CoolCoder44 commited on
Commit
8930078
·
verified ·
1 Parent(s): 2f2427f

6c705396c493d38677dba96ba08bc1b0103c27187eb885f6e449234e8f1c4785

Browse files
Files changed (50) hide show
  1. eesanje/url_46_42_3.txt +6 -0
  2. eesanje/url_46_42_4.txt +9 -0
  3. eesanje/url_46_42_5.txt +12 -0
  4. eesanje/url_46_42_6.txt +5 -0
  5. eesanje/url_46_42_7.txt +4 -0
  6. eesanje/url_46_42_8.txt +8 -0
  7. eesanje/url_46_42_9.txt +5 -0
  8. eesanje/url_46_43_1.txt +5 -0
  9. eesanje/url_46_43_10.txt +13 -0
  10. eesanje/url_46_43_11.txt +8 -0
  11. eesanje/url_46_43_12.txt +7 -0
  12. eesanje/url_46_43_2.txt +5 -0
  13. eesanje/url_46_43_3.txt +12 -0
  14. eesanje/url_46_43_4.txt +7 -0
  15. eesanje/url_46_43_5.txt +5 -0
  16. eesanje/url_46_43_6.txt +5 -0
  17. eesanje/url_46_43_7.txt +5 -0
  18. eesanje/url_46_43_8.txt +5 -0
  19. eesanje/url_46_43_9.txt +7 -0
  20. eesanje/url_46_44_1.txt +7 -0
  21. eesanje/url_46_44_10.txt +8 -0
  22. eesanje/url_46_44_11.txt +10 -0
  23. eesanje/url_46_44_12.txt +7 -0
  24. eesanje/url_46_44_2.txt +13 -0
  25. eesanje/url_46_44_3.txt +14 -0
  26. eesanje/url_46_44_4.txt +14 -0
  27. eesanje/url_46_44_5.txt +9 -0
  28. eesanje/url_46_44_6.txt +10 -0
  29. eesanje/url_46_44_7.txt +8 -0
  30. eesanje/url_46_44_8.txt +7 -0
  31. eesanje/url_46_44_9.txt +10 -0
  32. eesanje/url_46_45_1.txt +7 -0
  33. eesanje/url_46_45_10.txt +9 -0
  34. eesanje/url_46_45_11.txt +6 -0
  35. eesanje/url_46_45_12.txt +6 -0
  36. eesanje/url_46_45_2.txt +11 -0
  37. eesanje/url_46_45_3.txt +5 -0
  38. eesanje/url_46_45_4.txt +8 -0
  39. eesanje/url_46_45_5.txt +6 -0
  40. eesanje/url_46_45_6.txt +10 -0
  41. eesanje/url_46_45_7.txt +12 -0
  42. eesanje/url_46_45_8.txt +13 -0
  43. eesanje/url_46_45_9.txt +3 -0
  44. eesanje/url_46_46_1.txt +9 -0
  45. eesanje/url_46_46_10.txt +9 -0
  46. eesanje/url_46_46_11.txt +13 -0
  47. eesanje/url_46_46_12.txt +10 -0
  48. eesanje/url_46_46_2.txt +11 -0
  49. eesanje/url_46_46_3.txt +7 -0
  50. eesanje/url_46_46_4.txt +9 -0
eesanje/url_46_42_3.txt ADDED
@@ -0,0 +1,6 @@
 
 
 
 
 
 
 
1
+ ರಾಜ್ಯದ ಮುಖ್ಯಮಂತ್ರಿಗಳ ಸಾಮಾಜಿಕ ಜಾಲತಾಣ ಕಾಂಗ್ರೆಸ್ ಪಕ್ಷದ ಮುಖವಾಣಿಯೇ..? : ಸಿ.ಟಿ.ರವಿ ಪ್ರಶ್ನೆ
2
+ ಬೆಂಗಳೂರು,ಆ.18-ಸಿಎಂ ಕರ್ನಾಟಕ ಎಂಬ ಸಾಮಾಜಿಕ ಜಾಲತಾಣದ ಖಾತೆಯನ್ನು ವಾರ್ತಾ ಇಲಾಖೆಯ ಅಧಿಕಾರಿಗಳು ನಿರ್ವಹಿಸುತ್ತಿದ್ದಾರೊ ಅಥವಾ ಕೆಳಮಟ್ಟದ ಕಾಂಗ್ರೆಸ್ ಕಾರ್ಯಕರ್ತರೊ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.
3
+ ಈ ಕುರಿತು ಎಕ್ಸ್ ನಲ್ಲಿ ಸರ್ಕಾರಕ್ಕೆ ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿರುವ ಅವರು, ಪ್ರಧಾನಿ ನರೇಂದ್ರಮೋದಿ ಅವರನ್ನು ನಿಂದಿಸಲು ಹಾಗೂ ಘನತೆವೆತ್ತ ರಾಜ್ಯಪಾಲರನ್ನು ಟೀಕಿಸಲು ಈ ಖಾತೆಯನ್ನು ಬಳಸುತ್ತಿದ್ದಾರೆ. ಸಾಲದ್ದಕ್ಕೆ ಸಿಎಂ ಆಫ್ ಕರ್ನಾಟಕ ಎಂಬ ಖಾತೆಯನ್ನು ಸಿಎಂ ಸಿದ್ದರಾಮಯ್ಯ ಅವರ ವಂಧಿಮಾಗದರು ಕಾಂಗ್ರೆಸ್ ಮುಖವಾಣಿಯನ್ನಾಗಿ ಪರಿವರ್ತಿಸಿಕೊಂಡಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
4
+ "@" ಎಂಬ ಸಾಮಾಜಿಕ ಜಾಲತಾಣದ ಖಾತೆ ಸಂವಿಧಾನತ್ಮಕವಾದುದು, ಮುಖ್ಯಮಂತ್ರಿಯಾದವರ ದೈನಂದಿನ ಸರಕಾರದ ಕಾರ್ಯ ಚಟುವಟಿಕೆಗಳು ಜನಸಾಮಾನ್ಯರಿಗೆ ನೇರವಾಗಿ ತಲುಪಬೇಕು ಎಂಬ ನಿಟ್ಟಿನಲ್ಲಿ ವಾರ್ತಾ ಇಲಾಖೆ ಸೃಷ್ಟಿಸಿದ ಖಾತೆ.ಆದರೆ ಈಗ ಏನಾಗುತ್ತಿದೆ ನೋಡಿ!!ಪ್ರಧಾನಿ@narendramodiಯವರನ್ನು ನಿಂದಿಸಲು ಹಾಗೂ ಘನತೆವೆತ್ತ…://./jWrkj3jr5o
5
+ ಸಿಎಂ ಕರ್ನಾಟಕ ಎಂಬ ಸಾಮಾಜಿಕ ಜಾಲತಾಣವು ಸಂವಿಧಾನತಕವಾದುದು, ಮುಖ್ಯಮಂತ್ರಿಯಾದವರ ದೈನಂದಿನ ಸರಕಾರದ ಕಾರ್ಯ ಚಟುವಟಿಕೆಗಳು ಜನಸಾಮಾನ್ಯರಿಗೆ ನೇರವಾಗಿ ತಲುಪಬೇಕು ಎಂಬ ನಿಟ್ಟಿನಲ್ಲಿ ವಾರ್ತಾ ಇಲಾಖೆ ಸೃಷ್ಟಿಸಿದ ಖಾತೆ.
6
+ ಆದರೆ ಈಗ ಏನಾಗುತ್ತಿದೆ ನೋಡಿ!! ಉತ್ತರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಎಂದು ಒತ್ತಾಯಿಸಿರುವ ರವಿ, ಸರಕಾರದ ಮುಖ್ಯ ಕಾರ್ಯದರ್ಶಿಗಳು ಇದನ್ನು ಗಮನಿಸಬೇಕು ಎಂದು ಮನವಿ ಮಾಡಿದ್ದಾರೆ.
eesanje/url_46_42_4.txt ADDED
@@ -0,0 +1,9 @@
 
 
 
 
 
 
 
 
 
 
1
+ ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಮುನ್ಸೂಚನೆ
2
+ ಬೆಂಗಳೂರು, ಆ.18-ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದ ರಾಜ್ಯದಲ್ಲಿ ಮುಂಗಾರು ಮಳೆ ಚೇತರಿಕೆಯಾಗಿದೆ. ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ.
3
+ ಭಾರತೀಯ ಹವಾಮಾನ ಇಲಾಖೆಯು ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಆರೆಂಜ್‌ ಅಲರ್ಟ್‌, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.
4
+ ಕಳೆದ ಎರಡು ವಾರದಲ್ಲಿ ರಾಜ್ಯದಲ್ಲಿ ಮಳೆ ಪ್ರಮಾಣ ಇಳಿಕೆಯಾಗಿದೆ. ಕೆಲವೆಡೆ ಚದುರಿದಂತೆ ಸಾಧಾರಣ ಮಳೆಯಾಗಿದ್ದರೆ, ಮತ್ತೆ ಕೆಲವೆಡೆ ಭಾರಿ ಮಳೆಯಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಒಳ್ಳೆ ಮಳೆಯಾಗಿದೆ.
5
+ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಮೇಲೈ ಗಾಳಿಯೊಂದಿಗೆ ಆ.19ರವರೆಗೂ ಮಳೆಯಾಗಲಿದೆ. ಕೆಲವೆಡೆ ವ್ಯಾಪಕವಾಗಿ ಸಾಧಾರಣ ಮಳೆಯಾದರೆ, ಮತ್ತೆ ಕೆಲವೆಡೆ ಮಳೆ ಕಡಿಮೆಯಾಗಲಿದೆ.
6
+ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಆ.21ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಈ ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ.
7
+ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಕೆಲವೆಡೆ ವ್ಯಾಪಕ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ.ಜುಲೈ ತಿಂಗಳಲ್ಲಿ ಕರಾವಳಿ ಹಾಗೂ ಮಲೆನಾಡಿನಲ್ಲಿ ಅಬ್ಬರಿಸಿದ್ದ ಮಳೆ ಆಗಸ್ಟ್‌ನಲ್ಲಿ ಕಡಿಮೆಯಾಗಿದೆ. ಮಲೆನಾಡಿನಲ್ಲಿ ಶೇ.34ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.
8
+ ಕರಾವಳಿಯಲ್ಲಿ ಶೇ.11ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ವಾಡಿಕೆ ಪ್ರಮಾಣದ ಮಳೆಯಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ ಶೇ.100 ಕ್ಕಿಂತ ಹೆಚ್ಚು ಮಳೆಯಾಗಿದೆ. ಆದರೂ ಕೆಲವೆಡೆ ಮಳೆ ಕೊರತೆ ಕಂಡುಬರುತ್ತಿದೆ.
9
+ ಜುಲೈನಲ್ಲಿ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ವಾಡಿಕೆಗಿಂತ ಶೇ.51ರಷ್ಟು ಹೆಚ್ಚು ಮಳೆಯಾಗಿತ್ತು.ಒಳನಾಡಿನಲ್ಲಿ ಕಡಿಮೆ ಮಳೆಯಾಗಿದ್ದರೆ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಿ ಅತಿವೃಷ್ಟಿ ಉಂಟಾಗಿತ್ತು.
eesanje/url_46_42_5.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ರಾಜ್ಯಪಾಲರ ತೀರ್ಮಾನ ಪ್ರಶ್ನಿಸಿ ಮೇಲ್ಮನವಿ, ಕಾನೂನು ಹೋರಾಟಕ್ಕಿಳಿದ ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು,ಆ.18-ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧರ ರಾಜ್ಯಪಾಲರು ಅಭಿಯೋಜನೆ(ಪ್ರಾಸಿಕ್ಯೂಷನ್‌) ಅನುಮತಿ ನೀಡಿರುವುದರಿಂದ ಕಾನೂನು ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ. ರಾಜ್ಯಪಾಲರ ಥಾವರ್‌ಚಂದ್‌ ಗೆಹ್ಲೋಟ್‌ ಅವರ ತೀರ್ಮಾನವನ್ನು ಪ್ರಶ್ನಿಸಿ ಸರ್ಕಾರ ಸೋಮವಾರ ಹೈಕೋರ್ಟ್‌ನಲ್ಲಿ ಮೇಲನವಿ ಅರ್ಜಿ ಸಲ್ಲಿಸಲಿದೆ. ದೂರುದಾರರು ಕೂಡ ಕೆವಿಯೆಟ್‌ ಸಲ್ಲಿಸಿದ್ದು, ವಾದಕ್ಕೆ ನುರಿತ ವಕೀಲರನ್ನೇ ನೇಮಿಸಿಕೊಳ್ಳಲು ಮುಂದಾಗಿದ್ದಾರೆ.
3
+ ಹೈಕೋರ್ಟ್‌ನಲ್ಲಿ ಸೋಮವಾರ ಸಿಎಂ ಸಿದ್ದರಾಮಯ್ಯ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲರಾದ ಕಪೀಲ್‌ ಸಿಬಾಲ್‌ ಹಾಗೂ ಅಭಿಷೇಕ್‌ ಮನುಸಿಂಗ್ವಿ ವಾದ ಮಂಡಿಸಲಿದ್ದಾರೆ. ಮೇಲನವಿ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಬೇಕೇ? ಇಲ್ಲವೇ ಹೈಕೋರ್ಟ್‌ನಲ್ಲಿ ಸಲ್ಲಿಸಬೇಕೆ ಎಂಬ ಗೊಂದಲ ಮುಂದುವರೆದಿದೆ.ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಮತ್ತು ವಕೀಲರ ತಂಡ ಸಿದ್ದತೆಯನ್ನು ನಡೆಸಿದ್ದು, ಸೋಮವಾರ ಏಕಸದಸ್ಯ ಪೀಠಕ್ಕೆ ಮೇಲನವಿ ಸಲ್ಲಿಸಿ ರಾಜ್ಯಪಾಲರ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಲಿದ್ದಾರೆ.
4
+ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದ ಪ್ರದೀಪ್‌ ಎಂಬುವರು ತಮ ವಾದವನ್ನು ಆಲಿಸದೆ ಯಾವುದೇ ರೀತಿಯ ಆದೇಶ ನೀಡಬಾರದೆಂದು ಹೈಕೋರ್ಟ್‌ನಲ್ಲಿ ಈಗಾಗಲೇ ಕೆವಿಯೆಟ್‌ ಸಲ್ಲಿಸಿದ್ದಾರೆ. ಹೀಗಾಗಿ ನ್ಯಾಯಾಲಯ ಎರಡೂ ಕಡೆ ವಾದ-ವಿವಾದವನ್ನು ಆಲಿಸದೆ ಆದೇಶವನ್ನು ನೀಡಲು ಸಾಧ್ಯವಿಲ್ಲ.
5
+ ಈ ಬೆಳವಣಿಗೆಗಳ ನಡುವೆಯೇ ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ವಿಚಾರಣೆ ನಡೆಸಲು ಅನುಮತಿ ನೀಡಬೇಕೆಂದು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ಮಂಗಳವಾರಕ್ಕೆ ತೀರ್ಪು ಕಾಯ್ದಿರಿಸಿದೆ.
6
+ ಇನ್ನೊಂದೆಡೆ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಕೂಡ ತನಿಖೆಗೆ ಕೋರಿ ಸಲ್ಲಿಸಿರುವ ಅರ್ಜಿ ಬುಧವಾರ ನ್ಯಾಯಾಲಯ ಕೈಗೆತ್ತಿಕೊಳ್ಳಲಿದೆ. ಈ ಎರಡೂ ಅರ್ಜಿಯನ್ನು ಒಟ್ಟುಗೂಡಿಸಿ ವಿಚಾರಣೆ ನಡೆಸಬೇಕೆಂದು ಸರ್ಕಾರ ನ್ಯಾಯಾಧೀಶರಿಗೆ ಮನವಿ ಮಾಡುವ ಸಂಭವವಿದೆ ಎಂದು ಕಾನೂನು ತಜ್ಞರು ಹೇಳುತ್ತಾರೆ.
7
+ ಸಿಎಂ ವಿರುದ್ಧ ಅರ್ಜಿ ಸಲ್ಲಿಕೆ ಮಾಡಿರುವ ದೂರುದಾರರು ರಾಜ್ಯ ಸರ್ಕಾರದ ಅಡಿ ಬಾರದ ಯಾವುದೇ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲು ಮನವಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದರಿಂದ ವಿರೋಧ ಪಕ್ಷಗಳು ಸಿದ್ದರಾಮಯ್ಯ ರಾಜೀನಾ��ೆಗೆ ಆಗ್ರಹಿಸಿದ್ದಾರೆ.
8
+ ಆದರೆ ಸಿಎಂ ಪರ ನಿಂತಿರುವ ಸಚಿವರು ಸಿಎಂ ರಾಜೀನಾಮೆ ನೀಡುವ ಅಗತ್ಯವಿಲ್ಲ, ನಾವು ಕೂಡ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಖಾಸಗಿ ದೂರುಗಳಿಗೆ ಈಗ ಪ್ರಾಸಿಕ್ಯೂಷಗೆ ಅನುಮತಿ ನೀಡಿರುವ ಬಲ ಸಿಕ್ಕಿದೆ. ಆದ್ದರಿಂದ ಈಗ ಪೊಲೀಸರು ತನಿಖೆಯನ್ನು ಕೈಗೊಳ್ಳಬಹುದು. ಆದರೆ ಸಿಬಿಐ ಅಥವ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ನ್ಯಾಯಾಲಯದ ಮೊರೆ ಹೋಗಿದೆ.
9
+ ಮುಡಾ ಹಗರಣ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರಿಗೆ ಕಾನೂನು ಸಂಕಷ್ಟಗಳನ್ನು ಎದುರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
10
+ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ 17ಎ ಹಾಗೂ ಭಾರತೀಯ ಸುರಕ್ಷಾ ಸಂಹಿತೆಯ 218ರಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮೋದಿಸಿದ್ದಾರೆ. ಪೂರ್ವಾನುಮತಿ ಹಿನ್ನೆಲೆ ಸಿಎಂ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಬಹುದು. ಇದಕ್ಕೂ ಮುನ್ನ ಪೂರ್ವಾನುಮತಿ ಪತ್ರ ಹಾಗೂ ಆರೋಪಕ್ಕೆ ಪುಷ್ಠಿ ನೀಡುವ ದಾಖಲಾತಿಗಳನ್ನು ನ್ಯಾಯಾಲಯಕ್ಕೆ ಒದಗಿಸಬೇಕು.
11
+ ವಿಚಾರಣೆ ನಡೆಸುವ ನ್ಯಾಯಾಲಯವು ತನಿಖೆಗೆ ಆದೇಶಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಅಲ್ಲದೇ, ನ್ಯಾಯಾಲಯವು ನೇರವಾಗಿ ಕಾಗ್ನಿಝನ್‌್ಸ ದೂರು ದಾಖಲಿಸಿಕೊಂಡು ಸಿಎಂಗೆ ಸಮನ್‌್ಸ ಜಾರಿ ಮಾಡಬಹುದಾಗಿದೆ. ಸಮನ್‌್ಸ ಜಾರಿಯಾದರೆ ನ್ಯಾಯಾಲಯದ ಮುಂದೆ ಸಿದ್ದರಾಮಯ್ಯ ಅವರು ಹಾಜರಾಗುವ ಅನಿವಾರ್ಯತೆ ಎದುರಾಗಲಿದೆ.
12
+ ತನಿಖಾ ಸಂಸ್ಥೆಗೆ ತನಿಖೆ ನಡೆಸಲು ನ್ಯಾಯಾಲಯವು ಶಿಫಾರಸು ಮಾಡಲೂಬಹುದಾಗಿದೆ. ಒಂದು ವೇಳೆ ಶಿಫಾರಸು ಮಾಡಿದರೆ ಲೋಕಾಯುಕ್ತದಲ್ಲಿ ಸಿಎಂ ವಿರುದ್ಧ ಎಫ್‌ಐಆರ್‌ ದಾಖಲಿಸಬಹುದು. ಲೋಕಾಯುಕ್ತ ಅಧಿಕಾರಿಗಳು ಪ್ರಕರಣ ದಾಖಲಿಸಿ, ತನಿಖೆ ನಡೆಸಲು ಬಂಧಿಸಬಹುದಾಗಿದೆ.ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾದರೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಬೇಕಿದೆ.
eesanje/url_46_42_6.txt ADDED
@@ -0,0 +1,5 @@
 
 
 
 
 
 
1
+ ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಹೈಕಮಾಂಡ್
2
+ ಬೆಂಗಳೂರು,ಆ.17-ಸಂಕಷ್ಟ ಸಮಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುವ ಮೂಲಕ ವಿರೋಧ ಪಕ್ಷಗಳ ಮುಖಂಡರಿಗೆ ಮಹತ್ವದ ಸಂದೇಶ ನೀಡಿದೆ.
3
+ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಮುಡಾ ಪ್ರಕರಣದಲ್ಲಿ ತನಿಖೆಗೆ ಅನುಮತಿ ನೀಡಿರುವುದರಿಂದ ಕಾಂಗ್ರೆಸ್ನಲ್ಲಿ ತಳಮಳ ಶುರುವಾಗಿದೆ. ಈ ನಡುವೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಹಾಗೂ ರಣದೀಪ್ ಸುರ್ಜೆವಾಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.
4
+ ಯಾವುದೇ ಕಾರಣಕ್ಕೂ ಎದೆಗುಂದಬೇಡಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ದೈರ್ಯ ಹೇಳಿದ್ದಾರೆ. ಬಿಜೆಪಿಯ ಷಡ್ಯಂತ್ರಗಳನ್ನು ನಾವು ರಾಜಕೀಯವಾಗಿ ಎದುರಿಸಲು ಸಿದ್ದತೆ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದ್ದಾರೆ ಎನ್ನಲಾಗಿದೆ.
5
+ ಬೆಂಗಳೂರಿಗೆ ಬಂದಿರುವ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿಯೊಂದಿಗೆ ಸಭೆ ನಡೆಸಿ ಮುಂದಿನ ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.
eesanje/url_46_42_7.txt ADDED
@@ -0,0 +1,4 @@
 
 
 
 
 
1
+ ಸಚಿವರ ನಿಯೋಗದ ಭೇಟಿಗೆ ರಾಜ್ಯಪಾಲರ ನಿರಾಕರಣೆ
2
+ ಬೆಂಗಳೂರು,ಆ.17– ಸಚಿವ ಸಂಪುಟದ ಸದಸ್ಯರ ನಿಯೋಗವನ್ನು ಭೇಟಿ ಮಾಡಲು ರಾಜ್ಯಪಾಲರು ಅನುಮತಿ ನಿರಾಕರಿಸಿರುವ ಬೆಳವಣಿಗೆ ನಡೆದಿದೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟದ ಸದಸ್ಯರ ನಿಯೋಗ ಭೇಟಿ ಮಾಡಿ ಮುಡಾ ಪ್ರಕರಣದಲ್ಲಿ ಅಭಿಯೋಜನೆಗೆ ನೀಡಿರುವ ಪೂರ್ವಾನುಮತಿಯ ಬಗ್ಗೆ ಸಮಾಲೋಚನೆ ನಡೆಸಲು ಮುಂದಾಗಿತ್ತು.
3
+ ಆದರೆ ನಿಯೋಗಕ್ಕೆ ಸಮಯ ನೀಡಲು ರಾಜ್ಯಪಾಲರು ನಿರಾಕರಿಸಿದರು. ಹೀಗಾಗಿ ಡಿ.ಕೆ.ಶಿವಕುಮಾರ್ ಅವರು ಮಧ್ಯಾಹ್ನ ತುರ್ತು ಪತ್ರಿಕಾಗೋಷ್ಠಿ ನಡೆಸಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
4
+ ಪೂರ್ವಾನುಮತಿಯ ಸೂಚನೆಗಳು ಬಹಿರಂಗಗೊಳ್ಳುತ್ತಿದ್ದಂತೆ ಹೊರ ಜಿಲ್ಲೆಗಳಲ್ಲಿ ಪ್ರವಾಸದಲ್ಲಿದ್ದ ಸಚಿವರನ್ನು ಬೆಂಗಳೂರಿಗೆ ಆಗಮಿಸುವಂತೆ ತುರ್ತು ಸಂದೇಶ ರವಾನೆ ಮಾಡಲಾಗಿದೆ. ಹಬ್ಬದ ಸಲುವಾಗಿ ಊರಿಗೆ ತೆರಳಿದ್ದ ಸಚಿವರು ತುರ್ತು ಕರೆಯ ಮೇರೆಗೆ ಎದ್ದುಬಿದ್ದು ಬೆಂಗಳೂರಿನತ್ತ ಧಾವಿಸಿಬಂದರು.
eesanje/url_46_42_8.txt ADDED
@@ -0,0 +1,8 @@
 
 
 
 
 
 
 
 
 
1
+ ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ, ಬಿಗಿ ಪೊಲೀಸ್ ಬಂದೋಬಸ್ತ್
2
+ ಬೆಂಗಳೂರು,ಆ.17– ಮುಡಾ ಪ್ರಕರಣದಲ್ಲಿ ತನಿಖೆಗೆ ರಾಜ್ಯಪಾಲರು ಪೂರ್ವಾನುಮತಿ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದಿದ್ದು, ರಾಜ್ಯಪಾಲರ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ. ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಲವು ಭಾಗಗಳಲ್ಲಿ ದಿಢೀರ್ ಪ್ರತಿಭಟನೆಗಳು ನಡೆದಿವೆ. ಬೆಂಗಳೂರಿನ ರಾಜಭವನದ ಎದುರು ಕಾರ್ಯಕರ್ತರು ಆಗಮಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಅವರನ್ನು ನಿಯಂತ್ರಿಸಲು ಹರಸಾಹಸ ನಡೆಸಬೇಕಾಯಿತು.
3
+ ಪ್ರತಿಭಟನಾಕಾರರು ರಾಜ್ಯಪಾಲರು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವ ಜೊತೆಗೆ ಬಿಜೆಪಿ ಜೆಡಿಎಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಏಕಾಏಕಿ ಪ್ರತಿಭಟನೆ ನಡೆಸಿದ್ದರಿಂದಾಗಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿ ಕಾರ್ಯಕರ್ತರು ರಾಜಭವನದ ಬಳಿ ಬರುವುದನ್ನು ತಡೆದರು.
4
+ ಮೈಸೂರಿನಲ್ಲಿ ಭಾರೀ ಪ್ರತಿಭಟನೆ:ಮೈಸೂರಿನ ನ್ಯಾಯಾಲಯದ ಬಳಿ ಅಲ್ಪಸಂಖ್ಯಾತರ ಜಾಗೃತಿ ವೇದಿಕೆ ಅಧ್ಯಕ್ಷ ಶಿವರಾಂ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಕಾಂಗ್ರೆಸ್ ನವರು ಪ್ರತಿಭಟನೆ ನಡೆಸಿದರು. ಮುಡಾ ಹಗರಣ ಕುರಿತು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ವಿರೋಧಿಸಿ ಭಾರೀ ಪ್ರತಿಭಟನೆ ಹಮಿಕೊಳ್ಳ ಲಾಗಿತ್ತು. ನ್ಯಾಯಾಲಯದ ಮುಂದೆ ಟೈರ್ ಗಳಿಗೆ ಬೆಂಕಿ ಹಚ್ಚಿ, ಮಾನವ ಸರಪಳಿ ನಿರ್ಮಿಸಿ ರಾಜ್ಯಪಾಲರ ವಿರುಧ್ಧ ಘೋಷಣೆಗಳನ್ನು ಕೂಗಲಾಯಿತು.
5
+ ರಾಜ್ಯಪಾಲರು ಜೆಡಿಎಸ್,ಬಿಜೆಪಿ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಅವರನ್ನು ಕೂಡಲೇ ಬೇರೆ ರಾಜ್ಯಕ್ಕೆ ವರ್ಗಾಯಿಸಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.ನ್ಯಾಯಾಲಯ, ಮುಡಾ ಕಚೇರಿ, ಸಿಎಂ ಸಿದ್ದರಾಮಯ್ಯ ನಿವಾಸ, ಕೆ.ಆರ್.ವೃತ್ತ, ಚಾಮುಂಡಿ ಬೆಟ್ಟ ಸೇರೆದಂತೆ ಜನ ನಿಬಿಡ ಸ್ಥಳಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
6
+ ರಾಜ್ಯಪಾಲರ ಪೂರ್ವಾನುಮತಿ ಕುರಿತು ಮಾತನಾಡಿರುವ ವಿಧಾನಪರಿಷತ್ ಸದಸ್ಯ ಡಾ.ತಿಮಯ್ಯ, ಕೇಂದ್ರದ ಬಿಜೆಪಿ ಸರ್ಕಾರದ ಒತ್ತಡಕ್ಕೆ ಮಣಿದು ರಾಜ್ಯಪಾಲರು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ. ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಪಾತ್ರ ಎಳ್ಳಷ್ಟೂ ಇಲ್ಲ. ಈ ಪ್ರಕರಣದಿಂದ ನಿರ್ದೋಷಿಗಳಾಗಿ ಹೊರ ಬರುವ ವಿಶ್ವಾಸ ಇದೆ. ಒಂದು ವೇಳೆ ಸಿಎಂ ಬಂಧನವೇನಾದರೂ ಆದರೆ, ರಾಜ್ಯದಲ್ಲಿ ರಕ್ತ ಕ್ರಾಂತಿ ನಡೆದುಹೋಗುತ್ತದೆ ಎಂದು ಎಚ್ಚರಿಕೆ ನೀಡಿದರು. ಈ ಪ್ರಕರಣದಲ್ಲಿ ಸಿಎಂ ಸಂಪೂರ್ಣ ನಿರ್ದೋಷಿಗಳು. ನಾವು ಕಾನೂನಾತಕ ಹೋರಾಟ ಮಾಡುತ್ತೇವೆ ಎಂದು ಅವರು ತಿಳಿಸಿದ���ು.
7
+ ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ :ಬೆಂಗಳೂರು,ಆ.17- ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರಿಂದ ಅನುಮತಿ ದೊರೆತಿರುವ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಸೇರಿದಂತೆ ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ರಾಜಭವನ, ವಿಧಾನಸೌಧ, ವಿಕಾಸಸೌಧ, ಸಿಎಂ ಅವರ ಗೃಹಕಚೇರಿ ಕೃಷ್ಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಸಿಎಆರ್ ಹಾಗೂ ಕೆಎಸ್ಆರ್ಪಿ ತುಕಡಿಗಳನ್ನು ಸ್ಥಳೀಯ ಪೊಲೀಸರ ಜೊತೆ ನಿಯೋಜಿಸಲಾಗಿದೆ.
8
+ ಮೈಸೂರು ನಗರದ ಮುಡಾ ಕಚೇರಿ, ಸಿಎಂ ಅವರ ಮನೆ, ಕಚೇರಿ, ಬಸ್ನಿಲ್ದಾಣ ಹಾಗೂ ಅಲ್ಲಿನ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಮಾಡಲಾಗಿದೆ. ಅದೇ ರೀತಿ ಮಂಡ್ಯ, ರಾಮನಗರ, ಶಿವಮೊಗ್ಗ, ಹಾಸನ, ಬೆಳಗಾವಿ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.ಸ್ಥಳೀಯ ಪೊಲೀಸರ ಜೊತೆಗೆ ಡಿಎಆರ್ ಹಾಗೂ ಕೆಎಸ್ಆರ್ಪಿ ತುಕಡಿಗಳನ್ನು ಬಂದೊಬಸ್ತ್ಗಾಗಿ ನಿಯೋಜನೆ ಮಾಡಲಾಗಿದೆ.
eesanje/url_46_42_9.txt ADDED
@@ -0,0 +1,5 @@
 
 
 
 
 
 
1
+ ರಾಜಭವನವನ್ನು ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ : ಹರಿಪ್ರಸಾದ್
2
+ ಬೆಂಗಳೂರು,ಆ.17-ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಮೇಲೆ ರಾಜಕೀಯ ದ್ವೇಷದಿಂದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವ ಮೂಲಕ ರಾಜಭವನವನ್ನು ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಆರೋಪಿಸಿದ್ದಾರೆ.
3
+ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಜನರಿಂದ ಆಯ್ಕೆಯಾದ ಸರ್ಕಾರಗಳನ್ನು ಹಾಗೂ ಮುಖ್ಯಮಂತ್ರಿಗಳನ್ನು ಅಸ್ಥಿರಗೊಳಿಸುವ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ದ್ವೇಷ ರಾಜಕಾರಣಕ್ಕೆ ಜನರೇ ಕಳೆದ ಲೋಕಸಭೆಯಲ್ಲೇ ಉತ್ತರ ಕೊಟ್ಟಾಗಿದೆ. ಆದರೂ ಕೂಡ ಬಿಜೆಪಿ ಮತ್ತು ಮೋದಿ ಸರ್ಕಾರ ಬುದ್ಧಿ ಕಲಿಯುವ ಲಕ್ಷಣಗಳಿಲ್ಲ ಎಂದಿದ್ದಾರೆ.
4
+ ದಲಿತ-ಹಿಂದುಳಿದವರ ಹಾಗೂ ಬಡವರ ಪರವಾಗಿ ಕಾರ್ಯಕ್ರಮಗಳನ್ನು ನೀಡುವ ವಿಪಕ್ಷದ ಸರ್ಕಾರಗಳನ್ನು ಅಸ್ಥಿರಗೊಳಿಸುವ ಪ್ರಜಾಪ್ರಭುತ್ವ ವಿರೋಧಿ ನಡೆಯ ವಿರುದ್ಧ ಜನರು ತಕ್ಕ ಉತ್ತರ ನೀಡಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲಿನ ದ್ವೇಷದ ಪ್ರಕರಣಕ್ಕೆ ಕಾನೂನು ವ್ಯವಸ್ಥೆಯ ಮೂಲಕವೇ ಉತ್ತರ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
5
+ ಈ ಮೊದಲು ಬಿ.ಕೆ.ಹರಿಪ್ರಸಾದ್ ಅವರು ಸಿದ್ದರಾಮಯ್ಯ ವಿರುದ್ಧ ಬಹಿರಂಗ ವಾಗ್ದಾಳಿಗಳನ್ನು ನಡೆಸಿದ್ದರು. ಇತ್ತೀಚೆಗೆ ಇಬ್ಬರ ನಡುವೆ ಸಂಧಾನ ನಡೆದಿದ್ದು, ಹರಿಪ್ರಸಾದ್ ಮುಖ್ಯಮಂತ್ರಿಯವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಈಗ ಅದೇ ಹರಿಪ್ರಸಾದ್ ಅವರು ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಸೃಷ್ಟಿಸಿದೆ.
eesanje/url_46_43_1.txt ADDED
@@ -0,0 +1,5 @@
 
 
 
 
 
 
1
+ ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡುಕೊಳ್ಳುತ್ತಿದೆ : ಲಕ್ಷ್ಮಿ ಹೆಬ್ಬಾಳ್ಕರ್
2
+ ಬೆಳಗಾವಿ, ಆ.17– ಸಿಎಂ ಸಿದ್ದರಾಮಯ್ಯ ವಿರುದ್ಧ ಪಿತೂರಿ ಪ್ರೇರಿತ ಅಜೆಂಡಾ ರೂಪಿಸಿ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಕೊಡಿಸುವಲ್ಲಿ ಕೇಂದ್ರ ಸರ್ಕಾರ ರಾಜಭವನವನ್ನು ದುರುಪಯೋಗ ಪಡಿಸಿಕೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿಕಾರಿದರು.
3
+ ನಗರದ ತಮ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಪಿತೂರಿ ಭಾಗವಾಗಿ ಮಾಡಲಾದ ಕ್ರಮಗಳಿಗೆ ರಾಜೀನಾಮೆ ಕೊಡುವ ಪ್ರಮೇಯ ಸರಕಾರಕ್ಕೆ ಬರುವುದಿಲ್ಲ. ಅಂತಹ ಪಿತೂರಿ ರಾಜಕೀಯದ ವಿರುದ್ಧ ಹಾಗೂ ಕಾನೂನಾತಕವಾಗಿ ಮೆಟ್ಟಿ ನಿಲ್ಲುವ ಕ್ಷಮತೆ ಕಾಂಗ್ರೆಸ್ ಸರಕಾರ ಮತ್ತು ಪಕ್ಷಕ್ಕಿದೆ ಎಂದರು.
4
+ ಈಗಾಗಲೇ ನಿವೃತ್ತ ನ್ಯಾಯಾಧೀಶ ದೇಸಾಯಿ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ವರದಿ ಬರುವ ಮುಂಚೆ ರಾಜಭವನ ದುರುಪಯೋಗ ಮಾಡುತ್ತಿದ್ದಾರೆ. ಸಾಂವಿಧಾನಿಕ ಸ್ಥಾನದಲ್ಲಿರುವ ರಾಜ್ಯಪಾಲ ತನ್ನ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದು, ಇತರ ರಾಜ್ಯಗಳಲ್ಲಿ ಆಗಿರುವುದನ್ನು ಈಗಾಗಲೇ ಗಮನಿಸಬಹುದು.
5
+ ಬಿಜೆಪಿ ರಹಿತ ರಾಜ್ಯ ಸರಕಾರಗಳ ಮೇಲೆ ಇಡಿ, ಐಟಿ ಹಾಗೂ ರಾಜಭವನವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ಮುಖ್ಯಮಂತ್ರಿ ರಾಜೀನಾಮೆ ಕೊಡುವ ಪ್ರಮೇಯ, ಅವಶ್ಯಕತೆ ಬರುವುದಿಲ್ಲ ಎಂದರು.
eesanje/url_46_43_10.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ : ಸಿಎಂ ಸಿದ್ದರಾಮಯ್ಯ ಸಂಕಷ್ಟ : ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ರಾಜ್ಯಪಾಲರು
2
+ ಬೆಂಗಳೂರು,ಆ.17-ಮಹತ್ವದ ಬೆಳವಣಿಗೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಅಕ್ರಮ ನಿವೇಶನ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಶನ್‍ಗೆ ಅನುಮತಿ ನೀಡಿದ್ದಾರೆ.
3
+ ರಾಜ್ಯದ ಇತಿಹಾಸದಲ್ಲೇ ಹಾಲಿ ಮುಖ್ಯಮಂತ್ರಿ ವಿರುದ್ಧ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಶನ್‍ಗೆ ಸಮ್ಮತಿಸಿದ ಎರಡನೇ ಪ್ರಕರಣ ಇದಾಗಿದೆ.ಈ ಹಿಂದೆ ಅಕ್ರಮ ಡಿ ನೋಟಿಫಿಕೇಶನ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ 2011 ರಲ್ಲಿ ಅಂದಿನ ರಾಜ್ಯಪಾಲ ಹಂಸರಾಜ್ ಭಾರದ್ವಾಜ್‍ರವರು ಪ್ರಾಸಿಕ್ಯೂಶನ್‍ಗೆ ಅನುಮತಿ ನೀಡಿದ್ದರು.
4
+ ಸಿಎಂ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988 ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಮಿತಿ ಸೆಕ್ಷನ್ 218 ರಡಿ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿದ್ದಾರೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್ ಅವರು ಹೊರಡಿಸಿರುವ ನೋಟಿಸ್‍ನಲ್ಲಿ ತಿಳಿಸಿದ್ದಾರೆ.
5
+ ಇದೀಗ ರಾಜ್ಯಪಾಲ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರು ಸಿಎಂ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡಿರುವುದರಿಂದ ಸಿದ್ದರಾಮಯ್ಯಗೆ ಭಾರಿ ಕಾನೂನಿನ ಸಂಕಷ್ಟ ಎದುರಾಗಿದೆ.ಇದರ ಬೆನ್ನಲ್ಲೇ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಂದಿನ ಕಾನೂನು ಹೊರಾಟ ನಡೆಸುವ ಕುರಿತು ತಮ್ಮ ಸಂಪುಟದ ಸಹದ್ಯೋಗಿಗಳು ಹಾಗೂ ಕಾನೂನು ಸಲಹೆಗಾರ ಪೊನ್ನಣ್ಣ ಸೇರಿದಂತೆ ಮತ್ತಿತರರ ಜೊತೆ ಸಿದ್ದರಾಮಯ್ಯನವರು ಸಭೆ ನಡೆಸಿದ್ದಾರೆ.
6
+ ಇದರ ಬೆನ್ನಲ್ಲೇ ಸಂಜೆ 5 ಗಂಟೆಗೆ ವಿಶೇಷ ಸಚಿವ ಸಂಪುಟ ಸಭೆ ಕರೆದಿರುವುದು ಕೂಡ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ. ಇದೀಗ ಸರ್ಕಾರ ರಾಜಭವನದ ನಡುವೆ ಕಾನೂನಿನ ಸಂಘರ್ಷ ಏರ್ಪಟ್ಟಿದ್ದು, ರಾಜ್ಯಪಾಲರ ತೀರ್ಮಾನವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಸರ್ಕಾರ ಸಜ್ಜಾಗಿದೆ.
7
+ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‍ಗೆ ಅನುಮತಿ ವಿಚಾರವಾಗಿ ಮುಖ್ಯ ಕಾರ್ಯದರ್ಶಿ ಶಾಲಿನ್ ರಜನೀಶ್, ಎಸಿಎಸ್ ಅತೀಕ್‍ಗೆ ನೋಟಿಸ್ ನೀಡಲಾಗಿದೆ. ರಾಜಭವನದಿಂದ ನೋಟಿಸ್ ರವಾನೆಯಾಗಿದೆ. ಮುಡಾ ಪ್ರಕರಣದ ಮೂವರು ದೂರುದಾರರಾದ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್‍ಗೆ ನೋಟಿಸ್ ಜಾರಿ ಮಾಡಲಾಗಿದೆ. ಪ್ರದೀಪ್ ಈಗಾಗಲೇ ರಾಜಭವನದಲ್ಲಿ ನೋಟಿಸ್ ಸ್ವೀಕರಿಸಿದ್ದಾರೆ.
8
+ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್‍ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಎಫ್ ಐಆರ್ ದಾಖಲಾಗುವ ಸಾಧ್ಯತೆಯಿದೆ.ಹೀಗಾದರೆ ರಾಜಕೀಯ ಮತ್ತು ಕಾನೂನಾತ್ಮಕವಾಗಿ ಸರ್ಕಾರ ಇದನ್ನು ಒಂದು ಕಡೆಯಲ್ಲಿ ಎದುರಿಸಲಿದೆ. ಅದರ ಜೊತೆಗೆ ನೈತಿಕವಾಗಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಆಗ್ರಹ ಪ್ರತಿಪಕ್ಷಗಳಿಂದ ಹೆಚ್ಚಾಗುತ್ತದೆ. ಹೀಗಾಗಿ ಮುಂದಿನ ರಾಜಕೀಯ ಬೆಳವಣಿಗೆಗಳು ಸಾಕಷ್ಟು ಕುತೂಹಲಕ್ಕೆ ಕಾರಣವಾಗುತ್ತದೆ.
9
+ ಸಿದ್ದರಾಮಯ್ಯನವರು ಅ„ಕಾರ ದುರುಪಯೋಗಪಡಿಸಿಕೊಂಡು ಮುಡಾದಲ್ಲಿ ತಮ್ಮ ಪತ್ನಿ ಪಾರ್ವತಮ್ಮ ಹೆಸರಿನಲ್ಲಿ 14 ನಿವೇಶನಗಳನ್ನು ಪಡೆದಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರಾದ ಟಿ.ಜೆ.ಅಬ್ರಹಾಂ ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್ ಎಂಬುವವರು ರಾಜ್ಯಪಾಲರಿಗೆ ದಾಖಲೆಗಳ ಸಮೇತ ದೂರು ಸಲ್ಲಿಸಿದ್ದರು. ಈ ದೂರುಗಳನ್ನು ಸುದೀರ್ಘವಾಗಿ ಪರಿಶೀಲಿಸಿ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದ ರಾಜ್ಯಪಾಲರು ಪ್ರಾಸಿಕ್ಯೂಶನ್‍ಗೆ ಅನುಮತಿ ನೀಡಿದ್ದಾರೆ.
10
+ ಸಿಎಂ ವಿರುದ್ಧ ದೂರು ನೀಡಿರುವ ಮೂವರಿಗೂ ರಾಜ್ಯಪಾಲರಿಂದ ದೂರವಾಣಿ ಕರೆ ಬಂದಿದ್ದು, ರಾಜಭವನಕ್ಕೆ ಬರುವಂತೆ ಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್‍ಗೆ ಸೂಚಿಸಲಾಗಿದೆ.ಸಿಎಂ ವಿರುದ್ಧ ನೀಡಿರುವ ಶೋಕಾಸ್ ನೋಟಿಸ್ ಅನ್ನು ಹಿಂಪಡೆಯಬೇಕೆಂದು ಸಚಿವ ಸಂಪುಟ ಸಭೆ ಒಂದು ಸಾಲಿನ ನಿರ್ಣಯವನ್ನು ಕೈಗೊಂಡು ರಾಜಭವನಕ್ಕೆ ಕಳುಹಿಸಿಕೊಟ್ಟಿತ್ತು.
11
+ ರಾಜ್ಯಪಾಲರು ನೀಡಿದ್ದ ಶೋಕಾಸ್ ನೋಟಿಸ್‍ಗೆ ಸುಮಾರು 60 ಪುಟಗಳ ಸುದೀರ್ಘ ಉತ್ತರವನ್ನು ಕಳುಹಿಸಿಕೊಡಲಾಗಿತ್ತು. ಆದರೆ ರಾಜ್ಯಪಾಲರು ಇದ್ಯಾವುದಕ್ಕೂ ಜಗ್ಗದೇ ಕಾನೂನಿನ ಪ್ರಕಾರವಾಗಿ ಸಿಎಂ ವಿರುದ್ಧ ತನಿಖೆಗೆ ಅಸ್ತು ಎಂದಿದ್ದಾರೆ.ಕಳೆದ ಆ.15ರ ಸ್ವತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಶಿಷ್ಟಾಚಾರದಂತೆ ಸಿಎಂ ಸಿದ್ದರಾಮಯ್ಯನವರು ರಾಜಭವನದಲ್ಲಿ ಚಹಾಕೂಟಕ್ಕೆ ತೆರಳಿದ್ದ ವೇಳೆಯೇ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್‍ಗೆ ಅನುಮತಿ ನೀಡಲಿದ್ದಾರೆ ಎಂಬ ಸುಳಿವನ್ನು ಅಂದಾಜಿಸಿದ್ದರು ಎಂದು ತಿಳಿದುಬಂದಿದೆ.
12
+ ಏನಿದು ಪ್ರಕರಣ?:ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರಿಗೆ 50-50 ಅನುಪಾತದಲ್ಲಿ 14 ಮೂಡಾ ಸೈಟ್‍ಗಳನ್ನು ಹಂಚಿಕೆ ಮಾಡಲಾಗಿದ್ದು, ಅದರಲ್ಲಿ ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಎಂಬುವವರು ಇದರಲ್ಲಿ ಅಕ್ರಮ ಮಂಜೂರಾತಿ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಸಿಎಂ ಪತ್ನಿಗೆ 14 ನಿವೇಶನ ಮಂಜೂರಾದ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.
13
+ ದೇವನೂರು ಬಡಾವಣೆಯಲ್ಲಿ ಸಾವಿರಾರು ಸೈಟ್ ಇದ್ದರೂ ವಿಜಯನಗರದಲ್ಲಿ ಕೊಟ್ಟಿರುವುದು ಯಾಕೆ? ಇದು ಲಾಭದ ಉದ್ದೇಶ ಅಲ್ಲವೇ. ಈ ಹಿಂದಿನ ಮೂಡಾ ಆಯುಕ್ತ ನಟೇಶ್ ಈ ಆದೇಶ ಮಾಡಿದ್ದು, ಸಿಎಂ ಪತ್ನಿ ಆರ್ಥಿಕ ಲಾಭವನ್ನು ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.
eesanje/url_46_43_11.txt ADDED
@@ -0,0 +1,8 @@
 
 
 
 
 
 
 
 
 
1
+ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಆರೆಂಜ್‌ ಅಲರ್ಟ್‌ ಘೋಷಣೆ
2
+ ಬೆಂಗಳೂರು, ಆ.16-ರಾಜ್ಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಿದ್ದು, ಇಂದು ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ. ಹವಾಮಾನ ಇಲಾಖೆಯು ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಿದೆ.
3
+ ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಸರಾಸರಿ ಸಾಧಾರಣ ಮಳೆ ಮುಂದುವರೆಯಲಿದೆ. ಆದರೆ, ಇಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
4
+ ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಆಧರಿಸಿ ಈ ಮಾಹಿತಿ ನೀಡಲಾಗಿದೆ. ರಾಜ್ಯದ ಒಳನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ. ಅದೇ ರೀತಿ ಉತ್ತರ ಒಳನಾಡಿನಲ್ಲೂ ವ್ಯಾಪಕವಾಗಿ ಮಳೆಯಾಗಲಿದೆ. ಆದರೆ, ಒಂದೆರಡು ಕಡೆ ಭಾರೀ ಮಳೆಯಾಗುವ ಲಕ್ಷಣಗಳಿವೆ.
5
+ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ದಕ್ಷಿಣ ಒಳನಾಡಿನ ನದಿಗಳಲ್ಲಿ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. ಭದ್ರಾ, ಹಾರಂಗಿ, ಕೆಆರ್‌ಎಸ್‌‍, ಕಬಿನಿ, ಹೇಮಾವತಿ, ಲಿಂಗನಮಕ್ಕಿ ಜಲಾಶಯಗಳಿಗೆ ಒಳ ಹರಿವು ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.
6
+ ಈ ಜಲಾಶಯಗಳು ಈಗಾಗಲೇ ಭರ್ತಿಯಾಗಿದ್ದು, ಒಳಹರಿವು ಹೆಚ್ಚಾದಂತೆ ಹೊರ ಹರಿವನ್ನು ಹೆಚ್ಚಿಸಲಾಗುತ್ತದೆ. ಹೀಗಾಗಿ ನದಿ ಪಾತ್ರ ಜನವಸತಿಗಳಲ್ಲಿರುವ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
7
+ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಜುಲೈನಲ್ಲಿ ಅಬ್ಬರಿಸಿದ ಮುಂಗಾರು ಮಳೆ ಆಗಸ್ಟ್‌ನಲ್ಲಿ ಕಡಿಮೆಯಾಗಿದೆ. ಈ ಭಾಗದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುತ್ತಿದೆ. ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲೂ ವಾಡಿಕೆಗಿಂತ ಮಳೆ ಕಡಿಮೆಯಾಗಿದೆ.
8
+ ಆದರೆ, ರಾಜ್ಯದ ಒಳನಾಡಿನಲ್ಲಿ ಚೇತರಿಕೆ ಕಂಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಾತ್ರ ವಾಡಿಕೆಗಿಂತ ಹೆಚ್ಚು ಮಳೆ ಕಳೆದ ಎರಡು ವಾರಗಳಲ್ಲಿ ಬಿದ್ದಿದೆ. ಆದರೆ, ಭಾರಿ ಮಳೆಯಾಗಿಲ್ಲ. ಹೀಗಾಗಿ ಸಣ್ಣ ಕೆರೆ-ಕಟ್ಟೆಗಳಿಗೆ ಸಾಕಷ್ಟು ನೀರು ಬಂದಿಲ್ಲ.
eesanje/url_46_43_12.txt ADDED
@@ -0,0 +1,7 @@
 
 
 
 
 
 
 
 
1
+ ಪಂಚಾಯ್ತಿ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್‌‍ ಸಿದ್ಧತೆ
2
+ ಬೆಂಗಳೂರು, ಆ.16-ಮುಂಬರುವ ಜಿಲ್ಲಾ, ತಾಲ್ಲೂಕು ಪಂಚಾಯ್ತಿಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಬಿಬಿಎಂಪಿ ಚುನಾವಣೆ ಸಿದ್ಧತೆಯನ್ನು ಜೆಡಿಎಸ್‌‍ ಪ್ರಾರಂಭಿಸಿದೆ. ಲೋಕಸಭಾ ಚುನಾವಣೆಯ ನಂತರ ಹುಮಸ್ಸಿನಲ್ಲಿರುವ ಜೆಡಿಎಸ್‌‍ ಮುಂಬರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಲು ಈಗಿನಿಂದಲೇ ಕಾರ್ಯತಂತ್ರ ರೂಪಿಸಲಿದೆ.
3
+ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ತಯಾರಿ ನಡೆಸುವುದು, ಪಕ್ಷದ ಸದಸ್ಯತ್ವ ಅಭಿಯಾನ ಹಮಿಕೊಳ್ಳುವುದು ಹಾಗೂ ಪಕ್ಷದ ಸಂಘಟನೆ ಬಗ್ಗೆ ಚರ್ಚಿಸಲು ಆ.18ರಂದು ಜೆಪಿ ಭವನದಲ್ಲಿ ಜೆಡಿಎಸ್‌‍ ಸಭೆಯನ್ನು ಕರೆಯಲಾಗಿದೆ.
4
+ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿರವರ ಅಧ್ಯಕ್ಷತೆಯಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ಸಭೆ ಕರೆಯಲಾಗಿದೆ. ಈ ಸಭೆಗೆ ಜೆಡಿಎಸ್‌‍ ಪಕ್ಷದ ಸಂಸದರು, ಮಾಜಿ ಸಂಸದರು, ಮಾಜಿ ಸಚಿವರು, ಹಾಲಿ ಮತ್ತು ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಕಾರ್ಯಾಧ್ಯಕ್ಷರು, ಮಹಾಪ್ರಧಾನ ಕಾರ್ಯದರ್ಶಿಗಳು, ತಾಲ್ಲೂಕು ಅಧ್ಯಕ್ಷರು, ರಾಜ್ಯ ಕೋರ್‌ ಕಮಿಟಿ ಅಧ್ಯಕ್ಷರು, ಸಂಚಾಲಕರು, ಸದಸ್ಯರು, ರಾಜ್ಯ ಪದಾಧಿಕಾರಿಗಳು, 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಅಭ್ಯರ್ಥಿಗಳು, ವಿವಿಧ ವಿಭಾಗಗಳ ರಾಜ್ಯಾಧ್ಯಕ್ಷರುಗಳು ತಪ್ಪದೆ ಹಾಜರಾಗುವಂತೆ , ಜೆಡಿಎಸ್‌‍ ರಾಜ್ಯ ಮಹಾ ಪ್ರಧಾನಕಾರ್ಯದರ್ಶಿ ಹಾಗೂ ಮಾಜಿ ಸಚಿವ ವೆಂಕಟರಾವ್‌ ನಾಡಗೌಡ ಅವರು ಕೋರಿದ್ದಾರೆ.
5
+ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್‌‍, ಮುಂಬರುವ ವಿಧಾನಸಭಾ ಉಪ ಚುನಾವಣೆ, ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಅಪೇಕ್ಷೆ ಹೊಂದಿದೆ. ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ.
6
+ ಇತ್ತೀಚೆಗೆ ಬೆಂಗಳೂರಿನಿಂದ ಮೈಸೂರಿಗೆ ನಡೆದ ರಾಜ್ಯ ಸರ್ಕಾರದ ವಿರುದ್ಧದ ಪಾದಯಾತ್ರೆಯನ್ನು ಬಿಜೆಪಿ ಜತೆಗೂಡಿ ನಡೆಸಲಾಗಿತ್ತು. ಅಧಿವೇಶನದಲ್ಲೂ ಜಂಟಿ ಹೋರಾಟ ನಡೆಸಿದ್ದವು. ಮೈತ್ರಿಯಾದ ನಂತರ ಆಗಾಗ್ಗೆ ಕೆಲವೊಂದು ಭಿನ್ನಾಭಿಪ್ರಾಯಗಳು ಎರಡೂ ಪಕ್ಷಗಳ ನಡುವೆ ವ್ಯಕ್ತವಾಗಿ ಕಾರ್ಯಕರ್ತರ ನಡುವೆ ಅಸಮಾಧಾನವಾಗುತ್ತಿರುವುದು ಉಂಟು.
7
+ ಆದರೆ, ಉಭಯ ಪಕ್ಷಗಳ ನಾಯಕರ ನಡುವೆ ಮೈತ್ರಿ ವಿಚಾರದಲ್ಲಿ ಒಮತವಿದ್ದು, ಮುಂಬರುವ ವಿವಿಧ ಚುನಾವಣೆಗಳಲ್ಲೂ ಇದೇ ರೀತಿ ಮೈತ್ರಿ ಮುಂದುವರೆಯಲಿದೆ ಎಂದೂ ಎರಡೂ ಪಕ್ಷಗಳ ನಾಯಕರು ಹಲವು ಬಾರಿ ಪ್ರಸ್ತಾಪಿಸಿದ್ದಾರೆ. ಅದೇ ರೀತಿ ಚುನಾವಣೆ ಪೂರ್ವ ಮೈತ್ರಿ ಸ್ಥಳೀಯ ಸಂಸ್ಥೆಗಳಲ್ಲೂ ಮುಂದುವರೆಸುವ ಸಾಧಕ-ಬಾಧಕಗಳ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಜೆಡಿ���ಸ್‌‍ ಮೂಲಗಳು ತಿಳಿಸಿವೆ.
eesanje/url_46_43_2.txt ADDED
@@ -0,0 +1,5 @@
 
 
 
 
 
 
1
+ ಯಾವುದೇ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ
2
+ ಬೆಂಗಳೂರು,ಆ.17– ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದರಿಂದ ಯಾವುದೇ ಕ್ಷಣದಲ್ಲೂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ.
3
+ ದೂರುದಾರರಾದ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್ ಅವರು ನೀಡಿರುವ ದೂರಿನ ಅನುಸಾರ ಲೋಕಾಯುಕ್ತ ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳುವ ಸಂಭವವಿದೆ.ರಾಜ್ಯಪಾಲರು ನಿರ್ದಿಷ್ಟ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವ ಬಗ್ಗೆ ತಮ ನೋಟೀಸ್ನಲ್ಲಿ ಉಲ್ಲೇಖ ಮಾಡಿಲ್ಲವಾದರೂ ದೂರುದಾರರು ಈಗಾಗಲೇ ಲೋಕಾಯುಕ್ತ ನ್ಯಾಯಾಲಯಕ್ಕೆ ದೂರು ಕೊಟ್ಟಿದ್ದಾರೆ.
4
+ ಇದೀಗ ರಾಜ್ಯಪಾಲರೂ ಕೂಡ ತನಿಖೆಗೆ ಅನುಮತಿ ನೀಡಿರುವುದರಿಂದ ಸಿದ್ದರಾಮಯ್ಯ ಮೇಲೆ ಎಫ್ಐಆರ್ ದಾಖಲಿಸುವುದು ಅನಿವಾರ್ಯವಾಗುತ್ತದೆ.ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ನಂತರ ಎಫ್ಐಆರ್ ದಾಖಲಿಸಿಕೊಂಡಿದ್ದರು. ಈ ಎಫ್ಐಆರ್ ರದ್ದುಪಡಿಸಬೇಕೆಂದು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಮೇಲನವಿ ಅರ್ಜಿ ಸಲ್ಲಿಸಿದ್ದರು.
5
+ ಆದರೆ ನ್ಯಾಯಾಲಯ ಈ ಅರ್ಜಿಯನ್ನು ವಜಾಗೊಳಿಸಿ ಯಡಿಯೂರಪ್ಪ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಸಿದ್ದರಾಮಯ್ಯ ಕೂಡ ಪ್ರಭಾವಿ ಸ್ಥಾನದಲ್ಲಿರುವುದರಿಂದ ಸಾಕ್ಷ್ಯಗಳನ್ನು ನಾಶಪಡಿಸುವ ಇಲ್ಲವೇ, ಪ್ರಭಾವ ಬೀರುವ ಸಾಧ್ಯತೆ ಇದೆ ಎಂಬುದು ಕಂಡುಬಂದಿದೆ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವ ಸಾಧ್ಯತೆಯಿದೆ.
eesanje/url_46_43_3.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಬಲವಾಗಿ ಸಮರ್ಥಿಸಿಕೊಂಡ ರಾಜ್ಯಪಾಲರು
2
+ ಬೆಂಗಳೂರು,ಆ.17– ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರು ಹಲವು ಗಂಭೀರ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ತಾವು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಏಕೆ ಅನುಮತಿ ನೀಡುತ್ತಿದ್ದೇನೆ ಎಂಬುದನ್ನು ಬಲವಾಗಿ ಸಮರ್ಥಿಸಿಕೊಂಡಿರುವ ರಾಜ್ಯಪಾಲರು ಕೆಲವು ಮೂಲಭೂತ ಪ್ರಶ್ನೆಗಳನ್ನು ಸಹ ಹಾಕಿದ್ದಾರೆ.
3
+ ಸಿಎಂ ಕುಟುಂಬದ ಪ್ರಭಾವದ ಎರಡು ಅಂಶಗಳನ್ನು ರಾಜ್ಯಪಾಲರು ಉಲ್ಲೇಖಿಸಿದ್ದಾರೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ, ಪುತ್ರ ಯತೀಂದ್ರ ಸಿದ್ದರಾಮಯ್ಯ ಪ್ರಭಾವದ ಬಗ್ಗೆ ಉಲ್ಲೇಖವಾಗಿದೆ. ಸಿದ್ದರಾಮಯ್ಯ ಸಿಎಂ ಆಗುವ ತನಕ ಪಾರ್ವತಿ ಕಾದು, ಆ ಬಳಿಕ ಅರ್ಜಿ ಹಾಕಿದ್ದಾರೆ.
4
+ 2010 ರಲ್ಲಿ ಪಾರ್ವತಿ ಜಮೀನು ಮಾಲೀಕರಾದರೂ ಪರಿಹಾರಕ್ಕೆ ಅರ್ಜಿ ಹಾಕಲು 4 ವರ್ಷ ಕಾಯುತ್ತಾರೆ. ಸಿದ್ದರಾಮಯ್ಯ ಸಿಎಂ ಆದ ಮೇಲೆ 40:60 ಸೈಟ್ ಪರಿಹಾರ ಅನುಪಾತ, 50:50 ಆಯ್ತು. ಪಾಲಿಸಿ ಬದಲಾವಣೆಗೆ ಆಗಿನ ಸಿದ್ದರಾಮಯ್ಯ ಕ್ಯಾಬಿನೆಟ್ ಅನುಮತಿ ನೀಡಿತ್ತು. ಸಿದ್ದರಾಮಯ್ಯ ಪತ್ನಿ ಕೊಟ್ಟ ಅರ್ಜಿಯ ಆಧಾರದ ಮೇಲೆ ಪಾಲಿಸಿ ಬದಲಾವಣೆ ಮಾಡಿದರು. ಆ ನಂತರ ಪರಿಹಾರ ನೀಡುವ ಸಂಬಂಧ ನಡೆದ ಮುಡಾ ಸಭೆಯಲ್ಲಿ ಶಾಸಕರಾಗಿದ್ದ ಯತೀಂದ್ರ ಇದ್ದರು ಎಂದು ಪ್ರಭಾವದ ಬಗ್ಗೆ ಉಲ್ಲೇಖಿಸಲಾಗಿದೆ.
5
+ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರದ ಕುರಿತು ತಟಸ್ಥ, ವಸ್ತುನಿಷ್ಠ ಮತ್ತು ನಿಷ್ಪಕ್ಷಪಾತ ತನಿಖೆ ಅಗತ್ಯ ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ತನಿಖೆಗೆ ಅನುಮತಿ ನೀಡಿರುವ ಆದೇಶದಲ್ಲಿ ಹೇಳಿದ್ದಾರೆ.
6
+ ಮುಖ್ಯಮಂತ್ರಿಯವರ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಪ್ರದೀಪ್ ಕುಮಾರ್ ಎಸ್.ಪಿ., ಟಿ.ಜೆ. ಅಬ್ರಹಾಂ ಮತ್ತು ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಗಳಿಗೆ ಸಂಬಂಧಿಸಿದಂತೆ ಆರು ಪುಟಗಳ ಆದೇಶವನ್ನು ರಾಜ್ಯಪಾಲರು ಹೊರಡಿಸಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಸೆಕ್ಷನ್ 218ರ ಅಡಿಯಲ್ಲಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿರುವುದಾಗಿ ಶುಕ್ರವಾರ ಸಹಿ ಮಾಡಿರುವ ಆದೇಶದಲ್ಲಿ ತಿಳಿಸಿದ್ದಾರೆ.
7
+ ಮುಖ್ಯಮಂತ್ರಿಯವರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ದೂರುಗಳು, ಕಾನೂನು ತಜ್ಞರ ಅಭಿಪ್ರಾಯ ಮತ್ತು ಸಂಪುಟದ ನಿರ್ಣಯವನ್ನು ಪರಿಶೀಲಿಸಲಾಗಿದೆ. ಮುಖ್ಯಮಂತ್ರಿಯವರ ವಿರುದ್ಧದ ಆರೋಪಗಳ ವಿಚಾರದಲ್ಲಿ ಎರಡು ಬಗೆಯ ಅಭಿಪ್ರಾಯಗಳಿವೆ. ದೂರಿನಲ್ಲಿರುವ ಆರೋಪಗಳನ್ನು ಮೇಲ್ನೋಟಕ್ಕೆ ಪುಷ್ಟೀಕರಿಸುವ ದಾಖಲೆಗಳೂ ಇವೆ, ಆದ್ದರಿಂದ ಸಿದ್ದರಾಮಯ್ಯ ಅವರ ವಿರುದ್ಧ��� ಆರೋಪಗಳ ಕುರಿತು ತಟಸ್ಥ, ವಸ್ತುನಿಷ್ಠ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವ ಅಗತ್ಯವಿದೆ ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
8
+ ಮುಖ್ಯಮಂತ್ರಿಯವರ ವಿರುದ್ಧದ ವಿಚಾರಣೆಗೆ ಅನುಮತಿ ನೀಡುವಂತೆ ಕೋರಿ ಮೂರು ಅರ್ಜಿಗಳು ಸಲ್ಲಿಕೆಯಾಗಿದ್ದವು. ಜುಲೈ 26ರಂದು ಮುಖ್ಯಮಂತ್ರಿಯವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿ ವಿವರಣೆ ಕೇಳಲಾಗಿತ್ತು. ಆ.1ರಂದು ಸಂಪುಟದ ನಿರ್ಣಯವು ತಮ ಕಚೇರಿಗೆ ತಲುಪಿತು. ಆ.3ರಂದು ಮುಖ್ಯಮಂತ್ರಿಯವರ ಪ್ರತಿಕ್ರಿಯೆ ತಲುಪಿತು. ಅದರೊಂದಿಗೆ ಕೆಲವು ದಾಖಲೆಗಳನ್ನೂ ಸಲ್ಲಿಸಲಾಗಿತ್ತು ಎಂದು ರಾಜ್ಯಪಾಲರು ತಿಳಿಸಿದ್ದಾರೆ.
9
+ ಮುಡಾದಲ್ಲಿನ ಅಕ್ರಮಗಳ ಕುರಿತು ಐಎಎಸ್ ಅಧಿಕಾರಿ ವೆಂಕಟಾಚಲಪತಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಆ ಬಳಿಕ ಏಕಸದಸ್ಯ ಆಯೋಗವನ್ನು ನೇಮಿಸಲಾಗಿದೆ, ಯಾರ ವಿರುದ್ಧ ಆರೋಪಗಳು ಕೇಳಿಬಂದಿವೆಯೋ ಅದೇ ವ್ಯಕ್ತಿ ತನಿಖೆ ಹೇಗಿರಬೇಕು ಎಂಬುದನ್ನು ನಿರ್ಧರಿಸುವುದು ಕಾನೂನು ಸಮತವಲ್ಲ. ಆದ್ದರಿಂದ ಸಂಪುಟದ ನಿರ್ಧಾರವು ಕಾನೂನುಬಾಹಿರ ಎಂದು ಗೆಹ್ಲೋಟ್ ಹೇಳಿದ್ದಾರೆ.
10
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಮುಖ್ಯ ಕಾರ್ಯದರ್ಶಿಯವರು ಆ.1ರಂದು ಸಂಪುಟ ಸಭೆ ಕರೆದಿದ್ದರು. ಅಲ್ಲಿ ತಾವು ನೀಡಿದ್ದ ಶೋಕಾಸ್ ನೋಟೀಸ್ ಅನ್ನು ಮಂಡಿಸಿ ಚರ್ಚಿಸಲಾಗಿದೆ. ವಿಚಾರಣೆಗೆ ಅನುಮತಿ ಕೋರಿರುವ ಅರ್ಜಿಗಳನ್ನು ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಸಲಹೆ ನೀಡುವ ನಿರ್ಣಯವನ್ನು ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಸಿದ್ದರಾಮಯ್ಯ ಅವರ ಸಲಹೆಯಂತೆ ರಚನೆಯಾದ ಸಂಪುಟವು ಅವರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ ದೂರುಗಳನ್ನು ತಿರಸ್ಕರಿಸುವಂತೆ ಸಲಹೆ ನೀಡುವ ನಿರ್ಣಯ ಕೈಗೊಂಡಿದೆ. ಈ ನಿರ್ಣಯವು ವಿಶ್ವಾಸಾರ್ಹವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
11
+ ಮಧ್ಯಪ್ರದೇಶ ವಿಶೇಷ ಪೊಲೀಸ್ ಘಟಕ ಮತ್ತು ಮಧ್ಯಪ್ರದೇಶ ಸರ್ಕಾರದ ನಡುವಿನ ವ್ಯಾಜ್ಯದಲ್ಲಿ ಸುಪ್ರೀಂ ಕೋರ್ಟ್ 2004ರಲ್ಲಿ ನೀಡಿದ್ದ ತೀರ್ಪನ್ನು ತಮ ಆದೇಶದಲ್ಲಿ ಉಲ್ಲೇಖಿಸಿರುವ ರಾಜ್ಯಪಾಲರು, ಕೆಲವು ವಿಶೇಷ ಸಂದರ್ಭಗಳಲ್ಲಿ ಸಂಪುಟದ ಸಲಹೆಯನ್ನು ಸ್ವೀಕರಿಸುವುದು ರಾಜ್ಯಪಾಲರ ವಿವೇಚನೆಗೆ ಬಿಟ್ಟದ್ದು ಎಂದಿದ್ದಾರೆ.
12
+ ಇಂತಹ ಪ್ರಕರಣಗಳಲ್ಲಿ ದಾಖಲೆಗಳು ಲಭ್ಯವಿದ್ದಾಗಲೂ ರಾಜ್ಯಪಾಲರು ವಿವೇಚನಾ ಅಧಿಕಾರ ಬಳಸಲು ಅವಕಾಶ ನೀಡದೆ ಸರ್ಕಾರಕ್ಕೆ ಅನುಮತಿ ನಿರಾಕರಿಸುವ ಅಧಿಕಾರ ನೀಡಿದಲ್ಲಿ ಕಾನೂನಿನ ಆಡಳಿತವು ಕುಸಿದುಬೀಳುತ್ತದೆ. ಅಧಿಕಾರದಲ್ಲಿರುವ ಪ್ರಭಾವಿ ವ್ಯಕ್ತಿಗಳ ವಿರುದ್ಧ ಮೇಲ್ನೋಟಕ್ಕೆ ಸಾಕ್ಷ್ಯಗಳು ಲಭ್ಯವಿದ್ದಾಗಲೂ ತನಿಖೆಗೆ ಅನುಮತಿ ನಿರಾಕರಿಸಿದರೆ ಅದರಿಂದ ಪ್ರಜಾಪ್ರಭುತ್ವ ಅಪಾಯಕ್ಕೆ ಸಿಲುಕುತ್ತದೆ. ತಮ ವಿರುದ್ಧ ತನಿಖೆ ನಡೆಸಲು ಅವಕಾಶವೇ ಇಲ್ಲ ಎಂಬ ಭಾವನೆಯಿಂದ ಅಧಿಕಾರದಲ್ಲಿರುವ ವ್ಯಕ್ತಿಗಳು ಕಾನೂನು ಉಲ್ಲಂಸಲು ಪ್ರೀರಣೆ ದೊರೆಯುತ್ತದೆ ಎಂದು ಸ���ಪ್ರೀಂ ಕೋರ್ಟ್ 2004ರ ತೀರ್ಪಿನಲ್ಲಿ ಹೇಳಿದ್ದನ್ನು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
eesanje/url_46_43_4.txt ADDED
@@ -0,0 +1,7 @@
 
 
 
 
 
 
 
 
1
+ ಬಿಜೆಪಿ ಪಾದಯಾತ್ರೆಗೆ ಇಂದು ಯಶಸ್ಸು ಸಿಕ್ಕಿದೆ : ಆರ್‌.ಅಶೋಕ್‌
2
+ ಬೆಂಗಳೂರು, ಆ.17-ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದರು.
3
+ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ನಮ ಉದ್ದೇಶ. ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.
4
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದ ಬಗ್ಗೆ ಸ್ಪಷ್ಟನೆ ನೀಡಲು ಸಾಧ್ಯವಾಗಿಲ್ಲ. ಸದನದಲ್ಲಿ ನಿಲುವಳಿ ಸೂಚನೆಗೆ ಅವಕಾಶ ಕೊಟ್ಟು ಜನರಲ್ಲಿರುವ ಗೊಂದಲ ನಿವಾರಣೆ ಮಾಡಬೇಕಿತ್ತು. ಅದನ್ನು ಬಿಟ್ಟು ಪಲಾಯನ ಮಾಡಿದ್ದರಿಂದ ಇದರಲ್ಲಿ ಏನೋ ಇದೆ ಎಂಬ ಅನುಮಾನ ಎಲ್ಲರಿಗೂ ಸ್ಪಷ್ಟವಾಯಿತು. ಪ್ರತಿ ಹಂತದಲ್ಲೂ ಸಿದ್ದರಾಮಯ್ಯನವರ ಹಸ್ತಕ್ಷೇಪ ಕಂಡುಬಂದಿದೆ. ಡಿ ನೋಟಿಫಿಕೇಶನ್‌, ಭೂ ಪರಿವರ್ತನೆ ಈ ಎಲ್ಲ ಹಂತದಲ್ಲೂ ಅವರ ಹುದ್ದೆಯ ಪ್ರಭಾವ ಬಳಕೆಯಾಗಿದೆ. ಇಷ್ಟೆಲ್ಲ ಆಗಿರುವಾಗ ಇದು ದೊಡ್ಡ ಹಗರಣ ಎಂಬುದು ಸಾಬೀತಾಗಿದೆ ಎಂದರು.
5
+ ಕಾಂಗ್ರೆಸ್‌‍ ಈಗ ದ್ವೇಷದ ರಾಜಕಾರಣ ಮಾಡಿದರೆ ಅರ್ಥವಿಲ್ಲ. ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು, ಸಿಬಿಐ ತನಿಖೆಯಾಗಬೇಕು ಹಾಗೂ ಎಲ್ಲ ನಿವೇಶನಗಳನ್ನು ವಾಪಸ್‌‍ ಪಡೆಯಬೇಕೆಂಬುದು ನಮ ಬೇಡಿಕೆ. ನಿವೇಶನ ವಂಚಿತರಾದ ಜನರಿಗೆ ನ್ಯಾಯ ಸಿಗಬೇಕೆಂದು ನಮ ಆಗ್ರಹ ಎಂದು ತಿಳಿಸಿದರು.
6
+ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಆಗಿನ ರಾಜ್ಯಪಾಲರು ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್‌‍ ಕೈವಾಡವಿತ್ತು ಎಂದರೆ ಅದನ್ನು ಒಪ್ಪುತ್ತಾರಾ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ. ರಾಜ್ಯಪಾಲರು ಸರ್ಕಾರದ ಭಾಗ. ಅವರ ವಿರುದ್ಧ ಕಾಂಗ್ರೆಸ್‌‍ ಪ್ರತಿಭಟಿಸಿದರೆ ಅವರು ಸಂವಿಧಾನಕ್ಕೆ ತೋರುವ ಅಗೌರವ ಎಂದರು.
7
+ ಕಾಂಗ್ರೆಸ್‌‍ ಅಭಿವೃದ್ಧಿ ಮಾಡದೆ ಹೈಕಮಾಂಡ್‌ಗೆ ಎಟಿಎಂ ಆಗಿ ಕೆಲಸ ಮಾಡುತ್ತಿದೆ. ತುಂಗಭದ್ರಾ ಜಲಾಶಯದ ಗೇಟ್‌ ದುರಸ್ತಿ ಮಾಡಲು ಕೂಡ ಸರ್ಕಾರದ ಬಳಿ ಹಣವಿಲ್ಲ ಎಂದು ದೂರಿದರು. ಕಾಂಗ್ರೆಸ್‌‍ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿಲ್ಲ. ಕಾಂಗ್ರೆಸ್‌‍ ಪಕ್ಷದ ಶಾಸಕರೇ ತಿರುಗಿಬಿದ್ದರೆ ಅದಕ್ಕೆ ನಾವು ಜವಾಬ್ದಾರರಲ್ಲ ಎಂದು ಅವರು ಸ್ಪಷ್ಟಪಡಿಸಿದರು.
eesanje/url_46_43_5.txt ADDED
@@ -0,0 +1,5 @@
 
 
 
 
 
 
1
+ ಸಿಎಂ ಮೇಲ್ಮನವಿ ಸಲ್ಲಿಸಿದರೆ ಕೇವಿಯಟ್‌ ಹಾಕಲು ಮುಂದಾದ ದೂರುದಾರರು
2
+ ಬೆಂಗಳೂರು,ಆ.17-ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯನವರು ಹೈಕೋರ್ಟ್‌ನಲ್ಲಿ ಮೇಲನವಿ ಸಲ್ಲಿಸಿದರೆ, ಕೇವಿಯಟ್‌ ಹಾಕಲು ದೂರುದಾರರು ಮುಂದಾಗಿದ್ದಾರೆ.
3
+ ದೂರುದಾರ ಪ್ರದೀಪ್‌ ಅವರು ಈಗಾಗಲೇ ಹೈಕೋರ್ಟ್‌ನಲ್ಲಿ ಕೇವಿಯಟ್‌ ಸಲ್ಲಿಸಲು ಸಜ್ಜಾಗಿದ್ದು, ರಾಜ್ಯಪಾಲರ ಅನುಮತಿಯನ್ನು ಪ್ರಶ್ನಿಸಿ ಸಿದ್ದರಾಮಯ್ಯನವರು ಮೇಲನವಿ ಸಲ್ಲಿಸಿದರೆ ತಮ ವಾದವನ್ನು ಪರಿಗಣಿಸದೇ ನಿರ್ಧಾರ ಮಾಡದಂತೆ ಮನವಿ ಮಾಡಲಿದ್ದಾರೆ.
4
+ ಯಾವುದೇ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನಿಗೆ ತಡೆಯಾಜ್ಞೆ ತರಲು ಮೇಲನವಿ ಸಲ್ಲಿಸಿದಾಗ ಅದಕ್ಕೆ ಪ್ರತಿಯಾಗಿ ದೂರುದಾರರು ತಮ ಮನವಿಯನ್ನು ಸಹ ಪರಿಗಣಿಸಿ ನಂತರವೇ ನ್ಯಾಯಾಲಯ ತೀರ್ಪು ನೀಡಬೇಕೆಂದು ಸಲ್ಲಿಸುವ ಮೇಲನವಿ ಅರ್ಜಿಯೇ ಕೇವಿಯಟ್‌ ಆಗಿದೆ.
5
+ ಇದೀಗ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ರವರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದಾರೆ. ಇದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಪರ ವಕೀಲರು ಹೈಕೋರ್ಟ್‌ನಲ್ಲಿ ಮೇಲನವಿ ಸಲ್ಲಿಸಲು ಮುಂದಾಗಿದ್ದಾರೆ.ಈ ಬೆಳವಣಿಗೆಗಳ ನಡುವೆಯೇ ದೂರುದಾರ ಪ್ರದೀಪ್‌ ಕೂಡ ಕೇವಿಯಟ್‌ ಮೂಲಕ ಕಾನೂನು ಹೋರಾಟ ನಡೆಸಲು ಸಜ್ಜಾಗಿದ್ದಾರೆ.
eesanje/url_46_43_6.txt ADDED
@@ -0,0 +1,5 @@
 
 
 
 
 
 
1
+ ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜಕೀಯ ಸಂಚಲನ, ಕಾಂಗ್ರೆಸ್‌‍ನಲ್ಲಿ ತಳಮಳ
2
+ ಬೆಂಗಳೂರು,ಆ.17– ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಿದ್ದಂತೆ ಭಾರೀ ಸಂಚಲನ ಸೃಷ್ಟಿಯಾಗಿದ್ದು, ರಾಜಕೀಯವಾಗಿ ಕಾಂಗ್ರೆಸ್‌‍ನಲ್ಲಿ ತಳಮಳ ಕಂಡುಬಂದಿದೆ. ಇಂದು ಬೆಳಗ್ಗೆ ಪ್ರಾಸಿಕ್ಯೂಷನ್‌ನ ಅನುಮತಿ ನೀಡಿರುವ ಮಾಹಿತಿ ಬಹಿರಂಗವಾಗುತ್ತಿದ್ದಂತೆ ಸಂಪುಟದ ಎಲ್ಲ ಸಚಿವರು ತಮ ಹೇಳಿಕೆಗಳನ್ನು ಬಿಡುಗಡೆ ಮಾಡಿದ್ದು, ರಾಜ್ಯಪಾಲರು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ.
3
+ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಯುತ್ತಿದೆ. ಕೇಂದ್ರಸ ರ್ಕಾರ ಅದರಲ್ಲೂ ಬಿಜೆಪಿ ನಾಯಕರು ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸಚಿವ ಸಂಪುಟ ಸಭೆಯ ಸಲಹೆ ಮೇರೆಗೆ ನಡೆದುಕೊಳ್ಳಬೇಕಿದ್ದ ರಾಜ್ಯಪಾಲರು ಸಂಪುಟದ ಸಲಹೆಯನ್ನು ಧಿಕ್ಕರಿಸಿ ಅನುಮತಿ ನೀಡಿದ್ದಾರೆ ಎಂಬ ಆಕ್ರೋಶಗಳು ಕೇಳಿಬಂದಿವೆ. ಬಿಜೆಪಿಯ ಕೈಗೊಂಬೆಯಂತೆ ವರ್ತಿಸುತ್ತಿರುವ ರಾಜ್ಯಪಾಲರನ್ನು ವಜಾಗೊಳಿಸಬೇಕೆಂದು ಪ್ರತಿಪಾದಿಸಲಾಗುತ್ತಿದೆ.
4
+ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಬೆಂಬಲ ವ್ಯಕ್ತಪಡಿಸಿರುವ ಸಂಪುಟದ ಎಲ್ಲಾ ಸಚಿವರು ಹಾಗೂ ಕಾಂಗ್ರೆಸ್‌‍ ನಾಯಕರು, ಬಿಜೆಪಿ ವಿರುದ್ಧ ಕೆಂಡ ಕಾರಲಾರಂಭಿಸಿದ್ದಾರೆ.ಸದ್ಯದ ಪರಿಸ್ಥಿತಿ ನೋಡಿದರೆ ಒಂದು ವೇಳೆ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಾದರೂ ನಾಯಕತ್ವ ಬದಲಾವಣೆಯ ಚರ್ಚೆಗಳು ಅಪ್ರಸ್ತುತ ಎನ್ನುವ ಪರಿಸ್ಥಿತಿ ಇದೆ.
5
+ ಇಡೀ ಕಾಂಗ್ರೆಸ್‌‍ ಪಕ್ಷವೇ ಸಿದ್ದರಾಮಯ್ಯನವರ ಬೆನ್ನಿಗೆ ನಿಂತಂತಿದ್ದು, ಬಿಜೆಪಿ ವಿರುದ್ಧ ರಾಜಕೀಯ ಪ್ರತಿ ಸಮರ ಆರಂಭಿಸುವ ಲಕ್ಷಣಗಳು ಕಂಡುಬರುತ್ತಿವೆ.ಆದರೂ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದ ತನಿಖೆ ಆರಂಭವಾದರೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆಯ ಪ್ರಶ್ನೆಗಳು ಎದುರಾಗಲಿವೆ. ಹೀಗಾಗಿ ಸಿದ್ದರಾಮಯ್ಯ ಪಾಳೆಯದಲ್ಲಿ ತಲ್ಲಣ ಸೃಷ್ಟಿಯಾಗಿದೆ. ಕಾಂಗ್ರೆಸ್‌‍ನಲ್ಲಿ ಕೆಲವರಿಗೆ ಒಳಗೊಳಗೆ ಖುಷಿಯಾದರೆ, ಇನ್ನು ಕೆಲವರಿಗೆ ರಾಜಕೀಯವಾಗಿ ಬಿಜೆಪಿ ಮುನ್ನಡೆ ಸಾಧಿಸುತ್ತದೆ ಎಂಬ ದುಗುಡ ಕಂಡುಬರುತ್ತಿದೆ.
eesanje/url_46_43_7.txt ADDED
@@ -0,0 +1,5 @@
 
 
 
 
 
 
1
+ ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸಲು ಕೇಂದ್ರ ಸರ್ಕಾರ ಯತ್ನ : ಪ್ರಿಯಾಂಕ್‌ ಖರ್ಗೆ ಆರೋಪ
2
+ ಬೆಂಗಳೂರು,ಆ.17-ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸಲು ಕೇಂದ್ರ ಸರ್ಕಾರದ ಸಂಘಟಿತ ಯತ್ನ ನಡೆಸುತ್ತಿದ್ದು, ಬಿಜೆಪಿ ರಾಜಭವನವನ್ನು ಸಾಧನವಾಗಿ ದುರುಪಯೋಗಪಡಿಸಿಕೊಳ್ಳತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಆರೋಪಿಸಿದ್ದಾರೆ.
3
+ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಟೀಕಿಸಿದ್ದಾರೆ.
4
+ ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರು ತಮ ರಾಜಕೀಯ ಯಜಮಾನರನ್ನು ಸಮಾಧಾನಪಡಿಸಲು ಸಾಂವಿಧಾನಿಕ ಬಿಕ್ಕಟ್ಟನ್ನು ಹುಟ್ಟು ಹಾಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
5
+ ಕೇಂದ್ರ ಸರ್ಕಾರ ತನ್ನ ಎಷ್ಟೇ ಶಕ್ತಿಯನ್ನು ಪ್ರಯೋಗಿಸಿದರೂ, ನಾವು ನಮ್ಮ ಪರವಾಗಿ ಸಂವಿಧಾನದೊಂದಿಗೆ ದೃಢವಾಗಿ ನಿಲ್ಲುತ್ತೇವೆ ಎಂದೂ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.
eesanje/url_46_43_8.txt ADDED
@@ -0,0 +1,5 @@
 
 
 
 
 
 
1
+ ಸಿದ್ದರಾಮಯ್ಯ ಅಭಿಯೋಜನೆ : ಮುಂದಿನ ಯುದ್ಧ ಹೈಕೋರ್ಟ್‌ನಲ್ಲಿ ಎಂದ ಟಿ.ಜೆ.ಅಬ್ರಹಾಂ
2
+ ಬೆಂಗಳೂರು,ಆ.17-ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದರಿಂದ ಮುಂದಿನ ಯುದ್ಧ ಹೈಕೋರ್ಟ್‌ನಲ್ಲಿ ನಡೆಯಲಿದೆ ಎಂದು ದೂರುದಾರ ಟಿ.ಜೆ.ಅಬ್ರಹಾಂ ತಿಳಿಸಿದ್ದಾರೆ.ಈ ಸಂಜೆಯೊಂದಿಗೆ ಮಾತನಾಡಿದ ಅವರು, ಅನುಮತಿ ನೀಡಿರುವುದನ್ನು ಮುಖ್ಯಮಂತ್ರಿಯವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಿದ್ದಾರೆ. ಅನುಮತಿ ಏಕೆ ಕೊಡಬಾರದು ಎಂದು ನಾನು ವಾದಿಸಲಿದ್ದೇನೆ. ಹೀಗಾಗಿ ಮುಂದಿನ ಯುದ್ಧ ಹೈಕೋರ್ಟ್‌ನಲ್ಲಿ ನಡೆಯಲಿದೆ ಎಂದು ತಿಳಿಸಿದರು.
3
+ ನಾನು ಈಗಾಗಲೇ ಜನಪ್ರತಿನಿಧಿಗಳ ನ್ಯಾಯಾಲಯ ಸಂಖ್ಯೆ 82ರಲ್ಲಿ ಪ್ರಕರಣ ದಾಖಲಿಸಿದ್ದೇನೆ. ಅದರ ವಿಚಾರಣೆ ಈ ತಿಂಗಳ 21ರಂದು ನಡೆಯಲಿದ್ದು, ರಾಜ್ಯಪಾಲರು ಅನುಮತಿ ನೀಡಿರುವುದನ್ನು ನಾನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದೇನೆ ಎಂದು ಹೇಳಿದರು.
4
+ ಪ್ರಕರಣದ ತನಿಖೆಯಾಗಬೇಕು ಎಂದು ನ್ಯಾಯಾಲಯದ ಮುಂದೆ ಪ್ರಾರ್ಥನೆ ಮಾಡಿಕೊಂಡಿದ್ದೇನೆ. ನ್ಯಾಯಾಲಯ ಯಾವ ನಿರ್ದೇಶನ ನೀಡಲಿದೆ ಎಂದು ಕಾದುನೋಡಬೇಕಿದೆ. ಈ ಹಿಂದೆ ಯಡಿಯೂರಪ್ಪ ಪ್ರಕರಣದಲ್ಲಿ ಲೋಕಾಯುಕ್ತ ಮುಂದೆ ದೂರು ದಾಖಲಿಸಿದ ರೀತಿ ಬೇರೆ ಇತ್ತು. ಅದು ವಿಚಾರಣೆಯಾಗಬೇಕು ಎಂಬ ಕಾರಣಕ್ಕೆ ಸಲ್ಲಿಸಿದ್ದ ಅರ್ಜಿ.
5
+ ಈಗ ನಾನು ತನಿಖೆಗೆ ಮನವಿ ಮಾಡಿದ್ದೇನೆ. ಅದು ನ್ಯಾಯಾಲಯದ ಮುಂದಿದೆ. ರಾಜ್ಯಪಾಲರು ಅನುಮತಿ ನೀಡಿರುವುದರಿಂದ ನ್ಯಾಯಾಲಯದ ನಿರ್ದೇಶನಗಳು ಮಹತ್ವ ಪಡೆದುಕೊಳ್ಳುತ್ತವೆ ಎಂದರು.
eesanje/url_46_43_9.txt ADDED
@@ -0,0 +1,7 @@
 
 
 
 
 
 
 
 
1
+ ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ : ರಾಜ್ಯದಲ್ಲಿ ಮರುಕಳಿಸಲಿದೆಯೇ ಇತಿಹಾಸ..?
2
+ ಬೆಂಗಳೂರು,ಆ.17– ಮುಡಾ ಅಕ್ರಮ ನಿವೇಶನ ಹಂಚಿಕೆ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವುದು ರಾಜ್ಯದಲ್ಲಿ ಇತಿಹಾಸ ಮರುಕಳಿಸಲಿದೆಯೇ ಎಂಬ ಯಕ್ಷಪ್ರಶ್ನೆ ಎದುರಾಗಿದೆ. ಏಕೆಂದರೆ ಈ ಹಿಂದೆ ರಾಜ್ಯಪಾಲರಾಗಿದ್ದ ಹಂಸರಾಜ್‌ ಭಾರದ್ವಾಜ್‌ರವರು ಅಂದಿನ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ವಿರುದ್ಧ ಅಕ್ರಮ ಡಿ ನೋಟಿಫಿಕೇಶನ್‌ ಪ್ರಕರಣ ಸಂಬಂಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದರು.
3
+ ಇದೀಗ ಸಿಎಂ ಸಿದ್ದರಾಮಯ್ಯ ಮೇಲೆ ಮುಡಾ ಪ್ರಕರಣದಲ್ಲಿ ಕಾನೂನುಬಾಹಿರವಾಗಿ ನಿವೇಶನ ಹಂಚಿಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದಾರೆ.ಈ ಹಿಂದೆ 2011 ರಲ್ಲಿ ನಡೆದಿದ್ದ ಘಟನೆಯನ್ನು ಅವಲೋಕಿಸುವುದಾದರೆ, ಯಡಿಯೂರಪ್ಪ ಸಿಎಂ ಆಗಿದ್ದಾಗ ಅವರ ವಿರುದ್ಧ ಕಾನೂನುಬಾಹಿರ ಡಿನೋಟಿಫಿಕೇಷನ್‌ಗಳ ಆರೋಪಗಳು ಬಂದಿದ್ದವು.
4
+ ಈ ಆರೋಪಗಳ ಬಗ್ಗೆ ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಸಲು ಮುಂದಾಗಿದ್ದ ವಕೀಲ ಸಿರಾಜಿನ್‌ ಬಾಷಾ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ 2011 ರಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದ ಅಂದಿನ ರಾಜ್ಯಪಾಲ ಹಂಸರಾಜ ಭಾರದ್ವಾಜ್‌ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು.
5
+ ಇದಾದ ಮೇಲೆ ಇಕ್ಕಟ್ಟಿಗೆ ಸಿಲುಕಿದ ಬಿಎಸ್‌‍ವೈ ತಮ ಹ್ದುೆಗೆ ರಾಜೀನಾಮೆ ನೀಡಬೇಕಾಯಿತು. ಯಾಕೆಂದರೆ ಪ್ರಾಸಿಕ್ಯೂಷನ್‌ಗೆ ಅನುಮತಿ ಪಡೆದ ನಂತರ ವಕೀಲ ಸಿರಾಜಿನ್‌ ಬಾಷಾ ಯಡಿಯೂರಪ್ಪ ವಿರುದ್ಧ 5 ಖಾಸಗಿ ದೂರುಗಳನ್ನು ಬೆಂಗಳೂರಿನ ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ಸಲ್ಲಿಸಿದ್ದರು. ವಿಚಾರಣೆಗೆ ಹಾಜರಾಗುವಂತೆ ಕೋರ್ಟ್‌ ಯಡಿಯೂರಪ್ಪಗೆ ಸಮನ್‌್ಸ ಜಾರಿಗೊಳಿಸಿತ್ತು.
6
+ ಕೋರ್ಟ್‌ಗೆ ಹಾಜರಾಗಿ ಬಿಎಸ್‌‍ವೈ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ಜಾಮೀನು ಅರ್ಜಿ ತಿರಸ್ಕರಿಸಿದ ಲೋಕಾಯುಕ್ತ ವಿಶೇಷ ಕೋರ್ಟ್‌ ಯಡಿಯೂರಪ್ಪರನ್ನು ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಇದಾದ ಬಳಿಕ ಮುಂದೆ ನಡೆದ್ದೆಿಲ್ಲ ಒಂದು ಇತಿಹಾಸ. ಇದೀಗ ಮತ್ತದೇ ಇತಿಹಾಸ ಮರುಕಳಿಸುತ್ತದೆಯಾ ಎಂಬ ಪ್ರಶ್ನೆ ಮೂಡಿದೆ.
7
+ ಕಳೆದ ಜುಲೈ 26 ರಂದು ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಾಂ ಸುದೀರ್ಘವಾದ ದೂರೊಂದನ್ನು ಹಿಡಿದು ರಾಜ್ಯಪಾಲರ ಬಾಗಿಲು ತಟ್ಟಿದ್ದರು. ಸಿಎಂ ಸಿದ್ದರಾಮಯ್ಯ ವಿರುದ್ಧದ ಟಿ.ಜೆ.ಅಬ್ರಹಾಂರ ದೂರನ್ನು ಮುಂದಿಟ್ಟುಕೊಂಡು ರಾಜ್ಯಪಾಲರು ಸುದೀರ್ಘ ಒಂದೂವರೆ ಗಂಟೆಗಳ ಕಾಲ ಮಾಹಿತಿ ಪಡೆದುಕೊಂಡಿದ್ದರು.
eesanje/url_46_44_1.txt ADDED
@@ -0,0 +1,7 @@
 
 
 
 
 
 
 
 
1
+ ಟಿಬಿ ಡ್ಯಾಂ 19ನೇ ಕ್ರಸ್ಟ್‌ಗೇಟ್‌ ದುರಸ್ತಿ ಕಾರ್ಯ ಮುಂದುವರಿಕೆ
2
+ ಕೊಪ್ಪಳ,ಆ.16-ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್‌ ದುರಸ್ತಿ ಕಾರ್ಯ ಎರಡನೇ ದಿನ ಮುಂದುವರೆದಿದೆ.ನಿನ್ನೆ ಜಿಂದಾಲ್‌ನಿಂದ ತರಲಾಗಿದ್ದ 65 ಟನ್‌ ತೂಕದ ಸ್ಟಾಪ್‌ಲಾಗ್‌ ಗೇಟನ್ನು ಅಳವಡಿಸುವ ಮೊದಲ ದಿನದ ಕಾರ್ಯಾಚರಣೆ ನಿನ್ನೆ ರಾತ್ರಿ ಸ್ಥಗಿತಗೊಂಡಿತ್ತು. ಜಿಂದಾಲ್‌ ಸಂಸ್ಥೆ ರೂಪಿಸಿದ್ದ ಗೇಟ್‌ನ ಅಳತೆ ದೊಡ್ಡದಾಗಿತ್ತು. ಅದನ್ನು ಕೆಳಗಿಳಿಸಿದಾಗ ಸರಿಯಾಗಿ ಜೋಡಣೆಯಾಗದ ಹಿನ್ನೆಲೆಯಲ್ಲಿ ಮತ್ತೆ ಮೇಲಕ್ಕೆ ಎತ್ತಿ ದೊಡ್ಡದಾಗಿದ್ದ ಗೇಟನ್ನು ಕತ್ತರಿಸಿ ನಿಗದಿತ ಅಳತೆಗೆ ಸರಿಪಡಿಸಿ ವೆಲ್ಡಿಂಗ್‌ ಮಾಡಲಾಗಿದೆ.
3
+ ಇಂದು ಬೆಳಿಗ್ಗೆ 6 ಗಂಟೆಯಿಂದ ಮತ್ತೆ ಕಾರ್ಯಾಚರಣೆ ಆರಂಭಿಸಲಾಗಿದೆ.ನೂರಕ್ಕೂ ಹೆಚ್ಚು ಸಿಬ್ಬಂದಿಗಳು ಗೇಟ್‌ ಅಳವಡಿಕೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಕಾರ್ಯಾಚರಣೆಗೆ ಅಡ್ಡಲಾಗಿರುವ ಅಣೆಕಟ್ಟಿನ ಮೇಲಿನ ಕಬ್ಬಿಣದ ಕಂಬಿಗಳನ್ನು ಕತ್ತರಿಸಲಾಗಿದೆ. ಜಲಾಶಯದಲ್ಲಿನ ನೀರಿನ ರಭಸ ತೀವ್ರವಾಗಿದ್ದು, ಅದರ ನಡುವೆಯೂ ಗೇಟ್‌ ಅಳವಡಿಸಲು ಪ್ರಯತ್ನಿಸಲಾಗುತ್ತಿದೆ.
4
+ ಜಲಾಶಯದ ತಡೆಗೋಡೆ ಧಾರಣ ಸಾಮರ್ಥ್ಯ ಆಧರಿಸಿ ಎರಡು ಕ್ರೇನ್‌ಗಳನ್ನು ತಂದು ನಿಲ್ಲಿಸಲಾಗಿದೆ. ಈಗಾಗಲೇ ಹೆಚ್ಚೂ ಕಡಿಮೆ 35 ಟಿಎಂಸಿ ನೀರು ಖಾಲಿಯಾಗಿದೆ. 72 ಟಿಎಂಸಿ ಯಷ್ಟು ನೀರು ಬಾಕಿ ಉಳಿದಿದೆ. ಇರುವ ನೀರನ್ನು ಉಳಿಸಿಕೊಳ್ಳಲು ಐದು ಹಂತದಲ್ಲಿ ಸ್ಟಾಪ್‌ಗೇಟ್‌ಗಳನ್ನು ಅಳವಡಿಸಲು ಪ್ರಯತ್ನಿಸಲಾಗುತ್ತಿದೆ.
5
+ ಜಿಂದಾಲ್‌ ಸಂಸ್ಥೆ ನಿರ್ಮಿಸಿದ್ದ ಗೇಟನ್ನು ನಿಗದಿತ ಅಳತೆಗೆ ಸರಿಪಡಿಸಿಕೊಂಡು ಕೆಳಗಿಳಿಸುವ ಕೆಲಸ ನಡೆದಿದೆ. ಉಳಿದಂತೆ ಕೊಪ್ಪಳದ ಹೊಸಹಳ್ಳಿಯ ಹಿಂದೂಸ್ಥಾನ್‌ ಎಂಜಿನಿಯರಿಂಗ್‌್ಸ ಮತ್ತು ಹೊಸಪೇಟೆಯ ನಾರಾಯಣ ಎಂಜಿನಿಯರ್‌ರ‍ಸ ಸಂಸ್ಥೆಯಿಂದ ಸೇರಿ ಒಟ್ಟು 3 ಗೇಟುಗಳನ್ನು ತರಿಸಲಾಗುತ್ತಿದ್ದು, 19ನೇ ಕ್ರಸ್ಟ್‌ಗೇಟ್‌ಗೆ ಜೋಡಿಸುವ ಪ್ರಯತ್ನ ನಡೆಯುತ್ತಿದೆ. ಜಲಾಶಯ ತಜ್ಞ ಕನ್ನಯ್ಯನಾಯ್ಡು ನೇತೃತ್ವದಲ್ಲಿ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದು, ಒಂದು ವೇಳೆ ಅನಾಹುತ ಸಂಭವಿಸಿದರೆ ರಕ್ಷಣಾ ಕಾರ್ಯ ಕೈಗೊಳ್ಳಲು ಎಸ್‌‍ಡಿಆರ್‌ಎಫ್‌ ತಂಡ ಕೂಡ ಸಿದ್ಧವಾಗಿದೆ.
6
+ ಎರಡು ದಿನಗಳೊಳಗಾಗಿ ಗೇಟ್‌ ಅಳವಡಿಸಿ ಸುಮಾರು 70 ಟಿಎಂಸಿ ನೀರನ್ನು ಉಳಿಸುವ ಗುರಿ ರಾಜ್ಯಸರ್ಕಾರದ್ದಾಗಿತ್ತು. ಆದರೆ ಕೊಚ್ಚಿಹೋಗಿರುವ ಗೇಟಿನಲ್ಲಿ ನಿರಂತರವಾಗಿ ನೀರು ಹರಿದು ಹೋಗುತ್ತಿರುವುದರಿಂದಾಗಿ ಈಗಾಗಲೇ 35 ಟಿಎಂಸಿ ನೀರು ಖಾಲಿಯಾಗಿದೆ. ಮತ್ತೆ ಮಳೆ ಬರುವ ನಿರೀಕ್ಷೆಯಿದ್ದು, ಆ ವೇಳೆಗೆ ಅಣೆಕಟ್ಟು ತುಂಬಿಕೊಳ್ಳಲಿದೆ. ಭರ್ತಿಯಾಗುವ ನೀರನ್ನು ಉಳಿಸಿಕೊಳ್ಳಲು ಗೇಟ್‌ ಅಳವಡಿಸಲು ಶ್ರಮಿಸುತ್ತಿರುವುದಾಗಿ ಮೂಲಗಳು ತಿಳಿಸಿವೆ.
7
+ ಈ ನಡುವೆ ಸ್ಥಳದಲ್ಲೇ ಮೊಕ್ಕಾಂ ಹೂಡಿರುವ ಸಚಿವ ಜಮೀರ್‌ ಅಹಮದ್‌ ಖಾನ್‌ ಕಾರ್ಯಾಚರಣೆ ಯಶಸ್���ಿಯಾದ ಬಳಿಕ ಭಾಗವಹಿಸಿದ್ದ ಎಲ್ಲಾ ಸಿಬ್ಬಂದಿಗೂ ತಲಾ 50 ಸಾವಿರ ರೂ. ಉಡುಗೊರೆ ನೀಡುವುದಾಗಿ ಘೋಷಿಸಿದ್ದಾರೆ.
eesanje/url_46_44_10.txt ADDED
@@ -0,0 +1,8 @@
 
 
 
 
 
 
 
 
 
1
+ ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗುತ್ತೆ ಎಂದವರಿಗೆ ಆರ್ಥಿಕ ಬೆಳವಣಿ ಸಾಧಿಸಿ ಉತ್ತರ ನೀಡುತ್ತೇವೆ : ಸಿಎಂ
2
+ ಬೆಂಗಳೂರು,ಆ.15-ಪಂಚಖಾತ್ರಿ ಯೋಜನೆಗಳು ಅಬಾಧಿತವಾಗಿ ಮುಂದುವರೆಯಲಿವೆ. ಅವುಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ಆರ್ಥಿಕ ಬೆಳವಣಿಗೆಯನ್ನು ಸಾಧಿಸಿ ತೋರಿಸುವ ಮೂಲಕ ಉತ್ತರ ನೀಡಲಿದ್ದೇವೆ ಎಂದು ಸವಾಲು ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಲಕ್ಷ್ಮಿ ಫಲಾನುಭವಿಗಳನ್ನು ಸಂಘಟಿಸಿ ಸ್ತ್ರೀಶಕ್ತಿ ಮಹಿಳಾ ಸ್ವಸಹಾಯ ಸಂಘಗಳ ಮೂಲಕ ವರಮಾನ ತರುವ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸುವುದಾಗಿ ಘೋಷಿಸಿದ್ದಾರೆ.
3
+ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಫೀಲ್ಡ್ ಮಾರ್ಷಲ್‌ ಮಾಣಿಕ್‌ ಷಾ ಪೆರೇಡ್‌ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಪಂಚಖಾತ್ರಿ ಯೋಜನೆಗಳಷ್ಟೇ ಅಲ್ಲದೆ ಕಲ್ಯಾಣ ಯೋಜನೆಗಳಿಗೆ 13 ಸಾವಿರ ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ವೆಚ್ಚ ಮಾಡಲಾಗುತ್ತಿದೆ ಎಂದು ತಿಳಿಸಿದರು.
4
+ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2 ಸಾವಿರ ರೂ. ಪಡೆಯುತ್ತಿರುವ ಫಲಾನುಭವಿಗಳನ್ನು ಸ್ತ್ರೀಶಕ್ತಿ ಮಹಿಳಾ ಸ್ವಸಹಾಯ ಸಂಘಗಳನ್ನು ಸಂಘಟಿಸುವ ಮೂಲಕ ವಿವಿಧ ಹಣಕಾಸು ಸಂಸ್ಥೆಗಳಿಂದ ಆರ್ಥಿಕ ನೆರವು ಒದಗಿಸಿ ವರಮಾನ ತರುವ ಚಟುವಟಿಕೆಗಳಲ್ಲಿ ತೊಡಗಿಸಲಾಗುವುದು. ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವುದಾಗಿಹೇಳಿದ್ದಾರೆ.
5
+ ಶಕ್ತಿ ಯೋಜನೆಯಡಿ 270 ಕೋಟಿ ಉಚಿತ ಪ್ರಯಾಣ ಸೌಲಭ್ಯ ಪಡೆಯುವ ಮೂಲಕ ಮಹಿಳೆಯರು 6,541 ಕೋಟಿ ರೂ.ಗಳಷ್ಟು ಪ್ರಯಾಣ ವೆಚ್ಚವನ್ನು ಉಳಿತಾಯ ಮಾಡಿದ್ದಾರೆ. 120 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ 25,259 ಕೋಟಿ ರೂ.ಗಳನ್ನು ಅವರ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ.
6
+ ಅನ್ನಭಾಗ್ಯ ಯೋಜನೆಯಡಿ 4.08 ಕೋಟಿ ಫಲಾನುಭವಿಗಳ 1.16 ಕೋಟಿ ಪಡಿತರ ಚೀಟಿಗಳಿಗೆ 7,763 ಕೋಟಿ ರೂ. ನಗದನ್ನು ಪಾವತಿಸಲಾಗಿದೆ. ಗೃಹಜ್ಯೋತಿಯಡಿ 8,844 ಕೋಟಿ ರೂ.ಗಳನ್ನು, ಯುವನಿಧಿ ಯೋಜನೆಯಡಿ 91 ಕೋಟಿ ರೂ.ಗಳನ್ನು ಭರಿಸಲಾಗಿದೆ ಎಂದು ವಿವರಿಸಿದರು.
7
+ ಸಾಮಾಜಿಕ ಭದ್ರತೆ ಯೋಜನೆಯಡಿ 13,027 ಕೋಟಿ ರೂ.ಗಳನ್ನು ವಿವಿಧ ಮಾಸಾಶನ ರೂಪದಲ್ಲಿ ನೀಡಲಾಗುತ್ತಿದೆ. ಹಾಲು ಉತ್ಪಾದಕರಿಗೆ 1822 ಕೋಟಿ ರೂ.ಗಳನ್ನು ಪ್ರೋತ್ಸಾಹ ಧನ, ಬೆಳೆಸಾಲ, ಸ್ವಸಹಾಯ ಸಂಘಗಳ ಸಾಲಗಳಿಗೆ 1642 ಕೋಟಿ ರೂ. ಬಡ್ಡಿ ಸಹಾಯ ಧನ, ಕೃಷಿ ಪಂಪ್‌ಸೆಟ್‌ಗಳಿಗೆ 20 ಸಾವಿರ ಕೋಟಿಗಳಷ್ಟು ಉಚಿತ ವಿದ್ಯುತ್‌ ಒದಗಿಸಲಾಗಿದೆ.
8
+ ಕೊಬ್ಬರಿಗೆ ಪ್ರೋತ್ಸಾಹ ಧನ, ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಮೋಟಾರು ಮತ್ತು ಇತರ ಸಂಬಂಧಿತ ಕಾರ್ಮಿಕರಿಗೆ ಚಲನಚಿತ್ರ ಕ್ಷೇತ್ರ, ಗಿಗ್‌ ಕಾರ್ಮಿಕರ ವಿಮಾ ಸೌಲಭ್ಯಗಳು, ಪತ್ರಿಕಾ ವಿತರಕರಿಗೆ ಅಪಘಾತ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ನೀಡಲಾಗಿದೆ ಎಂದು ಹೇಳಿದರು.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರ ಅಭಿವೃದ್ಧಿಗೆ ರೂಪಿಸಲಾದ ಯೋಜನೆಗಳ ಬಗ್ಗೆ ವಿವರಣೆ ನೀಡಿದ್ದಾರೆ.
eesanje/url_46_44_11.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಡಿಕೆಶಿ ಆಕ್ರೋಶ
2
+ ಬೆಂಗಳೂರು,ಆ.15-ಭಾರತದ 78ನೇ ಸ್ವತಂತ್ರ್ಯ ದಿನಾಚರಣೆ ಅಂಗವಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು ಪಕ್ಷದ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.
3
+ ನಂತರ ಮಾತನಾಡಿದ ಡಿ.ಕೆ.ಶಿವಕುಮಾರ್‌, ದೇಶದ ಸ್ವತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಕಾಂಗ್ರೆಸ್‌‍ ಪಕ್ಷವನ್ನು ಅನೇಕ ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳು ಪ್ರಶ್ನಿಸುತ್ತಿವೆ. ಅಂದು ಬ್ರಿಟಿಷರ ಪರವಾಗಿ ನಿಂತು ಭಾರತೀಯರ ವಿರುದ್ಧ ಷಡ್ಯಂತ್ರ ರೂಪಿಸಿದವರನ್ನು ಇಂದು ಧಿಕ್ಕರಿಸಬೇಕಿದೆ.
4
+ ಶ್ಯಾಂಪ್ರಸಾದ್‌ ಮುಖರ್ಜಿ ಅವರ ಕ್ವಿಟ್‌ ಇಂಡಿಯಾ ಚಳವಳಿಯನ್ನು ಹತ್ತಿಕ್ಕುವಂತೆ ಬ್ರಿಟಿಷರಿಗೆ ಪತ್ರ ಬರೆದವರನ್ನೂ ಸ್ಮರಿಸಬೇಕಿದೆ. ಇಂತಹ ದೇಶದ್ರೋಹಿಗಳನ್ನು ಪೂಜಿಸುವವರು ಅಧಿಕಾರ ನಡೆಸುತ್ತಾ ನಮಗೆ ದೇಶಭಕ್ತಿಯ ಪಾಠ ಮಾಡುತ್ತಿರುವುದು ದೊಡ್ಡ ದುರಂತ ಎಂದು ಆಕ್ರೋಶ ವ್ಯಕ್ತಪಡಿಸಿದರು.
5
+ ಹಿಂದೆ ಭಾರತ ಹೇಗಿತ್ತು, ಈಗ ಹೇಗಿದೆ ಎಂದು ಆತಾವಲೋಕನ ಮಾಡಿಕೊಳ್ಳಬೇಕಿದೆ. ಧ್ವಜ ಹಾರಿಸಿ ರಾಷ್ಟ್ರಗೀತೆ ಹಾಡಿದರೆ ಸಾಲದು. ಇತಿಹಾಸವನ್ನು ತಿಳಿದು ಸ್ವಾತಂತ್ರ್ಯ ತಂದುಕೊಟ್ಟ ಎಲ್ಲಾ ಹಿರಿಯರ ಕೊಡುಗೆಗಳನ್ನು ಸರಿಸಬೇಕಿದೆ. ಸ್ವಾತಂತ್ರ್ಯ ಎಂದರೆ ಬೆಲೆ ಕಟ್ಟಿ ಪಡೆಯುವ ವಸ್ತುವಲ್ಲ. ಅದು ಜೀವನದ ಉಸಿರು ಎಂದು ಮಹಾತ್ಮ ಗಾಂಧೀಜಿ ಹೇಳಿಕೆಯನ್ನು ಉಲ್ಲೇಖಿಸಿದ ಡಿ.ಕೆ.ಶಿವಕುಮಾರ್‌, ಕಾಂಗ್ರೆಸ್‌‍ ಪಕ್ಷಕ್ಕೆ ದೊಡ್ಡ ಇತಿಹಾಸವಿದೆ. ಸ್ವಾತಂತ್ರ್ಯಕ್ಕೆ ಹೋರಾಡಿ, ಪ್ರಜಾಪ್ರಭುತ್ವವನ್ನು ರಕ್ಷಿಸಿದ ಪಕ್ಷದ ಸದಸ್ಯರಾಗಿರುವುದೇ ನಮ ಭಾಗ್ಯ ಎಂದರು.
6
+ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಮಹನೀಯರನ್ನು ಸರಿಸಿದ ಡಿ.ಕೆ.ಶಿವಕುಮಾರ್‌, ಸುಮಾರು 6.50 ಲಕ್ಷ ಜನ ಕಾಂಗ್ರೆಸಿಗರು ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಾಣತ್ಯಾಗ ಮಾಡಿದ್ದಾರೆ. ಪ್ರತಿ ಹಂತದಲ್ಲೂ ನಾವು ಅವರನ್ನು ನೆನಪಿಸಿಕೊಳ್ಳಬೇಕು. ನಕಲಿ ದೇಶಭಕ್ತರು ಅಂದು ದೇಶ ಮಾರಾಟ ಮಾಡಲು ಯತ್ನಿಸಿದರೂ ಕಾಂಗ್ರೆಸಿಗರು ಅದಕ್ಕೆ ಅವಕಾಶ ನೀಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.
7
+ ದೇಶಕ್ಕೆ ದೊಡ್ಡ ಇತಿಹಾಸವಿದೆ. ಐಕ್ಯತೆ ಮತ್ತು ಶಾಂತಿಗೆ ಒಟ್ಟಾಗಿ ಶ್ರಮಿಸಿದ್ದೇವೆ. ಅನೇಕ ಸಮಸ್ಯೆಗಳು ಬಂದಾಗ ದೇಶ ರಕ್ಷಣೆಗಾಗಿ ಸ್ವಾತಂತ್ರ್ಯ ರಕ್ಷಣೆಯ ಹೋರಾಟಗಳನ್ನು ಮೆಲುಕು ಹಾಕಿಕೊಂಡು ಯುವ ಪೀಳಿಗೆಯನ್ನು ಪ್ರೇರೇಪಿಸುತ್ತೇವೆ. ಸ್ವತಂತ್ರ್ಯ ಹೋರಾಟದಲ್ಲಿ ತ್ಯಾಗ, ಬಲಿದಾನ, ಕೊಡುಗೆಗಳನ್ನು ಮುಂದಿನ ಸಮುದಾಯಕ್ಕೆ ತಿಳಿಸಬೇಕಿದೆ ಎಂದರು.
8
+ ಸ್ವಾತಂತ್ರ್ಯ ಎಂದರೆ ಸಮಾಜದ ಎಲ್ಲಾ ವರ್ಗಗಳಿಗೂ ಹಸಿವು, ಬಡತನ, ಕತ್ತಲೆ, ಸಂಕೋಲೆ, ನಿರುದ್ಯೋಗದಿಂದ ಸ್ವತಂತ್ರ್ಯ ಸಿಕ್ಕಾಗ ಮಾತ್ರ ನಿಜವಾದ ಸ್ವಾತಂ��್ರ್ಯ ದೊರೆತಂತಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷವಾಕ್ಯ ನೀಡಿದ್ದಾರೆ. ರಾಜ್ಯಸರ್ಕಾರದ 5 ಗ್ಯಾರಂಟಿಗಳು ಇಂತಹ ಗಂಭೀರ ಸಮಸ್ಯೆಗಳ ನಿವಾರಣೆಗೆ ಸಹಾಯಕವಾಗಲಿವೆ ಎಂದು ಹೇಳಿದರು.
9
+ ಇಡೀ ದೇಶವೇ ಕರ್ನಾಟಕ ಕಾಂಗ್ರೆಸ್‌‍ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಗಮನಿಸುತ್ತಿದೆ. ಹಸಿವು ಮುಕ್ತ ಸಮಾಜ ನಿರ್ಮಾಣ ನಮ ಸರ್ಕಾರದ ಗುರಿ. ಕಾಂಗ್ರೆಸ್‌‍ ಸರ್ಕಾರ ಎಲ್ಲಾ ವರ್ಗದ ಜನರಿಗೂ ಅಭಿವೃದ್ಧಿಯ ಯೋಜನೆಗಳನ್ನು ರೂಪಿಸಿದೆ. ಜವಹರಲಾಲ್‌ ನೆಹರೂ, ಇಂದಿರಾಗಾಂಧಿ, ಮನಮೋಹನ್‌ಸಿಂಗ್‌ ಸೇರಿದಂತೆ ಕಾಂಗ್ರೆಸ್‌‍ನ ಎಲ್ಲರ ಕಾಲಾವಧಿಯಲ್ಲೂ ಸಮಷ್ಟಿ ವರ್ಗದ ಹಿತದೃಷ್ಟಿಯನ್ನು ಗುರಿಯಾಗಿಸಿಕೊಂಡೇ ಯೋಜನೆಗಳನ್ನು ರೂಪಿಸಿದ್ದೇವೆ. ಬಡವರಿಗೆ ಭೂಮಿ, ಕಲಿಕೆ, ಪಂಚಾಯಿತಿಗಳ ಅಭಿವೃದ್ಧಿ, ನಿರುದ್ಯೋಗ ನಿವಾರಣೆ, ಮನ್ರೇಗಾ, ಬಿಸಿಯೂಟ, ಆಹಾರ ಭದ್ರತೆ ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ಜಾರಿಗೊಳಿಸಿದರೂ ಅದು ಎಲ್ಲಾ ವರ್ಗಗಳಿಗೂ ಅನುಕೂಲವಾಗಿತ್ತು. ಇಂತಹ ಕಾರ್ಯಕ್ರಮಗಳನ್ನು ಉಳಿಸಲು, ಮುಂದುವರೆಸಲು ಕಾಂಗ್ರೆಸ್‌‍ ಪಕ್ಷದಿಂದ ಮಾತ್ರ ಸಾಧ್ಯ ಎಂದರು.
10
+ ಯಾವುದೇ ಕಾರಣಕ್ಕೂ ಪಂಚಖಾತ್ರಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ದೇಶಕ್ಕೆ ಇಲ್ಲಿಂದಲೇ ಮಾದರಿಯ ಸಂದೇಶ ನೀಡಲಾಗುವುದು. ಮಹಾತಗಾಂಧೀಜಿಯವರು ಕಾಂಗ್ರೆಸ್‌‍ ಪಕ್ಷದ ಅಧ್ಯಕ್ಷರಾಗಿ 100 ವರ್ಷವಾಗಿರುವ ಹಿನ್ನೆಲೆಯಲ್ಲಿ ಇಡೀ ವರ್ಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಎಲ್ಲರೂ ಅದರಲ್ಲಿ ಭಾಗವಹಿಸಬೇಕು ಎಂದು ಕರೆನೀಡಿದರು.
eesanje/url_46_44_12.txt ADDED
@@ -0,0 +1,7 @@
 
 
 
 
 
 
 
 
1
+ ಸದ್ಯಕ್ಕೆ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಪ್ರಸ್ತಾಪ ಇಲ್ಲ : ಪರಮೇಶ್ವರ್‌
2
+ ಬೆಂಗಳೂರು,ಆ.14-ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಅಲ್ಲಲ್ಲಿ ಶಾಸಕರು, ಸಚಿವರು ಸೇರಿದಾಗ ಅನೌಪಚಾರಿಕವಾಗಿ ಸಮಾಲೋಚನೆಗಳಾಗಿವೆ. ಆದರೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ, ಸದ್ಯಕ್ಕೆ ಈ ವರ್ಷ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಪ್ರಸ್ತಾಪ ಇಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.
3
+ ಸದಾಶಿವನಗರದ ತಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು, ಮುಖಂಡರು ದೆಹಲಿಗೆ ಹೋದಾಗ ಎಐಸಿಸಿ ಕಚೇರಿಗೆ ಭೇಟಿ ನೀಡುವುದು ಸಂಪ್ರದಾಯ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ತಲುಪಬೇಕು ಎಂಬುದು ಬಹಳ ಜನರ ಅಭಿಪ್ರಾಯವಾಗಿದೆ. ಈಗಾಗಲೇ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ರೂ. 56 ಸಾವಿರ ಕೋಟಿ ಮೀಸಲಿಡಲಾಗಿದೆ. ಹೀಗಾಗಿ ಪ್ರಸಕ್ತ ವರ್ಷದಲ್ಲಿ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡುವುದು ಸಾಧ್ಯವಿಲ್ಲ ಎಂದರು.
4
+ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಚರ್ಚೆಗಳಾಗುತ್ತಿರುವುದು ನಿಜ. ಶಾಸಕರು, ಕಾರ್ಯಕರ್ತರು ಸಾರ್ವಜನಿಕವಾಗಿ ಅಲ್ಲಲ್ಲಿ ಮಾತನಾಡಿರಬಹುದು. ಪಕ್ಷದ ವೇದಿಕೆಯಲ್ಲಿ, ಸರ್ಕಾರದ ಹಂತದಲ್ಲಿ ಚರ್ಚೆಯಾಗಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷಕ್ಕೆ ಶೇ.13ರಷ್ಟು ಮತ ಹೆಚ್ಚಾಗಿವೆ. ಗ್ಯಾರಂಟಿ ಯೋಜನೆಗಳಿಂದ ಮತ ಹೆಚ್ಚಾಗಿದೆ ಎಂದು ಯಾಕೆ ವಿಶ್ಲೇಷಣೆ ಮಾಡಬಾರದು ಎಂದ ಅವರು, ಗ್ಯಾರಂಟಿ ಯೋಜನೆ ಪರಿಷ್ಕರಣೆ ಬಗ್ಗೆ ನನ್ನ ಅಭಿಪ್ರಾಯವೊಂದೇ ಮುಖ್ಯವಾಗುವುದಿಲ್ಲ. ಒಬ್ಬೊಬ್ಬರು ಒಂದೊಂದು ಹೇಳಿಕೆಗಳನ್ನು ನೀಡುತ್ತಾ ಹೋದರೆ ಗೊಂದಲ ಉಂಟಾಗುತ್ತದೆ ಎಂದು ಸ್ಪಷ್ಟಪಡಿಸಿದರು.
5
+ ಮೂಡಾ ವಿಚಾರದಲ್ಲಿ ರಾಜ್ಯಪಾಲರ ನಡೆಯ ಬಗ್ಗೆ ವಕ್ತಾರನಾಗಿ ನಾನೇನೂ ಹೇಳಲು ಹೋಗುವುದಿಲ್ಲ. ತಪ್ಪು ತೀರ್ಮಾನ ತೆಗೆದುಕೊಳ್ಳುತ್ತಿದ್ದೀರಿ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಡಿ. ಸಿಎಂ ಅವರಿಗೆ ನೀಡಿರುವ ಷೋಕಾಸ್‌‍ ನೋಟಿಸ್‌‍ ವಾಪಸ್‌‍ ಪಡೆಯುವಂತೆ ರಾಜ್ಯಪಾಲರಿಗೆ ಸಲಹೆ ನೀಡಲು ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಇದನ್ನು ರಾಜ್ಯಪಾಲರು ಸ್ವೀಕರಿಸಬೇಕು. ಇಲ್ಲವಾದರೆ ಮುಂದಿನ ಕ್ರಮದ ಬಗ್ಗೆ ಸಮರ್ಥನೆ ನೀಡಬೇಕಾಗುತ್ತದೆ ಎಂದು ಹೇಳಿದರು.
6
+ ಒಳಮೀಸಲಾತಿ ಜಾರಿ ಮಾಡುವ ಕುರಿತು ಎಐಸಿಸಿಯವರು ರಾಜ್ಯ ಸರ್ಕಾರಕ್ಕೆ ಯಾವ ನಿರ್ದೇಶನ ನೀಡುತ್ತಾರೆಯೋ ಅದರ ಪ್ರಕಾರ ಮುಂದುವರಿಯುತ್ತೇವೆ. ಈ ಬಗ್ಗೆ ಹೈಕಮಾಂಡ್‌ ಹಂತದಲ್ಲಿ ಚರ್ಚೆಯಾಗಬೇಕು ಎಂದರು.
7
+ ಭೋವಿ ನಿಗಮದ ಮೇಲೆ ಸಿಐಡಿ ದಾಳಿ ನಡೆಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಅಕ್ರಮದ ಬಗ್ಗೆ ತನಿಖೆಗೆ ಆದೇಶಿಸಲಾಗಿತ್ತು. ಇದರ ಭಾಗವಾಗಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬಿಜೆಪಿ ಅಧಿಕಾರಾವಧಿಯಲ್ಲಿ ನಡೆದಿರುವ ಎಲ್ಲ ಅಕ್ರಮಗಳ ಬಗ್ಗೆ ತನಿಖೆ ಮಾಡುತ್ತೇವೆ. ಎಲ್ಲವನ್ನೂ ತಾರ್ಕಿಕ ಅಂತ್ಯಕ್ಕೆ ತರಬೇಕು ಎಂದು ಹೇಳಿದರು.
eesanje/url_46_44_2.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ : ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ದೋಸ್ತಿಗಳ ತಯಾರಿ
2
+ ಬೆಂಗಳೂರು,ಆ.16-ಜಿದ್ದಾಜಿದ್ದಿನ ಕುರುಕ್ಷೇತ್ರವಾಗಲಿರುವ ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕೆಲವು ಸಣ್ಣಪುಟ್ಟ ಗೊಂದಲದ ನಡುವೆಯೂ ಬಿಜೆಪಿ-ಜೆಡಿಎಸ್ ಎನ್ಡಿಎ ಮೈತ್ರಿಕೂಟ ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಿವೆ.ಲೋಕಸಭಾ ಚುನಾವಣೆಯಲ್ಲೂ ಎರಡು ಪಕ್ಷಗಳ ಮುಖಂಡರ ನಡುವೆ ಸುಮಧುರ ಬಾಂಧವ್ಯವೇನೂ ಇರಲಿಲ್ಲ. ಹಲವು ಗೊಂದಲಗಳ ನಡುವೆಯೂ 28 ಲೋಕಸಭಾ ಕ್ಷೇತ್ರಗಳ ಪೈಕಿ 19 ಕ್ಷೇತ್ರಗಳನ್ನು ಗೆದ್ದು ಬೀಗಿತ್ತು.
3
+ ಅಂದರೆ ರಾಜ್ಯದ ಜನತೆ ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಒಪ್ಪಿಕೊಂಡಿರುವುದಕ್ಕೆ ಈ ಫಲಿತಾಂಶವೇ ಸಾಕ್ಷಿ ಎಂಬುದು ಉಭಯ ಪಕ್ಷಗಳ ಮುಖಂಡರ ವಾದವಾಗಿದೆ. ಈಗ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳಿಗೆ ಒಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಆಡಳಿತಾರೂಢ ಕಾಂಗ್ರೆಸ್ಗೆ ಹಿನ್ನಡೆ ಉಂಟು ಮಾಡುವ ಲೆಕ್ಕಾಚಾರದಲ್ಲಿ ಉಭಯಪಕ್ಷಗಳ ಮುಖಂಡರಿದ್ದಾರೆ.
4
+ ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮುರಿಯಲು ಅವಕಾಶ ಕೊಡುವುದಿಲ್ಲ ಎಂದು ಕೇಂದ್ರ ವರಿಷ್ಠರು ಸ್ಪಷ್ಟ ಸಂದೇಶವನ್ನು ರಾಜ್ಯಘಟಕಕ್ಕೆ ರವಾನಿಸಿದ್ದಾರೆ.ಸಣ್ಣಪುಟ್ಟ ಭಿನ್ನಾಭಿಪ್ರಾಯಗಳ ನಡುವೆಯೂ ಕಾಂಗ್ರೆಸ್ಗೆ ಹಿನ್ನಡೆ ಉಂಟುಮಾಡಬೇಕಾದರೆ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಹೋಗಬೇಕು. ಇದಕ್ಕಾಗಿ ಕೆಲವರು ತ್ಯಾಗ ಮಾಡಬೇಕೆಂದು ಸೂಚನೆಯನ್ನು ನೀಡಲಾಗಿದೆ.
5
+ ಪ್ರತಿಷ್ಠೆಯ ಕಣವಾಗಿರುವ ಚನ್ನಪಟ್ಟಣ ಕ್ಷೇತ್ರವನ್ನು ಬಿಜೆಪಿಯಿಂದಲೇ ಜೆಡಿಎಸ್ಗೆ ಬಿಟ್ಟುಕೊಡುವುದರ ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವರಾಗಿರುವ ಎಚ್.ಡಿ.ಕುಮಾರಸ್ವಾಮಿ ಚರ್ಚಿಸಿ ಅಂತಿಮ ನಿರ್ಧಾರ ತಿಳಿಸುವುದಾಗಿ ವರಿಷ್ಠರು ಬಿಜೆಪಿ ಆಕಾಂಕ್ಷಿಯಾಗಿರುವ ಸಿ.ಪಿ.ಯೋಗೀಶ್ವರ್ ಅವರಿಗೆ ತಿಳಿಸಿದ್ದಾರೆ.
6
+ ಎರಡು ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಉಪಚುನಾವಣೆ ಎದುರಿಸೋಣ. ಇಬ್ಬರ ಜಗಳದಲ್ಲಿ ಮೂರನೆಯವರಿಗೆ ಅಂದರೆ ಕಾಂಗ್ರೆಸ್ಗೆ ಲಾಭವಾಗದಂತೆ ನೋಡಿಕೊಳ್ಳಬೇಕೆಂಬ ಕಟ್ಟುನಿಟ್ಟಿನ ಸೂಚನೆಯನ್ನು ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.ಜಿದ್ದಾಜಿದ್ದಿನ ಕುರುಕ್ಷೇತ್ರವಾಗಲಿರುವ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಹಾಲಿ ಸಂಸಸ ಡಾ. ಸಿ.ಎನ್.ಮಂಜುನಾಥ್ ಅವರ ಪತ್ನಿ ಅನುಸೂಯ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಿದರೆ ಹೇಗೆ ಎಂಬ ಚರ್ಚೆ ನಡೆಯುತ್ತಿದೆ.
7
+ ಕಾಂಗ್ರೆಸ್ನಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಣಕ್ಕಿಳಿಯಲಿರುವ ಬಗ್ಗೆ ಚರ್ಚೆಗಳು ನಡೆಯತ್ತಿರುವ ಹಿನ್ನೆಲೆಯಲ್ಲಿ ಮೈತ್ರಿಕೂಟದಲ್ಲಿ ರಾಜಕೀಯ ಲೆಕ್ಕಾಚಾರಗಳು ತೀವ್ರಗೊಂಡಿವೆ. ಹಾವೇರಿ ಜಿಲ್ಲೆ ಶಿಗ್ಗಾವಿಗೆ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮಾಯಿ ಅವರ ಪುತ್ರ ಭರತ್ ಬೊಮಾಯಿ ಹಾಗೂ ಬಳ್ಳಾರಿ ಜಿಲ್ಲೆ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಬಿ. ಶ್ರೀರಾಮುಲು ಟಿಕೆಟ್ಗಾಗಿ ಲಾಬಿ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
8
+ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ, ಹಾಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಭದ್ರಕೋಟೆಯಾದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ನಿರೀಕ್ಷೆಗೂ ಮೀರಿದ ದಾಖಲೆಯ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
9
+ ಚನ್ನಪಟ್ಟಣ ಉಪಚುನಾವಣೆ ಕಣ ಮದಗಜಗಳ ಹೋರಾಟದ ಜೊತೆಗೆ ಒಕ್ಕಲಿಗ ನಾಯಕರಾದ ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್ ಅವರ ಹೋರಾಟದ ನಡುವೆ, ಒಕ್ಕಲಿಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಯೋಜಿಸಲಾಗುತ್ತಿದೆ. ಹೀಗಾಗಿ ಚನ್ನಪಟ್ಟಣ ಉಪಚುನಾವಣೆ ಒಕ್ಕಲಿಗರ ಪ್ರಬಲ ನಾಯಕರಿಬ್ಬರ ನಡುವಿನ ಪ್ರತಿಷ್ಠೆಯ ಕಣವಾಗಲಿದೆ.
10
+ ಚನ್ನಪಟ್ಟಣ ಕ್ಷೇತ್ರ; ಇನ್ನೊಂದೆಡೆ ಸಿ.ಪಿ.ಯೋಗೇಶ್ವರ್ ಸಹ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು, ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ಜೊತೆಗೆ ಈಗಾಗಲೇ ಒಂದೆರಡು ಸುತ್ತಿನ ಮಾತುಕತೆ ನಡೆಸಿದ್ದಾರೆ. ಚನ್ನಪಟ್ಟಣ ಕ್ಷೇತ್ರಕ್ಕೆ ಈಗಾಗಲೇ ಕಾಲಿಟ್ಟಿರುವ ಡಿ.ಕೆ.ಶಿವಕುಮಾರ್ ಅವರು, ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಎಂಬ ಕಾರ್ಯಕ್ರಮದ ಮೂಲಕ ಜನರ ನಾಡಿಮಿಡಿತ ತಿಳಿಯಲು ಮುಂದಾಗಿದ್ದಾರೆ. ಇದೇ ವೇಳೆ ಅನ್ಯ ಪಕ್ಷಗಳಲ್ಲಿರುವ ಮುಖಂಡರನ್ನು ತಮ ಪಕ್ಷಕ್ಕೆ ಸೆಳೆಯುವ ಕೆಲಸವನ್ನೂ ಡಿಕೆಶಿ ಅವರು ಮಾಡುತ್ತಿದ್ದಾರೆ.
11
+ ಶಿಗ್ಗಾವಿ ಕ್ಷೇತ್ರ; ಇನ್ನು, ಮಾಜಿ ಮುಖ್ಯಮಂತ್ರಿ ಬೊಮಾಯಿ ಅವರು ಹಾವೇರಿ ಲೋಕಸಭಾ ಕ್ಷೇತ್ರದಿಂದ ವಿಜೇತರಾಗಿರುವ ಹಿನ್ನಲೆ ತೆರವಾಗಿರುವ ಶಿಗ್ಗಾವಿ ಕ್ಷೇತ್ರಕ್ಕೆ ಪುತ್ರ ಭರತ್ ಬೊಮಾಯಿ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆದಿದೆ. ಕುಟುಂಬದವರಿಗೆ ಟಿಕೆಟ್ ಕೊಟ್ಟರೆ ಬೊಮಾಯಿ ಅವರೇ ವಿಶೇಷ ಗಮನಹರಿಸಿ ಪುತ್ರನನ್ನು ಗೆಲ್ಲಿಸುವ ಜವಾಬ್ದಾರಿ ಹೊತ್ತುಕೊಳ್ಳುತ್ತಾರೆ. ಹೀಗಾಗಿ ಅವರನ್ನು ಅಭ್ಯರ್ಥಿ ಮಾಡಬೇಕೆಂಬ ಒತ್ತಡವೂ ಕೇಳಿಬಂದಿದೆ. ಇದೇ ರೀತಿ ಕಳೆದ ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಚುನಾವಣೆ ಎರಡೂ ಚುನಾವಣೆಗಳಲ್ಲಿ ಸೋತು ರಾಜಕೀಯ ಅತಂತ್ರಕ್ಕೆ ಸಿಲುಕಿರುವ ಬಿ.ಶ್ರೀರಾಮುಲು ಮತ್ತೊಮೆ ಅದೃಷ್ಟ ಪರೀಕ್ಷೆಗಿಳಿಯಲು ಹವಣಿಸುತ್ತಿದ್ದಾರೆ.
12
+ ಸಂಡೂರು ಕ್ಷೇತ್ರ; ಬಳ್ಳಾರಿ ಸಂಸದ ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ರಾಮುಲು ಟಿಕೆಟ್ ನೀಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ. ಆದರೆ ಎರಡು ಚುನಾವಣೆಗಳಲ್ಲಿ ಸೋತಿರುವ ಶ್ರೀರಾಮುಲ್ ಬದಲಿಗೆ ತಮ ಆಪ್ತ ಕೆ.ಎಸ್. ದಿವಾಕರ್ ಬಾಬುಗೆ ಟಿಕೆಟ್ ಕೊಡಿಸಲು ಮಾಜಿ ಸಚಿವ ಹಾಗ��� ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಪ್ರಯತ್ನಿಸುತ್ತಿದ್ದಾರೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿಬರುತ್ತಿದೆ.
13
+ ಒಟ್ಟಾರೆ, ಮೂರು ವಿಧಾನಸಭಾ ಕ್ಷೇತ್ರಗಳಿಗೆ ಇನ್ನೂ ಚುನಾವಣೆ ದಿನಾಂಕ ಘೋಷಣೆಯಾಗದಿದ್ದರೂ, ಮೂರು ಕ್ಷೇತ್ರಗಳಲ್ಲಿ ರಾಜಕೀಯ ಚಟುವಟಿಕೆಗಳು ಆರಂಭವಾಗಿವೆ. ಬಿಜೆಪಿ- ಜೆಡಿಎಸ್ ಮೈತ್ರಿಕೂಟ ಹಾಗೂ ಕಾಂಗ್ರೆಸ್ ನಾಯಕರ ಲೆಕ್ಕಾಚಾರ ಮಾತ್ರ ನಿಗೂಢವಾಗಿದೆ.
eesanje/url_46_44_3.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ದಿನಾಂಕ ಘೋಷಣೆ..?
2
+ ಬೆಂಗಳೂರು,ಆ.16-ಲೋಕಸಭೆ ಚುನಾವಣೆ ಕಾವು ಮುಗಿದ ಬೆನ್ನಲ್ಲೇ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಇಂದು ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆಯಿದೆ. ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಎದುರಾಗಿದ್ದು, ಆಯೋಗ ಇಂದು ಸಮಯವನ್ನು ನಿಗದಿಪಡಿಸುವ ಸಾಧ್ಯತೆಯಿದೆ.
3
+ ಮೂಲಗಳ ಪ್ರಕಾರ ಸೆಪ್ಟಂಬರ್ ತಿಂಗಳ ಕೊನೆಯ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ರಾಮನಗರ ಜಿಲ್ಲೆ, ಚನ್ನಪಟ್ಟಣ, ಬಳ್ಳಾರಿ ಜಿಲ್ಲೆಯ ಸಂಡೂರು ಮತ್ತು ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಎಚ್.ಡಿ.ಕುಮಾರಸ್ವಾಮಿ, ಬಳ್ಳಾರಿಯಿಂದ ತುಕಾರಾಂ ಮತ್ತು ಹಾವೇರಿಯಿಂದ ಬಸವರಾಜ ಬೊಮಾಯಿ ಆಯ್ಕೆಯಾಗಿದ್ದರು.
4
+ ಲೋಕಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ (ಚನ್ನಪಟ್ಟಣ), ತುಕಾರಾಂ (ಸಂಡೂರು), ಬಸವರಾಜ ಬೊಮಾಯಿ (ಶಿಗ್ಗಾವಿ) ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದರು.ತೆರವಾಗಿರುವ ಈ ಮೂರು ಕ್ಷೇತ್ರಗಳಿಗೆ ದಿನಾಂಕವನ್ನು ಘೋಣೆ ಮಾಡುವ ಸಂಭವವಿದ್ದು, ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ಮೈತ್ರಿಕೂಟ ಎನ್ಡಿಎ ನಡುವೆ ಮತ್ತೊಂದು ಸುತ್ತಿನ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಡಲಿದೆ.
5
+ ಶಿಗ್ಗಾವಿ ಕ್ಷೇತ್ರವು ಬಿಜೆಪಿ ತೆಕ್ಕೆಯಲ್ಲಿದ್ದರೆ, ಚನ್ನಪಟ್ಟಣ ಜೆಡಿಎಸ್ ಹಾಗೂ ಸಂಡೂರು ಕಾಂಗ್ರೆಸ್ ಗೆಲುವು ಸಾಧಿಸಿತ್ತು.ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ 19 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ಗೆ ತೀವ್ರ ಹಿನ್ನಡೆ ಉಂಟು ಮಾಡಿತ್ತು. ಇದೀಗ ಮೂರು ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದ್ದರೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಫಿನಿಕ್‌್ಸನಂತೆ ಪುಟಿದೇಳಲು ಸಜ್ಜಾಗಿದೆ.
6
+ ಲೋಕಸಭಾ ಚುನಾವಣೆ ನಂತರ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಸಾಕಷ್ಟು ರಾಜಕೀಯ ಏರುಪೇರುಗಳು ಉಂಟಾಗಿವೆ. ಕರ್ನಾಟಕ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರಕ್ಕೆ ಸಚಿವರಾಗಿದ್ದ ಬಿ.ನಾಗೇಂದ್ರ ತಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸದ್ಯ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದ್ದು, ಜೈಲುಪಾಲಾಗಿದ್ದಾರೆ.
7
+ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಮೇಲೆ ಮುಡಾ ಅಕ್ರಮ ನಿವೇಶನ ಹಂಚಿಕೆ ಆರೋಪ ಕೇಳಿಬಂದಿತ್ತು. ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ತೊಡೆ ತಟ್ಟಿದ ಎನ್ಡಿಎ ಮೈತ್ರಿಕೂಟ ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ನಡೆಸಿ ಸರ್ಕ��ರಕ್ಕೆ ಬಿಸಿ ಮುಟ್ಟಿಸುವಲ್ಲಿ ಯಶಸ್ವಿಯಾಯಿತು.
8
+ ಸೇರಿಗೆ ಸವ್ವಾ ಸೇರು ಎನ್ನುವಂತೆ ಕಾಂಗ್ರೆಸ್ ಕೂಡ ಪ್ರತಿಪಕ್ಷಗಳ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಿ ಮೈಸೂರಿನಲ್ಲಿ ಭರ್ಜರಿ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶಿಸಿ ಸರ್ಕಾರವನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ರವಾನಿಸಿತ್ತು.ಮುಡಾ ಮತ್ತು ವಾಲೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಉಪಚುನಾವಣೆಯಲ್ಲಿ ಸಾಕಷ್ಟು ಪ್ರತಿಧ್ವನಿಸುವ ಸಾಧ್ಯತೆಯಿದೆ.
9
+ ಪ್ರತಿಪಕ್ಷಗಳು ಸರ್ಕಾರದ ವೈಫಲ್ಯಗಳನ್ನೇ ಮುಂದಿಟ್ಟುಕೊಂಡು ಪ್ರಚಾರಕ್ಕಿಳಿಯಲು ಮುಂದಾಗಿವೆ. ಇದರ ನಡುವೆ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಸದ್ದು ಮಾಡುತ್ತಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಗೊಂದಲದ ಬಗ್ಗೆಯೂ ಪ್ರತಿಪಕ್ಷಗಳ ಕೈಗೆ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ.
10
+ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಹೇಳುತ್ತಿದ್ದರೂ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ಆರ್ಥಿ ನೆರವು ನೀಡುವ ಗೃಹಲಕ್ಷ್ಮಿ, ಯುವನಿಧಿ ಯೋಜನೆಯಡಿ ಡಿಪ್ಲೊಮೊ ಮತ್ತು ಪದವಿ ವ್ಯಾಸಂಗ ಮುಗಿಸಿದ ಯುವಕರಿಗೆ ನೀಡುತ್ತಿರುವ ಆರ್ಥಿಕ ನೆರವು ಗೊಂದಲ ಸೃಷ್ಟಿಸಿದೆ. ಇದು ಚುನಾವಣೆಯಲ್ಲಿ ಸದ್ದು ಮಾಡುವ ಸಂಭವವೇ ಹೆಚ್ಚಾಗಿದೆ.
11
+ ಇನ್ನು ಪ್ರತಿಪಕ್ಷಗಳಿಗೂ ಠಕ್ಕರ್ ಕೊಡಲು ಮುಂದಾಗಿರುವ ಕಾಂಗ್ರೆಸ್ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳ ಬಗ್ಗೆಯೂ ದೊಡ್ಡ ಮಟ್ಟದಲ್ಲಿ ಪ್ರಚಾರ ನಡೆಸಲು ಮುಂದಾಗಿದೆ.
12
+ ಕೇಂದ್ರದ ಪುರಸ್ಕೃತ ಯೋಜನೆಗಳಿಗೆ ಹಣ ನೀಡದಿರುವುದು, ಅನುದಾನ ಹಂಚಿಕೆಯಲ್ಲಿ ತಾರತಮ್ಯ, ತೆರಿಗೆ ಪಾವತಿ ವಿಳಂಬ, ನೀರಾವರಿ ಸೇರಿದಂತೆ ಕೆಲವು ಕ್ಷೇತ್ರಗಳಲ್ಲಿ ಉಂಟಾಗಿರುವ ಅನ್ಯಾಯವನ್ನು ಜನತೆಯ ಮುಂದಿಡಲಿದೆ.
13
+ ಮುಡಾ ಅಕ್ರಮದಲ್ಲಿ ಸಿದ್ದರಾಮಯ್ಯ ತಲೆದಂಡಕ್ಕೆ ಪ್ರತಿಪಕ್ಷ ಹವಣಿಸುತ್ತಿದೆ. ಈ ಮೂರು ಕ್ಷೇತ್ರಗಳನ್ನು ಗೆದ್ದು ತಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಅನಿವಾರ್ಯತೆ ಅವರಿಗಿದ್ದರೆ, ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ಥಾನವನ್ನು ಪಲ್ಲಟಗೊಳಿಸಲು ಯತ್ನಿಸುತ್ತಿರುವ ಮತ್ತೊಂದು ಬಣಕ್ಕೆ ಫಲಿತಾಂಶದ ಮೂಲಕ ಉತ್ತರ ನೀಡಲು ಅವರಿಗೆ ಇದು ಸೂಕ್ತ ವೇದಿಕೆಯಾಗಿದೆ.
14
+ ಇದೇ ರೀತಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ಮತ್ತೊಂದು ಸುತ್ತಿನ ವಾಕ್ಸಮರಕ್ಕೂ ಉಪಚುನಾವಣೆ ವೇದಿಕೆಯಾಗುವುದರಲ್ಲಿ ಅನುಮಾನವೇ ಇಲ್ಲ.
eesanje/url_46_44_4.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ : ಸಚಿವ ರಾಜಣ್ಣ
2
+ ಹಾಸನ,ಆ.16-ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ, ಯಥಾಸ್ಥಿತಿಯಾಗಿ ಮುಂದುವರೆಯಲಿದೆ ಎಂದು ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
3
+ ನಗರದ ಜಿಲ್ಲಾ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವಂತೆ ಐದು ಗ್ಯಾರಂಟಿ ಯೋಜನೆಗಳು ಪೂರ್ಣ ಪ್ರಮಾಣದಲ್ಲಿ ಮುಂದುವರೆಯಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು.
4
+ ಇತ್ತೀಚಿಗೆ ರಾಜ್ಯಕ್ಕೆ ಭೇಟಿ ನೀಡಿದ ಸುರ್ಜಿವಾಲ ಸೇರಿದಂತೆ ಇತರೆ ಹೈಕಮಾಂಡ್ ನಾಯಕರು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಸೂಚನೆ ನೀಡಿದ್ದು ಗೊಂದಲ ಆಗದಂತೆ ಐದು ಗ್ಯಾರಂಟಿಗಳನ್ನು ಜಾರಿ ಮಾಡಲು ನಿರ್ದೇಶನ ನೀಡಿದ್ದಾರೆ ಎಂದರು.
5
+ ಹೆಚ್ಚುವರಿಯಾಗಿ ಡಿಸಿಎಂ ಹ್ದುೆ ಸೃಷ್ಟಿ ಸಂಬಂಧ ಹೈಕಮಾಂಡ್ ಗಮನಕ್ಕೆ ತಂದಿದ್ದು ಅವರ ತೀರ್ಮಾನದಂತೆ ಕ್ರಮ ಆಗಲಿದೆ. ಮಹದೇವಪ್ಪ , ಸತೀಶ್ ಜಾರಕಿಹೊಳಿ, ಮುನಿಯಪ್ಪ ದೆಹಲಿ ಪ್ರವಾಸದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ಹೆದ್ದಾರಿ ಯೋಜನೆಗಳ ಸಂಬಂಧ ಕೇಂದ್ರ ಸಚಿವ ಗಡ್ಕರಿ ಅವರೊಂದಿಗೆ ಮಾತುಕತೆ ನಡೆಸಲು ತೆರಳಿದ್ದು ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದರು.
6
+ ಜಿಲ್ಲೆಯಲ್ಲಿ ಈ ಬಾರಿ ಉತ್ತಮವಾಗಿ ಮಳೆಯಾಗಿದ್ದು ಜಲಾಶಯಗಳಿಗೆ ಜೀವಕಳೆ ಬಂದಿದ್ದು ಕೆರೆಕಟ್ಟೆಗಳು ಭರ್ತಿಯಾಗಿ ರೈತರೆಲ್ಲ ಸಂತಸದಿಂದ ಇದ್ದಾರೆ. ಆದರೆ ಕೆಲವೆಡೆ ವಿಪರೀತ ಮಳೆಯಿಂದಾಗಿ ಬೆಳೆಹಾನಿ ಸಂಭವಿಸಿದ್ದು, ರಸ್ತೆ ಸೇರಿದಂತೆ ಆಸ್ತಿಪಾಸ್ತಿಗಳಿಗೆ ನಷ್ಟ ಉಂಟಾಗಿದೆ. ಇದುವರೆಗೂ 524 ಮನೆಗಳು ಹಾನಿಯಾಗಿದ್ದು ಎನ್ಡಿಆರ್ ಎಫ್ ಹಾಗೂ ಎಸ್ಡಿಆರ್ಎ್ ಮಾನದಂಡದಡಿ ಪರಿಹಾರ ವಿತರಣೆ ಕ್ರಮ ಕೈಗೊಳ್ಳಲಾಗುತ್ತಿದೆ.
7
+ ಅತಿವೃಷ್ಟಿ ಕಾರಣ ಮೂರು ಮಂದಿ ಸಾವಿಗೀಡಾಗಿದ್ದು ಅವರಿಗೆ ಪರಿಹಾರವನ್ನು ಒದಗಿಸಲಾಗಿದೆ. ಹಸು- ಕರು ಸಾವಿಗೀಡಾದ ಸಂದರ್ಭದಲ್ಲಿ ಮಾಲೀಕರಿಗೆ ಪರಿಹಾರವನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ರೈತರಿಗೆ ಯಾವುದೇ ಅನ್ಯಾಯ ಆಗದಂತೆ ಸರ್ಕಾರ ಎಲ್ಲಾ ರೀತಿಯ ಅನುಕೂಲ ಕಲ್ಪಿಸಲಿದೆ ಎಂದು ಭರವಸೆ ನೀಡಿದರು.
8
+ ಹೊಸ ಯೋಜನೆಗಳನ್ನು ತರುವ ಮುನ್ನ ಈಗಾಗಲೇ ಅನುಷ್ಠಾನದಲ್ಲಿ ಇರುವಂತಹ ಯೋಜನೆಗಳನ್ನು ಪೂರ್ಣ ಪ್ರಮಾಣದಲ್ಲಿ ಮುಂದುವರೆಸಲು ಹಾಗೂ ಕಾರ್ಯಗತ ಮಾಡಲು ಸರ್ಕಾರ ಬದ್ಧವಾಗಿದೆ ಎಂದರು.ಹಾಸನ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು ಇನ್ನೂ ಹೆಚ್ಚುವರಿ ಭೂಮಿ ಬೇಕಾಗಿದೆ ಏರ್ ಬಸ್ ಲ್ಯಾಂಡ್ ಹಾಗೂ ಟೇಕ್ ಆ್ ಆಗಲು ಹೆಚ್ಚುವರಿ ರನ್ ವೇ ಬೇಕಾಗಿದ್ದು ಅಗತ್ಯ ಭೂಮಿ ಹಾಗೂ ಕಾಮಗಾರಿಕಾರಿಗೆ ಬೇಕಾದ ಅನುದಾನ ಒದಗಿಸಲಾಗುವುದು ಹೆಚ್ಚುವರಿ ಭೂಮಿ ಒದಗಿಸುವ ನಿಟ್ಟಿನಲ್ಲಿ ಅತಿ ಶೀಘ್ರದಲ್ಲಿಯೇ ಸಭೆ ಕರೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹಾಜರಿದ್ದ ಜಿಲ್ಲಾಧಿಕಾ ರಿಗಳು ಹೇಳಿದರು.
9
+ ಹಾಸನ ನಗರದ ರೈಲ್ವೆ ಮೇಲ್ ಸೇತುವೆ ಕಾಮಗಾರಿಗೆ 60 ಕೋಟಿ ಹಣ ಬೇಕಾಗಿದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಕೇಂದ್ರ ಸಚಿವ ಸೋಮಣ್ಣ ಅವರೊಂದಿಗೂ ಮಾತನಾಡಿದ್ದು ಕೇಂದ್ರದ ಹಣದೊಂದಿಗೆ ರೈಲ್ವೆ ರಾಯಾಲ್ಟಿ ಹಣವನ್ನು ಕಾಮಗಾರಿಗೆ ಬಳಸಿಕೊಳ್ಳುವ ನಿಟ್ಟಿನಲ್ಲಿ ಸಚಿವರೊಂದಿಗೆ ಮಾತುಕತೆ ನಡೆಸಿರುವುದಾಗಿ ರಾಜಣ್ಣ ತಿಳಿಸಿದರು.
10
+ ಹಾಸನ ನಗರಸಭೆಯನ್ನು ಕಾರ್ಪೊರೇಷನ್ ಆಗಿ ಮೇಲ್ದರ್ಜೆಗೇರಿಸುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇತ್ತೀಚೆಗೆ 25 ಗ್ರಾಮ ಪಂಚಾಯಿತಿಗಳನ್ನು ನಗರಸಭೆಗೆ ಸೇರ್ಪಡೆಗೊಳಿಸಿದ್ದು ಇಲ್ಲಿ ಇ.ಖಾತೆ ಪಡೆದಿರುವ ದಾಖಲೆಗಳನ್ನೇ ನಗರಸಭೆಯಲ್ಲಿಯೂ ಪರಿಗಣಿಸುವಂತೆ ಸೂಚನೆ ನೀಡಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
11
+ ಗೊರೂರಿನ ಹೇಮಾವತಿ ಜಲಾಶಯಕ್ಕೆ ಮುಖ್ಯಮಂತ್ರಿಗಳು ಆಗಮಿಸಿ ಬಾಗಿನ ಅರ್ಪಿಸುವ ಸಂಬಂಧ ಮಾತನಾಡಲಾಗಿದೆ. ಶೀಘ್ರದಲ್ಲಿಯೇ ಸಿಎಂ ಆಗಮಿಸಿ ಬಾಗಿನ ಅರ್ಪಿಸಲಿದ್ದಾರೆ. ಜಲಾಶಯದ ಎದುರು ಕೆ ಆರ್ ಎಸಾದರಿ ಉದ್ಯಾನವನ ನಿರ್ಮಾಣಕ್ಕೆ ಎಚ್ ಕೆ ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸಿದ್ದು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
12
+ ಮುಡಾ ಹಗರಣ ಸಂಬಂಧ ಸಿ.ಎಂ ವಿರುದ್ಧ ಆರೋಪಗಳನ್ನು ಮಾಡುತ್ತಿರುವವರು ಸಹ ನಿವೇಶನಗಳನ್ನು ಹೊಂದಿದ್ದಾರೆ. 15 ವರ್ಷಗಳ ಹಿಂದೆಯೇ ಬಿಜೆಪಿ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರಿಗೆ ನಿವೇಶನ ನೀಡಲಾಗಿದ್ದು ಮುಖ್ಯಮಂತ್ರಿಗಳಿಗೆ ಕಪ್ಪು ಚುಕ್ಕೆ ತರಲು ಈ ರೀತಿ ಆರೋಪಗಳನ್ನು ಮಾಡುತ್ತಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ, ರಾಜಕೀಯದಲ್ಲಿ ಯಾರು ಸತ್ಯ ಹರಿಶ್ಚಂದ್ರರು ಇಲ್ಲ ಎಂದು ಹೇಳಿದರು.
13
+ ಈ ಬಾರಿ ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಭಕ್ತಾದಿಗಳ ಅನುಕೂಲಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಹಾಗೂ ಕಳೆದ ಬಾರಿಗಿಂತ ಎರಡು ಪಟ್ಟು ಹೆಚ್ಚು ಭಕ್ತರು ದರ್ಶನಕ್ಕೆ ಅವಕಾಶ ಕಲ್ಪಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
14
+ ಈ ವೇಳೆ ಸಂಸದ ಶ್ರೇಯಸ್ ಪಟೇಲ್, ಶಾಸಕ ಸ್ವರೂಪ್ ಪ್ರಕಾಶ್, ಡಿಸಿ ಸಿ.ಸತ್ಯಭಾಮಾ, ಸಿಇಒ ಬಿ.ಆರ್.ಪೂರ್ಣಿಮಾ, ಎಸ್ಪಿ ಮೊಹಮದ್ ಸುಜೀತಾ, ಉಪವಿಭಾಗಾಧಿಕಾರಿ ಮಾರುತಿ ಇತರರು ಇದ್ದರು.
eesanje/url_46_44_5.txt ADDED
@@ -0,0 +1,9 @@
 
 
 
 
 
 
 
 
 
 
1
+ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 15,428 ಹುದ್ದೆಗಳ ಭರ್ತಿಗೆ ಅನುಮೋದನೆ : ಸಿಎಂ
2
+ ಬೆಂಗಳೂರು,ಆ.15– ರಾಜ್ಯಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಒತ್ತು ನೀಡಲಾಗಿದ್ದು, 15,428 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
3
+ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ನಗರ ಜಿಲ್ಲಾಡಳಿತ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಹಮಿಕೊಂಡಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಅಧಿಸೂಚನೆಯಾಗಿ ಬಾಕಿ ಉಳಿದಿದ್ದ 670 ಹುದ್ದೆಗಳೂ ಸೇರಿದಂತೆ ಒಟ್ಟು 11,512 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ವಿವಿಧ ಹಂತದಲ್ಲಿದೆ ಎಂದರು.
4
+ 2023-24 ನೇ ಸಾಲಿನಲ್ಲಿ 54,427 ಕೋಟಿ ವಿದೇಶಿ ಬಂಡವಾಳ ಹೂಡಿಕೆ ಬಂದಿದ್ದು, ದೇಶದಲ್ಲೇ ರಾಜ್ಯ ಮೂರನೇ ಸ್ಥಾನದಲ್ಲಿದೆ. ವಿವಿಧ ಉದ್ಯಮ ಸಂಸ್ಥೆಗಳೊಡನೆ 13 ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದ್ದು, 42,915 ಕೋಟಿ ರೂ. ಹೂಡಿಕೆಯಾಗಿ 22,600 ಹೊಸ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ.
5
+ ಏಕಗವಾಕ್ಷಿ ಅನುಮೋದನಾ ಸಮಿತಿಗಳಲ್ಲಿ 591 ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, 84,232 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ 1,56,986 ಉದ್ಯೋಗಾವಕಾಶಗಳು ಲಭ್ಯವಾಗಲಿವೆ. ರಾಜ್ಯ 1,66,545 ಮಿಲಿಯನ್ ಅಮೆರಿಕನ್ ಡಾಲರ್ ಮೂಲಕ ರಫ್ತು ಮಾಡಿ ದೇಶದಲ್ಲೇ ಮೊದಲನೇ ಸ್ಥಾನದಲ್ಲಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಇದು ಶೇ.5.20 ರಷ್ಟು ಪ್ರಗತಿಯಾಗಿದೆ.
6
+ ಸಂಪೂರ್ಣ ಕ್ಲೀನ್ ಮೊಬಿಲಿಟಿ ವಾಹನ ಮೌಲ್ಯ ಸರಪಳಿಯಲ್ಲಿ 50 ಸಾವಿರ ಕೋಟಿ ಹೂಡಿಕೆ ಆಕರ್ಷಿಸುವ 1 ಲಕ್ಷ ಉದ್ಯೋಗ ಸೃಷ್ಟಿಸುವ ಹೊಸ ಕರಡು ನೀತಿಯನ್ನು ಸಿದ್ಧಪಡಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆ ಹೆಚ್ಚಿಸಲು ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಷ್ಟಿಗಾಗಿ 40 ಕೃಷಿ ನವೋದ್ಯಮಗಳಿಗೆ ಉತ್ತೇಜನ ನೀಡಲಾಗಿದೆ.
7
+ ಬೆಂಗಳೂರಿಗೆ ಆದ್ಯತೆ :ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿ 46,686 ಕೋಟಿ ರೂ. ವೆಚ್ಚದಲ್ಲಿ ದೀರ್ಘಾವಧಿಯ ಮೂಲಸೌಕರ್ಯ ಯೋಜನೆಗಳನ್ನು ಯೋಜಿಸಲಾಗಿದೆ. ಬೆಂಗಳೂರಿನಲ್ಲಿ ಪೆರಿಫೆರಿಲ್ ರಿಂಗ್ ರಸ್ತೆ ನಿರ್ಮಾಣ ಮಾಡಲಾಗುವುದು ಎಂದರು.ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಕೋಟಿ ರೂ.:ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 371 – ಜೆ ಮಾನ್ಯತೆ ದೊರೆತು 10 ವರ್ಷವಾಗಿರುವ ಹಿನ್ನೆಲೆಯಲ್ಲಿ ದಶಮಾನೋತ್ಸವ ಸಂಭ್ರಮಾಚರಣೆಗೆ ನಿರ್ಧರಿಸಲಾಗಿದೆ. ಜೊತೆಗೆ 5 ಸಾವಿರ ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.
8
+ ಬಾಬಾ ಸಾಹೇಬ್ ಅಂಬೇಡ್ಕರ್ ಸ್ಥಾಪಿಸಿದ ಪರಿಷ್ಕೃತ ಹಿತಕಾರಣಿ ಸಭಾ ಹಾಗೂ ಬೆಳಗಾವಿಯಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಚಾರಿತ್ರ��ಕ ಅಧಿವೇಶನ – ಈ ಎರಡಕ್ಕೂ 100 ವರ್ಷ ತುಂಬಿದ್ದು, ಶತಮಾನೋತ್ಸವವನ್ನು ಸರಣೀಯವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಹೇಳಿದರು.
9
+ ಎತ್ತಿನಹೊಳೆ ಯೋಜನೆಗೆ ಈ ವರ್ಷ 855 ಕೋಟಿ ರೂ. ಖರ್ಚು ಮಾಡಲಾಗಿದೆ. ಮೇಕೆದಾಟು ಸಮತೋಲನಾ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಭೂಸ್ವಾದೀನ ಪ್ರಕ್ರಿಯೆಗಳನ್ನು ಚುರುಕುಗೊಳಿಸಲು ಕಾವೇರಿ ನಿಗಮ ವ್ಯಾಪ್ತಿಯ ವಿಭಾಗ ಕಚೇರಿ ಮತ್ತು ಉಪವಿಭಾಗ ಕಚೇರಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ.
eesanje/url_46_44_6.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಯೋಗೇಶ್ವರ್- ಶಿವಕುಮಾರ್
2
+ ಚನ್ನಪಟ್ಟಣ,ಆ.15– ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚನ್ನಪಟ್ಟಣದಲ್ಲಿಂದು ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಪೊಲೀಸರು, ಭದ್ರತಾ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳಿಂದ ಗೌರವ ರಕ್ಷೆ ಸ್ವೀಕರಿಸಿದರು. ಅನಂತರ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರನ್ನು ಸನಾನಿಸಲಾಯಿತು.
3
+ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಸೇರಿದಂತೆ ವಿವಿಧ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳು ಹಾಗೂ ಇತರರು ಭಾಗವಹಿಸಿದ್ದರು.
4
+ ಇತ್ತೀಚೆಗೆ ಪರಸ್ಪರ ರಾಜಕೀಯ ಪ್ರತಿಸ್ಪರ್ಧಿಗಳಾಗಿ ಗುರುತಿಸಿಕೊಂಡಿದ್ದ ಸಿ.ಪಿ.ಯೋಗೇಶ್ವರ್ ಹಾಗೂ ಡಿ.ಕೆ.ಶಿವಕುಮಾರ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದ್ದು, ಅಲ್ಲಿಂದ ಸ್ಪರ್ಧಿಸಲು ಸಿ.ಪಿ.ಯೋಗೇಶ್ವರ್ ಬಿಜೆಪಿ ಟಿಕೆಟ್ ಗಿಟ್ಟಿಸಿ ಎನ್ಡಿಎ ಅಭ್ಯರ್ಥಿಯಾಗಲು ಲಾಬಿ ನಡೆಸಿದ್ದರು.
5
+ ಒಂದು ವೇಳೆ ಅದು ಸಾಧ್ಯವಾಗದೇ ಹೋದರೆ ಕಾಂಗ್ರೆಸ್ ಸೇರ್ಪಡೆಯಾಗಿ ಚುನಾವಣೆಯಲ್ಲಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಬ್ಬರು ನಾಯಕರೂ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ಚರ್ಚೆಗೆ ಗ್ರಾಸವಾಗಿದೆ.
6
+ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧ್ವಜಾರೋಹಣ ನಡೆಸಿದ್ದರಿಂದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎಚ್.ಡಿ.ಕುಮಾರಸ್ವಾಮಿಯವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.
7
+ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 150 ಕೋಟಿ ರೂ.ಗಳ ಅನುದಾನಕ್ಕೆ ನಿನ್ನೆಯಷ್ಟೇ ಮಂಜೂರಾತಿ ನೀಡಿದ್ದಾರೆ. ಇದರಲ್ಲಿ ಕ್ಷೇತ್ರದ ಸಮಾಜದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಲಾಗುವುದು. ಈ ಹಿಂದೆ ಪ್ರಗತಿಯಲ್ಲಿದ್ದ 105 ಕಾಮಗಾರಿಗಳನ್ನು ಮುಂದುವರೆಸಲಾಗುವುದು ಎಂದರು.
8
+ ತಾವು ನಡೆಸಿದ ಜನತಾದರ್ಶನದಲ್ಲಿ 22 ಸಾವಿರ ಅರ್ಜಿಗಳು ಸ್ವೀಕಾರವಾಗಿವೆ. ಅವುಗಳಿಗೆ ಪರಿಹಾರ ಒದಗಿಸಲಾಗುವುದು. ವನ್ಯಜೀವಿಗಳಿಗಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗುತ್ತಿದ್ದು, ಅದನ್ನು ತಡೆಯಲು 65 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಮನೆ ಹಾಗೂ ನಿವೇಶನಕ್ಕಾಗಿ 7 ಸಾವಿರ ಅರ್ಜಿಗಳು ಬಂದಿದ್ದು, 117 ಎಕರೆ ಜಾಗ ಗುರಿತಿಸಿ 5 ಸಾವಿರ ನಿವೇಶನ ಹಂಚಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
9
+ ಜಿಲ್ಲೆಯ ಪ್ರತಿನಿಧಿಯಾಗಿ ಚನ್ನಪಟ್ಟಣದ ಮನೆಮಗನಾಗ��� ಇಲ್ಲಿಗೆ ಬಂದು ಧ್ವಜಾರೋಹಣ ಮಾಡಿದ್ದೇನೆ. ನಿಮ ಸಮಸ್ಯೆಗಳಿಗೆ ಪರಿಹಾರ ದೊರಕಿಸುವುದುನನ್ನ ಆದ್ಯತೆ. ಸ್ವತಂತ್ರ್ಯ ದಿನಾಚರಣೆಯಂದು ಬಂದು ಬಾವುಟ ಹಾರಿಸಿ ಅರ್ಧಕ್ಕೆ ಹೋಗುವುದು ಧ್ವಜಕ್ಕೆ ಮಾಡಿದ ಅಪಮಾನ. ಅದೇ ರೀತಿ ಮತ ಹಾಕಿ ಆಯ್ಕೆ ಮಾಡಿದ ಜನರನ್ನು ಅರ್ಧಕ್ಕೆ ಕೈ ಬಿಟ್ಟು ಹೋಗುವುದೂ ಕೂಡ ಜನರಿಗೆ ಮಾಡುವ ಅಪಮಾನ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.
10
+ ನಾನು ಇಲ್ಲಿ ರಾಜಕಾರಣ ಮಾಡಲು ಬಂದಿಲ್ಲ. ಅಭಿವೃದ್ಧಿ ಏನು ಎಂದು ತಿಳಿಸಲು ಬಂದಿದ್ದೇನೆ. ಹಿಂದಿನ ಶಾಸಕರು ಏನು ಮಾಡಿದರು ಎಂದು ಚರ್ಚಿಸಲು ಬಯಸುವುದಿಲ್ಲ. ಜನರ ಬದುಕಿಗೆ ನೆರವಾಗುವುದು ನಮ ಆದ್ಯತೆ ಎಂದು ಹೇಳಿದರು.
eesanje/url_46_44_7.txt ADDED
@@ -0,0 +1,8 @@
 
 
 
 
 
 
 
 
 
1
+ ರಾಜ್ಯದಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ : ಸಚಿವ ಕೃಷ್ಣಭೈರೇಗೌಡ
2
+ ಬೆಂಗಳೂರು,ಆ.15-ರಾಜ್ಯದಲ್ಲಿ ಸರ್ಕಾರಿ ಭೂಮಿ ಒತ್ತುವರಿಯನ್ನು ತೆರವುಗೊಳಿಸಲು ಕಾರ್ಯಾಚರಣೆ ಆರಂಭಿಸುವುದಾಗಿ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ವಿವರಿಸಿದರು.
3
+ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಅವರು, ರಾಜ್ಯದಲ್ಲಿ ಒಟ್ಟು 1.40 ಕೋಟಿ ಎಕರೆ ಸರ್ಕಾರಿ ಜಮೀನು ಇದ್ದು, ಲ್ಯಾಂಡ್ ಬೀಟ್ ಮೊಬೈಲ್ ತಂತ್ರಾಂಶದ ಮೂಲಕ ಒಟ್ಟು 91,000 ಎಕರೆ ಜಮೀನುಗಳು ಒತ್ತುವರಿಯಾಗಿರುವುದನ್ನು ಗುರುತಿಸಲಾಗಿದೆ, 14.32 ಲಕ್ಷ ಸರ್ಕಾರಿ ಜಮೀನುಗಳ ಸ್ಥಳ ಪರಿಶೀಲನೆಗೆ ಸೂಚಿಸಿದ್ದು ಈ ಪೈಕಿ 13.04 ಲಕ್ಷ ಜಮೀನುಗಳಿಗೆ ಗ್ರಾಮಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂದರು.
4
+ ಇದರಲ್ಲಿ ಕಂದಾಯ ಇಲಾಖೆಯ 1.93 ಲಕ್ಷ ಜಮೀನುಗಳು ಇದ್ದು, ವಿವಿಧ 20 ಇಲಾಖೆಗಳ ಜಮೀನುಗಳನ್ನೂ ಗುರುತಿಸಲಾಗಿದೆ. ಕೆರೆ ಮತ್ತು ಸಶಾನಗಳ ಹೆಚ್ಚುವರಿ ಜವಾಬ್ದಾರಿ ತೆಗೆದುಕೊಂಡು, ಸಮೀಕ್ಷೆ ನಡೆಸಲಾಗಿದೆ. ಈಗಾಗಲೇ ಬಳ್ಳಾರಿ ಜಿಲ್ಲೆಯಲ್ಲಿ ಶೇ.80.27 ರಷ್ಟು ಅಂದರೆ 55.638 ಸರ್ಕಾರಿ ಜಮೀನುಗಳ ಪೈಕಿ 48,786 ಆಸ್ತಿಗಳನ್ನು ಲ್ಯಾಂಡ್ ಬೀಟ್ ತಂತ್ರಾಂಶಕ್ಕೆ ಒಳಪಡಿಸಲಾಗಿದೆ. ಆಗಸ್ಟ್ ತಿಂಗಳಿನಿಂದ ಸರ್ವೇಯರ್ ಲಭ್ಯತೆ ನೋಡಿಕೊಂಡು ಒತ್ತುವರಿ ತೆರವು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
5
+ ಭೂ ಸುರಕ್ಷಾ ಕರ್ಯಕ್ರಮದಡಿ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಇಂಡೆಕ್‌್ಸ ಮಾಡಿ ಡಿಜಿಟಲೀಕರಣ ಮಾಡಲಾಗಿದೆ. ಈ ವರೆಗೆ ಒಟ್ಟು 4,43,27,379 ಕೋಟಿ ಪುಟಗಳನ್ನು ಸ್ಕ್ಯಾನ್ ಮಾಡಲಾಗಿದೆ. 31 ತಾಲ್ಲೂಕಿನಲ್ಲಿ ಪ್ರಾಯೋಗಿಕವಾಗಿ ಕೈಗೆತ್ತಿಕೊಳ್ಳಲಾಗಿದ್ದು, ಉಳಿದ ತಾಲೂಕುಗಳಲ್ಲೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ಒಂದು ವರ್ಷದೊಳಗೆ ದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಇದರಿಂದ ಸರ್ವಜನಿಕರಿಗೆ ದಾಖಲೆಗಳನ್ನು ಒದಗಿಸುವುದರ ಜೊತೆಗೆ, ದಾಖಲೆಗಳ ತಿರುಚುವಿಕೆ, ದಾಖಲೆಗಳ ನಾಪತ್ತೆ ಮೊದಲಾದವುಗಳನ್ನು ತಡೆಯಬಹುದಾಗಿದೆ ಎಂದರು.
6
+ ಜಮೀನು ಮಾರಾಟದಲ್ಲಿ ವಂಚನೆ ತಡೆಯಲು ಪಹಣಿ-ಆಧಾರ್ ಜೋಡಣೆ ಕೈಗೊಳ್ಳಲಾಗಿದೆ, ಒಬ್ಬರು ಮೂರ್ನಾಲ್ಕು ದಶಕಗಳಿಂದ ಜಮೀನು ಸಾಗುವಳಿ ಮಾಡುತ್ತಿದ್ದು, ಅದಕ್ಕೆ ಬೇರೆ ವ್ಯಕ್ತಿಗಳು ಭೂ ಮಂಜೂರಾತಿ ಮಾಡಿಸಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆತಕ ವ್ಯಕ್ತಪಡಿಸಿದರು.
7
+ ರಾಷ್ಟ್ರೀಯ ಐಕ್ಯತೆಯನ್ನು ಕಾಪಾಡುವಂತಹ ಕಾರ್ಯಗಳಲ್ಲಿ ದುಷ್ಠಶಕ್ತಿಗಳ ದಮನಕ್ಕೆ ಹಾಗೂ ರಾಷ್ಟದ ರಕ್ಷಣೆಗೆ, ದೇಶದ ಸಮಗ್ರತೆಗೆ ಎಲ್ಲರೂ ಒಟ್ಟಾಗಿ ಶ್ರಮಿಸುವುದು ನಮೆಲ್ಲರ ಕರ್ತವ್ಯವಾಗಿದೆ ಇಂದು ತಿಳಿಸುತ್ತಾ ಮತ್ತೊಮೆ ಸರ್ವರಿಗೂ 78ನೇ ಸ್ವಾತಂತೋತ್ಸವದ ಹರ್ದಿಕ ಶುಭಾಶಯಗಳನ್���ು ಸಲ್ಲಿಸುತ್ತೇನೆ ಎಂದರು.
8
+ ರಾಜ್ಯ ಕಾಂಗ್ರೆಸ್ ಸರ್ಕಾರ ಆ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಸಮಾಜದ ಸಂಪತ್ತು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವಲ್ಲಿ ಕಟಿಬದ್ಧವಾಗಿದೆ. ಬಡವರು ದುಡಿದ ಹಣವನ್ನು ಶ್ರೀಮಂತರ ಜೇಬಿಗೆ ತುರಕದೆ ಅವರ ಹಣವನ್ನು ಅವರಿಗೇ ನೀಡುವ ಸಲುವಾಗಿ ಇಂದು ರಾಜ್ಯ ಕಾಂಗ್ರೆಸ್ ಸರ್ಕಾರ ಮಹತ್ವದ 5 ಗ್ಯಾರಂಟಿಗಳನು ಜಾರಿಗೆ ತಂದಿದೆ.ಹಸಿವು ಮುಕ್ತ ರ್ನಾಟಕ ಪ್ರತಿ ಲಾನುಭವಿಗೆ ಪ್ರತಿ ತಿಂಗಳು 10 ಕೆಜಿ. ಆಹಾರ ಧಾನ್ಯ ಉಚಿತ -5 ಕೆಜಿ. ಅಕ್ಕಿ ಬದಲಿಗೆ 170/- ರೂ. ಹಣವನ್ನು ಡಿಬಿಟಿ ಮೂಲಕ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ.
eesanje/url_46_44_8.txt ADDED
@@ -0,0 +1,7 @@
 
 
 
 
 
 
 
 
1
+ ಗ್ಯಾರಂಟಿಗಳನ್ನು ನಿಲ್ಲಿಸುವ ಬ್ಲಾಕ್‌ಮೇಲ್‌ ಮಾಡುತ್ತಿದೆ ಸರ್ಕಾರ : ನಿಖಿಲ್ ವಾಗ್ದಾಳಿ
2
+ ಬೆಂಗಳೂರು,ಆ.15-ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಗ್ಯಾರಂಟಿ ಯೋಜನೆ ನಿಲ್ಲಿಸುವುದಾಗಿ ಹೇಳಿದ್ದರು. ಈಗ ಅದೇ ರೀತಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮೂಲಕ ಜನರನ್ನು ಬ್ಲಾಕ್ಮೇಲ್ ಮಾಡಲಾಗುತ್ತಿದೆ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.
3
+ ಜೆಡಿಎಸ್ ಕಚೇರಿಯಲ್ಲಿ ಹಮಿಕೊಂಡಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಜನರಿಗೆ ಕೊಟ್ಟ ಮಾತಿನಂತೆ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳಬೇಕು. ಇದು ಅದರ ಕರ್ತವ್ಯ ಕೂಡ ಎಂದರು.
4
+ ವಿಧಾನಸಭೆಯ ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಕ ಪಾಟೀಲ್ಗೂ ಫ್ರೀ, ಮಹದೇವಪ್ಪಗೂ ಫ್ರೀ ಅಂದಿದ್ರು. ಅವರಾಗಲೀ, ಜನರಾಗಲೀ ಉಚಿತ ಖಾತ್ರಿಗಳನ್ನು ನೀಡುವಂತೆ ಕೇಳಿರಲಿಲ್ಲ. ಆದರೂ 5 ಗ್ಯಾರಂಟಿಯ ಭರವಸೆ ಕೊಟ್ಟಿದ್ದರು. ಗ್ಯಾರಂಟಿ ಯೋಜನೆಗಳು ಸರಿಯಾಗಿ ಜನರಿಗೆ ತಲುಪುತ್ತಿಲ್ಲ ಎಂದು ಹೇಳಿದರು.
5
+ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಆಸ್ತಿಗಳ ಮಾರ್ಗಸೂಚಿ ದರ ಶೇ.30ರಷ್ಟು ಹೆಚ್ಚಳ ಮಾಡಿದ್ದಲ್ಲದೆ, ಡೀಸೆಲ್, ಪೆಟ್ರೋಲ್ ಬೆಲೆ ಹೆಚ್ಚಳ ಮಾಡಲಾಯಿತು. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಸರಿಯಾಗಿ ನೀಡುತ್ತಿಲ್ಲ ಎಂದು ನಿಖಿಲ್ ವಾಗ್ದಾಳಿ ನಡೆಸಿದರು.
6
+ ವಾಲೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಹಾಗೂ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ಮಾಡಿ ಜನರ ಗಮನ ಸೆಳೆಯಲಾಯಿತು ಎಂದರು.ತುಂಗಭದ್ರಾ ಜಲಾಶಯದ ಕ್ರಸ್ಟ್ಗೇಟ್ ಮುರಿದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ 27 ಟಿಎಂಸಿ ನೀರು ಜಲಾಶಯದಿಂದ ಹೊರಗೆ ಹೋಗಿದೆ. 63 ಟಿಎಂಸಿಯಷ್ಟು ನೀರು ಖಾಲಿಯಾದ ನಂತರ ಗೇಟ್ ನಿರ್ಮಾಣ ಮಾಡುವುದಾಗಿ ತಜ್ಞರು ಹೇಳಿದ್ದಾರೆ. ರಾಜ್ಯಸರ್ಕಾರ ರೈತರಿಗೆ ನಷ್ಟವಾಗದಂತೆ ಕ್ರಮ ವಹಿಸಬೇಕು ಎಂದು ಅವರು ಒತ್ತಾಯಿಸಿದರು.
7
+ ಕಾರ್ಯಕ್ರಮದಲ್ಲಿ ಜೆಡಿಎಸ್ ನಗರ ಘಟಕಾಧ್ಯಕ್ಷ ರಮೇಶ್ಗೌಡ, ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ, ಕೆ.ಎ.ತಿಪ್ಪೇಸ್ವಾಮಿ, ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್, ಪಕ್ಷದ ಮುಖಂಡರಾದ ಆರ್.ಪ್ರಕಾಶ್, ನಾರಾಯಣರಾವ್ ಮತ್ತಿತರರು ಪಾಲ್ಗೊಂಡಿದ್ದರು.
eesanje/url_46_44_9.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಮಾಣಿಕ್ ಷಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಹೇಗಿತ್ತು ನೋಡಿ
2
+ ಬೆಂಗಳೂರು,ಆ.15-ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿಂದು ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿತ್ತು. ಅಂಗಾಂಗ ದಾನ ಮಾಡಿರುವ 65 ಕುಟುಂಬದ ಸದಸ್ಯರಿಗೆ ಪ್ರಶಂಸಾ ಪತ್ರ ನೀಡಿಕೆ, ರಾಜ್ಯಸರ್ಕಾರದ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ, ಮೈ ನವಿರೇಳಿಸುವ ಸೇನಾ ಯೋಧರ ಸಾಹಸಮಯ ಬೈಕ್ ಪ್ರದರ್ಶನ, ಸ್ವಾತಂತ್ರ್ಯ ಹೋರಾಟ ನೆನಪಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನಸೂರೆಗೊಂಡವು.
3
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಧ್ವಜಾರೋಹಣ ಮಾಡಿ ರಾಷ್ಟ್ರಧ್ವಜಕ್ಕೆ ನಮನ ಸಲ್ಲಿಸಿದ ಬಳಿಕ ಪೊಲೀಸ್ ತಂಡದವರಿಂದ ರಾಷ್ಟ್ರಗೀತೆ ನುಡಿಸಲಾಯಿತು.ತೆರೆದ ಜೀಪಿನಲ್ಲಿ ಮುಖ್ಯಮಂತ್ರಿ ಪರೇಡ್ ಪರಿವೀಕ್ಷಣೆ ಮತ್ತು ಗೌರವರಕ್ಷೆ ಸ್ವೀಕಾರದ ನಂತರ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವ ದಿನದ ಸಂದೇಶ ನೀಡಿದರು.ಬಳಿಕ ಮಂಜುನಾಥ್ ಮತ್ತು ತಂಡದವರು ರಾಷ್ಟ್ರಗೀತೆಯನ್ನು ಹಾಡಿದರು. ಆನಂತರ ಇದೇ ತಂಡದಿಂದ ನಾಡಗೀತೆ ಮತ್ತು ರೈತಗೀತೆಯನ್ನು ಹಾಡಲಾಯಿತು.
4
+ ಪೆರೇಡ್ ಕಮಾಂಡರ್ ಗೋಪಾಲರೆಡ್ಡಿ ಹಾಗೂ ಡೆಪ್ಯುಟಿ ಕಮಾಂಡರ್ ಹರೀಶ್ ಹೆಚ್.ಎನ್.ನೇತೃತ್ವದಲ್ಲಿ ಗಡಿ ಭದ್ರತಾ ಪಡೆ, ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ, ಕೈಗಾರಿಕಾ ಭದ್ರತಾ ಪಡೆ, ಗೋವಾ ಪೊಲೀಸ್, ಶ್ವಾನದಳ, ಅಬಕಾರಿ, ಸಂಚಾರ ಪೊಲೀಸ್, ಅಗ್ನಿ ಶಾಮಕ ದಳ, ಗೃಹ ರಕ್ಷಕ ದಳ, ಎನ್ಸಿಸಿ, ರಾಷ್ಟ್ರೀಯ ಮಿಲಿಟರಿ ಶಾಲೆ, ಆಮಿರ್ ಪಬ್ಲಿಕ್ ಶಾಲೆ, ಪೊಲೀಸ್ ಪಬ್ಲಿಕ್ ಶಾಲೆ, ಸಮರ್ಥನಂ ಹಾಗೂ ರಮಣಶ್ರೀ ಸಂಸ್ಥೆಗಳ ವಿಕಲಚೇತನ ಮಕ್ಕಳು ಸೇರಿದಂತೆ ವಿವಿಧ ಶಾಲಾ ತುಕಡಿಗಳಿಂದ ಚಿತ್ತಾಕರ್ಷಕ ಪಥಸಂಚಲನ ನಡೆಯಿತು.
5
+ ಮನಸೆಳೆದ ಸಾಂಸ್ಕೃತಿಕ ಕಾರ್ಯಕ್ರಮಗಳು :ಸರ್ಕಾರದ ಐದು ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಕುರಿತು ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ 400 ವಿದ್ಯಾರ್ಥಿಗಳು ನಂದಿಧ್ವಜ, ವೀರಗಾಸೆ, ಡೊಳ್ಳುಕುಣಿತ, ರಾಷ್ಟ್ರಧ್ವಜ, ನಾಡಧ್ವಜ ಹಿಡಿದು ವಿವಿಧ ವೇಷಭೂಷಣಗಳನ್ನು ತೊಟ್ಟು ಪ್ರದರ್ಶನ ನೀಡಿದರು.ಯಲಹಂಕದ ಸರ್ಕಾರಿ ಪ್ರೌಢಶಾಲೆಯ 750 ವಿದ್ಯಾರ್ಥಿಗಳು ಜಯ ಭಾರತಿ ಪ್ರದರ್ಶನವನ್ನು ಮನಸೂರೆಗೊಳ್ಳುವಂತೆ ಪ್ರದರ್ಶಿಸಿದರು.
6
+ ವಿವಿಧ ವೇಷಭೂಷಣ ತೊಟ್ಟು ಸ್ವಾತಂತ್ರ್ಯ ಹೋರಾಟಗಾರರ ಫಲಕ ಹಾಗೂ ರಾಷ್ಟ್ರಧ್ವಜವನ್ನು ಹಿಡಿದು ಕೋಟೆ ಮಾದರಿಯ ಜೊತೆಗೆ ನೀಡಿದಂತಹ ಪ್ರದರ್ಶನ ಸ್ವಾತಂತ್ರ್ಯ ಹೋರಾಟವನ್ನು ನೆನಪಿಸುವಂತಿತ್ತು. ಬಿಬಿಎಂಪಿ ಪಿಳ್ಳಣ್ಣ ಗಾರ್ಡನ್ ಸಂಯುಕ್ತ ಪ.ಪೂ.ಕಾಲೇಜಿನ 700 ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಅಬ್ಬಕ್ಕ ದೇವಿ ಕುರಿತ ಸಮೂಹ ನೃತ್ಯಗಳು, ರೂಪಕಗಳು ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದವು.
7
+ ಮರಾಠ ಲೈಟ್ ಇನ್ಫೆಂಟ್ರಿ ರೆಜಿಮೆಂಟ್ ಸೆಂಟರಿನ ಸಿಪಾಯಿಗಳು ನಡೆಸಿದ ಮಲ್ಲಕಂಬ ಪ್ರದರ್ಶನದ ವಿವಿಧ ಭಂಗಿಗಳು ರೋಮಾಂಚನಗೊಳಿಸಿದವು. ಅಲ್ಲದೆ, ಸೇನಾ ಯೋಧರು ಪ್ಯಾರಾ ಮೋಟರ್ನಲ್ಲಿ ಆಕಾಶದಲ್ಲಿ ಹಾರಾಡುತ್ತಾ ರಾಷ್ಟ್ರಧ್ವಜವನ್ನು ಪ್ರದರ್ಶಿಸಿದರು. ಪ್ರೇಕ್ಷಕರನ್ನು ತುದಿಗಾಲಿನಲ್ಲಿ ನಿಲ್ಲಿಸಿದ್ದ ಶ್ವೇತ ಅಶ್ವ ಹೆಸರಿನ ಸೇನಾ ಯೋಧರ ಬೈಕ್ ಪ್ರದರ್ಶನ ನಿಬ್ಬೆರಗಾಗುವಂತೆ ಮಾಡಿತು.
8
+ ಮಿಲಿಟರಿ ಪೊಲೀಸ್ ಸೆಂಟರ್ ಮತ್ತು ಶಾಲೆಯವರಿಂದ ಮೈ ನವಿರೇಳಿಸುವ ಮೋಟಾರ್ ಸೈಕಲ್ ಪ್ರದರ್ಶನಗಳು ನೆರೆದ ಜನರಲ್ಲಿ ಸಂಚಲನ ಉಂಟು ಮಾಡಿದವು.ಚಲಿಸುವ ಬೈಕಿನ ಮೇಲೆ ವಿವಿಧ ಭಂಗಿಗಳಲ್ಲಿ ಶಿಸ್ತುಬದ್ಧವಾಗಿ ನೀಡಿದ ಸಾಹಸಮಯ ಪ್ರದರ್ಶನ ಪ್ರೇಕ್ಷಕರನ್ನು ಸೂಜಿಗಲ್ಲಿನಂತೆ ಆಕರ್ಷಿಸಿತು.
9
+ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಂಗಾಂಗ ದಾನ ಮಾಡಿದ ಕುಟುಂಬದ ಸದಸ್ಯರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಿದರು. ಅನಂತರ ಸಮಾರಂಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಪಥಸಂಚಲನದಲ್ಲಿ ಪಾಲ್ಗೊಂಡಿದ್ದ ತಂಡಗಳಿಗೆ ಬಹುಮಾನವನ್ನು ವಿತರಿಸಲಾಯಿತು.
10
+ ಸಮಾರಂಭದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
eesanje/url_46_45_1.txt ADDED
@@ -0,0 +1,7 @@
 
 
 
 
 
 
 
 
1
+ ಇಂದಿನಿಂದ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ, ಆರೆಂಜ್‌ ಅಲರ್ಟ್ ಘೋಷಣೆ
2
+ ಬೆಂಗಳೂರು,ಆ.14-ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಭಾರಿ ಮಳೆಯಾಗುವ ಮುನ್ಸೂಚನೆಗಳಿದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಮಿಂಚು ಹಾಗೂ ಜೋರಾದ ಗಾಳಿ ಸಹಿತ ಚದುರಿದಂತೆ ವ್ಯಾಪಕ ಪ್ರಮಾಣದ ಮಳೆಯಾಗಲಿದೆ.
3
+ ಕೆಲವೆಡೆ ಭಾರಿ ಮತ್ತು ಅತಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ನೀಡಿದೆ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ಮಾಡಲಾಗಿದೆ.
4
+ ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಆಧರಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
5
+ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಅರ್ಕಾವತಿ, ಪಾಲಾರ್‌, ಪೊನ್ನಯ್ಯರ್‌, ಪೆನ್ನಾರ್‌ ಮೇಲ್ದಂಡೆ , ಶಿಂಷಾ, ವೇದಾವತಿ, ಕಾವೇರಿ ಹಾಗೂ ಅದರ ಉಪ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇದೆ. ಅಲ್ಲದೆ, ಧೋನಿ ನದಿಯು ವಿಜಯಪುರ ಜಿಲ್ಲೆಯಲ್ಲಿ ಪ್ರವಾಹದ ಮಟ್ಟ ಮೀರಿ ಹರಿಯುವುದರಿಂದ ನದಿಗಳ ತೀರ ಪ್ರದೇಶದ ಜನವಸತಿಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
6
+ ಆಗಸ್ಟ್‌ 16 ಮತ್ತು 17ರಂದು ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಅನಂತರ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ. ಕರಾವಳಿ ಮತ್ತು ಕರಾವಳಿಗೆ ಹೊಂದಿಕೊಂಡಿರುವ ಮಲೆನಾಡು ಜಿಲ್ಲೆಗಳಲ್ಲೂ ಗುಡುಗು, ಮಿಂಚು ಸಹಿತ ಚದುರಿದಂತೆ ವ್ಯಾಪಕವಾದ ಮಳೆಯಾಗುವ ಸಾಧ್ಯತೆಗಳಿವೆ. ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.
7
+ ಇಂದಿನಿಂದ ಮೂರು ದಿನಗಳ ಕಾಲ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕ ಪ್ರಮಾಣದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಭಾರಿ ಮಳೆಯಾಗಬಹುದು ಎಂದು ತಿಳಿಸಲಾಗಿದೆ.
eesanje/url_46_45_10.txt ADDED
@@ -0,0 +1,9 @@
 
 
 
 
 
 
 
 
 
 
1
+ ನ್ಯಾಯಾಲಯದಲ್ಲಿ ಇತ್ಯರ್ಥವಾಗಿರುವ ಒತ್ತುವರಿಗಳನ್ನು ಮಾತ್ರ ತೆರವುಗೊಳಿಸಲು ಸೂಚನೆ : ಖಂಡ್ರೆ
2
+ ಬೆಂಗಳೂರು,ಆ.14-ಅರಣ್ಯ ಭೂಮಿ ಒತ್ತುವರಿ ಪ್ರಕರಣ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದ್ದರೂ ತೆರವಾಗಿರದ ಒತ್ತುವರಿಗಳನ್ನು ಮಾತ್ರ ತೆರವುಗೊಳಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಈ ಬಗ್ಗೆ ರೈತರು ಆತಂಕ ಪಡುವ ಅಗತ್ಯ ಇಲ್ಲ ಎಂದು ಅರಣ್ಯ ಇಲಾಖಾ ಸಚಿವ ಈಶ್ವರ್‌ ಖಂಡ್ರೆ ಭರವಸೆ ನೀಡಿದ್ದಾರೆ.
3
+ ವಿಧಾನ ಸೌಧದಲ್ಲಿ ತಮನ್ನು ಭೇಟಿಯಾದ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ನೇತೃತ್ವದ ಜನಪ್ರತಿನಿಧಿಗಳ ಮತ್ತು ಮಲೆನಾಡು ಕರಾವಳಿ ಜನಪರ ಒಕ್ಕೂಟದ ಪ್ರತಿನಿಧಿಗಳ ನಿಯೋಗಕ್ಕೆ ಸಚಿವರು ಈ ಭರವಸೆ ನೀಡಿದ್ದಾರೆ.
4
+ ಒತ್ತುವರಿ ತೆರವುಗೊಳಿಸುವ ಕುರಿತು ಈಗಾಗಲೇ ಸ್ಪಷ್ಟವಾಗಿ ಆದೇಶ ಕೊಟ್ಟಿದ್ದೇನೆ. ಒತ್ತುವರಿ ಪ್ರಕರಣ ನ್ಯಾಯಾಲಯದಲ್ಲಿ ಇತ್ಯಾರ್ಥವಾಗಿದ್ದರೂ ತೆರವಾಗದೆ ಇರುವ ಬಗ್ಗೆ ನ್ಯಾಯಾಲಯ ಸಹ ಸರ್ಕಾರಕ್ಕೆ ನೋಟಿಸ್‌‍ ನೀಡುತ್ತಿದೆ. ಆದ್ದರಿಂದ ಇಂತಹ ಒತ್ತುವರಿಗಳನ್ನು ಹಾಗೂ 2015 ರ ನಂತರ ಅತಿಕ್ರಮಣವಾಗಿರುವುದನ್ನು ಮಾತ್ರ ತೆರವಿಗೆ ಸೂಚನೆ ನೀಡಲಾಗಿದೆ. ಉಳಿದಂತೆ 3 ಎಕರೆ ಒಳಗಿನ ಒತ್ತುವರಿ ಹಾಗೂ ಇತರೆ ಅರ್ಜಿಗಳು ವಿಲೇವಾರಿ ಆಗದೆ ಇರುವ ಒತ್ತುವರಿಗಳನ್ನು ಮುಟ್ಟ ಬಾರದು ಎಂದು ಸೂಚಿಸಿದ್ದೇನೆ ಎಂದು ಸಚಿವರು ನಿಯೋಗಕ್ಕೆ ತಿಳಿಸಿದ್ದಾರೆ.
5
+ ಒತ್ತುವರಿ ತೆರವುಗೊಳಿಸುವಂತೆ ಸಚಿವರು ನೀಡಿದ ಸೂಚನೆಗಳಿಂದಾಗಿ ಮಲೆನಾಡಿಗರಲ್ಲಿ ಆತಂಕವಿದ್ದು ಸಣ್ಣ ಹಾಗೂ ಅತೀ ಸಣ್ಣ ರೈತರು ಹಾಗೂ ಮನೆಗಳನ್ನು ಕಟ್ಟಿಕೊಂಡವರೆಲ್ಲ ಭಯಭೀತಾರಾಗಿದ್ದಾರೆ. ಇಲಾಖೆಯ ಈ ನಿಲುವಿನಿಂದಾಗಿ ಹಳ್ಳಿಗಳಲ್ಲಿ ಸಣ್ಣ ಪುಟ್ಟ ರೈತರ ಮೇಲೆ ಅಧಿಕಾರಿಗಳು ದಬ್ಬಾಳಿಕೆ ನಡೆಸುತ್ತಿದ್ದಾರೆ. ಹಾಗಾಗಿ ನಿಮ ಸ್ಪಷ್ಟವಾದ ನಿಲುವನ್ನು ತಿಳಿಸಬೇಕು ಎಂದು ನಿಯೋಗವು ಮನವಿ ಮಾಡಿಕೊಂಡಿತ್ತು. ಅಲ್ಲದೆ, ನ್ಯಾಯಾಲಯದಲ್ಲಿ ಇತ್ಯಾರ್ಥ ವಾಗಿರುವ ಕೃಷಿ ಭೂಮಿಯನ್ನು ಸಹ ಮುಂದಿನ ಸಲು ಕುಯ್ಯುವವವರೆಗೆ ತೆರವು ಮಾಡಬಾರದು ಎಂದು ಮನವಿ ಮಾಡಿಕೊಂಡಿತ್ತು.
6
+ ಇದಕ್ಕೆ ಸಕಾರಾತಕವಾಗಿ ಸ್ಪಂದಿಸಿದ ಸಚಿವರು, ನಿಮೆಲ್ಲರ ಕೋರಿಕೆ ಮೇರೆಗೆ ಇನ್ನೊಂದು ಸ್ಪಷ್ಟವಾದ ಸೂಚನೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನೀಡುವುದಾಗಿ ಭರವಸೆ ಕೊಟ್ಟರು. ಯಾವುದನ್ನು ತೆರವು ಮಾಡಬೇಕು ಹಾಗೂ ಯಾವುದನ್ನು ತೆರವು ಮಾಡಬಾರದು ಮತ್ತು ಏತಕ್ಕಾಗಿ ಒತ್ತುವರಿ ತೆರವು ಮಾಡುತ್ತಿದ್ದೇವೆ ಎಂಬ ಸ್ಪಷ್ಟ ಮಾಹಿತಿಯನ್ನು ಅಧಿಕಾರಿಗಳು ಹಾಗೂ ಜನಸಾಮಾನ್ಯರಿಗೆ ತಲುಪುವಂತೆ ವ್ಯವಸ್ಥೆ ಮಾಡುತ್ತೇನೆ ಎಂಬ ಆಶ್ವಾಸನೆಯನ್ನೂ ನಿಯೋಗಕ್ಕೆ ನೀಡಿದರು.
7
+ ಒತ್ತುವರಿ ಮಾಡಿಕೊಂಡು ಕೃಷಿ ಮಾಡುತ್ತಿದ್ದಲ್ಲಿ, ಸಲನ್ನು ಪಡೆಯಲು ಅವಕಾಶ ಮಾಡಿಕೊಡಲು, ಸದ್ಯ ಜಾಗದ ಗಡಿ ಗುರುತಿಸಿ ಈಗ ಬಂದಿರುವ ಸಲನ್ನು ರೈತರು ಕೊಯ್ಲು ಮಾಡುವವರೆಗೂ ಕಾದು, ನಂತರ ಒತ್ತವರಿ ತೆರವು ಮಾಡಲು ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಸಚಿವರು ಹೇಳಿದರು.
8
+ ಪಾರಂಪರಿಕ ಅರಣ್ಯ ಕಾಯ್ದೆಗೆ ತಿದ್ದುಪಡಿ ಮಾಡಲು ವಿಧಾನಸಭೆಯಲ್ಲಿ ನಿರ್ಣಯ ಮಾಡಿ ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಿರುವುದಕ್ಕೆ ಈ ನಿಯೋಗವು ಸಚಿವರಿಗೆ ಕೃತಜ್ಞತೆ ಸಲ್ಲಿಸಿತು.ಈ ವಿಚಾರವಾಗಿ ಕೇಂದ್ರದ ಮೇಲೆ ಸರ್ಕಾರವು ಒತ್ತಡ ಹೇರಲು ನಿಯೋಗ ಕರೆದುಕೊಂಡು ಹೋಗುವಂತೆ ಸಹ ಮನವಿ ಮಾಡಿಕೊಂಡಿತು.
9
+ ಈ ನಿಯೋಗದಲ್ಲಿ ಶೃಂಗೇರಿಯ ಶಾಸಕ ಟಿ.ಡಿ.ರಾಜೇಗೌಡ, ತರಿಕೆರೆ ಶಾಸಕ ಶ್ರೀನಿವಾಸ್‌‍, ಮಾಜಿ ಸಚಿವ ಕಿಮನೆ ರತ್ನಾಕರ್‌, ಮಾಜಿ ಪರಿಷತ್‌ ಸದಸ್ಯ ಗೋಪಾಲ ಸ್ವಾಮಿ, ಗುಂಡ್ಲು ಪೇಟೆ ಶಾಸಕ ಗಣೇಶ್‌ ಹಾಗೂ ಮಲೆನಾಡು ಜನಪರ ಒಕ್ಕೂಟದ ಅನಿಲ್‌ ಹೊಸಕೊಪ್ಪ, ಸುಕೇಶ್‌ ದಾಸನಕೋಡಿಗೆ ಇದ್ದರು.
eesanje/url_46_45_11.txt ADDED
@@ -0,0 +1,6 @@
 
 
 
 
 
 
 
1
+ ರಾಜ್ಯದಲ್ಲಿ ಜುಲೈನಲ್ಲಿ 7971.73 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹ
2
+ ಬೆಂಗಳೂರು, ಆ.14-ಕರ್ನಾಟಕ ರಾಜ್ಯದ ಜುಲೈ ತಿಂಗಳಿನ 7971.73 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹವಾಗಿದೆ. ಕಳೆದ ಜೂನ್‌ ತಿಂಗಳಿಗೆ ಹೋಲಿಸಿದರೆ 197.9 ಕೋಟಿ ರೂ. ಹೆಚ್ಚು ಸಂಗ್ರಹವಾಗಿದೆ.
3
+ ವಾಣಿಜ್ಯ ತೆರಿಗೆಗಳ ಇಲಾಖೆಯ ಮಾಹಿತಿ ಪ್ರಕಾರ ಜುಲೈ ತಿಂಗಳಿನಲ್ಲಿ 5990.38 ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ, 1893.31 ಕೋಟಿ ರೂ. ಕರ್ನಾಟಕ ಮಾರಾಟ ತೆರಿಗೆ ಹಾಗೂ 88.04 ಕೋಟಿ ರೂ. ವೃತ್ತಿ ತೆರಿಗೆ ಸಂಗ್ರಹಿಸಲಾಗಿದೆ.
4
+ ಜೂನ್‌ ತಿಂಗಳಿಗೆ ಹೋಲಿಸಿದರೆ, ವೃತ್ತಿ ತೆರಿಗೆ ಸಂಗ್ರಹ ಕಡಿಮೆಯಾಗಿದ್ದು, ಸರಕು ಮತ್ತು ಸೇವಾ ತೆರಿಗೆ ಹಾಗೂ ಕರ್ನಾಟಕ ಮಾರಾಟ ತೆರಿಗೆಗಳ ಸಂಗ್ರಹದಲ್ಲಿ ಹೆಚ್ಚಳ ಕಂಡುಬಂದಿದೆ.ಈ ಮೂರು ತೆರಿಗೆಗಳಿಂದ ಏಪ್ರಿಲ್‌ ತಿಂಗಳಲ್ಲಿ 9664.63 ಕೋಟಿ ರೂ. ಸಂಗ್ರಹವಾಗಿತ್ತು. ಅನಂತರದ ಮೇ, ಜೂನ್‌ ಹಾಗೂ ಜುಲೈ ತಿಂಗಳುಗಳಲ್ಲಿ ಆ ಪ್ರಮಾಣದ ವಾಣಿಜ್ಯ ತೆರಿಗೆ ಸಂಗ್ರಹಣೆಯಾಗಿಲ್ಲ.
5
+ ಕಳೆದ ವರ್ಷದ ಜುಲೈ ತಿಂಗಳಿಗೆ ಹೋಲಿಸಿದರೂ ಈ ವರ್ಷದ ಜುಲೈ ತಿಂಗಳ ವಾಣಿಜ್ಯ ತೆರಿಗೆ ಸಂಗ್ರಹ 515.44 ಕೋಟಿ ರೂ.ನಷ್ಟು ಹೆಚ್ಚಳವಾಗಿದೆ. 2024-25 ನೇ ಹಣಕಾಸು ವರ್ಷದ ಅಂದರೆ, ಕಳೆದ ನಾಲ್ಕು ತಿಂಗಳಲ್ಲಿ 32834.50 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹವಾಗಿದೆ.
6
+ ಇದರಲ್ಲಿ ಸರಕು ಮತ್ತು ಸೇವಾ ತೆರಿಗೆ 25033.82 ಕೋಟಿ ರೂ., ಕರ್ನಾಟಕ ಮಾರಾಟ ತೆರಿಗೆ 7321.76 ಕೋಟಿ ರೂ. ಹಾಗೂ ವೃತ್ತಿ ತೆರಿಗೆ 478.92 ಕೋಟಿ ರೂ. ಸಂಗ್ರಹವಾದಂತಾಗಿದೆ. 2023-24 ನೇ ಆರ್ಥಿಕ ಸಾಲಿನಲ್ಲಿ ರಾಜ್ಯದ ಒಟ್ಟು ವಾಣಿಜ್ಯ ತೆರಿಗೆ ಸಂಗ್ರಹ 94363.27 ಕೋಟಿ ರೂ.ನಷ್ಟಾಗಿತ್ತು.
eesanje/url_46_45_12.txt ADDED
@@ -0,0 +1,6 @@
 
 
 
 
 
 
 
1
+ ರಾಮ್‌ರಹೀಂಗೆ 10ನೇ ಬಾರಿ ಪೆರೋಲ್
2
+ ನವದೆಹಲಿ,ಆ.13-ಕೊಲೆ, ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜೈಲು ಪಾಲಾಗಿರುವ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್‌ ರಾಮ್‌ ರಹೀಮ್‌ ಮತ್ತೆ ಪೆರೋಲ್‌ ಮೇಲೆ ಹೊರಬಂದಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಇಪೆರೋಲ್‌ ಮೂಲಕ ಹೊರಬರುತ್ತಿರುವುದು ದು 10ನೇ ಬಾರಿ.
3
+ 21 ದಿನಗಳ ಕಾಲ ರಿಲೀಫ್‌ ಪಡೆದಿರುವ ಗುರ್ಮೀತ್‌ ರಾಮ್‌ ರಹೀಮ್‌ ಇಂದು ಬೆಳಗ್ಗೆ 6:30ಕ್ಕೆ ಜೈಲಿನಿಂದ ಹೊರ ಬಂದಿದಿದ್ದು ಉತ್ತರಪ್ರದೇಶದ ಭಾಗ್‌ಪತ್‌ ಜಿಲ್ಲೆಯಲ್ಲಿರುವ ಡೇರಾ ಸಚ್ಚಾ ಸೌಧ ಆಶ್ರಮದಲ್ಲಿ ಅವರು ತಂಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
4
+ 56 ವರ್ಷದ ರಾಮ್‌ ರಹೀಮ್, ಪಂಜಾಬ್‌, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಗಮನಾರ್ಹ ಅನುಯಾಯಿಗಳನ್ನು ಹೊಂದಿದ್ದು, ಅನಾರೋಗ್ಯದಿಂದ ಬಳಲುತ್ತಿರುವ ತನ್ನ ತಾಯಿಯನ್ನು ಭೇಟಿ ಮಾಡಲು ಮನವಿ ಸೇರಿದಂತೆ ವಿವಿಧ ಕಾರಣಗಳಿಗಾಗಿ ಎಂಟು ಪ್ರತ್ಯೇಕ ಸಂದರ್ಭಗಳಲ್ಲಿ ಪೆರೋಲ್‌ ಮೇಲೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
5
+ ಏನಿದು ಪೆರೋಲ್?:ಫರ್ಲೋ ಮತ್ತು ಪೆರೋಲ್‌ ನಡುವ ಸ್ವಲ್ಪ ವ್ಯತ್ಯಾಸ ಇದೆ. ಪೆರೋಲ್‌ ನೀಡಲೂಬಹುದು ಅಥವಾ ಅದನ್ನು ತಿರಸ್ಕರಿಸುವ ಅವಕಾಶ ಇದೆ. ಆದರೆ ಫರ್ಲೋ ಅಂದರೆ ಶಿಕ್ಷೆಯ ನಿಗದಿತ ಭಾಗವನ್ನು ಪೂರ್ಣಗೊಳಿಸಿದ ನಂತರ ಕೈದಿಯ ಕಿರು ಬಿಡುಗಡೆಯಾಗಿದೆ. ಇದು ಕೈದಿಯ ಅಧಿಕಾರವಾಗಿರುತ್ತದೆ. ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್ ಅವರಿಗೆ ತಾತ್ಕಾಲಿಕ ಬಿಡುಗಡೆಯ ಮಂಜೂರಾತಿಯನ್ನು ಪ್ರಶ್ನಿಸಿದ ಅರ್ಜಿಯನ್ನು ವಜಾಗೊಳಿಸಿದ ಬಳಿಕ ರಾಮ್‌ ರಹೀಮ್‌ಗೆ ಬಿಡುಗಡೆ ಭಾಗ್ಯ ದೊರೆತಿದೆ.
6
+ ಸಿರ್ಸಾ ಆಶ್ರಮದಲ್ಲಿ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ರಾಮ್‌ ರಹೀಮ್‌ ಅವರನ್ನು ಅಕ್ಟೋಬರ್‌ 18, 2021 ರಂದು ಪಂಚಕುಲದ ವಿಶೇಷ ಸಿಬಿಐ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿತ್ತು. ನ್ಯಾಯಾಲಯ ರಾಮ್‌ ರಹೀಮ್‌ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
eesanje/url_46_45_2.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಜೆಡಿಎಸ್‌‍ ಸಾರಥ್ಯ ನಿಖಿಲ್‌ ಕುಮಾರಸ್ವಾಮಿ ಹೆಗಲಿಗೆ..?
2
+ ಬೆಂಗಳೂರು,ಆ.14-ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿರುವ ಹಿನ್ನೆಲೆಯಲ್ಲಿ ಜೆಡಿಎಸ್‌‍ ರಾಜ್ಯಾಧ್ಯಕ್ಷ ಸ್ಥಾನವನ್ನು ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರಿಗೆ ನೀಡಲು ಸಿದ್ಧತೆ ನಡೆದಿದೆ.
3
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ರಾಜ್ಯದ ಕಾಂಗ್ರೆಸ್‌‍ ಸರ್ಕಾರದ ವಿರುದ್ಧ ಬೆಂಗಳೂರಿನಿಂದ ಮೈಸೂರಿನವರೆಗೆ ಬಿಜೆಪಿ-ಜೆಡಿಎಸ್‌‍ ಜಂಟಿಯಾಗಿ ನಡೆಸಿದ ಪಾದಯಾತ್ರೆಯ ಸಂದರ್ಭದಲ್ಲಿ ನಿಖಿಲ್‌ ಕುಮಾರಸ್ವಾಮಿ ಮುಂಚೂಣಿಯಲ್ಲಿದ್ದರು. ಪಾದಯಾತ್ರೆ ಸಂದರ್ಭದಲ್ಲಿ ಹೆಚ್‌.ಡಿ.ಕುಮಾರಸ್ವಾಮಿ ಅವರ ಜತೆಗೆ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು.
4
+ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಉದ್ದೇಶದಿಂದಲೇ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಪಕ್ಷದ ಕಾರ್ಯಕ್ರಮಗಳಲ್ಲಿ ಇತರ ನಾಯಕರು ಮತ್ತು ಮುಖಂಡರಿಗಿಂತ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ.
5
+ ಈಗಾಗಲೇ ಪಕ್ಷದ ಜವಾಬ್ದಾರಿಯನ್ನು ನಿಖಿಲ್‌ ಕುಮಾರಸ್ವಾಮಿ ನಿಭಾಯಿಸತೊಡಗಿದ್ದಾರೆ. ಹೀಗಾಗಿ ಮುಂದಿನ ರಾಜ್ಯಾಧ್ಯಕ್ಷರಾಗುವುದರಲ್ಲಿ ಅನುಮಾನವಿಲ್ಲ. ಮತ್ತೆ ರಾಜ್ಯಾಧ್ಯಕ್ಷ ಸ್ಥಾನ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರ ಕುಟುಂಬಕ್ಕೆ ದೊರೆತಂತಾಗುತ್ತದೆ.
6
+ ಸದ್ಯಕ್ಕೆ ಜೆಡಿಎಸ್‌‍ ರಾಜ್ಯಾಧ್ಯಕ್ಷರಾಗಿ ಹೆಚ್‌.ಡಿ.ಕುಮಾರಸ್ವಾಮಿ ಅವರೇ ಮುಂದುವರೆದಿದ್ದಾರೆ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಕಳೆದ ಮೂರು ತಿಂಗಳಿನಿಂದಲೂ ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಡುವ ಉದ್ದೇಶದಿಂದ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಯನ್ನು ಲಿಂಗಾಯತ ಇಲ್ಲವೆ ಕುರುಬ ಸಮುದಾಯಕ್ಕೆ ನೀಡಿದರೆ ಪಕ್ಷ ಸಂಘಟನೆಗೆ ಹೆಚ್ಚು ಅನುಕೂಲವಾಗಲಿದೆ ಎಂಬ ಅಭಿಪ್ರಾಯವೂ ಇದೆ.
7
+ ಮಾಜಿ ಸಚಿವ ಹೆಚ್‌. ವಿಶ್ವನಾಥ್‌ ಅವರು ಪಕ್ಷ ತೊರೆದ ನಂತರ ಜೆಡಿಎಸ್‌‍ ರಾಜ್ಯಾಧ್ಯಕ್ಷ ಸ್ಥಾನವನ್ನು ಹೆಚ್‌.ಕೆ.ಕುಮಾರಸ್ವಾಮಿ ಅವರಿಗೆ ನೀಡಲಾಗಿತ್ತು. ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಅವರು ಪಕ್ಷಕ್ಕೆ ಮರಳಿದ ನಂತರ ಕುಮಾರಸ್ವಾಮಿ ಅವರ ಬದಲಿಗೆ ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿತ್ತು.
8
+ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌‍ ಎನ್‌ಡಿಎ ಮೈತ್ರಿಕೂಟ ಸೇರುವುದನ್ನು ವಿರೋಧಿಸಿದ ಇಬ್ರಾಹಿಂ ಅವರನ್ನು ಪಕ್ಷದಿಂದಲೇ ಹೊರ ಹಾಕಿ ಹೆಚ್‌.ಡಿ.ಕುಮಾರಸ್ವಾಮಿ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಯಿತು.ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಕುರುಬ, ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತ ಹಾಗೂ ಒಕ್ಕಲಿಗ ಸಮುದಾಯಕ್ಕೆ ದೊರೆತಿದೆ.
9
+ ಲಿಂಗಾಯತ ಸಮುದಾಯಕ್ಕೆ ಅವಕಾಶ ಸಿಕ್ಕಿಲ್ಲ. ಹೀಗಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟನೆ ಬಲಗೊಳ್ಳಲು ಆ ಭಾಗ ಲಿಂಗಾಯತರಿಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಮಾಡಿಕೊಡುವುದು ಸೂಕ್ತ ಎಂಬ ಅಭಿಪ್ರಾಯ ಪಕ್ಷದ ಆಂತರಿಕ ವಲಯದಲ್ಲಿ ಕೇಳಿ ಬರುತ್ತಿದೆ.
10
+ ಮುಂಬರುವ ನಗರ ಸ್ಥಳೀಯ ಸಂಸ್ಥೆಗಳ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿಗಳ ಹಾಗೂ ಬಿಬಿಎಂಪಿ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಲು ಇದು ಸಹಕಾರಿಯಾಗಲಿದೆ. ಈಗಾಗಲೇ ಅಲ್ಪಸಂಖ್ಯಾತ ಸಮುದಾಯದವರು ಪಕ್ಷದಿಂದ ದೂರ ಸರಿದಿದ್ದಾರೆ. ಬಿಜೆಪಿ ಮೈತ್ರಿ ಒಂದನ್ನೇ ನಂಬಿಕೊಂಡರೆ ಅನುಕೂಲ ಆಗುವುದಿಲ್ಲ. ಸಂಘಟನೆ ದೃಷ್ಟಿಯಿಂದ ಪಕ್ಷದಲ್ಲಿ ಎಲ್ಲಾ ಸಮುದಾಯಗಳಿಗೂ ಸಮಾನ ಅವಕಾಶ ಕಲ್ಪಿಸುವ ಅಗತ್ಯವಿದೆ ಎಂಬ ಅಭಿಪ್ರಾಯವಿದೆ.
11
+ ನಿರೀಕ್ಷೆಯಂತೆ ನಿಖಿಲ್ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಸಾರಥ್ಯ ನೀಡಲಾಗುತ್ತದೆಯೇ ಅಥವಾ ಕೊನೆಯ ಕ್ಷಣದಲ್ಲಿ ಬದಲಾವಣೆ ಮಾಡಿ ಬೇರೆಯವರಿಗೆ ಜವಾಬ್ದಾರಿ ವಹಿಸಲಾಗುವುದೋ ಎಂಬುದನ್ನು ಕಾದು ನೋಡಬೇಕಿದೆ.
eesanje/url_46_45_3.txt ADDED
@@ -0,0 +1,5 @@
 
 
 
 
 
 
1
+ ಬೆಂಗಳೂರು-ಮಂಗಳೂರು ರೈಲು ಸಂಚಾರ ಪುನರಾರಂಭ
2
+ ಮಂಗಳೂರು,ಅ.14 (ಪಿಟಿಐ)ಬಾಳುಪೇಟೆ ಮತ್ತು ಸಕಲೇಶಪುರ ನಡುವೆ ಭೂಕುಸಿತದಿಂದ ಹಾನಿಗೊಳಗಾದ ಹಳಿಯನ್ನು ಪುನರ್‌ ಸ್ಥಾಪಿಸಲಾಗಿದೆ.ಹೀಗಾಗಿ ಇಂದಿನಿಂದ ಬೆಂಗಳೂರು-ಮಂಗಳೂರು ಸೆಕ್ಟರ್‌ನಲ್ಲಿ ಸೇವೆಯನ್ನು ಪುನರಾರಂಭಿಸುವುದಾಗಿ ನೈಋತ್ಯ ರೈಲ್ವೆ ತಿಳಿಸಿದೆ.
3
+ ಆಗಸ್ಟ್‌ 10 ರ ಮುಂಜಾನೆ ಮೈಸೂರು ವಿಭಾಗದ ಬಾಳುಪೇಟೆ ಮತ್ತು ಸಕಲೇಶಪುರ ನಡುವೆ ಭೂಕುಸಿತ ಸಂಭವಿಸಿದ ನಂತರ ಸೇವೆಗಳನ್ನು ರದ್ದುಗೊಳಿಸಲಾಗಿತ್ತು.
4
+ ಅಧಿಕಾರಿಗಳ ಪ್ರಕಾರ, ಬೆಂಗಳೂರು-ಮಂಗಳೂರು ಹಾಗೂ ಕಾರವಾರ ಸೆಕ್ಟರ್‌ನಲ್ಲಿ ರಾತ್ರಿಯ ಮೂರು ರೈಲುಗಳನ್ನು ಅಲ್ಪಾವಧಿಗೆ ನಿಲ್ಲಿಸಲಾಗಿದೆ.ಅದೇ ಭಾಗದಲ್ಲಿ ಹೊಸದಾಗಿ ಭೂಕುಸಿತ ಸಂಭವಿಸಿದ್ದರಿಂದ ಟ್ರ್ಯಾಕ್‌ ಮರುಸ್ಥಾಪನೆ ಕಾರ್ಯಕ್ಕೆ ಸಾಕಷ್ಟು ಸಮಯ ಬೇಕಾಗಿತ್ತು.
5
+ ಜುಲೈ 26 ರಿಂದ ಆಗಸ್ಟ್‌ 9 ರವರೆಗೆ ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ಘಾಟ್‌ ಮಾರ್ಗದಲ್ಲಿ ಯಡಕುಮಾರಿ ಮತ್ತು ಕಡಗರವಳ್ಳಿ ನಿಲ್ದಾಣಗಳ ನಡುವೆ ಭೂಕುಸಿತದಿಂದಾಗಿ ಈ ವಲಯದಲ್ಲಿ ಸೇವೆಗಳ ಮೇಲೆ ಪರಿಣಾಮ ಬೀರಿತು. ಸೇವೆಗಳನ್ನು ಪುನರಾರಂಭಿಸಿದ ಒಂದು ದಿನದೊಳಗೆ, ಹೊಸ ಭೂಕುಸಿತಗಳು ರೈಲು ಸೇವೆಗಳನ್ನು ತಡೆದಿದ್ದವು.
eesanje/url_46_45_4.txt ADDED
@@ -0,0 +1,8 @@
 
 
 
 
 
 
 
 
 
1
+ ಚನ್ನಪಟ್ಟಣ ಉಪಚುನಾವಣೆ ‘ದೋಸ್ತಿ ಟಿಕೆಟ್’ ಯಾರಿಗೆ..?
2
+ ಬೆಂಗಳೂರು,ಆ.14-ಚನ್ನಪಟ್ಟಣ ಉಪ ಚುನಾವಣೆ ಟಿಕೆಟ್ ಯಾರಿಗೆ ಎಂಬ ಕುತೂಹಲ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಟಿಕೆಟ್ಗಾಗಿ ಸಿಪಿ ಯೋಗೇಶ್ವರ್ ಹರ ಸಾಹಸ ಪಡುತ್ತಿದ್ದು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ನಡೆಯ ಮೇಲೆ ಯಾರಿಗೆ ಟಿಕೆಟ್ ಎಂಬ ಬಗ್ಗೆ ಅಂತಿಮ ನಿರ್ಧಾರವಾಗಲಿದೆ.
3
+ ಮಾಜಿ ಸಚಿವ ಸಿಪಿ ಯೋಗೇಶ್ವರ್ ಚನ್ನಪಟ್ಟಣದಿಂದ ಟಿಕೆಟ್ ಪಡೆದುಕೊಳ್ಳಲು ಹರ ಸಾಹಸ ಪಡುತ್ತಿದ್ದಾರೆ. ಕ್ಷೇತ್ರದಲ್ಲಿ ತಮ್ಮದೇ ಆದ ವರ್ಚಸ್ಸು ಹೊಂದಿದ್ದಾರೆ. ಬಿಜೆಪಿ, ಕಾಂಗ್ರೆಸ್, ಸಮಾಜವಾದಿ ಪಕ್ಷ ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿಯೂ ಕ್ಷೇತ್ರದಲ್ಲಿ ಯೋಗೇಶ್ವರ್ ತಮ್ಮದೇ ಆದ ರಾಜಕೀಯ ಶಕ್ತಿಯನ್ನು ಸಂಪಾದಿಸಿದ್ದಾರೆ.
4
+ ಸದ್ಯ ವಿಧಾನಪರಿಷತ್ ಬಿಜೆಪಿ ಸದಸ್ಯರಾಗಿರುವ ಅವರು, ಚನ್ನಪಟ್ಟಣದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ ಇದಕ್ಕೆ ತೊಡಕಾಗಿರುವುದು ಕೇಂದ್ರ ಸಚಿವರಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರ ನಡೆ.ರಾಮನಗರ ಜಿಲ್ಲೆ ( ಬೆಂಗಳೂರು ದಕ್ಷಿಣ) ದಲ್ಲಿ ಕೇವಲ ಒಂದು ಕ್ಷೇತ್ರವನ್ನು ಮಾತ್ರ ಜೆಡಿಎಸ್ ಹೊಂದಿದೆ. ಉಳಿದವು ಕಾಂಗ್ರೆಸ್ ಪಾಲಾಗಿವೆ. ಹೀಗಿರುವಾಗ ಇದ್ದ ಒಂದು ಕ್ಷೇತ್ರವನ್ನು ತಮ ಬಳಿಯೇ ಉಳಿಸಿಕೊಳ್ಳುವುದು ದಳಪತಿಗಳಿಗೆ ಅನಿವಾರ್ಯವಾಗಿದೆ.
5
+ ಬಿಜೆಪಿ ಚಿಹ್ನೆಯಡಿ ಸ್ಪರ್ಧಿಸಲು ಸಿಪಿವೈ ಒಲವು :ಚನ್ನಪಟ್ಟಣದಲ್ಲಿ ಬಿಜೆಪಿ ಚಿಹ್ನೆ ಅಡಿಯಲ್ಲಿ ಸ್ಪರ್ಧಿಸಬೇಕು ಎಂಬುವುದು ಸಿಪಿ ಯೋಗೇಶ್ವರ್ ಒಲವಾಗಿದೆ. ಆದರೆ ಇದಕ್ಕೆ ಎಚ್ಡಿಕೆ ಒಪ್ಪಿಗೆ ಸೂಚಿಸುತ್ತಿಲ್ಲ. ಹೀಗಿರುವಾಗ ಹೈಕಮಾಂಡ್ ಬಳಿಯೂ ಯೋಗೇಶ್ವರ್ ಮಾತುಕತೆ ನಡೆಸಿದ್ದಾರೆ. ಆದರೆ ಪೂರಕವಾದ ಬೆಳವಣಿಗೆಗಳು ನಡೆದಿಲ್ಲ. ಸಹಜವಾಗಿ ಎಚ್ಡಿಕೆಗೆ ಚನ್ನಪಟ್ಟಣ ಅನಿವಾರ್ಯವಾಗಿದೆ. ಆ ಕ್ಷೇತ್ರವನ್ನು ಜೆಡಿಎಸ್ನಲ್ಲೇ ಉಳಿಸಿಕೊಳ್ಳಬೇಕು ಎಂಬುವುದು ಅವರ ತಂತ್ರಗಾರಿಕೆಯಾಗಿದೆ. ಆದರೆ ಅವರು ಯಾರನ್ನು ಕಣಕ್ಕಿಳಿಸುತ್ತಾರೆ? ಎಂಬುವುದು ಮಾತ್ರ ಕುತೂಹಲಕ್ಕೆ ಕಾರಣವಾಗಿದೆ.
6
+ ನಿಖಿಲ್ ಪರವಾಗಿ ಎಚ್ಡಿಕೆ ಒಲವು? :ಚನ್ನಪಟ್ಟಣದಲ್ಲಿ ತಮ ಪುತ್ರ ನಿಖಿಲ್ ಅವರನ್ನೇ ಕುಮಾರಸ್ವಾಮಿ ಕಣಕ್ಕಿಳಿಸುತ್ತಾರಾ? ಎಂಬ ಕುತೂಹಲವೂ ಕೆರಳಿದೆ. ಪಾದಯಾತ್ರೆಯ ಸಂದರ್ಭದಲ್ಲೂ ನಿಖಿಲ್ ಕುಮಾರಸ್ವಾಮಿ ಮತ್ತು ಎಚ್ಡಿಕೆ ನಡವಳಿಕೆಯೂ ಇದಕ್ಕೆ ಪೂರಕವಾಗಿತ್ತು. ಆದರೆ ಈ ಬಗ್ಗೆ ಎಲ್ಲೂ ಅಧಿಕೃತವಾಗಿ ಅವರು ಸುಳಿವನ್ನು ನೀಡಿಲ್ಲ.
7
+ ಸಿಪಿವೈ ಮುಂದಿನ ನಡೆ ಏನು? :ಹಾಗಾದರೆ ಸಿಪಿ ಯೋಗೇಶ್ವರ್ ಅವರ ಮುಂದಿನ ನಡೆ ಏನು ಎಂಬುವುದು ಸಹಜವಾಗಿ ಕುತೂಹಲಕ್ಕೆ ಕಾರಣವಾಗಿದೆ. ಚನ್ನಪಟ್ಟಣದಲ್ಲಿ ಟಿಕೆಟ್ ಸಿಗದೆ ಇದ್ದಲ್ಲಿ ಪಕ್ಷೇತರರಾಗಿ ಅವರು ನಿಲ್ಲುವ ಸುಳಿವನ್ನು ನೀಡಿದ್ದಾರೆ. ಆದರೆ ಕಾಂಗ್ರೆಸ್ ನಾಯಕರ ಜೊತೆಗೂ ಸಂಪರ್ಕದಲ್ಲಿ ಇದ್ದಾರೆ ಎಂಬ ಮಾಹಿತಿಯೂ ಇದೆ. ಹೀಗಿ��ುವಾಗ ಸಿಪಿವೈ ಕಾಂಗ್ರೆಸ್ ಪಕ್ಷದ ಕದ ತಟ್ಟುತ್ತಾರಾ? ಅಥವಾ ಪಕ್ಷೇತರರಾಗಿ ನಿಲ್ಲುತ್ತಾರಾ? ಎಂಬುವುದು ಸದ್ಯ ಪ್ರಶ್ನೆಯಾಗಿ ಉಳಿದಿದೆ.
8
+ ಹೈಕಮಾಂಡ್ ನಡೆಯೂ ಕುತೂಹಲ :ಚನ್ನಪಟ್ಟಣ ವಿಚಾರವಾಗಿ ಬಿಜೆಪಿ ಹೈಕಮಾಂಡ್ ನಡೆ ಏನು ಎಂಬುವುದು ಇನ್ನೂ ಸ್ಪಷ್ಟಗೊಂಡಿಲ್ಲ. ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ತೆರವಾದ 3 ಸ್ಥಾನಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ಈ ಪೈಕಿ ಎರಡು ಕ್ಷೇತ್ರ ಬಿಜೆಪಿಗೆ ಹಾಗೂ ಒಂದು ಕ್ಷೇತ್ರ ಜೆಡಿಎಸ್ಗೆ ಎಂಬ ಮಾತುಕತೆ ನಡೆದಿದೆ ಎನ್ನಲಾಗಿದೆ. ಆದರೆ ಚನ್ನಪಟ್ಟಣದಲ್ಲಿ ಸಿಪಿವೈ ಬಿಜೆಪಿ ಚಿಹ್ನೆಯಲ್ಲೇ ಸ್ಪರ್ಧೆಗೆ ಪಟ್ಟು ಹಿಡಿದಿದ್ದಾರೆ. ಹೀಗಿರುವಾಗ ಬಿಜೆಪಿ ಹೈಕಮಾಂಡ್ ಯಾವ ನಿಲುವು ಕೈಗೊಳ್ಳಲಿದೆ ಎಂಬುವುದನ್ನು ಕಾದುನೋಡಬೇಕಾಗಿದೆ.
eesanje/url_46_45_5.txt ADDED
@@ -0,0 +1,6 @@
 
 
 
 
 
 
 
1
+ ಹೊಸ ಪಡಿತರ ಚೀಟಿ ವಿತರಣೆ ಕುರಿತು ಸಚಿವ ಮುನಿಯಪ್ಪ ಮಹತ್ವದ ಹೇಳಿಕೆ
2
+ ನವದೆಹಲಿ,ಆ.14-ಹೊಸ ಪಡಿತರಚೀಟಿಗಳನ್ನು ನೀಡುವ ಪ್ರಕ್ರಿಯೆಯನ್ನು ಸೆಪ್ಟೆಂಬರ್ನಿಂದ ಆರಂಭಿಸುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ಗಾಗಿ 2.95 ಲಕ್ಷ ಅರ್ಜಿಗಳು ಬಂದಿದ್ದವು. ಅವುಗಳಲ್ಲಿ ಅರ್ಹರಿಗಾಗಿ ಪರಿಶೀಲನೆ ನಡೆಸಿದಾಗ ಸುಮಾರು 50 ಸಾವಿರಕ್ಕೂ ಹೆಚ್ಚು ಅರ್ಜಿಗಳು ವಜಾಗೊಂಡಿವೆ. 2.40 ಲಕ್ಷ ಅರ್ಜಿಗಳನ್ನು ಪರಿಷ್ಕರಿಸಲಾಗಿದೆ ಎಂದರು.
4
+ ಇದೇ ರೀತಿ ಆಹಾರ ಇಲಾಖೆಯಲ್ಲಿ ಅರ್ಹರನ್ನು ಗುರುತಿಸುವ ಕೆಲಸ ಮಾಡುತ್ತಿದ್ದೇವೆ. ಹೊಸದಾಗಿ 90 ಸಾವಿರ ಕಾರ್ಡ್ಗಳಿಗೆ ಬೇಡಿಕೆ ಇದೆ. ಅವುಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಬಾಕಿ ಇರುವ ಅರ್ಜಿಗಳನ್ನು ಇತ್ಯರ್ಥಪಡಿಸಿದ ಬಳಿಕ ಸೆಪ್ಟೆಂಬರ್ನಲ್ಲಿ ಹೊಸ ಕಾರ್ಡ್ಗಳನ್ನು ನೀಡಲು ಆರಂಭಿಸಲಾಗುವುದು ಎಂದು ಹೇಳಿದರು.
5
+ ಹೊಸ ಕಾರ್ಡ್ಗಳು ಎಂದರೆ ಅವಿಭಕ್ತ ಕುಟುಂಬಗಳು ವಿಭಜನೆಯಾಗಿದ್ದರೆ, ಮಕ್ಕಳು, ತಂದೆ-ತಾಯಿಯಿಂದ ಬೇರೆ ವಾಸವಾಗಿದ್ದರೆ ಅವರಿಗೆ ಪ್ರತ್ಯೇಕ ಕಾರ್ಡ್ ನೀಡುವ ಕುರಿತು ತಹಸೀಲ್ದಾರ್ ಮತ್ತು ಆಹಾರ ಇಲಾಖಾಧಿಕಾರಿಗಳು ಪರಿಶೀಲನೆ ನಡೆಸಿ ವರದಿ ನೀಡುತ್ತಾರೆ. ಅನಂತರ ಅರ್ಹರಿಗೆ ಕಾರ್ಡ್ಗಳನ್ನು ನೀಡಲಾಗುವುದು ಎಂದರು.
6
+ ಸಮೀಕ್ಷೆಯ ವೇಳೆ ಅರ್ಹರು ಮತ್ತು ಅನರ್ಹರನ್ನು ಗುರುತಿಸಲಾಗುವುದು. ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡಿದರೆ, ಅನರ್ಹರಿಗೆ ಎಪಿಎಲ್ ಕಾರ್ಡ್ ನೀಡಲಾಗುತ್ತದೆ. ರಾಜ್ಯದಲ್ಲಿ 14 ಲಕ್ಷ ಎಪಿಎಲ್ ಕಾರ್ಡ್ಗಳಿದ್ದು, ಅವರಿಗೆ ಕಡಿಮೆ ದರದಲ್ಲಿ ಅಕ್ಕಿ ನೀಡಲಾಗುವುದು. ಹೆಚ್ಚು ಜನ ಪಡಿತರ ಅಂಗಡಿಗಳಿಂದ ಅಕ್ಕಿ ಖರೀದಿಸುವುದಿಲ್ಲ. ಈ ರೀತಿ ಕಾರ್ಡ್ ಸೌಲಭ್ಯ ಪಡೆದುಕೊಳ್ಳುವವರ ಪ್ರಮಾಣ 1 ರಿಂದ 2 ಲಕ್ಷ ಮಾತ್ರ ಎಂದು ಹೇಳಿದರು.
eesanje/url_46_45_6.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬಡವರಿಗೆ ಮಾತ್ರ ಗ್ಯಾರಂಟಿಗಳನ್ನು ಸೀಮಿತಗೊಳಿಸಲು ಚರ್ಚೆ ಜೋರು
2
+ ನವದೆಹಲಿ,ಆ.14-ರಾಜ್ಯಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳು ಪರಿಷ್ಕರಣೆಯಾಗಬೇಕು ಎಂಬ ಬೇಡಿಕೆಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ದೆಹಲಿ ಪ್ರವಾಸದಲ್ಲಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಶ್ರೀಮಂತರಿಗೆ ಹಾಗೂ ಅಗತ್ಯ ಇಲ್ಲದಿರುವವರಿಗೆ ಪಂಚಖಾತ್ರಿ ಯೋಜನೆಗಳ ಸೌಲಭ್ಯ ನೀಡುವುದನ್ನು ಪರಿಷ್ಕರಣೆ ಮಾಡಬೇಕು.
3
+ ಎಲ್ಲರಿಗೂ ಸೌಲಭ್ಯ ನೀಡುತ್ತಿರುವುದರಿಂದಾಗಿ ಬೊಕ್ಕಸದ 59 ಸಾವಿರ ಕೋಟಿ ರೂ.ಗಳು ಖರ್ಚಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಸಂಪನ್ಮೂಲದ ಕೊರತೆಯಾಗುತ್ತಿದೆ. ಶಾಸಕರು ಪ್ರತಿ ಕ್ಷೇತ್ರಕ್ಕೂ ವಿಶೇಷ ಅನುದಾನ ಕೇಳುತ್ತಿದ್ದು, ಅದನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪಂಚಖಾತ್ರಿ ಯೋಜನೆಗಳನ್ನು ಬಡವರಿಗೆ ಮಾತ್ರ ಸೀಮಿತಗೊಳಿಸಲು ಅವಕಾಶ ನೀಡುವಂತೆ ಹೈಕಮಾಂಡ್ಗೆ ಮನವಿ ಸಲ್ಲಿಸಿದ್ದಾರೆ.
4
+ ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವರು ಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿಯವರ ಅಭಿಪ್ರಾಯಕ್ಕೆ ವಿರೋಧ ವ್ಯಕ್ತಪಡಿಸಿದರೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಭಾಗಶಃ ಸಹಮತ ಸೂಚಿಸಿದ್ದಾರೆ.
5
+ ದೆಹಲಿಯಲ್ಲಿ ಮಾತನಾಡಿದ ಇಬ್ಬರು ಸಚಿವರು, ಹೈಕಮಾಂಡ್ ನಾಯಕರ ಬಳಿಯೂ ತಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.ಎಚ್.ಸಿ.ಮಹದೇವಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸತೀಶ್ ಜಾರಕಿಹೊಳಿ ಏನು ಹೇಳಿದ್ದಾರೆ ಎಂದು ನನಗೆ ಗೊತ್ತಿಲ್ಲ. ಆದರೆ ಅದು ಅವರ ವೈಯಕ್ತಿಕ ಅಭಿಪ್ರಾಯ. ಕಾಂಗ್ರೆಸ್ ತನ್ನ ಪ್ರಣಾಳಿಕೆಗಾಗಿ ಪಂಚಖಾತ್ರಿಗಳ ಭರವಸೆ ನೀಡಿತ್ತು. ಚುನಾವಣೆ ಬಳಿಕ ಅದನ್ನು ಜಾರಿಗೆ ತಂದಿದ್ದೇವೆ.
6
+ ಯಾವುದೇ ಬದಲಾವಣೆ ಅಥವಾ ಪರಿಷ್ಕರಣೆಯಾಗಬೇಕಾದರೆ ಸರ್ಕಾರದ ಸಚಿವ ಸಂಪುಟದಲ್ಲಿ ಮತ್ತು ಪಕ್ಷದಲ್ಲಿ ನಿರ್ಧಾರಗಳಾಗಬೇಕು, ಸದ್ಯಕ್ಕೆ ನಮ ಮುಂದೆ ಅಂತಹ ಪ್ರಸ್ತಾಪಗಳಿಲ್ಲ ಎಂದರು.ಜನರ ನಿರೀಕ್ಷೆಗಳು ಬಹಳಷ್ಟಿವೆ. ಅವೆಲ್ಲವನ್ನೂ ಈಡೇರಿಸಲು ಸಂಪನೂಲ ಅಗತ್ಯವಿದೆ. ಇದಕ್ಕಾಗಿ ತೆರಿಗೆ ಸಂಗ್ರಹವನ್ನು ಪ್ರಾಮಾಣಿಕವಾಗಿ ಹೆಚ್ಚಿಸಬೇಕು. ಬೊಕ್ಕಸ ತುಂಬಿ ತುಳುಕಿದಾಗ ಏನು ಬೇಕಾದರೂ ಮಾಡಬಹುದು. ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ಅಗತ್ಯವಿದೆ. ಅವುಗಳನ್ನು ಬದಲಾವಣೆ ಮಾಡುವ ಸಾಧ್ಯತೆಗಳಿಲ್ಲ ಎಂದು ಹೇಳಿದರು.
7
+ ಇದೇ ಸಂದರ್ಭದಲ್ಲಿ ಮಾತನಾಡಿರುವ ಸಚಿವ ಕೆ.ಎಚ್.ಮುನಿಯಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗ್ಯಾರಂಟಿ ಯೋಜನೆಗಳಲ್ಲಿ ಬದಲಾವಣೆಗಳಿಲ್ಲ ಎಂದು ಹಲವು ಬಾರಿ ಸ್ಪಷ್ಟಪಡಿಸಿದ್ದಾರೆ. ಸತೀಶ್ ಜಾರಕಿಹೊಳಿಯವರ ಅಭಿಪ್ರಾಯ ವೈಯಕ್ತಿಕವಾದದು. ಬಡವರು, ಕೂಲಿಕಾರ್ಮಿಕರು, ಕಟ್ಟಡ ಕಾ���್ಮಿಕರಿಗೆ ಪಂಚಖಾತ್ರಿ ಯೋಜನೆಗಳ ಅಗತ್ಯವಿದೆ. ಬಹುತೇಕ ಯೋಜನೆಗಳನ್ನು ಬಿಪಿಎಲ್ ಕುಟುಂಬಕ್ಕೆ ಸೌಲಭ್ಯ ನೀಡುವ ದೃಷ್ಟಿಯಿಂದ ರೂಪಿಸಲಾಗಿದೆ.
8
+ ಒಂದು ವೇಳೆ ಅನರ್ಹರಿದ್ದರೆ ಅದನ್ನು ಪರಿಷ್ಕರಣೆ ಮಾಡುವುದರಲ್ಲಿ ತಪ್ಪಿಲ್ಲ ಎಂದರು. 200 ಯೂನಿಟ್ ಮೇಲ್ಪಟ್ಟು ವಿದ್ಯುತ್ ಬಳಕೆ ಮಾಡುವವರ ಸಂಖ್ಯೆ ರಾಜ್ಯದಲ್ಲಿ ಶೇ.5 ರಷ್ಟು ಮಾತ್ರ. ಹೀಗಾಗಿ ಗೃಹಜ್ಯೋತಿ ಎಲ್ಲರಿಗೂ ತಲುಪುತ್ತಿದೆ. ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಗಳು ಬಿಪಿಎಲ್ನವರನ್ನು ದೃಷ್ಟಿಯಲ್ಲಿಟ್ಟುಕೊಂಡು ರೂಪಿಸಲಾಗಿದೆ. ಅದರಲ್ಲಿ ಎಪಿಎಲ್ನವರಿದ್ದಾರೆ. ಅನರ್ಹರನ್ನು ಗುರುತಿಸಿ ಪರಿಷ್ಕರಣೆ ಮಾಡಲಾಗುವುದು ಎಂದು ಹೇಳಿದರು.
9
+ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗೆ ಬಿಪಿಎಲ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಿದವರ ಪೈಕಿ ಬಹಳಷ್ಟು ಮಂದಿಯನ್ನು ಅನರ್ಹಗೊಳಿಸಿ ಅರ್ಜಿ ವಜಾಗೊಳಿಸಲಾಗಿದೆ. ಇನ್ನು ಯುವನಿಧಿ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ ಭತ್ಯೆ ನೀಡುವ ಜೊತೆಗೆ ಔದ್ಯೋಗಿಕ ತರಬೇತಿ ನೀಡಿ ಖಾಯಂ ಕೆಲಸ ಪಡೆದುಕೊಳ್ಳಲು ನೆರವಾಗುವ ಸಂಕಲ್ಪವನ್ನು ಸರ್ಕಾರ ಕೈಗೊಂಡಿದೆ. ಶಕ್ತಿ ಯೋಜನೆ ಸಾರ್ವತ್ರಿಕವಾಗಿ ಬಳಕೆಯಾಗುತ್ತಿದೆ ಎಂದರು.
10
+ ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆ ಬಗ್ಗೆ ಆ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಬಹುದು. ಅನ್ನಭಾಗ್ಯ ಯೋಜನೆಯಲ್ಲಿ ಅನರ್ಹರನ್ನು ಗುರುತಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ ಎಂದು ಹೇಳಿದರು.
eesanje/url_46_45_7.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ವಿಜಯೇಂದ್ರ-ಯತ್ನಾಳ್ ಬಣಗಳ ನಡುವೆ ಕೇಶವಕೃಪದಲ್ಲಿ ‘ಸಂಘ’ ಸಂಧಾನ
2
+ ಬೆಂಗಳೂರು,ಆ.14-ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಕೊನೆಗೂ ಸಂಘ ಪರಿವಾರದ ನಾಯಕರು ಮಧ್ಯ ಪ್ರವೇಶಿಸಿದ್ದು, ಇದೇ ತಿಂಗಳ 21 ರಂದು ವಿಜಯೇಂದ್ರ-ಯತ್ನಾಳ್ ಬಣಗಳ ನಡುವೆ ಸಂಧಾನ ಸಭೆ ನಡೆಸಲಿದ್ದಾರೆ.
3
+ ಚಾಮರಾಜಪೇಟೆಯಲ್ಲಿರುವ ಕೇಶವಕೃಪದಲ್ಲಿ ಆರ್ಎಸ್ಎಸ್ನ ಪ್ರಮುಖರಾದ ಮುಕುಂದ್ ನೇತೃತ್ವದಲ್ಲಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಒಟ್ಟು 40 ಮಂದಿಯನ್ನು ಸಭೆಗೆ ಆಹ್ವಾನಿಸಲಾಗಿದೆ.
4
+ ವಿಜಯೇಂದ್ರ ಬಣದ 20 ಮಂದಿ ಹಾಗೂ ಯತ್ನಾಳ್ ಬಣದ 20 ಮಂದಿ ಮಾತ್ರ ಸಭೆಗೆ ಬರುವಂತೆ ಸಂಘ ಪರಿವಾರದ ನಾಯಕರು ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಯಾರೂ ಕೂಡ ಬಲಾಬಲ ಪ್ರದರ್ಶನ ನಡೆಸುವಂತಿಲ್ಲ ಎಂದು ತಾಕೀತು ಮಾಡಿದೆ.
5
+ ರಾಜ್ಯ ಬಿಜೆಪಿಯಲ್ಲಿ ಬಿಕ್ಕಟ್ಟು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವರೊಬ್ಬರ ಮನವಿಯಂತೆ ಆರ್ಎಸ್ಎಸ್ ನಾಯಕರು ಸಂಧಾನ ಸಭೆಯನ್ನು ಏರ್ಪಡಿಸಿದ್ದಾರೆ. ಎರಡು ಬಣದವರನ್ನು ಒಟ್ಟಿಗೆ ಕೂರಿಸಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸುವುದು ಇದರ ಮೂಲ ಉದ್ದೇಶವಾಗಿದೆ ಎಂದು ತಿಳಿದುಬಂದಿದೆ.
6
+ ಕಳೆದ ಒಂದು ವಾರದಿಂದ ನಡೆಯುತ್ತಿರುವ ಬೆಳವಣಿಗೆಗಳಿಂದ ಪಕ್ಷದ ಸಂಘಟನೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಎಲ್ಲರೂ ಕೂಡ ಪ್ರತಿಷ್ಠೆಗೆ ಬಿದ್ದವರಂತೆ ನಡೆದುಕೊಳ್ಳುತ್ತಿರುವುದರಿಂದ ಸಮಸ್ಯೆ ಬೃಹದಾಕಾರವಾಗಿ ಬೆಳೆಯುವ ಮೊದಲೇ ಪ್ರಾರಂಭಿಕ ಹಂತದಲ್ಲೇ ಚಿವುಟಿ ಹಾಕಬೇಕೆಂದು ಕೇಂದ್ರದ ಸಚಿವರೊಬ್ಬರು ಆರ್ಎಸ್ಎಸ್ನ ಶಿವಮೊಗ್ಗ ಮೂಲದ ಪ್ರಭಾವಿ ನಾಯಕರ ಜೊತೆ ಮಾತುಕತೆ ನಡೆಸಿದ್ದರು.
7
+ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೂ ಆತೀಯರಾಗಿರುವ ಆರ್ಎಸ್ಎಸ್ನ ಈ ಪ್ರಭಾವಿ ನಾಯಕರು ಸಾಮಾನ್ಯವಾಗಿ ಬಿಜೆಪಿಯ ಚಟುವಟಿಕೆಗಳಲ್ಲಿ ಮಧ್ಯಪ್ರವೇಶ ಮಾಡುವುದು, ಇಲ್ಲವೇ ತಲೆ ಹಾಕುವುದು ತೀರಾ ವಿರಳ.
8
+ ವಿಜಯೇಂದ್ರ, ಬಿಎಸ್ವೈ ಹಾಗೂ ಕೇಂದ್ರ ಸಚಿವರ ಮನವಿ ಮೇರೆಗೆ ಸಭೆ ನಡೆಸುವಂತೆ ಮುಕುಂದ್ ಅವರಿಗೆ ಪ್ರಭಾವಿ ನಾಯಕರು ನಿರ್ದೇಶನ ನೀಡಿದ್ದಾರೆ.ಸಮಸ್ಯೆ ಉಂಟಾಗಲು ಕಾರಣಗಳೇನು ಎಂಬುದರ ಕುರಿತು ವಿಸ್ತೃತವಾಗಿ ವರದಿಯನ್ನು ತರಬೇಕೆಂದು ಎರಡು ಬಣದವರಿಗೆ ಸೂಚನೆ ಕೊಡಲಾಗಿದೆ.
9
+ ಮುಡಾ ಪಾದಯಾತ್ರೆ ಯಶಸ್ವಿಯಾಗಿದೆಯೇ? ಪಾದಯಾತ್ರೆ ಆರಂಭಕ್ಕೂ ಮುನ್ನ ಯಾರ್ಯಾರನ್ನು ಆಹ್ವಾನಿಸಲಾಗಿತ್ತು, ಕೆಲವರು ಗೈರು ಹಾಜರಾಗಲು ಕಾರಣಗಳೇನು? ಇತ್ಯಾದಿಗಳನ್ನು ಸವಿಸ್ತಾರವಾಗಿ ನೀಡಬೇಕೆಂದು ವಿಜಯೇಂದ್ರ ಬಣಕ್ಕೆ ಸೂಚನೆ ನೀಡಿದ್ದಾರೆ.
10
+ ಇದೇ ರೀತಿ ಯತ್ನಾಳ್ ಬಣಕ್ಕೂ ವಿಜಯೇಂದ್ರ ಮೇಲೆ ಮುನಿಸಿಕೊಳ್ಳಲು ಕಾರಣವೇನು? ಪ್ರತ್ಯೇಕ ಸಭೆ ನಡೆಸಿದ��ದರ ಔಚಿತ್ಯವಾದರೂ ಏನು? ಪಾದಯಾತ್ರೆಗೆ ಏಕೆ ಪಾಲ್ಗೊಳ್ಳಲಿಲ್ಲ? ಪಕ್ಷದ ಚಿಹ್ನೆಯಡಿ ಕೂಡಲಸಂಗಮದಿಂದ ಬಳ್ಳಾರಿವರೆಗೂ ಪಾದಯಾತ್ರೆ ನಡೆಸುತ್ತೀರಾ? ಇದರಲ್ಲಿ ವಿಜಯೇಂದ್ರ ಭಾಗಿಯಾಗಬೇಕೇ? ಬೇಡವೇ? ಹೊಂದಾಣಿಕೆಯ ರಾಜಕಾರಣ ಪದೇ ಪದೇ ಕೇಳಿಬರುತ್ತಿರುವುದೇಕೆ? ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕಾದ ವಿಷಯಗಳನ್ನು ಬಹಿರಂಗವಾಗಿ ಮಾಧ್ಯಮಗಳ ಮುಂದೆ ಹೇಳಿಕೆ ಕೊಡುತ್ತಿರುವುದರ ಬಗ್ಗೆಯೂ ಉತ್ತರಿಸುವಂತೆ ಸೂಚನೆ ನೀಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
11
+ ಇದೀಗ 21 ರಂದು ಉಭಯ ಬಣಗಳು ಮುಖಾಮುಖಿಯಾಗಲಿದ್ದು, ತಮತಮ ವಾದವನ್ನು ಮುಂದಿಡಲಿದ್ದಾರೆ. ರಾಜ್ಯಾಧ್ಯಕ್ಷನಾದ ಮೇಲೆ ಮಾಡಿರುವ ಸಂಘಟನೆ ಲೋಕಸಭಾ ಚುನಾವಣಾ ಫಲಿತಾಂಶ ದಾವಣಗೆರೆ, ಕಲಬುರಗಿ, ಬೀದರ್, ಚಿಕ್ಕೋಡಿ ಇತರೆ ಕ್ಷೇತ್ರಗಳಲ್ಲಿ ಸೋಲಿಗೆ ಕಾರಣಗಳೇನು? ಎಂಬುದರ ಕುರಿತು ವಿಜಯೇಂದ್ರ ವರದಿ ನೀಡಲಿದ್ದಾರೆ.ನನ್ನ ಮೇಲೆ ಹೊಂದಾಣಿಕೆ ರಾಜಕಾರಣ ಆರೋಪ ಮಾಡುವವರು ಆಡಳಿತಾರೂಢ ಕಾಂಗ್ರೆಸ್ ನಾಯಕರ ಜೊತೆ ಹೇಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆಂಬುದನ್ನು ಎಳೆಎಳೆಯಾಗಿ ಬಿಡಿಸಿಡಲಿದ್ದಾರೆ.
12
+ ಆರೋಪ-ಪ್ರತ್ಯಾರೋಪಗಳನ್ನು ಮಾಡುವ ಬದಲಿಗೆ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ವೈಮನಸ್ಸು ಮರೆತು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು ಎಂದು ಸಂಘ ಪರಿವಾರದ ನಾಯಕರು ಎರಡೂ ಬಣದವರಿಗೆ ಸೂಚನೆ ಕೊಡಲಿದ್ದಾರೆ ಎಂದು ತಿಳಿದುಬಂದಿದೆ.
eesanje/url_46_45_8.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಮುಡಾ ಪ್ರಕರಣ : ಸಿಎಂ ಹಾಗೂ ಕುಟುಂಬದವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು
2
+ ಬೆಂಗಳೂರು,ಆ.14-ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕುಟುಂಬದವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೆಂದು ರಾಜ್ಯಪಾಲರಿಗೆ ದೂರು ನೀಡಲಾಗಿದೆ.
3
+ ಕಳೆದ ಮೂರು ವಾರಗಳಿಂದ ಪ್ರಾಸಿಕ್ಯೂಷನ್ ಮುನ್ನಲೆಗೆ ಬಂದಿದ್ದು, ಸಿಎಂ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಿಸಲು ರಾಜ್ಯಪಾಲರು ಅನುಮತಿ ನೀಡಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ದಾಖಲೆಗಳ ಸಮೇತ ದೂರು ಕೊಟ್ಟಿದ್ದಾರೆ.ಈಗಾಗಲೇ ದಾಖಲೆಗಳನ್ನು ನೀಡಿ ಹಲವು ದಿನಗಳು ಕಳೆದಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಇದಕ್ಕೆ ರಾಜ್ಯ ಸರ್ಕಾರವು ಸಮರ್ಪಕವಾದ ಉತ್ತರವನ್ನು ನೀಡಿರುವುದು ಹಳೆಯ ವಿಷಯ.
4
+ ಸದ್ಯ ಎಲ್ಲರ ಚಿತ್ತ ಕಾರ್ಯಾಂಗದ ಮುಖ್ಯಸ್ಥರೂ ಆಗಿರುವ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಲಿದ್ದಾರೆಯೇ ಎಂಬ ಯಕ್ಷ ಪ್ರಶ್ನೆ ಎದುರಾಗಿದೆ. ಹಾಗಾದರೆ ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಎಂದರೇನು? ಇದರಲ್ಲಿ ರಾಜ್ಯಪಾಲರ ಪಾತ್ರವೇನು? ಒಂದು ವೇಳೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದರೆ ಏನಾಗಲಿದೆ?
5
+ ಪ್ರಾಸಿಕ್ಯೂಷನ್ ಎಂದರೇನು? :ಪ್ಯಾಸಿಕ್ಯೂಷನ್ ಎಂದರೆ ಸಾಮಾನ್ಯವಾಗಿ ಕಾನೂನು ಕ್ರಮ ಎನ್ನಬಹುದು. ಅದರಲ್ಲೂ ಮುಖ್ಯಮಂತ್ರಿಯ ವಿರುದ್ಧ ಕಾನೂನು ಕ್ರಮ ಎನ್ನುವುದು ಭಾರತೀಯ ರಾಜ್ಯದಲ್ಲಿ ಸರ್ಕಾರದ ಮುಖ್ಯಸ್ಥರಾಗಿರುವ ಹಾಲಿ ಮುಖ್ಯಮಂತ್ರಿಯ ವಿರುದ್ಧ ಅಪರಾಧ ಚಟುವಟಿಕೆಗಳು ಅಥವಾ ಕಾನೂನಿನ ಉಲ್ಲಂಘನೆಗಾಗಿ ಕಾನೂನು ಪ್ರಕ್ರಿಯೆಗಳನ್ನು ಒಳಗೊಂಡಿರುತ್ತದೆ.ಸಿಎಂ ಸರ್ಕಾರದ ಮುಖ್ಯಸ್ಥನಾಗಿದ್ದು, ಸಂವಿಧಾನಾತಕವಾಗಿ, ಆಡಳಿತಾತಕವಾಗಿ ಉನ್ನತ ಶ್ರೇಣಿಯ ಸ್ಥಾನ ಮತ್ತು ಅವರಿಗೆ ನೀಡಲಾದ ಕಾನೂನು ರಕ್ಷಣೆಗಳಿಂದಾಗಿ ಈ ಪ್ರಕ್ರಿಯೆಯು ಸಾಮಾನ್ಯವಾಗಿ ಸಂಕೀರ್ಣವಾಗಿದೆ.
6
+ ಕಾನೂನು ವಿನಾಯಿತಿ ಇದೆಯಾ? :ಮುಖ್ಯಮಂತ್ರಿಗಳು ಇತರ ಸಾರ್ವಜನಿಕ ಅಧಿಕಾರಿಗಳಂತೆ, ಕಾನೂನು ಕ್ರಮದಿಂದ ಸಂಪೂರ್ಣ ವಿನಾಯಿತಿ ಹೊಂದಿಲ್ಲ. ಆದಾಗ್ಯೂ, ಕೆಲವು ರಕ್ಷಣೆಗಳಿವೆ. ಉದಾಹರಣೆಗೆ, ಕೆಲವು ಸಂದರ್ಭಗಳಲ್ಲಿ ಕಾನೂನು ಕ್ರಮವನ್ನು ಪ್ರಾರಂಭಿಸುವ ಮೊದಲು ರಾಜ್ಯದ ರಾಜ್ಯಪಾಲರ ಒಪ್ಪಿಗೆ ಅಗತ್ಯವಾಗಬಹುದು.
7
+ ಪ್ರಾಸಿಕ್ಯೂಷನ್ಗೆ ಅನುಮೋದನೆ :ಸಿಎಂ ಮೇಲಿರುವ ಆರೋಪವು ಮೇಲ್ನೋಟಕ್ಕೆ ಸತ್ಯ ಎಂದು ಕಂಡು ಬಂದರೆ ಕಾನೂನು ಪ್ರಕ್ರಿಯೆಗಳು ಪ್ರಾರಂಭವಾಗುವ ಮೊದಲು ರಾಜ್ಯಪಾಲರಂತಹ ಮೇಲಿನ ಶ್ರೀಣಿಯ ಅಧಿಕಾರಿಗಳಿಂದ ಅನುಮತಿ ಅಗತ್ಯವಾಗುತ್ತದೆ.ಕಾನೂನು ಕ್ರಮ ಕೈಗ��ಳ್ಳುವ ನಿರ್ಧಾರವನ್ನು ಲಘುವಾಗಿ ತೆಗೆದುಕೊಳ್ಳಲಾಗುವುದಿಲ್ಲ ಮತ್ತು ವಸ್ತುನಿಷ್ಠ ಸಾಕ್ಷ್ಯವನ್ನು ಆಧರಿಸಿದೆ ಎಂದು ಖಚಿತಪಡಿಸಿಕೊಳ್ಳಬೇಕಾಗುತ್ತದೆ.
8
+ ತನಿಖೆ ನಡೆಸುವವರು ಯಾರು? :ಪ್ರಾಸಿಕ್ಯೂಷನ್ಗೆ ಮುನ್ನ, ಕೇಂದ್ರೀಯ ತನಿಖಾ ದಳ (ಸಿಬಿಐ) ಅಥವಾ ಭ್ರಷ್ಟಾಚಾರ ವಿರೋಧಿ ಬ್ಯೂರೋ (ಎಸಿಬಿ) ಯಂತಹ ಏಜೆನ್ಸಿಗಳು ಸಾಮಾನ್ಯವಾಗಿ ಸಂಪೂರ್ಣ ತನಿಖೆಯನ್ನು ನಡೆಸುತ್ತವೆ. ತನಿಖೆಯು ಆರೋಪಗಳನ್ನು ಬೆಂಬಲಿಸಲು ಸಾಕಷ್ಟು ಸಾಕ್ಷ್ಯಗಳನ್ನು ಸಂಗ್ರಹಿಸಬೇಕು.
9
+ ನ್ಯಾಯಾಲಯದ ಪ್ರಕ್ರಿಯೆ ಹೇಗಿರುತ್ತವೆ? :ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮೋದಿಸಿದರೆ, ಪ್ರಕರಣವು ನ್ಯಾಯಾಲಯಕ್ಕೆ ಹೋಗುತ್ತದೆ. ಅಲ್ಲಿ ಮುಖ್ಯಮಂತ್ರಿಯನ್ನು ಇತರ ಆರೋಪಿಗಳಂತೆ ಪರಿಗಣಿಸಲಾಗುತ್ತದೆ. ನ್ಯಾಯಾಲಯದ ಪ್ರಕ್ರಿಯೆಯು ಆರೋಪಗಳನ್ನು ರಚಿಸುವುದು, ಸಾಕ್ಷ್ಯವನ್ನು ಪ್ರಸ್ತುತಪಡಿಸುವುದು ಮತ್ತು ವಿಚಾರಣೆಯನ್ನು ನಡೆಸುವುದು ಒಳಗೊಂಡಿರುತ್ತದೆ.
10
+ ರಾಜಕೀಯ ಪರಿಣಾಮಗಳೇನು? :ಮುಖ್ಯಮಂತ್ರಿಯ ವಿರುದ್ಧದ ಕಾನೂನು ಕ್ರಮವು ಸಾಮಾನ್ಯವಾಗಿ ಗಮನಾರ್ಹ ರಾಜಕೀಯ ಪರಿಣಾಮಗಳನ್ನು ಹೊಂದಿರುತ್ತದೆ, ಏಕೆಂದರೆ ಇದು ರಾಜೀನಾಮೆ ಬೇಡಿಕೆಗಳಿಗೆ ಕಾರಣವಾಗಬಹುದು, ರಾಜಕೀಯ ಅಸ್ಥಿರತೆ ಮತ್ತು ರಾಜ್ಯದ ಆಡಳಿತದ ಮೇಲೆ ಪರಿಣಾಮ ಬೀರುತ್ತದೆ. ಸಂಕ್ಷಿಪ್ತವಾಗಿ ಹೇಳುವುದಾದರೆ, ಮುಖ್ಯಮಂತ್ರಿಯ ವಿರುದ್ಧದ ಕಾನೂನು ಕ್ರಮವು ಕೆಲವು ಸಾಂವಿಧಾನಿಕ ಮತ್ತು ಕಾನೂನು ರಕ್ಷಣೆಗಳಿಂದ ಬದ್ಧವಾಗಿರುವ ಕಾನೂನು ಪ್ರಕ್ರಿಯೆಯನ್ನು ಒಳಗೊಂಡಿರುತ್ತದೆ.
11
+ ಕಾನೂನು ಜಾರಿ ಸಂಸ್ಥೆಗಳು ಅಥವಾ ವಿಶೇಷ ತನಿಖಾ ತಂಡಗಳಿಂದ ತನಿಖೆ ನಡೆಯುತ್ತದೆ. ಸಿಎಂ ವಿರುದ್ಧ ನ್ಯಾಯಾಲಯದಲ್ಲಿ ಔಪಚಾರಿಕ ಆರೋಪಗಳನ್ನು ದಾಖಲಿಸಲಾಗುತ್ತದೆ. ಅಪರಾಧಿಯೋ ಅಥವಾ ನಿರಪರಾಧಿಯೋ ಅಂತ ನಿರ್ಧರಿಸಲು ನ್ಯಾಯಾಂಗ ಪ್ರಕ್ರಿಯೆ ನಡೆಸಲಾಗುತ್ತದೆ. ಒಂದು ವೇಳೆ ತಪ್ಪಿತಸ್ಥರೆಂದು ಕಂಡುಬಂದರೆ, ಸಿಎಂ ಜೈಲುವಾಸ ಸೇರಿದಂತೆ ದಂಡವನ್ನು ಎದುರಿಸುವ ಸಾಧ್ಯತೆ ಇರುತ್ತದೆ.
12
+ ಯಾವ ಪ್ರಾಸಿಕ್ಯೂಷನ್ ನಡೆಯಬಹುದು? :ಭ್ರಷ್ಟಾಚಾರ: ದುರುಪಯೋಗ, ಲಂಚ, ಅಥವಾ ಸಾರ್ವಜನಿಕ ನಿಧಿಯ ದುರುಪಯೋಗ. ಕ್ರಿಮಿನಲ್ ದುಷ್ಕೃತ್ಯ: ವಂಚನೆ, ನಕಲಿ ಅಥವಾ ಹಿಂಸಾಚಾರದಂತಹ ಅಪರಾಧ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ.
13
+ ಅಧಿಕಾರದ ದುರುಪಯೋಗ:ವೈಯಕ್ತಿಕ ಲಾಭಕ್ಕಾಗಿ ಅಥವಾ ಇತರರಿಗೆ ಹಾನಿ ಮಾಡಲು ಅಧಿಕೃತ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು.ಚುನಾವಣಾ ಅಪರಾಧಗಳು: ಚುನಾವಣಾ ಕಾನೂನುಗಳ ಉಲ್ಲಂಘನೆ, ಪ್ರಚಾರದ ಹಣಕಾಸು ಅಕ್ರಮಗಳು ಅಥವಾ ಮತ-ಖರೀದಿ.
eesanje/url_46_45_9.txt ADDED
@@ -0,0 +1,3 @@
 
 
 
 
1
+ ರಾಜ್ಯದ 19 ಪೊಲೀಸ್‌‍ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ : ಇಲ್ಲಿದೆ ಲಿಸ್ಟ್
2
+ ಬೆಂಗಳೂರು, ಆ.14-ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪೊಲೀಸರಿಗೆ ನೀಡುವ ರಾಷ್ಟ್ರಪತಿಯವರ ವಿಶಿಷ್ಠ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ ರಾಜ್ಯದ 19 ಮಂದಿ ಪೊಲೀಸ್‌‍ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಜನರಾಗಿದ್ದಾರೆ.
3
+ ವಿಶಿಷ್ಟ ಸೇವಾ ಪದಕ ಪುರಸ್ಕೃತರು:ಎಂ.ಚಂದ್ರಶೇಖರ್‌- ಎಡಿಜಿಪಿ, ಐಎಸ್‌‍ಡಿಶ್ಲಾಘನೀಯ ಸೇವಾ ಪದಕ ಪುರಸ್ಕೃತರು:ಜೋಷಿ ಶ್ರೀನಾಥ್‌ ಮಹದೇವ- ಪೊಲೀಸ್‌‍ ಅಧೀಕ್ಷಕರು, ಲೋಕಾಯುಕ್ತಸಿ.ಕೆ.ಬಾಬ- ಪೊಲೀಸ್‌‍ ಅಧೀಕ್ಷಕರು, ಬೆಂಗಳೂರು ಗ್ರಾಮಾಂತರ ಜಿಲ್ಲೆರಾಮಗೊಂಡ ಬಿ.ಬಸರಗಿ- ಅಪರ ಪೊಲೀಸ್‌‍ ಅಧೀಕ್ಷಕರು, ಬಳ್ಳಾರಿ ಜಿಲ್ಲೆಎಂ.ಡಿ.ಶರತ್‌- ಪೊಲೀಸ್‌‍ ಅಧೀಕ್ಷಕರು, ಸಿಐಡಿ, ಬೆಂಗಳೂರುಗೋಪಾಲ್‌ ರೆಡ್ಡಿ- ಡಿಸಿಪಿ, ಸಿಎಆರ್‌ ಪಶ್ಚಿಮ, ಬೆಂಗಳೂರುಗಿರಿ ಕೃಷ್ಣಮೂರ್ತಿ- ಡಿವೈಎಸ್‌‍ಪಿ, ಚನ್ನಪಟ್ಟಣ ಉಪವಿಭಾಗ, ರಾಮನಗರ ಜಿಲ್ಲೆ,ಪಿ. ಮುರಳೀಧರ್‌- ಡಿವೈಎಸ್‌‍ಪಿ, ಚಿಂತಾಮಣಿ ಉಪವಿಭಾಗ, ಚಿಕ್ಕಬಳ್ಳಾಪುರ ಜಿಲ್ಲೆಬಸವೇಶ್ವರ- ಡಿವೈಎಸ್‌‍ಪಿ, ಪೊಲೀಸ್‌‍ ಪ್ರಧಾನ ಕಚೇರಿ, ಬೆಂಗಳೂರುಬಸವರಾಜು ಕೆ.- ಡಿವೈಎಸ್‌‍ಪಿ, ಐಎಸ್‌‍ಡಿ, ಕಲಬುರಗಿಎನ್‌.ಮಹೇಶ್‌- ಸಹಾಯಕ ನಿರ್ದೇಶಕರು, ರಾಜ್ಯಗುಪ್ತವಾರ್ತೆ, ಬೆಂಗಳೂರುರವೀಶ್‌ ಎಸ್‌‍.ನಾಯಕ್‌- ಎಸಿಪಿ, ಸಿಸಿಆರ್‌ಬಿ, ಮಂಗಳೂರು ನಗರಪ್ರಭಾಕರ್‌ ಜಿ.- ಎಸಿಪಿ, ಸಂಚಾರ ಯೋಜನೆ, ಬೆಂಗಳೂರುಹರೀಶ್‌ ಹೆಚ್‌.ಆರ್‌- ಸಹಾಯಕ ಕಮಾಂಡೆಂಟ್‌, 11ನೆ ಪಡೆ, ಕೆಎಸ್‌‍ಆರ್‌ಪಿ, ಹಾಸನಎಸ್‌‍.ಮಂಜುನಾಥ್‌- ಆರ್‌ಪಿಐ, 3ನೆ ಪಡೆ, ಕೆಎಸ್‌‍ಆರ್‌ಪಿ, ಬೆಂ.ಮಂಜುನಾಥ ಎಸ್‌‍. ಕಲ್ಲೆದೇವರ್‌- ಪೊಲೀಸ್‌‍ ಸಬ್‌ ಇನ್‌್ಸಪೆಕ್ಟರ್‌, ಎಫ್‌ಪಿಬಿ, ದಾವಣಗೆರೆಗೌರಮ- ಎಎಸ್‌‍ಐ, ಸಿಐಡಿ ಬೆಂ.ವಿಜಯ್‌ಕುಮಾರ್‌- ಸಿಎಚ್‌ಸಿ, ಡಿಸಿಆರ್‌ಬಿ, ಉಡುಪಿ ಜಿಲ್ಲೆಮಹಬೂಬ್‌ ಸಾಹೇಬ ಎನ್‌.ಮುಜಾವರ್‌- ಸಿಎಚ್‌ಸಿ, ಮನಗುಳಿ ಪೊಲೀಸ್‌‍ ಠಾಣೆ, ವಿಜಯಪುರ ಜಿಲ್ಲೆ
eesanje/url_46_46_1.txt ADDED
@@ -0,0 +1,9 @@
 
 
 
 
 
 
 
 
 
 
1
+ ಬೆಂಗಳೂರು-ಬೆಳಗಾವಿಯಲ್ಲಿ 2 ಪ್ರತ್ಯೇಕ ಕುಕ್ಕರ್ ಸ್ಫೋಟ ಪ್ರಕರಣ, 8 ಮಂದಿಗೆ ಗಾಯ
2
+ ಬೆಂಗಳೂರು,ಆ.13-ರಾಜಧಾನಿ ಬೆಂಗಳೂರು ನಗರದ ಪುಟ್ಟೆನಹಳ್ಳಿ ಮತ್ತು ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಕುಕ್ಕರ್‌ ಸ್ಪೋಟ ಪ್ರಕರಣದಲ್ಲಿ ಒಟ್ಟು 8 ಮಂದಿ ಗಾಯಗೊಂಡಿದ್ದಾರೆ.
3
+ ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೋಟೆಲ್‌ ರೂಮ್‌ನಲ್ಲಿ ಕುಕ್ಕರ್‌ ಸ್ಪೋಟಗೊಂಡು ಆರು ಮಂದಿ ಗಾಯಗೊಂಡಿದ್ದು, ಈ ಪೈಕಿ ಇಬ್ಬರು ಮಹಿಳೆಯರ ಸ್ಥಿತಿ ಗಂಭೀರವಾಗಿದೆ.
4
+ ಸವದತ್ತಿಗೆ ಬಂದಿದ್ದ ಬೆಂಗಳೂರು ಮತ್ತು ಯಾದಗಿರಿ ಮೂಲದ ಭಕ್ತಾಧಿಗಳು ಹೋಟೆಲ್‌ನಲ್ಲಿ ರೂಮ್‌ಗಳನ್ನು ಮಾಡಿಕೊಂಡಿದ್ದು, ದೇವಿಗೆ ನೇವೈದ್ಯಕ್ಕಾಗಿ ಹೋಳಿಗೆ ತಯಾರಿಸಲು ಪ್ರೆಸರ್‌ ಕುಕ್ಕರ್‌ನಲ್ಲಿ ಅಡುಗೆ ಮಾಡುತ್ತಿದ್ದಾಗ ಏಕಾಏಕಿ ಸ್ಪೋಟಗೊಂಡಿದೆ.
5
+ ಪರಿಣಾಮ ರೂಮ್‌ನಲ್ಲಿದ್ದ ಇಬ್ಬರು ಮಹಿಳೆಯರು ಸೇರಿದಂತೆ 6 ಮಂದಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಹುಬ್ಬಳ್ಳಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.ಸ್ಥಳಕ್ಕೆ ಜಿಲ್ಲಾ ಎಸ್ಪಿ ಡಾ.ಭೀಮಾಶಂಕರ ಗುಳೇದ ಹಾಗೂ ಸವದತ್ತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
6
+ ಬೆಂಗಳೂರು ವರದಿ:ಅನ್ನ ಮಾಡಲು ಇಟ್ಟಿದ್ದ ಕುಕ್ಕರ್‌ ಏಕಾಏಕಿ ಸ್ಫೋಟಗೊಂಡು, ಶಾರ್ಟ್‌ ಸೆಕ್ಯೂಟ್‌ ಉಂಟಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಯುವಕರು ಗಾಯಗೊಂಡಿದ್ದಾರೆ.ದೆಹಲಿ ಮೂಲದ ಮೋಸಿನ್‌ ಮತ್ತು ಅದರ್‌ಖಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
7
+ ಈ ಇಬ್ಬರು ಯುವಕರು ಪುಟ್ಟೇನಹಳ್ಳಿಯ 24ನೇ ಮುಖ್ಯರಸ್ತೆಯಲ್ಲಿ ರೂಮ್‌ ಮಾಡಿಕೊಂಡು ವಾಸವಾಗಿದ್ದು, ಸೆಲ್ಯೂನ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.ಇಂದು ಮಂಗಳವಾರವಾದ್ದರಿಂದ ರಜೆ ಇದ್ದ ಕಾರಣ ಬೆಳಗ್ಗೆ ತಡವಾಗಿ ಎದ್ದು 11.30ರ ಸುಮಾರಿನಲ್ಲಿ ತಿಂಡಿಗಾಗಿ ಕುಕ್ಕರ್‌ನಲ್ಲಿ ಅನ್ನ ಮಾಡಲು ಅಕ್ಕಿ ಇಟ್ಟಿದ್ದಾರೆ.
8
+ ಕೆಲವೇ ನಿಮಿಷಗಳಲ್ಲಿ ಕುಕ್ಕರ್‌ ಸ್ಫೋಟಗೊಂಡಿದೆ. ಆ ವೇಳೆ ಎಲೆಕ್ಟ್ರಿಕ್‌ ಶಾರ್ಟ್‌ ಸೆರ್ಕ್ಯೂಟ್‌ ಉಂಟಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಈ ಇಬ್ಬರು ಯುವಕರಿಗೆ ಸುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್‌ ರೂಮ್‌ನಲ್ಲಿದ್ದ ಗ್ಯಾಸ್‌‍ ಸಿಲಿಂಡರ್‌ ಹಾಗೆಯೇ ಇದೆ.
9
+ ಇವರ ರೂಮ್‌ನಿಂದ ಶಬ್ದ ಕೇಳಿ ನೆರೆಹೊರೆಯವರು ಬಂದು ನೋಡಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸುದ್ದಿ ತಿಳಿದು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಕುಕ್ಕರ್‌ ಸ್ಫೋಟ ಹಾಗೂ ಶಾರ್ಟ್‌ ಸೆರ್ಕ್ಯೂಟ್‌ಗೆ ಕಾರಣವೇನೆಂಬ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.
eesanje/url_46_46_10.txt ADDED
@@ -0,0 +1,9 @@
 
 
 
 
 
 
 
 
 
 
1
+ ಕೊಚ್ಚಿ ಹೋದ ಟಿಬಿ ಡ್ಯಾಮ್ ಕ್ರಸ್ಟ್‌ಗೇಟ್‌ಗೆ ತಾತ್ಕಾಲಿಕ ಗೇಟ್‌ ಅಳವಡಿಕೆ ಕಾರ್ಯ ಆರಂಭ
2
+ ಬೆಂಗಳೂರು,ಆ.13-ತುಂಗಭದ್ರಾ ಅಣೆಕಟ್ಟಿನಲ್ಲಿ ಕೊಚ್ಚಿ ಹೋಗಿರುವ 19ನೇ ಕ್ರಸ್ಟ್‌ಗೇಟ್‌ಗೆ ತಾತ್ಕಾಲಿಕವಾದ ಗೇಟ್‌ ಅಳವಡಿಸಿ ನೀರನ್ನು ಸಂರಕ್ಷಿಸಲು ಪ್ರಯತ್ನಿಸಲಾಗುತ್ತಿದ್ದು, ಇಂದು ಸಂಜೆ ಕೆಲಸ ಆರಂಭಗೊಳ್ಳಲಿದೆ.ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಜಲಾಶಯದಲ್ಲಿ 105 ಟಿಎಂಸಿಗೂ ಹೆಚ್ಚಿನ ನೀರು ಸಂಗ್ರಹವಾಗಿತ್ತು. ಒತ್ತಡ ಹಾಗೂ ನೀರಿನ ರಭಸಕ್ಕೆ 19ನೇ ಕ್ರಸ್ಟ್‌ಗೇಟ್‌ನ ಸಂಪರ್ಕ ಸರಪಳಿ ತುಂಡಾಗಿ ಕ್ರಸ್ಟ್‌ಗೇಟ್‌ ಕೊಚ್ಚಿಹೋಗಿದೆ.
3
+ ಹೀಗಾಗಿ ನಿರಂತರವಾಗಿ 35 ಸಾವಿರ ಕ್ಯೂಸೆಕ್‌ ನೀರು ಈ ಗೇಟ್‌ನಿಂದ ಹರಿದುಹೋಗುತ್ತಿದೆ. ಇತರ ಕ್ರಸ್ಟ್‌ಗೇಟ್‌ಗಳ ಮೇಲೆ ಒತ್ತಡ ಹೆಚ್ಚಾಗಿ ಅಣೆಕಟ್ಟೆಗೆ ಅಪಾಯವಾಗುವ ಸಾಧ್ಯತೆ ಇದ್ದಿದ್ದರಿಂದಾಗಿ ಉಳಿದ 22 ಗೇಟ್‌ಗಳನ್ನು ತೆರೆದು ಪ್ರತಿದಿನ 1.50 ಲಕ್ಷ ಟಿಎಂಸಿ ನೀರನ್ನು ಹೊರಗೆ ಹರಿಯಬಿಡಲಾಗುತ್ತಿದೆ.
4
+ ಕ್ರಸ್ಟ್‌ಗೇಟ್‌ ದುರಸ್ಥಿಗೆ ಸಂಬಂಧಪಟ್ಟಂತೆ ಎರಡು ರೀತಿಯ ಅಭಿಪ್ರಾಯಗಳು ಕೇಳಿಬಂದಿದ್ದವು. ಒಂದು ತಂಡ ಜಲಾಶಯದಲ್ಲಿ 60 ಟಿಎಂಸಿ ನೀರನ್ನು ಖಾಲಿ ಮಾಡಿದ ಬಳಿಕ ಗೇಟ್‌ ದುರಸ್ಥಿ ಕೆಲಸ ಆರಂಭಿಸಬಹುದು ಎಂದು ವರದಿ ನೀಡಿತ್ತು. ಈ ಮೊದಲು ಇದೇ ಜಲಾಶಯದಲ್ಲಿ ಉಸ್ತುವಾರಿ ಅಧಿಕಾರಿಯಾಗಿ ಕೆಲಸ ಮಾಡಿದ್ದ ಕನ್ನಯ್ಯ ನಾಯ್ಡು ನೇತೃತ್ವದ ತಂಡ ನೀರನ್ನು ಉಳಿಸಿಕೊಂಡೇ ತಾತ್ಕಾಲಿಕವಾಗಿ ಗೇಟ್‌ ಅಳವಡಿಸಬಹುದು ಎಂದು ಸಲಹೆ ನೀಡಿತ್ತು.
5
+ ಜಿಂದಾಲ್‌ ಸಂಸ್ಥೆಯ ತಂತ್ರಜ್ಞರ ಉಸ್ತುವಾರಿಯಲ್ಲಿ ಇಂದು ಸಂಜೆಯಿಂದಲೇ ತಾತ್ಕಾಲಿಕ ಗೇಟ್‌ ಅಳವಡಿಕೆಗೆ ಕೆಲಸ ಆರಂಭಿಸಲಾಗುತ್ತಿದೆ. ಈಗಾಗಲೇ ಹೊಸಪೇಟೆಯ ನಾರಾಯಣ್‌ ಇಂಜಿನಿಯರ್‌ರ‍ಸ ಮತ್ತು ಕೊಪ್ಪಳದ ಹೊಸಹಳ್ಳಿಯ ಹಮೀದ್‌ ಇಂಜಿನಿಯರ್‌ರ‍ಸ ಸಂಸ್ಥೆಗಳಲ್ಲಿ ಎರಡು ಪ್ರತ್ಯೇಕ ಗೇಟ್‌ಗಳನ್ನು ಸಿದ್ಧಪಡಿಸಲಾಗಿದೆ. ಕನ್ನಯ್ಯ ನಾಯ್ಡು ಅವರು ಮೂಲನಕ್ಷೆ ಆಧರಿಸಿ ಸಿದ್ದಪಡಿಸಿಕೊಟ್ಟಿರುವ ವಿನ್ಯಾಸದ ಆಧಾರದ ಮೇಲೆ 20 ಅಡಿ ಅಗಲ, 60 ಅಡಿ ಉದ್ದದ 48 ಟನ್‌ ತೂಕದ ಕ್ರಸ್ಟ್‌ಗೇಟ್‌ಗಳನ್ನು ರೂಪಿಸಲಾಗಿದೆ.
6
+ 4×12 ಅಡಿ ಅಗಲದ ಹಲಗೆಗಳನ್ನು ಬಳಸಿ ಕ್ರಸ್ಟ್ಗೇಟ್ಗಳನ್ನು ಸಿದ್ದಪಡಿಸಲಾಗುತ್ತಿದ್ದು, ಅದನ್ನು ಅಣೆಕಟ್ಟು ಬಳಿ ತರಲಾಗಿದೆ. ಅಣೆಕಟ್ಟೆಯ ತಡೆಗೋಡೆಯ ಮೇಲೆ ಧಾರಣ ಸಾಮರ್ಥ್ಯದ ಕ್ರೇನ್ಗಳನ್ನು ನಿಲ್ಲಿಸಿ ಗೇಟ್ಗಳನ್ನು ಅಳವಡಿಸಲು ಪ್ರಯತ್ನಿಸಲಾಗುತ್ತಿದೆ.
7
+ 4 ಅಡಿಯ ತಲಾ ಎರಡು ಶೆಟ್ಟರ್‌ಗಳನ್ನು ಕೂರಿಸಿ ಒಟ್ಟು 20 ಅಡಿ ಎತ್ತರಕ್ಕೆ 5 ಹಂತದ ಶೆಟ್ಟರ್‌ಗಳನ್ನು ಜೋಡಿಸಿ ತಾತ್ಕಾಲಿಕವಾಗಿ ನೀರು ಹೊರಹರಿಯವುದನ್ನು ತಡೆಯುವ ಹಾಗೂ ಮುಂದಿನ ದಿನಗಳಲ್ಲಿ ಶಾಶ್ವತವಾದ ಕ್ರಸ್ಟ್‌ಗೇಟ್‌ ಅಳವಡಿಸುವಂತೆ ನಿನ್ನೆ ನಡೆದ ತುಂಗಭದ್ರಾ ಜಲಾಶಯ ಉಸ್ತುವಾರಿ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ.
8
+ ಇನ್ನು ಮುಂದೆ ತುಂಗ��ದ್ರಾ ಜಲಾಶಯಕ್ಕೆ ಕಂಪ್ಯೂಟರ್‌ ಆಧಾರಿತ ಕ್ರಸ್ಟ್‌ಗೇಟ್‌ ಚಾಲನಾ ವ್ಯವಸ್ಥೆ ಹಾಗೂ ರೂಟ್‌ ವೇ ಅಳವಡಿಸುವ ಬಗ್ಗೆ ಸಮಾಲೋಚನೆಗಳಾಗಿವೆ. ಪ್ರಸ್ತುತ ಅಣೆಕಟ್ಟೆಯಲ್ಲಿ ನೀರಿನ ರಭಸ ಎದೆ ಝಲ್ಲೆನುಸುವಂತಿದ್ದು, ಅದರ ನಡುವೆಯೇ ಕ್ರಸ್ಟ್‌ಗೇಟ್‌ ಅಳವಡಿಸಲು ಚಾಲನೆ ನೀಡಿರುವುದು ತೀವ್ರ ಕುತೂಹಲ ಕೆರಳಿಸಿದೆ.ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಣೆಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಕನ್ನಯ್ಯ ನಾಯ್ಡು ಅವರಿಂದ ಕ್ರಸ್ಟ್‌ಗೇಟ್‌ ಅಳವಡಿಕೆಯ ಕುರಿತು ಮಾಹಿತಿ ಪಡೆದಿದ್ದಾರೆ.
9
+ ರಾಜ್ಯ ಮತ್ತು ದೇಶದ ಇಂಜಿನಿಯರ್‌ಗಳ ಜೊತೆಯಲ್ಲಷ್ಟೇ ಅಲ್ಲದೆ, ಅಂತಾರಾಷ್ಟ್ರೀಯ ಮಟ್ಟದ ತಜ್ಞರೊಂದಿಗೂ ರಾಜ್ಯಸರ್ಕಾರ ಸಮಾಲೋಚನೆ ನಡೆಸಿದೆ.ತುಂಗಭದ್ರಾ ಅಣೆಕಟ್ಟೆ ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳ ಜೀವನದಿಯಾಗಿದ್ದು, ಸುಮಾರು 7.50 ಲಕ್ಷ ಹೆಕ್ಟೇರ್‌ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸಿದೆ. ಜೊತೆಗೆ ಬಯಲುಸೀಮೆಯ ತುಮಕೂರು ಜಿಲ್ಲೆಯ ಪಾವಗಡದವರೆಗೂ ಕುಡಿಯುವ ನೀರಿನ ಪೂರೈಕೆಗೆ ಇದೇ ಜಲಾಶಯವನ್ನು ಬಳಸಲಾಗುತ್ತಿದೆ.
eesanje/url_46_46_11.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ನಾಯಕರ ಒಡ್ಡೊಲಗದ ನಡುವೆ ಅನಾಥರಾದ ಕಾಂಗ್ರೆಸ್‌‍ ಕಾರ್ಯಕರ್ತರು
2
+ ಬೆಂಗಳೂರು, ಆ.13– ಕಾಂಗ್ರೆಸಿನ ಪ್ರಭಾವಿ ನಾಯಕರ ಅಬ್ಬರ, ಆರ್ಭಟ ಹಾಗೂ ರಾಜಕೀಯ ಸಮರಗಳ ನಡುವೆ ಕಾರ್ಯಕರ್ತರು ಅತಂತ್ರವಾಗಿದ್ದು, ಅವ ಅಧಿಕಾರದ ಅಭಿಲಾಷೆ ಮರಿಚಿಕೆಯಾಗಿಯೇ ಉಳಿದಿದೆ.ರಾಜ್ಯದ ನಿಗಮ-ಮಂಡಳಿಗಳಿಗೆ ಮೊದಲ ಹಂತದಲ್ಲಿ ಅಧ್ಯಕ್ಷರನ್ನು ನೇಮಿಸಲಾಗಿದೆ. ನಂತರದ ಹಂತದಲ್ಲಿ ನಿರ್ದೇಶಕರು ಹಾಗೂ ಸದಸ್ಯರನ್ನು ನೇಮಿಸಬೇಕಿತ್ತು. ಅದಕ್ಕಾಗಿ ರಚಿಸಲಾಗಿದ್ದ ಪರಮೇಶ್ವರ್‌ ನೇತೃತ್ವದ ಸಮಿತಿ ಅವಧಿ ಮುಗಿದಿದ್ದರೂ ಕೂಡ ವರದಿ ನೀಡದೆ, ಮತ್ತೆ ಒಂದು ತಿಂಗಳು ಕಾಲಾವಕಾಶ ಕೇಳಿರುವುದು ಕಾರ್ಯಕರ್ತರಲ್ಲಿ ಭಾರಿ ನಿರಾಶೆಯುಂಟು ಮಾಡಿದೆ.
3
+ ಚುನಾವಣೆಯ ಸಂದರ್ಭದಲ್ಲಿ ಕಾರ್ಯಕರ್ತರೇ ಪಕ್ಷದ ಆಸ್ತಿ, ಜೀವಾಳ ಎಂದೆಲ್ಲ ಪುಂಗಿ ಊದುವ ಪ್ರಭಾವಿ ನಾಯಕರು ಅಧಿಕಾರ ಸಿಗುತ್ತಿದ್ದಂತೆ ನಾವು ಮತ್ತು ನಮ್ಮ ಹಿಂಬಾಲಕು ಎಂಬ ಸ್ವಾರ್ಥಕ್ಕೆ ಸೀಮಿತಗೊಳ್ಳುವುದು ಪದೇ ಪದೇ ಸಾಬೀತುಕೊಳ್ಳುತ್ತಿದೆ. ಈ ಹಿಂದೆ ಕಾಂಗ್ರೆಸ್‌‍ ಕಾರ್ಯಕರ್ತರನ್ನು ಕಡೆಗಣಿಸಿದಾಗಲೆಲ್ಲಾ ಮೂಲೆಗುಂಪಾಗಿ ಹೋಗಿದೆ. ಪಕ್ಷ ಕುಸಿದಾಗ ಮುಂಚೂಣಿ ನಾಯಕರು ಮತ್ತೆ ಕಾರ್ಯಕರ್ತರ ಸಾಮರ್ಥ್ಯವನ್ನು ಜಪ ಮಾಡುತ್ತಾ ಉರಿದುಂಬಿಸಲು ಆರಂಭಿಸುತ್ತಾರೆ. ಮತ್ತೆ ನಾಯಕರ ಮಾತಗಳನ್ನು ನಂಬುವ ಕಹಿ ಮರೆತು ಹಗಲು ರಾತ್ರಿ ಶ್ರಮವರಿಯದೆ ದುಡಿಯುತ್ತಾರೆ.
4
+ ರಾಜಕೀಯ ಎದುರಾಳಿಗಳೊಂದಿಗೆ ಬಡಿದಾಡಿಕೊಂಡು, ಪ್ರಕರಣ ದಾಖಲಿಸಿಕೊಂಡು ಹೋರಾಟ ಮಾಡಿ ಜನರ ಮನವೋಲಿಸಿ ಮತ ಹಾಕಿಸಿ, ಹೆಚ್ಚು ಶಾಸಕರನ್ನು ಗೆಲ್ಲಿಸುವ ಮೂಲಕ ಸರ್ಕಾರ ರಚನೆಗೆ ಕಾರಣರಾಗುತ್ತಾರೆ. ಅಧಿಕಾರ ಕೈಗೆ ಸಿಗುತ್ತಿದ್ದಂತೆ ಪಕ್ಷದ ಮುಂಚೂಣಿ ನಾಯಕರು ಕಾರ್ಯಕರ್ತರನ್ನು ಮತ್ತೆ ಮರೆತು ನನ್ನಿಂದ ಪಕ್ಷ ಅಧಿಕಾರಕ್ಕೆ ಬಂತು, ನಾನೇ ಪ್ರಭಾವಿ ನಾಯಕ, ನಾನು ಇಲ್ಲದೆ ಇದ್ದರೆ ಕಾಂಗ್ರೆಸ್‌‍ ಪಕ್ಷವೇ ಇರುವುದಿಲ್ಲ ಎಂಬ ದಾಟಿಯಲ್ಲಿ ನಡೆದುಕೊಳ್ಳಲು ಆರಂಭಿಸುತ್ತಾರೆ.
5
+ ಕಾರ್ಯಕರ್ತರ ಶ್ರಮ, ಬದ್ಧತೆ ಮತ್ತು ಅರ್ಪಣಾ ಮನೋಭಾವ ನಗಣ್ಯವಾಗುತ್ತದೆ. ಶಾಸಕರಾದವರು ಸಚಿವರಾಗಲು, ಸಚಿವರಾದವರು ಉಪಮುಖ್ಯಮಂತ್ರಿಗಳಾಗಲು, ಉಪಮುಖ್ಯಮಂತ್ರಿಗಳಾದವರು ಮುಖ್ಯಮಂತ್ರಿಗಳಾಗಲು ಲಾಬಿಗಳು ಶುರುವಾಗುತ್ತವೆ. ಅಧಿಕಾರದ ಹಗ್ಗ ಜಗ್ಗಾಟದಲ್ಲಿ ಕಾರ್ಯಕರ್ತರು ಸಂಪೂರ್ಣ ಮೂಲೆಗುಂಪಾಗುತ್ತಾರೆ.
6
+ ಸರ್ಕಾರ ರಚನೆ ಆದರೆ ಬದುಕು ಹಸನಾಗುತ್ತದೆ, ಆಡಳಿತದಲ್ಲಿ ನಾವು ಪಾಲುದಾರರಾಗುತ್ತೇವೆ ಎಂಬ ಭ್ರಮೆಯಲ್ಲಿದ್ದ ಕಾರ್ಯಕರ್ತರಿಗೆ ಎಂದಿನಂತೆ ಭ್ರಮ ನಿರಸ ಕಟ್ಟಿಟ್ಟ ಬುತ್ತಿಯಾಗುತ್ತದೆ. ನಾಯಕರು ಎಂದಿನಂತೆ ತಾವೇ ಮೊದಲು, ತಮಿಂದಲೇ ಪಕ್ಷ, ಎಲ್ಲಾ ಪ್ರಾತಿನಿಧ್ಯಗಳು ತಮಗೆ ಸಿಗಬೇಕು ಎಂಬ ದೋರಣೆಯಲ್ಲಿ ವರ್ತಿಸುತ್ತಾರೆ.
7
+ 2013 ರಿಂದ 2018ರ ನಡುವಿನ ಕಾಂಗ್ರೆಸ್‌‍ ಆಡಳಿತ ಅವಧಿಯಲ್ಲಿ ಎರಡುವರೆ ವರ್ಷಗಳ ಕಾಲ ನಿಗಮ ಮಂಡಳಿಗಳಿಗ�� ನೇಮಕಾತಿಯೇ ನಡೆದಿರಲಿಲ್ಲ. ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದ ಕಾಲದಲ್ಲೂ ಕಾರ್ಯಕರ್ತರನ್ನು ಸಂಪೂರ್ಣ ಕಡೆಗಣಿಸಲಾಗಿದೆ.
8
+ ಸರ್ಕಾರದ ಅಸ್ತಿತ್ವಕ್ಕೆ ಧಕ್ಕೆ ತರಬಹುದು ಎಂಬ ಕಾರಣಕ್ಕೆ ಶಾಸಕರಿಗೆ ಮಾತ್ರ ಆದ್ಯತೆಗಳು ದೊರೆಯುತ್ತಿವೆ. ಶಾಸಕರನ್ನು ನಿಗಮ-ಮಂಡಳಿಗಳಿಗೆ ನೇಮಿಸುವ ಮೂಲಕ, ಕಾರ್ಯಕರ್ತರನ್ನು ಅಧಿಕಾರದಿಂದ ವಂಚಿಸಲಾಗಿದೆ. ಜೊತೆಗೆ ಪ್ರಭಾವಿ ನಾಯಕರುಗಳ ಹಿಂಬಾಲಕರು ಹಾಗೂ ಆಪ್ತರಿಗೆ ಸಾಂವಿಧಾನಿಕವಲ್ಲದ ಹಾಗೂ ನಿಯಮಗಳನ್ನು ಮೀರಿ ಹುದ್ದೆಗಳನ್ನು ಸೃಷ್ಟಿಸಿ, ಅಧಿಕಾರ ನೀಡಲಾಗಿದೆ.
9
+ ಶಾಸಕರಿಗೆ ಶೇ.60ರಷ್ಟು ಹಾಗೂ ಕಾರ್ಯಕರ್ತರಿಗೆ ಶೇ.40ರಷ್ಟು ಅನುಪಾತದಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಹಂಚಿಕೆಯಾಯಿತು. ಈ ಹಂತದಲ್ಲಿ ಪ್ರಭಾವಿಗಳು ಮಾತ್ರ ಅವಕಾಶ ಪಡೆದುಕೊಂಡರು. ಕೆಪಿಸಿಸಿಯ ಮಾಜಿ ಅಧ್ಯಕ್ಷ ಹಾಗೂ ಹಾಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ನಿಗಮ ಮಂಡಳಿಯ ನೇಮಕಾತಿ ವೇಳೆ, ತಮ ಅಭಿಪ್ರಾಯ ಸಂಗ್ರಹಿಸಿಲ್ಲ ಎಂಬ ಆಕ್ಷೇಪವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದರು.
10
+ ಈ ಕಾರಣಕ್ಕೆ ನಿಗಮ-ಮಂಡಳಿಯ ಸದಸ್ಯರು ಹಾಗೂ ನಿರ್ದೇಶಕರು ಆಯ್ಕೆ ಪ್ರಕ್ರಿಯೆಗೆ ಪಟ್ಟಿ ನೀಡುವಂತೆ ಪರಮೇಶ್ವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ. ಆ ಸಮಿತಿ ಜುಲೈ 31ರ ಒಳಗೆ ವರದಿ ನೀಡಬೇಕಿತ್ತು. ಅವಧಿ ಮುಗಿದು 15 ದಿನ ಕಳೆದರೂ ಈವರೆಗೂ ವರದಿ ಸಲ್ಲಿಸಿಲ್ಲ. ಈ ನಡುವೆ ಜೆಡಿಎಸ್‌‍-ಬಿಜೆಪಿ ಪಾದಯಾತ್ರೆಗಳು, ಕಾಂಗ್ರೆಸ್ಸಿನ ಜನಾಂಗೋಲನಗಳ ಅಬ್ಬರವೇ ಜೋರಾಗಿತ್ತು. ಕಾರ್ಯಕರ್ತರ ನೇಮಕಾತಿಯ ವಿಚಾರಗಳು ಮೂಲಗುಂಪಾಗಿ ಹೋಗಿವೆ.
11
+ ಮೂಲಗಳ ಪ್ರಕಾರ ಪರಮೇಶ್ವರ ನೇತೃತ್ವದ ಸಮಿತಿ ಆಗಸ್ಟ್ 31ರವರೆಗೂ ಕಾಲಾವಕಾಶ ಕೇಳಿದೆ ಎಂದು ಹೇಳಲಾಗಿದೆ. ಜಿಲ್ಲಾ ಸಚಿವರು ಸ್ಥಳೀಯ ಶಾಸಕರೊಂದಿಗೆ ಸಮಾಲೋಚನೆ ನಡೆಸಿ ಜಿಲ್ಲೆಗಳ ಘಟಕಗಳಿಂದ ವರದಿ ರವಾನಿಸಲಾಗಿದೆ. ಕೆಲವು ಜಿಲ್ಲೆಗಳ ವರದಿಗಳು ಬಾಕಿ ಉಳಿದಿವೆ. ಹೀಗಾಗಿ ಎಲ್ಲವನ್ನು ಕ್ರೂಢೀಕರಿಸಿದ ಬಳಿಕ ಅಂತಿಮ ವರದಿ ನೀಡುವುದಾಗಿ ಪರಮೇಶ್ವರ್‌ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
12
+ ಒಂದಲ್ಲ ಒಂದು ನೆಪ ಒಡ್ಡಿ ಕಾರ್ಯಕರ್ತರನ್ನು ಅಧಿಕಾರದಿಂದ ದೂರ ಇಡುವ ಪ್ರಕ್ರಿಯೆ ಸದಾ ಕಾಲ ನಡೆಯುತ್ತಲೇ ಇದೆ. ಪ್ರಭಾವಿಗಳಾಗಿದ್ದರೆ ಮುಂಚೂಣಿ ನಾಯಕರ ಹಿಂಬಾಲಕರಾಗಿದ್ದರೆ ಮಾತ್ರ ಯಾವುದೂ ಒಂದು ರೂಪದಲ್ಲಿ ಅಧಿಕಾರ ಗಿಟ್ಟಿಸಲು ಸಾಧ್ಯವಿದೆ.
13
+ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪದೇ ಪದೇ ತಮ ಭಾಷಣದಲ್ಲಿ ಯಾರು ದೊಡ್ಡ ನಾಯಕರಾಗಿದ್ದರು ತಮ ಬೂತ್‌ಗಳಲ್ಲಿ ಕಾಂಗ್ರೆಸ್‌‍ ಗೆ ಲೀಡ್‌ ಕೊಡಿಸದಿದ್ದರೆ ಅಂಥವರನ್ನು ಯಾವುದೇ ಅವಕಾಶಗಳಿಗೆ ಪರಿಗಣಿಸುವುದಿಲ್ಲ ಎಂದು ಹೇಳುತ್ತಿರುತ್ತಾದೆ. ಆದರೆ ಇತ್ತೀಚಿಗೆ ನಡೆದಿರುವ ಕೆಲವು ನೇಮಕಾತಿಗಳಲ್ಲಿ ಬೂತ್‌ ಮಟ್ಟದಲ್ಲಿರಲಿ ತಮ ಮನೆಯ ಸುತ್ತಮುತ್ತಲಿನ ಜನರಿಗೆ ಪರಿಚಯ ಇಲ್ಲದಂತಹ ನಾಯಕರಿಗೂ ಪ್ರಭಾವಿಗಳ ಹಿಂಬಾಲಕರು ಎಂಬ ಕಾರಣಕ್ಕಾಗಿ ಮಣೆ ಹಾಕಲಾಗಿದೆ. ಪಕ್ಷಕ್ಕಾಗಿ ಹಗಲು ರಾತ್ರಿ ಬೆವರಿಳಿಸಿದ ಕಾರ್ಯಕರ್ತರು ಮಾತ್ರ ಈಗಲೂ ಅನಾಥ ಸ್ಥಿತಿಯಲ್ಲಿದ್ದಾರೆ. ಮತ್ತೊಂದು ಚುನಾವಣೆ ಎದುರಾಗುವವರೆಗೂ ಎದುರಾಗುವವರೆಗೂ ಮುಂಚೂಣಿ ನಾಯಕರುಗಳಿಗೆ ಕಾರ್ಯಕರ್ತರು ಪಕ್ಷದ ಆಸ್ತಿ ಎಂಬುದು ನೆನಪಾಗುವುದಿಲ್ಲ.
eesanje/url_46_46_12.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಸ್ವಾತಂತ್ರ್ಯೋತ್ಸವದಲ್ಲಿ ಅಂಗಾಂಗ ದಾನಿಗಳ 64 ಕುಟುಂಬಗಳವರಿಗೆ ಪ್ರಶಂಸಾ ಪತ್ರ
2
+ ಬೆಂಗಳೂರು,ಆ.13-ಮಾಣಿಕ್‌ ಷಾ ಪೆರೇಡ್‌ ಮೈದಾನದಲ್ಲಿ ಈ ಬಾರಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಅಂಗಾಂಗ ದಾನ ಮಾಡಿರುವ 64 ಕುಟುಂಬಗಳ ಸದಸ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಂಸಾ ಪತ್ರ ನೀಡಿ ಗೌರವಿಸಲಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಇಂದಿಲ್ಲಿ ತಿಳಿಸಿದರು.
3
+ ಸ್ವಾತಂತ್ರ್ಯ ದಿನಾಚರಣೆ ಕುರಿತಂತೆ ಹಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ಬಾರಿ ವಿಶೇಷವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಸ್ಥಾಪಿತವಾದ ಸ್ಟೇಟ್‌ ಆರ್ಗನ್‌ ಟಿಶ್ಯೂ ಟ್ರಾನ್ಸ್ ಸಪ್ಲಾಂಟ್‌ ಆರ್ಗನೈಸೇಷನ್‌ ಮಾಹಿತಿಯನ್ನಾಧರಿಸಿ ಅಂಗಾಂಗ ದಾನ ಮಾಡಿರುವ 64 ಕುಟುಂಬಗಳ ಸದಸ್ಯರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಗುತ್ತಿದೆ ಎಂದು ವಿವರಿಸಿದರು.
4
+ ಸ್ವಾತಂತ್ರ್ಯ ದಿನೋತ್ಸವದಂದು ಬೆಳಿಗ್ಗೆ 8.58 ಕ್ಕೆ ಮುಖ್ಯಮಂತ್ರಿಗಳು ಪೆರೇಡ್‌ ಮೈದಾನಕ್ಕೆ ಆಗಮಿಸಲಿದ್ದು, 9 ಗಂಟೆಗೆ ಸರಿಯಾಗಿ ಧ್ವಜಾರೋಹಣ ನೆರವೇರಿಸಲಿದ್ದಾರೆ.ಧ್ವಜಾರೋಹಣದ ನಂತರ ಮುಖ್ಯಮಂತ್ರಿಗಳು ತೆರೆದ ಜೀಪ್‌ನಲ್ಲಿ ಪೆರೇಡ್‌ ವೀಕ್ಷಣೆ ಮಾಡಿ ಗೌರವ ರಕ್ಷೆ ಸ್ವೀಕರಿಸಿದ ನಂತರ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಲಿದ್ದಾರೆ ಎಂದು ತುಷಾರ್‌ ಗಿರಿನಾಥ್‌ ಹೇಳಿದರು.
5
+ ಸಿಎಂ ಗೌರವ ರಕ್ಷೆ ಸ್ವೀಕರಿಸುವ ತಾಲೀಮನ್ನು ಆ.11 ರಿಂದ ನಡೆಸಿಕೊಂಡು ಬರಲಾಗುತ್ತಿದೆ. ಗೌರವ ರಕ್ಷೆ ಕಾರ್ಯದಲ್ಲಿ ಕೆಎಸ್‌‍ಆರ್‌ಪಿ, ಸಿಆರ್‌ಪಿಎಫ್‌, ಬಿಎಸ್‌‍ಎಫ್‌, ಸಿಎಆರ್‌, ಗೋವಾ ಪೊಲೀಸ್‌‍, ಕೆಎಸ್‌‍ಐಎಸ್‌‍ಎಫ್‌, ಟ್ರಾಫಿಕ್‌, ಮಹಿಳಾ ಪೊಲೀಸರು, ಹೋಂಗಾರ್ಡ್‌್ಸ, ಅಗ್ನಿಶಾಮಕ ದಳ, ಡಾಗ್‌ ಸ್ಕ್ವಾಡ್‌ ಮತ್ತು ಬ್ಯಾಂಡ್‌ನ 35 ತುಕಡಿಗಳಲ್ಲಿ 1150 ಮಂದಿ ಭಾಗವಹಿಸುತ್ತಿದ್ದಾರೆ ಎಂದು ಅವರು ಹೇಳಿದರು.
6
+ ನಾಡಗೀತೆ ಮತ್ತು ರೈತಗೀತೆಯನ್ನು ಮಂಜುನಾಥ್‌, ಸಿದ್ದರಾಜಯ್ಯ ಹಾಗೂ ಸಬ್ಬನಹಳ್ಳಿ ರಾಜು ಮತ್ತು ತಂಡದವರು ನಡೆಸಿಕೊಡಲಿದ್ದಾರೆ.ಯಲಹಂಕ ಸರ್ಕಾರಿ ಪದವಿ ಪೂರ್ವ ಕಾಲೇಜಿನ 750 ವಿದ್ಯಾರ್ಥಿಗಳು ಜಯಭಾರತಿ ಹಾಡು ಹಾಡಲಿದ್ದಾರೆ.ರಾಷ್ಟ್ರೀಯ ಸೇವಾ ಯೋಜನೆ, ಎನ್‌ಎಸ್‌‍ಎಸ್‌‍, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 400 ಮಕ್ಕಳು ಸರ್ಕಾರದ 5 ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆ ಕುರಿತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
7
+ ಬಿಬಿಎಂಪಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ 700 ಮಕ್ಕಳು ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಅಬ್ಬಕ್ಕದೇವಿ ನೃತ್ಯ ನಾಟಕ ಪ್ರದರ್ಶಿಸಲಿದ್ದಾರೆ. ಅನಂತರ ಮಲ್ಲಕಂಬ, ಪ್ಯಾರಾಮೋಟಾರ್‌ ಪ್ರದರ್ಶನ ಹಾಗೂ ಮೋಟಾರ್‌ ಸೈಕಲ್‌ ಪ್ರದರ್ಶನಗಳನ್ನು ಹಮಿಕೊಳ್ಳಲಾಗಿದೆ.
8
+ ಬಿಗಿ ಬಂದೋಬಸ್ತ್:ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ���ಲಿ ಪೆರೇಡ್‌ ಮೈದಾನಕ್ಕೆ ಸೂಕ್ತ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದೆ. ಮೈದಾನದ ಸುತ್ತ 100 ಸಿಸಿ ಕ್ಯಾಮರಾ ಹಾಗೂ ಎರಡು ಬ್ಯಾಗೇಜ್‌ ಸ್ಕ್ಯಾನರ್‌ಗಳನ್ನು ಸ್ಥಾಪಿಸಲಾಗಿದೆ ಎಂದು ತುಷಾರ್‌ ಗಿರಿನಾಥ್‌ ತಿಳಿಸಿದರು.ಸ್ಥಳದಲ್ಲಿ ಆಂಬುಲೆನ್ಸ್ ಸ ವ್ಯವಸ್ಥೆ, ವೈದ್ಯಕೀಯ ಮತ್ತು ವೈದ್ಯಕೀಯೇತರ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಗಾಯಾಳುಗಳಿಗೆ ಹಲವು ಆಸ್ಪತ್ರೆಗಳನ್ನು ಗುರುತಿಸಿ ಸಾಕಷ್ಟು ಸಂಖ್ಯೆಯ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ.
9
+ ಪ್ರವೇಶ ದ್ವಾರ :ಸ್ವಾತಂತ್ರ್ಯ ದಿನಾಚರಣೆ ವೀಕ್ಷಣೆಗೆ ಆಗಮಿಸುವ ಅತಿ ಗಣ್ಯ, ಗಣ್ಯ, ಇತರ ಆಹ್ವಾನಿತರು ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕವಾಗಿ ಆಸನ ವ್ಯವಸ್ಥೆ ಮಾಡಲಾಗಿದೆ. ಅತಿ ಗಣ್ಯ, ಗಣ್ಯವ್ಯಕ್ತಿಗಳು ಹಾಗೂ ರಕ್ಷಣಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳು ಜಿ-2 ಪ್ರವೇಶ ದ್ವಾರದ ಮೂಲಕ ಆಗಮಿಸಬೇಕಾಗಿದೆ.
10
+ ಮುಖ್ಯಮಂತ್ರಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಡಿಜಿ, ಐಜಿ, ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳು ಜಿ-3 ಪ್ರವೇಶ ದ್ವಾರದ ಮೂಲಕ ಆಗಮಿಸಬೇಕಿದೆ. ಸ್ವಾತಂತ್ರ್ಯ ಹೋರಾಟಗಾರರು, ಪತ್ರಿಕಾ ಪ್ರತಿನಿಧಿಗಳು ಹಾಗೂ ಇಲಾಖೆಯ ಇತರೆ ಅಧಿಕಾರಿಗಳಿಗೆ ಜಿ-4 ಮತ್ತು ಸಾರ್ವಜನಿಕರಿಗೆ ಜಿ-5 ಪ್ರವೇಶ ದ್ವಾರ ನಿಗದಿಪಡಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್‌, ನಗರ ಪೊಲೀಸ್‌‍ ಆಯುಕ್ತ ಬಿ.ದಯಾನಂದ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
eesanje/url_46_46_2.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಮುಡಾ ಪ್ರಕರಣ : ರಾಜ್ಯಪಾಲರ ನಿರ್ಧಾರದ ನಿರೀಕ್ಷೆಯಲ್ಲಿದ್ದೇವೆ ಎಂದ ಪರಮೇಶ್ವರ್
2
+ ಬೆಂಗಳೂರು,ಆ.13– ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ನ್ಯಾಯಾಲಯದ ತೀರ್ಪು ಆಧರಿಸಿ ರಾಜ್ಯಪಾಲರು ನಿರ್ಧಾರ ತೆಗೆದುಕೊಳ್ಳಬಹುದು. ನಾವು ಅದನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯಪಾಲರನ್ನು ದುರುಪಯೋಗಪಡಿಸಿಕೊಂಡು ಮುಖ್ಯಮಂತ್ರಿಯವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇದಕ್ಕೆ ಪ್ರತಿಯಾಗಿ ಸಚಿವ ಸಂಪುಟ ಸಭೆ ಸಲಹೆ ನೀಡುವ ನಿರ್ಧಾರ ತೆಗೆದುಕೊಂಡು ರಾಜ್ಯಪಾಲರಿಗೆ ರವಾನಿಸಲಾಗಿದೆ ಎಂದರು.
4
+ ಚಾಮುಂಡಿ ದೇವಸ್ಥಾನವನ್ನು ತಮಗೆ ಬಿಟ್ಟುಕೊಡಬೇಕು ಎಂದು ರಾಜಮನೆತನದ ಪ್ರಮೋದಾ ದೇವಿಯವರು ನೀಡಿರುವ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪೊಲೀಸ್ ದೃಷ್ಟಿಯಿಂದ ನನಗೆ ಯಾವುದೇ ಮಾಹಿತಿ ಇಲ್ಲ. ಅವರ ಹೇಳಿಕೆಯನ್ನು ನಾನು ಮಾಧ್ಯಮದಲ್ಲಿ ಗಮನಿಸಿದ್ದೇನೆ. ಸಂದರ್ಭ ಬಂದಾಗ ಸರ್ಕಾರ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
5
+ ಚಾಮುಂಡಿ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರ ಮಾಡಲು ನಿರ್ಧರಿಸಿದ್ದು ಸಮಗ್ರ ವ್ಯವಸ್ಥೆಯ ಸುಧಾರಣೆಗಾಗಿ. ಸವದತ್ತಿ ಹಾಗೂ ಉಳಿದ ಬಹಳಷ್ಟು ದೇವಸ್ಥಾನಗಳಲ್ಲಿ ಸಾಕಷ್ಟು ಹಣ ಸಂಗ್ರಹವಾಗುತ್ತಿದೆ, ಹೆಚ್ಚು ಜನ ಬರುತ್ತಾರೆ, ಭಕ್ತರಿಗೆ ಸೂಕ್ತ ಸೌಲಭ್ಯ ಒದಗಿಸಲು ಪ್ರಾಧಿಕಾರಗಳನ್ನು ರಚಿಸಿ, ಸ್ಥಳೀಯ ಆಡಳಿತಕ್ಕೆ ಜವಾಬ್ದಾರಿ ನೀಡಲಾಗುತ್ತದೆ. ಅದೇ ರೀತಿ ಚಾಮುಂಡಿ ಬೆಟ್ಟಕ್ಕೂ ಕೂಡ ಪ್ರಾಧಿಕಾರ ಮಾಡಲಾಗಿತ್ತು. ಈಗ ಮೈಸೂರು ರಾಜವಂಶಸ್ಥರು ಪ್ರಾಧಿಕಾರಕ್ಕೆ ವಿರೋಧ ವ್ಯಕ್ತಪಡಿಸಿ ನ್ಯಾಯಾಲಯದ ಮೊರೆ ಹೋಗಿ ತಡೆಯಾಜ್ಞೆ ತಂದಿದ್ದಾರೆ ಎಂದು ಹೇಳಿದರು.
6
+ ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿ ಅರಮನೆ ಮೈದಾನದ ಜಾಗವನ್ನು ಬಳಸಿಕೊಂಡು ರಸ್ತೆ ಅಗಲೀಕರಣ ಮಾಡುವ ಪ್ರಸ್ತಾವದ ಕುರಿತು ತಮಗೆ ಮಾಹಿತಿ ಇಲ್ಲ. ಈ ಹಿಂದೆ ನಾನು ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿದ್ದಾಗ ರಸ್ತೆ ಅಗಲೀಕರಣಕ್ಕೆ ಬಿಬಿಎಂಪಿ ಪ್ರಯತ್ನಿಸಿತ್ತು. ರಸ್ತೆ ಅಗಲೀಕರಣಕ್ಕೆ ಜಾಗವನ್ನು ಗುರುತಿಸಿ ಮೈದಾನದ ತಡೆಗೋಡೆಯನ್ನು ಒಳಭಾಗಕ್ಕೆ ಸ್ಥಳಾಂತರಿಸಲಾಗಿತ್ತು ಎಂದು ವಿವರಿಸಿದರು.
7
+ ಸಾರ್ವಜನಿಕರ ದೃಷ್ಟಿಯಿಂದ ರಸ್ತೆ ಅಗಲೀಕರಣ ಮಾಡುವ ಯತ್ನ ನಡೆದಿತ್ತು. ಹಾಗೆಂದು ರಾಜಮನೆತನದ ಆಸ್ತಿಯನ್ನು ವಶಪಡಿಸಿಕೊಳ್ಳುವ ಉದ್ದೇಶವಿರಲಿಲ್ಲ. ನ್ಯಾಯಾಲಯದಲ್ಲಿ ಈ ಬಗ್ಗೆ ಹಲವು ಪ್ರಕರಣಗಳು ಹಾಗೂ ನಿರ್ದೇಶನಗಳು ಇವೆ. ನ್ಯಾಯಾಲಯದಲ್ಲಿನ ತಗಾದೆ ಬಗೆಹರಿದು ಅದನ್ನು ರಾಜಮನೆತನದವರು ಒಪ್ಪಿಕೊಂಡರೆ ರಸ್ತೆ ಅಗಲೀಕರಣ ಸುಲಭವಾಗುತ್ತದೆ. ಸದ್ಯಕ್ಕೆ ಮಧ್ಯಂತರ ತೀರ್ಪು ಬಂದಿದ್ದು, ಅಂತಿಮ ತೀರ್ಪನ್ನು ಸರ್ಕಾರ ನಿರೀಕ್ಷಿಸುತ್ತಿದೆ ಎಂದು ತಿಳಿಸಿದರು.
8
+ ಎಐಸಿಸಿ ಎಲ್ಲಾ ರಾಜ್ಯಗಳ ಕೆಪಿಸಿಸಿ ಅಧ್ಯಕ್ಷರುಗಳ ಜೊತೆ ಸಮಾಲೋಚನೆಗೆ ಸಭೆ ಕರೆದಿದೆ. ಅಲ್ಲಿ ಯಾವ ರೀತಿಯ ಚರ್ಚೆಗಳಾಗುತ್ತವೆ ಎಂಬ ಮಾಹಿತಿ ಇಲ್ಲ ಎಂದರು.ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಒಳಮೀಸಲಾತಿ ವಿಚಾರವಾಗಿ ಒತ್ತಡಗಳು ಹೆಚ್ಚಿವೆ. ಆದಷ್ಟು ಬೇಗ ಇದನ್ನು ಇತ್ಯರ್ಥಪಡಿಸಬೇಕು ಎಂಬುದು ನಮ ಬೇಡಿಕೆ ಕೂಡ ಆಗಿದೆ ಎಂದು ಹೇಳಿದರು.
9
+ ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಕೇಂದ್ರ ಸರ್ಕಾರ ಕೆಲವು ಸೂಚನೆಗಳನ್ನು ನೀಡುತ್ತದೆ. ರಾಜ್ಯಸರ್ಕಾರವೂ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುತ್ತದೆ. ನಿರ್ದಿಷ್ಟ ಎಚ್ಚರಿಕೆಗಳು ಬಂದರೆ ಸೂಕ್ತ ಕ್ರಮ ವಹಿಸಲಾಗುವುದು. ವಿಮಾನನಿಲ್ದಾಣದಲ್ಲಿ ರಾಷ್ಟ್ರೀಯ ಹಬ್ಬಗಳ ಮೊದಲ ಹಾಗೂ ಅನಂತರದ ಎರಡು ದಿನ ತೀವ್ರ ನಿಗಾ ವಹಿಸಲಾಗುವುದು. ಅದೇ ರೀತಿ ಗಣೇಶ ಹಬ್ಬದ ಸಂದರ್ಭದಲ್ಲೂ ಶಾಂತಿ ಪಾಲನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕಳೆದ ವರ್ಷ ಯಾವುದೇ ಅಹಿತಕರ ಘಟನೆ ನಡೆಯದಂತೆ ಯಶಸ್ವಿ ಬಂದೋಬಸ್ತ್ ಆಯೋಜಿಸಲಾಗಿತ್ತು. ಈ ವರ್ಷ ಅದೇ ರೀತಿ ಒಂದಷ್ಟು ಸೂಚನೆಗಳನ್ನು ನೀಡಲಾಗಿದೆ ಎಂದರು.
10
+ ಕೇಂದ್ರ ಸರ್ಕಾರದಿಂದ ಆರ್ಎಎಫ್ ತುಕಡಿಗಳನ್ನು ಬಳಸಿಕೊಂಡು ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಹೇಳಿದರು.ವಿಧಾನಪರಿಷತ್ನ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿಯವರಿಗೆ ಶಿಷ್ಟಾಚಾರದ ಪ್ರಕಾರ, ಅಗತ್ಯ ಭದ್ರತೆ ಒದಗಿಸಲಾಗುವುದು. ಒಂದು ವೇಳೆ ಅದು ಜಾರಿಯಾಗದೇ ಇದ್ದರೆ ನಾನು ಕೂಡ ಸೂಚನೆ ನೀಡುತ್ತೇನೆ ಎಂದರು.
11
+ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ಶೀಘ್ರವೇ ನಿರ್ಧಾರ ಮಾಡುವುದಾಗಿ ಪ್ರತಿಕ್ರಿಯಿಸಿದ ಅವರು, ಕ್ಷೇತ್ರಗಳ ಪುನರ್ ವಿಂಗಡಣೆ ಹಾಗೂ ಮೀಸಲಾತಿ ನಿಗದಿಯಾಗಬೇಕಿದೆ. ನಾಲ್ಕು ಮಹಾನಗರ ಪಾಲಿಕೆಗಳಿಗೆ ಹಿಂದಿನ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಆಧಾರದ ಮೇಲೆ ಚುನಾವಣೆ ನಡೆಸುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ. ನಾಲ್ಕು ಪಾಲಿಕೆಗಳಿಗೂ ಅದೇ ಆಧಾರದ ಮೇಲೆ ಚುನಾವಣೆ ನಡೆಯಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
eesanje/url_46_46_3.txt ADDED
@@ -0,0 +1,7 @@
 
 
 
 
 
 
 
 
1
+ ಕದ್ದುಮುಚ್ಚಿ ಹಿಂಬಾಗಿಲಿನಿಂದ ಬಂದು ಗೃಹಸಚಿವರನ್ನು ಭೇಟಿ ಮಾಡಿ ಹೋದ ಶಾಸಕ ಚೆನ್ನಾರೆಡ್ಡಿ
2
+ ಬೆಂಗಳೂರು,ಆ.13– ಯಾದಗಿರಿ ಪಿಎಸ್ಐ ಪರಶುರಾಮ್ ಅಸಹಜ ಸಾವಿನ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಇಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿದರು. ಪರಮೇಶ್ವರ್ರವರ ಮನೆಗೆ ಹಿಂಬಾಗಿಲ ಮೂಲಕ ಬಂದ ಚೆನ್ನಾರೆಡ್ಡಿ ಮಾಧ್ಯಮಗಳ ಕಣ್ತಪ್ಪಿಸಿ ಹಿಂಬಾಗಿಲಿನಿಂದಲೇ ಹೊರಹೋದರು.
3
+ ಪರಶುರಾಮ್ ಆತಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಆಡಳಿತ ಪಕ್ಷದ ಶಾಸಕರೂ ಆಗಿರುವ ಚೆನ್ನಾರೆಡ್ಡಿ ಮತ್ತು ಅವರ ಪುತ್ರ ಪಂಪನಗೌಡ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಶಾಸಕರು ಮತ್ತು ಅವರ ಪುತ್ರ ಬಂಧನದ ಭೀತಿ ಎದುರಿಸುತ್ತಿದ್ದಾರೆ.
4
+ ಶಾಸಕರ ಭೇಟಿ ಬಗ್ಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಸಚಿವ ಪರಮೇಶ್ವರ್, ನನ್ನ ಹುಟ್ಟುಹಬ್ಬದ ದಿನ ಅವರಿಗೆ ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಇಂದು ಬಂದು ಭೇಟಿ ಮಾಡಿ ಶುಭ ಹಾರೈಸಿದ್ದಾರೆ. ಇದು ಸೌಜನ್ಯದ ಭೇಟಿಯಷ್ಟೇ. ಈಗಾಗಲೇ ದಾಖಲಾಗಿರುವ ಪ್ರಕರಣದ ತನಿಖೆ ನಡೆಯುತ್ತಿದೆ. ಆ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ , ದೇರ್ ಈಸ್ ನೋ ನೀಡ್ ಟು ಬಿಟ್ವೀನ್ ದಿ ಲೈನ್ ಎಂದು ಹೇಳಿದರು.
5
+ ಚೆನ್ನಾರೆಡ್ಡಿ ಬಂಧನಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹಲಂಚಕ್ಕೆ ಬೇಡಿಕೆಯಿಟ್ಟ ಹಿನ್ನಲೆ ಒತ್ತಡದಿಂದಲೇ ನಿಗೂಢವಾಗಿ ಸಾವನ್ನಪ್ಪಿರುವ ಪಿಎಸ್ಐ ಪರಶುರಾಮ್ ಪ್ರಕರಣದಲ್ಲಿ ಸ್ಥಳೀಯ ಶಾಸಕ ಚೆನ್ನಾರೆಡ್ಡಿ ಅವರನ್ನು ತಕ್ಷಣವೇ ಪೊಲೀಸರು ಬಂಧಿಸಬೇಕೆಂದು ವಿಧಾನಪರಿಷತ್ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಒತ್ತಾಯಿಸಿದ್ದಾರೆ.
6
+ ಯಾದಗಿರಿ ಸುಭಾಷ್ ವೃತ್ತದಲ್ಲಿ ನಡೆದ ಬಿಜೆಪಿ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಪಿಎಸ್ಐ ಪರಶುರಾಮ್ ನಿಗೂಢ ಸಾವು ಖಂಡಿಸಿ, ಪ್ರಕರಣ ಸಂಬಂಧ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ಪಂಪಣ್ಣಗೌಡ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ್ಢರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳಿಂದ ನಿಷ್ಪಕ್ಷಪಾತವಾಗಿ ತನಿಖೆ ನಡೆಯಲು ಸಾಧ್ಯವಾಗಿಲ್ಲ. ಹೀಗಾಗಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ರಾಜ್ಯ ಸರ್ಕಾರದ ಮೇಲೆ ಅವರು ಒತ್ತಡ ಹಾಕಿದರು.
7
+ ಪ್ರತಿಭಟನೆ ಮುನ್ನ ಮೃತ ಪಿಎಸ್ಐ ಪರಶುರಾಮ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ಎನ್.ಮಹೇಶ್,ರಾಜುಗೌಡ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
eesanje/url_46_46_4.txt ADDED
@@ -0,0 +1,9 @@
 
 
 
 
 
 
 
 
 
 
1
+ ಗೌರಿ-ಗಣೇಶ ಹಬ್ಬದ ಬಳಿಕ ಚನ್ನಪಟ್ಟಣ ಜೆಡಿಎಸ್‌‍ ಅಭ್ಯರ್ಥಿ ಆಯ್ಕೆ
2
+ ಬೆಂಗಳೂರು, ಆ.13– ಗೌರಿ-ಗಣೇಶ ಹಬ್ಬದ ನಂತರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್‌‍ ಅಭ್ಯರ್ಥಿ ಆಯ್ಕೆ ಮಾಡಲು ಉದ್ದೇಶಿಸಲಾಗಿದೆ. ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ.
3
+ ಇನ್ನೂ ಚುನಾವಣಾ ವೇಳಾಪಟ್ಟಿ ಪ್ರಕಟವಾಗದಿದ್ದರೂ ಅಭ್ಯರ್ಥಿ ಆಯ್ಕೆ ಕುರಿತಂತೆ ಬಿಜೆಪಿ ಮತ್ತು ಜೆಡಿಎಸ್‌‍ನಲ್ಲಿ ಪದೇ ಪದೇ ಚರ್ಚೆಗಳಾಗುತ್ತಿವೆ. ಆದರೂ ಇದುವರೆಗೆ ಒಮತದ ಮೈತ್ರಿ ಅಭ್ಯರ್ಥಿ ಯಾರೆಂಬುದು ನಿರ್ಧಾರವಾಗದೇ ಉಳಿದಿದ್ದು, ಉಭಯ ಪಕ್ಷಗಳ ಕಾರ್ಯಕರ್ತರಲ್ಲಿ ಗೊಂದಲ ಮುಂದುವರೆದಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮಾಯಿ ಅವರ ರಾಜೀನಾಮೆಯಿಂದ ಶಿಗ್ಗಾವಿ ವಿಧಾನಸಭಾ ಕ್ಷೇತ್ರ ಹಾಗೂ ಸಂಸದ ತುಕಾರಾಂ ಅವರ ರಾಜೀನಾಮೆಯಿಂದ ಸಂಡೂರು ವಿಧಾನಸಭಾ ಕ್ಷೇತ್ರಗಳು ತೆರವಾಗಿದ್ದು, ಉಪ ಚುನಾವಣೆ ನಡೆಯಬೇಕಿದೆ.
4
+ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೂರು ಕ್ಷೇತ್ರಗಳ ಪೈಕಿ ಜೆಡಿಎಸ್‌‍, ಬಿಜೆಪಿ ಹಾಗೂ ಕಾಂಗ್ರೆಸ್‌‍ ತಲಾ ಒಂದು ಕ್ಷೇತ್ರದಲ್ಲಿ ಗೆದ್ದಿದ್ದವು. ಲೋಕಸಭಾ ಚುನಾವಣೆಯಂತೆ ಉಪ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್‌‍ ಮೈತ್ರಿ ಮುಂದುವರೆಯಲಿದೆ. ಮೂರು ಕ್ಷೇತ್ರಗಳಲ್ಲಿ ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್‌‍ ಉಳಿಸಿಕೊಳ್ಳಲಿದ್ದು, ಉಳಿದೆರಡು ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಟ್ಟಿದೆ.
5
+ ಆದರೂ ಚನ್ನಪಟ್ಟಣ ಕ್ಷೇತ್ರವನ್ನು ಬಿಟ್ಟುಕೊಡುವಂತೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಪಟ್ಟು ಹಿಡಿದ್ದಾರೆ. ಜೆಡಿಎಸ್‌‍ ವರಿಷ್ಠರನ್ನು ಭೇಟಿ ಮಾಡಿ ಈ ಸಂಬಂಧ ಮಾತುಕತೆ ನಡೆಸಿರುವುದಲ್ಲದೆ, ಟಿಕೆಟ್‌ ನೀಡುವಂತೆ ಬಿಜೆಪಿ ವರಿಷ್ಠರ ಮೇಲೆ ಒತ್ತಡವನ್ನೂ ತರುತ್ತಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತು ಅವರ ಸಹೋದರ ಮಾಜಿ ಸಂಸದ ಡಿ.ಕೆ.ಸುರೇಶ್‌ ಇವರಿಬ್ಬರಲ್ಲಿ ಒಬ್ಬರು ಸ್ಪರ್ಧೆ ಮಾಡಿದರೂ ಚನ್ನಪಟ್ಟಣ ಹೈ ವೋಲ್ಟೇಜ್‌ ಕ್ಷೇತ್ರವಾಗಿ ಪರಿಣಮಿಸಲಿದೆ.
6
+ ಈಗಾಗಲೇ ಶಿವಕುಮಾರ್‌ ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದು, ರಾಜಕೀಯವಾಗಿ ಚರ್ಚೆಯೂ ಆಗಿದೆ. ಮೂರು ಪಕ್ಷಗಳಿಂದ ಉಪ ಚುನಾವಣೆ ಸಿದ್ಧತೆಗಳು ಸಾಗಿವೆ.ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್‌‍ ತನ್ನಲ್ಲೇ ಉಳಿಸಿಕೊಳ್ಳುವ ನಿರ್ಧಾರ ಮಾಡಿದ್ದು, ಯೋಗೇಶ್ವರ್‌ ಸ್ಪರ್ಧೆಗೆ ವಿರೋಧ ಮಾಡಿಲ್ಲ. ಆದರೆ, ಬಿಜೆಪಿ ಚಿಹ್ನೆಯ ಬದಲಾಗಿ ಜೆಡಿಎಸ್‌‍ ಅಭ್ಯರ್ಥಿಯಾಗಿ ಸ್ಪರ್ಧಿಸಲಿ ಎಂಬ ಸಂದೇಶವನ್ನು ಬಿಜೆಪಿಗೆ ರವಾನಿಸಲಾಗಿದೆ ಎಂದು ಜೆಡಿಎಸ್‌‍ ಉನ್ನತ ಮೂಲಗಳು ತಿಳಿಸಿವೆ.
7
+ ಆದರೆ, ಯೋಗೇಶ್ವರ್‌ ಅವರು ಪ್ರಸ್ತುತ ವಿಧಾನ ಪರಿಷತ್‌ ಸದಸ್ಯರಾಗಿರುವುದರಿಂದ ಜೆಡಿ���ಸ್‌‍ ಚಿಹ್ನೆಯಡಿ ಸ್ಪರ್ಧಿಸಲು ಒಲವು ತೋರುತ್ತಿಲ್ಲ. ಬದಲಾಗಿ ಬಿಜೆಪಿ ಅಭ್ಯರ್ಥಿಯಾಗಿ ಉಪ ಚುನಾವಣೆಯಲ್ಲಿ ಕಣಕ್ಕಿಳಿಯಲು ಆಸಕ್ತಿ ತೋರಿದ್ದಾರೆ. ಒಂದು ವೇಳೆ ಬಿಜೆಪಿ ಟಿಕೆಟ್‌ ದೊರೆಯದಿದ್ದರೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಸಂದೇಶವನ್ನು ಯೋಗೇಶ್ವರ್‌ ರವಾನಿಸಿದ್ದಾರೆ. ಹೀಗಾಗಿ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯ ಮೈತ್ರಿ ಅಭ್ಯರ್ಥಿ ವಿಚಾರ ಇನ್ನೂ ಗೊಂದಲದಲ್ಲಿದೆ.
8
+ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಡಾ. ಸಿ.ಎನ್‌. ಮಂಜುನಾಥ್‌ ಅವರು ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಯೋಗೇಶ್ವರ್‌ ಅವರ ಸಾಧನೆ ಬಗ್ಗೆ ಜೆಡಿಎಸ್‌‍ಗೆ ಸಮಾಧಾನವಿಲ್ಲ ಎಂಬ ಅಭಿಪ್ರಾಯವಿದೆ. ಯೋಗೇಶ್ವರ್‌ ನಿಲುವಿನಲ್ಲಿ ಬದಲಾವಣೆಯಾಗದಿದ್ದರೆ, ಗಣೇಶ ಹಬ್ಬದ ನಂತರ ಜೆಡಿಎಸ್‌‍ ಬೇರೆ ಅಭ್ಯರ್ಥಿ ಆಯ್ಕೆ ಮಾಡಿ ಕಣಕ್ಕಿಳಿಸಲು ಉದ್ದೇಶಿಸಿದೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ.
9
+ ಪರ್ಯಾಯ ಅಭ್ಯರ್ಥಿಯಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಹೆಸರು ಮುಂಚೂಣಿಯಲ್ಲಿದೆ. ಆದರೆ, ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುವುದನ್ನು ಈಗಾಗಲೇ ತಳ್ಳಿ ಹಾಕಿದ್ದಾರೆ. ಕೊನೆ ಕ್ಷಣದಲ್ಲಿ ಜೆಡಿಎಸ್, ಕುಟುಂಬದವರಿಗೆ ಮಣೆ ಹಾಕಿ ಸ್ಪರ್ಧೆಗಿಳಿಸಲಿದೆಯೋ ಅಥವಾ ಸ್ಥಳೀಯರಿಗೆ ಅವಕಾಶ ಮಾಡಿಕೊಡಲಿದೆಯೋ ಎಂಬುದನ್ನು ಕಾದು ನೋಡಬೇಕು.