CoolCoder44 commited on
Commit
94d744c
·
verified ·
1 Parent(s): 73f9eac

4f798c4c7042ee31ebbbc81eca1e3fa6bb95484dbf7e77e67d16ca7ea0795d23

Browse files
Files changed (50) hide show
  1. eesanje/url_46_165_1.txt +12 -0
  2. eesanje/url_46_165_10.txt +9 -0
  3. eesanje/url_46_165_11.txt +5 -0
  4. eesanje/url_46_165_12.txt +7 -0
  5. eesanje/url_46_165_2.txt +6 -0
  6. eesanje/url_46_165_3.txt +6 -0
  7. eesanje/url_46_165_4.txt +11 -0
  8. eesanje/url_46_165_5.txt +4 -0
  9. eesanje/url_46_165_6.txt +16 -0
  10. eesanje/url_46_165_7.txt +8 -0
  11. eesanje/url_46_165_8.txt +11 -0
  12. eesanje/url_46_165_9.txt +5 -0
  13. eesanje/url_46_166_1.txt +12 -0
  14. eesanje/url_46_166_10.txt +7 -0
  15. eesanje/url_46_166_11.txt +9 -0
  16. eesanje/url_46_166_12.txt +8 -0
  17. eesanje/url_46_166_2.txt +4 -0
  18. eesanje/url_46_166_3.txt +5 -0
  19. eesanje/url_46_166_4.txt +9 -0
  20. eesanje/url_46_166_6.txt +7 -0
  21. eesanje/url_46_166_7.txt +4 -0
  22. eesanje/url_46_166_8.txt +8 -0
  23. eesanje/url_46_166_9.txt +7 -0
  24. eesanje/url_46_167_1.txt +16 -0
  25. eesanje/url_46_167_10.txt +6 -0
  26. eesanje/url_46_167_11.txt +8 -0
  27. eesanje/url_46_167_12.txt +5 -0
  28. eesanje/url_46_167_2.txt +13 -0
  29. eesanje/url_46_167_3.txt +5 -0
  30. eesanje/url_46_167_4.txt +5 -0
  31. eesanje/url_46_167_5.txt +9 -0
  32. eesanje/url_46_167_6.txt +10 -0
  33. eesanje/url_46_167_7.txt +6 -0
  34. eesanje/url_46_167_8.txt +5 -0
  35. eesanje/url_46_167_9.txt +5 -0
  36. eesanje/url_46_168_1.txt +5 -0
  37. eesanje/url_46_168_10.txt +21 -0
  38. eesanje/url_46_168_11.txt +6 -0
  39. eesanje/url_46_168_12.txt +8 -0
  40. eesanje/url_46_168_2.txt +8 -0
  41. eesanje/url_46_168_3.txt +5 -0
  42. eesanje/url_46_168_4.txt +9 -0
  43. eesanje/url_46_168_5.txt +17 -0
  44. eesanje/url_46_168_6.txt +5 -0
  45. eesanje/url_46_168_7.txt +4 -0
  46. eesanje/url_46_168_8.txt +5 -0
  47. eesanje/url_46_168_9.txt +5 -0
  48. eesanje/url_46_169_1.txt +5 -0
  49. eesanje/url_46_169_10.txt +9 -0
  50. eesanje/url_46_169_11.txt +6 -0
eesanje/url_46_165_1.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಚಾಮರಾಜನಗರದ ಸಂಸದ, ಪ್ರಭಾವಿ ದಲಿತ ನಾಯಕ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ: ನಾಳೆ ಅಂತ್ಯಕ್ರಿಯೆ
2
+ ಬೆಂಗಳೂರು,ಏ.29-ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ದಲಿತ ಸಮುದಾಯದ ಪ್ರಭಾವಿ ನಾಯಕ, ಕೇಂದ್ರದ ಮಾಜಿ ಸಚಿವ ಹಾಗೂ ಚಾಮರಾಜನಗರದ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ (76) ನಿಧನರಾಗಿದ್ದಾರೆ. ಪತ್ನಿ ಭಾಗ್ಯಲಕ್ಷ್ಮಿ, ಮೂವರು ಪುತ್ರಿಯರು, ಅಳಿಯಂದಿರಾದ ನಂಜನಗೂಡು ಮಾಜಿ ಶಾಸಕ ಹರ್ಷವರ್ಧನ್‌, ಡಾ.ಮೋಹನ್‌ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
3
+ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅಮಿತ್‌ ಷಾ, ರಾಜ್‌ ನಾಥ್‌ ಸಿಂಗ್‌, ಮುಖ್ಯಮಂತ್ರಿ ಸಿದ್ದರಾಮಯ್ಯ,ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ, ಹೆಚ್‌.ಡಿ.ಕುಮಾರಸ್ವಾಮಿ, ಬಸವರಾಜ್‌ ಬೊಮ್ಮಯಿ,ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ಗಣ್ಯರು ಶ್ರೀನಿವಾಸ್‌ ಪ್ರಸಾದ್‌ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.
4
+ ಕಳೆದ ಮೂರು ದಿನಗಳ ಹಿಂದೆ ಅವರನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ, ಚಿಕಿತ್ಸೆ ಫಲಕಾರಿಯಾಗದೆ, ಮುಂಜಾನೆ 1.27ರ ಸುಮಾರಿಗೆ ನಿಧನರಾಗಿದ್ದಾರೆ.ಮೃತರ ಅಂತ್ಯಕ್ರಿಯೆಯನ್ನು ತವರು ಜಿಲ್ಲೆ ಮೈಸೂರಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
5
+ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಖ್ಯಾತ ವೈದ್ಯ ಡಾ. ಸುದರ್ಶನ್‌ ಬಲ್ಲಾಳ್‌, ಶ್ರೀನಿವಾಸ್‌ ಪ್ರಸಾದ್‌ ಅವರಿಗೆ ಚಿಕಿತ್ಸೆ ನೀಡುತ್ತಿದ್ದರು. ಮೂತ್ರಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರ ಆರೋಗ್ಯದಲ್ಲಿ ಕಳೆದ ವಾರ ಏರುಪೇರಾಗಿತ್ತು. ಶ್ರೀನಿವಾಸ್‌ ಪ್ರಸಾದ್‌ ಪಾರ್ಥಿವ ಶರೀರವನ್ನು ಮಣಿಪಾಲ್‌ ಆಸ್ಪತ್ರೆಯಿಂದ ಮೈಸೂರಿನ ಜಯಲಕ್ಷೀಪುರಂನಲ್ಲಿರುವ ಅವರ ನಿವಾಸಕ್ಕೆ ತರಲಾಯಿತು.
6
+ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಮಾಜಿ ಶಾಸಕರಾದ ಜಿ.ಟಿ.ದೇವೇಗೌಡ, ಪುಟ್ಟರಂಗಶೆಟ್ಟಿ ಸೇರಿ ಹಲವರು ಅಂತಿಮ ದರ್ಶನ ಪಡೆದರು. ಬಳಿಕ ಇಲ್ಲಿನ ವಸ್ತುಪ್ರದರ್ಶನ ಕೇಂದ್ರದಲ್ಲಿ ಸಾರ್ವಜನಿಕದ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
7
+ ನಾಳೆ ಅಂತ್ಯಕ್ರಿಯೆ:ಶ್ರೀನಿವಾಸ್‌ ಪ್ರಸಾದ್‌ ಅವರ ಅಂತ್ಯಕ್ರಿಯೆ ನಾಳೆ ಮೈಸೂರಿನಲ್ಲಿ ನಡೆಯಲಿದೆ ಎಂದು ಅವ ಪುತ್ರಿ ಪ್ರತಿಮಾ ಪ್ರಸಾದ್‌ ತಿಳಿಸಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆ ತನಕ ಮನೆಯಲ್ಲಿ ಅಂತಿಮನಮನ ಸಲ್ಲಿಸಲಾಗುವುದು. ನಂತರ ಅಶೋಕಪುರಂನ ಎನ್‌ಟಿಎಂ ಶಾಲಾ ಆವರಣದಲ್ಲಿ ಅಂತಿಮ ನಮನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇಡೀ ರಾತ್ರಿ ಅಂತಿಮ ನಮನಕ್ಕೆ ಅವಕಾಶ ನೀಡಲಾಗುತ್ತದೆ. ನಾಳೆ ಬೆಳಗ್ಗೆ 10 ಗಂಟೆಗೆ ಅಶೋಕಪುರಂನಲ್ಲಿ ಮೆರ���ಣಿಗೆ ಬಳಿಕ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
8
+ ಸಂತಾಪ:ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು- ಚಾಮರಾಜನಗರ ಭಾಗದ ದಲಿತ ನಾಯಕ ವಿ.ಶ್ರೀನಿವಾಸ ಪ್ರಸಾದ್‌ ನಿಧನಕ್ಕೆ ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು ಸಂತಾಪ ಸೂಚಿಸಿದ್ದಾರೆ.ಚಾಮರಾಜನಗರದ ಹಿರಿಯ ನಾಯಕ ಹಾಗೂ ಸಂಸದರಾದ ವಿ.ಶ್ರೀನಿವಾಸಪ್ರಸಾದ್‌ ಅವರ ನಿಧನದಿಂದ ನನಗೆ ಅತೀವ ನೋವಾಗಿದೆ. ಅವರು ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದರು, ಬಡವರು, ದೀನದಲಿತರು ಮತ್ತು ಹಿಂದುಳಿದವರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು.
9
+ ತಮ್ಮ ಸಮಾಜ ಸೇವೆಗಳಿಂದಲೇ ಬಹಳ ಜನಪ್ರಿಯರಾಗಿದ್ದರು. ಅವರ ಅಗಲಿಕೆಯ ನೋವನ್ನು ಕುಟುಂಬ ವರ್ಗದವರಿಗೆ ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ.
10
+ ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು, ಶ್ರೀನಿವಾಸ್‌ ಪ್ರಸಾದ್‌ ಅವರು ನಿಧನರಾದ ವಾರ್ತೆ ಕೇಳಿ ಬಹಳ ದುಃಖವಾಗಿದೆ. ಅವರ ಅಗಲಿಕೆ ರಾಜಕೀಯಕ್ಕೆ ತುಂಬಲಾರದ ನಷ್ಟ. ಅವರ ಅಗಲಿಕೆ ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
11
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೋಸ್ಟ್ ಮಾಡಿ, ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್‌ ಅವರ ಸಾವು ನನ್ನನ್ನು ಆಘಾತಕ್ಕೀಡು ಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ ಎಂದು ಮರುಗಿದ್ದಾರೆ.
12
+ ದೀರ್ಘಕಾಲ ಕಾಂಗ್ರೆಸ್‌ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್‌ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ ಎಂದು ಬರೆದಿದ್ದಾರೆ.ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರ ಅಭಿಮಾನಿ ಬಳಗದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಹೇಳಿದ್ದಾರೆ.
eesanje/url_46_165_10.txt ADDED
@@ -0,0 +1,9 @@
 
 
 
 
 
 
 
 
 
 
1
+ ಪ್ರಜ್ವಲ್‌ ರೇವಣ್ಣ ವಿರುದ್ಧ ಕಾಂಗ್ರೆಸ್‌ನ ನಾಯಕಿಯರ ಆಕ್ರೋಶ, ಕಠಿಣ ಶಿಕ್ಷೆಗೆ ಆಗ್ರಹ
2
+ ಬೆಂಗಳೂರು,ಏ.28-ಹಾಸನದ ಸಂಸದರು ಭಾಗಿಯಾಗಿದ್ದಾರೆಂದು ಹೇಳಲಾದ ಪ್ರಕರಣದ ತನಿಖೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಕಾಂಗ್ರೆಸ್‌ನ ನಾಯಕಿಯರು ಆಗ್ರಹಿಸಿದ್ದಾರೆ.
3
+ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿಯ ಪ್ರಧಾನ ಕಾರ್ಯದರ್ಶಿ ಮಂಜುಳಾ ನಾಯ್ಡು, ಕವಿತಾ ರೆಡ್ಡಿ, ಭವ್ಯಾ ನರಸಿಂಹಮೂರ್ತಿ ಸೇರಿದಂತೆ ಹಲವರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
4
+ ಪ್ರಜ್ವಲ್‌ ರೇವಣ್ಣ ಅತ್ಯಂತ ಪ್ರಭಾವಿ ಕುಟುಂಬದಿಂದ ಬಂದವರು, ಅವರ ತಾತ ಪ್ರಧಾನಿಯಾಗಿದ್ದರು, ಚಿಕ್ಕಪ್ಪ ಮುಖ್ಯಮಂತ್ರಿಯಾಗಿದ್ದರು, ತಂದೆ ಸಚಿವರಾಗಿದ್ದರು, ಪ್ರಜ್ವಲ್‌ ರೇವಣ್ಣ ಖುದ್ದು ಸಂಸದರಾಗಿದ್ದಾರೆ. ಅವರ ವಿರುದ್ಧ ಹೋರಾಟ ನಡೆಸುವುದು ಸಾಮಾನ್ಯ ಮಹಿಳೆಯರಿಗೆ ಸುಲಭದ ವಿಚಾರವಲ್ಲ. ಹೀಗಾಗಿ ಸರ್ಕಾರ ಸಂತ್ರಸ್ತ ಮಹಿಳೆಯರಿಗೆ ಮತ್ತು ಅವರ ಕುಟುಂಬಕ್ಕೆ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.
5
+ ಹಾಸನ ಜಿಲ್ಲೆಯ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯರ ಮಾನಹಾನಿಗೆ ಕಾರಣರಾದವರ ವಿಚಾರವಾಗಿ ವಿಶೇಷ ತನಿಖಾ ತಂಡ ರಚಿಸುವಂತೆ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ ಬರೆಯಲಾಗಿತ್ತು. ಈ ಹಿನ್ನೆಲೆ, ತಂಡ ರಚನೆಗೆ ಸರ್ಕಾರ ನಿರ್ಧರಿಸಿದೆ.####://./
6
+ ಈ ಪ್ರಕರಣದಲ್ಲಿ ರಾಜಕೀಯ ಹಸ್ತಕ್ಷೇಪವಿಲ್ಲ ಎಂದ ಕವಿತಾ ರೆಡ್ಡಿಯವರು ರೇವಣ್ಣ ಜರ್ಮನಿಗೆ ಪರಾರಿಯಾಗಿದ್ದಾರೆ, ಜೆಡಿಎಸ್‌-ಬಿಜೆಪಿ ನಾಯಕರು ಈ ಬಗ್ಗೆ ಏಕೆ ಪ್ರತಿಕ್ರಿಯೆ ನೀಡುತ್ತಿಲ್ಲ? ಎಂದು ಪ್ರಶ್ನಿಸಿದರು.
7
+ ಮಂಜುಳಾ ನಾಯ್ಡು ಮಾತನಾಡಿ, ಪ್ರಧಾನಿಯವರು ಮಹಿಳೆಯರ ಮಾಂಗಲ್ಯ ಸರ ಕಿತ್ತುಕೊಳ್ಳುತ್ತಾರೆ ಎಂದು ಮಾತನಾಡುತ್ತಾರೆ, ಇಂತಹ ವಿಚಾರದ ಬಗ್ಗೆ ಏಕೆ ಪ್ರತಿಕ್ರಿಯಿಸುವುದಿಲ್ಲ? ಎಂದು ಪ್ರಶ್ನಿಸಿದರು.
8
+ ಭವ್ಯ ನರಸಿಂಹಮೂರ್ತಿಯವರು, ಪ್ರಜ್ವಲ್‌ ರೇವಣ್ಣ ಅವರಿಗೆ ಶಿಕ್ಷೆಯಾಗುವುದನ್ನು ನೋಡಿ ಬೇರೆ ಯಾರೂ ಇಂತಹ ಕೃತ್ಯಗಳಿಗೆ ಯೋಚಿಸಬಾರದು, ಆ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
9
+ ಈ ನಡುವೆ ರೇಸ್‌ಕೋರ್ಸ್‌ ರಸ್ತೆಯ ಕಾಂಗ್ರೆಸ್‌ ಕಚೇರಿ ಬಳಿ ಪಕ್ಷದ ಕಾರ್ಯಕರ್ತರು ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರತಿಭಟನೆ ನಡೆಸಿ, ಪ್ರತಿಕೃತಿಯನ್ನು ದಹಿಸಿದರು.
eesanje/url_46_165_11.txt ADDED
@@ -0,0 +1,5 @@
 
 
 
 
 
 
1
+ ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ
2
+ ಬೆಂಗಳೂರು,ಏ.28-ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ ವಿಚಾರವಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಿಂದ ತಲೆ ತಗ್ಗಿಸುವಂತಾಗಿರುವುದು ತೀವ್ರ ನೋವಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಮಹಿಳೆ ನೀಡಿದ ದೂರು ಆಧರಿಸಿ ಮಹಿಳಾ ಆಯೋಗ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದೆ. ಮುಖ್ಯಮಂತ್ರಿಯವರೇ ಖುದ್ದಾಗಿ ನಿಗಾ ವಹಿಸಿದ್ದು, ಗೃಹಸಚಿವರು ಉಸ್ತುವಾರಿ ವಹಿಸಿದ್ದಾರೆ ಎಂದರು.
4
+ ಮಾಧ್ಯಮಗಳಿಂದ ತಿಳಿದಿರುವ ಮಾಹಿತಿ ಪ್ರಕಾರ, ಪ್ರಜ್ವಲ್‌ ರೇವಣ್ಣ ದೇಶ ಬಿಟ್ಟು ಪರಾರಿಯಾಗಿದ್ದಾರೆ. ಇದು ಅಕ್ಷಮ್ಯ ಅಪರಾಧ. ಇಡೀ ದೇಶವೇ ನಾಚಿಕೆಪಡುವಂತಹ ವಿಚಾರ. ಸಂಸದರಾಗಿರುವವರು, ಮಾಜಿ ಪ್ರಧಾನಿಯವರ ಮೊಮ್ಮಗ ಈ ರೀತಿ ಕೆಲಸ ಮಾಡಿ ತಲೆ ಮರೆಸಿಕೊಂಡಿರುವುದು ನಾಚಿಕೆಗೇಡು ಎಂದರು.
5
+ ಬಿಜೆಪಿ ನಾಯಕರು ಈ ವಿಚಾರವಾಗಿ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂದು ಕಾದು ನೋಡುತ್ತೇನೆ. ಇಲ್ಲಿ ಮಹಿಳೆಯರ ಘನತೆ ಅತೀ ಮುಖ್ಯವಾದ ವಿಚಾರ. ಕಾನೂನು ತನ್ನದೇ ಆದ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.
eesanje/url_46_165_12.txt ADDED
@@ -0,0 +1,7 @@
 
 
 
 
 
 
 
 
1
+ ಪ್ರಜ್ವಲ್‌ ರೇವಣ್ಣ ವಿರುದ್ಧದ ಆರೋಪಗಳ ಕುರಿತು ಗೃಹಸಚಿವ ಪರಮೇಶ್ವರ್‌ ಪ್ರತಿಕ್ರಿಯೆ
2
+ ಬೆಂಗಳೂರು,ಏ.28-ಸಂತ್ರಸ್ತ ಮಹಿಳೆಯರ ದೂರು ಆಧರಿಸಿ ಹಾಸನದ ಸಂಸದರ ವಿರುದ್ಧ ಕೇಳಿಬಂದಿರುವ ದೂರು ತನಿಖೆಗೆ ವಿಶೇಷ ದಳವನ್ನು ರಚಿಸಲಾಗಿದ್ದು, ಶಂಕಿತ ಆರೋಪಿ ದೇಶ ಬಿಟ್ಟು ಪರಾರಿಯಾಗಿದ್ದರೆ ಆ ಸಂಬಂಧಪಟ್ಟಂತೆ ಎಸ್‌ಐಟಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತ ಮಹಿಳೆಯರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಅದನ್ನು ಆಧರಿಸಿ ಮಹಿಳಾ ಆಯೋಗ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದೆ. ಪತ್ರದ ಹಿನ್ನೆಲೆಯಲ್ಲಿ ಸರ್ಕಾರ ವಿಶೇಷ ತನಿಖಾ ದಳ ರಚಿಸಲಿದೆ ಎಂದರು.
4
+ ಇಂದು ಶೀಘ್ರವೇ ಎಸ್‌ಐಟಿ ರಚನೆ ಕುರಿತಂತೆ ಅಧಿ ಕೃತ ಆದೇಶ ಪ್ರಕಟಿಸಲಾಗುವುದು. ಒಮ್ಮೆ ತನಿಖಾ ದಳ ಅಸ್ತಿತ್ವಕ್ಕೆ ಬಂದ ಬಳಿಕ ತನಿಖೆಯ ಅಗತ್ಯ ಕುರಿತು ಅದರ ಮುಖ್ಯಸ್ಥರಾಗಿರುವ ಹಿರಿಯ ಅಧಿ ಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ಸರ್ಕಾರ ಯಾವುದೇ ನಿರ್ದೇಶನಗಳನ್ನು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
5
+ ತನಿಖೆಯಲ್ಲಿ ಯಾವ ರೀತಿಯ ವರದಿ ಬರುತ್ತದೆ ಎಂಬುದನ್ನು ಪರಿಶೀಲಿಸಿ ಸರ್ಕಾರ ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಿದೆ. ಸಾರ್ವಜನಿಕವಾಗಿ ಬೆಳಕಿಗೆ ಬಂದಿರುವ ವಿಡಿಯೋ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.
6
+ ಈ ನಡುವೆ ಪ್ರಜ್ವಲ್‌ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ ಎಂಬ ಸುದ್ದಿ ಬಂದಿದೆ. ಕಾನೂನು ಪ್ರಕಾರ ಎಸ್‌ಐಟಿ ಅಗತ್ಯವಾದ ಸೂಕ್ತ ಕ್ರಮ ಕೈಗೊಳ್ಳಲಿದೆ. ವಿದೇಶದಿಂದ ವಾಪಸ್‌ ಕರೆತರುವ ಕೆಲಸವನ್ನೂ ಎಸ್‌ಐಟಿ ಮಾಡಲಿದೆ ಎಂದು ಹೇಳಿದರು.
7
+ ತಾವು ಸೇರಿದಂತೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಈವರೆಗೂ ಯಾವ ಸಂತ್ರಸ್ತ ಮಹಿಳೆಯರೂ ತಮ್ಮನ್ನು ಭೇಟಿ ಮಾಡಿಲ್ಲ. ಸರ್ಕಾರ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿಯೇ ಎಸ್‌ಐಟಿ ರಚಿಸಿದ್ದೇವೆ ಎಂದರು.
eesanje/url_46_165_2.txt ADDED
@@ -0,0 +1,6 @@
 
 
 
 
 
 
 
1
+ ಹುಬ್ಬಳಿಯಲ್ಲಿ ತಲೆಮರೆಸಿಕೊಳ್ಳಲು ಯತ್ನಿಸಿದ್ದ ಬಂಧಿತ ಸಾಹಿಲ್‌ಖಾನ್‌
2
+ ಮುಂಬೈ,ಏ.29-ಮಹದೇವ್‌ ಬೆಟ್ಟಿಂಗ್‌ಆ್ಯಪ್‌ ಪ್ರಕರಣದಲ್ಲಿ ಬಂಧಿತನಾಗಿರುವ ಸಾಹಿಲ್‌ಖಾನ್‌ ಪೊಲೀಸರಿಗೆ ಸಿಕ್ಕಿಬೀಳುವ ಮುನ್ನ ಕರ್ನಾಟಕದಲ್ಲೂ ತಲೆಮರೆಸಿಕೊಳ್ಳಲು ಯತ್ನಿಸಿದ್ದ ಎಂಬ ವಿಷಯ ತಡವಾಗಿ ಬೆಳಕಿಗೆ ಬಂದಿದೆ.
3
+ ಸಾಹಿಲ್‌ಖಾನ್‌ಗೆ ನಿರೀಕ್ಷಣಾ ಜಾಮೀನು ದೊರೆಯದೆ ಇದ್ದ ಸಂದರ್ಭದಲ್ಲಿ ಆತ ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ವೇಷ ಮರೆಸಿಕೊಂಡು ಐದು ರಾಜ್ಯಗಳಲ್ಲಿ 1800 ಕಿ.ಮೀಗೂ ಹೆಚ್ಚು ದೂರ ಸಂಚರಿಸಿದ್ದ ಎನ್ನಲಾಗಿದೆ.
4
+ ಕೊನೆಗೂ ಆತ ಛತ್ತೀಸ್‌ಘಡದ ಜಗದಲ್ಪುರದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ. ಜಾಮೀನು ಸಿಗುವುದಿಲ್ಲ ಎಂದು ತಿಳಿಯುತ್ತಿದ್ದಂತೆ ಆತ ಸೀದಾ ಕರ್ನಾಟಕದ ಹುಬ್ಬಳ್ಳಿಗೆ ತೆರಳಿ ಅಲ್ಲಿಂದ ಹೈದರಾಬಾದ್‌ಗೆ ಪ್ರಯಾಣ ಬೆಳೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಖಾನ್‌ ವೇಷ ಬದಲಿಸಿ ಸ್ಕಾರ್ಫ್‌ ಹಿಂದೆ ತನ್ನ ಮುಖವನ್ನು ಮರೆಮಾಚಿಕೊಂಡು ಓಡಾಡುತ್ತಿದ್ದ ಎಂದು ವರದಿಯಾಗಿದೆ.
5
+ ಆದಾಗ್ಯೂ, ಪೊಲೀಸರು ಆತ ಹೈದರಾಬಾದ್‌ನಲ್ಲಿರುವುದುನ್ನು ಪತ್ತೆಹಚ್ಚಿದ್ದರು ಹಾಗೂ ಅಲ್ಲಿಂದ ಛತ್ತೀಸ್‌ಘಢದ ಕಡೆಗೆ ಪಲಾಯನ ಮಾಡಿರುವುದನ್ನು ಕಂಡು ಹಿಡಿದು ಸಿನಿಮಿಯ ಶೈಲಿಯಲ್ಲಿ ಆತನನ್ನು ಬಂಧಿಸಲಾಗಿದೆ.
6
+ ಖಾನ್‌ ಅವರು ಲಯನ್‌ ಬುಕ್‌ ಮತ್ತು ಲೋಟಸ್‌ 24/7 ನಂತಹ ಬೆಟ್ಟಿಂಗ್‌ ಪ್ಲಾಟ್‌ಫಾರ್ಮ್‌ಗಳ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ. ಆದಾಗ್ಯೂ, ಖಾನ್‌ ಅವರು ಜೂಜಿನ ವೇದಿಕೆಯೊಂದಿಗೆ ನೇರ ಸಂಬಂಧವನ್ನು ಹೊಂದಿಲ್ಲ ಎಂದು ವಾದಿಸುತ್ತಿದ್ದಾರೆ.
eesanje/url_46_165_3.txt ADDED
@@ -0,0 +1,6 @@
 
 
 
 
 
 
 
1
+ ಚಾಮರಾಜನಗರ ಲೋಕಸಭಾ ಕ್ಷೇತ್ರದ ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ
2
+ ಬೆಂಗಳೂರು, ಏ. 29 (ಪಿಟಿಐ) :ಕರ್ನಾಟಕದ ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹನೂರಿನ ಇಂಡಿಗನತ್ತ ಗ್ರಾಮದ ಒಂದು ಮತಗಟ್ಟೆಯಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆಗಳ ನಡುವೆ ಇಂದು ಮರುಮತದಾನ ನಡೆಯಿತು.
3
+ ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಗೊಳ್ಳಲಿದೆ.ಚಾಮರಾಜನಗರ ಜಿಲ್ಲೆಯ ಇಂಡಿಗನಾಥ ಗ್ರಾಮದ ಮತಗಟ್ಟೆಯಲ್ಲಿ ಎ. 26ರಂದು ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳಿಗೆ ಹಾನಿಯಾಗಿದ್ದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮರು ಮತದಾನಕ್ಕೆ ಆದೇಶಿಸಿತ್ತು.
4
+ ಜಿಲ್ಲಾಡಳಿತದ ಪ್ರಕಾರ, ಸಮರ್ಪಕ ಮೂಲಸೌಕರ್ಯ ಅಭಿವೃದ್ಧಿಯ ಕೊರತೆಯನ್ನು ಮುಂದಿಟ್ಟು ಗ್ರಾಮಸ್ಥರು ಮತದಾನ ಬಹಿಷ್ಕರಿಸಲು ಈ ಹಿಂದೆ ನಿರ್ಧರಿಸಿದ್ದರು. ಆದರೆ, ಸ್ಥಳೀಯ ಅಧಿಕಾರಿಗಳ ಭರವಸೆ ಮತ್ತು ಪ್ರಯತ್ನದ ನಂತರ ಮತದಾನ ನಡೆಯುತ್ತಿದೆ.
5
+ ಪ್ರಾಥಮಿಕ ಮಾಹಿತಿಯ ಪ್ರಕಾರ, ಒಂದು ಗುಂಪು ಮತದಾನ ಮಾಡಲು ಬಯಸಿದ್ದರೆ, ಇನ್ನೊಂದು ಗುಂಪು ಬಹಿಷ್ಕಾರಕ್ಕೆ ಉತ್ಸುಕವಾಗಿತ್ತು, ಇದು ಅವರ ನಡುವೆ ಘರ್ಷಣೆಗೆ ಕಾರಣವಾಯಿತು, ಈ ಸಮಯದಲ್ಲಿ ಅವರು ಇವಿಎಂಗಳನ್ನು ಹಾನಿಗೊಳಿಸಿದರು ಮತ್ತು ಕಲ್ಲು ತೂರಾಟದಲ್ಲಿ ತೊಡಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
6
+ ಚಾಮರಾಜನಗರ ಕ್ಷೇತ್ರದ ಚುನಾವಣಾಧಿಕಾರಿ ಮತ್ತು ಸಾಮಾನ್ಯ ವೀಕ್ಷಕರು ಸಲ್ಲಿಸಿದ ವರದಿಗಳ ಆಧಾರದ ಮೇಲೆ ಮತ್ತು ಎಲ್ಲಾ ವಸ್ತುಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು, ಮತಗಟ್ಟೆ ಸಂಖ್ಯೆ 146 ರಲ್ಲಿ ಮರು ಮತದಾನ ನಡೆದಿದೆ.
eesanje/url_46_165_4.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಯುಪಿಎ ಅವಧಿಯಲ್ಲಿ ಎಷ್ಟು ಅನುದಾನ ನೀಡಿತ್ತು ಎಂಬುದನ್ನು ಬಹಿರಂಗಪಡಿಸಿ : ಆರ್.ಅಶೋಕ್ ಸವಾಲ್
2
+ ಬೆಂಗಳೂರು,ಏ.28-ಹಿಂದಿನ ಡಾ.ಮನಮೋಹನಸಿಂಗ್‌ ಸರ್ಕಾರದ ಅವಧಿಯಲ್ಲಿ ಕರ್ನಾಟಕಕ್ಕೆ ಯುಪಿಎ ಎಷ್ಟು ಅನುದಾನವನ್ನು ಕೇಂದ್ರದಿಂದ ಬಿಡುಗಡೆ ಮಾಡಿತ್ತು ಎಂಬುದನ್ನು ಕಾಂಗ್ರೆಸ್‌ ನಾಯಕರು ಶ್ವೇತಪತ್ರ ಹೊರಡಿಸಲಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಬಹಿರಂಗ ಸವಾಲು ಹಾಕಿದ್ದಾರೆ.
3
+ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯುಪಿಎ ಕೊಟ್ಟ ಪರಿಹಾರ ನೋಡಿದರೆ ಸ್ಮಶಾನದಲ್ಲಿ ಬಾಯಿ ಬಡಿದುಕೊಳ್ಳಬೇಕು. ಸಿದ್ದರಾಮಯ್ಯನವರೇ ನಾವು 4,860 ಕೋಟಿ ರೂ. ಪರಿಹಾರ ಕೇಳಿದ್ದೇವೆ ಅಂತ ಅಂತ ಹೇಳಿದ್ದಾರೆ. ಕೇಂದ್ರ 3,454 ಕೋಟಿ ರೂ. ನೀಡಿದೆ. ಸಿದ್ದರಾಮಯ್ಯಗೆ ಎರಡು ನಾಲಿಗೆ ಇದೆಯೋ ಹತ್ತು ನಾಲಿಗೆ ಇದೆಯೋ? ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಇಬ್ಬರೂ ಸುಳ್ಳು ರಾಮಯ್ಯ, ಸುಳ್ಳು ಕುಮಾರ್‌, ಬುರುಡೆ ಕುಮಾರ್‌ ಎಂದು ವಾಗ್ದಾಳಿ ನಡೆಸಿದರು.
4
+ ಈ ವೇಳೆ ಯುಪಿಎ ಮತ್ತು ಎನ್‌ಡಿಎ ಅವಧಿಯಲ್ಲಿ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ದಾಖಲೆ ರಿಲೀಸ್‌ ಮಾಡಿ ವಾಗ್ದಾಳಿ ನಡೆಸಿದರು. ಕಳೆದ ಹತ್ತು ವರ್ಷಗಳ ಯುಪಿಎ ಅವಧಿಯಲ್ಲಿ ನಾವು 44,838.59 ಕೋಟಿ ರೂ. ಕೇಳಿದ್ದರೆ ಮನೆಹಾಳರು ಕೊಟ್ಟಿದ್ದು ಕೇವಲ 3,579.22 ಕೋಟಿ ರೂ. ಮಾತ್ರ. ಕಳೆದ ಹತ್ತು ವರ್ಷದಲ್ಲಿ ಎನ್‌ಡಿಎ ಸರ್ಕಾರದ ಬಳಿ 25,728 ಕೋಟಿ ರೂ. ಕೇಳಿದ್ದರೆ 1,1482 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಅಂಕಿ ಅಂಶ ಬಿಡುಗಡೆ ಮಾಡಿ ಅಕೋಶ ಹೊರಹಾಕಿದರು.
5
+ ಕೇಂದ್ರ ನೀಡಿದ ಬರ ಪರಿಹಾರದಲ್ಲಿ ಲೂಟಿ ಹೊಡೆಯಬಾರದು. ನಾವು ಕೇಂದ್ರದ ಹಣಕ್ಕೆ ಕಾವಲು ಕಾಯುತ್ತೇವೆ. ಕೇಂದ್ರ ಎಷ್ಟು ಹಣವನ್ನು ಬಿಡುಗಡೆ ಮಾಡಿದೆಯೋ, ನೀವೂ ಅಷ್ಟೇ ಬಿಡುಗಡೆ ಮಾಡಿ. ನೀವು ಅಷ್ಟೇ ಹಣ ಬಿಡುಗಡೆ ಮಾಡಲು ಸಾಧ್ಯವಾಗದೇ ಇದ್ದರೆ ನಿಮ್ಮದು ಪಾಪರ್‌ ಸರ್ಕಾರ. ಯೋಗ್ಯತೆ, ಮಾನ ಮರ್ಯಾದೆ ಇದ್ದರೆ ಕೇಂದ್ರದಷ್ಟೇ ನೀವೂ ಈಗ ಬರ ಪರಿಹಾರ ಬಿಡುಗಡೆ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಅಶೋಕ್‌ ಸವಾಲು ಎಸೆದರು.
6
+ ಯುಪಿಎ ಅವಧಿಯಲ್ಲಿ ಎಷ್ಟು? :2004-05 ರಲ್ಲಿ ಬರಗಾಲ ಇದ್ದಾಗ ಕರ್ನಾಟಕ 1,147.70 ಕೋಟಿ ರೂ. ಕೇಳಿತ್ತು. ಆದರೆ ಯುಪಿಎ ಸರ್ಕಾರ ನೀಡಿದ್ದು ಕೇವಲ 131 ಕೋಟಿ ರೂ. 2005-06ರಲ್ಲಿ ಅತಿವೃಷ್ಟಿಗೆ 4,297 ಕೋಟಿ ರೂ. ಕೇಳಲಾಗಿತ್ತು. ಯುಪಿಎ ನೀಡಿದ್ದು 358 ಕೋಟಿ ರೂ.. 2006-07ರಲ್ಲಿ ಪ್ರವಾಹ/ಬರಗಾಲಕ್ಕೆ 2.858 ಕೋಟಿ ರೂ. ಕೇಳಲಾಗಿತ್ತು. ನೀಡಿದ್ದು 226 ಕೋಟಿ ರೂ. ಮಾತ್ರ.2007-08ರಲ್ಲಿ ಜುಲೈನಲ್ಲಿ ಪ್ರವಾಹ ವೇಳೆ 406 ಕೋಟಿ ರೂ. ಕೇಳಿದ್ರೆ ಕೊಟ್ಟಿದ್ದು ಶೂನ್ಯ.
7
+ ಇದೇ ವರ್ಷದ ಆಗಸ್‌್ಟನಲ್ಲಿ 1,510 ರೂ. ಕೇಳಿದ್ರೆ ಕೊಟ್ಟಿದ್ದು ಚಿಪ್ಪು. ಅದೇ ವರ್ಷದ ಅಕ್ಟೋಬರ್‌ನಲ್ಲಿ 3,941ಕೋಟಿ ರೂ. ಕೇಳಲಾಗಿತ್ತು, ನೀಡಿದ್ದು 178 ಕೋಟಿ ರೂ.2008-09 ರಲ್ಲಿ ಬರಕ್ಕೆ 516 ಕೋಟಿ ರೂ ಕೇಳಿದರೆ, ಕೊಟ್ಟಿದ್ದು ಕೇವಲ 1 ಕೋಟಿ. 2009-10 ರಲ್ಲಿ ಪ್ರವಾಹ, ಬರಕ್ಕೆ 7,759 ಕೋ���ಿ ರೂ. ಹಣವನ್ನು ಬಿಜೆಪಿ ಸರ್ಕಾರ ಕೇಳಿತ್ತು. ಆದರೆ ಅವರು ನೀಡಿದ್ದು 957 ಕೋಟಿ ರೂ. ಮಾತ್ರ. 2010-11 ರಲ್ಲಿ ಪ್ರವಾಹಕ್ಕೆ ಸರ್ಕಾರ 1045 ಕೋಟಿ ರೂ. ಕೇಳಿತ್ತು. ಆದರೆ ಒಂದು ರೂ. ನೀಡಿಲ್ಲ.
8
+ 2011-12 ರಲ್ಲಿ 6,415 ಕೋಟಿ ರೂ. ಕೇಳಿದ್ದಕ್ಕೆ 429 ಕೋಟಿ ರೂ. ನೀಡಿತ್ತು. 2012-13 ರಲ್ಲಿ ಬರಕ್ಕೆ 11,489 ಕೋಟಿ ಕೇಳಿದರೆ, 397 ಕೋಟಿ ರೂ. ಸಿಕ್ಕಿತ್ತು. 2013-14 ರಲ್ಲಿ 2,258 ಕೋಟಿ ಕೇಳಿದ್ದರೆ ಕೊಟ್ಟಿದ್ದು 668 ಕೋಟಿ ಮಾತ್ರ ಎಂದು ಅಶೋಕ್‌ ಹೇಳಿದರು.
9
+ ಎನ್‌ಡಿಎ ಅವಧಿಯಲ್ಲಿ ಎಷ್ಟು? :2015-16 ರಲ್ಲಿ 3,831 ಕೋಟಿ ರೂ. ಕೇಳಿದ್ದಕ್ಕೆ 1,853 ಕೋಟಿ ರೂ. ನೀಡಿತ್ತು. 2016-17 ರಲ್ಲಿ ಬರ ಇದ್ದಾಗ 4,703 ಕೋಟಿ ರೂ. ಕೇಳಿದ್ದರೆ ಸರ್ಕಾರ 2,293 ಕೋಟಿ ರೂ. ವಿತರಿಸಿತ್ತು. 2017-18 ರಲ್ಲಿ 3,690 ಕೋಟಿ ರೂ. ಕೇಳಿದ್ದರೆ 1,141 ಕೋಟಿ ರೂ. ನೀಡಿತ್ತು.
10
+ 2018-19 ರಲ್ಲಿ ರಾಜ್ಯ 2,434 ಕೋಟಿ ರೂ. ಕೇಳಿದ್ದರೆ ಸರ್ಕಾರ 1,248 ಕೋಟಿ ರೂ. ನೀಡಿತ್ತು. 2019-20 ರಲ್ಲಿ 3,837 ಕೋಟಿ ರೂ. ಕೇಳಿದ್ದರೆ 3,412 ಕೋಟಿ ರೂ. ಸಿಕ್ಕಿತ್ತು. 2020-21 ರಲ್ಲಿ ಪ್ರವಾಹ ಬಂದಾಗ 2,242.48 ಕೋಟಿ ರೂ. ಕೇಳಿದ್ದಕ್ಕೆ 1,480 ಕೋಟಿ ರೂ. ನೀಡಿತ್ತು.
11
+ 2021-22 ರಲ್ಲಿ ಪ್ರವಾಹ, ಭೂಕುಸಿತ ವೇಳೆ 2122 ಕೋಟಿ ರೂ. ಕೇಳಿದ್ದರೆ ಸರ್ಕಾರ 2,255.8 ಕೋಟಿ ರೂ. ನೀಡಿತ್ತು. 2022-23 ರಲ್ಲಿ 1944 ಕೋಟಿ ರೂ. ಕೇಳಿದ್ದರೆ 1,603 ಕೋಟಿ ರೂ. ಸಿಕ್ಕಿತ್ತು. 2023-24 ರಲ್ಲಿ18171 ಕೋಟಿ ರೂ. ಕೇಳಿದ್ದರೆ 4,151.42 ಕೋಟಿ ರೂ.(ಎನ್‌ಡಿಆರ್‌ಎಫ್‌+ಎಸ್‌ಡಿಆರ್‌ಎಫ್‌ ಸೇರಿ) ಸಿಕ್ಕಿದೆ ಎಂದು ಅಶೋಕ್‌ ತಿಳಿಸಿದರು.
eesanje/url_46_165_5.txt ADDED
@@ -0,0 +1,4 @@
 
 
 
 
 
1
+ ರಾಯಚೂರಲ್ಲಿ ಬಿಸಿಲ ತಾಪಕ್ಕೆ ಇಬ್ಬರು ಮಕ್ಕಳ ಸಾವು
2
+ ರಾಯಚೂರು, ಏ.28-ಬಿಸಿಲ ತಾಪಕ್ಕೆ ಬಸವಳಿದು ನಿತ್ರಾಣಗೊಂಡು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಚಿಕ್ಕಸುಗೂರು ಗ್ರಾಮದಲ್ಲಿ ನಡೆದಿದೆ.ರಣಬಿಸಿಲಿನ ತಾಪದಿಂದ ಹೈರಾಣಾಗಿರುವ ಜನರು ಮನೆಯಿಂದ ಹೊರಬರಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
3
+ ಚಿಕ್ಕಸುಗೂರು ಗ್ರಾಮದಲ್ಲಿ ಹುಸೇನಮ್ಮ-ಮಾರುತಿ ದಂಪತಿಯ ಮಕ್ಕಳಾದ ಆರತಿ (9) ಮತ್ತು ಪ್ರಿಯಾಂಕಾ (7) ನಿತ್ರಾಣಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಮತ್ತೊಬ್ಬ ಪುತ್ರ ಲಕ್ಕಪ್ಪ (5)ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
4
+ ಈ ನಡುವೆ ಕೆಲವರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಬಿಸಿಲ ಬೇಗೆ ಹಿನ್ನೆಲೆಯಲ್ಲಿ ಕೃಷ್ಣಾನದಿಯ ನೀರು ಕುಡಿಯುತ್ತಿದ್ದ ಈ ಕುಟುಂಬದವರು ಅನಾರೋಗ್ಯಕ್ಕೀಡಾಗಿದ್ದರು ಎಂದು ಅಧಿ ಕಾರಿಗಳು ತಿಳಿಸಿದ್ದಾರೆ. ಆದರೆ, ಬೇಸಿಗೆಯ ಬೇಗೆಗೆ ಇಬ್ಬರು ಮಕ್ಕಳು ಮೃತಪಟ್ಟಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ.
eesanje/url_46_165_6.txt ADDED
@@ -0,0 +1,16 @@
 
 
 
 
 
 
 
 
 
 
 
 
 
 
 
 
 
1
+ ಜನರಿಗೆ ರಕ್ಷಣೆ ಕೊಡಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಿ : ಸಿದ್ದು ಸರ್ಕಾರದ ವಿರುದ್ಧ ಮೋದಿ ಘರ್ಜನೆ
2
+ ಬೆಂಗಳೂರು,ಏ.28-ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದ್ದು ರಾಜ್ಯದಲ್ಲಿ ಪರಿಸ್ಥಿತಿ ಚಿಂತಾಜನಕವಾಗಿದೆ. ಜನರಿಗೆ ರಕ್ಷಣೆ ಕೊಡಲು ನಿಮ್ಮಿಂದ ಸಾಧ್ಯವಾಗದಿದ್ದರೆ ಅಧಿಕಾರದಿಂದ ಬಿಟ್ಟು ತೊಲಗಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಆಡಳಿತರೂಢ ಕಾಂಗ್ರೆಸ್‌ ಸರ್ಕಾರಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ.
3
+ ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಬೆಳಗಾವಿ ಮತ್ತು ಚಿಕ್ಕೋಡಿಯ ಸಹೋದರ ಸಹೋದರಿಯರಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿ ಮಾತು ಆರಂಭಿಸಿದ ಮೋದಿ, ತಾಯಿ ಭುವನೇಶ್ವರಿ ಮತ್ತು ಸವದತ್ತಿ ಯಲ್ಲಮ್ಮಾಗೆ ಪ್ರಣಾಮ ಸಲ್ಲಿಸುತ್ತೇನೆ. ಕರ್ನಾಟಕದ ಎಲ್ಲ ಮತದಾರರಿಗೆ ಅಭಿನಂದನೆಗಳು.
4
+ ನಾನು ಕರ್ನಾಟಕದಲ್ಲಿ ಹೋದಲ್ಲೆಲ್ಲ ಮತ್ತೊಮ್ಮೆ ಮೋದಿ ಸರಕಾರ ಬರಬೇಕೆಂದು ಬಯಸುತ್ತಿದ್ದಾರೆ. ನಾವು ಛತ್ರಪತಿ ಶಿವಾಜಿ, ಭಗವಾನ್‌ ಬಸವೇಶ್ವರ ಅವರ ಅನುಯಾಯಿಗಳು. ಶಿವಾಜಿಯವರು ಪ್ರಜೆಗಳಿಗಾಗಿ ಸಂಘರ್ಷ ಮಾಡಿದವರು, ಬಸವೇಶ್ವರರು ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಮಹತ್ವ ಸಾರಿದವರು. ಭಾರತ ಪ್ರಜಾಪ್ರಭುತ್ವದ ತಾಯಿಯಾಗಿದೆ ಎಂದು ಹೇಳಿದರು.
5
+ ತಮ್ಮ 30 ನಿಮಿಷಗಳ ಭಾಷಣದಲ್ಲಿ ಮೋದಿ ಅವರು, ಇತ್ತೀಚಿಗೆ ಕರ್ನಾಟದಲ್ಲಿ ಸಂಭವಿಸಿದ ಕೆಲವು ಘಟನೆಗಳನ್ನು ಪ್ರಸ್ತಾಪಿಸಿ, ಕಾಂಗ್ರೆಸ್‌ ನಿಂದ ತುಷ್ಠೀಕರಣ ರಾಜಕಾರಣ ನಡೆಯುತ್ತಿದೆ. ಕೋಮುಗಲಭೆ, ಬಾಂಬ್‌ ಸ್ಫೋಟದಂತಹ ಪ್ರಕರಣಗಳು ಹೆಚ್ಚುತ್ತಿವೆ. ಬೆಳಗಾವಿಯಲ್ಲಿ ಮಹಿಳೆಯ ಮೇಲೆ ದಾಳಿ, ಚಿಕ್ಕೋಡಿಯಲ್ಲಿ ಜೈನಮುನಿ ಹತ್ಯೆ,. ಹುಬ್ಬಳ್ಳಿಯಲ್ಲಿ ಕಾಲೇಜಿನ ವಿದ್ಯಾರ್ಥಿನಿ ಹತ್ಯೆಯಿಂದ ದೇಶದಲ್ಲೇ ಆತಂಕ ಮೂಡಿದೆ.
6
+ ಕಾಂಗ್ರೆಸ್‌ ಸರಕಾರವು ತುಷ್ಠೀಕರಣದ ಕಡೆ ಗಮನ ಕೊಡುತ್ತಿದೆ. ವಿದ್ಯಾರ್ಥಿನಿ ನೇಹಾರ ಕುರಿತು ಕಾಂಗ್ರೆಸ್ಸಿಗರಿಗೆ ಕಳಕಳಿ ಇಲ್ಲ. ಬೆಂಗಳೂರಿನಲ್ಲಿ ಬಾಂಬ್‌ ಸ್ಫೋಟ ಸಂಭವಿಸಿದೆ. ಕಾಂಗ್ರೆಸ್‌ ಪಕ್ಷವು ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಡಲಿ ಎಂದು ಹೇಳಿದರು.
7
+ ಕಾಂಗ್ರೆಸ್‌ ಹೇಳಿದೆ ಅಧಿ ಕಾರಕ್ಕೆ ಬಂದರೆ, ಎಕ್ಸರೇ ಮಾಡುತ್ತೇವೆಂದು ಹೇಳುತ್ತಿದ್ದಾರೆ. ನಿಮ್ಮ ಮನೆಯಲ್ಲಿ ಇರುವ ಚಿನ್ನ, ಮಂಗಳ ಸೂತ್ರ, ನಿಮ್ಮ ಸಂಪತ್ತು, ಎಲ್ಲವನ್ನೂ ದೋಚಿ ಅದನ್ನು ಹಂಚಿಕೆ ಮಾಡುತ್ತದೆ. ನಿಮ್ಮ ಸಂಪತ್ತು ಲೂಟಿ ಆಗಬೇಕಾ? ನಿಮ್ಮ ಮಂಗಳ ಸೂತ್ರ ಇನ್ನೊಬ್ಬರ ಕೈಗೆ ಇಡ್ತೀರಾ? ನಿಮ್ಮ ಚಿನ್ನವನ್ನು ಕೊಡ್ತೀರಾ? ನಾನು ನಿಮಗೆ ಭರವಸೆ ನೀಡುತ್ತೇನೆ. ಮೋದಿ ಇರುವ ತನಕ ಅದು ಸಾಧ್ಯವಿಲ್ಲ ಎಂದು ತಮ್ಮ ವಿರೋಧಿ ಗಳಿಗೆ ಎಚ್ಚರಿಕೆ ನೀಡಿದರು.
8
+ ಕಾಂಗ್ರೆಸ್‌ ಅಧಿ ಕಾರಕ್ಕೆ ಬಂತೆಂದರೆ ನೀವು ನಿಮ್ಮ ಮಕ್ಕಳಿಗೆ ಕಷ್ಟ ಪಟ್ಟು ಕೂಡಿ ಇಟ್ಟದನ್ನು ಲೂಟಿ ಮಾಡುತ್ತದೆ. ಅದನ್ನು ನಿಮ್ಮ ಮಕ್ಕಳಿಗೆ ನೀಡೋದಿಲ್ಲ. ಶೇ. 55 ಅದಕ್ಕೆ ಟ್ಯಾಕ್‌್ಸ ಮೂಲಕ ಸರ್ಕಾರ ಪಡೆಯುತ್ತದೆ ಎಂದು ಕಾಂಗ್ರೆಸ್‌ ಹೇಳಿದೆ. ನಿಮ್ಮ ವೋಟ್‌ ಬ್ಯಾಂಕ್‌ ಗಾಗಿ ಕಾಂಗ್ರೆಸ್‌ ಏನು ಬೇಕಾದರೂ ಮಾಡುತ್ತದೆ ಕಾಂಗ್ರೆಸ್‌ಗೆ ಪಾಠ ಕಲಿಸಬೇಕೊ? ಬೇಡವೊ? ನಿಮ್ಮ ಕನಸು ನನ್ನ ಸಂಕಲ್ಪ. ನಾನು ಪ್ರತಿ ಕ್ಷಣ ಭಾರತಕ್ಕಾಗಿ ಮಿಡಿಯುವೆ. 24×7 ದುಡಿದು – 2047ರ ತನಕ ವಿಕಸಿತ ಭಾರವನ್ನಾಗಿ ಮಾರ್ಪಡಿಸುವೆ ಎಂದು ಮೋದಿ ಹೇಳಿದರು.
9
+ ರಾಜ, ಮಹಾರಾಜರ ಜಮೀನು ಕಸಿದುಕೊಂಡರು. ಕಾಂಗ್ರೆಸ್‌ ವೋಟ್‌ ಬ್ಯಾಂಕ್‌ಗಾಗಿ ಏನುಬೇಕಾದರೂ ಮಾಡುತ್ತದೆ. ಇಲ್ಲಿ ಅಭಿವೃದ್ಧಿ ಬಂದ್‌ ಆಗಿದೆ. ರಸ್ತೆ, ನೀರು, ಬರ, ಉದ್ಯೋಗ ಸಮಸ್ಯೆಗಳು ರಾಜ್ಯದಲ್ಲಿ ತಾಂಡವವಾಡುತ್ತಿವೆ. ಕಳೆದ 10 ವರ್ಷದಲ್ಲಿ 25 ಕೋಟಿ ಜನರು ಬಡತನದಿಂದ ಹೊರಗೆ ಬಂದಿದ್ದಾರೆ. ಹಾಗಾಗಿ ಜನರ ವಿಶ್ವಾಸ ವೃದ್ಧಿಯಾಗಿದೆ. ಬಡವರ ಕಲ್ಯಾಣಕ್ಕಾಗಿ ಮತ್ತೊಮ್ಮೆ ಬಿಜೆಪಿ ಸರಕಾರ ಬರಬೇಕು. ಭಾರತ ಇನ್ನಷ್ಟು ಬಲಾಢ್ಯವಾಗಲಿದೆ, ಭಾರತೀಯರು ಖುಷಿಯಾಗುತ್ತಾರೆ ಎಂದು ಮೋದಿ ಹೇಳಿದರು.
10
+ ಕಾಂಗ್ರೆಸ್ಸಿಗೆ ಔರಂಗಜೇಬನ ಅತ್ಯಾಚಾರ, ಮಂದಿರಗಳ ಧ್ವಂಸ ಮಾಡಿದ್ದು ನೆನಪಿಗೆ ಬರುವುದಿಲ್ಲ. ದೇಗುಲಗಳನ್ನು ಅವಮಾನ ಮಾಡುವವರ ಜೊತೆ ಕಾಂಗ್ರೆಸ್‌ ಪಕ್ಷ ಹೊಂದಾಣಿಕೆ ಮಾಡಿಕೊಂಡಿದೆ. ಭಾರತದ ವಿಭಜನೆಯಲ್ಲಿ ದೊಡ್ಡ ಪಾತ್ರ ವಹಿಸಿದವರನ್ನು ಕಾಂಗ್ರೆಸ್‌ ಪಕ್ಷ ಬೆಂಬಲಿಸುತ್ತದೆ ಎಂದು ತಿಳಿಸಿದರು. ಕಾಂಗ್ರೆಸ್ಸಿನ ತುಷ್ಠೀಕರಣ ನೀತಿ ಅವರ ಪ್ರಣಾಳಿಕೆಯಲ್ಲೂ ವಿವರವಾಗಿ ಹೊರಬಂದಿದೆ ಎಂದರು.
11
+ ಪಿತ್ರಾರ್ಜಿತ ಆಸ್ತಿಗೆ ಸಂಬಂಧಿಸಿ ಹೊಸ ನೀತಿ ತರಲು ಕಾಂಗ್ರೆಸ್‌ ಮುಂದಾಗಿದೆ. ಮಕ್ಕಳಿಗಾಗಿ ಶೇಖರಿಸಿಟ್ಟ ಹಣ, ಆಸ್ತಿಯನ್ನು ನೀವು ಅವರಿಗೆ ಕೊಡಲು ಸಾಧ್ಯವಾಗದು. ಅದನ್ನು ಮಕ್ಕಳಿಗೆ ಕೊಡಲು ಶೇ 55ರಷ್ಟು ತೆರಿಗೆ ಪಾವತಿಸಲು ಕಾಂಗ್ರೆಸ್‌ ಕೇಳಲಿದೆ. ಅದನ್ನು ಮತಬ್ಯಾಂಕಿಗೆ ಹಂಚಲು ನಿಮ್ಮ ಸಂಪತ್ತಿನ ಡಕಾಯಿತಿ ಮಾಡಲು ಮುಂದಾಗಿದ್ದಾರೆ ಎಂದು ಟೀಕಿಸಿದರು. ಇದನ್ನು ಹಿಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ಹೇಳಿದ್ದಾರೆ ಎಂದು ತಿಳಿಸಿದರು.
12
+ ಇಂಥ ಚಿಂತನೆಗಳನ್ನು ಹೊಂದಿದ ಕಾಂಗ್ರೆಸ್ಸಿಗರಿಗೆ ಪಾಠ ಕಲಿಸಿ ಎಂದು ತಿಳಿಸಿದರು. ಸೇನೆಯಲ್ಲಿ ಯುವತಿಯರಿಗೆ ಅವಕಾಶ ಕೊಡಲಾಗುತ್ತಿದೆ. ಸಿಆರ್‌ಪಿಎಫ್‌ನಲ್ಲೂ ಮಹಿಳೆಯರ ಪ್ರಾತಿನಿಧ್ಯ ಹೆಚ್ಚಾಗಿದೆ. ಜನರ ಕನಸೇ ಬಿಜೆಪಿ ಸಂಕಲ್ಪ ಎಂದು ಅವರು ನುಡಿದರು. ದೇಶಕ್ಕಾಗಿ ಸದಾ 24×7 ಗಂಟೆ ಕಾಲ ದುಡಿದು 2047ರ ವಿಕಸಿತ ಭಾರತದ ಸಂಕಲ್ಪವನ್ನು ಈಡೇರಿಸುತ್ತೇವೆ ಎಂದರು.
13
+ ಕರ್ನಾಟಕದ ಜನರ ಆಶೀರ್ವಾದ ಕೇಳಲು ಬಂದಿದ್ದೇನೆ. ಜಗದೀಶ್‌ ಶೆಟ್ಟರ್‌, ಅಣ್ಣಾಸಾಹೇಬ ಜೊಲ್ಲೆ ಅವರನ್ನು ಗರಿಷ್ಠ ಮತದಿಂದ ಚುನಾಯಿಸಿ. ಕಮಲದ ಚಿಹ್ನೆಗೆ ನೀಡಿದ ಮತವು ಮೋದಿಯವರಿಗೆ ಹೋಗಲಿದೆ. ಮೋದಿಯವರನ್ನು ಸಶಕ್ತಗೊಳಿಸಲು ಬಿಜೆಪಿಗೆ ಮತದಾನ ಮಾಡಿ ಎಂದು ವಿನಂತಿಸಿದರು. ಪ್ರತಿ ಬೂತ್ನಲ್ಲಿ ಬಿಜೆಪಿ ಗೆಲ್ಲುವಂತೆ ನೋಡಿಕೊಳ್ಳಿ ಎಂದು ತಿಳಿಸಿದರು.
14
+ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಅವರು ಮಾತನಾಡಿ, ರಾಜ್ಯ ಸರಕಾರವು ಸಂಪೂರ್ಣ ದಿವಾಳಿಯಾಗಿದೆ ಎಂದು ಟೀಕಿಸಿದರು. ಜಗದೀಶ್‌ ಶೆಟ್ಟರ್‌, ಅಣ್ಣಾಸಾಬೇಬ್‌ ಜೊಲ್ಲೆ ಅವರನ್ನು ಒಂದು ಲಕ್ಷಕ್ಕೂ ಹೆಚ್ಚು ಅಂತರದಲ್ಲಿ ಗೆಲ್ಲಿಸುತ್ತೇವೆ. ರಾಜ್ಯದ ಎಲ್ಲ 28 ಸ್ಥಾನಗಳನ್ನು ಗೆಲ್ಲಿಸಿಕೊಡುತ್ತೇವೆ ಎಂದು ವಿಶ್ವಾಸದಿಂದ ನುಡಿದರು.
15
+ ಅಭ್ಯರ್ಥಿಗಳಾದ ಜಗದೀಶ್‌ ಶೆಟ್ಟರ್‌ (ಬೆಳಗಾವಿ), ಅಣ್ಣಾಸಾಬೇಬ್‌ ಜೊಲ್ಲೆ (ಚಿಕ್ಕೋಡಿ), ಸಂಸದರಾದ ಮಂಗಳಾ ಅಂಗಡಿ, ಪ್ರಮುಖರಾದ ಡಾ.ಪ್ರಭಾಕರ ಕೋರೆ, ಈರಣ್ಣ ಕಡಾಡಿ, ಮಾಜಿ ಸಚಿವರು, ಶಾಸಕರು, ಪಕ್ಷದ ರಾಜ್ಯ- ಜಿಲ್ಲಾ ಪದಾಧಿ ಕಾರಿಗಳು, ಪಕ್ಷದ ಮುಖಂಡರು ವೇದಿಕೆಯಲ್ಲಿದ್ದರು.
16
+ ಇದೇ ವೇಳೆ ಸಮಾವೇಶದಲ್ಲಿ ಮೋದಿ ಅವರಿಗೆ ಅವರ ತಾಯಿಯ ಫೋಟೋ ಇರುವ ಫ್ರೇಮ್‌ ಒಂದನ್ನು ಗಿಫ್‌್ಟ ಆಗಿ ನೀಡಲಾಯ್ತು. ಈ ವೇಳೆ ಮೋದಿ ತಾಯಿ ಫೋಟೋ ನೋಡುತ್ತಿದ್ದಂತೆಯೇ ಕೊಂಚ ಭಾವುಕರಾದರು.
eesanje/url_46_165_7.txt ADDED
@@ -0,0 +1,8 @@
 
 
 
 
 
 
 
 
 
1
+ ಉಪ್ಪು ತಿಂದವರು ನೀರು ಕುಡಿಯಬೇಕು : ಪ್ರಜ್ವಲ್ ವಿರುದ್ಧದ ಆರೋಪಗಳ ಕುರಿತು ಹೆಚ್‌ಡಿಕೆ ಪ್ರತಿಕ್ರಿಯೆ
2
+ ಬೆಂಗಳೂರು,ಏ.28-ಹಾಸನ ಕ್ಷೇತ್ರದಲ್ಲಿ ಕೇಳಿಬಂದಿರುವ ಲೈಂಗಿಕ ದೌರ್ಜನ್ಯದ ಆರೋಪದ ಬಗ್ಗೆ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದ್ದು, ತನಿಖೆಯಿಂದ ಸತ್ಯಾಂಶ ಹೊರಬರಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಷ್ಟ ಹೇಳಿಕೊಂಡು ಬಂದಂತಹ ಹೆಣ್ಣುಮಕ್ಕಳ ಕಷ್ಟವನ್ನು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರಾಗಲಿ, ನಾನಾಗಲೀ ಪರಿಹರಿಸಿ ಕಳುಹಿಸಿದ್ದೇವೆ. ಹೆಣ್ಣು ಮಕ್ಕಳಿಗೆ ಹೆಚ್ಚಿನ ಗೌರವ ಕೊಟ್ಟಿದ್ದೇವೆ ಎಂದರು.
4
+ ಹಾಸನ ಚುನಾವಣಾ ಸಂದರ್ಭದಲ್ಲಿ ಕೇಳಿಬಂದಿರುವ ಆರೋಪದ ಬಗ್ಗೆ ಎಸ್‌ಐಟಿ ತನಿಖೆ ವಹಿಸಲಾಗಿದೆ. ಈ ನೆಲದಲ್ಲಿ ಯಾರೇ ತಪ್ಪು ಮಾಡಿದರೂ ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು, ತಪ್ಪು ಮಾಡಿದವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಕಡ್ಡಿ ಮುರಿದಂತೆ ನುಡಿದರು.
5
+ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿದ್ದಾರೆ ಎಂಬ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಅವರು, ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಲ್ಲೇ ಇದ್ದರೂ ಕರೆದುಕೊಂಡು ಬರುವ ಜವಾಬ್ದಾರಿ ಅವರದು ಎಂದರು.
6
+ ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ :ರಾಜ್ಯಸರ್ಕಾರ ಬರ ಪರಿಹಾರದ ವಿಚಾರದಲ್ಲಿ ಜನರನ್ನು ದಾರಿ ತಪ್ಪಿಸಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು. ಎನ್‌ಡಿಆರ್‌ಎಫ್‌ನಿಂದ ಯುಪಿಎ ಅವಧಿಯಲ್ಲಿ ಶೇ.8 ರಷ್ಟು ಹಣ ದೊರೆತಿದ್ದರೆ, ಎನ್‌ಡಿಎ ಅವಧಿಯಲ್ಲಿ ಶೇ.38 ರಷ್ಟು ಎನ್‌ಡಿಆರ್‌ಎಫ್‌ ಹಣ ಬಂದಿದೆ. ಆದರೂ ಕಾಂಗ್ರೆಸ್‌ ಸರ್ಕಾರ ಅಪಪ್ರಚಾರ ಮಾಡಿ ಪ್ರತಿಭಟನೆ ಮಾಡುತ್ತಿದೆ ಎಂದು ಟೀಕಿಸಿದರು.
7
+ ರಾಜ್ಯಸರ್ಕಾರ ಮೊದಲು ಕೇಳಿದ್ದು 4,800 ಕೋಟಿ ರೂ. ಇನ್ಪುಟ್‌ ಸಬ್ಸಿಡಿ. ಅದನ್ನು ಕೊಟ್ಟರೆ ಸಾಕು ಎಂದು ಹೇಳಿದ್ದರು. ಈಗ 18 ಸಾವಿರ ಕೋಟಿ ರೂ. ಕೊಡಬೇಕಿತ್ತು ಎಂದು ಹೇಳಿ ಕೇಂದ್ರ ಸರ್ಕಾರದ ಮೇಲೆ ಪದೇಪದೇ ಗೂಬೆ ಕೂರಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದರು.
8
+ ಚುನಾವಣಾ ಪ್ರಚಾರ :ಎನ್‌ಡಿಎ ಅಭ್ಯರ್ಥಿಗಳ ಪರವಾಗಿ ಹೊಸಪೇಟೆ, ಶಿವಮೊಗ್ಗ, ಕಲಬುರಗಿ, ಬೀದರ್‌, ರಾಯಚೂರು, ಕೊಪ್ಪಳದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವುದಾಗಿ ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ತಿಳಿಸಿದರು.
eesanje/url_46_165_8.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರವನ್ನು ನಿರ್ಮಲಾ ಸೀತರಾಮನ್‌ ಅವರೇ ಪ್ರಸ್ತಾಪಿಸಿದ್ದರು : ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು, ಏ.28– ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರವನ್ನು ಕಾಂಗ್ರೆಸ್‌‍ ನಾಯಕ ಸ್ಯಾಂ ಪಿತ್ರೋಡಾಗಿಂತಲೂ ಮೊದಲೇ 2019ರಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್‌ ಪ್ರಸ್ತಾಪಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರಧಾನಿಯವರು ನಿರ್ಲಜ್ಜವಾಗಿ ಸುಳ್ಳು ಹೇಳುತ್ತಿದ್ದಾರೆ. ಅವರ ಹೇಳಿಕೆಗಳು ಶಿಕ್ಷಾರ್ಹ ಅಪರಾಧವಾಗಿದ್ದರೂ ಯಾರು ಕ್ರಮ ಕೈಗೊಳ್ಳುವ ಪರಿಸ್ಥಿತಿ ದೇಶದಲ್ಲಿ ಇಲ್ಲ ಎಂದು ವಿಷಾದಿಸಿದ್ದಾರೆ.
3
+ ಕಾಂಗ್ರೆಸ್‌‍ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತಿನ ಸಮೀಕ್ಷೆ ನಡೆಸಿ ಹಿಂದೂಗಳ ಸಂಪತ್ತನ್ನು ಏಳೇಳು ಮಕ್ಕಳು ಹುಟ್ಟಿಸುವ ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆ ಎಂಬ ಅಪ್ಪಟ ಸುಳ್ಳನ್ನು ನಿರ್ಲಜ್ಜವಾಗಿ ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದಿರಲ್ಲಾ? ಇದಕ್ಕೆ ನಿಮಲ್ಲಿ ಆಧಾರ ಏನಿದೆ ? ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್‌‍ ಪಕ್ಷ ಬಿಡುಗಡೆ ಮಾಡಿದ ಪ್ರಣಾಳಿಕೆಯ ಯಾವ ಪುಟದಲ್ಲಿ ಈ ಭರವಸೆ ಇದೆ. ಯಾವ ಹಿರಿಯ ನಾಯಕರು ಇದನ್ನು ಹೇಳಿದ್ದಾರೆ ? ದಯವಿಟ್ಟು ತಿಳಿಸಿ ಇಲ್ಲವಾದರೆ ಸುಳ್ಳು ಆರೋಪಕ್ಕಾಗಿ ಕನಿಷ್ಠ ವಿಷಾದವನ್ನಾದರೂ ಸೂಚಿಸಿ ಎಂದು ಆಗ್ರಹಿಸಿದ್ದಾರೆ.
4
+ ಪಿತ್ರಾರ್ಜಿತ ಆಸ್ತಿ ತೆರಿಗೆ ಹೇರುವ ಬಗ್ಗೆ ಕಾಂಗ್ರೆಸ್‌‍ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಎಲ್ಲಿಯೂ ಹೇಳಿಲ್ಲ. ಪಕ್ಷದ ವೇದಿಕೆಯಲ್ಲಿಯೂ ಚರ್ಚೆಯಾಗಿಲ್ಲ. ಆ ಚರ್ಚೆಯನ್ನು ಪಕ್ಷ ನಡೆಸಿದ್ದರೆ ಅದಕ್ಕೆ ಆಧಾರ ಕೊಡಿ. ಸ್ಯಾಮ್‌ ಪಿತ್ರೋಡಾ ಅವರು ಇದನ್ನು ಪ್ರಸ್ತಾಪಿಸಿ ಈ ಬಗ್ಗೆ ಚರ್ಚೆಯಾಗಬೇಕೆಂದು ಹೇಳಿರುವುದು ನಿಜ, ಅದು ಅವರ ವೈಯಕ್ತಿಕ ಅಭಿಪ್ರಾಯ.
5
+ ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರದ ಚರ್ಚೆ ಶುರುಮಾಡಿರುವುದೇ ನಿಮ್ಮ ಸಹದ್ಯೋಗಿಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌. 2019ರ ಬಜೆಟ್‌ ನಲ್ಲಿ ಇದನ್ನು ಸೇರಿಸುವ ಬಗ್ಗೆ ಚರ್ಚೆ ನಡೆದಿರುವುದಕ್ಕೆ ಆ ಕಾಲದ ಪತ್ರಿಕೆಗಳ ವರದಿಗಳೇ ಸಾಕ್ಷಿ. ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ ? ಈಗ ನಿರ್ಮಲಾ ಸೀತಾರಾಮನ್‌ ಅವರನ್ನೂ ದೇಶದ್ರೋಹಿ ಪಟ್ಟಿಗೆ ಸೇರಿಸುವಿರಾ ಎಂದು ಸವಾಲು ಹಾಕಿದ್ದಾರೆ.
6
+ ಸಂಪತ್ತಿನ ಸಮಾನ ಹಂಚಿಕೆ ಎನ್ನವುದು ಒಂದು ಉದಾತ್ತ ಚಿಂತನೆಯಾಗಿದೆ. ಇದು ನಮ್ಮ ಸಂವಿಧಾನದ ಆಶಯವೂ ಆಗಿದೆ. ನಮ್ಮ ದೇಶದಲ್ಲಿ 1953ರಲ್ಲಿಯೇ ಎಸ್ಟೇಟ್‌ ತೆರಿಗೆ ಹೇರಲಾಗಿತ್ತು. ಅದನ್ನು ರದ್ದು ಮಾಡಿದವರು ದಿವಂಗತ ಪ್ರಧಾನಿ ರಾಜೀವ್‌ ಗಾಂಧಿಯವರು. 1998ರ ವರೆಗೆ ಚಾಲ್ತಿಯಲ್ಲಿದ್ದ ಗಿಫ್‌್ಟ ತೆರಿಗೆಯನ್ನು ರದ್ದು ಮಾಡಿದವರು ಆಗಿನ ಪ್ರಧಾನಿ ಹೆಚ್‌.ಡಿ.ದೇವೇಗೌಡರು. ಮೋದಿಯವರೇ ನಿಮ್ಮದೇ ಸರ್ಕಾರ 2015ರಲ್ಲಿ ಸಂಪತ್ತಿನ ಮೇಲಿನ ತೆರ��ಗೆಯನ್ನೂ ರದ್ದು ಮಾಡಿದೆ. ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
7
+ ನರೇಂದ್ರ ಮೋದಿಯವರದು ಸೂಟುಬೂಟು ಸರ್ಕಾರ, ಶ್ರೀಮಂತರ ಪರ ಮತ್ತು ಬಡವರ ವಿರೋಧಿ ಸರ್ಕಾರ ಎನ್ನುವ ನಮ್ಮ ಆರೋಪ ಆಧಾರರಹಿತವಲ್ಲ. 2019ರಲ್ಲಿ ನಿಮ್ಮದೇ ಸರ್ಕಾರ ಶೇ.30ರಷ್ಟಿದ್ದ ಕಾರ್ಪೋರೇಟ್‌ ತೆರಿಗೆಯನ್ನು ಶೇಕಡಾ 22ಕ್ಕೆ ಇಳಿಸಿದೆ. ಈ ಮೂರ್ಖತನದ ನಿರ್ಧಾರದಿಂದಾಗಿ ಎರಡು ವರ್ಷಗಳ ಅವಧಿಯಲ್ಲಿ ಸರ್ಕಾರ ಕಳೆದುಕೊಂಡ ಆದಾಯ 1.81 ಲಕ್ಷ ಕೋಟಿ ರೂಪಾಯಿ. ದೇಶದ ಬಡವರ ಕಲ್ಯಾಣಕ್ಕಾಗಿ ಬಳಕೆಯಾಗಬೇಕಾಗಿದ್ದ ಈ ಹಣ ಕಾರ್ಪೋರೇಟ್‌ ದೊರೆಗಳ ಜೇಬಿಗೆ ಸೇರಿದೆ. ಅವರ ಲಾಭದಲ್ಲಿ ಯಾರ ಪಾಲು ಎಷ್ಟು? ಪ್ರಧಾನಿ ಮೋದಿಯವರೇ, ಇದೇನಾ ನಿಮ್ಮ ಕಲ್ಪನೆಯ ಸಮಾನ ಆಸ್ತಿ ಹಂಚಿಕೆ ಎಂದು ಕಿಡಿಕಾರಿದ್ದಾರೆ.
8
+ ಸಂಪತ್ತಿನ ಸಮಾನ ಹಂಚಿಕೆಯ ನಮ್ಮ ಆಶಯವನ್ನೇ ತಿರುಚಿ ಅದಕ್ಕೆ ಕೋಮುವಾದಿ ಬಣ್ಣ ಬಳಿಯಲು ಮುಂದಾಗಿರುವ ಜಾಣ ಪ್ರಧಾನಿಯವರು, ಕೆಲವೇ ಕೆಲವು ಕುಟುಂಬಗಳ ಕೈಯಲ್ಲಿರುವ ದೇಶದ ಸಂಪತ್ತನ್ನು ಸಮಾನವಾಗಿ ಹಂಚುವುದಾಗಿ ರಾಹುಲ್‌ ಗಾಂಧಿಯವರು ಹೇಳಿದ ಕೂಡಲೇ ನಿಮ್ಮ ಹೊಟ್ಟೆ ಉರಿಯುತ್ತಿರುವುದು ಯಾಕೆ? ರಾಷ್ಟ್ರೀಕೃತ ಬ್ಯಾಂಕ್‌ ಗಳಿಗೆ ಲಕ್ಷಾಂತರ ಕೋಟಿ ರೂಪಾಯಿ ಸಾಲವನ್ನು ಪಾವತಿ ಮಾಡದೆ ನಿಮ್ಮ ಉದ್ಯಮ ಮಿತ್ರರು ವಿದೇಶಕ್ಕೆ ಪರಾರಿಯಾದಾಗ ನಿಮಗೆ ಹೊಟ್ಟೆ ಉರಿಯಲಿಲ್ಲವೇ ಎಂದು ಲೇವಡಿ ಮಾಡಿದ್ದಾರೆ.
9
+ ದೇಶದ ರೈತರು ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ ಸಾಲವನ್ನು ಮನ್ನಾ ಮಾಡಬೇಕೆಂದು ಕಳೆದ ಹತ್ತು ವರ್ಷಗಳಿಂದ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಆ ಬೇಡಿಕೆಯನ್ನು ತಳ್ಳಿ ಹಾಕುತ್ತಲೇ ಬಂದಿರುವ ಪ್ರಧಾನಿ ನರೇಂದ್ರ ಮೋದಿಯವರೇ ಉದ್ಯಮಿಗಳಿಗೆ ಸೇರಿರುವ 16 ಲಕ್ಷ ಕೋಟಿ ರೂಪಾಯಿಯನ್ನು ಒಂದೇ ಏಟಿಗೆ ಮನ್ನಾ ಮಾಡಿದಾಗ ದೇಶದ ಆಸ್ತಿಯನ್ನು ಸಮಾನ ಹಂಚಿಕೆಮಾಡಬೇಕೆಂದು ನಿಮಗೆ ಅನಿಸಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
10
+ ಹಿಂದಿನ ಪ್ರಧಾನಿಗಳಾದ ಜವಾಹರಲಾಲ್‌ ನೆಹರೂ 33, ಲಾಲ್‌ ಬಹದ್ದೂರ್‌ ಶಾಸ್ತ್ರಿ 5, ಇಂದಿರಾ ಗಾಂಧಿಯವರು 66, ರಾಜೀವ್‌ ಗಾಂಧಿಯವರು 16, ವಿ.ಪಿ.ಸಿಂಗ್‌ ಅವರು 2, ಐ.ಕೆ.ಗುಜ್ರಾಲ್‌ ಅವರು 3, ವಾಜಪೇಯಿ ಅವರು 17 ಮತ್ತು ಮನಮೋಹನ್‌ ಸಿಂಗ್‌ ಅವರು 23 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳನ್ನು ಸ್ಥಾಪಿಸಿದ್ದರು. ನೀವು ಒಂದೇ ಒಂದು ಸಾರ್ವಜನಿಕ ಸ್ವಾಮ್ಯದ ಸಂಸ್ಥೆಯನ್ನು ಸ್ಥಾಪಿಸಿಲ್ಲ. ಮೋದಿಯವರ ಹತ್ತು ವರ್ಷಗಳ ಆಡಳಿತಾವಧಿಯಲ್ಲಿ 23 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗಿದೆ.
11
+ ಹತ್ತು ವರ್ಷಗಳಲ್ಲಿ ಪ್ರಧಾನಿಯವರು ಆಸ್ತಿಮಾಡಿಕೊಟ್ಟಿದ್ದು ಅದಾನಿ-ಅಂಬಾನಿಗಳಿಗೆ ಮಾತ್ರ. ಮಾನ ನಿಲ್ದಾಣಗಳು,ಬಂದರುಗಳು, ಕಲ್ಲಿದ್ದಲು ಗಣಿಗಳು, ಅನಿಲ-ತೈಲ ನಿಕ್ಷೇಪಗಳು, ಹೆದ್ದಾರಿ ಟೋಲುಗಳು, ವಿದ್ಯುತ್‌ ನಿಗಮಗಳು ಒಂದೇ ಎರಡೇ ಎಲ್ಲವನ್ನೂ ಅದಾನಿ-ಅಂಬಾನಿ ಮಡಿಲು ಸೇರಿಸಲಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
eesanje/url_46_165_9.txt ADDED
@@ -0,0 +1,5 @@
 
 
 
 
 
 
1
+ ಪ್ರಜ್ವಲ್‌ ರೇವಣ್ಣ ಪ್ರಕರಣ : ಎಸ್‌ಐಟಿ ತನಿಖೆಗೆ ಜಿಟಿಡಿ ಸ್ವಾಗತ
2
+ ಬೆಂಗಳೂರು,ಏ.28-ಸಂಸದ ಪ್ರಜ್ವಲ್‌ ರೇವಣ್ಣ ಅವರದು ಎನ್ನಲಾದ ಲೈಂಗಿಕ ದೌರ್ಜನ್ಯದ ಆರೋಪದ ಬಗ್ಗೆ ರಾಜ್ಯಸರ್ಕಾರ ವಿಶೇಷ ತನಿಖಾದಳಕ್ಕೆ ವಹಿಸಿರುವುದನ್ನು ಸ್ವಾಗತಿಸುವುದಾಗಿ ಜೆಡಿಎಸ್‌ ಕೋರ್‌ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು ತಿಳಿಸಿದರು.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಎದುರಾಳಿಗಳನ್ನು ಸೋಲಿಸಲು ಎಲ್ಲಾ ರೀತಿಯ ಪ್ರಯತ್ನ ನಡೆಯುತ್ತವೆ. ಅದರ ಭಾಗ ಇದೂ ಆಗಿರಬಹುದು. ಲೈಂಗಿಕ ದೌರ್ಜನ್ಯದ ಆರೋಪದ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ.
4
+ ರಾಜ್ಯಸರ್ಕಾರ ಎಸ್‌ಐಟಿಗೆ ವಹಿಸಿರುವುದನ್ನು ಸ್ವಾಗತಿಸುತ್ತೇವೆ. ಆರೋಪಕ್ಕೆ ಸಂಬಂಧಿಸಿದಂತೆ ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ. ಪೆನ್‌ಡ್ರೈವ್‌ ವಿಚಾರ ಅಥವಾ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿರುವ ವಿಚಾರ ತಮ್ಮ ಗಮನಕ್ಕೆ ಬಂದಿಲ್ಲ. ತಾವು ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದು, ಆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದರು.
5
+ ಕಾಂಗ್ರೆಸ್‌ನವರು ಈ ವಿಚಾರದಲ್ಲಿ ಪ್ರತಿಭಟನೆ ಮಾಡಿರುವುದು ಗಮನಕ್ಕೆ ಬಂದಿದೆ. ಸರ್ಕಾರವೂ ಅವರದ್ದೇ ಆಗಿದೆ, ಎಸ್‌ಐಟಿ ಸೇರಿದಂತೆ ಎಲ್ಲಾ ತನಿಖಾ ಸಂಸ್ಥೆಗಳೂ ಅವರ ಸರ್ಕಾರದ ಅಧೀನದಲ್ಲೇ ಇವೆ. ಯಾವುದೇ ರೀತಿಯ ತನಿಖೆ ನಡೆಸಲು ಕ್ರಮ ಕೈಗೊಂಡರೂ ಸ್ವಾಗತಿಸುವುದಾಗಿ ತಿಳಿಸಿದರು.
eesanje/url_46_166_1.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಬರಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ಕಾನೂನು ಪಾಲಿಸಿಲ್ಲ : ಸಿದ್ದು ವಾಗ್ದಾಳಿ
2
+ ಬೆಂಗಳೂರು,ಏ.28-ಬರಪರಿಹಾರ ಪಾವತಿ ವಿಚಾರದಲ್ಲಿ ಕೇಂದ್ರ ಸರ್ಕಾರ ಕಾನೂನು ಪ್ರಕಾರ ನಡೆದುಕೊಂಡಿಲ್ಲ. ಸುಪ್ರೀಂಕೋರ್ಟ್‌ನ ಮೆಟ್ಟಿಲೇರಿದ ಮೇಲೆ ಅನಿವಾರ್ಯವಾಗಿ ಪರಿಹಾರ ನೀಡುವುದಾಗಿ ಹೇಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
3
+ ಕೇಂದ್ರ ಸರ್ಕಾರ ನೀಡಿರುವ ಬರಪರಿಹಾರದ ಮೊತ್ತ ಕಡಿಮೆಯಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎನ್‌ಡಿಆರ್‌ಎಫ್‌ ನಿಯಮಾವಳಿ ಪ್ರಕಾರ, ಬರ ಘೋಷಣೆಗಾಗಿ ಮನವಿ ಸಲ್ಲಿಸಿದ ವಾರದೊಳಗಾಗಿ ಕೇಂದ್ರದ ಅಧ್ಯಯನ ತಂಡ ರಾಜ್ಯಕ್ಕೆ ಆಗಮಿಸಬೇಕು, ವರದಿ ನೀಡಿದ ಒಂದು ತಿಂಗಳ ಒಳಗೆ ಪರಿಹಾರ ನೀಡಬೇಕು.
4
+ ರಾಜ್ಯಸರ್ಕಾರ ಸೆ. 22 ರಂದು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಆನಂತರ ತಾವು ಖುದ್ದಾಗಿ ಡಿ.19 ರಂದು ಪ್ರಧಾನಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಆದರೆ ಈವರೆಗೂ ಹಣ ಬಿಡುಗಡೆಯಾಗಿಲ್ಲ ಎಂದು ಹೇಳಿದರು.
5
+ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಸರ್ಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಬೇಕಾಯಿತು. 48 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ನಷ್ಟವಾಗಿದ್ದು, ಇದರ ಅಂದಾಜು ವೌಲ್ಯ 35 ಸಾವಿರ ಕೋಟಿ ರೂ.ಗಳು. ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ, 18,172 ಕೋಟಿ ರೂ. ಪರಿಹಾರ ನೀಡುವಂತೆ ಮನವಿ ಮಾಡಿದ್ದೆವು.
6
+ ಸುಪ್ರೀಂಕೋರ್ಟ್‌ ಚಾಟಿ ಬೀಸಿದ ಮೇಲೆ 15 ದಿನದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಕೇಂದ್ರ ಹೇಳಿತ್ತು. ಮತ್ತೆ ಹೆಚ್ಚುವರಿಯಾಗಿ ಒಂದು ವಾರ ಸಮಯ ಕೇಳಿ ಈಗ ಪ್ರಸ್ತಾವನೆ ಸಲ್ಲಿಸಿದ್ದರ ಪೈಕಿ ಶೇ.19 ರಷ್ಟು ಪರಿಹಾರ ನೀಡುವುದಾಗಿ ಹೇಳಿದೆ. 3,454 ಕೋಟಿ ರೂ. ಪರಿಹಾರ ನೀಡುವುದಾಗಿ ಹೇಳಿದೆ. 14,718 ಕೋಟಿ ರೂ. ಕೊಡುತ್ತಿಲ್ಲ ಎಂದು ವಿವರಿಸಿದರು.
7
+ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ಅಮಿತ್‌ ಶಾ ಅವರುಗಳು ರಾಜ್ಯಕ್ಕೆ ಬಂದು ಸುಳ್ಳು ಹೇಳಿದರು. ಪ್ರಸ್ತಾವನೆ ಸಲ್ಲಿಸುವುದು ತಡವಾಗಿದೆ ಎಂದಾಗಿದ್ದರೆ, ತಾವು ಭೇಟಿ ಮಾಡಿದ್ದಾಗಲೇ ಅಮಿತ್‌ ಶಾ ಹೇಳಬಹುದಿತ್ತು. ದ್ವೇಷದ ರಾಜಕಾರಣಕ್ಕಾಗಿ ಸುಳ್ಳು ಹೇಳುತ್ತಿದ್ದಾರೆ ಎಂದರು.
8
+ ನಮ್ಮ ಗ್ಯಾರಂಟಿ ಯೋಜನೆಗಳಿಗೆ ಹಣ ಕೇಳುತ್ತಿಲ್ಲ, ಬರಪೀಡಿತ ರೈತರ ಪರಿಹಾರಕ್ಕೆ ಹಣ ಕೇಳುತ್ತಿದ್ದೇವೆ. ನಾವು ಸಂಗ್ರಹಿಸಿಕೊಟ್ಟ ತೆರಿಗೆಯಲ್ಲಿ ನಮಗೆ ಸರಿಯಾದ ಪಾಲು ನೀಡುವುದು ಮತ್ತು ರೈತರಿಗೆ ಪರಿಹಾರ ನೀಡುವುದು ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.
9
+ ಗಾಂಧಿ ಪ್ರತಿಮೆಯಿಂದ ದೇವರಾಜ ಅರಸು ಪ್ರತಿಮೆವರೆಗೂ ಪಾದಯಾತ್ರೆ ನಡೆಸಿ ನಮ್ಮ ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಹೋರಾಟ ಮುಂದುವರೆಸುತ್ತೇವೆ ಎಂದರು.
10
+ ಸುಪ್ರೀ���ಕೋರ್ಟ್‌ ಮೊರೆ ಹೋದ ನಂತರ ಪರಿಹಾರ ಪಾವತಿಸಲು ಕೇಂದ್ರ ಮುಂದಾಗಿದೆಯೇ ಹೊರತು ಸ್ವಯಂಪ್ರೇರಿತವಾಗಿ ಹಣ ಕೊಟ್ಟಿಲ್ಲ. ಬಿಜೆಪಿಯ ನಾಯಕರಾದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಆರ್‌.ಅಶೋಕ್‌ ಸೇರಿದಂತೆ ಎಲ್ಲರೂ ಸುಳ್ಳು ಹೇಳುತ್ತಿದ್ದಾರೆ.
11
+ ಉದ್ಯೋಗ ಖಾತ್ರಿ ಯೋಜನೆಯ ಮಾನವ ಉದ್ಯೋಗ ದಿನಗಳ ಸಂಖ್ಯೆಯನ್ನು 150 ದಿನಗಳಿಗೆ ಹೆಚ್ಚಿಸಿಲ್ಲ. ಇಂದು ರಾಜ್ಯಕ್ಕೆ ಭೇಟಿ ನೀಡಿರುವ ಪ್ರಧಾನಮಂತ್ರಿಯವರು ಜನರಿಗೆ ಚೊಂಬು ನೀಡಿದ್ದಾರೆ. ಮೇಕೆದಾಟು, ಮಹದಾಯಿ, ಬರಪರಿಹಾರ, ತೆರಿಗೆ ಹಂಚಿಕೆ ಸೇರಿದಂತೆ ಎಲ್ಲದರಲ್ಲೂ ಚೊಂಬು ನೀಡಲಾಗಿದೆ ಎಂದು ವಾಗ್ದಾಳಿ ನಡೆಸಿದರು.
12
+ 34 ಲಕ್ಷ ರೈತರಿಗೆ ರಾಜ್ಯಸರ್ಕಾರ ತನ್ನ ಬೊಕ್ಕಸದಿಂದಲೇ ತಲಾ 2 ಸಾವಿರ ರೂ. ಪರಿಹಾರವನ್ನು ಪಾವತಿಸಿದೆ. ಎಲ್ಲರಿಗೂ ಸಮರ್ಪಕವಾಗಿ ಪರಿಹಾರ ದೊರೆಯುತ್ತಿದೆ. ಯಾವ ರೈತರೂ ಪರಿಹಾರ ಸಿಕ್ಕಿಲ್ಲ ಎಂದು ದೂರು ನೀಡಿಲ್ಲ. ಕುಮಾರಸ್ವಾಮಿ ಸುಳ್ಳು ಟೀಕೆಗಳನ್ನು ಮಾಡುತ್ತಿದ್ದಾರೆ. ನಾವು ರೈತರಿಗೆ ಪರಿಹಾರ ನೀಡುತ್ತಿದ್ದೇವೆಯೇ ಹೊರತು ಕುಮಾರಸ್ವಾಮಿಯವರಿಗಲ್ಲ ಎಂದು ತಿರುಗೇಟು ನೀಡಿದರು.
eesanje/url_46_166_10.txt ADDED
@@ -0,0 +1,7 @@
 
 
 
 
 
 
 
 
1
+ ಚುನಾವಣಾ ಅಕ್ರಮ : ರಾಜ್ಯದಲ್ಲಿ ಈವರೆಗೆ 443 ಕೋಟಿ ಮೊತ್ತದ ನಗದು, ಚಿನ್ನಾಭರಣ, ವಸ್ತುಗಳು ಜಪ್ತಿ
2
+ ಬೆಂಗಳೂರು,ಏ.27-ಪ್ರಸಕ್ತ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಪ್ತಿ ಮಾಡಲಾದ ಹಣ, ಮದ್ಯ, ಡ್ರಗ್ಸ್ , ಉಚಿತ ಉಡುಗೊರೆ, ಚಿನ್ನ, ಬೆಳ್ಳಿ ಆಭರಣಗಳ ಪ್ರಮಾಣ ಏರುತ್ತಲೇ ಇದ್ದು ಈತನಕ 443.80 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ.
3
+ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ ನಿನ್ನೆಯವರೆಗೆ ಪ್ರತಿನಿತ್ಯ ಒಂದಲ್ಲಾ ಒಂದು ಕಡೆ ಹಣ ಹಾಗೂ ಇತರೆ ವಸ್ತುಗಳು ಪರಿಶೀಲನೆ ವೇಳೆ ಭಾರೀ ಪ್ರಮಾಣ ದಲ್ಲಿ ಪತ್ತೆಯಾಗುತ್ತಲೇ ಇವೆ.ರಾಜ್ಯ ಮುಖ್ಯ ಚುನಾವಣಾಧಿ ಕಾರಿ ಕಚೇರಿ ಪ್ರಕಟಣೆ ಪ್ರಕಾರ, ಪೊಲೀಸ್‌ ಕ್ಷಿಪ್ರ ಪಡೆಗಳು ಹಾಗೂ ಸ್ಥಿರ ಕಣ್ಗಾವಲು ತಂಡಗಳು 139.88 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್ , ಚಿನ್ನ, ಬೆಳ್ಳಿ, ಉಚಿತ ಉಡುಗೊರೆಗಳನ್ನು ವಶಪಡಿಸಿಕೊಂಡಿದೆ.
4
+ ಅಬಕಾರಿ ಇಲಾಖೆಯವರು 277.72 ಕೋಟಿ ರೂ. ಮೊತ್ತದ ನಗದು, ಮದ್ಯ ಹಾಗೂ ಡ್ರಗ್‌್ಸ ಅನ್ನು ವಶಪಡಿಸಿಕೊಂಡಿದ್ದು, ಆದಾಯ ತೆರಿಗೆ ಅಧಿ ಕಾರಿಗಳು 46.09 ಕೋಟಿ ರೂ. ಮೊತ್ತದ ನಗದು, ಚಿನ್ನ, ವಜ್ರವನ್ನು ವಶಪಡಿಸಿಕೊಂಡಿದ್ದಾರೆ.
5
+ ವಾಣಿಜ್ಯ ತೆರಿಗೆ ಇಲಾಖೆಯವರು 80.11 ಕೋಟಿ ರೂ. ಮೊತ್ತದ ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ನಿನ್ನೆ ರಾಜ್ಯದಲ್ಲಿ 10.42 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್‌್ಸ, ಚಿನ್ನ, ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಲಾಗಿದೆ.
6
+ ಇದುವರೆಗೂ ರಾಜ್ಯದಲ್ಲಿ ಚುನಾವಣೆ ಹಿನ್ನೆಲೆಯಲ್ಲಿ 2172 ಎಫ್‌ಐಆರ್‌ಗಳನ್ನು ದಾಖಲಿಸಿದ್ದು, 1916 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.ಆದಾಯ ತೆರಿಗೆ ಅಧಿ ಕಾರಿಗಳು ಯಲಹಂಕದಲ್ಲಿ 4.80 ಕೋಟಿ ರೂ. ವಶಪಡಿಸಿಕೊಂಡಿದ್ದಾರೆ. ಕ್ಷಿಪ್ರಪಡೆಗಳು ಕೋರಮಂಗಲದಲ್ಲಿ 18,82,267 ರೂ. ನಗದನ್ನು ಕೆಜಿಎಫ್‌ನ ಬೇತಮಂಗಲದಲ್ಲಿ 47,56,000 ರೂ. ನಗದನ್ನು ಹಾಗೂ ಸ್ಥಿರ ಕಣ್ಗಾವಲು ತಂಡದವರು 20 ಲಕ್ಷ ರೂ. ನಗದನ್ನು ಚಾಮರಾಜಪೇಟೆಯ ರಾಯಲ್‌ ಸರ್ಕಲ್‌ನ ಚೆಕ್‌ ಪೋಸ್ಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ.
7
+ ಮೈಸೂರು ಜಿಲ್ಲೆಯ ಕಾಳಸಿದ್ದನಹುಂಡಿ ಚೆಕ್‌ ಪೋಸ್ಟ್ ನಲ್ಲಿ 81,90,900 ರೂ. ನಗದು ಹಾಗೂ ಕುಂದಾಪುರದಲ್ಲಿ 43,34,128 ರೂ. ನಗದನ್ನು ಸ್ಥಿರಕಣ್ಗಾವಲು ತಂಡದವರು ವಶಪಡಿಸಿಕೊಂಡಿದ್ದಾರೆಂದು ಪ್ರಕಟಣೆ ತಿಳಿಸಿದೆ.
eesanje/url_46_166_11.txt ADDED
@@ -0,0 +1,9 @@
 
 
 
 
 
 
 
 
 
 
1
+ ಗ್ಯಾರಂಟಿಗಳ ಪ್ರಭಾವದಿಂದ ನಾವು ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತೇವೆ : ಸಿಎಂ ಸಿದ್ದರಾಮಯ್ಯ
2
+ ಕಲಬುರಗಿ,ಏ.27-ಐದು ಗ್ಯಾರಂಟಿಗಳು ಜನರ ಮೇಲೆ ಹೆಚ್ಚು ಪರಿಣಾಮ ಬೀರಿವೆ ಎಂದು ನಂಬಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಲಬುರಗಿ ನಗರದ ಗ್ರ್ಯಾಂಡ್‌ ಹೋಟೆಲ್‌ನಲ್ಲಿ 2024ರ ಎರಡನೇ ಹಂತದ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಇಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು.
3
+ ಮೊದಲ ಹಂತದ ಚುನಾವಣೆ ಮುಗಿದಿದ್ದು, ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ವರದಿ ಬಂದಿದೆ. ಎಲ್ಲಾ ಅಭ್ಯರ್ಥಿಗಳು ಹಾಗೂ ಜಿಲ್ಲಾ ಸಚಿವರೊಂದಿಗೆ ಮಾತನಾಡಿದ್ದೇನೆ. ಎಲ್ಲರೂ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಜನರು ಆಶೀರ್ವಾದ ಮಾಡಿದ್ದಾರೆಂದು ಹೇಳಿದ್ದಾರೆ ಎಂದರು. ನರೇಂದ್ರ ಮೋದಿಯವರು ದೇಶದ ಪ್ರಧಾನಮಂತ್ರಿಯಾಗಿ ಸುಳ್ಳಗಳ ಮಾರುಕಟ್ಟೆ ತೆರೆದಿದ್ದಾರೆ.
4
+ ಹಿಂದುಳಿದವರಿಗೆ ಮೀಸಲಾತಿ ಬಗ್ಗೆ ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ ಎಂದರು.ಮಂಡಲ್‌ ಆಯೋಗದ ವರದಿ ಜಾರಿಯಾದಾಗ ಮೀಸಲಾತಿ ವಿರೋಧಿಸಿದ್ದು, ಬಿಜೆಪಿಯವರು. ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ, ಅವಕಾಶ ವಂಚಿತರಾದವರಿಗೆ ಮೀಸಲಾತಿ ಕೊಡಬೇಕೆಂದು ಸಂವಿಧಾನ ಹೇಳಿದೆ.
5
+ ನರೇಂದ್ರ ಮೋದಿಯವರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಸಂವಿಧಾನ ತಿದ್ದುಪಡಿ ಮಾಡಿ ಅವರಿಗೂ ಶೇ. 10 ಮೀಸಲಾತಿ ನೀಡಿದೆ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ರಚನೆ ಮಾಡಿರುವ ಮೂಲ ಸಂವಿಧಾನದಲ್ಲಿ ಅದು ಇಲ್ಲ. ಆದರೂ ಸಂವಿಧಾನ ತಿದ್ದುಪಡಿ ಮಾಡಿ ಮೀಸಲಾತಿ ನೀಡಿದೆ.
6
+ ಮೊದಲಿನಿಂದಲೂ ಬಿಜೆಪಿ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಅರ್ಜುನ್‌ ಸಿಂಗ್‌ ಅವರು ಆಗ ಮಾನವ ಸಂಪನ್ಮೂಲ ಸಚಿವರಾಗಿದ್ದರು. ದೇಶಾದ್ಯಂತ. ಐಐಟಿ, ಐಐಎಂ ನಂತಹ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ಜಾರಿ ಮಾಡಿದರು. ರಾಜೀವ್‌ ಗಾಂಧಿಯವರು ಪ್ರಧಾನ ಮಂತ್ರಿಯಾಗಿದ್ದಾಗ 73, 74 ನೇ ತಿದ್ದುಪಡಿ ಮಾಡಿದರು.
7
+ 73 ನೇ ತಿದ್ದುಪಡಿ ಮೂಲಕ ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯತಿಗಳಲ್ಲಿ ಮಹಿಳೆಯರಿಗೆ ಹಿಂದುಳಿದವರಿಗೆ ಮೀಸಲಾತಿ ತಂದರು. ನರಸಿಂಹರಾಯರು ಪ್ರಧಾನಿ ಮಂತ್ರಿಗಳಾಗಿದ್ದಾಗ ಜಾರಿಗೆ ಬಂತು. ಓಬಿಸಿ 2 (ಎ) ಮತ್ತು (ಬಿ )ಎಂದು ಮೀಸಲಾತಿ ತಂದು ಮಹಿಳೆಯರಿಗೆ 33% ಮೀಸಲಾತಿ ತಂದೆವು. ಹಿಂದುಳಿದವರಿಗೆ ಶೇ. 27.4 ಓಬಿಸಿ (ಎ) ಹಾಗೂ ಶೇ. 6.6 ಓಬಿಸಿ (ಬಿ) ಯವರಿಗೆ ಮಾಡಲಾಯಿತು. ಓಬಿಸಿ (ಎ) ನಲ್ಲಿ ಮುಸಲ್ಮಾನರನ್ನು ಸೇರಿಸಲಾಯಿತು ಎಂದರು.
8
+ ಹಿಂದುಳಿದವರಿಗೆ ನೀಡಲಾದ ಮೀಸಲಾತಿಯನ್ನು ರದ್ದುಪಡಿಸಿ ಮುಸಲ್ಮಾನರಿಗೆ ನೀಡಲಾಗುತ್ತದೆ ಎಂಬುದು ಅಪ್ಪಟ ಸುಳ್ಳು. ರಾಜಕೀಯವಾಗಿ ಬಿಜೆಪಿಯವರು ಈ ರೀತಿ ಮಾಡಲಾಗುತ್ತಿದೆ. ಮತಗಳನ್ನು ಧ್ರುವೀಕರಣ ಮಾಡುವ ಉದ್ದೇಶದಿಂದ ಮೋದಿಯವರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದು, ಅವರ ಸ್ಥಾನಕ್ಕೆ ಇದು ಶೋಭೆ ತರುವುದಿಲ್ಲ.
9
+ ಎಲ್ಲ ಭ���ರತೀಯರ ರಕ್ಷಣೆ ಮಾಡುವುದು ಪ್ರಧಾನಮಂತ್ರಿಗಳ ಕರ್ತವ್ಯ. ಮುಸಲ್ಮಾನರನ್ನು ಪ್ರತ್ಯೇಕಿಸಿ ಮತಗಳ ಧ್ರುವೀಕರಣ ಮಾಡುತ್ತಿರುವ ಮೋದಿಯವರ ಕಾರ್ಯ ಸಂವಿಧಾನ ಬಾಹಿರವಾದುದು. ಮೀಸಲಾತಿ ನೀಡಿಕೆ ಸಾಂವಿಧಾನಿಕವಾಗಿ ಸರಿಯೆಂದು ಸುಪ್ರೆಂ ಕೋರ್ಟ್‌ ತಿಳಿಸಿದ್ದರೂ, ಮೋದಿಯವರು ಹತಾಶೆಯಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮೀಸಲಾತಿಯನ್ನು ವಿರೋಧಿಸುವ ಬಿಜೆಪಿಯವರ ಧೋರಣೆಯನ್ನು ನಾನು ಖಂಡಿಸುತ್ತೇನೆ. ಜನರಿಗೆ ತಪ್ಪು ಮಾಹಿತಿಗಳನ್ನು ನೀಡುತ್ತಿರುವುದು ಸರಿಯಲ್ಲ ಎಂದರು.
eesanje/url_46_166_12.txt ADDED
@@ -0,0 +1,8 @@
 
 
 
 
 
 
 
 
 
1
+ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಸೇವೆ
2
+ ಬೆಂಗಳೂರು,ಏ.27-ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ದಿನ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡುವ ಕುರಿತು ಆದೇಶ ಹೊರಡಿಸಿದೆ. ಏಪ್ರಿಲ್‌ 29ರಿಂದ ಪರೀಕ್ಷೆಗಳು ಆರಂಭವಾಗಲಿದೆ.
3
+ ಈ ಕುರಿತು ಕೆಎಸ್‌ಆರ್‌ಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ. ಈ ಆದೇಶ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ನಿಗಮದ ಬಸ್ಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅನುಮತಿಸುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.
4
+ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ 29/04/2024 ರಿಂದ ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅವರು ಕೋರಿರುತ್ತಾರೆ ಎಂದು ಹೇಳಿದೆ.
5
+ ಆದೇಶದ ಅನ್ವಯ ಕ.ರಾ.ರ.ಸಾ. ನಿಗಮವು, ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯುವ ದಿನಾಂಕಗಳಂದು ಅಂದರೆ ದಿನಾಂಕ 29/04/2024 ರಿಂದ 16/05/2024 ರವರೆಗೆ, ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
6
+ ಈ ಸಂಬಂಧ, ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ. ಮುಂದುವರೆದು ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳುವುದು.
7
+ ಚಾಲನಾ ಸಿಬ್ಬಂದಿಗಳು ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು. ಈ ವಿಷಯವನ್ನು ಎಲ್ಲಾ ಘಟಕ ಮತ್ತು ಬಸ್‌ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಮೇಲ್ಕಂಡ ನಿರ್ದೇಶನಗಳನ್ನು ಜಾರಿಗೊಳಿಸಲು ಕ್ರಮ ವಹಿಸುವಂತೆ ತಿಳಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1 ಈಗಾಗಲೇ ಪೂರ್ಣಗೊಂಡಿದ್ದು, ಫಲಿತಾಂಶ ಸಹ ಪ್ರಕಟವಾಗಿದೆ. ಏಪ್ರಿಲ್‌ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ, ಫಲಿತಾಂಶ ಉನ್ನತೀಕರಣ ಬಯಸುವ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿದೆ.
8
+ ಮೊದಲನೇ ಪರೀಕ್ಷೆ ನಡೆದ ರೀತಿಯಲ್ಲೆ ಪಾರದರ್ಶಕವಾಗಿ ಪ್ರಾಮಾಣಿಕವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಒಟ್ಟು 1,49,300 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ ಫಲಿತಾಂಶ ಉನ್ನತೀಕರಣಕ್ಕಾಗಿ 32,848 ವಿದ್ಯಾರ್ಥಿಗಳು, 27,092 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. 84,933 ವಿದ್ಯಾರ್ಥಿಗಳು, 64,367 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗುತ್ತಿದ್ದು, ಕಲಾ ವಿಭಾಗದಲ್ಲಿ 52,492, ವಾಣಿಜ್ಯ ವಿಭಾಗದಲ್ಲಿ 39,427 ಮತ್ತು ವಿಜ್ಞಾನ ವಿಭಾಗದಲ್ಲಿ 57,381 ವಿದ್ಯಾರ್ಥಿಗಳು ರಾಜ್ಯದ 301 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.
eesanje/url_46_166_2.txt ADDED
@@ -0,0 +1,4 @@
 
 
 
 
 
1
+ ಚಾಮರಾಜನಗರ ಜಿಲ್ಲೆಯ ಇಂಡಿಗನತ್ತ ಮತಗಟ್ಟೆಯಲ್ಲಿ ನಾಳೆ ಮರು ಮತದಾನ
2
+ ಬೆಂಗಳೂರು,ಏ.28-ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಇಂಡಿಗನತ್ತ ಮತಗಟ್ಟೆಯಲ್ಲಿ ನಾಳೆ ಮರು ಮತದಾನ ನಡೆಯಲಿದೆ. ಕಳೆದ ಶುಕ್ರವಾರ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ, ಮತಗಟ್ಟೆಯ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿ, ಕಲ್ಲು ತೂರಾಟ ನಡೆಸಿದ್ದರು. ಆ ಸಂದರ್ಭದಲ್ಲಿ ಮತಯಂತ್ರಗಳೂ ಕೂಡ ಹಾನಿಗೊಳಗಾಗಿದ್ದವು.
3
+ ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣಾಧಿ ಕಾರಿ ಸಿ.ಟಿ.ಶಿಲ್ಪಾನಾಗ್‌ ಅವರು ಈ ಸಂಬಂಧ ಭಾರತದ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಿದ್ದರು.ವರದಿಯನ್ನು ಪರಿಶೀಲಿಸಿದ ಆಯೋಗವು ಮರು ಮತದಾನ ನಡೆಸಲು ತೀರ್ಮಾನಿಸಿದೆ. ಹೀಗಾಗಿ ನಾಳೆ ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಇಂಡಿಗನತ್ತ ಮತಗಟ್ಟೆಯಲ್ಲಿ ಮತದಾನ ನಡೆಯಲಿದೆ.
4
+ ಈ ಮತಗಟ್ಟೆ ವ್ಯಾಪ್ತಿಯಲ್ಲಿ 528 ಮತದಾರರಿದ್ದು, ಕಳೆದ ಶುಕ್ರವಾರ 9 ಮಂದಿಯಷ್ಟೇ ಮತ ಚಲಾವಣೆ ಮಾಡಿದ್ದರು. ಉಳಿದವರು ನಮಗೆ ಅಗತ್ಯ ಮೂಲಸೌಕರ್ಯವನ್ನು ಒದಗಿಸಿಲ್ಲ ಎಂದು ಆರೋಪಿಸಿ ಮತದಾನವನ್ನೇ ಬಹಿಷ್ಕರಿಸಿದ್ದರು.
eesanje/url_46_166_3.txt ADDED
@@ -0,0 +1,5 @@
 
 
 
 
 
 
1
+ ಪ್ರಧಾನಿ ಆಗಮನ ಹಿನ್ನೆಲೆ, ಸಾಂಬ್ರಾದಲ್ಲಿ ಸಿಎಂ ವಿಮಾನ ಇಳಿಯಲು ನಿರಾಕರಣೆ, ಕೊಲ್ಲಾಪುರದತ್ತ ಸಿದ್ದರಾಮಯ್ಯ
2
+ ಬೆಳಗಾವಿ,ಏ.28-ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ವಿಮಾನ ಇಳಿಯಲು ಅನುಮತಿ ನಿರಾಕರಿಸಲಾಗಿದೆ.ಸಾಂವಿಧಾನಿಕ ಮುಖ್ಯಸ್ಥರಾದ ಪಿಎಂ ಮತ್ತು ಸಿಎಂ ಇಂದು ಚುನಾವಣಾ ಪ್ರಚಾರಾರ್ಥ ಬೆಳಗಾವಿ ಪ್ರವಾಸದಲ್ಲಿದ್ದು, ಇಬ್ಬರ ವಿಮಾನಗಳು ಬೆಳಗಾವಿಯಲ್ಲಿ ಇಳಿಯಬೇಕಿತ್ತು.
3
+ ಶನಿವಾರ ತಡರಾತ್ರಿಯೇ ಬೆಳಗಾವಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಇಂದು ಭಾನುವಾರ ನಗರದ ಮಾಲಿನಿ ಮೈದಾನದಲ್ಲಿ ಸಾರ್ವಜನಿಕ ಸಭೆಯ ಬಳಿಕ ಶಿರಸಿಗೆ ತೆರಳಲಿದ್ದಾರೆ.
4
+ 11:45ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಿಂದ ಪ್ರಧಾನಿ ತೆರಳುವ ಹಿನ್ನೆಲೆಯಲ್ಲಿ ಇತರ ವಿಮಾನಗಳ ಪ್ರವೇಶ ಸಾಂಬ್ರಾ ನಿಲ್ದಾಣದಲ್ಲಿ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇದೇ ನಿಲ್ದಾಣಕ್ಕೆ ಬರಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅನುಮತಿ ನಿರಾಕರಿಸಲಾಗಿದೆ.
5
+ ಜಿಲ್ಲೆಯ ವಿವಿಧ ಪ್ರಚಾರ ಸಭೆಗಳಲ್ಲಿ ಭಾಗವಹಿಸಬೇಕಿರುವ ಸಿದ್ದರಾಮಯ್ಯ ಅವರು ಪರ್ಯಾಯವಾಗಿ ಕೊಲ್ಲಾಪುರ ವಿಮಾನ ನಿಲ್ದಾಣದಲ್ಲಿ ಇಳಿದು, ರಸ್ತೆ ಮಾರ್ಗವಾಗಿ ಬೆಳಗಾವಿ ಜಿಲ್ಲೆ ಪ್ರವೇಶಿಸಲಿದ್ದಾರೆ.
eesanje/url_46_166_4.txt ADDED
@@ -0,0 +1,9 @@
 
 
 
 
 
 
 
 
 
 
1
+ ಹೆಚ್ಚಿನ ಬರಪರಿಹಾರಕ್ಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ
2
+ ಬೆಂಗಳೂರು,ಏ.28-ಕೇಂದ್ರಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್‌ ಪಕ್ಷವು ಹೆಚ್ಚಿನ ಬರಪರಿಹಾರಕ್ಕೆ ಆಗ್ರಹಿಸಿ ವಿಧಾನಸೌಧ, ವಿಕಾಸಸೌಧದ ನಡುವೆ ಇರುವ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂದೆ ಪ್ರತಿಭಟನಾ ಧರಣಿ ನಡೆಸಿತು.
3
+ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ರಾಮಲಿಂಗಾರೆಡ್ಡಿ, ಡಾ.ಎಂ.ಸಿ.ಸುಧಾಕರ್‌, ಕೃಷ್ಣಾ ಭೈರೇಗೌಡ, ದಿನೇಶ್‌ ಗುಂಡೂರಾವ್‌, ಚೆಲುವರಾಯಸ್ವಾಮಿ, ಕೆ.ಎಚ್‌.ಮುನಿಯಪ್ಪ, ಡಾ.ಜಿ.ಪರಮೇಶ್ವರ್‌, ಶಾಸಕ ರಿಜ್ವಾನ್‌ ಅರ್ಷದ್‌, ಎಚ್‌.ಸಿ.ಬಾಲಕೃಷ್ಣ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
4
+ ತಲೆಯ ಮೇಲೆ ಖಾಲಿ ಚೊಂಬು ಹೊತ್ತು ಹಾಗೂ ಬರಪರಿಹಾರ ಕೇಳಿದ್ದು 18,174 ಕೋಟಿ ರೂ. ಕೊಟ್ಟಿದ್ದು, 3,454 ಕೋಟಿ ರೂ. ಬರಪರಿಹಾರ ನೀಡುವಲ್ಲಿಯೂ ಮೋಸವಾಗಿದೆ ಎಂಬ ಫಲಕಗಳನ್ನು ಹಿಡಿದು ಧರಣಿ ನಡೆಸಲಾಯಿತು.ಚೊಂಬು ಪ್ರದರ್ಶನ ಮಾಡಿ ಪ್ರಧಾನಿ ನರೇಂದ್ರ ಮೋದಿ ಗೋ ಬ್ಯಾಕ್‌ ಎಂಬ ಘೋಷಣೆಯನ್ನು ಕಾಂಗ್ರೆಸ್‌ ನಾಯಕರು ಕೂಗಿದರು.
5
+ ರಾಜ್ಯಕ್ಕೆ ನ್ಯಾಯ ಕೊಡಿ ಎಂದು ಘೋಷಣೆ ಕೂಗಲಾಯಿತು. ಮೇಕೆದಾಟು ಯೋಜನೆಗೆ ಅನುಮತಿ ಕೊಡದ ಮಹದಾಯಿ ಯೋಜನೆಗೆ ಬಿಜೆಪಿ ಸರ್ಕಾರ ಕೊಕ್ಕೆ ಹಾಕಿದೆ ಎಂದು ಆರೋಪಿಸಿದ್ದಲ್ಲದೆ, ರೈತರಿಗೆ ನ್ಯಾಯ ಕೊಡಿ, ಪೂರ್ಣ ಪ್ರಮಾಣದ ಬರ ಪರಿಹಾರ ನೀಡಿ ಎಂದು ಆಗ್ರಹಿಸಲಾಯಿತು.
6
+ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾತನಾಡಿ, ನಾವು ಬರಪರಿಹಾರ ನೀಡುವಂತೆ ಕಳೆದ ಸೆಪ್ಟೆಂಬರ್‌, ನವೆಂಬರ್‌ನಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೆವು. ಆಗ 35 ಸಾವಿರ ಕೋಟಿ ರೂ.ನಷ್ಟು ನಷ್ಟವಾಗಿದ್ದು, ಆನಂತರ ಈವರೆಗೂ ಒಟ್ಟು ನಷ್ಟದ ಅಂದಾಜು 50 ಸಾವಿರ ಕೋಟಿ ರೂ.ನಷ್ಟಾಗಿದೆ.
7
+ ಎನ್‌ಡಿಆರ್‌ಎಫ್‌ ನಿಯಮಾವಳಿಗಳ ಪ್ರಕಾರ, ಕೇಳಿರುವ ಪರಿಹಾರದಲ್ಲಿ ಕೊಟ್ಟಿರುವುದು ಅತ್ಯಂತ ಕಡಿಮೆ. ನಾವು ಅವರಿಂದ ಭಿಕ್ಷೆ ಕೇಳುತ್ತಿಲ್ಲ, ನಮಗಾಗಿ ಹಣ ಕೇಳುತ್ತಿಲ್ಲ, ಬರಪೀಡಿತ ಪ್ರದೇಶಗಳ ರೈತರಿಗೆ ಪರಿಹಾರ ನೀಡಲು ಹಣ ಕೇಳುತ್ತಿದ್ದೇವೆ. ಕೇಂದ್ರ ಯಾವುದೇ ದಯೆ, ಕರುಣೆ ತೋರಿಸಬೇಕಿಲ್ಲ. ನಮ್ಮ ಪಾಲಿನ ಹಕ್ಕನ್ನು ನೀಡಬೇಕು ಎಂದು ಒತ್ತಾಯಿಸಿದರು.ರಾಜ್ಯಕ್ಕೆ ಬಿಜೆಪಿ-ಜೆಡಿಎಸ್‌ ಮುಖಂಡರು ಒಟ್ಟಾಗಿ ಸೇರಿ ದ್ರೋಹ ಬಗೆದಿದ್ದಾರೆ, ಅವರು ರಾಜ್ಯದ ದ್ರೋಹಿಗಳು ಎಂದು ವಾಗ್ದಾಳಿ ನಡೆಸಿದರು.
8
+ ಗೃಹಸಚಿವ ಡಾ.ಜಿ.ಪರಮೇಶ್ವರ್‌ ಮಾತನಾಡಿ, 18 ಸಾವಿರ ಕೋಟಿ ರೂ. ಬರಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೆವು. ಕೇಂದ್ರದ ಸಚಿವರನ್ನು ಭೇಟಿ ಮಾಡಿ ಮನವರಿಕೆ ಮಾಡಿಕೊಟ್ಟಿದ್ದೆವು. ಬರ ಅಧ್ಯಯನ ಸಮಿತಿ ರಾಜ್ಯದಲ್ಲಿ ಪರಿಶೀಲನೆ ನಡೆಸಿ ಕೇಂದ್ರಕ್ಕೆ ವರದಿಯನ್ನೂ ಸಲ್ಲಿಸಿತ್ತು. ಒಂದು ತಿಂಗಳೊಳಗಾಗಿ ಬರಪರಿಹಾರ ನೀಡಬೇಕಿತ್ತು.
9
+ ಆದರೆ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್‌ ಮೊರೆ ಹೋಗಬೇಕಾಗಿತ್ತು. ಇದು ಇತಿಹಾಸದಲ್ಲೇ ಮೊದಲನೆಯದು. ಸುಪ್ರೀಂಕೋರ್ಟ್‌ ನಿರ್ದೇಶನದಂತೆ ಪರಿಹಾರ ನೀಡಿದೆ. ಅದು ಮನವಿ ಮಾಡಿದಷ್ಟು ಕೊಟ್ಟಿಲ್ಲ. ಕೇಂದ್ರ ಸರ್ಕಾರ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ. ಕೇಂದ್ರ ಸರ್ಕಾರದ ಹಾಗೂ ರಾಜ್ಯದ ಜನರ ಗಮನ ಸೆಳೆಯುವ ಉದ್ದೇಶದಿಂದ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದರು.
eesanje/url_46_166_6.txt ADDED
@@ -0,0 +1,7 @@
 
 
 
 
 
 
 
 
1
+ ಬರ-ಬಿಸಿಲಿನ ಎಫೆಕ್ಟ್ : ತರಕಾರಿಗಳ ಬೆಲೆ ಗಗನಕ್ಕೆ, ಮಾರಾಟವನ್ನೇ ನಿಲ್ಲಿಸಿದ ಚಿಲ್ಲರೆ ವ್ಯಾಪಾರಿಗಳು
2
+ ಬೆಂಗಳೂರು, ಏ.2-ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರುತ್ತಲೇ ಇದ್ದು ತರಕಾರಿಗಳ ಇಳುವರಿಯಲ್ಲಿ ಕುಂಠಿತವಾಗಿ ಬೆಲೆಗಳು ಗಗನಕ್ಕೆರಿದ್ದು ಚಿಲ್ಲರೆ ತರಕಾರಿ ವ್ಯಾಪಾರಿಗಳು ಮಾರಾಟವನ್ನೇ ತಾತ್ಕಾಲಿಕವಾಗಿ ನಿಲ್ಲಿಸುವಂತಾಗಿದೆ. ರಾಜ್ಯಾದ್ಯಂತ ಬರಗಾಲ ಆವರಿಸಿದ್ದು ಬಹುತೇಕ ಜಿಲ್ಲೆ ತಾಲೂಕುಗಳಲ್ಲಿ ನೀರಿಗೆ ಸಮಸ್ಯೆ ಎದರುರಾಗಿ ರೈತರು ಬೆಳೆ ಬೆಳೆಯಲು ಮುಂದಾಗದ ಕಾರಣ ಉತ್ಪಾದನೆ ಕುಂಟಿತವಾಗಿ ಬೆಲೆ ಹೆಚ್ಚಳವಾಗಿದೆ.
3
+ ಕೊಳವೆ ಬಾವಿ ನೀರನ್ನು ನಂಬಿ ಬೆಳೆ ಬೆಳೆಯುತ್ತಿದ್ದ ರೈತರಿಗೆ ಸಕಾಲಕ್ಕೆ ಮಳೆಯಾಗದೆ ಅಂತರ್ಜಲ ಮಟ್ಟ ಪಾತಾಳ ತಲುಪಿದೆ. ಜೊತೆಗೆ ವಿದ್ಯುತ್‌ ಕೊರತೆಯಿಂದ ಬೆಳೆ ಬೆಳೆಯಲು ಹಿಂದೆಟು ಹಾಕಿದ್ದಾರೆ.
4
+ ಹೆಚ್ಚಿನ ಬಿಸಿಲಿನ ತಾಪ ಹಾಗೂ ತೆವಾಂಶದ ಸಮಸ್ಯೆಯಿಂದ ಇಳುವರಿ ಭಾರಿ ಕುಂಠಿತವಾಗಿದೆ ಸಾಮಾನ್ಯವಾಗಿ ತರಕಾರಿ ಬೆಳೆಗೆ ಹೆಚ್ಚಿನ ತೇವಾಂಶದೊಂದಿಗೆ ಉತ್ತಮ ವಾತಾವರಣ ಅವಶ್ಯಕವಾಗಿರುತ್ತದೆ. ಇವುಗಳಲ್ಲಿ ಯಾವುದೇ ವ್ಯತ್ಯಯವಾದರೂ ಇಳುವರಿಗೆ ಹೊಡೆತ ಬಿಳುತ್ತದೆ.
5
+ ಉಷ್ಣಾಂಶ ಹೆಚ್ಚಾದ ಕಾರಣ ಗೀಡಗಳು ಕಚ್ಚುವುದಿಲ್ಲ. ಜೊತೆಗೆ ಹೂ, ಕಾಯಿ ಕೂಡ ಕಟ್ಟುವುದಿಲ್ಲ ಒಂದು ವೇಳೆ ಕಾಯಿ ಕಚ್ಚಿದರೂ ಸರಿಯಾಗಿ ಬಾರದೆ ಉದುರಿ ಹೋಗುತ್ತವೆ.ರಾಮನಗರ, ಮಾಗಡಿ, ತುಮಕೂರು, ಬೆಂಗಳೂರು ಗ್ರಾಮಾಂತರ, ಹೊಸಕೋಟೆ, ನಂದಗುಡಿ, ಕನಕಪುರ ಸೇರಿದಂತೆ ವಿವಿಧೆಡೆಯಿಂದ ಬೆಂಗಳೂರಿಗೆ ಬಾರಿ ತರಕಾರಿ ಬರುತ್ತಿತ್ತು. ಆದರೆ ಈಗ ಗಣೀೕಯವಾಗಿ ಇಳಿಮುಖವಾಗಿದೆ.
6
+ ಅಲ್ಲಿನ ಸ್ಥಳಿಯ ಮಾರುಕಟ್ಟೆಗಳಿಗೆ ಮಾಲು ಸಾಕಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತರಕಾರಿ ಸರಬರಾಜಿನಲ್ಲಿ ವ್ಯತ್ಯಯವಾಗಿ ಬೆಲೆ ಹೆಚ್ಚಳವಾಗಿದೆ. ಹುರುಳಿಕಾಯಿ ಕೆಜಿಗೆ 200 ರೂ ತಲುಪಿದೆ, ಕ್ಯಾರೆಟ್‌ 100, ಟಮೋಟೋ 30, ಕ್ಯಾಪ್ಸಿಕಂ 80, ಆಲೂಗೆಡ್ಡೆ 40. ಬದನೆಕಾಯಿ 50, ಗೆಡ್ಡೆಕೋಸ್‌ 50, ಸೌತೆಕಾಯಿ 50 ರೂನಂತೆ ಮಾರುಕಟ್ಟೆಗಳಲ್ಲಿ ಮಾರಾಟವಾಗುತ್ತಿದೆ.
7
+ ಇದರಿಂದ ಚಿಲ್ಲರೆ ವ್ಯಾಪಾರಿಗಳು ತರಕಾರಿ ತಂದು ಮರಾಟ ಮಾಡಲು ಹಿಂದೇಟು ಹಾಕುತ್ತಿದ್ದಾರೆ, ಬೆಲೆ ಹೆಚ್ಚಳದಿಂದ ಗ್ರಾಹಕರು ಖರೀದಿಗೆ ಮುಂದಾಗುತ್ತಿಲ್ಲ. ಇದರಿಂದ ತಂದ ತರಕಾರಿಗಳು ಒಣಗಿ ಹೋಗುತ್ತವೆ. ಇದರಿಂದ ಲಾಸ್‌ ಮಾಡಿಕೊಳ್ಳುವುದಕ್ಕಿಂತ ಕೆಲ ದಿನ ಮಾರಾಟ ನಿಲ್ಲಿಸೋದೆ ಒಳ್ಳೆಯದು ಎಂದು ತೀರ್ಮಾನಿಸಿದ್ದಾರೆ. ಸದ್ಯಕ್ಕೆ ಮಳೆ ಬಂದರೂ ಹೊಸ ತರಕಾರಿ ಬರಲು 2 ತಿಂಗಳಾದರೂ ಕಾಲವಕಾಶಬೇಕು ಸದ್ಯಕ್ಕೆ ಬೆಲೆ ಇಳಿಕೆಯಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ .
eesanje/url_46_166_7.txt ADDED
@@ -0,0 +1,4 @@
 
 
 
 
 
1
+ ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಕಾರಿನಲ್ಲಿದ್ದ 2 ಕೋಟಿ ರೂ. ವಶಕ್ಕೆ
2
+ ಬೆಂಗಳೂರು,ಏ.27-ಕಾರನ್ನು ಸುತ್ತುವರೆದ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿ 2 ಕೋಟಿ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ. ಕಲಬುರಗಿಯ ರೈಲು ನಿಲ್ದಾಣದ ಬಳಿ ಇಂದು ಬೆಳಿಗ್ಗೆ ಐಟಿ ಅಧಿಕಾರಿಗಳಿಗೆ ದೊರೆತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ್ದರು. ಆ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ರೈಲಿನಲ್ಲಿ ಬಂದು ಅಲ್ಲಿಯೇ ನಿಂತಿದ್ದ ಕಾರನ್ನು ಹತ್ತಿದ್ದಾರೆ.
3
+ ಇನ್ನೇನು ಕಾರು ಹೊರಡಬೇಕೆನ್ನುವಷ್ಟರಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಕಾರನ್ನು ಸುತ್ತುವರೆದು ಒಳಗೆ ಪರಿಶೀಲಿಸಿದಾಗ 2 ಕೋಟಿ ರೂ. ಪತ್ತೆಯಾಗಿದ್ದು, ಈ ಹಣಕ್ಕೆ ಸೂಕ್ತ ದಾಖಲೆ ಒದಗಿಸದ ಕಾರಣ ಕಾರಿನ ಸಮೇತ ಹಣವನ್ನು ಜಪ್ತಿ ಮಾಡಿದ್ದಾರೆ. ಈ ಹಣ ಮತ್ತು ಕಾರು ಯಾರಿಗೆ ಸೇರಿದ್ದು ಎಂಬ ಬಗ್ಗೆ ಐಟಿ ಅದಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.
4
+ ನಿನ್ನೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನವಾಗಿದೆ. ಮೇ 7 ರಂದು ಕಲಬುರಗಿ ಸೇರಿದಂತೆ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ನಡೆದಿರುವ ಐಟಿ ದಾಳಿ ಮಹತ್ವದ್ದಾಗಿದೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನಕ್ಕೂ ಮುನ್ನ ಐಟಿ ಅಧಿ ಕಾರಿಗಳು ಹಲವೆಡೆ ದಾಳಿ ನಡೆಸಿ ಕೋಟ್ಯಂತರ ರೂ. ಹಣ ವಶ ಪಡಿಸಿಕೊಂಡಿದ್ದು, ದಾಳಿ ಮುಂದುವರೆಸಿದ್ದಾರೆ.
eesanje/url_46_166_8.txt ADDED
@@ -0,0 +1,8 @@
 
 
 
 
 
 
 
 
 
1
+ ರಾಯಚೂರು ಬಿಜೆಪಿ ಬಂಡಾಯ ಅಭ್ಯರ್ಥಿ ನಾಮಪತ್ರ ತಿರಸ್ಕೃತ
2
+ ಬೆಂಗಳೂರು, ಏ.27-ರಾಯಚೂರಿನಲ್ಲಿ ಬಿಜೆಪಿ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ಬಿವಿ ನಾಯಕ್‌ ನಾಮಪತ್ರ ತಿರಸ್ಕೃತಗೊಂಡಿದೆ. ಬಿಜೆಪಿ ಪಕ್ಷದಿಂದಲೇ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆ ತಾಂತ್ರಿಕ ಕಾರಣಗಳಿಂದ ನಾಮಪತ್ರ ತಿರಸ್ಕತವಾಗಿದೆ. ನಾಮಪತ್ರ ಪರಿಷ್ಕರಣೆ ವೇಳೆ ಬಿ.ವಿ. ನಾಯಕ್‌ ನಾಮಪತ್ರ ತಿರಸ್ಕೃತಗೊಂಡಿದೆ.
3
+ ಬಿಜೆಪಿಯಿಂದಲೇ ಬಿವಿ ನಾಯಕ್‌ ನಾಮಪತ್ರ ಸಲ್ಲಿಸಿದ್ದರಿಂದ ಎ.ಬಿ ಫಾರ್ಮ್‌ ಇರಲಿಲ್ಲ.ಒಂದು ವೇಳೆ ಫಾರ್ಮ್‌ ಇಲ್ಲದ ಪಕ್ಷದಲ್ಲಿ 10 ಜನ ಸೂಚಕರು ಇವರ ಪರ ಇರಬೇಕು. ಆದರೆ ಬಿವಿ ನಾಯಕ್‌ ಪರ ಓರ್ವ ಸೂಚಕ ಮಾತ್ರ ಇದ್ದರು. ಇದೇ ಕಾರಣಕ್ಕೆ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಚಂದ್ರಶೇಖರ್‌ ನಾಯಕ್‌ ಹೇಳಿದ್ದಾರೆ.
4
+ ಬಂಡಾಯ ಅಭ್ಯರ್ಥಿ ಬಿವಿ ನಾಯಕ್‌ ನಾಮಪತ್ರ ತಿರಸ್ಕೃತಗೊಂಡಿರುವ ಕಾರಣ, ಬಿಜೆಪಿ ಪಾಳಯ ನಿಟ್ಟುಸಿರು ಬಿಟ್ಟಿದೆ. ಬಿವಿ ನಾಯಕರ ಬಂಡಾಯದಿಂದ ಕ್ಷೇತ್ರದಲ್ಲಿ ನೆಗೆಟಿವ್‌ ಅಲೆ ಶುರುವಾಗಿತ್ತು. ಆದರೀಗ ನಾಮಪತ್ರ ತಿರಸ್ಕೃತಗೊಂಡಿರೊ ಹಿನ್ನೆಲೆ ಬಿಜೆಪಿ ಪಾಳಯಕ್ಕೆ ಮತ್ತಷ್ಟು ಶಕ್ತಿಬಂದಂತಾಗಿದೆ. ಈಗಾಗಲೇ ವರಿಷ್ಠರ ಸಂಧಾನಕ್ಕೆ ಒಪ್ಪಿದ್ದ ಬಿವಿ ನಾಯಕ್‌ ಇನ್ಮುಂದೆ ಬಿಜೆಪಿ ಪರ ಪ್ರಚಾರಕ್ಕಿಳಿಯುತ್ತಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.
5
+ ಬಿವಿ ನಾಯಕ್‌ ರನ್ನ ಶತಾಯಗತಾಯ ಫೀಲ್ಡ್ ಗೆ ಕರೆತಂದು ಪ್ರಚಾರ ಮಾಡಬೇಕು ಅಂತ ಜಿಲ್ಲಾ ಘಟಕ ಹರಸಾಹಸ ಪಡ್ತಿದೆ. ಈ ಮಧ್ಯೆ ಬಿವಿ ನಾಯಕ್‌ ನಾಮಪತ್ರದ ಕುರಿತು ಪ್ರತಿಕ್ರಿಯೆ ನೀಡಲು ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ್‌ ನಾಯಕ್‌ ನಿರಾಕರಿಸಿದ್ದು, ಅದು ಅವರ ವೈಯಕ್ತಿಕ ಅಂತ ಹೇಳ್ತಿದ್ದಾರೆ. ಒಟ್ಟಿನಲ್ಲಿ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು ಬಿವಿ ನಾಯಕ್‌ ಬಿಜೆಪಿ ಪರ ಬ್ಯಾಟ್‌ ಬೀಸ್ತಾರಾ, ಇಲ್ಲಾ ಒಳಹೊಡೆತ ಕೊಡ್ತಾರಾ ಅನ್ನೋದೇ ಕುತೂಹಲ.
6
+ ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ಕೈ ತಪ್ಪಿದ್ದ ಹಿನ್ನೆಲೆ ಬಿವಿ ನಾಯಕ್‌ ಕೆರಳಿದ್ದರು. ಬಿಜೆಪಿ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ಬಿವಿ ನಾಯಕ್‌ ರಾಜ್ಯ,ಕೇಂದ್ರ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಆದರೆ ಇದರಿಂದ ಟಿಕೆಟ್‌ ಬದಲಾವಣೆ ಆಗಿರಲಿಲ್ಲ.
7
+ ಈ ಮಧ್ಯೆ ಬಿವಿ ನಾಯಕ್‌ ಬಂಡಾಯ ತಣಿಸಲು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಅಗರವಾಲ್‌ ಹರಸಾಹಸ ಪಟ್ಟಿದ್ದರು. ಖುದ್ದು ರಾಯಚೂರಿಗೆ ಆಗಮಿಸಿದ್ದ ಅಗರವಾಲ್‌ ಬಿವಿ ನಾಯಕ್‌ ಮನವೊಲಿಸಿ ಅವರ ಮೂಲಕವೇ ರಾಜಾ ಅಮರೇಶ್ವರ ನಾಯಕ್‌ಗೆ ಬಿ ಫಾರ್ಮ್‌ ಕೊಡಿಸಿದ್ದರು. ಇದಾದ ಬಳಿಕ ಎಲ್ಲವೂ ತಣ್ಣಗಾಯ್ತು ಅಂತ ಭಾವಿಸಲಾಗಿತ್ತು. ಆದರೆ ಆಗಿದ್ದೇ ಬೇರೆ.
8
+ ಬಿಜೆಪಿ ಸಂಸದ ಹಾಗೂ ಘೋಷಿತ ಅಭ್ಯರ್ಥಿ ರಾಜಾ ಅಮರೇಶ್ವರ್‌ ನಾಯಕ್‌ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ, ಬಿವಿ ನಾಯಕ್‌ ���ಂಡಾಯವೆದ್ದು ಅಜ್ಞಾತ ಸ್ಥಳದಿಂದಲೇ ತಮ್ಮ ಸೂಚಕರ ಮೂಲಕ ನಾಮಪತ್ರ ಸಲ್ಲಿಸಿದ್ದರು. ಅಚ್ಚರಿ ಅಂದ್ರೆ ಬಿವಿ ನಾಯಕ್‌ ಕೂಡ ಬಿಜೆಪಿಯಿಂದಲೇ ನಾಮಪತ್ರ ಸಲ್ಲಿಸಿದ್ದರು.
eesanje/url_46_166_9.txt ADDED
@@ -0,0 +1,7 @@
 
 
 
 
 
 
 
 
1
+ ಬರಪರಿಹಾರಕ್ಕೆ 3454 ಕೋಟಿ ರೂ. ಸಾಕಾಗಲ್ಲ : ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು,ಏ.27-ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂಕೋರ್ಟ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ. ಎನ್‌ಡಿಆರ್‌ಎಫ್‌ ನಿಯಮವಾಳಿ ಪ್ರಕಾರ, ರಾಜ್ಯಕ್ಕೆ 18,171 ಕೋಟಿ ರೂ. ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ 3498 ಕೋಟಿ ರೂ.ಗೆ ಅನುಮೋದನೆ ನೀಡಿ, 3454 ಕೋಟಿ ರೂ. ಬಿಡುಗಡೆ ಮಾಡಿದೆ. ಬರಪರಿಹಾರಕ್ಕಾಗಿ ಈ ಹಣ ಸಾಲದು.
3
+ ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಕಾಳಜಿಯಿಂದ ಈ ಬರ ಪರಿಹಾರ ನೀಡಿಲ್ಲ. ನಾವು ಸುಪ್ರೀಂಕೋರ್ಟ್‌ ಮೆಟ್ಟಿಲು ಹತ್ತಿ ನಮ್ಮಲ್ಲಿನ ಬರಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದೆವು.
4
+ ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ಗೆ ರಾಜಕೀಯ ದುರುದ್ದೇಶದಿಂದ ಕೇಂದ್ರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮನವರಿಕೆಯಾಗಿದೆ. ನ್ಯಾಯಾಲಯ ವಿಚಾರಣೆ ವೇಳೆ ಚಾಟಿ ಬೀಸಿದ ನಂತರ ವಾರದ ಅವಧಿಯೊಳಗೆ ಬರ ಪರಿಹಾರ ನೀಡಲಾಗುವುದು ಎಂದು ಸುಪ್ರೀಂಕೋರ್ಟ್‌ಗೆ ವಚನ ನೀಡಿತ್ತು. ಅದನ್ನು ಪಾಲಿಸಲಿಕ್ಕಾಗಿ ಒಲ್ಲದ ಮನಸ್ಸಿನಿಂದ ಈ ಪರಿಹಾರ ನೀಡಿದೆ ಎಂದು ತಿಳಿಸಿದ್ದಾರೆ.
5
+ ಇದರಲ್ಲಿ ಬಿಜೆಪಿಯ ನಾಯಕರದ್ದಾಗಲಿ, ಕೇಂದ್ರ ಸರ್ಕಾರದ್ದಾಗಲಿ ಯಾವ ಪಾತ್ರವೂ ಇಲ್ಲ. ಇದು ಕೃಷಿ ಕ್ಷೇತ್ರ ಮತ್ತು ರಾಜ್ಯದ ರೈತರ ಮೇಲೆ ಸುಪ್ರೀಂಕೋರ್ಟ್‌ ಇಟ್ಟುಕೊಂಡಿರುವ ಕಾಳಜಿಯ ಫಲ. ಸ್ವಲ್ಪವಾದರೂ ಪರಿಹಾರವನ್ನು ನೀಡದೆ ಇದ್ದರೆ ರೊಚ್ಚಿಗೆದ್ದಿರುವ ಕರ್ನಾಟಕದ ಜನ ಚುನಾವಣಾ ಪ್ರಚಾರಕ್ಕಾಗಿ ತಮ್ಮನ್ನು ರಾಜ್ಯಕ್ಕೆ ಕಾಲಿಡಲು ಬಿಡಲಾರರು ಎಂಬ ಭಯವೂ ಈ ಪರಿಹಾರ ಘೋಷಿಸಲು ಕಾರಣವಾಗಿದೆ. ಈ ಅಲ್ಪ ಪರಿಹಾರವನ್ನು ತಮ್ಮ ಸಾಧನೆ ಎಂದು ರಾಜ್ಯದ ಬಿಜೆಪಿ ನಾಯಕರು ಬಿಂಬಿಸಲು ಹೊರಟರೆ ರಾಜ್ಯದ ಜನ ಅವರಿಗೆ ತಕ್ಕ ಉತ್ತರ ನೀಡಬೇಕೆಂದು ಮನವಿ ಮಾಡಿದರು.
6
+ ಈ ಬರ ಪರಿಹಾರದ ಹಿಂದಿನ ಕಾರಣಗಳೇನೇ ಇರಲಿ, ನೀಡಿರುವ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಸಾಧ್ಯವಾದಷ್ಟು ಶೀಘ್ರ ಬಾಕಿ ಪರಿಹಾರದ ಹಣವನ್ನು ಬಿಡುಗಡೆಗೊಳಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಒತ್ತಾಯಿಸುತ್ತಿದ್ದೇನೆ. ಇದೇ ರೀತಿ ತೆರಿಗೆ ಹಂಚಿಕೆಯಲ್ಲಿನ ಅನ್ಯಾಯವನ್ನು ಕೂಡಾ ಕೇಂದ್ರ ಸರ್ಕಾರ ಸರಿಪಡಿಸಬೇಕೆಂದು ಆಗ್ರಹಿಸಿದರು.
7
+ ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ನಾವು 13-9-2024ರಂದು ಘೋಷಿಸಿದ್ದೆವು. ಈಗ ಏಳು ತಿಂಗಳುಗಳಾಗುತ್ತಾ ಬಂತು. 48 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ಹಾನಿಯಾಗಿದೆ. ಇದರಿಂದಾಗಿ 35,162 ಕೋಟಿ ರೂ.ನಷ್ಟು ನಷ್ಟವಾಗಿದೆ. ಕೇಂದ್ರ ಸರ್ಕಾರದಿಂದ ನಾವು ಪರಿಹಾರ ಕೇಳಿರುವುದು ಹೆಚ್ಚು ಕಡಿಮೆ ಅದರ ಅರ್ಧದಷ್ಟು ಅಂದರೆ 18,171 ಕೋಟಿ ರೂ. ಉಳಿದ ಹಣವನ್ನು ರಾಜ್ಯ ಸರ್ಕಾರ ತನ್ನ ಸಂಪನ್ಮೂಲದಿಂದಲೆ ಭರಿಸುತ್ತಿದೆ. ಈಗ ಬಿಡುಗಡೆಯಾಗಿರುವುದು 3498.98 ಕೋಟಿ ರೂ. ಮಾತ್ರ. ಉಳಿದ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
eesanje/url_46_167_1.txt ADDED
@@ -0,0 +1,16 @@
 
 
 
 
 
 
 
 
 
 
 
 
 
 
 
 
 
1
+ 2ನೇ ಹಂತದ ಫೈಟ್ : ಉತ್ತರ ಕರ್ನಾಟಕದತ್ತ ರಾಜಕೀಯ ನಾಯಕರ ದಾಂಗುಡಿ
2
+ ಬೆಂಗಳೂರು,ಏ.27-ಮೊದಲ ಹಂತದಲ್ಲಿ ಹಳೇ ಮೈಸೂರು ಭಾಗದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಮುಗಿದ ಬೆನ್ನಲ್ಲೇ, ಇದೀಗ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಮಧ್ಯ ಹಾಗೂ ಉತ್ತರ ಕರ್ನಾಟಕದತ್ತ ಲಗ್ಗೆಯಿಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿ.ಎಂ.ಗಳಾದ ಯಡಿಯೂರಪ್ಪ, ಹೆಚ್‌.ಡಿ.ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಘಟಾನುಘಟಿ ನಾಯಕರು ಆಖಾಡಕ್ಕೀಳಿದಿದ್ದಾರೆ.
3
+ ನಾಳೆ ಉತ್ತರ ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕುಂದಾನಗರಿ ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚಿಕ್ಕೋಡಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪರವಾಗಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ.ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಭಾನುವಾರವೇ ಚಿಕ್ಕೋಡಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರವಾಗಿ ಬಹಿರಂಗ ಪ್ರಚಾರ ನಡೆಸುವುದರಿಂದ ಏಟಿಗೆ ಏಟು ಮಾತಿನ ವಾಗ್ಬಣ ನಡೆಯಲಿದೆ.
4
+ ಅದರಲ್ಲೂ ಈ ಕ್ಷೇತ್ರಗಳ ಪೈಕಿ ಶಿವಮೊಗ್ಗ, ಬೆಳಗಾವಿ, ಚಿಕ್ಕೋಡಿ, ಹಾವೇರಿ ತೀವ್ರ ಕುತೂಹಲ ಕೆರಳಿಸಿದ ಕ್ಷೇತ್ರಗಳಾಗಿವೆ. ಬಳ್ಳಾರಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪುತ್ರ ಕಣದಲ್ಲಿದ್ದರೆ, ಚಿಕ್ಕೋಡಿಯಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಪುತ್ರಿ ಕಣದಲ್ಲಿದ್ದಾರೆ. ಅಲ್ಲದೆ ಬೀದರ್‌ನಲ್ಲಿ ನಲ್ಲಿ ಸಚಿವ ಈಶ್ವರ್‌ ಖಂಡ್ರೆ ಪುತ್ರ ಅಖಾಡಲ್ಲಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಘಟನಾನುಘಟಿ ನಾಯಕರು ಈ ಕ್ಷೇತ್ರಗಳತ್ತ ದೌಡಾಯಿಸಲಿದ್ದಾರೆ.
5
+ ಇನ್ನು ಬಿಜೆಪಿಗೂ ಇದು ಪ್ರತಿಷ್ಠೆಯ ಚುನಾವಣೆಯಾಗಿದೆ. ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಈಶ್ವರಪ್ಪ ಬಂಡಾಯ ಸಾರಿದ್ದಾರೆ. ಬಿವೈ ರಾಘವೇಂದ್ರ ವಿರುದ್ಧ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿದ್ದಾರೆ. ಹೀಗಾಗಿ ಎಲ್ಲರ ಚಿತ್ತ ಈ ಕ್ಷೇತ್ರದತ್ತ ನೆಟ್ಟಿದೆ. ಇನ್ನು ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ಹಿನ್ನೆಲೆಯಲ್ಲಿ ಮೂರು ಪಕ್ಷಗಳ ನಾಯಕರು ಮತ ಬೇಟೆಗೆ ಸಜ್ಜಾಗುತ್ತಿದ್ದಾರೆ.
6
+ ಬಿಜೆಪಿಯ ಜೆಪಿ ನಡ್ಡಾ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನಿನ್ನೆಯಿಂದಲೇ ಎರಡನೇ ಹಂತದ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಕೂಡಾ ಈ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ.
7
+ ಇನ್ನು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೂ ಈ ಕ್ಷೇತ್ರಗಳಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವುದು ಅನಿವಾರ್ಯವಾಗಿದೆ. ಇನ್ನುಳಿದಿರುವ ಒಂಬತ್ತು ದಿನಗಳ ಕಾಲ ಅವರು ಕಲ್ಯಾಣ ಕರ್ನಾಟಕ, ಉತ್ತರ ಕನ್ನಡ ಹಾಗೂ ಮಲೆನಾಡಿನ ಈ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
8
+ ಬೆಳಗಾವಿ ಕಳೆದ ಎರಡು ದಶಕಗಳಿಂದ ಬಿ���ೆಪಿ ಭದ್ರಕೋಟೆಯಾಗಿದೆ. ಇನ್ನು ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲೂ ಬಿಜೆಪಿ ತನ್ನದೆಯಾದ ಪ್ರಭಾವ ಹೊಂದಿದೆ. ಹೀಗಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಈ ಬಾರಿ ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲ್ಲಿಸಲು ಪಣ ತೊಟ್ಟಿದ್ದಾರೆ. ಈ ಸಂಬಂಧ ಲಕ್ಷ್ಮೀ ಹೆಬ್ಬಾಳ್ಕರ್‌ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಅವರನ್ನು ಕಣಕ್ಕಿಳಿಸಿ, ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರನ್ನು ಮಣಿಸಲು ರಣತಂತ್ರ ರೂಪಿಸಿದ್ದಾರೆ.
9
+ ಇಂದು ಗೋವಾದಿಂದ ಪ್ರಚಾರ ಮುಗಿಸಿಕೊಂಡು ಸಂಜೆ ಬೆಳಗಾವಿಗೆ ಆಗಮಿಸುವ ಮೋದಿ ರಾತ್ರಿ ಇಲ್ಲಿನ ಐಟಿಸಿ ಹೊಟೇಲ್‌ ನಲ್ಲಿ ವಾಸ್ತವ್ಯ ಹೂಡಲಿದ್ದು, ಬೆಳಿಗ್ಗೆ 11ಕ್ಕೆ ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಪ್ರಧಾನಿ ಮೋದಿ ಬೃಹತ್‌ ಸಮಾವೇಶ ನಡೆಸುವರು,ಇದೇ ದಿನದಂದು ಬೆಳಗಾವಿ ಮತ್ತು ಚಿಕ್ಕೋಡಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.
10
+ ಚಿಕ್ಕೋಡಿ ಕ್ಷೇತ್ರ ವ್ಯಾಪ್ತಿಯ ಉಗಾರ್‌ ಖುರ್ದ್‌, ಬೆಳಗಾವಿ ಕ್ಷೇತ್ರದ ಯರಗಟ್ಟಿಯಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಸಿದ್ದರಾಮಯ್ಯ ಒಂದೇ ದಿನ ಎರಡೂ ಕ್ಷೇತ್ರಗಳಲ್ಲಿ ತಲಾ ಒಂದೊಂದು ಸಮಾವೇಶ ನಡೆಸಲಿದ್ದಾರೆ.
11
+ ಮಧ್ಯಾಹ್ನ 12.55ಕ್ಕೆ ಉತ್ತರ ಕನ್ನಡ ಜಿಲ್ಲೆ ಶಿರಸಿಗೆ ಆಗಮಿಸುವ ಮೋದಿ, 1 ಗಂಟೆಗೆ ಶಿರಸಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. 2 ಗಂಟೆಗೆ ಶಿರಸಿಯಿಂದ ಹೊರಟು 2.50ಕ್ಕೆ ದಾವಣಗೆರೆಗೆ ತಲುಪಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ದಾವಣಗೆರೆ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಾರೆ. ನಂತರ 4.05ಕ್ಕೆ ದಾವಣಗೆರೆಯಿಂದ ಹೊಸಪೇಟೆ ಕಡೆಗೆ ಹೊರಡುವ ಪ್ರಧಾನಿ ಮೋದಿ, ಸಂಜೆ 4.50ಕ್ಕೆ ಹೊಸಪೇಟೆ ತಲುಪಲಿದ್ದಾರೆ. 5 ಗಂಟೆಗೆ ಹೊಸಪೇಟೆ ಸಮಾವೇಶದಲ್ಲಿ ಭಾಗಿಯಾಗಿ, 6 ಗಂಟೆಗೆ ಹೊಸಪೇಟೆ ಹೋಟೆಲ್ಗೆ ಆಗಮಿಸಿ, ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ.
12
+ ಏಪ್ರಿಲ್‌ 29ರ ಬೆಳಗ್ಗೆ 11 ಗಂಟೆಗೆ ಹೊಸಪೇಟೆಯಿಂದ ಮೋದಿ ನಿರ್ಗಮಿಸಿ, ಮಧ್ಯಾಹ್ನ 12.15ಕ್ಕೆ ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾಲಯ ಮೈದಾನದಲ್ಲಿ ನಡೆಯಲಿರುವ ಬಹಿರಂಗ ಸಮಾವೇಶದಲ್ಲಿ ಭಾಗಿಯಾಗುತ್ತಾರೆ. ಮಧ್ಯಾಹ್ನ 1.05ಕ್ಕೆ ಬಾಗಲಕೋಟೆಯಿಂದ ಸೊಲ್ಲಾಪುರಕ್ಕೆ ಪ್ರಯಾಣ ಬೆಳಸಲಿದ್ದಾರೆ.
13
+ ಡ್ರೋನ್‌ ಹಾರಾಟಕ್ಕೆ ನಿಷೇಧಬೆಳಗಾವಿಗೆ ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ದೃಷ್ಟಿಯಿಂದ ಶನಿವಾರ ಮುಂಜಾನೆ 6 ಗಂಟೆಯಿಂದ ಭಾನುವಾರ ಸಂಜೆ 6 ಗಂಟೆಯವರಗೆ ಡ್ರೋನ್‌ ಹಾರಾಟಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ನಿತೇಶ ಪಾಟೀಲ್‌ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ತಾಲೂಕಿನ ವ್ಯಾಪ್ತಿಯನ್ನು ರೆಡ್‌ ಜೋನ್‌ ಎಂದು ಘೋಷಿಸಿದೆ.
14
+ ಹಲವು ದಿಗ್ಗಜರು ಕಣದಲ್ಲಿ :ಇನ್ನು ಎರಡನೇ ಹಂತದಲ್ಲಿ ನಡೆಯುವ ಮತದಾನದಲ್ಲಿ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶಿವಮೊಗ್ಗ ಹಾಗೂ ಕಾಂಗ್ರೆಸ್‌ ಟಿಕೆಟ್‌ ದೊರೆಯದ ಹಿನ್ನೆಲೆಯಲ್ಲಿ ಶಿಕ್ಷಣ ತಜ್ಞ ವಿನಯ್‌ಕುಮಾರ್‌ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ದಾವಣಗೆರೆಯಲ್ಲಿ ಬಿಟ್ಟರೆ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದೆ. ಈ ಇಬ್ಬರೂ ಕುರುಬ ಸಮುದಾಯದವರಾಗಿದ್ದಾರೆ. ತಮ್ಮ ಪಕ್ಷದ ಯಾವುದೇ ಅಭ್ಯರ್ಥಿಗಳು ಸ್ಪಧಿಸದ ಹಿನ್ನೆಲೆಯಲ್ಲಿ ಬಿಜೆಪಿಗೆ ಜೆಡಿಎಸ್‌ ಬೆಂಬಲ ನೀಡಲಿದೆ.
15
+ ಬಿಜೆಪಿಯಿಂದ ಅಮಾನತುಗೊಂಡಿರುವ ಈಶ್ವರಪ್ಪ, ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಪುತ್ರ ಹಾಗೂ ಹಾಲಿ ಸಂಸದ ಬಿವೈ ವಿಜಯೇಂದ್ರಗೆ ಸವಾಲು ಹಾಕಿದ್ದಾರೆ. ಕಾಂಗ್ರೆಸ್‌ ಟಿಕೆಟ್‌ ನಿರೀಕ್ಷೆಯಲ್ಲಿದ್ದ ವಿನಯ್‌ಕುಮಾರ್‌ ಅವರು ಶಾಮನೂರು ಶಿವಶಂಕರಪ್ಪ ಸೊಸೆ, ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ ಪತ್ನಿ ಪ್ರಭಾಗೆ ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ. ಹಾವೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬೆಳಗಾವಿಯಲ್ಲಿ ಜಗದೀಶ ಶೆಟ್ಟರ್‌, ಹುಬ್ಬಳ್ಳಿ-ಧಾರವಾಡದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ ಮತ್ತು ಬೀದರ್‌ನಲ್ಲಿ ಭಗವಂತ ಖೂಬಾ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.
16
+ ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರು ಈ ಚುನಾವಣೆಯಲ್ಲಿ ರಾಜಕೀಯ ಅದೃಷ್ಟ ಪರೀಕ್ಷೆ ನಡೆಸುತ್ತಿದ್ದಾರೆ. ಧಾರವಾಡದಲ್ಲಿ ಆನಂದ ಅಸೂಟಿ ಅವರು ಪ್ರಲ್ಹಾದ ಜೋಶಿ ವಿರುದ್ಧ ಕಣಕ್ಕಿಳಿದಿದ್ದಾರೆ.ಮೇ 7ರಂದು ಬಾಗಲಕೋಟೆ, ಬೆಳಗಾವಿ, ಬೀದರ್‌, ಬಿಜಾಪುರ, ಚಿಕ್ಕೋಡಿ, ದಾವಣಗೆರೆ, ಧಾರವಾಡ, ಕಲಬುರಗಿ, ಹಾವೇರಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಶಿವಮೊಗ್ಗ ಮತ್ತು ಉತ್ತರ ಕನ್ನಡದ 14 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
eesanje/url_46_167_10.txt ADDED
@@ -0,0 +1,6 @@
 
 
 
 
 
 
 
1
+ ರಾಜ್ಯದಲ್ಲಿ ದಾಖಲೆ ಪ್ರಮಾಣದ ಚುನಾವಣಾ ಅಕ್ರಮ ಸಂಪತ್ತು ಜಪ್ತಿ
2
+ ಬೆಂಗಳೂರು,ಏ.26– ಪ್ರಸಕ್ತ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದಾಖಲೆ ಪ್ರಮಾಣದ ನಗದು, ಮದ್ಯ, ಡ್ರಗ್ಸ್ , ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಲಾಗಿದೆ. ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ ನಿನ್ನೆಯವರೆಗೆ ರಾಜ್ಯದಲ್ಲಿ ಒಟ್ಟಾರೆ 433.39 ಕೋಟಿ ರೂ. ಮೊತ್ತದ ನಗದು, ಮದ್ಯ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
3
+ ಪೊಲೀಸ್‌, ಕ್ಷಿಪ್ರ ಪಡೆಗಳು, ಸ್ಥಿರ ಕಣ್ಗಾವಲು ತಂಡಗಳು, 137.31 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್, ಚಿನ್ನ, ಬೆಳ್ಳಿ , ಉಚಿತ ಉಡುಗೊರೆಗಳನ್ನು ವಶಪಡಿಸಿಕೊಂಡಿದ್ದಾರೆ. ಅಬಕಾರಿ ಇಲಾಖೆಯವರು 177.52 ಕೋಟಿ ರೂ. ಮೊತ್ತದ ಮದ್ಯ, ಡ್ರಗ್‌್ಸ ವಶಪಡಿಸಿಕೊಂಡಿದ್ದರೆ ಆದಾಯ ತೆರಿಗೆ ಅಧಿಕಾರಿಗಳು 38.65 ಕೋಟಿ ರೂ.ಮೊತ್ತದ ನಗದು, ಚಿನ್ನ, ವಜ್ರ ವಶಪಡಿಸಿಕೊಂಡಿದ್ದಾರೆ.
4
+ ವಾಣಿಜ್ಯ ತೆರಿಗೆ ಅಽಕಾರಿಗಳು 79.90 ಕೋಟಿ ರೂ. ಮೊತ್ತದ ಚಿನ್ನ ಬೆಳ್ಳಿ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಜಪ್ತಿ ಮಾಡಿದ ವಸ್ತುಗಳಿಗೆ ಸಂಬಂಧಿಸಿದಂತೆ 2,149 ಎ್‌‍ಐಆರ್‌ಗಳನ್ನು ದಾಖಲಿಸಿಕೊಳ್ಳಲ್ಲಾಗಿದ್ದು, 1884 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
5
+ ಸಂಜಯನಗರ ಪೊಲೀಸ್‌ ತಂಡದವರು ಬೆಂಗಳೂರು ಉತ್ತರ ಲೋಕಸಭಾ ವ್ಯಾಪ್ತಿಯಲ್ಲಿ 10 ಲಕ್ಷ ನಗದು, ಬಳ್ಳಾರಿನಗರ ಬ್ರೂಸ್‌ಪೇಟೆ ಪೊಲೀಸ್‌ ಠಾಣೆ ತಂಡದವರು 23ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ.
6
+ ಸ್ಥಿರ ಕಣ್ಗಾವಲು ತಂಡದವರು ಜೇವರ್ಗಿಯ ನಾಗರಳ್ಳಿ ಚೆಕ್‌ ಪೋಸ್‌್ಟನಲ್ಲಿ 38 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ಆದಾಯ ತೆರಿಗೆ ಇಲಾಖೆಯವರು ಕೋಣನಕುಂಟೆಯ ಸಿಲಿಕಾನ್‌ ಸಿಟಿ ಲೇಔಟ್‌ನಲ್ಲಿ 26 ಲಕ್ಷ ನಗದು, ದೊಡ್ಡ ಕಲ್ಲಸಂದ್ರದ ಡಾಕ್ಟರ್‌ರ‍ಸ ಕಾಲೋನಿಯಲ್ಲಿ 34,97,500 ನಗದು ಹಾಗೂ 55 ಲಕ್ಷ ರೂ. ವೌಲ್ಯದ 1.113 ಕೆ.ಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ ಎಂದು ಪ್ರಕಟಿಸಿದೆ.
eesanje/url_46_167_11.txt ADDED
@@ -0,0 +1,8 @@
 
 
 
 
 
 
 
 
 
1
+ ದೇಶದ 2ನೇ ಹಂತದ ಚುನಾವಣೆಯಲ್ಲಿ ಸ್ಟಾರ್‌ ಚಂದ್ರು ಅತ್ಯಂತ ಶ್ರೀಮಂತ ಅಭ್ಯರ್ಥಿ
2
+ ನವದೆಹಲಿ,ಏ.26-ಎರಡನೆ ಹಂತದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳಲ್ಲಿ ಅತ್ಯಂತ ಹೆಚ್ಚು ಶ್ರೀಮಂತ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌‍ ಅಭ್ಯರ್ಥಿ ವೆಂಕಟರಮಣೇಗೌಡ ಹೊರಹೊಮಿದ್ದಾರೆ. ಕರ್ನಾಟಕ ಸೇರಿದಂತೆ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 88 ಸ್ಥಾನಗಳಲ್ಲಿ ಇಂದು ಚುನಾವಣಾ ನಡೆಯುತ್ತಿದ್ದು, ಪ್ರಮುಖ ಸ್ಪರ್ಧಿಗಳಲ್ಲಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌, ಹೇಮಾ ಮಾಲಿನಿ ಮತ್ತು ಅರುಣ್‌ ಗೋವಿಲ್‌‍, ಕಾಂಗ್ರೆಸ್‌‍ ನಾಯಕರಾದ ರಾಹುಲ್‌ ಗಾಂಧಿ ಮತ್ತು ಶಶಿ ತರೂರ್‌ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್‌‍ನ ಎಚ್‌ಡಿ ಕುಮಾರಸ್ವಾಮಿ ಇದ್ದಾರೆ.
3
+ ಅಸೋಸಿಯೇಶನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ (ಎಡಿಆರ್‌) ಮತ್ತು ನ್ಯಾಷನಲ್‌ನ ಸ್ಪರ್ಧಿಗಳ ಸ್ವಯಂ ಪ್ರಮಾಣ ಪತ್ರಗಳ ವಿಶ್ಲೇಷಣೆಯ ಪ್ರಕಾರ, ಸ್ಟಾರ್‌ ಚಂದ್ರು ಎಂದು ಜನಪ್ರಿಯವಾಗಿರುವ ಕರ್ನಾಟಕ ಕಾಂಗ್ರೆಸ್‌‍ ನಾಯಕ ವೆಂಕಟರಮಣೇಗೌಡ ಅವರು 2 ನೇ ಹಂತದ ಮತದಾನದಲ್ಲಿ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಸ್ಪರ್ಧಿಸಿರುವ ಗೌಡರು 622 ಕೋಟಿ ರೂ.ಗಳ ಆಸ್ತಿ ಘೋಷಿಸಿಕೊಂಡಿದ್ದಾರೆ.
4
+ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಹೋದರ ಹಾಗೂ ಹಾಲಿ ಕಾಂಗ್ರೆಸ್‌‍ ಸಂಸದ ಡಿ.ಕೆ.ಸುರೇಶ್‌ ಅವರು 593 ಕೋಟಿ ಮೌಲ್ಯದ ಆಸ್ತಿಯೊಂದಿಗೆ ಎರಡನೇ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ಮಥುರಾ ಲೋಕಸಭಾ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸುತ್ತಿರುವ ಬಿಜೆಪಿ ಸಂಸದೆ ಹೇಮಾ ಮಾಲಿನಿ 278 ಕೋಟಿ ಆಸ್ತಿಯೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, 232 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿರುವ ಮಧ್ಯಪ್ರದೇಶ ಕಾಂಗ್ರೆಸ್‌‍ ನಾಯಕ ಸಂಜಯ್‌ ಶರ್ಮಾ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ ಅವರ ಒಟ್ಟು ಆಸ್ತಿ ಮೌಲ್ಯ 217.21 ಕೋಟಿ ರೂ.ಗಳಾಗಿದೆ.
5
+ ಮೇಲಿನ ಐವರು ಅಭ್ಯರ್ಥಿಗಳು ಅತ್ಯಂತ ಶ್ರೀಮಂತ ಅಭ್ಯರ್ಥಿಗಳಾಗಿದ್ದರೆ ಈ ಕೆಳಗಿನ ಐವರು ಅಭ್ಯರ್ಥಿಗಳು ಕಡಿಮೆ ಆಸ್ತಿ ಹೊಂದಿರುವ ಅಭ್ಯರ್ಥಿಗಳಾಗಿದ್ದಾರೆ. ಮಹಾರಾಷ್ಟ್ರದ ನಾಂದೇಡ್‌ನಿಂದ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಲಕ್ಷ್ಮಣ್‌ ನಾಗರಾವ್‌ ಪಾಟೀಲ್‌ ಎರಡನೇ ಹಂತದಲ್ಲಿ ಅತಿ ಕಡಿಮೆ ಆಸ್ತಿ ಹೊಂದಿರುವ ಅಭ್ಯರ್ಥಿಯಾಗಿದ್ದಾರೆ. ಅವರ ಚುನಾವಣಾ ಅಫಿಡವಿಟ್‌ ಪ್ರಕಾರ, ಅವರ ಬಳಿ ಕೇವಲ 500 ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ.
6
+ ಪಾಟೀಲ್‌ ನಂತರ ಮತ್ತೊಬ್ಬ ಸ್ವತಂತ್ರ ಅಭ್ಯರ್ಥಿ ರಾಜೇಶ್ವರಿ ಕೆಆರ್‌ ಅವರು ಕೇರಳದ ಕಾಸರಗೋಡಿನಿಂದ ಸ್ಪರ್ಧಿಸಿದ್ದಾರ��� ಮತ್ತು ಅವರು 1,000 ಮೌಲ್ಯದ ಆಸ್ತಿ ಹೊಂದಿದ್ದರೆ, ಅಮರಾವತಿಯಿಂದ (ಎಸ್‌‍ಸಿ) ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿದಿರುವ ಪಥ್ವಿಸಾವ್ರಾಟ್‌ ಮುಕಿಂದ್ರರಾವ್‌ ದೀಪವಂಶ್‌ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು ಒಟ್ಟು 1,400 ಆಸ್ತಿ ಹೊಂದಿದ್ದಾರೆ.
7
+ ರಾಜಸ್ಥಾನದ ಜೋಧ್‌ಪುರದಿಂದ ಸ್ಪರ್ಧಿಸಿರುವ ದಲಿತ ಕ್ರಾಂತಿ ದಳದ ನಾಯಕ ಶಹನಾಜ್‌ ಬಾನೊ 2,000 ಮೌಲ್ಯದ ಆಸ್ತಿ ಘೋಷಿಸಿದ್ದಾರೆ.ಕೇರಳದ ಕೊಟ್ಟಾಯಂನಿಂದ ಸೋಷಿಯಲಿಸ್ಟ್‌ ಯೂನಿಟಿ ಸೆಂಟರ್‌ ಆಫ್‌ ಇಂಡಿಯಾ (ಕಮ್ಯುನಿಸ್ಟ್‌ ) ನಿಂದ ಕಣಕ್ಕಿಳಿದಿರುವ ವಿಪಿ ಕೊಚುಮೊನ್‌ 2,230 ಆಸ್ತಿಯೊಂದಿಗೆ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ.
8
+ ಶೂನ್ಯ ಆಸ್ತಿ ಅಭ್ಯರ್ಥಿಗಳು:ಶೂನ್ಯ ಆಸ್ತಿ ಹೊಂದಿರುವ ಆರು ಅಭ್ಯರ್ಥಿಗಳಲ್ಲಿ ಕರ್ನಾಟಕದ ಪ್ರಕಾಶ್‌ ಆರ್‌ಎ ಜೈನ್‌, ರಾಮಮೂರ್ತಿ ಎಂ, ಮತ್ತು ರಾಜಾ ರೆಡ್ಡಿ ಸೇರಿದ್ದಾರೆ. ಶೂನ್ಯ ಆಸ್ತಿ ಹೊಂದಿರುವ ಇತರ ಮೂವರು ಅಭ್ಯರ್ಥಿಗಳು ಮಹಾರಾಷ್ಟ್ರದ ಕಿಶೋರ ಭೀಮರಾವ್‌ ಲಬಾಡೆ, ನಾಗೇಶ ಸಂಭಾಜಿ ಗಾಯಕವಾಡ ಮತ್ತು ಜ್ಞಾನೇಶ್ವರ ರಾವ್ಸಾಹೇಬ್‌ ಕಪಾಟೆ ಅವರಾಗಿದ್ದಾರೆ.
eesanje/url_46_167_12.txt ADDED
@@ -0,0 +1,5 @@
 
 
 
 
 
 
1
+ ಮತಗಟ್ಟೆಯಲ್ಲಿ ಮಹಿಳೆಯ ಜೀವ ಉಳಿಸಿದ ವೈದ್ಯ
2
+ ಬೆಂಗಳೂರು,ಏ.26-ಮತದಾನ ಮಾಡಲು ಬೆಳಗ್ಗೆಯೇ ಬಂದಿದ್ದ ಮಹಿಳೆಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ನಿತ್ರಾಣಗೊಂಡಿದ್ದಾಗ ವೈದ್ಯ ರೊಬ್ಬರು ಪ್ರಥಮ ಚಿಕಿತ್ಸೆ ನೀಡಿ ಪ್ರಾಣ ಉಳಿಸಿದ್ದಾರೆ.ಜೆಪಿನಗರ 8ನೇ ಹಂತದ ಜಂಬೂ ಸವಾರಿ ದಿಣ್ಣೆ ಬಳಿಯ ಮತಗಟ್ಟೆಗೆ ಬಂದಿದ್ದ 50 ವರ್ಷದ ಮಹಿಳೆ ನೀರು ಕುಡಿಯಲು ಹೋದಾಗ ಏಕಾಏಕಿ ಕುಸಿದು ಬಿದ್ದು ನಿತ್ರಾಣಗೊಂಡರು.
3
+ ಅದೇ ಸಮಯದಲ್ಲಿ ಮತದಾನ ಮಾಡಲು ಆಗಮಿಸಿದ್ದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ವೈದ್ಯ ಡಾ.ಗಣೇಶ ಶ್ರೀನಿವಾಸ್‌ ಪ್ರಸಾದ್‌ ಅವರು ಆ ಮಹಿಳೆಯನ್ನು ಗಮನಿಸಿದ್ದಾರೆ. ತಕ್ಷಣ ಆ ಮಹಿಳೆ ಬಳಿ ಹೋಗಿ ನಾಡಿಮಿಡಿತ ಪರಿಶೀಲಿಸಿದಾಗ ಆರೋಗ್ಯದಲ್ಲಿ ಏರುಪೇರಾಗಿರುವುದು ಗಮನಕ್ಕೆ ಬಂದಿದೆ.
4
+ ಮಹಿಳೆ ದೇಹ ಸಹ ಯಾವುದೇ ಪ್ರತಿಕ್ರಿಯೆ ವ್ಯಕ್ತಪಡಿಸದಿದ್ದಾಗ ತಕ್ಷಣ ಸಿಪಿಆರ್‌ ಮಾಡಿದಾಗ ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆ ಕಂಡುಬಂದಿತು. ಆ ವೇಳೆ ಚುನಾವಣಾ ಕರ್ತವ್ಯದಲ್ಲಿದ್ದ ಸಿಬ್ಬಂದಿ ಜ್ಯೂಸ್‌ ನೀಡಿದರು. ಬಳಿಕ ಆ್ಯಂಬುಲೆನ್‌್ಸಗೆ ಕರೆ ಮಾಡಿ ಸ್ಥಳಕ್ಕೆ ಕರೆಸಿಕೊಂಡು ಮಹಿಳೆಯನ್ನು ಆಸ್ಪತ್ರೆ ಕರೆದೊಯ್ದು ಸೂಕ್ತ ಚಿಕಿತ್ಸೆ ನೀಡಿದ್ದರಿಂದ ಮಹಿಳೆಯ ಪ್ರಾಣ ಉಳಿದಿದೆ.
5
+ ವೈದ್ಯರ ಪ್ರತಿಕ್ರಿಯೆ:ಮತದಾನ ಮಾಡಲು ನಾನು ಬಂದಿದ್ದಾಗ ಮಹಿಳೆ ಕುಸಿದು ಬೀಳುತ್ತಿದ್ದುದನ್ನು ಗಮನಿಸಿದೆ. ತಕ್ಷಣ ಅವರ ನೆರವಿಗೆ ಧಾವಿಸಿ ಹೃದಯ ಶ್ವಾಸಕೋಶದ ಪುನರುಜ್ಜೀವನ(ಸಿಪಿಆರ್‌) ಮಾಡಿದ್ದರಿಂದ ಸ್ವಲ್ಪ ಸುಧಾರಿಸಿಕೊಂಡರು. ಒಂದು ವೇಳೆ ವಿಳಂಬವಾಗಿದ್ದರೆ ಆ ಮಹಿಳೆಯನ್ನು ಕಳೆದುಕೊಳ್ಳುವ ಸಾಧ್ಯತೆಯಿತ್ತು ಎಂದು ವೈದ್ಯರಾದ ಡಾ.ಗಣೇಶ ಶ್ರೀನಿವಾಸ್‌ ಪ್ರಸಾದ್‌ ಅವರು ಪ್ರತಿಕ್ರಿಯಿಸಿದ್ದಾರೆ.
eesanje/url_46_167_2.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಕೇಂದ್ರದಿಂದ ಕರ್ನಾಟಕಕ್ಕೆ 3454 ಕೋಟಿ ರೂ. ಬರ ಪರಿಹಾರ ಬಿಡುಗಡೆ
2
+ ನವದೆಹಲಿ,ಏ.27-ಬರಗಾಲದಿಂದ ತತ್ತರಿಸಿದ್ದ ರಾಜ್ಯಕ್ಕೆ ಕೊನೆಗೂ ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್‌ ಡಿಆರ್‌ಎಫ್‌) ಯಡಿ 3,454.22 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ಬರಪೀಡಿತ ಪ್ರದೇಶಗಳಲ್ಲಿ ಉಂಟಾಗಿದ್ದ ಹಾನಿಯ ಅಂದಾಜನ್ನು ನಡೆಸಿದ್ದ ರಾಜ್ಯ ಸರ್ಕಾರ 18,174 ಕೋಟಿ ರೂ. ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿತ್ತು.
3
+ ಸದ್ಯ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454.22 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ಇದರಿಂದ ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಗೆಲುವು ಸಿಕ್ಕಂತಾಗಿದೆ. ಕರ್ನಾಟಕದ ಜೊತೆಗೆ ಕೇರಳ ಮತ್ತು ತಮಿಳುನಾಡು ರಾಜ್ಯಗಳು ಕೂಡ ಪರಿಹಾರಕ್ಕಾಗಿ ಸುಪ್ರೀಂಕೋರ್ಟ್‌ ಮೆಟ್ಟಲೇರಿದ್ದವು. ಪ್ರಕೃತಿ ವಿಕೋಪದಲ್ಲಾದ ಪರಿಹಾರವಾಗಿ ತಮಿಳುನಾಡಿಗೆ 276.10 ಕೋಟಿ ರೂ. ಬಿಡುಗಡೆ ಮಾಡಿದೆ.
4
+ ಕರ್ನಾಟಕಕ್ಕೆ ಬರ ಪರಿಹಾರ ನೀಡುವ ವಿಚಾರವಾಗಿ ಏ. 29ರೊಳಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಉನ್ನತ ಮಟ್ಟದ ಸಭೆ ನಡೆಸಲು ಚುನಾವಣಾ ಆಯೋಗವೂ ಅನುಮತಿ ನೀಡಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿತ್ತು. ಇದರ ಬೆನ್ನಲ್ಲೇ ಕೇಂದ್ರ ಬರ ಪರಿಹಾರ ಬಿಡುಗಡೆ ಮಾಡಿದೆ.
5
+ ಸಂಕಷ್ಟಕ್ಕೆ ತುತ್ತಾದ ಜನರಿಗೆ ಬರ ಪರಿಹಾರ ವಿತರಣೆ ಮಾಡಬೇಕು. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ರಾಜ್ಯಕ್ಕೆ ಆರ್ಥಿಕ ನೆರವು ಬಿಡುಗಡೆಗೆ ತ್ವರಿತ ನಿರ್ಧಾರ ಕೈಗೊಳ್ಳಲು ಕೇಂದ್ರಕ್ಕೆ ನಿರ್ದೇಶಿಸಬೇಕು ಎಂದು ಕರ್ನಾಟಕ ಸರ್ಕಾರ ಸುಪ್ರೆಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು.
6
+ ಸಂವಿಧಾನಬದ್ದವಾಗಿ ಕರ್ನಾಟಕಕ್ಕೆ ಬಿಡುಗಡೆ ಮಾಡಬೇಕಿದ್ದ ಬರ ಪರಿಹಾರವನ್ನು ಬಿಡುಗಡೆ ಮಾಡದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ. ತೀವ್ರ ಬರದಿಂದ ಕಂಗೆಟ್ಟಿರುವ ಕರ್ನಾಟಕದ ರೈತರು ಕಂಗಾಲಾಗಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಕರ್ನಾಟಕ ಸರ್ಕಾರವು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್‌ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿಧಿಯಿಂದ ಕರ್ನಾಟಕಕ್ಕೆ ತಕ್ಷಣ ಹಣ ಬಿಡುಗಡೆ ಮಾಡುವಂತೆ ಆದೇಶಿಸಿತ್ತು. ಕೇಂದ್ರಸರ್ಕಾರವು ಪರಿಹಾರ ಬಿಡುಗಡೆ ಸಂಬಂಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು. ಸದ್ಯ ಪ್ರಕರಣದ ವಿಚಾರಣೆ ಏ.29ಕ್ಕೆ ನಡೆಯಲಿದೆ.
7
+ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ನಡುವೆ ಸಂಘರ್ಷ ತಾರಕಕ್ಕೇರಿ ರಾಜ್ಯಕ್ಕೆ ಬರ ಪರಿಹಾರ ನೀಡುವಲ್ಲಿ ಮೋದಿ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸೇರಿ ಡಿಸಿಎಂ, ಮಂತ್ರಿಗಳು ಹಾಗೂ ಕಾಂಗ್ರೆಸ್‌ ಪಕ್ಷದ ಮುಖಂಡರು, ಕಾರ್ಯಕರ್ತ���ು ಧರಣಿ ನಡೆಸಿದ್ದರು. ಬರ ಪರಿಹಾರ ಸಿಗದಿದ್ದಾಗ ರಾಜ್ಯ ಸರ್ಕಾರ ದೆಹಲಿಯಲ್ಲಿ ಕೂಡ ಪ್ರತಿಭಟನೆ ಮಾಡಿತ್ತು.
8
+ ಕರ್ನಾಟಕದ ವಾದವೇನು?ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಸಚಿವ ಕೃಷ್ಣಭೈರೇಗೌಡ 2023ರ ಡಿಸೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟ ಆಗಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದ್ದರು.
9
+ ಹೀಗಾಗಿ ಶೀಘ್ರವೇ 18,174 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು. ಇದರಲ್ಲಿ 4663 ಕೋಟಿ ರೂ. ಇನ್ಪುಟ್‌ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ ನೀಡುವಂತೆ ಕೋರಿದ್ದರು. 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಮನವಿ ಮಾಡಿದ್ದರು.
10
+ ಜೊತೆಗೆ ಎನ್‌ಡಿಆರ್‌ಎಫ್‌ನಿಂದ 4663 ಕೋಟಿ ರೂ. ಇನ್ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಿದ್ದರು. ರೈತರಿಗೆ ಇನ್ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫೂಟ್ಸ್‌‍ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ.
11
+ ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದ್ದರು. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದ್ದರು.
12
+ ರಾಜ್ಯ ಗಂಭೀರ ಮಾನವೀಯ ಸಂಕಷ್ಟ, ವಿಪತ್ತು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಬರ ಪರಿಹಾರಕ್ಕಾಗಿ 35,162 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕು. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಪ್ರಕಾರ, ಬರಗಾಲದ ಹಣಕಾಸಿನ ನೆರವು ಬಿಡುಗಡೆ ಮಾಡದಿರುವ ಕೇಂದ್ರ ಸರ್ಕಾರದ ಕ್ರಮವು ರಾಜ್ಯದ ಜನರ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂಬುದು ಕರ್ನಾಟಕ ವಾದವಾಗಿತ್ತು.
13
+ ತನ್ನ ಪಾಲಿನ ಬರ ಪರಿಹಾರ ಕೊಡಿಸಬೇಕು ಎಂದು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಕೋರ್ಟ್‌, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯ-ಕೇಂದ್ರ ಸರ್ಕಾರಗಳು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿತ್ತು.
eesanje/url_46_167_3.txt ADDED
@@ -0,0 +1,5 @@
 
 
 
 
 
 
1
+ ರಾಜ್ಯದ 14 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಸ್ಟ್ರಾಂಗ್‌ ರೂಂಗಳಲ್ಲಿ ಭದ್ರ
2
+ ಬೆಂಗಳೂರು,ಏ.27-ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಿನ್ನೆ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ. ಮತಯಂತ್ರಗಳನ್ನು ಆಯಾ ಕ್ಷೇತ್ರದಲ್ಲಿ ಸ್ಥಾಪಿಸಲಾಗಿರುವ ಸ್ಟ್ರಾಂಗ್‌ ರೂಂಗಳಲ್ಲಿ ಇಡಲಾಗಿದ್ದು, ಸೂಕ್ತ ಭದ್ರತೆಯನ್ನು ಒದಗಿಸಲಾಗಿದೆ.
3
+ ಮತದಾನ ಮುಕ್ತಾಯವಾಗಿದ್ದರೂ ಫಲಿತಾಂಶಕ್ಕಾಗಿ ಜೂನ್‌ 4 ರವರೆಗೂ ಕಾಯಬೇಕಿದೆ. ಜೂ.4 ರಂದು ಮತ ಎಣಿಕೆ ನಡೆಯಲಿದ್ದು, ಅಂದು ಎಲ್ಲಾ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಲಿದೆ.
4
+ ಬಿಜೆಪಿಯ 11, ಜೆಡಿಎಸ್‌ನ 3, ಕಾಂಗ್ರೆಸ್‌ನ 14 ಮಂದಿ ಸೇರಿದಂತೆ ಒಟ್ಟು 247 ಅಭ್ಯರ್ಥಿಗಳು ಮೊದಲ ಹಂತದ 14 ಕ್ಷೇತ್ರಗಳಲ್ಲಿ ಸ್ಪರ್ಧೆಗಿಳಿದಿದ್ದರು.ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸ್ಟ್ರಾಂಗ್‌ ರೂಂ ಅರಮನೆ ರಸ್ತೆಯ ವೌಂಟ್‌ಕಾರ್ಮಲ್‌ ಕಾಲೇಜಿನಲ್ಲಿ ಸ್ಥಾಪಿಸಲಾಗಿದ್ದು, ಅದೇ ಕೇಂದ್ರದಲ್ಲಿ ಮತ ಎಣಿಕೆ ನಡೆಯಲಿದೆ.
5
+ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸ್ಟ್ರಾಂಗ್‌ ರೂಂ ಅನ್ನು ವಿಟ್ಠಲ್‌ ಮಲ್ಯ ರಸ್ತೆಯ ಸೇಂಟ್‌ ಜೋಸೆಫ್‌ ಕಾಲೇಜಿನಲ್ಲಿ ಸ್ಥಾಪಿಸಲಾಗಿದೆ.ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸ್ಟ್ರಾಂಗ್‌ ರೂಂ ಅನ್ನು ಜಯನಗರದ ಎಸ್‌ಎಸ್‌ಎಂಆರ್‌ವಿ ಕಾಲೇಜಿನಲ್ಲಿ ಸ್ಥಾಪಿಸಲಾಗಿದ್ದು, ಅದೇ ಕೇಂದ್ರದಲ್ಲಿ ಮತ ಎಣಿಕೆ ನಡೆಯಲಿದೆ.
eesanje/url_46_167_4.txt ADDED
@@ -0,0 +1,5 @@
 
 
 
 
 
 
1
+ ಕಳೆದೆರಡು ಚುನಾವಣೆಗಳಿಂಗಿತ 14 ಲೋಕಸಭಾ ಕ್ಷೇತ್ರಗಳಲ್ಲಿ ಈ ಬಾರಿ ಮತದಾನ ಹೆಚ್ಚಳ
2
+ ಬೆಂಗಳೂರು, ಏ.27-ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ನಿನ್ನೆ ಶೇ.69.23ರಷ್ಟು ಮತದಾನವಾಗಿದ್ದು, ಇದು ಕಳೆದ ಎರಡೂ ಲೋಕಸಭಾ ಚುನಾವಣೆಗಳಿಗಿಂತ ಹೆಚ್ಚಾಗಿದೆ. ಕಳೆದ 2014ರಲ್ಲಿ ಶೇ.67.73ರಷ್ಟು ಹಾಗೂ 2019ರಲ್ಲಿ 68.96ರಷ್ಟು ಮತದಾನವಾಗಿತ್ತು.
3
+ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಮಾಹಿತಿ ಪ್ರಕಾರ, ಲೋಕಸಭೆಗಿಂತ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಹೆಚ್ಚಾಗಿದೆ. ಅಂದರೆ, 2018ರ ವಿಧಾನಸಭಾ ಚುನಾವಣೆಯಲ್ಲಿ ಶೇ. 74.37ರಷ್ಟು ಹಾಗೂ 2023ರಲ್ಲಿ 74.69ರಷ್ಟು ಮತದಾನವಾಗಿತ್ತು. ಆದರೆ, ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಸಾಕಷ್ಟು ಜಾಗೃತಿ ಮೂಡಿಸಿದ್ದರೂ ಮತದಾನದ ಪ್ರಮಾಣ ಹೆಚ್ಚಾಗುವದಲು ಕಡಿಮೆಯಾಗಿದೆ.
4
+ ನಿರೀಕ್ಷೆಯಂತೆ ಮಂಡ್ಯ ಕ್ಷೇತ್ರದಲ್ಲಿ ಅತ್ಯಧಿಕ ಮತದಾನವಾಗಿದ್ದರೆ, ಬೆಂಗಳೂರು ಕೇಂದ್ರದ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾನವಾಗಿದೆ. ಮಂಡ್ಯದಲ್ಲಿ ಶೇ.81.48ರಷ್ಟು ಮತದಾನವಾಗಿದ್ದರೆ, ಬೆಂಗಳೂರು ಕೇಂದ್ರದಲ್ಲಿ 52.81ರಷ್ಟು ಮತದಾನವಾಗಿದೆ. ನಗರ ಪ್ರದೇಶಕ್ಕಿಂತ ಗ್ರಾಮಾಂತರ ಕ್ಷೇತ್ರಗಳಲ್ಲಿ ಮತದಾನದ ಪ್ರಮಾಣ ಹೆಚ್ಚಾಗಿದೆ. ನಿನ್ನೆ ನಡೆದ ಮತದಾನದ ವಿವರ ಈ ಕೆಳಕಂಡಂತಿದೆ.
5
+ ಉಡುಪಿ-ಚಿಕ್ಕಮಗಳೂರು-76.06, ಹಾಸನ-77.51, ದಕ್ಷಿಣ ಕನ್ನಡ-77.43, ಚಿತ್ರದುರ್ಗ-73.11, ತುಮಕೂರು-77.70, ಮಂಡ್ಯ-81.48, ಮೈಸೂರು-70.45, ಚಾಮರಾಜನಗರ-76.59, ಬೆಂಗಳೂರು ಗ್ರಾಮಾಂತರ- 67.29, ಬೆಂಗಳೂರು ಉತ್ತರ-54.42, ಬೆಂಗಳೂರು ಕೇಂದ್ರ-52.81, ಬೆಂಗಳೂರು ದಕ್ಷಿಣ- 53.15, ಚಿಕ್ಕಳ್ಳಾಪುರ-76.82 ಹಾಗೂ ಕೋಲಾರ ಕ್ಷೇತ್ರದಲ್ಲಿ 78.07ರಷ್ಟು ಮತದಾನವಾಗಿದೆ.
eesanje/url_46_167_5.txt ADDED
@@ -0,0 +1,9 @@
 
 
 
 
 
 
 
 
 
 
1
+ : ಲೋಕಸಭೆ ಚುನಾವಣೆ-ರಾಜ್ಯದಲ್ಲಿ ಸರಾಸರಿ ಶೇ.70ರಷ್ಟು ಮತದಾನ
2
+ ಬೆಂಗಳೂರು, ಏ.26-ದೇಶದ ಭವಿಷ್ಯದ ಮುನ್ನುಡಿ ಬರೆಯುವ ಲೋಕಸಭೆ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ಇಂದು ನಡೆದ ಮತದಾನ ಬಹುತೇಕ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು ಸರಾಸರಿ ಶೇ.70ರಷ್ಟು ಮತದಾನವಾಗಿದೆ.
3
+ ಮಂಡ್ಯ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚು ಪ್ರಮಾಣದ ಮತದಾನವಾಗಿದ್ದರೆ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕಡಿಮೆ ಪ್ರಮಾಣದ ಮತದಾನವಾಗಿದೆ. ಎಂದಿನಂತೆ ರಾಜಧಾನಿ ಬೆಂಗಳೂರಿನ ಮತದಾರರಲ್ಲಿ ನಿರುತ್ಸಾಹ ಕಂಡುಬಂದಿದ್ದು, ಮತದಾನದ ಪ್ರಮಾಣ ನಿರೀಕ್ಷೆಯಂತೆ ಏರಿಕೆ ಆಗಿಲ್ಲ.ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲೂ ಜನರು ಉತ್ಸಾಹದಿಂದ ಮತ ಚಲಾಯಿಸುತ್ತಿದ್ದುದು ಕಂಡುಬಂತು.
4
+ ಹಲವೆಡೆ ಮತದಾರರ ಪಟ್ಟಿಯಲ್ಲಿ ಹೆಸರು ನಾಪತ್ತೆ. ಆರಂಭದಲ್ಲಿ ಕೈಕೊಟ್ಟ ಮತಯಂತ್ರ. ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ಆರೋಪ-ಪ್ರತ್ಯಾರೋಪದಂತಹ ಸಣ್ಣ-ಪುಟ್ಟ ಘಟನೆಗಳನ್ನು ಹೊರತು ಪಡಿಸಿದರೆ ಯಾವುದೇ ರೀತಿಯ ಅಹಿತಕರ ಘಟನೆಗಳು ಈವರೆಗೆ ನಡೆದಿಲ್ಲ.
5
+ ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಮತದಾರರು ಉತ್ಸಾಹದಿಂದಲೇ ಮತ ಚಲಾಯಿಸುತ್ತಿದ್ದುದು ಕಂಡುಬಂತು. ಮಧ್ಯಾಹ್ನ ಬಿರು ಬಿಸಿಲು ಹೆಚ್ಚಾಗುತ್ತದೆ ಎಂಬ ಹಿನ್ನೆಲೆಯಲ್ಲಿ ಮಹಿಳೆಯರು, ಹಿರಿಯ ನಾಗರಿಕರು ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿ ಮತಚಲಾಯಿಸಿದರು.ಮತಗಟ್ಟೆಗಳಿಗೆ ಹೆಚ್ಚಾಗಿ ಮಹಿಳೆಯರು ಆಗಮಿಸಿ ಮತದಾನ ಮಾಡುತ್ತಿರುವ ದೃಶ್ಯಗಳು ಕಂಡುಬಂದವು.
6
+ ಯುವ ಮತದಾರರು, ನವಮತದಾರರಲ್ಲಿ ಉತ್ಸಾಹ ಹೆಚ್ಚಾಗಿರುವುದು ಹಲವೆಡೆ ಕಂಡುಬಂತು.ರಾಜಕಾರಣಿಗಳು, ಚಲನಚಿತ್ರ ನಟ, ನಟಿಯರು, ಖ್ಯಾತ ಕ್ರಿಕೆಟ್‌ ಪಟುಗಳು, ಕಿರುತೆರೆ ಕಲಾವಿದರು ಸೇರಿದಂತೆ ವಿವಿಧ ಗಣ್ಯರು ಮತಗಟ್ಟೆಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತಚಲಾಯಿಸಿ ಗಮನ ಸೆಳೆದರು.
7
+ ಹೈವೋಲ್ಟೇಜ್‌ ಕ್ಷೇತ್ರಗಳಾದ ಮಂಡ್ಯ, ಬೆಂಗಳೂರು ಗ್ರಾಮಾಂತರ, ಹಾಸನ ಸೇರಿದಂತೆ 14 ಕ್ಷೇತ್ರಗಳಿಗೂ ಸೂಕ್ತ ಭದ್ರತೆ ಒದಗಿಸಲಾಗಿದೆ. 70 ಕಂಪನಿ ಅರೆಸೇನಾ ಪಡೆ, ಡಿಎಆರ್‌ ಪ್ಲಟೂನ್‌, ಸಿಎಆರ್‌ ಮತ್ತು ಕೆಎಸ್‌‍ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.ಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು, ಹೆಡ್‌ಕಾನ್‌ಸ್ಟೆಬಲ್‌ ಹಾಗೂ ಕಾನ್‌ಸ್ಟೆಬಲ್‌ಗಳನ್ನು ನಿಯೋಜಿಸಲಾಗಿದೆ.
8
+ ಕೋಲಾರ ತಾಲ್ಲೂಕಿನ ಕೆ.ಬಿ.ಹೊಸಳ್ಳಿ ಗ್ರಾಮದ ಜನರು ಮೂಲಭೂತ ಸೌಕರ್ಯ ಕೊರತೆ ಆರೋಪಿಸಿ ಮತದಾನ ಬಹಿಷ್ಕರಿಸುವ ಮೂಲಕ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ ಘಟನೆ ಕೂಡ ನಡೆದಿದೆ.ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ಥಾಪಿಸಿದ ಮತಗಟ್ಟೆಗೆ ಬೆಳಗ್ಗೆ 10 ಗಂಟೆಯಾದರೂ ಯಾವುದೇ ಮತದಾರರು ಬಂದಿರಲಿಲ್ಲ.
9
+ ಗ್ರಾಮದಲ್ಲಿ ಬಿಕೋ ಎನ್ನುವ ವಾತಾವರಣ ಕಂಡುಬಂದಿ���್ತು. ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ತಮ ಬೆಂಬಲಿಗರ ಜೊತೆ ಮತಗಟ್ಟೆಗೆ ಆಗಮಿಸಿದ್ದರು ಎಂದು ಆಕ್ಷೇಪ ವ್ಯಕ್ತ ಪಡಿಸಿ ಬಿಜೆಪಿ-ಜೆಡಿಎಸ್‌‍ ಕಾರ್ಯಕರ್ತರು ಕಾಂಗ್ರೆಸ್‌‍ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದರೆ,ಕನಕಪುರದಲ್ಲಿ ಕಾಂಗ್ರೆಸ್‌‍ ಕಾರ್ಯಕರ್ತರು ಮತಗಟ್ಟೆ ಬಳಿ ಗಿಫ್‌್ಟ ಕೂಪನ್‌ ಹಂಚುತ್ತಿದ್ದಾರೆಂದು ಆರೋಪಿಸಿ ಜೆಡಿಎಸ್‌‍-ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಮೇ.7 ಕ್ಕೆ 14 ಕ್ಷೇತ್ರಗಳಿಗೆ 2ನೇ ಹಂತದ ಚುನಾವಣೆ ನಡೆಯಲಿದ್ದು, ಜೂ.4ರಂದು ಫಲಿತಾಂಶ ಪ್ರಕಟವಾಗಲಿದೆ.
eesanje/url_46_167_6.txt ADDED
@@ -0,0 +1,10 @@
 
 
 
 
 
 
 
 
 
 
 
1
+ ರಾಜ್ಯದಲ್ಲಿ ಸಂಜೆ 5 ಗಂಟೆ ವೇಳೆಗೆ ಶೇ.63.90ರಷ್ಟು ಮತದಾನ
2
+ ಬೆಂಗಳೂರು, ಏ.26-ದೇಶದ ಭವಿಷ್ಯದ ಮುನ್ನುಡಿ ಬರೆಯುವ ಲೋಕಸಭೆ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ಇಂದು ನಡೆದ ಮತದಾನ ಬಹುತೇಕ ಶಾಂತಿಯುತವಾಗಿತ್ತು. ಮತದಾನ ಬೆಳಗ್ಗೆಯಿಂದಲೇ ಬಿರುಸಿನಿಂದ ಕೂಡಿದ್ದು ಸಂಜೆ 5 ಗಂಟೆ ವೇಳೆಗೆ ಶೇ.63.90%ರಷ್ಟು ಮತದಾನವಾಗಿದೆ
3
+ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚು ಪ್ರಮಾಣದ ಮತದಾನವಾಗಿದ್ದರೆ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕಡಿಮೆ ಪ್ರಮಾಣದ ಮತದಾನವಾಗಿದೆ. ಎಂದಿನಂತೆ ರಾಜಧಾನಿ ಬೆಂಗಳೂರಿನ ಮತದಾರರಲ್ಲಿ ನಿರುತ್ಸಾಹ ಕಂಡುಬಂದಿದ್ದು, ಮತದಾನದ ಪ್ರಮಾಣ ನಿರೀಕ್ಷೆಯಂತೆ ಏರಿಕೆ ಆಗಿಲ್ಲ.ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲೂ ಜನರು ಉತ್ಸಾಹದಿಂದ ಮತ ಚಲಾಯಿಸುತ್ತಿದ್ದುದು ಕಂಡುಬಂತು.
4
+ ಹಲವೆಡೆ ಮತದಾರರ ಪಟ್ಟಿಯಲ್ಲಿ ಹೆಸರು ನಾಪತ್ತೆ. ಆರಂಭದಲ್ಲಿ ಕೈಕೊಟ್ಟ ಮತಯಂತ್ರ. ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ಆರೋಪ-ಪ್ರತ್ಯಾರೋಪದಂತಹ ಸಣ್ಣ-ಪುಟ್ಟ ಘಟನೆಗಳನ್ನು ಹೊರತು ಪಡಿಸಿದರೆ ಯಾವುದೇ ರೀತಿಯ ಅಹಿತಕರ ಘಟನೆಗಳು ಈವರೆಗೆ ನಡೆದಿಲ್ಲ.
5
+ ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಮತದಾರರು ಉತ್ಸಾಹದಿಂದಲೇ ಮತ ಚಲಾಯಿಸುತ್ತಿದ್ದುದು ಕಂಡುಬಂತು. ಮಧ್ಯಾಹ್ನ ಬಿರು ಬಿಸಿಲು ಹೆಚ್ಚಾಗುತ್ತದೆ ಎಂಬ ಹಿನ್ನೆಲೆಯಲ್ಲಿ ಮಹಿಳೆಯರು, ಹಿರಿಯ ನಾಗರಿಕರು ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿ ಮತಚಲಾಯಿಸಿದರು.ಮತಗಟ್ಟೆಗಳಿಗೆ ಹೆಚ್ಚಾಗಿ ಮಹಿಳೆಯರು ಆಗಮಿಸಿ ಮತದಾನ ಮಾಡುತ್ತಿರುವ ದೃಶ್ಯಗಳು ಕಂಡುಬಂದವು.
6
+ ಯುವ ಮತದಾರರು, ನವಮತದಾರರಲ್ಲಿ ಉತ್ಸಾಹ ಹೆಚ್ಚಾಗಿರುವುದು ಹಲವೆಡೆ ಕಂಡುಬಂತು.ರಾಜಕಾರಣಿಗಳು, ಚಲನಚಿತ್ರ ನಟ, ನಟಿಯರು, ಖ್ಯಾತ ಕ್ರಿಕೆಟ್‌ ಪಟುಗಳು, ಕಿರುತೆರೆ ಕಲಾವಿದರು ಸೇರಿದಂತೆ ವಿವಿಧ ಗಣ್ಯರು ಮತಗಟ್ಟೆಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತಚಲಾಯಿಸಿ ಗಮನ ಸೆಳೆದರು.
7
+ ಮಧ್ಯಾಹ್ನ 1 ಗಂಟೆ ವೇಳೆಗೆ ರಾಜಧಾನಿ ಬೆಂಗಳೂರಿನ ಮೂರು ಕ್ಷೇತ್ರಗಳಾದ ಬೆಂಗಳೂರು ಉತ್ತರದಲ್ಲಿ ಶೇ. 32.25, ಬೆಂಗಳೂರು ದಕ್ಷಿಣದಲ್ಲಿ ಶೇ. 31.51, ಬೆಂಗಳೂರು ಕೇಂದ್ರದಲ್ಲಿ ಶೇ.30.10, ಹಾಗೂ ಉಡುಪಿ-ಚಿಕ್ಕಮಗಳೂರು ಶೇ.46.43, ಹಾಸನ ಶೇ. 40.99, ದಕ್ಷಿಣ ಕನ್ನಡ ಶೇ. 48.10, ಚಿತ್ರದುರ್ಗ ಶೇ. 39.05, ತುಮಕೂರು ಶೇ. 41.91, ಮಂಡ್ಯ ಶೇ.40.70, ಮೈಸೂರು ಶೇ. 41.58, ಚಾಮರಾಜನಗರ ಶೇ. 39.57, ಬೆಂಗಳೂರು ಗ್ರಾಮಾಂತರ ಶೇ. 36.09, ಚಿಕ್ಕಬಳ್ಳಾಪುರ ಶೇ.39.85, ಕೋಲಾರ ಶೇ. 38.42 ರಷ್ಟು ಮತದಾನವಾಗಿತ್ತು.
8
+ ಹೈವೋಲ್ಟೇಜ್‌ ಕ್ಷೇತ್ರಗಳಾದ ಮಂಡ್ಯ, ಬೆಂಗಳೂರು ಗ್ರಾಮಾಂತರ, ಹಾಸನ ಸೇರಿದಂತೆ 14 ಕ್ಷೇತ್ರಗಳಿಗೂ ಸೂಕ್ತ ಭದ್ರತೆ ಒದಗಿಸಲಾಗಿದೆ. 70 ಕಂಪನಿ ಅರೆಸೇನಾ ಪಡೆ, ಡಿಎಆರ್‌ ಪ್ಲಟೂನ್‌, ಸಿಎಆರ್‌ ಮತ್ತು ಕೆಎಸ್‌‍ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.ಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚಿನ ಭದ್ರತೆ ಒದ��ಿಸಲಾಗಿದ್ದು, ಹೆಡ್‌ಕಾನ್‌ಸ್ಟೆಬಲ್‌ ಹಾಗೂ ಕಾನ್‌ಸ್ಟೆಬಲ್‌ಗಳನ್ನು ನಿಯೋಜಿಸಲಾಗಿದೆ.
9
+ ಕೋಲಾರ ತಾಲ್ಲೂಕಿನ ಕೆ.ಬಿ.ಹೊಸಳ್ಳಿ ಗ್ರಾಮದ ಜನರು ಮೂಲಭೂತ ಸೌಕರ್ಯ ಕೊರತೆ ಆರೋಪಿಸಿ ಮತದಾನ ಬಹಿಷ್ಕರಿಸುವ ಮೂಲಕ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ ಘಟನೆ ಕೂಡ ನಡೆದಿದೆ.ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ಥಾಪಿಸಿದ ಮತಗಟ್ಟೆಗೆ ಬೆಳಗ್ಗೆ 10 ಗಂಟೆಯಾದರೂ ಯಾವುದೇ ಮತದಾರರು ಬಂದಿರಲಿಲ್ಲ.
10
+ ಗ್ರಾಮದಲ್ಲಿ ಬಿಕೋ ಎನ್ನುವ ವಾತಾವರಣ ಕಂಡುಬಂದಿತ್ತು. ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ತಮ ಬೆಂಬಲಿಗರ ಜೊತೆ ಮತಗಟ್ಟೆಗೆ ಆಗಮಿಸಿದ್ದರು ಎಂದು ಆಕ್ಷೇಪ ವ್ಯಕ್ತ ಪಡಿಸಿ ಬಿಜೆಪಿ-ಜೆಡಿಎಸ್‌‍ ಕಾರ್ಯಕರ್ತರು ಕಾಂಗ್ರೆಸ್‌‍ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದರೆ,ಕನಕಪುರದಲ್ಲಿ ಕಾಂಗ್ರೆಸ್‌‍ ಕಾರ್ಯಕರ್ತರು ಮತಗಟ್ಟೆ ಬಳಿ ಗಿಫ್‌್ಟ ಕೂಪನ್‌ ಹಂಚುತ್ತಿದ್ದಾರೆಂದು ಆರೋಪಿಸಿ ಜೆಡಿಎಸ್‌‍-ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಮೇ.7 ಕ್ಕೆ 14 ಕ್ಷೇತ್ರಗಳಿಗೆ 2ನೇ ಹಂತದ ಚುನಾವಣೆ ನಡೆಯಲಿದ್ದು, ಜೂ.4ರಂದು ಫಲಿತಾಂಶ ಪ್ರಕಟವಾಗಲಿದೆ.
eesanje/url_46_167_7.txt ADDED
@@ -0,0 +1,6 @@
 
 
 
 
 
 
 
1
+ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ : ಸಿಎಂ ಸಿದ್ದರಾಮಯ್ಯ
2
+ ಮೈಸೂರು,ಏ.26- ರಾಜ್ಯದಲ್ಲಿ ಕಾಂಗ್ರೆಸ್‌ಗೆ ಉತ್ತಮವಾದ ವಾತಾವರಣ ಇದ್ದು 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತಾನಾಡಿದ ಸಿಎಂ,ಮೊದಲ ಹಂತದ 14ರಲ್ಲಿ ಹೆಚ್ಚು ಸ್ಥಾನವನ್ನು ನಾವೇ ಗೆಲ್ಲುತ್ತೇವೆ ಆದರೆ ಅದರಲ್ಲಿ ಎಷ್ಟು ಅಂಥ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು.
3
+ ಮೈಸೂರು, ಚಾಮರಾಜನಗರ, ಮಂಡ್ಯ,ಹಾಸನ ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ, ಜನರು ಗ್ಯಾರೆಂಟಿಗೆ ಮತ ಹಾಕುತ್ತಾರೆ ಹಾಗಾಗಿ ನಾವು ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ಇದೆ ಎಂದರು. ಕಳೆದ ಮೂರು ದಿನಗಳಿಂದ ಮೋದಿ ಮಾಡುತ್ತಿರುವ ಭಾಷಣ ಹತಾಶೆಯಿಂದ ಮಾಡಿದಂತಿದೆ, ಅವರ ಭಾಷಣ ಓಲೈಕೆ ಅಲ್ಲ ಪ್ರಚೋದನೆಯಿಂದ ಕೂಡಿದೆ, ಅವರ ಭಾಷಣ ಆರ್‌ ಎಸ್‌ ಎಸ್‌ ನ ಭಾಷಣ ಎಂದು ಸಿದ್ದು ಟೀಕಿಸಿದರು.
4
+ ಅಲ್ಪ ಸಂಖ್ಯಾತರ ಸವಲತ್ತುಗಳನ್ನ ಮುಸ್ಲಿಂರಿಗೆ ಕೊಡುತ್ತಾರೆ ಎಂಬ ವಿಚಾರ ಎಲ್ಲ ಆರ್‌ ಎಸ್‌ ಎಸ್‌ ನ ಹಿಡನ್‌ ಅಜೆಂಡಾ. ಮೋದಿ ಬಂದು ಪ್ರಚಾರ ಮಾಡಲಿ ಎಂದು ಹೇಳಿದರು. ಇದೇ ವೇಳೆ ದೇವೇಗೌರ ಬಗ್ಗೆಯೂ ವಾಗ್ದಾಳಿ ನಡೆಸಿದ ಸಿಎಂ, ದೇವೇಗೌಡರ ಕಣ್ಣಿರು ಕೃತಕವಾದದ್ದು ಎಂದು ಟೀಕಿಸಿದರು.
5
+ ರಾಜಕಾರಣ ವಿಚಾರದಲ್ಲಿ ಕಣ್ಣೀರು ಬರಬಾರದು, ಆದರೆ ದೇವೇಗೌಡರ ಕುಟುಂಬದವರು ಯಾವಗಲೂ ಕಣ್ಣೀರು ಹಾಕುತ್ತಾರೆ, ಇದೆಲ್ಲ ಕೃತಕವಾದದ್ದು ಎಂದು ಟೀಕಿಸಿದರು.ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದೇವೆ, ಆದರೂ ಮೋದಿ ಅದೇ ರೀತಿ ಭಾಷಣ ಮುಂದುವರೆಸುತ್ತಿದ್ದಾರೆ ಎಂದು ಸಿದ್ದು ದೂರಿದರು.
6
+ ಮೊದಲ ಹಂತದ ಚುನಾವಣೆಯಲ್ಲಿ 105 ಸ್ಥಾನಗಳ ಸ್ಪರ್ಧೆಯಲ್ಲಿ ಎನ್‌ ಡಿಎ ಮೈತ್ರಿ ಕೂಟ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂದು ಮಾತನಾಡುವ ಭರದಲ್ಲಿ ಸಿದ್ದರಾಮಯ್ಯ ಎಡವಟ್ಟು ಮಾಡಿದರು,ಐ ಎನ್‌ ಡಿ ಐ ಎ ಎನ್ನುವ ಬದಲು ಎನ್‌ಡಿಎ ಎಂದು ಹೇಳಿದರು. ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ಕೂಡಾ ಇದೇ ರೀತಿ ಎಡವಟ್ಟು ಮಾಡಿ ಸುದ್ದಿಯಾಗಿದ್ದನ್ನು ಸ್ಮರಿಸಬಹುದು.
eesanje/url_46_167_8.txt ADDED
@@ -0,0 +1,5 @@
 
 
 
 
 
 
1
+ ಮತದಾರರಿಗೆ ಆಮಿಷವೊಡ್ಡಿದ ಆರೋಪದಲ್ಲಿ ಸುಧಾಕರ್‌ ವಿರುದ್ಧ ಎಫ್‌ಐಆರ್‌
2
+ ಬೆಂಗಳೂರು,ಏ.26-ಆಪ್ತನ ಮನೆಯಲ್ಲಿ 4.8 ಕೋಟಿ ಹಣ ವಶಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ವಿರುದ್ಧ ಮತದಾರರಿಗೆ ಆಮಿಷ ಹಾಗೂ ಅನಗತ್ಯ ಪ್ರಭಾವದ ಆರೋಪದ ಮೇಲೆ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ.
3
+ ಚಿಕ್ಕಬಳ್ಳಾಪುರದ ಫ್ಲೈಯಿಂಗ್‌ ಸ್ಕ್ವಾಡ್ ತಂಡ (ಎಫ್‌ಎಸ್‌ಟಿ) ಕ್ರಮ ಕೈಗೊಂಡಿರುವುದಾಗಿ ಚುನಾವಣಾ ಆಯೋಗ ಮಾಹಿತಿ ನೀಡಿದೆ. 4.8 ಕೋಟಿ ರೂ. ಮೌಲ್ಯದ ನಗದನ್ನು ಚಿಕ್ಕಬಳ್ಳಾಪುರದ ಎಫ್‌ಎಸ್‌ಟಿ ವಶಪಡಿಸಿಕೊಂಡಿರುವುದಾಗಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.
4
+ ಚಿಕ್ಕಬಳ್ಳಾಪುರ ಕ್ಷೇತ್ರದ ರಾಜ್ಯ ಕಣ್ಗಾವಲು ತಂಡವು ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್‌ ವಿರುದ್ಧ ಏಪ್ರಿಲ್‌ 25ರಂದು ಮಾದನಾಯಕನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿದೆ.
5
+ ಮತದಾರರಿಗೆ ಆಮಿಷ ಮತ್ತು ಅನಗತ್ಯ ಪ್ರಭಾವ ಆರೋಪದ ಮೇರೆಗೆ ಜನತಾ ಪ್ರಾತಿನಿಧ್ಯ ಕಾಯ್ದೆ ಮತ್ತು ಐಪಿಸಿಯ ಸಂಬಂಧಿತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಆಯೋಗ ಪೋಸ್ಟ್ ಮಾಡಿದೆ.
eesanje/url_46_167_9.txt ADDED
@@ -0,0 +1,5 @@
 
 
 
 
 
 
1
+ ಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದು ಅಭ್ಯಾಸ : ಜೋಶಿ ಲೇವಡಿ
2
+ ಹುಬ್ಬಳ್ಳಿ, ಏ.26-ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಜನರ ಕೈಗೆ ಚೊಂಬು ಕೊಡೋದನ್ನು ಕಾಂಗ್ರೆಸ್‌ ನಿಲ್ಲಿಸಲಿಲ್ಲ. ಪರಿಣಾಮ ಜನರೂ ಕಾಂಗ್ರೆಸ್ಸಿಗರ ಕೈಗೆ ಚೊಂಬು ಕೊಡುತ್ತಾ ಬಂದರು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲೇವಡಿ ಮಾಡಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದು ಅಡ್ಡಾಡೋದು ಅಭ್ಯಾಸವಾಗಿದೆ ಎಂದು ಟೀಕಿಸಿದರು.
3
+ ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ದೇಶದಲ್ಲಿ 14 ಕೋಟಿಗೂ ಅಧಿಕ ಶೌಚಗೃಹ ನಿರ್ಮಿಸಿ ಜನರು ಕೈಯಲ್ಲಿ ಚೊಂಬು ಹಿಡಿಯುವುದನ್ನು ನಿಲ್ಲಿಸಿದ್ದಿದ್ದಾರೆ ಎಂದು ಜೋಶಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.
4
+ ಜನರ ಕೈಗೆ ಚೊಂಬು ಕೊಟ್ಟ ಕಾಂಗ್ರೆಸ್‌:ಯುಪಿಎ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ ನಡೆಸಿ ದೇಶದ ಪ್ರತಿಯೊಬ್ಬರ ಕೈಗೂ ಚೊಂಬು ಕೊಟ್ಟಿದ್ದಾರೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರನ್ನು ಸೋಲಿಸಿದ್ದಲ್ಲದೆ, ಅವರ ವಿರುದ್ಧ ಗೆದ್ದವರಿಗೆ ಪದ್ಮವಿಭೂಷಣ ಕೊಟ್ಟು ಸತ್ಕರಿಸುವ ಮೂಲಕ ದಲಿತರ ಕೈಗೆ ಚೊಂಬು ಕೊಟ್ಟವರು ಕಾಂಗ್ರೆಸ್ಸಿಗರು ಎಂದು ಸಚಿವ ಜೋಶಿ ಹರಿ ಹಾಯ್ದರು.
5
+ ಇದೆಲ್ಲದರ ಪರಿಣಾಮ ಜನರೂ ನಿಮ್ಮ ಕೈಗೆ ಚೊಂಬು ಕೊಟ್ಟು ಕಳಿಸಿತ್ತಿದ್ದಾರೆ. ದೇಶದ 20-25 ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್‌ ಈಗ ಎರಡೇ ರಾಜ್ಯಗಳಲ್ಲಿ ಅಧಿಕಾರದಲ್ಲಿದೆ ಎಂದು ಕುಟುಕಿದರು.ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ಹೀಗೆ ಎಲ್ಲೆಡೆಯೂ ಹೀನಾಯವಾಗಿ ಸೋಲಿಸಿ ವಿರೋಧ ಪಕ್ಷದ ಸ್ಥಾನದಲ್ಲೂ ಕುಳಿತುಕೊಳ್ಳದಂತೆ ಜನ ನಿಮ್ಮ ಕೈಗೆ ಚೊಂಬು ಕೊಟ್ಟಿದ್ದಾರೆ, ನೆನಪಿಟ್ಟುಕೊಳ್ಳಿ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.
eesanje/url_46_168_1.txt ADDED
@@ -0,0 +1,5 @@
 
 
 
 
 
 
1
+ ತಲಾ ಒಂದು ಲಕ್ಷ ರೂ. ನೀಡುವುದಾಗಿ ಕಾಂಗ್ರೆಸ್‌ ಕರಪತ್ರ ಹಂಚಿಕೆ : ದೂರು ನೀಡಲು ಮುಂದಾದ ದೇವೇಗೌಡರು
2
+ ಹಾಸನ,ಏ.26-ಯುವಕರಿಗೆ ಹಾಗೂ ಮಹಿಳೆಯರಿಗೆ ತಲಾ ಒಂದು ಲಕ್ಷ ರೂ. ನೀಡುವುದಾಗಿ ಕಾಂಗ್ರೆಸ್‌ ಕರಪತ್ರ ಪ್ರಕಟಿಸಿರುವ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದರು.
3
+ ಪಡುವಲಹಿಪ್ಪೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವಕರು ಹಾಗೂ ಮಹಿಳೆಯರಿಗೆ ತಲಾ ಒಂದು ಲಕ್ಷ ಕೊಡುವುದಾಗಿ ಪಾಂಪ್ಲೆಟ್‌ ಪ್ರಕಟಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಸ್ಟೇಟಸ್‌ ಏನು ಎಂದು ಪ್ರಶ್ನಿಸಿದರು.
4
+ ಇವರೇನು ರಾಜ್ಯದ ಮುಖ್ಯಮಂತ್ರಿಯೋ ಅಥವಾ ಉಪಮುಖ್ಯಮಂತ್ರಿ ಆಗಿದ್ದಾರೆಯೇ? ಒಂದು ವೇಳೆ ಈ ಸ್ಥಾನಗಳಲ್ಲಿ ಅವರಿದ್ದರ ಆ ರೀತಿಯ ಪ್ರಚಾರವನ್ನು ಒಪ್ಪಬಹುದಿತ್ತು ಎಂದರು.
5
+ ನೆರೆಯ ಕೇರಳ, ತಮಿಳುನಾಡಿನಲ್ಲಿ ಇಲ್ಲದ ಈ ರೀತಿಯ ಭರವಸೆಯ ಪ್ರಕಟಣೆ ಕರ್ನಾಟಕದಲ್ಲಿ ಮಾತ್ರ ಏಕೆ ಎಂದು ಪ್ರಶ್ನಿಸಿದ ಅವರು, ಈ ಸಂಬಂಧ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ಹೇಳಿದರು.
eesanje/url_46_168_10.txt ADDED
@@ -0,0 +1,21 @@
 
 
 
 
 
 
 
 
 
 
 
 
 
 
 
 
 
 
 
 
 
 
1
+ ಲೋಕಸಭಾ ಚುನಾವಣೆ : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ( )
2
+ ಬೆಂಗಳೂರು,ಏ.26-ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಇಂದು ಮತದಾನ ಶಾಂತಿಯುತವಾಗಿ ನಡೆಯುತ್ತಿದೆ, ನಿಗದಿತ ಸಮಯದಂತೆ ಬೆಳಿಗ್ಗೆ 7 ಗಂಟೆಯಿಂದಲೇ 14 ಕ್ಷೇತ್ರಗಳ 30,602 ಮತಗಟ್ಟೆಗಳಲ್ಲಿ ಮತದಾನ ಆರಂಭಗೊಂಡಿದೆ. ಶಾಂತಿಯುತ ಮುಕ್ತ ಮತದಾನಕ್ಕೆ ಅನುಕೂಲವಾಗುವಂತೆ ಎಲ್ಲಾ ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿತ್ತು. ಮತದಾರರು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿರುವುದು ಬಹುತೇಕ ಕಡೆಗಳಲ್ಲಿ ಕಂಡುಬಂದಿದೆ.
3
+ ವಿಶೇಷ ಮತಗಟ್ಟೆಗಳಲ್ಲೂ ಕೂಡ ಮತದಾರರು ಉತ್ಸಾಹದಿಂದ ಮತ ಚಲಾಯಿಸಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾ ಕಚೇರಿ ಪ್ರಕಟಣೆ ತಿಳಿಸಿದೆ.ಯುವ ಮತದಾರರು ಉತ್ಸಾಹದಿಂದಲೇ ಮತ ಚಲಾಯಿಸುತ್ತಿರುವ ಮಾಹಿತಿ ಬಂದಿದೆ. ಬೆಳಿಗ್ಗೆಯಿಂದಲೇ ಮತದಾರರು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಿದ್ದಾರೆ. ಕೆಲವೊಂದು ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಎಲ್ಲೂ ಕೂಡ ಅಹಿತಕರ ಘಟನೆ ನಡೆದಿಲ್ಲ. ಮತಗಟ್ಟೆಗಳಲ್ಲಿ ಮತದಾರರಿಗೆ ಅನುಕೂಲವಾಗುವಂತೆ ನೆರಳು, ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿತ್ತು.
4
+ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲೂ ವೆಬ್‌ಕಾಸ್ಟಿಂಗ್‌ ಮಾಡಲಾಗುತ್ತಿದೆ. ಒಟ್ಟಾರೆ 19,701 ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್‌ ಹಾಗೂ 1370 ಮತಗಟ್ಟೆಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ. ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸೂಕ್ತ ಭದ್ರತೆಯನ್ನು ಮತಗಟ್ಟೆಗಳಲ್ಲಿ ಒದಗಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
5
+ ಪ್ರಧಾನಿ ಕನ್ನಡಲ್ಲೇ ಟ್ವೀಟ್ ಮನವಿ :
6
+ ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾನು ವಿಶೇಷವಾಗಿ…
7
+ ಲೋಕಸಭೆ ಚುಣಾವಣೆಗೆ ಇಂದು ರಾಜ್ಯದ 14 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ದಾಖಲೆಯ ಸಂಖ್ಯೆಯಲ್ಲಿ ಮತದಾರರು ಮತ ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ,ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ.ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ���ತೆ ನಾನು ವಿಶೇಷವಾಗಿ ಕೋರುತ್ತೇನೆ. ಎಂದು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.
8
+ ಲೋಕಸಭಾ ಚುನಾವಣೆ : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ( )
9
+
10
+
11
+ ಮತದಾನ ಮಾಡಿದ ಶ್ರೀ ರಂಭಾಪುರಿ ಜಗದ್ಗುರು ;
12
+ ಶ್ರೀ ರಂಭಾಪುರಿ ಪೀಠ (ಬಾಳೆಹೊನ್ನೂರು) , ಏ.26-ಲೋಕಸಭಾ ಚುನಾವಣೆಯ ಅಂಗವಾಗಿ ಇಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ತಮ್ಮ ಮತ ಚಲಾಯಿಸಿದರು.ಮತದಾನದ ನಂತರ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಯಶಸ್ವಿಗಾಗಿ ಪ್ರತಿಯೊಬ್ಬರೂ ಕೂಡಾ ಮತ ಚಲಾವಣೆ ಮಾಡುವುದು ಅವಶ್ಯಕ.
13
+ ಮತದಾನ ಸಂವಿಧಾನ ನೀಡಿದ ಉನ್ನತ ಹಕ್ಕು ಎಂಬುದನ್ನು ಮರೆಯಬಾರದು. ರಾಜ್ಯದಲ್ಲಿ ಎರಡು ಹಂತದ ಮತದಾನ ನಡೆಯುತ್ತಿದ್ದು ಮೊದಲ ಹಂತದ ಮತದಾನದಲ್ಲಿ ತಾವು ಮತ ಚಲಾಯಿಸಿದ್ದೇವೆ. ಸುಭದ್ರ ಮತ್ತು ಸದೃಢ ಸರ್ಕಾರದ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ಕರೆ ನೀಡಿದರು.
14
+ 0
15
+
16
+ ಮತದಾನ ಮಾಡಿ ಮಾದರಿಯಾದ 91 ವರ್ಷದ ಮಂಜುನಾಥ್‌ಅರಸೀಕೆರೆ, ಏ.26- ಲೋಕಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದಂತೆ ನಗರದ 13ನೇ ವಾರ್ಡಿನಲ್ಲಿ ವಾಸವಿರುವ 91 ವರ್ಷದ ಮಂಜುನಾಥ್‌ ರಾವ್‌ ಮತಗಟ್ಟೆ ಸಂಖ್ಯೆ 132 ರಲ್ಲಿ ತಮ್ಮ ಹಕ್ಕು ಚಲಾಯಿಸುವ ಮೂಲಕ ಯುವ ಮತದಾರರಿಗೆ ಮತದಾನದ ಮಹತ್ವ ಸಾರಿದರು.
17
+ ಬಾನಂಗಳದಲ್ಲಿ ಸೂರ್ಯ ತನ್ನ ದಿನಚರಿ ಆರಂಭಿಸುತ್ತಿದ್ದಂತೆಯೇ ಇತ್ತ ಚುನಾವಣಾ ಅಧಿ ಕಾರಿಗಳು ಸಹ ತಮ್ಮ ಚುನಾವಣಾ ಪ್ರಕ್ರಿಯೆಗಳನ್ನು ಆರಂಭಿಸಿದರು ಈ ವೇಳೆ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿದ ಮಂಜುನಾಥರಾಯರು ಸರದಿ ಸಾಲಿನಲ್ಲಿ ನಿಂತು ತಮ್ಮ ಮತದಾನ ಮಾಡುವ ಮೂಲಕ ಮತದಾನದ ಅರಿವು ಮೂಡಿಸಿದರು.
18
+ ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಒಂದೊಂದು ಜಾತಿ ಧರ್ಮದವರಿಗೆ ತಮ್ಮದೇ ಆದ ರೀತಿಯಲ್ಲಿ ಹಬ್ಬ-ಹರಿದಿನಗಳನ್ನು ಆಚರಣೆ ಮಾಡುವ ಸಂಪ್ರದಾಯವಿರುತ್ತದೆ ಆದರೆ ದೇಶದಲ್ಲಿ ವಾಸ ಮಾಡುತ್ತಿರುವ ಹಿಂದೂ, ಮುಸ್ಲಿಂ, ಕ್ರೈಸ್ತ , ಸಿಖ್‌್ಖ , ಜೈನ ಹೀಗೆ ಯಾವುದೇ ಧರ್ಮವಿರಲಿ, ಜಾತಿ ಇರಲಿ ಅವರೆಲ್ಲರೂ ಒಗ್ಗಟ್ಟಿನಿಂದ ಮಾಡಬಹುದಾದ ಹಬ್ಬವೆಂದರೆ ಅದು ಪ್ರಜಾಪ್ರಭುತ್ವದ ಹಬ್ಬ ಮತದಾನವೆಂಬ ಪೂಜೆ.
19
+ ಈ ಹಬ್ಬವನ್ನು ಎಲ್ಲರೂ ತಪ್ಪದೇ ಆಚರಣೆ ಮಾಡುವ ಮೂಲಕ ರಾಜ್ಯ ಹಾಗೂ ದೇಶದ ಅಭಿವೃದ್ಧಿಯ ಚಿಂತನೆಯೊಂದಿಗೆ ತಮ್ಮ ನೆಚ್ಚಿನ ಅಭ್ಯರ್ಥಿಗೆ ಮತದಾನ ಮಾಡುವ ಮೂಲಕ ರಾಜ್ಯ ಹಾಗೂ ದೇಶದ ಪ್ರಗತಿಗೆ ಕಾರಣೀಭೂತರಾಗುವಂತೆ ಮನವಿ ಮಾಡಿದರು.
20
+ ಪ್ರತಿಜ್ಞೆ : ಸಂವಿಧಾನ ನನಗೆ ಕೊಟ್ಟಿರುವ ಮತದಾನದ ಹಕ್ಕನ್ನು ದೇಶದ ಅತ್ಯಂತ ಜವಾಬ್ದಾರಿಯುತ ನಾಗರಿಕನಾಗಿ ಸ್ಥಳೀಯ ಸಂಸ್ಥೆ ಚುನಾವಣೆಯಿಂದ ಹಿಡಿದು ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ತಪ್ಪದೇ ಪಾಲ್ಗೊಂಡು ಮತದಾನ ಮಾಡುವ ಪ್ರತಿಜ್ಞೆ ಮಾಡಿರುವುದಲ್ಲದೆ ಪಾಲಿಸುತ್ತಾ ಬಂದಿದ್ದೇ��ೆ. ಅದೇ ರೀತಿ ಪ್ರತಿಯೊಬ್ಬರೂ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮತದಾನ ಮಾಡುವ ಪ್ರತಿಜ್ಞೆ ಮಾಡಬೇಕು ಎಂದು ಕರೆ ನೀಡಿದರು.
21
+ 0
eesanje/url_46_168_11.txt ADDED
@@ -0,0 +1,6 @@
 
 
 
 
 
 
 
1
+ ಎಲೆಕ್ಷನ್ ಎಫೆಕ್ಟ್, ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಬಸ್-ರೈಲುಗಳಲ್ಲಿ ಜನಜಂಗುಳಿ
2
+ ಬೆಂಗಳೂರು, ಏ.25-ನಾಳೆ ರಾಜ್ಯದಲ್ಲಿ ನಡೆಯಲಿರುವ ಮೊದಲ ಹಂತದ ಲೋಕಸಭೆ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲು ಜನರು ಊರುಗಳತ್ತ ತೆರಳುತ್ತಿದ್ದು ಬಸ್ಗಳು, ರೈಲುಗಳು ಫುಲ್ರಷ್ ಆಗಿವೆ.
3
+ ಮತದಾನ ಮಾಡಲು ಬೆಂಗಳೂರಿನಲ್ಲಿ ನೆಲೆಸಿರುವ ಮೊದಲ ಹಂತದ 14 ಲೋಕಸಭಾ ಕ್ಷೇತ್ರದ ಜನರು ರಾತ್ರಿಯೇ ಊರುಗಳತ್ತ ಪ್ರಯಾಣ ಬೆಳೆಸಿದ್ದಾರೆ. ಆದರೆ ಚುನಾವಣಾ ಕಾರ್ಯಕ್ಕೆ ಸಾರಿಗೆ ಬಸ್ಗಳನ್ನು ಬಳಸಿಕೊಳ್ಳಲಾಗಿದ್ದು, ಕೊರತೆ ಎದುರಾದ ಹಿನ್ನೆಲೆಯಲ್ಲಿ ಇರುವ ಬಸ್ಗಳಲ್ಲಿ ಜನ ಫುಲ್ ರಶ್ ಆಗಿದೆ. ಮೈಸೂರು, ಮಂಡ್ಯ, ಹಾಸನ, ತುಮಕೂರು, ಉಡುಪಿ, ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ವಿವಿಧ ತಾಲೂಕು ಜಿಲ್ಲೆಗಳಿಗೆ ತೆರಳಲು ರಾತ್ರಿಯೇ ಜನರು ಬಸ್ ನಿಲ್ದಾಣಕ್ಕೆ ಜಮಾಯಿಸಿದ್ದರು.
4
+ ಇಂದು ಬೆಳಗ್ಗೆ ಕೂಡ ಮೆಜೆಸ್ಟಿಕ್, ಸ್ಯಾಟಲೈಟ್ ಬಸ್ ನಿಲ್ದಾಣ, ಶಾಂತಿನಗರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿತ್ತು. ಕೆಲವರು ಸಾರಿಗೆ ಬಸ್ಗಳ ರಶ್ ನೋಡಿ ಖಾಸಗಿ ಬಸ್ಗಳತ್ತ ಮುಖ ಮಾಡಿದ್ದು, ಇದನ್ನೆ ಬಂಡವಾಳವನ್ನಾಗಿ ಮಾಡಿಕೊಂಡ ಕೆಲ ಖಾಸಗಿ ಬಸ್ನವರು ಟಿಕೆಟ್ ದರ ಹೆಚ್ಚಳ ಮಾಡಿದ್ದರು. ಆದರೂ ಅನಿವಾರ್ಯವಾಗಿ ಜನರು ತೆರಳಿದರು. ಇನ್ನೂ ಕೆಲವರು 15 ದಿನಗಳ ಹಿಂದೆಯೇ ಮುಂಗಡವಾಗಿ ಟಿಕೆಟ್ಗಳನ್ನು ಬುಕ್ಕಿಂಗ್ ಮಾಡಿಕೊಂಡು ತೆರಳಿದರು. ಕೆಲವರು ಇಂದು ಸಂಜೆ ಕೆಲಸ ಮುಗಿಸಿಕೊಂಡು ಖಾಸಗಿ ಕಾರು, ಟ್ರಾವೆಲ್ಸ್ , ಬೈಕ್ಗಳಲ್ಲಿ ತೆರಳಿದ್ದಾರೆ.
5
+ ನಾಳೆ ಮತದಾನ ರಜೆ. ಶನಿವಾರ, ಭಾನುವಾರ ಸೇರಿ ಮೂರು ದಿನ ಸಾಲು ಸಾಲು ರಜೆ ಬಂದಿದ್ದು, ಕುಟುಂಬ ಸಮೇತ ಜನರು ಊರುಗಳತ್ತ ತೆರಳಿದರು. ಉತ್ತರ ಕರ್ನಾಟಕ ಭಾಗದಲ್ಲಿ ಎರಡನೆ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಆ ಭಾಗದ ಜನರು ಮಾತ್ರ ಉಳಿದಿದ್ದಾರೆ. ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಗಳು ಎಂದಿನಂತೆ ಸಂಚಾರ ನಡೆಸಿವೆ.
6
+ ಬಿಎಂಟಿಸಿ ಬಸ್ಗಳು ವಿರಳ:ಬೆಂಗಳೂರು ಲೊಕಸಭಾ ಕ್ಷೇತ್ರಗಳ ಚುನಾವಣಾ ಕಾರ್ಯಕ್ಕೆ ಬಿಎಂಟಿಸಿ ಬಸ್ಗಳನ್ನು ತೆಗೆದುಕೊಳ್ಳಲಾಗಿದ್ದು, ಇಂದು ಬೆಳಗ್ಗೆ ಬಸ್ಗಳ ಸಂಖ್ಯೆ ಕಡಿಮೆ ಇತ್ತು. ಬಸ್ಗಳ ಕೊರತೆಯಿಂದ ಕೆಲಸ-ಕಾರ್ಯಗಳಿಗೆ ತೆರಳುವವರಿಗೆ ತೊಂದರೆಯಾಗಿದ್ದು, ಇರುವ ಬಸ್ಗಳು ಫುಲ್ ರಷ್ ಆಗಿದ್ದು, ಅನಿವಾರ್ಯವಾಗಿ ಜನರು ಪ್ರಯಾಣಿಸಿದರು.
eesanje/url_46_168_12.txt ADDED
@@ -0,0 +1,8 @@
 
 
 
 
 
 
 
 
 
1
+ ಮುಸ್ಲಿಂ ಮೀಸಲಾತಿ ಕುರಿತು ಮೋದಿ ಗೊಂದಲ ಮೂಡಿಸುತ್ತಿದ್ದಾರೆ : ಸಿಎಂ ಗರಂ
2
+ ಬೀದರ್,ಏ.25-ಮುಸ್ಲಿಂ ಮೀಸಲಾತಿ ವಿಷಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಟೀಕೆ ಮಾಡಿ ಗೊಂದಲ ಮೂಡಿಸುತ್ತಿದ್ದಾರೆ. ರಾಜ್ಯದಲ್ಲಿ ಈ ಹಿಂದೆ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರ ಶೇ.4 ರಷ್ಟು ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕೆ ಯಥಾರೀತಿಯಾಗಿ ಮುಂದುವರೆಸುವುದಾಗಿ ಸುಪ್ರೀಂಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿರುವುದನ್ನು ಮರೆತಂತೆ ವರ್ತಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
3
+ ಬೀದರ್ನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಎಸ್ಸಿ, ಎಸ್ಟಿಗೆ ನೀಡಲಾಗಿರುವ ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕೆ ನೀಡಲಿದೆ ಎಂದು ಮೋದಿಯವರು ಟೀಕಿಸಿದ್ದಾರೆ. ಚಿನ್ನಪ್ಪ ರೆಡ್ಡಿ ಆಯೋಗದ ಶಿಫಾರಸ್ಸಿನಂತೆ ಮುಸ್ಲಿಂ ಸಮುದಾಯಕ್ಕೆ ಶೇ.4 ರಷ್ಟು ಮೀಸಲಾತಿ 1994 ರಿಂದ ಜಾರಿಗೆ ಬಂದಿದೆ ಎಂದರು.
4
+ ರಾಜ್ಯದಲ್ಲಿ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಈ ಮೀಸಲಾತಿಯನ್ನು ಹಿಂಪಡೆಯಲಾಗಿತ್ತು. ಮುಸ್ಲಿಂ ಸಮುದಾಯ ಸುಪ್ರೀಂಕೋರ್ಟ್ನ ಮೊರೆ ಹೋಗಿದೆ. ವಿಚಾರಣೆಯ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಸುಪ್ರೀಂಕೋರ್ಟ್ನ ಮುಂದೆ ಶೇ.4 ಮೀಸಲಾತಿಯನ್ನು ಮುಂದುವರೆಸುವುದಾಗಿ ಮುಚ್ಚಳಿಕೆ ಬರೆದುಕೊಟ್ಟಿದೆ, ಈ ಮೀಸಲಾತಿ ಈಗಲೂ ಮುಂದುವರೆಯುತ್ತಿದೆ ಎಂದು ತಿಳಿಸಿದರು.
5
+ ಹುಬ್ಬಳಿಯ ವಿದ್ಯಾರ್ಥಿನಿ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಬಿಜೆಪಿಯವರು ಒತ್ತಾಯ ಮಾಡುತ್ತಿದ್ದಾರೆ. ಅವರ ಅಧಿಕಾರವಧಿಯಲ್ಲಿ ಯಾವುದಾದರೂ ಪ್ರಕರಣವನ್ನು ಸಿಬಿಐಗೆ ವಹಿಸಿದ ಉದಾಹರಣೆ ಇದೆಯೇ? ಎಂದು ಪ್ರಶ್ನಿಸಿದರು.
6
+ ನಾನು ಹಿಂದೆ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೇನೆ. ಬಿಜೆಪಿಯವರಿಗೆ ಕೇಳಲು ಯಾವ ನೈತಿಕ ಹಕ್ಕಿದೆ. ಇದರಲ್ಲಿ ರಾಜಕೀಯ ಮಾಡಬಾರದು. ನೇಹಾ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸರ್ಕಾರಿ ಅಭಿಯೋಜಕರೊಂದಿಗೆ ಮಾತನಾಡಿದ್ದು, ಸರ್ಕಾರ ಈಗಾಗಲೇ ಆರೋಪಿಯನ್ನು ಬಂಧಿಸಿದೆ. ಸಿಐಡಿ ತನಿಖೆ ನಡೆದಿದ್ದು ಆರೋಪಪಟ್ಟಿಯನ್ನು ತಯಾರಿಸಲಿದೆ ಎಂದರು.
7
+ ನೇಹಾ ಹತ್ಯೆ ಪ್ರಕರಣದಲ್ಲಿ ರಾಜಕೀಯ ಬೇಡ :ನೇಹಾ ತಂದೆಯವರು ತಮ್ಮ ಮಗಳ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವೇ ರಾಜಕೀಯ ಮಾಡುತ್ತಿದೆ ಹಾಗೂ ಬಿಜೆಪಿಯವರೂ ಇದೇ ಧೋರಣೆಯನ್ನು ಹೊಂದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ನೇಹಾ ಕೊಲೆ ಅನ್ಯಾಯವಾದುದು. ಅದನ್ನು ನಾವು ಖಂಡಿಸಿದ್ದೇವೆ. ಇತರೆ ಪಕ್ಷಗಳು ಅದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು. ತಪ್ಪಿತಸ���ಥರಿಗೆ ಕಠಿಣ ಶಿಕ್ಷೆ ಕೊಡಿಸುವ ಪ್ರಮಾಣಿಕ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದರು.
8
+ ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ :ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಜನರ ಆಸ್ತಿ ಕಸಿದುಕೊಂಡು ಸಂಪತ್ತು ಹಂಚುವ ಬಗ್ಗೆ ಮೋದಿಯವರು ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೋದಿಯವರು ನೀಡಿರುವ ಭರವಸೆಗಳನ್ನು ಈಡೇರಿಸಿಲ್ಲ. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ., 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದ್ವಿಗುಣಗೊಳಿಸುವ ಭರವಸೆಗಳನ್ನು ಈಡೇರಿಸಿದರೇ ಅಗತ್ಯವಸ್ತುಗಳ ಬೆಲೆಯನ್ನು ಮೋದಿಯವರು ಕಡಿಮೆ ಮಾಡಿದ್ದಾರೆಯೇ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.
eesanje/url_46_168_2.txt ADDED
@@ -0,0 +1,8 @@
 
 
 
 
 
 
 
 
 
1
+ ಮತದಾನದ ವಿಡಿಯೋ ರೆಕಾರ್ಡ್ ಮಾಡಿ ಕೆಲವು ಮತದಾರರಿಂದ ನಿಯಮ ಉಲ್ಲಂಘನೆ
2
+ ಬೆಂಗಳೂರು,ಏ.26-ಚುನಾವಣಾ ಆಯೋಗದ ಸೂಚನೆಯನ್ನು ಉಲ್ಲಂಘಿಸಿ ಕೆಲವು ಕಡೆ ಅಭ್ಯರ್ಥಿಗಳು ಮತ್ತು ಮತದಾರರು ಮತದಾನದ ನಂತರ ಮೊಬೈಲ್‌ ರೆಕಾರ್ಡ್‌ ಹಾಗೂ ಸೆಲ್ಫಿ ಕ್ಲಿಕಿಸಿಕೊಂಡಿರುವ ಘಟನೆಗಳು ನಡೆದಿವೆ. ಮತದಾನದ ವೇಳೆ ಅದರಲ್ಲೂ ವಿವಿಎಂ ಬಳಿ ಯಾರೊಬ್ಬರೂ ಸೆಲ್ಫಿ ತೆಗೆದುಕೊಳ್ಳುವುದು ಇಲ್ಲವೇ ಮತದಾನದ ವಿಡಿಯೋ ಚಿತ್ರೀಕರಣ ಮಾಡಿಕೊಳ್ಳಬಾರದೆಂದು ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿತ್ತು.
3
+ ಆಯೋಗದ ಈ ಸೂಚನೆಯನ್ನು ಧಿಕ್ಕರಿಸಿ ಕೆಲವು ಕಡೆ ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್‌ ಮಾಡಿಕೊಂಡಿದ್ದರೆ ಇನ್ನು ಕೆಲವು ಕಡೆ ಸೆಲ್ಫಿಯನ್ನು ತೆಗೆದುಕೊಂಡಿದ್ದಾರೆ.ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ಸೌಮ್ಯಾರೆಡ್ಡಿ ಅವರಿಗೆ ಮತ ಹಾಕಿ ಅದನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಜೊತೆಗೆ, ಬ್ಯಾಲೆಟ್‌ ಪೇಪರ್‌ ಮುದ್ರಣ ಆಗುವುದನ್ನೂ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು ಗುರುರಾಜ್‌ ಅಂಜನ್‌ ಎನ್ನುವವರು ಟ್ವಿಟರ್ನಲ್ಲಿ ಹಂಚಿಕೊಂಡು ಒಳ್ಳೆಯ ಕಾರ್ಯವನ್ನು ಶುಭ ಮುಂಜಾನೆಯೇ ಆರಂಭ ಮಾಡಿದ್ದಾರೆ ಎಂದು ಬರೆದುಕೊಂಡಿದ್ದಾನೆ.
4
+ ದಕ್ಷಿಣ ಕನ್ನಡ ಪುತ್ತೂರಿನಲ್ಲಿಯೂ ನಿಯಮ ಉಲ್ಲಂಘನೆ:ರಾಜ್ಯದ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಪುತ್ತೂರಿನ ಮತಗಟ್ಟೆಯೊಂದರಲ್ಲಿ ರಂಜಿತ್‌ ಬಂಗೇರ ಎಂಬ ಯುವಕ ಮತದಾನ ಮಾಡುವಾಗ ತಾನು ಕಾಂಗ್ರೆಸ್‌‍ ಅಭ್ಯರ್ಥಿಗೆ ಮತ ಹಾಕಿದ್ದೇನೆ ಎಂದು ಫೋಟೋ ತೆಗೆದುಕೊಂಡು ಶೇರ್‌ ಮಾಡಿಕೊಂಡಿದ್ದಾರೆ.
5
+ ತಾನು ಮತದಾನ ಮಾಡಿದ ಯುವಕ ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್‌ ಗೆ ಮತದಾನ ಮಾಡುವ ಫೋಟೊ ಶೇರ್‌ ಮಾಡಿಕೊಂಡಿದ್ದಾನೆ. ಮತಗಟ್ಟೆಯೊಳಗೆ ಮೊಬೈಲ್‌ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆ ಮಾಡಿದ್ದಾನೆ.
6
+ ಕೋಲಾರದಲ್ಲೂ ನಿಯಮ ಉಲ್ಲಂಘನೆ:ಪ್ರಜಾಪ್ರಭುತ್ವದ ಪ್ರಮುಖ ಹಕ್ಕಾಗಿರುವ ಮತದಾನವನ್ನು ಚಲಾವಣೆ ಮಾಡಲು 18 ವರ್ಷ ಪೂರೈಸಿದ ಎಲ್ಲ ಭಾರತೀಯ ನಾಗರಿಕರಿಗೂ ಹಕ್ಕಿದೆ. ನಮ್ಮ ದೇಶದಲ್ಲಿ ಗೌಪ್ಯ ಮತದಾನ ವ್ಯವಸ್ಥೆ ಇದೆ. ಆದರೆ, ಈ ನಿಯಮ ಉಲ್ಲಂಘಿಸುವ ಮತದಾರರು ತಾವು ಮತದಾನ ಮಾಡಿದ್ದಾರೆ.
7
+ ಕೋಲಾರದಲ್ಲಿ ಮತದಾರನೊಬ್ಬ ತಾನು ಕಾಂಗ್ರೆಸ್‌‍ ಅಭ್ಯರ್ಥಿ ಕೆ.ವಿ. ಗೌತಮ್‌ ಅವರಿಗೆ ಮತದಾನ ಮಾಡುವುದನ್ನು ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ.
8
+ ಅದೇ ರೀತಿ ಚಿಕ್ಕಬಳ್ಳಾಪುರದಲ್ಲಿಯೂ ನಿಯಮ ಉಲ್ಲಂಘನೆ ಮಾಡಲಾಗಿದೆ. ಚುನಾವಣಾ ಆಯೋಗದಿಂದ ಮತದಾನ ಕೇಂದ್ರದೊಳಗೆ ಮೊಬೈಲ್‌ ತೆಗೆದುಕೊಂಡು ಹೋಗಿ, ಫೋಟೋ ಮತ್ತು ವಿಡಿಯೋ ಮಾಡುವಂತಿಲ್ಲ ಎಂಬ ನಿಯಮವಿದೆ. ಆದರೆ, ಈ ನಿಯಮ ಉಲ್ಲಂಘಿಸಿ ಚಿಕ್ಕಬಳ್ಳಾಪುರ ಲೋಕಸಭಾ ವ್ಯಯಾಪ್ತಿಯಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಮತ ಹಾಕುವುದನ್ನು ವಿಡಿಯೋ ಮಾಡಿಕೊಂಡಿದ್ದಾನೆ. ಜೊತೆಗೆ, ಮತದಾನ ಮಾಡುವ ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಹಂಚಿಕೊಂಡಿದ್ದಾನೆ.
eesanje/url_46_168_3.txt ADDED
@@ -0,0 +1,5 @@
 
 
 
 
 
 
1
+ ಕಳೆದ ಬಾರಿಗಿಂತಲೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ : ಡಿ.ಕೆ.ಸುರೇಶ್‌
2
+ ಬೆಂಗಳೂರು,ಏ.26-ನಾನು ಕಳೆದ ಮೂರು ಚುನಾವಣೆಗಳಿಗಿಂತ ಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ಆತ್ಮವಿಶ್ವಾಸವಿದೆ. ಜನ ನನ್ನ ಪರವಾಗಿ ನಿಲ್ಲುವ ನಂಬಿಕೆಯಿದೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ಹೇಳಿದರು.
3
+ ಸದಾಶಿವನಗರದ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಬೆಳಗಿನ ಜಾವದ ತನಕ ಕ್ಷೇತ್ರದ ಕಾರ್ಯಕರ್ತರು, ಮತದಾರರನ್ನು ಭೇಟಿಯಾಗಿ ಬಂದಿದ್ದೇನೆ. ಎಲ್ಲರೂ ಅತ್ಯಂತ ಹುಮ್ಮಸ್ಸಿನಿಂದ ಭಾಗವಹಿಸಿದ್ದಾರೆ ಎಂದರು.
4
+ ಪ್ರಜಾಪ್ರಭುತ್ವದಲ್ಲಿ ಮತದಾನ ಹಬ್ಬದಂತೆ. ಹಿರಿಯರು, ಕಿರಿಯರು ಒಟ್ಟಾಗಿ ಭಾಗವಹಿಸಬೇಕು. ಮತದಾನ ಪ್ರಜಾಪ್ರಭುತ್ವದಲ್ಲಿ ಪ್ರಮುಖವಾದ ಪಾತ್ರವಹಿಸುತ್ತದೆ. ಈ ಹಕ್ಕನ್ನು ನಾವು ಚಲಾವಣೆ ಮಾಡಬೇಕಿರುವುದು ನಮ್ಮ ಕರ್ತವ್ಯ ಎಂದು ಹೇಳಿದರು. ಸಂಸತ್ತು ಪ್ರಜಾಪ್ರಭುತ್ವದ ದೇಗುಲ.
5
+ ಇದರ ಮೂಲಕ ದೇಶ, ರಾಜ್ಯವನ್ನು ಅಭಿವೃದ್ಧಿ ಮಾಡಲು, ಅವಶ್ಯಕತೆಗಳನ್ನು ಪೂರೈಸಲು, ಒಳ್ಳೆಯದನ್ನು ಮಾಡಲು, ಕಾನೂನು, ನಿಯಮಗಳನ್ನು ಮಾಡಲಾಗುತ್ತದೆ. ಆದ ಕಾರಣ ಲೋಕಸಭಾ ಚುನಾವಣೆ ಪ್ರಮುಖವಾದುದು. ಆದ್ದರಿಂದ ಎಲ್ಲ ನಾಗರಿಕರು ಮತದಾನದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.
eesanje/url_46_168_4.txt ADDED
@@ -0,0 +1,9 @@
 
 
 
 
 
 
 
 
 
 
1
+ ಆದಾಯ ತೆರಿಗೆ ಅಧಿಕಾರಿಗಳು ಬಿಜೆಪಿ ಏಜೆಂಟರಂತೆ ವರ್ತಿಸುತ್ತದ್ದಾರೆ : ಡಿಕೆಶಿ
2
+ ಬೆಂಗಳೂರು,ಏ.26-ಆದಾಯ ತೆರಿಗೆ ಅಧಿಕಾರಿಗಳು ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದು, ಕಾಂಗ್ರೆಸ್‌ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ, ಲೋಕಸಭಾ ಚುನಾವಣೆ ಬಳಿಕ ತಾವು ಖುದ್ದಾಗಿ ಪೊಲೀಸ್‌ ಮಹಾನಿರ್ದೇಶಕರನ್ನು ಭೇಟಿ ಮಾಡಿ ದೂರು ನೀಡುವುದರ ಜೊತೆಗೆ ಸಂತ್ರಸ್ತರ ಮೂಲಕ ಪ್ರಮಾಣಪತ್ರ ದಾಖಲಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದಾಯ ತೆರಿಗೆ ಅಧಿಕಾರಿಗಳು ಕಾಂಗ್ರೆಸ್‌ ಕಾರ್ಯಕರ್ತರು, ಮುಖಂಡರನ್ನು ಮಾತ್ರ ಗುರಿಯಾಗಿಸಿಕೊಂಡು ದಾಳಿಯ ಮೇಲೆ ದಾಳಿಯನ್ನು ನಡೆಸುತ್ತಿದ್ದಾರೆ. ಅದರಲ್ಲೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಈ ರೀತಿಯ ಬೆದರಿಕೆಗಳು ಹೆಚ್ಚಾಗಿವೆ ಎಂದರು.
4
+ ದಾಳಿ ನಡೆಸಿದ ವೇಳೆ ಅಧಿಕಾರಿಗಳು ನೀವು ಕಾಂಗ್ರೆಸ್‌ನಲ್ಲಿ ಏಕಿದ್ದೀರ, ಬಿಜೆಪಿಗೆ ಹೋಗಿ ಎಂದು ಒತ್ತಡ ಹೇರುತ್ತಿದ್ದಾರೆ. ಸಂಸದ ಡಿ.ಕೆ.ಸುರೇಶ್‌ ಅವರ ಕಾರು ಚಾಲಕ ಹಾಗೂ ಅವರ ಪತ್ನಿಯನ್ನು ವಿಚಾರಣೆ ನಡೆಸಿ ಕಿರುಕುಳ ನೀಡಲಾಗಿದೆ. ಇದರ ವಿರುದ್ಧ ತಾವು ಪ್ರಮಾಣಪತ್ರ ದಾಖಲಿಸುವುದಾಗಿ ಹೇಳಿದರು.
5
+ ಆದಾಯ ತೆರಿಗೆ ಅಧಿಕಾರಿಗಳು ಬಿಜೆಪಿಯ ಏಜೆಂಟರಂತೆ ನಡೆದುಕೊಳ್ಳುತ್ತಿದ್ದಾರೆ. ಪೊಲೀಸ್‌ ಮಹಾನಿರ್ದೇಶಕರಿಗೆ ಈ ಕುರಿತು ಖುದ್ದು ದೂರು ಸಲ್ಲಿಸುವುದಾಗಿ ಹೇಳಿದರು.ಬೆಂಗಳೂರು ಗ್ರಾಮಾಂತರದಲ್ಲಿ ಕೂಪನ್‌ಗಳನ್ನು ಹಂಚಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್‌, ಅವರೇನು ಸತ್ಯ ಹರಿಶ್ಚಂದ್ರರೇ? ಬಿಜೆಪಿ ಮತ್ತು ಜೆಡಿಎಸ್‌ನಿಂದ ಏನು ಹಂಚಲಾಗುತ್ತಿದೆ ಎಂದು ನಮಗೆ ಗೊತ್ತಿಲ್ಲವೇ? ಎಂದು ಪ್ರಶ್ನಿಸಿದರು.
6
+ ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದರು. ಈಗ ಅವರದೇ ಕುಟುಂಬದ ಅಭ್ಯರ್ಥಿ ಹಾಗೂ ಅವರ ಕುಟುಂಬದ ಸದಸ್ಯ ಹೆಣ್ಣುಮಕ್ಕಳೊಂದಿಗೆ ಅನುಚಿತವಾಗಿ ವರ್ತಿಸಿರುವ ವಿಚಾರಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿವೆ. ಇದರ ಬಗ್ಗೆ ದೇವೇಗೌಡರು ಮತ್ತು ಕುಮಾರಸ್ವಾಮಿಯವರೇ ಉತ್ತರ ನೀಡಬೇಕು ಎಂದರು.
7
+ ನಾವು ಯಾವುದೇ ಕೂಪನ್‌ಗಳನ್ನು ಹಂಚುತ್ತಿಲ್ಲ. ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯ ಮಾಹಿತಿಯನ್ನು ನೀಡುವ ಕೆಲಸ ಮಾಡುತ್ತಿದ್ದೇವೆ. ಆರೋಪ ಮಾಡುತ್ತಿರುವ ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ? ಅವರೇನು ಹಂಚುತ್ತಿದ್ದಾರೆ ನಮಗೆ ಗೊತ್ತಿಲ್ಲವೇ? ಕನಕಪುರ, ಚನ್ನಪಟ್ಟಣ, ರಾಮನಗರದಲ್ಲಿ ಏನು ಹಂಚುತ್ತಿದ್ದಾರೆ ಎಂಬುದಕ್ಕೆ ತಮ್ಮ ಬಳಿ ಸಾಕ್ಷಿಯಿದೆ. ರಾಜರಾಜೇಶ್ವರಿ ನಗರದಲ್ಲಿ ಚಿನ್ನದ ಕಾಯಿನ್‌ಗಳನ್ನು ಹಂಚುತ್ತಿರುವುದು ತಮಗೆ ಗೊತ್ತಿದೆ ಎಂದು ಹೇಳಿದರು.
8
+ ಮೊದಲ ಹಂತದ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ 10 ರಲ್ಲಿ ಗೆಲುವು ಸಾಧಿಸಲಿದೆ. ಒಟ್ಟು ರಾಜ್ಯಾದ್ಯಂತ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಜೆಡಿಎಸ್‌ನ ಅಭ್ಯರ್ಥಿಗಳು 3 ಕಡೆ ಸೋಲುವುದರ ಜೊತೆಗೆ ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿಯು ಸೋಲಲಿದ್ದಾರೆ ಎಂದರು.
9
+ ಕುಮಾರಸ್ವಾಮಿಯವರು ಧೈರ್ಯವಿಲ್ಲದೆ ರಣಹೇಡಿಯಂತೆ ಮಂಡ್ಯಕ್ಕೆ ಓಡಿ ಹೋಗಿದ್ದಾರೆ. ಅವರೇ ಬೆಂಗಳೂರು ಗ್ರಾಮಾಂತರದಲ್ಲಿ ಸ್ಪರ್ಧಿಸಬೇಕಿತ್ತು ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.ರಾಜ್ಯಸರ್ಕಾರದ ಪಂಚಖಾತ್ರಿ ಯೋಜನೆಗಳು ಜನರಿಗೆ ಅನುಕೂಲವಾಗಿವೆ. ಬಿಜೆಪಿಯವರು ಜನಪರವಾಗಿ ಒಂದು ಯೋಜನೆಗಳನ್ನೂ ಜಾರಿಗೊಳಿಸಿಲ್ಲ. ಈ ಹಿಂದೆ ಯುಪಿಎ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರೂಪಿಸಿದ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯವರಿಗೆ ಸಾಧ್ಯವಾಗಿಲ್ಲ ಎಂದು ಹೇಳಿದರು.
eesanje/url_46_168_5.txt ADDED
@@ -0,0 +1,17 @@
 
 
 
 
 
 
 
 
 
 
 
 
 
 
 
 
 
 
1
+ ರಾಜ್ಯದಲ್ಲಿ ಭರ್ಜರಿ ಮತದಾನ, ಸಾಲಲ್ಲಿ ನಿಂತು ಮತದಾನ ಮಾಡಿದ ಸೆಲೆಬ್ರೆಟಿಗಳು
2
+ ಬೆಂಗಳೂರು,ಏ.26-ರಾಜ್ಯದ ದಕ್ಷಿಣ ಭಾಗದಲ್ಲಿನ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆದಿದೆ. ಬಿಸಿಲೇರುವ ಮುನ್ನ ಮತದಾನ ಮಾಡಬೇಕು ಎಂಬ ಇರಾದೆಯಲ್ಲಿ ಬಹಳಷ್ಟು ಮಂದಿ ಬೆಳಿಗ್ಗೆ 6 ಗಂಟೆಯಿಂದಲೇ ಮತಗಟ್ಟೆಯ ಮುಂದೆ ಸಾಲುಗಟ್ಟಿ ನಿಂತಿದ್ದು ಕಂಡುಬಂದಿತು.
3
+ ಹಾಸನದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ತಮ್ಮ ಪತ್ನಿ ಚೆನ್ನಮ್ಮ ಅವರೊಂದಿಗೆ ಮತಗಟ್ಟೆಗೆ ಬಂದು ಮತ ಚಲಾಯಿಸುವ ಸಂದರ್ಭದಲ್ಲಿ ಚುನಾವಣಾ ಸಿಬ್ಬಂದಿಗಳು ಅವರಿಗೆ ಸಹಾಯ ಮಾಡಿದರು. ಇದೇ ವೇಳೆ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಕುಟುಂಬ ಸಮೇತರಾಗಿ ಆಗಮಿಸಿ ಮತ ಚಲಾಯಿಸಿದರು.
4
+ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ಮತ ಚಲಾಯಿಸಿದರು. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ಸಾತನೂರಿನ ದೊಡ್ಡಆಲನಹಳ್ಳಿಯಲ್ಲಿ ಕುಟುಂಬ ಸಮೇತರಾಗಿ ಮತ ಚಲಾಯಿಸಿದರು. ಈ ವೇಳೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ಕೂಡ ತಮ್ಮ ಹಕ್ಕು ಚಲಾಯಿಸಿದರು.
5
+ ಕೆಲವೆಡೆ ಉದ್ದನೆಯ ಸರದಿ ಸಾಲಿನಲ್ಲಿ ನಿಂತು ಮತ ಚಲಾವಣೆ ಮಾಡಲಾಯಿತು. ಇನ್‌ಫೋಸಿಸ್‌ನ ಸಂಸ್ಥಾಪಕ ನಾರಾಯಣಮೂರ್ತಿ ಮತ್ತು ಅವರ ಪತ್ನಿ, ರಾಜ್ಯಸಭಾ ಸದಸ್ಯೆ ಸುಧಾಮೂರ್ತಿಯವರು ಜಯನಗರದಲ್ಲಿ ಮತದಾನ ಮಾಡಿದರು. ಚುನಾವಣಾ ಮುಖ್ಯ ಅಧಿಕಾರಿ ಮನೋಜ್‌ಕುಮಾರ್‌ ಮೀನಾ, ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಜಕ್ಕೂರು ಪ್ರದೇಶದಲ್ಲಿರುವ ಮತಗಟ್ಟೆಯಲ್ಲಿ ಕುಟುಂಬ ಸಮೇತರಾಗಿ ನಿಂತು ಮತದಾನ ಮಾಡಿದರು.
6
+ ಮೈಸೂರಿನಲ್ಲಿ 101 ವರ್ಷದ ಅಜ್ಜಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸುವ ಮೂಲಕ ಗಮನ ಸೆಳೆದರೆ, ಬಿಜೆಪಿ ಅಭ್ಯರ್ಥಿಯಾಗಿರುವ ರಾಜಮನೆತನದ ಯದುವೀರ್‌ ಕೃಷ್ಣದತ್ತ ಒಡೆಯರ್‌, ಪತ್ನಿ ತ್ರಿಷಿಕಾ, ಅವರ ತಾಯಿ ಪ್ರಮೋದಾ ದೇವಿ ಅವರುಗಳು ಕುಟುಂಬ ಸಮೇತರಾಗಿ ಆಗಮಿಸಿ ಮತ ಚಲಾಯಿಸಿದರು.
7
+ ಬೆಂಗಳೂರಿನಲ್ಲಿ ಕ್ರಿಕೆಟಿಗ ರಾಹುಲ್‌ದ್ರಾವಿಡ್‌, ಹಿರಿಯ ನಟ ಹಾಗೂ ನಿರ್ಮಾಪಕ ರಾಘವೇಂದ್ರ ರಾಜ್‌ಕುಮಾರ್‌, ಪತ್ನಿ ಮಂಗಳ, ನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌, ಸದಾಶಿವನಗರದ ಮತಗಟ್ಟೆಯಲ್ಲಿ, ಹಿರಿಯ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್‌ ಮಲ್ಲೇಶ್ವರಂನಲ್ಲಿ, ನಟಿ ಅಮೂಲ್ಯ ಪತಿ ಜಗದೀಶ್‌ ಅವರೊಂದಿಗೆ, ಗೋಲ್ಡನ್‌ ಸ್ಟಾರ್‌ ಗಣೇಶ್‌ ಪತ್ನಿ ಶಿಲ್ಪಾ ಅವರೊಂದಿಗೆ ಬಂದು ಮತ ಚಲಾಯಿಸಿದರು. ಗೃಹಸಚಿವ ಡಾ.ಜಿ.ಪರಮೇಶ್ವರ್‌ ತುಮಕೂರಿನ ಹೆಗ್ಗೆರೆಯಲ್ಲಿ, ಚಿಕ್ಕಬಳ್ಳಾಪುರದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್‌ ಕೆರೆಸಂದ್ರದಲ್ಲಿ ಮತ ಚಲಾಯಿಸಿದರು.
8
+ ಸಾರಿಗೆ ಸಚಿವ ರಾಮಲ���ಂಗಾರೆಡ್ಡಿ ಹಾಗೂ ಅವರ ಪುತ್ರಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯರೆಡ್ಡಿ ಅವರೊಂದಿಗೆ ಆಗಮಿಸಿ ಮತ ಚಲಾಯಿಸಿದರು. ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಹಾಗೂ ಸಂಸದ ಡಿ.ವಿ.ಸದಾನಂದಗೌಡ, ನಟಿ ಸಪ್ತಮಿಗೌಡ, ಹಿರಿಯ ನಟ ಪ್ರಕಾಶ್‌ ರೈ ಅವರುಗಳೂ ಮತ ಚಲಾಯಿಸಿದ್ದಾರೆ.
9
+ ಮೈಸೂರಿನಲ್ಲಿ ಮತದಾನ ಬಿರುಸುಮೈಸೂರು ನಗರ ಮತ್ತು ಜಿಲ್ಲೆಯಾದ್ಯಂತ ಬೆಳಗಿನಿಂದಲೇ ಬಿರುಸಿನ ಮತದಾನ ನಡೆಯಿತು.ಯುವ ಜನತೆ ಮತ್ತು ಮೊದಲ ಬಾರಿಗೆ ಮತದಾನ ಮಾಡುವವರು, ಹಿರಿಯ ನಾಗರಿಕರು, ವಿಕಲಚೇತನರು ಕೂಡ ಅತ್ಯುತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.ಒಂದೆರಡು ಮತಗಟ್ಟೆಗಳಲ್ಲಿ ಸ್ವಲ್ಪ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು, ಕೆಲವೆಡೆ ಸಣ್ಣಪುಟ್ಟ ಜಗಳ ನಡೆದರೆ ಜಿಲ್ಲೆಯಲ್ಲಿ ಬಹುತೇಕ ಶಾಂತಿಯುತ ಮತದಾನ ನಡೆದಿದೆ.ನಗರದಲ್ಲಿ ಗಣ್ಯರು ಬೆಳಗ್ಗೆ ಬೇಗನೆ ಬಂದು ಮತ ಹಾಕಿ ಯುವಜನತೆಗೆ ಮಾದರಿಯಾದರು.
10
+ ಮೈಸೂರಿನ ಶ್ರೀಕಾಂತ ಶಾಲೆಯಲ್ಲಿ ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್‌ ಅವರು ಪತ್ನಿ ತ್ರಿಷಿಕಾ ಹಾಗೂ ತಾಯಿ ರಾಜಮಾತೆ ಪ್ರಮೋದಾ ದೇವಿ ಒಡೆಯರ್‌ ಅವರೊಂದಿಗೆ ಆಗಮಿಸಿ ಮತ ಚಲಾಯಿಸಿದರು. ಎಲ್ಲರೂ ಮರೆಯದೆ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸುವಂತೆ ಮನವಿ ಮಾಡಿದರು.ಮತದಾನ ಮಾಡಿ ಮನೆಗೆ ಬಂದ ವೃದ್ಧೆ ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಕಲ್ಲಳ್ಳಿ ಗ್ರಾಮದಲ್ಲಿ ನಡೆದಿದೆ. ಪುಟ್ಟಮ್ಮ (90) ಸಾವನ್ನಪ್ಪಿದ್ದು, ಕಲ್ಲಳ್ಳಿ ಸರ್ಕಾರಿ ಶಾಲೆಯಲ್ಲಿ ಮತದಾನ ಮಾಡಿ ಆರಾಮವಾಗಿಯೇ ಬಂದಿದ್ದರು. ಅದೇನಾಯಿತೋ ಇದ್ದಕ್ಕಿದ್ದಂತೆ ಮೃತಪಟ್ಟಿದ್ದಾರೆ.
11
+
12
+ ಎಂಬತ್ತು ವರ್ಷದಿಂದ ಮತದಾನ ಮಾಡುತ್ತಿರುವ ಶತಾಯುಷಿನಾನು ಇದುವರೆಗೂ ಒಂದು ಚುನಾವಣೆಯನ್ನು ಮಿಸ್‌‍ ಮಾಡ್ಕೊಂಡಿಲ್ಲ ತಪ್ಪದೆ ಮತದಾನ ಮಾಡುತ್ತಿದ್ದೇನೆ ಎಂದು ಜಮುವಿನ 102 ವರ್ಷದ ಶತಾಯುಷಿ ಮತದಾರ ಹೇಳಿಕೊಂಡಿದ್ದಾರೆ ಕುಟುಂಬ ಸದಸ್ಯರೊಂದಿಗೆ ಊರುಗೋಲಿನ ಸಮೇತ ಜಮು ಮತಗಟ್ಟೆಗೆ ಬಂದ 102 ವರ್ಷದ ಹಾಜಿ ಕರಮ್‌ದಿನ್‌ ಎಂಬುವರು ತಮ ಮತ ಚಲಾಯಿಸಿದ ಬಳಿಕ ಬೆರಳನ್ನು ತೋರಿಸಿ ಫೋಟೋಗೆ ಪೋಸ್‌‍ ನೀಡಿದ ನಂತರ ಮಾತನಾಡಿದರು.ಈ ವಯಸ್ಸಿನಲ್ಲಿ ಈ ಮತಗಟ್ಟೆಯಲ್ಲಿ ಮತದಾನ ಮಾಡಲು ನನಗೆ ತುಂಬಾ ಸಂತೋಷವಾಗಿದೆ. ನಾನು ಪ್ರತಿ ಬಾರಿಯೂ ಮತದಾನ ಮಾಡಿದ್ದೇನೆ. 102 ನೇ ವಯಸ್ಸಿನಲ್ಲಿ ಈ ಪ್ರಯಾಣವು ಇಂದಿಗೂ ಮುಂದುವರೆದಿದೆ ಎಂದು ಅವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು.
13
+ ರಿಯಾಸಿ ಜಿಲ್ಲೆ ಜಮು ಸಂಸದೀಯ ಕ್ಷೇತ್ರದ ಭಾಗವಾಗಿದ್ದು, 22 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲು 17.81 ಲಕ್ಷಕ್ಕೂ ಹೆಚ್ಚು ಮತದಾರರು ತಮ ಮತ ಚಲಾಯಿಸಲು ಅರ್ಹರಾಗಿದ್ದಾರೆ.ಪ್ರಸ್ತುತ ಬಿಜೆಪಿ ಸಂಸದ ಜುಗಲ್‌ ಕಿಶೋರ್‌ ಶರ್ಮಾ ಅವರು 2014 ಮತ್ತ��� 2019 ರ ಚುನಾವಣೆಗಳಲ್ಲಿ ಸತತ ಗೆಲುವಿನ ನಂತರ ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ ಅವರ ಪ್ರಮುಖ ಸ್ಪರ್ಧಿ ಕಾಂಗ್ರೆಸ್‌‍ ಅಭ್ಯರ್ಥಿ ಮತ್ತು ಮಾಜಿ ಸಚಿವ ರಾಮನ್‌ ಭಲ್ಲಾ ಅವರಾಗಿದ್ದಾರೆ.
14
+ ಜಮು-ರಿಯಾಸಿ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಆರಂಭಗೊಂಡಿದ್ದು, ಉತ್ಸಾಹದಿಂದ ಮತದಾರರು ಬೂತ್‌ಗಳಿಗೆ ಆಗಮಿಸಿದ್ದರು, ಕೆಲವರು ಸಾಂಪ್ರದಾಯಿಕ ಡೋಗ್ರಾ ಉಡುಗೆಗಳನ್ನು ಧರಿಸಿ ಮತದಾನ ಮಾಡಿದರು.ಕ್ಷೇತ್ರದಾದ್ಯಂತ 2,416 ಮತಗಟ್ಟೆಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದ್ದು ಬಿರುಸಿನಿಂದ ಮತದಾನವಾಗುತ್ತಿದೆ. 2019 ರ ಲೋಕಸಭೆ ಚುನಾವಣೆಯಲ್ಲಿ ಜಮುವಿನಲ್ಲಿ ಶೇ,74ರಷ್ಟು ಮತದಾನವಾಗಿದೆ.ಐದು ವರ್ಷಗಳ ಹಿಂದೆ ಆರ್ಟಿಕಲ್‌ 370 ರದ್ದತಿ ಮತ್ತು ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಜಮುವಿನಲ್ಲಿ ಇದು ಮೊದಲ ಪ್ರಮುಖ ಚುನಾವಣೆಯಾಗಿದೆ.
15
+ ಕಾಫಿನಾಡಿನಲ್ಲಿ ಯುವಜನತೆಗೆ ಮಾದರಿಯಾದ ಹಿರಿಯ ನಾಗರಿಕರುಉಡುಪಿ – ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂಜಾನೆಯಿಂದ ಬಿರುಸು ಪಡೆದುಕೊಂಡಿದೆ. ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದ್ದು ಮಾದರಿಯಾಗುವ ಘಟನೆಗಳಿಗೂ ಕೂಡ ಮತದಾನ ಪ್ರಕ್ರಿಯೆ ಕಾರಣವಾಗಿದೆ. ಒಂದೆಡೆ ಹಿರಿಯ ನಾಗರಿಕರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ರೆ, ಮತ್ತೊಂದೆಡೆ ಹಸೆಮಣೆ ಏರುವ ಮುನ್ನ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
16
+ ಮತದಾನದ ಪ್ರಕ್ರಿಯೆಯಲ್ಲಿ ಹಿರಿಯ ನಾಗರಿಕರು ಅತ್ಯಂತ ಉತ್ಸಾಹದಿಂದ ಮತದಾನದ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾರೆ. ಬೆಳಗ್ಗೆ ಏಳು ಗಂಟೆಗೆ ಮತಗಟ್ಟೆಗಳಿಗೆ ಆಗಮಿಸಿದ ಹಿರಿಯ ನಾಗರಿಕರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ನಗರದ ಬಸವನಹಳ್ಳಿಯ ಮತಗಟ್ಟೆಯಲ್ಲಿ ಮತದಾನ ಆರಂಭಕ್ಕೂ ಮುನ್ನವೇ ಆಗಮಿಸಿದ್ದ 80 ವರ್ಷದ ವೃದ್ಧೆ ಕನ್ನಮ್ಮ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
17
+ ಸೊಪ್ಪು, ವ್ಯಾಪಾರಿಯಾಗಿರುವ ಕನ್ನಮ್ಮ ವ್ಯಾಪಾರಕ್ಕೆ ಹೋಗುವ ಹಿನ್ನೆಲೆಯಲ್ಲಿ ಮುಂಜಾನೆ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಕನ್ನಮ್ಮ ಮುಂದಿನ ಚುನಾವಣೆಗೆ ನಾನು ಇರ್ತೀನೋ ಇಲ್ಲವೋ ಗೊತ್ತಿಲ್ಲ, ಆದರೆ ಮತದಾನ ಒಂದು ಪವಿತ್ರವಾದ ಕಾರ್ಯವಾಗಿದ್ದು ನಮ್ಮ ಕರ್ತವ್ಯವನ್ನು ನಾನು ಮಾಡಿದ್ದೇನೆ. ನಾನು ವ್ಯಾಪಾರಕ್ಕೆ ಹೋಗುವ ಕಾರಣ ಬೆಳಿಗ್ಗೆ ಬೇಗ ಬಂದು ವೋಟ್‌ ಮಾಡಿದ್ದೇನೆ ಎಂದರು.
eesanje/url_46_168_6.txt ADDED
@@ -0,0 +1,5 @@
 
 
 
 
 
 
1
+ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಪಾರದರ್ಶಕ ಚುನಾವಣೆ ನಡೆಸುವಲ್ಲಿ ಆಯೋಗ ವಿಫಲ । ಹೆಚ್‌ಡಿಕೆ ಆಕ್ರೋಶ
2
+ ಬೆಂಗಳೂರು,ಏ.26-ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ನಿಂದ ಗಿಫ್ಟ್ ಕಾರ್ಡ್‌ ಹಂಚಲಾಗಿದೆ ಎಂದು ಆರೋಪಿಸಿದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಮುಕ್ತ ಪಾರದರ್ಶಕ ಚುನಾವಣೆ ನಡೆಸುವಲ್ಲಿ ಚುನಾವಣಾ ಆಯೋಗ ಸಂಪೂರ್ಣ ವಿಫಲವಾಗಿದೆ ಎಂದು ಆಪಾದಿಸಿದರು.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗ ಈ ರೀತಿ ಚುನಾವಣೆ ನಡೆಸುವ ಬದಲು ಹಣ ಹಂಚಿಕೊಂಡು ಚುನಾವಣೆ ನಡೆಸಲು ಅವಕಾಶ ಮಾಡಿಕೊಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
4
+ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ಪರವಾಗಿ ಕ್ಯೂ ಆರ್‌ಕೋಡ್‌ ಇರುವ ಕೂಪನ್‌ಗಳನ್ನು ಹಂಚಿಕೆ ಮಾಡಲಾಗಿದೆ. ಅದನ್ನು ತಡೆಯಲು ಹೋದ ಜೆಡಿಎಸ್‌-ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಯಾಗಿದೆ ಎಂದು ಆರೋಪಿಸಿದರು.
5
+ ಶಾಸಕರಾದ ಡಾ.ರಂಗನಾಥ್‌, ಎಚ್‌.ಸಿ.ಬಾಲಕೃಷ್ಣ, ಇಕ್ಬಾಲ್‌ ಹುಸೇನ್‌, ಡಿಸಿಎಂ ಡಿ.ಕೆ.ಶಿವಕುಮಾರ್‌, ವಿಧಾನಪರಿಷತ್‌ ಸದಸ್ಯ ಪುಟ್ಟಣ್ಣ ಹಾಗೂ ಕುಸುಮ ಹನುಮಂತಯ್ಯ ಅವರ ಹೆಸರಿನಲ್ಲಿ ಕೂಪನ್‌ ಹಂಚಲಾಗಿದೆ ಎಂದು ಆರೋಪಿಸಿಸಿ ಮೊಬೈಲ್‌ ಕೂಪನ್‌ ನೀಡಲಾಗಿದೆ ಎನ್ನಲಾದ ಚಿತ್ರಗಳನ್ನು ತೋರಿಸಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲೂ ಇದೇ ರೀತಿ ಕಾಂಗ್ರೆಸ್‌ ಕೂಪನ್‌ ಕಾರ್ಡ್‌ಗಳನ್ನು ಹಂಚಿಕೆ ಮಾಡಿತ್ತು ಎಂದು ಆಪಾದಿಸಿದರು.
eesanje/url_46_168_7.txt ADDED
@@ -0,0 +1,4 @@
 
 
 
 
 
1
+ ಪ್ಲೀಸ್‌ ಮನೆಯಿಂದ ಹೊರಬಂದು ಮತ ಹಾಕಿ : ನಿರ್ಮಲಾ ಸೀತಾರಾಮನ್‌ ಮನವಿ
2
+ ಬೆಂಗಳೂರು,ಏ.26-ಪ್ಲೀಸ್‌ ಮನೆಯಿಂದ ಹೊರಗೆ ಬಂದು ಮತ ಚಲಾಯಿಸಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮನವಿ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಜಯನಗರದ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ಮಾತನಾಡಿದ ಅವರು, ಜನರು ಸ್ಥಿರತೆಯನ್ನು ಬಯಸುತ್ತಿದ್ದಾರೆ.
3
+ ಭಾರತ ಅಭಿವೃದ್ಧಿ ಕಾಣಲು ಬಯಸುತ್ತಿದ್ದಾರೆ. 10 ವರ್ಷದ ಕೇಂದ್ರ ಸರ್ಕಾರದ ಸಾಧನೆ ಜನರ ಮನಸ್ಸಿನಲ್ಲಿದೆ. ಮತದಾನದಲ್ಲಿ ಜನರ ಉತ್ಸಾಹ ನೋಡಬಹುದು ಎಂದರು. ಮುಖವಾಗಿ ಹಿರಿಯ ನಾಗರಿಕರು ಕ್ಯೂನಲ್ಲಿ ನಿಂತು ಮತದಾನ ಮಾಡುತ್ತಾರೆ. ಮತಗಟ್ಟೆಯಲ್ಲಿ ಉದ್ದನೆಯ ಸರತಿ ಸಾಲು ಕಾಣುತ್ತಿದೆ. ಚುನಾವಣೆ ಆಯೋಗ ಮನೆಯಲ್ಲೇ ಮತದಾನಕ್ಕೆ ಅವಕಾಶ ಮಾಡಿದರೂ ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದಾರೆ ಎಂದು ಅಭಿಪ್ರಾಯಟ್ಟರು.
4
+ ಮೊದಲ ಬಾರಿ ವೋಟ್‌ ಮಾಡುವ ಮತದಾರರು ಮತಗಟ್ಟೆಗೆ ಬರುತ್ತಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾರರು ವೋಟ್‌ ಮಾಡುವ ಭರವಸೆ ನನಗೆ ಇದೆ ಎಂದರು. ಸರಳವಾಗಿ ಮತಗಟ್ಟೆಗೆ ಆಗಮಿಸಿದ ನಿರ್ಮಲಾ ಸೀತಾರಾಮನ್‌ ಅವರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.
eesanje/url_46_168_8.txt ADDED
@@ -0,0 +1,5 @@
 
 
 
 
 
 
1
+ ಹಕ್ಕು ಚಲಾಯಿಸಿದ ಇನ್ಫೊಸಿಸ್‌ ನಾರಾಯಣಮೂರ್ತಿ ಮತ್ತು ಸುಧಾಮೂರ್ತಿ
2
+ ಬೆಂಗಳೂರು,ಏ.26-ನಾನು ಎಲ್ಲರಿಗೂ ಹೇಳಲು ಬಯಸುವುದೇನೆಂದರೆ ಅರ್ಹ ಮತದಾರರೆಲ್ಲರೂ ಮನೆಯಲ್ಲೇ ಕುಳಿತುಕೊಳ್ಳಬೇಡಿ. ಮತಗಟ್ಟೆಗೆ ಬಂದು ಮತ ಚಲಾಯಿಸಿ. ಇದು ನಿಮ್ಮ ಹಕ್ಕು, ನಿಮ್ಮ ನಾಯಕನನ್ನು ಆಯ್ಕೆ ಮಾಡಿ ಎಂದು ಲೇಖಕಿ ಹಾಗೂ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಮನವಿ ಮಾಡಿದ್ದಾರೆ.
3
+ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 1,200ಕ್ಕೂ ಹೆಚ್ಚು ಅಭ್ಯರ್ಥಿಗಳು ಜನಾದೇಶ ಬಯಸಿದ್ದಾರೆ.
4
+ ಇನ್ಫೊಸಿಸ್‌ ಸಹ ಸಂಸ್ಥಾಪಕ ಎನ್‌.ಆರ್‌. ನಾರಾಯಣಮೂರ್ತಿ ಹಾಗೂ ರಾಜ್ಯಸಭಾ ಸದಸ್ಯೆ, ಲೇಖಕಿ ಸುಧಾಮೂರ್ತಿ ಅವರು ಬೆಂಗಳೂರಿನ ಬಿಇಎಸ್‌ ಮತಗಟ್ಟೆಯಲ್ಲಿ ಮತ ಚಲಾಯಿಸಿದರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಿಗೆ ಹೋಲಿಸಿದರೆ ನಗರವಾಸಿಗಳು ಕಡಿಮೆ ಮತ ಚಲಾಯಿಸುತ್ತಾರೆ ಎಂದು ನಾನು ಯಾವಾಗಲೂ ಭಾವಿಸುತ್ತೇನೆ. ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.
5
+ ಪ್ರತಿ ಐದು ವರ್ಷಗಳಿಗೊಮ್ಮೆ ನಮ್ಮ ಸಂವಿಧಾನ ನೀಡಿರುವ ಹಕ್ಕನ್ನು ಚಲಾಯಿಸುವ ಅವಕಾಶವೇ ಮತದಾನ. ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಇದು ಸುಸಂದರ್ಭ. ಇಂದು ಬಹಳ ಸಂತೋಷದ ದಿನ. ನಾವೆಲ್ಲರೂ ನಮ್ಮ ಹಕ್ಕನ್ನು ಚಲಾಯಿಸಲು ಉತ್ಸಾಹದಿಂದ ಇರಬೇಕಾದ ದಿನ ಎಂದು ತಿಳಿಸಿದ್ದಾರೆ
eesanje/url_46_168_9.txt ADDED
@@ -0,0 +1,5 @@
 
 
 
 
 
 
1
+ ಬೆಂಗಳೂರಿನಲ್ಲಿ ದಾಖಲೆಯ ಮತದಾನವಾಗಲಿ : ರಾಹುಲ್‌ ದ್ರಾವಿಡ್‌
2
+ ಬೆಂಗಳೂರು, ಏ. 26-ಇಂದು ನಡೆಯುತ್ತಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಎರಡನೇ ಹಂತದಲ್ಲಿ ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದೆಲ್ಲೆಡೆ ಮತದಾನ ಪ್ರಕ್ರಿಯೆಯು ನಡೆಯುತ್ತಿದ್ದು ಸ್ಟಾರ್‌ ಕಲಾವಿದರು ಹಾಗೂ ಕ್ರೀಡಾಪಟುಗಳು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ತಮ್ಮ ಅಭಿಮಾನಿಗಳಿಗೂ ಸುಭದ್ರ ದೇಶದ ನಿರ್ಮಾಣಕ್ಕಾಗಿ ತಪ್ಪದೇ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ.
3
+ ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿ ಇಂದು ಬೆಳಗ್ಗೆಯೇ ತಮ್ಮ ಹಕ್ಕು ಚಲಾಯಿಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಟೀಮ್‌ ಇಂಡಿಯಾದ ಹೆಡ್‌ ಕೋಚ್‌ ರಾಹುಲ್‌ ದ್ರಾವಿಡ್‌ ಅವರು ಕೂಡ ಯುವ ಮತದಾರರು ಸೇರಿದಂತೆ ಎಲ್ಲರೂ ಕಡ್ಡಾಯ ಮತದಾನ ಮಾಡಬೇಕೆಂದು ಕರೆ ನೀಡಿದ್ದಾರೆ.
4
+ `ದೇಶದಾದ್ಯಂತ ಚುನಾವಣೆಯು ಯಾವುದೇ ಗದ್ದಲ ಹಾಗೂ ಗೊಂದಲವಿಲ್ಲದೆ ಸರಾಗವಾಗಿ ಸಾಗುತ್ತಿದೆ. ಅಲ್ಲದೆ ಮತದಾನದ ಪ್ರಕ್ರಿಕೆಯು ಹಿಂದೆಂದಿಗಿಂತಲೂ ಸರಳವಾಗಿದೆ. ಸದೃಢ ಪ್ರಜಾಪ್ರಭುತ್ವದ ದೃಷ್ಟಿಯಿಂದ ಪ್ರತಿಯೊಬ್ಬರು ಕಡ್ಡಾಯ ಮತದಾನ ಮಾಡುವುದು ಅಗತ್ಯವಾಗಿದ್ದು , ಎಲ್ಲರೂ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿ’ ಎಂದು ರಾಹುಲ್‌ ದ್ರಾವಿಡ್‌ ಅವರು ಮನವಿ ಮಾಡಿದ್ದಾರೆ.
5
+ `ಈ ಬಾರಿಯ ಲೋಕಸಭೆಯ ಚುನಾವಣೆಯಲ್ಲಿ ಬೆಂಗಳೂರಿನಲ್ಲಿರುವ ಕ್ಷೇತ್ರಗಳಲ್ಲಿ ದಾಖಲೆಯ ಮತದಾನವಾಗಲಿ ಎಂದು ನಾನು ನಿರೀಕ್ಷಿಸುತ್ತಿದ್ದೇನೆ. ಈ ಬಾರಿ ಅತಿ ಹೆಚ್ಚು ಯುವ ಮತದಾರರು ಮತದಾನ ಮಾಡಲು ಸಂಭ್ರಮಿಸುತ್ತಿದ್ದಾರೆ. ಅಲ್ಲದೆ ಪ್ರತಿಯೊಬ್ಬರು ಯುವ ಮತದಾರರು ಕಡ್ಡಾಯವಾಗಿ ತಮ್ಮ ಹಕ್ಕನ್ನು ಚಲಾಯಿಸಬೇಕೆಂದು ಕರೆ ನೀಡಿದರು. ಯುವಕ ಅಥವಾ ಯುವತಿ ಯಾರೇ ಆಗಲಿ ತಮ್ಮ ಹಕ್ಕನ್ನು ಪ್ರದರ್ಶಿಸಬೇಕು’ ಎಂದು ರಾಹುಲ್‌ ದ್ರಾವಿಡ್‌ ಹೇಳಿದ್ದಾರೆ.
eesanje/url_46_169_1.txt ADDED
@@ -0,0 +1,5 @@
 
 
 
 
 
 
1
+ ರಾಜ್ಯದಲ್ಲಿ ಬಿಸಿಲ ಬೇಗೆಗೆ ತತ್ತರಿಸಿದ ಜನ
2
+ ಬೆಂಗಳೂರು,ಏ.25-ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಕೊರತೆ ಒಂದಡೆಯಾದರೆ ಮತ್ತೊಂದೆಡೆ ಬಿಸಿಲಿನ ಬೇಗೆ ತೀವ್ರಗೊಂಡಿದ್ದು, ಜನರು ತತ್ತರಿಸುವಂತಾಗಿದೆ. ಕಳೆದೆರಡು ತಿಂಗಳಿನಿಂದ ನಿರಂತರವಾಗಿ ಬಿಸಿಲಿನ ಬೇಗೆ ಹೆಚ್ಚಾಗಿದ್ದು, ಜನರು ಬಸವಳಿದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಗರಿಷ್ಠ ತಾಪಮಾನ 40 ಡಿ.ಸೆ. ದಾಟಿದೆ. ರಾಯಚೂರಿನಲ್ಲಿ ಅತ್ಯಧಿಕ 41 ಡಿ.ಸೆ. ದಾಖಲಾಗಿದೆ. ಸದ್ಯಕ್ಕೆ ಮಳೆ ಬರುವ ಸಾಧ್ಯತೆಗಳು ತೀರಾ ವಿರಳವಾಗಿದ್ದು, ತಾಪಮಾನ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
3
+ ಕಳೆದ ಎಂಟತ್ತು ದಿನಗಳಿಂದ ಮಲೆನಾಡು, ಉತ್ತರ ಕರ್ನಾಟಕ ಸೇರಿದಂತೆ ಚದುರಿದಂತೆ ಕೆಲವೆಡೆ ಹಗುರವಾದ ಮಳೆಯಾಗಿದೆ. ಆದರೆ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗದ ಕಾರಣ ವಾತಾವರಣದಲ್ಲಿನ ತೇವಾಂಶವು ಕಡಿಮೆಯಾಗಿದೆ. ಹೀಗಾಗಿ ಹಗಲಿನ ವೇಳೆ ಬಿಸಿಲಿನ ಜೊತೆಗೆ ಬಿಸಿ ಗಾಳಿಯೂ ಜನರನ್ನು ಹೈರಾಣುಗೊಳಿಸಿದೆ.
4
+ ರಾಜಧಾನಿ ಬೆಂಗಳೂರಿನಲ್ಲೂ ಗರಿಷ್ಠ ತಾಪಮಾನ 37 ಡಿ.ಸೆ. ನಷ್ಟು ದಾಖಲಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 35 ಡಿ.ಸೆ. ಗಡಿ ದಾಟಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸರಾಸರಿ 40 ಡಿ.ಸೆ ಗಿಂತಲೂ ಹೆಚ್ಚು ತಾಪಮಾನ ದಾಖಲಾಗುತ್ತಿದೆ.
5
+ ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಮಂಡ್ಯ 39, ಚಿಂತಾಮಣಿ 38.1, ದಾವಣಗೆರೆ 38.5, ಚಿತ್ರದುರ್ಗ 38, ಚಾಮರಾಜನಗರ 38, ಬೆಂಗಳೂರು 37, ಕೊಪ್ಪಳ 39.7, ಕಲಬುರಗಿ 40.6, ಗದಗ 38.2, ಬಾಗಲಕೋಟೆ 40, ವಿಜಯಪುರ 39, ಕಾರವಾರ 37.1, ಶಿರಾಳಿ 37.5 ಡಿ.ಸೆಂ. ನಷ್ಟು ದಾಖಲಾಗಿದೆ.ಹೀಗಾಗಿ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಸುಡುಬಿಸಿಲಿನ ಬಿಸಿ ತಟ್ಟತೊಡಗಿದೆ.
eesanje/url_46_169_10.txt ADDED
@@ -0,0 +1,9 @@
 
 
 
 
 
 
 
 
 
 
1
+ ಕಾಂಗ್ರೆಸ್ ತನ್ನ ಓಲೈಕೆ, ತುಷ್ಟೀಕರಣ ರಾಜಕೀಯ ಮುಂದುವರಿಕೆ : ಅಶ್ವತ್ಥನಾರಾಯಣ್
2
+ ಬೆಂಗಳೂರು, ಏ.24-ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ದಿನದಿಂದ ಓಲೈಕೆ, ತುಷ್ಟೀಕರಣದ ರಾಜಕಾರಣ ಮುಂದುವರೆಸಿದೆ. ಕಾನೂನು- ಸುವ್ಯವಸ್ಥೆ ಸಂಪೂರ್ಣ ಕುಸಿದುಹೋಗಿದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ಟೀಕಿಸಿದರು.
3
+ ನಗರದ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿಂದು ಕಾಂಗ್ರೆಸ್ ಸರಕಾರದ ವಿರುದ್ಧ ಪೊಸ್ಟರ್ ಬಿಡುಗಡೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಓಲೈಕೆ ಜೊತೆಗೆ ಭಯೋತ್ಪಾದಕರ ವಿಚಾರದಲ್ಲಿ ಮೃದು ಧೋರಣೆ ಈ ಸರ್ಕಾರದ್ದು ಎಂದು ಆಕ್ಷೇಪ ವ್ಯಕ್ತಪಡಿಸಿದರು.
4
+ ಕಾಂಗ್ರೆಸ್ ಡೇಂಜರ್ ಪೊಸ್ಟರ್ ಇವತ್ತು ಬಿಡುಗಡೆ ಮಾಡಿದ್ದೇವೆ. ಕ್ಯೂಆರ್ ಕೋಡ್ ಕೊಟ್ಟಿದ್ದು, ಘಟನಾವಳಿಗಳನ್ನು ವೀಕ್ಷಿಸಬಹುದು ಎಂದರು.ನೇಹಾ ಹಿರೇಮಠದ ಹತ್ಯೆಯ ಲವ್ ಜಿಹಾದ್ ಸಂಬಂಧಿತ ಹುಬ್ಬಳ್ಳಿಯ ಘಟನೆ, ಸಿಎಂ ಹೇಳಿಕೆ, ಗೃಹ ಇಲಾಖೆ, ಕಮೀಷನರ್ ನಡವಳಿಕೆ ನೇಹಾರ ಪೊಷಕರಿಗೆ, ಕುಟುಂಬಕ್ಕಾದ ನೋವನ್ನು ಗಮನಿಸಬಹುದು. ಕಾಲೇಜಿಗೆ ಹೆಣ್ಮಕ್ಕಳು ಹೋಗಬೇಕೇ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಳವಳ ಸೂಚಿಸಿದರು.
5
+ ರಾಮೇಶ್ವರಂ ಕೆಫೆ ಬಾಂಬ್ ಪ್ರಕರಣವನ್ನು ವೈಯಕ್ತಿಕ ಎಂದಿದ್ದರು. ಕೊನೆಗೆ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ. ಕುಕ್ಕರ್ ಬಾಂಬ್ ವಿಚಾರದಲ್ಲಿ ಭಯೋತ್ಪಾದಕರನ್ನು ಸೆರೆ ಹಿಡಿದಾಗ ಅವರನ್ನು ಭಯೋತ್ಪಾದಕ ರೆಂದು ಕರೆಯದಂತೆ ಹೇಳಿದ್ದರು ಎಂದು ಗಮನ ಸೆಳೆದರು.
6
+ ಜೈಶ್ರೀರಾಂ ಎಂದವರ ಮೇಲೆ ಹಲ್ಲೆ , ಹನುಮಾನ್ ಚಾಲೀಸ ಹಾಕಿದವರ ಮೇಲೆ ಹಲ್ಲೆ , ಮೋದಿಯವರ ಕುರಿತ ಹಾಡು ಬರೆದವರ ಮೇಲೆ ಹಲ್ಲೆ ನಡೆದಿದೆ. ಇದೆಲ್ಲಕ್ಕೂ ಕಾಂಗ್ರೆಸ್ ಸರಕಾರವೇ ಕಾರಣ ಎಂದು ಟೀಕಿಸಿದರು.
7
+ ಶಾಸಕ ಸುರೇಶ್ಕುಮಾರ್ ಮಾತನಾಡಿ, ಮತ ಚಲಾಯಿಸುವ ಮೊದಲು ದಯವಿಟ್ಟು ಕಾಂಗ್ರೆಸ್ ಪ್ರಣಾಳಿಕೆಯನ್ನು ಗಮನಿಸಿ. ಇಂಡಿ ಒಕ್ಕೂಟದ ಬೇರೆ ಬೇರೆ ಪಕ್ಷಗಳ ನಿಲುವನ್ನೂ ಗಮನಿಸಿ ಎಂದು ವಿನಂತಿಸಿದರು. ಇಂಡಿ ಒಕ್ಕೂಟ, ಕಾಂಗ್ರೆಸ್ ಮತ್ತು ಈ ಒಕ್ಕೂಟದ ಪಾಲುದಾರರು ಭಾರತಕ್ಕೆ ಯಾವ ಗತಿ ತರಬಹುದು ಎಂಬುದು ಇವರ ಹೇಳಿಕೆಗಳಿಂದ ಗೊತ್ತಾಗುತ್ತದೆ ಎಂದು ವಿಶ್ಲೇ2ಷಿಸಿದರು.
8
+ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ್ದ ರಾಹುಲ್ ಗಾಂಧಿಯವರು ಆಗ ಜನಗಣತಿ ಮಾಡಿ ದೇಶದ ಜನಸಂಖ್ಯೆ ಆಧಾರದಲ್ಲಿ ಸಂಪತ್ತಿನ ವಿತರಣೆ ಮಾಡುತ್ತೇವೆ ಎಂದಿದ್ದರು. ಅದು ಅಸಮಾನತೆ ಸರಿಪಡಿಸಲು ಪೂರಕ ಎಂದಿದ್ದರು. ಕಷ್ಟಪಟ್ಟು ದುಡಿದವರ ಹಣವನ್ನು ಕೂಡ ಏನೂ ಕಷ್ಟಪಡದೆ ಇರುವವರಿಗೆ ಹಂಚುತ್ತೇವೆ ಎಂಬ ಮನಸ್ಥಿತಿ ಇವತ್ತು ಬಂದಿದೆ ಎಂದು ಆಕ್ಷೇಪಿಸಿದರು.
9
+ ಇವರಿಗೆ ಮಾತ್ರ ದೆಹಲಿಯಲ್ಲಿ ತಾಯಿ ಗೊಂದು ಮನೆ, ಒಬ್ಬನೇ ಮಗನಿಗೊಂದು ಮನೆ ಬೇಕು. ಇದು ಸಂಪತ್ತಿನ ವಿತರಣೆಯೇ ಎಂದು ಗೊತ್ತಾಗುತ್ತಿಲ್ಲ ಎಂದು ತಿಳಿಸಿದರು. ಇದು ಕಾಂಗ್ರೆಸ್ಸಿನೊಳಗಡೆ ಉಂಟಾಗಿರುವ ಮಾವೋವಾದಿ ಮಾನಸಿಕತೆ ಎಂದು ದೂರಿದರು.ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ರಾಜ್ಯ ವಕ್ತಾರರಾದ ಡಾ. ನರೇಂದ್ರ ರಂಗಪ್ಪ, ಅಶೋಕ್ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಉಪಸ್ಥಿತರಿದ್ದರು.
eesanje/url_46_169_11.txt ADDED
@@ -0,0 +1,6 @@
 
 
 
 
 
 
 
1
+ ಯುವ ಮತದಾರರಿಗೆ ಮತದಾನ ಜಾಗೃತಿ
2
+ ತುಮಕೂರು, ಏ.24-ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ತುಮಕೂರು ಹಾಗೂ ತುಮಕೂರು ತಾಲ್ಲೂಕು ಪಂಚಾಯತ್ ವತಿಯಿಂದ ಜಿಲ್ಲೆಯ ಪ್ರೇಕ್ಷಣೀಯ ಸ್ಥಳವಾದ ಮಂದಾರ ಗಿರಿಯ ಮೇಲೆ ಯುವ ಮತದಾರರಿಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
3
+ ಜೈನ ಬಸದಿ ಮುಂಭಾಗ ವಿ (ವೋಟ್) ಆಕೃತಿಯನ್ನು ರಚಿಸುವುದರ ಮೂಲಕ ಕಾರ್ಯಕ್ರಮವನ್ನು ಸುಂದರಗೊಳಿಸಲಾಯಿತು. ನಂತರ ಬೆಟ್ಟದ ಮೇಲೆ ವೋಟ್ ತುಮಕೂರು 2024 ಎಂಬ ಅಕ್ಷರಗಳಿರುವ ಬಲೂನ್ ಹಾರಿಸಿ ಮತದಾನದ ಬಗ್ಗೆ ಅರಿವು ಮೂಡಿಸಲಾಯಿತು.
4
+ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಜಿಲ್ಲಾ ಪಂಚಾಯತ್ ಸಿಇಒ ಪ್ರಭು ಜಿ., ಜಿಲ್ಲೆಯಲ್ಲಿ 45,000 ಯುವಕರು ಪ್ರಥಮ ಬಾರಿಗೆ ಮತದಾನ ಮಾಡುತ್ತಿದ್ದಾರೆ. ಯುವ ಮತದಾರರನ್ನು ಮತಗಟ್ಟೆಗಳ ಕಡೆ ಸೆಳೆಯುವ ಉದ್ದೇಶದಿಂದ ಹಾಗೂ ಮತದಾನದ ಬಗ್ಗೆ ಅರಿವು ಮೂಡಿಸುವ ಕಾರಣದಿಂದ ಮಂದಾರ ಗಿರಿ ಪ್ರವಾಸಿ ತಾಣದಲ್ಲಿ ಕಾರ್ಯಕ್ರಮ ಆಯೋಜಿಲಾಗಿದೆ ಎಂದರು.
5
+ ಮೊದಲ ಬಾರಿಗೆ ಮತ ಚಲಾಯಿಸಲು ಸಿದ್ದರಿರುವ ಯುವ ಮತದಾರರಿಗೆ ಗುಲಾಬಿ ಹೂ ನೀಡುವುದರ ಮೂಲಕ ಸ್ವಾಗತವನ್ನು ಕೋರಲಾಗಿದೆ. ಈ ಮೂಲಕ ಜಿಲ್ಲಿಯಲ್ಲಿರುವ ಎಲ್ಲಾ ಯುವ ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವುದರ ಮೂಲಕ ಪ್ರಜಾ ಪ್ರಭುತ್ವವನ್ನು ಉಳಿಸಬೇಕು ಎಂಬುದು ನಮ್ಮೆಲ್ಲರ ಆಶಯ ಎಂದರು.
6
+ ಕಾರ್ಯಕ್ರದಮಲ್ಲಿ ಜಿಲ್ಲಾ ಯೋಜನಾಧಿಕಾರಿ ಸಣ್ಣ ಮಸಿಯಪ್ಪ, ಕೃಷಿ ಇಲಾಖೆ ಉಪ ನಿರ್ದೇಶಕ ಅಶೋಕ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶ ಶಾರದಮ್ಮ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹರ್ಷಕುಮಾರ್ ಸೇರಿದಂತೆ ಸುಮಾರು 600 ಮಂದಿ ಭಾಗಿಯಾಗಿದ್ದರು. ವಿವಿಧ ಕಾಲೇಜು ವಿದ್ಯಾರ್ಥಿಗಳು, ಎನ್ಸಿಸಿ ಪಡೆ, ಪ್ರವಾಸಿಗರು ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಧಿಕಾರಿಗಳು ಭಾಗವಹಿಸಿದ್ದರು.