CoolCoder44 commited on
Commit
8a4ae11
·
verified ·
1 Parent(s): da67a00

648f89d8d1291994fe92b0f199ee1ef12aa0f1f7d610852ce6d6b0252d85144e

Browse files
Files changed (50) hide show
  1. eesanje/url_46_123_1.txt +4 -0
  2. eesanje/url_46_123_10.txt +11 -0
  3. eesanje/url_46_123_11.txt +5 -0
  4. eesanje/url_46_123_12.txt +9 -0
  5. eesanje/url_46_123_2.txt +6 -0
  6. eesanje/url_46_123_3.txt +15 -0
  7. eesanje/url_46_123_4.txt +5 -0
  8. eesanje/url_46_123_5.txt +4 -0
  9. eesanje/url_46_123_6.txt +12 -0
  10. eesanje/url_46_123_7.txt +5 -0
  11. eesanje/url_46_123_8.txt +9 -0
  12. eesanje/url_46_123_9.txt +8 -0
  13. eesanje/url_46_124_1.txt +7 -0
  14. eesanje/url_46_124_10.txt +5 -0
  15. eesanje/url_46_124_11.txt +6 -0
  16. eesanje/url_46_124_12.txt +6 -0
  17. eesanje/url_46_124_2.txt +7 -0
  18. eesanje/url_46_124_3.txt +7 -0
  19. eesanje/url_46_124_4.txt +7 -0
  20. eesanje/url_46_124_5.txt +8 -0
  21. eesanje/url_46_124_6.txt +7 -0
  22. eesanje/url_46_124_7.txt +7 -0
  23. eesanje/url_46_124_8.txt +7 -0
  24. eesanje/url_46_124_9.txt +7 -0
  25. eesanje/url_46_125_1.txt +11 -0
  26. eesanje/url_46_125_10.txt +3 -0
  27. eesanje/url_46_125_11.txt +7 -0
  28. eesanje/url_46_125_12.txt +7 -0
  29. eesanje/url_46_125_2.txt +10 -0
  30. eesanje/url_46_125_3.txt +8 -0
  31. eesanje/url_46_125_4.txt +4 -0
  32. eesanje/url_46_125_5.txt +7 -0
  33. eesanje/url_46_125_6.txt +10 -0
  34. eesanje/url_46_125_7.txt +7 -0
  35. eesanje/url_46_125_8.txt +7 -0
  36. eesanje/url_46_125_9.txt +5 -0
  37. eesanje/url_46_126_1.txt +4 -0
  38. eesanje/url_46_126_10.txt +6 -0
  39. eesanje/url_46_126_11.txt +9 -0
  40. eesanje/url_46_126_12.txt +4 -0
  41. eesanje/url_46_126_2.txt +6 -0
  42. eesanje/url_46_126_3.txt +7 -0
  43. eesanje/url_46_126_4.txt +7 -0
  44. eesanje/url_46_126_5.txt +8 -0
  45. eesanje/url_46_126_6.txt +7 -0
  46. eesanje/url_46_126_7.txt +8 -0
  47. eesanje/url_46_126_8.txt +11 -0
  48. eesanje/url_46_126_9.txt +5 -0
  49. eesanje/url_46_127_1.txt +10 -0
  50. eesanje/url_46_127_10.txt +4 -0
eesanje/url_46_123_1.txt ADDED
@@ -0,0 +1,4 @@
 
 
 
 
 
1
+ ಬಿಜೆಪಿ ಅವಧಿಯಲ್ಲಿ ಹಲವು ಹಗರಣಗಳು ನಡೆದಿವೆ, ತಪ್ಪು ಯಾರೇ ಮಾಡಿದರೂ ತಪ್ಪೇ : ರಾಮಲಿಂಗಾರೆಡ್ಡಿ
2
+ ಬೆಂಗಳೂರು, ಜೂ.3– ಬಿಜೆಪಿಯ ಅಧಿಕಾರವಧಿಯಲ್ಲಿ ಹಲವು ರೀತಿಯ ಹಗರಣಗಳಾಗಿದ್ದವು. ತಪ್ಪು ಯಾರೇ ಮಾಡಿದ್ದರೂ ಅದು ತಪ್ಪು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಬಿಜೆಪಿ ಸರ್ಕಾರದ 4 ವರ್ಷದ ಆಡಳಿತದಲ್ಲಿ ಜವಳಿ ನಿಗಮದಲ್ಲಿ ಮೈಸೂರು ಸ್ಯಾಂಡಲ್‌ ಸೋಪು ನಿಗಮದಲ್ಲಿ ಸೇರಿದಂತೆ ಪ್ರತಿ ಮಂಡಳಿಯಲ್ಲೂ ಹಗರಣಗಳಾಗಿದ್ದವು. ಹಿಂದೆ ಲೋಪಗಳಾಗಿದ್ದವು ಎಂಬ ಕಾರಣಕ್ಕೆ ಅದು ಮುಂದುವರೆಯಬೇಕು ಎಂದು ನಾವು ಬಯಸುವುದಿಲ್ಲ ಎಂದರು.
3
+ ತಪ್ಪನ್ನು ಯಾರೇ ಮಾಡಿದರೂ ಅದು ತಪ್ಪು. ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಲೋಪಗಳಾಗಿದ್ದರೆ ಅದನ್ನು ಪರಿಶೀಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಸೇರಿದಂತೆ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಬಿಜೆಪಿಯವರಿಗೆ ಟೀಕೆ ಮಾಡುವ ನೈತಿಕತೆ ಇಲ್ಲ ಎಂದು ತಿರುಗೇಟು ನೀಡಿದರು.
4
+ ನಿನ್ನೆ ತಮಗೆ ಬೇರೆ ಕೆಲಸವಿದ್ದಿದ್ದರಿಂದಾಗಿ ಕಾಂಗ್ರೆಸ್‌‍ ಶಾಸಕಾಂಗ ಸಭೆಗೆ ಹೋಗಲಾಗಲಿಲ್ಲ. ಅಲ್ಲಿ ಬಹಳಷ್ಟು ವಿಚಾರಗಳು ಚರ್ಚೆಯಾಗಿವೆ ಎಂದು ತಿಳಿಸಿದರು.ಲೋಕಸಭಾ ಚುನಾವಣೋತ್ತರ ಸಮೀಕ್ಷೆ ಕೇಂದ್ರ ಸರ್ಕಾರದ ಪ್ರಾಯೋಜಕ ವರದಿಯಾಗಿದೆ. ಅದನ್ನು ಮೀರಿ ಅಚ್ಚರಿಯ ಫಲಿತಾಂಶವನ್ನು ನಾವು ನಿರೀಕ್ಷಿಸುತ್ತೇವೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌‍ 85 ರಿಂದ 104 ಸ್ಥಾನಗಳಿಗೆ ಸೀಮಿತವಾಗಲಿದೆ ಎಂದು ಸಮೀಕ್ಷಾ ವರದಿಗಳು ಹೇಳಿದ್ದವು. ಆದರೆ ಎಲ್ಲವನ್ನೂ ಮೀರಿ 136 ಸ್ಥಾನಗಳಲ್ಲಿ ನಾವು ಗೆದ್ದಿದ್ದೇವೆ ಎಂದು ಹೇಳಿದರು.
eesanje/url_46_123_10.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಮತ ಎಣಿಕೆಯ ಪ್ರತಿಯೊಂದು ಟೇಬಲ್‌ಗೂ ಸಿಸಿ ಕ್ಯಾಮೆರಾ
2
+ ಬೆಂಗಳೂರು,ಜೂ.2-ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುವ ಪ್ರತಿ ಟೇಬಲ್‌ಗೂ ತಲಾ ಒಂದೊಂದು ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ಗಿರಿನಾಥ್‌ ಇಂದಿಲ್ಲಿ ತಿಳಿಸಿದರು.
3
+ ಇವಿಎಂಗಳನ್ನಿಟ್ಟಿರುವ ಸ್ಟ್ರಾಂಗ್‌ ರೂಂಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಾರಿ ಫಲಿತಾಂಶ ಪ್ರಕಟಣೆಗೆ ಇನ್ನಿಲ್ಲದಂತಹ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
4
+ ನಗರದ ಮೂರು ಲೋಕಸಭಾ ಕ್ಷೇತ್ರಗಳ ಮತ ಎಣಿಕೆಗೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ.ಒಂದೊಂದು ರೂಮಿನಲ್ಲಿ 14 ಟೆಬಲ್‌ಗಳನ್ನು ಹಾಕಲಾಗುವುದು ಈ ಬಾರಿ ಹೆಚ್ಚಿನ ಪ್ರಮಾಣದ ಪೋಸ್ಟಲ್‌ ಬ್ಯಾಲೆಟ್‌ ಬಂದಿರುವುದರಿಂದ ಪೋಸ್ಟಲ್‌ ಬ್ಯಾಲೆಟ್‌ ವ್ಯವಸ್ಥೆಗೆ ಪ್ರತ್ಯೇಕ ರೂಮ್‌ ಮಾಡಲಾಗಿದ್ದು, ಏಕಕಾಲಕ್ಕೆ ಪೋಸ್ಟಲ್‌ ಬ್ಯಾಲೆಟ್‌ಗಳ ಮತ ಎಣಿಕೆ ಮಾಡಲಾಗುವುದು ಎಂದು ಅವರು ತಿಳಿಸಿದರು.
5
+ ಮತ ಎಣಿಕೆ ಕಾರ್ಯಕ್ಕೆ 1200 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಮತ ಎಣಿಕೆ ಸಂದರ್ಭದಲ್ಲಿ ಆನ್‌ ಕೋರ್‌ ಅಂತ ಎಲೆಕ್ಷನ್‌ ಕಮಿಷನ್‌ ಸಾಫ್ಟವೇರ್‌ ಇದೆ ಅದರಲ್ಲಿ ಮಾಹಿತಿ ಎಂಟ್ರಿ ಮಾಡಲಾಗುವುದು ಎಂದು ಅವರು ಹೇಳಿದರು.ಮತ ಎಣಿಕೆ ಮಾಡುವ ಪ್ರತಿ ಟೆಬಲ್‌ಗೂ ಒಂದೊಂದು ಸಿಸಿ ಕ್ಯಾಮೆರಾ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ ಕಾರಿಡಾರ್‌ಗಳಲ್ಲಿ ಆಗು ಚಟುವಟಿಕೆಗಳ ಮೇಲೂ ತೀವ್ರ ನಿಗಾ ವಹಿಸಲಾಗುವುದು ಎಂದು ಅವರು ವಿವರಿಸಿದರು.
6
+ ಮಾಧ್ಯಮದವರಿಗೆ ಪ್ರತ್ಯೇಕ ರೂಮ್‌ ವ್ಯವಸ್ಥೆ ಮಾಡಲಾಗಿದೆ ಅವರಿಗೆ ಇನ್‌ಸೈಡ್‌ ಮೊಬೈಲ್‌ ತರುವುದನ್ನು ನಿಷೇಧಿಸಲಾಗಿದೆ ಎಂದು ತುಷಾರ್‌ಗಿರಿನಾಥ್‌ ತಿಳಿಸಿದರು.ಸಾಕಷ್ಟು ಸಂಖ್ಯೆಯಲ್ಲಿ ಮೈಕ್ರೋ ಅಬ್ಸರ್ವರ್‌ ಇರ್ತಾರೆ, ನಾಳೆ ಬೆಳಿಗ್ಗೆ ಯಾವ ಟೇಬಲ್‌ಗೆ ಯಾವ ಸಿಬ್ಬಂದಿ ಹೋಗಬೇಕು ಅಂತ ಅಬ್ಸರ್ವರ್‌ ಎದುರು ತೀರ್ಮಾನ ಮಾಡಲಾಗುತ್ತದೆ ಎಂದರು.
7
+ ಬೆಂಗಳೂರು ನಗರ ಜಿಲ್ಲೆಯ 3 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಮತ್ತು ಸ್ಟ್ರಾಂಗ್‌ ರೂಂ ಕೇಂದ್ರಗಳ ವಿವರ:
8
+ ವಿಧಾನಸಭಾ ಕ್ಷೇತ್ರಗಳ ಸಂಖ್ಯೆ: 8ಮತಗಟ್ಟೆಗಳ ಸಂಖ್ಯೆ: 2125ಮತ ಎಣಿಕೆ ಕೊಠಡಿಗಳ ಸಂಖ್ಯೆ: 10ಒಟ್ಟು ಟೇಬಲ್‌ ಗಳ ಸಂಖ್ಯೆ: 135ಒಟ್ಟು ಸಿಬ್ಬಂದಿಯ ಸಂಖ್ಯೆ: 416
9
+ ವಿಧಾನಸಭಾ ಕ್ಷೇತ್ರಗಳ ಸಂಖ್ಯೆ: 8ಮತಗಟ್ಟೆಗಳ ಸಂಖ್ಯೆ: 2911ಮತ ಎಣಿಕೆ ಕೊಠಡಿಗಳ ಸಂಖ್ಯೆ: 19ಒಟ್ಟು ಟೇಬಲ್‌ ಗಳ ಸಂಖ್ಯೆ: 130ಒಟ್ಟು ಸಿಬ್ಬಂದಿಯ ಸಂಖ್ಯೆ: 390
10
+ ವಿಧಾನಸಭಾ ಕ್ಷೇತ್ರಗಳ ಸಂಖ್ಯೆ: 8ಮತಗಟ್ಟೆಗಳ ಸಂಖ್ಯೆ: 2120ಮತ ಎಣಿಕೆ ಕೊಠಡಿಗಳ ಸಂಖ್ಯೆ: 9ಒಟ್ಟು ಟೇಬಲ್‌ ಗಳ ಸಂಖ್ಯೆ: 118ಒಟ್ಟು ಸಿಬ್ಬಂದಿಯ ಸಂಖ್ಯೆ: 354
11
+ ಈ ವೇಳೆ ಚುನಾವಣಾಧಿಕಾರಿಗಳಾದ ಡಾ. ಕೆ. ಹರೀಶ್‌ ಕುಮಾರ್‌ , ದಯಾನಂದ್‌‍, ವಿನೋತ್‌ ಪ್ರಿಯಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
eesanje/url_46_123_11.txt ADDED
@@ -0,0 +1,5 @@
 
 
 
 
 
 
1
+ ಶ್ವೇತಪತ್ರ ಹೊರಡಿಸುವಂತೆ ಸಿಎಂಗೆ ಆರ್‌.ಅಶೋಕ್‌
2
+ ಬೆಂಗಳೂರು,ಜೂ.2– ಕರ್ನಾಟಕದ ಜನತೆಯಲ್ಲಿ ಮೂಡಿರುವ ಅನುಮಾನ ನಿವಾರಿಸಲು ರಾಜ್ಯದ ಎಲ್ಲಾ ನಿಗಮ ಮಂಡಳಿಗಳ ಹಣಕಾಸಿನ ಸ್ಥಿತಿಗತಿ ಬಗ್ಗೆ ಒಂದು ಸಂಪೂರ್ಣ ಆಡಿಟ್‌ ನಡೆಸಿ, ನಿಗಮ ಮಂಡಳಿಗಳ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಒತ್ತಾಯಿಸಿದ್ದಾರೆ.
3
+ ಈ ಕುರಿತು ತಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಅವರು, ಕರ್ನಾಟಕವನ್ನು ಲೂಟಿ ಮಾಡಿ ಕಾಂಗ್ರೆಸ್‌‍ ಹೈಕಮಾಂಡ್‌ ಗೆ ಟಕಾಟಕ್‌ ಅಂತ ಹಣ ವರ್ಗಾವಣೆ ಮಾಡುತ್ತಿರುವ ಕಾಂಗ್ರೆಸ್‌‍ ಸರ್ಕಾರಕ್ಕೆ ರಾಜ್ಯದ ನಿಗಮ ಮಂಡಳಿಗಳೇ ಎಟಿಎಂಗಳಾಗಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.
4
+ ದಲಿತರು, ಹಿಂದುಳಿದವರು, ಬಡವರು, ರೈತರು, ಗ್ರಾಮೀಣ ಪ್ರದೇಶಗಳ ಜನರ ಕಲ್ಯಾಣಕ್ಕೆ ವಿನಿಯೋಗವಾಗಬೇಕಿದ್ದ ನಿಗಮ ಮಂಡಳಿಗಳ ಹಣ ಭ್ರಷ್ಟರ ಪಾಲಾಗುತ್ತಿರುವ ವಾಸನೆ ಬರುತ್ತಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
5
+ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬ್ರಹಾಂಡ ಭ್ರಷ್ಟಾಚಾರ ಗಮನಿಸಿದರೆ ರಾಜ್ಯದಲ್ಲಿರುವ ಎಲ್ಲಾ ನಿಗಮ ಮಂಡಳಿಗಳನ್ನು ಭ್ರಷ್ಟಾಚಾರಕ್ಕೆ ಬಳಸಿಕೊಂಡಿರುವ ದಟ್ಟವಾದ ಶಂಕೆ ಮೂಡುತ್ತಿದೆ ಎಂದು ಅನುಮಾನ ಹೊರಹಾಕಿದ್ದಾರೆ.
eesanje/url_46_123_12.txt ADDED
@@ -0,0 +1,9 @@
 
 
 
 
 
 
 
 
 
 
1
+ ಪಾರದರ್ಶಕವಾಗಿ ಮತಎಣಿಕೆಗೆ ಕ್ರಮ ಕೈಗೊಳ್ಳುವಂತೆ ಎಚ್‌.ಡಿ.ರೇವಣ್ಣ ಮನವಿ
2
+ ಹಾಸನ, ಜೂ.2-ಲೋಕಸಭಾ ಚುನಾವಣೆ ಮತ ಎಣಿಕೆಯು ಪಾರದರ್ಶಕವಾಗಿ ನಡೆಯಲು ಕ್ರಮ ಕೈಗೊಳ್ಳಬೇಕೆಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಭಾರತೀಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.
3
+ ಹರದನಹಳ್ಳಿಯ ನಿವಾಸದಲ್ಲಿ ಜೆಡಿಎಸ್‌‍ ಶಾಸಕರು ಹಾಗೂ ಮುಖಂಡರ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾರದರ್ಶಕವಾಗಿ ಮತ ಎಣಿಕೆ ನಡೆಸಬೇಕು. ಈ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಆಯೋಗ ನಿರ್ದೇಶನ ನೀಡಬೇಕು ಎಂದರು.
4
+ ಮತ ಎಣಿಕೆ ಕೇಂದ್ರಗಳಿಗೆ ಮಾಧ್ಯಮದವರಿಗೆ ಅವಕಾಶ ಕಲ್ಪಿಸಬೇಕೆಂದ ಅವರು, ಹಾಸನ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರಕ್ಕೆ ಜೂನ್‌ 4 ರಂದು ಬೆಳಿಗ್ಗೆ 6 ಗಂಟೆಗೆ ನಮ ಪಕ್ಷದ ಚುನಾವಣಾ ಏಜೆಂಟ್‌, ಮುಖಂಡರು ಹೋಗುತ್ತಾರೆ. ಪಕ್ಷದ ಎಲ್ಲಾ ಮುಖಂಡರು ಮತ ಎಣಿಕೆ ಸಂದರ್ಭದಲ್ಲಿ ಇರುತ್ತಾರೆ ಎಂದರು.
5
+ ಇಂದು ಶಾಸಕರಾದ ಡಾ.ಸಿ.ಎನ್‌.ಬಾಲಕೃಷ್ಣ, ಸ್ವರೂಪ್‌ ಪ್ರಕಾಶ್‌ ಅವರನ್ನೊಳಗೊಂಡಂತೆ ಸಭೆ ನಡೆಸಿದ್ದೇವೆ ಎಂದು ತಿಳಿಸಿದರು.
6
+ ಸಮೀಕ್ಷೆ : ಪ್ರತಿಕ್ರಿಯೆಗೆ ರೇವಣ್ಣ ನಕಾರಲೋಕಸಭಾ ಚುನಾವಣೆ ಮತದಾನೋತ್ತರ ಸಮೀಕ್ಷೆಗಳ ಬಗ್ಗೆ ಪ್ರತಿಕ್ರಿಯಿಸಲು ಮಾಜಿ ಸಚಿವ ಎಚ್‌.ಡಿ.ರೇವಣ್ಣ ನಿರಾಕರಿಸಿದರು.ಹೊಳೆನರಸೀಪುರದ ಲಕ್ಷ್ಮೀನರಸಿಂಹ ದೇವಾಲಯ ಹಾಗೂ ಹರದನಹಳ್ಳಿಯ ದೇವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌‍ 3 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದರು.
7
+ ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮೆ ದೇಶದ ಪ್ರಧಾನಿಯಾಗುವುದು ನಿಶ್ಚಿತ, ಈ ದೇಶ ಉಳಿಯಬೇಕಾದರೆ ಮೋದಿಯವರು ಪ್ರಧಾನಮಂತ್ರಿಯಾಗಲೇಬೇಕು, ಲಕ್ಷ್ಮೀನರಸಿಂಹ ಸ್ವಾಮಿ ಕೃಪೆ ಇರುವವರೆಗೂ ನಮಗೇನೂ ತೊಂದರೆಯಿಲ್ಲ ಎಂದು ಹೇಳಿದರು.
8
+ ಸ್ವಾತಂತ್ರ್ಯ ಬಂದು 75 ವರ್ಷ ಕಳೆದಿದೆ. ಶಿಕ್ಷಣ ಕ್ಷೇತ್ರಕ್ಕೆ ಒತ್ತು ಕೊಟ್ಟ ಮುಖ್ಯಮಂತ್ರಿ ಎಂದರೆ ಎಚ್‌.ಡಿ.ಕುಮಾರಸ್ವಾಮಿಯವರು. 1,600 ಪ್ರೌಢಶಾಲೆ, 600 ಪದವಿ ಪೂರ್ವ ಕಾಲೇಜು, 250 ಪದವಿ ಕಾಲೇಜುಗಳನ್ನು ಅವರ ಅವಧಿಯಲ್ಲಿ ತೆರೆಯಲಾಯಿತು. ಏಳೆಂಟು ಸಾವಿರ ಕೋಟಿ ರೂ. ಶಾಲಾ-ಕಾಲೇಜುಗಳ ಕಟ್ಟಡಗಳಿಗೆ ನೀಡಿದ್ದರು. ಅಲ್ಲದೆ, 4,800 ಶಿಕ್ಷಕರು, 1,600 ಪದವಿ ಪೂರ್ವ ಕಾಲೇಜು ಉಪನ್ಯಾಸಕರನ್ನು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಹಾಗೂ ಬಿ.ಎಸ್‌‍.ಯಡಿಯೂರಪ್ಪ ಅವರು ಉಪಮುಖ್ಯಮಂತ್ರಿಯಾಗಿದ್ದಾಗ ನೇಮಕ ಮಾಡಲಾಗಿದೆ.
9
+ ಬಿಜೆಪಿ-ಜೆಡಿಎಸ್‌‍ ಮೈತ್ರಿಯಿಂದ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಎದುರಿಸುತ್ತಿದ್ದೇವೆ. ಒಟ್ಟಾಗಿ ಎಲ್ಲರೂ ಕೆಲಸ ಮಾಡಿದ್ದೇವೆ. ನಮ ಪಕ್ಷದ ಅಭ್ಯರ್ಥಿ ವಿವೇಕಾನಂದ ಅವರು ಗೆಲ್ಲುವ ವಿಶ್ವಾಸವಿದೆ. ಹಾಸನ ಜಿ��್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದ್ದೇವೆ ಎಂದರು.
eesanje/url_46_123_2.txt ADDED
@@ -0,0 +1,6 @@
 
 
 
 
 
 
 
1
+ ಹಾವು-ಮುಂಗಸಿಗಳಂತೆ ಪರಸ್ಪರ ಕಚ್ಚಾಡುವ ನಾಯಕರು ಮುಖಾಮುಖಿಯಾದಾಗ..
2
+ ಬೆಂಗಳೂರು, ಜೂ.3-ಲೋಕಸಭಾ ಚುನಾವಣೆಯಿಂದಲೂ ಹಾವು ಮುಂಗಸಿಗಳಂತೆ ಪರಸ್ಪರ ಆರೋಪ-ಪ್ರತ್ಯಾರೋಪಗಳ ಮೂಲಕ ಕೆಂಡಕಾರುತ್ತಿರುವ ಕಾಂಗ್ರೆಸ್‌‍ ಮತ್ತು ಜೆಡಿಎಸ್‌‍ನ ವರಿಷ್ಠ ನಾಯಕರು ಪರಸ್ಪರ ಎದುರಾದಾಗ ನಾನಾ ರೀತಿಯ ಸ್ವಾರಸ್ಯಕರ ಪ್ರಸಂಗಗಳು ನಡೆದವು.
3
+ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಚುನಾವಣೆ ನಡೆಯುವ 11 ಕ್ಷೇತ್ರಗಳ ಚುನಾವಣಾ ಪ್ರಕ್ರಿಯೆಯಲ್ಲಿ ನಾಮಪತ್ರ ಸಲ್ಲಿಕೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪರಸ್ಪರ ಎದುರಾಗಿದ್ದಾರೆ. ವಿಧಾನಸಭೆಯ ಕಾರ್ಯದರ್ಶಿಯವರ ಕಚೇರಿಗೆ ಮೊದಲು ಭೇಟಿ ನೀಡಿದ್ದ ಕುಮಾರಸ್ವಾಮಿ ತಮ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ಬಳಿಕ ಹೊರಬಂದರು.
4
+ ಆ ವೇಳೆಗೆ ಸರಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಚ್‌.ಕೆ.ಪಾಟೀಲ್‌, ಎಚ್‌.ಸಿ.ಮಹದೇವಪ್ಪ, ಕೆ.ವೆಂಕಟೇಶ್‌ ಅವರೊಂದಿಗೆ ತಮ ಸರದಿಗಾಗಿ ಕಾಯುತ್ತಾ ನಿಂತಿದ್ದರು. ಕುಮಾರಸ್ವಾಮಿ ಹೊರಬರುವುದನ್ನು ಕಂಡ ಸಿದ್ದರಾಮಯ್ಯನವರು ಕೈ ಎತ್ತಿ ಹಾರೈಸಿದರು. ಅದಕ್ಕೆ ಕುಮಾರಸ್ವಾಮಿ ಪ್ರತಿಯಾಗಿ ವಂದಿಸಿ ಮುಂದೆ ಹೆಜ್ಜೆ ಹಾಕಿದರು.
5
+ ಅವರ ಹಿಂದೆ ಬಂದ ಜೆಡಿಎಸ್‌‍ನ ವಿಧಾನಪರಿಷತ್‌ ಸದಸ್ಯ ಶರವಣ ಅವರು ಮುಖ್ಯಮಂತ್ರಿ ಹಾಗೂ ಎಚ್‌.ಕೆ.ಪಾಟೀಲರಿಗೆ ನಮಸ್ಕಾರ ಹೇಳಿದರು. ಜಿ.ಟಿ.ದೇವೇಗೌಡ ಸೇರಿದಂತೆ ಹಲವು ನಾಯಕರು ಮುಖ್ಯಮಂತ್ರಿಯವರ ಬಳಿ ಬಂದು ಪರಸ್ಪರ ಉಭಯ ಕುಶಲೋಪರಿ ವಿಚಾರಿಸಿಕೊಂಡು ಹೋದರು.
6
+ ಮುಂದೆ ಹೆಜ್ಜೆ ಹಾಕಿದ ಕುಮಾರಸ್ವಾಮಿಯವರು ಸಚಿವ ಎಚ್‌.ಸಿ.ಮಹದೇವಪ್ಪ ಅವರಿಗೆ ಹಸ್ತಲಾಘವ ನೀಡಿ ತೆರಳಿದರು. ಕುಮಾರಸ್ವಾಮಿ ಮುಂದೆ ಸಾಗುತ್ತಿದ್ದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಿಧಾನಕ್ಕೆ ಬಂದರು. ಇಬ್ಬರೂ ಪರಸ್ಪರ ಮುಖವನ್ನೂ ನೋಡದೇ ಹಾದಿ ಸವೆಸಿದ್ದು ಗಮನಾರ್ಹವಾಗಿತ್ತು.ಅನಂತರ ಕಾಂಗ್ರೆಸ್‌‍ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಭಾಗಿಯಾಗಿದ್ದರು.
eesanje/url_46_123_3.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ನಾಳೆ ಲೋಕಸಭೆ ಚುನಾವಣೆ ಫಲಿತಾಂಶ : ಭಾರೀ ಬಿಗಿ ಭದ್ರತೆಯಲ್ಲಿ ಮತಎಣಿಕೆಗೆ ಸಿದ್ಧತೆ
2
+ ಬೆಂಗಳೂರು,ಜೂ.3-ವಿಶ್ವದ ಗಮನಸೆಳೆದಿರುವ 18ನೇ ಲೋಕಸಭೆ ಚುನಾವಣೆಯ 542 ಕ್ಷೇತ್ರಗಳ ಮತ ಎಣಿಕೆ ನಾಳೆ ಭಾರೀ ಬಿಗಿ ಭದ್ರತೆಯಲ್ಲಿ ನಡೆಯಲಿದ್ದು, ಕೇಂದ್ರದಲ್ಲಿ ಅಧಿಕಾರ ಗದ್ದುಗೆ ಯಾರಿಗೆ ಎಂಬುದು ತೀರ್ಮಾನವಾಗಲಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಏಕಕಾಲಕ್ಕೆ ಮತ ಎಣಿಕೆ ನಡೆದು, ಮತದಾರ ಗ್ಯಾರಂಟಿಗೋ ಇಲ್ಲವೋ ಮೋದಿ ಗ್ಯಾರಂಟಿಗೋ ಅಚ್ಚು ಒತ್ತಿದ್ದಾನೋ ಎಂಬುದು ಬಹಿರಂಗವಾಗಲಿದೆ.
3
+ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಾರಂಭವಾಗಲಿದೆ. ಆರಂಭದಲ್ಲಿ ಅಂಚೆ ಮತಗಳ ಎಣಿಕೆ ನಡೆದ ಬಳಿಕ ಇವಿಎಂಗಳ ಮತ ಎಣಿಕೆ ಆರಂಭವಾಗಲಿದೆ. ಮಧ್ಯಾಹ್ನ 2 ಗಂಟೆ ನಂತರ ಫಲಿತಾಂಶದ ಚಿತ್ರಣ ಹೊರಬೀಳಲಿದ್ದು, ಬಹುತೇಕ ಸಂಜೆಯೊಳಗೆ ಜನಾದೇಶ ಯಾರಿಗೆ ಎಂಬುದು ಸ್ಪಷ್ಟವಾಗಲಿದೆ.
4
+ ಬಹುತೇಕ ಮತಗಟ್ಟೆ ಸಮೀಕ್ಷೆಗಳು ಈ ಬಾರಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ. 2019ರ ಲೋಕಸಭಾ ಚುನಾವಣೆಯಲ್ಲಿ ಗಳಿಸಿದ ಸ್ಥಾನಕ್ಕಿಂತಲೂ ಹೆಚ್ಚಿನ ಸ್ಥಾನಗಳನ್ನು ಗೆದ್ದು ಬಿಜೆಪಿ 3ನೇ ಬಾರಿಗೆ ಹ್ಯಾಟ್ರಿಕ್‌ ಜಯ ಗಳಿಸಲಿದೆ ಎಂದು ಅಂದಾಜಿಸಲಾಗಿದೆ.
5
+ ಆದರೆ ಕಾಂಗ್ರೆಸ್‌‍ ನೇತೃತ್ವದ ಇಂಡಿಯಾ ಮೈತ್ರಿಕೂಟ ಮತಗಟ್ಟೆ ಸಮೀಕ್ಷೆಗಳನ್ನು ಸಾರಾಸಗಟಾಗಿ ತಿರಸ್ಕರಿಸಿದೆ. ಕಳೆದ 2023ರ ಮೇನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದ ಕಾಂಗ್ರೆಸ್‌‍ ಲೋಕಸಭೆ ಚುನಾವಣೆಯಲ್ಲಿ ಎರಡಂಕಿ ದಾಟಲಿದೆ ಎಂಬ ನಿರೀಕ್ಷೆಯನ್ನು ಇಟ್ಟುಕೊಂಡಿದೆ.
6
+ 1999ರಿಂದ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಈವರೆಗೂ ಎರಡಂಕಿಯನ್ನು ದಾಟಿಲ್ಲ. ಈ ಬಾರಿ 20 ಕ್ಷೇತ್ರಗಳಲ್ಲಿ ಗೆದ್ದು ದಾಖಲೆ ಬರೆಯುತ್ತೇವೆ ಎಂಬ ನಿರೀಕ್ಷೆಯನ್ನು ಕೈ ನಾಯಕರು ಹೊಂದಿದ್ದಾರೆ.
7
+ ಗ್ಯಾರಂಟಿಗಳ ಅನುಷ್ಟಾನದಿಂದ ಜನರ ಆರ್ಥಿಕ ಸ್ಥಿತಿ ಸುಧಾರಣೆಯಾಗಿದೆ. ಬಸ್‌‍ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಶಕ್ತಿ ಯೋಜನೆ, ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ಆರ್ಥಿಕ ನೆರವು ನೀಡುವ ಗೃಹಲಕ್ಷ್ಮಿ ಯೋಜನೆ, ಪದವಿ ಮತ್ತು ಡಿಪ್ಲೊಮೊ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ, ಅನ್ನಭಾಗ್ಯ, ಉಚಿತವಾಗಿ ವಿದ್ಯುತ್‌ ಪೂರೈಸುವ ಗೃಹಜ್ಯೋತಿ ಯೋಜನೆಗಳಿಂದ ಫಲಾನುಭವಿಗಳು ಸಂತುಷ್ಟರಾಗಿದ್ದಾರೆ. ಹೀಗಾಗಿ ನಮಗೆ ಹೆಚ್ಚಿನ ಸ್ಥಾನ ಬಂದೇ ಬರಲಿದೆ ಎಂಬ ಆತವಿಶ್ವಾಸದಲ್ಲಿದ್ದಾರೆ.
8
+ ಆದರೆ ಬಹುತೇಕ ಮತಗಟ್ಟೆ ಸಮೀಕ್ಷೆಗಳು ಕಾಂಗ್ರೆಸ್‌‍ ರಾಜ್ಯದಲ್ಲಿ ಈ ಬಾರಿಯೂ ಎರಡಂಕಿಯನ್ನು ದಾಟುವುದಿಲ್ಲ ಎಂದು ಹೇಳಿದೆ. ಬಹುತೇಕ ಸಮೀಕ್ಷೆಗಳು 2-3, 3-5, 5-7, 5-8 ಸ್ಥಾನಗಳನ್ನು ನೀಡಿವೆ.
9
+ ಮೋದಿ ಗ್ಯಾರಂಟಿಯಲ್ಲಿ ಬಿಜೆಪಿ:ಇನ್ನು ರಾಜ್ಯದಲ್ಲಿ ಮೊದಲ ಬಾರಿಗೆ ಜೆಡಿಎಸ್‌‍ ಜೊತೆ ಮೈತ್ರಿ ಮಾಡಿಕೊಂಡು ಚುನ��ವಣಾ ಕಣಕ್ಕಿಳಿದಿದ್ದ ಬಿಜೆಪಿ ಈ ಬಾರಿ ಬಂಪರ್‌ ಬೆಳೆಯ ನಿರೀಕ್ಷೆಯಲ್ಲಿದೆ. ಕಾಂಗ್ರೆಸ್‌‍ ಗ್ಯಾರಂಟಿಗಿಂತ ರಾಜ್ಯದ ಜನತೆ ಮೋದಿ ಗ್ಯಾರಂಟಿ ಬಗ್ಗೆಯೇ ಹೆಚ್ಚು ಒಲವು ಹೊಂದಿದ್ದಾರೆ.
10
+ ಏನೇ ಆದರೂ ನಾವು 25ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂಬ ದೃಢ ವಿಶ್ವಾಸ ಬಿಜೆಪಿ ನಾಯಕರಲ್ಲಿದೆ. ಇದಕ್ಕೆ ಪುಷ್ಟಿ ನೀಡುವಂತೆ ಮತಗಟ್ಟೆ ಸಮೀಕ್ಷೆಗಳು ಕೂಡ ರಾಜ್ಯದಲ್ಲಿ ಈ ಬಾರಿ ಬಿಜೆಪಿ-ಜೆಡಿಎಸ್‌‍ ಮೈತ್ರಿಕೂಟ ಕಡಿಮೆ ಎಂದರೂ 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಹೇಳಿದೆ.
11
+ ಇನ್ನು ಕೆಲವು ಸಮೀಕ್ಷೆಗಳು ರಾಜ್ಯದಲ್ಲಿ ಎನ್‌ಡಿಎ 24-26 ಕ್ಷೇತ್ರಗಳನ್ನು ಗೆದ್ದು ದಾಖಲೆ ಬರೆಯಬಹುದೆಂಬ ಭವಿಷ್ಯ ನುಡಿದಿರುವುದು ಕಾಂಗ್ರೆಸ್‌‍ ನಾಯಕರನ್ನು ತಲೆ ತಿರುಗುವಂತೆ ಮಾಡಿದೆ.
12
+ ಹೀಗಾಗಿಯೇ ಮತಗಟ್ಟೆ ಸಮೀಕ್ಷೆಗಳು ಸುಳ್ಳು ಎಂದು ಕಾಂಗ್ರೆಸ್‌‍ ಪ್ರತಿಪಾದಿಸಿದರೆ, ಬಿಜೆಪಿ ಇದು ವಾಸ್ತವಕ್ಕೆ ಹತ್ತಿರವಿದ್ದು ಜನರ ನಾಡಿಮಿಡಿತದ ಮೇಲೆಯೇ ಮತಗಟ್ಟೆ ಸಮೀಕ್ಷೆಗಳು ಹೊರಬಂದಿವೆ. ನಾವು 25ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆದ್ದು ಪ್ರಧಾನಿ ಮೋದಿಗೆ ಉಡುಗೊರೆ ಕೊಡುತ್ತೇವೆ ಎಂಬ ವಿಶ್ವಾಸದಲ್ಲಿದೆ.
13
+ ನಿಷೇಧಾಜ್ಞೆ:ಮತ ಎಣಿಕೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಜೂನ್‌ 3 ಸೋಮವಾರ ಸಂಜೆ 6 ಗಂಟೆಯಿಂದ ಜೂನ್‌ 5ರ ಮಧ್ಯರಾತ್ರಿ 12 ಗಂಟೆಯವರೆಗೆ ದೇಶಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
14
+ ನಿಷೇಧಾಜ್ಞೆ ವೇಳೆ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ, ಬೀದಿ, ಓಣಿ, ಕೇರಿಗಳಲ್ಲಿ, ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮುಂತಾದವುಗಳಲ್ಲಿ ಗುಂಪು ಸೇರುವಂತಿಲ್ಲ. ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಚಿ, ಚೂರಿ, ದೊಣ್ಣೆ, ಪಿಸ್ತೂಲು, ಬಂದೂಕು ಸೇರಿದಂತೆ ಯಾವುದೇ ಮಾರಕಾಸ್ತ್ರಗಳನ್ನು ಒಯ್ಯುವುದು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಲಾಗುತ್ತದೆ.
15
+ ಫಲಿತಾಂಶ ಪ್ರಕಟವಾದ ದಿನ ಗೆಲುವು ಸಾಧಿಸುವ ಅಭ್ಯರ್ಥಿಗಳ ಮೆರವಣಿಗೆ ಹಾಗೂ ಪಟಾಕಿ, ಬಾಣ, ಬಿರುಸು ಹಚ್ಚುವುದು ಹಾಗೂ ಸಾರ್ವಜನಿಕ ಸಭೆ ಸಮಾರಂಭ ನಡೆಸುವುದು, ಗೆಲುವಿನ ಸಂಭ್ರಮಾಚರಣೆ ನಡೆಸುವುದನ್ನು ನಿಷೇಧಿಸಿದೆ. ಸಾರ್ವಜನಿಕವಾಗಿ ಯಾವುದೇ ಘೋಷಣೆ ಹಾಕುವುದು, ಚೇಷ್ಟೆ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಅಥವಾ ಪ್ರಸಾರ ಮಾಡುವುದನ್ನೂ ನಿಷೇಧಿಸಲಾಗಿರುತ್ತದೆ.
eesanje/url_46_123_4.txt ADDED
@@ -0,0 +1,5 @@
 
 
 
 
 
 
1
+ ಬೆಂಗಳೂರಲ್ಲಿ ಮಳೆ ಅನಾಹುತಗಳನ್ನು ಸರಿಪಡಿಸಲು ಕ್ರಮ : ಡಿಸಿಎಂ ಡಿಕೆಶಿ
2
+ ಬೆಂಗಳೂರು, ಜೂ.3-ನಗರದಲ್ಲಿ ಮಳೆ ಅನಾಹುತಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಇನ್ನೂ ಹೆಚ್ಚು ಬರಲಿ ಎಂದು ನಾನು ಪ್ರಾರ್ಥಿಸುತ್ತೇನೆ, ಅದರಿಂದಾಗಿರುವ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಜನರ ಸಮಸ್ಯೆಗೆ ಸ್ಪಂದಿಸುವಂತೆ ಆದೇಶಿಸಲಾಗಿದೆ ಎಂದರು.
4
+ ತಾವು ಸ್ವಕ್ಷೇತ್ರ ಕನಕಪುರಕ್ಕೆ ಭೇಟಿ ನೀಡಿ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಭಾಗವಹಿಸಿ ಮರಳಿ ಬರುತ್ತೇನೆ. ಅನಂತರ ಸಂಜೆ ಅಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು ಎಂದು ಹೇಳಿದರು.
5
+ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯಿಂದ ಬಹಳಷ್ಟು ಅನಾಹುತಗಳಾಗಿದ್ದು, ಹಲವೆಡೆ ಮರಗಳು ಬಿದ್ದಿದ್ದು ಸಮಸ್ಯೆಗಳಾಗಿವೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಮಳೆಬಾಧಿತ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದಾಗಿ ಭರವಸೆ ನೀಡಿದರು.
eesanje/url_46_123_5.txt ADDED
@@ -0,0 +1,4 @@
 
 
 
 
 
1
+ ವಿಧಾನಪರಿಷತ್‌ ಚುನಾವಣೆ : ಜೆಡಿಎಸ್‌‍ ಅಭ್ಯರ್ಥಿಯಾಗಿ ಜವರಾಯಿಗೌಡ ಕಣಕ್ಕೆ
2
+ ಬೆಂಗಳೂರು, ಜೂ.3-ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್‌‍ ಅಭ್ಯರ್ಥಿಯಾಗಿ ಟಿ.ಎನ್‌.ಜವರಾಯಿಗೌಡ ಅವರನ್ನು ಕಣಕ್ಕಿಳಿಸಲಾಗಿದೆ. ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಸೇರಿದಂತೆ ನಾಲ್ಕು ಬಾರಿ ಜೆಡಿಎಸ್‌‍ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜವರಾಯಿಗೌಡ ಅವರಿಗೆ ಈವರೆಗೂ ಶಾಸನ ಸಭೆ ಪ್ರವೇಶಿಸಲು ಸಾಧ್ಯವಾಗಿರಲಿಲ್ಲ.
3
+ ವಿಧಾನಪರಿಷತ್‌ ಚುನಾವಣೆ ಅವರ ಅದೃಷ್ಟವನ್ನು ಖುಲಾಯಿಸುವಂತೆ ಮಾಡಿದೆ. ಜೆಡಿಎಸ್‌‍ನ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಇವರ ಪತ್ನಿ ಗಾಯತ್ರಿ ಜವರಾಯಿಗೌಡ ದೊಡ್ಡಬಿದ್ರಿಕಲ್ಲಿನಿಂದ ಬಿಬಿಎಂಪಿಯ ಸದಸ್ಯೆಯಾಗಿಯೂ ಕೆಲಸ ಮಾಡಿದ್ದರು.
4
+ ಇಂದು ನಾಮಪತ್ರ ಸಲ್ಲಿಕೆಯ ವೇಳೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಖುದ್ದು ಹಾಜರಿದ್ದರು.ಜೆಡಿಎಸ್‌‍ನ ಶಾಸಕಾಂಗ ಕಚೇರಿಗೆ ಆಗಮಿಸಿದ ಎಂ.ಟಿ.ಕೃಷ್ಣಪ್ಪ ಸೇರಿದಂತೆ ಹಲವು ಶಾಸಕರು ಜವರಾಯಿಗೌಡರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಮಾಡಿದರು.
eesanje/url_46_123_6.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ವಿಧಾನಪರಿಷತ್‌ ಚುನಾವಣೆ : ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಸಿಎಂ ಸಿದ್ದು ಮೇಲುಗೈ
2
+ ಬೆಂಗಳೂರು, ಜೂ.3-ವಿಧಾನಪರಿಷತ್‌ನ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಹೈಕಮಾಂಡ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಪ್ರಾಯದಂತೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ರಾಜ್ಯದಲ್ಲಿನ ನಾಯಕತ್ವ ಮತ್ತಷ್ಟು ಗಟ್ಟಿಗೊಂಡಂತಾಗಿದೆ.
3
+ ನಿನ್ನೆ ಸಂಜೆ ಪ್ರಕಟಿಸಲಾದ ಕಾಂಗ್ರೆಸ್‌‍ ಪಟ್ಟಿಯಲ್ಲಿ ಸಿದ್ದರಾಮಯ್ಯ ಅವರ ಶಿಫಾರಸ್ಸು ಮಾಡಿದ 3 ಮಂದಿಗೆ ಅವಕಾಶ ದೊರೆತಿದೆ. ಉಳಿದ ನಾಲ್ಕು ಸ್ಥಾನಗಳ ಪೈಕಿ ಹೈಕಮಾಂಡ್‌ ಮೂರೂ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡಿದ್ದು, ಡಿ.ಕೆ.ಶಿವಕುಮಾರ್‌ರವರು ಸೂಚಿಸಿದ್ದ ಒಬ್ಬರಿಗೆ ಮಣೆ ಹಾಕಲಾಗಿದೆ.
4
+ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮುಖ್ಯಮಂತ್ರಿಯವರ ಸುಪುತ್ರ ಯತೀಂದ್ರ ಹಾಗೂ ಶಿವಮೊಗ್ಗದ ಬಲ್ಕೀಸ್‌‍ ಬಾನು ಅವರಿಗೆ ಅವಕಾಶ ದೊರೆತಿದೆ. ಡಿ.ಕೆ.ಶಿವಕುಮಾರ್‌ರವರು ಸೂಚಿಸಿದ್ದ ಐವಾನ್‌ ಡಿಸೋಜಾ ಅವರಿಗೆ ವಿಧಾನಪರಿಷತ್‌ ಸದಸ್ಯರಾಗುವ ಯೋಗ ಬಂದಿದೆ.
5
+ ಬಹುತೇಕ ಎನ್‌.ಎಸ್‌‍.ಬೋಸರಾಜು ಅವರನ್ನು ಕೈಬಿಡುವ ಸಾಧ್ಯತೆಯಿತ್ತಾದರೂ ಕೊನೆಕ್ಷಣದಲ್ಲಿ ಮರು ಅವಕಾಶ ನೀಡಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತಕುಮಾರ್‌ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಕೃಪಾಶೀರ್ವಾದ ಮಾಡಿದ್ದಾರೆ. ಬೋಸರಾಜ್‌ ಮತ್ತು ವಸಂತಕುಮಾರ್‌ ಇಬ್ಬರೂ ರಾಯಚೂರು ಜಿಲ್ಲೆಗೆ ಸೇರಿದವರಾಗಿದ್ದು, ಈ ಬಾರಿ ಪ್ರಾದೇಶಿಕ ಆದ್ಯತೆ ಮೂಲೆಗುಂಪಾಗಿದೆ.
6
+ ಕಲಬುರಗಿಯ ಜಿಲ್ಲಾ ಕಾಂಗ್ರೆಸ್‌‍ ಅಧ್ಯಕ್ಷ ಜಗದೇವ್‌ ಗುತ್ತೇದಾರ್‌ ಅವರನ್ನು ವಿಧಾನಪರಿಷತ್‌ ಸದಸ್ಯರನ್ನಾಗಿ ಮಾಡುವ ಮೂಲಕ ಹೈಕಮಾಂಡ್‌ ತಮ ಅಭಿಲಾಷೆಯನ್ನು ಈಡೇರಿಸಿಕೊಂಡಿದೆ.
7
+ ಲಿಂಗಾಯತ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕಾದ ವಿಚಾರ ಬಂದಾಗ ಯುವಕಾಂಗ್ರೆಸ್‌‍ನ ಮಾಜಿ ಅಧ್ಯಕ್ಷ ಬಸನಗೌಡ ಬಾದರ್ಲಿ ಅವರಿಗೆ ಮಣೆ ಹಾಕಲಾಗಿದೆ.ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರಿಂದ ತೆರವಾಗಿರುವ ಒಂದು ಸ್ಥಾನಕ್ಕೆ ಮುಂದಿನ ತಿಂಗಳು ಚುನಾವಣೆ ನಡೆಯಲಿದ್ದು, ಅದಕ್ಕೆ ಬಸನಗೌಡ ಬಾದರ್ಲಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.
8
+ ವಿಧಾನಪರಿಷತ್‌ಗೆ ಅಭ್ಯರ್ಥಿಗಳಾಗಿ ಆಯ್ಕೆಯಾಗಿರುವ ಪೈಕಿ ಗೋವಿಂದರಾಜು, ಎನ್‌.ಎಸ್‌‍.ಬೋಸರಾಜ್‌ ಮರಳಿ ಅವಕಾಶ ಪಡೆದಿದ್ದಾರೆ. ಬೋಸ್‌‍ರಾಜ್‌ 2ನೇ ಬಾರಿ ವಿಧಾನಪರಿಷತ್‌ ಸದಸ್ಯರಾಗುತ್ತಿದ್ದರೆ, ಗೋವಿಂದ ರಾಜು 3ನೇ ಬಾರಿಗೆ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.
9
+ ಐವಾನ್‌ ಡಿಸೋಜಾ ಅವರಿಗೂ 2ನೇ ಬಾರಿ ಅದೃಷ್ಟ ಖುಲಾಯಿಸಿದೆ. ಯತೀಂದ್ರ ಈಗಾಗಲೇ ಶಾಸಕರಾಗಿ ಒಂದು ಅವಧಿಗೆ ಕೆಲಸ ಮಾಡಿದ್ದರು. ತಂದೆಗೆ ವರುಣ ಕ್ಷೇತ್ರವನ್ನು ಬಿಟ್ಟುಕೊಟ್ಟ ಪರಿಣಾಮ ಮೇಲನೆ ಅವಕಾಶ ದೊರೆತಿದೆ.
10
+ ವಸಂತಕುಮಾರ್‌ ರಾಯಚೂರು ಜಿಲ್ಲಾ ಕಾಂಗ್ರೆಸ್‌‍ ಅಧ್ಯಕ್ಷರಾಗಿದ್ದರು. ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಮಾಡುವ ಮೂಲಕ ಈಗ ವಿಧಾನಪರಿಷತ್‌ಗೂ ಅಭ್ಯರ್ಥಿ ಮಾಡಿರುವುದು ಗಮನ ಸೆಳೆದಿದೆ. ಯತೀಂದ್ರ ಹಾಗೂ ಬವನಗೌಡ ಬಾದರ್ಲಿ ಅವರನ್ನು ಹೊರತುಪಡಿಸಿ ಈ ಬಾರಿ ಕುಟುಂಬ ರಾಜಕಾರಣಕ್ಕೆ ಹೆಚ್ಚು ಮನ್ನಣೆ ಸಿಕ್ಕಿಲ್ಲ.
11
+ ಆದರೆ ಅವಕಾಶ ಪಡೆದವರಿಗೆ ಮರು ಆಯ್ಕೆ ಮಾಡುವುದಿಲ್ಲ ಎಂಬ ಹೈಕಮಾಂಡ್‌ನ ನಿಯಮಾವಳಿಗಳು ಕೆಲವರ ಪ್ರಕರಣದಲ್ಲಿ ಸಡಿಲಿಕೆ ಆಗಿರುವುದು ಅಚ್ಚರಿ ಮೂಡಿಸಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹೈಕಮಾಂಡ್‌ ನಾಯಕರು ತಮಗೆ ಬೇಕಾದವರಿಗೆ ಸದಸ್ಯರನ್ನಾಗಿ ಮಾಡಿಕೊಂಡಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಿಂಬಾಲಕರಿಗೆ ನಿರಾಸೆಯಾದಂತಾಗಿದೆ.
12
+ ಈ ಬಾರಿ ವಿಧಾನಪರಿಷತ್‌ನಲ್ಲಿ ಅವಕಾಶ ಗಿಟ್ಟಿಸಲು ಸುಮಾರು 80ಕ್ಕೂ ಹೆಚ್ಚು ಮಂದಿ ಲಾಬಿ ನಡೆಸಿದ್ದರು. ಆದರೆ ಹೈಕಮಾಂಡ್‌ ತನ್ನದೇ ಆದ ಲೆಕ್ಕಾಚಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ.
eesanje/url_46_123_7.txt ADDED
@@ -0,0 +1,5 @@
 
 
 
 
 
 
1
+ ಸಚಿವ ಬಿ.ನಾಗೇಂದ್ರ ಕುರಿತು ಸಿಎಂ, ಡಿಸಿಎಂ ನಿರ್ಧಾರಕ್ಕೆ ನಾನು ಬದ್ಧ : ಎಚ್‌.ಕೆ.ಪಾಟೀಲ್‌
2
+ ಬೆಂಗಳೂರು, ಜೂ.3-ವಾಲೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಸಚಿವ ಬಿ.ನಾಗೇಂದ್ರ ಅವರ ಕುರಿತು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ತೆಗೆದುಕೊಳ್ಳುವ ತೀರ್ಮಾನಕ್ಕೆ ತಾವು ಬದ್ಧ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ಹೇಳಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದ ಕಾಂಗ್ರೆಸ್‌‍ ಶಾಸಕಾಂಗ ಸಭೆಯಲ್ಲಿ ಹಲವಾರು ವಿಚಾರಗಳು ಚರ್ಚೆಯಾಗಿವೆ. ಅದರಲ್ಲಿ ಬಿ.ನಾಗೇಂದ್ರ ಅವರ ಪ್ರಕರಣ ಕುರಿತು ವಿಚಾರ ವಿನಿಮಯವಾಗಿದೆ. ಅವರ ವಿಚಾರದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧರಾಗಿದ್ದೇವೆ. ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದುನೋಡಿ ಎಂದರು.
4
+ ಚುನಾವಣೋತ್ತರ ಸಮೀಕ್ಷಾ ವರದಿಗಳು ಹುಸಿಯಾಗಲಿವೆ. ಕರ್ನಾಟಕದಲ್ಲಿ ಕಾಂಗ್ರೆಸ್‌‍ ಪಕ್ಷ 16ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಈಗಾಗಲೇ ಕಾಂಗ್ರೆಸ್‌‍ ಪಕ್ಷ ಮಾತ್ರವಲ್ಲದೆ, ಹಲವಾರು ತಜ್ಞರು ಕಾಂಗ್ರೆಸ್‌‍ ಪರವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಆದರೆ ಚುನಾವಣೋತ್ತರ ಸಮೀಕ್ಷಾ ವರದಿಗಳು ಒಂದು ಪಕ್ಷಕ್ಕೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಪ್ರಕಟವಾಗಿವೆ ಎಂದರು.
5
+ ನಾವು ಇದನ್ನು ನಂಬುವುದಿಲ್ಲ. ಪ್ರಜಾಪ್ರಭುತ್ವಕ್ಕೆ ಗೆಲುವಾಗುವ ವಿಶ್ವಾಸವಿದೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ಸಾಕಷ್ಟು ಸತ್ಯಾಂಶಗಳನ್ನು ಹುಡುಕಲಾಗಿದೆ. ಉತ್ತರ ಪ್ರದೇಶ, ಕರ್ನಾಟಕ ಸೇರಿದಂತೆ ಹಲವು ಕಡೆ ಕಾಂಗ್ರೆಸ್‌‍ಗೆ ನಕಾರಾತಕವಾಗಿ ಬಿಂಬಿಸಲಾಗಿದೆ ಎಂದು ಹೇಳಿದರು.
eesanje/url_46_123_8.txt ADDED
@@ -0,0 +1,9 @@
 
 
 
 
 
 
 
 
 
 
1
+ ಇಂದು ಪದವೀಧರ ಹಾಗೂ ಶಿಕ್ಷಕರ 6 ಕ್ಷೇತ್ರಗಳ ಚುನಾವಣೆ : ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ
2
+ ಬೆಂಗಳೂರು, ಜೂ.3-ಲೋಕಸಭಾ ಚುನಾವಣೆ ಬೆನ್ನಲ್ಲೇ ನಡೆಯುತ್ತಿರುವ ಪದವೀಧರ ಹಾಗೂ ಶಿಕ್ಷಕರ 6 ಕ್ಷೇತ್ರಗಳ ಚುನಾವಣೆ ಮತದಾನ ಇಂದು ಬಿರುಸಿನಿಂದ ಸಾಗಿತು.ಆಗ್ನೇಯ, ನೈರುತ್ಯ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರ, ಈಶಾನ್ಯ, ನೈರುತ್ಯ ಮತ್ತು ಬೆಂಗಳೂರು ಪದವೀಧರ ಕ್ಷೇತ್ರಗಳಲ್ಲಿ ಇಂದು ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದ್ದು, ಶಿಕ್ಷಕರು, ಪದವೀಧರ ಮತದಾರರು ಇಂದು ಬೆಳಿಗ್ಗೆಯಿಂದಲೇ ಆಗಮಿಸಿ ತಮ ಪ್ರಾಶಸ್ತ್ಯದ ಮತವನ್ನು ಚಲಾಯಿಸಿತ್ತಿದ್ದುದು ಕಂಡುಬಂದಿತು.
3
+ ಬೆಳಿಗ್ಗೆ ಆರಂಭವಾದ ಮತದಾನ ಸಂದರ್ಭದಲ್ಲಿ ಮತದಾರರ ಸಂಖ್ಯೆ ವಿರಳವಾಗಿತ್ತು. ಹೊತ್ತು ಕಳೆದಂತೆ ಮತದಾರರ ಸಂಖ್ಯೆ ಮತಗಟ್ಟೆಗೆ ಆಗಮಿಸುತ್ತಿದ್ದುದು ಹೆಚ್ಚಾಗಿದ್ದು ಕಂಡುಬಂದಿತು.ಮತಗಟ್ಟೆಯ ಹೊರಭಾಗದಲ್ಲಿ ತಮ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದೂ ಕೂಡ ಕಂಡುಬಂದಿತು.
4
+ ಆಗ್ನೇಯ ಶಿಕ್ಷಕರ ವಿಧಾನಪರಿಷತ್‌ ಚುನಾವಣಾ ಪ್ರಕ್ರಿಯೆ ಬೆಳಿಗ್ಗೆ 8 ಗಂಟೆಗೆ ಆರಂಭಗೊಂಡಿದ್ದು, ಇಲ್ಲಿನ ಚಿಕ್ಕಬಳ್ಳಾಪುರ ತಾಲೂಕು ಆಡಳಿತ ಸೌಧದ ತಾಲೂಕು ಕಚೇರಿಯಲ್ಲಿ ನಡೆದ ಮತದಾನದಲ್ಲಿ ಮತದಾರರು ಉತ್ಸುಕತೆಯಿಂದ ಆಗಮಿಸಿ ಮತ ಚಲಾಯಿಸಿದರು.
5
+ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ, ಕಾಂಗ್ರೆಸ್‌‍ ಪಕ್ಷದ ಅಭ್ಯರ್ಥಿ ಟಿ.ಡಿ.ಶ್ರೀನಿವಾಸ್‌‍ ಅವರ ಪರವಾಗಿ ಬೆಂಬಲಿಗರು, ಕಾರ್ಯಕರ್ತರು ಮತದಾರರ ಮನವೊಲಿಸುತ್ತಿದ್ದುದು ಕಂಡುಬಂದಿತು.ನೈರುತ್ಯ ಪದವೀಧರ ಕ್ಷೇತ್ರಕ್ಕೆ ನಡೆದ ಚುನಾವಣೆಗೆ ಚಿಕ್ಕಮಗಳೂರಿನ ಬೇಲೂರು ರಸ್ತೆಯಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಾಜಿ ಸಚಿವ ಸಿ.ಟಿ.ರವಿ ಮತದಾನ ಮಾಡಿದರು.
6
+ ಶಿಕ್ಷಕರ ಕ್ಷೇತ್ರದ ಬಿಜೆಪಿ ಬೆಂಬಲಿತ ಜೆಡಿಎಸ್‌‍ ಅಭ್ಯರ್ಥಿ ಎಸ್‌‍.ಎಲ್‌.ಬೋಜೇಗೌಡ ಮತದಾನ ನಡೆಯುತ್ತಿರುವ ಬೇಲೂರು ರಸ್ತೆಯಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
7
+ ಈಶಾನ್ಯ ಪದವೀಧರ, ಬೆಂಗಳೂರು ಪದವೀಧರ, ನೈರುತ್ಯ ಪದವೀಧರ ಹಾಗೂ ಆಗ್ನೇಯ ಶಿಕ್ಷಕರ, ನೈರುತ್ಯ ಶಿಕ್ಷಕರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳ 6 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು, ಪಕ್ಷೇತರರು ಸೇರಿ ಒಟ್ಟು 78 ಅಭ್ಯರ್ಥಿಗಳು ಕಣದಲ್ಲಿದ್ದು, 4.33 ಲಕ್ಷ ಮತದಾರರು ಮತದಾನ ಮಾಡುವ ಅರ್ಹತೆ ಪಡೆದಿದ್ದಾರೆ.
8
+ 6 ಕ್ಷೇತ್ರಗಳ ಚುನಾವಣೆಯಲ್ಲಿ ಗೆಲುವಿಗಾಗಿ ಕಾಂಗ್ರೆಸ್‌‍ ಮತ್ತು ಬಿಜೆಪಿ-ಜೆಡಿಎಸ್‌‍ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. 4 ಕ್ಷೇತ್ರಗಳಲ್ಲಿ ಕಾಂಗ್ರೆಸ್‌‍, ಬಿಜೆಪಿ ಮಧ್ಯೆ ನೇರ ಹಣಾಹಣಿ ಇದ್ದರೆ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರ���ತ್ಯ ಶಿಕ್ಷಕರ ಕ್ಷೇತ್ರಗಳಲ್ಲಿ ಕಾಂಗ್ರೆಸ್‌‍, ಜೆಡಿಎಸ್‌‍ ನಡುವೆ ಹಣಾಹಣಿ ಏರ್ಪಟ್ಟಿದೆ.
9
+ ವಿಧಾನಪರಿಷತ್‌ನಲ್ಲಿ ಬಹುಮತ ಸಾಧಿಸಲು ಹವಣಿಸುತ್ತಿರುವ ಕಾಂಗ್ರೆಸ್‌‍ಗೆ ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದರೆ ಮೇಲನೆಯಲ್ಲಿ ಸಭಾಪತಿ ಮತ್ತು ಉಪಸಭಾಪತಿ ಸ್ಥಾನವನ್ನು ತಮ ಬಳಿಯೇ ಉಳಿಸಿಕೊಳ್ಳಲು ಮುಂದಾಗಿರುವ ಬಿಜೆಪಿ ಮತ್ತು ಜೆಡಿಎಸ್‌‍ ಮೈತ್ರಿ ಮಾಡಿಕೊಂಡಿದ್ದು, ಮೈತ್ರಿಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಹೆಚ್ಚಿನ ಪ್ರಯತ್ನ ನಡೆಸಿದೆ.ಶಿಕ್ಷಕ, ಪದವೀಧರ ಮತದಾರರು ಯಾರ ಕಡೆ ವಾಲಲಿದ್ದಾರೆ? ಪಕ್ಷೇತರ ಅಭ್ಯರ್ಥಿಗಳು ಯಾರಿಗೆ ಕಂಠಕವಾಗಲಿದ್ದಾರೆ? ಎಂಬುದು ಜೂನ್‌ 6 ರಂದು ನಡೆಯುವ ಮತ ಎಣಿಕೆ ಸಂದರ್ಭದಲ್ಲಿ ಗೊತ್ತಾಗಲಿದೆ.
eesanje/url_46_123_9.txt ADDED
@@ -0,0 +1,8 @@
 
 
 
 
 
 
 
 
 
1
+ ಸಿ.ಟಿ.ರವಿ, ಎನ್‌.ರವಿಕುಮಾರ್‌, ಎಂ.ಜಿ. ಮೂಳೆಗೆ ಪರಿಷತ್‌ ಬಿಜೆಪಿ ಟಿಕೆಟ್‌
2
+ ಬೆಂಗಳೂರು,ಜೂ.2-ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಮೂರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ , ಅಚ್ಚರಿ ಬೆಳವಣಿಗೆ ಎಂಬಂತೆ ಮಾಜಿ ಸಚಿವ ಸಿ.ಟಿ.ರವಿ ಅವರಿಗೆ ಬಿಜೆಪಿ ಮಣೆ ಹಾಕಿದೆ.
3
+ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಮೂವರು ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದು, ಮಾಜಿ ಸಚಿವ ಸಿ.ಟಿ.ರವಿ, ಹಾಲಿ ವಿಧಾನಪರಿಷತ್‌ನ ಮುಖ್ಯ ಸಚೇತಕ ಎನ್‌.ರವಿಕುಮಾರ್‌ ಹಾಗೂ ಮಾಜಿ ಶಾಸಕ, ಮರಾಠ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಂ.ಜಿ. ಮುಳೆ ಅವರನ್ನು ಕಣಕ್ಕಿಳಿಸಿದೆ.
4
+ ಸಿ.ಟಿ.ರವಿ(ಒಕ್ಕಲಿಗ), ಎನ್‌.ರವಿಕುಮಾರ್‌(ಕೋಲಿ ಸಮಾಜ), ಎಂ.ಜಿ.ಮುಳೆ ಮರಾಠ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಸಿ.ಟಿ.ರವಿ ಅವರನ್ನು ಅಚ್ಚರಿ ಎಂಬಂತೆ ಪರಿಷತ್‌ ಚುನಾವಣೆಯಲ್ಲಿ ಅಭ್ಯರ್ಥಿ ಮಾಡಿರುವುದು ಹೊಸ ಬೆಳವಣಿಗೆಯಾಗಿದೆ.
5
+ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಅವರು ಪರಿಷತ್‌ಗೆ ಆಯ್ಕೆ ಮಾಡುವ ಸುಳಿವು ಕೊಟ್ಟಿದ್ದರು. ವಿಧಾನಸಭೆ ಹಾಗೂ ವಿಧಾನಪರಿಷತ್‌ನಲ್ಲಿ ಹೋರಾಟ ನಡೆಸಬೇಕಾಗಿದ್ದ ಅವರು ಕೆಲವು ಕಾರಣಗಳಿಂದ ಪರಾಭವಗೊಂಡಿದ್ದಾರೆ. ಪಕ್ಷವು ಸದ್ಯದಲ್ಲೇ ಸೂಕ್ತವಾದ ಸ್ಥಾನಮಾನವನ್ನು ನೀಡಲಿದೆ ಎಂದು ಹೇಳಿದ್ದರು.
6
+ ಇದೀಗ ಮೂರು ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಎನ್‌.ರವಿಕುಮಾರ್‌ ಅವರಿಗೆ ಮತ್ತೊಮೆ ಅವಕಾಶ ನೀಡಲಾಗಿದೆ. ಪರಿಷತ್‌ ಚುನಾವಣೆಯಲ್ಲಿ ಈ ಬಾರಿ ಸುಮಲತಾ ಅಂಬರೀಶ್‌ ಅವರಿಗೆ ಟಿಕೆಟ್‌ ನೀಡಲಾಗುತ್ತದೆ ಎಂಬ ವದ್ದಂತಿ ಕೇಳಿಬಂದಿತ್ತು. ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌‍ಗೆ ತ್ಯಾಗ ಮಾಡಿದ್ದ ಅವರಿಗೆ ಮೇಲನೆಯಲ್ಲಿ ಸ್ಥಾನ ಕಲ್ಪಿಸುವ ಮೂಲಕ ಅನ್ಯಾಯ ಸರಿಪಡಿಸಲಾಗುತ್ತದೆ ಎಂಬ ಮಾತು ಪಕ್ಷದ ಕಚೇರಿಯಲ್ಲಿ ಹಬ್ಬಿತ್ತು.
7
+ ಆದರೆ ಇದೀಗ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ ಒಕ್ಕಲಿಗ ಸಮುದಾಯದ ಸಿ.ಟಿ.ರವಿ, ಹಿಂದುಳಿದ ವರ್ಗಗಳಿಂದ ಎನ್‌.ರವಿಕುಮಾರ್‌ ಮತ್ತು ಸಂಘ ಪರಿವಾರದ ಮುಳೆ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ.
8
+ ವಿಧಾನಸಭೆಯಲ್ಲಿ 65 ಸದಸ್ಯರನ್ನು ಹೊಂದಿರುವ ಬಿಜೆಪಿ ವಿಧಾನಪರಿಷತ್‌ಗೆ ಮೂವರು ಅಭ್ಯರ್ಥಿಗಳನ್ನು ಸುಲಭವಾಗಿ ಆಯ್ಕೆ ಮಾಡಬಹುದು. ಒಬ್ಬ ಸದಸ್ಯ ಗೆಲ್ಲಲು 19 ಮತಗಳ ಅಗತ್ಯ ಇರುವುದರಿಂದ ಬಿಜೆಪಿಗೆ ಮೂರು ಸ್ಥಾನಗಳು ದಕ್ಕಲಿವೆ. ನಾಮಪತ್ರ ಸಲ್ಲಿಸಲು ಸೋಮವಾರ ಕಡೆಯ ದಿನವಾಗಿದ್ದು, ಇಂದು ನಿಗದಿತ ಸಮಯದೊಳಗೆ ನಾಮಪತ್ರ ಸಲ್ಲಿಸಲಿದ್ದಾರೆ.
eesanje/url_46_124_1.txt ADDED
@@ -0,0 +1,7 @@
 
 
 
 
 
 
 
 
1
+ ವಿಧಾನಪರಿಷತ್‌ ಚುನಾವಣೆ : ಇಂದು ಕಾಂಗ್ರೆಸ್‌‍ ಅಭ್ಯರ್ಥಿಗಳ ಪಟ್ಟಿ ಪ್ರಕಟ ?
2
+ ಬೆಂಗಳೂರು, ಜೂ.2-ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ 7 ಸ್ಥಾನಗಳಿಗೆ ಇಂದು ಸಂಜೆ ವೇಳೆಗೆ ಕಾಂಗ್ರೆಸ್‌‍ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಹಾಗೂ ಎನ್‌.ಎಸ್‌‍.ಬೋಸರಾಜ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು ಅವರಿಗೆ ಅವಕಾಶಗಳು ಸಿಗುವ ಸಾಧ್ಯತೆಗಳು ದಟ್ಟವಾಗಿವೆ.
3
+ ಪ್ರಸ್ತುತ ಚುನಾವಣೆ ನಡೆಯುತ್ತಿರುವ 7 ಸ್ಥಾನಗಳ ಜೊತೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರಿಂದ ತೆರವಾಗಿರುವ ಮತ್ತೊಂದು ಸ್ಥಾನಕ್ಕೂ ಮುಂದಿನ ತಿಂಗಳು ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಆ ಕ್ಷೇತ್ರವನ್ನೂ ಒಳಗೊಂಡಂತೆ ಒಟ್ಟು 8 ಮಂದಿಯ ಪಟ್ಟಿಯನ್ನು ಪ್ರಕಟಿಸಬಹುದು ಎಂದು ನಿರೀಕ್ಷಿಸಲಾಗಿದೆ.
4
+ 7 ಸ್ಥಾನಗಳಿಗೆ ಸುಮಾರು 300 ಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ಕಾಂಗ್ರೆಸ್‌‍ ಅಳೆದೂ ತೂಗಿ 80 ಮಂದಿಯ ಸಂಭವನೀಯ ಪಟ್ಟಿಯನ್ನು ತಯಾರಿಸಿತ್ತು. ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮೂರು ದಿನಗಳ ಕಾಲ ಬೀಡುಬಿಟ್ಟು ಹೈಕಮಾಂಡ್‌ ಜೊತೆ ಚರ್ಚಿಸಿದ ಬಳಿಕ 1:2 ಅನುಪಾತದ ಆಧಾರದ ಮೇಲೆ 14 ಜನರ ಪಟ್ಟಿಯನ್ನು ಸಲ್ಲಿಸಲಾಗಿತ್ತು. ಅದರಲ್ಲಿ ಮೂಲಗಳ ಪ್ರಕಾರ, ಯತೀಂದ್ರ, ಬೋಸ್‌‍ರಾಜ್‌, ಗೋವಿಂದರಾಜು ಅವರ ಜೊತೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತಕುಮಾರ್‌, ಮಾಜಿ ಸಂಸದ ವಿ.ಎಸ್‌‍.ಉಗ್ರಪ್ಪ, ಚಿಕ್ಕಮಗಳೂರಿನವರಾದ ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್‌ ಕುಮಾರ್‌, ಬಾಗಲಕೋಟೆಯ ಇಸಾಯಿಲ್‌ ಟಮಟ್ಕರ್‌ ಸೇರಿದಂತೆ ಹಲವರ ಹೆಸರುಗಳಿವೆ.
5
+ ಈ ಬಾರಿ ಮಹಿಳೆಯರಿಗೆ ಅವಕಾಶ ನಿರಾಕರಿಸುವ ಸಾಧ್ಯತೆಗಳಿವೆ. ವಿಧಾನಸಭೆ ಹಾಗೂ ಕ್ರಿಶ್ಚಿಯನ್‌ ಸಮುದಾಯಕ್ಕೆ ಅವಕಾಶ ಸಿಗಬೇಕು ಎಂಬ ಒತ್ತಾಸೆಗಳಿವೆ. ಕೆಪಿಸಿಸಿಯ ಆಡಳಿತಾತಕ ಪ್ರಧಾನ ಕಾರ್ಯದರ್ಶಿ ವಿಜಯ್‌ ಕೆ. ಮುಳಗುಂದ್‌, ಖಚಾಂಜಿ ವಿನಯ್‌ ಕಾರ್ತಿಕ್‌ ಅವರ ಹೆಸರುಗಳು ತೀವ್ರವಾಗಿ ಕೇಳಿಬಂದಿದೆ.11 ಸ್ಥಾನಗಳಲ್ಲಿ ಕಾಂಗ್ರೆಸ್‌‍ನ ಅರವಿಂದ್‌ ಕುಮಾರ್‌ ಅರಳಿ, ಎನ್‌.ಎಸ್‌‍.ಬೋಸರಾಜ್‌, ಕೆ.ಗೋವಿಂದರಾಜು, ಕೆ.ಹರೀಶ್‌ಕುಮಾರ್‌ ನಿವೃತ್ತರಾಗುತ್ತಿದ್ದಾರೆ.
6
+ ಅರವಿಂದ್‌ ಕುಮಾರ್‌ ಅರಳಿ, ಕೆ.ಹರೀಶ್‌ಕುಮಾರ್‌ ಅವರು ಅವಕಾಶ ಗಿಟ್ಟಿಸುವ ಸಾಧ್ಯತೆಗಳು ಕ್ಷೀಣವಾಗಿವೆ. ಬಿಜೆಪಿಯ ಸದಸ್ಯರಾಗಿದ್ದ ಡಾ.ತೇಜಸ್ವಿನಿಗೌಡ, ಕೆ.ಪಿ.ನಂಜುಂಡಿ ವಿಶ್ವಕರ್ಮ ಅವರು ತಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌‍ಗೆ ಸೇರ್ಪಡೆಯಾಗಿದ್ದು, ಅವರೂ ಕೂಡ ವಿಧಾನಪರಿಷತ್‌ ಸದಸ್ಯತ್ವಕ್ಕೆ ಲಾಬಿ ನಡೆಸಿದ್ದರು.
7
+ ಇಂದು ಬೆಳಿಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌‍ ನಾಯಕ ರಾಹುಲ್‌ಗಾಂಧಿ ಅವರು ಆನ್‌ಲೈನ್‌ ಮೂಲಕ ರಾಜ್ಯ ನಾಯಕರೊಂದಿಗೆ ಚರ್ಚೆ ನಡೆಸಿದ್ದು, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಅಂತಿಮ ಹಂತದ ಅಭಿಪ್ರಾಯ ಸಂಗ್ರಹಿಸಿದ್ದಾರೆ.ಸಂಜೆ ಕಾಂಗ್ರೆಸ್‌‍ ಪಕ್ಷದ ಶಾಸಕಾಂಗ ಸಭೆ ನಡೆಯಲಿದ್ದು, ಅಲ್ಲಿ ಪಕ್ಷದ ಶಾಸಕರಿಂದ ಪರಿಷತ್‌ ಅಭ್ಯರ್ಥಿಗಳ ನಾಮಪತ್ರಗಳಿಗೆ ಸೂಚಕರ ಸಹಿ ಹಾಕಿಸಲಾಗುವುದು. ಅದಕ್ಕೂ ಮೊದಲೇ ಅಭ್ಯರ್ಥಿಗಳ ಆಯ್ಕೆಯಾಗುವ ಸಾಧ್ಯತೆಗಳಿವೆ.
eesanje/url_46_124_10.txt ADDED
@@ -0,0 +1,5 @@
 
 
 
 
 
 
1
+ ರಜೆಗೆ ಸಂಬಂಧಿಕರ ಮನೆಗೆ ಬಂದಿದ್ದ ಬಾಲಕಿಯರಿಬ್ಬರು ನೀರಿನಲ್ಲಿ ಮುಳುಗಿ ಸಾವು
2
+ ಚಿಕ್ಕಬಳ್ಳಾಪುರ, ಜೂ.2-ಈಜಲು ತೆರಳಿದ್ದ ಮುಂಬೈ ಮೂಲದ ಬಾಲಕಿಯರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದಂಡಿಗನಹಳ್ಳಿ ಕೆರೆಯಲ್ಲಿ ನಡೆದಿದೆ.ಮುಂಬೈ ಮೂಲದ ಅಲಿಯಾ ಪಾಟೀಲ್‌ (14), ಜೋಯಾ ಪಾಟೀಲ್‌ (14) ಮೃತಪಟ್ಟ ದುರ್ದೈವಿಗಳು.
3
+ ರಜೆಯ ಹಿನ್ನೆಲೆಯಲ್ಲಿ ಗೌರಿಬಿದನೂರಿನ ಸಂಬಂಧಿಕರ ಮನೆಗೆ ಬಂದಿದ್ದ ಬಾಲಕಿಯರು ಕುಟುಂಬ ಸಮೇತ ನಿನ್ನೆ ದಂಡಿಗನಹಳ್ಳಿ ಕೆರೆ ವೀಕ್ಷಣೆಗೆ ಆಗಮಿಸಿದ್ದು, ಬಾಲಕಿಯರು ಈಜಲು ಕೆರೆಗೆ ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಇಬ್ಬರೂ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
4
+ ಕೆರೆ ಏರಿ ಮೇಲಿದ್ದ ಸಂಬಂಧಿಕರು ರಕ್ಷಿಸಲು ಹರಸಾಹಸ ಪಟ್ಟರೂ ಸಾಧ್ಯವಾಗಲಿಲ್ಲ. ಇನ್ನೆರೆಡು ದಿನ ಬಿಟ್ಟು ಮುಂಬೈಗೆ ವಾಪಸ್ಸಾಗಬೇಕಾಗಿದ್ದ ಬಾಲಕಿಯರು ಅಷ್ಟರೊಳಗೆ ಈ ದುರಂತ ಸಾವನ್ನು ಕಂಡಿದ್ದಾರೆ.
5
+ ಸುದ್ದಿ ತಿಳಿದ ಕೂಡಲೇ ಮಂಚೇನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮೃತದೇಹಗಳನ್ನು ಸ್ಥಳೀಯರ ನೆರವಿನೊಂದಿಗೆ ಹೊರತೆಗೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
eesanje/url_46_124_11.txt ADDED
@@ -0,0 +1,6 @@
 
 
 
 
 
 
 
1
+ ಕೊಲೆಯಾದ ನೇಹಾ ಮೇಲೆ ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪ..?
2
+ ಹುಬ್ಬಳ್ಳಿ , ಜೂ.2-ನೇಹಾ ಹಿರೇಮಠ ಕೊಲೆ ಪ್ರಕರಣ ದೇಶದ್ಯಂತ ಸಾಕಷ್ಟು ಸದ್ದು ಮಾಡಿತ್ತು. ಈ ಕೊಲೆ ಪ್ರಕರಣ ತನಿಖೆಯನ್ನು ಸಿಐಡಿ ನಡೆಸುತ್ತಿರುವಾಗಲೇ ಮತ್ತೊಂದು ಆರೋಪವನ್ನು ದಲಿತ ಸಂಘಟನೆಗಳು ಹೊರ ಹಾಕಿವೆ. ನಿರಂಜನ ಹಿರೇಮಠ ಅವರ ಮಗಳು ನೇಹಾ ಹೆಸರಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ದಾಖಲೆ ಸೃಷ್ಟಿ ಮಾಡಿದ್ದಾರೆ ಎಂದು ವಿವಿಧ ದಲಿತ ಸಂಘಟನೆಗಳು ಹಾಗೂ ಸಮತಾ ಸೇನೆ ರಾಜ್ಯಾಧ್ಯಕ್ಷ ಗುರುನಾಥ ಉಳ್ಳಿಕಾಶಿ ಆರೋಪಿಸಿದ್ದು, ಈ ಬಗ್ಗೆ ಜಿಲ್ಲಾಡಳಿತ ಸೇರಿದಂತೆ ತಾಲ್ಲೂಕಾಡಳಿತಕ್ಕೂ ಸತ್ಯಾಸತ್ಯದ ಪರಿಶೀಲನೆಗೆ ಮನವಿ ಮಾಡಿದ್ದಾರೆ.
3
+ ದೂರಿನಲ್ಲಿ ಏನಿದೆ? :ನೇಹಾ ಹಿರೇಮಠ ಹತ್ಯೆಯ ತನಿಖೆ ನಡೆದಿರುವಾಗಲೇ ಮತ್ತಷ್ಟು ಹೊಸ ವಿಷಯಗಳು ಹೊರಗೆ ಬರುತ್ತಿವೆ. ಪ್ರಬಲ ಲಿಂಗಾಯತ ಸಮಾಜದ ನಿರಂಜನ ಹಿರೇಮಠ ಮಗಳು ಬೇಡ ಜಂಗಮ ದಳ ಪರಿಶಿಷ್ಟ ಜಾತಿ (ಎಸ್ಸಿ) ಪ್ರಮಾಣ ಪತ್ರ ಪಡೆದಿದ್ದು, ಇದನ್ನು ರದ್ದು ಮಾಡಿ ಕ್ರಿಮಿನಲ್‌ ಕೇಸ್‌‍ ದಾಖಲಿಸಬೇಕೆಂದು ಸಮತಾ ಸೇನಾ ವಿವಿಧ ದಲಿತ ಸಂಘ ಸಂಸ್ಥೆಗಳ ಮಹಾಮಂಡಳದಿಂದ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ (ಡಿಸಿಆರ್‌ಇ) ದೂರು ನೀಡಿದ್ದಾರೆ.
4
+ ನೇಹಾ ಹುಬ್ಬಳ್ಳಿಯ ರಹವಾಸಿ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದ್ರೆ ಬೆಂಗಳೂರು ವಿಳಾಸ ತೋರಿಸಿ ಜಾತಿ ಸರ್ಟಿಫಿಕೇಟ್‌ ಪಡೆದುಕೊಂಡಿದ್ದಾರೆ. ಬೇಗೂರ ರೋಡ್‌ ಹೊಂಗಸಂದ್ರ ವಾರ್ಡ್‌ ನಂಬರ್‌ 135 ರಲ್ಲಿ ಬೇಡ ಜಂಗಮ ಸರ್ಟಿಫಿಕೇಟ್‌ ಪಡೆದುಕೊಂಡಿದ್ದು, ನೇಹಾ ಜಾತಿ ಸರ್ಟಿಫಿಕೇಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಸರ್ಟಿಫಿಕೆಟ್‌ ನಕಲಿಯಾಗಿದೆ. ಇದರ ಸಮಗ್ರ ತನಿಖೆಯಾಗಬೇಕು. ನಿರಂಜನ ಹಿರೇಮಠ ರಾಜಕೀಯ ಲಾಭಕ್ಕಾಗಿ ಈ ಕೃತ್ಯ ಎಸಗಿರಬೇಕು ಎಂಬ ಅನುಮಾನವಿದ್ದು ಸಮಗ್ರ ತನಿಖೆಗೆ ಸಂಘಟನೆಗಳು ಒತ್ತಾಯಿಸಿವೆ.
5
+ ಆದರೆ ಈ ಆರೋಪವನ್ನು ನೇಹಾ ತಂದೆ ನಿರಂಜನ ಹಿರೇಮಠ ಅಲ್ಲಗಳೆದಿದ್ದಾರೆ. ನಾವು ಬೇಡ ಜಂಗಮ ಸರ್ಟಿಫಿಕೆಟ್‌ ಖೊಟ್ಟಿಯಾಗಿ ತಗೆದುಕೊಂಡಿಲ್ಲ. ಕಾನೂನುಬದ್ಧವಾಗಿ ತಗೆದುಕೊಳ್ಳಲಾಗಿದೆ. ಈ ಬಗ್ಗೆ ಅನುಮಾನ ಇದ್ದವರು ತನಿಖೆ ನಡೆಸಲಿ ನಾನು ಎಲ್ಲಾ ತನಿಖೆಗೂ ಸಿದ್ಧ.
6
+ ಆದ್ರೆ ನನ್ನ ಮಗಳ ಸಾವಿನ ನಂತರ ಕೆಲವರು ಷಡ್ಯಂತ್ರ ಮಾಡಿ ಇಂತಹ ಆರೋಪ ಮಾಡುತ್ತಿದ್ದಾರೆ. ನಾನು ಸಿಐಡಿ ಅಧಿಕಾರಿಗಳಿಗೆ ಮಾತ್ರ ನಾನು ಬೇಡ ಜಂಗಮ ಎಸ್ಸಿ ಸರ್ಟೀಫಿಕೆಟ್‌ ಕೊಟ್ಟ್ದೆಿ. ಅದು ಆರೋಪ ಮಾಡಿದವರ ಕೈಗೆ ಹೇಗೆ ಸಿಕ್ಕಿತು ಎಂಬ ಬಗ್ಗೆಯೂ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
eesanje/url_46_124_12.txt ADDED
@@ -0,0 +1,6 @@
 
 
 
 
 
 
 
1
+ ಪ್ರಜ್ವಲ್‌ ರೇವಣ್ಣ ಕ್ಷಮೆಗೆ ಅರ್ಹರಲ್ಲ ; ಕಾನೂನು ರೀತಿ ಅತ್ಯುಗ್ರ ಶಿಕ್ಷೆಯಾಗಲಿ : ಜೋಶಿ
2
+ ಹುಬ್ಬಳ್ಳಿ,ಜೂ.1-ಪ್ರಜ್ವಲ್‌ ರೇವಣ್ಣ ಕ್ಷಮೆಗೆ ಅರ್ಹರಲ್ಲ. ಪೆನ್‌ಡ್ರೈವ್‌ ಪ್ರಕರಣದಲ್ಲಿ ಕಟ್ಟುನಿಟ್ಟಿನ ತನಿಖೆ ನಡೆಸಿ ಅತ್ಯುಗ್ರವಾದಂತಹ ಶಿಕ್ಷೆ ವಿಧಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
3
+ ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಜ್ವಲ್‌ ರೇವಣ್ಣ ಯಾವ ಕಾರಣಕ್ಕಾಗಿ ರಾಜ್ಯದ ಜನರ ಕ್ಷಮೆ ಕೇಳಿದ್ದಾರೋ ಗೊತ್ತಿಲ್ಲ. ಆದರೆ, ಅವರು ಕ್ಷಮೆಗೆ ಅರ್ಹರಲ್ಲ ಎಂದು ಸ್ಪಷ್ಟಪಡಿಸಿದರು.
4
+ ಹೇಸಿಗೆ ತರುತ್ತದೆ :ಮಹಿಳೆಯರನ್ನು ಉನ್ನತ ಸ್ಥಾನದಲ್ಲಿರಿಸಿ, ಅತ್ಯಂತ ಗೌರವದಿಂದ ನೋಡುವ ಭಾರತ ದೇಶದಲ್ಲಿ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹೇಸಿಗೆ ತರಿಸುವ ಕೆಲಸ ಎಂದು ಜೋಶಿ ತೀವ್ರವಾಗಿ ಖಂಡಿಸಿದರು.
5
+ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಇದುವರೆಗೆ ನಡೆದುಕೊಂಡ ರೀತಿ ಅಕ್ಷಮ್ಯ. ಸಂತ್ರಸ್ತರ ಕ್ಷಮೆ ಕೇಳುತ್ತಾರೋ, ಬಿಡುತ್ತಾರೋ ಆದರೆ, ಇದೊಂದು ಘನಘೋರ ಕೃತ್ಯವಾಗಿದ್ದರಿಂದ ಕಾನೂನು ರೀತಿಯಲ್ಲಿ ಶಿಕ್ಷೆಯಾಗಲೇಬೇಕು. ಇದು ಬಿಜೆಪಿಯ ಸ್ಪಷ್ಟ ನಿಲುವಾಗಿದೆ ಎಂದು ಪ್ರಲ್ಹಾದ ಜೋಶಿ ಹೇಳಿದರು.
6
+ ಭಾರತೀಯ ನ್ಯಾಯಾಂಗ ವ್ಯವಸ್ಥೆ ಬಲಿಷ್ಠವಾಗಿದೆ. ತ್ವರಿತವಾಗಿ ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ಆರೋಪಿಗೆ ಶೀಘ್ರವೇ ಅತ್ಯುಗ್ರ ಶಿಕ್ಷೆ ವಿಧಿಸಬೇಕು ಎಂದು ಸಚಿವ ಜೋಶಿ ಪ್ರತಿಕ್ರಿಯಿಸಿದರು.
eesanje/url_46_124_2.txt ADDED
@@ -0,0 +1,7 @@
 
 
 
 
 
 
 
 
1
+ ತಲೆಮರೆಸಿಕೊಂಡ ಭವಾನಿ ರೇವಣ್ಣ ಅವರಿಗಾಗಿ ಹುಡುಕಾಟ ನಡೆದಿದೆ : ಪರಮೇಶ್ವರ್‌
2
+ ಬೆಂಗಳೂರು, ಜೂ.2-ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಪತ್ನಿ ಭವಾನಿ ಅವರು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಹುಡುಕಾಟ ನಡೆದಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭವನಾ ರೇವಣ್ಣ ಅವರನ್ನು ಬಂಧಿಸುವುದಕ್ಕಾಗಿಯೇ ಹುಡುಕಾಡಲಾಗುತ್ತಿದೆ. ಅವರು ಸಿಕ್ಕ ತಕ್ಷಣ ಕಾನೂನು ಪ್ರಕ್ರಿಯೆಗಳನ್ನು ಮುಂದುವರೆಸಲಾಗುವುದು. ಈವರೆಗೂ ಅವರು ಎಲ್ಲಿದ್ದಾರೆ ಎಂದು ಗೊತ್ತಿಲ್ಲ. ತಪ್ಪಿಸಿಕೊಂಡಿದ್ದಾರೆ. ಅರವಾಗಿಯೇ ಬಂದರೆ ಅಥವಾ ಹುಡುಕಿದಾಗ ಸಿಕ್ಕರೆ ಬಂಧಿಸುವುದು ಖಚಿತ ಎಂದರು.
4
+ ಚುನಾವಣೋತ್ತರ ಸಮೀಕ್ಷೆ ವಿಶ್ವಾಸಾರ್ಹವಲ್ಲ :ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ವಾಸ್ತವಕ್ಕೆ ಹತ್ತಿರವಾಗಿಲ್ಲ. ನಮ ಪಕ್ಷದ ವತಿಯಿಂದ ನಡೆಸಿರುವ ಆಂತರಿಕ ಸಮೀಕ್ಷೆ ಹಾಗೂ ಕಾರ್ಯಕರ್ತರ ವರದಿ ಆಧರಿಸಿದರೆ ಕಾಂಗ್ರೆಸ್‌‍ ನೇತೃತ್ವದ ಇಂಡಿಯಾ ಕೂಟ 295 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮಲ್ಲಿಕಾರ್ಜುನ ಖರ್ಗೆಯವರು ವ್ಯಕ್ತಪಡಿಸಿರುವುದು ಸರಿಯಿದೆ. ರಾಜ್ಯದಲ್ಲಿ ನಾವು ತಳಮಟ್ಟದಲ್ಲಿ ಕೆಲಸ ಮಾಡಿದ್ದೇವೆ. ಕನಿಷ್ಟ 17 ರಿಂದ 18 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸದಲ್ಲಿದ್ದೇವೆ ಎಂದರು.
5
+ ಜನರ ನಡುವೆ ಹೋರಾಡಿರುವ ನಮಗೆ ವಾಸ್ತವ ಗೊತ್ತಿದೆ. ರಾಜ್ಯಸರ್ಕಾರದ ಗ್ಯಾರಂಟಿ ಯೋಜನೆಗಳು ಕೈಹಿಡಿಯುತ್ತವೆ ಎಂದು ನಂಬಿದ್ದೇವೆ. ಚುನಾವಣೋತ್ತರ ಸಮೀಕ್ಷೆಗಳಲ್ಲಿ 3 ರಿಂದ 4 ಸ್ಥಾನ ಮಾತ್ರ ಗೆಲ್ಲಲಿದೆ ಎಂದು ಹೇಳಲಾಗಿದೆ. ಇದರ ಮೇಲೆ ನನಗೆ ನಂಬಿಕೆ ಇಲ್ಲ ಎಂದು ಹೇಳಿದರು.
6
+ ಹಲವು ಸಂದರ್ಭಗಳಲ್ಲಿ ಸಮೀಕ್ಷೆಗಳು ಸರಿಯಾಗಿವೆ. ಆದರೆ ಈಗ ನಡೆದಿರುವ ಸಮೀಕ್ಷೆಗಳು ಅನುಮಾನಾಸ್ಪದ. ಆಯ್ದ ಮಾಧ್ಯಮಗಳು ಮಾತ್ರ ಸಮೀಕ್ಷೆಯನ್ನು ಮಾಡಿವೆ. ಇದು ಯಾವ ಕಾರಣಕ್ಕೆ ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದು ಹೇಳಿದರು.
7
+ ವಿಧಾನಪರಿಷತ್‌ನ ಚುನಾವಣೆ ಹಿನ್ನೆಲೆಯಲ್ಲಿ ಸಂಜೆ ಕಾಂಗ್ರೆಸ್‌‍ ಶಾಸಕಾಂಗ ಸಭೆಯನ್ನು ಕರೆಯಲಾಗಿದೆ. ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಇಂದು ಸಂಜೆ ಅಥವಾ ನಾಳೆ ಪ್ರಕಟಗೊಳ್ಳಲಿದೆ. ಅಭ್ಯರ್ಥಿಗಳ ನಾಮಪತ್ರಕ್ಕೆ 10 ಮಂದಿ ಶಾಸಕರು ಸಹಿ ಹಾಕಬೇಕು. ಅದಕ್ಕಾಗಿ ಶಾಸಕಾಂಗ ಸಭೆ ಆಯೋಜಿಸಲಾಗಿದೆ ಎಂದರು.
eesanje/url_46_124_3.txt ADDED
@@ -0,0 +1,7 @@
 
 
 
 
 
 
 
 
1
+ ಲೋಕಸಭಾ ಚುನಾವಣೆ : ರಾಜ್ಯದಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ
2
+ ಬೆಂಗಳೂರು, ಜೂ.2-ಪ್ರಸಕ್ತ ಲೋಕಸಭಾ ಚುನಾವಣೆ ಮತ ಎಣಿಕೆ ಮಂಗಳವಾರ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಸಂಜೆಯಿಂದ ಜೂ. 5ರ ಮಧ್ಯರಾತ್ರಿಯವರೆಗೆ ಮತ ಎಣಿಕೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮದ್ಯ ಮಾರಾಟ ನಿಷೇಧಿಸಲಾಗಿದೆ. ಮತ ಎಣಿಕೆ ಕೇಂದ್ರಗಳ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರ ವ್ಯವಸ್ಥೆಯನ್ನು ಬದಲಿ ರಸ್ತೆಗಳಿಗೆ ವರ್ಗಾಯಿಸಲಾಗಿದೆ.
3
+ ಭಾರಿ ಬಿಗಿ ಬಂದೋಬಸ್ತ್‌ನಲ್ಲಿ ಮತ ಎಣಿಕೆ ನಡೆಯಲಿದ್ದು, ಈಗಾಗಲೇ ಮತ ಎಣಿಕೆ ಮಾಡುವ ಸಿಬ್ಬಂದಿಗೆ ಆಯಾ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ತರಬೇತಿ ನೀಡಲಾಗಿದೆ.ವಿದ್ಯುನಾನ ಮತಯಂತ್ರವನ್ನು ಬಳಕೆ ಮಾಡಿರುವುದರಿಂದ ಸಂಜೆ ವೇಳೆಗೆ ಎಲ್ಲಾ 28 ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ.
4
+ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ನಗರದ ಸೇಂಟ್‌ ಜೋಸೆಫ್‌ ಕಾಲೇಜಿನಲ್ಲಿ ನಡೆದರೆ ಬೆಂಗಳೂರು ದಕ್ಷಿಣ ಕ್ಷೇತ್ರದ ಮತ ಎಣಿಕೆಯು ಜಯನಗರದ ಎಸ್‌‍.ಎಸ್‌‍.ಎಂ.ಆರ್‌.ವಿ ಕಾಲೇಜಿನಲ್ಲಿ ಹಾಗೂ ಬೆಂಗಳೂರು ಕೇಂದ್ರ ಕ್ಷೇತ್ರದ ಮತ ಎಣಿಕೆಯು ಮೌಂಟ್‌ ಕಾರ್ಮಲ್‌ ಕಾಲೇಜಿನಲ್ಲಿ ನಡೆಸಲಾಗುತ್ತದೆ.
5
+ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ರಾಮನಗರದ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ತುಮಕೂರು ಕ್ಷೇತ್ರದ ಮತ ಎಣಿಕೆಯು ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ನಡೆಯಲಿದೆ.
6
+ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ದೇವನಹಳ್ಳಿ ತಾಲೂಕಿನ ನಾಗಾರ್ಜುನ ಕಾಲೇಜಿನಲ್ಲಿ ನಡೆಯಲಿದೆ. ಹಾಗೆಯೇ ಆಯಾ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜಿಲ್ಲಾ ಕೇಂದ್ರಗಳಲ್ಲಿ ನಿಗದಿಪಡಿಸಿದ ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ಜೂ.4 ರ ಬೆಳಿಗ್ಗೆ 8 ರಿಂದ ಆರಂಭಗೊಳ್ಳಲಿದೆ.
7
+ ಏ.26 ರಂದು ಹಾಗೂ ಮೇ 7 ರಂದು ಎರಡು ಹಂತದಲ್ಲಿ ರಾಜ್ಯದಲ್ಲಿ ಮತದಾನ ನಡೆದಿತ್ತು. ಮತದಾನ ನಡೆದ ಬಳಿಕ ಮತಯಂತ್ರಗಳನ್ನು ಆಯಾ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿಗದಿಪಡಿಸಿದ ಸ್ಟ್ರಾಂಗ್‌ ರೂಂಗಳಲ್ಲಿ ಮತ ಯಂತ್ರಗಳನ್ನು ಸೂಕ್ತ ಬಿಗಿ ಭದ್ರತೆಯೊಂದಿಗೆ ದಾಸ್ತಾನು ಮಾಡಲಾಗಿದೆ.
eesanje/url_46_124_4.txt ADDED
@@ -0,0 +1,7 @@
 
 
 
 
 
 
 
 
1
+ ನಾಳೆ ಜೆಡಿಎಸ್‌‍ ಕೋರ್‌ಕಮಿಟಿ ಸಭೆ
2
+ ಬೆಂಗಳೂರು, ಜೂ.2-ಪ್ರಚಲಿತ ರಾಜಕೀಯ ವಿದ್ಯಮಾನಗಳು, ವಿಧಾನಪರಿಷತ್‌ ಚುನಾವಣೆಗಳ ಹಿನ್ನೆಲೆಯಲ್ಲಿ ನಾಳೆ ಮಹತ್ವದ ಜೆಡಿಎಸ್‌‍ ಕೋರ್‌ಕಮಿಟಿ ಸಭೆ ನಡೆಯಲಿದೆ. ಕೋರ್‌ಕಮಿಟಿ ಅಧ್ಯಕ್ಷರಾದ ಶಾಸಕ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ನಾಳೆ ಸಂಜೆ 4 ಗಂಟೆಗೆ ಜೆಡಿಎಸ್‌‍ ಕಚೇರಿ ಜೆ.ಪಿ.ಭವನದಲ್ಲಿ ಸಭೆ ನಡೆಯಲಿದೆ.
3
+ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಕೋರ್‌ಕಮಿಟಿ ಸದಸ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ವಿಧಾನಪರಿಷತ್‌ನ ಶಿಕ್ಷಕರ, ಪದವೀಧರ ಹಾಗೂ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆ ಬಗ್ಗೆ ಸಮಾಲೋಚನೆ ನಡೆಸಲಾಗುತ್ತದೆ. ಅಲ್ಲದೆ, ಮಂಗಳವಾರ ಹೊರಬೀಳಲಿರುವ ಲೋಕಸಭಾ ಚುನಾವಣಾ ಫಲಿತಾಂಶ ಕುರಿತಂತೆ ಚರ್ಚೆ ನಡೆಸಲಾಗುತ್ತದೆ.
4
+ ಲೋಕಸಭಾ ಚುನಾವಣೆಯ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸುವುದಲ್ಲದೆ, ಲೋಕಸಭಾ ಚುನಾವಣೆ ನಂತರ ರಾಜ್ಯ ರಾಜಕೀಯದಲ್ಲಾಗುವ ಬದಲಾವಣೆ ಬಗ್ಗೆ ಕೂಡ ಗಂಭೀರ ಚರ್ಚೆ ನಡೆಸಲಾಗುತ್ತದೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ.
5
+ ಪಕ್ಷ ಸಂಘಟನೆ, ಹೊಸ ಸದಸ್ಯರ ನೋಂದಣಿ, ಪಕ್ಷ ಕೈಗೊಳ್ಳಲಿರುವ ಹೋರಾಟದ ರೂಪುರೇಷೆಗಳ ಬಗ್ಗೆಯೂ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಅವಲೋಕನ ಮಾಡಲಾಗುತ್ತದೆ ಎಂದು ಮೂಲಗಳು ಹೇಳಿವೆ.
6
+ ಶಾಸಕಾಂಗ ಸಭೆ :ಇದಕ್ಕೂ ಮುನ್ನ ನಾಳೆ ಬೆಳಿಗ್ಗೆ 10.30ಕ್ಕೆ ವಿಧಾನಸೌಧದ ಪಕ್ಷದ ಕಚೇರಿಯಲ್ಲಿ ಜೆಡಿಎಸ್‌‍ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಶಾಸಕಾಂಗ ಪಕ್ಷದ ನಾಯಕರಾದ ಎಚ್‌.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ನಾಳೆ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಡೆಯ ದಿನ. ಹೀಗಾಗಿ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಪಕ್ಷದ ಶಾಸಕರು, ನಾಯಕರು ಹಾಜರಿರಲಿದ್ದಾರೆ.
7
+ ಪಕ್ಷದ ಅಭ್ಯರ್ಥಿಗೆ ಸೂಚಕರಾಗಿ ಶಾಸಕರು ಸಹಿ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
eesanje/url_46_124_5.txt ADDED
@@ -0,0 +1,8 @@
 
 
 
 
 
 
 
 
 
1
+ ಲವ್‌ ಜಿಹಾದ್‌ ವಿರುದ್ಧ ಶ್ರೀರಾಮ ಸೇನೆ ಸಹಾಯವಾಣಿಗೆ 400ಕ್ಕೂ ಹೆಚ್ಚು ಕರೆ
2
+ ಹುಬ್ಬಳಿ, ಜೂ.2-ಅಂಜಲಿ ಅಂಬೀಗೇರ ಹಾಗೂ ನೇಹಾ ಹಿರೇಮಠ ಕೊಲೆ ನಂತರ ಸಾಕಷ್ಟು ಆತಂಕದಲ್ಲಿ ಇದ್ದ ಹಿಂದು ಹೆಣ್ಣು ಮಕ್ಕಳ, ಯುವತಿಯರ ಸಹಾಯಕ್ಕಾಗಿ ಶ್ರೀ ರಾಮ ಸೇನೆ ಸ್ಥಾಪಿಸಿದ್ದ ಸಹಾಯವಾಣಿಗೆ ಕೇವಲ ಮೂರು ದಿನಗಳಲ್ಲಿ 400 ಕ್ಕೂ ಹೆಚ್ಚು ಕರೆಗಳು ಬಂದಿವೆ.
3
+ ವಿಶೇಷವಾಗಿ ಲವ್‌ ಜಿಹಾದ್‌ ವಿರುದ್ಧ ಸಮರ ಸಾರಿರುವ ಶ್ರೀ ರಾಮ ಸೇನೆ ಯಾವುದೇ ಕ್ರೌರಕ್ಕೆ ಹೆಣ್ಣು ಮಕ್ಕಳು, ಯುವತಿಯರು ಅಮಾಯಕರು ಬಲಿ ಆಗಬಾರದು ಮತ್ತು ಪೊಲೀಸ್‌‍ ನೈತಿಕಗಿರಿ ವಿರುದ್ಧ ಸೆಡ್ಡು ಹೊಡೆದಿರುವ ಶ್ರೀ ರಾಮ ಸೇನೆ ಕಾರ್ಯಕ್ಕೆ ಅಭೂತಪೂರ್ವ ಬೆಂಬಲ ಸಿಕ್ಕಂತಾಗಿದೆ.
4
+ ಹುಬ್ಬಳ್ಳಿಯಲ್ಲಿ ಶ್ರೀ ರಾಮ ಸೇನೆ ಆರಂಭಿಸಿದ್ದ ಸಹಾಯವಾಣಿಯಲ್ಲಿ ನುರಿತ ಕಾನೂನು ತಜ್ಞರು, ವಿವಿಧ ಕ್ಷೇತ್ರಗಳಲ್ಲಿನ ಪರಿಣಿತರು ಹಾಗೂ ಶ್ರೀ ರಾಮಸೇನೆ ಪ್ರಮುಖರು ಕಾರ್ಯಕರ್ತರು ಪ್ರತಿದಿನ ಸಹಾಯವಾಣಿಗೆ ಬಂದ ಕರೆಗಳನ್ನು ಸ್ವೀಕರಿಸಿ ಸ್ಥಳದಲ್ಲಿಯೇ ಸಾಧ್ಯವಾದ ಮಟ್ಟಿಗೆ ಪರಿಹರಿಸಲು ಮುಂದಾಗಿದ್ದಾರೆ. ಈಗ ಬಂದ ಕರೆಗಳಲ್ಲಿ ಲವ್‌ ಜಿಹಾದ್‌ ವಿರುದ್ಧ ನಲುಗಿದ ಮಹಿಳೆಯರ ಯುವತಿಯರ ಕರೆ ಆಗಿವೆ. ಮಹಿಳೆಯರ ರಕ್ಷಣೆಗಾಗಿ ಸ್ಥಾಪಿಸಿದ ಸಹಾಯವಾಣಿಗೆ ಬಂದ ಕರೆಗಳು ಸಹ ದಾಖಲಾಗಿತ್ತಿವೆ.
5
+ 400 ಕ್ಕೂ ಹೆಚ್ಚು ಕರೆಗಳು ಸಹಾಯವಾಣಿಗೆ ಬಂದ ಕರೆಗಳಲ್ಲಿ ಹುಬ್ಬಳ್ಳಿ ಧಾರವಾಡ, ನವಲಗುಂದ ನರಗುಂದ, ಕೊಪ್ಪಳ ಹಾಗೂ ಗದಗ ಜಿಲ್ಲೆಯಿಂದಲೂ ಬಂದಿವೆ.ಲವ್‌ ಜಿಹಾದ್‌ ಹೆಸರಲ್ಲಿ ಯಾರು ಆತಹತ್ಯೆ ಮಾಡಿಕೊಳ್ಳಬೇಡಿ ಎಂಬ ಸಂದೇಶ ರವಾನೆ ಮಾಡಿದ್ದು ನೈತಿಕ ಬೆಂಬಲ ನೀಡಲಾಗುತ್ತಿದ್ದು, ಪ್ರೀತಿ ಪ್ರೇಮದ ಹೆಸರಲ್ಲಿ ಹಿಂದೂ ಹೆಣ್ಣು ಮಕ್ಕಳ ಮತಾಂತರ ಆಗುವ ಕುರಿತು ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಾ ಇದೆ. ದಿನದ 24 ಗಂಟೆಯಲ್ಲಿ ಯಾವದೇ ಸಮಯದಲ್ಲಿ ನೀವು ಕರೆ ಮಾಡಲು ಅವಕಾಶ ನೀಡಲಾಗಿದೆ.
6
+ ಇನ್ನು ಇದೇ ಸಮಯದಲ್ಲಿ ಶ್ರೀ ರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಮಾತನಾಡಿ, ಇಷ್ಟೊಂದು ಬೇಗನೆ ಈ ರೀತಿಯಲ್ಲಿ ಕರೆಗಳು ಬರುತ್ತೇವೆ ಎಂದು ಊಹೆ ಮಾಡರಲಿಲ್ಲ. ಮೇ 29 ರಂದು ಆರಂಭ ಮಾಡಿದ್ದ ಸಹಾಯವಾಣಿಗೆ ಇದುವರೆಗೆ 400 ಕ್ಕೂ ಹೆಚ್ಚು ಕರೆಗಳು ಬಂದಿವೆ. ನಮ ಸಹಾಯವಾಣಿ ಕರೆಗೆ ಪ್ರಶಂಸೆ ಸಹ ಮಾಡಿದ್ದಾರೆ.
7
+ ಉದ್ಯೋಗದಲ್ಲಿ ಇದ್ದ ಮಹಿಳೆಯರು ಯುವತಿಯರು ಕುಟುಂಬ ಕಲಹ, ಪ್ರೀತಿ ಪ್ರೇಮ ವೈಫಲ್ಯ, ನಿರಾಕರಣೆ, ಹಿಂಸೆ ಹೀಗೆ ಹತ್ತು ಹಲವಾರು ಸಮಸ್ಯೆಗಳನ್ನ ಹೊತ್ತುಕೊಂಡು ಕರೆ ಮಾಡಲಾಗಿದೆ. ಇದರಲ್ಲಿ ಸಾಕಷ್ಟು ಈಗಾಗಲೇ ಬಗೆಹರಿಸಲಾಗಿದೆ ಎಂದರು.
8
+ ಇನ್ನು ಕೆಲವರು ನಮ ಸಹಾಯವಾಣಿ ಕೆಲಸಕ್ಕೆ ಸಹಿಸದ ಕೆಲವರು ಅಪಪ್ರಚಾರ ಮಾಡುತಿದ್ದು, ನಮ ನಂಬರ್‌ ಬ್ಲಾಕ್‌ ಸಹ ಮಾಡಲಾಗುತ್ತದೆ. ಆದರೆ ಇದಕ್ಕೆ ಯಾವುದಕ್ಕೂ ಹೆದರುವುದಿಲ್ಲ ಎಂದರು.
eesanje/url_46_124_6.txt ADDED
@@ -0,0 +1,7 @@
 
 
 
 
 
 
 
 
1
+ ಸಿ.ಟಿ.ರವಿಗೆ ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕ ಸ್ಥಾನ ಬಹುತೇಕ ಖಚಿತ
2
+ ಬೆಂಗಳೂರು,ಜೂ.2-ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಮಾಜಿ ಸಚಿವ ಸಿ.ಟಿ.ರವಿ ಅವರು ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಚಿಕ್ಕಮಗಳೂರು, ಉಡುಪಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಿಧಾನಪರಿಷತ್‌ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸಪೂಜಾರಿ ಅವರು ವಿಜೇತರಾದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ.
3
+ ತೆರವಾಗಲಿರುವ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಬಿಜೆಪಿಯಲ್ಲಿ ಹಲವರು ಆಕಾಂಕ್ಷಿಗಳಾಗಿದ್ದಾರೆ. ಆದರೆ ಪ್ರತಿಪಕ್ಷದಂತಹ ಮಹತ್ವದ ಹುದ್ದೆಯನ್ನು ನಿಭಾಯಿಸಬೇಕಾದರೆ ವಿಷಯ ಪಾಂಡಿತ್ಯ, ಆಳವಾದ ಅಧ್ಯಯನ, ಜ್ಞಾನ, ವಿಷಯಗಳ ಮೇಲೆ ಹಿಡಿತ, ಸಂದರ್ಭೋಚಿತ ವಿಷಯ ಪ್ರಸ್ತಾವನೆ, ಸರ್ಕಾರದ ಮೇಲೆ ಟೀಕೆ-ಟಿಪ್ಪಣಿ ಹೀಗೆ ಹಲವು ವಿಷಯಗಳ ಮೇಲೆ ಪಾಂಡಿತ್ಯ ಹೊಂದಿರಬೇಕು.
4
+ ಪರಿಷತ್‌ನಲ್ಲಿ ಉಪನಾಯಕರಾಗಿರುವ ಸುನಿಲ್‌ ವಲ್ಯಾಪುರೆ ಹಾಗೂ ಮುಖ್ಯ ಸಚೇತಕ ಎನ್‌.ರವಿಕುಮಾರ್‌ ಕೂಡ ಕಣ್ಣಿಟ್ಟಿದ್ದಾರೆ. ವಿಧಾನಸಭೆಯಲ್ಲಿ ಆರ್‌.ಅಶೋಕ್‌ ಪ್ರತಿಪಕ್ಷದ ನಾಯಕರಾಗಿರುವುದರಿಂದ ಪರಿಷತ್‌ನಲ್ಲೂ ಅದೇ ಸಮುದಾಯಕ್ಕೆ ಮಣೆ ಹಾಕುತ್ತಾರೆಯೇ ಎಂಬುದು ಯಕ್ಷ ಪ್ರಶ್ನೆಯಾಗಿದೆ.
5
+ ಸದನದಲ್ಲಿ ಸರ್ಕಾರದ ವಿರುದ್ಧ ರಣತಂತ್ರ ರೂಪಿಸುವುದು, ಎಲ್ಲರನ್ನು ಒಗ್ಗೂಡಿಸುವುದು ಹಾಗೂ ಸದಸ್ಯರ ಮೇಲೆ ಹಿಡಿತ, ಭಾಷೆ ಪಾಂಡಿತ್ಯ ಇರಬೇಕಾಗಿರುವುದರಿಂದ ಸಿ.ಟಿ.ರವಿ ಅವರಿಗೆ ಮಣೆ ಹಾಕಿದರೆ ಅಚ್ಚರಿ ಇಲ್ಲ.
6
+ ಮೂಲತಃ ಸಂಘ ಪರಿವಾರದ ಹಿನ್ನಲೆಯ ಸಿ.ಟಿ.ರವಿ ಅವರು ಉಗ್ರ ಹಿಂದೂತ್ವವಾದಿಯೂ ಹೌದು. ಸಂವಿಧಾನ, ಪ್ರಜಾಪ್ರಭುತ್ವ, ಪ್ರಚಲಿತ ವಿದ್ಯಮಾನಗಳು, ಇತಿಹಾಸ, ರಾಜಕೀಯ, ಸಾಹಿತ್ಯ ಹೀಗೆ ಹಲವಾರು ವಿಷಯಗಳ ಮೇಲೆ ತಮದೇ ಆದ ವಿದ್ವತ್‌ ಹೊಂದಿದ್ದಾರೆ.
7
+ ಯಾವುದೇ ವಿಷಯದ ಬಗ್ಗೆಯೂ ಸದನದಲ್ಲಿ ನಿರ್ಗಳವಾಗಿ ಮಾತನಾಡುವ ಚಾಕಚಕ್ಯತೆಯೂ ಇದೆ. ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಸಿ.ಟಿ.ರವಿ ಅವರಿಗೆ ಪ್ರತಿಪಕ್ಷದ ನಾಯಕನ ಸ್ಥಾನ ನೀಡಬಹುದೆಂಬ ಮಾತು ಬಿಜೆಪಿಯಲ್ಲಿ ಕೇಳಿಬರುತ್ತಿದೆ.ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಈ ಎಲ್ಲಾ ಅಂತೆಕಂತೆಗಳಿಗೆ ಪೂರ್ಣ ವಿರಾಮ ಬೀಳಲಿದೆ.
eesanje/url_46_124_7.txt ADDED
@@ -0,0 +1,7 @@
 
 
 
 
 
 
 
 
1
+ ವಿಧಾನಪರಿಷತ್‌ ಚುನಾವಣೆ : ಅಚ್ಚರಿ ಬೆಳವಣಿಯಲ್ಲಿ ಸಿ.ಟಿ.ರವಿಗೆ ಬಿಜೆಪಿ ಮಣೆ
2
+ ಬೆಂಗಳೂರು,ಜೂ.2-ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಮೂರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ , ಅಚ್ಚರಿ ಬೆಳವಣಿಗೆ ಎಂಬಂತೆ ಮಾಜಿ ಸಚಿವ ಸಿ.ಟಿ.ರವಿ ಅವರಿಗೆ ಬಿಜೆಪಿ ಮಣೆ ಹಾಕಿದೆ. ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಮೂವರು ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದು, ಮಾಜಿ ಸಚಿವ ಸಿ.ಟಿ.ರವಿ, ಹಾಲಿ ವಿಧಾನಪರಿಷತ್‌ನ ಮುಖ್ಯ ಸಚೇತಕ ಎನ್‌.ರವಿಕುಮಾರ್‌ ಹಾಗೂ ಮಾಜಿ ಶಾಸಕ, ಮರಾಠ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಂ.ಜಿ. ಮುಳೆ ಅವರನ್ನು ಕಣಕ್ಕಿಳಿಸಿದೆ.
3
+ ಸಿ.ಟಿ.ರವಿ(ಒಕ್ಕಲಿಗ), ಎನ್‌.ರವಿಕುಮಾರ್‌(ಕೋಲಿ ಸಮಾಜ), ಎಂ.ಜಿ.ಮುಳೆ ಮರಾಠ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಸಿ.ಟಿ.ರವಿ ಅವರನ್ನು ಅಚ್ಚರಿ ಎಂಬಂತೆ ಪರಿಷತ್‌ ಚುನಾವಣೆಯಲ್ಲಿ ಅಭ್ಯರ್ಥಿ ಮಾಡಿರುವುದು ಹೊಸ ಬೆಳವಣಿಗೆಯಾಗಿದೆ.
4
+ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಅವರು ಪರಿಷತ್‌ಗೆ ಆಯ್ಕೆ ಮಾಡುವ ಸುಳಿವು ಕೊಟ್ಟಿದ್ದರು. ವಿಧಾನಸಭೆ ಹಾಗೂ ವಿಧಾನಪರಿಷತ್‌ನಲ್ಲಿ ಹೋರಾಟ ನಡೆಸಬೇಕಾಗಿದ್ದ ಅವರು ಕೆಲವು ಕಾರಣಗಳಿಂದ ಪರಾಭವಗೊಂಡಿದ್ದಾರೆ. ಪಕ್ಷವು ಸದ್ಯದಲ್ಲೇ ಸೂಕ್ತವಾದ ಸ್ಥಾನಮಾನವನ್ನು ನೀಡಲಿದೆ ಎಂದು ಹೇಳಿದ್ದರು.
5
+ ಇದೀಗ ಮೂರು ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಎನ್‌.ರವಿಕುಮಾರ್‌ ಅವರಿಗೆ ಮತ್ತೊಮೆ ಅವಕಾಶ ನೀಡಲಾಗಿದೆ. ಪರಿಷತ್‌ ಚುನಾವಣೆಯಲ್ಲಿ ಈ ಬಾರಿ ಸುಮಲತಾ ಅಂಬರೀಶ್‌ ಅವರಿಗೆ ಟಿಕೆಟ್‌ ನೀಡಲಾಗುತ್ತದೆ ಎಂಬ ವದ್ದಂತಿ ಕೇಳಿಬಂದಿತ್ತು. ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌‍ಗೆ ತ್ಯಾಗ ಮಾಡಿದ್ದ ಅವರಿಗೆ ಮೇಲನೆಯಲ್ಲಿ ಸ್ಥಾನ ಕಲ್ಪಿಸುವ ಮೂಲಕ ಅನ್ಯಾಯ ಸರಿಪಡಿಸಲಾಗುತ್ತದೆ ಎಂಬ ಮಾತು ಪಕ್ಷದ ಕಚೇರಿಯಲ್ಲಿ ಹಬ್ಬಿತ್ತು.
6
+ ಆದರೆ ಇದೀಗ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ ಒಕ್ಕಲಿಗ ಸಮುದಾಯದ ಸಿ.ಟಿ.ರವಿ, ಹಿಂದುಳಿದ ವರ್ಗಗಳಿಂದ ಎನ್‌.ರವಿಕುಮಾರ್‌ ಮತ್ತು ಸಂಘ ಪರಿವಾರದ ಮುಳೆ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. ವಿಧಾನಸಭೆಯಲ್ಲಿ 65 ಸದಸ್ಯರನ್ನು ಹೊಂದಿರುವ ಬಿಜೆಪಿ ವಿಧಾನಪರಿಷತ್‌ಗೆ ಮೂವರು ಅಭ್ಯರ್ಥಿಗಳನ್ನು ಸುಲಭವಾಗಿ ಆಯ್ಕೆ ಮಾಡಬಹುದು.
7
+ ಒಬ್ಬ ಸದಸ್ಯ ಗೆಲ್ಲಲು 19 ಮತಗಳ ಅಗತ್ಯ ಇರುವುದರಿಂದ ಬಿಜೆಪಿಗೆ ಮೂರು ಸ್ಥಾನಗಳು ದಕ್ಕಲಿವೆ. ನಾಮಪತ್ರ ಸಲ್ಲಿಸಲು ಸೋಮವಾರ ಕಡೆಯ ದಿನವಾಗಿದ್ದು, ಇಂದು ನಿಗದಿತ ಸಮಯದೊಳಗೆ ನಾಮಪತ್ರ ಸಲ್ಲಿಸಲಿದ್ದಾರೆ.
eesanje/url_46_124_8.txt ADDED
@@ -0,0 +1,7 @@
 
 
 
 
 
 
 
 
1
+ ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಉತ್ತಮ ಮಳೆ ಸಾಧ್ಯತೆ
2
+ ಬೆಂಗಳೂರು, ಜೂ.2-ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ. ನೈರುತ್ಯ ಮುಂಗಾರು ಕೇರಳ ಪ್ರವೇಶಿಸಿ ಮೂರು ದಿನ ಕಳೆದಿದ್ದು, ಮತ್ತೆ ಅಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಕರ್ನಾಟಕಕ್ಕೆ ಇಂದು ಮುಂಗಾರು ಆಗಮನವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಿಸಿತ್ತು. ಆದರೆ ಈತನಕ ಮುಂಗಾರು ಪ್ರವೇಶ ಮಾಡಿರುವುದನ್ನು ಅಧಿಕೃತವಾಗಿ ಘೋಷಿಸಿಲ್ಲ. ಆದರೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗದಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿದೆ.
3
+ ಇಂದು ಸಂಜೆ ವೇಳೆಗೆ ಅಥವಾ ನಾಳೆ ಮುಂಗಾರು ಪ್ರವೇಶದ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ ಎಂದು ಹವಾಮಾನ ತಜ್ಞ ಸಿ.ಎಸ್‌‍.ಪಾಟೀಲ್‌ ತಿಳಿಸಿದರು. ಅರಬ್ಬೀ ಸಮುದ್ರದ ಆಗ್ನೇಯ ಭಾಗದಲ್ಲಿ ಮೇಲೈ ಸುಳಿಗಾಳಿ ಉಂಟಾಗಿದ್ದು, ಅದರ ಪ್ರಭಾವದಿಂದ ಕೇರಳ ಹಾಗೂ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುತ್ತಿದೆ.
4
+ ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಲಿದೆ. ನಿನ್ನೆಯಿಂದಲೇ ಮುಂಗಾರು ರಾಜ್ಯಕ್ಕೆ ಆಗಮಿಸಲು ಪೂರಕವಾದ ವಾತಾವರಣ ಸೃಷ್ಟಿಯಾಗಿದೆ ಎಂದರು.
5
+ ಉತ್ತರ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸೂಚನೆಗಳಿವೆ. ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಆಗೊಮೆ ಈಗೊಮೆ 40 ರಿಂದ 50 ಕಿ.ಮೀ. ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಲಕ್ಷಣಗಳಿವೆ ಎಂದು ಹೇಳಿದರು.ನಿನ್ನೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಿತ್ತು. ಉತ್ತರ ಕರ್ನಾಟಕ ಭಾಗದಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗಿದೆ ಎಂದು ತಿಳಿಸಿದರು.
6
+ ಹವಾಮಾನ ಮುನ್ಸೂಚನೆ ಪ್ರಕಾರ, ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಗಳಿವೆ. ಕೆಲೆವೆಡೆ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದರು.
7
+ ಬೆಂಗಳೂರು, ದೇವನಹಳ್ಳಿ ತಲಾ 5 ಸೆಂ.ಮೀ., ಗಂಗಾವತಿ 6 ಸೆಂ.ಮೀ., ಚಾಮರಾಜನಗರ 4 ಸೆಂ.ಮೀ., ಎಚ್‌.ಡಿ.ಕೋಟೆ, ಚಿಕ್ಕಬಳ್ಳಾಪುರ, ಹೊಸಕೋಟೆ, ಗುಬ್ಬಿ, ಮಂಡ್ಯ, ಮದ್ದೂರು, ಉಡುಪಿ, ಚಿಂತಾಮಣಿಯಲ್ಲಿ ತಲಾ 3 ಸೆಂ.ಮೀ., ಹೆಸರುಘಟ್ಟ, ತುಮಕೂರು, ಮೈಸೂರು, ನಾಗಮಂಗಲ, ಪರಶುರಾಮಪುರ, ಶಿರಾ, ಹುಣಸೂರು ತಲಾ 2 ಸೆಂ.ಮೀ., ಕೋಣನೂರು, ಕೆ.ಆರ್‌.ಪೇಟೆ, ಶ್ರವಣಬೆಳಗೊಳ, ಕೊಳ್ಳೆಗಾಲ, ರಾಮನಗರ, ರಾಯಲ್ಪಡು, ದೇವರಹಿಪ್ಪರಗಿ, ಕುಮಟಾದಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
eesanje/url_46_124_9.txt ADDED
@@ -0,0 +1,7 @@
 
 
 
 
 
 
 
 
1
+ ನೇಹಾ, ಅಂಜಲಿ ಹಾಗೆಯೇ ನಿನ್ನನ್ನೂ ಹತ್ಯೆ ಮಾಡ್ತೀವಿ ; ಮುಖ್ಯ ಶಿಕ್ಷಕಿಗೆ ಬೆದರಿಕೆ ಪತ್ರ
2
+ ಹುಬ್ಬಳ್ಳಿ, ಜೂ.2-ನೇಹಾ ಹಾಗೂ ಅಂಜಲಿ ಅಂಬೀಗೇರ ಹಾಗೆಯೇ ನಿನ್ನ ಹತ್ಯೆಯೂ ಆಗುತ್ತದೆ ಎಂದು ನಗರದ ಬೆಂಗೇರಿಯಲ್ಲಿರುವ ರೋಟರಿ ಪ್ರಾಥಮಿಕ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿಗೆ ಅನಾಮಧೇಯ ವ್ಯಕ್ತಿಯೊಬ್ಬ ಬೆದರಿಕೆ ಪತ್ರ ಬರೆದಿದ್ದಾನೆ.
3
+ ಮುಖ್ಯ ಶಿಕ್ಷಕಿ ದೀಪಾ ಅಡವಿಮಠ ಎನ್ನುವವರಿಗೆ ಐದು ದಿನಗಳ ಹಿಂದೆ ಪೋಸ್ಟ್‌ (ಅಂಚೆ) ಮೂಲಕ ಅನಾಮಧೇಯ ಬೆದರಿಕೆ ಪತ್ರ ಬಂದಿದೆ. ಈ ಹಿನ್ನಲೆಯಲ್ಲಿ ಹತ್ಯೆ ಬೆದರಿಕೆ ಪತ್ರದ ಕುರಿತು ಕೇಶ್ವಾಪೂರ ಪೊಲೀಸರ ಗಮನಕ್ಕೆ ತಂದಿದ್ದು, ಹುಬ್ಬಳ್ಳಿಯ ಬೆಂಗೇರಿಯಲ್ಲಿರುವ ಅವರ ಮನೆಗೆ ಪೊಲೀಸರು ಭೇಟಿ ನೀಡಿದ್ದಾರೆ.
4
+ ಎಸಿಪಿ ಭೇಟಿ :ಶಿಕ್ಷಕಿ ದೀಪಾ ಮನೆಗೆ ಎಸಿಪಿ ಶಿವಪ್ರಕಾಶ್‌ ನಾಯಕ್‌ ಭೇಟಿ ನೀಡಿದ್ದು, ಮಾಹಿತಿ ಪಡೆದಿದ್ದಾರೆ. ಜೊತೆಗೆ ಮುಂಜಾಗ್ರತಾ ಕ್ರಮವಾಗಿ ಮುಖ್ಯ ಶಿಕ್ಷಕಿ ಮನೆ ಬಳಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ನೇಹಾ, ಅಂಜಲಿ ಹತ್ಯೆ ಘಟನೆ ಮಾಸುವ ಮುನ್ನವೇ ಕೊಲೆ ಬೆದರಿಕೆ ಪತ್ರ ಮತ್ತಷ್ಟು ಆತಂಕ ಸೃಷ್ಟಿಸಿದೆ.
5
+ ಈ ಕುರಿತು ಮಾತನಾಡಿದ ಮುಖ್ಯ ಶಿಕ್ಷಕಿ ದೀಪಾ ಅಡವಿಮಠ, ಮೇ. 28 ರಂದು ನನಗೆ ಅನಾಮಧೇಯ ಪತ್ರ ಬಂದಿದೆ. ಅದರಲ್ಲಿ ದೀಪಾ ನಿನ್ನ ಹತ್ಯೆ ನೇಹಾ ಹಾಗೂ ಅಂಜಲಿ ಹಾಗೆ ಕೆಲವೇ ದಿನಗಳಲ್ಲಿ ಎಂದು ಬರೆದಿದೆ. ಯಾವ ಮಕ್ಕಳ ಮೇಲೂ ನನಗೆ ದ್ವೇಷ ಇಲ್ಲ, ಮಕ್ಕಳಿಗೂ ನನ್ನ ಮೇಲೆ ದ್ವೇಷವಿಲ್ಲ. ನಾನು ಕಣ್ಣಲ್ಲಿ ಬುದ್ಧಿ ಹೇಳಿದ್ದೇನೆ. ಇದೀಗ ಬೆಂಗೇರಿಯ ರೋಟರಿ ಶಾಲೆಗೆ ಪತ್ರ ಬಂದಿದೆ ಎಂದರು.
6
+ ಇನ್ನು ನಾನು ಮುಖ್ಯ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದು, ನನಗೆ ಪತ್ರ ಬಂದ ದಿನವೇ ನಾನು ಪೊಲೀಸರ ಗಮನಕ್ಕೆ ತಂದಿದ್ದೇನೆ. ಈ ಹಿನ್ನಲೆಯಲ್ಲಿ ಪೊಲೀಸರು ತನಿಖೆ ಮಾಡ್ತೀವಿ ಎಂದಿದ್ದು, ಪತ್ರ ಬರೆದ ಅನಾಮಧೇಯ ವ್ಯಕ್ತಿಯನ್ನು ಪತ್ತೆ ಮಾಡೋದಾಗಿ ಹೇಳಿದ್ದಾರೆ. ಈ ರೀತಿ ಯಾರೇ ಪತ್ರ ಬರೆದರೂ ಅವರಿಗೆ ಶಿಕ್ಷೆ ಆಗಬೇಕು.
7
+ ನಾನು ಅಮಾಯಕ ಶಿಕ್ಷಕಿ, ವಿದ್ಯಾರ್ಥಿಗಳ ಮೇಲೆ ನನಗೆ ಅನುಮಾನ ಇಲ್ಲ. ಎಲ್ಲ ವಿದ್ಯಾರ್ಥಿಗಳು ಪ್ರೀತಿ ಇಂದ ಇದ್ದಾರೆ. ವಿದ್ಯಾರ್ಥಿಗಳು ನನ್ನ ಮೊಬೈಲ್‌ ನಂಬರ್‌ ಗಾಡ್‌ ಎಂದು ಸೇವ್‌ ಮಾಡಿದ್ದಾರೆ. ಪತ್ರ ಬಂದ ದಿನದಿಂದ ನನಗೆ ಫ್ರೀಯಾಗಿ ಇರೋಕೆ ಆಗುತ್ತಿಲ್ಲ. ಭಯ ಆಗುತ್ತಿದೆ ಎಂದು ದೀಪಾ ಅಡವಿಮಠ ಹೇಳಿದ್ದಾರೆ.
eesanje/url_46_125_1.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ವಾಲ್ಮೀಕಿ ಅಭಿವೃದ್ದಿ ನಿಗಮದ ಅವ್ಯವಹಾರ ಪ್ರಕರಣವನ್ನು ಸಿಬಿಐಗೆ ವಹಿಸಬೇಕು : ಆರ್‌.ಆಶೋಕ್‌
2
+ ಬೆಂಗಳೂರು,ಜೂ.1-ಕರ್ನಾಟಕ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದಿರುವ ನೂರಾರು ಕೋಟಿ ಅವ್ಯವಹಾರ ಪ್ರಕರಣವನ್ನು ತಕ್ಷಣವೇ ರಾಜ್ಯ ಸರ್ಕಾರ ಸಿಬಿಐಗೆ ವಹಿಸಬೇಕು. ಇಲ್ಲದಿದ್ದರೆ, ದೆಹಲಿಗೂ ಕೊಂಡಯ್ಯುವುದಾಗಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಆಶೋಕ್‌ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕಿಕ್‌ ಬ್ಯಾಕ್‌ ಹಣ ದೆಹಲಿವರೆಗೂ ಮುಟ್ಟಿದೆ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ. ಇದರಲ್ಲಿ ಮುಂದೆ ಕಾಂಗ್ರೆಸ್‌‍ ನ ದೆಹಲಿ ನಾಯಕರ ತಲೆದಂಡವೂ ಆಗಲಿದೆ. ಹೀಗಾಗಿ ಇದನ್ನು ಸರ್ಕಾರ ಅವರನ್ನು ರಕ್ಷಿಸಲು ಎಸ್‌‍ಐಟಿ ಮೂಲಕ ತನಿಖೆಗೆ ಆದೇಶ ನೀಡಿದೆ. ಸಿಬಿಐಗೆ ಕೊಡದಿದ್ದರೆ ದೆಹಲಿವರೆಗೂ ಪ್ರಕರಣ ಕೊಂಡೊಯ್ತುತ್ತೇವೆ ಎಂದು ಹೇಳಿದರು.
4
+ ಕಾಂಗ್ರೆಸ್‌‍ ಪಕ್ಷದ ಅಽನಾಯಕಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಯವರೆಗೂ ಈ ಹಣ ಹೋಗಿದೆ. ಜೊತೆಗೆ 9 ಐಟಿ ಕಂಪೆನಿಗಳಿಗೆ ದಲಿತರ ಹಣ ವರ್ಗಾವಣೆ ಮಾಡಲಾಗಿದೆ.ದಲಿತರ ಹಣವನ್ನೇ ಲೂಟಿ ಹೊಡೆಯುವಷ್ಟು ಚಂಡಾಳರು ಇವರು. ಈ ಹಣವನ್ನು ಒಬ್ಬರೇ ತಿಂದಿಲ್ಲ, ಎಲ್ಲರಿಗೂ ಪಾಲು ಹೋಗಿದೆ ಎಂದು ದೂರಿದರು.
5
+ ವಾಲೀಕಿ ಹಗರಣದ ಸಂಪೂರ್ಣ ದಾಖಲೆಗಳನ್ನು ಕೇಂದ್ರದ ನಮ ನಾಯಕರಿಗೆ ಕಳಿಸಿಕೊಟ್ಟಿದ್ದೇವೆ. ಸಿಬಿಐ ತನಿಖೆಯಿಂದ ತಪ್ಪಿಸಿಕೊಳ್ಳಲು ಎಸ್‌‍ಐಟಿಗೆ ತನಿಖೆ ವಹಿಸಿದ್ದಾರೆ.ಸಿಬಿಐ ತನಿಖೆ ತಪ್ಪಿಸಿಕೊಳ್ಳೋದು ಹೇಗೆ ಎಂದು ಸಿಎಂ, ಡಿಸಿಎಂ, ಸಚಿವರು ಸಭೆಗಳ ಸಭೆ ನಡೆಸುತ್ತಾಲೇ ಇದ್ದಾರೆ. ಸರ್ಕಾರಕ್ಕೆ ಉಂಟಾಗುವ ಮುಜುಗರ ತಪ್ಪಿಸಿಕೊಳ್ಳಲು ಪ್ರಕರಣವನ್ನು ಏನಾದರೂ ಮಾಡಿ ಮುಚ್ಚಿ ಹಾಕಿ ಎಂದು ಸಿಎಂ ಅವರು ಎಸ್‌‍ಐಟಿ ಗೆ ಹೇಳಿದ್ದಾರೆಂದು ನಮಗೆ ಮಾಹಿತಿ ಬಂದಿದೆ ಎಂದು ಅನುಮಾನ ವ್ಯಕ್ತಪಡಿಸಿದರು.
6
+ 187 ಕೋಟಿ ಮೊತ್ತದ ಬ್ರಹಾಂಡ ಅವ್ಯವಹಾರ ಇದು. ಯಾರು ಎಲ್ಲಿಗೆ ಬೇಕಾದರೂ ಸರ್ಕಾರದ ಹಣ ವರ್ಗಾವಣೆ ಮಾಡುವ ಆದೇಶ ಕೊಟ್ಟಿದ್ದಾರಾ ಸಿಎಂ? ಎಂದು ಪ್ರಶ್ನೆಸಿದ ಅಶೋಕ್‌ ಅವರು, ಆರ್ಥಿಕ ಸಚಿವರಾಗಿ ಸಿಎಂ ಅಡಿಯೇ ಈ ಅಕ್ರಮ ನಡೆದಿದೆ. ರಾಜ್ಯದಲ್ಲಿ ಇಬ್ಬರು ಸಿಎಂ ಇದ್ದಾರೆ. ಒಬ್ಬರು ಸಿಎಂ, ಇನ್ನೊಬ್ಬರು ಸೂಪರ್‌ ಸಿಎಂ. ನಿಷ್ಟಾವಂತ ಅಧಿಕಾರಿಗಳಿಗೆ ಈ ಸರ್ಕಾರ ಸಾವಿನ ಭಾಗ್ಯ ಕಲ್ಪಿಸಿದೆ ಎಂದು ಟೀಕಾ ಪ್ರಹಾರ ನಡೆಸಿದರು.
7
+ ಆರ್ಥಿಕ ಇಲಾಖೆ ಅಡಿಯಲ್ಲೇ ಅಕ್ರಮ ನಡೆದಿದ್ದರೂ ಸಿದ್ದರಾಮಯ್ಯ ಕಣುಚ್ಚಿ ಕೂತಿದ್ದಾರೆ. ಈ ಹಣ ದಲಿತರಿಗೆ ತಲುಪಬೇಕು. ಸಿಎಂ ರಾಜೀನಾಮೆ ಕೊಡಬೇಕು. ಬಿಜೆಪಿ ಇದನ್ನು ಇಲ್ಲಿಗೇ ಬಿಡುವುದಿಲ್ಲ. ಹಣ ವರ್ಗಾವಣೆಯಾಗಿರುವ ಈ ಕಂಪೆನಿಗಳು ಕಾಂಗ್ರೆಸ್‌‍ನ ಹಿಂಬಾಲಕರದ್ದು.
8
+ ಕಾಂಗ್ರೆಸ್‌‍ ಮಾಯಾಜಾಲದ ಸ್ವರೂಪ ಬಯಲಾಗಿದೆ. ಅಕ್ರಮ ಆಗಿರುವುದು ನಿಗಮದ ಅಧ್ಯಕ್ಷರಿಗೇ ಗೊತ್ತಿಲ್ಲ. ಇಲಾಖೆ ಸಚಿ���ರಿಗೆ ಗೊತ್ತಿಲ್ಲ ಎಂದಿದ್ದಾರೆ. ಇಬ್ಬರೂ ಅಧಿಕಾರ ಸ್ವೀಕಾರ ನಂತರ ಅಧಿಕಾರಿಗಳ ಸಭೆ ನಡೆಸಿದರಲ್ಲ, ಆಗ ಯಾಕೆ ಕೇಳಲಿಲ್ಲ? ಸಿಎಂಗೂ ಕೇಳಿದರೆ ಗೊತ್ತಿಲ್ಲ ಅಂತಿದ್ದಾರೆ. ಆದರೆ, ಎಲ್ಲರೂ ಭ್ರಷ್ಟಾಚಾರ ನಡೆದಿದೆ ಎನ್ನುತ್ತಾರೆ. ಅಸಲಿಗೆ ಯಾರ ಮಾತನ್ನು ನಂಬಬೇಕು ಎಂದು ಆಶೋಕ್‌ ಆಶ್ಚರ್ಯ ವ್ಯಕ್ತಪಡಿಸಿದರು.
9
+ ಹಿಂದುಳಿದ ವರ್ಗಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್‌ ಪ್ರಸಾದ್‌ ಅವರು ರಿಸರ್ವ್‌ ಬ್ಯಾಂಕ್‌ ಅ್‌‍ ಇಂಡಿಯಾಗೆ ಪತ್ರ ಬರೆದು ಬ್ಯಾಂಕ್‌ನ ಹಣ ಫ್ರೀಜ್‌ ಮಾಡಿ ಎಂದು ಪತ್ರ ಬರೆದಿದ್ದಾರೆ. ಆದರೆ, ಲಿತಾಂಶ ಶೂನ್ಯ, ಪ್ರಕರಣ ಮುಚ್ಚಿ ಹಾಕಲು ಪ್ರಯತ್ನ ನಡೆದಿದೆ.ದಲಿತರ ಹಣ ನುಂಗಿ ಹಾಕುವ ಕಪ್ಪು ಚುಕ್ಕೆ ಸರ್ಕಾರಕ್ಕೆ ಅಂಟಿದೆ. ಸರ್ಕಾರದ ಮೇಲಿನ ಈ ಕಳಂಕ ನಿರ್ಮಾ ಹಾಕಿದರೂ ಹೋಗುವುದಿಲ್ಲ, ರ್ಸ್‌ ಎಕ್ಸೆಲ್‌ ಹಾಕಿದರೂ ಹೋಗುವುದಿಲ್ಲ ಎಂದು ಕುಹಕವಾಡಿದರು.
10
+ ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ಮಹಿಳೆಯರ ಖಾತೆಗೆ ಟಕಾ ಟಕ್‌ ಹಣ ಹಾಕುತ್ತೇವೆ ಎಂದು ಹೇಳಿದ್ದಾರೆ. ಅದೇ ರೀತಿ ದಲಿತರ ಹಣವನ್ನು ಖಾಸಗಿ ಕಂಪೆನಿಗಳಿಗೆ ಟಕಾ ಟಕ್‌ ಎಂದು ವರ್ಗಾವಣೆ ಮಾಡಿದ್ದಾರೆ. ಹಣ ಅಕ್ರಮವಾಗಿ ವರ್ಗಾವಣೆ ಆಗಿರುವುದಕ್ಕೆ ಸ್ಪಷ್ಟ ದಾಖಲೆಗಳು ಇವೆ.
11
+ ಅಂಗೈ ಹುಣ್ಣಿಗೆ ಕನ್ನಡಿ ಬೇಕಾ? ಸಚಿವರ ವಿರುದ್ಧ ಕ್ರಮಕ್ಕೆ ಇನ್ನು ಏನು ಬೇಕು? ಏತಕ್ಕಾಗಿ ಸರ್ಕಾರ ಕಾಯುತ್ತಿದೆ? ಎಂದು ಪ್ರಶ್ನೆ ಮಾಡಿದರು. ನಾನು ಶುಕ್ರವಾರ ಆತಹತ್ಯೆ ಮಾಡಿಕೊಂಡ ಚಂದ್ರಶೇಖರನ್‌ ಮನೆಗೆ ಭೇಟಿ ಕೊಟ್ಟ್ದೆಿ. ಅವರ ಪತ್ನಿ ಬೇಡಿಕೆ ಒಂದೇ, ಮಾಡದಿರುವ ತಪ್ಪಿಗೆ ಜೀವ ಕಳೆದುಕೊಂಡಿದ್ದಾರೆ. ಮಾಡದಿರುವ ತಪ್ಪಿಗೆ ರಾಜ್ಯ ಸರ್ಕಾರ ನಮನ್ನು ದೂಡಿದೆ. ಕೋವಿಡ್‌ ನಲ್ಲಿ ಮಾಡಿದ ಸಾಲವನ್ನು ಇದುವರೆಗೆ ನಾವು ತೀರಿಸಿಲ್ಲ ಎಂದು ನೋವನ್ನು ಹೊರಹಾಕಿದ್ದಾರೆ. ಇದಕ್ಕೆಲ್ಲಾ ಸರ್ಕಾರವೇ ಹೊಣೆ ಎಂದು ಆಶೋಕ್‌ ವಾಗ್ದಳಿ ನಡೆಸಿದರು.
eesanje/url_46_125_10.txt ADDED
@@ -0,0 +1,3 @@
 
 
 
 
1
+ ಮೈಸೂರು : ಗುರಾಯಿಸಿ ನೋಡಿದ ಯುವಕನ ಕೊಚ್ಚಿ ಕೊಲೆ
2
+ ಮೈಸೂರು, ಜೂ.1-ಗುರಾಯಿಸಿ ನೋಡಿದ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಉದಯಗಿರಿ ಪೊಲೀಸ್‌‍ ಠಾಣಾ ವ್ಯಾಪ್ತಿಯ ಶಾಂತಿನಗರದಲ್ಲಿ ನಡೆದಿದೆ. ಅರ್ಬಾಜ್‌ಖಾನ್‌(18) ಕೊಲೆಯಾದ ಯುವಕ.
3
+ ಶಾಂತಿನಗರದ ಲಾಲ್‌ ಮಸೀದಿ ಬಳಿ ಶಾದಿಲ್‌, ಶಹಬಾಜ್‌, ಶೋಯಬ್‌ ಹಾಗೂ ಸಾಹಿಲ್‌ ಎಂಬುವವರನ್ನು ಮೃತ ಅರ್ಬಾಜ್‌ಖಾನ್‌ ಗುರಾಯಿಸಿ ನೋಡಿದನೆಂದು ವಿನಾಕಾರಣ ಜಗಳ ತೆಗೆದಿದ್ದಾರೆ. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಹೊಡೆದಾಟ ಅರ್ಬಾಜ್‌ಖಾನ್‌ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ. ಈ ಸಂಬಂಧ ಉದಯಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
eesanje/url_46_125_11.txt ADDED
@@ -0,0 +1,7 @@
 
 
 
 
 
 
 
 
1
+ ಪ್ರಜ್ವಲ್‌ ರೇವಣ್ಣಗೆ ಸದ್ಯದಲ್ಲಿಯೇ ಪುರುಷತ್ವ ಪರೀಕ್ಷೆ?
2
+ ಬೆಂಗಳೂರು, ಜೂ.1-ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ, ಸದ್ಯ ಎಸ್‌‍ಐಟಿ ವಶದಲ್ಲಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣಗೆ ಸದ್ಯದಲ್ಲಿಯೇ ಪುರುಷತ್ವ ಪರೀಕ್ಷೆ ನಡೆಸಲು ಚಿಂತನೆ ನಡೆಸಿದೆ. ಅತ್ಯಾಚಾರ ಪ್ರಕರಣದ ಆರೋಪಿಯು ಸಂತ್ರಸ್ಥ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಸಾಮರ್ಥ್ಯ ಹೊಂದಿದ್ದಾನೆಯೇ ಎಂದು ಖಚಿತಪಡಿಸಿಕೊಳ್ಳಲು ಪುರುಷತ್ವ ಪರೀಕ್ಷೆ ಮಾಡಲಾಗುತ್ತದೆ.
3
+ ಆರೋಪಿ ತನಿಖೆಗೆ ಸಹಕರಿಸಲು ದೈಹಿಕ-ಮಾನಸಿಕವಾಗಿ ಸಿದ್ಧನಾಗಿದ್ದಾನೆಯೇ ಎಂಬುದನ್ನು ಈ ಪರೀಕ್ಷೆಗಳ ಮೂಲಕ ತಿಳಿದುಕೊಳ್ಳಲಾಗುತ್ತದೆ. ಪ್ರಜ್ವಲ್‌ ರೇವಣ್ಣ ಮೂರು ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿದ್ದು, ಅವರ ತಾಯಿ ಭವಾನಿ ರೇವಣ್ಣ ಅವರು ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದಾರೆ.
4
+ ಈ ಪ್ರಕರಣದಲ್ಲಿ ಭವಾನಿ ಆರೋಪಿಯಲ್ಲದಿದ್ದರೂ, ಆಕೆಯ ಪಾತ್ರದ ಬಗ್ಗೆ ತನಿಖೆ ನಡೆಸಲು ಎಸ್‌‍ಐಟಿ ಬಯಸಿದೆ ಪ್ರಕರಣದ ತನಿಖೆ ಹಾಗೂ ವಿಚಾರಣೆಗೆ ಎಲ್ಲಾ ರೀತಿಯ ಸಿದ್ಧತೆಯನ್ನು ಎಸ್‌‍ಐಟಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ, ವಿಡಿಯೋದಲ್ಲಿ ಇರುವಂಥ ಅಶ್ಲೀಲ ವಿಡಿಯೋವನ್ನು ತಾನು ಮಾಡಿಲ್ಲ ಎಂದು ಪ್ರಜ್ವಲ್‌ ಅಫಿಡವಿಟ್‌ ಸಲ್ಲಿಸಿದರೆ, ಪ್ರಜ್ವಲ್‌ ರೇವಣ್ಣಗೆ ಪುರುಷತ್ವ ಪರೀಕ್ಷೆ ನಡೆಸುವ ಸಾಧ್ಯತೆ ಇದೆ.
5
+ ತಾನು ಅತ್ಯಾಚಾರ ಮಾಡಿಲ್ಲ ಎಂದು ನ್ಯಾಯಾಲಯಕ್ಕೆ ಅಫಿಡವಿಟ್‌ ಸಲ್ಲಿಸುವ ಸಾಧ್ಯತೆಯೂ ಇರುವುದರಿಂದ, ಮುಂದಿನ ಹಂತದಲ್ಲಿ ಪ್ರಜ್ವಲ್‌ ರೇವಣ್ಣರ ಪುರುಷತ್ವ ಪರೀಕ್ಷೆಯನ್ನು ಎಸ್‌‍ಐಟಿ ಮಾಡಿಸಲಿದೆ.
6
+ ನಂತರ ಹಾಸನ ಸಂಸದರ ನಿವಾಸದಲ್ಲಿ ಸಂಗ್ರಹಿಸಲಾದ ಹಾಸಿಗೆ- ಹೊದಿಕೆ ಇತ್ಯಾದಿಗಳಲ್ಲಿ ಕಂಡುಬಂದಿರುವ ಡಿಎನ್‌ಎಗೂ, ಪ್ರಜ್ವಲ್‌ ಡಿಎನ್‌ಎಗೂ ತಾಳೆ ಮಾಡಲಾಗುತ್ತದೆ. ಒಟ್ಟು ಮೂರು ಹಂತದಲ್ಲಿ ಪ್ರಜ್ವಲ್‌ ರೇವಣ್ಣ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಈ ಹಿಂದೆಯೂ ಅನೇಕರಿಗೆ ಅತ್ಯಾಚಾರ ಪ್ರಕರಣದಲ್ಲಿ ಪುರುಷತ್ವ ಪರೀಕ್ಷೆ ನಡೆಸಲಾಗಿತ್ತು. ಸ್ವಾಮಿ ನಿತ್ಯಾನಂದ, ಮುರುಘಾ ಶ್ರೀ, ಅಸಾರಾಂ ಬಾಪು ಸೇರಿದಂತೆ ಹಲವರಿಗೆ ಪುರುಷತ್ವ ಪರೀಕ್ಷೆ ನಡೆಸಲಾಗಿತ್ತು.
7
+ ಪುರುಷತ್ವ ಪರೀಕ್ಷೆ? :ಇದು ಲೈಂಗಿಕ ಸಾಮಥ್ರ್ಯ ಸಾಬೀತು ಪಡಿಸುವ ಪರೀಕ್ಷೆ. ಲೈಂಗಿಕ ಕಿರುಕುಳ, ಅತ್ಯಾಚಾರ ಮುಂತಾದ ದೂರುಗಳು ಕೇಳಿ ಬಂದಾಗ ಆರೋಪಿ ಪುರುಷತ್ವ ಪರೀಕ್ಷೆ ನಡೆಸಲಾಗುತ್ತದೆ. ಪ್ರಾಥಮಿಕ ಹಂತದಲ್ಲಿ ಮೂರು ರೀತಿ ಪರೀಕ್ಷೆ ನಡೆಸಲಾಗುತ್ತದೆ.1) ಪುರುಷರ ಜನನಾಂಗ ನಿಮಿರುವಿಕೆ, ವೀರ್ಯ ವಿಶ್ಲೇಷಣೆ, ಶಿಶ್ನಕ್ಕೆ ಪೂರೈಕೆಯಾಗುವ ರಕ್ತನಾಳಗಳ ಪರೀಕ್ಷೆಯನ್ನು ಮುಖ್ಯವಾಗಿ ನಡೆಸಲಾಗುತ್ತದೆ. ಆಂಡೋಲಜಿಸ್ಟ್‌ ಸೇರಿದಂತೆ ನಾಲ್ವರು ತಜ್ಞ ವೈದ್ಯರ ತಂಡ ಈ ಪರೀಕ್ಷೆ ನಡೆ���ುತ್ತಾರೆ.2) ನಂತರ ವೀರ್ಯ ವಿಶ್ಲೇಷಣೆ ನಡೆಯುತ್ತದೆ. ಪುರುಷನ ವೀರ್ಯ ಮತ್ತು ವೀರ್ಯಾಣುಗಳ ಗುಣಲಕ್ಷಣಗಳ ಮೌಲ್ಯಮಾಪನ ನಡೆಸುವ ಪರೀಕ್ಷೆ ಇದು.3) ಡಾಪ್ಲರ್‌ ಅಲ್ಟ್ರಾಸೌಂಡ್‌ ಪರೀಕ್ಷೆ ನಡೆಯಲಿದೆ. ಆರೋಪಿಯ ಖಾಸಗಿ ಅಂಗಕ್ಕೆ ಸರಿಯಾಗಿ ರಕ್ತ ಪೂರೈಕೆಯಾಗುತ್ತಿದೆಯೆ? ರಕ್ತದ ಪ್ರಮಾಣ ಎಷ್ಟಿದೆ? ಎಂಬುದು ತಿಳಿಯುವ ಪರೀಕ್ಷೆ ಇದಾಗಿದೆ. ವಯಾಗ್ರಾದಂಥ ಮೆಡಿಸಿನ್‌ ಸೇವಿಸಿದರೂ ಕೂಡ ಈ ಪರೀಕ್ಷೆಯಲ್ಲಿ ಗೊತ್ತಾಗುತ್ತೆ.4) ಎನ್‌ಪಿಟಿ ಟೆಸ್ಟ್‌ : ಆಸ್ಪತ್ರೆಯ ನಿದ್ರಾ ಪ್ರಯೋಗಶಾಲೆಯಲ್ಲಿ ನಡೆಯುವ ಪರೀಕ್ಷೆ ಇದು. ಆರೋಪಿಯ ಖಾಸಗಿ ಅಂಗ ರಾತ್ರಿ ನಿದ್ರೆಯಲ್ಲಿ ಯಾವ ರೀತಿ ಪ್ರತಿಕ್ರಿಯಿಸುತ್ತದೆ ಎಂದು ಎನ್‌ಪಿಟಿ ಪರೀಕ್ಷೆಯಲ್ಲಿ ಪರಿಶೀಲನೆ ನಡೆಸಲಾಗುತ್ತದೆ. ಈ ಪರೀಕ್ಷೆ ಸಾಮಾನ್ಯವಾಗಿ ಆಸ್ಪತ್ರೆಯ ನಿದ್ರಾ ಪ್ರಯೋಗಶಾಲೆಯಲ್ಲಿ ನಡೆಯುತ್ತದೆ. ಆರೋಪಿಯ ಅರಿವಿಗೆ ಬಾರದಂತೆ ನಡೆಯುವ ಪರೀಕ್ಷೆ ಇದು. ಈ ಮೂರು ಟೆಸ್ಟ್‌ ಮೂಲಕ ಆರೋಪಿಯ ಪುರುಷತ್ವ ಪರೀಕ್ಷೆ ನಡೆಯುತ್ತವೆ. ಇದರಲ್ಲಿ ಬರುವ ವೈದ್ಯಕೀಯ ವರದಿ ಅತ್ಯಾಚಾರ ಪ್ರಕರಣದಲ್ಲಿ ಬಹಳ ಮುಖ್ಯವಾಗುತ್ತವೆಲೈಂಗಿಕ ದೌರ್ಜನ್ಯ ಎಸಗಿದ ವಿಡಿಯೋಗಳು ಸೋರಿಕೆಯಾದ ನಂತರ ಪ್ರಜ್ವಲ್‌ ರೇವಣ್ಣ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ.
eesanje/url_46_125_12.txt ADDED
@@ -0,0 +1,7 @@
 
 
 
 
 
 
 
 
1
+ ಡಿಕೆಶಿ ಶತ್ರು ಭೈರವಿ ಯಾಗ ಆರೋಪ ತಳ್ಳಿಹಾಕಿದ ದೇವಸ್ಥಾನದ ಆಡಳಿತ ಮಂಡಳಿ
2
+ ಕೋಝಿಕ್ಕೋಡು,ಜೂ.1– ಕೇರಳದ ದೇವಸ್ಥಾನದಲ್ಲಿ ಪ್ರಾಣಿ ಬಲಿ ಒಳಗೊಂಡ ಶತ್ರು ಭೈರವಿ ಯಾಗ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೀಡಿದ್ದ ಹೇಳಿಕೆಯನ್ನು ಕಣ್ಣೂರಿನ ತಳಿಪರಂಬದಲ್ಲಿರುವ ಶಿವ ದೇವಾಲಯವಾದ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ತಳ್ಳಿಹಾಕಿದೆ.
3
+ ಕೇರಳದ ದೇವಸ್ಥಾನವೊಂದರಲ್ಲಿ ಪ್ರಾಣಿ ಬಲಿಯನ್ನು ಒಳಗೊಂಡಿರುವ ಶತ್ರು ಭೈರವಿ ಯಾಗವನ್ನು ಗುರುವಾರ ನಡೆಸಲಾಗಿದೆ ಎಂದು ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದರಲ್ಲದೆ, ತಮ್ಮ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕರ್ನಾಟಕದ ಕಾಂಗ್ರೆಸ್‌‍ ಸರ್ಕಾರದ ವಿರುದ್ಧ ಮಾಟಮಂತ್ರ ಮಾಡಲಾಗಿದೆ ಎಂದು ಆರೋಪಿಸಿದ್ದರು.
4
+ ಕೇರಳದ ಬಹುತೇಕ ದೇವಾಲಯಗಳಲ್ಲಿ ಶತ್ರು ಸಂಹಾರ ಪೂಜೆಯನ್ನು ನಡೆಸಲಾಗುತ್ತಿದ್ದು, ಯಾವುದೇ ಜೀವಿಯ ಬಲಿದಾನವಿಲ್ಲದ ಸರಳ ಪೂಜೆಯಾಗಿರುತ್ತದೆ. ಮಲರ್ಬಾ ದೇವಸ್ಥಾನ ಮಂಡಳಿ ಸಹಾಯಕ ಕಮಿಷನರ್‌ ಗಿರೀಶ್‌ ಕುಮಾರ್‌ ಅವರು ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಇಂತಹ ಆರೋಪಗಳು ಆಧಾರರಹಿತವಾಗಿವೆ. ಈ ಪ್ರದೇಶದಲ್ಲಿ ಯಾವುದೇ ದೇವಾಲಯಗಳು ಅಕ್ರಮ ಆಚರಣೆಗಳಲ್ಲಿ ತೊಡಗುವುದಿಲ್ಲ ಎಂದು ಹೇಳಿದ್ದಾರೆ.
5
+ ಇದಕ್ಕೆ ಪುಷ್ಠಿ ನೀಡುವಂತೆ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಹಾಗೂ ಸಮೀಪದ ದೇವಸ್ಥಾನಗಳಲ್ಲಿ ನಡೆಯುವ ಧಾರ್ಮಿಕ ವಿಧಿ ವಿಧಾನಗಳ ಸಮಗ್ರ ವರದಿಯನ್ನು ಸಲ್ಲಿಸಲಾಗಿದೆ. ಈ ವರದಿಯು ಡಿ. ಕೆ.ಶಿವಕುಮಾರ್‌ ಅವರು ಮಾಡಿದ ಆರೋಪಗಳನ್ನು ನಿರಾಕರಿಸುವುದಕ್ಕೆ ಸಾಕ್ಷಿಯಾಗಿದೆ, ಈ ದೇವಾಲಯಗಳು ಕಾನೂನುಬದ್ಧ ಮತ್ತು ಸಾಂಪ್ರದಾಯಿಕ ಆಚರಣೆಗಳಿಗೆ ಬದ್ಧವಾಗಿರುವುದನ್ನು ತೋರಿಸುತ್ತವೆ.
6
+ ಕೇರಳದ ಬಹುತೇಕ ದೇವಾಲಯಗಳಲ್ಲಿ ಶತ್ರು ಸಂಹಾರ ಪೂಜೆಯನ್ನು ನಡೆಸಲಾಗುತ್ತಿದ್ದು, ಯಾವುದೇ ಬಲಿದಾನದ ಅಗತ್ಯವಿಲ್ಲದ ಸರಳ ಪೂಜೆಯಾಗಿದೆ, ಇಲ್ಲಿ ಸರಳವಾದ ಮಂತ್ರಗಳ ಪಠಿಸಲಾಗುತ್ತದೆ. ಕಣ್ಣೂರಿನ ತಿರುವರ್ಕಾಡು ಭಗವತಿ ದೇವಸ್ಥಾನ ಅಂದರೆ ಮಡಾಯಿ ಕಾವುನಲ್ಲಿ ಮಾತ್ರ ಜೀವಿಯ ಬಲಿ ನೀಡಲಾಗುತ್ತದೆ.
7
+ ಇಲ್ಲಿ ಕೋಜಿ ಕಲಶವನ್ನು ನಡೆಸಲಾಗುತ್ತಿದ್ದು, ಇದು ದೇವಿಗೆ ನೀಡುವ ಕೋಳಿ ಬಲಿಯಾಗಿದೆ, ಆದರೆ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ .ಕೆ.ಶಿವಕುಮಾರ್‌ ನೀಡಿರುವ ಹೇಳಿಕೆಯಂತೆ ಇಲ್ಲಿ ಯಾವುದೇ ಆಚರಣೆಗಳು ನಡೆಯುವುದಿಲ್ಲ ಎಂದರು.ಈ ಮಧ್ಯೆ, ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಆಚರಣೆಗಳ ತನಿಖೆಗಾಗಿ ಕರ್ನಾಟಕ ಪೊಲೀಸರ ವಿಶೇಷ ದಳ ನಿನ್ನೆ ಕಣ್ಣೂರಿಗೆ ಹೋಗಿತ್ತು.
eesanje/url_46_125_2.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಗುತ್ತಿಗೆದಾರರ ಆತಹತ್ಯೆಗೆ ಹಣ ಬಿಡುಗಡೆ ವಿಳಂಬ ಕಾರಣವಲ್ಲ : ಖರ್ಗೆ
2
+ ಕಲಬುರಗಿ,ಜೂ.1-ಕೆಆರ್‌ಐಡಿಎಲ್‌ ನಿಗಮದಿಂದ ಗುತ್ತಿಗೆ ಕಾಮಗಾರಿಗೆ ಹಣ ಬಂದಿಲ್ಲ ಎಂದು ಗುತ್ತಿಗೆದಾರರು ಆತಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಕಡಿಮೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.
3
+ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೃತಪಟ್ಟ ವ್ಯಕ್ತಿಯ ಮರಣಪತ್ರದಲ್ಲಿ ಕೌಟುಂಬಿಕ ಸಮಸ್ಯೆಯಿದೆ. ಹಲವು ಕಡೆ ಸಾಲ ಮಾಡಿಕೊಂಡಿದ್ದೇನೆ ಎಂದು ನಾನಾ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. 5 ನೇ ಅಂಶದಲ್ಲಿ ಕೆಆರ್‌ಐಡಿಎಲ್‌ನಿಂದ ಕಾಮಗಾರಿ ಗುತ್ತಿಗೆ ಪಡೆದು ಕೆಲಸ ಮಾಡಿದ್ದು, ಬಿಲ್‌ ಪಾವತಿಯಾಗದೆ ಸತಾಯಿಸುತ್ತಿದ್ದಾರೆ. ನನ್ನ ಸಾವಿನ ಬಳಿಕ ಕೆಆರ್‌ಐಡಿಎಲ್‌ನಿಂದ ದೊಡ್ಡ ಮೊತ್ತದ ಪರಿಹಾರ ಪಡೆದುಕೊಳ್ಳಿ ಎಂದು ಬರೆದಿದ್ದಾರೆ ಎಂದರು.
4
+ ಕೆಆರ್‌ಐಡಿಎಲ್‌ ಎಂಜಿನಿಯರಿಂಗ್‌ ಸಂಸ್ಥೆಯಾಗಿದ್ದು, ಕಾಮಗಾರಿಗಳನ್ನು ಖುದ್ದು ನಿರ್ವಹಣೆ ಮಾಡಲಿದೆ. ಉಪಗುತ್ತಿಗೆ ನೀಡಲು ಅವಕಾಶವಿಲ್ಲ. ಚನ್ನಗಿರಿಯಲ್ಲಿ ನಡೆದಿರುವ ರಸ್ತೆ ಕಾಮಗಾರಿಯನ್ನು ನೋಡಿದರೆ ಅಲ್ಲಿ ಆಗಿನ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಆದೇಶದ ಮೇಲೆ ನಡೆದಿರುವ ಕೆಲಸ ಎಂದು ರಸ್ತೆಗಿಂತಲೂ ದೊಡ್ಡದಾಗಿ ಫಲಕ ಹಾಕಲಾಗಿದೆ. ಯಾವುದೇ ಅನುಮೋದನೆ ಇಲ್ಲದೆ ಕಾಮಗಾರಿ ನಡೆದಿರುವ ಸಾಧ್ಯತೆಯಿದೆ. ಅಧಿಕಾರಿಗಳ ತನಿಖಾ ವರದಿ ಬಳಿಕ ಸತ್ಯಾಂಶ ಗೊತ್ತಾಗಲಿದೆ ಎಂದರು.
5
+ ಕಲ್ಯಾಣ ಕರ್ನಾಟಕ ಭಾಗಕ್ಕೆ 371 ಜೆ ವಿಶೇಷ ಮಾನ್ಯತೆ ಬಗ್ಗೆ ರಾಜ್ಯದ ಇತರ ಭಾಗಗಳ ಜನ ಅಸಹನೆ ತೋರಿಸಬಾರದು. ನಿಜಾಮರ ಆಡಳಿತದಲ್ಲಿದ್ದ ಪ್ರದೇಶಗಳ ಪೈಕಿ ತೆಲಂಗಾಣ, ಮರಾಠವಾಡ ಸೇರಿದಂತೆ ಹಲವು ಭಾಗಗಳಲ್ಲಿ ಅಭಿವೃದ್ಧಿ ಕುಂಠಿತವಾಗಿರುವ ಐತಿಹಾಸಿಕ ಕಾರಣಕ್ಕೆ ವಿಶೇಷ ಸ್ಥಾನಮಾನ ದೊರೆತಿದೆ. ಎ ಯಿಂದ ಜೆ ವರೆಗೂ ಹಲವು ಭಾಗಗಳು ಸೌಲಭ್ಯ ಪಡೆದಿವೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ತಡವಾಗಿ ಅವಕಾಶ ಸಿಕ್ಕಿದೆ ಎಂದು ಹೇಳಿದರು.
6
+ ಈ ಹಿಂದೆ ಸಚಿವರಾಗಿದ್ದ ಶ್ರೀರಾಮಲು ಉಪಸಮಿತಿ ಅಧ್ಯಕ್ಷರಾಗಿ ಹೊರಡಿಸಿದ್ದ ಹಲವು ಆದೇಶಗಳು ದೋಷಪೂರಿತವಾಗಿದ್ದವು, ಅವುಗಳನ್ನು ನಾವು ಸರಿಪಡಿಸಿದ್ದೇವೆ ಎಂದರು.ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ವಿರುದ್ಧ ಪಕ್ಷದ ಜಾಹೀರಾತಿನ ಕಾರಣಕ್ಕೆ ಬಿಜೆಪಿಯವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ನಾವು ಅದನ್ನು ಕಾನೂನಾತಕವಾಗಿಯೇ ಎದುರಿಸಿದ್ದೇವೆ. ರಾಹುಲ್‌ಗಾಂಧಿ ಇಂದು ದೆಹಲಿಯಲ್ಲಿ ನಡೆಯುವ ಇಂಡಿಯಾ ರಾಜಕೀಯ ಕೂಟದ ಸಭೆಯಲ್ಲಿ ಭಾಗವಹಿಸಿರುವ ಕಾರಣಕ್ಕೆ ಖುದ್ದು ಹಾಜರಾಗಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ನ್ಯಾಯಾಲಯಕ್ಕೆ ಬರುತ್ತಾರೆ ಎಂದು ತಿಳಿಸಿದರು.
7
+ ಬಿಜೆಪಿಯವರು ಮಾಡುವ ಯಾವ ಆರೋಪಗಳಿಗೂ ಸಾಕ್ಷ್ಯ ಪುರಾವೆಗಳನ್ನು ನೀಡುವುದಿಲ್ಲ. ಈ ಹಿಂದೆ ನಾ��ು ಮಾಡಿದ್ದ ಪ್ರತೀ ಟೀಕೆಗೂ ಸಾಕ್ಷ್ಯ ನೀಡಿದ್ದೇವೆ. ಸರ್ಕಾರ ರಚನೆಯಾದ ಬಳಿಕ ತನಿಖೆ ನಡೆಯುತ್ತಿದೆ. ವಾಲೀಕಿ ಅಭಿವೃದ್ಧಿ ನಿಗಮದಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವಶ್ಯಕತೆ ಬಿದ್ದರೆ ಸಿಬಿಐ, ಎನ್‌ಐ ಸೇರಿದಂತೆ ಯಾವುದೇ ತನಿಖೆಗಾದರೂ ಸರ್ಕಾರ ಸಿದ್ಧವಿದೆ. ಸದ್ಯಕ್ಕೆ ವಿಶೇಷ ತನಿಖಾ ದಳ ರಚನೆ ಮಾಡಿದ್ದು, ಅದರ ವರದಿಗಾಗಿ ಕಾಯುತ್ತಿದ್ದೇವೆ ಎಂದರು.
8
+ ಬಿಜೆಪಿಯವರು ಪ್ರತೀ ವಿಚಾರಕ್ಕೂ ಸಚಿವರ ರಾಜೀನಾಮೆ ಕೇಳುತ್ತಾರೆ. ಹಾಗೆ ನೋಡಿದರೆ ಈ ಹಿಂದೆ ಬಿಜೆಪಿಯಲ್ಲಾದ ಅವ್ಯವಹಾರಗಳಿಗೆ ಯಾರಾದರೂ ರಾಜೀನಾಮೆ ಕೊಟ್ಟಿದ್ದರೇ? ದೊಡ್ಡದಾಗಿ ಮಾತನಾಡುವ ಬಸನಗೌಡ ಪಾಟೀಲ್‌ ಯತ್ನಾಳ್‌ ಕೂಡ ನೈತಿಕ ಹೊಣೆ ಹೊತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರಲಿಲ್ಲ ಎಂದು ತಿರುಗೇಟು ನೀಡಿದರು.ಈ ಹಿಂದೆ ಬಿಜೆಪಿ ಸರ್ಕಾರ ದೆಹಲಿಯ ವರಿಷ್ಠರಿಗೆ ಎಟಿಎಂನಂತೆ ಬಳಕೆಯಾಗಿತ್ತು. ಅದೇ ಅನುಭವದ ಆಧಾರದ ಮೇಲೆ ಕಾಂಗ್ರೆಸ್‌‍ ಸರ್ಕಾರವೂ ಏರಿಕೆ ಮಾಡಿರಬಹುದು ಎಂದು ಹೇಳಿದ್ದಾರೆ. ಆದರೆ ನಮಲ್ಲಿ ಆ ಪದ್ಧತಿ ಇಲ್ಲ ಎಂದು ಹೇಳಿದರು.
9
+ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಾಯಿಯನ್ನು ನೋಡಲು ಹೋದರೂ ಕ್ಯಾಮೆರಾಮನ್‌ಗಳನ್ನು ಕರೆದುಕೊಂಡು ಹೋಗುತ್ತಾರೆ, ಧ್ಯಾನಕ್ಕೆ ಕುಳಿತರೆ ನಾಲ್ಕು ಬಾರಿ ಬಟ್ಟೆ ಬದಲಾಯಿಸುತ್ತಾರೆ, ಐದು ಪೀಠಗಳು ಬದಲಾಗುತ್ತವೆ, ಕನಿಷ್ಠ 10-12 ಕ್ಯಾಮರಾಗಳು ಫೋಟೋಶೂಟ್‌ ಮಾಡಿವೆ, ಭಕ್ತಿ ಎಂಬುದು ಖಾಸಗಿ ವಿಚಾರ. ಆದರೆ ನರೇಂದ್ರ ಮೋದಿ ಪ್ರಧಾನಮಂತ್ರಿ ಅಲ್ಲ, ಪ್ರಚಾರ ಮಂತ್ರಿ. ಹಾಗಾಗಿ ಪ್ರತಿಯೊಂದಕ್ಕೂ ಫೋಟೊಶೂಟ್‌ಗಳಾಗುತ್ತವೆ ಎಂದು ಲೇವಡಿ ಮಾಡಿದರು.
10
+ ರಾಹುಲ್‌ಗಾಂಧಿಯವರನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಹೇಳಿರುವ ಹೇಳಿಕೆ ಸಮರ್ಥನೀಯ. ದೇಶದ ಯಾವ ವ್ಯಕ್ತಿಯೂ ಕನ್ಯಾಕುಮಾರಿಯಿಂದ ಕಾಶೀರ, ಈಶಾನ್ಯ ರಾಜ್ಯದಿಂದ ಗುಜರಾತ್‌ವರೆಗೂ ಪ್ರವಾಸ ಮಾಡಿಲ್ಲ. ರಾಹುಲ್‌ಗಾಂಧಿ ಭಾರತ್‌ ಜೋಡೊ ಯಾತ್ರೆ ಮೂಲಕ ಈ ಪ್ರವಾಸ ಮಾಡಿದ್ದಾರೆ ಎಂದು ಹೇಳಿದರು.
eesanje/url_46_125_3.txt ADDED
@@ -0,0 +1,8 @@
 
 
 
 
 
 
 
 
 
1
+ ಕರ್ನಾಟಕ ಬಿಜೆಪಿ ದೇಶದಲ್ಲೇ ಕಡುಭ್ರಷ್ಟರು : ಡಿಕೆಶಿ
2
+ ಬೆಂಗಳೂರು,ಜೂ.1-ಕರ್ನಾಟಕ ಬಿಜೆಪಿ ದೇಶದಲ್ಲೇ ಅತ್ಯಂತ ಭ್ರಷ್ಟವಾಗಿದ್ದು, ನಾವು ಹೋಗಲಿ ಎಂದು ಸುಮನಿದ್ದರೂ ಅವರು ನಮನ್ನು ಬಯಲು ಮಾಡಿ ಎಂದು ಪದೇಪದೇ ಕೆಣಕುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ.ಮಾನನಷ್ಟ ಮೊಕದ್ದಮೆಯಲ್ಲಿ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಸಿಟಿ ಸಿವಿಲ್‌ ಕೋರ್ಟ್‌ಗೆ ಹಾಜರಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಕೆಂಡ ಕಾರಿದರು.
3
+ ಈ ಹಿಂದೆ ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ರೂ.ಗಳ ಲಂಚ ಕೇಳಿದ್ದರು ಎಂದು ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆರೋಪ ಮಾಡಿದ್ದರು. ಅಧಿಕಾರಿಗಳ ವರ್ಗಾವಣೆಗೆ ನಿಗದಿಯಾಗಿದ್ದ ದರದ ಪಟ್ಟಿ ಸಿಐಡಿ ವರದಿ ಆಧರಿಸಿ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು.ಕಾಂಗ್ರೆಸ್‌‍ ಪಕ್ಷ ಅದನ್ನೇ ಆಧಾರವಾಗಿಟ್ಟುಕೊಂಡು ಜಾಹೀರಾತು ನೀಡಿದೆ. ಯಾವ ಯಾವ ಪತ್ರಿಕೆಗಳಲ್ಲಿ ದರಪಟ್ಟಿ ಪ್ರಕಟವಾಗಿದೆ ಎಂಬುದನ್ನೂ ನಾವು ತಿಳಿಸಿದ್ದೇವೆ ಎಂದರು.
4
+ ಬಿಜೆಪಿಯವರು ಸಿದ್ದರಾಮಯ್ಯ ಹಾಗೂ ನನ್ನ ಮೇಲೆ ಕೇಸು ದಾಖಲಿಸಿದರೆ ನಮ ಅಭ್ಯಂತರವಿಲ್ಲ. ಆದರೆ ತಾವು ದೊಡ್ಡವರು ಎನ್ನಿಸಿಕೊಳ್ಳಬೇಕು ಎಂಬ ಕಾರಣಕ್ಕೆ ರಾಹುಲ್‌ಗಾಂಧಿಯವರ ಮೇಲೂ ಪ್ರಕರಣ ದಾಖಲಿಸಿದ್ದಾರೆ. ರಾಹುಲ್‌ಗಾಂಧಿ ಕಾನೂನಿಗೆ ಗೌರವ ನೀಡಲಿದ್ದು, ನ್ಯಾಯಾಲಯಕ್ಕೆ ಹಾಜರಾಗುತ್ತಾರೆ. ಬಿಜೆಪಿಯವರು ಸವಾಲು ಹಾಕಿದಂತೆ ನಾವು ಮಾಡಿದ ಆರೋಪಗಳನ್ನು ಸಾಬೀತುಪಡಿಸುತ್ತೇವೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.
5
+ ವಾಲೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಉದ್ದೇಶ ಇಲ್ಲ. ಈಗಾಗಲೇ ಎಸ್‌‍ಐಟಿ ರಚನೆಯಾಗಿದೆ. ಹಣ ಎಲ್ಲೆಲ್ಲಿ ಹೋಗಿದೆ ಎಂದು ಪತ್ತೆಹಚ್ಚಲು ಅಧಿಕಾರಿಗಳು ಮುಂದಾಗಿದ್ದಾರೆ. ಎಲ್ಲವೂ ತಿಳಿಯಲು 2-3 ದಿನಗಳ ಸಮಯಾವಕಾಶ ಬೇಕಿದೆ. ಅನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
6
+ ಬಿಜೆಪಿಯವರು ಏನಾದರೂ ಹೇಳಿಕೊಳ್ಳಲಿ, ಅವರ ಸರ್ಕಾರ ಇದ್ದಾಗಲೂ ಇಂತಹ ಹಲವು ಪ್ರಕರಣಗಳು ನಡೆದಿವೆ. ಬಸವರಾಜ ಬೊಮಾಯಿ ಅವರಿಗೆ ಇದು ಗೊತ್ತಿದೆ. ಬಿಜೆಪಿಯವರು ಪದೇಪದೇ ನಮನ್ನು ಕೆಣಕಿ ತನಿಖೆ ಆಗುವಂತೆ ಮಾಡುತ್ತಿದ್ದಾರೆ ಎಂದು ಮಾರ್ಮಿಕವಾಗಿ ನುಡಿದರು.
7
+ ಹಗರಣದಲ್ಲಿ ಡಿ.ಕೆ.ಶಿವಕುಮಾರ್‌ ಕೂಡ ಪಾಲುದಾರರು ಎಂದು ಅವನ್ಯಾರೋ ರವಿ ಹೇಳಿದ್ದಾನೆ. ಹೌದು, ನನ್ನದೂ ಪಾಲುದಾರಿಕೆ ಇದೆ. ನಾನು ಮತ್ತು ರವಿ ಇಬ್ಬರೂ ಪಾಲುದಾರರು. ಇಬ್ಬರೂ ಸೇರಿ ಹಂಚಿಕೊಂಡಿದ್ದೇವೆ ಎಂದು ವ್ಯಂಗ್ಯವಾಡಿದರು.100 ಕೋಟಿ ರೂ.ಗಳ ಮೇಲ್ಪಟ್ಟ ಹಣಕಾಸಿನ ವಹಿವಾಟು ನಡೆದಿದ್ದರೆ ಅದು ಸಹಜವಾಗಿಯೇ ಸಿಬಿಐ ತನಿಖೆಗೆ ಒಳಪಡುತ್ತದೆ. ಇಲ್ಲಿ ಸರ್ಕಾರ ತನಿಖೆಗೆ ಹಸ್ತಾಂತರಿಸಬೇಕು ಎಂಬ ಪ್ರಮೇಯ ಉದ್ಭವಿಸುವುದಿಲ್ಲ. ನ�� ಸರ್ಕಾರ ಸಿಬಿಐ ತನಿಖೆಗೆ ಅಗತ್ಯ ಸಹಕಾರ ನೀಡಲು ಸಿದ್ಧವಿದೆ.
8
+ ಆದರೆ ಅವರು ರಾಜಕೀಯ ಮಾಡದೇ ನಿಷ್ಪಕ್ಷಪಾತ ತನಿಖೆ ಮಾಡಲಿ ಎಂದು ಹೇಳಿದರು. ಈಶ್ವರಪ್ಪ ಅವರ ಪ್ರಕರಣದಲ್ಲಿ ನೇರವಾಗಿ ಹೆಸರು ಉಲ್ಲೇಖಿಸಲಾಗಿತ್ತು. ಈ ಪ್ರಕರಣದಲ್ಲಿ ಚಂದ್ರಶೇಖರನ್‌ ಅವರ ಮರಣಪತ್ರದಲ್ಲಿ ಸಚಿವರು ಮೌಖಿಕ ಆದೇಶ ನೀಡಿದ್ದಾರೆ ಎಂದು ಅಧಿಕಾರಿ ಹೇಳಿರುವುದಾಗಿ ಉಲ್ಲೇಖಿಸಲಾಗಿದೆ. ಸಾಕ್ಷ್ಯ ದೊರೆತರೆ ನಾವು ಯಾರನ್ನೂ ರಕ್ಷಿಸುವುದಿಲ್ಲ. ನಮ ಸರ್ಕಾರ ಪಾರದರ್ಶಕವಾಗಿರಲಿದೆ. ನಮ ಮೊದಲ ಆದ್ಯತೆ ಹಣ ರಕ್ಷಣೆ ಮಾಡುವುದಾಗಿದೆ. ಸಚಿವರು ಈ ಬಗ್ಗೆ ತಮ ಬಳಿ ಬಂದು ಚರ್ಚೆ ನಡೆಸಿದ್ದಾರೆ ಎಂದರು.
eesanje/url_46_125_4.txt ADDED
@@ -0,0 +1,4 @@
 
 
 
 
 
1
+ ಸಚಿವ ನಾಗೇಂದ್ರ ರಕ್ಷಣೆಗೆ ಸರ್ಕಾರ ಯತ್ನಿಸುತ್ತಿದೆ : ಬಿಜೆಪಿ ಆರೋಪ
2
+ ಬೆಂಗಳೂರು,ಜೂ.1-ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌‍ ಸರಕಾರ ಬಹುಕೋಟಿ ಹಗರಣದ ಆರೋಪಿ ಸಚಿವ ಬಿ.ನಾಗೇಂದ್ರ ಅವರನ್ನು ರಕ್ಷಿಸುವ ಸಲುವಾಗಿ ಅಕ್ರಮ ಹಣ ವರ್ಗಾವಣೆಯ ಆರೋಪವನ್ನು ಯೂನಿಯನ್‌ ಬ್ಯಾಂಕ್‌ ಆ್‌‍ ಇಂಡಿಯಾದ ಮೇಲೆ ಹೊರಿಸುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದೆ.
3
+ ಅತ್ಯಂತ ಭ್ರಷ್ಟ ಕಾಂಗ್ರೆಸ್‌‍ ಸರ್ಕಾರವು ಪ್ರಾಥಮಿಕ ಸಿಐಡಿ ತನಿಖೆಯ ಮೂಲಕ ಸಚಿವರಿಗೆ ಕ್ಲೀನ್‌ ಚಿಟ್‌ ಪಡೆಯಲು ಪ್ರಯತ್ನಿಸುತ್ತಿದೆ.ಸರ್ಕಾರ, ಭ್ರಷ್ಟ ಸಚಿವರ ರಾಜೀನಾಮೆ ಪಡೆಯುವುದು ಬಿಟ್ಟು ಎಸ್‌‍ಐಟಿ ಮೂಲಕ ಪ್ರಾಥಮಿಕ ತನಿಖೆ ಮಾಡಿಸಿ ಕ್ಲೀನ್‌ ಚಿಟ್‌ ಕೊಡಲು ಯತ್ನಿಸಿದೆ ಎಂದು ಬಿಜೆಪಿ ಕಿಡಿಕಾರಿದೆ.
4
+ ಇದಕ್ಕೆ ಪ್ರತಿಯಾಗಿ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಸಿಬಿಐಗೆ ದೂರು ನೀಡಿ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಿದ್ಧ ಎಂದು ತಿಳಿಸಿದೆ. ಸರ್ಕಾರ ಈ ಕೂಡಲೇ ಭ್ರಷ್ಟ ಸಚಿವನ ರಾಜೀನಾಮೆ ಪಡೆದು, ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದೆ.
eesanje/url_46_125_5.txt ADDED
@@ -0,0 +1,7 @@
 
 
 
 
 
 
 
 
1
+ ಎಸ್‌‍ಐಟಿ ಅಧಿಕಾರಿಗಳ ಪ್ರಶ್ನೆಗಳಿಗೆ ಪ್ರಜ್ವಲ್‌ ರೇವಣ್ಣ ಕಕ್ಕಾಬಿಕ್ಕಿ
2
+ ಬೆಂಗಳೂರು,ಜೂ.1-ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌‍ಐಟಿ ವಶದಲ್ಲಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರು ಎಸ್‌‍ಐಟಿ ಅಧಿಕಾರಿಗಳು ಕೇಳುತ್ತಿರುವ ಪ್ರಶ್ನೆಗಳಿಗೆ ಬಸವಳಿದು ಹೋಗಿದ್ದಾರೆ.ಹೊಳೆನರಸೀಪುರ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌‍ಐಟಿ ಅಧಿಕಾರಿಗಳು ಕೇಳುತ್ತಿರುವ ಪ್ರಶ್ನೆಗಳಿಗೆ ಪ್ರಜ್ವಲ್‌ ರೇವಣ್ಣ ಅವರು ಸುಸ್ತಾಗಿದ್ದಾರೆ.
3
+ ನಿಮ ತಾಯಿ ಇಲ್ಲದ ಸಂದರ್ಭದಲ್ಲಿ ಹೊಳೆನರಸೀಪುರದಲ್ಲಿರುವ ಮನೆಗೆ ಏಕೆ ಹೋಗುತ್ತಿದ್ದಿರಿ? ನಿಮ ಮನೆಯಲ್ಲಿ ಕೆಲಸಗಾರರು ಎಷ್ಟು ಮಂದಿ ಇದ್ದಾರೆ? ಅವರನ್ನು ಯಾವ ರೀತಿ ನೋಡುತ್ತಿದ್ದಿರಿ? ಎಂದು ಹಲವು ಪ್ರಶ್ನೆಗಳನ್ನು ಪ್ರಜ್ವಲ್‌ ರೇವಣ್ಣ ಅವರಿಗೆ ಕೇಳಿದ್ದಾರೆ.
4
+ ಅಲ್ಲದೆ, ಕೆಲವು ಫೋಟೊಗಳನ್ನು ತೋರಿಸಿ ಇವರು ನಿಮಗೆ ಗೊತ್ತಾ? ಎಂದು ಕೇಳಿದ್ದಾರೆ. ಅದಕ್ಕೆ ಪ್ರಜ್ವಲ್‌ ರೇವಣ್ಣ ಅವರು ಗೊತ್ತಿಲ್ಲ ಹಾಗೂ ನೆನಪಿಲ್ಲ ಎಂದು ಹೇಳಿದ್ದಾರೆ.ಹೊಳೆನರಸೀಪುರ, ಹಾಸನ ತೋಟದ ಮನೆಗಳಲ್ಲಿ ತುಂಬಾ ಜನ ಕೆಲಸದವರಿದ್ದಾರೆ. ಯಾರೆಂಬುದು ಗೊತ್ತಿಲ್ಲ. ಯಾರು ಎಂಬುದು ನೆನಪಿಲ್ಲ ಎಂದು ಉತ್ತರ ನೀಡಿದ್ದಾರೆಂದು ತಿಳಿದುಬಂದಿದೆ.
5
+ ನಾನು ಯಾರ ಮೇಲೂ ಲೈಂಗಿದ ದೌರ್ಜನ್ಯವೆಸಗಿಲ್ಲ. ಪೆನ್‌ಡ್ರೈವ್‌ ಪ್ರಕರಣಕ್ಕೂ, ನನಗೂ ಯಾವುದೇ ಸಂಬಂಧವಿಲ್ಲ, ವಿನಾಕಾರಣ ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗುತ್ತಿದೆ ಎಂದಿದ್ದಾರೆ.ಅಲ್ಲದೆ, ಇನ್ನೂ ಹಲವು ಪ್ರಶ್ನೆಗಳಿಗೆ ವಕೀಲರನ್ನು ಕೇಳಿ ಉತ್ತರಿಸುವುದಾಗಿ ತಿಳಿಸಿದ್ದಾರೆ. ಏನೇನು ಪ್ರಶ್ನೆಗಳನ್ನು ಕೇಳುತ್ತೀರಿ ಅದಕ್ಕೆಲ್ಲಾ ಉತ್ತರಿಸಲು ಆಗುವುದಿಲ್ಲ ಎಂದು ಕೂಡ ಹೇಳಿದ್ದಾರೆಂದು ತಿಳಿದುಬಂದಿದೆ.
6
+ ರಾತ್ರಿ ಪ್ರಜ್ವಲ್‌ ಅವರನ್ನು ವಿಚಾರಣೆ ನಡೆಸಲಾಗಿದೆ. 11.30 ರ ತನಕ ಎಚ್ಚರವಾಗಿದ್ದ ಅವರು ನಂತರ ನಿದ್ರೆಗೆ ಜಾರಿದರು. ಬೆಳಿಗ್ಗೆ ಮತ್ತೆ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು. ನಾಳೆ ಅಥವಾ ನಾಡಿದ್ದು ಹೊಳೆನರಸೀಪುರಕ್ಕೆ ಸ್ಥಳ ಮಹಜರಿಗಾಗಿ ಕರೆದೊಯ್ಯುವ ಸಾಧ್ಯತೆ ಇದೆ.
7
+ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ ಅವರು ಭಾರತಕ್ಕೆ ಆಗಮಿಸುತ್ತಿದ್ದಂತೆ ಬಂಧಿಸಿದ್ದ ಎಸ್‌‍ಐಟಿ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಧೀಶರು ಆರು ದಿನಗಳ ಕಾಲ ಎಸ್‌‍ಐಟಿ ವಶಕ್ಕೆ ನೀಡಿದ್ದರು.ಪ್ರಜ್ವಲ್‌ ರೇವಣ್ಣ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ಹಾಗೂ ಸಿಐಡಿ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.
eesanje/url_46_125_6.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬಿಜೆಪಿ ವಿರುದ್ಧ ಅಪಪ್ರಚಾರ ಜಾಹೀರಾತು ಆರೋಪ ಪ್ರಕರಣ : ಸಿಎಂ, ಡಿಸಿಎಂಗೆ ಜಾಮೀನು
2
+ ಬೆಂಗಳೂರು,ಜೂ.1– ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಜಾಹೀರಾತು ನೀಡಿ ಅಪಪ್ರಚಾರ ಮಾಡಿದೆ ಎಂಬ ಆರೋಪ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ನೀಡಿದೆ.
3
+ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ನ್ಯಾಯಾಲಯದ ಎದುರು ವಿಚಾರಣೆಗೆ ಹಾಜರಾಗಿ ಜಾಮೀನು ಕೋರಿ ಸಲ್ಲಿಸಿದ ಮನವಿ ಪುರಸ್ಕರಿಸಿದ ನ್ಯಾಯಾಧೀಶರಾದ ಕೆ.ಶಿವಕುಮಾರ್‌ರವರು ಜಾಮೀನು ಮಂಜೂರು ಮಾಡಿದರು.
4
+ ರಾಹುಲ್‌ ಗೈರು :ಪ್ರಕರಣದಲ್ಲಿ ಮತ್ತೊಬ್ಬ ಪ್ರತಿವಾದಿಯಾದ ರಾಹುಲ್‌ಗಾಂಧಿಯವರ ಹಾಜರಾತಿಗೆ ವಿನಾಯಿತಿ ನೀಡಬೇಕೆಂದು ಅವರ ಪರ ವಕೀಲರು ಮನವಿ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಪರ ವಕೀಲರಾದ ವಿನೋದ್‌ಕುಮಾರ್‌ರವರು ಚುನಾವಣಾ ನೆಪ ಹೇಳಿ ಗೈರುಹಾಜರಾಗುವಂತಿಲ್ಲ, ಇಂದು ಹಾಜರಾಗುವುದಾಗಿ ಹೇಳಿದ್ದರು, ಹಾಜರಾಗುವುದು ಅವರ ಕರ್ತವ್ಯ, ಮೊದಲ ಬಾರಿ ಗೈರಾದಾಗ ವಿನಾಯಿತಿ ನೀಡಿದಿರಿ, ಈಗ ಮೂರನೇ ಬಾರಿ ಗೈರಾಗಿದ್ದಾರೆ, ಯಾವುದೇ ಕಾರಣಕ್ಕೂ ವಿನಾಯಿತಿ ನೀಡಬಾರದು, ವಿಚಾರಣೆಗೆ ಹಾಜರಾಗುವಂತೆ ವಾರಂಟ್‌ ಹೊರಡಿಸಬೇಕೆಂದು ಮನವಿ ಮಾಡಿದರು.
5
+ ಇದು ದುರುದ್ದೇಶಪೂರ್ವಕ ಗೈರುಹಾಜರಿಯಲ್ಲ. ಚುನಾವಣೆ ನಡೆಯುತ್ತಿದೆ. ಇಂಡಿಯಾ ಒಕ್ಕೂಟದ ಸಭೆ ಇದೆ. ಹಾಗಾಗಿ ಹಾಜರಾಗಲು ಸಾಧ್ಯವಾಗಿಲ್ಲ. ಹಾಜರಾತಿಗೆ ವಿನಾಯಿತಿ ನೀಡಬೇಕೆಂದು ರಾಹುಲ್‌ ಪರ ವಕೀಲರಾದ ಎಸ್‌‍.ಎ.ಅಹಮದ್‌ ಮನವಿ ಮಾಡಿದರು.ಜೂ.7 ರಂದು ರಾಹುಲ್‌ಗಾಂಧಿಯವರು ವಿಚಾರಣೆಗೆ ಹಾಜರಾಗಲಿದ್ದಾರೆ. ಅವಕಾಶ ನೀಡಬೇಕೆಂದು ಮನವಿ ಮಾಡಿದರು. ರಾಹುಲ್‌ಗಾಂಧಿಯವರ ಹಾಜರಾತಿಗೆ ವಿನಾಯಿತಿ ನೀಡಬೇಕೋ ಅಥವಾ ವಾರಂಟ್‌ ಹೊರಡಿಸಬೇಕೋ ಎಂಬ ಆದೇಶವನ್ನು ನ್ಯಾಯಾಧೀಶರು ಮಧ್ಯಾಹ್ನಕ್ಕೆ ಕಾಯ್ದಿರಿಸಿದರು.
6
+ ಪ್ರಕರಣದ ಹಿನ್ನೆಲೆ :ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧದ ಭ್ರಷ್ಟಾಚಾರವನ್ನು ಪ್ರಧಾನ ಅಸ್ತ್ರವನ್ನಾಗಿಸಿದ್ದ ಕಾಂಗ್ರೆಸ್‌‍ 2023 ರ ಮೇ 5 ರಂದು ಭ್ರಷ್ಟಾಚಾರ ದರ ಪಟ್ಟಿ ಎಂಬ ಹೆಸರಿನಡಿ ವಿವಿಧ ಹುದ್ದೆಗಳಿಗೆ ಬಿಜೆಪಿ ಲಂಚ ನಿಗದಿಪಡಿಸಿದೆ ಎಂದು ಆರೋಪಿಸಿ ಎಲ್ಲಾ ಪ್ರಮುಖ ಪತ್ರಿಕೆಗಳ ಮುಖಪುಟಗಳಲ್ಲಿ ಜಾಹೀರಾತು ಪ್ರಕಟಿಸಿತ್ತು.
7
+ ಅಲ್ಲದೆ, ಕೋವಿಡ್‌ ಸಾಮಗ್ರಿಗಳ ಪೂರೈಕೆ, ಲೋಕೋಪಯೋಗಿ ಗುತ್ತಿಗೆಗಳು, ಮಠಗಳ ಅನುದಾನ, ಶಾಲೆಗಳಿಗೆ ಮೊಟ್ಟೆ ಪೂರೈಕೆ, ರಸ್ತೆ ಕಾಮಗಾರಿಗಳಲ್ಲಿ ಶೇ. 75-80 ಕಮಿಷನ್‌ ಪಡೆಯಲಾಗುತ್ತಿದೆ ಎಂದು ಕಾಂಗ್ರೆಸ್‌‍ ಆರೋಪಿಸಿತ್ತು. ಪತ್ರಿಕೆಗಳಿಗೆ ನೀಡಿದ ಜಾಹೀರಾತಿನ ಕೊನೆಯಲ್ಲಿ ಶೇ. 40 ಪರ್ಸೆಂಟ್‌ ಕಮಿಷನ್‌ನ (ಬಿಜೆಪಿ ಸರ್ಕಾರವು 1.5 ಲಕ್ಷ ಕೋಟಿ ರೂ.ಗಳನ್ನು ಕಳೆದ ನಾಲ್ಕು ವರ್ಷಗಳಲ್ಲಿ ಲೂಟಿ ಮಾಡಿದೆ) ಎಂದು ಕಾಂಗ್ರೆಸ್‌‍ ಆರೋಪ ಮಾಡಿತ್ತು.
8
+ ಡಬ್ಬಲ್‌ ಎಂಜಿನ್‌ ಸರ್ಕಾರಕ್ಕೆ ಬದಲಾಗಿ ಟ್ರಬಲ್‌ ಎಂಜಿನ್‌ ಸರ್ಕಾರ ಎಂದು ಹೇಳುವ ಮೂಲಕ ಬಿಜೆಪಿಯ ವರ್ಚಸ್ಸಿಗೆ ಹಾನಿ ಮಾಡಿ ಕಳೆದ ಚುನಾವಣೆಯಲ್ಲಿ ಗೆಲುವಿಗೆ ಅಡ್ಡಿಪಡಿಸಲಾಗಿದೆ. ಕೊನೆಯಲ್ಲಿ ಕಾಂಗ್ರೆಸ್‌‍ಗೆ ಮತ ನೀಡಿ ಎಂದು ಕೇಳಿದ್ದಾರೆ. ಸುಳ್ಳು ಜಾಹೀರಾತು ನೀಡಲು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌, ರಾಹುಲ್‌ಗಾಂಧಿಯವರು ನೇರ ಕಾರಣರಾಗಿದ್ದಾರೆ ಎಂದು ಬಿಜೆಪಿ ದೂರು ನೀಡಿತ್ತು.
9
+ ರಾಹುಲ್‌ಗಾಂಧಿಯವರು ತಮ ಟ್ವಿಟರ್‌ ಖಾತೆಯಲ್ಲಿ ಈ ಜಾಹೀರಾತನ್ನು ಹಂಚಿಕೊಂಡು ಬಿಜೆಪಿಗೆ ಮಾನಹರಣ ಮಾಡುವ ಪ್ರಯತ್ನ ಮಾಡಿದ್ದಾರೆ, ಹೀಗಾಗಿ ಕಾಂಗ್ರೆಸ್‌‍ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಮತ್ತು ರಾಹುಲ್‌ಗಾಂಧಿ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿಯು ಖಾಸಗಿ ದೂರು ದಾಖಲಿಸಿತ್ತು.
10
+ ಇದನ್ನು ಪರಿಗಣಿಸಿದ ವಿಶೇಷ ನ್ಯಾಯಾಲಯ ಫೆ.23 ರಂದು ಮಾನಹಾನಿ ದಾವೆ ದಾಖಲಿಸಲು ಆದೇಶಿಸಿ ಆರೋಪಿಗಳಿಗೆ ಸಮನ್‌್ಸ ಜಾರಿ ಮಾಡಿತ್ತು. ಸಮನ್‌್ಸ ಅನ್ನು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ರವರಿಗೆ ತಲುಪಿಸದ ಹಿನ್ನೆಲೆಯಲ್ಲಿ ಮರು ಜಾರಿ ಮಾಡಲಾಗಿತ್ತು.
eesanje/url_46_125_7.txt ADDED
@@ -0,0 +1,7 @@
 
 
 
 
 
 
 
 
1
+ ಸೋಮವಾರ ಜೆಡಿಎಸ್‌‍ ಶಾಸಕಾಂಗ ಸಭೆ
2
+ ಬೆಂಗಳೂರು, ಜೂ.1-ವಿಧಾನ ಪರಿಷತ್‌ ಚುನಾವಣೆಗೆ ಸಂಬಂಧಿಸಿದಂತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲು ಸೋಮವಾರ ಜೆಡಿಎಸ್‌‍ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ವಿಧಾನಸೌಧದಲ್ಲಿರುವ ಪಕ್ಷದ ಕಚೇರಿಯಲ್ಲಿ ಸೋಮವಾರ ಬೆಳಿಗ್ಗೆ 10.30ಕ್ಕೆ ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಈ ಸಭೆ ಜರುಗಲಿದೆ.
3
+ ರಾಜ್ಯ ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್‌ನ 11 ಸದಸ್ಯ ಸ್ಥಾನಗಳ ಆಯ್ಕೆಗಾಗಿ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೋಮವಾರ ಕಡೆಯ ದಿನ. ಈ ಚುನಾವಣೆಯಲ್ಲಿ ಜೆಡಿಎಸ್‌‍ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಹಾಗೂ ಚುನಾವಣಾ ತಂತ್ರಗಾರಿಕೆ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ.
4
+ ಜೆಡಿಎಸ್‌‍ ಅಭ್ಯರ್ಥಿಯಾಗಿ ಯಶವಂತಪುರ ಕ್ಷೇತ್ರದ ಪಕ್ಷದ ಮುಖಂಡ ಟಿ.ಎನ್‌.ಜವರಾಯಿಗೌಡ ಅವರು ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ. ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ನಾಯಕರು ಹಾಗೂ ಶಾಸಕರು ಉಪಸ್ಥಿತರಿರಲಿದ್ದಾರೆ. ಅಭ್ಯರ್ಥಿಯ ನಾಮಪತ್ರಕ್ಕೆ ಸೂಚಕರಾಗಿ ಶಾಸಕರು ಸಹಿ ಹಾಕಬೇಕಾಗಿರುವುದರಿಂದ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
5
+ ಈ ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾಗದೇ ಮತದಾನ ನಡೆಯುವುದು ಖಾತರಿಯಾದರೆ, ಕೈಗೊಳ್ಳಬೇಕಾದ ಚುನಾವಣಾ ತಂತ್ರಗಾರಿಕೆ, ಮೇಲನೆ ಹಾಗೂ ಲೋಕಸಭಾ ಚುನಾವಣೆ ಬಗ್ಗೆಯೂ ಸಮಾಲೋಚನೆ ನಡೆಸಲಾಗುತ್ತದೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ.
6
+ ಒಂದು ವೇಳೆ ಮತದಾನ ನಡೆಯುವುದು ಅನಿವಾರ್ಯವಾದರೆ, ಮಿತ್ರ ಪಕ್ಷ ಬಿಜೆಪಿ ಜತೆಗೂಡಿ ಚುನಾವಣೆ ಎದುರಿಸುವ ಬಗ್ಗೆ ಕಾರ್ಯತಂತ್ರ ರೂಪಿಸಲಾಗುತ್ತದೆ. ಮೊದಲ ಪ್ರಾಶಸ್ತ್ಯದ ಮತವನ್ನು ಪಕ್ಷದ ಅಭ್ಯರ್ಥಿಗೆ ಚಲಾಯಿಸುವುದು ಎರಡನೇ ಪ್ರಾಶಸ್ತ್ಯದ ಮತವನ್ನು ಬಿಜೆಪಿ ಅಭ್ಯರ್ಥಿಗಳಿಗೆ ನೀಡುವುದು, ಹಾಗೆಯೇ ಬಿಜೆಪಿಯ ಹೆಚ್ಚುವರಿ ಮತ ಹಾಗೂ ಎರಡನೇ ಪ್ರಾಶಸ್ತ್ಯದ ಮತವನ್ನು ಅವರಿಂದ ಪಡೆಯುವ ಬಗ್ಗೆಯೂ ಸಮಾಲೋಚನೆ ನಡೆಸಲಾಗುತ್ತದೆ ಎಂದು ಮೂಲಗಳು ಹೇಳಿವೆ.
7
+ ಅಲ್ಲದೆ, ಪ್ರಸಕ್ತ ರಾಜಕೀಯ ವಿದ್ಯಮಾನಗಳು, ಮುಂಬರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ಧತೆ, ಪಕ್ಷ ಸಂಘಟನೆ, ಪಕ್ಷದ ವತಿಯಿಂದ ಕೈಗೊಳ್ಳುವ ಹೋರಾಟ ಮೊದಲಾದ ವಿಚಾರಗಳ ಬಗ್ಗೆ ಗಂಭೀರ ಚರ್ಚೆ ನಡೆಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
eesanje/url_46_125_8.txt ADDED
@@ -0,0 +1,7 @@
 
 
 
 
 
 
 
 
1
+ ಪದವೀಧರ, ಶಿಕ್ಷಕರ ಕ್ಷೇತ್ರಗಳ ಪರಿಷತ್‌ ಚುನಾವಣೆಗೆ ಸೋಮವಾರ ಮತದಾನ
2
+ ಬೆಂಗಳೂರು, ಜೂ.1-ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಹಾಗೂ ಪಕ್ಷೇತರ ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿರುವ ವಿಧಾನ ಪರಿಷತ್ತಿನ ಮೂರು ಪದವೀಧರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸೋಮವಾರ ಮತದಾನ ನಡೆಯಲಿದೆ.
3
+ ಕರ್ನಾಟಕ ಈಶಾನ್ಯ ಪದವೀಧರ, ಬೆಂಗಳೂರು ಪದವೀಧರ, ಕರ್ನಾಟಕ ನೈರುತ್ಯ ಪದವೀಧರ ಹಾಗೂ ಕರ್ನಾಟಕ ಆಗ್ನೇಯ ಶಿಕ್ಷಕರ, ನೈರುತ್ಯ ಶಿಕ್ಷಕರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳಲ್ಲಿ ಸೋಮವಾರ ಬೆಳಿಗ್ಗೆ 8ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಇಂದು ಸಂಜೆ 4 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.
4
+ ಈ ಆರು ಕ್ಷೇತ್ರಗಳಲ್ಲಿ ಒಟ್ಟು 78 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಲೋಕಸಭಾ ಚುನಾವಣೆಯಂತೆ ಬಿಜೆಪಿ ಮತ್ತು ಜೆಡಿಎಸ್‌‍ ಪಕ್ಷಗಳು ಚುನಾವಣಾ ಪೂರ್ವ ಮೈತ್ರಿಯನ್ನು ವಿಧಾನ ಪರಿಷತ್‌ ಚುನಾವಣೆಯಲ್ಲೂ ಮಾಡಿಕೊಂಡಿವೆ. ಕಾಂಗ್ರೆಸ್‌‍ ಆರು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರೆ, ಬಿಜೆಪಿ ನಾಲ್ಕು ಹಾಗೂ ಜೆಡಿಎಸ್‌‍ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಿವೆ.
5
+ ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 121860, ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 156623, ನೈರುತ್ಯ ಪದವೀಧರ ಕ್ಷೇತ್ರದಲ್ಲಿ 85090 ಪದವೀಧರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ. ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 25309, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 23402, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 21549 ಶಿಕ್ಷಕರು ಮತದಾರರಾಗಿದ್ದಾರೆ.
6
+ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 47, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 79, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 44 ಸೇರಿದಂತೆ ಒಟ್ಟು 170 ಮತಗಟ್ಟೆಗಳನ್ನು ತೆರೆಯಲಾಗುತ್ತದೆ. ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 159, ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 194, ನೈರುತ್ಯ ಪದವೀಧರ ಕ್ಷೇತ್ರದಲ್ಲಿ 108 ಸೇರಿದಂತೆ 461 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
7
+ ನೋಂದಾಯಿತ ಪದವೀಧರ ಹಾಗೂ ಶಿಕ್ಷಕ ಮತದಾರರು ಮತದಾರರ ಗುರುತಿನ ಚೀಟಿ,ಆಧಾರ್‌ ಕಾರ್ಡ್‌, ಪಾನ್‌ ಕಾರ್ಡ್‌ ಸೇರಿದಂತೆ ನಿಗದಿಪಡಿಸಿರುವ ಗುರುತಿನ ಚೀಟಿಗಳನ್ನು ಹಾಜರು ಪಡಿಸಿ ಮತದಾನ ಮಾಡಬಹುದಾಗಿದೆ. ಜೂನ್‌ 6ರಂದು ಮತ ಎಣಿಕೆ ಆಯಾ ಕ್ಷೇತ್ರಗಳಲ್ಲಿ ನಡೆಯಲಿದ್ದು, ಜೂನ್‌ 12ರ ವೇಳೆಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
eesanje/url_46_125_9.txt ADDED
@@ -0,0 +1,5 @@
 
 
 
 
 
 
1
+ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಮೇಲೆ ಸರ್ಕಾರದ ಖಜಾನೆ ಖಾಲಿಯಾಗಿದೆ : ಗೋವಿಂದ ಕಾರಜೋಳ
2
+ ಚಿತ್ರದುರ್ಗ,ಜೂ.1-ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸರ್ಕಾರದ ಖಜಾನೆ ನಿರಂತರವಾಗಿ ಲೂಟಿಯಾಗುತ್ತಿದೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.
3
+ ಜೂ.3ರಂದು ನಡೆಯಲಿರುವ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್‌ ಚುನಾವಣೆಯ ಹಿನ್ನಲೆಯಲ್ಲಿ ಚಿತ್ರದುರ್ಗ ನಗರದ ಸಂತ ಜೋಸೆಫ್‌ ಕಾನ್ವೆಂಟ್‌ನಲ್ಲಿ ಮತಯಾಚನೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸರ್ಕಾರದ ಖಜಾನೆ ನಿರಂತರವಾಗಿ ಲೂಟಿಯಾಗುತ್ತಿದೆ. ವಾಲೀಕಿ ನಿಗಮ ಹಗರಣ ಸರ್ಕಾರದ ಖಜಾನೆಯ ಹಗಲು ದರೋಡೆಯಾಗಿದೆ ಎಂದು ದೂರಿದರು.
4
+ ಇದು ಭ್ರಷ್ಠಾಚಾರ ಅಲ್ಲ ಹಗಲು ದರೋಡೆಯಾಗಿದೆ. ಮಾರ್ಚಿನಲ್ಲಿ 180 ಕೋಟಿ ಹಣವನ್ನು ಬೇರೆಬೇರೆ ಆಕೌಂಟ್‌‍ ಓಪನ್‌ ಮಾಡಿ ವರ್ಗಾವಣೆ ಮಾಡಿದ್ದಾರೆ. ಚುನಾವಣೆಯ ಹಿನ್ನಲೆಯಲ್ಲಿ ನೆರೆರಾಜ್ಯವಾದ ಹೈದರಾಬಾದ್‌ ಮತ್ತು ತೆಲಂಗಾಣಕ್ಕೆ ಹಣ ಹೋಗಿದೆ.ಮುಖ್ಯಮಂತ್ರಿಗಳು ಇದುವರೆವಿಗೂ ಯಾವುದೇ ಹೇಳಿಕೆಯನ್ನು ನೀಡಿಲ್ಲ, ಹಣಕಾಸು ಇಲಾಖೆಯನ್ನು ನೋಡುತ್ತಿರುವವರ ಮುಖ್ಯಮಂತ್ರಿಗಳಾಗಿದ್ದಾರೆ.
5
+ ಈ ವೇಳೆಗೆ ಸಚಿವ ನಾಗೇಂದ್ರರವರ ರಾಜೀನಾಮೆಯನ್ನು ಪಡೆಯಬೇಕಿತ್ತು. ಈ ಪ್ರಕರಣವನ್ನು ನಿಸ್ಪಕ್ಷಪತವಾದ ತನಿಖೆಗೆ ಆದೇಶವನ್ನು ಮಾಡಬೇಕಿತ್ತು, ಅದನ್ನು ಮಾಡಿಲ್ಲ ಬಂಡತನದಿಂದ ಅವರನ್ನು ಉಳಿಸಿಕೊಳ್ಳುವ ಪ್ರಯತ್ನವನ್ನುಮುಖ್ಯಮಂತ್ರಿಗಳು ಮತ್ತು ಸಚಿವ ಸಂಪುಟದ ಸದಸ್ಯರು ಮಾಡುತ್ತಿದ್ದಾರೆ. ಇದು ಖಂಡನೀಯವಾದದು ಎಂದಿದ್ದಾರೆ.
eesanje/url_46_126_1.txt ADDED
@@ -0,0 +1,4 @@
 
 
 
 
 
1
+ ಕ್ಯಾಂಟರ್‌ ಹರಿದು ಟೋಲ್‌ ಸಿಬ್ಬಂದಿ ಸಾವು
2
+ ನೆಲಮಂಗಲ,ಜೂ.1-ಹಿಟ್‌ ಅಂಡ್‌ ರನ್‌ಗೆ ಟೋಲ್‌ ಕಾರ್ಮಿಕ ಬಲಿಯಾಗಿರುವ ಘಟನೆ ಅರಿಶಿನಕುಂಟೆ ಟೋಲ್‌ ಪ್ಲಾಸಾ ಬಳಿ ಇಂದು ಬೆಳಿಗ್ಗೆ ನಡೆದಿದೆ. ನಾಗರಾಜು (25) ಮೃತಪಟ್ಟ ಸಿಬ್ಬಂದಿ.
3
+ ಈತ ನವಯುಗ ಟೋಲ್‌ನಲ್ಲಿ ಆಪರೇಟರ್‌ ಆಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದು, ಇಂದು ಬೆಳಿಗ್ಗೆ ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕ್ಯಾಂಟರ್‌ ವಾಹನ ಟೋಲ್‌ನಲ್ಲಿ ಮುಂದೆ ಚಲಿಸುತ್ತಿದ್ದ ಎರಡು ವಾಹನಗಳ ಹಿಂದೆಯೇ ತೆರಳುತ್ತಿದ್ದು, ಈ ವೇಳೆ ಕರ್ತವ್ಯದಲ್ಲಿದ್ದ ನಾಗರಾಜು, ಹಿಂದೆ ಯಾವುದೇ ವಾಹನಗಳು ಇಲ್ಲವೆಂದು ರಸ್ತೆಗೆ ಇಳಿದಾಗ ಕ್ಯಾಂಟರ್‌ ವಾಹನ ಕಾಲಿನ ಮೇಲೆ ಹರಿದಿದೆ ಎನ್ನಲಾಗಿದೆ.
4
+ ಗಂಭೀರವಾಗಿ ಗಾಯಗೊಂಡಿದ್ದ ಸಿಬ್ಬಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.ಸುದ್ದಿ ತಿಳಿಯುತ್ತಿದ್ದ ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಚಾಲಕನ ಪತ್ತೆಗಾಗಿ ಬಲೆಬೀಸಿದ್ದಾರೆ.
eesanje/url_46_126_10.txt ADDED
@@ -0,0 +1,6 @@
 
 
 
 
 
 
 
1
+ ಜೂ.2ರಿಂದ ರಾಜ್ಯದಲ್ಲಿ ವ್ಯಾಪಕ ಮುಂಗಾರು ಮಳೆ ಸಾಧ್ಯತೆ
2
+ ಬೆಂಗಳೂರು, ಮೇ 31-ಪ್ರಸಕ್ತ ಸಾಲಿನ ನೈರುತ್ಯ ಮುಂಗಾರು ಜೂನ್‌ 2ರಂದು ರಾಜ್ಯಕ್ಕೆ ಆಗಮಿಸಲಿದ್ದು, ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆಗಳಿವೆ.ಮುಂಗಾರು ನಿನ್ನೆ ಕೇರಳ ಪ್ರವೇಶ ಮಾಡಿರುವುದನ್ನು ಭಾರತೀಯ ಹವಾಮಾನ ಇಲಾಖೆ ದೃಢಪಡಿಸಿದೆ. ಎರಡು ದಿನ ಮುಂಚೆಯೇ ಕೇರಳ ಪ್ರವೇಶಿಸಿರುವುದಲ್ಲದೆ, ಈಶಾನ್ಯ ರಾಜ್ಯಗಳಲ್ಲೂ ಏಕಕಾಲಕ್ಕೆ ಮುಂಗಾರು ಆರಂಭಗೊಂಡಿದೆ. ಹೀಗಾಗಿ ಇನ್ನೆರಡು ದಿನಗಳಲ್ಲಿ ಮುಂಗಾರು ಮಳೆ ರಾಜ್ಯ ಪ್ರವೇಶ ಮಾಡಲಿದೆ.
3
+ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೊಂದು ಸುತ್ತು ಮಳೆ ಆರಂಭಗೊಳ್ಳಲಿದೆ. ಮುಂಗಾರು ದುರ್ಬಲವಾಗಿರುವುದರಿಂದ ಭಾರೀ ಮಳೆ ಸಾಧ್ಯತೆ ಕಡಿಮೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ನಾಳೆಯಿಂದ ದಕ್ಷಿಣ ಕರ್ನಾಟಕದ ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ.
4
+ ಭಾನುವಾರದಿಂದ ಮುಂಗಾರು ಆರಂಭಗೊಳ್ಳುವುದರಿಂದ ಉತ್ತರ ಕರ್ನಾಟಕಕ್ಕೂ ಮಳೆ ವ್ಯಾಪಿಸಲಿದೆ. ಸಂಜೆ ಹಾಗೂ ರಾತ್ರಿ ವೇಳೆ ಮಿಂಚು, ಗುಡುಗು ಹಾಗೂ ಬಲವಾದ ಗಾಳಿ ಸಹಿತ ರಾಜ್ಯದೆಲ್ಲೆಡೆ ವ್ಯಾಪಕ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ತಜ್ಞರು ಹೇಳಿದ್ದಾರೆ.
5
+ ಮೇ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಪೂರ್ವ ಮುಂಗಾರಿನ ಮಾರ್ಚ್‌ ಮತ್ತು ಏಪ್ರಿಲ್‌ ಮಳೆ ಕೊರತೆಯನ್ನು ನೀಗಿಸಿದಂತಾಗಿದೆ. ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಮೇ ಒಂದರಿಂದ 30ರ ವರೆಗೆ ವಾಡಿಕೆ ಮಳೆ ಪ್ರಮಾಣ 70 ಮಿ.ಮೀ. ಆಗಿದೆ. ಈ ಅವಧಿಯಲ್ಲಿ 129 ಮಿ.ಮೀ. ಮಳೆಯಾಗಿದ್ದು, ವಾಡಿಕೆಗಿಂತ ಶೇ.83ರಷ್ಟು ಅಧಿಕವಾಗಿದೆ. ಮಾರ್ಚ್‌ನಿಂದ ಮೇ ವರೆಗೆ 112 ಮಿ.ಮೀ. ವಾಡಿಕೆ ಮಳೆ ಪ್ರಮಾಣವಾಗಿದ್ದು, 151 ಮಿ.ಮೀ.ನಷ್ಟು ಮಳೆಯಾಗಿದೆ.
6
+ ಈಗಾಗಲೇ ಮುಂಗಾರು ಆರಂಭವಾಗಿರುವುದರಿಂದ ಒಂದು ವಾರ ಕಾಲ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಮಳೆ ವ್ಯಾಪಕ ಪ್ರಮಾಣದಲ್ಲಿ ಆಗಲಿದೆ. ಆ ನಂತರ ಬಿಡುವು ಕೊಡಲಿದೆ. ಈ ಬಾರಿಯ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗುವ ಮುನ್ಸೂಚನೆಗಳಿದ್ದು, ಉತ್ತಮ ಮಳೆಯಾಗುವ ಆಶಾಭಾವನೆ ಇದೆ. ಹೀಗಾಗಿ ರಾಜ್ಯದಲ್ಲಿ ಮುಂಗಾರು ಹಂಗಾಮಿನ ಬಿತ್ತನೆಗಾಗಿ ಭೂಮಿ ಹದ ಮಾಡುವ ಕಾರ್ಯದಲ್ಲಿ ರೈತರು ನಿರತರಾಗಿದ್ದಾರೆ.
eesanje/url_46_126_11.txt ADDED
@@ -0,0 +1,9 @@
 
 
 
 
 
 
 
 
 
 
1
+ ಜೂನ್‌ 2, 4 ಮತ್ತು 6 ರಂದು ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧ
2
+ ಬೆಂಗಳೂರು, ಮೇ 31-ಎಂಎಲ್ಸಿ ಚುನಾವಣೆ ಮತ್ತು ಲೋಕಸಭೆ ಮತ್ತು ವಿಧಾನ ಪರಿಷತ್‌ ಚುನಾವಣೆಗಳ ಮತ ಎಣಿಕೆಯ ದೃಷ್ಟಿಯಿಂದ ರಾಜ್ಯಾದ್ಯಂತ ಐದು ದಿನಗಳ ಕಾಲ ಮದ್ಯ ಮಾರಾಟದ ಮೇಲೆ ಪರಿಣಾಮ ಬೀರಲಿದ್ದು, ಜೂನ್‌ 2, 4 ಮತ್ತು 6 ರಂದು ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಜೂನ್‌ 1 ಮತ್ತು ಜೂನ್‌ 3 ರಂದು ಭಾಗಶಃ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆ.
3
+ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಅಂಗವಾಗಿ ಏಪ್ರಿಲ್‌ 24 ರಿಂದ 26 ರವರೆಗೆ ಮದ್ಯ ಮಾರಾಟ ನಿಷೇಧದಿಂದ ಈಗಾಗಲೇ ತೀವ್ರ ಹೊಡೆತಕ್ಕೆ ತುತ್ತಾಗಿರುವ ಆಹಾರ ಮತ್ತು ಪಾನೀಯ (ಎ್‌‍ ಬಿ) ಉದ್ಯಮದಲ್ಲಿರುವವರಿಗೆ ಇದು ಮತ್ತೊಂದು ದೊಡ್ಡ ಹೊಡೆತ ಎಂದಿದ್ದಾರೆ.
4
+ ಒಟ್ಟು 5 ದಿನಗಳ ಕಾಲ ಮದ್ಯ ನಿಷೇಧ ಮಾಡಲಾಗಿದೆ. ಈ ಕುರಿತು ಆಯಾ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದಾರೆ. ಜೂನ್‌ 3 ರಂದು ವಿಧಾನ ಪರಿಷತ್‌ ಚುನಾವಣೆ ನಡೆಯಲಿದೆ. ಜೂನ್‌ 4 ರಂದು ಲೋಕಸಭಾ ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ. ಇನ್ನು ಜೂನ್‌ 6 ರಂದು ವಿಧಾನ ಪರಿಷತ್‌ ಚುನಾವಣೆ ಮತ ಎಣಿಕೆ ನಡೆಯಲಿದೆ. ಹೀಗಾಗಿ ಜೂನ್‌ 1 ರಿಂದ ಜೂನ್‌ 6ರ ವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಜೂನ್‌ 1 ರಿಂದ ಜೂನ್‌ 6ರ ವರೆಗೆ ಬಾರ್‌, ವೈನ್‌ ಶಾಪ್‌, ರೆಸ್ಟೋರೆಂಟ್‌, ಕ್ಲಬ್‌‍, ಹೊಟೆಲ್‌‍, ಅಂಗಡಿಗಳಲ್ಲಿ ಮದ್ಯ ಮಾರಾಟ, ಶೇಖರಣೆ ನಿಷೇಧಿಸಲಾಗಿದೆ.
5
+ ಜೂನ್‌ 03 ರಂದು ಪರಿಷತ್‌ ಚುನಾವಣೆಗೆ ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮತದಾನಕ್ಕೂ ಮುನ್ನ 48 ಗಂಟೆಗಳ ಕಾಲ ಅಂದರೆ ಜೂನ್‌ 1 ಮತ್ತು 2 ರಂದು ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಜೂನ್‌ 4 ಬಳಿಕ ಅಂದರೆ ಜೂನ್‌ 06 ರಂದು ವಿಧಾನ ಪರಿಷತ್‌ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜೂನ್‌ 6ರ ಸಂಜೆ 6 ಗಂಟೆವರೆಗೂ ಮದ್ಯ ಮಾರಾಟ ಬ್ಯಾನ್‌ ಆಗಲಿದೆ.
6
+ ಈ ಹಿನ್ನಲೆಯಲ್ಲಿ ನಿಗದಿತ ದಿನಗಳಲ್ಲಿ ಉತ್ಪಾದನೆ, ಮದ್ಯದ ಮಾರಾಟ, ವಿತರಣೆ, ಸಾಗಣೆ ಮತ್ತು ಸಂಗ್ರಹಣೆಗೆ ನಿಷೇಧ ಅನ್ವಯವಾಗಲಿದೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಜೂನ್‌ 1 ರಿಂದ 3 ಮತ್ತು ಜೂನ್‌ 6 ರವರೆಗೂ ನಿಷೇಧ ಅನ್ವಯ ಆಗಲಿದೆ. ನಿಷೇಧವು ಮದ್ಯದ ಅಂಗಡಿಗಳು, ವೈನ್‌ ಸ್ಟೋರ್‌ಗಳು, ಬಾರ್‌ಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಗ್ರಾಹಕರಿಗೆ ಮದ್ಯವನ್ನು ಪೂರೈಸುವ ಇತರ ಸ್ಥಳಗಳಿಗೆ ಇದು ಅನ್ವಯಿಸುತ್ತದೆ.
7
+ ಇನ್ನು, ಕರ್ನಾಟಕ ವಿಧಾನ ಪರಿಷತ್‌ ಚುನಾವಣೆ ಹಾಗೂ ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಬಹುತೇಕ ಜೂನ್‌ ಮೊದಲ ವಾರ ಮದ್ಯ ಮಾರಾಟ ನಿಷೇಧ ಇರಲಿದೆ. ಈ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಬಾರ್‌ ಹಾಗೂ ರೆಸ್ಟೋರೆಂಟ್‌ ಉದ್ಯಮಗಳ ಮಾಲೀಕರು, ಕಾನೂನು ಸಡಿಲಿಸುವಂತೆ ಆಗ್ರಹಿಸಿದ್ದಾರೆ.
8
+ ಮದ್ಯ ಮಾರಾಟ ನಿಷೇಧ ಮಾಡಿರುವುದರಿಂದ ಈ ಅವಧಿಯಲ್ಲಿ ಬಾರ್‌ ಹಾಗೂ ರೆಸ್ಟೋರೆಂಟ್‌ ಉದ್ಯಮಗಳಿಗೆ ಹ��ಡೆತ ಬೀಳಲಿದೆ. ಒಂದು ವಾರಕ್ಕೆ ಅಬಕಾರಿ ಸುಂಕವಾಗಿ ಸರ್ಕಾರಕ್ಕೆ 100 ಕೋಟಿ ರೂಪಾಯಿ ಅಧಿಕ ಮೊತ್ತ ನಷ್ಟವಾಗಲಿದೆ. ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ನಿರ್ದಿಷ್ಟ ವ್ಯಾಪ್ತಿಗೆ ಮಾತ್ರ ನಿಷೇಧ ಜಾರಿ ಮಾಡಲಿ, ಸಾರ್ವತ್ರಿಕವಾಗಿ ಆಲ್ಕೋಹಾಲ್‌ ನಿಷೇಧಿಸಿದರೆ ಉದ್ಯಮದ ಮೇಲೆ ವ್ಯತಿರಿಕ್ತವಾಗಿ ಪರಿಣಾಮ ಬೀರಲಿದೆ. ಹೀಗಾಗಿ ಒಂದು ವಾರದ ಡ್ರೈ ಡೇ ಆದೇಶ ವಾಪಾಸ್‌‍ ಪಡೆಯಲು ಹೋಟೆಲ್‌ ಸಂಘ ಮನವಿ ಮಾಡಿದೆ.
9
+ ಜೂನ್‌ 5 ರಂದು ಮದ್ಯ ಮಾರಾಟಕ್ಕೆ ಅವಕಾಶವಿದೆ. ಜೂನ್‌ 5 ರಂದು ಬೆಳಗ್ಗೆಯಿಂದ ನಿಗಽತ ಅವಧಿ ರಾತ್ರಿವರೆಗೆ ಮದ್ಯ ಮಾರಾಟ ನಡೆಯಲಿದೆ. ಜೂನ್‌ 6ರಂದು ವಿಧಾನ ಪರಿಷತ್‌ ಚುನಾವಣೆ ಮತ ಎಣಿಕೆ ನಡೆಯಲಿದೆ. ಹೀಗಾಗಿ ಜೂನ್‌ ರಂದು ಮತ್ತೆ ಮದ್ಯ ಮಾರಾಟಕ್ಕೆ ಬ್ರೀಕ್‌ ಬೀಳಲಿದೆ. ಜೂನ್‌ 6ರ ಮದ್ಯ ರಾತ್ರಿ 12 ಗಂಟೆ ತನಗ ನಿಷೇಧ ಮುಂದುವರಿಯಲಿದೆ.ಇತ್ತ ಎಣ್ಣೆಪ್ರಿಯರು ಈಗಾಗಲೇ ಮದ್ಯದ ಅಂಗಡಿಗಳಲ್ಲಿ ಮುಗಿ ಬೀಳುತ್ತಿದ್ದಾರೆ. ಮತ್ತೆ 5 ದಿನ ಮದ್ಯ ಮಾರಾಟಕ್ಕೆ ಬ್ರೇಕ್‌ ಬೀಳಲಿರುವ ಹಿನ್ನಲೆಯಲ್ಲಿ ಇದೀಗ ಎಣ್ಣೆ ಪ್ರಿಯರು ಮದ್ಯದ ಅಂಗಡಿಗಳಿಗೆ ಧಾವಿಸುತ್ತಿದ್ದಾರೆ.
eesanje/url_46_126_12.txt ADDED
@@ -0,0 +1,4 @@
 
 
 
 
 
1
+ ಎಚ್‌.ಡಿ.ರೇವಣ್ಣ ಜಾಮೀನು ರದ್ದು ಕೋರಿದ್ದ ಎಸ್‌‍ಐಟಿ ಅರ್ಜಿ ವಿಚಾರಣೆ ಮುಂದೂಡಿಕೆ
2
+ ಬೆಂಗಳೂರು, ಮೇ 31-ಮೈಸೂರು ಜಿಲ್ಲೆ ಕೆ.ಆರ್‌.ನಗರ ಮಹಿಳೆ ಅಪಹರಣ ಪ್ರಕರಣ ಸಂಬಂಧ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಜಾಮೀನು ರದ್ದು ಕೋರಿ ಎಸ್‌‍ಐಟಿ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಏಕಸದಸ್ಯ ಪೀಠ ಮುಂದೂಡಿದೆ.
3
+ ರೇವಣ್ಣ ಅವರಿಗೆ ಜಾಮೀನು ನೀಡಿರುವುದು ಸರಿಯಾದ ಕ್ರಮವಲ್ಲ. ಅವರ ಜಾಮೀನನ್ನು ರದ್ದುಪಡಿಸಬೇಕೆಂದು ಎಸ್‌‍ಐಟಿ ಪರ ಸರ್ಕಾರಿ ಅಭಿಯೋಜಕರಾದ ರವಿವರ್ಮ ಕುಮಾರ್‌ ಅವರು ನ್ಯಾಯಾಲಯದ ಮುಂದೆ ವಾದ ಮಂಡಿಸಿದರು.
4
+ ಸೆಕ್ಷನ್‌ 364 ಎ ಅನ್ವಯವಾಗಲು ಅಗತ್ಯ ಅಂಶಗಳು ಇಲ್ಲ ಎಂದು ನ್ಯಾಯಾಲಯ ಹೇಳಿದೆ. ಆದರೆ ಈ ಸೆಕ್ಷನ್‌ ಅನ್ವಯವಾಗುತ್ತದೆ ಎಂದು ಅವರು ವಾದ ಮಂಡಿಸಿದರು. ವಾದ ಆಲಿಸಿದ ನ್ಯಾಯಾಲಯ ಎಚ್‌.ಡಿ.ರೇವಣ್ಣ ಅವರಿಗೆ ನೋಟೀಸ್‌‍ ಜಾರಿಗೊಳಿಸಿ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ.
eesanje/url_46_126_2.txt ADDED
@@ -0,0 +1,6 @@
 
 
 
 
 
 
 
1
+ : ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
2
+ ಬೆಂಗಳೂರು, ಮೇ 31 – ಮೈಸೂರು ಜಿಲ್ಲೆ, ಕೆ.ಆರ್.ನಗರ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರು ಸೆಷನ್ ನ್ಯಾಯಾಲಯ ವಜಾ ಮಾಡಿದೆ. ಪ್ರಕರಣ ಸಂಬಂಧ ಬಂಧನ ಭೀತಿ ಎದುರಿಸುತ್ತಿದ್ದ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ವಾದ-ಪ್ರತಿವಾದಗಳನ್ನು ಆಲಿಸಿ ಕಾಯ್ದಿರಿಸಿದ್ದ ತೀರ್ಪನ್ನ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ್ ಭಟ್ ಅವರು ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿದರು.
3
+ ಈ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್.ಐ.ಟಿ ನೋಟೀಸ್ ನೀಡಿಯೇ ಇರಲಿಲ್ಲ. ಆದರು ಅವರು ಡಿ.ಐ.ಜಿ ಗೆ ಪತ್ರ ಬರೆದು ವಿಚಾರಣೆಗೆ ಸಹಕರಿಸುವುದಾಗಿ ತಿಳಿಸದರು. ಅಲ್ಲದೆ ಪ್ರಕರಣದ ಆರೋಪಿಗಳೊಂದಿಗೆ ಸಂಭಾಷಣೆ ನಡೆಸಿರುವ ಬಗ್ಗೆ ದಾಖಲೆಗಳಿವೆ ಎಂದು ಎಸ್.ಐ.ಟಿ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದರು.
4
+ ಸಂತ್ರಸ್ಥ ಮಹಿಳೆಯನ್ನ ಹೆದರಿಸುವ ಸಂಬಂಧ ಆರೋಪಿಗಳೊಂದಿಗೆ ಚರ್ಚೆ ನಡೆಸಿರುವ ದಾಖಲೆಗಳಿವೆ. ಇವರು ಪ್ರಭಾವಿಯಾಗಿದ್ದು ಇವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು, ಇವರನ್ನು ಎಸ್.ಐ.ಟಿ ವಶದಲ್ಲಿಟ್ಟು ವಿಚಾರಣೆ ನಡೆಸಲು ಅವಕಾಶ ನೀಡಬೇಕೆಂದು ಸರ್ಕಾರಿ ಪರ ವಕೀಲರಾದ ಜಗದೀಶ್ ಅವರು ಪ್ರಭಲ ವಾದ ಮಂಡಿಸಿದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು ಭವಾನಿ ರೇವಣ್ಣ ಅವರ ಪರ ವಕೀಲರು ಇಷ್ಟು ದಿನಗಳಾದರೂ ಎಸ್.ಐ.ಟಿ ಅವರು ವಿಚಾರಣೆಗೆ ಯಾವುದೇ ನೋಟೀಸ್ ನೀಡಿಲ್ಲ.
5
+ ಜಾಮೀನಿಗೆ ಅರ್ಜಿ ಸಲ್ಲಿದ್ದ ಮೇಲೆ ಆಕ್ಷೇಪಗಳನ್ನು ಮಾಡುತ್ತಿದ್ದಾರೆ. ಆರೋಪಿಗಳೊಂದಿಗೆ ನಡೆಸಿದ್ದಾರೆ ಎನ್ನಲಾದ ಸಂಭಾಷಣೆಗಳಿಗೆ ಯಾವುದೇ ದಾಖಲೆಯಿಲ್ಲ. ನಮ್ಮ ಕಕ್ಷಿದಾರರು ವಿಚಾರಣೆಗೆ ಸಹಕರಿಸುತ್ತಾರೆ, ಅವರಿಗೆ ಜಾಮೀನು ನೀಡಬೇಕೆಂದು ಮನವಿ ಮಾಡಿದ್ದರು.
6
+ ವಾದ-ಪ್ರತಿವಾದಿಗಳನ್ನು ಆಲಿಸಿದ್ದ ನ್ಯಾಯಾಧೀಶರು ತೀರ್ಪನ್ನು ಮೇ 31ಕ್ಕೆ ಕಾಯ್ದಿರಿಸಿದ್ದ ತೀರ್ಪು ನೀಡಿ, ನಿರೀಕ್ಷಣಾ ಜಾಮೀನು ಮನವಿ ತಳ್ಳಿ ಹಾಕಿದರು ಇದರಿಂದ ಭವಾನಿ ರೇವಣ್ಣ ಅವರಿಗೆ ಬಂಧನದ ಬೀತಿ ಎದುರಾಗಿ
eesanje/url_46_126_3.txt ADDED
@@ -0,0 +1,7 @@
 
 
 
 
 
 
 
 
1
+ ವಾಲ್ಮೀಕಿ ಅಭಿವೃದ್ಧಿ ನಿಗಮ ಹಣ ವರ್ಗಾವಣೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸಲ್ಲ : ಡಿಕೆಶಿ
2
+ ಕನಕಪುರ, ಮೇ 31-ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣದಲ್ಲಿ ವಾಸ್ತವಾಂಶಗಳ ಪರಿಶೀಲನೆ ನಡೆಯುತ್ತಿದೆ. ಯಾರನ್ನೂ ರಕ್ಷಣೆ ಮಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ. ಸ್ವಕ್ಷೇತ್ರದಲ್ಲಿ ವಿಧಾನಪರಿಷತ್‌ ಪದವೀಧರ ಕ್ಷೇತ್ರದ ಕಾಂಗ್ರೆಸ್‌‍ ಅಭ್ಯರ್ಥಿ ಪರ ಮುಖಂಡರ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಾವು ನಿನ್ನೆ ಸಭೆ ನಡೆಸಿದ್ದೇವೆ. ವಾಸ್ತವಾಂಶ ಏನು ಎಂದು ವಿಚಾರಣೆ ನಡೆಯುತ್ತಿದ್ದು, ವರದಿ ಬಂದ ಬಳಿಕ ಪರಿಶೀಲಿಸುತ್ತೇವೆ ಎಂದು ಹೇಳಿದರು.
3
+ ಬಿಜೆಪಿಯ ನಾಯಕರು ಸಚಿವರ ರಾಜೀನಾಮೆಗೆ ಆಗ್ರಹಿಸಿ ಜೂನ್‌ 6 ರ ಬಳಿಕ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಗಡುವು ನೀಡಿರುವುದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್‌ ಈಗಿನಿಂದಲೇ ಪ್ರತಿಭಟನೆ ಮಾಡಲಿ. 6 ರವರೆಗೂ ಕಾಯುವುದೇಕೆ? ಯಾವುದಕ್ಕೆ ಬಾಯಿ ಬಿಡಬೇಕೋ ಅದರ ಬಗ್ಗೆ ಮಾತನಾಡುತ್ತಿಲ್ಲ ಎಂದು ಆಕ್ಷೇಪಿಸಿದರು.
4
+ ಹಿಂದಿನ ಸರ್ಕಾರದಲ್ಲಿ ಎಸ್‌‍ಪಿ, ಇನ್‌್ಸಪೆಕ್ಟರ್‌ ಸೇರಿದಂತೆ ಪೊಲೀಸರಿಗೆ ಹಬ್ಬದ ದಿನ. ಬಿಜಾಪುರ ಮತ್ತು ಉಡುಪಿಯಲ್ಲಿ ಬಿಜೆಪಿಯ ಬಟ್ಟೆ ಹಾಕಿಸಿದ್ದನ್ನು ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ಮರೆತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ತಿರುಗೇಟು ನೀಡಿದರು.
5
+ ತಮ ವಿರುದ್ಧ ಕೇರಳದಲ್ಲಿ ಯಾಗ ನಡೆಸಿರುವ ಬಗ್ಗೆ ಸದ್ಯಕ್ಕೆ ಉತ್ತರಿಸುವುದಿಲ್ಲ. ಕಾಲವೇ ಎಲ್ಲದಕ್ಕೂ ಉತ್ತರ ಕೊಡುತ್ತದೆ. ಸರ್ಕಾರಕ್ಕೆ ಆಶೀರ್ವದಿಸಲು, ರಕ್ಷಣೆ ನೀಡಲು ಜನ ಇದ್ದಾರೆ. ನಾನು ನಂಬಿರುವ ಶಕ್ತಿ ಮತ್ತು ದೇವರು ನಮನ್ನು ಕಾಪಾಡುತ್ತದೆ ಎಂದರು.ಅಜ್ಜಯ್ಯ ಅವರ ಸನ್ನಿಧಾನಕ್ಕೆ ಭೇಟಿ ನೀಡಿ, ದರ್ಶನ ಪಡೆಯುತ್ತೀರಾ ಎಂಬ ಪ್ರಶ್ನೆಗೆ ತಮ ಮೊಬೈಲ್‌ನ ಹಿಂಬದಿಯಲ್ಲಿ ಅಜ್ಜಯ್ಯ ಅವರ ಭಾವಚಿತ್ರವನ್ನು ಲಗತ್ತಿಸಿರುವುದನ್ನು ಡಿ.ಕೆ.ಶಿವಕುಮಾರ್‌ ಪ್ರದರ್ಶಿಸಿದರು.
6
+ ಪ್ರಜ್ವಲ್‌ ರೇವಣ್ಣ ಅವರ ಬಂಧನದ ಬಗ್ಗೆ ಎಸ್‌‍ಐಟಿಯವರು ಗಮನಿಸುತ್ತಾರೆ. ನಾನು ಆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಪ್ರಶ್ನೆಯನ್ನು ತಳ್ಳಿಹಾಕಿದರು.ವಿಧಾನಪರಿಷತ್‌ ಅಭ್ಯರ್ಥಿಗಳ ಆಯ್ಕೆಗೆ ಹೈಕಮಾಂಡ್‌ಗೆ ಪಟ್ಟಿ ನೀಡಿ ಬಂದಿದ್ದೇವೆ. ಉಳಿದ ತೀರ್ಮಾನವನ್ನು ಅವರು ತೆಗೆದುಕೊಳ್ಳುತ್ತಾರೆ. ಯಾರ ಹೆಸರನ್ನು ಕೊಟ್ಟಿದ್ದೇವೆ ಎಂದು ಸದ್ಯಕ್ಕೆ ಹೇಳಲಾಗುವುದಿಲ್ಲ ಎಂದು ತಿಳಿಸಿದರು.
7
+ ಬೆಂಗಳೂರು ಪದವೀಧರ ಕ್ಷೇತ್ರದ ಕಾಂಗ್ರೆಸ್‌‍ನ ಅಭ್ಯರ್ಥಿ ರಾಮೋಜಿ ಗೌಡರ ಪರವಾಗಿ ತಮ ಕ್ಷೇತ್ರದಲ್ಲಿ ಮುಖಂಡರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ನನ್ನ ಅಭ್ಯರ್ಥಿ ಗೆದ್ದೇ ಗೆಲ್ಲುತ್ತಾರೆ ಎಂದು ವಿಶ್ವಾಸ ವ���ಯಕ್ತಪಡಿಸಿದರು.
eesanje/url_46_126_4.txt ADDED
@@ -0,0 +1,7 @@
 
 
 
 
 
 
 
 
1
+ : ಪ್ರಜ್ವಲ್‌ ರೇವಣ್ಣ ಅವರನ್ನು 6 ದಿನ ಎಸ್‌‍ಐಟಿ ಕಸ್ಟಡಿಗೆ ನೀಡಿದ ನ್ಯಾಯಾಲಯ
2
+ ಬೆಂಗಳೂರು, ಮೇ 31-ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 6 ದಿನಗಳ ಕಾಲ ಎಸ್‌‍ಐಟಿ ಕಸ್ಟಡಿಗೆ ನೀಡಿದೆ. ಇಂದು ಮುಂಜಾನೆ ಪ್ರಜ್ವಲ್‌ ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದ ಎಸ್‌‍ಐಟಿ ಪೊಲೀಸ್‌‍ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿ 10 ದಿನಗಳ ಕಾಲ ವಿಚಾರಣೆಗೆ ನೀಡಬೇಕೆಂದು ಮನವಿ ಮಾಡಿದರು.
3
+ ವಾದ-ಪ್ರತಿವಾದಗಳನ್ನು ಆಲಿಸಿದ 42ನೆ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರಾದ ಶಿವಕುಮಾರ್‌ ಅವರು ಪ್ರಜ್ವಲ್‌ ರೇವಣ್ಣ ಅವರನ್ನು 6 ದಿನಗಳ ಕಾಲ ಎಸ್‌‍ಐಟಿ ವಶಕ್ಕೆ ನೀಡಿದರು.ಎಸ್‌‍ಐಟಿ ಪರ ವಕೀಲರಾದ ಸರ್ಕಾರಿ ಅಭಿಯೋಜಕ ಅಶೋಕ್‌ ನಾಯಕ್‌ ವಾದ ಮಂಡಿಸಿ ಆರೋಪಿ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದೆ. ನೂರಕ್ಕೂ ಅಧಿಕ ಸಂತ್ರಸ್ತೆಯರಿದ್ದಾರೆ ಎಂದು ಹೊಳೆನರಸೀಪುರ ಪ್ರಕರಣವನ್ನು ಉಲ್ಲೇಖಿಸಿದರು.
4
+ ವಿಡಿಯೋ ವೈರಲ್‌ ಆದ ಬಳಿಕ ಹಲವು ಮಹಿಳೆಯರು ಸಂತ್ರಸ್ತೆಯರಾಗಿದ್ದಾರೆ. ಅವರಿಂದ ಮೊಬೈಲ್‌ ವಶಕ್ಕೆ ಪಡೆಯಬೇಕು. ಅವರ ಮೊಬೈಲ್‌ನಲ್ಲಿ ಫೇಸ್‌‍ಲಾಕ್‌ ಇದೆ. ಅದನ್ನು ಓಪನ್‌ ಮಾಡಲು ಇವರಿಗೆ ಮತ್ತು ಮಧು ಎಂಬುವವರಿಗೆ ಮಾತ್ರ ಅವಕಾಶವಿದೆ. ಹಾಗಾಗಿ ಹೆಚ್ಚಿನ ತನಿಖೆ ನಡೆಸಲು ಎಸ್‌‍ಐಟಿ ವಶಕ್ಕೆ ನೀಡಬೇಕೆಂದು ಎಂದು ಮನವಿ ಮಾಡಿದರು.
5
+ ಪ್ರಜ್ವಲ್‌ ರೇವಣ್ಣ ಪರ ವಕೀಲರಾದ ಅರುಣ್‌ ಅವರು ಪ್ರತಿವಾದ ಮಂಡಿಸಿ ಅತ್ಯಾಚಾರ ಮಾಡಿದ್ದಾರೆ ಎಂದು ಮೊದಲು ಸಂತ್ರಸ್ತೆ ದೂರು ನೀಡಿಲ್ಲ. ಯಾವುದೇ ದೃಶ್ಯ ರೆಕಾರ್ಡ್‌ ಆಗಿಲ್ಲ. ಏ.28 ರಿಂದ ಮೇ 2ರ ವರೆಗೆ ಅತ್ಯಾಚಾರದ ಉಲ್ಲೇಖವಿಲ್ಲ. ನ್ಯಾಯಯುತವಾಗಿ ಜಾಮೀನು ನೀಡಬಹುದಾದ ಪ್ರಕರಣ ಇದಾಗಿದೆ.
6
+ ಆದರೆ, ಸರ್ಕಾರಿ ಪರ ವಕೀಲರು ತಮಗಿಷ್ಟ ಬಂದ ಪದಗಳನ್ನು ಬಳಸಿ ವಾದ ಮಂಡಿಸಿದ್ದಾರೆ. ದೂರುದಾರರಿಂದ ರೆಡಿಮೇಡ್‌ ದೂರು ಸ್ವೀಕರಿಸಲಾಗಿದೆ. ವಿಡಿಯೋ ರೆಕಾರ್ಡ್‌ ಮಾಡಬೇಕೆಂಬ ನಿಯಮವಿದೆ. ಆದರೆ, ದೂರುದಾರರಿಂದ ವಿಡಿಯೋ ಹೇಳಿಕೆ ಪಡೆದಿಲ್ಲ. ತನಿಖೆಗೆ ಸಹಕರಿಸಲು ಪ್ರಜ್ವಲ್‌ ರೇವಣ್ಣ ಸಿದ್ಧರಿದ್ದಾರೆ. ಆದರೂ 15 ದಿನಗಳ ಕಾಲ ಎಸ್‌‍ಐಟಿ ವಶಕ್ಕೆ ಕೇಳುತ್ತಿರುವ ಉದ್ದೇಶವೇನು ಪ್ರಜ್ವಲ್‌ ರೇವಣ್ಣ ಪರ ವಕೀಲರು ಪ್ರಶ್ನಿಸಿದರು.
7
+ ಲೈಂಗಿಕ ದೌರ್ಜನ್ಯ ಕೇಸ್‌‍ ಅತ್ಯಾಚಾರ ಕೇಸ್‌‍ ಆಗಿ ಪರಿವರ್ತನೆಯಾಗಿದೆ. ಡಿಯೋದಲ್ಲಿರುವವರ ಮುಖ ಆಧರಿಸಿ ತನಿಖೆ ಮಾಡುತ್ತಿದ್ದಾರೆ ಎಂದು ಹೇಳಿದ ಅವರು, 15 ದಿನಗಳ ಕಾಲ ಕಸ್ಟಡಿ ಅಗತ್ಯವಿಲ್ಲ. ಕೇವಲ 1ದಿನ ಸಾಕು ಎಂದು ಹೇಳಿದರು.ವಾದ,ಪ್ರತಿವಾದ ಆಲಿಸಿದ ನ್ಯಾಯಾಲಯ ಪ್ರಜ್ವಲ್‌ ಅವರನ್ನು 6 ದಿನಕಾಲ ಎಸ್‌‍ಐಟಿ ವಶಕ್ಕೆ ನೀಡಿದರು.ವಿಚಾರಣೆ ಸಂದರ್ಭದಲ್ಲಿ ಕೋಟ್‌ ಹಾಲ್‌ ಕಿಕ್ಕಿರಿದು ತಂಬಿತ್ತು .
eesanje/url_46_126_5.txt ADDED
@@ -0,0 +1,8 @@
 
 
 
 
 
 
 
 
 
1
+ ಪರಿಷತ್‌ ಚುನಾವಣೆ : ಶಾಸಕಾಂಗ ಸಭೆ ಕರೆದ ಮುಖ್ಯಮಂತ್ರಿ ಸಿದ್ದರಾಮಯ್ಯ
2
+ ಬೆಂಗಳೂರು, ಮೇ 31-ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ದ್ವೈವಾರ್ಷಿಕ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌‍ ಶಾಸಕಾಂಗ ಸಭೆ ಕರೆದಿದ್ದಾರೆ.
3
+ ಜೂ 2 ರಂದು ಸಂಜೆ 6 ಗಂಟೆಗೆ ಅರಮನೆ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಯಲಿದ್ದು, ಅದರಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ, ವಿಧಾನಪರಿಷತ್‌ನ ಸಭಾ ನಾಯಕ ಎನ್‌.ಎಸ್‌‍.ಬೋಸರಾಜ್‌ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್‌‍ ಶಾಸಕಾಂಗ ಪಕ್ಷದ ಕಾರ್ಯದರ್ಶಿ ತುಕಾರಾಂ ತಿಳಿಸಿದ್ದಾರೆ.
4
+ ವಿಧಾನಪರಿಷತ್‌ ಚುನಾವಣೆಯಲ್ಲಿ ರಹಸ್ಯ ಮತದಾನ ನಡೆಯಲಿದೆ. ಈ ಮೊದಲು ಕೆಲ ಸಂದರ್ಭಗಳಲ್ಲಿ ಅಡ್ಡಮತದಾನ ನಡೆದು ಕಾಂಗ್ರೆಸ್‌‍ನ ಅಧಿಕೃತ ಅಭ್ಯರ್ಥಿಗೆ ಸೋಲು ಕಂಡಿರುವ ಉದಾಹರಣೆಗಳು ಇವೆ. ಈ ಬಾರಿ ಆ ರೀತಿಯಾಗದಂತೆ ಎಚ್ಚರಿಕೆ ವಹಿಸಲು ಕಾಂಗ್ರೆಸ್‌‍ ನಿರ್ಧರಿಸಿದೆ.
5
+ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಪಟ್ಟಂತೆ ದೆಹಲಿಯಲ್ಲಿ ಮೂರು ದಿನಗಳ ಕಾಲ ನಡೆದ ಸಭೆಯಲ್ಲಿ ಹಿಂದುಳಿದ ವರ್ಗಕ್ಕೆ 2, ಲಿಂಗಾಯತ, ಒಕ್ಕಲಿಗ, ಮುಸ್ಲಿಂ, ಕ್ರಿಶ್ಚಿಯನ್‌, ಪರಿಶಿಷ್ಟ ಜಾತಿ ಸೇರಿದಂತೆ ಆಯ್ಕೆಯ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ.
6
+ ಹಾಲಿ ವಿಧಾನಪರಿಷತ್‌ ಸದಸ್ಯ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಅವರಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಸಚಿವ ಎನ್‌.ಎಸ್‌‍.ಬೋಸರಾಜು ಅವರ ಕುರಿತು ಗೊಂದಲಗಳಿವೆ. ವಿಧಾನಪರಿಷತ್‌ನ ಅಭ್ಯರ್ಥಿಗಳ ಆಯ್ಕೆಯಲ್ಲೂ ಬಲಾಬಲ ಪ್ರದರ್ಶನ ಪರೋಕ್ಷವಾಗಿ ತಲೆದೋರಿದೆ.
7
+ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಯತೀಂದ್ರ, ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತಕುಮಾರ್‌, ಮಾಜಿ ಸಂಸದ ವಿ.ಎಸ್‌‍.ಉಗ್ರಪ್ಪ, ವಿನಯ್‌ಕಾರ್ತಿಕ್‌, ಇಸಾಯಿಲ್‌ ಟಮಟ್ಕರ್‌, ರಮೇಶ್‌ ಬಾಬು, ಡಾ.ಆನಂದಕುಮಾರ್‌, ಬಿ.ಆರ್‌.ನಾಯ್ಡು, ವಿಜಯ್‌ ಮುಳಗುಂದ್‌ ಸೇರಿದಂತೆ ಹಲವರ ಹೆಸರುಗಳು ಅಂತಿಮ ಪಟ್ಟಿಯಲ್ಲಿವೆ.
8
+ ಒಟ್ಟು 14 ಜನರ ಅಂತಿಮ ಪಟ್ಟಿಯಲ್ಲಿ ಅಭ್ಯರ್ಥಿಗಳ ಆಯ್ಕೆಯಾಗಲಿದೆಯೇ? ಅಥವಾ ಹೈಕಮಾಂಡ್‌ ಹೊಸ ಹೆಸರುಗಳನ್ನು ಸೇರ್ಪಡೆ ಮಾಡಲಿದೆಯೇ? ಎಂಬ ಕುತೂಹಲ ಕೆರಳಿದೆ. ಇಂದು ಸಂಜೆ ಅಥವಾ ನಾಳೆಯವರೆಗೂ ಅಂತಿಮ ಪಟ್ಟಿ ಪ್ರಕಟವಾಗುವ ನಿರೀಕ್ಷೆಗಳಿವೆ.ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್‌‍ ಶಾಸಕಾಂಗ ಸಭೆ ಕರೆದಿದ್ದಾರೆ.
eesanje/url_46_126_6.txt ADDED
@@ -0,0 +1,7 @@
 
 
 
 
 
 
 
 
1
+ ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಸೂಕ್ತ ತನಿಖೆಯಾಗಿ ಸಂತ್ರಸ್ತೆಯರಿಗೆ ನ್ಯಾಯ ಸಿಗಬೇಕು : ಬೊಮ್ಮಾಯಿ
2
+ ಹುಬ್ಬಳಿ, ಮೇ 31-ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಎಸ್‌‍ಐಟಿ ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಬೇಕು ಹಾಗೂ ಸಂತ್ರಸ್ತೆಯರಿಗೆ ನ್ಯಾಯ ದೊರೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
3
+ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೆನ್‌ ಡ್ರೈವ್‌ ವಿಚಾರದಲ್ಲಿ ಪ್ರಜ್ವಲ್‌ ರೇವಣ್ಣ ಕಾನೂನಾತಕವಾಗಿ ಶರಣಾಗಿದ್ದಾನೆ. ಎಸ್‌‍ಐಟಿಯವರು ತನಿಖೆಯನ್ನು ಕಟುಬದ್ದವಾಗಿ ಮಾಡಬೇಕು ಅನ್ನುವುದು ಇಡೀ ಕರ್ನಾಟಕ ಜನರ ಒತ್ತಾಯ. ಅಲ್ಲದೇ ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಎಂದು ಹೇಳಿದರು.
4
+ ಇದು ಯಾವ ರೀತಿ ಪ್ರಚಲಿತಕ್ಕೆ ಬಂತು ಯಾರು ಪ್ರಚಾರ ಮಾಡಿದರು. ಪೆನ್‌ ಡ್ರೈವ್‌ ಯಾರ ಹತ್ತಿರ ಇತ್ತು ಅವರು ಯಾಕೇ ಅರೆಸ್ಟ್‌‍ ಆದರು ಅನ್ನುವುದರ ಕುರಿತು ಹಲವು ಆಯಾಮಗಳನ್ನು ಪಡೆದಿತ್ತು. ಖಂಡಿತವಾಗಿಯೂ ಇದರಲ್ಲಿ ರಾಜಕಾರಣವು ಬೆರತ್ತಿತ್ತು. ಕಾನೂನು ಪ್ರಕಾರ ಇಂತಹದ್ದನ್ನು ಪ್ರಚಾರ ಮಾಡುವುದು ಕಾನೂನು ವಿರುದ್ದವಾದದ್ದು. ಆ ನಿಟ್ಟಿನಲ್ಲಿ ಎಸ್‌‍ಐಟಿ ಮುಂದುವರೆದು ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.
5
+ ಇನ್ನು ವಾಲೀಕಿ ನಿಗಮದ ಸೂಪರಿಂಟೆಂಡೆಂಟ್‌ ಚಂದ್ರಶೇಖರ ಆತಹತ್ಯೆ ಪ್ರಕರಣದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚಂದ್ರಶೇಖರನ್‌ ಪ್ರಕರಣವು ಸಿಬಿಐಗೆ ಹೋಗುವುದು ಯೋಗ್ಯವಾಗಿದೆ ಇದರಲ್ಲಿ ಬ್ಯಾಂಕ್‌ ಕೂಡ ಪಾತ್ರವಹಿಸಿದೆ. ಬ್ಯಾಂಕ್‌ನ ನಿಯಮ ಪ್ರಕಾರ 10 ಕೋಟಿಗಿಂತ ಜಾಸ್ತಿ ವಹಿವಾಟುಗಳ ಕುರಿತಾಗಿ ಸಿಬಿಐ ತನಿಖೆ ನಡೆಯಬೇಕು ಅನ್ನುವುದು ಇದೆ. ಸಚಿವ ಬಿ.ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಇಡೀ ಸರ್ಕಾರದ ನೈತಿಕತೆ ಪ್ರಶ್ನೆ ಇದೆ.
6
+ ಹಿಂದೆ ವಿರೋಧ ಪಕ್ಷದಲ್ಲಿದ್ದಾಗ ಯಾವ ನೈತಿಕತೆ ಬಗ್ಗೆ ಮಾತನಾಡಿದ್ರು ಅದೇ ನಾಯಕರು ಇವತ್ತು ಸಿಎಂ, ಡಿಸಿಎಂ ಆಗಿದ್ದಾರೆ. ಹಾಗಾಗಿ ಅವರ ನೈತಿಕತೆ ಸರ್ಕಾರದ ನೈತಿಕತೆಯ ಪ್ರಶ್ನೆಯಿದೆಪ್ರಮಾಣಿಕತೆ ಉಳಿಸಿಕೊಳ್ಳುತ್ತಾರೋ ಇಲ್ಲಾ ಮಂತ್ರಿಯನ್ನು ಉಳಿಸಿಕೊಳ್ಳುತ್ತಾರೋ ಅನ್ನುವ ಪ್ರಶ್ನೆ ಅವರ ಮೇಲೆ ಇದೆ ಎಂದು ಹೇಳಿದರು.
7
+ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಶತ್ರು ಭೈರವಿ ಯಾಗ ಮಾಡುತ್ತಿದ್ದಾರೆ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅದರ ಬಗ್ಗೆ ನನಗೆ ಗೊತ್ತಿಲ್ಲ. ಯಾಗ ಯಜ್ಞ ಅವರಿಗೇ ಗೊತ್ತು ಎಂದು ಹೇಳಿದರು.
eesanje/url_46_126_7.txt ADDED
@@ -0,0 +1,8 @@
 
 
 
 
 
 
 
 
 
1
+ ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕ್ಷಕ್ಷಿಯಲ್ಲ : ಡಿ.ಕೆ.ಸುರೇಶ್‌
2
+ ಬೆಂಗಳೂರು, ಮೇ 31– ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತಾವು ಆಕಾಂಕ್ಷಿಯಲ್ಲ, ಕೆಲವರು ನನ್ನನ್ನು ನಾಯಕನನ್ನಾಗಿ ಮಾಡಲು ಹೆಸರು ಪ್ರಸ್ತಾಪಿಸುತ್ತಿದ್ದಾರೆ, ಅದಕ್ಕೆ ಬೇಡ ಎಂದು ಹೇಳಲಾಗುವುದಿಲ್ಲ, ಈಗಾಗಲೇ ಕೆಪಿಸಿಸಿ ಅಧ್ಯಕ್ಷರು ಇದ್ದಾರೆ. ಹೀಗಾಗಿ ಹೊಸ ಅಧ್ಯಕ್ಷರ ಚರ್ಚೆ ಅಪ್ರಸ್ತುತ ಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೊಬ್ಬ ಪ್ರಾಮಾಣಿಕ ಸಣ್ಣ ಕಾರ್ಯಕರ್ತ. ಕೆಲವರು ತಮ್ಮ ತೀಟೆ ತೀರಿಸಿಕೊಳ್ಳಲು ಬೇರೆ ಬೇರೆ ಹೆಸರುಗಳನ್ನು ಹೇಳುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಪೆನ್‌ಡ್ರೈವ್‌ ಪ್ರಕರಣದಲ್ಲಿ ವಾಸ್ತವ ಏನು ಎಂದು ಜಗತ್ತು ನೋಡಿದೆ. ಆರೋಪಿ ಪ್ರಜ್ವಲ್‌ ರೇವಣ್ಣನನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಯುತ್ತಿದೆ. ನಾನು ವಿಮಾನನಿಲ್ದಾಣದಲ್ಲಿ ಬರುತ್ತಿದ್ದ ವೇಳೆಯಲ್ಲೇ ಪ್ರಜ್ವಲ್‌ ಕೂಡ ಬಂದಿದ್ದಾರೆ. ಹಾಗೆಂದು ನಾನು ಅವರನ್ನು ನೋಡಲು ವಿದೇಶಕ್ಕೆ ಹೋಗಿದ್ದೆ ಎಂಬ ವ್ಯಾಖ್ಯಾನ ಹಾಸ್ಯಾಸ್ಪದ ಎಂದರು.
4
+ ಪ್ರತಿ ಚುನಾವಣೆಯನ್ನು ನಾನು ಹೋರಾಟ ಎಂದೇ ಭಾವಿಸುತ್ತೇನೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರು, ಮುಖಂಡರು ಎಂದಿನ ಮನೋಭಾವದಲ್ಲೇ ಕೆಲಸ ಮಾಡಿದ್ದಾರೆ. ಗೆಲ್ಲುವ ವಿಶ್ವಾಸವಿದೆ. ಒಬ್ಬೊಬ್ಬರು ಒಂದೊಂದು ರೀತಿಯ ಅಭಿಪ್ರಾಯಗಳನ್ನು ಹೇಳುತ್ತಿದ್ದಾರೆ. ಎಲ್ಲದಕ್ಕೂ ಉತ್ತರ ಹೇಳಲು ಸಾಧ್ಯವಿಲ್ಲ ಎಂದರು.
5
+ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣದಲ್ಲಿ ಬಿಜೆಪಿಗರು ಸಚಿವ ನಾಗೇಂದ್ರ ಅವರ ರಾಜೀನಾಮೆ ಕೇಳುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಕರಣದ ಬಗ್ಗೆ ಈಗಾಗಲೇ ಮುಖ್ಯಮಂತ್ರಿಯವರು ತನಿಖೆಗೆ ಆದೇಶಿಸಿದ್ದಾರೆ. ತನಿಖೆ ಪೂರ್ಣಗೊಳ್ಳಲಿ. ಬಳಿಕ ಲೋಪ ಕಂಡುಬಂದರೆ ಸಚಿವ ನಾಗೇಂದ್ರ ತಲೆಬಾಗುತ್ತಾರೆ ಎಂದು ಹೇಳಿದರು.
6
+ ಬಿಜೆಪಿಗರು ಎಲ್ಲಾ ಪ್ರಕರಣಗಳನ್ನು ಸಿಬಿಐ ತನಿಖೆಯನ್ನೂ ಕೇಳುತ್ತಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಇದರಿಂದ ರಾಜಕೀಯವಾಗಿ ತಮಗೆ ಲಾಭವಾಗಬಹುದು ಎಂಬ ಲೆಕ್ಕಾಚಾರ ಅವರದು. ಸಿಬಿಐ ಎಂದರೆ ಅವರೇನು ಬೇರೆ ಕಡೆಯಿಂದ ಬಂದವರಲ್ಲ. ಆ ಸಂಸ್ಥೆ ಮುಖ್ಯಸ್ಥರು ನಮ ರಾಜ್ಯದವರೇ ಆಗಿದ್ದಾರೆ. ಈ ಹಿಂದೆ ಹಲವು ಪ್ರಕರಣಗಳಲ್ಲಿ ರಾಜ್ಯದ ಪೊಲೀಸರು ಪತ್ತೆ ಹಚ್ಚಿದ ಅಂಶಗಳನ್ನೇ ಸಿಬಿಐ ಕೂಡ ಅಂಗೀಕರಿಸಿದೆ. ನಮ ರಾಜ್ಯದ ಪೊಲೀಸರು ಸಮರ್ಥರಿದ್ದಾರೆ ಎಂದರಲ್ಲದೆ, ರಾಜೀನಾಮೆ ಕೇಳುವುದು ಬಿಜೆಪಿಯವರ ಚಾಳಿಯಾಗಿದೆ.
7
+ ವಿರೋಧಪಕ್ಷ ಸದೃಢವಾಗಿದ್ದರೆ, ಆಡಳಿತ ಪಕ್ಷಕ್ಕೆ ಎಚ್ಚರಿಕೆ ಇರುತ್ತದೆ ಎಂದರು.ಬಲಿ ಕೊಡುವುದರಲ್ಲಿ ಒಂದು ಪಕ್ಷ ಹೆಸರುವಾಸಿಯಾಗಿದೆ. ಈ ದೇಶದ ಆಸ್ತಿ ಎಂದು ಹೇಳಿಕೊಳ್ಳುವ ಶಕ್ತಿ ಮಂತ್ರ, ತಂತ್ರ, ಕುತಂತ್ರ ಮಾಡಿಕೊಂಡೇ ಬಂದ��ದೆ. ಅದನ್ನು ಈಗಲೂ ಮುಂದುವರೆಸುತ್ತಿರಬಹುದು. ಪ್ರಜ್ವಲ್‌ ರೇವಣ್ಣ ಅವರ ಪ್ರಕರಣದ ದಿಕ್ಕು ತಪ್ಪಿಸಲು ಉಪಮುಖ್ಯಮಂತ್ರಿ ಹೆಸರು ಬಳಕೆ ಮಾಡಿಕೊಳ್ಳುವುದು ಬಿಟ್ಟರೆ ಅವರಿಗೆ ಬೇರೆ ಗತಿ ಇಲ್ಲ.
8
+ ಹಾಗಾಗಿ ಡಿ.ಕೆ.ಶಿವಕುಮಾರ್‌ರವರ ಹೆಸರನ್ನು ಮುಂದಿಟ್ಟುಕೊಂಡು ಪಕ್ಷ ಸಂಘಟನೆ ಮಾಡಿಕೊಳ್ಳುತ್ತಾರೆ. ಈ ಬಗ್ಗೆ ನಾನು ಹೆಚ್ಚು ಚರ್ಚೆ ಮಾಡುವುದಿಲ್ಲ. ದೇಶ ಗಮನಿಸುತ್ತಿದೆ. ಕರ್ನಾಟಕದ ಕರ್ಮಕಾಂಡ ಪ್ರಕರಣ ವಿಶ್ವಮಟ್ಟದಲ್ಲೂ ಕುಖ್ಯಾತಿಗೆ ಕಾರಣವಾಗಿದೆ. ಅದನ್ನು ಸಮರ್ಥಿಸಿಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದರೆ ಆ ಪಕ್ಷದ ಸ್ಥಿತಿ ಅರ್ಥವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
eesanje/url_46_126_8.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಬಿಜೆಪಿ ಹಗರಣಗಳನ್ನು ಕೆದಕಲಾರಂಭಿಸಿದ ಕಾಂಗ್ರೆಸ್‌
2
+ ಬೆಂಗಳೂರು, ಮೇ 31– ವಾಲ್ಮೀಕಿ ಅಭಿವೃದ್ಧಿ ನಿಗಮದ ಬೃಹತ್‌ ಹಗರಣದಲ್ಲಿ ಸಚಿವ ನಾಗೇಂದ್ರ ಅವರ ತಲೆದಂಡವನ್ನು ತಪ್ಪಿಸಲು ನಾನಾ ರೀತಿಯ ಸರ್ಕಸ್‌ಗಳು ನಡೆಯುತ್ತಿದ್ದು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆದ 162 ಕೋಟಿ ರೂ.ಗಳ ಹಗರಣವನ್ನು ಕೆಣಕಲು ಕಾಂಗ್ರೆಸ್‌ ಸಿದ್ಧತೆ ನಡೆಸಿದೆ.
3
+ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ 187 ಕೋಟಿ ರೂ.ಗಳು ನಿಗಮದ ಉಪಖಾತೆಗಳಿಗೆ ವರ್ಗಾವಣೆಯಾಗಿರುವಂತೆ ಅಲ್ಲಿಂದ ಬೇರೆ ಬೇರೆ ಖಾತೆಗಳಿಗೂ ಸಂದಾಯವಾಗಿದೆ ಎಂಬ ಆರೋಪಗಳಿದ್ದು, ಸಂಪುಟದಲ್ಲಿ ಬಹಳಷ್ಟು ಮಂದಿ ಈ ಹಗರಣದ ಬಗ್ಗೆ ಸಿಡಿಮಿಡಿಗೊಂಡಿದ್ದಾರೆ. ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂಬ ಚರ್ಚೆಗಳು ತೀವ್ರವಾಗಿ ನಡೆಯುತ್ತಿವೆ.
4
+ ಬಿಜೆಪಿ ಸಚಿವ ನಾಗೇಂದ್ರ ಅವರ ತಲೆದಂಡಕ್ಕೆ ಪಟ್ಟು ಹಿಡಿದು ಜೂನ್‌ 6 ರವರೆಗೂ ಗಡುವು ನೀಡಿದೆ. ಕಾಂಗ್ರೆಸ್‌ನ ಒಂದು ಪಾಳಯ ಸಚಿವ ನಾಗೇಂದ್ರ ಅವರ ತಲೆದಂಡವಾಗಲಿ ಎಂದು ಹೇಳುತ್ತಿದೆ. ಹೈಕಮಾಂಡ್‌ ಮಟ್ಟದಲ್ಲೂ ಇದಕ್ಕೆ ಸಕಾರಾತ್ಮಕ ಸೂಚನೆಗಳು ಬಂದಿವೆ.
5
+ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಪ್ರತ್ಯೇಕ ಸಭೆ ನಡೆಸಿ ತನಿಖೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಆದರೆ ಏಕಾಏಕಿ ನಾಗೇಂದ್ರ ಅವರಿಂದ ರಾಜೀನಾಮೆ ಪಡೆದುಕೊಂಡರೆ ಸರ್ಕಾರ ಮತ್ತಷ್ಟು ಮುಜುಗರಕ್ಕೊಳಗಾಗಬೇಕಾಗುತ್ತದೆ, ಹಗರಣವನ್ನು ಒಪ್ಪಿಕೊಂಡಂತಾಗುತ್ತದೆ ಎಂಬ ಗೊಂದಲಗಳು ಕಾಂಗ್ರೆಸ್ಸಿಗರನ್ನು ಕಾಡುತ್ತಿವೆ.
6
+ ವಿರೋಧ ಪಕ್ಷ ಬಿಜೆಪಿ ಕೂಡ ಈ ಹಗರಣದಲ್ಲಿ ನಿರೀಕ್ಷಿತ ಮಟ್ಟ ಧ್ವನಿಯೇರಿಸದೆ ಮೃದು ಧೋರಣೆಯಿಂದ ಪ್ರತಿಕ್ರಿಯಿಸುತ್ತಿರುವುದು ಅಚ್ಚರಿ ಮೂಡಿಸಿದೆ. ಇದಕ್ಕೆ ಮೂಲ ಕಾರಣ ಬಿಜೆಪಿ ಸರ್ಕಾರದ ಅವಽಯಲ್ಲಿ ಪರಿಶಿಷ್ಟ ಜಾತಿಯ ನಿಗಮವೊಂದರಲ್ಲಿ ನಡೆದಿರುವ 162 ಕೋಟಿ ರೂ.ಗಳ ಹಗರಣ ಎಂದು ಹೇಳಲಾಗುತ್ತಿದೆ.
7
+ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್‌ ಬಿಜೆಪಿಯ ಹಿಂದಿನ ಸರ್ಕಾರದ ಹಲವು ಹಗರಣಗಳ ಬಗ್ಗೆ ವ್ಯಾಪಕ ಚರ್ಚೆ ನಡೆಸಿತ್ತು. ಸರ್ಕಾರ ರಚನೆಯಾದ ಮೇಲೆ ಇದ್ದಕ್ಕಿದ್ದಂತೆ ಕಾಂಗ್ರೆಸ್‌ ಸರ್ಕಾರವು ನಿಧಾನಗತಿಯನ್ನು ಅನುಸರಿಸುತ್ತಿದೆ. ಕೆಲವು ಗಂಭೀರ ಸ್ವರೂಪದ ಹಗರಣಗಳ ತನಿಖೆಗೆ ಎಸ್‌ಐಟಿ ಹಾಗೂ ನ್ಯಾಯಾಂಗ ತನಿಖಾ ಸಮಿತಿಗಳನ್ನು ರಚಿಸಿದ್ದು ಬಿಟ್ಟರೆ ಉಳಿದಂತೆ ಯಥಾರೀತಿಯಲ್ಲಿ ನಡೆದುಕೊಂಡು ಹೋಗಲಿ ಎಂಬ ಧೋರಣೆಯಲ್ಲಿದ್ದಂತಿದೆ.
8
+ ಈಗ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಽೕಕ್ಷಕ ಚಂದ್ರಶೇಖರನ್‌ ಅವರ ಆತ್ಮಹತ್ಯೆಯಿಂದಾಗಿ 187 ಕೋಟಿ ರೂ.ಗಳ ಹಗರಣ ಬೆಳಕಿಗೆ ಬಂದಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ರೀತಿಯ ಹಗರಣಗಳು ಹೊಸದಲ್ಲ. ಈ ಹಿಂದೆ ಕೂಡ ತುಂಬಾ ನಡೆದಿವೆ ಎಂಬ ಚರ್ಚೆಗಳು ನಡೆಯುತ್ತಿವೆ.
9
+ ಸಮುದಾಯವಾರು ಅಭಿವೃದ್ಧಿ ನಿಗಮಗಳಲ್ಲಿ ಅಕ್ರಮ ಹಣ ವರ್ಗಾವಣೆ ಸಾಮಾನ್ಯ ಎಂಬ ಧೋರಣೆ ಮನೆ ಮಾಡಿದೆ. ಈ ಹಿಂದೆ ಬಿಜೆ��ಿ ಅವಽಯಲ್ಲಿ ನಿಗಮವೊಂದರಿಂದ 162 ಕೋಟಿ ರೂ.ಗಳನ್ನು ವಿವಿಧ ಸಂಸ್ಥೆಗಳಿಗೆ ವರ್ಗಾವಣೆ ಮಾಡಲಾಗಿದೆ. ಅವುಗಳಲ್ಲಿ ಬಹುತೇಕ ಸಂಸ್ಥೆಗಳು ನಕಲಿ ಎಂದು ತಿಳಿದುಬಂದಿದೆ.
10
+ ವರ್ಗಾವಣೆಯಾದ ಹಣವನ್ನು ಹತ್ತು ನಿಮಿಷದಲ್ಲೇ ಬಿಜೆಪಿ ಶಾಸಕರೊಬ್ಬರ ಪುತ್ರನ ಹೆಸರಿನಲ್ಲಿದ್ದ ಟ್ರಸ್‌್ಟಗೆ ಸಂದಾಯ ಮಾಡಲಾಗಿತ್ತು. ಆರು ತಿಂಗಳ ಬಳಿಕ ಆ ಟ್ರಸ್‌್ಟ ಕೂಡ ಪರಿಸಮಾಪ್ತಿಯಾಗಿದೆ, ಹಣ ಎಲ್ಲಿಹೋಗಿದೆ? ಎಂಬ ಮಾಹಿತಿಯೇ ಇಲ್ಲ ಎಂದು ತಿಳಿದುಬಂದಿದೆ.ಈ ಕುರಿತು ಸಿಐಡಿ ತನಿಖೆ ನಡೆಯುತ್ತಿದ್ದು, ಹಲವು ವರ್ಷ ಕಳೆದರೂ ತಾರ್ಕಿಕ ಅಂತ್ಯ ಕಂಡಿಲ್ಲ ಎಂದು ಹೇಳಲಾಗಿದೆ.
11
+ ಹಿಂದಿನ ಹಗರಣದ ದಾಖಲಾತಿಗಳನ್ನು ಸಜ್ಜು ಮಾಡಿಟ್ಟುಕೊಂಡಿರುವ ಕಾಂಗ್ರೆಸ್ಸಿಗರು ಬಿಜೆಪಿಯ ಪ್ರತಿ ಟೀಕೆಗಳಿಗಾಗಿ ಕಾದು ಕುಳಿತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ವಿಚಾರದಲ್ಲಿ ಬಿಜೆಪಿ ರೊಚ್ಚಿಗೆದ್ದು ಸಂಘರ್ಷದ ವಾತಾವರಣಕ್ಕಿಳಿದರೆ ಆಗ ಬಿಜೆಪಿ ಅವಽಯಲ್ಲಾದ ಹಗರಣಗಳನ್ನು ಒಂದೊಂದಾಗಿ ಬಯಲಿಗೆ ತಂದು ಎದುರೇಟು ನೀಡಲು ತಯಾರಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
eesanje/url_46_126_9.txt ADDED
@@ -0,0 +1,5 @@
 
 
 
 
 
 
1
+ ಮುಂದಿನ ವಾರ ಕೆ-ಸಿಇಟಿ ಫಲಿತಾಂಶ
2
+ ಬೆಂಗಳೂರು, ಮೇ 31-ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿ ಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ತೀವ್ರ ಕುತೂಹಲದಿಂದ ವಿದ್ಯಾರ್ಥಿಗಳು ಕಾಯುತ್ತಿರುವ ಕೆ-ಸಿಇಟಿ ಪರೀಕ್ಷಾ ಫಲಿತಾಂಶ ಶೀಘ್ರದಲ್ಲೆ ಪ್ರಕಟವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆ-ಸಿಇಟಿ) ಫಲಿತಾಂಶ ಮುಂದಿನ ವಾರ ಪ್ರಕಟವಾಗುವ ಸಾಧ್ಯತೆಗಳಿವೆ.
3
+ ಉನ್ನತ ಮೂಲಗಳ ಮಾಹಿತಿ ಪ್ರಕಾರ ಜೂನ್‌ ಮೊದಲ ವಾರದಲ್ಲಿ ಕೆ-ಸಿಇಟಿ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶ ಪ್ರಕಟಕ್ಕೆ ಪೂರಕವಾದ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ. ಲೋಕಸಭೆ ಚುನಾವಣಾ ಫಲಿತಾಂಶ ಪ್ರಕಟಗೊಂಡ ನಂತರ ಯಾವಾಗ ಬೇಕಾದರೂ ಕೆ-ಸಿಇಟಿ ಫಲಿತಾಂಶ ಪ್ರಕಟಗೊಳ್ಳಬಹುದಾಗಿದೆ.
4
+ ಏಪ್ರಿಲ್‌ 18 ಮತ್ತು 19 ರಂದು ರಾಜ್ಯದಲ್ಲಿ ಕೆ-ಸಿಇಟಿ ಪರೀಕ್ಷೆ ನಡೆದಿತ್ತು. ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳು ಸಿಇಟಿ ಪರೀಕ್ಷೆಯಲ್ಲಿ ನೀಡಲಾಗಿತ್ತು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಅಂತಹ ಪ್ರಶ್ನೆಗಳನ್ನು ಹೊರತು ಪಡಿಸಿ ಉಳಿದ ಪ್ರಶ್ನೆಗಳ ಉತ್ತರವನ್ನು ಮೌಲ್ಯಮಾಪನ ಮಾಡುವುದಾಗಿ ಪ್ರಾಧಿಕಾರ ಘೋಷಿಸಿದಲ್ಲದೆ, ಸರಿಯಾದ ಕೀ ಉತ್ತರಗಳನ್ನು ಪ್ರಕಟಿಸಿತ್ತು.
5
+ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ, ಸಿಬಿಎಸ್‌‍ಇ, ಐಸಿಎಸ್‌‍ಇ ಮೊದಲಾದ ಮಂಡಳಿ ಪರೀಕ್ಷೆ ಅಂಕಗಳನ್ನು ದಾಖಲಿಸಲು ಅವಕಾಶ ನೀಡಿತ್ತು. ಈಗ ಎಲ್ಲ ಪ್ರಕ್ರಿಯೆಗಳು ಅಂತಿಮ ಹಂತ ತಲುಪಿದ್ದು, ಫಲಿತಾಂಶ ಶೀಘ್ರದಲ್ಲೇ ಪ್ರಕಟವಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
eesanje/url_46_127_1.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಸಚಿವ ನಾಗೇಂದ್ರ ತಲೆದಂಡ ತಪ್ಪಿಸಲು ಕಾಂಗ್ರೆಸ್ ನಾನಾ ಸರ್ಕಸ್‌‍
2
+ ಬೆಂಗಳೂರು, ಮೇ 31-ವಾಲ್ಮೀಕಿ ಅಭಿವೃದ್ಧಿ ನಿಗಮದ ಬೃಹತ್‌ ಹಗರಣದಲ್ಲಿ ಸಚಿವ ನಾಗೇಂದ್ರ ಅವರ ತಲೆದಂಡವನ್ನು ತಪ್ಪಿಸಲು ನಾನಾ ರೀತಿಯ ಸರ್ಕಸ್‌‍ಗಳು ನಡೆಯುತ್ತಿದ್ದು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆದ 162 ಕೋಟಿ ರೂ.ಗಳ ಹಗರಣವನ್ನು ಕೆಣಕಲು ಕಾಂಗ್ರೆಸ್‌‍ ಸಿದ್ಧತೆ ನಡೆಸಿದೆ.
3
+ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ 187 ಕೋಟಿ ರೂ.ಗಳು ನಿಗಮದ ಉಪಖಾತೆಗಳಿಗೆ ವರ್ಗಾವಣೆಯಾಗಿರುವಂತೆ ಅಲ್ಲಿಂದ ಬೇರೆ ಬೇರೆ ಖಾತೆಗಳಿಗೂ ಸಂದಾಯವಾಗಿದೆ ಎಂಬ ಆರೋಪಗಳಿದ್ದು, ಸಂಪುಟದಲ್ಲಿ ಬಹಳಷ್ಟು ಮಂದಿ ಈ ಹಗರಣದ ಬಗ್ಗೆ ಸಿಡಿಮಿಡಿಗೊಂಡಿದ್ದಾರೆ. ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂಬ ಚರ್ಚೆಗಳು ತೀವ್ರವಾಗಿ ನಡೆಯುತ್ತಿವೆ.
4
+ ಬಿಜೆಪಿ ಸಚಿವ ನಾಗೇಂದ್ರ ಅವರ ತಲೆದಂಡಕ್ಕೆ ಪಟ್ಟು ಹಿಡಿದು ಜೂನ್‌ 6 ರವರೆಗೂ ಗಡುವು ನೀಡಿದೆ. ಕಾಂಗ್ರೆಸ್‌‍ನ ಒಂದು ಪಾಳಯ ಸಚಿವ ನಾಗೇಂದ್ರ ಅವರ ತಲೆದಂಡವಾಗಲಿ ಎಂದು ಹೇಳುತ್ತಿದೆ. ಹೈಕಮಾಂಡ್‌ ಮಟ್ಟದಲ್ಲೂ ಇದಕ್ಕೆ ಸಕಾರಾತಕ ಸೂಚನೆಗಳು ಬಂದಿವೆ.
5
+ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಪ್ರತ್ಯೇಕ ಸಭೆ ನಡೆಸಿ ತನಿಖೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಆದರೆ ಏಕಾಏಕಿ ನಾಗೇಂದ್ರ ಅವರಿಂದ ರಾಜೀನಾಮೆ ಪಡೆದುಕೊಂಡರೆ ಸರ್ಕಾರ ಮತ್ತಷ್ಟು ಮುಜುಗರಕ್ಕೊಳಗಾಗಬೇಕಾಗುತ್ತದೆ, ಹಗರಣವನ್ನು ಒಪ್ಪಿಕೊಂಡಂತಾಗುತ್ತದೆ ಎಂಬ ಗೊಂದಲಗಳು ಕಾಂಗ್ರೆಸ್ಸಿಗರನ್ನು ಕಾಡುತ್ತಿವೆ.
6
+ ವಿರೋಧ ಪಕ್ಷ ಬಿಜೆಪಿ ಕೂಡ ಈ ಹಗರಣದಲ್ಲಿ ನಿರೀಕ್ಷಿತ ಮಟ್ಟ ಧ್ವನಿಯೇರಿಸದೆ ಮೃದು ಧೋರಣೆಯಿಂದ ಪ್ರತಿಕ್ರಿಯಿಸುತ್ತಿರುವುದು ಅಚ್ಚರಿ ಮೂಡಿಸಿದೆ. ಇದಕ್ಕೆ ಮೂಲ ಕಾರಣ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿಯ ನಿಗಮವೊಂದರಲ್ಲಿ ನಡೆದಿರುವ 162 ಕೋಟಿ ರೂ.ಗಳ ಹಗರಣ ಎಂದು ಹೇಳಲಾಗುತ್ತಿದೆ.
7
+ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್‌‍ ಬಿಜೆಪಿಯ ಹಿಂದಿನ ಸರ್ಕಾರದ ಹಲವು ಹಗರಣಗಳ ಬಗ್ಗೆ ವ್ಯಾಪಕ ಚರ್ಚೆ ನಡೆಸಿತ್ತು. ಸರ್ಕಾರ ರಚನೆಯಾದ ಮೇಲೆ ಇದ್ದಕ್ಕಿದ್ದಂತೆ ಕಾಂಗ್ರೆಸ್‌‍ ಸರ್ಕಾರವು ನಿಧಾನಗತಿಯನ್ನು ಅನುಸರಿಸುತ್ತಿದೆ. ಕೆಲವು ಗಂಭೀರ ಸ್ವರೂಪದ ಹಗರಣಗಳ ತನಿಖೆಗೆ ಎಸ್‌‍ಐಟಿ ಹಾಗೂ ನ್ಯಾಯಾಂಗ ತನಿಖಾ ಸಮಿತಿಗಳನ್ನು ರಚಿಸಿದ್ದು ಬಿಟ್ಟರೆ ಉಳಿದಂತೆ ಯಥಾರೀತಿಯಲ್ಲಿ ನಡೆದುಕೊಂಡು ಹೋಗಲಿ ಎಂಬ ಧೋರಣೆಯಲ್ಲಿದ್ದಂತಿದೆ.
8
+ ಈಗ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ಅಧೀಕ್ಷಕ ಚಂದ್ರಶೇಖರನ್‌ ಅವರ ಆತಹತ್ಯೆಯಿಂದಾಗಿ 187 ಕೋಟಿ ರೂ.ಗಳ ಹಗರಣ ಬೆಳಕಿಗೆ ಬಂದಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ರೀತಿಯ ಹಗರಣಗಳು ಹೊಸದಲ್ಲ. ಈ ಹಿಂದೆ ಕೂಡ ತುಂಬಾ ನಡೆದಿವೆ ಎಂಬ ಚರ್ಚೆಗಳು ನಡೆಯುತ್ತಿವೆ.ಸಮುದಾಯವಾರು ಅಭಿವೃದ್ಧಿ ನಿಗಮಗಳಲ್ಲಿ ಅಕ್ರಮ ಹಣ ವರ್ಗಾವಣೆ ಸಾಮಾನ್ಯ ಎಂಬ ಧೋರಣೆ ಮನೆ ಮಾಡಿದೆ. ಈ ಹಿಂದೆ ಬಿಜೆಪಿ ಅವಧಿಯಲ್ಲಿ ನಿಗಮವೊಂದರಿಂದ 162 ಕೋಟಿ ರೂ.ಗಳನ್ನು ವಿವಿಧ ಸಂಸ್ಥೆಗಳಿಗೆ ವರ್ಗಾವಣೆ ಮಾಡಲಾಗಿದೆ. ಅವುಗಳಲ್ಲಿ ಬಹುತೇಕ ಸಂಸ್ಥೆಗಳು ನಕಲಿ ಎಂದು ತಿಳಿದುಬಂದಿದೆ.
9
+ ವರ್ಗಾವಣೆಯಾದ ಹಣವನ್ನು ಹತ್ತು ನಿಮಿಷದಲ್ಲೇ ಬಿಜೆಪಿ ಶಾಸಕರೊಬ್ಬರ ಪುತ್ರನ ಹೆಸರಿನಲ್ಲಿದ್ದ ಟ್ರಸ್ಟ್‌ಗೆ ಸಂದಾಯ ಮಾಡಲಾಗಿತ್ತು. ಆರು ತಿಂಗಳ ಬಳಿಕ ಆ ಟ್ರಸ್ಟ್‌ ಕೂಡ ಪರಿಸಮಾಪ್ತಿಯಾಗಿದೆ, ಹಣ ಎಲ್ಲಿಹೋಗಿದೆ? ಎಂಬ ಮಾಹಿತಿಯೇ ಇಲ್ಲ ಎಂದು ತಿಳಿದುಬಂದಿದೆ.ಈ ಕುರಿತು ಸಿಐಡಿ ತನಿಖೆ ನಡೆಯುತ್ತಿದ್ದು, ಹಲವು ವರ್ಷ ಕಳೆದರೂ ತಾರ್ಕಿಕ ಅಂತ್ಯ ಕಂಡಿಲ್ಲ ಎಂದು ಹೇಳಲಾಗಿದೆ.
10
+ ಹಿಂದಿನ ಹಗರಣದ ದಾಖಲಾತಿಗಳನ್ನು ಸಜ್ಜು ಮಾಡಿಟ್ಟುಕೊಂಡಿರುವ ಕಾಂಗ್ರೆಸ್ಸಿಗರು ಬಿಜೆಪಿಯ ಪ್ರತಿ ಟೀಕೆಗಳಿಗಾಗಿ ಕಾದು ಕುಳಿತಿದ್ದಾರೆ. ವಾಲೀಕಿ ಅಭಿವೃದ್ಧಿ ನಿಗಮದ ವಿಚಾರದಲ್ಲಿ ಬಿಜೆಪಿ ರೊಚ್ಚಿಗೆದ್ದು ಸಂಘರ್ಷದ ವಾತಾವರಣಕ್ಕಿಳಿದರೆ ಆಗ ಬಿಜೆಪಿ ಅವಧಿಯಲ್ಲಾದ ಹಗರಣಗಳನ್ನು ಒಂದೊಂದಾಗಿ ಬಯಲಿಗೆ ತಂದು ಎದುರೇಟು ನೀಡಲು ತಯಾರಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
eesanje/url_46_127_10.txt ADDED
@@ -0,0 +1,4 @@
 
 
 
 
 
1
+ ವಿಧಾನ ಪರಿಷತ್‌ ಚುನಾವಣೆ: ಮತದಾನಕ್ಕೆ ಸಾಂದರ್ಭಿಕ ರಜೆ ನೀಡಲು ಆದೇಶ
2
+ ಬೆಂಗಳೂರು, ಮೇ 30-ವಿಧಾನ ಪರಿಷತ್ತಿನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರರ ಕ್ಷೇತ್ರಗಳಿಗೆ ಜೂ.3ರಂದು ಮತದಾನ ನಡೆಯಲಿದ್ದು, ಅಂದು ಮತದಾನ ಮಾಡಲು ಅನುಕೂಲವಾಗುವಂತೆ ಅರ್ಹ ಶಿಕ್ಷಕರು ಹಾಗೂ ಪದವೀಧರರಿಗೆ ಸೀಮಿತವಾಗಿ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಸರ್ಕಾರ ಆದೇಶಿಸಿದೆ.
3
+ ಈ ಸಂಬಂಧ ಅಧಿಸೂಚನೆ ಹೊರಡಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಈಶಾನ್ಯ ಪದವೀಧರ, ನೈರುತ್ಯ ಪದವೀಧರ, ಬೆಂಗಳೂರು ಪದವೀಧರರ ಕ್ಷೇತ್ರಗಳು ಮತ್ತು ಆಗ್ನೇಯ ಶಿಕ್ಷಕರ, ನೈರುತ್ಯ ಶಿಕ್ಷಕರ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈ ರಜೆ ಮಂಜೂರು ಮಾಡಬೇಕಿದೆ.
4
+ ವಿಧಾನ ಪರಿಷತ್‌ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿನ ಸರ್ಕಾರಿ, ಖಾಸಗಿ ಶಾಲಾ-ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ, ಕೇಂಧ್ರ ಸರ್ಕಾರದ ಕಾರ್ಖಾನೆಗಳು,ಕೈಗಾರಿಕಾ ಸಂಸ್ಥೆಗಳು, ಸಹಕಾರ ರಂಗದ ಸಂಘ-ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಮತ್ತು ದಿನಗೂಲಿ ಮೇಲೆ ಕೆಲಸ ನಿರ್ದೇಶಿಸುವ ಪದವೀಧರರು ಹಾಗೂ ಶಿಕ್ಷಕ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.