CoolCoder44 commited on
Commit
73f9eac
·
verified ·
1 Parent(s): 56ed928

e7aebfd7d2002474be40bb1273b91e901a5238f735c95cdf44f5adee830f4b88

Browse files
Files changed (50) hide show
  1. eesanje/url_46_160_6.txt +3 -0
  2. eesanje/url_46_160_7.txt +10 -0
  3. eesanje/url_46_160_8.txt +4 -0
  4. eesanje/url_46_160_9.txt +3 -0
  5. eesanje/url_46_161_1.txt +6 -0
  6. eesanje/url_46_161_10.txt +5 -0
  7. eesanje/url_46_161_11.txt +7 -0
  8. eesanje/url_46_161_12.txt +10 -0
  9. eesanje/url_46_161_2.txt +7 -0
  10. eesanje/url_46_161_3.txt +8 -0
  11. eesanje/url_46_161_4.txt +8 -0
  12. eesanje/url_46_161_5.txt +5 -0
  13. eesanje/url_46_161_6.txt +13 -0
  14. eesanje/url_46_161_7.txt +5 -0
  15. eesanje/url_46_161_8.txt +6 -0
  16. eesanje/url_46_161_9.txt +9 -0
  17. eesanje/url_46_162_1.txt +9 -0
  18. eesanje/url_46_162_10.txt +5 -0
  19. eesanje/url_46_162_11.txt +6 -0
  20. eesanje/url_46_162_12.txt +5 -0
  21. eesanje/url_46_162_2.txt +7 -0
  22. eesanje/url_46_162_3.txt +9 -0
  23. eesanje/url_46_162_4.txt +6 -0
  24. eesanje/url_46_162_5.txt +6 -0
  25. eesanje/url_46_162_6.txt +12 -0
  26. eesanje/url_46_162_7.txt +10 -0
  27. eesanje/url_46_162_8.txt +7 -0
  28. eesanje/url_46_162_9.txt +7 -0
  29. eesanje/url_46_163_1.txt +7 -0
  30. eesanje/url_46_163_10.txt +3 -0
  31. eesanje/url_46_163_11.txt +5 -0
  32. eesanje/url_46_163_12.txt +6 -0
  33. eesanje/url_46_163_2.txt +5 -0
  34. eesanje/url_46_163_4.txt +7 -0
  35. eesanje/url_46_163_5.txt +5 -0
  36. eesanje/url_46_163_6.txt +7 -0
  37. eesanje/url_46_163_7.txt +6 -0
  38. eesanje/url_46_163_8.txt +7 -0
  39. eesanje/url_46_163_9.txt +5 -0
  40. eesanje/url_46_164_10.txt +11 -0
  41. eesanje/url_46_164_11.txt +8 -0
  42. eesanje/url_46_164_12.txt +19 -0
  43. eesanje/url_46_164_2.txt +5 -0
  44. eesanje/url_46_164_3.txt +9 -0
  45. eesanje/url_46_164_4.txt +10 -0
  46. eesanje/url_46_164_5.txt +5 -0
  47. eesanje/url_46_164_6.txt +15 -0
  48. eesanje/url_46_164_7.txt +9 -0
  49. eesanje/url_46_164_8.txt +9 -0
  50. eesanje/url_46_164_9.txt +7 -0
eesanje/url_46_160_6.txt ADDED
@@ -0,0 +1,3 @@
 
 
 
 
1
+ ಬಿಸಿಲ ತಾಪ: 2 ಸಾವಿರ ಕೋಳಿಗಳು ಸಾವು
2
+ ಕೋಲಾರ, ಮೇ 2- ಮಿತಿ ಮೀರಿದ ಬಿಸಿಲಿನ ತಾಪಕ್ಕೆ ಜನರು ತತ್ತರಿಸಿದ್ದು, ಸಾಕು ಪ್ರಾಣಿಗಳು ಸಹ ಬಿಸಿಲಿನಿಂದ ಬಸವಳಿದಿವೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನಲ್ಲಿ ಎರಡು ಸಾವಿರಕ್ಕೂ ಹೆಚ್ಚು ಕೋಳಿಗಳು ಬಿಸಿಲಿನ ತಾಪದಿಂದ ಬಳಲಿ ಮೃತಪಟ್ಟಿವೆ.
3
+ ಮುರುಘನ್ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಬಿಸಿಲಿನಿಂದ ಕೋಳಿಗಳು ಮೃತಪಟ್ಟಿದ್ದು, ಜೀವನೋಪಯಕ್ಕಾಗಿ ಕೋಳಿ ಸಾಕಾಣಿಕೆ ಮಾಡಿಕೊಂಡಿದ್ದ ಮುರುಘನ್ ಕುಟುಂಬ ಕಂಗಾಲಾಗಿದೆ.ತೀವ್ರ ಶಾಖದ ಅಲೆ ಹಾಗೂ ಒಣಹವೆಯಿಂದಾಗಿ ಸಾಕು ಪ್ರಾಣಿಗಳಾದ ನಾಯಿ, ಬೆಕ್ಕು, ಕುರಿ, ಕೋಳಿ, ಪಕ್ಷಿಗಳ ಆರೋಗ್ಯದಲ್ಲೂ ಸಹ ಏರುಪೇರಾಗಿ ಸಾವನ್ನಪ್ಪುತ್ತಿರುವುದು ಕಂಡು ಬರುತ್ತಿವೆ. ರಾಜ್ಯಾದ್ಯಂತ ಬಿಸಿ ಗಾಳಿ ಕಾಣಿಸಿಕೊಂಡಿದ್ದು, ವರದಿ ಪ್ರಕಾರ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ.
eesanje/url_46_160_7.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬಿಸಿಲ ಬೇಗೆಗೆ ಜನತೆ ತತ್ತರ..! ಕಲ್ಲಂಗಡಿ, ತಂಪು ಪಾನೀಯಗಳಿಗೆ ಹೆಚ್ಚಿದ ಬೇಡಿಕೆ
2
+ ಬಯಲು ಸೀಮೆ ಚಿಕ್ಕಬಳ್ಳಾಪುರ ಜಿಲ್ಲೆ ಸದ್ಯ ಬಿಸಿಲ ನಾಡಾಗಿ ಪರಿವರ್ತನೆಯಾಗುತ್ತಿದ್ದು, ಜಿಲ್ಲೆಯಲ್ಲಿ ಬಿಸಿಲ ತಾಪ ಮಾನ 36 ರಿಂದ 38 ಡಿಗ್ರಿ ಸೆಲ್ಸಿಯಸ್ ಮೀರಿಸುತ್ತಿದೆ. ಬಿಸಿಲಿನ ತಾಪಮಾನಕ್ಕೆ ಇದ್ದ ಬದ್ದ ಕೆರೆ-ಕಟ್ಟೆ ಕುಂಟೆಗಳು ಬತ್ತಿ ಹೋಗಿವೆ. ಜನಜಾನುವಾರು ಸೇರಿದಂತೆ ಪ್ರಾಣಿ ಪಕ್ಷಿ ಸಂಕುಲಗಳಿಗೆ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿದೆ. ಬಿಸಿಲ ತಾಪ ತಾಳಲಾಗದೆ ಜನತೆ ಬಾಯಾರಿಕೆ ನೀಗಿಸಿಕೊಳ್ಳಲು ಕಲ್ಲಂಗಡಿ ಹಣ್ಣು, ತಂಪು ಪಾನೀಯಗಳಿಗೆ ಮುಗಿಬಿದ್ದಿದ್ದರೂ ಬಿಸಿಲಿನ ತಾಪಮಾನಕ್ಕೆ ತತ್ತರಿಸಿದ್ದಾರೆ.
3
+ ಈ ಹಿಂದಿನ ವರ್ಷಗಳಲ್ಲಿ ಇಷ್ಟೊತ್ತುಗಾಗ್ಲೇ ಒಂದೆರಡು ಬಾರಿ ಮಳೆ ಬಂದು ಭೂಮಿ ತಂಪಾಗುತ್ತಿತ್ತು. ಆದರೆ ಈ ಬಾರಿ ಮೇ ಮಾಹೆ ಬಂದರೂ ದಿನದಿಂದ ದಿನಕ್ಕೆ ಬಿಸಿಲಿನ ಝಳ ಏರಿಕೆಯಾಗುತ್ತಿದೆ. ಜನತೆ ಮನೆಯಿಂದ ಹೊರಗೆ ಬರಲು ಚಿಂತಿಸುವಂತಾಗಿರುವುದು ಒಂದು ಕಡೆಯಾದರೆ, ಮನೆಯಲ್ಲೇ ತಂಪು ಮಾಡಿಕೊಂಡು ಇದ್ದರೂ ತೀವ್ರತರವಾದ ಸೆಕೆಗೆ ಮನುಷ್ಯನ ದೇಹದಿಂದ ಬೆವರು ಇಳಿಯಲಾರಂಭಿಸಿದೆ. ಈ ಹಿಂದೆ ಜಿಲ್ಲೆಯಲ್ಲಿ 26-28 ಡಿಗ್ರಿ ಇದ್ದ ಉಷ್ಣಾಂಶ, ಕೆಲದಿನಗಳಿಂದ ಏಕಾಏಕಿ 36ರಿಂದ 38 ಡಿಗ್ರಿಗೆ ತಲುಪಿದ್ದು, ಬಿಸಿಲಿನ ಧಗೆಗೆ ಜನಜೀವನ ತತ್ತರಿಸಿದೆ.
4
+ ಬಿಸಿಲ ಝಳಕ್ಕೆ ರಸ್ತೆಯಲ್ಲಿ ಜನತೆ ಸಂಚರಿಸಲು ಒದ್ದಾಡುವಂತಾಗಿದ್ದು, ಮಹಿಳೆಯರು, ಯುವತಿಯರಲ್ಲದೆ ಪುರುಷರು ಕೂಡ ಛತ್ರಿ ಬಳಸುವ ಸ್ಥಿತಿ ಎದುರಾಗಿದೆ. ಕಾಂಕ್ರಿಟ್ ರಸ್ತೆ, ಕಟ್ಟಡಗಳು ಹಾಗೂ ಮನೆಯ ಚಾವಣಿ ಕಾದ ಕಾವಲಿಯಾಗಿವೆ. ಡಾಂಬರು ರಸ್ತೆಗಳು ಬಿಸಿಲತಾಪ ಉಗುಳುತ್ತಿವೆ. ಏರಿಕೆ ಯಾಗುತ್ತಿರುವ ಬಿಸಿಲ ತಾಪಕ್ಕೆ ಜನತೆ ಬೆಚ್ಚಿ ಬೀಳುವಂತೆ ಮಾಡಿದ್ದು, ವಿದ್ಯುತ್ ಕಡಿತದಿಂದ ಪ್ಯಾನ್, ಎಸಿಗಳು ಕೆಲಸ ಮಾಡದೆ ಮನೆಯ ಒಳಗೂ ಇರಲಾಗದೇ, ಹೊರಗೂ ಬರಲಾಗದೆ ಜನತೆ ಪರಿತಪಿಸುವಂತಾಗಿದೆ.
5
+ ಚಿಕ್ಕಬಳ್ಳಾಪುರ-ಕೋಲಾರ – ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೊದಲೇ ಹೇಳಿ ಕೇಳಿ ಯಾವುದೇ ನದಿ ನಾಲೆ ಇಲ್ಲದೆ ಬಯಲುಸೀಮೆ ಬರುಡಾದ ಪ್ರದೇಶ ಇದಾಗಿದ್ದು ಎಲ್ಲೆಲ್ಲೂ ಬಿಸಿಲ ಬೇಗೆ ಮಕ್ಕಳಿಂದ ಹಿಡಿದು ವಯಸ್ಕರ ರವರೆಗೂ ತಟ್ಟಿದೆ. ಹಗಲೆಲ್ಲ ಬಿಸಿಲ ಝಳ ತಪ್ಪಿಸಿಕೊಳ್ಳಲು ಪರದಾಡುವ ಜನತೆ, ರಾತ್ರಿಯಾದರೆ ಸಾಕು ಮನೆಯೊಳಗೆ ಮಲಗಲು ಒದ್ದಾಡುವಂತಾಗಿದೆ. ಇನ್ನು ಮನೆಯ ಮೇಲ್ಭಾಗದಲ್ಲಿ ಗಾಳಿ ಬರುತ್ತೆ ಎಂದು ಅಲ್ಲಿ ಮಲಗಿದರೆ ಬೆಳಗ್ಗೆಯಿಂದ ಸಂಜೆವರೆಗೂ ಕಾದ ಕಬ್ಬಿಣದಂತಾಗಿರುವ ಮೇಲ್ಚಾವಣಿಯ ಭಾಗ ಒಂದು ಕಡೆ ಹಬೆಗೆ ತತ್ತರಿಸಿದಂಥಗಿದ್ದಾರೆ.
6
+ ಆರೋಗ್ಯ ಇಲಾಖೆಯ ಸೂಚನೆಗಳು:ಬಿಸಿಲಿನ ತಾಪಕ್ಕೆ ಚರ್ಮ ರೋಗ ಸೇರಿದಂತೆ ಸಾಂಕ್ರಾಮಿಕ ರೋಗಗಳ ಭೀತಿ ಜನರಲ್ಲಿ ಉಂಟಾಗಲಿದೆ. ಸ್ನಾಯು ಸೆಳೆತ, ಸನ್ ಸ್ಟ್ರೋಕ್, ದೇಹದಲ್ಲಿ ನೀರಿನ ಅಂಶ ಕಡಿಮೆಯಾಗುವುದರಿಂದ ಮೂತ್ರಪಿಂಡ, ಹೃದಯ ��ಂಬಂ„ ಕಾಯಿಲೆ. ಬಿಸಿಲ ಬೇಗೆಗೆ ನೀರಿನ ಕೊರತೆಯಿಂದ ಗ್ರಾಮೀಣ ಭಾಗಗಳಲ್ಲಿ ವಾಂತಿ-ಭೇದಿಯಂತಹ ರೋಗಗಳು ಕಾಣಿಸಿಕೊಳ್ಳುತ್ತಿವೆ. ಅಶುದ್ಧ ನೀರಿನ ಸೇವನೆಯಿಂದ ಕಾಲರಾದಂಥ ರೋಗಗಳು ಹರಡುವ ಭೀತಿ ಎದುರಾಗಿದೆ. ಆರೋಗ್ಯದಲ್ಲಿ ಸ್ವಲ್ಪ ಏರುಪೇರಾದರೂ ಕೂಡಲೇ ಹತ್ತಿರದ ಆಸ್ಪತ್ರೆಗಳಲ್ಲಿ ವೈದ್ಯರನ್ನ ಸಂಪರ್ಕಿಸಿ ಸಲಹೆಗಳನ್ನು ಪಡೆಯಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ„ಕಾರಿ ಡಾ. ಮಹೇಶ್ ಕುಮಾರ್ ಆಗಿಂದಾಗೆ ಪ್ರಕಟಣೆಯ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.
7
+ ತಂಪು ಪಾನೀಯಗೆ ಡಿಮ್ಯಾಂಡ್:ಸೂರ್ಯನ ಕಿರಣ ಹೊರಬೀಳುತ್ತಿದ್ದಂತೆ ಆರಂಭವಾಗುವ ಬಿಸಿಲಿನ ಧಗೆ ತಾಳಲಾರದೆ ಜನರು ದೇಹ ತಂಪಾಗಿಸಿಕೊಂಡು ದಾಹ ತಣಿಸಿಕೊಳ್ಳಲು ಕಲ್ಲಂಗಡಿ ಹಣ್ಣು, ಎಳನೀರು, ಮಜ್ಜಿಗೆ, ತಂಪು ಪಾನಿಯ, ಜ್ಯೂಸ್ ಮೊರೆ ಹೋಗುತ್ತಿದ್ದಾರೆ. ಬಿಸಿಲು ಉಂಟು ಮಾಡುವ ದಾಹ, ಬಾಯಾರಿಕೆ ನೀಗಿಸಿಕೊಳ್ಳಲು ಸಾರ್ವಜನಿಕರು ಕಲ್ಲಂಗಡಿ ಹಣ್ಣು ತಿನ್ನಲು ಮುಗಿಬೀಳುತ್ತಿದ್ದು, ಜ್ಯೂಸ್, ಐಸ್ ಕ್ರೀಂಗೆ -ಡಿಮ್ಯಾಂಡ್ ಬಂದಿದೆ.
8
+ ಜನದಟ್ಟಣೆ ಇರುವ ಪ್ರದೇಶ, ಬಸ್ ನಿಲ್ದಾಣ, ರಸ್ತೆಬದಿ, ಕಚೇರಿ, ಬಡಾವಣೆ, ಹೀಗೆ ನಗರದ ಅಲ್ಲಲ್ಲಿ ಕಲ್ಲಂಗಡಿ ಹಣ್ಣು ಮಾರುವ ಗಾಡಿಗಳು, ರಾಶಿ, ರಾಶಿ ಕಲ್ಲಂಗಡಿ ಹಣ್ಣುಗಳು ಜನಸಾಮಾನ್ಯರ ಬಾಯಾರಿಕೆ ನೀಗಿಸುತ್ತಿವೆ. ಆದರೂ ಬಿಸಿಲಿನ ತಾಪಮಾನಕ್ಕೆ ತಟ್ಟುಕೊಳ್ಳಲು ಆಗದಂತಹ ಪರಿಸ್ಥಿತಿ ನಿರ್ಮಾಣ ಆಗಿದೆ.
9
+ ಬಾಯಾರಿಗೆ ತಣಿಸಿ:ಕೆರೆಕಟ್ಟೆಗಳ ಒಡಲು ಬರಿದಾಗಿದ್ದು, ಪ್ರಾಣಿ-ಪಕ್ಷಿಗಳಿಗೆ ತಿನ್ನಲು ಆಹಾರ, ಕುಡಿಯಲು ನೀರು ಸಿಗದಂತಾಗಿದೆ. ಪ್ರಾಣಿ-ಪಕ್ಷಿಗಳ ಬಾಯಾರಿಕೆ ನೀಗಿಸಲು ಜನಸಾಮಾನ್ಯರು ತಮ್ಮ ಮನೆಯ ಮಹಡಿ ಮೇಲೆ ಪಕ್ಷಿಗಳಿಗೆ ಕುಡಿಯಲು ನೀರಿಟ್ಟು, ಆಹಾರ ಧಾನ್ಯಗಳನ್ನು ನೀಡುವ ಮೂಲಕ ಜೀವಸಂಕುಗಳ ಉಳಿವಿಗೆ ಶ್ರಮಿಸಬೇಕಿರುವುದು ಮನುಷ್ಯರಾದ ತಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಪ್ರಾಣಿ ಪಕ್ಷಿ ಹಾಗೂ ಪರಿಸರ ಪ್ರೇಮಿಗಳು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
10
+ #ಎಂ. ಕೃಷ್ಣಪ್ಪ, ಚಿಕ್ಕಬಳ್ಳಾಪುರ
eesanje/url_46_160_8.txt ADDED
@@ -0,0 +1,4 @@
 
 
 
 
 
1
+ ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಕ್ಕೆ ಹೆದರಿ ಯುವಕ ಆತ್ಮಹತ್ಯೆ
2
+ ಕಲಬುರಗಿ, ಮೇ.2- ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಕ್ಕೆ ಹೆದರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಲಾಡಮುಗುಳಿ ಗ್ರಾಮದಲ್ಲಿ ನಡೆದಿದೆ. ನಿಖಿಲ್ ಪೂಜಾರಿ (23) ಲಾಡಮುಗುಳಿ ಗ್ರಾಮದ ಹೊರವಲಯದಲ್ಲಿನ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ.
3
+ ಕಳೆದ ನಾಲ್ಕು ದಿನಗಳ ಹಿಂದೆ ಈ ಗ್ರಾಮದಲ್ಲಿ ಜಾತ್ರೆ ನಡೆದಿತ್ತು. ಈ ವೇಳೆ ಎರಡು ಸಮುದಾಯಗಳ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿತ್ತು. ಗಲಾಟೆ ಬಳಿಕ ಊರಿನವರ ಸಮ್ಮುಖದಲ್ಲಿ ರಾಜಿಸಂದಾನ ಮಾಡಲಾಗಿತ್ತು.
4
+ ರಾಜಿ ಸಂದಾನದ ಬಳಿಕವೂ ನಿಖಿಲ್ ಪೂಜಾರಿ ಸೇರಿ ಹಲವರ ವಿರುದ್ಧ ಇನ್ನೊಂದು ಗುಂಪು ನರೋಣ ಪೊಲೀಸ್ ಠಾಣೆಗೆ ದೂರು ನೀಡಿತ್ತು. ನಿಖಿಲ್ ಹಾಗೂ ಇತರರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ದಾಖಲಾಗಿದ್ದಕ್ಕೆ ಹೆದರಿಕೊಂಡ ಯುವಕ ನಿಖಿಲ್ ಪೂಜಾರಿ ಗ್ರಾಮದ ಹೊರವಲಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
eesanje/url_46_160_9.txt ADDED
@@ -0,0 +1,3 @@
 
 
 
 
1
+ ಪರಮೇಶ್ವರ್ ಆಪ್ತನ ಮನೆ ಮೇಲೆ ಐಟಿ ದಾಳಿ
2
+ ಬೆಂಗಳೂರು,ಮೇ2- ವಿಧಾನಪರಿಷತ್ ಮಾಜಿ ಸದಸ್ಯ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್ ಆಪ್ತ ಎಂ.ಸಿ.ವೇಣುಗೋಪಾಲ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಇಲ್ಲಿನ ಜೆ.ಪಿನಗರದಲ್ಲಿರುವ ವೇಣುಗೋಪಾಲ್ ಅವರ ಮನೆ ಮೇಲೆ 15 ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಆದಾಯ ತೆರಿಗೆ ಪಾವತಿಸದ ಆರೋಪದಡಿ ಈ ದಾಳಿ ನಡೆಸಲಾಗಿದೆ.
3
+ 3 ಇನ್ನೋವಾ ಕಾರಿನಲ್ಲಿ ಬಂದಿದ್ದ ಐಟಿ ಅಕಾರಿಗಳು ಬೆಳಗ್ಗೆ 6 ಗಂಟೆಯಿಂದಲೇ ದಾಳಿ ನಡೆಸಿ, ವಿವಿಧ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ. ಬೆಳಗ್ಗೆಯಿಂದ ಸ್ವಲ್ಪವೂ ಬಿಡುವು ಮಾಡಿಕೊಳ್ಳದ ಅಕಾರಿಗಳು, ಅಲ್ಲಿಗೇ ತಿಂಡಿ ತರಿಸಿಕೊಂಡು ಕೆಲಸ ಮುಂದುವರಿಸಿದ್ದಾರೆ. ವಿವಿಧ ದಾಖಲೆ ಪತ್ರಗಳನ್ನ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಮನೆಯಲ್ಲೇ ಇದ್ದ ವೇಣುಗೋಪಾಲ್ ಅಧಿಕಾರಿಗಳ ಕಾರ್ಯಾಚರಣೆಗೆ ಸಹಕರಿಸಿದ್ದಾರೆ ಎನ್ನಲಾಗಿದೆ.
eesanje/url_46_161_1.txt ADDED
@@ -0,0 +1,6 @@
 
 
 
 
 
 
 
1
+ ಹುಲಿ ಹತ್ಯೆ: ಅರಣ್ಯ ಇಲಾಖೆಯ ವಾಚರ್ ಬಂಧನ
2
+ ಚಿಕ್ಕಮಗಳೂರು, ಮೇ.2- ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯೆಂದು ಗುರುತಿಸಿರುವ ಈ ಹಿಂದೆ ಅರಣ್ಯ ಇಲಾಖೆಯಲ್ಲಿ ದಿನಗೂಲಿ ವಾಚರ್ ಆಗಿದ್ದ ಕುಂಡ್ರ ಗ್ರಾಮದ ಸುರೇಶ್‍ನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮೂಡಿಗೆರೆ ನ್ಯಾಯಾಲಯದ ಸಮೀಪ ಸುರೇಶ್‍ನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
3
+ ಮೂಡಿಗೆರೆ ಸಮೀಪದ ಕುಂಡ್ರ ಎಂಬಲ್ಲಿ ಹುಲಿಯೊಂದನ್ನು ಹತ್ಯೆ ಮಾಡಿರುವ ಸಂಬಂಧ ಮೂಡಿಗೆರೆ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐವರನ್ನು ಬಂಧಿಸಲಾಗಿತ್ತು. ಈ ಪ್ರಕಣರದಲ್ಲಿ ಪ್ರಮುಖ ಆರೋಪಿ ಎನ್ನಲಾಗಿದ್ದ ಸುರೇಶ್ ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ. ಆತನ ಬಂಧನಕ್ಕೆ ಅರಣ್ಯ ಇಲಾಖೆ ಹುಡುಕಾಟ ನಡೆಸಿತ್ತು.
4
+ ಸುರೇಶ್ ಮೂಡಿಗೆರೆ ನ್ಯಾಯಾಲಯಕ್ಕೆ ಶರಣಾಗಲು ಬರುತ್ತಾನೆ ಎಂಬ ಮಾಹಿತಿ ಮೇರೆಗೆ ಮೂಡಿಗೆರೆ ನ್ಯಾಯಾಲಯದ ಸಮೀಪ ಅರಣ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಪಹರೆ ಹಾಕಿದ್ದರು.ಸುಮಾರು 5 ಗಂಟೆಯ ಸಮಯದಲ್ಲಿ ಸುರೇಶ್‍ನನ್ನು ನ್ಯಾಯಾಲಯದ ಸಮೀಪ ವಶಕ್ಕೆ ಪಡೆಯಲಾಗಿತ್ತು. ಆರೋಪಿಯನ್ನು ವಶಕ್ಕೆ ಪಡೆದು ಮೂಡಿಗೆರೆ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
5
+ ಇದರೊಂದಿಗೆ ಈ ಪ್ರಕರಣದಲ್ಲಿ ಒಟ್ಟು ಆರು ಮಂದಿ ಬಂಧನವಾದಂತಾಗಿದೆ. ಈಗಾಗಲೇ ಬಂಧಿಸಲ್ಪಟ್ಟಿದ್ದ ಐವರು ಆರೋಪಿಗಳು ಜಾಮೀನು ಪಡೆದು ಹೊರಬಂದಿದ್ದಾರೆ. ಈ ಪ್ರಕರಣದ ಆರೋಪಿಯೊಬ್ಬ ಹುಲಿ ಹತ್ಯೆಯ ಬಗ್ಗೆ ಎಳೆ ಎಳೆಯಾಗಿ ಮಾತನಾಡಿರುವ ವಿಡಿಯೋ ಒಂದು ರೆಕಾರ್ಡ್ ಆಗಿದ್ದು ಅದರಲ್ಲಿ ಕುಂಡ್ರ ಸುರೇಶ್ ನೇ ಹುಲಿಯನ್ನು ಬಂದೂಕಿನಿಂದ ಹೊಡೆದಿದ್ದಾನೆ ಎಂದು ಹೇಳಿದ್ದಾನೆ ಎನ್ನಲಾಗಿದೆ.
6
+ ಪ್ರಕರಣದ ಒಂದನೇ ಆರೋಪಿಯೆಂದು ಬಂಧಿತರಾಗಿರುವ ಸತೀಶ್ ಅವರ ಬೈಕಿಗೆ ಹುಲಿ ಅಂಗಾಂಗಗಳನ್ನು ಇಟ್ಟು ಅವರನ್ನು ಪ್ರಕರಣದಲ್ಲಿ ಸಿಲುಕಿಸಿರುವ ಬಗ್ಗೆಯೂ ಆತ ಹೇಳಿಕೆ ನೀಡಿದ್ದಾನೆ ಎಂದು ತಿಳಿದು ಬಂದಿದೆ.
eesanje/url_46_161_10.txt ADDED
@@ -0,0 +1,5 @@
 
 
 
 
 
 
1
+ ಬರ ಪರಿಹಾರವಿಲ್ಲ, ಗೋಶಾಲೆ ತೆರೆದಿಲ್ಲ, ಮೇವಿನ ಕಿಟ್‌ ವಿತರಿಸಿಲ್ಲ ರೈತ ದ್ರೋಹಿ ಕಾಂಗ್ರೆಸ್ ಸರ್ಕಾರ : ವಿಜಯೇಂದ್ರ
2
+ ಬೆಂಗಳೂರು,ಮೇ1-ವಿಪರೀತ ಬರ ಆವರಿಸಿದ್ದರೂ, ಬರ ಪರಿಹಾರ ನೀಡಲಿಲ್ಲ, ಒಂದೂ ಗೋಶಾಲೆ ತೆರೆಯಲಿಲ್ಲ, ಮೇವಿನ ಕಿಟ್‌ ವಿತರಿಸಲಿಲ್ಲ, ರೈತ ದ್ರೋಹಿ ಸರ್ಕಾರಕ್ಕೆ ಶೀಘ್ರವೇ ಜನರಿಂದಲೇ ತಕ್ಕ ಶಾಸ್ತಿಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್‌ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.
3
+ ಈ ಸಂಬಂಧ ತಮ್ಮ ಅಧಿ ಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕಳೆದ ಏಳು ತಿಂಗಳಿಂದಲೂ ಹಾಲಿನ ಪ್ರೋತ್ಸಾಹ ಧನವನ್ನೂ ನೀಡದೇ ರೈತರಿಗೆ ಖಾಲಿ ಬಕೆಟ್‌ ನೀಡಲು ಹೊರಟಿದ್ದು, ಕಾಂಗ್ರೆಸ್‌ ಸರ್ಕಾರಕ್ಕೆ ಅನ್ನದಾತರ ಶಾಪ ತಟ್ಟದೇ ಇರಲಾರದು ಎಂದು ಗುಡುಗಿದ್ದಾರೆ.
4
+ ಕುಡಿಯುವ ನೀರಿನ ಟ್ಯಾಂಕರ್‌ ಮಾಫಿಯಾಗೆ ಕಡಿವಾಣ ಹಾಕುವಲ್ಲಿ ವಿಫಲವಾಗಿರುವ ಕಾಂಗ್ರೆಸ್‌ ಸರ್ಕಾರ, ಇದೀಗ ತೀವ್ರ ಬರದಿಂದ ಕಂಗೆಟ್ಟಿರುವ ನಾಡಿನ ರೈತರ ಸಂಕಷ್ಟಗಳಿಗೆ ಜೊತೆ ನಿಲ್ಲುವಲ್ಲಿಯೂ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
5
+ ಓಲೈಕೆ ರಾಜಕಾರಣಕ್ಕಾಗಿ ದಲಿತರು ಹಾಗೂ ಹಿಂದುಳಿದವರಿಗೆ ಮೀಸಲಿಟ್ಟ ಹಣವನ್ನು ಅನ್ಯ ಕಾರ್ಯಗಳಿಗೆ ಬಳಸಿದ್ದಾಯಿತು, ರೈತರ ಪ್ರೋತ್ಸಾಹ ಧನವು ಮತ್ಯಾವ ಓಲೈಕೆಗೆ ಬಳಕೆಯಾಗಿದೆಯೋ ತಿಳಿಯದು ಎಂದು ವ್ಯಂಗ್ಯವಾಡಿದರು.
eesanje/url_46_161_11.txt ADDED
@@ -0,0 +1,7 @@
 
 
 
 
 
 
 
 
1
+ ರಾಮನಗರ ಶಾಸಕ ವಿಡಿಯೋ ವೈರಲ್, ಸಂತ್ರಸ್ತೆ ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ : ಡಿ.ಕೆ.ಸುರೇಶ್‌
2
+ ಬೆಂಗಳೂರು,ಮೇ.1-ರಾಮನಗರದ ಶಾಸಕರಿಗೆ ಸೇರಿದ್ದು ಎಂದು ಹೇಳಲಾದ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆ ದೂರು ನೀಡಿದರೆ ಕ್ರಮ ಕೈಗೊಳ್ಳಲು ಸೂಚನೆ ನೀಡುವುದಾಗಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ 108 ವಿಡಿಯೋಗಳಿರುತ್ತವೆ, ಎಲ್ಲರದೂ ಇರುತ್ತವೆ, ಸಿಡಿ ಬಾಯ್ಸ್ ಗೆ ಸೇರಿದ ವಿಡಿಯೋಗಳಿಲ್ಲವೇ? ಸಿ.ಪಿ.ಯೋಗೀಶ್ವರ್‌ ಅವರು ಮಠಗಳಿಗೆ ಭೇಟಿ ನೀಡಿದ್ದೇಕೆ ಎಂದು ಗೊತ್ತಿಲ್ಲವೇ? ಮಠದವರು ಖಾಸಗಿಯಾಗಿ ಬಹುಶಃ ವಿಷಯಗಳನ್ನು ಚರ್ಚೆ ಮಾಡಿರಬಹುದು, ಯಡಿಯೂರಪ್ಪ ಅವರನ್ನು ಕೆಳಗಿಳಿಸಿದ್ದು ಯಾವ ಕಾರಣಕ್ಕೆ? ಎಂದು ಪ್ರಶ್ನಿಸಿದರು.
3
+ ಇಂತಹ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಪ್ರತ್ಯೇಕ ವಿಶೇಷ ಕಾನೂನಿನ ಅಗತ್ಯವಿದೆ. ಬ್ಲಾಕ್‌ಮೇಲ್‌ ಮಾಡುವುದು, ಖಾಸಗಿ ಬದುಕಿಗೆ ಧಕ್ಕೆ ತರುವುದು, ಅಧಿಕಾರ ದುರುಪಯೋಗ ಸೇರಿದಂತೆ ಹಲವು ವಿಚಾರಗಳನ್ನೊಳಗೊಂಡಂತೆ ಕ್ರಮ ಕೈಗೊಳ್ಳಲು ಕಾನೂನಿನ ಅಗತ್ಯವಿದೆ ಎಂದು ಒತ್ತಾಯಿಸಿದರು.
4
+ ಹಾಸನದ ಪೆನ್‌ಡ್ರೈವ್‌ ಬಹಿರಂಗ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್‌ರವರ ಪಾತ್ರ ಇಲ್ಲ. ಎಚ್‌.ಡಿ.ಕುಮಾರಸ್ವಾಮಿಯವರಿಗೆ ಡಿ.ಕೆ.ಶಿವಕುಮಾರ್‌ರವರ ಹೆಸರು ಹೇಳದಿದ್ದರೆ ಊಟ ಸೇರುವುದಿಲ್ಲ, ತಿಂದಿದ್ದು ಜೀರ್ಣವಾಗುವುದಿಲ್ಲ, ನಿದ್ರೆ ಬರುವುದಿಲ್ಲ. ಪೆನ್‌ಡ್ರೈವ್‌ ಡಿ.ಕೆ.ಶಿವಕುಮಾರ್‌ರವರ ಬಳಿ ಇದ್ದರೆ ಚುನಾವಣೆಗೂ ಮೊದಲೇ ಬಿಡುಗಡೆಯಾಗುತ್ತಿತ್ತು.
5
+ ಚುನಾವಣಾ ಸಂದರ್ಭದಲ್ಲಿ ಹಾದಿಬೀದಿಯಲ್ಲಿ ಪೆನ್‌ಡ್ರೈವ್‌ ಸಿಗಲು ಹಾಸನ ಜಿಲ್ಲೆಯ ಸ್ಥಳೀಯ ರಾಜಕಾರಣದ ಕೈವಾಡವಿದೆ. ಜೆಡಿಎಸ್‌ನ ಮೈತ್ರಿ ಪಕ್ಷದ ನಾಯಕರು ಮತ್ತು ಎಚ್‌.ಡಿ.ಕುಮಾರಸ್ವಾಮಿಯವರು ಸೇರಿ ಪೆನ್‌ಡ್ರೈವ್‌ ಅನ್ನು ಬಹಿರಂಗ ಮಾಡಿದ್ದಾರೆ ಎಂದು ಡಿ.ಕೆ.ಸುರೇಶ್‌ ತಿರುಗೇಟು ನೀಡಿದರು.
6
+ ಕುಮಾರಸ್ವಾಮಿಯವರು ದಿನಕ್ಕೊಂದು ಹೇಳಿಕೆ ನೀಡಿ ಪ್ರಕರಣದ ಹಾದಿ ತಪ್ಪಿಸುತ್ತಿದ್ದಾರೆ. ಇಲ್ಲಿ ಮೂಲ ಪ್ರಶ್ನೆ ಇರುವುದು ಅನ್ಯಾಯಕ್ಕೊಳಗಾದ 500 ಹೆಣ್ಣು ಮಕ್ಕಳಿಗೆ ನ್ಯಾಯ ದೊರಕಿಸುವ ಬಗ್ಗೆ. ಆದರೆ ಕುಮಾರಸ್ವಾಮಿ ಅನಗತ್ಯ ವಿಚಾರಗಳನ್ನು ಚರ್ಚೆ ಮಾಡಿ ಜನರ ಗಮನವನ್ನು ಬೇರೆಡೆ ಸೆಳೆಯುವ ಯತ್ನ ನಡೆಸುತ್ತಿದ್ದಾರೆ. ಇಂತಹ ಯಾವುದೇ ಪ್ರಕರಣಗಳಾದರೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ ಎಂದು ಒತ್ತಾಯಿಸಿದರು.
7
+ ಅಧಿ ಕಾರ ದುರುಪಯೋಗ ಮಾಡಿಕೊಂಡು ವಿಡಿಯೋ ಮಾಡಿಕೊಂಡವರು ಮತ್ತು ಅದನ್ನು ಪೆನ್‌ಡ್ರೈವ್‌ ಮೂಲಕ ಬಹಿರಂಗಗೊಳಿಸಿದವರು ಶಿಕ್ಷಾರ್ಹರಾಗಿದ್ದಾರೆ. ಇದು ಒಬ್ಬರಿಗೆ ಸಂಬಂಧಪಟ್ಟ ವಿಚಾರವಲ್ಲ. ನೂಲಿನಂತೆ ಸೀರೆ ಎಂಬ ಮಾತಿದೆ. ಮಹಿಳೆಯರಿಗೆ ರಕ್ಷಣೆ ಕೊಡಬೇಕು ಎಂದು ಒತ್ತಾಯಿಸಿದ ಡಿ.ಕೆ.ಸುರೇಶ್‌, ಪ್ರಜ್ವಲ್‌ ರೇವಣ್ಣ ಅವರನ್ನು ಅಮಾನತುಗೊಳಿಸ��ವುದು ದೊಡ್ಡ ವಿಷಯವಲ್ಲ. ಜನತಾದಳ ಕುಟುಂಬದ ಪಕ್ಷ. ಬೇಡವಾದಾಗ ಅಮಾನತುಗೊಳಿಸುತ್ತಾರೆ, ಬೇಕಾದಾಗ ಸೇರಿಸಿಕೊಳ್ಳುತ್ತಾರೆ ಎಂದು ಲೇವಡಿ ಮಾಡಿದರು.
eesanje/url_46_161_12.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಸಿಕ್ಕಾಪಟ್ಟೆ ಬಿಸಿಲು : ಪ್ರಚಾರಕ್ಕೆ ಜನರಿಲ್ಲದೆ ರಾಜಕೀಯ ಪಕ್ಷಗಳ ಹರಸಾಹಸ
2
+ ಬೆಂಗಳೂರು, ಮೇ.1-ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ಕಾವೇರುತ್ತಿರುವುದರ ಜೊತೆಗೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವುದರಿಂದ ಜನ ನಿರೀಕ್ಷೆಯಂತೆ ಪ್ರಚಾರಕ್ಕೆ ಬರುತ್ತಿಲ್ಲ.
3
+ ಬೀದರ್‌, ಕಲಬುರಗಿ, ರಾಯಚೂರು, ವಿಜಯಪುರ ಬಳ್ಳಾರಿ, ಬಾಗಲಕೋಟೆ, ಕೊಪ್ಪಳ, ಹಾವೇರಿ, ಬೆಳಗಾವಿ, ದಾವಣಗೆರೆ, ಚಿಕ್ಕೋಡಿ, ಧಾರವಾಡ, ಉತ್ತರಕನ್ನಡ, ಶಿವಮೊಗ್ಗ ಕ್ಷೇತ್ರಗಳಲ್ಲಿ ನಾಯಕರು ಅಬ್ಬರದ ಪ್ರಚಾರಕ್ಕೆ ದಾಂಗುಡಿ ಇಡುತ್ತಿದ್ದರು. ಬಿಸಿಲಿನ ತಾಪಮಾನ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಜನ ಪ್ರಚಾರದ ಸಭೆ, ಮೆರವಣಿಗೆ, ರೋಡ್‌ ಶೋಗಳಲ್ಲಿ ನಿರೀಕ್ಷೆಯಂತೆ ಹೆಚ್ಚಾಗಿ ಪಾಲ್ಗೊಳ್ಳುತ್ತಿಲ್ಲ.
4
+ ರಾಜಕೀಯ ಪಕ್ಷಗಳ ನಾಯಕರು ಬೃಹತ್‌ ಸಮಾವೇಶ, ರೋಡ್‌ ಶೋ, ರ್ಯಾಲಿಗಳ ಮೂಲಕ ಶಕ್ತಿ ಪ್ರದರ್ಶನ ಮಾಡಿ ಮತದಾರರನ್ನು ಮತದಾನಕ್ಕೆ ಸಜ್ಜು ಗೊಳಿಸಲು ಮುಂದಾಗಿದ್ದಾರೆ. ಆದರೆ ಬಿಸಿಲಿನ ಧಗೆ ಇದಕ್ಕೆ ನಿರಂತರ ಅಡ್ಡಿಯಾಗುತ್ತಿದೆ. ಬೆಳಗ್ಗೆ 10 ಗಂಟೆಯೊಳಗೆ ಸಭೆ-ಸಮಾರಂಭಗಳನ್ನು ಮಾಡಿ ಮುಗಿಸಬೇಕು. ಇಲ್ಲವೇ ಸಂಜೆ 5.30ರ ನಂತರ ಸಮಾವೇಶ, ರೋಡ್‌ಶೋಗಳನ್ನು ಮಾಡಬೇಕು. ಮಧ್ಯಾಹ್ನದ ವೇಳೆ ಮನೆಯಿಂದ ಹೊರ ಬರಲು ಸಾಧ್ಯವಾಗದಷ್ಟು ಬಿಸಿಲಿನ ಝಳ ಇದೆ.
5
+ ಮೊದಲನೇ ಹಂತದ 14 ಕ್ಷೇತ್ರಗಳ ಚುನಾವಣೆಯಲ್ಲಿ ಕೂಡ ತಾಪಮಾನ ಮಿತಿಮೀರಿತ್ತು.ಎರಡನೇ ಹಂತದ ಚುನಾವಣೆಯಲ್ಲೂ ಕೂಡ ತಾಪಮಾನ ಏರಿಕೆಯಾಗಿದ್ದು, ಅಬ್ಬರದ ಪ್ರಚಾರ ಮಾಡಲು ಸಾಧ್ಯವಾಗುತ್ತಿಲ್ಲ. ಬಿಸಿಲಿನ ತೀವ್ರತೆಗೆ ಜನ ಹೈರಾಣಾಗುತ್ತಿದ್ದಾರೆ.
6
+ ರಾಯಚೂರು, ಕಲಬುರಗಿ, ಬೀದರ್‌, ಕೊಪ್ಪಳ, ವಿಜಯಪುರ, ಹಾವೇರಿ, ಬಳ್ಳಾರಿ ಮುಂತಾದ ಜಿಲ್ಲೆಗಳಲ್ಲಿ ದಾಖಲೆಯ ತಾಪಮಾನ ಏರಿಕೆಯಾಗಿದೆ. ಹೀಗಾಗಿ ಜನ ಪ್ರಚಾರಕ್ಕೆ ಬರುವುದು ಕಡಿಮೆಯಾಗಿದೆ. ಚುನಾವಣಾ ಪ್ರಚಾರಕ್ಕೆ ಬರುವ ಜನರಿಗೆ ತಂಪಾದ ಮಜ್ಜಿಗೆ, ಪಾನಕ ಪಾನೀಯಗಳ ವ್ಯವಸ್ಥೆ ಮಾಡಬೇಕು, ಬಹಿರಂಗ ಸಭೆಗಳಿಗೆ ಬಿಸಿಲಿನಿಂದ ರಕ್ಷಿಸಿಕೊಳ್ಳಲು ದೊಡ್ಡ ದೊಡ್ಡ ಪೆಂಡಾಲ್‌ಗಳನ್ನು ನಿರ್ಮಿಸಬೇಕು.
7
+ ಬರುವ ಸಭೆ-ಸಮಾರಂಭಗಳಿಗೆ ಬರುವ ಜನ ಬಿಸಿಲಿನ ಧಗೆ ಜಾಸ್ತಿ ಇರುವುದರಿಂದ ಹೆಚ್ಚು ಹೊತ್ತು ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ. ಅರ್ಧ ಮುಕ್ಕಾಲು ಗಂಟೆಯಲ್ಲೆ ಹೊರಡಲು ಆರಂಭಿಸುತ್ತಾರೆ. ವೇದಿಕೆಯ ಮೇಲೆ ಕುಳಿತ ರಾಜಕೀಯ ಪಕ್ಷಗಳ ಮುಖಂಡರು, ಮಂತ್ರಿ ಮಹೋದಯರು ಬಿಸಿಲಿಗೆ ಚಡಪಡಿಸುತ್ತಿರುವುದು ಕಂಡುಬರುತ್ತಿದೆ.
8
+ ಹೆಚ್ಚು ಹೊತ್ತು ಸಭೆಗಳನ್ನು ಕೂಡ ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಇದು ಬಿಸಿಲಿನ ತಾಪಮಾನ ಕಡಿಮೆಯಾದ ಸಂದರ್ಭದಲ್ಲಿ ಅಂದರೆ ಸಂಜೆ ವೇಳೆ ಸಭೆ-ಸಮಾರಂಭ, ರೋಡ್‌ ಶೋಗಳನ್ನು ಆಯೋಜಿಸಲಾಗುತ್ತಿದೆ. ಇನ್ನು ಮನೆ ಮನೆಗೆ ತೆರಳಿ ಮತಯಾಚನೆ ಮಾಡುವವರು ಕೂಡ ಬೆಳಗ್ಗೆ 7 ರಿಂದ 9 ಗಂಟೆ ಯೊಳ���ೆ ಹೋಗಿ ಕರಪತ್ರಗಳನ್ನು ವಿತರಿಸುತ್ತಾರೆ. ಆ ನಂತರ ಸಂಜೆ 5 ರಿಂದ 8 ಗಂಟೆಯ ವರೆಗೆ ಮನೆ ಮನೆ ಮತಯಾಚನೆ ನಡೆಯುತ್ತಿದೆ.
9
+ ಒಟ್ಟಾರೆ ಈ ಭಾರಿಯ ಲೋಕಸಬಾ ಚುನಾವಣೆಗೆ ಬಿಸಿಲಿನ ಕಾಟ ತೀವ್ರಗೊಂಡಿದೆ. ನಿರೀಕ್ಷೆಯಂತೆ ಮಳೆ ಬಾರದ ಹಿನ್ನೆಲೆಯಲ್ಲಿ ಬೋರ್‌ವೆಲ್‌, ಬಾವಿ, ಕೆರೆಕಟ್ಟೆಗಳು ಬತ್ತಿ ಹೋಗಿ ನೀರಿನ ಅಭಾವ ಸೃಷ್ಟಿಯಾಗಿದೆ.
10
+ ಅಂತರ್ಜಲ ಮಟ್ಟ ಕುಸಿದಿದ್ದು, ರೈತರು, ಸಾರ್ವಜನಿಕರು ಮಳೆಗಾಗಿ ಮುಗಿಲು ನೋಡುತ್ತಿದ್ದಾರೆ. ಚುನಾವಣೆ ವೇಳೆಗೆ ಅಥವಾ ಚುನಾವಣೆ ಮುಗಿದ ನಂತರವಾದರೂ ಮಳೆ ಬರುತ್ತದೆ ಎಂಬ ನಿರೀಕ್ಷೆಯಲ್ಲಿ ಜನ ಬಿಸಿಲಿನಲ್ಲಿಯೇ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
eesanje/url_46_161_2.txt ADDED
@@ -0,0 +1,7 @@
 
 
 
 
 
 
 
 
1
+ ಮತದಾನದಲ್ಲೂ ಮಹಿಳೆಯರೇ ಮುಂದು
2
+ ಬೆಂಗಳೂರು, ಮೇ2- ಕಾಂಗ್ರೆಸ್ ಹಾಗೂ ಎನ್‍ಡಿಎ ಮೈತ್ರಿಕೂಟವಾದ ಬಿಜೆಪಿ-ಜೆಡಿಎಸ್ ನಡುವಿನ ಜಿದ್ದಾಜಿದ್ದಿನ ಕುರುಕ್ಷೇತ್ರವಾಗಿರುವ ಲೋಕಸಭಾ ಚುನಾವಣಾ ಮೊದಲ ಹಂತದಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಪ್ರಮಾಣದಲ್ಲಿ ಮತ ಚಲಾಯಿಸಿ ಭೇಷ್ ಎನಿಸಿಕೊಂಡಿದ್ದಾರೆ. ಶಿಕ್ಷಣ, ಕ್ರೀಡೆ, ಕಲೆ, ಸಾಹಿತ್ಯ, ಸಂಸ್ಕøತಿ, ವಿಜ್ಞಾನ, ಬಾಹ್ಯಾಕಾಶ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲೂ ಪುರುಷರಿಗೆ ಸರಿಸಮನಾಗಿ ಸ್ಪರ್ಧೆವೊಡ್ಡುತ್ತಿರುವ ಮಹಿಳೆಯರು ಮತದಾನದಲ್ಲೂ ತಮ್ಮ ಹಕ್ಕು ಚಲಾಯಿಸಿ ಮಾದರಿಯಾಗಿದ್ದಾರೆ.
3
+ ಕಳೆದ ಏಪ್ರಿಲ್ 26ರಂದು ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿರುವುದು ತಿಳಿದುಬಂದಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ಪುರುಷರ ಮತದಾನ ಪ್ರಮಾಣ ಶೇಕಡಾ 69.48 ಆಗಿದ್ದರೆ, ಮಹಿಳೆಯರ ಮತದಾನ ಪ್ರಮಾಣ 69.65 ಆಗಿದೆ. ಒಟ್ಟು 1,00,16,921 ಪುರುಷರು ಮತ ಚಲಾಯಿಸಿದ್ದರೆ 1,00,20,796 ಮಹಿಳೆಯರು ಮತ ಚಲಾಯಿಸಿದ್ದಾರೆ. ಅಂದರೆ, ಪುರುಷ ಮತದಾರರಿಗಿಂತ ಮಹಿಳಾ ಮತದಾರರು 3,875 ಹೆಚ್ಚಿರುವುದನ್ನು ಇದು ತೋರಿಸಿದೆ.
4
+ ಬೆಂಗಳೂರು ಉತ್ತರ, ಸೆಂಟ್ರಲ್, ದಕ್ಷಿಣ, ಗ್ರಾಮಾಂತರ ಹಾಗೂ ದಕ್ಷಿಣ ಕನ್ನಡ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ ಚಲಾಯಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರಿಗಿಂತ ಪುರುಷ ಮತದಾರರ ಸಂಖ್ಯೆ ಹೆಚ್ಚಿತ್ತು. ಆಗ ಪುರುಷರ ಮತದಾನ ಪ್ರಮಾಣ ಶೇ 69.55 ಆಗಿದ್ದರೆ, ಮಹಿಳೆಯರದ್ದು ಶೇ 67.65 ಆಗಿತ್ತು. 2014 ರಲ್ಲಿ ಪುರುಷ ಮತದಾರರು ಶೇ 68.59 ಆಗಿದ್ದರೆ ಮಹಿಳಾ ಮತದಾರರ ಪ್ರಮಾಣ ಶೇ 65.79 ಆಗಿತ್ತು.
5
+ ಮಹಿಳಾ ಸಬಲೀಕರಣ, ಸುಧಾರಿತ ಶಿಕ್ಷಣ ಮತ್ತು ಹೆಚ್ಚಿದ ಜಾಗೃತಿಯು ಮಹಿಳಾ ಮತದಾರರ ಸಂಖ್ಯೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಚುನಾವಣೆಯಲ್ಲಿ ಏಳು ರಾಜ್ಯಗಳಲ್ಲಿ ಮಹಿಳಾ ಮತದಾನದ ಪ್ರಮಾಣ ಹೆಚ್ಚಾಗಿತ್ತು.
6
+ ಮಹಿಳಾ ಮತದಾನ ಹೆಚ್ಚಳ:ಚುನಾವಣಾ ಆಯೋಗದ ಅಂಕಿ-ಅಂಶಗಳ ಪ್ರಕಾರ, ಅಸ್ಸಾಂ, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ, ಮಣಿಪುರ, ಮೇಘಾಲಯ, ಪುದುಚೇರಿ, ನಾಗಾಲ್ಯಾಂಡ್, ತಮಿಳುನಾಡು, ಉತ್ತರಾಖಂಡ, ಪಶ್ಚಿಮ ಬಂಗಾಳ, ಬಿಹಾರ, ಕೇರಳ ಮತ್ತು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಹಂತ-1 ಮತ್ತು ಹಂತ-2ರಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಮತ ಚಲಾಯಿಸಿದ್ದಾರೆ. ಮತದಾರರಲ್ಲಿ ಜಾಗೃತಿಯನ್ನು ಮೂಡಿಸಲು ಆಯೋಜಿಸಿದ್ದ ಸಂವಾದ ಕಾರ್ಯಕ್ರಮಗಳಲ್ಲಿ ಪುರುಷರಿಗೆ ಹೋಲಿಸಿದರೆ ಮಹಿಳೆಯರು ವಿವರಗಳನ್ನು ತಿಳಿದುಕೊಳ್ಳಲು ಮತ್ತು ಮತ ಚಲಾಯಿಸಲು ಹೆಚ್ಚು ಉತ್ಸುಕರಾಗಿದ್ದು ಕಂಡುಬಂದಿತ್ತು.
7
+ ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ನಡೆಯುವ ಪ್ರದೇಶಗಳಲ್ಲಿಯೂ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು. ಇಲ್ಲಿಯೂ ಪುರುಷರಿಗಿಂತ ಮಹಿಳೆಯರ ಮತದಾನ ಹೆಚ್ಚುತ್ತದೆಯೇ ಎಂದು ಕಾದು ನೋಡಬೇಕಿದೆ ಎಂದು ಅವರು ಹೇಳಿದ್ದಾರೆ.
eesanje/url_46_161_3.txt ADDED
@@ -0,0 +1,8 @@
 
 
 
 
 
 
 
 
 
1
+ ರಾಹುಲ್ ಗಾಂಧಿ ಮನಸ್ಥಿತಿ ಕಾಗೆ ಬಾಯಲ್ಲಿ ಅಪಶಕುನ ನುಡಿಸಿದೆ: ಬಿವೈವಿ ಕೆಂಡ
2
+ ಬೆಂಗಳೂರು,ಮೇ2- ಕೊಳಕು ಮನಸ್ಸುಗಳು ಮಾತ್ರ ವಿಕೃತಿಯ ಮಾತನಾಡಲು ಸಾಧ್ಯ, ಅಂಥದ್ದೇ ಸಾಲಿಗೆ ಸೇರಿರುವ ಶಾಸಕ (ರಾಜು) ಕಾಗೆ ಬಾಯಿಂದ ಮೋದಿಯವರ ಕುರಿತು ಕಾಂಗ್ರೆಸ್ಸಿಗರು ಅಪಶಕುನವನ್ನು ಉಗುಳಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಕಿಡಿಕಾರಿದ್ದಾರೆ.
3
+ ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಹುಲ್ ಗಾಂಧಿ ಮನಃಸ್ಥಿತಿ ಕಾಗೆ ಬಾಯಲ್ಲಿ ಅಪಶಕುನ ನುಡಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಸಾವುಗಳನ್ನು ಆಧರಿಸಿ ಅಧಿಕಾರಗಳನ್ನು ಗಳಿಸಿದ ಹಿನ್ನೆಲೆಯ ಕಾಂಗ್ರೆಸ್ಸಿಗರು ಅಮೂಲ್ಯ ಜೀವಗಳ ಸಾವುಗಳಿಗಾಗಿ ಚಡಪಡಿಸುವುದು ಅವರ ಹೀನ ಸಂಸ್ಕøತಿಯ ದ್ಯೋತಕವಾಗಿದೆ ಎಂದು ಟೀಕಿಸಿದ್ದಾರೆ.
4
+ “ರಾಹುಲ್ ಗಾಂಧಿ ಮನಸ್ಥಿತಿಕಾಗೆ ಬಾಯಲ್ಲಿ ಅಪಶಕುನ ನುಡಿಸಿದೆ”ಸಾವುಗಳನ್ನು ಆಧರಿಸಿ ಅಧಿಕಾರಗಳನ್ನು ಗಳಿಸಿದ ಹಿನ್ನಲೆಯ ಕಾಂಗ್ರೆಸ್ಸಿಗರು ಅಮೂಲ್ಯ ಜೀವಗಳ ಸಾವುಗಳಿಗಾಗಿ ಚಡಪಡಿಸುವುದು ಅವರ ಹೀನ ಸಂಸ್ಕೃತಿಯ ದ್ಯೋತಕವಾಗಿದೆ.ಮೋದಿಯವರ ಸಾವು ಕಾಂಗ್ರೆಸ್ ಏಕೆ ಬಯಸುತ್ತದೆ?•ಆರ್ಟಿಕಲ್ 370 ರದ್ದುಗೊಳಿಸಿ, ಭಾರತದ ಕಿರೀಟ ಕಾಶ್ಮೀರವನ್ನು…../Yp9QMmw7gr
5
+ ಮೋದಿಯವರ ಸಾವನ್ನು ಕಾಂಗ್ರೆಸ್ ಏಕೆ ಬಯಸುತ್ತದೆ? ಆರ್ಟಿಕಲ್ 370 ರದ್ದುಗೊಳಿಸಿ, ಭಾರತದ ಕಿರೀಟ ಕಾಶ್ಮೀರವನ್ನು ಉಳಿಸಿದ್ದಕ್ಕಾಗಿಯೇ? ಐದು ಶತಮಾನಗಳ ಭಾರತೀಯರ ಕನಸು ಈಡೇರಿಸಲು ರಾಮಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣ ಮಾಡಿದ ಕಾರಣಕ್ಕಾಗಿಯೇ? ಎಂದು ಪ್ರಶ್ನಿಸಿದ್ದಾರೆ.ದೇಶವನ್ನು ಮುಕ್ಕಿ ತಿನ್ನುತ್ತಿದ್ದ ಭಯೋತ್ಪಾದಕತೆಯನ್ನು ಬೇರು ಸಮೇತ ಕಿತ್ತೊಗೆದು ರಾಷ್ಟ್ರವನ್ನು ರಕ್ಷಿಸಿದ ಕಾರಣಕ್ಕಾಗಿಯೇ? ವಿಶ್ವದಲ್ಲಿ ಭಾರತವನ್ನು ಆರ್ಥಿಕವಾಗಿ 5ನೇ ಸ್ಥಾನಕ್ಕೇರಿಸಿ ಶಕ್ತಿಶಾಲಿ ರಾಷ್ಟ್ರ ನಿರ್ಮಿಸಿದ ಕಾರಣಕ್ಕಾಗಿಯೇ? ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
6
+ ಅಭಿವೃದ್ಧಿಯ ಓಟದಲ್ಲಿ ಜಾಗತಿಕ ಪೈಪೋಟಿಯ ನಡುವೆ ಭಾರತವನ್ನು ಮುಂಚೂಣಿ ಸ್ಥಾನದಲ್ಲಿ ತಂದು ನಿಲ್ಲಿಸಿದ ಕಾರಣಕ್ಕಾಗಿಯೇ? ದೇಶದ ಕಟ್ಟಕಡೆಯ ಪ್ರಜೆಯೂ ಸ್ವಾಭಿಮಾನದ ಬದುಕು ರೂಪಿಸಲು ಹತ್ತು ಹಲವು ಯೋಜನೆಗಳನ್ನು ಸಮರ್ಪಿಸಿದ ಕಾರಣಕ್ಕಾಗಿಯೇ? ದಕ್ಷ ಹಾಗೂ ಪಾರದರ್ಶಕ ಆಡಳಿತ ನೀಡಿ ಕಪ್ಪು ಚುಕ್ಕೆ ಇಲ್ಲದ ಪರಿಶುಭ್ರ ಆಡಳಿತ ನೀಡಿ ಜನರಿಂದ ಸೈ ಅನಿಸಿಕೊಂಡ ಕಾರಣಕ್ಕಾಗಿಯೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
7
+ ಭಾರತೀಯ ಜನತಾ ಪಾರ್ಟಿ ವ್ಯಕ್ತಿ ಆಧರಿತವಾಗಿ ಬೆಳೆದದ್ದಲ್ಲ, ಸಿದ್ಧಾಂತ, ತತ್ವಗಳನ್ನು ಆಧರಿಸಿ ರಾಷ್ಟ್ರ ಭಕ್ತ ಕಾರ್ಯಕರ್ತರ ಪರಿಶ್ರಮದ ಫಲವಾಗಿ ಬೆಳೆದು ನಿಂತಿರುವ ಬೃಹತ್ ರಾಜಕೀಯ ವೃಕ್ಷ. ದಿವಂಗತ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಅವರಂತಹ ಸಾಲು ��ಾಲು ನಾಯಕರನ್ನು ದೇಶಕ್ಕೆ ಸಮರ್ಪಣೆ ಮಾಡಿದ ಪಕ್ಷ, ಈ ನಿಟ್ಟಿನಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಗಟ್ಟಿಯಾಗಿ ಪಡಿಮೂಡಿದ, ದೇಶ ಮೆಚ್ಚಿದ ಹೆಮ್ಮೆಯ ಪ್ರಧಾನಿ ನರೇಂದ್ರಮೋದಿ ಜೀ, ಸಮರ್ಥ ಆಡಳಿತಗಾರನಾಗಿ ದೇಶವನ್ನು ಬಲಿಷ್ಠಗೊಳಿಸಿದ ಮಹಾನ್ ನೇತಾರ ಎನ್ನುವ ಕಾರಣಕ್ಕಾಗಿ ಈ ದೇಶದ ಜನ ಮತ್ತೊಮ್ಮೆ ಅವರ ನಾಯಕತ್ವವನ್ನು ಬಯಸಿ ಪ್ರಧಾನಿಯನ್ನಾಗಿಸಲು ಸಂಕಲ್ಪ ತೊಟ್ಟಿದ್ದಾರೆ, ಇದನ್ನು ಸಹಿಸದ ಕಾಂಗ್ರೆಸ್ಸಿಗರ ಬಾಯಲ್ಲಿ ಹತಾಶೆ, ಅಪಶಕುನದ ಮಾತುಗಳಲ್ಲದೇ ಇನ್ನೇನು ಬರಲು ಸಾಧ್ಯ ಎಂದು ವ್ಯಂಗ್ಯವಾಡಿದ್ದಾರೆ.
8
+ ದೈವ ಬಲ, ಜನಾಶೀರ್ವಾದದ ಶಕ್ತಿ. ಭಾರತಮಾತೆಯ ಮಹಾನ್ ಸುಪುತ್ರ ಮೋದಿಯವರ ರಕ್ಷಣೆಗೆ ನಿಂತಿದೆ. ಚುನಾವಣೆಯ ಫಲಿತಾಂಶ ಅದನ್ನು ಪ್ರತಿಫಲಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
eesanje/url_46_161_4.txt ADDED
@@ -0,0 +1,8 @@
 
 
 
 
 
 
 
 
 
1
+ ಬಿಸಿಲ ಬೇಗೆ : ಏಸಿ-ಏರ್‌ಕೂಲರ್‌ಗಳ ಖರೀದಿಗೆ ಮುಗಿಬಿದ್ದಿ ಜನ
2
+ ಬೆಂಗಳೂರು, ಮೇ 1-ಮಳೆ ಕೈಕೊಟ್ಟಿದ್ದು, ಕೆರೆ- ಕಟ್ಟೆ- ಹಳ್ಳ- ಕೊಳ್ಳಗಳು ಬತ್ತಿಹೋಗಿವೆ. ಬರಗಾಲದ ಜೊತೆ ಹಿಂದೆಂದೂ ಕಂಡುಕೇಳರಿಯದ ಬಿಸಿಲಿನ ಝಳಕ್ಕೆ ಜನಸಾಮಾನ್ಯರು ತತ್ತರಿಸಿ ಹೋಗಿದ್ದು, ಸೆಕೆಯಿಂದ ಮುಕ್ತಿ ಪಡೆದುಕೊಳ್ಳಲು ಏರ್‌ಕೂಲರ್‌, ಏಸಿ ಅಂಗಡಿಗಳತ್ತ ಮುಗಿಬಿದ್ದಿದ್ದಾರೆ.
3
+ ಬಿಸಿಲಿನ ತಾಪಕ್ಕೆ ಮನೆಯಿಂದ ಹೊರಬರಲು ಒಂದು ಕ್ಷಣ ಯೋಚಿಸುವಂತಾಗಿದೆ. ಬಿಸಿಲಿನ ಜೊತೆಗೆ ಉಷ್ಣಗಾಳಿಯೂ ಸಹ ಹೆಚ್ಚಾಗಿದ್ದು, ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.ಮನೆಯಲ್ಲೂ ಇರಲಾಗದೆ ಹೊರಗಡೆ ಕೂಡ ಬರಲಾಗದೆ ತ್ರಿಶಂಕು ಸ್ಥಿತಿಯಲ್ಲಿ ಕಾಲ ದೂಡುವಂತಾಗಿದೆ.
4
+ ಸೆಕೆಯಿಂದ ರಕ್ಷಿಸಿಕೊಳ್ಳಲು ಸೀಲಿಂಗ್‌ ಫ್ಯಾನ್‌, ಟೇಬಲ್‌ ಫ್ಯಾನ್‌ಗಳು 24 ಗಂಟೆಗಳು ಸಹ ಓಡುವಂತಾಗಿವೆ. ಆದರೂ ಕೂಡ ಶಕೆಗೆ ಮುಕ್ತಿ ಸಿಕ್ಕಿಲ್ಲ. ಫ್ಯಾನ್‌ಗಳು ತಿರುಗಿ ತಿರುಗಿ ಬಿಸಿ ಗಾಳಿಯನ್ನು ಹೊರಸೂಸುತ್ತಿವೆ. ಫ್ಯಾನ್‌ ಗಾಳಿಯಿಂದ ಸೆಕೆಗೆ ಥಣಿಸಿಕೊಳ್ಳಲು ಸಾಧ್ಯವಾಗದೆ ಜನರು ಏಸಿ, ಏರ್‌ಕೂಲರ್‌ಗಳ ಖರೀದಿಯತ್ತ ಮುಖ ಮಾಡಿದ್ದಾರೆ.
5
+ ಮಾರುಕಟ್ಟೆಗಳಲ್ಲಿ ನಾನಾ ಕಂಪೆನಿಯ ಹಲವಾರು ಏಸಿ, ಏರ್‌ಕೂಲರ್‌ ದೊರೆಯುತ್ತಿದ್ದು, ಕಳೆದ ಒಂದು ತಿಂಗಳಿನಿಂದ ಮಾರಾಟ ಜೋರಾಗಿಯೇ ನಡೆಯುತ್ತಿದೆ. ಮಾರುಕಟ್ಟೆಗಳಲ್ಲಿ 10, 15, 25 ಲೀಟರ್‌ ಸಾಮರ್ಥ್ಯದ ಏರ್‌ಕೂಲರ್‌ಗಳು ಮಾರಾಟವಾಗುತ್ತಿದ್ದು, ಬೆಲೆಯಲ್ಲಿ ತಲಾ ಒಂದರಿಂದ ಎರಡು ಸಾವಿರ ರೂ. ಏರಿಕೆಯಾಗಿದೆ. ಆನ್‌ಲೈನ್‌ ಖರೀದಿಯೂ ಕೂಡ ಜೋರಾಗಿ ನಡೆಯುತ್ತಿದೆ.
6
+ ಏರ್‌ಕೂಲರ್‌ಗಳಿಗೆ ತಣ್ಣನೆಯ ನೀರು ಹಾಗೂ ಐಸ್‌ ಕ್ಯೂಬ್‌ಗಳನ್ನು ಹಾಕಿಕೊಂಡರೆ ಸ್ವಲ್ಪ ತಣ್ಣನೆಯ ಗಾಳಿ ಬರುತ್ತದೆ. ನಿದ್ದೆ ಮಾಡಬಹುದು ಎಂದು ಜನರು ಖರೀದಿಗೆ ಮುಂದಾಗಿದ್ದಾರೆ.
7
+ ಕೆರೆಕಟ್ಟೆಗಳಲ್ಲಿ ಇರುವ ನೀರು ಕೂಡ ಬಿಸಿಲಿನ ತಾಪಕ್ಕೆ ಹಾವಿಯಾಗುತ್ತಿದ್ದು, ಬೋರ್‌ವೆಲ್‌ಗಳಲ್ಲಿ ಅಂತರ್‌ಜಲ ಮಟ್ಟ ಪಾತಾಳ ತಲುಪಿ ಒಣಗಿ ಹೋಗಿವೆ. ಜನಜಾನುವಾರುಗಳ ಕುಡಿಯುವ ನೀರಿಗೆ ತೀವ್ರ ಹಾಹಾಕಾರ ಉಂಟಾಗಿದೆ.ರೈತರಿಗೆ ಬೆಳೆಗಳನ್ನು ಉಳಿಸಿಕೊಳ್ಳುವುದೇ ಒಂದು ಸವಾಲಾಗಿದೆ.
8
+ ಕೆಲವು ಭಾಗಗಳಲ್ಲಿ ಅಡಿಕೆ ತೋಟಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಹಾಯಿಸುವಂತಾಗಿದೆ.ಒಟ್ಟಿನಲ್ಲಿ ಬಿರು ಬೇಸಿಗೆ ಜನಸಾಮಾನ್ಯರ ಹಾಗೂ ಜಾನುವಾರಗಳನ್ನು ಹೈರಾಣ ವಾಗಿಸಿಬಿಟ್ಟಿದೆ. ಯಾವಾಗ ಮಳೆ ಬರುತ್ತಿದೆಯೋ ಎಂದು ದಿನನಿತ್ಯ ಮುಗಿಲು ನೋಡುವಂತಾಗಿದೆ.
eesanje/url_46_161_5.txt ADDED
@@ -0,0 +1,5 @@
 
 
 
 
 
 
1
+ ಸರ್ಕಾರದ ಖಜಾನೆ ಖಾಲಿಯಾಗಿದೆ : ಆರ್‌.ಅಶೋಕ್‌ ಆರೋಪ
2
+ ಬೆಂಗಳೂರು,ಮೇ1-ರೈತರಿಗೆ ಕೊಡುತ್ತಿದ್ದ ಹಾಲಿನ 5 ರೂ. ಪ್ರೋತ್ಸಾಹ ಧನವನ್ನೂ ಕೂಡ ನಿಲ್ಲಿಸಿದ್ದಾರೆ, ಸರ್ಕಾರದ ಖಜಾನೆ ಖಾಲಿಯಾಗಿದೆ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಪ್ರಶ್ನಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಖಜಾನೆ ಖಾಲಿಯಾಗಿದೆ ಅನ್ನುವುದಕ್ಕಿಂತ ಮೋದಿ ಕೊಡುತ್ತಿಲ್ಲ ಎಂದು ಕಾಂಗ್ರೆಸ್‌ ದೂರುತ್ತಿದೆ ಎಂದು ಕಿಡಿಕಾರಿದರು.
3
+ ಕಾಂಗ್ರೆಸ್‌ ಸರ್ಕಾರ ಬಂದು ಒಂದು ವರ್ಷವಾಗಿದೆ. ರಾಜ್ಯದ ಜನರ ಮೇಲೆ ತೆರಿಗೆ ಬಾರ ಹೇರಿದ್ದಾರೆ. ಅವರ ಜೇಬಿಗೆ ಕತ್ತರಿ ಹಾಕಿ, ಮಹಿಳೆಯರಿಗೆ ಕೊಡುತ್ತಿದ್ದೇವೇ ಎಂದು ನಾಟಕವಾಡುತ್ತಿದ್ದಾರೆ ಎಂದು ದೂರಿದರು.
4
+ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇನು ತಮ್ಮ ಮನೆಯಿಂದ ಕೊಡುತ್ತಿಲ್ಲ. ವಿಶ್ವ ಬ್ಯಾಂಕ್‌ನಿಂದ ಸಾಲ ತಂದು ಕೊಡುತ್ತಿಲ್ಲ. ನಮ್ಮ ದುಡ್ಡನ್ನೇ ಕಿತ್ತು ನಮಗೆ ಕೊಡುತ್ತಿದ್ದಾರೆ, ಇದು ಜನರಿಗೂ ಗೊತ್ತಾಗಿದೆ ಎಂದರು.ಕಾಂಗ್ರೆಸ್‌ಗೆ ಯೋಗ್ಯತೆ ಇದ್ದರೆ, ಕಳೆದ 20 ವರ್ಷದಲ್ಲಿ ನಾವು ಕೊಟ್ಟ ತೆರಿಗೆ ಎಷ್ಟು, ಕೇಂದ್ರದಿಂದ ರಾಜ್ಯಕ್ಕೆ ಬಂದಿದ್ದು ಎಷ್ಟು? ಎಂಬುದನ್ನು ಬಿಡುಗಡೆ ಮಾಡಿ ಎಂದು ಅಶೋಕ್‌ ಸವಾಲು ಹಾಕಿದರು.
5
+ ಇದಕ್ಕೂ ಮುನ್ನ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳ ಕುರಿತ ಹಾಗೂ ಪ್ರಧಾನಿ ನರೇಂದ್ರಮೋದಿ ಸರ್ಕಾರದ ಪ್ರಧಾನಿ ಮೋದಿ ಸರ್ಕಾರದ ಅಭಿವೃದ್ಧಿ ಯೋಜನೆಗಳ ಕುರಿತ ಆಡಿಯೋ, ವಿಡಿಯೋಗವನ್ನು ಬಿಡುಗಡೆ ಮಾಡಿದರು.
eesanje/url_46_161_6.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಹಾಸನ ಪೆನ್‌ಡ್ರೈವ್‌ ಸೂತ್ರಧಾರ ಯಾರು..?
2
+ ಬೆಂಗಳೂರು, ಮೇ.1-ನಾನಲ್ಲ… ನಾನಲ್ಲ… ನನಗೂ ವಿಡಿಯೋಗೂ, ಪೆನ್‌ಡ್ರೈವ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಈಗ ಎಲ್ಲರೂ ಹೇಳುತ್ತಿದ್ದಾರೆ. ನಾನು ಪೆನ್‌ಡ್ರೈವ್‌ ಕೊಟ್ಟಿದ್ದು ಬಿಜೆಪಿ ನಾಯಕನಿಗೆ ಅಷ್ಟೇ ಎಂದು ಪ್ರಜ್ವಲ್‌ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್‌ ಹೇಳಿದರೆ, ನನಗೆ ಕೊಟ್ಟಿದ್ದು ನಿಜ. ಆದರೆ ಹಂಚಿದ್ದು ನಾನಲ್ಲ ಎಂದು ದೇವರಾಜೇಗೌಡ ಹೇಳುತ್ತಿದ್ದಾರೆ.
3
+ ವಿಡಿಯೋ ಹಿಂದೆ ಮಹಾ ನಾಯಕನ ಕೈವಾಡವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನೇರ ಆರೋಪ ಮಾಡಿದರೆ, ಅಂತಹ ಚಿಲ್ಲರೆ ಕೆಲಸ ಮಾಡುವ ಅಭ್ಯಾಸ ನನಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.
4
+ ಅತ್ತ ಹಾಸನದಲ್ಲಿ ಪ್ರೀತಂ ಗೌಡ ನನಗೂ ಪೆನ್‌ಡ್ರೈವ್‌ಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಹಾಸನ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಶ್ರೇಯಸ್‌‍ ಪಟೇಲ್‌ ತಾಯಿ ಅನುಪಮಾ ಅವರು ಕೂಡ ಪೆನ್‌ಡ್ರೈವ್‌ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಹೇಳಿದ್ದಾರೆ.
5
+ ಹಾಸನ ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಪೆನ್‌ಡ್ರೈವ್‌ ಬಗ್ಗೆ ಡಿಸೆಂಬರ್‌ನಲ್ಲೇ ಪ್ರಸ್ತಾಪಿಸಿದ್ದೆ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಈ ಬಗ್ಗೆ ಪತ್ರಕೂಡ ಬರೆದಿದ್ದೆ ಎಂದು ಹೇಳಿದ್ದಾರೆ. ಆದರೆ ವಿಜಯೇಂದ್ರ ಅವರು ಯಾವುದೇ ಪತ್ರ ನನಗೆ ಬಂದಿಲ್ಲ ಎಂದು ಹೇಳಿದ್ದಾರೆ.
6
+ ಹಾಗಾದರೆ ಹಾಸನದ ಅಶ್ಲೀಲ ವಿಡಿಯೋ ಪೆನ್‌ಡ್ರೈವ್‌ ಮಾಡಿದ್ಯಾರು… ಹಂಚಿದ್ಯಾರು… ಹಾಸನದ ಮನೆ ಮನೆಗೂ ಪೆನ್‌ಡ್ರೈವ್‌ಗಳನ್ನು ತಲುಪಿಸಿದ್ಯಾರು…. ಎಂಬ ಯಕ್ಷ ಪ್ರಶ್ನೆ ಎಲ್ಲರನ್ನೂ ಕಾಡತೊಡಗಿದೆ.
7
+ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾದ ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾದ ಹಳ್ಳಿ ಹಳ್ಳಿಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಹಲ್‌ ಚಲ್‌ ಸೃಷ್ಟಿಸಿದ ಹಾಸನ ಪೆನ್‌ಡ್ರೈವ್‌ ಸೃಷ್ಟಿಕರ್ತ ಯಾರು…? ಅಶ್ಲೀಲ ವಿಡಿಯೋಗಳು ಫೋನ್‌ಗಳಲ್ಲಿ, ವಾಟ್ಸ್ಯಾಪ್‌ಗಳಲ್ಲಿ ಹರಿದಾಡುತ್ತಿದ್ದಾಗ ಒಬ್ಬರಿಗೊಬ್ಬರು ಫಾರ್ವರ್ಡ್‌ ಮಾಡಿ ಗುಸು ಗುಸು ಪಿಸಿಪಿಸಿಯೊಂದಿಗೆ ಖುಷಿ ಪಟ್ಟವರೇ ಹೆಚ್ಚು.
8
+ ಅಬ್ಬಾ… ಇದು ಹೀಗಿದೆಯೇ, ಚುನಾವಣೆ ಮೇಲೆ ಪರಿಣಾಮ ಬೀರಿದೆ. ಏ.. ಇದು ನಿಜವೇ, ಇದು ಸುಳ್ಳು, ಇದು ಫೇಕ್‌ ವಿಡಿಯೋ ಎಂಬಂತಹ ಮಾತುಗಳು ಕೇಳಿಬಂದವು.ನೂರಾರು ವಿಡಿಯೋಗಳು ಮೊಬೈಲ್‌ನಲ್ಲಿ ಯಾವಾಗ ಹರಿದಾಡಿದವೋ ಮಹಿಳಾ ಆಯೋಗ ರಾಜ್ಯಸರ್ಕಾರಕ್ಕೆ ಪತ್ರ ಬರೆದು ಎಸ್‌‍ಐಟಿ ತಂಡ ರಚಿಸುವಂತೆ ಮನವಿ ಮಾಡಿತ್ತು. ಕೂಡಲೇ ಸರ್ಕಾರ ಪ್ರಕರಣವನ್ನು ಎಸ್‌‍ಐಟಿಗೆ ವಹಿಸಿತು. ಆಗ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿತು.
9
+ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆಗಳು ಭುಗಿಲೆದ್ದವು. ಹಾಸನ, ಮಂಡ್ಯ, ಮೈಸೂರು, ಬೆಳಗಾವಿ, ಧಾರವಾಡ, ಕಲಬುರಗಿ ಎಲ್ಲೆಡೆ ಹಾಸನ ಸಂಸ��� ಪ್ರಜ್ವಲ್‌ ರೇವಣ್ಣ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿ ಮಹಿಳೆಯರಿಗೆ ಅನ್ಯಾಯವಾಗುತ್ತಿದೆ ಎಂಬ ಆರೋಪಗಳು ಕೇಳಿಬಂದವು.ಈ ನಡುವೆ ಪ್ರಜ್ವಲ್‌ ರೇವಣ್ಣ ಅವರು ಪೂರ್ವನಿಯೋಜಿತವೋ, ಕಾಕತಾಳೀಯವೋ ವಿದೇಶಕ್ಕೆ ಪ್ರವಾಸ ಬೆಳೆಸಿದ್ದರು.
10
+ ಇದರಿಂದ ಮತ್ತುಷ್ಟು ಪ್ರತಿಭಟನೆಗಳು ಹೆಚ್ಚಾದವು. ಚುನಾವಣಾ ಸಂದರ್ಭದಲ್ಲಿ ಪ್ರತಿಭಟನೆ ತೀವ್ರಗೊಂಡು ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ ರಾಜ್ಯ ಪೊಲೀಸ್‌‍ ಮಹಾನಿರ್ದೇಶಕರಿಗೆ ಪತ್ರ ಬರೆದು ಪ್ರಕರಣದ ಬಗ್ಗೆ ತನಿಖೆ ನಡೆಸಿ ಮೂರು ದಿನಗಳೊಳಗೆ ವರದಿ ನೀಡುವಂತೆ ಸೂಚಿಸಿತು.
11
+ ಈ ನಡುವೆ ಹೊಳೇನರಸೀಪುರ ಟೌನ್‌ ಠಾಣೆಯಲ್ಲಿ ಸಂತ್ರಸ್ತೆ ಎಚ್‌.ಡಿ. ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ವಿರುದ್ಧ ದೂರು ದಾಖಲಾಗಿತ್ತು.ದೂರು ದಾಖಲಾಗುತ್ತಿದ್ದಂತೆ ಪ್ರಕರಣ ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಂಡಿತು. ರಾಜಕೀಯ ಪಕ್ಷಗಳ ಕೆಸರೆರಚಾಟವು ಹೆಚ್ಚಾಯಿತು. ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಅವರನ್ನು ಗುರಿಯಾಗಿಸಿ, ಬಿಜೆಪಿಯೊಂದಿಗೆ ಜೆಡಿಎಸ್‌‍ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ಟೀಕೆ ಟಿಪ್ಪಣಿಗಳು ನಡೆದವು. ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್‌‍ ಈ ಪ್ರಕರಣವನ್ನು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಂಡು ಪ್ರತಿಭಟನೆಗಳನ್ನು ನಡೆಸಿತು.
12
+ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಜೆಡಿಎಸ್‌‍ ಎನ್‌ಡಿಎ ಭಾಗ ಅಷ್ಟೇ. ನಾವು ಪ್ರಜ್ವಲ್‌ ಪ್ರಕರಣವನ್ನು ಸಮರ್ಥಿಸುವುದಿಲ್ಲ. ನಮಗೂ ಅದಕ್ಕೂ ಸಂಬಂಧವಿಲ್ಲ. ರಾಜ್ಯ ಸರ್ಕಾರ ಕೈಗೊಳ್ಳುವ ಕ್ರಮಕ್ಕೆ ನಮ ಅಭ್ಯಂತರವಿಲ್ಲ. ಜೆಡಿಎಸ್‌‍-ಕಾಂಗ್ರೆಸ್‌‍ ಮೈತ್ರಿಯಲ್ಲಿಯೇ ಪ್ರಜ್ವಲ್‌ ಗೆಲುವು ಸಾಧಿಸಿದ್ದು ಎಂದು ಕಾಂಗ್ರೆಸ್‌‍ ಹೋರಾಟಕ್ಕೆ ತಿರುಗೇಟು ನೀಡಿದ್ದರು. ಪ್ರಜ್ವಲ್‌ ಪ್ರಕರಣದಲ್ಲಿ ರಾಜ್ಯ ಬಿಜೆಪಿ ಘಟಕಕ್ಕೆ ಅಂತರ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದ್ದರು.
13
+ ಈ ನಡುವೆ ಮುಜುಗರಕ್ಕೆ ಈಡಾದ ಜೆಡಿಎಸ್‌‍ ಕಾರ್ಯಕಾರಿಣಿ ಸಭೆ ನಡೆಸಿ ಪ್ರಜ್ವಲ್‌ ಅವರನ್ನು ಅಮಾನತುಗೊಳಿಸಿತ್ತು. ತನಿಖೆಯಲ್ಲಿ ಸಾಬೀತಾದರೇ ಶಾಶ್ವತವಾಗಿ ಉಚ್ಚಾಟನೆ ಮಾಡುವುದಾಗಿ ಜೆಡಿಎಸ್‌‍ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.ಇಷ್ಟೆಲ್ಲಾ ಘಟನೆಗಳಿಗೆ ಕಾರಣವಾದ ಪೆನ್‌ಡ್ರೈವ್‌ ಮಾಡಿ ಹಂಚಿದವರು ಯಾರು ಎಂಬುದು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ.
eesanje/url_46_161_7.txt ADDED
@@ -0,0 +1,5 @@
 
 
 
 
 
 
1
+ ನಾನು ತಪ್ಪು ಮಾಡಿಲ್ಲ, ಯಾವುದೇ ತನಿಖೆಗೆ ಸಿದ್ಧ : ಎಚ್‌.ಡಿ.ರೇವಣ್ಣ
2
+ ಹಾಸನ,ಮೇ.1-ನಾನೇನೂ ತಪ್ಪು ಮಾಡಿಲ್ಲ, ಯಾವುದೇ ರೀತಿಯ ತನಿಖೆಯನ್ನಾದರೂ ಎದುರಿಸಲು ಸಿದ್ಧನಿದ್ದೇನೆ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ತಿಳಿಸಿದ್ದಾರೆ. ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ.
3
+ ಆರೋಪವನ್ನು ಎದುರಿಸುವ ಶಕ್ತಿ ನಮಗಿದೆ. ತಪ್ಪೇ ಮಾಡಿಲ್ಲ ಎಂದ ಮೇಲೆ ಆರೋಪದ ಬಗ್ಗೆ ಏಕೆ ತಲೆಕೆಡಿಸಿಕೊಳ್ಳಬೇಕು? ಸದ್ಯಕ್ಕೆ ಈ ಬಗ್ಗೆ ತಾವು ಹೆಚ್ಚೇನೂ ಹೇಳಲು ಬಯಸುವುದಿಲ್ಲ ಎಂದರು.ಷಡ್ಯಂತ್ರವನ್ನು ಎದುರಿಸುವ ಶಕ್ತಿ ಇದೆ. ಹೀಗಾಗಿ ತನಿಖೆಯನ್ನು ಎದುರಿಸುವ ಸಾಮರ್ಥ್ಯವನ್ನು ದೇವರು ತಮಗೆ ಕೊಟ್ಟಿದ್ದಾನೆ ಎಂದು ಹೇಳಿದ್ದಾರೆ.
4
+ ಎಸ್‌ಐಟಿ ಸೇರಿದಂತೆ ಯಾವುದೇ ರೀತಿ ತನಿಖೆ ಎದುರಿಸಲು ಸಿದ್ಧ. ಎಸ್‌ಐಟಿ ನೋಟಿಸ್‌ ಪ್ರತಿಯನ್ನು ಮನೆಗೆ ಅಂಟಿಸಿ ಹೋಗಿದೆ. ಅದರಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ತನಿಖೆಗೆ ಸಹಕಾರ ನೀಡುವುದಾಗಿ ಅವರು ತಿಳಿಸಿದರು.ಇದಕ್ಕೂ ಮುನ್ನ ಅವರು ಹರದನಹಳ್ಳಿಯ ಶಿವ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
5
+ ಬಳಿಕ ಹೊಳೆನರಸೀಪುರದ ತಮ್ಮ ನಿವಾಸದಲ್ಲಿ ಕುಟುಂಬದ ಸದಸ್ಯರೊಂದಿಗೆ ಹೋಮ ನಡೆಸಿದರು. ಹೋಮದಲ್ಲಿ ಭಾಗಿಯಾಗಿದ್ದ ರೇವಣ್ಣ ಅವರು ಪೂರ್ಣಾಹುತಿ ಮುಗಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
eesanje/url_46_161_8.txt ADDED
@@ -0,0 +1,6 @@
 
 
 
 
 
 
 
1
+ ವಿಚಾರಣೆಗೆ ಹಾಜರಾಗುವಂತೆ ಎಚ್‌.ಡಿ.ರೇವಣ್ಣ ಮತ್ತು ಸುಪುತ್ರ ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್‌
2
+ ಹಾಸನ,ಮೇ1-ರಾಜ್ಯ ರಾಜಕೀಯದಲ್ಲಿ ಕೋಲಾಹಲ ಉಂಟು ಮಾಡಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹಾಗೂ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದೆ.ಹೊಳೆನರಸೀಪುರದಲ್ಲಿರುವ ಅವರಿಬ್ಬರ ಮನೆಯ ಬಾಗಿಲಿಗೆ ನೋಟಿಸ್‌ ಪ್ರತಿಯನ್ನು ಅಂಟಿಸಿ ಎಸ್‌ಐಟಿ ತಂಡ ವಾಪಸ್ಸಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಯ ಬಾಗಿಲಿಗೆ ನೋಟಿಸ್‌ನ್ನು ಅಂಟಿಸಲಾಗಿದೆ. ನೋಟಿಸ್‌ನಲ್ಲಿ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
3
+ ಸ್ಥಳ ಮಹಜರು ನಡೆಸಲು ಎಸ್‌ಐಟಿ ತಂಡ ದೂರು ನೀಡಿದ ಸಂತ್ರಸ್ತ ಮಹಿಳೆಯೊಂದಿಗೆ ಹೊಳೆನರಸೀಪುರಕ್ಕೆ ತೆರಳಲಿದೆ. ಹೊಳೆನರಸೀಪುರದಲ್ಲಿರುವ ರೇವಣ್ಣ ಅವರ ಮನೆಯಲ್ಲಿ ಎಸ್‌ಐಟಿ ತಂಡ ಸ್ಥಳ ಮಹಜರನ್ನು ನಡೆಸಬೇಕಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ರೇವಣ್ಣ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆಂದು ಮಹಿಳೆ ದೂರು ನೀಡಿದ್ದರು.
4
+ ದೂರನ್ನು ಆಧರಿಸಿ ಹೊಳೆನರಸೀಪುರ ಟೌನ್‌ ಠಾಣೆ ಪೊಲೀಸರು ಎಫ್‌ಐಆರ್‌ ದಾಖಲು ಮಾಡಿದ್ದಾರೆ. ಬಳಿಕ ಸರ್ಕಾರ ಪ್ರಕರಣವನ್ನು ಎಸ್‌ಐಟಿಗೆ ವರ್ಗಾಯಿಸಿತ್ತು.ನಿನ್ನೆ ಮಹಿಳೆಯ ಹೇಳಿಕೆಯನ್ನು ಎಸ್‌ಐಟಿ ದಾಖಲು ಮಾಡಿಕೊಂಡಿದ್ದು, ಇಂದು ಆ ಮಹಿಳೆಯ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಲಿದೆ.
5
+ ಪ್ರಜ್ವಲ್‌ ರೇವಣ್ಣ ವಾಪಸ್‌:ವಿದೇಶಕ್ಕೆ ತೆರಳಿರುವ ಪ್ರಜ್ವಲ್‌ ರೇವಣ್ಣ ಮೇ 3ರ ತಡರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಗೊತ್ತಾಗಿದೆ. ಸದ್ಯ ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿ ಅವರು ಇದ್ದಾರೆ ಎಂದು ತಿಳಿದುಬಂದಿದೆ.
6
+ ಲುಪ್ತಾನ್ಸ್ ಏರ್‌ಲೈನ್ಸ್ ನಲ್ಲಿ ಮೇ 3ರಂದು ಪ್ರಯಾಣಿಸಲು ಪ್ರಜ್ವಲ್‌ ಟಿಕೆಟ್‌ ಬುಕ್‌ ಮಾಡಿದ್ದಾರೆ. ಹೀಗಾಗಿ ಮೇ 3ರ ಮಧ್ಯರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಮೇ 4ರಂದು ವಿಚಾರಣೆಗೆ ಎಸ್‌ಐಟಿ ಮುಂದೆ ಹಾಜರಾಗುವ ಸಾಧ್ಯತೆ ಇದೆ.
eesanje/url_46_161_9.txt ADDED
@@ -0,0 +1,9 @@
 
 
 
 
 
 
 
 
 
 
1
+ ಹಾಸನ ಪೆನ್‌ಡ್ರೈವ್‌ ಪ್ರಕರಣ : ಹಲವು ಆಯಾಮಾಗಳಲ್ಲಿ ಎಸ್‌‍ಐಟಿ ತನಿಖೆ
2
+ ಬೆಂಗಳೂರು, ಮೇ.1-ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಎಸ್‌‍ಐಟಿ ತನಿಖಾ ತಂಡ ತನಿಖೆಯನ್ನು ಚುರುಕುಗೊಳಿದೆ. ಸಿಐಡಿ ಎಡಿಜಿಪಿ ಬಿ.ಕೆ ಸಿಂಗ್‌ ನೇತೃತ್ವದ ಎಸ್‌‍ಐಟಿ ತಂಡ ಪ್ರಕರಣವನ್ನು ಅತ್ಯಂತ ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದು, ನಾನಾ ಆಯಾಮಾಗಳಲ್ಲಿ ತನಿಖೆ ನಡೆಸುತ್ತಿದೆ.
3
+ ಈ ಹಗರಣದಲ್ಲಿ ನಡೆದಿದೆ ಎನ್ನಲಾಗ ಲೈಂಗಿಕ ದೌರ್ಜನ್ಯ, ಅಶ್ಲೀಲ ದೃಶ್ಯ ಚಿತ್ರೀಕರಣ, ವಿಡಿಯೋಗಳ ಹಂಚಿಕೆ ಮತ್ತು ಡೀಪ್‌ಫೇಕ್‌ಗಳು ಮಾಡಿರುವ ಸಾಧ್ಯತೆ ಬಗ್ಗೆಯೂ ಪರಿಶೀಲನೆ ಮಾಡಲಾಗುತ್ತಿದೆ. ಸಂತ್ರಸ್ತೆಯರು ನೀಡಿದ ದೂರಿನ ಸತ್ಯಾಸತ್ಯತೆ ಪರಾಮರ್ಶೆ ವಿಡಿಯೋಗಳನ್ನು ಪೆನ್‌ಡ್ರೈವ್‌ಗೆ ಹಾಕಿದ್ದು ಯಾರೂ, ಪೆನ್‌ಡ್ರೈವ್‌ಗಳನ್ನು ಹಂಚಿದ್ದು ಯಾರು, ಎಂಬ ಮೂಲಗಳನ್ನು ಹುಡುಕಲು ಮುಂದಾಗಿರುವ ಎಸ್‌‍ಐಟಿ ತಂಡವು ಸೂಕ್ಷ್ಮತನಿಖೆಗಾಗಿ ಮೂರು ಉಪತಂಡಗಳನ್ನು ರಚಿಸಿದೆ.
4
+ ಹೊಳೆನರಸೀಪುರ ಟೌನ್‌ ಪೊಲೀಸ್‌‍ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ಎಸ್ಪಿ ಸುಮನ್‌ ಡಿ ಪನ್ನೇಕರ್‌ ಅವರ ನೇತೃತ್ವದ ತಂಡ ತನಿಖೆ ನಡೆಸಲಿದೆ. ಈಗಾಗಲೇ ಹಲವಾರು ಸಾಕ್ಷಿಗಳನ್ನು ಸಂಗ್ರಹಿಸಿದ್ದು, ದೂರುದಾರ ಮಹಿಳೆಯಿಂದ ಯಾವಾಗ ಎಲ್ಲಿ ದೌರ್ಜನ್ಯ ಮಾಡಲಾಗಿದೆ, ಯಾವ ರೀತಿ ದೌರ್ಜನ್ಯ ಎಸಗಲಾಗಿದೆ ಎಂಬ ಮಾಹಿತಿ ಸಂಗ್ರಹಿಸಿ ಸ್ಥಳಕ್ಕೆ ಭೇಟಿ ಮಹಜರು ಮಾಡಲಿದೆ.
5
+ ಎಸ್‌‍ಪಿ ಸೀಮಾ ಲಾಟ್ಕರ್‌ ಎರಡನೇ ತಂಡವು ವಿಡಿಯೋದಲ್ಲಿರುವ ಸಂತ್ರಸ್ತೆಯರ ವಿಚಾರಣೆ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿರುವ ವಿಡಿಯೋಗಳ ಸಂಗ್ರಹ, ಅವುಗಳು ಎಲ್ಲಿಂದ ಅಪ್‌ಲೌಡ್‌ ಆಗಿವೆ ಎಂಬುದರ ಬಗ್ಗೆ ತನಿಖೆ ನಡೆಸಲಿದೆ. ಈಗಾಗಲೇ ಅಧಿಕಾರಿಗಳು ಸಂತ್ರಸ್ತೆಯರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ.
6
+ ಈ ತಂಡ ಹಾಸನದಲ್ಲಿಯೇ ಬೀಡುಬಿಟ್ಟು ಸಂತ್ರಸ್ತೆಯರ ಹೇಳಿಕೆ ಪಡೆಯಲು ಸಿದ್ಧತೆ ನಡೆಸಿದೆ. ಎಸ್‌‍ಐಟಿಯ ಮೂರನೇ ತಂಡದಲ್ಲಿ ಸೈಬರ್‌ಕ್ರೈಂ ತಂಡ ಕಾರ್ಯನಿರ್ವಹಿಸಲಿದ್ದು ಎಸಿಪಿಗಳ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಅಶ್ಲೀಲ ವಿಡಿಯೋ ಬಿಡುಗಡೆ ಮಾಡಿದ್ದು ಯಾರು, ಪೆನ್‌ಡ್ರೈವ್‌ಗಳನ್ನು ಹಂಚಿದ್ದು ಯಾರು, ಪೆನ್‌ಡ್ರೈವ್‌ನಲ್ಲಿ ವಿಡಿಯೋ ಕಾಪಿಯಾಗಿದ್ದು ಎಲ್ಲಿ, ಯಾವ ಕಂಪ್ಯೂಟರ್‌ನಿಂದ ಮೊದಲು ಕಾಪಿಯಾಗಿದೆ. ಇದರ ಸೂತ್ರದಾರರು ಯಾರು ಎಂಬಿತ್ಯಾದಿ ಆಯಾಮಗಳಲ್ಲಿ ತನಿಖೆ ನಡೆಯಲಿದೆ.
7
+ ಸಂಸದ ಪ್ರಜ್ವಲ್‌ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ಹಿಂದೆ ಯಾರಾ ಕೈವಾಡವಿದೆ, ವಿಡಿಯೋದ ಮೂಲವೇನು ಎಂಬುದು ತನಿಖೆಯ ನಂತರವೇ ಬಯಲಾಗಬೇಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯರು.
8
+ ಎಚ್‌.ಡಿ.ರೇವಣ್ಣ ಮತ್ತು ಪ್ರಜ್ವಲ್‌ ರೇವಣ್ಣ ವಿರುದ್ಧ ಹೊಳೇನರಸೀಪುರ ಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ತನಿಖೆಗೆ ಈಗಾಗಲೇ ರಾಜ್ಯಸರ್ಕಾರ ಎಸ್‌‍ಐಟಿ ತಂಡ ರಚಿಸಿದೆ. ಸಿಐಡಿ ಎಡಿಜಿಪಿ ಬಿ.ಕೆ. ಸಿಂಗ್‌ ನೇತೃತ್ವದಲ್ಲಿ 18 ಅಧಿಕಾರಿಗಳ ತಂಡ ತನಿಖೆಗೆ ನೇಮಕವಾಗಿದೆ.
9
+ ಮಾಜಿ ಪ್ರಧಾನಿಗಳ ಕುಟುಂಬಕ್ಕೆ ಸಂಬಂಧಿಸಿದ ಹೈಪ್ರೊಫೈಲ್‌ ಪ್ರಕರಣ ವಾಗಿರುವುದರಿಂದ ತನಿಖಾ ತಂಡ ಪ್ರತಿಯೊಂದು ವಿಚಾರವನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ.
eesanje/url_46_162_1.txt ADDED
@@ -0,0 +1,9 @@
 
 
 
 
 
 
 
 
 
 
1
+ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಪಾರಾರಿಯಾಗುವವರೆಗೆ ಪೊಲೀಸರು ದನ ಕಾಯುತ್ತಿದ್ದರೇ..? : ಜೋಶಿ
2
+ ಹುಬ್ಬಳ್ಳಿ,ಮೇ1-ಅಶ್ಲೀಲ ಸಿ.ಡಿ ಪ್ರಕರಣ ಹಾಗೂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ, ವಿದೇಶಕ್ಕೆ ಪರಾರಿಯಾಗುವ ಮುನ್ನ ಪೊಲೀಸರು ದನ ಕಾಯುತ್ತಿದ್ದರೇ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರಶ್ನಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಪ್ತಚರ ವಿಭಾಗ ಮುಖ್ಯಮಂತ್ರಿಯವರ ಅಧೀನದಲ್ಲಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರದ ಕರ್ತವ್ಯ. ಪ್ರಜ್ವಲ್‌ ರೇವಣ್ಣ ಮೇಲೆ ಆರೋಪಗಳು ಕೇಳಿಬಂದಾಗ ಅವರ ಚಲನವಲನಗಳ ಬಗ್ಗೆ ಗಮನಹರಿಸಲು ಪೊಲೀಸರಿಗೆ ಸರ್ಕಾರ ಏಕೆ ನಿರ್ದೇಶನ ನೀಡಿರಲಿಲ್ಲ ಎಂದು ಪ್ರಶ್ನೆ ಮಾಡಿದರು.
4
+ ವಿಮಾನ ನಿಲ್ದಾಣದ ವಲಸಿಗರ ವಿಭಾಗದಲ್ಲಿ ರಾಜ್ಯಕ್ಕೆ ಬಂದು ಹೋಗುವವರು, ಇಲ್ಲಿಂದ ಹೊರ ಹೋಗುವವರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಾರೆ. ಪ್ರಜ್ವಲ್‌ ರೇವಣ್ಣ ಜರ್ಮನಿಗೆ ಹೋಗಿದ್ದಾರೋ ಅಥವಾ ಇಂಗ್ಲೆಂಡ್‌ಗೆ ಹೋಗಿದ್ದಾರೋ ದೇವರಿಗೆ ಗೊತ್ತು. ಆದರೆ ಅವರು ವಿದೇಶಕ್ಕೆ ಹೋಗುವವರೆಗೂ ಸರ್ಕಾರವಾಗಲಿ, ಪೊಲೀಸರಾಗಲಿ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಹರಿಹಾಯ್ದರು.
5
+ ನನಗಿರುವ ಮಾಹಿತಿ ಪ್ರಕಾರ ಈ ಘಟನೆ 6 ತಿಂಗಳು ಅಥವಾ ಒಂದು ವರ್ಷದ ಹಿಂದೆ ನಡೆದಿಲ್ಲ. ಇದು ತುಂಬಾ ವರ್ಷಗಳಿಂದ ಹಿಂದೆ ನಡೆದಿದೆ. 2019ರಲ್ಲಿ ಹಾಸನ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪ್ರಜ್ವಲ್‌ ರೇವಣ್ಣ ಪರವಾಗಿ ಇದೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶಿವಕುಮಾರ್‌ ಪ್ರಚಾರ ಮಾಡಿರಲಿಲ್ಲವೇ? ಈಗ ಯಾರಿಗೆ ನೈತಿಕತೆ ಪಾಠ ಹೇಳಲು ಹೊರಟಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡರು.
6
+ ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ನಮ್ಮ ಪಕ್ಷ ಸಮರ್ಥನೆ ಮಾಡಿಕೊಳ್ಳುವುದಿಲ್ಲ. ಈಗಾಗಲೇ ನಮ್ಮ ನಿಲುವು ಏನೆಂಬುದನ್ನು ನಮ್ಮ ಕೇಂದ್ರ ಗೃಹಸಚಿವರಾದ ಅಮಿತ್‌ ಷಾ ಅವರೇ ಸ್ಪಷ್ಟಪಡಿಸಿದ್ದಾರೆ.
7
+ ಉಪ್ಪು ತಿಂದವರು ನೀರು ಕುಡಿಯಲೇಬೇಕೆಂದು ಸ್ವತಃ ಕುಮಾರಸ್ವಾಮಿಯವರೇ ಹೇಳಿರುವಾಗ ಇಲ್ಲಿ ಯಾರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯ ಸರ್ಕಾರದ ಪಾತ್ರವೇನೆಂಬುದನ್ನು ಡಿ.ಕೆ.ಶಿವಕುಮಾರ್‌ ಸರಿಯಾಗಿ ತಿಳಿದುಕೊಂಡು ಮಾತನಾಡಬೇಕು. ಮನಸ್ಸಿಗೆ ಬಂದಂತೆ ಮಾತನಾಡಿದರೆ ನಮಗೂ ಮಾತನಾಡಲು ಬರುತ್ತದೆ ಎಂದು ಜೋಶಿ ಎಚ್ಚರಿಸಿದರು.
8
+ ಎಸ್‌ಐಟಿ ರಚನೆ ಮಾಡಿರುವ ಉದ್ದೇಶವೇ ಕಾಲಹರಣ ಮಾಡಲು ಎಂಬುದು ಎಲ್ಲರಿಗೂ ಗೊತ್ತು. ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಲು ಸಲಹೆ ಕೊಟ್ಟವರು ಯಾರು ಎಂಬುದನ್ನು ಬಹಿರಂಗಪಡಿಸಬೇಕು. ಅದಕ್ಕೂ ಮೊದಲು ಉನ್ನತ ಸ್ಥಾನದಲ್ಲಿರುವವರಿಗೆ ಯಾರು ದೂರವಾಣಿ ಕರೆ ಮಾಡಿದ್ದರು? ಅವರು ನೀಡಿದ ಸಲಹೆಗಳೇನು? ಎಂಬುದು ದೂರವಾಣಿ ಕರೆಯಲ್ಲಿ ದಾಖಲಾಗಿರುತ್ತದೆ. ಇದನ್ನು ಮತ್ತೊಮ್ಮೆ ಉಪಮುಖ್ಯಮಂತ್ರಿಯವರು ಪರಿಶೀಲಿಸಿ ನಂತರ ನಮ್ಮ ಪಕ್ಷದ ಬಗ್ಗೆ ಮಾತನಾಡಲಿ ಎಂದು ತಿರುಗೇಟು ಕೊಟ್ಟರು.
9
+ ನಾವು ಘಟನೆಯನ್ನು ಅತ್ಯಂತ ಕಠಿಣ ಪದಗಳಲ್ಲಿ ಖಂಡಿಸುತ್ತೇವೆ. ಈ ಪ್ರಕರಣಕ್ಕೂ ನಮ್ಮ ಮೈತ್ರಿಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ಜೆಡಿಎಸ್‌ ತೆಗೆದುಕೊಂಡಿರುವ ನಿಲುವನ್ನು ನಾವು ಸ್ವಾಗತಿಸುತ್ತೇವೆ. ಅನಗತ್ಯವಾಗಿ ಬಿಜೆಪಿಯನ್ನು ಎಳೆದು ತರುವ ಅಗತ್ಯವಿಲ್ಲ ಎಂದು ಹೇಳಿದರು.
eesanje/url_46_162_10.txt ADDED
@@ -0,0 +1,5 @@
 
 
 
 
 
 
1
+ ಪೆನ್‌ಡ್ರೈವ್‌ ವಿಚಾರದಲ್ಲಿ ಪ್ರಧಾನಿ ಹೆಸರೇಕೆ ಎಳೆದು ತರುತ್ತೀರಿ..? : ಕುಮಾರಸ್ವಾಮಿ
2
+ ಹುಬ್ಬಳ್ಳಿ,ಏ.30-ಪೆನ್‌ಡ್ರೈವ್‌ ವಿಚಾರದಲ್ಲಿ ಕಾಂಗ್ರೆಸ್‌ನ ಮಹಾನ್‌ ನಾಯಕರು ಪ್ರತಿಭಟನೆ ಮಾಡಿಸಿದ್ದಾರೆ. ಮಹಿಳೆಯರ ಬದುಕನ್ನು ಬೀದಿಗೆ ತಂದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಪ್ರಮುಖ ಆರೋಪಿಯ ಬಗ್ಗೆಯೂ ತನಿಖೆಯಾಗಲಿದೆ.
3
+ ಪೆನ್‌ಡ್ರೈವ್‌ ಬಹಿರಂಗಪಡಿಸಿದವರ ಬಗ್ಗೆಯೂ ಚರ್ಚೆಯಾಗಲಿದೆ. ಮಹಾನ್‌ ನಾಯಕ ಉಪಮುಖ್ಯಮಂತ್ರಿ ಪ್ರತಿಭಟನೆ ಮಾಡಿಸಿದ್ದಾರೆ. ಇದನ್ನು ಇಷ್ಟಕ್ಕೆ ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
4
+ ಪೆನ್‌ಡ್ರೈವ್‌ ವಿಚಾರಕ್ಕೆ ಸಂಬಂಧಿಸಿದಂತೆ ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತದೆ ಎಂದರು. ಈ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರನ್ನು ಏಕೆ ಎಳೆದು ತರುತ್ತಿದ್ದೀರಿ? ಪ್ರತಿಭಟನೆ ಮಾಡುವುದಾದರೆ ಮಹಾನ್‌ ನಾಯಕರ ಮನೆ ಮುಂದೆ ಮಾಡಿ ಎಂದು ಕಾಂಗ್ರೆಸ್‌ನವರಿಗೆ ತಿರುಗೇಟು ನೀಡಿದರು.
5
+ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ವರ್ಚಸ್ಸು ಹಾಳಾಗಬಾರದೆಂಬ ಕಾಳಜಿ ಇದೆ. ಈ ಹಿನ್ನಲೆಯಲ್ಲಿ ಪಕ್ಷ ಆತಂರಿಕ ವೇದಿಕೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು.
eesanje/url_46_162_11.txt ADDED
@@ -0,0 +1,6 @@
 
 
 
 
 
 
 
1
+ ವಿಡಿಯೋಗಳನ್ನು ಕಾಂಗ್ರೆಸ್‌ನವರಿಗೆ ನಾನು ಕೊಟ್ಟಿಲ್ಲ : ಕಾರು ಚಾಲಕ ಕಾರ್ತಿಕ್‌ ಸ್ಪಷ್ಟನೆ
2
+ ಬೆಂಗಳೂರು, ಏ.30-ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಮತ್ತು ಪೋಟೊಗಳನ್ನು ನಾನು ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ ಮಾತ್ರ ಕೊಟ್ಟಿದ್ದೇನೆ ಹೊರತು ಕಾಂಗ್ರೆಸ್‌ನವರಿಗೆ ಕೊಟ್ಟಿಲ್ಲ ಎಂದು ಪ್ರಜ್ವಲ್‌ ಅವರ ಕಾರಿನ ಮಾಜಿ ಚಾಲಕ ಕಾರ್ತಿಕ್‌ ಅವರು ಸ್ಪಷ್ಟ ಪಡಿಸಿದ್ದಾರೆ.
3
+ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರ್ತಿಕ್‌ ಅವರು ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿರುವ ತುಣುಕು ಮಾಧ್ಯಮಕ್ಕೆ ಲಭ್ಯವಾಗಿದೆ. ನಾನು ಕಾಂಗ್ರೆಸ್‌ನವರಿಗೆ ಕೊಡುವುದಾಗಿದ್ದರೆ ದೇವರಾಜೇಗೌಡರ ಬಳಿ ಏಕೆ ಹೋಗುತ್ತಿದ್ದೆ. ಇವರಿಗೆ ಬಿಟ್ಟರೇ ವಿಡಿಯೋದ ಒಂದು ತುಣುಕನ್ನು ಯಾರಿಗೂ ಕೊಟ್ಟಿಲ್ಲ. ವಿನಾಕಾರಣ ಕಾಂಗ್ರೆಸ್‌ನವರ ಹೆಸರನ್ನು ಬೆರಸಬೇಡಿ ಎಂದು ಕಾರ್ತಿಕ್‌ ವಿಡಿಯೋದಲ್ಲಿ ಹೇಳಿದ್ದಾರೆ.
4
+ 15 ವರ್ಷದಿಂದ ಪ್ರಜ್ವಲ್‌ ಹಾಗೂ ಅವರ ಕುಟುಂಬದ ಕಾರು ಚಾಲಕನಾಗಿ ನಾನು ಕೆಲಸ ಮಾಡುತ್ತಿದ್ದೆ. ಆ ಸಂದರ್ಭದಲ್ಲಿ ನನ್ನ ಜಮೀನನ್ನು ಬರೆಸಿಕೊಂಡು ನನ್ನ ಹಾಗೂ ನನ್ನ ಪತ್ನಿ ಮೇಲೆ ಹಲ್ಲೆ ಮಾಡಿ ಹಿಂಸೆ ಕೊಟ್ಟರು. ಹಾಗಾಗಿ ನಾನು ಒಂದು ವರ್ಷದಿಂದೀಚೆಗೆ ಕೆಲಸ ಬಿಟ್ಟು ಅವರ ಮನೆಯಿಂದ ಹೊರ ಬಂದೆ. ಆ ಸಂದರ್ಭದಲ್ಲಿ ನನಗೆ ಯಾರೂ ನ್ಯಾಯ ಕೊಡಿಸಲಿಲ್ಲ. ಹಾಗಾಗಿ ಬಿಜೆಪಿ ಮುಖಂಡ ದೇವರಾಜೇಗೌಡ ಬಳಿ ಹೋಗಿ ತನಗಾದ ಅನ್ಯಾಯವನ್ನು ವಿವರಿಸಿದೆ.
5
+ ಅದೇ ಸಂದರ್ಭದಲ್ಲಿ ದೇವರಾಜೇಗೌಡ ಅವರು ಪ್ರಜ್ವಲ್‌ ಕುಟುಂಬದ ವಿರುದ್ಧ ಹೋರಾಟ ಮಾಡುತ್ತಿದ್ದರು. ನಿನ್ನ ಬಳಿ ಇರುವ ವಿಡಿಯೋ ಮತ್ತು ೇಟೊಗಳನ್ನು ನನಗೆ ಕೊಡು, ನಾನು ಯಾರಿಗೂ ತೋರಿಸುವುದಿಲ್ಲ ಎಂದು ಭರವಸೆ ನೀಡಿದ್ದರಿಂದ ಅವರ ಮಾತನ್ನು ನಂಬಿ ನನ್ನ ಬಳಿ ಇದ್ದ ವಿಡಿಯೋದ ಒಂದು ಕಾಪಿಯನ್ನು ಅವರಿಗೆ ಕೊಟ್ಟೆ.
6
+ ಆದರೆ ಅವರು ಅದನ್ನು ಸ್ವಾರ್ಥಕ್ಕಾಗಿ ಬಳಸಿಕೊಂಡಿದ್ದಾರೋ ಗೊತ್ತಿಲ್ಲ. ಆದರೆ ಯಾರು ಪೆನ್‌ಡ್ರೈವ್‌ ಹಂಚಿದ್ದಾರೋ ಎಂಬುದು ನನಗೆ ಗೊತ್ತಿಲ್ಲ. ವಿನಾಕಾರಣ ನನ್ನ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಎಲ್ಲಾ ವಿಚಾರವನ್ನು ಎಸ್‌ಐಟಿ ಮುಂದೆ ಹೇಳುತ್ತೇನೆ ಎಂದು ಅವರು ವಿಡಿಯೋ ತುಣುಕಿನಲ್ಲಿ ತಿಳಿಸಿದ್ದಾರೆ.
eesanje/url_46_162_12.txt ADDED
@@ -0,0 +1,5 @@
 
 
 
 
 
 
1
+ ಪೆನ್‌ಡ್ರೈವ್‌ ಪ್ರಕರಣಕ್ಕೆ ಮೋದಿ ಸ್ಪಷ್ಟನೆಗೆ ಆಗ್ರಹಸಿ ಬಿಜೆಪಿ ಕಚೇರಿಗೆ ಯುವ ಕಾಂಗ್ರೆಸ್‌‍ ಕಾರ್ಯಕರ್ತರ ಮುತ್ತಿಗೆ
2
+ ಬೆಂಗಳೂರು, ಏ.30-ಹಾಸನದ ಸಂಸದ ಪ್ರಜ್ಞಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್‌‍ ಕಾರ್ಯಕರ್ತರು ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಯತ್ನ ನಡೆಸಿದರು.
3
+ ಯುವ ಕಾಂಗ್ರೆಸ್‌‍ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌‍, ಕಾರ್ಯಾಧ್ಯಕ್ಷ ಮಂಜುನಾಥ್‌ಗೌಡ ಸೇರಿದಂತೆ ಅನೇಕ ಕಾರ್ಯಕರ್ತರು ಇಂದು ಬೆಳಗ್ಗೆ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕೆಲ ಕಾರ್ಯಕರ್ತರು ಪಕ್ಷದ ಕಾರ್ಯಾಲಯದ ಒಳಗೆ ನುಸುಳಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ಹಂತದಲ್ಲಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ತಳ್ಳಾಟ-ನೂಕಾಟ ನಡೆಯಿತು. ಯುವ ಕಾಂಗ್ರೆಸ್‌‍ನ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.
4
+ ಈ ವೇಳೆ ಮಾತನಾಡಿದ ಬಿ.ವಿ.ಶ್ರೀನಿವಾಸ್‌‍, ಪ್ರಧಾನಿಯವರು ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಹೇಳುತ್ತಾರೆ. ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಪ್ರಧಾನಿಯವರು ಮೌನವಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
5
+ ಎನ್‌ಡಿಎ ಮೈತ್ರಿಕೂಟದ ಮಿತ್ರ ಪಕ್ಷವಾಗಿರುವ ಜೆಡಿಎಸ್‌‍ನ ಸಂಸದರು ಮಾಡಿರುವ ಕೃತ್ಯವನ್ನು ಬಿಜೆಪಿ ಹೇಗೆ ಸಮರ್ಥಿಸಿಕೊಳ್ಳುತ್ತದೆ ಎಂದು ಪ್ರಶ್ನಿಸಿದ ಕಾರ್ಯಕರ್ತರು, ಆರೋಪಕ್ಕೆ ಗುರಿಯಾಗಿರುವ ಪ್ರಜ್ವಲ್‌ ರೇವಣ್ಣರನ್ನು ಜರ್ಮಿನಿಗೆ ಓಡಿ ಹೋಗಲು ಸಹಾಯ ಮಾಡಿದ್ದಾರೆ. ಈ ಪ್ರಕರಣದ ಬಗ್ಗೆ ಪ್ರಧಾನಿಗಳೇ ಮಾತನಾಡಬೇಕು ಎಂದು ಒತ್ತಾಯಿಸಿದರು.
eesanje/url_46_162_2.txt ADDED
@@ -0,0 +1,7 @@
 
 
 
 
 
 
 
 
1
+ ರಾಜ್ಯದಲ್ಲಿ ಈವರೆಗೆ 446.92 ಕೋಟಿ ರೂ.ಗಳಿಗೂ ಹೆಚ್ಚು ಚುನಾವಣಾ ಅಕ್ರಮ ಪತ್ತೆ
2
+ ಬೆಂಗಳೂರು,ಮೇ.1-ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮತದಾನ ಮುಕ್ತಾಯವಾದ ಬಳಿಕ ಜಪ್ತಿಯಾಗುತ್ತಿರುವ ನಗದು, ಚಿನ್ನ, ಬೆಳ್ಳಿ, ಡ್ರಗ್ಸ್ , ಉಚಿತ ಉಡುಗೊರೆಗಳ ಪ್ರಮಾಣ ಇಳಿಕೆಯಾಗಿದೆ. ಆದರೂ ಈವರೆಗೆ 446.92 ಕೋಟಿ ರೂ.ನಷ್ಟು ಜಪ್ತಿ ಮಾಡಲಾಗಿದೆ.
3
+ ಮಾ.16 ರಿಂದ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಅಂದಿನಿಂದ ನಿಯಮಬಾಹಿರವಾಗಿ ಸಾಗಾಟ ಮಾಡುವ ಹಣ, ಮದ್ಯ, ಡ್ರಗ್‌್ಸ, ಚಿನ್ನ, ಬೆಳ್ಳಿ ಹಾಗೂ ಇತರ ವಸ್ತುಗಳನ್ನು ನಿರಂತರವಾಗಿ ಜಪ್ತಿ ಮಾಡಲಾಗುತ್ತಿದೆ. ಈತನಕ ಒಟ್ಟಾರೆ 446.92 ಕೋಟಿ ರೂ.ನಷ್ಟು ನಗದು, ಚಿನ್ನ, ಬೆಳ್ಳಿ ಹಾಗೂ ಇತರ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
4
+ ರಾಜ್ಯದ 2ನೇ ಹಂತದ 14 ಕ್ಷೇತ್ರಗಳಿಗೆ ಮತದಾನ ನಡೆಯಲು ಇನ್ನೂ ಒಂದು ವಾರ ಬಾಕಿ ಇದೆ. ಹೀಗಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರತಿನಿತ್ಯ ನಗದು, ಮದ್ಯ, ಡ್ರಗ್ಸ್ , ಉಚಿತ ಉಡುಗೊರೆ ಸೇರಿದಂತೆ ಒಂದಲ್ಲಾ ಒಂದು ವಸ್ತುಗಳು ಪೊಲೀಸ್‌ ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳಿಗೆ ಸಿಗುತ್ತಲೇ ಇವೆ. ರಾಜ್ಯದಲ್ಲಿ 140.32 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್ , ಚಿನ್ನ, ಬೆಳ್ಳಿ, ಉಚಿತ ಉಡುಗೊರೆಗಳನ್ನು ಪೊಲೀಸರು, ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು ವಶಪಡಿಸಿಕೊಂಡಿವೆ.
5
+ ಅಬಕಾರಿ ಇಲಾಖೆಯವರು 178.39 ಕೋಟಿ ರೂ. ವೌಲ್ಯದ ಮದ್ಯ, ಡ್ರಗ್‌್ಸ ಅನ್ನು ವಶಪಡಿಸಿಕೊಂಡಿದ್ದಾರೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 48.09 ಕೋಟಿ ರೂ. ವೌಲ್ಯದ ನಗದು, ಚಿನ್ನ, ವಜ್ರದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವಾಣಿಜ್ಯ ತೆರಿಗೆ ಅಧಿಕಾರಿಗಳು 80.11 ಕೋಟಿ ರೂ. ಮೊತ್ತದ ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
6
+ 616.48 ಕೆಜಿ ತೂಕದ 11.54 ಕೋಟಿ ರೂ. ವೌಲ್ಯದ ಡ್ರಗ್ಸ್ ಹಾಗೂ 178.84 ಕೋಟಿ ರೂ. ಮೊತ್ತದ ಮದ್ಯ, 137.25 ಕೆಜಿ ಚಿನ್ನ, 302.37 ಕೆಜಿ ಬೆಳ್ಳಿ, 47.23 ಕ್ಯಾರೆಟ್‌ ವಜ್ರವನ್ನು ವಶಪಡಿಸಿಕೊಳ್ಳಲಾಗಿದೆ.ಚುನಾವಣೆ ಹಿನ್ನೆಲೆಯಲ್ಲಿ ಇದುವರೆಗೆ 2,226 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದ್ದು, 1,996 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
7
+ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರಿನಲ್ಲಿ 15 ಲಕ್ಷ ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಬಕಾರಿ ಇಲಾಖೆಯವರು ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,115 ಕೇಸ್‌ ಪೆಟ್ಟಿಗೆಗಳ ಬಿಯರ್‌ ಅನ್ನು ವಶಪಡಿಸಿಕೊಂಡಿದ್ದಾರೆ. ಇದರ ವೌಲ್ಯ 29,33,512 ರೂ. ಎಂದು ಅಂದಾಜಿಸಲಾಗಿದೆ.
eesanje/url_46_162_3.txt ADDED
@@ -0,0 +1,9 @@
 
 
 
 
 
 
 
 
 
 
1
+ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸೂಕ್ತ ಸಾಕ್ಷಿ-ಪುರಾವೆಗಳಿಲ್ಲದೆ ಯಾರನ್ನೂ ಬಂಧಿಸಲ್ಲ : ಗೃಹಸಚಿವ ಪರಮೇಶ್ವರ್‌
2
+ ಬೆಂಗಳೂರು,ಮೇ.1-ಹಾಸನದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಹಳಷ್ಟು ಮಂದಿಯ ಜೀವನದ ಪ್ರಶ್ನೆ ಅಡಗಿದೆ. ಈ ಕಾರಣಕ್ಕಾಗಿಯೇ ಎಸ್‌ಐಟಿಯ ತನಿಖೆಗೆ ಆದೇಶಿಸಲಾಗಿದೆ. ಸಾಕ್ಷಿ ಪುರಾವೆಗಳನ್ನು ನೋಡದೆ ಏಕಾಏಕಿ ರೇವಣ್ಣ ಅಥವಾ ಯಾರನ್ನೇ ಆಗಲಿ ಬಂಧಿಸುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ರಾಜ್ಯಸರ್ಕಾರ ಏನೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ, ಆ ರೀತಿ ಏಕಾಏಕಿ ಕ್ರಮ ತೆಗೆದುಕೊಳ್ಳುವುದು ಸೂಕ್ತ ಅಲ್ಲ. ಸೂಕ್ಷ್ಮ ಪ್ರಕರಣವಾಗಿದ್ದು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಎಚ್ಚರಿಕೆಯಿಂದ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.
4
+ ದೂರುದಾರರಿಂದ ಹೇಳಿಕೆ ಪಡೆಯಲಾಗಿದೆ. ಸಿಆರ್‌ಪಿಸಿ 41/ಎ ಸೆಕ್ಷನ್‌ ಅಡಿ ನೋಟೀಸ್‌ ನೀಡಲಾಗಿದೆ. 24 ಗಂಟೆಯೊಳಗಾಗಿ ವಿಚಾರಣೆಗೆ ಹಾಜರಾಗಬೇಕು, ಇಲ್ಲದೇ ಹೋದರೆ ಕಾನೂನಿನ ಪ್ರಕಾರ ಮುಂದಿನ ಕ್ರಮಗಳನ್ನು ಎಸ್‌ಐಟಿ ಅಧಿ ಕಾರಿಗಳು ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.
5
+ ಪ್ರಕರಣದ ಕೇಂದ್ರ ಬಿಂದು ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿರುವುದು ವಿಮಾನದ ಟಿಕೆಟ್‌ಗಳಿಂದ ಪತ್ತೆಯಾಗಿದೆ. ಅವರನ್ನು ವಾಪಸ್‌ ಕರೆತರಲು ಅಗತ್ಯವಿರುವ ಎಲ್ಲಾ ಪ್ರಕ್ರಿಯೆಗಳನ್ನು ಎಸ್‌ಐಟಿ ಕೈಗೊಳ್ಳಲಿದೆ. ಅಗತ್ಯವಾದರೆ ಕೇಂದ್ರ ಸರ್ಕಾರದ ಸಹಾಯವನ್ನು ಪಡೆಯಲಿದೆ ಎಂದರು.
6
+ ಸದ್ಯಕ್ಕೆ ಎಸ್‌ಐಟಿ ಅಧಿ ಕಾರಿಗಳು ಪ್ರಕರಣ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಅದಾದ ಬಳಿಕ ವಿಡಿಯೋಗಳ ಮೂಲ ಯಾವುದು? ಎಲ್ಲಿಂದ ಬಿಡುಗಡೆಯಾಗಿದೆ? ಎಂಬ ವಿಚಾರಗಳ ಕುರಿತು ಎಸ್‌ಐಟಿ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದರು.
7
+ ರೇವಣ್ಣ ಅವರನ್ನು ಏಕೆ ಬಂಧಿಸಿಲ್ಲ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ. ವಿಡಿಯೋ ಬಿಡುಗಡೆ ಹಿಂದೆ ಡಿ.ಕೆ.ಶಿವಕುಮಾರ್‌ ಕೈವಾಡವಿದೆ ಎಂಬ ಟೀಕೆಗಳನ್ನು ಗಮನಿಸಿದ್ದೇನೆ. ಎಸ್‌ಐಟಿ ತನಿಖೆ ನಡೆಯುತ್ತಿರುವುದರಿಂದಾಗಿ ಈ ಹಂತದಲ್ಲಿ ನಾನು ಯಾವುದೇ ಹೇಳಿಕೆಗಳನ್ನು ನೀಡುವುದಿಲ್ಲ. ಬೇರೆಯವರು ಈ ವಿಚಾರವನ್ನು ಚರ್ಚಿಸುವುದು ಸೂಕ್ತವಲ್ಲ. ಆರೋಪಗಳು, ಒತ್ತಡಗಳು, ಟೀಕೆಗಳನ್ನು ಆಧರಿಸಿ ಏಕಾಏಕಿ ಯಾರನ್ನೂ ಬಂಧಿಸಲು ಸಾಧ್ಯವಿಲ್ಲ.
8
+ ಹಾಗೆಯೇ ಯಾರನ್ನೂ ರಕ್ಷಿಸುವುದೂ ಇಲ್ಲ ಎಂದು ಸ್ಪಷ್ಟಪಡಿಸಿದರು. ನೇಹಾ ಪ್ರಕರಣದಲ್ಲಿ ಬೊಬ್ಬೆ ಹೊಡೆದಿದ್ದ ಬಿಜೆಪಿಯವರು ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ವೌನವಾಗಿರುವುದು ಮತ್ತು ಜೆಡಿಎಸ್‌ನಿಂದ ಅಂತರ ಕಾಯ್ದುಕೊಳ್ಳುತ್ತಿರುವುದು ನಮಗೆ ಸಂಬಂಧಟಪ್ಟ ವಿಚಾರಗಳಲ್ಲ. ಆ ಎರಡೂ ಪಕ್ಷಗಳಿಗೆ ಸೇರಿದ ವಿಷಯ ಎಂದು ಹೇಳಿದರು.
9
+ ಗ್ಯಾರಂಟಿ ನಿಲ್ಲಲ್ಲ :ಲೋಕಸಭಾ ಚುನಾವಣೆ ಬಳಿಕ ರಾಜ್ಯಸರ್ಕಾರ ಪಂಚಖಾತ್ರಿ ಯೋಜನೆಗಳನ್ನು ಸ್ಥಗಿತಗೊಳಿಸುತ್ತದೆ, ಕಾಂಗ್ರೆಸ್‌ ಸೋತರೆ ಗೃಹಜ್ಯೋತಿ ಯೋಜನೆ ನಿಲ್ಲಸಲಾಗುತ್ತದೆ ಎಂಬೆಲ್ಲಾ ಅಪಪ್ರಚಾರಗಳನ್ನು ವಿರೋಧಪಕ್ಷಗಳು ಮಾಡುತ್ತಿವೆ. ಖ್ಯಮಂತ್ರಿಯಾದಿಯಾಗಿ ಸಂಪುಟದ ಎಲ್ಲಾ ಸಚಿವರು ಸ್ಪಷ್ಟವಾಗಿ ಹೇಳಿದ್ದೇವೆ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಈಗಾಗಲೇ ಪಂಚಖಾತ್ರಿಗಳಿಗೆ ಬಜೆಟ್‌ನಲ್ಲಿ ಸಾಕಷ್ಟು ಹಣ ಮೀಸಲಿಡಲಾಗಿದೆ ಎಂದು ಸ್ಪಷ್ಟಪಡಿಸಿದರು.
eesanje/url_46_162_4.txt ADDED
@@ -0,0 +1,6 @@
 
 
 
 
 
 
 
1
+ ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರಿ ಬಿಸಿಗಾಳಿ, ಮಳೆಯಾಗುವ ಸಾಧ್ಯತೆಗಳಿಲ್ಲ
2
+ ಬೆಂಗಳೂರು,ಮೇ.1-ರಾಜ್ಯದಲ್ಲಿ ಒಣಹವೆ ಮುಂದುವರೆಯುತ್ತಿದ್ದು, ವಾರಾಂತ್ಯದವರೆಗೂ ಬಿಸಿಗಾಳಿಯ ವಾತಾವರಣ ಇರಲಿದೆ. ತಾಪಮಾನದಲ್ಲಿ ನಿರಂತರವಾಗಿ ಏರಿಕೆಯಾಗಿದ್ದು, ಹಗಲಿನ ವೇಳೆ ಸುಡುಬಿಸಿಲಿನ ಜೊತೆಗೆ ಬಿಸಿಗಾಳಿಯ ವಾತಾವರಣ ಇರುವುದರಿಂದ ಜನರು ಸುರಕ್ಷತಾ ಕ್ರಮಗಳನ್ನು ವಹಿಸುವಂತೆ ಹವಾಮಾನ ಇಲಾಖೆ ಸಲಹೆ ಮಾಡಿದೆ.
3
+ ಮೇ 4 ರವರೆಗೂ ಒಣಹವೆ ರಾಜ್ಯದಲ್ಲಿ ಕಂಡುಬರಲಿದ್ದು, ಮಳೆಯಾಗುವ ಸಾಧ್ಯತೆಗಳು ತೀರಾ ವಿರಳ. ಈ ಅವಧಿಯಲ್ಲಿ ಬಿಸಿಗಾಳಿ ಹೆಚ್ಚಾಗಲಿದೆ. ಅದರಲ್ಲೂ ಬಿಸಿಲ ನಾಡೇ ಎಂದೇ ಪರಿಗಣಿತವಾಗಿರುವ ಕಲ್ಯಾಣ ಕರ್ನಾಟಕದ ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್‌, ಬಾಗಲಕೋಟೆ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಈಗಾಗಲೇ 40 ಡಿ.ಸೆಂ. ನಷ್ಟು ದಾಟಿದೆ.
4
+ ಮಧ್ಯಾಹ್ನದ ವೇಳೆ ಸಾಧ್ಯವಾದಷ್ಟು ಮನೆ, ಕಚೇರಿಯಿಂದ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಿ, ಅನಿವಾರ್ಯವಾದರೆ ಕೊಡೆ ಸೇರಿದಂತೆ ನೆರಳಿನ ಆಶ್ರಯ ಪಡೆದು, ಸಾಕಷ್ಟು ದ್ರವ ಪದಾರ್ಥಗಳನ್ನು ಸೇವಿಸಿ ಎಂಬ ಸಲಹೆ ಮಾಡಲಾಗಿದೆ. ರಾಜ್ಯದಲ್ಲಿ ಈಗಾಗಲೇ ಗರಿಷ್ಠ ತಾಪಮಾನ 37 ಡಿ.ಸೆ. ಗಡಿಯನ್ನು ದಾಟಿದೆ. ಬೆಂಗಳೂರು ಸೇರಿದಂತೆ ಹಲವೆಡೆ ದಾಖಲೆ ಪ್ರಮಾಣದ ಉಷ್ಣಾಂಶ ಕಂಡುಬರುತ್ತಿದೆ.
5
+ ಒಂದು ವಾರದ ನಂತರ ರಾಜ್ಯದ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳು ಕಂಡುಬರುತ್ತಿವೆ. ಆದರೆ ಮೇ 4 ರವರೆಗೂ ಮಳೆಯಾಗುವ ಮುನ್ಸೂಚನೆಗಳು ಕಂಡುಬರುತ್ತಿಲ್ಲ. ಬೀದರ್‌ 40, ವಿಜಯಪುರ 41.8, ಬಾಗಲಕೋಟೆ 42.4, ಧಾರವಾಡ 40.2, ಗದಗ 41.2, ಕಲಬುರಗಿ 43.6, ಹಾವೇರಿ 37.4, ಕೊಪ್ಪಳ 42.7, ರಾಯಚೂರು 43.4, ಬೆಂಗಳೂರು ನಗರ 38.2, ಚಾಮರಾಜನಗರ 39, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 39, ಚಿತ್ರದುರ್ಗ 39.9, ದಾವಣಗೆರೆ 40, ಚಿಕ್ಕಬಳ್ಳಾಪುರ 31.1, ಮಂಡ್ಯ 39.6, ಶಿವಮೊಗ್ಗ 38.6 ಡಿ.ಸೆಂ. ನಷ್ಟು ಗರಿಷ್ಠ ತಾಪಮಾನ ದಾಖಲಾಗುತ್ತಿದೆ.
6
+ ಸರಾಸರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ 35 ಡಿ.ಸೆಂ.ಗಿಂತ ಹೆಚ್ಚು ತಾಪಮಾನ ಕಂಡುಬರುತ್ತಿದೆ. ಕಲಬುರಗಿಯಲ್ಲಿ ಅತೀ ಹೆಚ್ಚು 43.6 ಹಾಗೂ ರಾಯಚೂರಿನಲ್ಲಿ 43.4 ಡಿ.ಸೆ.ನಷ್ಟು ಗರಿಷ್ಠ ತಾಪಮಾನ ದಾಖಲಾಗಿದ್ದು, ಸರಾಸರಿ 2 ರಿಂದ 3 ಡಿ.ಸೆ. ನಷ್ಟು ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿರುವುದು ಕಂಡುಬರುತ್ತಿದೆ.ಹೀಗಾಗಿ ಬಿಸಿಲಿನ ತೀವ್ರತೆಗೆ ಜನ, ಜಾನುವಾರು, ಪ್ರಾಣಿ-ಪಕ್ಷಿಗಳು ತತ್ತರಿಸಿ ಹೋಗುವಂತಾಗಿದೆ.
eesanje/url_46_162_5.txt ADDED
@@ -0,0 +1,6 @@
 
 
 
 
 
 
 
1
+ ಪೆನ್‌ಡ್ರೈವ್‌ನ ವಿಡಿಯೋ-ಫೋಟೊ ಹಂಚಿಕೊಂಡವರ ವಿರುದ್ಧ ಕ್ರಮಕ್ಕೆ ಒತ್ತಾಯ
2
+ ಬೆಂಗಳೂರು,ಏ.30-ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯರ ವಿಡಿಯೋ ಹಾಗೂ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ನಗರ ಪೊಲೀಸ್‌ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
3
+ ಸಾಮಾಜಿಕ ತಾಲತಾಣಗಳಲ್ಲಿ ಸಂತ್ರಸ್ತ ಮಹಿಳೆಯರ ಫೋಟೋ ವಿಡಿಯೋಗಳನ್ನು ಹಂಚಲಾಗುತ್ತಿದೆ. ಇದರಿಂದ ಮಹಿಳೆಯರ ಘನತೆಗೆ ಧಕ್ಕೆ ಉಂಟಾಗುತ್ತಿದೆ. ಸಂತ್ರಸ್ತ ಮಹಿಳೆಯ ಕುಟುಂಬದಲ್ಲೂ ಸಮಸ್ಯೆಗಳು ಸೃಷ್ಟಿಯಾಗುತ್ತಿವೆ. ಈ ಬಗ್ಗೆ ಸಾಕಷ್ಟು ಮಹಿಳೆಯರಿಂದ ಅಭಿಪ್ರಾಯಗಳು ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿ ಸಂತ್ರಸ್ತ ಮಹಿಳೆಯರ ವಿಡಿಯೋ ಶೇರ್‌ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.
4
+ ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ಇಂತಹ ಕೃತ್ಯ ಎಸಗುತ್ತಿದ್ದಾರೆ. ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯರ ಫೋಟೋ, ವಿಡಿಯೋಗಳನ್ನು ಹರಿಯಬಿಡುವ ಮೂಲಕ ಅನ್ಯಾಯಕ್ಕೊಳಗಾದ ಮಹಿಳೆಯರ ಘನತೆಗೆ ಕುಂದು ತರುತ್ತಿದ್ದಾರೆ. ಇದರ ವಿರುದ್ಧ ಪೊಲೀಸ್‌ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಪೊಲೀಸ್‌ ಆಯುಕ್ತರಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದರು.
5
+ ಈಗಾಗಲೇ ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಎಸ್‌ಐಟಿ ರಚನೆ ಮಾಡಿ ಎರಡು ದಿನಗಳಷ್ಟೇ ಆಗಿದೆ. ತನಿಖಾ ತಂಡಕ್ಕೆ ಸಮಯಾವಕಾಶ ಕೊಡಬೇಕಿದೆ. ನಾವು ಸ್ವಲ್ಪ ಕಾಯಬೇಕಾಗಿದೆ. ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಆಗಲಿದೆ ಎಂಬ ಭರವಸೆ ಇದೆ ಎಂದು ಇದೇ ಸಂದರ್ಭದಲ್ಲಿ ನಾಗಲಕ್ಷ್ಮಿ ಚೌಧರಿ ವಿಶ್ವಾಸ ವ್ಯಕ್ತಪಡಿಸಿದರು.
6
+ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ರಚನೆ ಆಗಿರುವುದರಿಂದ ನಾವು ಕಾಯಬೇಕು, ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಲು ಮುಂದೆ ಬರುವ ಸಂತ್ರಸ್ತ ಮಹಿಳೆಯರ ಗೌಪ್ಯತೆ ಕಾಪಾಡೋದು, ತನಿಖೆಯಲ್ಲಿ ಭಾಗಿಯಾದಾಗ ರಕ್ಷಣೆ ಕೊಡಿಸುವುದು ಮಹಿಳಾ ಆಯೋಗದ ಜವಾಬ್ದಾರಿಯಾಗಿದೆ. ಈ ಭರವಸೆಯನ್ನು ನಾನು ಸಂತ್ರಸ್ತರಿಗೆ ನೀಡುತ್ತೇನೆ ಎಂದು ಹೇಳಿದರು.
eesanje/url_46_162_6.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಹಾಸನ ಪೈನ್‌ಡ್ರೈವ್‌ ಬಹಿರಂಗ ವಿಚಾರ : ಕಾರ್ತಿಕ್‌ – ದೇವರಾಜೇಗೌಡ ನಡುವೆ ಜಟಾಪಟಿ
2
+ ಬೆಂಗಳೂರು, ಏ.30-ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಮತ್ತು ಪೋಟೊಗಳನ್ನು ನಾನು ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ ಮಾತ್ರ ಕೊಟ್ಟಿದ್ದೇನೆ ಹೊರತು ಕಾಂಗ್ರೆಸ್‌ನವರಿಗೆ ಕೊಟ್ಟಿಲ್ಲ ಎಂದು ಪ್ರಜ್ವಲ್‌ ಅವರ ಕಾರಿನ ಮಾಜಿ ಚಾಲಕ ಕಾರ್ತಿಕ್‌ ಅವರು ಸ್ಪಷ್ಟ ಪಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರ್ತಿಕ್‌ ಅವರು ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿರುವ ತುಣುಕು ಮಾಧ್ಯಮಕ್ಕೆ ಲಭ್ಯವಾಗಿದೆ.
3
+ ನಾನು ಕಾಂಗ್ರೆಸ್‌ನವರಿಗೆ ಕೊಡುವುದಾಗಿದ್ದರೆ ದೇವರಾಜೇಗೌಡರ ಬಳಿ ಏಕೆ ಹೋಗುತ್ತಿದ್ದೆ. ಇವರಿಗೆ ಬಿಟ್ಟರೇ ವಿಡಿಯೋದ ಒಂದು ತುಣುಕನ್ನು ಯಾರಿಗೂ ಕೊಟ್ಟಿಲ್ಲ. ವಿನಾಕಾರಣ ಕಾಂಗ್ರೆಸ್‌ನವರ ಹೆಸರನ್ನು ಬೆರಸಬೇಡಿ ಎಂದು ಕಾರ್ತಿಕ್‌ ವಿಡಿಯೋದಲ್ಲಿ ಹೇಳಿದ್ದಾರೆ.
4
+ 15 ವರ್ಷದಿಂದ ಪ್ರಜ್ವಲ್‌ ಹಾಗೂ ಅವರ ಕುಟುಂಬದ ಕಾರು ಚಾಲಕನಾಗಿ ನಾನು ಕೆಲಸ ಮಾಡುತ್ತಿದ್ದೆ. ಆ ಸಂದರ್ಭದಲ್ಲಿ ನನ್ನ ಜಮೀನನ್ನು ಬರೆಸಿಕೊಂಡು ನನ್ನ ಹಾಗೂ ನನ್ನ ಪತ್ನಿ ಮೇಲೆ ಹಲ್ಲೆ ಮಾಡಿ ಹಿಂಸೆ ಕೊಟ್ಟರು. ಹಾಗಾಗಿ ನಾನು ಒಂದು ವರ್ಷದಿಂದೀಚೆಗೆ ಕೆಲಸ ಬಿಟ್ಟು ಅವರ ಮನೆಯಿಂದ ಹೊರ ಬಂದೆ.
5
+ ಆ ಸಂದರ್ಭದಲ್ಲಿ ನನಗೆ ಯಾರೂ ನ್ಯಾಯ ಕೊಡಿಸಲಿಲ್ಲ. ಹಾಗಾಗಿ ಬಿಜೆಪಿ ಮುಖಂಡ ದೇವರಾಜೇಗೌಡ ಬಳಿ ಹೋಗಿ ತನಗಾದ ಅನ್ಯಾಯವನ್ನು ವಿವರಿಸಿದೆ. ಅದೇ ಸಂದರ್ಭದಲ್ಲಿ ದೇವರಾಜೇಗೌಡ ಅವರು ಪ್ರಜ್ವಲ್‌ ಕುಟುಂಬದ ವಿರುದ್ಧ ಹೋರಾಟ ಮಾಡುತ್ತಿದ್ದರು.
6
+ ನಿನ್ನ ಬಳಿ ಇರುವ ವಿಡಿಯೋ ಮತ್ತು ಪೋಟೊಗಳನ್ನು ನನಗೆ ಕೊಡು, ನಾನು ಯಾರಿಗೂ ತೋರಿಸುವುದಿಲ್ಲ ಎಂದು ಭರವಸೆ ನೀಡಿದ್ದರಿಂದ ಅವರ ಮಾತನ್ನು ನಂಬಿ ನನ್ನ ಬಳಿ ಇದ್ದ ವಿಡಿಯೋದ ಒಂದು ಕಾಪಿಯನ್ನು ಅವರಿಗೆ ಕೊಟ್ಟೆ. ಆದರೆ ಅವರು ಅದನ್ನು ಸ್ವಾರ್ಥಕ್ಕಾಗಿ ಬಳಸಿಕೊಂಡಿದ್ದಾರೋ ಗೊತ್ತಿಲ್ಲ. ಆದರೆ ಯಾರು ಪೆನ್‌ಡ್ರೈವ್‌ ಹಂಚಿದ್ದಾರೋ ಎಂಬುದು ನನಗೆ ಗೊತ್ತಿಲ್ಲ. ವಿನಾಕಾರಣ ನನ್ನ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಎಲ್ಲಾ ವಿಚಾರವನ್ನು ಎಸ್‌ಐಟಿ ಮುಂದೆ ಹಾಜರಾಗಿ ಹೇಳುತ್ತೇನೆ ಎಂದು ಅವರು ವಿಡಿಯೋ ತುಣುಕಿನಲ್ಲಿ ತಿಳಿಸಿದ್ದಾರೆ.
7
+ `ಕೈ’ ಮುಖಂಡರಿಗೆ ತಲುಪಿವೆಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. ಸಿಬಿಐ ತನಿಖೆಯಿಂದ ಮಾತ್ರ ನ್ಯಾಯ ಸಿಗಲು ಸಾಧ್ಯ ಎಂದು ಪ್ರತಿಪಾದಿಸಿರುವ ಹಾಸನದ ಬಿಜೆಪಿ ಮುಖಂಡ ದೇವರಾಜೇಗೌಡ ಅವರು, ಪೆನ್‌ಡ್ರೈವ್‌ ಎಲ್ಲಿಂದ ಎಲ್ಲಿಗೆ ಹೋಗಿವೆ ಎಂಬ ಬಗ್ಗೆಯೂ ವಿಚಾರಣೆ ನಡೆಯಬೇಕಿದೆ ಎಂದು ಒತ್ತಾಯಿಸಿದ್ದಾರೆ.
8
+ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು. ನಾನು 2023ರ ವಿಧಾನಸಭೆ ಚುನಾವಣೆಯಲ್ಲಿ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಬ��ಜೆಪಿ ಅಭ್ಯರ್ಥಿಯಾಗಿದ್ದೆ. ಜಿಲ್ಲೆಯ ಜವಾಬ್ದಾರಿಯುತ ಬಿಜೆಪಿ ಮುಖಂಡ ಆಗಿದ್ದೇನೆ. ಕಳೆದ ಲೋಕಸಭೆ ಚುನಾವಣೆಯಲ್ಲಿನ ಅಕ್ರಮಗಳ ವಿರುದ್ಧ ಪ್ರಜ್ವಲ್‌ ರೇವಣ್ಣ, ಹೆಚ್‌.ಡಿ.ರೇವಣ್ಣ, ಸೂರಜ್‌ ರೇವಣ್ಣ, ಅರಕಲಗೂಡು ಕ್ಷೇತ್ರದ ಶಾಸಕ ಎ.ಮಂಜು ಅವರ ವಿರುದ್ಧ ನ್ಯಾಯಾಲಯದಲ್ಲಿ ಹೋರಾಟ ಮಾಡಿ ಗೆದ್ದಿದ್ದೇನೆ. ಇಷ್ಟು ಮಂದಿ ಅನರ್ಹಗೊಂಡಿ ದ್ದಾರೆ. ಮೇಲ್ಮನವಿಯ ಮೂಲಕ ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿದೆ ಎಂದು ವಿವರಿಸಿದ್ದರು.
9
+ ಈಗ ಪೆನ್‌ಡ್ರೈವ್‌ನಲ್ಲಿನ ವಿಡಿಯೋಗಳು ಬಹಿರಂಗವಾಗಿರುವುದರ ಹಿಂದೆ ನನ್ನ ಪಾತ್ರ ಇಲ್ಲ. ವಿಡಿಯೋಗಳು ಬಹಿರಂಗಗೊಳಿಸದಂತೆ ಪ್ರಜ್ವಲ್‌ ರೇವಣ್ಣ ಬೆಂಗಳೂರು ಸಿಟಿ ಸಿವಿಲ್‌ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಆ ಪ್ರಕರಣದಲ್ಲಿ ಕಾರು ಚಾಲಕ ಕಾರ್ತಿಕ್‌ 86ನೇ ಪ್ರತಿವಾದಿಯಾಗಿದ್ದರು. ಆತ ನನ್ನ ಬಳಿ ಬಂದು ವಕಾಲತ್ತು ವಹಿಸುವಂತೆ ಮನವಿ ಮಾಡಿದ್ದ. ಆ ವೇಳೆ ಕಕ್ಷಿದಾರನ ಪರವಾಗಿ ವಾದ ಮಂಡಿಸಬೇಕಾಗಿದ್ದರಿಂದ ಪೆನ್‌ಡ್ರೈವ್‌ನಲ್ಲಿ ಏನಿದೆ ಎಂದು ಕೇಳಿದ್ದೆ.
10
+ ಈ ವಿಡಿಯೋಗಳು ಬೇರೆ ಯಾರಿಗಾದರೂ ನೀಡಲಾಗಿದೆಯೇ ಎಂದು ನಾನು ಕೇಳಿದಾಗ ಕಾರ್ತಿಕ್‌ ನನಗೆ ಇವನ್ನು ನನ್ನ ಸ್ನೇಹಿತ ನೀಡಿದ್ದಾನೆ. ಇವು ಕಾಂಗ್ರೆಸ್‌ ಅಧ್ಯಕ್ಷರಿಗೆ ಮತ್ತು ಇತರ ಮುಖಂಡರಿಗೆ ತಲುಪಿವೆ ಎಂದು ಕಾರ್ತಿಕ್‌ ತಿಳಿಸಿದ್ದ ಎಂದು ದೇವರಾಜೇಗೌಡ ಹೇಳಿದ್ದಾರೆ. ಜೆಡಿಎಸ್‌-ಬಿಜೆಪಿ ಮೈತ್ರಿಯಾಗುವಾಗ ನಾನು ಹಾಸನದಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗುವ ವ್ಯಕ್ತಿ ವಿರುದ್ಧ ಈ ರೀತಿಯ ವಿಡಿಯೋಗಳಿವೆ ಎಂದು ಬಿಜೆಪಿ ಹೈಕಮಾಂಡ್‌ ನಾಯಕರಿಗೆ ಇ-ಮೇಲ್‌ ಕಳುಹಿಸಿದ್ದೆ, ಅವು ತಲುಪಿರಲಿಲ್ಲ.
11
+ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸಂಪೂರ್ಣ ಮಾಹಿತಿಯ ಪತ್ರ ಬರೆದು, ಅವರ ಕಚೇರಿಯಲ್ಲಿ ಇಟ್ಟು ಬಂದಿದ್ದೆ. ಅದನ್ನು ಅವರು ಓದಿರಲಿಲ್ಲ. ವಾಟ್‌್ಸಅಪ್‌ನಲ್ಲೂ ಕಳುಹಿಸಿದ್ದೆ, ಬ್ಲೂಟಿಕ್‌ ಆಗಿತ್ತು. ಆದರೆ ಆ ಸಂದೇಶವನ್ನು ವಿಜಯೇಂದ್ರ ಓದಿರಲಿಲ್ಲ ಎಂದು ಗೋತ್ತಾಗಿದೆ ಎಂದಿದ್ದಾರೆ. ಪೆನ್‌ಡ್ರೈವ್‌ ವಿಡಿಯೋದಲ್ಲಿ ಬಹಳಷ್ಟು ಹೆಣ್ಣು ಮಕ್ಕಳ ಜೀವನ ಅಡಗಿದೆ, ಅದನ್ನು ಬಯಲು ಮಾಡಿ ಅವರ ಘನತೆಗೆ ಧಕ್ಕೆ ತರುವ ಹೀನ ರಾಜಕಾರಣ ನಾನು ಮಾಡುವುದಿಲ್ಲ. ಒಂದು ವೇಳೆ ಆ ರೀತಿ ಮಾಡುವುದಿದ್ದರೆ ನಾನು ಪತ್ರ ಬಿಜೆಪಿ ವರಿಷ್ಠರಿಗೆ ಪತ್ರ ಬರೆಯುವ ಅವಶ್ಯಕತೆಯೇ ಬರುತ್ತಿರಲಿಲ್ಲ. ಆಗಲೇ ವಿಡಿಯೋ ಬಹಿರಂಗ ಮಾಡಿದ್ದರೆ ಪ್ರಜ್ವಲ್‌ಗೆ ಟಿಕೆಟ್‌ ಸಿಗುತ್ತಿರಲಿಲ್ಲ ಎಂದು ಹೇಳಿದರು.
12
+ ರಾಜಕಾರಣಕ್ಕಾಗಿ ಪ್ರಭಾವಿಗಳು ಕಿಡಿಗೇಡಿಗಳ ಕೈಗೆ ಪೆನ್‌ಡ್ರೈವ್‌ ನೀಡಿ, ಹಾದಿ ಬೀದಿಯಲ್ಲಿ ಸಿಗುವಂತೆ ಮಾಡಿದ್ದಾರೆ. ವಿಡಿಯೋದಲ್ಲಿ ಇರುವುದು ಅತ್ಯಾಚಾರವಲ್ಲ, ಒಪ್ಪಿತ ಕ್ರಿಯೆ. ವಿಡಿಯೋದಲ್ಲಿರುವ ಒಬ್ಬ ಮಹಿಳೆ ತಮ್ಮ ಮೇಲೆ ಒಂಬತ್ತು ವರ್ಷಗಳ ಹಿಂದೆ ಅತ್ಯಾಚಾರ ಆಗಿದೆ ಎಂದು ಹೇಳಿದ್ದಾರೆ. ಇಷ್ಟು ದಿನ ಏಕೆ ಸುಮ್ಮನಿದ್ದರು ದ��ವರಾಜೇಗೌಡ ಪ್ರಶ್ನಿಸಿದರು.
eesanje/url_46_162_7.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಪೊಲೀಸ್‌ ಕರ್ತವ್ಯ ಬಹಳ ಜಟಿಲ, ಆರೋಗ್ಯ ಕಾಪಾಡಿಕೊಳ್ಳಿ : ಡಿಜಿಪಿ ಪ್ರತಾಪ್‌ ರೆಡ್ಡಿ ಕಿವಿ ಮಾತು
2
+ ಬೆಂಗಳೂರು, ಏ.30-ಪೊಲೀಸ್‌ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವುದು ಬಹಳ ಜಟಿಲವಾಗಿದ್ದು, ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತಿ ಅವಶ್ಯಕವೆಂದು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರತಾಪ್‌ ರೆಡ್ಡಿ ಸಿಬ್ಬಂದಿಗಳಿಗೆ ಕಿವಿ ಮಾತು ಹೇಳಿದರು.
3
+ ಸ್ವಯಂ ನಿವೃತ್ತಿ ಪಡೆದಿರುವ ಡಿಜಿಪಿ ಪ್ರತಾಪ್‌ ರೆಡ್ಡಿ ಅವರಿಗೆ ಕೋರಮಂಗಲದ ಕೆಎಸ್‌ಆರ್‌ಪಿ ಪೆರೆಡ್‌ ಮೈದಾನದಲ್ಲಿ ಇಂದು ಬೀಳ್ಕೊಡುಗೆ ಕವಾಯತು ಹಮ್ಮಿಕೊಳ್ಳಲಾಗಿತ್ತು.
4
+ ಕವಾಯತಿನಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಇಲಾಖೆಯಲ್ಲಿ ಬಹಳ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸಬೇಕಾಗಿದೆ, ನಾನು ಇಲಾಖೆಗೆ ಸೇರಿದಾಗ ಇಷ್ಟೊಂದು ಕ್ಲಿಷ್ಟಕರವಾಗಿರಲಿಲ್ಲ. ಆದರೆ ಇತ್ತಿಚೀನ ದಿನಗಳಲ್ಲಿ ಕರ್ತವ್ಯ ಜಟಿಲವಾಗುತ್ತಿದೆ, ಮುಂದೆಯೂ ಕಷ್ಟ ವಾಗಬಹುದು. ಹಾಗಾಗಿ ಸಿಬ್ಬಂದಿ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದರು.
5
+ ಚುನಾವಣಾ ಸಂದರ್ಭದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಿ ಬೀಳ್ಕೊಡುಗೆ ಕವಾಯತು ಹಮ್ಮಿಕೊಳ್ಳುವುದು ಬಹಳ ಕಷ್ಟ. ಆದರೂ ಅದನ್ನೆಲ್ಲವನ್ನೂ ನಿಭಾಯಿಸಿ ಇಷ್ಟೊಂದು ಅಚ್ಚುಕಟ್ಟಾಗಿ ಸುಸೂತ್ರವಾಗಿ ಕಾರ್ಯಕ್ರಮ ಹಮ್ಮಿಕೊಂಡಿರುವುದಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.
6
+ ಕೆಎಸ್‌ಆರ್‌ಪಿ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಕರ್ನಾಟಕದ ಪೊಲೀಸ್‌ ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತಿದೆ ಎಂದರು.
7
+ ಕೆಎಸ್‌ಆರ್‌ಪಿ ತುಕಡಿಗಳ ಜೊತೆ ಕೆಲಸ ಮಾಡಿರುವುದು ಬಹಳ ತೃಪ್ತಿ ತಂದಿದೆ. ಕೆಎಸ್‌ಆರ್‌ಪಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿದೆ. ಕೆಎಸ್‌ಆರ್‌ಪಿ ತುಕಡಿ ಪೊಲೀಸ್‌ ಇಲಾಖೆಗೆ ಹೆಮ್ಮೆ ಎಂದು ಕೆಎಸ್‌ಆರ್‌ಪಿ ತುಕಡಿಯ ಕಾರ್ಯವೈಖರಿಯನ್ನು ಶ್ಲಾಸಿದರು.ಸತತ 33 ವರ್ಷ ಪೊಲೀಸ್‌ ಸೇವೆ ಸಲ್ಲಿಸಿದ ಸಂದರ್ಭದಲ್ಲಿ ವಿವಿಧ ವಿಭಾಗಗಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿ ಕೆಲಸ ಮಾಡಿದ್ದೇನೆ. ನನ್ನ ಸುಧಿರ್ಘ ಸೇವೆಯಲ್ಲಿ ಅಧಿಕಾರಿಗಳ ಮತ್ತು ಸಿಬ್ಬಂದಿ ಬಹಳ ಪ್ರೀತಿ ತೋರಿಸಿದ್ದಾರೆ. ವೈಯಕ್ತಿಕವಾಗಿ ಗೌರವ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದರು.
8
+ ಪುಟ್ಟ ಹಳ್ಳಿಯಲ್ಲಿ ಹುಟ್ಟಿದ ನನಗೆ ಪೋಷಕರು ಉತ್ತಮ ಶಿಕ್ಷಣ ಕೊಡಿಸಿದರು, ನಾನು ಐಪಿಎಸ್‌ ಪರೀಕ್ಷೆ ತೇರ್ಗಡೆಗೊಂಡು ಪೊಲೀಸ್‌ ಇಲಾಖೆಗೆ ಪಾದಾರ್ಪಣೆ ಮಾಡಿ ಇಂದು ನಿವೃತ್ತಿಯಾಗುತ್ತಿದ್ದು, ತನ್ನ ಸೇವಾ ಅವಽಯಲ್ಲಿ ಹಿರಿಯ ಅಽಕಾರಿಗಳ ಮಾರ್ಗದರ್ಶನದಲ್ಲಿ ಉತ್ತಮವಾಗಿ ಕರ್ತವ್ಯ ನಿಭಾಯಿಸಿರುವ ತೃಪ್ತಿ ನನಗಿದೆ ಎಂದರು.
9
+ ಕವಾಯತು ಕಾರ್ಯಕ್ರಮದಲ್ಲಿ ಡಿಜಿ ಅಲೋಕ್‌ ಮೋಹನ್‌, ಎಡಿಜಿಪಿ ಉಮೇಶ್‌ ಕುಮಾರ್‌, ನಗರ ಪೊಲೀಸ್‌ ಆಯುಕ್ತರಾದ ಬಿ. ದಯಾನಂದ ಸೇರಿ���ಂತೆ ಹಿರಿಯ ಹಾಗೂ ಕಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಪ್ರತಾಪ್‌ ರೆಡ್ಡಿ ಅವರ ಬೀಳ್ಕೊಡುಗೆ ಕಾರ್ಯಕ್ರಮ ಕಣ್ತುಂಬಿಕೊಳ್ಳಲು ಅವರ ತಂದೆ ಗುಂಟೂರಿನಿಂದ ಆಗಮಿಸಿದ್ದರು.
10
+ ಪ್ರತಾಪ್‌ ರೆಡ್ಡಿ ಅವರ ಪತ್ನಿ ಸುಜಾತಾ ರೆಡ್ಡಿ, ಮಗಳು ಹರ್ಷಲಾ ರೆಡ್ಡಿ ಹಾಗೂ ವಿದೇಶದಲ್ಲಿ ನೆಲೆಸಿರುವ ಮಗ ಡಾ. ಗೌತಮ್‌ ರೆಡ್ಡಿ, ಸೊಸೆ ಮತ್ತು ಮೊಮ್ಮಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
eesanje/url_46_162_8.txt ADDED
@@ -0,0 +1,7 @@
 
 
 
 
 
 
 
 
1
+ ಬೌದ್ಧ ಧರ್ಮದ ವಿಧಿ ವಿಧಾನದೊಂದಿಗೆ ಶ್ರೀನಿವಾಸ್‌ ಪ್ರಸಾದ್‌ ಅಂತ್ಯ ಸಂಸ್ಕಾರ
2
+ ಬೆಂಗಳೂರು,ಏ.30-ಕೇಂದ್ರದ ಮಾಜಿ ಸಚಿವ, ಸಂಸದ ಹಾಗೂ ದಲಿತರ ಆಶಾಕಿರಣ ವಿ.ಶ್ರೀನಿವಾಸ್‌ ಪ್ರಸಾದ್‌ ಅವರ ಅಂತ್ಯಕ್ರಿಯೆ ಇಂದು ಸರ್ಕಾರಿ ಸಕಲ ಗೌರವಾಧರಗಳೊಂದಿಗೆ ನಡೆಯಿತು. ಮೈಸೂರಿನ ಸಿಲ್ಕ್ ಫ್ಯಾಕ್ಟ್ರಿ ಬಳಿ ಇರುವ ಶ್ರೀನಿವಾಸ್‌ ಪ್ರಸಾದ್‌ ಅವರ ಡಾ.ಬಿ.ಆರ್‌.ಅಂಬೇಡ್ಕರ್‌ ಎಜುಕೇಷನ್‌ ಅಂಡ್‌ ಕಲ್ಚರಲ್‌ ಟ್ರಸ್ಟ್ ಆವರಣದಲ್ಲಿ ಬೌದ್ಧ ಧರ್ಮದ ವಿಧಿವಿಧಾನದೊಂದಿಗೆ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಯಿತು.
3
+ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರಂತೆಯೇ ಬೌದ್ಧ ಧರ್ಮದ ಅನುಯಾಯಿಯಾಗಿದ್ದ ಶ್ರೀನಿವಾಸ್‌ ಪ್ರಸಾದ್‌ ಅವರ ಕೊನೆಯ ಆಸೆಯಂತೆ ಅಹಿಂಸೆ ಮತ್ತು ಸತ್ಯದ ಸಂದೇಶದ ಮೂಲಕ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು.
4
+ ಮಧ್ಯಾಹ್ನ 1 ಗಂಟೆಗೆ ಶ್ರೀನಿವಾಸ್‌ ಪ್ರಸಾದ್‌ ಅವರ ಅಂತ್ಯಕ್ರಿಯೆಯನ್ನು ಬೌದ್ಧ ಧರ್ಮದ ಭಿಕ್ಷುಗಳು ನೆರವೇರಿಸಿಕೊಟ್ಟರು. ಕಳೆದ ಐದು ವರ್ಷಗಳಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಹಿರಿಯ ಮುತ್ಸದ್ದಿ ಇನ್ನು ನೆನಪು ಮಾತ್ರ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸ್ಥಳೀಯ ಶಾಸಕರು, ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಶ್ರೀನಿವಾಸ್‌ ಪ್ರಸಾದ್‌ ಅವರ ಸಾವಿರಾರು ಅಭಿಮಾನಿಗಳು ನೆಚ್ಚಿನ ನಾಯಕನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ.
5
+ ಇದಕ್ಕೂ ಮುನ್ನ ಭೀಮ ಸದನದಿಂದ ವಿ.ಶ್ರೀನಿವಾಸ ಪ್ರಸಾದ್‌ ಅವರ ಪಾರ್ಥಿವ ಶರೀರ ಹೊರಟಾಗ ರಸ್ತೆಯುದ್ದಕ್ಕೂ ಪುಷ್ಪವೃಷ್ಠಿ ಸುರಿಸಿ ಸಾರ್ವ ಜನಿಕರು ನಮನ ಸಲ್ಲಿಸಿದರು.ಮತ್ತೆ ಪ್ರಸಾದ್‌ ಅಣ್ಣ ಬರಲಿ ಎಂಬ ಘೋಷಣೆ ಗಳನ್ನು ಕೂಗಿರು. ಅಭಿಮಾನಿಗಳು ಭಾರವಾದ ಹೆಜ್ಜೆಗಳನ್ನಿಡುತ್ತಾ ಅಂತಿಮ ಯಾತ್ರೆಗೆ ಸಾಕ್ಷಿಯಾದರು. ಅಂತಿಮ ಯಾತ್ರೆ ಸಾಗಿದ ಮಾರ್ಗದುದ್ದಕ್ಕೂ ಮಳಿಗೆದಾರರು ಸ್ವಯಂಪ್ರೀರಿತವಾಗಿ ಅಂಗಡಿ, ಮುಂಗಟ್ಟುಗಳನ್ನು ಬಂದ್‌ ಮಾಡಿ ಗೌರವ ಸಲ್ಲಿಸಿದರು.
6
+ ಜೀರೋ ಟ್ರಾಫಿಕ್‌ನಲ್ಲೇ ಭೀಮಸದನದಿಂದ ಅಶೋಕಪುರಂ ವರೆಗೆ ಪಾರ್ಥಿವ ಶರೀರವನ್ನು ತರಲಾಯಿತು. ಪಾರ್ಥಿವ ಶರೀರವಿದ್ದ ವಾಹನವು ಅಶೋಕಪುರಂ ಪ್ರವೇಶಿಸುತ್ತಿದ್ದಂತೆ ಸಾವಿರಾರು ಅಭಿಮಾನಿಗಳು ಪುಷ್ಪವೃಷ್ಠಿ ಸುರಿಸಿ ಕಂಬನಿ ಮೀಡಿದರು.
7
+ ಎಂಟಿಎಂ ಶಾಲೆಯ ಸುತ್ತ ಸಾವಿರಾರು ಮಂದಿ ಜಮಾಯಿಸಿ ದ್ದರಿಂದ ಶಾಲೆಯ ಆವರಣ ಜನರಿಂದಲೇ ಭರ್ತಿಯಾಗಿತ್ತು. ಪಾರ್ಥಿವ ಶರೀರ ಹೊತ್ತು ಸಾಗಿದ ವಾಹನವನ್ನು ವಿಶೇಷ ಹೂ ಹಾಗೂ ತುಳಸಿ ಮಾಲೆಗಳಿಂದ ಅಲಂಕರಿಸಲಾಗಿತ್ತು.ಸಂಸದ ವಿ. ಶ್ರೀನಿವಾಸಪ್ರಸಾದ್‌ ಅವರ ನಿಧನದ ಹಿನ್ನೆಲೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲ ಸರಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು.
eesanje/url_46_162_9.txt ADDED
@@ -0,0 +1,7 @@
 
 
 
 
 
 
 
 
1
+ ನೇಹಾ ಹತ್ಯೆ ಪ್ರಕರಣ ಮುಚ್ಚಿ ಹಾಕಲು ಸಂಚು ನಡೆದಿದೆ : ಆರ್‌. ಅಶೋಕ್‌ ಆರೋಪ
2
+ ಬೆಂಗಳೂರು,ಏ.30-ನೇಹಾ ಹತ್ಯೆ ಪ್ರಕರಣವನ್ನು ಜನರು ಮೂರೋ ಆರೋ ತಿಂಗಳ ನಂತರ ಮರೆತ ಬಳಿಕ ಮುಚ್ಚಿ ಹಾಕಲು ಪ್ರಯತ್ನ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಆಕ್ಷೇಪಿಸಿದರು. ಹುಬ್ಬಳ್ಳಿಯಲ್ಲಿ ಕಾಲೇಜ್‌ ಕ್ಯಾಂಪಸ್‌ನಲ್ಲಿ ಇತ್ತೀಚೆಗೆ ಬರ್ಬರವಾಗಿ ಹತ್ಯೆಗೀಡಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ನಿವಾಸಕ್ಕೆ ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಭೇಟಿ ನೀಡಿ, ನಿರಂಜನ ಹಿರೇಮಠ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.
3
+ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌.ಅಶೋಕ್‌, ಸಮರ್ಥ ಸಾಕ್ಷಿ ಬೇಕು. ದಾಖಲೆಗಳನ್ನು ಸರಿಯಾಗಿ ಸಂಗ್ರಹ ಮಾಡಬೇಕಿತ್ತು. ಕಳೆದ ಹತ್ತಾರು ದಿನಗಳಿಂದ ಆತನ ಜೊತೆ ಸಂಪರ್ಕದಲ್ಲಿದ್ದವರ ಫೋನ್‌ ಕರೆಗಳ ವಿವರ ಯಾಕೆ ಸಂಗ್ರಹಿಸಿಲ್ಲ? ಯಾಕೆ ಇದನ್ನು ಮಾಡಿಲ್ಲ? ಅವನು ಮಾದಕ ದ್ರವ್ಯ ಸೇವನೆ ಮಾಡಿದ್ದನೇ? ಬೇರೆ ಏನಾದರೂ ಲಿಂಕ್‌ ಇತ್ತೇ? ಕೆಎಫ್‌ಡಿ, ಪಿಎಫ್‌ಐನಂಥ ಸಮಾಜ ವಿರೋಧಿ ಸಂಘಟನೆ ಜೊತೆ ಸಂಪರ್ಕ ಇತ್ತೇ ಎಂಬ ಮಾಹಿತಿಗಳನ್ನು ಪಡೆಯಬೇಕಿತ್ತು ಎಂದು ಆಗ್ರಹಿಸಿದರು.
4
+ ಗೃಹ ಸಚಿವರು, ಪೊಲೀಸ್‌ ಇಲಾಖೆಗೆ ಸಾಮಾನ್ಯ ಜ್ಞಾನ ಇರಬೇಕು. ಇಂಥ ಕೊಲೆ ಆದಾಗ ಡಬಲ್‌ ಅಲರ್ಟ್‌ ಇರಬೇಕು. ತನಿಖೆ ಮಾಡುವವರು ಆರೋಪಿಯನ್ನು ಪೊಲೀಸ್‌ ಕಸ್ಟಡಿಗೆ ಕೇಳಬೇಕಿತ್ತಲ್ಲವೇ? ಸಾಕ್ಷ್ಯಗಳನ್ನು ಸಂಗ್ರಹಿಸಬೇಕಿತ್ತಲ್ಲವೇ? ಕಾನೂನಿನಡಿ ಇರುವ ಕ್ರಮವನ್ನು ಯಾಕೆ ಕೈಗೊಂಡಿಲ್ಲ? ಆರೋಪಿಯನ್ನು ಜೈಲಿಗೆ (ಜುಡಿಷಿಯಲ್‌ ಕಸ್ಟಡಿ) ಕಳಿಸಿದ ಬಳಿಕ ಯಾರ್ಯಾರು ಭೇಟಿ ಮಾಡಿದ್ದರು? ಬಚಾವ್‌ ಮಾಡಲು ಸಲಹೆ ಕೊಟ್ಟಿರುವ ಸಾಧ್ಯತೆ ಇರಬಹುದಲ್ಲವೇ ಎಂದು ಕೇಳಿದರು.
5
+ ನೇಹಾ ಹತ್ಯೆ ಖಂಡಿಸಿ, ದೇಶ ಮಾತ್ರವಲ್ಲದೆ ಅಮೇರಿಕ, ಲಂಡನ್‌ನಲ್ಲೂ ಪ್ರತಿಭಟನೆಗಳು ನಡೆಯುತ್ತಿವೆ. ನೇಹಾ ಹತ್ಯೆ ವಿಷಯದಲ್ಲಿ ಆರೋಪಿ ಬಚಾವ್‌ ಆಗಲು ಪೊಲೀಸ್‌ ಇಲಾಖೆ, ಸರಕಾರವೇ ಅವಕಾಶ ಮಾಡಿಕೊಟ್ಟಿದೆ ಎಂದು ನೇರವಾಗಿ ಆರೋಪಿಸಿದರು.ಈ ಕೊಲೆ ಹಿಂದೆ ಯಾರಿದ್ದಾರೆ? ಕೊಲೆಗೆ ಬಳಸಿದ ಆಯುದ್ಧವನ್ನು ಎಲ್ಲಿಂದ ಖರೀದಿ ಮಾಡಲಾಗಿದೆ ಎಂಬ ಮಾಹಿತಿ ಸಂಗ್ರಹಿಸಬೇಕಿತ್ತು. ಇಡೀ ಕುಟುಂಬದ 20 ವರ್ಷಗಳ ಹಿನ್ನೆಲೆ ಏನು? ಅವರಿಗೆ ಯಾರ್ಯಾರ ಜೊತೆ ಸಂಪರ್ಕ ಇದೆ ಎಂಬ ಮಾಹಿತಿ ತಿಳಿಯಬೇಕಿತ್ತು ಎಂದು ತಿಳಿಸಿದರು.
6
+ ಇದೊಂದು ವಿಶೇಷ ಪ್ರಕರಣವಾಗಿದ್ದರೂ ಲವ್‌ ಜಿಹಾದ್‌ ಎಂದರೆ ತಮಗೆ ಕೆಟ್ಟ ಹೆಸರು ಬರಬಹುದೆಂದು, ಅದನ್ನು ತಪ್ಪಿಸಲು ಸರಕಾರವು ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ನೇಮಕ ಮಾಡಿಲ್ಲ. ಹಾಗೂ ಆರೋಪಿಯನ್ನು ಕಸ್ಟಡಿಗೆ ಪಡೆದಿಲ್ಲ ಎಂದು ಆರೋಪಿಸಿದರು. ನೊಂದ ಕುಟುಂಬವು ಸಿಬಿಐಗೆ ಕೊಡಿ ಎಂದರೆ ಸರಕಾರ ಕೊಡಬೇಕು. ಸಿಐಡಿಗೆ ಅಥವಾ ಎಸ್‌ಐಟಿಗೆ ಕೊಡಿ ಎಂದರೂ ಕೊಡಬೇಕಿತ್ತು. ಇದು ಸಾಮಾನ್�� ಜ್ಞಾನ ಎಂದು ತಿಳಿಸಿದರು.
7
+ ಕಾಲೇಜು ಕ್ಯಾಂಪಸ್‌ಗಳೂ ಸುರಕ್ಷಿತವಲ್ಲ, ಅಲ್ಲಿಯೂ ಕೂಡ ಮಕ್ಕಳ ಹತ್ಯೆ ಆಗಬಹುದು ಎಂಬುದಕ್ಕೆ ಇದೊಂದು ಉದಾಹರಣೆ. ಇದು ಕಾಲೇಜು ಕ್ಯಾಂಪಸ್‌ನಲ್ಲಿ ಆದ ಇಂಥ ಮೊದಲ ದುರ್ಘಟನೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಲವ್‌ ಜಿಹಾದ್‌ಗಾಗಿ ಈ ಘಟನೆ ಆಗಿದ್ದು, ರಾಜ್ಯವೇ ತಲೆತಗ್ಗಿಸುವ ಘಟನೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಹಾಜರಿದ್ದರು.
eesanje/url_46_163_1.txt ADDED
@@ -0,0 +1,7 @@
 
 
 
 
 
 
 
 
1
+ ಸಿಮಿಯನ್ನು ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಿ ಕೇಂದ್ರ ಅಧಿಸೂಚನೆ : ಆಕ್ಷೇಪಣೆಗಳು ಸಲ್ಲಿಸಲು ಅವಕಾಶ
2
+ ಬೆಂಗಳೂರು,ಏ.30-ಸ್ಪೂಡೆಂಟ್ಸ್ ಇಸ್ಲಾಮಿಕ್‌ ಮೂವ್ಮೆಂಟ್‌ ಆಫ್‌ ಇಂಡಿಯಾ(ಸಿಮಿ) ಅನ್ನು ಕಾನೂನು ಬಾಹಿರ ಚಟುವಟಿಕೆಗಳ(ತಡೆ) ಕಾಯ್ದೆ ಅನ್ವಯ ಕಾನೂನು ಬಾಹಿರ ಸಂಘಟನೆಯನ್ನು ಘೋಷಿಸಿ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಇದ್ದಲ್ಲಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಕುರಿತು ರಾಜ್ಯ ಗುಪ್ತಚರ ಇಲಾಖೆಯ ನಿರ್ದೇಶನಾಲಯವು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ.
3
+ ಕೇಂದ್ರ ಸರ್ಕಾರವು ಉಪ ಕಲಂ (1)ಕಲಂ- 3 ಕಾನೂನು ಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ)1967(37 ಆಫ್‌ 1967) ರ ಅಡಿಯಲ್ಲಿ ತನಗೆ ಪ್ರದತ್ತವಾದ ಅಧಿ ಕಾರದ ಅನ್ವಯ ಸ್ಪೂಡೆಂಟ್ಸ್ ಇಸ್ಲಾಮಿಕ್‌ ಮೂಮ್ಮೊಂಟ್‌ ಆಫ್‌ ಇಂಡಿಯಾ (ಸಿಮಿ) ಅನ್ನು ಕಾನೂನು ಬಾಹಿರ ಸಂಘಟನೆಯೆಂದು ಕೇಂದ್ರ ಸರಕಾರ 2024 ಜನೆವರಿ 29ರಂದು ಘೋಷಿಸಿದೆ ಎಂದು ದೆಹಲಿ ಉಚ್ಛ ನ್ಯಾಯಾಲಯದ ಕಾನೂನು ಬಾಹಿರ ಚಟುವಟಿಕೆ(ತಡೆ) ನ್ಯಾಯಾಧೀಕರಣ ರಿಜಿಸ್ಟ್ರಾರ್‌ ಜಿತೇಂದ್ರ ಪ್ರಸಾತ್‌ ಸಿಂಗ್‌ ಅವರು ತಿಳಿಸಿದ್ದಾರೆ.
4
+ ಈ ಕಾಯ್ದೆಯ ಉಪ ಕಲಂ (1) ಕಲಂ 4ರಲ್ಲಿ ತಿಳಿಸಿರುವಂತೆ ಸ್ಪೂಡೆಂಟ್‌್ಸ ಇಸ್ಲಾಮಿಕ್‌ ಮೂಮ್ಮೆಂಟ್‌ ಆಫ್‌ ಇಂಡಿಯಾ ಅನ್ನು ಕಾನೂನು ಬಾಹಿರ ಸಂಘಟನೆಯೆಂದು ಘೋಷಿಸಲು ಸಾಕಷ್ಟು ಕಾರಣಗಳು ಇವೆಯೇ ಎಂಬ ಬಗ್ಗೆ ನಿರ್ಣಯಿಸಲು ಕಲಂ 5(1) ಕಾಯ್ದೆ ಅಡಿ ದೆಹಲಿ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಪುರುಷೇಂದ್ರ ಕುಮಾರ್‌ ಕೌರವ್‌ ರವರನ್ನೂಳಗೊಂಡ ನ್ಯಾಯಾಧೀಕರಣವನ್ನು ರಚಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
5
+ ಈಗ ಕಾಯ್ದೆಯ ಕಲಂ 4. ಉಪ ಕಲಂ-2ರಡಿ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಈ ನೋಟೀಸ್‌ ಜಾರಿ ಮಾಡಿದ 30 ದಿನದೊಳಗೆ ಸ್ಪೂಡೆಂಟ್‌್ಸ ಇಸ್ಲಾಮಿಕ್‌ ಮೂವ್ಮೆಂಟ್‌ ಆಫ್‌ ಇಂಡಿಯಾ (ಸಿಮಿ) ಅನ್ನು ಸಾಕಷ್ಟು ಕಾರಣಗಳಿಂದ ಕಾನೂನು ಬಾಹಿರವೆಂದು ತೀರ್ಮಾನಿಸಿ ಘೋಷಿಸಿರುವುದನ್ನು ಏಕೆ ಒಪ್ಪಬಾರದು ಹಾಗೂ ಕಲಂ 4(3)ರಡಿ ಈ ನಿರ್ಣಯವನ್ನು ಒಪ್ಪಿಕೊಂಡು ಏಕೆ ಅಂತಹ ಘೋಷಣೆಯನ್ನು ದೃಢೀಕರಿಸಬಾರದೆಂಬುದಕ್ಕೆ ಕಾರಣಗಳನ್ನು ನೀಡಲು ತಿಳಿಸಲಾಗಿದೆ.
6
+ ಆಕ್ಷೇಪಣೆಗಳು /ಉತ್ತರ ಏನಾದರೂ ಇದ್ದಲ್ಲಿ ಒಂದು ವಾರದೊಳಗಾಗಿ ಕಚೇರಿ ಕೊಠಡಿ ಸಂಖ್ಯೆ 104, ಮೊದಲನೇ ಮಹಡಿ, ಎ ಬ್ಲಾಕ್‌, ದೆಹಲಿ ಉಚ್ಚ ನ್ಯಾಯಾಲಯ, ಶೇರ್‌ ಷಾ ರಸ್ತೆ, ನವದೆಹಲಿ-110503 ಇಲ್ಲಿಗೆ ಕಳುಹಿಸಬಹುದಾಗಿದೆ. ಆಕ್ಷೇಪಣೆಗಳು/ ಉತ್ತರ/ ದಾಖಲೆಗಳು ಪ್ರಾಂತೀಯ ಭಾಷೆಯಲ್ಲಿ ಇದ್ದಲ್ಲಿ ಅದರ ಯಥಾವತ್ತಾದ ಆಂಗ್ಲ ಭಾಷಾಂತರದ ಪ್ರತಿಯನ್ನು ಲಗತ್ತಿಸಬೇಕಿದೆ.
7
+ ನೀವು ಖುದ್ದಾಗಿ ಅಥವಾ ನಿಮ್ಮ ಅಧಿ ಕೃತ ಅನುಮತಿ ಪಡೆದ ವ್ಯಕ್ತಿಯ ಮೂಲಕ ಕೊಠಡಿ ಸಂಖ್ಯೆ 16, ದೆಹಲಿ ಉಚ್ಚ ನ್ಯಾಯಾಲಯ, ಶೇರ್‌ ಷಾ ರಸ್ತೆ, ನವದೆಹಲಿ – 110503 ರ ದೆಹಲಿಯಲ್ಲಿರುವ ಟ್ರಿಬ್ಯೂನಲ್ನ ಮುಂದೆ 2024ರ ಮೇ 04ರ ಸಂಜೆ 4.30 ಗಂಟೆಗೆ ಹಾಜರಾಗಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
eesanje/url_46_163_10.txt ADDED
@@ -0,0 +1,3 @@
 
 
 
 
1
+ ಇಂಡಿಗನತ್ತ ಮತಗಟ್ಟೆಯಲ್ಲಿ ಶೇ.13.45 ರಷ್ಟು ಮರುಮತದಾನ
2
+ ಬೆಂಗಳೂರು, ಏ.30-ಮರು ಮತದಾನ ನಡೆದ ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹನೂರು ತಾಲ್ಲೂಕಿನಲ್ಲಿ ಇಂಡಿಗನತ್ತ ಮತಗಟ್ಟೆಯಲ್ಲಿ ಶಾಂತಿಯುತ ಮತದಾನವಾಗಿದೆ. ಆದರೆ, ಮತದಾನ ಪ್ರಮಾಣ ತೀರಾ ಕಡಿಮೆಯಾಗಿದೆ, ಏಪ್ರಿಲ್‌ 26ರಂದು ಮತದಾನ ಬಹಿಷ್ಕರಿಸಿದಲ್ಲದೆ, ಇಂಡಿಗನತ್ತ ಮತಗಟ್ಟೆಯಲ್ಲಿ ಘರ್ಷಣೆಯಾಗಿ ಮತಯಂತ್ರಕ್ಕೆ ಹಾನಿ ಮಾಡಲಾಗಿದ್ದ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗ ನಿನ್ನೆ ಮರು ಮತದಾನ ನಡೆಸಿತ್ತು.
3
+ ಇಂಡಿಗನತ್ತ ಮತಗಟ್ಟೆಯಲ್ಲಿ 279 ಪುರುಷ, 249 ಮಹಿಳಾ ಮತದಾರರು ಸೇರಿದಂತೆ 528 ಮತದಾರರು ಇದ್ದು, ಇವರಲ್ಲಿ 32 ಪುರುಷ, 39 ಮಹಿಳಾ ಮತದಾರರು ಮಾತ್ರ ಮತ ಚಲಾಯಿಸಿದ್ದಾರೆ. ಒಟ್ಟಾರೆ 71 ಮತದಾರರು ಮಾತ್ರ ಮತದಾನ ಮಾಡಿದ್ದಾರೆ. ಒಟ್ಟಾರೆ ಶೇ.13.45ರಷ್ಟ ಮಾತ್ರ ಮತದಾನವಾಗಿದೆ ಎಂದು ರಾಜ್ಯ ಮುಖ್ಯಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
eesanje/url_46_163_11.txt ADDED
@@ -0,0 +1,5 @@
 
 
 
 
 
 
1
+ ನಗದು, ಚಿನ್ನ ಸೇರಿದಂತೆ 446.02 ಕೋಟಿ ಮೌಲ್ಯದ ಚುನಾವಣಾ ಅಕ್ರಮಗಳು ಬಯಲಿಗೆ
2
+ ಬೆಂಗಳೂರು,ಏ.29-ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ 446.02 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್ , ಚಿನ್ನ, ಬೆಳ್ಳಿ, ವಜ್ರ ಹಾಗೂ ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಲಾಗಿದೆ.
3
+ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಮಾಹಿತಿ ಪ್ರಕಾರ, ಮಾದರಿ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ ನಿನ್ನೆಯರವರೆಗೆ ಈ ಪ್ರಮಾಣದ ಜಪ್ತಿ ಮಾಡಲಾಗಿದೆ. ಪ್ರತಿನಿತ್ಯ ಒಂದಲ್ಲಾ ಒಂದು ಕಡೆ ಹಣ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ 2,207 ಎಫ್‌ಐಆರ್‌ಗಳನ್ನು ದಾಖಲಿಸಿದ್ದು, 1,961 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
4
+ ಪೊಲೀಸ್‌ ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು 140 ಕೋಟಿ ರೂ. ನಗದು, ಮದ್ಯ, ಡ್ರಗ್ಸ್ , ಚಿನ್ನ, ಬೆಳ್ಳಿ, ಉಚಿತ ಉಡುಗೊರೆಗಳನ್ನು ವಶಪಡಿಸಿಕೊಂಡಿದೆ.ಅಬಕಾರಿ ಇಲಾಖೆಯವರು 177.81 ಕೋಟಿ ರೂ. ಮೊತ್ತದ ಮದ್ಯ, ಡ್ರಗ್ಸ್ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದರೆ ಆದಾಯ ತೆರಿಗೆ ಅಧಿಕಾರಿಗಳು 48.09 ಕೋಟಿ ರೂ. ಮೊತ್ತದ ವಜ್ರ, ಚಿನ್ನ ಹಾಗೂ ನಗದನ್ನು ಜಪ್ತಿ ಮಾಡಿದ್ದಾರೆ.
5
+ ವಾಣಿಜ್ಯ ತೆರಿಗೆ ಅಧಿಕಾರಿಗಳು 80.11 ಕೋಟಿ ರೂ. ಮೊತ್ತದ ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಆದಾಯ ತೆರಿಗೆ ಅಧಿಕಾರಿಗಳು ಕಲಬುರಗಿ ರೈಲ್ವೇ ನಿಲ್ದಾಣದ ಬಳಿ 1,99,92,000 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಸಾರ್ವಜನಿಕರಿಂದ ಮತದಾರರ ಸಹಾಯವಾಣಿ ಮೂಲಕ 35,715 ಕರೆಗಳನ್ನು ಸ್ವೀಕರಿಸಿ ಅವುಗಳನ್ನು ವಿಲೇವಾರಿ ಮಾಡಲಾಗಿದೆ. ನಾಗರಿಕರಿಂದ ಎನ್‌ಜಿಆರ್‌ ಪೋರ್ಟಲ್‌ ಮೂಲಕ 20,183 ದೂರುಗಳನ್ನು ದಾಖಲಿಸಿ, 18,314 ದೂರುಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
eesanje/url_46_163_12.txt ADDED
@@ -0,0 +1,6 @@
 
 
 
 
 
 
 
1
+ ಹಾಸನ ಪೆನ್ ಡ್ರೈವ್ ಪ್ರಕರಣ, ಎಸ್‌ಐಟಿ ತಂಡ ಸಭೆ
2
+ ಬೆಂಗಳೂರು, ಏ.29-ಹಾಸನ ಸಂಸದ ಪ್ರಜ್ವಲ್‌ ರೇವಣ್ಣಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌ ಸಂಬಂಧದ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡ (ಎಸ್‌‍ಐಟಿ) ಇಂದು ಸಭೆ ನಡೆಸಿತು. ನಗರದ ಸಿಐಡಿ ಪ್ರಧಾನ ಕಚೇರಿಯಲ್ಲಿ ಎಸ್‌‍ಐಟಿ ಮುಖ್ಯಸ್ಥರಾದ ಬಿ.ಕೆ. ಸಿಂಗ್‌ ಅವರ ನೇತೃತ್ವದಲ್ಲಿ ಈ ಸಭೆ ನಡೆದಿದ್ದು, ಐಪಿಎಸ್‌‍ ಅಧಿಕಾರಿಗಳಾದ ಸುಮನ್‌ ಡಿ. ಪೆನ್ನೇಕರ್‌, ಸೀಮಾ ಲಾಟ್ಕರ್‌ ಭಾಗವಹಿಸಿದ್ದರು.
3
+ ಸಭೆಯಲ್ಲಿ ಪ್ರಮುಖವಾಗಿ ವಿಶೇಷ ತನಿಖಾ ತಂಡದಲ್ಲಿ ಎಷ್ಟು ಮಂದಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇರಬೇಕು, ಯಾವ ರ್ಯಾಂಕ್‌ನ ಅಧಿಕಾರಿಗಳು ಇರಬೇಕು, ಯಾರ್ಯಾರನ್ನು ಈ ತಂಡಕ್ಕೆ ನೇಮಿಸಿಕೊಳ್ಳಬೇಕು, ಯಾವ ಯಾವ ವಿಭಾಗಗಳಿಂದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ತೆಗೆದುಕೊಳ್ಳಬೇಕು, ಯಾವ ರ್ಯಾಂಕ್‌ನ ಅಧಿಕಾರಿಯನ್ನು ತನಿಖಾಧಿಕಾರಿಯಾಗಿ ನೇಮಿಸಿಕೊಳ್ಳಬೇಕು, ತನಿಖೆ ಯಾವ ಸ್ವರೂಪದಲ್ಲಿರಬೇಕು ಎಂಬಿತ್ಯಾದಿ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು.
4
+ ಈ ಪ್ರಕರಣ ಗಣ್ಯ ವ್ಯಕ್ತಿಗಳಿಗೆ ಸೇರಿದ್ದರಿಂದ ಬಹಳ ಸೂಕ್ಷ್ಮ ತೆಯಿಂದ ತನಿಖೆ ಮಾಡಬೇಕು, ತನಿಖೆ ಆರಂಭಿಸುವ ಮುನ್ನ ಯಾವ ಯಾವ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಬೇಕು, ಸಂಗ್ರಹಿಸಿದ ಸಾಕ್ಷ್ಯಗಳನ್ನು ಎಫ್‌ಎಸ್‌‍ಎಲ್‌ ಗೆ ಕಳುಹಿಸಬೇಕು. ನಂತರ ವರದಿ ತರಿಸಿಕೊಳ್ಳಬೇಕು ಎಂಬ ವಿಷಯಗಳ ಬಗ್ಗೆ ಅಧಿಕಾರಿಗಳು ಚರ್ಚೆ ನಡೆಸಿದರು ಎಂದು ಗೊತ್ತಾಗಿದೆ.
5
+ ತದನಂತರದಲ್ಲಿ ಯಾರ್ಯಾರನ್ನು ವಿಚಾರಣೆಗೆ ಒಳಪಡಿಸಬೇಕು, ಯಾರ್ಯಾರಿಗೆ ನೋಟಿಸ್‌‍ ಕೊಡಬೇಕು, ಸಂತ್ರಸ್ತೆಯರನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಳ್ಳುವುದು, ಈ ಪ್ರಕರಣ ಸಂಬಂಧ ಎಷ್ಟು ದೂರುಗಳು ದಾಖಲಾಗಿವೆ. ಎಲ್ಲಾ ದೂರುಗಳನ್ನು ಆಧರಿಸಿ ಒಟ್ಟಾಗಿ ತನಿಖೆ ಮಾಡಬೇಕಾ ಎಂಬುದರ ಬಗ್ಗೆ ಸಮಾಲೋಚನೆ ನಡೆಸಲಾಯಿತು.
6
+ ನಂತರದ ದಿನಗಳಲ್ಲಿ ಈ ತಂಡ ಹಾಸನಕ್ಕೆ ತೆರಳಿ ತನಿಖೆ ಕೈಗೊಳ್ಳಲಿದೆ.ಏನಿದು ಪ್ರಕರಣ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಾಸನದಲ್ಲಿ ಹರಿದಾಡುತ್ತಿದ್ದು, ರಾಜ್ಯ ಮಹಿಳಾ ಆಯೋಗ ಪ್ರಕರಣವನ್ನು ಎಸ್‌‍ಐಟಿ ತನಿಖೆಗೆ ವಹಿಸಬೇಕೆಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಿದೆ.
eesanje/url_46_163_2.txt ADDED
@@ -0,0 +1,5 @@
 
 
 
 
 
 
1
+ ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು
2
+ ಬೆಂಗಳೂರು,ಏ.30-ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾ ಎಚ್‌.ಡಿ.ದೇವೇಗೌಡರ ಅನುಮೋದನೆಯಂತೆ ಜೆಡಿಎಸ್‌ ಮಹಾ ಪ್ರಧಾನ ಕಾರ್ಯದರ್ಶಿ ಕೆ.ಆರ್‌.ಶಿವಕುಮಾರ್‌ ಅವರು ಪ್ರಜ್ವಲ್‌ ರೇವಣ್ಣ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
3
+ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅವರ ಮೇಲೆ ಆರೋಪ ಕೇಳಿಬಂದಿರುವ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಕೋರ್‌ ಕಮಿಟಿ ಸಭೆಯಲ್ಲಿ ಅಮಾನತು ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ತೀರ್ಮಾನದ ಬೆನ್ನಲ್ಲೇ ಪಕ್ಷದಿಂದ ಅಮಾನತು ಆದೇಶ ಹೊರಬಿದ್ದಿದೆ.
4
+ ಜೆಡಿಎಸ್‌ ಪಕ್ಷದ ಸಂವಿಧಾನ ಮತ್ತು ನಿಯಮಗಳಡಿ ಪ್ರಜ್ವಲ್‌ ರೇವಣ್ಣ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಹಾಸನ ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರಜ್ವಲ್‌ ರೇವಣ್ಣ ಅವರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಪಕ್ಷದ ಘನತೆ, ಗೌರವಗಳಿಗೆ ಮತ್ತು ಮುಖಂಡತ್ವಕ್ಕೆ ಸಾಕಷ್ಟು ಧಕ್ಕೆ ಉಂಟಾಗಿರುತ್ತದೆ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.
5
+ ಮಹಿಳೆಯರ ಮೇಲೆ ಎಸಗಿದೆ ಎಂದು ಹೇಳಲಾಗಿರುವ ಚಿತ್ರಗಳು ಮತ್ತುವಿಡಿಯೋಗಳ ಬಗ್ಗೆ ರಾಜ್ಯದಲ್ಲಿನ ಪ್ರಸ್ತುತ ಕಾಂಗ್ರೆಸ್‌ ಸರ್ಕಾರ ಒಂದು ವಿಶೇಷ ತನಿಖಾ ದಳವನ್ನು ರಚಿಸಿದೆ. ಆ ತನಿಖಾ ದಳವು ಈಗಾಗಲೇ ತನ್ನ ಕಾರ್ಯಗಳನ್ನು ಪ್ರಾರಂಭಿಸಿದೆ ಎಂದು ಹೇಳಲಾಗಿದೆ.
eesanje/url_46_163_4.txt ADDED
@@ -0,0 +1,7 @@
 
 
 
 
 
 
 
 
1
+ ಉತ್ತರಾಖಂಡದಲ್ಲಿ ಪತಂಜಲಿ ಉತ್ಪನ್ನಗಳ ಲೈಸೆನ್ಸ್ ರದ್ದು : ಆರ್‌.ಅಶೋಕ್‌ ಅವರೇ ಈಗೇನ್ ಹೇಳ್ತೀರಾ..?
2
+ ಬೆಂಗಳೂರು, ಏ.30-ಪತಂಜಲಿ ಸಂಸ್ಥೆ ಉತ್ಪನ್ನಗಳ ಗುಣಮಟ್ಟದ ಪರೀಕ್ಷೆ ನಡೆಸಲು ಮುಂದಾದಾಗ ವಿರೋಧ ವ್ಯಕ್ತ ಪಡಿಸಿದ್ದ ವಿಪಕ್ಷ ನಾಯಕ ಆರ್‌.ಅಶೋಕ್‌ ಈಗ ಉತ್ತರಾಖಂಡ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಏನು ಹೇಳುತ್ತಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಪ್ರಶ್ನಿಸಿದ್ದಾರೆ.
3
+ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, ಉತ್ತರಕಾಂಡದ ಬಿಜೆಪಿ ಸರ್ಕಾರ ಪತಂಜಲಿ ಸಂಸ್ಥೆಯ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದೆ. ಜನರ ಆರೋಗ್ಯದ ದೃಷ್ಟಿಯಿಂದ ರಾಜ್ಯದಲ್ಲಿ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ನಾನು ಆದೇಶಿಸಿದ್ದೆ. ಆಗ ತನ್ನ ಮನೆಗೇ ಬೆಂಕಿ ಬಿದ್ದಂತೆ ಚಡಪಡಿಸಿದ್ದ ವಿಪಕ್ಷ ನಾಯಕ ಆರ್‌.ಅಶೋಕ್‌ ಪತಂಜಲಿ ಸಂಸ್ಥೆ ಮೇಲೆ ದ್ವೇಷ ಯಾಕೆ ಎಂದು ನನ್ನನ್ನು ಪ್ರಶ್ನಿಸಿದ್ದರು.
4
+ ಈಗ ಅವರದ್ದೇ ಪಕ್ಷ ಅಧಿಕಾರದಲ್ಲಿರುವ ಉತ್ತರಕಾಂಡ ಸರ್ಕಾರ ಪತಂಜಲಿಯ 14 ಉತ್ಪನ್ನಗಳ ಪರವಾನಿಗೆಯನ್ನೇ ರದ್ದು ಮಾಡಿದೆ. ಈಗ ಅಶೋಕ್ರವರು ನನಗೆ ಕೇಳಿದ್ದ ಪ್ರಶ್ನೆಯನ್ನು ಉತ್ತರಕಾಂಡ ಸರ್ಕಾರಕ್ಕೂ ಕೇಳುತ್ತಾರೆಯೇ ಎಂದು ತಿರುಗೇಟು ನೀಡಿದ್ದಾರೆ. ಸುಳ್ಳು ಜಾಹೀರಾತು ನೀಡಿ ಜನರಿಗೆ ವಂಚಿಸಿದ್ದ ಬಾಬುರಾಮ್‌ದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಒಡೆತನದ ಪತಂಜಲಿ ಸಂಸ್ಥೆಗೆ ಸುಪ್ರೀಂ ಕೋರ್ಟ್‌ ಛೀಮಾರಿ ಹಾಕಿದೆ.
5
+ ಸರ್ವೋಚ್ಚ ನ್ಯಾಯಾಲಯವೇ ಪತಂಜಲಿ ಸಂಸ್ಥೆಯ ವಿಶ್ವಾಸರ್ಹತೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾಗ ವಿಪಕ್ಷ ನಾಯಕ ಆರ್‌.ಅಶೋಕ್‌ ಪತಂಜಲಿ ಜನ ಮೆಚ್ಚಿದ ಬ್ರ್ಯಾಂಡ್‌ ಎಂದು ಸರ್ಟಿಫಿಕೇಟ್‌ ಕೊಟ್ಟಿದ್ದರು. ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸುವುದೇ ಅಪರಾಧವೆಂಬಂತೆ ವರ್ತಿಸಿದ್ದರು. ಈಗ ಅವರ ಪಕ್ಷದ ನೇತೃತ್ವದ ಉತ್ತರಕಾಂಡ ಸರ್ಕಾರ ಕೈಗೊಂಡ ಕ್ರಮಗಳನ್ನು ಪ್ರಶ್ನಿಸುವ ತಾತ್ತು ಅಶೋಕ್‌ ಅವರಿಗೆ ಇದೆಯೇ ಎಂದು ಪ್ರಶ್ನಿಸಿದ್ದಾರೆ.
6
+ ಮತ್ತೊಂದು ಪೋಸ್ಟ್‌ನಲ್ಲಿ ದಿನೇಶ್‌ ಗುಂಡೂರಾವ್‌, ಕಮಲ ಪಾಳೆಯದವರೇ ಯಾರು ಡೇಂಜರ್‌, ನಿಮ್ಮ ಕಮಲ ದಳದಲ್ಲೇ ಇದೆ ಡೇಂಜರ್‌ ! ಕಣ್ಮುಂದೆ ಕಿರಾತಕ ಕೃತ್ಯಗಳನ್ನ ಕಂಡೂ, ಕಣ್ಣಾ ಮುಚ್ಚಾಲೆ ಆಡಿದ ನೀವು ಡೇಂಜರ್‌ ಎಂದು ಹಾಸನದ ಪೆನ್‌ಡ್ರೈವ್‌ ಪ್ರಕರಣ ಕುರಿತು ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ.
7
+ ಮಹಿಳೆಯರ ಮಾಂಗಲ್ಯದ ಬಗ್ಗೆ ಮಾತಾಡುವ ಮೋದಿಯವರೇ.. ಹುಬ್ಬಳ್ಳಿಯ ಹೆಣ್ಣುಮಗಳ ಹತ್ಯೆಗೆ ಅಬ್ಬರಿಸಿದಷ್ಟು, ಹಾಸನದ ಹೆಣ್ಣುಮಕ್ಕಳಿಗಾದ ಅನ್ಯಾಯಗಳ ಬಗ್ಗೆ ಏಕೆ ಅರ್ಭಟಿಸಲಿಲ್ಲ. ಯಾರಿಗೆ ಆಶೀರ್ವದಿಸಿ ಎಂದು ಕೇಳಿದ್ದಿರೋ, ಅವರ ಅಶ್ಲೀಲದ ಬಗ್ಗೆ ನಿಮಗೆ ಮೊದಲೇ ತಿಳಿಸಿದ್ದರಂತಲ್ಲ.. ಆದರೂ, ನಿಮ್ಮ ಮಡಿಲಲ್ಲಿಟ್ಟುಕೊಂಡು ಮತ ಕೇಳಲು ಅಸಹ್ಯ ಎನಿಸಲಿಲ್ಲವೇ. ದುಷ್ಕೃತ್ಯಗಳನ್ನ ನಡೆಸಿದ ವ್ಯಕ್ತಿಯನ್ನು ನಿಮ್ಮ ಪಕ್ಷ ಜೊತೆಗಿಟ್ಟುಕೊಂಡಿರುವುದು ದುರಂತವೇ ಸರಿ. ಕನ್ಯೆಯರ ಕಣ್ಣೀರಿಗೆ ಬೆಲೆ ಕೊಡದ ಕಮಂಗಿಗಳಿಗೆ ಕಮಲದಳ ರಾಜಕೀಯ ದಾಳವಾಗದಿರಲಿ ಎಂದು ಹೇಳಿದ್ದಾರೆ.
eesanje/url_46_163_5.txt ADDED
@@ -0,0 +1,5 @@
 
 
 
 
 
 
1
+ ಶ್ರೀನಿವಾಸ ಪ್ರಸಾದ್‌ ಅವರ ಅಂತಿಮ ದರ್ಶನ ಪಡೆಯದ ಮೋದಿ : ಕಾಂಗ್ರೆಸ್‌‍ ಪ್ರಶ್ನೆ
2
+ ಬೆಂಗಳೂರು, ಏ.30-ಕೇಂದ್ರದ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್‌ ಅವರ ಅಂತಿಮ ದರ್ಶನವನ್ನು ಪ್ರಧಾನಿ ನರೇಂದ್ರ ಮೋದಿ ಪಡೆಯದಿರುವುದನ್ನು ಕಾಂಗ್ರೆಸ್‌‍ ಪ್ರಶ್ನಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿರುವ ಕಾಂಗ್ರೆಸ್‌‍, ಪ್ರಧಾನಿ ಮೋದಿಯವರು ನಿನ್ನೆ ಕರ್ನಾಟಕದಲ್ಲೇ ಇದ್ದರು, ಕರ್ನಾಟಕ ಕಂಡ ಮುತ್ಸದ್ದಿ ರಾಜಕಾರಿಣಿ, ಶೋಷಿತ ಸಮುದಾಯಗಳ ಗಟ್ಟಿ ಧ್ವನಿಯಾಗಿದ್ದ ಶ್ರೀನಿವಾಸ್‌‍ ಪ್ರಸಾದ್‌ ಅವರು ತೀರಿಕೊಂಡಿದ್ದು ಪ್ರಧಾನಿಯಯವರಿಗೂ ತಿಳಿದಿತ್ತು.
3
+ ಶ್ರೀನಿವಾಸ್‌‍ ಪ್ರಸಾದ್‌ ಅವರು ಮೋದಿಯವರ ಸಂಸತ್‌ ಸಹೋದ್ಯೋಗಿ ಹಾಗೂ ಅವರದ್ದೇ ಪಕ್ಷದ ಹಾಲಿ ಸಂಸದ ಕೂಡ. ಹೀಗಿದ್ದೂ ಶ್ರೀನಿವಾಸ್‌‍ ಪ್ರಸಾದ್‌ ಅವರ ಪಾರ್ಥಿವ ಶರೀರ ನೋಡಿ ಗೌರವ ಸೂಚಿಸುವ ಕನಿಷ್ಠ ಸೌಜನ್ಯವನ್ನು ಪ್ರಧಾನಿಯವರು ತೋರಿಸಲಿಲ್ಲ ಎಂದು ಆರೋಪಿಸಿದೆ.
4
+ ಇದು ಮೋದಿಯವರಿಗೆ ಶೋಷಿತ ಸಮುದಾಯಗಳ ಬಗ್ಗೆ ಇರುವ ತಾತ್ಸಾರವೋ ಅಥವಾ ನಾಯಕರನ್ನು ಬಳಸಿ ಬಿಸಾಡುವ ಕುಯುಕ್ತಿಯ ಬುದ್ಧಿಯೊ? ಶ್ರೀನಿವಾಸ್‌‍ ಪ್ರಸಾದ್‌ ಅವರ ಸೈದ್ದಂತಿಕ ಭಿನ್ನತೆಯ ಕಾರಣಕ್ಕೆ ತೋರಿದ ದ್ವೇಷವೋ ಎಂದು ಕಾಂಗ್ರೆಸ್‌‍ ಪ್ರಶ್ನಿಸಿದೆ.
5
+ ಬಿಜೆಪಿ ಶ್ರೀನಿವಾಸ್‌‍ ಪ್ರಸಾದ್‌ರನ್ನು ಪಕ್ಷಕ್ಕೆ ಸೇರಿಸಿಕೊಂಡ ನಂತರ ಮೂಲೆಗುಂಪು ಮಾಡಿತ್ತು, ಈಗ ಮೋದಿಯವರು ನಿರ್ಲಕ್ಷ್ಯ ಮಾಡಿದ್ದಾರೆ. ಒಬ್ಬ ಹಿರಿಯ ಮುತ್ಸದ್ದಿ ನಾಯಕನಿಗೆ ಬಿಜೆಪಿ ಮತ್ತು ಮೋದಿ ಕೊಡುವ ಗೌರವ ಇದೇನಾ ಎಂದು ಖಾರವಾಗಿ ಪ್ರತಿಕ್ರಿಯಿಸಲಾಗಿದೆ.
eesanje/url_46_163_6.txt ADDED
@@ -0,0 +1,7 @@
 
 
 
 
 
 
 
 
1
+ ರಾಜ್ಯದಲ್ಲಿ ಮಾವಿನ ಹಣ್ಣಿಗೂ “ಬರಗಾಲ”, ಗಗನಕ್ಕೇರಿದ ಬೆಲೆ
2
+ ಬೆಂಗಳೂರು, ಏ.30-ಏಪ್ರಿಲ್‌-ಮೇ ಬಂತೆಂದರೆ ಎಲ್ಲಿ ನೋಡಿದರೂ ಹಣ್ಣುಗಳ ರಾಜ. ಮಾವಿನ ಹಣ್ಣಿನ ಗಮಲು ಪಸರಿಸುತ್ತಿತ್ತು. ಆದರೆ ಈ ಬಾರಿ ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದು, ಮಾವಿನ ಅಬ್ಬರವೇ ಇಲ್ಲದಂತಾಗಿದೆ. ಈ ಸಮಯದಲ್ಲಿ ರಾಜ್ಯದ ವಿವಿಧ ಜಿಲ್ಲೆ ಪಟ್ಟಣ ನಗರದ ರಸ್ತೆ ಬದಿ ರಾಶಿರಾಶಿ ಮಾವಿನ ಹಣ್ಣುಗಳ ವ್ಯಾಪಾರ ಜೋರಾಗಿ ನಡೆಯುತ್ತಿತ್ತು.
3
+ ಬರದಿಂದಾಗಿ ಇಳುವರಿ ಕುಂಠಿತವಾಗಿ ಬೆಲೆ ಏರಿಕೆಯಾಗಿದೆ. ಇದರಿಂದ ಜನಸಾಮಾನ್ಯರು ಕೈಗೆಟುಕದಂತೆ ಹಣ್ಣು ಹುಳಿಯಾಗಿದೆ. ಪ್ರತಿ ವರ್ಷ ಕೆಜಿ ಹಣ್ಣಿಗೆ 70ರಿಂದ 100 ರೂ.ಗೆ ಮಾರಾಟವಾಗುತ್ತಿತ್ತು. ಆದರೆ ಈ ಬಾರಿ ಕೆಜಿಗೆ 300 ರೂ.ಗೆ ತಲುಪಿದೆ. ರಾಜ್ಯ ಮಾತ್ರ ವಲ್ಲದೆ ಹೊರರಾಜ್ಯದಲ್ಲೂ ಸಹ ನಿರೀಕ್ಷೆಯಂತೆ ಮಾವು ಬೆಳೆಯಿಲ್ಲ. ಪೂರೈಕೆ ಇಲ್ಲದೆ ಬೆಲೆ ಗಗನಕ್ಕೇರಿದೆ.
4
+ ಮಾವು ಹೂ ಬಿಡುವ ಸಂದರ್ಭದಲ್ಲಿ ಮಳೆ ಕೈಕೊಟ್ಟಿದ್ದು, ಗಿಡದಲ್ಲೇ ಉಳಿದಿದ್ದ ಪೀಚುಗಳು ಸಹ ಬಿಸಿಲಿನ ಧಗೆಗೆ ಉದುರು ಹೋಗಿದ್ದು, ಬೆಳೆ ರಕ್ಷಿಸಿಕೊಳ್ಳಲು ರೈತರು ಟ್ಯಾಂಕರ್‌ಗಳ ಮೂಲಕ ನೀರು ಹಾಯಿಸಿದ್ದು, ಜೊತೆಗೆ ಸಾಕಷ್ಟು ಔಷಧಿಯನ್ನು ಸಹ ಸಿಂಪಡಿಸಿದರು.ಇದ್ಯಾವುದೇ ಸಹ ಪ್ರಯೋಗವಾಗದೇ ಹವಾಮಾನದ ಮುಂದೆ ನಮ್ಮ ಕಸರತ್ತು ಏನೂ ಕೂಡ ನಡೆಯದಂತಾಗಿ ಇಳುವಳಿ ಭಾರೀ ಕುಂಠಿತವಾಗಿದೆ. ಹಾಗಾಗಿ ಬೆಲೆ ಗಗನಕ್ಕೇರಿದೆ.
5
+ ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಾಲೂರು, ಮಾಗಡಿ ಪ್ರದೇಶದಲ್ಲಿ ಹೆಚ್ಚಿನ ಮಾವು ಬೆಳೆಯಲಾಗುತ್ತಿತ್ತು. ಬೆಂಗಳೂರಿಗೆ ಅಧಿಕ ಪ್ರಮಾಣದಲ್ಲಿ ಮಾಲು ಬರುತ್ತಿತ್ತು. ಈ ಬಾರಿ ಇಳುವಳಿ ಇಲ್ಲದೆ ಕೆಲವೇ ಟನ್‌ಗಳಷ್ಟೇ ಹಣ್ಣು ಬಂದಿದ್ದು, ನಗರದ ಆಯ್ದ ಪ್ರದೇಶಗಳಲ್ಲಿ ಮಾತ್ರ ಕಾಣಬಹುದಾಗಿದೆ.
6
+ ಬಂದಿರುವ ಹಣ್ಣುಗಳು ಸಹ ಅಷ್ಟೇನೂ ಗಾತ್ರ ಹೊಂದಿಲ್ಲ. ಜೊತೆಗೆ ರುಚಿಯೂ ಕೂಡ ಇಲ್ಲದಂತಾಗಿದೆ. ಅವು ಕೂಡ ನೈಸರ್ಗಿಕವಾಗಿ ಹಣ್ಣಾದಂತಿಲ್ಲ. ಬಿಸಿಲಿಗೆ ಕಲ್ಲರ್‌ ಬಂದಿದ್ದು ಬಲವಂತವಾಗಿ ಹಣ್ಣು ಮಾಡಲಾಗಿದ್ದು, ರುಚಿ ಇಲ್ಲದಂತಾಗಿದೆ.
7
+ ಬೆಲೆ ನೋಡುವುದಾದರೆ ಮಲಗೋಬ 200ರಿಂದ 250, ಬಾದಾಮಿ 200, ಸೇಂದೂರ 150, ರಸಪುರಿ 150ಗೆ ಮಾರಾಟ ಮಾಡಲಾಗುತ್ತಿದ್ದು, ಗ್ರಾಹಕರು ಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ.ಈ ಸಮಯದಲ್ಲಿ ಬುಟ್ಟಿಗಟ್ಟಲೆ ಹಣ್ಣು ಕೊಂಡು ತಿನ್ನುತ್ತಿದ್ದ ಜನ ಹಣ್ಣಿನ ಬರಹರಿಸಿಕೊಳ್ಳಲು ಕೆಜಿ ಲೆಕ್ಕದಲ್ಲಿ ಕೊಂಡು ತಿನ್ನುವಂತಾಗಿದೆ.
eesanje/url_46_163_7.txt ADDED
@@ -0,0 +1,6 @@
 
 
 
 
 
 
 
1
+ ಮೇ.10ರಂದು ರಿಸಲ್ಟ್
2
+ ಬೆಂಗಳೂರು,ಏ.30-ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಫಲಿತಾಂಶ ಮೇ 10ರಂದು ಪ್ರಕಟವಾಗುವ ಸಂಭವವಿದೆ. ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು ತೆಗೆದುಕೊಂಡಿದ್ದು ಎಲ್ಲವೂ ನಿರೀಕ್ಷೆಯಂತೆ ನಡೆದು ಮೇ 10ರಂದು ಫಲಿತಾಂಶ ಹೊರಬೀಳಲಿದೆ.
3
+ 2024ನೇ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು 4.28 ಲಕ್ಷ ಬಾಲಕಿಯರು ಸೇರಿದ್ದರು.
4
+ ಇನ್ನು ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು 41,375 ರೀ ಎಕ್ಸಾಮ್‌ ಬರೆದಿದ್ದ ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ. ಹೀಗಾಗಿ ಇವರೆಲ್ಲರ ಭವಿಷ್ಯ ಮೇ 10 ರಂದು ನಿರ್ಧಾರ ಆಗಲಿದೆ.
5
+ ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳು ಫಲಿತಾಂಶ ನೋಡಲು ಮೊದಲಿಗೆ ತಮ್ಮ ರಿಜಿಸ್ಟರ್‌ ನಂಬರ್‌ / ರೋಲ್‌ ನಂಬರ್‌ ಹೊಂದಿರಬೇಕು. ವಿದ್ಯಾರ್ಥಿಗಳು, ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್‌ ನಂಬರ್‌ (ನೋಂದಣಿ ಸಂಖ್ಯೆ) ಮೂಲಕವೇ ಕರ್ನಾಟಕ ಶಾಲೆ ಪರೀಕ್ಷೆ ಮೌಲ್ಯ ನಿರ್ಣಯ ಮಂಡಳಿ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು.
6
+ ...inಗೆ ಭೇಟಿ ನೀಡಬಹುದು. ಈ ಮೂಲಕವಾಗಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಮೇ 10 ರಂದು ನಿರ್ಧಾರ ಆಗಲಿದೆ. ಹಾಗೇ ಫಲಿತಾಂಶವನ್ನ ವೀಕ್ಷಿಸಲು ಕೆಲವು ಕಡೆ ವಿಶೇಷ ವ್ಯವಸ್ಥೆ ಮಾಡುವ ನಿರೀಕ್ಷೆ ಇದೆ.
eesanje/url_46_163_8.txt ADDED
@@ -0,0 +1,7 @@
 
 
 
 
 
 
 
 
1
+ ರೇವಣ್ಣ-ಸಿದ್ದರಾಮಯ್ಯ ನಡುವೆ ಒಪ್ಪಂದ: ಪ್ರಹ್ಲಾದ್‌ ಜೋಶಿ ಗಂಭೀರ ಆರೋಪ
2
+ ಹುಬ್ಬಳ್ಳಿ,ಏ.30-ಮಾಜಿ ಸಚಿವ ಎಚ್‌.ಡಿ. ರೇವಣ್ಣ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಒಪ್ಪಂದ ಇರಬಹುದು ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಪ್ರಜ್ವಲ್‌ ರೇವಣ್ಣ ಮೇಲೆ ಸರ್ಕಾರ ತಕ್ಷಣ ಎಫ್‌ಐಆರ್‌ ಹಾಕಿಲ್ಲ. ಅಷ್ಟೇ ಅಲ್ಲದೇ ಪ್ರಜ್ವಲ್‌ ಅವರನ್ನು ಓಡಿ ಹೋಗೋಕ್ಕೆ ಬಿಟ್ಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಗಂಭೀರ ಆರೋಪ ಮಾಡಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದ ವಿಚಾರದಲ್ಲಿ ಸರ್ಕಾರ ಏಕೆ ಇನ್ನು ಕ್ರಮ ಕೈಗೊಂಡಿಲ್ಲ. ಸಿದ್ದರಾಮಯ್ಯ ಮತ್ತು ರೇವಣ್ಣ ನಡುವೆ ಒಪ್ಪಂದ ಇರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಕೂಡಲೇ ರಾಜ್ಯ ಪೊಲೀಸರು ಸಂಸದ ಪ್ರಜ್ವಲ್‌ ರೇವಣ್ಣನನ್ನು ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದರು.
4
+ ಇನ್ನು ಪ್ರಜ್ವಲ್‌ ವಿದೇಶಕ್ಕೆ ಹೋಗಲು ಬಿಜೆಪಿಯವರು ಸಹಾಯ ಮಾಡಿದ್ದಾರೆಂಬ ಕಾಂಗ್ರೆಸ್‌ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಜೋಶಿ, ಕೇಂದ್ರಕ್ಕೆ ಏನಾದರೂ ಕನಸು ಬೀಳುತ್ತಾ? ಇವರು ಪ್ರಜ್ವಲ್‌ ಮೇಲೆ ಶೀಘ್ರ ಎಫ್‌ಐಆರ್‌ನ್ನು ದಾಖಲಿಸಿಲ್ಲ ಯಾಕೆ? ಎಫ್‌ಐಆರ್‌ ಆಗುವ ಮುಂಚೆ ಯಾಕೆ ಅರೆಸ್ಟ್ ಮಾಡಲಿಲ್ಲ. ಇದು ಆತ್ಯಂತ ಬೇಜಾವ್ದಾರಿ ಹೇಳಿಕೆ ಎಂದರು.
5
+ ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸರಿಯಾದ ರೀತಿಯಲ್ಲಿ ತನಿಖೆಯಾಗಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ, ಆದರೆ ಈ ಬಗ್ಗೆ ಯಾರನ್ನು ರಕ್ಷಣೆ ಮಾಡುವ ಪ್ರಶ್ನೆ ನಮ್ಮ ಮುಂದೆ ಇಲ್ಲ ಎಂದು ಹೇಳಿದರು.
6
+ ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಗೆ ನಮಗೇನೂ ಎಫೆಕ್ಟ್‌ ಆಗಲ್ಲ, ತಪ್ಪು ಮಾಡಿದವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕು. ಜೆಡಿಎಸ್‌ ಒಂದು ಇಂಡಿಪೆಂಡೆಂಟ್‌ ಪಕ್ಷ. ಮಾಜಿ ಪ್ರಧಾನಿ ಎಚ್‌.ಡಿ.ದೇವೆಗೌಡರ ಮೊಮ್ಮಗ ಆಗಿರುವ ಕಾರಣಕ್ಕೆ ಸೂಕ್ಷ್ಮ ವಿಚಾರವಾಗಿದೆ ಎಂದರು.
7
+ ನಾಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಹುಬ್ಬಳ್ಳಿಗೆ ಬರಲಿದ್ದಾರೆ. ಮೋದಿ ಅವರ ನಂತರ ದೇಶದಲ್ಲಿ ಅತ್ಯಂತ ಹೆಮ್ಮೆಯ ನಾಯಕರು. ಬಿಜೆಪಿ ಪಕ್ಷವನ್ನು ಕಟ್ಟಿ ಬೆಳಸಿದ್ದಾರೆ. ಜನರಿಗೆ ಅವರನ್ನು ನೋಡುವ ಕಾತುರ ಇದೆ ಎಂದು ಅವರು ಹೇಳಿದರು.
eesanje/url_46_163_9.txt ADDED
@@ -0,0 +1,5 @@
 
 
 
 
 
 
1
+ 2ನೇ ಹಂತದ 14 ಕ್ಷೇತ್ರಗಳಲ್ಲಿ ನಾಳೆಯಿಂದ ಅಂಚೆ ಮತದಾನ
2
+ ಬೆಂಗಳೂರು, ಏ.30-ಮೇ 7ರಂದು ಮತದಾನ ನಡೆಯುವ ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ ಮೂರು ದಿನಗಳ ಕಾಲ ಅಂಚೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ.
3
+ ಉತ್ತರ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರತಗಳಲ್ಲಿ ಅಂಚೆ ಮತದಾನ ಕೇಂದ್ರಗಳನ್ನು ತೆರೆಯಲಾಗಿದೆ. ನಾಳೆಯಿಂದ ಮೇ 3ರವರೆಗೆ ಪ್ರತಿ ದಿನ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಅಂಚೆ ಮತದಾನ ಮಾಡಬಹುದಾಗಿದೆ.
4
+ ಅಗತ್ಯ ಸೇವೆಗಳ ಇಲಾಖೆಗಳಿಗೆ ಸಂಬಂಧಿಸಿದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಳಾಖೆಗಳ ಸಿಬ್ಬಂದಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಭಾರತ ಚುನಾವಣಾ ಆಯೋಗ ಅಂಚೆ ಮತದಾನ ಕೇಂದ್ರಗಳನ್ನು ತೆರೆದಿದ್ದು, ಅರ್ಹ ಮತದಾರರ ಅಂಚೆ ಮತಪತ್ರಗಳ ಸೌಲಭ್ಯವನ್ನು ಬಳಸಿಕೊಳ್ಳುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
5
+ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್‌, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಂಚೆ ಮತದಾನ ಕೇಂದ್ರಗಳನ್ನು ತೆರೆಯಲಾಗಿದೆ.
eesanje/url_46_164_10.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಪ್ರಜ್ವಲ್‌ ರೇವಣ್ಣನವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಕುರಿತು ಹಾಸನದ ಪ್ರಮುಖರೊಬ್ಬರು ಬರೆದಿದ್ದ ಪತ್ರ ವೈರಲ್
2
+ ಬೆಂಗಳೂರು,ಏ.29-ರಾಜ್ಯಾದ್ಯಂತ ಭಾರೀ ವಿವಾದದ ಬಿರುಗಾಳಿಯನ್ನೇ ಸೃಷ್ಟಿಸಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರಿಗೆ ಹಾಸನದ ಪ್ರಮುಖರೊಬ್ಬರು ಪತ್ರ ಬರೆದಿರುವುದು ಬೆಳಕಿಗೆ ಬಂದಿದೆ.
3
+ 2023 ಡಿಸೆಂಬರ್‌ 8ರಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರಗೆ ಹೊಳೆನರಸೀಪುರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ದೇವರಾಜ ಗೌಡ ಎಂಬುವರು ಪ್ರಜ್ವಲ್‌ ರೇವಣ್ಣನವರಿಗೆ ಸಂಬಂಧಿಸಿದ ಎನ್ನಲಾದ ಅಶ್ಲೀಲ ವಿಡಿಯೋಗಳ ಕುರಿತು ಗಮನ ಸೆಳೆದಿದ್ದರು.
4
+ ವಿಜಯೇಂದ್ರರಿಗೆ ಎರಡು ಪುಟಗಳ ಪತ್ರ ಬರೆದಿದ್ದ ದೇವರಾಜ ಗೌಡ ಹಾಸನದಲ್ಲಿ ಪ್ರಜ್ವಲ್‌ ರೇವಣ್ಣನವರಿಗೆ ಸೇರಿದ ಸುಮಾರು 3 ಸಾವಿರ ಅಶ್ಲೀಲ ವಿಡಿಯೋಗಳು ಜಿಲ್ಲೆಯಾದ್ಯಂತ ಹರಿದಾಡುತ್ತಿವೆ. ಸರ್ಕಾರಿ ಅಧಿಕಾರಿಗಳು, ಯುವತಿಯರು, ಮನೆಗೆಲೆಸದವರು ಸೇರಿದಂತೆ ಅನೇಕರು ಈ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ.
5
+ ಪೆನ್‌ಡ್ರೈವ್‌ ಈಚೆ ಬರುತ್ತಿದ್ದಂತೆ ಇದೀಗ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಸಂತ್ರಸ್ತರು ಪ್ರಜ್ವಲ್‌ ರೇವಣ್ಣಗೆ ಬ್ಲಾಕ್‌ಮೇಲ್‌ ಮಾಡುತ್ತಿದ್ದಾರೆ. ಇದರ ಬಗ್ಗೆ ನೀವು ಗಮನಹರಿಸಬೇಕೆಂದು ದೇವರಾಜ ಗೌಡ ಪತ್ರದಲ್ಲಿ ಮನವಿ ಮಾಡಿದ್ದರು.
6
+ ಪ್ರಜ್ವಲ್‌ ರೇವಣ್ಣ ಇದರಲ್ಲಿ ಶಾಮೀಲಾಗಿರುವುದು ಕಂಡುಬಂದಿದೆ. ಮಹಿಳೆಯರನ್ನು ಅಕ್ರಮ ಚಟುವಟಿಕೆಗಳಿಗೆ ಬಳಸಿಕೊಂಡಿರುವ ಬಗ್ಗೆ ಜಿಲ್ಲೆಯಾದ್ಯಂತ ಗುಸುಗುಸು ಹಬ್ಬಿದೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಕುಟುಂಬದ ವಿರುದ್ಧ ಹಲವು ಆರೋಪಗಳು ಕೇಳಿಬಂದಿವೆ. ನನಗೆ ತಿಳಿದಿರುವ ಮಾಹಿತಿ ಪ್ರಕಾರ 2976 ವಿಡಿಯೋಗಳಿವೆ.
7
+ ಕೆಲವು ವಿಡಿಯೋಗಳನ್ನು ಮಹಿಳೆಯರಿಗೆ ತೋರಿಸಿ ಬ್ಲಾಕ್‌ಮೇಲ್‌ ಮಾಡಿ ಲೈಂಗಿಕ ಚಟುವಟಿಕೆಗಳಿಗೆ ಪ್ರಜ್ವಲ್‌ ರೇವಣ್ಣ ಬಳಸಿಕೊಂಡಿದ್ದಾರೆ ಎಂಬ ಆರೋಪವಿದೆ. ಈಗಾಗಲೇ ಪೆನ್‌ಡ್ರೈವ್‌ನ್ನು ಹಾಸನ ಜಿಲ್ಲೆಯ ಕೆಲವು ಕಾಂಗ್ರೆಸ್‌ ನಾಯಕರು ಎಐಸಿಸಿ ಅಧ್ಯಕ್ಷರಿಗೆ ತಲುಪಿಸಿದ್ದಾರೆ ಎಂಬ ಮಾಹಿತಿ ಇದೆ. ನಾವು ಇಂಥ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕೆಂದು ಪತ್ರದಲ್ಲಿ ಹೇಳಿದ್ದರು.
8
+ ಜೆಡಿಎಸ್‌ ಜೊತೆ ನಾವು ಮೈತ್ರಿ ಮಾಡಿಕೊಂಡಿರುವುದರಿಂದ ಹಾಸನದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಬೆಂಬಲಿಸಿದರೆ ಬಿಜೆಪಿಗೆ ಹೊಡೆತ ಬೀಳಲಿದೆ. ಏಕೆಂದರೆ ಕಾಂಗ್ರೆಸ್‌ ನಾಯಕರ ಕೈಗೆ ಈಗಾಗಲೇ ಪೆನ್‌ಡ್ರೈವ್‌ಗಳು ಕೈ ಸೇರಿದ್ದು, ಮತದಾನ ನಡೆಯುವ ಮುನ್ನ ಅಂದರೆ ಒಂದು ವಾರದೊಳಗೆ ಇವುಗಳನ್ನು ಮನೆಗೆ ಮನೆಗೆ ತಲುಪಿಸಲು ವ್ಯವಸ್ಥಿತವಾದ ತಂತ್ರ ಹೆಣಯಲಾಗಿದೆ.
9
+ ಮಹಿಳೆಯರನ್ನು ಅಕ್ರಮ ಚಟುವಟಿಕೆಗಳಿಗೆ ಬಳಸಿಕೊಂಡಿರುವ ಅಭ್ಯರ್ಥಿಗೆ ಬಿಜೆಪಿ ಬೆಂಬಲ ನೀಡಿದರೆ ಜಿಲ್ಲೆಯಲ್ಲಿ ಪಕ್ಷದ ಅಸ್ತಿತ್ವಕ್ಕೆ ಧಕ್ಕೆಯಾಗುತ್ತದೆ. ಇದರ ಬಗ್ಗೆ ನೀವು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕೆಂದು ದೇವರಾಜ ಗೌಡ ಅವರು ವಿಜಯೇಂದ್ರಿಗೆ ಪತ್ರದಲ್ಲಿ ಮನವಿ ಮಾಡಿದ್ದರು ಎಂಬುದು ಬಹಿರಂಗಗೊಂಡಿದೆ.
10
+ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಮೇಲ್ನೋಟಕ್ಕೆ ಇದು ವ್ಯವಸ್ಥಿತ, ಪೂರ್ವನಿಯೋಜಿತ ಕೃತ್ಯದಂತೆ ಕಾಣುತ್ತಿದೆ. ಚುನಾವಣೆ ನಡೆಯುವ ವೇಳೆ ಅದರಲ್ಲೂ ಮತದಾನಕ್ಕೆ ನಾಲ್ಕೈದು ದಿನ ಇರುವಾಗ ಪೆನ್‌ಡ್ರೈವ್‌ಗಳು ಹೊರಬಂದಿರುವ ಉದ್ದೇಶವಾದರೂ ಏನು ಪ್ರಶ್ನಿಸಿದ್ದರು.
11
+ ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ಎಚ್ಚರಿಕೆ ಹೆಜ್ಜೆ ಇಡುತ್ತಿದ್ದು, ಪಕ್ಷದ ಪ್ರಮುಖ ನಾಯಕರನ್ನು ಹೊರತುಪಡಿಸಿ ಬೇರೊಬ್ಬರು ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ನಿರ್ಬಂಧ ವಿಧಿಸಿದೆ.
eesanje/url_46_164_11.txt ADDED
@@ -0,0 +1,8 @@
 
 
 
 
 
 
 
 
 
1
+ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತಿಗೆ ಜೆಡಿಎಸ್‌ ಶಾಸಕ ಶರಣಗೌಡ ಮನವಿ
2
+
3
+ ಬೆಂಗಳೂರು,ಏ.29- ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ಆರೋಪ ಕೇಳಿಬಂದಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡುವಂತೆ ಗುರುಮಿಟ್ಕಲ್‌ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ್‌ ಅವರು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರಲ್ಲಿ ಮನವಿ ಮಾಡಿದ್ದಾರೆ.
4
+ ಈ ಸಂಬಂಧ ದೇವೇಗೌಡರು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಪಕ್ಷದ ಕೋರ್‌ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.
5
+ ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ಸರ್ಕಾರ ಎಸ್‌ಐಟಿ ತನಿಖೆಗೆ ವಹಿಸಿರುವ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಆಂತರಿಕ ಸಮಿತಿ ರಚನೆ ಮಾಡಬೇಕು. ಆ ಸಮಿತಿಯು ಪೆನ್‌ಡ್ರೈವ್‌ ಪ್ರಕರಣದ ಸತ್ಯಾಸತ್ಯತೆಯನ್ನು ನಾಡಿನ ತಾಯಂದಿರಿಗೆ ತಿಳಿಸುವಂತಾಗಲಿ, ಅಲ್ಲಿಯವರೆಗೆ ಪಕ್ಷಕ್ಕಾಗುವ ಮುಜುಗರ ತಪ್ಪಿಸಲು ರಾಜ್ಯದ 2ನೇ ಹಂತದ ಲೋಕಸಭಾ ಚುನಾವಣೆ ವೇಳೆ ವ್ಯತಿರಿಕ್ತ ಪ್ರಭಾವ ಬೀರದಿರಲು ಪ್ರಜ್ವಲ್‌ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡುವಂತೆ ಕೋರಿದ್ದಾರೆ.
6
+
7
+ ಕೆಲ ದಿನಗಳಿಂದ ರಾಜ್ಯಾದ್ಯಂತ ಹರಿದಾಡುತ್ತಿರುವ ವಿಡಿಯೋ ತುಣುಕುಗಳಿಂದ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗಿದೆ. ಪಕ್ಷದ ನಾಯಕರಾದ ನೀವು ಹೆಣ್ಣು ಮಕ್ಕಳನ್ನು ಗೌರವದಿಂದ ಕಾಣುತ್ತಿದ್ದೀರಿ ಎಂಬುದರಲ್ಲಿ ಎರಡು ಮಾತಿಲ್ಲ. 6 ದಶಕಗಳಿಗೂ ಹೆಚ್ಚು ಕಾಲ ರಾಜಕೀಯ ಜೀವನ ನಡೆಸಿಕೊಂಡು ಬಂದಿರುವ, ರಾಷ್ಟ್ರಕ್ಕೆ ಮಾದರಿಯಾದ ತತ್ವ ಸಿದ್ಧಾಂತಗಳ ಬುನಾದಿ ಮೇಲೆ ಜೆಡಿಎಸ್‌ ಅನ್ನು ಸಮರ್ಥವಾಗಿ ಕಟ್ಟಿ ಬೆಳೆಸಿದ್ದೀರಿ, ರಾಷ್ಟ್ರದ ಮೊದಲ ಕನ್ನಡಿಗ ಪ್ರಧಾನಿ ಎಂಬ ಹೆಗ್ಗಳಿಕೆಯೂ ನಿಮ್ಮದಾಗಿದೆ.
8
+ ಹೆಣ್ಣು ಸಾಕ್ಷಾತ್‌ ಕಪಿಲಸಿದ್ಧ ಮಲ್ಲಿಕಾರ್ಜುನ ಎಂಬ ಶರಣರ ವಾಣಿಯಂತೆ ಹೆಣ್ಣು ಮಕ್ಕಳನ್ನು ಗೌರವಾದರಗಳಿಂದ ನೋಡಿಕೊಂಡು ಬಂದಿದ್ದೀರಿ. ನಮ್ಮ ಪಕ್ಷದ ಚಿಹ್ನೆಯೂ ಕೂಡ ಭತ್ತದ ತೆನೆ ಹೊತ್ತ ಮಹಿಳೆಯಾಗಿದ್ದು, ಮಹಿಳೆಯರ ಬಗ್ಗೆ ಇರುವ ಗೌರವವನ್ನು ಪ್ರತಿನಿಧಿಸುತ್ತದೆ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಲಾಟರಿ ನಿಷೇಧ ಮಾಡಿ, ವಿದ್ಯಾರ್ಥಿನಿಯರಿಗೆ ಸೈಕಲ್‌ ಭಾಗ್ಯವನ್ನು ನೀಡುವ ಮೂಲಕ ಹೆಣ್ಣು ಮಕ್ಕಳ ಕಷ್ಟಕ್ಕೆ ಸ್ಪಂದಿಸಿದ್ದರು ಎಂದು ಪತ್ರದಲ್ಲಿ ಅವರು ತಿಳಿಸಿದ್ದಾರೆ.
eesanje/url_46_164_12.txt ADDED
@@ -0,0 +1,19 @@
 
 
 
 
 
 
 
 
 
 
 
 
 
 
 
 
 
 
 
 
1
+ ದಲಿತರ ಸೂರ್ಯನಂತಿದ್ದ ಸ್ವಾಭಿಮಾನಿ, ಕಳಂಕರಹಿತ ರಾಜಕಾರಣಿ ಶ್ರೀನಿವಾಸ್‌ಪ್ರಸಾದ್‌
2
+ ಬೆಂಗಳೂರು,ಏ.29-ತಮ್ಮ ರಾಜಕೀಯ ಜೀವನದ ಉದ್ದಕ್ಕೂ ಹೆಸರು ಕೆಡಿಸಿಕೊಳ್ಳದ ಶ್ರೀನಿವಾಸಪ್ರಸಾದ್‌ ಸ್ವಾಭಿಮಾನಿ ಕಳಂಕರಹಿತ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು. ಹಳೇ ಮೈಸೂರು ಭಾಗದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನ ಹೊಂದಿರುವ ಶ್ರೀನಿವಾಸ್‌ಪ್ರಸಾದ್‌, ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಎಂದೇ ಖ್ಯಾತರಾಗಿದ್ದರು.
3
+ ರಾಜಕೀಯದ ಏಳು-ಬೀಳುಗಳ ನಡುವೆ ಸ್ವಾಭಿಮಾನಕ್ಕೆ ಹೆಸರಾಗಿದ್ದ ಶ್ರೀನಿವಾಸಪ್ರಸಾದ್‌ ಅವರು ಕಳೆದ ತಿಂಗಳು ರಾಜಕೀಯದಿಂದ ನಿವೃತ್ತಿ ಪಡೆದಿದ್ದರು. ಚುನಾವಣೆಯಲ್ಲಿ ಸೋಲು – ಗೆಲುವು ಕಂಡಿದ್ದರೂ ಎಂದಿಗೂ ಅವರು ಧೃತಿಗೆಡದೇ ಅಂಬೇಡ್ಕರ್‌ ಚಿಂತನೆ, ದಲಿತಪರ ಹೋರಾಟದ ಮುಖ್ಯ ಧ್ವನಿಯಾಗಿದ್ದರು.
4
+ ದಲಿತ ನಾಯಕರಾಗಿದ್ದ, ತುಳಿತಕ್ಕೆ ಒಳಗಾದ ಪರವಾಗಿ ಸದಾ ಧ್ವನಿ ಎತ್ತುತ್ತಿದ್ದ, ನೇರ-ನಿಷ್ಠುರವಾದಿಯಾಗಿದ್ದ ಪ್ರಸಾದ್‌ ಅವರು ಸಾಕಷ್ಟು ಬಾರಿ, ನಾನು ಹಲವಾರು ಪಕ್ಷಗಳನ್ನು ಬದಲಿಸಿರಬಹುದು. ಆದರೆ ತತ್ವ ಬಿಟ್ಟಿಲ್ಲ, ನಾನು ಪಕ್ಷಾಂತರಿ ಆಗಿರಬಹುದು. ಆದರೆ ತತ್ವಾಂತರಿಯಾಗಿಲ್ಲ. ಸ್ವಾಭಿಮಾನ ಬಿಟ್ಟಿಲ್ಲ ಎನ್ನುತ್ತಿದ್ದರು. ಅದರಂತೆಯೇ ನಡೆದುಕೊಂಡಿದ್ದರು. ರಾಜಕೀಯ ಜೀವನದಲ್ಲಿ ಸ್ವಾಭಿಮಾನಕ್ಕೆ ಧಕ್ಕೆ ಉಂಟಾದಾಗ ಬಂಡಾಯವೆದ್ದಿದ್ದರು. ಪಕ್ಷ ಯಾವುದೇ ಇರಲಿ, ನಾಯಕ ಯಾರೇ ಇರಲಿ ಅವರನ್ನು ಬಿಟ್ಟು ಹೊರನಡೆದಿದ್ದ ಸ್ವಾಭಿಮಾನಿ ರಾಜಕಾರಣಿ ಎಂದೇ ಕರೆಯಿಸಿಕೊಂಡಿದ್ದರು.
5
+ ರಾಜಕೀಯ ಪ್ರವೇಶಿಸಿ 50 ವರ್ಷ ತುಂಬಿದ ಹಿನ್ನಲೆಯಲ್ಲಿ ಕಳೆದ ಮಾರ್ಚ್‌ 17 ರಂದು ಸುವರ್ಣ ಮಹೋತ್ಸವ ಆಚರಿಸಿ ಚುನಾವಣಾ ರಾಜಕೀಯ ಹಾಗೂ ಸಕ್ರಿಯ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರು. ರಾಜಕೀಯ ನಿವೃತ್ತಿ ಘೋಷಿಸಿದ್ದರೂ ಸಹ ಪ್ರಸ್ತುತ ನಡೆದ ಲೋಕಸಭಾ ಚುನಾವಣೆಯಲ್ಲಿ ಶ್ರೀನಿವಾಸ್‌ಪ್ರಸಾದ್‌ ಅವರ ಬೆಂಬಲ ಪಡೆಯಲು ಕಾಂಗ್ರೆಸ್‌ ಹಾಗೂ ಬಿಜೆಪಿ ಎರಡೂ ಪಕ್ಷಗಳು ಪ್ರಯತ್ನ ನಡೆಸಿದ್ದವು.
6
+ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀನಿವಾಸ್‌ ಪ್ರಸಾದ್‌ ಅವರ ಆರೋಗ್ಯ ವಿಚಾರಿಸುವ ನೆಪದಲ್ಲಿ ಅವರ ಮೈಸೂರಿನ ನಿವಾಸಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದರು. ಆದರೆ ಯಾರಿಗೆ ಬೆಂಬಲ ಘೋಷಿಸದ ಶ್ರೀನಿವಾಸ ಪ್ರಸಾದ್‌ ತಟಸ್ಥ ನಿಲುವು ತಾಳಿದ್ದರು.
7
+ ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಸಂಸದರು, ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಗ್ರಾಹಕ ಸೇವೆಗಳ ಸಚಿವರಾಗಿ ಕೆಲಸ ಮಾಡಿದ್ದಾರೆ. 2013ರಿಂದ 2016ರವರೆಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಖಾತೆ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೇ ರಾಜಕೀಯ ಕ್ಷೇತ್ರದಲ್ಲಿ 50 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
8
+ ಒಟ್ಟು 14 ಚುನಾವಣೆಗಳನ್ನು ಎದುರಿಸಿದ್ದು, 8 ಚುನಾವಣೆಗಳಲ್ಲಿ ಗೆದ್ದಿದ್ದಾರೆ. 6 ಬಾರಿ ಸಂಸದರಾಗಿ 2 ಬಾರಿ ಶಾಸಕರಾಗಿದ್ದ ಪ್ರಸಾದ್‌ 7 ಪ್ರಧಾನಿಗಳನ್ನು ಕಂಡಿದ್ದಾರೆ. ಹೌದು, 1974 ರಲ್ಲಿ ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಡಿ.ಸತ್ಯನಾರಾಯಣ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಎಐಡಿಎಂಕೆ ಬೆಂಬಲದೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ಪ್ರಸಾದ್‌ ಕಣಕ್ಕೆ ಇಳಿಯುವ ಮೂಲಕ ರಾಜಕೀಯ ಪ್ರವೇಶ ಮಾಡಿದ್ದರು.ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿ ಕಮಲ ಅರಳಿಸಿದ್ದ ವಿ. ಶ್ರೀನಿವಾಸ ಪ್ರಸಾದ್‌ ಅವರಿಗೆ ಸಲ್ಲುತ್ತದೆ.
9
+ 1974ರ ಮಾ.17ರಂದು ಮೈಸೂರಿನ ಕೃಷ್ಣರಾಜ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ವಿ. ಶ್ರೀನಿವಾಸ ಪ್ರಸಾದ್‌ ಅವರು ಪ್ರಥಮ ಬಾರಿಗೆ ಪಕ್ಷೇತರ ಅಭ್ಯರ್ಥಿಯಾಗಿ ಗುರುತಿನಿಂದ ಸ್ಪರ್ಧಿಸಿದ್ದರು. ಅವರ ಸ್ಪರ್ಧೆ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಗಮನ ಸೆಳೆದಿತ್ತು.
10
+ 1974ರಲ್ಲಿ ಸಂಸ್ಥಾ ಕಾಂಗ್ರೆಸ್‌ ಸೇರಿ ಯುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿಯಾಗಿ ಹುರುಪಿನಿಂದ ಸಂಘಟನೆ ಮಾಡಿ ಗಮನ ಸೆಳೆದಿದ್ದರು. ತುರ್ತು ಪರಿಸ್ಥಿತಿ ಬಳಿಕ ಜಯಪ್ರಕಾಶ್‌ ಕರೆ ನೀಡಿದಂತೆ ವಿಪಕ್ಷಗಳು ಸೇರಿ ಒಂದು ಪಕ್ಷ – ಒಂದು ಧ್ವಜ ರಚಿಸಿಕೊಂಡು ಜನತಾ ಪಕ್ಷ ಅಸ್ತಿತ್ವಕ್ಕೆ ಬಂದಿತ್ತು.
11
+ 1977ರಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಲೋಕದಳ ಅಭ್ಯರ್ಥಿಯಾಗಿ ಕಣಕ್ಕಿಳಿದು ಬಿ.ರಾಚಯ್ಯ ವಿರುದ್ಧ ಪರಾಭವಗೊಂಡಿದ್ದರು. 1978ರಲ್ಲಿ ಟಿ. ನರಸಿಪುರ ಕ್ಷೇತ್ರದಿಂದ ಜನತಾ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ, ಇಂದಿರಾ ಕಾಂಗ್ರೆಸ್ನ ಅಭ್ಯರ್ಥಿ 28,061 ಮತಗಳನ್ನು ಪಡೆದ ಪಿ. ವೆಂಕಟರಮಣ ಗೆದ್ದರೆ ಶ್ರೀನಿವಾಸಪ್ರಸಾದ್‌ 20,034 ಪಡೆದು ಮೂರನೇ ಚುನಾವಣೆಯಲ್ಲೂ ಪರಾಭವಗೊಂಡಿದ್ದರು.
12
+ 1980ರ ವೇಳೆಗೆ ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ್ದ ಶ್ರೀನಿವಾಸ ಪ್ರಸಾದ್‌ ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿದು ಬಿ.ರಾಚಯ್ಯ ವಿರುದ್ಧ ಗೆದ್ದು ಮೊದಲ ಬಾರಿ ಸಂಸತ್‌ ಸದಸ್ಯರಾಗಿದ್ದರು. ಆ ಚುನಾವಣೆಯಲ್ಲಿ ಪ್ರಸಾದ್‌ 2,28,748 ಮತಗಳನ್ನು ಪಡೆದರೆ, ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಯು.ಬಿ.ರಾಚಯ್ಯ ಅವರಿಗೆ 1,18,287, ಜನತಾ ಪಕ್ಷದ ಸಿದ್ದಯ್ಯಗೆ 36 ಸಾವಿರ ಮತಗಳು ಬಂದಿದ್ದವು.
13
+ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ತಾಯಿ ಠೇವಣಿ ಹಣವನ್ನು ಕೊಟ್ಟು ಶುಭ ಹಾರೈಸಿದ್ದರು ಎಂದು ಸ್ವಾಭಿಮಾನಿಯ ನೆನಪುಗಳು ಎಂಬ ತಮ್ಮ ಜೀವನಗಾಥೆಯಲ್ಲಿ ಪ್ರಸಾದ್‌ ದಾಖಲಿಸಿದ್ದಾರೆ.ಮೊದಲ ಬಾರಿ 1980 ರಲ್ಲಿ ಸಂಸದರಾದ ಬಳಿಕ ಪ್ರಸಾದ್‌ 1984, 1989, 1991 ಹೀಗೆ ಸತತ ನಾಲ್ಕು ಚುನಾವಣೆಗಳಲ್ಲಿ ಜಯ ಗಳಿಸಿದ್ದರು. 1984ರಲ್ಲಿ ಜನತಾ ಪಕ್ಷದ ಮಲ್ಲೇಶಯ್ಯ, 1989ರಲ್ಲಿ ಜನತಾ ದಳದ ದೇವನೂರು ಶಿವಮಲ್ಲು 1991ರಲ್ಲಿ ಜನತಾದಳದ ಡಾ.ಎಚ್‌.ಸಿ. ಮಹಾದೇವಪ್ಪ ಅವರನ್ನು ಶ್ರೀನಿವಾಸಪ್ರಸಾದ್‌ ಸೋಲಿಸಿದ್ದರು.
14
+ 1996ರ ಚುನಾವಣೆಯಲ್ಲಿ ಕಾಂಗ್ರೆ���್ನ ಟಿಕೆಟ್‌ ಸಿಗದೇ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದು ಪರಾಭವಗೊಂಡರು. ಸಂಯುಕ್ತರಂಗ ಸರ್ಕಾರ ಉರುಳಿದ್ದರಿಂದ 1998ರಲ್ಲಿ ಮತ್ತೇ ಚುನಾವಣೆ ಎದುರಾಗಿ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡಿದ್ದರು. ಆದರೆ, ಎರಡನೇ ಬಾರಿ ಎ. ಸಿದ್ದರಾಜು ಜನತಾ ದಳದಿಂದ ಆಯ್ಕೆಯಾಗಿದ್ದರು.
15
+ ಎಐಡಿಎಂಕೆ ಜಯಲಲಿತಾ ತಮ್ಮ ಬೆಂಬಲ ವಾಪಾಸ್‌ ಪಡೆದಿದ್ದರಿಂದ 1999ರಲ್ಲಿ ಮತ್ತೊಮ್ಮೆ ಲೋಕಸಭಾ ಚುನಾವಣೆ ನಡೆದಿತ್ತು. ಆ ಚುನಾವಣೆಯಲ್ಲಿ ಶ್ರೀನಿವಾಸಪ್ರಸಾದ್‌ ಜೆಡಿಯುನಿಂದ ಸ್ಪರ್ಧೆ ಮಾಡಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಎ. ಸಿದ್ದರಾಜು ಅವರನ್ನು ಸೋಲಿಸಿದರು.
16
+ ವಾಜಪೇಯಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ರಾಮಕೃಷ್ಣ ಹೆಗಡೆ, ಜಾರ್ಜ್‌ ಫರ್ನಾಂಡೀಸ್‌ ಅವರಿಂದಾಗಿ ಶ್ರೀನಿವಾಸಪ್ರಸಾದ್‌ ಅವರಿಗೆ ಕೇಂದ್ರ ಮಂತ್ರಿ ಸ್ಥಾನ ಒಲಿಯಿತು. ಬಳಿಕ, ಜಾರ್ಜ್‌ ಫರ್ನಾಂಡೀಸ್‌ ಅವರೊಂದಿಗೆ ಗುರುತಿಸಿಕೊಂಡು ಸಮತಾ ಪಾರ್ಟಿ ಸೇರಿ 2004ರ ಚುನಾವಣೆ ವೇಳೆಗೆ ಜೆಡಿಎಸ್‌ ಸೇರಿ ತಮ್ಮ ಬೆಂಬಲಿಗರಾದ ಕಾಗಲವಾಡಿ ಶಿವಣ್ಣಗೆ ಟಿಕೆಟ್‌ ಕೊಡಿಸಿ ಗೆಲ್ಲಿಸಿಕೊಂಡಿದ್ದರು.
17
+ ಬಳಿಕ ಮತ್ತೆ ಕಾಂಗ್ರೆಸ್‌ ನತ್ತ ವಾಲಿದ್ದ ಪ್ರಸಾದ್‌ 2008ರಲ್ಲಿ ನಂಜನಗೂಡು ಕ್ಷೇತ್ರದಿಂದ ಗೆದ್ದು ಮೊದಲ ಬಾರಿ ಶಾಸಕರಾಗಿದ್ದರು. ಬಳಿಕ, 2013ರಲ್ಲೂ ನಂಜನಗೂಡು ಕ್ಷೇತ್ರದಿಂದ ಆಯ್ಕೆಯಾಗಿ ಸಿದ್ದರಾಮಯ್ಯ ಸಂಪುಟದಲ್ಲಿ ಕಂದಾಯ ಸಚಿವರಾಗಿದ್ದರು. ಸಚಿವ ಸಂಪುಟ ಪುನಾರಚನೆ ಹೊತ್ತಲ್ಲಿ ಸಚಿವ ಸ್ಥಾನದಿಂದ ಕೈ ಬಿಟ್ಟಿದ್ದಕ್ಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕಾಂಗ್ರೆಸ್‌ನಿಂದ ಹೊರ ಬಂದಿದ್ದರು. ಬಳಿಕ, ಬಿಜೆಪಿ ಸೇರಿ ನಂಜನಗೂಡು ಉಪ ಚುನಾವಣೆಯಲ್ಲಿ ಪರಭಾವಗೊಂಡರು.
18
+ 2019ರಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಮುಖಂಡರು, ಅಭಿಮಾನಿಗಳ ಒತ್ತಡಕ್ಕೆ ಮಣಿದು ಸ್ಪರ್ಧಿಸಿ ಮೊದಲ ಬಾರಿಗೆ ಚಾಮರಾಜನಗರದಲ್ಲಿ ಕಮಲ ಅರಳಿಸಿದ್ದರು.
19
+ ರಾಜಕೀಯ ಹಿನ್ನಲೆ-ಚಾಮರಾಜನಗರ ಕ್ಷೇತ್ರದಿಂದ 7 ಬಾರಿ ಸಂಸದರಾಗಿದ್ದರು.-ನಂಜನಗೂಡು ಕ್ಷೇತ್ರದಿಂದ 2 ಬಾರಿ ಶಾಸಕರಾಗಿದ್ದರು.-1999ರಲ್ಲಿ ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿದ್ದರು.-2013ರಿಂದ 2016ರವರೆಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಕಂದಾಯ ಮತ್ತುಮುಜರಾಯಿ ಸಚಿವರಾಗಿದ್ದರು .-24 ಡಿಸೆಂಬರ್‌ 2016ರಂದು ಅಧಿ ಕೃತವಾಗಿ ಬಿಜೆಪಿ ಸೇರ್ಪಡೆಯಾದರು.-2017ರಲ್ಲಿ ನಂಜನಗೂಡು ಉಪಚುನಾವಣೆಯಲ್ಲಿ ಸೋಲು-2019ರಲ್ಲಿ ಚಾಮರಾಜನಗರ ಸಂಸದರಾಗಿ ಆಯ್ಕೆಯಾದರು.-2024 ಮಾರ್ಚ್‌ 17ರಂದು ರಾಜಕೀಯ ನಿವೃತ್ತಿ ಪಡೆದರು.
eesanje/url_46_164_2.txt ADDED
@@ -0,0 +1,5 @@
 
 
 
 
 
 
1
+ ಎಸ್‌ಐಟಿ ವರದಿ ಬಂದ ನಂತರ ಮುಲಾಜಿಲ್ಲದೆ ಕ್ರಮ : ಕುಮಾರಸ್ವಾಮಿ
2
+ ಶಿವಮೊಗ್ಗ,ಏ.29-ಹಾಸನದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್‌ ರೇವಣ್ಣ ಅವರ ಮೇಲೆ ಆರೋಪ ಕೇಳಿಬಂದಿರುವುದು ಇಡೀ ಸಮಾಜಕ್ಕೆ ಮುಜುಗರ ತರುವಂತದ್ದಾಗಿದ್ದು, ರಾಜ್ಯಸರ್ಕಾರ ರಚಿಸಿರುವ ಎಸ್‌ಐಟಿ ತನಿಖಾ ವರದಿ ಬಂದ ನಂತರ ಮುಲಾಜಿಲ್ಲದೆ ಜೆಡಿಎಸ್‌ ಕ್ರಮ ಕೈಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬಕ್ಕಷ್ಟೇ ಮುಜುಗರವಾಗುವುದಿಲ್ಲ, ಇಡೀ ಸಮಾಜಕ್ಕೆ ಮುಜುಗರವಾಗುವಂತಹುದು. ತನಿಖಾ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಪಕ್ಷ ಕ್ರಮ ಕೈಗೊಳ್ಳಲಿದೆ ಎಂದರು. ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಅನುಭವಿಸಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇಬೇಕಲ್ಲವೇ ಎಂದು ಹೇಳಿದರು.
4
+ ತನಿಖೆಯ ವಿಚಾರದಲ್ಲಿ ನಾನಾಗಲಿ, ಮಾಜಿ ಪ್ರಧಾನಿ ದೇವೇಗೌಡರಾಗಲಿ ಯಾವುದೇ ರೀತಿಯ ಪ್ರಭಾವ ಬೀರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇಂತಹ ಘಟನೆಗಳು ಯಾವುದೇ ಕಾರಣಕ್ಕೂ ನಡೆಯಬಾರದು ಎಂದರು. ದೇವೆಗೌಡರು ಮತ್ತು ನಾನು ಹಲವು ಹೆಣ್ಣುಮಕ್ಕಳ ಕಷ್ಟ, ಸಮಸ್ಯೆಗಳಿಗೆ ಸ್ಪಂದಿಸಿ ಪರಿಹರಿಸಿದ್ದೇವೆ.
5
+ ಹೆಣ್ಣು ಮಕ್ಕಳನ್ನು ಅತ್ಯಂತ ಗೌರವದಿಂದ ಕಂಡಿದ್ದೇವೆ. ಹಾಸನದ ಪೆನ್‌ಡ್ರೈವ್‌ ಪ್ರಕರಣದಿಂದ ಪಕ್ಷದ ಮೇಲೆ ಯಾವುದೇ ರೀತಿಯ ಪರಿಣಾಮವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಎಸ್‌ಐಟಿ ತನಿಖೆಯು ಪಾರದರ್ಶಕವಾಗಿ ನಡೆಯಲಿ, ಪ್ರಕರಣದಲ್ಲಿ ರಾಜಕೀಯ ಸಂಚಿರುವುದು ಕೂಡ ಬಯಲಾಗಲಿದೆ ಎಂದು ಅವರು ತಿಳಿಸಿದರು.
eesanje/url_46_164_3.txt ADDED
@@ -0,0 +1,9 @@
 
 
 
 
 
 
 
 
 
 
1
+ ಪೆನ್‌ಡ್ರೈವ್‌ ಪ್ರಕರಣದ ದೂರಿನಲ್ಲಿ ಉಲ್ಲೇಖಿಸಿರುವವರ ವಿರುದ್ಧ ಕ್ರಮ : ಗೃಹಸಚಿವ ಪರಮೇಶ್ವರ್‌
2
+ ಬೆಂಗಳೂರು,ಏ.29-ಹಾಸನದ ಪೆನ್‌ಡ್ರೈವ್‌ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆ ತಮ್ಮ ದೂರಿನಲ್ಲಿ ಯಾರೆಲ್ಲಾ ಹೆಸರನ್ನು ಉಲ್ಲೇಖಿಸಿದ್ದಾರೋ ಅವರುಗಳ ವಿರುದ್ಧ ತನಿಖೆ ಮತ್ತು ಕ್ರಮವಾಗಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಹಿಳಾ ಆಯೋಗಕ್ಕೆ ಬಂದ ದೂರು ಆಧರಿಸಿ ರಾಜ್ಯಸರ್ಕಾರ ಬಿಕೆಸಿ ನೇತೃತ್ವದಲ್ಲಿ ಎಸ್ಪಿ ದರ್ಜೆಯ ಇಬ್ಬರು ಮಹಿಳಾ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ದಳ ರಚನೆ ಮಾಡಿದೆ. ಯಾವ ಪದ್ಧತಿಯನ್ನು ಅನುಸರಿಸಿ ಅಧಿಕಾರಿಗಳು ತನಿಖೆ ನಡೆಸುತ್ತಾರೋ ನನಗೆ ಗೊತ್ತಿಲ್ಲ, ಇದರಲ್ಲಿ ಸರ್ಕಾರ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದರು.
4
+ ಸಾಮಾನ್ಯವಾಗಿ ಇಂತಹ ಪ್ರಕರಣಗಳಲ್ಲಿ 10 ರಿಂದ 15 ದಿನದೊಳಗೆ ತನಿಖೆ ಮುಗಿಸಿ ವರದಿ ನೀಡುವಂತೆ ಸೂಚಿಸಲಾಗುತ್ತದೆ. ಹಾಸನದ ಪ್ರಕರಣದಲ್ಲಿ ಆಂತರಿಕವಾಗಿ ಕಾಲಮಿತಿಯನ್ನು ತನಿಖಾಧಿಕಾರಿಗಳಿಗೆ ಸೂಚಿಸಲಾಗಿದೆ. ಸಮಯದ ಮಿತಿ ಇಲ್ಲದೇ ಇದ್ದರೆ ವರ್ಷಗಟ್ಟಲೆ ತನಿಖೆ ನಡೆಯುವ ಸಾಧ್ಯತೆ ಇರುತ್ತದೆ ಎಂದು ಹೇಳಿದರು.
5
+ ನಿಯೋಜಿತ ತನಿಖಾ ದಳದ ಅಧಿಕಾರಿಗಳು ಪೆನ್‌ಡ್ರೈವ್‌ಗಳನ್ನು ವಶಪಡಿಸಿಕೊಂಡು ಅವುಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಬೇಕಿದೆ. ಪೆನ್‌ಡ್ರೈವ್‌ ವಿಡಿಯೋಗಳ ಪ್ರಮುಖ ಪಾತ್ರಧಾರಿ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿದ್ದಾರೆ ಎಂಬ ಮಾಹಿತಿ ಇದೆ. ಅವರನ್ನು ಎಸ್‌ಐಟಿ ವಾಪಸ್‌ ಕರೆಸಲಿದೆ ಎಂದರು.
6
+ ತನಿಖೆ ನಡೆಸಿ ಎಸ್‌ಐಟಿ ವರದಿ ಸಲ್ಲಿಕೆಯಾದ ಬಳಿಕ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು. ಬಹಳಷ್ಟು ಪೆನ್‌ಡ್ರೈವ್‌ಗಳು ನಾಪತ್ತೆಯಾಗಿವೆ ಅಥವಾ ಅವುಗಳನ್ನು ಹೊರಗೆ ಬರಲು ಬಿಡದಂತೆ ತಡೆಹಿಡಿಯಲಾಗಿದೆ ಎಂಬುದರ ಕುರಿತು ಎಸ್‌ಐಟಿ ಅಕಾರಿಗಳು ಪರಿಶೀಲನೆ ನಡೆಸಲಿದ್ದಾರೆ. ಸತ್ಯಾಸತ್ಯತೆಗಳನ್ನು ಸಂಪೂರ್ಣವಾಗಿ ಪರಿಶೀಲಿಸಲಿದ್ದಾರೆ ಎಂದರು.
7
+ ದೂರುದಾರರು ಸಂದರ್ಭಾನುಸಾರ ಮಾಹಿತಿಯೊಂದಿಗೆ ಉಲ್ಲೇಖಿಸಲಾದ ವ್ಯಕ್ತಿಗಳ ವಿರುದ್ಧ ತನಿಖೆ ನಡೆಯಲಿದೆ. ಅದು ಎಚ್‌.ಡಿ.ರೇವಣ್ಣ ಇರಬಹುದು ಅಥವಾ ಬೇರೆ ಯಾರಾದರೂ ಸರಿ ತನಿಖೆಗೊಳಪಡಬೇಕಾಗುತ್ತದೆ ಎಂದು ಹೇಳಿದರು.
8
+ ದೂರುದಾರರು ಮತ್ತು ಸಂತ್ರಸ್ತರಿಗೆ ಅಗತ್ಯ ಬಿದ್ದರೆ ಭದ್ರತೆ ಒದಗಿಸಲು ಸರ್ಕಾರ ಸಿದ್ಧವಿದೆ. ಸಂತ್ರಸ್ತರಿಗೆ ಭಯದ ವಾತಾವರಣವಿದೆ ಎಂದು ಕಂಡುಬಂದರೆ ಯಾರಿಗೂ ತೊಂದರೆಯಾಗದಂತೆ ಭದ್ರತೆಯ ವ್ಯವಸ್ಥೆ ಮಾಡಿ ನ್ಯಾಯಯುತವಾಗಿ ತನಿಖೆ ನಡೆಸಲಾಗುವುದು ಎಂದು ಹೇಳಿದರು.
9
+ ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ್‌ ಪ್ರಸಾದ್‌ರ ನಿಧನ ತುಂಬಲಾರದ ನಷ್ಟವಾಗಿದೆ. ಅವರ ಅಗಲುವಿಕೆಯಿಂದ ಸಮಾಜ ಬಡವಾಗ���ದೆ. ಸುದೀರ್ಘ ರಾಜಕೀಯ ಅವಧಿಯಲ್ಲಿ ಶ್ರೀನಿವಾಸ್‌ ಪ್ರಸಾದ್‌ರವರು ಸೌಹಾರ್ದತೆಗೆ ಹೆಚ್ಚಿನ ಆದ್ಯತೆ ನೀಡಿದ್ದರು ಎಂದು ಹೇಳಿದರು.
eesanje/url_46_164_4.txt ADDED
@@ -0,0 +1,10 @@
 
 
 
 
 
 
 
 
 
 
 
1
+ “ಕಾಂಗ್ರೆಸ್ ಲೂಟಿಕೋರರ ಕೈಗೆ ದೇಶದ ಚುಕ್ಕಾಣಿ ಕೊಡಬೇಕೇ..?” : ಮುಂದುವರೆದ ಮೋದಿ ಅಟ್ಯಾಕ್
2
+ ಬಾಗಲಕೋಟೆ,ಏ.29-ಕಾಂಗ್ರೆಸ್‌ ವಿರುದ್ದ ಮತ್ತೆ ವಾಗ್ದಾಳಿಯನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರಮೋದಿ ಅವರು, ಕರ್ನಾಟಕವನ್ನು ಎಟಿಎಂ ಮಾಡಿಕೊಂಡು ಲೂಟಿ ಹೊಡೆಯುವವರ ಕೈಗೆ ದೇಶದ ಚುಕ್ಕಾಣಿಯನ್ನು ಕೊಡಬೇಕೆ ಎಂದು ಮತದಾರರನ್ನು ಪ್ರಶ್ನಿಸಿದ್ದಾರೆ.
3
+ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಬಾಗಲಕೋಟೆ ಮತ್ತು ಬಿಜಾಪುರ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಅಬ್ಬರದ ಪ್ರಚಾರ ನಡೆಸಿದ ಮೋದಿ, ತಮ್ಮ ಭಾಷಣದುದ್ದಕ್ಕೂ ಕಾಂಗ್ರೆಸ್‌ನ ಭ್ರಷ್ಟಾಚಾರ ಮತ್ತು ತುಷ್ಟೀಕರಣ ನೀತಿಯನ್ನು ತರಾಟೆಗೆ ತೆಗೆದುಕೊಂಡರು. ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ನಿರ್ವಹಿಸುತ್ತಿಲ್ಲ ವಸೂಲಿ ಗ್ಯಾಂಗ್‌ನ್ನು ನಡೆಸುತ್ತಿದೆ.
4
+ ಕಾಂಗ್ರೆಸ್‌ ಲೂಟಿಕೋರ ಸರ್ಕಾರ, ಈ ಸರ್ಕಾರದ ಕೈಗೆ ಇಂಥಾ ದೊಡ್ಡ ದೇಶವನ್ನು ಕೊಡಬೇಕೆ? ಎಂಬುದನ್ನು ಮತದಾರರು ತೀರ್ಮಾನಿಸಬೇಕು. ಇದು ದೇಶದ ಭವಿಷ್ಯವನ್ನು ತೀರ್ಮಾನಿಸುವ ಚುನಾವಣೆ ಎಂದು ಮನವಿ ಮಾಡಿದರು. ಕಾಂಗ್ರೆಸ್‌ ಪಕ್ಷವು ಕರ್ನಾಟಕವನ್ನು ಲೂಟಿ ಮಾಡುವ ಎಟಿಎಂ ಮಾಡಿಕೊಂಡಿದೆ. ಸರ್ಕಾರದ ಖಜಾನೆ ಖಾಲಿ ಮಾಡಿದ್ದಾರೆ.
5
+ ಮುಂದೊಂದು ದಿನ ಸರ್ಕಾರಕ್ಕೆ ತನ್ನ ನೌಕರರಿಗೆ ಸಂಬಳ ಕೊಡಲೂ ಹಣವಿರುವುದಿಲ್ಲ, ಜತೆಗೆ ನಿಮ್ಮ ಮಕ್ಕಳನ್ನೂ ಹಸಿವಿನಿಂದ ನರಳುವಂತೆ ಮಾಡುವುದರಲ್ಲಿ ಸಂಶಯವಿಲ್ಲ, ಕಾಂಗ್ರೆಸ್‌ ಮೊದಲೇ ಪ್ಲ್ಯಾನ್‌ ಮಾಡಿ ವಸೂಲಿ ಮಾಡಿ ಸರ್ಕಾರದ ಖಜಾನೆಯಿಂದ ತನ್ನ ತಿಜೋರಿಯನ್ನು ತುಂಬಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು.
6
+ ಕಾಂಗ್ರೆಸ್‌ ಕರ್ನಾಟಕದಲ್ಲಿ 2ಜಿ ಹಗರಣ ಮಾದರಿಯ ಲಕ್ಷಾಂತರ ಕೋಟಿಯ ಸ್ಕ್ಯಾಮ್‌ ಮಾಡುವ ಕನಸು ಕಾಣುತ್ತಿದೆ. ಕರ್ನಾಟಕದ ಲೂಟಿ ಮಾಡುವವರಿಗೆ 7 ಮೇ ಶಿಕ್ಷೆ ಸಿಗಬೇಕು, ಕಾಂಗ್ರೆಸ್‌ನ ಭ್ರಷ್ಟಾಚಾರವನ್ನು ಅಂತ್ಯಗೊಳಿಸಬೇಕು ಎಂದು ಮೋದಿ ಹೇಳಿದರು.
7
+ ಮೋದಿ 10 ವರ್ಷಗಳಲ್ಲಿ ಕತ್ತಲಿನಲ್ಲಿದ್ದ 18 ಸಾವಿರ ಹಳ್ಳಿಗಳನ್ನು ವಿದ್ಯುತ್‌ ದೀಪಗಳಿಂದ ಬೆಳಕಿದ್ದಾರೆ. ಶೇ,16ರಷ್ಟು ಜನರಿಗೆ ಮಾತ್ರ ಈ ಮೊದಲು ಜಲಜೀವನ್‌ ಮಿಷನ್‌ ಅಡಿ ನೀರು ತಲುಪುತ್ತಿತ್ತು ಆದರೆ ಈಗ ಐದು ವರ್ಷಗಳಲ್ಲಿ ಶೇ.75ರಷ್ಟು ಜನರಿಗೆ ನೀರು ತಲುಪುತ್ತಿದೆ. ನಮ್ಮ ಸಂಕಲ್ಪ ಮುಂದಿನ ಕೆಲವು ವರ್ಷಗಳಲ್ಲಿ ಭಾರತವು ವಿಶ್ವದ ಟಾಪ್‌ 3 ಆರ್ಥಿಕತೆಯನ್ನಾಗಿಸುವುದು, ಭಾರತವನ್ನು ವಿಶ್ವದ ಮೂರನೇ ಆರ್ಥಿಕತೆ ಮಾಡುವ ತಾಕತ್ತು ನಿಮ್ಮ ಮತಕ್ಕಿದೆ ಎಂದರು.
8
+ ಮುಂದಿನ ಕೆಲ ವರ್ಷಗಳಲ್ಲಿ ಭಾರತವನ್ನು ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಿಸುವುದು ನಮ್ಮ ಸಂಕಲ್ಪವಾಗಿದೆ. ನಾವು ಭಾರತವನ್ನು ಉತ್ಪಾದನಾ ಹಬ್‌, ಕೌಶಲ್ಯ ಕೇಂದ್ರವನ್ನಾಗಿ ಮಾಡಲು ಬಯಸುತ್ತೇವೆ. ಇದಕ್ಕೆ ದೂರದೃಷ್ಟಿ ಬೇಕು. ಮೋಜು, ಮಸ್ತಿ ಮಾಡುವವರಿಂದ ಇದನ್ನು ಮಾಡಲು ಸಾಧ್ಯವಿಲ್ಲ ಎಂದು ಹ���ಳಿದರು.
9
+ ಕರ್ನಾಟಕ ಸರ್ಕಾರ ತನ್ನ ನೌಕರರಿಗೆ ಸಂಬಳ ನೀಡದ ದಿನ ದೂರದಲ್ಲಿ ಇಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್‌ ವಸೂಲಿ ಗ್ಯಾಂಗ್‌ ನಡೆಸುತ್ತಿದೆ. ಸರ್ಕಾರವಲ್ಲಾ, 60 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರು, ಒಂದೇ ಬಾರಿಗೆ ಬಡತನವನ್ನು ತೊಡೆದುಹಾಕುತ್ತೇವೆ ಎಂದು ಹೇಳುತ್ತಾರೆ ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. ಮತಗಳನ್ನು ಪಡೆಯಲು ಭಯೋತ್ಪಾದನೆ ಮತ್ತು ಮೂಲಭೂತವಾದಿ ಮನಸ್ಥಿತಿವುಳ್ಳವರನ್ನು ಕಾಂಗ್ರೆಸ್‌ ರಕ್ಷಿಸುತ್ತಿದೆ.
10
+ ತನ್ನ ಪ್ರಣಾಳಿಕೆಯಲ್ಲಿ ಧರ್ಮ ಆಧಾರಿತ ಮೀಸಲಾತಿ ನೀಡುವ ಸಂದೇಶ ನೀಡಿದೆ ಎಂದು ಆರೋಪಿಸಿದರು. ಚುನಾವಣೆಯಲ್ಲಿ ಸೋತವರು ತಂತ್ರಜ್ಞಾನ ಬಳಸಿ, ನಕಲಿ ವಿಡಿಯೋ ಸೃಷ್ಟಿಸಿ, ತಪ್ಪು ಮಾಹಿತಿ ಹರಡುತ್ತಿದ್ದಾರೆ. ಇಂತಹ ನಕಲಿ ವಿಡಿಯೋಗಳ ಬಗ್ಗೆ ಪೊಲೀಸರು ಮತ್ತು ಬಿಜೆಪಿ ಪಕ್ಷದವರಿಗೆ ಮಾಹಿತಿ ನೀಡಿದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
eesanje/url_46_164_5.txt ADDED
@@ -0,0 +1,5 @@
 
 
 
 
 
 
1
+ ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಎಚ್‌.ಡಿ.ರೇವಣ್ಣ
2
+ ಬೆಂಗಳೂರು,ಏ.29-ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ ನಡೆದಿದ್ದು, ಇದಕ್ಕೆಲ್ಲಾ ಹೆದರುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ಎಚ್‌.ಡಿ.ರೇವಣ್ಣ ತಿರುಗೇಟು ನೀಡಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಕುಟುಂಬದ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಕಾನೂನು ಹೋರಾಟ ಮಾಡುವುದಾಗಿ ಹೇಳಿದರು.
3
+ ಕಳೆದ 40 ವರ್ಷಗಳಿಂದಲೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬದ ವಿರುದ್ಧ ಸಿಓಡಿ, ಲೋಕಾಯುಕ್ತ ಸೇರಿದಂತೆ ಹಲವು ತನಿಖೆಗಳು ನಡೆದಿವೆ.ತನಿಖೆಗಳನ್ನು ನಾವು ಎದುರಿಸಿದ್ದೇವೆ. ಸಂಸದ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗುವುದು ಮೊದಲೇ ನಿರ್ಧಾರವಾಗಿತ್ತು. ಅವರಿಗೆ ಎಸ್‌ಐಟಿಗೆ ವಹಿಸುವುದಾಗಲೀ, ಎಫ್‌ಐಆರ್‌ ದಾಖಲಿಸುವುದಾಗಲೀ ಗೊತ್ತಿರಲಿಲ್ಲ ಎಂದರು.
4
+ ರಾಜ್ಯಸರ್ಕಾರ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಕಾನೂನು ರೀತಿ ತನಿಖೆ ಮಾಡಲಿ. ಎಸ್‌ಐಟಿಯವರು ಕರೆದರೆ ಪ್ರಜ್ವಲ್‌ ಹಾಜರಾಗುತ್ತಾರೆ ಎಂದು ತಿಳಿಸಿದರು.ನಾಲ್ಕೈದು ವರ್ಷದ ಹಿಂದಿನ ಕಥೆಯನ್ನು ತಂದು ಈಗ ದೂರು ನೀಡಲಾಗಿದೆ. ಇದೆಲ್ಲವೂ ರಾಜಕೀಯ ಪ್ರೇರಿತ. ತನಿಖೆ ನಡೆಯಲಿ ಎಂದರು.
5
+ ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದ ಅವರು, ಈ ವಿಚಾರವನ್ನು ದೇವೇಗೌಡರ ಬಳಿ ತಾವು ಪ್ರಸ್ತಾಪಿಸಿಲ್ಲ ಎಂದು ಸ್ಪಷ್ಟಪಡಿಸಿದರು.
eesanje/url_46_164_6.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ಚುನಾವಣಾ ಪ್ರಚಾರವೇ ಮೋದಿಯವರ ಕೊನೇ ಭಾಷಣವಾಗಲಿದೆ, ಈಗಲಾದರೂ ಸತ್ಯ ಹೇಳಿ : ಸಿದ್ದರಾಮಯ್ಯ ತಿರುಗೇಟು
2
+ ಬೆಂಗಳೂರು, ಏ.29-ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ನಿರಂತರ ಅನ್ಯಾಯವಾಗುತ್ತಿದೆ ಎಂದು ದೂರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಯುಷಾನ್‌ ಭಾರತ್‌, ಪ್ರಧಾನಮಂತ್ರಿ ಫಸಲ್‌ಬೀಮಾ, ಕೃಷಿ ಸನಾನ್‌ ಯೋಜನೆಗಳಲ್ಲಿ ಅವ್ಯವಹಾರವಾಗಿದೆ ಎಂದು ಕೇಂದ್ರ ಸಚಿವರ ಹೇಳಿಕೆಗಳನ್ನು ಉಲ್ಲೇಖಿಸಿ ತಿರುಗೇಟು ನೀಡಿದ್ದಾರೆ.
3
+ ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿಯವರಿಗೆ ಲೋಕಸಭೆ ಚುನಾವಣಾ ಪ್ರಚಾರ ಕೊನೆಯ ಭಾಷಣವಾಗಿರಬಹುದು. ಇನ್ನಾದರೂ ಸತ್ಯ ಮಾತನಾಡಿ, ಜಾತಿ-ಜಾತಿ, ಧರ್ಮ-ಧರ್ಮಗಳ ನಡುವೆ ದ್ವೇಷ ಹುಟ್ಟಿಸಿ ರಾಜಕೀಯ ಲಾಭ ಪಡೆಯುವ ದುಷ್ಟತನವನ್ನು ಕೈಬಿಟ್ಟು, ಹತ್ತು ವರ್ಷಗಳ ಸಾಧನೆಯ ಬಗ್ಗೆ ಮಾತನಾಡಲಿ.
4
+ ಕನ್ನಡಿಗರಿಗೆ ಮಾಡಿರುವ ಅನ್ಯಾಯಗಳ ಬಗ್ಗೆ ಉತ್ತರ ಕೊಡಲಿ ಎಂದು ಆಗ್ರಹಿಸಿದ್ದಾರೆ.ಕರ್ನಾಟಕಕ್ಕೆ ಯುಪಿಎ ಸರ್ಕಾರ ಕೊಟ್ಟಿದ್ದು ಕಡಿಮೆ, ಎನ್‌ಡಿಎ ಸರ್ಕಾರ ಎಷ್ಟೊಂದು ಕೊಟ್ಟಿದೆ ಎಂದು ಲೆಕ್ಕ ಹೇಳುತ್ತಿದ್ದಾರೆ.
5
+ 2018-19ರಲ್ಲಿ ಕೇಂದ್ರ ಬಜೆಟ್‌ ಗಾತ್ರ ರೂ. 24,42,213 ಕೋಟಿ, ಕರ್ನಾಟಕಕ್ಕೆ ನೀಡಿದ್ದ ತೆರಿಗೆ ಪಾಲು ರೂ.35,895 ಕೋಟಿ ಮತ್ತು ಕೇಂದ್ರ ಪುರಸ್ಕೃತ ಯೋಜನೆಯ ಪಾಲು ರೂ. 16,082 ಕೋಟಿ. ಹೀಗೆ ಒಟ್ಟು ರೂ.46,288 ಕೋಟಿ ರಾಜ್ಯಕ್ಕೆ ಬಂದಿತ್ತು. 2023-24ನೇ ಸಾಲಿನ ಕೇಂದ್ರ ಬಜೆಟ್‌ ಗಾತ್ರ ರೂ.45,03,097 ಕೋಟಿ. ಆದರೆ ನಿಮ್ಮ ಸರ್ಕಾರ ಕರ್ನಾಟಕಕ್ಕೆ ತೆರಿಗೆ ಹಂಚಿಕೆ, ಕೇಂದ್ರ ಪುರಸ್ಕೃತ ಯೋಜನೆಯ ಪಾಲು ಸೇರಿ ನೀಡಿದ್ದು ಕೇವಲ ರೂ.55,529 ಕೋಟಿ. ಐದು ವರ್ಷಗಳಲ್ಲಿ ಬಜೆಟ್‌ ಗಾತ್ರ ಹೆಚ್ಚು ಕಡಿಮೆ ದುಪ್ಪಟ್ಟಾದರೂ ಕರ್ನಾಟಕಕ್ಕೆ ನೀಡುವ ಹಣವೂ ದುಪ್ಪಟ್ಟಾಗಬೇಕಿತ್ತು ಅಲ್ಲವೇ? ಅಂದರೆ ಕನಿಷ್ಠ ಒಂದು ಲಕ್ಷ ಕೋಟಿಯನ್ನಾದರೂ ನೀವು ನೀಡಬೇಕಾಗಿತ್ತು ಎಂದು ಹೇಳಿದ್ದಾರೆ.
6
+ ಯುಪಿಎ ಸರ್ಕಾರ ಹತ್ತು ವರ್ಷಗಳಲ್ಲಿ 95,21,493 ಲಕ್ಷ ಕೋಟಿ ರೂಪಾಯಿಗಳ ಬಜೆಟ್‌ ರೂಪಿಸಿ ಖರ್ಚು ಮಾಡಿತ್ತು. ನಿಮ ನೇತೃತ್ವದ ಎನ್‌ಡಿಎ ಸರ್ಕಾರ ಹತ್ತು ವರ್ಷಗಳ ಅವಧಿಯಲ್ಲಿ ಒಟ್ಟು 282 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್‌ ಮಾಡಿ ಖರ್ಚು ಮಾಡಿತ್ತು. ಅಂದರೆ ಬಜೆಟ್‌ ಗಾತ್ರ ಮೂರು ಪಟ್ಟು ಹೆಚ್ಚಾದರೂ ಅನುದಾನದ ಪ್ರಮಾಣ ಮಾತ್ರ ಏರಿಕೆಯಾಗಿಲ್ಲ ಎಂದು ಆಕ್ಷೇಪಿಸಿದ್ದಾರೆ.
7
+ 2014ರ ಯುಪಿಎ ಸರ್ಕಾರದ ಕಾಲದಲ್ಲಿ ದೇಶದ ಸಾಲ 54 ಲಕ್ಷ ಕೋಟಿ ರೂಪಾಯಿಗಳಿತ್ತು, ಈಗ ಒಟ್ಟು ಸಾಲದ ಪ್ರಮಾಣ 172.37 ಲಕ್ಷ ಕೋಟಿ ರೂಪಾಯಿಗಳಾಗಿದೆ. ಇದು ಸಾಧನೆಯೇ ? ರಾಷ್ಟ್ರೀಯ ಹೆದ್ದಾರಿ ನಿರ್ಮಿಸಿರುವುದು ನಿಮ್ಮ ಸಾಧನೆ ಎಂದು ಹೇಳಿಕೊಳ್ಳುತ್ತಿರಲ್ಲಾ ಮೋದಿಯವರೇ, ಇದರಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಪಾಲೆಷ್ಟು? ರಸ್ತೆ ನಿರ್ಮಾಣ ಗುತ್ತಿಗೆದಾರರ ಸಾಲ ಎಷ್ಟು ಎಂದು ಲೆಕ್ಕ ಯಾಕೆ ಹೇಳುವುದಿಲ್ಲ.
8
+ ಈ ಹೆದ್ದಾರಿ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಪಾಲು ನೀಡಿದ್ದರೂ ಹೆದ್ದಾರಿ ಟೋಲ್‌ಗಳಲ್ಲಿ ಸಂಗ್ರಹಿಸುವ ದುಡ್ಡ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ಯಾಕೆ ಹೋಗಬೇಕು? ಕಳೆದ ವರ್ಷ ಟೋಲ್‌ ಗಳಿಂದ ಸಂಗ್ರಹವಾಗಿರುವ ಹಣದ ಮೊತ್ತ 64,810 ಕೋಟಿ ರೂಪಾಯಿ. ಕರ್ನಾಟಕ ರಾಜ್ಯವೊಂದರಿಂದಲೇ ಸಂಗ್ರಹವಾಗಿರುವ ಟೋಲ್‌ ಹಣ 3,600 ಕೋಟಿ ರೂಪಾಯಿ ಎಂದು ವಿವರಿಸಿದ್ದಾರೆ.
9
+ ಕೇಂದ್ರ ಸರ್ಕಾರದ ಸಹಯೋಗದ 61 ಯೋಜನೆಗಳಿಗೆ ಸಂಬಂಧಿಸಿದಂತೆ 23 ಇಲಾಖೆಗಳಿಗೆ ನಯಾಪೈಸೆ ಅನುದಾನ ಬಿಡುಗಡೆಯಾಗಿಲ್ಲ. ಕೃಷ್ಣಾ, ಕಾವೇರಿ, ಮೇಕೆದಾಟು, ಮಹದಾಯಿ ಯೋಜನೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ. ಭದ್ರ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆಯಾಗಿಲ್ಲ ಎಂದು ಆಕ್ಷೇಪಿಸಿದ್ದಾರೆ.
10
+ ಪ್ರಧಾನಮಂತ್ರಿ ಸೂರ್ಯ ಘರ್‌ ಮುಫ್ತ ಬಿಜಲಿ ಯೋಜನೆಯ ಮೂಲಕ ಬಡ ಕುಟುಂಬಗಳಿಗೆ ಉಚಿತ ವಿದ್ಯುತ್‌ ಪೂರೈಸುತ್ತೇವೆ ಎನ್ನುವುದು ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದೆ. ಕಳೆದ ವರ್ಷದ ಬಜೆಟ್‌ ನಲ್ಲಿಯೇ ಘೋಷಿಸಿದ್ದ ಈ ಯೋಜನೆ ಸಂಪೂರ್ಣ ಉಚಿತ ಅಲ್ಲ. 1 ಕಿಲೋ ವ್ಯಾಟ್‌ ಉತ್ಪಾದಿಸುವ ರೂಫ್‌ಟಾಪ್‌ ಸೋಲಾರ್‌ ಪ್ಯಾನೆಲ್‌ಗೆ 50000 ರೂ ವೆಚ್ಚವಾಗುತ್ತದೆ. ಈ ಮೊತ್ತವನ್ನು ಶೇ.40ರಷ್ಟು ಹಣವನ್ನು ಖರೀದಿಸುವ ಕುಟುಂಬವೇ ಭರಿಸಬೇಕಾಗುತ್ತದೆ. ಬ್ಯಾಂಕ್‌ಗಳಿಂದ ಸಾಲ ಕೊಡಿಸಲಾಗುತ್ತಿದೆ. ಅಂದರೆ ಸೋಲಾರ್‌ ಪ್ಯಾನೆಲ್‌ ಅಳವಡಿಸುವ ವೆಚ್ಚದ ಹೊರೆ ಬಡ ಕುಟುಂಬದ ಮೇಲೆ ಹೊರಿಸಲಾಗಿದೆ. ಮತ್ತೆ ಎಲ್ಲಿಯ ಉಚಿತ ಎಂದು ಪ್ರಶ್ನಿಸಿದ್ದಾರೆ.
11
+
12
+ 70 ವರ್ಷ ಮೇಲ್ಪಟ್ಟವರಿಗೂ ಆಯಷ್ಮಾನ್‌ ಸೇವೆ ವಿಸ್ತರಿಸಲಾಗುವುದು ಎನ್ನುವುದು ಪ್ರಣಾಳಿಕೆಯಲ್ಲಿ ಬಿಜೆಪಿ ಭರವಸೆ ನೀಡಿದೆ. ವಾಸ್ತವ ಸಂಗತಿ ಎಂದರೆ ಆಯುಷ್ಮಾನ್‌ ಯೋಜನೆಯ ಆರೋಗ್ಯ ವಿಮೆಯಲ್ಲಿ ಅಕ್ರಮ ನಡೆದಿರುವುದನ್ನು ಸಿಎಜಿಯೇ ವರದಿ ಬಹಿರಂಗ ಮಾಡಿದೆ. 8.2 ಲಕ್ಷ ರೋಗಿಗಳು ಆಧಾರ್‌ ಬಯೋಮೆಟ್ರಿಕ್‌ ದಾಖಲೆಗಳಿಲ್ಲದೆ ಎರಡಕ್ಕಿಂತ ಹೆಚ್ಚು ಬಾರಿ ಚಿಕಿತ್ಸೆ ಪಡೆದಿರುವುದನ್ನು ಸಿಎಜಿ ಗುರುತಿಸಿತ್ತು. ನಕಲಿ ವಿಮೆಗಳಿಗೆ ರೂ.1697 ಕೋಟಿವರೆಗೆ ಸರ್ಕಾರದಿಂದ ಹಣ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.
13
+ ಕಳೆದ ಐದು ವರ್ಷಗಳಲ್ಲಿ ಪಿಎಂ ಕಿಸಾನ್‌ ಸಮಾನ್‌ ನಿಧಿ ಯೋಜನೆಯಡಿ 11 ಕೋಟಿ ರೈತರಿಗೆ ಸಹಾಯ ಧನ ನೀಡಲಾಗಿದೆ. ಕೃಷಿ ಸಚಿವರೇ ರಾಜ್ಯಸಭೆಯಲ್ಲಿ 4 ಲಕ್ಷ ಅನರ್ಹ ರೈತರಿಗೆ ರೂ. 3 ಸಾವಿರ ಕೋಟಿ ಸಹಾಯ ಧನ ವಿತರಣೆಯಾಗಿದ್ದು, ಮರಳಿ ವಸೂಲಿ ಮಾಡಲಾಗುತ್ತಿದೆ ಎಂದು ಹೇಳಿದ್ಧಾರೆ. ದೇಶದಲ್ಲಿ ಶೇ.55ರಷ್ಟು ಭೂ ರಹಿತ ರೈತರಿದ್ದು, ಅವರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ ಎನ್ನುವುದು ಮತ್ತೊಂದು ದುರಂತ.
14
+ ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆಯನ್ನು ತಂತ್ರಜ್ಞಾನದ ಬಳಕೆಯ ಮೂಲಕ ಮತ್ತಷ್ಟು ಬಲಪಡಿಸಿ ನಿಖರ ಪರಿಶೀಲನೆ ನಡೆಸಿ ಪರಿಹಾರದ ಹಣವನ್ನು ವೇಗವಾಗಿ ಪಾವತಿಸಲಾಗುವುದು ಎಂದು ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದೆ. ವಾಸ್ತವ ಸಂಗತಿ ಎಂದರ��� ಹಿಂದಿನ ಅವಧಿಯಲ್ಲಿ 5 ವರ್ಷಗಳಲ್ಲಿ ಈ ಯೋಜನೆಯಿಂದ ರೈತರಿಗೆ ಆದ ಲಾಭಕ್ಕಿಂತ ವಿಮಾ ಕಂಪನಿಗಳಿಗೆ ಆದ ಲಾಭವೇ ಹೆಚ್ಚು.
15
+ ಕೃಷಿ ಸಚಿವ ನರೇಂದ್ರ ತೋಮರ್‌ ರಾಜ್ಯಸಭೆಯಲ್ಲಿ ಉತ್ತರಿಸಿರುವಂತೆ, 2016-17ರಿಂದ 2021-22ರ ಅವಧಿಯಲ್ಲಿ ರೈತರು ರೂ. 1.59 ಲಕ್ಷ ಪ್ರೀಮಿಯಂ ಹಣ ಪಾವತಿಸಿದ್ದರು. ಈ ಪೈಕಿ ವಿಮಾ ಕಂಪನಿಗಳು ರೂ. 1.19 ಲಕ್ಷ ಕೋಟಿ ಹಣವನ್ನು ರೈತರಿಗೆ ಪಾವತಿಸಿದ್ದವು. ಅಂದರೆ ರೂ.40000 ಕೋಟಿಗಳಷ್ಟು ಲಾಭಗಳಿಸಿದ್ದವು ಎಂದು ಅಂಕಿ ಅಂಶ ಹಂಚಿಕೊಂಡಿದ್ದರು ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
eesanje/url_46_164_7.txt ADDED
@@ -0,0 +1,9 @@
 
 
 
 
 
 
 
 
 
 
1
+ ಪ್ರಧಾನಿ ಮೋದಿ ವಿರುದ್ಧ ಸಂತೋಷ್‌ ಲಾಡ್‌ ಅಸಮಾಧಾನ
2
+ ಹುಬ್ಬಳ್ಳಿ,ಏ.29-ಲೋಕಸಭಾ ಚುನಾವಣೆ ರಾಷ್ಟ್ರದ ಭವಿಷ್ಯ ನಿರ್ಧರಿಸುವಂತದ್ದಾಗಿದ್ದು, ಇಲ್ಲಿ ಕಳೆದ 10 ವರ್ಷಗಳಿಂದ ನಡೆದಿರುವ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆಯಾಗಬೇಕೇ ಹೊರತು ವ್ಯಕ್ತಿಗತ ವಿಚಾರಗಳಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ.
3
+ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿಯವರು ತಮ್ಮ ಪ್ರಚಾರ ಭಾಷಣದಲ್ಲಿ ಕಾಂಗ್ರೆಸ್‌ನಿಂದ ಲೂಟಿ, ಪಿಕ್‌ಪ್ಯಾಕೆಟ್‌ ಎಂಬ ವಿಚಾರಗಳನ್ನು ಪ್ರಸ್ತಾಪಿಸುತ್ತಿದ್ದಾರೆ. ತಾವು ಮಾಡುತ್ತಿರುವ ಆರೋಪಗಳಿಗೆ ಯಾವುದಕ್ಕೂ ಸರಿಯಾದ ಆಧಾರ ನೀಡುವುದಿಲ್ಲ. ತಮ್ಮ ಹುದ್ದೆಯ ಘನತೆಯನ್ನು ಕುಬ್ಜಗೊಳಿಸಿ ರಾಜಕೀಯ ಲಾಭಕ್ಕಾಗಿ ಜನರನ್ನು ಭಾವನಾತ್ಮಕವಾಗಿ ಕೆರಳಿಸುವ ಯತ್ನ ನಡೆಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
4
+ ಕಳೆದ 10 ವರ್ಷಗಳಿಂದ ದೇಶದಲ್ಲಾಗಿರುವ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆಯಾಗಬೇಕಿತ್ತು. ಆದರೆ ಅದರ ಬಗ್ಗೆ ಎಲ್ಲಿಯೂ ಪ್ರಸ್ತಾಪವಾಗುತ್ತಿಲ್ಲ. ಇವರು ಯಾವ ಆಧಾರದ ಮೇಲೆ ಮತ ಕೇಳುತ್ತಿದ್ದಾರೆ ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದರು. ಎನ್‌ಸಿಆರ್‌ಬಿ ಮಾಹಿತಿ ಪ್ರಕಾರ ದೇಶದಲ್ಲಿ 13.13 ಲಕ್ಷ ಮಹಿಳೆಯರು ಕಾಣೆಯಾಗಿದ್ದಾರೆ.
5
+ ದೇಶದ ಸಾಲ 183 ಲಕ್ಷ ಕೋಟಿ ರೂ. ಗಳಾಗಿವೆ. ಡಾಲರ್‌ ವೌಲ್ಯ 58 ರೂ.ಗಳಿಂದ 83 ರೂ.ಗಳಿಗೆ ಕುಸಿದಿದೆ. ಬಂಡವಾಳಶಾಹಿಗಳ 16 ಲಕ್ಷ ಕೋಟಿ ರೂ. ಸಾಲಮನ್ನಾವಾಗಿದೆ. ಇದ್ಯಾವ ವಿಚಾರಗಳು ಚರ್ಚೆಯಾಗಬಾರದೇ ಎಂದು ಪ್ರಶ್ನಿಸಿದರು.
6
+ ಅಮೆರಿಕದಲ್ಲಿ ಭಾಷಣ ಮಾಡಿದ ಮೋದಿಯವರು ಪ್ರತಿ ವಾರ ಒಂದು ವಿಶ್ವವಿದ್ಯಾಲಯವನ್ನು ಸ್ಥಾಪಿಸುವುದಾಗಿ ಹೇಳಿದ್ದರು. ಎಲ್ಲಿಗೆ ಆ ವಿಶ್ವವಿದ್ಯಾಲಯಗಳು ಎಂಬುದನ್ನು ಯಾರೂ ತೋರಿಸಿದ್ದಿಲ್ಲ, ನೋಟು ಅಮಾನೀಕರಣ ದೊಡ್ಡ ವಂಚನೆಯ ಹಗರಣ. 3 ಲಕ್ಷ ನಕಲಿ ನೋಟುಗಳನ್ನು ಪತ್ತೆ ಹಚ್ಚುವುದಾಗಿ ಹೇಳಿದರು.
7
+ ಈವರೆಗೂ ಅದನ್ನು ಲೆಕ್ಕ ಕೊಟ್ಟಿಲ್ಲ. ಪುಲ್ವಾಮ ದಾಳಿಯ ಬಗ್ಗೆ ಆಗಿನ ಲೆಫ್ಟಿನೆಂಟ್‌ ಗವರ್ನರ್‌ ಸತ್ಯಪಾಲ್‌ ಮಲ್ಲಿಕ್‌ ಹೇಳಿಕೆ ಪ್ರಚಾರಕ್ಕೆ ಬರುತ್ತಿಲ್ಲ. ದಾಳಿಯಾದ ಬಳಿಕ ಆಗಿನ ಸರ್ಕಾರದ ಅಧಿ ಕೃತ ಪ್ರತಿನಿಧಿ ಗಳ್ಯಾರು ಪತ್ರಿಕಾಗೋಷ್ಠಿ ನಡೆಸಲಿಲ್ಲ. ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಪತ್ರಿಕಾಗೋಷ್ಠಿ ಯಲ್ಲಿ ಮೃತಪಟ್ಟವರ ಲೆಕ್ಕ ಹೇಳಿದರು. ಅವರಿಗೆ ಹೇಗೆ ಗೊತ್ತಿತ್ತು ಎಂದು ಪ್ರಶ್ನಿಸಿದರು.
8
+ ಸಾಲ ಮಾಡಿ ದೇಶ ಬಿಟ್ಟು ಪರಾರಿಯಾಗಿರುವ 25 ಮಂದಿಯಲ್ಲಿ 12 ಜನ ಗುಜರಾತ್‌ನವರಿದ್ದಾರೆ. ಅವರನ್ನು ಈವರೆಗೂ ವಾಪಸ್‌ ಕರೆತರಲಾಗಿಲ್ಲ. ಉದ್ಯಮಿ ಗೌತಮ್‌ ಅದಾನಿಯವರ ಸಂಪತ್ತು 11 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಾಗಿದ್ದು ಹೇಗೆ ಎಂಬ ವಿಚಾರ ವಿಶ್ಲೇಷಣೆಯಾಗುವುದಿಲ್ಲ. ಸರ್ಕಾರದ ವಿಮಾನನಿಲ್ದಾಣ, ಬಂದರು, ರಸ್ತೆ ಸೇರಿದಂತೆ ಎಲ್ಲವನ್ನೂ ಅವರಿಗೆ ನೀಡಲಾಗಿದೆ ಎಂದು ಆರೋಪಿಸಿದರು.
9
+ ಕೇಂದ್ರ ಸರ್ಕಾರ ಸರ್ವಾಧಿ ಕಾರಿ ಧೋರಣೆ ಅನುಸರಿಸುತ್ತಿದೆ. ಈಗಾಗಲೇ ಎಕ್‌್ಸ ಖಾತೆಯ ಮೇಲೆ ನಿಗಾ ವಹಿಸಲಾಗಿದೆ. ಮುಂದುವರೆದು ವಾಟ್‌್ಸ ಆಪ್‌ ಸಂದೇಶಗಳಿಗೂ ಕಳ್ಳಗಣ್ಣಿಡುವ ಪ್ರಯತ್ನಗಳಾಗುತ್ತಿವೆ. ಸಾರ್ವಜನಿಕ ಉದ್ಯಮವಾಗಿರುವ ಬಿಎಸ್‌ಎನ್‌ಎಲ್‌ ಅನ್ನು ಮುಚ್ಚಿಸಿ ಖಾಸಗಿ ಸಂಸ್ಥೆ ಜಿಯೋವನ್ನು ಉದ್ಧಾರ ಮಾಡಲಾಗುತ್ತಿದೆ ಎಂದು ದೂರಿದರು.
eesanje/url_46_164_8.txt ADDED
@@ -0,0 +1,9 @@
 
 
 
 
 
 
 
 
 
 
1
+ ಪೆನ್ ಡ್ರೈವ್ ಪ್ರಕರಣದ ಬಗ್ಗೆ ಮೌನ ಮುರಿದ ಬಿಜೆಪಿ
2
+ ಬೆಂಗಳೂರು,ಏ.29-ಹಾಸನ ಸಂಸದ ಪ್ರಜ್ವಲ್‌ ರೇವಣ್ಣನಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಕೊನೆಗೂ ಬಿಜೆಪಿ ವೌನ ಮುರಿದಿದೆ. ಪ್ರಕರಣ ಆಚೆ ಬಂದು ಮೂರು ದಿನವಾದರೂ ಬಾಯಿ ಬಿಡದೆ ಅಂತರ ಕಾಪಾಡಿಕೊಂಡಿದ್ದ ಬಿಜೆಪಿ ನಾಯಕರು ಮೊದಲ ಬಾರಿಗೆ ಹೇಳಿಕೆಯನ್ನು ಕೊಟ್ಟಿದ್ದಾರೆ.
3
+ ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಎಲ್ಲರೂ ಸಮಾನರು ಎಂದು ಹೇಳಿದ್ದಾರೆ.ಎಚ್‌.ಡಿ. ಕುಮಾರಸ್ವಾಮಿ ಅವರು ಈ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಸರ್ಕಾರ ಎಸ್‌ಐಟಿ ರಚಿಸಿದೆ.
4
+ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ ಎಂದು ಅಶೋಕ್‌ ಹೇಳಿದ್ದಾರೆ. ಇನ್ನು, ಪೆನ್‌ ಡ್ರೈವ್‌ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ರಕ್ಷಣೆ ಇಲ್ಲ ಎನ್ನುವ ಡಿ.ಕೆ. ಸುರೇಶ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಆರ್‌ ಅಶೋಕ್‌, ಈಗ ರಾಜ್ಯದಲ್ಲಿ ಅವರದ್ದೇ ಸರ್ಕಾರ ಇದೆಯಲ್ಲ, ರಕ್ಷಣೆ ಕೊಡಲಿ ಎಂದು ಆಗ್ರಹಿಸಿದ್ದಾರೆ.
5
+ ಕಾನೂನಿಗಿಂತ ಯಾರೂ ಕೂಡ ದೊಡ್ಡವರಿಲ್ಲ. ಪ್ರಜ್ವಲ್‌ ರೇವಣ್ಣ ಇರಲಿ, ಇನ್ಯಾರೇ ಇರಲಿ ತಪ್ಪು ಮಾಡಿದಾಗ ಕಾನೂನಿಗೆ ತಲೆ ಬಾಗಲೇಬೇಕು. ಈಗಾಗಲೇ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಉಪ್ಪು ತಿಂದವರು ನೀರು ಕುಡಿಯಲೇಬೇಕೆಂದು ಹೇಳಿದ್ದಾರೆ. ಯಾರನ್ನು ರಕ್ಷಣೆ ಮಾಡುವ ಉದ್ದೇಶವಿಲ್ಲ ಎಂದರು.
6
+ ಪ್ರಜ್ವಲ್‌ ರೇವಣ್ಣ ಅವರಿಗೆ ದೇಶ ಬಿಟ್ಟು ಹೋಗುವಂತೆ ಬಿಜೆಪಿಯಾಗಲಿ, ಜೆಡಿಎಸ್‌ ನಾಯಕರು ಸಲಹೆ ಕೊಟ್ಟಿಲ್ಲ. ಅಷ್ಟಕ್ಕೂ ರಾಜ್ಯ ಗುಪ್ತಚರ ವಿಭಾಗ ಮುಖ್ಯಮಂತ್ರಿ ಅಧೀನದಲ್ಲಿದೆ. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನೆ ಮಾಡಿದರು. ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬಾಗಲಕೋಟೆಯಲ್ಲಿ ಈ ಪ್ರಕರಣದ ಬಗ್ಗೆ ಮಾತನಾಡಿದ್ದು, ಎಸ್‌ಐಟಿ ತನಿಖೆ ನಡೆದು ಸತ್ಯಾಸತ್ಯತೆ ಹೊರಬರಲಿ ಎಂದು ಹೇಳಿದ್ದಾರೆ.
7
+ ನಾವು ಯಾರನ್ನು ರಕ್ಷಣೆ ಮಾಡುವುದಿಲ್ಲ. ತಪ್ಪು ಮಾಡಿದ್ದರೆ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ. ಸರ್ಕಾರ ಈಗಾಗಲೇ ಎಸ್‌ಐಟಿ ರಚಿಸಿದೆ. ತನಿಖೆ ನಂತರ ಸತ್ಯಾಸತ್ಯತೆ ಹೊರಬರಲಿದೆ. ಅಲ್ಲಿಯವರೆಗೂ ಕಾದು ನೋಡೋಣ ಎಂದರು. ಇನ್ನೊಂದೆಡೆ ಹುಬ್ಬಳ್ಳಿಯಲ್ಲಿ ಮಾತನಾಡುತ್ತಿದ್ದ ಬಿಜೆಪಿಯ ಮಾಜಿ ಶಾಸಕ ಸಿ.ಟಿ. ರವಿ, ಕಾನೂನು ಎಲ್ಲರಿಗೂ ಒಂದೇ ಇರುತ್ತದೆ ಎಂದಿದ್ದಾರೆ.
8
+ ಕಾನೂನು ತಮಗೆ ಅನ್ವಯ ಆಗಬಾರದು ಎಂದು ಕಾಂಗ್ರೆಸ್‌ ಭಾವಿಸುತ್ತದೆ. ಕಾನೂನು ಎಲ್ಲರಿಗೂ ಒಂದೇ ಎಂಬುದು ತಮ್ಮ ಭಾವನೆ ಎಂದು ಹೇಳಿದ ಸಿ.ಟಿ. ರವಿ, ಈ ಪ್ರಕರಣ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತೆ ಎಂದು ಹೇಳಲು ಆಗಲ್ಲ. ಹಾಗೆಯೇ ಪರಿಣಾಮ ಬೀರುವುದಿಲ್ಲ ಎಂದಲೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
9
+ 2019��ಲ್ಲಿ ಹಾಸನದಲ್ಲಿ ಜೆಡಿಎಸ್‌ನಿಂದ ಪ್ರಜ್ವಲ್‌ ರೇವಣ್ಣಗೆ ಟಿಕೆಟ್‌ ಕೊಟ್ಟಿದ್ದರು. ಆವತ್ತು ಅವರ ಜೊತೆ ಕಾಂಗ್ರೆಸ್‌ ಇತ್ತು. ನಾವು ವಿರೋಧವಾಗಿ ಅಭ್ಯರ್ಥಿ ಹಾಕಿದ್ದೆವು. ಇದೀಗ ಪ್ರಜ್ವಲ್‌ ರೇವಣ್ಣಗೆ ಟಿಕೆಟ್‌ ಕೊಟ್ಟಿರುವುದು ನಾವಲ್ಲ, ಜೆಡಿಎಸ್‌ ಎಂದು ಸಿ.ಟಿ.ರವಿ ಹೇಳಿದ್ದಾರೆ.
eesanje/url_46_164_9.txt ADDED
@@ -0,0 +1,7 @@
 
 
 
 
 
 
 
 
1
+ ಕೈಕೊಟ್ಟ ಮುಂಗಾರು ಪೂರ್ವ ಮಳೆ, ರಾಜ್ಯದಲ್ಲಿ ದಾಖಲೆ ತಾಪಮಾನ, ಬೆಂಗಳೂರು ಕೊತಕೊತ
2
+ ಬೆಂಗಳೂರು,ಏ.29-ಕಳೆದ ವರ್ಷದ ಮುಂಗಾರು ಹಿಂಗಾರಿನಂತೆ ಈ ಬಾರಿಯ ಮುಂಗಾರು ಪೂರ್ವ ಮಳೆಯು ಕೈಕೊಟ್ಟಿದ್ದು, ರಾಜ್ಯದಲ್ಲಿ ಬಿಸಿಲಿನ ಝಳ ಹೆಚ್ಚಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 38.5 ಡಿಗ್ರಿ ಸೆಂಟಿಗ್ರೇಡ್‌ನಷ್ಟು ದಾಖಲಾಗಿದ್ದು, ರಾಯಚೂರಿನಲ್ಲಿ ಅತ್ಯಧಿಕ 43 ಡಿ.ಸೆ.ನಷ್ಟು ದಾಖಲಾಗಿದೆ.
3
+ ಬೆಂಗಳೂರಿನಲ್ಲಿ ನಿನ್ನೆ ಕೂಡ 38.5ರಷ್ಟು ಗರಿಷ್ಠ ತಾಪಮಾನ ದಾಖಲಾಗಿದೆ. ಇದು ಕೂಡ ದಾಖಲಾರ್ಹ ತಾಪಮಾನವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 2016ರ ಏಪ್ರಿಲ್‌ 25ರಂದು ಬೆಂಗಳೂರು ನಗರದಲ್ಲಿ 39.2 ಡಿಗ್ರಿ ಸೆಂಟಿಗ್ರೇಡ್‌ ದಾಖಲಾಗಿತ್ತು. 1999ರ ಏ.3ರಂದು 38.3 ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2016ರ ಏಪ್ರಿಲ್‌ 25ರಂದು 38.3 ಡಿಗ್ರಿ ಸೆಂಟಿಗ್ರೇಡ್‌ನಷ್ಟು ಗರಿಷ್ಠ ತಾಪಮಾನ ದಾಖಲಾಗಿತ್ತು.
4
+ ನಿನ್ನೆ 8 ವರ್ಷಗಳಲ್ಲೇ ಅತ್ಯಧಿಕ ಗರಿಷ್ಠ ತಾಪಮಾನ ಬೆಂಗಳೂರಿನಲ್ಲಿ ದಾಖಲಾಗಿದೆ. ಮಾರ್ಚ್‌, ಏಪ್ರಿಲ್‌ ತಿಂಗಳಿನಲ್ಲಿ ಬೇಸಿಗೆ ಅಥವಾ ಮುಂಗಾರು ಪೂರ್ವ ಮಳೆಯಾಗುವುದು ವಾಡಿಕೆ. ಏಪ್ರಿಲ್‌ ಮಧ್ಯ ಭಾಗದಲ್ಲಿ ರಾಜ್ಯದ ಕೆಲವೆಡೆ ಮಾತ್ರ ಮಳೆಯಾಗಿದ್ದನ್ನು ಬಿಟ್ಟರೆ ರಾಜ್ಯದಲ್ಲಿ ಉತ್ತಮ ಮಳೆಯಾಗಿಲ್ಲ. ಇದರಿಂದ ಗರಿಷ್ಠ ತಾಪಮಾನ ಹೆಚ್ಚಳವಾಗಿ ಬಿಸಿ ಗಾಳಿಯ ವಾತಾವರಣ ಕಂಡುಬರುತ್ತಿದೆ. ಇದರಿಂದ ಜನರು ತತ್ತರಿಸುವಂತಾಗಿದೆ.
5
+ ಜನರಿಗಷ್ಟೇ ಅಲ್ಲ ಜಾನುವಾರು ಹಾಗೂ ಕಾಡು ಪ್ರಾಣಿಗಳು ಕುಡಿಯುವ ನೀರಿನ ಸಂಕಷ್ಟ ಎದುರಾಗಿದೆ. ಕರ್ನಾಟಕ ಒಂದರ್ಥದಲ್ಲಿ ಬಿಸಿಲ ನಾಡಾಗಿ ಪರಿಣಮಿಸಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿಗಿಂತ ಹೆಚ್ಚಾಗಿ ಕಂಡುಬರುತ್ತಿದೆ.
6
+ ಬೆಳಗಾವಿ ವಿಮಾನ ನಿಲ್ದಾಣದಲ್ಲಿ 34.4, ಬೀದರ್‌ 39.8 , ವಿಜಯಪುರ 41.2, ಬಾಗಲಕೋಟೆ 42.3, ಧಾರವಾಡ 39.2, ಗದಗ 40.2, ಕಲಬುರಗಿ 42.9, ಹಾವೇರಿ 39.8, ಕೊಪ್ಪಳ 42, ಚಾಮರಾಜನಗರ 40.1, ಚಿತ್ರದುರ್ಗ 39.8, ದಾವಣಗೆರೆ 40, ಮಂಡ್ಯ 39.6, ಶಿವಮೊಗ್ಗ 38.4 ಡಿ.ಸೆ.ನಷ್ಟು ದಾಖಲಾಗಿದೆ.
7
+ ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದಲ್ಲಿ ಒಣ ಹವೆ ಮುಂದುವರೆದಿದ್ದು, ಸದ್ಯಕ್ಕೆ ಉತ್ತಮ ಮಳೆಯಾಗುವ ಲಕ್ಷಣಗಳಿಲ್ಲ. ಆದರೆ ಮೇ ಮೊದಲ ವಾರದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಒಳನಾಡಿನ ಕೆಲವು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ.