a38d8aa0b970040434a2c0ba4f66f5bfb5ec56d15ea5ddeae03656f5e0f374c3
Browse files- eesanje/url_46_293_11.txt +10 -0
- eesanje/url_46_293_12.txt +7 -0
- eesanje/url_46_293_2.txt +13 -0
- eesanje/url_46_293_3.txt +5 -0
- eesanje/url_46_293_4.txt +6 -0
- eesanje/url_46_293_5.txt +10 -0
- eesanje/url_46_293_6.txt +8 -0
- eesanje/url_46_293_7.txt +21 -0
- eesanje/url_46_293_8.txt +6 -0
- eesanje/url_46_293_9.txt +7 -0
- eesanje/url_46_294_1.txt +13 -0
- eesanje/url_46_294_10.txt +8 -0
- eesanje/url_46_294_11.txt +9 -0
- eesanje/url_46_294_12.txt +11 -0
- eesanje/url_46_294_2.txt +6 -0
- eesanje/url_46_294_3.txt +11 -0
- eesanje/url_46_294_4.txt +5 -0
- eesanje/url_46_294_5.txt +7 -0
- eesanje/url_46_294_6.txt +8 -0
- eesanje/url_46_294_7.txt +11 -0
- eesanje/url_46_294_8.txt +9 -0
- eesanje/url_46_294_9.txt +8 -0
- eesanje/url_46_295_1.txt +9 -0
- eesanje/url_46_295_10.txt +6 -0
- eesanje/url_46_295_11.txt +7 -0
- eesanje/url_46_295_12.txt +13 -0
- eesanje/url_46_295_2.txt +5 -0
- eesanje/url_46_295_3.txt +7 -0
- eesanje/url_46_295_4.txt +7 -0
- eesanje/url_46_295_5.txt +8 -0
- eesanje/url_46_295_6.txt +8 -0
- eesanje/url_46_295_7.txt +7 -0
- eesanje/url_46_295_8.txt +6 -0
- eesanje/url_46_295_9.txt +14 -0
- eesanje/url_46_296_1.txt +11 -0
- eesanje/url_46_296_10.txt +5 -0
- eesanje/url_46_296_11.txt +11 -0
- eesanje/url_46_296_12.txt +13 -0
- eesanje/url_46_296_2.txt +10 -0
- eesanje/url_46_296_3.txt +5 -0
- eesanje/url_46_296_4.txt +6 -0
- eesanje/url_46_296_5.txt +6 -0
- eesanje/url_46_296_6.txt +10 -0
- eesanje/url_46_296_7.txt +8 -0
- eesanje/url_46_296_8.txt +5 -0
- eesanje/url_46_296_9.txt +10 -0
- eesanje/url_46_297_1.txt +5 -0
- eesanje/url_46_297_10.txt +6 -0
- eesanje/url_46_297_11.txt +5 -0
- eesanje/url_46_297_12.txt +12 -0
eesanje/url_46_293_11.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬಂಡವಾಳ ಹೂಡಿಕೆ ಸಮಾವೇಶಗಳಿಗಾಗಿ 88 ಕೋಟಿ ಖರ್ಚು
|
2 |
+
ಬೆಳಗಾವಿ,ಡಿ.8- ಕಳೆದ ಎರಡು ಬಂಡವಾಳ ಹೂಡಿಕೆದಾರರ ಸಮಾವೇಶಗಳಲ್ಲಿ ಮಾಡಿಕೊಳ್ಳಲಾಗಿರುವ ಒಪ್ಪಂದಗಳು ಹಂತಹಂತವಾಗಿ ಜಾರಿಯಾಗಲಿದ್ದು, ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ಪೂರ್ಣಗೊಳ್ಳಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
|
3 |
+
ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಬಿಜೆಪಿಯ ಹೊಳಲ್ಕೆರೆ ಕ್ಷೇತ್ರದ ಶಾಸಕ ಎಂ.ಚಂದ್ರಪ್ಪ ಪ್ರಶ್ನೆ ಕೇಳಿ, ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಗಳಿಗಾಗಿ 88 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಆದರೆ ಹೂಡಿಕೆಯಾಗಿರುವುದು 94 ಕೋಟಿ ರೂ.ಗಳು ಮಾತ್ರ. ಇದು ಸರಿಯೇ? ಎಂದು ಆಕ್ಷೇಪಿಸಿದ್ದಲ್ಲದೆ, 1995 ರಲ್ಲಿ ಬಿಡದಿಯ ಬಳಿ ಟಯೋಟಾ ಕಂಪನಿಗೆ 400 ಎಕರೆ ಜಮೀನು ಮತ್ತು 16 ವರ್ಷ ತೆರಿಗೆ ಬಾಕಿ ಉಳಿಸಿಕೊಳ್ಳಲು ಅನುಕೂಲ ಕಲ್ಪಿಸಲಾಗಿತ್ತು.
|
4 |
+
ಟಯೋಟಾ ಸಂಸ್ಥೆಯ ಬಳಿ 8,500 ಸಾವಿರ ಕೋಟಿ ರೂ.ಗಳಷ್ಟು ತೆರಿಗೆ ಬಾಕಿ ಉಳಿದಿದೆ. ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಸಹಿ ಹಾಕಿರುವ ಕಂಪನಿಗಳಿಗೆ 16 ಸಾವಿರ ಎಂಎಲ್ಡಿ ನೀರು ಪೂರೈಸುವುದಾಗಿ ತಿಳಿಸಲಾಗಿದೆ. ನಮ್ಮಲ್ಲಿ ಕುಡಿಯಲಿಕ್ಕೇ ನೀರಿಲ್ಲ. ಇಷ್ಟೆಲ್ಲಾ ಸೌಲಭ್ಯ ಮತ್ತು ಸವಲತ್ತುಗಳನ್ನು ನೀಡಿ ರತ್ನಗಂಬಳಿ ಹಾಸಿ ಕೈಗಾರಿಕೆಗಳನ್ನು ಆಹ್ವಾನಿಸಲಾಗುತ್ತಿದೆ. ಆದರೆ ಅದರಿಂದ ಪ್ರಯೋಜನವೇನು? ಸ್ಥಳೀಯರಿಗೆ ಉದ್ಯೋಗ ದೊರೆಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
|
5 |
+
ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಎಂ.ಬಿ.ಪಾಟೀಲ್, 2022 ರ ನವೆಂಬರ್ 2 ರಿಂದ 4 ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಇನ್ವೆಸ್ಟ್ ಕರ್ನಾಟಕ ಸಮಾವೇಶ ನಡೆಸಲಾಯಿತು. ಅದರಲ್ಲಿ 57 ಕಂಪನಿಗಳೊಂದಿಗೆ 5.41 ಲಕ್ಷ ಕೋಟಿ ಬಂಡವಾಳ ಹೂಡಿಕೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಅವುಗಳಲ್ಲಿ 7 ಯೋಜನೆಗಳಿಗೆ ಏಕಗವಾಕ್ಷಿ ಸಮಿತಿ ಅನುಮೋದನೆ ನೀಡಿದೆ. ಭೂಮಿ, ನೀರು, ವಿದ್ಯುತ್ ಪೂರೈಕೆಯಂತಹ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಸುಮಾರು 75 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ವಿವರಿಸಿದರು.
|
6 |
+
ಸಿಖ್ ಪ್ರತ್ಯೇಕತಾವಾದಿ ಹತ್ಯೆ ಪ್ರಕರಣದ ತನಿಖೆಯಾಗಲೇಬೇಕು : ಅಮೆರಿಕ
|
7 |
+
2022 ರ ಅಕ್ಟೋಬರ್ 28 ರಂದು 12.23 ಲಕ್ಷ ಕೋಟಿ ರೂ. ಖರ್ಚು ಮಾಡಿ ಹುಬ್ಬಳ್ಳಿಯಲ್ಲಿ ಎಫ್ಎಂಸಿಜಿ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲಾಗಿದೆ. ಅಲ್ಲಿ 16 ಕಂಪನಿಗಳಿಂದ 1275 ಕೋಟಿ ರೂ. ಬಂಡವಾಳ ಹೂಡಿಕೆಯ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಅವುಗಳ ಪೈಕಿ 3 ಯೋಜನೆಗಳಿಗೆ ಏಕಗವಾಕ್ಷಿ ಯೋಜನೆಗಳಡಿ ಅನುಮೋದನೆ ನೀಡಲಾಗಿದೆ ಎಂದು ವಿವರಿಸಿದರು.
|
8 |
+
ಬೃಹತ್ ಯೋಜನೆ ಸ್ಥಾಪನೆಯಾಗಲು ಮೂರ್ನಾಲ್ಕು ವರ್ಷಗಳ ಸಮಯಾವಕಾಶ ಬೇಕಾಗುತ್ತದೆ. ಅದರಲ್ಲಿ ಶೇ.38 ರಷ್ಟು ಯೋಜನೆಗಳು ಹಸಿರು ಇಂಧನ ವಲಯಕ್ಕೆ ಸಂಬಂಧಪಟ್ಟದ್ದಾಗಿವೆ ಎಂದು ವಿವರಿಸಿದರು. ಸರೋಜಿನಿ ಮಹಿಷಿ ವರದಿಯ ಪ್ರಕಾರ, ಡಿ ವರ್ಗಗಳ ಹುದ್ದೆಗಳಿಗೆ ಶೇ.100 ರಷ್ಟು ಮೀಸಲಾತಿ ನೀಡಬೇಕು. ಒಟ್ಟಾರೆ ಶೇ.70 ರಷ್ಟು ಕನ್ನಡಿಗರಿಗೆ ಉದ್ಯೋಗ ನೀಡಬೇಕಾಗಿದೆ ಎಂದರು.
|
9 |
+
2018 ರಿಂದ ಇಲ್ಲಿಯವರೆಗೆ ವಿದೇಶಗಳಲ್ಲಿ 403 ಭಾರತೀಯ ವಿದ್ಯಾರ್ಥಿಗಳ ಸಾವು
|
10 |
+
ಸರ್ವತಾ ಸಂಸ್ಥೆಯ ಬಗ್ಗೆ ಶಾಸಕರು ನೀಡಿರುವ ಮಾಹಿತಿಯನ್ನು ಪರಿಶೀಲನೆ ನಡೆಸಿ ಅಗತ್ಯಬಿದ್ದರೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
|
eesanje/url_46_293_12.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ನಗರಸಭೆ, ಪುರಸಭೆಗಳಲ್ಲಿ ನಮೂನೆ-3ರ ವಿತರಣೆಗೆ ಕ್ರಮ
|
2 |
+
ಬೆಳಗಾವಿ,ಡಿ.8- ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಮೂನೆ-3 ರ ವಿತರಣೆಯಲ್ಲಾಗುತ್ತಿರುವ ಅಡಚಣೆಗಳನ್ನು ನಿವಾರಿಸಲು ಇನ್ನೆರೆಡು ತಿಂಗಳ ಒಳಗಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಸಚಿವ ರಹೀಂಖಾನ್ ತಿಳಿಸಿದ್ದಾರೆ.ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಶಿರಸಿ ಕ್ಷೇತ್ರದ ಶಾಸಕ ಭೀಮಣ್ಣ ನಾಯಕ್ ಅವರು ಪ್ರಶ್ನೆ ಕೇಳಿ, ಶಿರಸಿ ಸಿದ್ಧಾಪುರ ಕ್ಷೇತ್ರದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಫಾರಂ ನಂ-3 ನೀಡುತ್ತಿಲ್ಲ. ಇದರಿಂದ ಪಟ್ಟಣ, ಪಂಚಾಯಿತಿ, ನಗರಸಭೆ, ಪುರಸಭೆಗಳಲ್ಲಿರುವ ತಮ್ಮ ಮನೆಗಳ ನಿರ್ಮಾಣಕ್ಕೆ ಸಾಲ ಪಡೆಯಲು ಅವಕಾಶಗಳಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
|
3 |
+
ಸಿಖ್ ಪ್ರತ್ಯೇಕತಾವಾದಿ ಹತ್ಯೆ ಪ್ರಕರಣದ ತನಿಖೆಯಾಗಲೇಬೇಕು : ಅಮೆರಿಕ
|
4 |
+
ಶಾಸಕ ಜಿ.ಟಿ.ದೇವೇಗೌಡ ಇದಕ್ಕೆ ಬೆಂಬಲವಾಗಿ ಮಾತನಾಡಿ, ಗ್ರಾಮ ಪಂಚಾಯಿತಿಗಳಿಂದ ಮೇಲ್ದೆರ್ಜೆಗೇರಿರುವ ನಗರ ಸಂಸ್ಥೆಗಳಲ್ಲಿ ಅರ್ಜಿ ನಮೂನೆ-11 ಬಿ ಯನ್ನು ನೀಡುತ್ತಿಲ್ಲ. ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ವಿವರಿಸಿದರು.
|
5 |
+
ಶಾಸಕರಾದ ಕೋ.ನ.ರೆಡ್ಡಿ, ಸತೀಶ್ ಸೈಲ್ ಸೇರಿದಂತೆ ಮತ್ತಿತರರು ಚರ್ಚೆಯಲ್ಲಿ ಭಾಗವಹಿಸಿದ್ದರು. ಸಚಿವ ರಹೀಂಖಾನ್ ಇದು ರಾಜ್ಯಾದ್ಯಂತ ಗಂಭೀರ ಸ್ವರೂಪದ ಸಮಸ್ಯೆಯಾಗಿದೆ. ಅದರ ನಿವಾರಣೆಗಾಗಿ ಸಚಿವ ಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ. ಈಗಾಗಲೇ ಎರಡು ಸಭೆಗಳಾಗಿದ್ದು, ಹಿಂದಿನ ಏಳೆಂಟು ದಿನಗಳಲ್ಲಿ ಮೂರನೇ ಸಭೆ ನಡೆಯಲಿದೆ. ಅಲ್ಲಿ ಸೂಕ್ತ ತೀರ್ಮಾನ ತೆಗೆದುಕೊಂಡು ಬಿಬಿಎಂಪಿಯ ಮಾದರಿಯಲ್ಲಿ ಬಿ ಖಾತಾಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
|
6 |
+
ಮತ್ತೆ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ಆರ್ಬಿಐ
|
7 |
+
ಈ ಹಿಂದೆ ಹಳೆಯ ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಯೋಜಿತ ನಕ್ಷೆಗಳಿರುವುದಿಲ್ಲ. ಫಾರಂ-ಸಿ ನೀಡಲು ಯೋಜಿತ ನಕ್ಷೆ, ನಿರಪೇಕ್ಷಣಾ ಪತ್ರ ಸೇರಿದಂತೆ ಹಲವು ಷರತ್ತುಗಳನ್ನು ವಿಸಲಾಗಿದೆ. ಅವುಗಳು ಲಭ್ಯವಿಲ್ಲದ ಕಾರಣ ಸಮಸ್ಯೆ ಹೆಚ್ಚಾಗಿದೆ ಎಂದರು. ಶೀಘ್ರದಲ್ಲೇ ನಿರ್ಧಾರ ತೆಗೆದುಕೊಂಡು 2 ತಿಂಗಳೊಳಗಾಗಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದರು.
|
eesanje/url_46_293_2.txt
ADDED
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ನಾಳೆ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ
|
2 |
+
ಬೆಂಗಳೂರು, ಡಿ.8- ಜನತಾದಳ ಜಾತ್ಯತೀತ (ಜೆಡಿಎಸ್) ಪಕ್ಷದ ಮಹತ್ವದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ನಾಳೆ ಪಕ್ಷದ ಕೇಂದ್ರ ಕಚೇರಿ ಜೆ.ಪಿ. ಭವನದಲ್ಲಿ ನಡೆಯಲಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಆರಂಭವಾಗುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗುತ್ತದೆ.
|
3 |
+
ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಆಗಮಿಸುವಂತೆ ಎಲ್ಲಾ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರಿಗೆ ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಕೆ.ಆರ್.ಶಿವಕುಮಾರ್ ಅವರು ಆಹ್ವಾನ ನೀಡಿದ್ದಾರೆ.
|
4 |
+
ಎನ್ಡಿಎ ಮೈತ್ರಿಕೂಟ ಸೇರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಕಟಿಸಿದ ಬೆನ್ನಲ್ಲೇ ಜೆಡಿಎಸ್ನಲ್ಲಿ ಉಂಟಾಗಿರುವ ಆಂತರಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಾಳೆ ನಡೆಯುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ಭಾರೀ ಮಹತ್ವ ಪಡೆದುಕೊಂಡಿದ್ದು, ರಾಜಕೀಯವಾಗಿ ತೀವ್ರ ಕುತೂಹಲ ಕೆರಳಿಸಿದೆ.
|
5 |
+
ಎನ್ಡಿಎ ಮೈತ್ರಿಕೂಟ ಸೇರುವುದನ್ನು ವಿರೋಧಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಅವರು, ಪ್ರತ್ಯೇಕ ಸಭೆ ನಡೆಸಿ ನಮ್ಮದೇ ಒರ್ಜಿನಲ್ ಜನತಾದಳವೆಂದು ಘೋಷಿಸಿಕೊಂಡು ಪಕ್ಷದ ನಾಯಕರಿಗೆ ಸಡ್ಡು ಹೊಡೆದಿದ್ದರು. ಜೊತೆಗೆ ರಾಷ್ಟ್ರೀಯ ಉಪಾಧ್ಯಕ್ಷರಾದ ಸಿ.ಕೆ.ನಾನು ನೇತೃತ್ವದಲ್ಲಿ ಕೇರಳದಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ನಡೆಸಿದ್ದು, ಎನ್ಡಿಎ ಮೈತ್ರಿಕೂಟದಿಂದ ಹೊರಬರಲು ಡಿಸೆಂಬರ್ 10ರ ಗಡುವು ನೀಡಲಾಗಿತ್ತು.
|
6 |
+
ಈ ಸಂಬಂಧ ಸಿ.ಕೆ.ನಾನು ಅವರು ದೇವೇಗೌಡರಿಗೆ ಪತ್ರವನ್ನು ಬರೆದು ಸಭೆಯ ನಿರ್ಣಯವನ್ನು ತಿಳಿಸಿದ್ದರು. ಅಲ್ಲದೆ, ಡಿ.11ರಂದು ಮತ್ತೆ ರಾಷ್ಟ್ರ ಮಟ್ಟದ ಸಮಗ್ರವಾದ ಸಭೆ ಕರೆದಿದ್ದಾರೆ. ಆ ಸಭೆಯಲ್ಲಿ ಮುಂದಿನ ತೀರ್ಮಾನಗಳನ್ನು ಕೈಗೊಳ್ಳುವ ಸಾಧ್ಯತೆಗಳಿವೆ.
|
7 |
+
ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸೇರುವುದರಿಂದ ಜೆಡಿಎಸ್ನ ಜಾತ್ಯತೀತ ನಿಲುವಿಗೆ ಧಕ್ಕೆಯಾಗಲಿದೆ ಎಂದು ಇಬ್ರಾಹಿಂ ಹೇಳಿದರೆ, ಬಿಜೆಪಿ ಜೊತೆಗೆ ಹೋಗುವುದರಿಂದ ಪಕ್ಷದ ಜಾತ್ಯತೀತ ಸಿದ್ಧಾಂತಕ್ಕೆ ಧಕ್ಕೆಯಾಗುವುದಿಲ್ಲ ಎಂದು ದೇವೇಗೌಡರು ಹಾಗೂ ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದರು.
|
8 |
+
ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಪಕ್ಷ ವಿರೋ ಚಟುವಟಿಕೆಗಳ ಆರೋಪದ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷದಿಂದ ಅಮಾನತ್ತು ಮಾಡಿದ್ದಾರೆ. ಇದಕ್ಕೂ ಮುನ್ನ ಇಬ್ರಾಹಿಂ ನಾವೇ ಒರ್ಜಿನಲ್ ಜೆಡಿಎಸ್ ಎಂದು ಹೇಳಿಕೆ ನೀಡಿದ ಸಂದರ್ಭದಲ್ಲಿ ಪಕ್ಷದ ರಾಜ್ಯ ಘಟಕವನ್ನೇ ಗೌಡರು ವಿಸರ್ಜಿಸಿ, ಇಬ್ರಾಹಿಂ ಅವರಿಗೆ ಅಧಿಕಾರವಿಲ್ಲದಂತೆ ಮಾಡಿದ್ದರು. ಹಂಗಾಮಿ ರಾಜ್ಯಾಧ್ಯಕ್ಷರಾಗಿ ಹೆಚ್.ಡಿ.ಕುಮಾರಸ್ವಾಮಿ ನೇಮಕಗೊ��ಡಿದ್ದಾರೆ.
|
9 |
+
ಇಂದಿರಾ ಕ್ಯಾಂಟಿನ್ನಲ್ಲಿ ಚಪಾತಿ, ಮುದ್ದೆ, ಬಸ್ಸಾರು ಭಾಗ್ಯ
|
10 |
+
ಕಾನೂನಾತ್ಮಕ ಬಿಕಟ್ಟು ಉಂಟಾಗದಂತೆ ಪಕ್ಷದ ಸಿದ್ಧಾಂತ ಹಾಗೂ ನಿಯಮಗಳಿಗೆ ಅನುಗುಣವಾಗಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸುವ ಮೂಲಕ ಸೂಕ್ತ ನಿರ್ಣಯ ಕೈಗೊಳ್ಳಲು ಉದ್ದೇಶಿಸಲಾಗಿದೆ. ಮುಂದೆ ಎದುರಾಗಬಹುದಾದ ತೊಡಕುಗಳ ನಿವಾರಣೆಗೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
|
11 |
+
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಚುನಾವಣಾ ಮೈತ್ರಿ ಮಾಡಿಕೊಂಡಿದ್ದು, ಕ್ಷೇತ್ರಗಳ ಹಂಚಿಕೆ ಮಾತ್ರ ಬಾಕಿ ಉಳಿದಿದೆ. ಈ ಹಂತದಲ್ಲಿ ಇಬ್ರಾಹಿಂ ಬಣದಿಂದ ಯಾವುದೇ ತೊಂದರೆ ಉಂಟಾಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ.
|
12 |
+
ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾಜಿ ಪ್ರಧಾನ ಮಂತ್ರಿಗಳಾದ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್. ಡಿ. ಕುಮಾರಸ್ವಾಮಿ ಯವರು ಮತ್ತು ಪಕ್ಷದ ರಾಷ್ಟ್ರೀಯ ಕಾರ್ಯ ಕಾರಿಣಿ ಸಮಿತಿ ಸದಸ್ಯರುಗಳು ಉಪಸ್ಥಿತರಿರು ತ್ತಾರೆ ಎಂದು ಬೆಂಗಳೂರು ಮಹಾನಗರ ಜೆಡಿಎಸ್ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
|
13 |
+
ಈ ಸಂದರ್ಭದಲ್ಲಿ ಬೆಂಗಳೂರು ನಗರದ ಪಕ್ಷದ ಮುಖಂಡರು , ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಪದಾಕಾರಿ ಗಳು, ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರು, ವಿವಿಧ ವಿಭಾಗಗಳ ಅಧ್ಯಕ್ಷರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ರ್ಪಸಿದ್ದ ಅಭ್ಯರ್ಥಿಗಳು ಹಾಗೂ ಬಿಬಿಎಂಪಿ ಮಾಜಿ ಸದಸ್ಯರು ಸಭೆಗೆ ಆಗಮಿಸುವಂತೆ ಅವರು ಕೋರಿದ್ದಾರೆ.
|
eesanje/url_46_293_3.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಈ ಕ್ಷಣವೇ ರಾಜೀನಾಮೆ ನೀಡಲು ಸಿದ್ಧ : ಬಸವರಾಜ ಹೊರಟ್ಟಿ
|
2 |
+
ಬೆಳಗಾವಿ, ಡಿ.8- ನಾನು ಈ ಕುರ್ಚಿಗೆ ಅಂಟಿಕೊಂಡು ಕುಳಿತಿಲ್ಲ. ಈ ಕ್ಷಣವೇ ಬೇಕಾದರೂ ರಾಜೀನಾಮೆ ನೀಡುವೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಮಾರ್ಮಿಕವಾಗಿ ಮೇಲ್ಮನೆಯಲ್ಲಿ ನುಡಿದರು.
|
3 |
+
ವಿಧಾನಪರಿಷತ್ತಿನ ಕಲಾಪದಲ್ಲಿಂದು ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಗೆ ದಲಿತರ ಕಲ್ಯಾಣಕ್ಕಾಗಿ ಮೀಸಲಿಟ್ಟ ಅನುದಾನ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ವಿಚಾರಕ್ಕೆ ಮೇಲ್ಮನೆಯಲ್ಲಿ ವಿಪಕ್ಷ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸುತ್ತಿದ್ದ ಸಂದರ್ಭದಲ್ಲಿ, ಪೀಠದಿಂದ ಎದ್ದು ನಿಂತ ಅವರು, ಇದೇ ರೀತಿ ಪದ್ಧತಿ ಮುಂದುವರೆಸಿದರೆ ಸುಗಮ ಕಲಾಪ, ಸದನ ನಡೆಸುವುದು ಬೇಡ ಅನಿಸುತ್ತಿದೆ ಎಂದರು.
|
4 |
+
ಇಂದಿರಾ ಕ್ಯಾಂಟಿನ್ನಲ್ಲಿ ಚಪಾತಿ, ಮುದ್ದೆ, ಬಸ್ಸಾರು ಭಾಗ್ಯ
|
5 |
+
ಪ್ರಶ್ನೋತ್ತರ ವೇಳೆಯಲ್ಲಿ ಚರ್ಚೆಗೆ ಅವಕಾಶ ನೀಡಲು ಸಾಧ್ಯವೇ ಇಲ್ಲ. ಆದರೂ, ಈ ವಿಷಯದ ಗಂಭೀರವನ್ನು ಅರೆತು ಸೋಮವಾರ ಅರ್ಧ ಗಂಟೆ ಚರ್ಚೆಗೆ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ, ಧರಣಿ ಕೈಬಿಟ್ಟು ಹೊರಬಣ್ಣಿ ಎಂದು ರೂಲಿಂಗ್ ನೀಡಿದರು. ಆದರೂ, ವಿಪಕ್ಷ ಸದಸ್ಯರು ಸದನದ ಬಾವಿಯಲ್ಲಿಯೇ ಇದ್ದ ಕಾರಣಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಈ ಸ್ಥಾನದಲ್ಲಿ ನನಗೂ ಸಾಕಾಗಿದೆ. ನಾನು ಈ ಕುರ್ಚಿಗಾಗಿ ಅಂಟಿಕೊಂಡಿಲ್ಲ, ಈ ಕ್ಷಣವೇ ರಾಜೀನಾಮೆ ನೀಡಿ ಮನೆಗೆ ಹೋಗುವೇ ಎಂದರು ತಿಳಿಸಿದರು.
|
eesanje/url_46_293_4.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಕಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ, ಒಂದೇ ಕುಟುಂಬದ ಐವರ ಸಾವು
|
2 |
+
ಕಾರವಾರ,ಡಿ.8- ಅತಿವೇಗವಾಗಿ ಮುನ್ನುಗ್ಗಿದ್ದ ಕೆಎಸ್ಆರ್ಟಿಸಿ ಬಸ್ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐದು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಶಿರಸಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿನಲ್ಲಿ ನಡೆದಿದೆ.
|
3 |
+
ಮೃತರನ್ನು ಮಂಗಳೂರು ಮೂಲದ ಸುಹಾಸ್, ಪುಷ್ಪಲತಾ, ನಿತ್ಯಲಕ್ಷ್ಮಿ, ರಾಮಕೃಷ್ಣ ರಾವ್, ಅರವಿಂದ್ ಎಂದು ಗುರುತಿಸಲಾಗಿದೆ. ಒಂದೇ ಕುಟುಂಬದ ಈ ಐದು ಮಂದಿ ಮದುವೆ ಸಮಾ ರಂಭಕ್ಕಾಗಿ ಮಂಗಳೂರಿನಿಂದಶಿರಸಿಗೆ ಕಾರಿನಲ್ಲಿ ಹೋಗುತ್ತಿದ್ದರು.
|
4 |
+
ಗ್ಯಾರಂಟಿ ಯೋಜನೆಗಳಿಗೆ - ಅನುದಾನ ಬಳಕೆ : ಮೇಲ್ಮನೆಯಲ್ಲಿ ಕೋಲಾಹಲ
|
5 |
+
ಉತ್ತರ ಕನ್ನಡ ಜಿಲ್ಲೆ, ಶಿರಸಿ-ಕುಮುಟಾ ರಸ್ತೆಯ ಬಂಡಲ್ ಗ್ರಾಮದ ಬಳಿ ಅತಿವೇಗವಾಗಿ ಮುನ್ನುಗ್ಗಿ ಬಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಅತಿವೇಗದಿಂದಾಗಿ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
|
6 |
+
ಬಸ್ನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುದ್ದಿ ತಿಳಿದು ಶಿರಸಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ನಾಲ್ವರ ಮೃತದೇಹಗಳನ್ನು ಕಾರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
|
eesanje/url_46_293_5.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಯತ್ನಾಳ್ ಗುರಿ ನಾನಲ್ಲ, ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ
|
2 |
+
ಬೆಂಗಳೂರು,ಡಿ.8- ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಫೋಟೊವನ್ನು ಹಿಡ್ಕೊಂಡು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನನ್ನ ವಿರುದ್ದ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ನರೇಂದ್ರಮೋದಿ ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
|
3 |
+
ಸಾಮಾಜಿಕ ಮಾಧ್ಯಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿರುವ ಅವರು, ಮೌಲ್ವಿ ಹಾಶ್ಮಿ ಅವರ ಜೊತೆಗೆ ಇತರ ಬಿಜೆಪಿ ನಾಯಕರು ಮಾತ್ರವಲ್ಲ ಸಾಕ್ಷಾತ್ ನರೇಂದ್ರಮೋದಿ ಅವರೂ ಸಂಬಂಧ ಹೊಂದಿರುವುದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿರುವ ಫೋಟೊಗಳು ಸ್ಪಷ್ಟವಾಗಿ ಹೇಳುತ್ತಿವೆ ಎಂದಿದ್ದಾರೆ.
|
4 |
+
ದೀರ್ಘಕಾಲದಿಂದ ಹಾಶ್ಮಿ ಅವರಿಗೆ ಅತ್ಯಂತ ಆತ್ಮೀಯರಾಗಿರುವ ಮತ್ತು ಊರಿನಲ್ಲಿ ತನ್ನ ನೆರೆಹೊರೆಯಾಗಿರುವ ಯತ್ನಾಳ್ ಅವರಿಗೆ ಇದು ತಿಳಿದಿರಲಿಲ್ಲ ಎನ್ನುವುದನ್ನು ನಂಬಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷತೆ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನ ತಪ್ಪಿ ಹೋಗಿರುವುದರಿಂದ ಯತ್ನಾಳ್ ಅವರು ಕೆರಳಿ ಕೆಂಡವಾಗಿದ್ದಾರೆ. ಇದಕ್ಕೆ ಕಾರಣಕರ್ತರಾದ ಪ್ರಧಾನಿ ನರೇಂದ್ರಮೋದಿ ಮತ್ತು ಅಮಿತ್ ಶಾ ವಿರುದ್ಧ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದಲೇ ಮೌಲ್ವಿ ತನ್ವೀರ್ ಹಾಶ್ಮಿ ಜೊತೆಗಿನ ನನ್ನ ಫೋಟೋವನ್ನು ತೋರಿಸಿ ಆರೋಪ ಮಾಡಿದ್ದಾರೆ ಎಂದು ದೂರಿದ್ದಾರೆ.
|
5 |
+
ಈ ಆರೋಪದ ನಂತರ ಮೌಲ್ವಿ ಅವರ ಜೊತೆಗಿನ ಪ್ರಧಾನಿ ನರೇಂದ್ರ ಮೋದಿ ಅವರ ಸಂಬಂಧದ ವಿವರವೂ ಹೊರಬರಲಿದೆ ಎನ್ನುವುದು ಅವರಿಗೆ ಖಂಡಿತ ಗೊತ್ತಿತ್ತು. ಅವೆಲ್ಲವೂ ಬಯಲಾಗಿ ಪ್ರಧಾನಿ ಮತ್ತು ಬಿಜೆಪಿ ನಾಯಕರು ಮುಜುಗರಕ್ಕೀಡಾಗಲಿ ಎಂಬ ದುರುದ್ದೇಶದಿಂದ ನನ್ನ ವಿರುದ್ಧ ಆರೋಪ ಮಾಡುವ ಆಟ ಆಡಿದ್ದಾರೆ ಎಂದು ಟೀಕಿಸಿದ್ದಾರೆ. ಮೌಲ್ವಿ ಹಾಶ್ಮಿ ಅವರ ಜೊತೆಗಿನ ನನ್ನ ಸ್ನೇಹ ಸಂಬಂಧವನ್ನು ನಾನು ಬಹಿರಂಗವಾಗಿಯೇ ಒಪ್ಪಿಕೊಂಡಿದ್ದೇನೆ. ಹಾಶ್ಮಿಯವರೂ ಕೂಡಾ ಅವರ ಮೇಲಿನ ಆರೋಪದ ತನಿಖೆಯನ್ನು ಕೇಂದ್ರ ಸರ್ಕಾರವೇ ನಡೆಸಲಿ ಎಂದು ಸವಾಲು ಹಾಕಿದ್ದಾರೆ.
|
6 |
+
ಈಗ ಪ್ರಧಾನಿ ನರೇಂದ್ರಮೋದಿ ಅವರು ತನ್ನ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯಿಸಲೇ ಬೇಕಾಗುತ್ತದೆ. ಮೌಲ್ವಿ ತನ್ವೀರ್ ಹಾಶ್ಮಿ ಅವರಿಗೆ ನಿಜವಾಗಿ ಐಸಿಎಸ್ ಜೊತೆ ಸಂಬಂಧವಿದ್ದರೆ ಆ ಬಗ್ಗೆ ತನಿಖೆಗೆ ಪ್ರಧಾನಿಯವರು ತಕ್ಷಣ ಆದೇಶ ನೀಡಬೇಕು ಮತ್ತು ಹಾಶ್ಮಿ ಮತ್ತು ತನ್ನ ಸಂಬಂಧದ ವಿವರವನ್ನು ದೇಶದ ಮುಂದಿಡಬೇಕು. ಇದು ಎರಡೂ ಮಾಡದೆ ಇದ್ದರೆ ಇಂತಹ ಸುಳ್ಳು ಆರೋಪ ಮಾಡುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮವನ್ನಾದರೂ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
|
7 |
+
ಬಂಡವಾಳ ಹೂಡಿಕೆ ಸಮಾವೇಶಗಳಿಗಾಗಿ 88 ಕೋಟಿ ಖರ್ಚು
|
8 |
+
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ರೀತಿಯ ಆರೋಪಗಳನ್ನು ಮಾಡುವುದು ಇದೇ ಮೊದಲ ಸಲವೇನಲ್ಲ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಮಕ್ಕಳ ವಿರುದ್ಧ ಪುಂಖಾನುಪುಂಖವಾಗಿ ಆರೋಪ ಮಾಡಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಬೇಕಾದರೆ ಪಕ್ಷದ ಹೈಕಮಾಂಡ್ಗೆ ಎರಡು ಸಾವಿರ ಕೋಟಿ ರೂ. ಕೊಡಬೇಕಾಗುತ್ತದೆ ಎನ್ನುವ ಗಂಭೀರ ಆರೋಪವನ್ನೂ ಅವರು ಮಾಡಿದ್ದಾರೆ. ಈ ರೀತಿ ಬಹಿರಂಗವಾಗಿ ತಮ್ಮ ಪಕ್ಷದ ಉನ್ನತ ನಾಯಕರ ವಿರುದ್ಧವೇ ಆರೋಪ ಮಾಡಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಾಯಿ ಬಲದ ಹಿಂದೆ ಇರುವ ಶಕ್ತಿ ಯಾವುದು? ಎಂದು ಪ್ರಶ್ನಿಸಿದ್ದಾರೆ.
|
9 |
+
ಬಿಜೆಪಿಯಲ್ಲಿರುವ ಯಾವ ಜೀ..ಗಳ ಬಲದಿಂದ ಇಂತಹ ಸ್ವಪಕ್ಷೀಯರ ವಿರುದ್ಧ ಇಂತಹ ಮಾನಹಾನಿಕರ ಆರೋಪ ಮಾಡಿಯೂ ಅವರೂ ಬಚಾವಾಗುತ್ತಿದ್ದಾರೆ ಎನ್ನುವುದು ಕೂಡಾ ಬಯಲಾಗಬೇಕಾಗಿದೆ ಎಂದಿದ್ದಾರೆ. ಇಂದಿನ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಸುದ್ದಿಯ ಪ್ರಕಾರ ಮೌಲ್ವಿ ತನ್ವೀರ್ ಹಾಶ್ಮಿ ಕುಟುಂಬದ ಜೊತೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ವ್ಯಾಪಾರಿ ಸಂಬಂಧ ಕೂಡಾ ಇದೆ ಎನ್ನುವುದು ಬಯಲಾಗಿದೆ.
|
10 |
+
ಯತ್ನಾಳ್ ಅವರ ಆರೋಪದಂತೆ ತನ್ವೀರ್ ಹಾಶ್ಮಿ ಅವರಿಗೆ ಐಸಿಸ್ ಜೊತೆ ಸಂಬಂಧ ಇರುವುದಾಗಿದ್ದರೆ ಅವರ ಜೊತೆಗೆ ವ್ಯವಹಾರದ ಪಾಲುದಾರರಾಗಿರುವ ಯತ್ನಾಳ್ ಅವರಿಗೆ ಅದು ಗೊತ್ತಿರಲಿಲ್ಲವೇ? ಗೊತ್ತಿದ್ದೂ ಸುಮ್ಮನಿರಲು ಕಾರಣವೇನು? ಇಷ್ಟು ಸಮಯದ ನಂತರ ಇಂತಹ ಆರೋಪ ಮಾಡಲು ಕಾರಣಗಳೇನು ಎನ್ನುವುದನ್ನು ಕೂಡಾ ಕೇಂದ್ರ ಸರ್ಕಾರ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
|
eesanje/url_46_293_6.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಸದ್ಯದಲ್ಲೇ ಹಾಲಿನ ದರ ಏರಿಕೆ ಸಾಧ್ಯತೆ..?
|
2 |
+
ಬೆಂಗಳೂರು,ಡಿ.8- ಈಗಾಗಲೇ ದರ ಏರಿಕೆಯಿಂದ ಬಸವಳಿದಿರುವ ರಾಜ್ಯದ ಜನತೆಗೆ ಸದ್ಯದಲ್ಲೇ ಮತ್ತೊಂದು ದರ ಏರಿಕೆಯ ಶಾಕ್ ಕಾದಿದೆ. ಏಕೆಂದರೆ, ಒಕ್ಕೂಟಗಳು ನಷ್ಟದಲ್ಲಿರುವ ಕಾರಣ, ಹಾಲಿನ ದರ ಪರಿಷ್ಕರಣೆ ಮಾಡಲು ಕೆಎಂಎಫ್ ಮುಂದಾಗಿದೆ. ಈ ಕುರಿತು ಜನವರಿಯಲ್ಲಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕೆಎಂಎಪ್ ಮುಂದಾಗಿದೆ. ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ನಂದಿನಿ ಹಾಲಿನ ದರ ಹೆಚ್ಚಳ ಮಾಡಿತ್ತು. ಇದೀಗ ಹಾಲಿನ ದರ ಮತ್ತೆ ಹೆಚ್ಚಳ ಮಾಡಲು ಕೆಎಂಎಫ್ ಸಿದ್ದತೆ ಮಾಡಿಕೊಂಡಿದೆ ಎಂದು ತಿಳಿದು ಬಂದಿದೆ.
|
3 |
+
ಈಗಾಗಲೇ ಕೆಎಂಎಫ್ ಅಧಿಕಾರಿಗಳ ಮಟ್ಟದಲ್ಲಿ ದರ ಏರಿಕೆ ಕುರಿತು ಚಿಂತನೆ ನಡೆದಿದೆ. ಹಾಲಿನ ದರ ಪರಿಷ್ಕರಣೆಗೆ 14 ಹಾಲು ಒಕ್ಕೂಟದಿಂದ ಕೆಎಂಎಫ್ ಮನವಿ ಬಂದಿದೆ. ಹೀಗಾಗಿ ಅಧಿವೇಶನದಿಂದ ಸಿಎಂ ಬಂದ ಬಳಿಕ ಸಿದ್ದರಾಮಯ್ಯರ ಭೇಟಿ ಮಾಡಿ ನಂದಿನಿ ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲು ಕೆಎಂಎಫ್ ಸಿದ್ಧತೆ ಮಾಡಿಕೊಂಡಿದೆ. ಹೀಗಾಗಿ ಹೊಸ ವರ್ಷದ ಆರಂಭದಲ್ಲೇ ನಂದಿನಿ ಹಾಲಿನ ದರ ಏರಿಕೆ ಪ್ರಸ್ತಾವನೆ ಸಲ್ಲಿಸಲು ಕೆಎಂಎಫ್ ಆಡಳಿತ ಮಂಡಳಿ ತೀರ್ಮಾನಿಸಿದೆ.
|
4 |
+
ಈ ಕುರಿತು ಸಿಎಂ ಸಿದ್ದರಾಮಯ್ಯ ಅವರನ್ನು ಜನವರಿ ಆರಂಭದಲ್ಲಿ ಭೇಟಿಯಾಗಲು ಕೆಎಂಎಫ್ ಅಧ್ಯಕ್ಷ, ಎಂಡಿ ನಿರ್ಧರಿಸಿದ್ದಾರೆ. ಕೆಎಂಎಫ್ ಆರ್ಥಿಕ ನಷ್ಟದ ಹಿನ್ನಲೆ 5 ರೂ. ಪ್ರತಿ ಲೀಟರ್ಗೆ ದರ ಹೆಚ್ಚಿಸುವಂತೆ ಮನವಿ ಮಾಡಲು ನಿರ್ಧರಿಸಿದೆ. ಕಳೆದ ಆಗಸ್ಟ್ 1 ರಿಂದ ನಂದಿನಿ ಪ್ರತೀ ಲೀಟರ್ ಗೆ 3 ರೂ.ಹೆಚ್ಚಳ ಮಾಡಿತ್ತು. 5 ರೂ ಹೆಚ್ಚಳ ಮಾಡಲು ಮನವಿ ಮಾಡಿದ್ದಕ್ಕೆ ಕೇವಲ ಮೂರು ರೂ.ಹೆಚ್ಚಳ ಮಾಡಿತ್ತು. ಹೀಗಾಗಿ ಲೀಟರ್ ಗೆ 3 ರೂ ಹೆಚ್ಚುವರಿ ಹಣ ರೈತರಿಗೆ ಕೆಎಂಎಫ್ ನೀಡಿತ್ತು.
|
5 |
+
ಬಂಡವಾಳ ಹೂಡಿಕೆ ಸಮಾವೇಶಗಳಿಗಾಗಿ 88 ಕೋಟಿ ಖರ್ಚು
|
6 |
+
ಕೆಎಂಎಫ್ ಆರ್ಥಿಕ ನಷ್ಟದ ಹಿನ್ನಲೆ 5 ರೂಪಾಯಿ ಪ್ರತಿ ಲೀಟರ್ ಗೆ ದರ ಹೆಚ್ಚಿಸುವಂತೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ನಡೆದಿದೆ. ಆಗಸ್ಟ್ ಒಂದರಿಂದ ಪ್ರತಿ ಲೀಟರ್ ಗೆ ಮೂರು ರೂಪಾಯಿ ಏರಿಕೆ ಆಗಿತ್ತು. 5 ರೂಪಾಯಿ ಹೆಚ್ಚಳಕ್ಕೆ ಮನವಿ ಮಾಡಿದ್ದಕ್ಕೆ 3 ರೂಪಾಯಿ ಏರಿಕೆ ಮಾಡಲಾಗಿತ್ತು. ಆದರೆ ಒಕ್ಕೂಟಗಳಿಂದ ದರ ಏರಿಕೆಯಾದರೂ ಒಕ್ಕೂಟಗಳ ನಷ್ಟ ಇನ್ನೂ ಸರಿದೂಗಿಲ್ಲ. ಹೀಗಾಗಿ ದರ ಪರಿಷ್ಕರಣೆ ಮಾಡಿ ಎಂದು ಒಕ್ಕೂಟಗಳು ಪಟ್ಟು ಹಿಡಿದಿವೆ.
|
7 |
+
ಅಲ್ಲದೆ ಕ್ಷೀರ ಭಾಗ್ಯ ಯೋಜನೆಯಡಿ ಕೆಎಂಎಫ್ ಪೂರೈಸುತ್ತಿರುವ ಹಾಲಿನ ಪುಡಿ ದರ ಪ್ರತಿ ಕೆಜಿಗೆ 400 + ಜಿಎಸ್ಟಿ ನೀಡಲು ಮನವಿ ಮಾಡಲಾಗಿದೆ. ಈಗ 300+ ಜಿಎಸ್ಟಿ ನೀಡುತ್ತೀದ್ದೀರ ಅದರಿಂದ ನಷ್ಟವಾಗುತ್ತಿದೆ ಎಂದು ಕೆಎಂಎಫ್ ಹೇಳುತ್ತಿದ್ದರೆ, ಇತ್ತ ಹಾಲಿನ ದರ ಏರಿಕೆಗೆ ರೈತರು ಹಾಗೂ ಹಾಲು ಒಕ್ಕೂಟದಿಂದ ಒತ್ತಡವಿದೆ ಎಂದಿದ್ದಾರೆ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್. ಉತ್ಪಾದನ ವೆಚ್ಚ ಹೆಚ್ಚಳದಿಂದ ಹೊರೆ ಆಗುತ್ತಿರುವ ಬಗ್ಗೆ ಹಾಲು ಉತ್ಪಾದಕ��� ಒಕ್ಕೂಟ ಸಭೆಯಲ್ಲಿ ಅಹವಾಲು ಸಲ್ಲಿಸಿದೆ.
|
8 |
+
ಇತರ ರಾಜ್ಯಕ್ಕೆ ಹೊಲಿಕೆ ಮಾಡಿದರೆ ನಮ್ಮಲ್ಲಿ ಕಮ್ಮಿಯಿದೆ, ಹಾಗೆಯೇ ಅಮೂಲ್ 10 ತಿಂಗಳಿನಲ್ಲಿ 12 ರೂ.ಹೆಚ್ಚಿಸಿದೆ, ನಾವು 3 ರೂ. ಮಾತ್ರ ಹೆಚ್ಚಿಸಿರುವುದು ಎಂದಿದ್ದಾರೆ. ದರ ಏರಿಕೆ ಬಿಸಿಯಿಂದ ತತ್ತಿರಿಸುತ್ತಿರುವ ಶ್ರೀಸಾಮಾನ್ಯನಿಗೆ ಮತ್ತೆ ಹಾಲಿನ ದರ ಏರಿಕೆಯ ಬಿಸಿ ತಟ್ಟಲಿದೆ. ಇದಕ್ಕೆ ಸರ್ಕಾರ ಕೆಎಂಎಫ್ ದರ ಏರಿಕೆ ಪ್ರಸ್ತಾವನೆಗೆ ಯಾವ ನಿರ್ಧಾರ ಕೈಗೊಳ್ಳುತ್ತೋ? ಕಾದು ನೋಡಬೇಕು.ಯಾವ್ಯಾವ ಹಾಲಿಗೆ ಎಷ್ಟಿದೆ?
|
eesanje/url_46_293_7.txt
ADDED
@@ -0,0 +1,21 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಗ್ಯಾರಂಟಿ ಯೋಜನೆಗಳಿಗೆ - ಅನುದಾನ ಬಳಕೆ : ಮೇಲ್ಮನೆಯಲ್ಲಿ ಕೋಲಾಹಲ
|
2 |
+
ಬೆಳಗಾವಿ,ಡಿ.8-ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕಾಗಿ ಮೀಸಲಿಟ್ಟ ಎಸ್ಸಿ-ಎಸ್ಪಿ/ಟಿಎಸ್ಪಿ ಅನುದಾನವನ್ನು ರಾಜ್ಯ ಸರ್ಕಾರವು ತನ್ನ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಬಳಸಿಕೊಂಡಿದೆ ಎಂದು ಆರೋಪಿಸಿ ಬಿಜೆಪಿ ಗದ್ದಲ ಎಬ್ಬಿಸಿದ ಪರಿಣಾಮ, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮೇಲ್ಮನೆಯಲ್ಲಿ ಮಾತಿನ ಚಕಮಕಿ, ಆರೋಪ, ಪ್ರತ್ಯಾರೋಪ ನಡೆದು ಸದನವನ್ನು ಕೆಲಕಾಲ ಮುಂದೂಡಿದ ಪ್ರಸಂಗ ಜರುಗಿತು.
|
3 |
+
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ಅವರು, ಎಸ್ಸಿಎಸ್ಪಿ ಟಿಎಸ್ಪಿ ಯೋಜನೆಗಳ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರ ಬಳಕೆ ಮಾಡಿರುವ ಅನುದಾನದ ಕುರಿತು ಪ್ರಶ್ನೆ ಕೇಳಿದ್ದರು.ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ನೀಡಿದ ಉತ್ತರಕ್ಕೆ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
|
4 |
+
ಸಚಿವ ಎಚ್.ಸಿ.ಮಹದೇವಪ್ಪನವರು ಎಸ್ಸಿಎಸ್ಪಿ ಟಿಎಸ್ಪಿ ಅಧಿನಿಯಮ 2013ರ ಅನ್ವಯ ಸೆಕ್ಷನ್ ಎ, ಬಿ ಸಿ, ಡಿ ಪ್ರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ನೇರವಾಗಿ ಪ್ರಯೋಜನವಾಗುವ ವೈಯಕ್ತಿಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಈ ಅನುದಾನವನ್ನು ಅನ್ಯ ಕಾರ್ಯಕ್ರಮಗಳಿಗೆ ವರ್ಗಾವಣೆ ಮಾಡಲು ಬರುವುದಿಲ್ಲ ಎಂದು ಸಮರ್ಥಿಸಿಕೊಂಡರು.
|
5 |
+
ಸೆಕ್ಷನ್ 7 ಎ ಪ್ರಕಾರ ನೇರ ಫಲಾನುಭವಿಗಳು, ಸೆಕ್ಷನ್ 7ಬಿ ಪ್ರಕಾರ ಕಾಲೇಜುಗಳು, ಶಿಕ್ಷಣ ಸಂಸ್ಥೆ, ಅಭಿವೃದ್ಧಿ, ಸೆಕ್ಷನ್ 7 ಸಿ ಆರೋಗ್ಯ, ಶಿಕ್ಷಣ , ಸಮುದಾಯ ಭವನ ಹಾಗೂ 7ಡಿ ಅಭಿವೃದ್ಧಿ ಬಳಕೆ ಬಿಟ್ಟು ಅನ್ಯ ಯೋಜನೆಗಳಿಗೆ ಬಳಸುವಂತಿಲ್ಲ ಎಂದು ಕಾಯ್ದೆಯಲ್ಲಿವೆ.
|
6 |
+
ಇದು ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಮುಂತಾದ ಸಾಮಾನ್ಯ ಸಾಮಾಜಿಕ ವಲಯದ ಯೋಜನೆಗಳನ್ನು ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆಯಡಿ ಸೇರಿಸಲು ಅವಕಾಶವಿರುತ್ತದೆ. ಹಾಗಾಗಿ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಕಾರಣಕ್ಕೂ ಅನುದಾನ ಹಂಚಿಕೆ ಆಗಿಲ್ಲ ಎಂದು ವಿವರಿಸಿದರು.ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ನಾರಾಯಣಸ್ವಾಮಿ, ನಿಮಗೆ ನೀಡಿರುವ ಲಿಖಿತ ಉತ್ತರದಲ್ಲಿ ಗೃಹ ಲಕ್ಷ್ಮೀ, ಅನ್ನಭಾಗ್ಯ, ಗೃಹ ಜ್ಯೋತಿ, ಶಕ್ತಿ ಹಾಗೂ ಯುವ ನಿಧಿ ಯೋಜನೆಗಳಿಗೆ ಒಟ್ಟು 10 ಸಾವಿರಕ್ಕೂ ಅಧಿಕ ಕೋಟಿ ರೂಪಾಯಿ ಬಳಕೆ ಮಾಡಿಕೊಂಡಿದ್ದಾರೆ ಎಂದು ತಿಳಿಸಲಾಗಿದೆ. ಇದು ಮರೆಮಾಚುವ ಪ್ರಯತ್ನ ಎಂದರು.
|
7 |
+
ಸಚಿವರ ಉತ್ತರಕ್ಕೆ ತೃಪ್ತರಾಗದ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸಲು ಮುಂದಾದರು. ಇದು ದಲಿತ ವಿರೋಧ ಸರ್ಕಾರ, ಚುನಾವಣೆಯಲ್ಲಿ ಎಲ್ಲರಿಗೂ ಗ್ಯಾರಂಟಿ ಕೊಡುತ್ತೇವೆ ಎಂದು ಹೇಳಿ ಈಗ ಎಸ್ಸಿಎಸ್ಪಿ-ಟಿಎಸ್ಪಿ ಮೀಸಲಿಟ್ಟ ಹಣವನ್ನು ವರ್ಗಾವಣೆ ಮಾ��ಿಕೊಂಡಿದ್ದಾರೆ ಎಂದು ಆರೋಪಿಸಿದರು.
|
8 |
+
ಆಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಧ್ಯಪ್ರವೇಶಿಸಿ, ಈ ಯೋಜನೆಯಡಿ ಮೀಸಲಿಟ್ಟ ಯೋಜನೆಗಳನ್ನು ಅನ್ಯ ಯೋಜನೆಗಳಿಗೆ ಬಳಸಿಕೊಳ್ಳುವಂತಿಲ್ಲ ಎಂದು ಕಾಯ್ದೆಯಲ್ಲಿ ಸ್ಪಷ್ಟಪಡಿಸಲಾಗಿದೆ. ನಾವು ಫಲಾನುಭವಿಗಳನ್ನು ಗುರುತಿಸಿ ಹಂಚಿಕೆ ಮಾಡಿದ್ದೇವೆ ಎಂದು ಸಮರ್ಥಿಸಿಕೊಂಡರು.
|
9 |
+
ಅಲ್ಲಿ ಗೂಳಿಹಟ್ಟಿ ಶೇಖರ್ ಅವರನ್ನು ಒಳಗೆ ಬಿಡುವುದಿಲ್ಲ. ಇಲ್ಲಿ ಬಿಜೆಪಿಯವರು ಧರಣಿ ಮಾಡುತ್ತಾರೆ ಎಂದು ತಿರುಗೇಟು ನೀಡಿದರು. ಗೂಳಿಹಟ್ಟಿ ಶೇಖರ್ ಅವರ ಪ್ರಕರಣವನ್ನು ವಿಷಯಾಂತರ ಮಾಡಲು ಇಲ್ಲಿ ಧರಣಿ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಆಗ ಆರೋಪ-ಪ್ರತ್ಯಾರೋಪಗಳು ಮುಂದುವರೆದ ಕಾರಣ ಸದನವನ್ನು ಹತ್ತು ನಿಮಿಷಗಳ ಕಾಲ ಮುಂದೂಡಲಾಯಿತು.
|
10 |
+
ಪುನಃ ಸದನ ಸೇರಿದಾಗ ಪ್ರತಿಪಕ್ಷದವರು ಸದನದ ಬಾವಿಗಿಳಿದು ತಮ್ಮ ಧರಣಿಯನ್ನು ಮುಂದುವರೆಸಿದರು. ಈ ವೇಳೆ ಸಭಾಧ್ಯಕ್ಷರಾದ ಬಸವರಾಜ ಹೊರಟ್ಟಿಯವರು, ಸದಸ್ಯರು ನೀವು ನೀಡಿರುವ ಉತ್ತರದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಸಾಧ್ಯವಾದರೆ ಇನ್ನೊಮ್ಮೆ ಉತ್ತರ ಕೊಡಿ ಎಂದು ಸಚಿವ ಮಹದೇವಪ್ಪ ಅವರಿಗೆ ಸೂಚಿಸಿದರು.
|
11 |
+
ಬಂಡವಾಳ ಹೂಡಿಕೆ ಸಮಾವೇಶಗಳಿಗಾಗಿ 88 ಕೋಟಿ ಖರ್ಚು
|
12 |
+
ಆಗ ಮಹದೇವಪ್ಪನರು ಈ ಕಾಯ್ದೆಯಡಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯವರೂ ಇಬ್ಬರು ಕೆಲಸ ಮಾಡಿದ್ದೇವೆ. ಈ ಕಾಯ್ದೆ ಪ್ರಕಾರ ಎಸ್ಸಿ-ಎಸ್ಟಿ/ಟಿಎಸ್ಪಿ ಅಭಿವೃದ್ಧಿಗಾಗಿಯೇ ಈ ಹಣವನ್ನು ಮೀಸಲಿಡಲಾಗಿದೆ. ಬೇರೆ ಉದ್ದೇಶಗಳಿಗೆ ಇದನ್ನು ಬಳಕೆ ಮಾಡಲು ಸಾಧ್ಯವಿಲ್ಲ ಎಂದು ಬಲವಾಗಿ ಸಮರ್ಥಿಸಿಕೊಂಡರು.
|
13 |
+
ಆಗ ಛಲವಾದಿ ನಾರಾಯಣಸ್ವಾಮಿ ಹಾಗಾದರೆ ಈ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಏಕೆ ಕೊಟ್ಟಿದ್ದೀರಿ, ಅನ್ಯ ಉದ್ದೇಶಗಳಿಗೆ ಬಳಕೆ ಮಾಡುವಂತಿಲ್ಲ ಎಂದು ನೀವೇ ಹೇಳುತ್ತಿದ್ದೀರಿ, ಆದರೆ 11 ಸಾವಿರ ಕೋಟಿ ಹಣವನ್ನು ನಿಮ್ಮ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದ್ದೀರಿ. ದಲಿತರ ಹಣ ದಲಿತರ ಅಭಿವೃದ್ಧಿಗೇ ಮೀಸಲಿಡಬೇಕು. ಕೇವಲ ಸಿಮೆಂಟ್ ರಸ್ತೆ, ಸಮುದಾಯಭವನ, ಚರಂಡಿ ನಿರ್ಮಾಣ ಮಾಡಿದರೆ ಸಾಲದು, ಶಿಕ್ಷಣ ಅದಕ್ಕೆ ಬೇಕಾದ ಹಣ ಒದಗಿಸಿದರೆ ದಲಿತರ ಉದ್ದಾರವಾಗುತ್ತದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು.
|
14 |
+
ಈ ಹಂತದಲ್ಲಿ ಗದ್ದಲ ಜೋರಾದಾಗ ಸಭಾಪತಿಯವರು ಮತ್ತೆ ಸದನವನ್ನು ಮುಂದೂಡಿದರು. ಸದನ 2ನೇ ಬಾರಿಗೆ ಸೇರಿದಾಗ ಹಿಂದಿನ ಸರ್ಕಾರದ ಅವಧಿಯಲ್ಲೇ 10 ಸಾವಿರ ಕೋಟಿ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಈಗ ನಾವು ಕಾಯ್ದೆಯನ್ನು ಮತ್ತಷ್ಟು ಬಲಪಡಿಸುತ್ತಿದ್ದೇವೆ.
|
15 |
+
ಯಾವ ಯೋಜನೆಗೆ ಹಣ ಮೀಸಲಿಡಲಾಗಿದೆಯೋ ಅದಕ್ಕಷ್ಟೇ ಬಳಸಿಕೊಳ್ಳಬೇಕು. ಇವರಿಗೆ ದಲಿತರ ಉದ್ದಾರವಾಗಬೇಕಿಲ್ಲ. ಎಲ್ಲರದಲ್ಲೂ ರಾಜಕಾರಣ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.ಹಿಂದಿನ ಬಿಜೆಪಿ ಸರ್ಕಾರದ ಅವಯಲ್ಲೇ 7800 ಕೋಟಿ ���ಣವನ್ನು ಅನ್ಯ ಉದ್ದೇಶಗಳಿಗೆ ಬಳಕೆ ಮಾಡಲಾಗಿದೆ ಎಂದು ಸದನದಲ್ಲೇ ಉತ್ತರ ಕೊಟ್ಟಿದ್ದಾರೆ. ಈಗ ದಲಿತರ ಬಗ್ಗೆ ಮಾತನಾಡುತ್ತಾರೆ. ನಾಚಿಕೆಯಾಗುವುದಿಲ್ಲವೇ ಎಂದು ಕಿಡಿಕಾರಿದರು.
|
16 |
+
ಆಗ ಸಚಿವ ಮುನಿಯಪ್ಪ ಅವರು ಅಧಿವೇಶನದಲ್ಲಿ ಮುಖ್ಯವಾಗಿ ಉತ್ತರ ಕರ್ನಾಟಕದ ಅಭಿವೃದ್ದಿ ಬಗ್ಗೆ ಚರ್ಚೆಯಾಗಬೇಕಿದೆ. ಇನ್ನು ಸಮಸ್ಯೆಗಳು ಏನೇ ಇದ್ದರೂ ಸರ್ಕಾರ ಉತ್ತರ ಕೊಡಲು ಸಿದ್ದವಿದೆ. ದಯವಿಟ್ಟು ಎಲ್ಲಾ ಸದಸ್ಯರು ಸಹಕರಿಸಿ ಎಂದು ಮನವಿ ಮಾಡಿದರು.
|
17 |
+
ಮುನಿಯಪ್ಪನವರ ಮಾತಿಗೂ ಬಿಜೆಪಿ ಸದಸ್ಯರು ಕಿವಿಕೊಡದಿದ್ದಾಗ ಆಕ್ರೋಶಗೊಂಡ ಸಭಾಪತಿ ಬಸವರಾಜ ಹೊರಟ್ಟಿಯವರು ಪೀಠದಿಂದ ಎದ್ದುನಿಂತು, ನಾನು 43 ವರ್ಷಗಳಿಂದ ಈ ಸದನವನ್ನು ನೋಡಿದ್ದೇನೆ. ಸದನ ನಡೆಸಲು ನಾನು ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
|
18 |
+
ಈ ಹಂತದಲ್ಲಿ ತೇಜಸ್ವಿನಿ ಗೌಡ, ತಿಪ್ಪೇಸ್ವಾಮಿ ಅವರುಗಳು ಮಾತನಾಡಿ, ಅನ್ಯ ಉದ್ದೇಶಗಳಿಗೆ ಸರ್ಕಾರ ಹಣ ವರ್ಗಾವಣೆ ಮಾಡಿಕೊಂಡಿರುವುದು ಅಕ್ಷಮ್ಯ ಅಪರಾಧ. ನಮ್ಮ ಸರ್ಕಾರ, ನಿಮ್ಮ ಸರ್ಕಾರ ಎನ್ನಬೇಡಿ. ತಪ್ಪು ಯಾರೇ ಮಾಡಿದರೂ ತಪ್ಪೇ. ಸರ್ಕಾರಕ್ಕೆ ಸಮರ್ಪಕವಾದ ಮಾಹಿತಿ ನೀಡಲು ಸೂಚಿಸಬೇಕೆಂದು ಮನವಿ ಮಾಡಿದರು.
|
19 |
+
ಬಂಡವಾಳ ಹೂಡಿಕೆ ಸಮಾವೇಶಗಳಿಗಾಗಿ 88 ಕೋಟಿ ಖರ್ಚು
|
20 |
+
ಆಗ ಸಭಾಪತಿಯವರು ಹಣ ಬಳಕೆ ವಿಚಾರದ ವಿಷಯವನ್ನು ಸೋಮವಾರಕ್ಕೆ ತೆಗೆದುಕೊಳ್ಳುತ್ತೇನೆ ಎಂದಾಗ, ಇದಕ್ಕೆ ಒಪ್ಪದ ವಿಪಕ್ಷ ಸದಸ್ಯರರು 330ಕ್ಕೆ ಕೊಡಿ ಎಂದು ಪಟ್ಟು ಹಿಡಿದರು. ಸದನದ ಸಮಯ ಹಾಳು ಮಾಡಲು ಹೀಗೆ ಮಾತಾಡ್ತಾಯಿದ್ದೀರಿ ಎಂದು ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ ಹೇಳುತ್ತಿದ್ದಂತೆ, ಬಿಜೆಪಿಯ ಸದಸ್ಯ ರವಿಕುಮಾರ್ ಅವರು ನೀವು ಆ ಕೆಲಸ ಮಾಡಿದ್ದು ಎಂದಾಗ ಸದನದಲ್ಲಿ ಗದ್ದಲ ಮತ್ತಷ್ಟು ಹೆಚ್ಚಾಯಿತು.
|
21 |
+
ಸಭಾಪತಿ ಬಸವರಾಜ ಹೊರಟ್ಟಿ ಅವರು ಮಧ್ಯಪ್ರವೇಶಿಸಿ, ಹೀಗೆ ಮುಂದುವರೆದರೆ ಸದನ ನಡೆಸಲು ಕಷ್ಟವಾಗುತ್ತದೆ. ರಾಜೀನಾಮೆ ಕೊಟ್ಟು ಹೋಗುತ್ತೇನೆ ಎಂದು ಗರಮ್ಮಾದರು. ಬಳಿಕ ಸೋಮವಾರ ಚರ್ಚೆಗೆ ಅವಕಾಶ ಕೊಟ್ಟ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರು ಧರಣಿಯನ್ನು ಕೈ ಬಿಟ್ಟರು.
|
eesanje/url_46_293_8.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
2 ದಿನದಲ್ಲಿ ಬೆಳೆ ಹಾನಿ ಪರಿಹಾರ ಮಾರ್ಗಸೂಚಿ ಬಿಡುಗಡೆ
|
2 |
+
ಬೆಳಗಾವಿ, ಡಿ.8- ಮುಂಗಾರು ಹಂಗಾಮಿನ ಬೆಳೆ ಹಾನಿ ಪರಿಹಾರ ಸಂಬಂಧಿಸಿದಂತೆ ನಾಳೆ ಅಥವಾ ನಾಡಿದ್ದು ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.
|
3 |
+
ವಿಧಾನಪರಿಷತ್ನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಶರಣಗೌಡ ಬಯ್ಯಪುರ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರೈತರಿಗೆ ಅವರ ಜಮೀನಿಗೆ ಅನುಗುಣವಾಗಿ 2 ಸಾವಿರ ರೂ.ವರೆಗೆ ಬೆಳೆ ಪರಿಹಾರ ಹಣವನ್ನು ಡಿಬಿಟಿ ಮೂಲಕ ನೇರವಾಗಿ ಜಮೆ ಮಾಡಲಾಗುವುದು. ಈ ಸಂಬಂಧ ನಾಳೆ ಅಥವಾ ನಾಳಿದ್ದು ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು.
|
4 |
+
ಹಿಂದಿ ಚಿತ್ರ ಪ್ರದರ್ಶಿಸಲಾಗುತ್ತಿದ್ದ ಕೆನಡಾ ಚಿತ್ರಮಂದಿಗಳಲ್ಲಿ ಖಲಿಸ್ತಾನಿಗಳ ಕುಚೇಷ್ಟೆ
|
5 |
+
2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಭತ್ತ, ರಾಗಿ, ಜೋಳ, ಮುಸುಕಿನ ಜೋಳ, ಸಜ್ಜೆ, ತೃಣಧಾನ್ಯಗಳು, ತೊಗರಿ, ಹೆಸರು, ಉದ್ದು, ಹುರುಳಿ, ಅವರೆ, ಅಲಸಂದೆ, ಕಡಲೆ, ಸಾಸಿವೆ, ಸೂರ್ಯಕಾಂತಿ. ಸೋಯಾ ಅವರೆ, ಹತ್ತಿ,ಕಬ್ಬು ಹಾಗೂ ತಂಬಾಕು ಬೆಳೆಗಳು ಹಾಳಾಗಿವೆ.
|
6 |
+
ಹಾನಿಯಾದ ಬೆಳೆ ಹಾನಿ ಪರಿಹಾರಕ್ಕಾಗಿ ಎನ್ ಡಿಆರ್ ಎಫ್ ನಿಯಮದಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಆರ್ಥಿಕ ನೆರವನ್ನು ನಿರೀಕ್ಷಿಸಲಾಗಿದೆ ಎಂದು ಅವರು ಸದನಕ್ಕೆ ತಿಳಿಸಿದರು.
|
eesanje/url_46_293_9.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಮೋಡ ಬಿತ್ತನೆಯಿಂದ ಜನರಿಗೆ ಅನುಕೂಲವಾಗಲಿದೆ : ಡಿಕೆಶಿ
|
2 |
+
ಬೆಳಗಾವಿ,ಡಿ.8- ಬರಗಾಲದ ಹಿನ್ನೆಲೆಯಲ್ಲಿ ಮೋಡ ಬಿತ್ತನೆಗೆ ತಾವೂ ಕೂಡ ಸಕಾರಾತ್ಮಕ ನಿಲುವು ಹೊಂದಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ವಿಧಾನಸಭೆಯ ಶೂನ್ಯ ವೇಳೆಯಲ್ಲಿ ರಾಣೆಬೆನ್ನೂರಿನ ಶಾಸಕ ಪ್ರಕಾಶ್ ಕೋಳಿವಾಡ ವಿಷಯ ಪ್ರಸ್ತಾಪಿಸಿ, ಇಂದಿನಿಂದ ಡಿಸೆಂಬರ್ 11 ರವರೆಗೂ ರಾಜ್ಯದಲ್ಲಿ ಮೋಡಗಳು ಹೆಚ್ಚಾಗಿವೆ. ಮೋಡ ಬಿತ್ತನೆ ಮಾಡಿದರೆ ಒಳ್ಳೆಯ ಫಲಿತಾಂಶ ಬರಲಿದೆ. ಮಳೆಯಾದರೆ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ಸುಧಾರಿಸುತ್ತವೆ. ಕಡಿಮೆ ಖರ್ಚಿನಲ್ಲಿ ಮೋಡ ಬಿತ್ತನೆಗೆ ಅವಕಾಶವಿದೆ.
|
3 |
+
ಈ ನಿಟ್ಟಿನಲ್ಲಿ ತಂತ್ರಜ್ಞರ ಜೊತೆ ತಾವು ಚರ್ಚೆ ಮಾಡಿದ್ದು, ಎಲ್ಲಾ ರೀತಿಯ ಸಿದ್ಧತೆಗಳೂ ಲಭ್ಯ ಇವೆ. ಸರ್ಕಾರ ಇಂದೇ ತೀರ್ಮಾನ ಮಾಡಿದರೆ ಮೋಡ ಬಿತ್ತನೆಯಾಗಲಿದೆ. ಜನರಿಗೆ ಅನುಕೂಲವಾಗಲಿದೆ ಎಂದು ಗಮನ ಸೆಳೆದರು. ಆಡಳಿತ ಪಕ್ಷದ ಶಾಸಕ ಕೋ.ನ.ರೆಡ್ಡಿ ಇದಕ್ಕೆ ಬೆಂಬಲ ವ್ಯಕ್ತಪಡಿಸಿದರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮೋಡ ಬಿತ್ತನೆಗೆ ಉಪಮುಖ್ಯಮಂತ್ರಿಯವರು ಉತ್ತರಿಸುತ್ತಾರೆ ಎಂದು ಹೇಳಿದರು.
|
4 |
+
ಸಿಖ್ ಪ್ರತ್ಯೇಕತಾವಾದಿ ಹತ್ಯೆ ಪ್ರಕರಣದ ತನಿಖೆಯಾಗಲೇಬೇಕು : ಅಮೆರಿಕ
|
5 |
+
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಕಾಶ್ ಕೋಳಿವಾಡ ಅವರು ಈ ನಿಟ್ಟಿನಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಮೋಡ ಬಿತ್ತನೆ ಮಾಡುವ ಕಂಪನಿಗಳ ಜೊತೆ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಸ್ವಂತ ಖರ್ಚಿನಲ್ಲಿ ಮೋಡ ಬಿತ್ತನೆ ಮಾಡಲು ಕೂಡ ಅವರು ಆಸಕ್ತಿ ತೋರಿಸಿದ್ದಾರೆ. ಜನರಿಗೆ ಒಳ್ಳೆಯದನ್ನ ಮಾಡಬೇಕೆನ್ನುವ ಅವರ ಆಸಕ್ತಿ ಶ್ಲಾಘನೀಯ. ನಾನು ಕೂಡ ಮೋಡ ಬಿತ್ತನೆಯ ಪರವಾಗಿದ್ದೇನೆ. ಆದರೆ, ಕೆಲವು ತಾಂತ್ರಿಕ ತೊಂದರೆಗಳಿವೆ.
|
6 |
+
ಟೆಂಡರ್ ಕರೆಯುವುದೂ ಸೇರಿದಂತೆ ಹಲವಾರು ಪ್ರಕ್ರಿಯೆಗಳನ್ನು ಅನುಸರಿಸಬೇಕು. ಆದರೂ ತಾವು ಹಣಕಾಸು ಇಲಾಖೆಯ ಅಕಾರಿಗಳ ಜೊತೆ ಸಮಾಲೋಚನೆ ನಡೆಸಿ ಯಾವ ರೀತಿ ನೆರವು ನೀಡಬಹುದೆಂಬುದನ್ನು ಪರಿಶೀಲಿಸುತ್ತೇನೆ ಎಂದು ಭರವಸೆ ನೀಡಿದರು.ಮೋಡ ಬಿತ್ತನೆಯನ್ನು ಈಗಾಗಲೇ ಹಲವು ರಾಜ್ಯಗಳು ಜಾರಿಗೊಳಿಸಿವೆ. ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಕಾಣಸಿಗುವ ಮೋಡಗಳ ಸದ್ಬಳಕೆಗಾಗಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
|
7 |
+
ಪ್ರಕಾಶ್ ಕೋಳಿವಾಡರವರು ಒಂದು ವೇಳೆ ಸರ್ಕಾರಕ್ಕೆ ನಿರ್ಧಾರ ತೆಗೆದುಕೊಳ್ಳಲು ವಿಳಂಬವಾಗುವುದಾದರೆ ಚಿಂತೆ ಇಲ್ಲ. ನನ್ನ ಸ್ವಂತ ಖರ್ಚಿನಲ್ಲೇ ಮೋಡ ಬಿತ್ತನೆ ಮಾಡಿಸುತ್ತೇನೆ. ಮುಖ್ಯ ಕಾರ್ಯದರ್ಶಿಯವರಿಂದ ಅನುಮತಿ ಕೊಡಿಸಿ ಎಂದು ಮನವಿ ಮಾಡಿದರು.
|
eesanje/url_46_294_1.txt
ADDED
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕೇಂದ್ರದಿಂದ 40 ಸಾವಿರ ಕೋಟಿ ಕಡಿಮೆಯಾದ ಜಿಎಸ್ಟಿ ಪರಿಹಾರ : ಸಚಿವ ಕೃಷ್ಣಭೈರೇಗೌಡ
|
2 |
+
ಬೆಳಗಾವಿ, ಡಿ.7- ಕಳೆದ ಐದು ವರ್ಷಗಳಿಂದ ಕೇಂದ್ರ ಸರ್ಕಾರದ ಪುರಷ್ಕøತ ಯೋಜನೆ ಹಾಗೂ ಜಿಎಸ್ಟಿ ಪರಿಹಾರವಾಗಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾಗಿದ್ದ 40 ಸಾವಿರ ಕೋಟಿ ರೂ. ಅನುದಾನ ಕಡಿಮೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನ ಪರಿಷತ್ತಿನಲ್ಲಿ ಹೇಳಿದ್ದಾರೆ.
|
3 |
+
ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ಅವರ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಉತ್ತರಿಸಿದ ಕಂದಾಯ ಸಚಿವರು, ನಮ್ಮ ರಾಜ್ಯದ ಬಜೆಟ್ ಗಾತ್ರ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ. ನಾವು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ತೆರಿಗೆ ಪಾಲು ಹೆಚ್ಚಳವಾಗಿದೆ. ಆದರೆ, ಬಜೆಟ್ ಗಾತ್ರಕ್ಕೆ ಹೋಲಿಕೆ ಮಾಡಿದರೆ, ಕೇಂದ್ರದಿಂದ 5 ವರ್ಷಗಳಲ್ಲಿ ಸು.40 ಸಾವಿರ ಕೋಟಿ ರೂ. ಅನುದಾನ ಕಡಿತವಾಗಿದೆ.
|
4 |
+
ಇದರಿಂದ ನಮ್ಮ ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚಿನ ಹೊಡೆತ ಬಿದ್ದಿದೆ ಎಂದು ಬೇಸರ ವ್ಯಕ್ತಪಡಿಸಿದರು.ಕೇಂದ್ರ ಪುರಸ್ಕøತ ಯೋಜನೆಯಿಂದ 20 ಸಾವಿರ ಕೋಟಿ ರೂ. ಹಾಗೂ ಜಿಎಸ್ಟಿ ಪರಿಹಾರವಾಗಿ 20 ಸಾವಿರ ಕೋಟಿ ರೂ. ರಾಜ್ಯಕ್ಕೆ ಬರಬೇಕು. ವರ್ಷದಿಂದ ವರ್ಷಕ್ಕೆ ಕೇಂದ್ರದ ತೆರಿಗೆ ಪಾಲು ಕಡಿಮೆಯಾಗುತ್ತಿದೆಯೇ ಹೊರತು ಹೆಚ್ಚಳವಾಗುತ್ತಿಲ್ಲ. ನಮ್ಮ ಪಾಲು ಮಾತ್ರ ಹೆಚ್ಚಾಗುತ್ತಲೇ ಇದೆ.
|
5 |
+
ರಜಪೂತ ಕರ್ಣಿ ಸೇನೆ ಅಧ್ಯಕ್ಷರ ಹತ್ಯೆ : ಇಬ್ಬರು ಪೊಲೀಸರ ಅಮಾನತು
|
6 |
+
ಕೇಂದ್ರ ಸರ್ಕಾರ ನಮಗೆ ಆರ್ಥಿಕ ವರ್ಷದ ಅವಧಿಯೊಳಗೆ ನಮ್ಮ ಪಾಲಿನ ಹಣವನ್ನು ಕೊಡಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮಹಾರಾಷ್ಟ್ರ ಹೊರತುಪಡಿಸಿ 2ಲಕ್ಷ 37 ಸಾವಿರ ಕೋಟಿ ರೂ. ಬಜೆಟ್ ಮಂಡಿಸಿದಾಗ ಕೇಂದ್ರ ಸರ್ಕಾರ 43,369 ಕೋಟಿ ರೂ. (ಶೇ.23.3) ಅನುದಾನ ನೀಡಿತ್ತು. ಪ್ರಸ್ತುತ 3 ಲಕ್ಷದ 25 ಸಾವಿರ ಕೋಟಿ ರೂ. ಬಜೆಟ್ ಮಂಡಿಸಲಾಗಿದ್ದು, ಕೇಂದ್ರದಿಂದ ನಮಗೆ ಸಿಗುವುದು 76 ಸಾವಿರ ಕೋಟಿ ರೂ.(ಶೇ.17) ಮಾತ್ರ. ನಮ್ಮ ಬಜೆಟ್ ಗಾತ್ರ ಹೆಚ್ಚುತ್ತಿದೆಯೇ ಹೊರತು, ಕೇಂದ್ರದ ಪಾಲು ವರ್ಷದಿಂದ ವರ್ಷಕ್ಕೆ ಇಳಿಕೆಯಾಗುತ್ತಿದೆ. ಬಜೆಟ್ ಗಾತ್ರಕ್ಕೆ ತಕ್ಕಂತೆ ಅನುದಾನ ನೀಡಬೇಕಲ್ಲವೇ? ಎಂದು ಅವರು ಪ್ರಶ್ನಿಸಿದರು.
|
7 |
+
14 ಮತ್ತು 15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕೇಂದ್ರಕ್ಕೆ 5495 ಕೋಟಿ ರೂ. ವಿಶೇಷ ಅನುದಾನ ಹಾಗೂ 6 ಸಾವಿರ ಕೋಟಿ ಜಿಎಸ್ಟಿ ಪರಿಹಾರ ಸೇರಿದಂತೆ ರಾಜ್ಯಕ್ಕೆ 11,495 ಕೋಟಿ ಅನುದಾನ ಬರಬೇಕು. ಕಳೆದ ಆ.10ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರಿಗೆ ಪತ್ರ ಬರೆದು ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದರು. ಆದರೂ ಹಣ ಬಿಡುಗಡೆ ಮಾಡಿಲ್ಲ. ಖಂಡಿತವಾಗಿಯೂ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
|
8 |
+
ಜಿಎಸ್ಟಿ ಪರಿಹಾರವಾಗಿ 2339 ಕೋಟಿ ರೂ. ಹಾಗೂ ಕೇಂದ್ರ ಪುರಸ್ಕøತ ಯೋಜನೆಗೆ 1191 ಕೋಟಿ ರೂ. ಬಾಕಿ ಇದ್ದು, ಇದನ್ನು ಬಿಡುಗಡೆ ಮಾಡುವಂತೆ ಕೋರಿ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ. ನಮ್ಮ ಪ್ರಯತ್ನವನ್ನು ನಾವು ಮುಂದುವರೆಸಿದ್ದೇವೆ. ಕೇಂದ್ರ ಸರ್ಕಾರ ನಮಗೆ ಅನುದಾನವನ್ನು ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದರು.
|
9 |
+
ಒಂದು ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದಾಗ, ಶೇ.23 ರಷ್ಟು ಕೇಂದ್ರದ ಅನುದಾನ ದೊರೆಯುತ್ತಿತ್ತು. ಈಗ ಮೂರು ಲಕ್ಷ ಕೋಟಿ ರೂ. ಗೂ ಹೆಚ್ಚು ಬಜೆಟ್ ಮಂಡಿಸಿರುವಾಗ 76 ಸಾವಿರ ಕೋಟಿ ರೂ. ಅನುದಾನ ದೊರೆಯಬೇಕು. ದುರ್ದೈವವೆಂದರೆ, ಬಜೆಟ್ ಗಾತ್ರವನ್ನೇ ಕೇಂದ್ರ ಸರ್ಕಾರ ಇಳಿಕೆ ಮಾಡಿದೆ. ನಮ್ಮ ಸಂಪತ್ತಿನ ಮೇಲೆ ನಾವು ಅವಲಂಭಿತವಾಗಿರುವುದರಿಂದ ನಮಗೆ ಹೆಚ್ಚಿನ ಆರ್ಥಿಕ ಹೊರೆಯಾಗುತ್ತದೆ. ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಅವರು ಮನವಿ ಮಾಡಿದರು.
|
10 |
+
ಇದಕ್ಕೂ ಮುನ್ನ ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ವಿಷಯ ಪ್ರಸ್ತಾಪಿಸಿ, ಮಹಾರಾಷ್ಟ್ರ ಹೊರತುಪಡಿಸಿದರೆ, ಅತಿ ಹೆಚ್ಚು ತೆರಿಗೆ ಕಟ್ಟುವವರು ನಾವು. ಆದರೆ, ನಮ್ಮ ಪಾಲಿನ ತೆರಿಗೆ ಹಣವನ್ನು ಕಟ್ಟಿಸಿಕೊಂಡು ನಮಗೆ ಸೂಕ್ತ ಅನುದಾನ ನೀಡುತ್ತಿಲ್ಲ ಎಂದರೆ ಹೇಗೆ? ನಿನ್ನನ್ನು ಮುದ್ದಾಗಿ ಸಾಕುತ್ತೇನೆ. ನಾನು ಹೇಳಿದ ಹಾಗೆ ಕೇಳು ಎಂದು ಗಿಳಿಗೆ ಹೇಳಿದಂತಾಗಿದೆ ಎಂದು ಪರೋಕ್ಷವಾಗಿ ಕೇಂದ್ರ ಸರ್ಕಾರವನ್ನು ಛೇಡಿಸಿದರು.
|
11 |
+
ರಜಪೂತ ಕರ್ಣಿ ಸೇನೆ ಅಧ್ಯಕ್ಷರ ಹತ್ಯೆ : ಇಬ್ಬರು ಪೊಲೀಸರ ಅಮಾನತು
|
12 |
+
ಇದಕ್ಕೆ ಆಕ್ಷೇಪಿಸಿದ ಬಿಜೆಪಿ ಸದಸ್ಯರಾದ ಕೋಟಶ್ರೀನಿವಾಸ ಪೂಜಾರಿ, ವೈ.ಎ.ನಾರಾಯಣಸ್ವಾಮಿ ಸೇರಿದಂತೆ ಮತ್ತಿತರರು ಕೇಂದ್ರದಿಂದ ಎಷ್ಟು ಅನುದಾನ ಬಂದಿದೆ ಎಂಬುದರ ಬಗ್ಗೆ ಚರ್ಚಿಸಲು ನಾವು ಕೂಡ ಸಿದ್ಧರಿದ್ದೇವೆ. ಕೇಂದ್ರ ಅನುದಾನ ನೀಡಿದರೂ ಅದನ್ನು ರಾಜ್ಯ ಸರಿಯಾಗಿ ಸದ್ಬಳಕೆ ಮಾಡಿಕೊಂಡಿಲ್ಲ. ಆರೋಪ ಮಾಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
|
13 |
+
ಈ ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನಚಕಮಕಿ ನಡೆಯಿತು. ಸಭಾಪತಿ ಬಸವರಾಜ ಹೊರಟ್ಟಿ ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದಾಗ ಮಾತಿನಚಕಮಕಿಗೆ ತೆರೆಬಿದ್ದಿತು.
|
eesanje/url_46_294_10.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಸಾರಿಗೆ ನೌಕರರಿಗೆ ಸಕಾಲದಲ್ಲಿ ವೇತನ : ಸಚಿವ ರಾಮಲಿಂಗಾರೆಡ್ಡಿ
|
2 |
+
ಬೆಳಗಾವಿ,ಡಿ.6- ಸಾರಿಗೆ ನೌಕರರಿಗೆ ಪ್ರತಿ ತಿಂಗಳು ನಿಗದಿತ ಸಮಯಕ್ಕೆ ಸರಿಯಾಗಿ ವೇತನವನ್ನು ನೀಡಲಾಗುತ್ತಿದ್ದು, ವಿಳಂಬವಾಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ವಿಧಾನಪರಿಷ್ನಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಪ್ರಶ್ನೋತ್ತರ ಅವಯಲ್ಲಿ ಬಿಜೆಪಿ ಸದಸ್ಯ ಕೆ.ಎಸ್.ನಳೀನ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೆಎಸ್ಆರ್ಟಿಸಿಯಲ್ಲಿ ಪ್ರತಿ ತಿಂಗಳು 1ನೇ ತಾರೀಖು, ಬಿಎಂಟಿಸಿಯಲ್ಲಿ 5ನೇ ತಾರೀಖು ಹಾಗೂ ವಾಯುವ್ಯ ಮತ್ತು ಈಶಾನ್ಯ ನಿಗಮಗಳಲ್ಲಿ ತಿಂಗಳ 10ರೊಳಗೆ ವೇತನವನ್ನು ಒದಗಿಸುತ್ತಿದ್ದೇವೆ. ವಿಳಂಬ ಮಾಡುತ್ತಿಲ್ಲ. ಸಮಯಕ್ಕೆ ಸರಿಯಾಗಿ ವೇತನವನ್ನು ಪಾವತಿಸಲಾಗುತ್ತಿದೆ ಎಂದು ತಿಳಿಸಿದರು.
|
3 |
+
ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯುವ್ಯ ಮತ್ತು ಈಶಾನ್ಯ ಸಾರಿಗೆ ಸಂಸ್ಥೆ ಒಟ್ಟು ನಾಲ್ಕು ನಿಗಮಗಳಿಂದ 5 ಸಾವಿರದ 200 ಕೋಟಿ ಸಾಲ ಇದೆ. ಕೇಂದ್ರ ಸರ್ಕಾರ 9 ಸಾವಿರ ಕೋಟಿ ನೀಡದಿದ್ದರೆ ಸಾಲದ ಮೊತ್ತ 15 ಸಾವಿರ ಕೋಟಿಯಾಗುತ್ತಿತ್ತು ಎಂದರು.
|
4 |
+
ನಮ್ಮ ಸರ್ಕಾರ ಅಕಾರಕ್ಕೆ ಬಂದ ಮೇಲೆ 9 ಸಾವಿರ ನೌಕರರನ್ನು ನೇಮಕಾತಿ ಮಾಡಿಕೊಳ್ಳಲು ಮುಂದಾಗಿದ್ದು, 5 ಸಾವಿರ ಹೊಸದಾಗಿ ಬಸ್ಗಳನ್ನು ಖರೀದಿ ಮಾಡಲು ಮುಂದಾಗಿದ್ದೇವೆ. ಹಿಂದಿನ ಸರ್ಕಾರ ಒಂದೇ ಒಂದು ಬಸ್ನ್ನು ಖರೀದಿ ಮಾಡಿರಲಿಲ್ಲ. 13,088 ನೌಕರರು ಸೇವೆಯಿಂದ ನಿವೃತ್ತರಾದರೂ ಒಬ್ಬ ನೌಕರರನ್ನು ಕೂಡ ನೀವು ಏಕೆ ನೇಮಕ ಮಾಡಿಕೊಳ್ಳಲಿಲ್ಲ ಎಂದು ಪ್ರಶ್ನೆ ಮಾಡಿದರು.
|
5 |
+
ರಾಜ್ಯದ ಮದರಸಾಗಳಲ್ಲಿ ಕನ್ನಡ, ಗಣಿತ, ವಿಜ್ಞಾನ ಬೋಧನೆ ಕಡ್ಡಾಯ
|
6 |
+
ಬಸ್ಗಳನ್ನು ಖರೀದಿ ಮಾಡುವುದು ನಿರಂತರ ಪ್ರಕ್ರಿಯೆ, ಹಳೆ ಬಸ್ಗಳ ಸಾಮಥ್ರ್ಯ ಮುಗಿದ ನಂತರ ಹೊಸ ಬಸ್ಗಳನ್ನು ಖರೀದಿಸಬೇಕಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೊಸ ಬಸ್ ಖರೀದಿಗೆ ಅವಕಾಶ ಕಲ್ಪಿಸಿದ್ದಾರೆ. ಇದರಿಂದ ಇನ್ನಷ್ಟು ಸುಧಾರಣೆಯಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಹಿಂದಿನ ಸರ್ಕಾರ ಕೊರೋನ ಕಾರಣದಿಂದ ಬಸ್ ಖರೀದಿ ಮಾಡಲಿಲ್ಲ. ಅದೇ ಕಾಲಕ್ಕೆ 3800 ಬಸ್ ರೂಟ್ಗಳನ್ನು ರದ್ದುಪಡಿಸಿತ್ತು. ಈಗ ಹೊಸದಾಗಿ ನಾವು ಬಸ್ ರೂಟ್ಗಳನ್ನು ಸೇರ್ಪಡೆ ಮಾಡುತ್ತಿದ್ದೇವೆ.
|
7 |
+
ಈ ಹಿಂದೆ ಶಕ್ತಿ ಯೋಜನೆ ಬರುವ ಮುನ್ನ ನಾಲ್ಕು ನಿಗಮಗಳಲ್ಲಿ ಅಂದಾಜು ಸರಾಸರಿ 85 ಲಕ್ಷ ಜನರು ಪ್ರತಿದಿನ ಪ್ರಯಾಣಿಸುತ್ತಿದ್ದರು. ಈ ಯೋಜನೆ ಆರಂಭವಾದ ನಂತರ ಇದರ ಸಂಖ್ಯೆ ದಿನಕ್ಕೆ 1.6 ಕೋಟಿವರೆಗೂ ಏರಿಕೆಯಾಗಿದೆ. ಇದು ಇನ್ನಷ್ಟು ಹೆಚ್ಚಳವಾಗುವ ಸಂಭವವಿದೆ ಎಂದು ಹೇಳಿದರು.
|
8 |
+
ಶಕ್ತಿ ಯೋಜನೆ ಆರಂಭವಾದಾಗಿನಿಂದ ನಾಲ್ಕು ನಿಗಮಗಳಿಂದ ಪ್ರತಿದಿನ ಸಾರಿಗೆ ಸಂಸ್ಥೆಗೆ 5.92 ಕೋಟಿ ರೂ. ಆದಾಯ ಬರುತ್ತಿದೆ. ಈ ಯೋಜನೆಗೆ ಬಜೆಟ್ನಲ್ಲಿ 2,800 ಕೋಟಿ ರೂ. ಅನುದಾನ ನೀಡಿದ್ದೆವು. ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಅನುದಾನದ ಮೊತ್ತವನ್ನು ನಾಲ್ಕುವರ��� ಸಾವಿರ ಕೋಟಿಗೆ ಹೆಚ್ಚಳ ಮಾಡಬೇಕೆಂದು ಕೋರಲಾಗಿದೆ. ಇದಕ್ಕೆ ಮುಖ್ಯಮಂತ್ರಿಗಳು ಸಮ್ಮತಿಸಿದ್ದಾರೆ ಎಂದು ರಾಮಲಿಂಗಾ ರೆಡ್ಡಿ ಮಾಹಿತಿ ನೀಡಿದ್ದಾರೆ.
|
eesanje/url_46_294_11.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪರೀಕ್ಷಾ ಅಕ್ರಮ ತಡೆಗೆ ಮಸೂದೆ ಮಂಡನೆ : 12 ವರ್ಷ ಜೈಲು, 10 ಕೋಟಿವರೆಗೂ ದಂಡ
|
2 |
+
ಬೆಳಗಾವಿ, ಡಿ.6- ಸರ್ಕಾರದ ವಿವಿಧ ಹುದ್ದೆಗಳಿಗೆ ನಡೆಸಲಾಗುವ ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳಿಗೆ ಕಡಿವಾಣ ಹಾಕಲು ಕಠಿಣ ಕಾನೂನು ರೂಪಿಸಿರುವ ರಾಜ್ಯಸರ್ಕಾರ ಅಕ್ರಮದಲ್ಲಿ ಭಾಗಿ ಯಾದ ಅಭ್ಯರ್ಥಿಗೆ 5 ವರ್ಷಗಳ ಕಠಿಣ ಶಿಕ್ಷೆ ಮತ್ತು 10 ಲಕ್ಷ ರೂ. ದಂಡ ವಿಧಿಸುವುದು ಮತ್ತು ಒಳಸಂಚು ನಡೆಸುವವರಿಗೆ 8 ರಿಂದ 12 ವರ್ಷಗಳ ಕಠಿಣ ಶಿಕ್ಷೆ ಮತ್ತು 15 ಲಕ್ಷ ರೂ.ಗಳಿಂದ 10 ಕೋಟಿ ರೂ.ಗಳ ದಂಡ ವಿಧಿಸಲು ಅವಕಾಶವಿರುವ ವಿಧೇಯಕವನ್ನು ಇಂದು ವಿಧಾನಸಭೆಯಲ್ಲಿ ಮಂಡಿಸ ಲಾಯಿತು.
|
3 |
+
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ಖರ್ಗೆ, ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ಪರವಾಗಿ ವಿಧೇಯಕವನ್ನು ಮಂಡಿಸಿದರು.ಪ್ರಸ್ತಾವಿತ ವಿಧೇಯಕದಲ್ಲಿ ಸಾರ್ವ ಜನಿಕ ಪರೀಕ್ಷೆಗಳ ಅಕ್ರಮಗಳು, ಭ್ರಷ್ಟಾ ಚಾರ, ಅನುಚಿತ ವಿಧಾನಗಳ ಬಳಕೆಗೆ ಕಡಿವಾಣ ಹಾಕಲು ಕಾಯಿದೆ ಯನ್ನು ರೂಪಿಸಿರುವುದಾಗಿ ತಿಳಿಸಲಾಗಿದೆ.
|
4 |
+
ಪರೀಕ್ಷಾ ಅಕ್ರಮಗಳು ನೀಚ ವ್ಯಕ್ತಿಗಳಿಗೆ ಹಾಗೂ ಅನಿಹಿತವಾದ ಹಿತಾಸಕ್ತಿಗಳಿಗೆ ಅಗಾಧ ಪ್ರಮಾಣದ ಹಣಕಾಸಿನ ಅನುಕೂಲಗಳನ್ನು ಮಾಡಿ ಕೊಡುವುದಲ್ಲದೆ ಯುವಜನರ ಪ್ರಗತಿಯ ಅವಕಾಶವನ್ನು ಕುಂಠಿತಗೊಳಿಸುತ್ತದೆ. ನ್ಯಾಯಸಮ್ಮತವಾದ ರೀತಿಯಲ್ಲಿ ಸಾರ್ವಜನಿಕ ಪರೀಕ್ಷೆ ನಡೆಸುವುದನ್ನು ವಿಫಲಗೊಳಿಸಲು ಹೊಸ ಹೊಸ ಭ್ರಷ್ಟ ಹಾಗೂ ಅನುಚಿತ ವಿಧಾನಗಳನ್ನು ಬಳಸಲಾಗುತ್ತಿದೆ. ಲಕ್ಷಾಂತರ ಪ್ರತಿಭಾನ್ವಿತರ ಕಠಿಣ ಪರಿಶ್ರಮವನ್ನು ನಿರರ್ಥಕ ಗೊಳಿಸಿ ಯುವಜನರ ಅವಕಾಶ ಗಳನ್ನು ವಂಚಿಸುತ್ತಿದೆ. ಜನಸಾಮಾನ್ಯರ ನಂಬಿಕೆಗೆ ದ್ರೋಹವೆಸಗಲಾಗುತ್ತಿದೆ ಎಂದು ಆಕ್ಷೇಪಿಸಲಾಗಿದೆ.
|
5 |
+
ರಾಜ್ಯದ ಮದರಸಾಗಳಲ್ಲಿ ಕನ್ನಡ, ಗಣಿತ, ವಿಜ್ಞಾನ ಬೋಧನೆ ಕಡ್ಡಾಯ
|
6 |
+
ಪರೀಕ್ಷಾ ಪಾವಿತ್ರ್ಯತೆಗೆ ಚ್ಯುತಿ ತರುವ ವ್ಯಕ್ತಿಗಳು, ಸಂಚುಕೋರರು, ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ನ್ಯಾಯ ಸಮ್ಮತ ನೇಮಕ ಪ್ರಕ್ರಿಯೆಗಾಗಿ ಈ ಕಾಯ್ದೆ ಅಗತ್ಯವಿದೆ ಎಂದು ಪ್ರತಿಪಾದಿಸಲಾಗಿದೆ.ಪರೀಕ್ಷಾರ್ಥಿಗಳು ಮತ್ತು ಅಪರಾಕ ಸೂತ್ರಧಾರರನ್ನು ಪ್ರತಿಸ್ಪಂಸಲು ಹೊಸ ಕಾನೂನಿನಲ್ಲಿ 10 ವರ್ಷಗಳವರೆಗೆ ಶಿಕ್ಷೆ ಮತ್ತು 10 ಕೋಟಿ ರೂ.ಗಳವರೆಗೆ ದಂಡನೆ ಹಾಗೂ ಸ್ವತ್ತುಗಳ ಜಪ್ತಿ, ಆಸ್ತಿಗಳ ಮುಟ್ಟುಗೋಲಿನಂತಹ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಸಲಾಗಿದೆ.
|
7 |
+
ಪ್ರಶ್ನೆಪತ್ರಿಕೆ ಬಹಿರಂಗ, ಸ್ವಾಧೀನ , ಸೋರಿಕೆ, ಒಎಂಆರ್ ಸೀಟುಗಳ ಸ್ವಾೀನ ಅಥವಾ ಅನಕೃತವಾಗಿ ಬಹಿರಂಗಪಡಿಸುವುದು ಪರೀಕ್ಷಾ ಕೇಂದ್ರಕ್ಕೆ ಅಕ್ರಮ ಪ್ರವೇಶ , ಪರೀಕ್ಷಾ ಸಾಮಗ್ರಿಗಳ ದುರ್ಬಳಕೆಯನ್ನು ಶಿಕ್ಷಾರ್ಹ ಅಪರಾಧವನ್ನಾಗಿ ಮಾಡಲಾಗಿದೆ. ಆಡಳಿತ ಮಂಡಳಿ ಮತ್ತು ಸಂಸ್ಥೆಗಳು ಅಪರಾಧದಲ್ಲಿ ಭಾಗಿಯಾಗಿರುವುದರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲು ಕಾಯ್ದೆಯಲ್ಲಿ ಅವಕಾಶ ಮಾಡಿಕೊಟ್ಟಿದೆ.
|
8 |
+
ಅಪರಾಧದಲ್ಲಿ ದೋಷಿ ಎಂದು ಕಂಡುಬರುವ ವ್ಯಕ್ತಿಗಳನ್ನು ಮುಂದೆ ಯಾವುದೇ ಪರೀಕ್ಷೆ ತೆಗೆದುಕೊಳ್ಳದಂತೆ ಅನರ್ಹಗೊಳಿಸಲು ಅವಕಾಶವಿದೆ. ಯಾವುದೇ ಸಂದರ್ಶನಗಳಿಗೂ ಭಾಗವಹಿಸಲು ಅವಕಾಶ ಇರುವುದಿಲ್ಲ. ನಿಯಮಿತ ಅಪರಾಧಗಳಲ್ಲಿ ಎರಡು ವರ್ಷಗಳವರೆಗೂ ಪರೀಕ್ಷೆಯಿಂದ ನಿಷೇಧಗೊಳಿಸಲಾಗುತ್ತದೆ.
|
9 |
+
ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದ ಆರೋಪಿಗಳ ಸ್ವತ್ತುಗಳನ್ನು ಜಪ್ತಿ ಮಾಡಿಕೊಳ್ಳಲು ತನಿಖಾಕಾರಿಗೆ ಅವಕಾಶ ಮಾಡಿಕೊಡಲಾಗಿದೆ ಮತ್ತು ಪರೀಕ್ಷೆಗೆ ಸಂಬಂಧಪಟ್ಟ ವೆಚ್ಚವನ್ನು ಅಪರಾಗಳು ಮತ್ತು ಅಪರಾಕ ಸಂಸ್ಥೆಗಳಿಂದ ವಸೂಲಿ ಮಾಡುವ ಪ್ರಸ್ತಾಪವಿದೆ.ಅಪರ ಪೊಲೀಸ್ ಅೀಕ್ಷಕರ ದರ್ಜೆಗಿಂತ ಕಡಿಮೆ ಇರದ ಯಾರೇ ಪೊಲಿಸ್ಅಧಿಕಾರಿಯು ಪರೀಕ್ಷಾ ಅಕ್ರಮಗಳ ತನಿಖೆ ನಡೆಸುವಂತಿಲ್ಲ ಎಂದು ಸೂಚಿಸಲಾಗಿದೆ.ಈ ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳುವುದು ಅಥವಾ ದುರ್ಬಲ ಗೊಳಿಸದಂತೆಯೂ ಎಚ್ಚರಿಕೆ ವಹಿಸಲಾಗಿದೆ.
|
eesanje/url_46_294_12.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸಚಿವ ಜಮೀರ್ ಗೈರು, ಮೇಲ್ಮನೆಯಲ್ಲಿ ಕಾವೇರಿದ ಚರ್ಚೆ
|
2 |
+
ಬೆಳಗಾವಿ,ಡಿ.6- ವಸತಿ ಮತ್ತು ವಕ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಗೈರು ಹಾಜರಾದ ವಿಷಯ ವಿಧಾನಪರಿಷತ್ನಲ್ಲಿ ಪ್ರಸ್ತಾಪವಾಗಿ ಕಾವೇರಿದ ಚರ್ಚೆಗೆ ಎಡೆಮಾಡಿಕೊಟ್ಟಿದಲ್ಲದೆ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಪ್ರಶ್ನೋತ್ತರ ಅವಯಲ್ಲಿ ಕಾಂಗ್ರೆಸ್ ಸದಸ್ಯ ಅಬ್ದುಲ್ ಜಬ್ಬರ್ ಅವರು, ವಕ್ಪ್ ಆಸ್ತಿಗಳನ್ನು ಅನಕೃತವಾಗಿ ಒತ್ತುವರಿ ಮಾಡುತ್ತಿರುವ ಬಗ್ಗೆ ಸಚಿವ ಜಮೀರ್ ಅಹ್ಮದ್ ಅವರಿಗೆ ಪ್ರಶ್ನೆ ಕೇಳಿದ್ದರು.
|
3 |
+
ಈ ವೇಳೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಜಮೀರ್ ಪರವಾಗಿ ಉತ್ತರಿಸಿದರು.ಪ್ರಶ್ನೆ ಮುಗಿಯುತ್ತಿದ್ದಂತೆ ಸಭಾಪತಿ ಬಸವರಾಜ್ ಹೊರಟ್ಟಿ ಅವರು, ಸಚಿವರಿಗೆ ಸದನಕ್ಕೆ ಬಂದು ಮುಖ ತೋರಿಸಲು ಹೇಳಿ ಎಂದು ಸಭಾನಾಯಕ ಬೋಸ್ ರಾಜ್ಗೆ ಸಲಹೆ ಮಾಡಿದರು.ಸಭಾಪತಿಗಳು ಈ ಮಾತು ಹೇಳುತ್ತಿದ್ದಂತೆ ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸದಸ್ಯರು ಪ್ರಶ್ನಿಸಲಾರಂಭಿಸಿದರು.
|
4 |
+
ಸಚಿವರು ಸದನಕ್ಕೆ ಏಕೆ ಬಂದಿಲ್ಲ? ಅವರು ಬರಲು ಸಮಸ್ಯೆ ಏನು? ಅವರು ಅನುಮತಿ ಕೇಳಿದ್ದರೇ ಅಥವಾ ಪತ್ರವನ್ನು ಕೊಟ್ಟಿದ್ದಾರೆಯೇ ಎಂದು ಬಿಜೆಪಿ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಪ್ರಶ್ನೆ ಮಾಡಿದರು. ಸ್ಪೀಕರ್ ಸ್ಥಾನದ ಬಗ್ಗೆ ಜಮೀರ್ ಅವರಿಗೆ ಗೌರವವಿಲ್ಲ. ಸ್ಪೀಕರ್ ಸ್ಥಾನದ ಮೇಲೆ ಜಮೀರ್ ಅವರಿಗೆ ವಿಶ್ವಾಸ ಇಲ್ಲ. ಸ್ಪೀಕರ್ ಸ್ಥಾನಕ್ಕೆ ಧರ್ಮದ ಲೇಪನ ಮಾಡಿ ಮಾತನಾಡಿದ್ದಾರೆ. ಸ್ಪೀಕರ್ ಹಾಗೂ ಸಭಾಪತಿ ಸ್ಥಾನಕ್ಕೆ ಗೌರವ ಇಲ್ಲವೆಂದು ಅವರು ಬಂದಿಲ್ಲವೇ? ಸ್ಪೀಕರ್ ಸ್ಥಾನಕ್ಕೆ ಗೌರವ ನೀಡದೇ ಅಪಮಾನ ಮಾಡಿದರೆ ಅದಕ್ಕಿಂತ ದೊಡ್ಡ ದುರಂತ ಇಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದರು.
|
5 |
+
ರಾಜ್ಯದ ಮದರಸಾಗಳಲ್ಲಿ ಕನ್ನಡ, ಗಣಿತ, ವಿಜ್ಞಾನ ಬೋಧನೆ ಕಡ್ಡಾಯ
|
6 |
+
ಸಭಾನಾಯಕ ಬೋಸ್ರಾಜ್ ಅವರು ವೈಯಕ್ತಿಕ ಕೆಲಸಕ್ಕೆ ಹೋಗಿದ್ದಾರೆ ಎಂದಾಗ, ಸಭಾಪತಿಯವರು, ಹಾಗೆಲ್ಲ ಸಚಿವರು ಗೈರು ಹಾಜರಾಗುವುದು ಸರಿಯಲ್ಲ ಎಂದು ಹೇಳಿದರು.ಮಧ್ಯಪ್ರವೇಶಿಸಿದ ಬಿಜೆಪಿ ಸದಸ್ಯ ನಾರಾಯಣಸ್ವಾಮಿ ಅವರು, ಸರ್ಕಾರಕ್ಕೆ ಸಭಾಪತಿ ಛಾಟಿ ಬೀಸಬೇಕು, ಮುಖ ತೋರಿಸಿ ಎಂದು ಮಾತ್ರ ಹೇಳಿದರೆ ಹೇಗೆ? ಎಂದು ಪ್ರಶ್ನಿಸಿದರು.ಕೋಟ ಶ್ರೀನಿವಾಸ್ ಪೂಜಾರಿಯವರು ಯಾರು ಏನು ಬೇಕಾದರೂ ಮಾತಾಡಬಹುದಾ? ಎಂದಾಗ ನಾನು ಸೂಕ್ಷ್ಮವಾಗಿ ಹೇಳಿದ್ದೇನೆ ಎಲ್ಲರೂ ಅರ್ಥ ಮಾಡಿಕೊಳ್ಳಿ ಎಂದು ಸಭಾಪತಿ ಹೊರಟ್ಟಿ ಕಿವಿಮಾತು ಹೇಳಿದರು.
|
7 |
+
ಬಿಜೆಪಿ ಸದಸ್ಯ ರಘುನಾಥ್ ಮಲ್ಕಾಪುರೆ ಮಾತನಾಡಿ, ಯಾವ ಕಾರಣ ಹೇಳಿ ಜಮೀರ್ ಅಹ್ಮದ್ ಗೈರಾಗಿದ್ದಾರೆ? ಕುಟುಂಬದ ಸದಸ್ಯರಿಗೆ ಅನಾರೋಗ್ಯ , ತುರ್ತು ಕೆಲಸ ಇದ್ದರೆ ಗೈರಾಗಬಹುದು. ಆದರೆ ಬೆಳಗಾವಿಯಲ್ಲಿ ಅವೇಶನ ನಡೆಯುತ್ತಿದೆ. ಪೀಠದ ಬಗ್ಗೆ ಅವಹೇಳನ ಮಾತನಾಡಿದ್ದಾರೆ. ಹೀಗಾಗಿ ಉದ್ದೇಶಪೂರ್ವಕವಾಗಿ ಅವರು ಗೈರಾಗಿದ್ದಾರೆ ಎಂದು ಆರೋಪಿಸಿದರು.ಸಭ���ಪತಿಯಾದ ನನ್ನ ಅನುಮತಿ ಕೇಳಿದ್ದಾರೆ. ಕಾರಣವನ್ನೂ ನಾನು ಹೇಳಲಾಗುವುದಿಲ್ಲ ಎಂದು ಸಭಾಪತಿಗಳು ಸಮರ್ಥಿಸಿಕೊಂಡರು.
|
8 |
+
ಆಗ ಸದನದ ನಿಯಮ ಓದಿದ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ಉಳಿದದ್ದು ಸಭಾಪತಿಗಳ ನಿರ್ಣಯಕ್ಕೆ ಬಿಟ್ಟಿದ್ದು ಎಂದರು. ಗೈರಾದ ಬಗ್ಗೆ ಆಕ್ಷೇಪವಿಲ್ಲ , ಪೀಠದ ಬಗ್ಗೆ ಅವಹೇಳನ ಮಾಡಿರುವ ಜಮೀರ್ ಹೇಳಿಕೆ ಬಗ್ಗೆ ಚರ್ಚೆಗೆ ಅವಕಾಶ ಬೇಕು ಎಂದ ಕೋಟಾ ಶ್ರೀ ನಿವಾಸ ಪೂಜಾರಿ ಅವರಿಗೆ , ಸಭಾಪತಿಗಳು ಪರಿಗಣಿಸುವುದಾಗಿ ಹೇಳಿದರು.
|
9 |
+
ಕೃಷ್ಣ ಬೈರೆಗೌಡರು ಓದಿದ ನಿಯಮದ ಪ್ರತಿ ಸರಿ ಇದೆ. ಆದರೆ ಸಭಾಪತಿ ಪೀಠದಿಂದ ಈ ಉತ್ತರ ನಿರೀಕ್ಷೆ ಮಾಡಿರಲಿಲ್ಲ. ಸದನದ ಸದಸ್ಯರು ಕೇಳಿದಾಗ ಕಾರಣವನ್ನು ಹೇಳುವುದು ನಿಮ್ಮ ಕರ್ತವ್ಯ ಎಂದು ಜೆಡಿಎಸ್ ಸದಸ್ಯ ಭೋಜೆಗೌಡ ಅವರು ಒತ್ತಾಯಿಸಿದರು.ಗೈರಾಗುವ ಬಗ್ಗೆ ಹೇಳಿದ್ದಾರೆ, ಅನುಮತಿ ಕೊಟ್ಟಿದ್ದೇನೆ ಅಷ್ಟೇ. ಮಂತ್ರಿಗಳು ನಾಳೆಯಿಂದ ಎಲ್ಲರೂ ಹಾಜರಿರುವ ಬಗ್ಗೆ ಸೂಚನೆ ನೀಡಿದ್ದೇನೆ ಎಂದು ಸಭಾಪತಿ ಸದನಕ್ಕೆ ತಿಳಿಸಿದರು.ಪುನಃ ಪ್ರವೇಶಿಸಿದ ಕೃಷ್ಣ ಭೈರೇಗೌಡ ಅವರು, ಸಾಮಾನ್ಯವಾಗಿ ಸಚಿವರು ಗೈರು ಹಾಜರಾಗಲು ಅನುಮತಿ ಬೇಕಿಲ್ಲ. ನಿಯಮಗಳ ಪ್ರಕಾರ ಹೇಳುವ ಅವಶ್ಯಕತೆ ನನಗೂ ಇರಲಿಲ್ಲ, ವಿಷಯ ತಿಳಿದುಕೊಂಡು ಪೂಜಾರಿಯವರು ಮಾತನಾಡಲಿ ಎಂದು ಹೇಳಿದರು.
|
10 |
+
ಸಭಾಪತಿ ಅನುಮತಿ ಪಡೆದುಕೊಳ್ಳಬೇಕು, ಜಮೀರ್ ಪಡೆದುಕೊಂಡಿದ್ದಾರೆ, ಅವರ ಕಾರಣಗಳು ನನಗೆ ಸಂಬಂಧ ಇಲ್ಲ ಎಂದು ಸಭಾಪತಿ ಹೊರಟ್ಟಿ ಪುನರುಚ್ಚಿಸಿದರು. ಆಗ ಕೋಟಾ ಶ್ರೀನಿವಾಸ್ ಪೂಜಾರಿಯವರು, ಪೀಠ ಯಾವತ್ತೂ ನಮ್ಮ ರಕ್ಷಣೆಗೆ ಬರಬೇಕು. ಕ್ಯಾಬಿನೆಟ್ ದರ್ಜೆಯ ಮಂತ್ರಿ ಪೀಠಕ್ಕೆ ಅವಮಾನ ಆಗುವಂತೆ ಮಾತನಾಡಿದ್ದಾರೆ. ಅದರ ಬಗ್ಗೆ ಚರ್ಚೆ ಮಾಡಲು ನಮಗೆ ಅವಕಾಶ ನೀಡಬೇಕು ಎಂದು ಕೋರಿದಾಗ, ಸಭಾಪತಿಗಳು ಚರ್ಚೆಗೆ ಅವಕಾಶ ಮಾಡಿಕೊಡುವುದಾಗಿ ತಿಳಿಸಿದರು.
|
11 |
+
ಬಿಜೆಪಿ ಸದಸ್ಯ ಎನ್.ರವಿ ಕುಮಾರ್ ಮಾತನಾಡಿ, ಸಚಿವರು ಗೈರು ಹಾಜರಾಗಬಹುದು? ಅನುಮಾನದ ಪ್ರಶ್ನೆ ಎಂದರೆ ಕೃಷ್ಣ ಭೈರೇಗೌಡ, ರಾಮಲಿಂಗಾರೆಡ್ಡಿ ಗೈರಾಗಿರುವುದು. ಆದರೆ ನಾವು ಪ್ರಶ್ನೆಯೇ ಕೇಳುವುದಿಲ್ಲ ಎಂದು ಚರ್ಚೆಗೆ ತೆರೆ ಎಳೆದರು.
|
eesanje/url_46_294_2.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಹೊಸ ಮದ್ಯದಂಗಡಿಗಳಿಗೆ ಪರವಾನಗಿ ಇಲ್ಲ : ಸಚಿವ ಆರ್.ಬಿ.ತಿಮ್ಮಾಪುರ
|
2 |
+
ಬೆಳಗಾವಿ, ಡಿ.7- ರಾಜ್ಯದಲ್ಲಿ ಹೊಸದಾಗಿ ಮದ್ಯದಂಗಡಿಗಳನ್ನು ತೆರೆಯಲು ಅವಶ್ಯಕವಿರುವ ಲೈಸನ್ಸ್ ನೀಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರು ವಿಧಾನ ಪರಿಷತ್ತನಲ್ಲಿ ಇಂದು ಸ್ಪಷ್ಟಪಡಿಸಿದರು.
|
3 |
+
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ವೈ.ಎ.ನಾರಾಯಾಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಸರ್ಕಾರ ಹೊಸದಾಗಿ ಬಾರ್ ಅಂಗಡಿ ತೆರೆಯುವುದಾಗಲಿ, ಇಲ್ಲವೆ ಲೈಸನ್ಸ್ ನೀಡುವ ಪ್ರಸ್ತಾವನೆ ಇಟ್ಟುಕೊಂಡಿಲ್ಲ. ಈ ಸಂಬಂಧದ ಕೆಲವು ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದರು.
|
4 |
+
ರಾಜ್ಯದಲ್ಲಿ ಪ್ರಸ್ತುತ 3981 ಸಿಎಲ್ -2 ಸನ್ನದ್ದುದಾರರಿದ್ದು, ಅದೇ ರೀತಿ 3631 ಸಿಎಲ್-9 ಸನ್ನದ್ದುದಾರರಿದ್ದಾರೆ. 2465 ಸಿಎಲ್-7 ಸನ್ನದ್ದುದಾರರಿದ್ದಾರೆ. ಸಿಎಲ್-2 ಸನ್ನದ್ದುದಾರರಿಂದ 208.91 ಕೋಟಿ ರೂ., ಸಿಎಲ್-9 ಸನ್ನದ್ದುದಾರರಿಂದ 232.46 ಕೋಟಿ ರೂ. ಸಿಎಲ್-7 ಸನ್ನದ್ದುದಾರರಿಂದ 152.81ಕೋಟಿ ರೂ. ವಾರ್ಷಿಕ ಶುಲ್ಕ ಪಡೆದುಕೊಳ್ಳಲಾಗಿದೆ.
|
5 |
+
ಅಧಿಕಾರ ದುರುಪಯೋಗಪಡಿಸಿಕೊಂಡ ಅಧಿಕಾರಿಗಳನ್ನು ವಜಾ ಮಾಡಿದ ಯೋಗಿ
|
6 |
+
ಗ್ರಾಮೀಣ ಭಾಗಗಳಲ್ಲಿ ಅಂಗಡಿ ಮತ್ತಿತರ ಕಡೆಗಳಲ್ಲಿ ಮದ್ಯದ ಅಂಗಡಿಗಳನ್ನು, ಮದ್ಯವನ್ನು ಮಾರಾಟ ಮಾಡುತ್ತಾರೆ. ಇದನ್ನು ತಪ್ಪಿಸಲು ಸಿಎಲ್-7ನಲ್ಲಿ ಕೆಲವು ವಿನಾಯಿತಿಗಳನ್ನು ನೀಡಲಾಗಿದೆಯೇ ಹೊರತು ಸರ್ಕಾರ ಮದ್ಯಪಾನಕ್ಕೆ ಎಲ್ಲಿಯೂ ಸರ್ಕಾರ ಉತ್ತೇಜನ ನೀಡಿಲ್ಲ ಎಂದು ತಿಮ್ಮಾಪುರ ತಿಳಿಸಿದರು.
|
eesanje/url_46_294_3.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ವನ್ಯಜೀವಿ ಸಂಘರ್ಷ ತಡೆಗೆ ಕ್ರಮ : ಈಶ್ವರ್ ಖಂಡ್ರೆ
|
2 |
+
ಬೆಳಗಾವಿ, ಡಿ.7- ಇತ್ತೀಚೆಗೆ ಬೆಂಗಳೂರಿನ ಬೊಮ್ಮನಹಳ್ಳಿಯ ಅಪಾರ್ಟ್ಮೆಂಟಿನಲ್ಲಿ ಕಾಣಿಸಿಕೊಂಡಿದ್ದ ಚಿರತೆಯ ಪ್ರಕರಣ ವಿಧಾನಸಭೆಯಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದಲ್ಲದೆ, ವನ್ಯಜೀವಿ-ಮಾನವ ಸಂಘರ್ಷ ತಡೆಗೆ ಅಗತ್ಯ ಮೂಲಸೌಲಭ್ಯ ಒದಗಿಸುವುದಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.
|
3 |
+
ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಅವರು, ಪ್ರಶ್ನೆ ಕೇಳಿ ನವೆಂಬರ್ 1 ರಂದು ಚಿರತೆ ಬೆಂಗಳೂರಿನ ಬೊಮ್ಮನಹಳ್ಳಿ ವ್ಯಾಪ್ತಿಗೆ ಬಂದಿದ್ದು, ಅಪಾರ್ಟ್ಮೆಂಟಿನಲ್ಲಿ ಕಾಣಿಸಿಕೊಂಡಿತ್ತು. ಇಲ್ಲಿಂದ ಬನ್ನೇರುಘಟ್ಟ 20 ಕಿ.ಮೀ. ಅಂತರದಲ್ಲಿದ್ದರೂ ಅಲ್ಲಿಂದ ವನ್ಯಜೀವಿಗಳು ಜನವಸತಿ ಪ್ರದೇಶಗಳಿಗೆ ನುಗ್ಗಿ ಬರುತ್ತಿವೆ. ಈ ಮೊದಲೂ ಕೂಡ ಹುಲಿ, ಆನೆ, ಚಿರತೆ ಹಾವಳಿಯನ್ನು ಜನ ಅನುಭವಿಸಿದ್ದಾರೆ.ವನ್ಯಜೀವಿ ಸಂಘರ್ಷದ ವೇಳೆ ಅವುಗಳನ್ನು ಸುರಕ್ಷಿತವಾಗಿ ಹಿಡಿಯಲು ಅಥವಾ ಹಿಮ್ಮೆಟ್ಟಿಸಲು ಅಗತ್ಯ ಸೌಲಭ್ಯಗಳ ಕೊರತೆಯಿದೆ.
|
4 |
+
ಚಿರತೆ ಬಂದಾಗ 200 ಕಿ.ಮೀ. ಪ್ರದೇಶವನ್ನು ಸುತ್ತುವರೆಯಲಾಗಿದ್ದು, ಅಲ್ಲಿ ಸುರಕ್ಷಾ ತಂತಿಬೇಲಿ ಅಳವಡಿಸಲು ಹಾಗೂ ಥರ್ಮಲ್ ಡ್ರೋನ್ ಕ್ಯಾಮರಾ ವ್ಯವಸ್ಥೆ ಇರಲಿಲ್ಲ. ಈ ಎರಡನ್ನೂ ಖಾಸಗಿಯವರಿಂದ ಪಡೆಯಬೇಕಾಗಿತ್ತು. ಚಿರತೆಗೆ ನೀಡಿದ ಅರವಳಿಕೆಯ ಮದ್ದು ಕೆಲಸ ಮಾಡಲಿಲ್ಲ. ಬಹುಷಃ ಅದರ ಅವ ಮುಗಿದಿರಬಹುದು. ಮೂರು ಜನ ಅರಣ್ಯ ಸಿಬ್ಬಂದಿಗಳಿಗೆ ಚಿರತೆ ಕಚ್ಚಿ ಹಲ್ಲೆ ಮಾಡಿತ್ತು. ಕೊನೆಗೆ ಅದನ್ನು ಎನ್ಕೌಂಟರ್ ಮಾಡಿ ಕೊಲ್ಲಬೇಕಾಯಿತು. ಹೀಗಾಗಿ ಅರಣ್ಯ ಇಲಾಖೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿದರು.
|
5 |
+
ಅರಗ ಜ್ಞಾನೇಂದ್ರ ಮಲೆನಾಡು ಭಾಗದಲ್ಲಿ ಮಂಗ, ಕಾಡುಕೋಣ, ಹಂದಿಯ ಹಾವಳಿ ತೀವ್ರಗೊಂಡಿದೆ. ಇತ್ತೀಚೆಗೆ ಹಂದಿ ಹಾವಳಿಯನ್ನು ತಡೆಯಲು ಪ್ರಾಣಭಯದಿಂದ ವ್ಯಕ್ತಿಯೊಬ್ಬರು ಗುಂಡು ಹಾರಿಸಿದ್ದಾರೆ. ಅವರನ್ನು ಜೈಲಿಗೆ ಕಳುಹಿಸಲಾಗಿದೆ. ಕಾಡುಕೋಣವೊಂದು ವ್ಯಕ್ತಿಯೊಬ್ಬರ ಕೈ ಮುರಿದಿದೆ. ಹಂದಿ ಹೊಡೆಯಲು ಅವಕಾಶವಿದೆ. ಆದರೆ ತಿಂದರೆ ಅಪರಾಧ ಎಂದು ಪ್ರಕರಣ ದಾಖಲಿಸುತ್ತಿದ್ದಾರೆ. ವನ್ಯಜೀವಿ ಸಂರಕ್ಷಣಾ ಸಂದರ್ಭದಲ್ಲಿ ಕಾನೂನಿನ ವಿನಾಯಿತಿ ನೀಡಿ ಎಂದು ಮನವಿ ಮಾಡಿದರು.
|
6 |
+
ಬಿಜೆಪಿಯ ಸುನಿಲ್ಕುಮಾರ್, ಸಿಮೆಂಟ್ ಮಂಜು, ಸುರೇಶ್ಗೌಡ, ಎಂ.ಕೃಷ್ಣಪ್ಪ ಸೇರಿದಂತೆ ಹಲವಾರು ಮಂದಿ ಶಾಸಕರು ಚರ್ಚೆಯಲ್ಲಿ ಭಾಗವಹಿಸಿ ಅರಣ್ಯ ಪ್ರದೇಶದಲ್ಲಿನ ಗಣಿಗಾರಿಕೆಗೆ ಕಡಿವಾಣ ಹಾಕಬೇಕು. ಬೆಂಗಳೂರು ಸುತ್ತಮುತ್ತ ಮಾಂಸದಂಗಡಿಗಳ ತ್ಯಾಜ್ಯ ವಿಸರ್ಜನೆಯನ್ನು ವೈಜ್ಞಾನಿಕವಾಗಿ ಮಾಡಬೇಕೆಂದು ಆಗ್ರಹಿಸಿದರು. ಉತ್ತರ ನೀಡಿದ ಸಚಿವ ಈಶ್ವರ್ ಖಂಡ್ರೆ, ಆನೆ, ಚಿರತೆ ಹಾವಳಿಯನ್ನು ತಡೆಯಲು ವಿಶೇಷ ಕಾರ್ಯಪಡೆಗಳನ್ನು ರಚಿಸಲಾಗಿದೆ. 59 ಸಿಬ್ಬಂದಿಗಳನ್ನು ನೇಮಿಸಲಾಗಿದೆ.
|
7 |
+
ರಾಷ್ಟ್ರ ಉಳಿಸಲು ಸರ್ಕಾರಕ್ಕೆ ಅವಕಾಶ ನೀಡಬೇಕು : ಸುಪ್ರೀಂ ಕೋರ್ಟ್
|
8 |
+
ಒತ್ತುವರಿಯಿಂದಾಗಿ ಅರಣ್ಯ ಪ್ರದೇಶ ಕಿರಿದಾಗುತ್ತಿದೆ. ಬೆಂಗಳೂರಿನಲ್ಲಿ 500 ಹೆಕ್ಟೇರ್ ಅರಣ್ಯ ಹಸಿರು ಪ್ರದೇಶ ಕಡಿಮೆಯಾಗಿದೆ. 1051 ಪ್ರಕರಣಗಳಲ್ಲಿ 2570 ಎಕರೆ ಪ್ರದೇಶ ಒತ್ತುವರಿಯಾಗಿದೆ. ಅದರಲ್ಲಿ 403 ಪ್ರದೇಶವನ್ನು ತೆರವುಗೊಳಿಸಲಾಗಿದೆ. ಈಗ ಭೂಮಿಯ ಉಳಿದ ಒತ್ತುವರಿ ತೆರವಿಗೆ ಶಾಸಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
|
9 |
+
ವನ್ಯಜೀವಿ ಸಂರಕ್ಷಣೆ ಸಮಯದಲ್ಲಿ ಅಗತ್ಯವಾಗಿರುವ ಬೋನುಗಳು, ಬಲೆಗಳು, ಸುರಕ್ಷತಾ ಸಲಕರಣೆಗಳು, ಅಗತ್ಯ ತರಬೇತಿ ನೀಡಲು ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ. ಬೊಮ್ಮನಹಳ್ಳಿಯ ಚಿರತೆ ಕಾರ್ಯಾಚರಣೆಯ ವೇಳೆ ಶಾಸಕರು ಸಂಪೂರ್ಣ ಸಹಕಾರ ನೀಡಿದ್ದರು. ಗಾಯಗೊಂಡ ಸಿಬ್ಬಂದಿಗಳಿಗೆ ಶಾಸಕರು ವೈಯಕ್ತಿಕವಾಗಿ 2 ಲಕ್ಷ ರೂ. ಪರಿಹಾರ ನೀಡುವುದನ್ನು ಸ್ವಾಗತಿಸಲಾಗುವುದು.
|
10 |
+
ಇಲಾಖೆಯಿಂದಲೂ ಸಿಬ್ಬಂದಿಗಳಿಗೆ ಪರಿಹಾರ ನೀಡಲಾಗುತ್ತದೆ. ಅಂದು ಚಿರತೆ ಮೂರು ಜನರ ಮೇಲೆ ದಾಳಿ ಮಾಡಿ 4ನೆಯವರ ಮೇಲೆ ಎರಗಿದಾಗ ಗುಂಡು ಹಾರಿಸಬೇಕಾಯಿತು. ಅರವಳಿಕೆಯ ಮದ್ದಿನ ಸಿರಿಂಜ್ ಚಿರತೆಗೆ ಚುಚ್ಚಿಕೊಂಡಿತ್ತು. ಆದರೆ ಔಷ ಚಿರತೆಯ ದೇಹಕ್ಕೆ ಸ್ಪಂದಿಸಲಿಲ್ಲ. ಹೀಗಾಗಿ ಅದು ಪ್ರಜ್ಞೆ ತಪ್ಪಲಿಲ್ಲ ಎಂದು ಹೇಳಿದರು.
|
11 |
+
ಅಂದು ಚಿರತೆಯನ್ನು ಕೊಲ್ಲದೆ ಇದ್ದರೆ ಹೊರಗಡೆ ಸುಮಾರು ಒಂದೂವರೆ ಸಾವಿರ ಜನ ಇದ್ದರು. ಹೆಚ್ಚಿನ ಅನಾಹುತ ಆಗುತ್ತಿತ್ತು. ಸಚಿವರು ಸಕಾಲಿಕ ಆದೇಶ ನೀಡಿ ಅನಾಹುತ ತಪ್ಪಿಸಿದ್ದಾರೆ ಎಂದು ಶಾಸಕರು ಸಚಿವರನ್ನು ಅಭಿನಂದಿಸಿದರು.
|
eesanje/url_46_294_4.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ರಾಯಚೂರು : ಭೀಕರ ಅಪಘಾತದಲ್ಲಿ ನಾಲ್ವರ ದುರ್ಮರಣ
|
2 |
+
ರಾಯಚೂರು,ಡಿ.5- ಟಾಟಾ ಏಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಸಿಂದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ. ಇಸ್ಮಾಯಿಲ್(25), ಚನ್ನಬಸವ(26), ರವಿ(21) ಮತ್ತು ಅಂಬರೀಶ್(20) ಮೃತಪಟ್ಟ ದುರ್ದೈವಿಗಳು. ಕೊಲ್ಕತ್ತಾ ಮೂಲದ ಸಮೀರ್ ಎಂಬಾತ ಗಾಯಗೊಂಡಿದ್ದು, ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
|
3 |
+
ಟಾಟಾಏಸ್ ವಾಹನದಲ್ಲಿ ಐದು ಮಂದಿ ಸಿಂಧನೂರಿನಿಂದ ಮಸ್ಕಿ ತಾಲೂಕಿನ ಮದ್ಲಾಪುರಕ್ಕೆ ಮದುವೆ ಸಮಾರಂಭದ ಡೆಕೋರೇಟ್ಗಾಗಿ ಸಾಮಾಗ್ರಿಗಳನ್ನು ತೆಗೆದುಕೊಂಡು ಇಂದು ಬೆಳಗಿನ ಜಾಗ 4.30ರ ಸುಮಾರಿನಲ್ಲಿ ಹೋಗುತ್ತಿದ್ದಾಗ ಪಗಡದಿನ್ನಿ ಕ್ಯಾಂಪ್ ಬಳಿ ಅತಿ ವೇಗವಾಗಿ ಬಂದ ಲಾರಿ ಟಾಟಾಏಸ್ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟಿದ್ದು ಸಮೀರ್ ಎಂಬಾತ ಗಾಯಗೊಂಡಿದ್ದಾರೆ.
|
4 |
+
ರಾಷ್ಟ್ರ ಉಳಿಸಲು ಸರ್ಕಾರಕ್ಕೆ ಅವಕಾಶ ನೀಡಬೇಕು : ಸುಪ್ರೀಂ ಕೋರ್ಟ್
|
5 |
+
ಸುದ್ದಿ ತಿಳಿಯುತ್ತಿದ್ದಂತೆ ಸಿಂದನೂರು ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ವಾಹನದೊಳಗೆ ಸಿಲುಕಿ ಮೃತಪಟ್ಟಿದ್ದ ನಾಲ್ವರ ಮೃತದೇಹಗಳನ್ನು ಹೊರಗೆ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಸಿಂಧನೂರು ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಗೊಂಡ ಸಮೀರ್ನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂಧನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
|
eesanje/url_46_294_5.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಮುಂದಿನ ವರ್ಷದಿಂದ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್
|
2 |
+
ಬೆಳಗಾವಿ, ಡಿ.7- ಮುಂದಿನ ಆರ್ಥಿಕ ವರ್ಷದಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಿಸುವ ಯೋಜನೆಯನ್ನು ಆರಂಭಿಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಶಾಸಕ ಪ್ರದೀಪ್ಈಶ್ವರ್ ಪ್ರಶ್ನೆ ಕೇಳಿ, ಸೈಕಲ್ ವಿತರಣೆಯನ್ನು ಹಿಂದಿನ ಸರ್ಕಾರ ಸ್ಥಗಿತಗೊಳಿಸಿದೆ. ಅದನ್ನು ಮರು ಆರಂಭಿಸಬೇಕು. ಇದರಿಂದಾಗಿ ವಿದ್ಯಾರ್ಥಿಗಳು ಶಾಲೆ ತೊರೆಯುವ ಪ್ರಕರಣಗಳು ತಗ್ಗಲಿವೆ ಎಂದು ಹೇಳಿದರು.
|
3 |
+
ವಿಪಕ್ಷ ನಾಯಕ ಆರ್.ಅಶೋಕ್, ಈ ಹಿಂದೆ ಯಡಿಯೂರಪ್ಪ ಈ ಯೋಜನೆಯನ್ನು ಆರಂಭಿಸಿದ್ದರು. ಆದರೆ ಅದು ಸ್ಥಗಿತಗೊಂಡಿದೆ. ರಾಜ್ಯಸರ್ಕಾರದ ಶಕ್ತಿ ಯೋಜನೆಯಿಂದಾಗಿ ತಾಯಂದಿರು ಬಸ್ಸಿನಲ್ಲಿ ಹೋಗುತ್ತಿದ್ದಾರೆ, ಮಕ್ಕಳು ನಡೆದುಕೊಂಡು ಹೋಗುತ್ತಿದ್ದಾರೆ. ಅದರಲ್ಲೂ ಕೆಲವು ಕಡೆ ಜೆಸಿಬಿಯಲ್ಲಿ ಮಕ್ಕಳು ಪ್ರಯಾಣಿಸುತ್ತಿರುವ ಪ್ರಕರಣಗಳೂ ಕಂಡುಬಂದಿವೆ ಎಂದು ವಿವರಿಸಿದರು.
|
4 |
+
ರಾಷ್ಟ್ರ ಉಳಿಸಲು ಸರ್ಕಾರಕ್ಕೆ ಅವಕಾಶ ನೀಡಬೇಕು : ಸುಪ್ರೀಂ ಕೋರ್ಟ್
|
5 |
+
ಉತ್ತರ ನೀಡಿದ ಸಚಿವ ಮಧು ಬಂಗಾರಪ್ಪ, ಹಿಂದೆ ಆಡಳಿತದಲ್ಲಿದ್ದ ನಿಮ್ಮ ಸರ್ಕಾರವೇ ಸೈಕಲ್ ವಿತರಣೆಯನ್ನು ಸ್ಥಗಿತಗೊಳಿಸಿದೆ. ನಮ್ಮ ಸರ್ಕಾರ ಮತ್ತೆ ಆರಂಭಿಸುವ ಪ್ರಯತ್ನ ಮಾಡುತ್ತಿದೆ ಎಂದರು. ತಾವು ಭೇಟಿ ನೀಡಿದ ಹಲವು ಶಾಲೆಗಳಲ್ಲಿ ಈ ರೀತಿಯ ಬೇಡಿಕೆಗಳು ಕೇಳಿಬಂದಿವೆ. ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಯಿಂದ ಅನುಕೂಲವಾಗಲಿದೆ. ಅದರಲ್ಲೂ ಗ್ರಾಮೀಣ ಭಾಗ ಮತ್ತು ಕಡಿಮೆ ಅಂತರದ ಶಾಲಾ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಹಾಯವಾಗಲಿದೆ. ಈ ನಿಟ್ಟಿನಲ್ಲಿ ಮುಂದಿನ ಬಜೆಟ್ನಲ್ಲಿ ಚರ್ಚೆ ಮಾಡಿ ಯೋಜನೆಯನ್ನು ಮರು ಆರಂಭಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
|
6 |
+
ಶಾಲಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರ ಬಸ್ ಸೌಲಭ್ಯ ಒದಗಿಸಲಾಗುತ್ತಿದೆ. ಉಚಿತ ಬಸ್ ಪಾಸ್ಗಳಿವೆ. ಮುಂದುವರೆದು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕೇಂದ್ರ ಪ್ರಾಯೋಜಿತ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಲ್ಲಿ ತಮ್ಮ ವ್ಯಾಪ್ತಿಯನ್ನೂ ಮೀರಿದ ಶಾಲೆಗಳಿಗೆ ಪ್ರಯಾಣಿಸಲು ಪ್ರತಿ ತಿಂಗಳಿಗೆ 600 ರೂ. ಸಾರಿಗೆ ಭತ್ಯೆ ನೀಡಲಾಗುತ್ತಿದೆ ಎಂದು ಸಚಿವರು ವಿವರಿಸಿದರು.
|
7 |
+
ಒಂದರಿಂದ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಶಾಲೆಯ ಮಕ್ಕಳಿಗೆ ವಿದ್ಯಾವಿಕಾಸ ಯೋಜನೆಯಡಿ ಶೈಕ್ಷಣಿಕ ವರ್ಷದಲ್ಲಿ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ಅನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದು ಹೇಳಿದರು. ಇದನ್ನು ದುಪ್ಪಟ್ಟು ಪ್ರಮಾಣಕ್ಕೆ ಹೆಚ್ಚಿಸಬೇಕೆಂದು ಪ್ರದೀಪ್ ಈಶ್ವರ್ ಮನವಿ ಮಾಡಿದರು.
|
eesanje/url_46_294_6.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಹಳೆ ಪಿಂಚಣಿ ಜಾರಿ ವರದಿ ವಿಳಂಬ
|
2 |
+
ಬೆಳಗಾವಿ, ಡಿ.7- ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿ ಮಾಡುವ ಸಂಬಂಧ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಕೆಲವು ತಾಂತ್ರಿಕ ಕಾರಣಗಳಿಂದ ವರದಿ ನೀಡುವುದು ವಿಳಂಬವಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ವಿಧಾನಪರಿಷತ್ತಿಗೆ ತಿಳಿಸಿದರು.
|
3 |
+
ಸದಸ್ಯರಾದ ಮರಿತಿಬ್ಬೇಗೌಡ, ಎಸ್.ವಿ.ಸಂಕನೂರ, ಹೇಮಲತಾನಾಯಕ್ ಅವರ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಉತ್ತರಿಸಿದ ಕೃಷ್ಣಬೈರೇಗೌಡ ಅವರು, ಹೊಸ ಪಿಂಚಣಿ ಯೋಜನೆ (ಎನ್ಪಿಎಸ್)ಜಾರಿಗೆ ಬಂದ ಮೇಲೆ ಇದನ್ನು ಮುಂದುವರೆಸಬೇಕೆ? ಇಲ್ಲವೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಮಾಡಬೇಕೇ ಎಂಬುದರ ಬಗ್ಗೆ ವಿಸ್ತೃತ ವರದಿ ನೀಡುವಂತೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹಾಗೂ ಇತ್ತರೆ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ.
|
4 |
+
ಈ ಸಮಿತಿಯು ಈಗಾಗಲೇ ಮೂರು ಬಾರಿ ಸಭೆ ನಡೆಸಿದೆ. ಆದಷ್ಟು ಬೇಗ ವರದಿ ನೀಡುವಂತೆ ಸರ್ಕಾರ ಸಮಿತಿಗ ಸೂಚಿಸಿತ್ತು. ಕೆಲವು ತಾಂತ್ರಿಕ ಕಾರಣಗಳಿಂದ ವರದಿ ನೀಡಲು ಸಾಧ್ಯವಾಗಿಲ್ಲ. ಆದಷ್ಟು ಬೇಗ ವರದಿ ನೀಡಲು ಸಂಬಂಧಪಟ್ಟವರಿಗೆ ಸೂಚನೆ ನೀಡುವುದಾಗಿ ತಿಳಿಸಿದರು.
|
5 |
+
ರಾಷ್ಟ್ರ ಉಳಿಸಲು ಸರ್ಕಾರಕ್ಕೆ ಅವಕಾಶ ನೀಡಬೇಕು : ಸುಪ್ರೀಂ ಕೋರ್ಟ್
|
6 |
+
ಎನ್ಪಿಎಸ್ನಿಂದ ಕೆಲವು ನೌಕರರ ಭವಿಷ್ಯ ನಿಧಿ ಹಣ ಕೇಂದ್ರಕ್ಕೆ ಹೋಗುತ್ತದೆ. ನಾವು ಹಳೇ ಪಿಂಚಣಿ ವ್ಯವಸ್ಥೆ ಮುಂದುವರೆಸಿದರೆ ಈ ಹಣ ಬರುವುದಿಲ್ಲ. ಇದನ್ನು ಹೇಗೆ ಸರಿಪಡಿಸಬೇಕು ಎಂಬುದರ ಬಗ್ಗೆ ಸಮಿತಿ ಕೂಲಂಕುಷವಾಗಿ ಪರಿಶೀಲಿಸಲಿದೆ.
|
7 |
+
ರಾಜಸ್ಥಾನ ಸರ್ಕಾರ ನಮ್ಮ ನೌಕರರ ಪಿಎಫ್ ಹಣವನ್ನು ಹಿಂದಿರುಗಿಸುವಂತೆ ಕೇಂದ್ರಕ್ಕೆ ಪತ್ರ ಬರೆದಿದೆ. ಇದೇ ರೀತಿ ಬೇರೆ ಬೇರೆ ರಾಜ್ಯಗಳಲ್ಲಿ ಯಾವ ರೀತಿ ಕ್ರಮ ತೆಗೆದುಕೊಂಡಿದ್ದಾರೆ ಎಂಬುದರ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ಮುಖ್ಯಮಂತ್ರಿ ಅವರು ಸೂಚಿಸಿದ್ದಾರೆ.
|
8 |
+
ಕೇಂದ್ರದಲ್ಲಿರುವ ನಮ್ಮ ನೌಕರರ ಹಣವನ್ನು ನಾವೇ ಕಟ್ಟಬೇಕು ಎಂದರೆ ಆರ್ಥಿಕವಾಗಿ ಹೊರೆಯಾಗಲಿದೆ. ಈ ಎಲ್ಲದರ ಬಗ್ಗೆಯೂ ಸಮಿತಿ ಪರಿಶೀಲಿಸಿ ವರದಿ ನೀಡಲಿದೆ. ಅದಾದ ನಂತರ ಸರ್ಕಾರ ವರದಿ ಪರಿಶೀಲಿಸಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಸಚಿವರು ಹೇಳಿದರು.
|
eesanje/url_46_294_7.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಡಯಾಲಿಸಿಸ್ ಕೇಂದ್ರಗಳ ಸಮಸ್ಯೆ ನಿವಾರಿಸಲು ಆಗ್ರಹ
|
2 |
+
ಬೆಳಗಾವಿ, ಡಿ.7- ಮೂತ್ರಪಿಂಡ ಆರೋಗ್ಯದ ಸಮಸ್ಯೆಗೊಳಗಾದ ರೋಗಿಗಳಿಗೆ ಡಯಾಲಿಸಿಸ್ ಸೌಲಭ್ಯ ಕಲ್ಪಿಸಲು ಒಂದು ತಿಂಗಳ ಒಳಗಾಗಿ ಸಮರ್ಪಕ ವ್ಯವಸ್ಥೆಗಳನ್ನು ಕೈಗೊಳ್ಳುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ಗುಂಡೂರಾವ್ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಉಡುಪಿ ಕ್ಷೇತ್ರದ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಕೇಳಿದ ಪ್ರಶ್ನೆ ವ್ಯಾಪಕ ಚರ್ಚೆಗೆ ಗ್ರಾಸವಾಯಿತು.
|
3 |
+
ಪಕ್ಷಾತೀತವಾಗಿ ಶಾಸಕರು ಡಯಾಲಿಸಿಸ್ ಸಮಸ್ಯೆಯನ್ನು ನಿವಾರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ , ಕಾರವಾರದ ಮಂಡಸೂಡು ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೌಲಭ್ಯವಿಲ್ಲದೆ ಸಯ್ಯದ್ ಎಂಬುವರು ಸಾವನ್ನಪ್ಪಿದ್ದಾರೆ. ಅವರ ಸಾವಿಗೆ ಹೊಣೆ ಯಾರು ಎಂದು ಪ್ರಶ್ನಿಸಿದರು. ಸರ್ಕಾರ ಏಜೆನ್ಸಿ ಬದಲಾವಣೆಗೆ ಕ್ರಮ ಕೈಗೊಂಡಿದೆ. ಈ ಅವಧಿಯಲ್ಲಿ ಪರ್ಯಾಯ ಸೌಲಭ್ಯಗಳಿಗೆ ಮುನ್ನೆಚ್ಚರಿಕೆ ವಹಿಸಬೇಕು. ತುರ್ತು ಆರೋಗ್ಯ ಸಮಸ್ಯೆ ಇರುವ ರೋಗಿಗಳಿಗೆ ತೊಂದರೆಯಾಗಬಾರದು ಎಂದು ಒತ್ತಾಯಿಸಿದರು.
|
4 |
+
ಖಾಸಗಿ ಸಹಭಾಗಿತ್ವದಲ್ಲಿ ಡಯಾಲಿಸಿಸ್ ಯಂತ್ರಗಳನ್ನು ಖರೀದಿಸಲು ಶಾಸಕರು ಕ್ರಮ ಕೈಗೊಳ್ಳುತ್ತಾರೆ. ಅದರ ನಿರ್ವಹಣೆಗೆ ತಂತ್ರಜ್ಞರನ್ನು ನೇಮಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಇದರಿಂದಾಗಿ ತುರ್ತು ಸಮಸ್ಯೆ ಇರುವವರಿಗೆ ಸಹಾಯವಾಗಲಿದೆ ಮತ್ತು ಡಯಾಲಿಸಿಸ್ ಸೌಲಭ್ಯವನ್ನು ಆರೋಗ್ಯ ಕರ್ನಾಟಕ ವಿಮಾ ವ್ಯಾಪ್ತಿಗೆ ಒಳಪಡಿಸಿದರೆ ಖಾಸಗಿ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಸಹಾಯವಾಗಲಿದೆ ಎಂದು ಹೇಳಿದರು. ಪಿ.ಎಂ.ಅಶೋಕ್, ರಾಜೇಗೌಡ ಸೇರಿದಂತೆ ಹಲವಾರು ಶಾಸಕರು ಚರ್ಚೆಯಲ್ಲಿ ಭಾಗವಹಿಸಿದ್ದರು.
|
5 |
+
ಸಚಿವ ದಿನೇಶ್ ಗುಂಡೂರಾವ್, ಈ ಹಿಂದೆ ಡಯಾಲಿಸಿಸ್ ಕೇಂದ್ರಗಳನ್ನು ನಿರ್ವಹಣೆ ಮಾಡುತ್ತಿದ್ದ ಇಎಸ್ಕೆಎಜಿ ಸಂಸ್ಥೆ ಸಿಬ್ಬಂದಿಗಳಿಗೆ ವೇತನ, ಇಎಸ್ಐ, ಪಿಎಫ್ ಸೌಲಭ್ಯಗಳನ್ನು ಸರಿಯಾಗಿ ನೀಡುತ್ತಿರಲಿಲ್ಲ. ಹೀಗಾಗಿ ಸರ್ಕಾರದಿಂದಲೇ ಇಎಸ್ಐ, ಪಿಎಫ್ ಸೌಲಭ್ಯ ನೀಡಲು ನಿರ್ಧರಿಸಲಾಗಿದೆ. ಗುತ್ತಿಗೆ ಪಡೆದ ಇಎಸ್ಕೆಎಜಿ ಸಂಸ್ಥೆಗೆ ಅಸಮರ್ಥ ಸೇವೆಗಾಗಿ ದಂಡ ವಿಸಲಾಗಿದ್ದು, ಕಪ್ಪುಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
|
6 |
+
ಜೊತೆಗೆ ರಾಜ್ಯದಲ್ಲಿ 4 ಕಂದಾಯ ವಿಭಾಗಗಳಲ್ಲೂ ಡಯಾಲಿಸಿಸ್ ಕೇಂದ್ರಗಳ ನಿರ್ವಹಣೆಗೆ ಹೊಸ ಗುತ್ತಿಗೆಗಾಗಿ ಟೆಂಡರ್ ಕರೆಯಲಾಗಿದೆ. ಬೆಂಗಳೂರು, ಮೈಸೂರು, ಬೆಳಗಾವಿ ವಿಭಾಗಗಳ ಗುತ್ತಿಗೆ ಅಂತಿಮಗೊಂಡಿವೆ. ಒಂದು ತಿಂಗಳ ಒಳಗಾಗಿ ಹೊಸ ಗುತ್ತಿಗೆದಾರರು ಆಧುನಿಕವಾದ ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಲಿದ್ದಾರೆ. ತಂತ್ರಜ್ಞರು ವೇತನ ಪಾವತಿ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ನೀಡಿ ಉತ್ತಮವಾಗಿ ನಿರ್ವಹಣೆ ಮಾಡುವ ನಿರೀಕ್ಷೆಯಿದೆ.
|
7 |
+
ಈ ಬಾರಿ ಏಕ ಬ���ಕೆಯ ಡಯಲೈಸರ್ಗಳನ್ನು ಉಪಯೋಗಿಸಲು ನಿರ್ಧರಿಸಲಾಗಿದೆ. ಈ ಮೊದಲು ಬಹು ಬಳಕೆಯ ಡಯಲೈಸರ್ಗಳಿಂದಾಗಿ ಸೋಂಕು ವ್ಯಾಪಿಸುವ ಆತಂಕ ಇತ್ತು. ಶುದ್ಧ ನೀರಿನ ಘಟಕ ಸೇರಿದಂತೆ ಹಲವಾರು ಅಗತ್ಯಗಳು ಬೇಕಿದ್ದು, ಏಕ ಬಳಕೆ ಸುರಕ್ಷಿತವಾಗಿದೆ ಎಂದು ತಿಳಿಸಿದರು.
|
8 |
+
ರಾಷ್ಟ್ರ ಉಳಿಸಲು ಸರ್ಕಾರಕ್ಕೆ ಅವಕಾಶ ನೀಡಬೇಕು : ಸುಪ್ರೀಂ ಕೋರ್ಟ್
|
9 |
+
ಕಲಬುರ್ಗಿ ವಿಭಾಗದ ಟೆಂಡರ್ನ ದರದಲ್ಲಿ ಹೊಂದಾಣಿಕೆಯಾಗಿಲ್ಲ. ಹೀಗಾಗಿ ಅಲ್ಲಿಗೆ ಮರು ಟೆಂಡರ್ ಕರೆಯಲಾಗಿದೆ. ಡಯಾಲಿಸಿಸ್ ಕೇಂದ್ರಗಳನ್ನು ನಮ್ಮ ಸರ್ಕಾರ 168 ರಿಂದ 219 ಕ್ಕೆ ಹೆಚ್ಚಿಸಿದೆ. ಡಯಾಲಿಸಿಸ್ ಯಂತ್ರಗಳ ಸಂಖ್ಯೆಯನ್ನು 490 ರಿಂದ 800 ಕ್ಕೆ ಹೆಚ್ಚಿಸಲಾಗಿದೆ. 59 ಹೊಸ ತಾಲೂಕುಗಳ 48 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಡಯಾಲಿಸಿಸ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಹೇಳಿದರು.
|
10 |
+
ಮುಷ್ಕರ ನಿರತ ತಂತ್ರಜ್ಞರ ಜೊತೆ ಸಂಧಾನ ನಡೆಸಿದ್ದು, ಅವರ ಬೇಡಿಕೆಗಳನ್ನು ಈಡೇರಿಸಲಾಗಿದೆ. ಈಗ ಅವರು ಕೆಲಸ ನಿರ್ವಹಿಸುತ್ತಿದ್ದಾರೆ. ಗುತ್ತಿಗೆ ಸಂಸ್ಥೆಯ ಬದಲಾಗಿ ಆಯಾ ಜಿಲ್ಲೆಗಳ ಕುಟುಂಬ ಕಲ್ಯಾಣ ಆರೋಗ್ಯಾಧಿಕಾರಿಗಳೇ ಡಯಾಲಿಸಿಸ್ ಕೇಂದ್ರಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ. ಹೆಚ್ಚುವರಿ ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸುವುದಾದರೆ ಅಗತ್ಯವಾದ ತಂತ್ರಜ್ಞರನ್ನು ಒದಗಿಸಲು ಸರ್ಕಾರ ಸಿದ್ಧವಿದೆ.
|
11 |
+
ಪ್ರಸ್ತುತ ಡಯಾಲಿಸಿಸ್ ಕೇಂದ್ರಗಳಲ್ಲಿ ಗುತ್ತಿಗೆ ಪಡೆದ ಸಂಸ್ಥೆಗಳೇ ಯಂತ್ರಗಳನ್ನು ಅಳವಡಿಸುತ್ತಾರೆ. ಸರ್ಕಾರ ಯಾವುದೇ ಯಂತ್ರಗಳನ್ನೂ ಹಾಕುವುದಿಲ್ಲ ಎಂದು ತಿಳಿಸಿದರು. ಡಯಾಲಿಸಿಸ್ ಸೇವೆಯನ್ನು ಆರೋಗ್ಯ ಕರ್ನಾಟಕ ವಿಮಾ ವ್ಯಾಪ್ತಿಗೆ ಒಳಪಡಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸುವುದಾಗಿ ಹೇಳಿದರು.
|
eesanje/url_46_294_8.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಒಗ್ಗಟ್ಟು ಪ್ರದರ್ಶನ : ಕಾಂಗ್ರೆಸ್ ವಿರುದ್ಧ ಜೆಡಿಎಸ್-ಬಿಜೆಪಿ ಮೈತ್ರಿ ತಂತ್ರ ಯಶಸ್ವಿ
|
2 |
+
ಬೆಂಗಳೂರು, ಡಿ.7- ಎನ್ಡಿಎ ಮೈತ್ರಿಕೂಟ ಸೇರಿದ ಬೆನ್ನಲ್ಲೇ ಮಿತ್ರ ಪಕ್ಷಗಳಾದ ಜೆಡಿಎಸ್-ಬಿಜೆಪಿ ನಡುವೆ ಒಗ್ಗಟ್ಟು ಪ್ರದರ್ಶನವಾಗುತ್ತಿದೆ. ಸದನದ ಒಳ-ಹೊರಗೆ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಆರೋಪ, ಟೀಕೆಗಳನ್ನು ಮಾಡುತ್ತಿವೆ. ಸರ್ಕಾರದ ಲೋಪ-ದೋಷಗಳನ್ನು ಮುಂದಿಟ್ಟುಕೊಂಡು ಹರಿಹಾಯುತ್ತಿವೆ.
|
3 |
+
ಮುಂಬರುವ ಲೋಕಸಭೆ ಚುನಾವಣೆಯನ್ನು ಗುರಿಯಲ್ಲಿಟ್ಟುಕೊಂಡು ಉಭಯ ಪಕ್ಷಗಳು ಒಂದಾಗಿವೆ. ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ವಿರುದ್ಧದ ಹೋರಾಟಗಳನ್ನು ಎರಡೂ ಪಕ್ಷಗಳು ಜತೆಗೂಡಿ ನಡೆಸುತ್ತಿವೆ. ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರಪರಿಸ್ಥಿತಿಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಎರಡೂ ಪಕ್ಷಗಳು ಜಂಟಿಯಾಗಿ ನೋಟಿಸ್ ನೀಡಿ ಚರ್ಚೆ ಆರಂಭಿಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ನೀಡುವ ಬಹಿರಂಗ ಹೇಳಿಕೆಗಳ ವಿರುದ್ಧವಾಗಿ ಬಿಜೆಪಿ-ಜೆಡಿಎಸ್ ಟೀಕಿಸುವ ಇಲ್ಲವೆ ವಿರೋಧಿಸುವ ಮೂಲಕ ತೀಕ್ಷ್ಣ ಹೇಳಿಕೆ ನೀಡುತ್ತಿವೆ.
|
4 |
+
ಆದರೆ, ವಿಧಾನಸಭೆ ಚುನಾವಣೆಗೂ ಮುನ್ನ ಆರೋಪ, ಪ್ರತ್ಯಾರೋಪಗಳಲ್ಲಿ ತೊಡಗಿದ್ದ ಈ ಎರಡೂ ಪಕ್ಷಗಳು ಈಗ ಪರಸ್ಪರ ಟೀಕಿಸುವ ಇಲ್ಲವೆ ಆರೋಪ ಮಾಡುವ ಗೋಜಿಗೆ ಹೋಗುತ್ತಿಲ್ಲ. ಬದಲಿಗೆ ಒಟ್ಟಾಗಿ ಗೆಳೆತನದೊಂದಿಗೆ ಲೋಕಸಭೆ ಚುನಾವಣೆ ಎದುರಿಸಲು ಸಿದ್ಧತೆ ಮಾಡಿಕೊಳ್ಳುತ್ತಿವೆ.
|
5 |
+
ರಜಪೂತ ಕರ್ಣಿ ಸೇನೆ ಅಧ್ಯಕ್ಷರ ಹತ್ಯೆ : ಇಬ್ಬರು ಪೊಲೀಸರ ಅಮಾನತು
|
6 |
+
ಶಾಸಕ ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ಮೇಲೆ ಮಿತ್ರ ಪಕ್ಷಗಳ ಸಖ್ಯ ಇನ್ನಷ್ಟು ಗಟ್ಟಿಯಾಗಿದೆ. ಕಾಂಗ್ರೆಸ್ನತ್ತ ಮುಖ ಮಾಡಿದ್ದ ಜೆಡಿಎಸ್, ಬಿಜೆಪಿಯ ಕೆಲವು ಮುಖಂಡರು ಸದ್ಯಕ್ಕೆ ತಟಸ್ಥ ನಿಲುವು ತಳೆದು ತಮ್ಮ ತಮ್ಮ ಪಕ್ಷದಲ್ಲೇ ಉಳಿದಿದ್ದಾರೆ.
|
7 |
+
ಸದನದ ಒಳ-ಹೊರಗೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿ ತರಾಟೆಗೆ ತೆಗೆದುಕೊಳ್ಳುವ ಕಾರ್ಯತಂತ್ರ ರೂಪಿಸಿವೆ. ಅದರಂತೆ ನಿತ್ಯವೂ ಒಟ್ಟಿಗೆ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡುತ್ತಿವೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಹಾಕಿಕೊಂಡಿವೆ. ಗುರಿ ತಲುಪಲು ಈಗಿನಿಂದಲೇ ಕಾರ್ಯತಂತ್ರ ರೂಪಿಸುತ್ತಿವೆ. ಅದರ ಭಾಗವಾಗಿಯೇ ಜತೆಗೂಡಿ ಹೋರಾಟ ನಡೆಸುತ್ತಿವೆ ಎಂಬುದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.
|
8 |
+
ಇದಕ್ಕೆ ಪುಷ್ಠಿ ನೀಡುವಂತೆ ಬೆಳಗಾವಿಯಲ್ಲಿ ನಿನ್ನೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಒಂದೆಡೆ ನಡೆದರೆ, ಮತ್ತೊಂದೆಡೆ ಔತಣ ಕೂಟದ ನೆಪದಲ್ಲಿ ಬಿಜೆಪಿ-ಜೆಡಿಎಸ್ ಶಾಸಕರು ಒಟ್ಟಿಗೆ ಸೇರಿದ್ದಾರೆ. ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ನಿನ್ನೆ ರಾತ್ರಿ ಖಾಸಗಿ ಹೋಟೆಲ್ನಲ್ಲಿ ಎರಡೂ ಪಕ್ಷದ ಶಾಸಕರಿ���ೆ ಔತಣ ಕೂಟ ಆಯೋಜಿಸಿದ್ದರು. ಇದೊಂದು ಸೌಹಾರ್ಧ ಔತಣ ಕೂಟವಾಗಿತ್ತು. ಯಾವುದೇ ರಾಜಕೀಯ ವಿಚಾರಗಳು ಚರ್ಚೆಗೆ ಬರಲಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.
|
9 |
+
ಆದರೆ, ಒಟ್ಟಿಗೆ ಸೇರಿ ಔತಣ ಕೂಟದಲ್ಲಿ ಭಾಗಿಯಾಗಿರುವುದೇ ರಾಜಕೀಯವಾಗಿ ಮಿತ್ರ ಪಕ್ಷಗಳಲ್ಲಿ ಒಗ್ಗಟ್ಟಿದೆ ಎಂಬ ಸಂದೇಶ ರವಾನಿಸುವುದಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡರು ಸೇರಿದಂತೆ ಕೆಲವರು ಔತಣಕೂಟದಲ್ಲಿ ಭಾಗಿಯಾಗಿರಲಿಲ್ಲ ಎಂದು ಮೂಲಗಳು ಹೇಳಿವೆ.
|
eesanje/url_46_294_9.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಮೌಲ್ವಿಗೆ ಉಗ್ರರ ನಂಟು, ಕೇಂದ್ರ ಗೃಹ ಸಚಿವರಿಗೆ ಯತ್ನಾಳ್ ಪತ್ರ
|
2 |
+
ಬೆಳಗಾವಿ,ಡಿ.7- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಸಿಸ್ ಉಗ್ರರ ಸಂಪರ್ಕ ಹೊಂದಿರುವ ಮೌಲ್ವಿ ಜೊತೆಗೆ ವೇದಿಕೆ ಹಂಚಿಕೊಂಡಿದ್ದರು ಎಂದು ಆರೋಪಿಸಿದ್ದ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ರಾಷ್ಟ್ರೀಯ ತನಿಖಾ ದಳ ( ಎನ್ಐಎ) ದಿಂದ ಈ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರ ಬರೆದಿದ್ದಾರೆ.
|
3 |
+
ಸಿದ್ದರಾಮಯ್ಯನವರು ಮೌಲ್ವಿ ಜೊತೆ ವೇದಿಕೆ ಹಂಚಿಕೊಂಡಿದ್ದಕ್ಕೆ ಸಂಬಂಧಿಸಿದ ಕೆಲವು ಫೋಟೋ ಟ್ವೀಟ್ ಮಾಡಿದ್ದರು. ಮೌಲ್ವಿ ಕೂಡ ಉಗ್ರರ ಸಂಪರ್ಕ ಇರುವುದನ್ನು ಸಾಬೀತುಪಡಿಸುವಂತೆ ಸವಾಲು ಹಾಕಿದ್ದಾರೆ. ಇದೀಗ ನೇರವಾಗಿ ಕೇಂದ್ರ ಗೃಹ ಸಚಿವರಿಗೆ ಯತ್ನಾಳ್ ಪತ್ರ ಬರೆದಿದ್ದಾರೆ. ಮೌಲ್ವಿ ಉಗ್ರರ ಸಂಪಕ ಹೊಂದಿರುವ ಆರೋಪದ ಬಗ್ಗೆ ಎನ್ಐಎ ತನಿಖೆ ನಡೆಸುವಂತೆ ಮನವಿ ಮಾಡಿ ಪತ್ರವನ್ನು ಬರೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿ ಪೋಸ್ಟ್ ಹಂಚಿಕೊಂಡಿದ್ದಾರೆ.
|
4 |
+
ಇದಕ್ಕೂ ಮೊದಲು ಈ ಬಗ್ಗೆ ಟ್ವೀಟ್ ಮಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ. ತನ್ವೀರ್ ಪೀರಾ ಎಂಬ ಮುಸ್ಲಿಂ ಮೌಲ್ವಿ ಯೆಮೆನ್, ಸೌದಿ ಹಾಗೂ ಮಧ್ಯ ಪ್ರಾಚ್ಯ ದೇಶಗಳ ಪ್ರವಾಸಗಳ ವೇಳೆ ಭಯೋತ್ಪಾದಕ ಸಂಘಟನೆಗಳ ಪ್ರಮುಖರನ್ನು ಭೇಟಿಯಾಗಿರುವ ಚಿತ್ರಗಳು ಇಲ್ಲಿವೆ ಎಂದು ಒಂದು ಟ್ವೀಟ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದರು.
|
5 |
+
ಅಧಿಕಾರ ದುರುಪಯೋಗಪಡಿಸಿಕೊಂಡ ಅಧಿಕಾರಿಗಳನ್ನು ವಜಾ ಮಾಡಿದ ಯೋಗಿ
|
6 |
+
ಈ ಭಯೋತ್ಪಾದಕ ಬೆಂಬಲಿಗೆ ಹಿಂದೆಯೂ ಹಲವು ಬಾರಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದರು. ಕೆಲವೇ ದಿನಗಳಲ್ಲಿ ತನ್ವೀರ್ ಪೀರಾ ಎಂಬುವವರ ಇನ್ನಷ್ಟು ವಿವರಗಳನ್ನು ಬಹಿರಂಗಗೊಳಿಸುತ್ತೇನೆ. ಈತನು ಮಧ್ಯಪ್ರಾಚ್ಯ ದೇಶಗಳಿಂದ ಹಣವನ್ನು ಭಾರತಕ್ಕೆ ತರುವ ಹಾಗು ಭಾರತದ ಚಟುವಟಿಕಗಳ ಮಾಹಿತಿಯನ್ನು ಅರಬ್ ದೇಶಗಳಿಗೆ ರವಾನಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೋಟಕ ಆರೋಪ ಮಾಡಿದ್ದರು.
|
7 |
+
ರಜಪೂತ ಕರ್ಣಿ ಸೇನೆ ಅಧ್ಯಕ್ಷರ ಹತ್ಯೆ : ಇಬ್ಬರು ಪೊಲೀಸರ ಅಮಾನತು
|
8 |
+
ಹಾಗೆಯೇ ಮತ್ತೊಂದು ಟ್ವೀಟ್ನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ಸಿಎಂ ಸಿದ್ದರಾಮಯ್ಯ ಕುರಿತು ಆರೋಪ ಮಾಡುತ್ತಾ, ಇಂದು ಬೆಳಗಾವಿಯಲ್ಲಿ ಮುಂಜಾನೆ ನಾನು ಮುಖ್ಯಮಂತ್ರಿಗಳು ಐಸಿಸ್ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಹೇಳಿದ್ದೆ. ರಾಜ್ಯ ಪೊಲೀಸ್, ಕೇಂದ್ರೀಯ ತನಿಖಾ ಸಂಸ್ಥೆಗಳು ಈ ಕುರಿತು ವಿಚಾರಣೆ ಮಾಡಬೇಕು ಎಂದು ಆಗ್ರಹಿಸುತ್ತಿದ್ದೇನೆ ಎಂದಿದ್ದರು. ಇದೀಗ ನೇರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಸಿಎಂ ಸಿದ��ದರಾಮಯ್ಯ ಐಸಿಸ್ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರವಾದ ಆರೋಪ ಮಾಡಿದ್ದರು.
|
eesanje/url_46_295_1.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಎಂ.ಎಂ.ಕಲುಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ : ಸಿಎಂ
|
2 |
+
ಬೆಳಗಾವಿ, ಡಿ.6- ಹಿರಿಯ ಸಾಹಿತಿ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಹಾಗೂ ಖ್ಯಾತ ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆಯಾಗಿದ್ದ ಗೌರಿ ಲಂಕೇಶ್ ಹತ್ಯೆ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಳಾಡಳಿತ ಇಲಾಖೆಗೆ ಸೂಚಿಸಿದ್ದಾರೆ.
|
3 |
+
ಈ ಸಂಬಂಧ ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.ಕಲಬುರ್ಗಿ ಅವರ ಪತ್ನಿ ಉಮಾದೇವಿ ಎಂ.ಎಂ.ಕಲಬುರ್ಗಿ ಅವರು ವಿಶೇಷ ನ್ಯಾಯಾಲಯ ರಚಿಸುವಂತೆ ಕೋರಿರುವ ಬಗ್ಗೆ ಜರೂರು ಅಗತ್ಯ ಕ್ರಮ ವಹಿಸಲು ಮುಖ್ಯಮಂತ್ರಿ ಒಳಾಡಳಿತ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.
|
4 |
+
ಗೌರಿ ಸಹೋದರಿ ಕವಿತಾ ಲಂಕೇಶ್ರವರೂ ಕೂಡ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಿ ಪೂರ್ಣಾವ ನ್ಯಾಯಾೀಶರನ್ನು ನೇಮಕ ಮಾಡುವಂತೆ ಕೋರಿದ್ದಾರೆ. ಈ ಬಗ್ಗೆ ಜರೂರು ಅಗತ್ಯ ಕ್ರಮ ವಹಿಸಲು ಮುಖ್ಯಮಂತ್ರಿ ಒಳಾಡಳಿತ ಇಲಾಖೆಗೆ ಸೂಚಿಸಿದ್ದಾರೆ. ಈ ಎರಡೂ ಪ್ರಕರಣಗಳ ಬಗ್ಗೆ ಪ್ರತ್ಯೇಕ ಸೂಚನೆ ನೀಡಲಾಗಿದೆ.
|
5 |
+
ಹಿರಿಯ ಸಾಹಿತಿ ಹಾಗೂ ಕನ್ನಡ ಸಂಶೋಧನಾ ಕ್ಷೇತ್ರದ ದಿಗ್ಗಜ ಡಾ.ಎಂ.ಎಂ.ಕಲಬುರ್ಗಿ ಅವರು 2015 ರ ಆಗಸ್ಟ್ 31 ರಂದು ಧಾರವಾಡದ ಅವರ ಸ್ವಗೃಹದಲ್ಲಿ ಹತ್ಯೆಯಾಗಿದ್ದರು. ಹತ್ಯೆಯಾಗಿ 7 ವರ್ಷಗಳು ಪೂರ್ಣಗೊಂಡಿವೆ. ಈ ಪ್ರಕರಣದ ಸಂಬಂಧ 2018-19 ರಲ್ಲಿ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆಯಾಗಿತ್ತು.
|
6 |
+
ಮೃತರ ಕುಟುಂಬದವರ ವಿಚಾರಣೆಗಳು ಪೂರ್ಣಗೊಂಡಿದ್ದರೂ ನ್ಯಾಯಾಲಯದಲ್ಲಿ ವಿಚಾರಣೆಗಳು ಮುಂದುವರೆದಿವೆ. ಈಗಾಗಲೇ ಸಾಕಷ್ಟು ಸಮಯವಾಗಿದ್ದು, ವಿಶೇಷ ನ್ಯಾಯಾಲಯ ರಚಿಸುವಂತೆ ಕಲಬುರ್ಗಿಯವರ ಪತ್ನಿ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ಸೂಚನೆ ನೀಡಿದ್ದಾರೆ.
|
7 |
+
ರಾಜ್ಯದ ಮದರಸಾಗಳಲ್ಲಿ ಕನ್ನಡ, ಗಣಿತ, ವಿಜ್ಞಾನ ಬೋಧನೆ ಕಡ್ಡಾಯ
|
8 |
+
ಖ್ಯಾತ ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆಯಾಗಿದ್ದ ಗೌರಿ ಲಂಕೇಶ್ 2017 ರ ಸೆಪ್ಟೆಂಬರ್ 5 ರಂದು ಹತ್ಯೆಗೀಡಾಗಿದ್ದು, ಈ ಸಂಬಂಧ ವಿಶೇಷ ತನಿಖಾ ದಳ ರಚಿಸಲಾಗಿದೆ. ಇದುವರೆಗೂ 18 ಆರೋಪಿಗಳು ಬಂಧನಕ್ಕೆ ಒಳಗಾಗಿದ್ದು, 1200 ಪುರಾವೆ ಹಾಗೂ 5 ಸಾವಿರಕ್ಕೂ ಹೆಚ್ಚು ವಿವಿಧ ಬಗೆಯ ಸಾಕ್ಷ್ಯಗಳನ್ನು ಒಳಗೊಂಡ ಚಾರ್ಜ್ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
|
9 |
+
ಪ್ರಕರಣದ ವಿಚಾರಣೆಯು ನ್ಯಾಯಾಲಯದಲ್ಲಿ 2022 ರ ಜುಲೈನಿಂದ ಪ್ರಾರಂಭವಾಗಿದೆ. ನ್ಯಾಯಾಲಯದ ಅನುದಿನದ ಪ್ರಕರಣಗಳು ಸಾಕಷ್ಟು ಸಂಖ್ಯೆಯಲ್ಲಿರುವುದರಿಂದ ವಿಚಾರಣೆಯು ನಿಧಾನಗತಿಯಲ್ಲಿ ಸಾಗಿದೆ. ಆದ್ದರಿಂದ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಿ ಪೂರ್ಣಾವ ನ್ಯಾಯಾೀಶರನ್ನು ನೇಮಕ ಮಾಡುವಂತೆ ಕವಿತಾ ಲಂಕೇಶ್ ಕೋರಿದ್ದು, ಮುಖ್ಯಮಂತ್ರಿ ಒಳಾಡಳಿತ ಇಲಾಖೆಗೆ ಅಗ���್ಯ ಕ್ರಮ ಜರುಗಿಸಲು ಸೂಚಿಸಿದ್ದಾರೆ.
|
eesanje/url_46_295_10.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ರೈತರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ : ಹೆಚ್ಡಿಕೆ
|
2 |
+
ಬೆಳಗಾವಿ,ಡಿ.6- ಸಂಕಷ್ಟದಲ್ಲಿರುವ ರೈತರ ನೆರವಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುಣ್ಯಸ್ಮರಣೆ ಅಂಗವಾಗಿ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
|
3 |
+
ರಾಜ್ಯ ಸರ್ಕಾರದ ವೈಫಲ್ಯ, ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯ ಬಗ್ಗೆ ಸದನದಲ್ಲಿ ಚರ್ಚಿಸಲಾಗುವುದು ಎಂದರು. ರೈತರಿಗೆ ಯಾವುದೇ ರೀತಿಯ ಸ್ಪಂದನೆ ರಾಜ್ಯ ಸರ್ಕಾರದಿಂದ ಸಿಗುತ್ತಿಲ್ಲ. ರಾಜ್ಯದಲ್ಲಿ ಆರ್ಥಿಕ ಸಮಸ್ಯೆಗಳಿಲ್ಲ. ನಾಡಿನ ಜನರು ತೆರಿಗೆ ಕಟ್ಟುತ್ತಿದ್ದರು. ಸಾಕಷ್ಟು ತೆರಿಗೆ ಸಂಗ್ರಹವೂ ಆಗುತ್ತಿದೆ ಎಂದ ಅವರು, ಹಣದ ಕೊರತೆ ಇದ್ದರೆ ರಾಜ್ಯ ಸರ್ಕಾರಕ್ಕೆ ಏಕೆ ನಡೆಸಬೇಕು ಎಂದು ಅವರು ಪ್ರಶ್ನಿಸಿದರು.
|
4 |
+
ಗಂಗಾಕಲ್ಯಾಣ ಬೋರ್ವೆಲ್ ಮಂಜೂರಾತಿ ಆಗುತ್ತಿಲ್ಲ : ಪಕ್ಷಾತೀತ ಆಕ್ಷೇಪ
|
5 |
+
ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯ ಹಿನ್ನಲೆಯಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದು, ಕೇಂದ್ರ ಸರ್ಕಾರ ಬರ ಪರಿಹಾರ ಕಾರ್ಯಗಳಿಗೆ ಆರ್ಥಿಕ ನೆರವು ನೀಡುವಂತೆ ಕೋರಲಾಗಿದೆ ಎಂದು ಹೇಳಿದರು. ಅಸಮಾನತೆ ಹೋಗಲಾಡಿಸಲು ಅಂಬೇಡ್ಕರ್ ಅವರು ನೀಡಿರುವ ಕೊಡುಗೆ ಶಾಶ್ವತವಾಗಿದೆ. ದನಿ ಇಲ್ಲದವರಿಗೆ ಧ್ವನಿಯನ್ನು ನೀಡಿದ್ದಾರೆ ಎಂದು ಸ್ಮರಿಸಿದರು.
|
6 |
+
ಸಮಾಜದಲ್ಲಿರುವ ಅಸಮಾನತೆ ಹೋಗಲಾಡಿಸಲು ಪ್ರತಿಯೊಬ್ಬರು ಕ್ಷಮಿಸಬೇಕು. ಆ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಬೇಕು ಎಂದರು.
|
eesanje/url_46_295_11.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಹಾಲಿನ ದರ ಹೆಚ್ಚಿಸಲು ಸರ್ಕಾರ ಸಿದ್ಧವಿದೆ : ಸಚಿವ ಕೆ.ವೆಂಕಟೇಶ್
|
2 |
+
ಬೆಳಗಾವಿ,ಡಿ.6- ಸದನದ ಸದಸ್ಯರು ಸಮ್ಮತಿಸಿದರೆ ರೈತರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಹಾಲಿನ ಮಾರಾಟ ದರವನ್ನು ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ ಎಂದು ಪಶುಸಂಗೋಪನ ಸಚಿವ ಕೆ.ವೆಂಕಟೇಶ್ ವಿಧಾನಪರಿಷತ್ಗೆ ತಿಳಿಸಿದರು.
|
3 |
+
ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಕೆ.ಹರೀಶ್ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹಾಲಿನ ಮಾರಾಟ ದರವನ್ನು ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇದೆ. ಇದರಿಂದ ರೈತರಿಗೆ ಅನುಕೂಲವಾಗುವುದಾದರೆ ಖಂಡಿತವಾಗಿಯೂ ನಮ್ಮ ಸರ್ಕಾರ ಸಿದ್ಧವಿದೆ. ಆದರೆ ಅದಕ್ಕೂ ಮುನ್ನ ಸದನ ಸದಸ್ಯರ ಒಪ್ಪಿಗೆ ಅಗತ್ಯ ಎಂದು ಮನವಿ ಮಾಡಿದರು.
|
4 |
+
ಕರ್ನಾಟಕ ಹಾಲು ಮಹಾಮಂಡಳಿಯು ಪಶು ಆಹಾರ ಉತ್ಪಾದನೆಗೆ ಅವಶ್ಯಕವಿರುವ ಕಚ್ಚಾ ಪದಾರ್ಥಗಳ ವೆಚ್ಚದ ಮೇಲೆ ಪಶು ಆಹಾರದ ದರವನ್ನು ಹೆಚ್ಚಳ ಮಾಡಿದೆ. ಒಂದು ಮೆಟ್ರಿಕ್ ಟನ್ಗೆ ಒಂದು ಸಾವಿರ ರೂ.ಗಳಾದರೆ, ಒಂದು ಕೆಜಿಗೆ 1 ರೂ. ಹೆಚ್ಚಳವಾಗಿದೆ. ಇದಕ್ಕೆ ಬಳಸುವ ಕಚ್ಚಾ ಪದಾರ್ಥಗಳ ದರ ಹಾಗೂ ಆರ್ಥಿಕ ಪರಿಸ್ಥಿತಿಯನ್ನು ಆಧರಿಸಿ ದರವನ್ನು ಪರಿಷ್ಕರಣೆ ಮಾಡಲಾಗಿದೆ ಎಂದು ಹೇಳಿದರು.
|
5 |
+
ಮತ್ತೆ ಅಮೆರಿಕ ಅಧ್ಯಕ್ಷನಾದರೆ ಸರ್ವಾಧಿಕಾರಿಯಾಗಿ ಬದಲಾಗುವುದಿಲ್ಲ : ಟ್ರಂಪ್
|
6 |
+
ಆಗ ವೆಂಕಟೇಶ್ ಅವರು ಸಭಾಪತಿ ಹೊರಟ್ಟಿ ಅವರತ್ತ, ನೀವು ಕೂಡ ಹಸುಗಳನ್ನು ಸಾಕಿದ್ದೀರಿ, ಪಶು ಆಹಾರದ ಕಚ್ಚಾ ಬೆಲೆ ಎಷ್ಟು ಹೆಚ್ಚಾಗಿದೆ ಎಂಬುದು ನಿಮಗೂ ಗೊತ್ತು ಎಂದಾಗ, ಆಗ ಹೊರಟ್ಟಿಯವರು, ಒಂದು ಮೆಟ್ರಿಕ್ ಟನ್ಗೆ ಒಂದು ಸಾವಿರ ರೂ. ಮಾಡಿದ್ದೀರಲ್ಲವೇ? ಎಂದು ಪ್ರಶ್ನೆ ಹಾಕಿದರು.
|
7 |
+
ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ದಕ್ಷಿಣಕನ್ನಡದಲ್ಲಿ ಪ್ರತಿ ಲೀಟರ್ ಹಾಲಿಗೆ 40ರೂ. 85 ಪೈಸೆ ಕೊಡುತ್ತೇವೆ. ಇದಕ್ಕೆ ಬೆಂಬಲ ಬೆಲೆ ಸಿಗುವುದರಿಂದ ಇದು ಇನ್ನಷ್ಟು ಹೆಚ್ಚಾಗುತ್ತದೆ. ಆದರೆ ಮೈಸೂರು, ಕೊಡುಗು ಬೇರೆ ಬೇರೆ ಭಾಗಗಳಲ್ಲಿ ಇದರ ದರ ಕಡಿಮೆ ಇದೆ ಎಂದು ಮಾಹಿತಿ ನೀಡಿದರು.
|
eesanje/url_46_295_12.txt
ADDED
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಗಂಗಾಕಲ್ಯಾಣ ಬೋರ್ವೆಲ್ ಮಂಜೂರಾತಿ ಆಗುತ್ತಿಲ್ಲ : ಪಕ್ಷಾತೀತ ಆಕ್ಷೇಪ
|
2 |
+
ಬೆಳಗಾವಿ, ಡಿ.6- ಹಿಂದುಳಿದ ವರ್ಗದ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳಿಂದ ಸ್ವಾವಲಂಬಿ ಗಂಗಾಕಲ್ಯಾಣ ಯೋಜನೆಯಡಿ ನಿರೀಕ್ಷಿತ ಮಟ್ಟದಲ್ಲಿ ಬೋರ್ವೆಲ್ ಗಳ ಮಂಜೂರಾತಿ ಆಗುತ್ತಿಲ್ಲ ಎಂದು ಪಕ್ಷಾತೀತವಾಗಿ ಶಾಸಕರು ವಿಧಾನಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದರು. ಪ್ರಶ್ನೋತ್ತರದ ಅವಧಿಯಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಮತ್ತು ಚಾಮರಾಜನಗರದ ಪುಟ್ಟರಂಗಶೆಟ್ಟಿ ಅವರು ಕೇಳಿದ ಪ್ರಶ್ನೆಗಳು ವ್ಯಾಪಕ ಚರ್ಚೆಗಳಿಗೆ ಗ್ರಾಸವಾಯಿತು.
|
3 |
+
ಪುಟ್ಟರಂಗಶೆಟ್ಟಿಯವರು ಪ್ರಶ್ನೆ ಕೇಳುತ್ತಾ, ವಿವಿಧ ಅಭಿವೃದ್ಧಿ ನಿಗಮಗಳಿಗೆ ಸಾಕಷ್ಟು ಅನುದಾನ ನೀಡಲಾಗಿದೆ. ಆದರೆ ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಅನುದಾನ ಮೀಸಲಿಟ್ಟಿಲ್ಲ. ಹೀಗಾಗಿ ಜನರಿಗೆ ಸೌಲಭ್ಯ ಸಿಗುತ್ತಿಲ್ಲ . ಪ್ರತಿದಿನ ಅರ್ಜಿ ಹಿಡಿದು ಸಾವಿರಾರು ಮಂದಿ ನಮ್ಮ ಮನೆಬಾಗಿಲಿಗೆ ಬರುತ್ತಿದ್ದಾರೆ. ಅವರಿಗೆ ಸಮಜಾಯಿಷಿ ನೀಡುವುದೇ ಕಷ್ಟವಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
|
4 |
+
ಬಿ.ಸಿ.ಪಾಟೀಲ್ ಮಾತನಾಡಿ, ವಿವಿಧ ಅಭಿವೃದ್ಧಿ ನಿಗಮಗಳಿಂದ ಸ್ವಾವಲಂಬಿ ಗಂಗಾ ಕಲ್ಯಾಣ ಯೋಜನೆಯಡಿ ಒಂದು ಅಥವಾ ಎರಡು ಬೋರ್ವೆಲ್ಗಳನ್ನು ಮಂಜೂರು ಮಾಡುತ್ತಿದ್ದಾರೆ. ಇದರಿಂದ ಫಲಾನುಭವಿಗಳ ಆಯ್ಕೆ ಕಷ್ಟವಾಗುತ್ತಿದೆ ಎಂದು ಆಕ್ಷೇಪಿಸಿದರು. ಶಾಸಕ ಸಿದ್ಧು ಸವದಿ ಇದಕ್ಕೆ ಧ್ವನಿಗೂಡಿಸಿದರು.
|
5 |
+
ಉತ್ತರ ನೀಡಿದ ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವ ಶಿವರಾಜ ತಂಗಡಗಿ ಈ ಹಿಂದಿನ ಸರ್ಕಾರದಲ್ಲಿ ಭಾಷಣ ಮಾಡಿದ ಕಡೆಯಲ್ಲೆಲ್ಲಾ ಜಾತಿವಾರು ಅಭಿವೃದ್ಧಿ ನಿಗಮಗಳನ್ನು ಘೋಷಣೆ ಮಾಡಲಾಗಿದೆ.
|
6 |
+
ಮತ್ತೆ ಅಮೆರಿಕ ಅಧ್ಯಕ್ಷನಾದರೆ ಸರ್ವಾಧಿಕಾರಿಯಾಗಿ ಬದಲಾಗುವುದಿಲ್ಲ : ಟ್ರಂಪ್
|
7 |
+
ಆದರೆ ಸರಿಯಾದ ಅನುದಾನ ಹಂಚಿಕೆ ಮಾಡಿಲ್ಲ. ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಮಡಿವಾಳ, ನೇಕಾರ, ಉಪ್ಪಾರ, ಗಾಣಿಗ, ವಿಶ್ವಕರ್ಮ, ಸವಿತ ಸಮಾಜ ಸೇರಿದಂತೆ 11 ಕ್ಕೂ ಹೆಚ್ಚು ನಿಗಮಗಳನ್ನು ಘೋಷಣೆ ಮಾಡಲಾಗಿದೆ. ಆದರೆ ಅನುದಾನ ನೀಡಿಲ್ಲ. ನಾವು ಈ ಬಗ್ಗೆ ಮುಖ್ಯಮಂತ್ರಿಯವರ ಜೊತೆ ಚರ್ಚೆ ನಡೆಸಿದ್ದು, ನಿಗಮಗಳನ್ನು ನೋಂದಣಿ ಮಾಡಿಸಿ ಮುಂದಿನ ಆರ್ಥಿಕ ವರ್ಷದಲ್ಲಿ ಅನುದಾನ ನೀಡುವಂತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.
|
8 |
+
ದೇವರಾಜು ಅರಸು ಅಭಿವೃದ್ಧಿ ನಿಗಮದಲ್ಲಿ ಸಾಕಷ್ಟು ಅನುದಾನವಿದೆ. ಬೋರ್ವೆಲ್ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಸಣ್ಣ ಪ್ರಮಾಣದ ಜನಸಂಖ್ಯೆ ಹೊಂದಿರುವ ಸಮುದಾಯಗಳ ನಿಗಮಗಳಿಗೆ ಅನುದಾನ ಇಲ್ಲ. ಆದರೂ ವಿವಿಧ ಸೌಲಭ್ಯಗಳ ಹಂಚಿಕೆಗೆ ಗುರಿ ನಿಗದಿಪಡಿಸಲಾಗಿದೆ.
|
9 |
+
ಹಿಂದಿನ ಆರ್ಥಿಕ ವರ್ಷದಲ್ಲಿ ಲಭ್ಯವಿರುವ ಅನುದಾನದ ಆಧಾರದ ಮೇಲೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಫೆಬ್ರವರಿಯ ವೇಳೆಗೆ ಸ್ವಾವಲಂಬಿ ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ಗಳನ್ನು ಕೊರೆಸಲಾಗುವುದು ಎಂದರು. ಸಭಾಧ್ಯಕ್ಷ ಯು.ಟಿ.ಖಾದರ್ರವರು ಫೆಬ್ರವರಿಯಲ್ಲಿ ಸಾಧ್ಯವಾಗದಿದ್ದರೆ ಮಾರ್ಚ್ ಒಳಗಾದರೂ ಬೋರ್ವೆಲ್ ಕೊರೆಸುವ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.
|
10 |
+
ಗೆದ್ದ 3 ರಾಜ್ಯಗಳಲ್ಲಿ ಬಿಜೆಪಿಯ ಹೊಸ ಮುಖಗಳಿಗೆ ಸಿಎಂ ಸ್ಥಾನ
|
11 |
+
ಶಾಸಕ ಧೀರಜ್ ಮುನಿರಾಜು ಕೂಡ ಅನುದಾನದ ಅಲಭ್ಯತೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಶಾಸಕರಾದ ಚಂದ್ರಪ್ಪ ಅವರು ಇದರಲ್ಲಿ ಭಾಗವಹಿಸಿ ಆನ್ಲೈನ್ನಲ್ಲಿ ಅರ್ಜಿ ಪಡೆಯುತ್ತಾರೆ. 4 ಸಾವಿರ ಮಂದಿ ಅರ್ಜಿ ಹಾಕಿದ್ದಾರೆ. ಇವರು ಒಬ್ಬರಿಗೆ ಮಾತ್ರ ಸೌಲಭ್ಯ ನೀಡುವುದರಿಂದ ಸಾವಿರಾರು ಮಂದಿ ದಿನ ಬೆಳಗಾದರೆ ಶಾಸಕರ ಬಳಿ ಬಂದು ಸೌಲಭ್ಯ ಕೊಡಿಸಿ ಎಂದು ಒತ್ತಡ ಹಾಕುತ್ತಿದ್ದಾರೆ. ಇದರಿಂದ ಸಮಸ್ಯೆಯಾಗುತ್ತಿದೆ ಎಂದರು.
|
12 |
+
ಸುರೇಶ್ಬಾಬು ಅವರು ಮಧ್ಯಪ್ರವೇಶಿಸಿ ಪ್ರತಿ ವರ್ಷವೂ ಯೋಜನೆಗಾಗಿ ಹೊಸದಾಗಿ ಅರ್ಜಿ ಹಾಕಲು ಒಂದು ಸಾವಿರ ರೂ. ಖರ್ಚಾಗುತ್ತಿದೆ. ಅದರ ಬದಲು ಒಮ್ಮೆ ಸಲ್ಲಿಕೆಯಾದ ಅರ್ಜಿಯನ್ನೇ ಯೋಜನೆ ಸಿಗುವವರೆಗೂ ಅಥವಾ ಜೀವನಪರ್ಯಂತ ಪರಿಗಣಿಸುವಂತೆ ಸಲಹೆ ನೀಡಿದರು.
|
13 |
+
ಆಡಳಿತ ಪಕ್ಷದ ಶಾಸಕ ನರೇಂದ್ರಸ್ವಾಮಿ ಹಿಂದಿನ ಸರ್ಕಾರದಲ್ಲಿ ಒಂದು ಬೋರ್ವೆಲ್ ಕೂಡ ಕೊರೆಸಿಲ್ಲ. ಅದರ ಬಗ್ಗೆ ವಿರೋಧ ಪಕ್ಷಗಳ ಶಾಸಕರು ಮಾತನಾಡುವುದಿಲ್ಲ ಎಂದು ತಿರುಗೇಟು ನೀಡಿದರು.
|
eesanje/url_46_295_2.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ರಾಜ್ಯದ ಮದರಸಾಗಳಲ್ಲಿ ಕನ್ನಡ, ಗಣಿತ, ವಿಜ್ಞಾನ ಬೋಧನೆ ಕಡ್ಡಾಯ
|
2 |
+
ಬೆಳಗಾವಿ,ಡಿ.6-ರಾಜ್ಯ ವ್ಯಾಪಿ ಮದರಸಾ ಶಿಕ್ಷಣ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಕನ್ನಡ, ಗಣಿತ, ವಿಜ್ಞಾನ ಹಾಗೂ ಸಮಾಜ ಶಾಸ್ತ್ರವನ್ನು ಬೋಧಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.
|
3 |
+
ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಬಿ.ಎಂ.ಫಾರೂಖ್ ಪರವಾಗಿ ಅಬ್ದುಲ್ ಜಬ್ಬಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮದರಸಾ ಶಿಕ್ಷಣ ಸಂಸ್ಥೆಗಳಲ್ಲಿನ ಮಕ್ಕಳಿಗೆ ಧಾರ್ಮಿಕ ಬೋಧನೆ ಮಾತ್ರವಲ್ಲದೆ ಸಾಮಾಜಿಕ ಬದುಕು ಕಟ್ಟಿಕೊಳ್ಳುವ ಇತರೆ ವಿಷಯಗಳ ಕುರಿತು ಬೋದನೆ ಮಾಡಲಾಗುವುದು ಎಂದರು.
|
4 |
+
ಸಿ.ಪಿ.ಯೋಗೇಶ್ವರ್ ಭಾವನ ಕೊಲೆ ಹಿಂದೆ ಇದೆಯಾ ಹಣಕಾಸು ವಿಚಾರ..?
|
5 |
+
ರಾಜ್ಯದಲ್ಲಿ ಮುಸ್ಲಿಂ ಸಮುದಾಯದ ನೋಂದಾಯಿತ ವಕ್ ಆಸ್ತಿಗಳಲ್ಲಿ ಹಾಗೂ ವಕ್ ಸಂಸ್ಥೆಗಳಿಂದ ನಡೆಸಲಾಗುತ್ತಿರುವ ಮದರಸಾಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಪ್ರಾಯೋಗಿಕ ಆಧಾರದ ಮೇಲೆ 2 ವರ್ಷಗಳು ಕನ್ನಡ, ಇಂಗ್ಲೀಷ್, ವಿಜಾ್ಞನ, ಗಣಿತ ಹಾಗೂ ಇತರೆ ವಿಷಯಗಳ ಬಗ್ಗೆ ಸತತವಾಗಿ ಬೋಸಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ ಮತ್ತು ಪದವಿಯನ್ನು ರಾಜ್ಯ, ರಾಷ್ಟ್ರೀಯ ಮುಕ್ತ ಶಾಲೆಗಳ ಮೂಲಕ ನೀಡಲು ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಹೇಳಿದರು.
|
eesanje/url_46_295_3.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಬರಗಾಲದ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಗೆ ಮೇವು ಸರಬರಾಜಿಗೆ ನಿಬಂಧನೆ
|
2 |
+
ಬೆಳಗಾವಿ, ಡಿ. 6- ಬರಗಾಲ ಹಿನ್ನೆಲೆಯಲ್ಲ ರಾಜ್ಯದಿಂದ ಯಾವುದೇ ಕಾರಣಕ್ಕೂ ಮೇವು ಹೊರ ರಾಜ್ಯಕ್ಕೆ ಹೋಗಬಾರದು ಎಂದು ನಿಬಂಧನೆ ಹೇರಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.
|
3 |
+
ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಅವರು ಪ್ರಸ್ತಾಪಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, ಮೇವಿನ ಕೊರತೆ ಉಂಟಾಗದಂತೆ ರೈತರಿಗೆ ಮೇವಿನ ಬೀಜ ವಿತರಿಸಲು 20 ಕೋಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದರು.
|
4 |
+
ಬರ ಪರಿಹಾರ ಕಾರ್ಯಗಳಿಗಾಗಿ ಪ್ರಕೃತಿ ವಿಕೋಪ ಪರಿಹಾರ ನಿಯಡಿ ಪ್ರತಿ ಬರಪೀಡಿತ ತಾಲ್ಲೂಕಿಗೆ 324 ಕೋಟಿ ರೂ.ಗಳನ್ನು ರಾಜದ ಎಲ್ಲಾ ಜಿಲ್ಲೆಗಳಿಗೆ ಬಿಡುಗಡೆಗೊಳಿಸಲಾಗಿದೆ ಎಂದು ವಿವರಿಸಿದರು.
|
5 |
+
ಸಿ.ಪಿ.ಯೋಗೇಶ್ವರ್ ಭಾವನ ಕೊಲೆ ಹಿಂದೆ ಇದೆಯಾ ಹಣಕಾಸು ವಿಚಾರ..?
|
6 |
+
ಇನ್ನೂ, ಬರ ಪರಿಸ್ಥಿತಿಯ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದಿಂದ ಎನ್ ಡಿಆರ್ಎಫ್ ಅನುದಾನವನ್ನು ನಿರೀಕ್ಷಿಸಿ ಮಾರ್ಗನೋಚಿಗಳ ಪ್ರಕಾರ ಬೆಳೆ ಹಾನಿ ಪರಿಹಾರದ ಮೊದಲನೆ ಕಂತಾಗಿ ಬೆಳೆ ಹಾನಿ ಪರಿಹಾರವಾಗಿ ಅರ್ಹತೆಯ ಅನುಗೋಣವಾಗಿ 2,000 ಸಾವಿರವರೆಗೆ ಅರ್ಹ ರೈತರಿಗೆ ಪಾವತಿಲು ತೀರ್ಮಾನಿಸಿದೆ ಎಂದು ಹೇಳಿದರು.
|
7 |
+
ಇದಕ್ಕೂ ಮೊದಲು ಎನ್.ರವಿಕುಮಾರ್ ಪ್ರಸ್ತಾಪಿಸಿ, ರಾಜ್ಯ ಸರ್ಕಾರದ ಕೇಂದ್ರದ ಪರಿಹಾರಕ್ಕೂ ಮೊದಲು 10 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡುವ ಮೂಲಕ ರೈತರ ಹಿತ ಕಾಪಾಡಲಿ ಎಂದು ಆಗ್ರಹಿಸಿದರು.
|
eesanje/url_46_295_4.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಸಿ.ಪಿ.ಯೋಗೇಶ್ವರ್ ಭಾವನ ಕೊಲೆ ಹಿಂದೆ ಇದೆಯಾ ಹಣಕಾಸು ವಿಚಾರ..?
|
2 |
+
ಬೆಂಗಳೂರು,ಡಿ.6- ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರನ್ನು ಹಣಕಾಸು ವಿಚಾರಕ್ಕೆ ಅಪಹರಿಸಿ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ.
|
3 |
+
6 ತಂಡ ರಚನೆ:ಮಹದೇವಯ್ಯಅವರನ್ನು ಅವರದ್ದೇ ಕಾರಿನಲ್ಲಿ ಅಪಹರಿಸಿ ಕೊಲೆ ಮಾಡಿ ಪರಾರಿಯಾಗಿರುವ ದುಷ್ಕರ್ಮಿಗಳ ಬಂಧನಕ್ಕೆ ಚನ್ನಪಟ್ಟಣ ಉಪವಿಭಾಗದ ಡಿವೈಎಸ್ಪಿ ನೇತೃತ್ವದಲ್ಲಿ 6 ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಈಗಾಗಲೇ ಕಾರ್ಯಾಚರಣೆ ಕೈಗೊಂಡಿದ್ದು, ವಿವಿಧ ದೃಷ್ಟಿಕೋನಗಳಲ್ಲಿ ಹಲವು ಮಾಹಿತಿಗಳನ್ನು ಕಲೆ ಹಾಕುತ್ತಿವೆ.
|
4 |
+
ಪರಿಚಯಸ್ಥರೇ ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಒಂದು ತಂಡ ಆ ನಿಟ್ಟಿನಲ್ಲಿ ತನಿಖೆ ಕೈಗೊಂಡಿದೆ.ಮಹದೇವಯ್ಯ ಅವರು ಕಾಣೆಯಾಗಿದ್ದ ತೋಟದ ಮನೆಯನ್ನು ಇಂಚಿಂಚೂ ಬಿಡದೆ ಪರಿಶೀಲನೆ ನಡೆಸಿರುವ ಪೊಲೀಸರು ಹಲವು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದಾರೆ.
|
5 |
+
ಬೆಂಗಳೂರು : ಆಟೋ ಚಾಲಕನ ಬರ್ಬರ ಹತ್ಯೆ
|
6 |
+
ಮಹದೇವಯ್ಯ ಅವರ ಕಾರು ಚಾಮರಾಜನಗರ ಜಿಲ್ಲೆಯ ರಾಮಪುರ ಬಳಿ ಪತ್ತೆಯಾಗುತ್ತಿದ್ದಂತೆ ಪೊಲೀಸರು, ಬೆರಳಚ್ಚು ತಜ್ಞರು ಅಲ್ಲಿಗೆ ತೆರಳಿ ಕಾರನ್ನೂ ಸಹ ಕೂಲಂಕುಶವಾಗಿ ತಪಾಸಣೆ ನಡೆಸಿ ಹಲವು ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ.
|
7 |
+
ಮೃತದೇಹ ಪತ್ತೆಯಾದ ಸ್ಥಳಕ್ಕೆ ಭೇಟಿ:ಮಹದೇವಯ್ಯ ಅವರ ಮೃತದೇಹ ಪತ್ತೆಯಾದ ಸ್ಥಳಕ್ಕೆ ಒಂದು ತಂಡ ಭೇಟಿ ನೀಡಿ ಟೆಕ್ನಿಕಲ್ ಆಧಾರದ ಮೂಲಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುತ್ತಿದ್ದಾರೆ. ಒಟ್ಟಾರೆ ಮಹದೇವಯ್ಯ ಅವರ ಅಪಹರಣ ಹಾಗೂ ಕೊಲೆ ಮಾಡಿ ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಹಗಲಿರುಳು ರಾಮನಗರ ಜಿಲ್ಲಾ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದು , ಶೀಘ್ರದಲ್ಲೇ ಬಂಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
|
eesanje/url_46_295_5.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಭ್ರೂಣಹತ್ಯೆ ತಡೆಗೆ ಕಠಿಣ ನಿಯಮ ಜಾರಿಗೆ ಚಿಂತನೆ, ಸ್ಕ್ಯಾನಿಂಗ್ ಸೆಂಟರ್ಗಳ ತಪಾಸಣೆ
|
2 |
+
ಬೆಂಗಳೂರು,ಡಿ.5- ಭ್ರೂಣ ಹತ್ಯೆ ತಡೆಯುವ ಉದ್ದೇಶದಿಂದ ರಾಜ್ಯ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಜಾರಿಗೆ ತರಲು ಚಿಂತನೆ ನಡೆಸಿದೆ.ಭ್ರೂಣಹತ್ಯೆ ಮಾಡಿದರೆ ಐಪಿಸಿ ಸೆಕ್ಷನ್ 302 ಅಡಿ (ಕೊಲೆ) ಪ್ರಕರಣ ದಾಖಲಿಸಿಕೊಳ್ಳಲು ಚರ್ಚೆ ನಡೆಸಲಾಗುತ್ತಿದೆ.ಈ ಹೊಸ ನಿಯಮವನ್ನು ಜಾರಿಗೆ ತರುವ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ಗಂಭೀರ ಚಿಂತನೆ ನಡೆಸಿದ್ದು, ಕೊಲೆ ಪ್ರಕರಣ ದಾಖಲಿಸಲು ಕರಡು ತಯಾರಿಸುವ ಬಗ್ಗೆ ಚರ್ಚೆಗಳು ನಡೆದಿದ್ದು, ಆರೋಗ್ಯಾಧಿಕಾರಿಗಳಿಗೆ ಸಲಹೆ ನೀಡಲಾಗಿದೆ.
|
3 |
+
ರಾಜ್ಯದಲ್ಲಿ ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಭಾರೀ ಸದ್ದು ಮಾಡಿದ್ದು, ಭೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಭ್ರೂಣಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು ವೈದ್ಯರು, ನರ್ಸ್ಗಳು ಸೇರಿದಂತೆ 11 ಮಂದಿಯನ್ನು ಬಂಧಿಸಿದ್ದಾರೆ.ಮೈಸೂರಿನ ಎರಡು ಖಾಸಗಿ ಆಸ್ಪತ್ರೆಗಳಲ್ಲಿ ಭ್ರೂಣ ಹತ್ಯೆ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಪರಿಶೀಲಿಸಲಾಗಿದೆ.ಮೈಸೂರು-ಮಂಡ್ಯ ಭಾಗದಲ್ಲಿ ಗರ್ಭಪಾತ ಮಾಡಿಸುತ್ತಿದ್ದ ಭಾರಿ ಜಾಲವನ್ನೇ ಪೊಲಿಸರು
|
4 |
+
ಬೇಸಿದ್ದು, ಇದೀಗ ಇದಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಹೊಸ ಚಿಂತನೆ ನಡೆಸಿದೆ. ಭ್ರೂಣ ಪತ್ತೆ, ಹತ್ಯೆ ಪ್ರಕರಣಗಳು ಬೆಂಗಳೂರು, ಮಂಡ್ಯ ಹಾಗೂ ಮೈಸೂರಿನಲ್ಲಿ ಎಗ್ಗಿಲ್ಲದೆ ನಡೆದಿರುವುದು ಬೆಳಕಿಗೆ ಬರುತ್ತಿದ್ದಂತೆ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ್ದು, ಈ ಬಗ್ಗೆ ಸಿಐಡಿ ಪೊಲೀಸರು ಹೆಚ್ಚಿನ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.ಮುಂದಿನ ದಿನಗಳಲ್ಲಿ ಆರು ತಿಂಗಳು ಮತ್ತು ನಂತರದ ಭ್ರೂಣಹತ್ಯೆ ಮಾಡಿದರೆ ಕೊಲೆ ಪ್ರಕರಣ ದಾಖಲಿಸಲು ಪೊಲೀಸ್ ಇಲಾಖೆ ಯೋಜನೆ ರೂಪಿಸುತ್ತಿದೆ ಎಂದು ತಿಳಿದುಬಂದಿದೆ.
|
5 |
+
ಮುಸ್ಲಿಮರಿಗೆ 10,000 ಕೋಟಿ ಕೊಡುವುದಾಗಿ ಸಿಎಂ ಹೇಳಿಕೆ, ಸದನ ಕೋಲಾಹಲ
|
6 |
+
ಸ್ಕ್ಯಾನಿಂಗ್ ಸೆಂಟರ್ಗಳ ತಪಾಸಣೆ ?:ಬೆಂಗಳೂರು,ಡಿ.6- ಭ್ರೂಣ ಲಿಂಗ ಪತ್ತೆ ಪ್ರಕರಣದ ಬಳಿಕ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದ್ದು ರಾಜ್ಯದ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ಗಳ ಮಾಹಿತಿ ಪಡೆಯಲು ತೀರ್ಮಾನಿಸಿದೆ. ರಾಜ್ಯದ ಎಲ್ಲ ಸ್ಕ್ಯಾನಿಂಗ್ ಸೆಂಟರ್ ಗಳ ಡಿಟೈಲ್ ರಿಪೊರ್ಟ್ ಪಡೆಯಲು ಆರೋಗ್ಯ ಇಲಾಖೆ ಮುಂದಾಗಿರುವುದರಿಂದ ಭ್ರೂಣ ಲಿಂಗ ಪತ್ತೆ ಮಾಡಿರುವ ಸೆಂಟರ್ಗಳ ವೈದ್ಯರಿಗೆ ಡವ ಡವ ಶುರುವಾಗಿದೆ.
|
7 |
+
ರಾಜ್ಯದ 6000 ಸಾವಿರ ಸ್ಕ್ಯಾನಿಂಗ್ ಸೆಂಟರ್ ಹಾಗೂ ಕ್ಲಿನಿಕ್ಗಳ ತಪಾಸಣೆಗೆ ಹಾಗೂ ಕಾರ್ಯಾಚರಣೆ ಬೆಂಗಳೂರು ಸೇರಿದಂತೆ ರಾಜ್ಯದ ಸೆಂಟರ್ಗಳಲ್ಲಿರುವ ಯಂತ್ರೋಪಕರಣಗಳ ತಪಾಸಣೆ ನಡೆಸಬೇಕು ಎಂದು ಸೂಚಿಸಲಾಗಿದೆ.ರಾಜ್ಯದಲ್ಲಿರುವ 6000 ಸ್ಕ್ಯಾನಿಂಗ್ ಸೆಂಟರ್ ನಲ್ಲಿರುವ ಎಲ್ಲ ಮಷಿನಗಳನ್ನ ತಪಾಷಣೆ ಮಾಡಬೇಕು ಅಲ್ಲಿರುವ ನ್ಯೂನೆತಗಳನ್ನ ಪರಿಶೀಲನೆ ಮಾಡಬೇಕು ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿರುವುದು ಬೆಳಕಿಗೆ ಕಂಡು ಬಂದ್ರೆ ತಕ್ಷಣವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ವರದಿ ನೀಡುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
|
8 |
+
ಡಿಸೆಂಬರ್ 30 ರೊಳಗೆ ರಾಜ್ಯದ ಎಲ್ಲ ಸ್ಕ್ಯಾನಿಂಗ್ ಸೆಂಟರ್ ಗಳ ನ್ಯೂನೆತೆ ಹಾಗೂ ಎಷ್ಟು ಸ್ಕ್ಯಾನಿಂಗ್ ಮಾಡಲಾಗಿದೆ ಎಂಬುದರ ಬಗ್ಗೆ ಸ್ಕ್ಯಾನಿಂಗ್ ಮಷಿನ್ ಗಳ ಡಾಟಾ ಇಮೇಜ್ ಸಂಗ್ರಹಿಸುವಂತೆ ಸೂಚನೆ ನೀಡಿದೆ. ಅನುಮತಿ ಪಡೆಯದಿರುವ ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಮಾರ್ಗಸೂಚಿ ಅನ್ವಯ ಸ್ಕ್ಯಾನಿಂಗ್ ನಡೆಸಲಾಗುತ್ತಿದೆಯೇ? ಪಾಲಕರು, ತಾಯಿ ಹೊರತು ಅನ್ಯ ವ್ಯಕ್ತಿಗಳ ಪತ್ತೆಗಾಗಿ ಅಲ್ಲಿಯ ಸಿಸಿ ಕ್ಯಾಮರಾ ಪರಿಶೀಲನೆ ಮಾಡಬೇಕು ಇಮೇಜ್ ಡಾಟಾ ಹಾಗೂ ಸ್ಕ್ಯಾನಿಂಗ್ ಹಿಸ್ಟರಿ ದತ್ತಾಂಶ ಸಂಗ್ರಹಿಸಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಭ್ರೂಣ ಲಿಂಗ್ ಪತ್ತೆ ವಿರುದ್ಧ ದೊಡ್ಡ ಭೇಟೆಯನ್ನ ಆರೋಗ್ಯ ಇಲಾಖೆ ಶುರು ಮಾಡಿರುವುದು ಮಾತ್ರ ಆರೋಗ್ಯಕರ ಬೆಳವಣಿಗೆಯಾಗಿದೆ.
|
eesanje/url_46_295_6.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ವಿಧಾನಸಭೆ ಪ್ರತಿಪಕ್ಷದ ಉಪನಾಯಕನ ಸ್ಥಾನಕ್ಕೆ ಅರವಿಂದ್ ಬೆಲ್ಲದ್..?
|
2 |
+
ಬೆಳಗಾವಿ,ಡಿ.6- ವಿಧಾನಸಭೆಯ ಪ್ರತಿಪಕ್ಷದ ಉಪನಾಯಕರಾಗಿ ಅರವಿಂದ್ ಬೆಲ್ಲದ್ ಅವರನ್ನು ಬಿಜೆಪಿ ನೇಮಕ ಮಾಡಲು ಮುಂದಾಗಿದ್ದು, ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಗಳನ್ನು ಹೊಡೆಯಲು ಮುಂದಾಗಿದೆ. ಪಂಚಮಸಾಲಿ ಸಮುದಾಯಕ್ಕೆ ಬಿಜೆಪಿ ಅನ್ಯಾಯ ಮಾಡಿದೆ ಎಂಬ ಅಸಮಾಧಾನವನ್ನು ಸರಿದೂಗಿಸುವುದು, ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ಆರೋಪ ಹಾಗೂ ಪಕ್ಷದ ವಿರುದ್ಧವೇ ಗುಟುರು ಹಾಕುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಾಯಿಗೆ ಬೀಗ ಹಾಕುವುದು ಇದರ ಹಿಂದಿನ ಉದ್ದೇಶವಾಗಿದೆ.
|
3 |
+
ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಸತತ ಮೂರು ಬಾರಿ ಶಾಸಕರಾಗಿ ಗೆದ್ದಿರುವ ಅರವಿಂದ್ ಬೆಲ್ಲದ್ ಅವರನ್ನು ವಿಧಾನಸಭೆಯ ಪ್ರತಿಪಕ್ಷದ ಉಪನಾಯಕನ ಸ್ಥಾನಕ್ಕೆ ನೇಮಕ ಮಾಡಲು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಕೇಂದ್ರದ ವರಿಷ್ಠರಿಗೆ ಮಾಹಿತಿಯನ್ನು ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.
|
4 |
+
ರಾಜ್ಯ ಬಿಜೆಪಿ ಘಟಕ ಸಮ್ಮತಿ ಸೂಚಿಸಿದ್ದು, ಅರವಿಂದ್ ಬೆಲ್ಲದ್ ಹೆಸರಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಹಲವು ಶಾಸಕರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಅರವಿಂದ್ ಬೆಲ್ಲದ್ ಇತ್ತೀಚೆಗೆ ಶಾಸಕಾಂಗ ಸಭೆಯನ್ನು ಬಹಿಷ್ಕರಿಸಿ ಹೊರನಡೆದಿದ್ದರು.
|
5 |
+
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ವೇಳೆ ಬೆಲ್ಲದ್ ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯೂ ಕೂಡ ಆಗಿದ್ದರು. ಇದೀಗ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನವು ಮಧ್ಯ ಕರ್ನಾಟಕ ಹಾಗೂ ಪ್ರತಿ ಪಕ್ಷದ ನಾಯಕನ ಸ್ಥಾನ ಬೆಂಗಳೂರಿಗೆ ಸಿಕ್ಕಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಭದ್ರಕೋಟೆ ಎನ್ನಿಸಿದ್ದ ಉತ್ತರಕರ್ನಾಟಕಕ್ಕೆ ಅನ್ಯಾಯ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.
|
6 |
+
ಮುಸ್ಲಿಮರಿಗೆ 10,000 ಕೋಟಿ ಕೊಡುವುದಾಗಿ ಸಿಎಂ ಹೇಳಿಕೆ, ಸದನ ಕೋಲಾಹಲ
|
7 |
+
ಇದನ್ನು ಸರಿದೂಗಿಸುವ ನಿಟ್ಟಿನಲ್ಲಿ ಬೆಲ್ಲದ್ ಹೆಸರಿಗೆ ಬಹುತೇಕ ಸಮ್ಮತಿ ಸೂಚಿಸುವ ಸಾಧ್ಯತೆ ಇದೆ. ಜೊತೆಗೆ ಪಂಚಮಸಾಲಿ ಸಮುದಾಯಕ್ಕೆ ಬಿಜೆಪಿ ಅನ್ಯಾಯ ಮಾಡಿದೆ ಎಂದು ಕೂಡಲಸಂಗಮ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಆಗಾಗ್ಗೆ ಆರೋಪ ಮಾಡುತ್ತಲೇ ಇದ್ದರು. ಈ ಬೆಳವಣಿಗೆಗಳ ನಡುವೆಯೇ ಪ್ರತಿಪಕ್ಷದ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಯತ್ನಾಳ್ಗೆ ಆ ಸ್ಥಾನ ಕೈತಪ್ಪಿದ್ದರಿಂದ ಮತ್ತೆ ತಮ್ಮ ಹಳೆ ಛಾಳಿಯನ್ನು ಮುಂದುವರೆಸಿದ್ದರು.
|
8 |
+
ಇದೆಲ್ಲವನ್ನು ಪರಿಗಣಿಸಿರುವ ವರಿಷ್ಠರು ಅರವಿಂದ್ ಬೆಲ್ಲದ್ಗೆ ಉಪನಾಯಕನ ಸ್ಥಾನವನ್ನು ನೀಡುವ ಮೂಲಕ ಯತ್ನಾಳ್ ಬಾಯಿ ಬಂದ್ ಮಾಡುವ ಲೆಕ್ಕಾಚಾರದಲ್ಲಿ ವರಿಷ್ಠರಿದ್ದಾರೆ. ಇನ್ನು ವಿಧಾನಸಭೆಯ ಪ್ರತಿಪಕ್ಷದ ಮುಖ್ಯ ಸಚೇತಕ��� ಸ್ಥಾನಕ್ಕೆ ಶಾಸಕರಾದ ಸತೀಶ್ ರೆಡ್ಡಿ, ಹರೀಶ್ ಪೂಂಜಾ, ಅಭಯ್ ಪಾಟೀಲ್ ಹೆಸರುಗಳನ್ನು ದೆಹಲಿ ನಾಯಕರಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿದುಬಂದಿದೆ.
|
eesanje/url_46_295_7.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಒಲಿಂಪಿಕ್ ಕ್ರೀಡೆಗೆ ರಾಜ್ಯದ ಕ್ರೀಡಾಪಟುಗಳಿಗೆ ಉನ್ನತಮಟ್ಟದ ತರಬೇತಿ
|
2 |
+
ಬೆಳಗಾವಿ, ಡಿ.6- ಮುಂಬರುವ 2024 ರ ಒಲಿಂಪಿಕ್ ಕ್ರೀಡೆಗೆ ರಾಜ್ಯದಿಂದ ಕ್ರೀಡಾಪಟುಗಳನ್ನು ಸಜ್ಜುಗೊಳಿಸಲು ತಲಾ 10 ಲಕ್ಷ ರೂ. ವೆಚ್ಚದಲ್ಲಿ ತರಬೇತಿ ಕೊಡಿಸಲಾಗುತ್ತಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಪ್ರಶ್ನೆ ಕೇಳುತ್ತಾ, ಬೆಂಗಳೂರು ಹಾಗೂ ಇತರ ನಗರ ಪ್ರದೇಶಗಳ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಹೆಚ್ಚಿನ ಸಾಧನೆ ಮಾಡುತ್ತಿದ್ದಾರೆ. ಆದರೆ ಗ್ರಾಮೀಣ ಭಾಗದಲ್ಲಿ ಮೂಲಸೌಲಭ್ಯಗಳ ಕೊರತೆಯಿಂದಾಗಿ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಅವಕಾಶ ಸಿಗುತ್ತಿಲ್ಲ ಎಂದು ಸರ್ಕಾರದ ಗಮನ ಸೆಳೆದರು.
|
3 |
+
ಇದಕ್ಕೆ ಉತ್ತರ ನೀಡಿದ ಸಚಿವರು, ರಾಜ್ಯದಲ್ಲಿ ಅಮೃತ ಕ್ರೀಡಾ ದತ್ತಿ ಯೋಜನೆಯಡಿ 75 ಮಂದಿಯನ್ನು ಆಯ್ಕೆ ಮಾಡಿಕೊಂಡು ತರಬೇತಿ ಕೊಡಿಸಲಾಗುತ್ತಿದೆ. ಜೊತೆಗೆ ನಗದು ಪುರಸ್ಕಾರ, ಶೈಕ್ಷಣಿಕ ಶುಲ್ಕ ಮರುಪಾವತಿ ಸೇರಿದಂತೆ ಹಲವು ಸೌಲಭ್ಯಗಳ ಮೂಲಕ ಕ್ರೀಡೆಗೆ ಬೆಂಬಲ ನೀಡಲಾಗುತ್ತಿದೆ ಎಂದರು.
|
4 |
+
ಮುಸ್ಲಿಮರಿಗೆ 10,000 ಕೋಟಿ ಕೊಡುವುದಾಗಿ ಸಿಎಂ ಹೇಳಿಕೆ, ಸದನ ಕೋಲಾಹಲ
|
5 |
+
2024 ರ ಒಲಂಪಿಕ್ ಕ್ರೀಡೆಗೆ ಸಜ್ಜುಗೊಳ್ಳುವ ಕ್ರೀಡಾಪಟುಗಳಿಗೆ ಆಹಾರದಿಂದ ಹಿಡಿದು ಎಲ್ಲಾ ರೀತಿಯ ಕಾಳಜಿಯನ್ನು ವಹಿಸಲಾಗುತ್ತಿದೆ. ಪ್ರತಿಯೊಬ್ಬರ ತರಬೇತಿಗೆ 10 ಲಕ್ಷ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ ಎಂದು ಹೇಳಿದರು.180 ದೈಹಿಕ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ತರಬೇತಿ ನಡೆಯುತ್ತಿದೆ. ಶೀಘ್ರವೇ ಅವರು ಸೇವೆಗೆ ಸಮರ್ಪಣೆಗೊಳ್ಳಲಿದ್ದಾರೆ. ಈ ಮೂಲಕ ತರಬೇತುದಾರರ ಕೊರತೆಯೂ ನೀಗಲಿದೆ ಎಂದರು.
|
6 |
+
ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್.ಬಾಲಕೃಷ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ನಾಗೇಂದ್ರ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಅೀನದಲ್ಲಿ ರಾಜ್ಯಾದ್ಯಂತ 125 ಕ್ರೀಡಾಂಗಣಗಳಿವೆ. ಕ್ರೀಡಾಂಗಣಗಳ ಅಭಿವೃದ್ಧಿಗೆ 5,622 ಲಕ್ಷ ರೂಪಾಯಿಗಳನ್ನು 2 ವರ್ಷಗಳಿಂದ ಬಿಡುಗಡೆ ಮಾಡಲಾಗಿದೆ.
|
7 |
+
ಹಣಕಾಸು ಲಭ್ಯತೆಯನ್ನು ಆಧರಿಸಿ 16 ವರ್ಷಗಳಿಂದ ನೆನಗುದಿಗೆ ಬಿದ್ದಿರುವ ಕ್ರೀಡಾಂಗಣಗಳ ನಿರ್ಮಾಣವನ್ನು ಶೀಘ್ರ ಪೂರ್ಣಗೊಳಿಸಲಾಗುವುದು. ಶ್ರವಣಬೆಳಗೊಳದ ಕ್ಷೇತ್ರಗಳಿಗೂ ಆದ್ಯತೆ ಮೇರೆಗೆ ಕ್ರೀಡಾಂಗಣ ಪುನರ್ ಅಭಿವೃದ್ಧಿಗೊಳಿಸುವುದಾಗಿ ಕರೆ ನೀಡಿದರು. ಅಂತಾರಾಷ್ಟ್ರೀಯ ಕ್ರೀಡೆಯಲ್ಲಿ ಚಿನ್ನದ ಪದಕ ವಿಜೇತರಿಗೆ 25 ಲಕ್ಷ, ಬೆಳ್ಳಿ ಪದಕ ಗೆದ್ದವರಿಗೆ 15 ಲಕ್ಷ ರೂ.ಗಳ ಅನುದಾನ ನೀಡಲಾಗುತ್ತಿದೆ ಎಂದು ತಿಳಿಸಿದರು.
|
eesanje/url_46_295_8.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
4 ವರ್ಷ ಅಧಿಕಾರದಲ್ಲಿದ್ದರೂ ಗುಂಡಿ ಮುಚ್ಚಲಾಗಲಿಲ್ಲ : ಬಿಜೆಪಿ ವಿರುದ್ಧ ಸಿಎಂ ಕಿಡಿ
|
2 |
+
ಬೆಳಗಾವಿ, ಡಿ.6- ಬಿಜೆಪಿ ಬ್ರಾಂಡ್ ಬೆಂಗಳೂರು ಮಾಡಿದ್ದಾರೆಯೇ? ನಾಲ್ಕು ವರ್ಷ ಅಧಿಕಾರದಲ್ಲಿದ್ದು ಅವರಿಂದ ಗುಂಡಿ ಮುಚ್ಚಲಾಗಲಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹರಿಹಾಯ್ದರು. ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ನಾವು ಅಕಾರಕ್ಕೆ ಬಂದು 6 ತಿಂಗಳಾಯಿತು.
|
3 |
+
ಬ್ರಾಂಡ್ ಬೆಂಗಳೂರು ಕುರಿತಂತೆ ಬಿಜೆಪಿ ಸರಿಯಾಗಿ ಕೆಲಸ ಆಗುತ್ತಿಲ್ಲ ಎಂದು ಆರೋಪಿಸಿರುವ ಬಗ್ಗೆ ಮಾತನಾಡಿ, ಉಚ್ಚ ನ್ಯಾಯಾಲಯ ಅವರಿಗೆ ಛೀಮಾರಿ ಹಾಕಿದೆ. ಅವರಿಗೆ ಬೆಂಗಳೂರಿನ ಬಗ್ಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ ಎಂದರು.
|
4 |
+
ಬೆಂಗಳೂರು : ಆಟೋ ಚಾಲಕನ ಬರ್ಬರ ಹತ್ಯೆ
|
5 |
+
ಉತ್ತರ ಕರ್ನಾಟಕದಲ್ಲಿ ಸದನ ನಡೆಯುತ್ತಿದ್ದು ಸಚಿವರು ತೆಲಂಗಾಣದಲ್ಲಿದ್ದಾರೆ ಎಂಬ ಹೇಳಿಕೆಗೆ ಉತ್ತರಿಸಿದ ಅವರು, ಎಲ್ಲರೂ ಅಲ್ಲಿಲ್ಲ, ಒಂದಿಬ್ಬರು ಹೋಗಿದ್ದಾರೆ. ರಾಜಕೀಯವನ್ನೂ ಮಾಡಬೇಕಲ್ಲವೆ? ಸಚಿವ ಜಮೀರ್ ಅಹ್ಮದ್ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಇಬ್ಬರು ಬರಬೇಕಷ್ಟೇ ಎಂದರು. ಬಹುತೇಕರು ವಾಪಸ್ಸು ಬಂದಿದ್ದಾರೆ ಎಂದು ಹೇಳಿದರು.
|
6 |
+
ಅಭಿವೃದ್ಧಿ ಭಾಷಣವಿಲ್ಲ ಸಿದ್ದರಾಮಯ್ಯ ಕೇವಲ ಓಲೈಕೆ ಭಾಷಣ ಮಾಡುತ್ತಾರೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅದೆಲ್ಲಾ ನಿಮ್ಮಿಂದಲೇ ಆಗಿದೆ. ಎಲ್ಲಾ ಸಮುದಾಯಗಳು ಒಳಗೊಂಡಂತೆ ಮುಸ್ಲಿಮರನ್ನು ರಕ್ಷಣೆ ಮಾಡಲಾಗುವುದು ಎಂದರು.
|
eesanje/url_46_295_9.txt
ADDED
@@ -0,0 +1,14 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮುಸ್ಲಿಮರಿಗೆ 10,000 ಕೋಟಿ ಕೊಡುವುದಾಗಿ ಸಿಎಂ ಹೇಳಿಕೆ, ಸದನ ಕೋಲಾಹಲ
|
2 |
+
ಬೆಳಗಾವಿ, ಡಿ.6- ಅಲ್ಪಸಂಖ್ಯಾತರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.ಗಳ ಅನುದಾನ ಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಅವರು ನೀಡಿದ್ದ ಭರವಸೆ ವಿಧಾನಸಭೆಯಲ್ಲಿಂದು ಪ್ರಸ್ತಾಪ ವಾಗಿ ಕೋಲಾಹಲದ ವಾತಾವರಣ ಸೃಷ್ಟಿಸಿತು.ಪ್ರಶ್ನೋತ್ತರದ ಬಳಿಕ ಬಿಜೆಪಿಯ ಸುನಿಲ್ಕುಮಾರ್ ವಿಷಯ ಪ್ರಸ್ತಾಪಿಸಿ ಹುಬ್ಬಳ್ಳಿಯಲ್ಲಿ ನಡೆದ ಮೌಲಿಗಳ ಸಮಾವೇಶದಲ್ಲಿ ಮಾತನಾಡುವ ವೇಳೆ ಮುಖ್ಯಮಂತ್ರಿಗಳು ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.ಗಳನ್ನು ನೀಡುವುದಾಗಿ ಹೇಳಿದ್ದಾರೆ.
|
3 |
+
ಎಷ್ಟು ಹಣ ಕೊಡು ತ್ತಾರೆ, ಯಾರಿಗೆ ಕೊಡುತ್ತಾರೆ ಎಂದು ಪ್ರಶ್ನಿಸಿ ದರಲ್ಲದೆ, ಸದನ ನಡೆಯುವ ಸಂದರ್ಭದಲ್ಲಿ ಯಾವುದೇ ಹೊಸ ಯೋಜನೆಗಳ ಅನುದಾನವನ್ನು ಘೋಷಿಸಬಾರದು ಎಂಬ ನಿಯಮವಿದೆ. ಆದರೆ ಮುಖ್ಯಮಂತ್ರಿಯವರ ಈ ಹೇಳಿಕೆ ಸಂಪ್ರದಾಯಕ್ಕೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿಯ ಅರಗ ಜ್ಞಾನೇಂದ್ರ, ಚಂದ್ರಪ್ಪ, ಅಶ್ವತ್ಥನಾರಾಯಣ ಸೇರಿದಂತೆ ಹಲವಾರು ಮಂದಿ ಇದಕ್ಕೆ ಬೆಂಬಲ ವ್ಯಕ್ತಪಡಿಸಿದರು.
|
4 |
+
ಸರ್ಕಾರದ ವತಿಯಿಂದ ಪ್ರತ್ಯುತ್ತರಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರನ್ನು ಕೇಳಿಯೇ ಮುಖ್ಯಮಂತ್ರಿಯವರು ಮಾತನಾಡಲಾಗುವುದಿಲ್ಲ. ವಿರೋಧಪಕ್ಷಗಳು ಹೇಳಿದಂತೆ ಸರ್ಕಾರ ನಡೆಸಲು ಸಾಧ್ಯವಿಲ್ಲ. 10 ಸಾವಿರ ಕೋಟಿ ರೂ.ಗಳ ಅನುದಾನ ನೀಡಬೇಕಾದರೆ ಇದೇ ಅವೇಶನದಲ್ಲಿ ಬಿಲ್ ಮಂಡಿಸುತ್ತೇವೆ. ಹೊರಗೆ ಮಾತನಾಡುವುದನ್ನೆಲ್ಲಾ ಇಲ್ಲಿ ಪ್ರಸ್ತಾಪಿಸುವುದು, ಆಕ್ಷೇಪಿಸುವುದು ಸರಿಯಲ್ಲ ಎಂದರು.ಸಚಿವರಾದ ದಿನೇಶ್ಗುಂಡೂರಾವ್ ಸೇರಿದಂತೆ ಆಡಳಿತ ಪಕ್ಷದ ಶಾಸಕರು ಬಿಜೆಪಿಯವರ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದರು.
|
5 |
+
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಗೆ 8000ಕ್ಕೂ ಹೆಚ್ಚು ಗಣ್ಯರಿಗೆ ಆಹ್ವಾನ
|
6 |
+
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಅಧಿಕೃತವಾಗಿ ಸ್ಪಷ್ಟನೆ ನೀಡಿ ತಾವು ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಮುಖ್ಯಮಂತ್ರಿಯವರು ಈ ವರ್ಷವೇ 10 ಸಾವಿರ ಕೋಟಿ ರೂ. ಕೊಡುತ್ತೇವೆ ಎಂದು ಹೇಳಿಲ್ಲ. ಈಗಾಗಲೇ 2 ರಿಂದ 3 ಸಾವಿರ ಕೋಟಿ ರೂ.ಗಳ ಅನುದಾನ ನೀಡಿದ್ದೇವೆ. ಮುಂದಿನ ವರ್ಷ ಅಲ್ಪಸಂಖ್ಯಾತರ ಅಭಿವೃದ್ಧಿಯನ್ನು 10 ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸುವ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ. ಇದರಲ್ಲಿ ಸದನದ ಸಂಪ್ರದಾಯಕ್ಕೆ ಧಕ್ಕೆಯಾಗುವ ಯಾವ ಅಂಶಗಳೂ ಇಲ್ಲ ಎಂದು ಸ್ಪಷ್ಟಪಡಿಸಿದರು.
|
7 |
+
ಆಡಳಿತ ಪಕ್ಷ ಮತ್ತು ವಿರೋಧಪಕ್ಷಗಳ ವಾದ-ಪ್ರತಿವಾದ ಸುದೀರ್ಘ ಚರ್ಚೆಗೆ ಗ್ರಾಸವಾಯಿತು. ಸಚಿವ ದಿನೇಶ್ ಗುಂಡೂರಾವ್ ಬಿಜೆಪಿಯವರಿಗೆ ಅಲ್ಪಸಂಖ್ಯಾತರ ಮೇಲೆ ದ್ವೇಷ. ಅದಕ್ಕೆ ಮುಸ್ಲಿಂರ ಅಭಿವೃದ್ಧಿಗೆ ಹಣ ನೀಡುತ್ತೇವೆ ಎಂದಾಕ್ಷಣ ಗದ್ದಲ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.ಸಚಿವರಾದ ಎಂ.ಬಿ.ಪಾಟೀಲ್ ಸೇರಿದಂತೆ ಅನೇಕ ಸಚಿವರು, ಮುಖ್ಯಮಂತ್ರಿಯವರು ಮುಂದಿನ ವರ್ಷ ಅನುದಾನವನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ. ಇದನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ ಎಂದು ಸಮರ್ಥಿಸಿಕೊಂಡರು.
|
8 |
+
ಆಡಳಿತ ಪಕ್ಷದ ನರೇಂದ್ರಸ್ವಾಮಿ, ಕಂಚಿನ ಪ್ರತಿಮೆ ಮಾಡುತ್ತೇವೆ ಎಂದು ಹೇಳಿ ಪ್ಲಾಸ್ಟ್ ಆಫ್ ಪ್ಯಾರಿಸ್ ಪ್ರತಿಮೆ ನಿರ್ಮಿಸಿದ ವ್ಯಕ್ತಿಗಳು ಇಲ್ಲಿ ವಿಷಯ ಪ್ರಸ್ತಾಪಿಸುತ್ತಿದ್ದಾರೆ ಎಂದು ಅವರು ಲೇವಡಿ ಮಾಡಿದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸುನಿಲ್ಕುಮಾರ್ರ ಪ್ರಸ್ತಾವನೆಯನ್ನು ಸಮರ್ಥಿಸಿಕೊಂಡು, ಮುಖ್ಯಮಂತ್ರಿಗಳ ಭಾಷಣವನ್ನು ನಾನು ಕೇಳಿದ್ದೇನೆ. 10 ಸಾವಿರ ಕೋಟಿ ರೂ.ಗಳನ್ನು ಈ ವರ್ಷವೇ ನೀಡುತ್ತೇವೆ ಎಂದಿದ್ದಾರೆ. ಇದು ಸರಿಯಲ್ಲ ಎಂದರು.
|
9 |
+
ಈ ವೇಳೆ ಬಸವರಾಜರಾಯರೆಡ್ಡಿಯವರು ಇದರ ಬಗ್ಗೆ ಪ್ರಸ್ತಾಪ ಮಾಡಿದರು. ಸಭಾಧ್ಯಕ್ಷ ಯು.ಟಿ.ಖಾದರ್ ವಿಪಕ್ಷ ನಾಯಕರ ಬಳಿ ಮನವಿ ಮಾಡಿಕೊಂಡು ಕ್ರಿಯಾಲೋಪ ಪ್ರಸ್ತಾಪಕ್ಕೆ ಅವಕಾಶ ಮಾಡಿಕೊಟ್ಟರು. ಮುಖ್ಯಮಂತ್ರಿಯವರ ಹೇಳಿಕೆ ಸದನದ ಶಿಷ್ಟಾಚಾರವಾಗಲಿ ಅಥವಾ ಹಕ್ಕುಚ್ಯುತಿಯ ಉಲ್ಲಂಘನೆಯಾಗಲಿ ಆಗುವುದಿಲ್ಲ ಎಂದು ಹೇಳಿದರು.ಪಾಯಿಂಟ್ ಆಫ್ ಆರ್ಡರ್ನಲ್ಲಿ ಪಾಯಿಂಟ್ ಇಲ್ಲ, ಆರ್ಡರ್ ಕೂಡ ಇಲ್ಲ. ಹಾಗಾಗಿ ರಾಯರೆಡ್ಡಿಯವರ ಮಾತುಗಳು ಕಡತಕ್ಕೆ ಹೋಗಬಾರದು ಎಂದು ಅರಗ ಜ್ಞಾನೇಂದ್ರ ಹೇಳಿದರು.
|
10 |
+
ಆರ್.ಅಶೋಕ್ರವರು ಚರ್ಚೆ ಮುಂದುವರೆಸಿ ಮುಖ್ಯಮಂತ್ರಿಯವರ ಹೇಳಿಕೆ ಸರಿಯಲ್ಲ ಎಂದು ಪ್ರತಿಪಾದಿಸಲಾರಂಭಿಸಿದರು. ಈ ಹಂತದಲ್ಲಿ ಆಡಳಿತ ಪಕ್ಷದ ಶಾಸಕರು ಪ್ರತಿರೋಧ ವ್ಯಕ್ತಪಡಿಸಿದರು. ವಿರೋಧಪಕ್ಷದ ನಾಯಕರುಗಳ ಮಾತುಗಳಿಗೆ ಅಡ್ಡಿಪಡಿಸಬೇಡಿ ಎಂದು ಸಭಾಧ್ಯಕ್ಷರು ಮನವಿ ಮಾಡಿದರು. ಆದರೂ ಕಾಂಗ್ರೆಸ್ ಸದಸ್ಯರು ಗಲಾಟೆ ಮಾಡಿದ್ದರಿಂದ ಸಿಟ್ಟಾದ ಆರ್.ಅಶೋಕ್, ವಿಪಕ್ಷ ನಾಯಕರು ಮಾತನಾಡುವಾಗ ಅಡ್ಡಿಪಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳು ಮಾತನಾಡುವಾಗ ಅಡ್ಡಿಪಡಿಸುವ ತಾಕತ್ತು ನಮಗೂ ಇದೆ. ನಾವು 85 ಮಂದಿ ಇದ್ದೇವೆ ಎಂದು ಹೇಳಿದರು.
|
11 |
+
ಜೊತೆಗೆ ಬರ ಪರಿಸ್ಥಿತಿ ತೀವ್ರವಾಗಿದೆ. ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬರ ನಿರ್ವಹಣೆಗೆ ತಕ್ಷಣಕ್ಕೆ 2 ಸಾವಿರ ಕೋಟಿ ರೂ. ನೀಡಿದರೆ ರೈತರಿಗೆ ಎಷ್ಟೋ ಅನುಕೂಲವಾಗಲಿದೆ. ಅದನ್ನು ಬಿಟ್ಟು ರಾಜಕೀಯ ಕಾರಣಕ್ಕಾಗಿ 10 ಸಾವಿರ ಕೋಟಿ ರೂ.ಗಳನ್ನು ಏಕೆ ಘೋಷಣೆ ಮಾಡಿದ್ದೀರಿ ಎಂದು ಪ್ರಶ್ನಿಸಿದರು. ಆಡಳಿತ ಪಕ್ಷದ ಶಾಸಕರು, ಬಿಜೆಪಿಯ ನಾಯಕರು ಎಷ್ಟೆಲ್ಲಾ ಘೋಷಣೆಗಳನ್ನು ಮಾಡಿದ್ದಾರೆ ಎಂಬುದು ನಮ್ಮ ಕಣ್ಣ ಎದುರಿಗಿದೆ. ಅದನ್ನೆಲ್ಲಾ ಇಲ್ಲಿ ಪ್ರಸ್ತಾಪ ಮಾಡುವುದು ಬೇಕಿಲ್ಲ ಎಂದರು.
|
12 |
+
ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಮುಖ್ಯಮಂತ್ರಿಯ ಹೇಳಿಕೆ ವಿರುದ್ಧ ತೀವ್ರ ಕಿಡಿಕಾರಿದರು. ಚರ್ಚೆಗಳು ಕಾವೇರಿ ಬಹಳ ಹೊತ್ತು ಜಟಾಪಟಿಗೆ ಕಾರಣವಾಯಿತು.ಕಾಂಗ್ರೆಸ್ನ ಸಿ.ಎ��್.ನಾಡಗೌಡ ಮಾತನಾಡಿ, ಸುನಿಲ್ಕುಮಾರ್ರ ಪ್ರಸ್ತಾಪ ಅನಗತ್ಯವಾಗಿತ್ತು. ಯಾವುದೇ ಪ್ರಮುಖ ವಿಚಾರವಲ್ಲ ಮತ್ತು ಗಣನೀಯ ಸಂಗತಿಗಳೂ ನಡೆದಿಲ್ಲ. ಆದರೂ ಶೂನ್ಯವೇಳೆಯನ್ನು ಬದಿಗಿರಿಸಿ ಚರ್ಚೆ ಮಾಡಿದ್ದೇಕೆ ಎಂದು ಕ್ರಿಯಾಲೋಪ ಪ್ರಸ್ತಾಪಿಸಿದರು.ಸಚಿವ ದಿನೇಶ್ಗುಂಡೂರಾವ್ ಸರ್ಕಾರದ ಪರವಾಗಿ ಎಚ್.ಕೆ.ಪಾಟೀಲರ ಅಭಿಪ್ರಾಯವನ್ನೇ ಪುನರುಚ್ಚರಿಸಿದರು. ಇದರಿಂದ ಬಿಜೆಪಿಯ ಶಾಸಕರು ಆಕ್ರೋಶ ವ್ಯಕ್ತಪಡಿಸಿದರು. ಖುದ್ದು ಮುಖ್ಯಮಂತ್ರಿಯವರೇ ಬಂದು ಸ್ಪಷ್ಟನೆ ನೀಡಬೇಕು ಎಂದು ಪಟ್ಟು ಹಿಡಿದರು.
|
13 |
+
ಸರ್ಕಾರದ ಉತ್ತರಗಳು ಸಮಾಧಾನಕರವಾಗಿಲ್ಲ ಎಂದು ಆರೋಪಿಸಿ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು.ಬರದ ಮೇಲಿನ ಚರ್ಚೆಯಲ್ಲಿ ಭಾಗವಹಿಸುವ ಬದಲು ಸಣ್ಣ ವಿಚಾರಕ್ಕಾಗಿ ಸಭಾತ್ಯಾಗ ಮಾಡುವುದು ಸರಿಯಲ್ಲ ಎಂದು ಸಭಾಧ್ಯಕ್ಷರು ಆಕ್ಷೇಪಿಸಿದರು.ಅದರ ಬಳಿಕ ಮಾತನಾಡಿದ ಸಚಿವ ಎಚ್.ಕೆ.ಪಾಟೀಲ್, ವಿಪಕ್ಷ ನಾಯಕರು ಮುಖ್ಯಮಂತ್ರಿಯವರಿಗೆ ಮಾತನಾಡಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ. ಇವರು ಇಲ್ಲಿಗೆ ಚರ್ಚೆ ಮಾಡಲು ಬರುತ್ತಾರೋ, ಜಗಳ ಆಡಲು ಬರುತ್ತಾರೋ ಎಂದು ಪ್ರಶ್ನೆ ಮಾಡಿದರು.
|
14 |
+
ವಿರೋಧ ಪಕ್ಷದ ನಾಯಕರ ಈ ಧೋರಣೆ ಸಂಸದೀಯ ವ್ಯವಹಾರಗಳಿಗೆ ಮತ್ತು ಪ್ರಜಾಪ್ರಭುತ್ವಕ್ಕೆ ಧಕ್ಕೆ ತರಲಿದೆ. ಕೂಡಲೇ ವಿರೋಧಪಕ್ಷದ ನಾಯಕರುಗಳು ತಮ್ಮ ಹೇಳಿಕೆಯನ್ನು ಹಿಂಪಡೆದು ಕ್ಷಮೆ ಯಾಚಿಸಬೇಕು ಎಂದರು.ಸಚಿವ ಜಯಚಂದ್ರ, ತಾಕತ್ತಿನ ಪ್ರಶ್ನೆ ಮಾಡುವುದಾದರೆ ಕಾಂಗ್ರೆಸ್ನ ಶಾಸಕರ ಸಂಖ್ಯೆ 135 ರಷ್ಟಿದೆ. ನಾವು ಪ್ರಶ್ನೆ ಮಾಡಬಹುದು ಎಂದರು.ಸಚಿವ ಪ್ರಿಯಾಂಕ್ ಖರ್ಗೆ, ಸರ್ಕಾರ ಬರದ ಮೇಲಿನ ಚರ್ಚೆಗೆ ಸಿದ್ಧವಿದೆ. ಆದರೆ ವಿರೋಧಪಕ್ಷಗಳಿಗೆ ಚರ್ಚೆ ಮಾಡಲು ಅವಕಾಶವಿಲ್ಲ. ಅದಕ್ಕಾಗಿ ಸಭಾತ್ಯಾಗದ ಮೂಲಕ ಫಲಾಯನವಾದ ಅನುಸರಿಸಿದ್ದಾರೆ ಎಂದು ಆಕ್ಷೇಪಿಸಿದರು. ಸದಸ್ಯ ಬಸವರಾಜರಾಯರೆಡ್ಡಿಯವರು ವಿಪಕ್ಷ ನಾಯಕರ ಹೇಳಿಕೆಗಳನ್ನು ಕಡತದಿಂದ ತೆಗೆದುಹಾಕಬೇಕು ಎಂದು ಕ್ರಿಯಾಲೋಪದಡಿ ಪ್ರಸ್ತಾಪ ಮಾಡಿದರು.ಆದರೆ ಸಭಾಧ್ಯಕ್ಷರು ಕ್ರಿಯಾಲೋಪವನ್ನು ತಳ್ಳಿಹಾಕಿದರು.
|
eesanje/url_46_296_1.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಅರ್ಜನನ ಸಾವಿನ ವರದಿ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ
|
2 |
+
ಬೆಂಗಳೂರು, ಡಿ.6- ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಈ ಪ್ರಕರಣದಲ್ಲಿ ಯಾರೇ ಇದ್ದರೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 67ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
|
3 |
+
ಈಗಾಗಲೇ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಯಾರ್ಯಾರು ಭಾಗಿಯಾಗಿದ್ದಾರೆ, ಯಾರ್ಯಾರು ಈ ಪ್ರಕರಣಕ್ಕೆ ಕಾರಣಕರ್ತರಾಗಿದ್ದಾರೆಯೋ ಅಂಥವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದರು.
|
4 |
+
ಇಸ್ರೇಲ್ ಮಹಿಳೆಯರ ಮೇಲೆ ಹಮಾಸ್ ಉಗ್ರರ ಲೈಂಗಿಕ ಅಟ್ಟಹಾಸ : ಬಿಡೆನ್ ಖಂಡನೆ
|
5 |
+
ಅರ್ಜನ ಸಾವಿನ ವರದಿ ನೀಡಲು ಸೂಚನೆ :ಎಂಟು ಬಾರಿ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವಿಗೀಡಾಗಿದೆ. ಇನ್ನೂ ಹೆಚ್ಚು ಕಾಲ ಬದುಕಬೇಕಿತ್ತು. ಆದರೆ ಆನೆ ಕಾರ್ಯಾಚರಣೆಗೆ ಅರ್ಜುನನನ್ನು ಉಪಯೋಗಿಸಿದ ಕಾರಣದಿಂದ ಸಾವನ್ನಪ್ಪಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಕೇಳಿದ್ದೇನೆ. ಅರ್ಜುನ ಆನೆ ಸಕಲೇಶಪುರದಲ್ಲಿ ಎಲ್ಲಿ ಪ್ರಾಣ ಕಳೆದುಕೊಂಡಿದೆಯೋ ಅಲ್ಲಿಯೇ ಸ್ಮಾರಕ ಮಾಡುತ್ತೇವೆ. ಹೆಗ್ಗಡದೇವನಕೋಟೆಲ್ಲಿಯೂ ಸ್ಮಾರಕ ಮಾಡಲು ತಿಳಿಸಿದ್ದೇವೆ ಎಂದರು.
|
6 |
+
ಡಾಲಿ ಧನಂಜಯ ಲಿಡ್ಕರ್ ರಾಯಭಾರಿ: ಲಿಡ್ಕರ್ ಉತ್ಪನ್ನಗಳಿಗೆ ಖ್ಯಾತ ನಟ ಡಾಲಿ ಧನಂಜಯ ಅವರನ್ನು ರಾಯಭಾರಿಯಾಗಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ತಿಳಿಸಿದರು. ಧನಂಜಯ್ಯ ಅವರು ಉದಯೋನ್ಮುಖ ನಟ. ಸಾಮಾಜಿಕ ಕಳಕಳಿ ಇರುವ ನಟ. ಅವರನ್ನು ರಾಯಭಾರಿಯಾಗಿ ಮಾಡಿರುವುದು ಅರ್ಥಪೂರ್ಣವಾಗಿದೆ. ಉಚಿತವಾಗಿ ರಾಯಬಾರಿ ಕೆಲಸ ಮಾಡಲಿದ್ದಾರೆ. ಇದರಿಂದಾಗಿ ಚರ್ಮೋದ್ಯಮಕ್ಕೆ ಉತ್ತೇಜನ ಸಿಗಲಿದೆ ಎಂದರು.
|
7 |
+
ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಹೈಕಮಾಂಡ್ ಅಭಿಪ್ರಾಯ ಸಂಗ್ರಹಿಸಿದ್ದು, ರೇವಂತ್ ರೆಡ್ಡಿ ಅವರಿಗೆ ಬಹುಮತ ಇದೆಯೆಂದು ಆಯ್ಕೆ ಮಾಡಿದ್ದಾರೆ. ನಾವು ಅಲ್ಲಿ ಆರು ಗ್ಯಾರಂಟಿ ಭರವಸೆಗಳನ್ನು ಕೊಟ್ಟಿದ್ದೇವೆ. ಕಾಂಗ್ರೆಸ್ ಮತ್ತು ನಮ್ಮ ನಾಯಕರ ಮೇಲೆ ಜನ ವಿಶ್ವಾಸ ಇಟ್ಟಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ನಂಬಿಕೆ ಇಟ್ಟಿದ್ದಾರೆ. ಕೊಟ್ಟ ಮಾತಿನಂತೆ ನಂಬಿಕೆ ಉಳಿಸಿಕೊಳ್ಳುವ ವಿಶ್ವಾಸ ಇದೆ ಎಂದು ಅವರು ಹೇಳಿದರು.
|
8 |
+
ರಾಯಬಾರಿಯಾಗಿರುವುದು ಖುಷಿ ತಂದಿದೆ:ರಾಯಬಾರಿಯಾದ ಬಳಿಕ ನಟ ಡಾಲಿ ಧನಂಜಯ ಮಾತನಾಡಿ, ಮೊದಲನೇ ಬಾರಿಗೆ ರಾಯಬಾರಿ ಆಗಿರುವುದು ಖುಷಿ ಇ��ೆ. ಅದೂ ಕೂಡ ಲಿಡ್ಕರ್ಗೆ ರಾಯಭಾರಿ ಆಗುತ್ತಿರುವುದು ಇನ್ನೂ ಹೆಚ್ಚಿನ ಖುಷಿಯಾಗುತ್ತಿದೆ. ಸುಮಾರು 50 ಸಾವಿರ ಕುಟುಂಬಗಳು ಈ ಉದ್ಯಮದಲ್ಲಿವೆ. ಲಿಡ್ಕರ್ ಕೇಂದ್ರಕ್ಕೆ ಭೇಟಿ ನೀಡಿದಾಗ ಅಲ್ಲಿ ಕಲ್ಯಾಣಮ್ಮ ಮತ್ತು ಹರಳಯ್ಯ ಅವರ ಭಾವಚಿತ್ರ ಹಾಕಿದ್ದರು. ನಮ್ಮ ಕರ್ನಾಟಕದಲ್ಲಿ ಕಲ್ಯಾಣಮ್ಮ ಮತ್ತು ಹರಳಯ್ಯ ರಂತಹ ಸಾವಿರಾರು ಜನ ಕುಶಲಕರ್ಮಿಗಳಿದ್ದಾರೆ ಎಂದರು.
|
9 |
+
ಮಳೆ ಹಾನಿ : 5060 ಕೋಟಿ ರೂ. ಪರಿಹಾರಕ್ಕೆ ತಮಿಳುನಾಡು ಮನವಿ
|
10 |
+
ಇದು ಸರ್ಕಾರದಿಂದಲೇ ಮಾಡಿರುವಂತಹ ಉತ್ಪನ್ನ. ಇದರಿಂದ ಏನೇ ಬಂದರೂ ಅಷ್ಟೂ ಕುಟುಂಬಗಳಿಗೆ ಹೋಗುತ್ತದೆ. ಈ ಸಂಸ್ಥೆಗೆ ನನ್ನನ್ನು ರಾಯಭಾರಿಯಾಗಿ ಮಾಡಿದ್ದು ಖುಷಿ ಇದೆ. ಸಿದ್ದರಾಮಯ್ಯ ಮತ್ತು ಮಹದೇವಪ್ಪ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.
|
11 |
+
ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿಗಳು ನಂದಿನಿ ಹಾಲಿನ ಬಗ್ಗೆ ಹೇಳಿದ್ದರು. ನಂದಿನಿ, ಮೈಸೂರ್ ಸಿಲ್ಕ, ಮೈಸೂರ್ ಸ್ಯಾಂಡಲ್, ಲಿಡ್ಕರ್ ಇವು ನಮ್ಮದೇ ಉದ್ಯಮ. ಇದು ಮೇಡ್ ಇನ್ ಕರ್ನಾಟಕ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ, ಮಾಜಿ ಸಚಿವ ಎಚ್. ಆಂಜನೇಯ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
|
eesanje/url_46_296_10.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಅಕ್ರಮ ಗಣಿಗಾರಿಕೆ ನಡೆಸುವವರಿಂದ 87.51 ಕೋಟಿ ರೂ. ದಂಡ ವಸೂಲಿ
|
2 |
+
ಬೆಳಗಾವಿ,ಡಿ.5-ರಾಜ್ಯದಲ್ಲಿ ಕಳೆದ ಐದು ವರ್ಷಗಳ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುವವರಿಂದ 87.51 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. ವಿಧಾನಪರಿಷತ್ನಲ್ಲಿಂದು ಸದಸ್ಯ ಜೆಡಿಎಸ್ ಸದಸ್ಯ ಟಿ.ಎ.ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಅಕ್ರಮ ಗಣಿಗಾರಿಕೆ ಮತ್ತು ಸುಪ್ರೀಂಕೋರ್ಟ್ ಆದೇಶ ಉಲ್ಲಂಘನೆ ಮಾಡಿರುವ ಗಣಿ ಮಾಲೀಕರ ವಿರುದ್ಧ 87.51 ಕೋಟಿ ದಂಡ ವಸೂಲಿ ಮಾಡಲಾಗಿದೆ ಎಂದರು.
|
3 |
+
ಕಳೆದ ಮೂರು ವರ್ಷಗಳ ಅವಯಲ್ಲಿ 42,53,50,000 ರೂ. ದಂಡ ಹಾಗೂ 211 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಇತ್ತೀಚೆಗೆ ಸಚಿವ ಸಂಪುಟ ಉಪಸಮಿತಿಯಲ್ಲೂ ಇದರ ಬಗ್ಗೆ ವ್ಯಾಪಕವಾಗಿ ಚರ್ಚಿಸಿ ಎಲ್ಲೆಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಿ ಗಣಿಗಾರಿಕೆ ನಡೆಸಿದ್ದಾರೋ ಅಂತಹ ಕಡೆ ಇನ್ನಷ್ಟು ದಂಡ ಹಾಕಬೇಕೆಂಬ ಚರ್ಚೆ ಇದೆ ಎಂದು ಹೇಳಿದರು.
|
4 |
+
ಬಿಜೆಪಿ-ಜೆಡಿಎಸ್ ಮೋದಿ ನಾಯಕತ್ವದಲ್ಲಿ ಮುನ್ನಡೆಯಲಿದೆ : ದೇವೇಗೌಡರು
|
5 |
+
ರಾಜ್ಯದ ಎಲ್ಲಾ ಕಡೆ ಡ್ರೋನ್ ಮೂಲಕ ಸರ್ವೆ ನಡೆಸಿ ಕಾನೂನು ಉಲ್ಲಂಘನೆ ಮಾಡಿರುವವರ ಮೇಲೆ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದರಲ್ಲಿ ಯಾವುದೇ ಕಾರಣಕ್ಕೂ ಸರ್ಕಾರ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
|
eesanje/url_46_296_11.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮೆಕ್ಕೆಜೋಳ ಗೋದಾಮು ದುರಂತದಲ್ಲಿ ಮತೃಪಟ್ಟ ಕಾರ್ಮಿಕರ ಸಂಖ್ಯೆ 7ಕ್ಕೆ ಏರಿಕೆ
|
2 |
+
ವಿಜಯಪುರ, ಡಿ.5- ಕೈಗಾರಿಕ ಪ್ರದೇಶದಲ್ಲಿರುವ ಗೋದಾಮಿನಲ್ಲಿ ಮೆಕ್ಕೆಜೋಳದ ಮೂಟೆಗಳು ಕಾರ್ಮಿಕರ ಮೇಲೆ ಉರುಳಿ ಬಿದ್ದು, ಅದರಡಿಯಲ್ಲಿ ಸಿಲುಕಿದ್ದ ಕಾರ್ಮಿಕರ ಪೈಕಿ ಏಳು ಮಂದಿ ಮೃತಪಟ್ಟಿದ್ದು, ಮೃತದೇಹಗಳನ್ನು ರಕ್ಷಣಾ ಸಿಬ್ಬಂದಿ ಹೊರ ತೆಗೆದಿದ್ದಾರೆ.ಬಿಹಾರ ಮೂಲದ ಕಾರ್ಮಿಕರಾದ ರಾಜೇಶ್ ಮುಖಿಯಾ(25), ರಾಮಬ್ರೀಜ್ ಮುಖಿಯಾ(29), ಶಂಭು ಮುಖಿಯಾ(26), ಲುಕೋ ಜಾಧವ್(45), ರಾಮ್ ಬಾಲಕ್(52), ಕೃಷ್ಣಕುಮಾರ್(22), ಗುರುಲಾಲ್ ಚಂದ್(50) ಮೃತಪಟ್ಟ ದುರ್ದೈವಿಗಳು.
|
3 |
+
ಬಿಜೆಪಿ-ಜೆಡಿಎಸ್ ಮೋದಿ ನಾಯಕತ್ವದಲ್ಲಿ ಮುನ್ನಡೆಯಲಿದೆ : ದೇವೇಗೌಡರು
|
4 |
+
ವಿಜಯಪುರ ನಗರದ ಹೊರ ವಲಯದಲ್ಲಿ ರಾಜಗುರು ಇಂಡಸ್ಟ್ರೀಸ್ ಎಂಬ ಗೋದಾಮು ಇದ್ದು, ಈ ಗೋದಾಮಿನಲ್ಲಿ ಮೆಕ್ಕೆಜೋಳದ ಮೂಟೆಗಳನ್ನು ಸಂಗ್ರಹಿಸಿಡಲಾಗಿದೆ. ಹಲವು ವರ್ಷಗಳಿಂದ ಬಿಹಾರ ಮೂಲದ ಕಾರ್ಮಿಕರು ಈ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದಾರೆ. ನಿನ್ನೆ ಸಂಜೆ ಕಾರ್ಮಿಕರು ಕೆಲಸದಲ್ಲಿ ತೊಡಗಿದ್ದಾಗ ಏಕಾಏಕಿ ಮೆಕ್ಕೆಜೋಳದ ಮೂಟೆಗಳು ಅವರ ಮೇಲೆ ಉರುಳಿ ಬಿದ್ದಿವೆ. ತಕ್ಷಣ ನಾಲ್ಕು ಜೆಸಿಬಿಗಳ ಮೂಲಕ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತ್ತಾದರೂ ಕಾರ್ಮಿಕರನ್ನು ಆ ಸಂದರ್ಭದಲ್ಲಿ ರಕ್ಷಿಸಲು ಸಾಧ್ಯವಾಗಿಲ್ಲ.
|
5 |
+
ಸ್ಥಳಕ್ಕೆ ಬೆಳಗಾವಿ ಹಾಗೂ ಕಲಬುರಗಿಯಿಂದ ಎಸ್ಡಿಆರ್ಎಫ್ ಸಿಬ್ಬಂದಿ, ಅಗ್ನಿಶಾಮಕ ದಳದ ಸಿಬ್ಬಂದಿಯೂ ಸಹ ರಕ್ಷಣಾ ತಂಡದ ಜೊತೆ ಕೈಜೋಡಿಸಿ ಕಾರ್ಮಿಕರ ಮೇಲೆ ಬಿದ್ದಿರುವ ಮೂಟೆಗಳನ್ನು ತೆರವು ಮಾಡುವ ಕಾರ್ಯಾಚರಣೆ ಬರದಿಂದ ಸಾಗಿತ್ತು. ಸಂಜೆಯಿಂದ ನಿರಂತರವಾಗಿ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದರಾದರೂ ಮೂಟೆಗಳಡಿ ಸಿಲುಕಿ ಉಸಿರುಗಟ್ಟಿ ಕಾರ್ಮಿಕರು ಮೃತಪಟ್ಟಿದ್ದು, ಇದುವರೆಗೂ ಏಳು ಮಂದಿ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ.
|
6 |
+
ಸಚಿವರ ಭೇಟಿ:ಬೆಳಗಾವಿಯ ವಿಧಾನಮಂಡಲದ ಅಧಿವೇಶನದಲ್ಲಿದ್ದ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಅಲ್ಲಿಂದ ವಾಪಸ್ ಆಗಿದ್ದು, ರಾಜಗುರು ಮೆಕ್ಕೆಜೋಳ ಸಂಸ್ಕರಣ ಘಟಕಕ್ಕೆ ಆಗಮಿಸಿ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಸ್ಥಳದಲ್ಲಿದ್ದ ಕಾರ್ಮಿಕರಿಗೆ ಸಾಂತ್ವನ ಹೇಳಿದರು.
|
7 |
+
ಭೀಕರ ದುರಂತ:ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಭೀಕರ ದುರಂತ ನಡೆದು ಹೋಗಿದೆ. ಉದ್ಯೋಗ ಅರಸಿಕೊಂಡು ಬೇರೆ ರಾಜ್ಯದಿಂದ ಇಲ್ಲಿಗೆ ಬಂದು ಕೆಲಸ ಮಾಡುತ್ತಿರುವಾಗ ಇಂತಹ ಅನಾಹುತ ಸಂಭವಿಸಿರುವುದು ವಿಷಾದಕರ. ನಮ್ಮ ಪ್ರಥಮ ಆದ್ಯತೆ ಕಾರ್ಮಿಕರ ರಕ್ಷಣೆಯಾಗಿದೆ ಎಂದರು.ಕಾರ್ಮಿಕರ ಮೃತದೇಹಗಳನ್ನು ಅವರ ಮನೆಗಳಿಗೆ ತಲುಪಿಸುವಂತಹ ಕಾರ್ಯ ಮಾಡಲಾಗುತ್ತದೆ. ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಪೊಲೀ��್ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡಿ ಮಾಹಿತಿ ಪಡೆದುಕೊಂಡು ಮುಖ್ಯಮಂತ್ರಿಗಳಿಗೂ ಸಹ ಈ ಬಗ್ಗೆ ವಿವರಿಸಿದ್ದೇನೆ. ಗಾಯಾಳುಗಳಿಗೆ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.
|
8 |
+
ಮೃತರ ಕುಟುಂಬಕ್ಕೆ ಪರಿಹಾರ:ಮೃತ ಕಾರ್ಮಿಕರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದಾಗಿ ಭರವಸೆ ನೀಡಿದ ಸಚಿವರು, ಗೋದಾಮು ಮಾಲೀಕರಿಂದಲೂ ಸಹ ಕಾರ್ಮಿಕರ ಕುಟುಂಬಕ್ಕೆ ಪರಿಹಾರ ಕೊಡಿಸುವ ಕೆಲಸ ಮಾಡುತ್ತೇನೆ ಎಂದರು.ಗೋದಾಮಿನಲ್ಲಿ ಸಂಪೂರ್ಣ ಕಾರ್ಯಾಚರಣೆ ಮುಗಿದ ನಂತರ ಹೆಚ್ಚಿನ ಮಾಹಿತಿ ದೊರೆಯಲಿದೆ. ಕಾರ್ಮಿಕರು ಮತ್ತು ಕುಟುಂಬಸ್ಥರು ದುಃಖದಲ್ಲಿದ್ದಾರೆ ಎಂದರು.
|
9 |
+
ಬಿಗುವಿನ ವಾತಾವರಣ:ರಕ್ಷಣ ಕಾರ್ಯಾಚರಣೆ ವೇಳೆ ಗೋದಾಮಿನ ಬಳಿ ಬಿಗುವಿನ ವಾತಾವರಣ ಉಂಟಾಗಿತ್ತು. ರಕ್ಷಣಾ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿ, ಗ್ಯಾಸ್ ಕಟರ್ ಮೂಲಕ ಕಬ್ಬಿಣದ ರಾಡುಗಳನ್ನು ಕತ್ತರಿಸಿ ಕಾರ್ಮಿಕರ ಶವಗಳನ್ನು ಹೊರತೆಗೆದು ಮೃತದೇಹಗಳನ್ನು ಅಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲು ದಾರಿ ಬಿಡದೆ ಪ್ರತಿಭಟನೆಗೆ ಮುಂದಾದರು. ಅಂಬ್ಯಲೆನ್ಸ್ನ್ನು ಅಡ್ಡ ಹಾಕಿ ಮೊದಲು ಪರಿಹಾರ ಘೋಷಿಸಿ ನಂತರ ಮೃತದೇಹಗಳನ್ನು ಕೊಂಡೊಯ್ಯಿರಿ ಎಂದು ಪಟ್ಟು ಹಿಡಿದರು. ಆ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಸಚಿವರು ಕಾರ್ಮಿಕರ ಮನವೊಲಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
|
10 |
+
ಮುಸ್ಲಿಮರಿಗೆ ಸಂಪತ್ತು ಹಂಚುತ್ತೇನೆ ಎಂದ ಸಿಎಂಗೆ ತಿರುಗೇಟು ಕೊಟ್ಟ ಅಶೋಕ್
|
11 |
+
ಕಾರ್ಮಿಕರ ರಕ್ಷಣೆ:ಮೆಕ್ಕೆಜೋಳ ಮೂಟೆಗಳಡಿ 11 ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದ್ದು, ಮೂವರನ್ನು ರಕ್ಷಿಸಲಾಗಿದೆ. ಏಳು ಮಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸಿಲುಕಿರುವ ಕಾರ್ಮಿಕರ ರಕ್ಷಣೆಗಾಗಿ ಪೂನಾದಿಂದ 30ಕ್ಕೂ ಅಧಿಕ ಸಿಬ್ಬಂದಿ ಇರುವ ಎನ್ಡಿ ಆರೆಸ್ಟ್ ತಂಡ ಕಾರ್ಯಾಚರಣೆಯಲ್ಲಿ ತೊಡಗಿದೆ.
|
eesanje/url_46_296_12.txt
ADDED
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ
|
2 |
+
ಬೆಂಗಳೂರು, ಡಿ. 5- ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯಾದ್ಯಂತ ಮಿಂಚಿನ ದಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ 63 ಕಡೆ 13 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಅಪಾರ ಪ್ರಮಾಣದ ಅಕ್ರಮ ಸಂಪತ್ತನ್ನು ಬಯಲಿಗೆಳೆದಿದ್ದಾರೆ.
|
3 |
+
ಬೆಳಗಾವಿಯಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿಗಳು, ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ವಿಶೇಷವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ .ವೈ.ವಿಜಯೇಂದ್ರ ಅವರ ಪತ್ನಿಯ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
|
4 |
+
ಯಾದಗಿರಿಯಲ್ಲಿ ಡಿಎಚ್ಒ ಆಗಿರುವ ಡಾ.ಪ್ರಭುಲಿಂಗ ಮಾನಕರ್ ಅವರ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ನಿವಾಸ ಸೇರಿದಂತೆ ಹಲವೆಡೆ ಲೋಕಾ ಅಧಿಕಾರಿಗಳು ಶೋಧ ನಡೆಸಿದ್ದು, ಈ ವೇಳೆ 300 ಗ್ರಾಂ ಚಿನ್ನಾಭರಣ ಹಾಗೂ 4 ಲಕ್ಷ ನಗದು ಪತ್ತೆಯಾಗಿದ್ದು, ಇವರ ಸಂಬಂಗಳ ನಿವಾಸಗಳಲ್ಲೂ ಕೂಡ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
|
5 |
+
ಮುಸ್ಲಿಮರಿಗೆ ಸಂಪತ್ತು ಹಂಚುತ್ತೇನೆ ಎಂದ ಸಿಎಂಗೆ ತಿರುಗೇಟು ಕೊಟ್ಟ ಅಶೋಕ್
|
6 |
+
ಬೆಂಗಳೂರಿನ ಮೈಸೂರು ರಸ್ತೆ ಕಣಿಮಿಣಿಕೆ ಬಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಕಾರಿ ಹೆಚ್.ಎಸ್.ಕೃಷ್ಣಮೂರ್ತಿ ಮನೆ ಹಾಗೂ ಕುಂಬಳಗೋಡು ಬಳಿಯ ಕಚೇರಿ ಸೇರಿದಂತೆ ಹಲವೆಡೆ ದಾಳಿ ನಡೆದಿದ್ದು, ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.ಕೃಷಿ ಜಮೀನು, ಹಲವೆಡೆ ನಿವೇಶನ ಸೇರಿದಂತೆ ಹಲವು ಆಸ್ತಿ ದಾಖಲೆ ಪತ್ರಗಳು ಪತ್ತೆಯಾಗಿವೆ.
|
7 |
+
ಬೆಸ್ಕಾಂ ಜಾಗೃತ ದಳದ ಅಧಿಕಾರಿ ಸುಧಾಕರ್ ರೆಡ್ಡಿ ಅವರ ಅಮೃತಹಳ್ಳಿಯಲ್ಲಿರುವ ಅಪಾರ್ಟ್ಮೆಂಟ್ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. 92.95 ಲಕ್ಷ ನಗದು, ಚಿನ್ನಾಭರಣ,28 ಕೆಜಿ ಬೆಳ್ಳಿ, 25 ಲಕ್ಷ ಮೌಲ್ಯದ ವಜ್ರದ ಆಭರಣಗಳು ಹಾಗೂ ಅಪಾರ ಪ್ರಮಾಣದ ಸ್ಥಿರಾಸ್ತಿಗಳು ಪತ್ತೆಯಾಗಿವೆ. ಚಿಂತಾಮಣಿ ಬಳಿಯ ಸಂಬಂಧಿಕರ ಮನೆ ಮೇಲೂ ದಾಳಿ ನಡೆದಿದೆ.
|
8 |
+
ನಂಜನಗೂಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಎಂಬುವವರ ಮೈಸೂರಿನ ಗುರುಕುಲ ಬಡಾವಣೆ ನಿವಾಸ ಸೇರಿ 12 ಕಡೆ ಕಾರ್ಯಾಚರಣೆ ನಡೆದಿದೆ. ಕುಟುಂಬದ ಹೆಸರಿನಲ್ಲಿ ಎಂ.ಎಸ್. ಗ್ರೂಪ್ ಕಂಪೆನಿ ಇದ್ದು, ಇದರಲ್ಲಿ ಇವರ ಹೂಡಿಕೆ ಇದೆ ಎಂಬ ಆರೋಪವಿದ್ದು, ಪಿ.ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಡಿಎಸ್ಪಿ ಕೃಷ್ಣಯ್ಯ ನೇತೃತ್ವದಲ್ಲಿ 12 ತಂಡಗಳಿಂದ ವಿವಿಧ ಕಡೆಗಳಲ್ಲಿ ಪರಿಶೀಲನೆ ನಡೆದಿದೆ.
|
9 |
+
ಬಳ್ಳಾರಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಚಂದ್ರಶೇಖರ, ಅರಣ್ಯ ಇಲಾಖೆಯ ಡಿಆರ್ಎಫ್ಒ ಮಾರುತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆದಿದೆ. ಚಂದ್ರಶೇಖರ್ ಬಳ್ಳಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಮನೆ ಮಾತ್ರ ಹೊಸಪೇಟೆಯಲ್ಲಿದೆ. ಇನ್ನು ಅರಣ್ಯ ಇಲಾಖೆಯ ಡಿಆರ್ಎಫ್ಓ ಮಾರುತಿ ಗಂಗಾವತಿಯಲ್ಲಿ ಕೆಲಸ ಮಾಡುತ್ತಿದ್ದು , ಮನೆ ಕಂಪ್ಲಿಯಲ್ಲಿದೆ. ಹೀಗಾಗಿ ಚಂದ್ರಶೇಖರ ಅವರ ಹೊಸಪೇಟೆ ಮನೆ ಮತ್ತು ಮಾರುತಿ ಅವರ ಕಂಪ್ಲಿ ಮತ್ತು ಗಂಗಾವತಿ ನಿವಾಸದ ಮೇಲೆ ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸಲಾಗುತ್ತಿದ್ದು ಅಪಾರ ಪ್ರಮಾಣದ ಸಂಪತ್ತು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.
|
10 |
+
ಬೀದರ್ನಲ್ಲೂ ಸಹ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ಬೀದರ್ನ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ನೌಕರರ ಸುನೀಲ್ ಕುಮಾರ್ ಮನೆ ಹಾಗೂ ಅವರ ಒಡೆತನದ ಕಾಂಪ್ಲೆಕ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಕೃಷಿ ಇಲಾಖೆ ಉಪನಿರ್ದೇಶಕ ಮುನೇಗೌಡ ಅವರ ನಂದಿ ಕ್ರಾಸ್ ಬಳಿ ಇರುವ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.
|
11 |
+
ಚಿಕ್ಕಬಳ್ಳಾಪುರದ ಹಲವೆಡೆ ಇವರು ಅಪಾರ ಪ್ರಮಾಣದ ಆಸ್ತಿ ಖರೀದಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಹಲವಾರು ದಾಖಲೆಗಳನ್ನು ಪರಿಶೀಲಿಸಲಾಗುತ್ತಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
|
12 |
+
ಪೊಲೀಸರು ಕಾಂಗ್ರೆಸ್ ಏಜೆಂಟ್ ಆಗಿದ್ದಾರೆ : ಯತ್ನಾಳ್ ವಾಗ್ದಾಳಿ
|
13 |
+
ಬೆಳಗಾವಿಯಲ್ಲಿ ಕೆಆರ್ಐಡಿಎಲ್ನ ಸೂಪರಿಂಡೆಂಟ್ ಎಂಜಿನಿಯರ್ ತಿಮ್ಮರಾಜಪ್ಪ ಅವರ ನಿವಾಸ ಸೇರಿದಂತೆ 8 ಕಡೆ ಲೋಕಾಯುಕ್ತ ದಾಳಿ ನಡೆದಿದೆ. ಕೋಲಾರದ ಕೆಜಿಎಫ್ನಲ್ಲಿರುವ ಸ್ವಂತ ಊರಿನಲ್ಲಿರುವ ಮನೆ ಹಾಗೂ ಅವರ ಸಂಬಂಧಿಕರ ಮನೆ ಮೇಲೂ ದಾಳಿ ನಡೆಸಲಾಗಿದೆ. ಕೋಲಾರ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ.
|
eesanje/url_46_296_2.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸಿದ್ದರಾಮಯ್ಯ ಜೊತೆ ವೇದಿಕೆಯಲ್ಲಿ ಪಾಕ್ ಐಎಸ್ಐ ಸಂಪರ್ಕ ಹೊಂದಿರುವ ಮೌಲ್ವಿ : ಯತ್ನಾಳ್ ಬಾಂಬ್
|
2 |
+
ಬೆಳಗಾವಿ,ಡಿ.6- ಪಾಕಿಸ್ತಾನದ ಗುಪ್ತಚರ ಐಎಸ್ಐ ಜೊತೆ ಸಂಪರ್ಕ ಹೊಂದಿರುವ ಮೌಲ್ವಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದ ಐಎಸ್ಐ ಹಾಗೂ ಭಯೋತ್ಪಾದನೆ ಸಂಘಟನೆಗಳ ಜೊತೆ ಸಂಪರ್ಕ ಇಟ್ಟುಕೊಂಡಿರುವ ಮೌಲ್ವಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಂಡಿದ್ದು ಅತ್ಯಂತ ದುರ್ದೈವ ಎಂದು ವಾಗ್ದಾಳಿ ನಡೆಸಿದರು.
|
3 |
+
ಮುಖ್ಯಮಂತ್ರಿ@siddaramaiahಅವರು ಹುಬ್ಬಳ್ಳಿಯ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಆವರಣದಲ್ಲಿ ನಡೆದ ಬೃಹತ್ ಔಲಾದೇ ಗೌಸೆ ಅಜಮ್ (ಮೆಹಬೂಬೇ ಸುಭಾನೇ ಮಕ್ಕಳ ಸಮಾವೇಶ) ಉದ್ಘಾಟಿಸಿದರು.ಅಲ್ಹಜ್ ಸಯ್ಯದ್ ತಾಜುದ್ದೀನ್ ಖಾದ್ರಿ ಅಲ್ ಜಿಲಾನಿ, ಗುಲ್ಬರ್ಗಾ ಷರೀಫ್ ನ ಹಜರತ್ ಕ್ವಾಜಾ ಬಂದನವಾಜ್ ದರ್ಗಾದ ಖುಸ್ರೂ ಹುಸೇನ್ ಸಾಬ್ ಖಿಲಾಬಿ ಅವರ ದಿವ್ಯ…../PjBcK7t235
|
4 |
+
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿದಾಗ ಅದು ಹೇಗೆ ಜಾರಿ ಮಾಡುತ್ತೀರಿ ಎಂದು ಇದೇ ಮೌಲ್ವಿ ಪ್ರಾಣ ಬೆದರಿಕೆ ಹಾಕಿದ್ದ . ಇಂಥವರ ಬಗ್ಗೆ ಕಾಳಜಿ ತೋರುವ ಮುಖ್ಯಮಂತ್ರಿ ವೇದಿಕೆ ಹಂಚಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ? ಎಂದು ಪ್ರಶ್ನಿಸಿದರು.ದೇಶದ ಪ್ರಧಾನಿ ರಾಜ್ಯಕ್ಕೆ ಬರುವಾಗ ಅವರ ಜೊತೆ ಯಾರ್ಯಾರು ಇರಬೇಕೆಂದು ಮೊದಲು ತೀರ್ಮಾನವಾಗುತ್ತದೆ. ಅಲ್ಲದೆ ಪೂರ್ವಪರ ಹಿನ್ನೆಲೆಯಲ್ಲ ಮಾಹಿತಿಯನ್ನು ಕಲೆ ಹಾಕಲಾಗುತ್ತದೆ. ಅದೇ ಮುಖ್ಯಮಂತ್ರಿ ಜೊತೆ ವೇದಿಕೆ ಹಂಚಿಕೊಳ್ಳುವಾಗ ಪೊಲೀಸ್ ಇಲಾಖೆ ಹಾಗೂ ಗುಪ್ತಚರಕ್ಕೆ ಮಾಹಿತಿ ಇರುವುದಿಲ್ಲವೇ ಎಂದು ಪ್ರಶ್ನಿಸಿದರು.
|
5 |
+
ತುರ್ತು ಚಿಕಿತ್ಸೆಗಾಗಿ ಕರಾಚಿ ವಿಮಾನ ನಿಲ್ದಾಣದಲ್ಲಿ ಇಳಿದ ಸ್ಪೈಸ್ಜೆಟ್
|
6 |
+
ಈ ಮೌಲ್ವಿಯ ಹಿನ್ನೆಲೆ ಏನೆಂಬುದನ್ನು ಒಂದು ವಾರದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿ ಕೊಡುತ್ತೇನೆ. ಮುಖ್ಯಮಂತ್ರಿಯವರು ಇಂಥವರ ಜೊತೆ ವೇದಿಕೆ ಹಂಚಿಕೊಂಡು ರಾಜ್ಯದ ಜನತೆಗೆ ಏನು ಸಂದೇಶ ಕೊಡುತ್ತಾರೆ ಎಂದು ಪ್ರಶ್ನೆ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ಹಣ ಹಂಚುತ್ತೇನೆ ಎಂದು ಹೇಳಿದ್ದಾರೆ. ನೀವು ಕೇವಲ ಮುಸ್ಲಿಮರಿಗೆ ಮಾತ್ರ ಮುಖ್ಯಮಂತ್ರಿಯಲ್ಲ. ಈ ರಾಜ್ಯದ ಮುಖ್ಯಮಂತ್ರಿ ಎಂಬುದನ್ನು ಮರೆಯಬೇಡಿ. ನಿಮಗೆ ಕೇವಲ ಅವರೊಬ್ಬರೇ ಮಾತ್ರ ಮತ ಹಾಕಿದ್ದಾರೆಯೇ ಎಂದು ಪ್ರಶ್ನಿಸಿದರು.
|
7 |
+
ರಾಜ್ಯದ ಮುಖ್ಯಮಂತ್ರಿಯಾದವರು ಎಲ್ಲಾ ಸಮುದಾಯದವರನ್ನು ಸಮಾನವಾಗಿ ಕಾಣಬೇಕು. ಕೇವಲ ವೋಟ್ ಬ್ಯಾಂಕ್ಗಾಗಿ ಒಂದು ಸಮುದಾಯವನ್ನು ಓಲೈಕೆ ಮಾಡುವುದು ಸರಿಯಲ್ಲ. ಹೀಗೆ ತುಷ್ಟೀಕರಣ ಮಾಡಿದ್ದರಿಂದಲೇ ನಿಮ್ಮ ಪರಿ���್ಥಿತಿ ಏನಾಯಿತು ಎಂಬುದನ್ನು ಪಂಚರಾಜ್ಯ ಚುನಾವಣೆಯಿಂದಾದರೂ ತಿಳಿದುಕೊಳ್ಳಿ ಎಂದರು. ನೀವು ನಿಮ್ಮ ಪಕ್ಷದ ವತಿಯಿಂದ ಹಣ ನೀಡಿದರೆ ಸಮಸ್ಯೆ ಇಲ್ಲ. ಸರ್ಕಾರದ ದುಡ್ಡು ಎಲ್ಲ ಸಮುದಾಯಗಳಿಗೂ ಸದ್ಬಳಕೆಯಾಗಲಿ ಎಂದು ಹೇಳಿದರು.
|
8 |
+
ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿ ತಂದೆ ನಿಗೂಢ ಸಾವು
|
9 |
+
ಸ್ವಪಕ್ಷೀಯರ ವಿರುದ್ಧ ವಾಗ್ದಾಳಿ:ಇನ್ನು ಯತ್ನಾಳ್ ಎಂದಿನಂತೆ ಸ್ವಪಕ್ಷೀಯರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದರು. ನಾನಾಗಿಯೇ ದೆಹಲಿಗೆ ಹೋಗುವುದಿಲ್ಲ. ದೆಹಲಿಯಿಂದ ಕರೆ ಬಂದ ಮೇಲೆ ಹೋಗುತ್ತೇನೆ. ನಿನ್ನೆ ಸೂಚನೆ ಕೊಟ್ಟಿದ್ದಾರೆ. ಯಾವಾಗ ಕರೆ ಬರುತ್ತದೆ ಆಗ ಹೋಗುತ್ತೇನೆ ಎಂದು ಹೇಳಿದರು.
|
10 |
+
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಅವರಿಗೂ ಹೇಳಿರಬಹುದು. ದೆಹಲಿಗೆ ಹೋಗುವುದು ನಿಶ್ಚಿತ, ಖಚಿತ. ಉಚಿತ ಇಲ್ಲ ಎಂದು ವ್ಯಂಗ್ಯವಾಡಿದರು. ಇಬ್ಬರು ಮಹಾನುಭಾವರು ಇದ್ದಾರೆ. ಅವರಿಂದ ಕರ್ನಾಟಕದಲ್ಲಿ ಈ ಪರಿಸ್ಥಿತಿ ಬಂದಿದೆ. ಇಬ್ಬರು ಸಿಂಗ್ಗಳಿಂದ ಈ ನಿರ್ಧಾರ ಮಾಡಿದ್ದೇನೆ. ದೆಹಲಿಯ ಒಬ್ಬರು, ಕರ್ನಾಟಕದ ಒಬ್ಬರು ಇದ್ದಾರೆ ಎಂದು ಮಾರ್ಮಿಕವಾಗಿ ನುಡಿದರು.
|
eesanje/url_46_296_3.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಸಚಿವರು ಗೈರು, ಸಭಾಪತಿ ಗರಂ
|
2 |
+
ಬೆಳಗಾವಿ, ಡಿ.5- ಬೆಳಗಾವಿಯ ಚಳಿಗಾಲದ ಅಧಿವೇಶನ ಎರಡನೇ ದಿನವಾದ ಇಂದೂ ಸಹ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಚಿವರು ಗೈರಾಗಿದ್ದಕ್ಕೆ ಮುಖ್ಯ ಸಚೇತಕ ಸಲೀಂ ಅಹ್ಮದ್ ಮೇಲೆ ಗರಂ ಆದರು.
|
3 |
+
ಪ್ರಶ್ನೋತ್ತರ ಕಲಾಪದ ವೇಳೆ ಇಲಾಖೆಗೆ ಸಂಬಂಧಿಸಿದ ಸಚಿವರು ಕಾಣದ ಹಿನ್ನೆಲೆಯಲ್ಲಿ ವಿಷಯ ಪ್ರಸ್ತಾಪಿಸಿದ ಸಭಾಪತಿ ಹೊರಟ್ಟಿ, ಯಾರು, ಯಾವ ಇಲಾಖೆ ಸಚಿವರು ಗೈರಾಗುತ್ತಾರೆ ಎಂದು ಸರ್ಕಾರದ ಪರವಾಗಿ ಮುಖ್ಯ ಸಚೇತಕರು ಮಾಹಿತಿ ನೀಡಬೇಕು ಅಲ್ಲವೇ ಎಂದು ಏರು ಧ್ವನಿಯಲ್ಲಿ ಪ್ರಶ್ನೆ ಮಾಡಿದರು.
|
4 |
+
ಬ್ರಾಂಡ್ ಬೆಂಗಳೂರು ಹೆಸರಿನಲ್ಲಿ ಸರ್ಕಾರ ಕಾಲಾಹರಣ : ಬಿಜೆಪಿ ಆಕ್ರೋಶ
|
5 |
+
ಈ ವೇಳೆ ಮುಖ್ಯ ಸಚೇತಕ ಸಲೀಂ ಅಹ್ಮದ್ ಉತ್ತರ ನೀಡದೇ ಮೌನಕ್ಕೆ ಜಾರಿದರು. ಆಗ ವಿಪಕ್ಷ ಸದಸ್ಯ ವೈ.ಎ.ನಾರಾಯಣಸ್ವಾಮಿ ಅವರು ಮುಖ್ಯ ಸಚೇತಕರಿಗೆ ಅವರ ಕೆಲಸವೇ ಗೊತ್ತಿಲ್ಲ ಎಂದು ಕಾಲೆಳೆದರು. ಬಳಿಕ ಸಭಾಪತಿ, ಆಯಾ ಸಚಿವರು ಅವರ ಇಲಾಖೆ ಕುರಿತು ಉತ್ತರಿಸಿದರೆ, ಒಳಿತು. ಒಂದು ವೇಳೆ ಗೈರಾದರೆ ಮಾಹಿತಿ ಮುಟ್ಟಿಸಿ. ನೀವೇ ಇಲಾಖೆ ಬದಲಾಯಿಸಿ ಉತ್ತರಿಸುವುದು ಸೂಕ್ತವೇ ಎಂದು ಪ್ರಶ್ನೆ ಮಾಡಿದರು.
|
eesanje/url_46_296_4.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಯಶಸ್ವಿನಿ ಯೋಜನೆಯ ಬಿಲ್ ಬಾಕಿ ಉಳಿಸಿಕೊಂಡಿಲ್ಲ : ಸಚಿವ ರಾಜಣ್ಣ
|
2 |
+
ಬೆಳಗಾವಿ,ಡಿ.5-ರಾಜ್ಯದಲ್ಲಿ ಯಶಸ್ವಿನಿ ಯೋಜನೆ ಜಾರಿಯಾದ ನಂತರ ಒಪ್ಪಂದ ಮಾಡಿಕೊಂಡಿರುವ ಯಾವುದೇ ಆಸ್ಪತ್ರೆಗಳಿಗೂ ಪಾವತಿಸಬೇಕಾದ ಶುಲ್ಕ(ಬಿಲ್)ವನ್ನು ಬಾಕಿ ಉಳಿಸಿಕೊಂಡಿಲ್ಲ ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ವಿಧಾನಪರಿಷತ್ಗೆ ಸ್ಪಷ್ಟಪಡಿಸಿದ್ದಾರೆ.
|
3 |
+
ಸದಸ್ಯ ಪಿ.ಎನ್.ನಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 2023ರಿಂದ ಈ ಯೋಜನೆಯನ್ನು ಹೊಸದಾಗಿ ಮರುಜಾರಿ ಮಾಡಲಾಗಿದೆ. ಸರ್ಕಾರದ ಮಾನದಂಡಗಳನ್ನು ಪಾಲನೆ ಮಾಡಿಕೊಂಡಿರುವ ಆಸ್ಪತ್ರೆಗಳ ಜೊತೆ ನಾವು ಒಪ್ಪಂದ ಮಾಡಿಕೊಂಡಿದ್ದೇವೆ. ಯಾವ ಆಸ್ಪತ್ರೆಗಳಿಗೆ ಶುಲ್ಕ ನೀಡಬೇಕೊ ಅದನ್ನು ಹಂತ ಹಂತವಾಗಿ ನೀಡಲಾಗುತ್ತದೆ. ಈವರೆಗೂ ಯಾವ ಆಸ್ಪತ್ರೆಯ ಬಿಲ್ ಬಾಕಿ ಇಲ್ಲ ಎಂದು ಪ್ರಶ್ನಿಸಿದರು.
|
4 |
+
2003ರಲ್ಲಿ ಯಶಸ್ವಿನಿ ಯೋಜನೆಯನ್ನು ಪ್ರಪ್ರಥಮ ಬಾರಿಗೆ ನಮ್ಮ ರಾಜ್ಯದಲ್ಲಿ ಜಾರಿ ಮಾಡಲಾಯಿತು. 2003-04ರಿಂದ 2017ರಿಂದ 18ರವರೆಗೆ ಈ ಯೋಜನೆ ಜಾರಿಯಲ್ಲಿತ್ತು. ನಂತರ ಯೋಜನೆಯನ್ನು ಸಹಕಾರಿ ಇಲಾಖೆಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ವರ್ಗಾಯಿಸಲಾಯಿತು. 1-6-2017ರಿಂದ 31-05-2018ವರೆಗೆ ಅನುಷ್ಠಾನ ಮಾಡಲಾಯಿತು. ಆದರೆ 1-6-1-2018ರಿಂದ ಯೋಜನೆಯನ್ನು ಸ್ಥಗಿತಗೊಳಿಸಲಾಯಿತು ಎಂದರು.
|
5 |
+
ಬ್ರಾಂಡ್ ಬೆಂಗಳೂರು ಹೆಸರಿನಲ್ಲಿ ಸರ್ಕಾರ ಕಾಲಾಹರಣ : ಬಿಜೆಪಿ ಆಕ್ರೋಶ
|
6 |
+
ಆಗ ಬಿಜೆಪಿ ಸದಸ್ಯ ಎಚ್.ವಿಶ್ವನಾಥ್ ಅವರು, ಈ ಯೋಜನೆಯನ್ನು ತಡೆದವರು ಯಾರು ಎಂದು ಪ್ರಶ್ನಿಸಿದಾಗ, ನಾನು ಅದರ ಬಗ್ಗೆ ಮಾತನಾಡುವುದಿಲ್ಲ. ಆಸ್ಪತ್ರೆಗಳು ಕಳುಹಿಸಿಕೊಡುವ ಪ್ರತಿಯೊಂದು ಬಿಲ್ಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಾರೆ. ನಮ್ಮ ಮಾನದಂಡಗಳನ್ನು ಪಾಲನೆ ಮಾಡಲಾಗಿದೆಯೇ? ಆಧಾರ್ಕಾರ್ಡ್ ಲಿಂಕ್ ಹೀಗೆ ಎಲ್ಲ ನಿಯಮಗಳು ಕ್ರಮಬದ್ಧವಾಗಿದ್ದರೆ ಮಾತ್ರ ಬಿಲ್ ಪಾವತಿಯಾಗುತ್ತದೆ. ಕೆಲವು ತಾಂತ್ರಿಕ ಕಾರಣದಿಂದ ವಿಳಂಬವಾಗಿರಬಹುದು ಎಂದು ಹೇಳಿದರು.ರಾಜ್ಯದಲ್ಲಿ 2023ರಿಂದ ಈ ಯೋಜನೆಯನ್ನು ಜಾರಿ ಮಾಡಿದ್ದು, ಇದು ಸಮರ್ಪಕವಾಗಿ ಅನುಷ್ಠಾನಗೊಂಡಿದೆ ಎಂದು ರಾಜಣ್ಣ ತಿಳಿಸಿದರು.
|
eesanje/url_46_296_5.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ನೈಸ್ ಸಂಸ್ಥೆಗೆ ನೀಡಿರುವ 554 ಎಕರೆ ಜಾಮೀನು ಹಿಂಪಡೆಯಲು ಸರ್ಕಾರ ಬದ್ಧ
|
2 |
+
ಬೆಳಗಾವಿ,ಡಿ.5-ಬಿಎಂಐಸಿ ಯೋಜನೆಗೆ ಹೆಚ್ಚುವರಿಯಾಗಿ ನೈಸ್ ಸಂಸ್ಥೆಗೆ ನೀಡಿರುವ 554 ಎಕರೆ ಜಮೀನನ್ನು ಹಿಂಪಡೆಯಲು ಸರ್ಕಾರ ಬದ್ಧವಾಗಿದೆ ಎಂದು ಸಚಿವ ಶರಣಬಸಪ್ಪ ದರ್ಶನಾಪುರ್ ಅವರು ವಿಧಾನಪರಿಷತ್ಗೆ ಹೇಳಿದ್ದಾರೆ.
|
3 |
+
ಬಿಜೆಪಿ ಸದಸ್ಯ ಮುನಿರಾಜೇಗೌಡ.ಪಿ.ಎಂ. ಅವರ ಪ್ರಶ್ನೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪರವಾಗಿ ಉತ್ತರಿಸಿದ ಸಚಿವ ಶರಣಬಸಪ್ಪ ದರ್ಶನಾಪುರ್, ನೈಸ್ ಸಂಸ್ಥೆಯವರಿಗೆ ಹೆಚ್ಚುವರಿಯಾಗಿ 554 ಎಕರೆ ಜಮೀನನ್ನು ಹಿಂತಿರುಗಿಸಬೇಕೆಂದು ಕೆಐಎಡಿಬಿ ಮೂಲಕ ಸೂಚನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಜಮೀನು ಹಿಂಪಡೆಯುವ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
|
4 |
+
ಬಿಜೆಪಿ-ಜೆಡಿಎಸ್ ಮೋದಿ ನಾಯಕತ್ವದಲ್ಲಿ ಮುನ್ನಡೆಯಲಿದೆ : ದೇವೇಗೌಡರು
|
5 |
+
ಬಿಎಂಐಸಿ ಯೋಜನೆಗೆ ಹೆಚ್ಚುವರಿ ಜಮೀನುಗಳನ್ನು ಹಿಂಪಡೆಯುವ ಕುರಿತು ಈಗಾಗಲೇ ಜಮೀನುಗಳನ್ನು ಗುರುತಿಸಿ ಸರ್ವೆ ನಂಬರ್ ಕೂಡ ನೀಡಲಾಗಿದೆ. ಈಗಾಗಲೇ ಕಾನೂನಿನ ಪ್ರಕ್ರಿಯೆಗಳು ಪ್ರಾರಂಭವಾಗಿದೆ. ನೈಸ್ ಸಂಸ್ಥೆಯವರಿಗೆ ಜಮೀನು ಬಿಡಬೇಕು. ಅದರಿಂದ ನಮಗಾಗುವ ಉಪಯೋಗವೇನು ಎಂದು ಪ್ರಶ್ನಿಸಿದರು.ಹೆಚ್ಚುವರಿ ಭೂಮಿ ಹಿಂಪಡೆಯುವ ಬಗ್ಗೆ ಸದನ ಸಮಿತಿಯು ತನ್ನ ವರದಿಯಲ್ಲಿ ನೀಡಿರುವ ಜಮೀನಿನ ಸರ್ವೆ ನಂಬರ್ಗಳಿಗೂ ಮತ್ತು ವಿಸ್ತೀರ್ಣಕ್ಕೂ ವ್ಯತ್ಯಾಸಗಳಿವೆ. ಇದನ್ನು ಸರಿಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
|
6 |
+
ಭೂಮಿಯನ್ನು ಹಿಂಪಡೆದ ನಂತರ ಇದನ್ನು ಯಾವ ಉದ್ದೇಶಕ್ಕೆ ಬಳಸಿಕೊಳ್ಳಬೇಕು ಎಂಬುದರ ಕುರಿತು ಪರಿಶೀಲನೆಯಲ್ಲಿದೆ. ಜಮೀನು ನಮ್ಮ ಕೈಗೆ ಬಂದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
|
eesanje/url_46_296_6.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬ್ರಾಂಡ್ ಬೆಂಗಳೂರು ಹೆಸರಿನಲ್ಲಿ ಸರ್ಕಾರ ಕಾಲಾಹರಣ : ಬಿಜೆಪಿ ಆಕ್ರೋಶ
|
2 |
+
ಬೆಳಗಾವಿ,ಡಿ.5- ಬ್ರಾಂಡ್ ಬೆಂಗಳೂರು ಹೆಸರಿನಲ್ಲಿ ಸರ್ಕಾರ ಸಲಹೆ ಪಡೆದುಕೊಳ್ಳುವುದರಲ್ಲೇ ಕಾಲಾಹರಣ ಮಾಡುತ್ತಿದೆ, ಅಭಿವೃದ್ಧಿಯನ್ನು ಕಡೆಗಣಿಸಲಾಗಿದೆ ಎಂದು ಬಿಜೆಪಿ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಆಡಳಿತ ಪಕ್ಷದ ಶಾಸಕ ಎನ್.ಎ.ಹ್ಯಾರಿಸ್ ಅವರು ಪ್ರಶ್ನೆ ಕೇಳಿದರು. ಇದಕ್ಕೆ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪರವಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉತ್ತರಿಸಿದರು.
|
3 |
+
ಡಿ.ಕೆ.ಶಿವಕುಮಾರ್ರವರು ಬ್ರಾಂಡ್ ಬೆಂಗಳೂರು ಕಲ್ಪನೆಯನ್ನು ಸಾಕಾರಗೊಳಿಸಲು ಆಸಕ್ತಿ ತೋರಿಸಿದ್ದಾರೆ. ಸುಮಾರು 70 ಸಾವಿರಕ್ಕೂ ಅಕ ಸಲಹೆಗಳು ಬಂದಿವೆ. ಅವುಗಳನ್ನು ಕ್ರೂಢೀಕರಿಸಲು 8 ಶೈಕ್ಷಣಿಕ ಸಂಸ್ಥೆಗಳನ್ನು ಪಾಲುದಾರರನ್ನಾಗಿ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.
|
4 |
+
ನ್ಯುಮೋನಿಯಾ ಹೆಚ್ಚಳದ ಬಗ್ಗೆ ಭಯ ಪಡುವ ಅವಶ್ಯಕತೆ ಇಲ್ಲ : ಗುಂಡೂರಾವ್
|
5 |
+
ಸಚಿವರ ಉತ್ತರಕ್ಕೆ ಮುನ್ನವೇ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿಯ ಸದಸ್ಯರಾದ ಭಾಸ್ಕರ್, ಸಿ.ಎನ್.ಅಶ್ವತ್ಥನಾರಾಯಣ, ವಿಪಕ್ಷ ನಾಯಕ ಆರ್.ಅಶೋಕ್, ಎಸ್.ಎಸ್.ವಿಶ್ವನಾಥ್ ಮತ್ತಿತರರು ಸರ್ಕಾರ ರಚನೆಯಾಗಿ 6 ತಿಂಗಳಾಗಿದೆ. ಇನ್ನೂ ಅಭಿವೃದ್ಧಿ ಸಲಹೆ ಪಡೆಯುವುದರಲ್ಲೇ ಕಾಲಾಹರಣ ಮಾಡಲಾಗುತ್ತಿದೆ. ಅಭಿವೃದ್ಧಿಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
|
6 |
+
ಶಾಸಕ ಮುನಿರತ್ನ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವವರು ಸಂಚಾರದಟ್ಟಣೆಯಲ್ಲಿ 3 ಗಂಟೆಗಳ ಕಾಲ ಒದ್ದಾಡಬೇಕಿದೆ. ಹೆಬ್ಬಾಳ ಮೇಲು ಸೇತುವೆ ಯೋಜನೆಯನ್ನು ಪೂರ್ಣಗೊಳಿಸಲು ಇನ್ನೂ ಎಷ್ಟು ಸಮಯ ಬೇಕು ಎಂದು ವಿಪಕ್ಷ ನಾಯಕರು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಸಚಿವರ ನೆರವಿಗೆ ಧಾವಿಸಿದ ಆಡಳಿತ ಪಕ್ಷದ ಶಾಸಕರಾದ ಎನ್.ಎ.ಹ್ಯಾರಿಸ್, ಎಚ್.ಸಿ.ಬಾಲಕೃಷ್ಣ ಮತ್ತಿತರರು 9 ವರ್ಷಗಳ ಕಾಲ ಕೇಂದ್ರದಲ್ಲಿ ಬಿಜೆಪಿ ಅಕಾರದಲ್ಲಿದೆ. ರಾಜ್ಯದಲ್ಲೂ ವಿವಿಧ ಹಂತಗಳಲ್ಲಿ 9 ವರ್ಷ ಸರ್ಕಾರ ನಡೆಸಿದ್ದೀರ. ಬೆಂಗಳೂರು ಅಭಿವೃದ್ಧಿಗೆ ನಿಮ್ಮ ಕೊಡುಗೆಗಳೇನು. ಸಮಸ್ಯೆಗಳ ಪರಿಹಾರಕ್ಕೆ ನಿಮ್ಮ ಸರ್ಕಾರ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂದು ತಿರುಗೇಟು ನೀಡಿದರು.
|
7 |
+
ಬ್ರಾಂಡ್ ಬೆಂಗಳೂರು ಮೂಲಕ ಒಳ್ಳೆಯ ಕೆಲಸ ಮಾಡಲು ಮುಂದಾಗಿದ್ದರೂ ವಿರೋಧ ವ್ಯಕ್ತಪಡಿಸುತ್ತಿದ್ದೀರ ಎಂದು ಆಕ್ರೋಶ ಹೊರಹಾಕಿದರು. ನಾವು ಬ್ರಾಂಡ್ ಬೆಂಗಳೂರಿಗೆ ವಿರೋಧ ಮಾಡಿಲ್ಲ. ಆದರೆ ಸಲಹೆ ಪಡೆಯುವುದರಲ್ಲಿ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ವಿಪಕ್ಷ ಶಾಸಕರು ಅಸಮಾಧಾನ ಹೊರಹಾಕಿದರು.ಒಂದು ಹಂತದಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವೆ ಮಾತಿನ ಚಕಮಕಿ ಜೋರಾಗಿತ್ತು.
|
8 |
+
ಮೇಲ್ಸೇತುವೆ ಯೋಜನೆಗೆ ಬಿಜೆಪಿಯವರು ವಿರೋಧ ಮಾಡಿತ್ತು. ಈಗ ವಿಮಾ���ನಿಲ್ದಾಣ ರಸ್ತೆಯಲ್ಲಿ ಸಂಚಾರದ ಸಮಸ್ಯೆಯಾಗುತ್ತಿದೆ ಎಂದು ಮಾತನಾಡುತ್ತಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದರು.ಹೆಬ್ಬಾಳ ಮೇಲು ಸೇತುವೆ ಯೋಜನೆಗೆ ಯಾವುದೇ ವಿರೋಧ ಇಲ್ಲ. ಹೆಬ್ಬಾಳದಿಂದ ಚಾಲುಕ್ಯ ವೃತ್ತದವರೆಗೂ ಸ್ಟೀಲ್ ಬ್ರಿಡ್ಜ್ ಮಾಡಲು ಬೆಂಗಳೂರಿನ ಜನರೇ ವಿರೋಧ ವ್ಯಕ್ತಪಡಿಸಿದ್ದರು ಎಂದು ಬಿಜೆಪಿ ಶಾಸಕರು ಸ್ಪಷ್ಟನೆ ನೀಡಿದರು.
|
9 |
+
ಎಂಎಲ್ಸಿ ಚೆನ್ನರಾಜ್ ಹಟ್ಟಿಹೊಳಿ ಬಂಧನಕ್ಕೆ ವಿಜಯೇಂದ್ರ ಒತ್ತಾಯ
|
10 |
+
ಆರೋಪ-ಪ್ರತ್ಯಾರೋಪಗಳ ಬಳಿಕ ಸಮಜಾಯಿಷಿ ನೀಡಿದ ರಾಮಲಿಂಗಾರೆಡ್ಡಿಯವರು ಬ್ರಾಂಡ್ ಬೆಂಗಳೂರು ಪರಿಕಲ್ಪನೆಯ ಜಾರಿಗೆ ಉಪಮುಖ್ಯಮಂತ್ರಿಯ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ರಚಿಸಲಾಗಿದೆ. ಮುಖ್ಯಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಕಾರ್ಯಕಾರಿ ಸಮಿತಿ ಅಸ್ತಿತ್ವದಲ್ಲಿದೆ. ಶೀಘ್ರವೇ ಯೋಜನೆ ಜಾರಿಗೊಳ್ಳುತ್ತದೆ ಎಂದು ಸ್ಪಷ್ಟಪಡಿಸಿದರು.
|
eesanje/url_46_296_7.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಸಹಕಾರ ಸಂಘಗಳ ಅವ್ಯವಹಾರ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ
|
2 |
+
ಬೆಳಗಾವಿ,ಡಿ.5- ಸಹಕಾರ ಸಂಘಗಳಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ನಿಯಂತ್ರಣ ಮಾಡಲು ಹಾಲಿ ಇರುವ ಕಾಯ್ದೆಗೆ ತಿದ್ದುಪಡಿ ಮಾಡಲು ಹಿರಿಯ ತಜ್ಞರ ಸಮಿತಿಯನ್ನು ರಚನೆ ಮಾಡಲಾಗಿದ್ದು, ಮುಂದಿನ ಅವೇಶನದಲ್ಲಿ ವರದು ಮಂಡಿಸುತ್ತೇವೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ವಿಧಾನಪರಿಷತ್ಗೆ ತಿಳಿಸಿದ್ದಾರೆ.
|
3 |
+
ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸಹಕಾರ ಸಂಘಗಳಲ್ಲಿ ಹಲವಾರು ವರ್ಷಗಳಿಂದ ವ್ಯಾಪಕವಾದ ಭ್ರಷ್ಟಾಚಾರ ಮತ್ತು ಹಗರಣಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿಬಂದಿವೆ. ಇದನ್ನು ನಿಯಂತ್ರಿಸಲು ಈಗಿರುವ ಕಾಯ್ದೆಗೆ ತಿದ್ದುಪಡಿ ತರಲು ಹಿರಿಯ ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಮುಂದಿನ ಅಧಿವೇಶನದೊಳಗೆ ವರದಿಯು ಸರ್ಕಾರದ ಕೈ ಸೇರಲಿದ್ದು, ಬಳಿಕ ಮಂಡನೆ ಮಾಡುತ್ತೇವೆ ಎಂದು ತಿಳಿಸಿದರು.
|
4 |
+
ಸೋಮವಾರವಷ್ಟೇ ಸಮಿತಿ ತಜ್ಞರ ಜೊತೆ ಸಭೆ ನಡೆಸಿದ್ದೇನೆ. ಪ್ರಸ್ತುತ ಬೆಳಗಾವಿ ಅಧಿವೇಶನದಲ್ಲಿ ಇದನ್ನು ಮಂಡಿಸುವ ಉದ್ದೇಶವಿತ್ತು. ಅಮೂಲಾಗ್ರ ಬದಲಾವಣೆಗೆ ಸಮಯಾವಕಾಶ ಬೇಕು ಎಂದು ಕೇಳಿಕೊಂಡಿದ್ದಾರೆ. ಇನ್ನು ಮುಂದೆ ಸಹಕಾರಿ ಸಂಘಗಳಲ್ಲಿ ಅವ್ಯವಹಾರ, ಹಗರಣಗಳು, ಸಹಕಾರಿಗಳು ಒಪ್ಪದ ಯಾವುದೇ ವ್ಯವಹಾರಗಳು ನಡೆಯುವುದಿಲ್ಲ. ಈಗ ನಮ್ಮ ಸರ್ಕಾರ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ ಎಂದು ಹೇಳಿದರು.
|
5 |
+
ಸಹಕಾರ ಸಂಘಗಳ ಸ್ಥಿತಿಗತಿಗಳನ್ನು ಕಲಂ 63ರಡಿ ಪ್ರತಿ ಸಹಕಾರಿ ಸಂಘದ ಲೆಕ್ಕ ಪರಿಶೋಧನೆಯನ್ನು ಸೆಪ್ಟಂಬರ್ 1ನೇ ತಾರೀಖಿನೊಳಗೆ ಮುಕ್ತಾಯಗೊಳಿಸಬೇಕೆಂಬ ನಿಯಮವಿದೆ. ಚಾರ್ಟರ್ಡ್ ಅಕೌಂಟೆಂಟ್ಗಳಿಗೆ ಹೆಚ್ಚಿನ ವೆಚ್ಚ ತಗಲಿದೆ ಎಂಬ ಮಾತುಗಳು ಕೇಳಿಬಂದಿದ್ದವು. ತಿದ್ದುಪಡಿಯಲ್ಲಿ ಇದು ಕೂಡ ಪ್ರಸ್ತಾವನೆಯಾಗಲಿದೆ ಎಂದು ತಿಳಿಸಿದರು.
|
6 |
+
ನ್ಯುಮೋನಿಯಾ ಹೆಚ್ಚಳದ ಬಗ್ಗೆ ಭಯ ಪಡುವ ಅವಶ್ಯಕತೆ ಇಲ್ಲ : ಗುಂಡೂರಾವ್
|
7 |
+
ಸಹಕಾರ ಸಂಘಗಳ ಲೆಕ್ಕ ಪರಿಶೋಧನೆಯನ ತಜ್ಞರು, ಲೆಕ್ಕ ಪರಿಶೋಧಕರು ಹಾಗೂ ಇಲಾಖೆಯ ಲೆಕ್ಕ ಪರಿಶೋಧಕರು ನಿರ್ವಹಿಸುತ್ತಾರೆ. ರಾಜ್ಯ ಸಹಕಾರಿ ಬ್ಯಾಂಕ್ ಹಾಗೂ ಕೇಂದ್ರ ಸಹಕಾರಿ ಬ್ಯಾಂಕ್ಗಳು ರಾಷ್ಟ್ರೀಯ ಬ್ಯಾಂಕ್ನಿಂದ ಅನುಮೋದನೆಗೊಂಡ ಆಯ್ಕೆಯಾದ ಲೆಕ್ಕಿಗರು ಲೆಕ್ಕ ಪರಿಶೋಧನೆ ಮಾಡುತ್ತಾರೆ. ಸಹಕಾರಿ ಸಂಘಗಳ ಸ್ಥಿತಿಗತಿಗಳನ್ನು ಅವಲೋಕಿಸಿ ಸುಧಾರಣೆ ಕೈಗೊಳ್ಳುವ ವ್ಯವಸ್ಥೆ ರೂಪಿಸಲಾಗಿದೆ ಎಂದು ರಾಜಣ್ಣ ಹೇಳಿದರು.
|
8 |
+
ಸಹಕಾರಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಸಮಯ, ಸಂದರ್ಭ ಹಾಗು ಆರ್ಥಿಕ ಸ್ಥಿತಿಗತಿ ನೋಡಿಕೊಂಡು ಭರ್ತಿ ಮಾಡಲು ಅವಕಾಶವಿದೆ. ಖಾಲಿ ಹುದ್ದೆಗಳನ್ನು ಆಡಳಿತ ಮಂಡಳಿಯವರೇ ಭರ್ತಿ ಮಾಡಿಕೊಳ್ಳುತ್ತಾರೆ ಎಂದು ಅವರು ಹೇಳೀದರು.
|
eesanje/url_46_296_8.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಅಸಂಘಟಿತ ಕಾರ್ಮಿಕ ವಲಯಗಳಿಗೆ ಇಎಸ್ಐ, ಪಿಎಫ್ ಸೌಲಭ್ಯ
|
2 |
+
ಬೆಳಗಾವಿ,ಡಿ.5- 43 ಅಸಂಘಟಿತ ಕಾರ್ಮಿಕ ವಲಯಗಳಿಗೆ ಇಎಸ್ಐ, ಪಿಎಫ್ ಸೇರಿದಂತೆ ಇತರೆ ಸೌಲಭ್ಯ ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಭರವಸೆ ನೀಡಿದರು. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಕಾಪು ಕ್ಷೇತ್ರದ ಗುರ್ಮೆ ಸುರೇಶ್ಶೆಟ್ಟಿ ಅವರು ಮಾತನಾಡಿ, ರಾಜ್ಯಾದ್ಯಂತ 10 ಲಕ್ಷ ಟೈಲರ್ ವೃತ್ತಿ ಮಾಡುವವರಿ ದ್ದಾರೆ. ಅವರಿಗೆ ಸರಿಯಾದ ಸೌಲಭ್ಯಗಳು ಸಿಗುತ್ತಿಲ್ಲ ಎಂದರು.
|
3 |
+
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ 43 ಅಸಂಘಟಿತ ವಲಯಗಳಲ್ಲಿ ವಿವಿಧ ಕ್ಷೇತ್ರದ ಕಾರ್ಮಿಕರಿದ್ದಾರೆ. ಅವರಿಗೆ ಇಎಸ್ಐ, ಪಿಎಫ್ನಂತಹ ಸೌಲಭ್ಯಗಳನ್ನು ಒದಗಿಸಲು ಅವಕಾಶವಿಲ್ಲ ಎಂದರು.ತೇರದಾಳ ಕ್ಷೇತ್ರದ ಸಿದ್ಧುಸವದಿಯವರು ಕೂಡ ಕಾರ್ಮಿಕ ಕಲ್ಯಾಣದ ಬಗ್ಗೆ ಪ್ರಶ್ನೆ ಕೇಳಿದರು. ಇದು ವ್ಯಾಪಕ ಚರ್ಚೆಗೆ ಕಾರಣವಾಯಿತು.
|
4 |
+
ಸಚಿವ ಸಂತೋಷ್ ಲಾಡ್ ಮಾತನಾಡಿ, ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಸೆಸ್ ಸಂಗ್ರಹ ಮಾಡಲಾಗುತ್ತಿದೆ. ಅದರಡಿ ಕಲ್ಯಾಣ ಯೋಜನೆಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಉಳಿದಂತೆ ರಾಜ್ಯಸರ್ಕಾರ ಗಿಗ್ ಕ್ಷೇತ್ರದ ನೌಕರರಿಗೆ ವಿಮಾ ಯೋಜನೆ ಮತ್ತು ಇಎಸ್ಐ, ಪಿಎಫ್ ಸೌಲಭ್ಯ ಒದಗಿಸುತ್ತಿದೆ. ಸಾರಿಗೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ 35 ರಿಂದ 40 ಲಕ್ಷ ನೌಕರರಿಗೂ ಸೌಲಭ್ಯ ಒದಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇತರ ಕ್ಷೇತ್ರಗಳ ಕಾರ್ಮಿಕರಿಗೂ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
|
5 |
+
ಸಭಾಧ್ಯಕ್ಷ ಯು.ಟಿ.ಖಾದರ್ರವರು, ಗಾರ್ಮೆಂಟ್ಸ್, ವಾಹನ ಉತ್ಪಾದನೆ, ಖರೀದಿಯಂತಹ ಕ್ಷೇತ್ರಗಳಿಗೆ ಸೆಸ್ ಹಾಕಿ ಅದರಿಂದ ಬರುವ ಹಣವನ್ನು ಆಯಾ ಕ್ಷೇತ್ರದ ಕಾರ್ಮಿಕರ ಕಲ್ಯಾಣಕ್ಕೆ ಬಳಕೆ ಮಾಡುವಂತೆ ಸಲಹೆ ನೀಡಿದರು. ಇದನ್ನು ಪರಿಶೀಲಿಸುವುದಾಗಿ ಸಚಿವರು ಭರವಸೆ ನೀಡಿದರು.
|
eesanje/url_46_296_9.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ವೀರ ಅರ್ಜುನನ ನೆನಪಿನಲ್ಲಿ ಸ್ಮಾರಕ ನಿರ್ಮಾಣ
|
2 |
+
ಬೆಳಗಾವಿ, ಡಿ.5-ಐತಿಹಾಸಿಕ ಮೈಸೂರು ದಸರಾದ ಕೇಂದ್ರ ಬಿಂದುವಾಗಿದ್ದ ಗಜರಾಜ ವೀರ ಅರ್ಜುನ ನೆನಪಿನಲ್ಲಿ ಸರ್ಕಾರ ಸ್ಮಾರಕವೊಂದನ್ನು ನಿರ್ಮಾಣ ಮಾಡುವುದಾಗಿ ಪ್ರಕಟಿಸಿದೆ. ವಿಧಾನ ಪರಿಷತ್ತಿನ ಎರಡನೇ ದಿನ ಕಲಾಪ ಆರಂಭದಲ್ಲಿ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಹಾಗೂ ವೀರ ಯೋಧರು ಮತ್ತು ಐತಿಹಾಸಿಕ ಮೈಸೂರು ದಸರಾ ವೈಭವದ ಕೇಂದ್ರ ಬಿಂದುವಾಗಿದ್ದ ಗಜರಾಜ ಅರ್ಜುನ ನಿಧನಕ್ಕೆ ಸದನದಲ್ಲಿ ಸಂತಾಪ ಸೂಚಿಸಲಾಯಿತು.
|
3 |
+
ಈ ವೇಳೆ ಸಭಾ ನಾಯಕ ಎನ್.ಎಸ್.ಭೋಸರಾಜು ಪ್ರಸ್ತಾಪಿಸಿ, ಬಲಶಾಲಿ ಮಾಸ್ಟರ್ ಹಾಗೂ ಹಿರಿಯ ಎಂಬ ಹೆಸರುಗಳಿಂದ ಖ್ಯಾತನಾಗಿದ್ದ ಅರ್ಜುನನನ್ನು 1968ರಲ್ಲಿ ಖೆಡ್ಡಾ ವಿಧಾನದಲ್ಲಿ ಕಾಕನಕೋಟೆ ಅರಣ್ಯ ಪ್ರದೇಶದಲ್ಲಿ ಸೆರೆಹಿಡಿಯಲಾಗಿದ್ದು, 22ವರ್ಷಗಳಿಂದ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿತ್ತು.
|
4 |
+
2012ರಿಂದ 2019ರವರೆಗೆ 8 ಬಾರಿ ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯಲ್ಲಿ ಚಿನ್ನದ ಅಂಬಾರಿಯನ್ನು ಹೊತ್ತು ತನ್ನ ರಾಜಗಾಂಭೀರ್ಯದ ನಡಿಗೆಯ ಮೂಲಕ ದಸರೆಯ ಮೆರುಗಿಗೆ ಕೇಂದ್ರ ಬಿಂದುವಾಗಿ ನಾಡಿನ ಜನತೆಯ ಪ್ರೀತಿಗೆ ಪಾತ್ರವಾಗಿತ್ತು.ಇದರ ನೆನಪು ಸದಾ ಉಳಿಸುವ ನಿಟ್ಟಿನಲ್ಲಿ ಸ್ಮಾರಕವೊಂದು ನಿರ್ಮಿಸಲಾಗುವುದು ಎಂದು ಹೇಳಿದರು.
|
5 |
+
ಇದಕ್ಕೂ ಮುನ್ನ ಸಭಾಪತಿ ಬಸವರಾಜ ಹೊರಟ್ಟಿ ಅವರು, 60 ವರ್ಷದ ನಂತರ ಚಿನ್ನದ ಅಂಬಾರಿ ಹೊರುವ ಕೆಲಸದಿಂದ ನಿವೃತ್ತಿ ಹೊಂದಿ ಈ ಬಾರಿ ದಸರಾ ಮೆರವಣಿಗೆಯಲ್ಲಿ ದಿಕ್ಕು ತೋರುವ ನಿಶಾನೆ ಆನೆ¿ ಯಾಗಿ ಸಾಗಿದ್ದ ಅರ್ಜುನ ನಾಡಿನ ಜನತೆಯ ಮನಸೂರೆಗೊಂಡಿತ್ತು. ಸಕಲೇಶಪುರ ತಾಲ್ಲೂಕಿನ ಯಸಳೂರಿನಲ್ಲಿ ಕಾಡಾನೆಯನ್ನು ಹಿಡಿಯುವ ಕಾರ್ಯಾಚರಣೆ ವೇಳೆಯಲ್ಲಿ ಆಕಸ್ಮಿಕವಾಗಿ ಗಾಯಗೊಂಡು ಮೃತಪಟ್ಟಿರುತ್ತದೆ.
|
6 |
+
ನ್ಯುಮೋನಿಯಾ ಹೆಚ್ಚಳದ ಬಗ್ಗೆ ಭಯ ಪಡುವ ಅವಶ್ಯಕತೆ ಇಲ್ಲ : ಗುಂಡೂರಾವ್
|
7 |
+
ಮೈಸೂರು ದಸರಾ ಅಂಬಾರಿ ಹೊರುವ ಕಾಯಕವನ್ನು ಅತ್ಯಂತ ಠೀವಿಯಿಂದ ನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದ ಹೆಮ್ಮೆಯ ಅರ್ಜುನನ ನಿಧನದಿಂದಾಗಿ ರಾಜ್ಯವು ರಾಜಗಾಂಭೀರ್ಯದ ಗಜರಾಜನನ್ನು ಕಳೆದುಕೊಂಡು ಶೋಕದ ಮಡುವಿನಲ್ಲಿ ಮುಳುಗಿದೆ ಎಂದು ಹೇಳಿದರು.
|
8 |
+
ಅದೇ ರೀತಿ, ವೀರ ಯೋಧರುಗಳ ಹಾಗೂ ವೀರ ಅರ್ಜುನನ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತಾ, ವೀರ ಯೋಧರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಹಾಗೂ ವೀರ ಅರ್ಜುನನ ಅಪಾರ ಅಭಿಮಾನಿಗಳ ಬಳಗಕ್ಕೆ ಉಂಟಾಗಿರುವ ನೋವನ್ನು ಭರಿಸುವ ಶಕ್ತಿಯನ್ನು ಪರಮಾತ್ಮನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದು ನುಡಿದರು.
|
9 |
+
ಎಂಎಲ್ಸಿ ಚೆನ್ನರಾಜ್ ಹಟ್ಟಿಹೊಳಿ ಬಂಧನಕ್ಕೆ ವಿಜಯೇಂದ್ರ ಒತ್ತಾಯ
|
10 |
+
ವಿಪಕ್ಷ ಸದಸ್ಯ ಭೋಜೇಗೌಡ ಮಾತನಾಡಿ, ಅರ್ಜುನ ಸಾವು ಆಕಸ್ಮಿಕವಾಗಿ ನಡೆದಿಲ್ಲ. ಈಬಗ್ಗೆ ಚರ್ಚೆಗೆ ಅವಕಾಶ ನೀಡಬೇಕೆಂದು ಕೋರಿದರು. ಆಗ ಸಭಾಪ��ಿ ಚರ್ಚೆಗೆ ಅವಕಾಶ ನೀಡುವುದಾಗಿ ಸಮ್ಮತಿ ಸೂಚಿಸಿದರು. ಕೋಟಾ ಶ್ರೀನಿವಾಸ ಪೂಜಾರಿ ಪ್ರಸ್ತಾಪಿಸಿ, ಜಮ್ಮು ಕಾಶ್ಮೀರದ ರಚೌರಿ ಜಿಲ್ಲೆಯಲ್ಲಿ ಸೇನಾಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕ್ಯಾಪ್ಟನ್ ಪ್ರಾಂಜಲ್ ಸೇರಿದಂತೆ ಕ್ಯಾಪ್ಟನ್ ಶುಭಂ ಗುಪ್ತಾ, ಹವಲ್ದಾರ ಅಬ್ದುಲ್ ಮಜಿಕ್, ಲಾನ್ಸ್ ನಾಯ್ ಸಂಜಯ್ ಬಿಸ್ಟ್ ಮತ್ತು ಸಚಿನ್ ಲಾರ್ ಈ ಐದು ವೀರ ಯೋಧರುಗಳು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿ ಹುತಾತ್ಮರಾಗಿದ್ದು, ಇವರ ದೇಶ ಸೇವೆ ಎಂದಿಗೂ ನೆನಪಿನಲ್ಲಿ ಉಳಿಸಿಕೊಳ್ಳಲಿದೆ ಎಂದರು.
|
eesanje/url_46_297_1.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ನ್ಯುಮೋನಿಯಾ ಹೆಚ್ಚಳದ ಬಗ್ಗೆ ಭಯ ಪಡುವ ಅವಶ್ಯಕತೆ ಇಲ್ಲ : ಗುಂಡೂರಾವ್
|
2 |
+
ಬೆಳಗಾವಿ,ಡಿ.5- ಚೈನಾ ವೈರಸ್ ಮತ್ತು ನ್ಯುಮೋನಿಯಾ ಹೆಚ್ಚಳದ ಬಗ್ಗೆ ಭಯ ಪಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಆದರೆ ಚೈನಾದಲ್ಲಿ ಕಂಡುಬಂದಿರುವ ನ್ಯುಮೋನಿಯಾದ ಬಗ್ಗೆ ಆತಂಕ ಪಡುವುದು ಅನಗತ್ಯ ಎಂದರು.
|
3 |
+
ಈಗಾಗಲೇ ಈ ಸಂಬಂಧ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚಿಸಲಾಗಿದೆ. ಆಸ್ಪತ್ರೆಗಳಲ್ಲಿ ತೀವ್ರ ನಿಗಾಘಟಕ, ವೆಂಟಿಲೇಟರ್, ಆಕ್ಸಿಜನ್, ಮಾಸ್ಕ್, ಪಿಪಿ ಇ ಕಿಟ್ಗಳನ್ನು ಸದಾ ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಸೋಂಕಿನ ಹಾವಳಿ ತೀವ್ರಗೊಂಡಾಗ ಅದನ್ನು ನಿಯಂತ್ರಿಸಲು ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
|
4 |
+
ಮುಸ್ಲಿಮರಿಗೆ ಸಂಪತ್ತು ಹಂಚುತ್ತೇನೆ ಎಂದ ಸಿಎಂಗೆ ತಿರುಗೇಟು ಕೊಟ್ಟ ಅಶೋಕ್
|
5 |
+
ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಕೇಂದ್ರ ಸರ್ಕಾರ ಕೂಡ ಚೀನಾ ನ್ಯುಮೋನಿಯಾ ವೈರಸ್ ಬಗ್ಗೆ ಗಾಬರಿ ಪಡುವ ಅವಶ್ಯಕತೆ ಇಲ್ಲ ಎಂದು ಹೇಳಿವೆ. ಹೀಗಾಗಿ ಜನರು ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು. ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ತಿಳಿಸಿದರು.
|
eesanje/url_46_297_10.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಬರಗಾಲದ ಚರ್ಚೆಗೆ ಪ್ರತಿಪಕ್ಷಗಳಿಂದ ನಿಲುವಳಿ ಸೂಚನೆಯಡಿ ನೋಟಿಸ್
|
2 |
+
ಬೆಳಗಾವಿ,ಡಿ.4- ಚಳಿಗಾಲ ಅಧಿವೇಶನದ ಮೊದಲ ದಿನವೇ ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯ ಬಗ್ಗೆ ವಿಧಾನಸಭೆಯಲ್ಲಿ ಚರ್ಚಿಸಲು ಅವಕಾಶ ಕೋರಿ ಪ್ರತಿಪಕ್ಷಗಳು ನಿಲುವಳಿ ಸೂಚನೆಯಡಿ ನೋಟಿಸ್ ನೀಡಿವೆ. ಇಂದು ಬೆಳಗ್ಗೆ ವಿಧಾನಸಭೆ ಕಾರ್ಯದರ್ಶಿ ಯವರಿಗೆ ನಿಲುವಳಿ ಸೂಚನೆ ನೋಟಿಸ್ ನೀಡಲಾಗಿದ್ದು, ಸದನದಲ್ಲಿ ಚರ್ಚೆಗೆ ಅವಕಾಶ ಕೊಡುವಂತೆ ಕೋರಲಾಗಿದೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ನೋಟಿಸ್ ನೀಡಿದ್ದಾರೆ.
|
3 |
+
ರಾಜ್ಯಾದ್ಯಂತ ತೀವ್ರ ಸ್ವರೂಪದ ಬರಗಾಲ ಆವರಿಸಿದೆ. ಕೃಷಿ, ತೋಟಗಾರಿಕೆ ಬೆಳೆಗಳು ಮಳೆ ಅಭಾವದಿಂದ ಹಾನಿಗೀಡಾ ಗಿವೆ. ಸುಮಾರು 48 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದ್ದು, ಅತಂಕಕ್ಕೊಳಗಾಗಿರುವ ರೈತರು ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ ಎಂದು ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
|
4 |
+
ಅಧಿವೇಶನಕ್ಕೆ ಮಧುವಣಗಿತ್ತಿಯಂತೆ ಸಿಂಗಾರಗೊಂಡ ಕುಂದಾನಗರಿ
|
5 |
+
ತೀವ್ರ ಸ್ವರೂಪದ ಬರ ಪರಿಸ್ಥಿತಿ ಇದ್ದರೂ ರಾಜ್ಯದಲ್ಲಿ ಸಮಪರ್ಕವಾಗಿ ಬರ ಪರಿಹಾರ ಕಾರ್ಯಗಳು ನಡೆಯುತ್ತಿಲ್ಲ. ಕೃಷಿ, ಕೂಲಿ ಕಾರ್ಮಿಕರು ಉದ್ಯೋಗ ಹುಡುಕಿಕೊಂಡು ಬೇರೆ ರಾಜ್ಯಗಳತ್ತ ಗೂಳೇ ಹೋಗುತ್ತಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ 223 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಣೆ ಮಾಡಿದೆ.
|
6 |
+
ಇತ್ತೀಚೆಗಷ್ಟೇ ರೈತರಿಗೆ 2000 ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ. ಬರಪರಿಹಾರ ಕಾಮಗಾರಿಗಳು ನಡೆಯುತ್ತಿಲ್ಲ. ಜಾನುವಾರುಗಳ ಮೇವಿಗೆ ತೊಂದರೆಯಾಗದಂತೆ ಮೇವು ಬ್ಯಾಂಕ್ ಸ್ಥಾಪನೆ, ಗೋಶಾಲೆ ತೆರೆಯಲು ಅಗತ್ಯ ಕ್ರಮ ಕೈಗೊಂಡಿಲ್ಲ, ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಪರ್ಯಾಯ ವ್ಯವಸ್ಥೆ ಮಾಡಿಲ್ಲ, ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ಎದುರಿಸಲು ರಾಜ್ಯ ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿರುವ ಪ್ರತಿಪಕ್ಷಗಳ ಶಾಸಕರು ಸದನದಲ್ಲಿ ಈ ವಿಚಾರದ ಬಗ್ಗೆ ಚರ್ಚಿಸಲು ಅವಕಾಶ ನೀಡಬೇಕೆಂದು ನೋಟಿಸ್ನಲ್ಲಿ ಕೋರಿದ್ದಾರೆ.
|
eesanje/url_46_297_11.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ವಿಪಕ್ಷಗಳಿಗೆ ಉತ್ತರ ನೀಡಲು ಸರ್ಕಾರ ತಯಾರಾಗಿದೆ : ಸಿಎಂ
|
2 |
+
ಬೆಳಗಾವಿ,ಡಿ.4- ಅಧಿವೇಶನದಲ್ಲಿ ವಿರೋಧ ಪಕ್ಷಗಳು ಮಾಡುವ ಪ್ರಸ್ತಾಪಗಳಿಗೆ ಉತ್ತರ ನೀಡಲು ರಾಜ್ಯ ಸರ್ಕಾರ ತಯಾರಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಜಂಟಿಯಾಗಿ ಹೋರಾಟ ಮಾಡಿದರೂ ಸೂಕ್ತ ಉತ್ತರ ನೀಡಲು ನಾವು ತಯಾರಾಗಿದ್ದೇವೆ ಎಂದರು.
|
3 |
+
ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಕೆಲವು ಮಸೂದೆಗಳು ಮಂಡನೆಯಾಗಲಿದೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆಯಾಗಲಿದೆ ಎಂದು ಹೇಳಿದರು. ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಎಲ್ಲ ವರ್ಗದವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬಲು ಜಾರಿಗೆ ತರಲಾಗಿದೆ. ಬಡವರ ಪರವಾಗಿ ತಂದಿರುವಂತಹ ಕಾರ್ಯಕ್ರಮಗಳು ಎಂದು ಸಮರ್ಥಿಸಿಕೊಂಡರು.
|
4 |
+
ಲೋಕಸಭೆಯಲ್ಲಿ ಮೊಳಗಿದ ‘ತೀಸ್ರಿ ಬಾರ್ ಮೋದಿ ಸರ್ಕಾರ್’ ಘೋಷಣೆ
|
5 |
+
ತೆಲಂಗಾಣದಲ್ಲಿ ನೀಡಿದ್ದ ಗ್ಯಾರಂಟಿ ಭರವಸೆಯಿಂದ ಕಾಂಗ್ರೆಸ್ಗೆ ಗೆಲುವು ಸಿಕ್ಕಿದೆ. ಮಧ್ಯಪ್ರದೇಶದ ಮುಖ್ಯಮಂತ್ರಿ ಗ್ಯಾರಂಟಿ ಭರವಸೆ ಘೋಷಣೆ ಮಾಡಿರಲಿಲ್ಲವೇ? ಹಾಗಿದ್ದರೆ ಅವರು ಯಾವ ಭರವಸೆ ಮೇಲೆ ಗೆದ್ದಿದ್ದಾರೆ ಎಂದು ಪ್ರಶ್ನಿಸಿದರು. ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು 6 ತಿಂಗಳು ತೆಗೆದುಕೊಂಡ ಬಿಜೆಪಿಯವರಿಗೆ ನಮ್ಮ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ? ಎಂದರು.
|
eesanje/url_46_297_12.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ನಿಂತ ಬಸ್ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು
|
2 |
+
ಬೆಂಗಳೂರು,ಡಿ.4- ಪ್ರಯಾಣಿಕರನ್ನು ಇಳಿಸಲು ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ನಿಲ್ಲುತ್ತಿದ್ದಂತೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಇಂದು ಬೆಳಗ್ಗೆ ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
|
3 |
+
ಬೆಂಕಿಯ ತೀವ್ರತೆಯಿಂದಾಗಿ ಬಸ್ ಹಿಂಭಾಗ ಭಾಗಶಃ ಹಾನಿಯಾಗಿದೆ. ಚಾಲಕ ಹಾಗೂ ನಿರ್ವಾಹಕರ ಸಮಯ ಪ್ರಜ್ಞೆಯಿಂದ ಬಸ್ನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ರಕ್ಷಿಸಿದ್ದಾರೆ. ಕಾರಿನಲ್ಲಿದ್ದ ಲೋಕೇಶ್, ಇವರ ಪತ್ನಿ ಹಾಗೂ ಮಗಳು ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
|
4 |
+
ಇಂದು ಬೆಳಗ್ಗೆ 9 ಗಂಟೆ ಸುಮಾರಿನಲ್ಲಿ ಯಶವಂತಪುರದಿಂದ ಬಿಎಂಟಿಸಿ ಬಸ್ ನಾಯಂಡಹಳ್ಳಿ ಹೋಗುತ್ತಿತ್ತು. ರಿಂಗ್ ರಸ್ತೆಯ ಸುವರ್ಣ ಲೇಔಟ್, ನಾಗರಬಾವಿ ಜಂಕ್ಷನ್ನಲ್ಲಿ ಪ್ರಯಾಣಿಕರನ್ನು ಇಳಿಸಲು ಬಸ್ ನಿಲ್ಲಿಸಿದಾಗ ಹಿಂದಿನಿಂದ ಅತಿವೇಗವಾಗಿ ಬಂದ ಕಾರು ಬಸ್ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.
|
5 |
+
ಡಿಕ್ಕಿ ರಭಸಕ್ಕೆ ಕಾರಿನ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಕಾರನ್ನು ಪೂರ್ತಿ ಆವರಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ಕಾರಿನಲ್ಲಿದ್ದ ದಂಪತಿ ಹಾಗೂ ಮಗಳನ್ನು ಕಾರಿನಿಂದ ಹೊರ ಕರೆತಂದು ರಕ್ಷಿಸಿದ್ದಾರೆ. ಬಸ್ ಹಿಂಭಾಗಕ್ಕೆ ಕಾರು ಕಚ್ಚಿಕೊಂಡಿದ್ದರಿಂದ ಚಾಲಕ ಕಾರನ್ನು ಬೇರ್ಪಡಿಸಲು ಬಸ್ಸನ್ನು ಸ್ವಲ್ಪ ದೂರ ಚಾಲನೆ ಮಾಡಿಕೊಂಡು ಹೋಗಿ ಬುದ್ಧಿವಂತಿಕೆ ಉಪಯೋಗಿಸಿ ಮೀಡಿಯನ್ ಮೇಲೆ ಬಸ್ ಹತ್ತಿಸಿದಾಗ ಉರಿಯುತ್ತಿದ್ದ ಕಾರು ಕಳಚಿಕೊಂಡಿದೆ.
|
6 |
+
ಲೋಕಸಭೆಯಲ್ಲಿ ಮೊಳಗಿದ ‘ತೀಸ್ರಿ ಬಾರ್ ಮೋದಿ ಸರ್ಕಾರ್’ ಘೋಷಣೆ
|
7 |
+
ನಂತರ ಸಾರ್ವಜನಿಕರ ಸಹಾಯದಿಂದ ಬಸ್ ಚಾಲಕ ಹಾಗೂ ನಿರ್ವಾಹಕರು ಬಸ್ ಹಿಂಭಾಗ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಒಂದು ವೇಳೆ ಬಸ್ ಇಂಜಿನ್ಗೆ ಬೆಂಕಿ ತಾಗಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು ಎಂದು ಚಾಲಕ ವಿವರಿಸಿದ್ದಾರೆ.
|
8 |
+
ಬಸ್ ಹಿಂಭಾಗಕ್ಕೆ ಬೆಂಕಿ ತಾಗಿದ್ದರಿಂದ ಭಾಗಶಃ ಹಾನಿಯಾಗಿದೆ. ನೋಡ ನೋಡುತ್ತಿದ್ದಂತೆ ನಡುರಸ್ತೆಯಲ್ಲೇ ಕಾರು ಹೊತ್ತಿ ಉರಿದಿದ್ದು, ಸುದ್ದಿ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರಾದರೂ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಕಾರಿನಲ್ಲಿದ್ದ ಮೂವರು ಸಣ್ಣಪುಟ್ಟ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ.ಈ ಬಗ್ಗೆ ಬ್ಯಾಟರಾಯನಪುರ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
|
9 |
+
ಚಾಲಕನ ಸಮಯಪ್ರಜ್ಞೆ:ಪ್ರಯಾಣಿಕರನ್ನು ಇಳಿಸಲು ಬಸ್ ನಿಲ್ಲಿಸಿದಾಗ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರು ಬಸ್ಗೆ ಕಚ್ಚಿಕೊಂಡು ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಚಾಲಕ ಬಸ್ ಇಳಿದು ನಿರ್ವಾಹಕ ಹಾಗೂ ಸ್ಥಳೀಯರೊಂದಿಗೆ ಸೇರಿ ನೀರು ಹಾಗೂ ಮಣ್ಣು ಹಾಕಿ ಬೆಂಕಿಯನ್ನು ನಂದಿಸಲು ಹರಸಾಹಸಪಟ್ಟರು.
|
10 |
+
ಸಾಧ್ಯವಾಗದಿದ್ದಾಗ ಬಸ್ನ್ನು ಸ್ವಲ್ಪ ಮುಂದೆ ಚಾಲನೆ ಮಾಡಿದರಾದರೂ ಕಾರು ಬಸ್ನಿಂದ ಬಿಡಿಸಿಕೊಳ್ಳದೆ ಬಸ್ನ ಜೊತೆಗೆ ಬರುತ್ತಿರುವುದನ್ನು ಗಮನಿಸಿ ಬಸ್ನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ.
|
11 |
+
ಜನ ನಕಾರಾತ್ಮಕತೆಯನ್ನು ತಿರಸ್ಕರಿಸಿದ್ದಾರೆ : ಮೋದಿ
|
12 |
+
ನಂತರ ಬಸ್ನಲ್ಲಿದ್ದ ಬೆಂಕಿ ನಂದಿಸುವ ಸಾಧನದಿಂದ ಬೆಂಕಿಯನ್ನು ನಂದಿಸಲು ಯತ್ನಿಸಿದರು. ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ತಕ್ಷಣ ಅಗ್ನಿಶಾಮಕ ದಳ ಹಾಗೂ ಡಿಫೋಗೆ ವಿಷಯ ತಿಳಿಸಿದ್ದಾರೆ. ಡಿಫೋದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಸಾಧನದಿಂದ ಬೆಂಕಿಯನ್ನು ತಹಬದಿಗೆ ತರಲು ಯತ್ನಿಸುತ್ತಿದ್ದಾಗ ಅಗ್ನಿಶಾಮಕ ಸಿಬ್ಬಂದಿ ವಾಹನದೊಂದಿಗೆ ಆಗಮಿಸಿ ಬೆಂಕಿಯನ್ನು ನಂದಿಸಿದರು.
|