bff275944866e9d7a3aef11a7085036461b5826ffbc189efa255db0a69f796b5
Browse files- eesanje/url_46_217_6.txt +6 -0
- eesanje/url_46_217_7.txt +5 -0
- eesanje/url_46_217_8.txt +7 -0
- eesanje/url_46_217_9.txt +9 -0
- eesanje/url_46_218_1.txt +5 -0
- eesanje/url_46_218_10.txt +6 -0
- eesanje/url_46_218_11.txt +7 -0
- eesanje/url_46_218_12.txt +9 -0
- eesanje/url_46_218_2.txt +4 -0
- eesanje/url_46_218_3.txt +6 -0
- eesanje/url_46_218_4.txt +5 -0
- eesanje/url_46_218_5.txt +8 -0
- eesanje/url_46_218_6.txt +8 -0
- eesanje/url_46_218_7.txt +9 -0
- eesanje/url_46_218_8.txt +9 -0
- eesanje/url_46_218_9.txt +8 -0
- eesanje/url_46_219_1.txt +8 -0
- eesanje/url_46_219_10.txt +8 -0
- eesanje/url_46_219_11.txt +9 -0
- eesanje/url_46_219_12.txt +7 -0
- eesanje/url_46_219_2.txt +11 -0
- eesanje/url_46_219_3.txt +11 -0
- eesanje/url_46_219_4.txt +7 -0
- eesanje/url_46_219_5.txt +5 -0
- eesanje/url_46_219_6.txt +8 -0
- eesanje/url_46_219_7.txt +5 -0
- eesanje/url_46_219_8.txt +6 -0
- eesanje/url_46_219_9.txt +4 -0
- eesanje/url_46_21_1.txt +8 -0
- eesanje/url_46_21_10.txt +6 -0
- eesanje/url_46_21_11.txt +8 -0
- eesanje/url_46_21_12.txt +11 -0
- eesanje/url_46_21_2.txt +7 -0
- eesanje/url_46_21_3.txt +9 -0
- eesanje/url_46_21_4.txt +6 -0
- eesanje/url_46_21_5.txt +6 -0
- eesanje/url_46_21_6.txt +11 -0
- eesanje/url_46_21_7.txt +10 -0
- eesanje/url_46_21_8.txt +5 -0
- eesanje/url_46_21_9.txt +12 -0
- eesanje/url_46_220_1.txt +4 -0
- eesanje/url_46_220_10.txt +12 -0
- eesanje/url_46_220_11.txt +7 -0
- eesanje/url_46_220_12.txt +5 -0
- eesanje/url_46_220_2.txt +5 -0
- eesanje/url_46_220_3.txt +5 -0
- eesanje/url_46_220_4.txt +6 -0
- eesanje/url_46_220_5.txt +11 -0
- eesanje/url_46_220_6.txt +4 -0
- eesanje/url_46_220_7.txt +6 -0
eesanje/url_46_217_6.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟಕ್ಕೆ ಐಸಿಸ್ ನಂಟು!?
|
2 |
+
ಬೆಂಗಳೂರು,ಮಾ.2- ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಸೋಟಕ್ಕೂ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಹಾಗೂ ಶಿವಮೊಗ್ಗ ನದಿ ತೀರದಲ್ಲಿ ನಡೆಸಿದ್ದ ಟ್ರಯಲ್ ಬ್ಲಾಸ್ಟ್ ಪ್ರಕರಣಗಳ ನಡುವೆ ಸಾಮ್ಯ ಇರುವ ಹಿನ್ನೆಲೆಯಲ್ಲಿ ಈ ಪ್ರಕರಣದಲ್ಲಿ ಐಸಿಸ್ ಸಂಘಟನೆ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಬೆಂಗಳೂರಿನ ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿ ಸಂಭವಿಸಿದ್ದ ಬಾಂಬ್ ಬ್ಲಾಸ್ಟ್ ಮಾದರಿಯಲ್ಲೇ ರಾಮೇಶ್ವರಂ ಕೆಫೆಯಲ್ಲೂ ಸ್ಪೋಟ ಸಂಭವಿಸಿರುವುದು ಸ್ಥಳದಲ್ಲಿ ಸಿಕ್ಕ ವಸ್ತುಗಳ ಪರಿಶೀಲನೆ ಸಂದರ್ಭದಲ್ಲಿ ಕಂಡು ಬಂದಿರುವ ಹಿನ್ನೆಲಯಲ್ಲಿ ಈ ಪ್ರಕರಣದಲ್ಲೂ ಐಸಿಎಸ್ ಉಗ್ರರ ಕರಿನೆರಳು ಇರಬಹುದು ಎಂದು ಶಂಕಿಸಲಾಗಿದೆ.
|
3 |
+
ರಾಮೇಶ್ವರಂ ಕೆಫೆ ಸ್ಪೋಟದಲ್ಲಿ ಬಳಕೆಯಾಗಿರುವ ಡಿಟೋನೇಟರ್, ಬ್ಯಾಟರಿ ಸೇರಿ ಹಲವು ವಸ್ತುಗಳು ಮಂಗಳೂರು ಕುಕ್ಕರ್ ಬ್ಲಾಸ್ಟ್ ಮಾದರಿಯಲ್ಲೇ ನಡೆದಿರುವುದು ಈ ಎಲ್ಲ ಅನುಮಾನಗಳಿಗೆ ಇಂಬು ನೀಡುವಂತಿವೆ ಎಂದು ಪೊಲೀಸ್ ಮೂಲಗಳು ಈಸಂಜೆಗೆ ಖಚಿತಪಡಿಸಿವೆ. ದೇಶದ್ರೋಹಿಗಳು ರಾಮೇಶ್ವರಂ ಕೆಫೆ ಪ್ರಕರಣದಲ್ಲಿ ಕುಕ್ಕರ್ ಬದಲಿಗೆ ಪ್ಲಾಸ್ಟಿಕ್ ಕವರ್ ಬಳಕೆ ಮಾಡಿ ಎರಡು ಕಂಟೈನರ್ಗಳನ್ನು ಸೃಷ್ಟಿ ಮಾಡಿ ಎರಡು ಬಾಂಬ್ಗಳನ್ನಿಟ್ಟು ಒಂದಾದ ನಂತರ ಒಂದು ಸ್ಪೋಟಗೊಳ್ಳುವಂತೆ ಟೈಮ್ ಫಿಕ್ಸ್ ಮಾಡಿರುವುದು ಗೊತ್ತಾಗಿದೆ. ಬಾಂಬ್ ಇಟ್ಟ ಶಂಕಿತ ವ್ಯಕ್ತಿ ಹೊರನಡೆದ ಒಂದು ಗಂಟೆಯ ತರುವಾಯ ಸ್ಪೋಟ ಸಂಭವಿಸಿದೆ.
|
4 |
+
ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟಕ್ಕೂ ರಾಮೇಶ್ವರಂ ಕೆಫೆ ಪ್ರಕರಣಕ್ಕೂ ಸಾಮ್ಯತೆ ಇರುವುದರಿಂದ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ಆರೋಪಿಗಳನ್ನು ವಿಚಾರಣೆ ನಡೆಸಲು ಪೊಲೀಸರು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ. ಕುಕ್ಕರ್ ಬಾಂಬ್ ಸ್ಪೋಟದ ಆರೋಪಿ ಶಾರಿಕ್ ಮತ್ತು ಆತನ ಸಹಚರರು ಪರಪ್ಪನ ಆಗ್ರಹಾರ ಜೈಲಿನಲ್ಲಿದ್ದು ಅವರನ್ನು ಬಾಡಿ ವಾರೆಂಟ್ ಮೇಲೆ ಕರೆತಂದು ವಿಚಾರಣೆ ನಡೆಸುವ ಸಾಧ್ಯತೆಗಳಿವೆ.
|
5 |
+
ಎರಡೂ ಕಡೆ ನಡೆದ ಸ್ಪೋಟದ ವೇಳೆ ಹೊರಸೂಸಿರುವ ಹೊಗೆ ಒಂದೇ ಮಾದರಿಯಲ್ಲಿದೆ. ಈ ಎರಡೂ ಸ್ಪೋಟಗಳಲ್ಲೂ ಒಂದೇ ಮಾದರಿಯ ವಸ್ತುಗಳ ಬಳಕೆ ಮಾಡಲಾಗಿದೆ. ಎರಡೂ ಕಡೆ ಬ್ಯಾಟರಿ, ಡಿಟೊನೇಟರ್ಗಳು, ನಟ್ಟು, ಬೋಲ್ಟ ಬಳಕೆ ಮಾಡಿರುವುದು ಪತ್ತೆಯಾಗಿರುವುದರಿಂದ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ಮಧ್ಯೆ ತಡರಾತ್ರಿ ರಾಮೇಶ್ವರಂ ಕೆಫೆಗೆ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಯಾಂಪಲ್ಸ ಸಂಗ್ರಹ ಮಾಡಿಕೊಂಡಿದ್ದಾರೆ.
|
6 |
+
ಘಟನಾ ಸ್ಥಳದ ಬಳಿಯ ಸಿಸಿಟಿವಿಯಲ್ಲಿ ಆರೋಪಿಯ ಚಲನವಲನ ದೃಶ್ಯ ಸೆರೆಯಾಗಿದ್ದು ಆತನ ಗುರುತು ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಅದಷ್ಟು ಬೇಗ ಆರೋಪಿಯನ್ನು ಪತ್ತೆ ಹಚ್ಚಿ ಬ���ಧಿಸಲಾಗುವುದು ಎಂದು ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳದ ಬಗ್ಗೆ ಪಕ್ಕಾ ಮಾಹಿತಿ ಇದ್ದವನಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ರಾಮೇಶ್ವರಂ ಕೆಫೆಯಲ್ಲಿನ ಸಿಟಿಟಿವಿ ಹೊರತುಪಡಿಸಿ ಬೇರೆ ಕಡೆ ಇರುವ ಸಿಸಿ ಕ್ಯಾಮೆರಾಗಳಲ್ಲಿ ಆರೋಪಿ ಕಾಣಿಸಿಕೊಂಡಿಲ್ಲದಿರುವುದು ಆತನ ಚಾಣಕ್ಷತೆಗೆ ಸಾಕ್ಷಿಯಾಗಿದೆ.
|
eesanje/url_46_217_7.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ : ಅಜ್ಞಾತ ಸ್ಥಳದಲ್ಲಿ ನಾಲ್ವರ ವಿಚಾರಣೆ
|
2 |
+
ಬೆಂಗಳೂರು,ಮಾ.2- ಸಿಲಿಕಾನ್ ಸಿಟಿಯ ಜನರನ್ನು ಬೆಚ್ಚಿ ಬೀಳಿಸಿದ್ದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಿನ್ನೆ ಮಧ್ಯಾಹ್ನ ಸಂಭವಿಸಿದ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಗುಪ್ತಚರ ಇಲಾಖೆ ಅಧಿಕಾರಿಗಳು ನಾಲ್ವರನ್ನು ವಶಕ್ಕೆ ಪಡೆದು, ಅಜ್ಞಾತ ಸ್ಥಳಕ್ಕೆ ಕರೆದೊಯ್ದು ತೀವ್ರ ವಿಚಾರಣೆಗೊಳ ಪಡಿಸಿದ್ದಾರೆ. ಹೋಟೆಲ್ ಹಾಗೂ ಅಕ್ಕಪಕ್ಕದ ರಸ್ತೆಯಲ್ಲಿರುವ ಸಿಸಿಟಿವಿಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಅದರಲ್ಲಿ ಸೆರೆಯಾಗಿದ್ದ ಶಂಕಿತ ಆರೋಪಿಯ ಫೋಟೋ ಆಧಾರದ ಮೇಲೆ ಆತನನ್ನೇ ಹೋಲುವ ನಾಲ್ವರನ್ನು ತಡರಾತ್ರಿಯೇ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಸ್ಥಳದಲ್ಲಿ ದೊರೆತ ಸಿಸಿಟಿವಿ ಟವರ್ ಲೊಕೇಶನ್ ಹಾಗೂ ಪೊಲೀಸರ ಶಂಕೆ ಆಧಾರದಲ್ಲಿ ತನಿಖೆ ನಡೆಯುತ್ತಿದೆ.
|
3 |
+
ಕೇರಳ, ತಮಿಳು ನಾಡಿನಲ್ಲಿ ಶೋಧ :ಘಟನೆ ಸಂಭವಿಸುತ್ತಿದ್ದಂತೆ ಆರೋಪಿಗಳ ಪತ್ತೆಗಾಗಿ 10 ತಂಡಗಳನ್ನು ರಚಿಸಲಾಗಿದ್ದು, ಈ ತಂಡಗಳು ಈಗಾಗಲೇ ಕೇರಳ, ತಮಿಳುನಾಡು ಹಾಗೂ ಕರ್ನಾಟಕದ ವಿವಿಧ ಭಾಗಗಳಿಗೆ ಹೋಗಿ ಆರೋಪಿಗಾಗಿ ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ. ರಾಮೇಶ್ವರಂ ಕೆಫೆಯ ಪ್ರಮುಖ ಬ್ರಾಂಚ್ ತಮಿಳುನಾಡಿನಲ್ಲಿದ್ದು, ಅಲ್ಲಿಯೂ ಆಡಳಿತ ಮಂಡಳಿಯ ಕೆಲ ಸಿಬ್ಬಂದಿಗಳನ್ನು ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.
|
4 |
+
ಈ ಹಿಂದೆ ನಗರದಲ್ಲಿ ನಡೆದಿದ್ದ ಬಾಂಬ್ ಬ್ಲಾಸ್ಟ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನೂ ಕೂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅಬ್ದುಲ್ ಕಲಾಂ ಅವರ ಸ್ಪೂರ್ತಿಯಿಂದ ರಾಮೇಶ್ವರಂ ಕೆಫೆಯನ್ನು ತೆರೆಯಲಾಗಿದ್ದು, ಭಾರತದಾದ್ಯಂತ ಬ್ರಾಂಚ್ಗಳನ್ನು ಹೊಂದಿದೆ. ಈ ರಾಮೇಶ್ವರಂ ಕೆಫೆ ದೇಗುಲದ ಮಾದರಿಯಲ್ಲಿ ನಿರ್ಮಾಣವಾಗಿದೆ. ನಗರದಲ್ಲೂ ಹಲವು ಬ್ರಾಂಚ್ಗಳಿದ್ದು, ಈ ಕೆಫೆ ಜನಸಾಮಾನ್ಯರ ಹಾಗೂ ಐಟಿಬಿಟಿ ಉದ್ಯೋಗಿಗಳ ಫೇವರಿಟ್ ಸ್ಪಾಟ್ ಎಂದೇ ಹೇಳಲಾಗುತ್ತದೆ.
|
5 |
+
ಈ ಕೆಫೆಗೆ ನಿನ್ನೆ ಮಧ್ಯಾಹ್ನ ಊಟದ ಸಮಯಕ್ಕೆ ಉದ್ಯೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವುದನ್ನು ಗಮನದಲ್ಲಿಟ್ಟುಕೊಂಡು ಆರೋಪಿಯು ಬಹಳ ಚಾಣಾಕ್ಷತೆಯಿಂದ ಹೋಟೆಲ್ ಒಳಗೆ ಪ್ರವೇಶಿಸಿ ಬ್ಯಾಗ್ ಇಟ್ಟು ಹೋದ 1 ಗಂಟೆಯ ಅಂತರದಲ್ಲಿ ಬ್ಯಾಗ್ ಸ್ಪೋಟಗೊಂಡ ಪರಿಣಾಮ ಮಹಿಳೆ ಸೇರಿದಂತೆ 9 ಮಂದಿ ಗಾಯಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
|
eesanje/url_46_217_8.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ನಾಳೆಯಿಂದ ಮಾರ್ಚ್6ರ ವರೆಗೆ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ
|
2 |
+
ಬೆಂಗಳೂರು, ಮಾ.2- ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ರಾಜ್ಯಾದ್ಯಂತ ನಾಳೆಯಿಂದ ಮಾರ್ಚ್ 6ರವರೆಗೆ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪಲ್ಸ್ ಪೋಲಿಯೋ ಹನಿ ಹಾಕುವ ಕಾರ್ಯಕ್ರಮವನ್ನು ಆರೋಗ್ಯ ಇಲಾಖೆ ಹಮ್ಮಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮಾಲ್, ಟೂಲ್ ಪ್ರದೇಶ ಹಾಗೂ ಇತರ ಪ್ರಮುಖ ಸ್ಥಳಗಳಲ್ಲಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ.
|
3 |
+
ರಾಜ್ಯ ಮಟ್ಟದಲ್ಲಿ ಮುಖ್ಯಮಂತ್ರಿಯವರು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆಯನ್ನು ನೀಡುವ ಮೂಲಕ ಚಾಲನೆ ನೀಡಲಿದ್ದಾರೆ. ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಅಂಗವಾಗಿ ಮೊದಲ ದಿನ ಲಸಿಕಾ ಕೇಂದ್ರಗಳಲ್ಲಿ ಹಾಗೂ ಉಳಿದ ಮೂರು ದಿನ ಮನೆಗಳಿಗೆ ಭೇಟಿ ನೀಡಿ ಲಸಿಕೆಯನ್ನು ನೀಡಲಾಗುವುದು.
|
4 |
+
ಲಸಿಕಾ ಕಾರ್ಯದಲ್ಲಿ ತೊಡಗುವ ಎಲ್ಲಾ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುವ ಗೌರವ ಧನ ಸೂಕ್ತ ಸಮಯದಲ್ಲಿ ಸಿಗುವಂತೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಡಾ. ಶಾಲಿನಿ ರಜನೀಶ್ ಸೂಚಿಸಿದ್ದರು.
|
5 |
+
ಕಳೆದ ಬಾರಿ ಕಡಿಮೆ ಪ್ರಗತಿ ಹೊಂದಿರುವ ದುರ್ಬಲ ಪ್ರದೇಶಗಳ ಮೇಲೆ ಹೆಚ್ಚಿನ ನಿಗಾ ವಹಿಸುವ ಮೂಲಕ ಈ ಬಾರಿ ಐದು ವರ್ಷದೊಳಗಿನ ಯಾವುದೇ ಮಗು ಪಲ್ಸ್ ಪೋಲಿಯೋ ಲಸಿಕೆಯಿಂದ ವಂಚಿತವಾಗದಂತೆ ಕ್ರಮವಹಿಸಲು ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಅನುಷ್ಠಾನ ಕುರಿತು ನಡೆದ ರಾಜ್ಯ ಮಟ್ಟದ ಚಾಲನಾ ಸಮಿತಿ ಸಭೆಯಲ್ಲಿ ನಿರ್ದೇಶನ ನೀಡಿದ್ದರು.
|
6 |
+
ಕಳೆದ ಬಾರಿ ಯಾವ ಪ್ರದೇಶದಲ್ಲಿ ಯಾವ ಕಾರಣಕ್ಕೆ ಪಲ್ಸ್ ಪೋಲಿಯೋ ಲಸಿಕೆಯ ಅನುಷ್ಠಾನದಲ್ಲಿ ಕಡಿಮೆ ಪ್ರಗತಿ ಹೊಂದಲಾಗಿದೆಯೋ, ಅಂತಹ ಪ್ರದೇಶಗಳನ್ನು ಗುರುತಿಸಿ, ಕಾರಣ ಪತ್ತೆ ಹಚ್ಚಿ ಸೂಕ್ತ ಮೂಲಸೌಕರ್ಯ ಒದಗಿಸುವ ಜೊತೆಗೆ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಲು ಅಕಾರಿಗಳು ಕ್ರಮವಹಿಸಬೇಕು. ಆರೋಗ್ಯ ಇಲಾಖೆಯ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಂಬಂಧಿಸಿದ ಸರ್ಕಾರದ ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಗೂ ಆರೋಗ್ಯ ಕ್ಷೇತ್ರ ಸೇರಿದಂತೆ ಇತರ ಪೂರಕ ಸಂಘಸಂಸ್ಥೆಗಳ ಸಹಕಾರ ಪಡೆದು, ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಬೇಕು. ಹೆಚ್ಚಿನ ಮಕ್ಕಳಿಗೆ ಲಸಿಕೆಯನ್ನು ನೀಡಬೇಕು ಎಂದು ಅವರು ಸೂಚನೆ ನೀಡಿದರು.
|
7 |
+
ನಗರ ಅಥವಾ ಗ್ರಾಮೀಣ ಪ್ರದೇಶಕ್ಕೆ ಅನುಕೂಲವಾಗುವ ಸೂಕ್ತ ಯೋಜನೆಯನ್ನು ರೂಪಿಸಿಕೊಂಡು, ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಅನುಷ್ಠಾನಗೊಂಡರೆ, ಎಲ್ಲಾ ಅರ್ಹ ಮಕ್ಕಳು ಲಸಿಕೆ ಪಡೆಯಬಹುದು. ಪಲ್ಸ್ ಪೋಲಿಯೋ ಲಸಿಕೆಯ ಅನುಷ್ಠಾನ ಕಾರ್ಯದಲ್ಲಿ ಸೂಕ್ತ ಮೇಲುಸ್ತುವಾರಿ ಹಾಗೂ ನಿರ್ವಹಣೆಯಾಗಬೇಕು. ಇದರಿಂದ, ಲಸಿಕೆ ಪಡೆದ ಮಕ್ಕಳ ಮಾಹಿತಿ ಸಂಗ್ರಹಿಸಲು ಅನುಕೂಲವಾಗಲಿದೆ ಎಂದು ತಿಳಿಸಿದ್ದರು.
|
eesanje/url_46_217_9.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ತನಿಖೆ ನಡೆಸಲು ನಮ್ಮ ಪೊಲೀಸರು ಸಮರ್ಥರಿದ್ದಾರೆ : ಪರಮೇಶ್ವರ್
|
2 |
+
ಬೆಂಗಳೂರು,ಮಾ.2- ನಗರದ ರಾಮೇಶ್ವರಂ ಕೆಫೆಯಲ್ಲಿನ ಸ್ಪೋಟಕ ಪ್ರಕರಣವನ್ನು ತನಿಖೆ ನಡೆಸಲು ನಮ್ಮ ಪೊಲೀಸ್ ಅಧಿಕಾರಿಗಳೇ ಸಮರ್ಥರಿದ್ದಾರೆ ಎಂದು ಹೇಳುವ ಮೂಲಕ ಗೃಹಸಚಿವ ಡಾ.ಜಿ.ಪರಮೇಶ್ವರ್ ರಾಷ್ಟ್ರೀಯ ಸಂಸ್ಥೆಗಳ ತನಿಖೆಗೆ ವಹಿಸುವ ಸಾಧ್ಯತೆಯನ್ನು ತಳ್ಳಿ ಹಾಕಿದ್ದಾರೆ.
|
3 |
+
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯದ ಎಫ್ಎಸ್ಎಲ್ ಪ್ರಯೋಗಾಲಯ ಸಮರ್ಥ ಹಾಗೂ ಅತ್ಯಾಧುನಿಕವಾಗಿದೆ. ನಿನ್ನೆ ಘಟನೆ ನಡೆದ ತಕ್ಷಣ ತಜ್ಞರ ದೊಡ್ಡ ತಂಡ ಸ್ಥಳಕ್ಕೆ ಭೇಟಿ ನೀಡಿ ಮಾದರಿಗಳನ್ನು ಸಂಗ್ರಹಿಸಿದೆ. ಬಾಂಬ್ನಲ್ಲಿ ಟೈಮರ್ ಅಳವಡಿಸಿರುವುದು, ಯಾವ ರೀತಿಯ ಸ್ಪೋಟಕ ಬಳಸಲಾಗಿದೆ, ಬಾಂಬ್ ಸಾಮಥ್ರ್ಯ ಎಷ್ಟು ಎಂಬೆಲ್ಲಾ ವಿವರಗಳನ್ನೂ ಕಲೆ ಹಾಕಿಕೊಂಡಿದ್ದಾರೆ. ಇದೂ ಕೂಡ ತನಿಖೆಗೆ ಸಹಾಯವಾಗಲಿದೆ ಎಂದರು.
|
4 |
+
ಆರೋಪಿ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಬಾಂಬ್ ಸ್ಪೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಅನೇಕ ತಂಡಗಳನ್ನು ರಚನೆ ಮಾಡಲಾಗಿದೆ. ತನಿಖೆ ಆಳವಾಗಿ ನಡೆಯುತ್ತಿದೆ. ಕೆಲ ಕುರುಹುಗಳು ಸಿಕ್ಕಿವೆ. ಆ ಭಾಗದ ಸಿಸಿಟಿವಿ ದೃಶ್ಯಾವಳಿಗಳನ್ನೂ ಸಂಗ್ರಹಿಸಿ ಪರಿಶೀಲಿಸುತ್ತಿದ್ದಾರೆ ಎಂದು ಹೇಳಿದರು.
|
5 |
+
ರಾಮೇಶ್ವರಂ ಕೆಫೆ ಮಾರ್ಗದಲ್ಲಿ ನಿನ್ನೆ 26 ಬಸ್ಗಳು ಸಂಚರಿಸಿವೆ. ಅವುಗಳಲ್ಲೂ ಸಿಸಿಟಿವಿ ಕ್ಯಾಮರಾ ಇದೆ. ಅದರಲ್ಲಿ ಪ್ರಯಾಣಿಕರ ದೃಶ್ಯಗಳು ಸಂಗ್ರಹವಾಗಿರುತ್ತವೆ. ಬಿಎಂಟಿಸಿ ಸಹಕಾರದೊಂದಿಗೆ ಅದನ್ನೂ ಪರಿಶೀಲಿಸಲಾಗುತ್ತಿದೆ. ಆರೋಪಿ ಎಲ್ಲಿಂದ ಎಲ್ಲಿಗೆ ಪ್ರಯಾಣಿಸಿದ್ದಾನೆ. ಎಲ್ಲಿ ಇಳಿದಿದ್ದಾನೆ. ಬಸ್ನಲ್ಲಿ ಆತನ ನಡವಳಿಕೆ ಹೇಗಿತ್ತು. ಈ ಹಿಂದೆ ಎಲ್ಲಿಂದ ಬಂದಿದ್ದನು ಎಂಬೆಲ್ಲಾ ಮಾಹಿತಿಗಳನ್ನು ಪತ್ತೆ ಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದರು.
|
6 |
+
ಆರೋಪಿ ಎಷ್ಟೇ ಪ್ರಯತ್ನ ಪಟ್ಟರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅವರ ಪ್ಲಾನ್ ಆಫ್ ಆಕ್ಷನ್ ಕೂಡ ನಾವು ಕಲೆ ಹಾಕಿದ್ದೇವೆ. ಯಾವ ಸಂಘಟನೆ ಕೈವಾಡವಿದೆ ಎಂಬುದು ಗೊತ್ತಿಲ್ಲ. ನಿನ್ನೆ ನಾವು ಸ್ಥಳಕ್ಕೆ ಹೋಗಿದ್ದಾಗ ರಾಮೇಶ್ವರಂ ಕೆಫೆಯವರು ನಾಲ್ಕೈದು ಹೋಟೆಲ್ಗಳನ್ನು ಮಾಡಿದ್ದು, ಯಶಸ್ವಿ ಉದ್ಯಮ ನಡೆಸುತ್ತಿದ್ದರು. ಆ ಹೊಟ್ಟೆ ಉರಿಗೂ ಈ ರೀತಿ ಕೃತ್ಯಗಳು ನಡೆದಿರಬಹುದು ಎಂಬ ಶಂಕೆ ಕೇಳಿಬಂದಿದ್ದವು, ಎಲ್ಲಾ ಆಯಾಮಗಳಲ್ಲೂ ತನಿಖೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
|
7 |
+
ವಿರೋಧ ಪಕ್ಷಗಳಿಗೆ ಮುಖ್ಯಮಂತ್ರಿ ಹಾಗೂ ಗೃಹಸಚಿವರ ರಾಜಿನಾಮೆ ಕೇಳುವುದೇ ಕೆಲಸವಾಗಿದೆ. 2022 ರಲ್ಲಿ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟವಾಗಿದೆ. ಆಗ ಬಿಜೆಪಿಯವರು ಆಡಳಿತದಲ್ಲಿದ್ದು ರಾಜೀನಾಮೆ ಕೊಟ್ಟಿದ್ದರೇ ಎಂದು ತಿರುಗೇಟು ನೀಡಿದರು. ಆಡಳಿತ ಪಕ್ಷವಾಗಿ ನಮಗೆ ಜವಾಬ್ದಾರಿ ಇದೆ. ಯಾರನ್ನೂ ಬಿಡುವುದಿಲ್ಲ. ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ. ರಾಜ್ಯ ಮತ್ತು ಬೆಂಗಳೂರಿನ ಸುರಕ್ಷತೆ ದೃಷ್ಟಿಯಿಂದ ಈಗಾಗಲೇ ಹಲವು ಯೋಜನೆಗಳನ್ನು ಕೈಗೊಂಡಿದ್ದೇವೆ.
|
8 |
+
ಪೊಲೀಸ್ ಗಸ್ತು ಹೆಚ್ಚಳ, ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನ ಬಳಕೆ, 7,500 ಸಿಸಿಟಿವಿಗಳ ಅಳವಡಿಕೆ ಸೇರಿದಂತೆ ಹಲವು ಕ್ರಮಗಳಿಂದ ಬೆಂಗಳೂರನ್ನು ಸಾಮಾನ್ಯ ನಾಗರಿಕರ ಹಾಗೂ ಮಹಿಳೆಯರ ಸುರಕ್ಷತಾ ನಗರವನ್ನಾಗಿಸಲು ಪ್ರಯತ್ನಿಸುತ್ತಿದ್ದೇವೆ. ಸಿಸಿಟಿವಿಗಳ ದೃಶ್ಯಾವಳಿಗಳು ತನಿಖೆಗೆ ಮಹತ್ವದ ಸಹಕಾರಿಯಾಗಿವೆ ಎಂದು ಹೇಳಿದರು.
|
9 |
+
ವಿರೋಧಪಕ್ಷಗಳೂ ಸೇರಿದಂತೆ ಎಲ್ಲರೂ ತನಿಖೆಗೆ ಸಹಕಾರ ನೀಡಬೇಕು. ಈ ವಿಷಯದಲ್ಲಿ ರಾಜಕೀಯ ಮಾಡಬಾರದು. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆಗೆ ಸಂಬಂಧಪಟ್ಟಂತೆ ಈವರೆಗೂ ಎಫ್ಎಸ್ಎಲ್ನ ವರದಿ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.
|
eesanje/url_46_218_1.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಪಾಕ್ ಜಿಂದಾಬಾದ್ ಘೋಷಣೆಯ ಮತ್ತಷ್ಟು ವಿಡಿಯೋ ಎಫ್ಎಸ್ಎಲ್ಗೆ ರವಾನೆ
|
2 |
+
ಬೆಂಗಳೂರು, ಮಾ.1- ವಿಧಾನಸೌಧದ ಮೊಗಸಾಲೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಘಟನೆಗೆ ಸಂಬಂಧಿಸಿದಂತೆ ಮತ್ತಷ್ಟು ಖಚಿತಪಡಿಸಿಕೊಳ್ಳಲು ವಿಧಾನಸೌಧ ಠಾಣೆ ಪೊಲೀಸರು ಇನ್ನಷ್ಟು ವಿಡಿಯೋ ತುಣುಕುಗಳನ್ನು ಎಫ್ಎಸ್ಎಲ್ಗೆ ಕಳುಹಿಸಿದ್ದಾರೆ. ಘಟನೆ ಬೆಳಕಿಗೆ ಬಂದ ನಂತರ ವಿಧಾನಸೌಧ ಠಾಣೆ ಪೊಲೀಸರು ಕೆಲವು ಖಾಸಗಿ ಸುದ್ದಿ ವಾಹಿನಿಗಳು ಘಟನೆ ಬಗ್ಗೆ ಪ್ರಸಾರ ಮಾಡಿದ ವಿಡಿಯೋ ಕ್ಲಿಪ್ಪಿಂಗ್ ಪಡೆದುಕೊಂಡು ಅವುಗಳನ್ನು ಈಗಾಗಲೇ ಎಫ್ಎಸ್ಎಲ್ಗೆ ಕಳುಹಿಸಿದ್ದಾರೆ.
|
3 |
+
ಈ ಪ್ರಕರಣದ ಸತ್ಯಾಸತ್ಯತೆ ತಿಳಿದುಕೊಳ್ಳಲು ಮತ್ತಷ್ಟು ಸಾಕ್ಷ್ಯಾಧಾರಗಳು ಬೇಕೆಂದು ಎಫ್ಎಸ್ಎಲ್ ಅಧಿಕಾರಿಗಳು ತನಿಖಾಧಿಕಾರಿಗಳಿಗೆ ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದ ಮೊಗಸಾಲೆಯಲ್ಲಿರುವ ಸಿಸಿಟಿವಿ ಫುಟೇಜ್ಗಳನ್ನು ತೆಗೆದುಕೊಂಡು ಪೊಲೀಸರು ಎಫ್ಎಸ್ಎಲ್ಗೆ ಕಳುಹಿಸಿದ್ದಾರೆ. ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿರುವ ವಿಧಾನಸೌಧ ಠಾಣೆ ಪೊಲೀಸರು ಈತನಕ 14 ಮಂದಿಯನ್ನು ವಿಚಾರಣೆಗೊಳಪಡಿಸಿ ಹೇಳಿಕೆ ಪಡೆದುಕೊಂಡಿದ್ದಾರೆ.
|
4 |
+
ರಾಜ್ಯಸಭಾ ಸದಸ್ಯ ನಾಸಿರ್ ಬೆಂಬಲಿಗ ಬ್ಯಾಡಗಿ ಮಹಮ್ಮದ್ ಶಫಿ ಸೇರಿದಂತೆ ಮೂವರ ಧ್ವನಿಗಳ ಸ್ಯಾಂಪಲ್ ಪಡೆದುಕೊಂಡಿದ್ದು, ಅವುಗಳನ್ನು ಸಹ ಎಫ್ಎಸ್ಎಲ್ಗೆ ನೀಡಲಾಗಿದೆ. ಇದರ ಜತೆಗೆ ಇನ್ನಷ್ಟು ವಿಡಿಯೋ ಹಾಗೂ ಇನ್ನಿತರ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಕಳುಹಿಸಲಾಗಿದೆ. ಈ ಪ್ರಕರಣ ಗಂಭೀರವಾಗಿರುವುದರಿಂದ ತನಿಖಾಧಿಕಾರಿಗಳು ಈತನಕ ನೀಡಿರುವ ಎಲ್ಲ ವಿಡಿಯೋ ಕ್ಲಿಪ್ಪಿಂಗ್ ಮತ್ತು ಸಾಕ್ಷ್ಯಾಧಾರಗಳನ್ನು ಎಫ್ಎಸ್ಎಲ್ ಅಧಿಕಾರಿ ಹಾಗೂ ಸಿಬ್ಬಂದಿ ಪ್ರತಿಯೊಂದನ್ನೂ ಕೂಲಂಕಶವಾಗಿ ಪರಿಶೀಲನೆ ನಡೆಸುತ್ತಿದ್ದಾರೆ.
|
5 |
+
ಈ ಪ್ರಕರಣದ ಎಫ್ಎಸ್ಎಲ್ ಸಂಪೂರ್ಣ ವರದಿ ಬರಲು ಮತ್ತಷ್ಟು ಸಮಯದ ಅಗತ್ಯವಿದೆ. ವರದಿ ಬಂದ ನಂತರವಷ್ಟೇ ಸತ್ಯಾಸತ್ಯತೆ ತಿಳಿದುಬರಲಿದೆ ಎಂದು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಈ ಸಂಜೆಗೆ ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡುತ್ತಿದ್ದ ಅವರು, ಆದಷ್ಟು ಬೇಗ ವರದಿ ನೀಡುವಂತೆ ನಾವು ಎಫ್ಎಸ್ಎಲ್ ಅಧಿಕಾರಿಗಳಲ್ಲಿ ಮನವಿ ಮಾಡಿರುವುದಾಗಿ ಅವರು ತಿಳಿಸಿದರು.
|
eesanje/url_46_218_10.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ವಿತರಣೆ
|
2 |
+
ಬೆಂಗಳೂರು,ಮಾ.1- ಅಂಗಾಂಗ ದಾನ ಮಾಡಿದ ಕುಟುಂಬದವರಿಗೆ ತೊಂದರೆಯಾದರೆ ಸರ್ಕಾರ ಅವರ ಬಗ್ಗೆ ಕಾಳಜಿ ವಹಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಅಂಗಾಂಗ ದಾನಿಗಳ ಕುಟುಂಬದ ಸದಸ್ಯರಿಗೆ ಪ್ರಮಾಣ ಪತ್ರ ವಿತರಣೆ ಮಾಡಿದ ಬಳಿಕ ಮಾತನಾಡಿದ ಅವರು, ಕುಟುಂಬದ ಸದಸ್ಯರು ಕೈಗೊಂಡ ನಿರ್ಧಾರ ಸುಲಭವಲ್ಲ. ಆದರೆ ಇತರರ ಜೀವ ಉಳಿಸುವ ಕೆಲಸ ನೀವು ಮಾಡಿದ್ದೀರಿ ಎಂದು ಮೆಚ್ಚುಗೆಯ ನುಡಿಗಳನ್ನಾಡಿದರು. ನಿಮಗೆ ಯಾವುದೇ ಸಂಕಷ್ಟ ಎದುರಾದರೂ ನಿಮ್ಮೊಂದಿಗೆ ನಾವಿದ್ದೇವೆ ಎಂದು ಸ್ಥೈರ್ಯ ತುಂಬಿದರು.
|
3 |
+
ತಮ್ಮ ಹಿಂದಿನ ಅವಧಿಯಲ್ಲಿ ಅಂಗಾಂಗ ದಾನಕ್ಕೆ ಸೊಸೈಟಿ ಸ್ಥಾಪಿಸಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಯವರು ಇನ್ನಷ್ಟು ಜನರು ಅಂಗಾಂಗ ದಾನಕ್ಕೆ ಮುಂದಾಗಬೇಕೆಂದು ಕರೆ ನೀಡಿದರು. ಅಪಘಾತಕ್ಕೀಡಾದ ಶರವಣ ಅವರ ಪತ್ನಿ ಪ್ರಶಂಸಾ ಪತ್ರ ಸ್ವೀಕರಿಸುವಾಗ ಅಗಲಿದ ತಮ್ಮ ಪತಿಯನ್ನು ನೆನೆದು ಕಣ್ಣೀರಿಟ್ಟರು. ಕೊಲೆಗೀಡಾದ ರಾಮನಗರದ ಕೆ.ಜಿ. ನವೀನ್ ಕುಟುಂಬದವರಿಗೆ ಅವರ ಸಾವಿಗೆ ನ್ಯಾಯ ಒದಗಿಸುವುದಾಗಿ ಮುಖ್ಯಮಂತ್ರಿಗಳು ಇದೇ ವೇಳೆ ಭರವಸೆ ನೀಡಿದರು.
|
4 |
+
ಪ್ರಾಸ್ತಾವಿಕವಾಗಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಅಂಗಾಂಗ ದಾನಕ್ಕಾಗಿ ಫೆ.27 ರವರೆಗೂ 8,374 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅವರಲ್ಲಿ ಮೂತ್ರಪಿಂಡಕ್ಕಾಗಿ ಹೆಚ್ಚು ಬೇಡಿಕೆಯಿದ್ದು, 5,942 ಮಂದಿ ಮನವಿ ಮಾಡಿದ್ದಾರೆ. ಯಕೃತ್ಗಾಗಿ 2043, ಹೃದಯಕ್ಕಾಗಿ 187, ಶ್ವಾಸಕೋಶಕ್ಕಾಗಿ 79, ಹೃದಯ ಮತ್ತು ಶ್ವಾಸಕೋಶಕ್ಕಾಗಿ 30, ಯಕೃತ್ ಮತ್ತು ಮೂತ್ರಪಿಂಡಕ್ಕೆ 61, ಮೂತ್ರಪಿಂಡ ಮತ್ತು ಮೇದೊಜೀರಕ ಗ್ರಂಥಿಗಾಗಿ 29, ಹೃದಯ ಮತ್ತು ಮೂತ್ರಪಿಂಡಕ್ಕಾಗಿ 2, ಸಣ್ಣ ಕರುಳಿಗಾಗಿ ಒಬ್ಬರು ಅರ್ಜಿ ಸಲ್ಲಿಸಿದ್ದಾರೆ.
|
5 |
+
ಒಬ್ಬ ಅಂಗಾಂಗ ದಾನಿಯಿಂದ ಹೃದಯ, 2 ಮೂತ್ರಪಿಂಡಗಳು, ಪಿತ್ತಜನಕಾಂಗ ಸೇರಿ ಬಹು ಅಂಗಾಂಗಗಳಿಂದ 8 ಜೀವಗಳನ್ನು ಉಳಿಸಬಹುದು ಎಂದು ತಿಳಿಸಿದರು. ರಾಜ್ಯದಲ್ಲಿ ಕಳೆದ ವರ್ಷ 278 ಮಂದಿ ಅಂಗಾಂಗ ದಾನ ಮಾಡಿದ್ದಾರೆ. ದೇಶದಲ್ಲೇ ನಾವು 2 ನೇ ಸ್ಥಾನದಲ್ಲಿದ್ದೇವೆ. ಪ್ರಸಕ್ತ ವರ್ಷ 21 ಜನರಿಂದ ಅಂಗಾಂಗ ದಾನ ಪಡೆಯಲಾಗಿದೆ. ರಾಜ್ಯ ಅಂಗ ಮತ್ತು ಅಂಗಾಂಗ ಕಸಿ ಸಂಸ್ಥೆಯಲ್ಲಿ 11,527 ಮಹಿಳೆಯರೂ ಸೇರಿ 20,029 ಮಂದಿ ಅಂಗಾಂಗ ದಾನಕ್ಕೆ ಪ್ರತಿಜ್ಞೆ ಮಾಡಿದ್ದಾರೆ. ಬಳ್ಳಾರಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದು ವಿವರಿಸಿದರು.
|
6 |
+
ಕಾರ್ಯಕ್ರಮದಲ್ಲಿ 7 ಕುಟುಂಬಗಳ ಸದಸ್ಯರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಹಾಗೂ ಆಯುಕ್ತ ಡಿ.ರಂದೀಪ್ ಮತ್ತಿತರರು ಉಪಸ್ಥಿತರಿದ್ದರು.
|
eesanje/url_46_218_11.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
: ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ಐಇಡಿ ಸ್ಫೋಟ..!
|
2 |
+
ಬೆಂಗಳೂರು, ಮಾ.1- ನಗರದ ಪ್ರಖ್ಯಾತ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಪೋಟ ಸಂಭವಿಸಿ ಘಟನೆಯಲ್ಲಿ 9 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಎಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಇಂದು ಮಧ್ಯಾಹ್ನ ಏಕಾಏಕಿ ಸ್ಪೋಟಗೊಂಡ ಪರಿಣಾಮ ಕೆಫೆಯಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿದ್ದು, ಗ್ರಾಹಕರು ಕೆಫೆಯಿಂದ ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.
|
3 |
+
ಘಟನೆಯಲ್ಲಿ ಐದು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಪೋಟಕ್ಕೆ ಕಾರಣವೇನೆಂಬುದು ನಿಗೂಢವಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರು, ಬಾಂಬ್ ನಿಷ್ಕ್ರಿಯ ದಳದವರು ಸ್ಥಳಕ್ಕೆ ದೌಡಾಯಿಸಿದ್ದಾರೆ.
|
4 |
+
ಐಇಡಿ ಬಳಕೆ ಶಂಕೆ :
|
5 |
+
ನಗರದ ಕುಂದಲಹಳ್ಳಿಯ ರಾಮೇಶ್ವರ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಸುಧಾರಿತ ಸ್ಪೋಟಕ ಸಾಧನ (ಐಇಡಿ) ಬಳಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಕೆಫೆಯಲ್ಲಿನ ಕೈ ತೊಳೆಯುವ ವಾಷ್ಬೇಸಿನ್ ಬಳಿ ಸ್ಪೋಟಕಗಳಿದ್ದ ಬ್ಯಾಗನ್ನು ಇಟ್ಟು ಸ್ಪೋಟಿಸಲಾಗಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸ್ಪೋಟದಿಂದ ಒಟ್ಟು 9 ಮಂದಿ ಗಾಯಗೊಂಡಿದ್ದು, ಎಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
|
6 |
+
ಘಟನಾ ಸ್ಥಳದಲ್ಲಿ ಸಿಕ್ಕಿರುವ ಸ್ಪೋಟದ ಅವಶೇಷಗಳನ್ನು ಪೊಲೀಸರು ಸಂಗ್ರಹಿಸಿ, ಪರಿಶೀಲಿಸಿ, ಹೆಚ್ಚಿನ ಮಾಹಿತಿಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಕೆಫೆಗೆ ಎನ್ಐಎ ಹಾಗೂ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ , ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಾದ ಆಲೋಕ್ ಮೋಹನ್ ಅವರು ಭೇಟಿಪರಿಶೀಲಿಸಿದ್ದಾರೆ.
|
7 |
+
…
|
eesanje/url_46_218_12.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಹಿಂದುಳಿದ ವರ್ಗಗಳ ವರದಿ ಅಧ್ಯಯನಕ್ಕೆ ಸಂಪುಟ ಉಪಸಮಿತಿ ರಚನೆಗೆ ಚಿಂತನೆ
|
2 |
+
ಬೆಂಗಳೂರು,ಮಾ.1- ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವರದಿಯನ್ನು ಮತ್ತಷ್ಟು ಅಧ್ಯಯನಕ್ಕೆ ಒಳಪಡಿಸಲು ಸಚಿವ ಸಂಪುಟ ಉಪಸಮಿತಿ ರಚಿಸುವ ಮೂಲಕ ಬೀಸುವ ದೊಣ್ಣೆಯಿಂದ ತಲೆ ತಪ್ಪಿಸಿಕೊಳ್ಳಲು ಸರ್ಕಾರ ಚಿಂತನೆ ನಡೆಸಿದೆ. ಜಯಪ್ರಕಾಶ್ ಹೆಗ್ಡೆ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ನಿನ್ನೆ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿದೆ. 2015 ರಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ನೇತೃತ್ವದಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮಾಹಿತಿಗಳನ್ನು ಜಯಪ್ರಕಾಶ್ ಹೆಗ್ಡೆ ಅವರ ಸಮಿತಿ ದತ್ತಾಂಶ ಸಮೀಕರಿಸಿ ಸರ್ಕಾರಕ್ಕೆ ವರದಿ ನೀಡಿದೆ.
|
3 |
+
ಅದರಲ್ಲಿ ಜಾತಿವಾರು ಜನಸಂಖ್ಯೆಯ ವಿವರಗಳಿದ್ದು, ವಿಧಾನಸಭಾ ಕ್ಷೇತ್ರವಾರು ಜಾತಿ ಜನಗಣತಿಯ ಅಂಕಿ ಅಂಶಗಳನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ. ಆದರೆ ವರದಿಯ ಮಾಹಿತಿಗಳು ಅಧಿಕೃತವಾಗಿ ಇನ್ನೂ ಹೊರಬಂದಿಲ್ಲ. ನಿನ್ನೆ ಇದ್ದಕ್ಕಿದ್ದಂತೆ ಮಾಧ್ಯಮಗಳಲ್ಲಿ ಕೆಲವು ದತ್ತಾಂಶಗಳು ಬಹಿರಂಗಗೊಂಡಿವೆ. ಅದು ಕೆಲ ಸಮುದಾಯವನ್ನು ಮತ್ತಷ್ಟು ಕೆರಳುವಂತೆ ಮಾಡಿದೆ.
|
4 |
+
ಲೋಕಸಭೆ ಚುನಾವಣೆಯ ಹೊಸ್ತಿಲಿನಲ್ಲೇ ಇದು ಕಾಂಗ್ರೆಸ್ ಪಾಲಿಗೆ ಬಿಸಿ ತುಪ್ಪವಾಗಿದೆ. ವರದಿಗೆ ಕಾಂಗ್ರೆಸ್ನ ಹಿರಿಯ ಶಾಸಕರಾಗಿರುವ ಶ್ಯಾಮನೂರು ಶಿವಶಂಕರಪ್ಪ ಬಹಿರಂಗವಾಗಿ ವಿರೋಧಿಸಿದ್ದಾರೆ. ಒಕ್ಕಲಿಗ ಸಮುದಾಯ ಕೂಡ ವರದಿಯನ್ನು ತಿರಸ್ಕರಿಸಬೇಕು ಎಂದು ಪಟ್ಟು ಹಿಡಿದಿದೆ. ಈ ಹಂತದಲ್ಲಿ ವರದಿಯಲ್ಲಿರುವ ದತ್ತಾಂಶಗಳನ್ನು ಬಹಿರಂಗಗೊಳಿಸಿದರೆ ಅದು ಲೋಕಸಭೆ ಚುನಾವಣೆಯ ಮೇಲೆ ಭಾರಿ ಪರಿಣಾಮ ಬೀರುವ ಸಾಧ್ಯತೆಯಿದೆ.
|
5 |
+
ವಾಣಜ್ಯ ಬಳಕೆ ಎಲ್ಪಿಜಿ ದರ ಹೆಚ್ಚಳ
|
6 |
+
8 ವರ್ಷಗಳ ಹಿಂದೆ ನಡೆದ ಸಮೀಕ್ಷೆಯ ದತ್ತಾಂಶಗಳನ್ನು ಈಗಲೂ ಪಾಲನೆ ಮಾಡುವುದು ಅವೈಜ್ಞಾನಿಕ ಎಂಬುದು ವರದಿಯನ್ನು ವಿರೋಧಿಸುವವರ ಅಭಿಪ್ರಾಯವಾಗಿದೆ. ವರದಿ ನೀಡಿದ ಜಯಪ್ರಕಾಶ್ ಹೆಗ್ಡೆಯವರು, ಆಗಿನ ಸಮೀಕ್ಷಾ ಮಾಹಿತಿಗಳ ಜೊತೆಗೆ ನಮ್ಮ ಆಯೋಗ ವರ್ತಮಾನದ ಅಂಕಿ ಅಂಶಗಳನ್ನು ಕಲೆ ಹಾಕಿ ಸಮಗ್ರವಾಗಿ 2024 ರ ಸಾಮಾಜಿಕ ಮತ್ತು ಶೈಕ್ಷಣಿಕ ಅಧ್ಯಯನ ವರದಿಯನ್ನು ಸಿದ್ಧಪಡಿಸಿದೆ ಎಂದು ತಿಳಿಸಿದ್ದಾರೆ.
|
7 |
+
ಈ ವರದಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚುನಾವಣೆ ಹೊಸ್ತಿಲಿನಲ್ಲಿ ಅನಗತ್ಯವಾಗಿ ವಿವಾದವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಈ ಹಿಂದೆ ಲಿಂಗಾಯತ ಹಾಗೂ ವೀರಶೈವ ಧರ್ಮದ ಸಾಂವಿಧಾನಿಕ ಸ್ಥಾನಮಾನಕ್ಕಾಗಿ ನಡೆಸಿದ ಚರ್ಚೆಗಳು ಅಡ್ಡಪರಿಣಾಮ ಬೀರಿ 2018 ರ ವಿಧಾನಸಭಾ ಹಾಗೂ 2019 ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪೆಟ್ಟು ತಿನ್ನಬೇಕಾಯಿತು. ಈಗ ಜಾತಿ ಜನಗಣತಿಯ ವರದಿಯನ್ನು ಬಹಿರಂಗಪಡಿಸಿ ವಿವಾದಕ್ಕೆ ಸಿಲುಕುವುದು ಬೇಡ ಎಂದು ಬಹುತೇಕ ಶಾಸಕರು, ಸಚಿವರು, ಮುಖ್ಯಮಂತ್ರಿಯವರಿಗೆ ಮ��ವರಿಕೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
|
8 |
+
ವರದಿಯನ್ನು ವಿಧಾನಮಂಡಲದಲ್ಲಿ ಮಂಡಿಸುವುದರ ಮೂಲಕ ಬಹಿರಂಗಪಡಿಸುವುದು ಅಥವಾ ನೇರವಾಗಿ ಸರ್ಕಾರವೇ ಪ್ರಕಟಿಸುವ ಆಯ್ಕೆಗಳು ಚರ್ಚೆಯಲ್ಲಿವೆ. ಆದರೆ ಸದ್ಯಕ್ಕೆ ಅದ್ಯಾವುದರ ಗೋಜಿಗೂ ಹೋಗದೆ ಸಚಿವ ಸಂಪುಟ ಉಪಸಮಿತಿಯನ್ನು ರಚಿಸಿ 3 ತಿಂಗಳೊಳಗೆ ವರದಿ ನೀಡುವಂತೆ ಸೂಚಿಸುವ ಮೂಲಕ ಬೀಸುವ ದೊಣ್ಣೆಯಿಂದ ತಲೆ ತಪ್ಪಿಸಿಕೊಳ್ಳುವ ಚರ್ಚೆಗಳು ನಡೆದಿವೆ. ಸಚಿವ ಸಂಪುಟ ಉಪಸಮಿತಿ ರಚನೆಯಾಗಿದ್ದೇ ಆದರೆ ಅಲ್ಲಿಗೆ ಲೋಕಸಭೆ ಚುನಾವಣೆ ಘೋಷಣೆಯಾಗಲಿದೆ. ಸರ್ಕಾರ ವರದಿಯನ್ನು ಬಹಿರಂಗಪಡಿಸುವ ಅಥವಾ ಅನುಷ್ಠಾನಗೊಳಿಸುವ ಇಕ್ಕಟ್ಟಿಗಾಗಲೀ ಸಿಲುಕುವ ಅನಿವಾರ್ಯತೆ ಇರುವುದಿಲ್ಲ.
|
9 |
+
ಲೋಕಸಭೆ ಚುನಾವಣೆ ಬಳಿಕ ಪರಿಸ್ಥಿತಿಯನ್ನು ಆಧರಿಸಿ ಸರ್ಕಾರ ಮುಂದಿನ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಸಂಪುಟದ ಸಹದ್ಯೋಗಿಗಳು ಮುಖ್ಯಮಂತ್ರಿಯವರಿಗೆ ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ.
|
eesanje/url_46_218_2.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಮಾ.3ರಂದು ಕರ್ನಾಟಕ ರಾಜ್ಯ ಮುಕ್ತ ವಿವಿಯ 19ನೇ ಘಟಿಕೋತ್ಸವ
|
2 |
+
ಮೈಸೂರು, ಮಾ. 1- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 19ನೇ ಘಟಿಕೋತ್ಸವ ಮಾರ್ಚ್ 3ರಂದು ನಡೆಯಲಿದೆ ಎಂದು ಮುಕ್ತ ವಿವಿಯ ಕುಲಪತಿ ಪ್ರೊ. ಶರಣಪ್ಪ ಅವರು ತಿಳಿಸಿದ್ದಾರೆ. ನಗರದ ಮುಕ್ತಗಂಗೋತ್ರಿಯಲ್ಲಿ ರುವ ಕೆಎಸ್ಒಯು ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರೊ. ಶರಣಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದರು. ಈ ಬಾರಿಯ ಘಟಿಕೋತ್ಸವದಲ್ಲಿ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಗುತ್ತಿದೆ ಎಂದವರು ತಿಳಿಸಿದರು.
|
3 |
+
ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತ ಡಾ. ಹೆಚ್ಸಿ ಸತ್ಯನ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆಎಂ ವೀರೇಶ್ ಹಾಗೂ ಎಸ್ ಬಿ ಸಿ ಶಿಕ್ಷಣ ಕಾರ್ಯದರ್ಶಿ ಮೀರ ಶಿವಲಿಂಗಯ್ಯ ಅವರುಗಳಿಗೆ ಗೌರವ ಡಾಕ್ಟರೇಟ್ ಪದವಿಯನ್ನು ನೀಡಲಾಗುತ್ತಿದೆ ಎಂದವರು ಈ ಸಂದರ್ಭದಲ್ಲಿ ತಿಳಿಸಿದರು. 10276 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಪೈಕಿ 7,869 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದವರು ತಿಳಿಸಿದರು. 30 ಮಂದಿಗೆ ಚಿನ್ನದ ಪದಕ, 37 ಮಂದಿಗೆ ನಗದು ಬಹುಮಾನ ವಿತರಿಸಲಾಗುತ್ತದೆ ಎಂದವರು ತಿಳಿಸಿದರು.
|
4 |
+
ಸುದ್ದಿಗೋಷ್ಠಿಯಲ್ಲಿ ಪರೀಕ್ಷಾಂಕಗಳು ಸಚಿವ ಪ್ರೊ. ಕೆಬಿ ಪ್ರವೀಣ್, ಕುಲ ಸಚಿವ ಪ್ರೊ. ಕೆ ಎಲ್ ಎನ್ ಮೂರ್ತಿ ಡೀನ್ ಅಕಾಡೆಮಿಕ್ ಪ್ರೊ. ಲಕ್ಷ್ಮಿ, ಡೀನ್ ಸ್ಟಡಿ ಸೆಂಟರ್ ಪ್ರೊ. ರಾಮನಾಥನ್ ನಾಯ್ಡು, ಪ್ರಭಾರ ಹಣಕಾಸು ಅಧಿಕಾರಿ ಡಾ. ಬಿ ಎಂ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.
|
eesanje/url_46_218_3.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಅಗಲಿದ ಕೆ.ಶಿವರಾಮ್ಗೆ ಗಣ್ಯರ ಅಶ್ರುತರ್ಪಣ
|
2 |
+
ಬೆಂಗಳೂರು, ಮಾ.1- ನಿನ್ನೆ ನಿಧನರಾದ ನಿವೃತ್ತ ಐಎಎಸ್ ಅಧಿಕಾರಿ ಚಿತ್ರನಟ ರಾಜಕಾರಣಿ ಕೆ. ಶಿವರಾಮ್ ಅವರ ಅಂತಿಮ ದರ್ಶನಕ್ಕೆ ಅಪಾರ ಅಭಿಮಾನಿ ಬಳಗ ಹರಿದು ಬಂದಿತ್ತು. ರವೀಂದ್ರ ಕಲಾಕ್ಷೇತ್ರದಲ್ಲಿ ಮಧ್ಯಾಹ್ನದ ವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಚಿತ್ರರಂಗ, ರಾಜಕೀಯ ಕ್ಷೇತ್ರದ ಗಣ್ಯರು, ಅಧಿಕಾರಿ ವರ್ಗದವರು ಆಗಮಿಸಿ ಶಿವರಾಮ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.
|
3 |
+
ಸಚಿವರಾದ ಈಶ್ವರ ಖಂಡ್ರೆ, ಪ್ರಿಯಾಂಕ ಖರ್ಗೆ, ಸಂಸದ ಡಿ.ಕೆ.ಸುರೇಶ್, ಮಾಜಿ ಸಚಿವ ಎಚ್. ಆಂಜನೇಯ, ಮಾಜಿ ಶಾಸಕ ನೆ.ಲ. ನರೇಂದ್ರ ಬಾಬು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿಧಾನ ಪರಿಷತ್ ಸದಸ್ಯ, ಬಿಜೆಪಿ ಮುಖಂಡ ಛಲವಾದಿ ನಾರಾಯಣ ಸ್ವಾಮಿ, ಡಾ. ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ. ಗೋವಿಂದು, ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಎನ್.ಎಂ. ಸುರೇಶ್, ನಿರ್ದೇಶಕ ತರುಣ್ ಸುದೀರ್ ಸೇರಿದಂತೆ ಹಲವಾರು ಗಣ್ಯರು ಆಗಮಿಸಿ ಅಂತಿಮ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದರು.
|
4 |
+
ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದ ಕೆ. ಶಿವರಾಮ್ ಅವರು ಸಿನಿಮಾ ಹಾಗೂ ರಾಜಕೀಯ ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಾಮಾಜಿಕ ಕ್ಷೇತ್ರದಲ್ಲೂ ಸೇವೆ ಸಲ್ಲಿಸಿದ್ದರು. ಎಲ್ಲಾ ಕ್ಷೇತ್ರಗಳಿಂದ ಆಗಮಿಸಿದ್ದ ಗಣ್ಯರು ಅವರಿಗೆ ನಮನ ಸಲ್ಲಿಸಿದರು. ಶಿವರಾಮ್ ಅವರ ಅಂತ್ಯಕ್ರಿಯೆಯನ್ನು ಕೆಂಗೇರಿಯ ಛಲವಾದಿ ಮಹಾಸಭಾ ಆವರಣದಲ್ಲಿ ನಡೆಸಬೇಕೆಂದು ಬೆಂಬಲಿಗರು ಒತ್ತಾಯಿಸಿದ್ದು, ಈ ಕುರಿತು ಸಚಿವ ಎಚ್.ಸಿ. ಮಹದೇವಪ್ಪ ಅವರಿಗೆ ಮನವಿ ಮಾಡಿದ್ದಾರೆ. ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
|
5 |
+
ಸರಕಾರದಿಂದ ಅನುಮತಿ ಸಿಕ್ಕರೆ ಕೆಂಗೇರಿಯಲ್ಲಿರುವ ಛಲವಾದಿ ಮಹಾಸಭಾ ಆವರಣದಲ್ಲಿ ಸಂಜೆ ಅಂತ್ಯಕ್ರಿಯೆ ನೆರವೇರಲಿದೆ. ಇಲ್ಲದಿದ್ದರೆ ಬಿಡದಿ ಸಮೀಪದ ಶಿವರಾಮ್ ಅವರ ಸ್ವಗ್ರಾಮ ಊರಗಳ್ಳಿಯ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆಯೆಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
|
6 |
+
ಶಿವರಾಮ್ ಅವರು ಮೊಟ್ಟಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾದ ಹಿರಿಮೆಗೆ ಪಾತ್ರರಾಗಿದ್ದರು. ಇವರು ಐಎಎಸ್ ಅಧಿಕಾರಿಯಾಗಿ ಜನಮನ್ನಣೆ ಗಳಿಸಿದ್ದಲ್ಲದೆ, ಸಿನಿಮಾ ರಂಗದಲ್ಲಿ ನಾಡಿನಾದ್ಯಂತ ಮನೆಮಾತಾಗಿದ್ದರು. ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ನಂತರ ರಾಜಕಾರಣಿ ಆಗಬೇಕೆಂಬ ಹಂಬಲದೊಂದಿಗೆ ಬಿಜೆಪಿ ಪಕ್ಷ ಸೇರಿ ಛಲವಾದಿ ಮಹಾಸಭಾ ಹುಟ್ಟು ಹಾಕಿ ಕೆಳ ಸಮುದಾಯಕ್ಕೆ ಆಸರೆಯಾಗಿದ್ದರು.
|
eesanje/url_46_218_4.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ರೇಪ್ ಅಂಡ್ ಮರ್ಡರ್ ಆರೋಪಿ ಆಟೋ ಚಾಲಕನ ಸೆರೆ
|
2 |
+
ಬೆಂಗಳೂರು, ಮಾ.1- ನಿರ್ಜನ ಪ್ರದೇಶದ ಕಟ್ಟಡವೊಂದಕ್ಕೆ ಕರೆದೊಯ್ದು ಯುವತಿ ಮೇಲೆ ಅತ್ಯಾಚಾರ ಎಸಗಿ ಮಹಡಿಯಿಂದ ಕೆಳಗೆ ತಳ್ಳಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಖತರ್ನಾಕ್ ಆಟೋ ಚಾಲಕನನ್ನು ಬಂದಿಸುವಲ್ಲಿ ಸಂಪಂಗಿರಾಮನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ನಿವಾಸಿ, ಆಟೋ ಚಾಲಕ ಮುಬಾರಕ್ (38) ಬಂದಿತ ಆರೋಪಿ.
|
3 |
+
ಕೆಲ ದಿನಗಳ ಹಿಂದೆ ಸಂಪಂಗಿರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕೆಎಚ್ ರಸ್ತೆಯಲ್ಲಿನ ನಿವೇಶನದ ಬಹುಮಹಡಿ ಕಟ್ಟಡದ ಕೆಳಗೆ ಬಿದ್ದಿದ್ದ ಯುವತಿಯ ಶವ ಕುರಿತಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿರುತ್ತಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದಾಗ ಆಕೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದಾಗಿ ವರದಿ ಬಂದಿರುತ್ತದೆ. ವರದಿಯನ್ನಾಧರಿಸಿ ತನಿಖೆ ಕೈಗೊಂಡ ಪೊಲೀಸರು ಸಿಕ್ಕ ಮಾಹಿತಿ ಮೇರೆಗೆ ಆಟೋ ಚಾಲಕ ಮುಬಾರಕ್ನನ್ನು ಬಂದಿಸಿ ತೀವ್ರ ವಿಚಾರಣೆಗೊಳಪಡಿಸುತ್ತಾರೆ.
|
4 |
+
ವಿಚಾರಣೆ ಸಂದರ್ಭದಲ್ಲಿ ರಾತ್ರಿ ಪಾಳಿಯಲ್ಲಿ ಆಟೋ ಓಡಿಸುತ್ತಿದ್ದಾಗ ಸಿಟಿ ಮಾರುಕಟ್ಟೆ ಸಮೀಪ ಸಿಕ್ಕ ಯುವತಿಯನ್ನು ಕೆಎಚ್ ರಸ್ತೆಯಲ್ಲಿ ಖಾಲಿ ಬಿದ್ದಿದ್ದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿರುವುದಾಗಿ ಬಾಯಿಬಿಟ್ಟಿದ್ದಾನೆ. ಅತ್ಯಾಚಾರ ಸಂದರ್ಭದಲ್ಲಿ ಯುವತಿ ಕೂಗಿಕೊಂಡು ಈ ವಿಚಾರವನ್ನು ನಮ್ಮ ಪೋಷಕರಿಗೆ ತಿಳಿಸುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಮೊದಲನೆ ಮಹಡಿಯಿಂದ ಆಕೆಯನ್ನು ಕೆಳಗೆ ತಳ್ಳಿ ಪರಾರಿಯಾದೆ ಎಂದು ತಿಳಿಸಿದ್ದಾನೆ.
|
5 |
+
ಆತ ನೀಡಿದ ಮಾಹಿತಿಯನ್ನಾಧರಿಸಿ ಮುಬಾರಕ್ನನ್ನು ಬಂದಿಸಿರುವ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ರೇಪ್ ಅಂಡ್ ಮರ್ಡರ್ ಆಗಿರುವ ಯುವತಿಯ ಹೆಸರು ಮತ್ತು ವಿಳಾಸ ಪತ್ತೆಯಾಗಿಲ್ಲ. ಆದರೆ ಆಕೆ ಧರಿಸಿದ್ದ ಚೂಡಿದಾರ್ ಸಂಗ್ರಹಿಸಿಡಲಾಗಿದ್ದು, ಆಕೆಯ ಪೋಷಕರ ಪತ್ತೆಗೆ ಕ್ರಮಕೈಗೊಳ್ಳಲಾಗಿದೆ ಎಂದು ಸಂಪಂಗಿರಾಮನಗರ ಪೋಲೀಸರು `ಈಸಂಜೆ’ಗೆ ತಿಳಿಸಿದ್ದಾರೆ.
|
eesanje/url_46_218_5.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ವೀಲಿಂಗ್ ಮಾಡಿದರೆ ವಾಹನ ಸೀಜ್, ಡ್ರೈವಿಂಗ್ ಲೈಸೆನ್ಸ್ ರದ್ದು
|
2 |
+
ಬೆಂಗಳೂರು,ಮಾ.1- ರಸ್ತೆಗಳಲ್ಲಿ ವೀಲಿಂಗ್ ಮಾಡುವವರೇ ಎಚ್ಚರ… ಇನ್ನು ಮುಂದೆ ನೀವು ಎಲ್ಲೆಂದರಲ್ಲಿ ವೀಲಿಂಗ್ ಮಾಡಿದರೆ ಪೊಲೀಸರು ಎಫ್ಐಆರ್ ದಾಖಲಿಸಿ ಲೈಸೆನ್ಸ್ ರದ್ದು ಮಾಡುವುದರ ಜೊತೆಗೆ ನಿಮ್ಮ ವಾಹನಗಳನ್ನು ಜಪ್ತಿ ಮಾಡಲಿದ್ದಾರೆ ಇರಲಿ ಎಚ್ಚರ..! ಇತ್ತೀಚೆಗೆ ಜನನಿಬಿಡ ರಸ್ತೆಗಳಲ್ಲಿ ವೀಲಿಂಗ್ ಮಾಡುತ್ತಾ ಬೇರೆ ವಾಹನ ಸವಾರರಿಗೆ ಕಿರಿಕಿರಿ ಉಂಟುಮಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ನಗರ ಸಂಚಾರಿ ಪೊಲೀಸರು ವೀಲಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾರೆ.
|
3 |
+
ಫೆಬ್ರವರಿ 21 ರಿಂದ 29ರವರೆಗೆ ನಗರದಲ್ಲಿ ಸಂಚಾರಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 91 ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದುವರೆಗೂ 91 ಪ್ರಕರಣಗಳ ಪೈಕಿ 74 ವಾಹನಗಳನ್ನು ಜಪ್ತಿ ಮಾಡಿ 59 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಲ್ಲಿ 24 ಮಂದಿ ಅಪ್ರಾಪ್ತರಾಗಿರುವುದು ವಿಶೇಷವಾಗಿದೆ. ವೀಲಿಂಗ್ ಮಾಡುತ್ತಿದ್ದ ಅಪ್ರಾಪ್ತರ 23 ಪೋಷಕರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದು 18 ಮಂದಿಯ ಲೈಸೆನ್ಸ್ಗಳನ್ನು ಅಮಾನತುಪಡಿಸಲಾಗಿದೆ. ಇದರ ಜೊತೆಗೆ 38 ವಾಹನಗಳ ಆರ್ಸಿ ರದ್ದಿಗೆ ಆರ್ಟಿಒ ಕಚೇರಿಗೆ ರವಾನಿಸಲಾಗಿದೆ ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
|
4 |
+
ಮಹದೇವಪುರದಲ್ಲೂ ಕಾರ್ಯಾಚರಣೆ:ಫೆಬ್ರವರಿ 29 ರಂದು ಮಹದೇವಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವಿಶೇಷ ಕಾರ್ಯಾಚರಣೆ ಸಂದರ್ಭದಲ್ಲಿ ಬಿ ನಾರಾಯಣಪುರ ಹೊರವರ್ತುಲ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದ ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿ ಸವಾರನ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಸಂಚಾರ ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತ ಕುಲ್ದೀಪ್ಕುಮಾರ್ ಆರ್.ಜೈನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
|
5 |
+
ದಂಡ ಪಾವತಿಗೂ ಬಂತು ಕ್ಯೂಆರ್ ಕೋಡ್
|
6 |
+
ಬೆಂಗಳೂರು, ಮಾ.1- ಇಂದಿನಿಂದ ಸಂಚಾರ ನಿಯಮ ಉಲ್ಲಂಘನೆ ವಾಹನಗಳ ಮಾಲೀಕರಿಗೆ ಕಳುಹಿಸುವ 133 ನೊಟೀಸ್ನ ಬಲಭಾಗದಲ್ಲಿ ಕ್ಯೂಆರ್ ಕೋಡ್ಗಳನ್ನು ಕಳುಹಿಸಲಾಗುತ್ತದೆ. ನಗರ ಸಂಚಾರ ವಿಭಾಗದಲ್ಲಿ ಸಂಪರ್ಕ ರಹಿತ ನಿಯಮ ಜಾರಿಯಡಿ ದಾಖಲು ಮಾಡುವ ನಿಯಮ ಉಲ್ಲಂಘನಾ ಪ್ರಕರಣಗಳಿಗೆ ಆಟೋಮೇಷನ್ ಸೆಂಟರ್ ವಿಭಾಗದಿಂದ ನಿಯಮ ಉಲ್ಲಂಘನೆ ಮಾಡುವ ವಾಹನ ಮಾಲೀಕರಿಗೆ ಮೋಟಾರು ವಾಹನ ಕಾಯ್ದೆಯಡಿ ನೊಟೀಸ್ಗಳನ್ನು ಮುದ್ರಿಸಿ ಅಂಚೆ ಮುಖಾಂತರ ಕಳಿಸಲಾಗುತ್ತದೆ.
|
7 |
+
ಈ ಕ್ಯೂಆರ್ ಕೋಡ್ ಮುಖಾಂತರ ನಿಯಮ ಉಲ್ಲಂಘನೆಯ ವಿಧ, ಸ್ಥಳ, ದಿನಾಂಕ, ಸಮಯ ಹಾಗೂ ದಂಡದ ಮೊತ್ತದ ವಿವರಗಳ ಜೊತೆಗೆ ಬಹುಮುಖ್ಯವಾಗಿ ಸಾಕ್ಷ್ಯಾಧಾರಿತ ಛಾಯಾಚಿತ್ರವನ್ನು ಸಹ ವೀಕ್ಷಿಸಬಹುದಾಗಿದೆ.ಉಲ್ಲಂಘನೆಯ ದಂಡದ ಮೊತ್ತವನ್ನು ಆನ್���ೈನ್ನಲ್ಲಿ ಪಾವತಿಸಲು ಸಾರ್ವಜನಿಕರಿಗೆ ಅನುವು ಮಾಡಿಕೊಡಲು ಅದೇ ಕ್ಯೂಆರ್ ಕೋಡ್ನಲ್ಲಿ ಪಾವತಿಯ ಲಿಂಕ್ನ್ನು ಸಹ ಒದಗಿಸಲಾಗಿರುತ್ತದೆ.
|
8 |
+
ನಿಯಮ ಉಲ್ಲಂಘನೆಗಳಿಗೆ ಸಂಬಂಧಪಟ್ಟ ಯಾವುದೇ ದೂರು, ವಿವಾದಗಳಿದ್ದಲ್ಲಿ .. ಲಾಗಿನ್ ಆಗುವ ಮೂಲಕ ಅಥವಾ ಕೆಎಸ್ಪಿ ಆ್ಯಪ್ನ್ನು ಪ್ಲೇಸ್ಟೋರ್ನಿಂದ ಡೌನ್ಲೋಡ್ ಮಾಡಿಕೊಂಡು ಉಲ್ಲಂಘನೆ ವಿವರಗಳನ್ನು ವೀಕ್ಷಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ. ಅಥವಾ ದಂಡ ಪಾವತಿಸಬಹುದಾಗಿದೆ.2021ರ ನಂತರದ ನಿಯಮ ಉಲ್ಲಂಘನೆಗಳಿಗೆ ಮಾತ್ರ ಸಾಕ್ಷ್ಯಾಧಾರಿತ ಛಾಯಾಚಿತ್ರಗಳು ಅದರಲ್ಲಿ ಲಭ್ಯವಿರುತ್ತದೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಅನುಚೇತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
|
eesanje/url_46_218_6.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಪಾಕ್ ಪರ ಘೋಷಣೆ : ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟ ಸರ್ಕಾರದ ನಡೆ
|
2 |
+
ಬೆಂಗಳೂರು,ಮಾ.1- ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಸರ್ಕಾರದ ನಿಧಾನಗತಿಯ ಕ್ರಮಗಳು ಸಾರ್ವಜನಿಕ ವಲಯದಲ್ಲಿ ಹಲವು ಅನುಮಾನಗಳನ್ನು ಮೂಡಿಸಿದ್ದು, ಚುನಾವಣಾ ಸಂದರ್ಭದಲ್ಲಿ ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಘಟನೆ ನಡೆದು 36 ಗಂಟೆಗಳು ಕಳೆದರೂ ಈವರೆಗೂ ಯಾರನ್ನೂ ಬಂಧಿಸದೇ ಇರುವುದು ಪ್ರಶ್ನಾರ್ಹವಾಗಿದೆ. 12 ಮಂದಿಯನ್ನು ವಿಚಾರಣೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ತನಿಖೆಯಲ್ಲಿ ಸತ್ಯಾಂಶ ಪತ್ತೆಯಾಗಿದ್ದರೆ ಸರ್ಕಾರ ಅದನ್ನಾದರೂ ಧೈರ್ಯವಾಗಿ ಪ್ರಕಟಿಸದೆ ಮೀನಾಮೇಷ ಎಣಿಸುತ್ತಿರುವುದು ಅಚ್ಚರಿ ಮೂಡಿಸಿದೆ.
|
3 |
+
ವಿಧಾನಸೌಧದಲ್ಲಿ ನಡೆದ ಘಟನೆಯಲ್ಲಿ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಲಾಗಿದೆಯೇ ಎಂಬ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ದೃಶ್ಯಾವಳಿಗಳನ್ನು ಎಫ್ಎಸ್ಎಲ್ಗೆ ರವಾನಿಸಲಾಗಿತ್ತು. ಅದರಲ್ಲಿ ಕೆಲವು ವಿಡಿಯೋಗಳ ಎಫ್ಎಸ್ಎಲ್ ವರದಿ ಬಂದಿದೆಯಾದರೂ ಸ್ಪಷ್ಟ ಉತ್ತರ ಸಿಕ್ಕಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಮತ್ತಷ್ಟು ವಿಡಿಯೋಗಳು ಹಾಗೂ ಧ್ವನಿ ಮಾದರಿಗಳನ್ನು ಎಫ್ಎಸ್ಎಲ್ಗೆ ಕಳುಹಿಸಲು ಕ್ರಮ ಕೈಗೊಳ್ಳುತ್ತಿರುವುದಾಗಿ ಹೇಳಲಾಗುತ್ತಿದೆ.
|
4 |
+
ಬಿರುಸುಗೊಂಡ ರಾಜಕೀಯ ವಾಗ್ವಾದ:ರಾಜ್ಯ ಸರ್ಕಾರದ ನಿಧಾನಗತಿಯ ಧೋರಣೆಯನ್ನೇ ಆಧಾರವಾಗಿಟ್ಟುಕೊಂಡು ಬಿಜೆಪಿ ಹೆಜ್ಜೆ ಹೆಜ್ಜೆಗೂ ಕಾಂಗ್ರೆಸ್ ಸರ್ಕಾರ ದೇಶದ್ರೋಹಿಗಳಿಗೆ ಬೆಂಬಲ ನೀಡುತ್ತಿದೆ ಎಂದು ಟೀಕೆ ಮಾಡುತ್ತಿದೆ. ಭಯೋತ್ಪಾದಕರು ವಿಧಾನಸೌಧದ ಆವರಣಕ್ಕೇ ಬರಲು ಬಿಡಲಾಗಿದೆ. ಇದೇ ರೀತಿ ಮುಂದುವರೆದರೆ ದೇಶದ ಭದ್ರತೆಗೆ ಅಪಾಯ ಬಂದೊದಗಲಿದೆ ಎಂದು ಸಾರ್ವಜನಿಕವಾಗಿ ವ್ಯಾಪಕ ಪ್ರಚಾರ ಮಾಡುತ್ತಿದೆ. ಬಿಜೆಪಿಯ ಟೀಕೆಗಳಿಗೆ ಕಾಂಗ್ರೆಸ್ನ ಪ್ರತಿಕ್ರಿಯೆಗಳು ನೀರಸವಾಗಿವೆ. ತನ್ನ ಹಳೆಯ ಸಾಂಪ್ರದಾಯಿಕ ಶೈಲಿಯಲ್ಲಿ ಕಾಂಗ್ರೆಸ್, ನಾವು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು. ದೇಶದ ಪ್ರೇಮದ ಬಗ್ಗೆ ನಮಗೆ ಪಾಠ ಕಲಿಸಬೇಕಿಲ್ಲ. ಪಾಕಿಸ್ತಾನ್ ಜಿಂದಾಬಾದ್ ಘೋಷಣೆಗಳನ್ನು ಕೂಗಿದ್ದೇ ನಿಜವಾಗಿದ್ದರೆ, ಆರೋಪಿಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದೆಲ್ಲಾ ಸಮರ್ಥನೆ ಗಳನ್ನು ನೀಡುತ್ತಿದೆ.
|
5 |
+
ಸಚಿವರು, ಮುಖ್ಯಮಂತ್ರಿ ಹೇಳಿಕೆಗಳು ಬಿಜೆಪಿಯ ಆಕ್ರಮಣಕಾರಿ ವಾಗ್ದಾಳಿಗಳ ಮುಂದೆ ಸಪ್ಪೆ ಎನಿಸಲಾರಂಭಿಸಿವೆ. ಜನಮಾನಸದಲ್ಲಿ ಕಾಂಗ್ರೆಸ್ ಸರ್ಕಾರದ ನಡಾವಳಿಯ ಮೇಲೆ ಅನುಮಾನಗಳು ಗಟ್ಟಿಗೊಳ್ಳುತ್ತಿವೆ. ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ವ್ಯವಸ್ಥಿತ ವಾಗಿ ಮುಚ್ಚಿ ಹಾಕುತ್ತಿದೆ ಎಂದು ಬಿಜೆಪಿ ಈಗಾಗಲೇ ಜನರನ್ನು ನಂಬಿಸಿದೆ. ಒಂದು ವೇಳೆ ಪ್ರಕರಣದ ನೈಜತೆ ಹೊರಬಂದರೂ ಕೂಡ ಜನ ಅದನ್ನು ಅನುಮಾನದ ದೃಷ್ಟಿಯಿಂದಲೇ ನೋಡುವಂತಾಗಿದೆ.
|
6 |
+
ಎಫ್ಎಸ್ಎಲ್ ವರದಿಯಲ್ಲಿ ಈ ರೀತಿ ಘಟನೆ ನಡೆದಿಲ್ಲ ಎಂದು ವರದಿ ಬಂದರೆ ಅದನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಮತ್ತಷ್ಟು ವಾಗ್ದಾಳಿಗೆ ಇಳಿಯುವ ಸಾಧ್ಯತೆಯಿದೆ. ಪ್ರಕರಣ ನಡೆದು 36 ಘಂಟೆ ಕಳೆದರೂ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದೆ ಹಂತಹಂತವಾಗಿ ಪ್ರಕರಣವನ್ನು ಮುಚ್ಚಿ ಹಾಕಲಾಗಿದೆ.ಪ್ರಯೋಗಾಲಯ ಸೇರಿದಂತೆ ಎಲ್ಲಾ ಹಂತ ದಲ್ಲೂ ಪ್ರಭಾವ ಬಳಸಿ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿ ಕೊಳ್ಳಲಾಗಿದೆ ಎಂಬ ಆರೋಪಗಳು ಬಿಜೆಪಿಯಿಂದ ತೂರಿಬರುವ ಸಾಧ್ಯತೆಯಿದೆ.ಸೂಕ್ಷ್ಮವಾಗಿರುವ ಇಂತಹ ಬಹಳಷ್ಟು ಪ್ರಕರಣಗಳಲ್ಲಿ ಮೊದಲು ಆರೋಪಿಗಳನ್ನು ಬಂಧಿಸಿ ಅನಂತರ ವಿಚಾರಣೆ ನಡೆಸುವುದು ಕಂಡುಬರುತ್ತದೆ. ಆದರೆ ಈ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದರೆ ಅಮಾಯಕರ ವಿರುದ್ಧ ಕ್ರಮ ಕೈಗೊಂಡಂತಾಗುತ್ತದೆ ಎಂಬ ಧೋರಣೆಯನ್ನು ಸರ್ಕಾರ ಅನುಸರಿಸುತ್ತಿದೆ. ಇದು ಅಲ್ಪಸಂಖ್ಯಾತರ ತುಷ್ಟೀಕರಣ ಎಂದು ಬಿಜೆಪಿ ಟೀಕಿಸುತ್ತಿದೆ.
|
7 |
+
ಸೈದ್ಧಾಂತಿಕ ರಾಜಕೀಯ ಕುರಿತಂತೆ ಜನಸಾಮಾನ್ಯ ರಲ್ಲಿ ಈಗಾಗಲೇ ಸ್ಪಷ್ಟ ವಿಭಜನೆ ಕಂಡುಬಂದಿದೆ. ಕಾಂಗ್ರೆಸ್ ಬೆಂಬಲಿತ ಸೈದ್ಧಾಂತಿಕ ನಿಲುವನ್ನು ಹೊಂದಿರುವವರು ಬಿಜೆಪಿಯ ಧೋರಣೆಗಳನ್ನು ಟೀಕಿಸುವುದು ಒಂದೆಡೆಯಾದರೆ, ಬಿಜೆಪಿ ಮತ್ತು ಅದರ ಬೆಂಬಲಿತ ಸಿದ್ಧಾಂತದ ಅನುಯಾಯಿಗಳು ಕಾಂಗ್ರೆಸ್ ಪಕ್ಷ ದೇಶದ್ರೋಹಿಗಳಿಗೆ ಬೆಂಬಲ ನೀಡುತ್ತಿದೆ ಎಂದು ನಂಬುವಂತಹ ವಾತಾವರಣ ನಿರ್ಮಾಣವಾಗುತ್ತಿದೆ.ಸೈದ್ಧಾಂತಿಕ ತಟಸ್ಥತೆ ಹೊಂದಿರುವವರಿಗೆ ರಾಜ್ಯಸರ್ಕಾರದ ನಡವಳಿಕೆಗಳು ಗೊಂದಲ ಮೂಡಿಸುತ್ತಿದ್ದು, ಉದ್ದೇಶಪೂರ್ವಕವಾಗಿಯೇ ಸರ್ಕಾರ ತನಿಖೆಯನ್ನು ವಿಳಂಬ ಮಾಡು ತ್ತಿದೆಯೇ? ಪ್ರಕರಣ ಮುಚ್ಚಿ ಹಾಕಲು ಯತ್ನಿಸುತ್ತಿ ದೆಯೇ ಎಂಬ ಅನುಮಾನ ಕಾಡಲಾರಂಭಿಸಿದೆ.
|
8 |
+
ವಿಧಾನಮಂಡಲದ ಅವೇಶನ ನಡೆಯುತ್ತಿ ದ್ದರೂ ಸರ್ಕಾರ ಘಟನೆಗೆ ಸ್ಪಷ್ಟತೆಯ ತಾರ್ಕಿಕ ಅಂತ್ಯ ನೀಡುವಲ್ಲಿ ವೈಫಲ್ಯ ಅನುಭವಿಸಿದೆ. ದಿನೇದಿನೇ ಇದೇ ಘಟನೆಯನ್ನು ಆಧಾರ ವಾಗಿಟ್ಟುಕೊಂಡು ಹಿಂದಿನ ಹಲವು ಪ್ರಕರಣಗಳನ್ನು ಜೊತೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ವಿರುದ್ಧ ವ್ಯಾಪಕ ಟೀಕೆಗಳು ಕಂಡುಬರುತ್ತಿವೆ. ಎಫ್ಎಸ್ಎಲ್ ಈವರೆಗೂ ನೀಡಿರುವ ವರದಿಯನ್ನು ಬಹಿರಂಗಪಡಿಸಲೂ ಕೂಡ ಸರ್ಕಾರ ಹಿಂದೇಟು ಹಾಕುತ್ತಿರುವುದು ಮತ್ತಷ್ಟು ಅನುಮಾನಗಳಿಗೆ ಪುಷ್ಟಿ ನೀಡಿದಂತಾಗಿದೆ.
|
eesanje/url_46_218_7.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪಾಕ್ ಜಿಂದಾಬಾದ್ ಘೋಷಣೆಕಾರರಿಗೆ ಸರ್ಕಾರದ ಬೆಂಬಲ: ಶ್ರೀನಿವಾಸ್ ಪೂಜಾರಿ ಆರೋಪ
|
2 |
+
ಬೆಂಗಳೂರು, ಮಾ.1- ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ದುಷ್ಕರ್ಮಿಗಳನ್ನು ರಾಜ್ಯ ಸರ್ಕಾರವೇ ರಕ್ಷಣೆ ಮಾಡಲು ಮುಂದಾಗಿದೆ ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಗಂಭೀರ ಆರೋಪ ಮಾಡಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಪ್ರಕರಣ ನಡೆದು ಮೂರು ದಿನಗಳಾದರೂ ಸರ್ಕಾರ ಇದುವರೆಗೂ ಯಾವುದೇ ಆರೋಪಿಗಳನ್ನು ಬಂಧಿಸಿಲ್ಲ. ಸುಳ್ಳು ಕಾರಣಗಳನ್ನು ಕೊಟ್ಟು ಆರೋಪಿಗಳನ್ನು ರಕ್ಷಣೆ ಮಾಡಲು ಮುಂದಾಗಿರುವುದು ಅತ್ಯಂತ ದುರದೃಷ್ಟಕರ ಎಂದು ಅಸಮಾಧಾನ ವ್ಯಕ್ತಪಡಿಸಿದರು.
|
3 |
+
ಅಲ್ಲೂ ಇಲ್ಲೋ ಪಾಕಿಸ್ತಾನದ ಪರ ಘೋಷಣೆಗಳು ಕೇಳಿ ಬರುತ್ತಿದ್ದವು ಆದರೆ ವಿಧಾನಸೌಧದ ಆವರಣದಲ್ಲೇ ಪಾಕ್ ಪರ ಕೂಗಿರುವುದು ನೋವಿನ ಸಂಗತಿ ಅಂದರೆ, ಕೆಂಗಲ್ ಹನುಮಂತಯ್ಯ ಕಟ್ಟಿದ ವಿಧಾನಸೌಧದಲ್ಲಿ ಘೋಷಣೆ ಮೊಳಗಿದೆ ಎಂದರು. ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿ ರುವ ನಾಸೀರ್ ಹುಸೇನ್ ಎಂಬುವವರು ಘಟನೆಯನ್ನು ಇಷ್ಟಾದರೂ ಖಂಡಿಸುವ ಕೆಲಸ ಮಾಡಿಲ್ಲ ಎಂದು ಆಕ್ರೋಶ ಹೊರಹಾಕಿದ ಪೂಜಾರಿ, ನಿನ್ನೆ ನಾವು ರಾಜ್ಯಪಾಲರನ್ನು ಭೇಟಿಯಾಗಿದ್ದೇವೆ. ಅವರು ನ್ಯಾಯ ಕೊಡಿಸುವ ಭರವಸೆ ಕೊಡಿಸುತ್ತೇನೆ ಎಂದಿದ್ದಾರೆ. ಅದು ನಮಗೆ ತೃಪ್ತಿ ತಂದಿದೆ ಎಂದು ಹೇಳಿದರು.
|
4 |
+
ಅನ್ನಭಾಗ್ಯ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಕೋಟ ಶ್ರೀನಿವಾಸ್ ಪೂಜಾರಿ, ಕೇಂದ್ರ ಸರ್ಕಾರ ಪ್ರತಿ ತಿಂಗಳು 22 ಲಕ್ಷ ಕ್ವಿಂಟಾಲ್ ಅಕ್ಕಿ ಕಳುಹಿಸುತ್ತಿದೆ. ಆದರೆ, ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಜನರಿಗೆ ಸುಳ್ಳು ಹೇಳಿದ್ದಾರೆ. ಕೇಂದ್ರ ಸರ್ಕಾರ ಕೊಡುವ ಅಕ್ಕಿಯಿಂದಲೇ ಕಾಂಗ್ರೆಸ್ ಅನ್ನಭಾಗ್ಯ ಕಾರ್ಯಕ್ರಮ ಮಾಡಿದೆ ಎಂದರು.
|
5 |
+
ಬಿಜೆಪಿ ಸಂವಿಧಾನ ವಿರೋಧಿ ಎನ್ನುತ್ತಾರೆ. ಮೊನ್ನೆ ಸುಮಾರು 20 ಕೋಟಿ ರೂ. ವೆಚ್ಚದಲ್ಲಿ ಸಂವಿಧಾನದ ಸಭೆ ನಡೆಸಿದ್ದಾರೆ. ನಿತಾಶ ಕೌಲ್ ಎಂಬವರನ್ನು ವಿದೇಶದಿಂದ ಕರೆಸಿ ಭಾಷಣ ಮಾಡಿಸಲು ಮುಂದಾಗಿದ್ದರು. ಸಂವಿಧಾನಕ್ಕೆ ಮೋಸ ಮಾಡಿದವರು ಯಾರಾದರೂ ಇದ್ದರೇ, ಅದು ಕಾಂಗ್ರೆಸ್ನವರು ಮಾತ್ರ ಎಂದರು.
|
6 |
+
ಬ್ರಿಟಿಷ್ ಬರಹಗಾರ್ತಿಯಾಗಿರುವ ನಿತಾಶಾ ಕೌಲ್ ಭಾರತದ ವಿರುದ್ಧ ಅಜೆಂಡಾ ಹೊಂದಿದ್ದಾರೆ ಎಂಬ ಆರೋಪವಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಂವಿಧಾನ ಜಾಗೃತಿ ಸಭೆಗೆ ಭಾಷಣ ಮಾಡಲು ಕಾಂಗ್ರೆಸ್ ಸರ್ಕಾರ ನಿತಾಶ ಕೌಲ್ ಅವರಿಗೆ ಆಹ್ವಾನ ನೀಡಿತ್ತು. ಇದನ್ನು ವಿಹೆಚ್ಪಿ ವಿರೋದಿಸಿತ್ತು. ಅಲ್ಲದೆ, ಸಂಘಟನೆಯ ನಾಯಕ ಗಿರೀಶ್ ಭಾರದ್ವಾಜ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಒಸಿಐ ಕಾರ್ಡ್ ರದ್ದುಗೊಳಿಸುವಂತೆ ಮನವಿ ಮಾಡಿದ್ದರು.
|
7 |
+
ನಮ್ಮ ದೇಶದ ಹಿತಾಸಕ್ತಿಗಳಿಗೆ ವಿರುದ್ಧವಾದ ದುರುದ್ದೇಶಪೂರಿತ ಅಜೆಂಡಾದೊಂದಿಗೆ ಅವರು ಆಗಾಗ್ಗೆ ಭಾರತಕ್ಕೆ ಭೇಟಿ ನೀಡುತ್ತಾರೆ. ಭಾರತದಲ್ಲಿನ ಯಾವುದೇ ಕಾರ್ಯಕ್ರಮಗಳಿಗೆ ಡಾ ಕೌಲ್ ಅವರನ್ನು ಅತಿಥಿಯಾಗಿ ಆಹ್ವಾನಿಸುವುದನ್ನು ತಡೆಯಲು ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಬೇಕು ಎಂದು ಭಾರದ್ವಾಜ್ ಪತ್ರದಲ್ಲಿ ತಿಳಿಸಿದ್ದರು. ಬೇಸರದಲ್ಲಿ ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ಸರ್ಕಾರದಲ್ಲಿ 500 ಮೀ ರಸ್ತೆ ಹಾಕಲು ದುಡ್ಡಿಲ್ಲ. ಶಾಸಕರು ಗೆದ್ದವರು ಬೇಸರದಲ್ಲಿದ್ದಾರೆ. ಒಂದೇ ಒಂದು ಅಭಿವೃದ್ಧಿ ಕೆಲಸಗಳು ಆಗಿಲ್ಲ. ಇಡೀ ಸದನದಲ್ಲಿ ಸುಳ್ಳು ಹೇಳಲು ಸರ್ಕಾರ ಬಳಕೆ ಮಾಡಿಕೊಂಡಿದೆ ಎಂದು ಕೋಟಿ ಹೇಳಿದರು.
|
8 |
+
ಕಾಂತರಾಜು ವರದಿಯೋ? ಡಾ. ಹೆಗ್ಡೆ ವರದಿಯೋ?ಕಾಂತರಾಜು ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವೀಕಾರ ಮಾಡಿದ್ದಾರೆ. ಆದರೆ, ಇದು ಕಾಂತರಾಜು ವರದಿಯೋ ಅಥವಾ ಡಾ ಹೆಗ್ಡೆ ವರದಿಯೋ ಎನ್ನುವುದನ್ನು ಮೊದಲು ಹೇಳಬೇಕು. ಈ ಹಿಂದೆ ದ್ವಾರಕಾನಾಥ್ ವರದಿ ಕೊಟ್ಟಾಗ ಸರ್ಕಾರಕ್ಕೆ ಸಲ್ಲಿಸುವುದರ ಜತೆಗೆ ವರದಿ ಬಹಿರಂಗ ಮಾಡಿದ್ದರು. ಈಗ ಸಿಎಂ ಸಿದ್ದರಾಮಯ್ಯ ಸಹ ವರದಿಯನ್ನು ಬಹಿರಂಗಪಡಿಸದಂತೆ ಹೇಳಿದ್ದಾರೆ ಎಂದು ತಿಳಿಸಿದರು.
|
9 |
+
ಸಿಎಂ ಅವರು ರಾಜಕೀಯ ಮಾಡುತ್ತಾ ಇದ್ದಾರೆ ಅಷ್ಟೇ. ಅತ್ತ ದಾವಣಗೆರೆ ಹಾಗೂ ಕನಕಪುರದಿಂದ ಸಿಡಿಲುಗುಡುಗು ಬಂದಿದೆ. ಶಾಮನೂರು ಶಿವಶಂಕರಪ್ಪ ಹಾಗೂ ಡಿ.ಕೆ.ಶಿವಕುಮಾರ್ ಭಯದಿಂದ ಸಿಎಂ ವರದಿ ಮುಚ್ಚಿಟ್ಟಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ವರದಿ ಬಹಿರಂಗಪಡಿಸಿ ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಅವರು ಒತ್ತಾಯಿಸಿದರು.
|
eesanje/url_46_218_8.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಹಿಂದುಳಿದ ವರ್ಗಗಳ ಆಯೋಗದ ವರದಿಗೆ ಒಕ್ಕಲಿಗರ ಹೋರಾಟ ಸಮಿತಿ ವಿರೋಧ
|
2 |
+
ಬೆಂಗಳೂರು,ಮಾ.1- ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ರಾಜ್ಯ ಒಕ್ಕಲಿಗರ ಹೋರಾಟ ಸಮಿತಿ ವಿರೋಧಿಸಿದೆ. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಗಾ.ನಂ.ಶ್ರೀಕಂಠಯ್ಯ, ನಮ್ಮ ಸಮಾಜದ ಮಠಾೀಧಿಶರು, ಸಚಿವರು, ಶಾಸಕರು, ಸಂಸದರು, ಸಮಾಜದ ಹಿರಿಯರು ಸಭೆ ಸೇರಿ ಚರ್ಚಿಸಿ ಮುಂದಿನ ಹೋರಾಟದ ರೂಪು ರೇಷೆಗಳನ್ನ ನಿರ್ಧರಿಸಲಾಗುವುದು ಎಂದು ಹೇಳಿದರು.
|
3 |
+
ಸಂಪೂರ್ಣ ವರದಿಯನ್ನು ಪಡೆದು ಕಾಂತರಾಜು ಅವರು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಮನೆಮನೆ ಸರ್ವೆ ಮಾಡಿ ಮಾಹಿತಿ ಪಡೆದಿಲ್ಲ ಎಂಬ ಆರೋಪವಿದ್ದು, ಆ ವರದಿ ಸ್ವೀಕರಿಸಿದಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು ಎಂದರು. ನಮ್ಮ ಸಮಾಜದ ಮಠಾೀಧಿಶರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳು, ಮಾಜಿ ಉಪಮುಖ್ಯಮಂತ್ರಿಗಳು, ಸಂಸದರು, ಸಚಿವರು, ಶಾಸಕರು ಹಾಗೂ ಸಮಾಜದ ಹಿರಿಯರು ಸಹಿ ಮಾಡಿದ್ದ ಮನವಿಯನ್ನು ಸರ್ಕಾರಕ್ಕೆ ಸಲ್ಲಿಸಿ ಅವೈಜ್ಞಾನಿಕ ವರದಿ ಸ್ವೀಕರಿಸದಂತೆ ಕೋರಲಾಗಿತ್ತು ಎಂದು ಅವರು ಹೇಳಿದರು.
|
4 |
+
ಕಳೆದ 2014-15 ನೇ ಸಾಲಿನಲ್ಲಿ ಸಂಗ್ರಹಿಸಲಾದ ದತ್ತಾಂಶದ ಮಾಹಿತಿ ವರದಿಯಲ್ಲಿದೆ ಎಂದು ತಿಳಿಸಲಾಗಿದೆ. ಹಿಂದುಳಿದ ವರ್ಗಗಳ ಆಯೋಗದ ಕಾಯ್ದೆ ಪ್ರಕಾರ ಪ್ರತಿ 10 ವರ್ಷಕ್ಕೊಮ್ಮೆ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಬೇಕಾಗಿದೆ. ಈ ವರದಿಗೆ ದತ್ತಾಂಶ ಸಂಗ್ರಹಿಸಿ ಸುಮಾರು 10 ವರ್ಷವಾಗಿರುವುದರಿಂದ ವರದಿಯನ್ನು ತಿರಸ್ಕರಿಸುವಂತೆ ಮನವಿ ಮಾಡಲಾಗಿತ್ತು ಎಂದು ಅವರು ತಿಳಿಸಿದರು.
|
5 |
+
ಒಕ್ಕಲಿಗ ಸಮಾಜದ ಎಲ್ಲಾ ಉಪಪಂಗಡಗಳನ್ನು ಒಟ್ಟಿಗೆ ಸೇರಿಸಿ ವರದಿ ನೀಡಬೇಕೆಂದು ಮಾಡಿದ್ದ ಮನವಿಯನ್ನು ಆಯೋಗ ಪರಿಗಣಿಸಿಲ್ಲ. ಜಾತಿ ಜನಗತಣತಿಯನ್ನು ಮಾಡಲಾಗಿದೆ ಎನ್ನಲಾಗಿದೆ ಎಂದರು. ರಾಜ್ಯದ ಜನಸಂಖ್ಯೆ 7 ಕೋಟಿ 20 ಲಕ್ಷವಿದ್ದು, ಸಮೀಕ್ಷೆ ನಡೆಸಿದ ಸಂದರ್ಭದಲ್ಲಿ 5 ಕೋಟಿ 98 ಲಕ್ಷ ಮಾತ್ರ ಇತ್ತು. ಉಳಿದ 1 ಕೋಟಿ 22 ಲಕ್ಷ ಜನಸಂಖ್ಯೆಯ ಸಮೀಕ್ಷೆ ಮಾಡಿಲ್ಲ ಎಂದು ಅವರು ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಧಾನ ಸಂಚಾಲಕ ಆಡಿಟರ್ ನಾಗರಾಜ್ ಯಲಚವಾಡಿ, ಸಂಚಾಲಕರಾದ ಟಿ.ವೆಂಕಟೇಶ್, ಶಿವಲಿಂಗೇಗೌಡ, ರಾಮಚಂದ್ರ ಕೆ.ಆರ್. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
|
6 |
+
ಸಾಮಾಜಿಕ, ಶೈಕ್ಷಣಿಕ ವರದಿ ಬಹಿರಂಗಗೊಳಿಸದಿರಲು ಒಕ್ಕಲಿಗರ ಸಂಘ ಆಗ್ರಹಬೆಂಗಳೂರು,ಮಾ.1- ಅವೈಜ್ಞಾನಿಕವಾದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿಯನ್ನು ರಾಜ್ಯ ಸರ್ಕಾರ ಬಹಿರಂಗಗೊಳಿಸಿ ಅನುಷ್ಠಾನಕ್ಕೆ ಮುಂದಾದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಡಿ.ಹನುಮಂತಯ್ಯ ತಿಳಿಸಿದರು. ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ 2015ರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರ���ಿ ನಿನ್ನೆ ಸಲ್ಲಿಕೆಯಾಗಿದೆ. ಆ ವರದಿಯನ್ನು ಸ್ವೀಕಾರ ಮಾಡಿರುವುದು ಸರಿಯಲ್ಲ. ಆ ವರದಿಯನ್ನು ಬಹಿರಂಗಗೊಳಿಸುವುದು ಹಾಗೂ ಅನುಷ್ಠಾನಗೊಳಿಸಲು ಸರ್ಕಾರ ಮುಂದಾದರೆ ಕಾನೂನು ಪ್ರಕಾರ ಹೋರಾಟಕ್ಕೂ ಮುಂದಾಗುತ್ತೇವೆ ಎಂದರು.
|
7 |
+
ಅವೈಜ್ಞಾನಿಕವಾಗಿದೆ ಎಂಬ ಆರೋಪಕ್ಕೆ ಒಳಗಾಗಿರುವ ಸಮೀಕ್ಷಾ ವರದಿಯ ಬಗ್ಗೆ ಸಂಘ ತೀವ್ರ ವಿರೋಧ ವ್ಯಕ್ತಪಡಿಸಲಿದೆ. ಒಂದು ವೇಳೆ ಅನುಷ್ಠಾನಕ್ಕೆ ಮುಂದಾದರೆ ನಮ್ಮ ಸಮುದಾಯದ ಮಠಾೀಧಿಶರು, ಉಪಮುಖಮಂತ್ರಿಗಳು, ಸಚಿವರು, ವಿವಿಧ ಸಂಘಸಂಸ್ಥೆಗಳೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ಹೋರಾಟದ ರೂಪುರೇಷೆಗಳನ್ನು ನಿರ್ಧಾರ ಮಾಡುತ್ತೇವೆ ಎಂದು ಅವರು ತಿಳಿಸಿದರು.
|
8 |
+
ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಅವರ ಅವಧಿಯಲ್ಲಿ ಸಿದ್ದಪಡಿಸಲಾದ ಸಾಮಾಜಿಕ, ಶೈಕ್ಷಣಿಕ ವರದಿಯು ಅವೈಜ್ಞಾನಿಕವಾಗಿದೆ ಎಂಬ ಆರೋಪವಿತ್ತು. ಅಲ್ಲದೆ 8 ವರ್ಷಗಳಷ್ಟು ಹಳೆಯ ದತ್ತಾಂಶಗಳನ್ನು ಒಳಗೊಂಡಿದೆ. ಹೀಗಾಗಿ ಆ ವರದಿಯನ್ನು ಸ್ವೀಕರಿಸಬಾರದು ಮತ್ತು ಅನುಷ್ಠಾನಕ್ಕೆ ತರಬಾರದು ಎಂದು ಸಂಘ ಆಗ್ರಹಿಸಿತ್ತು. ಆದರೂ ಮುಖ್ಯಮಂತ್ರಿಯವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗಡೆ ಅವರಿಂದ ವರದಿ ಸ್ವೀಕಾರ ಮಾಡಿದ್ದಾರೆ.
|
9 |
+
ಒಂದು ವೇಳೆ ಸಮೀಕ್ಷಾ ವರದಿ ಅಗತ್ಯವಿದ್ದರೆ ಹೊಸದಾಗಿ ವೈಜ್ಞಾನಿಕ ರೀತಿಯಲ್ಲಿ ಸಮೀಕ್ಷೆ ನಡೆಸಬೇಕೆಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿತ್ತು. ಆದರೂ ಅವೈಜ್ಞಾನಿಕವಾಗಿದೆ ಎಂಬ ಆರೋಪ ಇರುವ ವರದಿಯನ್ನು ಸ್ವೀಕರಿಸಲಾಗಿದೆ. ಸರ್ಕಾರ ಮುಂದೆ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ನೋಡಿ ಸಂಘ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ಹೇಳಿದರು.
|
eesanje/url_46_218_9.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಜಾತಿ ಜ್ವಾಲೆ : ಸರ್ಕಾರಕ್ಕೆ ಶ್ಯಾಮನೂರು ಶಿವಶಂಕರಪ್ಪ ಗಂಭೀರ ಎಚ್ಚರಿಕೆ
|
2 |
+
ಬೆಂಗಳೂರು,ಮಾ.1- ಒಂಬತ್ತು ವರ್ಷಗಳಷ್ಟು ಹಳೆಯದಾದ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ತಿರಸ್ಕರಿಸಬೇಕು ಎಂಬುದು ಎಲ್ಲರ ಅಭಿಪ್ರಾಯವಾಗಿದೆ. ಒಂದು ವೇಳೆ ಸರ್ಕಾರ ಅದನ್ನು ಅಂಗೀಕರಿಸಲು ಮುಂದಾದರೆ ನಾವು ಸುಮ್ಮನೇ ಕೂರುವುದಿಲ್ಲ. ಏನು ಮಾಡಬೇಕು ಎಂಬ ನಿರ್ಧಾರ ಮಾಡುತ್ತೇವೆ ಎಂದು ಆಡಳಿತ ಪಕ್ಷವಾಗಿರುವ ಕಾಂಗ್ರೆಸ್ನ ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಗಂಭೀರ ಎಚ್ಚರಿಕೆ ನೀಡಿದ್ದಾರೆ.
|
3 |
+
ನಗರದಲ್ಲಿಂದು ದಿಢೀರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗ್ಡೆ ನಿನ್ನೆ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಅದರಲ್ಲಿ ಲಿಂಗಾಯತ-ವೀರಶೈವ, ಒಕ್ಕಲಿಗರು, ಬ್ರಾಹ್ಮಣರು ಸೇರಿ 1.82 ಲಕ್ಷ ಜನಸಂಖ್ಯೆ ಹೊಂದಿದ್ದಾರೆ ಎಂದು ತಿಳಿಸಲಾಗಿದೆ. ಉಳಿದವರು 3 ಕೋಟಿ ಇದ್ದಾರೆ ಎಂಬ ಮಾಹಿತಿ ಇದೆ. ಆದರೆ ಲಿಂಗಾಯತ-ವೀರಶೈವ ಸಮುದಾಯದ ಉಪಜಾತಿಗಳನ್ನು ಒಳಗೊಂಡು ಒಟ್ಟು ಜನಸಂಖ್ಯೆ 2 ಕೋಟಿಗೂ ಹೆಚ್ಚಿದೆ ಎಂದು ಹೇಳಿದರು.
|
4 |
+
ಒಂಬತ್ತು ವರ್ಷಗಳಷ್ಟು ಹಳೆಯದಾದ ವರದಿಯನ್ನು ಈಗ ತಂದಿದ್ದಾರೆ. ಸಮೀಕ್ಷೆ ಮಾಡಿದ್ದು ಕಾಂತರಾಜು, ಸರ್ಕಾರಕ್ಕೆ ವರದಿ ನೀಡಿರುವುದು ಹೆಗ್ಡೆಯವರು. ಇದು ಯಾರ ವರದಿ? ಎಂದು ಬಿಜೆಪಿಯ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿರುವ ಅಭಿಪ್ರಾಯ ಸರಿಯಾಗಿದೆ ಎಂದು ಶ್ಯಾಮನೂರು ಶಿವಶಂಕರಪ್ಪ ಬೆಂಬಲ ವ್ಯಕ್ತಪಡಿಸಿದರು.
|
5 |
+
ನಮ್ಮ ಸಮುದಾಯದ ಜನಸಂಖ್ಯೆ ಬಗ್ಗೆ ನಮಗೆ ಸ್ಪಷ್ಟತೆ ಇದೆ. ಹೀಗಾಗಿ ಹಿಂದುಳಿದ ವರ್ಗಗಳ ಆಯೋಗದ ವರದಿ ಅವೈಜ್ಞಾನಿಕ ಎಂದು ನಾವು ಸ್ಪಷ್ಟವಾಗಿ ಹೇಳುತ್ತಿದ್ದೇವೆ. ಒಂದು ವೇಳೆ ಸರ್ಕಾರ ನಮ್ಮ ಮಾತನ್ನು ಪರಿಗಣಿಸದೇ ಇದ್ದರೆ ನಾವು ಸುಮ್ಮನೇ ಕೂರುವುದಿಲ್ಲ. ಅಗತ್ಯ ಕ್ರಮ ಕೈಗೊಂಡು ವರದಿ ಅವೈಜ್ಞಾನಿಕ ಎಂಬುದನ್ನು ಸಾಬೀತುಪಡಿಸುತ್ತೇವೆ ಎಂದು ಸವಾಲು ಹಾಕಿದರು. ಸಮುದಾಯದಿಂದ ಖಾಸಗಿಯಾಗಿ ಸಮೀಕ್ಷೆ ನಡೆಸಬೇಕೆಂಬ ಚಿಂತನೆ ಇದೆ. ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡುತ್ತೇವೆ. ವೈಜ್ಞಾನಿಕವಾಗಿ ಮತ್ತೊಮ್ಮೆ ಸಮೀಕ್ಷೆ ನಡೆಸುವುದಾದರೆ ಒಪ್ಪಿಕೊಳ್ಳುತ್ತೇವೆ ಎಂದರು.
|
6 |
+
ವರದಿಯನ್ನು ಸ್ವೀಕರಿಸಿರುವುದು ತಪ್ಪು ಎಂದು ನಾನು ಹೇಳುವುದಿಲ್ಲ. ಅದನ್ನು ಸಂಪುಟದಲ್ಲೂ ಚರ್ಚಿಸಬೇಕಾಗುತ್ತದೆ. ಆದರೆ ಅನುಷ್ಠಾನಕ್ಕೆ ಮುಂದಾದರೆ ವಿರೋಧ ವ್ಯಕ್ತಪಡಿಸುತ್ತೇನೆ. ದಲಿತರ ಸಂಖ್ಯೆ ಹೆಚ್ಚಿದೆ ಎಂದು ವರದಿಯಲ್ಲಿ ನಮೂದಿಸಿರುವುದಕ್ಕೆ ನಾನು ಪ್ರತಿಕ್ರಿಯಿಸುವುದಿಲ್ಲ. ಆದರೆ ನಮ್ಮ ಸಮುದಾಯ ಕಡಿಮೆ ಇದೆ ಎಂದು ಹೇಳುತ್ತಿರುವುದನ್ನು ಒಪ್ಪುವುದಿಲ್ಲ. ಅವರು ಹೇಳುತ್ತಿರುವುದಕ್ಕಿಂತಲೂ ನಮ್ಮ ಸಂಖ್ಯೆ ದ್ವಿಗುಣವಾಗಿದೆ. ಸಮೀಕ್ಷೆಯ ಪುನರ್ ಪರಿಶೀಲನಾ ಸಮಿತಿ ರಚಿಸುವಂತ���ಯೂ ಸರ್ಕಾರವನ್ನು ಆಗ್ರಹಿಸುತ್ತೇವೆ ಎಂದರು.
|
7 |
+
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಅಭಿಪ್ರಾಯಗಳಿಗೆ ಮನ್ನಣೆ ನೀಡುವುದಿಲ್ಲ ಎಂದು ಒಂದು ಹಂತದಲ್ಲಿ ಆಕ್ಷೇಪ ವ್ಯಕ್ತಪಡಿಸಿದ ಶ್ಯಾಮನೂರು ಶಿವಶಂಕರಪ್ಪ, ವರದಿಯ ವಿರುದ್ಧ ಪ್ರತಿಭಟನೆ ನಡೆಸುತ್ತೀರಾ ಎಂಬ ಪ್ರಶ್ನೆಗೆ, ಯಾಕೆ ಜೈಲಿಗೆ ಹೋಗಬೇಕಾ ಎಂದು ಮರು ಪ್ರಶ್ನಿಸಿದರು. ಈ ಹಿಂದೆ ಲಿಂಗಾಯತ-ವೀರಶೈವ ಪ್ರತ್ಯೇಕ ಧರ್ಮದ ವಿಚಾರವಾಗಿ ವಿವಾದಕ್ಕೀಡಾಗಿ ಕಾಂಗ್ರೆಸ್ ಪೆಟ್ಟು ತಿಂದಿದೆ. ಈಗ ಜಾತಿ ಸಮೀಕ್ಷಾ ವರದಿಯಿಂದ ಮತ್ತಷ್ಟು ಸಮಸ್ಯೆ ಎದುರಿಸಲಿದೆಯೇ ಎಂಬ ಪ್ರಶ್ನೆಗೆ, ನಕ್ಕು ಮೌನಕ್ಕೆ ಶರಣಾದರು. ಪದೇಪದೇ ಪ್ರಶ್ನೆಗಳು ಎದುರಾದಾಗ ಸದ್ಯಕ್ಕೆ ನಾನು ಈ ಪ್ರಶ್ನೆಗೆ ಉತ್ತರ ಹೇಳುವುದಿಲ್ಲ ಎಂದು ಜಾರಿಕೊಂಡರು.
|
8 |
+
ಆಯೋಗದ ವರದಿಯನ್ನು ಬಹಿರಂಗಗೊಳಿಸುವ ಮೂಲಕ ಜಾತಿ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆಗಳಿವೆ. ಜಾತಿಜಾತಿಗಳನ್ನು ಛೂ ಬಿಡುತ್ತಾರೆ ಎಂದು ಶ್ಯಾಮನೂರು ಶಿವಶಂಕರಪ್ಪ ತಮ್ಮದೇ ಪಕ್ಷದ ನಾಯಕರ ವಿರುದ್ಧ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು. ಉದ್ದೇಶಪೂರ್ವಕವಾಗಿಯೇ ಜಾತಿ ಜನಗಣತಿಯ ವರದಿಯನ್ನು ಕೆಣಕಲಾಗಿದೆ ಎಂದು ಆಕ್ಷೇಪಿಸಿದರು. ದಾವಣಗೆರೆ ಲೋಕಸಭಾ ಚುನಾವಣೆಗೆ ಯಾರನ್ನು ಕಣಕ್ಕಿಳಿಸಬೇಕು ಎಂಬುದು ನಿಮ್ಮ ಅಭಿಪ್ರಾಯ ಎಂದಾಗ ಇದರ ಬಗ್ಗೆ ನನಗೆ ಮಾಹಿತಿ ಇಲ್ಲ. ಜಿಲ್ಲಾ ಉಸ್ತುವಾರಿ ಸಚಿವರಿದ್ದಾರೆ ಅವರನ್ನು ಕೇಳಿ ಎಂದು ತಮ್ಮ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ್ರತ್ತ ಬೊಟ್ಟು ಮಾಡಿದರು.
|
eesanje/url_46_219_1.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಎಫ್ಎಸ್ಎಲ್ ವರದಿ ಸರ್ಕಾರದ ಕೈ ಸೇರಿಲ್ಲ : ಜಿ.ಪರಮೇಶ್ವರ್
|
2 |
+
ಬೆಂಗಳೂರು,ಮಾ.1- ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈವರೆಗೂ ಎಫ್ಎಸ್ಎಲ್ ವರದಿ ಸರ್ಕಾರದ ಕೈ ಸೇರಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೂ ವರದಿ ಬರುವುದು ಬಾಕಿ ಇದೆ. ಒಂದು ಚಾನೆಲ್ನಲ್ಲಿ ಪ್ರಸಾರವಾದ ದೃಶ್ಯ ಅಥವಾ ಒಂದು ಕ್ಲಿಪ್ಪಿಂಗ್ಗೆ ಸಂಬಂಧಿಸಿದಂತೆ ತನಿಖೆ ಸೀಮಿತವಾಗುವುದಿಲ್ಲ. ಇರುವ ಎಲ್ಲಾ ದೃಶ್ಯಗಳನ್ನೂ ಪಡೆದುಕೊಂಡು ಎಫ್ಎಸ್ಎಲ್ಗೆ ಕಳುಹಿಸಿದ್ದೇವೆ. ಆದಷ್ಟು ಬೇಗ ವರದಿ ನೀಡುವಂತೆ ಪ್ರಯೋಗಾಲಯದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ಬಳಿಕ ಅದರ ಪ್ರಕಾರ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.
|
3 |
+
ಈಗಾಗಲೇ 7 ಜನರನ್ನು ಕರೆಸಿ, ಹೇಳಿಕೆ ಪಡೆದು, ಧ್ವನಿ ಮಾದರಿಯನ್ನು ಸಂಗ್ರಹಿಸಿದ್ದೇವೆ. ಪ್ರಯೋಗಾಲಯದ ವರದಿ ಬಂದ ಬಳಿಕ ಧ್ವನಿ ಮಾದರಿಗಳನ್ನು ಹೋಲಿಕೆ ಮಾಡಲಾಗುತ್ತದೆ. ಶಂಕೆ ಇರುವವರ ಧ್ವನಿ ಮಾದರಿಗಳನ್ನೂ ಸಂಗ್ರಹಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.
|
4 |
+
ಸಂಪುಟ ಸಭೆಯಲ್ಲಿ ತೀರ್ಮಾನ :ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ವರದಿಗೆ ಸಂಬಂಧಿಸಿದಂತೆ ಸಂಪುಟ ತೆಗೆದುಕೊಳ್ಳುವ ನಿರ್ಧಾರದ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಯವರು ನಿನ್ನೆಯ ಸಭೆಯಲ್ಲಿ ತಿಳಿಸಿದ್ದಾರೆ.ಜಯಪ್ರಕಾಶ್ ಹೆಗ್ಡೆ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ನಿನ್ನೆ ವರದಿ ನೀಡಿದೆ. ಅದರ ಕುರಿತು ನಿನ್ನೆ ಸಂಪುಟದಲ್ಲಿ ಔಪಚಾರಿಕ ಚರ್ಚೆ ನಡೆಸಲಾಯಿತು. ಮುಂದಿನ ದಿನಗಳಲ್ಲಿ ಸಚಿವ ಸಂಪುಟ ಸಭೆಯಲ್ಲಿ ವರದಿಯ ಕುರಿತು ಸವಿಸ್ತಾರವಾದ ಚರ್ಚೆ ನಡೆಸಲಾಗುವುದು.
|
5 |
+
ವರದಿಯನ್ನು ಉಭಯ ಸದನಗಳಲ್ಲಿ ಮಂಡಿಸಬೇಕೇ ಅಥವಾ ಸರ್ಕಾರವೇ ನೇರವಾಗಿಯೇ ವರದಿಯನ್ನು ಬಹಿರಂಗ ಪಡಿಸಬೇಕೇ ಎಂಬುದನ್ನು ಸಂಪುಟ ನಿರ್ಧರಿಸಬೇಕಾಗುತ್ತದೆ. ಎಲ್ಲಾ ಸಚಿವರು ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧರಾಗಿರುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ ಎಂದು ಪರಮೇಶ್ವರ್ ತಿಳಿಸಿದರು.
|
6 |
+
ದತ್ತಾಂಶ ಹಾಗೂ ಶಿಫಾರಸುಗಳು ಅಧಿಕೃತವಾಗಿ ಹೊರಗೆ ಬರುವವರೆಗೂ ಏನನ್ನೂ ಹೇಳಲು ಸಾಧ್ಯವಿಲ್ಲ. ಸದ್ಯಕ್ಕೆ ಏನೇ ಚರ್ಚೆಗಳಾದರೂ ಅದು ವದಂತಿ ಮಾತ್ರ. ಆ ಜಾತಿ ಜನಸಂಖ್ಯೆ ಜಾಸ್ತಿ ಇದೆ, ಈ ಜಾತಿ ಜನಸಂಖ್ಯೆ ಜಾಸ್ತಿ ಇದೆ ಎಂಬ ಕುರಿತು ಚರ್ಚೆಗಳು ನಡೆಯುತ್ತಿವೆ. ವರದಿ ತೆರೆದು ನೋಡಿದ ಬಳಿಕವಷ್ಟೇ ಸತ್ಯಾಂಶ ಗೊತ್ತಾಗಲಿದೆ ಎಂದರು.
|
7 |
+
ಕಾಂಗ್ರೆಸ್ನ ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಸೇರಿದಂತೆ ಹಲವರಿಗೆ ನಮ್ಮ ಸಮುದಾಯದ ಸಂಖ್ಯೆ ಕಡಿಮೆ ಇದೆ ಎಂಬ ಆತಂಕ ಇರುವಂತಿದೆ. ಒಂದು ವೇಳೆ ಜನಸಂಖ್ಯೆ ಕಡಿಮೆ ಎಂದಾದರೆ ರಾಜಕೀಯವಾಗಿ ತೊಂದರೆಯಾಗಬಹುದು ಎಂಬ ಅನುಮಾ���ಗಳೂ ಇವೆ. ಆದರೆ ವರದಿ ಬಹಿರಂಗಗೊಂಡ ನಂತರ ಅದಕ್ಕೆ ಅಕೃತ ಉತ್ತರ ದೊರೆಯಲಿದೆ. ಆವರೆಗೂ ನನ್ನನ್ನೂ ಸೇರಿದಂತೆ ಹಲವರು ವದಂತಿಗಳನ್ನು ಸೃಷ್ಟಿಸುತ್ತಲೇ ಇರುತ್ತಾರೆ ಎಂದು ತಿಳಿಸಿದರು.
|
8 |
+
ನಿನ್ನೆ ಸರ್ಕಾರ ಸ್ವೀಕರಿಸಿರುವ ವರದಿ ಕಾಂತರಾಜು ಅಥವಾ ಜಯಪ್ರಕಾಶ್ ಹೆಗ್ಡೆ ಅವರ ವರದಿಯೆಂದಾಗುವುದಿಲ್ಲ. ಅದು ಹಿಂದುಳಿದ ವರ್ಗಗಳ ಆಯೋಗದ ವರದಿ ಮಾತ್ರ ಎಂದು ಸ್ಪಷ್ಟಪಡಿಸಿದರು.ನಿನ್ನೆ ನಿಧನರಾದ ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ ಅವರ ಅಂತ್ಯಕ್ರಿಯೆಗೆ ಛಲವಾದಿ ಮಹಾಸಭಾದ ಜಾಗದಲ್ಲಿ ಸ್ಥಳಾವಕಾಶ ನೀಡಬೇಕು ಎಂಬ ಬೇಡಿಕೆಯಿದೆ. ನಾನೂ ಈ ಕುರಿತು ಮುಖ್ಯಮಂತ್ರಿಯವರ ಜೊತೆ ಚರ್ಚೆ ನಡೆಸಿದ್ದೇನೆ. ಇಂದು ಬೆಳಿಗ್ಗೆ ಮುಖ್ಯಮಂತ್ರಿಯವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.
|
eesanje/url_46_219_10.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಸಿಎಂ ಭೇಟಿ ಮಾಡಿದ ಜಯಪ್ರಕಾಶ್ ಹೆಗ್ಡೆ, ಹಿಂದುಳಿದ ವರ್ಗಗಳ ಆಯೋಗದ ವರದಿ ಸಲ್ಲಿಕೆ
|
2 |
+
ಬೆಂಗಳೂರು,ಫೆ.29- ಕಳೆದ 8 ವರ್ಷಗಳ ಹಗ್ಗಜಗ್ಗಾಟದ ಬಳಿಕ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಸರ್ಕಾರ ಕೊನೆಗೂ ಸ್ವೀಕರಿಸಿದೆ. ಹಲವು ಪ್ರಬಲ ಸಮುದಾಯಗಳ ತೀವ್ರ ವಿರೋಧದ ನಡುವೆಯೂ ಲೋಕಸಭೆ ಚುನಾವಣೆ ಹಂತದಲ್ಲೇ ವರದಿ ಸ್ವೀಕರಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜಕೀಯ ಸವಾಲಿನ ಸನ್ನಿವೇಶಕ್ಕೆ ಮುಖಾಮುಖಿಯಾಗಿದೆ.
|
3 |
+
2015-16 ರಲ್ಲಿ ಆಗಲೂ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಸರ್ಕಾರ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಅವರ ನೇತೃತ್ವದಲ್ಲಿ 162 ಕೋಟಿ ರೂ. ವೆಚ್ಚ ಮಾಡಿ ಮನೆಮನೆಗೆ ತೆರಳಿ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸಿತ್ತು. ಅದರಲ್ಲಿ ಸುಮಾರು 70 ಕ್ಕೂ ಹೆಚ್ಚು ಪ್ರಶ್ನೆಗಳಿಗೆ ಮಾಹಿತಿಯನ್ನು ಕಲೆ ಹಾಕಲಾಗಿತ್ತು.ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿ ಆಡುಮಾತಿನಲ್ಲಿ ಜಾತಿಜನಗಣತಿ ಎಂದು ಪ್ರಚಲಿತವಾಗಿತ್ತು.
|
4 |
+
ಸಿದ್ದರಾಮಯ್ಯನವರ ಸರ್ಕಾರದ ಕೊನೆಯ ಅವಧಿಯಲ್ಲಿ ವರದಿ ಸಿದ್ಧವಾಗಿದ್ದರೂ ಅದನ್ನು ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ನಂತರ ನೀತಿ ಸಂಹಿತೆ ಎದುರಾಗಿತ್ತು. ಅತಂತ್ರ ವಿಧಾನಸಭೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಸರ್ಕಾರ ರಚನೆಯಾಗಿತ್ತು. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಅವರ ಒಂದು ವರ್ಷ ಏಳು ತಿಂಗಳ ಅವಧಿಯಲ್ಲಿ ವರದಿ ಸ್ವೀಕಾರಗೊಳ್ಳಲಿಲ್ಲ.
|
5 |
+
ನಂತರ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರು ಜೈಪ್ರಕಾಶ್ ಹೆಗ್ಡೆ ಅವರನ್ನು ಆಯೋಗದ ಅಧ್ಯಕ್ಷರನ್ನಾಗಿ ಮಾಡಿದ್ದರು. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲೂ ವರದಿ ಸಲ್ಲಿಕೆಯಾಗಲಿಲ್ಲ.ವಿಧಾನಸಭೆ ಚುನಾವಣೆ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ವರದಿಯನ್ನು ಸ್ವೀಕರಿಸುವುದಾಗಿ ಹೇಳುತ್ತಿತ್ತು. ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆಯವರ ಅಕಾರವ ಡಿಸೆಂಬರ್ಗೆ ಮುಕ್ತಾಯಗೊಂಡರೂ ಕೂಡ 2 ಬಾರಿ ಅಕಾರ ಅವ ವಿಸ್ತರಣೆ ಮಾಡಲಾಗಿತ್ತು. ಇಂದಿಗೆ ಆ ಅವ ಮುಕ್ತಾಯಗೊಳ್ಳುತ್ತಿರುವುದರಿಂದ ವರದಿ ಸಲ್ಲಿಸುವುದು ಅನಿವಾರ್ಯವಾಗಿತ್ತು. ಹೀಗಾಗಿ ಜಯಪ್ರಕಾಶ್ ಹೆಗ್ಡೆ ಮುಚ್ಚಿದ ಲಕೋಟೆಯಲ್ಲಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದ್ದಾರೆ.
|
6 |
+
ಮೂಲಗಳ ಪ್ರಕಾರ ಕಾಂತರಾಜು ವರದಿಯ ದತ್ತಾಂಶಗಳನ್ನು ಆಧಾರವಾಗಿಟ್ಟುಕೊಂಡು ಜಯಪ್ರಕಾಶ್ ಹೆಗ್ಡೆ ಪ್ರತ್ಯೇಕ ವರದಿ ಸಿದ್ಧಪಡಿಸಿದ್ದಾರೆ. ಪ್ರಬಲ ಸಮುದಾಯಗಳು ತಮ್ಮ ಜನಸಂಖ್ಯೆಯನ್ನು ಕಡಿಮೆ ತೋರಿಸಲಾಗಿದೆ ಎಂದು ವಿರೋಧ ವ್ಯಕ್ತಪಡಿಸುತ್ತಿದ್ದವು. ಒಕ್ಕಲಿಗ ಸಮುದಾಯ ವರದಿಯನ್ನು ಸ್ವೀಕರಿಸಬಾರದು. ಹೊಸದಾಗಿ ಸಮೀಕ್ಷೆ ನಡೆಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟಿತ್ತು. ಅದಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿ ಸೇರಿದಂ���ೆ ಶಾಸಕ ಚೆಲುವರಾಯಸ್ವಾಮಿ ಸೇರಿದಂತೆ ಹಲವು ಸಚಿವರು ಸಹಿ ಹಾಕಿದ್ದರು.
|
7 |
+
ವೀರಶೈವ ಸಮುದಾಯವು ವರದಿಯನ್ನು ವಿರೋಸಿ ಕಾಂಗ್ರೆಸ್ ಶಾಸಕ ಶ್ಯಾಮನೂರು ಶಿವಶಂಕರಪ್ಪ ಅವರ ನೇತೃತ್ವದಲ್ಲಿ ಮನವಿ ನೀಡಿತ್ತು. ವರದಿಗೆ ಸಂಪೂರ್ಣ ವಿರೋಧ ವ್ಯಕ್ತಪಡಿಸುವ ಬದಲಾಗಿ ವೀರಶೈವ ಲಿಂಗಾಯತ ಸಮುದಾಯದ ಉಪಪಂಗಡಗಳನ್ನು ಏಕೀಕೃತ ನಮೂನೆಯಲ್ಲಿ ಪರಿಗಣನೆಗೆ ತೆಗೆದುಕೊಳ್ಳಬೇಕೆಂಬ ಮನವಿ ಮಾಡಲಾಗಿತ್ತು.ಜಯಪ್ರಕಾಶ್ ಹೆಗ್ಡೆ ಆಯೋಗ ಸಕಾರಾತ್ಮಕವಾಗಿ ಪರಿಗಣಿಸಿದೆ ಎಂದು ತಿಳಿದುಬಂದಿದೆ.
|
8 |
+
ಕಾಂತರಾಜು ಆಯೋಗದ ಶಿಫಾರಸ್ಸಿನ ಮೂಲಪ್ರತಿ ನಾಪತ್ತೆಯಾಗಿದೆ ಎಂಬ ದೂರುಗಳಿವೆ. ಜಯಪ್ರಕಾಶ್ ಹೆಗ್ಡೆ ಸಮೀಕ್ಷೆಯ ದತ್ತಾಂಶಗಳನ್ನೇ ಆಧಾರವಾಗಿಟ್ಟುಕೊಂಡು ಮೀಸಲಾತಿ ಪರಿಷ್ಕರಣೆ, ಸರ್ಕಾರಿ ಸೌಲಭ್ಯಗಳ ಹಂಚಿಕೆ ಸೇರಿದಂತೆ ಹಲವು ವಿಚಾರಗಳಲ್ಲಿ ಗಮನಾರ್ಹವಾದ ಶಿಫಾರಸ್ಸು ಮಾಡಿದೆ ಎಂದು ಹೇಳಲಾಗಿದೆ. ಆಯೋಗದ ವರದಿ ಇಂದು ಸಂಜೆ ನಡೆಯುವ ಸಚಿವ ಸಂಪುಟದಲ್ಲಿ ಪ್ರಸ್ತಾಪವಾಗುವ ಸಾಧ್ಯತೆಗಳಿವೆ.
|
eesanje/url_46_219_11.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸಿಎಂ ಬಜೆಟ್ ಉತ್ತರದ ವೇಳೆ ವಿಪಕ್ಷ ಧರಣಿ, ಸಭಾತ್ಯಾಗ
|
2 |
+
ಬೆಂಗಳೂರು,ಫೆ.29- ವಿಧಾನಸೌಧದಲ್ಲಿ ಪಾಕಿ ಸ್ತಾನದ ಪರ ಘೋಷಣೆ ಕೂಗಿದವರನ್ನು ಬಂಸಬೇಕು. ಆ ಘಟನೆಯ ನೈತಿಕ ಹೊಣೆ ಹೊತ್ತು ಸರ್ಕಾರ ರಾಜೀನಾಮೆ ನೀಡಬೇಕೆಂದು ನಿನ್ನೆ ವಿಧಾನಸಭೆಯಲ್ಲಿ ನಡೆಸಿದ ಪ್ರತಿಭಟನೆಯನ್ನು ಇಂದು ಮುಂದುವರೆಸಿದ ಬಿಜೆಪಿ ಶಾಸಕರು, ಕಾಗಪತ್ರಗಳನ್ನು ಹರಿದು ತೂರಿ, ಸರ್ಕಾರದ ವಿರುದ್ಧ ಕೆಲಕಾಲ ಘೋಷಣೆ ಕೂಗಿ ಸಭಾತ್ಯಾಗ ಮಾಡಿದರು.
|
3 |
+
ಇಂದು ಬೆಳಗ್ಗೆ ಸದನ ಸಮಾವೇಶಗೊಂಡಾಗ ಬಿಜೆಪಿಯ ಶಾಸಕರು ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಯಲ್ಲಿ ಧರಣಿ ಮುಂದುವರೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಇಡೀ ಪ್ರಪಂಚವೇ ನಮ್ಮ ಕಡೆ ನೋಡುತ್ತಿದೆ. ಆದರೂ ದೇಶದ್ರೋಹಿಗಳ ಮೇಲೆ ಯಾವ ಕ್ರಮವನ್ನೂ ಕೈಗೊಂಡಿಲ್ಲ. ಯಾರನ್ನೂ ಬಂಧಿಸಿಲ್ಲ. ಸರ್ಕಾರ ಮೌನವಾಗಿದೆ. ಹೀಗಾದರೆ ರಾಜ್ಯದ ಜನತೆಗೆ ಯಾವ ಸಂದೇಶ ರವಾನೆಯಾಗುತ್ತದೆ. ರಕ್ಷಣೆ ಕೊಡಲಿ ಎಂಬ ಉದ್ದೇಶದಿಂದ ನಮ್ಮನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ. ವಿಧಾನಸೌಧ ಉಗ್ರರ ತಾಣವಾಗಲು ಬಿಡಬೇಕಾ ಎಂದು ಆಕ್ರೋಶ ವ್ಯಕ್ತಪಡಿಸಿದರು.
|
4 |
+
ಸಭಾಧ್ಯಕ್ಷ ಯು.ಟಿ.ಖಾದರ್ ಮಾತನಾಡಿ, ಈ ವಿಚಾರದ ಬಗ್ಗೆ ನಿನ್ನೆ ಚರ್ಚೆಯಾಗಿದೆ. ಸರ್ಕಾರವು ಉತ್ತರ ಕೊಟ್ಟಿದೆ. ಘಟನೆ ಬಗ್ಗೆ ತನಿಖೆ ಕೈಗೊಂಡಿರುವುದಾಗಿ ಹೇಳಿದೆ. ಬಜೆಟ್ ಮೇಲಿನ ಚರ್ಚೆಗೆ ಮುಖ್ಯಮಂತ್ರಿಗಳು ಉತ್ತರ ಕೊಡುತ್ತಾರೆ. ಧರಣಿ ಕೈಬಿಟ್ಟು ಸುಗಮ ಕಲಾಪಕ್ಕೆ ಸಹಕಾರ ಕೊಡಬೇಕು ಎಂದರು. ಆಗ ಆರ್.ಅಶೋಕ್ ಅವರು, ಕೋಲಾರದಲ್ಲಿ ಈ ಹಿಂದೆ ದಲಿತರನ್ನು ಸುಟ್ಟು ಹಾಕಿದರು. ಆಗ ಗೃಹಸಚಿವರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಸಭೆಯಲ್ಲಿ ಕಣ್ಣೀರು ಹಾಕಿದರು. ಅದು ಅವರ ಕಳಕಳಿ. ಆದರೆ ಈ ಸರ್ಕಾರಕ್ಕೆ ಯಾವುದೇ ಜವಾಬ್ದಾರಿ ಇಲ್ಲ. ನೈತಿಕ ಹೊಣೆ ಹೊತ್ತಿಲ್ಲ ಎಂದು ಆರೋಪಿಸಿದರು.
|
5 |
+
ಏಳು ಜನರ ಹೇಳಿಕೆ: ಮಧ್ಯಪ್ರವೇಶಿಸಿದ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ವಿರೋಧ ಪಕ್ಷದ ನಾಯಕರು ಪ್ರಸ್ತಾಪಿಸಿದ ವಿಚಾರದ ಬಗ್ಗೆ ನಿನ್ನೆ ಉತ್ತರ ನೀಡಲಾಗಿದೆ. ಆ ಘಟನೆಗೆ ಸಂಬಂಧಿಸಿದಂತೆ ಏಳು ಜನರನ್ನು ಕರೆದು ವಿಚಾರ ಮಾಡಿ ಅವರ ಹೇಳಿಕೆ ಪಡೆಯಲಾಗಿದೆ. ತನಿಖೆ ಮುಂದುವರೆದಿದೆ. ಒಂದೊಂದು ಮಾಧ್ಯಮ ಒಂದೊಂದು ರೀತಿ ಹೇಳಿವೆ. ಅದರ ನೈಜ್ಯತೆ ತಾಂತ್ರಿಕವಾಗಿ ತಿಳಿಯಲು ವಿವಿಜ್ಞಾನ ಪ್ರಯೋಗಾಲಯದ ವರದಿ ಕೇಳಲಾಗಿದೆ. ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ.
|
6 |
+
ಒಂದು ವೇಳೆ ಆರೋಪಿಸಿದಂತೆ ಪಾಕಿಸ್ತಾನದ ಪರ ಘೋಷಣ ಕೂಗಿದ್ದೇ ಆದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದರು.ಆದರೂ ತೃಪ್ತರಾಗದ ಬಿಜೆಪಿ ಶಾಸಕರು ಧರಣಿ ಮುಂದುವರೆಸಿ ಘೋಷಣೆ ಕೂಗಿ ಗದ್ದಲ ಎಬ್ಬಿಸಿದರು. ಆಗ ಮಾತನಾಡಿದ ಸಭಾಧ್ಯಕ್ಷರು, ಬಡವರು ಹಸಿದ ಹೊಟ್ಟೆಯಲ್ಲೇ ಇರಬೇಕೆ. ಜನಸಾಮಾನ್ಯರ ವಿಚಾರಗ���ು ಚರ್ಚೆಯಾಗಬೇಕಲ್ಲವೇ ಎಂದು ಹೇಳಿದರು. ಅದಕ್ಕೂ ಕಿವಿಗೊಡದ ಪ್ರತಿಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
|
7 |
+
ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.ಮತ್ತೆ ಮಾತನಾಡಿದ ಅಶೋಕ್, ಘೋಷಣೆ ಕೂಗಿದ ಘಟನೆಗೆ ಸಂಬಂಧಿಸಿದಂತೆ ಕರೆದು ಮಾತನಾಡಿ ಕಳುಹಿಸಿದ್ದಾರೆ. ಅದರ ಬದಲು ಬಿರಿಯಾನಿ ಕೊಟ್ಟು ಶಾಲು ಹೊದಿಸಿ ಸನ್ಮಾನ ಮಾಡಬೇಕಿತ್ತು ಎಂದು ವ್ಯಂಗ್ಯವಾಡಿದರು.
|
8 |
+
ಅವರ ಮೇಲೆ ದೇಶದ್ರೋಹದ ಕೇಸ್ ಹಾಕಿಲ್ಲ. ಅವರನ್ನು ಬಂಧಿಸಿಲ್ಲ. ಸರ್ಕಾರಕ್ಕೆ ಯಾವ ನೈತಿಕತೆ ಇದೆ. ದೇಶ ಉಳಿಯಬೇಲ್ಲವೇ ಎಂದು ಆಕ್ಷೇಪಿಸಿದರು. ಮುಖ್ಯಮಂತ್ರಿಗಳ ಮನವಿಗೂ ಬಿಜೆಪಿ ಸದಸ್ಯರು ಮಣಿಯದಿದ್ದಾಗ ಸಭಾಧ್ಯಕ್ಷರು ಉತ್ತರ ನೀಡಲು ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು. ಒಂದೆಡೆ ಮುಖ್ಯಮಂತ್ರಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುತ್ತಿದ್ದರೆ ಮತ್ತೊಂದೆಡೆ ಬಿಜೆಪಿ ಶಾಸಕರು ಧರಣಿ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕಾಗದಪತ್ರಗಳನ್ನು ಹರಿದು ಸಭಾಧ್ಯಕ್ಷರ ಪೀಠದತ್ತ ತೂರಿ ಗದ್ದಲವನ್ನುಂಟು ಮಾಡಿದರು.
|
9 |
+
ಜೆಡಿಎಸ್ ಸದಸ್ಯರು ಕೂಡ ಧರಣಿಯಲ್ಲಿ ಭಾಗಿಯಾಗಿ ಬಿಜೆಪಿ ಶಾಸಕರ ಪ್ರತಿಭಟನೆಗೆ ಬೆಂಬಲ ನೀಡಿದರು. ಕೆಲಕಾಲ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಗದ್ದಲವೆಬ್ಬಿಸಿದರು. ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಚಲಿತರಾಗದೆ ಉತ್ತರವನ್ನು ಮುಂದುವರೆಸಿದರು. ಇದರಿಂದ ತೀವ್ರ ಅಸಮಾಧಾನಗೊಂಡ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು. ಜೆಡಿಎಸ್ ಸದಸ್ಯರು ಕೂಡ ಇವರನ್ನು ಹಿಂಬಾಲಿಸಿದರು.
|
eesanje/url_46_219_12.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯದಲ್ಲಿ ತಕ್ಷಣವೇ ರಾಷ್ಟ್ರಪತಿ ಆಡಳಿತ ಹೇರುವಂತೆ ರಾಜ್ಯಪಾಲರಿಗೆ ಬಿಜೆಪಿ ದೂರು
|
2 |
+
ಬೆಂಗಳೂರು,ಫೆ.29- ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿರುವ ಹಿನ್ನೆಲೆಯಲ್ಲಿ ತಕ್ಷಣವೇ ಸರ್ಕಾರವನ್ನು ವಜಾ ಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕೆಂದು ಪ್ರತಿಪಕ್ಷ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿದೆ. ರಾಜ್ಯಪಾಲ ಥಾವರ್ಚಂದ್ ಗೆಲ್ಹೋಟ್ ಅವರು ಪ್ರವಾಸದಲ್ಲಿದ್ದ ಕಾರಣ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ, ಉಪನಾಯಕರಾದ ಅರವಿಂದ್ ಬೆಲ್ಲದ್, ಸುನೀಲ್ ವಲ್ಯಾಪುರೆ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಎರಡೂ ಸದನಗಳ ಶಾಸಕರು ರಾಜ್ಯಪಾಲರ ಕಾರ್ಯದರ್ಶಿಗೆ ದೂರು ನೀಡಿದರು.
|
3 |
+
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸರ್ಕಾರವನ್ನು ವಜಾ ಮಾಡಿ ಎಂದು ಮನವಿ ನೀಡಿದ್ದೇವೆ. ಕಾಂಗ್ರೆಸ್ ಸರ್ಕಾರದಲ್ಲಿ ಭಯೋತ್ಪಾದನಾ ಚಟುವಟಿಕೆ ಆರಂಭವಾಗಿದೆ. ಗಲಾಟೆ, ಗಲಭೆ ಶುರುವಾಗಿದೆ ಎಂದು ದೂರಿದರು.
|
4 |
+
ಕಾಂಗ್ರೆಸ್ ಸರ್ಕಾರ ಮತಕ್ಕಾಗಿ ಅವರ ಮೇಲೆ ಕ್ರಮ ತೆಗೆದುಕೊಳ್ಳುವುದಿಲ್ಲ. ಮುಖ್ಯಮಂತ್ರಿಗಳೇ ಅವರನ್ನು ಬಿಡಿ ಎಂದಿದ್ದಾರೆ. ಗೃಹಸಚಿವರು ಕೂಡ ವಿಚಾರಣೆ ಮಾಡಿ ಬಿಟ್ಟಿದ್ದೇವೆ ಎಂದಿದ್ದಾರೆ. ಪ್ರಕರಣ ಮುಚ್ಚಿ ಹಾಕಿದ್ದಾರೆ. ಇಂದು ವರದಿ ಕೊಡಬಹುದಿತ್ತು. ಆದರೆ ಅವೇಶನ ಮುಗಿಯಲಿ ಎಂದು ಕಾಯುತ್ತಿದ್ದಾರೆ ಎಂದು ಆಕ್ಷೇಪಿಸಿದರು.
|
5 |
+
ಸರ್ಕಾರ ಎಫ್ಎಸ್ಎಲ್ ವರದಿಯನ್ನೂ ತಿರುಚುವ ಪ್ರಯತ್ನವನ್ನು ಮಾಡಲಿದೆ. ಪಾಪಿ ಕಾಂಗ್ರೆಸ್ ಸರ್ಕಾರ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಬೇರೆ ಯಾವುದೇ ಸರ್ಕಾರ ಇದಿದ್ದರೆ ಸಿಎಂ ರಾಜೀನಾಮೆ ಕೊಡುತ್ತಿದ್ದರು. ವಿಧಾನಸೌಧವನ್ನು ಸ್ಲೀಪರ್ ಸೆಲ್ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೆಂಗಲ್ ಹನುಮಂತಯ್ಯ ಸರ್ಕಾರಿ ಕೆಲಸ ದೇವರ ಕೆಲಸ ಎಂದು ಹಾಕಿಸಿದ್ದಾರೆ. ಅವರ ಹೇಳಿಕೆಗೆ ವಿರೋಧಿ ನೀತಿ ತಾಳುತ್ತಿದೆ ಈ ಸರ್ಕಾರ ಎಂದು ದೂರಿದರು.
|
6 |
+
ಮಾಧ್ಯಮದಲ್ಲಿ ಬಂದ ಮೇಲೂ ಪ್ರಕರಣವನ್ನು ಮುಚ್ಚಿ ಹಾಕುವ ಕೆಲಸ ಮಾಡಲಾಗುತ್ತಿದೆ. ಈ ಸರ್ಕಾರ ಕಿತ್ತೊಗೆಯಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದರು.ನಾವು ಜನರಿಗೆ ಮನವಿ ಮಾಡುತ್ತೇವೆ. ಎಲ್ಲಾ ಘಟನೆ ನೀವು ನೋಡುತ್ತಿದ್ದೀರಿ. ಹಿಂದೂ ವಿರೋ ನೀತಿ ತಾಳಿರುವ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಬೇಕೆಂದು ಮನವಿ ಮಾಡಿದರು. ರಾಜ್ಯಸಭಾ ಸದಸ್ಯ ಅಂದರೆ ಏಳುವರೆ ಕೋಟಿ ಜನರ ಪ್ರತಿನಿ.
|
7 |
+
ಅವರು ಕರೆತಂದಿರುವ 25 ಜನರು ಮುಸ್ಲಿಮರು. ಒಬ್ಬ ಹಿಂದೂವನ್ನೂ ಕರೆತಂದಿಲ್ಲ. ಸೆಕ್ಯುಲರ್ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಕಾ ಕೋಮುವಾದಿ ಸರ್ಕಾರ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಧಾನಿ ಮೋದಿ ಬಗ್ಗೆ, ಬಿಜೆಪಿ ��ಗ್ಗೆ ವಿಷ ತುಂಬುವುದೇ ಕೆಲಸ. ಟಿಪ್ಪು ಸುಲ್ತಾನ್ ಐಡಿಯಾಲಜಿ ಅವರ ತಲೆಯಲ್ಲಿ ಹೊಕ್ಕಿದೆ. ಸಿದ್ದರಾಮಯ್ಯ ಅವರ ತಲೆಯಲ್ಲಿ ಕಾರ್ಕೋಟಕ ವಿಷ ತುಂಬಿದೆ ಎಂದು ವಾಗ್ದಾಳಿ ನಡೆಸಿದರು.
|
eesanje/url_46_219_2.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
28 ಕ್ಷೇತ್ರಗಳನ್ನು ಗೆಲ್ಲಲು ಬಿಜೆಪಿ-ಜೆಡಿಎಸ್ನಿಂದ ಚಿಹ್ನೆ ವಿನಿಮಯ ತಂತ್ರ
|
2 |
+
ಬೆಂಗಳೂರು,ಮಾ.1- ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳನ್ನೂ ಶತಾಯಗತಾಯ ಗೆಲ್ಲಲೇಬೇಕು ಎಂದು ಬಿಜೆಪಿ-ಜೆಡಿಎಸ್ ನಾಯಕರು ಪ್ರಯತ್ನ ನಡೆಸುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಹೊಸ ರಣತಂತ್ರ ಹೆಣೆಯುತ್ತಿರುವ ಮೈತ್ರಿ ನಾಯಕರು ಚಿಹ್ನೆ ವಿನಿಮಯ ಎಂಬ ಹೊಸ ಸೂತ್ರದ ಮೊರೆ ಹೋಗುತ್ತಿದ್ದಾರೆ. ಅಂದರೆ, ಒಂದು ಪಕ್ಷದ ಅಭ್ಯರ್ಥಿಯನ್ನು ಮತ್ತೊಂದು ಪಕ್ಷದ ಚಿಹ್ನೆಯಡಿ ಕಣಕ್ಕೆ ಇಳಿಸಲು ವರಿಷ್ಠರು ಮುಂದಾಗಿದ್ದಾರೆ.
|
3 |
+
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಅವರ ಅಳಿಯ, ಜಯದೇವ ಸಂಸ್ಥೆಯ ಮಾಜಿ ನಿರ್ದೇಶಕ ಡಾ ಸಿಎನ್ ಮಂಜುನಾಥ್ ಅವರನ್ನು ಬೆಂಗಳೂರಿನ ಪ್ರಮುಖ ಕ್ಷೇತ್ರದಲ್ಲಿ ಬಿಜೆಪಿ ಚಿಹ್ನೆಯಡಿ ಕಣಕ್ಕಿಳಿಸಲು ಮೈತ್ರಿ ನಾಯಕರು ಮುಂದಾಗಿದ್ದಾರೆ. ಅದೇ ರೀತಿ, ತುಮಕೂರಿನಲ್ಲಿ ಮಾಜಿ ಸಚಿವ, ಬಿಜೆಪಿ ನಾಯಕ ವಿ.ಸೋಮಣ್ಣ ಅವರನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವ ಬಗ್ಗೆ ಮಾತುಕತೆ ನಡೆಯುತ್ತಿದೆ.
|
4 |
+
ಇನ್ನು ಚಿಕ್ಕಬಳ್ಳಾಪುರದಲ್ಲಿ ಮಾಜಿ ಆರೋಗ್ಯ ಸಚಿವ, ಬಿಜೆಪಿ ನಾಯಕ ಡಾ.ಕೆ.ಸುಧಾಕರ್ ಅವರು ಜೆಡಿಎಸ್ ಚಿಹ್ನೆಯಡಿ ಸ್ರ್ಪಧಿಸುವ ಸಾಧ್ಯತೆ ಇದೆ. ಮೈಸೂರು – ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಜೆಡಿಎಸ್ ನಾಯಕ ಸಾರಾ ಮಹೇಶ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಯುತ್ತಿದ್ದು, ಮೈತ್ರಿಯಲ್ಲಿ ಹೊಸ ಚಿಂತನೆಯೊಂದಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಮುನ್ನುಡಿ ಹಾಕುತ್ತಿರುವಂತೆ ಕಾಣುತ್ತಿದೆ.
|
5 |
+
ಕೇಸರಿ ಶಾಲಿಗೆ ತಡೆ : ಮೊತೊಮ್ಮೆ ಸುದ್ದಿಯಾದ ಕಾಂಗ್ರೆಸ್ ಸರ್ಕಾರದ ನಡೆ
|
6 |
+
ಇದೊಂದು ಹೊಸ ಚಿಂತನೆಯಾಗಿದೆ. ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಅಭ್ಯರ್ಥಿಗಳ ಬಗ್ಗೆ ಆತ್ಮೀಯತೆಯ ಪ್ರಜ್ಞಾಯನ್ನು ಬೆಳೆಸುವುದು ಈ ಚಿಂತನೆಯ ಪ್ರಮುಖ ಉದ್ದೇಶ ಆಗಿದೆ. ಗೆಲ್ಲುವುದೇ ಮುಖ್ಯ ಮಾನದಂಡವಾಗಿದ್ದು, ಈ ಬಗ್ಗೆ ಹೈಕಮಾಂಡ್ ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳುತ್ತದೆ ಎಂದು ಬಿಜೆಪಿಯ ಪ್ರಮುಖರೊಬ್ಬರು ಹೇಳಿದ್ದಾರೆ.
|
7 |
+
ಎಲ್ಲ ಆಯ್ಕೆಗಳ ಅನ್ವೇಷಣೆ!ಮುಂದಿನ ವಾರ ಅಭ್ಯರ್ಥಿಗಳ ಮೊದಲ ಪಟ್ಟಿಯ ಕುರಿತು ಅಂತಿಮ ಸುತ್ತಿನ ಚರ್ಚೆ ನಡೆಯಲಿದೆ. ಅಲ್ಲಿ ಕ್ಷೇತ್ರಗಳ ಹಂಚಿಕೆ, ಮೈತ್ರಿ ಅಭ್ಯರ್ಥಿಗಳ ಬಗ್ಗೆ ಹೆಚ್ಚಿನ ಸ್ಪಷ್ಟತೆ ಸಿಗಲಿದೆ ಎಂಬ ನಿರೀಕ್ಷೆ ಇದೆ.ಸಾಧ್ಯವಿರುವ ಎಲ್ಲ ಆಯ್ಕೆಗಳನ್ನು ನಾವು ಅನ್ವೇಷಿಸುತ್ತಿದ್ದೇವೆ ಎಂದು ಹೇಳಿರುವುದು ಚಿಹ್ನೆ ವಿನಿಮಯದ ಸಾಧ್ಯತೆಯನ್ನು ತೆರೆದಿಟ್ಟಿದೆ. ಡಾ.ಸಿ.ಎನ್.ಮಂಜುನಾಥ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಚಿಂತನೆಯಿದ್ದು, ಅವರ ಮನವೊಲಿಸುವ ಪ್ರಯತ್ನ ನಡೆಯುತ್ತಿದೆ. ಅದೇ ರೀತಿ, ಮೈಸೂರಿನಿಂದ ಸಾರಾ ಮಹೇಶ್ ಅವರನ್ನು ಕಣಕ್ಕಿಳಿಸುವ ಬಗ್ಗೆಯೂ ಮಾತುಕತೆ ನಡೆದಿದೆ.
|
8 |
+
ಬಿಜೆಪಿ ಮತ್ತು ಜೆಡಿಎಸ್ ಹೃದಯ ತಜ್ಞ ಡಾ ಸಿಎನ್ ಮ���ಜುನಾಥ್ ಅವರನ್ನು ಕಣಕ್ಕಿಳಿಸಬೇಕು ಎಂಬ ಚಿಂತನೆ ಇದೆ. ಆದರೆ ಚುನಾವಣೆಗೆ ಸ್ರ್ಪಧಿಸುವ ಬಗ್ಗೆ ಇನ್ನೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಮಂಜುನಾಥ್ ಹೇಳಿದ್ದಾರೆ. ದೇಶಾದ್ಯಂತ ಜನರು ನಾನು ಸಂಸದನಾಗಬೇಕೆಂದು ಬಯಸಿದ್ದು, ಚುನಾವಣೆಗೆ ಸ್ರ್ಪಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಒಂದು ವೇಳೆ ನಾನು ರಾಜಕೀಯಕ್ಕೆ ಬಂದರೂ ಶುದ್ಧ ರಾಜಕೀಯಕ್ಕಿಂತ ಸೇವಾ ಕೇಂದ್ರಿತ ರಾಜಕೀಯ ಮಾಡುತ್ತೇನೆ ಎಂದು ಮಂಜುನಾಥ್ ಹೇಳಿರುವುದರಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ.
|
9 |
+
ಮಂಜುನಾಥ್ ಅವರನ್ನು ಕಣಕ್ಕಿಳಿಸುವ ಚಿಂತನೆಯಲ್ಲೂ ಹಲವು ಸಮಸ್ಯೆಗಳಿವೆ. ಸದ್ಯಕ್ಕೆ ಮಂಜುನಾಥ್ ಅವರ ಹೆಸರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಕೇಳಿಬರುತ್ತಿದೆ. ಆದರೆ, ಅವರು ಅಲ್ಲಿ ಸ್ರ್ಪಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಉಳಿದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಸಂಸದರೇ ಇದ್ದು, ಮಂಜುನಾಥ್ ಅವರಿಗಾಗಿ ಯಾವ ಕ್ಷೇತ್ರವನ್ನು ಬಿಜೆಪಿ ಮೀಸಲಿಡುತ್ತದೆ ಎಂಬುದನ್ನು ನೋಡಬೇಕಿದೆ. ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಸ್ರ್ಪಧಿಸಲ್ಲ ಎಂದಿರುವುದರಿಂದ ಬೆಂಗಳೂರು ಉತ್ತರದಲ್ಲಿ ಸಿಎನ್ ಮಂಜುನಾಥ್ ಅವರು ಸ್ರ್ಪಧಿಸಬಹುದು ಎನ್ನಲಾಗಿದೆ.
|
10 |
+
ಇನ್ನು, ಮಾಜಿ ಸಚಿವ ವಿ ಸೋಮಣ್ಣ ಅವರಿಗೆ ತುಮಕೂರು ಕ್ಷೇತ್ರದಲ್ಲಿ ಟಿಕೆಟ್ ನೀಡುವ ಪ್ರಸ್ತಾಪಕ್ಕೆ ಮಾಜಿ ಸಚಿವ ಜೆಸಿ ಮಾಧುಸ್ವಾಮಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ನ ಹಿರಿಯ ನಾಯಕ ಎನ್.ಎಸ್.ಶಿವಶಂಕರ ರೆಡ್ಡಿ ಬಿಜೆಪಿ ಕಡೆ ಬರಲು ಮುಂದಾಗಿದ್ದು, ಅಲ್ಲಿ ಮಾಜಿ ಸಚಿವ ಡಾ ಕೆ ಸುಧಾಕರ್ಗೆ ಟಿಕೆಟ್ ಕೈತಪ್ಪುವ ಆತಂಕ ಕಾಡುತ್ತಿದೆ.
|
11 |
+
ಇನ್ನು, ಹೊಸ ಚಿಹ್ನೆ ವಿನಿಮಯ ತಂತ್ರದಡಿ ಅಭ್ಯರ್ಥಿಗಳು ತಮ್ಮ ಮಾತೃಪಕ್ಷವನ್ನು ತೊರೆದು ಬೇರೆ ಪಕ್ಷಕ್ಕೆ ಸೇರಬೇಕಾಗುತ್ತದೆ. ಆದರೆ, ಎಲ್ಲ ಮುಖಂಡರು ಈ ತಂತ್ರದ ಪರವಾಗಿಲ್ಲ. ಕಾರ್ಯಕರ್ತರು ಇದನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಟಿಕೆಟ್ಗಾಗಿ ಪಕ್ಷ ಬದಲಾಯಿಸುವುದನ್ನು ತಳಮಟ್ಟದ ಕಾರ್ಯಕರ್ತರು ಒಪ್ಪಲ್ಲ ಅನಿಸುತ್ತೆ. ಪಕ್ಷದ ಹಿತದೃಷ್ಟಿಯಿಂದ ನಮ್ಮ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಬಿಜೆಪಿಯ ಮತ್ತೊಬ್ಬ ನಾಯಕರು ಹೇಳಿದ್ದಾರೆ.
|
eesanje/url_46_219_3.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬೆಂಗಳೂರಲ್ಲಿ ಭೀಕರ ಜಲಕ್ಷಾಮದ ಭೀತಿ : ಜಿಲ್ಲಾಧಿಕಾರಿಗಳೊಂದಿಗೆ ಸಚಿವ ಕೃಷ್ಣಭೈರೇಗೌಡ ಸಭೆ
|
2 |
+
ಬೆಂಗಳೂರು,ಮಾ.1- ರಾಜ್ಯದ ಬರ ನಿರ್ವಹಣೆಯಿಂದ ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮಾಸಿಕ ಸಭೆ ನಡೆಸಿದ ಅವರು, ಕುಡಿಯುವ ನೀರಿನ ಸಮಸ್ಯೆಯನ್ನು ಕಡೆಗಣಿಸಿದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡುವುದಾಗಿ ಎಚ್ಚರಿಸಿದ್ದಾರೆ.
|
3 |
+
ಪ್ರತಿಯೊಂದು ಜಿಲ್ಲೆಯಲ್ಲೂ ಬರ ಪರಿಸ್ಥಿತಿ, ಬೆಳೆನಷ್ಟ, ಕುಡಿಯುವ ನೀರಿನ ಸಮಸ್ಯೆ, ಮೇವಿನ ಕೊರತೆ, ಉದ್ಯೋಗ ಸೃಜನೆ ಸೇರಿದಂತೆ ಹಲವು ವಿಚಾರಗಳಲ್ಲಿ ಜಿಲ್ಲಾಡಳಿತಗಳು ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಸಚಿವರು ಮಾಹಿತಿ ಪಡೆದುಕೊಂಡರು. ಕೆಲವು ಜಿಲ್ಲೆಗಳು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಮತ್ತಷ್ಟು ಗಂಭೀರ ಕ್ರಮಗಳನ್ನು ಕೈಗೊಳ್ಳಬೇಕು. ಕಲಬುರಗಿ, ರಾಯಚೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಜನ ಗಂಭೀರ ಸಮಸ್ಯೆ ಅನುಭವಿಸುತ್ತಿರುವುದು ವರದಿಯಾಗಿದೆ. ತಾಲ್ಲೂಕು ಹಾಗೂ ಜಿಲ್ಲಾಡಳಿತ ಅಧಿಕಾರಿಗಳು ಇಂತಹ ಸಮಸ್ಯೆಗಳನ್ನು ಮುಂಚಿತವಾಗಿಯೇ ಗುರುತಿಸಿ ಜನರಿಗೆ ನೆರವಾಗಲು ಕ್ರಮ ಕೈಗೊಳ್ಳುವಂತೆ ಸಚಿವರು ತಾಕೀತು ಮಾಡಿದ್ದಾರೆ.
|
4 |
+
ಫೆ. 28ರವರೆಗಿನ ಮಾಹಿತಿ ಪ್ರಕಾರ, 117 ಗ್ರಾಮಗಳಿಗೆ 181 ಟ್ಯಾಂಕರ್ ಮೂಲಕ ಹಾಗೂ 354 ಗ್ರಾಮಗಳಿಗೆ 419 ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ನೀರು ಪೂರೈಸಲಾಗುತ್ತಿದೆ. 9 ನಗರ ಸ್ಥಳೀಯ ಸಂಸ್ಥೆಗಳಲ್ಲಿನ 57 ವಾರ್ಡ್ಗಳಿಗೆ 17 ಟ್ಯಾಂಕರ್ಗಳ ಮೂಲಕ ಹಾಗೂ 29 ವಾರ್ಡ್ಗಳಿಗೆ 17 ಖಾಸಗಿ ಬೋರ್ವೆಲ್ಗಳ ಮೂಲಕ ತುರ್ತು ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
|
5 |
+
ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದಾದ ಒಟ್ಟು 7,412 ಗ್ರಾಮಗಳನ್ನು ಹಾಗೂ 1,115 ವಾರ್ಡ್ಗಳನ್ನು ಗುರುತಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಒಟ್ಟು 7108 ಖಾಸಗಿ ಬೋರ್ವೆಲ್ಗಳನ್ನು ಗುರುತಿಸಲಾಗಿದೆ.
|
6 |
+
ಪ್ರಸಕ್ತ ಸಾಲಿನ ಪ್ರಕೃತಿ ವಿಕೋಪ ಪರಿಹಾರ ನಿಯಡಿ ರೂ.930.14 ಕೋಟಿ ಹಂಚಿಕೆಯಾಗಿದ್ದು, ಇದರ ಪೈಕಿ ಕೇಂದ್ರದ ಪಾಲು 697.60 ಕೋಟಿ ರೂ. ಹಾಗೂ ರಾಜ್ಯದ ಪಾಲು 232.54 ಕೋಟಿ ರೂ. ಇರುತ್ತದೆ. ಈ ಅನುದಾನದ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಅನುದಾನ 885.67 ಕೋಟಿ ರೂ. ಸೇರಿದಂತೆ ಒಟ್ಟು 1810.81 ಕೋಟಿ ರೂ. ಸಂಪೂರ್ಣ ಅನುದಾನವನ್ನು ಬಿಡುಗಡೆಗೊಳಿಸಲು ಆರ್ಥಿಕ ಇಲಾಖೆ ಸಹಮತ ನೀಡಿದ್ದು, ಈವರೆಗೆ 1602.45 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.
|
7 |
+
ಜಿಲ್ಲಾಧಿಕಾರಿಗಳ ಖಾತೆಯಲ್ಲಿ 725.92 ಕೋಟಿ ರೂ. ಹಾಗೂ ತಹಸೀಲ್ದಾರ್ ಖಾತೆಯಲ್ಲಿ 135.40 ಕೋಟಿ ರೂ. ಸೇರಿದಂತೆ ಒಟ್ಟು 861.32 ಕ��ಟಿ ರೂ. ಅನುದಾನವು ಬರ ಪರಿಹಾರ ಕಾರ್ಯ ಕೈಗೆತ್ತಿಕೊಳ್ಳಲು ಲಭ್ಯವಿದೆ ಎಂದು ಸಚಿವರು ತಿಳಿಸಿದ್ದಾರೆ.
|
8 |
+
ಬರ ಘೋಷಿತ ತಾಲ್ಲೂಕುಗಳಲ್ಲಿ ಕುಡಿಯುವ ನೀರು ಮತ್ತು ಮೇವು ಒದಗಿಸಲು ಶಾಸಕರ ಅಧ್ಯಕ್ಷತೆಯಲ್ಲಿ 15 ದಿನಗಳಿಗೊಮ್ಮೆ ಟಾಸ್ಕ್ಫೋರ್ಸ್ ಸಭೆ ನಡೆಸಲಾಗುತ್ತಿದ್ದು, ಈವರೆಗೆ ತಾಲ್ಲೂಕು ಮಟ್ಟದ 566 ಟಾಸ್ಕ್ಫೋರ್ಸ್ ಸಭೆಗಳನ್ನು ನಡೆಸಲಾಗಿದೆ. ಪ್ರಕೃತಿ ವಿಕೋಪ ನಿವಾರಣೆಗಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ಸಭೆಯನ್ನು 15 ದಿನಗಳಿಗೊಮ್ಮೆ ನಡೆಸಲಾಗುತ್ತಿದ್ದು, ಈವರೆಗೆ 262 ಸಭೆಗಳನ್ನು ನಡೆಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ವಿವರಣೆ ನೀಡಿದ್ದಾರೆ.
|
9 |
+
ಭೂಮಿ ತಂತ್ರಾಂಶಗಳ ದತ್ತಾಂಶ, ಬೆಳೆ ಸಮೀಕ್ಷೆಯ ದತ್ತಾಂಶವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರುವ ಪ್ರಕಾರ 33.25 ಲಕ್ಷ ರೈತರಿಗೆ 631.12 ಕೋಟಿ ರೂ. ಮೊದಲ ಕಂತಿನ ಪರಿಹಾರವನ್ನು ನೇರವಾಗಿ ಖಾತೆಗೆ ವರ್ಗಾಯಿಸಲಾಗಿದೆ ಎಂದು ವಿವರಿಸಿದ್ದಾರೆ.
|
10 |
+
ಅಂತರರಾಜ್ಯ ಮೇವು ಸಾಗಾಣಿಕೆಯನ್ನು ನಿರ್ಬಂಧಿಸಿ ನವೆಂಬರ್ 22ರಂದೇ ಆದೇಶ ಹೊರಡಿಸಲಾಗಿದೆ. ಮೇವಿನ ಕಿಟ್ ಖರೀದಿಸಲು ಎಸ್ಡಿಆರ್ಎಫ್ ಅಡಿ ಪಶುಸಂಗೋಪನೆ ಇಲಾಖೆಗೆ 20 ಕೋಟಿ ರೂ. ನೀಡಲಾಗಿದ್ದು, 7.62 ಲಕ್ಷ ಮಿನಿ ಕಿಟ್ಗಳನ್ನು ಖರೀದಿಸಲಾಗಿದೆ. ಈ ಕಿಟ್ಗಳನ್ನು 4.19 ಲಕ್ಷ ರೈತರಿಗೆ ಉಚಿತವಾಗಿ ನೀಡಲಾಗಿದೆ. ಪ್ರಸ್ತುತ ರಾಜ್ಯದಲ್ಲಿ 144 ಲಕ್ಷ ಟನ್ ಮೇವು ಲಭ್ಯವಿದ್ದು ಮುಂದಿನ 27 ವಾರಗಳ ಬಳಕೆಗೆ ಸಾಕಾಗುತ್ತದೆ. ಗೋಶಾಲೆ ಹಾಗೂ ಮೇವಿನ ಬ್ಯಾಂಕ್ಗಳನ್ನು ಎಸ್ಡಿಆರ್ಎಫ್ಮಾರ್ಗಸೂಚಿಯ ಪ್ರಕಾರ ಅರ್ಹತೆಯಂತೆ ಸ್ಥಾಪಿಸಲು ಡಿ.4 ರಂದು ಸುತ್ತೋಲೆ ಹೊರಡಿಸಲಾಗಿದೆ.
|
11 |
+
ಟ್ಯಾಂಕರ್ ಹಾಗೂ ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ನೀರು ಪೂರೈಸಲು ಹಾಗೂ 15 ದಿನಗಳಲ್ಲಿ ಬಿಲ್ ಪಾವತಿಗೆ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ವಿವರಿಸಿದ್ದಾರೆ.
|
eesanje/url_46_219_4.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಕೇಸರಿ ಶಾಲಿಗೆ ತಡೆ : ಮೊತೊಮ್ಮೆ ಸುದ್ದಿಯಾದ ಕಾಂಗ್ರೆಸ್ ಸರ್ಕಾರದ ನಡೆ
|
2 |
+
ಬೆಂಗಳೂರು,ಮಾ.1- ಪಾಕಿಸ್ತಾನ್ ಜಿಂದಾಬಾದ್ ಎಂಬ ದೇಶದ್ರೋಹಿ ಘೋಷಣೆಯ ಗೊಂದಲಗಳು ಬಗೆಹರಿಯುವ ಮುನ್ನವೇ, ವಿಧಾನಸೌಧಕ್ಕೆ ಕೇಸರಿ ಶಾಲು ತೆಗೆದುಕೊಂಡು ಹೋಗುವುದನ್ನು ತಡೆಯಲಾಗಿತ್ತು ಎಂಬ ಮತ್ತೊಂದು ಮುಜುಗರದ ವಿಚಾರ ಬಯಲಾಗಿದೆ. ಪ್ರತಿಹಂತದಲ್ಲೂ ರಾಜ್ಯಸರ್ಕಾರವನ್ನು ಹಿಂದುತ್ವದ ವಿರೋಧಿ ಎಂದು ಬಿಂಬಿಸಲು ಬಿಜೆಪಿಗೆ ಮೇಲಿಂದ ಮೇಲೆ ಪೂರಕವಾದ ಅಸ್ತ್ರಗಳು ದೊರೆಯುತ್ತಿವೆ.
|
3 |
+
ನಿನ್ನೆ ಬಿಜೆಪಿ ಸದಸ್ಯರು ವಿಧಾನಮಂಡಲಕ್ಕೆ ಕೇಸರಿ ಶಾಲು ಧರಿಸಿ ಭಾಗವಹಿಸಲು ಮುಂದಾಗಿದ್ದರು. ಇದಕ್ಕಾಗಿ ವಿಧಾನಪರಿಷತ್ ಸದಸ್ಯ ಸಿ.ಕೇಶವ ಪ್ರಸಾದ್ ಕೇಸರಿ ಶಾಲುಗಳ ಪ್ಲಾಸ್ಟಿಕ್ ಚೀಲದೊಂದಿಗೆ ವಿಧಾನಸೌಧ ಪ್ರವೇಶಿಸುತ್ತಿದ್ದರು. ಆ ಸಂದರ್ಭದಲ್ಲಿ ಪೊಲೀಸರು ಅವರನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಇದರಿಂದ ಸಿಟ್ಟಾದ ಕೇಶವಪ್ರಸಾದ್ರವರು ಕೇಸರಿ ಶಾಲು ತಡೆಯಲು ನೀವ್ಯಾರು? ನಿಮಗೆ ಯಾವ ಅಧಿಕಾರ ಇದೆ? ಈ ರೀತಿ ಕೆಲಸ ಮಾಡಲು ಯಾರು ಹೇಳಿದ್ದು ಎಂದು ಏರಿದ ಧ್ವನಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
|
4 |
+
ತಪಾಸಣಾ ಕಾರ್ಯದಲ್ಲಿ ತೊಡಗಿದ್ದ ಮಹಿಳಾ ಸಬ್ಇನ್ಸ್ಪೆಕ್ಟರ್ ಒಬ್ಬರು ನಮಗೆ ಹಿರಿಯ ಅಧಿಕಾರಿಗಳಿಂದ ಮೌಖಿಕ ಆದೇಶವಿದೆ. ಕೇಸರಿ ಶಾಲು, ಕೇಸರಿ ಬಟ್ಟೆಗಳನ್ನು ತೆಗೆದುಕೊಂಡು ಹೋಗದಂತೆ ತಡೆಯಿರಿ ಎಂದು ಹೇಳಿದ್ದಾರೆ. ನಾವು ಯಾರನ್ನೂ ಅಗೌರವಿಸಿಲ್ಲ ಅಥವಾ ಅವಮಾನ ಮಾಡಿಲ್ಲ. ಪರಿಶೀಲನೆ ಮಾಡುತ್ತಿದ್ದೇವೆ ಎಂದು ಸಮಜಾಯಿಷಿ ನೀಡಿದರು.
|
5 |
+
ಮಜಾವಾದಿ@siddaramaiahಸರ್ಕಾರಕ್ಕೆ ಕೇಸರಿ ಶಾಲು, ತಿಲಕ ಕಂಡರೆ ಲುಂಗಿ ಒದ್ದೆಯಾಗುವುದಕ್ಕೆ ವಿಧಾನಸೌಧದ ಒಳಗೆ ಬಿಜೆಪಿಯ ಶಾಸಕರು ಕೇಸರಿ ಶಾಲು ಹಾಕಿಕೊಳ್ಳುವುದಕ್ಕೆ ಕಡಿವಾಣ ಹಾಕಲು ಮೌಖಿಕ ಆದೇಶ ಹೊರಡಿಸಿದೆ.ಅಧಿಕೃತವಾಗಿ ಲಿಖಿತ ಆದೇಶ ಹೊರಡಿಸುವುದಕ್ಕೂ ಎದೆಗಾರಿಕೆ ಇಲ್ಲದ ಹೇಡಿ ಸರ್ಕಾರ, ಪೊಲೀಸರನ್ನು ದುರ್ಬಳಕೆ ಮಾಡಿಕೊಂಡು ಅವರ ಮೂಲಕ…../OOMqMd75vF
|
6 |
+
ಅದೇ ವೇಳೆಗೆ ಅಲ್ಲಿಗೆ ಬಂದ ವಿಧಾನಪರಿಷತ್ನ ಹಿರಿಯ ಸದಸ್ಯ ರಘುನಾಥ್ ಮಲ್ಕಾಪುರೆ ಹಾಗೂ ರುದ್ರೇಗೌಡ ಅವರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ. ಕಾನೂನು ಮಾಡುವುದು ನಾವು, ಅದರ ಪಾಲನೆ ನಮಗೆ ಗೊತ್ತಿದೆ. ಕೇಸರಿ ಶಾಲು ನಮ್ಮ ಅಸ್ಮಿತೆ. ಅದನ್ನು ತಡೆಯುವಂತೆ ನಿಮಗೆ ಯಾವ ಆದೇಶವಿದೆ ತೋರಿಸಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
|
7 |
+
ಒಂದು ಹಂತದಲ್ಲಿ ಯಾರು ಏನು ಮಾಡುತ್ತಾರೋ ನೋಡೋಣ, ನೀವು ಕೇಸರಿ ಶಾಲನ್ನು ಒಳಗೆ ತನ್ನಿ ಎಂದು ರಘುನಾಥ್ ಮಲ್ಕಾಪುರೆ ತಮ್ಮ ಸಹದ್ಯೋಗಿ ಕೇಶವ ಪ್ರಸಾದ್ರಿಗೆ ಬೆಂಬಲ ನೀಡಿದ್ದಾರೆ. ಇದರಿಂದ ನಿಸ್ಸಾಹಯಕರಾದ ಪೊಲೀಸರು ಬೇರೆ ದಾರಿ ಕಾಣದೆ ತಟಸ್ಥರಾಗಿ ನಿಲ್ಲುವಂತಾಗಿದೆ.
|
eesanje/url_46_219_5.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
|
2 |
+
ಬೆಂಗಳೂರು,ಮಾ.1- ದ್ವಿತೀಯ ಪಿಯುಸಿ ಪರೀಕ್ಷೆ ಇಂದಿನಿಂದ ಆರಂಭಗೊಂಡಿದ್ದು, 6 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ರಾಜ್ಯಾದ್ಯಂತ 1,224 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ದ್ವಿತೀಯ ಪಿಯುಸಿಗೆ 3.3 ಲಕ್ಷ ವಿದ್ಯಾರ್ಥಿಗಳು, 3.6 ಲಕ್ಷ ವಿದ್ಯಾರ್ಥಿನಿಯರು ಸೇರಿ 6.9 ಲಕ್ಷ ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ.
|
3 |
+
ಪರೀಕ್ಷಾ ಕೇಂದ್ರಗಳಿಗೆ ಅನುಕೂಲವಾಗುವಂತೆ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯಸರ್ಕಾರದ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ, 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ, ಜೆರಾಕ್ಸ್ ಅಂಗಡಿಗಳು ಹಾಗೂ ಕಂಪ್ಯೂಟರ್ ಸೆಂಟರ್ಗಳನ್ನು ಮುಚ್ಚಿಸುವುದು ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಂಡಿದೆ.
|
4 |
+
ಧಾರ್ಮಿಕ ಸಂಸ್ಥೆಗಳ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ
|
5 |
+
ಇಂದು ಮೊದಲು ಮಾತೃಭಾಷೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ವರೆಗೆ ಪರೀಕ್ಷೆ ನಡೆಯಲಿದೆ. ಮಾರ್ಚ್ 22 ರವರೆಗೂ ಪಿಯುಸಿ ಪರೀಕ್ಷೆಗಳು ನಡೆಯಲಿವೆ.
|
eesanje/url_46_219_6.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ನಿವೃತ್ತ ಐಎಎಸ್ ಆಧಿಕಾರಿ, ನಟ ಕೆ.ಶಿವರಾಮ್ ಇನ್ನಿಲ್ಲ
|
2 |
+
ಬೆಂಗಳೂರು, ಫೆ.29- ಕೆಲ ದಿನಗಳಿಂದ ಆಸ್ಪತ್ರೆ ಸೇರಿದ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ, ನಟ, ರಾಜಕಾರಣಿ ಕೆ.ಶಿವರಾಮ್ ಬಹು ಅಂಗಾಂಗ ವೈಫಲ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗದೆ ನೆನ್ನೆ ಹೃದಯಾಘಾತದಿಂದ ಇಹಲೋಕ ತೆಜಿಸಿದ್ದಾರೆ.
|
3 |
+
ಮೊಟ್ಟ ಮೊದಲ ಬಾರಿಗೆ ಕನ್ನಡ ದಲ್ಲಿ ಐಎಎಸ್ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾದ ಹಿರಿಮೆಗೆ ಪಾತ್ರರಾಗಿದ್ದ ಶಿವರಾಮ್ ಅವರಿಗೆ ಕಳೆದ 6 ದಿನಗಳ ಹಿಂದೆ ರಕ್ತದ ಒತ್ತಡ ದಲ್ಲಿ ಏರಿಳಿತವಾಗಿ ಹೃದಯಾಘಾತದವಾಗಿತ್ತು.ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿತ್ತು. ಇವರು ಚಿಕಿತ್ಸೆಗೆ ಸ್ಪಂದಿಸದೆ ಮತ್ತೊಮ್ಮೆ ಹೃದಯಾಘಾತವಾಗಿ ಇಹಲೋಹ ತ್ಯಜಿಸಿದ್ದಾರೆ.
|
4 |
+
ಇವರು ಐಎಎಸ್ ಅಧಿಕಾರಿಯಾಗಿ ಜನಮನ್ನಣೆ ಗಳಿಸಿದ್ದಷ್ಟೇ ಅಲ್ಲದೆ ಸಿನಿಮಾ ರಂಗದಲ್ಲೂ ನಾಡಿನ ಮನೆ ಮಾತಾಗಿದ್ದವರು. ಅವರು ಅಭಿನಯಿಸಿದ ಬಾ ನಲ್ಲೆ ಮಧು ಚಂದ್ರಿಕೆ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ದೊಡ್ಡ ಹೆಸರು ತಂದು ಕೊಟ್ಟಿತ್ತು. ನಂತರ ಅನೇಕ ಪಾತ್ರೆಗಳ ಮೂಲಕ ಜನರ ಹತ್ತಿರವಾಗಿದ್ದರು
|
5 |
+
ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿಯಾದ ನಂತರ. ರಾಜಕಾರಣಿ ಆಗಬೇಕೆಂಬ ಹಂಬಲದೊಂದಿಗೆ ಬಿಜೆಪಿ ಪಕ್ಷ ಸೇರಿಕೊಂಡರು . ಛಲವಾದಿ ಮಹಾಸಭಾವನ್ನು ಹುಟ್ಟು ಹಾಕಿ ಕೆಳ ಸಮುದಾಯಕ್ಕೆ ಆಸರೆಯಾದರು. ಲೋಕಸಭೆ ಗೆ ಸ್ಪರ್ಧಿಸಿದ್ದರು. ಮೊದಲ ಪ್ರಯತ್ನದಲ್ಲಿ ಸೋಲು ಕಂಡಿದ್ದರು.
|
6 |
+
ಈ ಬಾರಿ ಬಿಜೆಪಿಯಿಂದ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ತಯಾರಿ ಮಾಡಿಕೊಂಡಿದ್ದರು. ಸುಮಾರು ಮೂರ್ನಾಲ್ಕು ತಿಂಗಳಿಂದ ಪ್ರವಾಸ ಮಾಡಿ ಬಳಲಿದ್ದರು. ವಾರದ ಹಿಂದೆ ಹೃದಯಾಘಾತವಾಗಿ ಆಸ್ಪತ್ರೆ ಸೇರಿದ್ದರು. ಅವರನ್ನು ಬದುಕಿಸುವ ಎಲ್ಲಾ ಪ್ರಯತ್ನ ವಿಫಕವಾಗಿ ಇಹಲೋಕ ತ್ಯಜಿಸಿದ್ದಾರೆ.
|
7 |
+
ಬೆಳಗ್ಗೆ 9 ಗಂಟೆಯಿಂದ ಮದ್ಯಾಹ್ನ 3 ಗಂಟೆಯ ತನಕ ರವೀಂದ್ರ ಕಲಾಕ್ಷೇತ್ರದಲ್ಲಿ ಕೆ. ಶಿವರಾಮ್ ಅವರ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದು ಅವರ ಅಳಿಯ ಹಾಗು ನಟ ಪ್ರದೀಪ್ ತಿಳಿಸಿದ್ಸಾರೆ.ಸಿನಿಮಾ ,ರಾಜಕಾರಣ ಮತ್ತು ಆಡಳಿತ ಕ್ಷೇತ್ರದಲ್ಲಿ ಅವರ ಸ್ನೇಹಿತರು, ಒಡನಾಡಿಗಳು ಮತ್ತು ಅಭಿಮಾನಿಗಳಿಗೆ ಅಂತಿಮ ದರ್ಶನದ ವ್ಯವಸ್ಥೆ ಮಾಡಿದ ನಂತರ ಸಂಜೆ ಎಲ್ಲಿ ಅಂತ್ಯಕ್ರಿಯೆ ನಡೆಸಯವ ಬಗ್ಗೆ ನಿರ್ದಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
|
8 |
+
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನೆನ್ನೆ ಆಸ್ಪತ್ರೆಗೆ ಹೋಗಿ ಸಂತಾಪ ಸೂಚಿಸಿದ್ದರು. ಇವರ ಅಕಾಲಿಕ ಆಗಲಿ ನಾಡಿನ ಸಿರಿಗಣ್ಯರು ಮತ್ತು ರಾಜಕಾರಣಿಗಳು ಕಂಬನಿ ಮಿಡಿದಿದ್ದಾರೆ
|
eesanje/url_46_219_7.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಧಾರ್ಮಿಕ ಸಂಸ್ಥೆಗಳ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ
|
2 |
+
ಬೆಂಗಳೂರು,ಫೆ.29- ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ಮತ್ತು ವಿಧಾನಪರಿಷತ್ನಿಂದ ತಿರಸ್ಕøತಗೊಂಡ ರೂಪದಲ್ಲಿ ಇದ್ದ 2024 ನೇ ಸಾಲಿನ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ ನೀಡಿತು.
|
3 |
+
ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿಯವರು ವಿಧೇಯಕವನ್ನು ಸದನದಲ್ಲಿ ಮಂಡಿಸಿ ಪುನರ್ ಪರ್ಯಾಲೋಚಿಸಬೇಕು ಎಂದು ಕೋರಿದರು. ಬಳಿಕ ಸಭಾಧ್ಯಕ್ಷ ಯು.ಟಿ.ಖಾದರ್ ಮತಕ್ಕೆ ಹಾಕಿದಾಗ ಧ್ವನಿಮತದ ಅಂಗೀಕಾರ ದೊರೆಯಿತು.
|
4 |
+
ಈ ವಿಧೇಯಕವು ಗ್ರೂಪ್ ಎ ದೇವಾಲಯಗಳ ಅಕಾರ ಕ್ಷೇತ್ರ ವ್ಯಾಪ್ತಿಯೊಳಗೆ ಯಾತ್ರಾರ್ಥಿಗಳಿಗೆ ಸುರಕ್ಷತೆಯನ್ನು ಕಲ್ಪಿಸಲು ನಿರ್ಮಾಣ ಮತ್ತು ನಿರ್ವಹಣೆ ಮೊದಲಾದವುಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು, ಪುನರ್ ಪರಿಶೀಲಿಸಲು ಮತ್ತು ಪ್ರಸ್ತಾವನೆಗಳನ್ನು ಸಲ್ಲಿಸಲು ಜಿಲ್ಲಾ ಹಾಗೂ ರಾಜ್ಯಮಟ್ಟದ ಉನ್ನತ ಸಮಿತಿಗಳನ್ನು ರಚಿಸುವ ಉದ್ದೇಶ ಒಳಗೊಂಡಿದೆ.
|
5 |
+
ಅಲ್ಲದೆ ಸಾಮಾನ್ಯ ಸಂಗ್ರಹಣಾ ನಿಯ ಮೊತ್ತವನ್ನು ಹೆಚ್ಚಿಸಲು, ಅಸೂಚಿತ ಸಂಸ್ಥೆಯ ವ್ಯವಸ್ಥಾಪನಾ ಸಮಿತಿಯಲ್ಲಿ ವಿಶ್ವ ಕರ್ಮ ಹಿಂದೂ ದೇವಾಲಯ ವಾಸ್ತುಶಿಲ್ಪ ಮತ್ತು ಶಿಲ್ಪಶಾಸ್ತ್ರದಲ್ಲಿ ಕೌಶಲ್ಯ ಉಳ್ಳ ವ್ಯಕ್ತಿಯನ್ನು ಸೇರಿಸುವ ಉದ್ದೇಶ ಒಳಗೊಂಡಿದೆ.
|
eesanje/url_46_219_8.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ದ್ವಿತೀಯ ಪಿಯು ಪರೀಕ್ಷೆಗೆ ಕ್ಷಣಗಣನೆ
|
2 |
+
ಬೆಂಗಳೂರು, ಫೆ.29- ವಿದ್ಯಾರ್ಥಿಗಳ ಭವಿಷ್ಯದ ಪ್ರಮುಖ ಘಟ್ಟ ಎಂದು ಬಿಂಬಿಸಲಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಕ್ಷಣಗಣನೆ ಆರಂಭಗೊಂಡಿದೆ.ರಾಜ್ಯಾದ್ಯಂತ ನಾಳೆಯಿಂದ ಆರಂಭವಾಗಲಿರುವ ಪರೀಕ್ಷೆಗೆ ಸುಮಾರು 6,90,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ನಾಳೆ ಕನ್ನಡ ಹಾಗೂ ಅರೇಬಿಕ್ ಭಾಷೆಯ ಪರೀಕ್ಷೆಗಳು ಬೆಳಗ್ಗೆ 10.30ಕ್ಕೆ ಆರಂಭಗೊಳ್ಳಲಿವೆ.
|
3 |
+
ಮಾರ್ಚ್ 22ರ ವರೆಗೆ ನಡೆಯಲಿರುವ ಪರೀಕ್ಷೆಗೆ ಯಾವುದೇ ಅಡೆತಡೆಯಾಗದಂತೆ ಮತ್ತು ಯಾವುದೇ ಅಕ್ರಮ ನಡೆಯದಂತೆ ಕರ್ನಾಟಕ ರಾಜ್ಯ ಶಾಲಾ ಪರೀಕ್ಷಾ ಮಂಡಳಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಈಗಾಗಲೇ ಆಯಾ ನಗರ ಹಾಗೂ ತಾಲ್ಲೂಕು ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ 200 ಮೀಟರ್ವರೆಗೂ ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
|
4 |
+
ಒಟ್ಟಾರೆ ಸುಮಾರು 1124 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಈಗಾಗಲೇ ಎಲ್ಲ ಸಿದ್ಧತೆಗಳೂ ಪೂರ್ಣಗೊಂಡಿವೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಲ್ಟಿಕೆಟ್ಗಳನ್ನು ಹೊಂದಿರಬೇಕು ಮತ್ತು ಕಾಲೇಜಿನ ಐಡೆಂಟಿಟಿ ಕಾರ್ಡ್ ಕೂಡ ಹೊಂದಿರಬೇಕು.ಪರೀಕ್ಷಾ ಕೇಂದ್ರಗಳಿಗೆ ಅರ್ಧ ಗಂಟೆ ಮುಂಚೆ ಬಂದು ತಮ್ಮ ನೋಂದಣಿ ಸಂಖ್ಯೆಯನ್ನು ಪರಿಶೀಲಿಸಬೇಕು. ಯಾವುದೇ ಗೊಂದಲ ಮಾಡಿಕೊಳ್ಳದಂತೆ ವೆಬ್ಸೈಟ್ಗಳಲ್ಲಿ ನೀಡಿರುವ ಮಾಹಿತಿಯನ್ನು ವಿದ್ಯಾರ್ಥಿಗಳು ಪರಿಶೀಲಿಸಿ ನಿರ್ಭೀತಿಯಿಂದ ಪರೀಕ್ಷೆ ಬರೆಯಿರಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
|
5 |
+
ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಆಸನ ಹಾಗೂ ಪರೀಕ್ಷೆ ಬರೆಯಲು ಡೆಸ್ಕ್ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರು, ಶೌಚಾಲಯದ ಸೇರಿದಂತೆ ಮೂಲಭೂತ ಸೌಕರ್ಯದ ವ್ಯವಸ್ಥೆ ಕಲ್ಪಿಸಲಾಗಿದೆ. ಇದಲ್ಲದೆ, ಕೊಠಡಿಗಳಲ್ಲಿ ಗಡಿಯಾರ, ಸಿಸಿಟಿವಿ ಕಣ್ಗಾವಲು ಇದ್ದು, ಹೊರಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಕೂಡ ಮಾಡಲಾಗುತ್ತಿದೆ.
|
6 |
+
ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಆದೇಶ ಹೊರಡಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೂ ಮುಖ್ಯ ಅೀಕ್ಷಕರನ್ನು ನೇಮಕ ಮಾಡಲಾಗಿದೆ. ಮುಖ್ಯ ಅೀಕ್ಷಕರನ್ನು ಹೊರತುಪಡಿಸಿ ಕೊಠಡಿ ಮೇಲ್ವಿಚಾರಕರು, ಇತರೆ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮೊಬೈಲ್ ಇತ್ಯಾದಿ ಎಲೆಕ್ಟ್ರಾನಿಕ್ ಸಾಧನ ಬಳಸುವುದನ್ನು ಕಡ್ಡಾಯವಾಗಿ ನಿಷೇಸಲಾಗಿದೆ. ಜಿಲ್ಲಾ ಖಜಾನೆಯಿಂದ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ವಿತರಿಸಲು ಪ್ರಶ್ನೆ ಪತ್ರಿಕೆ ಮಾರ್ಗಾಕಾರಿ ತಂಡಗಳಿಗೆ ಅಗತ್ಯವಿರುವ ವಾಹನಗಳ ಸೌಕರ್ಯ ಒದಗಿಸಲಾಗಿದೆ.
|
eesanje/url_46_219_9.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಪಾಕ್ ಪರ ಘೋಷಣೆ ಕೂಗಿದ್ದರೆ ಕಠಿಣ ಕ್ರಮ ಗ್ಯಾರಂಟಿ
|
2 |
+
ಬೆಂಗಳೂರು,ಫೆ.29- ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದರೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಗೆ ಭರವಸೆ ನೀಡಿದರು.ಪಾಕಿಸ್ತಾನದ ಪರ ಘೋಷಣೆ ಕೂಗಿದವರನ್ನು ಬಂಸಬೇಕು, ನೈತಿಕ ಹೊಣೆ ಹೊತ್ತು ಸರ್ಕಾರ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಪಕ್ಷದ ಸದಸ್ಯರು ಧರಣಿ ನಡೆಸುತ್ತಿದ್ದ ಸಂದರ್ಭದಲ್ಲಿ ಮಧ್ಯಪ್ರವೇಶಿಸಿ ಮಾತನಾಡಿದ ಸಿಎಂ, ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ.
|
3 |
+
ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ. ಸ್ವತಂತ್ರವಾಗಿ ಎಫ್ಐಆರ್ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ. ಆ ಘಟನೆಗೆ ಸಂಬಂದಿಸಿದಂತೆ 7 ಜನರ ವಿಚಾರಣೆ ನಡೆಸಿ ಹೇಳಿಕೆ ಪಡೆಯಲಾಗಿದೆ. ಆದರೂ ಪ್ರತಿಪಕ್ಷಗಳ ಶಾಸಕರು ಧರಣಿ ನಡೆಸಿ ಕಲಾಪಕ್ಕೆ ಅಡ್ಡಿಪಡಿಸುವುದು ಸರಿಯಲ್ಲ. ಸುಗಮ ಕಲಾಪಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.ಆದರೂ ಬಿಜೆಪಿ ಶಾಸಕರು ಮಣಿಯದಿದ್ದಾಗ, ದೇಶಭಕ್ತಿಯ ವಿಚಾರದಲ್ಲಿ ನಾವು ನಿಮ್ಮಿಂದ ಪಾಠ ಕಲಿಯಬೇಕಿಲ್ಲ. ನಿಮಗಿಂತ 100 ಪಾಲು ಹೆಚ್ಚು ನಮಗೆ ಇದೆ ಎಂದು ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು.
|
4 |
+
1925ರಲ್ಲಿ ಆರ್ಎಸ್ಎಸ್ ಅಸ್ತಿತ್ವಕ್ಕೆ ಬಂದಿತು. ಹೆಗಡೆವಾರು, ಗೋಲವಾಲ್ಕರ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದರೆ ? ನಮ್ಮ ಪಕ್ಷ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾದ ಪಕ್ಷ ಎಂದು ಸಮರ್ಥಿಸಿಕೊಂಡರು. ಮಹಾತ್ಮಗಾಂಧೀಜಿಯವರನ್ನು ಗುಂಡಿಕ್ಕಿ ಕೊಂದ ನಾಥೋರಾಮ್ ಗೂಡ್ಸೆ ಅವರನ್ನು ಪೂಜೆ ಮಾಡುವವರು ಅವರಿಂದ ನಾವು ದೇಶಭಕ್ತಿಯ ಪಾಠ ಹೇಳಿಸಿಕೊಳ್ಳಬೇಕಿಲ್ಲ ಎಂದರು.ಜೆಡಿಎಸ್ನವರು ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಎಸ್ ಅನ್ನು ತೆಗೆದು ಜನತಾ ದಳ ಎಂದಿಟ್ಟುಕೊಳ್ಳುವುದು ಸೂಕ್ತ. ಬೇಕಿದ್ದರೆ ಜನತಾದಳ ಬಿಜೆಪಿ ಎಂದಿಟ್ಟುಕೊಳ್ಳಲಿ ಎಂದು ಟೀಕಿಸಿದರು.
|
eesanje/url_46_21_1.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ನಾಗಮಂಗಲ ಕೋಮುಗಲಭೆಯನ್ನು ಅತ್ಯುಗ್ರವಾಗಿ ಖಂಡಿಸಿದ ಬಿ.ವೈ.ವಿಜಯೇಂದ್ರ
|
2 |
+
..
|
3 |
+
ಬೆಂಗಳೂರು,ಸೆ.12– ನಾಗಮಂಗಲದಲ್ಲಿ ಗಣಪತಿ ವಿಸರ್ಜನೆಯ ವೇಳೆ ಕಲ್ಲುತೂರಾಟ ನಡೆಸಿರುವ ಹಿಂದೂ ವಿರೋಧಿ ಮತಾಂಧ ಕಿಡಿಗೇಡಿಗಳ ಅಟ್ಟಹಾಸದಿಂದ ಉದ್ಭವಿಸಿರುವ ಪ್ರಕ್ಷುಬ್ಧ ಪರಿಸ್ಥಿತಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದ್ದು ಘಟನೆಯನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರವಾಗಿ ಖಂಡಿಸಿದ್ದಾರೆ.
|
4 |
+
ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಅತ್ಯುಗ್ರವಾಗಿ ಖಂಡಿಸುತ್ತೇನೆ. ಈ ಹಿಂದಿನ ವರ್ಷವೂ ಪುಂಡರು ಇದೇ ರೀತಿ ವರ್ತಿಸಿದ್ದ ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ಮುಂಜಾಗ್ರತೆಯ ಕಟ್ಟೆಚ್ಚರ ವಹಿಸವಲ್ಲಿ ಎಚ್ಚರ ತಪ್ಪಿರುವುದು ಸ್ಪಷ್ಟವಾಗಿದೆ ಎಂದು ಆರೋಪಿಸಿದ್ದಾರೆ.
|
5 |
+
ಕಾಂಗ್ರೆಸ್ ಸರ್ಕಾರದ ಆಡಳಿತ ಅವಧಿಯಲ್ಲಿ ನಮಗೆ ರಕ್ಷಣೆ ಸಿಗುತ್ತದೆ ಎಂಬ ದೃಢನಂಬಿಕೆ ವಿದೋಹಿ ಶಕ್ತಿಗಳು ವಿಧ್ವಂಸಕ ಕೃತ್ಯಗಳನ್ನು ನಡೆಸಲು ಪ್ರಚೋದನೆಯಾಗುತ್ತಿದೆ, ಜನರ ಧಾರ್ಮಿಕ ಶ್ರದ್ಧೆಯನ್ನು ಘಾಸಿಗೊಳಿಸಲು ಶಾಂತಿಯುತ ಗಣಪತಿ ವಿಸರ್ಜನೆಯ ಸಂದರ್ಭದಲ್ಲಿ ನಡೆದಿರುವ ಈ ಘಟನೆ ಹಿಂದೂ ಸಮುದಾಯವನ್ನು ಪ್ರಚೋದಿಸುವ ಕುಕೃತ್ಯವಾಗಿದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
|
6 |
+
ನಾಗಮಂಗಲದಲ್ಲಿ ಗಣಪತಿ ವಿಸರ್ಜನೆಯ ವೇಳೆ ಕಲ್ಲುತೂರಾಟ ನಡೆಸಿರುವ ಹಿಂದೂ ವಿರೋಧಿ ಮತಾಂದ ಕಿಡಿಗೇಡಿಗಳ ಅಟ್ಟಹಾಸದಿಂದ ಉದ್ಭವಿಸಿರುವ ಪ್ರಕ್ಷುಬ್ಧ ಪರಿಸ್ಥಿತಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದ್ದುಈ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ.ಈ ಹಿಂದಿನ ವರ್ಷವೂ ಪುಂಡರು ಇದೇ ರೀತಿ ವರ್ತಿಸಿದ್ದ ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು…../EQmoLyzjj4
|
7 |
+
ಸೌಹಾರ್ದತೆಯ ಸಮಾಜದಲ್ಲಿ ದಳ್ಳುರಿ ಹಚ್ಚಲು ಯತ್ನಿಸುತ್ತಿರುವ, ಹಿಂದೂ ಸಮುದಾಯದ ಆಚಾರ ವಿಚಾರಗಳನ್ನು ದಮನ ಮಾಡುವ ರೀತಿಯಲ್ಲಿ ವರ್ತಿಸಿರುವ ಹಾಗೂ ಭಾರತೀಯ ಪರಂಪರೆಯನ್ನು ಸದಾ ಕಾಲಕ್ಕೂ ಅಪಮಾನಿಸಲು ಯತ್ನಿಸುತ್ತಿರುವ ಉಗ್ರ ಮನಸ್ಥಿತಿಯ ವಿದೋಹಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
|
8 |
+
ನಾಗಮಂಗಲ ಘಟನೆಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿ ಹಿಂದೂ ವಿರೋಧಿ ಚಟುವಟಿಕೆಗಳನ್ನು ಸಂಘಟಿಸುತ್ತಿರುವ ದುಷ್ಟ ಶಕ್ತಿಗಳನ್ನು ನಿಗ್ರಹಿಸದೇ ಹೋದರೆ ಮುಂದಾಗುವ ಪರಿಣಾಮಗಳ ಹೊಣೆ ಕಾಂಗ್ರೆಸ್ ಸರ್ಕಾರವೇ ಹೊರಬೇಕಾಗುತ್ತದೆ. ಕಾಂಗ್ರೆಸ್ನ ಮತಬ್ಯಾಂಕ್ ಆಧಾರಿತ ಪಕ್ಷಪಾತ ನಡೆ ಕರುನಾಡನ್ನು ದಹಿಸುತ್ತಿದೆ ಎಂದು ವಿಜಯೇಂದ್ರ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ.
|
eesanje/url_46_21_10.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ನೂತನ ಜಾಹೀರಾತು ಪರಿಶೀಲನಾ ಸಮಿತಿ ರಚನೆ ಹಿಂದೆ ಮಾಧ್ಯಮಗಳನ್ನು ನಿಯಂತ್ರಿಸುವ ಹುನ್ನಾರ : ಆರ್.ಅಶೋಕ್
|
2 |
+
|
3 |
+
ಬೆಂಗಳೂರು,ಸೆ.11-ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೂತನವಾಗಿ ಜಾಹೀರಾತು ಪರಿಶೀಲನಾ ಸಮಿತಿ ರಚನೆ ಮಾಡಿರುವುದು ಮಾಧ್ಯಮಗಳನ್ನು ರಾಜ್ಯ ಸರ್ಕಾರ ಪರೋಕ್ಷವಾಗಿ ನಿಯಂತ್ರಣ ಮಾಡುವ ಹುನ್ನಾರ ಇದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಶಂಕೆ ವ್ಯಕ್ತಪಡಿಸಿದ್ದಾರೆ.
|
4 |
+
ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅಶೋಕ್, ಜಾಹೀರಾತು ಪರಿಶೀಲನಾ ಸಮಿತಿಗೆ ಆಡಳಿತ ಪಕ್ಷದ ಪದಾಧಿಕಾರಿಗಳನ್ನು ನೇಮಕ ಮಾಡಿರುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದ್ದಾರೆ. ಸರಣಿ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿ ಸರ್ಕಾರ ಜನಮನ್ನಣೆ ಕಳೆದುಕೊಂಡಿರುವ ಈ ಸಂದರ್ಭದಲ್ಲಿ ಇಂತಹ ನಡೆ ಸಹಜವಾಗಿ ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
|
5 |
+
ಕಾಂಗ್ರೆಸ್ ಸರ್ಕಾರ, ಕೆಪಿಸಿಸಿ ವಕ್ತಾರ ರಮೇಶ್ ಬಾಬು ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪ ಅವರನ್ನು ಸಮಿತಿಯಲ್ಲಿ ನೇಮಕ ಮಾಡಿದೆ.ಸಿಎಂ ಸಿದ್ದರಾಮಯ್ಯನವರೇ, ಜಾಹೀರಾತುಗಳನ್ನು ಪರಿಶೀಲನೆ ಮಾಡಲು ತಮ ಪಕ್ಷದ ಪದಾಧಿಕಾರಿಗಳನ್ನು ನೇಮಿಸಿದ್ದೀರಲ್ಲ, ಕೆಪಿಸಿಸಿ ವಕ್ತಾರರಿಗೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಿಗೆ ಜಾಹೀರಾತು ಪರಿಶೀಲನೆ ಮಾಡುವ ಯಾವ ಅರ್ಹತೆ ಇದೆ? ಯಾವ ಅನುಭವ ಇದೆ? ಎಂದು ಪ್ರಶ್ನಿಸಿದ್ದಾರೆ.
|
6 |
+
ಜಾಹೀರಾತು ಪರಿಶೀಲನೆ ಸಮಿತಿಗೆ ಅರ್ಹರನ್ನ ನೇಮಕ ಮಾಡಬೇಕಾದರೆ ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸಂಪಾದಕರನ್ನೋ ಅಥವಾ ವಾರ್ತಾ ಇಲಾಖೆಯ ಜಾಹಿರಾತು ವಿಭಾಗದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಅನುಭವಿ ಅಧಿಕಾರಿಗಳನ್ನೋ ನೇಮಿಸಬಹುದಿತ್ತು ಎಂದು ಅಶೋಕ್ ಸಲಹೆ ಮಾಡಿದ್ದಾರೆ.
|
eesanje/url_46_21_11.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಸಿದ್ದರಾಮಯ್ಯನವರು ಪ್ರಾಧಿಕಾರ ರಚನೆ ಮಾಡಿ ಒಳ್ಳೆಯ ಕೆಲಸ ಮಾಡಿದ್ದಾರೆ : ಪ್ರತಾಪ್ ಸಿಂಹ
|
2 |
+
|
3 |
+
ಮೈಸೂರು,ಸೆ.11– ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಹಾಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಹೆಸರು ಹೇಳದೆ ಮಾಜಿ ಸಂಸದ ಪ್ರತಾಪ್ ಸಿಂಹ ಟಾಂಗ್ ನೀಡಿದ್ದಾರೆ.
|
4 |
+
ಚಾಮುಂಡಿ ಬೆಟ್ಟದ ಪ್ರಾಧಿಕಾರ ಸ್ಥಾಪನೆಗೆ ರಾಜಮನೆತನ ವಿರೋಧ ವಿಚಾರ ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಕೆಲವು ಸೈದ್ದಾಂತಿಕ ವಿಚಾರದಲ್ಲಿ ಮಾತ್ರ ವಿರೋಧಿಸುತ್ತೇನೆ. ಬೆಟ್ಟದ ಯದ್ವಾತದ್ವಾ ಬೆಳವಣಿಗೆ ನಿಯಂತ್ರಿಸಲು ನ್ಯೂನತೆಗಳನ್ನು ಸರಿದೂಗಿಸಲು ಪ್ರಾಧಿಕಾರ ಅವಶ್ಯಕತೆ ಇದೆ. ಬೆಟ್ಟಕ್ಕೆ ಪೋಲಿಸ್ ಠಾಣೆ ಹಾಗೂ ಆಸ್ಪತ್ರೆ ಬೇಕು. ಇದೆಲ್ಲಾ ಆಗಲು ಒಂದು ಪ್ರಾಧಿಕಾರ ಬೇಕೇ ಬೇಕು ಎಂದು ಅವರು ಹೇಳಿದರು.
|
5 |
+
ಈ ಹಿಂದೆ ಬಿಜೆಪಿ ಸರ್ಕಾರದಲ್ಲೂ ಪ್ರಾಧಿಕಾರ ಬೇಕೆಂದು ಧ್ವನಿ ಎತ್ತಿದ್ದೆವು. ಸಿದ್ದರಾಮಯ್ಯನವರು ಪ್ರಾಧಿಕಾರ ರಚನೆ ಮಾಡಿದ್ದಾರೆ. ಖಂಡಿತ ಇದು ಒಳ್ಳೆಯ ಕೆಲಸ. ಆಸ್ತಿ ಹೊಡೆದಾಟದ ಬಗ್ಗೆ ಮಾತನಾಡುವುದಿಲ್ಲ. ಆದರೆ ದೇವರು ಭಕ್ತರಿಗೆ ಸೇರಬೇಕು. ಭಕ್ತರಿಗೆ ಸೌಲಭ್ಯ ಕಲ್ಪಿಸಬೇಕಾಗಿದ್ದು ಸರ್ಕಾರದ ಕರ್ತವ್ಯ ಎಂದರು.
|
6 |
+
ಅಮೃತ್ ಯೋಜನೆ ಕುಡಿಯುವ ನೀರು ಚಾಮುಂಡಿ ಬೆಟ್ಟಕ್ಕೆ ತಲುಪದಿರಲು ಕಾರಣ ಯಾರು ಎಂದು ನಾನು ಹೇಳಿದರೆ ವಿವಾದವಾಗುತ್ತದೆ. ಪೈಪ್ಲೈನ್ ಎಲ್ಲಿ ತಡೆದು ನಿಂತಿದೆ ನೀವೆ ಹೋಗಿ ಹುಡುಕಿ ಎನ್ನುವ ಮೂಲಕ ಪರೋಕ್ಷವಾಗಿ ಹೆಸರು ಹೇಳದೆ ಸಂಸದ ಯದುವೀರ್ ಒಡೆಯರ್ ಅವರಿಗೆ ಪ್ರತಾಪ್ ಸಿಂಹ ಟಾಂಗ್ ಕೊಟ್ಟರು.
|
7 |
+
ಚಾಮುಂಡಿ ಬೆಟ್ಟದ ದೇವಿಕೆರೆ ಮೇಲೆ ನಮಾಜ್ ಮಾಡುತ್ತಿದ್ದರು. ಚಾಮುಂಡಿ ಬೆಟ್ಟದಲ್ಲಿ 12 ಮುಸ್ಲಿಂ ಷಾಪ್ ಇತ್ತು. ಹಿಂದೂಗಳ ದೇವಸ್ಥಾನ, ಭಕ್ತಿ ಭಾವದಿಂದ ಹೋಗುವ ಜಾಗದಲ್ಲಿ ಇವರು ಯಾಕೆ ಅಂಗಡಿ ಇಡಬೇಕು. ಮುಜರಾಯಿ ಕಾನೂನಿನಲ್ಲಿ ಕೂಡ ಇದಕ್ಕೆ ಅವಕಾಶ ಇಲ್ಲ ಎಂದು ಮುಸ್ಲಿಂ ಅಂಗಡಿಗಳನ್ನು ತೆಗೆಸಿದ್ದೆ ಎಂದು ಹೇಳಿದರು.
|
8 |
+
ಚಾಮುಂಡೇಶ್ವರಿಗೆ ಅವಮಾನದ ರೀತಿಯಲ್ಲಿದ್ದ ಮಹಿಷ ದಸರಾ ತಡೆಯುವ ಕೆಲಸ ಮಾಡಿದೆ. ಅವತ್ತು ಚಾಮುಂಡೇಶ್ವರಿ ತಾಯಿಗೆ ಅನ್ಯಾಯ ಆಗುವಾಗ ಮಾತನಾಡಿಲ್ಲ. ಇಂದು ಬೇರೆ ಬೇರೆ ಕಾರಣಕ್ಕೆ ಕಾಂಟ್ರವರ್ಸಿ ಮಾಡುತ್ತಾರೆ ಎಂದು ಹೇಳುವ ಮೂಲಕ ಈ ಹಿಂದೆ ಸಂಸದರಾಗಿದ್ದ ಸಂದರ್ಭದಲ್ಲಿ ತಮ ಹೋರಟವನ್ನು ನೆನಪಿಸಿಕೊಂಡರು.
|
eesanje/url_46_21_12.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ : ನಾಳೆ ಅಂತಿಮ ತೀರ್ಪು ಸಾಧ್ಯತೆ
|
2 |
+
:
|
3 |
+
ಬೆಂಗಳೂರು,ಸೆ.11-ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಕುರಿತು ನಾಳೆ ಹೈಕೋರ್ಟ್ನಲ್ಲಿ ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ ಇದೆ. ಒಂದು ವೇಳೆ ನಾಳೆ ಸಾಧ್ಯವಾಗದಿದ್ದರೆ ಹೈಕೋರ್ಟ್ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ನಾಗಪ್ರಸನ್ನ ಅವರು ವಾದ ಪ್ರತಿವಾದವನ್ನು ಮುಗಿಸಿ ಅಂತಿಮ ತೀರ್ಪು ನೀಡಬಹುದು ಇಲ್ಲವೇ ತೀರ್ಪನ್ನು ಕಾಯ್ದಿರಿಸಬಹುದು.
|
4 |
+
ನಾಳೆ ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸುಪ್ರೀಂಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ವಾದ ಮಂಡಿಸಲಿದ್ದಾರೆ. ಇವರ ವಾದ ಮುಗಿದ ಬಳಿಕ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರವಾಗಿ ಸುಪ್ರೀಂಕೋರ್ಟ್ನ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತ ಅವರು ಅಂತಿಮ ವಾದ ಮಂಡಿಸುವರು.
|
5 |
+
ಹೀಗಾಗಿ ಹೈಕೋರ್ಟ್ನಲ್ಲಿ ನಾಳೆ ಸಿಎಂ ಸಿದ್ದರಾಮಯ್ಯನವರ ರಾಜಕೀಯ ಭವಿಷ್ಯವನ್ನು ತೀರ್ಮಾನಿಸಬಹುದಾದ ವಾದ-ವಿವಾದ ನಡೆಯಲಿದೆ. ಕಳೆದ ಬಾರಿ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಗುರುವಾರ ಅರ್ಜಿ ವಿಚಾರಣೆ ಮುಗಿಸೋಣ ಎಂದು ಅರ್ಜಿದಾರರಿಗೆ ಮೌಖಿಕ ಸೂಚನೆ ನೀಡಿದ್ದರು.
|
6 |
+
ದೂರುದಾರರ ಪರವಾಗಿ ಲಕ್ಷ್ಮಿ ಅಯ್ಯಂಗಾರ್, ರಾಘವನ್, ರಂಗನಾಥ್ , ಸರ್ಕಾರದ ಪರವಾಗಿ ಅಡ್ವೋಕೆಟ್ ಜನರಲ್ ಶಶಿಕುಮಾರ್ ಶೆಟ್ಟಿ, ರವಿವರ್ಮ ಕುಮಾರ್ ಸೇರಿದಂತೆ ಘಟಾನುಘಟಿ ದಿಗ್ಗಜರೇ ವಾದ ಮಂಡಿಸಿದ್ದರು.
|
7 |
+
ಏನಾಗಲಿದೆ ಸಿಎಂ ಭವಿಷ್ಯ?:ಮುಡಾ ಪ್ರಕರಣ ಸಂಬಂಧ ದೂರುದಾರರಾದ ಸ್ನೇಹಮಯಿ ಕೃಷ್ಣ, ಟಿ.ಜೆ.ಅಬ್ರಹಾಂ ನೀಡಿದ ದೂರಿನ ಮೇರೆಗೆ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದರು. ರಾಜ್ಯಪಾಲರ ತೀರ್ಮಾನವನ್ನು ಪ್ರಶ್ನಿಸಿ ಪ್ರಾಸಿಕ್ಯೂಷನ್ ರದ್ದುಪಡಿಸಬೇಕೆಂದು ಸಿದ್ದರಾಮಯ್ಯ ಪರ ವಕೀಲರು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.
|
8 |
+
ಇದೀಗ ಗುರುವಾರ ಅರ್ಜಿ ವಿಚಾರಣೆಯ ವಾದ-ಪ್ರತಿವಾದ ಮುಗಿದು ರಾಜ್ಯಪಾಲರ ಕ್ರಮದ ಕುರಿತು ಹೈಕೋರ್ಟ್ ನೀಡಲಿರುವ ತೀರ್ಪು ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ನಿರ್ಣಾಯಕವಾಗಲಿದೆ ಎಂದೇ ಹೇಳಲಾಗುತ್ತಿದೆ. ಏಕೆಂದರೆ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರು ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಕ್ರಮವನ್ನು ಎತ್ತಿಹಿಡಿದರೆ ಸಿದ್ದರಾಮಯ್ಯನವರಿಗೆ ಕಾನೂನಿನ ಸಂಕಷ್ಟ ಎದುರಾಗಲಿದೆ.
|
9 |
+
ಒಂದು ವೇಳೆ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಅನೂರ್ಜಿತಗೊಳಿಸಿದರೆ ಥಾವರ್ಚಂದ್ ಗೆಹ್ಲೋಟ್ಗೆ ಭಾರೀ ಮುಖಭಂಗವಾಗಲಿದೆ. ವಾದ- ಪ್ರತಿವಾದದ ವೇಳೆ ಈ ಹಿಂದೆ ಪ್ರಾಸಿಕ್ಯೂಷನ್ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀ���ಿರುವ ಅನೇಕ ತೀರ್ಪುಗಳನ್ನು ಉಲ್ಲೇಖ ಮಾಡಿದ್ದರು.
|
10 |
+
ಅರ್ಜಿದಾರರ ಪರವಾಗಿ ವಾದಿಸಿದ್ದ ಬಹುತೇಕ ವಕೀಲರು ರಾಜ್ಯಪಾಲರ ಕ್ರಮ ಸರಿಯಾಗಿದೆ ಎಂದೇ ವಾದಿಸಿದ್ದರು. ಆದರೆ ಸಿಎಂ ಪರವಾಗಿ ವಾದಿಸಿದ್ದ ಅಭಿಷೇಕ್ ಮನುಸಿಂಘ್ವಿ , ಶಶಿಕಿರಣ್ ಶೆಟ್ಟಿ ಅವರುಗಳು ರಾಜ್ಯಪಾಲರ ಕ್ರಮವನ್ನು ಸಂವಿಧಾನ ಬಾಹಿರ ಎಂದು ಆಕ್ಷೇಪಿಸಿದ್ದರು.ರಾಜ್ಯಪಾಲರ ಕ್ರಮ ಸರಿಯಾಗಿದೆ ಎಂದು ಹೈಕೋರ್ಟ್ ಎತ್ತಿ ಹಿಡಿದರೆ ಸಿದ್ದರಾಮಯ್ಯನವರಿಗೆ ಕಾನೂನಿನ ಕುಣಿಕೆ ಬಿಗಿಯಾಗಲಿದೆ.
|
11 |
+
ತಕ್ಷಣವೇ ತನಿಖಾ ಸಂಸ್ಥೆಗಳು ಅವರ ವಿರುದ್ಧ ಎಫ್ಐಆರ್ ದಾಖಲಿಸಬೇಕಾಗುತ್ತದೆ. ಆಗ ಸುಪ್ರೀಂಕೋರ್ಟ್ ಮೊರೆ ಹೋಗಿ ತಡೆಯಾಜ್ಞೆ ತರಬೇಕು ಇಲ್ಲವೇ ಕಾನೂನು ಎದುರಿಸಬೇಕಾಗುತ್ತದೆ. ಹೀಗೆ ಹೈಕೋರ್ಟ್ ನೀಡಲಿರುವ ತೀರ್ಪು ಸಿದ್ದರಾಮಯ್ಯನವರ ರಾಜಕೀಯ ಅಳಿವು-ಉಳಿವಿನ ಪ್ರಶ್ನೆಯಾಗಿದೆ.
|
eesanje/url_46_21_2.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ನಾಗಮಂಗಲ ಕೋಮುಗಲಭೆ : ಜಿಹಾದಿಗಳ ಬಾಲ ಕತ್ತರಿಸುವಂತೆ ಆರ್.ಅಶೋಕ್ ಆಕ್ರೋಶ
|
2 |
+
|
3 |
+
ಬೆಂಗಳೂರು,ಸೆ.12-ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಕೋಮು ಗಲಭೆಗೆ ಕೆಲವು ಮತೀಯ ಶಕ್ತೀಗಳೇ ಕಾರಣವಾಗಿದೆ. ಇಂತಹ ಮತಾಂಧ ಪುಂಡರ ಬಾಲ ಕತ್ತರಿಸದೆ ಹೀಗೆ ಬಿಟ್ಟರೆ ಇಂತಹವರು ನಾಳೆ ಉಗ್ರವಾದಿಗಳಾಗುವುದರಲ್ಲಿ ಸಂಶಯವೇ ಇಲ್ಲ. ನಿನ್ನೆಯ ಗಲಭೆಗೆ ಕಾರಣರಾದ ಸಮಾಜ ಘಾತುಕ ಶಕ್ತಿಗಳನ್ನ ಈ ಕೊಡಲೇ ಬಂಧಿಸಿ ಕಾನೂನು ವಶಕ್ಕೆ ಒಪ್ಪಿಸಿ ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಜಿಹಾದಿ ಮಾನಸಿಕತೆಗೆ ಜಾಗವಿಲ್ಲ ಎಂಬ ದಿಟ್ಟ ಸಂದೇಶ ರವಾನಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
|
4 |
+
ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಮತಾಂಧ ಶಕ್ತಿಗಳು ಮತ್ತೊಮೆ ಅಟ್ಟಹಾಸ ಮೆರೆದಿದ್ದು, ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಜಿಹಾದಿ ಮುಳ್ಳುಗಳ ದುಸ್ಸಾಹಸ ಶಾಂತಿ ಕದಡುತ್ತಿದೆ. ಇಂತಹ ಮತಾಂತ ಶಕ್ತೀಗಳ ವಿರುದ್ದ ನಿರ್ದಾಕ್ಷ್ಯಣ್ಯವಾಗಿ ಕಾನೂನು ಕ್ರಮ ಜರುಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ್ರವರಿಗೆ ಮನವಿ ಮಾಡಿಕೊಂಡಿದ್ದಾರೆ.
|
5 |
+
ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರ್ಕಾರದ ವೋಟ್ ಬ್ಯಾಂಕ್ ರಾಜಕಾರಣ, ಓಲೈಕೆ ರಾಜಕಾರಣ, ತುಷ್ಟೀಕರಣವೇ ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿರುವುದಕ್ಕೆ ನೇರ ಕಾರಣ.ಅಷ್ಟೇ ಅಲ್ಲದೆ, ರಕ್ಷಣೆ ಕೊಡಿ ಎಂದು ಪೊಲೀಸ್ ಠಾಣೆಗೆ ಬಂದವರ ಮೇಲೆಯೇ ಈ ಮತಾಂಧ ಪುಂಡರು ಹಲ್ಲೆ, ದಬ್ಬಾಳಿಕೆ ನಡೆಸುತ್ತಾರೆ ಅಂದರೆ ಈ ದುಷ್ಟರ ತಾಲಿಬಾನ್ ಮನಸ್ಥಿತಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಎಷ್ಟು ಪ್ರೋತ್ಸಾಹ, ಪೋಷಣೆ ದೊರಕುತ್ತಿದೆ ಎಂದು ಊಹಿಸಿಕೊಳ್ಳಿ ಎಂದು ಆತಂಕ ಹೊರಹಾಕಿದ್ದಾರೆ.
|
6 |
+
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಕಣರೆಯಾಗಿರುವ ಕಾನೂನು ಸುವ್ಯವಸ್ಥೆಗೆ ಮತ್ತೂಂದು ನಿದರ್ಶನವಾಗಿದೆ. ಕಳೆದ ವರ್ಷವೂ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಇಂತಹುದೇ ಘಟನೆ ನಡೆದಿದ್ದರೂ ಈ ವರ್ಷ ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದು ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ವಾಗ್ದಳಿ ನಡೆಸಿದ್ದಾರೆ.
|
7 |
+
ಶಾಂತಿಯುತವಾಗಿ ಸಾಗುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆಗೆ ಅಡ್ಡಿಪಡಿಸುವ ದುರುದ್ದೇಶದಿಂದ ಮುಸ್ಲಿಂ ಮತಾಂಧ ಪುಂಡರು ಪೂರ್ವನಿಯೋಜಿತವಾಗಿ ದಾಂಧಲೆ ಎಬ್ಬಿಸಿ ಸಾರ್ವಜನಿಕರು, ಪೊಲೀಸರ ಮೇಲೆ ಕಲ್ಲು ತೂ��ಾಟ ಮಾಡುವುದು, ಚಪ್ಪಲಿ ಎಸೆಯುವುದು, ಪೆಟೋಲ್ ಬಾಂಬ್ ಸ್ಫೋಟಿಸುವುದು, ತಲ್ವಾರ್ ಝಳಪಿಸುವಂತಹ ದುಸ್ಸಾಹಸಕ್ಕೆ ಮುಂದಾಗುತ್ತಾರೆ ಅಂದರೆ ರಾಜ್ಯದಲ್ಲಿ ಇಂತಹ ಮತಾಂಧ ಪುಂಡರಿಗೆ, ಮುಸ್ಲಿಂ ಮೂಲಭೂತವಾದಿಗಳಿಗೆ ಕಾನೂನಿನ ಭಯವೇ ಇಲ್ಲವೆಂಬುದು ಸ್ಪಷ್ಟವಾಗುತ್ತದೆ ಎಂದು ಆಶೋಕ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
|
eesanje/url_46_21_3.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಶಾಲೆಗಳಲ್ಲಿ ಪಾಠ ಮಾಡದೇ ರಾಜಕೀಯ ಮಾಡುವ ಶಿಕ್ಷಕರ ವಿರುದ್ಧ ಕ್ರಮ : ಶಿಕ್ಷಣ ಸಚಿವ ಮಧು ಬಂಗಾರಪ್ಪ
|
2 |
+
:
|
3 |
+
ಬೆಳಗಾವಿ,ಸೆ.11– ಶಾಲೆಗಳಲ್ಲಿ ಪಾಠ ಮಾಡದೇ ಇತರೇ ಕೆಲಸ ಮಾಡುತ್ತ ತಿರುಗಾಡುವ ಶಿಕ್ಷಕರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹರಿಹಾಯ್ದಿದ್ದಾರೆ.
|
4 |
+
ಸುದ್ದಿಗಾರರಿಗೆ ಮಾತನಾಡಿದ ಅವರು, ಶಿಕ್ಷಕರಾದವರು ಶಾಲೆಯಲ್ಲೇ ಇದ್ದು ಮಕ್ಕಳಿಗೆ ಶಿಕ್ಷಣ ನೀಡಲಿ. ಅದು ಬಿಟ್ಟು ರಾಜಕೀಯ, ಸಂಘಟನೆ, ವ್ಯವಹಾರ ಮಾಡುತ್ತ ತಿರುಗಾಡುತ್ತಿದ್ದಾರೆ ಎಂಬ ದೂರುಗಳಿವೆ. ಶಿಕ್ಷಣಾಧಿಕಾರಿಗಳ ನಿಯಂತ್ರಣದಲ್ಲೂ ಇಲ್ಲದಂತೆ ವರ್ತಿಸುತ್ತಿರುವುದು ಗಮನಕ್ಕೆ ಬಂದಿದೆ. ಅಂತಹ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
|
5 |
+
ಶಿಕ್ಷಕರು ಇಲ್ಲವೇ ಸರಕಾರಿ ನೌಕರರಿಗೆ ಪ್ರತಿಭಟನೆ ಮಾಡುವ ಹಕ್ಕು ಇದೆ ಎಂದ ಮಾತ್ರಕ್ಕೆ ಅದನ್ನೇ ಮುಖ್ಯ ಕಾಯಕ ಮಾಡಿಕೊಂಡರೆ ಹೇಗೆ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಯಾರಿಂದಲೂ ಸಾಧ್ಯವಿಲ್ಲ.
|
6 |
+
ನ್ಯಾಯಾಲಯ ಎನ್ನುವುದು ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ. ನ್ಯಾಯಿಕ ವಿಚಾರಣೆ ನಡೆದುಕೊಂಡು ಹೋಗುತ್ತದೆ. ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು ಎನ್ನುವುದು ನಮೆಲ್ಲರ ಆಸೆ, ಅವರು ಮುಂದುವರೆಯುತ್ತಾರೆ ಎಂದರು.ಕೋರ್ಟ್ ನಲ್ಲಿ ದೆಹಲಿ ಸಿಎಂ ಅರವಿಂದ ಕ್ರೇಜಿ ವಾಲ್, ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರದ್ದು ಕೇಸ್ ಇದೆ, ಇವರಿಗೆ ಸಿದ್ದರಾಮಯ್ಯ ಅಷ್ಟೇ ಯಾಕೆ ಕಾಣುತ್ತಾರೆ ಎಂದು ಬಿಜೆಪಿಯನ್ನು ಪ್ರಶ್ನಿಸಿದರು.
|
7 |
+
ನಮ ತಂದೆ ಎಸ್. ಬಂಗಾರಪ್ಪ ಮುಖ್ಯಮಂತ್ರಿ ಆಗಿದ್ದಾಗ ಬೇಕಾದಷ್ಟು ಕೇಸ್ ಗಳನ್ನ ನಾವು ಸಹ ನೋಡಿದ್ದೇವೆ, ಇದರ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಸಿಎಂ ರೇಸ್ ನಲ್ಲಿ ಕಾಂಗ್ರೆಸ್ ನಾಯಕರೇ ಹೆಚ್ಚಿನವರು ಇದ್ದಾರೆ ಎಂಬ ಬಿಜೆಪಿ ನಾಯಕರ ಆರೋಪ. ನಾನು ಅಷ್ಟು ದೊಡ್ಡ ಮನುಷ್ಯ ಅಲ್ಲ, ಅದಕ್ಕೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದರು.
|
8 |
+
ಬಿಜೆಪಿಗೆ ಸಿದ್ದರಾಮಯ್ಯ ಭಯ ಇದೆಯೇ ಎಂಬ ಪ್ರಶ್ನೆಗೆ, ಬಿಜೆಪಿ ಅಷ್ಟೇ ಅಲ್ಲಾ ಜೆಡಿಎಸ್ ಸೇರಿ ಎಲ್ಲ ವಿರೋಧ ಪಕ್ಷದವರಿಗೂ ಭಯ ಇದೆ. ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ. ಒಳ್ಳೆಯವರನ್ನ ಕೆಳಗಿಳಿಸಲು ಕುತಂತ್ರ ಇದ್ದೇ ಇರುತ್ತದೆ ಎಂದರು.
|
9 |
+
ಬಿಜೆಪಿಯವರು ನಿಸ್ಸಿಮರು.ಇವತ್ತಿನವರೆಗೂ ಅವರ ಹಣೆಬರಹಕ್ಕೆ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬಂದಿಲ್ಲ.ಬಾಂಬೆ ಬಾಯ್ಸ ಅಂತಾ ನೀವೆ ಎಲ್ಲ ಹಾಕಿದರೆ ಇಂತಹ ಸಂಪ್ರದಾಯ ಬೇಕಾ ನಮಗೆ ಎಂದು ಮರು ಪ್ರಶ್ನೆ ಹಾಕಿದರು. ದೀಪಾವಳಿ ನಂತರ ಸರ್ಕಾರ ಪತನ ಆಗುತ್ತೆ ಎಂಬ ಬಿಜೆಪಿ ನಾಯಕರು ಹೇಳಿಕೆ ವಿಚಾರಕ್ಕೆ ಉತ್ತರಿಸಿದ ಅವರು, ಬಿಜೆಪಿಯವರು ಇನ್ನೂ ನಾಲ್ಕು ದೀಪಾವಳಿ ಕಾಯಬೇಕು. ಅಲ್ಲಿಯವರೆಗೆ ಮನೆಯಲ್ಲಿ ದ���ಪಾವಳಿ ಮಾಡೋಕೆ ಹೇಳಿ ಎಂದು ಅವರು ವ್ಯಂಗ್ಯವಾಡಿದರು.
|
eesanje/url_46_21_4.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಸಿಎಂ ಆಗುವುದಾದರೆ ಸತೀಶ್ ಜಾರಕಿಹೊಳಿಯವರನ್ನು ಬೆಂಬಲಿಸುತ್ತೇವೆ : ಬಿಜೆಪಿ ಶಾಸಕ ವಿಠಲ್ ಬೆಂಬಲ
|
2 |
+
:
|
3 |
+
ಬೆಳಗಾವಿ, ಸೆ.11-ಲೋಕಾಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮುಖ್ಯ ಮಂತ್ರಿಯಾಗುವುದಾದರೆ ಅದು ಸಂತೋಷದ ವಿಚಾರ. ಅವರು ಪಕ್ಷತೀತವಾಗಿ ಕೆಲಸ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದು ಬಿಜೆಪಿ ಶಾಸಕ ವಿಠಲ್ ಸೋಮಣ್ಣ ಹಲಗೇಕರ್ ತಿಳಿಸಿದ್ದಾರೆ.
|
4 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉತ್ತರ ಕರ್ನಾಟಕದ ವ್ಯಕ್ತಿ ಮುಖ್ಯಮಂತ್ರಿಯಾದರೆ, ಅದರಲ್ಲೂ ನಮ ಜಿಲ್ಲೆಯವರಾದರೆ ಪಕ್ಷ ಬೇದ ಮರೆತು, ಅಭಿವೃದ್ದಿ ಕೆಲಸಗಳಾಗುತ್ತವೆ. ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಹುದ್ದೆಯ ರೇಸ್ನಲ್ಲಿದ್ದಾರೆ. ಅವರಿಗೆ ಅವಕಾಶ ಸಿಗುವ ನಿರೀಕ್ಷೆಯಿದೆ ಎಂದರು.
|
5 |
+
ಸತೀಶ್ ಜಾರಕಿಹೊಳಿ ನಮಗೂ ಆತಿಯರಾಗಿರುವುದರಿಂದ ಅವರು ಮುಖ್ಯಮಂತ್ರಿಯಾದರೆ ಸಹಜವಾಗಿಯೇ ನನಗೆ ಖುಷಿಯಾಗುತ್ತದೆ. ತಾವು ಗ್ರಾಮ ಪಂಚಾಯಿತಿ ಸದಸ್ಯರಾಗಿಯೂ ಕೆಲಸ ಮಾಡಿದ್ದು, ಖಾನಾಪುರ ಕ್ಷೇತ್ರದ ಬಗ್ಗೆ ವ್ಯಾಪಕ ಪರಿಚಯವಿದೆ ಅಭಿವೃದ್ದಿಗೆ ಹೆಚ್ಚು ಕೆಲಸ ಮಾಡುತ್ತೇನೆ ಎಂದರು.
|
6 |
+
ಕಾಂಗ್ರೆಸ್ ಸರ್ಕಾರಕ್ಕೆ 136 ಶಾಸಕರ ಬೆಂಬಲ ಇದೆ. ಹೀಗಾಗಿ ನಮ ಬೆಂಬಲದ ಅಗತ್ಯ ಇಲ್ಲ. ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾಗಲಿ ಎಂದು ಹೇಳಿದಾಕ್ಷಣ ಬೇರೆ ಏನೋ ರಾಜಕೀಯ ನಡೆಯುತ್ತದೆ ಎಂಬ ವಿಶ್ಲೇಷಣೆ ಅನಗತ್ಯ. ಮುಖ್ಯಮಂತ್ರಿ ಬದಲಾವಣೆಗೆ ಕಾಂಗ್ರೆಸ್ನಲ್ಲಿರುವ ಬೆಂಬಲವೇ ಸಾಕು. ನಾವು ವೈಯಕ್ತಿಕವಾಗಿ ಖುಷಿ ಪಡುತೇವೆ ಎಂದು ಹೇಳಿದರು.
|
eesanje/url_46_21_5.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಅಭಿವೃದ್ಧಿ ಕೆಲಸಗಳಿಗೆ ಪಂಚ ಗ್ಯಾರಂಟಿಗಳು ಅಡ್ಡಿಯಾಗಿವೆ : ಶಾಸಕ ದರ್ಶನ್ ಪುಟ್ಟಣ್ಣಯ್ಯ
|
2 |
+
|
3 |
+
ಮಂಡ್ಯ, ಸೆ.11-ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ, ಗ್ಯಾರಂಟಿ ಯೋಜನೆಗಳೂ ಸಿಗುತ್ತಿಲ್ಲವೆಂದು ಜನರು ದೂರುತ್ತಿದ್ದಾರೆ ಎಂದು ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯಹೇಳಿದ್ದಾರೆ. ಯಾವ ಊರಿಗೆ ಹೋದರೂ ಇದೇ ಮಾತುಗಳು ಕೇಳಿಬರುತ್ತಿವೆ. ರಸ್ತೆ ದುರಸ್ತಿ, ಅಭಿವೃದ್ಧಿ ಕೆಲಸಗಳನ್ನು ಏಕೆ ಮಾಡುತ್ತಿಲ್ಲ ಎಂದು ಜನರು ಪ್ರಶ್ನಿಸುತ್ತಿದ್ದಾರೆ.
|
4 |
+
ರಾಜ್ಯ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆ ಗಳಿಂದ ಇತರೆ ಅಭಿವೃದ್ಧಿ ಕೆಲಸಗಳಿಗೆ ಅನುದಾನಗಳು ಬರುತ್ತಿಲ್ಲ. ಹೀಗಾಗಿ ಸರ್ಕಾರ ಗ್ಯಾರಂಟಿ ಬಗ್ಗೆ ಪರಾಮರ್ಶೆ ಮಾಡಿ ಅಭಿವೃದ್ಧಿ ಯೋಜನೆಗಳಿಗೆ ಹಣ ನೀಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಒತ್ತಾಯಿಸಿದ್ದಾರೆ.
|
5 |
+
ನೀವು ಗೆದ್ದು ಒಂದೂವರೆ ವರ್ಷವಾಗಿದೆ, ಏನು ಕೆಲಸ ಮಾಡಿದ್ದೀರಾ ಎಂದು ಜನರು ಕೇಳುತ್ತಿದ್ದಾರೆ. ಜನರ ಅಭಿವೃದ್ಧಿಗೆ ಹಲವು ಇಲಾಖೆಗಳಿಂದ ಅನುದಾನವೇಸಿಗುತ್ತಿಲ್ಲ. ಹೀಗಾಗಿ ಅಭಿವೃದ್ಧಿಗೆ ಹಣದ ಅವಶ್ಯಕತೆ ಇದೆ.
|
6 |
+
ಸದ್ಯ ರಾಜ್ಯದ ಎಲ್ಲಾ ಆದಾಯದ ಮೂಲ ಗ್ಯಾರಂಟಿ ಯೋಜನೆಗಳಿಗೇ ಹೋಗುತ್ತಿದೆ. ಹೀಗಾಗಿ ಸಮತೋಲನವಾಗಿ ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕೆಲಸಕ್ಕೆ ಅನುದಾನ ನೀಡಬೇಕೆಂದು ಆಗ್ರಹಿಸಿದ್ದಾರೆ.
|
eesanje/url_46_21_6.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿ ಅವಧಿ ಹಗರಣಗಳ ತನಿಖೆ ಶೀಘ್ರ ಸಮಿತಿ ಸಭೆ : ಡಾ.ಜಿ.ಪರಮೆಶ್ವರ್
|
2 |
+
|
3 |
+
ಬೆಂಗಳೂರು, ಸೆ.11-ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಎಲ್ಲಾ ಹಗರಣಗಳನ್ನು ಪರಿಶೀಲನೆ ನಡೆಸಿ, ಸಚಿವ ಸಂಪುಟಕ್ಕೆ ವರದಿ ನೀಡಲು ರಚಿಸಲಾಗಿರುವ ಸಮಿತಿಯ ಸಭೆಯನ್ನು ಶೀಘ್ರವೇ ನಡೆಸುವುದಾಗಿ ಗೃಹ ಸಚಿವ ಡಾ. ಜಿ ಪರಮೆಶ್ವರ್ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆ ಪ್ರಗತಿ, ಸಮನ್ವಯ ಮುಂತಾದ ಕಾರ್ಯ ಗಳಿಗೆ ಕ್ರಮವಹಿಸಲು ತಮ ನೇತೃತ್ವದಲ್ಲಿ ಇತರ ನಾಲ್ವರ ಸಚಿವರನ್ನೊಳಗೊಂಡ ಸಮಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರಚಿಸಿದ್ದಾರೆ.
|
4 |
+
ಸಮಿತಿಯ ಸಭೆ ಇನ್ನೊಂದು ವಾರದೊಳಗಾಗಿ ನಡೆಯಲಿದೆ ಎಂದು ಹೇಳಿದರು.ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಗರಣಗಳನ್ನು ಗುರುತಿಸಿ, ಪಟ್ಟಿ ಮಾಡಲಾಗಿದೆ. ಕೆಲವು ತೀರ್ಮಾನವಾಗಿದ್ದು, ಇನ್ನೂ ಕೆಲವು ಬಾಕಿ ಇವೆ. ವಿವಿಧ ಹಂತಗಳಲ್ಲಿರುವ ಅವುಗಳನ್ನು ಪರಿಶೀಲಿಸಿ ಸಚಿವ ಸಂಪುಟ ಸಭೆಗೆ ವರದಿ ನೀಡಲಾಗುವುದು. ಸಚಿವ ಸಂಪುಟ ಸಭೆಯೇ ಹಿಂದಿನ ಸರ್ಕಾರದ ಹಗರಣಗಳ ತನಿಖೆಯನ್ನು ನೇರ ನಿಗಾವಣೆ ವಹಿಸಬೇಕೆಂದು ಚರ್ಚಿಸಿ ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಮಿತಿ ರಚಿಸಲಾಗಿದೆ ಎಂದರು.
|
5 |
+
ಬಹಳಷ್ಟು ಪ್ರಕರಣಗಳು ದೂಳು ಹಿಡಿದಿವೆ. ಈಗಾಗಲೇ ಇಲಾಖಾವಾರು ವಿಚಾರಣೆ ನಡೆಯುತ್ತಿದೆ. ಪೊಲೀಸ್ ಇಲಾಖೆಯಲ್ಲಿ ಬಾಕಿಯಿರುವ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ತಾವು ಸೂಚನೆ ನೀಡಿದ್ದು, ಪ್ರತಿ ಮೂರು ತಿಂಗಳಿಗೊಮೆ ಪ್ರಗತಿ ಪರಿಶೀಲನೆ ನಡೆಸುವಾಗ ಬಾಕಿ ಪ್ರಕರಣಗಳನ್ನು ಗಮನಿಸಲಾಗುತ್ತಿದೆ ಎಂದು ಹೇಳಿದರು.ಸಮಿತಿ ರಚನೆಯನ್ನು ದ್ವೇಷದ ರಾಜಕಾರಣ ಎಂದು ಬಿಜೆಪಿ ನಾಯಕರು ಟೀಕೆ ಮಾಡುತ್ತಾರೆ, ಅದು ಅವರ ಹಕ್ಕು. ಆಡಳಿತ ಮಾಡುವ ನಮಗೆ ಹೆಚ್ಚಿನ ಜವಾಬ್ದಾರಿ ಇದೆ. ಜನರಿಗೆ ನಾವು ಉತ್ತರ ನೀಡಬೇಕು. ಹೀಗಾಗಿ ನಮ ಕೆಲಸವನ್ನು ನಾವು ಮಾಡುತ್ತೇವೆ ಎಂದರು.
|
6 |
+
ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಣ ವರ್ಗಾವಣೆ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರ ಪಾತ್ರ ಇಲ್ಲ ಎಂದು ನಾವು ಹೇಳಿದ್ದೇವೆ. ತನಿಖೆ ನಡೆಸಿದ ಕೇಂದ್ರ ಸರ್ಕಾರದ ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದೆ. ತನಿಖಾ ಸಂಸ್ಥೆ ನಾಗೇಂದ್ರ ಅವರ ಪಾತ್ರ ಇದೆ ಎಂದು ಹೇಳಿದೆ. ಆದರೆ ಅಂತಿಮವಾಗಿ ಆರೋಪವನ್ನು ಸಾಬೀತುಪಡಿಸಬೇಕಿದೆ ಎಂದರು.
|
7 |
+
ಹಲವಾರು ಬಾರಿ ನಾವು ಹೇಳಿದಕ್ಕೆ ಸಾಕ್ಷ್ಯ ಸಿಕ್ಕಿರುವುದಿಲ್ಲ, ಹಲವು ಬಾರಿ ಅವರು ಹೇಳಿರುವುದಕ್ಕೂ ಸಾಕ್ಷ್ಯ ಸಿಕ್ಕಿರುವುದಿಲ್ಲ. ಇದೇ ಹಗರಣದಲ್ಲಿ ಎಸ್ಐಟಿ ನಡೆಸಿರುವ ತನಿಖೆಯ ಆದ್ಯತೆಯೇ ಬೇರೆ, ಇಡಿ ತನಿಖೆಯ ಆದ್ಯತೆಯೇ ಬೇರೆ. ಎರಡು ತನಿಖೆಗಳು ನಡೆಯಲಿದ್ದು, ಅಂತಿಮವಾಗಿ ಎರಡನ್ನು ಪರಿಗಣಿಸಲಾಗುವುದು. ಎರಡು ತನಿಖಾ ಸಂಸ್ಥೆಗಳು ಒಂದೇ ಪ್ರಕರಣದ ವಿಚಾರಣೆ ನಡೆಸಿದಾಗ ಭಿನ್ನ ರೀತಿಯ ಮಾಹಿತಿಗಳು ಹೊರಬರುತ್ತವೆ ಎಂದು ಹೇಳಿದರು.
|
8 |
+
ಮುಖ್ಯಮಂತ್ರಿ ಬದಲಾವಣೆಯ ವಿಚಾರವಾಗಿ ಅನಗತ್ಯ ಹೇಳಿಕೆಗಳು ಬರುತ್ತಿರುವುದು ಸರಿಯಲ್ಲ. ನಮಗೆ ಜನ ಮತ ನೀಡಿ ಗೆಲ್ಲಿಸಿದ್ದಾರೆ. ಉತ್ತಮ ಆಡಳಿತ ನಡೆಸುವತ್ತಾ ಗಮನ ಹರಿಸಬೇಕು. ಬಿಜೆಪಿ ಅವರು ಸರ್ಕಾರ ಅಸ್ಥಿರಗೊಳಿಸುವ ಅಥವಾ ಜನಪರ ಯೋಜನೆಗಳ ಅನುಷ್ಠಾನವನ್ನು ತಡೆಯುವ ಹುನ್ನಾರ ನಡೆಸಿದ್ದಾರೆ. ಇದನ್ನು ಬದಿಗೊತ್ತಿ ಕೆಲಸ ಮಾಡಬೇಕಿದೆ ಎಂದು ಹೇಳಿದರು.
|
9 |
+
ಪ್ರಸ್ತುತ ದಿನಗಳಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕೇಳಿ ಬರುತ್ತಿರುವ ಹೇಳಿಕೆಗಳ ಕುರಿತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿದೇಶದಿಂದ ವಾಪಸ್ ಬಂದ ಬಳಿಕ ಕ್ರಮ ಕೈಗೊಳ್ಳಬಹುದು ಎಂದರು.ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂಬುದು ಕೆಲವರ ವೈಯಕ್ತಿಕ ಅಭಿಪ್ರಾಯ ಎಂದ ಪರಮೇಶ್ವರ್, ಪಡಿತರ ಚೀಟಿಗಳನ್ನು ಕಡಿತ ಮಾಡುವುದು ಸರ್ಕಾರದ ಉದ್ದೇಶವಲ್ಲ.
|
10 |
+
ಆದಾಯ ಪಾವತಿ ಮಾಡುವವರು ಬಡವರಿಗೆ ತಲುಪಬೇಕಾದ ಯೋಜನೆಗಳಿಗೆ ಸುಳ್ಳು ದಾಖಲೆ ಸಲ್ಲಿಸಿ, ಫಲಾನುಭವಿಗಳಾಗುವುದು ಸರಿಯಲ್ಲ. ಅಂತವರ ಸೌಲಭ್ಯಗಳನ್ನು ಕಡಿತ ಮಾಡುವುದು ತಪ್ಪಲ್ಲ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಏನೇನೊ ಹೇಳುತ್ತಾರೆ. ಅದನ್ನು ಬಿಟ್ಟು ರಾಜ್ಯದ ಅಭಿವೃದ್ಧಿಗೆ ದೊಡ್ಡ ಕೆಲಸ ಮಾಡಲಿ ಎಂದು ಸಲಹೆ ನೀಡಿದರು.
|
11 |
+
ಅಮೆರಿಕಾದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ ಮತ್ತು ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಪರಸ್ಪರ ಭೇಟಿಯಾಗಿರುವುದು ಆಕಸಿಕ. ಫೋಟೋ ನೋಡಿ ನನಗೆ ಖುಷಿಯಾಯಿತು. ಒಂದೇ ಹೋಟೆಲ್ನಲ್ಲಿದ್ದಾರೆ, ಪರಸ್ಪರ ಎದುರಾದಾಗ ಮಾತನಾಡಿಸದೆ ಓಡಿಹೋಗಲು ಸಾಧ್ಯವೇ? ಎಂದು ಪ್ರಶ್ನಿಸಿದರು.
|
eesanje/url_46_21_7.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬಳ್ಳಾರಿ ಸಂಸದರ ಆಯ್ಕೆ ರದ್ದುಗೊಳಿಸಲು ಚುನಾವಣಾ ಆಯೋಗಕ್ಕೆ ಆಗ್ರಹ
|
2 |
+
|
3 |
+
ಬೆಂಗಳೂರು,ಸೆ.11– ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ್ದ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿನಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಲೂಟಿಯಾದ ಹಣ ಬಳಕೆಯಾಗಿರುವುದು ಸಾಕ್ಷಿ ಸಮೇತ ಸಾಬೀತಾಗಿದ್ದು, ಕೇಂದ್ರ ಚುನಾವಣಾ ಆಯೋಗ ಈ ಕೂಡಲೇ ಮಧ್ಯಪ್ರವೇಶಸಿ ಈ ಆಯ್ಕೆ ಯನ್ನು ರದ್ದುಗೊಳಿ ಸಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.
|
4 |
+
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸರ್ಕಾರದ ಸಚಿವರೊಬ್ಬರು ಈ ಹಗರಣದಲ್ಲಿ ಭಾಗಿಯಾಗಿರುವುದು ಸ್ಪಷ್ಟವಾದರೂ ಅದರ ಹೊಣೆಯನ್ನು ಹೊರುವಲ್ಲಿ ಮುಖ್ಯಮಂತ್ರಿಗಳು ಹಾಗೂ ಇಡೀ ಸರ್ಕಾರ ಏಕೆ ಹಿಂಜರಿಯುತ್ತಿದೆ ಎಂದು ಪ್ರಶ್ನಿಸಿದ್ದಾರೆ.
|
5 |
+
ಇಡಿ ತನಿಖೆ ಇನ್ನಷ್ಟು ವಿಸ್ತರಿಸಿದರೆ ಆರೋಪಿ ಸ್ಥಾನದಲ್ಲಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರ ಬೆನ್ನಿಗೆ ನಿಂತಿದ್ದ ದೊಡ್ಡ ಶಕ್ತಿಗಳ ಮುಖವಾಡವೂ ಬಯಲಾಗುತ್ತದೆ. ಮುಂದಿನ ವಿಚಾರಣೆಯಲ್ಲಿ ಈ ಹಗರಣದ ಪೂರ್ಣ ಸತ್ಯ ಬಯಲಾಗಲಿದೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
|
6 |
+
ಲೂಟಿಯಾದ ಹಣ ಯಾರ್ಯಾರಿಗೋ ಹರಿದು ಹಂಚಿ ಹೋಗಿರುವ ಭಾಗದಲ್ಲಿ ಲೋಕಸಭಾ ಚುನಾವಣೆಗೆ ಬಹುದೊಡ್ಡ ಮೊತ್ತ ಬಳಕೆಯಾಗಿರುವುದು ಸ್ಪಷ್ಟವಾಗಿದೆ. ರಾಜ್ಯದ ಲೋಕಸಭಾ ಚುನಾವಣೆಯಲ್ಲಿ 9 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್ ಯಾವ ಪರಿಯಲ್ಲಿ ಚುನಾವಣೆಯಲ್ಲಿ ಗೆದ್ದಿದೆ ಎನ್ನುವುದನ್ನು ಬಳ್ಳಾರಿಯ ಲೋಕಸಭೆಯ ಫಲಿತಾಂಶದಲ್ಲಿ ಉತ್ತರ ದೊರಕಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
|
7 |
+
ದುರ್ಮಾರ್ಗಗಳಿಂದ ಗಳಿಸಿದ ಕಪ್ಪು ಹಣದಿಂದ ಚುನಾವಣೆ ಗೆಲ್ಲುತ್ತಿದ್ದ ಕಾಂಗ್ರೆಸ್ ಇದೀಗ ಸರ್ಕಾರಿ ಖಾತೆಯಿಂದ ಲೂಟಿಯಾದ ಹಣದಿಂದಲೂ ಚುನಾವಣೆ ನಿರ್ವಹಿಸುವಷ್ಟು ಕೀಳುಮಟ್ಟದ ಕ್ರಿಮಿನಲ್ ಮಾರ್ಗ ಅನುಸರಿಸುತ್ತಿದೆ. ಚುನಾವಣೆಯಲ್ಲಿ ಗೆಲ್ಲುವುದಕ್ಕಾಗಿ ಯಾವ ಲಜ್ಜೆಗೇಡಿ ಮಾರ್ಗವನ್ನು ಅನುಸರಿಸಲು ಹಿಂದೇಟು ಹಾಕುವುದಿಲ್ಲ ಎಂಬುದನ್ನು ಕಾಂಗ್ರೆಸ್ ಸಾಬೀತುಪಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
|
8 |
+
ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಹಣದ ಲೂಟಿಕೋರತನದ ಹಣವನ್ನು ಚುನಾವಣೆಗೆ ಬಳಸಿಕೊಂಡಿರುವುದು ಲಜ್ಜೆತನದ ಪರಮಾವಧಿಯಾಗಿದೆ. ಜಾರಿ ನಿರ್ದೇಶನಾಲಯದ ಮಧ್ಯಪ್ರವೇಶದಿಂದಾಗಿ ಲೂಟಿಯಾದ ಹಣದ ಮೂಲ ಪತ್ತೆಯಾಗಿದ್ದು, ನಿಜವಾದ ಅಪರಾಧಿಗಳ ಮುಖವಾಡ ಬಯಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
|
9 |
+
ಇತಿಹಾಸದಲ್ಲಿ ಕಂಡು ಕೇಳರಿಯದ ಸರ್ಕಾರಿ ಖಾತೆಗಳಿಗೆ ಕನ್ನ ಹಾಕಿದ ಹಗರಣ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದ ಮೇಲುಸ್ತುವಾರಿಯಲ್ಲೇ ನಡೆದಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ಬೇಲಿಯೇ ಎದ್ದು ಹೊಲ ಮೇಯ್ದ ಉದಾಹರಣೆ ಉಲ್ಲೇಖಿಸಲು ಭವಿಷ್ಯತ್ತಿನಲ್ಲಿ ವಾಲೀಕಿ ಅಭಿವೃದ್ಧಿ ನಿಗಮದ ಹಗರಣ ಮೊದಲನೆಯ ಸ್ಥಾನದಲ್ಲಿ ನಿಲ್ಲುತ್ತದೆ ಎಂದು ಟೀಕಿಸಿದ್ದಾರೆ.
|
10 |
+
ಸದ್ಯ ಇಡಿ ಪಾರದರ್ಶಕವಾಗಿ ತನಿಖೆ ನಡೆಸಿ ಕಾಂಗ್ರೆಸ್ ಸರ್ಕಾರದ ಸಚಿವರೇ ಭಾಗಿಯಾಗಿದ್ದ ಆರೋಪವನ್ನು ಸಾಬೀತುಪಡಿಸುವಲ್ಲಿ ಮಹತ್ವದ ಹೆಜ್ಜೆಯನ್ನು ಇಟ್ಟಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
|
eesanje/url_46_21_8.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
“ಮುಂದಿನ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಜೈ”
|
2 |
+
|
3 |
+
ಬೆಂಗಳೂರು, ಸೆ.11– ರಾಜಕೀಯ ಸೂಕ್ಷ್ಮ ಸಂದರ್ಭದಲ್ಲೇ, ಮುಂದಿನ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರಿಗೆ ಜೈ ಎಂಬ ಘೋಷಣೆಗಳು ಮೊಳಗಿವೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮನೆ ಬಳಿ ಆಗಮಿಸಿದ ಕಾರ್ಯಕರ್ತರು ಪರಮೇಶ್ವರ್ ಹಾಗೂ ಅವರ ಪತ್ನಿ ಕನ್ನಿಕಾ ಪರಮೇಶ್ವರ್ ಚಿತ್ರವನ್ನು ಪೆನ್ಸಿಲ್ ಸ್ಕೆಚ್ ಮಾಡಿದ ಫೋಟೋವನ್ನು ಉಡುಗೊರೆ ನೀಡಿದರು.
|
4 |
+
ಈ ವೇಳೆ ಮುಂದಿನ ಮುಖ್ಯಮಂತ್ರಿ ಪರಮೇಶ್ವರ್ ಸಾಹೇಬರಿಗೆ ಜಯವಾಗಲಿ ಎಂದು ಘೋಷಣೆ ಕೂಗಿದರು. ಇದರಿಂದ ಸಿಟ್ಟಾದ ಪರಮೇಶ್ವರ್ ಕೈ ಎತ್ತಿ ಕಾರ್ಯಕರ್ತರನ್ನು ಹೊಡೆಯುವಂತೆ ನಟಿಸಿದರು.
|
5 |
+
ಇದಕ್ಕೆ ಕಾರ್ಯಕರ್ತರು ನಗುತ್ತಲೇ ಪ್ರತಿಕ್ರಿಯಿಸಿದರು. ಈಗಲೇ ಸಾಕಷ್ಟು ವಿವಾದಗಳಿವೆ. ಇಂತದರಲ್ಲಿ ನೀವು ಬೇರೆ ಎಂದು ಸಿಡಿಮಿಡಿಗೊಂಡು ಪರಮೇಶ್ವರ್ ಕಾರು ಏರಿ ಹೊರಟರು.
|
eesanje/url_46_21_9.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿ, ಆಸ್ತಿಗಳ ನಗದೀಕರಣಕ್ಕೆ ಸರ್ಕಾರ ನಿರ್ಧಾರ
|
2 |
+
|
3 |
+
ಬೆಂಗಳೂರು, ಸೆ.11-ಪಂಚಖಾತ್ರಿ ಯೋಜನೆ ಗಳನ್ನು ಜಾರಿಗೊಳಿಸಿ, ಬೊಕ್ಕಸವನ್ನು ಬರಿದು ಮಾಡಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಆದಾಯ ಮೂಲಗಳನ್ನು ಹುಡುಕಲು ಮುಂದಾಗಿದ್ದು, ಆಸ್ತಿ ನಗದೀಕರಣ (ಅಸೆಟ್ ಮಾನಿಟೈಸೇಷನ್) ಮೂಲಕ ಸಂಪನೂಲ ಕ್ರೂಢೀಕರಣಕ್ಕೆ ಮುಂದಾಗಿದೆ.
|
4 |
+
ತೆರಿಗೆಯೇತರ ಆದಾಯ ಸಂಪನೂಲಗಳನ್ನು ಹೆಚ್ಚಿಸಲು, ಸರ್ಕಾರದ ಆಸ್ತಿಗಳ ಸಮರ್ಪಕ ಬಳಕೆ, ನಿರ್ವಹಣೆ ಮತ್ತು ತನೂಲಕ ಖಾಸಗಿ ಬಂಡವಾಳವನ್ನು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಅಕರ್ಷಿಸಲು ಸಲಹೆಗಳನ್ನು ನೀಡಲು ತಜ್ಞರ ಸಮಿತಿಯನ್ನು ರಚಿಸಲಾಗಿದೆ.
|
5 |
+
ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 2024- 25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ರಾಜ್ಯದ ತೆರಿಗೆಯೇತರ ರಾಜಸ್ವ ಸಂಗ್ರಹ ಸಾಮರ್ಥ್ಯ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರದ ಆಸ್ತಿ ನಗದೀಕ ರಣದ ಅವಕಾಶವನ್ನು ಗುರುತಿಸಲು ನಿವೃತ್ತ ಐಎಎಸ್ ಅಧಿಕಾರಿ ಡಾ. ಕೆ.ಪಿ. ಕೃಷ್ಣನ್ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿಯನ್ನು ರಚಿಸಲಾಗಿದೆ.
|
6 |
+
ಸಮಿತಿಯಲ್ಲಿ ಪರೋಕ್ಷ ತೆರಿಗೆ ಮತ್ತು ಸುಂಕಗಳ ಕೇಂದ್ರಿಯ ಮಂಡಳಿ ಮಾಜಿ ಅಧ್ಯಕ್ಷ ನಜೀಬ್ ಶಾ, ನಿವೃತ್ತ ಐಎಎಸ್ ಅಧಿಕಾರಿ ಎಚ್. ಶಶೀಧರ್, ಐಎಸ್ಇಸಿ ಸಂಸ್ಥೆಯ ಪ್ರೊಫೆಸರ್ ಡಾ. ಕೃಷ್ಣರಾಜು, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಸದಸ್ಯರಾಗಿದ್ದಾರೆ.
|
7 |
+
ರಾಜ್ಯದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಕಾರ್ಯವ್ಯಾಪ್ತಿಯು ಇಲಾಖೆಗಳ ಕೆಲವು ಯೋಜನೆಗಳ ನಿರ್ವಹಣೆ ಮತ್ತು ಅನುಷ್ಠಾನಕ್ಕೆ ಸೀಮಿತಗೊಂಡಿದೆ. ಹೊಸ ಮೂಲ ಸೌಕರ್ಯಗಳು ಹಾಗೂ ಸಂಪನೂಲಗಳನ್ನು ಸೃಷ್ಟಿಸಿ ರಾಜ್ಯವನ್ನು ಅಭಿವೃದ್ದಿಯ ಪಥದಲ್ಲಿ ಕೊಂಡೊಯ್ಯುವ ವಿಶಾಲ ಕಾರ್ಯವ್ಯಾಪ್ತಿಯನ್ನು ಸರ್ಕಾರ ಹೊಂದಿದೆ. ಇದಕ್ಕಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಪಾಲುಗಾರಿಕೆಯನ್ನು ಹೆಚ್ಚಿಸಲು, ಆಸ್ತಿ ನಗದೀಕರಣ ಗುರುತಿಸಲು ಸಮಿತಿ ಕೆಲಸ ನಿರ್ವಹಿಸಬೇಕಿದೆ ಎಂದು ಕಳೆದ ಆಗಸ್ಟ್ 23ರಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.
|
8 |
+
ಈ ಸಮಿತಿಯು ಹೊಸ ತೆರಿಗೆಯೇತರ ಆದಾಯದ ಮೂಲಗಳನ್ನು ಗುರುತಿಸಬೇಕು, ಖಾಸಗಿ ಸಹಭಾಗಿತ್ವದಲ್ಲಿ ಆಸ್ತಿ ನಗದೀಕರಣ ಮೂಲಕ ಆದಾಯ ಹೆಚ್ಚಿಸಲು ಇರುವ ಹೊಸ ಅವಕಾಶಗಳು ಹಾಗೂ ಕಾರ್ಯ ಸಾಧ್ಯವಾದ ಯೋಜನೆಗಳನ್ನು ಗುರುತಿಸಬೇಕು, ರಾಜ್ಯದ ಪ್ರಸ್ತುತ ತೆರಿಗೆಗಳು, ತೆರಿಗೆಯೇತರ ಆದಾಯದ ಮೂಲಗಳನ್ನು ವಿಸ್ತರಿಸಲು ಮತ್ತು ತೆರಿಗೆ ಸಂಗ್ರಹಣೆಯನ್ನು ಹೆಚ್ಚಿಸಲು ಕಾರ್ಯ ಸಾಧ್ಯವಿರುವ ಸೂಕ್ತ ಶಿಫಾರಸ್ಸುಗಳನ್ನು ಮಾಡಬೇಕು ಎಂದು ಸೂಚಿಸಲಾಗಿದೆ.
|
9 |
+
ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಆಸ್ತಿ ನಗದೀಕರಣ ಯೋಜನೆಗಳನ್ನು ಪರಿಣಾಮಕಾರಿಯಾಗಿ ಹಾಗೂ ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಬಲಿಷ್ಠ ನಿಯಮಾವಳಿಗಳು, ಪರಿಣಾಮಕಾರಿ ಕಾರ್ಯತಂತ್ರ ಮತ್ತು ಪಾರದರ್ಶಕ ಕಾರ್ಯವಿಧಾನಗಳನ್ನು ರೂಪಿಸಬೇಕು.
|
10 |
+
ಯಾವುದೇ ಇತರ ನಿಬಂಧನೆಗಳನ್ನು ಸರ್ಕಾರ ಸಮಿತಿಗೆ ಕಾಲಕಾಲಕ್ಕೆ ಸೂಚಿಸಬಹುದಾಗಿದ್ದು, ಸಮಿತಿ ತನ್ನದೇ ಆದ ಕಾರ್ಯವಿಧಾನಗಳನ್ನು ರೂಪಿಸಿಕೊಂಡು, ಪರಶೀಲನಾರ್ಹ ಅಂಶಗಳಿಗೆ ಅಗತ್ಯ ಎನಿಸಿದ ಮಾಹಿತಿಗಳನ್ನು ವಿವಿಧ ಇಲಾಖೆಗಳಿಂದ ಪಡೆಯಬಹುದಾಗಿದೆ ಎಂದು ತಿಳಿಸಲಾಗಿದೆ.
|
11 |
+
ಸಮಿತಿ 12 ತಿಂಗಳೊಳಗಾಗಿ ಶಿಫಾರಸ್ಸುಗಳ ವರದಿಯನ್ನು ಸಲ್ಲಿಸಬೇಕು ಎಂದು ಆರ್ಥಿಕ ಇಲಾಖೆ ಆದೇಶಿಸಿದೆ. ಕೇಂದ್ರ ಸರ್ಕಾರ ಆಸ್ತಿ ನಗದೀಕರಣ ಯೋಜನೆಯನ್ನು ಜಾರಿಗೆ ತಂದಾಗ ವ್ಯಾಪಕ ಟೀಕೆಗಳು ಕೇಳಿ ಬಂದಿದ್ದವು. ಸರ್ಕಾರದ ಸ್ವತ್ತುಗಳನ್ನು ಖಾಸಗಿಯವರಿಗೆ ಪರಭಾರೆ ಮಾಡಲಾಗುತ್ತಿದೆ ಎಂಬ ಆಕ್ಷೇಪಗಳು ವ್ಯಾಪಕವಾಗಿದ್ದವು.
|
12 |
+
ಈಗ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಸ್ಥಳೀಯ ಸ್ವತ್ತುಗಳನ್ನು ಪರಭಾರೆ ಮಾಡಲು ಮುಂದಾಗಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಅದರಲ್ಲೂ ಪಂಚಖಾತ್ರಿ ಯೋಜನೆಗಳನ್ನು ರಾಜಕೀಯ ಕಾರಣಕ್ಕೆ ಜಾರಿಗೆ ತಂದು ಸಂಪನೂಲ ಕ್ರೂಢೀಕರಣಕ್ಕೆ ಆಸ್ತಿಗಳ ಪರಭಾರೆಗೆ ಮುಂದಾಗಿರುವುದು ತೀವ್ರ ಆಕ್ಷೇಪಕ್ಕೆ ಗುರಿಯಾಗಿದೆ.
|
eesanje/url_46_220_1.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಹಣಕಾಸು ವಿಚಾರಕ್ಕೆ ಇಬ್ಬರು ಪೊಲೀಸ್ ಕಾನ್ಸ್ಟೆಬಲ್ಸ್ ಕೈಕೈಮಿಲಾಯಿಸಿ ಫೈಟ್
|
2 |
+
ಬೆಂಗಳೂರು,ಫೆ.29- ಹಣಕಾಸು ವಿಚಾರದಲ್ಲಿ ಇಬ್ಬರು ಪೊಲೀಸ್ ಕಾನ್ಸ್ಟೆಬಲ್ಗಳು ಜಗಳವಾಡಿ ಕೈ ಕೈ ಮಿಲಾಯಿಸಿಕೊಂಡು ಹೊಡೆದಾಡಿಕೊಂಡಿದ್ದಾರೆ. ಈ ಹಿಂದೆ ಕೆಜಿಹಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ಸ್ಟೆಬಲ್ ಗಂಗಪ್ಪ ಎಂಬುವರು ಮತ್ತೊಬ್ಬ ಕಾನ್ಸ್ಟೆಬಲ್ ಮುಲ್ತಾನಿ ಎಂಬುವರ ಬಳಿ 40 ಸಾವಿರ ರೂ. ಸಾಲ ಪಡೆದುಕೊಂಡಿದ್ದಾರೆ.
|
3 |
+
ಇತ್ತೀಚೆಗೆ ಗಂಗಪ್ಪ ಅವರು ಕೊಡಿಗೆಹಳ್ಳಿ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದು, ಮುಲ್ತಾನಿಯವರು ಫೋನ್ ಮಾಡಿದರೂ ಸಿಗುತ್ತಿರಲಿಲ್ಲ. ಹಣವೂ ಹಿಂದಿರುಗಿಸಿರಲಿಲ್ಲ. ಮೂರು ದಿನಗಳ ಹಿಂದೆ ಗಂಗಪ್ಪ ಅವರು ಕರ್ತವ್ಯದ ಮೇಲೆ ಕೆಜಿಹಳ್ಳಿ ಪೊಲೀಸ್ ಠಾಣೆಗೆ ಬಂದಿದ್ದಾರೆ. ಆ ವೇಳೆ ಅಲ್ಲೇ ಕೆಲಸ ನಿರ್ವಹಿಸುತ್ತಿದ್ದ ಮುಲ್ತಾನಿ ಅವರು ಇವರನ್ನು ಗಮನಿಸಿ ಹಣ ಕೇಳಿದ್ದಾರೆ.
|
4 |
+
ಫೋನ್ ಮಾಡಿದರೂ ನೀನು ಸಿಗುತ್ತಿಲ್ಲ. ಹಣವೂ ಹಿಂದಿರುಗಿಸಿಲ್ಲ ಎಂದು ಮುಲ್ತಾನಿ ಅವರು ಕೇಳಿದಾಗ ಇಬ್ಬರ ನಡುವೆ ಪೊಲೀಸ್ ಠಾಣೆ ಬಳಿಯೇ ಜಗಳ ನಡೆದಿದೆ. ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ಹೋಗಿ ಕೈ ಕೈ ಮಿಲಾಯಿಸಿಕೊಂಡು ಹೊಡೆದಾಡಿಕೊಂಡಿದ್ದು, ಸಾರ್ವಜನಿಕರು ಪೊಲೀಸ್ ಕಾನ್ಸ್ಟೆಬಲ್ಗಳ ವರ್ತನೆಗೆ ಬೇಸರ ವ್ಯಕ್ತಪಡಿಸಿದ್ದಾರೆ.
|
eesanje/url_46_220_10.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸದನ ಕೋಲಾಹಲ : ಸರ್ಕಾರ ರಾಜೀನಾಮೆಗೆ ವಿಪಕ್ಷ ಪಟ್ಟು
|
2 |
+
ಬೆಂಗಳೂರು,ಫೆ.28- ವಿಧಾನಸೌಧದಲ್ಲಿ ನಿನ್ನೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂಬ ವಿಚಾರ ವಿಧಾನಸಭೆಯಲ್ಲಿಂದು ಕಾವೇರಿದ ಚರ್ಚೆಗೆ ಗ್ರಾಸವಾಗಿದ್ದಲ್ಲದೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ರಣಾಂಗಣವನ್ನೇ ನಿರ್ಮಿಸಿತ್ತು. ಹಲವು ಬಾರಿ ಗದ್ದಲಗಳಾಗಿ 2 ಬಾರಿ ಕಲಾಪ ಮುಂದೂಡ ಬೇಕಾಯಿತು. ಘಟನೆಯ ನೈತಿಕ ಹೊಣೆ ಹೊತ್ತು ಸರ್ಕಾರ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಧರಣಿ ನಡೆಸಿದೆ. ಘಟನೆ ಕುರಿತು ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ವಿಷಯ ಪ್ರಸ್ತಾಪಿಸಿ, ಚರ್ಚೆಗೆ ಅವಕಾಶ ಕೇಳಿದರು. ಈ ಹಂತದಲ್ಲಿ ಬಿಜೆಪಿ ಶಾಸಕರು ರಾಷ್ಟ್ರಧ್ವಜದೊಂದಿಗೆ ವಿಧಾನಸಭೆಗೆ ಆಗಮಿಸಿದರು.
|
3 |
+
ಸಭಾಧ್ಯಕ್ಷ ಯು.ಟಿ.ಖಾದರ್ ಚರ್ಚೆಗೆ ಅವಕಾಶ ಮಾಡಿಕೊಟ್ಟರು. ಚರ್ಚೆ ಮಾಡಿದ ಆರ್.ಅಶೋಕ್ರವರು ಘಟನೆಯ ಹಿಂದಿರುವ ಶಕ್ತಿಗಳನ್ನು ಮಟ್ಟ ಹಾಕಬೇಕು. ರಾಜ್ಯಸಭೆಗೆ ಆಯ್ಕೆಯಾದ ನಾಸಿರ್ ಹುಸೇನ್ರ ಗೆಲುವಿನ ಸಂಭ್ರಮಾಚರಣೆ ವೇಳೆಯಲ್ಲೇ ಈ ರೀತಿ ಘೋಷಣೆ ಕೂಗಿರುವುದು ಗಮನಾರ್ಹ. ಅವರನ್ನು ಯಾರು ಕರೆತಂದಿದ್ದರು ಎಂಬ ವಿಚಾರಗಳು ಚರ್ಚೆಯಾಗಬೇಕು. ಸರ್ಕಾರ ಪ್ರಕರಣವನ್ನು ಹಗುರವಾಗಿ ತೆಗೆದುಕೊಂಡಿದೆ. ಈವರೆಗೂ ಒಬ್ಬ ಆರೋಪಿಯನ್ನೂ ಬಂಧಿಸಿಲ್ಲ ಎಂದು ಕಿಡಿಕಾರಿದರು.
|
4 |
+
ವಿ.ಸುನಿಲ್ಕುಮಾರ್ರವರು ಘಟನೆ ಬಗ್ಗೆ ರಾಷ್ಟ್ರೀಯ ತನಿಖಾ ದಳ (ಎನ್ಐಎ)ದಿಂದ ವಿಚಾರಣೆಯಾಗಬೇಕೆಂದು ಆಗ್ರಹಿಸಿದರು. ಬಸನಗೌಡ ಪಾಟೀಲ್ ಯತ್ನಾಳ್, ಇಲ್ಲಿನ ಅನ್ನ ತಿಂದು, ನೀರು ಕುಡಿದು ಪಾಕಿಸ್ತಾನದ ಪರವಾಗಿ ಪ್ರೀತಿ ತೋರಿಸುವವರನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು. ಚರ್ಚೆಗಳು ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡು ಪುಲ್ವಾಮ ದಾಳಿ, ಸರ್ಜಿಕಲ್ ಸ್ಟ್ರೈಕ್, ದೇಶ ವಿಭಜನೆ, ಪಾಕ್ ಪರವಾದ ಧ್ವಜಾರೋಹಣದ ಆರೋಪ, ದೇಶಪ್ರೇಮ ಸೇರಿದಂತೆ ಹಲವು ವಿಚಾರಗಳ ಪ್ರಸ್ತಾಪಕ್ಕೆ ಕಾರಣವಾಯಿತು.
|
5 |
+
ಬಿಜೆಪಿ ಸದಸ್ಯರು, ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡು ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಇದಕ್ಕೆ ತಿರುಗೇಟು ನೀಡಿದ ಕಾಂಗ್ರೆಸ್ ಶಾಸಕರು ದೇಶಭಕ್ತಿಯ ಬಗ್ಗೆ ಬಿಜೆಪಿಯಿಂದ ಪಾಠ ಕಲಿಯಬೇಕಿಲ್ಲ, ದೇಶವಿಭಜನೆಯನ್ನು ಮೊದಲು ಪ್ರಸ್ತಾಪಿಸಿದ್ದೇ ಬಿಜೆಪಿ ಸಿದ್ದಾಂತ ಆಧಾರಿತ ನಾಯಕರು ಎಂದು ಆಕ್ರೋಶ ವ್ಯಕ್ತಪಡಿಸಿದರು.
|
6 |
+
ಅಷ್ಟಕ್ಕೇ ಸುಮ್ಮನಾಗದ ಕಾಂಗ್ರೆಸ್ ಶಾಸಕರು, ಹಲವು ಕಡೆಗಳಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರು ಹಾಗೂ ಧ್ವಜಾರೋಹಣ ಮಾಡಿದವರು ಸಿಕ್ಕಿಬಿದ್ದಿದ್ದಾರೆ. ಅವರ ಹಿನ್ನೆಲೆ ನೋಡಿದರೆ ಬಿಜೆಪಿ ಮತ್ತು ಅದರ ಅಂಗಸಂಸ್ಥೆಗಳಿಗೆ ಸೇರಿದವರಾಗಿದ್ದಾರೆ. ರಾಜಕೀಯ ಲಾಭಕ್ಕಾಗಿ ಅನ್ಯ ಧರ್ಮದವರ ಮೇಲೆ ಗೂಬೆ ಕೂರಿಸುವ ಹುನ್ನಾರಗಳು ನಡೆದಿದೆ ಎಂದು ಕಿಡಿಕಾರಿದ���ು. ಶೃಂಗೇರಿಯ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ, ತಮ್ಮ ಕ್ಷೇತ್ರದಲ್ಲಿ 2020, 2022 ರಲ್ಲಿ 2 ಪ್ರತ್ಯೇಕ ಪ್ರಕರಣಗಳು ನಡೆದಿವೆ. ಅದನ್ನು ಬಜರಂಗದಳ ಹಾಗೂ ಬಿಜೆಪಿ ಬೆಂಬಲಿತ ಸಂಘಟನೆಯವರು ಮಾಡಿ ಅಲ್ಪಸಂಖ್ಯಾತರ ತಲೆಗೆ ಕಟ್ಟುವ ಹುನ್ನಾರ ನಡೆಸಿದ್ದರು. ಪ್ರತಿಬಾರಿಯೂ ಈ ರೀತಿಯ ಸಂಚು ನಡೆದಿದೆ. ನಿನ್ನೆ ವಿಧಾನಸೌಧದಲ್ಲಿ ನಡೆದ ಘಟನೆ ಬಗ್ಗೆಯೂ ನಮಗೆ ಅನುಮಾನಗಳಿವೆ. ಒಂದು ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದೇ ಆಗಿದ್ದರೆ ಅಂತವರನ್ನು ಗಲ್ಲಿಗೆ ಹಾಕಿ ಎಂದು ಒತ್ತಾಯಿಸಿದರು.
|
7 |
+
ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಾಕಿಸ್ತಾನ ಪರ ಘೋಷಣೆ ಕೂಗುವವರು ತಾಯ್ಗಂಡರು ಎಂದು ಆಕ್ರೋಶಭರಿತ ವಾಗ್ದಾಳಿ ನಡೆಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್ನ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ, ಆರೋಪಿಗಳ ವಿರುದ್ಧ ಟೀಕೆ ಮಾಡಲು ನಮ್ಮ ಆಕ್ಷೇಪವಿಲ್ಲ. ಆದರೆ ಸದನದಲ್ಲಿ ಬಳಸಬೇಕಾದ ಭಾಷೆಗಳ ಬಗ್ಗೆ ನಿಯಮಾವಳಿಗಳನ್ನು ಅನುಸರಿಸಬೇಕಾಗುತ್ತದೆ. ಅವರ ರೀತಿಯಲ್ಲಿಯೇ ನಾವೂ ಕೂಡ ಬೋ… ಮಕ್ಕಳು, ಸೂ… ಮಕ್ಕಳು ಎಂದು ಬಳಸಬೇಕಾಗುತ್ತದೆ. ಅದಕ್ಕೂ ಅವಕಾಶ ಕೊಡುತ್ತೀರಾ ಎಂದು ಪ್ರಶ್ನಿಸಿದರು.
|
8 |
+
ಸಭಾಧ್ಯಕ್ಷ ಯು.ಟಿ.ಖಾದರ್, ಪಾಕಿಸ್ತಾನದ ಪರವಾಗಿರುವವರನ್ನು ಖಂಡಿಸಲು ನೀವು ಯಾವುದೇ ಭಾಷೆಯನ್ನು ಬಳಸಿದರೂ ಅದಕ್ಕೆ ನಾನು ಅನುಮತಿ ಕೊಡುತ್ತೇನೆ ಎಂದು ಪ್ರಕಟಿಸಿ ಯತ್ನಾಳ್ ಅವರನ್ನು ಬೆಂಬಲಿಸಿದರು. ಮುಂದುವರೆದ ಸಭಾಧ್ಯಕ್ಷರು ತಾವೂ ಕೂಡ ಬೋ… ಮಕ್ಕಳು ಎಂಬ ಕಠಿಣ ಪದ ಬಳಸಿ ದೇಶದ್ರೋಹಿಗಳ ವಿರುದ್ಧ ಕಿಡಿಕಾರಿದರು.
|
9 |
+
ಈ ವೇಳೆ ಬಸನಗೌಡ ಪಾಟೀಲ್ ಯತ್ನಾಳ್, ನಿಮ್ಮಂತ ದೇಶ ಭಕ್ತರು ಅಭಿನಾಂದನಾರ್ಹ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಭಾಧ್ಯಕ್ಷರು ನಾವೆಲ್ಲಾ ಭಾರತೀಯರು ಎಂದು ಸಮರ್ಥಿಸಿಕೊಂಡರು. ಚರ್ಚೆಯಲ್ಲಿ ಭಾಗವಹಿಸಿದ ಎಲ್ಲಾ ಶಾಸಕರು ಪಕ್ಷಬೇಧ ಮರೆತು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಂಡು ಗಲ್ಲು ಶಿಕ್ಷೆಗೆ ಒಳಪಡಿಸಿ ಎಂದು ಒತ್ತಾಯಿಸಿದರು. ಬಿಜೆಪಿಯವರು ಈ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ಸಿಗರು ಆಕ್ಷೇಪಿಸಿದರು.
|
10 |
+
ಸುದೀರ್ಘ ಚರ್ಚೆಗೆ ಉತ್ತರ ನೀಡಿದ ಗೃಹಸಚಿವ ಪರಮೇಶ್ವರ್, ಘಟನೆಯನ್ನು ಪರಿಶೀಲಿಸಲಾಗುತ್ತಿದೆ. ದೇಶದ್ರೋಹದ ಘೋಷಣೆಯನ್ನು ಕೂಗಿದ್ದರೆ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಎಫ್ಎಸ್ಎಲ್ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ಅದರ ಬಳಿಕ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
|
11 |
+
ಈ ಉತ್ತರದಿಂದ ತೃಪ್ತರಾಗದ ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು. ಆರ್.ಅಶೋಕ್, ಗೃಹಸಚಿವರು ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಆದರೆ ನಿನ್ನೆ ಘಟನೆ ನಡೆದಾಗ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ನಾಸಿರ್ ಹುಸ���ನ್ ಏಕೆ ಖಂಡನೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.ಈ ಸರ್ಕಾರ ಘಟನೆಯನ್ನು ಹಗುರವಾಗಿ ತೆಗೆದುಕೊಂಡಿದೆ. ಪಾಕಿಸ್ತಾನ ಪರವಾದ ಘೋಷಣೆ ಕೂಗಿದ ಬಳಿಕವೂ ಅದನ್ನು ಸಹಿಸಿಕೊಂಡರೆ ಬದುಕಿದ್ದೂ ವ್ಯರ್ಥ. ಸರ್ಕಾರ ಅಕಾರಕ್ಕೆ ಅಂಟಿಕೊಳ್ಳದೆ ತಕ್ಷಣವೇ ರಾಜೀನಾಮೆ ನೀಡಿ ನಿರ್ಗಮಿಸಬೇಕು ಎಂದು ಒತ್ತಾಯಿಸಿದರು.
|
12 |
+
ಇದಕ್ಕೆ ಬೆಂಬಲ ವ್ಯಕ್ತಪಡಿಸಿದ ಬಿಜೆಪಿ ಶಾಸಕರು ಸಭಾಧ್ಯಕ್ಷರ ಮುಂದಿನ ಬಾವಿಗೆ ಇಳಿದು ಧರಣಿ ನಡೆಸಿದರು.ಚರ್ಚೆಯ ಉದ್ದಕ್ಕೂ ವಾದ-ವಿವಾದ, ವಾಗ್ವಾದ, ವಾಕ್ಸಮರಗಳು ಯಥೇಚ್ಛವಾಗಿ ಕಂಡುಬಂದವು.10.30 ರ ಸುಮಾರಿಗೆ ಗದ್ದಲ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸಭಾಧ್ಯಕ್ಷರು ಕಲಾಪವನ್ನು ಮುಂದೂಡಿದ್ದರು. ನಂತರ 1.15 ರ ಸುಮಾರಿಗೆ ಬಿಜೆಪಿಯವರು ಧರಣಿ ನಡೆಸಿದ್ದರಿಂದಾಗಿ ಮತ್ತೊಮ್ಮೆ ಕಲಾಪವನ್ನು ಮುಂದೂಡಬೇಕಾಯಿತು.
|
eesanje/url_46_220_11.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಕಾಂಗ್ರೆಸ್-ಬಿಜೆಪಿ ನಡುವೆ ಏರಿದ ಧ್ವನಿಯಲ್ಲಿ ಮಾತಿನ ಚಕಮಕಿ
|
2 |
+
ಬೆಂಗಳೂರು,ಫೆ.28- ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಏರಿದ ಧ್ವನಿಯಲ್ಲಿ ಮಾತಿನ ಚಕಮಕಿ ವಿಧಾನಸಭೆಯಲ್ಲಿ ನಡೆಯಿತು. ರಾಜ್ಯಸಭೆ ಚುನಾವಣೆ ಫಲಿತಾಂಶದ ನಂತರ ನಡೆದ ವಿಜಯೋತ್ಸವದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪದಡಿ ಬಿಜೆಪಿ ಶಾಸಕ ವಿ.ಸುನಿಲ್ಕುಮಾರ್ ಮಾತನಾಡುವಾಗ ಶಾಸಕರ ಮನೆಗೆ ಬೆಂಕಿ ಹಾಕಿದವರನ್ನು ಅಮಾಯಕರು, ಕುಕ್ಕರ್ ಬಾಂಬ್ ಆರೋಪಿಯನ್ನು ಬ್ರದರ್ ಎಂದು ಕರೆದರು ಎಂದು ಹೇಳಿ ಬಳಸಿದ ಶಬ್ದ ಕಾಂಗ್ರೆಸ್ ಶಾಸಕರನ್ನು ಕೆರಳಿಸಿತು.
|
3 |
+
ಇದಕ್ಕೆ ಕಾಂಗ್ರೆಸ್ನವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಮಧ್ಯ ಪ್ರವೇಶಿಸಿದ ಯು.ಟಿ.ಖಾದರ್, ವಿಷಯದ ಬಗ್ಗೆ ಕಾಳಜಿ ಇದ್ದರೆ ಚರ್ಚೆ ಮಾಡಿ, ರಾಜಕೀಯ ಏಕೆ ಪ್ರಸ್ತಾಪ ಮಾಡುತ್ತೀರಿ ಎಂದರು. ಆಗ ಕಂದಾಯ ಸಚಿವ ಕೃಷ್ಣಭೈರೇಗೌಡ ಮಾತನಾಡಿ, ಅವರು ಎಷ್ಟೇ ಪ್ರಚೋದಿಸಿ ಮಾತನಾಡಿದರೂ ಸುಮ್ಮನೇ ಇದ್ದೇವೆ. ವಿಷಯದ ವಾಸ್ತವತೆ ಮೇಲೆ ಬೆಳಕು ಚೆಲ್ಲುತ್ತಿಲ್ಲ. ನಮ್ಮ ತಾಳ್ಮೆ ಪರೀಕ್ಷೆ ಮಾಡುತ್ತಿದ್ದಾರೆ. ಸುಳ್ಳುಗಳ ಕಟ್ಟುಕಥೆ ಕಟ್ಟುತ್ತಿದ್ದಾರೆ.
|
4 |
+
ಸುನಿಲ್ಕುಮಾರ್ ಪ್ರಸ್ತಾಪಿಸಿದ ಶಬ್ದವನ್ನು ಕಡತದಿಂದ ತೆಗೆಯಬೇಕು ಎಂದಾಗ ಪರಿಶೀಲಿಸುವ ಭರವಸೆಯನ್ನು ಸಭಾಧ್ಯಕ್ಷರು ನೀಡಿದರು. ವಿರೋಧಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಮಾತನಾಡಿ, ಕಡತದಿಂದ ಏಕೆ ತೆಗೆಯಬೇಕೆಂದು ಆಕ್ಷೇಪಿಸಿದರು. ಈ ಹಂತದಲ್ಲಿ ಬಿಜೆಪಿ ಶಾಸಕ ಅಶ್ವತ್ಥ ನಾರಾಯಣ, ಸಚಿವ ಪ್ರಿಯಾಂಕ್ ಖರ್ಗೆ, ಕೃಷ್ಣ ಭೈರೇಗೌಡ ಸೇರಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಮಾತುಮುಂದುವರೆಸಿದ ಸುನಿಲ್ಕುಮಾರ್ ಸರ್ಜಿಕಲ್ ಸ್ಟ್ರೈಕ್ ಆದಾಗ ಸಾಕ್ಷಿ ಕೇಳಿದ್ದು ಯಾವ ಪಕ್ಷ ಎಂದು ಪ್ರಶ್ನಿಸಿದರು.
|
5 |
+
ಪಾಕ್ ಪರ ಘೋಷಣೆ ಪ್ರಕರಣವನ್ನು NIAಗೆ ವಹಿಸಲು ಸುನಿಲ್ಕುಮಾರ್ ಒತ್ತಾಯ
|
6 |
+
ಆಗಲೂ ಏರಿದ ಧ್ವನಿಯಲ್ಲಿ ಆಡಳಿತ ಮತ್ತು ವಿರೋಧಪಕ್ಷಗಳ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಕೃಷ್ಣಭೈರೇಗೌಡ ಮಾತನಾಡಿ, 40 ಸೈನಿಕರು ಮೃತಪಟ್ಟರೂ ಯಾರನ್ನಾದರೂ ಬಂಸಿದ್ದಾರಾ? ಅವರ ಸಾವಿಗೆ ಯಾರು ಕಾರಣ? 5 ವರ್ಷವಾಯಿತು ಯಾವೊಬ್ಬ ಕಾರಣಕರ್ತರನ್ನು ಪತ್ತೆ ಹಚ್ಚಿಲ್ಲ ಎಂದರು. ಇದಕ್ಕೆ ಸಚಿವ ಶಿವರಾಜ್ ತಂಗಡಗಿ ಧ್ವನಿಗೂಡಿಸಿ ಮಾತನಾಡಿದರು. ಆಗ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಮಾತನಾಡಲು ಮುಂದಾದಾಗ ನಾಳೆ ಬೆಳಿಗ್ಗೆಯವರೆಗೂ ಮಾತನಾಡಲು ಅವಕಾಶ ಕೊಡಲಾಗುವುದು. ಯಾರ್ಯಾರು ಮಾತನಾಡಬೇಕೆನ್ನುತ್ತೀರೊ ಅವರ ಪಟ್ಟಿ ಕೊಡಿ ಎಂದು ಸಭಾಧ್ಯಕ್ಷರು ಕೇಳಿದರು.
|
7 |
+
ವಿರೋಧಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಘೋಷಣೆ ಕೂಗಿ ವ್ಯಕ್ತಿಯನ್ನು ರಾಜಾಜಿನಗರದ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಅವರ ಬಾಯಿ ಮುಚ್ಚಿದ್ದಾರೆ. ಆ ರೀತಿ ಘೋಷಣೆ ಕೂಗದೇ ಇದ್ದರೆ ಏಕೆ ಬಾಯಿ ಮುಚ್ಚಬೇಕಿತ್ತು ಎಂದು ಪ್ರಶ್ನಿಸಿದರು.
|
eesanje/url_46_220_12.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ರಾಜ್ಯಸಭಾ ಚುನಾವಣೆ : ಮತದಾನ ಮಾಡದಿರುವುದಕ್ಕೆ ಸ್ಪಷ್ಟನೆ ನೀಡಿದ ಹೆಬ್ಬಾರ್
|
2 |
+
ಕಾರವಾರ,ಫೆ.28- ಆರೋಗ್ಯ ಸರಿ ಇರಲಿಲ್ಲ, ಅನಾರೋಗ್ಯದ ಕಾರಣ ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಆಗಲಿಲ್ಲ ಎಂದು ಯಲ್ಲಾಪುರದಲ್ಲಿ ಶಾಸಕ ಶಿವರಾಮ್ ಹೆಬ್ಬಾರ್ ಸ್ಪಷ್ಟನೆ ನೀಡಿದ್ದಾರೆ. ನಾನು ನಾಲ್ಕು ದಶಕದಿಂದ ರಾಜಕಾರಣದಲ್ಲಿ ಇದ್ದೇನೆ. ನಾನು ಯಾರಿಗೂ ಹೆದರಿ ಮತದಾನಕ್ಕೆ ಹೋಗಿಲ್ಲ. ನಾನು ಮತದಾನಕ್ಕೆ ಹೋಗಿ ಅಡ್ಡ ಮತದಾನ ಮಾಡಬಹುದಿತ್ತು.
|
3 |
+
ಇಲ್ಲವೇ ಮತದಾನ ಮಾಡದೆಯೇ ಇರಬಹುದಿತ್ತು. ನಾನು ಯಾರಿಗೂ ವಾರ್ನಿಂಗ್ ಕೊಡಲು ಹೋಗಿಲ್ಲ. ನನಗೆ ನನ್ನದೇ ಆದ ಅಸಮಾಧಾನ ಇರುವುದು ನಿಜ. ಅದು ಜಿಲ್ಲಾಮಟ್ಟದಲ್ಲಿ ಮಾತ್ರ ಎಂದು ಹೇಳಿದ್ದಾರೆ.
|
4 |
+
ಮಾ.1ರಿಂದ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ, ತಪ್ಪಿದರೆ ದಂಡ ಫಿಕ್ಸ್
|
5 |
+
ಕೇಂದ್ರ ಮತ್ತು ರಾಜ್ಯದ ಮುಖಂಡರ ಮೇಲೆ ಅಸಮಾಧಾನ ಇಲ್ಲ. ಸಮಸ್ಯೆ ಇರುವುದು ಜಿಲ್ಲಾ ಮಟ್ಟದ ನಾಯಕರಿಂದ ಮಾತ್ರ. ಯಾರು ಅಡ್ಡಗಾಲು ಹಾಕುತ್ತಿದ್ದಾರೆ ಎಂಬುದಕ್ಕೆ ಕಾಲವೇ ಉತ್ತರ ಕೊಡಲಿದೆ ಎಂದು ತಿಳಿಸಿದರು.
|
eesanje/url_46_220_2.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ : ಮೊಹಮ್ಮದ್ ಶಫಿ ನಾಶಿಪುಡಿ ಸೇರಿದಂತೆ 8 ಮಂದಿಯ ವಿಚಾರಣೆ
|
2 |
+
ಬೆಂಗಳೂರು,ಫೆ.29- ವಿಧಾನಸೌಧದ ಮೊಗಸಾಲೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ವಿಧಾನಸೌಧ ಠಾಣೆ ಪೊಲೀಸರು ಮೊಹಮ್ಮದ್ ಶಫಿ ನಾಶಿಪುಡಿ ಸೇರಿದಂತೆ 8 ಮಂದಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
|
3 |
+
ರಾಜ್ಯಸಭಾ ಚುನಾವಣೆಯಲ್ಲಿ ನಾಸಿರ್ ಹುಸೇನ್ರವರು ಗೆದ್ದು ವಿಧಾನಸೌಧದ ಮೊಗಸಾಲೆಯಲ್ಲಿ ವಿಜಯೋತ್ಸವ ಆಚರಿಸುವ ಸಂದರ್ಭದಲ್ಲಿ ಯಾರ್ಯಾರು ಇದ್ದರು, ಅವರ ಪರ ಯಾರ್ಯಾರು ಘೋಷಣೆ ಕೂಗುತ್ತಿದ್ದರು, ಅಂತವರ ಒಂದು ಪಟ್ಟಿಯನ್ನು ಪೊಲೀಸರು ಮಾಡಿಕೊಂಡಿದ್ದಾರೆ.
|
4 |
+
ಘಟನೆಗೆ ಸಂಬಂಸಿದಂತೆ ಮಾಧ್ಯಮಗಳಲ್ಲಿ ಬಿತ್ತರವಾದ ವಿಡಿಯೋ ತುಣುಕುಗಳನ್ನು ಪೊಲೀಸರು ಕೂಲಂಕುಶವಾಗಿ ಪರಿಶೀಲನೆ ನಡೆಸಿ ಈ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಆದರೆ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ವ್ಯಕ್ತಿ ಯಾರು ಎಂಬುದನ್ನು ನಿಖರವಾಗಿ ಇನ್ನೂ ಪತ್ತೆ ಹಚ್ಚಲಾಗಿಲ್ಲ. ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ರ ಬೆಂಬಲಿಗ ಬ್ಯಾಡಗಿ ಮೆಣಸಿನಕಾಯಿ ವ್ಯಾಪಾರಿ ಮೊಹಮ್ಮದ್ ಶಫಿ ನಾಶಿಪುಡಿಯ ಧ್ವನಿ ಹೋಲಿಕೆ ಹಿನ್ನೆಲೆಯಲ್ಲಿ ಅವರನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
|
5 |
+
ಬ್ಯಾಡಗಿಯ ಬಿಜೆಪಿ ಮುಖಂಡರು ಸಹ ಈ ವ್ಯಾಪಾರಿಯ ಮೇಲೆ ಶಂಕೆ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆಗೊಳಪಡಿಸಿ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಆದರೆ ನಾನು ನಾಸಿರ್ ಸಾಬ್ ಜಿಂದಾಬಾದ್ ಎಂದು ಕೂಗಿದ್ದೇನೆ. ನನ್ನ ತಾಯಿಯಾಣೆ ಆ ರೀತಿ ಘೋಷಣೆ ಕೂಗಿಲ್ಲ ಎಂದು ಪೊಲೀಸರ ವಿಚಾರಣೆ ವೇಳೆ ಮೊಹಮ್ಮದ್ ಶಫಿ ತಿಳಿಸಿದ್ದಾನೆಂದು ಗೊತ್ತಾಗಿದೆ.
|
eesanje/url_46_220_3.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ದೇಶದ್ರೋಹಿಗಳಿಗೆ ಬೆಂಬಲ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ದೂರು
|
2 |
+
ಬೆಂಗಳೂರು,ಫೆ.29- ದೇಶದ್ರೋಹಿಗಳಿಗೆ ಬೆಂಬಲ ನೀಡುವ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ದೂರು ನೀಡುತ್ತೇವೆ ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ವಿಧಾನಸಭೆಯಲ್ಲಿಂದು ತಿಳಿಸಿದರು.ಬಜೆಟ್ ಮೇಲೆ ನಡೆದ ಚರ್ಚೆಗೆ ಮುಖ್ಯಮಂತ್ರಿಯವರು ವಿಧಾನಸಭೆಯಲ್ಲಿ ಉತ್ತರ ನೀಡುತ್ತಿದ್ದರು. ಈ ಹಂತದಲ್ಲಿ ಬಿಜೆಪಿ ಶಾಸಕರು ಸಭಾಧ್ಯಕ್ಷರ ಮುಂದಿನ ಬಾವಿಯಲ್ಲಿ ನಿಂತು ಧರಣಿ ನಡೆಸಿ ಘೋಷಣೆ ಕೂಗುವುದನ್ನು ಮುಂದುವರೆಸಿದರು.
|
3 |
+
ಆದರೂ ಮುಖ್ಯಮಂತ್ರಿಯವರು ತಮ್ಮ ಉತ್ತರವನ್ನು ಮುಂದುವರೆಸಿದರು. ಕಾಗದ ಪತ್ರಗಳನ್ನು ಹರಿದು ತೂರಿದ ಬಿಜೆಪಿ ಶಾಸಕರು ನಾನಾ ರೀತಿಯ ಘೋಷಣೆಗಳ ಮೂಲಕ ಮುಖ್ಯಮಂತ್ರಿಗಳ ಉತ್ತರಕ್ಕೆ ಅಡ್ಡಿಪಡಿಸಿದರು. ಆದರೂ ಸಿದ್ದರಾಮಯ್ಯ ಜಗ್ಗದೇ ತಮ್ಮ ಮಾತುಗಳನ್ನು ಮುಂದುವರೆಸಿ ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ಅನ್ಯಾಯದ ಬಗ್ಗೆ ಎಳೆಎಳೆಯಾಗಿ ವಿವರಿಸಲಾರಂಭಿಸಿದರು.
|
4 |
+
ಇದರಿಂದ ಸಿಡಿಮಿಡಿಗೊಂಡ ಬಿಜೆಪಿ ಶಾಸಕರು ಏರಿದ ಧ್ವನಿಯಲ್ಲಿ ಘೋಷಣೆ ಕೂಗುತ್ತಿದ್ದರು. ಕೊನೆಗೆ ಆರ್.ಅಶೋಕ್ರವರು ವಿಧಾನಸಭೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಲಾಗಿದೆ. 68 ಘಂಟೆ ಕಳೆದರೂ ಒಬ್ಬ ಆರೋಪಿಯನ್ನೂ ಬಂಸಿಲ್ಲ. ಈ ಸರ್ಕಾರ ಹಿಂದೂ ವಿರೋಯಾಗಿದೆ. ದೇಶದ್ರೋಹಿಗಳಿಗೆ ಬೆಂಬಲ ಕೊಡುತ್ತಿದೆ. ಮೊನ್ನೆ ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ. ಮುಂದಿನ ದಿನಗಳಲ್ಲಿ ವಿಧಾನಸಭೆಯ ಸಭಾಂಗಣದೊಳಗೂ ಘೋಷಣೆ ಕೂಗಬಹುದು. ಘೋಷಣೆ ಕೂಗಿದ ಪ್ರಕರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.
|
5 |
+
ದೇಶದ್ರೋಹಿಗಳ ಜೊತೆ ಶಾಮೀಲಾಗಿರುವ ಈ ಸರ್ಕಾರವನ್ನು ವಜಾಗೊಳಿಸಬೇಕೆಂದು ನಾವು ರಾಜ್ಯಪಾಲರಿಗೆ ದೂರು ನೀಡುತ್ತೇವೆ, ಸಭಾತ್ಯಾಗ ಮಾಡುತ್ತೇವೆ ಎಂದು ಹೇಳಿ ತಮ್ಮ ಶಾಸಕರೊಂದಿಗೆ ಕಲಾಪದಿಂದ ಹೊರನಡೆದರು.ಈ ವೇಳೆ ಸಿದ್ದರಾಮಯ್ಯನವರು ನಿಮ್ಮ ಕೈಲಿ ಬೇರೇನೂ ಆಗುವುದಿಲ್ಲ, ಸರಿ ನಡಿಯಿರಿ ಎಂದು ಲೇವಡಿ ಮಾಡಿದರು.
|
eesanje/url_46_220_4.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
‘ಹರ್ ಘರ್ ಮೋದಿ’ ಎಂದು ಕೂಗಿದ ಬಿಜಿಪಿಯವರಿಗೆ ‘ಜೈ ಸೀತಾರಾಮ್’ ಘೋಷಣೆ ಕೂಗಿ ತಿರುಗೇಟು ನೀಡಿದ ಸಿಎಂ
|
2 |
+
ಬೆಂಗಳೂರು,ಫೆ.29- ವಿಧಾನಸಭೆಯ ಸಭಾಂಗಣದಲ್ಲಿ ಬಿಜೆಪಿಯವರು ಹರ್ಘರ್ ಮೋದಿ ಘೋಷಣೆ ಕೂಗಿದಾಗ ಅದಕ್ಕೆ ಪ್ರತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೈ ಸೀತಾರಾಮ್ ಘೋಷಣೆ ಕೂಗುವ ಮೂಲಕ ತಿರುಗೇಟು ನೀಡಿದರು.ಬಜೆಟ್ ಮೇಲಿನ ಚರ್ಚೆಗೆ ಮುಖ್ಯಮಂತ್ರಿಯವರು ಉತ್ತರ ನೀಡುವಾಗ ಬಿಜೆಪಿಯವರು ಧರಣಿ ನಡೆಸುತ್ತಿದ್ದರು. ರಾಜ್ಯಸಭೆ ಚುನಾವಣೆ ಗೆಲುವಿನ ಸಂಭ್ರಮಾಚರಣೆಯ ವೇಳೆ ಕಾಂಗ್ರೆಸ್ನ ನಾಸಿರ್ ಹುಸೇನ್ ಜೊತೆಯಲ್ಲಿ ನಿಂತಿದ್ದವರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಧರಣಿ ನಡೆಸುತ್ತಿತ್ತು.
|
3 |
+
ಆ ವೇಳೆಯಲ್ಲಿ ಬಿಜೆಪಿಯವರು ಧರಣಿ ನಡೆಸುತ್ತಲೇ ಕಾಗದ ಪತ್ರಗಳನ್ನು ತೂರುವ ಮೂಲಕ ನಾನಾ ರೀತಿಯ ಘೋಷಣೆಗಳನ್ನು ಮೊಳಗಿಸಿದರು.ಮೋದಿ ಮೋದಿ ಎಂದು ಬಿಜೆಪಿ ಶಾಸಕರು ಕೂಗುತ್ತಿದ್ದಂತೆ ಸಿದ್ದರಾಮಯ್ಯ ಜೈ ಸೀತಾರಾಮ್ ಎಂದು ಕೂಗಿದರು.ಇದಕ್ಕೆ ಧ್ವನಿಗೂಡಿಸಿದ ಕಾಂಗ್ರೆಸ್ ಶಾಸಕರು ಜೈ ಸೀತಾರಾಮ್ ಎಂದು ಜೈಕಾರ ಹಾಕಿದ್ದರಿಂದ ಗೊಂದಲದ ವಾತಾವರಣ ನಿರ್ಮಾಣವಾಯಿತು. ಯಾರು ಏನು ಹೇಳುತ್ತಿದ್ದಾರೆಂಬುದೇ ಕೇಳಿಸದಾಯಿತು.
|
4 |
+
ಮುಂದುವರೆದ ಬಿಜೆಪಿ ಶಾಸಕರು ಹರ್ಹರ್ ಮೋದಿ, ಹರ್ಘರ್ ಮೋದಿ ಎಂದು ಘೋಷಣೆ ಕೂಗಿದರು. ಅದಕ್ಕೆ ಕೆಂಡ ಕಾರಿದ ಸಿದ್ದರಾಮಯ್ಯ ಮೋದಿ ಇಲ್ಲಿದ್ದಾರೆಯೇ? ಮತ್ತೆ ಅವರ ಹೆಸರನ್ನು ಏಕೆ ಕರೆಯುತ್ತೀರಿ ಎಂದು ಪ್ರಶ್ನಿಸಿದರು. ಕೇಂದ್ರದಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಇದರ ಬಗ್ಗೆ ಚರ್ಚೆ ಮಾಡುವ ಬದಲಾಗಿ ಮೋದಿ ಮೋದಿ ಎಂದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು.ಆದರೂ ಸುಮ್ಮನಾಗದ ಬಿಜೆಪಿಯವರು ಹಲವು ರೀತಿಯ ಘೋಷಣೆಗಳನ್ನು ಮುಂದುವರೆಸಿದರು.
|
5 |
+
ಬಿಜೆಪಿಯವರು ಜೈ ಕೆಂಪೇಗೌಡ ಎಂದು ಘೋಷಣೆ ಕೂಗಿದರು. ಅದಕ್ಕೆ ತಿರುಗೇಟು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಂಪೇಗೌಡ ಜಯಂತಿ ಆಚರಣೆ ಮಾಡುವುದನ್ನು ಜಾರಿಗೆ ತಂದಿದ್ದು ನಾವು. ನೀವು ಬರೀ ಘೋಷಣೆ ಕೂಗುತ್ತೀರ, ನಾವು ಕೆಲಸ ಮಾಡಿ ತೋರಿಸುತ್ತೇವೆ ಎಂದರು.
|
6 |
+
ಬಿಜೆಪಿಯವರು ಜೈ ಸಿದ್ಧರಾಮೇಶ್ವರ ಎಂದು ಘೋಷಣೆ ಕೂಗಿದಾಗ ತಿರುಗೇಟು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಸವಣ್ಣನವರನ್ನು ನಾಡಿನ ಸಾಂಸ್ಕøತಿಕ ನಾಯಕ ಎಂದು ಘೋಷಣೆ ಮಾಡಿದ್ದು ನಮ್ಮ ಸರ್ಕಾರ. ವಿಜಯಪುರ ಮಹಿಳಾ ವಿಶ್ವವಿದ್ಯಾನಿಲಯಕ್ಕೆ ಅಕ್ಕಮಹಾದೇವಿ ಹೆಸರನ್ನು ನಾಮಕರಣ ಮಾಡಿದ್ದೇವೆ ಎಂದು ಹಲವು ಯೋಜನೆಗಳನ್ನು ಪ್ರಸ್ತಾಪಿಸಿದರು.ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದ ಬಳಿಕ ಕಾಂಗ್ರೆಸ್ ಶಾಸಕರು ಜೈ ಜೈ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದರು.
|
eesanje/url_46_220_5.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ವಿಧಾನಸಭೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ
|
2 |
+
ಬೆಂಗಳೂರು,ಫೆ.29- ಕೇವಲ 12 ಸಾವಿರ ರೂ.ಗಳ ಹಣ ಕೊಟ್ಟು ಬಡವರ ಮನೆ ನಿರ್ಮಾಣದ ಯೋಜನೆಗೆ ಪ್ರಧಾನಮಂತ್ರಿ ಅವಾಜ್ ಯೋಜನೆಯೊಂದು ಹೆಸರನ್ನಿಟ್ಟುಕೊಂಡು ಮೋದಿ ಗ್ಯಾರಂಟಿ ಎಂದು ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು. ರಾಜ್ಯಸರ್ಕಾರದ ಆಯವ್ಯಯದ ಮೇಲೆ ನಡೆದ ಸುದೀರ್ಘ ಚರ್ಚೆಗೆ ವಿಧಾನಸಭೆಯಲ್ಲಿಂದು ಉತ್ತರ ನೀಡಿದ ಮುಖ್ಯಮಂತ್ರಿಯವರು ಕೇಂದ್ರದ ತಾರತಮ್ಯವನ್ನು ಎಳೆಎಳೆಯಾಗಿ ಬಿಡಿಸಿಟ್ಟು ವಾಗ್ದಾಳಿ ನಡೆಸಿದರು.
|
3 |
+
ಪ್ರಧಾನಮಂತ್ರಿ ಆವಾಜ್ ಯೋಜನೆಗೆ ಕೇಂದ್ರ ಸರ್ಕಾರ ಕೇವಲ ಒಂದೂವರೆ ಲಕ್ಷ ರೂ.ಗಳನ್ನು ಮಾತ್ರ ನೀಡುತ್ತದೆ. ಅದರಲ್ಲಿ ಜಿಎಸ್ಟಿ ರೂಪದಲ್ಲಿ 1.38 ಲಕ್ಷ ರೂ.ಗಳನ್ನು ವಾಪಸ್ ತೆಗೆದುಕೊಳ್ಳುತ್ತಾರೆ. ರಾಜ್ಯಸರ್ಕಾರ ಈ ಯೋಜನೆಗೆ 6 ರಿಂದ 7 ಲಕ್ಷ ರೂ.ಗಳನ್ನು ನೀಡುತ್ತಿದೆ. ಆದರೂ ಹೆಸರು ಮಾತ್ರ ಪ್ರಧಾನಮಂತ್ರಿ ಆವಾಜ್ ಯೋಜನೆಯಾಗಿದೆ ಎಂದು ಆರೋಪಿಸಿದರು.
|
4 |
+
ಕೇಂದ್ರ ಪುರಸ್ಕøತ ಯೋಜನೆಗಳಿಗೆ ರಾಜ್ಯಸರ್ಕಾರದ ಪಾಲು ಶೇ.50 ಕ್ಕಿಂತಲೂ ಹೆಚ್ಚಿನದಾಗಿದೆ. ಈ ಹಿಂದೆ ಮನಮೋಹನ್ಸಿಂಗ್ರವರು ಪ್ರಧಾನಿಯಾಗಿದ್ದಾಗ ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಶೇ.70 ರಿಂದ 80 ರಷ್ಟು ಆರ್ಥಿಕ ನೆರವು ನೀಡುತ್ತಿದ್ದರು. ರಾಜ್ಯದ ಪಾಲು ಶೇ.20 ರಿಂದ 30 ರಷ್ಟಿತ್ತು. ಪ್ರತಿವರ್ಷ ಇದು ಹೆಚ್ಚಾಗುತ್ತಾ ಬಂದಿದೆ. ಪ್ರಸ್ತುತ ಕೇಂದ್ರ ಮತ್ತು ರಾಜ್ಯಸರ್ಕಾರಗಳ ಪಾಲು ಸರಿಸಮನಾಗಿ ಹಂಚಿಕೆಯಾಗುತ್ತಿದೆ. ಆದರೂ ಪ್ರಧಾನಿಯವರು ಮೋದಿ ಗ್ಯಾರಂಟಿ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ವಿವರಿಸಿದರು.
|
5 |
+
ಸರ್ವ ಶಿಕ್ಷಣ ಅಭಿಯಾನ, ವಿಧವಾ ವೇತನ ಸೇರಿದಂತೆ ಸಾಮಾಜಿಕ ಭದ್ರತಾ ಪಿಂಚಣಿ, ಆಯುಷ್ಮಾನ್ ಭಾರತ್, ಪ್ರಧಾನಮಂತ್ರಿ ಕೃಷಿ ಸಿಂಚಾಯಿ, ಪ್ರಧಾನಮಂತ್ರಿ ಆವಾಜ್ ಯೋಜನೆಗಳಲ್ಲಿ ರಾಜ್ಯಸರ್ಕಾರ ಕೇಂದ್ರಕ್ಕಿಂತಲೂ ಹೆಚ್ಚಿನ ಹಣ ಖರ್ಚು ಮಾಡುತ್ತಿದೆ. ಅದನ್ನು ಮರೆಮಾಚಿ ಮೋದಿ ಗ್ಯಾರಂಟಿ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.ಸರ್ವ ಶಿಕ್ಷಣ ಅಭಿಯಾನದಲ್ಲಿ ಕೇಂದ್ರ ವರ್ಷಕ್ಕೆ 770 ಕೋಟಿ ರೂ. ಕೊಟ್ಟರೆ, ರಾಜ್ಯ 472 ಕೋಟಿ ರೂ. ನೀಡುತ್ತಿದೆ. ಇದರ ಹೊರತಾಗಿ ರಾಜ್ಯಸರ್ಕಾರ ಹೆಚ್ಚುವರಿಯಾಗಿ 1,528 ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದೆ.
|
6 |
+
ಮಧ್ಯಾಹ್ನದ ಬಿಸಿಯೂಟಕ್ಕೆ ಕೇಂದ್ರದ ಪಾಲು 594 ಕೋಟಿ, ರಾಜ್ಯದ ಪಾಲು 340 ಕೋಟಿ, ಹೆಚ್ಚುವರಿಯಾಗಿ ರಾಜ್ಯಸರ್ಕಾರ 967 ಕೋಟಿ ರೂ. ನೀಡುತ್ತಿದೆ. ಆಯುಷ್ಮಾನ್ ಭಾರತ್ ಯೋಜನೆಯನ್ನು ಮೋದಿ ಗ್ಯಾರಂಟಿ ಎಂದು ದೊಡ್ಡದಾಗಿ ಪ್ರಚಾರ ಪಡೆಯುತ್ತಿದ್ದಾರೆ. ಅದಕ್ಕೆ ಕೇಂದ್ರ ನೀಡುತ್ತಿರುವುದು 187 ಕೋಟಿ ರೂ. ಮಾತ್ರ. ರಾಜ್ಯ 124 ಕೋಟಿ ರೂ. ಹೊಂದಾಣಿಕೆ ಹಣದ ಜೊತೆಗೆ ಹೆಚ್ಚುವರಿಯಾಗಿ 624 ಕೋಟಿ ರೂ.ಗಳನ್ನುಒದಗಿಸುತ್ತಿದೆ.
|
7 |
+
ವಿಧವಾ ವೇತನ, ವಿಶೇ��� ಚೇತನರ ಮಾಸಾಶನ, ವೃದ್ಧಾಪ್ಯ ಪಿಂಚಣಿ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಗೆ ಕೇಂದ್ರ ಸರ್ಕಾರ 520 ಕೋಟಿ ರೂ. ಕೊಟ್ಟರೆ, ರಾಜ್ಯಸರ್ಕಾರ 324 ಕೋಟಿ ರೂ. ಹೊಂದಾಣಿಕೆಯ ಅನುದಾನದ ಜೊತೆಗೆ ಹೆಚ್ಚುವರಿಯಾಗಿ 8,569 ಕೋಟಿ ರೂ.ಗಳನ್ನು ನೀಡುತ್ತಿದೆ.ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಗೆ ಕೇಂದ್ರದ ಪಾಲು ಶೇ.32 ರಷ್ಟಿದ್ದರೆ, ರಾಜ್ಯದ ಪಾಲು ಶೇ.28 ರಷ್ಟು. ನಾವು ಹೆಚ್ಚುವರಿಯಾಗಿ ಶೇ.33 ರಷ್ಟು ಹಣವನ್ನು ಖರ್ಚು ಮಾಡುತ್ತಿದ್ದೇವೆ.
|
8 |
+
ಇನ್ನು ಬಡವರಿಗೆ ಮನೆ ನಿರ್ಮಿಸಿಕೊಡುವ ಪ್ರಧಾನಮಂತ್ರಿ ಆವಾಜ್ ಯೋಜನೆಯಲ್ಲಿ ಕೇಂದ್ರದ ಪಾಲು ಜಿಎಸ್ಟಿ ನಂತರ ಕೇವಲ 12 ಸಾವಿರ ರೂ. ಮಾತ್ರ.ಒಟ್ಟಾರೆ ಕೇಂದ್ರ ಸರ್ಕಾರಗಳ ಪುರಸ್ಕøತ ಯೋಜನೆಗಳಡಿ ರಾಜ್ಯಸರ್ಕಾರಕ್ಕೆ ದೊರೆಯುತ್ತಿರುವುದು 13,005 ಕೋಟಿ ರೂ. ಮಾತ್ರ.
|
9 |
+
ಇದನ್ನು ಯಾವ ರೀತಿ ಮೋದಿ ಗ್ಯಾರಂಟಿ ಎಂದು ಕರೆಯಬೇಕೆಂದು ಪ್ರಶ್ನಿಸಿದರು. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತಿದೆ ಎಂದು ಮೋದಿ ಟೀಕಿಸಿದರು.ನಾವು ಪಂಚಖಾತ್ರಿ ಯೋಜನೆಗಳ ಜಾರಿ ಬಳಿಕವೂ ಆರ್ಥಿಕವಾಗಿ ಸಬಲರಾಗಿದ್ದೇವೆ, ಸದೃಢರಾಗಿದ್ದೇವೆ. ಈ ವರ್ಷ ರಾಜಸ್ವದ ಕೊರತೆಯಿದೆ. ಮುಂದಿನ ಎರಡು ವರ್ಷಗಳಲ್ಲಿ ಹೆಚ್ಚುವರಿ ಆದಾಯದ ಬಜೆಟ್ ಮಂಡಿಸುವ ವಿಶ್ವಾಸವನ್ನು ಮುಖ್ಯಮಂತ್ರಿ ವ್ಯಕ್ತಪಡಿಸಿದರು.
|
10 |
+
ಗ್ಯಾರಂಟಿಗಳನ್ನು ಟೀಕಿಸುತ್ತಿದ್ದ ಮೋದಿಯವರು ಈಗ ನಮ್ಮದೇ ಗ್ಯಾರಂಟಿಗಳನ್ನು ಕದ್ದು ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ. ಬರ ನಿರ್ವಹಣೆಗೆ ಹಣ ಕೊಟ್ಟಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ನಲ್ಲಿ ಘೋಷಿಸಿದ ಹಣವೂ ಬಿಡುಗಡೆಯಾಗಿಲ್ಲ. 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕಾದ ಅನ್ಯಾಯವನ್ನು ಸರಿಪಡಿಸಲು ಹೆಚ್ಚುವರಿಯಾಗಿ 5,495 ಕೋಟಿ ರೂ.ಗಳನ್ನು ನೀಡಬೇಕು ಎಂಬ ಶಿಫಾರಸ್ಸು ಇತ್ತು. ಅದನ್ನು ತಿರಸ್ಕರಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಂತಿಮ ವರದಿಯಲ್ಲಿ ವಿಶೇಷ ಅನುದಾನದ ಪ್ರಸ್ತಾಪ ಇರಲಿಲ್ಲ. ಹಾಗಾಗಿ ನೀಡಲಿಲ್ಲ ಎಂದಿದ್ದಾರೆ.
|
11 |
+
ಆದರೆ ಮಧ್ಯಂತರ ವರದಿಯಲ್ಲಿನ ಎಲ್ಲಾ ಶಿಫಾರಸ್ಸುಗಳನ್ನು ಕೇಂದ್ರ ಅನುಷ್ಠಾನಗೊಳಿಸಿದೆ. ರಾಜ್ಯಕ್ಕೆ ವಿಶೇಷ ಅನುದಾನ ನೀಡಬೇಕೆಂಬುದನ್ನು ಮಾತ್ರ ತಿರಸ್ಕರಿಸಲಾಗಿದೆ ಎಂದು ದೂರಿದರು. ಕೆರೆ ಅಭಿವೃದ್ಧಿ, ಪೆರಿಫಿರಲ್ ರಿಂಗ್ ರಸ್ತೆ ಅಭಿವೃದ್ಧಿ ಸೇರಿದಂತೆ 11,495 ಕೊಟಿ ರೂ.ಗಳ ಹೆಚ್ಚುವರಿ ಹಣವನ್ನು ನೀಡದೇ ತಿರಸ್ಕರಸುವ ಮೂಲಕ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅನ್ಯಾಯ ಮಾಡಿದ್ದಾರೆ. ಬಿಜೆಪಿಯ 25 ಮಂದಿ ಸಂಸದರು ಸೇರಿದಂತೆ ಆ ಪಕ್ಷದ ಯಾವ ನಾಯಕರಿಗೂ ಮೋದಿ ಮತ್ತು ನಿರ್ಮಲಾ ಸೀತಾರಾಮನ್ ಎದುರು ನಿಂತು ರಾಜ್ಯಕ್ಕೆ ನ್ಯಾಯ ಕೇಳುವ ದಮ್ಮು, ತಾಕತ್ತು ಇಲ್ಲ. ಇವರು ಕನ್ನಡ ದ್ರೋಹಿಗಳು ಎಂದು ವಾಗ್ದಾಳಿ ನಡೆಸಿದರು.
|
eesanje/url_46_220_6.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ನಿಗಮ-ಮಂಡಳಿ, ಪ್ರಾಧಿಕಾರ ಹಾಗೂ ಅಕಾಡೆಮಿಗಳಿಗೆ ಅಧ್ಯಕ್ಷರ ಘೋಷಣೆ
|
2 |
+
ಬೆಂಗಳೂರು,ಫೆ.29- ಬಹುನಿರೀಕ್ಷಿತ ನಿಗಮ, ಮಂಡಳಿ, ಪ್ರಾಧಿಕಾರ ಹಾಗೂ ಅಕಾಡೆಮಿಗಳಿಗೆ ಅಧ್ಯಕ್ಷರನ್ನು ಘೋಷಿಸಲಾಗಿದೆ. ಕಳೆದ ರಾತ್ರಿ ಸಿಎಂ ಸಿದ್ದರಾಮಯ್ಯ ಅವರು ಪಟ್ಟಿಯನ್ನು ಅಂತಿಮಗೊಳಿಸಿ ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ.ವಿಧಾನಪರಿಷತ್ ಮಾಜಿ ಸದಸ್ಯರೊಬ್ಬರು ಸೇರಿದಂತೆ 44 ಹಿರಿಯ ಕಾಂಗ್ರೆಸ್ ಮುಖಂಡರಿಗೆ ನಿಗಮ ಮಡಳಿ ಅಧ್ಯಕ್ಷ ಪಟ್ಟ ಲಭಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರಿಗೂ ಅದೃಷ್ಟ ಒಲಿದಿದೆ.
|
3 |
+
ಪ್ರಮುಖವಾಗಿ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕರಾಗಿ ಹಾಸ್ಯನಟ ಸಾಧು ಕೋಕಿಲ ಅವರನ್ನು ನೇಮಿಸಲಾಗಿದ್ದು, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ಡಾ.ನಾಗಲಕ್ಷ್ಮಿ ಚೌಧರಿ ಅವರನ್ನು ನೇಮಿಸಲಾಗಿದೆ.
|
4 |
+
ಕಾಂತಾ ನಾಯ್ಕ – ಕೌಶಲ್ಯಾಭಿವೃದ್ಧಿ ನಿಗಮ ಅಧ್ಯಕ್ಷೆಮುಂಡರಗಿ ನಾಗರಾಜು – ಬಾಬು ಜಗಜೀವನ್ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವಿನೋದ್ ಕೆ. ಅಸೂಟಿ – ಕರ್ನಾಟಕ ಕ್ರೀಡಾ ಪ್ರಾಕಾರ ಉಪಾಧ್ಯಕ್ಷಬಿ.ಹೆಚ್.ಹರೀಶ್ – ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷಡಾ.ಅಂಶುಮಂತ್ – ಭದ್ರಾ ಕಾಡಾ ಅಧ್ಯಕ್ಷಜೆ.ಎಸ್.ಆಂಜನೇಯಲು – ಬಳ್ಳಾರಿ ನಗರಾಭಿವೃದ್ಧಿ ಪ್ರಾಕಾರ ಅಧ್ಯಕ್ಷಡಾ.ಬಿ.ಯೋಗೇಶ್ ಬಾಬು – ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷಮರೀಗೌಡ ಯಾದಗಿರಿ – ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷದೇವೇಂದ್ರಪ್ಪ ಮರ್ತೂರು – ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅಧ್ಯಕ್ಷರಾಜಶೇಖರ್ ರಾಮಸ್ವರಂ – ಕರ್ನಾಟಕ ಜೈವಿಕ ಇಂಧನ ಮಂಡಳಿ ಅಧ್ಯಕ್ಷಕೆ.ಮರೀಗೌಡ – ಮೈಸೂರು ನಗರಾಭಿವೃದ್ಧಿ ಪ್ರಾಕಾರದ ಅಧ್ಯಕ್ಷಎಸ್.ಮನೋಹರ್ – ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ಅಯೂಬ್ ಖಾನ್ – ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷಮಮತಾ ಗಟ್ಟಿ – ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆಜಿ.ಪಲ್ಲವಿ – ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷೆಹೆಚ್.ಸಿ.ಸುೀಂದ್ರ – ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷಡಾ.ನಾಗಲಕ್ಷ್ಮಿ ಚೌಧರಿ – ಕರ್ನಾಟಕ ರಾಜ್ಯ ಮಹಿಳಾ ಆಯೋಗಎಚ್.ಎಸ್.ಸುಂದರೇಶ್- ಶಿವಮೊಗ್ಗ ನಗಾರಭಿವೃದ್ಧಿ ಪ್ರಾಕಾರಎಂ.ಆರ್.ಮಂಜುನಾಥ್ – ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಜಯಣ್ಣ – ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗಸಂಪತ್ ರಾಜ್ – ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮಪದ್ಮಾವತಿ – ಮಹಿಳಾ ಅಭಿವೃದ್ಧಿ ನಿಗಮಶ್ರೀನಿವಾಸ್ – ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮಶಾಕಿರ್ ಸನದಿ – ಹುಬ್ಬಳ್ಳಿ, ಧಾರವಾಡ ನಗರಾಭಿವೃದ್ಧಿ ಪ್ರಾಧ್ಗಿಕಾರಸೋಮಣ್ಣ ಬೇವಿನಮರದ – ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಕಾರಮೆಹಬೂಬ್ ಪಾಷ – ಕಂಠೀರವ ಸ್ಟುಡಿಯೋಕೀರ್ತಿ ಗಣೇಶ್ – ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಮಜರ್ಖಾನ್ – ದೇವರಾಜ ಅರಸು ಟ್ರಕ್ ಟರ್ಮಿನಲ್ಸವಿತಾ ರಘು – ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗಲಲಿತ್ ರಾಘವ್ – ಕರ್ನಾಟಕ ವಿದ್ಯುತ್ ಕಾರ್ಖಾನೆಜಿ.ಎಸ್.ಮಂಜುನಾಥ್ – ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಮಾಲಾ ನಾರಾಯಣ ರಾವ್ – ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತರಿಜ್ವಾನ್ – ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮಕೇಶವರೆಡ್ಡಿ – ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಕಾರತಾಜ್ಪೀರ್ – ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಕಾರಗಂಗಾಧರ್ – ಮೈಸೂರು ಸಕ್ಕರೆ ಕಾರ್ಖಾನೆಅಲ್ತಾಫ್ – ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಜಯಸಿಂಹ – ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷವಿಜಯ್ ಕೆ.ಮುಳುಗುಂದ್ – ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಕಾರಮರಿಸ್ವಾಮಿ – ಮೈಸೂರು ಕಾಡಾ ಅಧ್ಯಕ್ಷಸದಾಶಿವ ಉಲ್ಲಾಳ್ – ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರರಘುನಂದನ್ ರಾಮಣ್ಣ – ಬಿಎಂಐಸಿಎಪಿಎ ಅಧ್ಯಕ್ಷಬಸವರಾಜ್ ಜಾಬಶೆಟ್ಟಿ – ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷಸಾಧು ಕೋಕಿಲ – ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
|
eesanje/url_46_220_7.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ವಿಧಾನಸಭೆಯಲ್ಲಿ ಸರ್ಕಾರದ ವಿರುದ್ಧ ಚಪ್ಪಾಳೆ ಹೊಡೆದು, ಭಜನೆ ಮಾಡಿ ಬಿಜೆಪಿ ಪ್ರತಿಭಟನೆ
|
2 |
+
ಬೆಂಗಳೂರು,ಫೆ.29- ರಾಜ್ಯಸಭೆ ಚುನಾವಣಾ ಫಲಿತಾಂಶದ ನಂತರ ನಡೆದ ಸಂಭ್ರಮಾಚರಣೆ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದವರನ್ನು ಬಂಧಿಸಿಲ್ಲ ಎಂದು ಆರೋಪಿಸಿ ಸರ್ಕಾರದ ಉತ್ತರಕ್ಕೆ ತೃಪ್ತರಾಗದೆ ಬಿಜೆಪಿ ಸದಸ್ಯರು ವಿಧಾನಸಭೆಯಲ್ಲಿಂದು ಚಪ್ಪಾಳೆ ಬಡಿದು ಭಜನೆ ಮಾಡುವ ರೀತಿಯಲ್ಲಿ ಪ್ರತಿರೋಧ ವ್ಯಕ್ತಪಡಿಸಿದರು.
|
3 |
+
ಪ್ರತಿಪಕ್ಷಗಳ ಶಾಸಕರ ಧರಣಿಯ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮೇಲಿನ ಚರ್ಚೆಗೆ ಒಂದೆಡೆ ಉತ್ತರ ನೀಡುತ್ತಿದ್ದರೆ, ಮತ್ತೊಂದೆಡೆ ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಯಲ್ಲಿ ಧರಣಿ ನಡೆಸುತ್ತಿದ್ದ ಬಿಜೆಪಿ ಶಾಸಕರು ವಿವಿಧ ರೀತಿಯಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
|
4 |
+
ಸ್ವಲ್ಪ ಹೊತ್ತಿನ ನಂತರ ಬಾವಿಯಲ್ಲಿ ಸುತ್ತುವರೆಯುತ್ತಾ, ಚಪ್ಪಾಳೆ ಬಡಿಯುತ್ತಾ ಪ್ರತಿಭಟನೆ ನಡೆಸಿದರು. ಅಲ್ಲದೆ ಕಾಗದಪತ್ರಗಳನ್ನು ಹರಿದು ಸಭಾಧ್ಯಕ್ಷರ ಪೀಠದತ್ತ ತೂರಿದರು. ಬಿಜೆಪಿ ಶಾಸಕರಿಗೆ ಬೆಂಬಲ ನೀಡಿ ಧರಣಿಯಲ್ಲಿ ಪಾಲ್ಗೊಂಡಿದ್ದ ಜೆಡಿಎಸ್ ಶಾಸಕರು ಮಾತ್ರ ಮೌನವಾಗಿದ್ದರು.
|
5 |
+
ಭಜನೆ ರೀತಿ ಚಪ್ಪಾಳೆ ತಟ್ಟುತ್ತಿರುವುದನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜಸಭೆ ಚುನಾವಣೆಯಲ್ಲಿ ಅಡ್ಡ ಮತ ಹಾಕಿದ್ದನ್ನು ಮರೆಮಾಚಲು ನಾಟಕವಾಡುತ್ತಿದ್ದಾರೆ. ಇಲ್ಲಿ ಭಜನೆ ಮಾಡುತ್ತಿದ್ದಾರೆ. ಇದು ಸರಿಯಲ್ಲ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಭಾಧ್ಯಕ್ಷರಲ್ಲಿ ಮನವಿ ಮಾಡಿದರು.
|
6 |
+
ರಾಜ್ಯಸಭೆ ಚುನಾವಣೆಯಲ್ಲಿ ಒಬ್ಬರು ನೇರವಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದರೆ ಇನ್ನೊಬ್ಬ ಬಿಜೆಪಿ ಶಾಸಕರು ಮತದಾನ ಮಾಡದೆ ಗೈರು ಹಾಜರಾಗಿದ್ದಾರೆ. ಆದರೆ ಇಲ್ಲಿ ಭಜನೆ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಸಭಾಧ್ಯಕ್ಷ ಯು.ಟಿ.ಖಾದರ್ ಮಾತನಾಡಿ, ಶಾಸಕರು ಬಾವಿಯಲ್ಲಿಲ್ಲ. ನಿಮ್ಹಾನ್ಸ್ ಆಸ್ಪತ್ರೆಯಲ್ಲಿದ್ದಾರೆ ಅನಿಸುತ್ತಿದೆ ಎಂದರು. ಮುಖ್ಯಮಂತ್ರಿ ಉತ್ತರ ನೀಡುತ್ತಿದ್ದಂತೆ ಬಿಜೆಪಿ ಶಾಸಕರು ಧರಣಿ ನಡೆಸಿ ಗದ್ದಲ ಎಬ್ಬಿಸಿ ಸರ್ಕಾರದ ವಿರುದ್ದ ಘೋಷಣೆ ಕೂಗುತ್ತಲೇ ಇದ್ದರು.
|