CoolCoder44 commited on
Commit
806b6d8
·
verified ·
1 Parent(s): c579157

a6fe2bdeefe36b4dde0f91737df407ff8ff786a3d31ceeefae8ab385aef88eae

Browse files
Files changed (50) hide show
  1. eesanje/url_46_61_2.txt +13 -0
  2. eesanje/url_46_61_3.txt +10 -0
  3. eesanje/url_46_61_4.txt +4 -0
  4. eesanje/url_46_61_5.txt +7 -0
  5. eesanje/url_46_61_6.txt +14 -0
  6. eesanje/url_46_61_7.txt +6 -0
  7. eesanje/url_46_61_8.txt +14 -0
  8. eesanje/url_46_61_9.txt +12 -0
  9. eesanje/url_46_62_1.txt +8 -0
  10. eesanje/url_46_62_10.txt +8 -0
  11. eesanje/url_46_62_11.txt +8 -0
  12. eesanje/url_46_62_12.txt +5 -0
  13. eesanje/url_46_62_2.txt +4 -0
  14. eesanje/url_46_62_3.txt +6 -0
  15. eesanje/url_46_62_4.txt +10 -0
  16. eesanje/url_46_62_5.txt +9 -0
  17. eesanje/url_46_62_6.txt +17 -0
  18. eesanje/url_46_62_7.txt +9 -0
  19. eesanje/url_46_62_8.txt +9 -0
  20. eesanje/url_46_62_9.txt +8 -0
  21. eesanje/url_46_63_1.txt +4 -0
  22. eesanje/url_46_63_10.txt +5 -0
  23. eesanje/url_46_63_11.txt +9 -0
  24. eesanje/url_46_63_12.txt +5 -0
  25. eesanje/url_46_63_2.txt +7 -0
  26. eesanje/url_46_63_3.txt +6 -0
  27. eesanje/url_46_63_4.txt +59 -0
  28. eesanje/url_46_63_5.txt +5 -0
  29. eesanje/url_46_63_6.txt +5 -0
  30. eesanje/url_46_63_7.txt +9 -0
  31. eesanje/url_46_63_8.txt +6 -0
  32. eesanje/url_46_63_9.txt +6 -0
  33. eesanje/url_46_64_1.txt +8 -0
  34. eesanje/url_46_64_10.txt +10 -0
  35. eesanje/url_46_64_11.txt +5 -0
  36. eesanje/url_46_64_12.txt +6 -0
  37. eesanje/url_46_64_2.txt +6 -0
  38. eesanje/url_46_64_3.txt +7 -0
  39. eesanje/url_46_64_4.txt +13 -0
  40. eesanje/url_46_64_5.txt +7 -0
  41. eesanje/url_46_64_6.txt +8 -0
  42. eesanje/url_46_64_7.txt +10 -0
  43. eesanje/url_46_64_8.txt +13 -0
  44. eesanje/url_46_64_9.txt +6 -0
  45. eesanje/url_46_65_1.txt +5 -0
  46. eesanje/url_46_65_10.txt +4 -0
  47. eesanje/url_46_65_11.txt +7 -0
  48. eesanje/url_46_65_12.txt +4 -0
  49. eesanje/url_46_65_2.txt +7 -0
  50. eesanje/url_46_65_3.txt +7 -0
eesanje/url_46_61_2.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಶೀಘ್ರದಲ್ಲೇ ದೇವರು ನನಗೆ ಸಿಎಂ ಆಗುವ ಅವಕಾಶ ಕೊಡಲಿದ್ದಾನೆ : ಹೆಚ್ಡಿಕೆ
2
+ ಮೈಸೂರು,ಜು.28-ಶೀಘ್ರವಾಗಿಯೇ ತಮಗೆ ರಾಜ್ಯದಲ್ಲಿ ಮುಖ್ಯಮಂತ್ರಿಯಾಗುವ ಅವಕಾಶವನ್ನು ದೇವರು ಕೊಡಲಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ನಂಜನಗೂಡು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್‌‍ ನಾಯಕರು ಅವರಪ್ಪರಾಣೆ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಹೇಳಿದ್ದರು. ಆದರೆ ಅದೇ ಅವಧಿಯಲ್ಲೇ ನನಗೆ ಮುಖ್ಯಮಂತ್ರಿಯಾಗುವ ಅವಕಾಶ ದೊರೆಯಿತು ಎಂದು ಹೇಳಿದರು.
3
+ ಈಗ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕುಮಾರಸ್ವಾಮಿಯವರಿಗೆ ಮುಖ್ಯಮಂತ್ರಿಯಾಗಿ ರಾಮನಗರದ ಹೆಸರು ಬದಲಾವಣೆ ಮಾಡುವ ಅವಕಾಶ ಹಣೆಯಲ್ಲಿ ಬರೆದಿಲ್ಲ ಎಂದು ಹೇಳಿದ್ದಾರೆ. ಅವರು ಯಾವ ರೀತಿ ಪದಗಳನ್ನು ಬಳಕೆ ಮಾಡುತ್ತಾರೋ, ಆದಷ್ಟು ಬೇಗ ಅವು ಜಾರಿಗೆ ಬರುತ್ತವೆ. ತಮಗೆ ರಾಜ್ಯದಲ್ಲಿ ಮುಖ್ಯಮಂತ್ರಿಯಾಗುವ ಅವಕಾಶ ಶೀಘ್ರ ಬರಲಿದೆ ಎಂದಿದ್ದಾರೆ.ತಮಗೆ ಜನರ ಮತ್ತು ದೇವರ ಆಶೀರ್ವಾದ ಸಾಕು. ಡಿ.ಕೆ.ಶಿವಕುಮಾರ್‌ ಹಾಗೂ ಇತರರ ಆಶೀರ್ವಾದ ಬೇಡ ಎಂದು ಹೇಳಿದರು.
4
+ ಅನಂತರ ಮೈಸೂರಿನ ಪ್ರೆಸ್‌‍ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಸರ್ಕಾರದ ನಡವಳಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ರಾಜ್ಯದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಿಲ್ಲ ಎಂಬ ಆರೋಪವನ್ನು ತಳ್ಳಿಹಾಕಿದ ಕುಮಾರಸ್ವಾಮಿಯವರು ಉದ್ಯೋಗ ಅವಕಾಶ, ಕೌಶಲ್ಯಾಭಿವೃದ್ಧಿ ಶಿಕ್ಷಣಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ. ಇದು ಯಾವುದೋ ಒಂದು ರಾಜ್ಯಕ್ಕೆ ಸೀಮಿತವಲ್ಲ. ಕರ್ನಾಟಕಕ್ಕೂ ಲಾಭವಾಗಲಿದೆ ಎಂದರು.
5
+ ಕೌಶಲ್ಯಾಭಿವೃದ್ಧಿಗೆ 2015 ರಲ್ಲಿ 1.50 ಲಕ್ಷ ಕೋಟಿ ನೀಡಲಾಗಿತ್ತು. ಪ್ರಸಕ್ತ ಸಾಲಿನಲ್ಲಿ 7.50 ಲಕ್ಷ ಕೋಟಿ ನೀಡಲಾಗಿದೆ. ಕಳೆದ 8 ವರ್ಷಗಳಲ್ಲಿ ಅದು ನಿರೀಕ್ಷಿತ ಪ್ರಮಾಣದಲ್ಲಿ ಯಶಸ್ವಿಯಾಗಿಲ್ಲ. ಸುಮಾರು 11,000 ಖಾಸಗಿ ಕಂಪನಿಗಳು ಉಪಯೋಗ ಮಾಡಿಕೊಂಡಿವೆ. ಆ ಕಂಪನಿಗಳ ಮೂಲಕ ಕೌಶಲ್ಯಾಭಿವೃದ್ಧಿ ತರಬೇತಿ ಕೊಡಿಸಲಾಗಿದೆ. ಪ್ರಸಕ್ತ ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿಗೆ 2 ಲಕ್ಷ ಕೋಟಿ ನೀಡಲಾಗಿದೆ. ಕೃಷಿ ಹಾಗೂ ಅದರ ಚಟುವಟಿಕೆಗಳಿಗೆ 1.50 ಲಕ್ಷ ಕೋಟಿ ಒದಗಿಸಲಾಗಿದೆ.ಉನ್ನತ ಶಿಕ್ಷಣ ಸೇರಿದಂತೆ ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರ ಆದ್ಯತೆ ನೀಡಿದ್ದು, ಇದು ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳಿಗೂ ಅನುಕೂಲವಾಗಲಿದೆ ಎಂದು ಹೇಳಿದರು.
6
+ ರಾಜ್ಯಕ್ಕೆ ಕೇಂದ್ರದಿಂದ ಆಗಬೇಕಿರುವ ಕೆಲಸಗಳ ಬಗ್ಗೆ ಕರ್ನಾಟಕ ಸರ್ಕಾರ ಸರಿಯಾಗಿ ನಡೆದುಕೊಳ್ಳುತ್ತಿಲ್ಲ. ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ದೆಹಲಿಗೆ ಬಂದು ಆಯಾ ಇಲಾಖೆಗಳ ಅಧಿಕಾರಿಗಳು, ಸಚಿವರೊಂದಿಗೆ ���ಭೆ ನಡೆಸಿ, ಚರ್ಚಿಸಿ ಒತ್ತಡ ಹೇರಿದ್ದಾರೆ.
7
+ ಆದರೆ ಕರ್ನಾಟಕ ಸರ್ಕಾರ ಕರ್ನಾಟಕ ಭವನದಲ್ಲಿ ಸಂಸದರ ಸಭೆ ಕರೆದು ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಯೋಜನೆಗಳ ಬುಕ್‌ಲೆಟ್‌ ನೀಡಿ ಇದನ್ನು ಸಂಸತ್‌ನಲ್ಲಿ ಪ್ರಸ್ತಾಪಿಸಿ ಎಂದು ಮನವಿ ಮಾಡಿಕೊಳ್ಳುತ್ತಾರೆ. ಸಂಸತ್‌ನಲ್ಲಿ ಪ್ರಸ್ತಾಪಿಸುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಮುಖ್ಯಮಂತ್ರಿಯಾಗಿ ಹಾಗೂ ಕೇಂದ್ರ ಸಚಿವರಾಗಿ ನನಗೂ ಸ್ವಲ್ಪ ಅನುಭವವಿದೆ. ರಾಜ್ಯಸರ್ಕಾರದ ನಡವಳಿಕೆ ಸರಿಯಿಲ್ಲ. ಕೇಂದ್ರಸರ್ಕಾರವನ್ನು ಟೀಕೆ ಮಾಡಿ ತಿರುಗುತ್ತಿದ್ದರೆ ಯಾವುದೇ ಕೆಲಸಗಳಾಗುವುದಿಲ್ಲ ಎಂದರು.
8
+ ಭದ್ರಾ ಮೇಲ್ದಂಡೆಗೆ 5,300 ಕೋಟಿ, ಬೆಂಗಳೂರು ಹೊರವಲಯದ ಪೆರಿಫೆರಲ್‌ ರಿಂಗ್‌ ರಸ್ತೆಗೆ 3 ಸಾವಿರ ಕೋಟಿ ಬಾಕಿ ಇದೆ ಎಂದು ಕಾಂಗ್ರೆಸ್‌‍ ಹೇಳುತ್ತಿದೆ. ಪೆರಿಫೆರಲ್‌ ರಿಂಗ್‌ ರಸ್ತೆ 2008 ರಲ್ಲೇ ನಾನೇ ಪ್ರಸ್ತಾವನೆ ಮಾಡಿದ್ದೆ. ಆಗ 3 ಸಾವಿರ ಕೋಟಿ ರೂ. ಒಟ್ಟು ವೆಚ್ಚವಿತ್ತು. ಈಗ ಅದು ಹಲವು ಪಟ್ಟು ಹೆಚ್ಚಾಗಿದೆ. ಈವರೆಗೂ ರಾಜ್ಯಸರ್ಕಾರ ಇದನ್ನು ಏಕೆ ಆದ್ಯತೆ ಮೇರೆಗೆ ಪರಿಗಣಿಸಲಿಲ್ಲ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
9
+ ಕೇಂದ್ರ ಸರ್ಕಾರ ಪೆರಿಫೆರಲ್‌ ರಿಂಗ್‌ ರಸ್ತೆಗೆ 3 ಸಾವಿರ ಕೋಟಿ ರೂ. ಕೊಟ್ಟರೂ ಒಟ್ಟು ಯೋಜನಾ ವೆಚ್ಚ 20 ಸಾವಿರ ಕೋಟಿ ಇದೆ. ಅದಕ್ಕೆ ಬಾಕಿ ಹಣವನ್ನು ಸರ್ಕಾರ ಎಲ್ಲಿಂದ ತರಲಿದೆ ಎಂದು ಪ್ರಶ್ನಿಸಿದರು.
10
+ ಈ ಹಿಂದೆ ಕೆರೆ ಪುನಶ್ಚೇತನಕ್ಕೆ ನೀಡಿದ್ದ ಹಣವನ್ನು ರಾಜ್ಯಸರ್ಕಾರ ದುರುಪಯೋಗಪಡಿಸಿಕೊಂಡಿರುವುದು ಸಿಎಜಿ ವರದಿಯಲ್ಲಿ ಉಲ್ಲೇಖವಿದೆ. ಮೆಗಾಟೆಕ್‌್ಸಟೈಲ್‌ ಪಾರ್ಕ್‌ಗೆ 100 ರಿಂದ 200 ಕೋಟಿ ರೂ. ಬಾಕಿ ಇದೆ. ಯಾದಗಿರಿಯಲ್ಲಿ ಪ್ರಸ್ತಾವಿತ ಯೋಜನೆ ಅನುಷ್ಠಾನಗೊಳಿಸಿಲ್ಲ. ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿಲ್ಲ. ನಮಲ್ಲಿ ನಾವೇ ಅನ್ಯಾಯ ಮಾಡಿಕೊಳ್ಳುತ್ತಿದ್ದೇವೆ. ಯೋಜನೆಯನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ಟೀಕೆ ಮಾಡುತ್ತಿರುವುದರಿಂದ ಪ್ರಯೋಜನವಾಗುವುದಿಲ್ಲ ಎಂದರು.
11
+ ಈ ಬಾರಿಯ ಬಜೆಟ್‌ನಲ್ಲಿ 45,485 ಕೋಟಿ ರೂ ತೆರಿಗೆ ಹಂಚಿಕೆ ಹಾಗೂ ಅನುದಾನದ ರೂಪದಲ್ಲಿ 15,000 ಕೋಟಿ ಸೇರಿ 60,000 ಕೋಟಿ ರೂ. ಕೇಂದ್ರದಿಂದ ರಾಜ್ಯಕ್ಕೆ ನೆರವು ದೊರೆಯುತ್ತಿದೆ ಎಂದು ಹೇಳಿದರು.
12
+ ಇದರ ಜೊತೆಗೆ ಸಾರ್ಟ್‌ಸಿಟಿಗೆ 6,400 ಕೋಟಿ ರೂ. ಅನುದಾನ ದೊರೆತಿದ್ದು, 904 ಯೋಜನೆಗಳಿಗೆ 14,480 ಕೋಟಿ ರೂ. ಬಳಕೆಯಾಗಿದೆ ಎಂದ ಅವರು ರಾಜ್ಯಸರ್ಕಾರ ಯಾವುದೇ ಯೋಜನೆಯ ಸವಿಸ್ತಾರ ನೀಲನಕ್ಷೆಯೊಂದಿಗೆ ಬಂದರೆ ನಾನೇ ಇವರಿಗೆ ಬೆಂಬಲ ಕೊಡುತ್ತೇನೆ. ಆದರೆ ಅದಕ್ಕೂ ಮೊದಲು ಇವರು ಹಾದಿಬೀದಿಯಲ್ಲಿ ಟೀಕೆ ಮಾಡುವುದನ್ನು ನಿಲ್ಲಿಸಬೇಕು. ಕುಮಾರಸ್ವಾಮಿ ರಾಜ್ಯಕ್ಕೆ ಬಂದರೆ ಸಚಿವರನ್ನು ಭೇಟಿ ಮಾಡಬಾರದು, ಅಧಿಕಾರಿಗಳ ಸಭೆ ನಡೆಸಬಾರದು ಎಂಬ ಧೋರಣೆಯನ್ನು ಬದಲಿಸಿಕೊಳ್ಳಲಿ ಎಂದರು.
13
+ ಕೇಂದ್ರ ಸರ್ಕಾರದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ಸಮಾಜಕಲ್ಯಾಣ ಇಲಾಖೆಯ ಕಲ್ಲೇಶ್‌ ಎಂಬುವರಿಂದ ದೂರು ಕೊಡಿಸಲಾಗಿದೆ. ಅದೇ ವ್ಯಕ್ತಿಯನ್ನು ಒಂದು ತಿಂಗಳ ಹಿಂದಷ್ಟೇ ಸರ್ಕಾರ ಅಮಾನತುಗೊಳಿಸಿತ್ತು. ಕೇಂದ್ರ ಸರ್ಕಾರ ನೀಡಿದ್ದ 40 ಕೋಟಿ ರೂ. ಅನುದಾನಕ್ಕೆ ಬಳಕೆದಾರರ ಪ್ರಮಾಣ ಪತ್ರ ನೀಡುವಂತೆ 8 ಬಾರಿ ಪತ್ರ ಬರೆದಿದ್ದರು. ಅದಕ್ಕೆ ಪ್ರತ್ಯುತ್ತರ ನೀಡದಿದ್ದರಿಂದ ಸದರಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿತ್ತು ಎಂದು ಹೇಳಿದರು.
eesanje/url_46_61_3.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬೆಳ್ಳಂಬೆಳಗ್ಗೆ ಘರ್ಜಿಸಿದ ಪೊಲೀಸರ ರಿವಾಲ್ವರ್‌, ಗುಂಡು ಹಾರಿಸಿ ರೌಡಿ ಶೀಟರ್‌ಗಳ ಸೆರೆ
2
+ ಕನಕಪುರ, ಜು.28-ಇಂದು ಬೆಳ್ಳಂಬೆಳಗ್ಗೆ ಪೊಲೀಸರ ರಿವಾಲ್ವರ್‌ ಗರ್ಜಿಸಿದ್ದು, ತಲೆಮರೆಸಿಕೊಂಡು ಆರ್ಭಟಿಸುತ್ತಿದ್ದ ಇಬ್ಬರು ರೌಡಿ ಶೀಟರ್‌ಗಳಿಗೆ ಗುಂಡು ಹಾರಿಸಿ ಸೆರೆ ಹಿಡಿಯಲಾಗಿದೆ.ಕಳೆದ ಜುಲೈ 22ರಂದು ಕನಕಪುರ ಪಟ್ಟಣದ ಮುಳಗಲ ಪ್ರದೇಶದಲ್ಲಿ ಜಿಪಂ ಮಾಜಿ ಅಧ್ಯಕ್ಷನ ಮನೆಗೆ ನುಗ್ಗಿ ದಾಂಧಲೆ ನಡೆಸಿ ಯುವಕನ ಕೈ ಕತ್ತರಿಸಿ ಮನೆಯವರ ಮೇಲೆ ಹಲ್ಲೆ ನಡೆಸಿದ್ದ ಕುಖ್ಯಾತ ರೌಡಿ ಶೀಟರ್‌ ಹಾಗೂ ಗಡಿ ಪಾರಾಗಿದ್ದ ಹರ್ಷ ಅಲಿಯಾಸ್‌‍ ಕೈಮಾ ಮತ್ತು ಕರುಣೇಶ್‌ ಅಲಿಯಾಸ್‌‍ ಕಣ್ಣನನ್ನು ಕಗ್ಗಲಿಪುರದ ಸಮೀಪ ಕಾರ್ಯಾಚರಣೆಯಲ್ಲಿ ಸೆರೆ ಹಿಡಿಯಲಾಗಿದೆ.
3
+ ಘಟನೆ ವಿವರ: ತಡರಾತ್ರಿ ಮನೆಗೆ ನುಗ್ಗಿದ್ದ ಆರು ಮಂದಿ ದಾಂಧಲೆ ನಡೆಸಿದ್ದರು. ಇದನ್ನು ನೋಡಿ ಜನರು ಭೀತಿಗೊಂಡಿದ್ದರು. ಸ್ಥಳಕ್ಕೆ ಬಂದಿದ್ದ ಐಜಿಪಿ ಪರಿಶೀಲನೆ ನಡೆಸಿ ಮೂರು ವಿಶೇಷ ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿತ್ತು.
4
+ ಕೇವಲ 24 ಗಂಟೆಗಳಲ್ಲೇ ನಾಲ್ವರು ಆರೋಪಿಗಳನ್ನು ಸೆರೆ ಹಿಡಿದರು. ಇವರಲ್ಲಿ ಪ್ರಮುಖ ಆರೋಪಿಗಳಾದ ಹರ್ಷ ಮತ್ತು ಕರುಣೇಶ್‌ ತಲೆಮರೆಸಿಕೊಂಡಿದ್ದರು. ಇವರಿಗೆ ಅಕ್ಕಪಕ್ಕದ ಜಿಲ್ಲೆಗಳಲ್ಲೂ ಹುಡುಕಾಟ ನಡೆಸಲಾಗಿತ್ತು. ಆದರೆ, ಸಿಕ್ಕಿರಲಿಲ್ಲ. ಪೊಲೀಸರ ಬಗ್ಗೆ ಮಾಹಿತಿ ಪಡೆದು ಒಂದೇ ಪ್ರದೇಶದಲ್ಲಿರದೆ ಹಲವಾರು ಹಳ್ಳಿಗಳಿಗೆ ಸಂಚರಿಸಿ ತಲೆಮರೆಸಿಕೊಂಡಿದ್ದರು.
5
+ ಕಳೆದ ರಾತ್ರಿ ಕಗ್ಗಲಿಪುರದ ವ್ಯಾಲಿ ಶಾಲೆ ಬಳಿ ಇವರಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಕನಕಪುರ ಟೌನ್‌ ಸರ್ಕಲ್‌ ಇನ್‌್ಸಪೆಕ್ಟರ್‌ ಮಿಥುನ್‌ ಶಿಲ್ಪಿ ಹಾಗೂ ಪಿಎಸ್‌‍ಐ ಮನೋಹರ್‌ ಮತ್ತವರ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದರು.
6
+ ಇಂದು ಮುಂಜಾನೆ ಅವರಿರುವ ಸ್ಥಳಕ್ಕೆ ತಲುಪಿ ಮೊದಲು ಇಬ್ಬರು ಕಾನ್‌್ಸಟೆಬಲ್‌ಗಳು ಅವರನ್ನು ಹಿಡಿಯಲು ಹೋಗಿದ್ದಾರೆ. ಈ ವೇಳೆ ಈ ಇಬ್ಬರು ಲಾಂಗ್‌ ಮತ್ತು ಡ್ರ್ಯಾಗರ್‌ನಿಂದ ಅವರ ಮೇಲೆಯೇ ಎರಗಿ ಹಲ್ಲೆ ನಡೆಸಿ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾರೆ.
7
+ ತಕ್ಷಣ ಎಚ್ಚೆತ್ತ ಪೊಲೀಸರು ಅವರನ್ನು ಸುತ್ತುವರೆದು ಶರಣಾಗುವಂತೆ ಸೂಚಿಸಿ ಗಾಳಿಯಲ್ಲಿ ಗುಂಡು ಹಾರಿಸಿದರೂ ಅದನ್ನು ಲೆಕ್ಕಿಸದೆ ಅವರ ಮೇಲೆಯೇ ದಾಳಿ ಮುಂದಾದಾಗ ಆತರಕ್ಷಣೆಗಾಗಿ ಇನ್‌್ಸಪೆಕ್ಟರ್‌ ಮತ್ತು ಸಬ್‌ಇನ್‌್ಸಪೆಕ್ಟರ್‌ ಹಾರಿಸಿದ ಗುಂಡುಗಳು ಹರ್ಷನ ಬಲಗಾಲು ಮತ್ತು ಎಡಗಾಲಿಗೆ ಗುಂಡು ತಗುಲಿದ್ದರೆ, ಮತ್ತೊಬ್ಬ ಆರೋಪಿ ಕಣ್ಣನಿಗೆ ಎಡಗಾಲಿಗೆ ಗುಂಡು ಬಿದ್ದು ಕುಸಿದು ಬಿದ್ದರು.
8
+ ತಕ್ಷಣ ಅವರನ್ನು ವಶಕ್ಕೆ ಪಡೆದು ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ನಡುವೆ ಗಾಯಗೊಂಡಿರುವ ಇಬ್ಬರು ಕಾನ್‌್ಸಟೆಬಲ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
9
+ ಒಟ್ಟಾರೆ, ಕಳೆದ ಆರು ದಿನಗಳಿಂದ ತ���ೆಮರೆಸಿಕೊಂಡಿದ್ದ ರೌಡಿ ಶೀಟರ್‌ ಹರ್ಷನನ್ನು ಸೆರೆಹಿಡಿಯಲಾಗಿದೆ. ಈತನ ಮೇಲೆ ಸುಮಾರು ಐದಕ್ಕೂ ಹೆಚ್ಚು ಗಂಭೀರ ಪ್ರಕರಣಗಳಿದ್ದು, ಗಡೀಪಾರು ಮಾಡಲಾಗಿತ್ತು. ಆದರೆ, ಆತ ಕನಕಪುರಕ್ಕೆ ಬಂದು ಈ ದಾಂಧಲೆಯಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.
10
+ ಸ್ಥಳಕ್ಕೆ ಎಸ್‌‍ಪಿ, ಡಿವೈಎಸ್‌‍ಪಿ ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಚುರುಕುಗೊಂಡಿದೆ.
eesanje/url_46_61_4.txt ADDED
@@ -0,0 +1,4 @@
 
 
 
 
 
1
+ ಅತಿಥಿ ಗೃಹಕ್ಕೆ ಬೀಗ : ವಿಶ್ರಾಂತಿಗೆ ಬಂದಿದ್ದ ಕೇಂದ್ರ ಸಚಿವ ಕುಮಾರಸ್ವಾಮಿಗೆ ಬೇಸರ
2
+ ನಂಜನಗೂಡು, ಜು.28-ಬೆಳಗ್ಗೆ ಇಲ್ಲಿನ ಶ್ರೀಕಂಠೇಶ್ವರ ಸ್ವಾಮಿಯ ದರ್ಶನ ಪಡೆದು ಸರ್ಕಾರಿ ಅತಿಥಿಗೃಹಕ್ಕೆ ಆಗಮಿಸಿದ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಶಾಕ್‌ ಕಾದಿತ್ತು. ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಲ್ಪ ವಿಶ್ರಾಂತಿ ಪಡೆಯಲು ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹಕ್ಕೆ ಆಗಮಿಸಿದಾಗ ಬೀಗ ಜಡಿಯಲಾಗಿತ್ತು.
3
+ ಈ ಸಂದರ್ಭದಲ್ಲಿ ಅಲ್ಲಿನ ಸಿಬ್ಬಂದಿಗಳನ್ನು ಕೇಳಿದಾಗ ಅಧಿಕಾರಿಗಳು ಬೀಗ ಹಾಕಿಕೊಂಡು ಹೋಗಿದ್ದಾರೆ ಎಂದು ಹೇಳಿದ್ದಾರೆ. ಸುಮಾರು 15 ನಿಮಿಷ ಅಲ್ಲಿ ಕಾದರೂ ಯಾರೂ ಬರದಿದ್ದಾಗ ಎಚ್‌ಡಿಕೆ ಬೇಸರಿದಂದಲೇ ಮೈಸೂರಿಗೆ ತೆರಳಿದರು.
4
+ ಈ ಸಂದರ್ಭದಲ್ಲಿ ಜತೆಯಲ್ಲಿದ್ದ ಮಾಜಿ ಶಾಸಕ ಸಾ.ರಾ.ಮಹೇಶ್‌ ಸೇರಿದಂತೆ ಇತರ ಜೆಡಿಎಸ್‌‍ ನಾಯಕರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಆಕ್ರೋಶ ವ್ಯಕ್ತಪಡಿಸಿದರು.ಮೊದಲೇ ಕೇಂದ್ರ ಸಚಿವರು ಬರುವ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಆದರೆ, ಸರ್ಕಾರದ ನಿರ್ದೇಶನದಂತೆ ಇಲ್ಲಿನ ಅಧಿಕಾರಿಗಳು ವರ್ತಿಸಿದ್ದಾರೆ. ಇದು ಎಂತಹ ದ್ವೇಷದ ರಾಜಕಾರಣ ಎಂದು ಕಿಡಿಕಾರಿದ್ದಾರೆ.
eesanje/url_46_61_5.txt ADDED
@@ -0,0 +1,7 @@
 
 
 
 
 
 
 
 
1
+ ಸಿದ್ದರಾಮಯ್ಯನವರಿಂದ ಅಧಿಕಾರ ದುರುಪಯೋಗ : ಹೆಚ್‌ಡಿಕೆ ಆರೋಪ
2
+ ನವದೆಹಲಿ, ಜು. 27-ಮುಡಾದಲ್ಲಿ ತಮಗೂ ನಿವೇಶನವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ನೀಡಿರುವ ಹೇಳಿಕೆ ಬಗ್ಗೆ ತಿರುಗೇಟು ನೀಡಿರುವ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು, ಸಿದ್ದರಾಮಯ್ಯ ಅವರಂತೆ ನಾನು ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಎಂದಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮೈಸೂರಿನಲ್ಲಿ ನನಗೆ ನಿವೇಶನ ಕೊಟ್ಟಿದ್ದಾರೆ ಎಂದು ಅರಿಬ್ಬರೂ ಹೇಳಿದ್ದಾರೆ. ಆದರೆ, ಈವರೆಗೆ ಆ ನಿವೇಶನವನ್ನೇ ನನಗೆ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.2006ರಲ್ಲಿಯೇ ನಾನು ಮುಖ್ಯಮಂತ್ರಿಯಾಗಿದ್ದೆ. ಅಧಿಕಾರ ದುರುಪಯೋಗ ಮಾಡಿಕೊಳ್ಳಬೇಕು ಎಂದು ನನಗೆ ಅನ್ನಿಸಿದ್ದಿದ್ದರೆ, ಆಗಲೇ ಆ ನಿವೇಶನವನ್ನು ನನ್ನ ಹೆಸರಿಗೆ ಬರೆಸಿಕೊಳ್ಳಬಹುದಾಗಿತ್ತು ಎಂದಿದ್ದಾರೆ.
4
+ ಈ ನಿವೇಶನದ ಬಗ್ಗೆ ರಾಮಕೃಷ್ಣ ಹೆಗಡೆ ಅವರ ಕಾಲದಿಂದಲೂ ತನಿಖೆ ನಡೆಯುತ್ತಿದೆ. ಲೋಕಾಯುಕ್ತ, ಸಿಐಡಿ ತನಿಖೆಗಳು ನಡೆದು ಹೋಗಿವೆ. 500 ನಿವೇಶನಗಳನ್ನು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಪಡೆದುಕೊಂಡಿದ್ದಾರೆ ಎಂದು ಅಪಪ್ರಚಾರ ಮಾಡಲಾಗಿತ್ತು. ಕೊನೆಗೆ ತನಿಖೆಯಲ್ಲಿ ಒಂದು ನಿವೇಶನವನ್ನಷ್ಟೇ ಪಡೆದುಕೊಂಡಿದ್ದಾರೆ ಎಂದು ಗೊತ್ತಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.
5
+ 2012ನೇ ಇಸವಿಯಲ್ಲಿ ನಾನು ಮುಡಾಕ್ಕೆ ಪತ್ರ ಬರೆದು ಹಂಚಿಕೆ ಮಾಡಿರುವ ನಿವೇಶನ ಕೊಡಿ ಎಂದು ಮನವಿ ಮಾಡಿದ್ದೆ. 2017ರಲ್ಲಿ ಮತ್ತೊಂದು ಪತ್ರವನ್ನೂ ಬರೆದಿದ್ದೆ. ನಾನು ಅಧಿಕಾರ ದುರುಪಯೋಗಪಡಿಸಿಕೊಳ್ಳಲಿಲ್ಲ. ಅಂಥ ಆಲೋಚನೆಯನ್ನೂ ಮಾಡಲಿಲ್ಲ ಎಂದು ಅವರು ಹೇಳಿದ್ದಾರೆ.
6
+ 40 ವರ್ಷವಾದರೂ ನಿವೇಶನ ಕೊಟ್ಟಿಲ್ಲ: ನಿವೇಶನವನ್ನು ಅವರು ನನಗೆ ಧರ್ಮಕ್ಕೆ ಕೊಡುತ್ತಿಲ್ಲ. ನಾನು 34,000 ರೂ. ಹಣ ಕಟ್ಟಿದ್ದೇನೆ. ಆ ಹಣ ಕಟ್ಟಿ 40 ವರ್ಷಗಳೇ ಆಗಿದೆ. ನಿವೇಶನ ಕೊಟ್ಟಿಲ್ಲ. ಇದು ನಿಜವಾದ ಪರಿಸ್ಥಿತಿ ಎಂದು ಕುಮಾರಸ್ವಾಮಿ ಅವರು ಹೇಳಿದರು.
7
+ ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಆರ್ಭಟ ನೋಡಿದೆ. ಈ ವ್ಯಕ್ತಿ ಯಾವ ಹಿನ್ನೆಲೆಯಿಂದ ಬಂದಿರುವುದು ಎನ್ನುವುದು ನನಗೆ ಗೊತ್ತಿದೆ. ಬೆಂಗಳೂರು ನಗರದಲ್ಲಿ ಈ ಮಹಾಶಯ ಏನೆಲ್ಲಾ, ಯಾವೆಲ್ಲಾ ಭ್ರಷ್ಟಾಚಾರ ಎಸಗಿದ್ದಾರೆ ಎಂಬುದನ್ನು ತೆಗೆದರೆ ಈ ವ್ಯಕ್ತಿಯ ಅಸಲಿ ಬಂಡವಾಳ ಗೊತ್ತಾಗುತ್ತದೆ. ಬೆಂಗಳೂರು ಸುತ್ತಮುತ್ತಾ ಮಾಡಿದ್ದಾರಲ್ಲ. ಅದನ್ನಷ್ಟೇ ತೆಗೆದಿಟ್ಟರೆ ಸಾಕು ಎಂದು ಕುಮಾರಸ್ವಾಮಿ ಅವರು ಭೈರತಿ ಸುರೇಶ್‌ ಗೆ ತಿರುಗೇಟು ಕೊಟ್ಟರು.
eesanje/url_46_61_6.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಇನ್ನು ಮುಂದೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಚರಿಸುವ ಮುನ್ನ ಹುಷಾರ್..!
2
+ ಬೆಂಗಳೂರು,ಜು.27-ಇನ್ನು ಮುಂದೆ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್‌‍ವೇಯಲ್ಲಿ ಓವರ್‌ಸ್ಪೀಡ್‌ನಲ್ಲಿ ಚಲಾಯಿಸುವವರು ಹುಷಾರಾಗಿರಬೇಕು. ರ್ಯಾಶ್‌ ಡ್ರೈವಿಂಗ್‌ಮಾಡುವವರು ಕಂಬಿ ಎಣಿಸಬೇಕಾಗುತ್ತದೆ. ಹೈವೇಯಲ್ಲಿ ಹಿಡಿಯೋರಿಲ್ಲ ಎಂದು ಓವರ್‌ಸ್ಪೀಡ್‌‍ ಹೋದರೆ ನಿಮ ಮೇಲೆ ಎಫ್‌ಐಆರ್‌ ದಾಖಲಾಗಲಿದೆ.
3
+ ಬೆಂಗಳೂರು-ಮೈಸೂರು ಹೈವೇಯಲ್ಲಿ ಟ್ರಾಫಿಕ್‌ ಪೊಲೀಸರು ಹಲವು ಕ್ರಮಗಳನ್ನು ಕೈಗೊಂಡಿದ್ದರೂ ರ್ಯಾಶ್‌ ಡ್ರೈವಿಂಗ್‌ ನಿಲ್ಲುತ್ತಿಲ್ಲ. ಹೀಗಾಗಿ ಅತಿ ವೇಗದಲ್ಲಿ ಚಾಹನ ಚಲಾಯಿಸುವವರ ವಿರುದ್ಧ ಕೇಸ್‌‍ ದಾಖಲು ಮಾಡಲು ಪೊಲೀಸರು ಮುಂದಾಗಿದ್ದಾರೆ.130 ಕಿಮೀಗೂ ಅಧಿಕ ವೇಗದಲ್ಲಿ ವಾಹನಗಳು ಸಂಚರಿಸುತ್ತಿವೆ. ಇಂಟರ್‌ಸೆಪ್ಟರ್‌ಗಳು ಇದ್ದರೂ ಹಲವರು ಕ್ಯಾರೇ ಮಾಡುತ್ತಿಲ್ಲ. ಹೀಗಾಗಿ ಅಪಘಾತಗಳಾಗುತ್ತಿವೆ. ಅತಿ ವೇಗದ ಚಾಲನೆಯಿಂದಲೇ 90%ರಷ್ಟು ಅಪಘಾತಗಳು ಸಂಭವಿಸುತ್ತಿವೆ.
4
+ ನಿನ್ನೆ ಮೈಸೂರು ಬೆಂಗಳೂರು ಹೈವೇ ಸಿಸಿಟಿವಿಗಳನ್ನು ಸಂಚಾರಿ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್‌ ಕುಮಾರ್‌ ಪರಿಶೀಲನೆ ಮಾಡಿದ್ದರು. ಪರಿಶೀಲನೆ ವೇಳೆ ಒಂದೇ ದಿನ 150ಕ್ಕೂ ಹೆಚ್ಚು ಅತಿ ವೇಗದ ಚಾಲನೆ ಕೇಸ್‌‍ಗಳು ಪತ್ತೆಯಾಗಿವೆ.
5
+ ಇದರಿಂದ ಓವರ್‌ಸ್ಪೀಡ್‌ಗೆ ಬ್ರೇಕ್‌ ಹಾಕಲು ಎಡಿಜಿಪಿ ಅಲೋಕ್‌ಕುಮಾರ್‌ ಹೊಸ ಕ್ರಮಗಳನ್ನು ಕೈಗೆತ್ತಿಕೊಂಡಿದ್ದಾರೆ. ಆಗಸ್ಟ್‌ 1ರಿಂದಲೇ ಇದನ್ನು ಜಾರಿಗೊಳಿಸಲಾಗುತ್ತಿದೆ.ಸಾಮಾಜಿಕ ಜಾಲತಾಣ ಎಕ್‌್ಸ ಖಾತೆಯಯಲ್ಲಿ ಈ ಕುರಿತು ಮಾಹಿತಿ ನೀಡಿದ್ದು ಮಿತಿ ಮೀರಿದ ವೇಗದಿಂದ ಚಾಲನೆ ಮಾಡುವವರ ವಿರುದ್ಧ ಎಫ್‌‍ಐಆರ್‌ ದಾಖಲಿಸಲಾಗುತ್ತದೆ. ಸ್ಪೀಡ್‌ನಲ್ಲಿ 130 ಕಿಮೀ ದಾಟಿದರೆ ಎಫ್‌‍ಐಆರ್‌ ದಾಖಲಾಗಲಿದೆ. ನಂತರ ಚಾಲಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ವಾಹನ ಚಾಲನೆ ಪರವಾನಗಿಯೂ ರದ್ದಾಗಬಹುದು ಎಂದು ಎಚ್ಚರಿಸಿದ್ದಾರೆ.
6
+ ಹೆದ್ದಾರಿಯಲ್ಲಿ ಸಾರ್ಟ್‌ ಟ್ರಾಫಿಕ್‌ ಮ್ಯಾನೇಜ್‌ಮೆಂಟ್‌‍ವಾಹನ ಸಂಚಾರ ನಿಯಮ ಉಲ್ಲಂಘನೆ ಹಾಗೂ ರಸ್ತೆ ಅಪಘಾತಗಳ ತಡೆಗಾಗಿ ಸಂಚಾರ ಪೊಲೀಸ್‌‍ ವಿಭಾಗ, ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಳ್ಳುತ್ತಿದೆ. ಇದರ ಭಾಗವಾಗಿ ಜುಲೈ 1ರಿಂದ ಬೆಂಗಳೂರು-ಮೈಸೂರು ಎಕ್‌್ಸಪ್ರೆಸ್‌‍ ವೇನಲ್ಲಿ ಇಂಟೆಲಿಜೆಂಟ್‌ ಟ್ರಾಫಿಕ್‌ ಮ್ಯಾನೇಜ್‌ಮೆಂಟ್‌‍ ಸಿಸ್ಟಮ್‌ ಅಳವಡಿಸಲಾಗಿದೆ.
7
+ ಈ ಮಾರ್ಗದಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡವನ್ನು ನೇರವಾಗಿ ಫಾಸ್ಟ್ಯಾಗ್‌ ಖಾತೆಯಿಂದಲೇ ಕಡಿತಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಕ್ಯಾಮೆರಾಗಳು, ಸ್ಪೀಡ್‌ ಗನ್‌ಗಳು ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಲು ನೆರವಾಗಲಿವೆ.
8
+ ಜುಲೈ 1ರಿಂದ ಮೈಸೂರು-ಬೆಂಗಳೂರು ಹೆದ್ದಾರಿಯು ಸಂಪೂರ್ಣವಾಗಿ ಕ್ರಿಯಾತಕ ಐಟಿಎಂಎಸ್‌‍ ಕಾರಿಡಾರ್‌ ಆಗಲಿದೆ ಎಂದು ಕರ್ನಾಟಕ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಎಡಿಜಿಪಿ ಅಲೋಕ್‌ಕುಮಾರ್‌ ಇತ್ತೀಚೆಗೆ ತಿಳಿಸಿದ್ದರು.
9
+ ಐಟಿಎಂಎಸ್‌‍ ಅಥವಾ ಇಂಟೆಲಿಜೆಂಟ್‌ ಟ್ರಾಫಿಕ್‌ ಮ್ಯಾನೇಜ್‌ಮೆಂಟ್‌‍ ಸಿಸ್ಟಮ್‌ ಅನ್ನು ಡಿಸೆಂಬರ್‌ 2022ರಲ್ಲಿ ಬೆಂಗಳೂರಿನಲ್ಲಿ ಚಾಲನೆಗೆ ತರಲಾಯಿತು. ಅದಕ್ಕಾಗಿ 250 ಸ್ವಯಂಚಾಲಿತ ನಂಬರ್‌ ಪ್ಲೇಟ್‌ ರೆಕಗ್ನಿಷನ್‌ (ಎಎನ್‌ಪಿಆರ್‌) ಕ್ಯಾಮೆರಾಗಳು ಮತ್ತು 80 ರೆಡ್‌ ಲೈಟ್‌ ಉಲ್ಲಂಘನೆ ಪತ್ತೆ (ಆರ್‌ಎರ್‌ವಿಡಿ) ಕ್ಯಾಮೆರಾಗಳನ್ನು ನಗರದ 50 ಜಂಕ್ಷನ್‌ ಗಳಲ್ಲಿ ಅಳವಡಿಸಲಾಗಿದೆ.
10
+ ಈಗ ಐಟಿಎಂಎಸ್‌‍ ಅಡಿಯಲ್ಲಿ ಸ್ವಯಂಚಾಲಿತ ನಂಬರ್‌ ಪ್ಲೇಟ್‌ ರೆಕಗ್ನಿಷನ್‌ ಕ್ಯಾಮೆರಾಗಳನ್ನು ಮೈಸೂರಿನ ಪ್ರಮುಖ ರಸ್ತೆಗಳಲ್ಲಿ 8.5 ಕೋಟಿ ರೂ. ಅಂದರೆ ಮೈಸೂರು ನಗರಕ್ಕೆ ರೂಪಾಯಿ 4 ಕೋಟಿ ಮತ್ತು ಮೈಸೂರು ಜಿಲ್ಲೆಗೆ ರೂ.4.5 ಕೋಟಿ ಅಂದಾಜು ವೆಚ್ಚದಲ್ಲಿ ಅಳವಡಿಸಲಾಗಿದೆ. ಅಲ್ಲದೇ ಜುಲೈ 1ರಿಂದ ಟ್ರಾಫಿಕ್‌ ರೂಲ್‌್ಸ ಬ್ರೇಕ್‌ ಮಾಡಿದ ವಾಹನ ಚಾಲಕರಿಗೆ ಚಲನ್‌ ನೀಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ದರು.
11
+ ಅಲ್ಲದೇ ಕ್ಯಾಮೆರಾಗಳನ್ನು ಮೈಸೂರು ಜಿಲ್ಲೆಯ ಹುಣಸೂರು, ಎಚ್ ಡಿ ಕೋಟೆ, ನಂಜನಗೂಡು ಮತ್ತು ಟಿ ನರಸೀಪುರದಂತಹ ಹಲವಾರು ಪ್ರದೇಶಗಳಲ್ಲಿ ಅಳವಡಿಸಲಾಗುವುದು. ಹಾಗಾಗಿ ರೂಲ್‌್ಸ ಬ್ರೇಕ್‌ ಮಾಡಿದ ವಾಹನ ಚಾಲಕರಿಗೆ ಸರಿಯಾದ ಸಮಯಕ್ಕೆ ಎಸ್‌‍ ಎಂಎಸ್‌‍ ಕಳುಹಿಸಲಾಗುವುದು ಎಂದು ಅವರು ಹೇಳಿದ್ದರು.
12
+ ಹೆಚ್ಚುವರಿಯಾಗಿ ಈ ವರ್ಷ ಬೆಂಗಳೂರಿನಿಂದ ಹತ್ತಿರದ ತಾಲೂಕುಗಳು ಮತ್ತು ಜಿಲ್ಲೆಗಳಿಗೆ ಸಂಪರ್ಕಿಸುವ ನಾಲ್ಕು ಪ್ರಮುಖ ಹೆದ್ದಾರಿಗಳಲ್ಲಿ (ತುಮಕೂರು ರಸ್ತೆ, ಕನಕಪುರ ರಸ್ತೆ, ಹೊಸೂರು ರಸ್ತೆ ಮತ್ತು ಹೊಸಕೋಟೆ) ಐಟಿಎಂಎಸ್‌‍ ಕ್ಯಾಮೆರಾಗಳನ್ನು ಅಳವಡಿಸಲು ಎಡಿಜಿಪಿ ಪ್ರಸ್ತಾಪಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
13
+ ಐಟಿಎಂಎಸ್‌‍ ಕ್ಯಾಮೆರಾಗಳ ಜೊತೆಗೆ ಅವರು ಈ ರಸ್ತೆಗಳಲ್ಲಿ ವೇರಿಯಬಲ್‌ ಮೆಸೇಜಿಂಗ್‌ ಚಿಹ್ನೆಗಳನ್ನು ಸೇರಿಸಲು ಯೋಜಿಸುತ್ತಿದ್ದಾರೆ ಎನ್ನಲಾಗಿದೆ. ಈ ಸೈನ್‌ ಬೋರ್ಡ್‌ಗಳು ಸರಿಯಾದ ಸಮಯಕ್ಕೆ ಟ್ರಾಫಿಕ್‌ ಪರಿಸ್ಥಿತಿಯ ಕುರಿತು ಡಿಜಿಟಲ್‌ ಸಂದೇಶವನ್ನು ಪ್ರದರ್ಶಿಸುತ್ತದೆ. ಈ ಪ್ರಸ್ತಾವನೆಯನ್ನು ರಾಜ್ಯ ರಸ್ತೆ ಸಾರಿಗೆ ಪ್ರಾಧಿಕಾರವು ಅನುಮೋದಿಸಿದ್ದು, ಗದಗ ಪಟ್ಟಣದಲ್ಲಿಯೂ ಐಟಿಎಂಎಸ್‌‍ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ.
14
+ ಈ ಬಗ್ಗೆ ಜೂನ್‌ 1ರಂದು ರಾಜ್ಯ ಪೊಲೀಸ್‌‍ನ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗವು ಪ್ರಾದೇಶಿಕ ಎನ್‌ ಹೆಚ್‌‍ಎಐ ಅಧಿಕಾರಿಯೊಂದಿಗೆ ಸಭೆ ನಡೆಸಿತ್ತು. ಹಾಗೇ ಎಡಿಜಿಪಿ ಅವರು ಈ ಬಗ್ಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಪತ್ರ ಬರೆಯುವ ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
eesanje/url_46_61_7.txt ADDED
@@ -0,0 +1,6 @@
 
 
 
 
 
 
 
1
+ ಗುಡ್ಡ ಕುಸಿತದ ಹಿನ್ನೆಲೆಯಲ್ಲಿ ಹಲವು ರೈಲು ರದ್ದು, ಕೆಲವೆಡೆ ಮಾರ್ಗ ಬದಲಾವಣೆ, ಇಲ್ಲಿದೆ ಮಾಹಿತಿ
2
+ ಮಂಗಳೂರು,ಜು.27-ಸತತವಾಗಿ ಸುರಿಯುತ್ತಿರುವ ಮಳೆಯಿಂದ ಶಿರಾಡಿಘಾಟ್‌ ಪ್ರದೇಶದ ಎಡಕುಮೇರಿ ಮತ್ತು ಕಡಗರವಳ್ಳಿ ನಡುವೆ ಭೂ ಕುಸಿತ ಸಂಭವಿಸಿ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಕೆಲ ರೈಲು ಸಂಚಾರಗಳನ್ನು ರದ್ದುಗೊಳಿಸಲಾಗಿದೆ.
3
+ ಇಂದು ಹೊರಡುವ ಯಶವಂತಪುರ-ಮಂಗಳೂರು ಜಂಕ್ಷನ್‌ ಸಾಪ್ತಾಹಿಕ ಎಕ್ಸ್ ಪ್ರೆಸ್‌‍ ಹಾಗೂ ಕಾರವಾರ-ಯಶವಂತಪುರ ಎಕ್ಸ್ ಪ್ರೆಸ್‌‍ ರೈಲುಗಳನ್ನು ರದ್ದುಪಡಿಸಲಾಗಿದೆ. ಸಕಲೇಶಪುರ ಬಳಿಯ ಶಿರಾಡಿಘಾಟ್‌ ಪ್ರದೇಶದ ಎಡಕುಮೇರಿ ಕಡಗರವಳ್ಳಿ ನಡುವೆ ರೈಲು ಹಳಿಯ ಮೇಲೆ ಗುಡ್ಡ ಕುಸಿತ ಉಂಟಾದ ಹಿನ್ನಲೆಯಲ್ಲಿ ರೈಲುಗಳ ಸಂಚಾರ ರದ್ದುಪಡಿಸಲಾಗಿದೆ.
4
+ ಅದೇ ರೀತಿ ಹಾಸನ-ಮಂಗಳೂರು ನಡುವೆ ಸಂಚರಿಸುವ ಹಲವು ರೈಲುಗಳಿಗೆ ಕೇರಳ-ತಮಿಳುನಾಡು ಮೂಲಕ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.ರಾತ್ರಿ 8 ಗಂಟೆಗೆ ಮಂಗಳೂರು ಸೆಂಟ್ರಲ್‌ ನಿಲ್ದಾಣದಿಂದ ಹೊರಡುವ ಕಣ್ಣೂರು-ಬೆಂಗಳೂರು ರೈಲು ನಿನ್ನೆ ರಾತ್ರಿ 9.30 ಆದರೂ ಹೊರಟಿರಲಿಲ್ಲ.
5
+ ರೈಲು ಸಾಗುವ ಹಾದಿಯಲ್ಲಿ ಭೂಕುಸಿತವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ರೈಲು ಟಿಕೆಟ್‌ ಪಡೆದಿದ್ದ ಪ್ರಯಾಣಿಕರು ಕಾದು ಕಾದು ಸಂಕಷ್ಟ ಅನುಭವಿಸಬೇಕಾಯಿತು.ಕೆಲ ಪ್ರಯಾಣಿಕರು ಬಸ್‌‍ನಲ್ಲಿ ಬೆಂಗಳೂರಿಗೆ ತೆರಳಿದರು. 9.45ರ ಸುಮಾರಿಗೆ ಈ ರೈಲು ಮರಳಿ ಕೇರಳದತ್ತ ಸಂಚರಿಸಿ ಸೇಲಂ ಮಾರ್ಗವಾಗಿ ಬೆಂಗಳೂರು ಸಂಚರಿಸಿತು.
6
+ ಇನ್ನು ಕೆಲವು ರೈಲುಗಳ ಸಂಚಾರ ಮಾರ್ಪಾಡು ಮಾಡಲಾಗಿದೆ. ಏಳು ರೈಲುಗಳ ಸಂಚಾರವನ್ನು ಮಾರ್ಗ ಬದಲಾವಣೆ ಮಾಡಲಾಗಿದೆ. ವಿಜಯಪುರ ಎಕ್ಸ್ ಪ್ರೆಸ್‌‍ ರೈಲು ಕಾರವಾರ, ಮಡಗಾವ್‌, ಕ್ಯಾಲರಕ್‌, ಲೋಂಡಾ ಜಂಕ್ಷನ್‌, ಹುಬ್ಬಳ್ಳಿ ಮೂಲಕ ವಿಜಯಪುರಕ್ಕೆ ತೆರಳಿದೆ. ಸುಬ್ರಹಣ್ಯ-ಸಕಲೇಶಪುರ ನಡುವೆ ಭೂ ಕುಸಿತ ಸಂಭವಿಸಿ ರೈಲು ರದ್ದುಪಡಿಸಿದ ಕಾರಣ ರೈಲ್ವೆ ಅಧಿಕಾರಿಗಳು ಪ್ರಯಾಣಿಕರಿಗೆ ಸಮರ್ಪಕ ವ್ಯವಸ್ಥೆ ಮಾಡಿಲ್ಲ ಎಂದು ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಮತ್ತು ರೈಲ್ವೆ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದೆ.
eesanje/url_46_61_8.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ KSFCಯಿಂದ 1100 ಕೋಟಿ ರೂ. ಸಾಲ ನೀಡುವ ಗುರಿ
2
+ ಬೆಂಗಳೂರು,ಜು.27-ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯು 2024-25ನೇ ಹಣಕಾಸು ವರ್ಷದಲ್ಲಿ 1,100 ಕೋಟಿ ರೂ.ಗಳ ಸಾಧಾರಣ ಸಾಲ ಮಂಜೂರಾತಿ ಗುರಿ ಹೊಂದಿದೆ.
3
+ ಕೆಎಸ್ಎಫ್ಸಿಯ 65ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ರೇಜು.ಎಂ.ಟಿ ಅವರು, ಸಂಸ್ಥೆಯು ಗುಣಮಟ್ಟದ ಉದ್ಯಮಗಳಿಗೆ ಹಣಕಾಸು ನೆರವು ನೀಡಿ ಆರ್ಥಿಕ ಅಭಿವೃದ್ಧಿಯ ದೂರದೃಷ್ಟಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.
4
+ 2024-25ರಲ್ಲಿ ಸಂಸ್ಥೆಯಲ್ಲಿ ಲಭ್ಯವಿರುವ ಎಲ್ಲಾ ಐದು ಬಡ್ಡಿ ಸಹಾಯಧನ ಸಾಲ ಯೋಜನೆಗಳಿಂದ ಉದ್ದೇಶಿತ ಸಾಲ ಮಂಜೂರಾತಿ ಹಾಗೂ ವಿತರಣೆೆಯ ಗುರಿ ಸಾಧಿಸುವ ನಿರೀಕ್ಷೆಯಿದೆ. ಅಲ್ಲದೆ ಅನುತ್ಪಾದಕ ಆಸ್ತಿಗಳನ್ನು ಮತ್ತಷ್ಟು ಕಡಿಮೆಗೊಳಿಸಲು ಸಂಸ್ಥೆಯು ಹೆಚ್ಚಿನ ಒತ್ತು ನೀಡಲಿದೆ ಎಂದು ಹೇಳಿದ್ದಾರೆ.
5
+ 2023-24ರ ಹಣಕಾಸು ವರ್ಷದಲ್ಲಿ ರಾಜ್ಯ ಸರ್ಕಾರದ ಬೆಂಬಲದೊಂದಿಗೆ ಸಂಸ್ಥೆಯು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ನೂತನವಾಗಿ ಶೇ.5.5ರ ಬಡ್ಡಿ ಸಹಾಯಧನ ಸಾಲ ಯೋಜನೆಗಳನ್ನು ಹಿಂದುಳಿದ ವರ್ಗಗಳ (ಪ್ರವರ್ಗ-1 ಮತ್ತು ಪ್ರವರ್ಗ-2ಎ ಜಾತಿಗಳಿಗೆ) ಉದ್ಯಮಿಗಳಿಗೆ ಅಲ್ಪ ಸಂಖ್ಯಾತ ಸಮುದಾಯಗಳ ಉದ್ಯಮಿಗಳಿಗೆ ಅನುಷ್ಠಾನಗೊಳಿಸಲಾಯಿತು ಎಂದಿದ್ದಾರೆ.
6
+ ಚಾಲ್ತಿಯಲ್ಲಿರುವ ಮಹಿಳಾ ಉದ್ಯಮಿಗಳಿಗೆ ಲಭ್ಯವಿರುವ ಶೇ.4ರ ಬಡ್ಡಿದರ ಸಹಾಯಧನ ಸಾಲ ಯೋಜನೆಯ ಗರಿಷ್ಠ ಮೊತ್ತವನ್ನು 2 ಕೋಟಿ ರೂ.ಗಳಿಂದ 5 ಕೋಟಿ ರೂ.ಗಳಿಗೆ ಹೆಚ್ಚಿಸಲಾಯಿತು. ಚಾಲ್ತಿಯಲ್ಲಿರುವ ಸೂಕ್ಷ್ಮ ಹಾಗೂ ಸಣ್ಣ ಪ್ರಮಾಣದ ಉತ್ಪಾದನಾ ಘಟಕಗಳಿಗೆ ಶೇ.5.5ರ ಬಡ್ಡಿ ಸಹಾಯಧನ ಸಾಲ ಯೋಜನೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಶೇ.4ರ ಬಡ್ಡಿ ಸಹಾಯಧನ ಸಾಲ ಯೋಜನೆಗಳಡಿ ಯಶಸ್ವಿಯಾಗಿ ಹಣಕಾಸಿನ ನೆರವನ್ನು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
7
+ 143.28 ಕೋಟಿ ತೆರಿಗೆಪೂರ್ವ ದಾಖಲೆ ಲಾಭ:2023-24ನೇ ಸಾಲಿನ ಆರ್ಥಿಕ ಸ್ಥಿತಿಯನ್ನು ಕ್ರೋಡೀಕರಿಸಲಾಗಿದ್ದು, 143.28 ಕೋಟಿ ರೂ. ತೆರಿಗೆ ಪೂರ್ವ ದಾಖಲೆ ಲಾಭವನ್ನು ಹಾಗೂ 115.58 ಕೋಟಿ ರೂ. ತೆರಿಗೆ ನಂತರದ ಲಾಭವನ್ನು ಸಂಸ್ಥೆಯು ಗಳಿಸಿದೆ ಎಂದು ಅವರು ತಿಳಿಸಿದ್ದಾರೆ.
8
+ ಸಂಸ್ಥೆಯು 2023-24ರ ಹಣಕಾಸು ವರ್ಷದಲ್ಲಿ ವಿವಿಧ ಸಾಲ ಯೋಜನೆಗಳ ಮೂಲಕ 827.13 ಕೋಟಿ ರೂ. ಸಾಲ ಮಂಜೂರಾತಿ ಮಾಡಿದ್ದು, ಇದರಲ್ಲಿ 775.76 ಕೋಟಿ ಮೊತ್ತದ ಮಂಜೂರಾತಿಯು 610 ಸೂಕ್ಷ್ಮ ಮತ್ತು ಸಣ್ಣ ಗಾತ್ರದ ಕೈಗಾರಿಕಾ ಉದ್ಯಮಗಳಿಗೆ ನೀಡಲಾಗಿದೆೆ. 2024ರ ಮಾರ್ಚ್ ಅಂತ್ಯದವರೆಗೆ ಸಂಚಿತ ಸಾಲ ಮಂಜೂರಾತಿಯ ಮೊತ್ತವು 20,507.86 ಕೋಟಿ ರೂ.ಗಳನ್ನು 1,76,486 ಉದ್ಯಮಗಳಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
9
+ ಈ ಹಣಕಾಸು ವರ್ಷದಲ್ಲಿ 613.04 ಕೋಟಿ ರೂ. ಸಾಲ ವಿತರಿಸಿದ್ದು, 2023-24ರ ಮಾರ್ಚ್ ಅಂತ್ಯದವರೆಗೆ ಸಂಚಿತ ವಿತರಣೆಯ ಮೊತ್ತ 15,835.14 ಕೋಟಿ ರೂ.ಗಳಷ್ಟಾಗಿದೆ. ಹ���ಕಾಸು ವರ್ಷ 2023-24ರಲ್ಲಿ 820.85 ಕೋಟಿ ರೂ. ಸಾಲ ವಸೂಲಾತಿ ಮಾಡಲಾಗಿದೆ ಮತ್ತು 257.08 ಕೋಟಿ ರೂ. ಬಡ್ಡಿ ಮೊತ್ತವು ವಸೂಲಾತಿಯಾಗಿದೆ. 2024ರ ಮಾರ್ಚ್ ಅಂತ್ಯದವರೆಗೆ ಸಂಚಿತ ವಸೂಲಾತಿಯ ಮೊತ್ತವು ರೂ.20,844.49 ಕೋಟಿಗಳಷ್ಟಾಗಿರುತ್ತದೆ. ಹಾಗೆಯೇ 2022-23ರಲ್ಲಿ ಶೇ.3.51ರಷ್ಟಿದ್ದ ನಿವ್ವಳ ಅನುತ್ಪಾದಕ ಆಸ್ತಿಯು ಪ್ರಸಕ್ತ ಹಣಕಾಸು ವರ್ಷ 2023-24ರಲ್ಲಿ ಶೇ.3.43ಕ್ಕೆ ಇಳಿಕೆಯಾಗಿದೆ ಎಂದು ಅಂಕಿ-ಅಂಶಗಳ ವಿವರ ನೀಡಿದ್ದಾರೆ.
10
+ ಸಾಲ ಮಂಜೂರಾತಿಯ ವಿವರಗಳು:ಸಂಸ್ಥೆಯ ಸ್ಥಾಪಿತ ದಿನದಿಂದ 2024ರ ಮಾರ್ಚ್ 31 ಅಂತ್ಯದವರೆಗೆ 31,706ಕ್ಕೂ ಹೆಚ್ಚಿನ ಮಹಿಳಾ ಉದ್ಯಮಿಗಳಿಗೆ 5,174.09 ಕೋಟಿ ರೂ.ಗಳ ಸಾಲ ಮಂಜೂರಾತಿ ಮಾಡಲಾಗಿದೆ. ಮುಂದುವರೆದು 22,636 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ 3,082.67 ಕೋಟಿ ರೂ.ಗಳಿಗೂ ಅಧಿಕ ಸಾಲ ಮಂಜೂರಾತಿ ನೆರವನ್ನು ನೀಡಿರುತ್ತದೆ ಹಾಗೂ 41,321 ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತ ಉದ್ಯಮಿಗಳಿಗೂ ಸುಮಾರು ರೂ.1,993.50 ಕೋಟಿಗಳ ಸಾಲ ಮಂಜೂರಾತಿ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
11
+ ಆಕರ್ಷಕ ಸಹಾಯಧನ ಸಾಲ ಯೋಜನೆಯಡಿ ನೆರವು:2023-24ರಲ್ಲಿ ಸಂಸ್ಥೆಯು ರಾಜ್ಯ ಸರ್ಕಾರದ ಬೆಂಬಲದೊಂದಿಗೆ ರೂಪಿತವಾದ ವಿವಿಧ ಬಡ್ಡಿ ಸಹಾಯಧನ ಸಾಲ ಯೋಜನೆಗಳಲ್ಲಿ ಮಹಿಳಾ ಉದ್ಯಮಿಗಳಿಗೆ ಲಭ್ಯವಿರುವ ಶೇ.4ರ ಬಡ್ಡಿದರ ಸಹಾಯಧನ ಸಾಲ ಯೋಜನೆಯಡಿ 103 ಮಹಿಳಾ ಉದ್ಯಮಿಗಳಿಗೆ 165.91 ಕೋಟಿ ರೂ. ಸಾಲ ಮಂಜೂರಾತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
12
+ ಈ ಯೋಜನೆಯಡಿ 2024ರ ಮಾರ್ಚ್ 31ರ ಅಂತ್ಯದವರೆಗೆ ಒಟ್ಟು 1,214.39 ಕೋಟಿ ರೂ. ಸಂಚಿತ ನೆರವನ್ನು 1,460 ಮಹಿಳಾ ಉದ್ಯಮಿಗಳಿಂದ ಸ್ಥಾಪಿಸಲ್ಪಟ್ಟ ಉದ್ಯಮಗಳಿಗೆ ನೀಡಲಾಗಿದೆ. ಸೂಕ್ಷ್ಮ ಹಾಗೂ ಸಣ್ಣ ಪ್ರಮಾಣದ ಉತ್ಪಾದನಾ ಘಟಕಗಳಿಗೆ ಲಭ್ಯವಿರುವ ಶೇ.5.5ರ ಬಡ್ಡಿ ಸಹಾಯಧನ ಸಾಲ ಯೋಜನೆಯಡಿ 240 ಘಟಕಗಳಿಗೆ 295.85 ಕೋಟಿ ರೂ.ಸಾಲ ಮಂಜೂರಾತಿ ಮಾಡಲಾಗಿದೆ ಎಂದು ಹೇಳಿದ್ದಾರೆ.
13
+ ಹಣಕಾಸು ವರ್ಷದ ಅಂತ್ಯದವರೆಗೆ, 1,439 ಉದ್ಯಮಗಳಿಗೆೆ 1,658.03 ಕೋಟಿ ರೂ. ಸಂಚಿತ ನೆರವು ನೀಡಲಾಗಿದೆ. ಹಾಗೆಯೇ ಸದರಿ ವರ್ಷದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಲಭ್ಯವಿರುವ ಶೇ.4ರ ಬಡ್ಡಿ ಸಹಾಯಧನ ಸಾಲ ಯೋಜನೆಯಡಿ 269 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ 315.67 ಕೋಟಿ ರೂ. ಸಾಲ ಮಂಜೂರಾತಿ ಮಾಡಲಾಗಿದೆ. ಈ ಯೋಜನೆಯಡಿ ಸದರಿ ಹಣಕಾಸು ವರ್ಷದ ಅಂತ್ಯದವರೆಗೆ 2,544.51 ಕೋಟಿ ರೂ. ಸಂಚಿತ ನೆರವನ್ನು 3,993 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳಿಂದ ಸ್ಥಾಪಿಸಲ್ಪಟ್ಟ ಉದ್ಯಮಗಳಿಗೆ ನೀಡಲಾಗಿದೆ ಎಂದು ವಿವರಿಸಿದ್ದಾರೆ.
14
+ ರಾಜ್ಯ ಸರ್ಕಾರದ ನೆರವು :2023-24ರ ಹಣಕಾಸು ವರ್ಷದಲ್ಲಿ ಕರ್ನಾಟಕ ಸರ್ಕಾರವು ಸಂಸ್ಥೆಗೆ 159.67 ಕೋಟಿ ರೂ. ಬಡ್ಡಿ ಸಹಾಯಧನ ಸಾಲ ಯೋಜನೆಗಳಿಗೆ ಪೂರಕ ನೆರವನ್ನು ಒದಗಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಯಮಿಗಳು ಸ್ಥಾಪಿಸುವ ಜವಳಿ ಮತ್ತು ಕೈಮಗ್ಗ ಉದ್ಯಮಗಳಿಗೆೆ ವಿಶೇಷ ಅನುದಾ�� ಯೋಜನೆಯಡಿ ಕರ್ನಾಟಕ ಸರ್ಕಾರವು ರೂ.12.75 ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ಅವರು ವಿವರಣೆ ನೀಡಿದ್ದಾರೆ.
eesanje/url_46_61_9.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಬೆಂಗಳೂರು ಸಮಸ್ಯೆಗಳ ಬಗ್ಗೆ ಪಕ್ಷಬೇಧ ಮರೆತು ಜನಪ್ರತಿನಿಧಿಗಳ ಮಹತ್ವದ ಸಮಾಲೋಚನೆ
2
+ ಬೆಂಗಳೂರು,ಜು.27-ಬೆಂಗಳೂರು ಮಹಾನಗರದ ಸಮಸ್ಯೆಗಳು ಹಾಗೂ ಅದರ ಪರಿಹಾರಗಳ ಬಗ್ಗೆ ಪಕ್ಷಬೇಧ ಮರೆತು ಎಲ್ಲಾ ಜನಪ್ರತಿನಿಧಿಗಳು ಮಹತ್ವದ ಸಮಾಲೋಚನೆ ನಡೆಸಿದ್ದಾರೆ.
3
+ ವಿಧಾನಸೌಧದಲ್ಲಿಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆದ ಸಭೆಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಚಿವರಾದ ಜಮೀರ್ ಅಹಮದ್ಖಾನ್, ಬಿಜೆಪಿಯ ಶಾಸಕರಾದ ಅಶ್ವತ್ಥ ನಾರಾಯಣ, ಎಸ್.ಆರ್.ವಿಶ್ವನಾಥ್, ಗೋಪಾಲಯ್ಯ, ಭೈರತಿ ಬಸವರಾಜು, ಮುನಿರತ್ನ, ರಾಮಮೂರ್ತಿ, ರವಿ ಸುಬ್ರಹಣ್ಯ, ದಾಸರಹಳ್ಳಿಯ ಮುನಿರಾಜು, ಕಾಂಗ್ರೆಸ್ನ ಬಿಡಿಎ ಅಧ್ಯಕ್ಷರೂ ಆಗಿರುವ ಎನ್.ಎ.ಹ್ಯಾರಿಸ್, ಆನೇಕಲ್ ಕ್ಷೇತ್ರದ ಶಿವಣ್ಣ, ಎ.ಸಿ.ಶ್ರೀನಿವಾಸ್, ವಿಧಾನಪರಿಷತ್ ಸದಸ್ಯ ಸುಧಾಂದಾಸ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.
4
+ ಬ್ರ್ಯಾಂಡ್ ಬೆಂಗಳೂರು ವಿಚಾರವಾಗಿ ವಿರೋಧಪಕ್ಷಗಳ ಶಾಸಕರಲ್ಲಿ ಅಸಮಾಧಾನಗಳಿವೆ. ಇತ್ತೀಚೆಗೆ ವಿಧಾನಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಾಗ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.ಬೆಂಗಳೂರಿನ ಅಭಿವೃದ್ಧಿ ಹಾಗೂ ಬ್ರ್ಯಾಂಡ್ ಬೆಂಗಳೂರು ಬಗ್ಗೆ ಬೆಂಗಳೂರಿನ ಶಾಸಕರ ಸಭೆ ಕರೆಯುವುದಾಗಿ ವಿಧಾನಸಭೆಯಲ್ಲಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. ಅದರಂತೆ ಇಂದು ಸಭೆ ಕರೆಯಲಾಗಿತ್ತು.
5
+ ಸಭೆಯಲ್ಲಿ ಪಕ್ಷಭೇದ ಮರೆತು ಎಲ್ಲರೂ ಪರಸ್ಪರ ಆತೀಯತೆಯಿಂದ ಚರ್ಚೆಯಲ್ಲಿ ತೊಡಗಿಸಿಕೊಂಡಿದ್ದರು. ಆರ್.ಅಶೋಕ್, ಡಿ.ಕೆ.ಶಿವಕುಮಾರ್ ಅಕ್ಕಪಕ್ಕ ಕುಳಿತು ಬೆಂಗಳೂರು ಮಹಾನಗರದ ಅಭಿವೃದ್ಧಿಯ ಕುರಿತು ಸಮಾಲೋಚನೆ ನಡೆಸಿದರು.ಬ್ರ್ಯಾಂಡ್ ಬೆಂಗಳೂರು ಎಂಬುದು ಕೇವಲ ಹೆಸರಿಗೆ ಸೀಮಿತ ಆಗಬಾರದು. ಈ ಹಿಂದೆ ಬಿಬಿಎಂಪಿಯನ್ನು ರಚನೆ ಮಾಡಿ ವಾರ್ಡ್ಗಳ ಸಂಖ್ಯೆಯನ್ನು 198ಕ್ಕೆ ಹೆಚ್ಚಿಸಿದಾಗಲೇ ಬಿಜೆಪಿ ವಿರೋಧ ಮಾಡಿತ್ತು. ಈಗಲೂ ಹೊರವಲಯದ ಬೆಂಗಳೂರು ಯಾವುದೇ ಮೂಲಭೂತ ಸೌಲಭ್ಯವಿಲ್ಲದೆ ಸೊರಗುತ್ತಿದೆ.
6
+ ಇಂತಹ ಸಂದರ್ಭದಲ್ಲಿ ಗ್ರೇಟರ್ ಬೆಂಗಳೂರು ರಚನೆ ಮಾಡುವುದು ಅನಗತ್ಯ ಎಂದು ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಈ ಹಿಂದೆ ಬಸವರಾಜು ಬೊಮಾಯಿಯವರು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ಅಭಿವೃದ್ಧಿಗೆ ಅನುದಾನ ನೀಡಿದ್ದರು. ಈಗ ಆರ್ಥಿಕ ಮುಗ್ಗಟ್ಟಿನ ನೆಪವೊಡ್ಡಿ ಹಣ ನೀಡುತ್ತಿಲ್ಲ. ಹೀಗಾಗಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ.
7
+ ಪ್ರತಿಯೊಂದು ವಿಧಾನಸಭಾ ಕ್ಷೇತ್ರಕ್ಕೂ ಕನಿಷ್ಟ 25 ಕೋಟಿ ರೂ.ಗಳ ಅನುದಾನ ಒದಗಿಸಬೇಕು ಎಂದು ಶಾಸಕರು ಒತ್ತಾಯಿಸಿದ್ದಾರೆ.ಬ್ರ್ಯಾಂಡ್ ಬೆಂಗಳೂರು ಯೋಜನೆಗಾಗಿ ಸಾಕಷ್ಟು ಸಮಾಲೋಚನೆ ಹಾಗೂ ಅಧ್ಯಯನ ನಡೆಸಲಾಗಿದೆ. ಅಂತಾರಾಷ್ಟ್ರೀಯ ಗುಣಮಟ್ಟಕ್ಕನುಗುಣವಾಗಿ ಬೆಂಗಳೂರಿನಲ್ಲಿ ಮೂಲಸೌಲಭ್ಯಗಳನ್ನು ನಿರ್ಮಿಸಬೇಕಿದೆ. ಜ��ತೆಗೆ ಅಂತಹ ಸೌಲಭ್ಯಗಳನ್ನು ಕಲ್ಪಿಸಲು ಬ್ರ್ಯಾಂಡ್ ಬೆಂಗಳೂರು ಕಲ್ಪನೆಯನ್ನು ವಿನ್ಯಾಸಗೊಳಿಸಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿವರಿಸಿದರು.
8
+ ಬೆಂಗಳೂರಿನಲ್ಲಿ 250 ಮೀಟರ್ ಎತ್ತರದ ಆಕಾಶ ಗೋಪುರ ನಿರ್ಮಾಣದ ಪ್ರಾತಕ್ಷ್ಯಿಕೆಯನ್ನು ಇದೇ ವೇಳೆ ಪ್ರದರ್ಶಿಸಲಾಯಿತು.ನಗರದ ಆಯಕಟ್ಟಿನ ಜಾಗದಲ್ಲಿ ಅತ್ಯಾಕರ್ಷಕವಾದ ಆಕಾಶ ಗೋಪುರವನ್ನು ನಿರ್ಮಿಸುವ ಪರಿಕಲ್ಪನೆ ಇದೆ. ಇದು ಪ್ರವಾಸಿ ಕ್ಷೇತ್ರವಾಗಿ ಅಭಿವೃದ್ಧಿಯಾಗಲಿದೆ.
9
+ ಭಾರತದಲ್ಲಿ ಹಲವು ಕಡೆ ವಿವಿಧ ಅತೀ ಎತ್ತರದ ನಿರ್ಮಾಣ ಯೋಜನೆಗಳು ಚಾಲ್ತಿಯಲ್ಲಿವೆ. ಮುಂಬೈನ ಓಷ್ಯನ್ ಟವರ್ನಲ್ಲಿ 331 ಮೀಟರ್, ಪೆಲಾಯಿಸ್ ರಾಯಲ್ನಲ್ಲಿ 320, ಆರಾಧ್ಯ ಅವಾನ್ ಟವರ್-1 307 ಮೀಟರ್, ಸೆಂಚುರಿ ಐಟಿ ಪಾರ್ಕ್ ಟವರ್ 300 ಮೀಟರ್, ಆರಾಧ್ಯಅವಾನ್ ಟವರ್ 295 ಮೀಟರ್ ಎತ್ತರದಲ್ಲಿ ನಿರ್ಮಿಸುವ ಪ್ರಸ್ತಾವಿತ ಯೋಜನೆಗಳಿವೆ ಎಂದು ಪ್ರಾತ್ಯಕ್ಷಿಕೆಯಲ್ಲಿ ವಿವರಿಸಲಾಗಿದೆ.
10
+ ಬೆಂಗಳೂರಿನಲ್ಲಿ 250 ಮೀಟರ್ ಎತ್ತರದ ಆಕಾಶ ಗೋಪುರ ನಿರ್ಮಾಣದಿಂದ ನಗರದ ಆಧುನಿಕತೆಯನ್ನು ಸಂಭ್ರಮಿಸಲು ಸಾಧ್ಯವಾಗಲಿದೆ. ಇದರಿಂದ ಬೆಂಗಳೂರಿನ ಆಕರ್ಷಣೆ ಹೆಚ್ಚಾಗಿ ಪ್ರವಾಸೋದ್ಯಮ ಉತ್ತೇಜನಗೊಳ್ಳಲಿದೆ. ಆದಾಯ ಹಾಗೂ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ವಿವರಿಸಲಾಗಿದೆ.
11
+ 200 ಕಿ.ಮೀ.ವರೆಗೂ ಹೆಚ್ಚಿನ ಹೊಸ ರಸ್ತೆಗಳ ನಿರ್ಮಾಣ, ಸುರಂಗ ರಸ್ತೆ, ಮೇಲು ಸೇತುವೆ, ಸಂಚಾರ ನಿರ್ವಹಣೆಗೆ ಒತ್ತು ನೀಡುವುದರ ಜೊತೆಗೆ ಬೆಂಗಳೂರಿನಲ್ಲಿ ಸಮೂಹ ಸಾರಿಗೆ, ಸೈಕಲ್ ಬಳಕೆಯನ್ನು ಉತ್ತೇಜಿಸುವ ಚರ್ಚೆಗಳು ನಡೆದಿವೆ.ವೈಜ್ಞಾನಿಕ ತ್ಯಾಜ್ಯ ವಿಲೇವಾರಿಯ ಮೂಲಕ ನಗರ ಸೌಂದರ್ಯೀಕರಣವನ್ನು ಹೆಚ್ಚಿಸಲು ಹಾಗೂ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಪ್ರಸ್ತಾವಿತ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗಿದೆ.
12
+ ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆಗೆ ಕೈಗೊಳ್ಳಬೇಕಾದ ಕ್ರಮಗಳು, ಹೊರವಲಯದ ಮೂಲಸೌಕರ್ಯ ಅಭಿವೃದ್ಧಿ, ವಸತಿ ಯೋಜನೆಗಳು, ಶಿಕ್ಷಣ, ಆರೋಗ್ಯ ಸುಧಾರಣೆ ಮತ್ತಿತರ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
eesanje/url_46_62_1.txt ADDED
@@ -0,0 +1,8 @@
 
 
 
 
 
 
 
 
 
1
+ ವಾಲ್ಮೀಕಿ ನಿಗಮ ಹಗರಣದ ಪ್ರಮುಖ ಆರೋಪಿ ಮನೆಯಲ್ಲಿ 10 ಕೆಜಿ ಚಿನ್ನದ ಬಿಸ್ಕೆತ್ ಪತ್ತೆ..!
2
+ ಬೆಂಗಳೂರು,ಜು.27– ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿ ಹಾಗೂ ಎಸ್‌‍ಐಟಿ ತನಿಖಾ ತಂಡವು ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಮನೆಯಲ್ಲಿ ಅಡಗಿಸಿಟ್ಟಿದ್ದ ಬರೋಬ್ಬರಿ 10 ಕೆಜಿ ಚಿನ್ನದ ಬಿಸ್ಕೆಟ್‌ಗಳನ್ನು ವಶಕ್ಕೆ ಪಡೆದಿದೆ.
3
+ ಅಲ್ಲದೆ ಹೈದ್ರಾಬಾದ್‌ನ ಫ್ಲಾಟ್‌ನಲ್ಲಿ ಅಡಗಿಸಿಟ್ಟಿದ್ದ 8 ಕೋಟಿ ರೂ. ಹಣವನ್ನು ಜಪ್ತಿ ಮಾಡಲಾಗಿದೆ.ಆರೋಪಿ ಸತ್ಯನಾರಾಯಣವರ್ಮಾ ವಾಲೀಕಿ ಹಗರಣದ ಹಣದಲ್ಲೇ ಚಿನ್ನ ಖರೀದಿಸಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ 15 ಕೆಜಿ ಚಿನ್ನದ ಬಿಸ್ಕೆಟ್‌ಗಳ ಬಗ್ಗೆ ಬಾಯ್ಸಿಟ್ಟಿದ್ದು, ಅದರಂತೆ ಹೈದ್ರಾಬಾದ್‌ನ ತ್ನ ಫ್ಲಾಟ್‌ನಲ್ಲಿ 10 ಕೆಜಿ ಚಿನ್ನದ ಗಟ್ಟಿ ಇಟ್ಟಿರುವುದಾಗಿ ಹೇಳಿದ್ದರು.
4
+ ಇದೀಗ ಎಸ್‌‍ಐಟಿ ತನಿಖಾ ತಂಡ ಚಿನ್ನದ ಬಿಸ್ಕೆಟ್‌ಗಳನ್ನು ವಶಕ್ಕೆ ಪಡೆದು ಉಳಿದ 5 ಕೆಜಿ ಚಿನ್ನದ ಬಿಸ್ಕೆಟ್‌ಗಾಗಿ ಶೋಧ ನಡೆಸುತ್ತಿದ್ದಾರೆ.ಒಟ್ಟಾರೆ ವಾಲೀಕಿ ನಿಗಮದ ಹಣದಿಂದ ಸತ್ಯನಾರಾಯಣ ವರ್ಮಾ ಬರೋಬ್ಬರಿ 35 ಕೆಜಿ ಚಿನ್ನದ ಬಿಸ್ಕೆಟ್‌ ಖರೀದಿ ಮಾಡಿರುವ ಮಾಹಿತಿಯನ್ನು ತನಿಖಾ ತಂಡ ಕಲೆ ಹಾಕಿವೆ.
5
+ ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸತ್ಯನಾರಾಯಣ ವರ್ಮಾ ನಾಪತ್ತೆಯಾಗಿದ್ದರು. ಎಸ್‌‍ಐಟಿ ತಂಡ ಸತತ ಒಂದು ವಾರಗಳ ಕಾಲ ಹುಡುಕಾಟ ನಡೆಸಿದ್ದರಾದರೂ ಪತ್ತೆಯಾಗಿರಲಿಲ್ಲ.
6
+ ತದನಂತರ ವರ್ಮಾ ಸ್ನೇಹಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹೈದ್ರಾಬಾದ್‌ನಲ್ಲಿರುವುದು ಗೊತ್ತಾಯಿತು. ತಕ್ಷಣ ತನಿಖಾ ತಂಡ ಮಾಸ್ಟರ್‌ ಪ್ಲಾನ್‌ ಮಾಡಿ ಹೈದ್ರಾಬಾದ್‌ಗೆ ತೆರಳಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿ, ನಗರಕ್ಕೆ ಕರೆತಂದು ತೀವ್ರ ವಿಚಾರಣೆಗೊಳಪಡಿಸಿದಾಗ ಹಣ ಹಾಗೂ ಚಿನ್ನದ ಬಗ್ಗೆ ತಿಳಿಸಿದ್ದರು.
7
+ ಸತ್ಯನಾರಾಯಣ ವರ್ಮಾ ಬಂಧನಕ್ಕೊಳಗಾಗುವ ವೇಳೆಗಾಗಲೇ ಹಣ, ಚಿನ್ನವನ್ನು ಬೇರೆಬೇರೆ ಕಡೆಗಳಲ್ಲಿ ಸಾಗಿಸಿದ್ದರು.ತೀವ್ರ ವಿಚಾರಣೆಗೆ ಒಳಪಡಿಸಿದಾಗ ಹಣ ಹಾಗೂ ಫ್ಲಾಟ್‌ ಖರೀದಿ ಬಗ್ಗೆ ಸತ್ಯನಾರಾಯಣ ವರ್ಮಾ ಬಾಯ್ಬಿಟ್ಟಿದ್ದರು.
8
+ ತದನಂತರದಲ್ಲಿ ನ್ಯಾಯಾಲಯದಿಂದ ಸರ್ಚ್‌ ವಾರೆಂಟ್‌ ಪಡೆದು ಎಸ್‌‍ಐಟಿ ತಂಡ ಹೈದ್ರಾಬಾದ್‌ಗೆ ತೆರಳಿ ವರ್ಮಾಗೆ ಸೇರಿದ ಫ್ಲಾಟ್‌ ಶೋಧ ನಡೆಸಿದಾಗ ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 8 ಕೋಟಿ ಹಣವನ್ನು ಜಪ್ತಿ ಮಾಡಿದ್ದಾರೆ. ಹೈದ್ರಾಬಾದ್‌ನ ಸೀಮಾಪೇಟೆ, ಮೀಯಾಪುರದಲ್ಲಿ ವಾಸವಿ ಬಿಲ್ಡರ್ಸ್‌ನಲ್ಲಿ ತಲಾ 2 ಫ್ಲಾಟ್‌ ಸೇರಿ ಬರೋಬ್ಬರಿ 11 ಫ್ಲಾಟ್‌ ಖರೀದಿಸಿರುವ ಬಗ್ಗೆ ಎಸ್‌‍ಐಟಿಗೆ ಮಾಹಿತಿ ಲಭ್ಯವಾಗಿದೆ.
eesanje/url_46_62_10.txt ADDED
@@ -0,0 +1,8 @@
 
 
 
 
 
 
 
 
 
1
+ ಸಿಎಂ ವಿರುದ್ಧ ದೂರು ದಾಖಲಿಸಲು ಅನುಮತಿಗೆ ರಾಜ್ಯಪಾಲರ ಬಳಿ ಮನವಿ
2
+ ಬೆಂಗಳೂರು,ಜು.26-ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದ ಸೃಷ್ಟಿಸಿರುವ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಇದೀಗ ರಾಜಭವನಕ್ಕೂ ಕಾಲಿಟ್ಟಿದೆ.
3
+ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಲು ಅವಕಾಶ ನೀಡಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಿಂ ಅವರು ರಾಜ್ಯಪಾಲ ಥಾವರ್‌ಚಂದ್‌ ಗೆಲ್ಹೋಟ್‌ಗೆ ದಾಖಲೆಗಳ ಸಮೇತ ದೂರು ಸಲ್ಲಿಸಿದ್ದಾರೆ.ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಕುರಿತು ದಾಖಲೆಗಳ ವಿವರಗಳನ್ನು ನೀಡಿದ್ದಾರೆ.
4
+ ಸುಮಾರು 2000ಕ್ಕೂ ಹೆಚ್ಚು ಪುಟಗಳ ದಾಖಲೆಗಳನ್ನು ನೀಡಿರುವ ಅಬ್ರಾಹಿಂ ಅವರು, ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಪುತ್ರ ಎಸ್‌‍.ಯತೀಂದ್ರ, ಮುಡಾ ಆಯುಕ್ತ ನಟೇಶ್‌ ಹಾಗೂ ಹಿಂದಿನ ಮುಡಾ ಅಧ್ಯಕ್ಷ ಎಚ್‌.ವಿ.ರಾಜೀವ್‌ ವಿರುದ್ಧ ದೂರು ದಾಖಲಿಸಲು ಅನುಮತಿ ನೀಡಬೇಕೆಂದು ಕೋರಿದ್ದಾರೆ.
5
+ ಸೆಕ್ಷನ್‌ 218, ಭಾರತೀಯ ನಾಗರಿಕ ಸುರಕ್ಷಾ ಸಮಿತಿ, ಸೆಕ್ಷನ್‌ 17ಎ, 19 ಮತ್ತು 1988ರ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದೂರು ದಾಖಲಿಸಲು ಅಬ್ರಾಹಿಂ ಮನವಿ ಮಾಡಿದ್ದಾರೆ. ಕಳೆದ ಜು.18ರಂದು ಮೈಸೂರಿನ ವಿಜಯನಗರ ಪೊಲೀಸ್‌‍ ಠಾಣೆಯಲ್ಲಿ ಮುಡಾ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲಿಸಿದ್ದರೂ ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
6
+ ಬದಲಿ ನಿವೇಶನ ಪಡೆದಿದ್ದರಿಂದ ಸರ್ಕಾರದ ಬೊಕ್ಕಸಕ್ಕೆ ಒಟ್ಟು 45 ಕೋಟಿ ನಷ್ಟವಾಗಿದೆ. ಉನ್ನತ ಸ್ಥಾನದಲ್ಲಿರುವ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ದೂರು ದಾಖಲಿಸಲು ಅನುಮತಿ ನೀಡಬೇಕು ಎಂಬುದಾಗಿಯೂ ಕೋರಿಕೊಳ್ಳಲಾಗಿದೆ.
7
+ ಈ ಹಿಂದೆ ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಲು ಅಂದು ವಕೀಲರಾದ ಕೆ.ಎನ್‌.ಬಾಲರಾಜ್‌ ಹಾಗೂ ಸಿರಾಜುದ್ದೀನ್‌ ಪಾಷ ಅವರು ಅಂದಿನ ರಾಜ್ಯಪಾಲ ಹಂಸರಾಜ್‌ ಭಾರದಾಜ್‌ ಅವರು ದೂರು ದಾಖಲಿಸಲು ಅನುಮತಿ ನೀಡಿದ್ದರು ಎಂಬುದನ್ನು ಅಬ್ರಾಹಿಂ ಪ್ರಸ್ತಾಪಿಸಿದ್ದಾರೆ.
8
+ ಭೂಮಿ ವಶಪಡಿಸಿಕೊಂಡ ಜಾಗದಲ್ಲಿ, ಅಥವಾ ಸಮಾನಾಂತರ ಜಾಗದಲ್ಲಿ ಬದಲಿ ಭೂಮಿ ನೀಡಬೇಕು ಎಂಬುದು ಕಾನೂನಿನಲ್ಲಿದೆ. ಆದರೆ ಸಿಎಂ ಪತ್ನಿಗೆ ಭೂಸ್ವಾಧೀನವಾದ ಜಾಗ ಬಿಟ್ಟು, ವಿಜಯನಗರದಲ್ಲಿ ಭೂಮಿ ಕೊಡಲಾಗಿದೆ. 50:50 ಅನುಪಾತ ನಿಯಮವನ್ನು ದುರುಪಯೋಗಪಡಿಸಿಕೊಂಡು, 1998ರಲ್ಲಿ ವಶಪಡಿಸಿಕೊಂಡ ಜಾಗಕ್ಕೆ 2020ರಲ್ಲಿ ಜಾರಿಗೆ ಬಂದ 50-50 ಅನುಪಾತ ಬಳಸಿದ್ದೇಕೆ ಎಂದು ಪ್ರಶ್ನಿಸಿದ್ದಾರೆ.
eesanje/url_46_62_11.txt ADDED
@@ -0,0 +1,8 @@
 
 
 
 
 
 
 
 
 
1
+ ಅವಧಿಗೂ ಮುನ್ನವೇ ಅಧಿವೇಶನ ಮುಕ್ತಾಯಗೊಂಡಿದ್ದು ಬೇಸರ ತಂದಿದೆ : ಸ್ಪೀಕರ್ ಖಾದರ್
2
+ ಬೆಂಗಳೂರು,ಜು.26-ವಿರೋಧ ಪಕ್ಷಗಳ ಧರಣಿ ನಡುವೆ ಸರ್ಕಾರಿ ಕಲಾಪಗಳನ್ನು ನಡೆಸುವುದು ಅನಿವಾರ್ಯವಾಗಿತ್ತು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಇಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷಗಳ ಪ್ರತಿಭಟನೆಯಿಂದಾಗಿ ನಿಗದಿತ ಅವಧಿಗಿಂತ ಒಂದು ದಿನ ಮುನ್ನವೇ ಅಧಿವೇಶನ ಮುಕ್ತಾಯಗೊಂಡಿದ್ದು ಬೇಸರ ತಂದಿದೆ ಎಂದರು.
3
+ ಎಂಟು ದಿನಗಳ ಕಾಲ 36 ಗಂಟೆ 51 ನಿಮಿಷ ಕಾರ್ಯ ಕಲಾಪ ನಡೆಸಲಾಗಿದೆ. ದೇಶದ ಯಾವುದೇ ವಿಧಾನಸಭೆಯಲ್ಲಿ ಅಳವಡಿಸದ ಎಐ ಕ್ಯಾಮೆರಾ ಅಳವಡಿಸಲಾಗಿದ್ದು, ಶಾಸಕರು ಎಷ್ಟು ಬಾರಿ ಬರುತ್ತಾರೆ, ಎಷ್ಟು ಬಾರಿ ಹೊರಗೆ ಹೋಗುತ್ತಾರೆ, ಎಷ್ಟು ಅವಧಿ ಇದ್ದರು ಎಂಬುದು ಗೊತ್ತಾಗಲಿದೆ.
4
+ ನಿಲುವಳಿ ಸೂಚನೆಯಡಿ ಚರ್ಚಿತವಾಗುವ ವಿಚಾರವು ಇತ್ತೀಚಿನ ಘಟನೆಯಾಗಿರಬೇಕು, ಸಾರ್ವಜನಿಕ ಮಹತ್ವ ಹೊಂದಿರಬೇಕು, ನ್ಯಾಯಾಂಗ ಅಥವಾ ಅರೆ ನ್ಯಾಯಾಂಗದಿಂದ ತನಿಖೆ ನಡೆಯುತ್ತಿರಬಾರದು. ಆದರೆ ಮುಡಾ ಹಗರಣ ವಿಚಾರ ಈಗಾಗಲೇ ನ್ಯಾಯಾಂಗ ವಿಚಾರಣೆಗೆ ವಹಿಸಿರುವುದರಿಂದ ಕೆಟ್ಟ ಸಂಪ್ರದಾಯಕ್ಕೆ ಅವಕಾಶ ನೀಡಬಾರದು ಎಂಬ ಕಾರಣಕ್ಕೆ ಚರ್ಚೆಗೆ ಅವಕಾಶ ನೀಡಲಿಲ್ಲ. ಸಭಾಧ್ಯಕ್ಷರು ನೀಡಿದ ರೂಲಿಂಗ್‌ ಸರಿಯಾಗಿದೆ ಎಂಬುದು ಮುಂದೆ ವಿರೋಧ ಪಕ್ಷಗಳಿಗೂ ಮನವರಿಕೆಯಾಗಲಿದೆ. ಅಶಿಸ್ತಿನ ವರ್ತನೆ ಕಂಡಾಗ ಕಠಿಣ ಕ್ರಮ ಕೈಗೊಳ್ಳುವುದು ಕಷ್ಟವಲ್ಲ. ಕಲಾಪ ಸುಗಮವಾಗಿ ನಡೆಯಬೇಕು ಎಂಬ ಕಾರಣಕ್ಕೆ ಸಹಿಸಿಕೊಂಡು ಅಧಿವೇಶನ ನಡೆಸಲಾಯಿತು ಎಂದರು.
5
+ ನೀಟ್‌ ಮತ್ತು ಅತಿವೃಷ್ಟಿ ಸೇರಿದಂತೆ ಹಲವು ಮಹತ್ವದ ವಿಚಾರಗಳು ಚರ್ಚೆಯಾಗಬೇಕಿತ್ತು. ಅದಾಗಲಿಲ್ಲ ಎಂಬ ಬೇಸರವಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶೇ.85ರಷ್ಟು ಹಾಜರಾತಿ ಇತ್ತು. ವಿವಿಧ ಸ್ಥಾಯಿ ಸಮಿತಿಗಳ ಅಧಿಕಾರ ಆ.8ಕ್ಕೆ ಮುಗಿಯಲಿದ್ದು, ಮರುನೇಮಕಕ್ಕೆ ಸದನ ಸಭಾಧ್ಯಕ್ಷರಿಗೆ ಅಧಿಕಾರ ಕೊಟ್ಟಿದೆ ಎಂದರು.
6
+ ಈ ಅಧಿವೇಶನದಲ್ಲಿ 23 ಅಧಿಸೂಚನೆಗಳು, 146 ವಾರ್ಷಿಕ ವರದಿಗಳು, 160 ಲೆಕ್ಕ ಪರಿಶೋಕಾ ವರದಿಗಳು, 5 ಅನುಪಾಲನ ವರದಿಗಳು, 4 ಅನುಸರಣಾವರದಿ ಹಾಗೂ 1 ಲೆಕ್ಕ ತಪಸಣಾ ವರದಿ ಮಂಡಿಸಲಾಗಿದೆ. ಮಂಡಿಸಲಾದ 13 ವಿಧೇಯಕಗಳಲ್ಲಿ 12 ವಿಧೇಯಕಗಳನ್ನು ಅಂಗೀಕರಿಸಲಾಗಿದೆ ಎಂದು ಸದನದಲ್ಲಿ ನಡೆದ ಕಾರ್ಯ ಕಲಾಪಗಳ ವರದಿಯನ್ನು ನೀಡಿದರು.
7
+ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ವಿಧಾನಪರಿಷತ್‌ನಲ್ಲಿ 8 ದಿನಗಳ ಕಾಲ 37 ಗಂಟೆ, 30 ನಿಮಿಷ ಕಲಾಪ ನಡೆಸಲಾಗಿದೆ. ಒಟ್ಟು 135 ಪ್ರಶ್ನೆಗಳಲ್ಲಿ 90 ಪ್ರಶ್ನೆಗಳಿಗೆ ಉತ್ತರಿಸಲಾಗಿದೆ ಎಂದರು. ನಾಲ್ಕು ಅಧಿಕೃತ ನಿರ್ಣಯಗಳನ್ನು ಮಂಡಿಸಿ ಅಂಗೀಕರಿಸಲಾಗಿದೆ. ಶೂನ್ಯ ವೇಳೆಯ 62 ಸೂಚನೆಗಳ ಪೈಕಿ 39 ಸೂಚನೆಗಳಿಗೆ ಉತ್ತರವನ್ನು ಮಂಡಿಸಲಾಗಿದೆ ಎಂದು ಮಾಹಿತಿ ನೀಡಿದರು.
8
+ ಸುದ್ದಿಗೋಷ್ಠಿಯಲ್ಲಿ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಸೇರಿದಂತೆ ಉಭಯ ಸದನಗಳ ಕಾರ್ಯದರ್ಶಿಗಳು, ಅಧಿಕಾರಿಗಲು ಉಪಸ್ಥಿತರಿದ್ದರು.
eesanje/url_46_62_12.txt ADDED
@@ -0,0 +1,5 @@
 
 
 
 
 
 
1
+ ರಾಜ್ಯಕ್ಕೆ ಅನ್ಯಾಯವಾದಾಗ ಬಿಜೆಪಿ-ಜೆಡಿಎಸ್‌‍ ಸಂಸದರೇಕೆ ಪ್ರತಿಭಟಿಸಲಿಲ್ಲ..? : ಸಿಎಂ ಪ್ರಶ್ನೆ
2
+ ಬೆಂಗಳೂರು,ಜು.26-ರಾಜ್ಯಕ್ಕೆ ಅನ್ಯಾಯವಾಗಿರುವ ಬಗ್ಗೆ ಬಿಜೆಪಿ-ಜೆಡಿಎಸ್‌‍ನ ಸಂಸದರು, ರಾಜ್ಯಸಭಾ ಸದಸ್ಯರು ಸಂಸತ್‌ನಲ್ಲಿ ಎಂದಾದರೂ ಧ್ವನಿಯೆತ್ತಿದ್ದಾರೆಯೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
3
+ ಮುಡಾ ಪ್ರಕರಣವನ್ನು ಮುಂದಿಟ್ಟುಕೊಂಡು ಸಂಸತ್‌ನಲ್ಲಿ ಜೆಡಿಎಸ್‌‍-ಬಿಜೆಪಿ ಸಂಸದರು ಪ್ರತಿಭಟನೆ ನಡೆಸಿರುವುದಕ್ಕೆ ತಿರುಗೇಟು ನೀಡಿದ ಮುಖ್ಯಮಂತ್ರಿಯವರು, ರಾಜ್ಯಕ್ಕೆ ನಿರಂತರವಾಗಿ ಕೇಂದ್ರದಿಂದ ಅನ್ಯಾಯವಾಗುತ್ತಿದೆ. ತೆರಿಗೆ ಹಂಚಿಕೆಯಿಂದ ಆರಂಭಗೊಂಡು ಮೊನ್ನೆ ಮಂಡನೆಯಾದ ಬಜೆಟ್‌ನಲ್ಲೂ ಅನ್ಯಾಯ ಮುಂದುವರೆದಿದೆ. ಇದರ ಬಗ್ಗೆ ಜೆಡಿಎಸ್‌‍-ಬಿಜೆಪಿಯ ಸಂಸದರು ಧ್ವನಿಯನ್ನೇ ಎತ್ತಿಲ್ಲ ಎಂದು ಆಕ್ಷೇಪಿಸಿದರು.
4
+ ಸಂಸತ್‌ನ ಒಳಗೆ ಮುಡಾ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ-ಜೆಡಿಎಸ್‌‍ನ ಸದಸ್ಯರು ಪ್ರತಿಭಟನೆ ನಡೆಸಿರುವುದು ಮುಖ್ಯಮಂತ್ರಿ ಮತ್ತು ಕಾಂಗ್ರೆಸ್‌‍ ಸರ್ಕಾರದ ಹೆಸರಿಗೆ ಮಸಿ ಬಳಿಯುವ ರಾಜಕೀಯ ಹುನ್ನಾರ ಎಂದು ಸ್ಪಷ್ಟವಾಗಿ ತಿಳಿದುಬರುತ್ತದೆ.
5
+ ಕಳೆದ ಲೋಕಸಭೆ ಅವಧಿಯಲ್ಲಿ ರಾಜ್ಯದಿಂದ 25 ಜನ ಸಂಸದರು ಗೆದ್ದಿದ್ದರು. ಎಂದಾದರೂ ರಾಜ್ಯಕ್ಕಾಗಿರುವ ಅನ್ಯಾಯದ ಬಗ್ಗೆ ಪ್ರತಿಭಟನೆ ನಡೆಸಿದ್ದಾರೆಯೇ?, ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಪ್ರಸ್ತಾಪಿಸಿದ್ದಾರೆಯೇ?, ಮುಡಾ ಪ್ರಕರಣವನ್ನು ಪ್ರಸ್ತಾಪ ಮಾಡುತ್ತಾರೆ. ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದ್ದರೂ ಪ್ರಸ್ತಾಪ ಮಾಡುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
eesanje/url_46_62_2.txt ADDED
@@ -0,0 +1,4 @@
 
 
 
 
 
1
+ ಚಾರ್ಮುಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಟ್ರಾಫಿಕ್‌ ಜಾಮ್‌
2
+ ದಕ್ಷಿಣ ಕನ್ನಡ,ಜು.27-ಮಲೆನಾಡು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಚಾರ್ಮುಡಿಘಾಟ್‌ನಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ 10ನೇ ತಿರುವಿನಲ್ಲಿ ರಸ್ತೆಯ ಮೇಲೆ ಗುಡ್ಡ ಕುಸಿದ ಪರಿಣಾಮ ಸಂಪರ್ಕ ಕಡಿತಗೊಂಡು ಚಾರ್ಮುಡಿಘಾಟ್‌ನಿಂದ ಕೊಟ್ಟಿಗೆಹಾರದವರೆಗೆ ವಾಹನಗಳು ನಿಂತಲ್ಲೇ ನಿಂತಿದ್ದವು.
3
+ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯಿತು. ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲೇ ಪೊಲೀಸರು ವಾಹನಗಳನ್ನು ತಡೆದು ವಾಪಸ್‌‍ ಕಳುಹಿಸಿದರು.ಅತ್ತ ಉಜರಿ ಬಳಿ ಚಾರ್ಮುಡಿಘಾಟ್‌ ಪ್ರವೇಶ ನಿರ್ಬಂಧಿಸಿ ವಾಹನಗಳನ್ನು ಶಿರಾಡಿಘಾಟ್‌ ಬಳಿ ತೆರಳುವಂತೆ ಸೂಚಿಸಲಾಯಿತು.
4
+ ಪ್ರತಿಬಾರಿ ಮಳೆ ಬಂದಾಗಲೂ ಚಾರ್ಮುಡಿಘಾಟ್‌ನಲ್ಲಿ ಗುಡ್ಡ ಕುಸಿಯುವುದು, ರಸ್ತೆಗಳ ಮೇಲೆ ಬಂಡೆಗಳು ಉರುಳುವುದು ಸರ್ವೆಸಾಮಾನ್ಯವಾಗಿದೆ.ಪ್ರತಿಬಾರಿಯೂ ಕೂಡ ವಾಹನ ಸಂಚಾರಕ್ಕೆ ಅಡಚಣೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಮಳೆಗಾಲದಲ್ಲಿ ಆಗುವ ಈ ತೊಂದರೆ ತಪ್ಪಿಸಲು ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿದೆ.
eesanje/url_46_62_3.txt ADDED
@@ -0,0 +1,6 @@
 
 
 
 
 
 
 
1
+ ರಾಮನಗರ ಹೆಸರು ಬದಲಿಸಿದವರು ಸರ್ವನಾಶ ಆಗುತ್ತಾರೆ : ಹೆಚ್ಡಿಕೆ ಕಿಡಿ
2
+ ನವದೆಹಲಿ, ಜು. 27-ರಾಮನಗರ ಜಿಲ್ಲೆಗೆ ರಾಮನ ಹೆಸರು ತೆಗೆಯಲು ಆಗಲ್ಲ. ಈ ಭೂಮಿ ಇರುವ ತನಕ ರಾಮನಗರ ಹೆಸರನ್ನು ತೆಗೆಯಲು ಸಾಧ್ಯವಿಲ್ಲ. ಒಂದು ವೇಳೆ ತಮ್ಮ ಸ್ವಾರ್ಥಕ್ಕಾಗಿ ಹೆಸರು ಬದಲಾವಣೆ ಮಾಡಿದರೆ, ಆ ಕೃತ್ಯ ಎಸಗಿದವರು ಸರ್ವನಾಶ ಆಗುತ್ತಾರೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
3
+ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಮನಗರ ಜಿಲ್ಲೆಯ ಹೆಸರನ್ನು ತೆಗೆದು ಬೆಂಗಳೂರು ದಕ್ಷಿಣ ಎಂದು ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಕಟುವಾಗಿ ಟೀಕಿಸಿದ್ದಾರೆ.
4
+ ಜಿಲ್ಲೆ ರಚನೆ ಮಾಡಿ ರಾಮನಗರ ಎಂದು ಹೆಸರಿಡುವಾಗ, ವಿಧಾನಸಭೆ ಕ್ಷೇತ್ರಕ್ಕೆ ರಾಮನಗರ ಎಂದು ಹೆಸರು ಇಡುವಾಗ ಯಾವುದೇ ಮಾತು ಆಡಲೇ ಇಲ್ಲ. ತಕರಾರು ಮಾಡಲಿಲ್ಲ. ಈಗ ಸ್ವಾರ್ಥಕ್ಕಾಗಿ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
5
+ ರಾಜ್ಯ ಸರ್ಕಾರ ಮೊದಲು ಕಾನೂನು ವ್ಯವಸ್ಥೆ ಸರಿ ಮಾಡಲಿ. ರಾಮನಗರ ಎಷ್ಟು ಅಭಿವೃದ್ಧಿ ಆಗಿದೆ ಅನ್ನುವುದನ್ನು ನೋಡಲಿ. ಹೆಸರು ಬದಲಾವಣೆಯಿಂದ ಭೂಮಿಗೆ ಬೆಲೆ ಬರಲ್ಲ. ಹೆಸರು ಬದಲಾಯಿಸಿದರೆ ಅವರ ಪತನ ಶುರುವಾಯಿತು ಎಂದೇ ಲೆಕ್ಕ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.
6
+ 2028 ಅಥವಾ ಅದರೊಳಗೆಯೇ ಆ ಜಿಲ್ಲೆಗೆ ರಾಮನಗರ ಹೆಸರು ಮತ್ತೆ ಬರುತ್ತದೆ. ಅದನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ ಎಂದು ರಾಜ್ಯದ ಮುಂದಿನ ರಾಜಕೀಯ ಭವಿಷ್ಯವನ್ನು ಸೂಚ್ಯವಾಗಿ ನುಡಿದ್ದಾರೆ.
eesanje/url_46_62_4.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಮಳೆ ಆರ್ಭಟಕ್ಕೆ ಕಂಗಾಲಾದ ಅರ್ಧ ಕರ್ನಾಟಕ, ಇಲ್ಲಿದೆ ಅವಾಂತರಗಳ ವಿವರ
2
+ ಬೆಳಗಾವಿ/ಉತ್ತರಕನ್ನಡ,ಜು.27-ಮಳೆ…ಮಳೆ…ಮಳೆ… ಕಳೆದ ಹತ್ತು ದಿನಗಳಿಂದ ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ಅರ್ಧರಾಜ್ಯ ಅಕ್ಷರಶಃ ನಲುಗಿ ಹೋಗಿದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಬಳ್ಳಾರಿ, ಕೊಪ್ಪಳ, ಮಂಡ್ಯ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಜಲಾಶಯಗಳ ಮೂಲಕ ಭಾರಿ ಪ್ರಮಾಣದಲ್ಲಿ ನದಿಗಳಿಗೆ ನೀರನ್ನು ಬಿಡುಗಡೆಗೊಳಿಸುತ್ತಿರುವುದರಿಂದ ನದಿ ತೀರದ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.ಹೊಲ, ಗದ್ದೆಗಳು ಜಲಾವೃತಗೊಂಡಿವೆ. ಹಲವು ಪಟ್ಟಣ ಪ್ರದೇಶ, ಗ್ರಾಮಗಳಿಗೆ ನೀರು ಹರಿದು ಜನಜೀವನ ಅಸ್ತವ್ಯಸ್ಥವಾಗಿದೆ.
3
+ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ :ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಡಕುಮೇರಿ ಬಳಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದಿದ್ದು, ನಿನ್ನೆ ಸಂಜೆಯಿಂದಲೇ ಬೆಂಗಳೂರು-ಮಂಗಳೂರು ನಡುವಿನ ಎಲ್ಲಾ ಪ್ರಯಾಣಿಕ ಹಾಗೂ ಗೂಡ್‌್ಸ ರೈಲು ಸಂಚಾರ ರದ್ದುಗೊಳಿಸಲಾಗಿತ್ತು. ಮಣ್ಣು ತೆರವು ಹಾಗೂ ಹಳಿ ದುರಸ್ಥಿ ಕಾರ್ಯಾಚರಣೆ ನಡೆಸಲಾಗಿದೆ. ರೈಲಿನಲ್ಲಿ ಸಿಲುಕಿದ್ದ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಪರ್ಯಾಯ ವ್ಯವಸ್ಥೆ ಮಾಡಿ ಬಸ್‌‍ ಮೂಲಕ ಕಳುಹಿಸಿಕೊಡಲಾಗಿದೆ.
4
+ ಚಾರ್ಮುಡಿಯಲ್ಲಿ ಸಂಚಾರ ಸ್ಥಗಿತ :ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಚಾರ್ಮುಡಿಘಾಟ್‌ನ ಹತ್ತನೇ ತಿರುವಿನಲ್ಲಿ ನಿನ್ನೆ ರಾತ್ರಿ ಗುಡ್ಡ ಕುಸಿದಿದ್ದು, ಕೊಟ್ಟಿಗೆಹಾರದವರೆಗೆ ಟ್ರಾಫಿಕ್‌ ಜಾಂ ಆಗಿತ್ತು. ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ ವಾಹನಗಳನ್ನು ತಡೆದು ಪೊಲೀಸರು ವಾಪಸ್‌‍ ಕಳುಹಿಸಿದರು.ಅತ್ತ ಉಜರಿ ಬಳಿಯೂ ಚಾರ್ಮುಡಿ ಘಾಟ್‌ ಪ್ರವೇಶ ನಿರ್ಬಂಧಿಸಲಾಗಿದೆ. ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಗಿದೆ.
5
+ ಬೆಳಗಾವಿಯಲ್ಲಿ ಜನಜೀವನ ಅಸ್ತವ್ಯಸ್ಥ :ಬೆಳಗಾವಿ ಜಿಲ್ಲೆಯಲ್ಲಿ 7 ನದಿಗಳು ಉಕ್ಕಿ ಹರಿದು ಸುಮಾರು 182 ಗ್ರಾಮಗಳು ನೀರಿನಿಂದ ಆವೃತಿಯಾಗಿವೆ. ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿ ನೀರು ನುಗ್ಗಿ ಬೆಳೆ ಹಾನಿ ಸಂಭವಿಸಿದೆ. ಕೃಷ್ಣ, ದೂದ್‌ಗಂಗಾ, ವೇದ್‌ಗಂಗಾ, ಘಟಪ್ರಭಾ, ಮಲಪ್ರಭಾ, ತುಂಗಭದ್ರಾ ನದಿಗಳ ಅಬ್ಬರಕ್ಕೆ 50ಕ್ಕೂ ಹೆಚ್ಚು ಸೇತುವೆಗಳು ಮುಳುಗಡೆಯಾಗಿ ಸಂಪರ್ಕ ಕಡಿತಗೊಂಡಿದೆ.
6
+ ಕಾವೇರಿಯ ಅಬ್ಬರ, ಮುಳುಗಿದ ಸ್ನಾನಘಟ್ಟ :ಕಾವೇರಿ ಜಲಾನಯನ ಪ್ರದೇಶದಲ್ಲೂ ಮಳೆಯ ಅಬ್ಬರ ಮುಂದುವರೆದಿದ್ದು, ಕೆಆರ್‌ಎಸ್‌‍ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ಸ್ ನೀರನ್ನು ಹರಿಯಬಿಟ್ಟಿರುವುದರಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ನಿಮಿಷಾಂಬ ದೇವಸ್ಥಾನ ಸಂಪೂರ್ಣ ಮುಳುಗಡೆಯಾಗಿದೆ. ಸ್ನಾನಘಟ್ಟ ದೇವಸ್ಥಾನದ ಮುಂಭಾಗ ನವಗ್ರಹ, ಅರಳಿಕಟ್ಟೆ, ಶಿವನ ದೇಗುಲಗಳು ಮುಳುಗಡೆಯಾಗಿವೆ. ಭಕ್ತರು ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಶ್ರೀರಂಗಪಟ್ಟಣದ ಗೋಸಾಯ್‌ ಘಾಟ್‌ ಮುಳುಗಡೆಯಾಗಿದ್ದು, ಪಿಂಡಪ್ರಧಾನ, ಹೋಮ-ಹವನ, ಪೂಜಾಕೈಂಕರ್ಯಗಳಿಗೆ ನಿರ್ಬಂಧ ವಿಧಿಸಲಾಗಿದೆ. ಸಿನಿಮಾ ಚಿತ್ರೀಕರಣಕ್ಕೂ ನಿಷೇಧ ಹೇರಲಾಗಿದೆ.
7
+ ಮಲೆನಾಡಿನಲ್ಲಿ ನಿಲ್ಲದ ಮಳೆಯ ಅಬ್ಬರ :ಮಲೆನಾಡಿನ ಚಿಕ್ಕಮಗಳೂರಿನಲ್ಲೂ ಅಬ್ಬರದ ಮಳೆಯಾಗುತ್ತಿದ್ದು, ಜಿಲ್ಲೆಯ ಕಡೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮದಗದ ಕೆರೆ ಕೋಡಿ ಬಿದ್ದಿದೆ. ಕಳೆದ ಎರಡು ವಾರಗಳಿಂದ ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಈ ಕೆರೆ ತುಂಬಿ ಕೋಡಿ ಬಿದ್ದಿದ್ದು, ಸುತ್ತಮುತ್ತಲ ಹಳ್ಳಿಗಳ ರೈತರು ಹಾಗೂ ಜನರ ಸಂಭ್ರಮಕ್ಕೆ ಕಾರಣವಾಗಿದೆ.
8
+ ಶಿವಮೊಗ್ಗದಲ್ಲೂ ಮಳೆಯ ಅಬ್ಬರ ಮುಂದುವರೆದಿದೆ. ನಾಡಿಗೆ ವಿದ್ಯುತ್‌ ನೀಡುವ ಲಿಂಗನಮಕ್ಕಿ ಜಲಾಶಯ 1804 ಅಡಿ ತಲುಪಿದೆ. ಕಳೆದ ಎರಡು ವರ್ಷಗಳಲ್ಲಿ ಮಳೆಯ ಕೊರತೆಯಿಂದ ಜಲಾಶಯದಲ್ಲಿ ನಿರೀಕ್ಷಿಸಿದ ಮಟ್ಟದಲ್ಲಿ ನೀರು ಭರ್ತಿಯಾಗಿರಲಿಲ್ಲ. ಈ ಬಾರಿ ಉತ್ತಮ ಬೆಳೆಯಾಗಿದ್ದು, 1800 ಅಡಿ ದಾಟಿದೆ.
9
+ ಜಲಾಶಯ ತುಂಬಿದರೆ ನೀರನ್ನು ಹೊರಬಿಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ತುಂಗಾಭದ್ರಾ ಜಲಾಶಯಕ್ಕೂ ಹೆಚ್ಚಿನ ಒಳಹರಿವಿದ್ದು, ತುಂಗಾಭದ್ರಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದಿರಬೇಕು ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್‌ಕುಮಾರ್‌ ಮಿಶ್ರಾ ತಿಳಿಸಿದ್ದಾರೆ.
10
+ ಜಿಲ್ಲೆಯ ಕಂಪ್ಲಿ, ಶಿರಗುಪ್ಪ ತಾಲ್ಲೂಕಿನ ನದಿ ಗ್ರಾಮದ ಗ್ರಾಮಸ್ಥರು ನದಿಪಾತ್ರಕ್ಕೆ ತೆರಳದಂತೆ ಸೂಚನೆ ನೀಡಿದ್ದಾರೆ. ಹಲವೆಡೆ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಊಟ, ವಸತಿ ಸೇರಿದಂತೆ ಮೂಲಭೂತ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ನೂಡಲ್‌ ಅಧಿಕಾರಿಗಳನ್ನು ನೇಮಿಸಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
eesanje/url_46_62_5.txt ADDED
@@ -0,0 +1,9 @@
 
 
 
 
 
 
 
 
 
 
1
+ ಸಿದ್ದರಾಮಯ್ಯರವರ ಕ್ಲೀನ್‌ ಇಮೇಜ್‌ಗೆ ಧಕ್ಕೆ ತರಲು ಮುಡಾ ಆರೋಪ : ಸಚಿವ ರಾಜಣ್ಣ
2
+ ತುಮಕೂರು,ಜು.27-ಸಿದ್ದರಾಮಯ್ಯರವರ ಮೇಲೆ ಮಾಡುವ ಆರೋಪ ಅಹಿಂದ ವರ್ಗಗಳ ಮೇಲೆ ಮಾಡುವ ಆರೋಪ, ಮುಡಾದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿಕೊಂಡು ಸೈಟು ಪಡೆದವರೇ ಇಂದು ಆರೋಪ ಮಾಡುತ್ತಿರುವುದು ಸಾಧುವಲ್ಲ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಹೇಳಿದ್ದಾರೆ.
3
+ ತಮ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಯಡಿಯೂರಪ್ಪ ನವರ ಕಾಲದಲ್ಲಿ ಮುಡಾದಲ್ಲಿ ಏನು ಆಗಿದೆ? ಆರೋಪ ಮಾಡುವವರೇ ಮುಡಾದ ಲನುಭವಿಗಳು ಸುಳ್ಳು ದಾಖಲಾತಿ ನೀಡಿ ಸೈಟು ಪಡೆದವರೆ ಇಂದು ಪ್ರಶ್ನೆ ಮಾಡುವುದು ಸಾದುವಲ್ಲ ಎಂದು ನುಡಿದರು.
4
+ ಸಿದ್ದರಾಮಯ್ಯನವರ ಕ್ಲೀನ್‌ ಇಮೇಜ್‌ಗೆ ಧಕ್ಕೆ ತರುವ ಯೋಜಿತ ವಾದ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಕಾಂಗ್ರೆಸ್‌‍ನಲ್ಲಿ ಹಿಂದುಳಿದ ವರ್ಗದವರು ಮುಖ್ಯಮಂತ್ರಿಗಳು ಆದಾಗ ಅವರನ್ನು ಕಳಂಕಿತರು ಎಂದು ಹೇಳುವ ಇತಿಹಾಸವನ್ನು ಮುಂದುವರೆದ ಜನಾಂಗದವರು ಮಾಡುತ್ತಿರುವುದು ಹೀನ ಕೃತ್ಯ ಎಂದಿದ್ದಾರೆ.
5
+ ಬಿಜೆಪಿಯವರು ಮುಡಾ ಪ್ರಕರಣ ಮುಂದಿಟ್ಟು ಕೊಂಡು ಮೈಸೂರು ವರೆಗೆ ರ್ಯಾಲಿ ಮಾಡುತ್ತೇವೆ ಎಂದಿದ್ದಾರೆ. ಅವರು ಪ್ರತಿಭಟನಾ ರ್ಯಾಲಿ ಮಾಡಿದರೆ ನಾವೂ ಸಹ ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಅಹಿಂದದವರು ಪ್ರತಿಭಟನೆ ಮಾಡುತ್ತೇವೆ ಎಂದಿರುವ ರಾಜಣ್ಣ ಅವರು ಸಿದ್ದರಾಮಯ್ಯನವರ ಹೆಸರಿಗೆ ಮಸಿ ಬಳಿಯುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ಪ್ರಭಲವಾಗಿ ಪ್ರತಿಪಾದಿಸಿದರು.ತಾಲ್ಲೂಕು, ಜಿಲ್ಲಾ, ರಾಜ್ಯ ಸಹಕಾರ ಸಂಘಗಳಲ್ಲಿ ಪ.ಜಾತಿ/ಪ ಪಂಗಡ, ಹಿಂದುಳಿದವರಿಗೆ ಹಾಗೂ ಮಹಿಳೆಯರಿಗೆ ಪ್ರಾತಿನಿಧ್ಯ ಕಲ್ಪಸುತ್ತೇವೆ.
6
+ ನೇಮಕಾತಿಯಲ್ಲಿ ಸಹ ರೋಸ್ಟರ್‌ ಮಾಡಲಾಗುವುದು. ಸಹಕಾರಿ ಚುನಾವಣೆಯಲ್ಲಿ ಸಹ ಸ್ಪರ್ಧೆ ನೀಡಲು ಅವಕಾಶ ಮಾಡಿಕೊಡಲಾಗುವುದು ಎಂದ ಅವರು, ಅತಿವೃಷ್ಠಿಯಿಂದ ಜನ ತತ್ತರಿಸಿದ್ದಾರೆ. ಇದರ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಯಾಗಬೇಕಾಗಿತ್ತು. ಬಿಜೆಪಿ ಆ ಕೆಲಸ ಮಾಡದೆ ಕಾಲಹರಣ ಮಾಡಿದೆ ಎಂದು ಆರೋಪಿಸಿದರು.
7
+ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ. ಈಗಾಗಲೇ ಮೂರು ತನಿಖಾ ಸಂಸ್ಥೆಗಳು ತನಿಖೆ ಕೈಗೊಂಡಿದ್ದಾರೆ. ಮೂಡಾದಿಂದ ಯಾರು? ಯಾರು? ಸೈಟುಗಳು ತೆಗೆದುಕೊಂಡಿದ್ದಾರೆ ಅವರೆಲ್ಲಾ ವಾಪಸ್ಸು ನೀಡಲಿ, ಅದು ಬಿಟ್ಟು ಒಬ್ಬರ ಮೇಲೆ ಗದಾಪ್ರಹಾರ ನಡೆಸುವುದು ಸರಿಯಲ್ಲ ಎಂದರು.
8
+ ಬಿಜೆಪಿಯೇತರ ಸರ್ಕಾರವನ್ನು ಕೆಳಗಿಳಿಸುವುದೆ ಬಿಜೆಪಿಯ ಉದ್ದೇಶ. ಜಾರ್ಖಂಡ್‌ ಮತ್ತು ಅರವಿಂದ ಕೇಜ್ರಿವಾಲರ ಮೇಲೆ ನಡೆಯುತ್ತಿರುವುದು ಏನು? ಕೇಂದ್ರ ಸರ್ಕಾರವು ತನಿಖಾ ಸಂಸ್ಥೆ ಗಳನ್ನು ದುರುಪಯೋಗ ಮಾಡಿಕೊಂಡಿದೆ. ಶೇ 90/ ರಷ್ಟು ಬಿಜೆಪಿಯೇತರರ ಮೇಲೆ ತನಿಖೆ ನಡೆಸಲಾಗುತ್ತಿದೆ ಎಂದರು.
9
+ ಕಾಂಗ್ರೆಸ್‌‍ ಮುಖಂಡ ವೇಣುಗೋಪಾಲ ಮಾತನಾಡಿ, ಸಿದ್ದರಾಮಯ್ಯನವರ ಮೇಲೆ ಇಲ್ಲ ಸಲ್ಲದ ಆರೋಪವನ್ನು ಮಾಡುವ ವಿಜಯೇಂದ್ರ ಮೊದಲು ಬುದ್ಧಿ ಕಲಿಯಲಿ. ಯಡಿಯೂರಪ್ಪ ಜೈಲಿಗೆ ಹೋಗಲು ಇದೇ ವಿಜಯೇಂದ್ರ ಕಾರಣ ಅಲ್ಲವೇ? ಭೂತದ ಬಾಯಿಂದ ಭಗವದ್ಗೀತೆ ಕೇಳುವ ಅನಿವಾರ್ಯ ನಮಗಿಲ್ಲ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌‍ ಮುಖಂಡ ಟಿ.ಪಿ.ಮಂಜುನಾಥ್‌ ಹಾಜರಿದ್ದರು.
eesanje/url_46_62_6.txt ADDED
@@ -0,0 +1,17 @@
 
 
 
 
 
 
 
 
 
 
 
 
 
 
 
 
 
 
1
+ : ರಾಮನಗರ ಜಿಲ್ಲೆ ಮರುನಾಮಕರಣಕ್ಕೆ ಸರ್ಕಾರ ಅಸ್ತು : ಇಲ್ಲಿದೆ ಸಂಪುಟ ಸಭೆ ಹೈಲೈಟ್ಸ್
2
+ ಬೆಂಗಳೂರು, ಜು.26-ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡುವುದು. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮರು ನಾಮಕರಣ ಮಾಡುವ ಮಹತ್ವದ ನಿರ್ಧಾರವನ್ನು ಇಂದು ನಡೆದ ಸಚಿವ ಸಂಪುಟ ಸಭೆ ತೆಗೆದುಕೊಂಡಿದೆ.
3
+ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಸಚಿವ ಎಚ್. ಕೆ.ಪಾಟೀಲ್ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು, ಜುಲೈ 31ಕ್ಕೆ ಸೇವೆಯಿಂದ ವಯೋನಿವೃತ್ತಿ ಹೊಂದಲಿದ್ದಾರೆ. ಅವರ ನಿವೃತ್ತಿಯ ನಂತರ ತೆರವಾಗುವ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲು ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ ಎಂದರು.
4
+ ನಿವೃತ್ತಿ ಹೊಂದಲಿರುವ ರಜನೀಶ್ ಗೋಯಲ್ ಅವರಿಗೆ ಸಂಪುಟ ಸಭೆಯಲ್ಲಿ ಬೀಳ್ಕೊಡುಗೆ ನೀಡಲಾಯಿತು ಎಂದು ಹೇಳಿದರು.ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಬದಲಾಯಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಜಿಲ್ಲೆಯ ಹೆಸರು ಮಾತ್ರ ಬದಲಾವಣೆಯಾಗಲಿದ್ದು, ಉಳಿದೆಲ್ಲವೂ ಹಾಗೆ ಇರಲಿದೆ. ಬ್ರಾಂಡ್ ಬೆಂಗಳೂರು ಹಿನ್ನಲೆಯಲ್ಲಿ ಈ ಬದಲಾವಣೆ ಮಾಡಲಾಗುತ್ತಿದ್ದು, ಕಂದಾಯ ಇಲಾಖೆ ಮುಂದಿನ ಪ್ರಕ್ರಿಯೆಯನ್ನು ಕೈಗೊಳ್ಳಲಿದೆ ಎಂದು ಅವರು ಹೇಳಿದರು.
5
+ ಕೆ. ಆರ್. ಎಸ್ ಜಲಾಶಯದ ಬೃಂದಾವನವನ್ನು ಮೇಲ್ದರ್ಜೆಗೇರಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ 2263 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುತ್ತದೆ.‌ ಹೆಲಿಪ್ಯಾಡ್, ಪಾರ್ಕಿಂಗ್, ಜಲಕ್ರೀಡೆ ಸೇರಿದಂತೆ ಎಲ್ಲವೂ ಒಳಗೊಂಡಿರುತ್ತದೆ ಎಂದು ಅವರು ತಿಳಿಸಿದರು.
6
+ ಪ್ರೌಢಶಾಲೆಯ ಶಿಕ್ಷಕರು ಪದವಿಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ಹೊಂದಲು ಸ್ನಾತಕೋತ್ತರ ಪರೀಕ್ಷೆಯಲ್ಲಿ ಶೇ. 55 ಅಂಕಗಳಿಗೆ ಬದಲಾಗಿ ಶೇ. 50ರಷ್ಟು ಅಂಕಗಳನ್ನು ಗಳಿಸಿದವರಿಗೆ ಅವಕಾಶ ಮಾಡಿ ಕೊಡುವ ನಿರ್ಧಾರ ಕೈಗೊಳ್ಳಲಾಯಿತು. ಲೋಕೋಪಯೋಗಿ ಇಲಾಖೆ ವತಿಯಿಂದ ಕಲ್ಯಾಣ ಇಲಾಖೆಯ 15 ಹಾಸ್ಟೆಲ್ಗಳನ್ನು ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು ಎಂದರು.
7
+ 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದವರಿಗೆ ಒಂದು ಬಾರಿಗೆ ಮಾತ್ರ ಎರಡು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿದ್ದು, ಅದಕ್ಕೆ ಘಟನೊತ್ತರ ಅನುಮೋದನೆ ನೀಡಲಾಯಿತು. ವಿಜ್ಞಾನ, ತಂತ್ರಜ್ಞಾನ, ಐಟಿ, ಬಿಟಿ ಇಲಾಖೆಯ ಅನಿಮೇಷನ್ ವಿಸ್ಯುಯಲ್ ಎಫೆಕ್ಟ್ ಗೆ 16 ಕೋಟಿ ಅನುದಾನ ನೀಡಲು ಸಮ್ಮತಿಸಲಾಯಿತು ಎಂದು ಪಾಟೀಲ್ ತಿಳಿಸಿದರು.
8
+ ಪ್ರಸ್ತುತ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರನಾಮಕರಣ ಮಾಡುವ ಪ್ರಸ್ತಾವನೆಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ ಎಂದು ಕಾನೂನು, ನ್ಯಾಯ ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ ಪಾಟೀಲ ಪ್ರಕಟಿಸಿದರು.
9
+ ಬ್ರ್ಯಾಂಡ್ ಬೆಂಗಳೂರು ಮೂಲಕ ಸೇರ್ಪಡೆ ( ) ಅಭಿವೃದ್ಧಿಯ ಕಲ್ಪನೆಗಳನ್ನು ಸಾಕಾರಗೊಳಿಸುವ ಸದುದ್ದೇಶದಿಂದ ಈ ಹೊಸ ನಾಮಕರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.
10
+ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಒಂದು ಬಾರಿಗೆ ವಯೋಮಿತಿಯ ನಿರ್ಬಂಧವನ್ನು ಸಡಿಲಿಸಿ ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡುವ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ () ಪ್ರಸ್ತಾಪಿಸಿತ್ತು. ಪ್ರಸ್ತಾಪಕ್ಕೆ ದಿನಾಂಕ: 21.06.2024ರ ಸರ್ಕಾರಿ ಆದೇಶಕ್ಕೆ ಸಚಿವ ಸಂಪುಟ ಘಟನೋತ್ತರ ಅನುಮೋದನೆ ನೀಡಿದೆ. 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಹುದ್ದೆಯ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳು ಇದು ಅನ್ವಯವಾಗುತ್ತದೆ ಎಂದು ತಿಳಿಸಿದರು.
11
+ ಲೋಕ ಶಿಕ್ಷಣ ಟ್ರಸ್ಟ್ ಧಾರವಾಡದ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಲು 2.64 ಎಕರೆ ಜಮೀನನ್ನು ಹಂಚಿಕೆ ಮಾಡಲು ಕೈಗಾರಿಕಾ ಇಲಾಖೆ ಪ್ರಸ್ತಾಪಿಸಿತ್ತು. ಪ್ರಸ್ತಾಪಕ್ಕೆ ಸಚಿವ ಸಂಪುಟ ಅನುಮೋದಿಸಿದೆ. ಗಾಮನಗಟ್ಟಿ ಕೈಗಾರಿಕಾ ಪ್ರದೇಶದ ಸಿ.ಎ ನಿವೇಶನ ಸಂಖ್ಯೆ: 1 ರಲ್ಲಿ 2.64 ಎಕರೆ ಜಮೀನನ್ನು ಪ್ರಸ್ತುತವಿರುವ ಹಂಚಿಕೆ ದರದ ಮೇಲೆ ಶೇ.75 ರಷ್ಟು ರಿಯಾಯಿತಿ ದರದಲ್ಲಿ ಹಂಚಿಕೆ ಮಾಡಲು ಹಾಗೂ ವಿಸ್ತರಿಸುವ ರಿಯಾಯಿತಿ ಮೊತ್ತವನ್ನು ಸರ್ಕಾರದಿಂದ ಕೆಐಎಡಿಬಿಗೆ ಮರುಪಾವತಿ ಮಾಡಲು ಸಚಿವ ಸಂಪುಟ ಅನುಮೋದಿಸಿದೆ ಎಂದು ಸಚಿವರು ವಿವರಿಸಿದರು.
12
+ ಬೆಂಗಳೂರು ಆಧಾರಿತ ಅನಿಮೇಶನ್ ಇಂಡಸ್ಟ್ರಿ ( ) ಸಂಘಟನೆಯು ಅನಿಮೇಶನ್, ( ) ಮತ್ತು ಗೇಮಿಂಗ್ () ಉದ್ಯಮವನ್ನು ಅಭಿವೃದ್ಧಿಪಡಿಸಲು ಬದ್ಧವಾಗಿದೆ. ಇದು ಉದ್ಯಮ, ಶೈಕ್ಷಣಿಕ ಸಂಸ್ಥೆಗಳು, ಸರ್ಕಾರ ಮತ್ತು (, , ) ಸಮುದಾಯದ ಪರಿಸರ ವ್ಯವಸ್ಥೆಯ ಅಭಿವೃದ್ಧಿಗೆ ಉತ್ತೇಜಕವಾಗಿ ಕಾರ್ಯನಿರ್ವಹಿಸುವ ಉದ್ದೇಶ ಹೊಂದಿದೆ.
13
+ ಒಟ್ಟು 16.00 ಕೋಟಿ ರೂ.ಗಳ ವೆಚ್ಚದಲ್ಲಿ ಈ ಉತ್ಕೃಷ್ಟತಾ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಸಚಿವರು ತಿಳಿಸಿದರು. 2024-25ನೇ ಸಾಲಿನಲ್ಲಿ ಈಗ ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿರುವ 18 ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಾಣ ಮಾಡುವುದಾಗಿ ಮುಂಗಡ ಪತ್ರದ ಭಾಷಣದಲ್ಲಿ ಮುಖ್ಯಮಂತ್ರಿಯವರು ಘೋಷಿಸಿದ್ದರು. ಈ ಪೈಕಿ ತಲಾ 100 ವಿದ್ಯಾರ್ಥಿಗಳಿಗೆ ಒಂದು ಹಾಸ್ಟೆಲ್ನಂತೆ 15 ಹಾಸ್ಟೆಲ್ಗಳ ನಿರ್ಮಾಣವನ್ನು ಕೈಗೊಳ್ಳಲಾಗುವುದು. ಪ್ರತಿ ಹಾಸ್ಟೆಲ್ ವೆಚ್ಚ 7 ಕ��ಟಿಗಳು. ಒಟ್ಟು ಯೋಜನಾ ವೆಚ್ಚ ರೂ.105.00 ಕೋಟಿ ರೂ.ಗಳ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಅನುಮೋದಿಸಿದೆ.
14
+ ಪದವಿ ಪೂರ್ವ ಕಾಲೇಜು ಉಪನ್ಯಾಸಕರುಗಳ ಹುದ್ದೆಗೆ ಬಡ್ತಿ ಹೊಂದಲು ಪ್ರೌಢ ಶಾಲಾ ಶಿಕ್ಷಕರಿಗೆ ಸ್ನಾತಕೋತ್ತರ ಪದವಿಯಲ್ಲಿ ಶೇ.55 ರಷ್ಟು ಅಂಕಗಳನ್ನು ನಿಗದಿಪಡಿಸಿರುವುದನ್ನು ಪರಿಷ್ಕರಿಸಿ ಕನಿಷ್ಠ ಶೇ.50 ರಷ್ಟು ಅಂಕಗಳನ್ನು ನಿಗದಿಪಡಿಸಲು ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಥವಾ ಕೇಂದ್ರಿಕೃತ ದಾಖಲಾತಿ ಘಟಕ ಅಥವಾ ಕರ್ನಾಟಕ ಲೋಕಸೇವಾ ಆಯೋಗಗಳನ್ನು ಉಪನ್ಯಾಸಕರ ವೃಂದದ ಆಯ್ಕೆ ಪ್ರಾಧಿಕಾರವೆಂದು ನಿಗದಿಪಡಿಸಲು ಮತ್ತು ಉಪನ್ಯಾಸಕ ವೃಂದದ ನೇರ ನೇಮಕಾತಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಮಾತ್ರ ಕನಿಷ್ಠ ಶೇ.50 ರಷ್ಟು ಅಂಕಗಳನ್ನು ನಿಗದಿಪಡಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಸ್ತಾವನೆಯನ್ನು ಸಚಿವ ಸಂಪುಟವು ಒಪ್ಪಿದೆ ಎಂದು ಸಚಿವರು ತಿಳಿಸಿದರು.
15
+ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವನ್ನು ಕಂಪನಿ ಕಾಯ್ದೆ, 2013ರನ್ವಯ ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ನರ್ಣಯಿಸಿದೆ. ಕೌಶಲ್ಯ ಮಿಷನ್ನ ಎಲ್ಲಾ ಅಲ್ಪಾವಧಿ ಕೌಶಲ್ಯಾಭಿವೃದ್ಧಿ ಚಟುವಟಿಕೆಗಳನ್ನು ಒಂದೆಡೆ ತರುವ ಉದ್ದೇಶದಿಂದ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಸ್ಥಾಪಿಸಲು ಮತ್ತು ರಾಜ್ಯ ಸರ್ಕಾರದಿಂದ ಅನುಮೋದಿಸಲಾದ “ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ” ಮತ್ತು ಕೇಂದ್ರ ಸರ್ಕಾರದಿಂದ ಅನುಮೋದಿಸಲಾದ “ಪ್ರಧಾನಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ” ಮತ್ತು “ಸಂಕಲ್ಪ ಯೋಜನೆ”ಗಳನ್ನು ಕೌಶಲ್ಯಾಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ. ಈ ವಿಶೇಷ ಅಭಿವೃದ್ಧಿ ವಾಹಕವು 5 ಕೋಟಿ ರೂ.ಅಧಿಕೃತ ಷೇರು ಬಂಡವಾಳ 1 ಕೋಟಿ ರೂ. . 100 ರೂ. ಮುಖಬೆಲೆಯ 5 ಲಕ್ಷ ರೂ. ಇಕ್ವೀಟಿ ಷೇರುಗಳನ್ನು ಹೊಂದಲು ಅವಕಾಶ ಕಲ್ಪಿಸಲಾಗಿದೆ.ಈ ಸರ್ಕಾರಿ ಸಂಸ್ಥೆಗೆ 6 ಜನ ನಿರ್ದೇಶಕರನ್ನು ನೇಮಕ ಮಾಡಲು ಅವರಲ್ಲಿ 3 ಜನ ಪುರುಷ ಸರ್ಕಾರೇತರ 2 ಮಹಿಳಾ ಸರ್ಕಾರೇತರ ಹಾಗೂ ನಿರ್ದೇಶಕರು, ಐಟಿಬಿಟಿ ನಿರ್ದೇಶಕರಾಗಿರುತ್ತಾರೆಂದು ಸಚಿವರು ತಿಳಿಸಿದರು.
16
+ ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯದ ಕೆಳಭಾಗದಲ್ಲಿನ 198 ಎಕರೆ ಜಾಗದಲ್ಲಿ ಉದ್ಯಾನವನ ಸೌಂದರ್ಯೀಕರಣ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದ್ದು, ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಕೈಗೊಳ್ಳಲು ಈಗಾಗಲೇ ನೀಡಿರುವ ಅನುಮೋದನೆಯಂತೆ ಟೆಂಡರ್ ಕರೆಯುವ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದಿಸಿದೆ.
17
+ ಕೃಷ್ಣರಾಜಸಾಗರ ಆಣೆಕಟ್ಟೆಯ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆಗೆ ಉನ್ನತೀಕರಣಗೊಳಿಸುವ ಕಾಮಗಾರಿಗಳ ವಿಸ್ತೃತ ಯೋಜನಾ ವರದಿಯನ್ನು ಆರ್ಥಿಕ ಇಲಾಖೆ, ಯೋಜನಾ ಇಲಾಖೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಬಂದರ�� ಮತ್ತು ಒಳನಾಡು ಜಲಸಾರಿಗೆ ಇಲಾಖೆಯು ನೀಡಿರುವ ಅಭಿಪ್ರಾಯದನ್ವಯ ಪರಿಷ್ಕರಿಸಿ ಟೆಂಡರ್ ಮುಖಾಂತರ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಚೌಕಟ್ಟಿನಲ್ಲಿ ಅನುಷ್ಠಾನಗೊಳಿಸಲು; ಸಚಿವ ಸಂಪುಟ ನಿರ್ಣಯಿಸಿದೆ. ಒಟ್ಟು ಯೋಜನಾ ವೆಚ್ಚ 2663.74 ಕೋಟಿ ರೂ. 34.5 ವರ್ಷಗಳ ಒಟ್ಟು ರಿಯಾಯಿತಿ ಅವಧಿಯು 4.5 ವರ್ಷಗಳ ರಿಯಾಯಿತಿ ಅವಧಿಯು ಸೇರಿದೆ. ಮಾಸ್ಟರ್ ಪ್ಲಾನ್ನಲ್ಲಿ ಒಟ್ಟು 45 ಘಟಕಗಳನ್ನು ಪರಿಗಣಿಸಲಾಗಿದೆ ಎಂದು ಸಚಿವರು ವಿವರ ನೀಡಿದರು.
eesanje/url_46_62_7.txt ADDED
@@ -0,0 +1,9 @@
 
 
 
 
 
 
 
 
 
 
1
+ ಸ್ವಪಕ್ಷೀಯರ ವಿರುದ್ಧವೇ ಅರವಿಂದ ಲಿಂಬಾವಳಿ ಕಿಡಿ
2
+ ಬೆಂಗಳೂರು,ಜು.26-ಮುಡಾ, ವಾಲ್ಮೀಕಿ ಹಗರಣ, ಹೆಚ್ಚುತ್ತಿರುವ ಡೆಂಘೀ ಸೇರಿದಂತೆ ಆಡಳಿತಾರೂಢ ಕಾಂಗ್ರೆಸ್‌‍ ಸರ್ಕಾರದ ವೈಫಲ್ಯಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವಲ್ಲಿ ವಿಫಲವಾಗಿದೆ ಎಂದು ಸ್ವಪಕ್ಷೀಯರ ವಿರುದ್ಧವೇ ಬಿಜೆಪಿ ಹಿರಿ ನಾಯಕ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ಕೆಂಡಕಾರಿದ್ದಾರೆ.
3
+ ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ಸ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಲಿಂಬಾವಳಿ, ಪ್ರವಾಹಕ್ಕೂ ಮೊದಲು ಈ ಹಿಂದಿನ ವರ್ಷದ ಬರ ಪರಿಹಾರವೂ ಅನೇಕ ರೈತರಿಗೆ ತಲುಪಿಲ್ಲ. ಆ ಬಗ್ಗೆ ಪ್ರತಿಪಕ್ಷದ ನಾಯಕರು ಮಾತಾಡಲೇ ಇಲ್ಲ.
4
+ ಶಾಸಕರೂ ಆಗಿರುವ ನಮ್ಮ ಪಕ್ಷದ ಅಧ್ಯಕ್ಷರು ಮತ್ತು ಪ್ರತಿಪಕ್ಷ ನಾಯಕರ ಮಧ್ಯೆ ಸಾಮರಸ್ಯ, ಹೊಂದಾಣಿಕೆ ಮತ್ತು ತಾಳ-ಮೇಳ ಇಲ್ಲದೇ ಹೋದದ್ದು ವಿಷಾದನೀಯ ಎಂದು ಕಿಡಿಕಾರಿದ್ದಾರೆ. ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಗ್ಯಾರಂಟಿ ಯೋಜನೆ ಹಣಕ್ಕೆ ಎಸ್‌‍ಸಿ-ಎಸ್‌‍ಟಿಗೆ ಮೀಸಲಿಟ್ಟಿರುವ ಅನುದಾನ ದುರ್ಬಳಕೆ ಹೀಗೆ ಯಾವ ವಿಷಯವನ್ನೂ ಒಂದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ನಮ್ಮ ಪಕ್ಷಕ್ಕೆ ಸಾಧ್ಯವಾಗಲಿಲ್ಲ ಎಂದು ವಿಷಾದಿಸಿದ್ದಾರೆ.
5
+ ಈ ವಿಷಯಗಳ ಬಗ್ಗೆ ಪರಿಣಾಮಕಾರಿಯಾಗಿ ವಿಷಯ ಮಂಡಿಸಲು ಪ್ರತಿಪಕ್ಷದ ನಾಯಕರೂ ವಿಫಲರಾದರು. ಆಡಳಿತ ಪಕ್ಷದೊಂದಿಗೆ ಪ್ರತಿಪಕ್ಷ ಶಾಮೀಲಾಗಿದೆಯಾ ಎಂದು ಜನ ಮಾತಾಡಿಕೊಳ್ಳುವಂತಾಯಿತು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
6
+ ಸಿಕ್ಕ ಅವಕಾಶ ಮತ್ತು ಸಮಯವನ್ನು ಸದನದಲ್ಲಿ ಸಮರ್ಪಕವಾಗಿ ಬಳಸಿಕೊಳ್ಳದೇ, ಇಡೀ ಅಧಿವೇಶನದಲ್ಲಿ ವೃಥಾ ಕಾಲಹರಣ ಮಾಡಿ, ಇನ್ನೂ ಒಂದು ದಿನ ಬಾಕಿ ಇರುವಾಗಲೇ ಸದನದ ಕಲಾಪಗಳನ್ನು ಮೊಟಕುಗೊಳಿಸುವಲ್ಲಿ ಆಡಳಿತ ಪಕ್ಷದವರೊಂದಿಗೆ ಕೈಜೋಡಿಸಿದ ನಮ್ಮ ಪಕ್ಷದ ನಾಯಕರ ನಡೆ ಪ್ರಶ್ನಾರ್ಹ ಎಂದು ಹೇಳಿದ್ದಾರೆ.
7
+ ಅಧಿವೇಶನದಲ್ಲಿ ನಾಯಕರ ನಡೆ ಗಮನಿಸಿದರೆ, ಮುಂದಿನ ದಿನಗಳಲ್ಲಿ ಬಿಜೆಪಿ ಜನಪರ ಹೋರಾಟಗಳಲ್ಲಿ ಹೇಗೆ ತನ್ನನ್ನು ತೊಡಗಿಸಿಕೊಳ್ಳಬಹುದು ಎಂಬುದು ನಿಷ್ಠಾವಂತ, ದೇವದುರ್ಲಭ ಕಾರ್ಯಕರ್ತರಿಗೆ ಆತಂಕದ ವಿಷಯವಾಗಿದೆ ಎಂದಿದ್ದಾರೆ.
8
+ ಬೆರಳೆಣಿಕೆಯಷ್ಟು ಶಾಸಕರನ್ನು ಹೊಂದಿದ್ದ ದಿನಗಳಲ್ಲೂ ಕಲಾಪಗಳಲ್ಲಿ ಆರ್ಭಟಿಸುತ್ತಿದ್ದ, ಜನರ ಆಶೋತ್ತರಗಳಿಗೆ ದನಿಯಾಗುತ್ತಿದ್ದ ಬಿಜೆಪಿಯನ್ನು ನೋಡಿದ ನನಗೆ, ಇಂದಿನ ನಮ್ಮ ಪಕ್ಷದ ಈ ಪರಿಸ್ಥಿತಿ ನೋಡಿ ತೀವ್ರ ಬೇಸರ ಮತ್ತು ಆತಂಕವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.ಐಟಿ-ಬಿಟಿ ರಾಜಧಾನಿ ಎನಿಸಿರುವ, ವಿಜ್ಞಾನ ಕ್ಷೇತ್ರದಲ್ಲಿ ದೇಶಕ್ಕೆ ಮಾದರಿಯಾಗಿರುವ ಬೆಂಗಳೂರು ಸೇರಿದಂತೆ, ಅನೇಕ ಜಿಲ್ಲೆಗಳಲ್ಲಿ ಡೆಂಘೀ ತಾಂಡವವಾಡುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮತ್ತು ನೆರೆ ಹಾವಳಿಯಿಂದ ಲಕ್ಷಾಂತರ ಜನ ಮನೆ-ಮಠ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ.
9
+ ಈ ಬಗ್ಗೆ ಬೆಳಕು ಚೆಲ್ಲಬೇಕು, ಜನರ ಸಂಕಷ್ಟಕ್ಕೆ ಕನ್ನಡಿಯಾಗಬೇಕು ಎಂದು ನಮ್ಮ ಪಕ್ಷದ ನಾಯಕರಿಗೆ ಅನಿಸದೇ ಹೋದುದು ದುರ್ದೈವ ಎಂದು ಹೇಳೀದ್ದಾರೆ. ಮೈಸೂರಿನಲ್ಲಿ ಮುಡಾ ವಿರುದ್ಧ ನಡೆಸಿದ ಹೋರಾಟ ಕಣ್ಣೊರೆಸುವ ತಂತ್ರದಂತೆ ಕಂಡಿತು. ಒಟ್ಟಾರೆ ಈ ಬಾರಿಯ ಅಧಿವೇಶನದಲ್ಲಿ ಪ್ರತಿಪಕ್ಷವಾಗಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ ಎಂದು ದೂರಿದ್ದಾರೆ.
eesanje/url_46_62_8.txt ADDED
@@ -0,0 +1,9 @@
 
 
 
 
 
 
 
 
 
 
1
+ ಯೂತ್‌ ಕಾಂಗ್ರೆಸ್‌ ಚುನಾವಣೆಗೆ ಸಿದ್ಧತೆ
2
+ ಬೆಂಗಳೂರು,ಜು.26– ರಾಷ್ಟ್ರಮಟ್ಟದಲ್ಲಿ ಹೊಸ ನಾಯಕರ ಹುಡುಕಾಟ ನಡೆಯುತ್ತಿದೆ. ಯೂತ್‌ ಕಾಂಗ್ರೆಸ್‌‍ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದು, ಇಂದಿನಿಂದ ಸಾರ್ಟ್‌ ಫೋನ್‌ ಮೂಲಕ ಆನ್‌ಲೈನ್‌ ಸದಸ್ಯತ್ವ ನೋಂದಣಿ ಆರಂಭಿಸುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.
3
+ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರು ಬೇಕಾದರೂ ಆನ್‌ಲೈನ್‌ನಲ್ಲೇ ಸದಸ್ಯತ್ವ ಪಡೆಯಬಹುದು. ಸದಸ್ಯತ್ವದ ಜೊತೆಗೆ ಬ್ಲಾಕ್‌, ಡಿಸ್ಟ್ರಿಕ್ಟ್‌ ಪ್ರೆಸಿಡೆಂಟ್‌, ಜನರಲ್‌ ಸೆಕ್ರೆಟರಿ, ಕೆಪಿಸಿಸಿ ಪದಾಧಿಕಾರಿಗಳ ಚುನಾವಣೆಗೆ ಮತ ಚಲಾವಣೆಗೆ ಅವಕಾಶ ಕೊಡಲಾಗತ್ತದೆ. ಒಬ್ಬರಿಗೆ 6 ಮತ ಚಲಾವಣೆ ಮಾಡಲು ಅವಕಾಶ ಇದೆ ಎಂದು ತಿಳಿಸಿದರು.
4
+ ಸದಸ್ಯತ್ವ ನೋಂದಣಿಯನ್ನು ಪಾರದರ್ಶಕವಾಗಿ ಮಾಡಲಾಗುತ್ತದೆ. ಟೆಕ್ನಾಲಜಿ ಬಳಸಿ ಫೇಸ್‌‍ ಐಡೆಂಟಿಟಿ ಒಳಗೊಂಡಂತೆ ಸದಸ್ಯತ್ವ ಮಾಡಿಸುತ್ತಿದ್ದೇವೆ. ಎಲ್ಲಾ ಜಿಲ್ಲೆಗಳಲ್ಲಿ ಚುನಾವಣಾಧಿಕಾರಿಗಳು ಇರುತ್ತಾರೆ. ಆಗಸ್ಟ್‌ 2ರಿಂದ ನಾಮಪತ್ರ ಸಲ್ಲಿಕೆ. ಆ.9 ನಾಮಪತ್ರ ವಾಪಸ್‌‍ ಪಡೆಯಲು ಅಂತಿಮ ದಿನವಾಗಿದೆ. ಚುನಾವಣೆಗೆ ಮೀಸಲಾತಿ ಕೂಡ ನಿಗಧಿ ಮಾಡಲಾಗಿದೆ. ಎಸ್ಸಿ ಎಸ್ಟಿ, ಜನರಲ್‌ ಕೆಟಗರಿ ಇರಲಿದೆ ಎಂದು ಮಾಹಿತಿ ನೀಡಿದರು.
5
+ ಮಹಾತಗಾಂಧಿ ಕಾಂಗ್ರೆಸ್‌‍ ನಾಯಕತ್ವ ವಹಿಸಿ ನೂರು ವರ್ಷ ಆಗಿದೆ. ಈ ಸುಸಂದರ್ಭದಲ್ಲಿ ದೊಡ್ಡ ಸಂಭ್ರಮಾಚರಣೆ ಮಾಡಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಕಾರ್ಯಕ್ರಮ ರೂಪಿಸಲು ಸಮಿತಿ ರಚನೆ ಮಾಡಲಾಗುವುದು. 15 ಸಚಿವರು, ಪದಾಧಿಕಾರಿಗಳು ಸೇರಿ 60 ನಾಯಕರ ಕಮಿಟಿ ಮಾಡುತ್ತಿದ್ದೇವೆ. ಬೆಳಗಾವಿ, ಎಲ್ಲೆಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸ ಇದೆಯೋ ಅಲ್ಲಿ ಕಾರ್ಯಕ್ರಮ ಮಾಡಲಾಗುವುದು ಎಂದರು.
6
+ ಹೆಚ್‌.ಕೆ.ಪಾಟೀಲ್‌ ಅಧ್ಯಕ್ಷತೆಯ ಸಮಿತಿಯಲ್ಲಿ ವೀರಪ್ಪ ಮೊಯ್ಲಿ ಸಲಹೆಗಾರರಾಗಿ ಇರುತ್ತಾರೆ. ಆ.9ರೊಳಗೆ ಸಭೆ ನಡೆಸಿ ನಂತರ ಸಲಹೆ ಕೊಡುತ್ತಾರೆ. ಪಕ್ಷ ಸರ್ಕಾರ ಮಟ್ಟದಲ್ಲಿ ಏನು ಕಾರ್ಯಕ್ರಮ ಮಾಡಬೇಕೋ ಮಾಡುತ್ತಿದ್ದೇವೆ ಎಂದು ಹೇಳಿದರು.
7
+ ಬಿಜೆಪಿಗೆ ತಿರುಗೇಟು: ಅವರೇ ತೊಡಿಕೊಂಡ ಬಾವಿಗೆ ಅವರೇ ಬೀಳಲು ಹೊರಟಿದ್ದಾರೆ. ವಾಲ್ಮೀಕಿ ನಿಗಮ ಹಗರಣದ ಬಗ್ಗೆ ನಾವೇ ಎಸ್‌‍ಐಟಿ ತನಿಖೆಗೆ ವಹಿಸಿದ್ದೇವೆ. 89 ಕೋಟಿನಾ 189 ಕೋಟಿ ಅಂತಿದ್ದಾರೆ. ಸದನದಲ್ಲಿ ಮುಖ್ಯಮಂತ್ರಿಗಳಿಗೆ ಉತ್ತರಕೊಡಲು ಬಿಡದೆ ಬಿಜೆಪಿ ಕಾಲದ ಹಗರಣ ಮಾಡಿದ್ದಾರೆ. ತಮ ಪಕ್ಷಕ್ಕಾಗಿ ಮುಡಾ ಹಗರಣವಿಟ್ಟುಕೊಂಡು ಪ್ರಚಾರ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಬಿಜೆಪಿಯೊಂದಿಗೆ ಜೆಡಿಎಸ್‌‍ ವಿಲೀನವಾಗುತ್ತದೆಯೋ ಇಲ್ಲವೇ ಜೆಡಿಎಸ್‌‍ನವರೇ ಬಿಜೆಪಿಗೆ ವಿಲೀನವಾಗುತ್ತಾರೆಯೋ? ಎಂದು ವ್ಯಂಗ್ಯವಾಡಿದರು.
8
+ ಅವರ ಕಾಲದಲ್ಲಿ ನಡೆದ ಹಗರಣಗಳು. ಸಿಎಂ ಕುಟುಂಬದ ಜಮೀನನ್ನು ಮುಡಾ ಆಕ್ರಮಿಸಿಕೊಂಡಿದೆ. ಮುಡಾ 50:50 ಪರಿಹಾರ ಕೊಟ್ಟಿದೆ. ���ವರೇನು ಪರಿಹಾರ ಕೇಳಿಲ್ಲ. ಅವರೇ ಕೊಟ್ಟಿದ್ದಾರೆ. ಆಗ ಬಿಜೆಪಿ ಸರ್ಕಾರ ಇತ್ತು. ಆಸ್ತಿಗೆ ಪರಿಹಾರ ಮಾತ್ರ ಸಿಎಂ ಕುಟುಂಬ ಕೇಳಿದು, ಕಾನೂನು ಚೌಕಟ್ಟಿನನಲ್ಲೇ ನಡೆದಿದೆ. ಸಿಎಂ ಗೌರವಕ್ಕೆ ಧಕ್ಕೆ ತರುವ ಕೆಲಸ ಮಾಡಲಾಗಿದೆ ಎಂದು ಆರೋಪಿಸಿದರು.
9
+ ಅವರು ಎಷ್ಟು ಬೇಕಾದರೂ ಪಾದಯಾತ್ರೆ ಮಾಡಲಿ. ನಾವು ಏನು ಕಾರ್ಯಕ್ರಮ ರೂಪಿಸಬೇಕು, ಅದನ್ನು ಮಾಡುತ್ತೇವೆ. ಅವರ ಪಾದಯಾತ್ರೆಗೆ ಏನು ಉತ್ತರ ಕೋಡಬೇಕೋ ಕೋಡುತ್ತೇವೆ. ಪಾದಯಾತ್ರೆ ಆರಂಭ ಮಾಡಿದ್ದು ಕಾಂಗ್ರೆಸ್‌‍ ಪಕ್ಷ. ಗಾಂಧಿಜೀ ಕಾಲದಿಂದ ಪಾದಯಾತ್ರೆ ಮಾಡುತ್ತಿದ್ದೇವೆ. ಬಿಜೆಪಿಗರೇ ಈ ಹಗರಣದಲ್ಲಿ ಸರ್ದಾರರು. ಅದು ಏನು ಬಿಚ್ಚಿಡಬೇಕೋ ನಾವು ಬಿಚ್ಚಿಡುತ್ತಿದ್ದೇವೆ ಎಂದು ತಿರುಗೇಟು ನೀಡಿದರು. ವಾಲ್ಮೀಕಿ ನಿಗಮದ ಎಸ್‌‍ಐಟಿ ತನಿಖೆ ಮಧ್ಯಂತರ ವರದಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದರ ಬಗ್ಗೆ ಮಾಹಿತಿ ನನಗೆ ಇಲ್ಲ ಎಂದು ಸ್ಪಷ್ಟಪಡಿಸಿದರು.
eesanje/url_46_62_9.txt ADDED
@@ -0,0 +1,8 @@
 
 
 
 
 
 
 
 
 
1
+ ಎಚ್‌.ಡಿ.ಕುಮಾರಸ್ವಾಮಿಯವರಿಗೂ ಮುಡಾದಿಂದ ಬದಲಿ ನಿವೇಶನ ಮಂಜೂರು
2
+ ಬೆಂಗಳೂರು,ಜು.26– ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರ ಸ್ವಾಮಿಯವರು ಮುಡಾದಿಂದ ಬದಲಿ ನಿವೇಶನ ಪಡೆಯಲು ಅರ್ಜಿ ಸಲ್ಲಿಸಿರುವ ದಾಖಲಾತಿಗಳು ಬಹಿರಂಗಗೊಂಡಿವೆ. 1984 ರಲ್ಲಿ ಕುಮಾರಸ್ವಾಮಿ ಯವರಿಗೆ ಮೈಸೂರಿನ ಇಂಡಸ್ಟ್ರಿಯಲ್‌ ಸಬ್‌ ಅರ್ಬನ್‌ ಮೂರನೇ ಹಂತದಲ್ಲಿ 21 ಸಾವಿರ ಚದರ ಅಡಿಯ ನಿವೇಶನ ಮಂಜೂರಾಗಿತ್ತು. ಅದಕ್ಕಾಗಿ 1985 ಜನವರಿ 16 ರಂದು ಸ್ವಾಧೀನ ಪತ್ರವನ್ನೂ ನೀಡಲಾಗಿದೆ.
3
+ ಈ ನಿವೇಶನದಲ್ಲಿ ಅಳತೆಯ ಭಾಗಶಃ ಭಾಗವನ್ನು ಬೇರೆಯವರಿಗೆ ಮಂಜೂರು ಮಾಡಿದ್ದು, ತಮಗೆ ಹಂಚಿಕೆಯಾಗಿರುವ ನಿವೇಶನ ಲಭ್ಯವಿಲ್ಲದ ಕಾರಣ ಕೈಗಾರಿಕೆ ಪ್ರಾರಂಭಿಸಲು ಅನುಕೂಲವಾಗುವಂತೆ ಬದಲಿ ನಿವೇಶನ ನೀಡುವಂತೆ ಕುಮಾರಸ್ವಾಮಿಯವರು2017, 2019, 2020 ರಲ್ಲಿ ಮೂರು ಬಾರಿ ಮುಡಾಗೆ ಮನವಿ ಸಲ್ಲಿಸಿದ್ದಾರೆ.
4
+ ಈ ಬಗ್ಗೆ ತಾಂತ್ರಿಕ ತನಿಖೆ ನಡೆದಿದ್ದು, ನಿವೇಶನ ಸಂಖ್ಯೆ 17 ಬಿ 1 ರ ಸ್ವಾಧೀನ ಪತ್ರದಂತೆ ಸದರಿ ನಿವೇಶನದಲ್ಲಿ 13,064 ಚದರ ಅಡಿಗಳು ಭೌತಿಕವಾಗಿ ಲಭ್ಯವಿವೆ ಎಂದು ವರದಿ ಸಲ್ಲಿಸಲಾಗಿದೆ. ಕಡಿಮೆ ಇರುವ 7,936 ಚದರ ಅಡಿಯಷ್ಟು ಬದಲಿ ನಿವೇಶನ ನೀಡುವ ಪ್ರಸ್ತಾವನೆ ಸಲ್ಲಿಕೆಯಾಗಿದೆ.
5
+ ಈ ಕುರಿತು ಬದಲಿ ನಿವೇಶನ ನೀಡಲು ಪ್ರಾಧಿಕಾರ ಸಭೆಯಲ್ಲಿ ಚರ್ಚಿಸಲಾಗಿದ್ದು, 21,000 ಚದರ ಅಡಿಗೆ ತಾಳೆ ಹೊಂದುವ ನಿವೇಶನಗಳು ಇಂಡಸ್ಟ್ರಿಯಲ್‌ ಸಬ್‌ ಅರ್ಬನ್‌ನಲ್ಲಿ ಲಭ್ಯವಿಲ್ಲದ ಕಾರಣ ಪರ್ಯಾಯವಾಗಿ 32,800 ಚದರ ಅಡಿಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ.
6
+ ಹೆಚ್ಚುವರಿಯಾಗಿರುವ 11,000 ಚದರ ಅಡಿಯನ್ನು ಕುಮಾರಸ್ವಾಮಿಯವರಿಗೆ ಮಂಜೂರು ಮಾಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ರಿಕಾ ಗೋಷ್ಠಿಯಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ದಾಖಲಾತಿ ಬಿಡುಗಡೆ ಮಾಡಿದರು.
7
+ ಮುಡಾ ನಿವೇಶನ ಪಡೆದ ವಿಪಕ್ಷ ನಾಯಕರು :ಬೆಂಗಳೂರು, ಜು.26- ಮುಡಾದಿಂದ ಬಿಜೆಪಿ ಮತ್ತು ಜೆಡಿಎಸ್‌‍ನ ಶಾಸಕರು, ಜನಪ್ರತಿನಿಧಿಗಳು, ಪ್ರಮುಖ ನಾಯಕರು ನಿವೇಶನ ಪಡೆದಿರುವ ವಿವರ ಗಳನ್ನು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಬಹಿರಂಗಪಡಿಸಿದ್ದಾರೆ.
8
+ ಸಿ.ಎನ್‌.ಮಂಜೇಗೌಡ, ಜಿ.ಟಿ.ದೇವೇಗೌಡ, ಎಚ್‌.ವಿಶ್ವನಾಥ್‌, ಗಂಗರಾಜು, ಮಹದೇವಸ್ವಾಮಿ, ಸಾ.ರಾ.ಮಹೇಶ್‌ ಸೇರಿದಂತೆ ವಿವಿಧ ನಾಯಕರು ಎಕರೆಗಟ್ಟಲೆ ಭೂಮಿಯನ್ನು ಮೈಸೂರಿನ ಪ್ರಮುಖ ಪ್ರದೇಶಗಳಲ್ಲಿ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿದರು. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಯವರು ಮುಡಾದಿಂದ ಬದಲಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿರುವ ದಾಖಲೆಯನ್ನು ಇದೇ ವೇಳೆ ಬಿಡುಗಡೆ ಮಾಡಲಾಯಿತು.
eesanje/url_46_63_1.txt ADDED
@@ -0,0 +1,4 @@
 
 
 
 
 
1
+ “ಸಿಎಂ ಸಿದ್ದರಾಮಯ್ಯ ಬಾಲಕ ಬುದ್ದಿಯ ರಾಹುಲ್ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ”
2
+ ಬೆಂಗಳೂರು,ಜು.26-ದಿನೇ ದಿನೇ ಭ್ರಷ್ಟಾಚಾರದ ಕಳಂಕಿತ ಸಿಎಂ ಸಿದ್ದರಾಮಯ್ಯ ದುರ್ಬಲರಾಗುತ್ತಿದ್ದು, ತಮ್ಮ ಕುರ್ಚಿ ಉಳಿಸಿಕೊಳ್ಳಲು ಬಾಲಕ ಬುದ್ದಿಯ ರಾಹುಲ್ ಗಾಂಧಿ ಅವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಆಶೋಕ್ ವಾಗ್ದಳಿ ನಡೆಸಿದ್ದಾರೆ.
3
+ ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ಸನಲ್ಲಿ ಪೋಸ್ಟ್ ಮಾಡಿರುವ ಅವರು, 2016ರಲ್ಲಿ ಏಕಕಾಲದ ಚುನಾವಣೆಯ ಪರಿಕಲ್ಪನೆಯನ್ನು ಸ್ವಾಗತಿಸಿ ಬೆಂಬಲಿಸಿದ್ದ ಅದೇ ಸಿದ್ದರಾಮಯ್ಯ ಈಗ ಕರ್ನಾಟಕ ವಿಧಾನಸಭೆಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ವಿರುದ್ಧ ನಿರ್ಣಯ ಅಂಗೀಕರಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
4
+ ಸಿಎಂ ಸಿದ್ದರಾಮಯ್ಯ ಅವರೇ ಈ ಚೇಷ್ಟೆಗಳಿಂದ ಯಾರನ್ನು ಮೆಚ್ಚಿಸಲು ಪ್ರಯತ್ನಿಸುತ್ತಿದ್ದೀರಿ? ನಿಮ ಆತಸಾಕ್ಷಿಯನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದೀರಾ? ಅಧಿಕಾರಕ್ಕಾಗಿ ಆತವನ್ನು ಮಾರಿಕೊಂಡಿದ್ದೀರಾ? ಉತ್ತರ ಮಾಡಿ ಎಂದು ಅಶೋಕ್ ಸವಾಲು ಎಸೆದಿದ್ದಾರೆ.
eesanje/url_46_63_10.txt ADDED
@@ -0,0 +1,5 @@
 
 
 
 
 
 
1
+ ಮುಡಾ ಅಕ್ರಮ ಚರ್ಚೆಗೆ ಅವಕಾಶ ನೀಡುವ ರೂಲಿಂಗ್ ಮರು ಪರಿಶೀಲನೆ ಮತ್ತೆ ತಿರಸ್ಕಾರ
2
+ ಬೆಂಗಳೂರು,ಜು.25-ಮುಡಾ ಅಕ್ರಮ ನಿವೇಶನ ಹಂಚಿಕೆ ಕುರಿತಂತೆ ಸದನದಲ್ಲಿ ಅವಕಾಶ ನೀಡುವ ರೂಲಿಂಗ್ ಮರುಪರಿಶೀಲನೆ ಮಾಡಬೇಕೆಂಬ ಪ್ರತಿಪಕ್ಷಗಳ ಸದಸ್ಯರ ಕೋರಿಕೆಯನ್ನು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತೆ ತಿರಸ್ಕರಿಸಿದ್ದಾರೆ.
3
+ ಬುಧವಾರವಷ್ಟೇ ಪ್ರತಿಪಕ್ಷಗಳ ಸದಸ್ಯರು ಮುಡಾ ಪ್ರಕರಣ ಕುರಿತು ಮಂಡಿಸಿದ್ದ ನಿಲುವಳಿ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದರು. ಈ ವೇಳೆ ಪ್ರತಿಪಕ್ಷದ ಸದಸ್ಯರು ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ತಾವು ನೀಡಿರುವ ರೂಲಿಂಗ್ನ್ನು ಮರುಪರಿಶೀಲಿಸಬೇಕೆಂದು ಮನವಿ ಮಾಡಿಕೊಂಡರು.
4
+ ಗದ್ದಲದ ನಡುವೆಯೇ ತಮ್ಮ ತೀರ್ಮಾನವನ್ನು ಪ್ರಕಟಿಸಿದ ಹೊರಟ್ಟಿಯವರು ನಿಲುವಳಿ ಸೂಚನೆ ಪ್ರಸ್ತಾವನೆಗೆ ಚರ್ಚೆ ಮಾಡಲು ವಿಷಯವು ತುಂಬ ಸಾರ್ವಜನಿಕವಾಗಿ ಮಹತ್ವದ್ದಾಗಿರಬೇಕು. ಅಲ್ಲದೆ ಘಟನೆಯು ಇತ್ತೀಚೆಗೆ ನಡೆದಿರಬೇಕು. ಪ್ರತಿಪಕ್ಷಗಳ ಸದಸ್ಯರು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಕುರಿತಂತೆ ಚರ್ಚೆಗೆ ಅವಕಾಶ ನೀಡಬೇಕೆಂದು ನಿಲುವಳಿ ಸೂಚನೆ ಮಾಡಿದ್ದರು. ನಾನು ನಿಯಮ 59ರಡಿ ಚರ್ಚೆಗೆ ಅವಕಾಶ ಕೊಟ್ಟಿದ್ದೆ. ಅದೇ ರೀತಿ ಮುಡಾ ಪ್ರಕರಣದ ಬಗ್ಗೆಯೂ ಚರ್ಚೆಗೆ ಕೇಳಿದ್ದೀರಿ. ಈಗಾಗಲೇ ನಾನು ರೂಲಿಂಗ್ ನೀಡಿ ತಿರಸ್ಕರಿಸಿದ್ದೆನು.
5
+ ಇದನ್ನು ಮರುಪರಿಶೀಲನೆ ಮಾಡಬೇಕೆಂದು ಪ್ರತಿಪಕ್ಷದ ಸದಸ್ಯರು ಮನವಿ ಮಾಡಿದ್ದರು. ನಾನು ಹಿಂದಿನ ನಡವಳಿಕೆಯನ್ನು ಅಧ್ಯಯನ ನಡೆಸಿ ಒಂದು ಬಾರಿ ರೂಲಿಂಗ್ ನೀಡಿದ ಮೇಲೆ ಚರ್ಚೆಗೆ ಅವಕಾಶವಿಲ್ಲ. ಹೀಗಾಗಿ ನಿಮ್ಮ ಮನವಿಯನ್ನು ತಿರಸ್ಕರಿಸುತ್ತೇನೆ ಎಂದು ಪ್ರಕಟಿಸಿದರು. ಇದರಿಂದ ಸದನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಭಾರೀ ಗದ್ದಲ, ಕೋಲಾಹಲ ಉಂಟಾಯಿತು.
eesanje/url_46_63_11.txt ADDED
@@ -0,0 +1,9 @@
 
 
 
 
 
 
 
 
 
 
1
+ ವಿಧಾನಸಭೆಯಲ್ಲಿ 6 ಮಹತ್ವದ ವಿಧೇಯಕಗಳು ಅಂಗೀಕಾರ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
2
+ ಬೆಂಗಳೂರು,ಜು.25-ಪ್ರಾಚೀನ ಹಾಗೂ ಐತಿಹಾಸಿಕ ಸ್ಮಾರಕ ದತ್ತು ತೆಗೆದುಕೊಳ್ಳಲು ಅವಕಾಶ ನೀಡುವ 2024ನೇ ಸಾಲಿನ ಕರ್ನಾಟಕ ಪ್ರಾಚೀನ, ಐತಿಹಾಸಿಕ ಸ್ಮಾರಕಗಳು, ಪುರಾತತ್ವ ಸ್ಥಳಗಳ ಮತ್ತು ಅವಶೇಷಗಳ (ತಿದ್ದುಪಡಿ) ವಿಧೇಯಕ ಸೇರಿದಂತೆ 6 ವಿಧೇಯಕಗಳು ವಿಧಾನಸಭೆಯಲ್ಲಿಂದು ಅಂಗೀಕಾರಗೊಂಡವು.
3
+ ಬಿಜೆಪಿ-ಜೆಡಿಎಸ್‌‍ ಶಾಸಕರ ಗದ್ದಲದ ನಡುವೆ ನಡೆದ ಶಾಸನ ರಚನಾ ಕಲಾಪದಲ್ಲಿ ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಅವರು ವಿಧೇಯಕ ಕುರಿತು ಮಾತನಾಡಿ, ಪ್ರಾಚೀನ ಮತ್ತು ಐತಿಹಾಸಿಕ ಸಾರಕ ಮತ್ತು ಪುರಾತತ್ವ ಸ್ಥಳಗಳ ಸಂರಕ್ಷಣೆ ಮಾಡುವ ಕರ್ತವ್ಯವಿದೆ. ಸಾರಕಗಳನ್ನು ದತ್ತು ತೆಗೆದುಕೊಳ್ಳಲು ಈ ವಿಧೇಯಕ ಅವಕಾಶ ಮಾಡಿಕೊಡಲಿದೆ. ಸೊಸೈಟಿ, ಸಹಕಾರ ಸಂಘಗಳು, ಟ್ರಸ್ಟ್‌ಗಳು, ಸರ್ಕಾರೇತರ ಸಂಸ್ಥೆಗಳು ಆಸಕ್ತಿ ಉಳ್ಳ ವ್ಯಕ್ತಿಗಳನ್ನು ಸಾರಕ ಮಿತ್ರರು ಪಟ್ಟಿಯಲ್ಲಿ ಸೇರಿಸುವುದಕ್ಕೆ ಅರ್ಹರಾಗಿಸುವುದಕ್ಕೆ ತಿದ್ದುಪಡಿ ತರಲಾಗಿದೆ ಎಂದು ಹೇಳಿದರು.
4
+ ಬಳಿಕ ಸಭಾಧ್ಯಕ್ಷರು 2024ನೇ ಸಾಲಿನ ಕರ್ನಾಟಕ ಪ್ರಾಚೀನ, ಐತಿಹಾಸಿಕ ಸಾರಕಗಳು, ಪುರಾತತ್ವ ಸ್ಥಳಗಳ ಮತ್ತು ಅವಶೇಷಗಳ (ತಿದ್ದುಪಡಿ) ವಿಧೇಯಕವನ್ನು ಮತಕ್ಕೆ ಹಾಕಿದಾಗ ಧ್ವನಿಮತದ ಒಪ್ಪಿಗೆ ದೊರೆಯಿತು.
5
+ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರ ಪರವಾಗಿ ಕಾನೂನು ಸಚಿವರು ಪರ್ಯಾಲೋಚಿಸಿದ 2024 ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು, ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ವಿಧೇಯಕಕ್ಕೂ ಸದನ ಒಪ್ಪಿಗೆ ನೀಡಿತು.
6
+ ವಿಧೇಯಕ ಕುರಿತು ಮಾತನಾಡಿದ ಕಾನೂನು ಸಚಿವರು, ಹೊರಗುತ್ತಿಗೆಯಲ್ಲಿ ಸಾಮಾಜಿಕ ನ್ಯಾಯವಿರಲಿಲ್ಲ. ಸಾಮಾಜಿಕ ನ್ಯಾಯ ಒದಗಿಸುವ ಉದ್ದೇಶದಿಂದ ತಿದ್ದುಪಡಿ ತರಲಾಗಿದ್ದು, ಸದನ ಒಪ್ಪಿಗೆ ನೀಡಬೇಕೆಂದು ಇದಕ್ಕೂ ಮುನ್ನ ಕೋರಿದ್ದರು.ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿಯವರು ಮಂಡಿಸಿದ 2024 ನೇ ಸಾಲಿನ ರೇಣುಕಾ ಯಲ್ಲಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೂ ಸದನದ ಒಪ್ಪಿಗೆ ದೊರೆಯಿತು.
7
+ ವಿಧೇಯಕ ಕುರಿತು ಮಾತನಾಡಿದ ರಾಮಲಿಂಗಾರೆಡ್ಡಿ, ಯಲ್ಲಮ ದೇವಾಲಯಕ್ಕೆ ಕರ್ನಾಟಕ, ಗೋವಾ, ಆಂಧ್ರ, ತೆಲಂಗಾಣದಿಂದ ವಾರ್ಷಿಕ 80 ಲಕ್ಷದಿಂದ 1 ಕೋಟಿ ಭಕ್ತಾದಿಗಳು ಬರುತ್ತಾರೆ. ಹೀಗಾಗಿ ರೇಣುಕಾ ಯಲ್ಲಮ ದೇವಸ್ಥಾನ ಅಭಿವೃದ್ಧಿ ಮತ್ತು ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲು ಸ್ವತಂತ್ರ ಶಾಸನಬದ್ಧ ಪ್ರಾಧಿಕಾರದ ರಚನೆಗೆ ಉಪಬಂಧ ಕಲ್ಪಿಸಲು ಈ ವಿಧೇಯಕವನ್ನು ತರಲಾಗಿದೆ. ರಾಜ್ಯಮಟ್ಟದಲ್ಲಿ ಒಂದು ಸಮಿತಿ, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇನ್ನೊಂದು ಸಮಿತಿ ಕಾರ್ಯ ನಿರ್ವಹಿಸಲಿದೆ. ಆ ಮೂಲಕ ದೇವಸ್ಥಾನದ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
8
+ ಕಂದಾಯ ಸಚಿವ ಕೃಷ್ಣಭೈರೇಗೌ�� ಅವರು ಮಂಡಿಸಿದ 2024ನೇ ಸಾಲಿನ ಕರ್ನಾಟಕ ಭೂ ಕಂದಾಯ 2ನೇ ತಿದ್ದುಪಡಿ ವಿಧೇಯಕಕ್ಕೂ ಒಪ್ಪಿಗೆ ದೊರೆಯಿತು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಮಂಡಿಸಿದ 2024ನೇ ಸಾಲಿನ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು ತಿದ್ದುಪಡಿ ವಿಧೇಯಕಕ್ಕೂ ಸದನ ಅಂಗೀಕಾರ ನೀಡಿತು.
9
+ ಬಳಿಕ ತೋಟಗಾರಿಕಾ ಸಚಿವ ಮಲ್ಲಿಕಾರ್ಜುನ ಅವರ ಪರವಾಗಿ ಕಾನೂನು ಸಚಿವರು ಮಂಡಿಸಿದ 2024ನೇ ಸಾಲಿನ ಕರ್ನಾಟಕ ಸರ್ಕಾರಿ ಉದ್ಯಾನವನಗಳ (ಸಂರಕ್ಷಣಾ) (ತಿದ್ದುಪಡಿ) ವಿಧೇಯಕಕ್ಕೂ ಸದನದ ಒಪ್ಪಿಗೆ ದೊರೆಯಿತು.
eesanje/url_46_63_12.txt ADDED
@@ -0,0 +1,5 @@
 
 
 
 
 
 
1
+ ಪುರಸಭೆ ಸದಸ್ಯ ಸ್ಕ್ರಾಪ್‌ ರವಿ ಹಂತಕರ ಸೆರೆಗೆ 2 ತಂಡ ರಚನೆ
2
+ ಆನೇಕಲ್‌, ಜು.25-ಮನೆಗೆ ನುಗ್ಗಿ ಪುರಸಭೆ ಸದಸ್ಯನ ಹತ್ಯೆಗೈದು ಪರಾರಿಯಾಗಿರುವ ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.ಪುರಸಭೆ ಸದಸ್ಯ ರವಿ ಮನೆಯ ಆವರಣದಲ್ಲಿಯೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹಂತಕರ ಬಂಧನಕ್ಕೆ ಪೋಲಿಸರು ಹುಡುಕಾಟ ನಡೆಸಿದ್ದಾರೆ.
3
+ ಪುರಸಭೆಯ 22ನೇ ವಾರ್ಡ್‌ ಸದಸ್ಯ ಹಾಗೂ ಕಾಂಗ್ರೆಸ್‌‍ ಮುಖಂಡರಾಗಿದ್ದ ರವಿ ಅಲಿಯಾಲ್‌ ಸ್ಕ್ರಾಪ್‌ ರವಿ ಬಹದ್ದೂರ್‌ ಪುರದ ತಮ ನಿವಾಸದಲ್ಲಿರುವುದನ್ನು ಖಚಿತಪಡಿಸಿಕೊಂಡ ದುಷ್ಕರ್ಮಿಗಳು ನಿನ್ನೆ ರಾತ್ರಿ 8.30ರ ಸಂದರ್ಭದಲ್ಲಿ ಏಕಾಏಕಿ ಮನೆಗೆ ನುಗ್ಗಿ ಮಾರಕಾಸಗಳಿಂದ ರವಿ ಮೇಲೆ ಹಲ್ಲೆ ನಡೆಸಿ ಕೊಲೆಗೈದು ಪರಾರಿಯಾಗಿದ್ದಾರೆ.
4
+ ರವಿ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್‌‍ಪಿ ಸಿ.ಕೆ. ಬಾಬು ಭೇಟಿ ನೀಡಿದ ನಂತರ ಮಾದ್ಯಮದವರೊಂದಿಗೆ ಮಾತನಾಡಿ, ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದ್ದು, ಅವರ ಬಂಧನಕ್ಕೆ ಈಗಾಗಲೇ ಎರಡು ತಂಡಗಳನ್ನು ರಚನೆ ಮಾಡಿದ್ದೇವೆ.
5
+ ತನಿಖೆ ನಂತರ ಕೊಲೆಗೆ ನಿಖರ ಕಾರಣ ತಿಳಿಯಲಿದೆ ಎಂದರು. ಸ್ಥಳಕ್ಕೆ ಶಾಸಕ ಬಿ.ಶಿವಣ್ಣ ಭೇಟಿ ನೀಡಿ ರವಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
eesanje/url_46_63_2.txt ADDED
@@ -0,0 +1,7 @@
 
 
 
 
 
 
 
 
1
+ ಬೆಂಗಳೂರಲ್ಲಿ ಡ್ರಗ್ಸ್ ಕಡಿವಾಣಕ್ಕೆ ಕಠಿಣ ಕ್ರಮ : ನಗರ ಪೊಲೀಸ್ ಆಯುಕ್ತ ಬಿ.ದಯಾನಂದ
2
+ ಬೆಂಗಳೂರು,ಜು.26-ವಿದೇಶಿ ಪ್ರಜೆಗಳಿಂದ ನಗರದಲ್ಲಿ ಮಾದಕ ವಸ್ತು ಮಾರಾಟ ಮತ್ತು ಸೇವನೆ ಹೆಚ್ಚಾಗುತ್ತಿದ್ದು, ಇದನ್ನು ಕಡಿವಾಣ ಹಾಕಲು ಅಂಗ ಸಂಸ್ಥೆ ಗಳೊಂದಿಗೆ ಚರ್ಚಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.
3
+ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮ ಮತ್ತು ವೀಸಾ ಅನಧಿಕೃತ ವಿದೇಶಿ ಪ್ರಜೆಗಳಿಂದ ಮಾದಕ ವಸ್ತು ಜಾಲ ವಿಸ್ತಾರವಾಗುತ್ತಿದೆ. ಈ ಬಗ್ಗೆ ಈಗಾಗಲೇ ಸಿಸಿಬಿ ತಂಡ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಎನ್ ಸಿ ಬಿ, ಎ್ ಆರ್ ಆರ್ ಓ ಸೇರಿದಂತೆ ಅಂಗ ಸಂಸ್ಥೆಗಳ ಜೊತೆ ಸಭೆ ನಡೆಸಿ ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
4
+ ಅಕ್ರಮ ವೀಸಾ ಹೊಂದಿರುವ 20 ವಿದೇಶಿ ಪ್ರಜೆಗಳನ್ನು ಗುರುತಿಸಲಾಗಿದ್ದು, ಈಗಾಗಲೇ 10 ಮಂದಿಯನ್ನು ವಿದೇಶಗಳಿಗೆ ಕಳಿಸಿದ್ದು ಉಳಿದ ಹತ್ತು ಮಂದಿಯನ್ನು ಶೀಘ್ರದಲ್ಲೇ ಕಳುಹಿಸಿಕೊಡಲಾಗುವುದು ಎಂದರು.
5
+ ಶಾಲಾ ಮುಖ್ಯಸ್ಥರ ಜೊತೆ ಚರ್ಚೆ :ಮಾದಕ ವಸ್ತು ಜಾಲವು ಕಾಲೇಜುಗಳ ವ್ಯಾಪ್ತಿಯಲ್ಲಿ ಹೆಚ್ಚಾಗಿದ್ದು ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ ಜೊತೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
6
+ ಆರೋಪಿಯ ಶೀಘ್ರ ಬಂಧನ :ಕೋರಮಂಗಲ ಪಿಜಿಗೆ ನುಗ್ಗಿ ಮಹಿಳೆಯನ್ನು ಹತ್ಯೆ ಮಾಡಿದ ಆರೋಪಿಯನ್ನು ಪೊಲೀಸರು ಹುಡುಕುತ್ತಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
7
+ ವ್ಹೀಲಿಂಗ್ ಪುಂಡರ ವಿರುದ್ಧ ಕ್ರಮ :ಇತ್ತೀಚೆಗೆ ಉದ್ಘಾಟನೆಯಾದ ಡಬ್ಬಲ್ ಡೆಕ್ಕರ್ ರಸ್ತೆಯಲ್ಲಿ ಕೆಲ ಪುಂಡರು ವೀಲಿಂಗ್ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವುದು ಕಂಡುಬಂದಿದ್ದು ಅವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
eesanje/url_46_63_3.txt ADDED
@@ -0,0 +1,6 @@
 
 
 
 
 
 
 
1
+ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ವರ್ಗಾವಣೆಗೆ ಶಾಸಕರ ಆಗ್ರಹ
2
+ ಬೆಂಗಳೂರು, ಜು.26-ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನು ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 55ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಪತ್ರ ಬರೆದಿದ್ದಾರೆ.ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ಅವರನ್ನು ವರ್ಗಾವಣೆ ಮಾಡುವಂತೆ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಸಿಎಂಗೆ ಪತ್ರ ಬರೆದಿದ್ದಾರೆ.
3
+ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯಲ್ಲಿರುವ ಸುಮಾರು 40ಕ್ಕೂ ಹೆಚ್ಚು ಎಕರೆ ಸರ್ಕಾರಿ ಜಾಗಕ್ಕೆ ಪ್ರಭಾವಿಗಳು ಕಾಂಪೌಂಡ್ ಹಾಕಿ ಖಾಸಗಿ ಗಾಲ್ಸ್ ಫ ಕೋರ್ಸ್, ಲೇಔಟ್ ಕೂಡ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಮಾಹಿತಿ ತಿಳಿದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ವರದಿ ಕೇಳಿದ್ದರು.
4
+ ಆಗ ಜಿಲ್ಲಾಧಿಕಾರಿ, ತಹಶೀಲ್ದಾರ್ ಪ್ರಭಾವಿಗಳಿಗೆ ಕ್ಲೀನ್ಚಿಟ್ ನೀಡಿ, ಕಂದಾಯ ಇಲಾಖೆಗೆ ಪತ್ರ ಬರೆದಿದ್ದರು. ಬಳಿಕ ಪ್ರಕರಣದ ಆಳಕ್ಕೆ ಇಳಿದು ಸರ್ವೇ ಮಾಡಲು ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ಸೂಚನೆ ನೀಡಿದ್ದರು.
5
+ ಸರ್ವೇ ಬಳಿಕ ಸತ್ಯ ಹೊರಬಂದಿದ್ದು, ಸರ್ಕಾರಿ ಜಮೀನಿಗೆ ಕಾಂಪೌಂಡ್ ಹಾಕಿರುವುದು ಬಹಿರಂಗವಾಗಿದೆ. ಆಗ ರಾಜೇಂದ್ರ ಕಟಾರಿಯಾ ಅವರು ಈ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯಲು ಮುಂದಾಗಿದ್ದಾರೆ.
6
+ ರಾಜೇಂದ್ರ ಕಟಾರಿಯಾ ಬೆನ್ನಿಗೆ ಸಚಿವ ಕೃಷ್ಣಬೈರೇಗೌಡ ನಿಂತಿದ್ದಾರೆ. ಇದೇ ಕಾರಣಕ್ಕೆ ಕಟಾರಿಯಾ ವಿರುದ್ಧ ಕೆಲವು ಶಾಸಕರು ತಿರುಗಿಬಿದ್ದಿದ್ದಾರೆ.ರಾಜೇಂದ್ರ ಕಟಾರಿಯಾ ಅವರನ್ನು ವರ್ಗಾವಣೆ ಮಾಡುವಂತೆ 55 ಶಾಸಕರು ಸಹಿಯೊಂದಿಗೆ ಮುಖ್ಯಮಂತ್ರಿಗಳಿಗೆ ದೂರು ನೀಡಲಾಗಿದೆ.
eesanje/url_46_63_4.txt ADDED
@@ -0,0 +1,59 @@
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
1
+ ಮುಡಾ ಹುನ್ನಾರದ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ : ವಿಪಕ್ಷಗಳ ವಿರುದ್ಧ ಆಕ್ರೋಶ
2
+ ಬೆಂಗಳೂರು,ಜು.26-ಮುಡಾ ನಿವೇಶನ ಹಂಚಿಕೆಯಲ್ಲಿ ಯಾವುದೇ ಅಕ್ರಮಗಳು ನಡೆಯದೇ ಇದ್ದರೂ ತಮ ಹೆಸರಿಗೆ ಮಸಿ ಬಳಿಯಲು ಬಿಜೆಪಿ ಮತ್ತು ಜೆಡಿಎಸ್‌‍ ಹುನ್ನಾರ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವುದನ್ನು ಸಹಿಸಿಕೊಳ್ಳಲು ವಿಪಕ್ಷಗಳಿಗೆ ಸಾಧ್ಯವಾಗುತ್ತಿಲ್ಲ. ಇದಕ್ಕಾಗಿ ಸುಳ್ಳು ಮಾಹಿತಿಯೊಂದಿಗೆ ಜನರನ್ನು ದಾರಿ ತಪ್ಪಿಸಿ ಅಪಪ್ರಚಾರ ಮಾಡುತ್ತಿವೆ ಎಂದು ಕಿಡಿಕಾರಿದರು.
3
+ ಭೂಮಿಯ ಮೂಲ ಒಡೆತನ ಹರಾಜು ಮೂಲಕ ಖರೀದಿ ಮಾಡಿದ್ದಾಗಿದ್ದು, ದೇವರಾಜ ಅವರಿಂದ ತಮ ಭಾವಮೈದುನ ಕಾನೂನುಬದ್ಧವಾಗಿ ಖರೀದಿ ಮಾಡಿದ್ದಾರೆ. ಹೀಗಾಗಿಪಿಟಿಸಿಎಲ್‌ ಕಾಯ್ದೆ ವ್ಯಾಪ್ತಿಗೆ ಭೂಮಿ ಬರುವುದಿಲ್ಲ.ನಿಂಗ ಅವರ ಕುಟುಂಬದ ಸದಸ್ಯರು ಒಪ್ಪಿಗೆಯೊಂದಿಗೆ ದೇವರಾಜ ಅವರಿಗೆ ಭೂಮಿಯ ಮಾಲಿಕತ್ವ ದಕ್ಕಿದೆ. ಹೀಗಾಗಿ ಈಗ ಮಂಜುನಾಥಸ್ವಾಮಿಯವರಿಂದ ಬಿಜೆಪಿಯವರು ದೂರು ಕೊಡಿಸಿ ಮನೆಮುರುಕ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
4
+ ಮುಡಾ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ವಿವರಣೆ ಕೇಳಿದರೆ ಸರ್ಕಾರ ವರದಿ ನೀಡಲು ಸಿದ್ಧವಿದೆ ಎಂದು ಹೇಳಿದ ಮುಖ್ಯಮಂತ್ರಿಯವರು ಮುಡಾದಲ್ಲಿ ವಿರೋಧಪಕ್ಷಗಳ ಬೇರೆ ಬೇರೆ ನಾಯಕರು ಪಡೆದಿರುವ ನಿವೇಶನಗಳ ಮಾಹಿತಿಗಳನ್ನು ಬಹಿರಂಗಪಡಿಸಿದರು.
5
+ ಈಗಾಗಲೇ ರಚನೆ ಮಾಡಲಾಗಿರುವ ನ್ಯಾಯಾಂಗ ಸಮಿತಿ ಮುಡಾದಲ್ಲ ನಡೆದಿರುವ ನಿವೇಶನ ಹಂಚಿಕೆ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪರಿಶೀಲನೆ ನಡೆಸಲಿದೆ ಎಂದು ಸ್ಪಷ್ಟಪಡಿಸಿದರು.ಇದೇ ವೇಳೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಜೆಡಿಎಸ್‌‍ನ ಸಾ.ರಾ.ಮಹೇಶ್‌, ಜಿ.ಟಿ.ದೇವೇಗೌಡ ಹಾಗೂ ಇತರರಿಗೆ ಬದಲಿ ನಿವೇಶನ ಹಂಚಿಕೆ ಮಾಡಿರುವ ಕುರಿತು ಮುಖ್ಯಮಂತ್ರಿ ದಾಖಲೆಗಳನ್ನು ಬಿಡುಗಡೆ ಮಾಡಿದರು.
6
+ ಸೇಡಿನ ರಾಜಕಾರಣದಿಂದ ಪ್ರತಿಪಕ್ಷಗಳಿಂದ ಮಸಿ ಬಳಿಯುವ ಯತ್ನ
7
+ ತಮ ರಾಜಕೀಯ ಜೀವನ ತೆರೆದ ಪುಸ್ತಕವಾಗಿದ್ದು, ಒಂದೇ ಒಂದು ಕಪ್ಪು ಚುಕ್ಕೆಯಿಲ್ಲ. ಬಿಜೆಪಿ-ಜೆಡಿಎಸ್‌‍ ಪಕ್ಷಗಳು ದುರುದ್ದೇಶಪೂರಕವಾಗಿ ಸೇಡಿನ ರಾಜಕಾರಣದಿಂದ ಮಸಿ ಬಳಿಯುವ ಯತ್ನ ನಡೆಸುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
8
+ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ವಿಧಾನಸಭೆ ಮತ್ತು ವಿಧಾನಮಂಡಲದಲ್ಲಿ ಜೆಡಿಎಸ್‌‍-ಬಿಜೆಪಿ ಪಕ್ಷಗಳು ಆಧಾರ ರಹಿತವಾಗಿ ಕಾನೂನು ಬಾಹಿರವಾದ ನಿಲುವಳಿ ಸೂಚನೆ ತಂದಿದ್ದರು. ನಿಲುವಳಿ ಚರ್ಚೆಯಾಗಬೇಕಾದರೆ ನಿಯಮಗಳ ಅನುಸಾರ ಇರಬೇಕು. ಆದರೆ  ಬಿಜೆಪಿಯವರು ನೀಡಿದ್ದ ನಿಲುವಳಿ ಸೂಚನೆ ನಿಯಮಗಳ ವಿರುದ್ಧವಾಗಿತ್ತು. ಅದನ್ನು ಚರ್ಚೆ ಮಾಡಲು ಅವಕಾಶ ಇರಲಿಲ್ಲ. ಹಾಗಾಗಿ ನಿಯಾಮವಳಿ ವಿರುದ್ಧವಾಗಿದ್ದ ಸೂಚನೆ ಕುರಿತು ವಿಧಾನ ಸಭಾಧ್ಯಕ್ಷರು, ವಿಧಾನ ಪರಿಷತ್‌ ಸಭಾಪತಿ ಕಾನೂನು ರೀತಿಯ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದರು.
9
+ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌‍ 135 ಸ್ಥಾನಗಳನ್ನು ಗೆದ್ದ ಮೇಲೆ ಬಿಜೆಪಿ, ಜೆಡಿಎಸ್‌‍ನವರು ರಾಜಕೀಯವಾಗಿ ಹತಾಶರಾಗಿದ್ದಾರೆ. ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮುಖ್ಯಮಂತ್ರಿ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
10
+ ಕಾಂಗ್ರೆಸ್‌‍ ಪಕ್ಷ ಮತ್ತೆ ಅಧಿಕಾರಕ್ಕೆ ಬಂದಿರುವುದನ್ನು ಹಾಗೂ ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿರುವುದನ್ನು ಸಹಿಸಿಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ. ಸರ್ಕಾರ ಎರಡು ವಾರ ವಿಧಾನ ಸಭಾಧಿವೇಶನ ನಡೆಸಿತ್ತು. ಅಷ್ಟೂ ದಿನ ಒಂದೇ ವಿಚಾರ ಪ್ರಸ್ತಾಪವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರವನ್ನು ಮಾತ್ರ ಬಿಜೆಪಿಯವರು ಚರ್ಚೆ ಮಾಡಿದ್ದಾರೆ. ರಾಜ್ಯದ ಸಮಸ್ಯೆಗಳ ಬಗ್ಗೆ ಚಕಾರ ಎತ್ತಿಲ್ಲ ಎಂದು ಆಕ್ಷೇಪಿಸಿದರು.
11
+ ರಾಜ್ಯದಲ್ಲಿ ಅತಿವೃಷ್ಟಿಯಿಂದ ಪ್ರವಾಹ ಬಂದಿರುವುದರ ಬಗ್ಗೆ ಕಾಂಗ್ರೆಸ್‌‍ ಶಾಸಕರು ಮಾತ್ರ ಚರ್ಚೆ ಮಾಡಿದ್ದಾರೆ. ವಿರೋಧ ಪಕ್ಷಗಳ ಶಾಸಕರು ಆ ಚರ್ಚೆಯಲ್ಲಿ ಭಾಗವಹಿಸಲಿಲ್ಲ. ಇದನ್ನು ನೋಡಿದರೆ ಮುಖ್ಯಮಂತ್ರಿ ವ್ಯಕ್ತಿತ್ವಕ್ಕೆ ಹಾಗೂ ಕಾಂಗ್ರೆಸ್‌‍ ಸರ್ಕಾರದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನವನ್ನು ಎರಡು ಸದನಗಳಲ್ಲಿ ವಿರೋಧ ಪಕ್ಷಗಳು ನಡೆಸಿವೆ ಎಂದು ದೂರಿದರು.
12
+ ನಾನು ಮೊದಲ ಬಾರಿಗೆ 1983ರಲ್ಲಿ ಶಾಸಕನಾಗಿ, 1984ರಲ್ಲಿ ಸಚಿವನಾದವನು. ಉಪಮುಖ್ಯಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ 40ವರ್ಷ ರಾಜಕೀಯದಲ್ಲಿದ್ದೇನೆ. ಸಚಿವನಾಗಿಯೇ 40 ವರ್ಷವಾಗಿದೆ. ಇವತ್ತಿನವರೆಗೆ ನನ್ನ ಮೇಲೆ ಒಂದು ಕಪ್ಪು ಚುಕ್ಕೆ ಇಲ್ಲ.
13
+ ನನ್ನ ರಾಜಕೀಯ ಜೀವನ ಪರಿಶುದ್ಧವಾಗಿದೆ. ಬಿಜೆಪಿ ಮತ್ತು ಜೆಡಿಎಸ್‌‍ನಿಂದ ಸೇಡಿನ ರಾಜಕಾರಣ ನಡೆಯುತ್ತಿದೆ. ಅವರು ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಕಳೆದ ವಿಧಾನಸಭೆಯಲ್ಲಿ ಸೋಲನ್ನನುಭವಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಎರಡು ಪಕ್ಷಗಳು ಮೈತ್ರಿ ಮಾಡಿಕೊಂಡರೂ ಹೆಚ್ಚು ಸ್ಥಾನ ಗೆಲ್ಲಲಾಗಿಲ್ಲ. ತೀವ್ರ ಹಿನ್ನಡೆ ಅನುಭವಿಸಿದ್ದಾರೆ. ವಿಧಾನಸಭೆ ಚುನಾವಣೆಗಿಂತ ಲೋಕಸಭೆ ಚುನಾವಣೆಯಲ್ಲಿ ಶೇ.13.5ರಷ್ಟು ಕಾಂಗ್ರೆಸ್‌‍ ಹೆಚ್ಚು ಮತ ಗಳಿಸಿದೆ. ಬಿಜೆಪಿ-ಜೆಡಿಎಸ್‌‍ನವರು ಜನರ ವಿಶ್ವಾಸ ಕಳೆದುಕೊಂಡಿದ್ದು, ಅದನ್ನು ಮರು ಗಳಿಸಲು ವಾಮಮಾರ್ಗ ಅನುಸರಿಸುತ್ತಿದ್ದಾರೆ ಎಂದು  ಅವರು ಟೀಕಿಸಿದರು.
14
+ ಈಗ ಮುಡಾ ಪ್ರಕರಣವನ್ನು ಮುಂದಿಟ್ಟುಕೊಂಡು ಅನಗತ್ಯವಾಗಿ ಪ್ರಚಾರ ಮಾಡುತ್ತಿದ್ದಾರೆ. ಇದರ ಹಿಂದೆ ಯಾರಿದ್ದಾರೆ ಎಂಬುದು ಹಂತ ಹಂತವಾಗಿ ಬಹಿರಂಗಗೊಳ್ಳಲಿದೆ ಎಂದು ಹೇಳಿದರು.
15
+ ಆರಂಭದಿಂದ ಪರಭಾರೆವರೆಗೂ ಸಮಗ್ರ ವಿವರ ನೀಡಿದ ಸಿಎಂ
16
+ ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಭೂಮಿಯ ಮೂಲ ಆರಂಭದಿಂದ ಹಿಡಿದು ಇತ್ತೀಚಿನ ಪರಭಾರೆವರೆಗೂ ಸಮಗ್ರವಾದ ವಿವರಗಳನ್ನು ಜನತೆಯ ಮುಂದಿಟ್ಟಿದ್ದಾರೆ. ಈ ಮೊದಲು ಸಿಟಿ ಇಂಪ್ರೂವ್‌ಮೆಂಟ್‌ ಟ್ರಸ್ಟ್‌ ಬೋರ್ಡ್‌ (ಸಿಐಟಿಬಿ)ಗಳು ಜಾರಿಯಲ್ಲಿದ್ದವು. 1985ರಲ್ಲಿ ಕಾನೂನು ತಿದ್ದುಪಡಿ ಮಾಡಿ ರಾಜ್ಯದೆಲ್ಲೆಡೆ ನಗರಾಭಿವೃದ್ಧಿ ಪ್ರಾಧಿಕಾರಗಳನ್ನು ರಚಿಸಲಾಯಿತು. ಅಂದಿನಿಂದ ಸಾವಿರಾರು ಎಕರೆ ಸ್ವಾಧೀನ ಮಾಡಿಕೊಂಡು, ನಿವೇಶನ ರಚನೆ ಮಾಡಿ ಹಂಚಲಾಗಿದೆ.
17
+ ಮುಡಾ ಸರ್ವೆ ನಂಬರ್‌ 464ರಲ್ಲಿ  3 ಎಕರೆ 16 ಗುಂಟೆ ಭೂಮಿಯನ್ನು ಬಿ.ಎಂ.ಮಲ್ಲಿಕಾರ್ಜುನ ಸ್ವಾಮಿ 2004ರಲ್ಲಿ ಕ್ರಯ ಮಾಡಿಕೊಂಡಿದ್ದಾರೆ. ಈ ಜಮೀನು ಪಿಟಿಸಿಎಲ್‌ ಕಾಯ್ದೆಗೆ ಒಳಪಡಲಿದೆ ಎಂದು ಬಿಜೆಪಿ-ಜೆಡಿಎಸ್‌‍ ಶಾಸಕರು ಆರೋಪಿಸುತ್ತಿದ್ದಾರೆ. ಆದರೆ ದಲಿತರಿಗೆ ಸರ್ಕಾರದಿಂದ ಜಮೀನು ಮಂಜೂರು ಆಗಿದ್ದರೆ, ಅಲ್ಲಿ ಕೆಲ ನಿಬಂಧನೆಗಳನ್ನು ಹಾಕಿರುತ್ತಾರೆ. ಅವು ಉಲ್ಲಂಘನೆಯಾಗಿದ್ದರೆ ಪಿಟಿಸಿಎಲ್‌ ಕಾಯ್ದೆ ಒಳಪಡಲಿದೆ, ಇದು ಪಿರ್ತಾಜಿತ ಆಸ್ತಿ. ಹಾಗಾಗಿ ಪಿಟಿಸಿಎಲ್‌ ಕಾಯ್ದೆಗೆ ಒಳಪಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
18
+ ಜಮೀನಿನ ಪೂರ್ವದಲ್ಲಿ ನಿಂಗ ಬಿನ್‌ ಜವರ 1935ರಲ್ಲಿ ಮೈಸೂರು ತಾಲ್ಲೂಕು ಕಚೇರಿಗೆ ಅರ್ಜಿ ನೀಡಿದ್ದಾರೆ. ಆಗ ಹರಾಜು ನಡೆಯುತ್ತದೆ.  26-9-1930ರಲ್ಲಿ ಹರಾಜು ನೋಟಿಸ್‌‍ ನೀಡಲಾಗಿದೆ. 3-10-1935 ಹರಾಜಿನಲ್ಲಿ ಭಾಗವಹಿಸಿ ಒಂದು ರೂಪಾಯಿಗೆ ನಿಂಗ ಕೂಗುತ್ತಾರೆ. ಬೇರೆ ಯಾರು ಇಲ್ಲದ ಕಾರಣ ನಿಂಗ ಬಿನ್‌ ಜವರ ಅವರಿಗೆ ಒಂದು ರೂಪಾಯಿಗೆ ಕ್ರಯ ಆಗುತ್ತದೆ. 13-10-1935ರಲ್ಲಿ ಅವರಿಗೆ ಹರಾಜಿನಲ್ಲಿ ಖರೀದಿ ಖಚಿತವಾಗುತ್ತದೆ ಎಂದು ವಿವರಿಸಿದರು.
19
+ ಜಮೀನು ಹರಾಜಿನ ಮೂಲಕ ಬಂದಿದ್ದು, ಸ್ವಯಾರ್ಜಿತ ಆಸ್ತಿ. ಕೆಸರೆ ಗ್ರಾಮದ ಸರ್ವೆ ನಂ.464 ರಲ್ಲಿನ 3.16 ಎಕರೆಯನ್ನು ಒಂದು ರೂಪಾಯಿಗೆ ಖರೀದಿಯಾಗಿದೆ. ಬಿಜೆಪಿ-ಜೆಡಿಎಸ್‌‍ ಜನರಿಗೆ ತಪ್ಪು ಮಾಹಿತಿ ನೀಡಲು ಕುಟೀಲ ಹರ ಸಾಹಸ ನಡೆಸುತ್ತಿದ್ದಾರೆ. ಗ್ರಾಂಟ್‌ ಆಗದಿದ್ದರೂ, ಸ್ವಯಾರ್ಜಿತ ಆಸ್ತಿಯಾಗಿದ್ದರೂ ಪಿಟಿಸಿಲ್‌ ಕಾಯ್ದೆಗೆ ಒಳಪಡಲಿದೆ ಎಂದು ಹೇಳುತ್ತಿದ್ದಾರೆ ಎಂದು ಟೀಕಿಸಿದರು.
20
+ ನಿಂಗ ಬಿನ್‌ ಜವರ ಅವರಿಗೆ ಮೂರು ಜನ ಮಕ್ಕಳು. ಮಲ್ಲಯ್ಯ, ಮೈಲಾರಯ್ಯ, ದೇವರಾಜ ಎಂಬುವರಿದ್ದು, ಮಲ್ಲಯ್ಯನಿಗೆ ವಾರಸುದಾರರಿಲ್ಲದೆ ಪವತಿಯಾಗಿದ್ದಾರೆ. ಮೈಲಾರಯ್ಯನ ಪತ್ನಿ ಪುಟ್ಟಗೌರಮ ಅವರ ಮಗ ಎಂ.ಮಂಜುನಾಥಸ್ವಾಮಿ ಇದ್ದರು. ಮಲ್ಲಯ್ಯ ಸೇರಿದಂತೆ ವಂಶವೃಕ್ಷಕ್ಕೆ ಮೂರು ಜನ ಸಹಿ ಮಾಡಿದ್ದಾರೆ.
21
+ ಸದರಿ ಭೂಮಿಯನ್ನು ದೇವರಾಜಯ್ಯನಿಗೆ ಖಾತೆ ಮಾಡಿಕೊಡಲು ನಮ್ಮ ವಿರೋಧ ಇಲ್ಲ ಎಂದು ಕುಟುಂಬದ ಸದಸ್ಯರು ಸರ್ಕಾರಕ್ಕೆ ಬರೆದುಕೊಡುತ್ತಾರೆ. ಮಲ್ಲಯ್ಯ, ಪುಟ್ಟಗೌರಮ, ಮಂಜುನಾಥಸ್ವಾಮಿ ಸಹಿ ಮಾಡಿದ್ದಾರೆ. ಇತ್ತೀಚೆಗೆ ಮಂಜುನಾಥಸ್ವಾಮಿಯನ್ನು ಬಿ���ೆಪಿಯವರು ಪುಸಲಾಯಿಸಿ ದೂರು ಕೊಡಿಸಿದ್ದಾರೆ. ಇಷ್ಟೆಲ್ಲಾ ಇದ್ದರೂ ಬಿಜೆಪಿ ಸುಳ್ಳು ಹೇಳುವುದರಲ್ಲಿ ಬಿಜೆಪಿ ನಿಸ್ಸೀಮರು ಎಂದು ವಾಗ್ದಾಳಿ ನಡೆಸಿದರು.
22
+ ದೇವರಾಜು ಹೆಸರಿಗೆ ಮ್ಯೂಟೆಷನ್‌ ಹಾಗೂ ಪಹಣಿ ಆಗಿದೆ. ಇದಕ್ಕೆ ಕುಟುಂಬದ ಎಲ್ಲಾ ಸದಸ್ಯರು ಲಿಖಿತ ಹೇಳಿಕೆಗೆ ಸಹಿ ಹಾಕಿದ್ದಾರೆ. 20 ವರ್ಷ ಇಲ್ಲದ ತಕರಾರನ್ನು ಈಗ ಸೃಷ್ಟಿಸಲಾಗಿದೆ. ಬಿಜೆಪಿಯವರು ಮಲ್ಲಿಕಾರ್ಜುನಸ್ವಾಮಿಯನ್ನು ಎತ್ತಿ ಕಟ್ಟಿ ಚಿತಾವಣೆ ಮಾಡಿ ಹೇಳಿಕೆ ಕೊಡಿಸಿರುವ ಬಿಜೆಪಿಯವರಿಗೆ ನಾಚಿಕೆ ಮಾನ ಮರ್ಯಾದೆ ಇದ್ಯಾ ಎಂದು ಕಿಡಿಕಾರಿದರು. ಮುಡಾ ಈ ಜಮೀನು ಸ್ವಾಧೀನ ಪಡಿಸಿಕೊಳ್ಳಲು 1992ರಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. 1997ರಲ್ಲಿ ಅಂತಿಮ ಅಧಿಸೂಚನೆಯಾಗಿದೆ.  13-08-1996ರಲ್ಲಿ ದೇವರಾಜಯ್ಯ ಅರ್ಜಿ ಕೊಟ್ಟು ನನಗೆ ಕೆಸರೆ ಗ್ರಾಮದಲ್ಲಿ ಎರಡು ಸರ್ವೆ ನಂ.ಗಳಿಂದ ತಮಗೆ 4.18 ಎಕರೆ ಪಿರ್ತಾಜಿತ ಆಸ್ತಿ ಇದ್ದು ಹಾಲಿ ನನ್ನ ಸ್ವಾದೀನದಲ್ಲಿದೆ, ಈ ಕೃಷಿ ಭೂಮಿ ನಂಬಿ ಜೀವನ ಮಾಡುತ್ತಿದ್ದೇನೆ. ಇದನ್ನು ಬಿಟ್ಟು ಬೇರೆ ಜಮೀನು ಇಲ್ಲ. ನನಗೆ ನಾಲ್ಕು ಗಂಡು ಮಕ್ಕಳಿದ್ದಾರೆ. ಅಲ್ಲಿ ಸಾಕಷ್ಟು ಮರಗಳಿವೆ. ನಗರಾಭಿವೃದ್ಧಿ ಉದ್ದೇಶದ ಸ್ವಾಧೀನಕ್ಕೆ ಕೈ ಬಿಟ್ಟು ಕೃಷಿ ಮುಂದುವರೆಸಲು ಅನುಕೂಲ ಮಾಡಿಕೊಳ್ಳಬೇಕು ಎಂದು ಅರ್ಜಿ ಬರೆದಿದ್ದರು.
23
+ ಆಗ ಡಿ-ನೋಟಿಫಿಕೇಷನ್‌ ಮಾಡಲು ವಿ.ಬಾಲಸುಬ್ರಹಣ್ಯ ನೇತೃತ್ವದಲ್ಲಿ ಒಂದು ಸಮಿತಿ ಇರುತ್ತದೆ. ನಗರಾಭಿವೃದ್ಧಿ ಇಲಾಖೆ ಉಪಕಾರ್ಯದರ್ಶಿ ವಿ.ಗೋವಿಂದರಾಜು, ಕಾನೂನು ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಕೆ.ಎಂ.ತಮಯ್ಯ ಸದಸ್ಯರಾಗಿದ್ದರು.
24
+ 24-07-1977 ಸಭೆಯಲ್ಲಿ ಡಿ-ನೋಟಿಫಿಕೇಷನ್‌ ಪ್ರಕ್ರಿಯೆಯಿಂದ ಕೈ ಬಿಡಲು ಶಿಫಾರಸ್ಸು ಮಾಡಲಾಗಿದೆ. ಸದರಿ ಭೂಮಿಯಲ್ಲಿ ನೀರು ಸರಬರಾಜು ಹಾಗೂ ಒಳ ಚರಂಡಿ ಯೋಜನೆ ನಡೆಯದಿರುವುದರಿಂದ ಭೂಸ್ವಾಧೀನದಿಂದ ಕೈ ಬಿಡಬಹುದು ಎಂದು ಚರ್ಚಿಸಿ ಸಮಿತಿಯವರು ಮುಡಾ ಶಿಫಾರಸ್ಸು ಆಧರಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಭೂ ಸ್ವಾದೀನಕ್ಕೆ ಈವರೆಗೂ ಯಾವುದೇ ಪರಿಹಾರ ಪಾವತಿಸಿಲ್ಲ ಎಂದರು.
25
+ ಅಂದಿನ ಸಭೆಯಲ್ಲಿ ಮೈಸೂರಿನ ಎರಡು ಜಾಗ ಸೇರಿ, ರಾಜ್ಯದ 19 ಕಡೆಗಳ ಭೂಮಿಯನ್ನು ಭೂ ಸ್ವಾದೀನದಿಂದ ಕೈ ಬಿಡಲಾಗಿದೆ 1998ರಲ್ಲಿ ಡಿ-ನೋಟಿಫಿಕೇಷನ್‌ ಆಗಿದೆ ಎಂದು ವಿವರಿಸಿದರು.
26
+ ಮಲ್ಲಿಕಾರ್ಜುನ ಸ್ವಾಮಿ ಹೆಸರಿಗೆ ದೇವರಾಜ ಅವರಿಂದ 25-08-2004ರಲ್ಲಿ ಖರೀದಿ ಕರಾರು ಆಗಿದೆ. ದೇವರಾಜು ಅವರ ಪತ್ನಿ ಮತ್ತು ಮಕ್ಕಳು ಖರೀದಿ ಕರಾರಿಗೆ ಸಹಿ ಹಾಕಿದ್ದಾರೆ. 15-07-2005ರಲ್ಲಿ ಮಲ್ಲಿಕಾರ್ಜುನಸ್ವಾಮಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳಲು ಪರಿವರ್ತನೆ ಮಾಡಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ವಿವರಿಸಿದ್ದಾರೆ.ನಮ್ಮ ಮಾವನಿಗೆ ಮೂರು ಜನ ಮಕ್ಕಳು. ಮಲ್ಲಿಕಾರ್ಜುನ ಸ್ವಾಮಿ, ಪಾರ್ವತಿ, ಜಗದೀಶ್‌. ಅವರು ಭಾಗವಾದಾಗ 6-10-2010ರಲ್ಲಿ ದಾನಪತ್ರದ ಮೂಲಕ ನನ್ನ ಪತ್ನಿ ಅವರಿಗೆ 3 ಎಕರೆ 16 ಗುಂಟೆ ಭೂಮಿ ನೀಡುತ್ತಾರೆ.  2013-14ರಲ್ಲಿ ಮುಡಾ ಅಕ್ರಮವಾಗಿ ಸ್ವಾಧೀನ ತೆಗೆದುಕೊಂಡು ನಿವೇಶನ ಹಾಗೂ ಪಾರ್ಕ್‌ ಮಾಡಿ ಹಂಚಿದ್ದಾರೆ ಎಂದು ಗೊತ್ತಾಯಿತು. 2014ರಲ್ಲಿ ಅರ್ಜಿ ನೀಡಿ, ನಮ್ಮ ಜಮೀನನ್ನು ಅಕ್ರಮವಾಗಿ ಬಳಸಿಕೊಂಡಿದ್ದೀರಾ ? ನಮ್ಮಗೆ ಪರ್ಯಾಯ ಜಮೀನು ಕೊಡಿ ಎಂದು ಮನವಿ ಸಲ್ಲಿಸಲಾಯಿತು ಎಂದು ವಿವರಿಸಿದರು.
27
+ ಮುಡಾ ನಿವೇಶನ ಹಂಚಿಕೆ ಕಾನೂನು ಬದ್ಧ : ರಾಜ್ಯಪಾಲರಿಗೆ ವರದಿ ಸಲ್ಲಿಕೆ
28
+ ಮುಡಾ ಪ್ರಕರಣದಲ್ಲಿ ರಾಜ್ಯಪಾಲರಿಗೆ ಸರ್ಕಾರ ವರದಿ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ವ್ಯಕ್ತಿಯೊಬ್ಬರು ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯಪಾಲರು ವಿವರಣೆ ಕೇಳಿದರೆ ವರದಿ ನೀಡಲಾಗುವುದು.ಮುಡಾ ತಮಗೆ ನಿವೇಶನ ಹಂಚಿಕೆ ಮಾಡಿರುವುದು ಸಂಪೂರ್ಣ ಕಾನೂನು ಬದ್ಧವಾಗಿದೆ. ಇದನ್ನು ರಾಜ್ಯಪಾಲರಿಗೆ ತಿಳಿಸಲಾಗುವುದು ಎಂದು ಹೇಳಿದರು.
29
+ ಪರ್ಯಾಯ ನಿವೇಶನ ಪಡೆಯುವಲ್ಲಿ ನನ್ನ ಪತ್ನಿ, ಭಾವಮೈದುನನ ಪಾತ್ರವಿಲ್ಲ
30
+ ಬೆಂಗಳೂರು,ಜು.26- ಮುಡಾದಿಂದ ಪರ್ಯಾಯ ನಿವೇಶನ ಪಡೆಯುವ ಪ್ರಕರಣದಲ್ಲಿ ನನ್ನದಾಗಲೀ, ತಮ ಪತ್ನಿ ಪಾರ್ವತಿಯದಾಗಲೀ, ಭಾವಮೈದುನ ಮಲ್ಲಿಕಾರ್ಜುನ ಸ್ವಾಮಿಯದ್ದಾಗಲೀ ಯಾವುದೇ ಪಾತ್ರವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ತಮ ತಪ್ಪನ್ನು ಒಪ್ಪಿಕೊಂಡು ಬದಲಿ ನಿವೇಶನವನ್ನು ನೀಡಿದೆ ಎಂದು ಹೇಳಿದರು.
31
+ ಮುಡಾ ಭೂಮಿಯನ್ನು ಅಕ್ರಮವಾಗಿ ಬಳಸಿಕೊಂಡ ಕಾರಣಕ್ಕೆ 2014 ಮತ್ತು 2021 ರಲ್ಲಿ ತಮ ಪತ್ನಿ ಪಾರ್ವತಿಯವರು ಎರಡು ಬಾರಿ ಪತ್ರ ಬರೆದು ಬದಲಿ ನಿವೇಶನ ನೀಡುವಂತೆ ಮನವಿ ಮಾಡಿದ್ದರು.2014ರ ಜೂನ್‌ 23 ರಂದು ಮೊದಲ ಬಾರಿ ಪತ್ರ ಬರೆಯಲಾಗಿತ್ತು. ಆಗ ನಾನು ಮುಖ್ಯಮಂತ್ರಿಯಾಗಿದ್ದೆ. ನನ್ನ ಪತ್ನಿ ಅರ್ಜಿ ಸಲ್ಲಿಸಿರುವುದನ್ನು ಗಮನಕ್ಕೆ ತಂದಾಗ ನಾನು ಅಧಿಕಾರದಲ್ಲಿರುವುದರಿಂದ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಬದಲಿ ನಿವೇಶನವನ್ನೂ ನೀಡುವುದಿಲ್ಲ. ಅಧಿಕಾರವಧಿ ಮುಗಿದ ಬಳಿಕ ಮುಡಾದವರು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲಿ ಎಂದು ಹೇಳಿದ್ದೆ. ಮತ್ತೆ ಈ ವಿಚಾರವನ್ನು ನನ್ನ ಗಮನಕ್ಕೆ ತರುವುದು ಬೇಡ ಎಂದು ಸೂಚಿಸಿದ್ದಾಗಿ ತಿಳಿಸಿದರು.ನಂತರ 2021 ರಲ್ಲಿ ಮತ್ತೊಮೆ ಅರ್ಜಿ ಸಲ್ಲಿಸಲಾಗಿತ್ತು ಎಂದು ಮುಖ್ಯಮಂತ್ರಿ ಹೇಳಿದರು.
32
+ 2017 ರ ಡಿಸೆಂಬರ್‌ 15 ರಂದು ಮುಡಾ ಸಭೆಯಲ್ಲಿ ಚರ್ಚೆ ಮಾಡಿ ಕೆಸರೆ ಗ್ರಾಮದ 464ರ ಸರ್ವೆ ನಂ.ನಲ್ಲಿ 3 ಎಕರೆ 16 ಗುಂಟೆ ಭೂಮಿಯನ್ನು ಭೂಸ್ವಾಧೀನದಿಂದ ಕೈಬಿಡಲಾಗಿದ್ದರೂ ಅದನ್ನು ಬಳಕೆ ಮಾಡಿಕೊಂಡು ನಿವೇಶನ ಹಂಚಿಕೆ ಮಾಡಿ ಮಾರಾಟ ಮಾಡಿರುವುದು ತಪ್ಪಾಗಿದೆ. ಜಮೀನಿನ ಮಾಲೀಕರು ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸಿ ಸಮಾನಾಂತರವಾಗಿ ಪರಿವರ್ತನೆಯಾಗದೇ ��ರುವ ಭೂಮಿ ನೀಡಬೇಕೆಂದು ನಿರ್ಣಯ ಕೈಗೊಳ್ಳಲಾಯಿತು.
33
+ ನಂತರ 2021ರಲ್ಲಿ ಎರಡನೇ ಬಾರಿ ಅರ್ಜಿ ಸಲ್ಲಿಸಿದಾಗ ತಮ ಜಮೀನನ್ನು ಉಪಯೋಗಿಸಿಕೊಂಡಿರುವ ಬಾಬ್ತು ಯಾವುದೇ ಪರಿಹಾರ ನೀಡಿಲ್ಲ. ಭೂಮಿಗೆ ಭೂಮಿ ನೀಡುವುದು ಬೇಡ. ಶೇ.50:50ರ ಅನುಪಾತದಲ್ಲಿ ನಿವೇಶನ ನೀಡುವಂತೆ ಮನವಿ ಸಲ್ಲಿಸಲಾಗಿತ್ತು.
34
+ ನಾವು ಇಂತಹ ಕಡೆಯೇ ಜಾಗ ಕೊಡಿ ಎಂದು ಕೇಳಿರಲಿಲ್ಲ. ಮುಡಾದವರು ವಿಜಯನಗರದ 3 ಮತ್ತು 4 ನೇ ಹಂತದ ಬಡಾವಣೆಯಲ್ಲಿ ನಿವೇಶನ ನೀಡಿದ್ದಾರೆ. ನಮ್ಮ ಒಟ್ಟು 3 ಎಕರೆ 16 ಗುಂಟೆಯಿಂದ 1,48,000 ಚದರ ಅಡಿ ಜಾಗ ವಿಸ್ತೀರ್ಣವಿದ್ದು, ಮುಡಾ ಬದಲಿಯಾಗಿ ನೀಡಿರುವುದು 38,588 ಚದರ ಅಡಿ ಮಾತ್ರ. ಮುಡಾ ನಿರ್ಣಯದಲ್ಲಿ ಅರ್ಜಿದಾರರು ಒಪ್ಪುವ ಜಾಗದಲ್ಲೇ ನಿವೇಶನ ನೀಡಬೇಕು ಎಂದು ನಿರ್ಣಯ ಕೈಗೊಳ್ಳಲಾಗಿದೆ ಎಂದರು.ಮುಡಾ ಸಭೆಯಲ್ಲಿ ಜೆಡಿಎಸ್‌‍ ಶಾಸಕರಾದ ಜಿ.ಟಿ.ದೇವೇಗೌಡ, ಮರಿತಿಬ್ಬೇಗೌಡ, ಬಿಜೆಪಿಯ ಎಸ್‌‍.ಎ.ರಾಮದಾಸ್‌‍, ಅದೇ ಪಕ್ಷದ ನಾಗೇಂದ್ರ ಭಾಗವಹಿಸಿದ್ದರು.
35
+ ಸುಂದರಮ್ಮ ಪ್ರಕರಣ :
36
+ ಇದೇ ರೀತಿ ಮುಡಾ ಸುಂದರಮ್ಮ ಎಂಬುವರ ಜಮೀನನ್ನು ಅಕ್ರಮವಾಗಿ ಬಳಸಿಕೊಂಡಿತ್ತು. ಅದರಲ್ಲೂ ತಪ್ಪು ಒಪ್ಪಿಕೊಂಡು ಬದಲಿ ನಿವೇಶನ ನೀಡಲು ಮುಡಾ ನಿರ್ಣಯಿಸಿತ್ತು. ಆದರೆ ಸುಂದರಮ ಮುಡಾದ ಪ್ರಸ್ತಾಪವನ್ನು ಒಪ್ಪಿಕೊಳ್ಳಲಿಲ್ಲ. ಬದಲಾಗಿ ಹೈಕೋರ್ಟ್‌ ಮೆಟ್ಟಿಲೇರಿದಾಗ ಸ್ವಾಧೀನಪಡಿಸಿಕೊಳ್ಳಲಾದ ಜಾಗದಷ್ಟೇ ಬದಲಿ ಭೂಮಿ ನೀಡುವ ಆದೇಶ ನೀಡಲಾಗಿತ್ತು. ಆದರೆ ನಮ್ಮ ಪ್ರಕರಣದಲ್ಲಿ 50:50 ಅನುಪಾತಕ್ಕೆ ಒಪ್ಪಿಕೊಂಡಿದ್ದೇವೆ. ಇದರಲ್ಲಿ ಲೋಪ ಏನಾಗಿದೆ? ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು.
37
+ ಬಿಜೆಪಿಯವರ ಮನೆ ಮುರುಕ ರಾಜಕಾರಣ : ಸಿಎಂ ಸಿದ್ದು ಆಕ್ರೋಶ..
38
+ ಬೆಂಗಳೂರು,ಜು.26- ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ ಹೆಸರಿಗೆ ಮಸಿ ಬಳಿಯುವ ದುರುದ್ದೇಶದಿಂದ ಬಿಜೆಪಿಯವರು ಮನೆಮುರುಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಂಗ ಬಿನ್‌ ಜವರ ಅವರ ಕುಟುಂಬದ ಸದಸ್ಯರು ಒಪ್ಪಂದದ ಮೇರೆಗೆ ಕೆಸರೆ ಗ್ರಾಮದ 3 ಎಕರೆ 16 ಗುಂಟೆಯನ್ನು ನಿಂಗ ಅವರ ಕೊನೆಯ ಪುತ್ರ ದೇವರಾಜ ಅವರ ಹೆಸರಿಗೆ ಬಿಟ್ಟುಕೊಟ್ಟಿದ್ದರು. ತಮ ಪಾಲಿನ ಭೂಮಿಯನ್ನು ದೇವರಾಜ ಪರಭಾರೆ ಮಾಡಿದ್ದಾರೆ.
39
+ ತಮ ಭಾವಮೈದುನ ಮಲ್ಲಿಕಾರ್ಜುನ ಸ್ವಾಮಿ ಖರೀದಿಸಿ ಭೂಪರಿವರ್ತನೆ ಮಾಡಿಸಿಕೊಂಡಿದ್ದಾರೆ. ತಮ ಪತ್ನಿಯ ಹೆಸರಿಗೆ ದಾನಪತ್ರ ನೀಡಿದ್ದಾರೆ. ಇತ್ತೀಚೆಗೆ ವಿವಾದ ಮಾಡಿದ ಬಿಜೆಪಿಯವರು ಮಂಜುನಾಥಸ್ವಾಮಿ ಎಂಬುವರಿಂದ ಜಿಲ್ಲಾಧಿಕಾರಿಗೆ ದೂರು ಕೊಡಿಸಿ ತಮಗೂ ಪಾಲು ಬರಬೇಕೆಂದು ಪ್ರತಿಪಾದನೆ ಮಾಡಿಸಲು ಯತ್ನಿಸುತ್ತಿದ್ದಾರೆ.
40
+ ಕಳೆದ 24 ವರ್ಷಗಳಿಂದಲೂ ಈ ಭೂಮಿ ವಿಷಯವಾಗಿ ಯಾವುದೇ ತಗಾದೆಗಳು, ವ್ಯಾಜ್ಯಗಳು ಇರಲಿಲ್ಲ. ಪಾಲುದಾರಿಕೆ ಕೂಡ ಕುಟುಂಬದಲ್ಲಿ ಸಮರ್ಪಕವಾಗಿ ನಡೆದಿತ್ತು. ಆದರೆ ರಾಜಕೀಯ ಕಾರಣಕ್ಕಾಗಿ ದೂರು ಕೊಡಿಸಿ ಕುಟುಂಬದಲ್ಲಿ ಮನೆಮುರುಕ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
41
+ ಆರಂಭದಿಂದ ಪರಭಾರೆವರೆಗೂ ಸಮಗ್ರ ವಿವರ ನೀಡಿದ ಸಿಎಂ
42
+ ಬೆಂಗಳೂರು,ಜು.26- ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಭೂಮಿಯ ಮೂಲ ಆರಂಭದಿಂದ ಹಿಡಿದು ಇತ್ತೀಚಿನ ಪರಭಾರೆವರೆಗೂ ಸಮಗ್ರವಾದ ವಿವರಗಳನ್ನು ಜನತೆಯ ಮುಂದಿಟ್ಟಿದ್ದಾರೆ. ಈ ಮೊದಲು ಸಿಟಿ ಇಂಪ್ರೂವ್‌ಮೆಂಟ್‌ ಟ್ರಸ್ಟ್‌ ಬೋರ್ಡ್‌ (ಸಿಐಟಿಬಿ)ಗಳು ಜಾರಿಯಲ್ಲಿದ್ದವು. 1985ರಲ್ಲಿ ಕಾನೂನು ತಿದ್ದುಪಡಿ ಮಾಡಿ ರಾಜ್ಯದೆಲ್ಲೆಡೆ ನಗರಾಭಿವೃದ್ಧಿ ಪ್ರಾಧಿಕಾರಗಳನ್ನು ರಚಿಸಲಾಯಿತು. ಅಂದಿನಿಂದ ಸಾವಿರಾರು ಎಕರೆ ಸ್ವಾಧೀನ ಮಾಡಿಕೊಂಡು, ನಿವೇಶನ ರಚನೆ ಮಾಡಿ ಹಂಚಲಾಗಿದೆ.
43
+ ಮುಡಾ ಸರ್ವೆ ನಂಬರ್‌ 464ರಲ್ಲಿ  3 ಎಕರೆ 16 ಗುಂಟೆ ಭೂಮಿಯನ್ನು ಬಿ.ಎಂ.ಮಲ್ಲಿಕಾರ್ಜುನ ಸ್ವಾಮಿ 2004ರಲ್ಲಿ ಕ್ರಯ ಮಾಡಿಕೊಂಡಿದ್ದಾರೆ. ಈ ಜಮೀನು ಪಿಟಿಸಿಎಲ್‌ ಕಾಯ್ದೆಗೆ ಒಳಪಡಲಿದೆ ಎಂದು ಬಿಜೆಪಿ-ಜೆಡಿಎಸ್‌‍ ಶಾಸಕರು ಆರೋಪಿಸುತ್ತಿದ್ದಾರೆ. ಆದರೆ ದಲಿತರಿಗೆ ಸರ್ಕಾರದಿಂದ ಜಮೀನು ಮಂಜೂರು ಆಗಿದ್ದರೆ, ಅಲ್ಲಿ ಕೆಲ ನಿಬಂಧನೆಗಳನ್ನು ಹಾಕಿರುತ್ತಾರೆ. ಅವು ಉಲ್ಲಂಘನೆಯಾಗಿದ್ದರೆ ಪಿಟಿಸಿಎಲ್‌ ಕಾಯ್ದೆ ಒಳಪಡಲಿದೆ, ಇದು ಪಿರ್ತಾಜಿತ ಆಸ್ತಿ. ಹಾಗಾಗಿ ಪಿಟಿಸಿಎಲ್‌ ಕಾಯ್ದೆಗೆ ಒಳಪಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
44
+ ಜಮೀನಿನ ಪೂರ್ವದಲ್ಲಿ ನಿಂಗ ಬಿನ್‌ ಜವರ 1935ರಲ್ಲಿ ಮೈಸೂರು ತಾಲ್ಲೂಕು ಕಚೇರಿಗೆ ಅರ್ಜಿ ನೀಡಿದ್ದಾರೆ. ಆಗ ಹರಾಜು ನಡೆಯುತ್ತದೆ.  26-9-1930ರಲ್ಲಿ ಹರಾಜು ನೋಟಿಸ್‌‍ ನೀಡಲಾಗಿದೆ. 3-10-1935 ಹರಾಜಿನಲ್ಲಿ ಭಾಗವಹಿಸಿ ಒಂದು ರೂಪಾಯಿಗೆ ನಿಂಗ ಕೂಗುತ್ತಾರೆ. ಬೇರೆ ಯಾರು ಇಲ್ಲದ ಕಾರಣ ನಿಂಗ ಬಿನ್‌ ಜವರ ಅವರಿಗೆ ಒಂದು ರೂಪಾಯಿಗೆ ಕ್ರಯ ಆಗುತ್ತದೆ. 13-10-1935ರಲ್ಲಿ ಅವರಿಗೆ ಹರಾಜಿನಲ್ಲಿ ಖರೀದಿ ಖಚಿತವಾಗುತ್ತದೆ ಎಂದು ವಿವರಿಸಿದರು.
45
+ ಜಮೀನು ಹರಾಜಿನ ಮೂಲಕ ಬಂದಿದ್ದು, ಸ್ವಯಾರ್ಜಿತ ಆಸ್ತಿ. ಕೆಸರೆ ಗ್ರಾಮದ ಸರ್ವೆ ನಂ.464 ರಲ್ಲಿನ 3.16 ಎಕರೆಯನ್ನು ಒಂದು ರೂಪಾಯಿಗೆ ಖರೀದಿಯಾಗಿದೆ. ಬಿಜೆಪಿ-ಜೆಡಿಎಸ್‌‍ ಜನರಿಗೆ ತಪ್ಪು ಮಾಹಿತಿ ನೀಡಲು ಕುಟೀಲ ಹರ ಸಾಹಸ ನಡೆಸುತ್ತಿದ್ದಾರೆ. ಗ್ರಾಂಟ್‌ ಆಗದಿದ್ದರೂ, ಸ್ವಯಾರ್ಜಿತ ಆಸ್ತಿಯಾಗಿದ್ದರೂ ಪಿಟಿಸಿಲ್‌ ಕಾಯ್ದೆಗೆ ಒಳಪಡಲಿದೆ ಎಂದು ಹೇಳುತ್ತಿದ್ದಾರೆ ಎಂದು ಟೀಕಿಸಿದರು.
46
+ ನಿಂಗ ಬಿನ್‌ ಜವರ ಅವರಿಗೆ ಮೂರು ಜನ ಮಕ್ಕಳು. ಮಲ್ಲಯ್ಯ, ಮೈಲಾರಯ್ಯ, ದೇವರಾಜ ಎಂಬುವರಿದ್ದು, ಮಲ್ಲಯ್ಯನಿಗೆ ವಾರಸುದಾರರಿಲ್ಲದೆ ಪವತಿಯಾಗಿದ್ದಾರೆ. ಮೈಲಾರಯ್ಯನ ಪತ್ನಿ ಪುಟ್ಟಗೌರಮ ಅವರ ಮಗ ಎಂ.ಮಂಜುನಾಥಸ್ವಾಮಿ ಇದ್ದರು. ಮಲ್ಲಯ್ಯ ಸೇರಿದಂತೆ ವಂಶವೃಕ್ಷಕ್ಕೆ ಮೂರು ಜನ ಸಹಿ ಮಾಡಿದ್ದಾರೆ.
47
+ ಸದರಿ ಭೂಮಿಯನ್ನು ದೇವರಾಜಯ್ಯನಿಗೆ ಖಾತೆ ಮಾಡಿಕೊಡಲು ನಮ್ಮ ವಿರೋಧ ಇಲ್ಲ ಎಂ��ು ಕುಟುಂಬದ ಸದಸ್ಯರು ಸರ್ಕಾರಕ್ಕೆ ಬರೆದುಕೊಡುತ್ತಾರೆ. ಮಲ್ಲಯ್ಯ, ಪುಟ್ಟಗೌರಮ, ಮಂಜುನಾಥಸ್ವಾಮಿ ಸಹಿ ಮಾಡಿದ್ದಾರೆ. ಇತ್ತೀಚೆಗೆ ಮಂಜುನಾಥಸ್ವಾಮಿಯನ್ನು ಬಿಜೆಪಿಯವರು ಪುಸಲಾಯಿಸಿ ದೂರು ಕೊಡಿಸಿದ್ದಾರೆ. ಇಷ್ಟೆಲ್ಲಾ ಇದ್ದರೂ ಬಿಜೆಪಿ ಸುಳ್ಳು ಹೇಳುವುದರಲ್ಲಿ ಬಿಜೆಪಿ ನಿಸ್ಸೀಮರು ಎಂದು ವಾಗ್ದಾಳಿ ನಡೆಸಿದರು.
48
+ ದೇವರಾಜು ಹೆಸರಿಗೆ ಮ್ಯೂಟೆಷನ್‌ ಹಾಗೂ ಪಹಣಿ ಆಗಿದೆ. ಇದಕ್ಕೆ ಕುಟುಂಬದ ಎಲ್ಲಾ ಸದಸ್ಯರು ಲಿಖಿತ ಹೇಳಿಕೆಗೆ ಸಹಿ ಹಾಕಿದ್ದಾರೆ. 20 ವರ್ಷ ಇಲ್ಲದ ತಕರಾರನ್ನು ಈಗ ಸೃಷ್ಟಿಸಲಾಗಿದೆ. ಬಿಜೆಪಿಯವರು ಮಲ್ಲಿಕಾರ್ಜುನಸ್ವಾಮಿಯನ್ನು ಎತ್ತಿ ಕಟ್ಟಿ ಚಿತಾವಣೆ ಮಾಡಿ ಹೇಳಿಕೆ ಕೊಡಿಸಿರುವ ಬಿಜೆಪಿಯವರಿಗೆ ನಾಚಿಕೆ ಮಾನ ಮರ್ಯಾದೆ ಇದ್ಯಾ ಎಂದು ಕಿಡಿಕಾರಿದರು. ಮುಡಾ ಈ ಜಮೀನು ಸ್ವಾಧೀನ ಪಡಿಸಿಕೊಳ್ಳಲು 1992ರಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. 1997ರಲ್ಲಿ ಅಂತಿಮ ಅಧಿಸೂಚನೆಯಾಗಿದೆ.  13-08-1996ರಲ್ಲಿ ದೇವರಾಜಯ್ಯ ಅರ್ಜಿ ಕೊಟ್ಟು ನನಗೆ ಕೆಸರೆ ಗ್ರಾಮದಲ್ಲಿ ಎರಡು ಸರ್ವೆ ನಂ.ಗಳಿಂದ ತಮಗೆ 4.18 ಎಕರೆ ಪಿರ್ತಾಜಿತ ಆಸ್ತಿ ಇದ್ದು ಹಾಲಿ ನನ್ನ ಸ್ವಾದೀನದಲ್ಲಿದೆ, ಈ ಕೃಷಿ ಭೂಮಿ ನಂಬಿ ಜೀವನ ಮಾಡುತ್ತಿದ್ದೇನೆ. ಇದನ್ನು ಬಿಟ್ಟು ಬೇರೆ ಜಮೀನು ಇಲ್ಲ. ನನಗೆ ನಾಲ್ಕು ಗಂಡು ಮಕ್ಕಳಿದ್ದಾರೆ. ಅಲ್ಲಿ ಸಾಕಷ್ಟು ಮರಗಳಿವೆ. ನಗರಾಭಿವೃದ್ಧಿ ಉದ್ದೇಶದ ಸ್ವಾಧೀನಕ್ಕೆ ಕೈ ಬಿಟ್ಟು ಕೃಷಿ ಮುಂದುವರೆಸಲು ಅನುಕೂಲ ಮಾಡಿಕೊಳ್ಳಬೇಕು ಎಂದು ಅರ್ಜಿ ಬರೆದಿದ್ದರು.
49
+ ಆಗ ಡಿ-ನೋಟಿಫಿಕೇಷನ್‌ ಮಾಡಲು ವಿ.ಬಾಲಸುಬ್ರಹಣ್ಯ ನೇತೃತ್ವದಲ್ಲಿ ಒಂದು ಸಮಿತಿ ಇರುತ್ತದೆ. ನಗರಾಭಿವೃದ್ಧಿ ಇಲಾಖೆ ಉಪಕಾರ್ಯದರ್ಶಿ ವಿ.ಗೋವಿಂದರಾಜು, ಕಾನೂನು ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಕೆ.ಎಂ.ತಮಯ್ಯ ಸದಸ್ಯರಾಗಿದ್ದರು.
50
+ 24-07-1977 ಸಭೆಯಲ್ಲಿ ಡಿ-ನೋಟಿಫಿಕೇಷನ್‌ ಪ್ರಕ್ರಿಯೆಯಿಂದ ಕೈ ಬಿಡಲು ಶಿಫಾರಸ್ಸು ಮಾಡಲಾಗಿದೆ. ಸದರಿ ಭೂಮಿಯಲ್ಲಿ ನೀರು ಸರಬರಾಜು ಹಾಗೂ ಒಳ ಚರಂಡಿ ಯೋಜನೆ ನಡೆಯದಿರುವುದರಿಂದ ಭೂಸ್ವಾಧೀನದಿಂದ ಕೈ ಬಿಡಬಹುದು ಎಂದು ಚರ್ಚಿಸಿ ಸಮಿತಿಯವರು ಮುಡಾ ಶಿಫಾರಸ್ಸು ಆಧರಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಭೂ ಸ್ವಾದೀನಕ್ಕೆ ಈವರೆಗೂ ಯಾವುದೇ ಪರಿಹಾರ ಪಾವತಿಸಿಲ್ಲ ಎಂದರು.
51
+ ಅಂದಿನ ಸಭೆಯಲ್ಲಿ ಮೈಸೂರಿನ ಎರಡು ಜಾಗ ಸೇರಿ, ರಾಜ್ಯದ 19 ಕಡೆಗಳ ಭೂಮಿಯನ್ನು ಭೂ ಸ್ವಾದೀನದಿಂದ ಕೈ ಬಿಡಲಾಗಿದೆ 1998ರಲ್ಲಿ ಡಿ-ನೋಟಿಫಿಕೇಷನ್‌ ಆಗಿದೆ ಎಂದು ವಿವರಿಸಿದರು.
52
+ ಮಲ್ಲಿಕಾರ್ಜುನ ಸ್ವಾಮಿ ಹೆಸರಿಗೆ ದೇವರಾಜ ಅವರಿಂದ 25-08-2004ರಲ್ಲಿ ಖರೀದಿ ಕರಾರು ಆಗಿದೆ. ದೇವರಾಜು ಅವರ ಪತ್ನಿ ಮತ್ತು ಮಕ್ಕಳು ಖರೀದಿ ಕರಾರಿಗೆ ಸಹಿ ಹಾಕಿದ್ದಾರೆ. 15-07-2005ರಲ್ಲಿ ಮಲ್ಲಿಕಾರ್ಜುನಸ್ವಾಮಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳಲು ಪರಿವರ್ತನೆ ಮಾಡಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ವಿವರಿಸಿದ್ದಾರೆ.ನಮ್ಮ ಮಾವ���ಿಗೆ ಮೂರು ಜನ ಮಕ್ಕಳು. ಮಲ್ಲಿಕಾರ್ಜುನ ಸ್ವಾಮಿ, ಪಾರ್ವತಿ, ಜಗದೀಶ್‌. ಅವರು ಭಾಗವಾದಾಗ 6-10-2010ರಲ್ಲಿ ದಾನಪತ್ರದ ಮೂಲಕ ನನ್ನ ಪತ್ನಿ ಅವರಿಗೆ 3 ಎಕರೆ 16 ಗುಂಟೆ ಭೂಮಿ ನೀಡುತ್ತಾರೆ.  2013-14ರಲ್ಲಿ ಮುಡಾ ಅಕ್ರಮವಾಗಿ ಸ್ವಾಧೀನ ತೆಗೆದುಕೊಂಡು ನಿವೇಶನ ಹಾಗೂ ಪಾರ್ಕ್‌ ಮಾಡಿ ಹಂಚಿದ್ದಾರೆ ಎಂದು ಗೊತ್ತಾಯಿತು. 2014ರಲ್ಲಿ ಅರ್ಜಿ ನೀಡಿ, ನಮ್ಮ ಜಮೀನನ್ನು ಅಕ್ರಮವಾಗಿ ಬಳಸಿಕೊಂಡಿದ್ದೀರಾ ? ನಮ್ಮಗೆ ಪರ್ಯಾಯ ಜಮೀನು ಕೊಡಿ ಎಂದು ಮನವಿ ಸಲ್ಲಿಸಲಾಯಿತು ಎಂದು ವಿವರಿಸಿದರು.
53
+ ಜೀವನದಲ್ಲೇ ಕಾಣದಷ್ಟು ಕೆಟ್ಟ ರಾಜಕಾರಣ
54
+ ಬಿಜೆಪಿ- ಜೆಡಿಎಸ್‌‍ ಪಕ್ಷಗಳು ನನ್ನ ಜೀವನದಲ್ಲೇ ಕಾಣದಷ್ಟು ಕೆಟ್ಟ ರಾಜಕಾರಣವನ್ನು ಮಾಡುತ್ತಿದ್ದು, ವೈಯಕ್ತಿಕವಾಗಿ ತೇಜೋವಧೆ ಮಾಡುವ ಹುನ್ನಾರ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.ಕರ್ನಾಟಕದಲ್ಲಿ ಕುಸಿದು ಹೋಗುತ್ತಿರುವ ಜನಪ್ರಿಯತೆಯನ್ನು ಮರುಸ್ಥಾಪಿಸಿಕೊಳ್ಳಲು ಸಾವಿರ ಸಲ ಸುಳ್ಳು ಹೇಳಿದರೆ ನಿಜವಾಗುತ್ತದೆ ಎಂಬ ಹಿಟ್ಲರ್‌ ವಾದವನ್ನು ಅನುಸರಿಸುತ್ತಿದ್ದಾರೆ. ಪೇಶ್ವೆವಾದಿ ಮನಸ್ಥಿತಿಯನ್ನು ಪ್ರತಿಪಾದಿಸುತ್ತಿದ್ದಾರೆ.
55
+ ಈ ಹಿಂದೆ ದೇವರಾಜ ಅರಸು ವಿಚಾರದಲ್ಲೂ ಇದೇ ರೀತಿ ಅಪಪ್ರಚಾರ ನಡೆಸಲಾಯಿತು. ಧರ್ಮಸಿಂಗ್‌ ಬಗ್ಗೆಯೂ ಸಂಚುಗಳು ನಡೆದವು. ಕಲ್ಯಾಣದ ಬಿಜ್ಜಳನನ್ನು ಇದೇ ಮನಸ್ಥಿತಿಯ ಜನರೇ ಕೊಲೆ ಮಾಡಿದರು. ಗಮನಿತ ವರ್ಗಗಳ ಜನಸಮುದಾಯದಿಂದ ಬಂದವರು ರಾಜಕಾರಣ ಮಾಡಬಾರದು ಎಂಬ ನಿಲುವು ಇವರದು. ಮುಡಾ ವಿಚಾರದಲ್ಲಿ ಗುಲಗಂಜಿಯಷ್ಟೂ ನ್ಯೂನತೆ ಇಲ್ಲದೇ ಇದ್ದರೂ ದೊಡ್ಡದಾಗಿ ಚರ್ಚೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
56
+ ಸಂಚಿನ ಹಿಂದೆ ನಿಂತು ಆಟ ಆಡುತ್ತಿರುವ ಸೈದ್ಧಾಂತಿಕ ಗುರುಗಳಿಗೆ ಕರ್ನಾಟಕದ ಜನರ ಮನಸ್ಥಿತಿ ಅರ್ಥವಾಗುತ್ತಿದೆ. ಜನ ಅವರಿಂದ ದೂರವಾಗುತ್ತಿದ್ದಾರೆ. ಅದಕ್ಕಾಗಿ ಕಾಗಕ್ಕ, ಗೂಬಕ್ಕನ ಕಥೆ ಕಟ್ಟಿ ಜನರನ್ನು ನಂಬಿಸಲು ಹೊರಟಿದ್ದಾರೆ. ಬಿಜೆಪಿ-ಜೆಡಿಎಸ್‌‍ನವರ ಮೆದುಳು ಖಾಲಿಯಾಗಿದೆ. ಭೌತಿಕವಾಗಿ ದಿವಾಳಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಕಿಡಿಕಾರಿದ್ದಾರೆ.
57
+ ತನಿಖೆಗೆ ನ್ಯಾಯಾಂಗ ಆಯೋಗ
58
+ ಮುಡಾದಲ್ಲಿ ನಿವೇಶನ ಹಂಚಿಕೆ ಸೇರಿದಂತೆ ಇತರ ವಿಚಾರಗಳಲ್ಲಿ ತನಿಖೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್‌.ದೇಸಾಯಿ ಅವರ ಏಕಸದಸ್ಯ ಆಯೋಗವನ್ನು ರಚಿಸಲಾಗಿದ್ದು, ತನಿಖೆಯ ಚೌಕಟ್ಟಿನ ಮಾರ್ಗಸೂಚಿಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
59
+ 2006 ರಿಂದ 2024 ರ ನಡುವೆ ಮುಡಾ ಎಷ್ಟು ಬಡಾವಣೆಗಳನ್ನು ರಚಿಸಿದೆ. ಡಿ ನೋಟಿಫಿಕೇಷನ್‌ ಆಗಿರುವ ಎಷ್ಟು ಭೂಮಿಯನ್ನು ನಿವೇಶನಗಳನ್ನಾಗಿ ಮಾಡಲು ಬಳಕೆ ಮಾಡಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಪಾಲಿಸಿರುವ ನಿಯಮಗಳ್ಯಾವುವು, ಉಲ್ಲಂಘಿಸಿರುವ ನಿಯಮಗಳ್ಯಾವುವು ಎಂಬುದನ್ನು ಪರಿಶೀಲನೆ ನಡೆಸಿ ವರದಿ ನೀಡಲು 6 ���ಿಂಗಳ ಕಾಲಾವಕಾಶ ಇದೆ ಎಂದು ಹೇಳಿದರು.
eesanje/url_46_63_5.txt ADDED
@@ -0,0 +1,5 @@
 
 
 
 
 
 
1
+ ರಾಜ್ಯದ ಹಲವೆಡೆ ಮತ್ತೆ ಭಾರೀ ಮಳೆ ಮುನ್ಸೂಚನೆ
2
+ ಬೆಂಗಳೂರು, ಜು.26-ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳು ನಿರಂತರ ಮಳೆಯಿಂದ ಅತಿವೃಷ್ಟಿ ಹಾಗೂ ಪ್ರವಾಹಕ್ಕೆ ಸಿಲುಕಿ ನಲುಗಿದ್ದು, ಮತ್ತೆ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ.
3
+ ಉತ್ತರ ಒಳನಾಡಿನಲ್ಲಿ ಇಂದು ಸಹ ಅತಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಲಾಗಿದೆ. ಈಗಾಗಲೇ ನಿರಂತರ ಮಳೆಗೆ ಜಲಾಶಯಗಳು ಭರ್ತಿಯಾಗಿದ್ದು, ಭಾರೀ ಪ್ರಮಾಣದಲ್ಲಿ ಜಲಾಶಯಗಳಿಂದ ನೀರನ್ನು ನದಿಗಳಿಗೆ ಬಿಡಲಾಗುತ್ತಿದೆ. ಹೀಗಾಗಿ ಅಪಾಯದ ಮಟ್ಟ ಮೀರಿ ನದಿಗಳು ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
4
+ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮತ್ತು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನಾಳೆ ಬಲವಾದ ತಂಪಾದ ಮೈಲೈ ಗಾಳಿಯೊಂದಿಗೆ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಉಲ್ಲೇಖಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಹವಾಮಾನ ಇಲಾಖೆಯು ಆರೆಂಟ್‌ ಅಲರ್ಟ್‌ ಘೋಷಿಸಿದೆ.
5
+ ಜುಲೈ 28ರಿಂದ 30ರವರೆಗೆ ದಕ್ಷಿಣ ಒಳನಾಡಿನಲ್ಲೂ ಅಧಿಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉಳಿದಂತೆ ಸಾಧಾರಣ ಮಳೆ ಮುಂದುವರೆಯಲಿದೆ. ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ್ಗೆ ಬಲವಾದ ಮೈಲೈ ಗಾಳಿ ಬೀಸಲಿದೆ. ಕೆಲವೊಮೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಲಾಗಿದೆ.
eesanje/url_46_63_6.txt ADDED
@@ -0,0 +1,5 @@
 
 
 
 
 
 
1
+ ಪ್ರಧಾನಿ ಮೋದಿ ಭೇಟಿಯಾದ ಗೌಡರು, ಕುಮಾರಸ್ವಾಮಿ
2
+ ನವದೆಹಲಿ, ಜು.26-ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು, ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಭೇಟಿಯಾಗಿ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.
3
+ ಪ್ರಧಾನಿ ಅವರ ಅಧಿಕೃತ ನಿವಾಸ ಲೋಕಕಲ್ಯಾಣ ಮಾರ್ಗದಲ್ಲಿ ಗೌಡರು ಮತ್ತು ಕುಮಾರಸ್ವಾಮಿ ಅವರು ನಿನ್ನೆ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಯಾವ ವಿಚಾರದ ಈ ಮೂವರು ನಾಯಕರು ಚರ್ಚೆ ಮಾಡಿದ್ದಾರೆ ಎಂಬ ವಿವರ ಲಭ್ಯವಾಗಿಲ್ಲ.ಭೇಟಿಯಾಗಿರುವ ಈ ವಿಚಾರವನ್ನು ಪ್ರಧಾನಿ ಎಕ್‌್ಸನಲ್ಲಿ ಪೋಟೋ ಸಹಿತ ಹಂಚಿಕೊಂಡಿದ್ದಾರೆ.
4
+ ದೇವೇಗೌಡರನ್ನು ಭೇಟಿಯಾಗುವುದು ಗೌರವದ ವಿಚಾರವಾಗಿದೆ. ವಿವಿಧ ವಿಷಯಗಳ ಬಗ್ಗೆ ಮಾಜಿ ಪ್ರಧಾನಿಗಳಿಗಿರುವ ಜಾಣೆ, ದೃಷ್ಟಿ ಕೋನವು ಪ್ರಬಲವಾದ ಮೌಲ್ಯಯುತವಾಗಿದೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ.
5
+ ಭೇಟಿಯ ಸಂದರ್ಭದಲ್ಲಿ ಗೌಡರು ಕಲಾಕೃತಿಯನ್ನು ಉಡುಗೊರೆಯಾಗಿ ನೀಡಿದ್ದು, ಅದು ನನ್ನ ಇತ್ತೀಚಿನ ಕನ್ಯಾಕುಮಾರಿ ಭೇಟಿಯನ್ನು ನೆನಪಿಸುತ್ತದೆ. ಅವರ ಭೇಟಿ ಹಾಗೂ ನೀಡಿರುವ ಉಡುಗೊರೆಗೆ ಧನ್ಯವಾದಗಳನ್ನು ಮೋದಿ ಸಲ್ಲಿಸಿದ್ದಾರೆ.
eesanje/url_46_63_7.txt ADDED
@@ -0,0 +1,9 @@
 
 
 
 
 
 
 
 
 
 
1
+ ಮುಂದುವರೆದ ಮುಂಗಾರು ಮಳೆ ಅಬ್ಬರ, ಜಲಾಶಯಗಳು ಭರ್ತಿ, ನದಿಪಾತ್ರದ ಗ್ರಾಮಗಳು ಜಲಾವೃತ
2
+ ಬೆಂಗಳೂರು,ಜು.26– ಮುಂಗಾರು ಮಳೆ ಅಬ್ಬರ ಮುಂದುವರೆದಿದೆ. ನಿರಂತರ ಮಳೆಯಿಂದ ಅನೇಕ ಕಡೆ ಮರಗಳು ಧರೆಗುರುಳಿ ರಸ್ತೆ ಸಂಚಾರಕ್ಕೆ ಅಡಚಣೆಯುಂಟಾಗಿದೆ.ವಿದ್ಯುತ್‌ ಕಂಬಗಳು ಮುರಿದು ಬಿದ್ದು ಹಲವೆಡೆ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಜಲಾಶಯಗಳು ಭರ್ತಿಯಾಗಿ ಭಾರಿ ಪ್ರಮಾಣದ ನೀರನ್ನು ಹೊರಬಿಟ್ಟಿರುವುದರಿಂದ ನದಿಪಾತ್ರದ ಹಲವು ಗ್ರಾಮಗಳು ಜಲಾವೃತಗೊಂಡಿವೆ.
3
+ ಮಂಡ್ಯದಲ್ಲಿ ಕಾವೇರಿಯ ಅಬ್ಬರ ಹೆಚ್ಚಾಗಿದೆ. ಕೆಆರ್‌ಎಸ್‌‍ನಿಂದ ಭಾರಿ ಪ್ರಮಾಣದಲ್ಲಿ ನೀರನ್ನು ಹೊರಬಿಡುತ್ತಿರುವುದರಿಂದ ನದಿಪಾತ್ರದಲ್ಲಿರುವ ಧಾರ್ಮಿಕ ಕ್ಷೇತ್ರಗಳು ಮುಳುಗಡೆಯಾಗಿವೆ.ನಿಮಿಷಾಂಬ ದೇಗುಲದ ಸ್ನಾನಘಟ್ಟ ಸಂಪೂರ್ಣ ಜಲಾವೃತವಾಗಿದೆ. ಕಾವೇರಿ ನದಿ ಬಳಿ ಬ್ಯಾರಿಕೇಡ್‌ ಅಳವಡಿಸಿ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಭಕ್ತರು ನದಿಗೆ ತೆರಳದಂತೆ ಸೂಚನೆ ನೀಡಲಾಗಿದೆ.
4
+ ರಂಗನತಿಟ್ಟು ಪಕ್ಷಿಧಾಮ ಜಲಾವೃತಗೊಂಡಿದ್ದು, ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಕಾವೇರಿಯ ಬೋರ್ಗರೆತಕ್ಕೆ ಪಕ್ಷಿ ಸಂಕುಲನ ನಲುಗಿ ಹೋಗಿದೆ. ಬೋಟಿಂಗ್‌ ಪಾಯಿಂಟ್‌ ಅನ್ನು ಸ್ಥಗಿತಗೊಳಿಸಲಾಗಿದೆ.ಉತ್ತರ ಕರ್ನಾಟಕದ ಬೆಳಗಾವಿಯಲ್ಲೂ ಮಳೆಯ ಆರ್ಭಟ ಮುಂದುವರೆದಿದೆ. ಬೆಳಗಾವಿ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯ ರೌದ್ರನರ್ತನ ಮುಂದುವರೆದಿದೆ. ಭಾರಿ ಪ್ರಮಾಣದಲ್ಲಿ ಜಲಾಶಯಗಳಿಂದ ನೀರನ್ನು ಹೊರಬಿಡುತ್ತಿರುವುದರಿಂದ ನದಿಪಾತ್ರದ ಹಲವು ಗ್ರಾಮಗಳಲ್ಲಿ ಮುಳುಗಡೆ ಭೀತಿ ಎದುರಾಗಿದೆ.
5
+ ಮುನ್ನೆಚ್ಚರಿಕೆ ಕ್ರಮವಾಗಿ ಹಲವರನ್ನು ಸ್ಥಳಾಂತರ ಮಾಡಲಾಗಿದೆ. ಬೆಳಗಾವಿ, ಖಾನಾಪುರ ಮುಂತಾದೆಡೆ ಮಳೆ ಧಾರಕಾರವಾಗಿ ಸುರಿಯುತ್ತಿರುವುದರ ಜೊತೆಗೆ ಮಹಾರಾಷ್ಟ್ರದಿಂದ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಹೊಲ-ಗದ್ದೆಗಳು ಜಲಾವೃತಗೊಂಡು ಪ್ರವಾಹದ ಭೀತಿ ಎದುರಾಗಿದೆ.
6
+ ದೂಪದಾಳ, ಮಾರ್ಕಂಡಯ್ಯ, ಬಳ್ಳಾರಿ ನಾಲದಿಂದ ಘಟಪ್ರಭಾ ನದಿಗೆ 60 ಸಾವಿರ ಕ್ಯೂಸೆಕ್‌್ಸ ನೀರನ್ನು ಹೊರಬಿಡಲಾಗುತ್ತಿದೆ. ಆಲಮಟ್ಟಿಯಿಂದ ಕೃಷ್ಣಾ ನದಿಗೆ 2,500 ಲಕ್ಷ ಕ್ಯೂಸೆಕ್‌್ಸ ನೀರನ್ನು ಹೊರಬಿಡಲಾಗುತ್ತಿದೆ. ನಾರಾಯಣಪುರ ಜಲಾಶಯದಿಂದಲೂ ಕೂಡ ಭಾರಿ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದ್ದು, ಕೃಷ್ಣ, ತುಂಗಭದ್ರಾ ತೀರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.
7
+ ಮಲೆನಾಡು ಭಾಗದ ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಧಾರಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.ಉತ್ತರಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೂಡ ಮಳೆ ನಿರಂತರವಾಗಿ ಸುರಿಯುತ್ತಿದೆ. ಹಲವೆಡೆ ಗುಡ್ಡ ಕುಸಿದಿದೆ. ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡು ಕಡಲ ಕೊರೆತ ಉಂಟಾಗಿದೆ.
8
+ ಹಾಸನ ಜಿಲ್ಲೆಯಲ್ಲಿ ಸತತ ಹ��್ತು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹೇಮಾವತಿ ಉಪನದಿಗಳಾದ ಐಗೂರು, ಎಡಕೆರೆ, ಪಾಲಳ್ಳಿ ಹೊಳೆಗಳಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿಯತೊಡಗಿದೆ.
9
+ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತುಂಗ, ಭದ್ರ, ಘಟಪ್ರಭಾ, ಮಲಪ್ರಭಾ, ಕಾವೇರಿ, ನೇತ್ರಾವತಿ, ಅಘನಾಶಿನಿ ಸೇರಿದಂತೆ ಬಹುತೇಕ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹದ ಭೀತಿ ಎದುರಾಗಿದ್ದು, ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ.
eesanje/url_46_63_8.txt ADDED
@@ -0,0 +1,6 @@
 
 
 
 
 
 
 
1
+ ಮುಡಾ ಹಗರಣದ ಸಿಬಿಐ ತನಿಖೆಗೆ ಆಗ್ರಹಿಸಿ ಸಂಸತ್‌ ಭವನದ ಬಿಜೆಪಿ -ಜೆಡಿಎಸ್‌‍ ಸಂಸದರ ಪ್ರತಿಭಟನೆ
2
+ ನವದೆಹಲಿ,ಜು.26-ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಅಕ್ರಮ ನಿವೇಶನ ಹಂಚಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿ -ಜೆಡಿಎಸ್‌‍ನ ಸಂಸದರು ಸಂಸತ್‌ ಭವನದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
3
+ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮಾಯಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಬಿ.ವೈ.ರಾಘವೇಂದ್ರ, ಮಲ್ಲೇಶ್‌ ಬಾಬು, ಜಗದೀಶ್‌ ಶೆಟ್ಟರ್‌, ಜಗ್ಗೇಶ್‌ ಸೇರಿದಂತೆ ಲೋಕಸಭಾ ಸದಸ್ಯರು ಹಾಗೂ ರಾಜ್ಯಸಭಾ ಸದಸ್ಯರು ಜಂಟಿಯಾಗಿ ಪ್ರತಿಭಟನೆ ನಡೆಸಿದರು.
4
+ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬ ನೇರವಾಗಿ ಶಾಮೀಲಾಗಿದ್ದು, ನೈತಿಕ ಹೊಣೆ ಹೊತ್ತು ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇದು ನಾಲ್ಕು ಸಾವಿರ ಕೋಟಿ ಹಗರಣವಾಗಿದೆ. ಕಾಂಗ್ರೆಸ್‌‍ ಭ್ರಷ್ಟಾಚಾರದಲ್ಲಿ ಶಾಮೀಲಾಗಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.
5
+ ಕೈಯಲ್ಲಿ ಫಲಕಗಳನ್ನಿಡಿದಿದ್ದ ಸಂಸದರು ಸಿದ್ದರಾಮಯ್ಯ ಕುಟುಂಬದವರು ಕಾನೂನು ಬಾಹಿರವಾಗಿ ನಿವೇಶನ ಪಡೆದುಕೊಂಡಿದ್ದಾರೆ. ತಪ್ಪಿತಸ್ಥ ಸ್ಥಾನದಲ್ಲಿರುವ ಅವರು ಅಧಿಕಾರದಲ್ಲಿ ಮುಂದುವರೆಯಬಾರದು. ತಕ್ಷಣವೇ ರಾಜ್ಯ ಸರ್ಕಾರ ಸಿಬಿಐಗೆ ಪ್ರಕರಣವನ್ನು ಹಸ್ತಾಂತರ ಮಾಡಬೇಕೆಂದು ಒತ್ತಾಯಿಸಿದರು.
6
+ ರಾಜ್ಯದಲ್ಲಿ ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದ ನಂತರ ಭ್ರಷ್ಟಾಚಾರ ತಾಂಡವವಾಡುತ್ತಿದೆ. ವಾಲೀಕಿ ಸೇರಿದಂತೆ ಪ್ರತಿಯೊಂದರಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಸ್ವತಃ ಮುಖ್ಯಮಂತ್ರಿಗಳ ಮೇಲೆ ಆರೋಪ ಇರುವುದರಿಂದ ನೈತಿಕವಾಗಿ ಮತ್ತು ರಾಜಕೀಯವಾಗಿ ಅಧಿಕಾರದಲ್ಲಿ ಮುಂದುವರೆಯಬಾರದೆಂದು ಎಂದು ಕಿಡಿಕಾರಿದರು.
eesanje/url_46_63_9.txt ADDED
@@ -0,0 +1,6 @@
 
 
 
 
 
 
 
1
+ ರಕ್ಷಣಾ ಸಚಿವ ರಾಜನಾಥ ಸಿಂಗ್‌ರನ್ನು ಭೇಟಿಯಾದ ಜಗದೀಶ್‌ ಶೆಟ್ಟರ್
2
+ ಬೆಳಗಾವಿ,ಜು.25-ದಂಡು ಮಂಡಳಿ ವ್ಯಾಪ್ತಿಯ ಎಲ್ಲ ನಾಗರಿಕ ಕ್ಷೇತ್ರವನ್ನು / ಜಮೀನನ್ನು ರಕ್ಷಣಾ ಸಚಿವಾಲಯದ ನಿರ್ದೇಶನಗಳಡಿ, ಬೆಳಗಾವಿ ಮಹಾನಗರ ಪಾಲಿಕೆಗೆ ಹಸ್ತಾಂತರವಾಗುವ ನಿಟ್ಟಿನಲ್ಲಿ ಪ್ರಸ್ತಾವನೆ ತಯಾರಿಸುವ ಬಗ್ಗೆ ಸೂಚನೆ ನೀಡಬೇಕೆಂದು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ ಸಿಂಗ್‌ ಅವರಿಗೆ ಸಂಸದ ಜಗದೀಶ್‌ ಶೆಟ್ಟರ್‌ ಮನವಿ ಮಾಡಿದ್ದಾರೆ.
3
+ ನವದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿ ಈ ಕುರಿತು ಮಾತುಕತೆ ನಡೆಸಿರುವ ಅವರು, ಬೆಳಗಾವಿ ದಂಡು ಮಂಡಳಿ ಇದರ ವ್ಯಾಪ್ತಿಯ ನೋಟಿೈಡ್‌ ಸಿವಿಲ್‌ ಏರೀಯಾ ಮಾತ್ರ ಅಧಿಕಾರಿಗಳು ಗುರುತಿಸಿ ಉಳಿದ ಸಿವಿಲ್‌ ಏರಿಯಾಗಳನ್ನು ಮಹಾನಗರ ಪಾಲಿಕೆಗೆ ಹಸ್ತಾಂರಿಸುವ ಬಗ್ಗೆ ಕರಡು ಪ್ರಸ್ತಾವನೆಯಲ್ಲಿ ಪ್ರಸ್ತಾಪ ಮಾಡಿರಲಿಲ್ಲ.
4
+ ಕೇವಲ ಬಜಾರ ಪ್ರದೇಶಗಳನ್ನು ಮಾತ್ರ ಪರಿಗಣಿಸಿ ಬಂಗಲೋ ಪ್ರದೇಶ ಮಾಡಿರಿಲಿಲ್ಲ. ಈ ಕುರಿತು ಇದೇ ಜು. 6 ರಂದು ಜರುಗಿದ ದಂಡು ಮಂಡಳಿ ಸಭೆಯಲ್ಲಿ ಖುದ್ದಾಗಿ ಹಾಜರಿದ್ದು ಗಮನಕ್ಕೂ ತಂದರು ಅಧಿಕಾರಿಗಳು ಸ್ಪಂದಿಸಿರಲಿಲ್ಲ. ಅಲ್ಲದೆ ಸಾರ್ವಜನಿಕ ವಲಯದಲ್ಲಿ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.
5
+ ಈ ಹಿನ್ನಲೆಯಲ್ಲಿ ನವ-ದೆಹಲಿಯಲ್ಲಿ ಸಂಸದ ಜಗದೀಶ ಶೆಟ್ಟರ್‌ರವರು ರಕ್ಷಣಾ ಸಚಿವ ರಾಜನಾಥ ಸಿಂಗ್‌ರನ್ನು ಬೇಟಿ ಮಾಡಿ ಸುಧೀೕರ್ಘವಾಗಿ ಈ ಕುರಿತು ಚರ್ಚಿಸಿ, ರಕ್ಷಣಾ ಸಚಿವಾಲಯದ ಆದೇಶಗಳಂತೆ ಬೆಳಗಾವಿ ದಂಡು ಮಂಡಳಿ ವ್ಯಾಪ್ತಿಯ ಎಲ್ಲ ಸಿವಿಲ್‌ ಪ್ರದೇಶಗಳನ್ನು ಗುರುತಿಸಿ, ಕರಡು ಪ್ರಸ್ತಾವನೆಯನ್ನು ರೂಪಿಸಿ ಕರ್ನಾಟಕ ರಾಜ್ಯ ಸರಕಾರಕ್ಕೆ ಸಲ್ಲಿಸುವಂತೆ ವಿನಂತಿದರು.
6
+ ರಕ್ಷಣಾ ಸಚಿವಾಲಯದ ನಿರ್ದೇಶಗಳಡಿ ಯಲ್ಲಿಯೇ ಪ್ರಸ್ತಾಪಿತ ಕರಡು ಪ್ರಸ್ತಾವನೆ ತಯಾರಿಸುವ ಬಗ್ಗೆ ಸೂಚನೆಯನ್ನು ಬೆಳಗಾವಿ ದಂಡು ಮಂಡಳಿ ಅಧಿಕಾರಿಗಳಿಗೆ ನೀಡುವುದಾಗಿ ರಾಜನಾಥ ಸಿಂಗ್‌ ಭರವಸೆ ನೀಡಿದ್ದಾರೆ ಎಂದು ಜಗದೀಶ ಶೆಟ್ಟರ್‌ ತಿಳಿಸಿದ್ದಾರೆ.
eesanje/url_46_64_1.txt ADDED
@@ -0,0 +1,8 @@
 
 
 
 
 
 
 
 
 
1
+ ಕರ್ನಾಟಕ ವೈದ್ಯಕೀಯ ನೋಂದಣಿ ವಿಧೇಯಕ ಅಂಗೀಕಾರ
2
+ ಬೆಂಗಳೂರು,ಜು.25-ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳ ಮೇಲೆ ಹಿಂಸಾಚಾರ, ಅಪಮಾನ ಮಾಡುವುದನ್ನು ನಿಷೇಧಿಸುವ ಮತ್ತು ಇಂತಹ ಕೃತ್ಯಗಳಿಗೆ ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸುವ ಹಾಗೂ ವೈದ್ಯಕೀಯ ವೃತ್ತಿ ಪಾಲನೆ ಮಾಡುವವರಿಗೆ ಕಡ್ಡಾಯ ನೋಂದಣಿ ಮಾಡಿಸಬೇಕಾದ ಮಸೂದೆಯನ್ನು ವಿಧಾನಸಭೆಯಲ್ಲಿಂದು ಅಂಗೀಕರಿಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌, ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು ತಿದ್ದುಪಡಿ ವಿಧೇಯಕವನ್ನು ಕೆಳಮನೆಯಲ್ಲಿ ಮಂಡಿಸಿದರು.
3
+ ಪ್ರಸ್ತಾವಿತ ಮಸೂದೆಯಲ್ಲಿ ವೈದ್ಯರು ವೃತ್ತಿಯಲ್ಲಿ ಕಾರ್ಯ ನಿರ್ವಹಿಸಬೇಕಾದರೆ, ವೈದ್ಯಕೀಯ ಪರಿಷತ್ತಿನಲ್ಲಿ ಕಡ್ಡಾಯವಾಗಿ ನೋಂದಣಿಯಾಗಿರಬೇಕು. ಒಂದು ವೇಳೆ ನೋಂದಣಿಯಾಗದೆ ವೃತ್ತಿ ಅಭ್ಯಾಸ ಮಾಡುತ್ತಿದ್ದರೆ, ಅಂತಹವರ ವಿರುದ್ಧ ಪರಿಷತ್‌ ಕ್ರಮ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
4
+ ವೈದ್ಯಕೀಯ ಪರಿಷತ್ತಿಗೆ ರಿಜಿಸ್ಟರ್‌ ಹಾಗೂ ಉಪ ರಿಜಿಸ್ಟರ್‌ಗಳನ್ನು ನೇಮಕ ಮಾಡುವ ವ್ಯವಸ್ಥೆಯಲ್ಲೂ ಬದಲಾವಣೆ ತರಲಾಗಿದೆ. ಪರಿಷತ್ತಿಗೆ ಸಭೆ ನಡೆಸುವ ವೇಳೆ, ಸ್ಥಳ ಹಾಗೂ ಕಾರ್ಯವಿಧಾನಗಳ ಬಗ್ಗೆಯೂ ವಿವರಿಸಲಾಗಿದೆ. ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಉಪಾಧ್ಯಕ್ಷರು, ಒಂದು ವೇಳೆ ಇಬ್ಬರು ಲಭ್ಯವಿಲ್ಲದ ಸಂದರ್ಭದಲ್ಲಿ ಸದಸ್ಯರು ಸಭೆಯ ಅಧ್ಯಕ್ಷತೆ ವಹಿಸಬಹುದು ಎಂದು ತಿಳಿಸಲಾಗಿದೆ. ಪರಿಷತ್ತಿನ ರಿಜಿಸ್ಟ್ರಾರ್‌ ಅವರು ವೈದ್ಯಕೀಯ ವೃತ್ತಿಗರ ಪಟ್ಟಿಯನ್ನು ಪ್ರತಿದಿನ ಅಧಿಕೃತ ಜಾಲತಾಣದಲ್ಲಿ ನಿರ್ವಹಿಸಬೇಕು ಮತ್ತು ರಾಷ್ಟ್ರೀಯ ಆಯೋಗಕ್ಕೆ ತಿಳಿಸಬೇಕು ಎಂದು ಮಸೂದೆಯಲ್ಲಿ ಸೂಚಿಸಲಾಗಿದೆ.
5
+ ನಕಲಿಯಾಗಿ ವೈದ್ಯಕೀಯ ವೃತ್ತಿ ಮಾಡುವವರಿಗೆ 10 ಸಾವಿರ ರೂಪಾಯಿಂದ ಒಂದು ಲಕ್ಷ ರೂಪಾಯಿಗಳವರೆಗೂ ಜುಲಾನೆ ವಿಧಿಸುವ ಅವಕಾಶ ಕಲ್ಪಿಸಲಾಗಿದೆ.ವೈದ್ಯಕೀಯ ಸೇವಾ ಸಿಬ್ಬಂದಿಯನ್ನು ಹಿಂಸಿಸುವುದು, ಅಪಮಾನ ಮಾಡುವುದು, ವೈದ್ಯೋಪಚಾರ ಸಂಸ್ಥೆಗಳ ಆಸ್ತಿಗೆ ಹಾನಿ ಮಾಡುವುದಕ್ಕೆ ಈ ಮೊದಲು ನಿಗದಿಯಾಗಿದ್ದ ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸಲಾಗಿದೆ.
6
+ ಪ್ರಸ್ತಾವಿತ ಮಸೂದೆಯಲ್ಲಿ ಮೂರು ವರ್ಷಗಳಿಗಿಂತ ಕಡಿಮೆ ಇಲ್ಲದಂತೆ ಏಳು ವರ್ಷಗಳವರೆಗೂ ವಿಸ್ತರಿಸಬಹುದಾದ ಕಾರಾಗೃಹ ವಾಸ ಹಾಗೂ ಇಪ್ಪತ್ತೈದು ಸಾವಿರ ರೂಪಾಯಿಗಳಿಗಿಂತ ಕಡಿಮೆ ಇಲ್ಲದಂತೆ 2 ಲಕ್ಷಗಳವರೆಗೂ ಜುಲಾನೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಅಪರಾಧಗಳಿಗೆ ಪ್ರಚೋದನೆ ನೀಡುವವರೆಗೂ ಇದೇ ತೆರನಾದ ಶಿಕ್ಷೆಯನ್ನು ವಿಧಿಸಲು ಮಸೂದೆಯಲ್ಲಿ ಅವಕಾಶವಿದೆ.
7
+ ಇನ್ನು ಮುಂದೆ ವೈದ್ಯಕೀಯ ಸೇವಾ ಸಿಬ್ಬಂದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ, ಆಡಿಯೋ-ವಿಡಿಯೋಗಳಲ್ಲಿ, ಆಸ್ಪತ್ರೆಗಳಲ್ಲಾಗಲಿ ೇಟೋ, ವಿಡಿಯೋ ತೆಗೆಯುವ ಮೂಲಕ ಅಗೌರವಿಸುವ, ದೌರ್ಜನ್ಯ ಎಸಗುವ ಕೃತ್ಯಗಳನ್ನು ನಡೆಸಿದರೆ ಅ���ು ದಂಡನಾರ್ಹವಾಗಲಿವೆ.ಪ್ರಮುಖವಾದ ಈ ಮಸೂದೆ ಕುರಿತು ವಿಧಾನಸಭೆಯಲ್ಲಿ ಯಾವುದೇ ಚರ್ಚೆಗಳಾಗಲಿಲ್ಲ. ಮುಡಾ ಹಗರಣವನ್ನು ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್‌‍ನ ಶಾಸಕರು ಸದನದ ಬಾವಿಯಲ್ಲಿ ಇಳಿದು ಧರಣಿ ಸತ್ಯಾಗ್ರಹ ನಡೆಸುತ್ತಿದ್ದರು.
8
+ ಈ ವೇಳೆ ಮಸೂದೆ ಮಂಡನೆ ಆಯಿತು. ಸಭಾಧ್ಯಕ್ಷ ಯು.ಟಿ.ಖಾದರ್‌ ಜನಪರವಾದ ಮಸೂದೆಗಳು ಮಂಡನೆಯಾಗಿವೆ. ಅವುಗಳ ಮೇಲೆ ಚರ್ಚೆ ಮಾಡಿ ಎಂದು ಮನವಿ ಮಾಡಿದರು. ವಿರೋಧ ಪಕ್ಷದ ನಾಯಕರು ತಮ ಪಟ್ಟನ್ನು ಮುಂದುವರೆದಿದ್ದರಿಂದಾಗಿ ಮಸೂದೆ ಚರ್ಚೆ ಇಲ್ಲದೆ ಅಂಗೀಕಾರಗೊಂಡಿತು.
eesanje/url_46_64_10.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಹಲವು ಜಿಲ್ಲೆಗಳಲ್ಲಿ ಮುಂದುವರೆದ ಮಳೆ ಅಬ್ಬರ, ಶಾಲಾ-ಕಾಲೇಜುಗಳಿಗೆ ರಜೆ, ಜನಜೀವನ ಅಸ್ತವ್ಯಸ್ಥ
2
+ ಬೆಂಗಳೂರು,ಜು.25-ಮುಂಗಾರು ಮಳೆ ಅಬ್ಬರ ಮುಂದುವರೆದಿದೆ. ಮಳೆಯ ಆರ್ಭಟಕ್ಕೆ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ಥವಾಗಿದೆ.ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರಿ ಮಳೆಯಿಂದ ಕೃಷ್ಣಾ, ದೂದ್‌ಗಂಗಾ, ವೇದ್‌ಗಂಗಾ, ತುಂಗಾ, ಭದ್ರಾ, ಘಟಪ್ರಭಾ, ಮಲಪ್ರಭಾ, ವರದ, ಅಘನಾಶಿನಿ, ನೇತ್ರಾವತಿ, ಕಾವೇರಿ, ಕಪಿಲ ಸೇರಿದಂತೆ ಬಹುತೇಕ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.
3
+ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ಮುಂಜಾಗ್ರತಾ ಕ್ರಮವಾಗಿ ನದಿ ತೀರದಲ್ಲಿ ಎನ್‌ಡಿಆರ್‌ ತಂಡಗಳನ್ನು ನಿಯೋಜಿಸಲಾಗಿದೆ.ಈಗಾಗಲೇ ಮಳೆ ಅನಾಹುತಕ್ಕೆ ಮೂವರು ಮೃತಪಟ್ಟಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಕಬ್ಬಿನಗದ್ದೆಯ ವಿನಯ್‌ ಮಂಜುನಾಥ್‌ ಗಾಡಿಗ (25) ಮರ ಬಿದ್ದು ಮೃತಪಟ್ಟಿದ್ದಾರೆ. ಮಂಡಗೋಡ ತಾಲ್ಲೂಕಿನ ಮಳಗಿ ಧರ್ಮ ಜಲಾಶಯದಲ್ಲಿ ಈಜಲು ಹೋಗಿದ್ದ ಮುಡಸಾಲಿ ಗ್ರಾಮದ ಶ್ರೀಕಾಂತ ಹರಿಜನ್‌ (20) ನೀರುಪಾಲಾಗಿದ್ದಾರೆ.
4
+ ಮುದ್ದೆಬಿಹಾಳ್‌ ತಾಲ್ಲೂಕಿನ ನಾರಾಯಣಪುರ ಎಡದಂಡೆ ಕಾಲುವೆಯಲ್ಲಿ ಕಾಲು ಜಾರಿ ಬಿದ್ದಿದ್ದ ಕುರಿಗಾಹಿ ಮಂಜುನಾಥ ಮಾದರ (28) ಮೃತದೇಹ ಯಾದಗಿರಿ ಜಿಲ್ಲೆ ಹೊರಟ್ಟಿ ಗ್ರಾಮದ ಕಾಲುವೆಯಲ್ಲಿ ಪತ್ತೆಯಾಗಿದೆ.ಬೆಳಗಾವಿ ಜಿಲ್ಲೆಯಲ್ಲಿ 22, ಮಹಾಲಿಂಗಪುರ ತಾಲ್ಲೂಕಿನಲ್ಲಿ 3 ಸೇತುವೆಗಳು ಮುಳುಗಡೆಯಾಗಿ ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ನದಿ ತೀರದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ.
5
+ ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ, ಮಾರ್ಕಂಡಯ್ಯ ನದಿಗಳ ನೀರು ಜನವಸತಿ ಪ್ರದೇಶಗಳಿಗೆ ನುಗ್ಗಿದೆ. ಮೂಡಲಗಿ ತಾಲ್ಲೂಕಿನ ಘಟಪ್ರಭಾ ನದಿ ಪಾತ್ರದ ಗ್ರಾಮಗಳ ಜನರಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ.ಬೆಳಗಾವಿ ಜಿಲ್ಲೆಯಲ್ಲಿ 427 ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪ್ರವಾಹ ಪರಿಸ್ಥಿತಿ ಎದುರಿಸಲು ಬೋಟ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ. ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 2.02 ಲಕ್ಷ ಕ್ಯೂಸೆಕ್‌ ನೀರು ಹರಿಬಿಟ್ಟಿದ್ದರಿಂದ ಗಡ್ಡೆಗೊಳ್ಳಿ ಬಸವೇಶ್ವರ ದೇವಸ್ಥಾನ ಮುಳುಗಡೆಯಾಗಿದೆ.
6
+ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡ ಮಳೆ ಆರ್ಭಟ ಮುಂದುವರೆದಿದ್ದು, ಶಿರಸಿ, ಮತ್ತಿಗಟ್ಟಿ ಮಾರ್ಗವಾಗಿ ಆಂಕೋಲಾಕ್ಕೆ ತೆರಳುವ ಮಾರ್ಗದಲ್ಲಿ ಭೂಕುಸಿತ ಉಂಟಾಗಿ ಸಂಚಾರ ಸ್ಥಗಿತವಾಗಿದೆ. ಹಲವೆಡೆ ಮನೆಗಳ ಮೇಲೆ ಮರ ಬಿದ್ದು ಹಾನಿಯಾಗಿದೆ.
7
+ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು ಭಾಗದಲ್ಲಿ ಮಳೆಯ ಅಬ್ಬರ ಕಡಿಮೆಯಾದರೂ ನದಿಗಳ ಅಬ್ಬರ ತಗ್ಗಿಲ್ಲ. ಜಲಾಶಯಗಳಿಂದ ನದಿಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹೊರಬಿಡುತ್ತಿರುವುದರಿಂದ ನದಿಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕೆಂದು ಸ���ಚನೆ ನೀಡಲಾಗಿದೆ.
8
+ ಮಳೆಯ ಆರ್ಭಟದಿಂದ ಉತ್ತರಕನ್ನಡ, ಬೆಳಗಾವಿ, ದಕ್ಷಿಣ ಕನ್ನಡ ಮುಂತಾದೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಳಗಾವಿಯ ನಿಪ್ಪಾಣಿ ತಾಲ್ಲೂಕಿನ ಕಾರದಗ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
9
+ ದೂದ್‌ಗಂಗಾ ನದಿ ನೀರು ಗ್ರಾಮಕ್ಕೆ ನುಗ್ಗಿ ಇಲ್ಲಿನ ಹತ್ತಾರು ಮನೆಗಳು ಜಲಾವೃತಗೊಂಡಿವೆ. ಬಾಗಲಕೋಟೆಯಲ್ಲಿ ಭಾರಿ ಮಳೆಯಿಂದ ಡವಳೇಶ್ವರ-ಬೆಳಗಾವಿ ಸಂಪರ್ಕ ಸೇತುವೆ ಕಡಿತಗೊಂಡಿದೆ. ಯಾದಗಿರಿ ವೀರಾಂಜನೇಯ, ಕಂಗಾಲೇಶ್ವರ ದೇವಾಲಯಗಳು ಜಲಾವೃತಗೊಂಡಿವೆ.
10
+ ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಭಾರಿ ಮಳೆಯಿಂದ ಜನ ಹೈರಾಣಾಗಿ ಹೋಗಿದ್ದಾರೆ. ಆಂಕೋಲಾ ತಾಲ್ಲೂಕಿನ ಶಿರೂರು ಬಳಿ ಗುಡ್ಡ ಕುಸಿತ ಉಂಟಾಗಿದ್ದು, ಮಣ್ಣಿನಡಿ ಸಿಲುಕಿರುವವರನ್ನು ಹೊರತೆಗೆಯುವ ಕಾರ್ಯಾಚರಣೆ ಹತ್ತನೇ ದಿನಕ್ಕೆ ಕಾಲಿಟ್ಟಿದೆ.
eesanje/url_46_64_11.txt ADDED
@@ -0,0 +1,5 @@
 
 
 
 
 
 
1
+ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ : ಹಾಡು, ನೃತ್ಯ, ಭಜನೆ ಮಾಡಿ ರಾತ್ರಿಕಳೆದ ಶಾಸಕರು
2
+ ಬೆಂಗಳೂರು,ಜು.25-ಮೈಸೂರಿನ ಮೂಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದ ಬಿಜೆಪಿ-ಜೆಡಿಎಸ್‌ ಶಾಸಕರು ಕಳೆದ ರಾತ್ರಿ ಹಾಡು, ಭಜನೆ, ನೃತ್ಯ ಮಾಡಿದ್ದಾರೆ. ನಿನ್ನೆ ಸಂಜೆ ಆರಂಭಿಸಿದ ಧರಣಿಯನ್ನು ರಾತ್ರಿ ಕೂಡಾ ಮುಂದುವರೆಸಿದ್ದರು. ರಾತ್ರಿ ವೇಳೆ ಶಾಸಕರು ಹಾಡು, ನೃತ್ಯ, ಭಜನೆ ಮೂಲಕ ಸಮಯ ಕಳೆದಿದ್ದಾರೆ.
3
+ ವಿರೋಧಪಕ್ಷದ ಮೊಗಸಾಲೆಯಲ್ಲಿ ತಡರಾತ್ರಿ ಸುಮಾರು 1 ಗಂಟೆವರೆಗೂ ಹಾಡು ಹೇಳಿ ರಂಜಿಸುವುದು, ಭಜನೆ ಮಾಡುವುದು ಹಾಗೂ ಶಾಸಕ ಪ್ರಭು ಚೌವ್ಹಾಣ್‌ ಅವರು ಹಾಡು ಮತ್ತು ನೃತ್ಯ ಮಾಡುವ ಮೂಲಕ ಶಾಸಕರನ್ನು ರಂಜಿಸಿದ್ದಾರೆ.
4
+ ಹೊಸದಾಗಿ ಆಯ್ಕೆಯಾದ ಶಾಸಕರು ಉತ್ಸಾಹದಿಂದ ಮನರಂಜನೆಯಲ್ಲಿ ಪಾಲ್ಗೊಂಡಿದ್ದಾರೆ. ಗುರ್ಮೇ ಸುರೇಶ್‌ ಶೆಟ್ಟಿ ಯವರು ಹಾಡು ಹೇಳುವ ಮೂಲಕ ರಂಜಿಸಿದ್ದಾರೆ. ಇದೇ ರೀತಿ ಶಾಸಕರು ಒಬ್ಬರಾದ ಮೇಲೆ ಒಬ್ಬರು ಹಾಡು ಹೇಳುವುದು, ಭಜನೆ ಮಾಡುವುದು, ನೃತ್ಯ ಮಾಡುವ ಮೂಲಕ ರಂಜಿಸಿದ್ದಾರೆ. ಭಜನೆ, ಹಾಡು ಹೇಳುವುದರಿಂದ ನಿದ್ರೆ ಮಾಡಲು ಯತ್ನಿಸಿದ ಶಾಸಕರಿಗೂ ಅಡಚಣೆಯಾಗಿದೆ. ಕೆಲ ಶಾಸಕರು ನಿದ್ರೆ ಮಾಡಲಾಗಲಿಲ್ಲ ಎಂದು ಹೇಳಿದ್ದಾರೆ.
5
+ ರಾತ್ರಿ ಊಟ, ಬೆಳಗಿನ ತಿಂಡಿಯನ್ನು ಮೊಗಸಾಲೆಯಲ್ಲಿ ಸೇವಿಸಿದ್ದಾರೆ. ಬೆಳಿಗ್ಗೆ ವಿಧಾನಸೌಧದ ಆವರಣದಲ್ಲಿ ವಾಕಿಂಗ್‌ ಮಾಡಿದ್ದಾರೆ. ಬಳಿಕ ಕೆಲವರು ಶಾಸಕರ ಭವನಕ್ಕೆ ಹೋಗಿ ತಮ್ಮ ತಮ್ಮ ಕೊಠಡಿಗಳಲ್ಲಿ ನಿತ್ಯಕರ್ಮಗಳನ್ನು ಮುಗಿಸಿ ಮರಳಿ ಧರಣಿಗೆ ಸೇರಿಕೊಂಡಿದ್ದಾರೆ.ಚರ್ಚೆಗೆ ಅವಕಾಶ ನೀಡುವವರೆಗೂ ಧರಣಿ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದು ಧರಣಿಯನ್ನ ಮುಂದುವರೆಸಿದ್ದಾರೆ.
eesanje/url_46_64_12.txt ADDED
@@ -0,0 +1,6 @@
 
 
 
 
 
 
 
1
+ ಪುತ್ರನಿಗೆ ಟಿಕೆಟ್ ಕೊಡಿಸಲು ಇಬ್ರಾಹಿಂ ಲಾಬಿ.!
2
+ ಬೆಂಗಳೂರು,ಜು.24- ಶಿಗ್ಗಾವಿ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ತಮ್ಮ ಪುತ್ರನಿಗೆ ಸ್ಪರ್ಧಿಸಲು ಟಿಕೆಟ್ ನೀಡಬೇಕು ಎಂದು ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ನಾಯಕರ ಬಳಿ ಲಾಬಿ ನಡೆಸುತ್ತಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಅವರ ಆಪ್ತರಾಗಿದ್ದ ಸಿ.ಎಂ.ಇಬ್ರಾಹಿಂ, ವಿಧಾನಪರಿಷತ್ನಲ್ಲಿ ವಿರೋಧಪಕ್ಷದ ನಾಯಕನ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಅಸಮಾಧಾನಗೊಂಡಿದ್ದರು. ಪಕ್ಷ ಹಾಗೂ ನಾಯಕರ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡಿ ಮುಜುಗರ ಉಂಟು ಮಾಡಿದ್ದರು.
3
+ ಕೊನೆಗೆ ಕಾಂಗ್ರೆಸ್ನ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ಗೆ ಸೇರ್ಪಡೆಯಾದರು. ಅಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದರು. ಜೆಡಿಎಸ್ ನಾಯಕರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಬಳಿಕ ಅಸಮಾಧಾನಗೊಂಡು ಜೆಡಿಎಸ್ನ ನಾಯಕರನ್ನು ಟೀಕಿಸಲಾರಂಭಿಸಿದರು. ಅಲ್ಲಿಂದಲೂ ಹೊರಗುಳಿದ ಸಿ.ಎಂ.ಇಬ್ರಾಹಿಂ ರಾಜಕೀಯವಾಗಿ ಅತಂತ್ರ ಸ್ಥಿತಿಯಲ್ಲಿದ್ದಾರೆ. ಮರಳಿ ಕಾಂಗ್ರೆಸ್ಗೆ ಬರಲಾಗದೇ, ಜೆಡಿಎಸ್ನಲ್ಲೂ ಯಾವುದೇ ಸ್ಥಾನಮಾನ ಪಡೆಯಲಾಗದೇ ತ್ರಿಶಂಕು ಸ್ಥಿತಿಯಲ್ಲಿದ್ದರು.
4
+ ತಮ್ಮ ಪುತ್ರ ಫಯಾಜ್ ಇತ್ತೀಚೆಗೆ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ಅವರಿಗೆ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಡಬೇಕು ಎಂದು ಸಿ.ಎಂ.ಇಬ್ರಾಹಿಂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಒತ್ತಡ ಹೇರಿದ್ದಾರೆ.
5
+ ಇತ್ತೀಚೆಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಆಯ್ಕೆಯಾದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮಾಯಿ ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ನಡೆಯಬೇಕಿದೆ. ಈ ಹಿಂದೆ 2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಯಾಸಿರ್ ಅಹಮದ್ಖಾನ್ ಪಠಾಣ್ ಸ್ಪರ್ಧೆ ಮಾಡಿದ್ದರು. ಅದಕ್ಕೂ ಹಿಂದಿನ 2018, 2013 ಮತ್ತು 2008ರ ಚುನಾವಣೆಯಲ್ಲಿ ಸಯ್ಯದ್ ಅಜೀರ್ ಖಾದ್ರಿ ಸ್ಪರ್ಧಿಸಿ ಸೋಲು ಕಂಡಿದ್ದರು.
6
+ ಕಾಂಗ್ರೆಸ್ ಶಿಗ್ಗಾವಿ ಕ್ಷೇತ್ರವನ್ನು ಅಲ್ಪಸಂಖ್ಯಾತರ ವರ್ಗಕ್ಕೆ ಮೀಸಲಿಡುತ್ತಾ ಬಂದಿದೆ. ಈ ಬಾರಿ ಯಾಸಿರ್ ಅಹಮದ್ಖಾನ್ ಪಠಾಣ್ ಮರು ಸ್ಪರ್ಧೆಗೆ ಪ್ರಯತ್ನ ಮಾಡುತ್ತಿದ್ದಾರೆ. ಈ ನಡುವೆ ಸಿ.ಎಂ.ಇಬ್ರಾಹಿಂ ತಮ್ಮ ಪುತ್ರನಿಗೆ ಅವಕಾಶ ಕೊಡಿಸಲು ಪ್ರಯತ್ನ ನಡೆಸುತ್ತಿದ್ದಾರೆ.ಇದರ ಜೊತೆಗೆ ಕೇಂದ್ರ ಸಚಿವ ಕುಮಾರಸ್ವಾಮಿಯವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ, ತುಕಾರಾಂ ಸಂಸದರಾದ ಬಳಿಕ ತೆರವಾಗಿರುವ ಸಂಡೂರು ಕ್ಷೇತ್ರಕ್ಕೂ ಉಪಚುನಾವಣೆ ನಡೆಯಬೇಕಿದೆ. ಈ ಕ್ಷೇತ್ರಗಳಲ್ಲಿ ಅವಕಾಶ ಗಿಟ್ಟಿಸಲು ���ಾಂಗ್ರೆಸ್ನ ಘಟಾನುಘಟಿ ನಾಯಕರು ತೆರೆಮರೆಯ ಲಾಬಿ ನಡೆಸುತ್ತಿದ್ದಾರೆ. ಈ ಕ್ಷಣದವರೆಗೂ ತಮ್ಮನ್ನು ಜೆಡಿಎಸ್ನ ನಾಯಕರು ಎಂದು ಹೇಳಿಕೊಳ್ಳುತ್ತಿರುವ ಸಿ.ಎಂ.ಇಬ್ರಾಹಿಂ ತಮ್ಮ ಪುತ್ರನಿಗೆ ಕಾಂಗ್ರೆಸ್ನಲ್ಲಿ ಟಿಕೆಟ್ ಕೊಡಿಸಲು ಪ್ರಯತ್ನ ನಡೆಸುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.
eesanje/url_46_64_2.txt ADDED
@@ -0,0 +1,6 @@
 
 
 
 
 
 
 
1
+ ಗ್ರೇಟರ್ ಬೆಂಗಳೂರು ಚರ್ಚೆಗೆ ಸದನ ಸಮಿತಿ ರಚನೆ : ಡಿಸಿಎಂ ಡಿಕೆಶಿ
2
+ ಬೆಂಗಳೂರು,ಜು.25-ಬೆಂಗಳೂರಿಗೆ ಹೊಸ ರೂಪ ನೀಡುವ 2024 ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕದ ಬಗ್ಗೆ ಸಮಗ್ರವಾಗಿ ಚರ್ಚಿಸಲು ಸದನ ಸಮಿತಿ ರಚನೆ ಮಾಡುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿಧಾನಸಭೆಗೆ ತಿಳಿಸಿದರು.
3
+ ಶಾಸನ ರಚನಾ ಕಲಾಪದಲ್ಲಿ ವಿಧೇಯಕವನ್ನು ಪರ್ಯಾಲೋಚನೆಗಾಗಿ ಮಂಡಿಸಿದ ಉಪಮುಖ್ಯಮಂತ್ರಿ ಬೆಂಗಳೂರಿಗೆ ಹೊಸ ರೂಪ ನೀಡುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಇದಾಗಿದೆ. ಬೆಂಗಳೂರಿನ ಜನಸಂಖ್ಯೆ 1 ಕೋಟಿ 40 ಲಕ್ಷದಷ್ಟಿದೆ. ದೊಡ್ಡ ಸಮಸ್ಯೆಗಳಿವೆ. ಆಡಳಿತದಲ್ಲಿ ಸುಧಾರಣೆ ತರಬೇಕು. ನಾಗರಿಕರಿಗೆ ಹೆಚ್ಚು ಸೌಲಭ್ಯ ಕಲ್ಪಿಸಬೇಕು.
4
+ ಆಡಳಿತ ನಿಯಂತ್ರಣ ನೀಡಬೇಕು, ಆರ್ಥಿಕ ಶಕ್ತಿ ತುಂಬಬೇಕು. ಇದು ಮಹತ್ವದ ವಿಧೇಯಕವಾಗಿದ್ದು, ಒಪ್ಪಿಗೆ ನೀಡಬೇಕೆಂದು ಕೋರಿದರು.ಈ ಸಂದರ್ಭದಲ್ಲಿ ಮಾತನಾಡಿದ ವಿರೋಧಪಕ್ಷದ ನಾಯಕ ಆರ್.ಅಶೋಕ್, ವಿಧೇಯಕವನ್ನು ಬಾಕಿ ಉಳಿಸಬೇಕು. ಇದರ ಬಗ್ಗೆ ಸಮಗ್ರ ಚರ್ಚೆಯಾಗಬೇಕಾಗಿದ್ದು, ವಿಧಾನಸಭೆ ಮತ್ತು ವಿಧಾನಪರಿಷತ್ನ ಸದಸ್ಯರನ್ನೊಳಗೊಂಡ ಸದನ ಸಮಿತಿ ರಚಿಸಬೇಕೆಂದು ಸಲಹೆ ಮಾಡಿದರು.
5
+ ಇದಕ್ಕೆ ಪೂರಕವಾಗಿ ಮಾತನಾಡಿದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್, ಇದೊಂದು ಐತಿಹಾಸಿಕವಾದ ವಿಧೇಯಕ. ಈ ವಿಧೇಯಕದ ಬಗ್ಗೆ ಸಮಗ್ರ ಚರ್ಚೆಯಾಗಬೇಕು. ಬೆಂಗಳೂರು ಪ್ರತಿನಿಧಿಸುವ ವಿಧಾನಸಭೆ, ವಿಧಾನಪರಿಷತ್ ಸದಸ್ಯರನ್ನೊಳಗೊಂಡ ಸದನ ಸಮಿತಿ ರಚನೆ ಮಾಡಬೇಕು ಎಂದು ಒತ್ತಾಯಿಸಿದರು.
6
+ ಮತ್ತೆ ಮಾತನಾಡಿದ ಉಪಮುಖ್ಯಮಂತ್ರಿ, ವಿಧೇಯಕದ ಬಗ್ಗೆ ವಿಸ್ತೃತವಾದ ಚರ್ಚೆಯಾಗಬೇಕೆಂಬ ಆಲೋಚನೆಯಿದೆ. ಬೆಂಗಳೂರಿನ ಶಾಸಕರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ಕೃಷ್ಣಭೈರೇಗೌಡ ಸೇರಿದಂತೆ ಹಲವರು ಸಾಕಷ್ಟು ಚರ್ಚೆಯಾಗಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ ವ್ಯಾಪಕವಾದ ಚರ್ಚೆಯಾಗಲಿ. ನಾವು ಹರಿಬರಿ ಮಾಡುವುದಿಲ್ಲ. ಹೀಗಾಗಿ ಸದನ ಸಮಿತಿ ರಚನೆ ಮಾಡಲು ಒಪ್ಪಿಗೆ ಇದೆ ಎಂದು ಹೇಳಿದರು.ಆಗ ಸಭಾಧ್ಯಕ್ಷ ಯು.ಟಿ.ಖಾದರ್ರವರು ಈ ವಿಧೇಯಕವನ್ನು ಬಾಕಿ ಉಳಿಸಿಕೊಳ್ಳೋಣ ಎಂದು ಹೇಳಿ ಮುಂದಿನ ಕಲಾಪವನ್ನು ಕೈಗೆತ್ತಿಕೊಂಡರು.
eesanje/url_46_64_3.txt ADDED
@@ -0,0 +1,7 @@
 
 
 
 
 
 
 
 
1
+ ಕೇಂದ್ರದ ಲೋಕಸಭೆ-ವಿಧಾನಸಭೆ ಕ್ಷೇತ್ರಗಳ ಪುನರ್‌ ವಿಂಗಡಣೆ ಪ್ರಸ್ತಾವನೆ ವಿರೋಧಿ ನಿರ್ಣಯ ಮಂಡನೆ
2
+ ಬೆಂಗಳೂರು,ಜು.25-ಹೊಸ ಜನಗಣತಿಯ ಆಧಾರದ ಮೇಲೆ ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರಗಳ ಪುನರ್‌ ವಿಂಗಡಣೆ ಮಾಡುವ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ವಿರೋಧಿಸುವ ನಿರ್ಣಯವನ್ನು ರಾಜ್ಯ ಸರ್ಕಾರ ಮಂಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷಗಳ ಸದಸ್ಯರ ಗದ್ದಲದ ನಡುವೆಯೇ ಹೊಸ ಜನಗಣತಿ ಆಧಾರದ ಮೇಲೆ ಕ್ಷೇತ್ರ ಪುನರ್‌ ವಿಂಗಡನೆ ಪ್ರಕ್ರಿಯೆಯನ್ನು ನಡೆಸಬಾರದೆಂಬ ನಿರ್ಣಯವನ್ನು ಮಂಡಿಸಿದರು.
3
+ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌‍ ಸದಸ್ಯರ ನಡುವೆಯೇ ಸಭಾಪತಿ ಬಸವರಾಜ ಹೊರಟ್ಟಿಯವರು ನಿರ್ಣಯವನ್ನು ಅಂಗೀಕರಿಸಲಾಗಿದೆ ಎಂದು ಘೋಷಿಸಿದರು. ಕರ್ನಾಟಕ ವಿಧಾನ ಸಭೆಯು, 2026ರಲ್ಲಿನ ಅಥವಾ ಅದರ ನಂತರ ನಡೆಸುವ ಹೊಸ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಪುನರ್‌ವಿಂಗಡಣಾ ಪ್ರಕ್ರಿಯೆಯನ್ನು ನಡೆಸಬಾರದೆಂದು ಜನಸಂಖ್ಯೆಯನ್ನು ಆಧರಿಸಿ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಸಂದರ್ಭದಲ್ಲಿ, ಪ್ರತೀ ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಮತ್ತು ಪ್ರತಿ ರಾಜ್ಯದ ವಿಧಾನ ಸಭೆಗೆ ನಿಗದಿಪಡಿಸಬೇಕಾದ ಸ್ಥಾನಗಳ ಒಟ್ಟು ಸಂಖ್ಯೆಯನ್ನು 1971ರ ಜನಗಣತಿಯನ್ನಾಧರಿಸಿ ನಿರ್ಧರಿಸಬೇಕೆಂದು ಕೇಂದ್ರ ಸರ್ಕಾರವನ್ನು ಈ ಸದನವು ಒತ್ತಾಯಿಸುತ್ತದೆ ಎಂದು ಹೇಳಿದರು.
4
+ ಭಾರತವು ವಿಶ್ವದ ಅತಿದೊಡ್ಡ ಒಕ್ಕೂಟ ಪ್ರಜಾಪುಭುತ್ವವಾಗಿದೆ. ಭಾರತ ಸಂವಿಧಾನದ ಭಾಗ XVಯಲ್ಲಿ ಪ್ರತಿಪಾದಿಸಿರುವ ಮುಕ್ತ ಮತ್ತು ನ್ಯಾಯಸಮತ ಚುನಾವಣೆಯ ತತ್ವವು ಈ ಪ್ರಜಾಪ್ರಭುತ್ವದ ಆತವಾಗಿದೆ. ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವವು ಭಾರತದ ಪ್ರಜಾಸತ್ತಾತಕ ಮತ್ತು ಒಕ್ಕೂಟ ವ್ಯವಸ್ಥೆಗೆ ಅಪಾಯವನ್ನುಂಟು ಮಾಡುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
5
+ ಬೇರೆ ಬೇರೆ ರಾಜ್ಯಗಳ ವಿಧಾನ ಸಭೆಗಳು ಅವುಗಳದ್ದೇ ಅಧಿಕಾರ ಅವಧಿಗಳನ್ನು ಹೊಂದಿರುತ್ತವೆ, ಮತ್ತು ಏಕರೂಪ ಚುನಾವಣಾ ವೇಳಾಪಟ್ಟಿಯು ರಾಷ್ಟ್ರೀಯ ವಿಷಯಗಳ ಮೇಲೆ ಹೆಚ್ಚಾಗಿ ಗಮನಹರಿಸುವ ಮತ್ತು ಸ್ಥಳೀಯ ಕಾಳಜಿಗಳನ್ನು ನಿರ್ಲಕ್ಷಿಸುವ ಮೂಲಕ ರಾಜ್ಯಗಳ ಸ್ವಾಯತ್ತತೆಯನ್ನು ದುರ್ಬಲಗೊಳಿಸಬಹುದು ಎಂದು ಆರೋಪಿಸಿದರು.
6
+ ಸಾಕಷ್ಟು ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದು, ಚುನಾವಣಾ ಸಿಬ್ಬಂದಿಯನ್ನು ನಿರ್ವಹಿಸುವುದು. ಮತದಾರರ ಬೇಸರ, ಕಡಿಮೆಗೊಂಡ ಸರ್ಕಾರದ ಉತ್ತರದಾಯಿತ್ವ ಹಾಗೂ ಆರ್ಥಿಕ ಮತ್ತು ಸಾಮಾಜಿಕ ಅಡತಡೆಗಳು ಏಕಕಾಲಿಕ ಚುನಾವಣೆಗಳಿಗೆ ಸಂಬಂಧಿಸಿದ ಗುರುತರ ಗಂಡಾಂತರಗಳಾಗಿವೆ. ಹಾಗಾಗಿ ಭಾರತದ ಪ್ರಜಾಸತ್ತಾತಕ ಪ್ರಕ್ರಿಯೆಗಳು ಮತ್ತು ಒಕ್ಕೂಟ ಸಮಗ್ರತೆಯನ್ನು ರಕ್ಷಿಸಲು ಕಠೋರ ನೀತಿಯನ್ನು ಅನುಷ್ಠಾನಗೊಳಿಸಬಾರದೆಂದು ಕೇಂದ್ರ ಸರ್ಕಾರವನ್ನು ಈ ಸದನವು ಒತ್ತಾಯಿಸುತ್ತದೆ ಎಂದು ರಾಜ್ಯ ಸರ��ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.
7
+ ಮಾಜಿ ರಾಷ್ಟ್ರಪತಿ ರಾಮ್‌ ನಾಥ್‌ ಕೋವಿಂದ್‌ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಏಕಕಾಲದ ಚುನಾವಣೆಯ ಉನ್ನತ ಮಟ್ಟದ ಸಮಿತಿಯು ಒಂದು ರಾಷ್ಟ್ರ, ಒಂದು ಚುನಾವಣೆೞ ಕುರಿತು ತನ್ನ ವರದಿಯನ್ನು ಮಾರ್ಚ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿತ್ತು. 2024 ರ ಲೋಕಸಭಾ ಚುನಾವಣೆಯ ನಂತರ ಜನಗಣತಿ ಮತ್ತು ಡಿಲಿಮಿಟೇಶನ್‌ ಪ್ರಕ್ರಿಯೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಈ ಹಿಂದೆ ಹೇಳಿದ್ದರು.
eesanje/url_46_64_4.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಮುಡಾ ನಡೆದಿದೆ ಎನ್ನಲಾದ ಅಕ್ರಮದಲ್ಲಿ ನನ್ನ ಪಾತ್ರ ಏನೂ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
2
+ ಬೆಂಗಳೂರು,ಜು.25– ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿದೆ ಎನ್ನಲಾದ ನಿವೇಶನ ಅಕ್ರಮದಲ್ಲಿ ನನ್ನ ಪಾತ್ರವೇ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಪರಿಷತ್‌ನಲ್ಲಿ ಘಂಟಾಘೋಷವಾಗಿ ಹೇಳಿದ್ದಾರೆ. ಮುಡಾ ಅಕ್ರಮದ ಕುರಿತು ಚರ್ಚೆಗೆ ಅವಕಾಶ ನೀಡಬೇಕೆಂದು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್‌‍ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡಿದ ಸಿದ್ದರಾಮಯ್ಯನವರು, ಪ್ರತಿಪಕ್ಷದ ಸದಸ್ಯರು ಎತ್ತಿರುವ ವಿಷಯದಲ್ಲಿ ನನ್ನ ಪಾತ್ರವೇ ಇಲ್ಲ ಎಂದು ಪುನರುಚ್ಚರಿಸಿದರು.
3
+ ನಾವು ಕಾನೂನುಬದ್ಧವಾಗಿ ನಿವೇಶನ ಹಂಚಿಕೆ ಮಾಡುವಂತೆ ಮುಡಾದವರಿಗೆ ಅರ್ಜಿ ಕೊಟ್ಟಿದ್ದೆವು. ಶೇ. 50-50ರ ಅನುಪಾತದಲ್ಲಿ ಕಾನೂನಿನಡಿಯೇ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿತ್ತು. ನಿಯಮಾನುಸುರವಾಗಿ ನಿವೇಶನ ಹಂಚಿಕೆ ಮಾಡಿದ್ದಾರೆ. ಇದರಲ್ಲಿ ತಪ್ಪಿನ ಪ್ರಶ್ನೆ ಎಲ್ಲಿದೆ ಎಂದು ಪ್ರಶ್ನೆ ಮಾಡಿದರು.
4
+ ಮುಡಾದವರು ನಿಯಮಾನುಸಾರ ನಿವೇಶನ ಹಂಚಿಕೆ ಮಾಡುತ್ತಾರೆ. 38 ಚದರ ಅಡಿಯಲ್ಲಿ ಸ್ವತಃ ನಮದೇ ಭೂಮಿ ಹೋಗಿದೆ. ನಾನು 2014ರಲ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ ಈ ಅಕ್ರಮ ನಡೆದಿಲ್ಲ ಎಂದು ಹೇಳಿದ್ದೆ. ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
5
+ ನಾವು ಇಂತಹ ಕಡೆಯೇ ನಿರ್ಧಿಷ್ಟ ಸ್ಥಳದಲ್ಲಿ ನಿವೇಶನ ಕೊಡಿ ಎಂದು ಕೇಳಿದ್ದರೆ ಅದು ನಿಯಮ ಬಾಹಿರವಾಗುತ್ತಿತ್ತು. ಮುಡಾದವರೇ ನಿವೇಶನ ಹಂಚಿಕೆ ಮಾಡಿರುವಾಗ ನಾವೇನು ಮಧ್ಯಪ್ರವೇಶ ಮಾಡಿದ್ದೇವಾ? ಎಂದು ಪ್ರತಿಪಕ್ಷದ ಸದಸ್ಯರದ ವಿರುದ್ಧ ಹರಿಹಾಯ್ದರು.ನಿಮ ಉದ್ದೇಶ ಏನೆಂಬುದು ನಮಗೆ ಸ್ಪಷ್ಟವಾಗಿ ಗೊತ್ತಿದೆ. ನಾನು ಮುಖ್ಯಮಂತ್ರಿಯಾಗಿದ್ದ ಎಂದು ನಿಮಗೆ ಹೊಟ್ಟೆ ಉರಿ. 40 ವರ್ಷ ಸಾರ್ವಜನಿಕ ಜೀವನದಲ್ಲಿರುವ ನನ್ನ ಮೇಲೆ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
6
+ ನಾನು ಮುಖ್ಯಮಂತ್ರಿ ಸ್ಥಾನದಲ್ಲಿದ್ದೇನೆ ಎಂಬ ಕಾರಣಕ್ಕಾಗಿ ನಿಮಗೆ ಹೊಟ್ಟೆ ಉರಿ. ನನ್ನ ಮುಖಕ್ಕೆ ಮಸಿ ಬಳಿಯುವ ನಿಮ ಪ್ರಯತ್ನ ಈಡೇರುವುದಿಲ್ಲ ಎಂದು ಸಿಡಿಮಿಡಿಗೊಂಡರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ. ನಿಷ್ಪಕ್ಷಪಾತವಾಗಿ ತನಿಖೆ ವರದಿ ಬರಲಿದೆ ಎಂದರು.
7
+ ಮುಡಾ ಅಧ್ಯಕ್ಷರಾಗಿದ್ದ ರಾಜೀವ್‌ ಅವರೇ ನಿವೇಶನಗಳನ್ನು ಹಂಚಿಕೆ ಮಾಡಿದ್ದಾರೆ. ಬಿಜೆಪಿ ಕಾಲದಲ್ಲೇ ಇದು ನಡೆದಿರುವುದು. ಈಗ ನನ್ನ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದರಲ್ಲಿ ನೀವು ಯಶಸ್ವಿಯಾಗುವುದಿಲ್ಲ ಎಂದು ಹೇಳಿದರು.ಅಧಿವೇಶನದ ಕಲಾಪ ನಡೆಯಬಾರದೆಂಬುದು ಪ್ರತಿಪಕ್ಷಗಳ ಹುನ್ನಾರ.
8
+ ಉದ್ದೇಶಪೂರ್ವಕವಾಗಿ ಪದೇ ಪದೇ ಒಂದೇ ವಿಷಯವನ್ನು ಪ್ರಸ್ತಾಪಿಸುತ್ತಿದ್ದಾರೆ. ಈಗಾಗಲೇ ಸಭಾಪತಿಯವರು ನಿಮ ನಿಲುವಳಿ ಸೂಚನೆ ಪ್ರಸ್ತಾವನೆಯನ್ನು ತಿರಸ್ಕಾರಿಸಿದ್ದೇವೆ ಎಂದು ರೂಲಿಂಗ್‌ ಕೊಟ್ಟಿದ್ದಾರೆ. ಆದರೂ ಅದೇ ವಿಷಯವನ್ನು ಚರ್ಚೆಗೆ ಕೊಡಬೇಕೆಂದು ಪಟ್ಟು ಹಿಡಿಯುವುದು ಎಷ್ಟರ ಮಟ್ಟಿಗೆ ಸರಿ ಎಂದು ಗರಮಾದರು.
9
+ ಆಗ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ನೀವು ಈ ವಿಷಯವನ್ನು ವೈಯಕ್ತಿಕವಾಗಿ ತೆಗೆದುಕೊಂಡಿದ್ದೀರಿ. ನಿಮ ಮೇಲೆ ನಮಗೆ ಯಾವುದೇ ದ್ವೇಷವಿಲ್ಲ. ಮುಡಾದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ನಾವು ಚರ್ಚೆಗೆ ಕೇಳುತ್ತಿದ್ದೇವೆ. ಇದು ತಪ್ಪೇ ಎಂದು ಪ್ರಶ್ನೆ ಮಾಡಿದರು.
10
+ ಇದು ಸಾವಿರಾರು ಕೋಟಿಗಳ ವಿಷಯ. ಸ್ವತಃ ಮುಖ್ಯಮಂತ್ರಿಗಳ ಕುಟುಂಬದವರೇ ಶಾಮೀಲಾಗಿದ್ದಾರೆ ಎಂಬ ಆರೋಪವಿದೆ. ಇಂತಹ ಮಹತ್ವದ ವಿಷಯವನ್ನು ಚರ್ಚೆ ಮಾಡಲೇಬಾರದೆಂದರೆ ಹೇಗೆ ಎಂದು ಮರು ಪ್ರಶ್ನೆ ಹಾಕಿದರು.
11
+ ಈ ವೇಳೆ ಪ್ರತಿಪಕ್ಷಗಳ ಸದಸ್ಯರು ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಿದ್ದ ವೇಳೆ ಸಿಎಂ ಸಿದ್ದರಾಮಯ್ಯನವರ ಪರವಾಗಿ ಸಚಿವ ಜಮೀರ್‌ ಅಹಮದ್‌ ಖಾನ್‌ ಪರವಾಗಿ ನಿಂತರು.ಈ ಸಂದರ್ಭದಲ್ಲಿ ಬಿಜೆಪಿಯ ಸದಸ್ಯ ಸಿ.ಟಿ.ರವಿ ಅವರು, ಸಮಾಜವಾದಿ ಎನ್ನುತ್ತಾರೆ. ಮಜವಾದ ಮಾಡುತ್ತಾರೆ. ದಲಿತರ ಪರ ಎನ್ನುತ್ತಾರೆ. ಅವರ ಜಮೀನನ್ನೇ ಕಬಳಿಸುತ್ತಾರೆ. ದಲಿತರ ಅಭಿವೃದ್ಧಿ ಎನ್ನುತ್ತಾರೆ, ಅವರ ಬೆನ್ನಿಗೆ ಚೂರಿ ಹಾಕುತ್ತಾರೆ ಎಂದು ವಾಗ್ದಾಳಿ ನಡೆಸಿದರು.
12
+ 187 ಕೋಟಿ ಮಹರ್ಷಿ ವಾಲೀಕಿ ನಿಗಮದ ದುಡ್ಡು ತೆಲಂಗಾಣಕ್ಕೆ ಹೋಯ್ತು. ಹೇಳುವುದು ಸಮಾಜವಾದ, ಮಾಡುವುದು ಮಜಾವಾದ. ದಲಿತರ ಸೈಟ್‌ ತಿಂದಿರುವ ಸಿದ್ದರಾಮಯ್ಯನವರಿಗೆ ಧಿಕ್ಕಾರ ಎಂದು ತರಾಟೆಗೆ ತೆಗೆದುಕೊಂಡರು.
13
+ ಗದ್ದಲದ ನಡುವೆಯೇ ಸಚಿವರು ಕೆಲವು ಕಾಯ್ದೆಗಳನ್ನು ಮಂಡಿಸಲು ಮುಂದಾದಾಗ ಗೋವಿಂದ ಗೋವಿಂದ ಎಂದು ಹಾಡುಗಳ ಮೂಲಕ ಆಡಳಿತ ಪಕ್ಷವನ್ನು ವಿರೋಧ ಪಕ್ಷದ ಸದಸ್ಯರು ಕಿಚಾಯಿಸಿದರು. ಆಗ ಆಡಳಿತ ಪಕ್ಷದವರು ಯಡಿಯೂರಪ್ಪ, ಕುಮಾರಸ್ವಾಮಿ, ಜಗದೀಶ್‌ ಶೆಟ್ಟರ್‌ ಅವಧಿಯಲ್ಲಿ ನಡೆದಿರುವ ಅಕ್ರಮಗಳನ್ನು ಪ್ರಸ್ತಾಪಿಸಿ ತಿರುಗೇಟು ನೀಡಿದರು.
eesanje/url_46_64_5.txt ADDED
@@ -0,0 +1,7 @@
 
 
 
 
 
 
 
 
1
+ ಉಭಯ ಸದನಗಳಲ್ಲಿ ನೀಟ್‌ ಪರೀಕ್ಷೆ ರದ್ದುಪಡಿಸಿಸುವ ಮಹತ್ವದ ನಿರ್ಣಯ ಅಂಗೀಕಾರ
2
+ ಬೆಂಗಳೂರು,ಜು.25-ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗೆ ದೇಶಾದ್ಯಂತ ನಡೆಯುವ ರಾಷ್ಟ್ರೀಯ ಅರ್ಹತ ಪ್ರವೇಶ ಪರೀಕ್ಷೆ(ನೀಟ್‌)ಅನ್ನು ರದ್ದುಪಡಿಸಿ ಹಳೆಯ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ವ್ಯವಸ್ಥೆಯನ್ನೇ ಮುಂದುವರೆಸುವ ಮಹತ್ವದ ನಿರ್ಣಯವನ್ನು ಉಭಯ ಸದನಗಳಲ್ಲಿ ಮಂಡಿಸಿ, ಪ್ರತಿಪಕ್ಷಗಳ ವಿರೋಧದ ನಡುವೆಯೂ ಅಂಗೀಕರಿಸಲಾಯಿತು.
3
+ ವಿಧಾನಸಭೆಯಲ್ಲಿ ಸಚಿವ ಶರಣ ಪ್ರಕಾಶ ಪಾಟೀಲ್‌ ಬಿಜೆಪಿ ಸದಸ್ಯರ ಗದ್ದಲದ ನಡುವೆಯೇ ನಿರ್ಣಯವನ್ನು ಮಂಡಿಸಿ ಮಾತನಾಡಿ, ನೀಟ್‌ ಪರೀಕ್ಷಾ ವ್ಯವಸ್ಥೆಯು ಗ್ರಾಮೀಣ ಬಡಮಕ್ಕಳ ವೈದ್ಯಕೀಯ ಶಿಕ್ಷಣ ಅವಕಾಶಗಳ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಹಾಗೂ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ನಿರರ್ಥಕಗೊಳಿಸುತ್ತದೆ. ರಾಜ್ಯಸರ್ಕಾರದ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ರಾಜ್ಯಸರ್ಕಾರದ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ನೀಟ್‌ ಪರೀಕ್ಷೆಯನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿದರು.
4
+ ನೀಟ್‌ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಬೇಕು, ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯಸರ್ಕಾರ ನಡೆಸುವ ಸಾಮಾನ್ಯ ಪರೀಕ್ಷೆ ಸಿಇಟಿ ಅಂಕಗಳನ್ನು ಆಧರಿಸಿ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಾತಿ ನೀಡಬೇಕೆಂದು ಮತ್ತು ನೀಟ್‌ ಪರೀಕ್ಷೆಯಲ್ಲಿ ಆಗುತ್ತಿರುವ ಪುನರಾವರ್ತಿತ ಅಕ್ರಮಗಳನ್ನು ಪರಿಗಣಿಸಿ ರಾಷ್ಟ್ರೀಯ ಮಟ್ಟದಲ್ಲಿ ನೀಟ್‌ ಪರೀಕ್ಷೆಯನ್ನು ರದ್ದುಪಡಿಸುವುದು ಜೊತೆಗೆ ಕೇಂದ್ರ ಸರ್ಕಾರವು ರಾಷ್ಟ್ರೀಯ ವೈದ್ಯಕೀಯ ಅಧಿನಿಯಮ 2019 ರಲ್ಲಿ ಅಗತ್ಯ ತಿದ್ದುಪಡಿ ಮಾಡಬೇಕೆಂದು ಸದನ ಒತ್ತಾಯಿಸುತ್ತದೆ ಎಂಬ ನಿರ್ಣಯ ಮಂಡಿಸಿದರು.
5
+ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ನಿರ್ಣಯ ಸರ್ವಾನುಮತದಿಂದ ಅಂಗೀಕಾರಗೊಂಡಿದೆ ಎಂದು ಪ್ರಕಟಿಸಿದರು.ಅತ ಮೇಲನೆಯಲ್ಲಿ ಪ್ರತಿಪಕ್ಷಗಳ ಸದಸ್ಯರ ವಿರೋಧ ನಡುವೆಯೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು, ನೀಟ್‌ ಪರೀಕ್ಷೆಯನ್ನು ರದ್ದು ಕರ್ನಾಟಕ ಸರ್ಕಾರದ ವತಿಯಿಂದಲೇ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಪ್ರವೇಶಕ್ಕಾಗಿ ನಡೆಯುವ ಸಿಇಟಿಯನ್ನೇ ಮುಂದುವರಿಸುವ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
6
+ ಇತ್ತೀಚೆಗೆ ದೇಶಾದ್ಯಂತ ನಡೆದಿದ್ದ ನೀಟ್‌ ಪರೀಕ್ಷೆಯಲ್ಲಿ ಸಾಕಷ್ಟು ಲೋಪದೋಷಗಳು ಉಂಟಾಗಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನಲೆಯಲ್ಲಿ ನೀಟ್‌ನಿಂದ ವಿನಾಯ್ತಿ ನೀಡಿ ಕರ್ನಾಟಕ ಸರ್ಕಾರ ಪ್ರತಿ ವರ್ಷ ವೈದ್ಯಕೀಯ ಕಾಲೇಜುಗಳ ಪ್ರವೇಶಾತಿಗೆ ನಡೆಯುವ ಸಿಇಟಿಯನ್ನು ಮುಂದುವರೆಸಲು ಅನುವು ಮಾಡಿಕೊಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಯಿತು.
7
+ ನಿರ್ಣಯದ ಮೇಲೆ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್‌, ನೀಟ್‌ ಪರೀಕ್ಷಾ ವ್ಯವಸ್ಥೆಯು, ಗ್ರಾಮೀಣ ಬಡಮಕ್ಕಳ ವೈದ್ಯಕೀಯ ಶಿಕ್ಷಣಾವಕಾಶಗಳ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಈ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಬೇಕೆಂದು ಹಾಗೂ ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಅಂಕಗಳನ್ನಾಧರಿಸಿ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಾತಿ ನೀಡಬೇಕೆಂದು ಹೇಳಿದರು.ಗದ್ದಲದ ನಡುವೆಯೇ ನಿರ್ಣಯವನ್ನು ಅಂಗೀಕರಿಸಲಾಯಿತು.
eesanje/url_46_64_6.txt ADDED
@@ -0,0 +1,8 @@
 
 
 
 
 
 
 
 
 
1
+ ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರಕ್ಕೆ ಸಡ್ಡು ಹೊಡೆಯುವಂತಹ 3 ನಿರ್ಣಯಗಳ ಅಂಗೀಕಾರ
2
+ ಬೆಂಗಳೂರು,ಜು.25-ಕೇಂದ್ರ ಸರ್ಕಾರಕ್ಕೆ ಸಡ್ಡು ಹೊಡೆಯುವಂತಹ ಪ್ರಮುಖ ಮೂರು ನಿರ್ಣಯಗಳನ್ನು ವಿಧಾನಸಭೆಯಲ್ಲಿದ್ದು ಅಂಗೀಕರಿಸಲಾಗಿದೆ. ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್‌‍ ಸದಸ್ಯರ ಧರಣಿ, ಸತ್ಯಾಗ್ರಹದ ನಡುವೆಯೂ ರಾಜ್ಯ ಸರ್ಕಾರ, ಒಂದು ದೇಶ-ಒಂದು ಚುನಾವಣೆಯನ್ನು ವಿರೋಧಿಸುವ, ನೀಟ್‌ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಲು ಆಗ್ರಹಿಸುವ, ಲೋಕಸಭೆ ಹಾಗೂ ವಿಧಾನಸಭೆಗಳ ಕ್ಷೇತ್ರ ವಿಂಗಡಣೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡುವ ಮೂರು ಪ್ರಮುಖ ನಿರ್ಣಯಗಳು ಹಾಗೂ ಅರಣ್ಯ ವಾಸಿ ಅನುಸೂಚಿತ ಬುಡಕಟ್ಟುಗಳಿಗೆ ಅರಣ್ಯ ಸಂರಕ್ಷಣಾ ಕಾಯ್ದೆಯಿಂದ ವಿನಾಯಿತಿ ನೀಡಬೇಕೆಂದು ಒತ್ತಾಯಿಸುವ ನಾಲ್ಕನೇ ನಿರ್ಣಯವನ್ನು ಮಂಡಿಸಲಾಯಿತು.
3
+ ವಿಧಾನಸಭಾಧ್ಯಕ್ಷರು ಯು.ಟಿ.ಖಾದರ್‌ ಅವರು, ಸರ್ವಾನುಮತದಿಂದ ಅಂಗೀಕಾರಗೊಂಡಿವೆ ಎಂದು ಪ್ರಕಟಿಸಿದರು.ಒಂದು ದೇಶ- ಒಂದು ಚುನಾವಣೆ ನಿರ್ಣಯಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿ, ಸರ್ವಾನುಮತದ ಅಂಗೀಕಾರವನ್ನು ಆಕ್ಷೇಪಿಸಿತ್ತು.
4
+ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌, 2026ರಲ್ಲಿನ ಅಥವಾ ಅದರ ನಂತರ ನಡೆಸುವ ಹೊಸ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಪುನರ್ವಿಂಗಡಣಾ ಪ್ರಕ್ರಿಯೆಯನ್ನು ನಡೆಸಬಾರದು.
5
+ ಜನಸಂಖ್ಯೆಯನ್ನು ಆಧರಿಸಿ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಸಂದರ್ಭದಲ್ಲಿ ಪ್ರತಿ ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಮತ್ತು ಪ್ರತಿ ರಾಜ್ಯದ ವಿಧಾನಸಭೆಗೆ ನಿಗದಿಪಡಿಸಬೇಕಾದ ಸ್ಥಾನಗಳ ಒಟ್ಟು ಸಂಖ್ಯೆಯನ್ನು 1971ರ ಜನಗಣತಿಯನ್ನು ಆಧರಿಸಿ ನಿರ್ಧರಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಹೇಳಿದರು.
6
+ ಆರಂಭದಲ್ಲಿ ಮಾತನಾಡಿದ ಸಚಿವ ಹೆಚ್‌.ಕೆ.ಪಾಟೀಲ್‌, ರಾಜ್ಯ ಮತ್ತು ದಕ್ಷಿಣ ಭಾರತದ ಜನರ ರಕ್ಷಣೆಗಾಗಿ ಪ್ರಜಾಪ್ರಭುತ್ವದಲ್ಲಿ ಸೂಕ್ತ ಸ್ಥಾನಮಾನ ನಿಗದಿಯಾಗಬೇಕು ಎಂದು ಒತ್ತಾಯಿಸುವ ನಿರ್ಣಯವನ್ನು ಅಂಗೀಕಾರ ಮಾಡಬೇಕಾಗಿದೆ. ಶಾಂತ ಚಿತ್ತರಾಗಿ ಚರ್ಚೆಯಲ್ಲಿ ಭಾಗವಹಿಸಿ ಎಂದು ಮನವಿ ಮಾಡಿದರು. ಆದರೆ ವಿರೋಧ ಪಕ್ಷದ ಸದಸ್ಯರು ಅದಕ್ಕೆ ಕಿವಿಗೊಡಲಿಲ್ಲ.
7
+ ನಿರ್ಣಯ ಮಂಡನೆ ಆಗುತ್ತಿದ್ದಂತೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ನಾವು ಈ ನಿರ್ಣಯದ ಪರವಾಗಿದ್ದೇವೆ. ಚರ್ಚೆಯಲ್ಲಿ ಭಾಗವಹಿಸುತ್ತೇವೆ ಎಂದು ಪ್ರತಿಪಾದಿಸಿದರು. ಹಾಗಿದ್ದ ಮೇಲೆ ಧರಣಿ ಕೈ ಬಿಟ್ಟು ಚರ್ಚೆಯಲ್ಲಿ ಭಾಗವಹಿಸಿ ಎಂದು ಸಭಾಧ್ಯಕ್ಷರು ಸಲಹೆ ನೀಡಿದರು.
8
+ ವಿರೋಧ ಪಕ್ಷಗಳ ಸದಸ್ಯರು ಧರಣಿ ಮುಂದುವರೆಸಿದ್ದರಿಂದ ಸಭಾಧ್ಯಕ್ಷರು ನಿರ್ಣಯ ಸರ್ವಾನುಮತದಿಂದ ಅಂಗೀಕಾರಗೊಂಡಿದೆ ಎಂದು ಪ್ರಕಟಿಸಿದರು.
eesanje/url_46_64_7.txt ADDED
@@ -0,0 +1,10 @@
 
 
 
 
 
 
 
 
 
 
 
1
+ ವಿಧಾನಪರಿಷತ್‌ನಲ್ಲಿ ಪ್ರತಿಪಕ್ಷಗಳ ಗದ್ದಲದ ನಡುವೆಯೂ ಹಲವು ವಿಧೇಯಕಗಳ ಮಂಡನೆ
2
+ ಬೆಂಗಳೂರು,ಜು.25-ಪ್ರತಿಪಕ್ಷಗಳ ಸದಸ್ಯರ ತೀವ್ರ ಗದ್ದಲದ ನಡುವೆಯೂ ವಿಧಾನಪರಿಷತ್‌ನಲ್ಲಿ ಕರ್ನಾಟಕ ಧನ ವಿನಿಯೋಗ ವಿಧೇಯಕ-2024 ಸೇರಿದಂತೆ ಹಲವು ವಿಧೇಯಕಗಳನ್ನು ಮಂಡಿಸಲಾಯಿತು. ಮುಡಾ ಹಗರಣ ಕುರಿತು ಚರ್ಚೆಗೆ ಅವಕಾಶ ಕೊಡಬೇಕೆಂದು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌‍ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲೇ ಬಸವರಾಜ ಹೊರಟ್ಟಿಯವರು ವಿಧೇಯಕ ಮಂಡಿಸಲು ಸೂಚಿಸಿದರು.
3
+ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ 2024ನೇ ಸಾಲಿನ ಕರ್ನಾಟಕ ಧನವಿನಿಯೋಗ ವಿಧೇಯಕ-2024ನ್ನು ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿ ವಿಧೇಯಕವನ್ನು ಅಂಗೀಕರಿಸಬೇಕೆಂದು ಸದಸ್ಯರಿಗೆ ಮನವಿ ಮಾಡಿದರು.
4
+ ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ಅವರು ವಿಧಾನಸಭೆಯಿಂದ ಅಂಗೀಕೃತವಾಗಿರುವ 2024ನೇ ಸಾಲಿನ ಕರ್ನಾಟಕ ವಿಧಾನಮಂಡಲ ವಿಧೇಯಕವನ್ನು ಮಂಡಿಸಿದರು.
5
+ ನಂತರ ವಿಧೇಯಕವನ್ನು ಅಂಗೀಕರಿಸಲಾಗಿದೆ ಎಂದು ಸಭಾಪತಿಗಳು ಘೋಷಣೆ ಮಾಡಿದರು. ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಕರ್ನಾಟಕ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆದುಕೊಂಡರು.
6
+ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾಗಿರುವ ಎನ್‌.ಎಸ್‌‍.ಭೋಸರಾಜ ಅವರು ಚುನಾವಣಾ ಪ್ರಸ್ತಾವನೆಗಳನ್ನು ಮಂಡಿಸಿದರು. ವಿಧಾನಮಂಡಲ ಹಾಗೂ ವಿಧಾನಪರಿಷತ್‌ನ ವಿವಿಧ ಸಮಿತಿಗಳಿಗೆ ಚುನಾವಣೆ ನಡೆಸುವ ಬದಲು ಸದಸ್ಯರುಗಳನ್ನು ನಾಮನಿರ್ದೇಶಿಸಲು ಸಭಾಪತಿಯವರಿಗೆ ಅಧಿಕಾರ ನೀಡುವ ಪ್ರಸ್ತಾವನೆಯನ್ನು ಮಂಡಿಸಿದ ನಂತರ ಅಂಗೀಕರಿಸಲಾಯಿತು.
7
+ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಸೆನೆಟ್‌ಗೆ ಹಾಗೂ ಕರ್ನಾಟಕ ರಾಜ್ಯ ಅಂಗವಿಕಲರ ಸಲಹಾ ಮಂಡಳಿಗೆ ಚುನಾವಣೆ ನಡೆಸುವ ಬದಲು ಸದಸ್ಯರುಗಳನ್ನು ನಾಮನಿರ್ದೇಶಿಸಲು ಸಭಾಪತಿಯವರಿಗೆ ಅಧಿಕಾರ ನೀಡುವ ಪ್ರಸ್ತಾವನೆಯನ್ನು ಮಂಡಿಸಿದ ನಂತರ ಸದನವು ಅಂಗೀಕಾರ ನೀಡಿತು.
8
+ ವಿಧಾನಪರಿಷತ್‌ನ ನಿಯಮಾವಳಿ ಸಮಿತಿಗೆ ಶಾಸಕರನ್ನು ನಾಮನಿರ್ದೇಶನ ಮಾಡುವ ಸಭಾಪತಿಯವರಿಗೆ ಅಧಿಕಾರ ನೀಡುವ ಮತ್ತೊಂದು ಪ್ರಸ್ತಾವನೆ ಮಂಡನೆ ಮಾಡಲಾಯಿತು. ನಂತರ ವರದಿಗಳನ್ನು ಒಪ್ಪಿಸಲು ಸಭಾಪತಿಯವರು ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಿದರು.
9
+ ಸದಸ್ಯರಾದ ಆರ್‌.ರಾಜೇಂದ್ರ ರಾಜಣ್ಣ ಅವರು 2023-24ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಮೂರನೇ ವರದಿಯನ್ನು ಒಪ್ಪಿಸಿದರು.
10
+ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಸದಸ್ಯ ಕೆ.ಅಬ್ದುಲ್‌ ಜಬ್���ಾರ್‌ ಅವರು 2023-24ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಮೊದಲನೆ ವರದಿಯನ್ನು ಸದನಕ್ಕೆ ಒಪ್ಪಿಸಿದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರುಗಳು ನಿರ್ಣಯಗಳನ್ನು ಮಂಡಿಸಿದರು.
eesanje/url_46_64_8.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ವಿಪಕ್ಷಗಳಿಂದ ಸಿದ್ದರಾಮಯ್ಯನವರ ಹೆಸರಿಗೆ ಮಸಿ ಬಳಿಯುವ ಹುನ್ನಾರ : ಕಾಂಗ್ರೆಸ್‌‍ ಶಾಸಕರು ಕಿಡಿ
2
+ ಬೆಂಗಳೂರು,ಜು.25-ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರ ಮುಡಾದ ವಿಚಾರದಲ್ಲಿ ಬಿಜೆಪಿ ಅನಗತ್ಯವಾಗಿ ರಾಜಕಾರಣ ಮಾಡುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಕಪ್ಪು ಮಸಿ ಬಳಿಯುವ ಹುನ್ನಾರ ನಡೆಸಿದೆ. ಜೊತೆಗೆ ವಿಧಾನಸಭೆಯಲ್ಲಿ ಸಭಾಧ್ಯಕ್ಷರ ರೂಲಿಂಗ್‌ ಅನ್ನು ವಿರೋಧಿಸಿ ಅಹೋರಾತ್ರಿ ಧರಣಿ ನಡೆಸುವ ಮೂಲಕ ನಿಯಮಬಾಹಿರವಾಗಿ ನಡೆದುಕೊಂಡಿದೆ ಎಂದು ಕಾಂಗ್ರೆಸ್‌‍ ಶಾಸಕರು ಕಿಡಿ ಕಾರಿದ್ದಾರೆ.
3
+ ಅರಸೀಕೆರೆ ಕ್ಷೇತ್ರದ ಕೆ.ಎಂ.ಶಿವಲಿಂಗೇಗೌಡ, ಮಳವಳ್ಳಿ ಕ್ಷೇತ್ರದ ಪಿ.ಎಂ.ನರೇಂದ್ರಸ್ವಾಮಿ, ಬಂಗಾರಪೇಟೆ ಕ್ಷೇತ್ರದ ಎಂ.ನಾರಾಯಣಸ್ವಾಮಿ ಅವರು ಇಂದು ವಿಧಾನಸೌಧದ ಸಭೆಯಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರನ್ನು ಸಮರ್ಥಿಸಿಕೊಂಡರು ಹಾಗೂ ಮುಡಾ ಪ್ರಕರಣದಲ್ಲಿ ದಾಖಲಾತಿಗಳನ್ನು ಬಿಡುಗಡೆ ಮಾಡಿದರು.
4
+ ಶಿವಲಿಂಗೇಗೌಡ ಮಾತನಾಡಿ, ಸಿದ್ದರಾಮಯ್ಯ ಅವರು ತಮ ರಾಜಕೀಯ ಜೀವನದ ಉದ್ದಕ್ಕೂ ಒಂದು ಕಪ್ಪು ಚುಕ್ಕೆ ಇಲ್ಲದಂತೆ ನಡೆದುಕೊಂಡಿದ್ದಾರೆ. ಬಿಜೆಪಿ ಮುಡಾ ವಿಚಾರದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಇದೆ ಎಂದು ಅಪಪ್ರಚಾರ ಮಾಡುವ ಮೂಲಕ ಕೆಟ್ಟ ಹೆಸರು ತರುವ ಪ್ರಯತ್ನ ನಡೆಸುತ್ತಿದೆ. ಜೆಡಿಎಸ್‌‍ ಮತ್ತು ಬಿಜೆಪಿಯ ಈ ನಾಟಕ ಕಂಪನಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿರುಗೇಟು ನೀಡಿದರು.
5
+ ನಾರಾಯಣಸ್ವಾಮಿ ಅವರು ಮಾತನಾಡಿ, ಈ ಹಿಂದೆ ಬ್ರಿಟಿಷರ ಅವಧಿಯಲ್ಲಿ ಸರ್ಕಾರಿ ಜಮೀನನ್ನು ಹರಾಜು ಮೂಲಕ ವಿಲೀನ ಮಾಡಲಾಗುತ್ತಿತ್ತು. ಮೈಸೂರು ಸಮೀಪ ಮೂರು ಎಕರೆ 16 ಗುಂಟೆಯನ್ನು 1995 ರಲ್ಲಿ ಲಿಂಗ ಬಿನ್‌ ಜವರ ಎಂಬುವರು ಹರಾಜು ಮೂಲಕ ಖರೀದಿ ಮಾಡಿದ್ದರು. ಇದು ಯಾವುದೇ ಸರ್ಕಾರದ ನಿಯಮಾವಳಿ ಅಡಿ ಮಂಜೂರಾದ ಅಥವಾ ಷರತ್ತಿಗೆ ಒಳಪಟ್ಟ ಭೂಮಿಯಲ್ಲ ಎಂದು ಸಮರ್ಥಿಸಿಕೊಂಡರು.
6
+ ಲಿಂಗ ಅವರಿಗೆ ಮಲ್ಲಯ್ಯ, ಮೈಲಾರಲಿಂಗ ಹಾಗೂ ದೇವರಾಜ್‌ ಎಂಬ ಮೂವರು ಮಕ್ಕಳಿದ್ದರು. ಈ ಹಿಂದಿನ ಪದ್ಧತಿಯಲ್ಲಿ ಅಣ್ಣ-ತಮಂದಿರು ಪಂಚರ ಸಮುಖದಲ್ಲಿ ಪರಸ್ಪರ ಒಪ್ಪಿಗೆಯ ಮೇರೆಗೆ ಮೂರು ಎಕರೆ 16 ಗುಂಟೆಯನ್ನು ದೇವರಾಜ್‌ ಅವರಿಗೆ ಬಿಟ್ಟುಕೊಡುವ ಹೇಳಿಕೆ ನೀಡಿದ್ದಾರೆ. ಅಧಿಕಾರಿಗಳು ಸಹೋದರರ ಹೇಳಿಕೆ ಆಧರಿಸಿ ದೇವರಾಜ್‌ ಅವರಿಗೆ ಆಸ್ತಿಯ ಸಂಪೂರ್ಣ ಸ್ವಾಧೀನ ಹಾಗೂ ಅಧಿಕಾರ ಪ್ರದತ್ತವಾಗುವ ಮ್ಯುಟೇಶನ್‌ ನೀಡಿದ್ದಾರೆ ಎಂದು ಹೇಳಿದರು.
7
+ 1992 ರಲ್ಲಿ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ ಸದರಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಅಧಿಸೂಚನೆ ಹೊರಡಿಸಿತ್ತು. ದೇವರಾಜು ಅವರು ಸ್ವಾಧೀನ ಪ್ರಕ್ರಿಯೆಯಿಂದ ತಮ ಭೂಮಿಯನ್ನು ಕೈಬಿಡುವಂತೆ ಮನವಿ ಮಾಡಿದ್ದರು. ಮನವಿ ಆಧರಿಸಿ ಮುಡಾ ಸಮಿತಿ ಚರ್ಚೆ ನಡೆಸಿದ್ದು, ದೇವರಾಜು ಸೇರಿದಂತೆ 19 ಜನರ ಸ್ವತ್ತುಗಳನ್ನು ಸ್ವಾಧೀನ ಪ್ರಕ್ರಿಯೆಯಿಂದ ಮುಡಾ ಕೈಬಿಟ್ಟಿದೆ. 2004ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಮೈದುನ ಮಲ್ಲಿಕಾರ್ಜುನಯ್ಯ ಈ ಭೂಮಿಯನ್ನು ಖರೀದಿಸಿದ್ದಾರೆ. ದೇವರಾಜಯ್ಯ ಅವರ ಪಿತ್ರಾಜಿತ ಆಸ್ತಿಯಾಗಿದ್ದರಿಂದ ಹಾಗೂ ಲಿಂಗ ಅವರು ಹರಾಜು ಮೂಲಕ ಭೂಮಿ ಖರೀದಿ ಮಾಡಿದ್ದರಿಂದ ಮಲ್ಲಿಕಾರ್ಜುನಯ್ಯ ಅವರಿಗೆ ಭೂ ದಾಖಲೆಗಳು ವರ್ಗಾವಣೆಗೊಂಡಿವೆ ಎಂದರು.
8
+ ನರೇಂದ್ರ ಸ್ವಾಮಿ, ಬಿಜೆಪಿಯವರು ಉದ್ದೇಶ ಪೂರ್ವಕವಾಗಿ ಪರಿಶಿಷ್ಟ ಜಾತಿಯವರ ಭೂಮಿಯನ್ನು ಖರೀದಿಸಲಾಗಿದೆ ಎಂಬ ಆರೋಪ ಮಾಡುತ್ತಿದ್ದಾರೆ ಇದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.
9
+ ಮಲ್ಲಿಕಾರ್ಜುನ 2004ರಲ್ಲಿ ಜಮೀನು ಖರೀದಿಸಿದರು. 2005ರಲ್ಲಿ ಈ ಜಾಗದ ಭೂ ಪರಿವರ್ತನೆ ಆಗಿದೆ. 2010ರಲ್ಲಿ ಸದರಿ ಭೂಮಿಯನ್ನು ಮಲ್ಲಿಕಾರ್ಜುನಯ್ಯ ತಮ ಸಹೋದರಿ ಹಾಗೂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಅರಿಶಿಣ ಕುಂಕುಮಕ್ಕೆ ದಾನ ಪತ್ರ ಮಾಡಿಕೊಟ್ಟಿದ್ದಾರೆ. ಅನಂತರ ಮುಡಾ ಸದರಿ ಭೂಮಿಗೆ ಅಕ್ರಮವಾಗಿ ಪ್ರವೇಶ ಮಾಡಿ ನಿವೇಶನಗಳನ್ನಾಗಿ ಮಾಡಿ ಹಂಚಿದೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು ನಮ ಭೂಮಿಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ನಮ ಜಮೀನನ್ನು ಬಿಟ್ಟು ಕೊಡಿ ಅಥವಾ ಸಮಾನಾಂತರವಾದ ಜಾಗ ಕೊಡಿ ಎಂದು ಮನವಿ ಸಲ್ಲಿಸಿದ್ದರು.
10
+ ಬಿಜೆಪಿಯ ಅಧಿಕಾರ ಅವಧಿಯಲ್ಲಿ ಮುಡಾದ ಅಧ್ಯಕ್ಷರು ಹಾಗೂ ಇತರರು ಸಾಮಾನ್ಯ ಸಭೆ ನಡೆಸಿ ಪಾರ್ವತಿಯವರ ಅರ್ಜಿಯನ್ನು ಪರಿಶೀಲನೆ ನಡೆಸಿದ್ದಾರೆ. ಶಾಸಕರೂ ಆಗಿದ್ದ ಜಿ.ಟಿ.ದೇವೇಗೌಡ 50:50ರ ಅನುಪಾತ ಅಡಿ ಅರ್ಜಿದಾರರಿಗೆ ಭೂಮಿ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
11
+ ಮರಿತಿಬ್ಬೇಗೌಡ ಮೂರು ಎಕರೆ 16 ಗುಂಟೆಯನ್ನು ಅರ್ಜಿದಾರರಿಗೆ ವಾಪಸ್‌‍ ನೀಡಬೇಕು ಎಂದು ಮುಡಾ ಸಭೆಯಲ್ಲಿ ಹೇಳಿದ್ದಾರೆ. ಎಲ್ಲವೂ ಕಾನೂನುಬದ್ಧವಾಗಿ ನಡೆದಿದೆ. ಈಗ ಬಿಜೆಪಿಯವರು ಈ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಲಿಂಗ ಕುಟುಂಬದ ಸದಸ್ಯನ ಮೂಲಕ ಅರ್ಜಿ ಕೊಡಿಸಿ ಗೊಂದಲ ಮೂಡಿಸುತ್ತಿದ್ದಾರೆ. ಇಷ್ಟು ವರ್ಷ ಇಲ್ಲದ ತಕರಾರು ಈಗ ಏಕೆ ಎಂದು ಪ್ರಶ್ನಿಸಿದರು.
12
+ ವಿಧಾನಸಭೆಯಲ್ಲಿ ಚರ್ಚೆಗೆ ಕೈಗೆತ್ತಿಕೊಳ್ಳಲು ಮುಡಾ ಪ್ರಕರಣ ಸೂಕ್ತವಾಗಿಲ್ಲ. ಆರು ತಿಂಗಳ ಒಳಗಿನ ಪ್ರಸಕ್ತ ವಿದ್ಯಮಾನವಾಗಿರಬೇಕು ಸಾರ್ವಜನಿಕ ಮಹತ್ವದ್ದಾಗಿರಬೇಕು ಎಂಬ ನಿಯಮಗಳನ್ನು ಶಾಸನಸಭೆ ರಚನೆ ಮಾಡಿದೆ. ಬಿಜೆಪಿ ಅವರು ನೀಡಿದ ನಿಲುವಳಿ ಸೂಚನೆ, ಈ ಯಾವ ನಿಯಮಾವಳಿಗೂ ಅನ್ವಯಿಸುವುದಿಲ್ಲ. ಹೀಗಾಗಿ ಸಭಾಧ್ಯಕ್ಷರು ನಿಲುವಳಿ ಸೂಚನೆಯನ್ನು ತಿರಸ್ಕರಿಸಿದ್ದಾರೆ. ಮುಡಾ ಹಗರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ.
13
+ ಈ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಅವಕಾಶ ಇಲ್ಲ. ಆದರೂ ಬಿಜೆಪಿಯವರು ಜೆಡಿಎಸ್‌‍ ನಾಯಕರು ದುರುದ್ದೇಶಪೂರ್ವಕವಾಗಿ ಧರಣಿಯ ನಾಟಕ ಮಾಡುತ್ತಿದ್ದಾರೆ ಎಂದು ಶಿವಲಿಂಗೇಗೌಡ ಟ��ಕೆ ಮಾಡಿದರು.
eesanje/url_46_64_9.txt ADDED
@@ -0,0 +1,6 @@
 
 
 
 
 
 
 
1
+ ವಿರೋಧ ಪಕ್ಷಗಳ ಧರಣಿ ನಾಟಕವಷ್ಟೆ : ಹೆಚ್‌.ಕೆ.ಪಾಟೀಲ್‌
2
+ ಬೆಂಗಳೂರು,ಜು.25-ವಿಧಾನಸೌಧದಲ್ಲಿ ಕಾನೂನು, ಸಂಸದೀಯ ಮತ್ತು ಪ್ರವಾಸೋದ್ಯಮ ಸಚಿವ ಹೆಚ್‌.ಕೆ.ಪಾಟೀಲ್‌‍ ವಿಪಕ್ಷಗಳ ಧರಣಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.ಈ ಬಗ್ಗೆ ಮಾತನಾಡಿದ ಅವರು, ನಿನ್ನೆ ಪ್ರತಿಪಕ್ಷದವರು ಅಹೋರಾತ್ರಿ ಧರಣಿ ಮಾಡಿದ್ದಾರೆ. ನಿಲುವಳಿ ಪ್ರಸ್ತಾಪ ಏಕೆ ಮಾಡಬಾರದು ಎನ್ನುವುದನ್ನು ವಿವರಿಸಿದ್ದಾರೆ.
3
+ ಇಷ್ಟೆಲ್ಲಾ ಇದ್ದರೂ ಅವರು ಧರಣಿ ಮಾಡಿದ್ದಾರೆ. ರಾಜಕೀಯ ತಂತ್ರಕ್ಕೆ ಅವರು ವಿಧಾನಸಭಾ ಅಧಿವೇಶನ ಉಪಯೋಗ ಮಾಡಿಕೊಂಡಿದ್ದಾರೆ. ಈಗಾಗಲೇ ಈ ತನಿಖೆಯನ್ನು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ಮೂಲಕ ನಡೆಸಲಾಗುತ್ತಿದೆ.
4
+ ಆಪಾದನೆ ಅವರ ಮೇಲಿದ್ದರೂ ಸಿಎಂ ತನಿಖೆಗೆ ಆಯೋಗ ರಚಿಸಿದ್ದಾರೆ. ತನ್ನ ಮೇಲೆ ಆಪಾದನೆ ಇದ್ದಾಗ ಯಾರಾದರೂ ಒಬ್ಬ ಮುಖ್ಯಮಂತ್ರಿ ತನಿಖಾ ಆಯೋಗ ರಚಿಸಿರುವ ಉದಾಹಣೆ ಇದೆಯಾ? ಎಂದು ಪ್ರಶ್ನಿಸಿದರು.
5
+ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಕುಮಾರಸ್ವಾಮಿ, ಬಸವರಾಜ ಬೊಮಾಯಿ ಆಯೋಗ ರಚನೆ ಮಾಡಿದರಾ? ವಿರೋಧ ಪಕ್ಷ ಸಿಎಂ ನಿಲುವನ್ನು ಪ್ರಶಂಸೆ ಮಾಡಬೇಕಿತ್ತು. ಇದು ಕೇವಲ ರಾಜಕೀಯ ನಾಟಕ ಅಷ್ಟೆ. ಭಾರಿ ಮಳೆಯಿಂದ ಉತ್ತರ ಕನ್ನಡದಲ್ಲಿ, ಮಲೆನಾಡಲ್ಲಿ ಸಾಕಷ್ಟು ಅನಾಹುತ ಆಗಿದೆ. ಆದರೆ ಇದರ ಬಗ್ಗೆ ಚರ್ಚೆ ಮಾಡಿಲ್ಲ.
6
+ ಒನ್‌ ನೇಷನ್‌ ಒನ್‌ ಎಲೆಕ್ಷನ್‌ ವಿಚಾರದ ಬಿಲ್‌ ಇದೆ. ನೀಟ್‌ ವಿರೋಧಿಸಿ ಸಿಇಟಿ ಮರು ಸ್ಥಾಪಿಸುವ ಬಿಲ್‌ ಇದೆ. ಹತ್ತಾರು ಜನರ ಪರವಾದ ಬಿಲ್‌ ಬಗ್ಗೆ ಮಾತನಾಡುತ್ತಿಲ್ಲ. ವಿಪಕ್ಷಗಳ ಧರಣಿ ಕೇವಲ ರಾಜಕೀಯ ನಾಟಕವಷ್ಟೇ ಎಂದು ಆಕ್ಷೇಪಿಸಿದರು.
eesanje/url_46_65_1.txt ADDED
@@ -0,0 +1,5 @@
 
 
 
 
 
 
1
+ ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆ..
2
+ ಬೆಂಗಳೂರು,ಜು.24- ಮಹಿಳಾ ಪಿಜಿಯೊಳಗೆ ನುಗ್ಗಿದ ದುಷ್ಕರ್ಮಿ ಯುವತಿಯ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಬಿಹಾರ ಮೂಲದ ಕೃತಿಕುಮಾರಿ(24) ಕೊಲೆಯಾದ ಯುವತಿ. ಈಕೆ ಎಂಬಿಎ ಪದವೀಧರೆಯಾಗಿದ್ದು, ನಗರದ ಖಾಸಗಿ ಕಂಪನಿಯೊಂದರ ಉದ್ಯೋಗಿ. ಕೋರ ಮಂಗಲದ ವಿಆರ್ ಲೇಔಟ್ನಲ್ಲಿರುವ ಪಿಜಿಯಲ್ಲಿ ನೆಲೆಸಿದ್ದರು.
3
+ ನಿನ್ನೆ ಎಂದಿನಂತೆ ಕೆಲಸಕ್ಕೆ ಹೋಗಿದ್ದು, ರಾತ್ರಿ ಪಿಜಿಗೆ ಕೃತಿ ಮರಳಿದ್ದರು. ಇದೇ ಸಮಯಕ್ಕಾಗಿ ಕಾಯುತ್ತಾ ಕುಳಿತಿದ್ದ ದುಷ್ಕರ್ಮಿ ರಾತ್ರಿ 11.10 ರಿಂದ 11.30 ರ ಮಧ್ಯೆ ಮಾಲೀಕರ ಹಾಗೂ ಮಹಿಳಾ ಸೆಕ್ಯೂರಿಟಿ ಗಾರ್ಡ್ ಕಣ್ತಪ್ಪಿಸಿ, ಪಿಜಿಯೊಳಗೆ ನುಗ್ಗಿ 3ನೇ ಮಹಡಿಯ ರೂಂ ಬಳಿ ಹೋಗಿ ಚಾಕುವಿನಿಂದ ಕೃತಿಕುಮಾರಿ ಕತ್ತು ಕೊಯ್ದು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ.
4
+ ಸುದ್ದಿ ತಿಳಿದು ಕೋರಮಂಗಲ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಆರೋಪಿ ಪತ್ತೆಗೆ ಬಲೆಬೀಸಿದ್ದಾರೆ. ಸ್ಥಳಕ್ಕೆ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.ಪಿಜಿ ಮಾಲೀಕರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ. ಪರಿಚಯಸ್ಥ ಯುವಕನಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತಪಡಿಸಿರುವ ಪೊಲೀಸರು, ಪಿಜಿ ಹಾಗೂ ಸುತ್ತಮುತ್ತಲ ರಸ್ತೆಯಲ್ಲಿರುವ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿ ಆರೋಪಿಯ ಪತ್ತೆ ಕಾರ್ಯ ಕೈಗೊಂಡಿದ್ದಾರೆ.
5
+ ಪಿಜಿ ಯುವತಿಯರ ಆತಂಕ :ಮಹಿಳಾ ಪಿಜಿಯಲ್ಲಿ ನಡೆದಿರುವ ಘಟನೆಯಿಂದ ಉಳಿದ ಯುವತಿಯರು ಭಯಭೀತರಾಗಿದ್ದಾರೆ. ಆರೋಪಿ ಪಿಜಿಯೊಳಗೆ ಹೇಗೆ ಬಂದ, ಕೃತಿ ಉಳಿದುಕೊಂಡಿದ್ದ ರೂಮಿನ ವಿವರ ಹೇಗೆ ಗೊತ್ತಾಯಿತು, ಆತ ಎಲ್ಲಾ ತಿಳಿದುಕೊಂಡೇ ಬಂದಿರುವ ಅನುಮಾನ ವ್ಯಕ್ತವಾಗಿದೆ.ಯುವತಿಯ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿರುವ ಆರೋಪಿ ಬಗ್ಗೆ ಸುಳಿವು ಸಿಕ್ಕಿದೆ. ಆದಷ್ಟು ಬೇಗ ಬಂಧಿಸಲಾಗುವುದು ಎಂದು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಈ ಸಂಜೆಗೆ ತಿಳಿಸಿದ್ದಾರೆ.
eesanje/url_46_65_10.txt ADDED
@@ -0,0 +1,4 @@
 
 
 
 
 
1
+ ನಾನು ಮೂಲತಃ ಅಂಬೇಡ್ಕರ್ ವಾದಿ: ಛಲವಾದಿ ನಾರಾಯಣಸ್ವಾಮಿ
2
+ ಬೆಂಗಳೂರು,ಜು.24- ಜನರ ಆಶಯಕ್ಕೆ ಅನುಗುಣವಾಗಿ ಸದನದ ಗೌರವಕ್ಕೆ ಚ್ಯುತಿ ಬಾರದಂತೆ ಪಕ್ಷದ ಹಿತವನ್ನು ಗಮನದಲ್ಲಿಟ್ಟುಕೊಂಡು ನನಗೆ ನೀಡಿರುವ ಈ ಮಹತ್ವದ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ ಎಂದು ವಿಧಾನಪರಿಷತ್ನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ನಾನು ಈ ಹುದ್ದೆಯನ್ನು ನಿರೀಕ್ಷೆ ಮಾಡಿರಲಿಲ್ಲ. ನನ್ನ ಜೊತೆ ಸಿ.ಟಿ.ರವಿ, ಎನ್.ರವಿಕುಮಾರ್ರವರು ಕೂಡ ಆಕಾಂಕ್ಷಿಗಳಾಗಿದ್ದರು.
3
+ ಅಂತಿಮವಾಗಿ ಪಕ್ಷವು ನನಗೆ ಜವಾಬ್ದಾರಿ ನೀಡಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿ.ಎಲ್.ಸಂತೋಷ್, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಮತ್ತಿತರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು. ನಾನು ಮೂಲತಃ ಅಂಬೇಡ್ಕರ್ ವಾದಿ. ಅವರ ಆಶಯಗಳನ್ನಿಟ್ಟುಕೊಂಡು ರಾಜಕಾರಣಕ್ಕೆ ಬಂದಿದ್ದೇನೆ. ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಮುನ್ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದರು.
4
+ ನನಗೆ ಬಂಗಾರಪ್ಪನವರು ರಾಜಕೀಯ ಗುರುಗಳು. ನಾನು ಅಂದೆಯೇ ರಾಜಕೀಯ ಮುನ್ನಲೆಗೆ ಬರಬೇಕಿತ್ತು. ಕೆಲವು ಕಾರಣಗಳಿಂದ ಸಾಧ್ಯವಾಗಲಿಲ್ಲ. ಯೋಗ ಇರಲಿಲ್ಲವೋ ಅಥವಾ ಯೋಗ್ಯತೆ ಇರಲಿಲ್ಲವೋ ಗೊತ್ತಿಲ್ಲ. ನನಗೆ ಪಕ್ಷ ಜವಾಬ್ದಾರಿ ನೀಡಿದೆ. ಅದನ್ನು ಜವಾಬ್ದಾರಿಯುತವಾಗಿ ನಡೆಸುವುದಾಗಿ ತಿಳಿಸಿದರು.
eesanje/url_46_65_11.txt ADDED
@@ -0,0 +1,7 @@
 
 
 
 
 
 
 
 
1
+ ಬೆಳೆ ಪರಿಹಾರ: ವಿಧಾನಪರಿಷತ್‌ನಲ್ಲಿ ಮಾತಿನ ಚಕಮಕಿ
2
+ ಬೆಂಗಳೂರು,ಜು.24- ರೈತರಿಗೆ ಬೆಳೆ ಪರಿಹಾರ ನೀಡುವ ವಿಷಯದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಿಧಾನಪರಿಷತ್‌ನಲ್ಲಿ ಕೆಲ ಹೊತ್ತು ಮಾತಿನ ಚಕಮಕಿ ನಡೆಯಿತು. ಪ್ರಶ್ನೋತ್ತರ ವೇಳೆ ಕೇಶವಪ್ರಸಾದ್‌ ಅವರು, ರಾಜ್ಯಸರ್ಕಾರ ರೈತರ ಬೆಳೆಪರಿಹಾರ ನೀಡುವಲ್ಲಿ ತಾರತಮ್ಯ ಎಸಗಿದ್ದು, ವಿಫಲವಾಗಿದೆ ಎಂದು ದೂರಿದರು.
3
+ ಇದಕ್ಕೆ ಆಕ್ಷೇಪಿಸಿದ ಕಂದಾಯ ಸಚಿವ ಕೃಷ್ಣಭೈರೇಗೌಡ, ನೀವು ರಾಜಕೀಯ ಮಾತನಾಡುತ್ತೀರಿ ಎಂದರೆ ನಮಗೂ ಕೂಡ ಮಾತನಾಡಲು ಬರುತ್ತದೆ ಎಂದು ತಿರುಗೇಟು ನೀಡಿದರು. 1296 ಕೋಟಿ ರಾಜ್ಯದಿಂದಲೂ ಪರಿಹಾರ ಕೊಟ್ಟಿದ್ದೇವೆ. ಕಳೆದ ವರ್ಷ ಕೇಂದ್ರಕ್ಕೆ ಆಂಧ್ರ, ಮಹಾರಾಷ್ಟ್ರದವರು ಪರಿಹಾರ ಕೇಳಿದರೂ ಯಾರಿಗೂ ಕೊಟ್ಟಿಲ್ಲ. ನಾವು ಸುಪ್ರೀಂಕೋರ್ಟ್‌ಗೆ ಹೋಗಿದ್ದಕ್ಕೆ 3,498 ಕೋಟಿ ರೂ. ಪರಿಹಾರ ಸಿಕ್ಕಿದೆ. 4,132 ಕೋಟಿ ರೂ ಬರಪರಿಹಾರಕ್ಕೆ ಖರ್ಚಾಗಿದೆ. ಕೇಂದ್ರ ಸರ್ಕಾರ ಪರಿಹಾರ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
4
+ ಕಳೆದ ವರ್ಷ ಕೇಂದ್ರ ಸರ್ಕಾರ ಬೆಳೆಪರಿಹಾರವನ್ನು ಆಂಧ್ರಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಯಾವುದೇ ರಾಜ್ಯಕ್ಕೂ ಒಂದೇ ಒಂದು ನಯಾಪೈಸೆ ಹಣವನ್ನು ಕೊಡಲಿಲ್ಲ. ದೇಶದಲ್ಲೇ ಕರ್ನಾಟಕಕ್ಕೆ 3 ಸಾವಿರಕ್ಕೂ ಹೆಚ್ಚು ಕೋಟಿ ಅನುದಾನ ಬಂದಿದೆ ಎಂದರೆ ಅದಕ್ಕೆ ಸುಪ್ರೀಂಕೋರ್ಟ್‌ ಕಾರಣ ಎಂದು ತಿರುಗೇಟು ನೀಡಿದರು.
5
+ ನಾವು ಸುಪ್ರೀಂಕೋರ್ಟ ಕದ ತಟ್ಟಿದ್ದರಿಂದ ವಿಧಿಯಿಲ್ಲದೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನವನ್ನು ಬಿಡುಗಡೆ ಮಾಡಿತು. ಇಲ್ಲದಿದ್ದರೆ ಕರ್ನಾಟಕಕ್ಕೂ ದೊಡ್ಡ ಚೊಂಬು ಸಿಗುತ್ತಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು. ಆಂಧ್ರಪ್ರದೇಶ, ಮಹಾರಾಷ್ಟ್ರದಲ್ಲೂ ಬರಗಾಲ ಬಂದಿದ್ದರೂ ಒಂದೇ ಒಂದು ಪೈಸಾ ಹಣವನ್ನು ನೀಡಲಿಲ್ಲ. ನಾವು ನಮಗೆ ಬರಬೇಕಾದ ಹಣವನ್ನು ನೀಡಬೇಕೆಂದು ಒತ್ತಾಯಿಸಿ ನ್ಯಾಯಾಲಯದ ಮೊರೆ ಹೋದೆವು. ನಮಗೆ ನ್ಯಾಯ ಸಿಕ್ಕಿದ್ದರೆ ಅದು ನ್ಯಾಯಾಲಯದಿಂದ ಎಂದು ಹೇಳಿದರು.
6
+ ಆಗ ಬಿಜೆಪಿಯ ಸಿ.ಟಿ.ರವಿ, ಭಾರತಿ ಶೆಟ್ಟಿ, ಕೇಶವಪ್ರಸಾದ್‌ ಸೇರಿದಂತೆ ಮತ್ತಿತರರು ಆಕ್ಷೇಪಿಸಿ ಕೇಂದ್ರ ಸರ್ಕಾರವನ್ನು ಎಲ್ಲದಕ್ಕೂ ದೂಷಣೆ ಮಾಡುವುದು ಬೇಡ. 3 ಸಾವಿರ ಕೋಟಿ ರೂ. ಅನುದಾನ ಕೊಟ್ಟಿಲ್ಲವೇ? ಎಂದು ಸಚಿವರನ್ನು ಪ್ರಶ್ನಿಸಿದರು. ಆಗ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಈ ವಿಷಯದಲ್ಲಿ ರಾಜಕೀಯ ಮಾಡುವುದು ಬೇಡ. ರೈತರಿಗೆ ಬೆಳೆಪರಿಹಾರ ಸಿಗಬೇಕೆಂಬುದು ಎಲ್ಲರ ಆಶಯ. ಇದರಲ್ಲಿ ಯಾರಿಗೂ ತಾರತಮ್ಯ ಎಸಗುವುದು ಬೇಡ. ಸರ್ಕಾರ ಸಮರ್ಪಕವಾಗಿ ಪರಿಹಾರ ನೀಡಲಿ ಎಂದು ಸಲಹೆ ನೀಡಿದರು.
7
+ ಇದಕ್ಕೂ ಮುನ್ನ ಉತ್ತರಿಸಿದ ಕೃಷ್ಣಭೈರೇಗೌಡ, ನಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದಿನ ಎಲ್ಲಾ ಸರ್ಕಾರಗಳಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಬೆಳೆಪರಿಹಾರವನ್ನು ನೀಡಿದ್ದೇವೆ. ನಾವು ಈವರೆಗೂ ಒಟ್ಟು 33 ಲಕ್ಷಕ್ಕೂ ಅಧಿಕ ರೈತರಿಗೆ ಪರಿಹಾರ ಕೊಟ್ಟಿದ್ದೇವೆ. ಅಂದರೆ ಹಿಂದಿನ ಸರ್ಕಾರ ನೀಡಿದ್ದಕ್ಕಿಂತಲೂ ನಾವು ದುಪ್ಪಟ್ಟು ಕೊಟ್ಟಿದ್ದೇವೆ. ಬೆಳೆ ಪರಿಹಾರ ನೀಡಬೇಕಾದರೆ ಡಿಜಿಟಲ್‌ ವ್ಯವಸ್ಥೆಯನ್ನು ಮಾಡಿದ್ದೇವೆ. ಇದಕ್ಕಾಗಿ ವಿಶೇಷವಾದ ಆ್ಯಪ್‌ ಅನುಷ್ಠಾನ ಮಾಡಲಿದೆ. ರೈತರು ಬೆಳೆ ಬೆಳೆದಿದ್ದಾರೋ, ಇಲ್ಲವೋ ಎಂಬುದನ್ನು ಇದು ಖಾತರಿಪಡಿಸುತ್ತದೆ. ಶೇ.33 ಕ್ಕಿಂತಲೂ ಹೆಚ್ಚು ಬೆಳೆನಷ್ಟವಾಗಿದ್ದರೆ ಪರಿಹಾರ ನೀಡುತ್ತೇವೆ ಎಂದು ಹೇಳಿದರು.
eesanje/url_46_65_12.txt ADDED
@@ -0,0 +1,4 @@
 
 
 
 
 
1
+ ರಾಜ್ಯದಲ್ಲಿ ನೂತನ 5 ಲೇಔಟ್‌ಗಳ ನಿರ್ಮಾಣ: ಸಚಿವ ಜಮೀರ್ ಅಹಮದ್
2
+ ಬೆಂಗಳೂರು,ಜು.24- ರಾಜ್ಯದಲ್ಲಿ ನೂತನವಾಗಿ 5 ಲೇಔಟ್ಗಳನ್ನು ನಿರ್ಮಾಣ ಮಾಡುವ ಗುರಿಯನ್ನು ಹಾಕಿಕೊಂಡಿದ್ದೇವೆ ಎಂದು ವಸತಿ ಸಚಿವ ಜಮೀರ್ ಅಹಮದ್ ಹೇಳಿದ್ದಾರೆ. ವಿಧಾನಪರಿಷತ್ನ ಸದಸ್ಯ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹೊಸದಾಗಿ ರಾಜ್ಯದ ಒಟ್ಟು 5 ಕಡೆ ಅತ್ಯಂತ ಸುವ್ಯವಸ್ಥಿತ ಹಾಗೂ ಸುಸಜ್ಜಿತ ಲೇಔಟ್ಗಳನ್ನು ನಿರ್ಮಾಣ ಮಾಡಬೇಕೆಂಬ ಯೋಜನೆ ಇದೆ. ಆದರೆ ಯಾವ ಸ್ಥಳದಲ್ಲಿ ಮಾಡುತ್ತೇವೆ ಎಂಬುದನ್ನು ಬಹಿರಂಗಪಡಿಸುವುದಿಲ್ಲ. ಬೇಕೆಂದರೆ ರೈತರು ಇದಕ್ಕೆ ಜಮೀನು ಕೊಡಲು ಹಿಂದೆಮುಂದೆ ನೋಡುತ್ತಾರೆ ಎಂದು ಸ್ಪಷ್ಟಪಡಿಸಿದರು.
3
+ ಲೇಔಟ್ಗಳನ್ನು ನಿರ್ಮಾಣ ಮಾಡಬೇಕೆಂಬ ಬೇಡಿಕೆ ಇದೆ. ಒಂದು ಲೇಔಟ್ ನಿರ್ಮಿಸಬೇಕೆಂದರೆ ಕನಿಷ್ಠ ಪಕ್ಷ 1 ಸಾವಿರ ಎಕರೆ ಜಮೀನು ಬೇಕು. ನಾವು ರೈತರಿಂದ ಬಲವಂತವಾಗಿ ಜಮೀನು ಭೂಸ್ವಾದೀನಪಡಿಸಿಕೊಳ್ಳಲು ಆಗುವುದಿಲ್ಲ. ಅವರ ಮನವೊಲಿಸಬೇಕಾಗುತ್ತದೆ ಎಂದು ತಿಳಿಸಿದರು. ಒಂದು ಲೇಔಟ್ನಲ್ಲಿ ಪಾರ್ಕಿಂಗ್, ಸ್ಟೇಡಿಯಂ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳೂ ಇರಬೇಕು. ಈಗಾಗಲೇ ಆನೇಕಲ್ನಲ್ಲಿ ಸುಮಾರು ಒಂದು ಸಾವಿರ ಎಕರೆಯಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳಿರುವ ಲೇಔಟ್ ನಿರ್ಮಾಣ ಮಾಡಿ ಅದರಲ್ಲಿ ಯಶಸ್ವಿಯೂ ಆಗಿದ್ದೇವೆ ಎಂದರು.
4
+ ಶೇ. 50:50 ಅನುಪಾತದಲ್ಲಿ ಭೂಸ್ವಾದೀನ ಮಾಡಿಕೊಳ್ಳಬೇಕೇ ಇಲ್ಲವೇ ನಾವೇ ಖರೀದಿ ಮಾಡಬೇಕೆ ಎಂಬುದರ ಬಗ್ಗೆಯೂ ಆಲೋಚನೆಯಿದೆ. ಗೃಹಮಂಡಳಿಯಿಂದ ಭೂ ಖರೀದಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಜಮೀರ್ ಸ್ಪಷ್ಟಪಡಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿ ಹಿಂದಿನ ಸರ್ಕಾರ 71 ಎಕರೆಯಲ್ಲಿ ಲೇಔಟ್ ನಿರ್ಮಾಣ ಮಾಡಲು ಮುಂದಾಗಿತ್ತು. ಇಷ್ಟು ಸಣ್ಣ ಪ್ರಮಾಣದಲ್ಲಿ ಸಾಧ್ಯವಿಲ್ಲದ ಕಾರಣ ನೆನೆಗುದಿಗೆ ಬಿದ್ದಿದೆ. ಒಟ್ಟು 9,460 ಅರ್ಜಿಗಳು ಬಂದಿವೆ. ಅರ್ಜಿದಾರರಿಂದ ಒಟ್ಟು 26 ಕೋಟಿ 80 ಲಕ್ಷ ಠೇವಣಿ ಹಣವನ್ನು ಸಂಗ್ರಹಿಸಿ, ಯೂನಿಯನ್ ಬ್ಯಾಂಕ್ ಇಂಡಿಯಾದಲ್ಲಿ ಇಟ್ಟಿದ್ದೇವೆ ಎಂದು ಮಾಹಿತಿ ನೀಡಿದರು.
eesanje/url_46_65_2.txt ADDED
@@ -0,0 +1,7 @@
 
 
 
 
 
 
 
 
1
+ ಮಚ್ಚಿನಿಂದ ಕೊಚ್ಚಿ ಅಪ್ಪ-ಮಗನ ಕೊಲೆ
2
+ ಬಾಗೇಪಲ್ಲಿ,ಜು.24- ಜಮೀನು ವಿವಾದದ ಹಿನ್ನೆಲೆಯಲ್ಲಿ ಟೈಲರ್ ಒಬ್ಬ ತನ್ನ ಅಣ್ಣ ಹಾಗೂ ಅಣ್ಣನ ಮಗನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಪಿಸ್ತೂಲ್ನಿಂದ ಗುಂಡಿಕ್ಕಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಇಂದು ಬೆಳ್ಳಂಬೆಳಿಗ್ಗೆ ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯ ಹಂಪಸಂದ್ರದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಗುಡಿಬಂಡೆ ತಾಲ್ಲೂಕಿನ ಹಂಪಸಂದ್ರ ಗ್ರಾಮದ ಮಾಜಿ ಗ್ರಾಮ ಪಂಚಾಯ್ತಿ ಸದಸ್ಯ ನಜೀರ್ ಅಹಮದ್ (55) ಎಂದು ಗುರುತಿಸಲಾಗಿದೆ. ಮಹಮದ್ ಬಷೀರ್ (65) ಕೊಲೆ ಆರೋಪಿ.
3
+ ಘಟನೆಯ ವಿವರ:ಇಂದು ಬೆಳಗಿನ ಜಾವ 5.15ರ ಸಮಯದಲ್ಲಿ ಮೃತ ನಜೀರ್ ಅಹಮದ್ ಪ್ರಾರ್ಥನೆ ಸಲ್ಲಿಸಲು ಮಸೀದಿಗೆ ಹೋಗುತ್ತಿದ್ದಾಗ ಹೊಂಚು ಹಾಕಿ ಕಾದು ಕುಳಿತಿದ್ದ ಮಹಮದ್ ಬಷೀರ್ ಏಕಾಏಕಿ ಮಚ್ಚಿನಿಂದ ಹಲ್ಲೆಮಾಡಿ ನಂತರ ತನ್ನ ಬಳಿ ಇದ್ದ ಪಿಸ್ತೂಲ್ನಿಂದ ಗುಂಡು ಹಾರಿಸಿ ಹತ್ಯೆಗೈದಿದ್ದಾನೆ ಎನ್ನಲಾಗಿದೆ. ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡು ನಜೀರ್ ಅಹಮದ್ ಸ್ಥಳದಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ನಂತರ ಕೊಲೆಗಾರ ಬಷೀರ್ ಕೂಗಳತೆ ದೂರದಲ್ಲಿದ್ದ ತನ್ನ ಅಣ್ಣ ಹಾಗೂ ಮೃತ ನಜೀರ್ರವರ ತಂದೆ ಮಹಬೂಬ್ ಸಾಬ್ (80) ಎಂಬುವವರ ಮೇಲೂ ಕೂಡ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ.
4
+ ಪಿಸ್ತೂಲಿನ ಶಬ್ದಕ್ಕೆ ಬೆಚ್ಚಿಬಿದ್ದ ಜನರು ಹೊರ ಬಂದಾಗ ದ್ವಿಚಕ್ರ ವಾಹನದಲ್ಲಿ ಬಾಗೇಪಲ್ಲಿ ಪಟ್ಟಣದ ಕೊತ್ತಪಲ್ಲಿ ರಸ್ತೆಯಲ್ಲಿರುವ ತನ್ನ ಹೆಂಡತಿಯನ್ನು ಕೊಲೆ ಮಾಡಲು ಮಚ್ಚು ಮತ್ತು ಪಿಸ್ತೂಲ್ನೊಂದಿಗೆ ಹೋಗಿದ್ದಾನೆ. ಹಂಪಸಂದ್ರ ಗ್ರಾಮದಲ್ಲಿ ನಡೆದ ಕೊಲೆಯ ಬಗ್ಗೆ ಮಾಹಿತಿ ತಿಳಿದಿದ್ದ ಪೊಲೀಸರು ಬಾಗೇಪಲ್ಲಿ ಪಟ್ಟಣದ ಕೊಲೆಗಾರನ ಹೆಂಡತಿಗೆ ಮಾಹಿತಿ ನೀಡಿ ಬಾಗಿಲು ತೆರೆಯದಂತೆ ತಿಳಿಸಿದ್ದಾರೆ.
5
+ ಮನೆಯ ಬಳಿ ಹೋದ ಕೊಲೆಗಾರ ಬಾಗಿಲು ಬಡಿದಿದ್ದು ಬಾಗಿಲು ತೆಗೆಯದಿದ್ದಾಗ ಸ್ವಲ್ಪಹೊತ್ತು ಕಾದು ವಾಪಸ್ಸಾಗುವಾಗ ಪೊಲೀಸರು ಕೊಲೆ ಗಾರನನ್ನು ಬಂಧಿಸಿ ಪಿಸ್ತೂಲ್ ಹಾಗೂ ಮಚ್ಚನ್ನು ವಶಪಡಿಸಿಕೊಂಡಿದ್ದಾರೆ. ಗಂಭೀರ ಗಾಯಗೊಂಡ ಮಹಬೂಬ್ ಸಾಬ್ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಕೂಡ ಮೃತಪಟ್ಟಿದ್ದಾರೆ.
6
+ ಆರೋಪಿ ಕೆಲವರ್ಷಗಳಿಂದ ಸೌದಿಯಲ್ಲಿ ಟೈಲರ್ ವೃತ್ತಿ ಮಾಡುತ್ತಿದ್ದು, ಇತ್ತೀಚೆಗೆ ಗ್ರಾಮಕ್ಕೆ ವಾಪಸ್ ಬಂದು ಇಲ್ಲಿಯೂ ಕೂಡ ಟೈಲರ್ ವೃತ್ತಿ ಮಾಡಿಕೊಂಡಿದ್ದ. ಆಸ್ತಿ ವಿಚಾರವಾಗಿ ಜಗಳ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದ್ದು, ಇದೇ ವಿಚಾರವಾಗಿ ಕೊಲೆ ಮಾಡಿರಬಹುದು ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.
7
+ ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಕುಷಾಲ್ ಚೌಕ್ಸೆ, ಅಡಿಷನಲ್ ಎಸ್.ಪಿ. ಖಾಸಿಂ, ಡಿ.ವೈ.ಎಸ್.ಪಿ. ಶಿವಕುಮಾರ್, ಸರ್ಕಲ್ ಇನ್ಸಪೆಕ್ಟರ್ ನಯಾಜ್ ಬೇಗ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಕರೆಸಲಾಗಿತ್ತು.
eesanje/url_46_65_3.txt ADDED
@@ -0,0 +1,7 @@
 
 
 
 
 
 
 
 
1
+ ಮುಡಾ ಅವ್ಯವಹಾರ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ
2
+ ಬೆಂಗಳೂರು,ಜು.24- ಮೈಸೂರು ನಗರಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ವಿರುದ್ಧ ಪ್ರತಿಪಕ್ಷ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ನಿರ್ಧರಿಸಿದೆ. ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯ ಬಳಿಕ ಮುಡಾ ಅಕ್ರಮ ಪ್ರಕರಣ ಯಾವ ಹಂತಕ್ಕೆ ಬರಲಿದೆ ಎಂದು ನೋಡಿಕೊಂಡು ಪಾದಯಾತ್ರೆ ನಡೆಸಲು ಬಿಜೆಪಿ ರಾಜ್ಯ ನಾಯಕರು ತೀರ್ಮಾನಿಸಿದ್ದು, ಒಂದು ವೇಳೆ ಸಿಎಂ ರಾಜೀನಾಮೆ ಕೊಡದಿದ್ದರೆ ಪಾದಯಾತ್ರೆ ಮೂಲಕ ಮೈಸೂರಿಗೆ ತೆರಳಿ ಸಿಎಂ ರಾಜೀನಾಮೆಗೆ ಆಗ್ರಹಿಸಲಿದ್ದಾರೆ.
3
+ ಅಧಿವೇಶನ ಬಳಿಕ ಜು. 29ರಂದು 120 ಕಿ.ಮೀ. ಪಾದಯಾತ್ರೆ ನಡೆಸಲು ಬಿಜೆಪಿ ನಿರ್ಧಾರ ಮಾಡಿದೆ ಎಂದು ತಿಳಿದುಬಂದಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವ ಸುನೀಲ್ ಕುಮಾರ್ ಸೇರಿ ವಿವಿಧ ನಾಯಕರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲು ರಾಜ್ಯ ಬಿಜೆಪಿ ನಿರ್ಧರಿಸಿದೆ. ಇನ್ನು ಪಾದಯಾತ್ರೆ ವೇಳೆ ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಸಾಗದೆ, ಚನ್ನಪಟ್ಟಣ, ಮಂಡ್ಯ ಒಳರಸ್ತೆಯಲ್ಲಿ ಪಾದಯಾತ್ರೆ ಮೂಲಕ ತೆರಳಿ ಜನರ ಗಮನ ಸೆಳೆಯಲು ಬಿಜೆಪಿ ಕಾರ್ಯತಂತ್ರ ರೂಪಿಸಿದೆ.
4
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಅವರಿಗೆ ಅರ್ಹತೆಗೂ ಮೀರಿ ಎರಡು ಕೋಟಿ ರೂ. ಬೆಲೆಬಾಳುವ 14 ನಿವೇಶನಗಳನ್ನು ಪ್ರತಿಷ್ಠಿತ ವಿಜಯನಗರ ಬಡಾವಣೆಯಲ್ಲಿ ಹಂಚಿಕೆ ಮಾಡಲಾಗಿದೆ. ಅರ್ಹತೆ ಪ್ರಕಾರ ಪಾರ್ವತಿ ಅವರಿಗೆ ನೀಡಬೇಕಾಗಿದ್ದು ಕೇವಲ ಎರಡು ಜಮೀನು ಮಾತ್ರ. ಆದರೆ 14 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ಗಂಭೀರ ಆರೋಪ ಮಾಡುತ್ತಿದೆ.
5
+ ಈ ಆರೋಪಕ್ಕೆ ಸಿದ್ದರಾಮಯ್ಯ, ನಿಯಮದ ಪ್ರಕಾರವೇ ಎಲ್ಲರಿಗೂ ಹಂಚಿಕೆಯಾಗುವಂತೆ ಮುಡಾದಿಂದ ಸೈಟ್ ಹಂಚಿಕೆಯಾಗಿದೆ. ನಾವು ಯಾವುದೇ ತಪ್ಪು ಮಾಡಿಲ್ಲ. ನಾವು ಅಲ್ಲೇ ನಿವೇಶನ ನೀಡಬೇಕೆಂದು ಕೇಳಿಕೊಂಡಿಲ್ಲ. ಮುಡಾದವರು ಹಂಚಿಕೆ ಮಾಡಿದ್ದಾರೆ. ಯಾವುದೇ ಅಕ್ರಮ ನಡೆಸಿಲ್ಲ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ.
6
+ ಬೆಂಗಳೂರು ಟು ಬಳ್ಳಾರಿ ಪಾದಯಾತ್ರೆ :2010ರ ಜುಲೈನಲ್ಲಿ ಮುಂಗಾರು ಅಧಿವೇಶನದ ಸಂದರ್ಭದಲ್ಲಿ ಸದನದಲ್ಲಿ ರೆಡ್ಡಿ ಸಹೋದರರ ವಿರುದ್ಧ ದಿನೇಶ್ ಗುಂಡೂರಾವ್ ಅಕ್ರಮ ಗಣಿಗಾರಿಕೆ ಆರೋಪ ಮಾಡಿದ್ದರು. ಇದರಿಂದ ಸದನದಲ್ಲಿ ಮಾತಿನ ಚಕಮಕಿ ಆರಂಭವಾಯಿತು. ಈ ವೇಳೆ ಅಂದಿನ ಬಿಜೆಪಿ ಶಾಸಕ ಟಿ.ಎಸ್.ಸುರೇಶ್ ಬಾಬು ಗುಂಡೂರಾವ್ ವಿರುದ್ಧ ಹರಿಹಾಯ್ದರು. ಬಳ್ಳಾರಿಗೆ ಬಾ ನೋಡಿಕೊಳ್ಳುತ್ತೇವೆ ಎಂದು ಸವಾಲು ಎಸೆದಿದ್ದರು.ಇದರಿಂದ ಸದನ ಮತ್ತಷ್ಟು ಗದ್ದಲಮಯವಾಯಿತು. ಬಳ್ಳಾರಿ ಶಾಸಕರು ತೋಳೇರಿಸಿಕೊಂಡು ವಿಪಕ್ಷ ನಾಯಕರ ಬಳಿ ಹೊರಟರು. ಇವರಲ್ಲಿ ಮೂವರು ರೆಡ್ಡಿ ಸಹೋದರರೂ ಇದ್ದರು. ಆಗ ಸಿಟ್ಟಿಗೆದ್ದ ಸಿದ್ದರಾಮಯ್ಯ ತೋಳು ತಟ್ಟಿ ಬಳ್ಳಾರಿಗೆ ಬರುತ್ತೇವೆ, ರೆಡ್ಡಿ ಮನೆ ಮುಂದೆಯೇ ಮೆರವಣಿಗೆ ಮಾಡುತ್ತೇವೆ ಎಂದು ಅಬ್ಬರಿಸಿ ಸವಾಲೆಸೆದಿದ್ದರು.
7
+ ಅನಂತರ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಬೆಂಗಳೂರಿನಿಂದ ಬಳ್ಳಾರಿಯವರೆಗೆ ಪಾದಯಾತ್ರೆ ಮಾಡಿದರು. ನಂತರ ನಡೆದಿದೆಲ್ಲ ಇತಿಹಾಸ. ಇದೀಗ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದಲ್ಲಿ ಭಾಗಿಯಾದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಬೆಂಗಳೂರು ಟು ಬಳ್ಳಾರಿ ಮಾದರಿಯಲ್ಲಿ ಬೆಂಗಳೂರು ಟು ಮೈಸೂರಿಗೆ ಪಾದಯಾತ್ರೆ ನಡೆಸಲು ಚಿಂತನೆ ನಡೆಸಿದ್ದಾರೆ.