CoolCoder44 commited on
Commit
8883e67
·
verified ·
1 Parent(s): 6dfd0e0

17988d0978e71e3117bd9c698cd8d50aa9f31a19bcb98f758e6084d6c85d7960

Browse files
Files changed (50) hide show
  1. eesanje/url_46_32_8.txt +7 -0
  2. eesanje/url_46_32_9.txt +7 -0
  3. eesanje/url_46_330_1.txt +11 -0
  4. eesanje/url_46_330_10.txt +10 -0
  5. eesanje/url_46_330_11.txt +9 -0
  6. eesanje/url_46_330_12.txt +9 -0
  7. eesanje/url_46_330_2.txt +9 -0
  8. eesanje/url_46_330_3.txt +10 -0
  9. eesanje/url_46_330_4.txt +5 -0
  10. eesanje/url_46_330_5.txt +5 -0
  11. eesanje/url_46_330_6.txt +3 -0
  12. eesanje/url_46_330_7.txt +14 -0
  13. eesanje/url_46_330_8.txt +18 -0
  14. eesanje/url_46_330_9.txt +10 -0
  15. eesanje/url_46_331_1.txt +11 -0
  16. eesanje/url_46_331_10.txt +6 -0
  17. eesanje/url_46_331_11.txt +8 -0
  18. eesanje/url_46_331_12.txt +12 -0
  19. eesanje/url_46_331_2.txt +13 -0
  20. eesanje/url_46_331_3.txt +6 -0
  21. eesanje/url_46_331_4.txt +9 -0
  22. eesanje/url_46_331_5.txt +6 -0
  23. eesanje/url_46_331_6.txt +13 -0
  24. eesanje/url_46_331_7.txt +7 -0
  25. eesanje/url_46_331_8.txt +8 -0
  26. eesanje/url_46_331_9.txt +8 -0
  27. eesanje/url_46_332_1.txt +5 -0
  28. eesanje/url_46_332_10.txt +6 -0
  29. eesanje/url_46_332_11.txt +12 -0
  30. eesanje/url_46_332_12.txt +8 -0
  31. eesanje/url_46_332_2.txt +9 -0
  32. eesanje/url_46_332_3.txt +5 -0
  33. eesanje/url_46_332_4.txt +5 -0
  34. eesanje/url_46_332_5.txt +7 -0
  35. eesanje/url_46_332_6.txt +6 -0
  36. eesanje/url_46_332_7.txt +6 -0
  37. eesanje/url_46_332_8.txt +11 -0
  38. eesanje/url_46_332_9.txt +7 -0
  39. eesanje/url_46_333_1.txt +17 -0
  40. eesanje/url_46_333_10.txt +7 -0
  41. eesanje/url_46_333_11.txt +13 -0
  42. eesanje/url_46_333_12.txt +5 -0
  43. eesanje/url_46_333_2.txt +13 -0
  44. eesanje/url_46_333_3.txt +9 -0
  45. eesanje/url_46_333_4.txt +6 -0
  46. eesanje/url_46_333_5.txt +8 -0
  47. eesanje/url_46_333_6.txt +5 -0
  48. eesanje/url_46_333_7.txt +11 -0
  49. eesanje/url_46_333_8.txt +8 -0
  50. eesanje/url_46_333_9.txt +10 -0
eesanje/url_46_32_8.txt ADDED
@@ -0,0 +1,7 @@
 
 
 
 
 
 
 
 
1
+ ಸಿಎಂ ಸಿದ್ದರಾಮಯ್ಯನವರನ್ನು ಬೆಂಬಲಿಸಿ ಹಿಂದುಳಿದ ಸಂಘಟನೆಗಳ ರಾಜಭವನ ಚಲೋ
2
+
3
+ ಬೆಂಗಳೂರು,ಆ.27-ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿದ್ದನ್ನು ವಿರೋಧಿಸಿ ಶೋಷಿತ ಹಿಂದುಳಿದ ಸಂಘಟನೆಗಳ ಒಕ್ಕೂಟ ನಗರದಲ್ಲಿಂದು ರಾಜಭವನ ಚಲೋ ನಡೆಸಿದವು.
4
+ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆ ಮಾಡಲಾಗುತ್ತಿದೆ. ಬಿಜೆಪಿ-ಜೆಡಿಎಸ್‌‍ ಪಕ್ಷಗಳು ಜನರಿಂದ ಚುನಾಯಿತವಾದ ಕಾಂಗ್ರೆಸ್‌‍ ಸರ್ಕಾರವನ್ನು ಅಸ್ಥಿರಗೊಳಿಸಲು ಕುತಂತ್ರ ಮಾಡುತ್ತಿವೆ ಎಂದು ಸಂಘಟನೆಗಳ ಮುಖಂಡರು ಆರೋಪಿಸಿದರು.
5
+ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌, ಬಿಜೆಪಿಯ ಹಾಗೂ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ದ ಬಾಕಿ ಇರುವ ಪ್ರಕರಣವನ್ನು ಕಡೆಗಣಿಸಲಾಗಿದೆ.
6
+ ಬಿಜೆಪಿಯ ಶಶಿಕಲಾ ಜೊಲ್ಲೆ, ಮುರುಗೇಶ್‌ ನಿರಾಣಿ, ಜನಾರ್ದನ ರೆಡ್ಡಿ ಅವರುಗಳ ವಿರುದ್ಧದ ಪ್ರಕರಣಗಳಲ್ಲಿ ತೀರ್ಮಾನ ತೆಗೆದುಕೊಳ್ಳಲು ವಿಳಂಬ ಮಾಡಲಾಗಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣದಲ್ಲಿ 10 ಗಂಟೆಗಳಲ್ಲೇ ಪ್ರಕ್ರಿಯೆಗಳು ಆರಂಭವಾಗಿದೆ.
7
+ ಇದು ದುರದ್ದೇಶಪೂರಿತ ಕ್ರಮ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಫ್ರೀಡಂಪಾರ್ಕ್‌ನಿಂದ ರಾಜಭವನದತ್ತ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪೊಲೀಸರು ಅರ್ಧ ದಾರಿಯಲ್ಲಿ ಪ್ರತಿಭಟನಾಕಾರರನ್ನು ತಡೆಹಿಡಿದರು.
eesanje/url_46_32_9.txt ADDED
@@ -0,0 +1,7 @@
 
 
 
 
 
 
 
 
1
+ ಕುತೂಹಲ ಕೆರಳಿಸಿದೆ ಡಿಕೆಶಿ-ಎಚ್.ವಿಶ್ವನಾಥ್ ಮಾತುಕತೆ
2
+
3
+ ಬೆಂಗಳೂರು,ಆ.27– ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದ ಕಿಡಿ ಹೊತ್ತಿಸಿದ ಬಿಜೆಪಿಯ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ.
4
+ ಎಸ್.ಆರ್.ವಿಶ್ವನಾಥ್ ಅವರು ತಮ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಉಪಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಅತ್ತ ಎಚ್.ವಿಶ್ವನಾಥ್ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿರುದ್ದ ಡಿ.ಕೆ.ಶಿವಕುಮಾರ್ ಮನೆಯ ಎದುರೇ ವಾಗ್ದಾಳಿ ನಡೆಸಿದ್ದಾರೆ.
5
+ ಈ ಹಿಂದೆ ಮುಡಾದಲ್ಲಿ ನಿವೇಶನ ಹಂಚಿಕೆಗೆ ಸಂಬಂಧಪಟ್ಟಂತೆ ಕಳೆದ ಎರಡು ವರ್ಷಗಳ ಹಿಂದಿನ ಪ್ರಕರಣವನ್ನು ಎಚ್.ವಿಶ್ವನಾಥ್ ಕೆದಕಿದರು. ಲೋಕಸಭೆ ಚುನಾವಣೆಗೂ ಮುನ್ನ ಎಚ್.ವಿಶ್ವನಾಥ್ ಬಿಜೆಪಿ ಮುಖಂಡರ ವಿರುದ್ಧವೇ ಕೆಂಡಕಾರಿ ಕಾಂಗ್ರೆಸ್ ನಾಯಕರ ಪರವಾಗಿ ಮಾತನಾಡಿದ್ದರು. ಆ ಸಂದರ್ಭದಲ್ಲಿ ವಿಶ್ವನಾಥ್ ಮರಳಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿಗಳು ಹರಡಿದ್ದವು.
6
+ ಆದರೆ ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಇದ್ದಕ್ಕಿದ್ದಂಗೆ ಕಾಂಗ್ರೆಸ್ ನಾಯಕರ ವಿರುದ್ಧವೇ ವಿಶ್ವನಾಥ್ ತಿರುಗಿ ಬಿದ್ದಿದ್ದರು. ಮುಡಾದಲ್ಲಿ ನಿವೇಶನ ಹಂಚಿಕೆಯ ಸಂಬಂಧಪಟ್ಟಂತೆ ಅಕ್ರಮಗಳಾಗಿವೆ ಎಂದು ದೂರಿದ್ದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ಟೀಕೆ ಮಾಡಿದ್ದರು.
7
+ ಆನಂತರ ಇದು ಕಾವೇರಿದ ಚರ್ಚೆಗೆ ಗ್ರಾಸವಾಗಿದ್ದಲ್ಲದೆ ಬಿಜೆಪಿ-ಜೆಡಿಎಸ್ ಪಕ್ಷಗಳು ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸಿದವು. ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿದ ಬಳಿಕ ಮತ್ತಷ್ಟು ಉಲ್ಭಣ ವಾತಾವರಣ ನಿರ್ಮಾಣವಾಗಿತ್ತು.
eesanje/url_46_330_1.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಖರ್ಗೆ-ವೇಣುಗೋಪಾಲ್ ಜೊತೆ ಡಿಕೆಶಿ ಮಹತ್ವದ ಮಾತುಕತೆ
2
+ ಬೆಂಗಳೂರು, ಅ.16- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಿನಲ್ಲಿಂದು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ.
3
+ ವೇಣುಗೋಪಾಲ್ ಅವರು ಬೆಂಗಳೂರಿಗೆ ದಿಢೀರ್ ಆಗಮಿಸಿದ್ದು, ಡಿ.ಕೆ.ಶಿವಕುಮಾರ್ ಅವರೊಂದಿಗೆ ಹೋಗಿ ಚರ್ಚೆ ನಡೆಸಿರುವುದು ಹಲವು ಕುತೂಹಲಗಳನ್ನು ಕೆರಳಿಸಿದೆ. ಮಲ್ಲಿಕಾರ್ಜುನಖರ್ಗೆಯವರು ಬೆಂಗಳೂರಿನಲ್ಲೇ ಇದ್ದಿದ್ದರಿಂದ ಕೆ.ಸಿ.ವೇಣುಗೋಪಾಲ್ ದೆಹಲಿಯಿಂದ ಆಗಮಿಸಿದ್ದಾರೆ. ನಿನ್ನೆ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಡಿ.ಕೆ.ಶಿವಕುಮಾರ್ ಆತುರಾತುರವಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ.
4
+ ದಿಢೀರ್ ಭೇಟಿ ಸಮಾಲೋಚನೆಗಳು ರಾಜಕೀಯದಲ್ಲಿ ಕುತೂಹಲ ಕೆರಳಿಸಿದೆ. ರಾಜ್ಯದಲ್ಲಿ ನಿರಂತರವಾಗಿ ಆದಾಯ ತೆರಿಗೆ ದಾಳಿಗಳಾಗುತ್ತಿದ್ದು, ನೂರಾರು ಕೋಟಿ ರೂ.ಗಳನ್ನು ಜಪ್ತಿ ಮಾಡಲಾಗಿದೆ. ಕಾಕತಾಳೀಯ ಎಂಬಂತೆ ದಾಳಿಗೊಳಗಾದವರು ಮತ್ತು ಕಾಂಗ್ರೆಸ್‍ನ ಪ್ರಭಾವಿ ನಾಯಕರ ನಡುವಿನ ಸಂಪರ್ಕಗಳು ಸ್ಪಷ್ಟವಾಗುತ್ತಿದೆ. ಲೋಕಸಭೆ ಚುನಾವಣೆ, ಪಂಚರಾಜ್ಯಗಳ ಚುನಾವಣೆಗಳ ನಡುವೆ ಈ ದಾಳಿಗಳು ರಾಜಕೀಯ ಪ್ರೇರಿತ ಎಂಬ ಆರೋಪಗಳು ವ್ಯಾಪಕವಾಗಿವೆ.
5
+ ಬಿಜೆಪಿ ಪ್ರತಿಭಟನೆಗಳನ್ನು ಜನ ನಂಬುವುದಿಲ್ಲ : ಸಿಎಂ ಸಿದ್ದರಾಮಯ್ಯ
6
+ ದಾಳಿಯಲ್ಲಿ ಸಿಕ್ಕಿದೆ ಎಂದು ಹೇಳಲಾದ ಹಣಕಾಸಿನ ಕುರಿತು ವಿರೋಧಪಕ್ಷಗಳು ಹಲವು ರೀತಿಯ ವ್ಯಾಖ್ಯಾನಗಳನ್ನು ಮಾಡುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಲೂಟಿಗಿಳಿದಿದೆ, ಗುತ್ತಿಗೆದಾರರ ಬಾಕಿ ಬಿಲ್‍ಗಳ ಪಾವತಿಯಲ್ಲಿ ಕಮಿಷನ್ ಪಡೆಯುತ್ತಿದೆ ಎಂಬೆಲ್ಲಾ ಟೀಕೆಗಳು ಕೇಳಿಬಂದಿವೆ.
7
+ ಈ ನಡುವೆ ಕೆ.ಸಿ.ವೇಣುಗೋಪಾಲ್‍ರವರು ಬೆಂಗಳೂರಿಗೆ ಆಗಮಿಸಿ ಎಐಸಿಸಿ ಅಧ್ಯಕ್ಷರು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಸಮಾಲೋಚನೆ ನಡೆಸಿರುವುದು ಹಲವು ಚರ್ಚೆಗಳನ್ನು ಹುಟ್ಟುಹಾಕಿದೆ. ಲೋಕಸಭೆ ಅಧ್ಯಕ್ಷರ ಆಯ್ಕೆ, ಪಕ್ಷ ಸಂಘಟನೆ, ನಿಗಮ ಮಂಡಳಿಗಳ ನೇಮಕಾತಿ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ ಎಂಬ ವ್ಯಾಖ್ಯಾನಗಳಿವೆ.
8
+ ಮಾಮೂಲಿ ಎಂಬಂತೆ ಇದೊಂದು ಸೌಜನ್ಯದ ಭೇಟಿ, ವಿಶೇಷತೆ ಇಲ್ಲ ಎಂಬ ಹೇಳಿಕೆಗಳು ಕೇಳಿಬರುತ್ತಿವೆ. ಆದರೆ ಕೆ.ಸಿ. ವೇಣುಗೋಪಾಲ್ ಅವರ ದಿಢೀರ್ ಭೇಟಿ, ಆತುರಾತುರವಾಗಿ ನಡೆದ ಸಮಾಲೋಚನೆಗಳು ಹಲವು ರೀತಿಯ ಚರ್ಚೆಗಳಿಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಸರಾ ಸಂಭ್ರಮದಲ್ಲಿ ಮೈಸೂರಿನಲ್ಲಿರುವುದರಿಂದ ಸಮಾಲೋಚನಾ ಸಭೆಯಿಂದ ಹೊರಗುಳಿದಿದ್ದರು.
9
+ ಮೂಲಗಳ ಪ್ರಕಾರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿಗಮಮಂಡಳಿಗಳ ನೇಮಕಾತಿ ನಡೆಯುತ್ತಿದ್ದು, ಈ ಕುರಿತು ಚರ್ಚೆಗಳಾಗಿವೆ ಎಂದು ಹೇಳಲಾಗಿದೆ. ದಸರಾ ಹಬ್ಬಕ್ಕೂ ಮುನ್ನವೇ ನಿಗಮಮಂಡಳಿಗಳ ನೇಮಕಾತಿ ನಡೆಯುತ್ತಿದ್ದು, ಶಾಸಕರಿಗೆ ಶೇ. 50 ರಷ್ಟು, ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ಶೇ. 50 ರ ಅನುಪಾತದಲ್ಲಿ ಅಧ್ಯಕ್ಷ ಸ್ಥಾನ ಹಂಚಿಕೆ ಮಾಡಲಾಗುತ್ತದೆ ಎಂಬ ವದಂತಿಗಳಿವೆ.
10
+ ಇಸ್ರೇಲ್ ಪಡೆಗಳಿಗೆ ಅಂತಿಮ ಎಚ್ಚರಿಕೆ ನೀಡಿದ ಇರಾನ್
11
+ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಸರಾ ಸಂಭ್ರಮ ಮುಗಿಸಿ ಬೆಂಗಳೂರಿಗೆ ಬರುತ್ತಿದ್ದ ಹಾಗೆ ನಿಗಮಮಂಡಳಿಗಳ ನೇಮಕಾತಿಗೆ ಚಾಲನೆ ದೊರೆಯಲಿದೆ ಎಂಬ ನಿರೀಕ್ಷೆಗಳಿವೆ.
eesanje/url_46_330_10.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಕನ್ನಡದ ಶಾಂತಿ ಮಂತ್ರ ವಿಶ್ವಕ್ಕೆ ಪಸರಿಸಿ : ದಸರಾ ಮಹೋತ್ಸವಕ್ಕೆ ಹಂಸಲೇಖ ಚಾಲನೆ
2
+ ಮೈಸೂರು,ಅ.15- ಕನ್ನಡದ ಶಾಂತಿ ಮಂತ್ರ ವಿಶ್ವಕ್ಕೆ ಪಸರಿಸಬೇಕು ಎಂದು ನಾದಬ್ರಹ್ಮ, ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ ಕರೆ ನೀಡಿದರು. ಚಾಮುಂಡಿ ಬೆಟ್ಟದಲ್ಲಿಂದು ನಾಡಹಬ್ಬ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಕನ್ನಡವನ್ನು ಪ್ರಪಂಚದ ವೇದಿಕೆಯಲ್ಲಿ ಪ್ರತಿಷ್ಠಾಪಿಸಬೇಕು. ಆಗ ಕನ್ನಡ ಜಗತ್ತಿನ ಭಾಷೆಯಾಗಿ ಬೆಳೆಯಲು ಸಾಧ್ಯವಿದೆ. ಅಭಿವೃದ್ಧಿ ಮತ್ತು ಶಾಂತಿ ಸಂವೃದ್ದಿ ಕನ್ನಡಿಗರ ಒಂದು ಅಂಶ ಕಾರ್ಯಸೂಚಿಯಾಗಬೇಕು ಎಂದರು.
3
+ ಪೂಜ್ಯ ಕನ್ನಡ – ಕನ್ನಡಿಗರಿಗೆ ನನ್ನ ನಮನ ಎಂದು ಭಾಷಣ ಆರಂಭಿಸಿದ ಅವರು, ಈ ಬಾರಿಯ ದಸರಾ ಮಹೋತ್ಸವವನ್ನು ಕರ್ನಾಟಕ ಐದಶ ಎಂದು ಕರೆಯೋಣ, ಕರ್ನಾಟಕದ ಏಕೀಕರಣವಾಗಿ 50 ವರ್ಷಗಳಾಗಿದೆ ಹಾಗೆಯೇ ನನ್ನ ಕಲಾ ಸೇವೆಯು ಆರಂಭವಾಗಿ 50 ವರ್ಷಗಳು ತುಂಬಿದೆ .ಹಾಗಾಗಿ ಈ ಬಾರಿಯ ದಸರಾ ಮಹೋತ್ಸವವನ್ನು ಕರ್ನಾಟಕ ಐದಶ ಎಂದು ಕರೆಯೋಣ. ನನ್ನ ಐವತ್ತು ವರ್ಷಗಳ ಸೇವೆಗೆ ಸಿಕ್ಕಿರುವ ಇದು ಬಹಳ ದೊಡ್ಡ ಬೆಲೆ ಬಾಳುವಂತದು ಎಂದರು.
4
+ ಈ ದೇವಾಲಯ, ಈ ಬೆಟ್ಟ, ಈ ದೇವಿ, ಹಬ್ಬ, ಈ ದಿಬ್ಬ, ಈ ದೀಪ ಹಚ್ಚೋದು, ನನ್ನ ಸೌಭಾಗ್ಯ. ದೈವಸಮಾನಾವಾದ ಈ ನುಡಿಗೆ , ಕನ್ನಡ ನಾಡಿಗೆ , ಈ ದೇವಾಲಯಕ್ಕೆ , ಈ ಪ್ರೇಮಾಯಣಕ್ಕೆ ಸಾವಿರದ ಶರಣುಗಳು ಎಂದು ಹೇಳಿದರು.ಈ ಅವಕಾಶಕ್ಕಾಗಿ ಯಾರನ್ನು ನೆನೆಯಬೇಕು, ಅಪ್ಪ ಗೋವಿಂದರಾಜು, ಅವ್ವ ರಾಜವ್ವ, ಗುರು ನೀಲಕಂಠನನ್ನೇ, ರಕ್ತದೊಳಗಿನ ನಾದವನ್ನೇ, ಚಂದನವನವನ್ನೇ, ಸರ್ಕಾರವನ್ನೇ , ಸಂವಿಧಾನವನ್ನೇಎಂದು ಬಣ್ಣಿಸಿದರು.
5
+ ಚಾಮುಂಡಿ ಬೆಟ್ಟಕ್ಕೆ ಸಾವಿರ ಮೆಟ್ಟಿಲುಗಳಿವೆ. ದಸರಾ ಸಮಾರಂಭದಲ್ಲಿ ಭಾಗವಹಿಸಲು ನಾನು ಸಾವಿರ ಮೆಟ್ಟಿಲುಗಳನ್ನು ಹತ್ತಿ ಬಂದಿದ್ದೇನೆ. ಈ ಅವಕಾಶಕ್ಕಾಗಿ ನಿರಾಯಾಸವಾಗಿ ಬಂದಿಲ್ಲ , ನಾನು ಸಹ ಸಾವಿರ ಮೆಟ್ಟಿಲುಗಳನ್ನು ಜೀವನದಲ್ಲಿ ಹತ್ತಿ ಇಂದು ಇಂತಹ ಒಂದು ದೊಡ್ಡ ಸಮಾರಂಭದಲ್ಲಿ ಭಾಗವಹಿಸಲು ಬಂದಿದ್ದೇನೆ ಎಂದು ಸಂತಸಪಟ್ಟರು.
6
+ ಪಾರ್ಟಿಯಲ್ಲಿ ಶೂಟೌಟ್ ಮೂವರ ಸಾವು
7
+ ಸಮೀಕ್ಷೆ ನಡೆಯಬೇಕು: ಕರ್ನಾಟಕದಲ್ಲಿ ಕನ್ನಡ ಮಾತನಾಡುವವರ ಕುರಿತು ಒಂದು ಸಮೀಕ್ಷೆ ನಡೆಯಬೇಕು ಕರ್ನಾಟಕದಲ್ಲಿ ಎಷ್ಟು ಮಂದಿಗೆ ಕನ್ನಡ ಬರುತ್ತದೆ. ಕನ್ನಡ ಬರೆಯಲು ಬರುತ್ತದೆ. ಕನ್ನಡ ಓದಲು ಬರುತ್ತದೆ ಎಂಬ ಎಲ್ಲಾ ವಿಷಯ ಕುರಿತು ಮಾಹಿತಿಯನ್ನು ಸಂಗ್ರಹಿಸಿ ಸಮೀಕ್ಷೆಯನ್ನು ನಡೆಸಬೇಕು ಎಂದು ಅವರು ಹೇಳಿದರು.
8
+ ಇದೊಂದು ಡೇಟಾ ಆಗಬೇಕು. ಈ ಮಾಹಿತಿ ನಮ್ಮಲ್ಲಿ ಇರಬೇಕು ಎಂದು ಸರ್ಕಾರಕ್ಕೆ ಇದೇ ವೇಳೆ ಹಂಸಲೇಖ ಅವರು ಮನವಿ ಮಾಡಿದರು. ಸರ್ಕಾರ ಹಾಗೂ ಸಾರ್ವಜನಿಕರ ಒತ್ತಾಸೆ ಮೇರೆಗೆ ಇದನ್ನು ಮಾಡಬೇಕು. ಕನ್ನಡ ಕಲಿಯಬೇಕು ಎಂದು ಮುಂದೆ ಬರುವವರಿಗೆ ಕರ್ನಾಟಕದಲ್ಲಿ 30 ದಿನಗಳೊಳಗೆ ಕನ್ನಡವನ್ನು ಕಲಿಸಬೇಕು. ಅವರು ಕನ್ನಡ ಕಲಿತ ಮೇಲೆ ಅವರಿಗೆ ಕನ್ನಡ ಪಟ್ಟ ನೀಡಬೇಕು. ಕನ್ನಡ ಪಟ್ಟ ಎಂದರೆ ಇದೊಂದು ದಾಖಲೆಯಾಗಿರುತ್ತದೆ ಎಂದರು.
9
+ ಮಿನಿ ಬಸ್ ಕಂಟೈನರ್‌ಗೆ ಡಿಕ್ಕಿಯಾಗಿ 12 ಮಂದಿ ಸಾವು
10
+ ಎಪಿಎಲ್ , ಬಿಪಿಎಲ್ ಕಾರ್ಡ್ ಇಲ್ಲದಿದ್ದರೂ ಈ ಕನ್ನಡ ಪಟ್ಟ ಹೊಂದಿರುವವರಿಗೆ ಕರ್ನಾಟಕದಲ್ಲಿ ಕೆಲಸ ಸಿಗುವಂತಾಗಬೇಕು ಎಂದವರು ಈ ಸಂದರ್ಭದಲ್ಲಿ ಅವರು ಒತ್ತಾಯಿಸಿದರು. ಇಂದಿನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹದೇವಪ್ಪ, ಶಿವರಾಜ್ ತಂಗಡಗಿ, ಕೆ.ಜೆ.ಜಾರ್ಜ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಶ್ರೀವತ್ಸ, ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ಮೇಯರ್ ಶಿವಕುಮಾರ್ ಸೇರಿದಂತೆ ಮತ್ತಿತರ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.
eesanje/url_46_330_11.txt ADDED
@@ -0,0 +1,9 @@
 
 
 
 
 
 
 
 
 
 
1
+ ಕಿಯೊನಿಕ್ಸ್ ನಲ್ಲಿ ಮುಕ್ತ ಟೆಂಡರ್ ವ್ಯವಸ್ಥೆಗೆ ಚಾಲನೆ
2
+ ಬೆಂಗಳೂರು,ಅ.14- ಕಿಯೊನಿಕ್ಸ್ ಸಂಸ್ಥೆಯಲ್ಲಿ ಹೊಣೆಗಾರಿಕೆ ಮತ್ತು ಪಾರದರ್ಶಕತೆಯನ್ನು ಕಾಪಾಡಿಕೊಂಡು ಸಾರ್ವಜನಿಕ ಸಂಪನ್ಮೂಲವನ್ನು ರಕ್ಷಿಸುವ ಸಲುವಾಗ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
3
+ ಆಡಿಟ್ ಜನರಲ್ ಕಚೇರಿ ಇತ್ತೀಚೆಗೆ ಕಿಯೊನಿಕ್ಸ್ ಸಂಸ್ಥೆಯ ಲೆಕ್ಕ ಪರಿಶೋಧನಾ ವರದಿಯನ್ನು ಸಲ್ಲಿಸಿದ್ದು, ಅದರಲ್ಲಿ ಹಲವು ಲೋಪಗಳನ್ನು ಗುರುತಿಸಿದೆ. ಅವುಗಳನ್ನು ಗಮನಿಸಲಾಗಿದ್ದು, ಭವಿಷ್ಯದಲ್ಲಿ ಸುಸ್ಥಿರತೆ ಹಾಗೂ ಪಾರದರ್ಶಕತೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
4
+ ಈ ಹಿಂದೆ ಕಿಯೊನಿಕ್ಸ್ ಸಂಸ್ಥೆಯು ವಿವಿಧ ಸರ್ಕಾರಿ ಇಲಾಖೆಗಳು, ಮಂಡಳಿಗಳು ಮತ್ತು ನಿಗಮಗಳಿಗೆ ಒದಗಿಸಿದ ಹೆಚ್ಚಿನ ಸರಕುಗಳು ಮತ್ತು ಸೇವೆಗಳಿಗೆ ಮೂರನೇ ವ್ಯಕ್ತಿಯ ತಪಾಸಣೆ ನಡೆಸದೆ ಬಿಲ್ ಪಾವತಿಸಲಾಗಿತ್ತು. ಒಪ್ಪಂದದ ಷರತ್ತುಗಳನ್ನು ಉಲ್ಲಂಘಿಸಿ ಅಕ್ರಮ ಪಾವತಿಗಳು, ಕೆಲವು ಒಪ್ಪಂದಗಳಲ್ಲಿ ಮೂಲ ದರವನ್ನು ತಪ್ಪಾಗಿ ಅಳವಡಿಸುವುದು, ಎಂಪ್ಯಾನಲ್ಮೆಂಟ್ ಉಲ್ಲಂಘನೆಗಳು, ಬಿಲ್ಡರ್‍ಗಳು ಸಲ್ಲಿಸಿದ್ದ ಆಸಕ್ತಿಯ ಅಭಿವ್ಯಕ್ತಿಯ ಮೌಲ್ಯಮಾಪನಕ್ಕೆ ಸಮಿತಿಗಳನ್ನು ರಚಿಸದಿರುವುದು, ಪಾರದರ್ಶಕ ಕಾಯ್ದೆ ಉಲ್ಲಂಘಿಸಿ ಮಾಹಿತಿ ತಂತ್ರಜ್ಞಾನ ಸಂಬಂಧಿಸಿದ ಸರಬರಾಜುಗಳ ಸಂಗ್ರಹಣೆ, ಪ್ರಮಾಣಿತ ಟೆಂಡರ್ ದಾಖಲೆಗಳನ್ನು ಅಳವಡಿಸಿಕೊಳ್ಳದಿರುವುದು, ಟೆಂಡರ್ ವಿಭಜನೆ, ಒಪ್ಪಂದಗಳಲ್ಲಿ ಕಾರ್ಯಕ್ಷಮತೆಯ ಭದ್ರತೆಯನ್ನು ಗಮನಿಸಿದಿರುವುದು, ಬಿಲ್ಡರ್ಸ್‍ಗಳಿಂದ ಇಎಂಡಿ ಸಂಗ್ರಹ ಸೇರಿದಂತೆ ಹಲವು ಲೋಪಗಳು ನಡೆದಿವೆ ಎಂದು ವಿವರಿಸಲಾಗಿದೆ.
5
+ ನಾಳೆ ನಾಡಹಬ್ಬ ದಸರಾಗೆ ಚಾಲನೆ ನೀಡಲಿದ್ದಾರೆ ನಾದಬ್ರಹ್ಮ ಹಂಸಲೇಖ
6
+ ಕಿಯೊನಿಕ್ಸ್‍ನಲ್ಲಿ ಬಾಕಿ ಇರುವ ಬಿಲ್‍ಗಳಿಗಾಗಿ ವೆಂಡರ್‍ಗಳು ಮತ್ತು ಭಾದ್ಯಸ್ಥರು ಪ್ರಸ್ತಾವನೆಗಳನ್ನು ಸಲ್ಲಿಸಿದ್ದಾರೆ. ಅವುಗಳನ್ನು ಆದ್ಯತೆ ಮತ್ತು ಲೆಕ್ಕಪರಿಶೋಧನೆಗಳ ಅವಲೋಕನಗಳ ಆಧಾರದ ಮೇಲೆ ಪರಿಶೀಲಿಸಲಾಗುವುದು. ಹಣಕಾಸು ಇಲಾಖೆಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಸರಣೆ ಮಾಡಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
7
+ ಸುಗಮ ವ್ಯವಹಾರಕ್ಕಾಗಿ ಜಿಎಸ್‍ಟಿ ಪುರಾವೆಯನ್ನು ಸಮರ್ಪಕವಾಗಿ ಪರಿಶೀಲಿಸಲಾಗುತ್ತಿದೆ. ಆಡಿಟ್ ವರದಿಯಲ್ಲಿನ ಅಂಶಗಳು ಮರುಪರಿಶೀಲನೆಗೆ ಒಳಪಡಿಸಿದ್ದು, ಸರ್ಕಾರಕ್ಕೆ ಯಾವುದೇ ನಷ್ಟವಾಗದಂತೆ ಎಚ್ಚರಿಕೆ ವಹಿಸಲಾಗುವುದು. ಕರ್ನಾಟಕ ಪಾರದರ್ಶಕ ಕಾಯ್ದೆ ನಿಬಂಧನೆಗಳನ್ನು ಅನುಸರಿಸಲಾಗುವುದು.
8
+ ತಾಯ್ನಾಡಿಗೆ ಸುರಕ್ಷಿತವಾಗಿ ಮರಳಿದ 235 ಭಾರತೀಯರು
9
+ 2023 ರ ಅಕ್ಟೋಬರ್ 11 ರಂದು ನಡೆದ ಟೆಂಡರ್ ಪರಿಶೀಲನಾ ಸಂಸ್ಥೆಯ ಮೊದಲ ಸಭೆಯಲ್ಲಿ ಟೆಂಡರ್ ಪ್ರಸ್ತಾವನೆಗಳನ್ನು ಸ���ಕ್ಷ್ಮವಾಗಿ ಪರಿಶೀಲಿಸಲಾಗಿದೆ ಎಂದು ವಿವರಿಸಿದ್ದಾರೆ. 4 ಜಿ ವಿನಾಯಿತಿಯಲ್ಲಿ ಕೆಲವು ಲೋಪಗಳು ಕಂಡುಬಂದಿವೆ. ಅವುಗಳನ್ನು ಸರಿಪಡಿಸಲು ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ಜೊತೆಗೆ ಮುಕ್ತ ಟೆಂಡರ್ ವ್ಯವಸ್ಥೆಯನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ.
eesanje/url_46_330_12.txt ADDED
@@ -0,0 +1,9 @@
 
 
 
 
 
 
 
 
 
 
1
+ ಪ್ರಭಾವಿಗಳಿಗೆ ನೋಟಿಸ್ ನೀಡಲು ಆದಾಯ ತೆರಿಗೆ ಇಲಾಖೆ ಸಜ್ಜು
2
+ ಬೆಂಗಳೂರು,ಅ.14- ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ನಿವಾಸದಲ್ಲಿ ಸಿಕ್ಕಿಬಿದ್ದಿದ್ದ 42 ಕೋಟಿ ನಗದು ಹಾಗೂ ಚಿನ್ನಾಭರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಭಾವಿಗಳಿಗೆ ನೋಟಿಸ್ ನೀಡಲು ಐಟಿ ಸಜ್ಜಾಗಿದೆ. ಈ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿವಾಸ, ಕಚೇರಿ ಮತ್ತು ಸಂಬಂಧಿಕರ ಮೇಲೆ ಐಟಿ ಅಧಿಕಾರಿಗಳು ಸತತವಾಗಿ ಮೂರು ದಿನ ಶೋಧ ನಡೆಸಿದ್ದರು.
3
+ ಅದಾದ ನಂತರ ರಾಜ್ಯದಲ್ಲಿ ನಡೆದಿರುವ ಅತಿದೊಡ್ಡ ಐಟಿ ದಾಳಿ ಇದಾಗಿದ್ದು, 42 ಕೋಟಿ ನಗದು, ಕೋಟ್ಯಂತರ ರೂ. ಬೆಲೆ ಬಾಳುವ ಚಿನ್ನಾಭರಣಗಳು ಸಿಕ್ಕಿಬಿದ್ದಿರುವುದರ ಹಿಂದೆ ನಿಜವಾದ ನಾಯಕನನ್ನು ಪತ್ತೆ ಹಚ್ಚಲು ಐಟಿ ಮುಂದಾಗಿದೆ. ಗುರುವಾರ ಸಂಜೆ 6 ಗಂಟೆಯಿಂದ ಸತತ 40 ಗಂಟೆಗೂ ಅಧಿಕ ಕಾಲ ಅಂಬಿಕಾಪತಿ ಮನೆ, ಸಂಬಂಧಿಕರ ನಿವಾಸ, ಕಚೇರಿ ಸೇರಿದಂತೆ ಇಂಚಿಂಚು ಮಾಹಿತಿಯನ್ನು ಹೊರತೆಗೆಯುತ್ತಿರುವ ಐಟಿ ಅಧಿಕಾರಿಗಳಿಗೆ ಇದರ ಹಿಂದೆ ಕಾಣದ ಪ್ರಭಾವಿಗಳ ಕೈವಾಡ ಇರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಮಾನ್ಯತಾಟೆಕ್ ಪಾರ್ಕ್‍ನಲ್ಲಿ ಅಂಬಿಕಾಪತಿ ಒಡೆತನಕ್ಕೆ ಸೇರಿದ ಮನೆಯ ಲಾಕರ್‍ನೊಳಗೆ ಸಿಕ್ಕಿರುವ ಸೂಟ್‍ಕೇಸ್ ಹಲವರಿಗೆ ಕಂಟಕವಾಗುವ ಸಾಧ್ಯತೆ ಇದೆ.
4
+ ಸೈನಿಕರ ಬಲಿದಾನಕ್ಕಿಂತ ಹೆಚ್ಚಾಯ್ತಾ ಕ್ರಿಕೆಟ್ : ಬಿಸಿಸಿಐ ವಿರುದ್ಧ ರೊಚ್ಚಿಗೆದ್ದ ದೇಶಪ್ರೇಮಿಗಳು
5
+ ಏಕೆಂದರೆ ಇದರಲ್ಲಿ ಉಮಾಪತಿ ಕೆಲವು ಮಹತ್ವದ ದಾಖಲೆಗಳನ್ನು ಸಂಗ್ರಹಿಸಿಟ್ಟಿದ್ದರು ಎನ್ನಲಾಗಿದೆ. ಪ್ರಾರಂಭದಲ್ಲಿ ಇದನ್ನು ತೆಗೆಯಲು ಹಿಂದೇಟು ಹಾಕಿದಾಗಲೇ ಐಟಿ ಅಕಾರಿಗಳಿಗೆ ಮತ್ತಷ್ಟು ಅನುಮಾನ ಮೂಡಿಬಂದು ಬಲವಂತವಾಗಿ ತೆರೆಸಿದರು. ಆಗ ಸೂಟ್‍ಕೇಸ್‍ನಲ್ಲಿದ್ದ ಕೆಲವು ದಾಖಲೆಗಳು ಈಗ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಕೊಟ್ಟಿದೆ.
6
+ ಈ ಹಣ ಎಲ್ಲಿಂದ ಬಂತು? ಯಾರಿಗೆ ಕೊಡಬೇಕಿತ್ತು? ಯಾರಿಂದ ಸಂಗ್ರಹಿಸಲಾಗಿತ್ತು? ಎಂಬುದರ ಬಗ್ಗೆ ದಾಖಲೆಗಳಲ್ಲಿ ಉಲ್ಲೇಖ ಮಾಡಲಾಗಿದೆ. ಹಣವನ್ನು ಬೆಂಗಳೂರಿನಿಂದ ಚೆನ್ನೈಗೆ ತೆಗೆದುಕೊಂಡು ಹೋಗಿ ಯಾರಿಗೆ ತಲುಪಿಸಬೇಕು, ಅಲ್ಲಿಂದ ಎಲ್ಲಿಗೆ ಹೋಗಬೇಕು ಹೀಗೆ ಪ್ರತಿಯೊಂದು ವಿವರಗಳನ್ನು ನಮೂದಿಸಲಾಗಿದೆ ಎಂದು ತಿಳಿದುಬಂದಿದೆ.
7
+ ಈ ದಾಖಲೆಗಳನ್ನೇ ಆಧಾರವಾಗಿಟ್ಟುಕೊಂಡಿರುವ ಐಟಿ ಅಧಿಕಾರಿಗಳು ಕೆಲವು ಪ್ರಭಾವಿ ವ್ಯಕ್ತಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಸಿದ್ದತೆ ನಡೆಸಿದೆ. ಮೇಲ್ನೋಟಕ್ಕೆ ಪ್ರಕರಣದಲ್ಲಿ ಪ್ರಭಾವಿ ವ್ಯಕ್ತಿಗಳು, ಗುತ್ತಿಗೆದಾರರು, ಮಧ್ಯವರ್ತಿಗಳು ಹೀಗೆ ಹಲವರು ಶಾಮೀಲಾಗಿರುವ ಸಾಧ್ಯತೆ ಇರುವುದರಿಂದ ತನಿಖೆಯನ್ನು ವಿವಿಧ ಆಯಾಮಗಳಲ್ಲಿ ಕೈಗೆತ್ತಿಕೊಳ್ಳಲು ಐಟಿ ಮುಂದಾಗಿದೆ.
8
+ ಪಂಚರಾಜ್ಯಗಳ ಚುನಾವಣೆಯಲ್ಲಿ 42 ಕೋಟಿ ರೂ. ಪ್ರತಿಧ್ವನಿ
9
+ ಪ್ರಭಾವಿಗಳಿಗೆ ನಡುಕ:ಗುತ್ತಿಗೆದಾರನ ಬಳಿ ಐದು ಕೋಟಿಗೂ ಹೆಚ್ಚು ಹಣ ಸ���ಕ್ಕಿಬಿದ್ದಿರುವುದರಿಂದ ಇದೀಗ ಪ್ರಭಾವಿ ರಾಜಕಾರಣಿಗಳು ಮತ್ತು ಗುತ್ತಿಗೆದಾರರಿಗೆ ನಡುಕ ಆರಂಭವಾಗಿದೆ. ಮೂಲಗಳ ಪ್ರಕಾರ ಸದ್ಯದಲ್ಲೇ ಹಲವರಿಗೆ ನೋಟಿಸ್ ನೀಡಲು ಐಟಿ ಸಜ್ಜಾಗಿರುವುದರಿಂದ ಯಾರ ಕೊರಳಿಗೆ ಹುರುಳಾಗಲಿದೆ ಎಂಬುದೇ ಯಕ್ಷ ಪ್ರಶ್ನೆಯಾಗಿದೆ.
eesanje/url_46_330_2.txt ADDED
@@ -0,0 +1,9 @@
 
 
 
 
 
 
 
 
 
 
1
+ ರಾಜ್ಯದ ಕರಾವಳಿ, ಒಳನಾಡಿನಲ್ಲಿ 2 ದಿನ ಮಳೆ ಸಾಧ್ಯತೆ
2
+ ಬೆಂಗಳೂರು, ಅ.16-ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಎರಡು ದಿನಗಳ ಕಾಲ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ನೈರುತ್ಯ ಮುಂಗಾರು ಮುಕ್ತಾಯದ ಅವಧಿಯಾಗಿರುವುದರಿಂದ ಸಹಜವಾಗಿ ಉತ್ತಮ ಮಳೆಯಾಗಬೇಕು. ಆದರೆ, ಚದುರಿದಂತೆ ಸಾಧಾರಣ ಮಳೆಯಾಗುತ್ತಿದೆ.
3
+ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಆದರೆ, ಈಶಾನ್ಯ ಹಿಂಗಾರು ಮಳೆ ಪ್ರಾರಂಭವಾಗುವ ಸ್ಪಷ್ಟ ಲಕ್ಷಣಗಳು ಈತನಕ ಗೋಚರಿಸುತ್ತಿಲ್ಲ. ಮುಂಗಾರು ಅವ ಮುಗಿಯುತ್ತಿದ್ದಂತೆ ಹಿಂಗಾರು ಆರಂಭಗೊಳ್ಳುವುದು ವಾಡಿಕೆ. ಈ ಬಾರಿ ಅಂತಹ ಯಾವ ಸುಳಿವು ಇದುವರೆಗೆ ಕಂಡುಬಂದಿಲ್ಲ ಎಂದು ತಜ್ಞರು ಹೇಳಿದ್ದಾರೆ.
4
+ ಕಾಂಗ್ರೆಸ್ ಕೇವಲ ‘ಲೂಟಿ ಗ್ಯಾರಂಟಿ’ ಮಾತ್ರ ನೀಡಬಲ್ಲದು : ನಡ್ಡಾ
5
+ ಅರಬ್ಬೀ ಸಮುದ್ರದ ಲಕ್ಷ ದ್ವೀಪದ ಬಳಿ ವಾಯುಭಾರ ಕುಸಿತವಾಗಿದ್ದು, ಅದರಿಂದ ರಾಜ್ಯದ ಮೇಲೆ ಹೆಚ್ಚಿನ ಪರಿಣಾಮ ಉಂಟಾಗುವುದಿಲ್ಲ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಚದುರಿದಂತೆ ಹಗರದಿಂದ ಸಾಧಾರಣ ಮಳೆ ನಿರೀಕ್ಷಿಸಬಹುದಾಗಿದೆ.
6
+ ಇನ್ನೆರಡು ದಿನ ಕರಾವಳಿ ಹಾಗೂ ಒಳನಾಡಿನಲ್ಲಿ ಮಳೆ ಮುಂದುವರೆಯಲಿದೆ. ಕಳೆದ ಎರಡು ವಾರದಲ್ಲೂ ರಾಜ್ಯದಲ್ಲಿ ವಾಡಿಕೆ ಪ್ರಮಾಣದ ಮಳೆಯಾಗಿಲ್ಲ. ಬಹಳಷ್ಟು ಕಡೆಗಳಲ್ಲಿ ಒಣಹವೆ ಮುಂದುವರೆದಿದ್ದು, ತೇವಾಂಶ ಕೊರತೆಯಿಂದ ಬೆಳೆಗಳು ಒಣಗುತ್ತಿವೆ.
7
+ ಮುಂಗಾರು ಮಳೆಯ ಮರಳುವಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಇನ್ನೆರಡು ದಿನಗಳಲ್ಲಿ ಮುಗಿಯುವ ಸಾಧ್ಯತೆಗಳಿವೆ. ಮುಂಗಾರು ಮುಗಿಯುತ್ತಿದ್ದಂತೆ ಹಿಂಗಾರು ಮಳೆ ಆರಂಭವಾಗಬೇಕು. ಆದರೆ, ಅಂತಹ ಯಾವ ಸುಳಿವು ಈಗ ಕಂಡುಬರುತ್ತಿಲ್ಲ. ಹಿಂಗಾರು ಮಳೆ ಆರಂಭಗ್ಳೊಳ್ಳುವ ಮುನ್ನ ತಂಪಾದ ಮೇಲ್ಮೈ ಗಾಳಿ ಬೀಸಬೇಕು. ಇದರ ಬಲಿಗೆ ಒಣ ಹವೆ ಇದ್ದು, ಕೆಲವೆಡೆ ಪ್ರಖರ ಬಿಸಿಲಿರುವುದು ಕಂಡುಬರುತ್ತಿದೆ.
8
+ ಇಸ್ಲಾಮಿಕ್ ರಾಷ್ಟ್ರಗಳ ವಿರುದ್ಧ ಹರಿಹಾಯ್ದ ನಿಕ್ಕಿ ಹ್ಯಾಲೆ
9
+ ಇದರಿಂದ ಹಿಂಗಾರು ಪ್ರಾರಂಭವೂ ವಿಳಂಬವಾಗುವುದನ್ನು ಅಲ್ಲಗಳೆಯಲಾಗದು ಎನ್ನುತ್ತಾರೆ ಹವಾಮಾನ ತಜ್ಞರು. ಮುಂಗಾರು ಮಳೆಯ ಆರಂಭವೂ ವಿಳಂಬವಾಗಿತ್ತು. ಜುಲೈ ತಿಂಗಳನ್ನು ಹೊರತುಪಡಿಸಿದರೆ, ಜೂನ್, ಆಗಸ್ಟ್, ಸೆಪ್ಟೆಂಬರ್‍ನಲ್ಲೂ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಅಕ್ಟೋಬರ್‍ನಲ್ಲೂ ಅದೇ ಪರಿಸ್ಥಿತಿ ಮುಂದುವರೆಯುತ್ತಿದೆ. ಹೀಗಾಗಿ ರೈತರು ಮಳೆಗಾಗಿ ಆಕಾಶದತ್ತ ಮುಖಮಾಡುವಂತಾಗಿದೆ.
eesanje/url_46_330_3.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬ್ರ್ಯಾಂಡ್ ಬೆಂಗಳೂರು ಅನ್ನುವುದು ಕೆಲವರಿಗೆ ಬಿರಿಯಾನಿ! : ಹೆಚ್‌ಡಿಕೆ
2
+ ಬೆಂಗಳೂರು, ಅ.15-ಬ್ರ್ಯಾಂಡ್ ಹೆಸರಿನಲ್ಲಿ ರಾಜ್ಯ ಕಾಂಗ್ರೇಸ್ ಸರ್ಕಾರ ಹಣ ಕೊಳ್ಳೆ ಹೊಡೆಯಲು ಕಂಡ ಕಂಡ ಕಡೆ ಬೇಲಿ ಹಾಕಲು ಬೆಂಗಳೂರಿನ ನಾಲ್ಕೂ ದಿಕ್ಕುಗಳಲ್ಲಿಯೂ ಕಸದ ಡಂಪಿಂಗ್ ಯಾರ್ಡ್‍ಗಳನ್ನು ಸೃಷ್ಟಿ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
3
+ ದಿನವೊಂದಕ್ಕೆ 1,630 ಟನ್ ಕಸ ಸುರಿದರೆ ಅಲ್ಲಿನ ಜನರ ಪಾಡೇನು ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಹೆಚ್‍ಡಿಕೆ ಪ್ರಶ್ನಿಸಿದ್ದಾರೆ. ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ ಪರ್ಸಂಟೇಜ್ ಪಟಾಲಂ ಈಗ ಕಸಕ್ಕೂ ಬಾಯಿ ಹಾಕಿದೆ. ಬ್ರ್ಯಾಂಡ್ ಬೆಂಗಳೂರು ಅನ್ನುವುದು ಕೆಲವರಿಗೆ ಬಿರಿಯಾನಿ. ಅದರ ಒಳಗುಟ್ಟು ರಟ್ಟಾಗಿದೆ ಎಂದು ಅವರು ಟೀಕಿಸಿದ್ದಾರೆ.
4
+ ಮಂಡೂರು ಜನ ಎದುರಿಸಿದ ಕಷ್ಟ ಅಷ್ಟಿಷ್ಟಲ್ಲ. ಯಶವಂತಪುರ ಕ್ಷೇತ್ರದ ಜನ ಈ ನರಕದಲ್ಲೇ ಬೇಯುತ್ತಿದ್ದಾರೆ. ದೊಡ್ಡಬಳ್ಳಾಪುರದ ಜನರೂ ಕಸದ ಕಷ್ಟಕ್ಕೆ ಸಿಲುಕಿದ್ದಾರೆ. ಈಗ ರಾಮನಗರದ ಸರದಿ.
5
+ ಪಾಕಿಸ್ತಾನ ಹೋರಾಟದ ಪ್ರವೃತ್ತಿ ತೋರಿಸಿಲ್ಲ : ರಮೀಜ್ ರಾಜಾ
6
+ ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳನ್ನು ಕಸದ ತೊಟ್ಟಿಗಳನ್ನಾಗಿ ಮಾಡಿ ಸಾವಿನ ದಿಬ್ಬಗಳನ್ನು ನಿರ್ಮಿಸಲು ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಹುನ್ನಾರ ಹೂಡಲಾಗಿದೆ. ಇದು ಘೊರ ಅಕ್ಷಮ್ಯ ಹಾಗೂ ರಾಜಧಾನಿಯ ಆಸುಪಾಸಿನಲ್ಲಿ ಈಗಾಗಲೇ ಕೆಟ್ಟಿರುವ ಪರಿಸರವನ್ನು ಮತ್ತಷ್ಟು ಹಾಳು ಮಾಡುವ ದುಷ್ಟ ತಂತ್ರವಷ್ಟೇ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
7
+ ಬೆಂಗಳೂರು ಅಕ್ಕಪಕ್ಕದ ಜಿಲ್ಲೆಗಳು ಕೃಷಿ, ತೋಟಗಾರಿಕೆ, ಹೈನುಗಾರಿಕೆಯಲ್ಲಿ ಸಮೃದ್ಧವಾಗಿವೆ. ಅಲ್ಲಿನ ಪರಿಸರ, ಜೀವ ವೈವಿಧ್ಯಕ್ಕೆ ಹಾನಿ ಮಾಡಿ, ಜನಜೀವನವನ್ನು ಸರ್ವನಾಶ ಮಾಡುವುದು ಒಂದೆಡೆಯಾದರೆ; ಹೊಸ ಡಂಪಿಂಗ್ ಯಾರ್ಡ್ ಗಳ ಮೂಲಕ ಕೋಟಿಗಟ್ಟಲೇ ಹಣವನ್ನು ಜೇಬಿಗೆ ಡಂಪ್ ಮಾಡಿಕೊಳ್ಳುವ ಖತರ್ನಾಕ್ ಐಡಿಯಾ ಇನ್ನೊಂದೆಡೆ ಅಡಗಿದೆ ಎಂದು ಆರೋಪಿಸಿದ್ದಾರೆ.
8
+ ಜಗತ್ತಿನಲ್ಲಿಯೇ ಉತ್ಕೃಷ್ಟ ಮಾವು, ರೇಷ್ಮೆ, ಹಣ್ಣು, ತರಕಾರಿ ಬೆಳೆಯುತ್ತಿರುವ ರಾಮನಗರ, ಬಿಡದಿ ಬಳಿ ನೂರು ಎಕರೆ ಪ್ರದೇಶದಲ್ಲಿ ಕಸ ಸುರಿಯಲು ಉಪ ಮುಖ್ಯಮಂತ್ರಿಗಳ ದೊಡ್ಡ ಹುನ್ನಾರದ ಒಳ ಉದ್ದೇಶ ಸ್ಪಷ್ಟ. ಈಗಾಗಲೇ ವೃಷಭಾವತಿ ಸೇರಿ ರಾಮನಗರ ಜಿಲ್ಲೆಯ ಜಲಮೂಲಗಳು ಪೂರ್ಣ ಹಾಳಾಗಿ ಅಂತರ್ಜಲವೂ ಕಲುಷಿತವಾಗಿದೆ ಎಂದಿದ್ದಾರೆ.
9
+ ರೋಹಿತ್ ಶರ್ಮಾ ಒನ್ ಮ್ಯಾನ್ ಆರ್ಮಿ : ಅಖ್ತರ್ ಬಣ್ಣನೆ
10
+ ನೂರು ಎಕರೆ ಸರ್ಕಾರಿ ಭೂಮಿಯನ್ನು ಅನಾಮತ್ತಾಗಿ ಎಗರಿಸಿಬಿಡುವ ರಿಯಲ್ ಎಸ್ಟೇಟ್ ಬ್ರ್ಯಾಂಡೆಡ್ ಪರಿಕಲ್ಪನೆ ಇದಲ್ಲದೆ ಮತ್ತೇನು ಅಕ್ಕಪಕ್ಕದ ಜಿಲ್ಲೆಗಳ ಜನರ ಸಮಾ ಮೇಲೆ ಬ್ರ್ಯಾಂಡ್ ಬೆಂಗಳೂರು ಕಟ್ಟಿದರೆ ಅದಕ್ಕೆ ನಮ್ಮ ತೀವ್ರ ವಿರೋಧವಿದೆ. ಕಾಂಗ್ರೆಸ್ ಸರ್ಕಾರವು ಈ ನಿರ್ಧಾರವನ್ನು ಕೈಬಿಡದಿದ್ದರೆ ಜನರು ಬೀದಿಗೆ ಬೀದಿಗಿಳಿಯುತ್ತಾರೆ ಎಂದು ಅವರು ಎಚ್ಚರಿಸಿದ್ದಾರೆ.
eesanje/url_46_330_4.txt ADDED
@@ -0,0 +1,5 @@
 
 
 
 
 
 
1
+ ವಿಮಾನದಲ್ಲಿ ಪಾಸ್ತಾ ಮಷೀನ್‍ನಲ್ಲಿ ಚಿನ್ನ ಸಾಗಾಟ : ಪ್ರಯಾಣಿಕನ ಬಂಧನ
2
+ ಬೆಂಗಳೂರು,ಅ.15- ದುಬೈ ವಿಮಾನದ ಮೂಲಕ ಪಾಸ್ತಾ ಮಾಡುವ ಮಷೀನ್‍ನಲ್ಲಿ ಚಿನ್ನ ಅಡಗಿಸಿಟ್ಟುಕೊಂಡು ನಗರಕ್ಕೆ ಬಂದ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ 35.37 ಲಕ್ಷ ಮËಲ್ಯದ 598 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
3
+ ಬೆಂಗಳೂರು ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದ ಪ್ರಯಾಣಿಕನೊಬ್ಬನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಪಾಸ್ತಾ ಮಾಡುವ ಮಷೀನ್ ಪತ್ತೆಯಾಗಿದೆ. ಆ ಮಷೀನ್‍ನ್ನು ಅಧಿಕಾರಿಗಳು ಸೂಕ್ಷ್ಮವಾಗಿ ಗಮನಿಸಿದಾಗ ಮಷೀನ್ ಮೂಲಕ ಅಕ್ರಮ ಚಿನ್ನ ಸಾಗಾಟ ಮಾಡುತ್ತಿರುವುದು ತಿಳಿದು ಮಷೀನ್‍ಗೆ ಅಳವಡಿಸಿದ್ದ ಬೋಲ್ಟ್ ಮತ್ತು ಸ್ಕ್ರೂ ಕೂಲಂಕುಷವಾಗಿ ಪರಿಶೀಲಿಸಿದಾಗ ಚಿನ್ನದಲ್ಲಿ ಅವುಗಳನ್ನು ಮಾಡಿಸಿ ಸಿಲ್ವರ್ ಕೋಟ್ ಮಾಡಿರುವುದು ಕಂಡುಬಂದಿದೆ.
4
+ ಪಾಕಿಸ್ತಾನ ಹೋರಾಟದ ಪ್ರವೃತ್ತಿ ತೋರಿಸಿಲ್ಲ : ರಮೀಜ್ ರಾಜಾ
5
+ ಕೂಡಲೆ ಆ ಮಷೀನ್ ಅನ್ನು ಕಸ್ಟಮ್ಸ್ ಅಧಿಕಾರಿಗಳು ತೆರೆದು ಬರೊಬ್ಬರಿ 35,37,768 ರು. ಮೌಲ್ಯದ 598 ಗ್ರಾಂ ಚಿನ್ನ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಪ್ರಯಾಣಿಕನನ್ನು ಕೂಲಂಕುಷವಾಗಿ ವಿಚಾರಣೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
eesanje/url_46_330_5.txt ADDED
@@ -0,0 +1,5 @@
 
 
 
 
 
 
1
+ ಆಹಾರ ತಜ್ಞ ಕೆ.ಸಿ.ರಘು ಅನಾರೋಗ್ಯದಿಂದ ನಿಧನ
2
+ ಬೆಂಗಳೂರು- ವಿಜ್ಞಾನ ಲೋಕ, ರಘು ಬುಕ್ಸ್ , ಜ್ಞಾನ, ತತ್ವಶಾಸ್ತ್ರ ಮತ್ತು ಧರ್ಮ ಎಂಬ ಹೊಸ ಪರಿಕಲ್ಪನೆಯ ಕಾರ್ಯಕ್ರಮವನ್ನು ಪ್ರಸ್ತುತಪಡಿಸುತ್ತಿದ್ದ ನಾಡಿನ ಹೆಸರಾಂತ ಆಹಾರ ತಜ್ಞ, ಅಂಕಣಕಾರ ಕೆ.ಸಿ. ರಘು ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.
3
+ ಕೆ.ಸಿ. ರಘು ಅವರು ಅನೇಕ ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವಲ್ರ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದರು. ಅನೇಕ ದಿನಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆಯುತ್ತಿದ್ದರು. ಸಾಮಾನ್ಯ ವಿಜ್ಞಾನ ಮತ್ತು ಆರ್ಥಿಕತೆಯ ವಿಷಯಗಳನ್ನು ಅತಿಥಿ ಉಪನ್ಯಾಸಕರಾಗಿ ನಿರ್ವಹಿಸಿದ್ದಾರೆ. ಅವರು ಸ್ಥಾಪಿಸಿದ ಪ್ರಿಸ್ಟೀನ್ ಆಗ್ರ್ಯಾನಿಕ್ಸ್ ಎಂಬ ಸಂಸ್ಥೆಯಲ್ಲಿ ನವಜಾತ ಶಿಶುಗಳಲ್ಲಿ ಕಂಡುಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರವನ್ನು ಸಂಶೋಧನೆಯಿಂದ ಕಂಡುಹಿಡಿದು, ದೇಶಾದ್ಯಂತ ಹಾಗೂ ವಿದೇಶಕ್ಕೂ ಒದಗಿಸುತ್ತಿದ್ದರು.
4
+ ಶಾಹೀನ್ ಶಾ ಆಫ್ರಿದಿಗೆ ರವಿಶಾಸ್ತ್ರಿ ಹಿಗ್ಗಾಮುಗ್ಗಾ ಕ್ಲಾಸ್
5
+ ಈ ಕಾರ್ಯದಿಂದ ಸುಮಾರು 5 ಸಾವಿರ ನವಜಾತ ಶಿಶುಗಳನ್ನು ಸಾವಿನ ದವಡೆಯಿಂದ ಪಾರು ಮಾಡಲಾಗಿತ್ತು.ಭಾರತದಲ್ಲಿ ಈ ರೀತಿಯ ಪರಿಹಾರ ಒದಗಿಸುವ ಏಕೈಕ ಸಂಸ್ಥೆ ಇದಾಗಿತ್ತು. ಕೆ.ಸಿ.ರಘು, ಅನೇಕ ವಿಷಯಗಳ ಆಳವಾದ ಆಸಕ್ತಿ ಮತ್ತು ಜ್ಞಾನವನ್ನು ಉಳ್ಳವರಾಗಿ ಸದಾ ಅಧ್ಯಯನದಲ್ಲಿ ತೊಡಗಿಸಿಕೊಂಡಿರುತ್ತಾರೆ. ಕೆ.ಸಿ. ರಘು, ಲೇಖಕರಾಗಿ ಆಹಾರಕ್ಕೆ ಸಂಬಂಧಪಟ್ಟ ಆಹಾರ ರಾಜಕೀಯ ಮತ್ತು ತುತ್ತು ತತ್ವ ಪುಸ್ತಕಗಳನ್ನು ಪ್ರಕಟಿಸಿದ್ದರು.
eesanje/url_46_330_6.txt ADDED
@@ -0,0 +1,3 @@
 
 
 
 
1
+ ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭ
2
+ ಮೈಸೂರು, ಅ.15- ದಸರಾ ಮಹೋತ್ಸವದ ಅಂಗವಾಗಿ ಇಂದು ಮೈಸೂರು ಅರಮನೆಯಲ್ಲಿ ರಾಜ ಮನೆತನದಿಂದ ಖಾಸಗಿ ದರ್ಬಾರ್ ನಡೆಯಿತು. ಮೈಸೂರು ಅರಮನೆಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ಬಹಳ ವಿಶೇಷವಾಗಿತ್ತು. ಇಂದು ಬೆಳಿಗ್ಗೆಯಿಂದಲೇ ಅರಮನೆ ಯಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿತು.
3
+ ಆನಂತರ ಅರಮನೆಯ ದರ್ಬಾರ್ ಹಾಲಿನಲ್ಲಿ ಇರಿಸಲಾಗಿರುವ ಸಿಂಹಾಸನಕ್ಕೆ ಯದುವೀರ್ ಅವರು ಮೊದಲು ಪೂಜೆ ಸಲ್ಲಿಸಿದರು. ಆನಂತರ ಸಿಂಹಾಸನ ರೂಢರಾಗಿ ಖಾಸಗಿ ದರ್ಬಾರ್ ನಡೆಸಿದರು. ಇದಕ್ಕೂ ಮುನ್ನ ಗಣಪತಿ ಪೂಜೆ, ಕಳಸ ಪೂಜೆ ನೆರವೇರಿಸಲಾಯಿತು.
eesanje/url_46_330_7.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಕಾಂಗ್ರೆಸ್ ಸರ್ಕಾರದಿಂದ ದಸರಾಗೂ ಕಳಂಕ : ಸಿ.ಟಿ.ರವಿ
2
+ ಬೆಂಗಳೂರು, ಅ.15- ಹಿರಿಯ ಕಲಾವಿದರ ಬಳಿಯೇ ಕಮಿಷನ್ ಕೇಳುತ್ತಿರುವ ಕಾಂಗ್ರೆಸ್ ಶೇ.60ರಷ್ಟು ಸರ್ಕಾರವಾಗಿದೆ ಎಂದು ಆರೋಪಿಸಿರುವ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಗುತ್ತಿಗೆದಾರರ ಬಳಿ ಕೋಟಿ ಕೋಟಿ ಹಣ ಪತ್ತೆಯಾಗುತ್ತಿರುವ ಪ್ರಕರಣವನ್ನು ಸಿಬಿಐ ತನಿಖಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
3
+ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾಡಹಬ್ಬಕ್ಕೆ ಕಳಂಕ ತರುವ ರೀತಿಯಲ್ಲಿ ಈ ಸರಕಾರದ ಹಗರಣಗಳು, ಭ್ರಷ್ಟಾಚಾರದ ಅಸ್ಥಿಪಂಜರಗಳು ಪ್ರತಿನಿತ್ಯ ಹೊರಕ್ಕೆ ಬರುತ್ತಿವೆ. ದಸರಾ ಉತ್ಸವದಲ್ಲಿ ಖ್ಯಾತ ಸರೋದ್ ವಾದಕ, ಪದ್ಮಶ್ರೀ ಪುರಸ್ಕøತ ರಾಜೀವ್ ತಾರಾನಾಥ್ ಅವರ ಕಾರ್ಯಕ್ರಮ ಆಯೋಜಿಸಲು 5 ಲಕ್ಷ ಕಾರ್ಯಕ್ರಮದ ಆಯೋಜನೆಗೆ 3 ಲಕ್ಷ ಲಂಚ ಎಂದಾದರೆ, ಶೇ.60 ಲಂಚ ಕೇಳಿದಂತಾಗಿದೆ. ಹಿರಿಯ ಕಲಾವಿದರ ಬಳಿಯೇ ಶೇ.60 ಲಂಚ ಕೇಳುವುದಾದರೆ ನಾಡಹಬ್ಬಕ್ಕೆ ಇದಕ್ಕಿಂತ ಕಳಂಕ ಬೇರೊಂದಿಲ್ಲ. ಇಷ್ಟು ಮಾತ್ರವಲ್ಲ; ಈ ಸರಕಾರ ಕಲಾವಿದರನ್ನೂ ಬಿಡುತ್ತಿಲ್ಲ; ಇನ್ನು ಬೇರೆಯವರನ್ನು ಬಿಡುವರೇ ಎಂದು ಪ್ರಶ್ನಿಸಿದರು.
4
+ ಗಾಜಾದಲ್ಲಿ ಆಹಾರ, ನೀರು ಇಲ್ಲದೆ 2.3 ಮಿಲಿಯನ್ ಜನರ ನರಳಾಟ
5
+ ಕಾಂಗ್ರೆಸ್ ಸರಕಾರದ ಕಮಿಷನ್ ದಂಧೆ ಕೇವಲ ಗುತ್ತಿಗೆದಾರರಿಗೆ, ಸರಕಾರಿ ಯೋಜನೆಗಳಿಗೆ ಸೀಮಿತವಾಗಿಲ್ಲ. ಅದು ಕಲಾವಿದರ ಗೌರವಧನದ ವರೆಗೂ ಕೈಚಾಚಿಬಿಟ್ಟಿದೆ. ಇದು ದುರಂತದ ಸಂಗತಿ ಮಾತ್ರವಲ್ಲ. ಸಾಂಸ್ಕøತಿಕ ಅಧಃಪತನದತ್ತ ಇವರು ರಾಜ್ಯವನ್ನು ಒಯ್ಯುತ್ತಿದ್ದಾರೆ ಎಂದು ಆಕ್ಷೇಪಿಸಿದರು.
6
+ ಮುಖ್ಯಮಂತ್ರಿಗಳು ನಮ್ಮದು ಭ್ರಷ್ಟಾಚಾರರಹಿತ ಆಡಳಿತ ಎನ್ನುತ್ತಾರೆ. ಅಬ್ಬರಿಸಿ ಬೊಬ್ಬಿರಿವ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಅವರ ಮೂಗಿನ ಕೆಳಗೇ ಇದು ನಡೆಯುತ್ತಿದೆ. ಬೇರೆ ಜಿಲ್ಲೆಗಳಲ್ಲಿ ಇನ್ನು ಪರಿಸ್ಥಿತಿ ಹೇಗಿರಬಹುದು ಎಂಬ ಪ್ರಶ್ನೆ ಕಾಡುತ್ತಿದೆ. ಒತ್ತಡದ ಮೂಲಕ ಪ್ರಕರಣ ಮುಚ್ಚಿಹಾಕಲು ಮುಂದಾದುದು ಇನ್ನಷ್ಟು ನಾಚಿಕೆಗೇಡಿನ ಸಂಗತಿ ಎಂದರು.
7
+ ಕೆಪಿಸಿಸಿ ಎಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಾಂಗ್ರೆಸ್ ಆಗಿ ಬದಲಾಗಿದೆ. ಹಿಂದೆ ನಮ್ಮ ಸರಕಾರದ ಮೇಲೆ ಆರೋಪ ಮಾಡುತ್ತಿದ್ದರು. ಈಗ ಗುತ್ತಿಗೆದಾರ ಅಂಬಿಕಾಪತಿ ಕರೋಡ್‍ಪತಿಯಾಗಿದ್ದಾರೆ. ಅವರ ಮನೆಯಲ್ಲಿ 42 ಕೋಟಿ, ಇನ್ನೊಬ್ಬ ಬಿಲ್ಡರ್ ಕೇತಮಾರನಹಳ್ಳಿ ಸಂತೋಷ್ ಕೃಷ್ಣಪ್ಪ ಮನೆಯಲ್ಲಿ 40 ಕೋಟಿ, ಹೀಗೆ ಕೋಟಿ ಕೋಟಿ ಹೊರಕ್ಕೆ ಬರುತ್ತಿದೆ. ಇವರಿಬ್ಬರೂ ರಾಜ್ಯದ ನಂಬರ್ 1, ನಂಬರ್ 2 ಅವರ ಬೇನಾಮಿಗಳು ಎಂಬ ಮಾಹಿತಿ ನಮಗಿದೆ ಎಂದು ವಿವರ ನೀಡಿದರು. ಇದರ ಸಿಬಿಐ ತನಿಖೆ ಮಾಡಿ ಎಂದು ಆಗ್ರಹಿಸಿದರು.
8
+ ನಂಬರ್ 1, ನಂಬರ್ 2 ಅವರು ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ನೂರಾರು ಬೇನಾಮಿಗಳನ್ನು ನೇಮಿಸಿದ್ದಾರೆ. ಇಬ್ಬರು ಬೇನಾಮಿಗಳು ಮಾತ್ರ ಸಿಕ್ಕಿದ್ದಾರೆ. ಈ ಹಣವೇ ಬೇನಾಮಿಗಳ ನೇಮಕಕ್ಕೆ ಸಾಕ್ಷಿ. ಕರ್ನಾಟಕವನ್ನು ಇವರು ಎಟಿಎಂ ಮಾಡಿಕೊಂಡಿದ್ದಾರೆ. ಹಿಂದೆ ಗೋವಿಂದರಾಜು ಅವರ ಡೈರಿ ಇದಕ್ಕೆ ಸಾಕ್ಷಿ ಆಗಿತ್ತು. ಆರ್‍ಜಿ ಯಾರು, ಎಸ್‍ಜಿ ಯಾರು, ಎಷ್ಟೆಷ್ಟು ಕೊಟ್ಟಿದ್ದಾಗಿ ಡೈರಿ ಸಾಕ್ಷಿ ಕೊಟ್ಟಿತ್ತು ಎಂದು ಅವರು ತಿಳಿಸಿದರು.
9
+ ಸಿಎಂ ಕುರ್ಚಿಗೆ ಟವೆಲ್ ಹಾಕಿದವರೊಬ್ಬರು ಚುನಾವಣೆ ಖರ್ಚಿಗೆ 2 ಸಾವಿರ ಕೋಟಿ ಕೊಡುವುದಾಗಿ ಹೇಳಿದ ಮಾಹಿತಿ ಇದೆ. ಹಾಲಿ ಮುಖ್ಯಮಂತ್ರಿಗಳು ಕಷ್ಟಪಟ್ಟು ಅದರ ಅರ್ಧ ವ್ಯವಸ್ಥೆ ಮಾಡುವುದಾಗಿ ಹೇಳಿದ ಮಾಹಿತಿ ಸಿಕ್ಕಿದೆ. ಇದು ಒಳಗಿನ ಸುದ್ದಿ. ಸತ್ಯವನ್ನು ಅವರೇ ಹೇಳಬೇಕು. ಇದನ್ನು ನೋಡಿದರೆ ಬ್ರ್ಯಾಂಡ್ ಬೆಂಗಳೂರು ಎಂದರೆ ಭ್ರಷ್ಟ ಬೆಂಗಳೂರು ಎಂದು ಅರ್ಥವಾಗುತ್ತದೆ ಎಂದರು.
10
+ ಬೆಂಗಳೂರಿನಲ್ಲಿ ಮತ್ತೊಂದು ಐಟಿ ದಾಳಿ, ಮತ್ತೆ 45 ಕೋಟಿ ರೂ. ಪತ್ತೆ!
11
+ ತನಿಖೆ ಆದರೆ ಸಂಗ್ರಹಿತ ಮೊತ್ತ, ನಂಬರ್ 1ರಿಂದ ಆದ ಸಂಗ್ರಹ, ನಂಬರ್ 2 ಸಂಗ್ರಹಿಸಿದ ಮೊತ್ತದ ವಿವರ ಹೊರಬರುತ್ತದೆ. ಅಂತರರಾಜ್ಯ ವಿಷಯವಾದ ಕಾರಣ ಸಿಬಿಐ ತನಿಖೆಗೆ ಆಗ್ರಹಿಸುವುದಾಗಿ ಅವರು ಪ್ರಶ್ನೆಗಳಿಗೆ ಉತ್ತರ ನೀಡಿದರು.
12
+ ಐಟಿ ದಾಳಿ ಹಿಂದೆ ರಾಜಕೀಯ ಇರುತ್ತದೆ ಎಂದು ಉಪ ಮುಖ್ಯಮಂತ್ರಿ ಹೇಳಿದರೆ, ಎಲ್ಲ ಖಾತೆ ತಮ್ಮ ಕೈಯಲ್ಲಿ ಇರುವಂತೆ ವರ್ತಿಸುವ ಪ್ರಿಯಾಂಕ್ ಖರ್ಗೆಯವರು ದಾಳಿ ವಿರುದ್ಧ ಅಣಿಮುತ್ತು ಉದುರಿಸುತ್ತಾರೆ ಎಂದು ಟೀಕಿಸಿದರು. ಏಕ್ ತರಫ್ ಸೆ ಆಲೂ ಡಾಲ್‍ನ, ದೂಸ್‍ರಾ ತರಫ್ ಸೆ ಸೋನಾ ನಿಕಾಲ್‍ನ ಎಂಬಂತೆ ದುಡ್ಡು ತೆಗೆದಿದ್ದಾರಾ ಎಂದು ವ್ಯಂಗ್ಯವಾಡಿದರು.
13
+ ಅಬಕಾರಿ ಸುಂಕ, ವಿದ್ಯುತ್ ದರ, ಸ್ಟ್ಯಾಂಪ್ ಶುಲ್ಕ ಹೀಗೆ ಎಲ್ಲ ಬೆಲೆ ಏರಿಸಿದ ಬಳಿಕ ಬಾಕಿ ಬಿಲ್ ನೀಡಲು ನೀವು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದೀರಿ. ಬಹುಶಃ ಪಂಜಾಬ್ ಬಳಿಕ ಕರ್ನಾಟಕದ ಸಿಎಂ ಕೂಡ ತನ್ನ ರಾಜ್ಯ ದಿವಾಳಿ ಆಗುತ್ತಿದೆ ಎಂದು ಮುನ್ಸೂಚನೆ ಕೊಟ್ಟಿದ್ದಾರೆ. ಇಷ್ಟಾದರೂ ಇವರು ನುಡಿದಂತೆ ನಡೆದಿದ್ದೇವೆ ಎಂದು ಜಾಹೀರಾತು ಕೊಡುವುದನ್ನು ನಿಲ್ಲಿಸಿಲ್ಲ ಎಂದು ಟೀಕಿಸಿದರು.
14
+ ಈ ಸರಕಾರ ವಸೂಲಿ ಸರಕಾರ ಎಂದು ಟ್ಯಾಗ್‍ಲೈನ್ ಕೊಟ್ಟರೆ ತಪ್ಪಾಗದು. ಹಾಗಾಗಿ ವಸೂಲಿಗೆ ಸಂಬಂಸಿ ಸಿಬಿಐ ತನಿಖೆಗೆ ಆಗ್ರಹಿಸುವುದಾಗಿ ತಿಳಿಸಿದರು. ದೇಶ ಮತ್ತು ನಾಡಿನ ಜನತೆಗೆ ಅವರು ನಾಡಹಬ್ಬ ದಸರಾ ಶುಭಾಶಯ ಕೋರಿದರು. ವಿಧಾನ ಪರಿಷತ್ ಸದಸ್ಯ ಮತ್ತು ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಮುಖಂಡ ಭಾಸ್ಕರ ರಾವ್ ಉಪಸ್ಥಿತರಿದ್ದರು.
eesanje/url_46_330_8.txt ADDED
@@ -0,0 +1,18 @@
 
 
 
 
 
 
 
 
 
 
 
 
 
 
 
 
 
 
 
1
+ ಬರಗಾಲವಿದ್ದರೂ ವೈಭವಕ್ಕೆ ಕೊರತೆ ಇಲ್ಲದಂತೆ ದಸರಾ ಆಚರಣೆ : ಸಿಎಂ
2
+ ಮೈಸೂರು,ಅ.15- ಬರಗಾಲವಿದ್ದರೂ ನಮ್ಮ ಸಂಪ್ರದಾಯ ಮತ್ತು ವೈಭವಕ್ಕೆ ಕೊರತೆ ಇಲ್ಲದಂತೆ ಅರ್ಥಪೂರ್ಣ ದಸರಾ ಆಚರಿಸಲಾಗುವುದು. ನಮ್ಮ ಪರಂಪರೆ ಮತ್ತು ಹಿರಿಮೆಯನ್ನು ಜಗತ್ತಿಗೆ ಸಾರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
3
+ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ ನೀಡಿ ಮಾತನಾಡಿದರು. ಕನ್ನಡ ನಾಡಿನ ಸಮೃದ್ಧಿ, ಪ್ರಗತಿ, ಸಂಸ್ಕೃತಿ ಮತ್ತು ವೈಭವವನ್ನು ದಸರಾ ಮೂಲಕ ಜಗತ್ತಿಗೆ ಸಾರುವ ಕೆಲಸವನ್ನು ನಾವು ಮಾಡುತ್ತೇವೆ. ಸಾಂಸ್ಕೃತಿಕವಾಗಿ ಬಹಳ ಶ್ರೀಮಂತ ನಾಡು ನಮ್ಮದು. ನಮ್ಮ ಜನ ಬಹಳ ಸುಸಂಸ್ಕೃತರು. ಪ್ರೀತಿ ಹಂಚುವವರು. ಎಲ್ಲಾ ಜಾತಿ ಧರ್ಮದವರನ್ನು ಅತ್ಯಂತ ಪ್ರೀತಿಯಿಂದ, ಘನತೆಯಿಂದ ನಡೆಸಿಕೊಳ್ಳುವುದು ನಮ್ಮ ಧರ್ಮ ಮತ್ತು ಕರ್ತವ್ಯ ಎಂದರು.
4
+ ಮುಂಗಾರು ಮಳೆ ಕೊರತೆಯಿಂದ 42 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದ್ದು 30 ಸಾವಿರ ಕೋಟಿ ರೂಪಾಯಿಗಳ ಬೆಳೆ ನಷ್ಟವಾಗಿದೆ. ಮಾನದಂಡಗಳ ಪ್ರಕಾರ 4850 ಕೋಟಿ ರೂಪಾಯಿ ಬೆಳೆ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. 116 ತಾಲ್ಲೂಕುಗಳಲ್ಲಿ ತೀವ್ರ ಬರ ಪೀಡಿತವಾಗಿವೆ.
5
+ ಹಿಂಗಾರು ಮಳೆ ಉತ್ತಮವಾಗಿ ಆಗಲಿ ಎಂದು ತಾಯಿ ಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥನೆ ಮಾಡಿದ್ದೇವೆ. ಮಳೆ ಇಲ್ಲದೆ ನಾಡಿನ ರೈತ ಕುಲ, ನಾಡಿನ ಜನತೆ ಕಷ್ಟದಲ್ಲಿದ್ದಾರೆ. ಆದ್ದರಿಂದ ಅದ್ದೂರಿ ಇಲ್ಲದ ವೈಭವಕ್ಕೆ ಕೊರತೆ ಇಲ್ಲದ ಅರ್ಥಪೂರ್ಣ ದಸರಾ ಆಚರಿಸಬೇಕು ಎನ್ನುವುದು ನಮ್ಮ ಉದ್ದೇಶ ಎಂದರು.
6
+ ಮೈಸೂರು ಅರಸರ ಕಾಲದಿಂದಲೂ ಅತ್ಯಂತ ವೈಭವದಿಂದ ಆಚರಿಸಲ್ಪಡುತ್ತಿರುವ ದಸರಾವನ್ನು ನಾನು ತಂದೆಯ ಹೆಗಲ ಮೇಲೆ ಕುಳಿತು ನೋಡುತ್ತಿದ್ದೆ . ರಾಜರ ಕಾಲ ಮುಗಿದು ಪ್ರಜಾರಾಜ್ಯ ಬಂದ ಬಳಿಕ ರಾಜ್ಯ ಸರ್ಕಾರ ನಾಡಹಬ್ಬವಾಗಿ ದಸರಾವನ್ನು ಆಚರಿಸಲಾಗುತ್ತಿದೆ. 10 ನೆಯ ದಿನ ಜಂಬೂ ಸವಾರಿ ನಡೆಯುತ್ತದೆ.
7
+ ದಸರಾ ಹಬ್ಬ ವಿಜಯನಗರ ಸಾಮ್ರಾಜ್ಯದ ಆಚರಣೆಯಾಗಿತ್ತು. ವಿಜಯನಗರ ಸಾಮ್ರಾಜ್ಯ ವೈಭವ ಯುತವಾಗಿತ್ತು. ಈ ಸಾಮ್ರಾಜ್ಯದಲ್ಲಿ ಮುತ್ತು ರತ್ನಗಳನ್ನು ಸೇರು ಬಳ್ಳ ಗಳಲ್ಲಿ ಅಳೆದು ಮಾರಾಟ ಮಾಡುತ್ತಿದ್ದರು. ಮೈಸೂರು ಅರಸರು ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜರಾಗಿದ್ದರು. ವಿಜಯನಗರ ಸಾಮ್ರಾಜ್ಯದ ಪತನ ನಂತರ ಮೈಸೂರು ಅರಸರು ದಸರಾ ಹಬ್ಬವನ್ನು ಆಚರಣೆ ಮಾಡಲು ಪ್ರಾರಂಭಿಸಿದರು. ಈಗ ರಾಜ್ಯ ಸರ್ಕಾರ ಆಚರಣೆ ಮಾಡುತ್ತಿದೆ ಎಂದು ಮಾಹಿತಿ ನೀಡಿದರು.
8
+ ಸರ್ವರಿಗೂ ಸಮಾನ ಅವಕಾಶ ಕಲ್ಪಿಸುವುದೇ ಸಾಮಾಜಿಕ ನ್ಯಾಯ. ಇದು ನಮ್ಮ ಸಂವಿಧಾನದ ಮತ್ತು ನಮ್ಮ ಸರ್ಕಾರದ ಆಶಯ. ಕೇವಲ ರಾಜಕೀಯ ಸ್ವಾತಂತ್ರ್ಯ ಸಾಲದು. ನಮ್ಮ ಜನರಿಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಒರಬೇಕು ���ಂದು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದರು. ನಾವು ಎಲ್ಲಾ ಜನರಿಗೆ ಸ್ಥಿರ ಆದಾಯವನ್ನು ಬರುವಂತೆ ಮಾಡಿ, ಕೊಂಡುಕೊಳ್ಳುವ ಶಕ್ತಿ ಬರುವಂತೆ ಮಾಡಲು 5 ಗ್ಯಾರೆಂಟಿ ಗಳನ್ನು ಘೋಷಣೆ ಮಾಡಿ 4 ಗ್ಯಾರೆಂಟಿ ಗಳನ್ನು ಜಾರಿಗೆ ತಂದಿದ್ದೇವೆ. 5 ನೇಯ ಗ್ಯಾರೆಂಟಿ ಯನ್ನು ಮುಂದಿನ ಜನವರಿಯಲ್ಲಿ ಜಾರಿಗೆ ತರುತ್ತೇವೆ ಎಂದರು.
9
+ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ದುಃಖವನ್ನು ದೂರ ಮಾಡುವ ದೇವಿ ದುರ್ಗಾದೇವಿ. ನಮ್ಮ ಕನ್ನಡ ಸಂಸ್ಕತಿಯನ್ನು ಬಿಂಬಿಸುವ ಆಚರಣೆ ದಸರಾ. ಭೂಮಿಯನ್ನು ಭಾಷೆಯನ್ನು ತಾಯಿಯ ಹೆಸರಿನಲ್ಲಿ ಕರೆಯುತ್ತೇವೆ. ನಮ್ಮ ನಾಡಿನ ಅಗ್ರ ದೇವತೆ ಚಾಮುಂಡಿತಾಯಿ. ಪ್ರಯತ್ನ ಮಾಡಿ ಸೋಲಬಹುದು ಆದರೆ ಪ್ರಾರ್ಥಿಸಿ ಸೋತಿಲ್ಲ ಎಂಬ ನಂಬಿಕೆ ಇಟ್ಟು ನಾಡಿಗೆ ಒಳ್ಳೆ ಮಳೆ ಬೆಳೆ ನೀಡುವಂತೆ ಪ್ರಾರ್ಥಿಸಲು ಇಲ್ಲಿ ಬಂದಿದ್ದೇವೆ ಎಂದರು.
10
+ ನಾವು ಚುನಾವಣೆಗೆ ಮುಂಚೆ ನಾನು ಮತ್ತು ಮುಖ್ಯಮಂತ್ರಿಗಳು ತಾಯಿ ಚಾಮುಂಡಿ ದೇವಿಗೆ 5 ಗ್ಯಾರೆಂಟಿ ಗಳನ್ನು ಜಾರಿಗೆ ತರಲು ಶಕ್ತಿ ನೀಡುವಂತೆ ಪ್ರಾರ್ಥನೆ ಮಾಡಿದ್ದೆವು. ಅದರಂತೆ ನಾವು ನುಡಿದಂತೆ ನಡೆದು 4 ಗ್ಯಾರೆಂಟಿ ಗಳನ್ನು ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು.
11
+ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಮಾತನಾಡಿ, ವಿಜಯನಗರ ಸಾಮ್ರಾಜ್ಯದ ವೈಭವವನ್ನು ನೆನಪಿಸುತ್ತಾ, ಮೈಸೂರು ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ ಆಡಳಿತ ಮೇಲೆ ಬೆಳಕು ಚೆಲ್ಲುವುದು ಮೈಸೂರು ದಸರಾ. ಮೈಸೂರು ದಸರಾ ನಾಡಿನ ಕಲೆ ಸಂಸೃತಿ, ಪರಂಪರೆಯನ್ನು ತಿಳಿಸುತ್ತದೆ. ನಾಲ್ವಡಿ ಕೃಷ್ಣರಾಜ ಒಡೆಯರ ಜನಪರ ಆಡಳಿತ, ಕಾಳಜಿ, ಬದ್ದತೆ ಮೈಸೂರು ದಸರಾದ ಪ್ರತೀಕ. ಮೈಸೂರಿನ ಜನರು ಶಾಂತಿಪ್ರಿಯರು ಎಂದು ತಿಳಿಸಿದರು.
12
+ ಕನ್ನಡದ ಶಾಂತಿ ಮಂತ್ರ ವಿಶ್ವಕ್ಕೆ ಪಸರಿಸಿ : ದಸರಾ ಮಹೋತ್ಸವಕ್ಕೆ ಹಂಸಲೇಖ ಚಾಲನೆ
13
+ ಸೆಪ್ಟೆಂಬರ್ 15 ರಂದು ಸಂವಿಧಾನ ಪೀಠಿಕೆಯನ್ನು ಮಾನ್ಯ ಮುಖ್ಯಮಂತ್ರಿಗಳು ಓದಿ, ಎಲ್ಲಾ ಕಚೇರಿಗಳು ಹಾಗೂ ಶಾಲಾ ಕಾಲೇಜುಗಳಲ್ಲಿ ಏಕ ಕಾಲಕ್ಕೆ ಓದಲಾಯಿತು. ಚಾಮುಂಡಿ ಅಭಿವೃದ್ಧಿ ಪ್ರಾಕಾರವನ್ನು ಮಾಡಿ ಚಾಮುಂಡಿ ಬೆಟ್ಟ ವನ್ನು ಅಭಿವೃದ್ಧಿ ಮಾಡಲು ಸರ್ಕಾರ ಕ್ರಮವಹಿಸಲಾಗಿದೆ. ಈ ಬಾರಿ ಮಳೆ ಕೊರತೆ ಆಗಿರುವುದರಿಂದ ಸಾಂಪ್ರದಾಯಿಕ ದಸರಾ ಆಚರಿಸುತ್ತಿದ್ದು, ಶಾಂತಿ ಸೌಹಾರ್ದತೆ ಯಿಂದ ಎಲ್ಲರೂ 9 ದಿನಗಳ ಕಾಲ ದಸರಾ ಆಚರಿಸೋಣ ಎಂದು ಮನವಿ ಮಾಡಿದರು.
14
+ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ ಟಿ ದೇವೇಗೌಡ ಅವರು ಮಾತನಾಡಿ ವಿಜಯ ದಶಮಿ ವಿಜಯದ ಒಂದು ಸಂಕೇತ. ಎಲ್ಲಾ ಶಕ್ತಿಯನ್ನು ಹೊಂದಿರುವ ತಾಯಿ ಚಾಮುಂಡೇಶ್ವರಿ ರಾಕ್ಷಸರನ್ನು ಸಂಹಾರ ಮಾಡಿದಳು. ಇಂದು ನಮ್ಮಲ್ಲಿಯೇ ರಾಕ್ಷಸ ಗುಣಗಳು ಇವೆ. ಇವನ್ನು ಬಿಟ್ಟು ಎಲ್ಲರೂ ಶಾಂತಿ ಸೌಹಾರ್ದತೆ ಯಿಂದ ನಡೆದುಕೊಂಡು ಹೋಗಬೇಕು ಎಂದು ಅವರು ಹೇಳಿದರು.
15
+ ಮಿನಿ ಬಸ್ ಕಂಟೈನರ್‌ಗೆ ಡಿಕ್ಕಿಯಾಗಿ 12 ಮಂದಿ ಸಾವು
16
+ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ದಸರಾಗೆ ಸೇರುತ್ತಾರೆ. 9 ದಿನಗಳ ಕಾಲ ನಡೆಯುವ ದಸರಾ ಆಚರಣೆಯಲ್ಲಿ ಎಲ್ಲರೂ ಭಾಗಿಗಳಾಗಿ ಎಂದರು.ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಸಾಂಪ್ರದಾಯಕವಾಗಿ, ಅರ್ಥಪೂರ್ಣವಾಗಿ ಉದ್ಘಾಟಿಸಿದರು.ಪಲ್ಲಕ್ಕಿಯಲ್ಲಿ ಅಲಂಕೃತ ಗೊಂಡಿದ್ದ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ನಾಡಿನಲ್ಲಿ ಉತ್ತಮ ಮಳೆ ಬೆಳೆಯಾಗಲಿ ಎಂದು ಪ್ರಾರ್ಥಿಸಿದರು.
17
+ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಮೈಸೂರು ಮೇಯರ್ ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾರ್ಜ್, ಪಶುಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಆಹಾರ ನಾಗರೀಕ ಫೂರೈಕೆ ಸಚಿವ ಕೆ.ಎಚ್.ಮುನಿಯಪ್ಪ,
18
+ ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ತನ್ವೀರ್ ಸೇಠ್, ಎ.ಆರ್.ಕೃಷ್ಣಮೂರ್ತಿ, ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಉಪ ಮೇಯರ್ ಡಾ.ಜಿ.ರೂಪ, ಜಿಲ್ಲಾಕಾರಿ ದಸರಾ ವಿಶೇಷಾಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಜಿ.ಪಂ. ಸಿಇಓ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ನಗರಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಶರೀಫ್ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿದ್ದರು.
eesanje/url_46_330_9.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬೆಂಗಳೂರಿನಲ್ಲಿ ಮತ್ತೊಂದು ಐಟಿ ದಾಳಿ, ಮತ್ತೆ 45 ಕೋಟಿ ರೂ. ಪತ್ತೆ!
2
+ ಬೆಂಗಳೂರು, ಅ.13- ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಂಗಳೂರಿನಲ್ಲಿ ಮತ್ತೊಬ್ಬ ಗುತ್ತಿಗೆದಾರರ ಮನೆಯ ಮೇಲೆ ದಾಳಿ ನಡೆಸಿದ್ದು, ಮತ್ತೆ 45 ಕೋಟಿ ರೂಪಾಯಿ ಪತ್ತೆ ಹಚ್ಚಿದ್ದಾರೆ. ಪಂಚರಾಜ್ಯಗಳ ವಿಧಾನಸಭೆ ಹಾಗೂ ಮುಂದಿನ ವರ್ಷದ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಳೆದ ಹತ್ತು ದಿನಗಳಿಂದ ರಾಜ್ಯದ ಬೆಂಗಳೂರು ಸೇರಿದಂತೆ ಹಲವು ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಿರಂತರವಾಗಿ ತಪಾಸಣೆ ನಡೆಸುತ್ತಿದ್ದಾರೆ. ಅಕ್ಟೋಬರ್ 12ರಂದು ಬೆಂಗಳೂರಿನ ಆರ್.ಟಿ.ನಗರ ಸೇರಿದಂತೆ ಇತರ ಭಾಗಗಳಲ್ಲಿ ತಪಾಸಣೆ ನಡೆಸಿ ನಲವತ್ತು ಕೋಟಿ ರೂಪಾಯಿಗಳಿಗೂ ಹೆಚ್ಚು ಹಣವನ್ನು ಪತ್ತೆ ಹಚ್ಚಲಾಗಿದೆ ಎಂದು ಹೇಳಲಾಗಿತ್ತು.
3
+ ಮತ್ತೊಂದು ಕಾರ್ಯಾಚರಣೆಯಲ್ಲಿ ಬೆಂಗಳೂರಿನ ರಾಜಾಜಿನಗರದ ಕೇತಮಾರನಹಳ್ಳಿಯಲ್ಲಿರುವ ಪ್ಲಾಟ್‍ವೊಂದರ ಮೇಲೆ ನಿನ್ನೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ. ಗುತ್ತಿಗೆದಾರ ಸಂತೋಷ್ ಅವರಿಗೆ ಸೇರಿದ ಈ ಪ್ಲಾಟ್‍ನಲ್ಲಿ 45 ಕೋಟಿ ರೂಪಾಯಿ ಹಣ ಪತ್ತೆಯಾಗಿದೆ.
4
+ ಪಾರ್ಟಿಯಲ್ಲಿ ಶೂಟೌಟ್ ಮೂವರ ಸಾವು
5
+ ಆರಂಭದಲ್ಲಿ ಐದು ಮಂದಿ ಅಧಿಕಾರಿಗಳು ತಪಾಸಣೆ ನಡೆಸಿದ್ದು, ಹಣ ಪತ್ತೆಯಾದ ಬಳಿಕ ಮತ್ತಷ್ಟು ಮಂದಿಯನ್ನು ಕರೆಸಿಕೊಂಡಿದ್ದಾರೆ. ಮೂರು ಟ್ರಂಕ್, ಮೂರು ಬ್ಯಾಗ್ ಹಾಗೂ ಎರಡು ಸೂಟ್‍ಕೇಸ್‍ನಲ್ಲಿ ಹಣವನ್ನು ಬಚ್ಚಿಡಲಾಗಿತ್ತು ಎಂಬ ಮಾಹಿತಿಗಳು ಹರಿದಾಡುತ್ತಿವೆ. ಒಟ್ಟು 15 ಮಂದಿ ಅಧಿಕಾರಿಗಳು ತಡ ರಾತ್ರಿವರೆಗೂ ತಪಾಸಣೆ ನಡೆಸಿ 32 ಬಾಕ್ಸ್‍ಗಳಲ್ಲಿ ಹಣವನ್ನು ತುಂಬಿಕೊಂಡು ಹೋಗಿದ್ದು, ಹಣದ ಬಗ್ಗೆ ಮಾಹಿತಿ ನೀಡುವಂತೆ ಸಂತೋಷ್‍ಗೆ ನೋಟಿಸ್ ನೀಡಲಾಗಿದೆ ಎಂದು ಹೇಳಲಾಗಿದೆ.
6
+ ಬಿಬಿಎಂಪಿ ವ್ಯಾಪ್ತಿಯಲ್ಲಿ ಗುತ್ತಿಗೆ ಕಾಮಗಾರಿಗಳಿಗೆ ಬಾಕಿ ಇದ್ದ ಬಿಲ್ ಪಾವತಿಗೆ ಕಮಿಷನ್ ಪಡೆಯಲಾಗುತ್ತಿದೆ. ಅದರಿಂದ ಸಂಗ್ರಹಿಸಿದ ಹಣವನ್ನು ಬೇರೆ ಬೇರೆ ಕಡೆ ಇರಿಸಲಾಗಿದ್ದು, ಅದರ ಜಾಡು ಹಿಡಿದು ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ ಎನ್ನಲಾಗಿದೆ.
7
+ ಆರ್.ಟಿ.ನಗರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಡೆಸಿದ ವಿಚಾರಣೆಯ ಮಾಹಿತಿ ಆಧಾರಿಸಿ ಆದಾಯ ತೆರಿಗೆ ಅಧಿಕಾರಿಗಳು ಮತ್ತಷ್ಟು ಮಂದಿಯ ಮೇಲೆ ಕಣ್ಣಿಟ್ಟಿದ್ದರು. ಎರಡು ಕಾರ್ಯಾಚರಣೆಯಲ್ಲಿ ಒಟ್ಟು 80 ಕೋಟಿ ರೂಪಾಯಿಗೂ ಅಕ ಮೊತ್ತದ ಹಣ ಪತ್ತೆ ಮಾಡಿದ್ದಾರೆ ಎಂಬ ಮಾಹಿತಿ ಇದೆ.
8
+ ಮಿನಿ ಬಸ್ ಕಂಟೈನರ್‌ಗೆ ಡಿಕ್ಕಿಯಾಗಿ 12 ಮಂದಿ ಸಾವು
9
+ ವಿಚಾರಣೆಯ ವೇಳೆ ಈ ಹಣ ವಿಧಾನಪರಿಷತ್‍ನ ಮಾಜಿ ಸದಸ್ಯ ಕಾಂತರಾಜು ಅವರಿಗೆ ಸೇರಿದೆ ಎಂದು ಸಂತೋಷ್ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿತ್ತು. ಆದರೆ ಇದಕ್ಕೆ ಸ್ಪಷ್ಟನೆ ನೀಡಿದ ಕಾಂತರಾಜು ಅವರು ಸಂತೋಷ್ ಯಾರು ಎಂದು ತಮಗೆ ಗೋತ್ತೆ ಇಲ್ಲ, ನಾನು ಆತನನ್ನು ನೋಡಿಯೇ ಇಲ್ಲ. ಆದಾಯ ತೆರಿಗೆ ಅಧಿಕಾರಿಗಳ ದಾಳಿಯಲ್ಲಿ ಸಿಕ್ಕ ಹಣಕ್ಕೂ ತಮಗೂ ಸಂಬಂಧವೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
10
+ ನಾನು ನೆಲಮಂಗಲದ ನನ್ನ ಮನೆಯಲ್ಲೇ ಇದ್ದೇನೆ, ಆದಾಯ ತೆರಿಗೆ ದಾಳಿಗೆ ಸಂಬಂಧಪಟ್ಟಂತೆ ನನಗೆ ಯಾವ ನೋಟಿಸ್ ಬಂದಿಲ್ಲ. ನನಗೆ ಯಾವ ಸಹೋದರರು ಇಲ್ಲ, ಹೀಗಾಗಿ ನನ್ನ ಸಹೋದರರನ್ನು ವಿಚಾರಣೆ ನಡೆಸುವ ಸಾಧ್ಯತೆಯೂ ಇಲ್ಲ ಎಂದಿದ್ದಾರೆ.
eesanje/url_46_331_1.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಹಿಂಗಾರು ಕೂಡ ಕೈಕೊಡಲಿದೆ, ಅಕ್ಟೋಬರ್‌ನಲ್ಲೂ  ಮಳೆ ಕೊರತೆ
2
+ ಬೆಂಗಳೂರು, ಅ.14- ನೈರುತ್ಯ ಮುಂಗಾರು ಹಂಗಾಮು ಮುಗಿಯುತ್ತಾ ಬಂದರೂ ರಾಜ್ಯದಲ್ಲಿ ಮಳೆ ಕೊರತೆ ಮಾತ್ರ ನಿವಾರಣೆಯಾಗಿಲ್ಲ. ಆಗಸ್ಟ್, ಸೆಪ್ಟೆಂಬರ್ ನಂತೆಯೇಅಕ್ಟೋಬರ್‌ನಲ್ಲೂಮಳೆ ಕೊರತೆ ಮುಂದುವರೆದಿದೆ. ಈಶಾನ್ಯ ಹಿಂಗಾರಿನ ಆರಂಭವೂ ಆಶಾದಾಯಕವಾಗಿಲ್ಲ.
3
+ ಜೂನ್‍ನಲ್ಲಿ ಮುಂಗಾರು ದುರ್ಬಲಗೊಂಡಂತೆ ಹಿಂಗಾರಿನ ಆರಂಭವೂ ದುರ್ಬಲವಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಮುಂಗಾರು ಮಳೆ ಯ ಅವಧಿ ಮುಗಿಯುತ್ತಿದ್ದು, ಹಿಂಗಾರು ಮಳೆ ಆರಂಭವಾಗುವ ಪರ್ವ ಕಾಲದಲ್ಲಿ ಮಳೆಯಾಗುವುದು ವಾಡಿಕೆ. ಆದರೂ ರಾಜ್ಯದಲ್ಲಿ ವಾಡಿಕೆ ಪ್ರಮಾಣದ ಮಳೆಯಾಗಿಲ್ಲ.
4
+ ಕಳೆದ ಎರಡು ವಾರಗಳಲ್ಲಿ ರಾಜ್ಯದ ದಕ್ಷಿಣ ಒಳನಾಡು , ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗಿದ್ದರೂ ವ್ಯಾಪಕ ಪ್ರಮಾಣದ ವಾಡಿಕೆ ಮಳೆಯಾಗಿಲ್ಲ. ಹೀಗಾಗಿ ರಾಜ್ಯದ ಬಹುತೇಕ ಭಾಗ ಬರದ ಕರಾಳ ಛಾಯೆಗೆ ಸಿಲುಕಿದೆ. ರಾಜ್ಯ ಸರ್ಕಾರವೂ 216 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಣೆ ಮಾಡಿದೆ.
5
+ ಸೋಶಿಯಲ್ ಮೀಡಿಯಾದಲ್ಲಿ ಗ್ಯಾರಂಟಿ ಸರ್ಕಾರದ ಕುರಿತು ಹಿಗ್ಗಾಮುಗ್ಗಾ ಟ್ರೊಲ್
6
+ ಕಾವೇರಿ ಕೊಳ್ಳದ ಜಲಾಶಯಗಳಿಗೆ ಕಳೆದ ಎರಡು ವಾರದಲ್ಲಿ ಸ್ವಲ್ಪ ಪ್ರಮಾಣದ ಒಳ ಹರಿವು ಹೆಚ್ಚಾಗಿದೆ. ಆದರೆ, ನೀರಿನ ಬಿಕ್ಕಟ್ಟು ಪರಿಹಾರವಾಗುವಷ್ಟು ಮಳೆಯಾಗಿಲ್ಲ; ಜಲಾಶಯಗಳಿಗೆ ಒಳ ಹರಿವು ಸಹ ಹೆಚ್ಚಾಗಿಲ್ಲ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಜೂನ್ ಒಂದರಿಂದ ಸೆಪ್ಟೆಂಬರ್ 30ರವರೆಗೆ ರಾಜ್ಯದಲ್ಲಿ 642 ಮಿ.ಮೀ. ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆ ಮಳೆ ಪ್ರಮಾಣ 852 ಮಿ.ಮೀ. ಆಗಿದೆ. ಅಂದರೆ, ವಾಡಿಕೆಗಿಂತ ಶೇ.25ರಷ್ಟು ಮಳೆ ಕೊರತೆಯಾಗಿದೆ. ರಾಜ್ಯದ ಯಾವ ಭಾಗದಲ್ಲೂ ಈ ಅವಧಿಯಲ್ಲಿ ವಾಡಿಕೆ ಪ್ರಮಾಣದ ಮಳೆಯಾಗಿಲ್ಲ.
7
+ ಕಳೆದ ಒಂದು ವಾರದಲ್ಲೂ ರಾಜ್ಯದಲ್ಲಿ ವಾಡಿಕೆಗಿಂತ ಶೇ.42 ರಷ್ಟು ಕಡಿಮೆ ಮಳೆಯಾದ ವರದಿಯಾಗಿದೆ. ಅಕ್ಟೋಬರ್ ಒಂದರಿಂದ ನಿನ್ನೆ ವರೆಗಿನ ಮಳೆ ಪ್ರಮಾಣ ಗಮನಿಸಿದರೆ ವಾಡಿಕೆಗಿಂತ ಶೆ.54 ರಷ್ಟು ಕೊರತೆ ಇದೆ. ಅಂದರೆ ಕಳೆದ ಎರಡು ವಾರದಲ್ಲಿ ಮಳೆ ಕೊರತೆ ತೀವ್ರವಾಗಿದೆ. ಈ ಅವಧಿಯಲ್ಲಿ 71 ಮಿ.ಮೀ. ವಾಡಿಕೆ ಮಳೆಯಿದ್ದು, ಕೇವಲ 33 ಮಿ. ಮೀ.ನಷ್ಟು ಮಾತ್ರ ಮಳೆಯಾದ ವರದಿಯಾಗಿದೆ.
8
+ ಕಳೆದ ಜೂನ್‍ನಿಂದ ನಿನ್ನೆಯವರೆಗೆ ವಾಡಿಕೆ ಮಳೆ ಪ್ರಮಾಣ 923 ಮಿ.ಮೀ.ನಷ್ಟಿದ್ದು, 674 ಮಿ.ಮೀ.ನಷ್ಟು ಮಾತ್ರ ಮಳೆಯಾಗಿದೆ. ವಾಡಿಕೆಗಿಂತ ಶೇ. 27ರಷ್ಟು ಕೊರತೆಯಾಗಿದೆ. ಜನವರಿ ಒಂದರಿಂದ ನಿನ್ನೆಯವರೆಗೆ ವಾಡಿಕೆ ಮಳೆ ಪ್ರಮಾಣ 1042 ಮಿ.ಮೀ. ಇದ್ದು, 791 ಮಿ.ಮೀ.ನಷ್ಟು ಮಳೆಯಾಗಿದ್ದು, ವಾಡಿಕೆಗಿಂತ ಶೇ.24 ರಷ್ಟು ಮಳೆಯಾಗಿದೆ.
9
+ ಪೂರ್ವ ಮುಂಗಾರಿನ ಅವಧಿಯ ಏಪ್ರಿಲ್ ಒಂದರಿಂದ ನಿನ್ನೆವರೆಗೆ ವಾಡಿಕೆಗಿಂತ ಶೇ.24ರಷ್ಟು ಮಳೆ ಕಡಿಮೆಯಾಗಿದೆ. 1029 ಮಿ.ಮೀ.ನಷ್ಟು ವಾಡಿಕೆ ಮಳೆ ಪ್ರಮಾಣವಿದ್ದು, ಕೇವಲ 781ಮಿ.ಮೀ.ನಷ್ಟು ಮಾತ್ರ ಮಳೆಯಾಗಿದೆ.
10
+ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ, ಮೂವರು ದುರ್ಮರಣ
11
+ ಇದುವರೆಗಿನ ರಾಜ್ಯದ ಮಳೆಯ ವಾಸ್ತವ ಸ್ಥಿತಿ ಈ ರೀತಿ ಇದ್ದು, ಹಿಂಗಾರು ಮಳೆಯೂ ಮುಂಗಾರಿನಂತೆ ಕೈಕೊಟ್ಟರೆ, ಅಲ್ಪಸ್ವಲ್ಪ ಬೆಳೆಯೂ ರೈತರ ಕೈ ಸೇರುವುದು ಕಷ್ಟ. ಹೀಗಾಗಿ ರೈತರು ಹಿಂಗಾರು ಮಳೆಯಾಗುವುದನ್ನೇ ಎದುರು ನೋಡುತ್ತಿದ್ದಾರೆ.
eesanje/url_46_331_10.txt ADDED
@@ -0,0 +1,6 @@
 
 
 
 
 
 
 
1
+ ಐಟಿ ದಾಳಿ ರಾಜಕೀಯ ಪ್ರೇರಿತ : ಡಿಸಿಎಂ ಡಿಕೆಶಿ
2
+ ಬೆಂಗಳೂರು, ಅ.13- ರಾಜಕಾರಣ ಇಲ್ಲದೆ ಆದಾಯ ತೆರಿಗೆಯವರು ದಾಳಿ ಮಾಡುವುದೇ ಇಲ್ಲ. ನಮಗೆ ಆ ಬಗ್ಗೆ ಸ್ಪಷ್ಟ ತಿಳುವಳಿಕೆ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿಂದು ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದಾಯ ತೆರಿಗೆ ದಾಳಿಯಲ್ಲಿ ರಾಜಕೀಯ ಇದ್ದೇ ಇದೆ. ಚತ್ತಿಸ್‍ಗಡ ಸೇರಿದಂತೆ ಎಲ್ಲಾ ರಾಜ್ಯಗಳಲ್ಲೂ ಈ ರೀತಿಯ ದಾಳಿಗಳಾಗುತ್ತಿವೆ. ರಾಜಕೀಯ ಇಲ್ಲದೆ ಇದ್ದರೆ ಆದಾಯ ತೆರಿಗೆ ಅಧಿಕಾರಿಗಳು ಬರುವುದೇ ಇಲ್ಲ. ಇದರ ಬಗ್ಗೆ ನಮಗೆ ಗೋತ್ತಿದೆ ಎಂದರು.
3
+ ಪಂಚರಾಜ್ಯಗಳ ಚುನಾವಣೆಗೆ ರಾಜ್ಯದಿಂದ ಹಣ ಕಳುಹಿಸಲಾಗುತ್ತಿತ್ತು ಎಂದು ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಆರೋಪಕ್ಕೆ ಉತ್ತರ ನೀಡಲು ಡಿ.ಕೆ.ಶಿವಕುಮಾರ್ ನಿರಾಕರಿಸಿದರು. ಕೆಲವು ರಾಜಕೀಯ ಇದ್ದಿದ್ದೆ, ಇವರಿಗೆಲ್ಲಾ ಉತ್ತರ ಕೊಡುವ ಅಗತ್ಯ ಇಲ್ಲ. ರಸ್ತೆಯಲ್ಲಿ, ಬೀದಿಗೆ ಮಾತನಾಡುವವರಿಗೆಲ್ಲಾ ಪ್ರತಿಕ್ರಿಯಿಸಲ್ಲ ಎಂದರು. ಬಿಬಿಎಂಪಿಯಲ್ಲಿ ಬಿಡುಗಡೆ ಮಾಡಿದ್ದ ಗುತ್ತಿಗೆ ಬಿಲ್‍ನ ಬಾಕಿಯಲ್ಲಿ ಕಮಿಷನ್ ಪಡೆದು ತಮಿಳುನಾಡಿಗೆ ಕಳುಹಿಸಲಾಗುತ್ತಿತ್ತು ಎಂಬ ಆರೋಪದ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದಿದ್ದಾರೆ.
4
+ ಕರ್ನಾಟಕದಲ್ಲಿ ಕಾಂಗ್ರೆಸ್ ಕಲೆಕ್ಷನ್ ಜಾತ್ರೆ ನಡೆಸುತ್ತಿದೆ : ಯತ್ನಾಳ್
5
+ ರಾಜ್ಯದಲ್ಲಿನ ವಿದ್ಯುತ್ ಕೊರತೆ ಬಗ್ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಜೆ ಸಭೆ ನಡೆಸಲಿದ್ದಾರೆ. ಯಾರ್ಯಾರ ಕಾಲದಲ್ಲಿ ಎಷ್ಟೆಷ್ಟು ವಿದ್ಯುತ್ ಉತ್ಪಾದನೆಯಾಗುತ್ತಿತ್ತು. ತಾವು ಇಂಧನ ಸಚಿವರಾಗಿದ್ದಾಗ ಎಷ್ಟು ವಿದ್ಯುತ್ ಹೆಚ್ಚುವರಿಯಾಗಿತ್ತು ಎಂಬ ಮಾಹಿತಿ ಇದೆ. ಮುಖ್ಯಮಂತ್ರಿಯವರ ನೇತೃತ್ವದ ಸಭೆ ಮುಗಿಯಲಿ, ನಂತರ ನಾನು ಮಾತನಾಡುತ್ತೇನೆ ಎಂದರು.
6
+ ಬಾಕಿ ಬಿಲ್ ಬಿಡುಗಡೆಗೆ ಸಂಬಂಸಿದಂತೆ ಗುತ್ತಿಗೆದಾರರ ಸಂಘದ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ವಿಚಾರಣೆ ಬಾಕಿ ಇದ್ದಾಗಲೂ ಬಹುತೇಕ ಶೇ.65-70ರಷ್ಟು ಬಾಕಿ ಬಿಲ್‍ಗಳನ್ನು ಬಿಡುಗಡೆ ಮಾಡಿದ್ದೇವೆ. ವಿಚಾರಣಾ ವರದಿ ಬರದೆ ಇದ್ದರೂ ಗುತ್ತಿಗೆದಾರರು, ಅದರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದರು ಎಂಬ ಕಾರಣಕ್ಕೆ ಆದ್ಯತೆ ಮೇರೆಗೆ ಹಣ ನೀಡಿದ್ದೇವೆ. ಕೆಂಪಣ್ಣ ಅವರು ಆತಂಕ ಪಡುವ ಅಗತ್ಯ ಇಲ್ಲ. ಯಾವುದಾದರೂ ಬಾಕಿ ಇದ್ದರೆ ಅದನ್ನು ಪರಿಶೀಲಿಸಿ ನ್ಯಾಯ ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಭರವಸೆ ನೀಡಿದರು.
eesanje/url_46_331_11.txt ADDED
@@ -0,0 +1,8 @@
 
 
 
 
 
 
 
 
 
1
+ ನಾವು ಯಾವ ರಾಜ್ಯಗಳಿಗೂ ಹಣ ಕಳಿಸಿಲ್ಲ : ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು, ಅ.13- ಪಂಚರಾಜ್ಯಗಳ ಚುನಾವಣೆಗೆ ಕರ್ನಾಟಕದಿಂದ ಹಣ ರವಾನೆಗುತ್ತಿದೆ ಎಂಬುದು ಆಧಾರ ರಹಿತವಾದ ಆರೋಪವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪ ಮಾಡಿದವರು ನಾವು ಹಣ ಕಳುಹಿಸಿದ್ದನ್ನು ನೋಡಿದ್ದಾರೆಯೇ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
3
+ ನಾವು ಯಾವ ರಾಜ್ಯಗಳಿಗೂ ಹಣ ಕಳುಹಿಸುವುದಿಲ್ಲ. ಅವರು ನಮ್ಮ ಬಳಿ ಕೇಳುವುದು ಇಲ್ಲ. ಬಿಜೆಪಿಯವರು ಆಧಾರ ರಹಿತವಾಗಿ ಆರೋಪ ಮಾಡುತ್ತಾರೆ ಎಂದು ಸಿಡಿಮಿಡಿಗೊಂಡರು. ಬೆಂಗಳೂರಿನಲ್ಲಿ ಆದಾಯ ತೆರಿಗೆ ದಾಳಿಗೆ ಪ್ರತಿಕ್ರಿಯಿಸಲು ಮುಖ್ಯಮಂತ್ರಿ ನಿರಾಕರಿಸಿದರು. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ. ಕಳೆದ ವರ್ಷ ಇದೇ ವೇಳೆಗೆ 900 ಮೆ.ವ್ಯಾಟ್ ಬಳಸಲಾಗುತ್ತಿತ್ತು. ಈ ಬಾರಿ 1500 ರಿಂದ 1600 ಮೆ.ವ್ಯಾಟ್ ಬೇಡಿಕೆ ಇರುವುದರಿಂದ ತೊಂದರೆಯಾಗಿದೆ. ವಿದ್ಯುತ್ ನ್ನು ಹೊರಗಿನಿಂದ ಹೇಗೆ ಖರೀದಿಸುವ ಕುರಿತು ಎಂದು ಚರ್ಚಿಸಲು ಇಂದು ಸಭೆ ಕರೆಯಲಾಗಿದೆ ಎಂದರು.
4
+ ರಾಜ್ಯವನ್ನು ಕತ್ತಲೆಗೆ ತಳ್ಳಿರುವುದು ನಾವಲ್ಲ : ಸಚಿವ ಕೆ.ಜೆ.ಜಾರ್ಜ್
5
+ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಮಾಡುವವರು ಸರ್ಕಾರಕ್ಕೆ ಮಾರಾಟ ಮಾಡಬೇಕು, ಬೇರೆಲ್ಲಿಯೂ ಮಾರಬಾರದೆಂದು ಸೆಕ್ಷನ್ 11ರನ್ವಯ ನಿನ್ನೆ ಅದೇಶ ಹೊರಡಿಸಲಾಗಿದೆ. ಬಿಜೆಪಿಗೆ ವಸ್ತುಸ್ಥಿತಿ ತಿಳಿದಿಲ್ಲ. ರಾಜ್ಯದಲ್ಲಿ ಮಳೆ ಕಡಿಮೆಯಾಗುವುದರಿಂದ ಹಾಗೂ ಬೇಸಿಗೆ ರೀತಿಯಲ್ಲಿ ವಿದ್ಯುತ್‍ಗೆ ಬೇಡಿಕೆ ಹೆಚ್ಚಾಗಿರುವುದರಿಂದ ತೊಂದರೆಯಾಗಿದೆ ಎಂದರು.
6
+ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಹೇಳಿದ್ದಕ್ಕೆಲ್ಲಾ ಉತ್ತರ ನೀಡಲು ಆಗುವುದಿಲ್ಲ. ಅವರು ರಾಜಕೀಯವಾಗಿ ಮಾತನಾಡುತ್ತಾರೆ. ವಸ್ತುಸ್ಥಿತಿ ಅವರಿಗೆ ತಿಳಿದಿದೆಯೇ. ಮಳೆ ಇಲ್ಲದೆ ಬರಗಾಲ ಬಂದು ತೊಂದರೆಯಾಗಿದೆ.
7
+ ಕರ್ನಾಟಕದಲ್ಲಿ ಕಾಂಗ್ರೆಸ್ ಕಲೆಕ್ಷನ್ ಜಾತ್ರೆ ನಡೆಸುತ್ತಿದೆ : ಯತ್ನಾಳ್
8
+ ಆದರೂ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ.ಅವರು ಹೇಳಿದಂತೆ ಸಂಪೂರ್ಣ ಲೋಡ್ ಶೆಡ್ಡಿಂಗ್ ಆಗಿಲ್ಲ. ಮೂರು ಫೇಸ್ ನಲ್ಲಿ 7 ಗಂಟೆ ವಿದ್ಯುತ್ ನೀಡಬೇಕೆಂದಿರುವುದನ್ನು ಕೊಡಲು ಆಗುತ್ತಿಲ್ಲ ಎಂಬ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.
eesanje/url_46_331_12.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಬಾಕಿ ಬಿಲ್ ಪಾವತಿಗೆ ಒಂದು ತಿಂಗಳು ಡೆಡ್‍ಲೈನ್ ನೀಡಿದ ಕೆಂಪಣ್ಣ
2
+ ಬೆಂಗಳೂರು,ಅ.13- ಒಂದು ತಿಂಗಳೊಳಗೆ ಬಾಕಿ ಬಿಲ್ ಬಿಡುಗಡೆ ಮಾಡದಿದ್ದರೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಲಾಗುವುದೆಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಗುತ್ತಿಗೆದಾರರ ಸಮಸ್ಯೆಗಳು ಬಗೆಹರಿಯುವುದಕ್ಕಿಂತ ಮತ್ತಷ್ಟು ಸಮಸ್ಯೆಗಳು ಸೇರ್ಪಡೆಯಾಗಿವೆ.
3
+ ಈಗಾಗಲೇ ಹಲವು ವರ್ಷಗಳಿಂದ ಗುತ್ತಿಗೆದಾರರು ಬಾಕಿ ಬಿಲ್ ಬಿಡುಗಡೆ ಜಿಎಸ್‍ಟಿ ಗೊಂದಲ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಾ ಬಂದಿದ್ದೇವೆ. ಕಾಂಗ್ರೆಸ್ ಸರ್ಕಾರ ರಚನೆಯಾದಾಗ ಗುತ್ತಿಗೆದಾರರಿಗೂ ಬಾಕಿಗಳನ್ನು ಕರುಣಿಸಲಾಗುತ್ತದೆ ಎಂದು ನಿರೀಕ್ಷೆ ಮಾಡಿದ್ದೇವು, ಆದರೆ ಹಳೆ ಸಮಸ್ಯೆಗಳ ಜೊತೆಗೆ ಹೊಸ ಸಮಸ್ಯೆಗಳು ಸೇರ್ಪಡೆಯಾಗಿವೆ. ತಮಗೆ ಬೇಕಾದ ಕೆಲ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಲಾಗುತ್ತಿದೆ. ಈ ಬಗ್ಗೆ ಕೇಳಿದರೆ ನಮಗೆ ಗೊತ್ತಿಲ್ಲ ಎಂದು ಎಂಜಿನಿಯರ್‍ಗಳು ಹೇಳುತ್ತಿದ್ದಾರೆ. ಕೆಲ ಗುತ್ತಿಗೆದಾರರು ಶಿಫಾರಸು ತಂದರೆ ಕಮಿಷನ್ ಪಡೆದು ರಾತ್ರೋರಾತ್ರಿ ಚೆಕ್ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
4
+ ಇಸ್ರೇಲ್‍ನಿಂದ ತಾಯ್ನಾಡಿಗೆ ಬಂದಿಳಿದ ಭಾರತೀಯರು
5
+ ಗುತ್ತಿಗೆದಾರರು ಸಾಲಸೋಲ ಮಾಡಿ ಕಾಮಗಾರಿ ಮಾಡಿದ್ದು, ಮಾಡಿರುವ ಸಾಲ ಕಟ್ಟಲಾಗದೆ ಕೆಲವರು ಊರು ಬಿಡುತ್ತಿದ್ದಾರೆ. ಈಗಾಗಲೇ ಹುಬ್ಬಳ್ಳಿಯಲ್ಲಿ ಒಬ್ಬರು ವಿಷ ಸೇವಿಸಿದ್ದಾರೆ. ಪ್ರತಿ ಬಾರಿ ಸರ್ಕಾರಗಳು ಹಿಂದಿನ ಸರ್ಕಾರಗಳ ಮೇಲೆ ಬೆರಳು ಮಾಡುತ್ತಿವೆ. ನಾವು ಕಷ್ಟದಲ್ಲಿದ್ದೇವೆ, ನಮ್ಮ ಪರಿಸ್ಥಿತಿಯಂತೂ ಅಯೋಮಯವಾಗಿದೆ. ಜೀವನವೇ ಕಷ್ಟವಾಗಿದೆ. ಇನ್ನು ಜಿಎಸ್‍ಟಿ ಎಲ್ಲಿಂದ ಕಟ್ಟೋಣ. ಪಾಲಿಕೆಯ ಪರಿಸ್ಥಿತಿಯಂತೂ ಹೇಳುವುದಕ್ಕೇ ಆಗಲ್ಲ. ನಮ್ಮ ಅಕೌಂಟ್‍ಗಳು ಈಗಾಗಲೇ ಫ್ರೀಜ್ ಆಗಿವೆ.
6
+ ರಾಜ್ಯದ ಬಹುತೇಕ ಕೆಲಸಗಳನ್ನು ಆಂಧ್ರದವರು ಮಾಡುತ್ತಿದ್ದಾರೆ. ನಾವು ಅರ್ಹರಾಗಿದ್ದರೂ ಕೂಡ ಇಲ್ಲದಂತಾಗಿದ್ದೇವೆ ಎಂದರು.ಬಾಕಿ ಬಿಲ್ ಬಿಡುಗಡೆಗೆ ಆಗ್ರಹಿಸಿ ಹಲವು ಬಾರಿ ಮುಖ್ಯಮಂತ್ರಿಗಳ ಗಮನಕ್ಕೆ ಕೂಡ ತರಲಾಗಿತ್ತು. ವಿವಿಧ ಇಲಾಖೆಗಳಿಂದ ಸುಮಾರು 20 ಸಾವಿರ ಕೋಟಿ ರೂ.ಗಳಿಗಿಂತಲೂ ಅಕ ಮೊತ್ತವನ್ನು ಬಾಕಿ ಉಳಿಸಿಕೊಳ್ಳಲಾಗಿದೆ. ಈ ಮೊತ್ತವನ್ನು ಒಂದೇ ಬಾರಿ ಅಲ್ಲದಿದ್ದರೂ, ಹಂತ-ಹಂತವಾಗಿ ಬಿಡುಗಡೆ ಮಾಡಿ ಸರ್ಕಾರ ಪ್ರಾಮಾಣಿಕತೆಯನ್ನು ತೋರಬೇಕಾಗಿತ್ತು, ಆದರೆ ನಮ್ಮನ್ನು ನಿರ್ಲಕ್ಷ್ಯ ಮಾಡುತ್ತಾ ಬಂದಿದೆ.
7
+ ಪ್ರಮುಖವಾಗಿ ಗುತ್ತಿಗೆದಾರರು ಕೆಲಸ ನಿರ್ವಹಿಸುವ ಜಲಸಂಪನ್ಮೂಲ, ಸಣ್ಣ ನೀರಾವರಿ ಲೋಕೋಪಯೋಗಿ ಮತ್ತು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಗಳಲ್ಲೂ ಸಹ ಹೊಸ ಸಮಸ್ಯೆಗಳು ಸೃಷ್ಠಿಯಾಗಿದೆ ಎಂದರು.ವಿವಿಧ ಕಾಮಗಾರಿಗಳನ್ನು ವರ್ಗಿಕರಿಸಿ ಅನುದಾನವನ್ನು ಬಿಡುಗಡೆ ಮಾಡುವ ಬಿಬಿಎಂಪಿ ಹೊಸ ಸಂಪ್ರದಾಯವನ್ನು ಹುಟ್ಟು ಹಾಕಿದೆ. ಈ ಸಂಬಂಧ ಉಪಮುಖ್ಯಮಂತ್ರಿಗಳು, ಬಿಬಿಎಂಪಿ ಆಯುಕ್ತರು ಮತ್ತು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದರೂ ಪ್ರಯೋಜನವಾಗಲಿಲ್ಲ.
8
+ ಕೆಲವು ವರ್ಗಗಳಿಗೆ ಕಾಮಗಾರಿ ಮುಗಿದ ಕೂಡಲೇ ಅನುದಾನ ಲಭ್ಯವಾದರೆ ಇನ್ನೂ ಕೆಲವು ವರ್ಗಗಳಲ್ಲಿ ವರ್ಷಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಇದು ತಾರತಮ್ಯಕ್ಕೆ ಕಾರಣವಾಗಿದೆ.ಪ್ರಭಾವಿ ಮತ್ತು ಪಟ್ಟಭದ್ರ ಹಿತಾಸಕ್ತಿಗಳ ಒತ್ತಡಕ್ಕೆ ಮಣಿದು ಈ ನಿಯಮಗಳನ್ನು ರೂಪಿಸಿರುವುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ.
9
+ ಬಾಕಿ ಮೊತ್ತವನ್ನು ಹಿರಿತನದ ಆಧಾರದಲ್ಲಿಯೇ ಬಿಡುಗಡೆ ಮಾಡಬೇಕೆಂದು ಹೈಕೋರ್ಟ್ ತೀರ್ಪು ನೀಡುತ್ತದೆ. ಯಾವುದೇ ವರ್ಗವಾದರೂ, ಎಲ್ಲವೂ ಕಾಮಗಾರಿಗಳ ಪಟ್ಟಿಯ ಅಡಿಯಲ್ಲೇ ಬರುತ್ತದೆ. ಆದರೂ ತಾರತಮ್ಯ ಮತ್ತು ಆರ್ಥಿಕ ಅಸಮಾನತೆಯನ್ನು ಏಕೆ ಜಾರಿಗೊಳಿಸುತ್ತೀರಿ ಎಂದು ಪ್ರಶ್ನಿಸಿದರು.
10
+ ಇನ್ನೊಂದು ತಿಂಗಳೊಳಗೆ ಎಲ್ಲಾ ಇಲಾಖೆಗಳಲ್ಲೂ ಬಾಕಿ ಉಳಿಸಿಕೊಂಡಿರುವ ಶೇ. 50ರಷ್ಟು ಬಾಕಿ ಮೊತ್ತವನ್ನು ಬಿಡುಗಡೆ ಮಾಡಲೇಬೇಕು. ಯಾವುದೇ ಸಬೂಬು ಹೇಳದೆ ತನಿಖೆ ಆಯೋಗದ ಹೆಸರಿನಲ್ಲಿ ಮುಂದೂಡಬಾರದು, ಇಲ್ಲವಾದಲ್ಲಿ ಬೆಂಗಳೂರು ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದೆಂದು ತಿಳಿಸಿದ್ದಾರೆ.
11
+ ಕರ್ನಾಟಕದಲ್ಲಿ ಕಾಂಗ್ರೆಸ್ ಕಲೆಕ್ಷನ್ ಜಾತ್ರೆ ನಡೆಸುತ್ತಿದೆ : ಯತ್ನಾಳ್
12
+ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ನಿವಾಸದ ಮೇಲೆ ಐಟಿ ದಾಳಿ ವಿಚಾರ ಕುರಿತಂತೆ ಮಾತನಾಡಿದ ಅವರು, ಇದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಕೃಷಿ, ಜಲ್ಲಿ ಕ್ರಷರ್ ಸೇರಿದಂತೆ ಹಲವು ವ್ಯಾಪಾರಗಳಿವೆ. ಈಗಾಗಲೇ ಕಂಟ್ರಾಕ್ಟರ್ ಕೆಲಸವನ್ನು ಸಹ ಬಿಟ್ಟಿದ್ದಾರೆ. ಐಟಿ ದಾಳಿ ವಿಚಾರದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಅವರು ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳುತ್ತೇವೆ. ಸರ್ಕಾರ ಇದೆ, ಐಟಿ ಅಕಾರಿಗಳಿದ್ದಾರೆ, ಅವರು ತನಿಖೆ ಮಾಡಲಿದ್ದಾರೆ ಎಂದರು.
eesanje/url_46_331_2.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಸೋಶಿಯಲ್ ಮೀಡಿಯಾದಲ್ಲಿ ಗ್ಯಾರಂಟಿ ಸರ್ಕಾರದ ಕುರಿತು ಹಿಗ್ಗಾಮುಗ್ಗಾ ಟ್ರೊಲ್
2
+ ಬೆಂಗಳೂರು,ಅ.14- ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಆರಂಭದಲ್ಲಿ ಒಂದಷ್ಟು ದಿನ ಸಹನೆಯಿಂದಿದ್ದ ಕೇಸರಿ ಬೆಂಬಲಿತ ಸಾಮಾಜಿಕ ಜಾಲತಾಣದ ಕಾರ್ಯಕರ್ತರು ಇತ್ತೀಚೆಗೆ ರೊಚ್ಚಿಗೆದ್ದಿದ್ದು, ರಾಜ್ಯಸರ್ಕಾರ ಹಾಗೂ ಕಾಂಗ್ರೆಸ್ ವಿರುದ್ಧ ಆಕ್ರಮಣಕಾರಿಯಾಗಿ ಮುಗಿಬಿದ್ದಿದ್ದಾರೆ. ಈ ಹಿಂದಿಗಿಂತಲೂ ಹೆಚ್ಚು ತೀವ್ರವಾಗಿ ಮತ್ತು ನಿಂದನಾತ್ಮಕ ಭಾಷೆಗಳ ಮೂಲಕವೇ ಪ್ರತಿದಾಳಿ ನಡೆಸುತ್ತಿರುವುದು ಸರ್ಕಾರಕ್ಕೆ ಬಿಸಿ ತುಪ್ಪವಾಗಿದೆ.
3
+ ರಾಜ್ಯಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡುವುದಾಗಿ ಘೋಷಿಸಿತ್ತು. ಇದರ ಭಾಗವಾಗಿ ಸತ್ಯ ಶೋಧನಾ ತಂಡವನ್ನೂ ಕೂಡ ರಚಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುವ ಮತ್ತು ಶಾಂತಿಗೆ ಭಂಗ ಉಂಟುಮಾಡುವಂತ ಮಾಹಿತಿಗಳನ್ನು ಹರಡದಂತೆ ಕ್ರಮ ಕೈಗೊಳ್ಳಲಾಗುತ್ತಿದೆ.
4
+ ಉದ್ದೇಶಪೂರಕವಾಗಿ ಬಿಜೆಪಿ ಕಾರ್ಯಕರ್ತರ ವಿರುದ್ಧ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ಕೋಮು ಪ್ರಚೋದಿತ ಪ್ರಕರಣಗಳಲ್ಲಿ ಕಾನೂನು ಕ್ರಮ ಎದುರಿಸುವ ಕಾರ್ಯಕರ್ತರ ರಕ್ಷಣೆಗೆ ವಕೀಲರ ತಂಡಗಳನ್ನು ರಚಿಸಿದೆ. ಇದರ ಜೊತೆಯಲ್ಲೇ ರಾಜ್ಯಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸುತ್ತಿದೆ ಎಂಬ ದೊಡ್ಡ ಮಟ್ಟದ ಕೂಗು ಕೂಡ ಕೇಳಿಬಂದಿತ್ತು.
5
+ ಕ್ರಿಸ್ಟಿಯಾನೊ ರೊನಾಲ್ಡೊಗೆ ಕಾದಿದೆ 99 ಛಡಿ ಏಟಿನ ಶಿಕ್ಷೆ..!
6
+ ಹಂತಹಂತವಾಗಿ ಚೇತರಿಸಿಕೊಂಡಿರುವ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ಇತ್ತೀಚೆಗೆ ತೀವ್ರ ಸ್ವರೂಪದ ಪ್ರತಿಕ್ರಿಯೆಗಳಿಗೆ ಮುಂದಾಗಿದ್ದಾರೆ. ರಾಜ್ಯಸರ್ಕಾರ ಪಂಚಖಾತ್ರಿ ಯೋಜನೆಗಳ ಜಾರಿಯ ಯಶಸ್ಸಿನಲ್ಲೇ ತೇಲುತ್ತಿದ್ದು, ಇದರ ಗುಂಗಿನಲ್ಲೇ ಲೋಕಸಭೆ ಚುನಾವಣೆಯನ್ನು ಗೆದ್ದು ಬೀಗುವ ಕನಸು ಕಾಣುತ್ತಿದೆ. ಆದರೆ ತೆರೆಮರೆಯಲ್ಲಿ ಪಂಚಖಾತ್ರಿ ಯೋಜನೆಗಳು ಒಂದು ವರ್ಗಕ್ಕೆ ಮಾತ್ರ ಲಾಭವಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ತೆರಿಗೆಯ ದುಡ್ಡನ್ನು ತನ್ನ ಓಟ್‍ಬ್ಯಾಂಕ್ ರಾಜಕಾರಣಕ್ಕೆ ಬಳಸುತ್ತಿದೆ.
7
+ ಓಲೈಕೆಯ ರಾಜಕಾಣರಕ್ಕಾಗಿಯೇ ಸೀಮಿತವಾಗಿದೆ ಎಂಬ ವ್ಯಾಪಕ ಪ್ರಚಾರಗಳು ನಡೆದಿವೆ. ಗೃಹಜ್ಯೋತಿ, ಶಕ್ತಿಯಂತಹ ಯೋಜನೆಗಳ ಸೌಲಭ್ಯ ಪಡೆಯುವವರೂ ಕೂಡ ಅವುಗಳ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡುವ ಬದಲಿಗೆ, ರಾಜ್ಯಸರ್ಕಾರ ಒಂದು ವರ್ಗಕ್ಕೆ ಮಾತ್ರ ಸೌಲಭ್ಯಗಳನ್ನು ನೀಡುತ್ತಿದೆ ಎಂದು ಸಿಡಿಮಿಡಿಗೊಳ್ಳುವುದು ಕಂಡುಬರುತ್ತಿದೆ.
8
+ ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ, ಮಾಧ್ಯಮಗಳಲ್ಲಿ ನಡೆದಿರುವ ನಿರಂತರವಾದ ಪ್ರಚಾರ ಕಾರಣವಾಗಿದೆ. ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಮೊದಲಿನಿಂದಲೂ ಅತ್ಯಂತ ಬಲಿಷ್ಠವಾಗಿದೆ. ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಒಂದಿಷ್ಟು ಚುರುಕಾಗಿದ್ದುದನ್ನು ಹೊರತುಪಡಿಸಿದರೆ ಅಧಿಕಾರಕ್ಕೆ ಬರುತ್ತಿದ್ದಂತೆ ಮೈಮರೆತು ಮಲಗಿದೆ. ಜೊತೆಗೆ ಅಪಪ್ರಚಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂಬ ಉದ್ಧಟತನದ ಮಾತುಗಳ ಮೂಲಕ ಸರ್ವಾಧಿಕಾರಿ ಧೋರಣೆಗಳನ್ನು ಅನುಸರಿಸುತ್ತಿದೆ.
9
+ ಬಿಜೆಪಿ ವಿಧಾನಸಭೆ ಚುನಾವಣೆ ಸೋಲಿನಿಂದ ಎಚ್ಚೆತ್ತುಕೊಂಡು ಮತ್ತೊಮ್ಮೆ ಸಾಮಾಜಿಕ ಜಾಲತಾಣವನ್ನೇ ಪ್ರಬಲ ಅಸ್ತ್ರವನ್ನಾಗಿ ಬಳಕೆ ಮಾಡಿಕೊಂಡಿದೆ. ಈ ಹಿಂದೆ ರಾಜ್ಯದಲ್ಲಿ ಆಡಳಿತದಲ್ಲಿದ್ದ ಬಿಜೆಪಿ ನಾಯಕರ ವಿರುದ್ಧ ಕೇಳಿಬಂದ ಭ್ರಷ್ಟಾಚಾರಗಳಿಗೆ ಉತ್ತರ ಹೇಳಲಾಗದೆ ಮುಜುಗರಕ್ಕೊಳಗಾಗಿದ್ದ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ರಾಜ್ಯಸರ್ಕಾರದ ಪಂಚಖಾತ್ರಿ ಯೋಜನೆಗಳು ಹಾಗೂ ಅಭಿವೃದ್ಧಿಯ ಕುರಿತಂತೆ ಮೈಕೊಡವಿ ನಿಂತಿದ್ದಾರೆ.
10
+ ಕಾಂಗ್ರೆಸ್‍ನ ಪ್ರತಿಯೊಂದು ನಡೆಯಲ್ಲೂ ಉಗ್ರ ಸ್ವರೂಪದಲ್ಲಿ ಟೀಕಿಸಲಾಗುತ್ತಿದೆ. ಜನಸಾಮಾನ್ಯರ ಮನಮುಟ್ಟುವಂತ ಪ್ರಚಾರ ಮಾಡಲಾಗುತ್ತಿದೆ. ಕೆಲವೊಮ್ಮೆ ಇದಕ್ಕೆ ಪ್ರತಿಯಾಗಿ ಸತ್ಯ ಹೇಳುವವರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸುವ ಮೂಲಕ 2014 ಮತ್ತು 2019 ರ ಲೋಕಸಭೆ ಚುನಾವಣೆಯಲ್ಲಿ ಈ ರೀತಿಯ ಪ್ರವೃತ್ತಿಗಳು ಕಂಡುಬಂದಿದ್ದವು. ಈಗ ಮತ್ತೊಮ್ಮೆ 2024 ರ ಚುನಾವಣೆ ವೇಳೆಯಲ್ಲೂ ಇದು ಪುನರಾವರ್ತನೆಯಾಗಿದೆ.
11
+ ಅವಾಚ್ಯ ಶಬ್ದಗಳನ್ನು ಬಳಸಿದವರ ವಿರುದ್ಧ ದೂರು ನೀಡಿದರೆ ಅಥವಾ ಕ್ರಮ ಕೈಗೊಂಡರೆ ಅದನ್ನು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಎಂದು ಬೊಬ್ಬೆ ಹಾಕಲಾಗುತ್ತಿದೆ. ಈ ಮೊದಲು ಹಿಂದೂ ಭಾವನೆಗಳನ್ನು ಆಧರಿಸಿ ಹೆಚ್ಚು ಆಕ್ರಮಣಕಾರಿಯಾಗಿದ್ದ ಬಿಜೆಪಿ ಬೆಂಬಲಿತ ಕಾರ್ಯಕರ್ತರು ಪ್ರಸ್ತುತ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸುತ್ತಿದ್ದಾರೆ.
12
+ ಸೈನಿಕರ ಬಲಿದಾನಕ್ಕಿಂತ ಹೆಚ್ಚಾಯ್ತಾ ಕ್ರಿಕೆಟ್ : ಬಿಸಿಸಿಐ ವಿರುದ್ಧ ರೊಚ್ಚಿಗೆದ್ದ ದೇಶಪ್ರೇಮಿಗಳು
13
+ ಧಾರ್ಮಿಕ ಭಾವನೆಗಳು ಒಂದು ಕಡೆಯಾದರೆ, ಮತ್ತೊಂದೆಡೆ ಸರ್ಕಾರದ ಪ್ರತಿಯೊಂದು ನಡೆಯನ್ನು ವೈಫಲ್ಯವೆಂದೇ ಬಿಂಬಿಸಲಾಗುತ್ತಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್ ಪಕ್ಷ ಬಿಜೆಪಿಯ ಆಕ್ರಮಣದ ಮುಂದೆ ಸಪ್ಪೆಯಾಗಿದ್ದು, ಮೌನಕ್ಕೆ ಶರಣಾಗುವ ಅನಿವಾರ್ಯತೆಗೆ ಸಿಲುಕಿದೆ.
eesanje/url_46_331_3.txt ADDED
@@ -0,0 +1,6 @@
 
 
 
 
 
 
 
1
+ ನಾಳೆ ನಾಡಹಬ್ಬ ದಸರಾಗೆ ಚಾಲನೆ ನೀಡಲಿದ್ದಾರೆ ನಾದಬ್ರಹ್ಮ ಹಂಸಲೇಖ
2
+ ಮೈಸೂರು, ಅ. 14- ಜಗದ್ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ನಾಳೆ ಬೆಳಿಗ್ಗೆ 10-15ರಿಂದ 10.30 ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ನಾದಬ್ರಹ್ಮ ಡಾ. ಹಂಸಲೇಖ ಅವರು ಚಾಲನೆ ನೀಡಲಿದ್ದಾರೆ.
3
+ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಹ್ಲಾದ ಜೋಶಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿರುವರು.
4
+ ಕ್ರಿಸ್ಟಿಯಾನೊ ರೊನಾಲ್ಡೊಗೆ ಕಾದಿದೆ 99 ಛಡಿ ಏಟಿನ ಶಿಕ್ಷೆ..!
5
+ ಈ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಜಿ.ಟಿ. ದೇವೇಗೌಡ ಅವರು ವಹಿಸಲಿದ್ದಾರೆ. ನಾಳೆ ಸಂಜೆ ಅರಮನೆ ಆವರಣದಲ್ಲಿ 7 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಸರಾ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
6
+ ಬೆಳಿಗ್ಗೆ ದಸರಾ ಚಲನಚಿತ್ರೋತ್ಸವ, ವಸ್ತು ಪ್ರದರ್ಶನ, ಕುಸ್ತಿ ಪಂದ್ಯಾವಳಿ, ಫಲಪುಷ್ಪ ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮಗಳು ನೆರವೇರಲಿವೆ. ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
eesanje/url_46_331_4.txt ADDED
@@ -0,0 +1,9 @@
 
 
 
 
 
 
 
 
 
 
1
+ ಬಾಕಿ ಬಿಲ್ ಕುರಿತು ಸಿಎಂ ಜೊತೆ ಗುತ್ತಿಗೆದಾರರ ಸಮಾಲೋಚನೆ
2
+ ಬೆಂಗಳೂರು,ಅ.14- ವಿವಿಧ ಕಾಮಗಾರಿಗಳ ಬಾಕಿ ಬಿಲ್ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುತ್ತಿಗೆದಾರರ ಸಂಘದ ಪ್ರತಿನಿಗಳ ಜೊತೆ ಸಮಾಲೋಚನೆ ನಡೆಸಿದರು. ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಅವರ ನಿಯೋಗ ಇಂದು ಮುಖ್ಯಮಂತ್ರಿಯವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದೆ.
3
+ ಬಾಕಿ ಬಿಲ್‍ಗಳ ಸಂಬಂಧಪಟ್ಟಂತೆ ನವೆಂಬರ್‍ವರೆಗೂ ಗಡುವು ನೀಡಿರುವ ಗುತ್ತಿಗೆದಾರರು ರಾಜ್ಯಸರ್ಕಾರ ಸ್ಪಂದಿಸದೇ ಇದ್ದರೆ ಉಗ್ರಸ್ವರೂಪದ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಲೋಕೋಪಯೋಗಿ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಬಿಬಿಎಂಪಿ, ಸಮಾಜ ಕಲ್ಯಾಣ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸಾವಿರಾರು ಕೋಟಿ ರೂ.ಗಳ ಕಾಮಗಾರಿಗಳು ನಡೆದಿವೆ.
4
+ ಲಾಹೋಸ್ ಕಾರ್ಖಾನೆಯಲ್ಲಿ ಬಂಧಿಯಾಗಿದ್ದಾರೆ ಒಡಿಶಾದ 35 ಕಾರ್ಮಿಕರು
5
+ ಒಂದು ಅಂದಾಜಿನ ಪ್ರಕಾರ ಸುಮಾರು 20 ಸಾವಿರ ಕೋಟಿ ರೂ.ಗಳ ಬಿಲ್‍ಗಳು ಬಾಕಿ ಉಳಿದಿವೆ ಎಂದು ಹೇಳಲಾಗಿದೆ. ಈ ಕುರಿತು ಗುತ್ತಿಗೆದಾರರ ಸಂಘ ಪದೇಪದೇ ಆಕ್ಷೇಪ ವ್ಯಕ್ತಪಡಿಸುತ್ತಲೇ ಇದೆ. ಈ ಹಿಂದಿನ ಸರ್ಕಾರದಲ್ಲಿ ಗುತ್ತಿಗೆ ನೀಡುವಾಗ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ, ಸಾಕಷ್ಟು ಅಕ್ರಮಗಳಾಗಿವೆ ಎಂಬ ಆರೋಪಗಳು ಕೇಳಿಬಂದಿದ್ದವು. ಅವುಗಳ ತನಿಖೆಗೆ ರಾಜ್ಯಸರ್ಕಾರ ಆದೇಶಿಸಿದೆ.
6
+ ಇದರ ಹೊರತಾಗಿಯೂ ಶೇ. 70 ರಷ್ಟು ಬಿಲ್‍ಗಳನ್ನು ಪಾವತಿಸಲಾಗುತ್ತಿದೆ ಎಂಬ ಮಾಹಿತಿ ಇದೆ. ಆದರೆ ರಾಜ್ಯಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ. ಬಾಕಿ ಬಿಡುಗಡೆಯಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ. ಇದರಿಂದ ಗುತ್ತಿಗೆದಾರರು ಸಂಕಷ್ಟಕ್ಕೀಡಾಗಿದ್ದಾರೆ ಎಂಬುದು ಸಂಘದ ಪ್ರಮುಖ ಆರೋಪಿ.
7
+ ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಶೇ.40 ರಷ್ಟು ಕಮಿಷನ್‍ನ ಆರೋಪವನ್ನು ಗುತ್ತಿಗೆದಾರರ ಸಂಘ ಮಾಡಿತ್ತು. ಕಾಂಗ್ರೆಸ್ ಅದನ್ನೇ ಚುನಾವಣೆ ಅಸ್ತ್ರವನ್ನಾಗಿ ಬಳಸಿಕೊಂಡು ಗೆಲುವು ಕಂಡಿತ್ತು. ಅಕಾರಕ್ಕೆ ಬಂದ ಕಾಂಗ್ರೆಸ್ ಕೂಡ ಗುತ್ತಿಗೆದಾರರಿಗೆ ನೆರವಾಗುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಗುತ್ತಿಗೆದಾರರನ್ನು ಸಮಾಧಾನಪಡಿಸಲು ಮುಖ್ಯಮಂತ್ರಿ ಮುಂದಾಗಿದ್ದಾರೆ.
8
+ ಕ್ರಿಸ್ಟಿಯಾನೊ ರೊನಾಲ್ಡೊಗೆ ಕಾದಿದೆ 99 ಛಡಿ ಏಟಿನ ಶಿಕ್ಷೆ..!
9
+ ಇಂದು ಕೆಂಪಣ್ಣ ಅವರ ನಿಯೋಗ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಿದ್ದು, ಹಲವಾರು ಸಮಸ್ಯೆಗಳನ್ನು ವಿವರಿಸಿದೆ. ಗುತ್ತಿಗೆದಾರರ ಎಲ್ಲಾ ಸಮಸ್ಯೆಗಳಿಗೂ ಸ್ಪಂದಿಸುವುದಾಗಿ ಮತ್ತು ಹಣಕಾಸು ಲಭ್ಯತೆ ಆಧರಿಸಿ ಬಾಕಿ ಬಿಲ್‍ಗಳನ್ನು ಪಾವತಿ ಮಾಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಪದಾಕಾರಿಗಳು ತಿಳಿಸಿದ್ದಾರೆ.
eesanje/url_46_331_5.txt ADDED
@@ -0,0 +1,6 @@
 
 
 
 
 
 
 
1
+ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ, ಮೂವರು ದುರ್ಮರಣ
2
+ ರಾಮನಗರ,ಅ.14- ಬೆಂಗಳೂರು- ಮೈಸೂರು ಎಕ್ಸ್‍ಪ್ರೆಸ್ ವೇನಲ್ಲಿ ಇಂದು ಬೆಳ್ಳಂಬೆಳಿಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಲಾರಿ ಹಾಗೂ ಓಮ್ನಿ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರು ನಗರದ ದಂಪತಿ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ನಡೆದಿದೆ.
3
+ ಪೀಣ್ಯ 2ನೇ ಹಂತದ ನಿವಾಸಿ ಆಟೋ ಚಾಲಕರಾದ ರಾಜೇಶ್(45), ಇವರ ಪತ್ನಿ ಉಮಾ ಸ್ಥಳದಲ್ಲೇ ಮೃತಪಟ್ಟರೆ, ಸಂಬಂಧಿ ಲಕ್ಕಮ್ಮ(65) ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ಕು ಮಕ್ಕಳು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
4
+ ಬೆಂಗಳೂರಿನಿಂದ ಏಳು ಮಂದಿ ಓಮ್ನಿ ಕಾರಿನಲ್ಲಿ ಶ್ರೀರಂಗಪಟ್ಟಣಕ್ಕೆ ಹೋಗುತ್ತಿದ್ದಾಗ ಬೆಂಗಳೂರು-ಮೈಸೂರು ಎಕ್ಸ್‍ಪ್ರೆಸ್ ವೇ ಬಳಿ ಲಾರಿಯನ್ನು ಓವರ್‍ಟೇಕ್ ಮಾಡಲು ಹೋಗಿ ಇವರಿದ್ದ ಕಾರು ಹಿಂದಿನಿಂದ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸುದ್ದಿ ತಿಳಿಯುತ್ತಿದ್ದಂತೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಟ್ಟರು.
5
+ ಪಂಚರಾಜ್ಯಗಳ ಚುನಾವಣೆಯಲ್ಲಿ 42 ಕೋಟಿ ರೂ. ಪ್ರತಿಧ್ವನಿ
6
+ ಸಂಚಾರ ದಟ್ಟಣೆ:ಅಪಘಾತದ ಹಿನ್ನೆಲೆಯಲ್ಲಿ ಎಕ್ಸ್‍ಪ್ರೆಸ್ ವೇ ನಲ್ಲಿ ಕೆಲವು ಗಂಟೆಗಳ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಇಂದು ಮಹಾಲಯ ಅಮಾವಾಸ್ಯೆಯಾಗಿದ್ದು, ಬೆಂಗಳೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮೈಸೂರಿನತ್ತ ತೆರಳುತ್ತಿದ್ದು, ವಾಹನಗಳು ಕಿಲೊಮೀಟರ್‍ಗಟ್ಟಲೆ ಸಾಲುಗಟ್ಟಿ ನಿಂತಿದ್ದವು. ನಂತರ ಪೊಲೀಸರು ಅಪಘಾತಕ್ಕೀಡಾದ ಕಾರನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
eesanje/url_46_331_6.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ದಸರಾ ರಜೆಗಳ ಪ್ರಯುಕ್ತ ಕೆಎಸ್ಆರ್‌ಟಿಸಿಯಿಂದ 2000ಕ್ಕೂ ಹೆಚ್ಚು ವಿಶೇಷ ಬಸ್
2
+ ಬೆಂಗಳೂರು, ಅ.14- ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಆಗಮಿಸುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಿದೆ.
3
+ ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ಕರ್ನಾಟಕ ಸಾರಿಗೆ(ವೇಗದೂತ), ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್‍ಕ್ಲಾಸ್(ಮಲ್ಟಿ ಆಕ್ಸಲ್), ಇ. ಪವರ್ ಪ್ಲಸ್, ಅಂಬಾರಿ ಕ್ಲಬ್‍ಕ್ಲಾಸ್, ಅಂಬಾರಿ ಉತ್ಸವ್ ಹಾಗೂ ಪಲ್ಲಕ್ಕಿ ಸಾರಿಗೆ ಸೇವೆಗಳ ಜೊತೆಗೆ ಹೆಚ್ಚುವರಿ ಬಸ್‍ಗಳ ವಿಶೇಷ ಸಾರಿಗೆ ಸೇವೆಗಳ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ.
4
+ ದಸರಾ ರಜೆಗಳ ಪ್ರಯುಕ್ತ ಕೆಎಸ್ಆರ್‌ಟಿಸಿಯಿಂದ 2000ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅ. 20ಂದ ಅ.26ರವರೆಗೆ ಬೆಂಗಳೂರಿನಿಂದ ರಾಜ್ಯದ ಮತ್ತು ಅಂತರ ರಾಜ್ಯದ ವಿವಿಧ ಸ್ಥಳಗಳಿಗೆ 2000ಕ್ಕೂ ಹೆಚ್ಚು ಬಸ್‍ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ.
5
+ ಹೆಚ್ಚುವರಿ ಬಸ್‍ಗಳು ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ತೆರಳಲಿವೆ. ನಂತರ ರಾಜ್ಯದ ಮತ್ತು ಅಂತರ ರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಅ.24 ರಿಂದ ಅ.29ರವರೆಗೆ ಪ್ರಯಾಣಿಕರು ಮರಳಿ ಬರಲು ಅನುಕೂಲವಾಗುವತೆ ವಿಶೇಷ ಬಸ್‍ಗಳನ್ನು ಕಾರ್ಯಾಚರಣೆ ಮಾಡಲಾಗುವುದು.
6
+ ಹಮಾಸ್ ನೆರವಿಗೆ ನಿಂತ ಇರಾನ್ ಬೆಂಬಲಿತ ಹಿಜ್ಬುಲ್ಲಾ
7
+ ರಾಜ್ಯದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆ ರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಬಸ್‍ಗಳ ವ್ಯವಸ್ಥೆ ಕಲ್ಪಿಸುವುದಾಗಿ ಕೆಎಸ್‍ಆರ್‍ಟಿಸಿ ಪ್ರಕಟಣೆ ತಿಳಿಸಿದೆ.
8
+ 600 ವಿಶೇಷ ಬಸ್ ವ್ಯವಸ್ಥೆ: ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 250ಹೆಚ್ಚುವರಿ ಬಸ್‍ಗಳ ಕಾರ್ಯಾಚರಣೆ ಹಾಗೂ ಮೈಸೂರಿನ ಸುತ್ತ ಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿಬೆಟ್ಟ, ಕೆ.ಆರ್.ಎಸ್.ಅಣೆಕಟ್ಟು/ಬೃಂದಾವನ ಉದ್ಯಾನ, ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಹೆಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 350 ಹೆಚ್ಚುವರಿ ಬಸ್‍ಗಳು ಸೇರಿದಂತೆ ಒಟ್ಟಾರೆ 600ದಸರಾ ವಿಶೇಷ ಬಸ್‍ಗಳನ್ನು ಕಾರ್ಯಾಚರಿಸಲು ಯೋಜಿಸಲಾಗಿದೆ.
9
+ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಫ್ಲೈ ಬಸ್ ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಲಾಗಿರುತ್ತದೆ. ಇ-ಟಿಕೇಟ್ ಬುಕಿಂಗ್ ಅನ್ನು ನಿಗಮದ ವೆಬ್ ಸೈಟ್ ಅಥವಾ ಮೊಬೈಲ್ ಮುಖಾಂತರ ಮಾಡಬಹುದಾಗಿದೆ. ಮೈಸೂರು ಗ್ರಾಮಾಂತರ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಪ್ರವಾಸಿಗರಿಗೆ ನಿಗಮದ ಸಾರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಮಾಹಿ ತಿಕೇಂದ್ರವನ್ನು ಪ್ರತ್ಯೇಕವಾಗಿ ತೆರೆಯಲಾಗುವುದು ಎಂದು ತಿಳಿಸಿದೆ.
10
+ ಮಧ್ಯರಾತ್ರಿ ಬಂದು ಹಣ್ಣು ಕದ್ದ ಕಳ್ಳ
11
+ ಸಾರ್ವಜನಿಕ ಪ್ರಯಾಣಿಕರುಕರ್ನಾಟಕ ಹಾಗೂ ನೆರೆರಾಜ್ಯಗಳಾದ ಆಂಧ್ರ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ತುಳುನಾಡು, ಮಹಾರಾಷ್ಟ್ರ ಹಾಗೂ ಪುದುಚೇರಿ ರಾಜ್ಯಗಳಲ್ಲಿರುವ ಒಟ್ಟು703ಗಣಕೀಕೃತ ಮುಂಗಡ ಆಸನಗಳನ್ನು ಕಾ್ದುರಿಸುವ ಕೌಂಟರ್‍ಗಳ ಮೂಲಕ ನಿಗಮದ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾ್ದುರಿಸಬಹುದಾಗಿದೆ.
12
+ ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರುಒಟ್ಟಾಗಿ ಮುಂಗಡಟಿಕೇಟ್ ಕಾ್ದುರಿಸಿದಲ್ಲಿ ಶೇಕಡ5 ರಷ್ಟುರಿಯಾುತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದಟಿಕೇಟ್‍ನ್ನುಒಟ್ಟಿಗೆ ಕಾ್ದುರಿಸಿದಾಗ ಬರುವ ಪ್ರಯಾಣದರದಲ್ಲಿಶೇಕಡ 10 ರಷ್ಟುರಿಯಾುತಿ ನೀಡಲಾಗುವುದು. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾ್ದುರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
13
+ ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡವಾಗಿಕಾ್ದುರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‍ಅಪ್ ಪಾುಂಟ್‍ನ ಹೆಸರನ್ನು ಗಮನಿಸುವಂತೆಕೋರಲಾಗಿದೆ. ಅಲ್ಲದೇ, ನಿಗಮದಕಾರ್ಯಾಚರಣೆ ವ್ಯಾಪ್ತಿಯಲ್ಲಿನಎಲ್ಲಾತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರಒತ್ತಡಕ್ಕನುಗುಣವಾಗಿ ಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.
eesanje/url_46_331_7.txt ADDED
@@ -0,0 +1,7 @@
 
 
 
 
 
 
 
 
1
+ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ ಅಂಬಿಕಾಪತಿಯ ಮಂಚದ ಖಜಾನೆ
2
+ ಬೆಂಗಳೂರು,ಅ.13- ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆಸಿದ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಲು 40% ಕಮೀಷನ್ ಆರೋಪ ಮಾಡಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಐಟಿ ಖೆಡ್ಡಾಕ್ಕೆ ಬಿದ್ದಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
3
+ ಮಾಜಿ ಮುಖ್ಯಮಂತ್ರಿ ಯಡಿ ಯೂರಪ್ಪ ಸರ್ಕಾರದಲ್ಲಿ ವಿವಿಧ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಲು ಸಚಿವರು ಮತ್ತು ಶಾಸಕರು 40% ಕಮೀಷನ್‍ಗೆ ಬೇಡಿಕೆ ಇಟ್ಟಿದ್ದಾರೆಂಬ ಗಂಭೀರ ಆರೋಪ ಮಾಡಿದ್ದರು. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹಾಗೂ ಅಂಬಿಕಾಪತಿ ಮಾಡಿದ್ದ ಈ ಆರೋಪ ಬಿಜೆಪಿ ಸರ್ಕಾರದ ಅಸ್ತಿತ್ವವನ್ನೇ ಅಲುಗಾಡಿಸಿತ್ತು.
4
+ ಪ್ರಧಾನಿ ನರೇಂದ್ರಮೋದಿಯವರಿಗೆ ಪತ್ರ ಬರೆದಿದ್ದ ಗುತ್ತಿಗೆದಾರರ ಸಂಘ, ನಿಮ್ಮದೇ ಸರ್ಕಾರ ಇರುವ ಕರ್ನಾಟಕದಲ್ಲಿ ಲೋಕೋಪಯೋಗಿ, ನೀರಾವರಿ, ಸಣ್ಣ ನೀರಾವರಿ, ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನಡೆದಿರುವ ಕಾಮಗಾರಿಗಳ ಹಣ ಬಿಡುಗಡೆಗೆ 40% ಕಮೀಷನ್ ಕೇಳುತ್ತಿದ್ದಾರೆ ಎಂದು ಪತ್ರದಲ್ಲಿ ಆರೋಪ ಮಾಡಿದ್ದರು.
5
+ ಬಾಕಿ ಬಿಲ್ ಪಾವತಿಗೆ ಒಂದು ತಿಂಗಳು ಡೆಡ್‍ಲೈನ್ ನೀಡಿದ ಕೆಂಪಣ್ಣ
6
+ ಈ ಪ್ರಕರಣವು ರಾಜ್ಯ ರಾಜಕಾರಣದಲ್ಲಿ ಅಲೋಲ್ಲ ಕಲ್ಲೋಲವನ್ನೇ ಸೃಷ್ಟಿಸಿ ಪ್ರತಿಪಕ್ಷ ಕಾಂಗ್ರೆಸ್ 40% ಕಮೀಷನ್ ಆರೋಪವನ್ನೇ ಚುನಾವಣಾ ಸಂದರ್ಭದಲ್ಲಿ ಪ್ರಮುಖ ಅಸ್ತ್ರ ಮಾಡಿಕೊಂಡಿತ್ತು. ಮಾಜಿ ಸಚಿವ ಮುನಿರತ್ನ ಅವರು ಇಂದು ಐಟಿ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿರುವ ಅಂಬಿಕಾಪತಿ ವಿರುದ್ಧ ಕಾವಲ್‍ಬೈರಸಂದ್ರ ಠಾಣೆಗೆ ದೂರು ನೀಡಿದ್ದರು.
7
+ ಇದೀಗ 42 ಕೋಟಿ ನಗದು ಸಮೇತ ಐಟಿ ಖೆಡ್ಡಾದಲ್ಲಿ ಬಿದ್ದಿರುವ ಅಂಬಿಕಾಪತಿ ಕುಟುಂಬಕ್ಕೆ ಬರುವ ದಿನಗಳಲ್ಲಿ ಕಾನೂನಿನ ಸಂಕಷ್ಟಗಳು ಎದುರಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
eesanje/url_46_331_8.txt ADDED
@@ -0,0 +1,8 @@
 
 
 
 
 
 
 
 
 
1
+ ಸ್ವಾಭಿಮಾನಿ ಹೋರಾಟಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಸ್ಪೂರ್ತಿ : ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು ಅ.13- ಕಿತ್ತೂರು ರಾಣಿ ಚನ್ನಮ್ಮ, ಟಿಪ್ಪು ಸುಲ್ತಾನ್ ಸ್ವಾಭಿಮಾನಿ ಹೋರಾಟದ ಸೂರ್ತಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಳಗಾವಿ ಜಿಲ್ಲಾಡಳಿತ ಚನ್ನಮ್ಮನ ಕಿತ್ತೂರು ಉತ್ಸವದ ಜ್ಯೋತಿ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಿತ್ತೂರು ಚನ್ನಮ್ಮ ತನ್ನ ಸಣ್ಣ ಸೈನ್ಯದಿಂದ ಬ್ರಿಟಿಷರ ಬೃಹತ್ ಸೈನ್ಯಕ್ಕೆ ಸೆಡ್ಡು ಹೊಡೆದ ಧೀಮಂತ ರಾಣಿ.
3
+ ಈಕೆಯ ಧೈರ್ಯ ಮತ್ತು ಆದರ್ಶ ಯುವ ಸಮೂಹವನ್ನು, ಇವತ್ತಿನ ಪೀಳಿಗೆಯನ್ನು ತಲುಪಬೇಕು ಎನ್ನುವ ಕಾರಣಕ್ಕೇ ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಕಿತ್ತೂರು ಉತ್ಸವ ಮತ್ತು ಜಯಂತ್ಸೋವವನ್ನು ಆರಂಭಿಸಿದೆ ಎಂದು ವಿವರಿಸಿದರು.
4
+ ರಾಜ್ಯದ 216 ತಾಲ್ಲೂಕುಗಳು ಬರಪೀಡಿತ ; ಸರ್ಕಾರ ಘೋಷಣೆ
5
+ ಅಕ್ಟೋಬರ್ 23ರಿಂದ ಮೂರು ದಿನಗಳ ಕಾಲ ಕಿತ್ತೂರಿನಲ್ಲಿ ಕಿತ್ತೂರು ಉತ್ಸವ ನಡೆಯುತ್ತಿದೆ. ಅದರ ಪ್ರಯುಕ್ತ ವಿಜಯ ಜ್ಯೋತಿ ಬೆಂಗಳೂರಿನ ವಿಧಾನಸೌಧದಿಂದ ಪ್ರಾರಂಭವಾಗುತ್ತಿದ್ದು, ರಾಜ್ಯದ ಅನೇಕ ಪ್ರದೇಶಗಳಿಗೆ ಭೇಟಿ ನೀಡಿ, ಅ.23ರಂದು ಕಿತ್ತೂರಿಗೆ ತಲುಪಲಿದೆ. ಆ ದಿನ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಟ ಮಾಡಿ, ಮೊದಲ ಯುದ್ಧದಲ್ಲಿ ಜಯ ಗಳಿಸಿದ ದಿನವೇ ಅ.23 ಎಂದರು.
6
+ ಯುದ್ಧದ ವೇಳೆ ಸಂಗೊಳ್ಳಿ ರಾಯಣ್ಣ ಕಿತ್ತೂರು ರಾಣಿ ಚೆನ್ನಮ್ಮರ ಬಲಗೈ ಬಂಟನಾಗಿದ್ದ. ಅನೇಕ ರಾಜರೂ ಬ್ರಿಟಿಷರಿಗೆ ಶರಣಾಗಿದ್ದ ಕಾಲದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಶರಣಾಗಲಿಲ್ಲ. ಝಾನ್ಸಿರಾಣಿ, ಕಿತ್ತೂರು ರಾಣಿ ಚೆನ್ನಮ್ಮ, ಟಿಪ್ಪು ಸುಲ್ತಾನ್ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದರು. ಅವರ ಇತಿಹಾಸವನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು. ಬಲಾಢ್ಯರಾಗಿದ್ದ ಬ್ರಿಟಿಷರ ವಿರುದ್ಧ ಹೋರಾಟ ಮಾಡಬೇಕಾದರೆ ಧೈರ್ಯ ಇರಬೇಕಿತ್ತು ಎಂದರು.
7
+ ಕಿತ್ತೂರು ರಾಣಿ ಕುರಿತು ಸಿನಿಮಾ ಒಂದು ಬಂದಿತ್ತು, ಅದರಲ್ಲಿ ಆಕೆಯ ಧೈರ್ಯ ಸಾಹಸ ಸ್ಪಷ್ಟವಾಗಿ ಕಾಣುತ್ತದೆ. ಹೊರಗಿನಿಂದ ಬಂದ ನಿಮಗೆ ಏಕೆ ಕಪ್ಪ ಕೊಡಬೇಕು ಎಂದು ಕಿತ್ತೂರು ರಾಣಿ ಪ್ರಶ್ನಿಸಿದರು. ನಾಡನ್ನು ಪ್ರತಿಯೊಬ್ಬರು ಪ್ರೀತಿಸಬೇಕು, ಸ್ವಾಭಿಮಾನ, ದೇಶ ಪ್ರೇಮ ಇದ್ದವರಿಗೆ ಮಾತ್ರ ದೇಶದ ಬಗ್ಗೆ ಪ್ರೀತಿ, ಗೌರವ ಇರುತ್ತದೆ. ಹತ್ತೊಂಬತ್ತನೆ ಶತಮಾನದಲ್ಲೇ ಕಿತ್ತೂರು ರಾಣಿ ಚೆನ್ನಮ್ಮ ಅದನ್ನು ಸಾಬೀತು ಮಾಡಿದ್ದಾರೆ ಎಂದರು.ಕಿತ್ತೂರು ರಾಣಿ ಚೆನ್ನಮ್ಮ ದೇಶದ ಆಸ್ತಿ. ತಾವು ಮುಖ್ಯಮಂತ್ರಿಯಾಗುವವರೆಗೂ ಯಾರು ಅವರ ಜಯಂತ್ಯೋತ್ಸವ ಆಚರಣೆ ಮಾಡಿರಲಿಲ್ಲ. ಅವರ ಬಗ್ಗೆ ಮಾತನಾಡುವುದರಿಂದ ದೇಶ ಪ್ರೇಮ ಹೆಚ್ಚಾಗುತ್ತದೆ. ನಾವು ನಮ್ಮ ತಾಯ್ನಾಡನ್ನು ಪ್ರೀತಿಸಲೇಬೇಕು ಎಂದರು.
8
+ ಲೋಕೋಪಯೋಗಿ ಸಚಿವ ಸತೀಶ್ ಜಾರಕಿ, ಕಿತ್ತೂರು ಶಾಸಕರಾದ ���ಾಬಾಸಾಹೇಬ ಪಾಟೀಲ್, ಧಾರವಾಡ ಗ್ರಾಮೀಣ ಶಾಸಕರಾದ ವಿನಯ್ ಕುಲಕರ್ಣಿ, ಬೈಲಹೊಂಗಲ ಶಾಸಕರಾದ ಮಹಂತೇಶ ಕೌಜಲಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.
eesanje/url_46_331_9.txt ADDED
@@ -0,0 +1,8 @@
 
 
 
 
 
 
 
 
 
1
+ ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿ ಕಲೆಕ್ಷನ್ ಹಣದ ಆದಿಪುರುಷ ಯಾರು.. ? : ಹೆಚ್ಡಿಕೆ ಪ್ರಶ್ನೆ
2
+ ಬೆಂಗಳೂರು: ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿರುವ 42 ಕೋಟಿ ರೂಪಾಯಿ ಕಂತೆ ಕಂತೆ ಹಣದ ಮೂಲವನ್ನು ಪ್ರಶ್ನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಇದು ಬೆಂಗಳೂರು ನಗದು ಅಭಿವೃದ್ಧಿ ಇಲಾಖೆಯ ಕೈ ಕರಾಮತ್ತು ಎಂದು ಕಾಂಗ್ರೆಸ್ ಪಕ್ಷಕ್ಕೆ ಕಾಲೆಳೆದಿದ್ದಾರೆ.
3
+ ಈ ಬಗ್ಗೆ ಖಾರವಾದ ಪ್ರತಿಕ್ರಿಯೆ ನೀಡಿರುವ ಅವರು; ಪಂಚರಾಜ್ಯ ಚುನಾವಣೆ ಘೋಷಣೆ ಆಗಿದ್ದೇ ತಡ, ರಾಜ್ಯದಲ್ಲಿ ಕುರುಡು ಕಾಂಚಾಣ ಕಂತೆ ಕಂತೆಯಾಗಿ ಕಾಟನ್ ಬಾಕ್ಸ್ ಗಳಲ್ಲಿ ಕುಣಿಯುತ್ತಿದೆ. ಅದೂ ಮಂಚದ ಕೆಳಗೆ ಐಟಿದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಪತ್ತೆಯಾದ ಹಣ ಯಾರದ್ದು? ಯಾರ ಹೆಣದ ಮೇಲೆ ಸಂಗ್ರಹಿಸಿದ ಪಾಪದ ಹಣವಿದು? ಈ ಪ್ರಶ್ನೆಗಳಿಗೆ ಉತ್ತರ ಬೇಕಿದೆ ಎಂದು ಹೇಳಿದ್ದಾರೆ.
4
+ ಆಯ್ದ ಗುತ್ತಿಗೆದಾರರಿಗೆ ಬಿಬಿಎಂಪಿಯಿಂದ 650 ಕೋಟಿ ರೂ. ಬಿಡುಗಡೆಯಾದ ಬೆನ್ನಲ್ಲೇ ಈ 42 ಕೋಟಿ ರೂ. ಐಟಿ ಅಧಿಕಾರಿಗಳಿಗೆ ಸಿಕ್ಕಿಬೀಳುತ್ತದೆ. ಅಲ್ಲಿಗೆ ಕಲೆಕ್ಷನ್ ನಿಜ ಎಂದಾಯಿತು. ಅದು ಎಷ್ಟು ಪರ್ಸಂಟೇಜ್? ಅದರ ಹಿಂದೆ ಅಡಗಿ ಕೂತಿರುವ ಆದಿಪುರುಷರು ಯಾರು? ಎಂದು ಅವರು ಪ್ರಶ್ನಿಸಿದ್ದಾರೆ.
5
+ ಐಟಿ ದಾಳಿ ರಾಜಕೀಯ ಪ್ರೇರಿತ : ಡಿಸಿಎಂ ಡಿಕೆಶಿ
6
+ 23 ಬಾಕ್ಸ್ ಗಳಲ್ಲಿ ತುಂಬಿಡಲಾಗಿದ್ದ ಈ ಇಡಗಂಟು ಪಕ್ಕದ ತೆಲಂಗಾಣಕ್ಕೆ ಹೊರಟು ನಿಂತಿತ್ತು ಎನ್ನುವುದು ಮಾಹಿತಿ. ಅಲ್ಲಿಗೆ ಚುನಾವಣೆಗಾಗಿ ಈ ಹಣವನ್ನು ಸಂಗ್ರಹ ಮಾಡಲಾಗಿತ್ತು ಎನ್ನುವುದು ಸತ್ಯ. ಈ ಕನಕ ಮಹಾಲಕ್ಷ್ಮಿಯ ಕಲೆಕ್ಷನ್ ಗೆ ಬೆಂಗಳೂರು ನಗದು ಅಭಿವೃದ್ಧಿ ಇಲಾಖೆಯ ಕೈ ಕರಾಮತ್ತು ಅಂತ ಇನ್ನೊಂದು ಮಾಹಿತಿ. ಅಷ್ಟರಲ್ಲಿ ಐಟಿ ಇಲಾಖೆ ಮುಗಿಬಿದ್ದ ಪರಿಣಾಮ, ಗುಟ್ಟು ರಟ್ಟಾಗಿದೆ. ಅಲ್ಲಿಗೆ ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಪರ್ಸಂಟೇಜ್ ಪಾರಮ್ಯ ಅವ್ಯಾಹತ ಎಂದಾಯಿತು? ಎಂದು ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.
7
+ ಈಗ ಹೇಳಿ ಸಿದ್ದರಾಮಯ್ಯನವರೇ 42 ಕೋಟಿ ರೂ. ಬಗ್ಗೆ ಯಾವ ತನಿಖೆ ಮಾಡಿಸುತ್ತೀರಿ? ಸಿಬಿಐ, ಈಡಿ, ಹಾಲಿ ನ್ಯಾಯಾಧೀಶರು, ನಿವೃತ್ತ ನ್ಯಾಯಾಧೀಶರು.. ದಯಮಾಡಿ ಹೇಳಿ. ರೈತರು ಬರ, ವಿದ್ಯುತ್ ಬಿಕ್ಕಟ್ಟಿನಿಂದ ಕಂಗೆಟ್ಟಿದ್ದಾರೆ. ಗುತ್ತಿಗೆದಾರರು ಅಯೋಮಯ ಸ್ಥಿತಿಯಲ್ಲಿದ್ದಾರೆ. ಆದರೂ ಕಲೆಕ್ಷನ್ ಕೈ ಚಳಕ ಜೋರಾಗಿದೆ. ಪಂಚರಾಜ್ಯಗಳ ಪಾಲಿಕೆ ಕರ್ನಾಟಕ ಸಮೃದ್ಧ ಎಟಿಎಮ್ ಕಾವೇರಿ ನೀರು  ತಮಿಳುನಾಡಿಗೆ ನಿರಂತರ ಹರಿಯುತ್ತಿದ್ದರೆ, ಕನ್ನಡಿಗರ ತೆರಿಗೆಲಕ್ಷ್ಮೀ ಎಲೆಕ್ಷನ್ ರಾಜ್ಯಗಳ ಪಾಲಾಗುತ್ತಿದ್ದಾಳೆ ಎಂದು ಕಾಂಗ್ರೆಸ್ ಪಕ್ಷದ ಕಾಲೆಳೆದಿದ್ದಾರೆ.
8
+ ಆದಿಯಿಂದಲೂ ಇದೇ ಕಥೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೈಕಮಾಂಡ್ ಗೆ ಹಬ್ಬ. ಈಗಲೂ ಅದೇ ಆಗುತ್ತಿದೆ. ಪಂಚರಾಜ್ಯಗಳ ಚುನಾವಣೆಗಾಗಿ ಕರ್ನಾಟಕಕ್ಕೆ ಕನ್ನ ಹೊಡೆಯಲಾಗಿದೆ. ವೋಟು ಕೊಟ್ಟ ತಪ್ಪಿಗೆ ಕಾಂಗ್ರೆಸ್ ಉಂಡು ಹೋಗುತ್ತಿದೆ, ಕೊಂಡು ಹೋಗುತ್ತಿದೆ. ಇದು ಕನ್ನಡಿಗರ ಕರ್ಮ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ
eesanje/url_46_332_1.txt ADDED
@@ -0,0 +1,5 @@
 
 
 
 
 
 
1
+ ಪೋಕ್ಸೋ ಪ್ರಕರಣ : ಪರಮಶಿವಯ್ಯಗೆ ಹೈಕೋರ್ಟ್ ಜಾಮೀನು
2
+ ಬೆಂಗಳೂರು,ಅ.13- ಚಿತ್ರದುರ್ಗದ ಮುರುಘಾಶ್ರೀ ವಿರುದ್ಧದ ಪೋಕ್ಸೋ ಪ್ರಕರಣದ ಮೂರನೇ ಆರೋಪಿ ಪರಮಶಿವಯ್ಯಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನೀಡಿ ಆದೇಶ ಹೊರಡಿಸಿದೆ. ಚಿತ್ರದುರ್ಗದ ಮುರುಘಾಶ್ರೀ ಮಠದ ಕಾರ್ಯದರ್ಶಿಯಾಗಿದ್ದ ಪರಮಶಿವಯ್ಯ ಪರ ವಕೀಲ ಕೆ.ಬಿ.ಕೆ.ಸ್ವಾಮಿ ವಾದ ಮಂಡಿಸಿದ್ದು, ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿರುವ ಇವರು ಇದೇ 17ರಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಗಳಿವೆ.
3
+ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜೈಲು ಪಾಲಾಗಿರುವ ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಎಸ್‍ಜೆಎಂ ವಿದ್ಯಾಪೀಠದ ಮಾಜಿ ಕಾರ್ಯದರ್ಶಿ ಪರಮಶಿವಯ್ಯ ಮೂರನೇ ಆರೋಪಿಯಾಗಿದ್ದು, ಇವರನ್ನು 2022ರ ಅಕ್ಟೋಬರ್ 28ರಂದು ಬಂಧಿಸಲಾಗಿತ್ತು.
4
+ ತೆರಿಗೆ ಪಾವತಿಸದೆ ಸಂಚಾರಿಸುತಿದ್ದ ಬಸ್‍ಗಳ ಜಪ್ತಿ
5
+ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಐವರು ಆರೋಪಿಗಳ ವಿರುದ್ಧ ಪೋಕ್ಸೊ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಆಗಸ್ಟ್ 28ರಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಪರಮಶಿವಯ್ಯ ಅವರನ್ನು ಎರಡು ತಿಂಗಳ ನಂತರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.
eesanje/url_46_332_10.txt ADDED
@@ -0,0 +1,6 @@
 
 
 
 
 
 
 
1
+ ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾದ ಗುತ್ತಿಗೆದಾರರು
2
+ ಬೆಂಗಳೂರು,ಅ.12- ಗುತ್ತಿಗೆದಾರರ ಬಾಕಿ ಬಿಲ್‍ಗೆ ಸಂಬಂಧಪಟ್ಟಂತೆ ರಾಜ್ಯಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಮತ್ತೆ ಹೋರಾಟಕ್ಕೆ ಮುಂದಾಗಿದೆ. ರಾಜ್ಯಸರ್ಕಾರ ರಚನೆಯಾಗಿ 5 ತಿಂಗಳು ಕಳೆದಿದ್ದರೂ ಬಾಕಿ ಬಿಲ್ ಪಾವತಿಯಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ತನಿಖೆಯ ಹೆಸರಿನಲ್ಲಿ ಕಿರುಕುಳ ನೀಡಲಾಗುತ್ತಿದೆ.
3
+ ದ್ದೇಶಪೂರ್ವಕವಾಗಿಯೇ ಕಾಮಗಾರಿಗಳ ಬಿಲ್ ಅನ್ನು ತಡೆಹಿಡಿಯಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಹಿಂದೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪತ್ರಿಕಾಗೋಷ್ಠಿ ನಡೆಸಿ ರಾಜ್ಯಸರ್ಕಾರದ ವಿರುದ್ಧ ಕಿಡಿಕಾರಿದರು. ಅದರ ನಂತರ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದಿಷ್ಟು ಬಾಕಿ ಬಿಲ್ ಪಾವತಿಯಾಗಿದ್ದವು. ಅದರ ಹೊರತಾಗಿಯೂ ಇನ್ನೂ ಸಾವಿರಾರು ಕೋಟಿ ರೂ.ಗಳು ಬಿಡುಗಡೆಯಾಗಬೇಕಿದೆ.
4
+ ಇಸ್ರೇಲ್‍ನಲ್ಲಿರುವ ಭಾರತೀಯರ ರಕ್ಷಣೆಗೆ ‘ಆಪರೇಷನ್ ಅಜಯ್’ ಕಾರ್ಯಾಚರಣೆ ಆರಂಭ
5
+ ಈ ಹಿನ್ನೆಲೆಯಲ್ಲಿ ರಾಜ್ಯಸರ್ಕಾರದ ಮೇಲೆ ಒತ್ತಡ ಹೇರಲು ಗುತ್ತಿಗೆದಾರರ ಸಂಘ ಮುಂದಾಗಿದೆ. ನಾಳೆ ಬೆಳಿಗ್ಗೆ ಸಂಘದ ಸಭೆ ಕರೆಯಲಾಗಿದ್ದು, ಅಲ್ಲಿ ಮುಂದಿನ ಹೋರಾಟಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ.
6
+ ರಾಜ್ಯಸರ್ಕಾರ ಲೋಕೋಪಯೋಗಿ, ಸಮಾಜ ಕಲ್ಯಾಣ, ಪಂಚಾಯತ್ ರಾಜ್, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಬಿಬಿಎಂಪಿ ಸೇರಿದಂತೆ ಮತ್ತಿತರ ಇಲಾಖೆಗಳಲ್ಲಿ ಬಾಕಿ ಇರುವ ಬಿಲ್‍ಗಳನ್ನು ಶೀಘ್ರ ಬಿಡುಗಡೆ ಮಾಡುವಂತೆ ಒತ್ತಡ ಹೇರಲಾಗಿದೆ.
eesanje/url_46_332_11.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಈರುಳ್ಳಿ ಬೆಲೆ ಮತ್ತೆ ಗಗನಕ್ಕೇರುವ ಸಾಧ್ಯತೆ
2
+ ಬೆಂಗಳೂರು,ಅ.12- ಮಳೆ ಅಭಾವದಿಂದಾಗಿ ರಾಜ್ಯ ಹಾಗೂ ದೇಶದಲ್ಲಿ ಈರುಳ್ಳಿ ಬೆಳೆಯುವ ಪ್ರದೇಶಗಳಲ್ಲಿ ಬೆಳೆ ಇಳುವರಿ ಕಡಿಮೆಯಾಗಿರುವುದರಿಂದ ಮುಂದಿನ ದಿನಗಳಲ್ಲಿ ಈರುಳ್ಳಿ ಬೆಲೆ ಗಗನಕ್ಕೇರುವ ಸಾಧ್ಯತೆ ಇದೆ. ದೇಶಾದ್ಯಂತ ಮಳೆಯ ಅನಿಶ್ಚಿತ ಕೃಷಿ ವಲಯದ ಮೇಲೆ ಭಾರೀ ಪರಿಣಾಮ ಬೀರಿದೆ. ಮಳೆ ಆಧಾರಿತ ಬೆಳೆಗಳ ಉತ್ಪಾದನೆ ತೀವ್ರವಾಗಿ ಕುಂಠಿತವಾಗಿದ್ದು, ಪೂರೈಕೆಯಲ್ಲಿ ವ್ಯತ್ಯಾಸ ಉಂಟು ಮಾಡಲಿದೆ.
3
+ ಅಕ್ಕಿ, ಬೇಳೆ ಸೇರಿದಂತೆ ಹಲವು ಆಹಾರ ಧಾನ್ಯಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ. ಈರುಳ್ಳಿ ಕೂಡ ಇದೇ ಸಾಲಿನಲ್ಲಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳು ಬರಕ್ಕೆ ತುತ್ತಾಗಿವೆ. ಅದರಲ್ಲೂ ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬೆಳೆಯುವ ಪ್ರದೇಶಗಳಾದ ಚಿತ್ರದುರ್ಗ, ಚಿಕ್ಕಬಳ್ಳಾಪುರ, ಗದಗ, ವಿಜಯಪುರ ಮತ್ತು ಹಲವು ಜಿಲ್ಲೆಗಳಲ್ಲಿ ಮಳೆ ಅಭಾವ ಕಾಡುತ್ತಿರುವ ಕಾರಣ ಈರುಳ್ಳಿ ಇಳುವರಿ ಕಡಿಮೆಯಾಗಿರುವುದರಿಂದ ಈ ಪ್ರದೇಶಗಳಲ್ಲೂ ಈರುಳ್ಳಿ ಬೆಲೆ ಏರಿಕೆಯಾಗಲಿದೆ ಎಂದು ಹೇಳಲಾಗಿದೆ.
4
+ ರಾಜ್ಯದಲ್ಲಿ ಹೊಸ ಈರುಳ್ಳಿ ಬೆಳೆಯ ಒಟ್ಟು ಇಳುವರಿ ಕೇವಲ ಶೇ.40ರಷ್ಟಿದ್ದು, ಈಗಾಗಲೇ ಶೇ.25ರಷ್ಟು ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ. ರಾಜ್ಯದಲ್ಲಿ ಬೆಳೆಯುವ ಈರುಳ್ಳಿ ಬೆಳೆ ಹೊರತುಪಡಿಸಿ, ಇಡೀ ಈರುಳ್ಳಿ ಮಾರುಕಟ್ಟೆ ನಾಸಿಕ್ ಮತ್ತು ಮಹಾರಾಷ್ಟ್ರದ ಇತರ ಈರುಳ್ಳಿ ಬೆಳೆಯುವ ಪ್ರದೇಶಗಳನ್ನು ಅವಲಂಬಿಸಿದೆ.
5
+ ಕಳೆದ 15 ದಿನಗಳಿಂದ ಶಿವಮೊಗ್ಗ ಸಗಟು ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ಬೆಲೆ ಸುಮಾರು 25ರಿಂದ 30 ರೂ.ಗಳಿದ್ದರೆ, ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿಗೆ 30ರಿಂದ 35 ರೂ.ಗೆ ಮಾರಾಟವಾಗುತ್ತಿತ್ತು. ಸದ್ಯಕ್ಕೆ ಶಿವಮೊಗ್ಗದ ಸಗಟು ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ 32ರಿಂದ 35 ರೂ.ಗೆ ಏರಿಕೆಯಾಗಿದೆ. ಈರುಳ್ಳಿ ರಫ್ತಿನ ಮೇಲೆ ಕೇಂದ್ರ ಸರ್ಕಾರ ಶೇ 40ರಷ್ಟು ತೆರಿಗೆ ವಿಸಿದೆ. ಈ ಕ್ರಮವು ಮಹಾರಾಷ್ಟ್ರದ ಪ್ರಮುಖ ಮಾರಾಟಗಾರರು ರಫ್ತು ಮಾಡಲು ಕಡಿವಾಣ ಹಾಕಿದ್ದಾರೆ ಎಂದು ವ್ಯಾಪಾರಿಗಳು ಆಳಲು ತೊಡಿಕೊಂಡಿದ್ದಾರೆ.
6
+ ಕೇಂದ್ರ ಸರ್ಕಾರವು ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ (ಎನ್ಸಿಸಿಎಫ್) ಬೆಂಬಲದೊಂದಿಗೆ ಕಳೆದ ಕೆಲವು ತಿಂಗಳುಗಳಿಂದ ಮಹಾರಾಷ್ಟ್ರದಿಂದ ಈರುಳ್ಳಿಯನ್ನು ಖರೀದಿಸುವ ಮೂಲಕ ಬೆಲೆಯನ್ನು ನಿಯಂತ್ರಿಸುತ್ತಿದೆ. ನವೆಂಬರ್‌ನಿಂದ ಈರುಳ್ಳಿ ಬೆಲೆ ಸ್ಥಿರವಾದ ಏರಿಕೆಗೆ ಸಾಕ್ಷಿಯಾಗಬಹುದು ಮತ್ತು ಮಹಾರಾಷ್ಟ್ರದಿಂದ ಪೂರೈಕೆಯ ಆಧಾರದ ಮೇಲೆ ಬೆಲೆ ಏರಿಕೆ ನಿರ್ಧಾರವಾಗಲಿದೆ.
7
+ ವಿಶ್ವಸಂಸ್ಥೆಯಲ್ಲಿ ವಸುದೈವ ಕುಟುಂಬಕಂ ನಾಮಫಲಕ ಅನಾವರಣ
8
+ ಬೆಲೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ ಈರುಳ್ಳಿ ಬೆಲೆ ಹೆಚ್ಚಳವನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಕೇಂದ್ರ ಸರ್ಕಾರ ಈರುಳ್ಳಿ ದಾಸ್ತಾನು ಮಾಡಿದ್ದು, ಬೆಲೆ ಹೆಚ್ಚಳವಾಗುವಾಗ ಮಾರುಕಟ್ಟೆಗೆ ಈರುಳ್ಳಿ ಬಿಡುಗಡೆ ಮಾಡುವ ಮೂಲಕ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯನ್ನು ನಿಯಂತ್ರಿಸುತ್ತಿದೆ.
9
+ ಕುಸಿದ ಟೊಮೊಟೊ ಬೆಲೆ:ತಿಂಗಳ ಹಿಂದೆ ಟೊಮೆಟೊ ಕಾಯಲು ಹಲವರು ಇರುತ್ತಿದ್ದರು ಆದರೆ ಈಗ ಟೊಮೆಟೊ ಕೇಳುವವರೆ ಇಲ್ಲ ಎನ್ನುವಂತಾಗಿದೆ. ಟೊಮೆಟೊ ಬೆಳೆದಿದ್ದ ರೈತರು ಈಗ ಕಂಗಾಲಾಗಿದ್ದು, ಮಾರುಕಟ್ಟೆಗೆ ತಂದ ಟೊಮೆಟೊಗೆ ಬೆಲೆ ಸಿಗದ ಕಾರಣ ರಸ್ತೆಬದಿಯಲ್ಲೇ ಸುರಿದು ಹೋಗುತ್ತಿದ್ದಾರೆ.
10
+ ಜೈಲಿನಲ್ಲಿ ಚಂದ್ರಬಾಬು ನಾಯ್ಡು ಅವರಿಗೆ ಜೀವಭಯವಿದೆ : ನಾರಾ ಲೋಕೇಶ್
11
+ ರಾಜ್ಯದ ಸಗಟು ಮಾರುಕಟ್ಟೆಯಲ್ಲಿ ಕೆಜಿಗೆ 2 ರೂ.ಗೆ ಹಾಗೂ ಚಿಲ್ಲರೆ ಮಾರುಕಟ್ಟೆಯಲ್ಲಿ 8 ರಿಂದ 10 ರೂ.ಗೆ ತರಕಾರಿ ಮಾರಾಟವಾಗುತ್ತಿದೆ. ಚಳ್ಳಕೆರೆ ಮಾರುಕಟ್ಟೆಯಲ್ಲಿ ಮಂಗಳವಾರ ಮತ್ತು ಬುಧವಾರದಂದು ಟೊಮೆಟೊ ಕೆಜಿಗೆ 2 ರೂ.ಗೆ ಕುಸಿದಿದೆ.
12
+ ತಿಂಗಳ ಹಿಂದೆ 2,000 ರಿಂದ 2,500 ರೂ.ಗೆ ಮಾರಾಟವಾಗುತ್ತಿದ್ದ 15 ಕೆಜಿ ಟೊಮೇಟೊ ಕ್ರೇಟ್ ಈಗ 20-30 ರೂ.ಗೆ ಸಿಗುತ್ತಿಲ್ಲ, ಇದು ರೈತರನ್ನು ತೀವ್ರವಾಗಿ ಬಾಸುತ್ತಿದೆ. ಈ ಬೆಲೆಯಲ್ಲಿ ಟೊಮೆಟೊ ಮಾರಿದರೆ ಮಾರುಕಟ್ಟೆಗೆ ತರುವ ಬಾಡಿಗೆ ಸಹ ಸಿಗುವುದಿಲ್ಲ.
eesanje/url_46_332_12.txt ADDED
@@ -0,0 +1,8 @@
 
 
 
 
 
 
 
 
 
1
+ ಬೆಂಗಳೂರು ಕಂಬಳಕ್ಕೆ ಗುದ್ದಲಿ ಪೂಜೆ
2
+ ಬೆಂಗಳೂರು,ಅ.11- ಬೆಂಗಳೂರಿನ ಅರಮನೆ ಮೈದಾನದಲ್ಲಿ ಮುಂದಿನ ತಿಂಗಳು ನಡೆಯುವ ಬೆಂಗಳೂರು ಕಂಬಳ, ನಮ್ಮ ಕಂಬಳ ಕಾರ್ಯಕ್ರಮಕ್ಕೆ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು. ರಾಜಕೀಯವಾಗಿ ಆರೋಪ, ಪ್ರತ್ಯಾರೋಪಗಳಿಂದ ಹೆಚ್ಚು ಚರ್ಚೆಗೆ ಒಳ ಗಾಗಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು.
3
+ ಮಾಜಿ ಮುಖ್ಯಮಂತ್ರಿ ಹಾಗೂ ಸಚಿವರೂ ಆಗಿರುವ ಡಿ.ವಿ.ಸದಾನಂದಗೌಡ, ಶಾಸಕರಾದ ಎನ್.ಎ.ಹ್ಯಾರಿಸ್, ರಿಜ್ವಾನ್ ಹರ್ಷದ್, ಸಂಗೀತ ನಿರ್ದೇಶಕ ಗುರುಕಿರಣ್, ಕರಾವಳಿ ಸಂಘಟನೆಗಳ ಮುಖ್ಯಸ್ಥರಾದ ಅಶೋಕ್ ರೈ, ಪ್ರಕಾಶ್, ಗುರುರಂಜನ್ ಶೆಟ್ಟಿ, ರಾಜೇಂದ್ರಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
4
+ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕರಾವಳಿ ಸಂಸ್ಕøತಿ, ವೈವಿಧ್ಯತೆ ನಾಡಿಗೆ ಹೆಮ್ಮೆ. ಇಂದು ಬೆಂಗಳೂರಿನ ಕಂಬಳಕ್ಕೆ ಚಾಲನೆ ನೀಡಲಾಗಿದೆ. ತುಳು ನಾಡಿನ ಆಚರಣೆಗಳು ಬೆಂಗಳೂರಿನಲ್ಲಿ ನಡೆಯಲಿವೆ. ಇದಕ್ಕಾಗಿ ಚಿಕ್ಕ ಕ್ರೀಡಾಂಗಣವನ್ನು ನಿರ್ಮಾಣ ಮಾಡಲಾಗುತ್ತದೆ ಎಂದರು. ಕರಾವಳಿಯವರು ತಮ್ಮ ಆಚರಣೆ, ಸಂಸ್ಕøತಿಯನ್ನು ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಅದಕ್ಕೆ ನಮ್ಮ ಬೆಂಬಲ ಇದೆ. ಬೆಂಗಳೂರಿನಲ್ಲಿ ಕರಾವಳಿ ಭಾಗದ ಸಂಘಟನೆ ಕಚೇರಿಗೆ ಅಗತ್ಯವಾದ ಸ್ಥಳಾವಕಾಶ ಮಾಡಿಕೊಡಲು ಬಿಬಿಎಂಪಿಗೆ ಸೂಚನೆ ನೀಡುವುದಾಗಿ ತಿಳಿಸಿದರು.
5
+ ಈ ಹಿಂದೆ ಡಿ.ವಿ.ಸದಾನಂದಗೌಡ ಅವರು ಮುಖ್ಯಮಂತ್ರಿಯಾಗಿದ್ದಾಗ ಪ್ರತಿ ಕಂಬಳಕ್ಕೆ 10 ಲಕ್ಷ ನೀಡಿದ್ದರು. ತಮ್ಮ ಸರ್ಕಾರ ಪ್ರತಿ ಕಂಬಳಕ್ಕೆ ಐದು ಲಕ್ಷದಂತೆ 20 ಕಂಬಳಕ್ಕೆ ಹಣ ನೀಡುತ್ತೇವೆ ಎಂದು ಹೇಳಿದರು.ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನಗರಾಭಿವೃದ್ಧಿ ಇಲಾಖೆ ಸೇರಿದಂತೆ ಎಲ್ಲರೊಂದಿಗೆ ಚರ್ಚಿಸಿ ಕಂಬಳಕ್ಕೆ ಗರಿಷ್ಠ ಪ್ರಮಾಣದ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಯ ಯುವಕರು ಬೆಂಗಳೂರಿನಲ್ಲಿ ಕಂಬಳ ಮಾಡಲು ಮುಂದಾಗಿದ್ದಾರೆ. ಇದು ಶ್ಲಾಘನೀಯ. ಯಾವುದೇ ತೊಂದರೆ ಬಂದರೂ ತಲೆಕೆಡಿಸಿಕೊಳ್ಳಬೇಡಿ. ಸರ್ಕಾರ ನಿಮ್ಮ ಜೊತೆಯಲ್ಲಿದೆ ಎಂದು ಭರವಸೆ ನೀಡಿದರು.
6
+ ಡಿ.ವಿ.ಸದಾನಂದಗೌಡ ಮಾತನಾಡಿ, ಕಂಬಳ ನಡೆಸುವುದು ಕಷ್ಟ. ಅದನ್ನು ನಿಲ್ಲಿಸಬೇಕು ಎನ್ನುವ ಹಂತದಲ್ಲಿ ನಾನು ಮುಖ್ಯಮಂತ್ರಿಯಾಗಿದ್ದೆ. ಒಂದು ಕಂಬಳಕ್ಕೆ 10 ಲಕ್ಷ ರೂ.ಗಳಂತೆ 10 ಕಂಬಳಗಳಿಗೆ 1 ಕೋಟಿ ರೂ. ಅನುದಾನ ನಿಗದಿ ಮಾಡಿ ತಮಿಳುನಾಡಿನಲ್ಲಿ ಜಲ್ಲಿಕಟ್ಟಿನಂತೆ ಕಂಬಳವನ್ನು ರಾಜ್ಯ ಕ್ರೀಡೆ ಯಾಗಿ ಪರಿವರ್ತನೆ ಮಾಡಿದ ತೃಪ್ತಿ ತಮಗಿದೆ ಎಂದರು. ಕಂಬಳದ ಬಗ್ಗೆ ನ್ಯಾಯಾಲಯದಲ್ಲಿ ಸಾಕಷ್ಟು ವಾದ-ವಿವಾದ ನಡೆದವು. ಹೈಕೋರ್ಟ್ ನಲ್ಲಿ ಸಮರ್ಥ ವಾದ ಮಂಡಿಸಿ ನಾವು ಕಂಬಳ ಉಳಿಸಿಕೊಂಡಿದ್ದೇವೆ ���ಂದರು.
7
+ ನಾವು ನಿನ್ನೆ ಕಂಬಳದ ಬಗ್ಗೆ ಚರ್ಚೆ ನಡೆಯುವಾಗ ಮಳೆ ಬಂದಿತು. ಇದರಿಂದಾಗಿ ಉಪಮುಖ್ಯಮಂತ್ರಿಯವರಿಗೆ ತಲೆಬಿಸಿ ಕಡಿಮೆಯಾಗಿದೆ. ಇಲ್ಲವಾದರೆ ಕಂಬಳ ನಡೆಸಲು ಬಳಸುವ ನೀರಿನ ಬಗ್ಗೆ ಕೆಲ ಬುದ್ಧಿಜೀವಿಗಳು ತಗಾದೆ ತೆಗೆಯುತ್ತಾರೆ. ಅದಕ್ಕೂ ಪೂರ್ವಸಿದ್ಧರಾಗಿರಬೇಕು. ಕೆಲವರಿಗೆ ತಲೆಯಲ್ಲಿ ಮೆದುಳಿಲ್ಲ, ಮೆದುಳನ್ನು ಬ್ಯಾಗಿನಲ್ಲೇ ಇಟ್ಟುಕೊಂಡಿದ್ದಾರೆ ಎಂದು ಸದಾನಂದಗೌಡ ಕಿಡಿಕಾರಿದರು.
8
+ ಸಂಗೀತ ನಿರ್ದೇಶಕ ಗುರುಕಿರಣ್ ಮಾತನಾಡಿ, 44 ಎಕರೆಯಲ್ಲಿ ಕಂಬಳಕ್ಕಾಗಿ ಸಿದ್ಧತೆ ನಡೆಸಲಾಗಿದೆ. ಕಂಬಳ ಮತ್ತು ಅದರ ಮೈದಾನ ಒಂದು ಭಾಗವಾದರೆ, ಮತ್ತೊಂದು ವೇದಿಕೆಯಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ಹಳೆ ಮಿನಿ ಮಂಗಳೂರಿನ ಮಾದರಿಯನ್ನು ನಿರ್ಮಿಸಲಾಗುವುದು. ತುಳುನಾಡಿನ ಜನಪದ ಆಚರಣೆಗಳಾದ ಯಕ್ಷಗಾನ, ಹುಲಿವೇಷ ಸೇರಿದಂತೆ ಸಾಂಸ್ಕøತಿಕ ಕಾರ್ಯಕ್ರಮಗಳು, ಕರಾವಳಿ ಭಾಗದ ತಿಂಡಿ ಭಕ್ಷ್ಯಗಳನ್ನು ಬೆಂಗಳೂರಿನವರಿಗೆ ಪರಿಚಯಿಸುವ ಉದ್ದೇಶವಿದೆ ಎಂದು ವಿವರಿಸಿದರು.
eesanje/url_46_332_2.txt ADDED
@@ -0,0 +1,9 @@
 
 
 
 
 
 
 
 
 
 
1
+ ರಾಜ್ಯದ 216 ತಾಲ್ಲೂಕುಗಳು ಬರಪೀಡಿತ ; ಸರ್ಕಾರ ಘೋಷಣೆ
2
+ ಬೆಂಗಳೂರು,ಅ.13- ಹೆಚ್ಚುವರಿಯಾಗಿ 21 ಬರಪೀಡಿತ ತಾಲ್ಲೂಕುಗಳನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ 216 ತಾಲ್ಲೂಕುಗಳು ಬರಪೀಡಿತವಾಗಿವೆ. 189 ತೀವ್ರ ಬರಪೀಡಿತ ತಾಲ್ಲೂಕು 17 ಸಾಧಾರಣ ಬರಪೀಡಿತ ತಾಲ್ಲೂಕುಗಳಾಗಿವೆ. ಕೇಂದ್ರ ಸರ್ಕಾರದ ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ವಯ ಜಿಲ್ಲಾಧಿಕಾರಿಗಳಿಗೆ ನೀಡಿರುವ ಬೆಳೆ ಹಾನಿ ಸಮೀಕ್ಷೆಯ ವರದಿ ಆಧರಿಸಿ 216 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ.
3
+ ಹೆಚ್ಚುವರಿ 21 ಬರಪೀಡಿತ ತಾಲ್ಲೂಕುಗಳ ಪೈಕಿ 17 ತಾಲ್ಲೂಕು ತೀವ್ರ ಬರಪೀಡಿತವಾಗಿದ್ದು, 4 ತಾಲ್ಲೂಕು ಸಾಧಾರಣ ಬರಪೀಡಿತವಾಗಿವೆ. ಈ ಹಿಂದೆ ಘೋಷಣೆ ಮಾಡಿದ್ದ 195 ತಾಲ್ಲೂಕುಗಳ ಪೈಕಿ 161 ತಾಲ್ಲೂಕುಗಳು ಬರಪೀಡಿತವಾಗಿದ್ದವು. ಸಾಧಾರಣ ಬರಪೀಡಿತವೆಂದು ಗುರುತಿಸಲಾಗಿದ್ದ 34 ತಾಲ್ಲೂಕುಗಳ ಪೈಕಿ 22 ತಾಲ್ಲೂಕುಗಳ ಬಗ್ಗೆ ಜಿಲ್ಲಾಧಿಕಾರಿಗಳು ನೀಡಿರುವ ವರದಿ ಆಧರಿಸಿ 11 ತಾಲ್ಲೂಕುಗಳು ತೀವ್ರ ಬರ ಹಾಗೂ 11 ಸಾಧಾರಣ ಬರ ಎಂದು ಘೋಷಿಸುವ ಅರ್ಹತೆ ಪಡೆದಿದೆ ಎಂದು ಸರ್ಕಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.
4
+ ಕರ್ನಾಟಕದಲ್ಲಿ ಕಾಂಗ್ರೆಸ್ ಕಲೆಕ್ಷನ್ ಜಾತ್ರೆ ನಡೆಸುತ್ತಿದೆ : ಯತ್ನಾಳ್
5
+ ಸೆಪ್ಟೆಂಬರ್ ಅಂತ್ಯದವರಿಗೆ ಬರ ಪರಿಸ್ಥಿತಿ ಕಂಡು ಬಂದ 28 ತಾಲ್ಲೂಕುಗಳ ಪೈಕಿ 18 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ಹಾಗೂ 4 ಸಾಧಾರಣ ಬರಪೀಡಿತ ಎಂದು ಗುರುತಿಸಲಾಗಿದೆ. ಹೆಚ್ಚುವರಿ 21 ಬರಪೀಡಿತ ತಾಲ್ಲೂಕುಗಳ ಪೈಕಿ ಬೆಳಗಾವಿ, ಖಾನಾಪುರ, ಚಾಮರಾಜನಗರ, ಅಳ್ನಾವರ, ಅಣ್ಣೀಗೇರಿ, ಕಲಘಟಗಿ, ಮುಂಡರಗಿ, ಆಲೂರು, ಅರಸೀಕೆರೆ, ಹಾಸನ, ಬ್ಯಾಡಗಿ, ಹಾನಗಲ್, ಶಿಗ್ಗಾವಿ, ಪೊನ್ನಂಪೇಟೆ, ಕೆಆರ್ ನಗರ, ಹೆಬ್ರಿ ಹಾಗೂ ದಾಂಡೇಲಿ ತೀವ್ರ ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ.
6
+ ಯಳಂದೂರು, ಮೂಡಿಗೆರೆ, ತರೀಕೆರೆ, ಸಿದ್ದಾಪುರ ಸಾಧಾರಣ ಬರಪೀಡಿತ ತಾಲ್ಲೂಕುಗಳಾಗಿವೆ. ಸೆಪ್ಟೆಂಬರ್‍ನಲ್ಲಿ 34 ಸಾಧಾರಣ ಬರಪೀಡಿತವೆಂದು ಘೋಷಿಸಲಾಗಿತ್ತು. ಆ ತಾಲ್ಲೂಕುಗಳಲ್ಲಿ ಮರುಬೆಳೆ ಸಮೀಕ್ಷೆ ಅನ್ವಯ 11 ತಾಲ್ಲೂಕುಗಳು ತೀವ್ರ ಬರಪೀಡಿತವಾಗಿವೆ. ಅವುಗಳೆಂದರೆ ಬೆಂಗಳೂರು ಉತ್ತರ, ಗುಂಡ್ಲುಪೇಟೆ, ಹನೂರು, ಬೇಲೂರು, ಚನ್ನರಾಯಪಟ್ಟಣ, ಹೊಳೇನರಸೀಪುರ, ಸೋಮವಾರಪೇಟೆ, ಮಾಲೂರು, ದೇವದುರ್ಗ, ಮಸ್ಕಿ, ತುಮಕೂರು.
7
+ ಸಾಧಾರಣ ಬರಪೀಡಿತ ತಾಲ್ಲೂಕುಗಳೆಂದರೆ ಕೊಳ್ಳೇಗಾಲ, ಕೊಪ್ಪ, ನರಸಿಂಹರಾಜಪುರ, ಶೃಂಗೇರಿ, ಮಂಗಳೂರು, ಮೂಡಬಿದ್ರೆ, ಸಕಲೇಶಪುರ, ಚನ್ನಪಟ್ಟಣ, ಮಾಗಡಿ, ಬ್ರಹ್ಮಾವರ ಹಾಗೂ ಕಾರವಾರ ತಾಲ್ಲೂಕುಗಳು. ಮುಂಗಾರು ಹಂಗಾಮಿನಲ್ಲಿ ಬರಪೀಡಿತವಾಗಿರುವ 216 ತಾಲ್ಲೂಕುಗಳಲ್ಲಿ ಬರ ನಿರ್ವಹಣೆ ಕಾರ್ಯಕ್ರಮವನ್ನು ಜಿಲ್ಲಾಕಾರಿಗಳು ಮುಂದಿನ 6 ತಿಂಗಳವರೆಗೆ ಕೈಗೊಳ್ಳಬೇಕಾಗಿದೆ.
8
+ ಇಸ್ರೇಲ್‍ನಿಂದ ತಾಯ್ನಾಡಿಗೆ ಬಂದಿಳಿದ ಭಾರತೀಯರು
9
+ ಈ ಸಂಬಂಧ ��ೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸಿರುವ ಬರ ಪರಿಹಾರ ಮಾರ್ಗಸೂಚಿ ಅನ್ವಯ ಬರಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕಾಗಿದೆ.
eesanje/url_46_332_3.txt ADDED
@@ -0,0 +1,5 @@
 
 
 
 
 
 
1
+ ತೆರಿಗೆ ಪಾವತಿಸದೆ ಸಂಚಾರಿಸುತಿದ್ದ ಬಸ್‍ಗಳ ಜಪ್ತಿ
2
+ ಬೆಂಗಳೂರು, ಅ.13- ತೆರಿಗೆ ಪಾವತಿಸದೆ ಸಂಚಾರ ಮಾಡುವ ಖಾಸಗಿ ಬಸ್‍ಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿರುವ ಸಾರಿಗೆ ಇಲಾಖೆ ಅಕಾರಿಗಳು ಹಲವು ಬಸ್‍ಗಳನ್ನು ಜಪ್ತಿ ಮಾಡಿ ಭಾರೀ ಪ್ರಮಾಣದ ದಂಡ ವಿಧಿಸಿದ್ದಾರೆ.
3
+ ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾದ ಮಲ್ಲಿಕಾರ್ಜುನ, ಜಂಟಿ ಆಯುಕ್ತರಾದ ಶೋಭಾ ಅವರ ಮಾರ್ಗದರ್ಶನದಲ್ಲಿ ಕಸ್ತೂರಿನಗರದ ಸಾರಿಗೆ ಪೂರ್ವ ಕಚೇರಿಯ ಆರ್‍ಟಿಒ ಶ್ರೀನಿವಾಸ ಪ್ರಸಾದ್ ಅವರು ಕಾರ್ಯಾಚರಣೆ ನಡೆಸಿದ್ದು, ಅಖಿಲ ಭಾರತ ರಹದಾರಿ ಹೊಂದಿದ್ದ ಖಾಸಗಿ ಐಶರಾಮಿ ಬಸ್‍ನ್ನು ಜಪ್ತಿ ಮಾಡಿದ್ದಾರೆ.
4
+ ಬೆಂಗಳೂರಲ್ಲಿ ಐಟಿ ದಾಳಿ : ಮಂಚದ ಕೆಳಗಿದ್ದ ಕಾಂಚಾಣ ಕಂಡು ಅಧಿಕಾರಿಗಳು ಶಾಕ್.
5
+ 30 ಸೀಟುಗಳ ಈ ಸ್ಲಿಪರ್ ಕೋಚ್‍ಗೆ ಜುಲೈ 1ನಿಂದ ಎರಡು ತ್ರೈಮಾಸಿಕದಲ್ಲಿ ತೆರಿಗೆ ಪಾವತಿಸಿಲ್ಲ ಎಂದು ಹೇಳಲಾಗಿದೆ. ದಂಡ ಮತ್ತು ತೆರಿಗೆ ಹಿಂಬಾಕಿ ಸೇರಿ 2,19,780 ರೂಪಾಯಿ ಪಾವತಿಸುವಂತೆ ಸಾರಿಗೆ ಇಲಾಖೆ ಬಸ್ ಮಾಲೀಕರಿಗೆ ನೋಟಿಸ್ ನೀಡಿದೆ. ಇದಲ್ಲದೆ ರಹದಾರಿ ನಿಯಮಾವಳಿಗಳನ್ನು ಉಲ್ಲಂಘಿಸಿದ್ದ ಎಂಟು ಬಸ್ ಗಳನ್ನು ಸಾರಿಗೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
eesanje/url_46_332_4.txt ADDED
@@ -0,0 +1,5 @@
 
 
 
 
 
 
1
+ ಕರ್ನಾಟಕದಲ್ಲಿ ಕಾಂಗ್ರೆಸ್ ಕಲೆಕ್ಷನ್ ಜಾತ್ರೆ ನಡೆಸುತ್ತಿದೆ : ಯತ್ನಾಳ್
2
+ ಬೆಂಗಳೂರು,ಅ.13- ಕರ್ನಾಟಕದಲ್ಲಿ ಕಾಂಗ್ರೆಸ್ ಕಲೆಕ್ಷನ್ ಜಾತ್ರೆ ನಡೆಸುತ್ತಿದೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಕಲೆಕ್ಷನ್ ಜಾತ್ರೆ ನಡೆಸುತ್ತಿದೆ. ಮಹದೇವಪ್ಪನ ದುಡ್ಡು , ಕಾಕ ಪಾಟೀಲನ ದುಡ್ಡು , ದಯಾನಂದನ ದುಡ್ಡು ಎಂದು ಯತ್ನಾಳ್ ಕುಹುಕವಾಡಿದ್ದಾರೆ.
3
+ ಕರ್ನಾಟಕದಲ್ಲಿ ಕಾಂಗ್ರೆಸ್ ಕಲೆಕ್ಷನ್ ಜಾತ್ರೆ!ಮಹದೇವಪ್ಪನ ದುಡ್ಡು,ಕಾಕಪಾಟಿಲನ ದುಡ್ಡು,ದಯಾನಂದನ ದುಡ್ಡು,1/4ರಷ್ಟು ರಾಜಸ್ಥಾನಕ್ಕೆ,1/4ರಷ್ಟು ಮಧ್ಯಪ್ರದೇಶಕ್ಕೆ,1/4ರಷ್ಟು ತೆಲಂಗಾಣಕ್ಕೆ,1/4 ರಷ್ಟು ಛತ್ತೀಸಘಡಕ್ಕೆ!!ಅವರಿಗೆ ವಿಧಾನಸೌಧ,ಜನರಿಗೆ ಲಾಲಬಾಗ್!
4
+ ಸಿಕ್ಕಿಬಿದ್ದಿರುವ 42 ಕೋಟಿ ನಗದಿನಲ್ಲಿ 4ನೇ 1ರಷ್ಟು ರಾಜಸ್ಥಾನಕ್ಕೆ, 4ನೇ 1ರಷ್ಟು ಮಧ್ಯಪ್ರದೇಶಕ್ಕೆ, 4ನೇ 1ರಷ್ಟು ತೆಲಂಗಾಣಕ್ಕೆ ಹಾಗೂ 4ನೇ 1ರಷ್ಟು ಛತ್ತೀಸ್‍ಘಡಕ್ಕೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ನಾಯಕಿ ಮಾಜಿ ಕಾಪೆರ್ರೇಟರ್ ಅಶ್ವಥಮ್ಮ ಅವರ ಪತಿ ಅಂಬಿಕಾಪತಿಯ ಮಗಳ ಮನೆಯಲ್ಲಿ ಐಟಿ ಅಧಿಕಾರಿಗಳು ವಶಪಡಿಸಿಕೊಂಡಿರುವ 42 ಕೋಟಿ ಹಣ! ಈತ ಯಾರ ಚಿರಂಜೀವಿಯವರ ಪರವಾಗಿ ಹಣ ಸಂಗ್ರಹ ಮಾಡುತ್ತಿದ್ದ ಎಂದು ಗುತ್ತಿಗೆದಾರರು ಕೇಳಿದರೆ ನಿಜ ಹೊರಬರಬಹುದು ಎಂದು ಹೇಳಿದ್ದಾರೆ.
5
+ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷನೇ ಸರ್ಕಾರದ ಪರವಾಗಿ ವಸೂಲಿಗಿಳಿದರೆ ಗುತ್ತಿಗೆದಾರರನ್ನು ಕಾಪಾಡುವವರು ಯಾರು? ಈ ಹಣ ಯಾರದ್ದು ಎಂಬುದರ ಬಗ್ಗೆ ತನಿಖೆಯಾಗಲಿ ಎಂದು ಯತ್ನಾಳ್ ಒತ್ತಾಯಿಸಿದ್ದಾರೆ.
eesanje/url_46_332_5.txt ADDED
@@ -0,0 +1,7 @@
 
 
 
 
 
 
 
 
1
+ ಬೆಂಗಳೂರಲ್ಲಿ ಐಟಿ ದಾಳಿ : ಮಂಚದ ಕೆಳಗಿದ್ದ ಕಾಂಚಾಣ ಕಂಡು ಅಧಿಕಾರಿಗಳು ಶಾಕ್..!
2
+ ಬೆಂಗಳೂರು,ಅ.13- ಖಚಿತ ಮಾಹಿತಿ ಮೇರೆಗೆ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಹಾಗೂ ಮಾಜಿ ಕಾಪೊರೇಟರ್ ಪತಿ ಮನೆ ಮೇಲೆ ಮಿಂಚಿನ ದಾಳಿ ನಡೆಸಿರುವ ಆದಾಯ ತೆರಿಗೆ ಅಧಿಕಾರಿಗಳು 42 ಕೋಟಿ ನಗದು ಪತ್ತೆಹಚ್ಚಿದ್ದಾರೆ. ಇತ್ತೀಚಿನ ವರ್ಷಗಳಲ್ಲೇ ಇದು ಐಟಿಯ ಅತಿದೊಡ್ಡ ದಾಳಿ ಇದಾಗಿದ್ದು , ದಾಳಿಯ ವೇಳೆ ಸಿಕ್ಕಿರುವ ಕಂತೆ ಕಂತೆ ನೋಟುಗಳನ್ನು ಕಂಡು ಸ್ವತಃ ಅಧಿಕಾರಿಗಳೇ ದಂಗಾಗಿದ್ದಾರೆ. ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹಾಗೂ ಬಿಬಿಎಂಪಿ ಮಾಜಿ ಸದಸ್ಯೆ ಅಶ್ವಥಮ್ಮ ಅವರ ಮನೆ ಮೇಲೆ ನಿನ್ನೆ ರಾತ್ರಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.
3
+ ಇದೇ ಸಂದರ್ಭದಲ್ಲಿ ಆರ್‍ಟಿನಗರದ ಆತ್ಮಾನಂದ ಫ್ಲಾಟ್ ಮೇಲೆ ಅಶ್ವಥಮ್ಮ ಅವರ ಬಾಮೈದ ಪ್ರದೀಪ್‍ಗೆ ಸೇರಿದ ಫ್ಲಾಟ್‍ನಲ್ಲಿ ದಾಳಿ ನಡೆಸಿದ ವೇಳೆ ಮಂಚದ ಕೆಳಗೆ 23 ಬಾಕ್ಸ್‍ನಲ್ಲಿ ಸಂಗ್ರಹಿಸಿಟ್ಟಿದ್ದ 500 ರೂ. ಮುಖಬೆಲೆಯ ಒಟ್ಟು 42 ಕೋಟಿ ನಗದನ್ನು ಪತ್ತೆ ಮಾಡಿದ್ದಾರೆ. ಅಂಬಿಕಾಪತಿಯ ಪುತ್ರಿಯ ಆರ್‍ಟಿನಗರದಲ್ಲಿರುವ ವೈಟ್‍ಹೌಸ್ ಫ್ಲಾಟ್ ಮೇಲೂ ಐಟಿ ದಾಳಿ ನಡೆಸಿದೆ. ಮತ್ತೊಂದು ಪ್ರಕರಣದಲ್ಲಿ ಗುತ್ತಿಗೆದಾರ ಹೇಮಂತ್ ಅವರ ಬನಶಂಕರಿ ನಿವಾಸದ ಮೇಲೂ ದಾಳಿ ಮಾಡಲಾಗಿದೆ.
4
+ ಸದ್ಯಕ್ಕೆ ಪತ್ತೆಯಾಗಿರುವ ಕೋಟ್ಯಂತರ ಹಣ ಯಾರಿಗೆ ಸೇರಿದ್ದು, ಎಲ್ಲಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು. ಫ್ಲಾಟ್ ಯಾರ ಒಡೆತನಕ್ಕೆ ಸೇರಿದೆ, ಹಣದ ಮೂಲ ಯಾವುದು, ಎಲ್ಲಿಗೆ ಸಂಗ್ರಹಿಸಲಾಗುತಿತ್ತು ಎಂಬುದರ ಬಗ್ಗೆ ಯಾವ ಗುಟ್ಟನ್ನು ಐಟಿ ಬಿಟ್ಟುಕೊಟ್ಟಿಲ್ಲ. ಮೂಲಗಳ ಪ್ರಕಾರ ಐಟಿ ಅಧಿಕಾರಿಗಳು ವಶಪಡಿಸಿಕೊಂಡಿರುವ ಇಷ್ಟು ದೊಡ್ಡ ಮೊತ್ತದ ಹಣವನ್ನು ಕಾರಿನ ಮೂಲಕ ಚೆನ್ನೈನಿಂದ ತೆಲಂಗಾಣಕ್ಕೆ ತೆಗೆದುಕೊಂಡು ಹೋಗಲು ಸಿದ್ದತೆ ನಡೆಸಲಾಗುತ್ತಿತ್ತು.
5
+ ಇಸ್ರೇಲ್-ಹಮಾಸ್ ಯುದ್ಧ, ದೆಹಲಿಯಲ್ಲಿ ಬಿಗಿ ಬಂದೋಬಸ್ತ್
6
+ ಐಟಿ ಅಧಿಕಾರಿಗಳು ದಾಳಿ ನಡೆಸುವ ಒಂದು ಗಂಟೆಗೂ ಮುನ್ನ ಇದೇ ಫ್ಲಾಟ್‍ನಿಂದ 15 ಕೋಟಿ ಹಣವನ್ನು ಸಾಗಿಸಲಾಗಿತ್ತು. ಇನ್ನು ಒಂದೇ ಒಂದು ಗಂಟೆ ತಡವಾಗಿದ್ದರೂ ಈಗ ಪತ್ತೆಯಾಗಿರುವ ನಗದು ಕೂಡ ಅಲ್ಲಿಂದ ಬೇರೊಂದು ಸ್ಥಳಕ್ಕೆ ತೆಗೆದುಕೊಂಡು ಹೋಗಲು ಸಿದ್ದತೆ ನಡೆಸಲಾಗಿತ್ತು. ಇದೀಗ ಐಟಿ ಅಧಿಕಾರಿಗಳು ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹಾಗೂ ಮಾಜಿ ಬಿಬಿಎಂಪಿ ಸದಸ್ಯೆ ಅಶ್ವಥಮ್ಮ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
7
+ ಬ್ಯಾಂಕ್ ಖಾತೆಗಳು, ಚಿರ-ಚರಾಸ್ತಿಗಳು ಸೇರಿದಂತೆ ಪ್ರತಿಯೊಂದು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ದಾಳಿ ನಡೆಸಿದ ವೇಳೆ ಸ್ಥಳೀಯ ಪೊಲೀಸರ ನೆರವು ಪಡೆಯಲಾಗಿತ್ತು. ಒಂದೇ ಒಂದು ಸಣ್ಣ ಸುಳಿವನ್ನೂ ಸಹ ನೀಡದೆ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.ದಾ ಳಿಯ ಸಂದರ್ಭದಲ್ಲಿ ಅಧಿಕಾರಿಗಳಿಗೆ ಬಳಕೆಯಾಗದ 2000 ಮುಖ ಬೆಲ��ಯ ನೋಟುಗಳು ಸಹ ಪತ್ತೆಯಾಗಿದೆ.
eesanje/url_46_332_6.txt ADDED
@@ -0,0 +1,6 @@
 
 
 
 
 
 
 
1
+ ಪಂಚ ಗ್ಯಾರಂಟಿಗಳಿಂದ 1 ಕೋಟಿ ಜನ ಮೇಲ್ದರ್ಜೆಗೆ : ಸಚಿವ ಹೆಚ್.ಕೆ.ಪಾಟೀಲ್
2
+ ಬೆಂಗಳೂರು,ಅ.12- ರಾಜ್ಯದಲ್ಲಿ ಒಂದು ಕೋಟಿ ಜನ ಬಡತನ ರೇಖೆಗಿಂತ ಮೇಲ್ಮಟ್ಟಕ್ಕೆ ಪರಿವರ್ತನೆಯಾಗಿದ್ದು, ಇದು ವಿಶ್ವದಲ್ಲೇ ಹಿಂದೆಂದೂ ಇಲ್ಲದಂತಹ ಐತಿಹಾಸಿಕ ದಾಖಲೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.
3
+ ಕೆಪಿಸಿಸಿ ಕಚೇರಿಯಲ್ಲಿಂದು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪಂಚಖಾತ್ರಿಗಳನ್ನು ಜಾರಿಗೊಳಿಸುವಲ್ಲಿ ಯಶಸ್ವಿಯಾಗಿರುವುದರಿಂದ ಶೇ.90ರಷ್ಟು ಜನರಿಗೆ ಸೌಲಭ್ಯಗಳು ತಲುಪಿವೆ. ಒಂದು ಕೋಟಿ ಕುಟುಂಬಗಳು ಬಡತನ ರೇಖೆಗಿಂತ ಮೇಲೆ ಬಂದು ಮಧ್ಯಮ ವರ್ಗದ ಪಟ್ಟಿಗೆ ಸೇರುತ್ತಿವೆ. ಇದು ರಾಜ್ಯ, ದೇಶದಲ್ಲಷ್ಟೆ ಅಲ್ಲ ವಿಶ್ವದಲ್ಲೇ ಐತಿಹಾಸಿಕ ದಾಖಲೆಯಾಗಿದೆ. ರಾಜ್ಯ ಸರ್ಕಾರದ ಒಂದು ನಿರ್ಣಯದಿಂದ ಮಹತ್ವದ ಬದಲಾವಣೆಯಾಗಲಿದೆ ಎಂದರು.
4
+ ಮಾಜಿ ಶಾಸಕ ರಾಮಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆ
5
+ ಕಾಂಗ್ರೆಸ್‍ನ ಈ ಯಶಸ್ಸನ್ನು ಸಹಿಸಿಕೊಳ್ಳಲಾಗದೆ ವಿರೋಧ ಪಕ್ಷಗಳು ಅಪಪ್ರಚಾರದಲ್ಲಿ ತೊಡಗಿವೆ. ಸರ್ಕಾರ ಆರು ತಿಂಗಳಿನಲ್ಲೇ ಬಿದ್ದು ಹೋಗಲಿದೆ ಎಂದು ಹತಾಶ ಹೇಳಿಕೆ ನೀಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿಯವರೇ ಹೇಳುತ್ತಿದ್ದಾರೆ.
6
+ ಜನಾಭಿಪ್ರಾಯಕ್ಕೆ ಬೆಲೆ ಕೊಟ್ಟು ಬಹಳಷ್ಟು ಅನ್ಯಪಕ್ಷಗಳ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಹೊಸಬರ ಸೇರ್ಪಡೆಗೆ ಕಾಂಗ್ರೆಸ್‍ನಲ್ಲಿ ಒಮ್ಮತದ ಬೆಂಬಲ ವ್ಯಕ್ತವಾಗಿದೆ ಎಂದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಾಲ ಸನ್ನಿತವಾಗುತ್ತಿದೆ. ಕಾಂಗ್ರೆಸ್‍ನ ಯಶಸ್ಸು ಏರುತ್ತಿದೆ ಎಂದರು.
eesanje/url_46_332_7.txt ADDED
@@ -0,0 +1,6 @@
 
 
 
 
 
 
 
1
+ ಕೃಷಿ ಇಲಾಖೆಯಲ್ಲಿ 1 ಸಾವಿರ ಹುದ್ದೆ ಭರ್ತಿಗೆ ಕ್ರಮ : ಸಚಿವ ಚೆಲುವರಾಯಸ್ವಾಮಿ
2
+ ಬೆಂಗಳೂರು,ಅ.12- ಮೊದಲ ಹಂತದಲ್ಲಿ ಒಂದು ಸಾವಿರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದರು. ವಿಧಾನಸೌಧದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಬೀಜ ನಿಗಮ ಮತ್ತು ಕರ್ನಾಟಕ ರಾಜ್ಯ ಸಾವಯವ ಬೀಜ ಪ್ರಮಾಣ ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಮತ್ತು ಕಿರುಹೊತ್ತಿಗೆ ಬಿಡುಗಡೆ ಮಾಡಿ ಅವರು ಮಾತನಾಡಿದರು.
3
+ ಕೃಷಿ ಇಲಾಖೆಯಲ್ಲಿ ಶೇ.57ರಷ್ಟು ವಿವಿಧ ಹುದ್ದೆಗಳು ಖಾಲಿ ಇವೆ. ಅಂದರೆ ಸುಮಾರು 2,500 ಹುದ್ದೆಗಳು ಖಾಲಿ ಇದ್ದು, ಮೊದಲ ಹಂತದಲ್ಲಿ ಒಂದು ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದು, ಅವರು ಆರ್ಥಿಕ ಇಲಾಖೆಗೆ ಸೂಚಿಸಿದ್ದಾರೆ. ಆದಷ್ಟು ಬೇಗ ನೇಮಕಾತಿ ಮಾಡಲಾಗುವುದು. ಇದರಲ್ಲಿ ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಕಾರಿಗಳ ಹುದ್ದೆಗಳು ಸೇರಿವೆ ಎಂದರು.
4
+ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಕೃಷಿ ಅಧಿಕಾರಿಗಳಿದ್ದಾರೆ. ಆದರೆ ಕ್ಷೇತ್ರ ಮಟ್ಟದಲ್ಲಿ ಇಲ್ಲ. ಹೋಬಳಿ, ತಾಲ್ಲೂಕು ಮಟ್ಟದಲ್ಲೂ ಕೃಷಿ ಅಧಿಕಾರಿಗಳು ರೈತರ ಸಂಪರ್ಕಕ್ಕೆ ಸಿಗಬೇಕೆಂಬುದು ನಮ್ಮ ಉದ್ದೇಶ. ಖಾಲಿ ಇರುವ ಹುದ್ದೇಶಗಳಲ್ಲಿ ಶೇ.50ರಷ್ಟು ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
5
+ ಕಳೆದ ಐದು ವರ್ಷಗಳಲ್ಲಿ ಕೃಷಿ ಇಲಾಖೆಯಲ್ಲಿ ನೇಮಕಾತಿಯನ್ನೇ ಮಾಡಿಲ್ಲ. ನಾವು ನಾಲ್ಕೂವರೆ ತಿಂಗಳಲ್ಲೇ ನೇಮಕಾತಿಗೆ ಕ್ರಮ ಕೈಗೊಂಡಿದ್ದೇವೆ ಎಂದರು. ಅಲ್ಲದೆ 360 ಕೃಷಿ ಸಹಾಯಕ ಅಧಿಕಾರಿಗಳ ಹುದ್ದೆಗಳು ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು. ಕಳೆದ ವರ್ಷ ಸೆಪ್ಟೆಂಬರ್‍ನಲ್ಲಿ 113 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವರ್ಷ 22 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಪೂರ್ಣ ಪ್ರಮಾಣದಲ್ಲಿ ನಿಲ್ಲಿಸಲು ಸರ್ಕಾರ ಕೆಲಸ ಮಾಡುತ್ತಿದೆ. ರೈತರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದರು.
6
+ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇರುವುದನ್ನು ಮುಖ್ಯಮಂತ್ರಿಗಳು ಗಮನಿಸಿದ್ದು, ಆದಷ್ಟು ಬೇಗ ಪರಿಹರಿಸಲಾಗುವುದು ಎಂದರು. ರಾಜ್ಯದಲ್ಲಿನ ಬರಪೀಡಿತ ಪ್ರದೇಶಗಳ ಅಧ್ಯಯನವನ್ನು ಕೇಂದ್ರ ತಂಡ ಮಾಡಿದ್ದು ಕೇಂದ್ರ ಸರ್ಕಾರಕ್ಕೆ ವರದಿ ನೀಡಲಿದೆ. ಆ ವರದಿ ಆಧರಿಸಿ ಕೇಂದ್ರ ಸರ್ಕಾರ ನೀಡುವ ಪರಿಹಾರ ಧನ ನೋಡಿಕೊಂಡು ರಾಜ್ಯ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ. 195 ತಾಲ್ಲೂಕುಗಳ ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿದ್ದು, ಸುಮಾರು 5 ಸಾವಿರ ಕೋಟಿ ರೂ. ಪರಿಹಾರ ನೀಡಲು ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.
eesanje/url_46_332_8.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ 25 ಸಾವಿರ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ : ಸಚಿವ ಎಂ.ಬಿ.ಪಾಟೀಲ್
2
+ ಬೆಂಗಳೂರು, ಅ.12- ಅಮೆರಿಕದಲ್ಲಿ ಹೂಡಿಕೆದಾರರನ್ನು ಆಕರ್ಷಿಸಲು ಕೈಗೊಂಡಿದ್ದ ಪ್ರವಾಸದಿಂದ ರಾಜ್ಯದಲ್ಲಿ ಸುಮಾರು 25 ಸಾವಿರ ಕೋಟಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆ ಇದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 25ರಿಂದ ಅ. 6ರವರೆಗೆ 12 ದಿನಗಳ ಕಾಲ ಅಮೆರಿಕಾದ ವಿವಿಧ ನಗರಗಳಲ್ಲಿ ಪ್ರವಾಸ ಕೈಗೊಳ್ಳಲಾಗಿತ್ತು. ಆ ಸಂದರ್ಭದಲ್ಲಿ ವಿಶ್ವದ ಅತ್ಯುತ್ತಮ ಕಂಪೆನಿಗಳ, ಉದ್ಯಮಿಗಳ, ಹೂಡಿಕೆದಾರರ ಜೊತೆ ಸಭೆಗಳನ್ನು ನಡೆಸಿ ಕರ್ನಾಟಕದಲ್ಲಿ ಹೂಡಿಕೆಗಿರುವ ಅವಕಾಶಗಳ ಬಗ್ಗೆ ಚರ್ಚೆ ಮಾಡಿದ್ದೇವೆ.
3
+ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ರಾಜ್ಯ ಸರ್ಕಾರದ ನಿಯೋಗವು ಅಮೆರಿಕಾದ ವಿವಿಧ ಸ್ಥಳಗಳಲ್ಲಿ ವಿವಿಧ ಕಂಪೆನಿಗಳ ಉನ್ನತ ಅಧಿಕಾರಿಗಳ ಜೊತೆ ವಿಸ್ತೃತವಾದ ವಿಚಾರ ವಿನಿಮಯ ನಡೆಸಲಾಯಿತು. ಕರ್ನಾಟಕದಲ್ಲಿರುವ ಹೂಡಿಕೆ ಸ್ನೇಹಿ ನೀತಿ, ಪರಿಸರ ಉತ್ತೇಜನ ಎಲ್ಲವನ್ನೂ ಮನವರಿಕೆ ಮಾಡಿಕೊಟ್ಟಿದ್ದು, ಅಮೆರಿಕ ಪ್ರವಾಸ ಯಶಸ್ವಿ ಭೇಟಿಯಾದಂತಾಗಿದೆ ಎಂದರು. ವೇಗವಾಗಿ ಬದಲಾಗುತ್ತಿರುವ ಪ್ರಸ್ತುತ ಭೌಗೋಳಿಕ ರಾಜಕೀಯ ಪರಿಸ್ಥಿತಿಯಲ್ಲಿ ಅಮೆರಿಕಾ ಬೇಟಿ ಅಗತ್ಯವಿದ್ದು, ಹೆಚ್ಚಿನ ಸಂಖ್ಯೆಯ ಜಾಗತೀಕ ಹೂಡಿಕೆದಾರರು ಭಾರತದ ಹೂಡಿಕೆಯನ್ನು ಆಕರ್ಷಕ ಹಾಗೂ ಹೂಡಿಕೆಗೆ ಸುರಕ್ಷಿತ ತಾಣ ಎಂದು ಭಾವಿಸಿದ್ದಾರೆ.
4
+ ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾದ ಗುತ್ತಿಗೆದಾರರು
5
+ ಎಲ್ಲ ಉದ್ಯಮ ಸ್ನೇಹಿ ನೀತಿಗಳು ಲಾಭ ದಾಯಕ ಪ್ರೋತ್ಸಾಹಗಳು, ತಾಂತ್ರಿಕ ಅರ್ಹತೆ, ನುರಿತ ಉದ್ಯೋಗಿಗಳ ಲಭ್ಯತೆಯೊಂದಿಗೆ ವಿದೇಶಿ ಹೂಡಿಕೆಗೆ ಕರ್ನಾಟಕವೂ ಪ್ರಸಕ್ತ ತಾಣವಾಗಿದೆ ಎಂಬುದನ್ನು ಈ ಪ್ರವಾಸದ ಸಂದರ್ಭದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. 12 ದಿನಗಳಲ್ಲಿ ಈ ನಿಯೋಗವು ವಿವಿಧ ವಲಯಗಳ ಕಂಪೆನಿ ಪ್ರತಿನಿಧಿಗಳೊಂದಿಗೆ 27 ಮುಖಾಮುಖಿ ಸಭೆಗಳು 9 ಸಂವಾದ ಕಾರ್ಯಕ್ರಮಗಳನ್ನು ನಡೆಸಲಾಯಿತು.
6
+ ಅದರಲ್ಲಿ ಮುಖ್ಯವಾಗಿ ಎಲೆಕ್ಟ್ರಾನಿಕ್, ಸೆಮಿ ಕಂಡಕ್ಟರ್, ಏರೋಸ್ಪೇಸ್, ರಕ್ಷಣೆ, ಆಟೋ ಮೊಬೈಲ್, ಇವಿ, ಮತ್ತಿತರ ವಲಯ ಗಳಲ್ಲಿ ಹೂಡಿಕೆಗೆ ಅವಕಾಶಗಳನ್ನು ಶೋಸಲಾಯಿತು. ಇದರಿಂದ ಪೂರೈಕೆದಾರರ ನೆಲೆ ವಿಸ್ತರಣೆ ಈ ಅಸ್ತಿತ್ವದಲ್ಲಿರುವ ಸಂಶೋಧನೆ ಮತ್ತು ಅಭಿವೃದ್ಧಿ ಪರಿಸರ ವ್ಯವಸ್ಥೆ ಬಲಪಡಿಸುವುದು ರಾಜ್ಯ ಸರ್ಕಾರದ ಸಹಯೋಗ ದೊಂದಿಗೆ ಉತ್ಕøಷ್ಠ ಕೇಂದ್ರಗಳ ಸ್ಥಾಪನೆ ಕುರಿತು ಉದ್ಯಮಿಗಳೊಂದಿಗೆ ಚರ್ಚೆ ನಡೆಸಲಾಯಿತು.
7
+ ರಾಜ್ಯದಲ್ಲಿ ಸದೃಡ ಕೈಗಾರಿಕ ಪರಿಸರ, ವಿಶ್ವ ದರ್ಜೆ ಮೂಲಸೌಕರ್ಯ, ಸುಗಮ ವ್ಯಾಪಾರ, ಕಾರ್ಯಾಚರಣೆ, ನುರಿತ ಹಾಗೂ ತರಬೇತಿ ಪಡೆದ ಕಾರ್ಮಿಕ ಶಕ್ತಿಜೊತೆಗೆ ಉದ್ಯಮಶೀಲ ರಾಜ್ಯವಾಗಿದೆ ಎಂದು ಮನವರಿಕೆ ಮಾಡಿಕೊಟ್ಟಿದೆ. ಪರಿಸರ ಸ್ನೇಹಿ ವಾತಾವರಣವನ್ನು ಕರ್ನಾಟಕದಲ್ಲಿದೆ ಎಂದು ಹೇಳಿದ್ದೇವೆ.
8
+ ಹಮಾಸ್ ಸರ್ವನಾಶದ ಶಪಥ ಮಾಡಿದ ಇಸ್ರೇಲ್
9
+ ತಯಾರಿಕಾ ವಲಯಕ್ಕೆ ಒತ್ತು:ಐಟಿ- ಬಿಟಿ ಪ್ರಿಯಾಂಕ ಖರ್ಗೆ ಮಾತನಾಡಿ, ತಯಾರಿಕಾ ವಲಯದಲ್ಲಿ ಹೆಚ್ಚಿನ ಒತ್ತು ನೀಡುವ ಬಗ್ಗೆ ಚರ್ಚೆ ಮಾಡಿದ್ದೇವೆ. ಬಯೋಟೆಕ್ನಾಲಜಿಯಲ್ಲಿ ಶಾಮ್‍ಫರ್ಡ್ ವಿಶ್ವವಿದ್ಯಾಲಯ ಜೊತೆ ನವೋದ್ಯಮ ಹೆಚ್ಚಿಸಲು ಪಾಲುದಾರಿಕೆಗೆ ಮಾಡಿಕೊಳ್ಳಲು ಚರ್ಚಿಸಲಾಗಿದೆ ಅದಕ್ಕೆ ಅವರು ಒಪ್ಪಿದ್ದಾರೆ.
10
+ ಅವಿಷ್ಕಾರದಲ್ಲಿ 18ನೇ ಸ್ಥಾನದಲ್ಲಿದ್ದು, ಅದನ್ನು 10ರೊಳಗೆ ತರಲು ಬೇರೆ ಬೇರೆ ದೇಶಗಳೊಂದಿಗೆ ಒಪ್ಪಂದ ಅನಿವಾರ್ಯವಾಗಲಿದೆ. ರಾಜ್ಯದಲ್ಲಿ ಸುಮಾರು 28 ಸಾವಿರ ನವೋದ್ಯಮಗಳಿವೆ. ಹೊಸ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ಕೊಡುವ ಪ್ರಯತ್ನದ ಬಗ್ಗೆ ಮಾಡಿದ್ದೇವೆ. ವಿದೇಶಿಗಳಷ್ಟೇ ಅಲ್ಲ ಬೇರೆ ಬೇರೆ ರಾಜ್ಯಗಳು ಕೂಡ ನಮಗೆ ಸ್ರ್ಪಧಿಯಾಗಿವೆ. ಈ ನಿಟ್ಟಿನಲ್ಲಿ ರಾಜ್ಯಸರ್ಕಾರ ಹೂಡಿಕೆ ಬಗ್ಗೆ ಗಂಭೀರ ಪ್ರಯತ್ನ ಮಾಡುತ್ತಿದೆ.
11
+ ಹೂಡಿಕೆದಾರರು ಕೌಶಲ್ಯಾ ಧರಿತ ಮಾನವ ಸಂಪನ್ಮೂಲ ಉದ್ಯಮಶೀಲತೆ ಬಗ್ಗೆ ಅಪೇಕ್ಷಿತರಾಗಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಎಲ್. ಸೆಲ್ವ ಕುಮಾರ್ ಕೈಗಾರಿಕಾ ಅಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ, ಐಟಿ-ಬಿಟಿ ವಿಜ್ಞಾನ- ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿ ಏಕರೂಪ್ ಕೌರ್ ಉಪಸ್ಥಿತರಿದ್ದರು.
eesanje/url_46_332_9.txt ADDED
@@ -0,0 +1,7 @@
 
 
 
 
 
 
 
 
1
+ ಮಾಜಿ ಶಾಸಕ ರಾಮಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆ
2
+ ಬೆಂಗಳೂರು,ಅ.12- ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಬಿಜೆಪಿಯ ಮಾಜಿ ಶಾಸಕ ಶಿರಹಟ್ಟಿ ಕ್ಷೇತ್ರದ ರಾಮಪ್ಪ ಲಮಾಣಿ ಇಂದು ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ರಾಮಪ್ಪ ಲಮಾಣಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.
3
+ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್, ಬಿ.ಎನ್.ಚಂದ್ರಪ್ಪ, ಗದಗ್‍ನ ಜಿಲ್ಲಾಧ್ಯಕ್ಷರೂ ಆಗಿರುವ ಶಾಸಕ ಜಿ.ಎಸ್.ಪಾಟೀಲ್, ಶಾಸಕರಾದ ವಿನಯ್ ಕುಲಕರ್ಣಿ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
4
+ ಈ ವೇಳೆ ಮಾತನಾಡಿದ ಜಗದೀಶ್ ಶೆಟ್ಟರ್ ಅವರು, ವಿಧಾನಸಭೆ ಚುನಾವಣೆ ಫಲಿತಾಂಶ ಭಾರೀ ಪರಿಣಾಮ ಬೀರಿದೆ. ಐದು ಭರವಸೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಎಲ್ಲರೂ ಹೇಳುತ್ತಿದ್ದರೂ, ನಿರೀಕ್ಷೆ ಮೀರಿ ಸರ್ಕಾರ ಭರವಸೆಗಳನ್ನು ಈಡೇರಿಸಿದೆ. ಇದು ರಾಷ್ಟ್ರಕ್ಕೆ ಮಾದರಿ. ಬೇರೆ ರಾಜ್ಯಗಳಲ್ಲೂ ಕಾಂಗ್ರೆಸ್ ಭರವಸೆಗಳಂತಹ ಕಾರ್ಯಕ್ರಮಗಳ ಜಾರಿಗೆ ಒತ್ತಡ ಹೆಚ್ಚಿದೆ. ಜೊತೆಯಲ್ಲಿ ಕಾಂಗ್ರೆಸ್ ಮೇಲೆ ಭರವಸೆ ಹೆಚ್ಚುತ್ತಿದೆ ಎಂದು ಹೇಳಿದರು.
5
+ ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾದ ಗುತ್ತಿಗೆದಾರರು
6
+ ದೇಶದಲ್ಲಿ ರಾಜಕೀಯ ದ್ರುವೀಕರಣವಾಗುತ್ತಿದೆ. ಸದ್ಯಕ್ಕೆ ಘೋಷಣೆಯಾಗಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಸೆಮಿಫೈನಲ್ ಆಗಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ದೇಶದಲ್ಲಿ ಅಧಿಕಾರಕ್ಕೆ ಮರಳಲಿದೆ ಎಂದರು.
7
+ ರಾಮಣ್ಣ ಲಮಾಣಿ ಬಿಜೆಪಿಯಿಂದ ಎರಡು ಬಾರಿ ಎಂಎಲ್‍ಎ ಆಗಿದ್ದರು, ಒಮ್ಮೆ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದರು, ಕಾಂಗ್ರೆಸ್ ತತ್ವಕ್ಕೆ ಬದ್ಧರಾಗಿ ಇಂದು ಕಾಂಗ್ರೆಸ್ ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಂದಿ ಕಾಂಗ್ರೆಸ್ ಸೇರುತ್ತಾರೆ ಎಂದು ಹೇಳಿದರು. ಇದೇ ವೇಳೆ ರಾಮಣ್ಣ ಲಮಾಣಿ ಮಾತನಾಡಿ, ಬಿಜೆಪಿ ಅಧೋಗತಿಗೆ ಹೋಗುತ್ತಿದೆ. ಅಲ್ಲಿ ಹೆಚ್ಚು ಅನುಭವಸ್ಥರು ಇಲ್ಲ, ರಾಜ್ಯಾದ್ಯಂತ 15 ಕ್ಕೂ ಹೆಚ್ಚು ಮಂದಿ ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲು ಸಿದ್ಧರಾಗಿದ್ದಾರೆ. ಇದೇ 20 ರಂದು ಮತ್ತಷ್ಟು ಮಂದಿ ಕಾಂಗ್ರೆಸ್‍ಗೆ ಬರಲಿದ್ದಾರೆ ಎಂದರು.
eesanje/url_46_333_1.txt ADDED
@@ -0,0 +1,17 @@
 
 
 
 
 
 
 
 
 
 
 
 
 
 
 
 
 
 
1
+ ಇಂಧನ ಇಲಾಖೆಯಿಂದ ಅಭಾವ ನಿವಾರಣೆಗೆ ವಿದ್ಯುತ್ ಪಡಿತರ ವ್ಯವಸ್ಥೆ ಜಾರಿ
2
+ ಬೆಂಗಳೂರು,ಅ.11- ಮುಂಗಾರು ವೈಫಲ್ಯದಿಂದ ರಾಜ್ಯದಲ್ಲಿ ವಿದ್ಯುತ್ ಬೇಡಿಕೆಗೆ ಅಸಾಧಾರಣ ಪರಿಸ್ಥಿತಿ ಎದುರಾಗಿದ್ದು, ಈ ಹಿನ್ನಲೆ ವಿದ್ಯುತ್ ಪಡಿತರ ವ್ಯವಸ್ಥೆಯನ್ನು ಜಾರಿಗೊಳಿಸಲು ಇಂಧನ ಇಲಾಖೆ ಮುಂದಾಗಿದೆ.ಈ ಉದ್ದೇಶಕ್ಕಾಗಿ ಇಂಧನ ಇಲಾಖೆಯು ಶೀಘ್ರದಲ್ಲೇ ಆದ್ಯತೆ ಮತ್ತು ಆದ್ಯತೆಯೇತರ ಗ್ರಾಹಕರ ಪಟ್ಟಿಯನ್ನು ಸಿದ್ದಪಡಿಸಲಿದೆ. ಜೊತೆಗೆ ವಿದ್ಯುತ್ ಕೊರತೆ ನೀಗಿಸಲು ರಾಜ್ಯ ಸರ್ಕಾರ ಬೇರೆ ಬೇರೆ ರಾಜ್ಯಗಳಿಂದ ವಿದ್ಯುತ್ ಖರೀದಿಸಲು ಮುಂದಾಗಿದೆ.
3
+ ಕಳೆದ ವರ್ಷ ಅಕ್ಟೋಬರ್ ತಿಂಗಳ ಅವಧಿಯಲ್ಲಿ 12,000 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಇತ್ತು. ಈ ವರ್ಷ ಇದೇ ತಿಂಗಳ ಅವಧಿಯಲ್ಲಿ 15000 ಮೆಗಾವ್ಯಾಟ್ ಗರಿಷ್ಠ ಬೇಡಿಕೆ ಇರುವುದರಿಂದ ಈ ಕೊರತೆಯನ್ನು ನೀಗಿಸಲು ಇಂಧನ ಇಲಾಖೆ ಪರ್ಯಾಯ ಮಾರ್ಗವನ್ನು ಹುಡುಕುತ್ತಿದೆ.
4
+ ಒಂದು ಮೂಲದ ಪ್ರಕಾರ ಪ್ರತಿದಿನ 1500-2000 ಮೆಗಾವ್ಯಾಟ್ ಉತ್ಪಾದನೆಯಲ್ಲಿ ಕೊರತೆಯನ್ನು ಎದುರಿಸುತ್ತಿದೆ. ಹೀಗಾಗಿ ಪರ್ಯಾಯ ಇಂಧನ ಮೂಲಗಳಿಂದ ಬೇಡಿಕೆಯನ್ನು ಸರಿದೂಗಿಸಲು ಹೊರರಾಜ್ಯಗಳಿಂದ ವಿದ್ಯುತ್ ಖರೀದಿ ಹಾಗೂ ಪಡಿತರ ವ್ಯವಸ್ಥೆ ಜಾರಿ ಮಾಡುವ ಸಂಭವವಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
5
+ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಭಿನ್ನಮತದ ಭೀತಿ
6
+ ನಿರಂತರ ಜ್ಯೋತಿ ಯೋಜನೆಯಡಿ ಗ್ರಾಹಕರ ವಿದ್ಯುತ್ ಪೂರೈಕೆಗೆ ಕೆಲ ನಿರ್ಬಂಧಗಳನ್ನು ವಿಧಿಸಲಾಗುತ್ತದೆ. ಕೈಗಾರಿಕೆಗಳು, ಆಸ್ಪತ್ರೆಗಳು ಮತ್ತು ಇತರ ಅಗತ್ಯ ಸೇವೆಗಳಿಗೆ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಕಡಿತ ಇರುವುದಿಲ್ಲ. ಆದಾಗ್ಯೂ ಪರಿಸ್ಥಿತಿ ಈ ಬಾರಿ ಭಿನ್ನವಾಗಿರುವುದರಿಂದ ವಿದ್ಯುತ್ ಕಡಿತ ಮಾಡದೆ ಅನ್ಯ ಮಾರ್ಗವಿಲ್ಲ ಎಂದು ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
7
+ ಬಿಕ್ಕಟ್ಟನ್ನು ತಗ್ಗಿಸಲು ನಾವು ಈಗಾಗಲೇ ಹಲವಾರು ಪರ್ಯಾಯ ಮಾರ್ಗಗಳನ್ನು ಕಂಡುಕೊಂಡಿದ್ದೇವೆ. ಅದರಲ್ಲಿ ಮುಖ್ಯವಾಗಿ ಹೊರರಾಜ್ಯದಿಂದ ವಿದ್ಯುತ್ ಖರೀದಿ, ಪರ್ಯಾಯ ಇಂಧನ ಮೂಲಗಳು ಇದರಲ್ಲಿ ಸೇರಿವೆ. ರೈತರಿಗೆ ತೊಂದರೆಯಾಗದಂತೆ ವಿದ್ಯುತ್ ಪೂರೈಕೆ ಮಾಡಲು ಸರ್ವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.
8
+ ಬೇಡಿಕೆಯನ್ನು ಪೂರೈಸಲು ರಾಜ್ಯವು ಅನ್ಯ ರಾಜ್ಯಗಳಿಂದ ವಿದ್ಯುತ್ ಖರೀದಿಸಲು ಆಲೋಚಿಸಿದೆ. ಪ್ರಸ್ತುತ ಅಕ್ಟೋಬರ್‌ನಿಂದ ಮೇ 2024ರವರೆಗೆ ಪೂರ್ವ ಸೌರ ಮತ್ತು ನಂತರದ ಸಮಯದಲ್ಲಿ ಉತ್ತರ ಪ್ರದೇಶದೊಂದಿಗೆ 300ರಿಂದ 600 ಮೆಗಾವಾಟ್ ವಿದ್ಯುತ್ ಖರೀದಿಗೆ ಮಾತುಕತೆ ನಡೆಸಲಾಗಿದೆ.
9
+ ನವೆಂಬರ್‌ನಿಂದ ಮೇ 2024ರವರೆಗೆ 500 ಮೆ.ವ್ಯಾ ಪೂರೈಕೆಗಾಗಿ ಪಂಜಾಬ್ ಸರ್ಕಾರದೊಂದಿಗೆ ರಾಜ್ಯ ಸರ್ಕಾರ ಮಾತುಕತೆ ನಡೆಸಿದೆ. ರಾಜ್ಯಕ್ಕೆ ವಿದ್ಯುತ್ ಪೂರೈಸಲು ಅಲ್ಲಿನ ಸರ್ಕಾರಗಳು ಮೌಖಿಕ ಸಮ್ಮತಿ ನೀಡಿವೆ. ಕಳೆದ ಆಗಸ್ಟ್‍ನಲ್ಲಿ ರಾಜ್ಯವು 17,000 ಮೆ���ಾವ್ಯಾಟ್ ಬೇಡಿಕೆಯನ್ನು ದಾಖಲಿಸಿತ್ತು. ಆದರೆ ಸೆಪ್ಟೆಂಬರ್‌ನಲ್ಲಿ ಅಲ್ಪಸ್ವಲ್ಪ ಮಳೆಯಾಗಿದ್ದರಿಂದ ಬೇಡಿಕೆ ಪ್ರಮಾಣ ತುಸು ಕಡಿಮೆಯಾಗಿತ್ತು.
10
+ ಈಗ ಪುನಃ ಮಳೆ ಬಾರದ ಕಾರಣ ರೈತರಿಂದ ಬೇಡಿಕೆ ಹೆಚ್ಚಾಗುತ್ತಿದ್ದು, ಉಷ್ಣ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಗಮನವನ್ನು ಇಲಾಖೆ ಹರಿಸಿದೆ. ಮಳೆ ಕಡಿಮೆಯಾಗಿರುವುದರಿಂದ ಪಾವಗಡ ಸೋಲಾರ್ ಪಾರ್ಕ್‍ನಲ್ಲಿ 800 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಕುಸಿದಿದೆ. ಪವನ ಯೋಜನೆಗಳಿಂದ ವಿದ್ಯುತ್ ಉತ್ಪಾದನೆಯು ಸಾಮಾನ್ಯ 2000 ಮೆಗಾವ್ಯಾಟ್‍ನಿಂದ 400 ಮೆಗಾವ್ಯಾಟ್‍ಗೆ ಇಳಿದಿದೆ. 2000 ಮೆಗಾವ್ಯಾಟ್ ನವೀಕರಿಸಬಹುದಾದ ಮೂಲಗಳ ಕೊರತೆಯಿದೆ.
11
+ ಹೀಗಾಗಿ ಉಷ್ಣ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ. ಪ್ರಸ್ತುತ, ರಾಜ್ಯವು ಉಷ್ಣ ಯೋಜನೆಗಳಿಂದ ಮತ್ತು ವಿದ್ಯುತ್ ಖರೀದಿಯ ಮೂಲಕ 7000 ಮೆಗಾವ್ಯಾಟ್ ಪಡೆಯುತ್ತದೆ. ರಾಜ್ಯವು ತನ್ನ ಮೂರು ಶಾಖೋತ್ಪನ್ನ ಯೋಜನೆಗಳಿಂದ 1953w ಉತ್ಪಾದಿಸುತ್ತದೆ.
12
+ ಜುಲೈ 2022ರಲ್ಲಿ ಕೃಷಿ ಕ್ಷೇತ್ರಕ್ಕೆ 1,425 ಮೆ.ವ್ಯಾಟ್ ಬಳಕೆಯಾಗಿದ್ದರೆ, ಜುಲೈ 2023 ರಲ್ಲಿ ಇದು 2,209 ಮೆಗಾ ವ್ಯಾಟ್ಗೆ ಏರಿಕೆಯಾಗಿದೆ. ಲಿಂಗನಮಕ್ಕಿ, ಸೂಫಾ ಮತ್ತು ವಾರಾಹಿ ಜಲಾಶಯದ ಜಲ ವಿದ್ಯುತ್ ಉತ್ಪಾದನೆ ಶೇ 50ರಷ್ಟು ಕಡಿಮೆಯಾಗಿದೆ. ಇನ್ನು ಅಕ್ಟೋಬರ್ 1 ರಂದು ಗಾಳಿಯಿಂದ ವಿದ್ಯುತ್ ಉತ್ಪಾದನೆ 53.63 ಮೆ.ವಾ. ಆಗಿದ್ದರೆ, ಅಕ್ಟೋಬರ್ 9 ರಂದು 4.76 ಮೆಗಾವ್ಯಾಟ್‍ಗೆ ಇಳಿದಿದೆ. ಇನ್ನೊಂದೆಡೆ ವಿದ್ಯುತ್ ಸ್ಥಾವರಗಳು ಆಗಾಗ್ಗೆ ಸ್ಥಗಿತಗೊಳ್ಳುತ್ತಿವೆ.
13
+ ವಿದ್ಯುತ್ ಸಮಸ್ಯೆಗೆ ಮಳೆ ಕೊರತೆ ಮಾತ್ರವಲ್ಲ, ಹಿಂದಿನ ಹಾಗೂ ಈಗಿನ ಸರ್ಕಾರದ ನಿರ್ಲಕ್ಷ್ಯವೂ ವಿದ್ಯುತ್ ಅಭಾವ ಸೃಷ್ಟಿಗೆ ಕಾರಣ ಎನ್ನಲಾಗಿದೆ. ಸಾರ್ವಜನಿಕ ಸ್ವಾಮ್ಯದ ಕೆಪಿಸಿಎಲ್ ನಿರ್ಲಕ್ಷ್ಯಕ್ಕೊಳಗಾಗಿದ್ದು, ವಿದ್ಯುತ್ ಜಾಲಕ್ಕೆ ಹೊಸದಾಗಿ ಒಂದೇ ಒಂದು ಯುನಿಟ್ ಸೇರಿಸಲು ಸಾಧ್ಯವಾಗಿಲ್ಲ. ಕಲ್ಲಿದ್ದಲು ಖರೀದಿ ವಿಷಯದಲ್ಲಿ ಸ್ಪಷ್ಟ ನಿರ್ಧಾರಕ್ಕೆ ಬರಲಾಗದ ಕಾರಣ ಒಂದು ವಾರಕ್ಕೆ ಬೇಕಾಗುವಷ್ಟು ದಾಸ್ತಾನಿಡಲು ಸಾಧ್ಯವಾಗಿಲ್ಲ. ಇದು ಶಾಖೋತ್ಪನ್ನ ಸ್ಥಾವರದ ಪೂರ್ಣ ಸಾಮಥ್ರ್ಯದ ವಿದ್ಯುತ್ ಉತ್ಪಾದನೆಗೆ ಅಡ್ಡಗಾಲು ಹಾಕಿದೆ ಎಂದು ಮೂಲಗಳು ಸ್ಪಷ್ಟಪಡಿಸುತ್ತಿವೆ.
14
+ ಚೆನ್ನೈನಿಂದ ಅಹಮದಾಬಾದ್‍ಗೆ ಶುಭ್‍ಮನ್ ಗಿಲ್ ಶಿಫ್ಟ್
15
+ ವಿದ್ಯುತ್ ಸಮಸ್ಯೆ ಈಗ ಸೃಷ್ಟಿಯಾಗಿರುವುದಲ್ಲ. ಮಳೆ ವೈಫಲ್ಯವೂ ಒಂದು ಕಾರಣವಾಗಿರಬಹುದು. ಇದರೊಂದಿಗೆ ಇನ್ನೂ ಹಲವು ಕಾರಣಗಳು ಸೇರಿರಬಹುದು. ಪವನ ವಿದ್ಯುತ್ ಮತ್ತು ಸೋಲಾರ್ ವಿದ್ಯುತ್ ಉತ್ಪಾದನೆ ತೀವ್ರವಾಗಿ ಕುಸಿದಿರುವ ಪರಿಣಾಮ ವಿದ್ಯುತ್ ಸಮಸ್ಯೆ ತಲೆದೋರಿದೆ. ರೈತರಿಗೆ 7 ಗಂಟೆ ವಿದ್ಯುತ್ ಬದಲಿಗೆ 2 ಗಂಟೆ ಕಡಿತ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಆಗಾಗ್ಗೆ ವಿದ್ಯುತ್ ವ್ಯತ್ಯಯ ಮಾಡಲಾಗುತ್ತಿದೆ ಎಂದು ಅಕೃತ ಮೂಲಗಳು ಹೇಳುತ್ತವೆ.
16
+ ಇಂಧನ ಸಚಿವ ಕೆಜೆ ಜಾರ್���್ ಅವರು ವಿದ್ಯುತ್ ಕೊರತೆ ಇಲ್ಲ. ಲೋಡ್ ಶೆಡ್ಡಿಂಗ್ ಮಾಡುತ್ತಿಲ್ಲ ಎಂದು ಹೇಳುತ್ತಲ್ಲೇ ಇದ್ದಾರೆ. ಆದರೆ ರಾಜ್ಯಾದ್ಯಂತ ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ವಿದ್ಯುತ್ ವ್ಯತ್ಯಯ, ಕೃಷಿ ಪಂಪ್ಸೆಟ್‍ಗಳಿಗೆ ವಿದ್ಯುತ್ ಕಡಿತ ಮುಂದುವರೆದಿದೆ. ಇದರಿಂದ ರೈತರು ಕಂಗಾಲಾಗಿದ್ದು, ಇಂಧನ ಇಲಾಖೆ ವಿರುದ್ಧ ಸಿಡಿದೆದ್ದಿದ್ದಾರೆ.
17
+ ಒಂದೆಡೆ ಉಚಿತ ವಿದ್ಯುತ್(ಗೃಹ ಜ್ಯೋತಿ) ಭಾಗ್ಯದ ಮಧ್ಯೆ ಬೇಡಿಕೆ ಹೆಚ್ಚಳವಾಗಿದೆ. ಮತ್ತೊಂದೆಡೆ ವಿದ್ಯುತ್ ಉತ್ಪಾದನೆಯಲ್ಲಿ ಕುಸಿತವಾಗಿದೆ. ಇದರಿಂದ ರಾಜ್ಯ ಸರ್ಕಾರ ಸಂಕಷ್ಟ ಎದುರಾಗಿದ್ದು, ಇದನ್ನು ಹೇಗೆ ನಿಭಾಯಿಸಲಿದೆ ಎಂಬುದೇ ಯಕ್ಷಪ್ರಶ್ನೆಯಾಗಿದೆ.
eesanje/url_46_333_10.txt ADDED
@@ -0,0 +1,7 @@
 
 
 
 
 
 
 
 
1
+ ಅರಣ್ಯ ಅಕ್ರಮ ಒತ್ತುವರಿ ತೆರವು ಅನಿವಾರ್ಯ : ಈಶ್ವರ್ ಖಂಡ್ರೆ
2
+ ಬೆಂಗಳೂರು,ಅ.10- ಅರಣ್ಯ ಇಲಾಖೆಯಿಂದ ಸಕ್ರಮ ವಾಗಿರುವವರನ್ನು ಒಕ್ಕಲೆಬ್ಬಿಸುವುದಿಲ್ಲ, ಅಕ್ರಮ ಒತ್ತುವರಿಗಳನ್ನು ತೆರವು ಮಾಡುವುದು ಅನಿವಾರ್ಯ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು ವರ್ಷಗಳಿಂದ ಅಲ್ಲಿಯೇ ನೆಲೆಸಿರುವವರನ್ನು ಒಕ್ಕಲೆಬ್ಬಿಸಬಾರದು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕ್ರಮಬದ್ಧವಾಗಿ, ನಿಯಮಬದ್ಧವಾಗಿ, ಕಾನೂನಾತ್ಮಕವಾಗಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಶಾಸಕರು ಮತ್ತು ಸಾರ್ವಜನಿಕರು ಪ್ರಕೃತಿ ಮತ್ತು ಪರಿಸರ ಸಂರಕ್ಷಣೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
4
+ 1978 ರ ಪೂರ್ವದಲ್ಲಿ ವಾಸಿಸುತ್ತಿರುವವರು ಮತ್ತು ಅರಣ್ಯದಂಚಿನಲ್ಲಿ ವಾಸ ಮಾಡುತ್ತಿರುವವರನ್ನು ಗುರುತಿಸಿ ಪಟ್ಟಿ ಮಾಡಲು ಸೂಚಿಸಲಾಗಿದೆ. ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಈ ಪ್ರಕರಣವನ್ನು ಮೂರು ತಿಂಗಳ ಒಳಗಾಗಿ ಇತ್ಯರ್ಥಪಡಿಸಲು ನಿರ್ಧರಿಸಿದ್ದೇವೆ. ಸಾವಿರಾರು ಜನರಿಗೆ ಹಕ್ಕು ಪತ್ರ ನೀಡಲಾಗುವುದು. ಇದರಿಂದ ಬಡವರಿಗೆ, ರೈತರಿಗೆ, ಬುಡಕಟ್ಟು ಸಮುದಾಯದವರಿಗೆ ಅನುಕೂಲವಾಗಲಿದೆ ಎಂದರು.
5
+ ಸೈಬರ್ ಕ್ರೈಂ ಪ್ರಕರಣಗಳ ಕಾಲಮಿತಿ ತನಿಖೆಗೆ ಕಟ್ಟುನಿಟ್ಟಿನ ಕ್ರಮ : ದಯಾನಂದ
6
+ ಅರಣ್ಯವನ್ನು ಅಕ್ರಮವಾಗಿ ಒತ್ತುವರಿ ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ. ಅದನ್ನು ತೆರವು ಮಾಡಲಾಗುವುದು. ನಮ್ಮ ಸರ್ಕಾರ ಮೊದಲಿನಿಂದಲೂ ಪರಿಸರ ರಕ್ಷಣೆ ಹಾಗೂ ಸಾರ್ವಜನಿಕ ಹಕ್ಕುಗಳ ವಿಷಯದಲ್ಲಿ ಸಕಾರಾತ್ಮಕವಾಗಿದೆ. ಸಣ್ಣ ಪ್ರಮಾಣದ ಜಮೀನುಗಳಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಮತ್ತು ನಿವಾಸಿಗಳಿಗೆ ತೊಂದರೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
7
+ ಲಿಂಗಾಯತ ಸಮುದಾಯದ ಪ್ರಮುಖರೊಂದಿಗೆ ಸೇರಿ ಶ್ರೀಶೈಲ ಜಗದ್ಗುರುಗಳನ್ನು ನಿನ್ನೆ ಭೇಟಿ ಮಾಡಿದ್ದೇವೆ. ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಗಣೇಶ್ ಹುಕ್ಕೇರಿ ಸೇರಿದಂತೆ ಹಲವು ನಾಯಕರು ಇದ್ದರು. ಶ್ರೀಗಳ ಜೊತೆ ರಾಜಕೀಯ ಹೊರತಾಗಿ ಹಲವಾರು ವಿಚಾರಗಳನ್ನು ಚರ್ಚಿಸಿದ್ದೇವೆ ಎಂದರು.
eesanje/url_46_333_11.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಪಟಾಕಿ ದುರಂತ : ತಹಸೀಲ್ದಾರ್, ಇನ್‌ಸ್ಪೆಕ್ಟರ್‌ ಸೇರಿ ಮೂವರು ಅಮಾನತು
2
+ ಬೆಂಗಳೂರು,ಅ.10-ಅತ್ತಿಬೆಲೆ ಪಟಾಕಿ ದುರಂತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಂಬಂಧ ತಹಸೀಲ್ದಾರ್, ಇನ್ಸ್‍ಪೆಕ್ಟರ್ ಮತ್ತು ರೀಸನಲ್ ಫೈಯರ್ ಆಫೀಸರ್ ಅವರ ಅಮಾನತಿಗೆ ಸೂಚನೆ ನೀಡಿದ್ದಾರೆ.
3
+ ಪಟಾಕಿ ದುರಂತ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾಜ್ಯಾದ್ಯಂತ ಪ್ರತಿಯೊಂದು ಪಟಾಕಿ ಪರವಾನಗಿದಾರರ ಸ್ಥಳ ಪರಿಶೀಲನೆ ನಡೆಸಿ, ಲೋಪಗಳಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಖಡಕ್ ಸೂಚನೆ ನೀಡಿದ್ದಾರೆ. ಅತ್ತಿಬೆಲೆ ಪಟಾಕಿ ದುರಂತವಾದ ಮಳಿಗೆಗೆ ಸಂಬಂಧಿಸಿದಂತೆ ಸರ್ಕಲ್ ಇನ್ಸ್‍ಪೆಕ್ಟರ್ ವರದಿ, ಛಾಯಾಚಿತ್ರಗಳೊಂದಿಗೆ ಚೆಕ್‍ಬಂಧಿ ನಿಗದಿ ಮಾಡಿ ವರದಿ ಸಲ್ಲಿಸಲಾಗಿದೆ.
4
+ ಪೊಲೀಸ್ ಅೀಧಿಕ್ಷಕರು ಜಿಲ್ಲಾಧಿಕಾರಿಗಳಿಗೆ ಘಟನೆ ಸಂಬಂಧ ವರದಿ ಸಲ್ಲಿಸಿದ್ದಾರೆ. ಅದರ ಆಧಾರದಲ್ಲಿ ಜಿಲ್ಲಾಧಿಕಾರಿಗಳು ಪರವಾನಗಿ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ತಹಸೀಲ್ದಾರ್‍ ರಿಂದಲೂ ವರದಿ ಪಡೆದಿದ್ದಾರೆ ಎಂದು ಸಭೆಯಲ್ಲಿ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ವಿವರಣೆ ನೀಡಿದರು.
5
+ ಎಕ್ಸ್‍ಫ್ಲೋಸೀವ್ ಆಕ್ಟ್‌ನಲ್ಲಿ ಲೈಸೆನ್ಸ್ ಕೊಡುವಾಗ ನೀವು ಎಚ್ಚರಿಕೆ ವಹಿಸಬೇಕು. 14 ಜನರ ಜೀವಕ್ಕೆ ಹೊಣೆ ಯಾರು. ಕಾಯ್ದೆಯಲ್ಲಿರುವ ಮಾನದಂಡಗಳನ್ನು ಪೂರೈಸಿದ್ದಾರೆಯೇ ಎಂದು ನೋಡಬೇಕು. ತಳಹಂತದ ಸಲ್ಲಿಸಿದ ವರದಿ ಸರಿ ಇದೆಯೇ ಎಂಬುದನ್ನು ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಬೇಕೆಂದು ತಾಕೀತು ಮಾಡಿದರು.
6
+ ತಪಾಸಣಾ ವರದಿ ಸರಿಯಾಗಿದೆಯೇ ಎಂದು ಪರಿಶೀಲಿಸಿಯೇ ಲೈಸೆನ್ಸ್ ನೀಡುವ ಬಗ್ಗೆ ತೀರ್ಮಾನಿಸಬೇಕು. ಈ ಪ್ರಕರಣದಲ್ಲಿ ಗೋಡನ್‍ಗೆ ಅನುಮತಿ ನೀಡಿರಲಿಲ್ಲ. ಮಾರಾಟಕ್ಕೆ ಮಾತ್ರ ಅನುಮತಿ ನೀಡಲಾಗಿತ್ತು ಎಂದು ಸಭೆಯ ಗಮನಕ್ಕೆ ತರಲಾಯಿತು.
7
+ ಸೈಬರ್ ಕ್ರೈಂ ಪ್ರಕರಣಗಳ ಕಾಲಮಿತಿ ತನಿಖೆಗೆ ಕಟ್ಟುನಿಟ್ಟಿನ ಕ್ರಮ : ದಯಾನಂದ
8
+ ರಾಜ್ಯದೆಲ್ಲೆಡೆ ತಪಾಸಣೆ ನಡೆಸಿ ಸುರಕ್ಷತಾ ಕ್ರಮ ಕೈಗೊಳ್ಳದ ಗೋಡನ್ ಹಾಗೂ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳುವುದಲ್ಲದೆ, ಅವುಗಳ ಪರವಾನಗಿಗಳನ್ನು ರದ್ದುಗೊಳಿಸಬೇಕೆಂದು ಸೂಚಿಸಿದರು.ಬೆಂಗಳೂರು ನಗರದಲ್ಲಿ ಎರಡು ರೀತಿಯ ಪರವಾನಗಿಗಳಿವೆ. ಶಾಶ್ವತ ಮಳಿಗೆಗಳು ಹಾಗೂ ತಾತ್ಕಾಲಿಕ ಮಳಿಗೆಗಳಿಗೆ ಪರವಾನಗಿ ನೀಡಲಾಗುತ್ತದೆ. ಬಿಬಿಎಂಪಿ, ವಿದ್ಯುತ್, ಅಗ್ನಿಶಾಮಕ, ಟ್ರಾಫಿಕ್ ಮತ್ತು ಕಾನೂನು ಸುವ್ಯವಸ್ಥೆ ವಿಭಾಗದ ನಿರಪೇಕ್ಷಣಾ ಪತ್ರ ಪಡೆದು ಲೈಸನ್ಸ್ ನೀಡಲಾಗುತ್ತದೆ.
9
+ 5 ವರ್ಷಕ್ಕೊಮ್ಮೆ ನವೀಕರಣಕ್ಕೆ ನಿರಪೇಕ್ಷಣಾ ಪತ್ರದ ಅಗತ್ಯವಿರುವುದಿಲ್ಲ. ಸ್ಪೋಟಕದ ನಿಯಂತ್ರಕರು ನವೀಕರಿಸುತ್ತಾರೆ. ಈ ಕುರಿತು ನಿಯಮಗಳ ತಿದ್ದುಪಡಿ ಅಗತ್ಯವಿದೆ ಎಂದ ಅವರು, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸೂಚಿಸಿದರು. ರಾಜ್ಯಕ್ಕೆ ಅನ್ವಯಿಸುವ ನಿಯಮ ಬದಲಿಸಲು ಸೂಚನೆ ನೀಡಿದರು.ಅತ್ತಿಬೆಲೆಯಲ್ಲಿ ನಿಗದಿಯಾದ ಮಾನದಂಡ ಪೂರೈಸದಿದ್ದರೂ ತಪಾಸಣಾ ವರದಿ ನೀಡಿ, ಶಿಫಾರಸ್ಸು ಮಾಡಿದ ಸರ್ಕಲ್ ಇನ್ಸ್‍ಪೆಕ್ಟರ್, ತಹಸೀಲ್ದಾರ್, ಪ್ರಾದೇಶಿಕ ಅಗ್ನಿಶಾಮಕ ಅಕಾರಿಗಳನ್ನು ಅಮಾನತು ಮಾಡಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.
10
+ ಅತ್ತಿಬೆಲೆ ಹೊಸೂರು ಗಡಿಭಾಗದಲ್ಲಿ ಬರುವ ಪಟಾಕಿಗಳ ಕುರಿತು ತೀವ್ರ ನಿಗಾ ವಹಿಸಬೇಕೆಂದು ಹೇಳಿದ ಅವರು, ಈ ಕುರಿತು ನ್ಯಾಯಾಲಯಗಳ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಎಲ್ಲಾ ಕ್ರಮ ಕೈಗೊಳ್ಳಬೇಕು. ಹಸಿರು ಪಟಾಕಿಗಳ ಮಾರಾಟವನ್ನು ಖಾತರಿಪಡಿಸಿಕೊಳ್ಳಬೇಕೆಂದು ಹೇಳಿದರು.
11
+ ಸಭೆಯಲ್ಲಿ ಭಾಗವಹಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ರಾಜಕೀಯ ಸಮಾವೇಶ ಹಾಗೂ ವಿವಾಹ ಸಂದರ್ಭಗಳಲ್ಲಿ ಸುರಕ್ಷಿತ ದೃಷ್ಟಿಯಿಂದ ಪಟಾಕಿ ಬಳಕೆಯನ್ನು ನಿಷೇಧಿಸುವಂತೆ ಸಲಹೆ ಮಾಡಿದರು.
12
+ ಬಿಗ್‍ಬಾಸ್‍ನಿಂದ ಹೊರಬಂದು ಪ್ರದೀಪ್ ಈಶ್ವರ್ ಹೇಳಿದ್ದೇನು..?
13
+ ಸಭೆಯಲ್ಲಿ ಮುಖ್ಯಕಾರ್ಯದರ್ಶಿ ವಂದಿತಾಶರ್ಮಾ, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಸಿಎಂ ಅವರ ಅಪರ ಮುಖ್ಯಕಾರ್ಯದರ್ಶಿ ಡಾ.ರಜನೀಶ್ ಘೋಯೆಲ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ನಗರ ಜಿಲ್ಲಾಕಾರಿ ಕೆ.ಎ.ದಯಾನಂದ ಮತ್ತಿತರರು ಉಪಸ್ಥಿತರಿದ್ದರು.
eesanje/url_46_333_12.txt ADDED
@@ -0,0 +1,5 @@
 
 
 
 
 
 
1
+ ಮಳೆ ನಡುವೆಯೇ ಅಂಬಾರಿ ತಾಲೀಮು
2
+ ಮೈಸೂರು,,ಅ.10- ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಈ ಬಾರಿ ಅಂಬಾರಿ ಹೊರಲಿರುವ ಆನೆಗಳ ತಾಲೀಮು ಭರದಿಂದ ಸಾಗಿದ್ದು, ಮಳೆಯ ನಡುವೆಯೂ ಕ್ಯಾಪ್ಟನ್ ಅಭಿಮನ್ಯು ಮರದ ಅಂಬಾರಿ ಹೊತ್ತು ಹೆಜ್ಜೆ ಹಾಕಿದೆ.
3
+ ಚಿನ್ನದ ಅಂಬಾರಿ ಹೊತ್ತು ಸಾಗಲಿರುವ ಅಭಿಮನ್ಯುವಿಗೆ ಮರದ ಅಂಬಾರಿ ಕಟ್ಟಿ ನಗರದ ವಿವಿಧೆಡೆ ತಾಲೀಮುಗಾಗಿ ಅರ್ಚಕರಾದ ಪ್ರಹ್ಲಾದ್‍ರಾವ್ ಅವರು ಪೂಜೆ ಸಲ್ಲಿಸಿ ಚಾಲನೆ ನೀಡಬೇಕೆನ್ನುವಷ್ಟರಲ್ಲಿ ವರುಣನ ಸಿಂಚನವಾಗಿದ್ದು, ಇದೊಂದು ಶುಭ ಸಂಕೇತವೆಂದು ಮಳೆಯ ನಡುವೆಯೇ ಗಜಪಡೆ ತಾಲೀಮು ನಡೆಸಿದವು.
4
+ ಉದ್ಯಮಿಗೆ 5.39 ಕೋಟಿ ಪಂಗನಾಮ : ಹೆಚ್ಚು ಲಾಭಕ್ಕಾಗಿ ಹೂಡಿಕೆ ಮಾಡುವ ಮುನ್ನ ಹುಷಾರ್..!
5
+ ಅಭಿಮನ್ಯುವಿನ ಬಲ ಹಾಗೂ ಎಡ ಭಾಗದಲ್ಲಿ ಹೆಣ್ಣು ಆನೆಗಳು ಸಾಥ್ ನೀಡಿದರೆ ಹಿಂದೆ ಹನ್ನೊಂದು ಆನೆಗಳು ಹೆಜ್ಜೆ ಹಾಕುತ್ತಾ ನಗರದ ಕೆಆರ್ ವೃತ್ತ, ಸಯ್ಯಾಜಿರಾವ್ ರಸ್ತೆ ಮೂಲಕ ಸಾಗಿ ಬನ್ನಿಮಂಟಪಕ್ಕೆ ಯಶಸ್ವಿಯಾಗಿ ತಲುಪಿದವು. ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಮಾವುತರು ಸಹ ಆನೆಗಳೊಂದಿಗೆ ಸಾಗಿದರು.
eesanje/url_46_333_2.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ನವೆಂಬರ್‌ನಲ್ಲಿ ಜಾತಿಗಣತಿ ವರದಿ ಬಹಿರಂಗ..!?
2
+ ಬೆಂಗಳೂರು,ಅ.11- ಬಿಹಾರದ ನಂತರ ಕರ್ನಾಟಕದಲ್ಲಿ ನವೆಂಬರ್ ವೇಳೆಗೆ ಜಾತಿ ಜನಗಣತಿಯ ವರದಿಯನ್ನು ಬಹಿರಂಗಗೊಳ್ಳುವ ಸಾಧ್ಯತೆಗಳಿವೆ. ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವ ಶಿವರಾಜ್ ತಂಗಡಗಿ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆಯನ್ನು ಭೇಟಿ ಮಾಡಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿರುವುದು ಇದಕ್ಕೆ ಪುಷ್ಟಿ ನೀಡಿದೆ.
3
+ ಪ್ರಸ್ತುತ ಸನ್ನಿವೇಶದಲ್ಲಿ ವರದಿ ಬಿಡುಗಡೆಯ ಸಾಧ್ಯತೆಗಳು ಹೆಚ್ಚಾಗಿ ಕಂಡುಬರುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಜೊತೆ ಚರ್ಚೆ ನಡೆಸಿದ್ದು, ಈ ಹಿಂದೆ ಕಾಂತರಾಜು ನೇತೃತ್ವದ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯನ್ನು ಯಥಾವತ್ತು ಸಲ್ಲಿಕೆ ಮಾಡುವಂತೆ ಸೂಚನೆ ನೀಡಿದ್ದಾರೆ.
4
+ ಕಾಂತರಾಜು ಅವರ ಆಯೋಗ ಸಮೀಕ್ಷೆ ನಡೆಸಿ ತಯಾರಿಸಿದ ವರದಿಗೆ ಆಗಿನ ಆಯೋಗದ ಕಾರ್ಯದರ್ಶಿ ಸಹಿ ಹಾಕಿರಲಿಲ್ಲ. ಅದರ ಹೊರತಾಗಿಯೂ ವರದಿಯನ್ನು ಕಾಂತರಾಜು ಅವರು ಸರ್ಕಾರದ ಮುಖ್ಯಕಾರ್ಯದರ್ಶಿ ಅವರಿಗೆ ನೀಡಿದ್ದರು. ಅದು ಊರ್ಜಿತವಲ್ಲ ಎಂಬ ತಾಂತ್ರಿಕ ಅಂಶಗಳು ಎದುರಾಗಿವೆ. ಕಾರ್ಯದರ್ಶಿಯವರ ಸಹಿಯನ್ನೊಳಗೊಂಡ ಕ್ರಮಬದ್ಧವಾದ ವರದಿಯನ್ನು ಮತ್ತೊಮ್ಮೆ ಸರ್ಕಾರಕ್ಕೆ ಸಲ್ಲಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.
5
+ ಮನವೊಲಿಸಿದ ಬಿಎಸ್‌ವೈ, ಧರಣಿ ಕೈಬಿಟ್ಟ ಶಾಸಕ ಮುನಿರತ್ನ
6
+ ನವೆಂಬರ್‍ವರೆಗೂ ಕಾಲಾವಕಾಶ ನೀಡುವಂತೆ ಆಯೋಗದ ಅಧ್ಯಕ್ಷರು ಮನವಿ ಮಾಡಿಕೊಂಡಿದ್ದಾರೆ. ಸರಿಪಡಿಸಿದ ತಾಂತ್ರಿಕ ಅಂಶಗಳನ್ನು ಪರಿಗಣಿಸಿ ವರದಿ ಸಲ್ಲಿಕೆಯಾಗುವ ನಿರೀಕ್ಷೆಗಳಿವೆ. ಕಳೆದ ಎಂಟು ವರ್ಷಗಳ ಹಿಂದೆ ನಡೆದಿದ್ದ ಸಮೀಕ್ಷೆ ವರದಿಯನ್ನು ಪ್ರಸ್ತುತ ಅಂಗೀಕರಿಸಲು ಸಾಧ್ಯವೇ ಎಂಬ ಗೊಂದಲಗಳು ತಲೆ ಎತ್ತಿವೆ.
7
+ ಕಾಂತರಾಜು ಅವರ ಆಯೋಗದಲ್ಲಿ ಕೆಲವು ಜಾತಿಗಳ ಸಂಖ್ಯಾವಾರು ಪ್ರಮಾಣದ ಬಗ್ಗೆ ಆಕ್ಷೇಪಗಳೆವೆ. ಕೆಲವು ಸಮುದಾಯಗಳು ಇದನ್ನು ತೀವ್ರವಾಗಿ ವಿರೋಧಿಸಿಯೂ ಇವೆ. ಮನೆ ಮನೆ ಸಮೀಕ್ಷೆ ಸರಿಯಾಗಿ ನಡೆದಿಲ್ಲ. ಸಮೀಕ್ಷಾ ವರದಿಯಲ್ಲಿ ಕೆಲವು ಮಾಹಿತಿಗಳನ್ನು ಆ ವೇಳೆ ತಿರುಚಲಾಗಿದೆ ಎಂಬ ಆರೋಪಗಳಿವೆ. ಹಲವು ಗಂಭೀರ ಆರೋಪಗಳಿಂದ ಕೂಡಿರುವ ಸಮೀಕ್ಷಾ ವರದಿಯನ್ನು ಅಂಗೀಕರಿಸುವುದು ಸರಿಯಲ್ಲ ಎಂಬ ವಾದಗಳು ಕೇಳಿಬಂದಿವೆ.
8
+ ರಾಜ್ಯಸರ್ಕಾರ ಸಮೀಕ್ಷೆ ನಡೆಸುವಾಗ ಆರ್ಥಿಕ, ಸಾಮಾಜಿಕ ಮಾಹಿತಿ ಸಂಗ್ರಹ ಎಂದು ಹೇಳಿತ್ತು. ವರದಿ ಸಿದ್ಧಗೊಂಡ ಬಳಿಕ ಅದನ್ನು ಜಾತಿ ಜನಗಣತಿ ಎಂದು ಪ್ರತಿಪಾದಿಸಲಾಗುತ್ತಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಾವುದೇ ಸೌಲಭ್ಯಗಳ ಹಂಚಿಕೆ ಹಾಗೂ ಸಾಮಾಜಿಕ ನ್ಯಾಯಗಳ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಜಾತಿ ಜನಸಂಖ್ಯೆಯ ಮಾಹಿತಿಗಳು ಅಗತ್ಯ. ಆದರೆ ಅದನ್ನು ಕ್ರೂಢೀಕ��ಿಸಲು ಕರಾರುವಕ್ಕಾದ ಸಮೀಕ್ಷೆಗಳು ನಡೆಯಬೇಕು. ದೇಶದಲ್ಲಿ ಜನಗಣತಿಗೆ ಭಾರತೀಯ ಗಣತಿ ಆಯೋಗಕ್ಕೆ ಮಾತ್ರ ಅಕಾರ ಇದೆ ಎಂದು ಸುಪ್ರೀಂಕೋರ್ಟ್ ತೀಪೆರ್ದರಲ್ಲಿ ಸ್ಪಷ್ಟಪಡಿಸಿದೆ.
9
+ ಹೀಗಿರುವಾಗ ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ ನಡೆದಿದೆ ಎಂದು ಹೇಳಲಾದ ಸಮೀಕ್ಷಾ ವರದಿ ಕಾನೂನಾತ್ಮಕವಾಗಿ ಊರ್ಜಿತವೇ ಎಂಬುದು ಪ್ರಶ್ನಾರ್ಹವಾಗಿದೆ. ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡಿ ಜಾರಿಗೊಳಿಸಲು ಮುಂದಾದರೆ ಮತ್ತಷ್ಟು ಪ್ರತಿಭಟನೆಗಳು ಎದುರಾಗುವ ಸಾಧ್ಯತೆಯಿದೆ.
10
+ ಜೆಡಿಎಸ್, ಬಿಜೆಪಿ ಅಕಾರ ನಡೆಸಿದ ಸಂದರ್ಭದಲ್ಲಿ ವರದಿಯ ತಂಟೆಗೆ ಹೋಗಿರಲಿಲ್ಲ. ಸಿದ್ಧರಾಮಯ್ಯ ಅದನ್ನೇ ಗುರಿಯಾಗಿಟ್ಟುಕೊಂಡು ಹಲವು ಬಾರಿ ತಗಾದೆ ತೆಗೆದಿದ್ದರು. ಈಗ ಸಿದ್ದರಾಮಯ್ಯನವರೇ ಅಧಿಕಾರದಲ್ಲಿರುವುದರಿಂದ ವರದಿಯ ಅಂಗೀಕಾರದ ಅನಿವಾರ್ಯತೆ ಎದುರಾಗಿದೆ.
11
+ ಇದಕ್ಕೆ ಪೂರಕವಾಗಿ ಎಐಸಿಸಿ ಕೂಡ ದೇಶಾದ್ಯಂತ ಜಾತಿ ಜನಗಣತಿ ನಡೆಯಬೇಕು ಎಂದು ಪ್ರತಿಪಾದಿಸಿದೆ. ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಈ ರೀತಿಯ ಸಮೀಕ್ಷೆ ನಡೆಯಲಿದೆ ಮತ್ತು ಅವು ಅಂಗೀಕಾರಗೊಳ್ಳಲಿವೆ ಎಂದು ರಾಹುಲ್‍ಗಾಂಧಿ ತಿಳಿಸಿದ್ದಾರೆ. ಸಿದ್ದರಾಮಯ್ಯ ಕೂಡ ಅದಕ್ಕೆ ದನಿಗೂಡಿಸಿದ್ದಾರೆ.
12
+ ಪಟಾಕಿ ದುರಂತ : ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ
13
+ ಆದರೆ ಕಾನೂನಾತ್ಮಕವಾಗಿ ಸಾಕಷ್ಟು ತೊಂದರೆಗಳು, ಗೊಂದಲಗಳು ಇರುವುದರಿಂದ ರಾಜ್ಯಸರ್ಕಾರ ವರದಿ ಅಂಗೀಕರಿಸಿದರೆ ನ್ಯಾಯಾಲಯದಲ್ಲಿ ಅದು ಮೇಲುಗೈ ಸಾಧಿಸಲಿದೆಯೇ ಎಂಬುದು ಚರ್ಚೆಗೊಳಗಾಗುತ್ತಿದೆ. ಒಂದು ವೇಳೆ ಸರ್ಕಾರ ಹಿಂದಿನ ವರದಿಯನ್ನು ಅಂಗೀಕರಿಸಿ ಲೋಪದೋಷಗಳ ಪರಿಷ್ಕರಣೆಗೆ ಮತ್ತೊಂದು ಸಮೀಕ್ಷೆ ನಡೆಸುವ ಸಾಧ್ಯತೆಗಳ ಬಗ್ಗೆಯೂ ಸಮಾಲೋಚನೆ ನಡೆದಿವೆ ಎಂದು ಹೇಳಲಾಗುತ್ತಿದೆ.
eesanje/url_46_333_3.txt ADDED
@@ -0,0 +1,9 @@
 
 
 
 
 
 
 
 
 
 
1
+ ಯುವ ದಸರಾ, ಏರ್ ಶೋ : ಕಂಗೊಳಿಸಲಿದೆ ಸಾಂಸ್ಕೃತಿಕ ನಗರಿ
2
+ ಮೈಸೂರು, ಅ. 11- ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಆರಂಭಗೊಂಡಿದ್ದು, ಅ. 18ರಿಂದ ಯುವ ದಸರಾ ನಡೆಯಲಿದ್ದು ಅ. 23ರಂದು ಏರ್ ಶೋ ಹಮ್ಮಿಕೊಳ್ಳಲಾಗಿದೆ. ದಸರಾ ಸಿದ್ಧತೆ ಕುರಿತು ಅರಮನೆ ಮಂಡಳಿ ಕಚೇರಿಯಲ್ಲಿ ಜಿಲ್ಲಾಕಾರಿ ಡಾ. ಕೆ. ವಿ. ರಾಜೇಂದ್ರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.
3
+ ಐದು ವರ್ಷಗಳ ಬಳಿಕ ದಸರಾ ಮಹೋತ್ಸವದಲ್ಲಿ ಏರ್ ಶೋ ಆಯೋಜಿಸಲಾಗಿದೆ. ಅ. 22ರಂದು ಏರ್ ಶೋ ರಿಹರ್ಸಲ್ ಹಾಗೂ ಅ.23ರಂದು ಪೂರ್ಣಪ್ರಮಾಣದ ಏರ್ ಶೋ ಆಯೋಜನೆ ಮಾಡಲಾಗಿದೆ ಎಂದು ಅವರು ವಿವರಿಸಿದರು. ಬನ್ನಿಮಂಟಪದ ಕವಾಯತು ಮೈದಾನದಲ್ಲಿ ಸಂಜೆ 4 ಗಂಟೆಗೆ ಏರ್ ಶೋ ಆರಂಭವಾಗಲಿದ್ದು, ಒಟ್ಟು 45 ನಿಮಿಷ ಏರ್ ಶೋ ನಡೆಯಲಿದೆ ಎಂದು ಅವರು ತಿಳಿಸಿದರು.
4
+ ಪಟಾಕಿ ದುರಂತ : ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ
5
+ ಈ ಬಾರಿ ಬರದ ಪರಿಣಾಮ ಸರ್ಕಾರದ ಮಾರ್ಗಸೂಚಿಯನ್ವಯ ಸಾಂಪ್ರದಾಯಿಕ ದಸರಾವನ್ನು ವ್ಯವಸ್ಥಿತವಾಗಿ ಆಚರಿಸಲು ಸಿದ್ದತೆ ಮಾಡಲಾಗುತ್ತಿದೆ, ದಸರಾಗೆ ಜನರನ್ನು ಆಕರ್ಷಿಸಲು ಕ್ರಮ ಕೈಗೊಳ್ಳಲಾಗುವುದು. ಹೊರ ರಾಜ್ಯಗಳಿಂದ ಮೈಸೂರಿಗೆ ಬರುವ ಪ್ರವಾಸಿಗರ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡುವ ಚಿಂತನೆಯಿದೆ ಎಂದು ಡಿಸಿ ರಾಜೇಂದ್ರ ಹೇಳಿದರು.
6
+ ಎಸ್‍ಪಿ ಸೀಮಾ ಲಾಟ್ಕರ್ ಮಾತನಾಡಿ, ಅ. 18 ರಿಂದ 21ರವರೆಗೆ ಯುವ ದಸರಾ ಆಯೋಜನೆ ಮಾಡಲಾಗಿದ್ದು ಉದ್ಘಾಟನೆಯಲ್ಲಿ ನಟ ಶಿವರಾಜ್ ಕುಮಾರ್ ಭಾಗಿಯಾಗಲಿದ್ದಾರೆ. ಕನ್ನಡ ಹಿನ್ನೆಲೆ ಗಾಯಕ ಸಂಚಿತ್ ಹೆಗ್ಡೆ ಮತ್ತು ಅವರ ತಂಡ ಯುವ ದಸರಾದಲ್ಲಿ ಪಾಲ್ಗೊಳ್ಳಲಿದೆ ಎಂದು ತಿಳಿಸಿದರು.
7
+ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಯುವ ದಸರಾ ಸಂಭ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್. ಸಿ. ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಸಂಜೆ 6.30 ರಿಂದ ರಾತ್ರಿ 10.30 ರವರಿಗೆ ಯುವ ದಸರಾ ನಡೆಯಲಿದೆ ಎಂದು ಹೇಳಿದರು.
8
+ ಪಾಕ್‌ನಲ್ಲಿ ಭಾರತದ ಮತ್ತೊಬ್ಬ ಮೋಸ್ಟ್ ವಾಂಟೆಡ್ ಉಗ್ರನನ್ನ ಹತ್ಯೆಮಾಡಿದ ‘ಅಪರಿಚಿತರು’
9
+ ಮೊದಲ ದಿನ ಹಾಸ್ಯನಟ ಹಾಗೂ ಸಂಗೀತ ನಿರ್ದೇಶಕರಾದ ಸಾಧು ಕೋಕಿಲ ಮತ್ತು ತಂಡದಿಂದ ಸಂಗೀತ ಸಂಜೆ, ಕನ್ನಡದಾಲ್ ಒಕೆ ತಂಡದಿಂದ ಸಂಗೀತ ಕಾರ್ಯಕ್ರಮ, ಬಾಲಿವುಡ್ ಹಾಡುಗಾರರು ಕೂಡ ಈ ಬಾರಿ ಯುವ ದಸರಾದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ. ಸ್ಥಳೀಯ ಪ್ರತಿಭೆಗಳಿಗೂ ಯುವ ದಸರಾ ಸಂಭ್ರಮದಲ್ಲಿ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಸೀಮಾ ಲಾಟ್ಕರ್ ತಿಳಿಸಿದರು.
eesanje/url_46_333_4.txt ADDED
@@ -0,0 +1,6 @@
 
 
 
 
 
 
 
1
+ ಪಟಾಕಿ ದುರಂತ : ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ
2
+ ಬೆಂಗಳೂರು,ಅ.11- ಅತ್ತಿಬೆಲೆ ಪಟಾಕಿ ಬೆಂಕಿ ದುರಂತದ ಹಿನ್ನಲೆಯಲ್ಲಿ ಆನೇಕಲ್ ತಹಸೀಲ್ದಾರ್(ಹಿಂದಿನ) ಶಶಿಧರ ಮಾಡ್ಯಾಳ್ ಸೇರಿದಂತೆ ನಾಲ್ವರು ಅಧಿಕಾರಿ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
3
+ ಬೆಂಗಳೂರು ನಗರ ಜಿಲ್ಲಾಧಿಕಾರಿ ನೀಡಿರುವ ವರದಿ ಆಧರಿಸಿ ಕರ್ತವ್ಯ ನಿರ್ಲಕ್ಷ್ಯತೆ ಆರೋಪದ ಮೇಲೆ ತಹಸೀಲ್ದಾರ್ ಶಶಿಧರ ಮಾಡ್ಯಾಳ್ ಅತ್ತಿಬೆಲೆ ನಾಡಕಚೇರಿ ಉಪತಹಸೀಲ್ದಾರ್ ಶ್ರೀಧರ್.ವಿ.ಸಿ ಅತ್ತಿಬೆಲೆ ವೃತ್ತದ ರಾಜಸ್ವ ನಿರೀಕ್ಷಕ ಪುಷ್ಪರಾಜ್.ಎ ಹಾಗೂ ಗ್ರಾಮ ಆಡಳಿತಾಧಿಕಾರಿ ಭಾಗೇಶ್ ಹೊಸಮನೆ ಅವರನ್ನು ಇಲಾಖೆ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತು ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.
4
+ ಇಂದಿರಾ ಕ್ಯಾಂಟಿನ್ ರೀ ಓಪನ್‍ಗೆ ಅಡ್ಡಿಯಾಯ್ತೇ ಗ್ಯಾರಂಟಿ ಯೋಜನೆಗಳು..?
5
+ ಅಮಾನತು ಅವಧಿಯಲ್ಲಿ ನಿಯಮಾನುಸಾರ ಜೀವನ ಆಧಾರ ಭತ್ಯೆಯನ್ನು ಪಡೆಯಲು ಅರ್ಹರಾಗಿದ್ದು, ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಆದೇಶದಲ್ಲಿ ಸೂಚಿಸಲಾಗಿದೆ.ಹಸಿರು ಪಟಾಕಿ ಗೋದಾಮಿಗೆ ಬೆಂಕಿ ತಗುಲಿ ಕಾರಣರಾದ ಮತ್ತು ಅಸಮರ್ಪಕ ವರದಿ ಸಲ್ಲಿಸಲು ಕಾರಣರಾದ ಆರೋಪದ ಮೇಲೆ ಶಿಸ್ತು ಕ್ರಮ ಜರುಗಿಸಲು ತೀರ್ಮಾನಿಸಿ ಜಂಟಿ ಇಲಾಖೆ ವಿಚಾರಣೆಯನ್ನು ಬಾಕಿ ಇರಿಸಿ ಸೇವಾ ನಿಯಮಗಳ ಅನ್ವಯ ಅಮಾನತುಗೊಳಿಸಲಾಗಿದೆ.
6
+ ಅ.7ರಂದು ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿಗೆ ಬೆಂಕಿ ತಗುಲಿ 14 ಮಂದಿ ಮೃತಪಟ್ಟಿದ್ದು, ಕೆಲವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತಕ್ಕೆ ಮೇಲಿನ ಅಧಿಕಾರಿಗಳೇ ಕಾರಣ ಎಂದು ಆದೇಶದಲ್ಲಿ ಪ್ರಸ್ತಾಪಿಸಲಾಗಿದೆ.
eesanje/url_46_333_5.txt ADDED
@@ -0,0 +1,8 @@
 
 
 
 
 
 
 
 
 
1
+ ಇಂದಿರಾ ಕ್ಯಾಂಟಿನ್ ರೀ ಓಪನ್‍ಗೆ ಅಡ್ಡಿಯಾಯ್ತೇ ಗ್ಯಾರಂಟಿ ಯೋಜನೆಗಳು..?
2
+ ಬೆಂಗಳೂರು,ಅ.11- ಬಡವರ ಪಾಲಿನ ಅನ್ನಪೂರ್ಣೇಶ್ವರಿ ಎಂದೆ ಪ್ರಸಿದ್ಧಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಕೂಸಾದ ಇಂದಿರಾ ಕ್ಯಾಂಟಿನ್‍ಗಳಿಗೆ ಇನ್ನು ಓಪನಿಂಗ್ ಭಾಗ್ಯ ಸಿಕ್ಕಿಲ್ಲ.ಇದನ್ನು ಗಮನಿಸಿದರೆ ಬಿಬಿಎಂಪಿ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರ ಕನಸಿನ ಕೂಸಿಗೆ ಎಳ್ಳು ನೀರು ಬಿಟ್ರ ಎಂಬ ಅನುಮಾನ ಕಾಡತೊಡಗಿದೆ.
3
+ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬರ್ತಿದಂಗೆ ಇಂದಿರಾ ಕ್ಯಾಂಟೀನ್ ಅನ್ನೂ ಮರು ಓಪನ್ ಮಾಡ್ತಿವಿ ಅಂತ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರೂ ಆದರೆ, ಇದುವರೆಗೂ ಇಂದಿರಾ ಕ್ಯಾಂಟಿನ್‍ಗಳು ಓಪನ್ ಆಗದಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
4
+ ಚೀನಾಗೆ ನೆರವು ನೀಡಿದ್ದನ್ನು ಒಪ್ಪಿಕೊಂಡ ಅಮೆರಿಕನ್ ನಾವಿಕ
5
+ ಕಳೆದ ಬಿಜೆಪಿ ಸರ್ಕಾರದಲ್ಲಿ ಬೆಂಗಳೂರಿನ ಕೇಲವು ಕಡೆ ಇಂದಿರಾ ಕ್ಯಾಂಟೀನ್ ಗಳನ್ನ ಬಂದ್ ಮಾಡಲಾಗಿತ್ತು. ಆದರೆ, ರಾಜ್ಯದಲ್ಲಿ ಮತ್ತೆ ಕಾಂಗ್ರೇಸ್ ಸರ್ಕಾರ ಬರ್ತಿದಂಗೆ ಬಾಗಿಲು ಮುಚ್ಚಿದ ಕ್ಯಾಂಟೀನ್ ಗಳನ್ನೂ ರೀ ಓಪನ್ ಮಾಡ್ತಿವಿ ಅಂತ ಸಿಎಂ ಹೇಳಿಕೆ ನೀಡಿದ್ರು.
6
+ ನಗರದ ಕಾಲೇಜು, ಬಸ್ ಸ್ಟಾಪ್ , ವಿಧಾನಸೌಧ, ಏರ್‍ಪೆಪೋರ್ಟ್‍ಗಳಲ್ಲೂ ಕೂಡ ಕ್ಯಾಂಟೀನ್ ಓಪನ್ ಮಾಡ್ತಿವಿ ಅಂತ ಭರವಸೆ ನೀಡಿದ್ದರು. ಇದರ ಜತೆಗೆ ಊಟದಲ್ಲೂ ವಿಶೇಷತೆ ಇರಲಿದೆ ಎಂದು ಹೇಳಿ ನಾಲ್ಕು ತಿಂಗಳು ಕಳೆದರೂ ಕ್ಯಾಂಟಿನ್‍ಗಳು ಮಾತ್ರ ಓಪನ್ ಆಗುತ್ತಿಲ್ಲ.
7
+ ಹರಿದಾಡುತ್ತಿದೆ ಇಸ್ರೇಲ್-ಹಮಾಸ್ ಯುದ್ಧದ ನಕಲಿ ವಿಡಿಯೋಗಳು
8
+ ಹಾಗಾದ್ರೆ ಇಂದಿರಾ ಕ್ಯಾಂಟೀನ್ ಓಪನ್ ಮಾಡೋದಕ್ಕೆ ಸರ್ಕಾರಕ್ಕೆ ಮನಸು ಇಲ್ವ,,? ಅಥವಾ ಗ್ಯಾರಂಟಿ ಯೋಜನೆ ಜಾರಿಯಿಂದ ಕ್ಯಾಂಟೀನ್ ಗೆ ಅನುದಾನ ಕೊಡಲು ಸಾಧ್ಯವಾಗುತ್ತಿಲ್ಲವೋ ಎನ್ನೋದು ಆರ್ಥವಾಗುತ್ತಿಲ್ಲ. ಸದ್ಯ ಬಿಬಿಎಂಪಿ ವ್ಯಾಪ್ತಿಯಲ್ಲಿ 176 ಕ್ಯಾಂಟೀನ್ ಗಳು ಇವೇ ಆದರೆ, ಈಗ 30 ಕ್ಯಾಂಟೀನ್ ಗಳು ಬಾಗಿಲು ಬಂದ್ ಅಗಿವೇ,, ಅ„ಕಾರಕ್ಕೆ ಬರ್ತಿದಂಗೆ ಬಡವರ ಹಸಿವು ನಿಗಿಸೋ ಕ್ಯಾಂಟೀನ್ ರೀ ಓಪನ್ ಮಾಡ್ತಿನಿ ಅಂದ ಸರ್ಕಾರ ಈಗ ಯಾಕೆ ಓಪನ್ ಮಾಡ್ತಿಲ್ಲ,, ಸಿದ್ದರಾಮಯ್ಯ ಕನಸಿನ ಕೂಸಿಗೆ ತಣ್ಣಿರು ಎರಚಿತ ಗ್ಯಾರಂಟಿ ಯೋಜನೆಗಳು ಎಂಬ ಅನುಮಾನ ಕಾಡತೊಡಗಿದೆ.
eesanje/url_46_333_6.txt ADDED
@@ -0,0 +1,5 @@
 
 
 
 
 
 
1
+ ಜೈನ ಮಂದಿರದಲ್ಲಿ ಕಳ್ಳತನ ಮಾಡಿದ್ದ ನಾಲ್ವರ ಬಂಧನ, 14 ಕೆಜಿ ಬೆಳ್ಳಿ ಆಭರಣ ವಶ
2
+ ಬೆಂಗಳೂರು,ಅ.10- ಜೈನ ಮಂದಿರದಲ್ಲಿ ಕನ್ನಕಳವು ಮಾಡಿದ್ದ ನಾಲ್ವರು ಅಂತರಾಜ್ಯ ಆರೋಪಿಗಳನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿ 9.75 ಲಕ್ಷ ರೂ. ಮೌಲ್ಯದ 14 ಕೆ.ಜಿ. ಬೆಳ್ಳಿ ಆಭರಣ ವಶಪಡಿಸಿಕೊಂಡಿದ್ದಾರೆ. ಶಾಂತಿನಗರದಲ್ಲಿರುವ ಆದಿನಾಥ ಜೈನ ಮಂದಿರದಲ್ಲಿ ಸೆ.9ರಂದು ರಾತ್ರಿ ಕಳ್ಳರು ದೇವಾಲಯದ ಒಳಗೆ ನುಗ್ಗಿ ಬೆಳ್ಳಿ ಆಭರಣವನ್ನು ಕಳವು ಮಾಡಿಕೊಂಡು ಹೋಗಿದ್ದ ಬಗ್ಗೆ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಆರೋಪಿಗಳು ಮತ್ತು ಮಾಲು ಪತ್ತೆ ಮಾಡಲು ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತರು ಒಂದು ವಿಶೇಷ ತಂಡವನ್ನು ರಚಿಸಿದ್ದರು.
3
+ ಈ ತಂಡವು ಆರೋಪಿಗಳ ಬಗ್ಗೆ ಹಲವು ಮಾಹಿತಿಗಳನ್ನು ಸಂಗ್ರಹಿಸಿ, ರಾಜಸ್ತಾನ ರಾಜ್ಯದ ಪಾಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ , ಒಟವಾಟೋ ಕಿ ಪಾಲಿ ಎಂಬ ಗ್ರಾಮದಲ್ಲಿ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿ, ಕಳವು ಮಾಡಿದ್ದ 14 ಕೆ.ಜಿ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಂಡಿದ್ದು, ಇದರ ಒಟ್ಟು ಮೌಲ್ಯ 9.75 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
4
+ ಒಂದೇ ಮಳೆಗೆ ನಲುಗಿದ ಬೆಂಗಳೂರು, 50 ಜನರ ಪ್ರಾಣ ಉಳಿಸಿದ ಅಗ್ನಿಶಾಮಕ ದಳ
5
+ ಈ ಪ್ರಕರಣದಲ್ಲಿ ತಲೆಮರೆಸಿ ಕೊಂಡಿರುವ ಇನ್ನಿಬ್ಬರು ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶೇಖರ್ ಮತ್ತು ಕಬ್ಬನ್ ಪಾರ್ಕ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಬಾಲಕೃಷ್ಣ ಅವರ ಮಾರ್ಗದರ್ಶನ ಲ್ಲಿ ಇನ್ಸ್‍ಪೆಕ್ಟರ್ ರವಿ ಅವರ ನೇತೃತ್ವದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ತಂಡದ ಉತ್ತಮ ಕಾರ್ಯವನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.
eesanje/url_46_333_7.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಘನತ್ಯಾಜ್ಯ ವಿಲೇವಾರಿಗೆ 100 ಎಕರೆ ಜಾಗ
2
+ ಬೆಂಗಳೂರು,ಅ.10- ಬೆಂಗಳೂರಿನ ನಾಲ್ಕು ಮೂಲೆಗಳನ್ನು ಘನತ್ಯಾಜ್ಯ ವಿಲೇವಾರಿಗೆ ತಲಾ 100 ಎಕರೆ ಜಾಗ ಗುರುತಿಸಲಾಗುವುದೆಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದಿಲ್ಲಿ ತಿಳಿಸಿದರು. ವಿಧಾನಸೌಧದಲ್ಲಿ ಇಂದು ನಡೆದ ತಿಪ್ಪೇಗೊಂಡನಹಳ್ಳಿ ಜಲಾಶಯ ವ್ಯಾಪ್ತಿಯ ವಿವಿಧ ವಲಯಗಳ ಬಫರ್ ಅಂತರ ಕಡಿಮೆ ಮಾಡುವುದು ಸೇರಿದಂತೆ ಜಲಸಂಪನ್ಮೂಲ ಇಲಾಖೆಯ ಉನ್ನತ ಮಟ್ಟದ ಸಭೆಯ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
3
+ ಘನತ್ಯಾಜ್ಯ ವಿಲೇವಾರಿಗೆ ಗುರುತಿಸಲಾದ ಅರಣ್ಯ ಭೂಮಿಯಾಗಿದ್ದರೆ ಪರ್ಯಾಯ ಜಾಗವನ್ನು ಅರಣ್ಯ ಇಲಾಖೆಗೆ ನೀಡಲಾಗುವುದು, ಇಲ್ಲವೇ ಹಣ ನೀಡಲಾಗುವುದು ಎಂದರು. ಆನೇಕಲ್, ದಾಸರಹಳ್ಳಿ ಸೇರಿದಂತೆ ಕೆಲವೆಡೆ ಊರಿನ ಬಳಿಯೇ ಕಸ ವಿಲೇವಾರಿ ಘಟಕಗಳಿವೆ. ಅವುಗಳನ್ನು ಸ್ಥಳಾಂತರ ಮಾಡಲು ಸಿದ್ದತೆ ಮಾಡಲಾಗಿದೆ, ಕಲ್ಲುಗುಡ್ಡೆಗಳಿಂದ ಕೂಡಿದ ಪ್ರದೇಶ ವಾಸನೆ ಬರದಂತಹ ಜಾಗವನ್ನು ಗುರುತಿಸಲು ಸೂಚಿಸಲಾಗಿದೆ ಎಂದರು. ಬೆಂಗಳೂರು ಸುತ್ತಮುತ್ತಲಿನ ಅರಣ್ಯ ಮತ್ತು ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಇಂದಿನ ಸಭೆ ನಡೆಸಲಾಗಿತ್ತು.
4
+ ಬಿಡಿಎ ಮತ್ತು ಬೆಂಗಳೂರು ಜಲಮಂಡಳಿ ಅರಣ್ಯ ಇಲಾಖೆಯಿಂದ ತೊಂದರೆಯಾಗುತ್ತಿದ್ದು, ಬಫರ್ ವಲಯಗಳಲ್ಲಿ ಮರಗಳಿಲ್ಲದಿದ್ದರೆ ಆಕ್ಷೇಪವಿಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಮೌಖಿಕವಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು. 2003ರಲ್ಲಿ ಸುಮಾರು ಒಂದು ಸಾವಿರ ನಿವೇಶನಗಳನ್ನು ಬಿಡಿಎಯಿಂದ ಹಂಚಿಕೆ ಮಾಡಲಾಗಿದೆ. ಅಂತಹ ನಿವೇಶನಗಳಲ್ಲಿ ಮನೆ ಕಟ್ಟಲು ಅರಣ್ಯ ಇಲಾಖೆಯಿಂದ ಅಡ್ಡಿ ಆಗುತ್ತಿತ್ತು. ಮರಗಳಿಲ್ಲದಿದ್ದರೆ ಆಕ್ಷೇಪ ಮಾಡುವುದಿಲ್ಲ ಭರವಸೆ ಅರಣ್ಯ ಇಲಾಖೆಯಿಂದ ಸಿಕ್ಕಿದೆ ಎಂದರು.
5
+ ತಿಪ್ಪೆಗೊಂಡನಹಳ್ಳಿ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಕೆಲವು ಕಾನೂನು ಬಾಹಿರ ಕಟ್ಟಡಗಳು ತಲೆ ಎತ್ತುತ್ತಿವೆ. ಈ ಹಿನ್ನೆಲೆಯಲ್ಲಿ ತಿಪ್ಪೆಗೊಂಡನಹಳ್ಳಿ ಜಲಾಶಯದ ಮಾಲಿನ್ಯವಾಗದಂತೆ ನೆಲಮಂಗಲ, ಡಾಬಸ್‍ಪೇಟೆ, ಶಿವಗಂಗೆ ಪ್ರದೇಶದಲ್ಲಿ ಕೆಂಪು ವಲಯಗಳ ಕೈಗಾರಿಕೆಗಳನ್ನು ಮಾಡಬಾರದು ಹಾಗೂ ರಾಜಕಾಲುವೆಯ 500 ಮೀ. ಅಂತರದಲ್ಲಿ ಯೋಜನೆಗೆ ಅನುಮೋದನೆ ನೀಡಬಾರದೆಂಬ ನಿಯಮವಿದೆ, ಇಲ್ಲಿನ ಜನರ ಸಮಸ್ಯೆಗಳಿಗೆ ಖಾಯಂ ಪರಿಹಾರ ರೂಪಿಸಲು ಕಾನೂನು ನಗರಾಭಿವೃದ್ಧಿ ಇಲಾಖೆ, ಅರಣ್ಯ ಹಾಗೂ ಕಂದಾಯ ಇಲಾಖೆ ಜಂಟಿಯಾಗಿ ಕ್ರಮ ಕೈಗೊಳ್ಳಲಿದೆ ಎಂದರು.
6
+ ಸೋಲಾರ್ ವಿದ್ಯುತ್ತಿಪ್ಪೆಗೊಂಡನಹಳ್ಳಿ ಹಾಗೂ ಹೆಸರಘಟ್ಟ ಜಲಾಶಯದ ಬಳಿ ಬೆಂಗಳೂರು ಜಲಮಂಡಳಿಯ ಜಮೀನು ಇದ್ದು ಆ ಜಮೀನಿನಲ್ಲಿ ಮಂಡಳಿಯ ಬಳಕೆಗಾಗಿ ಸೋಲಾರ್ ವಿದ್ಯುತ್ ಉತ್ಪಾದಿಸಲು ತೀರ್ಮಾನಿಸಲಾಗಿದೆ ಎಂದರು. ಜಲಮಂಡಳಿಯು ಒಂದು ಸಾವಿರ ಕೋಟಿ ರೂ. ವಿದ್ಯುತ್ ಬಿಲ್ ಪಾವತಿಸುತ್ತಿದೆ. ಪ್ರತಿ ಯುನಿಟ್‍ಗೆ 6 ರೂ. ವೆಚ್ಚ ತಗುಲುತ್ತಿದ್ದು, ಸೋಲಾರ್ ವಿದ್ಯುತ್ ಉತ್ಪಾದನೆಯಾದರೆ ಪ್ರತಿ ಯುನಿಟ್‍ಗೆ 4 ರೂ. ವೆಚ್ಚವಾಗಲಿದೆ. ಉತ್ಪಾದಿತ ಸೌರ ವಿದ್ಯುತನ್ನು ಜಲಮಂಡಳಿಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
7
+ ಮೇಕೆದಾಟು ಜಲಾಶಯದಲ್ಲಿ ಮುಳುಗಡೆಯಾಗುವ ಅರಣ್ಯ ಭೂಮಿಗೆ ಪರ್ಯಾಯವಾಗಿ ರಾಮನಗರ, ಮಂಗಳೂರು, ಮಂಡ್ಯ ಮತ್ತಿತರ ಜಿಲ್ಲೆಗಳಲ್ಲಿ ನೀಡಲಾಗುವುದು. ಬೆಂಗಳೂರು ಸುತ್ತಮುತ್ತ ಆನೆ, ಚಿರತೆ ಹಾವಳಿ ತಡೆಗೆ ರಕ್ಷಣೆ ಒದಗಿಸುವಂತೆ ಅರಣ್ಯ ಇಲಾಖೆ ಕೋರಿದ್ದು, ಅದಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದರು.
8
+ 470 ಕೋಟಿ ರೂ. ಸೈಬರ್ ವಂಚನೆ ಪತ್ತೆ, 27.68 ಕೋಟಿ ರೂ.ವಾರಸುದಾರರಿಗೆ ಹಸ್ತಾಂತರ
9
+ ಪ್ರತಿಕ್ರಿಯೆ ಇಲ್ಲತಮಿಳುನಾಡು ಸರ್ಕಾರ ಕೈಗೊಂಡಿರುವ ನಿರ್ಣಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನಾವು ನಮ್ಮ ರೈತರ ಹಿತವನ್ನು ಕಾಪಾಡಿದ್ದೇವೆ. ರಾಜ್ಯದಲ್ಲಿರುವ ಬರ ಪರಿಸ್ಥಿತಿ ಕೃತಕವೋ ವಾಸ್ತವವೋ ಎಂಬುವುದು ಎಲ್ಲರಿಗೂ ಗೊತ್ತಿದೆ. ಕೇಂದ್ರದ ತಂಡ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿದೆ ಎಂದರು. ಬಿಜೆಪಿಯವರು ಮಾರ್ಗದರ್ಶನ ಮಾಡಿದ್ದಂತೆ ನಾವು ಆರ್ ಆರ್ ನಗರದ ವಿಧಾನ ಸೌಧ ಕ್ಷೇತ್ರದಲ್ಲಿ ಅನುದಾನದ ವಿಚಾರದಲ್ಲಿ ಕ್ರಮಕೈಗೊಂಡಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
10
+ ಐಸಿಸಿ ಪ್ರಶಸ್ತಿಗಾಗಿ ಗಿಲ್-ಸಿರಾಜ್ ಫೈಟ್
11
+ ಸಭೆಯಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಸಂಸದರಾದ ಡಿವಿ ಸದಾನಂದ, ಡಿಕೆ ಸುರೇಶ್, ಶಾಸಕರಾದ ಎಸ್‍ಟಿ ಸೋಮಶೇಖರ್, ಶ್ರೀನಿವಾಸ್, ಎಸ್ ರವಿ, ಶಶಿ ಕಿರಣ್ ಶೆಟ್ಟಿ, ಜಲಸಂಪನ್ಮೂಲ ಇಲಾಖೆ ಅಪರಮುಖಿ ಕಾರ್ಯದರ್ಶಿ ರಾಕೇಶ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಡಿಎ ಆಯುಕ್ತ ಜಯರಾಮ್ ಮತ್ತಿತರರು ಪಾಲ್ಗೊಂಡಿದ್ದರು.
eesanje/url_46_333_8.txt ADDED
@@ -0,0 +1,8 @@
 
 
 
 
 
 
 
 
 
1
+ ಅಲ್ಪಸಂಖ್ಯಾತ ಮಕ್ಕಳ ವೈದ್ಯಕೀಯ ವ್ಯಾಸಂಗಕ್ಕೆ ಸಾಲದ ಮೊತ್ತ ಹೆಚ್ಚಳ : ಸಿಎಂ
2
+ ಬೆಂಗಳೂರು, ಅ. 10- ಅಲ್ಪಸಂಖ್ಯಾತ ಸಮುದಾಯಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅರಿವು ಸಾಲ ಯೋಜನೆಯಡಿ ವೈದ್ಯಕೀಯ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ನೀಡುವ ಸಾಲದ ಮೊತ್ತ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
3
+ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಸಂಖ್ಯೆ ಹೆಚ್ಚಳ ಹಾಗೂ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಮಾಣ ಹೆಚ್ಚಳ ಮಾಡಿರುವುದಕ್ಕೆ ಅನುಗುಣವಾಗಿ ಹೆಚ್ಚುವರಿ ಹುದ್ದೆಗಳ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ನಿಗದಿತ ಗುರಿಗೆ ಎದುರಾಗಿ ನಿರೀಕ್ಷೆಗೂ ಮೀರಿ ಅರ್ಜಿಗಳು ಸ್ವೀಕೃತವಾಗಿರುವುದರಿಂದ ಅರ್ಹ ಫಲಾನುಭವಿಗಳ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಿ, ಅನುದಾನ ಲಭ್ಯತೆಗೆ ಅನುಸಾರವಾಗಿ ಸೌಲಭ್ಯ ವಿತರಿಸುವಂತೆ ಸೂಚಿಸಿದರು.
4
+ ಸೈಬರ್ ಕ್ರೈಂ ಪ್ರಕರಣಗಳ ಕಾಲಮಿತಿ ತನಿಖೆಗೆ ಕಟ್ಟುನಿಟ್ಟಿನ ಕ್ರಮ : ದಯಾನಂದ
5
+ ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 1,000 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆ ರೂಪಿಸಿ, ಕಾಮಗಾರಿಗಳ ಆದ್ಯತಾ ಪಟ್ಟಿಯನ್ವಯ ಕೆಲಸ ಕೈಗೆತ್ತಿಕೊಳ್ಳುವಂತೆ ಸಲಹೆ ನೀಡಿದರು.ಅಲ್ಪಸಂಖ್ಯಾತರ ಇಲಾಖೆಯಡಿ ಆಯವ್ಯಯ ದಲ್ಲಿ ಘೋಷಿಸಲಾದ 19 ಘೋಷಣೆಗಳ ಪೈಕಿ 16 ಘೋಷಣೆಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಆದೇಶ ಹೊರಡಿಸಲಾಗಿದೆ ಎಂದು ಅಕಾರಿಗಳು ಮಾಹಿತಿ ನೀಡಿದರು.
6
+ ಪ್ರಧಾನಮಂತ್ರಿ ಆವಾಸ್ ಯೋಜನೆ ಪ್ರಗತಿ ಕುಂಠೀತವಾಗಿರುವುದರಿಂದ ಸಂಪನ್ಮೂಲ ಕ್ರೂಢೀಕರಣ ಕುರಿತಂತೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಯಿತು. ಈ ಯೋಜನೆಯಡಿ ಫಲಾನುಭವಿ ವಂತಿಗೆ ಪ್ರಮಾಣ ಹೆಚ್ಚಾಗಿರುವುದ ರಿಂದ ಹಾಗೂ ಫಲಾನುಭವಿಗಳ ವಂತಿಗೆ ಪಾವತಿ ಹಿನ್ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ಸಂಪನ್ಮೂಲ ಕ್ರೂಢೀಕರಣಕ್ಕೆ ನೀತಿ ರೂಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.
7
+ ಬಿಗ್‍ಬಾಸ್‍ನಿಂದ ಹೊರಬಂದು ಪ್ರದೀಪ್ ಈಶ್ವರ್ ಹೇಳಿದ್ದೇನು..?
8
+ ಒಂದು ಲಕ್ಷ ವಸತಿ ಯೋಜನೆಯಡಿ ನಿರ್ಮಾಣಗೊಂಡ ಮನೆಗಳಿಗೆ ಅಗತ್ಯ ಮೂಲಸೌಕರ್ಯವನ್ನು ಆದ್ಯತೆಯ ಮೇರೆಗೆ ಕಲ್ಪಿಸುವಂತೆ ಸೂಚಿಸಿದರು. ಸಭೆಯಲ್ಲಿ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್, ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ, ಗೋವಿಂದರಾಜು ನಸೀರ್ ಅಹ್ಮದ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲï.ಕೆ. ಅತೀಕ್ ಮತ್ತು ಸರ್ಕಾರದ ಇತರ ಹಿ���ಿಯ ಅಕಾರಿಗಳು ಉಪಸ್ಥಿತರಿದ್ದರು.
eesanje/url_46_333_9.txt ADDED
@@ -0,0 +1,10 @@
 
 
 
 
 
 
 
 
 
 
 
1
+ ನಿಗಮ ಮಂಡಳಿಗಳಿಗೆ 30 ಶಾಸಕರ ಪಟ್ಟಿ ಹೈಕಮಾಂಡ್‍ಗೆ ಸಲ್ಲಿಕೆ
2
+ ಬೆಂಗಳೂರು,ಅ.10- ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಕಳೆಯುತ್ತಾ ಬಂದಿದ್ದು, ನಿಗಮ ಮಂಡಳಿಗಳಿಗೆ ನೇಮಕಾತಿ ಮಾಡದಿರುವ ಕುರಿತು ಅಸಮಾಧಾನ ಹೊಗೆಯಾಡುತ್ತಿರುವ ನಡುವೆಯೇ, 30 ಮಂದಿ ಶಾಸಕರನ್ನು ಪ್ರಮುಖ ನಿಗಮಗಳಿಗೆ ಅಧ್ಯಕ್ಷರನ್ನಾಗಿ ಮಾಡುವ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್‍ಗೆ ಸಲ್ಲಿಸಿದ್ದಾರೆ.
3
+ ನಿನ್ನೆ ದೆಹಲಿಯಲ್ಲಿ ನಡೆದ ಕಾಂಗ್ರೆಸ್‍ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್ ನಾಯಕರ ಜೊತೆ ಸಮಾಲೋಚನೆ ನಡೆಸಿದ್ದು, ಶೇ. 50-50 ರ ಅನುಪಾತದಲ್ಲಿ ನಿಗಮ ಮಂಡಳಿಗಳಿಗೆ ನೇಮಕಾತಿ ಮಾಡುವ ಪ್ರಸ್ತಾವನೆಯನ್ನು ಮುಂದಿಟ್ಟಿದ್ದಾರೆ.
4
+ ಆರ್ಥಿಕವಾಗಿ ಸುಸ್ಥಿತಿಯಲ್ಲಿರುವ 70 ಕ್ಕೂ ಹೆಚ್ಚು ನಿಗಮಗಳಿಗೆ ಏಕಕಾಲಕ್ಕೆ ತಲಾ 30 ತಿಂಗಳ ಅವಧಿಯಂತೆ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರನ್ನು ನೇಮಿಸಲು ಚಿಂತನೆ ನಡೆದಿದೆ. ಇದನ್ನು ಮೂರು ಭಾಗಗಳಾಗಿ ವಿಂಗಡಿಸಿ 24 ತಿಂಗಳುಗಳಿಗೆ ಸೀಮಿತಗೊಳಿಸಿದರೆ ಇನ್ನಷ್ಟು ಮಂದಿಗೆ ಅಧಿಕಾರ ಹಂಚಿಕೆ ಮಾಡಬಹುದು. ಆಗ ಎಲ್ಲರಿಗೂ ಆದ್ಯತೆ ನೀಡಲು ಸಾಧ್ಯವಾಗಲಿದೆ ಎಂಬ ವಾದಗಳು ಕೇಳಿಬಂದಿದೆ.
5
+ ಸೈಬರ್ ಕ್ರೈಂ ಪ್ರಕರಣಗಳ ಕಾಲಮಿತಿ ತನಿಖೆಗೆ ಕಟ್ಟುನಿಟ್ಟಿನ ಕ್ರಮ : ದಯಾನಂದ
6
+ ಸಚಿವ ಸಂಪುಟದಲ್ಲಿ ಅವಕಾಶ ಸಿಗದೆ ಅಸಮಾಧಾನಗೊಂಡಿರುವ ಕಾಂಗ್ರೆಸ್‍ನ ಶಾಸಕರನ್ನು ಓಲೈಸಲು ನಿಗಮಮಂಡಳಿಗಳಲ್ಲಿ ಅವಕಾಶ ಕಲ್ಪಿಸುವ ಸಾಧ್ಯತೆ ಇದೆ. ಆದರೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿಗಮಮಂಡಳಿಗಳಲ್ಲಿ ಕಾರ್ಯಕರ್ತರಿಗೆ, ಮುಖಂಡರಿಗೆ ಹೆಚ್ಚಿನ ಅವಕಾಶ ನೀಡಬೇಕು. ಅಕಾರ ಅವಕಾಶ ವಂಚಿತ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ನಿಗಮ ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಪ್ರತಿಪಾದಿಸುತ್ತಿದ್ದಾರೆ.
7
+ ಶಾಸಕರಿಗೆ ಆದ್ಯತೆ ನೀಡುತ್ತಾ ಹೋದರೆ ಕಾಂಗ್ರೆಸ್‍ನ ಮುಖಂಡರು, ಕಾರ್ಯಕರ್ತರು ಅಸಮಾಧಾನಗೊಳ್ಳುತ್ತಾರೆ. ಲೋಕಸಭೆ, ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇದು ಅಡ್ಡಪರಿಣಾಮ ಬೀರಲಿದೆ. ಹೀಗಾಗಿ ಪಕ್ಷದ ಕಾರ್ಯಕರ್ತರಿಗೆ, ಮುಖಂಡರಿಗೆ ಒತ್ತು ನೀಡಬೇಕು ಎಂಬುದು ಡಿ.ಕೆ.ಶಿವಕುಮಾರ್ ಅವರ ಆಗ್ರಹವಾಗಿದೆ.
8
+ ಆದರೆ ಇದರ ಹೊರತಾಗಿಯೂ ಮುಖ್ಯಮಂತ್ರಿಯವರು 30 ಮಂದಿ ಶಾಸಕರ ಪಟ್ಟಿಯನ್ನು ಹೈಕಮಾಂಡ್ ಮುಂದೆ ಮಂಡಿಸಿದ್ದು, ಅಧ್ಯಕ್ಷ ಸ್ಥಾನ ನೀಡಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಡಿ.ಕೆ.ಶಿವಕುಮಾರ್ ಅವರ ಜೊತೆ ಚರ್ಚಿಸಿ ಅಭಿಪ್ರಾಯ ತಿಳಿಸುವುದಾಗಿ ಹೈಕಮಾಂಡ್ ಹೇಳಿದೆ ಎಂದು ಮೂಲಗಳು ತಿಳಿಸಿವೆ.
9
+ ಶತಕ ಸಿಡಿಸಿ ವಿಶಿಷ್ಟ ದಾಖಲೆ ಬರೆದ ಡೇವಿಡ್ ಮಲಾನ್
10
+ ಈ ಹಿಂದೆ ವಿಧಾನಸಭೆಯಿಂದ ವಿಧಾನಪರಿಷತ್‍ಗೆ ಸದಸ್ಯರ ಆಯ್ಕೆ ವೇಳ���ಯಲ್ಲೂ ರಾಜ್ಯ ಕಾಂಗ್ರೆಸಿಗರನ್ನು ಕಡೆಗಣಿಸಲಾಗಿದೆ ಎಂಬ ಆಕ್ಷೇಪಗಳಿದ್ದವು. ಕೆಲವು ಸಚಿವರ ವಿರೋಧವನ್ನೂ ಲೆಕ್ಕಿಸದೆ ಮೂರು ಸದಸ್ಯರನ್ನು ವಿಧಾನಪರಿಷತ್‍ಗೆ ಚುನಾಯಿಸಲಾಗಿತ್ತು. ಈಗ ನಿಗಮಮಂಡಳಿ ನೇಮಕಾತಿ ವಿಷಯದಲ್ಲೂ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರ ಅಭಿಪ್ರಾಯಗಳಿಗೆ ಮನ್ನಣೆ ನೀಡಲಿದೆಯೇ, ಇಲ್ಲವೇ ಎಂಬುದು ಕುತೂಹಲ ಕೆರಳಿಸಿದೆ.