CoolCoder44 commited on
Commit
a2c3385
·
verified ·
1 Parent(s): ff7afc1

fe9e02bb835557f71e1ca8209a8bacc1864925cd5b59958fbc20d2a13cbdf822

Browse files
Files changed (50) hide show
  1. eesanje/url_46_341_2.txt +8 -0
  2. eesanje/url_46_341_3.txt +18 -0
  3. eesanje/url_46_341_4.txt +8 -0
  4. eesanje/url_46_341_5.txt +10 -0
  5. eesanje/url_46_341_6.txt +14 -0
  6. eesanje/url_46_341_7.txt +12 -0
  7. eesanje/url_46_341_8.txt +7 -0
  8. eesanje/url_46_341_9.txt +12 -0
  9. eesanje/url_46_342_1.txt +8 -0
  10. eesanje/url_46_342_10.txt +14 -0
  11. eesanje/url_46_342_11.txt +6 -0
  12. eesanje/url_46_342_12.txt +9 -0
  13. eesanje/url_46_342_2.txt +6 -0
  14. eesanje/url_46_342_3.txt +5 -0
  15. eesanje/url_46_342_4.txt +8 -0
  16. eesanje/url_46_342_5.txt +6 -0
  17. eesanje/url_46_342_6.txt +5 -0
  18. eesanje/url_46_342_7.txt +11 -0
  19. eesanje/url_46_342_8.txt +12 -0
  20. eesanje/url_46_342_9.txt +8 -0
  21. eesanje/url_46_343_1.txt +7 -0
  22. eesanje/url_46_343_10.txt +7 -0
  23. eesanje/url_46_343_11.txt +8 -0
  24. eesanje/url_46_343_12.txt +6 -0
  25. eesanje/url_46_343_2.txt +6 -0
  26. eesanje/url_46_343_3.txt +5 -0
  27. eesanje/url_46_343_4.txt +6 -0
  28. eesanje/url_46_343_5.txt +5 -0
  29. eesanje/url_46_343_6.txt +12 -0
  30. eesanje/url_46_343_7.txt +7 -0
  31. eesanje/url_46_343_8.txt +5 -0
  32. eesanje/url_46_343_9.txt +8 -0
  33. eesanje/url_46_344_1.txt +11 -0
  34. eesanje/url_46_344_2.txt +10 -0
  35. eesanje/url_46_344_3.txt +6 -0
  36. eesanje/url_46_344_4.txt +8 -0
  37. eesanje/url_46_344_5.txt +7 -0
  38. eesanje/url_46_34_1.txt +11 -0
  39. eesanje/url_46_34_10.txt +10 -0
  40. eesanje/url_46_34_11.txt +22 -0
  41. eesanje/url_46_34_12.txt +8 -0
  42. eesanje/url_46_34_2.txt +8 -0
  43. eesanje/url_46_34_3.txt +5 -0
  44. eesanje/url_46_34_4.txt +7 -0
  45. eesanje/url_46_34_5.txt +15 -0
  46. eesanje/url_46_34_6.txt +6 -0
  47. eesanje/url_46_34_7.txt +16 -0
  48. eesanje/url_46_34_8.txt +9 -0
  49. eesanje/url_46_34_9.txt +11 -0
  50. eesanje/url_46_35_1.txt +6 -0
eesanje/url_46_341_2.txt ADDED
@@ -0,0 +1,8 @@
 
 
 
 
 
 
 
 
 
1
+ ಸಾಲುಸಾಲು ರಜೆ, ಪ್ರವಾಸಿ ತಾಣಗಳತ್ತ ಜನಸಾಗರ
2
+ ಬೆಂಗಳೂರು,ಸೆ.28- ಇಂದು ಈದ್ ಮಿಲಾದ್, ನಾಳೆ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಸಾಲು ಸಾಲು ರಜೆ ಬಂದಿದ್ದು ನಗರ ನಿವಾಸಿಗಳು ಊರುಗಳತ್ತ ತೆರಳುತ್ತಿದ್ದು ರಾತ್ರಿಯಂದಲೇ ಸಾರಿಗೆ ಹಾಗೂ ಖಾಸಗಿ ಬಸ್‍ಗಳಲ್ಲಿ ಜನ ಪ್ರಯಾಣಿಸಿದ್ದು ಸಂಚಾರ ದಟ್ಟಣೆ ಉಂಟಾಗಿತ್ತು. ನಾಳಿನ ಕರ್ನಾಟಕ ಬಂದ್‍ಗೆ ಸರ್ಕಾರಿ ರಜೆ ಇಲ್ಲದಿದ್ದರೂ ಖಾಸಗಿ ಕಂಪನಿ, ಕೈಗಾರಿಕೆಗಳಿಗೆ ರಜೆ ಇರಲಿದೆ. ಶನಿವಾರ ಕೆಲವರಿಗೆ ರಜೆ, ಭಾನುವಾರ ವಾರದ ರಜೆ ಹಾಗೂ ಸೋಮವಾರ ಗಾಂಧಿ ಜಯಂತಿ ಹಿನ್ನಲೆಯಲ್ಲಿ ಸಾಲು ಸಾಲು ರಜೆಗಳು ಬಂದಿದ್ದು, ನಗರ ನಿವಾಸಿಗಳು ಪುಲ್ ಖುಷಿಯಾಗಿದ್ದು, ಊರುಗಳತ್ತ ತೆರಳುತ್ತಿದ್ದಾರೆ.
3
+ ರಾತ್ರಿಯಿಂದಲೇ ಪ್ರಯಾಣ ಆರಂಭಿಸಿದ್ದು ನಗರದ ಕೆಂಪೇಗೌಡ ಬಸ್ ನಿಲ್ದಾಣದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿತ್ತು. ಇನ್ನೂ ಕೆಲವರು ಖಾಸಗಿ ಟ್ರಾವಲ್ಸ್‍ಗಳಲ್ಲಿ ಬುಕ್ಕಿಂಗ್ ಮಾಡಿದ್ದು ಆನಂದ್ ರಾವ್ ವೃತ್ತ, ಕೆಆರ್ ಮಾರುಕಟ್ಟೆ, ಗೋರಗುಂಟೆಪಾಳ್ಯ, ನವರಂಗ್ ಬಳಿ ಇರುವ ಖಾಸಗಿ ಬಸ್‍ಗಳ ಬುಕ್ಕಿಂಗ್ ಸೆಂಟರ್ ಗಳ ಮುಂದೆ ಪ್ರಯಾಣಿಕರು ಹೆಚ್ಚಾಗಿದ್ದ ದೃಶ್ಯಗಳು ಕಂಡು ಬಂದವು. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯದಿಂದ ಮಹಿಳಾ ಪ್ರಯಾಣಿಕರ ಸಂಖ್ಯೆಯೂ ಸಹ ಹೆಚ್ಚಾಗಿದೆ.
4
+ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆಟೋ ಚಾಲಕ ಸೇರಿ ಮೂವರ ಬಂಧನ
5
+ ಕಳೆದ ವಾರವಷ್ಟೆ ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೋಗಿ ಬಂದಿದ್ದೆವೆ ಎಂದು ಕೆಲವರು ಊರುಗಳಿಗೆ ತೆರಳದ ಕೆಲವರು ಟ್ರಿಪ್ ಪ್ಲಾನ್ ಮಾಡಿಕೊಂಡು ಪ್ರವಾಸಿ ತಾಣ, ಪುಣ್ಯ ಕ್ಷೇತ್ರಗಳತ್ತ ತೆರಳುತ್ತಿದ್ದಾರೆ. ಇಂದು ಈದ್‍ಮಿಲಾದ್ ಹಿನ್ನಲೆಯಲ್ಲಿ ರಜೆ ಇದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟ, ಇಶಾಫೌಂಡೇಷನ್, ಶಿವಗಂಗೆ, ರಾಮನಗರದ ರಾಮದೇವರ ಬೆಟ್ಟ, ತುಮಕೂರು ಜಿಲ್ಲೆಯ ದೇವರಾಯನ ದುರ್ಗ, ಗೋರವನಹಳ್ಳಿ, ಮಾದೇಶ್ವರ ಬೆಟ್ಟ, ಮೈಸೂರಿನ ಚಾಮುಂಡಿ ಬೆಟ್ಟ, ಸೇರಿದಂತೆ ಮತ್ತಿತರ ಕಡೆ ಇಂದು ಮುಂಜಾನೆ ಯಿಂದಲೆ ಸ್ವಂತ ವಾಹನ ಹಾಗೂ ಸಾರಿಗೆ ಬಸ್ ಗಳಲ್ಲಿ ಜನರು ತೆರಳಿದ್ದು ನಗರದ ವಿವಿಧ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
6
+ ಗೋರಗುಂಟೆಪಾಳ್ಯ, ನೆಲಮಂಗಲ ಟೋಲ್, ನೈಸ್ ಟೋಲ್, ಅತ್ತಿಬೆಲೆ, ಆನೆಕಲ್, ಮೈಸೂರು ರಸ್ತೆ, ದೇವನಹಳ್ಳಿ ರಸ್ತೆಯಲ್ಲಿ ರಾತ್ರಿಯಿಂದಲೆ ವಾಹನ ಸಂಚಾರ ಹೆಚ್ಚಾಗಿದ್ದು ಇಂದು ಬೆಳಗ್ಗೆ ಟ್ರಾಫಿಕ್ ಸಮಸ್ಥೆ ಉಂಟಾಗಿತ್ತು. ಇನ್ನೂ ಚಿಕ್ಕಬಳ್ಳಾಪುರದ ನಂದಿಬೆಟ್ಟದ ಪ್ರಕೃತಿ ಸೌಂದರ್ಯ ಸವಿಯಲು ಪ್ರವಾಸಿಗರ ದಂಡೆ ಹರಿದು ಬಂದಿದ್ದರಿಂದ ಬೆಟ್ಟದ ನಂದಿ ಗಿರಿ ದಾಮ ಸುತ್ತಮುತ್ತ ಸಂಚಾರ ದಟ್ಟಣೆ ಕಂಡುಬಂತು.
7
+ ಛತ್ತೀಸ್‍ಗಢದಲ್ಲಿ ಸಿಡಿಲಿಗೆ ಮೂವರು ಮಹಿಳೆಯರ ಬಲಿ
8
+ ಒಟ್ಟಿನಲ್ಲಿ ಸಾಲು ಸಾಲು ರಜೆ ಬಂದರೆ ಸಾಕು ನಗರ ನಿವಾಸಿಗಳು ದಿನಿತ್���ದ ಟ್ರಾಫಿಕ್ ಕಿರಿಕಿರಿ ಕೆಲಸದ ಒತ್ತಡ ದಿಂದ ಮುಕ್ತಿ ಪಡೆದು ಮನ ಥಣಿಸಿಕೊಂಡು ರಿಲ್ಯಾಕ್ಸ್‍ಗೆ ಹೆಚ್ಚಿನ ಒತ್ತು ನೀಡುತ್ತಿರುವುದು ಇತ್ತಿಚಿನ ದಿನಗಳಲ್ಲಿ ಹೆಚ್ಚಾಗಿದ್ದು ರಜೆ ಸಿಕ್ಕರೆ ಸಾಕು ಪ್ರಕೃತಿ ಮಡಿಲಿಗೆ ಲಗ್ಗೆ ಇಡುತ್ತಿದ್ದಾರೆ.
eesanje/url_46_341_3.txt ADDED
@@ -0,0 +1,18 @@
 
 
 
 
 
 
 
 
 
 
 
 
 
 
 
 
 
 
 
1
+ ಜೆಡಿಎಸ್, ಬಿಜೆಪಿಯ ಕೆಳ ಹಂತದ ನಾಯಕರಿಗೆ ಕಾಂಗ್ರೆಸ್ ಗಾಳ
2
+ ಬೆಂಗಳೂರು,ಸೆ.28- ಜೆಡಿಎಸ್, ಬಿಜೆಪಿಯ ಮೈತ್ರಿಯಿಂದ ಅಸಮಾಧಾನಗೊಂಡಿರುವ ಜೆಡಿಎಸ್‍ನ ಹಲವು ನಾಯಕರು ಕಾಂಗ್ರೆಸ್ ಸಂಪರ್ಕಕ್ಕೆ ಬಂದಿದ್ದು, ಪಕ್ಷ ಸೇರ್ಪಡೆ ಕಾರ್ಯಕ್ರಮಗಳು ಜೋರಾಗಿ ನಡೆಯುತ್ತಿವೆ. ಅದೇ ವೇಳೆ ಪಕ್ಷನಿಷ್ಠರು ಮುಂದಿನ ಭವಿಷ್ಯದ ವಿಷಯದಲ್ಲಿ ಗೊಂದಲಕ್ಕೊಳಗಾಗಿ ವರಿಷ್ಠರ ನಿರ್ಧಾರಗಳ ವಿರುದ್ಧ ಸಿಡಿಮಿಡಿಗೊಳ್ಳುತ್ತಿದ್ದಾರೆ.
3
+ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಬಲಗೊಳಿಸಲು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಣ ತೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ದೊಡ್ಡ ದೊಡ್ಡ ನಾಯಕರುಗಳಿಗಿಂತಲೂ ಕೆಳಹಂತದ ಕಾರ್ಯಕರ್ತರಿಗೆ ಮಣೆ ಹಾಕಬೇಕು. ಬ್ಲಾಕ್ ಮತ್ತು ಜಿಲ್ಲಾಮಟ್ಟದಲ್ಲೇ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ಫರ್ಮಾನು ಹೊರಡಿಸಿದ್ದಾರೆ.
4
+ ಆದರೆ ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್, ಜೆಡಿಎಸ್ ದಶಕಗಳಿಂದಲೂ ವೈರುಧ್ಯ ರಾಜಕಾರಣಕ್ಕೆ ಹೆಸರುವಾಸಿಯಾಗಿದೆ. ಜೆಡಿಎಸ್, ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆ ವೇಳೆಯಲ್ಲೂ ಮೇಲ್ಮಟ್ಟದಲ್ಲಿ ಹೊಂದಾಣಿಕೆಯಾಗಿತ್ತೇ ಹೊರತು ಕೆಳಹಂತದಲ್ಲಿ ಕಾರ್ಯಕರ್ತರು ಜಿದ್ದಾಜಿದ್ದಿಗೆ ಬಿದ್ದಿದ್ದರು. ಅದರ ಪರಿಣಾಮವೇ ಲೋಕಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳೂ ಹೀನಾಯವಾಗಿ ನೆಲಕಚ್ಚಿದ್ದವು.ಈಗ ಜೆಡಿಎಸ್ ಮತ್ತು ಬಿಜೆಪಿ ಪುನರ್ ಮಿಲನವಾಗಿದೆ.
5
+ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆಟೋ ಚಾಲಕ ಸೇರಿ ಮೂವರ ಬಂಧನ
6
+ ರಾಜ್ಯದಲ್ಲಿ ಕೋಮುಸೂಕ್ಷ್ಮ ವಾತಾವರಣ ಹಿಂದೆಂದಿಗಿಂತಲೂ ಹೆಚ್ಚು ಸಂಕೀರ್ಣಗೊಂಡಿವೆ. ಈ ಸಂದರ್ಭದಲ್ಲಿ ಜೆಡಿಎಸ್‍ನಲ್ಲಿರುವ ಅಲ್ಪಸಂಖ್ಯಾತ, ಜಾತ್ಯತೀತ ಮತ್ತು ಪ್ರಗತಿಪರ ನಾಯಕರು ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗುತ್ತಿದೆ ಎಂಬ ನೆಪ ಹೇಳಿ ಕಾಂಗ್ರೆಸ್‍ನತ್ತ ಮುಖ ಮಾಡುತ್ತಿದ್ದಾರೆ.
7
+ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸಿರುವ ಕಾಂಗ್ರೆಸ್ ಮುಂದಿನ 5 ವರ್ಷ ಆಡಳಿತ ನಡೆಸುವ ನಿರೀಕ್ಷೆಗಳನ್ನು ಹುಟ್ಟಿಸಿದೆ. ಹೀಗಾಗಿ ಅಧಿಕಾರ ಹಾಗೂ ಅವಕಾಶಗಳಿಗಾಗಿ ಹಾತೊರೆಯುತ್ತಿದ್ದವರು ಆಡಳಿತಾರೂಢ ಪಕ್ಷದತ್ತ ವಲಸೆ ಆರಂಭಿಸಿದ್ದಾರೆ. ಇದಕ್ಕೆ ಸೈದ್ಧಾಂತಿಕ ಸನ್ನಿವೇಶವೂ ಕೂಡ ಪೂರಕವಾಗಿರುವುದು ಪಕ್ಷಾಂತರ ಪ್ರಮಾಣ ಹೆಚ್ಚಾಗಲು ಕಾರಣವಾಗಿದೆ.
8
+ ಬಿಜೆಪಿ ಮತ್ತು ಜೆಡಿಎಸ್‍ನಲ್ಲಿರುವ ಕೆಲವು ಶಾಸಕರುಗಳು ಕಾಂಗ್ರೆಸ್ ಸೇರುವ ವದಂತಿಗಳು ಹರಡಿದ್ದವು. ಆದರೆ ಆಪರೇಷನ್ ಹಸ್ತ ಎಂಬ ಅಪಕೀರ್ತಿಗೆ ಹೆದರಿದ ಕಾಂಗ್ರೆಸಿಗರು ಶಾಸಕರನ್ನು ಸೆಳೆಯಲು ಹಿಂದೇಟು ಹಾಕಿದರು. ಅದೇ ವೇಳೆ ಆಯಾ ಪಕ್ಷಗಳ ವರಿಷ್ಠರು ಅತೃಪ್ತರನ್ನು ಸಮಾಧಾನಪಡಿಸಿ ವಾತಾವರಣವನ್ನು ತಹಬದಿಗೆ ತಂದಿದ್ದಾರೆ.
9
+ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಮಗೆ ಶಾಸಕರ ಅಗತ್ಯವಿಲ್ಲ. ಆದರೆ ಪಕ್ಷದ ಮತಗಳಿಕೆಯನ್ನು ಹೆಚ್ಚಿಸಿಕೊಳ್ಳುವ ಸಲುವಾಗಿ ಕೆಳಹಂತದಲ್ಲಿ ವರ್ಚಸ್ವಿ ನಾಯಕರು ಸೇರ್ಪಡೆಯಾಗುವುದಾದರೆ ಸ್ವಾಗತಿಸುತ್ತೇವೆ ಎಂದಿದ್ದಾರೆ.
10
+ ಕೆಲವು ಮಾಜಿ ಶಾಸಕರು, ಮಾಜಿ ಸಚಿವರು ಕಾಂಗ್ರೆಸ್‍ನ ಪ್ರಮುಖ ನಾಯಕರನ್ನು ಸಂಪರ್ಕಿಸಿದ್ದು, ಪಕ್ಷ ಸೇರ್ಪಡೆಗೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿರುವುದು ತಿಳಿದುಬಂದಿದೆ. ಇನ್ನೂ ಕೆಲವು ಪ್ರಭಾವಿಗಳಿಗೆ ಕಾಂಗ್ರೆಸ್ ಪಕ್ಷವೇ ಗಾಳ ಹಾಕಿದೆ.
11
+ ಸದ್ಯದ ಸನ್ನಿವೇಶದಲ್ಲಿ ಬರುವವರನ್ನೆಲ್ಲಾ ಪಕ್ಷಕ್ಕೆ ಸೇರಿಸಿಕೊಂಡರೆ ಮುಂದಿನ ದಿನಗಳಲ್ಲಿ ಗೊಂದಲಗಳಾಗುವ ಆತಂಕ ಕೇಳಿಬರುತ್ತಿದೆ. ಈಗಿರುವ ಪಕ್ಷದಲ್ಲೇ ಅಕಾರ ಇಲ್ಲ ಎಂಬ ಕಾರಣಕ್ಕಾಗಿ ಪಕ್ಷಾಂತರ ಮಾಡುತ್ತಿರುವವರು ನಾಳೆ ಇಲ್ಲಿಯೂ ಅವಕಾಶ ಸಿಗಲಿಲ್ಲ ಎಂಬ ಕಾರಣಕ್ಕೆ ಚುನಾವಣೆಯಂತಹ ಬಿಗುವಿನ ಸಮಯದಲ್ಲಿ ಗೊಂದಲ ಮೂಡಿಸಿ ಬೇರೆ ಪಕ್ಷದತ್ತ ಹೆಜ್ಜೆ ಹಾಕಿದರೆ ಕಾಂಗ್ರೆಸ್‍ಗೆ ನಷ್ಟವಾಗಲಿದೆ. ಹೀಗಾಗಿ ವಲಸಿಗ ನಾಯಕರನ್ನು ಅಳೆದು ತೂಗಿ ಸೇರ್ಪಡೆ ಮಾಡಿಕೊಳ್ಳಬೇಕು.
12
+ ವಿಧಾನಸಭೆ ಚುನಾವಣೆಗೂ ಮೊದಲೇ ಇದ್ದಂತಹ ವ್ಯವಸ್ಥೆಯನ್ನು ಚಾಚೂತಪ್ಪದೇ ಪಾಲಿಸಬೇಕು. ಕಾಂಗ್ರೆಸ್ ಸೇರ್ಪಡೆಯಾಗಲು ಇಚ್ಛೆ ವ್ಯಕ್ತಪಡಿಸುವ ನಾಯಕರ ಮಾಹಿತಿಗಳನ್ನು ಕ್ಷೇತ್ರ ಹಾಗೂ ಜಿಲ್ಲಾ ಸಮಿತಿಗಳೊಂದಿಗೆ ಹಂಚಿಕೊಳ್ಳಬೇಕು. ಅಲ್ಲಿಂದ ಅಭಿಪ್ರಾಯ ಪಡೆದ ಬಳಿಕ ಕೆಪಿಸಿಸಿಯ ಅಲ್ಲಮ ವೀರಭದ್ರಪ್ಪ ಸಮಿತಿ ಹಸಿರು ನಿಶಾನೆ ನೀಡಿದ ಬಳಿಕವೇ ವಲಸಿಗರಿಗೆ ಸದಸ್ಯತ್ವ ನೀಡಬೇಕು ಎಂಬ ಆಗ್ರಹಗಳು ಕೇಳಿಬರುತ್ತಿವೆ.
13
+ ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಬಿಬಿಎಂಪಿ, ವಿವಿಧ ಪಾಲಿಕೆಗಳು ಹಾಗೂ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳು ನಡೆಯಲಿವೆ. ಅಲ್ಲಿ ಕಾಂಗ್ರೆಸಿಗರು ಆಕಾಂಕ್ಷಿಗಳಾಗಿ ಈಗಾಗಲೇ ತಯಾರಿ ಆರಂಭಿಸಿದ್ದಾರೆ.
14
+ ವಲಸಿಗ ನಾಯಕರು ಅದರಲ್ಲೂ ಮಾಜಿಗಳು ಪಕ್ಷಕ್ಕೆ ಬಂದಾಗ ಸಹಜವಾಗಿ ಅವರೂ ಟಿಕೆಟ್ ಆಕಾಂಕ್ಷಿಗಳಾಗಿರುತ್ತಾರೆ. ಈ ಹಂತದಲ್ಲಿ ಗೊಂದಲಗಳಾಗುತ್ತವೆ. ಅವಕಾಶ ದೊರೆಯದೇ ಇದ್ದರೆ ವಲಸಿಗರು ಕಾಂಗ್ರೆಸ್ ನಾಯಕರ ವಿರುದ್ಧವೇ ಮುಗಿಬೀಳುತ್ತಾರೆ. ಇದು ಭಿನ್ನಮತಕ್ಕೂ ದಾರಿಯಾಗಬಹುದು ಎಂಬ ಎಚ್ಚರಿಕೆಯ ಮಾತುಗಳನ್ನು ನಾಯಕರು ಹೇಳುತ್ತಿದ್ದಾರೆ ಎನ್ನಲಾಗಿದೆ.
15
+ ವಿಶ್ವದ ಕಿರಿಯ ಸಂಗೀತ ನಿರ್ದೇಶಕರಾಗಿ ವೆಂಕಟೇಶ್ ಇತಿಹಾಸ
16
+ ಸರ್ಕಾರದ ಮಟ್ಟದಲ್ಲಿ ವಿವಿಧ ನಿಗಮ-ಮಂಡಳಿಗಳು, ಪ್ರಾಕಾರ, ಆಯೋಗ ಹಾಗೂ ಇತರ ಸಮಿತಿಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ನಿರ್ದೇಶಕರುಗಳ ನೇಮಕಾತಿ ನಡೆಯಬೇಕಿದೆ. ಬಹುತೇಕ ವಲಸಿಗರು ಇಂತಹ ಸ್ಥಾನಗಳ ಮೇಲೆ ಕಣ್ಣಿಟ್ಟುಕೊಂಡೇ ಬರುತ್ತಿದ್ದಾರೆ. ಅದರಲ್ಲೂ ಕೆಲವು ಬಲಾಢ್ಯರು ತಮ್ಮ ಹಣ ಹಾಗೂ ಪ್ರಭಾವ ಬಳಸಿ ಅವಕಾಶ ಗಿಟ್ಟಿಸುವ ದೂರಾಲೋಚನೆಯಿಂದ ಕಾಂಗ್ರೆಸ್ ಸೇರುತ್ತಿದ್ದಾರೆ.
17
+ ಪಕ್ಷ ಒಂದು ವೇಳೆ ಇಂತವರಿಗೆ ಮಣೆ ಹಾಕಿದರೆ ಸಂಕಷ್ಟ ಕಾಲದಲ್ಲೂ ಪಕ್ಷದ ಬೆನ್ನಿಗೆ ನಿಂತು ಸಂಘಟನೆ ಮಾಡಿ ಅಕಾರಕ್ಕೆ ತಂದ ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯವಾಗುತ್ತದೆ. ಸಹಜವಾಗಿ ಈ ಬೆಳವಣಿಗೆ ಪಕ್ಷನಿಷ್ಠರ ಉತ್ಸಾಹವನ್ನು ಕುಗ್ಗಿಸಲಿದೆ. ಮುಂದಿನ ದಿನಗಳಲ್ಲಿ ಅದು ಪಕ್ಷದ ಅವನತಿಗೂ ಅವಕಾಶ ಮಾಡಿಕೊಡಬಹುದು ಎಂಬ ವಿಶ್ಲೇಷಣೆಯನ್ನು ಕಾಂಗ್ರೆಸ್‍ನ ಚಿಂತಕರ ಛಾವಡಿ ನಡೆಸಿದೆ.
18
+ ಆದರೆ ಪಕ್ಷ ಸಂಘಟನೆ ಎಂಬ ಉಮೇದಿಗೆ ಬಿದ್ದ ವರಿಷ್ಠ ನಾಯಕರು ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ನಿಮ್ಮ ವೈಯಕ್ತಿಕ ಭಿನ್ನಾಭಿಪ್ರಾಯ ಮತ್ತು ಹಿತಾಸಕ್ತಿಗಳನ್ನು ಪಕ್ಕಕ್ಕಿರಿಸಿ ಪಕ್ಷ ಸಂಘಟನೆ ಮಾಡಿ, ವಲಸಿಗರನ್ನು ಸೇರಿಸಿಕೊಳ್ಳಿ ಎಂದು ಕಟ್ಟಪ್ಪಣೆ ಮಾಡುತ್ತಿದ್ದಾರೆ. ಇದು ಮೂಲ ಕಾಂಗ್ರೆಸಿಗರಿಗೆ ನುಂಗಲಾರದ ಬಿಸಿತುಪ್ಪವಾಗಿದೆ.
eesanje/url_46_341_4.txt ADDED
@@ -0,0 +1,8 @@
 
 
 
 
 
 
 
 
 
1
+ ರಾಷ್ಟ್ರಪತಿ ಭವನದ ಹೆಸರನ್ನು ಬದಲಾಹಿಸಿದ ಸಿಎಂ ಸಿದ್ದರಾಮಯ್ಯ
2
+ ಹನೂರು, ಸೆ.28- ಮಲೈ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನದ ಹೆಸರು ಇನ್ನು ಮುಂದೆ ತಪೋಭವನ ಎಂದು ಪರಿವರ್ತನೆ ಆಗಲಿದೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ತಾಲ್ಲೂಕಿನ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ 37 ಜೋಡಿ ಉಚಿತ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ದೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಉಚಿತ ಸಾಮೂಹಿಕ ವಿವಾಹಗಳು ಹೆಚ್ಚಾಗಿ ನಡೆಯಬೇಕು ಎಂದರು.
3
+ ಅಲ್ಲದೆ ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿಯಾಗಿರುತ್ತದೆ ಹಲವರು ವ್ಯವಸಾಯ ಕ್ಕೆಂದು ಸಾಲ ಮಾಡಿ ಆಡಂಬರದ ಮದುವೆ ಮಾಡುವುದನ್ನು ನಿಲ್ಲಿಸಬೇಕು. ಅದೇ ಹಣದಲ್ಲಿ ಮಕ್ಕಳ ಭವಿಷ್ಯ ರೂಪಿಸುವ ಆಲೋಚನೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
4
+ ಗುಜರಿ ವ್ಯಾಪಾರಿಯ ಮನೆಯಲ್ಲಿದ್ದ 2.50 ಕೋಟಿ ಮೌಲ್ಯದ ಚಿನ್ನ-ಹಣ ಲೂಟಿ
5
+ ಚಿತ್ರಣ ಬದಲಾಗಲಿದೆ: ಮುಂದಿನ ಐದು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಮಲೈ ಮಹದೇಶ್ವರ ಶ್ರೀ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸ್ತೀವಿ ಎಂದು ಮಹತ್ವದ ಘೋಷಣೆ ಮಾಡಿದ ಮುಖ್ಯಮಂತ್ರಿಗಳು ಕುಡಿಯುವ ನೀರು ಶೌಚಾಲಯ ರಸ್ತೆ ಮತ್ತು ಶುಚಿತ್ವಕ್ಕೆ ಹೆಚ್ಚಿನ ಆಧ್ಯತೆ ನೀಡಿ ಎಂದು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
6
+ ಮ.ಬೆಟ್ಟವು ಮಹದೇಶ್ವರರು ತಪಸ್ಸು ಮಾಡಿದ ಶಕ್ತಿ ಕೇಂದ್ರ ಆಗಿದ್ದು ಇದನ್ನು ನಾವು ತಪೋಭವನ ಎಂದು ಕರೆಯಬೇಕು. ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾ ಸ್ವಾಮಿಗಳ ಸಲಹೆಯಂತೆ ರಾಷ್ಟ್ರಪತಿ ಭವನವನ್ನು ಇನ್ನೂ ಮುಂದೆ ತಪೋಭವನ ಎಂದು ಬದಲಾಯಿಸಿದ್ದೇವೆ ಎಂದರು.
7
+ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಪಟ್ಟದ ಗುರುಸ್ವಾಮಿಗಳು, ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ದಿವ್ಯ ಸಮ್ಮುಖದಲ್ಲಿ ಅಧ್ಯಕ್ಷತೆಯನ್ನು ಹನೂರು ಶಾಸಕ ಎಂ.ಆರ್.ಮಂಜುನಾಥ್ ಕಾರ್ಯಕ್ರಮದ ವಹಿಸಿ ಮಾತನಾಡಿದರು.
8
+ ಜಿಲ್ಲಾ ಉಸ್ತುವಾರಿ ಮತ್ತು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ , ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಪ್ರಾಕಾರದ ಕಾರ್ಯದರ್ಶಿ ಸರಸ್ವತಿ ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಪುಟ್ಟರಂಗಶೆಟ್ಟಿ, ಗಣೇಶ್, ಪ್ರಸಾದ್, ವಿಧಾನ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ, ಮರಿತಿಬ್ಬೇಗೌಡ, ಮಾಜಿ ಶಾಸಕರಾದ ಕೊಳ್ಳೇಗಾಲ ನಂಜುಂಡಸ್ವಾಮಿ, ಆರ್.ನರೇಂದ್ರ, ಮ.ಬೆಟ್ಟ ಗ್ರಾ.ಪಂ. ಅಧ್ಯಕ್ಷೆ ಅರ್ಚನಾ ಇನ್ನಿತರರು ಉಪ���್ಥಿತರಿದ್ದರು.
eesanje/url_46_341_5.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಕರ್ನಾಟಕ ಬಂದ್ ಬಳಿಕ ನಾಡಿನಾದ್ಯಂತ ಉಗ್ರ ಹೋರಾಟ : ವಾಟಾಳ್
2
+ ಬೆಂಗಳೂರು,ಸೆ.27- ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಸದೇ ಇದ್ದರೆ ಕರ್ನಾಟಕ ಬಂದ್ ಬಳಿಕ ನಾಡಿನಾದ್ಯಂತ 15 ದಿನಗಳ ಕಾಲ ಉಗ್ರ ಹೋರಾಟ ರೂಪಿಸುವುದಾಗಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
3
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆ.29 ರಂದು ಕರ್ನಾಟಕ ಬಂದ್ ನಡೆಯಲಿದೆ. ಅದಕ್ಕೆ ಬೆಂಬಲ ಕೇಳಲು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಗೆ ಬಂದಿದ್ದೇವೆ. ಬಂದ್ ದಿನ ಚಿತ್ರೋದ್ಯಮ ಸಂಪೂರ್ಣ ಸ್ಥಗಿತಗೊಳ್ಳಬೇಕು. ಬಂದ್ನಲ್ಲಿ ನಟ-ನಟಿಯರು ಪಾಲ್ಗೊಳ್ಳಬೇಕು ಎಂದು ಆಗ್ರಹಿಸಿದರು.ಸೂಪರ್ ಸ್ಟಾರ್ ರಜನಿಕಾಂತ್ ಅವರು ಕರ್ನಾಟಕದಲ್ಲೇ ಹುಟ್ಟಿ ಇಲ್ಲಿನ ನೀರು ಕುಡಿದು ಬೆಳೆದಿದ್ದಾರೆ. ಕಾವೇರಿ ವಿಷಯವಾಗಿ ಅವರು ಕರ್ನಾಟಕದ ಪರ ಮಾತನಾಡಬೇಕು. ಇಲ್ಲವಾದರೆ ಅವರ ಚಿತ್ರಗಳು ಇಲ್ಲಿ ಪ್ರದರ್ಶನಗೊಳ್ಳಲು ಅವಕಾಶ ನೀಡುವುದಿಲ್ಲ. ರಜನಿಕಾಂತ್ ಬೆಂಗಳೂರಿಗೆ ಬರಲು ಬಿಡುವುದಿಲ್ಲ ಎಂದು ಹೇಳಿದರು.
4
+ ಸೆ. 29 ರಂದು ಬೆಳಿಗ್ಗೆಯಿಂದ ಸಂಜೆಯವರೆಗೂ ಚಿತ್ರೋದ್ಯಮವನ್ನು ಬಂದ್ ಮಾಡುವುದಾಗಿ ಚಲನಚಿತ್ರ ವಾಣಿಜ್ಯ ಮಂಡಳಿಯವರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು. 2018 ರಲ್ಲಿ ವಿಧಾನಸಭೆಯಲ್ಲಿ ಕಟುಶಬ್ಧಗಳಲ್ಲಿ ನಿಂದಿಸಿಕೊಂಡಿದ್ದ ಜೆಡಿಎಸ್, ಬಿಜೆಪಿ ನಾಯಕರು ಇಂದು ವಿಧಾನಸೌಧದ ಮುಂದೆ ಒಂದಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಲ್ಲಿ ರಾಜಕೀಯ ಬೆರೆಸುವುದಿಲ್ಲ. ಆದರೆ ಚಳುವಳಿಗಾರರ ಬಗ್ಗೆ ಯಾರೂ ಹಗುರವಾಗಿ ಮಾತನಾಡುವುದನ್ನು ಸಹಿಸುವುದಿಲ್ಲ ಎಂದರು.
5
+ ಐಟಿ ಕಂಪನಿಗಳ ಜೊತೆ ಸೇರಿ ಸೈಬರ್ ಸ್ಪೇರ್ ಸೆಂಟರ್ ಆಫ್ ಎಕ್ಸಲೆನ್ಸಿ ಕೇಂದ್ರ ಸ್ಥಾಪನೆ
6
+ ತಾವು ಈವರೆಗೂ ಡಿ.ಕೆ.ಶಿವಕುಮಾರ್ ವಿರುದ್ಧ ಮಾತನಾಡಿಲ್ಲ. ಆದರೆ ಕರ್ನಾಟಕ ಬಂದ್ ವಿಷಯದಲ್ಲಿ ಅವರು ಅಂತರಾತ್ಮಕವಾಗಿ ಮಾತನಾಡಿದ್ದಾರೆ. ಒಂದೇ ಬಂದ್ ಸಾಕು ಎಂದಿದ್ದಾರೆ. ನೀರು ಬಿಡಲು ಅವರು ಕಾರಣ. ಈಗ ಸರ್ವಾಧಿಕಾರಿಯಂತೆ ಮಾತನಾಡುತ್ತಿದ್ದಾರೆ. ಇದನ್ನು ನಿಂದಿಸದೇ ಇದ್ದರೆ ನಾವು ರಾಜ್ಯಾದ್ಯಂತ ಡಿ.ಕೆ.ಶಿವಕುಮಾರ್ ರಾಜಿನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
7
+ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಚ್ಚರಿಕೆಯಿಂದ ಮಾತನಾಡುತ್ತಿದ್ದಾರೆ. ಈ ರೀತಿಯ ನಡವಳಿಕೆಯನ್ನು ಡಿ.ಕೆ.ಶಿವಕುಮಾರ್ ಕೂಡ ಪಾಲಿಸಬೇಕು. ಏನೇ ಆದರೂ ಸರ್ಕಾರ ತಮಿಳುನಾಡಿಗೆ ನೀರು ಹರಿಸುವುದು ಸರಿಯಲ್ಲ. ಕೂಡಲೇ ನೀರು ನಿಲ್ಲಿಸಬೇಕು. ಇಲ್ಲವಾದರೆ ನಾವು ರಾಜ್ಯಾದ್ಯಂತ ಹೆದ್ದಾರಿ ಮತ್ತು ರೈಲು ತಡೆ, ಜೈಲ್ಬರೊ ಹೋರಾಟಗಳನ್ನು ಮುಂದಿನ 15 ದಿನದವರೆಗೂ ನಡೆಸುವುದಾಗಿ ತಿಳಿಸಿದರು.
8
+ ಆಸ್ಕರ್ ಪ್ರಶಸ್ತಿಗೆ ಪ್ರವೇಶ ಪಡೆದ ‘2018’ ಸಿನಿಮಾ
9
+ ಸರ್ಕಾರ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸಬಾರದು. ಪೊಲೀಸ್ ಬಲ ಪ್ರದರ್ಶಿಸಿ ದರ್ಪ ತೋರಿಸಿದರೆ ನಾವು ಸಹಿಸುವುದಿಲ್ಲ. ಹೋರಾಟಗಾರರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕೆಂದು ಆಗ್ರಹಿಸಿದರು.ತಮಿಳುನಾಡಿನಲ್ಲಿ ಅಲ್ಲಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋರಾಟ ಮಾಡುತ್ತಿದ್ದಾರೆ. ಬಂದ್ ನಡೆಸಿದರೆ ಸರ್ಕಾರವೇ ಬೆಂಬಲ ಕೊಡುತ್ತದೆ. ಇಲ್ಲಿ ಹೋರಾಟವನ್ನು ಹತ್ತಿಕ್ಕಲು ಯತ್ನಿಸಲಾಗುತ್ತಿದೆ. ಮೇಕೆದಾಟುವಿಗಾಗಿ ಪಂಚತಾರಾ ಹೋಟೆಲ್ ಮಾದರಿಯಲ್ಲಿ ಪಾದಯಾತ್ರೆ ಮಾಡಿದವರು ಇಂದು ಮೇಕೆದಾಟು ಯೋಜನೆಯಲ್ಲಿ ಹುಡುಗಾಟ ಆಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದರು.
10
+ ಕಾವೇರಿ ನೀರು ಹರಿಸುತ್ತಿರುವುದರ ವಿರುದ್ಧ ವಾಟಾಳ್ ನಾಗರಾಜ್ ಬೆಂಗಳೂರಿನಲ್ಲಿಂದು ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ವಶಕ್ಕೆ ಪಡೆದರು.
eesanje/url_46_341_6.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಕಾಂಗ್ರೆಸ್ ವಿರುದ್ಧ ದೇವೇಗೌಡರು ಕಿಡಿ
2
+ ಬೆಂಗಳೂರು,ಸೆ.27- ನಾವು ಎಲ್ಲೇ ಇದ್ದರೂ ನಮ್ಮ ಪಕ್ಷದ ಜಾತ್ಯತೀತ ನಿಲುವನ್ನು ಬಿಟ್ಟುಕೊಟ್ಟಿಲ್ಲ. ಅಲ್ಪಸಂಖ್ಯಾತರನ್ನು ರಕ್ಷಣೆ ಮಾಡುತ್ತಾ ಬಂದಿದ್ದೇವೆ. ಮುಂದೆಯೂ ಮಾಡುತ್ತೇವೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಹಿಂದೆಯೂ ಅಲ್ಪಸಂಖ್ಯಾತರನ್ನು ಕೈಬಿಟ್ಟಿಲ್ಲ. ಮುಂದೆಯೂ ಕೈ ಬಿಡುವುದಿಲ್ಲ. ಅವರನ್ನು ರಕ್ಷಣೆ ಮಾಡುತ್ತೇವೆ. ಪಕ್ಷದ ಜಾತ್ಯತೀತ ನಿಲುವಿನಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.
3
+ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಒಂದು ಹಂತದ ಮಾತುಕತೆ ನಡೆದಿದ್ದು, ಇನ್ನು ಪ್ರಧಾನಿ ಅವರೊಂದಿಗೆ ಚರ್ಚೆ ಮಾಡಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ಬಗ್ಗೆ ಇನ್ನು ಚರ್ಚೆಯಾಗಿಲ್ಲ. ಎರಡೂ ಪಕ್ಷಗಳ ಸಂಸದೀಯ ಮಂಡಳಿ ಸಭೆಯಲ್ಲಿ ಚರ್ಚೆಯಾಗಿ ಆನಂತರ ಸೀಟು ಹಂಚಿಕೆ ಮತ್ತು ಮುಂದಿನ ಮೈತ್ರಿ ಸ್ವರೂಪದ ಬಗ್ಗೆ ನಿರ್ಧಾರವಾಗಲಿದೆ ಎಂದರು.
4
+ ಕಳೆದ 60 ವರ್ಷದ ರಾಜಕೀಯ ಜೀವನದಲ್ಲಿ ಜಾತ್ಯತೀತ ನಿಲುವಿಗೆ ಬದ್ದವಾಗಿ ರಾಜಕೀಯ ಮಾಡಿದ್ದು, ಯಾವುದೇ ಸಮುದಾಯಕ್ಕೆ ಅನ್ಯಾಯ ಮಾಡಲು ಬಿಟ್ಟಿಲ್ಲ ಎಂದು ಹೇಳಿದರು. ಅವಕಾಶವಾದಿ ರಾಜಕಾರಣ ಮಾಡುವ ಪಕ್ಷ ನಮ್ಮದಲ್ಲ. ಜಾತ್ಯತೀತೆ ಬಗ್ಗೆ ಪಾಠ ಹೇಳುವ ಕಾಂಗ್ರೆಸ್ನವರು ರಾಜ್ಯ ಮತ್ತು ರಾಷ್ಟ್ರದಲ್ಲಿ ಜಾತ್ಯತೀತ ಶಕ್ತಿಗಳನ್ನು ದುರ್ಬಲಗೊಳಿಸಲು ಮಾಡಿರುವ ಪ್ರಯತ್ನಗಳ ಬಗ್ಗೆ ಹತ್ತು ಹಲವು ನಿದರ್ಶನಗಳನ್ನು ನೀಡಬಲ್ಲೆ ಎಂದು ಹೇಳಿದರು.
5
+ ಟಿ-20 ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ನೇಪಾಳ ಆಟಗಾರರು
6
+ ಜಾತ್ಯತೀತ ನಿಲುವಿನಲ್ಲಿ ಕಿಂಚಿತ್ತೂ ರಾಜೀ ಮಾಡಿಕೊಂಡಿಲ್ಲ. ಮುಂದೆ ಮಾಡಿಕೊಳ್ಳುವುದೂ ಇಲ್ಲ. ಬಿಜೆಪಿಯೊಂದಿಗಿನ ಮೈತ್ರಿ ವಿಚಾರದ ಬಗ್ಗೆ ರಾಜ್ಯದ ಪರಿಸ್ಥಿತಿಯ ಬಗ್ಗೆ ಕೇಂದ್ರ ಗೃಹಸಚಿವ ಅಮಿತ್ ಷಾ ಅವರ ಜೊತೆ ಮಾತನಾಡಿದ್ದೇನೆ. ಕದ್ದುಮುಚ್ಚಿ ಮಾತನಾಡಿಲ್ಲ. ಆ ವಿಚಾರವನ್ನು ಬಹಿರಂಗಪಡಿಸಲಾಗಿದೆ.
7
+ ಆನಂತರವೇ ಕುಮಾರಸ್ವಾಮಿಯವರು ಬಿಜೆಪಿ ನಾಯಕರೊಂದಿಗೆ ಮಾತನಾಡಿದ್ದಾರೆ ಎಂದ ಅವರು,ಬಿಜೆಪಿಯೊಂದಿಗಿನ ಮೈತ್ರಿ ಮಾಡಿಕೊಳ್ಳುವ ಪರಿಸ್ಥಿತಿಗೆ ಯಾರು ಹೊಣೆ? ಏಕೆ ಹೀಗಾಯ್ತು ಎಂದು ಪ್ರಶ್ನಿಸಿದರು. ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಆಡಳಿತ ನಡೆಸುವಾಗ 17 ಶಾಸಕರನ್ನು ಮುಂಬೈಗೆ ಕಳುಹಿಸಿ ಸರ್ಕಾರದ ಪತನಕ್ಕೆ ಕಾರಣರಾದವರು ಯಾರು? ಬಿಜೆಪಿ ಸರ್ಕಾರ ರಚನೆಗೆ ಯಾರು ಅವಕಾಶ ಮಾಡಿಕೊಟ್ಟರು ಎಂಬುದು ಚರ್ಚೆಯಾಗಲಿ. ಕುಮಾರಸ್ವಾಮಿ ಸಿಎಂ ಆಗಲಿ ಎಂದು ಕಾಂಗ್ರೆಸ್ ನಾಯಕರೇ ನಮ್ಮನ್ನು ಒತ್ತಾಯಿಸಿದ್ದರು. ನಾವು ಬೇಡ ಎಂದು ಅವರು ಬಲವಂತ ಮಾಡಿ ಕುಮಾರಸ್ವಾಮಿಯವರನ್ನೇ ಮುಖ್ಯಮಂತ್ರಿ ಮಾಡಿದರು. ನಂತರ ಅವರೇ ಸರ್ಕಾರವನ್ನು ತೆಗೆದರು ಎಂದು ಆರೋಪಿಸಿದರು.
8
+ ನಮ್ಮ ಪಕ್ಷದ ಎಲ್ಲ ವಿಧಾನಸಭೆ, ವಿಧಾನಪರಿಷತ್ನ ಸದಸ್ಯರ ಅಭಿಪ್ರಾಯವನ್ನು ಸಂಗ್ರಹಿಸಿ ಮೈತ್ರಿ ಮಾತುಕತೆ ನಡೆಸಲಾಗಿದೆ ಎಂದ ಅವರು, ಜಾತ್ಯತೀತ ಪ್ರಜಾಪ್ರಭುತ್ವವನ್ನು ಕಾಂಗ್ರೆಸ್ ಎಷ್ಟರ ಮಟ್ಟಿಗೆ ರಾಷ್ಟ್ರದಲ್ಲಿ ಉಳಿಸಿದೆ ಎಂದು ಅವರು ಪ್ರಶ್ನಿಸಿದರು. ರಾಜಕೀಯ ಪಕ್ಷದ ಮಡಿವಂತಿಕೆಯಿಂದ ಹೊರಬಂದು ನೇರ ಇಲ್ಲವೇ ಪರೋಕ್ಷವಾಗಿ ಬಿಜೆಪಿ ಸಂಬಂಧವಿಲ್ಲದೆ ಸ್ವಚ್ಛವಾಗಿದ್ದೇವೆ ಎಂಬ ಒಂದು ರಾಜಕೀಯ ಪಕ್ಷವಿದ್ದರೆ ಯಾರು ಬೇಕಾದರೂ ಪ್ರಶ್ನಿಸಬಹುದು.
9
+ ಪಶ್ಚಿ ಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಲು ಎಡಪಕ್ಷಗಳ ಕೆಲವು ಮುಖಂಡರು ಬಿಜೆಪಿ ಜೊತೆ ಕೆಲಸ ಮಾಡಿರುವುದು ಬಹಿರಂಗವಾಗಿಲ್ಲವೇ? ವಿಧಾನಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಅವರು ರಾಜ್ಯಸಭೆಗೆ ಸ್ರ್ಪಧಿಸಿದ್ದಾಗ 8 ಮಂದಿ ಪಕ್ಷಾಂತರ ಮಾಡಿ ಅವರನ್ನು ಸೋಲಿಸಲಿಲ್ಲವೇ? ಆಗ ಕಾಂಗ್ರೆಸ್ನ ಜಾತ್ಯತೀತ ನಿಲುವು ಎಲ್ಲಿ ಹೋಗಿತ್ತು? ಪ್ರಾದೇಶಿಕ ಪಕ್ಷವನ್ನು ಉಳಿಸಲು ಹೋರಾಟ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು.
10
+ ಫಾರೂಕ್ ಅಬ್ದುಲ್ಲಾ ಸರ್ಕಾರವನ್ನು ತೆಗೆದವರು ಯಾರು ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಈ ಹಿಂದೆ ಕುಮಾರಸ್ವಾಮಿಯವರು ಬಿಜೆಪಿ ಜೊತೆ ಸರ್ಕಾರ ಮಾಡಿದಾಗ ಮಂಗಳೂರಿನಲ್ಲಿ ಇಬ್ಬರು ಮುಸ್ಲಿಂ ಮುಖಂಡರ ಹತ್ಯೆಯಾಗಿತ್ತು. ಅಲ್ಲಿಗೆ ಕುಮಾರಸ್ವಾಮಿ ಭೇಟಿ ನೀಡಿದ್ದರು. ಆ ಹಂತಕರಿಗೆ ಜೀವಾವ ಶಿಕ್ಷೆಯಾಯಿತು. ಹೀಗೆ ನಾವು ಎಲ್ಲೇ ಇದ್ದರೂ ಅಲ್ಪಸಂಖ್ಯಾತರನ್ನು ಕೈಬಿಟ್ಟಿಲ್ಲ ಎಂದು ಗೌಡರು ಸಮರ್ಥಿಸಿಕೊಂಡರು.
11
+ ಮೈತ್ರಿ ವಿಚಾರವನ್ನು ಸಿ.ಎ.ಇಬ್ರಾಹಿಂ ಅವರಿಂದ ಮುಚ್ಚಿಟ್ಟಿಲ್ಲ : ಹೆಚ್ಡಿಕೆ ಸ್ಪಷ್ಟನೆ
12
+ ಅಧ್ಯಕ್ಷ ಸ್ಥಾನ ಬಿಟ್ಟುಕೊಡಲು ಸಿದ್ಧ:ಕೇರಳದ ನಮ್ಮ ಪಕ್ಷದ ಸ್ನೇಹಿತರು ಕರ್ನಾಟಕದಲ್ಲಿ ಪಕ್ಷವನ್ನು ಉಳಿಸಿ-ಬೆಳೆಸುವುದಾದರೆ ಅವರಿಗೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವೆ. ಸಂಕಷ್ಟ ಪರಿಸ್ಥಿತಿಯಲ್ಲಿ ಪಕ್ಷವನ್ನು ಉಳಿಸಿ ಬೆಳೆಸಬೇಕಿದೆ. ನಮ್ಮ ಪಕ್ಷದ ಶಾಸಕರಾದ ಕರ್ರೆಮ್ಮ ಅವರು ಪಕ್ಷ ಬಿಡುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
13
+ ಎಲ್ಲಿದೆ ನಾಗಾಲೋಟ:ರಾಜ್ಯದಲ್ಲಿ ಕಾಂಗ್ರೆಸ್ನ ನಾಗಾಲೋಟ ಎಲ್ಲಿದೆ ಎಂದು ಪ್ರಶ್ನಿಸಿದ ಗೌಡರು, ಕಾವೇರಿ ನೀರು ಓಡುತ್ತಿದೆ… ಓಡುತ್ತಿದೆ ಎಂದು ಹೇಳಿದರು. ಕಾವೇರಿ ನದಿನೀರು ನಿರ್ವಹಣಾ ಸಮಿತಿ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಮಾಡಿರುವ ಶಿಫಾರಸು ಖುಷಿ ತಂದಿದೆ ಎಂದು ಜಲಸಂಪನ್ಮೂಲ ಖಾತೆ ಹೊಂದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸಮಿತಿಯ ಶಿಫಾರಸ್ಸನ್ನು ಸ್ವಾಗತಿಸಿದ್ದಾರೆ. ನೀರನ್ನು ಉಳಿಸಿ ರಾಜ್ಯದ ಹಿತ ಕಾಪಾಡಲು ಹೋರಾಟ ನಡೆಸಿದೆ. ಆದರೆ ಅವರಿಗೆ ತಮಿಳುನಾಡಿನ ಸ್ಟಾಲಿನ್ ಅವರು ಗೆಲ್ಲಬೇಕಿ��ೆ ಎಂದು ಟೀಕಿಸಿದರು.
14
+ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಶಾಸಕರಾದ ಎಂ.ಟಿ.ಕೃಷ್ಣಪ್ಪ, ಮಂಜುನಾಥ್, ಟಿ.ಎ.ಶರವಣ, ಬಿ.ಎಂ.ಫಾರೂಖ್, ಮಂಜೇಗೌಡ, ವಿಧಾನಪರಿಷತ್ ಮಾಜಿ ಸದಸ್ಯರಾದ ರಮೇಶ್ ಗೌಡ, ಕೆ.ಪಿ.ಶ್ರೀಕಂಠೇಗೌಡ, ರಾಜ್ಯಸಭೆ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಉಪಸ್ಥಿತರಿದ್ದರು.
eesanje/url_46_341_7.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಐಟಿ ಕಂಪನಿಗಳ ಜೊತೆ ಸೇರಿ ಸೈಬರ್ ಸ್ಪೇರ್ ಸೆಂಟರ್ ಆಫ್ ಎಕ್ಸಲೆನ್ಸಿ ಕೇಂದ್ರ ಸ್ಥಾಪನೆ
2
+ ಬೆಂಗಳೂರು,ಸೆ.27- ಆಂತರಿಕ ಭದ್ರತೆ, ಸಂಶೋಧನೆ ಹಾಗೂ ನಾವಿನ್ಯ ಸವಾಲುಗಳನ್ನು ಎದುರಿಸಲು ಪೂರಕವಾಗಿ ಬೆಂಗಳೂರಿನಲ್ಲಿ ಸೈಬರ್ ಸ್ಪೇರ್ ಸೆಂಟರ್ ಆಫ್ ಎಕ್ಸಲೆನ್ಸಿ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
3
+ ನಗರದಲ್ಲಿಂದು ಟೆಕ್ ಪ್ಯೂಶನ್ ಸನ್ ರೈಸ್ ಸಮ್ಮಿಟ್ 2023 ಅಂಗವಾಗಿ ಐಟಿ ಸಂಸ್ಥೆಗಳ ಜೊತೆ ಸಂವಾದ ನಡೆಸಿದ ಅವರು, ಆಧುನಿಕ ತಂತ್ರಜ್ಞಾನದಲ್ಲಿ ಎದುರಾಗುತ್ತಿರುವ ಸೈಬರ್ ಸವಾಲುಗಳನ್ನು ನಿಭಾಯಿಸಲು ಗೃಹ ಇಲಾಖೆ ಮತ್ತು ಮಾಹಿತಿ ತಂತ್ರಜ್ಞಾನ ಕಂಪನಿಗಳ ಸಹಭಾಗಿತ್ವದಲ್ಲಿ ಬೆಂಗಳೂರು ಸೈಬರ್ ಸ್ಪೇರ್ ಜೇಷ್ಠತಾ ಕೇಂದ್ರ ಸ್ಥಾಪಿಸಲಾಗುತ್ತಿದೆ ಎಂದು ಹೇಳಿದರು.
4
+ ನಮ್ಮ ಬಳಿ ಇರುವ ಜ್ಞಾನ ಹಾಗೂ ಐಟಿಬಿಟಿ ಕಂಪನಿಗಳ ತಂತ್ರಜ್ಞಾನ ಬಳಸಿಕೊಂಡು ಖಾಸಗಿ ಸಹಭಾಗಿತ್ವದಲ್ಲಿ ಸೈಬರ್ ಅಪರಾಧಗಳನ್ನು ತಡೆಯಲು ಹಾಗೂ ಪತ್ತೆ ಹಚ್ಚಲು ಸಾಧ್ಯವಾಗಲಿದೆ. ಈಗಾಗಲೇ ಠಾಣೆಗಳಲ್ಲಿ ಎಫ್‍ಐಆರ್ ದಾಖಲು ಸೇರಿದಂತೆ ಅನೇಕ ತಂತ್ರಜ್ಞಾನವನ್ನು ಬಳಸುತ್ತಿದ್ದೇವೆ, ಜೇಷ್ಠತಾ ಕೇಂದ್ರದಿಂದ ಮುಂದಿನ 5 ವರ್ಷಗಳಲ್ಲಿ ಇಲಾಖೆಯ ಎಲ್ಲಾ ಸಿಬ್ಬಂದಿಗಳಿಗೂ ಅಗತ್ಯ ತರಬೇತಿ ಕೊಡಿಸುವುದಾಗಿ ಹೇಳಿದರು.
5
+ ಸಂವಾದದಲ್ಲಿ ಸುಮಾರು 50ಕ್ಕೂ ಹೆಚ್ಚು ಐಟಿಬಿಟಿ ಕಂಪೆನಿಗಳು ಭಾಗವಹಿಸಿದ್ದವು. ಎಲ್ಲರ ಸಲಹೆ, ಸೂಚನೆಗಳನ್ನು ಪಡೆಯಲಾಗಿದೆ. ಟ್ರಾಫಿಕ್ ಸಮಸ್ಯೆ, ಭದ್ರತೆ ಕುರಿತಂತೆ ಸ್ಥಳೀಯ ಮಟ್ಟದಲ್ಲಿ ಸಭೆಗಳನ್ನು ನಡೆಸಲಾಗುವುದು.
6
+ ಆತಂಕ ಸೃಷ್ಟಿಸಿದ ಬೆಂಗಳೂರು ವಿಮಾನ ನಿಲ್ದಾಣದ ಬಳಿ ಡ್ರೋಣ್ ಹಾರಾಟ
7
+ ಸೈಬರ್ ಸಂಶೋಧನಾ ಪ್ರಯೋಗಾಲಯ ಸ್ಥಾಪನೆ, ಕಾನೂನು ಜಾರಿ ಮತ್ತು ಸಾರ್ವಜನಿಕ ಸುರಕ್ಷತೆಗಾಗಿ ಕೊನೆ ಹಂತಕ್ಕೆ ತಂತ್ರಜ್ಞಾನದ ಸೌಲಭ್ಯ ಕಲ್ಪಿಸುವುದು, ಜ್ಞಾನದ ವಿನಿಮಯ, ಕೌಶಲ್ಯಾಭಿವೃದ್ಧಿ, ಸಮುದಾಯದ ಸಹಭಾಗಿತ್ವ, ಸೈಬರ್ ಸುರಕ್ಷತೆಗೆ ತಾಂತ್ರಿಕ ಸಂಶೋಧನೆ, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಣೆ ಸೇರಿದಂತೆ ಅನೇಕ ಉದ್ದೇಶಗಳಿಗೆ ಈ ಕೇಂದ್ರ ನೆರವು ನೀಡಲಿದೆ ಎಂದರು.
8
+ ಖಾಸಗಿ ಕಂಪನಿಗಳು ತಮ್ಮ ಸಂಪನ್ಮೂಲ ವ್ಯಕ್ತಿಗಳನ್ನು ಇಲಾಖೆಯ ಜೊತೆ ಕೈ ಜೋಡಿಸಲು ಕಳುಹಿಸಿಕೊಡಬೇಕು, ಇದರಿಂದ ಅತ್ಯಾಧುನಿಕವಾದ ಅಪರಾಧಗಳು ಮತ್ತು ಅವುಗಳ ಬೆಳವಣಿಗೆಗಳ ಮೇಲೆ ಕಣ್ಣಿಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.
9
+ ಭಾರತದ ಆರ್ಥಿಕತೆಗೆ ಬೆಂಗಳೂರು ತಂತ್ರಜ್ಞಾನ ಕ್ಷೇತ್ರ ಶೇ.34 ರಷ್ಟು ಪಾಲು ನೀಡಿದೆ. ವಿಶ್ವದ ಅತ್ಯಂತ ವೇಗದ ಬೆಳವಣಿಗೆಯ ನಗರಗಳಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನವಿದೆ. ಇದಕ್ಕೆ ಐಟಿಬಿಟಿ ಕ್ಷೇತ್ರದ ಕೊಡುಗೆ ಅಪಾರ ಎಂದು ಶ್ಲಾಘಿಸಿದರು.
10
+ ಕಾಂಗ್ರೆಸ್ ಬಂದ ಮೇಲೆ ಏನೇನೆಲ್ಲಾ ಹೋಯ್ತು ಎಂಬುದನ್ನು ಪಟ್ಟಿ ಮಾಡಿದ ಬಿಜೆಪಿ
11
+ ಭಾರತವು ವಿಶ್ವದ 3 ನೇ ಆರ್ಥಿಕ ಶಕ್ತಿಯಾಗಲು ಮುನ್ನುಗ್ಗುತ್ತಿದೆ. ಇದಕ್ಕೆ ಪೂರಕವಾಗಿ ಬೆಟರ್ ಬೆಂಗಳೂರು, ಬೆಟರ್ ಕರ್ನಾಟಕ, ಬೆಟರ್ ಇಂಡಿಯಾ ಎಂಬ ಧ್ಯೇಯದೊಂದಿಗೆ ಕೆಲಸ ಮಾಡಬೇಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಉದ್ಯಮಿ ಸ್ನೇಹಿಯಾಗಿದ್ದು, ವಿಶ್ವದ ಉದ್ಯಮಿಗಳನ್ನು ಆಕರ್ಷಿಸಲು ಬಂಡವಾಳ ಹೂಡಿಕೆ ಸಮಾವೇಶಗಳನ್ನು ನಡೆಸುತ್ತಿದ್ದೇವೆ. ಬೆಂಗಳೂರು ಸೇರಿದಂತೆ ಮಂಗಳೂರು, ಬೆಳಗಾಂ, ಹುಬ್ಬಳ್ಳಿ, ಧಾರವಾಡ, ಮೈಸೂರು ಕಡೆಗಳಲ್ಲಿ ಉದ್ಯಮಿಗಳನ್ನು ಹೂಡಿಕೆ ಮಾಡುವಂತೆ ಬೆಂಬಲಿಸಲಾಗುತ್ತಿದೆ ಎಂದರು.
12
+ ಭಾರತದ ಅಭಿವೃದ್ಧಿಗೆ ಮಹಿಳೆಯರ ಪಾತ್ರ ಅತ್ಯಂತ ಪ್ರಾಮುಖ್ಯವಾದುದು. ಮಹಿಳೆಯರನ್ನು ಸ್ವಾವಲಂಬಿಗೊಳಿಸಲು ನಮ್ಮ ಸರ್ಕಾರ ಗ್ರಾಮೀಣ ಭಾಗದ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ.ಗಳ ಯೋಜನೆಯನ್ನು ಜಾರಿಗೊಳಿಸಿದೆ. ರಾಜ್ಯಸರ್ಕಾರದ ಪಂಚಖಾತ್ರಿಗಳ ಮೂಲಕ ಪ್ರತಿ ಕುಟುಂಬಕ್ಕೆ ವಾರ್ಷಿಕ 24 ಸಾವಿರ ರೂ.ಗಳಿಗೂ ಅಕ ನೆರವು ದೊರೆಯುತ್ತಿದೆ ಎಂದು ಹೇಳಿದರು.
eesanje/url_46_341_8.txt ADDED
@@ -0,0 +1,7 @@
 
 
 
 
 
 
 
 
1
+ 3 ಸಾವಿರ ಕ್ಯೂಸೆಕ್ ನೀರು ಬಿಡುವ ಶಿಫಾರಸ್ಸನ್ನು ಸುಪ್ರೀಂನಲ್ಲಿ ಪ್ರಶ್ನಿಸುತ್ತೇವೆ : ಸಿಎಂ
2
+ ಚಾಮರಾಜನಗರ,ಸೆ.27- ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿ ನೀಡಿರುವ ಶಿಫಾರಸ್ಸನ್ನು ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಚಾಮರಾಜನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಿತಿಯ ಆದೇಶದಿಂದಾಗಿ ತಾವು ವಕೀಲರ ಜೊತೆ ಚರ್ಚೆ ನಡೆಸಿದ್ದು, ಅದನ್ನು ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸಬಹುದು ಎಂದು ಸಲಹೆ ನೀಡಿದ್ದಾರೆ. ಅದರಂತೆ ಮೇಲ್ಮನವಿ ಸಲ್ಲಿಸಿದ್ದೇವೆ. ತಮಿಳುನಾಡಿಗೆ ಬಿಡಲು ನಮ್ಮ ಬಳಿ ನೀರೇ ಇಲ್ಲ ಎಂದು ಹೇಳಿದರು.
3
+ ತೀರ್ಪಿನ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಸೆ.29 ರಂದು ಬಂದ್ ನಡೆಸುವುದಾಗಿ ಕನ್ನಡಪರ ಸಂಘಟನೆಗಳು ಘೋಷಣೆ ನೀಡಿವೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಅವಕಾಶವಿದೆ. ಆದರೆ ಸುಪ್ರೀಂಕೋರ್ಟಿನ ತೀರ್ಪಿನ ಪ್ರಕಾರ ಬಂದ್, ಪ್ರತಿಭಟನಾ ಮೆರವಣಿಗೆ ಮಾಡಲು ಅವಕಾಶ ಇಲ್ಲ ಎಂದು ಹೇಳಿದರು.
4
+ ಇಯರ್-ಫೋನ್ ವಿಚಾರಕ್ಕೆ ಸ್ನೇಹಿತನನ್ನೆ ಕೊಂದ 9ನೇ ತರಗತಿ ವಿದ್ಯಾರ್ಥಿಗಳು
5
+ ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬ ಮೌಢ್ಯ ಈಗ ಇಲ್ಲವಾಗಿದೆ. ನಾನು ಮೊದಲ ಅವಯಲ್ಲಿ ಮುಖ್ಯಯಾದ ಬಳಿಕ ಚಾಮರಾಜನಗರಕ್ಕೆ ಭೇಟಿ ನೀಡಿದ್ದೆ. ಆ ಬಳಿಕವೂ 5 ವರ್ಷ ಗಟ್ಟಿಯಾಗಿ ಆಡಳಿತ ನಡೆಸಿದೆ. ಮೌಢ್ಯ, ಮೂಢನಂಬಿಕೆ, ಕಂದಾಚಾರದ ಮೇಲೆ ನನಗೆ ನಂಬಿಕೆಯಿಲ್ಲ. ಹಾಗಾಗಿ 12 ಬಾರಿ ಚಾಮರಾಜನಗರಕ್ಕೆ ಬಂದಿದ್ದೇನೆ ಎಂದರು.
6
+ ಮಲೈಮಹದೇಶ್ವರ ದೇವಸ್ಥಾನ ಪ್ರಾಕಾರದ ಸಭೆಗಾಗಿ ತಾವಿಂದು ಇಲ್ಲಿಗೆ ಭೇಟಿ ನೀಡಿದ್ದು, ಮಹದೇಶ್ವರನ ದರ್ಶನ ಪಡೆದು, ರಾಜ್ಯದಲ್ಲಿ ಉತ್ತಮ ಮಳೆಯಾಗಲಿ, ಜನರು ಮತ್ತು ರೈತರು ಸೌಖ್ಯವಾಗಿರಲಿ ಎಂದು ಪ್ರಾರ್ಥಿಸಿದ್ದೇನೆ.ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದೇವೆ. ಹೀಗಾಗಿ ಮಳೆಗಾಗಿ ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದು ಹೇಳಿದರು.
7
+ ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಸ್ಥಳೀಯ ಶಾಸಕರು, ಜನಪ್ರತಿನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮುಖ್ಯಮಂತ್ರಿಯಾದಿಯಾಗಿ ಎಲ್ಲರೂ ಮಹದೇಶ್ವರನ ಮುಂದೆ ಭಕ್ತಿ ಭಾವ ಪರವಶರಾಗಿ ಪೂಜೆ ಸಲ್ಲಿಸಿದ ನಂತರ ಪ್ರಾಕಾರದ ಸಭೆ ನಡೆಸಿದ್ದು, ಮಹದೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಹಲವಾರು ಯೋಜನೆಗಳ ಕುರಿತು ಚರ್ಚೆ ನಡೆಸಲಾಗಿದೆ.ದೇವಸ್ಥಾನದ ಆಡಳಿತ ಮಂಡಳಿ ಮುಖ್ಯಮಂತ್ರಿ ಹಾಗೂ ಗಣ್ಯರಿಗೆ ಪೂರ್ಣ ಕುಂಭ ಸ್ವಾಗತ ಕೋರಿದರು.
eesanje/url_46_341_9.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಪ್ರತಿಪಕ್ಷಗಳ ಹೋರಾಟದಲ್ಲಿ ಜನರ ಹಿತಾಸಕ್ತಿ ಇಲ್ಲ : ಸಿದ್ದರಾಮಯ್ಯ
2
+ ಮೈಸೂರು, ಸೆ.26- ಕಾವೇರಿ ವಿವಾದವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ಹೋರಾಟದ ಹಿನ್ನೆಲೆಯಲ್ಲಿ ಜನ ಕಲ್ಯಾಣ ಅಥವಾ ನಾಡಿನ ಹಿತಾಸಕ್ತಿ ಉದ್ದೇಶ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ.ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನೆ, ಬಂದ್ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ಇದೆ. ಅದರ ಹೊರತಾಗಿಯೂ ರಾಜ್ಯಸರ್ಕಾರ ಕಾವೇರಿ ವಿಷಯವಾಗಿ ಕರೆ ನೀಡಿರುವ ಬಂದ್‍ಗಳಿಗೆ ಅಡ್ಡಿಪಡಿಸುವುದಿಲ್ಲ ಎಂದರು.
3
+ ಹೋರಾಟ ಮಾಡುವುದು ಪ್ರಜಾಪ್ರಭುತ್ವದಲ್ಲಿ ಮೂಲಭೂತ ಹಕ್ಕಾಗಿದೆ. ಅದೇ ವೇಳೆ ಬೇರೆಯವರ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಈ ನಿಟ್ಟಿನಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
4
+ ಬಿಜೆಪಿಯವರು ಮಂಡ್ಯದಲ್ಲಿ ಚಡ್ಡಿ ಮೆರವಣಿಗೆ ಮಾಡಿದ್ದಾರೆ. ಅವರನ್ನು ಚಡ್ಡಿಗಳು ಎಂದೇ ಕರೆಯುತ್ತಿದ್ದೆವು. ಪ್ರತಿಭಟನೆ ಮಾಡಲಿ, ಅದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ ರಾಜಕೀಯ ಲಾಭಕ್ಕಾಗಿ ವಿವಾದವನ್ನು ದುರುಪಯೋಗಪಡಿಸಿಕೊಳ್ಳುವುದು ನಾಡಿನ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಇಲ್ಲಿ ಪ್ರತಿಭಟನೆ ಮಾಡುವ ಬದಲು ಬಿಜೆಪಿಯ 25 ಮಂದಿ ಸಂಸದರು ಪ್ರಧಾನಮಂತ್ರಿಯ ಮೇಲೆ ಒತ್ತಡ ಹಾಕಿ, ಮಧ್ಯಪ್ರವೇಶ ಮಾಡುವಂತೆ ಮಾಡಲಿ ಎಂದು ಸವಾಲು ಹಾಕಿದರು.
5
+ ಕಾವೇರಿ ನದಿ ಪಾತ್ರದ ವಾಸ್ತವಾಂಶಗಳ ಅಧ್ಯಯನಕ್ಕೆ ತಜ್ಞರ ತಂಡ ಕಳುಹಿಸಬೇಕು. ನ್ಯಾಯಾಲಯದ ಹೊರಗೆ ವಿವಾದ ಇತ್ಯರ್ಥಪಡಿಸಲು ಪ್ರಧಾನಿ ಮಧ್ಯಪ್ರವೇಶ ಮಾಡಬೇಕು ಎಂದು ನಾನು ಎರಡು ಬಾರಿ ಪ್ರಧಾನಿಯವರಿಗೆ ಪತ್ರ ಬರೆದಿದ್ದೇನೆ, ದೆಹಲಿಗೆ ಹೋಗಿ ಪ್ರಧಾನಿಯವರ ಭೇಟಿಗೂ ಪ್ರಯತ್ನಿಸಿದ್ದೇನೆ. ಆದರೆ ಯಾವುದಕ್ಕೂ ಅವರಿಂದ ಸ್ಪಂದನೆ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
6
+ ಬೆಂಗಳೂರು ಬಂದ್ : ತಾರಕಕ್ಕೇರಿದ ಕಾವೇರಿ ಕೂಗು, ರಾಜಭವನ ಮುತ್ತಿಗೆಗೆ ಹೋರಾಟಗಾರರ ಯತ್ನ
7
+ ಈಗ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರಧಾನಿಯವರಿಗೆ ಪತ್ರ ಬರೆದಿದ್ದಾರೆ, ಅದನ್ನು ಸ್ವಾಗತಿಸುತ್ತೇನೆ. ಆದರೆ ಅದರಲ್ಲಿ ರಾಜ್ಯಸರ್ಕಾರ ವಿಫಲವಾಗಿದೆ ಎಂಬ ಆಕ್ಷೇಪ ಮಾಡಿರುವುದರ ಹಿಂದೆ ರಾಜಕಾರಣ ಅಡಗಿದೆ. ನನ್ನ ಪತ್ರಕ್ಕೆ ಪ್ರಧಾನಿಯವರು ಸ್ಪಂದಿಸಿಲ್ಲ. ಈಗ ದೇವೇಗೌಡರು ಬಿಜೆಪಿಯ ಜೊತೆ ಹೊಸ ಸ್ನೇಹ ಮಾಡಿಕೊಂಡಿದ್ದಾರೆ. ಅದಕ್ಕಾದರೂ ಕೇಂದ್ರಸರ್ಕಾರ ಸ್ಪಂದಿಸಬಹುದೇನೋ ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದರು.
8
+ ಕಾಂಗ್ರೆಸ್ ಡಿಎಂಕೆಯ ಬಿ ಟೀಂ ಎಂದು ಎಚ್.ಡಿ.ಕುಮಾರಸ್ವಾಮಿ ಟೀಕಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಡಿಎಂಕೆ ತಮಿಳುನಾಡಿನ ಪಕ್ಷ. ರಾಜಕೀಯಕ್ಕಾಗಿ ಬಾಯಿಗೆ ಬಂದಂತೆ ಮಾತನಾಡಬಾರದು. ಮೊನ್ನೆಯವರೆಗೂ ಬಿಜೆಪಿ ತಮಿಳುನಾಡಿನ ಎ��ಡಿಎಂಕೆ ಪಕ್ಷದ ಜೊತೆ ಮೈತ್ರಿಯಲ್ಲಿತ್ತಲ್ಲಾ ಅದಕ್ಕೆ ಏನೆಂದು ಕರೆಯಬೇಕು ಎಂದು ಪ್ರಶ್ನಿಸಿದರು.
9
+ ರಾಜ್ಯಸರ್ಕಾರ ನಾಡಿನ ಮತ್ತು ರೈತರ ಹಿತಾಸಕ್ತಿ ವಿಷಯದಲ್ಲಿ ಹಿಂದೆ ಬಿದ್ದಿಲ್ಲ, ಹಿಂದೆ ಬೀಳುವುದೂ ಇಲ್ಲ. ನಮಗೆ ಅಧಿಕಾರ ಮುಖ್ಯ ಅಲ್ಲ, ರಾಜ್ಯದ ಜನರ ಹಿತ ಮುಖ್ಯ ಎಂಬ ತತ್ವದಲ್ಲಿ ನಂಬಿಕೆ ಇಟ್ಟುಕೊಂಡಿದ್ದೇವೆ ಎಂದು ಹೇಳಿದರು.
10
+ ಕಾವೇರಿ ನದಿ ವಿವಾದದಲ್ಲಿ ನ್ಯಾಯಾಧಿಕರಣ ಸಾಮಾನ್ಯ ವರ್ಷದಲ್ಲಿ 172.25 ಟಿಎಂಸಿ ನೀರು ಬಿಡಬೇಕು ಎಂದು ತೀರ್ಪು ನೀಡಿದೆ. ಆದರೆ ಸಂಕಷ್ಟ ಸಂದರ್ಭದಲ್ಲಿ ಪಾಲಿಸಬೇಕಾದ ಸೂತ್ರ ರಚನೆಯಾಗಿಲ್ಲ. ಇದು ಎರಡೂ ರಾಜ್ಯಗಳಿಗೂ ಅನ್ವಯವಾಗುತ್ತಿದೆ. ಹೀಗಾಗಿ ಸಂಕಷ್ಟ ಸೂತ್ರ ತುರ್ತು ಅಗತ್ಯವಿದೆ. ನದಿ ನೀರಿನ ಹಂಚಿಕೆ ವಿವಾದಕ್ಕೆ ಮತ್ತೊಂದು ಪರಿಹಾರ ಎಂದರೆ ಮೇಕೆದಾಟು ಸಮತೋಲಿತ ಅಣೆಕಟ್ಟು ನಿರ್ಮಾಣವಾಗಿದೆ. ಇದರಿಂದ 67 ಟಿಎಂಸಿ ಮಳೆ ನೀರನ್ನು ಸಂಗ್ರಹಿಸಿ ಸಂಕಷ್ಟ ಸಂದರ್ಭದಲ್ಲಿ ಹಂಚಿಕೊಳ್ಳಲು ಅನುಕೂಲವಾಗುತ್ತದೆ ಎಂದರು.
11
+ ಕಾವೇರಿ ಹೋರಾಟಕ್ಕೆ ಜಯವಾಗಲಿ ಎಂದು ಪೋಸ್ಟ್ ಮಾಡಿದ ಸುದೀಪ್
12
+ ಕಾವೇರಿ ಪ್ರಕರಣದಲ್ಲಿ ರಾಜ್ಯಸರ್ಕಾರ ಸಮರ್ಥವಾದ ವಾದ ಮಂಡಿಸಿದೆ. ದೇವೇಗೌಡರ ಕಾಲದಿಂದಲೂ ಅಸ್ತಿತ್ವದಲ್ಲಿರುವ ಕಾನೂನು ತಂಡವೇ ನ್ಯಾಯಾಲಯಗಳಿಗೆ ವಾಸ್ತವಾಂಶವನ್ನು ಮನವರಿಕೆ ಮಾಡಿಕೊಡುತ್ತಿವೆ. ನೀರು ನಿಯಂತ್ರಣಾ ಸಮಿತಿ ಮುಂದೆ ಬಲವಾದ ವಾದ ಮಂಡಿಸಿದ್ದರೂ ಕೂಡ 5 ಸಾವಿರ ಕ್ಯೂಸೆಕ್ ನೀರು ಬಿಡಬೇಕು ಎಂಬ ತೀರ್ಪು ನೀಡಲಾಗಿದೆ. ಇಂದು ಮತ್ತೆ ನಿಯಂತ್ರಣಾ ಸಮಿತಿಯ ಸಭೆ ನಡೆಯುತ್ತಿದ್ದು, ಅಲ್ಲಿಯೂ ಪ್ರಬಲವಾದ ವಾದ ಮಂಡಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
eesanje/url_46_342_1.txt ADDED
@@ -0,0 +1,8 @@
 
 
 
 
 
 
 
 
 
1
+ ಶಾಕಿಂಗ್ : ಮತ್ತೆ 3 ಸಾವಿರ ಕ್ಯೂಸೆಕ್ ನೀರು ಬಿಡಲು ಆದೇಶ
2
+ ಬೆಂಗಳೂರು, ಸೆ.26- ರೈತ ಹಾಗೂ ಕನ್ನಡ ಪರ ಸಂಘಟನೆಗಳ ತೀವ್ರ ಪ್ರತಿಭಟನೆ ನಡುವೆಯೂ ಕಾವೇರಿ ನದಿ ನೀರಿನ ಹಂಚಿಕೆ ವಿಷಯದಲ್ಲಿ ಮತ್ತೆ ಕರ್ನಾಟಕಕ್ಕೆ ವ್ಯತಿರಿಕ್ತವಾದ ತೀರ್ಪು ಹೊರ ಬಿದ್ದಿದೆ. 150 ವರ್ಷಗಳ ಹಳೆಯದಾದ ಅಂತಾರಾಜ್ಯ ವಿವಾದದಲ್ಲಿ ನ್ಯಾಯಾಧೀಕರಣದ ತೀರ್ಪಿನ ಬಳಿಕ, ನೀರಿನ ಹಂಚಿಕೆಯಲ್ಲಿ ಆದ್ಯ ಪಾತ್ರ ವಹಿಸುತ್ತಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಇಂದು ಮಹತ್ವದ ಸಭೆ ನಡೆಸಿದೆ. ಅಲ್ಲಿ ತಮಿಳುನಾಡು, ಕರ್ನಾಟಕ ಸೇರಿದಂತೆ ಕಾವೇರಿ ನದಿ ಪಾತ್ರದ ನೀರಿನಲ್ಲಿ ಹಕ್ಕು ಸಾಮ್ಯತೆ ಹೊಂದಿರುವ ಕೇರಳ, ಪಾಂಡಿಚೇರಿ ರಾಜ್ಯಗಳ ನೀರಾವರಿ ಇಲಾಖೆ ಅಧಿಕಾರಿಗಳು, ವಕೀಲರು ಭಾಗವಹಿಸಿದ್ದರು.
3
+ ಕರ್ನಾಟಕ ತನ್ನಲ್ಲಿ ನೀರಿಲ್ಲ. ಹಾಗಾಗಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ವಾದಿಸಿತ್ತು. ಕೆಆರ್ಎಸ್, ಕಬಿನಿ, ಹಾರಂಗಿ, ಹೇಮಾವತಿ ಸೇರಿ ನಾಲ್ಕು ಜಲಾಶಯಗಳಲ್ಲಿ 53.04 ಟಿಎಂಸಿಯಷ್ಟು ಮಾತ್ರ ನೀರು ಸಂಗ್ರಹವಿದೆ. ಬೆಂಗಳೂರು, ಮಂಡ್ಯ, ರಾಮನಗರ ಸೇರಿ ಹಲವಾರು ನಗರ ಪ್ರದೇಶಗಳಿಗೆ ಕುಡಿಯುವ ನೀರು ಹಾಗೂ ಈಗಾಗಲೇ ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗೆ ರಾಜ್ಯಕ್ಕೆ 106 ಟಿಎಂಸಿ ನೀರಿನ ಅಗತ್ಯ ಇದೆ. ಹೀಗಾಗಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ವಾದಿಸಿತ್ತು.
4
+ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಸರ್ಕಾರ ಪ್ರತಿಭಟನೆ ಹತ್ತಿಕ್ಕುತ್ತಿದೆ : ಕುರುಬೂರು ಶಾಂತಕುಮಾರ್
5
+ ರಾಜ್ಯದಲ್ಲಿ 195 ತಾಲ್ಲೂಕುಗಳು ಬರಪೀಡಿತವಾಗಿವೆ. ಮುಂದೆ ಮಳೆಯಾಗುವ ನಿರೀಕ್ಷೆಗಳು ಇಲ್ಲ. ಸಂಕಷ್ಟ ಸಂದರ್ಭದಲ್ಲಿ ಪಾಲಿಸಬೇಕಾದ ಸೂತ್ರ ರಚನೆಯಾಗಿಲ್ಲ. ಹಾಗಾಗಿ ನೀರು ಹರಿಸಲು ಸಾಧ್ಯವಿಲ್ಲ ಎಂದು ವಾದಿಸಿತ್ತು. ಇದಕ್ಕೆ ಪ್ರತಿಯಾಗಿ ತಮಿಳುನಾಡು ಸರ್ಕಾರ ತನ್ನ ವಾದ ಮಂಡಿಸಿದ್ದಲ್ಲದೆ. ಇತ್ತಿಚೆಗೆ ಕಾವೇರಿ ನದಿ ಪಾತ್ರದ ಜಲಾಶಯಗಳಲ್ಲಿ ನೀರಿನ ಒಳಹರಿವು ಹೆಚ್ಚಾಗಿದೆ.
6
+ ಹೀಗಾಗಿ ತಮಿಳುನಾಡಿಗೆ 12500 ಕ್ಯೂಸೆಕ್ ನೀರು ಹರಿಸಬೇಕು ಎಂದಿತ್ತು. ಕರ್ನಾಟಕ ಕಾವೇರಿ ನೀರು ನಿಯಂತ್ರಣ ಸಮಿತಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಸುಪ್ರೀಂಕೋರ್ಟ್ನ ಆದೇಶಗಳನ್ನು ಪಾಲನೇ ಮಾಡುತ್ತಿಲ್ಲ. ನ್ಯಾಯಾಧಿಕರಣದ ತೀರ್ಪಿನ ಅನುಸಾರ ನೀರು ಬಿಡುಗಡೆ ಮಾಡುತ್ತಿಲ್ಲ ಎಂದು ಆಕ್ಷೇಪಿಸಿತ್ತು.
7
+ ಫೆನ್ಸಿಂಗ್‍ನಲ್ಲಿ ಭಾರತದ ಚೊಚ್ಚಲ ಏಷ್ಯನ್ ಗೇಮ್ಸ್ ಪದಕದ ಭರವಸೆ
8
+ ವಾದ, ಪ್ರತಿವಾದಗಳನ್ನು ಆಲಿಸಿದ ನೀರು ನಿರ್ವಹಣಾ ಮಂಡಳಿ ಸೆಪ್ಟಂಬರ್ 28ರಿಂದ ಅಕ್ಟೋಬರ್ 15ರವರೆಗೆ ಪ್ರತಿದಿನ ಮೂರು ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಶಿಫಾರಸ್ಸು ನೀಡಿದೆ. ಮಂಗಳವಾರ ಬೆಳಗ್ಗೆ 8ಗಂಟೆಯಿಂದ ಆರಂಭಗೊಳ್ಳುವ ಲೆಕ್ಕದಲ್ಲಿ ತಮಿಳುನಾಡಿನ ಬಿಳಿಗುಂಡ್ಲು ಜಲಾಶಯಕ್ಕೆ ಮೂರು ಸಾವಿರ ಕ್ಯೂಸೆಕ್ ನೀರು ಹರಿಯಬೇಕು ಎಂದು ಸೂಚಿಸಲಾಗಿದೆ
eesanje/url_46_342_10.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಸದ್ಯದ ಚಿತ್ರ ತೋರಿಸಿ ಕಣ್ಣೀರಿಟ್ಟ ದೇವೇಗೌಡರು
2
+ ಬೆಂಗಳೂರು, ಸೆ.25- ಕಾವೇರಿ ನದಿ ನೀರು ಹಂಚಿಕೆ ಬಿಕ್ಕಟ್ಟು ಪರಿಹಾರಕ್ಕಾಗಿ ತಮಿಳುನಾಡು ಮತ್ತು ಕರ್ನಾಟಕ ರಾಜ್ಯದಲ್ಲಿನ ವಾಸ್ತವಾಂಶ ಗಳನ್ನು ಅರಿಯಲು ತಜ್ಞರ ಸಮಿತಿ ಕಳುಹಿಸುವ ಬಗ್ಗೆ ಕೇಂದ್ರ ಜಲಶಕ್ತಿ ಇಲಾಖೆಯಿಂದ ಸುಪ್ರಿಂಕೋರ್ಟ್‍ಗೆ ಅರ್ಜಿ ಸಲ್ಲಿಸಿ ಮನವಿ ಮಾಡಬೇಕೆಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.
3
+ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ಸಂಕಷ್ಟಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ವಾಸ್ತವಾಂಶಗಳನ್ನು ಆಧರಿಸಿದ 5 ಪುಟಗಳ ಪತ್ರವನ್ನು ಬರೆದಿದ್ದು, ಅದರಲ್ಲಿ ಸಂಕಷ್ಟ ಪರಿಹಾರಕ್ಕೆ ಸಲಹೆಗಳನ್ನು ನೀಡಿ, ಪರಿಗಣಿಸುವಂತೆ ಮನವಿ ಮಾಡಿದ್ದಾರೆ.
4
+ ಕೆಆರ್‍ಎಸ್ ಜಲಾಶಯದಲ್ಲಿ ನೀರಿಲ್ಲದಿರುವ ಫೋಟೋವನ್ನು ಪ್ರದ ರ್ಶಿಸಿ ಭಾವುಕರಾಗಿ ಮಾತನಾಡಿದ ದೇವೇಗೌಡರು, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ ಮುಂದಿನ ಬೇಸಿಗೆಯವರೆಗೆ ಕುಡಿಯುವ ನೀರು ಮತ್ತು ಬೆಳೆಗಳಿಗೆ ಅಗತ್ಯವಿರುವ ನೀರಿನ ಪ್ರಮಾಣವನ್ನು ಆಧರಿಸಿ ಸಂಕಷ್ಟ ಸೂತ್ರ ರೂಪಿಸಬೇಕು. ಇದಕ್ಕಾಗಿ ತಮಿಳುನಾಡು ಮತ್ತು ಕರ್ನಾಟಕ ರಾಜ್ಯವನ್ನು ಹೊರತುಪಡಿಸಿದ ಐವರು ಪರಿಣಿತರ ತಂಡವನ್ನು ಉಭಯ ರಾಜ್ಯಗಳಿಗೆ ಕಳುಹಿಸಿ ವಾಸ್ತವಾಂಶದ ವರದಿ ಪಡೆದು ಸೂಕ್ತ ನಿರ್ಧಾರವನ್ನು ಕೈಗೊಳ್ಳಬೇಕು. ಈಗ ಆಗಿರುವಂತೆ ಮುಂದೆ ತೊಂದರೆ ಉಂಟಾಗದಂತೆ ಪರಿಹಾರ ರೂಪಿಸಬೇಕು ಎಂದು ಹೇಳಿದರು.
5
+ ನಿಗದಿತ ಸಮಯದೊಳಗೆ ಜನರ ಸಮಸ್ಯೆಗಳನ್ನು ಪರಿಹರಿಸಿ : ಸಚಿವ ಗುಂಡೂರಾವ್
6
+ 9 ಅಂಶಗಳ ಸಲಹೆಗಳನ್ನು ಪ್ರಧಾನಿಯವರಿಗೆ ಪತ್ರದಲ್ಲಿ ನೀಡಲಾಗಿದೆ. ತಜ್ಞರ ಸಮಿತಿ ನೀಡಿರುವ ವರದಿಯನ್ನು ಆಧಾರಿಸಿ ಸಂಕಷ್ಟ ಸೂತ್ರವನ್ನು ರೂಪಿಸಬೇಕು ಇದು ಮಧ್ಯಂತರ ಪರಿಹಾರವಾಗಲಿದೆ ಎಂದು ಹೇಳಿದರು. ಎಲ್ಲಾ ಜಲಾಶಯಗಳಲ್ಲಿರುವ ನೀರಿನ ಸಂಗ್ರಹ, ಅಗತ್ಯ ಇರುವ ನೀರಿನ ಪ್ರಮಾಣ ಸೇರಿದಂತೆ ವಾಸ್ತವ ಸಂಗತಿಗಳನ್ನು ಸ್ವತಂತ್ರವಾದ ಬಾಹ್ಯ ಏಜೆನ್ಸಿ ನೇಮಿಸುವ ಮೂಲಕ ಕೇಂದ್ರ ಸರ್ಕಾರ ವರದಿ ಪಡೆಯಬೇಕು. ಆ ವರದಿ ಆಧರಿಸಿ ಕಾವೇರಿ ನೀರು ನಿರ್ವಹಣಾ ಸಮಿತಿ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಸೂಕ್ತ ನಿರ್ದೇಶನ ನೀಡಬೇಕು.
7
+ 15 ದಿನಗಳಿಗೊಮ್ಮೆ ನಿರ್ವಹಣಾ ಸಮಿತಿ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕಾವೇರಿ ಜಲಾನಯನ ಭಾಗದ ಜಲಾಶಯಗಳಿಗೆ ಭೇಟಿ ನೀಡಿ ವಾಸ್ತವ ಸಂಗತಿಗಳನ್ನು ಆಧರಿಸಿ ನಿರ್ಣಯ ಕೈಗೊಳ್ಳಬೇಕು. ಜಲಶಕ್ತಿ ಸಚಿವಾಲಯಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಅವರು ಕೋರಿದರು.
8
+ ಕಾವೇರಿ ವಿಷಯದಲ್ಲಿ ಜನರು ಸಂಕಷ್ಟಕ್ಕೀಡಾಗಿರುವ ಬಗ್ಗೆ ಕುಮಾರಸ್ವಾಮಿಯವರು ಮಾಹಿತಿ ಸಂಗ್ರಹಿಸಿದ್ದಾರೆ. ಅದರ ಮಾಹಿತಿಯನ್ನು ಪ್ರಧಾನಿಗೆ ತಲುಪಿಸಿದ್ದೇವೆ. ತಮಿಳುನಾಡಿನ ಸಹೋದರರು ಕರ್ನಾಟಕದಲ್ಲಿ ನೀರಿಲ್ಲದಿರುವ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು. ಅವರು ಬದುಕಬೇಕು ನಮ್ಮನ್ನು ಬದುಕಿಸಬೇಕು ಎಂದರು.
9
+ ಉಭಯ ರಾಷ್ಟ್ರದಲ್ಲಿರುವ ವಾಸ್ತವ ಸ್ಥಿತಿಗತಿ ಅರಿಯಲು ತಜ್ಞರ ತಂಡವನ್ನು ಕಳುಹಿಸಲು ಕೋರಿ ರಾಜ್ಯಸಭೆಯಲ್ಲಿ ಮನವಿ ಮಾಡಿದ್ದೆ. ರಾಜ್ಯಸಭೆಯ ಅಧ್ಯಕ್ಷರು ಮನವಿಯನ್ನು ತಳ್ಳಿಹಾಕಿದರು. ನಾಳಿನ ಬಂದ್ ವಿಚಾರದಲ್ಲಿ ಯಾರ್ಯಾರು ಏನೇನು ಮಾತನಾಡುತ್ತಾರೆ ಎಂಬ ಬಗ್ಗೆ ನಾನು ಚರ್ಚಿಸುವುದಿಲ್ಲ ಎಂದರು.
10
+ ಕಳೆದ 60 ವರ್ಷದಲ್ಲಿ ಕಾಂಗ್ರೆಸ್ ಬಿಜೆಪಿ ಪಕ್ಷಗಳ ನಿಲುವನ್ನು ನೋಡಿದ್ದೇನೆ. ರಾಜಕೀಯ ಲಾಭಕ್ಕಾಗಿ ಕಾವೇರಿ ವಿಚಾರವನ್ನು ಬಳಸಿಕೊಂಡಿಲ್ಲ. 2 ರಾಜಕೀಯ ಪಕ್ಷಗಳು ಅಧಿಕಾರದಲ್ಲಿದ್ದಾಗ ನಾಡಿನ ಸಂಕಷ್ಟ ಪರಿಹಾರಕ್ಕಾಗಿ ಹೋರಾಟ ಮಾಡಿದ್ದೇನೆ. ತಮಿಳುನಾಡಿನ 40 ಸಂಸದರು ಒಗ್ಗಟ್ಟಾಗಿ ಹೋರಾಟ ಮಾಡುತ್ತಾರೆ. ನಮ್ಮಲ್ಲಿ 28 ಸಂಸದರು ಇದ್ದರೂ ಮೂಲೆಗುಂಪುಗಳಾಗುತ್ತಾರೆ ಒಗ್ಗಟ್ಟಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
11
+ ಮನಮೋಹನ್‍ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಡುಗುತ್ತಿದ್ದ ಕೈಯಲ್ಲಿ ಒಂದು ಲೋಟ ಹಿಡಿದು ಕಾವೇರಿ ವಿಚಾರ ಪ್ರಸ್ತಾಪವನ್ನು ಸಂಸತ್ತಿನಲ್ಲಿ ಪ್ರಸ್ತಾಪ ಮಾಡಿದೆ. ಆಗ ರಾಜ್ಯ ಪ್ರತಿನಿಧಿಸುವ ನಾಲ್ವರು ಕೇಂದ್ರ ಸಚಿವರಾದ ಮಲ್ಲಿಕಾರ್ಜುನ ಖರ್ಗೆ, ವಿರಪ್ಪ ಮೋಯ್ಲಿ, ಎಸ್.ಎಂ ಕೃಷ್ಣ. ಕೆ.ಎಚ್. ಮುನಿಯಪ್ಪ ಅವರು ಯಾರು ಕೂಡ ಮಾತನಾಡಲಿಲ್ಲ. ಆಗಿನ ಸಂಸದರಾಗಿದ್ದ ಅನಂತ್‍ಕುಮಾರ್ ಅವರ ಸಹಕಾರವನ್ನು ಕೋರಿದ್ದೆ. ಅವರು ಪಕ್ಷದ ತೀರ್ಮಾನ ಪಡೆದು ನಾಳೆ ಹೇಳುವುದಾಗಿ ಹೇಳಿದ್ದರು. ಆದರೆ ಮರುದಿನ ಬರಲೇ ಇಲ್ಲ ಸ್ಮರಿಸಿದರು. ಅಧಿಕಾರಕ್ಕಾಗಿ ನಮ್ಮ ಪಕ್ಷ ಹೋರಾಡುತ್ತಿಲ್ಲ. ಸ್ವಾಭಿಮಾನದಿಂದ ಜನರ ಹಿತ ಕಾಪಾಡಲು ಹೋರಾಡುತ್ತಿದೆ ಎಂದು ಹೇಳಿದರು.
12
+ ಅಸ್ತಿತ್ವ ಉಳಿಸಿಕೊಳ್ಳಲು ಕುಮಾರಸ್ವಾಮಿ ಬಿಜೆಪಿ ನಾಯಕರ ಕಾಲಿಗೆ ಬಿದ್ದಿದ್ದಾರೆ : ಪ್ರಿಯಾಂಕ್ ಖರ್ಗೆ
13
+ ಬಂದ್‍ಗೆ ಬೆಂಬಲ:ನಾಳೆ ನೀಡಿರುವ ಬೆಂಗಳೂರು ಬಂದ್‍ಗೆ ಕುಮಾರಸ್ವಾಮಿ ಅವರು ಬೆಂಬಲ ಘೋಷಿಸಿದ್ದಾರೆ. ಯಾವುದೇ ಅಹಿತಕರ ಘಟನೆ ಆಗದಂತೆ ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕೆಂದು ಗೌಡರು ಸಲಹೆ ಮಾಡಿದರು.ರಾಜಕೀಯಕ್ಕೆ ಸಂಬಂಧಿಸಿದ ಯಾವುದೇ ವಿಚಾರವನ್ನು ಇಂದು ಪ್ರಸ್ತಾಪಿಸುವುದಿಲ್ಲ. ಮೈತ್ರಿ ಕುರಿತಂತೆ ರಾಜಕೀಯಕ್ಕೆ ಸಂಬಂಧಿಸಿದಂತೆ ಸುದೀರ್ಘ ವಿಚಾರ ಬುಧವಾರ ತಿಳಿಸುವುದಾಗಿ ಹೇಳಿದರು.
14
+ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಕುಮರಾಸ್ವಾಮಿ, ಮಾಜಿ ಸಂಸದ ಕುಪೇಂದ್ರರೆಡ್ಡಿ, ಬಿಎಂ ಪಾರುಕ್, ತಿಪ್ಪೆಸ್ವಾಮಿ, ಮಾಜಿ ಸದಸ್ಯ ರಮೇಶ್ ಗೌಡ ಹಾಗೂ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಉಪಸ್ಥಿತರಿದ್ದರು.
eesanje/url_46_342_11.txt ADDED
@@ -0,0 +1,6 @@
 
 
 
 
 
 
 
1
+ ಪ್ರತಿಭಟನೆ ವೇಳೆ ಶಾಂತಿ ಕದಡಿದರೆ ಹುಷಾರ್ : ಸಿಎಂ ಎಚ್ಚರಿಕೆ
2
+ ಬೆಂಗಳೂರು, ಸೆ.25- ಕಾವೇರಿ ನದಿ ನೀರಿನ ವಿಚಾರವಾಗಿ ವಿವಿಧ ಸಂಘಟನೆಗಳು ಕರೆ ನೀಡಿರುವ ಬೆಂಗಳೂರು ಬಂದ್ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಾರ್ವಜನಿಕ ಆಸ್ತಿಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಲು ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ಬೆಳಿಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ. ಮುಖ್ಯಮಂತ್ರಿಯವರು ಬಂದ್‍ಗೆ ಸರ್ಕಾರ ಅಡ್ಡಿಪಡಿಸುವುದಿಲ್ಲ.
3
+ ಆದರೆ ಸಾರ್ವಜನಿಕ ಆಸ್ತಿ, ನೆಮ್ಮದಿಗೆ ಭಂಗ ಬರಬಾರದು. ಹೀಗಾಗಿ ಅಗತ್ಯ ಇರುವ ಕಡೆಗೆ ಸೂಕ್ತ ಬಂದೋಬಸ್ತ್ ಮಾಡುವಂತೆ ತಾಕೀತು ನೀಡಿದ್ದಾರೆ. ಇಂದು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಗೃಹಸಚಿವ ಡಾ.ಜಿ.ಪರಮೇಶ್ವರ್, ಕಾವೇರಿ ವಿಷಯದಲ್ಲಿ ಸರ್ಕಾರ ಜನಪರವಾದ ನಿಲುವನ್ನು ಹೊಂದಿದೆ.
4
+ ನಾಳೆ ಬೆಂಗಳೂರು ಬಂದ್ : ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಮಾಹಿತಿ
5
+ ಹೀಗಾಗಿ ಬಂದ್ ಮಾಡಬೇಡಿ ಎಂದು ಮನವಿ ಮಾಡಿದೆ. ಅದರ ಹೊರತಾಗಿಯೂ ಕನ್ನಡ ಸಂಘಟನೆಗಳು ಬಂದ್ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದೆ. ಅಗತ್ಯವಿರುವ ಕಡೆ ವ್ಯಾಪಕ ಬಂದೋಬಸ್ತ್ ಆಯೋಜನೆ ಮಾಡಿದೆ ಎಂದರು.
6
+ ಬಂದ್ ಮಾಡುವವರು ಸಾರ್ವಜನಿಕ ಆಸ್ತಿಗಳಿಗೆ ತೊಂದರೆ ಮಾಡಬಾರದು, ಕಾನೂನನ್ನು ಕೈಗೆತ್ತಿಕೊಳ್ಳಬಾರದು, ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು, ಇಲ್ಲವಾದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
eesanje/url_46_342_12.txt ADDED
@@ -0,0 +1,9 @@
 
 
 
 
 
 
 
 
 
 
1
+ ರಾಜ್ಯಾದ್ಯಂತ ಏಕಕಾಲದಲ್ಲಿ ಜನತಾ ದರ್ಶನ, ಸ್ಥಳದಲ್ಲೇ ಪರಿಹಾರ
2
+ ಬೆಂಗಳೂರು,ಸೆ.25- ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ಸದಾಶಯದೊಂದಿಗೆ ಇಂದು ಜಿಲ್ಲಾಮಟ್ಟದಲ್ಲಿ ಜನತಾದರ್ಶನ ನಡೆಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಜಿಲ್ಲೆಯಾದ್ಯಂತ ಉಸ್ತುವಾರಿ ಸಚಿವರು, ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಎಸ್ಪಿಗಳ ಸಮ್ಮುಖದಲ್ಲಿ ಜನತಾದರ್ಶನ ನಡೆಯಿತು.
3
+ ತಾಂತ್ರಿಕ ಹಾಗೂ ಕಾನೂನಾತ್ಮಕ ಅಡಚಣೆಗಳಿಲ್ಲದ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಲಾಗಿದೆ. ಗಂಭೀರ ಸ್ವರೂಪದ ಅಡಚಣೆಗಳಿರುವ ಅರ್ಜಿಗಳನ್ನು ಸ್ವೀಕರಿಸಿ ಸಾರ್ವಜನಿಕ ಕುಂದುಕೊರತೆ ನಿವಾರಣೆ ವ್ಯವಸ್ಥೆ (ಐಪಿಜಿಆರ್‍ಎಸ್) ತಂತ್ರಾಂಶದಲ್ಲಿ ದಾಖಲಿಸಲಾಗಿದೆ.
4
+ ಅಸ್ತಿತ್ವ ಉಳಿಸಿಕೊಳ್ಳಲು ಕುಮಾರಸ್ವಾಮಿ ಬಿಜೆಪಿ ನಾಯಕರ ಕಾಲಿಗೆ ಬಿದ್ದಿದ್ದಾರೆ : ಪ್ರಿಯಾಂಕ್ ಖರ್ಗೆ
5
+ ಸದರಿ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗೆ ರವಾನಿಸಿ ಕಾಲಮಿತಿಯಲ್ಲಿ ಇತ್ಯರ್ಥಕ್ಕೆ ಸೂಚನೆ ನೀಡಲಾಗಿದೆ. ಬೆಂಗಳೂರು ನಗರ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆನೆಕಲ್ ತಾಲೂಕಿನ ಹೊಸ ಮಾಧ್ಯಮಿಕ ಪಾಠಶಾಲೆ ಆಟದ ಮೈದಾನದಲ್ಲಿ ನಡೆಯುವ ಜನತಾದರ್ಶನದಲ್ಲಿ ಭಾಗವಹಿಸಿದ್ದರು. ಉಳಿದಂತೆ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆದ ಜನತಾದರ್ಶನದಲ್ಲಿ ಭಾಗವಹಿಸಿದ್ದರು.
6
+ ಈ ವೇಳೆ ಸ್ಥಳೀಯ ಜನಪ್ರತಿನಿಧಿಗಳು ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಸಣ್ಣಪುಟ್ಟ ಸಮಸ್ಯೆಗಳಿಗೂ ಪ್ರತಿದಿನ ಸಾವಿರಾರು ಸಾರ್ವಜನಿಕರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಸಚಿವರುಗಳ ಬಳಿಗೆ ಅರ್ಜಿ ನೀಡಲು ಬರುವುದು ಸಾಮಾನ್ಯವಾಗಿದೆ. ದೂರದೂರುಗಳಿಂದಲೂ ಬೆಂಗಳೂರಿಗೆ ಸಮಸ್ಯೆಗಳನ್ನು ಹೊತ್ತು ತರುವ ಜನರ ಕಷ್ಟಗಳಿಗೆ ಸ್ಥಳೀಯವಾಗಿಯೇ ಸ್ಪಂದಿಸಲು ಜನತಾದರ್ಶನ ಆಯೋಜಿಸಲಾಗಿತ್ತು.
7
+ ರಾಹುಲ್ ಗಾಂಧಿಗೆ ಹೈದರಾಬಾದ್‍ನಲ್ಲಿ ಸ್ಪರ್ಧಿಸುವಂತೆ ಓವೈಸಿ ಚಾಲೆಂಜ್
8
+ ಈ ಮೊದಲು ಮೊದಲ ಅವಧಿಗೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ಖುದ್ದಾಗಿ ತಾವೇ ಗೃಹಕಚೇರಿ ಕೃಷ್ಣಾದಲ್ಲಿ ಜನತಾದರ್ಶನ ನಡೆಸುತ್ತಿದ್ದರು. ಅದರಲ್ಲಿ ಸಾವಿರಾರು ಮಂದಿ ಭಾಗವಹಿಸುತ್ತಿದ್ದರು. ಎರಡನೇ ಹಂತದಲ್ಲಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯನವರು ಮತ್ತೆ ಜನತಾದರ್ಶನ ನಡೆಸಲಿದ್ದಾರೆ ಎಂಬ ಚರ್ಚೆಗಳಿದ್ದವು. ಆದರೆ ಅಧಿಕಾರ ವಿಕೇಂದ್ರಿಕರಣದ ಮಾದರಿಯಲ್ಲೇ ಜನತಾದರ್ಶನವನ್ನು ಸ್ಥಳೀಯ ಮಟ್ಟಕ್ಕೆ ವಿಕೇಂದ್ರಿಕರಿಸಲಾಗಿದೆ.
9
+ ಮೊದಲ ಹಂತದಲ್ಲಿ ಜಿಲ್ಲಾಮಟ್ಟದ ಜನತಾದರ್ಶನ ನಡೆದರೆ ನಂತರ ಜಿಲ್ಲಾಧಿಕಾರಿಗಳು ಪ್ರತಿದಿನ 15 ದಿನಕ್ಕೆ ತಾಲೂಕು ಮಟ್ಟದಲ್ಲಿ ಜನತಾದರ್ಶನ ನಡೆಸಲು ಸ���ಚಿಸಲಾಗಿದೆ.
eesanje/url_46_342_2.txt ADDED
@@ -0,0 +1,6 @@
 
 
 
 
 
 
 
1
+ ನೋವನ್ನು ವ್ಯಕ್ತಪಡಿಸಲು ನಮ್ಮ ಜನ ಬಂದ್ ಮಾಡಿದ್ದಾರೆ : ಎಚ್‍ಡಿಡಿ
2
+ ಬೆಂಗಳೂರು, ಸೆ.26- ನಮ್ಮ ನೋವು ಅರ್ಥ ಮಾಡಿಕೊಂಡು ನಮ್ಮ ಪಕ್ಕದ ರಾಜ್ಯದ ಅಣ್ಣ ತಮ್ಮಂದಿರು ಸ್ವಲ್ಪವಾದರೂ ಬದಲಾವಣೆ ಮಾಡಿಕೊಳ್ಳಿ ಎಂಬ ಸಂದೇಶ ಕೊಡಲು ಬೆಂಗಳೂರು ಬಂದ್ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನೋವನ್ನು ತಿಳಿಸಲು ನಮ್ಮ ಜನರು ಬಂದ್ ಮಾಡಿದ್ದಾರೆ. ಇದನ್ನು ಪಕ್ಕದ ರಾಜ್ಯದವರೂ ಅರ್ಥ ಮಾಡಿಕೊಳ್ಳಬೇಕು ಎಂದರು.
3
+ ಶಾಂತಿಯುತವಾಗಿ ಬಂದ್ ಮಾಡಬೇಕು. ಯಾವುದೇ ಸಂಘರ್ಷ ಮಾಡಬಾರದು ಹಾಗೂ ಯಾವುದೇ ಆಸ್ತಿ- ಪಾಸ್ತಿಗೆ ಹಾನಿ ಮಾಡಬಾರದು ಎಂದು ಅವರು ಹೇಳಿದ್ದಾರೆ. ಬಂದ್ ಶಾಂತಿಯುತವಾಗಿ ನಡೆಯಲಿ ಎಂಬ ಉದ್ದೇಶದಿಂದ ಸರ್ಕಾರ ಕೆಲವು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿರುತ್ತದೆ ಎಂದು ಹೋರಾಟಗಾರರನ್ನು ವಶಕ್ಕೆ ಪಡೆದಿದ್ದಾರೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
4
+ ನಮ್ಮ ಮನಸಿನ ನೋವು ಶಾಂತಿಯುತವಾಗಿ ಮಾಡಿ ನಮ್ಮ ಪಕ್ಕದ ರಾಜ್ಯಕ್ಕೆ ಸಂದೇಶ ಕಳುಹಿಸಬೇಕೇ ಹೊರತು ಮುತ್ತಿಗೆ ಹಾಕುವುದು ಮೊದಲಾದ ಅಹಿತಕರ ಘಟನೆಗಳನ್ನು ಮಾಡಬಾರದು. ತಮಿಳುನಾಡು ರೈತರು ಸಹ ನಮ್ಮ ನೋವು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.
5
+ ಜಮ್ಮುವಿನಲ್ಲಿ ಶಂಕಿತ ಉಗ್ರರ ಮನೆ ಮೇಲೆ ದಾಳಿ
6
+ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲರೂ ಬೆಂಬಲ ಕೊಟ್ಟಿದ್ದಾರೆ. ಪ್ರತಿಭಟನೆ ಮಾಡುತ್ತಿರುವ ನಮ್ಮ ರಾಜ್ಯದ ಜನರ ನೋವು ನಮ್ಮ ಪಕ್ಕದ ರಾಜ್ಯದ ಅಣ್ಣ ತಮ್ಮಂದಿರಿಗೆ ಅರ್ಥ ಆಗಬೇಕು. ನಮ್ಮ ಪಕ್ಕದ ರಾಜ್ಯದ ರಾಜಕೀಯ ಮುಖಂಡರು ಯಾವ ನಿಲುವು ತೆಗೆದುಕೊಂಡಿದ್ದಾರೆ ಎಂಬುದನ್ನು ಗಮನಿಸಬೇಕು.
eesanje/url_46_342_3.txt ADDED
@@ -0,0 +1,5 @@
 
 
 
 
 
 
1
+ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಸರ್ಕಾರ ಪ್ರತಿಭಟನೆ ಹತ್ತಿಕ್ಕುತ್ತಿದೆ : ಕುರುಬೂರು ಶಾಂತಕುಮಾರ್
2
+ ಬೆಂಗಳೂರು, ಸೆ.26- ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಪ್ರತಿಭಟನೆಯನ್ನು ಹತ್ತಿಕ್ಕುವ ಯತ್ನ ನಡೆಸಿದೆ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆರೋಪಿಸಿದ್ದಾರೆ. ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ. ಕಾನೂನು ಹೋರಾಟದಲ್ಲಿ ಹಿನ್ನಡೆ ಅನುಭವಿಸಿದೆ. ಈ ವೈಫಲ್ಯಗಳನ್ನು ಮರೆಮಾಚಿಕೊಳ್ಳಲು ಪ್ರತಿಭಟನೆಯನ್ನು ತಡೆಯಲು ನಾನಾ ರೀತಿಯ ಕಾರ್ಯತಂತ್ರಗಳನ್ನು ಅನುಸರಿಸುತ್ತಿದೆ ಎಂದು ಕಿಡಿಕಾರಿದರು.
3
+ ಬಂದ್ ವಿಷಯದಲ್ಲಿ ಯಾವುದೇ ಗೊಂದಲಗಳಿಲ್ಲ. ಸೆ.23 ಕ್ಕೆ ನಾವು ಬಂದ್ ಘೋಷಿಸಿದ್ದೆವು. ಅದಕ್ಕೆ ನಮ್ಮ ವಿರೋಧ ಇಲ್ಲ ಎಂದು ವಾಟಾಳ್ ನಾಗರಾಜ್ ಮತ್ತು ಅವರ ಸಂಗಡಿಗರು ಸ್ಪಷ್ಟಪಡಿಸಿದ್ದರು. ಬೆಂಗಳೂರು ಬಂದ್‍ಗೆ ಬೆಂಬಲ ನೀಡುವ ಕುರಿತಂತೆ ಸೆ. 25 ರಂದು ನಡೆಯುವ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದೆವು. ನಾವೂ ಕೂಡ ಆ ಸಭೆಯಲ್ಲಿ ಭಾಗವಹಿಸಿ ಒಗ್ಗಟ್ಟಿನ ಹೋರಾಟಕ್ಕೆ ಸಹಕರಿಸಿ ಎಂದು ಮನವಿ ಮಾಡಿದ್ದೆವು. ಅದರ ಹೊರತಾಗಿಯೂ ಬಂದ್‍ಗೆ ಬೆಂಬಲ ಇಲ್ಲ ಎಂದು ನಿನ್ನೆ ಘೋಷಣೆ ಮಾಡಿದ್ದಾರೆ. ಇದು ನಾಡಿನ ಹಿತಾಸಕ್ತಿಯ ದೃಷ್ಟಿಯಿಂದ ಸರಿಯಲ್ಲ ಎಂದರು.
4
+ ಜಮ್ಮುವಿನಲ್ಲಿ ಶಂಕಿತ ಉಗ್ರರ ಮನೆ ಮೇಲೆ ದಾಳಿ
5
+ ವಾಟಾಳ್ ನಾಗರಾಜ್ ಮತ್ತು ಅವರ ಸಂಗಡಿಗರು ಸೆ. 29 ಕ್ಕೆ ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಬೆಂಬಲ ನೀಡಬೇಕೆ, ಬೇಡವೇ ಎಂದು ನಾವೂ ಕೂಡ ನಮ್ಮ ಸಂಘಟನೆಗಳ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು. ಇಂದು ಬೆಳಿಗ್ಗೆಯಿಂದಲೂ ಪೊಲೀಸ್ ಬಲವನ್ನು ಬಳಸಿ ಹೋರಾಟಗಾರರನ್ನು ಅಲ್ಲಲ್ಲಿ ಬಂಧಿಸಲಾಗುತ್ತಿದೆ. ಪ್ರತಿಭಟನೆಗೂ ಅವಕಾಶ ನೀಡುತ್ತಿಲ್ಲ. ಇದು ಸರಿಯಲ್ಲ ಎಂದು ಕಿಡಿಕಾರಿದರು.
eesanje/url_46_342_4.txt ADDED
@@ -0,0 +1,8 @@
 
 
 
 
 
 
 
 
 
1
+ ಕಾವೇರಿ ವಿಚಾರದಲ್ಲಿ ರಾಜ್ಯಸರ್ಕಾರ ವಿಫಲವಾಗಿದೆ : ಮುಖ್ಯಮಂತ್ರಿ ಚಂದ್ರು
2
+ ಬೆಂಗಳೂರು, ಸೆ.26- ರಾಜ್ಯಸರ್ಕಾರ ಸಮಗ್ರತೆ ಚರ್ಚೆ ನಡೆಸುವ ಮೂಲಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವನ್ನು ತಿರಸ್ಕರಿಸುವಂತಹ ನಿಲುವನ್ನು ವ್ಯಕ್ತಪಡಿಸಬೇಕು ಎಂದು ಅಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದ್ದಾರೆ.
3
+ ಬೆಂಗಳೂರು ಬಂದ್ ವೇಳೆ ಮಾತನಾಡಿರುವ ಅವರು, ಕಾವೇರಿ ನದಿ ವಿವಾದದಲ್ಲಿ ತಮಿಳುನಾಡು ತನ್ನ ಪಾಲಿನ ಹಕ್ಕನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿದೆ. ನಮ್ಮ ರಾಜ್ಯಸರ್ಕಾರ ವೈಫಲ್ಯ ಅನುಭವಿಸಿದೆ. ಕೇಂದ್ರ ಸರ್ಕಾರ ನ್ಯಾಯಾಲಯದ ಹೊರಗೆ ವಿವಾದವನ್ನು ಇತ್ಯರ್ಥಗೊಳಿಸಲು ಮಧ್ಯಪ್ರವೇಶ ಮಾಡಬೇಕಿತ್ತು. ಆದರೆ ಪ್ರಧಾನಿ ಹಾಗೂ ಕೇಂದ್ರ ಸರ್ಕಾರ ಕಂಡೂ ಕಾಣದಂತೆ ಜಾರಿಗೊಳ್ಳುತ್ತಿದೆ ಎಂದು ಆರೋಪಿಸಿದರು.
4
+ ಕಾವೇರಿ ನದಿ ನೀರನ್ನು ಒಂದು ತಿಂಗಳಿನಿಂದಲೂ ತಮಿಳುನಾಡಿಗೆ ಹರಿಸಲಾಗುತ್ತಿದೆ. ಮಂಡ್ಯ ಭಾಗದ ಜನ ಇದನ್ನು ವಿರೋಧಿಸಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ಬೆಂಗಳೂರಿಗೆ ಕುಡಿಯುವ ನೀರು ಇಲ್ಲವಾಗುತ್ತದೆ. ಇಂತಹ ಸಂಕಷ್ಟದಲ್ಲಿ ಪ್ರತಿಭಟನೆ ಬಿಟ್ಟು ಬೇರೆ ಮಾರ್ಗ ಏನಿದೆ ಎಂದು ಪ್ರಶ್ನಿಸಿದರು.
5
+ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಮಧ್ಯಪ್ರದೇಶ ಅನಾರೋಗ್ಯ ರಾಜ್ಯವಾಗಿತ್ತು : ಚೌಹಾಣ್ ವಾಗ್ದಾಳಿ
6
+ ಕಾಂಗ್ರೆಸ್ ಸರ್ಕಾರ ಗಂಭೀರ ಸಮಸ್ಯೆಯನ್ನು ಕಡೆಗಣಿಸಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಯ ಜಂಜಾಟದಲ್ಲಿ ಮುಳುಗಿದೆ. ಬೆಂಗಳೂರು ಬಂದ್ ಪಕ್ಷಾತೀತವಾದ ಹೋರಾಟ. ಇದರಿಂದ ಬ್ರಾಂಡ್ ಬೆಂಗಳೂರಿಗೆ ಧಕ್ಕೆಯಾಗಲಿದೆ ಎಂಬ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಸರಿಯಲ್ಲ. ಸರ್ಕಾರ ಜನರ ಕಷ್ಟಕ್ಕೆ ಸ್ಪಂಧಿಸಬೇಕು. ಬ್ರಾಂಡ್‍ಗೋಸ್ಕರ ಸಮಸ್ಯೆಗಳನ್ನು ಕಡೆಗಣಿಸಬಾರದು ಎಂದು ಎಚ್ಚರಿಸಿದರು.
7
+ ಕಾಂಗ್ರೆಸ್ ಅಧಿಕಾರಕ್ಕಾಗಿ ಮೇಕೆದಾಟು ಪಾದಯಾತ್ರೆ ಮಾಡಿತ್ತು. ಅಧಿಕಾರಕ್ಕೆ ಬಂದು ಮೂರು ತಿಂಗಳಾದರೂ ಅಣೆಕಟ್ಟು ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಲಾಗಿಲ್ಲ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ವಿಶೇಷ ಅಧಿವೇಶನ ಕರೆದು ನೀರು ಬಿಡದೇ ಇರುವ ನಿರ್ಣಯ ಕೈಗೊಳ್ಳಬೇಕು. ನೀರಿಲ್ಲ ಎಂದರೂ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡುತ್ತಿರುವ ಕಾವೇರಿ ನೀರು ನಿಯಂತ್ರಣಾ ಸಮಿತಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಗಳನ್ನು ತಿರಸ್ಕಾರ ಮಾಡಬೇಕು.
8
+ ನ್ಯಾಯಾಲಯದ ಮುಂದೆ ವಾದ ಮಂಡಿಸಲು ಸಮರ್ಥ ತಂಡವನ್ನು ರಚಿಸಬೇಕು ಎಂದು ಒತ್ತಾಯಿಸಿದರು. ಸೆ.29 ರಂದು ಕರೆ ನೀಡಿರುವ ಕರ್ನಾಟಕ ಬಂದ್‍ಗೂ ನಮಗೂ ಸಂಬಂಧವಿಲ್ಲ. ನಾವು ಮೊದಲಿಗೆ ಬೆಂಗಳೂರು ಬಂದ್‍ಗೆ ಕರೆ ನೀಡಿದ್ದೆವು. ಅದನ್ನು ಇಂದು ಆಚರಿಸಿದ್ದೇವೆ ಎಂದರು.
eesanje/url_46_342_5.txt ADDED
@@ -0,0 +1,6 @@
 
 
 
 
 
 
 
1
+ ಮಾಜಿ ಸಿಎಂ ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ನಿಧನ
2
+ ಬೆಂಗಳೂರು,ಸೆ.26- ವಯೋ ಸಹಜದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ (93) ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತ ಶಾರದಾ ಪಾಟೀಲ ಅವರು, ಮಾಜಿ ಶಾಸಕ ಕೈಲಾಸನಾಥ್ ಪಾಟೀಲ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಪಾರ್ಥೀವ ಶರೀರವನ್ನು ಚಿಂಚೋಳಿಗೆ ತೆಗೆದುಕೊಂಡು ಹೋಗಲು ಕುಟಂಬಸ್ಥರು ತೀರ್ಮಾನಿಸಿದ್ದಾರೆ.
3
+ ಚಿಂಚೋಳಿಯಲ್ಲಿರುವ ವೀರೇಂದ್ರ ಪಾಟೀಲರ ಸಮಾಧಿ ಪಕ್ಕದಲ್ಲೇ ಶಾರದಾ ಪಾಟೀಲರ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ ನಡೆಯಲಿದೆ ಎಂದು ಕೈಲಾಸನಾಥ ಪಾಟೀಲ ತಿಳಿಸಿದ್ದಾರೆ.
4
+ ಬೆಂಗಳೂರು ಬಂದ್‍ಗೆ ಜೆಡಿಎಸ್ ಸಂಪೂರ್ಣ ಬೆಂಬಲ
5
+ ಸಂತಾಪ :ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ. ಬಸವರಾಜ್ ಬೊಮ್ಮಯಿ, ಸೇರಿದಂತೆ ಮತ್ತಿತರ ಅನೇಕ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
6
+ ಕರ್ನಾಟಕ ಪ್ರಬಲ ಲಿಂಗಾಯಿತ ಸಮುದಾಯದ ನಾಯಕರಾಗಿದ್ದ ವೀರೇಂದ್ರ ಪಾಟೀಲ್ ಅವರು 1989 ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಐತಿಹಾಸಿಕ ಗೆಲುವು ತಂದುಕೊಟ್ಟವರಲ್ಲಿ ಪ್ರಮುಖರು. ಹಠಾತ್ತನೆ ಮುಖ್ಯಮಂತ್ರಿ ಸ್ಥಾನವನ್ನು ಕಳೆದುಕೊಂಡಿದ್ದ ಅವರು 1997 ಮಾರ್ಚ್ 14 ರಂದು ಆನಾರೋಗ್ಯದ ಕಾರಣ ನಿಧನರಾಗಿದ್ದರು.
eesanje/url_46_342_6.txt ADDED
@@ -0,0 +1,5 @@
 
 
 
 
 
 
1
+ ಬೆಂಗಳೂರು ಬಂದ್‍ಗೆ ಜೆಡಿಎಸ್ ಸಂಪೂರ್ಣ ಬೆಂಬಲ
2
+ ಬೆಂಗಳೂರು, ಸೆ. 26- ಕಾವೇರಿ ನೀರು ಉಳಿವಿಗಾಗಿ ನಡೆಯುತ್ತಿರುವ ಬೆಂಗಳೂರು ಬಂದ್‍ಗೆ ಜೆಡಿಎಸ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಬಂದ್‍ನಲ್ಲಿ ಜೆಡಿಎಸ್ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
3
+ ಕಾವೇರಿ ನೀರಿಗಾಗಿ ನಡೆಯುತ್ತಿರುವ ಬಂದ್‍ಗೆ ನನ್ನ ಪೂರ್ಣ ಬೆಂಬಲವಿದೆ. ಹೋರಾಟಗಾರರು ಶಾಂತಿಯುತವಾಗಿ ವರ್ತಿಸಬೇಕು. ಬಂದ್ ಯಶಸ್ವಿಯಾಗಲು ಜೆಡಿಎಸ್ ಕಾರ್ಯಕರ್ತರು ಕೂಡ ಸಹಕಾರ ನೀಡಲಿದ್ದಾರೆ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ತಿಳಿಸಿದ್ದಾರೆ.
4
+ ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಪೊಲೀಸರಿಂದ ಬಿಗಿ ಬಂದೋಬಸ್ತ್
5
+ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯಸರ್ಕಾರದ ವಿರುದ್ಧ ವಿವಿಧ ಸಂಘಟನೆಗಳು ನೀಡಿರುವ ಬಂದ್ ಕರೆಗೆ ಬೆಂಬಲ ವ್ಯಕ್ತಪಡಿಸಿ ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.ಜೆಡಿಎಸ್ ಕೇಂದ್ರ ಕಚೇರಿ ಜೆ.ಪಿ.ಭವನದಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡು ರಾಜ್ಯಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
eesanje/url_46_342_7.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಸೆ.29 ರಂದು ಕರ್ನಾಟಕ ಬಂದ್ ಫಿಕ್ಸ್
2
+ ಬೆಂಗಳೂರು,ಸೆ.25- ಕನ್ನಡಪರ ಸಂಘಟನೆಗಳ ನಡುವೆಯೇ ಗೊಂದಲಕ್ಕೆ ಕಾರಣವಾಗಿದ್ದ ಕರ್ನಾಟಕ ಬಂದ್ ಇದೇ 29ರಂದು ನಡೆಯುವುದು ಖಚಿತವಾಗಿದ್ದು, ಒಂದೇ ವಾರದಲ್ಲಿ ಎರಡೆರಡು ಬಂದ್ ಎದುರಿಸುವ ಪರಿಸ್ಥಿತಿ ಎದುರಾಗಿದೆ. ಮಂಗಳವಾರ ಕರ್ನಾಟಕ ಕಬ್ಬು ಬೆಳೆಗಾರರ ಸಂಘ ಹಾಗೂ ಜಲಶಕ್ತಿ ಸಂರಕ್ಷಣಾ ಸಮಿತಿ ಬೆಂಗಳೂರು ಬಂದ್‍ಗೆ ಕರೆ ಕೊಟ್ಟಿರುವ ಬೆನ್ನಲ್ಲೇ ಕನ್ನಡಪರ ಸಂಘಟನೆಗಳು ಇದೇ 29ರಂದು ಕರ್ನಾಟಕ ಬಂದ್‍ಗೂ ಕರೆ ಕೊಟ್ಟಿವೆ.
3
+ ಕನ್ನಡ ಚಳುವಳಿ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ಹಾಗೂ ಕನ್ನಡ ಒಕ್ಕೂಟ ಮುಖಂಡರ ನೇತೃತ್ವದಲ್ಲಿ ಸಭೆ ನಡೆಸಿ 29ರಂದು ಕರೆ ನೀಡಿರುವ ಕರ್ನಾಟಕ ಬಂದ್ ಹಿಂತೆಗೆದುಕೊಳ್ಳಬಾರದು ಎಂಬ ಒಮ್ಮತದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.
4
+ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ನಾಳೆ ನಡೆಯಲಿರುವ ಬೆಂಗಳೂರು ಬಂದ್‍ಗೆ ನಮ್ಮ ಬೆಂಬಲವಿಲ್ಲ. ಸೆ.29ಕ್ಕೆ ಅಖಂಡ ಕರ್ನಾಟಕ ಬಂದ್ ಮಾಡುತ್ತೇವೆ. ರಾಜಭವನವನ್ನು ಮುತ್ತಿಗೆ ಹಾಕುತ್ತೇವೆ ಎಂದು ಘೋಷಣೆ ಮಾಡಿದರು. ಶುಕ್ರವಾರ ನಡೆಯುವ ಅಖಂಡ ಕರ್ನಾಟಕ ಬಂದ್ ಸೇರಿದಂತೆ ರಾಜ್ಯಾದ್ಯಂತ ಭಾರೀ ಚಳವಳಿ ನಡೆಸುವ ಬಗ್ಗೆ ಕನ್ನಡ ಒಕ್ಕೂಟದ ಆಶ್ರಯದಲ್ಲಿ ನಡೆದ ಕನ್ನಡಪರ ಸಂಘಟನೆಗಳ ಮಹತ್ತರವಾದ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಿದರು.
5
+ ರಾಹುಲ್ ಗಾಂಧಿಗೆ ಹೈದರಾಬಾದ್‍ನಲ್ಲಿ ಸ್ಪರ್ಧಿಸುವಂತೆ ಓವೈಸಿ ಚಾಲೆಂಜ್
6
+ ಬಂದ್ ಎಂದರೆ ಕನ್ನಡ ಒಕ್ಕೂಟ, ಎಲ್ಲಾ ಕನ್ನಡ ಪರ ಸಂಘಟನೆಗಳು ಸೆ.29ಕ್ಕೆ ಬಂದ್ ನಡೆಸಲು ತೀರ್ಮಾನಿಸಿರುವ ಸಂದರ್ಭದಲ್ಲಿ ಇದನ್ನು ತಿಳಿದು ಆಮ್ ಆದ್ವಿ ಪಕ್ಷ ಮತ್ತು ರೈತ ಸಂಘಟನೆಯೊಂದು ನಾಳೆ ಬೆಂಗಳೂರು ಬಂದ್ ಕರೆಕೊಟ್ಟು ರಾಜಕೀಯ ಮಾಡುತ್ತಿವೆ. ನಾವೆಲ್ಲಾ ಸಂಘಟನೆಗಳು ನಾಳೆ ಬಂದ್ ಬೇಡ ಎಂದು ಕೈ ಮುಗಿದು ಕೇಳಿಕೊಂಡರು ಅವರು ಒಪ್ಪಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
7
+ ಕೇವಲ ಬೆಂಗಳೂರು ಮಾತ್ರ ಕರ್ನಾಟಕವಲ್ಲ ಅಖಂಡ ಕರ್ನಾಟಕ ಸೇರಿ ಕರ್ನಾಟಕವಾಗಿದೆ. ಆದ್ದರಿಂದ ನಮ್ಮ ಕೂಗು, ದೇಶದ ಪ್ರಧಾನಿಗಳಿಗೆ ಮುಟ್ಟಬೇಕು ದೆಹಲಿಯಲ್ಲಿ ನಮ್ಮ ಹೋರಾಟದ ಕಿಚ್ಚು ಹೆಚ್ಚಾಗಬೇಕು ಎಂದರು. ರಾಜ್ಯದ ಸುಮಾರು 12 -16 ಸಂಘಟನೆಗಳು ನಮಗೆ ಬೆಂಬಲ ನೀಡವೆ. ಇದೇ 29ರಂದು ಕರೆ ಕೊಟ್ಟಿರುವ ಅಖಂಡ ಕರ್ನಾಟಕ ಬಂಧಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕೂಡ ಬೆಂಬಲ ವ್ಯಕ್ತಪಡಿಸಿದ್ದು, ಅಂದು ಮಲ್ಟಿಪ್ಲೆಕ್ಸ್ ಮತ್ತು ಚಿತ್ರಮಂದಿರಗಳಲ್ಲಿ ಯಾವುದೇ ಚಲನಚಿತ್ರಗಳು ಪ್ರದರ್ಶನವಾಗುವುದಿಲ್ಲ ಹಾಗೆಯೇ ರಾಷ್ಟ್ರೀಯ ಹೆದ್ದಾರಿಗಳು ಕೂಡ ಬಂದ್ ಆಗಲಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲೂ ಬಂದ್ ಮಾಡಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.
8
+ ಡಾಕ್ಟರ್ ರಾಜಕುಮಾರ್ ಅಭಿಮಾನಿಗಳ ಸಂಘ ಅಧ್ಯಕ್ಷ ಸಾರಾ ಗೋವಿಂದ್ ಮಾತನಾಡಿ, ಕುಡಿಯು ನೀರಿಗೆ ಮೇಕೆದಾಟು ಅಣೆಕಟ್ಟು ಕಟ್ಟಲು ತೊಂದರೆ ಕೊಡ���ತ್ತಿರುವ ತಮಿಳು ನಾಡಿಗೆ ಕಾವೇರಿ ನೀರಿನ ಬಗ್ಗೆ ಮಾತನಾಡುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
9
+ ಇವತ್ತು ಅಧಿಕಾರದಲ್ಲಿ ಇಲ್ಲದೇ ಇರುವವರು ಹೋರಾಟಕ್ಕೆ ಬೆಂಬಲ ಕೊಡುತ್ತೇವೆಂದು ಹೇಳುತ್ತಿದ್ದಾರೆ. ಇವರು ಅಧಿಕಾರದಲ್ಲಿದ್ದಾಗ ನೀರನ್ನು ತಮಿಳುನಾಡಿಗೆ ನೀರು ಹರಿಸಿ ದ್ರೋಹವೆಸಗಿದ್ದಾರೆ ಅವರಿಗೆ ಮಾತನಾಡುವ ಹಕ್ಕಿಲ್ಲ. ಹೋರಾಟಗಳನ್ನು ಮಾಡಿಕೊಂಡು ಬಂದಿರುವ ಕನ್ನಡಪರ ಸಂಘಟನೆಗಳಿಗೆ ಮಾತ್ರ ನೈತಿಕ ಹಕ್ಕಿದೆ ಎಂದು ಪರೋಕ್ಷವಾಗಿ ಬಿಜೆಪಿ ಪಕ್ಷವನ್ನು ದೂರಿದರು. ಅಷ್ಟೇ ಅಲ್ಲದೆ ನಾಳೆ ನಡೆಯುವ ಬಂದ್ ಗೆ ಬೆಂಬಲವಾಗಿ ನಿಂತಿರುವ ಆಮ್ ಆದ್ಮಿ ಪಕ್ಷದ ನಿರ್ಣಯವನ್ನು ಖಂಡಿಸಿದರು.
10
+ ಕಾವೇರಿ ವಿವಾದದಲ್ಲಿ ಬಿಜೆಪಿ-ಜೆಡಿಎಸ್ ರಾಜಕೀಯ ಮಾಡುತ್ತಿವೆ : ಸಿಎಂ
11
+ ಸಭೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಶಿವರಾಮೇಗೌಡ, ಪ್ರವೀಣ್ ಕುಮಾರ್ ಶೆಟ್ಟಿ, ಕನ್ನಡ ಸೇನೆಯ ರಾಜ್ಯಾಧ್ಯಕ್ಷರಾದ ಕೆ.ಆರ್. ಕುಮಾರ್, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಅಧ್ಯಕ್ಷ ಎನ್.ಮೂರ್ತಿ, ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ಮಂಜುನಾಥ್ ದೇವ್, ಹಾಗೂ ಹೆಚ್.ವಿ. ಗಿರೀಶ್ ಗೌಡ ಹಾಗೂ ಅನೇಕ ಕನ್ನಡಪರ ಸಂಘಟನೆಗಳ ಮುಖಂಡರು, ಹೋರಾಟಗಾರರು ಸೇರಿದಂತೆ ಮತ್ತಿತರರು ಇದ್ದರು.
eesanje/url_46_342_8.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ನಗರ ಪ್ರದೇಶದಲ್ಲಿ ನೀರಿನ ಬಳಕೆ ಮಿತಿಗೊಳಿಸಲು ತಜ್ಞರ ಸಲಹೆ
2
+ ಬೆಂಗಳೂರು, ಸೆ.25- ಈ ವರ್ಷ ಮುಂಗಾರು ಮಳೆ ಕೈಕೊಟ್ಟಿರುವುದರಿಂದ ರಾಜ್ಯದ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟದ ಮೇಲೆ ಪರಿಣಾಮ ಬೀರುತ್ತಿದ್ದು, ಈಗಿನಿಂದಲೇ ನಗರ ಪ್ರದೇಶಗಳಿಗೆ ಮತ್ತು ನೀರಾವರಿಗೆ ಪಡಿತರ ರೀತಿಯಲ್ಲಿ ನೀರು ಸರಬರಾಜು ಅಂದರೆ ದೈನಂದಿನ ನೀರಿನ ಬಳಕೆಯನ್ನು ಸೀಮಿತಗೊಳಿಸುವ ಕ್ರಿಯೆಗೆ ಸರ್ಕಾರ ಚಾಲನೆ ನೀಡಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ.
3
+ ಜಲಸಂಪನ್ಮೂಲ ಇಲಾಖೆ ಮತ್ತು ಅಂತರ್ಜಲ ಮಂಡಳಿಯ ಅಧಿಕಾರಿಗಳ ಪ್ರಕಾರ, ಮೇಲ್ಮೈಯಲ್ಲಿನ ನೀರನ್ನು ಮಾತ್ರ ಅತ್ಯುತ್ತಮವಾಗಿ ಹಿಡಿದಿಡಲಾಗುತ್ತದೆ. ಅಣೆಕಟ್ಟಿನ ಸುತ್ತಲ ಪ್ರದೇಶಗಳಲ್ಲಿ ಅಂತರ್ಜಲ ವನ್ನು ಹಿಡಿದಿಟ್ಟುಕೊಳ್ಳಲು ವ್ಯವಸ್ಥೆ ಮಾಡಿ ಅವುಗಳನ್ನು ನೀರಿನ ಕೊರತೆಯ ಸಮಯದಲ್ಲಿ ಬಳಸಿಕೊಳ್ಳುವಂತೆ ಮಾಡಬೇಕು. ನಗರ ಪ್ರದೇಶಗಳಲ್ಲಿ ಮತ್ತು ನೀರಾವರಿಗೆ ದಿನನಿತ್ಯ ಸಹಜವಾಗಿ ನೀರು ಪೂರೈಕೆ ಮಾಡು ವುದಕ್ಕಿಂತ ಕಡಿಮೆ ಮಿತಿಯಲ್ಲಿ ನೀರು ಸರಬರಾಜು ಮಾಡಲು ವ್ಯವಸ್ಥೆ ಮಾಡಬೇಕು.
4
+ ಸರ್ಕಾರವು ನೀರಾವರಿ, ಕೈಗಾರಿಕೆ ಗಳಿಗೆ ಮತ್ತು ನಗರ ಪ್ರದೇಶಗಳಿಗೆ ತಕ್ಷಣವೇ ಶೇಕಡಾ 20 ರಿಂದ 30 ರಷ್ಟು ನೀರು ಸರಬರಾಜನ್ನು ಕಡಿಮೆ ಮಾಡಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಈಶಾನ್ಯ ಮುಂಗಾರು ವಿಫಲವಾದರೆ ಈ ನೀರನ್ನು ಬೇಸಿಗೆಯಲ್ಲಿ ಸಂಗ್ರಹಿಸಿ ಬಳಸಬೇಕೆಂಬ ಸಲಹೆ ಕೊಟ್ಟಿದ್ದಾರೆ.
5
+ ನಾಳೆ ಬೆಂಗಳೂರು ಬಂದ್ : ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಮಾಹಿತಿ
6
+ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಭಾರತೀಯ ಮಾನದಂಡಗಳ ಬ್ಯೂರೋ ಮಾರ್ಗಸೂಚಿಗಳ ಪ್ರಕಾರ, ನಾಲ್ಕು ಜನರ ಕುಟುಂಬಕ್ಕೆ ಮಾಸಿಕವಾಗಿ 12,000-15,000 ಲೀಟರ್ ನೀರು ಬೇಕಾಗುತ್ತದೆ, ಆದರೆ ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಲ್ಲಿ ಒಂದು ಕುಟುಂಬವು ತಿಂಗಳಿಗೆ 20,000-40,000 ಲೀಟರ್ ನೀರನ್ನು ಬಳಸುತ್ತದೆ. ನಗರ ನೀರು ಬಳಕೆಯ ಕುರಿತು ಯೋಜನೆಯ ಕೊರತೆ ಇದೆ ಎಂದು ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
7
+ ಅಣೆಕಟ್ಟು ಸುತ್ತಲ ಪ್ರದೇಶಗಳಲ್ಲಿ ಕೃಷಿ ಮಾಡಲು ಅಂತರ್ಜಲದತ್ತ ಗಮನಹರಿಸಬೇಕು. ಸಮಸ್ಯೆ ಹೆಚ್ಚು ರಾಜಕೀಯವಾಗುತ್ತಿದೆ ಎಂದು ಅವರು ಹೇಳಿದರು. ಕಾವೇರಿಯಿಂದ ಕರ್ನಾಟಕದ ನೀರಿನ ಪಾಲು ಕೇವಲ ಶೇ.25ರಷ್ಟಿದೆ ಆದರೆ ಇತರ ಮೂಲಗಳಿಂದ ಅದರ ನೀರಿನ ಬಳಕೆ ಹೆಚ್ಚಾಗಿದೆ.
8
+ ಕಳೆದ 32 ವರ್ಷಗಳಲ್ಲಿ, ಕರ್ನಾಟಕವು ತಮಿಳುನಾಡಿನೊಂದಿಗೆ ಆರು ಬಾರಿ ಬರ ಮತ್ತು ನೀರಿನ ಹೋರಾಟವನ್ನು ಎದುರಿಸಿತು. ಸರ್ಕಾರಗಳ ಕಡೆಯಿಂದ ಯೋಜನೆ ಮತ್ತು ಸಿದ್ಧತೆಯ ಕೊರತೆ ಇತ್ತು, ಅದು ಈಗ ಪ್ರತಿಫಲಿಸಿದೆ ಎಂದಿದ್ದಾರೆ.
9
+ ಜಲಾನಯನ ಪ್ರದೇಶದ ಎಲ್ಲಾ ನಾಲ್ಕು ಜಲಾಶಯಗಳಲ್ಲಿ 51 ಟಿಎಂಸಿ ಅಡಿ ನೀರು ಇದೆ. ಬೆಳೆದ ಬೆಳೆಗಳಿಗೆ 70 ಟಿಎಂಸಿ, ಕುಡಿಯಲು 33 ಟಿಎಂಸಿ ನೀರು, ಕೈಗಾರಿಕೆಗಳಿಗೆ 3 ಟಿಎಂಸಿ ಅಡಿ ನೀರು ಬೇಕು. ರೈತರು ಬಿತ್ತನೆ ಕೈಗೊಂಡಿದ್ದರಿಂದ ನೀರಾವ���ಿಗೆ ಹೊಡೆತ ಬೀಳಲಿದೆ. ಎರಡೂ ರಾಜ್ಯಗಳ ರೈತರಿಗೆ ಈಗಲೇ ಮನವರಿಕೆ ಮಾಡಿಕೊಡಬೇಕಿದೆ.
10
+ ಕಾವೇರಿ ಜಲಾನಯನ ಪ್ರದೇಶದಲ್ಲಿ ಶೇ.50ರಷ್ಟು ಮಳೆ ಕೊರತೆಯಾಗಿರುವುದು ಸಮಸ್ಯೆಗೆ ಕಾರಣವಾಗುತ್ತಿದೆ ಎಂದು ಐಐಎಸ್‍ಸಿಯ ತಜ್ಞರು ಹೇಳಿದ್ದಾರೆ. ನೀರಾವರಿಗಾಗಿ ಉತ್ತಮ ನೀರಿನ ನಿರ್ವಹಣೆಯನ್ನು ರೈತರು ಅರ್ಥಮಾಡಿಕೊಳ್ಳಬೇಕು. ಕೃಷಿ ವಿಶ್ವವಿದ್ಯಾಲಯಗಳ ಪಾತ್ರ ಇಲ್ಲಿ ಬಳಸಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.
11
+ ನಿಗದಿತ ಸಮಯದೊಳಗೆ ಜನರ ಸಮಸ್ಯೆಗಳನ್ನು ಪರಿಹರಿಸಿ : ಸಚಿವ ಗುಂಡೂರಾವ್
12
+ ವೈಕ್ತಿಗತವಾಗಿ ದೈನಂದಿನ ನೀರಿನ ಬಳಕೆ3-4 ಲೀಟರ್ ಕುಡಿಯಲು ಬೇಕು8 ಲೀಟರ್ ಅಡುಗೆಗಾಗಿ ಕಾದಿರಿಸಬೇಕು20 ಲೀಟರ್ ಸ್ನಾನ, ಬಟ್ಟೆ, ಪಾತ್ರೆ ತೊಳೆಯಲು ಬೇಕು25-30 ಲೀಟರ್ ಫ್ಲಶ್, ಶೌಚಾಲಯದ ಅವಶ್ಯಕತೆ8-10 ಲೀಟರ್ ಇತರ ಉಪಯುಕ್ತತೆಗಾಗಿ ಬೇಕು
eesanje/url_46_342_9.txt ADDED
@@ -0,0 +1,8 @@
 
 
 
 
 
 
 
 
 
1
+ ಯಶವಂತಪುರ-ಕಾಚೀಗುಡ ವಂದೇ ಭಾರತ್ ರೈಲಿಗೆ ಚಾಲನೆ
2
+ ಬೆಂಗಳೂರು, ಸೆ.25- ಪ್ರಯಾಣಿಕರ ಅನುಕೂಲಕ್ಕಾಗಿ ಕಾಚೀಗುಡ-ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ಪ್ರಾರಂಭಿಸಲಾಗಿದ್ದು, ವಿಡಿಯೋ ಲಿಂಕ್ ಮೂಲಕ ನಿನ್ನೆ ಪ್ರಧಾನಿ ಚಾಲನೆ ನೀಡಿದ ನಂತರ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಯಲಹಂಕ ರೈಲ್ವೆ ನಿಲ್ದಾಣದಲ್ಲಿ ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯಾ, ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೇಶ್ ಮೋಹನ್, ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಕುಸುಮಾ ಹರಿಪ್ರಸಾದ್ ಸೇರಿದಂತೆ ರೈಲ್ವೆ ಅಕಾರಿಗಳು ಪಾಲ್ಗೊಂಡಿದ್ದರು.
3
+ ಇಂದು ಅಕೃತವಾಗಿ ಯಶವಂತಪುರದಿಂದ ಕಾಚೀಗುಡಕ್ಕೆ ರೈಲು 20704 ಹೊರಟಿದೆ. ಬುಧವಾರ ಬಿಟ್ಟು ಉಳಿದ ವಾರದ ಆರು ದಿನಗಳು ಈ ರೈಲು ಸಂಚರಿಸಲಿವೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.
4
+ ರೈಲು ಸಂಖ್ಯೆ 20703 ಕಾಚೀಗುಡ-ಯಶವಂತಪುರ ವಂದೇ ಭಾರತ್ ಎಕ್ಸ್‍ಪ್ರೆಸ್ ಕಾಚಿಗುಡದಿಂದ ಬೆಳಿಗ್ಗೆ 05:30 ಗಂಟೆಗೆ ಹೊರಟು ಅದೇ ದಿನ ಮಧ್ಯಾಹ್ನ 02:00 ಗಂಟೆಗೆ ಯಶವಂತಪುರವನ್ನು ತಲುಪುತ್ತದೆ. ಮಾರ್ಗದಲ್ಲಿ, ಈ ರೈಲು ಮೆಹಬೂಬ್ ನಗರ (06:49/06:50 ಅI) ಕರ್ನೂಲ್ ನಗರ (08:24/08:25 ಅI) ಅನಂತಪುರ (10:44/10:45 ಅI) ಮತ್ತು ಧರ್ಮಾವರಂ (11:14/11: 15 ಅI) ಮಾರ್ಗದಲ್ಲಿ ಸಂಚರಿಸುತ್ತದೆ.
5
+ ಸದ್ಯದ ಚಿತ್ರ ತೋರಿಸಿ ಕಣ್ಣೀರಿಟ್ಟ ದೇವೇಗೌಡರು
6
+ ರೈಲು ಸಂಖ್ಯೆ 20704 ಯಶವಂತಪುರ-ಕಾಚೀಗುಡ ವಂದೇ ಭಾರತ್ ಎಕ್ಸ್‍ಪ್ರೆಸ್ ಯಶವಂತಪುರದಿಂದ ಮಧ್ಯಾಹ್ನ 02:45 ಕ್ಕೆ ಹೊರಟು ಅದೇ ದಿನ ರಾತ್ರಿ 11:15ಕ್ಕೆ ಕಾಚೀಗುಡ ತಲುಪುತ್ತದೆ. ಈ ರೈಲು ಧರ್ಮಾವರಂನಲ್ಲಿ ಸಂಜೆ 04:59/05:00ಕ್ಕೆ, ಅನಂತಪುರದಲ್ಲಿ ಸಂಜೆ 05:29/05:30ಕ್ಕೆ, ಕರ್ನೂಲ್ ಸಿಟಿ 07:50/07:51ಕ್ಕೆ ಮತ್ತು ಮಹಬೂಬ್ ನಗರದಲ್ಲಿ 09:34/09:35 PIಗೆ ನಿಲ್ಲುತ್ತದೆ.
7
+ ಕಾಚೀಗುಡ-ಯಶವಂತಪುರ ದರಸಿಸಿ ವರ್ಗ ರೂ. 1600ಇಸಿ ವರ್ಗ ರೂ. 2915ಇಸಿ ವರ್ಗ ರೂ. 2865
8
+ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲಿನಲ್ಲಿ 2 ಡಿಟಿಸಿ (ಡ್ರೈವಿಂಗ್ ಟ್ರೈಲರ್ ಕೋಚ್‍ಗಳು), 4 ಎಂಸಿ (ಮೋಟಾರ್ ಕೋಚ್‍ಗಳು), ಮತ್ತು 2 ಟಿಸಿ (ಟ್ರೇಲರ್ ಕೋಚ್‍ಗಳು) ಸೇರಿದಂತೆ ಒಟ್ಟು 8 ಕೋಚ್‍ಗಳನ್ನು ಒಳಗೊಂಡಿರುತ್ತದೆ ಎಂದು ಸಾರ್ವಜನಿಕ ಸಂಪರ್ಕಾಕಾರಿ ತ್ರಿನೇತ್ರ ತಿಳಿಸಿದ್ದಾರೆ.
eesanje/url_46_343_1.txt ADDED
@@ -0,0 +1,7 @@
 
 
 
 
 
 
 
 
1
+ ನಿಗದಿತ ಸಮಯದೊಳಗೆ ಜನರ ಸಮಸ್ಯೆಗಳನ್ನು ಪರಿಹರಿಸಿ : ಸಚಿವ ಗುಂಡೂರಾವ್
2
+ ಬೆಂಗಳೂರು, ಸೆ.25- ಜನತಾ ದರ್ಶನಕ್ಕೆ ಬರುವ ಜನರ ಕೆಲಸಗಳನ್ನು ನಿಗದಿತ ಸಮಯದೊಳಗೆ ಪರಿಹರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜನತಾದರ್ಶನಕ್ಕೆ ಚಾಲನೆ ನೀಡಿದ ಅವರು, ಅರ್ಜಿ ಹಿಡಿದುಕೊಂಡು ಬರುವ ಜನಸಾಮಾನ್ಯರಿಗೆ ಸ್ಪಷ್ಟತೆ ಕೊಡಬೇಕು.
3
+ ಕೇವಲ ಅರ್ಜಿಗಳನ್ನು ಸ್ವೀಕರಿಸಿದರೆ ಪ್ರಯೋಜನವಿಲ್ಲ. ಸ್ಥಳದಲ್ಲೇ ಅವರಿಗೆ ಪರಿಹಾರ ಒದಗಿಸುವಂತ ವ್ಯವಸ್ಥೆ ಜಾರಿಗೆ ಬರಬೇಕು ಎಂದರು.ಜನರು ಕೇಳುವ ಕೆಲಸ ಕಾರ್ಯಗಳು ಆಗೋತ್ತದೆಯೋ, ಇಲ್ಲವೋ ಎಂಬ ಸ್ಪಷ್ಟತೆಯನ್ನು ಜನರಿಗೆ ನೀಡಿ. ನೋಡೊಣ, ಮಾಡೊಣ ಎಂದು ಹೇಳಿ ಜನರನ್ನು ಅಲೆದಾಡಿಸುವ ಪರಿಸ್ಥಿತಿಗೆ ತರಬೇಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
4
+ ಯಾವ ಕಾರ್ಯಗಳು ಈಡೇರಿಸಲು ಸಾಧ್ಯ ಅವುಗಳನ್ನು ಸಾಧ್ಯವಾದಷ್ಟು ಶೀಘ್ರದಲ್ಲಿ ಮಾಡಿಕೊಡಿ. ಯಾವ ಕೆಲಸಗಳು ಮಾಡಲು ಸಾಧ್ಯವಿಲ್ಲ ಆ ಬಗ್ಗೆ ಜನರಿಗೆ ನೇರವಾಗಿ ನೈಜ ಪರಿಸ್ಥಿತಿಯನ್ನು ತಿಳಿಸಿ ಎಂದರು.
5
+ ಬಂದ್‍ಗೆ ಬೆಂಬಲಿಸುವುದು ಸಾರಿಗೆ ಒಕ್ಕೂಟಗಳಿಗೆ ಬಿಟ್ಟಿದ್ದು : ಸಚಿವ ರಾಮಲಿಂಗಾರೆಡ್ಡಿ
6
+ ತಾಲೂಕು ಮಟ್ಟದಲ್ಲೂ ಜನತಾ ದರ್ಶನ :ಜಿಲ್ಲಾ ಕೇಂದ್ರದಲ್ಲಿ ಅಷ್ಟೇ ಅಲ್ಲ ತಾಲೂಕು ಮಟ್ಟದಲ್ಲೂ ಜನತಾ ದರ್ಶನಗಳನ್ನು ನಡೆಸುವಂತೆ ಇದೇ ವೇಳೆ ದಿನೇಶ್ ಗುಂಡೂರಾವ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು. ಜಿಲ್ಲಾಡಳಿತ ಜನರ ಬಳಿಗೆ ಹೋಗಬೇಕು. ಗ್ರಾಮೀಣ ಪ್ರದೇಶದ ಹಲವು ಜನರಿಗೆ ಜಿಲ್ಲಾ ಕೇಂದ್ರಗಳಿಗೆ ಬರಲು ಕಷ್ಟವಾಗಿರುತ್ತದೆ. ಹೀಗಾಗಿ ತಾಲೂಕು ಮಟ್ಟದಲ್ಲಿ ಜನತಾ ದರ್ಶನ ನಡೆಸಿದರೆ, ಹಳ್ಳಿಗಾಡಿನ ಜನರಿಗೆ ತಮ್ಮ ಸಮಸ್ಯಗಳನ್ನ ಪರಿಹರಿಸಿಕೊಳ್ಳಲು ಅನುಕೂಲವಾಗಲಿದೆ.
7
+ ಮುಂದಿನ ಜನತಾ ದರ್ಶನಗಳನ್ನು ತಾಲೂಕುಗಳಲ್ಲಿ ಆಯೋಜಿಸುವುದಾಗಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಜಿಲ್ಲಾಯಲ್ಲಿ ಇರುವ 9 ತಾಲೂಕುಗಳಲ್ಲೂ ಹಂತ ಹಂತವಾಗಿ ಜನತಾ ದರ್ಶನಗಳನ್ನು ಆಯೋಜಿಸಲಾಗುವುದು ಎಂದು ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
eesanje/url_46_343_10.txt ADDED
@@ -0,0 +1,7 @@
 
 
 
 
 
 
 
 
1
+ ಅನ್ಯಾಯದ ವಿರುದ್ಧ ನಾವೆಲ್ಲರೂ ಹೋರಾಡಬೇಕಿದೆ : ಕುರುಬೂರು ಶಾಂತಕುಮಾರ್
2
+ ದಾಬಸ್‍ಪೇಟೆ,ಸೆ.25- ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುವುದು ಖಂಡನೀಯ. ಯಾವ ಸರ್ಕಾರಗಳು ರೈತರಪರ ನಿಲ್ಲುವುದಿಲ್ಲ. ನೀರಿನ ವಿಷಯ ಬಂದಾಗ ದೂರವೇ ಉಳಿಯುತ್ತವೆ. ಅನ್ಯಾಯದ ವಿರುದ್ದ ನಾವೆಲ್ಲರೂ ಪ್ರಾಮಾಣಿಕವಾಗಿ ಹೋರಾಟ ಮಾಡಬೇಕಿದೆ ಎಂದು ರಾಜ್ಯ ರೈತ ಸಂಘಗಳ ಒಕ್ಕೂಟದ ರಾಜ್ಯಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.
3
+ ರಾಜ್ಯ ಪಟ್ಟಣದಲ್ಲಿ ರೈತ ಸಂಘಟನೆಗಳ ಓಕ್ಕೂಟ, ರಾಜ್ಯ ಕಬ್ಬು ಬೇಳೇಗಾರರ ಸಂಘ ಕರ್ನಾಟಕದಿಂದ ನೆಲಮಂಗಲ ತಾಲೂಕು ಘಟಕ ಉದ್ಘಾಟಿಸಿ ಮಾತನಾಡಿದ ಅವರು, ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ಖಂಡಿಸಿ ನಾಳೆ ಬೆಂಗಳೂರು ಬಂದ್ ಮಾಡುತ್ತಿದ್ದೇವೆ. ಹಲವಾರು ಕನ್ನಡಪರ ಸಂಘಟನೆಗಳು ಒಗ್ಗೂಡಿ ಟೌನ್‍ಹಾಲಿನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೂ ಶಾಂತಿಯುತ ಬಂದ್ ಮಾಡುತ್ತಿದ್ದೇವೆ ಎಂದರು.
4
+ ಕೆನಡಾ ಬಿಟ್ಟು ಬೇರೆ ದೇಶಗಳತ್ತ ಮುಖಮಾಡಿದ ಭಾರತೀಯ ವಿದ್ಯಾರ್ಥಿಗಳು
5
+ ಕರ್ನಾಟಕ ಕೈಗಾರಿಕಾ ಪ್ರದೇಶದವರೂ ನಿಮ್ಮ ಭೂಮಿಯನ್ನು ಸ್ವಾೀಧಿನ ಮಾಡಿ ಅದಕ್ಕೆ ತಕ್ಕದಾದ ಬೆಲೆಯನ್ನು ನೀಡಬೇಕು ಇಲ್ಲಾವಾದರೆ ಅದರ ಬಗ್ಗೆ ನಮ್ಮ ತಾಲೂಕು ಘಟಕ ಉಗ್ರವಾಗಿ ಹೋರಾಡುತ್ತದೆ, ಸೋಂಪುರ ಹೋಬಳಿಯಲ್ಲಿ ಅಕ್ರಮ ಕ್ಷೇಷರ್ ನಿಂದ, ರಿಯಲ್ ಏಸ್ಟೆಟ್ ನಿಂದ ಮಾಫಿಯಾ ಹೆಚ್ಚಾಗಿದೆ ಎಂದರು.
6
+ ಕಾವೇರಿ ನೀರು ಬಿಡುತ್ತಿರುವುದರಿಂದ ಕಾವೇರಿ ನ್ಯಾಯಾೀಧಿಕರಣ ಹಾಗೂ ಸುಪ್ರೀಂಕೋರ್ಟ್ ತಿರ್ಪೀನಿಂದ 26ನೇ ತಾರಿಖು ಬೆಂಗಳೂರು ಬಂದ್ ಮಾಡುತ್ತಿದ್ದೇವೆ ಇದಕ್ಕೇ ಹಲವಾರು ಕನ್ನಡ ಪರ ಸಂಘಟನೆಗಳು, ಎಲ್ಲರೂ ಬಂದ ಮಾಡಲು ತೀರ್ಮಾನಿಸಿದ್ದು ಅಂದು ನಾವು ಟೋನ್ ಹಾಲಿನಿಂದ ಮೈಸೂರು ಭ್ಯಾಂಕ್ ನವರೆವಿಗೂ ಶಾಂತಿಯುತ ಬಂದ್ ಮಾಡಿ ಯಶಸ್ವಿಗೊಳಿಸುತ್ತೇವೆ ಎಂದರು.
7
+ ಅಧ್ಯಕ್ಷತೆಯನ್ನು ಭಾಬಾ ಸಾಹೇಬ್ ಜನಾರಾಳಕರನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯದೀಶರು, ಮುಖ್ಯ ಅಥೀತಿಗಳಾದ ಟಿ.ಎನ್.ಶ್ರೀನಿವಾಸಯ್ಯ, ಕಾನೂನು ಸಲಹಗಾರರಾದ ಡಾ.ಕಿಶನ್ ರಾವ್ ಉಪಸ್ತೀತರಿದ್ದರು.ನೂತನ ಪದಾದಿಕಾರಿಗಳಾದ ನೆಲಮಂಗಳ ತಾಲೂಕು ಅಧ್ಯಕ್ಷ ಶ್ರೀಪತಿಹಳ್ಳಿ ರಾಜೇಶ್, ಪ್ರಧಾನ ಕಾರ್ಯಧರ್ಶಿ ಹಳೇನಿಜಗಲ್ ಗುರುಮೂರ್ತಿ , ಉಪಾಧ್ಯಕ್ಷರಾದ ಎನ್.ಶಿವಕುಮಾರ, ಎಂ.ಸಿ.ನೀಲಕಂಟಯ್ಯ, ಎಚ್.ಪಿ.ಸುರೇಶ, ದಾಬಸ್‍ಪೇಟೆ ಪಂಚಾಕ್ಷರಿ ಸಂಘಟನಾ ಕಾರ್ಯಧರ್ಶಿ ಶಿವಶಂಕರಯ್ಯ, ದಾಬಸ್ ಪೇಟೆ ಜಗದೀಶ್, ಕಾಂತರಾಜು, ಗೌರಾಪುರ ಲೋಕೇಶ್ ಇದ್ದರು.
eesanje/url_46_343_11.txt ADDED
@@ -0,0 +1,8 @@
 
 
 
 
 
 
 
 
 
1
+ ಕಾವೇರಿಗಾಗಿ ಕರೆನೀಡಿರುವ ಬಂದ್‍ ವಿರೋಧಿಸುವಂತೆ ಸಚಿವರಿಗೆ ಸಿಎಂ ಸಂದೇಶ
2
+ ಬೆಂಗಳೂರು,ಸೆ.24- ಕಾವೇರಿ ನೀರಿಗಾಗಿ ವಿವಿಧ ಸಂಘಟನೆಗಳು ಕರೆ ನೀಡಿರುವ ಬಂದ್‍ಗೆ ವಿರೋಧ ವ್ಯಕ್ತಪಡಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಸಂದೇಶ ರವಾನಿಸಿದ್ದಾರೆ. ಕಾವೇರಿ ನಾಡಿನ ಅಸ್ಮಿತೆಯಾಗಿದ್ದು, ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿರುವುದು ಕನ್ನಡಿಯಷ್ಟೇ ಸತ್ಯವಾಗಿದೆ.
3
+ ಒಂದೆಡೆ ನ್ಯಾಯಾಲಯದ ಆದೇಶ ಪಾಲನೆ ಮಾಡಬೇಕಾದ ಅನಿವಾರ್ಯತೆ ಇದೆ. ಮತ್ತೊಂದೆಡೆ ಜಲಾಶಯಗಳಲ್ಲಿ ನೀರು ಬರಿದಾಗುತ್ತಿರುವುದರಿಂದ ನಮ್ಮ ಬೆಳೆ ಹಾಗೂ ಕುಡಿಯುವ ನೀರಿನ ಸಂಕಷ್ಟಗಳು ಹೆಚ್ಚಾಗುತ್ತಿದೆ. ಎಷ್ಟು ಬಾರಿ ಮನವಿ ಮಾಡಿದರೂ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿಲ್ಲ. ಪ್ರಧಾನಮಂತ್ರಿಯವರಿಗೆ ಸಮಯ ಕೇಳಿದರೂ ಸ್ಪಂದಿಸಿಲ್ಲ.
4
+ ಈ ವಿಷಯದಲ್ಲಿ ರಾಜ್ಯಸರ್ಕಾರ ಅಸಹಾಯಕವಾಗಿದೆ. ನ್ಯಾಯಾಲಯಗಳಿಗೆ, ನೀರು ಹಂಚಿಕೆಯ ಸಮಿತಿಗಳಿಗೆ ವಾಸ್ತವತೆಯನ್ನು ಮನವರಿಕೆ ಮಾಡಿಕೊಡಬೇಕು. ಇದಕ್ಕೆ ಪೂರಕವಾಗಿ ಜನಾಂದೋಲನ ನಡೆಯುತ್ತಿದೆ. ಇದನ್ನು ನಾವು ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಬಂದ್ ಸೇರಿದಂತೆ ಯಾವುದೇ ಹೋರಾಟಗಳಿಗೆ ವಿರೋಧ ವ್ಯಕ್ತಪಡಿಸುವುದು ಬೇಡ ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
5
+ : ಸೆ.29 ರಂದು ‘ಕರ್ನಾಟಕ ಬಂದ್’ಗೆ ಕರೆಕೊಟ್ಟ ವಾಟಾಳ್
6
+ ಪ್ರತಿಭಟನಾಕಾರರು ಸಹಜವಾಗಿ ಕೇಂದ್ರದ ಜೊತೆ ರಾಜ್ಯಸರ್ಕಾರವನ್ನು ಟೀಕೆ ಮಾಡುತ್ತಾರೆ. ಪ್ರಜಾಪ್ರಭುತ್ವದಲ್ಲಿ ಟೀಕೆಗಳಿಗೆ ನಾವು ಒಗ್ಗಿಕೊಳ್ಳಬೇಕು, ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವುದು, ಲೇವಡಿ ಮಾಡುವುದು, ಬೆದರಿಸುವುದು ಖಂಡಿಸುವಂತಹ ಪ್ರವೃತ್ತಿಗಳು ಬೇಡ. ಪ್ರಜಾಸತ್ತಾತ್ಮಕವಾಗಿ ಕಾನೂನು ಚೌಕಟ್ಟಿನಲ್ಲಿ ಪ್ರತಿಭಟನೆ ಮಾಡುವವರಿಗೆ ಮುಕ್ತ ಸ್ವಾತಂತ್ರ್ಯವಿದೆ. ನಾವು ಅದನ್ನು ಗೌರವಿಸೋಣ ಎಂಬ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.
7
+ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ಬಂದ್‍ನಿಂದ ಬ್ರಾಂಡ್ ಬೆಂಗಳೂರಿಗೆ ಧಕ್ಕೆಯಾಗುತ್ತದೆ ಎಂಬ ಅಸಮಾಧಾನವನ್ನು ವ್ಯಕ್ತಪಡಿಸಿದರು. ಅದರ ಬೆನ್ನಲ್ಲೇ ಕರವೇಯ ಪ್ರವೀಣ್‍ಶೆಟ್ಟಿ, ಕೆಲವು ಸಂಘಟನೆಗಳು ಬೆಂಗಳೂರು ಬಂದ್‍ಗೆ ಬಹಿರಂಗ ವಿರೋಧ ವ್ಯಕ್ತಪಡಿಸಿದರು. ಅದರ ಬೆನ್ನಲ್ಲೇ ಹಿರಿಯರಾದ ವಾಟಾಳ್ ನಾಗರಾಜ್ ಹಾಗೂ ಮತ್ತಿತರರು ಸೆ.29 ಕ್ಕೆ ಕರ್ನಾಟಕ ಬಂದ್‍ಗೆ ಕರೆ ನೀಡಿದ್ದಾರೆ.
8
+ ಹೀಗಾಗಿ ಬೆಂಗಳೂರು ಬಂದ್ ವಿಷಯದಲ್ಲೂ ಗೊಂದಲಗಳು ಸೃಷ್ಟಿಯಾಗಲಾರಂಭಿಸಿವೆ. ಕಾವೇರಿ ವಿಷಯದಲ್ಲಿ ಪ್ರತಿಭಟನೆ ನಡೆಯುತ್ತಿರುವುದರ ಬಗ್ಗೆ ಸರ್ಕಾರದಲ್ಲಿರುವ ಕೆಲವರು ಅಸಮಾಧಾನಗೊಂಡರೆ, ಪ್ರತಿಭಟನೆಗಳಿಂದ ರಾಜ್ಯಸರ್ಕಾರಕ್ಕೆ ಸಹಾಯವಾಗುತ್ತಿದೆ ಎಂಬ ಪ್ರತಿಪಾದನೆಯನ್ನು ಕೆಲವರು ಮಾಡುತ್ತಿದ್ದಾರೆ. ಈಗ ಬಂದ್‍ಗಳಲ್ಲೂ ಬೆಂಗಳೂರು, ಕರ್ನಾಟಕ ಎಂಬ ಗೊಂದಲಗಳು ಸೃಷ್ಟ���ಯಾಗಿವೆ.
eesanje/url_46_343_12.txt ADDED
@@ -0,0 +1,6 @@
 
 
 
 
 
 
 
1
+ : ಸೆ.29 ರಂದು ‘ಕರ್ನಾಟಕ ಬಂದ್’ಗೆ ಕರೆಕೊಟ್ಟ ವಾಟಾಳ್
2
+ ಬೆಂಗಳೂರು,ಸೆ.24- ಕಾವೇರಿ ಉಳಿವಿಗಾಗಿ ರೈತಪರ ಸಂಘಟನೆಗಳು, ವಿವಿಧ ಸಂಘಟನೆಗಳು ಬೆಂಗಳೂರು ಬಂದ್‍ಗೆ ಸೆಪ್ಟೆಂಬರ್ 26 ರಂದು ರಾಜಧಾನಿ ಬೆಂಗಳೂರಿಗೆ ಕರೆ ಕೊಟ್ಟ ಬೆನ್ನಲ್ಲೇ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಸೆ. 29 ರಂದು ಕರ್ನಾಟಕ ಬಂದ್ ಮಾಡಲು ಮುಂದಾಗಿದ್ದಾರೆ.
3
+ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಅಖಿಲ ಕರ್ನಾಟಕ ಡಾ.ರಾಜ್‍ಕುಮಾರ್ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್, ಕನ್ನಡ ಸೇನೆ ಕುಮಾರ್, ಕರವೇ ಅಧ್ಯಕ್ಷ ಪ್ರವೀಣ್‍ಶೆಟ್ಟಿ, ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ಮಂಜುನಾಥ್ ದೇವ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಹೋರಾಟವನ್ನು ರಾಜ್ಯಾದ್ಯಂತ ಮಾಡಬೇಕಾಗಿದೆ. ಅದಕ್ಕಾಗಿ ನಾವು ಕರ್ನಾಟಕ ಬಂದ್ ಮಾಡಿ ಸರ್ಕಾರದ ಗಮನ ಸೆಳೆಯಬೇಕು. ಹೀಗಾಗಿ ಬಂದ್ ಮಾಡಲು ನಿರ್ಧರಿಸಿದ್ದೇವೆ. ನಾಳೆ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಹೇಳಿದರು.
4
+ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 5 ದಿನ ಮಳೆ
5
+ ಕಾವೇರಿ ವಿವಾದದಲ್ಲಿ ನಮಗೆ ನಿರಂತರ ಅನ್ಯಾಯವಾಗುತ್ತಿದೆ. ಇದಕ್ಕಾಗಿ ನಾವೂ ಕೂಡ ನಿರಂತರವಾಗಿ ಹೋರಾಟ ಮಾಡುತ್ತಲೇ ಬಂದಿದ್ದೇವೆ. ನಿನ್ನೆ ಹಲವು ಸಂಘಟನೆಗಳು ಬೆಂಗಳೂರು ಬಂದ್ ಮಾಡಲು ನಿರ್ಧರಿಸಿದ್ದಾರೆ. ಹೋರಾಟ ಬೆಂಗಳೂರಿಗೆ ಸೀಮಿತವಾಗಬಾರದು. ಈ ಹಿನ್ನೆಲೆಯಲ್ಲಿ ನಾಳೆ ಎಲ್ಲಾ ಸಂಘಟನೆಗಳೊಂದಿಗೆ ಚರ್ಚಿಸಿ ಹೋರಾಟವನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು.
6
+ ಸೆ. 29 ಕ್ಕೆ ರಾಜ್ಯ ಬಂದ್ ಮಾಡುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಮೊದಲಿನಿಂದಲೂ ಕಾವೇರಿ ವಿವಾದದಲ್ಲಿ ಅನ್ಯಾಯವಾಗುತ್ತಿದೆ, ಹೋರಾಟ ಕೂಡ ಅನಿವಾರ್ಯವಾಗಿದೆ. ಕನ್ನಡ ನಾಡು, ನುಡಿ, ಜಲದ ವಿಷಯದಲ್ಲಿ ಕನ್ನಡಪರ ಸಂಘಟನೆಗಳು ಹೋರಾಟ ಮಾಡಲೇಬೇಕಾಗಿದೆ. ಈ ಹಿನ್ನೆಲೆಯಲ್ಲಿ ನಾವು ಬಂದ್‍ಗೆ ಮುಂದಾಗಿದ್ದೇವೆ ಎಂದು ಸಾ.ರಾ.ಗೋವಿಂದ್ ತಿಳಿಸಿದರು.
eesanje/url_46_343_2.txt ADDED
@@ -0,0 +1,6 @@
 
 
 
 
 
 
 
1
+ ಇದು ‘ಸಾರಾಯಿ ಗ್ಯಾರಂಟಿ’ ಸರ್ಕಾರ : ಬಸವರಾಜ ಬೊಮ್ಮಾಯಿ
2
+ ಬೆಂಗಳೂರು,ಸೆ.25- ಬರಗಾಲದಲ್ಲಿ ನೀರು ಕೊಡದಿರುವ ಸರ್ಕಾರ ಸಾರಾಯಿ ಕುಡಿಸಲು ಮುಂದಾಗಿರುವುದು ದೊಡ್ಡ ದುರಂತ. ಇದು ಸಾರಾಯಿ ಗ್ಯಾರೆಂಟಿ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಪಂಚಾಯಿತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯಲು ಮುಂದಾಗಿರುವುದು ಸರ್ಕಾರದ ನೈತಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ.
3
+ ಒಂದೆಡೆ ಗ್ಯಾರೆಂಟಿ ಹೆಸರಲ್ಲಿ ಮಹಿಳೆಯರಿಗೆ 2000 ರೂ. ನೀಡುವುದಾಗಿ ಹೇಳುವ ಸರ್ಕಾರ ಅದೇ ಹಣವನ್ನು ಅವರ ಗಂಡಂದಿರಿಂದ ವಸೂಲಿ ಮಾಡಲು ಮದ್ಯ ಮಾರಾಟದ ಮಾರ್ಗ ಹುಡುಕಿಕೊಂಡಂತಿದೆ. ಹೆಂಡತಿಯ ದುಡ್ಡು ಗಂಡಂದಿರಿಂದ ಪಡೆಯುವ ಮನಿ ರಿಟರ್ನ್ ಪಾಲಿಸಿ ಹಾಕಿಕೊಂಡ ಹಾಗಿದೆ ಎಂದು ಕಿಡಿಕಾರಿದ್ದಾರೆ.
4
+ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಲು ಸರ್ಕಾರಿ ಮದ್ಯದಂಡಗಿ ತೆರೆಯುತ್ತಿರುವುದಾಗಿ ಅಬಕಾರಿ ಸಚಿವರು ಹೇಳಿರುವುದು ಹಾಸ್ಯಾಸ್ಪದವಾಗಿದೆ. ಅಕ್ರಮ ತಡೆಯಲಾಗದಿದ್ದರೆ ನಿಮ್ಮ ಇಲಾಖೆ ಮಾಡುವುದಾದರೂ ಏನು? ಎಂದು ಪ್ರಶ್ನಿಸಿದ್ದಾರೆ.
5
+ ಬಂದ್‍ಗೆ ಬೆಂಬಲಿಸುವುದು ಸಾರಿಗೆ ಒಕ್ಕೂಟಗಳಿಗೆ ಬಿಟ್ಟಿದ್ದು : ಸಚಿವ ರಾಮಲಿಂಗಾರೆಡ್ಡಿ
6
+ ಗ್ಯಾರೆಂಟಿ ಯೋಜನೆಯಲ್ಲಿ ಮನೆ ಯಜಮಾನಿ ಹುಡುಕುವ ಹೆಸರಲ್ಲಿ ಅತ್ತೆ ಸೊಸೆ ನಡುವೆ ಜಗಳ ಹಚ್ಚಿರುವ ಸರ್ಕಾರ ಇನ್ನು ಸಾರಾಯಿ ಕುಡಿಯಲು ಹಣಕ್ಕಾಗಿ ಗಂಡ ಹೆಂಡಿರ ನಡುವೆ ಜಗಳ ಹಚ್ಚಲು ಮುಂದಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
eesanje/url_46_343_3.txt ADDED
@@ -0,0 +1,5 @@
 
 
 
 
 
 
1
+ ಕಾವೇರಿ ವಿವಾದದಲ್ಲಿ ಬಿಜೆಪಿ-ಜೆಡಿಎಸ್ ರಾಜಕೀಯ ಮಾಡುತ್ತಿವೆ : ಸಿಎಂ
2
+ ಬೆಂಗಳೂರು, ಸೆ.25- ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಅವಕಾಶ ಇದೆ. ಆದರೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿವಾದದಲ್ಲಿ ರಾಜಕೀಯ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿ, ಜೆಡಿಎಸ್ ಪಕ್ಷಗಳನ್ನು ಒಳಗೊಂಡತೆ ಕಾವೇರಿ ವಿವಾದದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿತ್ತು. ಅಲ್ಲಿ ಚರ್ಚೆ ನಡೆಸಲಾಗಿದೆ. ಆ ವೇಳೆ ವಿರೋಧಪಕ್ಷಗಳು ತಮ್ಮ ರಾಜೀನಾಮೆ ಕೇಳಿರಲಿಲ್ಲ. ಈಗ ರಾಜಕೀಯ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
3
+ ರಾಜ್ಯಸರ್ಕಾರ ಕಾವೇರಿ ವಿಷಯದಲ್ಲಿ ನಾಡಿನ ಹಿತರಕ್ಷಣೆಗೆ ಅಗತ್ಯ ಕ್ರಮ ಕೈಗೊಂಡಿದೆ. ಆದರೂ ಸುಪ್ರೀಂಕೋರ್ಟ್ ಆದೇಶ ನೀಡಿದೆ ಎಂದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಸಂಸ್ಥೆಗಳು ನೀಡಿದ್ದ ಆದೇಶಗಳನ್ನು ಪ್ರಶ್ನಿಸಿ ರಾಜ್ಯಸರ್ಕಾರ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿತ್ತು. ಅದನ್ನು ತಿರಸ್ಕರಿಸಲಾಗಿದೆ. ಅದೇ ರೀತಿ ತಮಿಳುನಾಡು 24 ಸಾವಿರ ಮತ್ತು 7,200 ಕ್ಯೂಸೆಕ್ಸ್ ನೀರು ಬಿಡುವಂತೆ ಮೇಲ್ಮನವಿ ಸಲ್ಲಿಸಿದ್ದರು. ಅದನ್ನೂ ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
4
+ ಅನ್ಯಾಯದ ವಿರುದ್ಧ ನಾವೆಲ್ಲರೂ ಹೋರಾಡಬೇಕಿದೆ : ಕುರುಬೂರು ಶಾಂತಕುಮಾರ್
5
+ ಸೆ. 26 ರಂದು ಸುಪ್ರೀಂಕೋರ್ಟ್‍ನಲ್ಲಿ ಮತ್ತೊಮ್ಮೆ ಕಾವೇರಿ ವಿಚಾರ ಚರ್ಚೆಗೆ ಬರಲಿದೆ. ಅಲ್ಲಿ ನಾವು ಪ್ರಬಲವಾದ ವಾದ ಮಂಡಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡಲು ಎಲ್ಲರಿಗೂ ಅವಕಾಶ ಇದೆ. ನಾವು ಅದನ್ನು ಹತ್ತಿಕ್ಕಲು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಲಾಯಿತು.
eesanje/url_46_343_4.txt ADDED
@@ -0,0 +1,6 @@
 
 
 
 
 
 
 
1
+ ಬಂದ್‍ಗೆ ಬೆಂಬಲಿಸುವುದು ಸಾರಿಗೆ ಒಕ್ಕೂಟಗಳಿಗೆ ಬಿಟ್ಟಿದ್ದು : ಸಚಿವ ರಾಮಲಿಂಗಾರೆಡ್ಡಿ
2
+ ಬೆಂಗಳೂರು, ಸೆ.25- ನಾಡಿನ ನೆಲ, ಜಲ, ಭಾಷೆ ವಿಷಯ ಬಂದಾಗ ಸಂಘಸಂಸ್ಥೆಗಳು ಬಂದ್ ಮಾಡುವುದು ಸಹಜ ಪ್ರಕ್ರಿಯೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬಂದ್‍ಗೆ ಬೆಂಬಲ ನೀಡುವುದು ಅಥವಾ ನೀಡದೇ ಇರುವ ಬಗ್ಗೆ ಸಾರಿಗೆ ನಿಗಮಗಳ ಒಕ್ಕೂಟಗಳು ನಿರ್ಧಾರ ತೆಗೆದುಕೊಳ್ಳಲಿವೆ. ಈ ವಿಷಯದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದರು.
3
+ ಬಿಜೆಪಿಯವರು ರಾಜಕೀಯ ಕಾರಣಕ್ಕಾಗಿ ಸತ್ಯಾಂಶ ಗೊತ್ತಿದ್ದರೂ ಟೀಕೆ ಮಾಡುತ್ತಿದ್ದಾರೆ. ಮಳೆ ಬರದೇ ಇರುವುದು ಪ್ರಕೃತಿಯ ವಿಕೋಪ. ಅದಕ್ಕೂ, ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಹೇಳಿದರು. ಕಾವೇರಿ ನ್ಯಾಯಾೀಧಿಕರಣದ ತೀರ್ಪಿನ ಪ್ರಕಾರ, ತಮಿಳುನಾಡಿಗೆ 100 ಟಿಎಂಸಿ ಗೂ ಹೆಚ್ಚು ನೀರನ್ನು ಹರಿಸಬಹುದಿತ್ತು. ಆದರೆ ಮಳೆ ಕೊರತೆಯಿಂದಾಗಿ ನೀರು ಬಿಡಲಾಗಿಲ್ಲ.
4
+ ನಮ್ಮ ಜಲಾಶಯಗಳಲ್ಲಿ ನೀರಿಲ್ಲ ಎಂಬುದು ಕಾವೇರಿ ನೀರು ನಿಯಂತ್ರಣಾ ಸಮಿತಿ, ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮಾಹಿತಿ ಇದ್ದರೂ ತಮಿಳುನಾಡಿಗೆ ನೀರು ಬಿಡಿ ಎಂದು ತೀರ್ಪು ನೀಡುತ್ತಿವೆ. ಸುಪ್ರೀಂಕೋರ್ಟ್ ಕೂಡ ಇದೇ ತೀರ್ಪನ್ನು ಅನುಮೋದಿಸುತ್ತದೆ.
5
+ ಕರ್ನಾಟಕ ಬಂದ್‍ಗೆ ಜ್ಯುವೆಲರಿ ಅಸೋಸಿಯೇಶನ್ ಬೆಂಬಲ : ಶರವಣ
6
+ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಸಂಧಾನ ಸಭೆ ನಡೆಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
eesanje/url_46_343_5.txt ADDED
@@ -0,0 +1,5 @@
 
 
 
 
 
 
1
+ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ
2
+ ಮಂಡ್ಯ, ಸೆ.25- ಕೆಆರ್‌ಎಸ್‌ನಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಜಿಲ್ಲೆಯಾದ್ಯಂತ ಪ್ರತಿಭಟನೆಗಳು ಜೋರಾಗಿದ್ದು, ಇಂದು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆಯಲಾಗಿದೆ. ನೂರಾರು ಮಂದಿ ರೈತರು ಏಕಾಏಕಿ ಸಂಜಯ್ ವೃತ್ತದಲ್ಲಿ ಜಮಾಯಿಸಿ ಹೆದ್ದಾರಿಯಲ್ಲೇ ಮಲಗಿ ಪ್ರತಿಭಟನೆ ನಡೆಸಿದ್ದು, ಸರ್ಕಾರ ಕೂಡಲೇ ರೈತರ ನೆರವಿಗೆ ಬರಬೇಕು. ನೀರು ಹರಿಸುವುದನ್ನು ನಿಲ್ಲಿಸಿ ದಿಟ್ಟ ನಿರ್ಧಾರ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
3
+ ಶ್ರೀರಂಗಪಟ್ಟಣದ ಬಳಿ ಕಾವೇರಿ ನದಿಗೆ ಇಳಿದು ಅರೆಬೆತ್ತಲೆ ಪ್ರತಿಭಟನೆ ನಡೆದರೆ, ಮದ್ದೂರು, ಮಳವಳ್ಳಿ ಸೇರಿದಂತೆ ವಿವಿಧೆಡೆ ಪ್ರತಿಭಟನಾ ಮೆರವಣಿಗೆಗಳು ನಡೆದಿವೆ. ಬೆಂಗಳೂರು-ಮೈಸೂರು ರಸ್ತೆ ತಡೆದಿದ್ದರಿಂದ ವಾಹನಗಳು ಸಾಲುಗಟ್ಟಿ ನಿಂತು ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ರೈತರನ್ನು ಸಮಾಧಾನಪಡಿಸಲು ಹರಸಾಹಸಪಟ್ಟರು.
4
+ ಪಿಯುಸಿ ಪರೀಕ್ಷೆಗಳ ಮೌಲ್ಯಮಾಪಕರ ಸಂಭಾವನೆ ಬಿಡುಗಡೆಗೆ ಆಗ್ರಹ
5
+ ರೈತರ ಭಾವನೆ ಕಡೆಗಣಿಸಿ ಕೆಣಕಲಾಗುತ್ತಿದೆ. ಇದಕ್ಕೆ ತಕ್ಕ ಉತ್ತರ ನೀಡುತ್ತೇವೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ. ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಮಂಡ್ಯ ರೈತರು ಬೆಂಬಲ ನೀಡಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿಫಲತೆಯಿಂದ ಈ ಸಂಕಷ್ಟ ಎದುರಾಗಿದೆ ಎಂದು ದೂರಿದ್ದಾರೆ.
eesanje/url_46_343_6.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಮೋಡ ಬಿತ್ತನೆ ಕುರಿತಂತೆ ಚರ್ಚೆ : ಡಿಸಿಎಂ ಡಿಕೆಶಿ
2
+ ಬೆಂಗಳೂರು,ಸೆ.25- ಮಳೆ ಕೊರತೆಯಿಂದಾಗಿ ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಆತಂಕದ ಪರಿಸ್ಥಿತಿಯನ್ನು ಮನಗಂಡು ಮೋಡ ಬಿತ್ತನೆ ಕುರಿತಂತೆ ಚರ್ಚೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಕೊರತೆಯಿಂದಾಗಿ ಸಾಕಷ್ಟು ಸಮಸ್ಯೆಗಳಾಗಿವೆ. ಕಾಲ ಮೀರಿದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಣಾಮವಾಗಬಹುದು. ಈ ನಿಟ್ಟಿನಲ್ಲಿ ಮೋಡ ಬಿತ್ತನೆ ಬಗ್ಗೆ ಚರ್ಚೆಗಳು ನಡೆದಿವೆ.
3
+ ಈಗಾಗಲೇ ಎರಡು-ಮೂರು ಕಡೆ ಸ್ಥಳ ಗುರುತಿಸಲಾಗಿದೆ. ಮೋಡ ಬಿತ್ತನೆಯ ಬಗ್ಗೆ ನಾನಾ ರೀತಿಯ ಅಭಿಪ್ರಾಯಗಳು ಕೂಡ ಕೇಳಿಬಂದಿವೆ. ಸರ್ಕಾರ ಎಲ್ಲವನ್ನೂ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು. ಕಾವೇರಿಯ ನದಿ ವಿವಾದ ತೀವ್ರವಾಗಿದೆ. ನಿನ್ನೆ ಮತ್ತು ಇಂದು ಬೆಂಗಳೂರು ಸುತ್ತಮುತ್ತ ಆಗಿರುವ ಮಳೆಯ ನೀರು ತಮಿಳುನಾಡಿನತ್ತ ಹರಿದುಹೋಗಿದೆ. ಕಾವೇರಿ ನದಿಪಾತ್ರದಲ್ಲಿನ ಜಲಾಶಯಗಳಿಗೆ ಒಳಹರಿವು ಸುಧಾರಣೆಗೊಂಡಿದೆ.
4
+ ಬಂದ್‍ಗೆ ಆಕ್ಷೇಪಣೆಯಿಲ್ಲ :ಕಾವೇರಿ ನದಿ ವಿಷಯದಲ್ಲಿ ಪ್ರತಿಭಟನೆ ನಡೆಸಲು, ಬಂದ್ ಮಾಡಲು ನಮ್ಮ ಆಕ್ಷೇಪಣೆಗಳಿಲ್ಲ. ನಾಡಿನ ಹಿತಾಸಕ್ತಿ ವಿಷಯವಾಗಿ ನಾವು ಎಲ್ಲಾ ರೀತಿಯ ಸಹಕಾರ ಕೊಡುತ್ತೇವೆ. ನೆಲ, ಜಲ, ಭಾಷೆ ವಿಷಯವಾಗಿ ಪಕ್ಷಾತೀತವಾಗಿ ನಾವು ಒಟ್ಟಾಗಬೇಕಿದೆ. ಹೀಗಾಗಿ ನಾವು ಹೋರಾಟಕ್ಕೆ ವಿರೋಧ ವ್ಯಕ್ತಪಡಿಸುವುದಿಲ್ಲ. ಆದರೆ ಶಾಂತಿ ಕಾಪಾಡಿಕೊಳ್ಳಬೇಕಿದೆ. ಜನರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
5
+ ಯಾವುದೇ ಪಕ್ಷವಾದರೂ ಹೋರಾಟ ಮಾಡಲಿ, ನಾವು ಬೇಡ ಎನ್ನುವುದಿಲ್ಲ. ನಮ್ಮ ಪಕ್ಷದಲ್ಲಿ ಕೆಲವರು ಕರೆ ಮಾಡಿ ಹೋರಾಟ ಮಾಡುವುದಾಗಿ ಹೇಳುತ್ತಿದ್ದಾರೆ. ನಾವು ಯಾವುದಕ್ಕೂ ಬೇಡ ಎನ್ನುವುದಿಲ್ಲ. ಆದರೆ ಕಾವೇರಿ ವಿವಾದ ಕುರಿತಂತೆ ಹೈಕೋರ್ಟ್, ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆ ಬಾಕಿ ಇದೆ. ನಮ್ಮ ಹೋರಾಟದಿಂದ ತೀರ್ಪಿಗೆ ತೊಂದರೆಯಾಗಬಾರದು. ಪ್ರಚಾರಕ್ಕಾಗಿ ಹೋರಾಟ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.
6
+ ಪಿಯುಸಿ ಪರೀಕ್ಷೆಗಳ ಮೌಲ್ಯಮಾಪಕರ ಸಂಭಾವನೆ ಬಿಡುಗಡೆಗೆ ಆಗ್ರಹ
7
+ ಹೋರಾಟಗಳಿಂದ ಕಾನೂನಾತ್ಮಕವಾಗಿ ತೊಂದರೆಯಾಗಲಿದೆಯೇ ಎಂಬ ಬಗ್ಗೆ ನಾನು ಪ್ರತಿಕ್ರಿಯಿಸಲಾಗುವುದಿಲ್ಲ. ಇತ್ತ ಮಂತ್ರಿಯಾಗಿ ಕಾನೂನಿಗೂ ಗೌರವ ಕೊಡಬೇಕು, ಜನರನ್ನೂ ಉಳಿಸಿಕೊಳ್ಳಬೇಕು. ಇದು ನನ್ನ ಮತ್ತು ಸರ್ಕಾರದ ಪರಿಸ್ಥಿತಿಯಾಗಿದೆ. ಏನೇ ಆದರೂ ರಾಜ್ಯದ ಹಿತಾಸಕ್ತಿ ಕಾಪಾಡಿಕೊಳ್ಳಬೇಕಿದೆ ಎಂದರು. ಸರ್ಕಾರ ಜನರ ಜೊತೆಗಿದೆ. ಬಂದ್‍ಗೆ ಜನ ಸಹಕಾರ ಕೊಡದೇ ಇದ್ದರೆ ಮರ್ಯಾದೆ ಹೋಗುತ್ತದೆ. ಸಂಘಟನೆಗಳ ನಡುವೆಯೇ ಹಲವಾರು ಭಿನ್ನಾಭಿಪ್ರಾಯಗಳು ಕಂಡುಬರುತ್ತಿವೆ ಎಂದು ಪ್ರತಿಕ್ರಿಯಿಸಿದರು.
8
+ ಜೆಡಿಎಸ್ ನಿಂದ ಹಲವರ ವಲಸೆ :ಹೆಚ್ಚುವರಿ ಉಪ��ುಖ್ಯಮಂತ್ರಿ ಹುದ್ದೆಯ ವಿವಾದಗಳ ಬಗ್ಗೆ ನಾನು ಚರ್ಚೆ ಮಾಡಲು ಹೋಗುವುದಿಲ್ಲ. ಅದರೆ ಜೆಡಿಎಸ್, ಬಿಜೆಪಿಯ ಮೈತ್ರಿಯ ಬಳಿಕ ಜೆಡಿಎಸ್‍ನಲ್ಲಿರುವ ಅಲ್ಪಸಂಖ್ಯಾತರು ಸೇರಿದಂತೆ ಹಲವಾರು ನಾಯಕರು ಅಸಮಾಧಾನಗೊಂಡಿದ್ದಾರೆ. ನಮ್ಮ ಜೊತೆ ಚರ್ಚೆ ಮಾಡುತ್ತಿದ್ದಾರೆ.
9
+ ಜೆಡಿಎಸ್‍ನಿಂದ ಕಾಂಗ್ರೆಸ್‍ಗೆ ಬರುವ ಕಾರ್ಯಕರ್ತರನ್ನು ಸ್ಥಳೀಯ ಮಟ್ಟದಲ್ಲಿ ಸೇರಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಚುನಾವಣೆಯಲ್ಲಿ ಸ್ರ್ಪಧಿಸಿ ಸೋತವರು, ಗೆದ್ದವರನ್ನು ಸೇರಿಸಿಕೊಳ್ಳಲು ಉನ್ನತ ಮಟ್ಟದಲ್ಲಿ ಚರ್ಚೆಗಳಾಗುತ್ತಿವೆ. ಶಾಸಕರನ್ನು ಸೇರ್ಪಡೆ ಮಾಡಿಕೊಳ್ಳುವುದರಿಂದ ಪಕ್ಷಾಂತರ ನಿಷೇಧ ಕಾಯ್ದೆ ಅಡ್ಡಿಯಾಗುವ ಬಗ್ಗೆಯೂ ನಮಗೆ ಅರಿವಿದೆ. ಮುಖ್ಯಮಂತ್ರಿ ಹಾಗೂ ಸಂಪುಟದ ಸಹದ್ಯೋಗಿಗಳ ಜೊತೆಗೆ ಈ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ ಎಂದು ಹೇಳಿದರು.
10
+ ಮಹಿಳಾ ಮೀಸಲಾತಿ ಲೋಪದ ವಿರುದ್ಧ ಕಾಂಗ್ರೆಸ್‍ನಿಂದ ಸರಣಿ ಪತ್ರಿಕಾಗೋಷ್ಠಿ
11
+ ಜನವರಿಗೂ ಮೊದಲೇ ಪಟ್ಟಿ ಬಿಡುಗಡೆ :ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳ ಆಯ್ಕೆಗೆ ಅಭಿಪ್ರಾಯ ಕ್ರೂಢೀಕರಿಸಿ, ವರದಿ ನೀಡಲು ಸಚಿವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಎಂ.ಬಿ.ಪಾಟೀಲ್ ವಿದೇಶದಲ್ಲಿದ್ದಾರೆ. ಕೆ.ಜೆ.ಜಾರ್ಜ್ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿದ್ದಾರೆ. ಈ ರೀತಿ ತಾಂತ್ರಿಕ ಸಮಸ್ಯೆಯಿರುವ ಎರಡು-ಮೂರು ಮಂದಿ ಸಚಿವರನ್ನು ಹೊರತುಪಡಿಸಿದರೆ ಉಳಿದ ಎಲ್ಲರನ್ನೂ ವೀಕ್ಷಕರನ್ನಾಗಿ ನೇಮಿಸಲಾಗಿದೆ.
12
+ ಅವರು ಜಿಲ್ಲೆಗಳಿಗೆ ಭೇಟಿ ನೀಡಿ, ಸ್ಥಳೀಯ ನಾಯಕರ ಜೊತೆ ಚರ್ಚೆ ನಡೆಸಿ ಚುನಾವಣೆಯಲ್ಲಿ ಸ್ರ್ಪಧಿಸಲು ಆಕಾಂಕ್ಷಿಗಳಾಗಿರುವ ಎರಡು-ಮೂರು ಮಂದಿಯ ಹೆಸರುಗಳನ್ನು ಎಂಟು-ಹತ್ತು ದಿನಗಳಲ್ಲಿ ಕೆಪಿಸಿಸಿಗೆ ವರದಿ ನೀಡಲಿದ್ದಾರೆ. ಹತ್ತು ದಿನಗಳೊಳಗಾಗಿ ಇದನ್ನು ಕ್ರೂಢೀಕರಿಸಿ ವಿಧಾನಸಭಾ ಚುನಾವಣಾ ಮಾದರಿಯಲ್ಲೇ ಜನವರಿಗೂ ಮೊದಲೇ ಲೋಕಸಭೆ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಘೋಷಣೆ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.
eesanje/url_46_343_7.txt ADDED
@@ -0,0 +1,7 @@
 
 
 
 
 
 
 
 
1
+ ಬೆಂಗಳೂರು ಬಂದ್‌ಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಫೆಡರೇಷನ್ ಬೆಂಬಲ
2
+ ಬೆಂಗಳೂರು,ಸೆ.25- ತಮಿಳುನಾಡಿಗೆ ಕಾವೇರಿ ನದಿಯಿಂದ ನೀರು ಹರಿಸುತ್ತಿರುವ ರಾಜ್ಯಸರ್ಕಾರದ ಕ್ರಮವನ್ನು ವಿರೋಧಿಸಿ ವಿವಿಧ ಸಂಘಟನೆಗಳು ನಾಳೆ ನೀಡಿರುವ ಬೆಂಗಳೂರು ಬಂದ್ ಕರೆಗೆ ಕೆಎಸ್ಆರ್‌ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.
3
+ ಆದರೆ, ದೈನಂದಿನ ಬಸ್ ಸೌಲಭ್ಯದಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಎಂದಿನಂತೆ ನಾಳೆಯೂ ಬಸ್‍ಗಳು ಸಂಚರಿಸಲಿವೆ ಎಂದು ಬಿಎಂಟಿಸಿ ಮೂಲಗಳು ತಿಳಿಸಿವೆ. ಬೆಂಗಳೂರು ಮತ್ತು ರಾಮನಗರ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬಸ್ ಸಂಚಾರವನ್ನು ಸ್ಥಗಿತಗೊಳಿಸುವುದಿಲ್ಲ. ಯಥಾರೀತಿ ಬಸ್ ಸೌಲಭ್ಯವನ್ನು ಪ್ರಯಾಣಿಕರಿಗೆ ಕಲ್ಪಿಸುವುದಾಗಿ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿ ಮೂಲಗಳು ತಿಳಿಸಿವೆ.
4
+ ಅನ್ಯಾಯದ ವಿರುದ್ಧ ನಾವೆಲ್ಲರೂ ಹೋರಾಡಬೇಕಿದೆ : ಕುರುಬೂರು ಶಾಂತಕುಮಾರ್
5
+ ಆದರೆ ಫೆಡರೇಶನ್ ಅಧ್ಯಕ್ಷ ಎಚ್.ವಿ.ಅನಂತಸುಬ್ಬರಾವ್ ಹಾಗೂ ಪ್ರಧಾನ ಕಾರ್ಯದರ್ಶಿ ವಿಜಯ ಭಾಸ್ಕರ್ ಡಿ.ಎ. ಅವರು ಪತ್ರಿಕಾ ಪ್ರಕಟಣೆ ನೀಡಿ, ಮಂಗಳವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಿಎಂಟಿಸಿಯ ಎಲ್ಲಾ ಘಟಕಗಳಲ್ಲಿಯೂ ಯಾವುದೇ ಬಸ್‍ಗಳನ್ನು ಘಟಕದಿಂದ ಹೊರತೆಗೆಯದೆ ಬಂದ್‍ಗೆ ಬೆಂಬಲ ವ್ಯಕ್ತಪಡಿಸುವಂತೆ ಎಲ್ಲಾ ನೌಕರರಿಗೂ ಕರೆ ನೀಡಿದ್ದೇವೆ ಎಂದು ಹೇಳಿದ್ದಾರೆ.
6
+ ನಮ್ಮ ರಾಜ್ಯದ ರೈತರ ಬೆಳೆಗಳಿಗೆ ಹಾಗೂ ಕುಡಿಯುವ ನೀರಿಗೆ ಜಲಾಶಯಗಳಲ್ಲಿ ಸಾಕಷ್ಟು ನೀರಿಲ್ಲದಿದ್ದರೂ ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಈಗಾಗಲೇ ವಿವಿಧ ಸಂಘಟನೆಗಳು ಬಂದ್‍ಗೆ ವ್ಯಾಪಕ ಬೆಂಬಲ ವ್ಯಕ್ತಪಡಿಸಿವೆ.
7
+ ಹೀಗಾಗಿ ಬಂದ್ ಹಿನ್ನೆಲೆಯಲ್ಲಿ ನಾಳೆ ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಾಸವಾದರೂ ಅಚ್ಚರಿಪಡಬೇಕಿಲ್ಲ.
eesanje/url_46_343_8.txt ADDED
@@ -0,0 +1,5 @@
 
 
 
 
 
 
1
+ ಕರ್ನಾಟಕ ಬಂದ್‍ಗೆ ಜ್ಯುವೆಲರಿ ಅಸೋಸಿಯೇಶನ್ ಬೆಂಬಲ : ಶರವಣ
2
+ ಬೆಂಗಳೂರು, ಸೆ.25- ಕಾವೇರಿ ವಿವಾದದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆದಿರುವ ಕರ್ನಾಟಕ ಬಂದ್‍ಗೆ ಕರ್ನಾಟಕ ಜ್ಯುವೆಲರಿ ಅಸೋಸಿಯೇಶನ್ ಬೆಂಬಲ ನೀಡಲಿದೆ ಎಂದು ಅಸೋಸಿಯೇಶನ್ ಅಧ್ಯಕ್ಷರ ಮತ್ತು ವಿಧಾನ ಪರಿಷತ್ ಸದಸ್ಯ ಟಿ. ಎ.ಶರವಣ ತಿಳಿಸಿದ್ದಾರೆ.
3
+ ವ್ಯಕ್ತಿಗತವಾಗಿ ತಾವು ಹಾಗೂ ತಮ್ಮ ಸಂಘಟನೆ ಜನರ ಪರವಾಗಿದ್ದು, ರಾಜ್ಯಕ್ಕೆ ಆಗಿರುವ ಅನ್ಯಾಯ ಸಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.
4
+ ಮಹಿಳಾ ಮೀಸಲಾತಿ ಲೋಪದ ವಿರುದ್ಧ ಕಾಂಗ್ರೆಸ್‍ನಿಂದ ಸರಣಿ ಪತ್ರಿಕಾಗೋಷ್ಠಿ
5
+ ಜ್ಯುವೆಲೇರಿ ಅಸೋಸಿಯೇಶನ್ ನಾಡಿನ ಹಿತವನ್ನೆ ಬಯಸುತ್ತದೆ. ನಾಡು, ನುಡಿಗೆ ಬದ್ಧವಾಗಿದೆ. ನೆಲ ಜಲಕ್ಕೆ ಸಂಕಷ್ಟ ಎದುರಾದಾಗ ಜನರ ಪರ ದನಿಗೂಡಿಸುತ್ತದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.
eesanje/url_46_343_9.txt ADDED
@@ -0,0 +1,8 @@
 
 
 
 
 
 
 
 
 
1
+ ಪಿಯುಸಿ ಪರೀಕ್ಷೆಗಳ ಮೌಲ್ಯಮಾಪಕರ ಸಂಭಾವನೆ ಬಿಡುಗಡೆಗೆ ಆಗ್ರಹ
2
+ ಬೆಂಗಳೂರು, ಸೆ.25- ಪಿಯುಸಿ ವಾರ್ಷಿಕ ಪರೀಕ್ಷಾ ಮತ್ತು ಪೂರಕ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಿದ ಉಪನ್ಯಾಸಕರ ಸಂಭಾವನೆ ಹಾಗೂ ಭತ್ಯೆಗಳನ್ನು ಬಿಡುಗಡೆ ಮಾಡುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯನ್ನು ಶಿಕ್ಷಕರ ಮತ್ತು ಆಡಳಿತ ಮಂಡಳಿ ಫೋರಂ ಕರ್ನಾಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಒತ್ತಾಯಿಸಿದ್ದಾರೆ.
3
+ ಈ ಸಂಬಂಧ ಮಂಡಳಿಯ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ಉಪನ್ಯಾಸಕರ ಸಂಭಾವನೆ ಹಾಗೂ ಭತ್ಯೆ ಬಿಡುಗಡೆ ಮಾಡುವಲ್ಲಿ ವಿಳಂಬ ನೀತಿ ಅನುಸರಿಸಿದರೆ ಅಕ್ಟೋಬರ್ 3ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಮುಂದೆ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದ್ದಾರೆ.
4
+ ಕಳೆದ ಮಾರ್ಚ್ – ಏಪ್ರಿಲ್‍ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಮತ್ತು ಮೌಲ್ಯಮಾಪನ ಕಾರ್ಯ, ಜೂನ್‍ನಲ್ಲಿ ನಡೆದ ಮೊದಲ ಪೂರಕ ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯ ಹಾಗೂ ಆಗಸ್ಟ್-ಸೆಪ್ಟೆಂಬರ್‍ನಲ್ಲಿ ನಡೆದ 2ನೇ ಪೂರಕ ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯಗಳಲ್ಲಿ ಭಾಗಿಯಾದ ಉಪನ್ಯಾಸಕರ ಸಂಭಾವನೆ ಮತ್ತು ಭತ್ಯೆಗಳನ್ನು ಈವರೆಗೂ ಸಂಪೂರ್ಣವಾಗಿ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
5
+ ಮಹಿಳಾ ಮೀಸಲಾತಿ ಲೋಪದ ವಿರುದ್ಧ ಕಾಂಗ್ರೆಸ್‍ನಿಂದ ಸರಣಿ ಪತ್ರಿಕಾಗೋಷ್ಠಿ
6
+ ಜರೂರಾಗಿ ಮೌಲ್ಯಮಾಪನ ಮಾಡಿಸಿ, ಶೀಘ್ರದಲ್ಲಿ ಫಲಿತಾಂಶ ಬಿಡುಗಡೆ ಮಾಡಿದ್ದೇವೆಂದು ಹೆಮ್ಮೆಪಡುವ ಮಂಡಲಿಯು ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯದಲ್ಲಿ ಭಾಗಿಯಾಗುವ ಮೂಲಕ ಮಂಡಲಿಯ ಹಿರಿಮೆ ಮತ್ತು ಯಶಸ್ಸಿಗೆ ಕಾರಣೀಭೂತರಾದ ಉಪನ್ಯಾಸಕರ ಸಂಭಾವನೆ ಮತ್ತು ಭತ್ಯೆಗಳ ಶೀಘ್ರ ಬಿಡುಗಡೆಗೂ ಇದೇ ಇಚ್ಛಾಶಕ್ತಿ ಪ್ರದರ್ಶಿಸಬೇಕಿತ್ತಲ್ಲವೇ ಎಂದು ಪ್ರಶ್ನಿಸಿದ್ದಾರೆ.
7
+ ಕೆಲವು ವರ್ಷಗಳ ಹಿಂದೆ ಮೌಲ್ಯಮಾಪನದ ಕಡೆಯ ದಿನದಂದೆ ಚೆಕ್ ಮೂಲಕ ಉಪನ್ಯಾಸಕರಿಗೆ ಸಂಭಾವನೆ ಮತ್ತು ಭತ್ಯೆಗಳನ್ನು ವಿತರಿಸಲಾಗುತ್ತಿತ್ತು. ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಪರೀಕ್ಷಾ ಶುಲ್ಕವನ್ನು ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯದಲ್ಲಿ ತೊಡಗಿದ ಉಪನ್ಯಾಸಕರಿಗೆ ವಿತರಿಸಲು ಏಕೆ ವಿಳಂಬ ಧೋರಣೆ ಎಂದಿದ್ದಾರೆ.
8
+ ವಿಶೇಷವಾಗಿ ಖಾಸಗಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರು ಮೌಲ್ಯಮಾಪನದ ಸಂಭಾವನೆ ಮತ್ತು ಭತ್ಯೆಗಳಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದು, ಅನೇಕರು ನನ್ನ ಬಳಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಇದು ಅವರ ಜೀವನ ನಿರ್ವಹಣೆಯ ಪ್ರಶ್ನೆಯೂ ಆಗಿದೆ ಎಂದು ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.
eesanje/url_46_344_1.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 5 ದಿನ ಮಳೆ
2
+ ಬೆಂಗಳೂರು, ಸೆ.24- ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಿದ್ದು, ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ. ನೈರುತ್ಯ ಮುಂಗಾರು ಚೇತರಿಕೆಯಾಗಿರುವುದರಿಂದ ಈ ತಿಂಗಳ ಅಂತ್ಯದವರೆಗೂ ಮಳೆ ನಿರೀಕ್ಷಿಸಬಹುದು.
3
+ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಇದರ ಪ್ರಭಾವದಿಂದ ರಾಜ್ಯದ ಕರಾವಳಿ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
4
+ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಮಳೆ ಬರುವ ಸಂಭವಿದೆ. ವಾಯುಭಾರ ಕುಸಿತ ಪರಿಣಾಮದಿಂದ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಕೆಲವೆಡೆ ತುಂತುರು ಇಲ್ಲವೆ, ಸಾಧಾರಣ ಮಳೆ ಆಗಾಗ್ಗೆ ಬರುವ ನಿರೀಕ್ಷೆ ಇದೆ. ಮಂಗಳವಾರದ ನಂತರ ದಕ್ಷಿಣ ಒಳನಾಡಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ತಜ್ಞರು ಹೇಳಿದ್ದಾರೆ.
5
+ ಭಾರತೀಯ ಹವಾಮಾನ ಇಲಾಖೆಯೂ ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ವ್ಯಾಪಕ ಪ್ರಮಾಣದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ರಾಜ್ಯದ ಒಳನಾಡಿನಲ್ಲಿ ಭಾಗಶಃ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದೆ.
6
+ ಮದ್ಯಭಾಗ್ಯ ನೀಡಿ ಕರ್ನಾಟಕವನ್ನು ‘ಕುಡುಕರ ತೋಟ’ ಮಾಡುತ್ತಿದೆ ಧನಪಿಶಾಚಿ ಸರ್ಕಾರ : ಹೆಚ್ಡಿಕೆ ಆಕ್ರೋಶ
7
+ ನೀಗದ ಮಳೆ ಕೊರತೆ:ಆದರೂ ನೈರುತ್ಯ ಮುಂಗಾರಿನ ಅವ ಮುಗಿಯುತ್ತಾ ಬಂದಿದ್ದರೂ ರಾಜ್ಯದಲ್ಲಿ ಮಳೆ ಕೊರತೆಯು ಈತನಕ ನಿವಾರಣೆಯಾಗಿಲ್ಲ. ಆಗಸ್ಟ್ ನಲ್ಲಿ ಪ್ರಾರಂಭವಾದ ಮಳೆ ಕೊರತೆ ಸೆಪ್ಟೆಂಬರ್‍ನಲ್ಲೂ ಮುಂದುವರೆದಿದ್ದು, ಬರದ ತೀವ್ರತೆ ಹೆಚ್ಚತೊಡಗಿದೆ. ಇದರಿಂದ ಬಿತ್ತಿದ ಬೆಳೆ ಹಾನಿಯಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
8
+ ರಾಜ್ಯದ ಕೆಲವೆಡೆ ಚದುರಿದಂತೆ ಅಲ್ಲಲ್ಲಿ ಮಳೆಯಾಗುತ್ತಿದ್ದರೂ ವ್ಯಾಪಕವಾಗಿ ರಾಜ್ಯಾದ್ಯಂತ ವಾಡಿಕೆ ಪ್ರಮಾಣದ ಮಳೆಯಾಗುತ್ತಿಲ್ಲ. ಹೀಗಾಗಿ ಜಲಾಶಯಗಳಲ್ಲಿನ ಒಳಹರಿವು ಏರಿಕೆಯಾಗುತ್ತಿಲ್ಲ. ಕಳೆದ ವರ್ಷ ಅತಿವೃಷ್ಟಿಯಾಗಿದ್ದರೆ, ಈ ವರ್ಷ ಬರಪರಿಸ್ಥಿತಿ ಎದುರಿಸುವಂತಾಗಿದೆ.
9
+ ತಡವಾಗಿ ಆರಂಭವಾದ ಮುಂಗಾರು ಮಳೆಯು ಜೂನ್‍ನಲ್ಲಿ ಕೈಕೊಟ್ಟಿತ್ತು. ಆದರೆ, ಜುಲೈ ಸುಧಾರಿಸಿ ವಾಡಿಕೆಗಿಂತ ಹೆಚ್ಚು ಮಳೆಯಾಗಿ ನಿಟ್ಟುಸಿರು ಬಿಡುವಂತಾಗಿತ್ತು. ಆದರೆ, ಮತ್ತೆ ಆಗಸ್ಟ್‍ನಲ್ಲಿ ಮುಂಗಾರು ಮಳೆ ಕೈಕೊಟ್ಟು ಶತಮಾನದ ದಾಖಲೆ ಮುರಿಯುವಷ್ಟು ಮಳೆ ಕೊರತೆಯಾಗಿದೆ. ಇದರಿಂದ ರಾಜ್ಯ ಬೀಕರ ಬರಗಾಲ ಎದುರಿಸುವಂತಾಗಿದೆ. ಸೆಪ್ಟೆಂಬರ್‍ನಲ್ಲಿ ಮಳೆ ಚೇತರಿಸಿಕೊಳ್ಳಬಹುದೆಂಬ ನಿರೀಕ್ಷೆ ಹುಸಿಯಾಗಿದೆ.
10
+ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಕಳೆದ ಒಂದು ವಾರದಲ್ಲಿ ಮಳೆ ಕೊರತೆ ಪ್ರಮಾಣ ಹೆಚ್ಚಾಗಿದೆ. ವಾಡಿಕೆ ಪ್ರಮಾಣಕ್ಕಿಂತ ಶೇ.36ರಷ್ಟು ರಾಜ್ಯದಲ್ಲಿ ಮಳೆ ಕಡಿಮೆಯಾಗಿದೆ. ಅದೇ ರೀತಿ ಸೆಪ್ಟೆಂಬರ್ ಒಂದರಿಂದ ನಿನ್ನೆವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಶೇ.11 ಕಡಿಮೆ ಮಳೆಯಾಗಿದೆ. ಕೆಲವೆಡೆ ಕೊರತೆ ಪ್ರಮಾಣ ಇನ್ನೂ ಹೆಚ್ಚಿದೆ.
11
+ ಮುಂಗಾರು ಹಂಗಾಮಿನ ಅವಯ ಜೂನ್ ಒಂದರಿಂದ ನಿನ್ನೆವರೆಗೆ ರಾಜ್ಯದಲ್ಲಿ ಶೇ.26ರಷ್ಟು ಮಳೆ ಕೊರತೆ ಇದೆ. ಜನವರಿಯಿಂದ ನಿನ್ನೆವರೆಗೆ ಮಳೆ ಪ್ರಮಾಣದಲ್ಲೂ ವಾಡಿಕೆಗಿಂತ ಶೇ. 26ರಷ್ಟು ಕೊರತೆ ಕಂಡುಬಂದಿದೆ. ಅಕ್ಟೋಬರ್‍ನಿಂದ ಹಿಂಗಾರು ಮಳೆ ಆರಂಭವಾಗುವುದು ರೂಢಿ. ನೈರುತ್ಯ ಮುಂಗಾರು ಮಾರುತಗಳು ಮರಳಿದ ಬಳಿಕ ಈಶಾನ್ಯ ಹಿಂಗಾರಿನ ಮಾರುತಗಳು ಪ್ರಾರಂಭವಾಗುತ್ತವೆ. ಹಿಂಗಾರಿನ ಆರಂಭದ ಮುನ್ಸೂಚನೆಯೂ ಅಶಾದಾಯಕವಾಗಿಲ್ಲ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
eesanje/url_46_344_2.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಯಡಿಯೂರಪ್ಪನವರ ಆಶೀರ್ವಾದ ಪಡೆದ ನಿಖಿಲ್ ಕುಮಾರಸ್ವಾಮಿ
2
+ ಬೆಂಗಳೂರು,ಸೆ.24- ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ನಿರ್ಧಾರ ಪ್ರಕಟವಾದ ಬೆನ್ನಲ್ಲೇ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಶೀರ್ವಾದ ಪಡೆದರು.ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಯಡಿಯೂರಪ್ಪ ಅವರನ್ನು ನಿಖಿಲ್ ಕುಮಾರಸ್ವಾಮಿ ಅವರು ಸೌಹಾರ್ದಯುತ ಭೇಟಿ ಮಾಡಿದರು.
3
+ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಬೆಂಬಲ ನೀಡಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಚುನಾವಣೆ ಎದುರಿಸುತ್ತವೆ ಎಂದರು.
4
+ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲುತ್ತವೆ. ಮಂಡ್ಯ ಲೋಕಸಭಾ ಚುನಾವಣೆ ಬಗ್ಗೆ ಮಾತನಾಡಲು ಇದು ಸೂಕ್ತ ಸಮಯವಲ್ಲ. ಅಲ್ಲಿರುವ ಮಾಜಿ ಶಾಸಕರು, ನಾಯಕರು ತೀರ್ಮಾನ ಮಾಡುತ್ತಾರೆ. ಮಂಡ್ಯದಲ್ಲಿ ನಮ್ಮ ಪಕ್ಷದಲ್ಲಿ ಅಭ್ಯರ್ಥಿಗಳಿಗೆ ಕೊರತೆಯಿಲ್ಲ. ಅನೇಕ ನಾಯಕರುಗಳಿದ್ದಾರೆ ಎಂದು ಅವರು ತಿಳಿಸಿದರು.
5
+ ಮದ್ಯಭಾಗ್ಯ ನೀಡಿ ಕರ್ನಾಟಕವನ್ನು ‘ಕುಡುಕರ ತೋಟ’ ಮಾಡುತ್ತಿದೆ ಧನಪಿಶಾಚಿ ಸರ್ಕಾರ : ಹೆಚ್ಡಿಕೆ ಆಕ್ರೋಶ
6
+ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ರಾಜ್ಯದ ಹಿತ ಕಾಪಾಡುವ ದೃಷ್ಟಿಯಿಂದ ಬಿಜೆಪಿ ಜತೆ ಮೈತ್ರಿಯ ನಿರ್ಧಾರ ಮಾಡಿದ್ದಾರೆ. ಯಡಿಯೂರಪ್ಪ ಅವರ ಕೊಡುಗೆ ರಾಜ್ಯಕ್ಕೆ ಸಾಕಷ್ಟಿದೆ. ಹಿರಿಯರ ಆಶೀರ್ವಾದ ಪಡೆದುಕೊಳ್ಳುವುದು ಸಂಸ್ಕøತಿ. ಹಾಗಾಗಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿರುವುದಾಗಿ ಅವರು ಹೇಳಿದರು.
7
+ ಬಿಜೆಪಿ ಪಕ್ಷವು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪಕ್ಷ ಎಂದು ಭಾವಿಸಿದ್ದೇನೆ. ರಾಜ್ಯದ ಬಿಜೆಪಿ ನಾಯಕರನ್ನು ಕಡೆಗಣಿಸುವುದಿಲ್ಲ ಎಂಬ ವಿಶ್ವಾಸವಿದೆ. ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರಗಳ ಹಂಚಿಕೆ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.
8
+ ಜೆಡಿಎಸ್ ಪ್ರಾದೇಶಿಕ ಪಕ್ಷವನ್ನು ಅನೇಕರು ಶ್ರಮವಹಿಸಿ ಕಟ್ಟಿದ್ದಾರೆ. ನಮ್ಮ ನಾಯಕರು ಪಕ್ಷ ಮುನ್ನಡೆಸಿದ್ದಾರೆ. ಯುವಕರು ಪಕ್ಷದ ಜವಾಬ್ದಾರಿ ತೆಗೆದುಕೊಂಡು ಇನ್ನಷ್ಟು ಸಂಘಟನೆ ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರು ನಿರ್ವಹಿಸುತ್ತೇನೆ ಎಂದು ಅವರು ಹೇಳಿದರು
9
+ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಹೊಳೆನರಸೀಪುರದಲ್ಲಿ ಕಾರ್ಯಕ್ರಮವಿದ್ದ ಹಿನ್ನೆಲೆಯಲ್ಲಿ ಅವರು ದೆಹಲಿಯಿಂದ ಮುಂಚಿತವಾಗಿ ರಾಜ್ಯಕ್ಕೆ ಮರಳಿದರು. ಆದರೆ, ಮೊದಲ ದಿನದ ಉಭಯ ಪಕ್ಷಗಳ ನಾಯಕರ ಮಾತುಕತೆಯ ಸಂದರ್ಭದಲ್ಲಿ ರೇವಣ್ಣ ಕೂಡ ಇದ್ದರು. ಎಲ್ಲರ ಸಮ್ಮುಖದಲ್ಲೆ ಮೈತ್ರಿಯ ಮುಂದಿನ ತೀರ್ಮಾನಗಳ ಬಗ್ಗೆ ಚರ್ಚೆಯಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
10
+ ಬೆಂಗಳೂರು ಬಂದ್ ಗೆ ನಮ್ಮ ಬೆಂಬಲವಿರಲಿದೆ. ನಿನ್ನೆ ಮಂಡ್ಯ ಬಂದ್ನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭಾಗಿಯಾಗಿದ್ದರು. ರೈತ ಬಂಧುಗಳಿಗೆ ನ್ಯಾಯ ಒದಗಿಸಿ ಕೊಡುವುದರಲ್ಲಿ ನಾವು ಯಾವಾಗಲೂ ಜೊತೆಗಿರುತ್ತೇವೆ ಎಂದು ಅವರು ಹೇಳಿದರು. ಅಲ್ಪಸಂಖ್ಯಾತ ನಾಯಕರು ಜೆಡಿಎಸ್ ಗೆ ರಾಜೀನಾಮೆ ನೀಡಿದ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.
eesanje/url_46_344_3.txt ADDED
@@ -0,0 +1,6 @@
 
 
 
 
 
 
 
1
+ ವಿಮಾನ ನಿಲ್ದಾಣ ಮಾದರಿಯಲ್ಲಿ ವಿಶ್ವದರ್ಜೆಯ ಹುಬ್ಬಳ್ಳಿ ರೈಲ್ವೆ ನಿಲ್ದಾಣ ಅಭಿವೃದ್ಧಿ : ಜೋಶಿ
2
+ ಹುಬ್ಬಳ್ಳಿ, ಸೆ.24- ನಗರದ ಶ್ರೀಸಿದ್ಧಾರೂಢ ಸ್ವಾಮಿ ರೈಲ್ವೆ ನಿಲ್ದಾಣವನ್ನು ವಿಶ್ವದರ್ಜೆಯ ರೈಲ್ವೆ ನಿಲ್ದಾಣವನ್ನಾಗಿ ಅಭಿವೃದ್ಧಿ ಪಡಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.
3
+ ಶ್ರೀಸಿದ್ಧಾರೂಢ ಸ್ವಾಮಿ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ 1ರಲ್ಲಿ 2.08 ಕೋಟಿ ರೂ. ವೆಚ್ಚದಲ್ಲಿ ಅಳವಡಿಸಿದ ಎರಡು ಎಸ್ಕಲೇಟರ್‍ಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ರೈಲ್ವೆ ನಿಲ್ದಾಣವನ್ನು ವಿಮಾನ ನಿಲ್ದಾಣದ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಕೆಲವು ವರ್ಷಗಳ ಹಿಂದೆ ಇಲ್ಲಿ ಎರಡು ಪ್ಲಾಟ್ ಫಾರಂ ಇದ್ದವು. ಇಂದು 8 ಪ್ಲಾಟ್ ಫಾರಂಗಳನ್ನು ಕಲ್ಪಿಸಲಾಗಿದೆ ಎಂದರು.
4
+ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಉನ್ನತೀಕರಣಕ್ಕೆ ನಿರಂತರವಾಗಿ ಪ್ರಯತ್ನಿಸಿದ ಪರಿಣಾಮ ಪ್ರಯಾಣಿಕರಿಗೆ ಸಾಕಷ್ಟು ಸೌಲಭ್ಯಗಳು ಕಲ್ಪಿಸಿದಂತಾಗಿದೆ ಎಂದು ಹೇಳಿದರು.
5
+ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಭೇಟೆ ಆರಂಭ, ಏರ್ ರೈಫಲ್ ಶೂಟಿಂಗ್‍ನಲ್ಲಿ ಬೆಳ್ಳಿ
6
+ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಮೇಯರ್ ವೀಣಾ ಬರದ್ವಾಡ, ಪಾಲಿಕೆ ಸದಸ್ಯರಾದ ಸಂತೋಷ್ ಚವ್ಹಾಣ, ರಾಜಣ್ಣ ಕೊರವಿ, ಶಿವು ಮೆಣಸಿನಕಾಯಿ, ಬಿಜೆಪಿ ಮುಖಂಡ ಪ್ರಭು ನವಲಗುಂದಮಠ, ರಂಗಾಬದ್ದಿ, ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ, ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಹರ್ಷ ಖರೆ, ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಸಂತೋಷ ಹೆಗಡೆ, ಹರಿತಾ ಎಸ್, ಇತರರು ಉಪಸ್ಥಿತರಿದ್ದರು.
eesanje/url_46_344_4.txt ADDED
@@ -0,0 +1,8 @@
 
 
 
 
 
 
 
 
 
1
+ ಸಂಶಯಕ್ಕೆ ಎಡೆ ಮಾಡಿಕೊಟ್ಟ ತೇಜಸ್ವಿನಿ ಅನಂತಕುಮಾರ್ ಹೇಳಿಕೆ
2
+ ಬೆಂಗಳೂರು,ಸೆ.23- ಕರ್ನಾಟಕದಲ್ಲಿ ಬಿಜೆಪಿ ಕಟ್ಟಿರುವ ಕ್ರೆಡಿಟ್ನ್ನು ಪೂರ್ತಿ ಅನಂತಕುಮಾರ್ ಅವರಿಗೆ ನೀಡಿದ್ದಾರೆ. ಬಿಜೆಪಿಗೆ ದಕ್ಷಿಣ ಭಾರತದಲ್ಲಿ ಬಾಗಿಲು ತೆರೆದಿದ್ದು ಅನಂತಕುಮಾರ್ ಎಂದು ತೇಜಸ್ವಿನಿ ಅನಂತ್ಕುಮಾರ್ ಹೇಳಿರುವುದು ಸಾಕಷ್ಟು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ.
3
+ ಬಿಜೆಪಿ ಹಿರಿಯ ನಾಯಕ ಕೇಂದ್ರ ಮಾಜಿ ಸಚಿವ ದಿ.ಅನಂತಕುಮಾರ್ ಜನ್ಮದಿನದ ಪ್ರಯುಕ್ತ ಟ್ವೀಟ್ ಮಾಡಿರುವ ಅವರು, ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಬಾಗಿಲನ್ನು ತೆರೆದಿದ್ದು ಅನಂತಕುಮಾರ್, ಬಿಜೆಪಿಯ ಸಿದ್ಧಾಂತವನ್ನು ಕರ್ನಾಟಕದಾದ್ಯಂತ ಪಸರಿಸಿದ್ದು ಅನಂತಕುಮಾರ್ ಎಂದಿದ್ದಾರೆ.
4
+ ಅವರ ನಾಯಕತ್ವದಲ್ಲಿ ಪಕ್ಷದ ಮತ ಹಂಚಿಕೆ ಪ್ರಮಾಣ ಶೇ.2ರಿಂದ ಶೇ.25ಕ್ಕೆ ಏರಿತು. ಜೊತೆಗೆ ಬಿಜೆಪಿ ಶಾಸಕರ ಸಂಖ್ಯೆ ಒಂದರಿಂದ 40ಕ್ಕೆ ಏರಿತು. ಮತ್ತು ಕೇವಲ 5 ವರ್ಷಗಳಲ್ಲಿ 4 ಬಿಜೆಪಿ ಸಂಸದರು ರಾಜ್ಯದಿಂದ ಆಯ್ಕೆಯಾದರು. ಇದರಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಎಲ್.ಕೆ.ಅಡ್ವಾಣಿ ಅವರು ಅನಂತಕುಮಾರ್ ಅವರನ್ನು ಡೈನಾಮಿಕ್ ನಾಯಕರೆಂದು ಗುರುತಿಸಿದರು ಎಂದು ಹೇಳಿದ್ದಾರೆ.
5
+ ಈ ಮೂಲಕ ಕರ್ನಾಟಕ ಬಿಜೆಪಿ ಕಟ್ಟುವಲ್ಲಿ ಅನಂತಕುಮಾರ್ ಅವರ ಪಾತ್ರವನ್ನು ಬಿಜೆಪಿ ನಾಯಕರಿಗೆ ತೇಜಸ್ವಿನಿ ಅನಂತಕುಮಾರ್ ನೆನಪಿಸಿದ್ದಾರೆ. ಅದಲ್ಲದೇ ತಮ್ಮ ಟ್ವಿಟರ್ನಲ್ಲಿ ಅನಂತಕುಮಾರ್ ಅವರ ಎರಡು ಹಳೇ ಪೊಟೋಗಳನ್ನು ಹಂಚಿಕೊಂಡಿದ್ದು, ಅದರಲ್ಲಿ ಒಂದು ಮಾಧ್ಯಮಗಳ ಜೊತೆ ಮಾತನಾಡುತ್ತಿದ್ದರೆ, ಮತ್ತೊಂದರಲ್ಲಿ ಬಿಎಸ್ ಯಡಿಯೂರಪ್ಪ ಜೊತೆ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿರುವ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ.
6
+ ಈ ಹಿಂದೆಯೂ ಅನಂತಕುಮಾರ್ ಅವರ ಪುತ್ರಿ ವಿಜೇತ ಅನಂತಕುಮಾರ್ ಕೂಡ ಟ್ವೀಟ್ ಮಾಡಿ ತಮ್ಮ ತಂದೆಯನ್ನು ಮರೆತ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದರು. ಬಿಜೆಪಿ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
7
+ ಚುನಾವಣೆ ಹತ್ತಿರವಾದಂತೆಲ್ಲ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನೇಕ ಯೋಜನೆಗಳನ್ನು ಪ್ರಧಾನಿ ನರೇಂದ್ರಮೋದಿ ಸೇರಿ ಅನೇಕ ನಾಯಕರು ಉದ್ಘಾಟಿಸುತ್ತಿದ್ದಾರೆ. ಆದರೆ, ಯಾವುದೇ ಯೋಜನೆಗೆ ಅನಂತಕುಮಾರ್ ಹೆಸರನ್ನು ನಾಮಕರಣ ಮಾಡುವುದಾಗಲಿ ಮಾಡಿಲ್ಲ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡ ಅವರ ಹೆಸರನ್ನು ಪ್ರಸ್ತಾಪ ಮಾಡಿ ಕೇಂದ್ರದ ಒಪ್ಪಿಗೆ ಪಡೆದವರು ಅನಂತಕುಮಾರ್.
8
+ ಆದರೂ ಆ ಕಾರ್ಯಕ್ರಮದಲ್ಲಿಯೂ ಅವರನ್ನು ಸ್ಮರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಬೆಂಗಳೂರಿನ ಮೆಟ್ರೋ ಯೋಜನೆಗೆ ಅನಂತಕುಮಾರ್ ಅವರ ಕೊಡುಗೆ ಅಪಾರವಾಗಿದ್ದರೂ ಮೆಟ್ರೋ ಉದ್ಘಾಟನೆಯಾಗಲಿ ಅಥವಾ ಬೆಂಗಳೂರು ಸಂಬಂತ ಯಾವುದೇ ಕಾರ್ಯಕ್ರಮದಲ್ಲಿ ಅನಂತಕುಮಾರ್ ಅವರನ್ನು ಸ್ಮರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
eesanje/url_46_344_5.txt ADDED
@@ -0,0 +1,7 @@
 
 
 
 
 
 
 
 
1
+ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ದೀರ್ಘಾವಧಿವರೆಗೆ ಮುಂದುವರೆಯಲಿದೆ : ಹೆಚ್ಡಿಕೆ
2
+ ಬೆಂಗಳೂರು,ಸೆ.23- ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಕೇವಲ ಲೋಕಸಭೆ ಚುನಾವಣೆಗೆ ಸೀಮಿತವಾಗದೆ ಧೀರ್ಘಾವಧಿವರೆಗೆ ಮುಂದುವರೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ನವದೆಹಲಿಯಿಂದ ಆಗಮಿಸಿದ ಅವರು ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ವಿಚಾರದಲ್ಲಿ ಸೌಹಾರ್ದಯುತವಾಗಿ ಚರ್ಚೆ ಮಾಡಿದ್ದೇವೆ. ಉಭಯ ಪಕ್ಷಗಳ ಮೈತ್ರಿಯನ್ನು ದೀರ್ಘಾವವರೆಗೆ ಮುಂದುವರೆಸುವ ಬಗ್ಗೆ ಹಲವು ಸಂಗತಿಗಳನ್ನು ಚರ್ಚೆ ಮಾಡಿದ್ದೇವೆ ಎಂದರು.
3
+ ನಿನ್ನೆ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ , ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ಮೈತ್ರಿ ಮಾಡಿಕೊಳ್ಳುವ ವಿಚಾರದ ಬಗ್ಗೆ ಚರ್ಚೆ ಮಾಡಲಾಯಿತು. ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರಗಳ ಹೊಂದಾಣಿಕೆ ಕುರಿತಂತೆ ಚರ್ಚಿಸಿದ್ದು, ಯಾವುದೇ ಭಿನ್ನಾಭಿಪ್ರಾಯಗಳು ಉಭಯ ಪಕ್ಷಗಳ ನಡುವೆ ಇಲ್ಲ ಎಂದು ಹೇಳಿದರು.
4
+ ನಾಡಿನ ಜನತೆಯ ಹಿತದೃಷ್ಟಿಯಿಂದ ಕೆಲವು ವಿಚಾರಗಳನ್ನು ಬಿಜೆಪಿ ನಾಯಕರೊಂದಿಗೆ ಚರ್ಚೆ ಮಾಡಿದ್ದು, ಅವುಗಳನ್ನು ಬಹಿರಂಗಪಡಿಸಲು ಆಗುವುದಿಲ್ಲ. ನಮ್ಮ ನಾಡಿಗೆ ಉಂಟಾಗಿರುವ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರದ ಬಗ್ಗೆ ಚಿಂತನೆಯನ್ನು ಮಾಡಲಾಗಿದೆ.ನಾಡಿನ ಸಮಸ್ಯೆಗಳ ಪರಿಹಾರಕ್ಕಾಗಿ ಬಿಜೆಪಿ ಜೊತೆ ಮೈತ್ರಿ ಮುಂದುವರೆ ಸಬೇಕಿದ್ದು, ಈ ವಿಚಾರದಲ್ಲಿ ಯಾವುದೇ ರೀತಿಯ ಪ್ರತಿಷ್ಟೆ ಇಲ್ಲ ಎಂದು ತಿಳಿಸಿದರು.
5
+
6
+ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲವು ಸಭೆಗಳನ್ನು ನಡೆಸಲು ಮನವಿ ಮಾಡಿದ್ದು, ದಸರಾ ಹಬ್ಬದ ನಂತರ ಮೈತ್ರಿ ನಿರ್ಧಾರವನ್ನು ಅಕೃತವಾಗಿ ಪ್ರಕಟಿಸುತ್ತೇವೆ. ಉಭಯ ಪಕ್ಷಗಳ ನಡುವೆ ಈ ವಿಚಾರದಲ್ಲಿ ಗೊಂದಲವಿಲ್ಲ.
7
+ ನಾಡಿನ, ರಾಷ್ಟ್ರದ ಅಭಿವೃದ್ಧಿಗಾಗಿ ಮೈತ್ರಿ ಮಾಡಿಕೊಳ್ಳುತ್ತಿದ್ದೇವೆ ಎಂದರು. ಕಾವೇರಿ ನದಿನೀರು ವಿವಾದ ಕುರಿತಂತೆ ಅಮಿತ್ ಷಾ ಅವರ ಜೊತೆ ಚರ್ಚಿಸಿದ್ದು, ನಮಗೆ ಆಗಿರುವ ಅನ್ಯಾಯದ ಬಗ್ಗೆಯೂ ಪ್ರಸ್ತಾಪಿಸಿದ್ದೇನೆ. ಬಿಜೆಪಿ, ಜೆಡಿಎಸ್ ಮೈತ್ರಿಯಿಂದ ನಾಡಿನ ನೀರಾವರಿ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
eesanje/url_46_34_1.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ತೀವ್ರ ವಿರೋಧದ ನಡುವೆಯೂ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ನಾಳೆ ಪರೀಕ್ಷೆ
2
+
3
+ ಬೆಂಗಳೂರು,ಆ.26– ತೀವ್ರ ವಿರೋಧದ ನಡುವೆಯೂ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ದ ವತಿಯಿಂದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಗ್ರೂಪ್ ಎ ಮತ್ತು ಬಿ ವೃಂದದ 344 ಹುದ್ದೆಗಳಿಗೆ ನಾಳೆ ಭಾರಿ ಬಿಗಿ ಭದ್ರತೆ ನಡುವೆ ಪೂರ್ವಭಾವಿ ಪರೀಕ್ಷೆ (ಪ್ರಿಲಿಮನರಿ ಎಕ್ಸಾಂ) ನಡೆಯಲಿದೆ.
4
+ ಪರೀಕ್ಷೆಯನ್ನು ಮುಂದೂಡಬೇಕೆಂದು ಕೆಲ ವಿದ್ಯಾರ್ಥಿಗಳು ರಾಜ್ಯಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು. ಇದಕ್ಕೆ ಸೊಪ್ಪು ಹಾಕದ ಸರ್ಕಾರ ಈಗಾಗಲೇ ನಿಗದಿಯಾಗಿರುವಂತೆ ನಾಳೆ ರಾಜ್ಯದ ಒಟ್ಟು 700 ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಿದೆ.
5
+ ಕೆಪಿಎಸ್ಸಿಯ 384 ಎ ಮತ್ತು ಬಿ ವೃಂದದ ಹುದ್ದೆಗಳಿಗೆ ಒಟ್ಟು 2,10,541 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸುತ್ತಿದ್ದು, ಯಾವುದೇ ರೀತಿಯ ನಕಲು, ಅಹಿತಕರ ಘಟನೆ ನಡೆಯಂದತೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
6
+ ಪರೀಕ್ಷೆಯು ಬೆಳಿಗ್ಗೆ 10 ರಿಂದ 12 ಹಾಗೂ ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು 2 ಗಂಟೆ ಮುಂಚಿತವಾಗಿಯೇ ಕಡ್ಡಾಯವಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಬೇಕೆಂದು ಸೂಚನೆ ನೀಡಲಾಗಿದೆ.
7
+ ಅಂದರೆ ಮೊದಲ ಪ್ರಶ್ನೆ ಪತ್ರಿಕೆ 10 ಗಂಟೆಗೆ ಆರಂಭವಾದರೆ, 8 ಗಂಟೆಯೊಳಗೆ ಅಭ್ಯರ್ಥಿಗಳು ಕೇಂದ್ರದೊಳಗೆ ಬರಬೇಕು.ಬೆಳಗಿನ ಅವಧಿಗೆ 9.50 ಮತ್ತು ಮಧ್ಯಾಹ್ನ ನಡೆಯುವ ಎರಡನೇ ಪ್ರಶ್ನೆಪತ್ರಿಕೆಗೆ 1.50 ರ ನಂತರ ಬರುವ ಅಭ್ಯರ್ಥಿಗಳನ್ನು ಯಾವುದೇ ಕಾರಣಕ್ಕೂ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಆಯೋಗ ಕಟ್ಟುನಿಟ್ಟಿನ ಸಂದೇಶವನ್ನು ರವಾನಿಸಿದೆ.
8
+ ಬಿಗಿ ಭದ್ರತೆ :ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳು ಹಾಗೂ ಮತ್ತಿತರ ಕಡೆ ಪರೀಕ್ಷೆ ನಡೆಯಲಿದ್ದು, ಈ ಬಾರಿ ಹಿಂದೆಂದಿಗಿಂತಲೂ ಬಿಗಿ ಭದ್ರತೆಯನ್ನು ತೆಗೆದುಕೊಳ್ಳಲಾಗಿದೆ. ಈ ಹಿಂದೆ ಪ್ರಶ್ನೆ ಪತ್ರಿಕೆ ಸೋರಿಕೆ, ನಕಲು ನಡೆದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಆಯೋಗ ಮುಂಚಿತವಾಗಿಯೇ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ.
9
+ ಪರೀಕ್ಷಾ ಕೇಂದ್ರದ ಒಂದು ಕಿ.ಮೀ. ಸುತ್ತಮುತ್ತ 144 ಸೆಕ್ಷನ್ ಹಾಕಲಾಗಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಬೇರೆ ಯಾವುದೇ ವ್ಯಕ್ತಿಗಳು ಅನಗತ್ಯವಾಗಿ ತಿರುಗಾಟ ನಡೆಸುವುದು, ಅನುಮಾನಸ್ಪದವಾಗಿ ಓಡಾಡುವಂತಿಲ್ಲ. ಒಂದು ವೇಳೆ ಅನುಮಾನ ಕಂಡುಬಂದರೆ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲು ಅನುಮತಿ ನೀಡಲಾಗಿದೆ.
10
+ ಪರೀಕ್ಷಾ ಕೇಂದ್ರದ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಮಂಗಳವಾರ ಯಾವುದೇ ಜೆರಾಕ್‌್ಸ ಅಂಗಡಿಗಳು ತೆರೆಯುವಂತಿಲ್ಲ ಎಂದು ಸೂಚಿಸಲಾಗಿದೆ. ಒಂದು ವೇಳೆ ಯಾರಾದರೂ ತೆರೆದರೆ ತಕ್ಷಣವೇ ಮುಚ್ಚಬೇಕು. ಇಲ್ಲವೇ ಬಲವಂತವಾಗಿ ಮುಚ್ಚಿಸಬೇಕು ಜೊತೆಗೆ ಅಂತವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.
11
+ ದಾಖಲೆಗಳು :ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಅಗತ್ಯವಿರುವ ಪ್ರವೇಶಪತ್ರ, ಪಾಸ್ಪೋರ್ಟ್, ಪ್ಯಾನ್ಕಾರ್ಡ್, ಮತಚೀಟಿ, ಆಧಾರ್ಕಾರ್ಡ್, ಗುರುತಿನ ಚೀಟಿ, ಪಾಸ್ಪೋರ್ಟ್ ಅಳತೆಯ ಎರಡು ಭಾವಚಿತ್ರಗಳು, ವಿಕಲ ಚೇತನ ವಿದ್ಯಾರ್ಥಿಗಳು ಪ್ರಮಾಣಪತ್ರ ತರಬೇಕು. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯಕ್ಕೆ ಹಾಜರಾಗಿ ಪರೀಕ್ಷೆಯು ಸುಸೂತ್ರವಾಗಿ ನಡೆಯಲು ಸಹಕಾರ ನೀಡಬೇಕೆಂದು ಆಯೋಗ ಮನವಿ ಮಾಡಿದೆ.
eesanje/url_46_34_10.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಕುಮಾರಸ್ವಾಮಿಯವರನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನ ಫಲ ನೀಡಲ್ಲ । ನಿಖಿಲ್
2
+ ಬೆಂಗಳೂರು,ಆ.25-ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಸ್ಥಾನದಿಂದ ಎಚ್.ಡಿ.ಕುಮಾರಸ್ವಾಮಿಯವರನ್ನು ಇಳಿಸಬೇಕೆಂಬ ಕಾಂಗ್ರೆಸ್ ಮಾಡುವ ಪ್ರಯತ್ನ ಫಲ ನೀಡುವುದಿಲ್ಲ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ಕುಮಾರಸ್ವಾಮಿಯವರನ್ನು ಯಾವ ರೀತಿ ಕಟ್ಟಿ ಹಾಕಬೇಕು ಎಂಬ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದು ಆರೋಪಿಸಿದರು.
4
+ ಗಣಿಗಾರಿಕೆಗೆ ಸಂಬಂಧಿಸಿದ ಪ್ರಕರಣ ಸುಪ್ರೀಂಕೋರ್ಟ್ನಲ್ಲಿ ಇದೆ. ಆದರೂ ಕಾಂಗ್ರೆಸ್ನವರು ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ನವರು ಮಾಡುತ್ತಿರುವ ಆರೋಪದಲ್ಲಿ ಸತ್ಯಾಂಶವಿದ್ದರೆ 2018 ರ ವಿಧಾನಸಭಾ ಚುನಾವಣೆಯ ನಂತರ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಲು ಏಕೆ ಬಂದಿದ್ದರು ಎಂದು ಪ್ರಶ್ನಿಸಿದರು.
5
+ ಗಣಿಗಾರಿಕೆಗೆ ಅನುಮತಿ ನೀಡಿ ಕುಮಾರಸ್ವಾಮಿ ಸಹಿ ಹಾಕಿಲ್ಲ. ಆದರೂ ಎಸ್ಐಟಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ರಾಜ್ಯಪಾಲರನ್ನು ಕೋರಿದೆ. ಇದು ಮುಡಾ ಹಗರಣವನ್ನು ಮುಚ್ಚಿ ಹಾಕಲು ಮಾಡಿರುವ ಯೋಜನೆಯಷ್ಟೇ ಎಂದು ಟೀಕಿಸಿದ ಅವರು, ಈ ಮೂಲಕ ಜನರನ್ನು ದಿಕ್ಕು ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ನವರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
6
+ ದೇಶಾದ್ಯಂತ ಮುಡಾ ಹಗರಣ ವಿಚಾರ ಚರ್ಚೆಯಾಗುತ್ತಿದ್ದು, ಪ್ರತಿನಿತ್ಯ ಒಂದಲ್ಲಾ ಒಂದು ದಾಖಲೆ ಹೊರಬರುತ್ತಿದೆ. ಆದರೂ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ ಎಂದು ಹೇಳಿದರು.ಲೋಕಸಭಾ ಚುನಾವಣೆ ಬಳಿಕ ಹಳೆ ಮೈಸೂರು ಭಾಗದಲ್ಲಿ ಮಾತ್ರವಲ್ಲದೆ, ಉತ್ತರ ಕರ್ನಾಟಕದಲ್ಲೂ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಶಕ್ತಿ ಹೆಚ್ಚಾಗಿದೆ. ಹೀಗಾಗಿ ಕಾಂಗ್ರೆಸ್ನವರು ಕಂಗಾಲಾಗಿದ್ದಾರೆ ಎಂದರು.
7
+ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಪತ್ನಿ ಪಾರ್ವತಮನವರು ನಿವೇಶನ ಕೋರಿ ಬರೆದಿರುವ ಪತ್ರ ಬಹಿರಂಗವಾಗಿದೆ. ಆ ಪತ್ರದಲ್ಲಿ 40:60 ಅನುಪಾತದ ನಿವೇಶನ ನಮಗೆ ಬೇಡ. ಇಂತಹ ಜಾಗವೇ ಬೇಕೆಂದು ಕೋರಿದ್ದಾರೆ. ಅದನ್ನು ವೈಟ್ನರ್ ಹಾಕಿ ಅಳಿಸಿದ್ದಾರೆ. ಅದರಲ್ಲಿ ಏನು ಬರೆದಿದ್ದರು? ಎಂದು ಪ್ರಶ್ನಿಸಿದ ಅವರು, ವಿಜಯನಗರದಲ್ಲಿ ನಿವೇಶನ ಕೇಳಿದ್ದರು ಎಂಬ ಮಾಹಿತಿ ನಮಗಿದೆ ಎಂದು ಹೇಳಿದರು.
8
+ ಚನ್ನಪಟ್ಟಣದಲ್ಲಿ ಕಾಂಗ್ರೆಸ್ಗೆ ನೆಲೆ ಇಲ್ಲ :ಆಡಳಿತಾರೂಢ ಕಾಂಗ್ರೆಸ್ಗೆ ಚನ್ನಪಟ್ಟಣದಲ್ಲಿ ನೆಲೆ ಇಲ್ಲ. ಚನ್ನಪಟ್ಟಣ ಕ್ಷೇತ್ರದ ಇತಿಹಾಸದಲ್ಲಿ ಆ ಪಕ್ಷ ಗಳಿಸಿರುವ ಮತಗಳು ಹಾಗೂ ಜೆಡಿಎಸ್ ಪಕ್ಷ ಗಳಿಸಿರುವ ಮತಗಳನ್ನು ಅವಲೋಕಿಸಿದಾಗ ಇದು ತಿಳಿಯುತ್ತದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
9
+ ಜೆಡಿಎಸ್ಗೆ 60 ಸಾವಿರದಷ್ಟು ಸಾಂಪ್ರದಾಯಿಕ ಮತಗಳಿಗೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ಗೂ ವೈಯಕ��ತಿಕ ವರ್ಚಸ್ಸಿದೆ. ಈ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಗೆಲ್ಲಬೇಕು ಎಂಬುದೇ ಎರಡೂ ಪಕ್ಷಗಳ ನಾಯಕರ ಉದ್ದೇಶ.
10
+ ದೆಹಲಿ ಮಟ್ಟದ ಬಿಜೆಪಿ ನಾಯಕರು, ನಮ ನಾಯಕರು ಸಮಾಲೋಚನೆ ನಡೆಸಿ ಉಪಚುನಾವಣೆಯ ಅಭ್ಯರ್ಥಿಯನ್ನು ಅಂತಿಮಗೊಳಿಸಲಿದ್ದಾರೆ. ಚುನಾವಣೆ ಸಂಬಂಧದ ವರದಿ ಈಗಾಗಲೇ ಹೈಕಮಾಂಡ್ ಕೈ ಸೇರಿದ್ದು, ಸದ್ಯದಲ್ಲೇ ಎನ್ಡಿಎ ಅಭ್ಯರ್ಥಿ ಯಾರೆಂಬುದನ್ನು ಘೋಷಣೆ ಮಾಡುತ್ತಾರೆ ಎಂದರು.
eesanje/url_46_34_11.txt ADDED
@@ -0,0 +1,22 @@
 
 
 
 
 
 
 
 
 
 
 
 
 
 
 
 
 
 
 
 
 
 
 
1
+ ಆ.27ರಂದೇ ಕೆಎಎಸ್ ಪರೀಕ್ಷೆ : ಹಠಕ್ಕೆ ಬಿದ್ದ ಸರ್ಕಾರ
2
+ 27:
3
+ ಬೆಂಗಳೂರು,ಆ.25-ಕರ್ನಾಟಕ ಗೆಜಿಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ನಿಗದಿಯಾಗಿರುವ ಪರೀಕ್ಷೆಯ ವಿಚಾರದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿದ್ದು, ಪ್ರತಿಭಟನೆಗಳಿಗೆ ಜಗ್ಗದೆ ಆ.27ರಂದೇ ಪ್ರಿಲಿಮ್ಸ್ ಪರೀಕ್ಷೆ ನಡೆಸುವುದಾಗಿ ಕೆಪಿಎಸ್ಸಿ ಹಾಗೂ ಸರ್ಕಾರ ಹಠಕ್ಕೆ ಬಿದ್ದಿವೆ.
4
+ ನಗರದ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದ ಕೆಲವರು ಕೆಎಎಸ್ ಪರೀಕ್ಷೆಗೆ ಪೂರ್ವ ತಯಾರಿ ಮಾಡಿಕೊಳ್ಳಲು ಕಾಲಾವಕಾಶ ನೀಡಬೇಕು. ಕನಿಷ್ಠ ಮೂರು ತಿಂಗಳ ಕಾಲ ಪರೀಕ್ಷೆಯನ್ನು ಮುಂದೂಡಬೇಕೆಂದು ಪಟ್ಟು ಹಿಡಿದಿದ್ದಾರೆ.
5
+ ಪ್ರತಿಭಟನೆಯ ಜೊತೆಗೆ ರಾಜ್ಯ ಸರ್ಕಾರದ ಸಚಿವರು, ಅಧಿಕಾರಿಗಳಿಗೆ ನಿರಂತರವಾಗಿ ಕರೆ ಮಾಡಿ ವಾಟ್ಸಪ್ ಸಂದೇಶಗಳನ್ನು ಕರೆಸಿ ಒತ್ತಡ ಹೇರುವ ತಂತ್ರಗಾರಿಕೆ ನಡೆಸಿದ್ದಾರೆ. ಸಾವಿರಾರು ಆಕಾಂಕ್ಷಿಗಳು ಸಚಿವರ, ಅಧಿಕಾರಿಗಳ ಮೊಬೈಲ್ ಸಂಖ್ಯೆಗಳನ್ನು ವಿನಿಮಯ ಮಾಡಿಕೊಂಡು ಏಕಕಾಲಕ್ಕೆ ಸಂದೇಶ ರವಾನಿಸಿದ್ದಾರೆ.
6
+ ಇದರಿಂದ ನಿದ್ದೆ ಮಾಡಲು ಆಗದೆ ಬಹಳಷ್ಟು ಮಂದಿ ಸಚಿವರು, ಅಧಿಕಾರಿಗಳು ಮೊಬೈಲ್ಗಳನ್ನು ಸ್ವಿಚ್ ಆಫ್ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.
7
+ ಇನ್ನು ಕೆಲವರು ಲ್ಯಾಂಡ್ಲೈನ್ಗಳ ನಂಬರ್ಗಳಿಗೂ ನಿರಂತರವಾಗಿ ಕರೆ ಮಾಡಿದ್ದಾರೆ. ಏಕಾಏಕಿ ಈ ರೀತಿಯ ದೂರವಾಣಿ ಕರೆಗಳನ್ನು ಸಹಿಸಲಾಗದೆ ಅಧಿಕಾರಿಗಳು, ಸಚಿವರು ಹೈರಾಣರಾಗಿದ್ದಾರೆ.ಪರೀಕ್ಷೆ ಮುಂದೂಡಬೇಕೆಂಬುದು ಆಕಾಂಕ್ಷಿಗಳ ಒತ್ತಾಯವಾಗಿದ್ದರೆ ಅದಕ್ಕೆ ಕ್ಯಾರೆ ಎನ್ನದೆ ನಿಗದಿತ ಅವಧಿಯಲ್ಲೇ ಪರೀಕ್ಷೆ ನಡೆಸಲಿದೆ ಎಂದು ಸರ್ಕಾರ ಸಡ್ಡು ಹೊಡೆದಿದೆ.
8
+ ಲೋಕಸೇವಾ ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಸರ್ಕಾರದ ಸಲಹೆ ಆಧರಿಸಿ ಪರೀಕ್ಷಾ ಪ್ರಕ್ರಿಯೆಗಳನ್ನು ನಡೆಸುತ್ತದೆ. ಈ ಹಿಂದೆ ಹಲವಾರು ಪರೀಕ್ಷೆಗಳಲ್ಲಿ ಹಗರಣಗಳು, ಪ್ರಶ್ನೆ ಪತ್ರಿಕೆ ಸೋರಿಕೆ, ಸ್ವಜನ ಪಕ್ಷಪಾತ ಸೇರಿ ನಾನಾ ಅದ್ವಾನಗಳು ನಡೆದಿದ್ದವು. ಪಿಎಸ್ಐ ಪರೀಕ್ಷೆಯಂತೂ ಒಂದು ಸರ್ಕಾರದ ಭವಿಷ್ಯವನ್ನೇ ನಿರ್ಧಾರ ಮಾಡುವಷ್ಟು ಸದ್ದು ಮಾಡಿತ್ತು. ಅದಕ್ಕೂ ಮೊದಲು ಕೆಎಎಸ್ ಪರೀಕ್ಷೆಗಳು ಗೊಂದಲಕ್ಕೊಳಗಾಗಿ ಲಕ್ಷಾಂತರ ಅಭ್ಯರ್ಥಿಗಳ ಭವಿಷ್ಯ ತೂಗುಯ್ಯಾಲೆಯಾಗಿತ್ತು.
9
+ ಇತ್ತೀಚಿನ ದಿನಗಳಲ್ಲಿ ಸಂಸತ್ ಹಾಗೂ ರಾಜ್ಯ ವಿಧಾನಮಂಡಲದಲ್ಲಿ ಪರೀಕ್ಷಾ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಪ್ರಮುಖ ಮಸೂದೆಗಳನ್ನು ರೂಪಿಸಲಾಗಿದೆ. ಹೀಗಾಗಿ ಯಾವುದೇ ಅಕ್ರಮಗಳು ನಡೆದರೂ ಕಠಿಣ ಶಿಕ್ಷೆ ವಿಧಿಸುವ ನಿಯಮಾವಳಿಗಳು ಚಾಲ್ತಿಯಲ್ಲಿವೆ.
10
+ ಕೆಎಎಸ್ ಪರೀಕ್ಷೆ ಪಾರದರ್ಶಕವಾಗಿ ನಡೆಯಲಿದೆ ಎಂದು ಸರ್ಕಾರ ಮತ್ತು ಕೆಪಿಎಸ್ಸಿ ಪದೇ ಪದೇ ಪ್ರತಿಪಾದಿಸುತ್ತಿದೆ. ಆದರೆ ಪ್ರತಿಭಟನೆ ನಡೆಸುತ್ತಿರುವ ಅಭ್ಯರ್ಥಿಗಳು ಎರಡು ತಿಂಗಳ ಮೊದಲೇ ಕೆಎಎಸ್ಗೆ ಪ್ರಶ್ನೆ ಪತ್ರಿಕೆ ಸಿದ್ದಗೊಳಿಸಲಾಗಿದೆ. ಬಹುಶಃ ಅದು ಸೋರಿಕೆಯಾಗಿರಬಹುದು ಅಥವಾ ತಮ ಕಡೆಯವರಿಗೆ ಪತ್ರಿಕೆಯನ್ನು ಸಂಬಂಧಪಟ್ಟವರು ತಲುಪಿಸಿರಬಹುದು ಎಂದು ದೂರುಗಳು ಕೇಳಿಬಂದಿವೆ.
11
+ ಈ ಹಿನ್ನಲೆಯಲ್ಲಿ ಆ.27ರಂದು ನಡೆಯಲಿರುವ ಪರೀಕ್ಷೆಗಳ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಸರ್ಕಾರ ಮತ್ತು ಅಭ್ಯರ್ಥಿಗಳ ನಡುವೆ ಸಂಘರ್ಷಮಯ ವಾತಾವರಣ ಸೃಷ್ಟಿಯಾಗಿದೆ. ಮಹಾರಾಷ್ಟ್ರದಲ್ಲಿ ಅಭ್ಯರ್ಥಿಗಳ ಒತ್ತಡಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಲಾಗಿತ್ತು. ರಾಜ್ಯದಲ್ಲೂ ಅದೇ ರೀತಿಯ ನಿರ್ಧಾರಗಳಾಗಬಹುದು ಎಂಬ ಅಂದಾಜು ತಲೆಕೆಳಗಾಗಿದೆ.
12
+ ಪ್ರತಿಭಟನೆಗೆ ಮಣಿದು ಕೃಷ್ಣ ಜನಾಷ್ಟಮಿಯಂದು ನಡೆಯುವ ಒಂದು ವಿಷಯದ ಪರೀಕ್ಷೆಗೆ ಮಾತ್ರ ಬೇರೆ ದಿನ ಸಮಯ ನಿಗದಿಪಡಿಸುವುದಾಗಿ ತಿಳಿಸಿರುವ ಮುಖ್ಯಮಂತ್ರಿ, ಉಳಿದಂತೆ ಪರೀಕ್ಷೆಗಳು ಯಥಾರೀತಿಯಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ. ಇದು ಸರ್ಕಾರದ ವಿರುದ್ಧ ಪ್ರತಿಭಟನಾಕಾರರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ.
13
+ ಕೆಎಎಸ್‌‍ ಪರೀಕ್ಷೆಗೆ ಅನಗತ್ಯ ಗೊಂದಲ : ಅತೀಕ್‌ ಬೇಸರಬೆಂಗಳೂರು,ಆ.25-ಕೆಎಎಸ್‌‍ ಪರೀಕ್ಷೆಗೆ ಎಲ್ಲಾ ಸಿದ್ಧತೆಗಳು ವ್ಯವಸ್ಥಿತವಾಗಿ ನಡೆದಿದ್ದು, ಕೆಲವೇ ಕೆಲವು ಅಭ್ಯರ್ಥಿಗಳ ಗುಂಪು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದೆ ಎಂದು ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್‌.ಕೆ.ಅತೀಕ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
14
+ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಯುವ ಪರೀಕ್ಷೆಯ ಆಕಾಂಕ್ಷಿಗಳ ಸಣ್ಣ ಗುಂಪು ಆ.27ಕ್ಕೆ ನಿಗದಿಯಾಗಿರುವ ಪರೀಕ್ಷೆಯನ್ನು ಮುಂದೂಡಿಸುವ ಲಾಬಿ ನಡೆಸುತ್ತಿದೆ ಎಂದು ಆಕ್ಷೇಪಿಸಿದ್ದಾರೆ.
15
+ ಈ ವಿಚಾರವಾಗಿ ಒತ್ತಡದ ತಂತ್ರಗಾರಿಕೆಯನ್ನು ಅನುಸರಿಸಲಾಗುತ್ತಿದೆ. ಕೆಪಿಎಸ್‌‍ಸಿಯ ಮುಖ್ಯ ಅಧಿಕಾರಿಗಳು, ಡಿಪಿಎಆರ್‌ ಮತ್ತು ಮುಖ್ಯಮಂತ್ರಿ ಸಚಿವಾಲಯದ ಅಧಿಕಾರಿಗಳಿಗೆ ನಿರಂತರವಾಗಿ ಕರೆ ಮಾಡಿ ವಾಟ್ಸಪ್‌ ಸಂದೇಶಗಳ ಸುರಿಮಳೆಗೈಯ್ಯಲಾಗಿದೆ.
16
+ ಅಸಂಖ್ಯ ಪ್ರಮಾಣದ ಸಂದೇಶಗಳು ಹರಿದುಬಂದಿದ್ದರಿಂದಾಗಿ ಅನಿವಾರ್ಯವಾಗಿ ನಾನು ನನ್ನ ಮೊಬೈಲ್‌ನ್ನು ಏರ್‌ಪ್ಲೇನ್‌ ಮೋಡ್‌ಗೆ ಹಾಕುವಂತಹ ಪರಿಸ್ಥಿತಿ ಬಂದಿತ್ತು ಎಂದು ವಿವರಿಸಿದ್ದಾರೆ. ಪರೀಕ್ಷೆ ಮುಂದೂಡಿಸಬೇಕೆಂದು ಪ್ರಯತ್ನಿಸುತ್ತಿರುವ ಗುಂಪು ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಹಗರಣ ನಡೆದಿದೆ ಎಂದು ತಪ್ಪು ಮಾಹಿತಿ ಹರಡುವ ಪ್ರಯತ್ನ ಮಾಡುತ್ತಿದ್ದಾರೆ.
17
+ ರಾಜ್ಯ ಸರ್ಕಾರ ಅಥವಾ ಕೆಪಿಎಸ್‌‍ಸಿ ಸರಿಸುಮಾರು ಒಂದೂವರೆ ಸಾವಿದಷ್ಟಿರುವ ಈ ಗುಂಪಿನ ಲಾಬಿಗೆ ಮಣಿದರೆ, ನಿರಂತರವಾಗಿ ಪರಿಶ್ರಮಪಟ್ಟು ನ್ಯಾಯಾಯಕ್ಕಾಗಿ ಎದುರು ನೋಡುತ್ತಿರುವ ಎರಡೂವರೆ ಲಕ್ಷ ಆಕಾಂಕ್ಷಿಗಳಿಗೆ ಅನ್ಯಾಯವಾಗಲಿದೆ ಎಂದು ವಿವರಿಸಿದ್ದಾರೆ.
18
+ ಪರೀಕ್ಷೆ ಬರೆಯಲು ನೈಜವಾಗಿ ತಯಾರಿ ನಡೆಸಿದವರು ಈಗಾಗಲೇ ಕೇಂದ್ರಗಳಿಗೆ ತೆರಳಲು ಟಿಕೆಟ್‌ ಬುಕ್‌ ಮಾಡಿ���ೊಂಡು ಸಜ್ಜುಗೊಂಡಿದ್ದಾರೆ. ವಯೋಮಿತಿ ಸಡಿಲಿಕೆಯಿಂದಾಗಿ ಹೆಚ್ಚುವರಿ ಅವಕಾಶ ಪಡೆದಿರುವವರು ಪರೀಕ್ಷೆ ಮುಂದೂಡಿಕೆಯಾದರೆ ಸಂಕಷ್ಟಕ್ಕೆ ಒಳಗಾಗಲಿದ್ದಾರೆ ಎಂದು ಎಲ್‌.ಕೆ.ಅತೀಕ್‌ ಆತಂಕ ವ್ಯಕ್ತಪಡಿಸಿದ್ದಾರೆ.
19
+ ಜೊತೆಯಲ್ಲಿ ಪರೀಕ್ಷೆಗಳು ಪದೇ ಪದೇ ಮುಂದೂಡಿಕೆ ಆಗುತ್ತಿರುವುದರ ವಾಸ್ತಾಂಶಗಳನ್ನು ವಿವರಿಸಿದ್ದಾರೆ. ಈ ಮೊದಲು ಫೆ.26ರಂದು ಪ್ರಿಲಿಮ್ಸೌ ಪರೀಕ್ಷೆಯನ್ನು ಮೇ 5ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು. ಬಳಿಕ ಲೋಕಸಭೆ ಚುನಾವಣೆ ಘೋಷಣೆಯಾಗಿದ್ದರಿಂದ 2ನೇ ಬಾರಿಗೆ ಜು.7ಕ್ಕೆ ನಿಗದಿಯಾಯಿತು.
20
+ ಆ ವೇಳೆಗೆ ಯುಪಿಎಸ್‌‍ಸಿ ಪರೀಕ್ಷೆ ಎದುರಾಗಿದ್ದರಿಂದ ಜು.21ಕ್ಕೆ ದಿನಾಂಕವನ್ನು ಮರುಪರಿಷ್ಕರಿಸಲಾಯಿತು. ಈ ಕುರಿತು ಜೂ.21ಕ್ಕೆ ದಿನಾಂಕ ಘೋಷಿಸಿದಾಗ 2017-18ರ ಸಾಲಿನ ಅಭ್ಯರ್ಥಿಗಳು ಹೆಚ್ಚುವರಿ ಅವಕಾಶ ಪಡೆಯಲು ವಯೋಮಿತಿಯ ಗರಿಷ್ಠ ಸಡಿಲಿಕೆಯನ್ನು ಕಳೆದುಕೊಂಡಿದ್ದರು.
21
+ ಅವರಿಗೆ ಅನುಕೂಲ ಮಾಡಿಕೊಡಲು ಸಾಫ್ಟ್ ವೇರ್‌ನಲ್ಲಿ ಸಣ್ಣ ಪ್ರಮಾಣದ ಬದಲಾವಣೆ ಮಾಡಬೇಕಾಯಿತು. ಜುಲೈ 6ಕ್ಕೆ ಇದು ಪೂರ್ಣಗೊಂಡಿದ್ದು, ಜು.21ಕ್ಕೆ 1560 ಅರ್ಜಿಗಳು ಸ್ವೀಕರಿಸಲ್ಪಟ್ಟಿದ್ದವು. ಇದರಿಂದಾಗಿ ಆ.25ಕ್ಕೆ ಮೂರನೇ ಬಾರಿಗೆ ದಿನಾಂಕ ನಿಗದಿಪಡಿಸಲಾಗಿತ್ತು. ಈ ನಡುವೆ ಬ್ಯಾಂಕಿಂಗ್‌ ಕ್ಷೇತ್ರಕ್ಕೆ ಸಂಬಂಧಪಟ್ಟ ಐಬಿಪಿಎಸ್‌‍ ಪರೀಕ್ಷೆಗಳಿಗೆ ಜು.1ರಂದು ದಿನಾಂಕ ಘೋಷಣೆಯಾಗಿತ್ತು. ಆದರೆ ಅದರ ಬಗ್ಗೆ ಯಾವುದೇ ಮಾಹಿತಿಯನ್ನೂ ನೀಡಿರಲಿಲ್ಲ. ಆನ್‌ಲೈನ್ನಲ್ಲೂ ಲಭ್ಯವಿರಲಿಲ್ಲ, ಪರಿಣಾಮ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ಆ.25ರ ಬದಲಾಗಿ 27ರಂದು ಪರೀಕ್ಷೆ ನಡೆಸಲು ಆ.3ರಂದು ಹೊಸ ದಿನಾಂಕವನ್ನು ಘೋಷಿಸಲಾಯಿತು ಎಂದು ಹೇಳಿದ್ದಾರೆ.
22
+ ಮುಂದಿನ ಎರಡು ತಿಂಗಳ ಅವಧಿಯಲ್ಲಿ ಭಾನುವಾರಗಳಂದು ಬಿಡುವಿಲ್ಲದ ಕಾರಣ ವಾರದ ಕೆಲಸದ ದಿನವೇ ಪರೀಕ್ಷೆ ನಡೆಸಲಾಗುತ್ತಿದೆ. ಎರಡೂವರೆ ಲಕ್ಷ ವಿದ್ಯಾರ್ಥಿಗಳು ಇದಕ್ಕೆ ತಯರಾಗಿದ್ದಾರೆ. ಕಾಗದಪತ್ರಗಳ ಮುದ್ರಣಕ್ಕೆ ನಾಲ್ಕರಿಂದ 5 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಸುದೀರ್ಘ ಕಾಲದವರೆಗೂ ಮುದ್ರಿತ ದಸ್ತವೇಜುಗಳನ್ನು ರಕ್ಷಿಸುವುದು ಸೂಕ್ತವಲ್ಲ. ಪ್ರಶ್ನೆಪತ್ರಿಕೆ ಬಹಿರಂಗದಂತಹ ಅಪಾಯಗಳು ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ವಾರದ ರಜಾ ದಿನವೇ ಪರೀಕ್ಷೆ ನಡೆಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.
eesanje/url_46_34_12.txt ADDED
@@ -0,0 +1,8 @@
 
 
 
 
 
 
 
 
 
1
+ ಕೆಎಎಸ್‌‍ ಪೂರ್ವಭಾವಿ ಪರೀಕ್ಷೆ ಮುಂದೂಡಲು ಆಗ್ರಹಿಸಿ ಪ್ರತಿಭಟನೆ
2
+
3
+ ಬೆಂಗಳೂರು,ಆ.25-ಆಗಸ್ಟ್‌ 27ಕ್ಕೆ ನಿಗದಿಯಾಗಿರುವ ಕೆಎಎಸ್‌‍ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಬೇಕು ಎಂದು ಆಗ್ರಹಿಸಿ ಫ್ರೀಡಂಪಾರ್ಕ್‌ನಲ್ಲಿ 50ಕ್ಕೂ ಹೆಚ್ಚು ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
4
+ ಒಂದು ತಿಂಗಳು ಮೊದಲೇ ಪ್ರಶ್ನೆ ಪತ್ರಿಕೆ ಮುದ್ರಣವಾಗಿರುವ ಹಿನ್ನೆಲೆಯಲ್ಲಿ ಭ್ರಷ್ಟಾಚಾರಕ್ಕೆ ಎಡೆಮಾಡಿಕೊಟ್ಟಂತಾಗಿದೆ. ಇನ್ನು ವಾರದ ದಿನದಲ್ಲಿ (ಮಂಗಳವಾರ) ಪರೀಕ್ಷೆ ನಿಗದಿಯಾಗಿರುವುದರಿಂದ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ತೊಂದರೆಯಾಗಿದೆ.
5
+ ಹೀಗಾಗಿ ರಾಜ್ಯ ಸರ್ಕಾರವು ಪರೀಕ್ಷೆಯನ್ನು ಮುಂದೂಡಬೇಕು, ಇಲ್ಲವೇ ನಮಗೆ ದಯಾಮರಣಕ್ಕೆ ಅನುಮತಿ ಕೊಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದಾರೆ.
6
+ ಪ್ರತಿಭಟನಾನಿರತ ಅಭ್ಯರ್ಥಿ ಕಾಂತಕುಮಾರ್‌ ಪ್ರತಿಕ್ರಿಯಿಸಿ, ಆಗಸ್ಟ್‌ 27 ಕ್ಕೆ ಪರೀಕ್ಷೆ ನಿಗದಿಯಾಗಿದೆ. ವಾರದ ದಿನದಲ್ಲಿ ಪರೀಕ್ಷೆ ನಡೆಯುತ್ತಿದೆ. ಒಂದು ತಿಂಗಳಿಗಿಂತ ಮುಂಚಿತವಾಗಿ ಪ್ರಶ್ನೆಪತ್ರಿಕೆ ಮುದ್ರಿಸಿದ್ದಾರೆ. ತರಾತುರಿಯಲ್ಲಿ ಈ ಪರೀಕ್ಷೆ ನಡೆಸಲಾಗುತ್ತಿದ್ದು, ಸಿಎಂಗೆ ಸುಳ್ಳು ಸುದ್ದಿ ನೀಡಿ ದಾರಿ ತಪ್ಪಿಸಲಾಗುತ್ತಿದೆ. ಸಿದ್ದರಾಮಯ್ಯ ಅವರು ಪ್ರಶ್ನೆ ಪತ್ರಿಕೆ ಮರು ಮುದ್ರಣ ಮಾಡಿಸಿ, ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
7
+ ಒಂದು ತಿಂಗಳ ಮುಂಚೆಯೇ ಪ್ರಶ್ನೆ ಪತ್ರಿಕೆ ಮುದ್ರಿಸಿದ್ದಾರೆ. ಇದು ಭ್ರಷ್ಟಾಚಾರಕ್ಕೆ ಎಡೆಮಾಡಿಕೊಟ್ಟಿದೆ. ಪರೀಕ್ಷೆ ಮುಂದೂಡಿ ಇಲ್ಲವೇ ನಮನ್ನ ಜೈಲಿಗೆ ಹಾಕಿ ಅಥವಾ ದಯಾಮರಣ ಕೊಡಿ ಎಂದು ಅಲವತ್ತುಕೊಂಡಿದ್ದಾರೆ.ಅಭ್ಯರ್ಥಿ ತೇಜಸ್‌‍ ಮಾತನಾಡಿ, ನಾವು ಅನುಮತಿ ಕೇಳಿದ್ದಾಗ ಬೇರೆ ಕಾರ್ಯಕ್ರಮ ಇದೆ ಎಂದಿದ್ದರು. 10ರಿಂದ 2 ಗಂಟೆವರೆಗೆ ಅವಕಾಶ ನೀಡಿದರು. ಆದರೆ ಇಲ್ಲಿ ಯಾವುದೇ ಪ್ರತಿಭಟನೆ ಕೂಡ ಇಲ್ಲ. ಪ್ರತಿಭಟನಾಕಾರರಿಗಿಂತ ಹೆಚ್ಚಾಗಿ ಪೊಲೀಸರ ನಿಯೋಜನೆಯಾಗಿದೆ ಎಂದು ಹೇಳಿದ್ದಾರೆ.
8
+ ಸರ್ಕಾರದ ಪರವಾಗಿ ಇಲ್ಲಿ ಯಾರೂ ಬಂದಿಲ್ಲ. ಪರೀಕ್ಷೆಗೆ ಸಾಕಷ್ಟು ಸಮಯ ಇಲ್ಲ, ಮಾನಸಿಕವಾಗಿ ಸಾಕಷ್ಟು ಕಷ್ಟವಾಗುತ್ತಿದೆ ಎಂದು ಅಭ್ಯರ್ಥಿ ಯಮುನಾ ಅಳಲು ತೋಡಿಕೊಂಡಿದ್ದಾರೆ. ರಾಜ್ಯ ಸರ್ಕಾರ ಪರೀಕ್ಷೆಯನ್ನು ಮುಂದೂಡಬೇಕು, ಇಲ್ಲವೇ ನಮಗೆ ದಯಾ ಮರಣಕ್ಕೆ ಅನುಮತಿ ನೀಡಬೇಕು ಎಂದು ಪಟ್ಟು ಹಿಡಿದಿದ್ದರಿಂದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
eesanje/url_46_34_2.txt ADDED
@@ -0,0 +1,8 @@
 
 
 
 
 
 
 
 
 
1
+ ಖರ್ಗೆ ಕುಟುಂಬದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಕೆಐಎಡಿಬಿ ಜಮೀನು ಮಂಜೂರು ಮಾಡಿರುವುದಕ್ಕೆ ಬಿಜೆಪಿ ವಿರೋಧ
2
+ -
3
+ ಬೆಂಗಳೂರು,ಆ.26-ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತವರ ಕುಟುಂಬ ನಡೆಸುತ್ತಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್ಗೆ ಕೆಐಎಡಿಬಿ ಜಮೀನು ಮಾಡಿರುವುದಕ್ಕೆ ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್ಸಿಂಗ್ ಸಿರೋಯ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.
4
+ ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿಯು ಹೈಟೆಕ್ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್ನಲ್ಲಿ ಹಂಚಿಕೆ ಮಾಡಿದ್ದ 45.94 ಎಕರೆ ಪೈಕಿ ಐದು ಎಕರೆ ಜಮೀನನ್ನು ಪರಿಶಿಷ್ಟ ಜಾತಿ ಕೋಟಾದಲ್ಲಿ ಈ ಟ್ರಸ್ಟ್ಗೆ ಮಂಜೂರು ಮಾಡಲಾಗಿದೆ.
5
+ ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದ ತಮ ಖಾತೆಯಲ್ಲಿ ಪೋಸ್ಟ್ ಮಾಡಿರುವ ಲಹರ್ಸಿಂಗ್ ಸಿರೋಯ ಅವರು, ಡಿಫೆನ್ಸ್ ಏರೋಸ್ಪೇಸ್ ಪಾರ್ಕ್ನಲ್ಲಿ ಖರ್ಗೆ ಕುಟುಂಬದ ಟ್ರಸ್ಟ್ಗೆ ಐದು ಎಕರೆ ಜಮೀನು ಮಂಜೂರು ಮಾಡಿರುವುದು ದಾಖಲೆ ಆಧಾರದಲ್ಲಿ ಸುದ್ದಿ ವಾಹಿನಿಯೊಂದರ ವರದಿಯಿಂದ ಬೆಳಕಿಗೆ ಬಂದಿದೆ.
6
+ ಬೆಂಗಳೂರು ಸಮೀಪದ ಹೈಟೆಕ್ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್ನಲ್ಲಿ ನಾಗರಿಕ ಸೌಲಭ್ಯಗಳಿಗೆ ಕಾದಿಟ್ಟ ಈ ಜಮೀನನ್ನು ಪರಿಶಿಷ್ಟ ಜಾತಿ ಕೋಟಾದಲ್ಲಿ ಮಂಜೂರು ಮಾಡಲಾಗಿದೆ. ಕುತೂಹಲಕಾರಿ ಅಂಶವೆಂದರೆ, ಟ್ರಸ್ಟ್ನಲ್ಲಿ ಸ್ವತಃ ಮಲ್ಲಿಕಾರ್ಜುನ ಖರ್ಗೆ, ಅವರ ಪತ್ನಿ ರಾಧಾಬಾಯಿ ಖರ್ಗೆ, ಅಳಿಯ ರಾಧಾಕೃಷ್ಣ, ಅವರ ಮಗ ಹಾಗೂ ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆ, ಮತ್ತೊಬ್ಬ ಪುತ್ರ ರಾಹುಲ್ ಖರ್ಗೆ ಟ್ರಸ್ಟಿಗಳಾಗಿದ್ದಾರೆ. ಇದು ಸ್ವಹಿತಾಸಕಿ ಸಂಘರ್ಷ, ಸ್ವಜನಪಕ್ಷಪಾತ, ಅಧಿಕಾರದ ದುರ್ಬಬಳಕೆ ಅಲ್ಲವೆ? ಎಂಬ ಪ್ರಶ್ನೆಗಳನ್ನು ಹುಟ್ಟಿಹಾಕಿದೆ.
7
+ ಸಚಿವ ಎಂ.ಬಿ.ಪಾಟೀಲ ಈ ಭೂಮಿ ಮಂಜೂರು ಮಾಡಲು ಒಪ್ಪಿಗೆ ನೀಡಿದ್ದಾದರೂ ಹೇಗೆ? ಖರ್ಗೆ ಕುಟುಂಬ ಯಾವಾಗ ಏರೋಸ್ಪೇಸ್ ಉದ್ಯಮಿಗಳಾದರು? ಈ ಅಕ್ರಮ ಹಂಚಿಕೆ ವಿಷಯ ಆರ್ಟಿಐ ಕಾರ್ಯಕರ್ತನ ಮೂಲಕ ರಾಜ್ಯಪಾಲರ ಕಚೇರಿಗೂ ತಲುಪಿದೆ ಎಂದು ಹೇಳಿದ್ದಾರೆ.
8
+ ಮೈಸೂರಿನ ವಿವಾದಿತ ಮುಡಾ ನಿವೇಶನಗಳನ್ನು ಸಿಎಂ ಸಿದ್ದರಾಮಯ್ಯನವರು ಬಿಟ್ಟುಕೊಡುವಂತಹ ಪರಿಸ್ಥಿತಿ ತಲೆದೋರಿದೆ. ಅದೇ ರೀತಿ ಮಲ್ಲಿಕಾರ್ಜುನ ಖರ್ಗೆ ಮತ್ತವರ ಕುಟುಂಬ ಅಂತಿಮವಾಗಿ ಈ ಜಮೀನು ಬಿಟ್ಟು ಕೊಡಬೇಕಾದೀತು ಎಂದು ಎಚ್ಚರಿಕೆ ನೀಡಿದ್ದಾರೆ.
eesanje/url_46_34_3.txt ADDED
@@ -0,0 +1,5 @@
 
 
 
 
 
 
1
+ ಸ್ತ್ರೀ ಕುಲಕ್ಕೆ ರಕ್ಷಣೆ ಕೊಡದ ಸರ್ಕಾರ ಇದ್ದರೂ ಸತ್ತಂತೆ : ವಿಜಯೇಂದ್ರ ವಾಗ್ದಳಿ
2
+ ,
3
+ ಬೆಂಗಳೂರು,ಆ.26- ಸ್ತ್ರೀಕುಲಕ್ಕೆ ರಕ್ಷಣೆ ಕೊಡಲಾಗದ ಸರ್ಕಾರ ಇದ್ದರೂ ಸತ್ತಂತೆ, ಇದನ್ನು ಕಾಂಗ್ರೆಸ್ ಸರ್ಕಾರ ಆತವಿಮರ್ಶೆ ಮಾಡಿಕೊಳ್ಳಲಿ, ಅರಿಸಿನ ಕುಂಕುಮದ ಬಣ್ಣವನ್ನೇ ಧ್ವಜವಾಗಿಸಿಕೊಂಡಿರುವ ಕನ್ನಡನಾಡಿನಲ್ಲಿ ಈ ಪರಿಯ ಮಹಿಳಾ ಪೀಡನೆ ನಡೆದಿರುವುದು ಇಡೀ ರಾಜ್ಯವೇ ತಲೆತಗ್ಗಿಸುವ ಸಂಗತಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ದ ವಾಗ್ದಳಿ ನಡೆಸಿದ್ದಾರೆ.
4
+ ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಭ್ರಷ್ಟಾಚಾರ, ಸ್ವಜನ ಪಕ್ಷಪಾತದಲ್ಲೇ ಮುಳುಗಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಳೆದ 7 ತಿಂಗಳಲ್ಲೇ 340 ಅತ್ಯಾಚಾರ ಪ್ರಕರಣಗಳು ದಾಖಲಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕಿಡಿಕಾರಿದ್ದಾರೆ.
5
+ ಕರ್ನಾಟಕ ಅತ್ಯಾಚಾರಿಗಳ ರಾಜ್ಯ, ಹೆಣ್ಣುಮಕ್ಕಳ ಪಾಲಿಗೆ ಅಸುರಕ್ಷಿತ ತಾಣ ಎಂಬ ಕೆಟ್ಟ ಹೆಸರು ಬರುತ್ತಿದೆ. ಇದು ಮಹಾ ಶಿವಶರಣೆ ಅಕ್ಕಮಹಾದೇವಿ ನಡೆದಾಡಿದ ಕ್ಷೇತ್ರ, ಕಿತ್ತೂರು ಚೆನ್ನಮನ ನಾಡು, ಒನಕೆ ಓಬವ್ವಳ ಛಲ ಮೆರೆದ ನೆಲ, ಕೆಳದಿ ಚೆನ್ನಮ, ಬೆಳವಡಿ ಮಲ್ಲಮ, ರಾಣಿ ಅಬ್ಬಕ್ಕ ಮೊದಲಾದ ವೀರನಾರಿಯರು ಶೌರ್ಯ ಮೆರೆದ ಹೆಮೆಯ ಬೀಡು ಎಂದು ಹೇಳಿಕೊಳ್ಳಲು ಹಿಂಜರಿಯುವಷ್ಟು ನಾರಿ ಕುಲಕ್ಕೆ ರಕ್ಷಣೆ ನೀಡಲಾಗದ ಪರಿಸ್ಥಿತಿ ರಾಜ್ಯದಲ್ಲಿ ಉದ್ಭವವಾಗಿದೆ ಎಂದು ಸರ್ಕಾರವನ್ನು ವಿಜಯೇಂದ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
eesanje/url_46_34_4.txt ADDED
@@ -0,0 +1,7 @@
 
 
 
 
 
 
 
 
1
+ ಜೋಗ ಜಲಪಾತ ವೀಕ್ಷಣೆಗೆ ದುಬಾರಿ ಶುಲ್ಕ, ಸ್ಥಳೀಯರು ಹಾಗೂ ಪ್ರವಾಸಿಗರಿಂದ ಆಕ್ರೋಶ
2
+ ಬೆಂಗಳೂರು,ಆ.26– ವಿಶ್ವವಿಖ್ಯಾತ ಜೋಗ ಜಲಪಾತ ಪ್ರವಾಸಿಗರಿಗೆ ವೀಕ್ಷಣೆಗೆ ಬಲು ದುಬಾರಿಯಾಗಿದೆ. ಜೋಗ ನಿರ್ವಹಣಾ ಪ್ರಾಧಿಕಾರ ಜಲಪಾತ ವೀಕ್ಷಣೆಗೆ ಹೆಚ್ಚಿನ ಶುಲ್ಕ ವಿಧಿಸಿದೆ. ಪ್ರವಾಸಿಗರ ವೀಕ್ಷಣೆಗೆ ಹೆಚ್ಚಿಸಿರುವ ದರಕ್ಕೆ ಪ್ರವಾಸಿಗರು ಹಾಗೂ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
3
+ ಜೋಗವನ್ನು ಅಭಿವೃದ್ಧಿ ಪಡಿಸುವ ವೇಳೆ ಜಲಪಾತದ ವೀಕ್ಷಣೆಯ ದರ ಏರಿಕೆ ಯಾವ ಕಾರಣಕ್ಕೆ ಮಾಡಿದರು ಎಂಬ ಪ್ರಶ್ನೆಯನ್ನು ಸ್ಥಳೀಯರು ಮಾಡುತ್ತಿದ್ದಾರೆ. ಜೋಗ ಜಲಪಾತದ ಪ್ರವೇಶ ದರ, ಪಾರ್ಕಿಂಗ್ ದರವನ್ನು ಏರಿಕೆ ಮಾಡಲಾಗಿದೆ. ಅಲ್ಲದೇ ಜಲಪಾತದ ವೀಕ್ಷಣೆಯನ್ನು ಪ್ರವಾಸಿಗರಿಗೆ ಕೇವಲ ಎರಡು ಗಂಟೆಗೆ ಸೀಮಿತ ಮಾಡಲಾಗಿದೆ.
4
+ ಜೋಗದಲ್ಲಿ ಹಿಂದೆ ಇದ್ದ ದರಕ್ಕಿಂತ ಶೇ 30 ರಿಂದ ಶೇ 50 ರಷ್ಟು ಏರಿಕೆ ಮಾಡಲಾಗಿದೆ. ಹಿಂದೆ ಬಸ್ಗೆ 150 ರೂ. ಇತ್ತು. ಈಗ ಅದನ್ನು 200ಕ್ಕೆ ಏರಿಕೆ ಮಾಡಲಾಗಿದೆ. ಅದೇ ರೀತಿ ಕಾರಿಗೆ 50 ರೂ. ಇದ್ದು ಅದನ್ನು 80 ರೂ. ಏರಿಕೆ ಮಾಡಲಾಗಿದೆ. ಒಬ್ಬ ಪ್ರವಾಸಿಗನಿಗೆ 10 ರೂ. ಇದ್ದ ಶುಲ್ಕ 20 ರೂ. ಗೆ ಏರಿಕೆ ಮಾಡಲಾಗಿದೆ. ಶುಲ್ಕ ಏರಿಕೆ ಮಾಡಿ ಜೋಗ ನಿರ್ವಹಣಾ ಪ್ರಾಧಿಕಾರ ಈಗಾಗಲೇ ಲಕವನ್ನು ಅಳವಡಿಸಿದೆ. ಪ್ರಕೃತಿ ದತ್ತವಾಗಿರುವ ಜಲಪಾತ ವೀಕ್ಷಣೆಗೆ ಏಕೆ ದುಬಾರಿ ಶುಲ್ಕ ಎಂಬುದು ಎಲ್ಲರ ಕೆಂಗಣ್ಣಿಗೆ ಕಾರಣವಾಗಿದೆ.
5
+ ಜೋಗ ವೀಕ್ಷಣೆ 2 ಗಂಟೆಗೆ ಸೀಮಿತ :ಪ್ರವಾಸಿಗರು ಶರಾವತಿ ನದಿ ಮೇಲಿಂದ ಬೀಳುವ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಗಂಟೆ ಗಟ್ಟಲೆ ನಿಂತು ಎಲ್ಲ ಆಯಾಮಗಳಿಂದಲೂ ನೋಡಿ,ಫೋಟೋ, ವಿಡಿಯೋ ತೆಗೆದುಕೊಂಡು ಖುಷಿ ಪಡುತ್ತಿದ್ದರು.
6
+ ಆದರೆ, ಇನುಂದೆ ನೀವು ಜೋಗಕ್ಕೆ ಟಿಕೆಟ್ ನೀಡಿ ಬಂದಿದ್ದೀರಿ ಅಂದರೆ ಜೋಗವನ್ನು ಕೇವಲ ಎರಡು ಗಂಟೆಗಳ ಕಾಲ ಮಾತ್ರ ವೀಕ್ಷಿಸಲು ಸಾಧ್ಯ. ಜೋಗ ಜಲಪಾತವನ್ನು ಮಳೆಗಾಲದಲ್ಲಿ ನೋಡುವುದೇ ಒಂದು ಅದ್ಭುತ. ಆದರೆ, ಮಳೆಗಾಲದಲ್ಲಿ ಮೇಲಿಂದ ಕೆಳಕ್ಕೆ ಬೀಳುವ ನೀರಿನಿಂದ ಮಂಜು ಎದ್ದೇಳುತ್ತದೆ.
7
+ ಇದರಿಂದ ಜಲಪಾತವನ್ನು ಸರಿಯಾಗಿ ನೋಡಲು ಆಗುವುದಿಲ್ಲ. ಜೋರಾಗಿ ಗಾಳಿ ಬಂದಾಗ ಮಾತ್ರ ಜೋಗದ ಸೌಂದರ್ಯವನ್ನು ಸವಿಯಲು ಸಾಧ್ಯವಾಗುತ್ತದೆ. ಆದರೆ, ಇವುಗಳಿಗೆ ಕೂಡ ಬ್ರೇಕ್ ಬೀಳುವ ಸಾಧ್ಯತೆಗಳಿವೆ.
eesanje/url_46_34_5.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ಕಾರಾಗೃಹದಲ್ಲಿ ನಟ ದರ್ಶನ್‌ಗೆ ರಾಜ್ಯಾತಿಥ್ಯ, ಜೈಲರ್ ಸೇರಿ 7 ಅಧಿಕಾರಿಗಳು ಅಮಾನತು
2
+ ' : 7
3
+ ಬೆಂಗಳೂರು,ಆ.26- ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ಗೆ ರಾಜ್ಯಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲಿನ ಏಳು ಮಂದಿಯನ್ನು ಅಮಾನತುಗೊಳಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಹಿರಿಯ ಅಧಿಕಾರಿಗಳು ಶಾಮೀಲಾಗಿದ್ದರೆ ಅವರನ್ನೂ ಅಮಾನತುಗೊಳಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.
4
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೋಟೋ, ವಿಡಿಯೋಗಳು ಬಹಿರಂಗಗೊಂಡ ಬೆನ್ನಲ್ಲೇ ದರ್ಶನ್‌ ಅವರನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.
5
+ ನಿನ್ನೆ ಸಂಜೆ 4.30ರ ವೇಳೆಗೆ ತಮಗೆ ಈ ಬಗ್ಗೆ ಮಾಹಿತಿ ಬಂತು. ತಕ್ಷಣವೇ ಬಂಧಿಖಾನೆಯ ಡಿಜಿಪಿ ಅವರೊಂದಿಗೆ ಸಮಾಲೋಚನೆ ನಡೆಸಿ ರಾತ್ರಿ 1.30ರವರೆಗೂ ಪರಿಶೀಲನೆ ನಡೆಸಿದ್ದೇವೆ. ನಂತರ ಜೈಲರ್‌ಗಳಾದ ಶರಣಬಸವ, ಅಮೀನ್‌ಗಢ, ಪ್ರಭು.ಎಸ್‌‍ ಕಂದೇವಾಡ್‌, ಸಹಾಯಕ ಜೈಲಾಧಿಕಾರಿಗಳಾದ ಎಲ್‌.ಎಸ್‌‍ತಿಪ್ಪೇಸ್ವಾಮಿ, ಶ್ರೀಕಾಂತ್‌ ತಳ್ವಾರ್‌, ಹೆಡ್‌ ವಾರ್ಡನ್‌ಗಳಾದ ವೆಂಕಪ್ಪ, ಸಂಪತ್‌ಕುಮಾರ್‌ ಕಡಪಟ್ಟಿ, ವಾರ್ಡನ್‌ ಬಸಪ್ಪ ತೇಲಿ ಅವರನ್ನು ಅಮಾನತುಗೊಳಿಸಲಾಗಿದೆ.
6
+
7
+ ದರ್ಶನ್‌ಗೆ ನಿಯಮ ಮೀರಿ ಆತಿಥ್ಯ ನೀಡಿದ ಬಗ್ಗೆ ವರದಿ ಕೇಳಲಾಗಿದೆ. ಡಿಜಿಪಿಯವರು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗಿದೆ. ಹಿರಿಯ ಅಧಿಕಾರಿಗಳನ್ನು ಅಲ್ಲಿಂದ ವರ್ಗಾವಣೆ ಮಾಡಲಾಗಿದೆ. ಪರಪ್ಪನ ಅಗ್ರಹಾರ ಮಾತ್ರವಲ್ಲ ರಾಜ್ಯದ ಯಾವುದೇ ಜೈಲಿನಲ್ಲೂ ಈ ರೀತಿಯ ಘಟನೆಗಳು ಆಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದರು.
8
+ ಜೈಲಿನಲ್ಲಿರುವ ದರ್ಶನ್‌ಗೆ ಜೈಲಿನ ನಿಯಮಾವಳಿಗಳ ಪ್ರಕಾರವೇ ಸೌಲಭ್ಯಗಳನ್ನು ಒದಗಿಸಬೇಕು. ಅದನ್ನು ಹೊರತುಪಡಿಸಿ ಹೆಚ್ಚುವರಿ ಸೌಲಭ್ಯ ನೀಡಬಾರದೆಂದು ಈ ಮೊದಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು. ಅದರ ಹೊರತಾಗಿಯೂ ಈಗ ದರ್ಶನ್‌ ಜೈಲಿನಲ್ಲೇ ಸಿಗರೇಟ್‌ ಸೇದುತ್ತಿರುವ ಹಾಗೂ ಟೀ ಕುಡಿಯುತ್ತಿರುವ ಫೋಟೋಗಳು ಬಹಿರಂಗಗೊಂಡಿವೆ. ಅದೇ ರೀತಿ ವಿಡಿಯೋ ಕಾಲ್‌ ಮಾಡಿರುವ ವಿಡಿಯೋ ಕೂಡ ಹರಿದಾಡುತ್ತಿದೆ. ಈ ನಿಟ್ಟಿನಲ್ಲಿ ತನಿಖೆಗೆ ಆದೇಶಿಸಲಾಗಿದೆ ಎಂದರು.
9
+ ಘಟನೆಯನ್ನು ನಾವು ಸಮರ್ಥಿಸಿಕೊಳ್ಳುತ್ತಿಲ್ಲ. ದರ್ಶನ್‌ ಪ್ರಕರಣದಲ್ಲಿ ತಮ ಮೇಲೆ ಯಾವ ಒತ್ತಡವೂ ಇಲ್ಲ. ನನ್ನ ಮಟ್ಟದವರೆಗೂ ತಲುಪಲು ಯಾರಿಗೂ ಸಾಧ್ಯವಿಲ್ಲ. ಯಾರ ಒತ್ತಡಗಳಿಗೂ ತಾವು ಮಣಿಯುವುದಿಲ್ಲ. ಸರ್ಕಾರಕ್ಕೆ ಯಾವ ಮುಜುಗರ ಇಲ್ಲ. ಆಗಿರುವ ಲೋಪಗಳನ್ನು ಸರಿಪಡಿಸುತ್ತೇವೆ. ತಪ್ಪಿತಸ್ಥರ ವಿರುದ್ಧ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಹೇಳಿದರು.ಜೈಲಿನಲ್ಲಿ ದಿನದ 24 ಗಂಟೆ ಹಾಗೂ ವಾರಪೂರ್ತಿ ನಿಗಾವಹಿಸಲಾಗುತ್ತಿದೆ.
10
+ ಅದರ ನಡುವೆಯೂ ಈ ರೀತಿಯ ಘಟನೆಗಳು ನಡೆದಿವೆ ಎಂದಾದರೆ ಅದನ್ನು ಹಿರಿಯ ಅಧಿಕಾರಿಗಳು ಗಮನಿಸಬೇಕಿತ್ತು. ಅಲ್ಲಿ ಲೋಪವಾಗಿದೆ. ಹೀಗಾಗಿ ಹಿರಿಯ ಅಧಿಕಾರಿಗಳಿಂದ ತನಿಖೆ ನಡೆಸಲಾಗುತ್ತಿದೆ. ಹಿರಿಯ ಅಧಿಕಾರಿಗಳ ಪಾತ್ರ ಇದ್ದರೆ ಅವರನ್ನು ಅಮಾನತುಗೊಳಿಸಲಾಗುವುದು ಎಂದು ತಿಳಿಸಿದರು.
11
+ ಹಿರಿಯ ಅಧಿಕಾರಿಗಳನ್ನು ರಕ್ಷಿಸಿ ಕಿರಿಯರನ್ನು ಶಿಕ್ಷಿಸುವ ಸಂದರ್ಭಗಳಿಲ್ಲ. ಈ ಮೊದಲು ದರ್ಶನ್‌ಗೆ ಚಿಕನ್‌ ಬಿರಿಯಾನಿ ಕೊಟ್ಟಿದ್ದಾರೆ ಎಂಬ ಆರೋಪಗಳು ಬಂದವು. ಆಗ ನಾವು ಪರಿಶೀಲನೆ ನಡೆಸಿದಾಗ ಅಂತಹ ಯಾವುದೇ ಘಟನೆಗಳು ನಡೆದಿರಲಿಲ್ಲ. ಆ ವೇಳೆಯಲ್ಲೇ ಜೈಲಿನ ಮ್ಯಾನ್ಯುಲ್‌ ಹೊರತುಪಡಿಸಿ ಹೆಚ್ಚುವರಿ ಸೌಲಭ್ಯ ನೀಡಬಾರದೆಂದು ಸೂಚಿಸಿದ್ದೆವು ಎಂದು ಹೇಳಿದರು.
12
+ ಜೈಲಿನಲ್ಲಿ ಮೊಬೈಲ್‌ ಬಳಕೆ ಮಾಡಿ ವಿಡಿಯೋ ಕಾಲ್‌ ಮಾಡಿದ್ದು ಯಾರು?, ಫೋಟೋ ತೆಗೆದಿದ್ದು ಯಾರು? ಫೋಟೋಗಳು ಹೇಗೆ ಹೊರಗೆ ಬಂದವು? ಮೊಬೈಲ್‌ ಒಳಗೆ ಹೋಗಿದ್ದು ಹೇಗೆ ಎಂಬೆಲ್ಲ ವಿಚಾರಗಳು ತನಿಖೆಯಾಗಲಿವೆ. ಈಗ ಘಟನೆಯಂತೂ ಆಗಿದೆ. ಈ ಮೊದಲು ಅಲ್ಲಿ ಹೈ ಫ್ರೀಕ್ವೆನ್ಸಿ ಜಾಮರ್‌ ಅಳವಡಿಸಲಾಗಿತ್ತು. ಆದರೆ ಅದರಿಂದ ಅಕ್ಕಪಕ್ಕದವರಿಗೆ ತೊಂದರೆಯಾಗುತ್ತಿದೆ ಎಂಬ ಕಾರಣಕ್ಕೆ ಜಾಮರ್‌ನ ಫ್ರೀಕ್ವೆನ್ಸಿಯನ್ನು ಕಡಿಮೆ ಮಾಡಲಾಗಿದೆ ಎಂದು ತಿಳಿಸಿದರು.
13
+ ಜೈಲಿನ ಒಳಗೆ ಎಲ್ಲರಿಗೂ ಹೋಗಲು ಅವಕಾಶ ನೀಡುವುದಿಲ್ಲ. ದರ್ಶನ್‌ ಭೇಟಿಗೂ ಮಾರ್ಗಸೂಚಿಗಳ ಅನ್ವಯ ನಿರ್ಬಂಧಗಳಿವೆ. ಈ ಮೊದಲು ಜೈಲಿನಲ್ಲಿ ಕೆಲವು ಆಕ್ಷೇಪಾರ್ಹ ವಸ್ತುಗಳು ದೊರೆಯುತ್ತಿವೆ ಎಂದು ಆರೋಪಗಳು ಬಂದಾಗ ಸಿಸಿಬಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದರು. ಆಗ ಏನೂ ಸಿಕ್ಕಿರಲಿಲ್ಲ. ಇದರ ಬಗ್ಗೆ ಕೂಡ ತನಿಖೆ ನಡೆಸುತ್ತೇವೆ. ಜೈಲಿನಲ್ಲಿ ಮೂರು ದಿನಗಳ ಹಿಂದಿನವರೆಗೂ ಸಿಸಿಟಿವಿಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ. ಮಾಹಿತಿ ಸೋರಿಕೆ ಆಗಿತ್ತೇ? ಆಕ್ಷೇಪಾರ್ಹ ವಸ್ತುಗಳನ್ನು ಅಲ್ಲಿಂದ ಸ್ಥಳಾಂತರ ಮಾಡಲಾಗಿತ್ತೇ ಎಂಬೆಲ್ಲ ವಿಚಾರಗಳ ಬಗ್ಗೆ ತನಿಖೆ ನಡೆಯಲಿದೆ ಎಂದರು.
14
+ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಸಡಿಲಗೊಳ್ಳಲು ಬಿಡುವುದಿಲ್ಲ. ಜೈಲಿನಲ್ಲಿ ಮುಂದೆ ಈ ರೀತಿಯ ಬೆಳವಣಿಗೆಗಳಾಗದಂತೆ ಎಚ್ಚರಿಕೆ ವಹಿಸುತ್ತೇವೆ. ಕೊಲೆ ಪ್ರಕರಣದ ದೋಷಾರೋಪ ಪಟ್ಟಿಯ ಬಗ್ಗೆ ಯಾವುದೇ ಅನುಮಾನ ಇಟ್ಟುಕೊಳ್ಳುವ ಅಗತ್ಯವಿಲ್ಲ ಎಂದು ಅವರು ಹೇಳಿದರು.
15
+ ಈ ಹಿಂದೆ ಹಳೆಯ ಪ್ರಕರಣದಲ್ಲಿ ದರ್ಶನ್‌ ವಿರುದ್ದ ಕಾನೂನು ಕ್ರಮ ಕೈಗೊಳ್ಳುವ ಪರಿಶೀಲನೆ ನಡೆಯಲಿದೆ. ಅಗತ್ಯ ಬಿದ್ದರೆ ಪ್ರಕರಣವನ್ನು ದಾಖಲಿಸುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ದರ್ಶನ್‌ ಅವರನ್ನು ಆತಿಥ್ಯ ಸಿಗದೇ ಇರುವ ಕಡೆಗೆ ಸ್ಥಳಾಂತರದ ಕುರಿತು ಪರಿಶೀಲನೆ ನಡೆಸಲಾಗುವುದು. ಪ್ರಕರಣದಲ್ಲಿ ಯಾವುದನ್ನು ಮರೆಮಾಚುವ ಅಥವಾ ಸುಳ್ಳು ಮಾಹಿತಿ ನೀಡುವ ಅಗತ್ಯ ತಮ���ಿಲ್ಲ ಎಂದು ಪರಮೇಶ್ವರ್‌ ಸ್ಪಷ್ಟನೆ ನೀಡಿದರು.
eesanje/url_46_34_6.txt ADDED
@@ -0,0 +1,6 @@
 
 
 
 
 
 
 
1
+ ರಾಜ್ಯದೆಲ್ಲೆಡೆ ಜನಾಷ್ಟಮಿ ಸಂಭ್ರಮ : ಮನೆ-ಮನಗಳಲ್ಲಿ ಕೃಷ್ಣನಾಮ ಜಪ
2
+
3
+ ಬೆಂಗಳೂರು,ಆ.26-ಶ್ರೀ ಕೃಷ್ಣ ಜನಾಷ್ಟಮಿ ಅಂಗವಾಗಿ ರಾಷ್ಟ್ರದೆಲ್ಲೆಡೆ ಇಂದು ಹರೇ ರಾಮ ಹರೇ ಕೃಷ್ಣ ಕೃಷ್ಣ ಹರೇ ರಾಮ ಎಂದು ಭಜಿಸಿ ಪರಮಾತನ ನಾಮಸರಣೆ ಘೋಷ ಎಲ್ಲೆಡೆ ಮೊಳಗಿತು. ಭಾರತದಲ್ಲಿ ಶ್ರೀಕೃಷ್ಣ ಜನಾಷ್ಟಮಿ ತನ್ನದೇ ಆದ ವಿಶೇಷತೆಗಳನ್ನು ಹೊಂದಿದ್ದು, ಮನೆಮನೆಗಳಲ್ಲಿ ಪುಟ್ಟ ಪುಟ್ಟ ಕಂದಮಗಳು ಕೃಷ್ಣ-ರಾಧೆಯರ ವೇಷಭೂಷಣ ತೊಟ್ಟು ಸಂಭ್ರಮಿಸುತ್ತಾರೆ. ಇನ್ನೂ ಕೆಲವೆಡೆ ಮಡಿಕೆ ಕಟ್ಟಿ ಹೊಡೆದು, ಬೆಣ್ಣೆ ಕದ್ದು ತಿನ್ನುವ ಸಂದರ್ಭವನ್ನು ಸರಿಸಿದ್ದಾರೆ.
4
+ ದೇವಸ್ಥಾನಗಳಲ್ಲಂತೂ ಇಂದು ಮುಂಜಾನೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಅದರಲ್ಲೂ ಭಗವಾನ್‌ ಶ್ರೀ ಕೃಷ್ಣ ಜನಸ್ಥಳವಾದ ಮಥುರಾದಲ್ಲಿ ಶ್ರೀಕೃಷ್ಣನ ಜನಾಷ್ಟಮಿ ಸಂಭ್ರಮ ಜೋರಾಗಿತ್ತು.ರಾಜಧಾನಿ ಬೆಂಗಳೂರಿನ ಇಸ್ಕಾನ್‌ ದೇವಾಲಯದಲ್ಲಂತೂ ಸ್ವರ್ಗವೇ ಭೂಲೋಕಕ್ಕೆ ಬಂದಂತೆ ಭಾಸವಾಗುತ್ತಿತ್ತು. ಇಡೀ ದೇವಾಲಯ ಹೂವಿನ ಅಲಂಕಾರದಿಂದ ಅಲಂಕೃತಗೊಂಡಿತ್ತು.
5
+ ನಗರ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪುನೀತರಾದರು.ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ತಾಲ್ಲೂಕು ಯಾದವ ಸಂಘದ ವತಿಯಿಂದ ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಶ್ರೀಕೃಷ್ಣ ಜನಾಷ್ಟಮಿ ಕಾರ್ಯಕ್ರಮವನ್ನು ಹಮಿಕೊಳ್ಳಲಾಗಿತ್ತು.
6
+ ಶ್ರೀ ವೇಣುಗೋಪಾಲ ಸ್ವಾಮಿಯನ್ನು ಮುತ್ತಿನ ಪಲ್ಲಕ್ಕಿಯಲ್ಲಿ ಅಲಂಕರಿಸಿ ವಿವಿಧ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು.ಶಾಲೆಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮ ಮಕ್ಕಳಿಗೆ ರಾಧ-ಕೃಷ್ಣ ವೇಷಗಳನ್ನು ಹಾಕಿಸಿ ಪೋಷಕರು ಸಂಭ್ರಮಿಸಿದರು.
eesanje/url_46_34_7.txt ADDED
@@ -0,0 +1,16 @@
 
 
 
 
 
 
 
 
 
 
 
 
 
 
 
 
 
1
+ ಕಾಂಗ್ರೆಸ್ ಶಾಸಕರಿಗೆ 100 ಕೋಟಿ ರೂ. ಆಫರ್, ಆಪರೇಷನ್ ಕಮಲದ ಯತ್ನ
2
+ 100
3
+ ಬೆಂಗಳೂರು,ಆ.25-ಆಪರೇಷನ್ ಕಮಲದ ಪ್ರಯತ್ನಗಳು ನಡೆಯುತ್ತಿ ರುವ ಬಗ್ಗೆ ಕಾಂಗ್ರೆಸ್ನ ಶಾಸಕಾಂಗ ಸಭೆಯಲ್ಲಿ ಚರ್ಚೆಯಾಗಿತ್ತು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ನ ಮಧ್ಯವರ್ತಿಗಳು ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಿ 100 ಕೋಟಿ ರೂ. ಆಮೀಷವೊಡ್ಡುತ್ತಿರುವ ಬಗ್ಗೆ ನಡೆಯುತ್ತಿರುವ ಚರ್ಚೆಗಳು ಸತ್ಯ ಎಂದರು.
4
+ ನಮ ಶಾಸಕರು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ ಎಂದ ಮೇಲೆ ಅದರಲ್ಲಿ ವಾಸ್ತಾವಂಶ ಇದೆ ಎಂದು ಶಾಸಕ ಗಣಿಗ ರವಿಕುಮಾರ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರ ಪ್ರಸ್ತಾಪಿಸಿದರು.
5
+ ಬಿಜೆಪಿ ಹಲವು ದಿನಗಳಿಂದಲೂ ಪ್ರಯತ್ನ ಮಾಡುತ್ತಿದೆ. ಈಗಲೂ ಪ್ರಯತ್ನಗಳು ಮುಂದುವರೆಸಿದೆ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರನ್ನು ಅಸ್ಥಿರಗೊಳಿಸುವ ಮೂಲಕ ರಾಜ್ಯ ಸರ್ಕಾರವನ್ನು ಪತನಗೊಳಿಸುವ ಉದ್ದೇಶ ಹೊಂದಿದೆ. ನಮ ಯಾವ ಶಾಸಕರು ಇದಕ್ಕೆ ಬಲಿಯಾಗುವುದಿಲ್ಲ ಎಂದು ಹೇಳಿರುವುದಾಗಿ ತಿಳಿಸಿದರು.
6
+ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಲೋಪಗಳೇನು ಎಂದು ಯಾರು ಹೇಳುತ್ತಿಲ್ಲ. ಸ್ವಂತ ಜಾಗವನ್ನು ಕಳೆದುಕೊಂಡರೆ 50:50ರ ಅನುಪಾತದಲ್ಲಿ ನಿವೇಶನ ನೀಡುವುದು ಎಲ್ಲ ನಗರಾಭಿವೃದ್ದಿ ಪ್ರಾಧಿಕಾರಗಳಲ್ಲೂ ಚಾಲ್ತಿಯಲ್ಲಿದೆ.
7
+ ಕಲಬುರಗಿ ಸೇರಿದಂತೆ ರಾಜ್ಯದ ಹಲವು ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಭೂಮಿ ಕಳೆದುಕೊಂಡವರಿಗೆ ನಿವೇಶನ ನೀಡಿದಂತೆ ಮೈಸೂರಿನಲ್ಲೂ ನೀಡಲಾಗಿದೆ. ಇದನ್ನು ವಿರೋಧ ಪಕ್ಷದವರು ಉದ್ದೇಶಪೂರ್ವಕವಾಗಿ ಹಗರಣ ಎಂಬಂತೆ ಬಿಂಬಿಸುತ್ತಿದ್ದಾರೆ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರದ ಹಿಂದೆ ಕೇಂದ್ರ ಗೃಹಸಚಿವ ಅಮಿತ್ ಷಾ ಅವರ ಕೈವಾಡವಿದೆ ಎಂದರು.
8
+ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆಕ್ಷನ್ 17ರಡಿ ಅನುಮತಿ ನೀಡಬೇಕಾದರೆ ಅನುಸರಿಸಬೇಕಾದ ಕಾರ್ಯ ವಿಧಾನಗಳ ಬಗ್ಗೆ ಕೇಂದ್ರ ಸರ್ಕಾರವೇ ಸ್ಪಷ್ಟ ಮಾರ್ಗಸೂಚಿಯನ್ನು ರೂಪಿಸಿದೆ. ಅದನ್ನು ಮೀರಿ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಎಲ್ಲಾ ನಿಯಮಗಳನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
9
+ ಬಿಜೆಪಿಯಿಂದ ಶಾಸಕರ ಖರೀದಿ ಯತ್ನ: ಗಣಿಗ ರವಿಕುಮಾರ್ಬೆಂಗಳೂರು,ಆ.25- ಕಾಂಗ್ರೆಸ್‌‍ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಸತತ ಪ್ರಯತ್ನ ನಡೆಸುತ್ತಿದ್ದು , ಶಾಸಕರ ಖರೀದಿಗೆ 50 ಕೋಟಿ ರೂ.ಗಳಷ್ಟಿದ್ದ ಮೌಲ್ಯವನ್ನು 100 ಕೋಟಿ ರೂ.ಗೆ ಹೆಚ್ಚಿಸಲಾಗಿದೆ ಎಂದು ಕಾಂಗ್ರೆಸ್‌‍ ಶಾಸಕ ಗಣಿಗ ರವಿಕುಮಾರ್‌ ಆರೋಪಿಸಿದ್ದಾರೆ.
10
+ ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ ಬಿಜೆಪಿಯ ಬ್ರೋಕರ್‌ ಒಬ್ಬರು ಕರ�� ಮಾಡಿ 100 ಕೋಟಿ ರೂ.ನೀಡುವುದಾಗಿ ಹೇಳಿದ್ದರು. ಇದಕ್ಕೆ ಸಂಬಂಧಪಟ್ಟ ಆಡಿಯೋ ನಮ ಬಳಿ ಇದೆ. ಸಮಯ ಬಂದಾಗ ಬಿಡುಗಡೆ ಮಾಡುತ್ತೇನೆ ಎಂದು ಎಚ್ಚರಿಸಿದ್ದಾರೆ.
11
+ ಈ ಮೊದಲು ಆಪರೇಷನ್‌ ಕಮಲಕ್ಕೆ 50 ಕೋಟಿ ರೂ. ಹೇಳುತ್ತಿದ್ದರು. ಈಗ 100 ಕೋಟಿಗೆ ಹೆಚ್ಚಿಸಿದ್ದಾರೆ. 50 ಮಂದಿ ಶಾಸಕರು ಯಾರು ಬರುತ್ತೀರೋ ಬನ್ನಿ ಎಂದು ಖರೀದಿಸುವುದಾಗಿ ತಿಳಿಸುತ್ತಿದ್ದಾರೆ. ಇವರ ಬಗ್ಗೆ ಇ.ಡಿ, ಸಿಬಿಐ ಏಕೆ ಗಮನಿಸುತ್ತಿಲ್ಲವೋ ಗೊತ್ತಿಲ್ಲ ಎಂದು ಹೇಳಿದರು.
12
+ ಬಿಜೆಪಿಯ ಸಂತೋಷ್‌ ಜೀ, ಶೋಭಾ ಕರಂದ್ಲಾಜೆ, ಪ್ರಹ್ಲಾದ್‌ ಜೋಷಿ, ಎಚ್‌.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್‌‍ ಸರ್ಕಾರವನ್ನು ಪತನಗೊಳಿಸುವುದಾಗಿ ಪ್ರಧಾನಿ ನರೇಂದ್ರಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್‌ ಷಾ ಅವರಿಗೆ ಭರವಸೆ ನೀಡಿದ್ದಾರೆ. ಅದಕ್ಕಾಗಿ ಹಗಲುರಾತ್ರಿ ಪ್ರಯತ್ನಿಸುತ್ತಿದ್ದಾರೆ. ಆದರೆ 136 ಶಾಸಕರ ಬೆಂಬಲ ಇರುವ ಕಾಂಗ್ರೆಸ್‌‍ ಸರ್ಕಾರ ಸದೃಢವಾಗಿದೆ ಎಂದರು.
13
+ ಬಿಜೆಪಿಯವರು ಎಷ್ಟೇ ಪ್ರಯತ್ನಪಟ್ಟರೂ ನಮ ಒಬ್ಬ ಶಾಸಕರನ್ನೂ ಖರೀದಿಸಲು ಸಾಧ್ಯವಿಲ್ಲ. ಈ ಮುಂದಿನ ದಿನಗಳಲ್ಲಿ 100 ಕೋಟಿ ಎಂದು ಹೇಳಿಕೊಂಡು ಬೇರೆ ಯಾರಾದರೂ ಬಂದರೆ ಅವರ ವಿಡಿಯೋ ಮಾಡಿಕೊಂಡು ಬಹಿರಂಗ ಮಾಡುತ್ತೇವೆ ಎಂದು ತಿರುಗೇಟು ನೀಡಿದರು. ಕಾಂಗ್ರೆಸ್‌‍ ಸರ್ಕಾರ ಬಂಡೆಯಂತೆ 5 ವರ್ಷ ಗಟ್ಟಿಯಾಗಿರಲಿದೆ ಎಂದು ಅವರು ಹೇಳಿದರು.
14
+ ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಬಿಜೆಪಿಯ ಏಜೆಂಟರಂತೆ ನಡೆದುಕೊಂಡಿದ್ದಾರೆ ಎಂದು ಕಿಡಿಕಾರಿದ ಅವರು, ಯಾರು ಏನೇ ಪ್ರಯತ್ನ ಮಾಡಿದರೂ ಕಾಂಗ್ರೆಸ್‌‍ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದರು.
15
+ ಮಂಡ್ಯ ನಗರಸಭೆ ಅಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್‌‍ಗೆ 13 ಮತಗಳು ಲಭ್ಯವಿದ್ದು, ಬಿಜೆಪಿ-ಜೆಡಿಎಸ್‌‍ನವರು 20ಕ್ಕೂ ಹೆಚ್ಚು ಮತಗಳನ್ನು ಹೊಂದಿದ್ದಾರೆ. ಹೀಗಾಗಿ ಕಾಂಗ್ರೆಸ್‌‍ನವರು ಅಧಿಕಾರ ಹಿಡಿಯುವ ಪ್ರಯತ್ನ ಮಾಡುತ್ತಿಲ್ಲ ಎಂದು ಹೇಳಿದರು.
16
+ ಶಾಸಕ ಗಣಿಗ ರವಿಕುಮಾರ್‌ ಆಪರೇಷನ್‌ ಕಮಲದ ವಿಚಾರವನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದು, ಸರ್ಕಾರವು ಅಸ್ಥಿರಗೊಳಿಸುವ ಪ್ರಯತ್ನ ನಡೆಯುತ್ತಿದೆ. ಇದಕ್ಕಾಗಿ ಪ್ರತಿಯೊಬ್ಬ ಶಾಸಕರ ಖರೀದಿಗೆ 100 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಇಕ್ಕಟ್ಟಿಗೆ ಸಿಲುಕಿರುವುದರಿಂದ ಇದೇ ಸಂದರ್ಭವನ್ನು ಬಳಸಿಕೊಂಡು ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರವನ್ನು ಬಿಜೆಪಿ-ಜೆಡಿಎಸ್‌‍ ಪಕ್ಷಗಳು ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.
eesanje/url_46_34_8.txt ADDED
@@ -0,0 +1,9 @@
 
 
 
 
 
 
 
 
 
 
1
+ ಯಾವುದೇ ಹಂತದಲ್ಲೂ ಸಿಎಂ ರಾಜೀನಾಮೆ ನೀಡಲ್ಲ : ಎಚ್.ಸಿ.ಮಹದೇವಪ್ಪ
2
+ ಬೆಂಗಳೂರು,ಆ.25-ಮುಡಾ ಪ್ರಕರಣದಲ್ಲಿ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್ನಲ್ಲಿ ಎತ್ತಿ ಹಿಡಿದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕತೆ ಹಿನ್ನಲೆಯಲ್ಲಿ ರಾಜೀನಾಮೆ ನೀಡುವ ಪರಿಸ್ಥಿತಿ ಬರುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಪಾದಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಯಾವುದೇ ಹಂತದಲ್ಲೂ ಭಾಗಿಯಾಗಿಲ್ಲ. ಸ್ವಜನಪಕ್ಷಪಾತ, ಹಸ್ತಕ್ಷೇಪ ಮಾಡಿಲ್ಲ. ಹೀಗಾಗಿ ಇದರಲ್ಲಿ ನೈತಿಕತೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸಮರ್ಥಿಸಿಕೊಂಡರು.
4
+ ದೆಹಲಿಯಲ್ಲಿ ನಡೆದಿರುವ ಕಾಂಗ್ರೆಸ್ ಹೈಕಮಾಂಡ್ ಸಭೆಯಲ್ಲಿ ಮುಡಾ ಪ್ರಕರಣದ ಬಗ್ಗೆ ಚರ್ಚೆಯಾಗಿದೆ. ಆದರೆ ನಾಯಕತ್ವ ಬದಲಾವಣೆ ಕುರಿತು ಯಾವುದೇ ಪ್ರಸ್ತಾಪ ಇಲ್ಲ. ಹೈಕಮಾಂಡ್, ಕಾಂಗ್ರೆಸ್ನ ಶಾಸಕರು, ಸಚಿವರು ಮುಖ್ಯಮಂತ್ರಿಯೊಂದಿಗೆ ಗಟ್ಟಿಯಾಗಿ ನಿಂತಿದ್ದಾರೆ. ಈ ಹಂತದಲ್ಲಿ ಸಿಎಂ ಬದಲಾವಣೆ ವಿಚಾರ ಅಪ್ರಸ್ತುತ ಎಂದರು.
5
+ ಆಪರೇಷನ್ ಕಮಲ ಹೊಸದಲ್ಲ. ಬಿಜೆಪಿ-ಜೆಡಿಎಸ್ನವರು ಜನರಿಂದ ಮತ ಪಡೆದು ನೇರವಾಗಿ ಆಯ್ಕೆಯಾಗಿ ಸರ್ಕಾರ ರಚಿಸಲು ಯಶಸ್ವಿಯಾಗಿಲ್ಲ. ಹೀಗಾಗಿ ಹಿಂಬಾಗಿಲ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಸತತ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಇದು ಯಶಸ್ವಿಯಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
6
+ ಕುಮಾರಸ್ವಾಮಿ, ಪ್ರಹ್ಲಾದ್ ಜೋಷಿ ಸೇರಿದಂತೆ ಬಿಜೆಪಿಯ ನಾಯಕರು, ಜೆಡಿಎಸ್ ಮುಖಂಡರು ಹತ್ತು ತಿಂಗಳಲ್ಲೇ ಸರ್ಕಾರ ಬದಲಾಗಲಿದೆ ಎಂದು ಹೇಳಿದ್ದಾರೆ. ಸಂಖ್ಯಾ ಬಲದ ಕೊರತೆ ಇದ್ದಾಗಲೂ ಸರ್ಕಾರ ರಚಿಸುತ್ತೇವೆ ಎಂದು ಯಾವ ಆಧಾರದ ಮೇಲೆ ಹೇಳಲು ಸಾಧ್ಯ? ಅದರ ಅರ್ಥ ಬಿಜೆಪಿಯವರು ತಮ ಹಳೆಯ ಛಾಳಿಯನ್ನೇ ಮುಂದುವರೆಸಿದ್ದಾರೆ. ಆಪರೇಷನ್ ಕಮಲಕ್ಕೆ ಕೈಹಾಕಿದ್ದಾರೆಂದೇ ಅರ್ಥವಲ್ಲವೇ ಎಂದು ಪ್ರಶ್ನಿಸಿದರು.
7
+ ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳನ್ನು ರೂಪಿಸುತ್ತಿದೆ. ಇದನ್ನು ಸಹಿಸಲು ವಿಪಕ್ಷಗಳಿಗೆ ಆಗುತ್ತಿಲ್ಲ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿ ಅತ್ಯಂತ ಪ್ರಾಮಾಣಿಕ ವ್ಯಕ್ತಿ. 1999ರಲ್ಲಿ ಸೋಲು ಕಂಡಿದ್ದರು. ಡಾಲರ್ರಸ ಕಾಲೋನಿಯ ಮನೆಯಲ್ಲಿ ಬಾಡಿಗೆ ಮನೆಯಲ್ಲಿದ್ದರು. ಮನೆಯ ಖರ್ಚಿಗೆ ಕಷ್ಟಪಟ್ಟು ಹೇಗೋ ಹೊಂದಿಸಿ 50 ಸಾವಿರ ನೀಡುತ್ತಿದ್ದರು. ಹಬ್ಬ ಹಾಗೂ ಇತರ ಸಂದರ್ಭಗಳು ಬಂದಾಗ ಖರ್ಚುಗಳು ಹೆಚ್ಚಾಗಿ ಮತ್ತಷ್ಟು ಹಣ ಕೇಳಿದರೆ, ಮನೆಯ ಖರ್ಚಿಗೆ ಇನ್ನು ಎಷ್ಟು ಹಣ ಬೇಕೆಂದು ಜಗಳ ಮಾಡಿದ್ದನ್ನು ನಾನು ಕಣ್ಣಾರೆ ನೋಡಿದ್ದೇನೆ ಎಂದು ಹಳೆಯ ಘಟನೆಯನ್ನು ಸರಿಸಿಕೊಂಡರು.
8
+ ಕಾಂಗ್ರೆಸ್ನಲ್ಲಿ ಯಾವುದೇ ಗೊಂದಲಗಳಿಲ್ಲ. ಪಕ್ಷದಲ್ಲಿ ಮುಖ್ಯಮಂತ್ರಿಯಾಗಲು ಯಾರೂ ಕಾಯುತ್ತಿಲ್ಲ. ಬಿಜ���ಪಿ ಜೆಡಿಎಸ್ನಲ್ಲಿ ಗೊಂದಲಗಳಿವೆ. ನಮ ಸರ್ಕಾರವನ್ನು ಅಸ್ಥಿರಗೊಳಿಸಲು ಅವರು ಸತತ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.
9
+ ದಲಿತ ಮುಖ್ಯಮಂತ್ರಿ ವಿಚಾರ ಸದ್ಯಕ್ಕಿಲ್ಲ. ಎಲ್ಲಾ ಸಮುದಾಯಗಳಿಗೂ ಅವಕಾಶ ಸಿಗಬೇಕೆಂಬುದು ಕಾಂಗ್ರೆಸ್ನ ಉದ್ದೇಶ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ತಾವು ಸದಾಕಾಲ ಸಿದ್ದರಾಮಯ್ಯನವರ ಜೊತೆಗಿರುವುದಾಗಿ ಮಹದೇವಪ್ಪ ತಿಳಿಸಿದರು.
eesanje/url_46_34_9.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಮಾಜಿ ಸಿಎಂ ಒಬ್ಬರ ಲೈಂಗಿಕ ಹಗರಣ : ಸುಪ್ರೀಂ ಮೆಟ್ಟಿಲೇರಲು ಮುಂದಾದ ವಕೀಲ ಜಗದೀಶ್
2
+
3
+ ಬೆಂಗಳೂರು,ಆ.25-ಮಾಜಿ ಸಚಿವ ರಮೇಶ್ ಜಾರಕಿಹೊಳಿಅವರ ಸಿ.ಡಿ ಪ್ರಕರಣದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ವಕೀಲ ಜಗದೀಶ್, ಇದೀಗ ಮಾಜಿ ಮುಖ್ಯಮಂತ್ರಿಯೊಬ್ಬರ ವಿರುದ್ಧ ಲೈಂಗಿಕ ಹಗರಣದ ವಿಚಾರವಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ತಿಳಿಸಿದ್ದಾರೆ.
4
+ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರು ನಂದಿಬೆಟ್ಟಕ್ಕೆ ಹೋಗಿ ಕೆಲವು ಅಧಿಕಾರಿಗಳು, ಅಂದಿನ ಸಚಿವರು ಹಾಗೂ ಮಧ್ಯವರ್ತಿಗಳ ಸಹಾಯದಿಂದ ಹೆಣ್ಣುಮಕ್ಕಳ ಸಂಘದಲ್ಲಿ ಮೈಮರೆತು ನಿಯಮ ಬಾಹಿರ ಚಟುವಟಿಕೆಗಳಿಗೆ ಬೆಂಬಲ ನೀಡಿದ್ದಾರೆ ಎಂದು ಆರೋಪ ಮಾಡಿರುವ ವಕೀಲರು, ಈ ಹಗರಣವನ್ನು ಸುಪ್ರೀಂಕೋರ್ಟ್ ನಿಗಾವಣೆಯಲ್ಲಿ ತನಿಖೆಯಾಗಬೇಕೆಂದು ಮನವಿ ಮಾಡುವುದಾಗಿ ಹೇಳಿದ್ದಾರೆ.
5
+ ಹಲವು ದಿನಗಳ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪ್ರತ್ಯಕ್ಷವಾಗಿರುವ ವಕೀಲ ಜಗದೀಶ್ ಇದ್ದಕ್ಕಿದ್ದಂತೆ ಮಾಜಿ ಮುಖ್ಯಮಂತ್ರಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಅದರ ಮುಂದುವರೆದ ಭಾಗವಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ಮಾಹಿತಿ ನೀಡಿದ್ದಾರೆ.
6
+ ಹೆಣ್ಣುಮಕ್ಕಳನ್ನು ಬಳಸಿಕೊಂಡು ಮಾಜಿ ಮುಖ್ಯಮಂತ್ರಿಯಿಂದ ಆಗಿನ ಸಚಿವರು, ಅಧಿಕಾರಿಗಳು ಕೋಟ್ಯಂತರ ರೂ. ಲಾಭ ಮಾಡಿಕೊಂಡಿದ್ದಾರೆ. ಅಕ್ರಮ ಮಾಡಿದವರು, ಅಕ್ರಮವಾಗಿ ಹಣ ಸಂಪಾದನೆ ಮಾಡಿದವರು ಪ್ರಕರಣಗಳಿಂದ ರಕ್ಷಣೆ ಪಡೆದಿದ್ದಾರೆ. ಮುಖ್ಯಮಂತ್ರಿ ಜೊತೆಗೆ ಆಗಿನ ಇನ್ನಿಬ್ಬರು ಸಚಿವರು ಈ ಲೈಂಗಿಕ ಹಗರಣದಲ್ಲಿ ಭಾಗಿಯಾಗಿದ್ದು, ಅವರಲ್ಲಿ ಒಬ್ಬರು ಈಗ ಸಂಸದರಾಗಿದ್ದಾರೆ ಎಂದು ಸುಳಿವು ನೀಡಿದ್ದಾರೆ.
7
+ ಈ ಹಗರಣದ ಕುರಿತು ನಾವು ದಾಖಲೆಗಳನ್ನು ಸಂಗ್ರಹಿಸಿದ್ದೇವೆ. ಅದರ ಪ್ರಕಾರ ಮೇಲ್ನೋಟಕ್ಕೆ ಆರೋಪಗಳು ಸಾಬೀತಾಗುವಂತಿವೆ. ಮಾಜಿ ಮುಖ್ಯಮಂತ್ರಿಯನ್ನು ಲೈಂಗಿಕ ಹಗರಣದಲ್ಲಿ ತೊಡಗಿಸಿ ಇಬ್ಬರು ಸಚಿವರು ಹಾಗೂ 15ರಿಂದ 20 ಅಧಿಕಾರಿಗಳು ಹಲವು ರೀತಿಯ ಲಾಭಗಳನ್ನು ಪಡೆದುಕೊಂಡಿದ್ದಾರೆ ಎಂದು ಜಗದೀಶ್ ದೂರಿದ್ದಾರೆ.
8
+ ಈ ಹಗರಣದಲ್ಲಿ ಆಂಧ್ರಪ್ರದೇಶದಿಂದ ನಟಿಯರನ್ನು ಹಾಗೂ ಹೆಣ್ಣುಮಕ್ಕಳನ್ನು ಕರೆಸಿಕೊಳ್ಳಲಾಗಿದೆ. ಒಬ್ಬರಿಗಿಂತಲೂ ಹೆಚ್ಚು ಜನರನ್ನು ಏಕಕಾಲಕ್ಕೆ ಬಳಕೆ ಮಾಡಲಾಗಿದೆ. ಅದರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದರಲ್ಲಿ ಹೆಣ್ಣು ಮಕ್ಕಳಿಂದ ದೂರು ಕೊಡಿಸುವುದಾಗಲಿ ಅಥವಾ ಹಾಸನದ ಮಾದರಿಯಲ್ಲಿ ಸಿ.ಡಿ ಬಿಡುಗಡೆ ಮಾಡಿಸುವುದಾಗಲಿ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
9
+ ಬಹುತೇಕವಾಗಿ ಹೆಣ್ಣು ಮಕ್ಕಳು ಸಹಮತಿಯ ಮೇರೆಗೆ ಇತರ ಲಾಲಸೆಗಳಿಗೆ ಒಳಗಾಗಿಯೇ ಇಂತಹ ಕೃತ್ಯದಲ್ಲಿ ತೊಡಗಿಸಿಕೊಂಡಿರುತ್ತಾರೆ. ಹೀಗಾಗಿ ದೂರು ಕೊಡಿಸುವುದು ಅರ್ಥಹೀನವಾಗುತ್ತದೆ. ಅಧಿಕಾರದಲ್ಲಿದ್ದಾಗ ಈ ರೀತಿಯ ಜಾಲಕ್ಕೆ ಸಿಲುಕಿ ಯಾವೆಲ್ಲ ಕಡತಗಳಿಗೆ ಸಹಿ ಮಾಡಿದ್ದಾರೆ. ��ಡಳಿತಾತಕವಾಗಿ ಹಾಗೂ ಬೊಕ್ಕಸಕ್ಕೆ ಆಗಿರುವ ನಷ್ಟವೇನು ಎಂಬುದರ ಬಗ್ಗೆ ಮಾತ್ರ ನಾವು ಗಮನಹರಿಸುತ್ತಿದ್ದೇವೆ. ಈ ಬಗ್ಗೆ ಸುಪ್ರೀಂಕೋರ್ಟ್ ಮೆಟ್ಟಿಲೇರಲು ದೆಹಲಿಯಲ್ಲಿ ವಕೀಲರ ತಂಡ ಕಡತಗಳನ್ನು ಸಜ್ಜುಗೊಳಿಸುತ್ತಿದೆ ಎಂದು ಹೇಳಿದ್ದಾರೆ.
10
+ ಆಗಿನ ಮುಖ್ಯಮಂತ್ರಿಯನ್ನು ನಂದಿಬೆಟ್ಟ ಹಾಗೂ ಇತರ ಜಾಗಗಳಿಗೆ ಕರೆದುಕೊಂಡು ಹೋಗಿದ್ದವರೇ ವಿಡಿಯೋಗಳನ್ನು ಚಿತ್ರಿಸಿಕೊಂಡು ಬ್ಲಾಕ್ಮೇಲ್ ಮಾಡಿದ್ದರು ಎಂಬ ಮಾಹಿತಿ ಇದೆ. ಇದರಲ್ಲಿ ಆರೋಪಿಗಳು ಹಾಗೂ ಮಧ್ಯವರ್ತಿಗಳು ಪ್ರಮುಖ ಸ್ಥಾನದಲ್ಲಿರುವುದರಿಂದಾಗಿ ಲೋಕಸಭಾಧ್ಯಕ್ಷ ಓಂ ಬಿರ್ಲಾ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮಾಹಿತಿ ನೀಡುತ್ತೇವೆ.
11
+ ಬಳಿಕ ನ್ಯಾಯಾಲಯದ ಉಸ್ತುವಾರಿಯಲ್ಲಿ ತನಿಖೆಯಾಗಬೇಕು. ವಿಡಿಯೋದಲ್ಲಿರುವ ವ್ಯಕ್ತಿಯ ಬಗ್ಗೆ ಕರಾರುವಕ್ಕಾದ ಮಾಹಿತಿಸಾರ್ವಜನಿಕವಾಗಿ ಬಹಿರಂಗಗೊಳ್ಳಬೇಕು ಎಂದು ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸುವುದಾಗಿ ಜಗದೀಶ್ ತಿಳಿಸಿದ್ದಾರೆ.
eesanje/url_46_35_1.txt ADDED
@@ -0,0 +1,6 @@
 
 
 
 
 
 
 
1
+ ಡಿಸಿಇಟಿ-2024ಗೆ ಪ್ರವೇಶ ಪಡೆಯಲು ಆ.27ರ ಗಡುವು
2
+ 27 -2024
3
+ ಬೆಂಗಳೂರು,ಆ.25-ಕರ್ನಾಟಕ ಪ್ರದೇಶ ಪ್ರಾಧಿಕಾರವು ಡಿಸಿಇಟಿ-2024ಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಕಾಲೇಜಿನಲ್ಲಿ ಪ್ರವೇಶ ಪಡೆಯಲು ಆ.27ರ ಗಡುವು ನಿಗದಿಪಡಿಸಿದೆ.
4
+ ಅಂದು ಸಂಜೆ 5.30 ಗಂಟೆಯೊಳಗೆ ಸಂಬಂಧಿಸಿದ ಕಾಲೇಜಿನಲ್ಲಿ ಅಭ್ಯರ್ಥಿಗಳು ಪ್ರವೇಶ ಪಡೆಯಬೇಕಾಗಿದೆ. ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಆ.20 ರಂದು ಪ್ರಕಟಿಸಿದೆ.
5
+ ಕೆಲವು ಅಭ್ಯರ್ಥಿಗಳು ದಿನಾಂಕ ವಿಸ್ತರಣೆ ಕೋರಿ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಎರಡನೇ ಸುತ್ತಿನ ಸೀಟು ಹಂಚಿಕೆಯ ನಂತರದ ಪ್ರಕ್ರಿಯೆಗಳಿಗೆ ಕೆಇಎ ಮತ್ತೊಮೆ ದಿನಾಂಕವನ್ನು ವಿಸ್ತರಿಸಿ ವೇಳಾಪಟ್ಟಿಯನ್ನು ಮರುನಿಗದಿ ಮಾಡಿದೆ.
6
+ ಅಭ್ಯರ್ಥಿಗಳು ಚಲನ್ ಡೌನ್ಲೌಡ್ ಮಾಡಿಕೊಳ್ಳಲು ನಾಳೆ ಸಂಜೆ 4 ಗಂಟೆಯವರೆಗೆ ಅವಕಾಶವಿದೆ. ಶುಲ್ಕ ಪಾವತಿ ಮಾಡಲು ನಾಳೆಯಿಂದ ಆ.27 ರವರೆಗೆ ಕಾಲಾವಕಾಶ ನೀಡಲಾಗಿದೆ.ಶುಲ್ಕ ಪಾವತಿಯ ನಂತರ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಆ.27 ರ ಸಂಜೆ 4 ಗಂಟೆಯವರೆಗೆ ಅವಕಾಶವನ್ನು ಕೆಇಎ ನೀಡಲಾಗಿದೆ.