದೆ. ಇವುಗಳಲ್ಲಿ ಎ,ಬಿ,ಸಿ ಹಾಗೂ ಡಿ ವೃಂದದ ಹುದ್ದೆಗಳು ಸೇರಿವೆ ಎಂದು ವಿವರಿಸಿದ್ದಾರೆ.
|
6 |
+
ಕಲ್ಯಾಣ ಕರ್ನಾಟಕ ಭಾಗದಲ್ಲಿ 9,905 ವಿವಿಧ ಹುದ್ದೆಗಳನ್ನು ಬಡ್ತಿ ಮೂಲಕ ತುಂಬ ಬೇಕಿದ್ದು, ಈ ಹುದ್ದೆಗಳನ್ನು ಬಡ್ತಿ ಮೂಲಕ ತುಂಬಲು ಕ್ರಮ ಕೈಗೊಳ್ಳುವಂತೆಯೂ ಸಚಿವ ಪ್ರಿಯಾಂಕ್ ಖರ್ಗೆಸಂಪುಟದ ಎಲ್ಲಾ ಸಚಿವರಿಗೂ ಬರೆದಿರುವ ಪತ್ರದಲ್ಲಿ ಕೋರಿದ್ದಾರಲ್ಲದೆ, ಇಲಾಖೆಯ ಅಧಿಕಾರಿಗಳ ಸಭೆ ಕರೆದು ಈ ನಿಟ್ಟಿನಲ್ಲಿ ಪ್ರಗತಿ ಸಾಧಿಸಲು ಸಹಕಾರ ನೀಡಬೇಕೆಂದೂ ತಿಳಿಸಿದ್ದಾರೆ.
|
eesanje/url_46_327_4.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ವಿಧಾನಸೌಧ-ವಿಕಾಸಸೌಧದಲ್ಲಿ ಆಯುಧ ಪೂಜೆಯ ಸಂಭ್ರಮ
|
2 |
+
ಬೆಂಗಳೂರು,ಅ.21- ಆಡಳಿತದ ಶಕ್ತಿ ಕೇಂದ್ರಗಳಾದ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ ಸೇರಿದಂತೆ ಬಹುತೇಕ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಇಂದೇ ಆಯುಧ ಪೂಜೆಯನ್ನು ನೆರವೇರಿಸಲಾಯಿತು.
|
3 |
+
ಸರ್ಕಾರಿ ಕಚೇರಿಗಳಲ್ಲಿ ಇಂದು ಬೆಳಗ್ಗೆಯಿಂದಲೇ ಆಯುಧ ಪೂಜೆಯ ಸಂಭ್ರಮ ಮನೆ ಮಾಡಿತ್ತು. ಸಿಬ್ಬಂದಿಗಳು ಪೂಜಾ ಕೈಂಕರ್ಯದಲ್ಲಿ ತೊಡಗಿದ್ದರು. ತಮ್ಮ ತಮ್ಮ ಕಚೇರಿಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ ಪೂಜೆ ನೆರವೇರಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.
|
4 |
+
ಯಶಸ್ವಿಯಾಗಿ ಗಗನಯಾನ ಪರೀಕ್ಷಾ ಹಾರಾಟ ನಡೆಸಿದ ಇಸ್ರೋ
|
5 |
+
ನಿನ್ನೆಯಿಂದಲೇ ಕಚೇರಿಗಳನ್ನು ಶುಚಿಗೊಳಿಸಿ ಸಿಂಗರಿಸುವ ಕಾರ್ಯದಲ್ಲಿ ಸಿಬ್ಬಂದಿಗಳು ತೊಡಗಿದ್ದರು. ಸಚಿವರ ಕಚೇರಿಗಳು, ವಾಹನಗಳು ಸೇರಿದಂತೆ ವಿಧಾನಸೌಧ ಮತ್ತು ವಿಕಾಸಸೌಧದಲ್ಲಿನ ಕೆಲವು ಕಚೇರಿಗಳಲ್ಲಿ ನಿನ್ನೆಯೇ ಆಯುಧ ಪೂಜೆ ನೆರವೇರಿಸಲಾಗಿತ್ತು.
|
6 |
+
ಸೋಮವಾರ ಆಯುಧ ಪೂಜೆ ಮಾಡಬೇಕಿದೆ. ಆದರೆ ನಾಳೆ ಭಾನುವಾರ ಹಾಗೂ ಸೋಮವಾರ ಆಯುಧ ಪೂಜೆ ರಜೆ ಇರುವುದರಿಂದ ಇಂದೇ ಆಡಳಿತದ ಶಕ್ತಿ ಕೇಂದ್ರಗಳಲ್ಲಿ ಪೂಜೆಗಳನ್ನು ನೆರವೇರಿಸಿದ್ದು ಕಂಡುಬಂದಿತು.
|
eesanje/url_46_327_5.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ವಿದ್ಯುತ್ ಕೃತಕ ಅಭಾವ ಸೃಷ್ಟಿಸಿ ಕಮಿಷನ್ ಹೊಡೆಯಲು ಮುಂದಾದ ಸರ್ಕಾರ : ಹೆಚ್ಡಿಕೆ
|
2 |
+
ಬೆಂಗಳೂರು,ಅ.21- ವಿದ್ಯುತ್ ಉತ್ಪಾದನೆ ಮಾಡುವ ಸಾಮಥ್ರ್ಯ ಇದ್ದರೂ ರಾಜ್ಯ ಸರ್ಕಾರ ಕೃತಕ ವಿದ್ಯುತ್ ಅಭಾವ ಸೃಷ್ಟಿಸುವ ಮೂಲಕ ದುಬಾರಿ ದರದಲ್ಲಿ ವಿದ್ಯುತ್ ಖರೀದಿ ಮಾಡಿ ಕಮಿಷನ್ ಪಡೆಯಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.
|
3 |
+
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಮರ್ಪಕವಾಗಿ ವಿದ್ಯುತ್ ಉತ್ಪಾದನೆ ಮಾಡಿದರೆ ಉಳಿತಾಯವಾಗುವಷ್ಟು ವಿದ್ಯುತ್ ಉತ್ಪಾದಿಸಬಹುದು. ಆದರೆ ವಿದ್ಯುತ್ ಉತ್ಪಾದನೆಗೆ ಆದ್ಯತೆ ನೀಡದೆ ಗ್ಯಾರಂಟಿ ಯೋಜನೆಗಳ ಬಗ್ಗೆ ಕಾಲಹರಣ ಮಾಡಿದೆ. ಮಳೆ ಅಭಾವದಿಂದ ವಿದ್ಯುತ್ ಸಮಸ್ಯೆ ಉಂಟಾಗಿದೆ ಎಂದು ಹೇಳಿ ವಿದ್ಯುತ್ ಖರೀದಿ ಮಾಡಲು ಮುಂದಾಗುತ್ತಿದೆ ಎಂದು ಆರೋಪಿಸಿದರು.
|
4 |
+
1500 ಮೆಗಾವ್ಯಾಟ್ ವಿದ್ಯುತ್ ಖರೀದಿಸುವ ಬಗ್ಗೆ ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಬೇಕು. ಸರ್ಕಾರವೇ ಹೇಳಿರುವ ಮಾಹಿತಿ ಪ್ರಕಾರ ಪ್ರತಿದಿನ 40 ಕೋಟಿ ವಿದ್ಯುತ್ ಖರೀದಿಗೆ ಬೇಕಾಗುತ್ತದೆ ಎಂದರು.
|
5 |
+
ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಆಖಿಲೇಶ್ ಯಾದವ್
|
6 |
+
ರಾಜ್ಯದಲ್ಲಿ 32,912.52 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಬಹುದು. ಜಲವಿದ್ಯುತ್ನಲ್ಲಿ ಶೇ.50ರಷ್ಟು ಅಂದರೂ 1953.3 ಮೆ.ವ್ಯಾ ವಿದ್ಯುತ್ ಉತ್ಪಾದಿಸಬಹುದು. ಶಾಖೋತ್ಪನ್ನ ವಿದ್ಯುತ್ ಘಟಕಗಳಿಂದ 9947.56 ಮೆ.ವ್ಯಾ ಉತ್ಪಾದಿಸಬಹುದು. ಕೂಡ್ಲಗಿಯಲ್ಲಿ ಇನ್ನೆರು ಶಾಖೋತ್ಪನ್ನ ಘಟಕ ಆರಂಭಿಸಿದರೆ 4000 ಮೆ.ವ್ಯಾ ವಿದ್ಯುತ್ ಉತ್ಪಾದಿಸಬಹುದು. ಹೀಗೆ ರಾಜ್ಯದಲ್ಲಿ ಸರಾಸರಿ 16 ಸಾವಿರದಿಂದ 18 ಸಾವಿರ ಮೆ.ವ್ಯಾಟ್ವರೆಗೂ ವಿದ್ಯುತ್ ಉತ್ಪಾದಿಸಬಹುದು ಎಂದು ಹೇಳಿದರು.
|
7 |
+
ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಗೆ ದುಡ್ಡಿನ ಅಗತ್ಯವಿಲ್ಲ ಎಂದು ಭಾವಿಸುತ್ತೇನೆ. ಆದರೂ ಸರ್ಕಾರ ವಿದ್ಯುತ್ ಖರೀದಿ ಮಾಡಿ ಕಮಿಷನ್ ಪಡೆಯಲು ಹೊರಟಿದೆ. ಸರ್ಕಾರದ ಲೋಪದೋಷಗಳನ್ನು ಹೇಳಿದ್ದು, ಯಾವ ರೀತಿ ಪರೀಕ್ಷಿಸಿಕೊಳ್ಳಬಹುದು ಎಂಬುದನ್ನು ಹೇಳಿದ್ದೇನೆ. ಸತ್ಯ ಹರಿಶ್ಚಂದ್ರ ಸರ್ಕಾರ ಐದು ತಿಂಗಳಲ್ಲಿ ಮಾಡಿದ್ದು ಸಾಕು, ಕಮಿಷನ್ ನಿಲ್ಲಿಸಿ ಜನರ ಸಮಸ್ಯೆ ಪರಿಹರಿಸಿ ಎಂದರು.
|
8 |
+
ಯಶಸ್ವಿಯಾಗಿ ಗಗನಯಾನ ಪರೀಕ್ಷಾ ಹಾರಾಟ ನಡೆಸಿದ ಇಸ್ರೋ
|
9 |
+
ಬರಗಾಲದಿಂದಾಗಿ ಆಹಾರಧಾನ್ಯ ಉತ್ಪಾದನೆ ಸಾಕಷ್ಟು ಕಡಿಮೆಯಾಗಲಿದ್ದು, ಆಮದು ಮಾಡಿಕೊಳ್ಳಬೇಕಾದ ಪರಿಸ್ಥಿತಿ ಉಂಟಾಗಬಹುದು. ಅದಕ್ಕೆ ಯಾವ ಸಿದ್ದತೆ ಮಾಡಿಕೊಂಡಿದ್ದೀರಿ? ಎಂದು ಪ್ರಶ್ನಿಸಿದರು. ಮಾಹಿತಿ ಇಲ್ಲದೆ ಆರೋಪ ಮಾಡುತ್ತಿಲ್ಲ. 25-35 ವರ್ಷಗಳಿಂದ ಮಾಡಿಕೊಂಡು ಬಂದಿರುವುದು ಸಾಕು. ಇನ್ನಾದರೂ ಜನರ ಸಮಸ್ಯೆ ಬಗೆಹರಿಸಲು ಗಮನ ನೀಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೆಸರು ಹೇಳದೆ ಪ್ರಸ್ತಾಪಿಸಿದರು.
|
eesanje/url_46_327_6.txt
ADDED
@@ -0,0 +1,14 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಹುತಾತ್ಮ ಪೊಲೀಸ್ ವಿಮಾ ಮೊತ್ತ 50 ಲಕ್ಷಕ್ಕೆ ಹೆಚ್ಚಳ
|
2 |
+
ಬೆಂಗಳೂರು ಅ.21- ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
|
3 |
+
ಇಂದು ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ ಪುಷ್ಪಚಕ್ರ ಅರ್ಪಿಸಿ ನಮನ ಸಲ್ಲಿಸಿ ಮಾತನಾಡಿದರು. ಪೊಲೀಸ್ ವ್ಯವಸ್ಥೆ ರಾಜ್ಯದ , ಸರ್ಕಾರದ ಘನತೆಯನ್ನು ಹೆಚ್ಚಿಸುವಂತೆ ಕೆಲಸ ಮಾಡುತ್ತದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಗೆ ನೇರ ಸಂಬಂಧವಿದೆ. ಯಾವ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿರುತ್ತದೋ ಅಲ್ಲಿಗೆ ಬಂಡವಾಳ ಹೆಚ್ಚಾಗಿ ಬರುತ್ತದೆ.
|
4 |
+
ಇದರಿಂದ ಉದ್ಯೋಗ ಸೃಷ್ಟಿ ಹೆಚ್ಚಾಗಿ, ಅಭಿವೃದ್ಧಿ ವೇಗ ಪಡೆದುಕೊಳ್ಳುತ್ತದೆ. ಇದರ ಪರಿಣಾಮ ನಾಡಿನ ಜನರ ತಲಾ ಆದಾಯದ ಪ್ರಮಾಣವೂ ಹೆಚ್ಚಾಗುತ್ತದೆ. ಆದ್ದರಿಂದ ನಾಡಿನ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟು ನಿಟ್ಟಾಗಿ ನಿರ್ವಹಿಸಬೇಕು ಎಂದು ಕರೆ ನೀಡಿದರು.
|
5 |
+
ಛತ್ತೀಸ್ಗಢದಲ್ಲಿ ಇಬ್ಬರು ನಕ್ಸಲೀಯರ ಹತ್ಯೆ
|
6 |
+
ತಂತ್ರಜ್ಞಾನ ಬೆಳೆದಂತೆ ಪೊಲೀಸ್ ವ್ಯವಸ್ಥೆ ಹೊಸ ಹೊಸ ಸವಾಲುಗಳಿಗೆ ಮುಖಾಮುಖಿ ಆಗುತ್ತದೆ. ಸೈಬರ್ ತಂತ್ರಜ್ಞಾನದ ಜತೆಗೇ ಸೈಬರ್ ಅಪರಾಧಗಳೂ ಹೆಚ್ಚಾಗುತ್ತಿವೆ. ಇದನ್ನು ಪರಿಣಾಮಕಾರಿಯಾಗಿ ತಡೆ ಹಿಡಿಯಬೇಕು ಎನ್ನುವ ಸೂಚನೆ ನೀಡಿದರು.
|
7 |
+
ಸುಳ್ಳು ಸುದ್ದಿಗಳು, ಅಶಾಂತಿ ಸೃಷ್ಟಿಸುವ ಸುಳ್ಳುಗಳನ್ನು, ದ್ವೇಷ ಹರಡುವ ಸುಳ್ಳುಗಳನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಮತ್ತು ಸಮಾನವಾಗಿ ನಡೆಸಿಕೊಳ್ಳುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆ ಮೇಲಿದೆ ಎಂದರು.
|
8 |
+
ಆದ್ದರಿಂದ ಸುಳ್ಳು ಸುದ್ದಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಸುಳ್ಳು ಮತ್ತು ದ್ವೇಷದ ಸುದ್ದಿಗಳು ನಾಡಿನ ಜಿಡಿಪಿಗೆ ಮಾರಕ. ಅಶಾಂತಿಯ ಪರಿಣಾಮವಾಗಿ ಜನರ ತಲಾ ಆದಾಯಕ್ಕೂ ಧಕ್ಕೆಯಾಗುತ್ತದೆ. ಆದ್ದರಿಂದ ಸುಳ್ಳು ಸುದ್ದಿ ಹರಡುವ ಜಾಲ ತಾಣಗಳು ಮತ್ತು ಅವನ್ನು ನಿರ್ವಹಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.
|
9 |
+
ಮಹಿಳೆ, ಮಕ್ಕಳು ಮತ್ತು ಹಿರಿಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ರಕ್ಷಣೆ ಕೊಡುವ ಅಗತ್ಯವಿದೆ. ಸುಗಮ ಸಂಚಾರ ವ್ಯವಸ್ಥೆ ಇನ್ನಷ್ಟು ಪರಿಣಾಮಕಾರಿಯಾಗಬೇಕು. ಹೀಗಾಗಿ ಹೆಚ್ಚುವರಿ ಪೊಲೀಸ್ ಹುದ್ದೆ ಸೃಷ್ಟಿಸಿದ್ದೇವೆ. ಹೆಚ್ಚುವರಿ ಮಹಿಳಾ ಮತ್ತು ಸಂಚಾರ ಠಾಣೆಗಳನ್ನು ಆರಂಭಿಸಿದ್ದೇವೆ. ಹೊಸ ವಾಹನ ಖರೀದಿಗೆ 100 ಕೋಟಿ ರೂಪಾಯಿಗಳನ್ನು ನೀಡಲಾಗುವುದು ಎಂದರು.
|
10 |
+
2125 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು 450 ಕೋಟಿ ನೀಡಲಾಗುವುದು. ಪೊಲೀಸ್ ಸಿಬ್ಬಂ���ಿ ಮತ್ತು ಅಧಿಕಾರಿಗಳ ಆರೋಗ್ಯ ಭಾಗ್ಯಕ್ಕಾಗಿ 100 ಕೋಟಿ ರೂ ಒದಗಿಸಲಾಗಿದೆ. ನಿವೃತ್ತ ಸಿಬ್ಬಂದಿಯ ಆರೋಗ್ಯ, ಚಿಕಿತ್ಸೆಗಾಗಿ ನಿಶ್ಚಿತ ಠೇವಣಿ ಇಡಲಾಗಿದೆ. ಪೊಲೀಸ್ ಸಿಬ್ಬಂದಿಯ ಮಕ್ಕಳ ಶಿಕ್ಷಣಕ್ಕಾಗಿ 7 ಜಿಲ್ಲೆಗಳಲ್ಲಿ 7 ಪೊಲೀಸ್ ಪಬ್ಲಿಕ್ ಶಾಲೆ ಆರಂಭಿಸಲಾಗುತ್ತಿದೆ. ಇವುಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರ ಬದ್ದವಾಗಿದೆ. ಪೊಲೀಸ್ ಕ್ಯಾಂಟೀನ್ ಗಳನ್ನು ಆರಂಭಿಸಲಾಗುತ್ತಿದೆ ಎಂದರು.
|
11 |
+
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಅನೇಕ ಬಾರಿ ಅಪಾಯ ಎದುರಿಸುತ್ತಾರೆ ಮತ್ತು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಅವರಿಗೆ ಸಹಾಯ ಮತ್ತು ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯ ಎಂದರು.
|
12 |
+
ಕರ್ನಾಟಕದಲ್ಲಿ ಕಳೆದ ವರ್ಷದ ಸೆಪ್ಟೆಂಬರ್ ನಿಂದ ಈ ವರ್ಷದ ಆಗಸ್ಟ್ ವರೆಗೆ 16 ಜನ ಹಾಗೂ ದೇಶದಲ್ಲಿ 180 ಜನ ರಕ್ಷಣಾ ಸಿಬ್ಬಂದಿ ಹುತ್ಮಾತರಾಗಿದ್ದು, ಅವರೆಲ್ಲರನ್ನು ಸ್ಮರಿಸಿ ನಮನ ಸಲ್ಲಿಸಲಾಗಿದೆ. ಹುತಾತ್ಮರಾದ ಪೊಲೀಸ್ ಸಿಬ್ಬಂದಿಗಳ ಕುಟುಂಬದವರಿಗೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡುತ್ತದೆ ಎಂದು ತಿಳಿಸಿದರು.
|
13 |
+
ಇಸ್ರೇಲ್ ಪೊಲೀಸರಿಗೆ ಸಮವಸ್ತ್ರ ಸರಬರಾಜು ಸ್ಥಗಿತಗೊಳಿಸಿದ ಕೇರಳ
|
14 |
+
ಗೃಹ ಮಂತ್ರಿ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ಮತ್ತು ಪೊಲೀಸ್ ಇಲಾಖೆಯ ನಾನಾ ವಿಭಾಗಗಳ ಮುಖ್ಯಸ್ಥರು ಪುಷ್ಪ ನಮನ ಸಲ್ಲಿಸಿದರು. ಕಳೆದ ಒಂದು ವರ್ಷದಲ್ಲಿ ದೇಶದಾದ್ಯಂತ ಹುತಾತ್ಮರಾದ ಎಲ್ಲಾ ರಕ್ಷಣಾ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಸ್ಮರಿಸಿ ನಮನ ಸಲ್ಲಿಸಲಾಯಿತು.
|
eesanje/url_46_327_7.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
“ಶಿವಕುಮಾರ್ ಪೂಜಾರಿ ಆತ್ಮಹತ್ಯೆಗೂ ನನಗೂ ಸಂಬಂಧ ಇಲ್ಲ”
|
2 |
+
ಕಲಬುರಗಿ, ಅ.20- ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆಗೂ ನನಗೂ ಯಾವುದೇ ಸಂಬಂಧ ಇಲ್ಲ. ಬಿಜೆಪಿಯವರು ಅನಗತ್ಯವಾಗಿ ರಾಜಕೀಯ ಮಾಡುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷ ಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿರುಗೇಟು ನೀಡಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಸೋಲಿನಿಂದ ಹತಾಶರಾಗಿರುವ ಬಿಜೆಪಿಯವರು ನನ್ನ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಜೊತೆ ನಾನು ಯಾವತ್ತು ಮಾತನಾಡಿಲ್ಲ. ಆ ವ್ಯಕ್ತಿಯನ್ನು ನೋಡೆ ಇಲ್ಲ. ಆತ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ ಎಂದು ಕುಟುಂಬದ ಸದಸ್ಯರೇ ಪೊಲೀಸರಿಗೆ ದೂರು ಕೊಟ್ಟು, ಹೇಳಿಕೆ ನೀಡಿದ್ದಾರೆ. ಘಟನೆಯ ಬಳಿಕ ಮಾಧ್ಯಮದವರು ಶಿವಕುಮಾರ್ ಅವರ ಊರಿಗೆ ಹೋಗಿ ಹೇಳಿಕೆ ಪಡೆದಿದ್ದಾರೆ. ಅಲ್ಲಿಯೂ ಕುಟುಂಬದ ಸದಸ್ಯರು ಸತ್ಯ ಹೇಳಿದ್ದಾರೆ. ವಾಸ್ತವ ಏನು ಎಂದು ಎಲ್ಲರಿಗೂ ಗೋತ್ತಿದೆ ಎಂದರು.
|
4 |
+
ಆತ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನಾ ಮಾತನಾಡಿರುವ ಆಡಿಯೋವನ್ನು ನಾನು ಕೇಳಿದ್ದೇನೆ. ಆದರಲ್ಲಿ ಜನರಲ್ ಆಗಿ ಮಾತನಾಡಿ ದ್ದಾರೆ. ಆಡಿಯೋ ಯಾರು ಕಳುಹಿಸಿದ್ದಾರೆ, ಹೇಗೆ ಬಂದಿದೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಾನೂನು ತನ್ನದೆ ಆದ ಕ್ರಮ ಕೈಗೊಳ್ಳುತ್ತದೆ. ಈ ಹಿಂದೆ ಬಿಜೆಪಿ ಈಶ್ವರಪ್ಪ ಸೇರಿದಂತೆ ಹಲವರ ಮೇಲೆ ನಿರ್ದಿಷ್ಟ ಆರೋಪಗಳಿದ್ದವು, ಈಗ ನನ್ನ ಮೇಲೆ ಇರುವ ಆರೋಪಗಳೇನು? ಯಾವ ಕಾರಣಕ್ಕೆ ನಾನು ರಾಜಿನಾಮೆ ನೀಡಬೇಕು ಎಂದು ಪ್ರಶ್ನಿಸಿದರು.
|
5 |
+
ಸತೀಶ್ ಜಾರಕಿಹೊಳಿ ಅಸಮಾಧಾನದಿಂದ ಪಕ್ಷಕ್ಕೆ ನಷ್ಟವಿಲ್ಲ : ಸಚಿವ ರಾಜಣ್ಣ
|
6 |
+
ಸೇಡಂ ವಿಧಾನಸಭಾ ಕ್ಷೇತ್ರದಲ್ಲಿ ಈ ಮೊದಲು ಭಯದ ವಾತಾವರಣ ಇತ್ತು. ಬಿಜೆಪಿ ಕಾರ್ಯಕರ್ತರು ತಮ್ಮಲ್ಲೆ ಹಲ್ಲೆ ಮಾಡಿಕೊಂಡು ಜನರಲ್ಲಿ ಆತಂಕ ಮೂಡಿಸಿದ್ದರು. ಈಗ ಅಂತಹ ವಾತಾವರಣ ಇಲ್ಲವಾಗಿದೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಪಾಲನೆ ಮಾಡಲಾಗಿದೆ ಎಂದರು.
|
7 |
+
ಶಿವಕುಮಾರ್ನ ಆತ್ಮಹತ್ಯೆ ಬಗ್ಗೆ ಸ್ಥಳೀಯರು ನನಗೆ ಮಾಹಿತಿ ನೀಡಿದ್ದರು. ಆರೋಪ ಮಾಡಿರು ವುದೇಕೆ ಎಂದು ಗೋತ್ತಿಲ್ಲ. ಕಾಂಗ್ರೆಸ್ ನವರು ಮನೆ ಮನೆ ಗಳಲ್ಲಿ ಜಗಳ ತಂದಿಡುತ್ತಾರೆ ಎಂದು ಸಾರ್ವತ್ರಿಕವಾಗಿ ಆರೋಪ ಮಾಡಿರುವುದು ಕಂಡು ಬಂದಿದೆ. ನನ್ನ ಮೇಲೆ ನಿರ್ದಿಷ್ಟ ಆರೋಪಗಳಿಲ್ಲ. ಬಿಜೆಪಿಯವರು ದೊಡ್ಡ ಪ್ರಮಾಣದಲ್ಲಿ ಸೋಲು ಕಂಡ ಬಳಿಕ ಹತಾಶರಾಗಿದ್ದು, ಆರೋಪ ಮಾಡುತ್ತಿದ್ದಾರೆ. ಸಂತೋಷ ಪೂಜಾರಿ ಆರೋಪದ ಬಗ್ಗೆ ಊರಿನವರಿಗೆ ಮಾಹಿತಿ ಇಲ್ಲ. ಆತ್ಮಹತ್ಯೆ ಮಾಡಿಕೊಂಡಿ ರುವುದಂತೂ ನಿಜ, ಅದಕ್ಕೆ ಕಾರಣಗಳೇನು ಎಂದು ಪೊಲೀಸರು ತನಿಖೆ ನಡೆಸುತ್ತಾರೆ ಎಂದರು.
|
8 |
+
ಗ್ಯಾರಂಟಿ ಸರ್ಕಾರದ ಕಲೆಕ್ಷನ್ ವಂಶಾವಳಿ ಪೋಸ್ಟರ್ ಬಿಡುಗಡೆ ಮಾಡಿದ ಬಿಜೆಪಿ
|
9 |
+
ಆತನನ್ನು ನಾನು ನೋಡಿಲ್ಲ, ಮಾತನಾಡಿಸಿಲ್ಲ. ಕರೆ ಮಾ���ಿಲ್ಲ, ಭೇಟಿಯಾಗಿಲ್ಲ, ಅವರ ಕುಟುಂಬದ ಸದಸ್ಯರೊಂದಿಗೂ ಮಾತನಾಡಿಲ್ಲ. ಆದರೂ ನನ್ನ ಹೆಸರು ಏಕೆ ಪ್ರಸ್ತಾಪ ಮಾಡಲಾಗಿದೆ ಎಂದು ಗೋತ್ತಿಲ್ಲ. ಪ್ರಕರಣದಲ್ಲಿ ನಾನು ಯಾರ ಮೇಲೂ ಒತ್ತಡ ಹೇರಿಲ್ಲ, ಅದರ ಅಗತ್ಯವೂ ನನಗೆ ಇಲ್ಲ. ನಾನು ಏನು ಎಂದು ಜಿಲ್ಲೆಯ ಜನರಿಗೆ ಗೊತ್ತಿದೆ. 2004ರಿಂದಲೂ ಶಾಸಕನಾಗಿ ಕೆಲಸ ಮಾಡಿದ್ದೇನೆ. ಅಭಿವೃದ್ಧಿ ಹೊರತು ಪಡಿಸಿ ದೌರ್ಜನ್ಯದ ರಾಜಕಾರಣವನ್ನು ನಾನು ಮಾಡಿಲ್ಲ ಎಂದು ಸ್ಪಷ್ಟ ಪಡಿಸಿದರು.
|
eesanje/url_46_327_8.txt
ADDED
@@ -0,0 +1,14 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
317 ಕಿ.ಮೀ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ಕ್ರಮ : ಸಿಎಂ
|
2 |
+
ಬೆಂಗಳೂರು,ಅ.20- ಬೆಂಗಳೂರು ನಗರವು ವೇಗವಾಗಿ ಬೆಳೆಯುತ್ತಿದ್ದು, ಬೆಂಗಳೂರಿನಲ್ಲಿ 2031ರ ವೇಳೆಗೆ 317 ಕಿ.ಮೀ.ಗಳ ಮೆಟ್ರೋ ಮಾರ್ಗಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಬೆಂಗಳೂರಿನ ಎರಡು ರೈಲು ಮಾರ್ಗಗಳನ್ನು ಪ್ರಧಾನಿಯವರು ವಿಡಿಯೋ ಕಾನರೆನ್ಸ್ ಮೂಲಕ ಉದ್ಘಾಟಿಸಿ ಕಾರ್ಯಕ್ರಮದಲ್ಲಿ ವರ್ಚುವಲ್ ಮಾದರಿಯಲ್ಲಿ ಹಾಜರಿದ್ದು ಮುಖ್ಯಮಂತ್ರಿಯವರು ಮಾತನಾಡಿದರು.
|
3 |
+
ಸಿಎಂಪಿ ಪ್ಲಾನ್ನಲ್ಲಿ ಅನುಮೋದಿಸಿದೆ. ಈಗಾಗಲೇ 257 ಕಿ.ಮೀ.ಗಳ ಮಾರ್ಗವು ಕಾರ್ಯಾಚರಣೆ, ನಿರ್ಮಾಣ ಮತ್ತು ಯೋಜನೆ ಹಂತದಲ್ಲಿದೆ. ಇನ್ನುಳಿದ 60 ಕಿ.ಮೀ.ಗಳ ಮೆಟ್ರೊ ಮಾರ್ಗಗಳ ಕಾರ್ಯಸಾಧ್ಯತೆಯ ಸಮೀಕ್ಷೆಯನ್ನು ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದರು.
|
4 |
+
ಪ್ರಧಾನಮಂತ್ರಿಯವರು ವಿಡಿಯೋ ಕಾನರೆನ್ಸ್ ಮೂಲಕ ಎರಡು ಮೆಟ್ರೋ ಮಾರ್ಗಗಳನ್ನು ಉದ್ಘಾಟಿಸಿದ್ದಾರೆ. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಅತ್ಯಕವಾಗಿದೆ. ಅದನ್ನು ನಿವಾರಣೆ ಮಾಡಲು ಮೆಟ್ರೋ ಯೋಜನೆ ಸಹಕಾರಿಯಾಗಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಪ್ರಯತ್ನದಿಂದ ಪ್ರಮುಖ ಎರಡು ಮಾರ್ಗಗಳಾದ ಕೃಷ್ಣರಾಜಪುರದಿಂದ ಬೈಯಪ್ಪನಹಳ್ಳಿ ನಡುವಿನ 2.10 ಕಿ.ಮೀ.ಗಳ ಉದ್ದ ಮತ್ತು ಕೆಂಗೇರಿಯಿಂದ ಚಲ್ಲಘಟ್ಟವರೆಗಿನ 2.05 ಕಿ.ಮೀ.ಗಳ ಉದ್ದದ ಮಾರ್ಗವನ್ನು ಇದೇ ತಿಂಗಳ 9ರಂದು ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗಿದೆ.
|
5 |
+
ಈ ಎರಡು ಪ್ರಮುಖ ಮಾರ್ಗಗಳನ್ನು ತೆರೆಯುವುದರೊಂದಿಗೆ, ನಗರವು ಪೂರ್ವದಿಂದ ಪಶ್ಚಿಮಕ್ಕೆ ತಡೆರಹಿತ ಸಂಪರ್ಕ ಹೊಂದಿದೆ ಮತ್ತು ಮೆಟ್ರೋ ಜಾಲ 74 ಕಿ.ಮೀ.ಗಳಿಗೆ ವಿಸ್ತರಿಸಿದೆ ಎಂದರು.ಬೆಂಗಳೂರು ಮೆಟ್ರೋ ರೈಲು ಯೋಜನೆ ಹಂತ-1ರ 42.3 ಕಿ.ಮೀ.ಗಳ ಉದ್ದದ ಮಾರ್ಗವನ್ನು ರೂ. 14,133 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ನಮ್ಮ ಸರ್ಕಾರದ ಹಿಂದಿನ ಅವಯಲ್ಲಿ ರಾಷ್ಟ್ರಪತಿಗಳಾಗಿದ್ದ ಪ್ರಣಬ್ ಮುಖರ್ಜಿ ಉದ್ಘಾಟಿಸಿದರು. ಈ ಯೋಜನೆಗಾಗಿ ರಾಜ್ಯ ಸರ್ಕಾರವು ರೂ. 5630 ಕೋಟಿಗಳಷ್ಟು ವೆಚ್ಚ ಮಾಡಿದೆ.
|
6 |
+
ಬೆಂಗಳೂರು ಮೆಟ್ರೋ ರೈಲು ಯೋಜನೆ ಹಂತ-2ರಲ್ಲಿ 75.06 ಕಿ.ಮೀ.ಗಳ ಉದ್ದದ ಮಾರ್ಗ ಹೊಂದಿದ್ದು, ಸದರಿ ಯೋಜನೆಗೆ ರೂ. 30,695 ಕೋಟಿಗಳ ವೆಚ್ಚವಾಗಲಿದೆ. ಈಗಾಗಲೇ ಕಾಮಗಾರಿಗಳು ಭರದಿಂದ ನಿರ್ಮಾಣವಾಗುತ್ತಿದ್ದು, 32 ಕಿ.ಮೀ.ಗಳ ಉದ್ದದ ಮಾರ್ಗವನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗಿದೆ. ಪ್ರಸ್ತುತ ಬೆಂಗಳೂರು ಮೆಟ್ರೋ ಜಾಲದ ಕಾರ್ಯಾಚರಣೆಯು 74 ಕಿ.ಮೀ.ಗಳಿಗೆ ಏರಿಕೆಯಾಗಿದೆ ಎಂದರು.
|
7 |
+
ಇಂಡಿಯಾ ಮೈತ್ರಿಕೂಟಕ್ಕೆ ಮರ್ಮಾಘಾತ ಕೊಟ್ಟ ಜೆಡಿಯು-ಎಸ್ಪಿ
|
8 |
+
ನಾಗಸಂದ್ರದಿಂದ ಮಾದವಾರದವರೆಗಿನ ಉತ್ತರ ವಿಸ್ತರಣೆ 3.14 ಕಿ.ಮೀ.ಗಳ ಉದ್ದದ ಮಾರ್ಗವು ಮತ್ತು ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ 19.15 ಕಿ.ಮೀ.ಗಳ ಉದ್ದದ ಹೊಸ ಮಾರ್ಗಗಳು ಮುಕ್ತಾಯದ ಹಂತದಲ್ಲಿದ್ದು, 2024ರ ಏಪ್���ಿಲ್ ವೇಳೆಗೆ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲು ಯೋಜಿಸಲಾಗಿದೆ. ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ 21.26 ಕಿ.ಮೀ.ಗಳ ಉದ್ದದ ಹೊಸ ಮಾರ್ಗವನ್ನು 2025ರ ಮಾರ್ಚ್ ವೇಳೆಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ.
|
9 |
+
ಈ ಮಾರ್ಗಗಳನ್ನು ಪೂರ್ಣಗೊಳಿಸುವು ದರೊಂದಿಗೆ, ಕಾರ್ಯಾಚರಣೆಯ ಜಾಲವು 117 ಕಿ.ಮೀ.ಗಳಿಗೆ ವಿಸ್ತಾರಗೊಳ್ಳುತ್ತದೆ ಮತ್ತು 12 ಲಕ್ಷ ಪ್ರಯಾಣಿಕರು ಸಂಚರಿಸುವ ನಿರೀಕ್ಷೆಯಿದೆ. ಹಂತ-2 ಯೋಜನೆಗಾಗಿ, ಕರ್ನಾಟಕ ಸರ್ಕಾರವು ರೂ. 11583.08 ಕೋಟಿಗಳನ್ನು ಬಿಡುಗಡೆ ಮಾಡಿದೆ.
|
10 |
+
ಓಆರ್ಆರ್-ಏರ್ಪೊರ್ಟ್ ಮೆಟ್ರೋ ಎಂದು ಕರೆಯಲ್ಪಡುವ 58 ಕಿ.ಮೀ.ಗಳ ಉದ್ದದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ನಿಂದ ಹೆಬ್ಬಾಳ ಜಂಕ್ಷನ್ ಮೂಲಕ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಂತ 2ಎ ಮತ್ತು 2ಬಿ ಯೋಜನೆಯನ್ನು ಅಂದಾಜು ರೂ. 14788.1 ಕೋಟಿಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, 2026ರ ವೇಳೆಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ. ಕರ್ನಾಟಕ ಸರ್ಕಾರವು ಇದುವರೆಗೆ ರೂ. 4775.36 ಕೋಟಿ ಬಿಡುಗಡೆ ಮಾಡಲಾಗಿದೆ. ಈ ಯೋಜನೆಯು ಪೂರ್ಣಗೊಂಡ ನಂತರ, ಮೆಟ್ರೋ ಜಾಲವು 176 ಕಿ.ಮೀ.ಗಳು ಆಗಲಿದೆ ಮತ್ತು ಪ್ರತಿದಿನ ಸುಮಾರು 20 ಲಕ್ಷ ಪ್ರಯಾಣಿಕರು ಸಂಚರಿಸಲಿದ್ದಾರೆ.
|
11 |
+
ದೇಶದ ಮೊದಲ ರ್ಯಾಪಿಡ್-ಎಕ್ಸ್ ಪ್ರೆಸ್ ರೈಲಿಗೆ ಮೋದಿ ಚಾಲನೆ
|
12 |
+
ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು, ಬೆಂಗಳೂರು ಮೆಟ್ರೊ ರೈಲು ಯೋಜನೆಯ 3ನೇ ಹಂತದಲ್ಲಿ 45 ಕಿ.ಮೀ.ಗಳ ಉದ್ದದ ಮಾರ್ಗವನ್ನು ಅಂದಾಜು ರೂ. 15,611 ಕೋಟಿಗಳ ವೆಚ್ಚದಲ್ಲಿ ನಿರ್ಮಿಸಲು ವಿಸ್ತೃತ ಯೋಜನಾ ವರದಿ (ಡಿಪಿಆರ್)ನ್ನು ಕೇಂದ್ರ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಈ ಯೋಜನೆಗೆ ಶೀಘ್ರವಾಗಿ ಅನುಮೋದನೆ ನೀಡುವಂತೆ ಪ್ರಧಾನಮಂತ್ರಿಯವರಲ್ಲಿ ಒತ್ತಾಯಿಸಿದರು.
|
13 |
+
ಸರ್ಜಾಪುರದಿಂದ ಹೆಬ್ಬಾಳದವರೆಗಿನ 37 ಕಿ.ಮೀ.ಗಳ ಉದ್ದದ ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-3ಎಗೆ ಡಿಪಿಆರ್ ತಯಾರಿಸಲಾಗುತ್ತಿದೆ. ಮೆಟ್ರೋ ಯೋಜನೆಯನ್ನು ಸಾಕಾರಗೊಳಿಸಿದ ಪ್ರಧಾನಿಯವರಿಗೆ, ಕೇಂದ್ರ ಸಚಿವರಿಗೆ, ಸಾಧಾರಣ ಬಡ್ಡಿದರಗಳೊಂದಿಗೆ ದೀರ್ಘಾವ ಸಾಲವನ್ನು ಒದಗಿಸುವ ಮೂಲಕ ಮೆಟ್ರೋ ರೈಲು ಯೋಜನೆಗೆ ಬೆಂಬಲ ನೀಡಿದ ಎಲ್ಲಾ ವಿದೇಶೀ ಹಣಕಾಸು ಸಂಸ್ಥೆಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಹೇಳಿದರು.
|
14 |
+
ಈ ಯೋಜನೆಯಲ್ಲಿ ಕೆಲಸ ಮಾಡಿದ ಎಲ್ಲಾ ಗುತ್ತಿಗೆದಾರರಿಗೆ ಹಾಗೂ ಈ ಯೋಜನೆಗಳಲ್ಲಿ ತೊಡಗಿರುವ 14 ಸಾವಿರಕ್ಕೂ ಹೆಚ್ಚು ಕಾರ್ಮಿಕರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದರು.
|
eesanje/url_46_327_9.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಕರಾವಳಿ-ಮಲೆನಾಡಿಗರ ಬವಣೆ ನಿವಾರಣೆಗೆ ಸಮಾಲೋಚನೆ
|
2 |
+
ಬೆಂಗಳೂರು,ಅ.20- ಮಲೆನಾಡು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಸೇರಿದಂತೆ ಏಳು ಜಿಲ್ಲಾಗಳ ಸಮಸ್ಯೆಗಳನ್ನು ಸಮಾಲೋಚಿಸಿ ಪರಿಹಾರ ಹುಡುಕಲು ಮತ್ತು ನಮ್ಮ ವಿವಿಧ ಹಕ್ಕುಗಳ ಹಕ್ಕೊತ್ತಾಯವನ್ನು ಮಾಡಲು ಅ.31ರಂದು ಬೆಳಗ್ಗೆ 10 ಗಂಟೆಗೆ ನಗರದ ವಿಜಯನಗರ ಆದಿಚುಂಚನಗಿರಿ ಮಠದ ಸಭಾಂಗಣದಲ್ಲಿ ಸಮಾಲೋಚನಾ ಸಭೆ ನಡೆಸಲು ಮಲೆನಾಡು ಕರಾವಳಿ ಜನಪರ ಒಕ್ಕೂಟ ತೀರ್ಮಾನಿಸಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಮುರೋಳಿ ತಿಳಿಸಿದರು.
|
3 |
+
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಲೆನಾಡು ಕರಾವಳಿ ಜನಪರ ಒಕ್ಕೂಟ ಅನೇಕ ವರ್ಷಗಳಿಂದ ಮಲೆನಾಡು ಕರಾವಳಿ ಭಾಗದ ಜಿಲ್ಲೆಗಳ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚು ಒತ್ತುಕೊಟ್ಟು ಹೋರಾಟ ಮಾಡುತ್ತಾ ಬಂದಿದೆ. ಸ್ಥಳೀಯ ಸಮಸ್ಯೆಗಳ ವಿರುದ್ಧ ಧ್ವನಿಯೆತ್ತಿ ಪರಿಹಾರಗಳನ್ನು ಹುಡುಕಿಕೊಳ್ಳುವಲ್ಲಿ ಶ್ರಮಿಸುತ್ತಿದೆ.
|
4 |
+
ಇಲ್ಲಿನ ಭಾಗದಲ್ಲಿ ರೈತಾಪಿ ವರ್ಗ, ಮೀನುಗಾರರು ಸೇರಿದಂತೆ ಅನೇಕರು ಬದುಕು ಕಟ್ಟಿಕೊಂಡಿದ್ದಾರೆ. ಈ ಭಾಗದಿಂದ ಸಂಸ್ಕøತಿ, ಭಾಷೆ, ರಾಜಕೀಯ, ಸಾಹಿತ್ಯ, ಕಲೆಗೆ ಸಂಬಂಧಿಸಿದಂತೆ ರಾಜ್ಯಕ್ಕೆ ಅಪಾರವಾದ ಕೊಡುಗೆ ಇದೆ. ಆದರೆ, ಈ ಭಾಗದ ಜನ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದರು.
|
5 |
+
ಇಂಡಿಯಾ ಮೈತ್ರಿಕೂಟಕ್ಕೆ ಮರ್ಮಾಘಾತ ಕೊಟ್ಟ ಜೆಡಿಯು-ಎಸ್ಪಿ
|
6 |
+
ಕರಾವಳಿ ಮತ್ತು ಕಾಡು ಇಲ್ಲಿನ ಜನರಿಗೆ ಹೆಚ್ಚು ಉದ್ಯೋಗವನ್ನು ಒದಗಿಸಿ ಕೊಟ್ಟಿದ್ದು, ಸರ್ಕಾರಗಳಿಂದ ಸೂಕ್ತ ಮಾನ್ಯತೆ ಸಿಕ್ಕಿಲ್ಲ. ಅರಣ್ಯ ಹಕ್ಕು ಕಾಯ್ದೆ ಸೇರಿದಂತೆ ಜನಪರ ಕಾಯ್ದೆಗಳು ಇಲ್ಲದಿರುವುದು ಇಲ್ಲಿನ ಸಾಮಾನ್ಯ ಜನರಿಗೆ ಅನಾನುಕೂಲವಾಗಿದೆ. ಮಲೆನಾಡು ಕರಾವಳಿ ಭಾಗಕ್ಕೆ ಮೆಡಿಕಲ್ ಕಾಲೇಜು, ಐಐಟಿ ಸೇರಿದಂತೆ ಉನ್ನತ ಶಿಕ್ಷಣಕ್ಕೆ ನೆರವಾಗುವ ಯೋಜನೆಗಳನ್ನು ರೂಪಿಸಬೇಕು ಎಂದು ಹೇಳಿದರು.
|
7 |
+
ಚಿಕ್ಕಮಗಳೂರಿನ ಕಾಫಿ ಬೆಳೆಗಾರರು, ಮೀನುಗಾರರ ಸಮಸ್ಯೆ, ಅರಣ್ಯ ಹೊತ್ತುವರಿ ಪರಿಹಾರ, ಕಸ್ತೂರಿ ರಂಗನ್ ವರದಿಗಾಗಿ ಹೊಸ ಸೂತ್ರ ರಚನೆ, ಹೊಸ ತಾಲೂಕುಗಳ ಅಭಿವೃದ್ಧಿ, ಉಡುಪಿ ಆಗುಂಬೆ ಹೆದ್ದಾರಿ ನವೀಕರಣ, ನದಿ ಮೂಲಗಳ ರಕ್ಷಣೆ, ಪ್ರಕೃತಿ ಸಹಜ ನದಿ ಜೋಡಣೆಗೆ ಮಹತ್ವ, ಚಿಕ್ಕಮಗಳೂರು-ಮಡಿಕೇರಿ ಹಾಗೂ ಸೂಕ್ತ ಪ್ರದೇಶಕ್ಕೆ ರೈಲ್ವೆ ಪಥ ವಿಸ್ತರಣೆ, ಜಾತಿ ಮತ ಭೇದ ಇಲ್ಲದೆ ಅಸ್ಪೃಶ್ಯತೆ ವಿರುದ್ಧ ಸಂಘಟನೆ ಮಾಡುತ್ತಾ ಶೋಷಿತರ ಕೂಗಾಗಿದ್ದ ಕ್ರಾಂತಿಕಾರಿ ಸಾಮಾಜಿಕ ಸಮಾನತೆಯ ಹರಿಕಾರ ನಾರಾಯಣ ಗುರುಗಳ ಹೆಸರಲ್ಲಿ ವಿಶ್ವವಿದ್ಯಾನಿಲಯ ನಿರ್ಮಾಣ ಆಗಬೇಕು ಎಂಬ ಇನ್ನಿತರ ಅನೇಕ ವಿಷಯಗಳನ್ನು ಇದೇ ವೇಳೆ ಸರ್ಕಾರದ ಮುಂದಿಟ್ಟರು.
|
8 |
+
ಒಕ್ಕೂಟದ ಸಂಚಾಲಕರಾದ ಅನಿಲ್ ಹೊಸಕೊಪ್ಪ ಮಾತನಾಡಿ, ಜನಪರ ಒಕ್ಕೂಟದ ಮೂಲಕ ಏಳು ಜಿಲ್ಲೆಗಳನ್ನು ಒಳಗೊಂಡ ಮಲೆನಾಡು ಕರಾವಳಿ ಪ್ರದೇಶದ ಸಮಸ್ಯೆಗಳನ್ನು ಹೋರಾಟಗಳ ಮೂಲಕ ಸರ್ಕಾರದ ಮುಂದಿಡುವುದು ನಮ್ಮ ಮುಖ್ಯ ಉದ್ದೇಶ ವಾಗಿದೆ. ಕರಾವಳಿ ಮಲೆನಾಡು ಪಶ್ಚಿಮ ಘಟ್ಟದಲ್ಲಿ ರೈತರು, ಸಾರ್ವಜನಿಕರು ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಮತ್ತಷ್ಟು ಸದೃಢರಾಗಬೇಕಿದೆ. ಈ ನಿಟ್ಟಿನಲ್ಲಿ ಜನಪ್ರತಿನಿಗಳ ಕಣ್ಣು ತೆರೆಸುಲು ನಾವು ಶ್ರಮಿಸುತ್ತಿದ್ದೇವೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ತೇಜ್ ಶೆಟ್ಟಿ, ಮಹೇಶ್ ಶಿರಸಿ, ಸಂತೋಷ್ ಶೆಟ್ಟಿ, ಅಬ್ಬಾಸ್ ಕೆಗ್ಗ, ಅಬ್ಬಾಸ್ ಧರ್ಮಸ್ಥಳ, ನವೀನ್ ಮಾವಿನಕಟ್ಟೆ, ಕಿರಣ್ ಮಲ್ನಾಡ್ ಉಪಸ್ಥಿತರಿದ್ದರು.
|
eesanje/url_46_328_1.txt
ADDED
@@ -0,0 +1,14 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಶೋಭಾಗೆ ಬಿಜೆಪಿ ಅಧ್ಯಕ್ಷ ಪಟ್ಟ, ಕಮಲಪಾಳಯದಲ್ಲಿ ಗರಿಗೆದರಿದ ಚಟುವಟಿಕೆ
|
2 |
+
ಬೆಂಗಳೂರು,ಅ.19- ಮುಂಬರುವ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ನೂತನ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ರಾಜ್ಯದ ಎರಡು ಪ್ರಬಲ ಸಮುದಾಯಗಳಾದ ಲಿಂಗಾಯತ ಮತ್ತು ಒಕ್ಕಲಿಗ ಜೊತೆ ಹಿಂದುಳಿದ ವರ್ಗಗಳ ಸಮೀಕರಣದೊಂದಿಗೆ ಆಯಕಟ್ಟಿನ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಎಂಬ ಮಾತುಗಳು ಬಿಜೆಪಿ ಪಡಸಾಲೆಯಲ್ಲಿ ಕೇಳಿಬರುತ್ತಿದೆ.
|
3 |
+
ಇದರ ಮೊದಲ ಭಾಗವಾಗಿ ಲೋಕಸಭಾ ಚುನಾವಣೆ ಸೇರಿದಂತೆ ಸಾಲು ಸಾಲು ಚುನಾವಣೆ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಎದುರಿಸುವ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್ ಅಳೆದು ತೂಗಿ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆಗೆ ಮುಂದಾಗಿದ್ದು, ಜಾತಿ ಲೆಕ್ಕಾಚಾರವನ್ನು ಹಾಕಿಕೊಂಡಿದೆ.
|
4 |
+
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ರಾಜ್ಯ ಕರಂದ್ಲಾಜೆ ಅವರನ್ನು ನೇಮಿಸಲು ಪಕ್ಷದ ಹೈಕಮಾಂಡ್ ಆಸಕ್ತಿ ತೋರಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಪ್ರಮುಖರ ಅಭಿಪ್ರಾಯ ಕೇಳಲಾಗಿದ್ದು, ಶೀಘ್ರದಲ್ಲೆ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಸದ್ಯಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿರುವ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ತರುವುದು ಬಿಎಸ್ವೈ ಆಸೆಯಾಗಿತ್ತು.
|
5 |
+
ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಯಡಿಯೂರಪ್ಪ ಸಹಕಾರ ಅವಶ್ಯಕ. ಹಾಗಾಗಿ ವಿಜಯೇಂದ್ರ ಬದಲಿಗೆ ಹಿರಿಯ ಪುತ್ರ ಬಿ.ವೈ.ರಾಘವೇಂದ್ರ ಅವರಿಗೆ ಪ್ರಮುಖ ಜವಾಬ್ದಾರಿ ನೀಡಲು ಹೈಕಮಾಂಡ್ ಪರಿಶೀಲಿಸಿತ್ತು. ಈ ಪ್ರಸ್ತಾಪವನ್ನು ಬಿಎಸ್ವೈ ಸ್ಪಷ್ಟವಾಗಿ ತಳ್ಳಿ ಹಾಕಿದ್ದರು.
|
6 |
+
ಪಕ್ಷ ಸಂಘಟನೆ ದೃಷ್ಟಿಯಿಂದ ಈ ಹುದ್ದೆಗೆ ವಿಜಯೇಂದ್ರ ಹೆಸರನ್ನೇ ಪರಿಗಣಿಸಿ ಎಂದು ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದ ಬಿಎಸ್ವೈ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ತಮ್ಮ ಅಭಿಪ್ರಾಯ ತಿಳಿಸಿದ್ದರು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ನಾನಾ ಆಯಾಮಗಳಿಂದ ಪರಾಮರ್ಶೆ ನಡೆಸಿದ ಹೈಕಮಾಂಡ್, ಶೋಭಾ ಕರಂದ್ಲಾಜೆ ಈ ಸ್ಥಾನಕ್ಕೆ ಒಮ್ಮತದ ಆಯ್ಕೆಯಾಗಬಹುದು ಎಂಬ ಲೆಕ್ಕಾಚಾರಕ್ಕೆ ಬಂದಿದೆ. ಈ ನೇಮಕಕ್ಕೆ ಬಿಎಸ್ವೈ ಬೆಂಬಲಿಸುತ್ತಾರೆ.
|
7 |
+
ಇತರ ನಾಯಕರೂ ನಿರಾಕರಣೆ ಮಾಡುವುದಿಲ್ಲ ಎಂಬ ಅಂಶವನ್ನು ಹೈಕಮಾಂಡ್ ಕಂಡುಕೊಂಡಿದೆ. ಈ ನಡುವೆ ಶೋಭಾ ಕರಂದ್ಲಾಜೆ ನಿಯೋಜನೆ ಸಂಬಂಧದಲ್ಲಿ ಬಿಎಸ್ವೈ ಅವರನ್ನು ಸಂಪರ್ಕಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿಪ್ರಾಯ ಪಡೆದಿದ್ದಾರೆ ಎಂದು ಉನ್ನತ ಮೂಲಗಳು ಹೇಳುತ್ತಿವೆ.
|
8 |
+
ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಭವಿಷ��ಯತ್ತಿನಲ್ಲಿ ಆದರೂ ಪ್ರತಿಪಕ್ಷದ ನಾಯಕನ ಆಯ್ಕೆಗೆ ವಿಳಂಬವಾಗಲಿದೆ. ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿಯಲ್ಲಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಚೇತರಿಸಿಕೊಂಡ ಬಳಿಕ ಈ ನಿಟ್ಟಿನಲ್ಲಿ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.
|
9 |
+
ಸಾಕಲಾಗದೆ ಕಂದನನ್ನು ಕೆರೆಗೆ ಎಸೆದ ಕರುಣೆಯಿಲ್ಲದ ತಂದೆ
|
10 |
+
ಜಾತಿ ಸಮೀಕರಣ: ಪ್ರತಿ ಬಾರಿಯೂ ಬಿಜೆಪಿಯಲ್ಲಿ ಜಾತಿ ರಾಜಕಾರಣವೂ ಮುಖ್ಯವಾಗುತ್ತದೆ. ಈ ಬಾರಿಯೂ ಸಹ ಪ್ರಬಲ ಸಮುದಾಯ ಲಿಂಗಾಯತರಿಗೆ ಒಂದು ಹುದ್ದೆಯನ್ನು ನೀಡಲೇಬೇಕು. ಇನ್ನೊಂದು ಹುದ್ದೆಯನ್ನುಒಕ್ಕಲಿಗರಿಗೆ ನೀಡುವ ಚಿಂತನೆ ನಡೆದಿದೆ. ರಾಜ್ಯದಲ್ಲಿ ನಾಲ್ಕು ಜನ ಕೇಂದ್ರ ಸಚಿವರಿದ್ದು, ಆ ಪೈಕಿ ಒಕ್ಕಲಿಗ ಸಮುದಾಯದ ಮಹಿಳಾ ನಾಯಕಿ ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ನೀಡುವ ಯೋಜನೆಗೆ ಪಕ್ಷ ಮುಂದಾಗಿದೆ ಎಂದು ಹೇಳಲಾಗಿದೆ.
|
11 |
+
ಇನ್ನೂ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಮತ್ತು ಚಾಮರಾಜನಗರದಲ್ಲಿ ಸ್ಪರ್ಧೆ ಮಾಡುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಸವಾಲಿಗೆ ತೆಗೆದು ಕೊಂಡಿದದ್ದ ವಿ.ಸೋಮಣ್ಣ, ಚುನಾವಣಾ ಸೋಲಿನ ಬಳಿಕ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಹೈಕಮಾಂಡ್ ಮುಂದೆ ತಮ್ಮ ಇಂಗಿತ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಸೋಮಣ್ಣ ಹೆಸರು ಕೂಡ ಪ್ರಬಲವಾಗಿ ಕೇಳಿಬರುತ್ತಿದೆ.
|
12 |
+
ವಿಧಾನಸಭೆ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ್ ಯತ್ನಾಳ್, ಸುನೀಲ್ ಕುಮಾರ್, ಆರ್.ಅಶೋಕ್ ಹೆಸರುಗಳು ಕೇಳಿಬಂದಿವೆ. ಆದರೆ ಲಿಂಗಾಯತ ಸಮುದಾಯಕ್ಕೆ ಅವಕಾಶ ಕೊಡುವ ನಿರ್ಧಾರವಾಗಿರುವ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯಗ್ನಾಳ್ಗೆ ಅವಕಾಶ ಸಿಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
|
13 |
+
ಹಿಂದುತ್ವದ ಫೈರ್ ಬ್ರ್ಯಾಂಡ್ ಆಗಿರುವ ಯತ್ನಾಳ್ ಸದನದಲ್ಲಿ ಗಟ್ಟಿಯಾಗಿ ಸರ್ಕಾರವನ್ನು ಟೀಕಿಸಿ ವಾಗ್ದಾಳಿ ನಡೆಸುವ ಸಾಮಥ್ರ್ಯ ಹೊಂದಿದ್ದಾರೆ ಎಂಬ ಕಾರಣಕ್ಕೆ ಅವರ ಹೆಸರನ್ನು ಪರಿಗಣಿಸಲಾಗಿದೆ. ಆದರೆ ಅದಕ್ಕೆ ಯಡಿಯೂರಪ್ಪ ಒಪ್ಪದೆ ಇದ್ದಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ತಾತ್ಕಾಲಿಕವಾಗಿ ಚುನಾವಣೆ ಮುಗಿಯುವವರೆಗೂ ನೇಮಕ ಮಾಡಲಾಗುತ್ತದೆ ಅಥವಾ ಬೇರೆ ಸಮುದಾಯದ ನಾಯಕರಿಗೂ ಅವಕಾಶ ನೀಡುವ ಸಾಧ್ಯತೆ ಇದೆ.
|
14 |
+
ಲಿಂಗಾಯತ ಸಮುದಾಯಕ್ಕೆ ಕೈತಪ್ಪಿದರೆ ಶಾಸಕ ಸುನೀಲ್ ಕುಮಾರ್ಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಒಕ್ಕಲಿಗರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ ನಂತರ ಪ್ರತಿಪಕ್ಷ ನಾಯಕನ ಸ್ಥಾನವನ್ನೂ ಅದೇ ಸಮುದಾಯಕ್ಕೆ ನೀಡುವ ಸಾಧ್ಯತೆ ಕಡಿಮೆ. ಆದರೆ ದೆಹಲಿಯಲ್ಲಿ ನಡೆಯುವ ವಿದ್ಯಮಾನಗಳ ಮೇಲೆ ಇದೆಲ್ಲಾ ನಿರ್ಧಾರವಾಗಬೇಕಿರುವುದರಿಂದ ನೇಮಕವಾಗುವವರೆಗೂ ಬಿಜೆಪಿ ನಾಯಕರಿಗೆ ಕಾದುನೋಡದೆ ಬೇರೆ ಮಾರ್ಗವಿಲ್ಲದಂತಾಗಿದೆ.
|
eesanje/url_46_328_10.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಸಿಬಿಐ ತನಿಖೆ ಅಗತ್ಯತೆ ಕುರಿತು ಐಟಿ ಅಧಿಕಾರಿಗಳೇ ನಿರ್ಧರಿಸುತ್ತಾರೆ : ಪರಮೇಶ್ವರ್
|
2 |
+
ಬೆಂಗಳೂರು, ಅ.18- ಶೋಧ ಕಾರ್ಯಾಚರಣೆಯಲ್ಲಿ ಸಿಕ್ಕಿರುವ ಹಣ ಅಥವಾ ಇನ್ಯಾವುದೇ ಮಾಹಿತಿಯ ಬಗ್ಗೆ ಸಿಬಿಐ ತನಿಖೆ ಅಗತ್ಯವಾದರೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳೇ ನಿರ್ಧರಿಸುತ್ತಾರೆ. ಯಾರನ್ನೂ ಹೇಳಿ-ಕೇಳಿ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
|
3 |
+
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಆದಾಯ ತೆರಿಗೆ ಅಧಿಕಾರಿಗಳು ಹಣ ಯಾರಿಗೆ ಸಂಬಂಧಪಟ್ಟಿದೆ ಎಂಬುದನ್ನು ಅಗತ್ಯ ಸಂದರ್ಭದಲ್ಲಿ ಬಹಿರಂಗ ಮಾಡುತ್ತಾರೆ. ಬಹುಶಃ ಸದ್ಯದಲ್ಲಿ ತನಿಖೆ ನಡೆಯುತ್ತಿರುವುದರಿಂದ ಈವರೆಗೂ ಮಾಹಿತಿ ಹೊರ ಬಂದಿಲ್ಲ ಇರಬಹುದು ಎಂದರು. ಹಲವಾರು ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳೇ ಅಗತ್ಯ ಮಾಹಿತಿ ನೀಡುತ್ತಾರೆ. ಅಧಿಕೃತ ಮಾಹಿತಿ ಪ್ರಕಟವಾಗದ ಹೊರತು ಹಣ ಅವರಿಗೆ ಸೇರಿದೆ, ಇವರಿಗೆ ಸೇರಿದೆ ಎಂದು ಊಹೆ ಮಾಡಿ ತೇಜೋವಧೆ ಮಾಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
|
4 |
+
ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಹಣ ಸಂಗ್ರಹಿಸಲಾಗಿದೆ ಎಂಬ ಆರೋಪ ನಿರಾಧಾರ, ಬಿಜೆಪಿಯವರು ಸುಳ್ಳು ಆರೋಪ ಮಾಡುತ್ತಾರೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗಲೂ ಈ ರೀತಿಯ ಬೆಳವಣಿಗೆಗಳಾಗಿರಲಿಲ್ಲವೇ ಎಂದು ಪ್ರಶ್ನಿಸಿದರು.
|
5 |
+
ಪ್ರಕರಣದಲ್ಲಿ ಗಂಭೀರತೆ ಇದೆ ಎಂದಾದರೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳೇ ಸಿಬಿಐ ಸೇರಿದಂತೆ ಅಗತ್ಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಯಾರನ್ನೂ ಹೇಳಿ-ಕೇಳಿ ಮಾಡುವುದಿಲ್ಲ ಎಂದರು. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್-ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಭೇಟಿಯ ಬಗ್ಗೆ ತಮಗೆ ಮಾಹಿತಿ ಇಲ್ಲ. ವಿದೇಶ ಪ್ರವಾಸಕ್ಕೆ ತೆರಳಿದ್ದ ತಾವು ನಿನ್ನೆ ರಾತ್ರಿಯಷ್ಟೆ ಬಂದಿದ್ದೇನೆ. ಯಾವ ವಿಚಾರಗಳು ಗೊತ್ತಿಲ್ಲ. ಕಾಂಗ್ರೆಸ್ ಶಾಸಕರನ್ನು ಬಿಜೆಪಿ ನಾಯಕರು ಭೇಟಿ ಮಾಡಿರುವ ಬಗ್ಗೆ ನನಗೆ ತಿಳಿದಿಲ್ಲ ಎಂದು ಸ್ಪಷ್ಟಪಡಿಸಿದರು.
|
6 |
+
ಶೆಟ್ಟರ್ – ಸಾಹುಕಾರ್ ಭೇಟಿ ಬಗ್ಗೆ ಡಿಕೆಶಿ ಹೇಳಿದ್ದೇನು..?
|
7 |
+
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮಾಹಿತಿ ಇರಬೇಕು. ಒಂದು ವೇಳೆ ಆಪರೇಷ್ ಕಮಲ ನಡೆಯುತ್ತಿದ್ದರೆ ಹೈಕಮಾಂಡ್ ಗಮನಕ್ಕೆ ತರುತ್ತೇವೆ. ಜೊತೆಗೆ ಅಗತ್ಯ ಕ್ರಮ ಕೈಗೊಳ್ಳತ್ತೇವೆ ಎಂದಿದ್ದಾರೆ. ಹಲವಾರು ಸಂದರ್ಭದಲ್ಲಿ ಶಾಸಕ ಸ್ನೇಹಿತರು ಸಿಂಗಪೂರ್, ಮಲೇಶಿಯಾ ಸೇರಿದಂತೆ ವಿವಿಧ ಕಡೆ ಪ್ರವಾಸಕ್ಕೆ ಹೋಗಿದ್ದನ್ನು ನೋಡಿದ್ದೇವೆ. ಅದೇ ರೀತಿಯ ಪ್ರವಾಸವನ್ನು ಸತೀಶ್ ಜಾರಕಿಹೊಳಿ ಮತ್ತು ಸ್ನೇಹಿತರು ಪ್ರವಾಸಕ್ಕೆ ಹೋಗಬಹುದು. ಅದಕ್ಕೆ ವಿಶೇಷ ಅರ್ಥ ಕಲ್ಪಸಬೇಕಿಲ್ಲ ಎಂದರು.
|
eesanje/url_46_328_11.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಮೆಟ್ರೋದಲ್ಲಿ ಪ್ರಯಾಣಿಸಿದ ಸಚಿವ ಎಂ.ಬಿ.ಪಾಟೀಲ್
|
2 |
+
ಬೆಂಗಳೂರು,ಅ.18- ಇಲ್ಲಿನ ಕೆಂಗೇರಿ ಸಮೀಪದ ಮೈಲಸಂದ್ರ- ಶ್ರೀನಿವಾಸಪುರದಲ್ಲಿ ಬುಧವಾರ ನಿಗದಿಯಾಗಿದ್ದ ಜೆಎಸ್ಎಸ್ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು ವಿಧಾನಸೌಧದಿಂದ ಕೆಂಗೇರಿ ಬಸ್ ಟರ್ಮಿನಲ್ ವರೆಗೆ ನಮ್ಮ ಮೆಟ್ರೋದಲ್ಲಿ ಪ್ರಯಾಣ ಮಾಡಿದರು.
|
3 |
+
ಈ ಬಗ್ಗೆ ಮಾತನಾಡಿದ ಸಚಿವರು, ದೇಶದ ಬೇರೆ ಬೇರೆ ಭಾಗಗಳಲ್ಲಿ ನಾನು ಮೆಟ್ರೋದಲ್ಲಿ ಸಂಚರಿಸಿ, ಅನುಭವ ಪಡೆದಿದ್ದೇನೆ. ಆದರೆ, ಬೆಂಗಳೂರಿನಲ್ಲಿ ನಮ್ಮ ಮನೆಗೆ ಹತ್ತಿರದಲ್ಲಿ ಇನ್ನೂ ಮೆಟ್ರೋ ಬಂದಿಲ್ಲ. ಹೀಗಾಗಿ, ನಮ್ಮ ರಾಜಧಾನಿಯಲ್ಲಿ ಈವರೆಗೆ ಮೆಟ್ರೋದಲ್ಲಿ ಸಂಚರಿಸುವ ಅವಕಾಶ ಸಿಕ್ಕಿರಲಿಲ್ಲ. ಇವತ್ತು ವಾರದ ದಿನವಾದ್ದರಿಂದ ಸಂಚಾರ ದಟ್ಟಣೆ ಇರುತ್ತದೆ ಎನ್ನುವುದು ಗೊತ್ತಿತ್ತು. ಹೀಗಾಗಿ, ಮೊದಲೇ ನಮ್ಮ ಮೆಟ್ರೋದಲ್ಲಿ ಸಂಚರಿಸಲು ನಿರ್ಧರಿಸಿದ್ದೆ. ಇದರಂತೆ ವಿಧಾನಸೌಧದಿಂದ ಮೈಲಸಂದ್ರಕ್ಕೆ ಕೇವಲ 30 ನಿಮಿಷಗಳಲ್ಲಿ ತಲುಪಿದೆ. ಮುಂದಿನ ದಿನಗಳಲ್ಲಿ ನಮ್ಮ ಮೆಟ್ರೋ ನಗರದ ಜೀವನಾಡಿಯಾಗಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.
|
4 |
+
ಪ್ರಯಾಣದುದ್ದಕ್ಕೂ ಸಹ ಪ್ರಯಾಣಿಕರ ಜೊತೆ ಮಾತನಾಡಿಕೊಂಡು, ನಮ್ಮ ಮೆಟ್ರೋದ ಬಗ್ಗೆ ಕೇಳಿಕೊಂಡು ಬಂದೆ. ಪ್ರತಿಯೊಬ್ಬರೂ ಇದರಿಂದ ಸುಗಮ ಸಂಚಾರ ಸಾಧ್ಯವಾಗಿದೆ ಎಂದು ಹೇಳಿದರು. ಸಂಚಾರ ದಟ್ಟಣೆಯ ಸಮಸ್ಯೆ ಆಧುನಿಕ ನಗರಗಳ ಭಾಗವಾಗಿ ಬಿಟ್ಟಿದೆ. ಮೆಟ್ರೋ ಸೌಲಭ್ಯವು ನಗರದ ಸಂಚಾರ ವ್ಯವಸ್ಥೆಯ ರೂಪುರೇಷೆಗಳನ್ನೇ ಆಮೂಲಾಗ್ರವಾಗಿ ಬದಲಿಸುತ್ತಿದೆ.
|
5 |
+
ಶಹನವಾಜ್ ಹುಸೇನ್ ವಿರುದ್ಧದ ಸಮನ್ಸ್ ಗೆ ವಿಶೇಷ ಕೋರ್ಟ್ ತಡೆ
|
6 |
+
ಇದರಿಂದ ಬೆಂಗಳೂರಿನ ಉತ್ಪಾದಕತೆ ಗಣನೀಯವಾಗಿ ಹೆಚ್ಚಲಿದೆ. ಜೊತೆಗೆ ಇದು ಶಬ್ದ, ಧೂಳು ಮತ್ತು ಇಂಗಾಲದ ಮಾಲಿನ್ಯಗಳಿಗೆ ಪರಿಹಾರವಾಗಿದೆ. ಅಲ್ಲದೆ, ಆರೋಗ್ಯದ ಸಮಸ್ಯೆಗಳಿಂದಲೂ ತಕ್ಕ ಮಟ್ಟಿಗೆ ಪಾರಾಗಬಹುದು ಎಂದು ಪಾಟೀಲ ವಿವರಿಸಿದರು.
|
7 |
+
ಕೆಂಗೇರಿಯಲ್ಲಿ ಇಳಿದ ಅವರು, ಅಲ್ಲಿಂದ ಮುಂದಕ್ಕೆ ಜೆಎಸ್ಎಸ್ ತಾಂತ್ರಿಕ ಶಿಕ್ಷಣ ಅಕಾಡೆಮಿಯ ಕಾರ್ಯಕ್ರಮಕ್ಕೆ ತೆರಳಿದರು.
|
eesanje/url_46_328_12.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
“ಕಾಂಗ್ರೆಸ್ ಬಂದಿದೆ, ಲೂಟಿ ಜೋರಾಗಿದೆ, ಹೈಕಮಾಂಡ್ ಜೇಬು ತುಂಬಿದೆ”
|
2 |
+
ಬೆಂಗಳೂರು,ಅ.18-ಕಾಂಗ್ರೆಸ್ ಬಂದಿದೆ ಕಲೆಕ್ಷನ್ ಮಾಡಿದೆ. ಕಾಂಗ್ರೆಸ್ ಬಂದಿದೆ ಕಮಿಷನ್ ತಿಂದಿದೆ. ಕಾಂಗ್ರೆಸ್ ಬಂದಿದೆ ಲೂಟಿ ಜೋರಾಗಿದೆ. ಕಾಂಗ್ರೆಸ್ ಬಂದಿದೆ ಹೈಕಮಾಂಡ್ ಜೇಬು ತುಂಬಿದೆ. ಕಾಂಗ್ರೆಸ್ ಬಂದಿದೆ ಕರ್ನಾಟಕ ದಿವಾಳಿ ಆಗಿದೆ ಎಂದು ಪ್ರತಿಪಕ್ಷ ಬಿಜೆಪಿ ಪೋಸ್ಟ್ ಮಾಡುವ ಮೂಲಕ ಕಾಂಗ್ರೆಸ್ ನಾಯಕರನ್ನು ಕೆಣಕಿದೆ.
|
3 |
+
ಈ ಕುರಿತು ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಚುನಾವಣೆಗೂ ಮುನ್ನ ರಾಜ್ಯದ ಜನತೆಯ ಕಿವಿ ಮೇಲೆ ಕಲರ್ ಕಲರ್ ಹೂವಿಟ್ಟು, ನಂಗೂ ಫ್ರೀ, ನಿಂಗೂ ಫ್ರೀ ಎಂದು ಬೊಗಳೆ ಬಿಟ್ಟಿದ್ದ ಸಿದ್ದರಾಮಯ್ಯ ಅವರೇ ಇಲ್ಲಿ ನೋಡಿ, ನಿಮ್ಮ ಸರ್ಕಾರದ ಅಸಲಿ ತಾಕತ್ತು ಏನೆಂಬುದು ತಿಳಿಯುತ್ತದೆ.
|
4 |
+
ನೇಕಾರರ ಮಕ್ಕಳಿಗೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರೈತ ವಿದ್ಯಾನಿಧಿ ಯೋಜನೆಯನ್ನು ವಾಪಸ್ ಪಡೆದಿದ್ದೀರಿ, ಈಗ ನೇಕಾರರಿಗೆ ಉಚಿತ ವಿದ್ಯುತ್ ಹಾಗಿರಲಿ, ಕನಿಷ್ಟ ಒಂದು ತಾಸು ವಿದ್ಯುತ್ ನೀಡಲು ನಿಮ್ಮ ಸರ್ಕಾರಕ್ಕೆ ಯೋಗ್ಯತೆಯೂ ಇಲ್ಲ, ಸಾಮಥ್ರ್ಯವೂ ಇಲ್ಲ. ಅಂತಹ ಅಸಮರ್ಥ ಸರ್ಕಾರ ನಿಮ್ಮದು ಎಂದು ಆರೋಪ ಮಾಡಿದೆ.
|
5 |
+
ಮಲಮಗನನ್ನು ಕೊಂದು ಶವವನ್ನು ತೊಟ್ಟಿಯಲ್ಲಿ ಬಚ್ಚಿಟ್ಟಿದ್ದ ಮಲತಾಯಿ
|
6 |
+
ಒಟ್ಟಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನಡೆಯುತ್ತಿರುವ ಕಿರಿಕ್ ದೊಡ್ಡದಾಗುತ್ತಿದೆ. ಈ ನಡುವೆ ಲೋಕಸಭೆ ಚುನಾವಣೆಗೆ ಇದೇ ಅಸ್ತ್ರವನ್ನು ದೊಡ್ಡದಾಗಿ ಬಳಸಿಕೊಳ್ಳಲು ಬಿಜೆಪಿ ರಾಜ್ಯ ನಾಯಕರು ಪ್ಲ್ಯಾನ್ ಮಾಡಿದಂತೆ ತೋರುತ್ತಿದೆ. ಹೀಗೆ ಕಾಂಗ್ರೆಸ್ ಬಿಜೆಪಿ ನಡುವೆ ನಡೆಯುತ್ತಿರುವ ಐಟಿ ಜಟಾಪಟಿ ಸದ್ಯಕ್ಕೆ ಮುಗಿಯುವ ಯಾವುದೇ ಸಾಧ್ಯತೆ ಇಲ್ಲ. ಅಷ್ಟೇ ಅಲ್ಲ ಗ್ಯಾರಂಟಿ ವಾರ್ ಕೂಡ ಮುಂದುವರಿಯುವುದು ಗ್ಯಾರಂಟಿಯಾಗಿದೆ.
|
eesanje/url_46_328_2.txt
ADDED
@@ -0,0 +1,18 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸಿಎಂ ಹುದ್ದೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ :
|
2 |
+
ಬೆಳಗಾವಿ, ಅ.19- ಮುಖ್ಯಮಂತ್ರಿ ಹುದ್ದೆಯ ಬಗ್ಗೆ ತಾವು ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ. ಅದನ್ನು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯ ಸಕ್ಯೂಟ್ ಹೌಸ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಕಕ್ಕೆ ಜನ ಐದು ವರ್ಷ ಆಡಳಿತ ನಡೆಸಲು ಆಶೀರ್ವಾದ ಮಾಡಿದ್ದಾರೆ.
|
3 |
+
ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ಬಹಷ್ಟು ಜನರಿಗೆ ಬಯಕೆಗಳಿರುತ್ತವೆ. ಅವರ ಆಸೆ, ವಿಚಾರಗಳು ಇರುತ್ತವೆ. ಆದರೆ ನಮ್ಮ ಆದ್ಯತೆ ಉತ್ತಮ ಆಡಳಿತ ನೀಡುವತ್ತ ಇದೆ. ಅಧಿಕಾರದ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ, ಆ ಬಗ್ಗೆ ತಾವು ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.
|
4 |
+
ಈ ವರ್ಷ ಮಳೆಯ ಕೊರತೆಯಾಗಿದೆ. ಒಂದು ದಿನದ ಮಳೆ ಕೊರತೆಯಿಂದ ಸರ್ಕಾರಕ್ಕೆ ಒಂದು ಸಾವಿರ ಕೋಟಿ ರೂಪಾಯಿ ನಷ್ಟವಾಗುತ್ತದೆ. ಈ ವರ್ಷ 60-70 ದಿನಗಳು ಮಾತ್ರ ಮಳೆಯಾಗಿದೆ. ವಿದ್ಯುತ್ ಅನ್ನು 6ರಿಂದ 7 ರೂಪಾಯಿವರೆಗೂ ಖರೀದಿ ಮಾಡಿ, ರೈತರಿಗೆ ವಿನಾಯಿತಿ ರೂಪದಲ್ಲಿ ಪೂರೈಕೆ ಮಾಡಲಾಗುತ್ತಿದೆ. ರೈತರು ಬಳಸಿದ ವಿದ್ಯುತ್ಗೆ ಸರ್ಕಾರವೇ ಶುಲ್ಕ ಭರಿಸುತ್ತಿದೆ ಎಂದರು.
|
5 |
+
ಹಿಂದೆ ನಾವು ಅಧಿಕಾರದಲ್ಲಿದ್ದಾಗ ಹೆಚ್ಚುವರಿ ವಿದ್ಯುತ್ ಉತ್ಪಾದನೆ ಮಾಡಲಾಗಿತ್ತು. ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ವಿದ್ಯುತ್ ಉತ್ಪಾದನೆಯನ್ನು ನಿರ್ಲಕ್ಷ್ಯಿಸಿತ್ತು. ಹಾಗಾಗಿ ಸಮಸ್ಯೆ ಶುರುವಾಗಿದೆ. ನಾವು ಹಿಂದಿನ ಸರ್ಕಾರವನ್ನು ಟೀಕಿಸುತ್ತಾ ಕುಳಿತುಕೊಳ್ಳುವುದಿಲ್ಲ. ಸರ್ಕಾರ ರಚನೆಯಾದ ದಿನದಿಂದಲೇ ವಿದ್ಯುತ್ ಉತ್ಪಾದನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಜೊತೆ ಪಾವಗಡದ ಸೌರಶಕ್ತಿ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಹೊಸದಾಗಿ ವಿದ್ಯುತ್ ಉತ್ಪಾದನೆ ಕುರಿತು ಕ್ರಮ ಕೈಗೊಳ್ಳುತ್ತಿದ್ದೇವೆ ಎಂದರು.
|
6 |
+
ರೈತರಿಗೆ ಆರು ಗಂಟೆ ವಿದ್ಯುತ್ ನೀಡುತ್ತಿದ್ದೇವೆ, ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಏಳು ಗಂಟೆ ಸಬರಾಜು ಮಾಡಲಾಗುತ್ತಿತ್ತು. ಪ್ರಸ್ತುತ ಸಂದರ್ಭದಲ್ಲಿ ವಿದ್ಯುತ್ ಪೂರೈಕೆಗೆ ವ್ಯತ್ಯಾಸವಾಗಿದೆ ಎಂದರು. ನೀರಾವರಿ ಪ್ರದೇಶದಲ್ಲಿ ಕೊನೆಭಾಗಕ್ಕೂ ನೀರು ತಲುಪಿಸಲು ಜಾಗೃತಿ ಮೂಡಿಸಬೇಕಿದೆ. ಕೆಲವು ಭಾಗಗಳಲ್ಲಿ ಪೈಪ್ ಹಾಕಿಕೊಂಡು 10-20 ಕಿಲೋಮೀಟರ್ ವರೆಗೂ ನೀರು ಹರಿಸಿಕೊಳ್ಳುತ್ತಿದ್ದಾರೆ. ಇದರಿಂದ ಸರ್ಕಾರಕ್ಕೆ ಭಾರವಾಗುತ್ತಿದೆ ಎಂದರು.
|
7 |
+
ತಾವು ನಿನ್ನೆ ನೀರಾವರಿ ಬಳಕೆದಾರರ ಸಂಘಗಳ ಹಾಗೂ ಸಹಕಾರ ಸಂಘಗಳ ಪದಾಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಅವುಗಳನ್ನು ಮತ್ತೆ ಸಕ್ರಿಯಗೊಳಿಸುವ ಪ್ರಯತ್ನ ನಡೆಸಲಾಗಿದೆ ಎಂದರು. ಎತ್ತಿನಹೊಳೆ ಯೋಜನೆಯಲ್ಲಿ ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರಮ ಕೋಲಾರದ��ರೆಗೂ ನೀರು ಹರಿಸಬೇಕಿದೆ. ಮಧ್ಯದಲ್ಲಿ ಪಂಪ್ಸೆಟ್ ಹಾಕಿಕೊಂಡು ನೀರು ಎಳೆದುಕೊಂಡರೆ ಕೊನೆಭಾಗಕ್ಕೆ ನೀರು ಹೋಗುವುದಿಲ್ಲ. ಅದಕ್ಕಾಗಿ ಕಾಲುವೆ ಮಧ್ಯದಲ್ಲಿ ನೀರು ತೆಗೆಯದಂತೆ ತಡೆಯಲು ವಿಶೇಷ ಕಾನೂನು ರೂಪಿಸಲಾಗುವುದು ಎಂದರು.
|
8 |
+
ನೀರು ಬಳಕೆದಾರರ ಹಾಗೂ ಸಹಕಾರ ಸಂಘಗಳ ಪದಾಧಿಕಾರಿಗಳು, ರೈತರಿಗೆ, ಇಂಜಿನಿಯರ್ಗಳಿಗೆ ಧಾರವಾಡದ ವಾಲ್ಮಿ ಸಂಸ್ಥೆಯಿಂದ ತರಬೇತಿ ಕೊಡಿಸಲು ನಿರ್ಧರಿಸಲಾಗಿದೆ. ಸಂಪನ್ಮೂಲ ವ್ಯಕ್ತಿಗಳು ಜಿಲ್ಲೆಗಳಿಗೆ ಭೇಟಿ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದರು. ಬೆಳಗಾವಿಯಲ್ಲಿ ಉತ್ತಮ, ರೈತ ಪರ ಕಾಳಜಿ, ಬದ್ಧತೆ ಇರುವ ಅಧಿಕಾರಿಗಳಿದ್ದಾರೆ. ಏನು ಸಮಸ್ಯೆ ಇಲ್ಲ ಎಂದರು.
|
9 |
+
ಕಾಲುವೆ ಮಧ್ಯದಲ್ಲಿ ನೀರು ಪಂಪ್ ಮಾಡುವುದಕ್ಕೆ ಶುಲ್ಕ ನಿಗದಿ ಮಾಡುವ ಪದ್ಧತಿಯನ್ನು ಮಹಾರಾಷ್ಟ್ರ ಸರ್ಕಾರ ಜಾರಿಗೊಳಿಸಿದೆ. ಅದನ್ನೂ ಅಧ್ಯಯನ ನಡೆಸಲಾಗುತ್ತಿದೆ. ನೀರಾವರಿ ಯೋಜನೆಗೆ ಬಳಕೆ ಮಾಡುವ ವಿದ್ಯುತ್ಗೆ ಸಾವಿರಾರು ಕೋಟಿ ರೂಪಾಯಿ ಶುಲ್ಕ ಪಾವತಿಸಬೇಕಿದೆ. ಪಂಪಿಂಗ್ ಮೂಲಕ ನೀರು ತುಂಬಿಸುವ ಕೆರೆಗಳಲ್ಲಿ ಮೀನು ಸಾಗಾಣಿಕೆ ಮಾಡುವಂತೆ ಸಂಬಂಧ ಪಟ್ಟ ಸಚಿವರಿಗೆ ಸೂಚಿಸಿದ್ದೇನೆ. ಮೀನು ಸಾಗಾಣಿಕೆಯಿಂದ ಬರುವ ಆದಾಯವನ್ನು ಸರ್ಕಾರಕ್ಕೆ ಪಾವತಿಸಬೇಕು, ಅದರಿಂದ ವಿದ್ಯುತ್ ಶುಲ್ಕ ಪಾವತಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
|
10 |
+
ಬೆಳಗಾವಿ ಜಿಲ್ಲೆಯೊಂದರಲ್ಲೇ ಎರಡು ಸಾವಿರ ಕೋಟಿ ರೂಪಾಯಿ ವಿದ್ಯುತ್ ಶುಲ್ಕ ಬಾಕಿ ಇದೆ. ಇದು ಪಾವತಿಯಾಗದಿದ್ದರೆ ಕಷ್ಟವಾಗುತ್ತದೆ. ಏಳು ರೂಪಾಯಿಗೆ ವಿದ್ಯುತ್ ಖರೀದಿಸಿ, ಎರಡು-ಮೂರು ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಈ ನಷ್ಟವನ್ನು ಭರಿಸಲು ಮೀನುಗಾರಿಕೆ ಆದಾಯವನ್ನು ಆಶ್ರಯಿಸಲಾಗುವುದು. ಮಹಾರಾಷ್ಟ್ರ ಮಾದರಿಯನ್ನು ಅಧ್ಯಯನ ನಡೆಸಲಾಗುತ್ತಿದೆ, ವರದಿ ನೀಡಲು ಸೂಚಿಸಿದ್ದೇನೆ. ಒಳ್ಳೆಯ ಅಭ್ಯಾಸಗಳನ್ನು ಜಾರಿಗೆ ತರುವುದರಲ್ಲಿ ತಪ್ಪೇನು ಎಂದರು.
|
11 |
+
ಆದಾಯ ಮೀರಿ ಆಸ್ತಿ ಪ್ರಕರಣದ ಸಿಬಿಐ ತನಿಖೆಗೆ ಹೈಕೋರ್ಟ್ ಅಸ್ತು, ಡಿಕೆಶಿಗೆ ಟ್ರಬಲ್ ಶುರು
|
12 |
+
ಕಿತ್ತೂರು ಕರ್ನಾಟಕ ಭಾಗದ ಅದೃಷ್ಟ ಚೆನ್ನಾಗಿದೆ. ಮಲ್ಲಪ್ರಭಾ ಹೊರತು ಪಡಿಸಿ ಉಳಿದ ಎಲ್ಲಾ ಅಣೆಕಟ್ಟೆಗಳು, ಕೆರೆ-ಕುಂಟೆಗಳು ತುಂಬಿವೆ. ಮಳೆ ಇರಲಿ, ಇಲ್ಲದಿರಲಿ ಈಭಾಗದಲ್ಲಿ ಸಮಸ್ಯೆಗಳಿಲ್ಲ. ಹಳೆ ಮೈಸೂರು ಭಾಗವನ್ನೂ ದೇವರೆ ಕಾಪಾಡಬೇಕು ಎಂದರು.
|
13 |
+
ಮಹಾರಾಷ್ಟ್ರ ಚಂದಗಡದಲ್ಲಿ ಕಚೇರಿ ತೆರೆದು ಗಡಿ ಭಾಗದ ಮರಾಠಿಗರಿಗೆ ಆರೋಗ್ಯ ಯೋಜನೆ ಜಾರಿಗೆ ತರಲು ನೆರೆಯ ಸರ್ಕಾರ ಮುಂದಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದು ಸೂಕ್ಷ್ಮ ವಿಚಾರ. ವೈಯಕ್ತಿಕವಾಗಿ ಪ್ರತಿಕ್ರಿಯಿಸುವುದಿಲ್ಲ. ಅನಗತ್ಯ ವಿವಾದಗಳು ಸೃಷ್ಟಿಯಾಗಬಾರದು. ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ ಬಳಿಕ ಸರ್ಕಾರ ತನ್ನ ನಿಲುವು ಪ್ರಕಟಿಸಲಿದೆ ಎಂದರು.
|
14 |
+
ತಮ್ಮ ವಿರುದ್ಧ ಸಿಬಿಐ ತನಿಖೆಗೆ ಆದೇಶಿರುವ ಪ್ರಕರಣದ ವಿಚಾರಣೆಯಲ್ಲಿ ಏನಾಗಿದೆ ಎಂದು ತಮಗೆ ಗೋತ್ತಿಲ್ಲ. ಎಫ್ಐಆರ್ ಹಾಕಿದ್ದು ಸರಿಯಿಲ್ಲ, ತನಿಖೆ ಮಾಡಬಾರದು. ಎಫ್ಐಆರ್ನಲ್ಲಿ ಲೋಪಗಳಿವೆ ಎಂದು ನಮ್ಮ ವಕೀಲರು ಅರ್ಜಿ ಹಾಕಿದ್ದರು. ಅದೇನಾಗಿಯೇ ಮಾಹಿತಿ ಇಲ್ಲ ಎಂದರು.
|
15 |
+
ಹೊಸೂರಿನಿಂದ ಬೆಂಗಳೂರಿನ ಬೊಮ್ಮಸಂದ್ರದವರೆಗೂ ಮೇಟ್ರೋ ಯೋಜನೆ ಅನುಷ್ಠಾನಗೊಳಿಸಲು ತಮಿಳುನಾಡು ಸರ್ಕಾರ ಟೆಂಡರ್ ಕರೆದಿಲ್ಲ. ಎರಡು ರಾಜ್ಯಗಳ ನಡುವಿನ ಗಡಿಭಾಗದಲ್ಲಿ ಹೆಚ್ಚು ಬೆಳವಣಿಗೆಗಳಾಗಿವೆ. ನಾನೇ ಬಿಬಿಎಂಪಿ ಸಚಿವನಿದ್ದೇನೆ, ಟೆಂಡರ್ ಕರೆದಿಲ್ಲ. ಆದರೆ ಮೇಟ್ರೋ ಯೋಜನೆಗೆ ಕಾರ್ಯಸಾಧುತ್ವದ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಮದರು.
|
16 |
+
ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಚಾಲೆಂಜ್
|
17 |
+
ಕರ್ನಾಟಕದ ಜನ, ಹೂಸೂರಿಗೆ ಹೋಗಿ, ಅಲ್ಲಿನವರು ಇಲ್ಲಿಗೆ ಬಂದು ಕೆಲ ಮಾಡುತ್ತಾರೆ. ಜನರಿಗೆ ಅನುಕೂಲವಾಗುವಂತೆ ಮೆಟ್ರೋ ಯೋಜನೆ ಜಾರಿಗೊಳಿಸಲು ತಮಿಳುನಾಡು ಸರ್ಕಾರ ಮನವಿ ಮಾಡಿತ್ತು. ಯೋಜನೆ ಜಾರಿ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ. ಕೇಂದ್ರ ಸರ್ಕಾರ ಮೇಟ್ರೋ ಯೋಜನೆಗೆ ಶೇ.50ರಷ್ಟು ಅನುದಾನ ನೀಡುತ್ತಿದೆ ಎಂದ ಅವರು, ಮಹಾರಾಷ್ಟ್ರದ ಬಸ್ಗಳು ಕರ್ನಾಟಕಕ್ಕೆ ಬರಬಾರದು ಎಂದು ಹೇಳಲು ಸಾಧ್ಯವೇ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ರೈಲು ಸಂಪರ್ಕಗಳಿಲ್ಲವೇ ಎಂದು ಪ್ರಶ್ನಿಸಿದರು.
|
18 |
+
ಮಹಾರಾಷ್ಟ್ರ ಸರ್ಕಾರ ಕುಡಿಯುವ ನೀರು ಪೂರೈಸಲು ದೂದ್ಗಂಗಾ ನದಿ ತಿರುವ ಯೋಜನೆ ಕೈಗೆತ್ತಿಕೊಂಡಿದು ಗೋತ್ತಿಲ್ಲ. ಬೆಳಗಾವಿ ಭಾಗಕ್ಕೆ ನೀರೆ ಬರುತ್ತಿಲ್ಲ ಎಂಬ ವರದಿಯ ಬಗ್ಗೆ ತಂತ್ರಜ್ಞರ ಜೊತೆ ಚರ್ಚೆ ಮಾಡಿ ಬಳಿಕ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು.
|
eesanje/url_46_328_3.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ಡಿ.ಕುಮಾರಸ್ವಾಮಿ ಆಯ್ಕೆ
|
2 |
+
ಬೆಂಗಳೂರು,ಅ.19- ಜೆಡಿಎಸ್ ರಾಜ್ಯ ಘಟಕವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜನೆ ಮಾಡಿದ್ದು, ಹಂಗಾಮಿ ರಾಜ್ಯಾಧ್ಯಕ್ಷರಾಗಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಜೆಪಿಭವನದಲ್ಲಿಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರು, ಸದಸ್ಯರು, ಶಾಸಕರು ಒಳಗೊಂಡಂತೆ ಪಕ್ಷದ ಸಂಘಟನೆಗೆ ಸಂಬಂಧಿಸಿದಂತೆ ನಡೆದ ಮಹತ್ವದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
|
3 |
+
ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರು, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನೊಳಗೊಂಡಂತೆ ರಾಜ್ಯ ಘಟಕವನ್ನು ವಿಸರ್ಜನೆ ಮಾಡಲಾಗಿದೆ.
|
4 |
+
ಪಕ್ಷದ ಕಾರ್ಯ ಚಟುವಟಿಕೆಗಳನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ಹಾಗೂ ಮುಂದಿನ ಚುನಾವಣೆವರೆಗೆ ಕಾರ್ಯ ನಿರ್ವಹಿಸಲು ಅನುಕೂಲವಾಗುವಂತೆ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಹಂಗಾಮಿ (ಅಡಹಾಕ್) ರಾಜ್ಯಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದರು.
|
5 |
+
ಜೆಡಿಎಸ್ ರಾಜ್ಯ ಘಟಕದ ಕಾರ್ಯದರ್ಶಿಯಾಗಿ ವಿಧಾನಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಕಾರ್ಯ ನಿರ್ವಹಿಸಲಿದ್ದಾರೆ. ರಾಜ್ಯಾಧ್ಯಕ್ಷರಾದ ಕುಮಾರಸ್ವಾಮಿ ಅವರೊಂದಿಗೆ ಕಾರ್ಯ ನಿರ್ವಹಿಸಲು ಇನ್ನು ಮೂರು ದಿನದಲ್ಲಿ ಕೆಲವು ಪದಾಧಿಕಾರಿಗಳನ್ನು ನೇಮಕ ಮಾಡಲಾಗುವುದು. ಪಕ್ಷದ ಮುಖಂಡರೊಂದಿಗೆ ಸಮಾಲೋಚನೆ ಮಾಡಿ ಪದಾಧಿಕಾರಿಗಳನ್ನು ನೇಮಕ ಮಾಡುವುದಾಗಿ ಗೌಡರು ತಿಳಿಸಿದರು.
|
6 |
+
ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಅವರ ಬಗ್ಗೆ ಯಾವ ತೀರ್ಮಾನ ಮಾಡಲಾಗಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ದೇವೇಗೌಡರು, ರಿಮೂವ್ ಮಾಡಲಾಗಿದೆ. ನೀವು ರಾಜ್ಯ ಘಟಕ ವಿಸರ್ಜನೆ ಮಾಡಲಾಗಿದೆ ಎಂದು ಭಾವಿಸಬಹುದು ಎಂದು ಹೇಳಿದರು.
|
7 |
+
ಕೋರ್ ಕಮಿಟಿಯ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು ಒಕ್ಕಲಿಗರೇ ಆಗಿದ್ದಾರೆ ಎಂದು ನೀವು ಪ್ರಶ್ನಿಸಬಹುದು. ಕುಮಾರಸ್ವಾಮಿ ಅವರ ನಾಯಕತ್ವಕ್ಕೆ ರಾಷ್ಟ್ರ ಮಟ್ಟದಲ್ಲಿ ಮಾನ್ಯತೆ ಇದೆ. ಅವರ ನಾಯಕತ್ವವನ್ನು ಗುರುತಿಸಲಾಗಿದೆ. ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಾಡಿದ ರೈತರ ಸಾಲಮನ್ನಾ, ಜನಪ್ರಿಯ ಕಾರ್ಯಕ್ರಮಗಳು, ಚುನಾವಣಾ ಪೂರ್ವದಲ್ಲಿ ನಡೆದ ಜನತಾ ಜಲಧಾರೆ, ಪಂಚರತ್ನ ಕಾರ್ಯಕ್ರಮಗಳಿಂದ ಅವರನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸಿದ್ದಾರೆ. ಹೀಗಾಗಿ ಪಕ್ಷದ ಎಲ್ಲ ನಾಯಕರು, ಮುಖಂಡರು ಒಟ್ಟಾಗಿ ತೀರ್ಮಾನಿಸಿ ಕುಮಾರಸ್ವಾಮಿ ಅವರೇ ಅಧ್ಯಕ್ಷರಾಗಬೇಕು ಎಂದು ತೀರ್ಮಾನ ಮಾಡಿದ್ದೇವೆ ಎಂದರು.
|
8 |
+
ರಾಜ್ಯ ಘಟಕ, ರಾಷ್ಟ್ರ ಘಟಕ ಬೇರೆ. ಬೇರೆ ಬೇರೆ ರಾಜ್ಯ ಘಟಕಗಳು ಬೇರೆ. ತಮಿಳುನಾಡಿನ ಘಟಕ ಪಕ್ಷ ಕೈಗೊಳ್ಳುತ್ತಿರುವ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿದೆ. ತಮಿಳುನಾಡು ಘಟಕ ಅಲ್ಲಿನ ಸರ್ಕಾರಲ್ಲಿ ಭಾಗಿಯಾಗಿದೆ ಎಂದು ಹೇಳಿದರು. ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದ ವಿಧಾನಪರಿಷತ್ ಸದಸ್ಯ ಬಿ.ಎಂ.ಫಾರುಖ್ ಸೇರಿದಂತೆ ಹಲವು ಮುಖಂಡರು ಪಕ್ಷದಲ್ಲಿ ಇದ್ದಾರೆ. ನಮಗೆ ಅಲ್ಪಸಂಖ್ಯಾತ ಮುಖಂಡರ ಕೊರತೆ ಇಲ್ಲ. ಒಂದೊಂದು ರಾಜ್ಯದಲ್ಲಿ ಒಂದೊಂದು ವಿಧವಾದ ಬೆಳವಣಿಗೆಗಳಿವೆ. ಪಶ್ಚಿಮ ಬಂಗಾಳವೇ ಬೇರೆ, ತ್ರಿಪುರವೇ ಬೇರೆ, ಕರ್ನಾಟಕವೇ ಬೇರೆ ಎಂದು ಅವರು ವಿಶ್ಲೇಷಿಸಿದರು.
|
9 |
+
ವಿಧಾನಸಭೆ ಚುನಾವಣೆ ನಡೆದು ನಾಲ್ಕು ತಿಂಗಳು ಕಳೆದರೂ ಪಕ್ಷದಲ್ಲಿನ ವಿವಿಧ ಘಟಕಗಳ ಜವಾಬ್ದಾರಿ, ಸ್ಥಾನಮಾನ ಮಾರ್ಪಡು ಮಾಡಿರಲಿಲ್ಲ. ರಾಜ್ಯ ಘಟಕದ ಅಧ್ಯಕ್ಷರಾಗಿದ್ದವರು ನೀಡಿರುವ ಹೇಳಿಕೆಯನ್ನು ಪ್ರಸ್ತಾಪಿಸುವುದಿಲ್ಲ. ಅದರ ಅವಶ್ಯಕತೆಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.
|
10 |
+
ಹಮಾಸ್ ಉಗ್ರರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಇಸ್ರೇಲಿ ಮಹಿಳೆ ಭೇಟಿಯಾದ ಬಿಡೆನ್
|
11 |
+
ಬಿಜೆಪಿ ಜೊತೆ ರಾಜ್ಯದಲ್ಲಿ ಹೋಗಬೇಕಾದ ಸನ್ನಿವೇಶವನ್ನು ಮನವರಿಕೆ ಮಾಡಿಕೊಟ್ಟ ನಂತರ ಕೇರಳ ಭಾಗವು ಅಲ್ಲಿನ ಎಡಪಂಥೀಯ ಪಕ್ಷದ ಜೊತೆ ಕೆಲಸ ಮಾಡಿರುವ ಶಾಸಕರ ಒಪ್ಪಿಗೆಯೂ ದೊರೆತಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಕೋರ್ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು, ಮಾಜಿ ಸಚಿವರಾದ ಎಚ್.ಕೆ.ಕುಮಾರಸ್ವಾಮಿ, ಹಲ್ಕೋಡ್ ಹನುಮಂತಪ್ಪ, ವೆಂಕಟರಾವ್ ನಾಡಗೌಡ, ಕೋರ್ ಕಮಿಟಿ ಸದಸ್ಯರಾದ ವೈ.ಎಸ್.ವಿ.ದತ್ತ, ಮಾಜಿ ಸಚಿವರಾದ ಎ.ಮಂಜು, ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಸೇರಿದಂತೆ ಶಾಸಕರು, ಮಾಜಿ ಶಾಸಕರು, ಹಲವು ಉಪಸ್ಥಿತರಿದ್ದರು.
|
eesanje/url_46_328_4.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಅರಿಶಿನ-ಕುಂಕುಮ ಆದೇಶಕ್ಕೆ ಸ್ಪಷ್ಟನೆ ಕೊಟ್ಟ ಸಿಎಂ
|
2 |
+
ಬೆಂಗಳೂರು, ಅ.19- ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ರಾಸಾಯನಿಕಯುಕ್ತ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಹೊಸದಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದ್ದಾರೆ.
|
3 |
+
ವಿಧಾನಸೌಧ ಮತ್ತು ವಿಕಾಸಸೌಧ ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯಲಿದೆ. ಈ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ, ಇದು ಹೊಸತೇನಲ್ಲ ಎಂದಿದ್ದಾರೆ.
|
4 |
+
ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ. ಜೊತೆಯಲ್ಲಿ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 2021ರ ಅಕ್ಟೋಬರ್ 12ರಂದು ಹೊರಡಿಸಿದ್ದ ಸುತ್ತೋಕೆ ಹಾಗೂ ಸೆಪ್ಟಂಬರ್ 30ರಂದು ಹೊರಡಿಸಲಾಗಿರುವ ಸುತ್ತೋಲೆ ಎರಡನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
|
5 |
+
ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ರಾಸಾಯನಿಕಯುಕ್ತ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಇದು ಹೊಸತೇನಲ್ಲ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ…../5QguMBgWg0
|
6 |
+
ಕಾಂಗ್ರೆಸ್ ಸರ್ಕಾರ ಶಾಲಾ ಕಾಲೇಜುಗಳಲ್ಲಿ ಹೆಣ್ಣುಮಕ್ಕಳು ಬಳೆ ತೊಡಬಾರದು ಎಂದು ಆದೇಶ ಹೊರಡಿಸಿದೆ ಎಂದು ಬೊಬ್ಬೆ ಹಾಕಿದ್ದ ಬಿಜೆಪಿ, ಹಿಂದು ಭಾವನೆಗಳಿಗೆ ಧಕ್ಕೆಯುಂಟು ಮಾಡಲಾಗುತ್ತಿದೆ ಎಂದು ಪ್ರಚಾರ ಮಾಡಲಾಯಿತು. ಆ ದೇಶ ಕೂಡ ಕೇಂದ್ರ ಸರ್ಕಾರದ ಸುತ್ತೋಲೆ ಆಧಾರಿತವಾಗಿತ್ತು ಎಂದು ಸ್ಪಷ್ಟನೆ ದೊರೆತ ಬಳಿ ಟೀಕಾಕಾರರು ತಣ್ಣಗಾದರು.
|
7 |
+
ರಾಹುಲ್ ಅಣತಿಯಂತೆ ಹಮಾಸ್ಗೆ ಕಾಂಗ್ರೆಸ್ ಬೆಂಬಲಿಸಿದೆ ; ಹಿಮಂತ್ ಬಿಸ್ವಾ
|
8 |
+
ಈ ಮತ್ತೊಮ್ಮೆ ದಸರಾ-ಆಯುಧ ಪೂಜೆ ಸಂದರ್ಭದಲ್ಲಿ ಕುಂಕುಮ, ಹರಿಶಿನ ಬಳಸಬಾರದು ಎಂಬ ಆದೇಶವನ್ನು ಕಾಂಗ್ರೆಸ್ ಸರ್ಕಾರವೇ ಹೊರಡಿಸಿದೆ ಎಂದು ಪ್ರಚಾರ ಮಾಡಲಾಗಿದೆ. ಅದಕ್ಕೂ ಹಿಂದಿನ ಸರ್ಕಾರದ ಆದೇಶವನ್ನು ಬಯಲುಗೊಳಿಸುವ ಮೂಲಕ ಮುಖ್ಯಮಂತ್ರಿ ಬಿಜೆಪಿ ಟಾಂಗ್ ನೀಡಿದ್ದಾರೆ.
|
eesanje/url_46_328_5.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಆದಾಯ ಮೀರಿ ಆಸ್ತಿ ಪ್ರಕರಣದ ಸಿಬಿಐ ತನಿಖೆಗೆ ಹೈಕೋರ್ಟ್ ಅಸ್ತು, ಡಿಕೆಶಿಗೆ ಟ್ರಬಲ್ ಶುರು
|
2 |
+
ಬೆಂಗಳೂರು,ಅ.19: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ರದ್ದು ಗೊಳಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
|
3 |
+
ಇದರ ನಡುವೆಯೇ ನೀಡಲಾಗಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿ ತನಿಖೆ ಮುಂದುವರಿಸಿ 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸುವಂತೆ ಹೈಕೋರ್ಟ್ ಸಿಬಿಐಗೆ ಸೂಚಿಸಿದೆ. ಕಳೆದ 2014 ಮತ್ತು 2018ರ ನಡುವೆ ತಮ್ಮ ಆದಾಯಕ್ಕಿಂತ ಮೀರಿ ಆಸ್ತಿ ಗಳಿಸಿದ್ದಾರೆ ಎಂದು 2018ರಲ್ಲಿ ಸಿಬಿಐ ಪ್ರಕರಣ ದಾಖಲಿಸಿತ್ತುಇದಲ್ಲದೆ 2023ರಲ್ಲೂ ಪ್ರತ್ಯೇಕ ಪ್ರಕರಣವನ್ನು ದಾಖಲಿಸಲಾಗಿತ್ತು.
|
4 |
+
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರು 2023ರಲ್ಲಿ ಸಿಬಿಐ ತನಿಖೆ ತಡೆ ನೀಡುವಂತೆ ಹೈಕೋರ್ಟ್ ಮೊರೆ ಹೋಗಿದ್ದರು. ಆಗ ಅವರಿಗೆ ಮಧ್ಯಂತರ ತಡೆ ನೀಡಲಾಗಿತ್ತು. ಇದೀಗ ಹೈಕೋರ್ಟ್ ಈಗ ಪುನಃ ತನಿಖೆ ಪುನಾರಂಭಿಸುವಂತೆ ಆದೇಶ ಹೊರಡಿಸಿರುವುದರಿಮದ ಮತ್ತೆ ಡಿ.ಕೆ. ಶಿವಕುಮಾರ್ ಅವರಿಗೆ ಸಂಕಷ್ಟ ಎದುರಾಗಿದೆ.
|
5 |
+
ಆಸ್ಪತ್ರೆ ಮೇಲಿನ ದಾಳಿಯಲ್ಲಿ ಇಸ್ರೇಲ್ ಪಾತ್ರವಿಲ್ಲ : ಅಮೆರಿಕ ಸ್ಪಷ್ಟನೆ
|
6 |
+
ತನಿಖೆ ವೇಳೆ ಸಿಬಿಐ 200 ಕೋಟಿ ರೂ. ಅಧಿಕ ಅಕ್ರಮ ಆಸ್ತಿ ಪತ್ತೆ ಯಾಗಿದೆ ಎಂದು ಸಿಬಿಐ ವಾದ ಮಂಡಿಸಿತ್ತು, ತಡೆಯಾಜ್ಞೆ ತೆರವಿಗೆ ಮೇಲ್ಮನವಿ ಸಲ್ಲಿಸಿತ್ತು. ಈಗ ಅದನ್ನು ಮಾನ್ಯ ಮಾಡಿ ನ್ಯಾಯಾಲಯ ತನಿಖೆ ಮುಂದುವರೆಸುವಂತೆ ಸೂಚಿಸಿದೆ. ಸದ್ಯದಲ್ಲೆ ಸಿಬಿಐ ಚಾರ್ಜ್ ಶೀಟ್ ಸಲ್ಲಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದ್ದು ಇದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
|
eesanje/url_46_328_6.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕ್ರೀಡಾಪಟುಗಳಿಗೆ ಸರ್ಕಾರೀ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ : ಸಿಎಂ
|
2 |
+
ಬೆಂಗಳೂರು, ಅ.18- ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ನೇಮಕಾತಿಯಲ್ಲಿ ಕ್ರೀಡಾಳುಗಳಿಗೆ ಶೇ.2ರಷ್ಟು ಮೀಸಲಾತಿ ನೀಡುವ ಕುರಿತು ಸಕಾರಾತ್ಮಕವಾಗಿ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಕಾರ್ಯಕ್ರದಲ್ಲಿ 19 ಏಷಿಯನ್ ಗೇಮ್ಸ್ನಲ್ಲಿ ವಿಜೇತರಾದ ಎಂಟು ಮಂದಿ ಕ್ರೀಡಾಪಟುಗಳು ಹಾಗೂ ಮೂವರು ಕೋಚ್ಗಳನ್ನು ಸನ್ಮಾನಿಸಿದರು.
|
3 |
+
ಚೀನಾ ಹಾಂಗ್ಝೌನಲ್ಲಿ ಸೆಪ್ಟಂಬರ್ .23ರಿಂದ ಅಕ್ಟೋಬರ್ 8ರವರೆಗೂ ನಡೆದ ಏಷ್ಯನ್ ಗೇಮ್ಸ್ನಲ್ಲಿ ಭಾರತ 28 ಚಿನ್ನ, 38 ಬೆಳ್ಳಿ, 41 ಕಂಚಿನ ಪದಕ ಸೇರಿ ಭಾರತೀಯ ಕ್ರೀಡಾಳುಗಳು 107 ಪದಕ ಗೆದ್ದರಿಂದ ಭಾರತ ಪದಕ ಪಟ್ಟಿಯಲ್ಲಿ ನಾಲ್ಕನೇ ಪಡೆಯುವಂತೆ ಮಾಡಿದ್ದಾರೆ. ಕರ್ನಾಟಕದ ಕೀಡಾಪಟುಗಳ ಪೈಕಿ ನಾಲ್ಕು ಚಿನ್ನ, ನಾಲ್ಕು ಬೆಳ್ಳಿ ಗೆದ್ದಿದ್ದಾರೆ ಎಂದು ಹೇಳಿದರು.
|
4 |
+
ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸ್ಪರ್ಧೆ ಇರುತ್ತದೆ. ಅಲ್ಲಿ ಚಿನ್ನ, ಬೆಳ್ಳಿ ಪದಕ ಗೆಲ್ಲುವುದು ಸಾಧನೆಯಲ್ಲ. ನಿಮ್ಮ ಪರಿಶ್ರಮದ ಫಲ ಇದೆ. ಮುಂದಿನ ಒಲಿಂಪಿಕ್ನಲ್ಲೂ ಭಾಗವಹಿಸಿ ಇನ್ನಷ್ಟು ಪದಕಗಳನ್ನು ಗೆದ್ದು ನಾಡಿನ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿ ಎಂದು ಹಾರೈಸಿದರು.
|
5 |
+
ಪ್ರಸ್ತುತ ಪೊಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ.3 ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಸಕಾರಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
|
6 |
+
ದೇಶ ಮತ್ತು ರಾಜ್ಯದ ಗೌರವ ಹೆಚ್ಚು ಮಾಡಿದ್ದೀರಿ. ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ವಿಷಯ. ಈ ಬಾರಿ ಚೀನಾದಲ್ಲಿ ನಡೆದ ಏಷ್ಯನ್ ಗೇಮ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳು ಅಧಿತ್ಯಕ ಪದಕಗಳನ್ನು ಗೆದ್ದಿದ್ದಾರೆ. ಕಳೆದ ಬಾರಿ 70, ಈ ಬಾರಿ 107 ಪದಕ ಗೆದ್ದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇಡೀ ಜಗತ್ತಿನಲ್ಲಿ ಜನಸಂಖ್ಯೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಏಷ್ಯನ್ ಗೇಮ್ಸ್ನಲ್ಲಿಯೂ ಮೊದಲ-ಎರಡನೇ ಸ್ಥಾನ ಬಂದರೆ ಗೌರವ ಹೆಚ್ಚಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
|
7 |
+
ರಾಜ್ಯ ಸರ್ಕಾರ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದ್ದು, ತಾವು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಏಷ್ಯನ್ ಗೇಮ್ಸ್, ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬಹುಮಾನ ಮೊತ್ತ ನೀಡುವ ಕುರಿತು ಘೋಷಿಸಲಾಗಿತ್ತು. ಅತಿ ಹೆಚ್ಚು ಮೊತ್ತದ ಬಹುಮಾನ ಘೋಷಿಸಿದ ಮೊದಲ ರಾಜ್ಯ ನಮ್ಮದು ಎಂದು ಅವರು ವಿವರಿಸಿದರು.
|
8 |
+
ಪದಕ ವಿಜೇತರು:ಕ್ರಿಕೆಟ್ನಲ್ಲಿ ಚಿನ್ನ ಗೆದ್ದ ರಾಜೇಶ್ವರಿ ಗಾಯಕ್ವಾಡ್ ಪರವಾಗಿ ಅವರ ಸಹೋದರಿ ಭುವನೇಶ್ವರಿ ಗಾಯಕ್ ವಾಡ್ ಸನ್ಮಾನ ಸ್ವೀಕರಿಸಿದರು. ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣ, ಅಥ್ಲೇಟಿಕ್ಸ್ ಪುರುಷರ 4400 ಮೀಟರ್ ರಿಲೆಯಲ್ಲಿ ಮಿಜೋ ಚಾಕೋ ಕುರಿಯನ್, ನಿಹಾಲ್ಜೋಯಲ್ ಚಿನ್ನದ ಪದಕ ಗೆದ್ದಿದ್ದಾರೆ. ಬ್ಯಾಡ್ಮಿಂಟನ್ನಲ್ಲಿ ಮಿಥುನ್ ಮಂಜುನಾಥ್, ಸಾಯಿ ಪ್ರತೀಕ್, ಗಾಲನಲ್ಲಿ ಅದಿತಿ ಅಶೋಕ್ ಬೆಳ್ಳಿ ಪದಕ ಗೆದ್ದಿದ್ದಾರೆ. ಕುಮಾರಿ ದಿವ್ಯ ಶೂಟಿಂಗ್ ಎರಡು ಬೆಳ್ಳಿ ಪದಕ ಪಡೆದಿದ್ದಾರೆ. ತಲಾ ಒಂದು ಪದಕಕ್ಕೆ 15 ಲಕ್ಷದಂತೆ 30 ಲಕ್ಷ ರೂಪಾಯಿಯ ಚೆಕ್ ವಿತರಿಸಲಾಯಿತು.
|
9 |
+
“ಕಾಂಗ್ರೆಸ್ ಬಂದಿದೆ, ಲೂಟಿ ಜೋರಾಗಿದೆ, ಹೈಕಮಾಂಡ್ ಜೇಬು ತುಂಬಿದೆ”
|
10 |
+
ತರಬೇತುದಾರರಾದ ಕಬ್ಬಡಿ ಕ್ರೀಡೆಯ ವಿ.ತೇಜಸ್ವಿನಿ, ಹಾಕಿ ತರಬೇತುದಾರರಾದ ಬಿ.ಎಸ್.ಅಂಕಿತ, ಬಾಕ್ಸಿಂಗ್ ತರಬೇತುದಾರರಾದ ಸಿ.ಎ.ಕುಟ್ಟಪ್ಪ ಅವರಿಗೂ 5 ಲಕ್ಷ ರೂಪಾಯಿ ನಗದು ಪುರಷ್ಕಾರ ನೀಡಿ ಸನ್ಮಾನಿಸಲಾಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾಗೇಂದ್ರ, ಕೃಷಿ ಸಚಿವ ಚಲುವರಾಯಸ್ವಾಮಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ನಸೀರ್ ಅಹ್ಮದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
|
eesanje/url_46_328_7.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ವಿದ್ಯುತ್ ಚಾಲಿತ ವಾಹನಗಳ ನೋಂದಣಿಯಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ
|
2 |
+
ಬೆಂಗಳೂರು, ಅ.18- ರಾಜ್ಯದಲ್ಲಿ ಸದ್ಯಕ್ಕೆ 2 ಲಕ್ಷ ವಿದ್ಯುತ್ ಚಾಲಿತ ವಾಹನಗಳು ನೋಂದಣಿಯಾಗಿದ್ದು, ದೇಶಕ್ಕೆ ಮೂರನೇ ಸ್ಥಾನದಲ್ಲಿದ್ದೇವೆ. ಮುಂಬರುವ ದಿನಗಳಲ್ಲಿ ಇ.ವಿ.ವಾಹನಗಳು ಮತ್ತಷ್ಟು ಜನಪ್ರಿಯವಾಗಲಿದ್ದು, ಸುಗಮ, ತ್ವರಿತ, ಸುರಕ್ಷಿತ ಮತ್ತು ಮಾಲಿನ್ಯರಹಿತ ಸಂಚಾರವನ್ನು ಸಾಧ್ಯವಾಗಿಸಲಿವೆ. ಇನ್ನು ಒಂದು ದಶಕದಲ್ಲಿ ಸಾಂಪ್ರದಾಯಿಕ ಇಂಧನದ ವಾಹನಗಳು ನೇಪಥ್ಯಕ್ಕೆ ಸರಿಯಲಿವೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ್ ವಿವರಿಸಿದರು.
|
3 |
+
ಕೆಂಗೇರಿ ಸಮೀಪದ ಮೈಲಸಸಂದ್ರದಲ್ಲಿರುವ ಜೆಎಸ್ಎಸ್ ತಾಂತ್ರಿಕ ಶಿಕ್ಷಣ ಅಕಾಡೆಮಿ ಸ್ಥಾಪಿಸಿರುವ ಜಾಗತಿಕ ಮಟ್ಟದ ವಿದ್ಯುತ್ ಚಾಲಿತ ವಾಹನಗಳ ಉತ್ಕೃಷ್ಟತಾ ಮತ್ತು ನಾವೀನ್ಯತಾ ಕೇಂದ್ರವನ್ನು ಲೋಕಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ಸದ್ಯಕ್ಕೆ 7 ಒಇಎಂ, ಬಿಡಿಭಾಗಗಳನ್ನು ತಯಾರಿಸುವ 50 ಕಂಪನಿಗಳು, 45 ನವೋದ್ಯಮಗಳು, ಅತ್ಯಕ ಆರ್. ಡಿ.ಕೇಂದ್ರಗಳು ಇವೆ. ಈ ಕ್ಷೇತ್ರವು ಸಾವಿರಾರು ಸಂಖ್ಯೆಯ ಉದ್ಯೋಗಗಳನ್ನು ಸೃಷ್ಟಿಸುವ ಸಾಮಥ್ರ್ಯ ಹೊಂದಿದ್ದು, ಇದಕ್ಕೆ ತಕ್ಕಂತೆ ಮಾನವ ಸಂಪನ್ಮೂಲವನ್ನು ಸಜ್ಜುಗೊಳಿಸುವ ಉಪಕ್ರಮವನ್ನು ಶಿಕ್ಷಣ ಕ್ರಮದಲ್ಲೇ ಅಳವಡಿಸಿಕೊಳ್ಳಲಾಗಿದೆ ಎಂದು ಹೇಳಿದರು.
|
4 |
+
ವಿದ್ಯುತ್ ಚಾಲಿತ ವಾಹನಗಳ ಕ್ಷೇತ್ರಕ್ಕೆ ಸಂಬಂಧಿಸಿದಂತೆ ದೇಶದಲ್ಲಿ ಸಮರ್ಪಕ ನೀತಿಯನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕವಾಗಿದೆ. ಈಗ ಈ ಕ್ಷೇತ್ರದಲ್ಲಿ ರಾಜ್ಯವು ಈಗಾಗಲೇ 25 ಸಾವಿರ ಕೋಟಿ ರೂ. ಹೂಡಿಕೆಯನ್ನು ಆಕರ್ಷಿಸಿದೆ. ಮುಂಬರುವ ದಿನಗಳಲ್ಲಿ ಇನ್ನೂ 15 ಸಾವಿರ ಕೂಟಿ ರೂ. ಹೂಡಿಕೆ ಇಲ್ಲಿ ಸಾಧ್ಯವಾಗಲಿದೆ ಎಂದರು.
|
5 |
+
“ಕಾಂಗ್ರೆಸ್ ಬಂದಿದೆ, ಲೂಟಿ ಜೋರಾಗಿದೆ, ಹೈಕಮಾಂಡ್ ಜೇಬು ತುಂಬಿದೆ”
|
6 |
+
ಮೊದಲಿಗೆ ನಮ್ಮಲ್ಲಿ 2017ರಲ್ಲಿ ವಿದ್ಯುತ್ ಚಾಲಿತ ವಾಹನಗಳ ನೀತಿಯನ್ನು ಜಾರಿಗೆ ತರಲಾಯಿತು. 2021ರಲ್ಲಿ ಇದನ್ನು ಜಾಗತಿಕ ಮಟ್ಟಕ್ಕೆ ತಕ್ಕಂತೆ ಪರಿಷ್ಕರಿಸಲಾಯಿತು. ರಾಜ್ಯದ ನೀತಿಯು ಇ.ವಿ.ಬ್ಯಾಟರಿ ಮತ್ತು ಕೋಶಗಳ ಉತ್ಪಾದನೆ, ಬಿಡಿಭಾಗಗಳ ತಯಾರಿಕೆ, ಒಇಎಂ (ಒರಿಜನಲ್ ಎಕ್ವಿಪ್ಮೆಂಟ್ ಮ್ಯಾನುಫ್ಯಾಕ್ಚರರ್ಸ್), ಚಾರ್ಜಿಂಗ್ ಮತ್ತು ಪರೀಕ್ಷಾರ್ಥ ಮೂಲಸೌಲಭ್ಯ, ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಹೂಡಿಕೆಯ ಸಮಗ್ರ ಮೌಲ್ಯ ಸರಪಳಿಯನ್ನು ಒಳಗೊಂಡಿದೆ. ಹೀಗಾಗಿ, ಇ.ವಿ. ಕ್ಷೇತ್ರದಲ್ಲಿ ರಾಜ್ಯವು ದೇಶಕ್ಕೇ ಪ್ರಥಮ ಸ್ಥಾನದಲ್ಲಿದೆ ಎಂದು ನುಡಿದರು.
|
7 |
+
ಜೆಎಸ್ಎಸ್ ತಾಂತ್ರಿಕ ಶಿಕ್ಷಣ ಅಕಾಡೆಮಿಯಲ್ಲಿ ಸ್ಥಾಪಿಸಿರುವ ಉತ್ಕೃಷ್ಟತಾ ಮತ್ತು ನಾವೀನ್ಯತಾ ಕೇಂದ್ರವು ಅತ್ಯುತ್ತಮ ಗುಣಮಟ್ಟದಿಂದ ಕೂಡಿದೆ. ಇದು ತರಬೇತಿ, ಸಂಶೋಧನೆ, ಕೌಶಲಾಭಿವೃದ್ಧಿ, ಸಹಭಾಗಿತ್ವ ಮತ್ತು ಪರಿಪೋಷಣೆಗಳಿಗೆ ಉತ್ತಮ ವೇದಿಕೆಯಾಗಿ ಒದಗಿ ಬರಲಿದೆ. ಇದು ಅಂತಿಮವಾಗಿ ಸುಸ್ಥಿ�� ಅಭಿವೃದ್ಧಿಯ ಗುರಿಯನ್ನು ಸಾಧಿಸಲು ಚಿಮ್ಮುಹಲಗೆಯಾಗಿ ಕೆಲಸ ಮಾಡಲಿದೆ ಎಂದು ಪಾಟೀಲ ಭರವಸೆ ವ್ಯಕ್ತಪಡಿಸಿದರು.
|
8 |
+
ಕಾರ್ಯಕ್ರಮಕ್ಕೂ ಮೊದಲು ಸಚಿವರು ಉತ್ಕೃಷ್ಟತಾ ಕೇಂದ್ರದಲ್ಲಿರುವ 3ಡಿ ಎಕ್ಸಪೀರಿಯನ್ಸ್ ಲ್ಯಾಬ್, ಸರ್ವೀಸ್ ಲ್ಯಾಬ್, ಬಿಡಿಭಾಗಗಳ ಲ್ಯಾಬ್ ಸೇರಿದಂತೆ ಪ್ರತಿಯೊಂದು ವಿಭಾಗಕ್ಕೂ ಭೇಟಿ ನೀಡಿ, ಅಲ್ಲಿನ ಸಾಧನ-ಸಲಕರಣೆಗಳು ಮತ್ತು ಸೌಲಭ್ಯಗಳನ್ನು ವೀಕ್ಷಿಸಿ, ವಿವರಣೆ ಪಡೆದುಕೊಂಡರು.
|
9 |
+
ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಸಂಸದ ಡಿ.ವಿ.ಸದಾನಂದ ಗೌಡ, ಶಾಸಕ ಎಸ್ ಟಿ ಸೋಮಶೇಖರ್ ಮುಂತಾದವರು ಉಪಸ್ಥಿತರಿದ್ದರು.
|
eesanje/url_46_328_8.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿ ಮತ್ತು ಭ್ರಷ್ಟಚಾರಕ್ಕೆ ಜನ್ಮಜನ್ಮದ ನಂಟಿದೆ : ಕಾಂಗ್ರೆಸ್
|
2 |
+
ಬೆಂಗಳೂರು, ಅ.18- ಆದಾಯ ತೆರಿಗೆ ದಾಳಿಯನ್ನು ನೆಪ ಮಾಡಿಕೊಂಡು ಕಾಂಗ್ರೆಸ್ ನಾಯಕರ ವಿರುದ್ಧ ಪೋಸ್ಟರ್ ವಾರ್ ಶುರು ಮಾಡಿದ್ದ ಬಿಜೆಪಿಗೆ, ತೀರುಗೇಟು ನೀಡಲಾಗಿದ್ದು, ಬಿಜೆಪಿ ಮತ್ತು ಭ್ರಷ್ಟಚಾರ.. ಇದು ಜನ್ಮಜನ್ಮದ ನಂಟು ಎಂದು ಆರೋಪಿಸಲಾಗಿದೆ.
|
3 |
+
ಕಾಂಗ್ರೆಸ್ ನಾಯಕರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಪೋಸ್ಟರ್ನಲ್ಲಿ ಹಗರಣಗಳಲ್ಲಿ ಸಿಲುಕಿದ ಬಿಜೆಪಿಯವರ ಹೆಸರು ಮತ್ತು ಭಾವಚಿತ್ರವನ್ನು ಹಾಕಲಾಗಿದೆ. ಬಿಜೆಪಿ ನಾಯಕರೇ ನಿಮಗೆ ಆತ್ಮಸಾಕ್ಷಿ ಇದ್ದರೆ ಮಾಡಿದ ಪಾಪಕ್ಕೆ ಪ್ರಾಯಶ್ಚಿತವಾಗಿ ಇಷ್ಟೊತ್ತಿಗೆ ಪಕ್ಷ ವಿಸರ್ಜನೆ ಮಾಡಬೇಕಿತ್ತು ಎಂದು ಟಾಂಗ್ ನೀಡಲಾಗಿದೆ.
|
4 |
+
ಜೈಲು ಪಾಲಾದ ಬಿಜೆಪಿ ನಾಯಕರು ಎಂಬ ತಲೆಬಹರದಡಿ ಮಾಜಿಮುಖ್ಯಮಂತ್ರಿ ಯಡಿಯೂರಪ್ಪ. ಜನಾರ್ದನ ರೆಡ್ಡಿ, ಕಟ್ಟಾಸುಬ್ರಮಣ್ಯನಾಯ್ಡು, ಕೃಷ್ಣಯ್ಯ ಶೆಟ್ಟಿ ಹೆಸರು ಮತ್ತು ಪೋಟೋ ಹಾಕಲಾಗಿದೆ.
|
5 |
+
“ಕಾಂಗ್ರೆಸ್ ಬಂದಿದೆ, ಲೂಟಿ ಜೋರಾಗಿದೆ, ಹೈಕಮಾಂಡ್ ಜೇಬು ತುಂಬಿದೆ”
|
6 |
+
ಶೇ.40ರಷ್ಟು ಕಮಿಷನ್ ಆರೋಪದಲ್ಲಿ ಈಶ್ವರಪ್ಪ, ಮುನಿರತ್ನ, ಡಾ.ಕೆ.ಸುಧಾಕರ್, ಬಿ.ಸಿ.ಪಾಟೀಲ್, ಪಿಎಸ್ಐ ನೇಮಕಾತಿ ಹಗರಣದಲ್ಲಿ ಡಾ.ಸಿ.ಎನ್.ಅಶ್ವಥ್ನಾರಾಯಣ್, ಬಿ.ವೈ.ವಿಜಯೇಂದ್ರ, ಅರಗಜ್ಞಾನೇಂದ್ರ ಅವರ ಹೆಸರುಗಳು, ಬಿಟ್ಕಾಯಿನ್ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ರಾಯರೆಡ್ಡಿ, ನಳೀನ್ಕುಮಾರ್ ಕಟೀಲ್, ಲಂಚ ಸ್ವಿಕರಿಸುವಾಗ ಸಿಕ್ಕಿ ಬಿದ್ದವರ ಸಾಲಿನಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಮಗ ಪ್ರಶಾಂತ್ ಮಾಡಾಳ್ ಹೆಸರು ಕೇಳಿ ಬಂದಿದೆ ಎಂದು ಪೋಸ್ಟರ್ನಲ್ಲಿ ವಿವರಿಸಲಾಗಿದೆ.
|
7 |
+
ವಿಧಾನಸಭೆ ಚುನಾವಣೆಯಲ್ಲಿ ಸ್ರ್ಪಧಿಸಲು ಹಣ ಪಡೆದು ವಂಚಿಸಿದ್ದ ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಬಿ.ಎಲ್.ಸಂತೋಶ್, ಸುನೀಲ್ ಕುಮಾರ್, ಸಿ.ಟಿ.ರವಿ ಹೆಸರು ಹೇಳಿ ಬಂದಿದೆ ಎಂದು ದೂರಲಾಗಿದೆ.
|
eesanje/url_46_328_9.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಹಿಂಗಾರು ಮಳೆ ಮತ್ತಷ್ಟು ವಿಳಂಬ
|
2 |
+
ಬೆಂಗಳೂರು, ಅ.18- ಮುಂಗಾರು ಮಳೆಯಂತೆ ಹಿಂಗಾರು ಮಳೆಯ ಆರಂಭವೂ ವಿಳಂಬವಾಗಿದ್ದು, ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿದೆ. ಕಳೆದ ಎರಡು ವಾರದಲ್ಲಿ ಒಣಹವೆ ಹೆಚ್ಚಾಗಿದ್ದು, ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಇದರಿಂದ ಹಿಂಗಾರು ಹಂಗಾಮಿನ ಬಿತ್ತನೆಯೂ ವಾಡಿಕೆಯಂತೆ ಆಗುತ್ತಿಲ್ಲ.
|
3 |
+
ಉತ್ತರ ಕರ್ನಾಟಕ ಭಾಗದಲ್ಲಿ ಅಕ್ಟೋಬರ್ ಆರಂಭದಿಂದಲೂ ಸಾಕಷ್ಟು ಮಳೆಯಾಗಿಲ್ಲ. ಒಳನಾಡಿನ ಹಲವೆಡೆ ಮಳೆಯಾಗಿದ್ದರೂ ವಾಡಿಕೆ ಪ್ರಮಾಣದಲ್ಲಿ ಆಗುತ್ತಿಲ್ಲ. ಈ ನಡುವೆ ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆಯೇ ಎಂಬುದು ಸದ್ಯಕ್ಕೆ ಗೊಚರವಾಗುತ್ತಿಲ್ಲ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು.
|
4 |
+
ಶೆಟ್ಟರ್ – ಸಾಹುಕಾರ್ ಭೇಟಿ ಬಗ್ಗೆ ಡಿಕೆಶಿ ಹೇಳಿದ್ದೇನು..?
|
5 |
+
ಹವಾಮಾನದಲ್ಲಿ ಉಂಟಾಗಿರುವ ವೈಪರಿತ್ಯದಿಂದ ನೈರುತ್ಯ ಮುಂಗಾರು ಮಳೆಯಲ್ಲೂ ವ್ಯತ್ಯಯವಾಗಿ ರಾಜ್ಯದಲ್ಲಿ ಬರದ ಛಾಯೆ ಆವರಿಸಿದೆ. ಈಶಾನ್ಯ ಹಿಂಗಾರು ಹಂಗಾಮಿನಲ್ಲೂ ಹವಾಮಾನದ ವೈಪರಿತ್ಯ ಮುಂದುವರೆಯಲಿದೆ. ಅಂದರೆ ಮುಂದಿನ ಜನವರಿವರೆಗೂ ಹೆಚ್ಚುಕಡಿಮೆ ಹವಾಮಾನ ವೈಪರಿತ್ಯದ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು ಎಂದರು.
|
6 |
+
ಸಾಮಾನ್ಯವಾಗಿ ಸೆಪ್ಟೆಂಬರ್ ಅಂತ್ಯಕ್ಕೆ ಮುಂಗಾರು ಮುಕ್ತಾಯಗೊಂಡು ಅಕ್ಟೋಬರ್ ಮೊದಲ ವಾರದಲ್ಲಿ ಹಿಂಗಾರು ಆರಂಭವಾಗಬೇಕಿತ್ತು. ಆದರೆ, ಹವಾಮಾನ ವೈಪರಿತ್ಯದಿಂದ ಇನ್ನೂ ಮುಂಗಾರು ಮಳೆ ಮುಕ್ತಾಯಗೊಂಡಿಲ್ಲ. ಮುಂಗಾರು ಮಾರುತಗಳ ಮರಳುವಿಕೆ ಆರಂಭಗೊಂಡಿದೆ. ಇನ್ನೆರಡು ದಿನದಲ್ಲಿ ಮುಂಗಾರು ಮರಳುವಿಕೆ ಪೂರ್ಣಗೊಳ್ಳಲಿದೆ.
|
7 |
+
ವಾಯುಭಾರ ಕುಸಿತಗಳು ಉಂಟಾಗಿರುವುದರಿಂದ ಮುಂಗಾರು ಮುಗಿಯುತ್ತಿದ್ದಂತೆ ಈ ಶಾನ್ಯ ಹಿಂಗಾರು ಆರಂಭಗೊಳ್ಳಬಹುದು. ವಾಯುಭಾರ ಕುಸಿತದಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆಯಾಗಲಿದೆಯೆ ಅಥವಾ ಇಲ್ಲವೆ ಎಂಬುದು ನಾಳೆ ಸ್ಪಷ್ಟವಾಗಲಿದೆ ಎಂದು ಅವರು ಹೇಳಿದರು.
|
8 |
+
ಅಕ್ಟೋಬರ್ ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಅಂದರೆ ಶೇ.50ಕ್ಕಿಂತಲೂ ಹೆಚ್ಚು ಮಳೆ ಕೊರತೆ ರಾಜ್ಯದಲ್ಲಿ ಕಂಡುಬರುತ್ತಿದೆ. ಹೀಗಾಗಿ ಹಿಂಗಾರು ಹಂಗಾಮಿನ ಬೆಳೆಗಳ ಬಿತ್ತನೆಗೆ ತೊಂದರೆಯಾಗಿದೆ. ಮುಂಗಾರು ಹಂಗಾಮಿನ ಬೆಳೆಗಳು ಸಹ ತೇವಾಂಶ ಕೊರತೆಯಿಂದ ಒಣಗುತ್ತಿವೆ.
|
9 |
+
ಇಂಧನವಿಲ್ಲದ ಕಾರಣ 48 ವಿಮಾನ ಹಾರಾಟ ರದ್ದು ಮಾಡಿದ ಪಾಕಿಸ್ತಾನ
|
10 |
+
ಮಳೆಗಾಲ ಮುಕ್ತಾಯಗೊಂಡು ಚಳಿಗಾಲ ಆರಂಭವಾಗುವ ಈ ಸಂದರ್ಭದಲ್ಲಿ ರಾಜ್ಯದಲ್ಲಿ ಬೇಸಿಗೆಯ ವಾತಾವರಣ ಕಂಡುಬರುತ್ತಿದೆ. ಭಾಗಶಃ ಮೋಡ ಕವಿದಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಎಲ್ಲೆಡೆ ಒಣ ಹವೆಯೇ ಮುಂದುವರೆದಿದೆ. ಮಳೆ ಕೊರತೆಯಿಂದಾಗ��� ಜಲಾಶಯಗಳ ಒಳ ಹರಿವು ಕ್ಷೀಣಿಸಿದ್ದು, ಮುಂದಿನ ದಿನಗಳು ಇನ್ನಷ್ಟು ಕಷ್ಟದಾಯಕವಾಗಲಿವೆ.
|
eesanje/url_46_329_1.txt
ADDED
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕರ್ನಾಟಕ ರಾಜ್ಯಕ್ಕೆ 50 ವರ್ಷದ ಸಂಭ್ರಮ : ಲಾಂಛನ ಬಿಡುಗಡೆ
|
2 |
+
ಬೆಂಗಳೂರು,ಅ.17- ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ತುಂಬಿರುವ ಹಿನ್ನಲೆಯಲ್ಲಿ ಆಚರಿಸಲಾಗುತ್ತಿರುವ ಕರ್ನಾಟಕ ಸಂಭ್ರಮ ಕಾರ್ಯಕ್ರಮದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿಂದು ಬಿಡುಗಡೆ ಮಾಡಿದರು.
|
3 |
+
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
|
4 |
+
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ದೇವರಾಜ್ ಅರಸ್ ಅವರು 50 ವರ್ಷಗಳ ಹಿಂದೆ ಕರ್ನಾಟಕ ಎಂದು ನಾಮಕರಣ ಮಾಡುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ತಾಯಿ ಜನ್ಮ ನೀಡಿದರೆ, ದೇವರು ಬುದ್ದಿ ಕೊಡುತ್ತಾರೆ, ಗುರುಗಳು ವಿದ್ಯೆ ಕೊಡುತ್ತಾರೆ. ಕನ್ನಡ ನಾಡಿನಲ್ಲಿ ಹುಟ್ಟಿರುವುದೇ ನಮ್ಮ ಪುಣ್ಯ ಎಂದರು.
|
5 |
+
ಇತಿಹಾಸ ಮರೆತವರಿಂದ ಇತಿಹಾಸ ಸೃಷ್ಟಿಸಲು ಸಾಧ್ಯವಾಗುವುದಿಲ್ಲ. ನಮ್ಮ ಭಾಷೆ ನಮ್ಮ ಹೆಮ್ಮೆ ಎಂದು ಅವರು ಹೇಳಿದರು. ಕರ್ನಾಟಕ ಸಂಭ್ರಮ ಕಾರ್ಯಕ್ರಮ ಆಚರಿಸುವ ಅವಕಾಶ ದೊರೆತಿರುವುದು ನಮ್ಮ ಪುಣ್ಯ ಎಂದು ಕುವೆಂಪು ಅವರ ಕವನಗಳನ್ನು ಉಪಮುಖ್ಯಮಂತ್ರಿ ವಾಚಿಸಿದರು. ಕನ್ನಡಿಗನಾಗು, ಭಾರತೀಯನಾಗು ವಿಶ್ವ ಮಾನವನಾಗು ಎಂಬ ಕುವೆಂಪು ಅವರ ಸಂದೇಶವನ್ನು ಸಾರುವುದು ಸೇರಿದಂತೆ ವರ್ಷವಿಡೀ ಕರ್ನಾಟಕ ಸಂಭ್ರಮವನ್ನು ಆಚರಿಸುವುದಾಗಿ ಅವರು ಹೇಳಿದರು.
|
6 |
+
ವಿದ್ಯೆ ಕೇವಲ ಸರ್ಟಿಫಿಕೇಟ್ ಆಗಿರಬಾರದು, ಸಂಸ್ಕಾರ ಒಳಗೊಂಡಿರಬೇಕು : ಎಚ್ಡಿಡಿ
|
7 |
+
ಇದು ಸರ್ಕಾರದ ಕಾರ್ಯಕ್ರಮವಾಗಬಾರದು. ಜನರ ಕಾರ್ಯಕ್ರಮವಾಗಬೇಕು. ಬೀದರ್ನಿಂದ ಚಾಮರಾಜನಗರ ದವರೆಗೂ, ಮಂಗಳೂರಿನಿಂದ ಕೋಲಾರದವರೆಗೂ ಎಲ್ಲ ಮೂಲೆ ಮೂಲೆಗಳಲ್ಲೂ ಸಂಭ್ರಮಾಚರಣೆ ನಡೆಯಲಿದೆ. ಮನೆಗಳ ಮುಂದೆ ರಂಗೋಲಿ ಇಟ್ಟು ಕನ್ನಡ ಜ್ಯೋತಿಯನ್ನು ಬರಮಾಡಿಕೊಂಡಿದ್ದಾರೆ ಎಂದು ಶ್ಲಾಘಿಸಿದರು.
|
8 |
+
ಲಾಂಛನ ಸೃಷ್ಟಿಸುವ ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಕನ್ನಡ ಸಂಸ್ಕøತಿ ಇಲಾಖೆಯಿಂದ 25 ಸಾವಿರ ರೂ. ಬಹುಮಾನ ನೀಡಲಾಗಿದೆ. ಬಿಬಿಎಂಪಿಯಿಂದ ಒಂದು ಲಕ್ಷ ರೂ. ಬಹುಮಾನ ನೀಡಲು ತೀರ್ಮಾನಿಸಲಾಗಿದೆ. ನಾಡಿನ ಸಂಸ್ಕøತಿ, ಕಲೆಗಳ ಅರಿವು ಮೂಡಿಸಲು ಪ್ರೋತ್ಸಾಹ ನೀಡಬೇಕಿದೆ ಎಂದರು.
|
9 |
+
ಕನ್ನಡ ಮಾತನಾಡುವ ಅನಿವಾರ್ಯತೆ ಸೃಷ್ಟಿಸಿಬೆಂಗಳೂರು,ಅ.17- ನಾಡಿನಲ್ಲಿ ವಾಸಿಸುತ್ತಿರುವ ಪ್ರತಿಯೊಬ್ಬರು ಕನ್ನಡಿಗರೇ. ಅವರೆಲ್ಲರೂ ಕನ್ನಡ ಮಾತನಾಡುವುದನ್ನು ಕಲಿಯಬೇಕು ಅಂತಹ ವಾತಾವರಣ ಮತ್ತು ಅನಿವಾರ್ಯತೆ ಸೃಷ್ಟಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
|
10 |
+
ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ತುಂಬಿರುವ ಹಿನ್ನಲೆಯಲ್ಲಿ ಆಚರಿಸಲಾಗುತ್ತಿರುವ ಕರ್ನಾಟಕ ಸಂಭ್ರಮ ಕಾರ್ಯಕ್ರಮದ ಲಾಂಛನ ಬಿಡುಗಡೆ ��ಾಡಿ ಅವರು ಮಾತನಾಡಿದರು.
|
11 |
+
ಕರ್ನಾಟಕ ಏಕೀಕರಣವಾದಾಗ ಬೇರೆ ಬೇರೆ ಭಾಷೆ ಮಾತನಾಡುವ ಜನ ಇದ್ದರು. ಅವರ ಮಾತೃ ಭಾಷೆ ತಮಿಳು, ತೆಲುಗು, ಮರಾಠಿ, ಹಿಂದಿ ಮಾತನಾಡುತ್ತಾರೆ. ಕೆಲವರಿಗೆ ಕನ್ನಡ ಮಾತನಾಡಲು ಬರುವುದಿಲ್ಲ. ರಾಜ್ಯದಲ್ಲಿ ಇರುವವರೆಲ್ಲ ಕನ್ನಡ ಮಾತನಾಡುವ ಅನಿವಾರ್ಯವನ್ನು ನಾವು ಸೃಷ್ಟಿಸಬೇಕು ಎಂದರು.
|
12 |
+
ಸಿಎಂ ಇಬ್ರಾಹಿಂಗೆ ಟಾಂಗ್ ಕೊಟ್ಟ ಶರವಣ
|
13 |
+
ತಮಿಳುನಾಡಿನಲ್ಲಿ ತಮಿಳು, ಉತ್ತರಪ್ರದೇಶದಲ್ಲಿ ಹಿಂದಿ, ಆಂಧ್ರದಲ್ಲಿ ತೆಲುಗು ಮಾತನಾಡಲು ಬರದಿದ್ದರೆ ಅಲ್ಲಿ ಬದುಕಲು ಸಾಧ್ಯವಿಲ್ಲ. ಆದರೆ ಕರ್ನಾಟಕದಲ್ಲಿ ಕನ್ನಡವೇ ಬರದೇ ಬದುಕುವವರು ಇದ್ದಾರೆ. ಇದೇ ನಮ್ಮ ಮತ್ತು ಪಕ್ಕದ ರಾಜ್ಯಗಳಿರುವ ವ್ಯತ್ಯಾಸ. ನಾವು ಉದಾರವಾದಿಗಳು ಎಂದರು. ಬೇರೆ ಭಾಷೆಯನ್ನು ಕಲಿಯುವುದು ಬೇಡ ಎನ್ನುವುದಿಲ್ಲ. ಕರ್ನಾಟಕದಲ್ಲಿ ಕನ್ನಡಿಗರು ಕನ್ನಡವನ್ನು ಮಾತನಾಡುವ ಪ್ರವೃತ್ತಿ ಬೆಳೆಸಿಕೊಂಡು ಬೇರೆಯವರೂ ಕನ್ನಡ ಮಾತನಾಡುವ ವಾತಾವರಣ ಸೃಷ್ಟಿಸಬೇಕು ಎಂದು ಹೇಳಿದರು.
|
eesanje/url_46_329_10.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ವಿದ್ಯುತ್ ದರ ಏರಿಕೆ ಕುರಿತು ಸ್ಪಷ್ಟನೆ ಕೊಟ್ಟ ಬೆಸ್ಕಾಂ
|
2 |
+
ಬೆಂಗಳೂರು, ಅ.16- ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ದರದಲ್ಲಿ ಮೊದಲಿಗಿಂತಲೂ ಶೇ. 14 ಪೈಸೆಯಷ್ಟು ಕಡಿತವಾಗಿದೆ ಎಂದು ಬೆಸ್ಕಾಂ ತಿಳಿಸಿದೆ. ಈ ಮೊದಲು ಆಗಸ್ಟ್ನಲ್ಲಿ ಪ್ರತಿ ಯುನಿಟ್ಗೆ 1.15 ರೂಪಾಯಿ ವಿದ್ಯುತ್ ಮತ್ತು ಇಂಧನ ಖರೀದಿ ಹೊಂದಾಣಿಕೆ ವೆಚ್ಚ ನಿಗದಿಯಾಗಿತ್ತು. ಸೆಪ್ಟೆಂಬರ್ನಲ್ಲಿ ಅದನ್ನು ಕೆಇಆರ್ಸಿ ಪರಿಷ್ಕರಣೆ ಮಾಡಿದ್ದು, 14 ಪೈಸೆ ಕಡಿಮೆ ಮಾಡಿದೆ. ಹೀಗಾಗಿ ಪ್ರತಿ ಯುನಿಟ್ಗೆ ಪ್ರಸ್ತುತ 1.1 ಪೈಸೆ ನಿಗದಿಯಾಗಿದೆ. ಇದರ ಲಾಭವನ್ನು ಬೆಸ್ಕಾಂಗಳು ಗ್ರಾಹಕರಿಗೆ ತಲುಪಿಸುತ್ತಿವೆ.
|
3 |
+
ಪ್ರತಿಯೊಂದು ಬಿಲ್ನಲ್ಲೂ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ದರದ ಮೇಲೆ ಶುಲ್ಕ ನಿಗದಿಯಾಗುತ್ತದೆ. ಇದನ್ನು ಗ್ರಾಹಕರಿಂದಲೇ ಸಂಗ್ರಹಿಸಬೇಕೆಂಬುದು ಕೇಂದ್ರ ಸರ್ಕಾರದ ಅಧಿಸೂಚನೆಯಾಗಿದೆ.ಇತ್ತೀಚೆಗೆ ಕಲ್ಲಿದ್ದಲ ಸಾಗಾಣಿಕೆ ಹಾಗೂ ಇತರ ವೆಚ್ಚಗಳು ತಗ್ಗಿದ್ದರಿಂದಾಗಿ ವಿದ್ಯುತ್ ಖರೀದಿ ದರ ಕಡಿಮೆಯಾಗಿದೆ. ಇದನ್ನು ಪರಿಗಣಿಸಿರುವ ಕೆಇಆರ್ಸಿ ಹೊಂದಾಣಿಕೆ ದರವನ್ನೂ ಕಡಿಮೆಗೊಳಿಸುವಂತೆ ಆದೇಶಸಿದೆ.
|
4 |
+
ಬಿಜೆಪಿ ಪ್ರತಿಭಟನೆಗಳನ್ನು ಜನ ನಂಬುವುದಿಲ್ಲ : ಸಿಎಂ ಸಿದ್ದರಾಮಯ್ಯ
|
5 |
+
ಇದರ ಲಾಭ ಗ್ರಾಹಕರಿಗೆ ತಲುಪಿಸಲಾಗುತ್ತಿದೆ. ಯಾವುದೇ ರೀತಿಯ ವಿದ್ಯುತ್ ಶುಲ್ಕ ಏರಿಕೆಯಾಗಿಲ್ಲ ಎಂದು ಬೆಸ್ಕಾಂ ಮೂಲಗಳು ಸ್ಪಷ್ಟಪಡಿಸಿವೆ. ಪ್ರತಿ ಮೂರು ತಿಂಗಳಿಗೊಮ್ಮೆ ಇಂಧನ ಮತ್ತು ವಿದ್ಯುತ್ ಖರೀದಿ ಹೊಂದಾಣಿಕೆ ಶುಲ್ಕ ಪರಿಷ್ಕರಣೆಯಾಗುತ್ತದೆ. ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ನಿಗದಿಯಾಗಿರುವ 1.1 ರೂ.ಗಳ ದರ ಮುಂದಿನ ಜನವರಿಯ ವೇಳೆ ಮತ್ತೊಮ್ಮೆ ಪರಿಷ್ಕರಣೆಯಾಗುವ ಸಾಧ್ಯತೆಯಿದೆ.
|
eesanje/url_46_329_11.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಜೆಡಿಎಸ್ ಸಮಾನಮನಸ್ಕರ ಸಭೆಯ ಬ್ಯಾನರ್ನಲ್ಲಿ ಹೆಚ್ಡಿಕೆ ಫೋಟೋಗೆ ಕೊಕ್
|
2 |
+
ಬೆಂಗಳೂರು,ಅ.16- ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜೆಡಿಯು ರಾಜ್ಯಾಧ್ಯಕ್ಷ ಮಹಿಮ ಪಟೇಲ್ ಪಾಲ್ಗೊಂಡಿದ್ದರು. ಮಹಿಮ ಪಾಟೀಲ್ ಪಾಲ್ಗೊಂಡಿರುವುದರಿಂದ ಇಬ್ರಾಹಿಂ ಮುಂದಿನ ನಡೆ ಏನು ಎಂಬುದು ತೀವ್ರ ಕುತೂಹಲ ಕೆರಳಿಸಿದೆ.
|
3 |
+
ಬಿಜೆಪಿಯೊಂದಿಗಿನ ಮೈತ್ರಿಯ ಬಗ್ಗೆ ಅಸಮಾಧನ ವ್ಯಕ್ತಪಡಿಸಿ ಸಮಾನ ಮನಸ್ಕರ ಅಭಿಪ್ರಾಯ ಸಂಗ್ರಹಿಸಲು ಇಬ್ರಾಹಿಂ ಚಿಂತನ-ಮಂಥನ ಸಭೆ ಕರೆದಿದ್ದರು. ಸಭೆಯ ಬ್ಯಾನರ್ನಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಸಿ.ಎಂ.ಇಬ್ರಾಹಿಂ ಫೋಟೋ ಮಾತ್ರ ಇತ್ತು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಬೇರೆ ಯಾವ ನಾಯಕರ ಫೋಟೋವು ಕೂಡ ಇರಲಿಲ್ಲ.
|
4 |
+
ಬಿಜೆಪಿ ಪ್ರತಿಭಟನೆಗಳನ್ನು ಜನ ನಂಬುವುದಿಲ್ಲ : ಸಿಎಂ ಸಿದ್ದರಾಮಯ್ಯ
|
5 |
+
ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಯದ್ ಸಬಿವುಲ್ಲಾ ಸಾಹೇಬ್ ಸೇರಿದಂತೆ ಅಲ್ಪಸಂಖ್ಯಾತ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದರು. ಮಹಿಮ ಪಟೇಲ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ, ಮಾಜಿ ಕೇಂದ್ರ ಸಚಿವ ಜಾರ್ಜ್ ಫರ್ನಾಂಡಿಸ್ ಅವರು ಬಿಜೆಪಿಗೆ ಸೇರಿದ್ದರು. ಆಗ ಫರ್ನಾಂಡಿಸ್ ಅವರು ಪ್ರಧಾನಿಯಾಗಲಿದ್ದಾರೆ ಸಹಕಾರ ಕೊಡಿ ಎಂದು ನಮ್ಮ ತಂದೆ ಜೆ.ಎಚ್.ಪಟೇಲ್ ಅವರು ಸಮ್ಮತಿಸಿದ್ದರು ಎಂದರು.
|
6 |
+
ಸಿದ್ದಾಂತದ ಮೂಲಕ ಮತ ಯಾಚಿಸಬೇಕೇ ಹೊರತು ಹಣ, ಜಾತಿ ಆಧಾರದ ಮೇಲೆ ಕೇಳಿದರೆ ಅದು ದಂಧೆಯಾಗಲಿದೆ. ಈಗಾಗಲೇ ರಾಜಕಾರಣಿಗಳ ಬಗ್ಗೆ ಗೌರವ ಕಡಿಮೆಯಾಗಿದೆ. 2004ರಲ್ಲಿ ಜೆಡಿಎಸ್ನಿಂದ ಚೆನ್ನಗಿರಿ ಕ್ಷೇತ್ರದಿಂದ ಚುನಾಯಿತನಾಗಿದ್ದೆ. ಆಗ ಇಬ್ರಾಹಿಂ ಹಾಗೂ ಸಿದ್ದರಾಮಯ್ಯನವರು ನಾವು ಯಾರ ಜೊತೆಯೂ ಹೋಗುವುದಿಲ್ಲ ಎಂದಿದ್ದರು. ನಮ್ಮ ಅಭಿಪ್ರಾಯವನ್ನು ಯಾರೂ ಕೇಳಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
|
7 |
+
ಇಸ್ರೇಲ್ ಪಡೆಗಳಿಗೆ ಅಂತಿಮ ಎಚ್ಚರಿಕೆ ನೀಡಿದ ಇರಾನ್
|
8 |
+
ಅಮೆರಿಕ ಪ್ರವಾಸದಲ್ಲಿದ್ದಾಗ ದೇವೇಗೌಡರು ಫೋನ್ ಮಾಡಿ ಮಾನ ಮರ್ಯಾದೆ ಹೋಗಿದೆ ಎಂದರು. ಅಲ್ಲಿಂದ ಬರುವಷ್ಟರಲ್ಲಿ ಕುಮಾರಸ್ವಾಮಿ ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿದ್ದರು.ಹೊಸ ಹಾದಿಯ ಬಗ್ಗೆ ಇಬ್ರಾಹಿಂ ಹಾಗೂ ನಾಡಗೌಡರು ಯೋಚಿಸುತ್ತಿದ್ದಾರೆ. ಮತ್ತೆ ಜನತಾದಳದವರು ಸೇರುವ ಸಮಯ ಬಂದಿದೆ. ಇಬ್ರಾಹಿಂ ಅವರಿಗೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವಿದೆ. ಮುಂದಿನ ವಿಧಾನಸಭೆ ಚುನಾವಣೆ ನೇತೃತ್ವವನ್ನು ಇಬ್ರಾಹಿಂ ಅವರೇ ವಹಿಸಬೇಕು ಎಂದರು.
|
eesanje/url_46_329_12.txt
ADDED
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ನಾಳೆ ಗೌರವ ಡಾಕ್ಟರೇಟ್ ಪ್ರದಾನ
|
2 |
+
ಬೆಂಗಳೂರು,ಅ.16-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಇಸ್ರೋ ಅಧ್ಯಕ್ಷ ಹಾಗೂ ಭಾರತ ಸರ್ಕಾರದ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ ಸೋಮನಾಥ್.ಎಸ್ ಅವರಿಗೆ ಬೆಂಗಳೂರು ವಿವಿಯು ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದೆ. ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವವು ನಾಳೆ ಬೆಳಗ್ಗೆ 10.30ಕ್ಕೆ ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿದ್ದು, ಈ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ.
|
3 |
+
ಘಟಿಕೋತ್ಸವದಲ್ಲಿ ಒಟ್ಟು 299 ಚಿನ್ನದ ಪದಕ ಹಾಗೂ 113 ನಗದು ಬಹುಮಾನಗಳನ್ನು ಒಟ್ಟು 193 ವಿದ್ಯಾರ್ಥಿಗಳಿಗೆ ನೀಡಲಾಗುವುದು ಎಂದು ವಿವಿಯ ಕುಲಪತಿ ಪ್ರೊ.ಜಯಕರ.ಎಚ್.ಎಂ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
|
4 |
+
204 ವಿದ್ಯಾರ್ಥಿಗಳಿಗೆ ಪಿಎಚ್ಡಿ ಪದವಿ ಪ್ರದಾನ ಮಾಡಲಿದ್ದು, ಚಿನ್ನದ ಪದಕಗಳನ್ನು 25 ಗ್ರಾಂ ಬೆಳ್ಳಿಯ ನಾಣ್ಯಕ್ಕೆ 18 ಕ್ಯಾರೆಟ್ನ 1.3 ಗ್ರಾಂ ಚಿನ್ನದ ಎಂಬೋಜ್ ಮಾಡಲಾಗಿದೆ. ಚಿನ್ನಪದಕ ವಿಜೇತ ವಿದ್ಯಾರ್ಥಿಗಳಿಗೆ ಈ ಪದಕಗಳನ್ನು ಈ ಬಾರಿ ನೀಡಲಾಗುವುದು ಎಂದರು.
|
5 |
+
ಘಟಿಕೋತ್ಸವದಲ್ಲಿ 28,881 ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹರಾಗಿದ್ದು, ಅವರಲ್ಲಿ 13,707 ವಿದ್ಯಾರ್ಥಿಗಳು ಹಾಗೂ 15,164 ವಿದ್ಯಾರ್ಥಿನಿಯರಿದ್ದಾರೆ ಎಂದು ಹೇಳಿದರು. ವಿಶ್ವವಿದ್ಯಾಲಯದ ಕುಲಾದಿಪತಿಗಳಾದ ರಾಜ್ಯಪಾಲ ಥಾವರ್ಚಂದ್ ಗೆಲ್ಹೋಟ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ಯುವ ಉದ್ಯಮಿ ಘೆರಾದ ಸಂಸ್ಥೆಯ ಸಹಸಂಸ್ಥಾಪಕ ನಿಖಿಲ್ ಕಾಮತ್ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದರು.
|
6 |
+
ರಾಜ್ಯದ ಕರಾವಳಿ, ಒಳನಾಡಿನಲ್ಲಿ 2 ದಿನ ಮಳೆ ಸಾಧ್ಯತೆ
|
7 |
+
ವಿನೂತರಿಗೆ 8 ಚಿನ್ನದ ಪದಕ:ಸ್ನಾತಕೋತ್ತರ ವಿಭಾಗದಲ್ಲಿ ಆಕ್ಸಫರ್ಡ್ ವಿಜ್ಞಾನ ಮತ್ತು ಕಲಾ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ವಿನೂತ.ಕೆ 8 ಚಿನ್ನದ ಪದಕ ಹಾಗೂ ಮೂರು ನಗದು ಬಹುಮಾನ ಪಡೆಯಲಿದ್ದಾರೆ. ವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಶ್ವೇತ ಉದಯಕುಮಾರ ಮುರಗೋಡ ಅವರು 8 ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ.
|
8 |
+
ಬೆಂಗಳೂರು ವಿವಿಯ ಭೌತಶಾಸ್ತ್ರ ವಿಭಾಗದ ಅಸೀನಬಾನು.ಡಬ್ಲ್ಯು, ಗಣಿತ ಶಾಸ್ತ್ರ ವಿಭಾಗದ ದಿವ್ಯಾ.ಟಿ.ಎಂ, ಪ್ರಾಣಿಶಾಸ್ತ್ರ ಶಾಸ್ತ್ರ ವಿಭಾಗದ ನರ್ಮತಾ.ಎ, ಸಂಸ್ಕøತ ಶಾಸ್ತ್ರ ವಿಭಾಗದ ಭವಿಷ್ಯ ತಲಾ ಆರು ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ ಎಂದು ಅವರು ತಿಳಿಸಿದರು.
|
9 |
+
ಸ್ನಾತಕ ವಿಭಾಗದಲ್ಲಿ ಎಎಸ್ಪಿ ಪದವಿ ಕಾಲೇಜಿನ ದೀಕ್ಷಿತ.ಆರ್ ನಾಯಕ್ ಹಾಗೂ ವಿಶ್ವಚೇತನ ಪದವಿ ಕಾಲೇಜಿನ ರವಿಕುಮಾರ.ಎಸ್.ಎಂ, ಯುವಿಸಿಯ ಮೆಕಾನಿಕಲ್ ಇಂಜಿನಿಯರ್ ವಿಭಾಗದ ಯೋಗೇಶ್ವರನ್ ಪಡೆದುಕೊಂಡಿದ್ದಾರೆ.
|
10 |
+
ಜಿಂದಾಲ್ ಮಹಿಳಾ ಕಾಲೇಜಿನ ಚೈತ್ರ.ಎಸ್, ಬೆಂಗಳೂರು ವಿವಿ ಗಣಿತ ಶಾಸ್ತ್ರ ವಿಭಾಗದ ದಿವ್��ಾ.ಟಿ.ಎಂ, ವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಶ್ವೇತ ಉದಯಕುಮಾರ ಮುರಗೋಡ ಅವರು ಬಾಬಾ ಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ಚಿನ್ನದ ಪದಕ ಪಡೆದುಕೊಂಡಿದ್ದಾರೆ.
|
11 |
+
ಈ ಬಾರಿ ಪದವಿ ಪ್ರಮಾಣಪತ್ರವನ್ನು ವಿದ್ಯಾರ್ಥಿಗಳು ಡಿಜಿ ಲಾಕರ್ ಮತ್ತು ಮ್ಯಾಡ್ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ವಿವಿಯು ಸಂಪೂರ್ಣ ಡಿಜಟಲೀಕರಣಗೊಂಡಿದ್ದು, ಪರೀಕ್ಷೆ ಮುಗಿದ ಒಂದು ವಾರದೊಳಗೆ ಫಲಿತಾಂಶ ನೀಡಿ ಸ್ನಾತಕೋತ್ತರ ಪ್ರವೇಶ ಪ್ರಕ್ರಿಯೆಗೆ ಅನುಕೂಲ ಮಾಡಿಕೊಡಲಾಗಿದೆ ಎಂದು ಕುಲಪತಿ ಹೇಳಿದರು. 26,056 ಪ್ರಥಮ ಶ್ರೇಣಿ, 4807 ಪ್ರಥರ್ಮ ದರ್ಜೆ, 874 ದ್ವಿತೀಯ ದರ್ಜೆ ಹಾಗೂ 137 ಪದವಿ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
|
12 |
+
ಇಸ್ರೇಲ್ ಪಡೆಗಳಿಗೆ ಅಂತಿಮ ಎಚ್ಚರಿಕೆ ನೀಡಿದ ಇರಾನ್
|
13 |
+
ಪತ್ರಿಕಾಗೋಷ್ಠಿಯಲ್ಲಿ ವಿಶ್ವವಿದ್ಯಾಲಯದ ಕುಲಸಚಿವರಾದ ಶೇಖ್ ಲತೀಫ್, ಪ್ರೊ.ಸಿ.ಶ್ರೀನಿವಾಸ್ (ಮೌಲ್ಯಮಾಪನ), ವಿತ್ತಾಕಾರಿ ಡಾ.ಎಂ.ಸುನಿತ ಉಪಸ್ಥಿತರಿದ್ದರು.
|
eesanje/url_46_329_2.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಇಬ್ರಾಹಿಂ ಹೇಳಿಕೆ ಬಗ್ಗೆ ಚಿಂತಿಸುವ ಅಗತ್ಯ ಇಲ್ಲ : ಹೆಚ್ಡಿಕೆ
|
2 |
+
ಬೆಂಗಳೂರು, ಅ.17- ನಮ್ಮ ಪಕ್ಷದಲ್ಲಿರುವ ಹಿರಿಯರು ಸೂಕ್ತ ತೀರ್ಮಾನ ಕೈಗೊಳ್ಳಲಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರ ಹೇಳಿಕೆ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ರಾಹಿಂ ಅವರ ಹೇಳಿಕೆ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ.
|
3 |
+
ಎಲ್ಲವನ್ನು ಸರಿ ಮಾಡುತ್ತೇವೆ ಎಂದರು. ಇಬ್ರಾಹಿಂ ಅವರೇ ಒರ್ಜಿನಲ್ ಜೆಡಿಎಸ್ ಎಂದು ಬೋರ್ಡ್ ಹಾಕಿಕೊಳ್ಳಲಿ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ಅದು ಅವರಿಗೆ ಬಿಟ್ಟ ವಿಚಾರ. ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ಕೇಳಬೇಡಿ. ಅವರು ಫ್ರೀ ಇದ್ದಾರೆ. ಅವರ ಜೊತೆ ಮಾತನಾಡಿಕೊಳ್ಳಿ ಎಂದು ಸುದ್ದಿಗಾರರಿಗೆ ತಿಳಿಸಿದರು.
|
4 |
+
ವಿದ್ಯೆ ಕೇವಲ ಸರ್ಟಿಫಿಕೇಟ್ ಆಗಿರಬಾರದು, ಸಂಸ್ಕಾರ ಒಳಗೊಂಡಿರಬೇಕು : ಎಚ್ಡಿಡಿ
|
5 |
+
ನಿನ್ನೆ ಇಬ್ರಾಹಿಂ ಅವರು ಪಕ್ಷದ ಚಿಂತನ-ಮಂಥನ ಸಭೆ ನಡೆಸಿ ನಾನೇ ಪಕ್ಷದ ರಾಜ್ಯಾಧ್ಯಕ್ಷ. ನಮ್ಮದೇ ಒರ್ಜಿನಲ್. ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಕ್ಕೆ ತೀವ್ರ ವಿರೋದ ವ್ಯಕ್ತಪಡಿಸಿದರು. ಅಲ್ಲದೆ ಪಕ್ಷದಲ್ಲಿ ಮೈತ್ರಿ ಬಗ್ಗೆ ಚರ್ಚೆಯಾಗದೆ ಕುಮಾರಸ್ವಾಮಿ ಅವರು ಎನ್ಡಿಎ ಮೈತ್ರಿಕೂಟ ಸೇರುವ ಘೋಷಣೆ ಮಾಡಿದ್ದಾರೆ ಎಂದು ಆರೋಪಿಸಿದ್ದರು.
|
eesanje/url_46_329_3.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
478 ಕೋಟಿ ಬಾಕಿ ಹಣ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಪತ್ರ
|
2 |
+
ಬೆಂಗಳೂರು,ಅ.17- ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಯಡಿ ರಾಜ್ಯಕ್ಕೆ ಬಾಕಿ ಇರುವ 478.46 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರು ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
|
3 |
+
ರಾಜ್ಯದಲ್ಲಿ 236 ತಾಲ್ಲೂಕುಗಳ ಪೈಕಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಅವುಗಳಲ್ಲಿ 161 ತಾಲ್ಲೂಕುಗಳಲ್ಲಿ ತೀವ್ರ ಬರವಿದ್ದು, 34 ತಾಲ್ಲೂಕುಗಳಲ್ಲಿ ಸಾಧಾರಣ ಪರಿಸ್ಥಿತಿ ಇದೆ. ಮನ್ರೇಗಾ ಯೋಜನೆಯ ಮೂಲ ಉದ್ದೇಶವೇ ಗ್ರಾಮೀಣ ಜಾಗದಲ್ಲಿ ದುಡಿಯುವ ಜನರಿಗೆ ಉದ್ಯೋಗ ಕಲ್ಪಿಸಿ ನಗರದತ್ತ ವಲಸೆ ಬರುವುದನ್ನು ತಪ್ಪಿಸಬಹುದಾಗಿದೆ.
|
4 |
+
ದೇಶದೊಂದಿಗೆ ಪಾಲುದಾರರಾಗಲು ಹೂಡಿಕೆದಾರರಿಗೆ ಮೋದಿ ಕರೆ
|
5 |
+
ಬರದ ಸನ್ನಿವೇಶದಲ್ಲಿ ಗ್ರಾಮೀಣ ಭಾಗದವರು ನಗರದತ್ತ ವಲಸೆ ಹೋಗುವುದನ್ನು ತಪ್ಪಿಸಲು ಉದ್ಯೋಗ ಖಾತ್ರಿಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಕಳೆದ ಆ.30ರಂದು ಅನುದಾನ ಬಳಕೆಯ ಪ್ರಮಾಣ ಪತ್ರವನ್ನು ಹಾಗೂ ಸೆ.22ರಂದು ವಾರ್ಷಿಕ ಲೆಕ್ಕಪತ್ರಗಳ ವರದಿಯನ್ನು ಕೇಂದ್ರ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ರಾಜ್ ಇಲಾಖೆಗೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.
|
6 |
+
ಕಳೆದ ಸೆಪ್ಟೆಂಬರ್ 24ರಂದು ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿಗೆ ಸಂಬಂಧಿಸಿದಂತೆ 1.55 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಆ.29ರಿಂದಲೂ ಈವರೆಗೂ ಮನ್ರೇಗಾ ಯೋಜನೆಯಡಿ 478.46 ಕೋಟಿ ರೂ.ಗಳ ಬಾಕಿ ಇದ್ದು, ಅದನ್ನು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ.
|
eesanje/url_46_329_4.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ವಿದ್ಯೆ ಕೇವಲ ಸರ್ಟಿಫಿಕೇಟ್ ಆಗಿರಬಾರದು, ಸಂಸ್ಕಾರ ಒಳಗೊಂಡಿರಬೇಕು : ಎಚ್ಡಿಡಿ
|
2 |
+
ಬೆಂಗಳೂರು, ಅ.17- ವಿದ್ಯೆ ಹಣ ಗಳಿಕೆಯ ಸಾಧನವಾಗದೆ ವ್ಯಕ್ತಿತ್ವ ರೂಪಿಸುವ ಸಾಧನವಾದಾಗ ಮಾತ್ರ ಬದುಕಿನಲ್ಲಿ ಸುಖ, ಶಾಂತಿ, ನೆಮ್ಮದಿ ಸಿಗಲು ಸಾಧ್ಯ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದರು. ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೊತಿ ಸಭಾಂಗಣದಲ್ಲಿ ನಡೆದ ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿ ಮಾತನಾಡಿದ ಅವರು, ವಿದ್ಯೆ ಕೇವಲ ಕಾಗದದ ಸರ್ಟಿಫಿಕೇಟ್ ಆಗಿರಬಾರದು. ಅದು ಸಂಸ್ಕಾರವನ್ನು ಸಹ ಒಳಗೊಂಡಿರಬೇಕು ಎಂದರು.
|
3 |
+
ಪ್ರಸ್ತುತ ಎಲ್ಲಾ ವಿದ್ಯಾರ್ಥಿಗಳಿಗೂ ಗುಣಮಟ್ಟದ ಹಾಗೂ ನೈತಿಕ ಶಿಕ್ಷಣದ ಅಗತ್ಯ ಹೆಚ್ಚಿದೆ. ಅಂತಹ ಶಿಕ್ಷಣವನ್ನು ಬೆಂಗಳೂರು ವಿಶ್ವವಿದ್ಯಾಲಯ ನೀಡುತ್ತಿದೆ ಎಂದು ಹೇಳಿದರು. ವಿದ್ಯೆ ಮತ್ತು ಸಂಸ್ಕಾರ ಬದುಕಿನ ಬೇರುಗಳಿದ್ದಂತೆ. ಈ ಎರಡೂ ಒಟ್ಟಿಗೆ ಬೆಳೆದಾಗ ಮಾತ್ರ ಬದುಕಿಗೊಂದು ಸಾರ್ಥಕತೆ ಸಿಗುತ್ತದೆ. ಶಿಕ್ಷಣ ಅಂದರೆ ಪುಸ್ತಕ ಜ್ಞಾನ, ಅಕ್ಷರ ಜ್ಞಾನ ಮಾತ್ರವಲ್ಲ ಮನಸ್ಸಿಗೆ ಸಂಸ್ಕಾರವನ್ನು ಕೊಡುವುದೂ ಸಹ ಶಿಕ್ಷಣದ ಭಾಗ, ಬುದ್ದಿಯ ವಿಕಾಸದೊಂದಿಗೆ ಹೃದಯವಂತಿಕೆಯನ್ನೂ ಬೆಳೆಸಬೇಕು ಎಂದು ತಿಳಿಹೇಳಿದರು.
|
4 |
+
ವಿದ್ಯೆ ವಿನಯವನ್ನು ನೀಡುತ್ತದೆ. ವಿನಯದಿಂದ ಮನಷ್ಯನ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ಆ ವ್ಯಕ್ತಿಯಿಂದ ಹಣ ಸಂಪಾದನೆ ಆಗುತ್ತದೆ. ಸಂಪಾದಿಸಿದ ಹಣದಿಂದ ಧರ್ಮ ಕಾರ್ಯಗಳನ್ನು ನಡೆಸಿದಾಗ ಮಾತ್ರ ಮನಸ್ಸಿಗೆ ತೃಪ್ತಿ ಸಿಗುತ್ತದೆ ಎಂದರು.
|
5 |
+
ವಿದ್ಯಾರ್ಥಿ ಜೀವನ ಒಂದು ತಪಸ್ಸು ಇದ್ದಂತೆ. ಪ್ರತಿ ವಿದ್ಯಾರ್ಥಿಯ ಜೀವನ ಕ್ರಮ ಶಿಸ್ತಿಗೆ ಒಳಪಡಬೇಕು. ವಿದ್ಯೆ ಕೇವಲ ಒಬ್ಬನ ಜೀವನವನ್ನು ಕಟ್ಟಿಕೊಡುವುದಷ್ಟೇ ಅಲ್ಲ ಒಂದು ದೇಶದ ಬೆಳವಣಿಗೆಯನ್ನೂ, ದೇಶದ ಸಂಸ್ಕೃತಿಯನ್ನು ಉನ್ನತಮಟ್ಟಕ್ಕೆ ಕೊಂಡೊಯ್ಯುತ್ತದೆ. ಒಟ್ಟಾರೆ ಹೇಳಬೇಕೆಂದರೆ ವಿದ್ಯೆ ಸಂಪತ್ತು ಹೌದು, ಸಂಸ್ಕಾರವೂ ಹೌದು ಎಂದು ಎಂದರು.
|
6 |
+
ಬೆಂಗಳೂರು ವಿಶ್ವವಿದ್ಯಾಲಯ ಲಕ್ಷಾಂತರ ವಿದ್ಯಾರ್ಥಿಗಳ ಜ್ಞಾನಭಂಡಾರ, ವಿದ್ಯಾರ್ಥಿಗಳಿಗೆ ನೈತಿಕ ಹಾಗೂ ಗುಣಮಟ್ಟದ ಶಿಕ್ಷಣವನ್ನು ಧಾರೆ ಎರೆಯುತ್ತಿರುವ ಜ್ಞಾನಾಲಯ, ಉನ್ನತ ಶಿಕ್ಷಣದಲ್ಲಿ ಉತ್ಕೃಷ್ಟತೆಯನ್ನು ಸಾಸುತ್ತಿರುವ ವಿಶ್ವವಿದ್ಯಾಲಯದ ಬಗ್ಗೆ ನನಗೆ ಅಪಾರ ಗೌರವವಿದೆ ಎಂದರು.
|
7 |
+
ಈ ಸಂಧರ್ಭದಲ್ಲಿ ಇಸ್ರೋದ ಅಧ್ಯಕ್ಷರಾದ ಎಸ್ ಸೋಮನಾಥ್ ಅವರಿಗೆ ನಾನು ವಿಶೇಷವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಯಶಸ್ವಿ ಚಂದ್ರಯಾನ-3ರ ರೂವಾರಿ ಆಗಿರುವ ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್ ನೀಡುತ್ತಿರುವುದು ನನಗೆ ಬಹಳ ಸಂತೋಷ ತಂದಿದೆ. ಇಸ್ರೋ ಸಂಸ್ಥೆ ಇವತ್ತು ನಮ್ಮ ಭಾರತ ದೇಶವನ್ನು ಬಾಹ್ಯಾಕಾಶದ ಭೂಪಟದಲ್ಲಿ ವಿಶ್ವಕ್ಕೆ ಪರಿಚಯ ಮಾಡಿ ನಮಗೆಲ್ಲಾ ಹೆಮ್ಮೆ ತಂದಿದೆ. ಈ ಸಂದರ್ಭದಲ್ಲಿ ಎಲ್ಲಾ ವಿಜ್ಞಾನಿಗಳು ಅಭಿನಂದಿಸುತ್ತೇನೆ ಎಂದರು.
|
8 |
+
ಹೊರ ರಾಜ್ಯದ ವಾಹನಗಳಿಗೆ ವಿನಾಯತಿ ನೀಡಿದ ಕರ್ನಾಟಕ ಸರ್ಕಾರ
|
9 |
+
ಬೆಂಗಳೂರು ವಿಶ್ವವಿದ್ಯಾನಿಲಯ ನನಗೆ ನೀಡಿರುವ ಗೌರವ ಡಾಕ್ಟರೇಟ್ನ್ನು ತುಂಬಾ ಸಂತೋಷದಿಂದ ಸ್ವೀಕರಿಸಿದ್ದೇನೆ ಎಂದು ಗೌಡರು ಹೇಳಿದರು. ಇಸ್ರೋದ ಅಧ್ಯಕ್ಷರಾದ ಎಸ್. ಸೋಮನಾಥ್ ಮಾತನಾಡಿ, ಬಾಹ್ಯಾಕಾಶ ಸಂಸ್ಥೆಯ ಪ್ರತಿನಿಯಾಗಿ ನನಗೆ ಲಭಿಸಿರೋ ಈ ಗೌರವ ಅತೀವ ಸಂತಸ ತಂದಿದೆ. ನೂತನ ತಂತ್ರಜ್ಞಾನಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ವೇದಿಕೆಯಾಗಿದೆ ಎನ್ನುವುದರಲ್ಲಿ ಸಂಶಯವಿಲ್ಲ. ದೇವೇಗೌಡರು ಹಿರಿಯ ರಾಜಕಾರಣಿ, ರಾಜಕೀಯ ವಿಶ್ಲೇಷಕ ಮಾತ್ರವಲ್ಲದೇ ಜನರ ಪ್ರಧಾನಿಯಾಗಿದ್ದವರು. ನನಗೆ ನೀಡಿದ ಗೌರವ ಡಾಕ್ಟರೇಟ್ಅನ್ನು ಚಂದ್ರಯಾನದ ಪ್ರತಿಯೊಬ್ಬ ವಿಜ್ಞಾನಿ ಹಾಗು ತಂತ್ರಜ್ಞಾನಿಗೂ ಅರ್ಪಿಸುತ್ತೇನೆ ಎಂದರು.
|
10 |
+
ನಾವು ಅನೇಕ ಬಾಹ್ಯಾಕಾಶ ವಿಚಾರದಲ್ಲಿ ಇಂದಿಗೂ ಅನ್ವೇಷಣೆ ನಡೆಸುತ್ತಲೇ ಇದ್ದೇವೆ. ಭಾರತದ ಶಕ್ತಿಯನ್ನು ಮತ್ತೊಮ್ಮೆ ಚಂದ್ರಯಾನ ಮುಖಾಂತರ ಸಾಬೀತು ಮಾಡಿದ್ದೇವೆ ಎಂದು ಅವರು ಹೇಳಿದರು. ಸೋಮನಾಥ್ ಅವರ ಅನುಪಸ್ಥಿತಿಯಲ್ಲಿ ಅವರ ಸಂದೇಶದ ವಿಡಿಯೋವನ್ನು ಘಟಿಕೋತ್ಸವದಲ್ಲಿ ಪ್ರದರ್ಶಿಸಲಾಯಿತು.
|
11 |
+
ಬೆಂಗಳೂರು ವಿಶ್ವ ವಿದ್ಯಾಲಯದ ಕುಲಾಪತಿಗಳಾದ ರಾಜ್ಯಪಾಲರಾದ ಥಾವರ್ ಚಂದ್ ಗೆಲ್ಲೋಟ್, ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ ಸುಧಾಕರ್, ಝರೋದಾ ಸಹ ಪ್ರಾಧ್ಯಾಕರಾದ ನಿಖಿಲ್ ಕಾಮತ್, ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಜಯಕರ, ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಘಟಿಕೋತ್ಸವದಲ್ಲಿ ಒಟ್ಟು 299 ಚಿನ್ನದ ಪದಕ ಹಾಗೂ 113 ನಗದು ಬಹುಮಾನಗಳನ್ನು ಒಟ್ಟು 193 ವಿದ್ಯಾರ್ಥಿಗಳಿಗೆ ನೀಡಲಾಯಿತು. 204 ವಿದ್ಯಾರ್ಥಿಗಳಿಗೆ ಪಿಎಚ್ಡಿ ಪದವಿ ಪ್ರದಾನ ಮಾಡಲಾಗಿದೆ.
|
eesanje/url_46_329_5.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಸಿಎಂ ಇಬ್ರಾಹಿಂಗೆ ಟಾಂಗ್ ಕೊಟ್ಟ ಶರವಣ
|
2 |
+
ಬೆಂಗಳೂರು, ಅ.17-ಸಮಾನ ಮನಸ್ಕರ ಚಿಂತನ-ಮಂಥನ ಸಭೆಯನ್ನು ಜೆಡಿಎಸ್ ರಾಜ್ಯಾಧ್ಯಕ್ಷರು ನಡೆಸಿದ್ದು, ಅದು ಸಮಾನ ದುಖಃಸ್ಥರ ಸಭೆ ಎಂದೆನಿಸತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಟಿ.ಎ. ಶರವಣ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಂತನ- ಮಂಥನ ಸಭೆಯಲ್ಲಿ ಪಕ್ಷದ ವರಿಷ್ಠರು ಇರಬೇಕಾಗಿತ್ತು. ಇದನ್ನು ಪಕ್ಷದ ವೇದಿಕೆ ಎಂದು ಕರೆಯಬಹುದೆ ಎಂದು ಪ್ರಶ್ನಿಸಿದರು.
|
3 |
+
ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ..ದೇವೇಗೌಡರು ಚಿಂತನ- ಮಂಥನ ಸಭೆಗೆ ಅನುಮತಿ ಕೊಟ್ಟಿದ್ದರಾ ಎಂದು ಪ್ರಶ್ನಿಸಿದರು. ದೇವೇಗೌಡರ ಕಣ್ಮುಂದೆ ಇರುವು ಪಕ್ಷ ಅಧಿಕಾರಕ್ಕೆ ಬರಬೇಕು ಎಂಬುದು. ಕಷ್ಟದ ಸಮಯದಲ್ಲಿ ನಾವು ಜೊತೆಯಲ್ಲಿ ಇದ್ದೇವೆ. ಮುಂಬರುವ ಲೋಕಸಭಾ ಚುನಾವಣೆಗೆ ಏನು ಮಾಡಬೇಕು ಎಂಬ ಚರ್ಚೆಯಲ್ಲಿ ಇದ್ದೇವೆ ಎಂದು ಹೇಳಿದರು.
|
4 |
+
ರಾಜ್ಯಾಧ್ಯಕ್ಷರು ನಡೆಸಿರುವ ಸಭೆ ವಿಚಾರವಾಗಿ ದೇವೇಗೌಡರು ತೀರ್ಮಾನ ಮಾಡುತ್ತಾರೆ. ಪಕ್ಷದ ವರಿಷ್ಠರು ಮೈತ್ರಿಗೂ ಮುನ್ನ ಸಭೆ ಕರೆದು ಚರ್ಚಿಸಿದ್ದಾರೆ. ಮೈತ್ರಿ ಬಗ್ಗೆ ಏಕ ಪಕ್ಷೀಯ ನಿರ್ಧಾರ ತೆಗೆದುಕೊಂಡಿಲ್ಲ. ನಾವೆಲ್ಲಾ ಒಪ್ಪಿದ ಮೇಲೆಯೇ ಅವರು ಮುಂದುವರೆದಿದ್ದು. ಒಳಗೊಂದು ಹೊರಗೊಂದು ಮಾತಾಡೋದು ಸರಿಯಲ್ಲ. ಅವರು ಕೂಡ ಹಿರಿಯರಿದ್ದಾರೆ ಎಂದು ಅವರು ಹೇಳಿದರು.
|
5 |
+
ಟ್ರಕ್ಗೆ ಬೆಂಕಿ, ನಾಲ್ವರ ಸಜೀವ ದಹನ
|
6 |
+
ನಿನ್ನ ನಡೆದ ಘಟನೆ ನಮಗೂ ನೋವಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ದೆಹಲಿಗೆ ದೇವೇಗೌಡರ ಅನುಮತಿ ಪಡೆದೇ ಹೋಗಿದ್ದರು. ಶಾಸಕಾಂಗ ಸಭೆ ಕರೆದಾಗ ಎಲ್ಲರೂ ಬಂದಿದ್ದರು. ವರಿಷ್ಠರು ಏನೇ ನಿರ್ಧಾರ ತೆಗೆದುಕೊಂಡರೆ ಜೊತೆಗೆ ಇರುತ್ತೇವೆ ಅಂದಿದ್ದಾರೆ. ಶಾಸಕರು ಸಂಪರ್ಕದಲ್ಲಿ ಇದ್ದಾರೆ ಎಂಬುದು ಗಾಳಿಯಲ್ಲಿ ಗುಂಡು ಅಷ್ಟೆ ಎಂದರು.
|
7 |
+
ದೇವೇಗೌಡರಿಗೆ ಇನ್ನೂ ನೋವು ಕೊಡಬೇಡಿ. ನನಗೂ ಸೇರಿ ಪಕ್ಷದ ಪ್ರಮುಖರಿಗೆ ಕರೆ ಮಾಡಿದ್ದರು.ಆದರೆ ನಾವ್ಯಾರೂ ಸಭೆಗೆ ಹೋಗಿಲ್ಲ. ನೋವಿನಿಂದ ಆ ಸಭೆ ಮಾಡಿದ್ದಾರೆ ಅಷ್ಟೆ. ಇಲ್ಲಿ ಬ್ಲಾಕ್ ಮೇಲ್ ಏನೂ ಬರೋದಿಲ್ಲ ಎಂದು ಅವರು ಹೇಳಿದರು.
|
8 |
+
ನಾನೊಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದು, ಇಬ್ರಾಹಿಂ ದೊಡ್ಡವರು. ಅವರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಅವರು ಕೊಟ್ಟಿರು ಹೇಳಿಕೆಯನ್ನು ಪಕ್ಷದ ವರಿಷ್ಠರು ಗಮನಿಸುತ್ತಿದ್ದಾರೆ. ಯಾರ್ಯಾರನ್ನ ಕರೆಸಬೇಕು ಅನ್ನೋದು ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.
|
eesanje/url_46_329_6.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಹೊರ ರಾಜ್ಯದ ವಾಹನಗಳಿಗೆ ವಿನಾಯತಿ ನೀಡಿದ ಕರ್ನಾಟಕ ಸರ್ಕಾರ
|
2 |
+
ಬೆಂಗಳೂರು,ಅ.17- ಒಂಬತ್ತು ದಿನಗಳ ಕಾಲ ನಡೆಯುವ ನಾಡಹಬ್ಬ ದಸರಾ ಹಿನ್ನಲೆಯಲ್ಲಿ ವಿಶೇಷವಾಗಿ ಹೊರ ರಾಜ್ಯದಿಂದ ಬರುವ ವಾಹನಗಳಿಗೆ ಪ್ರವೇಶ ಶುಲ್ಕದಿಂದ ವಿನಾಯಿತಿ ನೀಡಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ದಸರಾ ಹಬ್ಬದ ಸಂದರ್ಭದಲ್ಲಿ ಇತರೆ ರಾಜ್ಯಗಳಿಂದ ಮೈಸೂರು ಮತ್ತು ಕೃಷ್ಣರಾಜ ಸಾಗರಕ್ಕೆ (ಕೆಆರೆಸ್) ತೆರಳುವ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ. ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು ಮತ್ತು ಪ್ರವಾಸೋದ್ಯಮಕ್ಕೆ ಬೆಂಬಲ ನೀಡಲು ಈ ಆದೇಶ ನೀಡಲಾಗಿದೆ.
|
3 |
+
ಇತರೆ ರಾಜ್ಯಗಳಲ್ಲಿ ನೋಂದಣಿಯಾಗಿರುವ ಪ್ರವಾಸಿ ವಾಹನಗಳು ಮತ್ತು ಆ ರಾಜ್ಯಗಳಲ್ಲಿ ರಸ್ತೆ ತೆರಿಗೆ ಪಾವತಿಸುವ ವಾಹನಗಳಿಗೆ ಅಕ್ಟೋಬರ್ 16 ಮತ್ತು 24ರ ನಡುವೆ ಕರ್ನಾಟಕದಲ್ಲಿ ಪ್ರವೇಶ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲಾಗುತ್ತದೆ ಎಂದು ಸಾರಿಗೆ ಇಲಾಖೆ ಅಧಿಸೂಚನೆಯಲ್ಲಿ ತಿಳಿಸಿದೆ.
|
4 |
+
ಬೆಲ್ಜಿಯಂನಲ್ಲಿ ಭಯೋತ್ಪಾದನಾ ಕೃತ್ಯಕ್ಕೆ ಇಬ್ಬರು ಬಲಿ
|
5 |
+
ದಸರಾ ಮಹೋತ್ಸವದ ಒಂಬತ್ತು ದಿನಗಳ ಅವಧಿಯಲ್ಲಿ ಮೈಸೂರು ನಗರ ಮತ್ತು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್ಎಸ್ ಅಣೆಕಟ್ಟೆಗೆ ತೆರಳುವ ವಾಹನಗಳು ಮಾತ್ರ ಶುಲ್ಕ ವಿನಾಯಿತಿ ಪಡೆಯಲು ಅರ್ಹವಾಗಿರುತ್ತವೆ. ತೆರಿಗೆ ವಿನಾಯಿತಿಗಳಿಗೆ ಅರ್ಹರಾಗಲು ಅವರು ವಿಶೇಷ ಪರವಾನಗಿ ಪಡೆಯಬೇಕಾಗುತ್ತದೆ ಎಂದು ಇಲಾಖೆ ಹೇಳಿದೆ. ಕೇರಳ ಮತ್ತು ತಮಿಳುನಾಡಿನಿಂದ ಮ್ಯಾಕ್ಸಿ ಕ್ಯಾಬ್ಗಳು, ಟ್ಯಾಕ್ಸಿಗಳು ಮತ್ತು ಪ್ರವಾಸಿ ಬಸ್ಗಳು ತೆರಿಗೆ ವಿನಾಯಿತಿಯಿಂದ ಹೆಚ್ಚಿನ ಪ್ರಯೋಜನ ಪಡೆಯಲಿವೆ.
|
6 |
+
ದಸರಾ ಸಂದರ್ಭದಲ್ಲಿ ಪ್ರತಿದಿನ 2,000 ಟ್ಯಾಕ್ಸಿಗಳು, 1,000 ಮ್ಯಾಕ್ಸಿ ಕ್ಯಾಬ್ಗಳು ಮತ್ತು 300 ಪ್ರವಾಸಿ ಬಸ್ಗಳು ಮೈಸೂರು ಮತ್ತು ಸುತ್ತಮುತ್ತಲಿನ ಪ್ರವಾಸಿ ತಾಣಗಳಿಗೆ ಬರುತ್ತವೆ. ಪ್ರವೇಶ ಶುಲ್ಕ ಟ್ಯಾಕ್ಸಿಗಳಿಗೆ 300 ರೂ. ಮ್ಯಾಕ್ಸಿ ಕ್ಯಾಬ್ಗಳಿಗೆ 1,800-2,000 ರೂ. ಮತ್ತು ಬಸ್ಗಳಿಗೆ ಅವುಗಳ ಆಸನ ಸಾಮಥ್ರ್ಯದ ಆಧಾರದ ಮೇಲೆ 15,000 ರೂ.ವರೆಗೆ ಇರುತ್ತದೆ. ಪ್ರತಿ ಪ್ರವೇಶಕ್ಕೆ ಶುಲ್ಕ ವಿಧಿಸಲಾಗುತ್ತದೆ ಅದು ಏಳು ದಿನಗಳವರೆಗೆ ಮಾನ್ಯವಾಗಿರುತ್ತದೆ.
|
7 |
+
ಸ್ಥಳೀಯ ಆರ್ಥಿಕತೆ ಸುಧಾರಣೆ ತೆರಿಗೆ ವಿನಾಯಿತಿ ಇರುವುದರಿಂದ ದಸರಾ ಸಮಯದಲ್ಲಿ ಮೈಸೂರು ಮತ್ತು ಕೆಆರ್ಎಸ್ಗೆ ಹೆಚ್ಚಿನ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದ್ದು, ಹೋಟೆಲ್ ಉದ್ಯಮದ ಜೊತೆ ಸ್ಥಳೀಯ ಆರ್ಥಿಕತೆ ಸುಧಾರಣೆಗೆ ಇದು ಅನುಕೂಲವಾಗಲಿದೆ. ಮೈಸೂರು ದಸರಾದಂತೆ ಮಂಗಳೂರು ದಸರಾ ಕೂಡ ವಿಶೇಷವಾಗಿರುವುದರಿಂದ ಇಲ್ಲಿಗೂ ಕೂಡ ತೆರಿಗೆ ವಿನಾಯಿತಿ ಘೋಷಣೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ.
|
8 |
+
ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ ರಾಹುಲ್ ಪ್ರಧಾನಿ : ತರೂರ್
|
9 |
+
32 ಒಕ್ಕೂಟಗಳನ್ನು ಪ್ರತಿನಿಧಿಸುವ ಕರ್ನಾಟಕ ರಾ��್ಯ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟವು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯಿಂದ ನಷ್ಟವಾಗಿರುವುದರಿಂದ ಸರ್ಕಾರ ಈ ವರ್ಷ ತೆರಿಗೆ ವಿನಾಯಿತಿಯನ್ನು ಘೋಷಿಸುವುದಿಲ್ಲ ಎಂದು ಆತಂಕದಲ್ಲಿತ್ತು.
|
eesanje/url_46_329_7.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ
|
2 |
+
ಮಡಿಕೇರಿ,ಅ.17-ಕನ್ನಡ ನಾಡಿನ ಜೀವನದಿ ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ಸಕಲಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಇಂದು ರಾತ್ರಿ 1.27ಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ಮಾತೆ ತೀರ್ಥರೂಪದಲ್ಲಿ ಪ್ರತ್ಯಕ್ಷವಾಗಲಿದ್ದು, ಈ ಅದ್ಭುತ ಕ್ಷಣವನ್ನು ಕಣ್ತುಂಬಿಕೊಳ್ಳಲು ಜನರು ಕಾತುರದಿಂದ ಕಾಯುತ್ತಿದ್ದಾರೆ.
|
3 |
+
ಈಗಾಗಲೇ ಜಿಲ್ಲಾಡಳಿತ ಹಾಗೂ ದೇವಸ್ಥಾನದ ಆಡಳಿತ ಮಂಡಳಿಯಿಂದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ತೀರ್ಥೋದ್ಭವದ ವೇಳೆ ದೇವಾಲಯದ ಸುತ್ತಮುತ್ತ ನೂಕುನುಗ್ಗಲು ಬ್ಯಾರಿಕೇಡ್ ಹಾಗೂ ಲೈಟ್ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
|
4 |
+
ಬಿಹಾರದಲ್ಲಿ ಕಳ್ಳಬಟ್ಟಿ ಸಾರಾಯಿ ಕುಡಿದು ಇಬ್ಬರು ಸಾವು
|
5 |
+
ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಲಿದ್ದು, ಪಾರ್ಕಿಂಗ್, ಬಸ್ ವ್ಯವಸ್ಥೆ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಅಂತಿಮ ಸಿದ್ದತೆಗಳನ್ನು ಪೂರ್ಣಗೊಳಿಸಲಾಗಿದೆ. ನಾಳೆ ಸಂಜೆವರೆಗೂ ಸಾರ್ವಜನಿಕರಿಗೆ ತೀರ್ಥ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆ 5.30ಕ್ಕೆ ಸಾರ್ವಜನಿಕ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು, ನಂತರ ರಾತ್ರಿ 10.30ಕ್ಕೆ ತೀರ್ಥ ಸ್ನಾನ, ಪವಿತ್ರ ಪಠಣಗಳು ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿದೆ.
|
6 |
+
ತೀರ್ಥೋದ್ಭವದ ಕ್ಷಣವನ್ನು ವೀಕ್ಷಿಸಲು ಎಲ್ಇಡಿ ಪರದೆ ವ್ಯವಸ್ಥೆ ಕೂಡ ಮಾಡಲಾಗಿದೆ. ಶ್ರೀ ಭಗಂಡೇಶ್ವರ ದೇವಾಲಯ ಹಾಗೂ ತಲಕಾವೇರಿ ಕ್ಷೇತ್ರದಲ್ಲಿ ವಿಶೇಷ ಪೂಜೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿವೆ.
|
eesanje/url_46_329_8.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಮಾಜಿ ಸಿಎಂ ಬೊಮ್ಮಾಯಿ ಆಸ್ಪತ್ರೆಗೆ ದಾಖಲು
|
2 |
+
ಬೆಂಗಳೂರು,ಅ.17-ಮೊಣಕಾಲು ನೋವಿನಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಹಲವು ದಿನಗಳಿಂದ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದು, ನೋವು ತೀವ್ರವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
|
3 |
+
ಸದ್ಯ ವೈದ್ಯರು ಅವರ ಮೊಣಕಾಲಿಗೆ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸದ್ಯ ಬೊಮ್ಮಾಯಿ ಆರೋಗ್ಯವಾಗಿದ್ದು, ಅವರನ್ನು ವೈದ್ಯರು ನಾಳೆ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ. ಕೆಲ ವರ್ಷಗಳಿಂದ ಬೊಮ್ಮಾಯಿಯವರು ತೀವ್ರ ಮಂಡಿ ನೋವಿನಿಂದ ಬಳಲುತ್ತಿದ್ದರು. ನಡೆದಾಡುವಾಗ ಸಮಸ್ಯೆ ಎದುರಿಸುತ್ತಿದ್ದರು. ಆದರೂ ಸಹ ಅವರು ಕುಂಟುತ್ತಾ ರಾಜಕೀಯ ಕಾರ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ಕೊನೆಗೆ ನೋವು ಹೆಚ್ಚಾಗಿದ್ದರಿಂದ ಅವರು ಸಿಎಂ ಸ್ಥಾನದಲ್ಲಿರವಾಗಲೇ ವಿದೇಶಕ್ಕೆ ಹೋಗಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲಿದ್ದಾರೆ ಎಂದು ಸುದ್ದಿ ಹರಿದಾಡಿತ್ತು.
|
4 |
+
ಬಿಹಾರದಲ್ಲಿ ಕಳ್ಳಬಟ್ಟಿ ಸಾರಾಯಿ ಕುಡಿದು ಇಬ್ಬರು ಸಾವು
|
5 |
+
ಒಂದು ವೇಳೆ ಆಪರೇಷನ್ ಮಾಡಿಸಿಕೊಂಡರೇ ಹಲವು ದಿನಗಳ ವಿಶ್ರಾಂತಿ ಅಗತ್ಯವಿರುತ್ತದೆ ಎಂದು ಆಪರೇಷನ್ ಮಾಡಿಸಿಕೊಳ್ಳುವುದನ್ನು ಕೈಬಿಟ್ಟಿದ್ದರು. ಬದಲಿಗೆ ಬಸವರಾಜ ಬೊಮ್ಮಾಯಿ ಮಂಡಿ ನೋವಿಗೆ ಮೈಸೂರಿನ ಮೂಲದ ಖ್ಯಾತ ನಾಟಿ ವೈದ್ಯ ಲೋಕೇಶ್ ಟೇಕ್ ಅವರಿಂದ ಚಿಕಿತ್ಸೆ ಪಡೆದುಕೊಂಡಿದ್ದರು.
|
6 |
+
ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸರ್ಕಾರದ ಚುಕ್ಕಾಣಿ ಹಿಡಿದ ವೇಳೆ ಮಂಡಿ ನೋವು ಉಲ್ಬಣಿಸಿತ್ತು. ಉಪಚುನಾವಣಾ ಪ್ರಚಾರದ ವೇಳೆ ವಿಶ್ರಾಂತಿ ರಹಿತ ಪ್ರವಾಸದ ಕಾರಣದಿಂದ ಮಂಡಿ ನೋವು ಮತ್ತಷ್ಟು ಹೆಚ್ಚಾಗಿ ಅಕ್ಷರಶಃ ಕುಂಟುತ್ತಾ ನಡೆಯುವಂತಾಗಿತ್ತು.
|
7 |
+
ಮುಖ್ಯಮಂತ್ರಿ ಸ್ಥಾನದಲ್ಲಿ ಇರುವಷ್ಟು ಸಮಯವೂ ಮಂಡಿ ಚಿಕಿತ್ಸೆಗೆ ಮುಂದಾಗಿರಲಿಲ್ಲ. ಒಂದು ವೇಳೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡರೆ ಹಲವು ದಿನಗಳ ವಿಶ್ರಾಂತಿ ಅಗತ್ಯವಿರುತ್ತದೆ ಎಂದು ಆಪರೇಷನ್ ಮಾಡಿಸಿಕೊಳ್ಳುವುದನ್ನು ಕೈಬಿಟ್ಟಿದ್ದರು. ಕುಂಟುತ್ತಲೇ ವಿಧಾನಸಭಾ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಇದೀಗ ಮಂಡಿ ಶಸ್ತ್ರಚಿಕಿತ್ಸೆ ಆಗಲೇಬೇಕು ಎಂದು ವೈದ್ಯರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ.
|
8 |
+
ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಬಸವರಾಜ ಬೊಮ್ಮಾಯಿ ಅವರು ಶೀಘ್ರಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಫೋಸ್ಟ್ ಮಾಡಿದ್ದಾರೆ.
|
eesanje/url_46_329_9.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
20 ಶಾಸಕರ ಜೊತೆ ಪ್ರವಾಸಕ್ಕೆ ಸತೀಶ್ ಜಾರಕಿಹೊಳಿ ಪ್ಲಾನ್!
|
2 |
+
ಬೆಂಗಳೂರು, ಅ.16- ಉಪಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಶಾಸಕರ ಹಾಗೂ ಆಪ್ತಬಣದ ಪ್ರವಾಸ ಆಯೋಜನೆ ಮಾಡಲು ಮುಂದಾಗಿರುವುದು ಕುತೂಹಲ ಕೆರಳಿಸಿದೆ.
|
3 |
+
ಈ ಮೊದಲು ಸತೀಶ್ ಜಾರಕಿಹೊಳಿ ಅವರು ಮೈಸೂರು ದಸರಾ ನೋಡಲು 20 ಕ್ಕೂ ಹೆಚ್ಚು ಮಂದಿ ಶಾಸಕರನ್ನು ಗುಂಪು ಕಟ್ಟಿಕೊಂಡು ಹೋಗುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ಅದು ತಪ್ಪಿದೆ. ಆಪ್ತ ಶಾಸಕರ ಜೊತೆ ಪ್ರವಾಸದ ಬಗ್ಗೆ ಪ್ರತಿಕ್ರಿಯಿಸಿರುವ ಸತೀಶ್ ಜಾರಕಿಹೊಳಿ ಅವರು ವಿವಿಧ ಪಕ್ಷಗಳ ಶಾಸಕರುಗಳು ಹಲವು ಕಡೆ ಪ್ರವಾಸ ಮಾಡಿದ್ದಾರೆ. ಈ ಬಗ್ಗೆ ನಮ್ಮ ಶಾಸಕರು ಕೂಡ ಪದೇಪದೇ ಪ್ರಸ್ತಾಪಿಸುತ್ತಿದ್ದಾರೆ ಎಂದು ಹೇಳಿದರು.
|
4 |
+
ವಿರಾಟ್ಕೊಹ್ಲಿ ವಿಶ್ವದಲ್ಲೇ ಅತ್ಯಂತ ಉತ್ತಮ ಆಟಗಾರ
|
5 |
+
ಇದು ಬಣ ರಾಜಕೀಯವಲ್ಲ. ಕಾಂಗ್ರೆಸ್ನ ಶಾಸಕರು ಮಾತ್ರವೇ ಹೋಗುತ್ತೇವೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿಯೇ ಪ್ರವಾಸ ಮಾಡುತ್ತೇವೆ. ಮೈಸೂರು ದಸರಾ ನೋಡಲು ಬನ್ನಿ ಎಂದು ಆ ಭಾಗದ ಶಾಸಕರು ಆಹ್ವಾನ ನೀಡಿದ್ದರು. ಅದರಂತೆ ನಮ್ಮ ಆಪ್ತರು, ನಮ್ಮ ಭಾಗದ ಶಾಸಕರು, ಸಮಾನ ಮನಸ್ಕರು ಹೋಗಲು ನಿರ್ಧರಿಸಿದ್ದೆವು. ಆದರೆ ಅದಕ್ಕೆ ಸಮಯ ಸಿಗಲಿಲ್ಲ. ನಮ್ಮ ಭಾಗದಲ್ಲೇ ಕೆಲವು ಹಬ್ಬಗಳಿರುವುದರಿಂದ ಎಲ್ಲರಿಗೂ ಸಮಯ ಆಗಲಿಲ್ಲ. ಆದರೆ ಮುಂದೊಂದು ದಿನ ಸಮಯ ನಿಗದಿ ಮಾಡಿಕೊಂಡು ಪ್ರವಾಸ ಮಾಡುತ್ತೇವೆ ಎಂದರು.
|
eesanje/url_46_32_1.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ನಟ ದರ್ಶನ್ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಸಿದ್ಧತೆ
|
2 |
+
|
3 |
+
ಬೆಂಗಳೂರು,ಆ.28-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಸಿದ್ಧತೆ ಕೈಗೊಳ್ಳಲಾಗಿದೆ.ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪಡೆಯುವ ಮೂಲಕ ವಿವಾದಕ್ಕೀಡಾಗಿರುವ ದರ್ಶನ್ ಮತ್ತು ಆತನ ಸಂಗಡಿಗರನ್ನು ರಾಜ್ಯದ ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರಿಸಲಾಗುತ್ತಿದೆ.
|
4 |
+
24ನೇ ಎಸಿಎಂಎಂ ನ್ಯಾಯಾಲಯದ ಅನುಮತಿ ಪಡೆದು ದರ್ಶನ್ರನ್ನು ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರಿಸುವ ಪ್ರಕ್ರಿಯೆಗಳು ಚಾಲನೆಯಲ್ಲಿವೆ.ಈ ನಡುವೆ ಜೈಲಿನಲ್ಲಿ ರಾಜಾತಿಥ್ಯ ಪಡೆದು ಕಾನೂನು ಉಲ್ಲಂಘಿಸಿದ ಕಾರಣಕ್ಕಾಗಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಎರಡು ಪ್ರಕರಣಗಳಲ್ಲಿ ದರ್ಶನ್ ಆರೋಪಿಯಾಗಿದ್ದಾರೆ.
|
5 |
+
ತನಿಖಾಧಿಕಾರಿಗಳು ನಿನ್ನೆ ದರ್ಶನ್ರನ್ನು ಪ್ರಾಥಮಿಕ ತನಿಖೆಗೆ ಒಳಪಡಿಸಿದ್ದು, ಇಂದು ಹೆಚ್ಚಿನ ತನಿಖೆ ನಡೆಸುವ ನಿರೀಕ್ಷೆಗಳಿವೆ. ಇದಕ್ಕಾಗಿ ನಿನ್ನೆಯೇ ಸ್ಥಳಾಂತರಗೊಳ್ಳಬೇಕಿದ್ದ ದರ್ಶನ್ರನ್ನು ಬೆಂಗಳೂರಿನ ಜೈಲಿನಲ್ಲೇ ಉಳಿಸಲಾಗಿದ್ದು, ಇಂದು ಮಧ್ಯಾಹ್ನ ಬಿಗಿಭದ್ರತೆಯಲ್ಲಿ ಕರೆದೊಯ್ಯುವ ಸಾಧ್ಯತೆಯಿದೆ. ಇದಕ್ಕಾಗಿ ದಾರಿಯುದ್ದಕ್ಕೂ ಪೊಲೀಸ್ ಪಹರೆಯನ್ನು ನಿಯೋಜಿಸಲಾಗಿದೆ.
|
6 |
+
ಇತ್ತ ಬಳ್ಳಾರಿ ಕಾರಾಗೃಹದಲ್ಲಿ ರಾಜಾತಿಥ್ಯದಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗಿದೆ. ಈಗಾಗಲೇ ಜೈಲಿನ ಕೊಠಡಿಗಳು ಸೇರಿದಂತೆ ಎಲ್ಲವನ್ನೂ ಪರಿಶೀಲನೆ ನಡೆಸಲಾಗಿದೆ. ಸಿಬ್ಬಂದಿಗಳನ್ನು ಬದಲಾವಣೆ ಮಾಡಿ ವ್ಯವಸ್ಥೆ ಸಜ್ಜುಗೊಳಿಸಲಾಗಿದೆ. ದರ್ಶನ್ ಭದ್ರತೆಗೆ ಪ್ರತ್ಯೇಕವಾಗಿ ಇಬ್ಬರು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
|
7 |
+
1824 ರಲ್ಲಿ ಬ್ರಿಟಿಷರು ನಿರ್ಮಿಸಿದ ಬಳ್ಳಾರಿಯ ಜೈಲಿನಲ್ಲಿ 385 ಖೈದಿಗಳಿದ್ದಾರೆ. ಅದರಲ್ಲಿ ಕೆಲವು ನಟೋರಿಯಸ್ ಹಾಗೂ ಕುಖ್ಯಾತಿ ಗಳಿಸಿದವರಿದ್ದಾರೆ. ಈ ಹಿನ್ನೆಲೆಯಲ್ಲಿ ದರ್ಶನ್ಗೆ ಭದ್ರತೆ ಹೆಚ್ಚಿಸಲು ನಿರ್ಧರಿಸಲಾಗಿದೆ.
|
8 |
+
ಬೆಂಗಳೂರು ಜೈಲಿನಲ್ಲಿ ಆರಾಮಾಗಿ ಅಡ್ಡಾಡಿಕೊಂಡು, ಚೇರು, ಟೇಬಲ್ಲು, ಕಾಫಿ ಮತ್ತು ಬೆಡ್ಡು, ಮೊಬೈಲು ಎಲ್ಲಾ ಸೌಲಭ್ಯಗಳನ್ನೂ ಪಡೆದುಕೊಂಡು ಸುಖಾಸೀನ ಸೌಲಭ್ಯ ನಡೆಸುತ್ತಿದ್ದ ದರ್ಶನ್ಗೆ ಕೆಲವು ರೌಡಿಗಳು ಆತಿಥ್ಯ ಸೌಲಭ್ಯಗಳನ್ನು ಕಲ್ಪಿಸುತ್ತಿದ್ದರು. ಕೊಲೆ ಪ್ರಕರಣದಲ್ಲಿ ಜೈಲಿಗೆ ಬಂದ ಆರೋಪಿಯನ್ನು ಬಂಧೀಖಾನೆಯ ಮಾರ್ಗಸೂಚಿಯ ಅನುಸಾರ ನಡೆಸಿಕೊಳ್ಳುವ ಬದಲಾಗಿ ರಾಜಾತಿಥ್ಯ ನೀಡಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಯಿತು.
|
9 |
+
ಜೈಲಿನಲ್ಲಿ ರೌಡಿಗಳ ಜೊತೆ ದರ್ಶನ್ ಲಾನ್ನಲ್ಲಿ ಕುಳಿತು ಟೀ, ಸಿಗರೇಟ್ನೊಂದಿಗೆ ಚರ್ಚೆ ನಡೆಸುತ್ತಿರುವುದು ಜೈಲಿನ ಲೋಪದೋಷಗಳನ್ನು ಅನಾವರಣಗೊಳಿಸಿದ್ದವು. ಹೀಗಾಗಿ ರೇಣುಕಾಸ್���ಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವವರನ್ನು ಶಿವಮೊಗ್ಗ, ಮೈಸೂರು, ಧಾರವಾಡ, ಬಳ್ಳಾರಿ ಹಾಗೂ ಬೆಳಗಾವಿ ಜೈಲುಗಳಿಗೆ ಸ್ಥಳಾಂತರಿಸಲಾಗುವುದು.
|
eesanje/url_46_32_10.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಜೈಲು ಸುಧಾರಣೆಗೆ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚನೆ
|
2 |
+
|
3 |
+
ಬೆಂಗಳೂರು,ಆ.27-ನಟ ದರ್ಶನ್ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೇರಿ ದಂತೆ ಹಲವರಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಹಿನ್ನಲೆಯಲ್ಲಿ ಜೈಲಿನ ಸಮಗ್ರ ಸುಧಾರಣೆಗೆ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡುವುದಾಗಿ ಗೃಹಸಚಿವ ಪರಮೇಶ್ವರ್ ತಿಳಿಸಿದ್ದಾರೆ.
|
4 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡುಮೂರು ದಿನಗಳ ಒಳಗಾಗಿ ಈ ಕುರಿತು ಸಮಿತಿಯೊಂದನ್ನು ಪ್ರಕಟಿಸಲಾಗುವುದು. ಜೊತೆಗೆ ಈ ಹಿಂದೆ ಸಚಿವ ಎಚ್.ಕೆ.ಪಾಟೀಲ್ ಅವರ ಸಮಿತಿ ಜೈಲಿನ ಸುಧಾರಣೆಗೆ ನೀಡಿದ್ದ ವರದಿಯನ್ನು ಪರಿಗಣಿಸಲಾಗುವುದು.
|
5 |
+
ಈವರೆಗೂ ಅದು ತಮ ಗಮನಕ್ಕೆ ಬಂದಿರಲಿಲ್ಲ ಎಂದು ಹೇಳಿದರು. ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ ಹಾಗೂ ಇತರ ಕೈದಿಗಳನ್ನು ಒಂದು ಬ್ಯಾರೆಕ್ನಿಂದ ಮತ್ತೊಂದು ಬ್ಯಾರೆಕ್ಗೆ ಸುಲಭವಾಗಿ ತಿರುಗಾಡಲು ಅವಕಾಶ ಮಾಡಿಕೊಟ್ಟಿದ್ದು ಸಿಸಿಟಿವಿಯಲ್ಲಿ ದಾಖಲಾಗಿದೆ.
|
6 |
+
ಇದು ಒಂದು ಜೈಲಿನ ವಿಚಾರವಲ್ಲ. ಬೆಳಗಾವಿ ಹಿಂಡಲಗ ಸೇರಿದಂತೆ ರಾಜ್ಯಾದ್ಯಂತ ಜೈಲುಗಳಲ್ಲಿ ಲೋಪಗಳು ಕಂಡುಬಂದಿವೆ. ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ, ದರ್ಶನ್ ಗುಂಪಿಗೆ ಸಹಾಯ ಮಾಡಿದವರ ವಿರುದ್ಧ ತನಿಖೆ ನಡೆಸಲಾಗುವುದು. ಈಗಾಗಲೇ 9 ಮಂದಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದರು.
|
7 |
+
ಜೈಲಿನ ಸುಧಾರಣೆಗೆ ರಾಷ್ಟ್ರ ಮಟ್ಟದಲ್ಲೂ ಮನಮೋಹನ್ ಸಿಂಗ್ ಕಾಲದಲ್ಲಿ ವರದಿಯೊಂದು ಮಂಡನೆಯಾಗಿರುವ ಬಗ್ಗೆ ಮಾಹಿತಿ ಇದೆ. ಅದನ್ನು ಪರಿಶೀಲಿಸಲಾಗುವುದು. ದರ್ಶನ್ ವಿಚಾರ ಒಂದೇ ಅಲ್ಲ ಒಟ್ಟಾರೆ ಜೈಲಿನ ವ್ಯವಸ್ಥೆಗಳನ್ನೇ ಪುನರ್ ಪರಿಶೀಲಿಸಿ ಸರಿಪಡಿಸಲಾಗುವುದು ಎಂದು ಹೇಳಿದರು.
|
8 |
+
ಪರಪ್ಪನ ಅಗ್ರಹಾರ ಕಾರಾಗೃಹವನ್ನು ಮೂರು ವಿಭಾಗಗಳನ್ನಾಗಿ ಮಾಡಲು ಅವಕಾಶವಿಲ್ಲ. ಆಂತರಿಕವಾಗಿ ಸಣ್ಣಪುಟ್ಟ ಹೊಂದಾಣಿಕೆಗಳನ್ನು ಮಾಡಿಕೊಳ್ಳಬಹುದು. ಶಿಕ್ಷಾಧೀನ ಕೈದಿಗಳು, ವಿಚಾರಣಾಧೀನ ಕೈದಿಗಳು, ಮಹಿಳಾ ಕೈದಿಗಳು ಎಂದು ಪ್ರತ್ಯೇಕ ಮಾಡಬಹುದು. ಆದರೆ ಅದರ ಹೊರತಾಗಿ ಘಟಕಗಳವಾರು ವಿಭಜಿಸಲು ಸಾಧ್ಯವಿಲ್ಲ ಎಂದರು.
|
9 |
+
ಶಿವಮೊಗ್ಗ, ಬಳ್ಳಾರಿ, ಮಂಗಳೂರು ಸೇರಿದಂತೆ ಹಲವು ಜೈಲುಗಳ ವ್ಯವಸ್ಥೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ತಿಳಿಸಿದರು.ದರ್ಶನ್ ಪ್ರಕರಣದಲ್ಲಿ ರಾಜಕೀಯ ಲಾಭ ಪಡೆದುಕೊಳ್ಳುವ ಅಗತ್ಯವಿಲ್ಲ. ಇದರಲ್ಲಿ ನಾವು ಯಾವುದನ್ನೂ ಮುಚ್ಚಿಡುತ್ತಿಲ್ಲ. ಸಾಕ್ಷಿಗಳನ್ನು ಬೆದರಿಸುವ ಅಗತ್ಯವೂ ನಮಗಿಲ್ಲ ಎಂದರು.
|
10 |
+
ದರ್ಶನ್ ಅವರನ್ನು ಬೇರೆ ಜೈಲಿಗೆ ವರ್ಗಾವಣೆ ಮಾಡುವ ಬಗ್ಗೆ ಬಂಧೀಖಾನೆಯ ಅಧಿಕಾರಿಗಳ ಸಮಿತಿ ನಿರ್ಧಾರ ತೆಗೆದುಕೊಳ್ಳುತ್ತದೆ. ಪರಿಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತಂದು ನಂತರ ಕ್ರಮ ಕೈಗೊಳ್ಳಬಹುದು. ಈ ವಿಚಾರದಲ್ಲಿ ಸರ್ಕಾರ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ.
|
11 |
+
ಜೈಲ��ನ ಅಧಿಕಾರಿಗಳೇ ಎರಡುಮೂರು ದಿನಗಳಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಹೇಳಿದರು.ರಾಜಭವನ ಚಲೋ ನಡೆಸುತ್ತಿರುವ ವಿವಿಧ ಸಂಘಟನೆಗಳು ಶಾಂತಿ ಪಾಲನೆ ಮಾಡಬೇಕು. ಮೆರವಣಿಗೆ ಹಾಗೂ ಇತರ ವಿಚಾರಗಳ ಬಗ್ಗೆ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಬೇಕು ಎಂದರು.
|
eesanje/url_46_32_11.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಜೈಲಲ್ಲಿ ರಾಜೋಪಚಾರ ವಿಚಾರ : ಸಚಿವರ ಸಿಎಂ ಮಾತುಕತೆ, ಬೇರೆ ಜೈಲಿಗೆ ದರ್ಶನ್ ಶಿಫ್ಟ್..?
|
2 |
+
|
3 |
+
ಬೆಂಗಳೂರು,ಆ.27-ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿ ರುವ ನಟ ದರ್ಶನ್, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ರಾಜೋಪಚಾರ ಮಾಡಿದ ಪ್ರಕರಣ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಸಚಿವರ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ.
|
4 |
+
ಇಂದು ಬೆಳಗ್ಗೆ ಗೃಹಸಚಿವ ಡಾ.ಜಿ.ಪರ ಮೇಶ್ವರ್ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಜೈಲಿನಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ವರದಿ ನೀಡಿದ್ದಾರೆ. ಲೋಪದೋಷಗಳ ಬಗ್ಗೆ ಮಾಹಿತಿ ಒದಗಿಸಿದ್ದಾರೆ.
|
5 |
+
ಈಗಾಗಲೇ ಹಿರಿಯ ಅಧಿಕಾರಿಗಳು ಸೇರಿದಂತೆ 9 ಮಂದಿಯನ್ನು ಅಮಾನತು ಮಾಡಲಾಗಿದೆ. ಜೊತೆಗೆ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಸಲಾಗಿದೆ ಎಂದು ವಿವರಿಸಿದ್ದಾರೆ. ಈ ವೇಳೆ ನ್ಯಾಯಾಲಯದ ಪೂರ್ವಾನುಮತಿ ಪಡೆದು ದರ್ಶನ್ನನ್ನು ಬೇರೆ ಜೈಲಿಗೆ ವರ್ಗಾಯಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
|
6 |
+
ನ್ಯಾಯಾಲಯದ ಪ್ರಕ್ರಿಯೆಗಳು ಮುಗಿದ ನಂತರ ನಟ ದರ್ಶನ್ ಅವರನ್ನು ಬಳ್ಳಾರಿಯ ಕಾರಾಗೃಹ ಅಥವಾ ಬೆಳಗಾಂನ ಹಿಂಡಲಗ ಜೈಲಿಗೆ ಸ್ಥಳಾಂತರಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.ಪರಪ್ಪನ ಅಗ್ರಹಾರ ಅಷ್ಟೇ ಅಲ್ಲದೆ ಹಲವು ಜೈಲುಗಳಲ್ಲಿ ವಿವಿಐಪಿ ಹಾಗೂ ಪ್ರಭಾವಿ ಕೈದಿಗಳಿಗೆ ರಾಜೋಪಚಾರ ನೀಡುತ್ತಿರುವುದು , ಮೊಬೈಲ್ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸುತ್ತಿರುವುದು ಕಂಡುಬಂದಿದೆ.
|
7 |
+
ಈ ಹಿನ್ನಲೆಯಲ್ಲಿ ಬಂಧಿಖಾನೆಗಳ ಸಮಗ್ರ ಸುಧಾರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಪರಮೇಶ್ವರ್ ಅವರನೊಂದಿಗಿನ ಚರ್ಚೆಯ ಬಳಿಕ ಸಿದ್ದರಾಮಯ್ಯ, ಸಚಿವ ಎಚ್.ಕೆ.ಪಾಟೀಲ್ ಅವರೊಂದಿಗೂ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ.
|
8 |
+
ಈ ಹಿಂದೆ ಜೈಲಿನ ವ್ಯವಸ್ಥೆಗಳ ಸುಧಾರಣೆಗಾಗಿ ಎಚ್.ಕೆ.ಪಾಟೀಲ್ನೇತೃತ್ವದ ಸಮಿತಿ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ನೀಡಿತ್ತು. ಅದರ ಕುರಿತು ಮುಖ್ಯಮಂತ್ರಿ ಇಂದು ವರದಿ ಪಡೆದಿದ್ದು, ಬಂಧಿಖಾನೆಯ ಲೋಪದೋಷಗಳನ್ನು ಸರಿಪಡಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
|
9 |
+
ಜೈಲಿನಲ್ಲಿ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ, ದರ್ಶನ್ಗೆ ಆತಿಥ್ಯ ನೀಡುತ್ತಿದ್ದು ಜೈಲಿನ ಅಧಿಕಾರಿಗಳನ್ನು ನಿಯಂತ್ರಿಸುತ್ತಿದ್ದಾನೆ. ನಾಗ ತನ್ನ ವರ್ಚಸ್ಸನ್ನು ಹೆಚ್ಚಿಸಿಕೊಳ್ಳಲು ದರ್ಶನ್ ಜೊತೆ ಇರುವ ಫೋಟೋಗಳನ್ನು ಉದ್ದೇಶಪೂರ್ವಕವಾಗಿ ತನ್ನ ಹಿಂಬಾಲಕರ ಮೂಲಕ ಬಹಿರಂಗಪಡಿಸಬಹುದು ಎಂಬ ಶಂಕೆ ಇದೆ.
|
10 |
+
ಮತ್ತೊಂದು ಮಾಹಿತಿಯ ಪ್ರಕಾರ, ದರ್ಶನ್ಗೆ ನಾಗ ಹತ್ತಿರವಾಗಿರುವುದನ್ನು ಸಹಿಸಲಾಗದೆ ರಘು ಎಂಬ ಮತ್ತೊಬ್ಬ ರೌಡಿಯ ಗುಂಪು ಜೈಲಿನಲ್ಲಿ ದೊರೆಯುತ್ತಿರುವ ರಾಜಾತಿಥ್ಯದ ಮಾಹಿತಿಯನ್ನು ಹೊರಜಗತ್ತಿಗೆ ವಿವರಿಸಿ ಚರ್ಚೆಗೆ ಎಡೆಮಾಡಿಕೊಟ್ಟಿದೆ ಎಂದು ಹೇಳಲಾಗುತ್ತಿದೆ.
|
eesanje/url_46_32_12.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬಿಗಿ ಭದ್ರತೆ ನಡುವೆ ನಡೆದ ಗೆಜೆಟೆಡ್ ಪ್ರಬೇಷನರಿ ಹುದ್ದೆಗಳ ನೇಮಕಾತಿ ಪರೀಕ್ಷೆ
|
2 |
+
|
3 |
+
ಬೆಂಗಳೂರು,ಆ.27-ಕರ್ನಾಟಕ ಲೋಕಸೇವಾ ಆಯೋಗದ 384 ಗೆಜೆಟೆಡ್ ಪ್ರೊಬೆಷನರ್ರಸ ಹುದ್ದೆಗಳ ನೇಮಕಾತಿಗಾಗಿ ಇಂದು ರಾಜ್ಯಾದ್ಯಂತ ಏಕಕಾಲಕ್ಕೆ ಪರೀಕ್ಷೆ ನಡೆದಿದೆ. ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ವ್ಯಾಪಕ ತಪಾಸಣಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅದರಲ್ಲೂ ಈ ಮೊದಲು ಪಿಎಸ್ಐ ಹುದ್ದೆಗಳ ನೇಮಕಾತಿ ಸೇರಿದಂತೆ ಹಲವು ಪರೀಕ್ಷೆಗಳಲ್ಲಿ ಅಕ್ರಮಗಳಿಗೆ ಕುಖ್ಯಾತವಾಗಿರುವ ಕಲಬುರಗಿ ಹಾಗೂ ಇತರ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿತ್ತು.
|
4 |
+
ಪರೀಕ್ಷಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಅಳವಡಿಸಲಾಗಿದ್ದು, ನೊಂದಾಯಿತ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ಲೋಹ ಪರಿಶೋಧಕ ಅಳವಡಿಸಲಾಗಿದ್ದು, ಸಂಬಂಧಪಟ್ಟ ಸಲಕರಣೆಗಳಿಂದ ತೀವ್ರ ತಪಾಸಣೆ ನಡೆಸಲಾಗಿದೆ.
|
5 |
+
ಎಲೆಕ್ಟ್ರಾನಿಕ್ಸ್ ಉಪಕರಣಗಳ ಬಳಕೆಗೆ ಸಂಪೂರ್ಣ ನಿಷೇಧ ಹೇರಲಾಗಿದ್ದು, ಸೂಕ್ಷ್ಮ ಬ್ಲೂಟೂತ್ನಂತಹ ಡಿವೈಸ್ಗಳನ್ನು ಬಳಸಿ ಅಕ್ರಮ ನಡೆಸಬಹುದೆಂಬ ಕಾರಣಕ್ಕೆ ಪ್ರತಿಯೊಬ್ಬ ಅಭ್ಯರ್ಥಿಯ ಎರಡೂ ಕಿವಿಗಳನ್ನು ಬ್ಯಾಟರಿಯ ಬೆಳಕಿನಲ್ಲಿ ತಪಾಸಣೆ ನಡೆಸಲಾಯಿತು.
|
6 |
+
ಹೆಣ್ಣು ಮಕ್ಕಳಿಗೆ ಕಿವಿಯೊಲೆ, ಮೂಗುತಿ ಹಾಗೂ ಚಿನ್ನದ ಸರ ಧರಿಸದಂತೆ ಪರೀಕ್ಷಾ ಕೇಂದ್ರದ ಬಳಿ ಇದ್ದ ಧ್ವನಿವರ್ಧಕಗಳ ಮೂಲಕ ಸೂಚನೆ ನೀಡಲಾಗಿತ್ತು. ಕೆಲವರು ಬಹಳ ದಿನಗಳಿಂದ ಧರಿಸಿದ್ದ ಮೂಗುತಿ ಹಾಗೂ ಕಿವಿಯೋಲೆಗಳು ತಕ್ಷಣಕ್ಕೆ ಬಿಚ್ಚಲಾಗದೆ ಪರದಾಡಿದರು. ಅವುಗಳನ್ನು ಕತ್ತರಿಸಿ ತೆಗೆದಿರುವ ಉದಾಹರಣೆಗಳು ಇವೆ. ಕೆಲವರಿಗೆ ಈ ಸಂದರ್ಭದಲ್ಲಿ ಸಣ್ಣ ಪ್ರಮಾಣದ ರಕ್ತ ಜಿನಿಗಿದ್ದು, ನೋವಿನಿಂದ ಅಳತ್ತಿರುವ ದೃಶ್ಯಗಳು ಕಂಡುಬಂದಿವೆ.
|
7 |
+
ಬೆಳಗಾವಿಯ ಅಂಜುಮನ್ ಕಾಲೇಜಿನಲ್ಲಿ ಓಎಂಆರ್ ಶೀಟ್ ಅದಲು ಬದಲು ಗೊಂಡಿದ್ದರಿಂದ ಗೊಂದಲ ಉಂಟಾಯಿತು. ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಅನುಮಾನ ವ್ಯಕ್ತಪಡಿಸಿ ಕೆಲವರು ಪ್ರತಿಭಟನೆ ನಡೆಸಿದರು.ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ ಮೊಹಮದ್ ಮೋಸಿನ್, ಓಎಂಆರ್ ಶೀಟ್ನಲ್ಲಿ ಅದಲು ಬದಲು ಆಗಿರುವ ಗೊಂದಲವನ್ನು ಬಗೆಹರಿಸಿದರು. ಒಂದು ಗಂಟೆ ತಡವಾಗಿ ಪರೀಕ್ಷೆ ಆರಂಭವಾಯಿತು. ತಮಗೆ ಪರೀಕ್ಷೆ ಬರೆಯಲು ಹೆಚ್ಚುವರಿ ಸಮಯ ನೀಡಬೇಕೆಂದು ಅಭ್ಯರ್ಥಿಗಳು ಆಗ್ರಹಿಸಿದರು.
|
8 |
+
2017-18ರಲ್ಲಿ ಕೆಎಎಸ್ ಪರೀಕ್ಷೆ ನಡೆಸಲಾಗಿತ್ತು. ಆನಂತರ ಏಳು ವರ್ಷಗಳ ಬಳಿಕ 2024-25ನೇ ಸಾಲಿನ ಅಧಿಸೂಚನೆ ಹೊರಡಿಸಲಾಗಿದೆ. ಈ ಮೊದಲು ಲೋಕಸಭೆ ಚುನಾವಣೆ ಹಾಗೂ ಇತರೆ ಕಾರಣಗಳಿಂದಾಗಿ ಎರಡು ಬಾರಿ ಪರೀಕ್ಷೆಯನ್ನು ಮುಂದೂಡಲಾಗಿತ್ತು.
|
9 |
+
ಕಳೆದ ಜುಲೈನಲ್ಲಿ ಅಧಿಸೂಚನೆ ಹೊರಡಿಸಿ ಆ.27ಕ್ಕೆ ದಿನಾಂಕ ನಿಗದಿಪಡಿಸಿದಾಗ ಕೆಲವು ಅಭ್ಯರ್ಥಿಗಳು ವಿರೋಧ ವ್ಯಕ್ತಪಡಿಸಿದ್ದರು. 21ಕ್ಕೂ ಹೆಚ್ಚಿನ ವಿಷಯಗಳನ್ನು ಅಧ್ಯಯನ ಮಾಡಬೇಕಿದೆ. ಹೀಗಾಗಿ ಒಂದು ತಿಂಗಳ ಕಾಲಾವಕಾಶ ಸಾಲುವುದಿಲ್ಲ. ಕನಿಷ್ಟ ಮೂರು ತಿಂಗಳಿಗೆ ಪರೀಕ್ಷೆಯನ್ನು ಮುಂದೂಡಬೇಕು ಎಂದು ಒತ್ತಾಯಿಸಿದ್ದರು. ಆದರೆ ಇದಕ್ಕೆ ಸರ್ಕಾರ ಸೊಪ್ಪು ಹಾಕಲಿಲ್ಲ.
|
10 |
+
ಅಭ್ಯರ್ಥಿಗಳು ನಡೆಸಿದ ಹೋರಾಟಗಳಿಗೆ ತಿರುಗೇಟು ಕೊಟ್ಟ ಮುಖ್ಯಮಂತ್ರಿ ಸಚಿವಾಲಯ 2.5 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ತಯಾರಿ ಮಾಡಿಕೊಂಡಿದ್ದಾರೆ. ಕೆಲವೇ ಕೆಲವರು ಮುಂದೂಡಿಕೆ ಬೇಡಿಕೆಯನ್ನಿಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಲಾಗಿತ್ತು. ಕೊನೆಗೆ ಯಾವುದೇ ಒತ್ತಾಯಕ್ಕೆ ಮಣಿಯದೆ ನಿಗದಿತ ಸಮಯದಲ್ಲೇ ಇಂದು ಕೆಎಎಸ್ ಪರೀಕ್ಷೆ ನಡೆದಿದೆ.
|
eesanje/url_46_32_2.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
10 ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಸದಸ್ಯರ ನಾಮನಿರ್ದೇಶನ ಮಾಡಿದ ರಾಜ್ಯ ಸರ್ಕಾರ
|
2 |
+
10
|
3 |
+
ಬೆಂಗಳೂರು,ಆ.28– ಕನ್ನಡ ವಿಶ್ವವಿದ್ಯಾಲಯ, ಜಾನಪದ ವಿವಿ, ಬೆಂಗಳೂರು, ಬೆಂಗಳೂರು ನಗರ, ಬೆಂಗಳೂರು ಉತ್ತರ ಸೇರಿದಂತೆ ಹತ್ತು ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಪ್ರಾಧಿಕಾರಗಳಿಗೆ ರಾಜ್ಯ ಸರ್ಕಾರ ಸದಸ್ಯರನ್ನು ನಾಮನಿರ್ದೇಶನ ಮಾಡಿದೆ.
|
4 |
+
ಮೂರು ವರ್ಷಗಳ ಅವಧಿಗೆ ಸಿಂಡಿಕೇಟ್ ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ. ಮಹಿಳೆ, ಅಲ್ಪಸಂಖ್ಯಾತ, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗಕ್ಕೆ ನಾಮನಿರ್ದೇಶನ ಸದಸ್ಯರ ನೇಮಕದಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗಿದೆ.
|
5 |
+
ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾಗಿ ಡಾ.ಬಿ.ಯು.ಸುಮ, ಸೋಮಶೇಖರ ಬಣ್ಣದಮನೆ, ಡಾ.ಎಸ್.ಎಂ.ಮುತ್ತಯ್ಯ, ಎನ್.ಎ.ಮೊಹಮದ್, ಇಸಾಯಿಲ್, ಡಾ.ಬಂಜಗೆರೆ ಜಯಪ್ರಕಾಶ್, ಡಾ.ಪಣಿರಾಜ್, ಡಾ.ನಟರಾಜ್ ಹುಳಿಯಾರ್, ಬಿ.ಆರ್.ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.
|
6 |
+
ಬೆಂಗಳೂರು ವಿವಿ ಸಿಂಡಿಕೇಟ್ಗೆ ಡಾ.ಜಯಶ್ರೀ ಹೆಗಡೆ, ಎಂ.ಎ.ಮಹದೇವ ನಾಯ್ಕ, ಡಾ.ಕೆ.ಷರೀಫಾ, ಡಿ.ವಿ.ಗಂಗರಾಜು, ದಂಡಕೆರೆ ನಾಗರಾಜ್, ರಮೇಶ್ ಬಾಬು ಅವರನ್ನು ನಾಮನಿರ್ದೇಶನ ಸದಸ್ಯರಾಗಿ ನೇಮಕ ಮಾಡಲಾಗಿದೆ.
|
7 |
+
ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಿಂಡಿಕೇಟ್ಗೆ ಆಯೇಷ, ಫರ್ಜಾನಾ, ಡಾ.ಎಚ್.ಕೃಷ್ಣರಾಮ್, ಡಾ.ಫ್ರಾನ್ಸಿಸ್ ಅಸ್ಸಿಸಿ ಅಲೇದ, ವಿ.ಶಿವಕುಮಾರ್, ಕೆ.ಪಿ.ಪಾಟೀಲ್, ಡಾ.ಬೀರಪ್ಪ.ಎಚ್ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ಗೆ ಸಹನ.ಎಸ್.ಆರ್, ಜಯದೀಪ್, ಅರ್ಬಾಜ್ ಪಾಷ, ಎಂ.ಗೋಪಾಲಗೌಡ, ನಿರೂಪ್, ಕೆ.ಬಸವರಾಜ್ ಅವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ.
|
8 |
+
ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್ಗೆ ಪ್ರೊ.ಸಾಕಮ.ಬಿ, ಶಿವಕುಮಾರ್.ಎಂ, ಮುಸಾವಿರ್ ಬಾಷಾ.ಎಂ, ಲಕ್ಷ್ಮಿಕಾಂತ ಚಿಮನೂರು, ಕೆ.ಪಿ.ಸಿ.ಪಾಲ್, ಎಚ್.ಜಿ.ಅರವಿಂದ, ಗುಲ್ಬರ್ಗ ವಿಶ್ವವಿದ್ಯಾಲಯದ ಸಿಂಡಿಕೇಟ್ಗೆ ಡಾ.ಶ್ರೀದೇವಿ.ಎಸ್ ಕಟ್ಟಿಮನಿ, ಸಿದ್ದಪ್ಪ ಸುಳ್ಳದ್, ಡಾ.ಬೀರ್ಜಾದ ಪಹೀ ಮುದ್ದೀನ್, ಮಲ್ಲಣ್ಣ.ಎಸ್ ಮಡಿವಾಳ, ಉದಯ್ ಕಾಂತ್, ಸಿದ್ದಪ್ಪ ಮೂಲಗೆ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.
|
9 |
+
ರಾಯಚೂರು ವಿಶ್ವವಿದ್ಯಾಲಯದ ಸಿಂಡಿಕೇಟ್ಗೆ ಡಾ.ಮೀನಾಕ್ಷಿ ಖಂಡಿಮಠ, ಡಿ.ಆರ್.ಚಿನ್ನ, ಜೀಶಾನ್ ಆಖಿಲ್ ಸಿದ್ದಖಿ, ಶಿವಣ್ಣ, ಚನ್ನಬಸವ, ಕೆ.ಪ್ರತಿಮಾ, ವಿಜಯನಗರ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಿಂಡಿಕೇಟ್ಗೆ ಜಯಲಕ್ಷ್ಮಿ ನಾಯಕ್, ಡಾ.ವೈ.ಆರ್ತೋಬ ನಾಯ್ಕ, ಬಿ.ಪೀರ್ಬಾಷಾ, ಶಿವಕುಮಾರ್.ಕೆ, ಡಾ.ಅಮರೇಶ ನಿಗಡೋಣಿ ಹಾಗೂ ಚ.ಹ.ರಘುನಾಥ್ ಅವರನ್ನು ನಾಮನಿರ್ದೇಶನ ಮಾಡಿ ಆದೇಶಿಸಿದೆ.
|
10 |
+
ಜಾನಪದ ��ಿಶ್ವವಿದ್ಯಾಲಯದ ಸಿಂಡಿಕೇಟ್ಗೆ ಡಾ.ಜ್ಯೋತಿಲಕ್ಷ್ಮಿ .ಡಿ.ಪಿ, ರಾಮಪ್ಪ ಮಾನಪ್ಪ ಲಂಬಾಣಿ, ಸಹನ ಪಿಂಜಾರ, ಮೋಹನ್ಕುಮಾರ್.ಎನ್, ಗೋರೆವಾಲೆ ಚಂದ್ರಶೇಖರ್, ಡಾ.ಮೊಗುಳಿ ಗಣೇಶ್, ಸಂಸ್ಕೃತಿ ವಿಶ್ವವಿದ್ಯಾಲಯದ ಸಿಂಡಿಕೇಟ್ಗೆ ಡಾ.ಬಂಗಾರಮ.ಕೆ, ಡಾ.ಶಿವಲಿಂಗಯ್ಯ, ಡಾ.ಮುನೀರ್ ಅಹಮದ್, ಬಸಪ್ಪ ಡೊಂಕಬಳ್ಳಿ, ಹನುಮಂತನಾಥ ಹಾಗೂ ನಾರಾಯಣ ಯಾಜಿ ಅವರನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಲಾಗಿದೆ.
|
eesanje/url_46_32_3.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ದಾಖಲೆಗಳಲ್ಲಿ ಹೆಸರು ಬದಲಿಸಿದಾಕ್ಷಣ ಮಾಲಿಕತ್ವ ಬದಲಾಗಲ್ಲ : ಹೈಕೋರ್ಟ್ ಮಹತ್ವದ ತೀರ್ಪು
|
2 |
+
|
3 |
+
ಬೆಂಗಳೂರು:ಖಾಸಗಿ ವ್ಯಕ್ತಿಯ ಹೆಸರಿನಲ್ಲಿದ್ದ ಕಂದಾಯ ದಾಖಲೆಗಳಲ್ಲಿ ಹೆಸರು ಬದಲಾಯಿಸಿದಾಕ್ಷಣ ಆಸ್ತಿಯ ಮಾಲಿಕತ್ವ ಬದಲಾಗದು ಎಂದು ಹೈಕೋರ್ಟ್ ನ ಕಲಬುರಗಿ ಪೀಠ ಮಹತ್ವದ ತೀರ್ಪು ನೀಡಿದೆ. ಇದೇ ವೇಳೆ, ಚೆನ್ನಮ್ಮ ಹಿರೇಮಠ ಎಂಬುವರ ಹೆಸರಿನಲ್ಲಿದ್ದ ಆಸ್ತಿಯ ದಾಖಲೆಗಳಲ್ಲಿ ಅವರ ಹೆಸರು ತೆಗೆದು ವಕ್ಫ್ ಬೋರ್ಡ್ ಹೆಸರು ಸೇರ್ಪಡೆ ಮಾಡಿದ್ದ ಕಂದಾಯ ಇಲಾಖೆ ಅಧಿಕಾರಿಗಳಿಗೆ ದಾಖಲೆಗಳನ್ನು ಸರಿಪಡಿಸಿಕೊಡುವಂತೆ ನಿರ್ದೇಶಿಸಿದೆ.
|
4 |
+
ರಾಯಚೂರಿನ ರೈತ ಮಹಿಳೆ ಚೆನ್ನಮ್ಮ ಹಿರೇಮಠ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅರ್ಜಿದಾರರ ಹೆಸರಿಗೆ 60 ದಿನಗಳಲ್ಲಿ ದಾಖಲೆಗಳನ್ನು ಸರಿಪಡಿಸಿಕೊಡುವಂತೆ ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶಿಸಿದೆ.
|
5 |
+
ಹೈಕೋರ್ಟ್ ತನ್ನ ತೀರ್ಪಿನಲ್ಲಿ, ಪ್ರಾದೇಶಿಕ ಆಯುಕ್ತರು ಹೊರಡಿಸಿರುವ ಆದೇಶಗಳನ್ನು ತಹಶೀಲ್ದಾರ್ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಒಂದು ಆಸ್ತಿ ವಕ್ಫ್ ಮಂಡಳಿಗೆ ಸೇರಿದ್ದರೆ ಅಂತಹ ಸಂದರ್ಭದಲ್ಲಿ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲನೆ ನಡೆಸಿ, ನಂತರ ದಾಖಲೆಗಳಲ್ಲಿ ಹೆಸರು ಸೇರ್ಪಡೆ ಮಾಡಬೇಕು. ಆದರೆ, ಈ ಪ್ರಕರಣದಲ್ಲಿ ಯಾವುದೇ ಪರಿಶೀಲನೆ ನಡೆಸದೆ, ಏಕಾಏಕಿ ಹೆಸರು ಬದಲಾವಣೆ ಮಾಡಲಾಗಿದೆ ಎಂದು ನ್ಯಾಯಾಲಯ ಹೇಳಿದೆ.
|
6 |
+
ಅಲ್ಲದೇ, ಈ ಹಿಂದೆ ಹೈಕೋರ್ಟ್ ಅರ್ಜಿದಾರರ ಮನವಿ ಪರಿಗಣಿಸಲು ಅಧಿಕಾರಿಗಳಿಗೆ ನಿರ್ದೇಶಿಸಿದ್ದರೂ ಸೂಕ್ತ ಕ್ರಮ ಕೈಗೊಂಡಿಲ್ಲ. ಉಪವಿಭಾಗಾಧಿಕಾರಿ ಈ ವಿಚಾರದಲ್ಲಿ ತಮಗೆ ಯಾವುದೇ ಅಧಿಕಾರವಿಲ್ಲ, ಆಸ್ತಿಗೆ ಸಂಬಂಧಿಸಿದಂತೆ ವ್ಯಾಜ್ಯವಿದ್ದರೆ ವಕ್ಫ್ ಕಾಯ್ದೆಯ ಸೆಕ್ಷನ್ 83ರ ಅಡಿ ವಕ್ಫ್ ನ್ಯಾಯಮಂಡಳಿ ಮೊರೆ ಹೋಗಿ ಎಂದು ಹೇಳಿದ್ದಾರೆ. ಆದರೆ, ದಾಖಲೆಗಳ ಪ್ರಕಾರ ಅರ್ಜಿದಾರರು ಆಸ್ತಿಯ ಮಾಲಿಕರಾಗಿದ್ದಾರೆ. ಆಸ್ತಿ ವಕ್ಫ್ ಬೋರ್ಡ್ಗೆ ಸೇರಿದ್ದು ಎಂದು ಹೇಳಲು ದಾಖಲೆಗಳಿಲ್ಲ. ಹೀಗಾಗಿ ಅವರು ತಮ್ಮ ಆಸ್ತಿಗಾಗಿ ವಕ್ಫ್ ಟ್ರಿಬ್ಯುನಲ್ ಮೊರೆ ಹೋಗಬೇಕಾಗಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
|
7 |
+
ಅಂತಿಮವಾಗಿ ಆಸ್ತಿಯ ಹಕ್ಕುಸ್ವಾಮ್ಯದ ಕುರಿತಂತೆ ವಿವಾದಗಳಿದ್ದಲ್ಲಿ ಅವುಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲು ತಹಶೀಲ್ದಾರ್ ಗೆ ಸ್ವಾತಂತ್ರವಿದೆ ಎಂದಿರುವ ಹೈಕೋರ್ಟ್, ಅಂತಹ ಕ್ರಮ ಕೈಗೊಳ್ಳುವುದಿದ್ದಲ್ಲಿ, ಅರ್ಜಿದಾರರಿಗೆ ನೋಟಿಸ್ ನೀಡಿ, ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿ ನಂತರ ಸೂಕ್ತ ನಿರ್ಣಯ ಕೈಗೊಳ್ಳಬೇಕು ಎಂದು ಹೈಕೋರ್ಟ್ ಕಂದಾಯ ಅಧಿಕಾರಿಗಳಿಗೆ ನಿರ್ದೇಶಿಸಿದೆ.
|
8 |
+
ಪ್ರಕರಣದ ಹಿನ್ನೆಲೆ: ಅರ್ಜಿದಾರರಾದ ಚೆನ್ನಮ್ಮ ಹಿರೇಮಠ ಅವರು2012ರಲ್ಲಿ ಕ್ರಯಪತ್ರದ ಮೂಲಕ 39 ಗುಂಟೆ ಜಮೀನು ಖರೀದಿಸಿದ್ದರು. ಈ ಜಮೀನು ಪೂರ್ವದಲ್ಲಿ ಹಸನ್ ಖಾನ್ ಹಾಗೂ ಹಕೀಮ್ ಖಾನ್ ಎಂಬುವರಿಗೆ ಮಂಜೂರಾದ ಇನಾಂ ಜಮೀನಾಗಿತ್ತು. ಆ ನಂತರದಲ್ಲಿ ಒಬ್ಬರಿಂದೊಬ್ಬರಿಗೆ ಮಾರಾಟವಾಗಿ, ಕೊನೆಯದಾಗಿ ಚೆನ್ನಮ್ಮ 2012 ರಲ್ಲಿ ಶಿವಾನಂದ್ ಎಂಬುವರಿಂದ ಜಮೀನು ಖರೀದಿಸಿದ್ದರು.
|
9 |
+
2017ರಲ್ಲಿ ವಕ್ಪ್ ಬೋರ್ಡ್ ಗೆ ಸಂಬಂಧಿಸಿದ ಆಸ್ತಿಗಳ ಬಗ್ಗೆ ಪರಿಶೀಲನೆ ನಡೆಸಿ, ಒಂದು ವೇಳೆ ಕಂದಾಯ ದಾಖಲೆಗಳಲ್ಲಿ ಹೆಸರು ಬದಲಾವಣೆ ಆಗಿದ್ದರೆ ಅವುಗಳನ್ನು ತೆಗೆದು, ಕಂದಾಯ ದಾಖಲೆಗಳ ಕಾಲಂ ನಂ 9 ಮತ್ತು 11 ರಲ್ಲಿ ವಕ್ಫ್ ಬೋರ್ಡ್ ಹೆಸರು ದಾಖಲಿಸಲು ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಜಿಲ್ಲಾಧಿಕಾರಿ ಸಂಬಂಧಪಟ್ಟ ದಾಖಲೆಗಳಲ್ಲಿ ವಕ್ಫ್ ಹೆಸರನ್ನು ನಮೂದಿಸುವಂತೆ ತಹಶೀಲ್ದಾರ್ ಗಳಿಗೆ ಆದೇಶಿಸಿದ್ದರು. ತಹಶೀಲ್ದಾರ್ 2018-19ರಲ್ಲಿ ಚೆನ್ನಮ್ಮ ಅವರಿಗೆ ಸೇರಿದ ಆಸ್ತಿಯ ಕಂದಾಯ ದಾಖಲೆಗಳಲ್ಲಿ ವಕ್ಫ್ ಮಂಡಳಿಯ ಹೆಸರು ಸೇರಿಸಿದ್ದರು.
|
10 |
+
ಈ ವಿಚಾರ ತಿಳಿದ ನಂತರ ಅರ್ಜಿದಾರೆ ಚೆನ್ನಮ್ಮ, ದಾಖಲೆಗಳಲ್ಲಿ ತಮ್ಮ ಹೆಸರು ನಮೂದಿಸುವಂತೆ ಮನವಿ ಸಲ್ಲಿಸಿದ್ದರು. ಆದರೆ, ಅದನ್ನು ಅಧಿಕಾರಿಗಳು ಪುರಸ್ಕರಿಸದೇ ಇದ್ದಾಗ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ ಅವರ ಮನವಿ ಪರಿಗಣಿಸುವಂತೆ ಸೂಚಿಸಿತ್ತು. ಆದರೆ, ಉಪವಿಭಾಗಾಧಿಕಾರಿಯು ಅರ್ಜಿದಾರರ ಮನವಿ ತಿರಸ್ಕರಿಸಿ, ವಕ್ಫ್ ಕಾಯ್ದೆ ಸೆಕ್ಷನ್ 83ರ ಪ್ರಕಾರ ವಕ್ಫ್ ಟ್ರಿಬ್ಯುನಲ್ಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದರು. ಎಸಿ ಆದೇಶ ಪ್ರಶ್ನಿಸಿ ಅರ್ಜಿದಾರರು ಮತ್ತೆ ಹೈಕೋರ್ಟ್ ಮೊರೆ ಹೋಗಿದ್ದರು.
|
11 |
+
‘
|
eesanje/url_46_32_4.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ದರ್ಶನ್ ಸ್ವಾತಂತ್ರ್ಯಹೋರಾಟಗಾರನಲ್ಲ, ಕೊಲೆ ಮಾಡಿ ಬಂದ ಕ್ರಿಮಿನಲ್ : ವಿಶ್ವನಾಥ್ ಆಕ್ರೋಶ
|
2 |
+
|
3 |
+
ಬೆಂಗಳೂರು,ಆ.27– ನಟ ದರ್ಶನ್ ಸ್ವಾತಂತ್ರ್ಯ ಹೋರಾಟಗಾರನಲ್ಲ. ಕೊಲೆ ಮಾಡಿ ಬಂದ ಕ್ರಿಮಿನಲ್. ಆತನಿಗೆ ರಾಜೋಪಚಾರ ಮಾಡಬಾರದು ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ದರ್ಶನ್ ಪ್ರಕರಣದ ಕುರಿತು ಖಾರವಾಗಿ ಪ್ರತಿಕ್ರಿಯಿಸಿದರು.
|
4 |
+
ದರ್ಶನ್ ಸ್ವಾತಂತ್ರ್ಯ ಹೋರಾಟ ಗಾರನಲ್ಲ. ಹಿ ಇಸ್ ಎ ಕ್ರಿಮಿನಲ್. ಒಬ್ಬನನ್ನು ಕೊಲೆ ಮಾಡಿ ಬಂದವನು. ಆತನಿಗೆ ಜೈಲಿನಲ್ಲಿ ರಾಜೋಪಚಾರ ನೀಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಗೃಹಸಚಿವ ಪರಮೇಶ್ವರ್ ಈ ವಿಚಾರವಾಗಿ ಏಕೆ ಸುಮನಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
|
5 |
+
ಮೈಸೂರು ನಗರಾ ಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂದ ಪಟ್ಟಂತೆ ಪ್ರತಿಕ್ರಿಯಿಸಿದ ವಿಶ್ವನಾಥ್, ಈ ವಿಚಾರವಾಗಿ ನಾನು ಮೌನವಾಗಿಲ್ಲ. ಹಾಗೆಂದು ಪ್ರತಿದಿನ ಮಾತನಾಡಲು ಸಾಧ್ಯವಿಲ್ಲ ಎಂದರು.
|
6 |
+
ಮುಡಾದಿಂದ ಪಡೆದಿರುವ ನಿವೇಶನಗಳನ್ನು ವಾಪಸ್ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಾನು ಮೊದಲೇ ಸಲಹೆ ನೀಡಿದ್ದೆ. ಅದ್ಯಾಕೊ ಅವರು ಸುಮನಾಗಿದ್ದರು. ಸಿದ್ದರಾಮಯ್ಯ ಅವರಿಂದಲೂ ಮುಡಾವನ್ನು ಸರಿಪಡಿಸಲು ಸಾಧ್ಯವಾಗಿಲ್ಲ ಎಂದರೆ ಹೇಗೆ? ಎಂದು ಅಸಮಾಧಾನ ವ್ಯಕ್ತಪಡಿಸಿದರು.
|
7 |
+
ಬಡವರಿಗೆ ನಿವೇಶನ ಹಂಚಲಿಲ್ಲ. ಮುಡಾದಲ್ಲಿನ ಹಗರಣಗಳನ್ನು ಸಿದ್ದರಾಮಯ್ಯ ಗಂಭೀರವಾಗಿ ತೆಗೆದುಕೊಳ್ಳಲಿಲ್ಲ ಎಂದು ಆರೋಪಿಸಿದರು.ಮುಡಾ ಹಗರಣದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಪಾತ್ರವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆತನನ್ನು ಹತ್ತಿರ ಬಿಟ್ಟುಕೊಂಡಿದ್ದೇ ತಪ್ಪು. ಮೊದಲು ಭೈರತಿಯನ್ನು ಹೊರಗೆ ಹಾಕಬೇಕು.
|
8 |
+
ಹಾಗೆಯೇ ಮುಡಾದ ಆಯುಕ್ತ ನಟೇಶ್ನನ್ನು ಹೊರ ಹಾಕಬೇಕೆಂದು ಸಲಹೆ ನೀಡಿದರು. ನಟೇಶ್ ಸರ್ಕಾರದ ಆಸ್ತಿಯನ್ನು ಲೂಟಿ ಮಾಡಿದ್ದಾರೆ. ಅಂತಹ ವ್ಯಕ್ತಿಯ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದ ಮೇಲೆ ಯಾವ ರೀತಿಯ ಆಡಳಿತ ಇದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಸಚಿವ ಭೈರತಿ ಸುರೇಶ್ ದುರಾಹಂಕಾರಿ. ಧುರ್ಯೋದನ, ದುಶ್ಯಾಸನ ಇದ್ದಂತೆ. ಸಿದ್ದರಾಮಯ್ಯ ಅವರನ್ನು ಹಾಳು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
|
eesanje/url_46_32_5.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪ್ರಿಯಾಂಕ್ ಖರ್ಗೆಯನ್ನು ಸಚಿವ ಸಂಪುಟದಿಂದ ವಜಾಗೊಳಿಸಲು ರಾಜ್ಯಪಾಲರಿಗೆ ಬಿಜೆಪಿ ದೂರು
|
2 |
+
|
3 |
+
ಬೆಂಗಳೂರು,ಆ.27-ನಿಯಮ ಉಲ್ಲಂಘಿಸಿ ಅಧಿಕಾರ ದುರುಪಯೋಗ ಹಾಗೂ ಸ್ವಜನಪಕ್ಷಪಾತದ ಮೇಲೆ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ(ಕೆಐಎಡಿಬಿ) ಮೂಲಕ ಜಮೀನು ಪಡೆದಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿದೆ.
|
4 |
+
ವಿಧಾನಸಭೆಯ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಂಗಳವಾರ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿಯಾಗಿ ದೂರು ನೀಡಿದ್ದಾರೆ.
|
5 |
+
ಸ್ವಜನ ಪಕ್ಷಪಾತ ಅಧಿಕಾರ ದುರುಪಯೋಗ ಮತ್ತು ಹಿತಾಸಕ್ತಿ ಸಂಘರ್ಷದ ಮೂಲಕ 5 ಎಕರೆ ಭೂಮಿಯನ್ನು ಕಾನೂನು ಬಾಹಿರವಾಗಿ ಪಡೆದಿರುವ ಪ್ರಿಯಾಂಕ ಖರ್ಗೆಯನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸಬೇಕೆಂದು ಮುಖ್ಯಮಂತ್ರಿಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದಾರೆ.
|
6 |
+
ಕೆಐಎಡಿಬಿಯಿಂದ ಹೈಟೆಕ್ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್ಗಾಗಿ ಮೀಸಲಿಟ್ಟ 45.9 ಎಕರೆ ಜಮೀನಿನಲ್ಲಿ ಪ್ರಿಯಾಂಕ್ ಖರ್ಗೆ ಅವರಿಗೆ 5 ಎಕರೆ ಜಮೀನು ನೀಡಲಾಗಿದೆ. ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಕುಟುಂಬದವರು ನಡೆಸುತ್ತಿರುವ ಸಿದ್ದಾರ್ಥ ವಿಹಾರ ಟ್ರಸ್ಟ್ಗೆ ಪರಿಶಿಷ್ಟ ಕೋಟಾದಡಿ 5 ಎಕರೆ ಜಮೀನು ನೀಡಲಾಗಿದೆ. ಈ ಟ್ರಸ್ಟ್ನಲ್ಲಿ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ ಖರ್ಗೆ, ರಾಹುಲ್ ಖರ್ಗೆ, ಸಂಸದ ಹಾಗೂ ಅಳಿಯ ರಾಧಾಕೃಷ್ಣ ಅವರುಗಳು ಸದಸ್ಯರಾಗಿದ್ದಾರೆ. ಇದು ನಿಯಮ ಉಲ್ಲಂಘನೆಯಾಗಿದೆ ಎಂದು ರಾಜ್ಯಪಾಲರಿಗೆ ಮನವರಿಕೆ ಮಾಡಿದ್ದಾರೆ.
|
7 |
+
ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಜಮೀನು ನೀಡಿರುವುದನ್ನು ಸಮರ್ಥಿಸಿಕೊಂಡಿದ್ದು, ರಾಹುಲ್ ಖರ್ಗೆ ಜಮೀನು ಪಡೆಯಲು ಅರ್ಹರಾಗಿದ್ದಾರೆ ಎಂದು ಹೇಳಿರುವುದು ಅಧಿಕಾರ ದುರುಪಯೋಗ ಎಂದು ಆರೋಪಿಸಿದ್ದಾರೆ.
|
8 |
+
ಇದೇ ವೇಳೆ ಬಿಜೆಪಿಯ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವೀಟ್ ಮಾಡಿ, ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣ ಆರೋಪ ಬಂದ ಬೆನ್ನಲ್ಲೇ ಸಚಿವ ಪ್ರಿಯಾಂಕ ಖರ್ಗೆ ಸಹೋದರನಿಗೆ ಕಾನೂನು ಬಾಹಿರವಾಗಿ ಜಮೀನು ನೀಡಿದ್ದಾರೆ.
|
9 |
+
2024ರ ಮಾರ್ಚ್ನಲ್ಲಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಈ ಹಂಚಿಕೆಗೆ ಹೇಗೆ ಸಮತಿ ಸೂಚಿಸಿದರು? ಖರ್ಗೆ ಕುಟುಂಬ ಕೆಐಎಡಿಬಿ ಭೂಮಿಗೆ ಅರ್ಹತೆ ಪಡೆಯಲು ಯಾವಾಗ ಏರೋಸ್ಪೇಸ್ ಉದ್ಯಮಿಯಾದರು? ಈ ಅಕ್ರಮ ಹಂಚಿಕೆಯ ವಿಷಯವು ರಾಜ್ಯಪಾಲರ ಕಚೇರಿಗೆ ತಲುಪಿದೆ ಎಂದು ಪ್ರಶ್ನಿಸಿದ್ದಾರೆ.
|
10 |
+
ಮಲ್ಲಿಕಾರ್ಜುನ ಖರ್ಗೆ ಅವರ ಪತ್ನಿ ರಾಧಾಭಾಯಿ ಖರ್ಗೆ ಕೂಡ ಸಿದ್ಧಾರ್ಥ ವಿಹಾರ್ ಟ್ರಸ್ಟ್ನ ಸದಸ್ಯರಾಗಿರುವುದು ದಾಖಲೆಗಳಿಂದ ಸಾಬೀತಾಗಿದೆ ಎಂದಿದ್ದಾರೆ.
|
eesanje/url_46_32_6.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಗೃಹಲಕ್ಷ್ಮಿ ಯೋಜನೆಗೆ ಈಗಲೂ ಅರ್ಜಿ ಸಲ್ಲಿಸಬಹುದು : ಲಕ್ಷ್ಮಿ ಹೆಬ್ಬಾಳ್ಕರ್
|
2 |
+
:
|
3 |
+
ಬೆಂಗಳೂರು, ಆ.27-ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಈಗಲೂ ಅವಕಾಶವಿದೆ ಎಂದು ತಿಳಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಜುಲೈ ಮತ್ತು ಆಗಸ್ಟ್ ತಿಂಗಳ ಬಾಕಿಯನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
|
4 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 1.58 ಕೋಟಿ ಕುಟುಂಬಗಳಿವೆ. ಅವುಗಳ ಪೈಕಿ 1.23 ಕೋಟಿ ಕುಟುಂಬದ ಯಜಮಾನಿಯರಿಗೆ ಮಾಸಿಕ 2 ಸಾವಿರ ರೂ. ಪಾವತಿಸುವ ಗೃಹಲಕ್ಷ್ಮಿ ಯೋಜನೆ ಯನ್ನು ಜಾರಿಗೊಳಿಸಲಾಗಿದೆ ಎಂದರು.
|
5 |
+
ಇನ್ನು 27 ಲಕ್ಷ ಕುಟುಂಬಗಳು ಯೋಜನೆಯಿಂದ ಹೊರಗಿವೆ. ಬಹುತೇಕ ಅವರಲ್ಲಿ ಜಿಎಸ್ಟಿ ಹಾಗೂ ಆದಾಯ ತೆರಿಗೆ ಪಾವತಿದಾರರು ಇರಬಹುದು ಅಥವಾ ಯೋಜನೆಯ ಸೌಲಭ್ಯ ತಮಗೆ ಬೇಡ ಎಂದು ನಿರಾಕರಿಸಿರಲೂ ಬಹುದು ಎಂದು ಹೇಳಿದರು.
|
6 |
+
ಈಗಲೂ ವೆಬ್ಸೈಟ್ ಮುಕ್ತವಾಗಿದ್ದು, ಆದಾಯ ತೆರಿಗೆ ಜಿಎಸ್ಟಿ ಪಾವತಿ ಮಾಡದೇ ಇರುವವರು ಗೃಹಲಕ್ಷ್ಮಿ ಯೋಜನೆಗಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ತಿಳಿಸಿದರು. ಜಿಎಸ್ಟಿ ಮತ್ತು ಆದಾಯ ತೆರಿಗೆ ಪಾವತಿ ಮಾಡುತ್ತಿದ್ದರೆ ಅರ್ಜಿಯೇ ಸ್ವೀಕಾರವಾಗುವುದಿಲ್ಲ.
|
7 |
+
ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ಆಧಾರ್ ಸಂಖ್ಯೆಯನ್ನು ನಮೂದಿಸುತ್ತಿದ್ದಂತೆ ಸ್ಪಷ್ಟ ಮಾಹಿತಿಗಳು ಲಭ್ಯವಾಗುತ್ತವೆ. ಈ ಮೊದಲು ಈ ರೀತಿಯ 15 ಸಾವಿರ ಜನ ಜಿಎಸ್ಟಿ ಮತ್ತು ಆದಾಯ ತೆರಿಗೆ ಪಾವತಿದಾರರು ಅರ್ಜಿ ಸಲ್ಲಿಸಿದ್ದರು. ಅದನ್ನು ಆರಂಭದಲ್ಲೇ ಪೋರ್ಟಲ್ ತಿರಸ್ಕರಿಸಿದೆ ಎಂದು ಹೇಳಿದರು.
|
8 |
+
ಗೃಹಲಕ್ಷ್ಮಿಯರಿಗೆ ಜೂನ್ ತಿಂಗಳ ಕಂತನ್ನು ಪಾವತಿ ಮಾಡಲಾಗಿದೆ. ಜುಲೈ ಮತ್ತು ಆಗಸ್ಟ್ ತಿಂಗಳ ಹಣವನ್ನು ವಾರದೊಳಗಾಗಿ ಬಿಡುಗಡೆ ಮಾಡಲು ಮುಖ್ಯಮಂತ್ರಿಯವರ ಜೊತೆ ನಡೆಸಲಾಗಿದೆ. ಅರ್ಜಿ ಸಲ್ಲಿಸಿದವರ ಪೈಕಿ 80 ಸಾವಿರ ಜನರಿಗೆ ತಾಂತ್ರಿಕ ಕಾರಣಗಳಿಗಾಗಿ ಹಣ ತಲುಪುತ್ತಿರಲಿಲ್ಲ. ಅದನ್ನು ಸರಿಪಡಿಸಲಾಗಿದೆ ಎಂದು ತಿಳಿಸಿದರು.
|
eesanje/url_46_32_7.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ನಿಮ್ಮ ಸೋನಿಯಾ ಗಾಂಧಿ ಇಟಲಿಯಿಂದ ಬಂದವರು : ಪ್ರಿಯಾಂಕ್ ಖರ್ಗೆಗೆ ಲೆಹರ್ಸಿಂಗ್ ತಿರುಗೇಟು
|
2 |
+
|
3 |
+
ಬೆಂಗಳೂರು,ಆ.27– ನಾನು ರಾಜಸ್ಥಾನದಿಂದ ಬಂದವನಾಗಿದ್ದರೆ ನಿಮ್ಮ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಇಟಲಿಯಿಂದ ಬಂದವರು. ಅವರು ಕೂಡ ನಮ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ ಎಂಬುದನ್ನು ಮರೆಯಬಾರದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ರಾಜ್ಯಸಭೆ ಸದಸ್ಯ ಲೆಹರ್ ಸಿಂಗ್ ತಿರುಗೇಟು ನೀಡಿದ್ದಾರೆ.
|
4 |
+
ಕೆಐಎಡಿಬಿ ಭೂ ವ್ಯವಹಾರವನ್ನು ಪ್ರಶ್ನಿಸಿದ್ದಕ್ಕಾಗಿ ಖರ್ಗೆ ಜೂನಿಯರ್ ಮತ್ತವರ ಸ್ನೇಹಿತರು ರಾಜಸ್ಥಾನಿ ಎಂದು ನನ್ನ ಮೇಲೆ ಆರೋಪ ಮಾಡಿದ್ದಾರೆ. ನಾನು ಕೇಳಲು ಬಯಸುತ್ತೇನೆ ಸೋನಿಯಾ ಗಾಂಧಿ ಅವರು ರಾಜಸ್ಥಾನ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಇಟಲಿಯ ಜುಂಜುನುದಲ್ಲಿ ಜನಿಸಿದವರು.
|
5 |
+
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸಿಕಾರ್ನಲ್ಲಿ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಚುರುದಲ್ಲಿ ಜನಿಸಿದವರು. ಅವರು ಯಾವ ರಾಜ್ಯದಿಂದ ರಾಜಸಭೆಗೆ ಆಯ್ಕೆಯಾಗಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
|
6 |
+
ರಾಜಸ್ಥಾನಿಯಾಗಿರುವುದು ಅಪರಾಧವೇ? ರಾಜಸ್ಥಾನವು ಪಾಕಿಸ್ತಾನದಲ್ಲಿಲ್ಲ ಎಂದು ಈ ಫೆಲೋಗಳಿಗೆ ತಿಳಿದಿದೆ ಎಂದು ನಾನು ಭಾವಿಸುತ್ತೇನೆ. ಅಂದಹಾಗೆ, ನೆಹರೂ ಕುಟುಂಬ ಉತ್ತರ ಪ್ರದೇಶದಿಂದ ಬಂದಿದೆಯೇ ಅಥವಾ ಕಾಶೀರದಿಂದ ಬಂದಿದೆಯೇ? ಎಂದು ಪ್ರಶ್ನಿಸಿದ್ದಾರೆ.
|
7 |
+
ನಾನು 59 ವರ್ಷಗಳಿಂದ ಕರ್ನಾಟಕದಲ್ಲಿ ವಾಸಿಸುತ್ತಿದ್ದೇನೆ ಮತ್ತು ಕೆಲಸ ಮಾಡಿದ್ದೇನೆ. ನಾನು ಕನ್ನಡ ಮಾತನಾಡುತ್ತೇನೆ, ಓದುತ್ತೇನೆ ಮತ್ತು ಬರೆಯುತ್ತೇನೆ. ನಾನು ಕರ್ನಾಟಕ ಬಿಜೆಪಿಯ ಖಜಾಂಚಿಯಾಗಿದ್ದೆ ಮತ್ತು ನಾನು ನನ್ನ ಪಕ್ಷದ ಎಂಎಲ್ಸಿ ಮತ್ತು ಸಂಸದನಾಗಿ ಸೇವೆ ಸಲ್ಲಿಸಿದ್ದೇನೆ.
|
8 |
+
ನಾನು ಶ್ರೀಗಳಂತಹ ರಾಜಕೀಯ ವಂಶದಿಂದ ಬಂದವನಲ್ಲ. ರಾಹುಲ್ ಗಾಂಧಿ ಅಥವಾ ಖರ್ಗೆ ಜೂನಿಯರ್.. ನಾನು ಯಾರೂ ಅಲ್ಲ ಎಂದು ಹೆಮೆಪಡುತ್ತೇನೆ. ಅದೇ ನಿಜವಾದ ಪ್ರಜಾಪ್ರಭುತ್ವವನ್ನು ಕಾಂಗ್ರೆಸ್ ಪಕ್ಷ ಸಮರ್ಥಿಸಿಕೊಳ್ಳುವಂತೆ ನಟಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
|
9 |
+
ಕಲ್ಲೆಸೆಯುವ ಮುನ್ನ ಖರ್ಗೆ ಜೂನಿಯರ್ ಅವರು ಗಾಜಿನ ಮನೆಯಲ್ಲಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕು. ನಾನು ಅವನ ತಂದೆಗಿಂತ ಕೇವಲ 06 ವರ್ಷ ಚಿಕ್ಕವನು ಮತ್ತು ಅವನಿಗಿಂತ ಹೆಚ್ಚು ಕಾಲ ಇದ್ದೇನೆ ಎಂದು ಅವನಿಗೆ ತಿಳಿದಿರಬೇಕು. ಅವರ ಪ್ರತಿಪಾದಿಸಿದ ಶಿಕ್ಷಣಕ್ಕಿಂತ ನನ್ನ ಅನುಭವ ನನಗೆ ಕಲಿಸಿದೆ ಎಂದು ಹೇಳಿದ್ದಾರೆ.
|
10 |
+
ಹೇಗಾದರೂ ಕೆಐಎಡಿಬಿ ಭೂ ಹಂಚಿಕೆ ಪ್ರಕರಣವು ಕರ್ನಾಟಕದ ರಾಜ್ಯಪಾಲರನ್ನು ತಲುಪಿದೆ ಮತ್ತು ಅವರು ಅದನ್ನು ಪರಿಶೀಲಿಸುತ್ತಾರೆ. ಖರ್ಗೆ ಕುಟುಂಬದವರಾಗಲಿ ಅಥವಾ ಸಂಬಂಧಪಟ್ಟ ಸಚಿವರಾಗಲಿ ಭೂ ಮಂಜೂರಾತಿಯನ್ನು ನಿರಾಕರಿಸದೆ ಸಮರ್ಥಿಸಿಕೊಂಡಿರುವುದು ನನಗೆ ಖುಷಿ ತಂದಿದೆ. ಜನರು ಬುದ್ಧಿವಂತರು, ಇದನ್ನು ಹೇಗೆ ನಿರ್ಣಯಿಸುವುದು ಎಂದು ಅವರಿಗೆ ತಿಳಿದಿದೆ ಎಂದು ಲೆಹರ್ ಸಿಂಗ್ ತಿರುಗೇಟು ನೀಡಿದ್ದಾರೆ.
|