CoolCoder44 commited on
Commit
b89e836
·
verified ·
1 Parent(s): d373ca9

93c22603706d2467876d8f7d39e0a38404ec96142ab8f28a1586eccc455a37b2

Browse files
Files changed (50) hide show
  1. eesanje/url_46_146_1.txt +6 -0
  2. eesanje/url_46_146_10.txt +6 -0
  3. eesanje/url_46_146_11.txt +7 -0
  4. eesanje/url_46_146_12.txt +8 -0
  5. eesanje/url_46_146_2.txt +6 -0
  6. eesanje/url_46_146_3.txt +4 -0
  7. eesanje/url_46_146_4.txt +10 -0
  8. eesanje/url_46_146_5.txt +4 -0
  9. eesanje/url_46_146_6.txt +9 -0
  10. eesanje/url_46_146_7.txt +8 -0
  11. eesanje/url_46_146_8.txt +9 -0
  12. eesanje/url_46_146_9.txt +9 -0
  13. eesanje/url_46_147_1.txt +9 -0
  14. eesanje/url_46_147_10.txt +7 -0
  15. eesanje/url_46_147_11.txt +8 -0
  16. eesanje/url_46_147_12.txt +5 -0
  17. eesanje/url_46_147_2.txt +7 -0
  18. eesanje/url_46_147_3.txt +3 -0
  19. eesanje/url_46_147_4.txt +7 -0
  20. eesanje/url_46_147_5.txt +6 -0
  21. eesanje/url_46_147_6.txt +6 -0
  22. eesanje/url_46_147_7.txt +4 -0
  23. eesanje/url_46_147_8.txt +7 -0
  24. eesanje/url_46_147_9.txt +6 -0
  25. eesanje/url_46_148_1.txt +8 -0
  26. eesanje/url_46_148_10.txt +5 -0
  27. eesanje/url_46_148_11.txt +5 -0
  28. eesanje/url_46_148_12.txt +8 -0
  29. eesanje/url_46_148_2.txt +7 -0
  30. eesanje/url_46_148_3.txt +5 -0
  31. eesanje/url_46_148_4.txt +7 -0
  32. eesanje/url_46_148_5.txt +7 -0
  33. eesanje/url_46_148_6.txt +10 -0
  34. eesanje/url_46_148_7.txt +6 -0
  35. eesanje/url_46_148_8.txt +6 -0
  36. eesanje/url_46_148_9.txt +6 -0
  37. eesanje/url_46_149_1.txt +7 -0
  38. eesanje/url_46_149_10.txt +8 -0
  39. eesanje/url_46_149_11.txt +4 -0
  40. eesanje/url_46_149_12.txt +9 -0
  41. eesanje/url_46_149_2.txt +4 -0
  42. eesanje/url_46_149_3.txt +6 -0
  43. eesanje/url_46_149_4.txt +9 -0
  44. eesanje/url_46_149_5.txt +9 -0
  45. eesanje/url_46_149_6.txt +7 -0
  46. eesanje/url_46_149_7.txt +4 -0
  47. eesanje/url_46_149_8.txt +7 -0
  48. eesanje/url_46_149_9.txt +10 -0
  49. eesanje/url_46_14_1.txt +8 -0
  50. eesanje/url_46_14_10.txt +11 -0
eesanje/url_46_146_1.txt ADDED
@@ -0,0 +1,6 @@
 
 
 
 
 
 
 
1
+ ಕೊಟ್ಟ ಮಾತಿನಂತೆ ಬಾಗಲಕೋಟೆ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ
2
+ ಬೆಂಗಳೂರು,ಮೇ 15-ಚುನಾವಣಾ ಪ್ರಚಾರದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅವರ ತಾಯಿ ಇರುವ ಭಾವಚಿತ್ರ ನೀಡಿದ್ದ ಬಾಗಲಕೋಟೆ ಯುವತಿ ನಾಗರತ್ನಾ ಬಸವರಾಜ ಮೇಟಿಯವರಿಗೆ ಮೋದಿ ಅವರು ಧನ್ಯವಾದ ತಿಳಿಸಿ, ಪತ್ರ ಬರೆದಿದ್ದಾರೆ.
3
+ ಪ್ರಧಾನಿ ಮೋದಿ ಅವರು ಬಾಗಲಕೋಟೆಯಲ್ಲಿ ಭಾಷಣ ಮಾಡುವ ವೇಳೆ ನಾಗರತ್ನಾ ಅವರು ಫೋಟೋ ಹಿಡಿದು ನಿಂತಿದ್ದರು. ಇದನ್ನು ಗಮನಿಸಿದ ಮೋದಿಯವರು ತಮ ಅಂಗರಕ್ಷಕ ಅಧಿಕಾರಿಗಳಿಂದ ಫೋಟೋ ತರಿಸಿಕೊಂಡು, ಪತ್ರ ಬರೆಯುವುದಾಗಿ ತಿಳಿಸಿದ್ದರು. ಇದೀಗ ಕೊಟ್ಟ ಮಾತಿನಂತೆ ಪ್ರಧಾನಿ ಮೋದಿ ಯುವತಿಗೆ ಪತ್ರ ಬರೆದಿದ್ದಾರೆ.
4
+ ಏಪ್ರಿಲ್‌ 29ರಂದು ಬಾಗಲಕೋಟೆಗೆ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಬಂದ ಸಂದರ್ಭದಲ್ಲಿ ಮೋದಿ ಅವರಿಗೆ ನಾಗರತ್ನಾ ಅವರು ಚಿತ್ರವನ್ನು ದೂರದಿಂದ ತೋರಿಸಿದ್ದರು. ಆಗ ಮೋದಿ ಅವರು ವಿಶೇಷ ಭದ್ರತಾ ಸಿಬ್ಬಂದಿಗೆ ಚಿತ್ರವನ್ನು ಸಂಗ್ರಹಿಸಿಕೊಳ್ಳುವಂತೆ ತಿಳಿಸಿದ್ದಲ್ಲದೇ, ನಿನ್ನ ಹೆಸರು, ವಿಳಾಸ ಬರೆದು ಕಳುಹಿಸು ಮಗಳೇ, ನಾನು ನಿನಗೆ ಖಂಡಿತವಾಗಿಯೂ ಪತ್ರ ಕಳುಹಿಸುತ್ತೇನೆಂದು ಹೇಳಿದ್ದರು.
5
+ ಈ ಕಲಾತಕ ಚಿತ್ರವು ಮಾನವನ ಭಾವನೆಗಳ ಪ್ರಾಮುಖ್ಯ ತೋರಿಸುತ್ತದೆ. ಹೊಸ ಭಾರತ ಮತ್ತು ಯುವಶಕ್ತಿಯ ಭವಿಷ್ಯ ನಿರ್ಮಾಣಕ್ಕೆ ನನ್ನನ್ನು ಪ್ರೇರೇಪಿಸುತ್ತದೆ. ಕೌಶಲ ಹಾಗೂ ರಚನಾತಕ ಚಟುವಟಿಕೆಯನ್ನು ನಿಮ ಕೆಲಸದಲ್ಲಿ ಅಳವಡಿಸಿಕೊಳ್ಳಿ. ಶುಭವಾಗಲಿ ಎಂದು ಮೋದಿ ಹಾರೈಸಿದ್ದಾರೆ.
6
+ ಮೋದಿಯವರ ಪತ್ರಕ್ಕೆ ನಾಗರತ್ನಾ ಅವರು ಬಹಳ ಸಂತಸ ವ್ಯಕ್ತಪಡಿಸಿದ್ದು, ಇದು ನನ್ನ ಜೀವನದಲ್ಲಿ ಮರೆಯಲಾಗದ ಕ್ಷಣ ಎಂದು ಹೇಳಿದ್ದಾರೆ.
eesanje/url_46_146_10.txt ADDED
@@ -0,0 +1,6 @@
 
 
 
 
 
 
 
1
+ : ಮಾಜಿ ಸಚಿವ ಎಚ್‌.ಡಿ.ರೇವಣ್ಣ ಜೈಲಿನಿಂದ ರಿಲೀಸ್
2
+ ಬೆಂಗಳೂರು,ಮೇ 14-ಮಹಿಳೆಯ ಅಪಹರಣ ಪ್ರಕರಣದಲ್ಲಿ ನ್ಯಾಯಾಲಯ ನಿನ್ನೆ ಜಾಮೀನು ನೀಡಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರು ನ್ಯಾಯಾಂಗ ಬಂಧನದಿಂದ ಇಂದು ಬಿಡುಗಡೆಯಾದರು.ನಿನ್ನೆ ಸಂಜೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ನ್ಯಾಯಾಲಯದ ಆದೇಶ ಪ್ರತಿಯನ್ನು ನಿನ್ನೆ ಸಂಜೆ 7 ಗಂಟೆಯೊಳಗೆ ಜೈಲಿನ ಅಧಿಕಾರಿಗಳಿಗೆ ತಲುಪಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ರೇವಣ್ಣ ಅವರು ಬಿಡುಗಡೆಯಾಗಲು ಸಾಧ್ಯವಾಗಿರಲಿಲ್ಲ.
3
+ ಇಂದು ಬೆಳಿಗ್ಗೆ ರೇವಣ್ಣರ ಪರ ವಕೀಲರು ಆದೇಶದ ಪ್ರತಿಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳಿಗೆ ತಲುಪಿಸಿ ಜಾಮೀನು ಷರತ್ತು ಪ್ರಕ್ರಿಯೆಗಳನ್ನು ಪೂರೈಸಿದ ನಂತರ ರೇವಣ್ಣ ಅವರ ಬಿಡುಗಡೆಯಾಯಿತು.
4
+ ಈ ಮೂಲಕ ರೇವಣ್ಣ ಅವರ 6 ದಿನಗಳ ಸೆರೆವಾಸ ಅಂತ್ಯವಾಯಿತು. ಮಹಿಳೆ ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 6 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತ್ತು. ರೇವಣ್ಣ ಅವರು ಈ ಪ್ರಕರಣದಲ್ಲಿ ಅಮಾಯಕರು ಯಾವುದೇ ತಪ್ಪೆಸಗಿಲ್ಲ. ಅವರ ವಿರುದ್ಧದ ಆರೋಪದ ಪುಷ್ಟೀಕರಿಸುವ ಸಂದರ್ಭ ಸಾಕ್ಷಿಗಳಿಲ್ಲ. ಅವರು ಯಾರಿಗೂ ಬೆದರಿಕೆಯೊಡ್ಡಿಲ್ಲ ಎಂದು ರೇವಣ್ಣ ಪರ ವಕೀಲರಾದ ಸಿ.ವಿ.ನಾಗೇಶ್‌ ಪ್ರಬಲ ವಾದ ಮಂಡಿಸಿದ್ದರು.
5
+
6
+ ಸರ್ಕಾರಿ ಪರ ವಿಶೇಷ ಅಭಿಯೋಜಕರಾದ ಜಾಯ್ನ ಕೊಥಾರಿ ಹಾಗೂ ಅಶೋಕ್‌ ನಾಯಕ್‌ ಎಸ್‌‍ಐಟಿ ಪರವಾಗಿ ವಾದ ಮಂಡಿಸಿದ್ದರು. ವಾದ-ವಿವಾದಗಳನ್ನು ಆಲಿಸಿದ ನ್ಯಾಯಾಲಯ ರೇವಣ್ಣ ಅವರಿಗೆ ಹಲವು ಷರತ್ತುಗಳನ್ನು ವಿಧಿಸಿ ನಿನ್ನೆ ಜಾಮೀನು ಮಂಜೂರು ಮಾಡಿತ್ತು.
eesanje/url_46_146_11.txt ADDED
@@ -0,0 +1,7 @@
 
 
 
 
 
 
 
 
1
+ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಚಾರಕ್ಕಾಗಿ ನನ್ನ ಹೆಸರು ಬಳಸಿಕೊಳ್ಳುತ್ತಿದ್ದಾರೆ : ಡಿಕೆಶಿ
2
+ ಬೆಂಗಳೂರು,ಮೇ 14-ಹಾಸನದ ಪೆನ್‌ಡ್ರೈವ್‌ ಪ್ರಕರಣ ನಮಗೆ ಗೊತ್ತಿಲ್ಲದೇ ಇರುವ ಸಮಸ್ಯೆ, ಕೆಲವರಿಗೆ ನನ್ನ ಹೆಸರನ್ನು ಬಳಸಿಕೊಂಡರೆ ಪ್ರಚಾರ ಸಿಗುತ್ತದೆ ಎಂದು ಮಾತನಾಡುತ್ತಾರೆ, ಈ ವಿಚಾರದಲ್ಲಿ ನನಗೇನೂ ಗೊತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ.
3
+ ತಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ವಿಡಿಯೋ ಹಾಗೂ ಆಡಿಯೋ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.
4
+ ಯಾವುದೇ ವಿಚಾರಗಳಿಗೂ ಎಸ್‌‍ಐಟಿಯನ್ನು ಕೇಳಿಕೊಳ್ಳಿ, ನನಗೆ ಗೊತ್ತಿಲ್ಲದೇ ಇರುವ ವಿಚಾರ ಇದು. ನನ್ನ ಹೆಸರು ಉಪಯೋಗಿಸಿಕೊಳ್ಳುವುದರಿಂದ ಪ್ರಚಾರ ಸಿಗುತ್ತದೆ ಎಂಬ ಕಾರಣಕ್ಕೆ ಕೆಲವರು ನನ್ನ ಹೆಸರು ತೆಗೆದುಕೊಳ್ಳುತ್ತಾರೆ. ಆ ವಿಚಾರವಾಗಿ ನನಗೆ ಏನೂ ಗೊತ್ತಿಲ್ಲ ಎಂದರು.
5
+ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌, ಬಿಜೆಪಿ ಹಿರಿಯ ನಾಯಕ ಅಶ್ವತ್ಥನಾರಾಯಣ ಅವರು ಇದೆಲ್ಲಾ ಡಿ.ಕೆ.ಶಿವಕುಮಾರ್‌ ಕುತಂತ್ರ ಎಂದಿರುವುದಕ್ಕೆ ಸೂಕ್ತ ಸಮಯದಲ್ಲಿ ಉತ್ತರ ಕೊಡೋಣ ಎಂದು ತಿರುಗೇಟು ನೀಡಿದರು.
6
+ ಇಂದಿನಿಂದ ತಾವು ಎರಡು ದಿನಗಳ ಕಾಲ ಉತ್ತರ ಪ್ರದೇಶದ ರಾಯಭರೇಲಿಯಲ್ಲಿ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತಿದ್ದೇನೆ. ನಾಳೆ ನನ್ನ ಹುಟ್ಟುಹಬ್ಬ ಇರುವುದರಿಂದ ಯಾರೂ ಮನೆಯ ಬಳಿ ಬರಬಾರದು. ಹುಟ್ಟುಹಬ್ಬದ ಆಚರಣೆ ಮಾಡಬಾರದು ಎಂದು ಈಗಾಗಲೇ ಮನವಿ ಮಾಡಿಕೊಂಡಿದ್ದೇನೆ ಎಂದರು.
7
+ ದೇಶದ ಎಲ್ಲಾ ಕಡೆ ಒಳ್ಳೆಯ ವಾತಾವರಣವಿದೆ. ಇಂಡಿಯಾ ಕೂಟ ಸರ್ಕಾರ ರಚಿಸುತ್ತದೆ ಎಂಬ ವಿಶ್ವಾಸವಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ನೀಡಿರುವ ಹೇಳಿಕೆ ತಿರುಗುಬಾಣವಾಗಲಿದೆ. ಲೋಕಸಭಾ ಚುನಾವಣೆಯ ಬಳಿಕ ಅವರದೇ ಜೊತೆಯಲ್ಲಿರುವ ಶಾಸಕರು ಶಿವಸೇನೆ ಹಾಗೂ ಎನ್‌ಸಿಪಿಗೆ ಮರಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
eesanje/url_46_146_12.txt ADDED
@@ -0,0 +1,8 @@
 
 
 
 
 
 
 
 
 
1
+ ಶುಕ್ರವಾರದಿಂದ ಭಾನುವಾರದವರೆಗೆ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ
2
+ ಬೆಂಗಳೂರು,ಮೇ 14-ಕಳೆದ ಎಂಟು ಹತ್ತು ದಿನಗಳಿಂದ ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇನ್ನೂ 5 ದಿನಗಳ ಕಾಲ ಮುಂದುವರೆಯಲಿದೆ. ಶುಕ್ರವಾರದಿಂದ ಭಾನುವಾರದವರೆಗೆ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆಗಳಿವೆ.ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅದು ಚಂಡಮಾರುತವಾಗಿ ಪರಿವರ್ತನೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ.
3
+ ಅದರ ಪರಿಣಾಮ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಕರಾವಳಿ ಹಾಗೂ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್‌‍.ಪ್ರಕಾಶ್‌ ತಿಳಿಸಿದರು.
4
+ ಮುಂಗಾರುಪೂರ್ವ ಮಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚದುರಿದಂತೆ ಆಗುತ್ತಿದೆ. ಇದೇ ರೀತಿ ಇನ್ನೂ ಮೂರು ದಿನ ಮುಂದುವರೆಯಲಿದೆ. ಆದರೆ ಶುಕ್ರವಾರದ ನಂತರ ಮಳೆ ಹೆಚ್ಚಾಗಲಿದೆ ಎಂದರು.
5
+ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಹಲವು ಕಡೆ ಮಳೆಯಾಗಲಿದೆ. ಕೆಲವೆಡೆ ಬಿರುಗಾಳಿ, ಮಿಂಚು, ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ನಿನ್ನೆ ಕೂಡ ಬೆಂಗಳೂರು, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಯಾದಗಿರಿ, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಿದೆ.
6
+ ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಮಾ.1 ರಿಂದ ನಿನ್ನೆಯವರೆಗೆ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ವಾಡಿಕೆಗಿಂತ ಕಡಿಮೆಯಾಗಿದೆ. ಶೇ. 40 ರಷ್ಟು ಮಳೆ ಕೊರತೆಯಾಗಿರುವುದು ಕಂಡುಬಂದಿದೆ. ಈ ಅವಧಿಯಲ್ಲಿ ವಾಡಿಕೆ ಮಳೆ ಪ್ರಮಾಣ 86.2 ಮಿಲಿ ಮೀಟರ್‌ ಆಗಿದ್ದು, ಕೇವಲ 51.5 ಮಿಲಿ ಮೀಟರ್‌ ಮಾತ್ರ ಮಳೆಯಾಗಿದೆ.
7
+ ಮೂರ್ನಾಲ್ಕು ಜಿಲ್ಲೆಗಳನ್ನು ಹೊರತುಪಡಿಸಿದರೆ ರಾಜ್ಯದ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಮೇ ತಿಂಗಳಿನಲ್ಲಿ ಮಳೆ ಪ್ರಾರಂಭವಾಗಿದ್ದರೂ ವ್ಯಾಪಕವಾಗಿ ಎಲ್ಲಾ ಕಡೆ ಮಳೆಯಾಗಿಲ್ಲ. ಒಂದು ಕಡೆ ಉತ್ತಮ ಮಳೆಯಾಗಿದ್ದರೆ, ಮತ್ತೊಂದು ಕಡೆ ಹಗುರ ಹಾಗೂ ಸಾಧಾರಣ ಮಳೆಯಾಗಿದೆ. ಇನ್ನೂ ಕೆಲವೆಡೆ ಮಳೆಯೇ ಆಗಿಲ್ಲ. ಇಂತಹ ಪರಿಸ್ಥಿತಿ ರಾಜ್ಯದಲ್ಲಿ ಕಂಡುಬರುತ್ತಿದೆ. ಕೆಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ.
8
+ ಇದರಿಂದ ಮರ, ವಿದ್ಯುತ್‌ ಕಂಬಗಳು ಮುರಿದು ಬಿದ್ದಿವೆ. ಬಾಳೆ, ಮಾವು ಸೇರಿದಂತೆ ವಿವಿಧ ಬೆಳೆಗಳು ಹಾನಿಗೀಡಾಗಿವೆ. ಒಟ್ಟಾರೆ ಬರದಿಂದ ಕಂಗೆಟ್ಟಿದ್ದ ರಾಜ್ಯಕ್ಕೆ ಬೇಸಿಗೆ ಮಳೆ ತಂಪೆರೆಯುವುದರ ಜೊತೆಗೆ ಕೃಷಿ ಚಟುವಟಿಕೆಗಳು ಚುರುಕುಗೊಳ್ಳುವಂತೆ ಮಾಡಿದೆ.
eesanje/url_46_146_2.txt ADDED
@@ -0,0 +1,6 @@
 
 
 
 
 
 
 
1
+ ವಿಧಾನ ಪರಿಷತ್‌ ಚುನಾವಣೆಗೆ ನಾಮಪತ್ರ ಸಲ್ಲಿಸಾಲು ನಾಳೆ ಕಡೇ ದಿನ
2
+ ಬೆಂಗಳೂರು, ಮೇ 15– ವಿಧಾನ ಪರಿಷತ್ತಿನ ಆರು ಸದಸ್ಯ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕಡೆಯದಿನ. ಮೇ 9 ರಿಂದ ನಿನ್ನೆಯವರೆಗೆ ಒಟ್ಟು 29 ಅಭ್ಯರ್ಥಿಗಳು ತಮ ಉಮೇದುವಾರಿಕೆ ಸಲ್ಲಿಸಿದ್ದಾರೆ.
3
+ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ಪ್ರಕಾರ, ಬಿಜೆಪಿ 3, ಕಾಂಗ್ರೆಸ್‌‍ 5, ಜೆಡಿಎಸ್‌‍ ಒಂದು ಹಾಗೂ 20 ಮಂದಿ ಪಕ್ಷೇತರರು ನಾಮಪತ್ರ ಸಲ್ಲಿಸಿದ್ದಾರೆ. 29 ಅಭ್ಯರ್ಥಿಗಳಲ್ಲಿ 28 ಪುರುಷ ಹಾಗೂ ಒಬ್ಬ ಮಹಿಳೆ ಸೇರಿದ್ದಾರೆ. ಒಟ್ಟು 40 ನಾಮಪತ್ರಗಳು ಸಲ್ಲಿಕೆಯಾಗಿವೆ. ನಿನ್ನೆ ವಿವಿಧ ಕ್ಷೇತ್ರಗಳಲ್ಲಿ 16 ಅಭ್ಯರ್ಥಿಗಳಿಂದ ಒಟ್ಟು 20 ನಾಮ ಪತ್ರ ಸಲ್ಲಿಕೆಯಾಗಿದ್ದವು.
4
+ ಇಂದು ಸಹ ಬೆಂಗಳೂರು ಪದವೀಧರ ಕ್ಷೇತ್ರದಿಂದ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಎಂ. ಪುಟ್ಟಸ್ವಾಮಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕರ್ನಾಟಕ ಈಶಾನ್ಯ ಪದವೀಧರ, ಕರ್ನಾಟಕ ನೈರುತ್ಯ ಪದವೀಧರ, ಬೆಂಗಳೂರು ಪದವೀಧರ, ಕರ್ನಾಟಕ ಆಗ್ನೇಯ ಶಿಕ್ಷಕರ, ಕರ್ನಾಟಕ ನೈರುತ್ಯ ಶಿಕ್ಷಕರ ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಜೂನ್‌ 3ರಂದು ಚುನಾವಣೆ ನಡೆಯಲಿದೆ.
5
+ ಮೆಲನೆ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಜೊತೆಗೆ ಸ್ವತಂತ್ರ ಅಭ್ಯರ್ಥಿಗಳೂ ಸ್ಪರ್ಧೆಗಿಳಿದಿದ್ದಾರೆ. ಇಂದು ಮತ್ತು ನಾಳೆ ಮತ್ತಷ್ಟು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಮೇ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಂದು ಸಂಜೆ ತಿರಸ್ಕೃತ ನಾಮಪತ್ರಗಳು ಹಾಗೂ ಒಪ್ಪಿತವಾದ ನಾಮಪತ್ರಗಳ ಪಟ್ಟಿಯನ್ನು ಆಯಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗುತ್ತದೆ.
6
+ ನಾಮಪತ್ರ ಹಿಂದಕ್ಕೆ ಪಡೆಯಲು ಮೇ 20ರವರೆಗೂ ಕಾಲಾವಕಾಶವಿದೆ. ಅಂದು ಸಂಜೆ ಅಧಿಕೃತವಾಗಿ ಚುನಾವಣಾ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಜೂನ್‌ 6ರಂದು ಮತ ಎಣಿಕೆ ನಡೆಯಲಿದೆ.ಲೋಕಸಭೆ ಚುನಾವಣೆಯಂತೆ ಬಿಜೆಪಿ ಮತ್ತು ಜೆಡಿಎಸ್‌‍ ಮೈತ್ರಿ ಮಾಡಿಕೊಂಡು ತಮ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸಿದ್ದರೆ, ಆಡಳಿತಾರೂಢ ಕಾಂಗ್ರೆಸ್‌‍ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತಿದೆ.
eesanje/url_46_146_3.txt ADDED
@@ -0,0 +1,4 @@
 
 
 
 
 
1
+ ಏಪ್ರಿಲ್‌ನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಿಂದ 9,662.98 ಕೋಟಿ ತೆರಿಗೆ ಸಂಗ್ರಹ
2
+ ಬೆಂಗಳೂರು,ಮೇ14-ರಾಜ್ಯದ ವಾಣಿಜ್ಯ ತೆರಿಗೆಗಳ ಇಲಾಖೆಯು ಕಳೆದ ಏಪ್ರಿಲ್‌ ತಿಂಗಳಿನಲ್ಲಿ 9,662.98 ಕೋಟಿ ರೂ. ತೆರಿಗೆಯನ್ನು ಸಂಗ್ರಹಿಸಿದೆ. ಕಳೆದ ವರ್ಷ ಏಪ್ರಿಲ್‌ ತಿಂಗಳಿನಲ್ಲಿ 8,859.65 ಕೋಟಿ ರೂ. ತೆರಿಗೆ ಸಂಗ್ರಹ ಮಾಡಲಾಗಿತ್ತು. ಕಳೆದ ವರ್ಷದ ಏಪ್ರಿಲ್‌ಗೆ ಹೋಲಿಸಿದರೆ ಈ ವರ್ಷದ ಏಪ್ರಿಲ್‌ ತಿಂಗಳಿನಲ್ಲಿ ಒಂದು ಸಾವಿರ ಕೋಟಿ ರೂ.ಗೂ ಹೆಚ್ಚು ತೆರಿಗೆ ಸಂಗ್ರಹವಾಗಿದೆ.
3
+ ಕಳೆದ ಏಪ್ರಿಲ್‌ ತಿಂಗಳಿನಲ್ಲಿ 7678.06 ಕೋಟಿ ರೂ. ಸರಕು ಸೇವಾ ತೆರಿಗೆ, 1811.32 ಕೋಟಿ ರೂ. ಕರ್ನಾಟಕ ಮಾರಾಟ ತೆರಿಗೆ ಹಾಗೂ 173.60 ಕೋಟಿ ರೂ. ವೃತ್ತಿ ತೆರಿಗೆ ಸಂಗ್ರಹಿಸಲಾಗಿದೆ.
4
+ 2023-24ನೇ ಆರ್ಥಿಕ ಸಾಲಿನಲ್ಲಿ ಒಟ್ಟು 94,363.27 ಕೋಟಿ ರೂ. ತೆರಿಗೆ ಸಂಗ್ರಹವನ್ನು ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆ ಮಾಡಿತ್ತು.
eesanje/url_46_146_4.txt ADDED
@@ -0,0 +1,10 @@
 
 
 
 
 
 
 
 
 
 
 
1
+ ರೇವಣ್ಣ ಬಂಧನ ರಾಜಕೀಯ ಪ್ರೇರಿತ, ದೇವೇಗೌಡರ ಕುಟುಂಬಕ್ಕೆ ಕಳಂಕ ತರುವ ಯತ್ನ :
2
+ ಬೆಂಗಳೂರು,ಮೇ14-ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಕುಟುಂಬಕ್ಕೆ ಕಳಂಕ ತರಲು ರೇವಣ್ಣ ವಿರುದ್ಧ ಕೇಸು ದಾಖಲಿಸಲಾಗಿದೆ ಎಂದರು.
3
+ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರೇವಣ್ಣ ಅವರಿಗೆ ಜಾಮೀನು ನೀಡಿದ್ದು, ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಪಡುವ ಸಮಯ ಇದಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯಾದಾಗ ಸಂಭ್ರಮ ಪಡಬೇಕು ಎಂದು ಅವರು ಹೇಳಿದರು.
4
+ ಹಾಸನದಲ್ಲಿ ಕೇಳಿಬಂದ ಪೆನ್‌ಡ್ರೈವ್‌ ಪ್ರಕರಣ ರಾಜ್ಯವೇ ತಲೆತಗ್ಗಿಸುವಂತಹ ಹೀನಾಯ ಘಟನೆ. ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪೆನ್‌ಡ್ರೈವ್‌ ಹಂಚಿಕೆ ಮಾಡಿದವರನ್ನು ಇಲ್ಲಿಯವರೆಗೂ ಕಂಡುಹಿಡಿದಿಲ್ಲ. ಘಟನೆಗೆ ಕಾರಣವಾದ ವ್ಯಕ್ತಿಯನ್ನು ಬಂಧಿಸಲಿಲ್ಲ. ಇದು ಸರ್ಕಾರದ ಬೇಜವಾಬ್ದಾರಿ ಅಲ್ಲವೇ? ಬಿಜೆಪಿಯ ಮಾಜಿ ಶಾಸಕರೊಬ್ಬರ ಎಡಬಲವನ್ನು ಮಾತ್ರ ಹಿಡಿಯಲಾಗಿದೆ. ಇನ್ನೊಂದು ವಾರದಲ್ಲಿ ಮುಖ್ಯವಾದವರನ್ನು ಹಿಡಿಯಲಾಗುತ್ತದೆ ಎನ್ನುತ್ತಾರೆ. ಹಾಗಾದರೆ ಎಸ್‌‍ಐಟಿ ತನಿಖೆ ಹೇಗೆ ಸೋರಿಕೆಯಾಗುತ್ತಿದೆ ಎಂದು ಪ್ರಶ್ನಿಸಿದರು.
5
+ ಎಫ್‌ಐಆರ್‌ ದಾಖಲಾಗಿರುವ ವ್ಯಕ್ತಿಯನ್ನು ಸಹ ವಶಕ್ಕೆ ಪಡೆದಿಲ್ಲ ಎಂದು ಆರೋಪಿಸಿದ ಅವರು, ಖಾಸಗಿ ಚಾನೆಲ್‌ನಲ್ಲಿ ಸಂದರ್ಶನ ನೀಡುತ್ತಾರೆ ಎಂದರು. ನವೀನ್‌ ಗೌಡ ಎಂಬಾತ ನಮ ಪಕ್ಷದ ಶಾಸಕರಿಗೆ ಪೆನ್‌ಡ್ರೈವ್‌ ಕೊಟ್ಟಿರುವುದಾಗಿ ಹೇಳಿದ್ದಾರೆ. ಆದರೂ ಆತನನ್ನು ಪೊಲೀಸರು ಬಂಧಿಸಲಿಲ್ಲ ಎಂದು ಆರೋಪಿಸಿದರು.
6
+ ವಿಡಿಯೋದಲ್ಲಿ ಕಾಣಿಸಿಕೊಂಡಂಥ ಮಹಿಳೆಯರ ಕುಟುಂಬದ ಬಗ್ಗೆ ಸರ್ಕಾರಕ್ಕೆ ಅನುಕಂಪ ಇದೆಯೇ? ಮಾಹಿತಿ ತಂತ್ರಜ್ಞಾನದಲ್ಲಿ ಅಪರಾಧಿ ನಿರಪರಾಧಿಯಾಗಬಹುದು. ಸರ್ಕಾರಕ್ಕೆ ಬದ್ದತೆಯಿದ್ದರೆ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸಲಿ. ಅಕ್ಕತಂಗಿ, ತಂದೆತಾಯಿಗಳು ನಿಮಗೂ ಇರುವುದಿಲ್ಲವೇ ಎಂದು ಪ್ರಶ್ನಿಸಿದರು.
7
+ ಕೆಲವೇ ಕ್ಷಣಗಳಲ್ಲಿ ಪೆನ್‌ಡ್ರೈವ್‌ ಬರಲಿದೆ ಎಂದು ಪೋಸ್ಟ್‌ ಮಾಡಿರುವ ವ್ಯಕ್ತಿಯನ್ನು ಬಂಧಿಸಿದ್ದಿರಾ? ಎಂದು ಪ್ರಶ್ನಿಸಿದ ಅವರು, ತಮ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ನಾನು ನ್ಯಾಯದ ಹಾಗೂ ಮಹಿಳೆಯ ಪರವಾಗಿ ಇದ್ದೇನೆ ಎಂದು ಹೇಳಿದರು.ವಿಡಿಯೋದಲ್ಲಿ ಆರೋಪಿತ ವ್ಯಕ್ತಿಯ ಯಾವುದೇ ಚಿತ್ರಣವಿಲ್ಲ ಎಂದು ಪತ್ರಿಕೆಯಲ್ಲಿ ವರದಿಯಾಗಿದೆ. ಹಾಗಾದರೆ ಈ ಪ್ರಕರಣ ಎಲ್ಲಿಗೆ ಹೋಗುತ್ತದೆ ಎಂದು ಪ್ರಶ್ನಿಸಿದರು.
8
+ ದೊಡ್ಡ ತಿಮಿಂಗಲದ ಆಡಿಯೋ ಬಹಿರಂಗಪಡಿಸಿದರು ಎಂದು ವಕೀಲ ದೇವರಾಜೇಗೌಡ ಅವರ ಮೇಲೆ ಕೇಸ್‌‍ ಹಾಕಿ ಬಂಧಿಸಲಾಗಿದೆ. ಒಂದು ತಿಂಗಳಿನಿಂದ ಏನೆಲ್ಲಾ ಬೆಳವಣಿಗೆಯಾಯಿತು ಎಂದರು.
9
+ ರಾಷ್ಟ್ರೀಯ ಮಹಿಳಾ ಆಯೋ���ಕ್ಕೆ ಮಹಿಳೆಯೊಬ್ಬರು ದೂರು ಕೊಟ್ಟಿದ್ದಾರೆ. ಹೆಣ್ಣುಮಕ್ಕಳಿಗೆ ಬೆದರಿಸಿ ದೂರು ಕೊಡಲು ಪ್ರಯತ್ನ ಮಾಡಲಾಗುತ್ತಿದೆ. ಕೆಲವೇ ದಿನಗಳಲ್ಲಿ ಎಲ್ಲಾ ವಿಚಾರಗಳು ಹೊರಗೆ ಬರಲಿದೆ ಎಂದು ಹೇಳಿದರು.
10
+ ಹೆದರಿಸಿ ಹೆಣ್ಣುಮಕ್ಕಳಿಂದ ದೂರು ಪಡೆಯುವವರ ಬಗ್ಗೆ ಗೃಹಸಚಿವರು ಏನು ಕ್ರಮ ಕೈಗೊಂಡಿದ್ದಾರೆ ಎಂದು ಅವರು ಪ್ರಶ್ನಿಸಿದರು. ಪ್ರಜ್ವಲ್‌ ನನ್ನ ಅಣ್ಣನ ಮಗನೇ ಇರಬಹುದು. ಆದರೂ ವಿದೇಶಕ್ಕೆ ಹೋಗಿರುವ ಪ್ರಜ್ವಲ್‌ನನ್ನು ಏಕೆ ಕರೆಸಲಿಲ್ಲ. ಬೆಳೆದ ಮಕ್ಕಳು ನಮನ್ನು ಕೇಳಿ ಹೋಗುತ್ತಾರಾ ಎಂದು ಅಸಮಾಧಾನ ವ್ಯಕ್ತಪಡಿಸಿದರು.
eesanje/url_46_146_5.txt ADDED
@@ -0,0 +1,4 @@
 
 
 
 
 
1
+ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದ್ದು ಸತ್ಯ, ನಿಷ್ಠೆಗೆ ಜಯ : ಶರವಣ
2
+ ಬೆಂಗಳೂರು,ಮೇ14-ಮಾಜಿ ಸಚಿವ ಎಚ್‌.ಡಿ.ರೇವಣ್ಣರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದು ಸತ್ಯ, ನಿಷ್ಠೆಗೆ ಜಯ ಸಿಕ್ಕಂತಾಗಿದೆ. ಕಾಂಗ್ರೆಸ್‌‍ ರೂಪಿಸಿದ್ದ ಸಂಚು ಇದರಿಂದ ವಿಫಲಗೊಂಡಿದೆ ಎಂದು ವಿಧಾನಪರಿಷತ್‌ ಸದಸ್ಯ ಟಿ.ಎ.ಶರವಣ ಹೇಳಿದರು.
3
+ ಎಚ್‌.ಡಿ. ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ವಿನಾಕಾರಣ ರೇವಣ್ಣ ಅವರ ತೇಜೋವಧೆಗೆ ಸಂಚು ರೂಪಿಸಿದ್ದು, ಅವರ ವಿರುದ್ಧ ಮೊಕದ್ದಮೆ ದಾಖಲಿಸಲಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.
4
+ ನಾಲ್ಕು ದಶಕಗಳ ರಾಜಕಾರಣದಲ್ಲಿ ರಾಜ್ಯಕ್ಕೆ ಅದರಲ್ಲೂ ಹಾಸನ ಜಿಲ್ಲೆಗೆ ರೇವಣ್ಣ ಕೊಡುಗೆ ಅಪಾರ. ಹಾಲು ಉತ್ಪಾದಕ ಕ್ಷೇತ್ರದಲ್ಲಿ ಅವರು ಜಾರಿಗೆ ತಂದಿರುವ ಸುಧಾರಣೆ ಇಡೀ ಭಾರತದಲ್ಲೇ ಮಾದರಿ. ಇಂಥ ನಾಯಕರ ತೇಜೋವಧೆ ಮಾಡುವ ಮಟ್ಟಿಗೆ ಕಾಂಗ್ರೆಸ್‌‍ ನಾಯಕರು ಮಾಡಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
eesanje/url_46_146_6.txt ADDED
@@ -0,0 +1,9 @@
 
 
 
 
 
 
 
 
 
 
1
+ ಬಿ.ವೈ.ರಾಘವೇಂದ್ರ ಅವರನ್ನು ಬಂಧಿಸುವಂತೆ ಚುನಾವಣಾ ಆಯೋಗಕ್ಕೆ ಈಶ್ವರಪ್ಪ ದೂರು
2
+ ಬೆಂಗಳೂರು,ಮೇ14-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿ ಪಕ್ಷೇತರ ಅಭ್ಯರ್ಥಿ ಕೆ.ಎಸ್‌‍.ಈಶ್ವರಪ್ಪ ಅವರು ರಾಜ್ಯ ಚುನಾವಣಾ ಆಯೋಗಕ್ಕೆ ಇಂದು ದೂರು ನೀಡಿದ್ದಾರೆ.
3
+ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು, ಚುನಾವಣೆಯ ಹಿಂದಿನ ದಿನ ಫೇಕ್‌ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ವಿಡಿಯೋದಲ್ಲಿ ನಾನು ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮಾಡಿದ್ದೆ. ನಾನು ಚುನಾವಣಾ ಆಖಾಡದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಹೇಳಲಾಗಿದೆ. ಹೀಗಾಗಿ, ರಾಘವೇಂದ್ರ ವಿರುದ್ಧ ದೂರು ನೀಡಲಾಗಿದೆ ಎಂದು ತಿಳಿಸಿದರು.
4
+ ಕಳೆದ ಚುನಾವಣೆಯಲ್ಲಿ ನಾನು ಮಾಡಿದ ಪ್ರಚಾರವನ್ನೇ ಈಗ ಮಾಡಿರುವಂತೆ ಬಿಂಬಿಸಿ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಚುನಾವಣೆಯಲ್ಲಿ ಸೋಲುತ್ತೇವೆ ಎಂಬ ಭಯದಿಂದ ಬಿ.ವೈ.ರಾಘವೇಂದ್ರ ಅವರು ನನ್ನದು ಮತ್ತು ನರೇಂದ್ರಮೋದಿ ಅವರ ಭಾವಚಿತ್ರವಿರುವ ಫೇಕ್‌ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾಡಿರುವ ದ್ರೋಹ ಎಂದು ಹೇಳಿದರು.
5
+ ಈಗ ನಡೆದಿರುವ ಚುನಾವಣೆಗೂ, ಬಿಡುಗಡೆ ಮಾಡಿರುವ ವಿಡಿಯೋಗೂ ಸಂಬಂಧವಿಲ್ಲ. ನಾನು ಜೀವನದಲ್ಲಿ ಇಂತಹ ತಪ್ಪು ಮಾಡುವುದಿಲ್ಲ ಎಂದು ನಾನು ಹೇಳಿದ ಹಾಗೇ ಮಾಡಿದ್ದಾರೆ. ನಾನು ಕುಟುಂಬ ರಾಜಕಾರಣದಿಂದ ಹೊರಗೆ ಬರಬೇಕು, ಹಿಂದುತ್ವ ಪ್ರತಿಪಾದಿಸಿ ಸ್ಫರ್ಧಿಸಿದ್ದೇ, ಈಶ್ವರಪ್ಪ ಹಿಂದೆ ಸರಿದಿದ್ದಾರೆ. ನನಗೆ ಬೆಂಬಲಿಸಿದ್ದಾರೆ ಎಂದು ಅಪಪ್ರಚಾರ ಮಾಡಿದ್ದಾರೆ.ಇದು ಷಡ್ಯಂತ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು.
6
+ ಮಹಾರಾಷ್ಟ್ರ ಮಾದರಿಯಲ್ಲಿ ಸರ್ಕಾರ ರಚನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್‌ ಇದಕ್ಕೆ ಉತ್ತರ ಕೊಡಬೇಕು. ಅವರು ಟೊಳ್ಳು ಇದ್ದಾರೋ, ಗಟ್ಟಿ ಇದ್ದಾರೋ ಅವರೇ ಉತ್ತರ ಕೊಡಬೇಕು. ಮುಖ್ಯಮಂತ್ರಿ ಆಗುವುದು ಒಕ್ಕಲಿಗರು, ಕುರುಬರು ಮಾಡುತ್ತಾರಾ? ಜಾತಿ ರಾಜಕಾರಣ ಮಾಡುತ್ತಿರುರೋ, ಸರ್ಕಾರ ಮುಂದುವರೆಸುತ್ತಾರಾ? ನಾಳೆ ಸರ್ಕಾರ ಏನಾಗುತ್ತೆ ಗೊತ್ತಿಲ್ಲ. ನಾನು ಭವಿಷ್ಯಕಾರ ಅಲ್ಲ. ಅಶೋಕ್‌‍, ಕುಮಾರಸ್ವಾಮಿ ಹೇಳಿಕೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದರು.
7
+ ಹಾಸನ ಪೆನ್‌ಡ್ರೈವ್‌ ಪ್ರಕರಣ ಸಂಬಂಧ ಮಾತನಾಡಿದ ಅವರು, ಸಿದ್ಧರಾಮಯ್ಯ, ಡಿಕೆಶಿ, ಕುಮಾರಸ್ವಾಮಿ, ರೇವಣ್ಣ ಅವರು ಹೆಣ್ಣನ್ನು ತಾಯಿ ಅಂತಾರೆ. ಹೆಣ್ಣನ್ನು ಮುಂದೆ ಇಟ್ಟುಕೊಂಡು ಇಷ್ಟೆಲ್ಲಾ ಮಾಡಿರುವುದು ಅಸಹ್ಯ. ಈ ಪ್ರಕರಣ ಸಿಬಿಐಗೆ ಕೊಡಬೇಕು ಎಂದರು.
8
+ ಜಗದೀಶ್‌ ಶೆಟ್ಟರ್‌ ಅವರನ್ನು 6 ವರ್ಷ ಉಚ್ಚಾಟನೆ ಅಂದರು ಯಡಿಯೂರಪ್ಪ ಅವರ ಮನೆಗೆ ಹೋಗಿ ಕರೆದುಕೊಂಡ��� ಬಂದು ಸೀಟು ಕೊಟ್ಟರು. ಈ ಉಚ್ಛಾಟನೆ ನಾನು ಲೆಕ್ಕಕ್ಕೇ ಇಟ್ಟುಕೊಂಡಿಲ್ಲ. ನಾನು ಮೋದಿ ಪರ ಕೈ ಎತ್ತುತ್ತೇನೆ. ರಾಘವೇಂದ್ರ ಲಿಂಗಾಯತರ ಹೆಸರಲ್ಲಿ ಓಟು ಕೇಳಿದರು ಮಧು ಬಂಗಾರಪ್ಪ ಈಡಿಗರ ಹೆಸರಲ್ಲಿ ಓಟು ಕೇಳಿದರು ನಾಚಿಕೆ ಆಗಬೇಕು ಇವರಿಗೆ.ಜಾತಿ ಹೆಸರಿನಲ್ಲಿ ಮತ ಕೇಳಿದ್ದಕ್ಕೆ ಎಂದು ತರಾಟೆಗೆ ತೆಗೆದುಕೊಂಡರು.
9
+ ಈ ಬಾರಿ ಮುಸ್ಲಿಂರು ಒಂದಾಗಿ ಅತಿ ಹೆಚ್ಚು ಮತಗಳನ್ನು ಚಲಾಯಿಸಿದ್ದಾರೆ. ಜಾತಿ ಹೆಸರಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌‍ ನಾಯಕರು ರಾಜಕಾರಣ ಮಾಡುತ್ತಿದ್ದಾರೆ. ಇದರಿಂದ ಮುಸ್ಲಿಂರು ಒಂದಾಗಿದ್ದಾರೆ. ಹಿಂದು ಸಮಾಜ ಎಚ್ಚೆತ್ತಕೊಳ್ಳಬೇಕು. ಮುಂದಿನ ದಿನಗಳಲ್ಲಿ ನಮ ಹಿಂದು ಸಮಾಜ ಒಂದಾಗುವ ವಿಶ್ವಾಸ ನನಗಿದೆ ಎಂದರು.
eesanje/url_46_146_7.txt ADDED
@@ -0,0 +1,8 @@
 
 
 
 
 
 
 
 
 
1
+ ಎಸ್‌‍ಎಸ್‌‍ಎಲ್‌ಸಿ ಟಾಪರ್‌ ಅಂಕಿತಾಗೆ 5 ಲಕ್ಷ ರೂ. ಬಹುಮಾನ ನೀಡಿ ಸನ್ಮಾನಿಸಿದ ಡಿಸಿಎಂ
2
+ ಬೆಂಗಳೂರು,ಮೇ 14-ಎಸ್‌‍ಎಸ್‌‍ಎಲ್‌ಸಿಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್‌ ಪಡೆದ ಅಂಕಿತ ಬಸವರಾಜ್‌ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ 5 ಲಕ್ಷ ರೂ.ಗಳ ನಗದು ಬಹುಮಾನ ನೀಡಿ ಅಭಿನಂದಿಸಿದ್ದಾರೆ.
3
+ ಅಂಕಿತ ಅವರ ಪೋಷಕರು ಮತ್ತು ಶಾಲೆಯ ಶಿಕ್ಷಕರನ್ನು ತಮ ಮನೆಗೆ ಕರೆಸಿಕೊಂಡು ಸನ್ಮಾನಿಸಿದ ಡಿ.ಕೆ.ಶಿವಕುಮಾರ್‌, ಸರ್ಕಾರದ ವತಿಯಿಂದ ಪ್ರಶಂಸನಾ ಪತ್ರ ನೀಡಿದರು.ಅದರ ಮೇಲೆ ದಿನಾಂಕವನ್ನು ಖುದ್ದಾಗಿ ತಾವೇ ನಮೂದಿಸಿದರು. ಜೊತೆಗೆ ತಮ್ಮ ಪುತ್ರಿಯಿಂದಲೂ ಸಹಿ ಹಾಕಿಸಿ ಅಂಕಿತಾ ಅವರಿಗೆ ತಲುಪಿಸುವಂತೆ ತಮ ಸಿಬ್ಬಂದಿಗಳಿಗೆ ಸೂಚಿಸಿದರು. ವೈಯಕ್ತಿಕವಾಗಿ 5 ಲಕ್ಷ ರೂ.ಗಳ ಚೆಕ್‌ ಅನ್ನು ವಿತರಿಸಿದರು. ಜೊತೆಗೆ ತೃತೀಯ ರ್ಯಾಂಕ್‌ ಪಡೆದಿರುವ ಮಂಡ್ಯದ ನವನೀತ್‌ಗೂ 2 ಲಕ್ಷ ರೂ.ಗಳ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದರು.
4
+ ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ಬಾಗಲಕೋಟೆಯ ಮುಧೋಳ ಮೂಲದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಹಾಗೂ ಮೂರನೇ ಸ್ಥಾನ ಪಡೆದ ಮಂಡ್ಯದ ಕನ್ನಲಿ ಗ್ರಾಮದ ನವನೀತ್‌ ಅವರನ್ನು ಇಂದು ಭೇಟಿಯಾಗಿ ಸನ್ಮಾನಿಸಿ ಗೌರವಿಸಿದೆ. ಹಾಗೆಯೇ ಅವರ ಮುಂದಿನ ವಿದ್ಯಾಭ್ಯಾಸಕ್ಕಾಗಿ ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್‌ಗೆ 2 ಲಕ್ಷ ರೂ. ಚೆಕ್…../
5
+ ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ಬಾಗಲಕೋಟೆಯ ಅಂಕಿತಾ 625 ಕ್ಕೆ 625 ಅಂಕ ಗಳಿಸಿ ಪ್ರಥಮ ರ್ಯಾಂಕ್‌ ಪಡೆದಿದ್ದಾರೆ. ನಾನು ಓದುವಾಗಲೂ ಬಹಳಷ್ಟು ಮಂದಿ ರ್ಯಾಂಕ್‌ ಪಡೆಯುತ್ತಿದ್ದರು, ಬೆಂಗಳೂರಿನ ಶಾಲೆಗಳಲ್ಲಿ ರ್ಯಾಂಕ್‌ ಪಡೆಯುವುದು ದೊಡ್ಡ ವಿಷಯವಲ್ಲ. ಆದರೆ ಗ್ರಾಮೀಣ ಭಾಗದಲ್ಲಿ ಅದರಲ್ಲೂ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ರ್ಯಾಂಕ್‌ ಪಡೆದಿದ್ದು ಶ್ಲಾಘನಾರ್ಹ ಎಂದರು.
6
+ ನಾನು ಪ್ರವೃತ್ತಿಯಲ್ಲಿ ರಾಜಕಾರಣಿ. ಆದರೆ ಶೈಕ್ಷಣಿಕ ಸೇವೆ ನನ್ನ ಆಯ್ಕೆ. ರಾಜ್ಯದ ಗ್ರಾಮೀಣ ಭಾಗದಲ್ಲಿನ ಪಂಚಾಯಿತಿ ಮಟ್ಟದಲ್ಲಿ 2 ಸಾವಿರ ಮಾದರಿ ಶಾಲೆಗಳನ್ನು ಆರಂಭಿಸುವುದು ನನ್ನ ಗುರಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿಎಸ್‌‍ಆರ್‌ ಅನುದಾನ ಬಳಸಿ ಶಾಲೆಗಳ ನಿರ್ಮಾಣಕ್ಕೆ ಸಹಮತಿ ಸೂಚಿಸಿದ್ದಾರೆ. ಈಗಾಗಲೇ ಸಂಸದ ಡಿ.ಕೆ.ಸುರೇಶ್‌ ಪ್ರತಿನಿಧಿಸುವ ರಾಮನಗರದಲ್ಲಿ ಈ ರೀತಿಯ 20 ಶಾಲೆಗಳ ನಿರ್ಮಾಣ ಕಾರ್ಯ ಆರಂಭವಾಗಿದೆ ಎಂದು ತಿಳಿಸಿದರು.
7
+ ನೀತಿ ಸಂಹಿತೆಯ ಕಾರಣಕ್ಕಾಗಿ ಈವರೆಗೂ ಸಭೆಗಳನ್ನು ಮಾಡಿಲ್ಲ. ಇನ್ನು ಮುಂದೆ ನಿರಂತರವಾಗಿ ಸಭೆಗಳನ್ನು ಮಾಡಿ ಶಾಲೆಗಳ ನಿರ್ಮಾಣ ಕಾರ್ಯವನ್ನು ಚುರುಕುಗೊಳಿಸಲಾಗುವುದು. ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಅವರ ಫಲಿತಾಂಶ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಸಮರ್ಥರಿದ್ದಾರೆ, ಶಿಕ್ಷಕರೂ ಸಮರ್ಥರು ಎಂಬುದನ್ನು ಸಾಬೀತುಪಡಿಸಿದೆ ಎಂದು ಡಿ.ಕೆ.ಶಿವಕುಮಾರ್‌ ಅಭಿಪ್ರಾಯಪಟ್ಟರು.
8
+ ಇದೇ ವೇಳೆ ಮೊರಾರ್ಜಿ ಶಾಲೆಯ ಪ್ರಾಂಶುಪಾಲರನ್ನು ಡಿ.ಕೆ.ಶಿವಕುಮಾರ್‌ ಅಭಿನಂದಿಸಿದರು.ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಇದು ರಾಜಕಾರಣದ ವಿಚಾರ. ವಿದ್ಯಾರ್ಥಿನಿಯಾಗಿರುವ ನಿನಗೆ ಇದರ ಸಹವಾಸ ಬೇಡ ಎಂದು ಅಂಕಿತಾರನ್ನು ಪಕ್ಕಕ್ಕೆ ಕಳುಹಿಸಿದರು.
eesanje/url_46_146_8.txt ADDED
@@ -0,0 +1,9 @@
 
 
 
 
 
 
 
 
 
 
1
+ ವಿಧಾನಪರಿಷತ್‌ ಚುನಾವಣಾ ಮೇಲೆ ಪೆನ್‌ಡ್ರೈವ್‌ ಪ್ರಕರಣ ಪರಿಣಾಮ ಬೀರಲ್ಲ : ಸಿಎಂ
2
+ ಮೈಸೂರು,ಮೇ 14-ಶಿಕ್ಷಕರು ಹಾಗೂ ಪದವೀಧರರ ವಲಯದಿಂದ ವಿಧಾನಪರಿಷತ್‌ಗೆ ನಡೆಯುತ್ತಿರುವ ದ್ವೈ ವಾರ್ಷಿಕ ಚುನಾವಣೆಯ ಮೇಲೆ ಪೆನ್‌ಡ್ರೈವ್‌ ಪ್ರಕರಣ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರದ ಮತದಾರರು ಪ್ರಬುದ್ಧರಿದ್ದಾರೆ. ಯಾವುದು ಸರಿ, ಯಾವುದು ತಪ್ಪು ಎಂದು ಯೋಚಿಸುವ ಹಾಗೂ ಕೇಂದ್ರ ಸರ್ಕಾರದ 10 ವರ್ಷಗಳ ಆಡಳಿತ ಹಾಗೂ ನಮ ಸರ್ಕಾರದ ಸಾಧನೆಗಳ ಬಗ್ಗೆ ವಿಮರ್ಶೆ ಮಾಡುವ ವಿವೇಚನೆ ಹೊಂದಿದ್ದಾರೆ. ಹೀಗಾಗಿ ಪೆನ್‌ಡ್ರೈವ್‌ ಪ್ರಕರಣ ಪರಿಣಾಮ ಬೀರುವುದಿಲ್ಲ ಎಂದರು.
4
+ ಬೆಂಗಳೂರು ದಕ್ಷಿಣ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್‌‍ ಪರವಾದ ವಾತಾವರಣವಿದೆ. ನಮ ಪಕ್ಷ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿದೆ. ಆರು ತಿಂಗಳಿಗೂ ಮೊದಲೇ ಅಭ್ಯರ್ಥಿಗಳನ್ನು ಘೋಷಿಸಲಾಗಿತ್ತು. ಹೀಗಾಗಿ ಒಂದು ಸುತ್ತಿನ ಮತದಾರರ ಭೇಟಿ ಪೂರ್ಣಗೊಂಡಿದೆ ಎಂದು ಹೇಳಿದರು.
5
+ ಜೆಡಿಎಸ್‌‍-ಬಿಜೆಪಿ ಪಕ್ಷಗಳು ಮೈತ್ರಿ ಮಾಡಿಕೊಂಡಿರುವುದರಿಂದ ನಮಗೇನೂ ನಷ್ಟವಾಗುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿಯೂ ಅವರು ಮೈತ್ರಿ ಮಾಡಿಕೊಂಡಿದ್ದರು. ಆದರೆ ಮತದಾರರು ನಮ ಪರವಾದ ಒಲುವು ಹೊಂದಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
6
+ ತಮ ಬಳಿ ಭ್ರಷ್ಟಾಚಾರದ ವಿಚಾರಕ್ಕೆ ಸಂಬಂಧಪಟ್ಟಂತಹ ಪೆನ್‌ಡ್ರೈವ್‌ ಇದೆ. ಸರ್ಕಾರ ತನಿಖೆ ಮಾಡುವ ತಾಕತ್ತು ಪ್ರದರ್ಶಿಸಿದರೆ ಅದನ್ನ ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರದು ಹಿಟ್‌ ಅಂಡ್‌ ರನ್‌ ಕೇಸು. ಎಚ್‌.ಡಿ.ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದರು.
7
+ ನಮ ಸರ್ಕಾರ ಪತನಗೊಳ್ಳುತ್ತದೆ ಎಂದು ಒಂದು ವರ್ಷದಿಂದಲೂ ಹೇಳುತ್ತಲೇ ಬಂದಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಮೊದಲು ತಮ ಸರ್ಕಾರವನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಲಿ. ಅಲ್ಲಿನವರು ನಮ ಸರ್ಕಾರದ ಬಗ್ಗೆ ಮಾತನಾಡುವ ಅಗತ್ಯವಿಲ್ಲ ಎಂದು ತಿಳಿಸಿದರು.
8
+ ಕಾಂಗ್ರೆಸ್‌‍ನಲ್ಲಿ ಒಳ ಜಗಳ ಇಲ್ಲ. ವಿರೋಧಪಕ್ಷಗಳು ರಾಜಕೀಯಕ್ಕಾಗಿ ಏನು ಬೇಕಾದರೂ ಹೇಳಿಕೊಳ್ಳಲಿ. ಒಳಜಗಳ ಇದ್ದಿದ್ದರೆ ಲೋಕಸಭಾ ಚುನಾವಣೆಯನ್ನು ಅಷ್ಟು ಒಗ್ಗಟ್ಟಾಗಿ ಎದುರಿಸಲು ಸಾಧ್ಯವಿತ್ತೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
9
+ ಇದೇ ವೇಳೆ ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಮರಿತಿಬ್ಬೇಗೌಡ ಅವರು ನಾಮಪತ್ರ ಸಲ್ಲಿಸುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಭಾಗವಹಿಸಿದ್ದರು.ಈ ವೇಳೆ ಸಚಿವರಾದ ಎಚ್‌.ಸಿ.ಮಹದೇವಪ್ಪ, ಚೆಲುವರಾಯಸ್ವಾಮಿ, ಮಧು ಬಂಗಾರಪ್ಪ, ಕೆ.ವೆಂಕಟೇಶ್‌ ಸೇರಿದಂ���ೆ ಶಾಸಕರು ಹಾಜರಿದ್ದರು.
eesanje/url_46_146_9.txt ADDED
@@ -0,0 +1,9 @@
 
 
 
 
 
 
 
 
 
 
1
+ ಪ್ರಜ್ವಲ್ ಪೆನ್‌ಡ್ರೈವ್‌ ಹಂಚಿದ್ದು ಬಿಜೆಪಿಯವರೇ : ಶಾಸಕ ಗಣಿಗ ರವಿ
2
+ ಮಂಡ್ಯ,ಮೇ 14-ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ಬಿಜೆಪಿಯವರೇ ಹಂಚಿಕೆದಾರರಾಗಿದ್ದು, ಮಾಜಿ ಶಾಸಕರು, ರಾಜ್ಯಮಟ್ಟದ ಪ್ರಭಾವಿ ನಾಯಕರ ಪಾತ್ರವು ಶೀಘ್ರವೇ ಹೊರಬರುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್‌‍ ಶಾಸಕ ಗಣಿಗ ರವಿ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌‍ ಪಕ್ಷವನ್ನು ಮುಗಿಸಲು ಬಿಜೆಪಿಯವರೇ ಮಾಡಿದ ಹುನ್ನಾರ ಇದು ಎಂದು ಟೀಕಿಸಿದರು.
3
+ ಬಿಜೆಪಿಯವರಿಗೆ ಹಳೆ ಮೈಸೂರು ಭಾಗದಲ್ಲಿ ಹೆಚ್ಚಿನ ಬೆಂಬಲ ಇಲ್ಲ. ಹೀಗಾಗಿ ಜನತಾದಳವನ್ನು ಪಕ್ಕದಲ್ಲೇ ಇಟ್ಟುಕೊಂಡು ಅವರನ್ನು ಮುಗಿಸಿ, ಆ ಪಕ್ಷದ ಕಾರ್ಯಕರ್ತರನ್ನು ಬಿಜೆಪಿಯತ್ತ ಸೆಳೆದುಕೊಳ್ಳುವ ಸಂಚು ನಡೆದಿದೆ. ಅದಕ್ಕಾಗಿ ಕಾಂಗ್ರೆಸ್‌‍ ಮೇಲೆ ಕೋಪ ಬರುವಂತೆ ಅಪಪ್ರಚಾರ ಮಾಡಲಾಗುತ್ತಿದೆ ಎಂದರು.
4
+ ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯತ ಸಮುದಾಯ ಈ ಮೊದಲು ಜನತಾದಳದ ಜೊತೆಗಿತ್ತು. ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ ಮೇಲೆ ಒಟ್ಟಾರೆ ಲಿಂಗಾಯತ ಸಮುದಾಯವನ್ನು ಬಿಜೆಪಿ ಹೈಜಾಕ್‌ ಮಾಡಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್‌‍ ಹೇಳ ಹೆಸರಿಲ್ಲದಂತೆ ಮಾಡಲಾಗಿದೆ. ಈಗ ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯವನ್ನು ಸೆಳೆದುಕೊಂಡು ಜೆಡಿಎಸ್‌‍ ಪಕ್ಷವನ್ನು ಮುಗಿಸಲು ಬಿಜೆಪಿ ಸಂಚು ರೂಪಿಸಿದೆೆ ಎಂದರು.
5
+ ಜೆಡಿಎಸ್‌‍-ಬಿಜೆಪಿಯ ಮೈತ್ರಿಗೂ ಮೊದಲು ಜೆಡಿಎಸ್‌‍ನವರು ಮಣ್ಣು, ನೇಗಿಲು, ತೆನೆ ಎನ್ನುತ್ತಿದ್ದರು. ಈಗ ಭಾರತ, ಪಾಕಿಸ್ತಾನ, ಆಘ್ಫಾನಿಸ್ತಾನ ಎಂದು ಮಾತನಾಡುತ್ತಿದ್ದಾರೆ. ಹೊಲ ಉಳುವುದು, ನೀರು ಹಾಯಿಸುವ ಬಗ್ಗೆ ಮಾತನಾಡುತ್ತಿದ್ದ ಜನತಾದಳದ ನಾಯಕರು, ಅಮೆರಿಕ ಎಂದು ವಿದೇಶದ ವಿಚಾರಗಳನ್ನು ಬಿಜೆಪಿಯವರ ರೀತಿಯಲ್ಲೇ ಚರ್ಚೆ ಮಾಡಲಾರಂಭಿಸಿದ್ದಾರೆ ಎಂದು ಹೇಳಿದರು.
6
+ ಪೆನ್‌ಡ್ರೈವ್‌ ಪ್ರಕರಣಕ್ಕೂ, ಕಾಂಗ್ರೆಸ್‌‍ಗೂ ಯಾವುದೇ ಸಂಬಂಧ ಇಲ್ಲ. ಸಹಜ ಕುತೂಹಲದಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ದೇವರಾಜೇಗೌಡರ ಜೊತೆ ಮಾತನಾಡಿದ್ದಾರೆ. ಆತ ಅದನ್ನು ರೆಕಾರ್ಡ್‌ ಮಾಡಿಕೊಂಡು ತನಗೆ ಬೇಕಾದಷ್ಟು ಮಾತ್ರ ಬಹಿರಂಗಗೊಳಿಸಿದ್ದಾರೆ ಎಂದು ಕಿಡಿಕಾರಿದರು.
7
+ ಪೆನ್‌ಡ್ರೈವ್‌ನಲ್ಲಿನ ಅಶ್ಲೀಲ ವಿಡಿಯೋಗಳ ಚಿತ್ರೀಕರಣ ಮಾಡಿದವರು ಸಂಸದ ಪ್ರಜ್ವಲ್‌ ರೇವಣ್ಣ. ಅದರ ಹಂಚಿಕೆದಾರರು, ಪ್ರಿಂಟರ್‌ ಬಿಜೆಪಿಯವರು. ಈಗಾಗಲೇ ಬಿಜೆಪಿಯ ಮಾಜಿ ಶಾಸಕ ರ ಎಡಗೈ, ಬಲಗೈನಂತಿದ್ದ ಆಪ್ತರನ್ನು ಬಂಧಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮುಖ್ಯ ಪಾತ್ರಧಾರಿಗಳು ಹೊರಬರುತ್ತಾರೆ ಎಂದು ಹೇಳಿದರು.
8
+ ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ಪ್ರತಿಭಟನೆ ನಡೆಸುತ್ತಿರುವುದು ಹಾಸ್ಯಾಸ್ಪದ. ಹೆಣ್ಣು ಮಕ್ಕಳನ್ನು ದುರುಪಯೋಗಪಡಿಸಿಕೊಂಡು ಚಿತ್ರೀಕರಣ ಮಾಡಿಕೊಳ್ಳಲು ನಾವು ಹೇಳಿರಲಿಲ್ಲ. ಎಲ್ಲವೂ ಅವರೇ ಮಾ��ಿಕೊಂಡ ತಪ್ಪುಗಳು. ನಾವು ಪ್ರಕರಣದ ತನಿಖೆಗೆ ಎಸ್‌‍ಐಟಿ ರಚನೆ ಮಾಡಿದ್ದೇವೆ. ಹಂಚಿಕೆದಾರರು, ಭಾಗಿದಾರರು ಇಬ್ಬರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
9
+ ಸರ್ಕಾರ ಎಸ್‌‍ಐಟಿ ರಚನೆ ಮಾಡಿದೆ, ತನಿಖೆ ನಡಯುತ್ತಿದೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಕುಮಾರಸ್ವಾಮಿ ಹೇಳಿದಂತೆ ತಪ್ಪು ಮಾಡಿದವರ ವಿರುದ್ಧ ಖಂಡಿತ ಕ್ರಮ ತೆಗೆದುಕೊಳ್ಳಲಾಗುತ್ತದೆ. ತಾವು ದಾಖಲೆ ಇಲ್ಲದೆ ಯಾರ ವಿರುದ್ಧವೂ ಆರೋಪ ಮಾಡುವುದಿಲ್ಲ, ಹಿಟ್‌ ಅಂಡ್‌ ರನ್‌ ಪ್ರವೃತ್ತಿಯೂ ನಮದಲ್ಲ ಎಂದು ಗಣಿಗ ರವಿ ಹೇಳಿದರು.
eesanje/url_46_147_1.txt ADDED
@@ -0,0 +1,9 @@
 
 
 
 
 
 
 
 
 
 
1
+ : ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರು
2
+ ಬೆಂಗಳೂರು, ಮೇ 13- ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.
3
+ ಸಾಕ್ಷ್ಯ ನಾಶ ಪಡಿಸಬಾರದು, ವಿದೇಶ ಸೇರಿದಂತೆ ನಿಗೂಢ ಸ್ಥಳಕ್ಕೆ ತೆರಳಬಾರದು. 5 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ನ ಭದ್ರತೆ ಒದಗಿಸಬೇಕು ಎಂಬವು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಜಾಮೀನು ಮಂಜೂರು ಮಾಡಿದ್ದಾರೆ.
4
+ ಹಾಸನದ ಪೆನ್ ಡ್ರೈವ್ ಪ್ರಕರಣ ಬಯಲಿಗೆ ಬಂದ ಬಳಿಕ ಮಹಿಳೆಯ ಪುತ್ರ ಮೈಸೂರಿನ ಕೆ.ಅರ್.ನಗರ ಪೊಲೀಸ್ ಠಾಣೆಗೆ ದೂರು ನೀಡಿ, ತಮ್ಮ ತಾಯಿ ಅಪಹರಣವಾಗಿದ್ದಾರೆ ಎಂದು ಆರೋಪಿಸಿದರು. ಈ ಸಂಬಂಧ ತನಿಖೆ ನಡೆಸಿದ ಕೆ.ಅರ್.ನಗರ ಹಾಗೂ ವಿಶೇಷ ತನಿಖಾ ದಳದ ಅಧಿಕಾರಿಗಳು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಅವರ ಆಪ್ತ ಸತೀಶ್ ಬಾಬು ಎಂಬುವರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಿದ್ದರು. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ರೇವಣ್ಣ ಜಾಮೀನಿಗಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
5
+ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಮುಂದೆ ಹೆಚ್.ಡಿ.ರೇವಣ್ಣ ಅವರ ಪರವಾಗಿ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರು. ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರ ಪಾತ್ರವಿಲ್ಲ ಎಂದರು. ಐಪಿಸಿ ಸೆಕ್ಷನ್ 364 ಎ ಮತ್ತು 365ರ ಅಡಿ ಅಪಹರಣ ಪ್ರಕರಣ ದಾಖಲಿಸಲಾಗಿದೆ. ಈ ಸೆಕ್ಷನ್ ಬಳಕೆ ಸಂಪೂರ್ಣ ಕಾನೂನು ಬಾಹಿರವಾಗಿದೆ. ಅಪಹರಣ ಪ್ರಕರಣದಲ್ಲಿ ಒತ್ತೆಯಾಳನ್ನು ಬಿಡುಗಡೆ ಮಾಡಲು ಬೇಡಿಕೆ ಇಟ್ಟಿರಬೇಕು, ಕೊಲ್ಲುವುದಾಗಿ ಬೆದರಿಕೆ ಹಾಕಿರಬೇಕು. ಹಲ್ಲೆ ಮಾಡಿರಬೇಕು, ಈ ಎಲ್ಲಾ ಆರೋಪಗಳಿಗೆ ಪೂರಕ ಸಾಕ್ಷ್ಯಗಳಿರಬೇಕು. ಅಪಹರಣ ಮಾಡಿದವರನ್ನು ಒತ್ತೆಯಲ್ಲಿಡುವುದು ಅಪರಾಧ ಹೌದಾದರೂ, ಇಲ್ಲಿ ಪ್ರತಿವಾದಿ ಹೆಚ್.ಡಿ.ರೇವಣ್ಣ ಮಹಿಳೆಯನ್ನು ಅಪಹರಣ ಮಾಡಿಲ್ಲ, ಆಕೆಯನ್ನು ಒತ್ತೆಯಾಳಾಗಿಸಿರಿಕೊಂಡಿಲ್ಲ. ಆಕೆಯನ್ನು ಬಿಡುಗಡೆ ಮಾಡಲು ಯಾವುದೇ ಬೇಡಿಕೆಯನ್ನೂ ಇಟ್ಟಿಲ್ಲ ಎಂದು ವಾದಿಸಿದ್ದಾರೆ.
6
+ ದೂರು ನೀಡಿರುವ ಮಹಿಳೆಯ ಪುತ್ರ, ತನ್ನ ತಾಯಿ ಅಪಹರಣವಾಗಿದ್ಧಾರೆ, ತನ್ನ ತಾಯಿಯನ್ನು ಅಪಹರಣ ಮಾಡಿ ಒತ್ತೆಯಾಳಾಗಿಸಿಕೊಂಡಿದ್ದಾರೆ ಎಂದು ಊಹೆ ಮಾಡಿಕೊಂಡಿದ್ದಾರೆ. ದೂರು ನೀಡಲು ಕೂಡ ಸಾಕಷ್ಟು ವಿಳಂಬವಾಗಿದೆ. ದೂರು ನೀಡುವ ಮೊದಲು ದೂರುದಾರರು ತನ್ನ ತಾಯಿಯನ್ನು ಹುಡುಕುವ ಪ್ರಯತ್ನ ಮಾಡಿಲ್ಲ. ಪೆನ್ಡ್ರೈವ್ ಬಹಿರಂಗಗೊಂಡ ಬಳಿಕ ದೂರು ನೀಡಲಾಗಿದೆ. ಮಹಿಳೆ ರೇವಣ್ಣ ಅವರ ಮನೆಯಲ್ಲಿ 10 ವರ್ಷ ಕೆಲಸ ಮಾಡಿದ್ದರು ಎಂದೆಲ್ಲಾ ವಿವರಿಸಿದರು.
7
+ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಸತೀಶ್ ಬಾಬು ದ್ವಿಚಕ್ರವಾಹನದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿದ್ದರು. ಚುನಾವಣೆಯ ದಿನ ಮ��ಿಳೆಯನ್ನು ಮತ್ತೆ ಕರೆ ತಂದು ವಾಪಾಸ್ ಬಿಟ್ಟಿದ್ದಾರೆ. ಮಹಿಳೆ ತಮ್ಮ ಮತ ಚಲಾಯಿಸಿದ್ದಾರೆ. ಇದನ್ನು ಹೇಗೆ ಅಪಹರಣ ಪ್ರಕರಣ ಎಂದು ಪರಿಗಣಿಸಲು ಸಾಧ್ಯ ಎಂದು ನಾಗೇಶ್ ವಾದಿಸಿದ್ದರು.
8
+ ಜೀವಾವಧಿ ಶಿಕ್ಷೆಗೆ ಅರ್ಹವಾದ ಸಾಧ್ಯತೆಗಳಿದ್ದರೆ ಮಾತ್ರ ಜಾಮೀನು ನಿರಾಕರಿಸಬಹುದು. ಆದರೆ ಈ ಪ್ರಕರಣದಲ್ಲಿ ರೇವಣ್ಣನವರ ವಿರುದ್ಧ ಕೇಸು ದಾಖಲಿಸಲು ಸೂಕ್ತ ಸಾಕ್ಷ್ಯಗಳೇ ಇಲ್ಲ. ಮಹಿಳೆ ಪತ್ತೆಯಾದ ಬಳಿಕ ಆರು ದಿನಗಳಾದರೂ ಹೇಳಿಕೆ ದಾಖಲಿಸಿಲ್ಲ. ಸಾಕ್ಷ್ಯ ಸಂಗ್ರಹಿಸಲು ವಿಳಂಬ ಮಾಡಲಾಗಿದೆ. ಮಹಿಳೆ ಸ್ವಯಿಚ್ಚೆಯಿಂದ ಹೋಗಿದ್ದಾರೆ. ಹಾಗಾಗಿ ಪೊಲೀಸರು ರೇವಣ್ಣನವರ ವಿರುದ್ಧ ಐಪಿಸಿ 364 ಎ ಮತ್ತು 365 ಅಡಿ ಪ್ರಕರಣ ದಾಖಲಿಸಿರುವುದು ಕಾನೂನು ಬಾಹಿರ ಎಂದು ವಾದಿಸಿದರು.
9
+ ಸರ್ಕಾರದ ಪರವಾಗಿ ವಾದಿಸಿದ ವಿಶೇಷ ಅಭಿಯೋಜಕ ಜಯ್ನಾ ಕೊಠಾರಿ, ಮಹಿಳೆಯ ಅಪಹರಣದ ಹಿಂದೆ ಸಾಕ್ಷ್ಯ ನಾಶ ಪಡಿಸುವ ಉದ್ದೇಶ ಇದೆ. ಹಾಸನದಲ್ಲಿ ಸಿಕ್ಕ ಪೆನ್ಡ್ರೈವ್ ಪ್ರಕರಣದಲ್ಲಿ ಅಪಹರಣಕ್ಕೆ ಒಳಗಾದ ಮಹಿಳೆ ಸಂತ್ರಸ್ಥೆಯಾಗಿದ್ದಾರೆ. ಹಾಗಾಗಿ ಆಕೆಯನ್ನು ಮರೆ ಮಾಚುವ ಮೂಲಕ ಸಾಕ್ಷ್ಯ ನಾಶ ಪಡಿಸುವ ದುರುದ್ದೇಶ ಹೊಂದಿದ್ದರು ಎಂದು ಪ್ರತಿವಾದಿಸಿದರು. ಎಸ್ಐಟಿ ಪರವಾಗಿ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರಾದ ಅಶೋಕ್‌ ನಾಯ್ಕ್‌ ಅವರು “ಎಚ್‌ ಡಿ ರೇವಣ್ಣ ಪ್ರಭಾವಶಾಲಿಯಾಗಿರುವ ಕಾರಣ, ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಸಾಕ್ಷ್ಯ ನಾಶ ಪಡಿಸುವ ಸಾಧ್ಯತೆ ಇದೆ. ಮಹಿಳೆಯರು ಹೇಳಿಕೆ ನೀಡುವಿದಿಲ್ಲ, ಹಾಗೂ ಈವರೆಗಿನ ವಿಚಾರಣೆಯಲ್ಲಿ ರೇವಣ್ಣ ಅಗತ್ಯ ಸಹಕಾರ ನೀಡಿಲ್ಲ ಎಂದು ಬಲವಾಗಿ ವಾದಿಸಿದರು. ವಾದಿಸಿದರು.
eesanje/url_46_147_10.txt ADDED
@@ -0,0 +1,7 @@
 
 
 
 
 
 
 
 
1
+ ಕರ್ನಾಟಕದ ಗ್ಯಾರಂಟಿ ಸರ್ಕಾರ ಪತನಕ್ಕೆ ಮಹಾರಾಷ್ಟ್ರದಂತೆ`ನಾಥ್‌ ಆಪರೇಷನ್‌’..?!
2
+ ಬೆಂಗಳೂರು,ಮೇ 13-ಮಹಾರಾಷ್ಟ್ರದ ಮಾದರಿಯಲ್ಲಿ ಕರ್ನಾಟಕದಲ್ಲೂ ನಾಥ್‌ ಆಪರೇಷನ್‌ ಮಾಡಿ ಕಾಂಗ್ರೆಸ್‌‍ ಸರ್ಕಾರವನ್ನು ಪತನಗೊಳಿಸಲು ಚರ್ಚೆಗಳು ನಡೆದಿವೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಹೇಳಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
3
+ ಮಹಾರಾಷ್ಟ್ರದ ಸತಾರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಹೇಳಿಕೆ ನೀಡಿರುವ ಏಕನಾಥ ಶಿಂಧೆ ಕರ್ನಾಟಕ ಸರ್ಕಾರದ ಭವಿಷ್ಯ ಕುರಿತು ಮಹತ್ವದ ಸುಳಿವು ನೀಡಿದ್ದಾರೆ. ಇತ್ತೀಚೆಗೆ ತಾವು ಕರ್ನಾಟಕದ ಸಭೆಯಲ್ಲಿ ಭಾಗವಹಿಸಲು ತೆರಳಿದ್ದೆ. ಅಲ್ಲಿ ಪಕ್ಷದ ನಾಯಕರು ನಾಥ್‌ ಆಪರೇಷನ್‌ ಮಾಡೋದಿದೆ ಎಂದು ಹೇಳಿದರು. ನಾಥ್‌ ಆಪರೇಷನ್‌ ಎಂದರೆ ಏನು ಎಂದು ನಾನು ಅವರಲ್ಲಿ ಕೇಳಿದೆ.
4
+ ಮಹಾರಾಷ್ಟ್ರದಲ್ಲಿ ಏಕನಾಥ್‌ ಶಿಂಧೆ ಮಾದರಿಯಲ್ಲೇ ನಾಥ್‌ ಆಪರೇಷನ್‌ ಮಾಡಬೇಕಿದೆ. ನಿಮ ಅನುಭವ ಮತ್ತು ಸಹಕಾರ ನಮಗೆ ಅಗತ್ಯ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ. ನಾನು ಅಗತ್ಯ ಸಂದರ್ಭದಲ್ಲಿ ಜೊತೆಗಿರುವುದಾಗಿ ಭರವಸೆ ನೀಡಿದ್ದೇನೆ ಎಂದು ಶಿಂಧೆ ತಿಳಿಸಿದ್ದಾರೆ.ಇದು ಬಿಜೆಪಿಯವರು ಕರ್ನಾಟಕದಲ್ಲಿ ತೆರೆಮರೆಯಲ್ಲಿ ಆಪರೇಷನ್‌ ಕಮಲಕ್ಕೆ ವೇದಿಕೆ ಸಜ್ಜುಗೊಳಿಸಿರುವುದನ್ನು ಮತ್ತೊಮೆ ಸಾಬೀತುಪಡಿಸಿದೆ.
5
+ ಇತ್ತೀಚೆಗೆ ಸರ್ಕಾರದ ಹಲವು ಸಚಿವರು ಬಿಜೆಪಿಯ ಹುನ್ನಾರಗಳ ಬಗ್ಗೆ ಅಸಮಾಧಾನ ಹೊರಹಾಕಿದ್ದರು. ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ನಿನ್ನೆಯಷ್ಟೇ ಹೇಳಿಕೆ ನೀಡಿ, ಮಹಾರಾಷ್ಟ್ರದಲ್ಲಿ ಶಿವಸೇನೆಯ ಮೂರನೇ ಎರಡರಷ್ಟು ಶಾಸಕರನ್ನು ಬಿಜೆಪಿಯವರು ಸೆಳೆದುಕೊಂಡಿದ್ದರು. ಹೀಗಾಗಿ ಅಲ್ಲಿ ಅವರು ಯಶಸ್ವಿಯಾಗಿದ್ದಾರೆ.
6
+ ಕರ್ನಾಟಕದಲ್ಲಿ ಆ ಪರಿಸ್ಥಿತಿ ಇಲ್ಲ. ಇಲ್ಲಿ ನಮ್ಮ ನಾಲ್ಕು ಮಂದಿ ಶಾಸಕರನ್ನು ಸೆಳೆಯಲು ಪ್ರಯತ್ನಿಸಿದರೆ ಬಿಜೆಪಿ ಮತ್ತು ಜೆಡಿಎಸ್‌‍ನಿಂದ ಹಲವು ಮಂದಿ ಕಾಂಗ್ರೆಸ್‌‍ನತ್ತ ಬರಲು ತಯಾರಾಗಿದ್ದಾರೆ. ಹೀಗಾಗಿ ಆಪರೇಷನ್‌ ಕಮಲ ಯಶಸ್ವಿಯಾಗುವುದಿಲ್ಲ, ಸರ್ಕಾರ ಪತನಗೊಳ್ಳಲು ಸಾಧ್ಯವಿಲ್ಲ ಎಂದಿದ್ದರು.
7
+ ಅದರ ಹೊರತಾಗಿಯೂ ಬಿಜೆಪಿ ನಾಯಕರು ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಸರ್ಕಾರ ಪತನಗೊಳ್ಳುತ್ತದೆ ಎಂದು ಹೇಳುತ್ತಲೇ ಬಂದಿದ್ದಾರೆ. ರಾಜ್ಯ ಬಿಜೆಪಿ ನಾಯಕರ ಹೇಳಿಕೆಗಳಿಗೆ ಅಧಿಕೃತ ಮುದ್ರೆ ಎಂಬಂತೆ ಏಕನಾಥ ಶಿಂಧೆ ಹೇಳಿಕೆ ಸ್ಫೋಟಕ ತಿರುವು ನೀಡಿದೆ.
eesanje/url_46_147_11.txt ADDED
@@ -0,0 +1,8 @@
 
 
 
 
 
 
 
 
 
1
+ ಅಪಹರಣ ಪ್ರಕರಣ ; ಸಂತ್ರಸ್ತೆ ಹೇಳಿಕೆಗೆ ಪ್ರತಿಕ್ರಿಯಿಸಲು ಗೃಹಸಚಿವ ಪರಮೇಶ್ವರ್‌ ನಕಾರ
2
+ ಬೆಂಗಳೂರು,ಮೇ 13-ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಬಂಧನಕ್ಕೆ ಕಾರಣವಾಗಿರುವ ಕಿಡ್ನ್ಯಾಪ್‌ ಪ್ರಕರಣದಲ್ಲಿ ಸಂತ್ರಸ್ತೆ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಲು ಗೃಹಸಚಿವ ಡಾ.ಜಿ.ಪರಮೇಶ್ವರ್‌ ನಿರಾಕರಿಸಿದ್ದಾರೆ.
3
+ ನಗರದಲ್ಲಿಂದು ಮಾಧ್ಯಮದವರು ಎಂದಿನಂತೆ ಗೃಹಸಚಿವರ ಹೇಳಿಕೆ ಪಡೆಯಲು ಪ್ರಯತ್ನಿಸಿದರು. ಎಸ್‌‍ಐಟಿ ಎನ್ನುತ್ತಿದ್ದಂತೆ ಪರಮೇಶ್ವರ್‌ ಮುಖ ತಿರುಗಿಸಿ ಪ್ರತಿಕ್ರಿಯಿಸಲು ನಿರಾಕರಿಸುವ ಮೂಲಕ ಕಾರು ಹತ್ತಿದರು. ಕಿಡ್ನ್ಯಾಪ್‌ ಪ್ರಕರಣದ ಸಂತ್ರಸ್ತೆ ನೀಡಿರುವ ಹೇಳಿಕೆ ಬಗ್ಗೆ ಪ್ರಶ್ನಿಸಿದಾಗ ಎಸ್‌‍ಐಟಿಯವರನ್ನು ಕೇಳಬೇಕು ಎಂದಷ್ಟೇ ಹೇಳಿದರು. ಎಸ್‌‍ಐಟಿ ತನಿಖೆ ಬಗ್ಗೆ ಪ್ರತಿದಿನ ವಿವರಣೆ ನೀಡಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಸ್ಥಳದಿಂದ ತೆರಳಿದರು.
4
+ ಉಲ್ಟಾ ಹೊಡೆದ ಹೇಳಿಕೆ :ಹಾಸನದಲ್ಲಿ ಪತ್ತೆಯಾದ ಪೆನ್‌ಡ್ರೈವ್‌ಗಳಲ್ಲಿದ್ದ ಅಶ್ಲೀಲ ವಿಡಿಯೋಗಳು ಬಹಿರಂಗಗೊಂಡ ನಂತರ ಸಾಕಷ್ಟು ಬೆಳವಣಿಗೆಗಳಾಗಿದ್ದು, ವಿಡಿಯೋದಲ್ಲಿ ಇದ್ದಾರೆ ಎಂದು ಹೇಳಲಾದ ಸಂತ್ರಸ್ತೆಯೊಬ್ಬರು ಅಪಹರಣವಾಗಿದ್ದಾರೆ ಎನ್ನಲಾಗಿತ್ತು. ಆಕೆಯ ಪುತ್ರ ಮೈಸೂರಿನ ಕೆ.ಆರ್‌.ನಗರ ಪೊಲೀಸ್‌‍ ಠಾಣೆಗೆ ದೂರು ನೀಡಿ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಮತ್ತು ಸಂತೋಷ್‌ ಬಾಬು ವಿರುದ್ಧ ದೂರಿದ್ದರು.
5
+ ಈ ಪ್ರಕರಣದಲ್ಲಿ ಎಚ್‌.ಡಿ.ರೇವಣ್ಣ ಹಾಗೂ ಆವರ ಆಪ್ತ ಸಂತೋಷ್‌ ಬಾಬು ಅವರನ್ನು ಬಂಧಿಸಲಾಗಿತ್ತು. ಇದೀಗ ಸಂತ್ರಸ್ತ ಮಹಿಳೆ ಅನಾಮಿಕ ಜಾಗದಿಂದ ವಿಡಿಯೋ ಸಂದೇಶದ ಮೂಲಕ ತಮ ಹೇಳಿಕೆ ನೀಡಿದ್ದಾರೆ. ಅದರಲ್ಲಿ ತಮನ್ನು ಯಾರೂ ಕಿಡ್ನ್ಯಾಪ್‌ ಮಾಡಿಲ್ಲ ಎಂದು ಮಹಿಳೆ ಸ್ಪಷ್ಟಪಡಿಸಿದ್ದಾರೆ.
6
+ ನಾನು ಸಂಬಂಧಿಕರ ಮನೆಗೆ ಬಂದಿದ್ದೇನೆ. ಸುರಕ್ಷಿತವಾಗಿ ಹಾಗೂ ಕ್ಷೇಮವಾಗಿದ್ದೇನೆ. ತಮ ಪುತ್ರ ನಾನು ಕಾಣದೇ ಇರುವುದಕ್ಕೆ ಗಾಬರಿಗೊಂಡು ದೂರು ನೀಡಿದ್ದಾನೆ. ನನಗೆ ಯಾರಿಂದಲೂ ತೊಂದರೆಯಾಗಿಲ್ಲ. ಇಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ಸಂಬಂಧಿಕರ ಮನೆಯಲ್ಲಿ ಟಿವಿ ನೋಡಿದಾಗ ರೇವಣ್ಣ ಅವರಿಗೆ ತೊಂದರೆಯಾಗಿರುವುದು ತಿಳಿದು ಬಂತು.
7
+ ನನಗೆ ರೇವಣ್ಣ, ಭವಾನಿ ಅಕ್ಕ ಅಥವಾ ಸಂತೋಷ್‌ ಬಾಬು ಅವರಿಂದಾಗಲಿ ಯಾವುದೇ ತೊಂದರೆಯಾಗಿಲ್ಲ, ಯಾರೂ ನನ್ನನ್ನು ಅಪಹರಣ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸ್ವಲ್ಪ ದಿನದ ಬಳಿಕ ಬರುತ್ತೇನೆ, ಎಲ್ಲಿ ಬೇಕಾದರೂ ಹೇಳಿಕೆ ನೀಡುತ್ತೇನೆ, ನನಗೂ ಹಾಗೂ ವಿವಾದಿತ ವಿಡಿಯೋಗೂ ಸಂಬಂಧವಿಲ್ಲ. ಈ ರೀತಿ ಏಕೆಲ್ಲಾ ಪ್ರಚಾರ ನಡೆಯುತ್ತಿದೆ ಎಂದು ನನಗೆ ಗೊತ್ತಿಲ್ಲ ಎಂದು ಮಹಿಳೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
8
+ ನಾವು ಕೂಲಿ ಮಾಡಿಕೊಂಡು ಬದುಕುವ ಜನ. ಪೊಲೀಸರು ಅನಗತ್ಯವಾಗಿ ನಮ ಮನೆಯ ಬಳಿ ಹೋಗಿ ಕಿರುಕುಳ ನೀಡಬಾರದು. ಮನೆಯಲ್ಲಿ ಚಿಕ್ಕ ಮಕ್ಕಳಿದ್ದಾರೆ, ಗಾಬರಿಗೊಳ್���ುತ್ತಿದ್ದಾರೆ, ಅಕ್ಕಪಕ್ಕದವರು ಅನುಮಾನದಿಂದ ನೋಡುವಂತಾಗುತ್ತಿದೆ ಎಂದು ಮಹಿಳೆ ಅಸಹನೆ ವ್ಯಕ್ತಪಡಿಸಿದ್ದಾರೆ.
eesanje/url_46_147_12.txt ADDED
@@ -0,0 +1,5 @@
 
 
 
 
 
 
1
+ ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರಆರೋಗ್ಯ ಸ್ಥಿರ
2
+ ಬೆಂಗಳೂರು,ಮೇ 13-ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಬಿಜೆಪಿ ಪಕ್ಷದ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಕಳೆದ ಒಂದು ವಾರದಿಂದ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರಿಗೆ ಡಾ.ಸತ್ಯನಾರಾಯಣ ಅವರ ನೇತೃತ್ವದ ಹಿರಿಯ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ.
3
+ ಪ್ರಸ್ತುತ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರ ಆರೋಗ್ಯದ ಬಗ್ಗೆ ಹಿರಿಯ ವೈದ್ಯರ ತಂಡ ತೀವ್ರ ನಿಗಾ ವಹಿಸಿದ್ದು, ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
4
+ ದಿನದಿಂದ ದಿನಕ್ಕೆ ಕೃಷ್ಣ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ ಎಂದು ಮಣಿಪಾಲ್‌ ಆಸ್ಪತ್ರೆ ಇಂದು ಬಿಡುಗಡೆ ಮಾಡಿರುವ ಹೆಲ್ತ್‌ ಬುಲೆಟಿನ್‌ನಲ್ಲಿ ತಿಳಿಸಿದೆ.
5
+ ಕಳೆದ ವಾರ ಇದ್ದಕ್ಕಿದ್ದಂತೆ ಆರೋಗ್ಯದಲ್ಲಿ ಕೊಂಚ ಏರುಪೇರಾದ ಕಾರಣ ಎಸ್‌.ಎಂ.ಕೃಷ್ಣ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
eesanje/url_46_147_2.txt ADDED
@@ -0,0 +1,7 @@
 
 
 
 
 
 
 
 
1
+ ಸರ್ಕಾರವನ್ನು ಪತನಗೊಳಿಸಲು ಸಾಧ್ಯವಿಲ್ಲ, ಬಿಜೆಪಿಯವರು ಭ್ರಮೆಯಲ್ಲಿದ್ದಾರೆ : ಸಿಎಂ
2
+ ಬೆಂಗಳೂರು, ಮೇ 13-ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಪತನಗೊಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೃಢ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
3
+ ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯನವರು, ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿಜೆಪಿಯವರು ಭ್ರಮೆಯಲ್ಲಿದ್ದು, ಹಗಲುಗನಸು ಕಾಣುತ್ತಿದ್ದಾರೆ. ಆಪರೇಷನ್‌ ಕಮಲ ಮಾಡಿ ಮಹಾರಾಷ್ಟ್ರದ ಮಾದರಿಯಲ್ಲಿ ಕರ್ನಾಟಕ ಸರ್ಕಾರವನ್ನು ಪತನಗೊಳಿಸಲು ಸಾಧ್ಯವಿಲ್ಲ ಎಂದರು.
4
+ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸೋಲು ಕಾಣುತ್ತಿದೆ. ಹೀಗಾಗಿ ಮಹಾರಾಷ್ಟ್ರದಲ್ಲಿನ ಏಕನಾಥ ಶಿಂಧೆ ಅವರ ಸರ್ಕಾರವೇ ಪತನಗೊಳ್ಳಲಿದೆ. ಕೇಂದ್ರದಲ್ಲಿ ಇಂಡಿಯಾ ಕೂಟ ಗೆಲ್ಲಲಿದೆ. ಕಾಂಗ್ರೆಸ್‌ನವರು ಪ್ರಧಾನಿಯಾಗಲಿದ್ದಾರೆ. ರಾಜ್ಯದಲ್ಲಿ 20 ಕ್ಕೂ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್‌ ಗೆಲ್ಲಲಿದೆ ಎಂದು ತಿಳಿಸಿದರು.
5
+ ನಮ್ಮ ಶಾಸಕರು ಮಾರಾಟಗೊಳ್ಳಲು ತಯಾರಿಲ್ಲ . ಬಿಜೆಪಿಯವರು ಕಳೆದ ಒಂದು ವರ್ಷದಿಂದಲೂ ಸರ್ಕಾರವನ್ನು ಪತನಗೊಳಿಸಲು ಪ್ರಯತ್ನ ಮಾಡುತ್ತಲೇ ಇದ್ದಾರೆ. ಆದರೆ ಯಶಸ್ವಿಯಾಗಿಲ್ಲ. ಪ್ರತಿ ಬಾರಿಯೂ ವಿಫಲವಾಗುತ್ತರೇ ಇದ್ದಾರೆ. ಪ್ರಯತ್ನ ಮಾಡುವುದು, ವಿಫಲವಾಗುವುದು ಅವರ ಚಾಳಿಯಾಗಿದೆ. ಹೀಗಾಗಿ ಅವರು ಮತ್ತೊಮ್ಮೆ ಪ್ರಯತ್ನಿಸುವುದಿಲ್ಲ ಎಂಬ ನಿರೀಕ್ಷೆಯಿದೆ ಎಂದರು.
6
+ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯದಿಂದಾಗಿ ಸರ್ಕಾರ ಪತನಗೊಳ್ಳುವ ಮಾತನಾಡುತ್ತಿದ್ದಾರೆ. ಖುದ್ದು ಪ್ರಧಾನಿ ನರೇಂದ್ರ ಮೋದಿಯವರಿಗೆ ಸೋಲಿನ ಭಯ ಎದುರಾಗಿದ್ದು, ಮಾತು ಹಿಡಿತ ತಪ್ಪಿದೆ ಎಂದು ಸಿದ್ದರಾಮಯ್ಯ ಹೇಳಿದರು.
7
+ ಡಿ.ಕೆ.ಶಿವಕುಮಾರ್‌ ಮಾತನಾಡಿ, ಏಕನಾಥ್‌ ಶಿಂಧೆ ಅವರ ಸರ್ಕಾರ ಉಳಿಯುವುದೇ ಅನುಮಾನವಾಗಿದೆ. ಶಿವಸೇನೆ ಮತ್ತು ಎನ್‌ಸಿಪಿಯಿಂದ ವಲಸೆ ಹೋದವರು ಈಗ ಮಾತೃಪಕ್ಷದತ್ತ ಮರಳುತ್ತಿದ್ದಾರೆ. ಪ್ರಧಾನಿಯವರು ಸೋಲಿನ ಆತಂಕದಲ್ಲಿ ಉದ್ಧವ್‌ ಠಾಕ್ರೆ ವಿರುದ್ಧ ಟೀಕೆ ಮಾಡಿದ್ದಾರೆ ಎಂದು ತಿಳಿಸಿದರು.
eesanje/url_46_147_3.txt ADDED
@@ -0,0 +1,3 @@
 
 
 
 
1
+ ನಾಗರಹೊಳೆಯಲ್ಲಿ ಅರಣ್ಯ ಸಚಿವ ಖಂಡ್ರೆ ಸಫಾರಿ
2
+ ಮೈಸೂರು, ಮೇ 13-ಅರಣ್ಯ ಸಚಿವ ಈಶ್ವರ್‌ಖಂಡ್ರೆ ನಾಗರಹೊಳೆ ಪ್ರದೇಶದಲ್ಲಿ ಸಫಾರಿ ನಡೆಸುತ್ತಿದ್ದಾಗ ಹುಲಿಯ ದರ್ಶನವಾಗಿದೆ.ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಸಚಿವರು ಕರ್ತವ್ಯಕ್ಕೆ ಮರಳಿದ್ದು, ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ವನ್ಯಜೀವಿಗಳಿಗೆ ಮೇವು ಮತ್ತು ನೀರಿನ ಲಭ್ಯತೆಯನ್ನು ಪರಿಶೀಲಿಸಲು ಖುದ್ದು ಸಫಾರಿ ನಡೆಸಿದರು.
3
+ ಹಾದಿ ಮಧ್ಯೆ ಸಚಿವರಿಗೆ ಹುಲಿಯ ದರ್ಶನವಾಗಿದೆ. ಹುಲಿ ದಾರಿಯಲ್ಲಿ ಮಲಗಿದ್ದು, ಸಚಿವರ ವಾಹನವನ್ನು ಕಂಡು ಎದ್ದು ಜೀಪಿನತ್ತ ಬರಲಾರಂಭಿಸಿದೆ. ಅನಂತರ ಇದ್ದಕ್ಕಿದ್ದಂತೆ ಹಾದಿ ಬದಲಿಸಿ ಅರಣ್ಯದತ್ತ ತೆರಳಿದೆ. ಈ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
eesanje/url_46_147_4.txt ADDED
@@ -0,0 +1,7 @@
 
 
 
 
 
 
 
 
1
+ ವಿಧಾನಪರಿಷತ್‌ ಚುನಾವಣೆ : ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ರಾಮೋಜಿಗೌಡ ಬಿ.ಡಿ.ಶ್ರೀನಿವಾಸ್‌ ನಾಮಪತ್ರ ಸಲ್ಲಿಕೆ
2
+ ಬೆಂಗಳೂರು, ಮೇ 13-ಶಿಕ್ಷಕರು ಹಾಗೂ ಪದವೀಧರರ 6 ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಬೆಂಗಳೂರು ನಗರ ಪದವೀಧರ ಕ್ಷೇತ್ರದ ರಾಮೋಜಿಗೌಡ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರದ ಬಿ.ಡಿ.ಶ್ರೀನಿವಾಸ್‌ ಅವರು ಇಂದು ನಾಮಪತ್ರ ಸಲ್ಲಿಸಿದರು.
3
+ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಎಚ್‌.ಮುನಿಯಪ್ಪ, ಮಧು ಬಂಗಾರಪ್ಪ, ಸಂಸದ ಡಿ.ಕೆ.ಸುರೇಶ್‌, ವಿಧಾನಪರಿಷತ್‌ ಸದಸ್ಯರಾದ ಪುಟ್ಟಣ್ಣ, ನಸೀರ್‌ ಅಹಮ್ಮದ್‌ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
4
+ ಇದಕ್ಕೂ ಮುನ್ನ ರಾಮೋಜಿಗೌಡ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ನಂತರ ಶಾಂತಿನಗರದಲ್ಲಿರುವ ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿ ಕಾರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಜೊತೆಯಲ್ಲಿ ನಾಮಪತ್ರ ಸಲ್ಲಿಸಿದರು.
5
+ ಬಳಿಕ ಹೊಂಬೇಗೌಡ ನಗರದಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಭಾಗವಹಿಸಿದರು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿಯವರು, ಕಾಂಗ್ರೆಸ್‌ನ ಇಬ್ಬರು ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದ್ದು, ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. 6 ತಿಂಗಳ ಮೊದಲೇ ನಾವು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದೆವು. ಈಗಾಗಲೇ ಒಂದು ಸುತ್ತು ಅವರು ಮತದಾರರನ್ನು ಸಂಪರ್ಕಿಸಿದ್ದಾರೆ. ಶಿಕ್ಷಕರು ಮತ್ತು ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ ಎಂದು ಹೇಳಿದರು.
6
+ ಇದೇ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ನಮ್ಮ ಪಕ್ಷದ ಇಬ್ಬರು ಅಭ್ಯರ್ಥಿಗಳು ಆಯಾ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅರಿವು ಹೊಂದಿದ್ದಾರೆ. ಹಿಂದೆ ಶಿಕ್ಷಕರಿಗಾಗಲೀ, ಪದವೀಧರರಿಗಾಗಲೀ ಯಾವುದೇ ಅನುಕೂಲ ಮಾಡಿಕೊಟ್ಟಿರಲಿಲ್ಲ. ನಮ್ಮ ಸರ್ಕಾರ ಪದವೀಧರರಿಗೆ ಸಹಾಯ ಮಾಡಿದೆ. ಎನ್‌ಇಪಿ ಪರಿಷ್ಕರಣೆ, ಎಸ್‌ಇಪಿ ಜಾರಿ ಸೇರಿದಂತೆ ಶಿಕ್ಷಕರಿಗೆ ಹಲವು ವಿಚಾರಗಳನ್ನು ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ತಿಳಿಸಿದೆ ಎಂದು ಹೇಳಿದರು.
7
+ ಶಿಕ್ಷಕರಿಗೆ ಮತ್ತು ಪದವೀಧರರಿಗೆ ಅನುಕೂಲ ಮಾಡಿಕೊಡುವುದು ತಮ್ಮ ಜವಾಬ್ದಾರಿ. ನಮ್ಮ ಪಕ್ಷಕ್ಕೆ ಮತ ಹಾಕುವುದು ಅವರ ಕರ್ತವ್ಯ. ಅವರಿಗೆ ಕೆಲಸ ಆಗಬೇಕಿದೆ, ನಮಗೆ ಮತ ಬೇಕಿದೆ ಎಂದು ಹೇಳಿದರು.ಈ ಹಿಂದಿನ ಚುನಾವಣೆಯಲ್ಲಿ ಪ್ರಕಾಶ್‌ ಹುಕ್ಕೇರಿ ಮತ್ತು ಮಧು ಮಾದೇಗೌಡರು ಗೆದ್ದ ಮಾದರಿಯಲ್ಲಿ 6 ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದರು.
eesanje/url_46_147_5.txt ADDED
@@ -0,0 +1,6 @@
 
 
 
 
 
 
 
1
+ ಬಿಜೆಪಿಯದು ಸರ್ಕಾರ ಬೀಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ : ರಾಮಲಿಂಗಾರೆಡ್ಡಿ
2
+ ಬೆಂಗಳೂರು, ಮೇ 13-ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನಗೊಳ್ಳಲಿದೆ ಎಂದು ಬಿಜೆಪಿಯವರು ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಲೇವಡಿ ಮಾಡಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್‌, ಬಿಜೆಪಿ ಎರಡೂ ಸೇರಿದರೆ 84 ಶಾಸಕರಾಗುತ್ತಾರೆ. ನಾವು 137 ಶಾಸಕರನ್ನು ಹೊಂದಿದ್ದೇವೆ. ನಮ್ಮ ಸರ್ಕಾರ ಪತನವಾಗಬೇಕಾದರೆ 55 ಕ್ಕೂ ಹೆಚ್ಚು ಶಾಸಕರು ರಾಜೀನಾಮೆ ಕೊಡಬೇಕು. ನಮ್ಮ ಸಂಖ್ಯಾಬಲ 83 ರಷ್ಟಾಗಬೇಕು. ಆಗ ಸರ್ಕಾರ ಪತನವಾಗಲು ಸಾಧ್ಯ. ಇಲ್ಲದೇ ಹೋದರೆ ಬಿಜೆಪಿಯವರು ಹೇಗೆ ಹೊಸ ಸರ್ಕಾರ ರಚನೆ ಮಾಡುತ್ತಾರೆ? ಎಂದು ಪ್ರಶ್ನಿಸಿದರು.
4
+ ಲೋಕಸಭಾ ಚುನಾವಣೆಯಲ್ಲಿ 28 ಕ್ಕೆ 28 ಕ್ಷೇತ್ರಗಳನ್ನೂ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದರು. ಆದರೆ ಜನರ ನಾಡಿಮಿಡಿತ ನೋಡಿದರೆ ಅವರು ಏಕ ಅಂಕಿಯನ್ನು ದಾಟುವುದೂ ಕಷ್ಟಸಾಧ್ಯವಾಗಿದೆ. ಕಾಂಗ್ರೆಸ್‌ನ ಹೆಚ್ಚಿನ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಹೀಗಾಗಿ ಹತಾಶರಾಗಿರುವ ಬಿಜೆಪಿಯವರು ಇಂತಹ ಅಸಂಬದ್ಧವಾದ ಪ್ರಚಾರವನ್ನು ನಡೆಸುತ್ತಿದ್ದಾರೆ ಎಂದರು.
5
+ ಲೋಕಸಭಾ ಚುನಾವಣೆಗೆ 10ಕ್ಕೂ ಹೆಚ್ಚು ಬಿಜೆಪಿ ಸಂಸದರಿಗೆ ಗೋಬ್ಯಾಕ್‌ ಎಂಬ ಘೋಷಣೆ ಬಿಸಿ ತಟ್ಟಿತ್ತು. ಮೊದಲು ಅವರು ತಮ್ಮ ಮನೆಯನ್ನು ಸರಿಯಾಗಿ ನೋಡಿಕೊಳ್ಳಲಿ. ಅನಂತರ ನಮ್ಮ ಪಕ್ಷದ ಬಗ್ಗೆ ಚರ್ಚೆ ಮಾಡಲಿ ಎಂದು ಹೇಳಿದರು. ಬಿಜೆಪಿಯಲ್ಲೀಗ ಮತ ತಂದುಕೊಡುವಂತಹ ನಾಯಕತ್ವ ಯಾರದಿದೆ? ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಲೋಕಸಭಾ ಚುನಾವಣೆಯಲ್ಲಿ ಮೋದಿಗಾಗಿ ಮತ ನೀಡಿ ಎಂದು ಕೇಳಿಕೊಂಡರು. ಅವರ ಯೋಗ್ಯತೆಗೆ ಬಿಜೆಪಿ ಹೆಸರಿನಲ್ಲಾಗಲೀ ಅಥವಾ ಅಭ್ಯರ್ಥಿಗಳ ಹೆಸರಿನಲ್ಲಾಗಲೀ ಮತ ಕೇಳಲಿಲ್ಲ ಎಂದು ಕಿಡಿಕಾರಿದರು.
6
+ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಹೇಳಿಕೆಗೆ ಮಹತ್ವ ನೀಡುವ ಅಗತ್ಯವಿಲ್ಲ. ಒಂದು ವೇಳೆ ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿ ಕಾರಕ್ಕೆ ಬಂದರೆ ಏಕನಾಥ ಶಿಂಧೆ ನೇತೃತ್ವದ ಸರ್ಕಾರ ಪತನಗೊಳ್ಳಲಿದೆ. ಮೊದಲು ಅವರು ತಮ್ಮ ಸರ್ಕಾರವನ್ನು ಉಳಿಸಿಕೊಳ್ಳಲಿ ಎಂದು ಹೇಳಿದರು.
eesanje/url_46_147_6.txt ADDED
@@ -0,0 +1,6 @@
 
 
 
 
 
 
 
1
+ ನವೀನ್‌ ಗೌಡ ನನಗೆ ಯಾವುದೇ ಪೆನ್‌ಡ್ರೈವ್‌ ಕೊಟ್ಟಿಲ್ಲ : ಎ.ಮಂಜು
2
+ ಬೆಂಗಳೂರು, ಮೇ 13-ನವೀನ್‌ ಗೌಡ ಎಂಬ ವ್ಯಕ್ತಿಯು ನನಗೆ ಪರಿಚಯವಿಲ್ಲ. ನನಗೆ ಆತ ಪೆನ್‌ ಡ್ರೈವ್‌ ಕೊಟ್ಟಿಲ್ಲ. ಈ ಬಗ್ಗೆ ತನಿಖೆಯಾಗಿ ಸತ್ಯಾಂಶ ಹೊರಬರಲಿ ಎಂಬ ಉದ್ದೇಶದಿಂದ ಎಸ್‌ಐಟಿಗೆ ದೂರು ನೀಡಿರುವುದಾಗಿ ಶಾಸಕ ಎ.ಮಂಜು ಹೇಳಿದ್ದಾರೆ. ಎಸ್‌ಐಟಿಗೆ ದೂರು ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೀನ್‌ ಅವ್ರ ಫೇಸ್‌ ಬುಕ್‌ನಲ್ಲಿ ಏ.20 ರಂದು ಪೆನ್‌ಡ್ರೈವ್‌ ಸಿಗುತ್ತದೆ. 21ರಂದು ಕಲ್ಯಾಣ ಮಂಟಪದಲ್ಲಿ ಸಿಗುತ್ತದೆ ಅಂತಾ ಹೇಳಿದ್ದರು.
3
+ ಇವ್ರಿಗೆ ರಸ್ತೆಯಲ್ಲೇ ಪೆನ್‌ಡ್ರೈವ್‌ ಸಿಕ್ಕಿರಬಹುದು. ಆದರೆ, ಅದನ್ನು ನನಗೆ ಯಾಕೆ ಕೊಡಬೇಕು? ಆ ಮನಸ್ಸು ಅವರಿಗೆ ಯಾಕೆ ಬಂದಿದೆ ಎಂದು ಪ್ರಶ್ನಿಸಿದರು. ನನಗೆ ಆತನ ಬಗ್ಗೆ ಪರಿಚಯವಿಲ್ಲ. ಆತ ಎಸ್‌ಐಟಿ ತನಿಖೆ ದಿಕ್ಕು ತಪ್ಪಿಸೋಕೆ ಈ ರೀತಿ ಮಾಡಿರಬಹುದು.ಇದರ ಹಿಂದೆ ರಾಜಕೀಯ ಷಡ್ಯಂತ್ರ ಇದೆ. ಇದರ ಹಿಂದೆ ಯಾರಿದ್ದಾರೆ, ಏನು ಅಂತ ನಾನು ಹೇಳಲ್ಲ ಎಂದರು.
4
+ ಆತ ಯಾವುದೇ ರೀತಿಯಿಂದಲೂ ನನಗೆ ಪರಿಚಯ ಇಲ್ಲ.ನನ್ನನ್ನು ಭೇಟಿಯಾಗಿದ್ದು, ಪೆನ್‌ಡ್ರೈವ್‌ ಕೊಟ್ಟಿದ್ದು ಸುಳ್ಳು. ಇದ್ರ ಬಗ್ಗೆ ತನಿಖೆ ಆಗ್ಲಿ ಅಂತಲೇ ನಾನು ದೂರು ಕೊಟ್ಟಿದ್ದೇನೆ. ಮಾಜಿ ಪ್ರಧಾನಿ ದೇವೇಗೌಡರ ಜೆಡಿಎಸ್‌ ಪಕ್ಷದಿಂದ ಗೆದ್ದಿದ್ದೇನೆ. ನನ್ನ ಅವರ ಕುಟುಂಬದಿಂದ ದೂರ ಮಾಡಬೇಕು ಎಂಬ ಉದ್ದೇಶದಿಂದ ಈ ರೀತಿ ಮಾಡಿದ್ದಾರೆ. ಏ.21 ರಂದು ನನಗೆ ಪೆನ್‌ಡ್ರೈವ್‌ ಕೊಟ್ಟಿರುವುದಾದರೆ, ಏ.29ರಂದು ಕೊಟ್ಟ ಅಫಿಡವಿಟ್‌ನಲ್ಲಿ ಯಾಕೆ ಆ ರೀತಿ ಆಗಿದೆ ಎಂದು ಪ್ರಶ್ನಿಸಿದರು.
5
+ ಫೇಸ್‌ಬುಕ್‌ ಅಕೌಂಟ್‌ ಯಾಕೆ ಇವತ್ತು ಹ್ಯಾಕ್‌ ಆಗಿದೆ:ಇದರ ಸತ್ಯಾಸತ್ಯತೆ ಹೊರಬರಬೇಕು.ನವೀನ್‌ ಅವರನ್ನು ಎಸ್‌ಐಟಿ ಬೇಗ ಬಂಧಿಸಬೇಕು. ಆಗ ಮಾತ್ರ ಇದರ ಸತ್ಯಾಸತ್ಯತೆ ಹೊರ ಬರುತ್ತದೆ ಎಂದು ಅವರು ಹೇಳಿದರು.ಸಂಸದ ಪ್ರಜ್ವಲ್‌ ರೇವಣ್ಣ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಘಟನೆ ಆದಮೇಲೆ ದೇವೇಗೌಡರನ್ನು ಭೇಟಿಯಾಗಿ ಧೈರ್ಯ ತುಂಬಿದ್ದೇನೆ. ಶಾಸಕ ರೇವಣ್ಣ ಅವರಿಗೂ ಭೇಟಿಯಾಗಿ ಧೈರ್ಯ ಹೇಳಿದ್ದೇನೆ. ಆ ಮಹಿಳೆ ಕೂಡ ದೂರು ಕೊಟ್ಟಿಲ್ಲ ಅಂತಾ ಹೇಳಿದಾರೆ. ಕಾದು ನೋಡೋಣ ಏನಾಗುತ್ತದೆ ಎಂದರು.
6
+ ಈ ರೀತಿಯ ಘಟನೆಗಳು ಪ್ರಪಂಚದಲ್ಲಿ ಎಲ್ಲೂ ಆಗಬಾರದು. ಇದರಲ್ಲಿ ರಾಜಕೀಯ ಇದೆ. ಇದರ ಬಗ್ಗೆ ನನ್ನ ಆಕ್ಷೇಪವಿದೆ. ಯಾರು ಇದನ್ನು ಪ್ರಚಾರ ಮಾಡುತ್ತಿದ್ದಾರೆ ಅವರಿಗೂ ಹೆಂಡತಿ, ಮಕ್ಕಳು, ತಾಯಂದರು ಇರುತ್ತಾರೆ ಎಂಬುದನ್ನು ಮರೆಯಬಾರದು ಎಂದು ಹೇಳಿದರು.
eesanje/url_46_147_7.txt ADDED
@@ -0,0 +1,4 @@
 
 
 
 
 
1
+ ಸಂಸದ ಪ್ರಜ್ವಲ್‌ ರೇವಣ್ಣ ನಿವಾಸದಲ್ಲಿ ಎಫ್‌ಎಸ್‌‍ಎಲ್‌ ತಂಡ ಪರಿಶೀಲನೆ
2
+ ಹಾಸನ, ಮೇ 13-ಸಂಸದ ಪ್ರಜ್ವಲ್‌ ರೇವಣ್ಣ ಅವರ ಆರ್‌ಸಿ ರಸ್ತೆಯಲ್ಲಿರುವ ನಿವಾಸಕ್ಕೆ ಇಂದು ಬೆಳಗ್ಗೆ ಎಫ್‌ಎಸ್‌‍ಎಲ್‌ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಪ್ರಜ್ವಲ್‌ ವಿರುದ್ಧ ಸಿಐಡಿಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಸಾಕ್ಷ್ಯ ಸಂಗ್ರಹಿಸಲು ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಸಂಸದರ ನಿವಾಸಕ್ಕೆ ಆಗಮಿಸಿದ್ದಾರೆ.
3
+ ಸ್ಥಳೀಯ ಪೊಲೀಸರ ಸಮುಖದಲ್ಲಿ ಎಫ್‌ಎಸ್‌‍ಎಲ್‌ ಅಧಿಕಾರಿಗಳು ಸಂಸದರ ನಿವಾಸದ ಬೀಗ ತೆಗೆದು ಒಳಗೆ ಹೋಗಿ ಪ್ರತಿ ಕೊಠಡಿಯನ್ನು ಪರಿಶೀಲಿಸುತ್ತಿದ್ದಾರೆ.ಈ ಸಂದರ್ಭದಲ್ಲಿ ಸಂಸದರ ನಿವಾಸದ ಬಳಿ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿತ್ತು.
4
+ ಈಗಾಗಲೇ ಎಸ್‌‍ಐಟಿ ಅಧಿಕಾರಿಗಳ ತಂಡ ಸಂತ್ರಸ್ತೆಯನ್ನು ಸಂಸದರ ನಿವಾಸಕ್ಕೆ ಕರೆತಂದು ಮಹಜರು ನಡೆಸಿ ವಿಡಿಯೋ ಚಿತ್ರೀಕರಣ ಮಾಡಿಕೊಂಡು ತೆರಳಿದ್ದಾರೆ. ಸಂಸದ ಪ್ರಜ್ವಲ್‌ ಅವರ ಬಳಿ ಹಾಸ್ಟೆಲ್‌ ಪ್ರವೇಶಕ್ಕಾಗಿ ಸಹಾಯ ಕೇಳಿಕೊಂಡು ಹೋದಾಗ ಎಂಪಿ ಕ್ವಾರ್ಟಸ್‌‍ನಲ್ಲಿ ನನ್ನ ಮೇಲೆ ಅತ್ಯಾಚಾರ ವೆಸಗಿದ್ದಾರೆಂದು ಸಿಐಡಿಗೆ 44 ವರ್ಷದ ಮಹಿಳೆ ದೂರು ನೀಡಿದ್ದಾರೆ. ಈ ಪ್ರಕರಣದ ತನಿಖೆಯ ಹಿನ್ನೆಲೆಯಲ್ಲಿ ಇಂದು ಎಫ್‌ಸ್‌‍ಎಲ್‌ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
eesanje/url_46_147_8.txt ADDED
@@ -0,0 +1,7 @@
 
 
 
 
 
 
 
 
1
+ ಡಿಸಿಎಂ ಡಿಕೆಶಿ ಭೇಟಿಯಾದ ಬಿಜೆಪಿ ಶಾಸಕರಾದ ಸೋಮಶೇಖರ್‌, ಹೆಬ್ಬಾರ್‌
2
+ ಬೆಂಗಳೂರು,ಮೇ 13-ಲೋಕಸಭಾ ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್‌‍ನ ಜೊತೆ ಆತೀಯ ಸಖ್ಯ ಹೊಂದಿರುವ ಬಿಜೆಪಿ ಶಾಸಕರು ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರನ್ನು ಭೇಟಿ ಮಾಡಿ ಗಮನ ಸೆಳೆದರು.
3
+ ಯಶವಂತಪುರದ ಕ್ಷೇತ್ರದ ಶಾಸಕ ಎಸ್‌‍.ಟಿ.ಸೋಮಶೇಖರ್‌, ಯಲ್ಲಾಪುರ ಕ್ಷೇತ್ರದ ಅರೆಬೈಲು ಶಿವರಾಂ ಹೆಬ್ಬಾರ್‌ ಇಬ್ಬರೂ ಇಂದು ಬೆಳಿಗ್ಗೆ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್‌ರವರ ಮನೆಗೆ ಭೇಟಿ ನೀಡಿದರು. ಈ ವೇಳೆ ರಾಜಕೀಯವಾಗಿ ಮಹತ್ವದ ಚರ್ಚೆಗಳು ನಡೆದಿವೆ ಎಂದು ತಿಳಿದುಬಂದಿದೆ.
4
+ ಆಪರೇಷನ್‌ ಕಮಲಕ್ಕೆ ತುತ್ತಾಗಿ ಕಾಂಗ್ರೆಸ್‌‍ನಿಂದ ಬಿಜೆಪಿಗೆ ಸೇರಿದ್ದ 17 ಶಾಸಕರ ಪೈಕಿ ಪುನರ್‌ ಆಯ್ಕೆಯಾಗಿರುವ ಇನ್ನೂ ಕೆಲವರು ಕಾಂಗ್ರೆಸ್‌‍ನತ್ತ ಮರಳಲು ಆಸಕ್ತಿ ಹೊಂದಿದ್ದಾರೆ ಎನ್ನಲಾಗಿದೆ.
5
+ ಈಗಾಗಲೇ ಎಸ್‌‍.ಟಿ.ಸೋಮಶೇಖರ್‌ ಮತ್ತು ಶಿವರಾಂ ಹೆಬ್ಬಾರ್‌ ಕಾಂಗ್ರೆಸ್‌‍ನ ಜೊತೆ ಆತೀಯ ಸಂಬಂಧ ರೂಢಿಸಿಕೊಂಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡದೇ ತಟಸ್ಥವಾಗಿ ಉಳಿದಿದ್ದರು. ಇನ್ನೂ ಕೆಲವು ಭಾಗಗಳಲ್ಲಿ ಕಾಂಗ್ರೆಸ್‌‍ ಪರವಾಗಿ ಪ್ರಚಾರ ಮಾಡಿದರು ಎಂಬ ಮಾಹಿತಿಗಳು ಇವೆ. ಚುನಾವಣೆಯ ಬಳಿಕ ಈ ಇಬ್ಬರೂ ಶಾಸಕರು ಡಿ.ಕೆ.ಶಿವಕುಮಾರ್‌ರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಕುತೂಹಲ ಕೆರಳಿಸಿದೆ.
6
+ ಲಭ್ಯವಿರುವ ಈವರೆಗಿನ ಮಾಹಿತಿ ಪ್ರಕಾರ, ಎಸ್‌‍.ಟಿ.ಸೋಮಶೇಖರ್‌ ಮತ್ತು ಶಿವರಾಂ ಹೆಬ್ಬಾರ್‌ರವರು ಬಿಜೆಪಿಯಲ್ಲೇ ಮುಂದುವರೆಯಲಿದ್ದಾರೆ. ಆದರೆ ಕಾಂಗ್ರೆಸ್‌‍ ಪರವಾಗಿ ಕೆಲಸ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ. ಇನ್ನಷ್ಟು ಶಾಸಕರು ಕಾಂಗ್ರೆಸ್‌‍ನತ್ತ ಮುಖ ಮಾಡಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ.
7
+ ಬಿಜೆಪಿ ನಾಯಕರು ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌‍ ಸರ್ಕಾರ ಪತನವಾಗಲಿದೆ ಎಂದು ಹೇಳಿಕೆ ನೀಡಿದ್ದಾರೆ. ಅದಕ್ಕೆ ತದ್ವಿರುದ್ಧವಾಗಿ ರಾಜಕೀಯ ಬೆಳವಣಿಗೆಯಾಗುತ್ತಿದ್ದು, ಜೆಡಿಎಸ್‌‍, ಬಿಜೆಪಿಯಲ್ಲಿರುವ ಬಹಳಷ್ಟು ಶಾಸಕರು ಕಾಂಗ್ರೆಸ್‌‍ನೊಂದಿಗೆ ನಿಕಟ ಸಂಪರ್ಕದಲ್ಲಿದ್ದಾರೆ.ಲೋಕಸಭಾ ಚುನಾವಣೆಯ ಫಲಿತಾಂಶವನ್ನು ನೋಡಿಕೊಂಡು ರಾಜಕೀಯ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ.
eesanje/url_46_147_9.txt ADDED
@@ -0,0 +1,6 @@
 
 
 
 
 
 
 
1
+ ಸರ್ಕಾರವನ್ನು ನಾವು ಅಸ್ಥಿರಗೊಳಿಸೊ ಪ್ರಯತ್ನ ಮಾಡಲ್ಲ, ಅದಾಗೆ ಬಿದ್ದರೆ ನಾವೇನ್ ಮಾಡೋಕಾಗುತ್ತೆ : ವಿಜಯೇಂದ್ರ
2
+ ಬೆಂಗಳೂರು, ಮೇ 13-ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಮ್ಮಿಂದಾಗುವುದಿಲ್ಲ. ಒಂದು ವೇಳೆ ತನ್ನಿಂದ ತಾನೇ ಬಿದ್ದು ಹೋದರೆ ನಾವೇನು ಮಾಡಲು ಸಾಧ್ಯ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಪ್ರತಿಕ್ರಿಯಿಸಿದ್ದಾರೆ.
3
+ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಒಂದು ಪಕ್ಷದ ರಾಜ್ಯಾಧ್ಯಕ್ಷನಾಗಿ ನಾನು ಜವಾಬ್ದಾರಿಯುತವಾಗಿ ಮಾಧ್ಯಮದವರ ಮುಂದೆ ಹೇಳಿಕೆ ನೀಡುತ್ತಿದ್ದೇನೆ. ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ನಮ್ಮಿಂದ ನಡೆಯುವುದಿಲ್ಲ ಎಂದು ವದಂತಿಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು.
4
+ ನಾವು ವಿರೋಧಪಕ್ಷದಲ್ಲಿ ಕುಳಿತುಕೊಂಡು ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದ್ದೇವೆ. ಪೂರ್ಣ ಬಹುಮತ ಹೊಂದಿರುವ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವುದು ಅಷ್ಟು ಸುಲಭದ ಮಾತಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಯಾವ ಅರ್ಥದಲ್ಲಿ ಹೇಳಿಕೆ ಕೊಟ್ಟಿದ್ದಾರೋ ನನಗೆ ಗೊತ್ತಿಲ್ಲ. ಇದಕ್ಕೆ ಅವರೇ ಉತ್ತರ ಕೊಡಲಿ ಎಂದರು.
5
+ ನಮ್ಮ ಮುಂದೆ ಲೋಕಸಭಾ ಚುನಾವಣೆಯ ಫಲಿತಾಂಶ ಏನಾಗಲಿದೆ ಎಂಬ ಕಾತುರವಿದೆ. ನಾವು ಅದರ ಬಗ್ಗೆ ಹೆಚ್ಚಿನ ಗಮನ ಹರಿಸಿದ್ದೇವೆ. ಒಂದು ಬಹುಮತ ಇರುವ ಸರ್ಕಾರವನ್ನು ಅಸ್ಥಿರಗೊಳಿಸುವುದು ಅಷ್ಟು ಸುಲಭವಲ್ಲ. ಲೋಕಸಭಾ ಚುನಾವಣೆ ನಂತರ ನಡೆಯುವ ರಾಜಕೀಯ ಬೆಳವಣಿಗೆಗಳ ಬಗ್ಗೆ ನಾವು ಈಗಲೇ ಭವಿಷ್ಯ ಹೇಳಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.
6
+ ಲೋಕಸಭಾ ಚುನಾವಣೆಯಲ್ಲಿ ತಮಗೆ ಉತ್ತಮವಾದ ಫಲಿತಾಂಶ ಬರಲಿದೆ. ನಮ್ಮ ನಿರೀಕ್ಷೆಗೂ ಮೀರಿ ಮತದಾನವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಕಾರಣಕ್ಕಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತದಾನ ಮಾಡಿದ್ದಾರೆ. ಎಲ್ಲಾ ರಾಜಕೀಯ ಸಮೀಕ್ಷೆಗಳನ್ನು ತಲೆಕೆಳಗೆ ಮಾಡಿ ಬಿಜೆಪಿ, ಜೆಡಿಎಸ್‌ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸವನ್ನು ವಿಜಯೇಂದ್ರ ವ್ಯಕ್ತಪಡಿಸಿದರು.
eesanje/url_46_148_1.txt ADDED
@@ -0,0 +1,8 @@
 
 
 
 
 
 
 
 
 
1
+ ಎ.ಎಸ್‌.ನಡಹಳ್ಳಿಗೆ ಒಲಿಯಲಿದೆಯೇ ವಿಧಾನಪರಿಷತ್‌ ಸ್ಥಾನ..?
2
+ ಬೆಂಗಳೂರು,ಮೇ 13-ಮುಂದಿನ ಜೂನ್‌ ತಿಂಗಳಿನಲ್ಲಿ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್‌.ನಡಹಳ್ಳಿಯವರಿಗೆ ಅವಕಾಶ ನೀಡಬೇಕೆಂಬ ಬೇಡಿಕೆ ಕೇಳಿಬಂದಿದೆ. ಕೆಲವು ಕಾರಣಗಳಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುದ್ದೆಬಿಹಾಳ ವಿಧಾನಸಭಾ ಕ್ಷೇತ್ರದಿಂದ ಪರಾಭವಗೊಂಡಿದ್ದ ನಡಹಳ್ಳಿಯವರನ್ನು ಮೇಲ್ಮನೆಗೆ ಆಯ್ಕೆ ಮಾಡಿದರೆ ಪಕ್ಷಕ್ಕೆ ಹೆಚ್ಚಿನ ಬಲ ಬರಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
3
+ ಜೂನ್‌ ತಿಂಗಳ ಮಧ್ಯಭಾಗದಲ್ಲಿ ವಿಧಾನಸಭೆಯಿಮದ ವಿಧಾನಪರಿಷತ್‌ಗೆ ಚುನಾವಣೆ ನಡೆಯಲಿದೆ. ವಿಧಾನಸಭೆಯ ಬಲಾಬಲದಲ್ಲಿ ಕಾಂಗ್ರೆಸ್‌ 7, ಬಿಜೆಪಿ 3 ಹಾಗೂ ಜೆಡಿಎಸ್‌ಗೆ 1 ಸ್ಥಾನ ದಕ್ಕಲಿದೆ. ಓರ್ವ ಸದಸ್ಯ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಆಯ್ಕೆಯಾಗಬೇಕಾದರೆ 19 ಮತಗಳ ಅಗತ್ಯವಿದೆ. 65 ಸದಸ್ಯರನ್ನು ಹೊಂದಿರುವ ಬಿಜೆಪಿಗೆ 3 ಸ್ಥಾನ ಸುಲಭವಾಗಿ ಸಿಗಲಿದೆ.
4
+ ಹಾಲಿ ವಿಧಾನಪರಿಷತ್‌ನ ಮುಖ್ಯ ಸಚೇತಕರಾಗಿರುವ ಎನ್‌.ರವಿಕುಮಾರ್‌ ಅವಧಿ ಜೂನ್‌ ತಿಂಗಳಲ್ಲಿ ಮುಕ್ತಾಯವಾಗಲಿದ್ದು, ಪಕ್ಷನಿಷ್ಠೆ ಕಾರಣ ಅವರನ್ನು ಮುಂದುವರೆಸುವ ಸಾಧ್ಯತೆಯಿದೆ. ಉಳಿದ ಎರಡು ಸ್ಥಾನಗಳಿಗೆ ಪಕ್ಷದಲ್ಲಿ ತೀವ್ರ ಪೈಪೋಟಿಯಿದ್ದು, ಕಲ್ಯಾಣ ಕರ್ನಾಟಕ ಭಾಗದವರನ್ನೇ ವಿಧಾನಪರಿಷತ್‌ಗೆ ಆಯ್ಕೆ ಮಾಡಬೇಕೆಂಬ ಒತ್ತಾಯ ಪಕ್ಷದೊಳಗೆ ಕೇಳಿಬರುತ್ತಿದೆ.
5
+ ಎ.ಎಸ್‌.ನಡಹಳ್ಳಿಯವರನ್ನು ಪರಿಷತ್‌ಗೆ ಆಯ್ಕೆ ಮಾಡಿದರೆ, ಕಲ್ಯಾಣ ಕರ್ನಾಟಕದಲ್ಲಿ ಪ್ರವಾಸ ಮಾಡಿ ಪಕ್ಷ ಸಂಘಟನೆಗೆ ಹೆಚ್ಚಿನ ಅನುಕೂಲವಾಗಲಿದೆ. ಹೀಗಾಗಿ ಅವರನ್ನೇ ಆಯ್ಕೆ ಮಾಡಬೇಕೆಂಬ ಒಕ್ಕೊರಲ ಅಭಿಪ್ರಾಯ ಪಕ್ಷದೊಳಗೆ ವ್ಯಕ್ತವಾಗಿದೆ.
6
+ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಆತ್ಮೀಯ ಒಡನಾಟ ಇಟ್ಟುಕೊಂಡಿರುವ ನಡಹಳ್ಳಿಯವರು ಸಂಘ ಪರಿವಾರಕ್ಕೂ ಅಚ್ಚುಮೆಚ್ಚು. ವಿಶೇಷವಾಗಿ ಕೃಷಿ, ರೈತರ ಬಗ್ಗೆ ಸದನದಲ್ಲಿ ಎದೆಗಾರಿಕೆಯಿಂದ ಮಾತನಾಡುವ ಚಾತಿಯುಳ್ಳವರು. ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ನಂತರ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ಗುರುತಿಸಿಕೊಂಡಿರುವ ನಡಹಳ್ಳಿಯವರು ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜಾಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಅವಿರತ ಪ್ರಯತ್ನ ನಡೆಸಿದ್ದಾರೆ.
7
+ ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆಯಾದರೂ ಎದೆಗುಂದದೆ ರಾಜ್ಯಾದ್ಯಂತ ಪಕ್ಷ ಸಂಘಟನೆಗೆ ಒತ್ತು ನೀಡಿರುವ ನಡಹಳ್ಳಿ ಅವರನ್ನು ಮೇಲ್ಮನೆಗೆ ಆಯ್ಕೆ ಮಾಡಿದರೆ, ಪಕ್ಷಕ್ಕೂ ಅನುಕೂಲ ಹಾಗೂ ಸಂಘಟನೆಗೆ ಮತ್ತಷ್ಟು ಆನೆಬಲ ಬರಲಿದೆ ಎಂಬ ವ್ಯಾಖ್ಯಾನ ಕೇಳಿಬರುತ್ತಿದೆ.
8
+ ತಮ್ಮನ್ನು ಮೇಲ್ಮ��ೆಗೆ ಆಯ್ಕೆ ಮಾಡುವಂತೆ ನಡಹಳ್ಳಿಯವರು ಎಲ್ಲಿಯೂ ಒತ್ತಡ ಹೇರಿಲ್ಲ. ಪಕ್ಷ ನೀಡುವ ಯಾವುದೇ ಹುದ್ದೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸುತ್ತೇನೆ ಎಂದು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ. ಅವರ ಸಂಘಟನೆಯ ಚಾತುರ್ಯವನ್ನು ಕಂಡು ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಪಕ್ಷ ಆಯ್ಕೆ ಮಾಡಿದರೂ ಅಚ್ಚರಿಯಿಲ್ಲ ಎಂದು ಮೂಲಗಳು ತಿಳಿಸಿವೆ.
eesanje/url_46_148_10.txt ADDED
@@ -0,0 +1,5 @@
 
 
 
 
 
 
1
+ ಭೋಜೇಗೌಡ ಮೇಲ್ಮನೆ ಜೆಡಿಎಸ್ ಅಭ್ಯರ್ಥಿ
2
+ ಬೆಂಗಳೂರು, ಮೇ 12-ಲೋಕಸಭೆ ಚುನಾವಣೆಯಂತೆ ವಿಧಾನ ಪರಿಷತ್ತಿನ ಚುನಾವಣೆಯಲ್ಲೂ ಮೈತ್ರಿ ಮುಂದುವರೆದಿದ್ದು, ಜೆಡಿಎಸ್ ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮಾತ್ರ ಸ್ಪರ್ಧಿಸಲಿದೆ. ಈ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾಗಿರುವ ಎಸ್.ಎಲ್.ಭೋಜೇಗೌಡ ಅವರು ಮರು ಸ್ಪರ್ಧೆಗಿಳಿಯಲಿದ್ದಾರೆ.
3
+ ಪದವೀಧರರ ಮೂರು ಹಾಗೂ ಶಿಕ್ಷಕರ ಮೂರು ಸೇರಿದಂತೆ ವಿಧಾನ ಪರಿಷತ್‍ನ ಆರು ಸದಸ್ಯ ಸ್ಥಾನಗಳಿಗೆ ಜೂನ್ ಮೂರರಂದು ಚುನಾವಣೆ ನಡೆಯಲಿದೆ. ಆರು ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಲಿದ್ದು, ಜೆಡಿಎಸ್‍ಗೆ ಒಂದು ಕ್ಷೇತ್ರವನ್ನು ಮಾತ್ರ ಬಿಟ್ಟುಕೊಟ್ಟಿದೆ.
4
+ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‍ನಿಂದ ಸ್ಪರ್„ಸಿ ಚುನಾಯಿತರಾಗಿದ್ದ ಮರಿತಿಬ್ಬೇಗೌಡ ಅವರು, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಲ್ಲದೆ, ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದು, ಈಗ ಅದೇ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.
5
+ ಈಗಾಗಿ ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಯುತ್ತಿದ್ದಾರೆ. ಈ ಕ್ಷೇತ್ರದಿಂದ ಸ್ಪರ್ಧೆಗಿಳಿಯಬೇಕೆಂಬ ಆಕಾಂಕ್ಷಿಯಾಗಿದ್ದ ಜೆಡಿಎಸ್‍ನವರಿಗೆ ನಿರಾಸೆ ಉಂಟಾಗಿದೆ. ನಿನ್ನೆಯಷ್ಟೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಎರಡು ಕ್ಷೇತ್ರಗಳನು ಜೆಡಿಎಸ್‍ಗೆ ಬಿಟ್ಟುಕೊಡುವುದಾಗಿ ಹೇಳಿದ್ದರು. ನಿನ್ನೆ ರಾತ್ರಿ ಬಿಜೆಪಿ ಐದು ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.
eesanje/url_46_148_11.txt ADDED
@@ -0,0 +1,5 @@
 
 
 
 
 
 
1
+ ನಾಳೆ ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ
2
+ ಬೆಂಗಳೂರು, ಮೇ 12-ಮಹಿಳೆಯೊಬ್ಬರ ಅಪಹರಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿಯ ಮುಂದುವರೆದ ವಿಚಾರಣೆ ನಾಳೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿದೆ.
3
+ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ವಿಧಿಸಿದ್ದ ರೇವಣ್ಣ ಅವರ ಏಳು ದಿನಗಳ ನ್ಯಾಯಾಂಗ ಬಂಧನದ ಅವಧಿ ಮಂಗಳವಾರ ಮುಗಿಯಲಿದೆ. ನ್ಯಾಯಾಂಗ ಬಂಧನದಲ್ಲಿರುವ ಹೆಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಗುರುವಾರ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧಿಶರಾದ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠವು ವಾದ ಮತ್ತು ಪ್ರತಿವಾದ ಆಲಿಸಿದ ಬಳಿಕ ಸೋಮವಾರಕ್ಕೆ ಮುಂದೂಡಿತ್ತು.
4
+ ಹೆಚ್.ಡಿ.ರೇವಣ್ಣ ಅವರ ಪರ ಹಿರಿಯ ವಕೀಲರಾದ ಸಿ.ವಿ.ನಾಗೇಶ್ ಅವರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಪ್ರಬಲ ವಾದ ಮಂಡಿಸಿ ನನ್ನ ಕಕ್ಷಿದಾರರ ವಿರುದ್ಧ ಅನಗತ್ಯ ಆರೋಪ ಮಾಡಲಾಗಿದೆ. ಅವರ ಮೇಲೆ ಯಾವುದೇ ಗಂಭೀರ ಸ್ವರೂಪದ ಆರೋಪಗಳು ಇಲ್ಲ. ಅವರಿಗೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು.ಜಾಮೀನು ನೀಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎಸ್‍ಐಟಿಪರ ವಕೀಲೆ ಜಾಯ್ನ ಕೋಠಾರಿ ಅವರು, ರೇವಣ್ಣ ಅವರು ಪ್ರಭಾವಿ ನಾಯಕರಾಗಿದ್ದು, ಜಾಮೀನು ನೀಡಿದರೆ ಸಾಕ್ಷ್ಯ ನಾಶವಾಗುವ ಸಾಧ್ಯತೆ ಇದೆ. ಹೀಗಾಗಿ ಜಾಮೀನು ನೀಡಬಾರದು. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಾದ ಮಂಡಿಸಲು ಇನ್ನೂ ಕಾಲಾವಕಾಶ ಬೇಕು ಎಂದು ಮನವಿ ಮಾಡಿದ್ದರು.
5
+ ಎರಡೂ ಕಡೆಯ ವಾದ ವಿವಾದ ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ್ದು, ನಾಳೆ ನಡೆಯಲಿರುವ ವಿಚಾರಣೆಯ ಬಗ್ಗೆ ತೀವ್ರ ಕುತೂಹಲ ಕೆರಳಿಸಿದೆ. ರೇವಣ್ಣ ಅವರಿಗೆ ಜಾಮೀನು ಸಿಗಲಿದೆಯೋ ಅಥವಾ ಇಲ್ಲವೋ ಎಂಬುದನ್ನು ಕಾದುನೋಡಬೇಕಿದೆ.
eesanje/url_46_148_12.txt ADDED
@@ -0,0 +1,8 @@
 
 
 
 
 
 
 
 
 
1
+ ಪೆನ್‌ಡ್ರೈವ್‌ ಪ್ರಕರಣವನ್ನು ನ್ಯಾಯಾಧೀಶರಿಂದ ತನಿಖೆ ಮಾಡಿಸಲು ಸಿ.ಟಿ.ರವಿ ಒತ್ತಾಯ
2
+ ಬೆಂಗಳೂರು,ಮೇ11-ಹಾಸನ ಸಂಸದ ಪ್ರಜ್ವಲ್‌ ರೇವಣ್ಣಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌‍ಐಟಿ ನಡೆವಳಿಕೆಗಳ ಬಗ್ಗೆ ಅನುಮಾನ ಮೂಡುತ್ತಿದ್ದು, ಪ್ರಕರಣವನ್ನು ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಬಿಜೆಪಿ ಮುಖಂಡ ಸಿ.ಟಿ.ರವಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜೊತೆ ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ನಡೆಸಿದ ಸಂಭಾಷಣೆಯನ್ನು ಬಿಡುಗಡೆ ಮಾಡಿದ ಮರು ಕ್ಷಣವೇ ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದರೆ ಇದು ಏನು ಸೂಚಿಸುತ್ತದೆ ಎಂದು ಪ್ರಶ್ನೆ ಮಾಡಿದರು.
4
+ ಇನ್ನಷ್ಟು ಆಡಿಯೋ, ವಿಡಿಯೋಗಳನ್ನು ದೇವರಾಜೇಗೌಡ ಬಿಡುಗಡೆ ಮಾಡಬಹುದೆಂಬ ಆತಂಕದಿಂದಲೇ ಯಾರೋ ಒಬ್ಬರ ನಿರ್ದೇಶನದಂತೆ ಪೊಲೀಸರು ದೇವರಾಜೇಗೌಡ ಅವರನ್ನು ಬಂಧಿಸಿದ್ದಾರೆ. ಎಲ್ಲವೂ ಸರ್ಕಾರ ನಡೆಸುವವರ ನಿರ್ದೇಶನದ ಮೇಲೆ ನಡೆಯುತ್ತದೆ ಎಂದರೆ ಎಸ್‌‍ಐಟಿ ನಿಷ್ಪಕ್ಷಪಾತ ತನಿಖೆ ನಡೆಸಲು ಸಾಧ್ಯವೇ ಇಲ್ಲ ಎಂದು ಆಕ್ಷೇಪಿಸಿದರು.
5
+ ಸರ್ಕಾರ ಕೂಡಲೇ ಸುಪ್ರೀಂಕೋರ್ಟ್‌ ಇಲ್ಲವೇ ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶರಿಂದ ತನಿಖೆಯನ್ನು ನಡೆಸಬೇಕು. ಸಿಬಿಐ ಮೇಲೆ ನಂಬಿಕೆ ಇಲ್ಲದಿದ್ದರೆ ಚಿಂತೆ ಇಲ್ಲ ಕಡೆಪಕ್ಷ ನ್ಯಾಯಾಂಗದ ತನಿಖೆಗೆ ವಹಿಸಲು ಸಮಸ್ಯೆಯಾದರೂ ಏನು ಎಂದು ಪ್ರಶ್ನಿಸಿದರು.
6
+ ಇದು ಮೊದಲಿನಿಂದಲೂ ನಿಷ್ಪಕ್ಷಪಾತ ತನಿಖೆ ನಡೆಯಲು ಸಾಧ್ಯವಿಲ್ಲ ಎಂಬ ಅನುಮಾನ ಇತ್ತು. ಡಿ.ಕೆ.ಶಿವಕುಮಾರ್‌ ಜೊತೆ ಎಲ್‌ಆರ್‌ ಶಿವರಾಮೇಗೌಡ ನಡೆಸಿದ ಆಡಿಯೋ ಸಂಭಾಷಣೆ ಬಿಡುಗಡೆಯಾದ ಅರ್ಧಗಂಟೆಯಲ್ಲೇ ದೇವರಾಜೇಗೌಡ ಬಂಧನ ಸಾಕಷ್ಟು ಸಂಶಯಗಳಿಗೆ ಎಡೆ ಮಾಡಿಕೊಟ್ಟಿವೆ ಎಂದು ಹೇಳೀದರು.
7
+ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜೀವ್‌ ಮಾತನಾಡಿ, ರಾಜ್ಯ ಸರ್ಕಾರದ ಜವಾಬ್ದಾರಿ. ಈ ರೀತಿ ಘಟನೆ ನಡೆಯುವ ಮೊದಲು ಗುಪ್ತಚರ ಇಲಾಖೆ ಸರ್ಕಾರದ ಗಮನಕ್ಕೆ ತರಬೇಕಿತ್ತು. ಇಂಟಲಿಜೆನ್ಸ್ ಫೆಲ್ಯೂರ್‌ ಆಗಿದೆ. ಫಲಿತಾಂಶ ಬಂದ ಹೆಣ್ಣು ಮಗು ತಲೆ ಕಡಿದು ಹತ್ಯೆಯಾಗಿದೆ. ಭ್ರೂಣ ಹತ್ಯೆ ಪ್ರಕರಣ ಮತ್ತೆ ಹೊರ ಬರುತ್ತಿವೆ. ಕರ್ನಾಟಕದಲ್ಲಿ ಕಾನೂನು ಸುವ್‌ಯವಸ್ಥೆ ಹಾಳಗಿದೆ ಎಂದರು.
8
+ ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌‍ ಮೈತ್ರಿ ರಾಷ್ಟ್ರ ಮಟ್ಟದಲ್ಲಿ ನಡೆದಿದೆ. ಮುಂದುವರೆಸಬೇಕೆ, ಬೇಡವೇ ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದರು.
eesanje/url_46_148_2.txt ADDED
@@ -0,0 +1,7 @@
 
 
 
 
 
 
 
 
1
+ ಇನ್ನೂ ಮೂರು ದಿನ ವರ್ಷಧಾರೆ, ಹಲವೆಡೆ ಅವಾಂತರ ಸೃಷ್ಟಿಸಿದ ಪೂರ್ವ ಮುಂಗಾರು ಮಳೆ
2
+ ಬೆಂಗಳೂರು,ಮೇ 13-ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದ್ದು, ವಿವಿಧೆಡೆ ಉತ್ತಮವಾಗಿ ಮಳೆಯಾಗಿದ್ದು, ಅನ್ನದಾತರಲ್ಲಿ ಸಂತಸ ತಂದಿದ್ದರೆ, ಮತ್ತೊಂದೆಡೆ ಬೆಳೆ ನಾಶದಿಂದ ರೈತರು ಕಂಗಾಲಾಗಿದ್ದಾರೆ.
3
+ ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ಎನ್‌.ಆರ್‌.ಪುರ ತಾಲೂಕಿನ ಕಟ್ಟೀಮನಿ ಗ್ರಾಮದ ಬಳಿ ಮರ ಬಿದ್ದು, ಮಹಿಳೆ ಸಾವನ್ನಪ್ಪಿದರೆ, ಬೀದರ್‌ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಇಟಿಗ ಗ್ರಾಮದಲ್ಲಿ ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ವರದಿಯಾಗಿದೆ.
4
+ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೀದರ್‌, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ರಾಯಚೂರು ಪಟ್ಟಣದಲ್ಲಿ ಸುರಿದ ಮಳೆಯಿಂದಾಗಿ ಎಪಿಎಂಸಿ ಆವರಣದಲ್ಲಿ ಭತ್ತದ ರಾಶಿ ನೀರಿನಲ್ಲಿ ನೆಂದು ಹೋಗಿದ್ದು, ಇದರಿಂದ ಅಪಾರ ನಷ್ಟ ಸಂಭವಿಸಿದೆ.
5
+ ಚಾಮರಾಜನಗರ ತಾಲೂಕಿನ ದೇವರಾಜಪುರ, ಬ್ಯಾಡಮಡ್ಲು, ಉತ್ತುಮಳ್ಳಿಯಲ್ಲಿ ಮಳೆಯಾಗಿದ್ದು, ಕಟಾವಿಗೆ ಬಂದಿದ್ದ ಬಾಳೆ ನಾಶವಾಗಿದ್ದು, ಅಪಾರ ನಷ್ಟ ಸಂಭವಿಸಿದೆ. ಯಾದಗಿರಿಯಲ್ಲಿ ಸಿಡಿಲು ಬಡಿದು ಕುರಿಗಾಹಿ ಸಾವನ್ನಪ್ಪಿರುವ ಘಟನೆ ಶಹಪುರ ತಾಲೂಕಿನ ವೀಬೂತಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಳೆಗೆ ರಾಜ್ಯದ ವಿವಿಧೆಡೆ ಮೂವರು ಬಲಿಯಾಗಿದ್ದಾರೆ.
6
+ ಬೆಂಗಳೂರಿನಲ್ಲಿಯೂ ಸಹ ಉತ್ತಮವಾಗಿ ಮಳೆಯಾಗಿದ್ದು, ಅಲ್ಲಲ್ಲಿ ಗಾಳಿಗೆ ಮರಗಳು ಉರುಳಿ ಬಿದ್ದಿವೆ. ಹಾಸನ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಇಂದು ಮುಂಜಾನೆಯಿಂದ ತುಂತುರು ಮಳೆಯಾಗಿದೆ.
7
+ ಮೂರು ದಿನ ಮಳೆ ಸಾಧ್ಯತೆ :ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದ ಎಲ್ಲಾ ಜಿಲ್ಲೆಗಗಳಲ್ಲೂ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಒಟ್ಟಿನಲ್ಲಿ ಬಿರು ಬೇಸಿಗೆಯಿಂದ ಕಂಗಾಲಾಗಿದ್ದ ರಾಜ್ಯದ ಜನತೆಗೆ ವರುಣ ತಂಪೆರೆದಿದ್ದು, ತಂಪು ವಾತಾವರಣದಿಂದ ನಿಟ್ಟುಸಿರು ಬಿಡುವಂತಾಗಿದೆ.
eesanje/url_46_148_3.txt ADDED
@@ -0,0 +1,5 @@
 
 
 
 
 
 
1
+ ವಕೀಲೆ ಚೈತ್ರಾಗೌಡ ಆತ್ಮಹತ್ಯೆ ಕಾರಣ ಇನ್ನೂ ನಿಗೂಢ
2
+ ಬೆಂಗಳೂರು, ಮೇ 12-ಕೆಎಎಸ್ ಅಧಿಕಾರಿ ಪತ್ನಿ ಹೈಕೋರ್ಟ್ ವಕೀಲೆ ಚೈತ್ರಾಗೌಡ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಪೊಲೀಸರಿಗೆ ಸಿಕ್ಕಿರುವ ಡೆತ್‍ನೋಟ್ ನಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದೇನೆ, ಬದುಕಲು ಸಾಧ್ಯವಾಗುತ್ತಿಲ್ಲ, ನನ್ನ ಪತಿ ಶಿವಕುಮಾರ್ ಒಳ್ಳೆಯವರು, ನನ್ನ ಮಗುವನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಮಾರ್ಚ್ ತಿಂಗಳಲ್ಲೇ ಚೈತ್ರಾಗೌಡ ಡೆತ್‍ನೋಟ್ ಬರೆದಿಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
3
+ ಯಾವ ಕಾರಣಕ್ಕೆ ಅವರಿಗೆ ಮಾನಸಿಕ ಖಿನ್ನತೆಯಾಗಿತ್ತು. ಖಿನ್ನತೆಗೆ ಕಾರಣ ಗಳೇನು?ಎಂಬ ಬಗ್ಗೆ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ. ನಿನ್ನೆ ಸಂಜಯ್ ನಗರದ ಗೆದ್ದಲ ಹಳ್ಳಿಯ ಅಪಾರ್ಟ್‍ಮೆಂಟ್‍ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಚೈತ್ರಾಗೌಡ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.
4
+ ಪೊಲೀಸರು ಅವರ ಪತಿ, ಕುಟುಂಬದವರು ಮತ್ತು ಸ್ನೇಹಿತರನ್ನು ಭೇಟಿ ಮಾಡಿ ಚೈತ್ರಾ ಅವರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಡೆತ್‍ನೋಟ್ ಬಗ್ಗೆ ಕೂಡ ಪರಿಶೀಲನೆ ನಡೆಸುತ್ತಿದ್ದಾರೆ. ಚೈತ್ರಾಗೌಡ ಅವರು ತುಂಬಾ ಗಟ್ಟಿಗಿತ್ತಿ, ಆತ್ಮಹತ್ಯೆ ಮಾಡಿಕೊಳ್ಳುವಂತ ಮನಸ್ಥಿತಿ ಅವರಲ್ಲ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಬೆಂಗಳೂರು ವಕೀಲರ ಸಂಘ ಪೊಲೀಸರಿಗೆ ದೂರು ನೀಡಿದೆ.
5
+ ಈ ಹಿನ್ನೆಲೆಯಲ್ಲಿ ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ. ಒಟ್ಟಾರೆ ಈ ವರೆಗೆ ಆತ್ಮಹತ್ಯೆ ಪ್ರಕರಣ ಇನ್ನೂ ನಿಗೂಢವಾಗಿಯೇ ಇದೆ.
eesanje/url_46_148_4.txt ADDED
@@ -0,0 +1,7 @@
 
 
 
 
 
 
 
 
1
+ ಪೆನ್‍ಡ್ರೈವ್ ಪ್ರಕರಣ ಸ್ಪೋಟಕ ತಿರುವು : ಬಿಜೆಪಿ ಮಾಜಿ ಶಾಸಕರ ಆಪ್ತರು ಎಸ್‍ಐಟಿ ವಶಕ್ಕೆ
2
+ ಹಾಸನ, ಮೇ 12- ಪೆನ್‍ಡ್ರೈವ್ ಪ್ರಕರಣ ದಿನೇ ದಿನೇ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಮಹತ್ವದ ಬೆಳವಣಿಗೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕರ ಆಪ್ತರೊಬ್ಬರು ಸೇರಿದಂತೆ ಇಬ್ಬರನ್ನು ವಿಶೇಷ ತನಿಖಾ ತಂಡ (ಎಸ್‍ಐಟಿ) ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
3
+ ಬಿಜೆಪಿ ಮಾಜಿ ಶಾಸಕರ ಅತ್ಯಾಪ್ತನೆನ್ನಲಾದ ಲಿಖಿತ್‍ಗೌಡ ಮತ್ತು ಯಲಗುಂದ ಚೇತನ್ ಎಂಬ ಇಬ್ಬರನ್ನು ಪೆನ್‍ಡ್ರೈವ್ ಹಂಚಿಕೆ ಸಂಬಂಧದ ಆರೋಪದಲ್ಲಿ ಎಸ್‍ಐಟಿ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪೆನ್‍ಡ್ರೈವ್ ವೈರಲ್ ವಿಚಾರದಲ್ಲಿ ಬಿಜೆಪಿಯ ಇಬ್ಬರು ಕಾರ್ಯಕರ್ತರನ್ನು ಎಸ್‍ಐಟಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದು ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
4
+ ಪೂರ್ಣ ಚಂದ್ರ ತೇಜಸ್ವಿ ಎಂಬುವವರು ಏ.23ರಂದು ಹಾಸನ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿ ಲೋಕಸಬೆ ಚುನಾವಣೆಗೆ ಸರ್ಧಿಸಿರುವ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾದ ಪ್ರಜ್ವಲ್ ರೇವಣ್ಣ ಅವರ ಭಾವಚಿತ್ರಗಳನ್ನು ನವೀನ್‍ಗೌಡ ಎಂಬುವವರು ಮಾ-ರ್ï ಮಾಡಿ ಅಶ್ಲೀಲ ವಿಡಿಯೋ ತಯಾರಿಸಿಕೊಂಡು ಮನೆ ಮನೆಗೆ ತೆರಳಿ ಮತದಾರರಿಗೆ ಪೆನ್‍ಡ್ರೈವ್, ಸಿಡಿ, ವಾಟ್ಸಾಪ್ ಪೋಟೊಗಳನ್ನು ಮೊಬೈಲ್‍ಗಳಲ್ಲಿ ತೋರಿಸಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಿದ್ದರು.
5
+ ಈ ಪ್ರಕರಣದ ಹೆಚ್ಚಿನ ತನಿಖೆಗಾಗಿ ಸರ್ಕಾರ ಎಸ್‍ಐಟಿಗೆ ವಹಿಸಿದೆ. ತನಿಖೆ ಕೈಗೊಂಡ ಎಸ್‍ಐಟಿ ಇಂದು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಈ ಪೆನ್‍ಡ್ರೈವ್‍ಗಳನ್ನು ಏಕೆ ಹಂಚಲಾಯಿತು, ಎಲ್ಲೆಲ್ಲಿ ಹಂಚಿದ್ದೀರಿ, ಇದರ ಹಿಂದೆ ಯಾರು ಯಾರು ಇದ್ದಾರೆ ಎಂಬಿತ್ಯಾದಿ ಪ್ರಶ್ನೆಗಳನ್ನು ಅವರಿಗೆ ಕೇಳಿ ಎಸ್‍ಐಟಿ ಮಾಹಿತಿ ಕಲೆ ಹಾಕುತ್ತಿದೆ.
6
+ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಇನ್ನಿಬ್ಬರು ಆರೋಪಿಗಳಿಗಾಗಿ ಎಸ್‍ಐಟಿ ಶೋಧ ನಡೆಸುತ್ತಿದೆ. ಹಾಸನದಲ್ಲಿ ಹರಿದಾಡಿದೆ ಎನ್ನಲಾದ ಪೆನ್‍ಡ್ರೈವ್ ಪ್ರಕರಣ ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ.
7
+ ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಶಾಸಕ, ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಹಲವು ಸಂತ್ರಸ್ತ ಮಹಿಳೆಯರು ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.ನವೀನ್‍ಗೌಡ, ಕಾರ್ತಿಕ್‍ಗೌಡ ಸೇರಿ ನಾಲ್ವರಿಗೆ ಎಸ್‍ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದೆ.ಪೆನ್‍ಡ್ರೈವ್‍ಅನ್ನು ಮನೆ ಮನೆಗೆ ಹಂಚಿ ಮಹಿಳೆಯರ ಮಾನಾಪಹರಣ ಮಾಡಿದ ಕಿಡಿಗೇಡಿಗಳನ್ನು ಬಂಧಿಸುವಂತೆ ��ಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಈ ನಡುವೆ ರಾಜಕೀಯ ಪಕ್ಷಗಳ ನಡುವೆ ಪರಸ್ಪರ ಕೆಸರೆರಚಾಟ ತೀವ್ರಗೊಂಡಿದೆ.
eesanje/url_46_148_5.txt ADDED
@@ -0,0 +1,7 @@
 
 
 
 
 
 
 
 
1
+ ಎಸ್‍ಐಟಿ ತಂಡ ವಿದೇಶಕ್ಕೆ ಹೋಗೋಲ್ಲ: ಪರಮೇಶ್ವರ್
2
+ ಬೆಂಗಳೂರು, ಮೇ 12- ಪೆನ್‍ಡ್ರೈವ್ ಪ್ರಕರಣದಲ್ಲಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸಲು ವಿಶೇಷ ತನಿಖಾ ದಳದ ಅಧಿಕಾರಿಗಳು ವಿದೇಶಕ್ಕೆ ತೆರಳುವ ಅವಕಾಶ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‍ಐಟಿ ಅಧಿಕಾರಿಗಳು ವಿದೇಶಕ್ಕೆ ಹೋಗಲು ಅವಕಾಶ ಇಲ್ಲ ಎಂದು ಸ್ಪಷ್ಟ ಪಡಿಸಿದರು.
3
+ ಈಗಾಗಲೇ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲಾಗಿದೆ. ಇಂಟರ್ ಪೋಲ್ ಸಂಸ್ಥೆಯವರು ಪ್ರಜ್ವಲ್‍ನ ಚಲನವಲನಗಳನ್ನು ಗುರುತಿಸಿ, ಎಲ್ಲಿದ್ದಾರೆ ಎಂದು ಪತ್ತೆ ಹಚ್ಚುತ್ತಾರೆ. ಅದನ್ನು ಸಿಬಿಐಗೆ ತಿಳಿಸುತ್ತಾರೆ. ಅಲ್ಲಿಂದ ನಮ್ಮ ತನಿಖಾ ಸಂಸ್ಥೆಗಳಿಗೆ ಮಾಹಿತಿ ಬರುತ್ತದೆ. ಸದ್ಯಕ್ಕೆ ಈವರೆಗೂ ಪ್ರಜ್ವಲ್ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ವಿವರಿಸಿದರು.
4
+ ಸದ್ಯಕ್ಕೆ ಪ್ರಕರಣದ ತನಿಖೆ ನಡೆಯುತ್ತಿದೆ. ಈ ಹಂತದಲ್ಲಿ ತನಿಖೆಯ ಮೇಲೆ ಪರಿಣಾಮ ಬೀರುವ ಯಾವುದೇ ವಿಚಾರ ಅಥವಾ ಮಾಹಿತಿಗಳನ್ನು ಸಾರ್ವಜನಿಕವಾಗಿ ಹೇಳಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.ಪೆನ್‍ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಾಜೇಗೌಡರನ್ನು ಈಗಾಗಲೇ ಬಂಧಿಸಲಾಗಿದೆ. ಮುಂದಿನ ಕ್ರಮಗಳ ಬಗ್ಗೆ ಎಸ್‍ಐಟಿ ಅಧಿಕಾರಿಗಳಿಗೆ ಮಾಹಿತಿ ಇರುತ್ತದೆ. ಅವರು ನಿರ್ಧಾರ ತೆಗೆದುಕೊಳ್ಳುತ್ತಾರೆ.
5
+ ಹೇಳಿಕೆ ನೀಡುವಾಗ ಎಚ್ಚರ:ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಪ್ರತಿಯೊಬ್ಬರು ನೀಡುವ ಹೇಳಿಕೆಗೂ ಉತ್ತರಿಸಲಾಗುವುದಿಲ್ಲ. ಈ ಪ್ರಕರಣದಲ್ಲಿ ವಿಶೇಷ ಮನವಿ ಏನಂದರೆ ನಾಯಕರು ಹೇಳಿಕೆಗಳನ್ನು ನೀಡುವಾಗ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಇಲ್ಲವಾದರೆ 41 ಎ ಅಡಿ ನೋಟಿಸ್ ಕೊಟ್ಟು, ವಿಚಾರಣೆಗೆ ಕರೆದು, ಅವರು ನೀಡಿದ ಹೇಳಿಕೆಯ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
6
+ ಹೆಚ್.ಡಿ.ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದು ಭಾವಿಸಿದ್ದೇನೆ. ಮುಂದೆ ಯಾವುದೇ ಹೇಳಿಕೆಗಳನ್ನು ಕೊಡುವಾಗ ಅಥವಾ ಸಾರ್ವಜನಿಕ ವಲಯದಲ್ಲಿ ಮಾಹಿತಿಯನ್ನು ಹಂಚಿಕೊಳ್ಳುವಾಗ ಎಚ್ಚರಿಕೆಯಿಂದ ಇರಬೇಕು ಎಂದು ಎಲ್ಲರಿಗೂ ಮನವಿ ಮಾಡಿಕೊಳ್ಳುತ್ತೇನೆ ಎಂದರು.
7
+ ಬೆದರಿದ ಬಿಜೆಪಿ:ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯವರಿಗೆ ಲೋಕಸಭೆ ಚುನಾವಣೆಯ ಬಗ್ಗೆ ಭಯವಾಗಿದೆ. ಬಹುಶಃ ನಿರಾಶರಾಗಿದ್ದಾರೆ. ಆರಂಭದಲ್ಲಿ 400 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದರು. ಇದ್ದಕ್ಕಿದ್ದಂತೆ 300ಕ್ಕೆ ಇಳಿದಿದರು. ಈಗ ಮತ್ತೆ 400 ಗೆಲ್ಲುತ್ತೇವೆ ಎಂದು ಹೇಳುತ್ತಿದ್ದಾರೆ. ಜನ ಸಾಮಾನ್ಯರು ಯಾವ ರೀತಿ ಮತ ಹಾಕುತ್ತಾರೆ ಎಂಬ ಸುಳಿವು ಅವರಿಗೆ ಸಿಕ್ಕಿದಂತಿದೆ. ಅದಕ್ಕಾಗಿ ಹತಾಶರಾಗಿ, ಗೊಂದಲಕ್ಕೆ ಒಳಗಾಗಿ ಹೇಳಿಕೆ ನೀಡುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿಯ ಬಗ್ಗೆ ನಮಗೆ ಯಾವ ಸಂಬಂಧನೂ ಇಲ್ಲ ಎಂದು ಹೇಳಿಕೆಯೊಂದಕ್ಕೆ ಪರಮೇಶ್ವರ್ ಪ್ರತಿಕ್ರಿಯಿಸಿದರು.
eesanje/url_46_148_6.txt ADDED
@@ -0,0 +1,10 @@
 
 
 
 
 
 
 
 
 
 
 
1
+ ರಾಜ್ಯದಲ್ಲಿ ಮತ್ತೊಂದು ಮಿನಿ ಅಗ್ನಿಪರೀಕ್ಷೆಗೆ ರಾಜಕೀಯ ಪಕ್ಷಗಳು ಸಿದ್ಧತೆ
2
+ ಬೆಂಗಳೂರು,ಮೇ12- ಲೋಕಸಭೆ ಚುನಾವಣೆಯ ಕಾವು ತಣ್ಣಗಾಗುವ ಮುನ್ನವೇ ರಾಜ್ಯದಲ್ಲಿ ರಾಜಕೀಯ ಪಕ್ಷಗಳಿಗೆ ಮತ್ತೊಂದು ಮಿನಿ ಅಗ್ನಿಪರೀಕ್ಷೆ ಎದುರಾಗಿದೆ. ರಾಜ್ಯ ಸರ್ಕಾರಕ್ಕೆ ವಿಧಾನಪರಿಷತ್‍ನಲ್ಲಿ ಸಂಖ್ಯಾಬಲ ಹೆಚ್ಚಿಸಿಕೊಂಡು ವಿಧೇಯಕಗಳನ್ನು ಪಾಸು ಮಾಡಿಕೊಳ್ಳಲು ಪೂರಕವಾಗಿ ಜೂನ್ 3ರಂದು ನಡೆಯುವ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
3
+ ವಿಧಾನಪರಿಷತ್‍ನ ಶಿಕ್ಷಕರ ಹಾಗೂ ಪದವೀಧರರ ಆರು ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯುತ್ತಿದ್ದು, ಅvಸೂಚನೆ ಜಾರಿಯಲ್ಲಿದೆ. ಮೇ 16ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಈ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್‍ನ ಮೈತ್ರಿ ಮುಂದುವರೆದಿದೆ. ಬಿಜೆಪಿ ಐದು ಕ್ಷೇತ್ರಗಳಿಗೆ ನಿನ್ನೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಒಂದು ಕ್ಷೇತ್ರವನ್ನು ಮಾತ್ರ ಜೆಡಿಎಸ್‍ಗೆ ಬಿಟ್ಟು ಕೊಡಲಾಗಿದ್ದು, ಅದಕ್ಕೆ ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆ ಚಾಲನೆಯಲ್ಲಿದೆ.
4
+ ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದಿಂದ ಡಾ.ಚಂದ್ರಶೇಖರ ಪಾಟೀಲ(ಕಾಂಗ್ರೆಸ್), ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರದಿಂದ ಅಯನೂರು ಮಂಜುನಾಥ್(ಬಿಜೆಪಿ), ಬೆಂಗಳೂರು ಪದವೀಧರ ಕ್ಷೇತ್ರದಿಂದ ಅ.ದೇವೇಗೌಡ(ಬಿಜೆಪಿ), ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿ (ಬಿಜೆಪಿ), ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್.ಎಲ್.ಬೋಜೇಗೌಡ (ಜೆಡಿಎಸ್), ಕರ್ನಾಟಕ ದಕ್ಷಿಣ ಕ್ಷೇತ್ರದಿಂದ ಮರಿತಿಬ್ಬೇಗೌಡ (ಜೆಡಿಎಸ್) 2018ರ ಚುನಾವಣೆಯಲ್ಲಿ ಆಯ್ಕೆಯಾಗಿದ್ದರು. ಇದೇ ಜೂನ್ 21ಕ್ಕೆ ಅವಧಿ ಪೂರ್ಣಗೊಳ್ಳುತ್ತಿದೆ.
5
+ ಇವರ ಪೈಕಿ ಮರಿತಿಬ್ಬೇಗೌಡ, ಅಯನೂರು ಮಂಜುನಾಥ್ ತಮ್ಮ ಪಕ್ಷಗಳಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದಾರೆ. ಬಿಜೆಪಿ ನಿನ್ನೆ ಐದು ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಅಮರನಾಥ್ ಪಾಟೀಲ್, ನೈರುತ್ಯ ಪದವೀಧರ ಕ್ಷೇತ್ರಕ್ಕೆ ಡಾ.ಧನಂಜಯ ಸರ್ಜಿ, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಅ.ದೇವೇಗೌಡ, ಅಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವೈ.ಎ.ನಾರಾಯಣಸ್ವಾಮಿ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ವಿ.ಸಿ.ನಿಂಗರಾಜು ಅಭ್ಯರ್ಥಿಗಳಾಗಿದ್ದಾರೆ.
6
+ ನೈರುತ್ಯ ಶಿಕ್ಷಕರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಉಡುಪಿ ಕ್ಷೇತ್ರದ ಮಾಜಿ ಶಾಸಕ ರಘುಪತಿ ಭಟ್ ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಅಸಮಾಧಾನ ಹೊರಹಾಕಿದ್ದು, ಬಿಜೆಪಿ ತಮಗೆ ವಿಧಾನಪರಿಷತ್‍ನ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವ ಭರವಸೆ ನೀಡಿತ್ತು. ಆದರೆ ಈಗ ಆ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟು ಕೊಡಲು ಮುಂದಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
7
+ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‍�� ಶ್ರೀಕಂಠೇಗೌಡ ಆಕಾಂಕ್ಷಿಯಾಗಿದ್ದರು. ಆದರೆ ಆ ಸ್ಥಾನಕ್ಕೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಹೀಗಾಗಿ ಮೈತ್ರಿ ಪಕ್ಷದಲ್ಲಿ ಒಂದಿಷ್ಟು ಗೊಂದಲಗಳು ಕಂಡುಬಂದಿವೆ.ಇತ್ತ ಕಾಂಗ್ರೆಸ್ ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಮೋಜಿ ಗೌಡ, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ.ಮಂಜುನಾಥ್, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಪಿ.ಡಿ.ಶ್ರೀನಿವಾಸ್, ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಡಾ.ಚಂದ್ರಶೇಖರ್ ಬಿ.ಪಾಟೀಲ್, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮರಿತಿಬ್ಬೇಗೌಡ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.ನೈರುತ್ಯ ಪದವೀಧರ ಕ್ಷೇತ್ರಕ್ಕೆ ಅಯನೂರು ಮಂಜುನಾಥ್ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಈ ಚುನಾವಣೆಗೆ ವಿದ್ಯಾವಂತರು ಹಾಗೂ ಪ್ರಜ್ಞಾವಂತರು ಮತದಾರರಾಗಿರುವುದರಿಂದ ಎಲ್ಲ ಪಕ್ಷಗಳಿಗೂ ಅಗ್ನಿಪರೀಕ್ಷೆ ಎದುರಾಗಿದೆ.
8
+ ಆಡಳಿತಾರೂಢ ಕಾಂಗ್ರೆಸ್‍ಗೆ ವಿಧಾನಪರಿಷತ್‍ನಲ್ಲಿ ತನ್ನ ಸಂಖ್ಯಾಬಲವನ್ನು ಹೆಚ್ಚಿಸಿಕೊಳ್ಳಲು ಇದು ಸುವರ್ಣಾವಕಾಶವಾಗಿದೆ. ದ್ವೈವಾರ್ಷಿಕ ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳ ಪೈಕಿ ಈಶಾನ್ಯ ಪದವೀಧರ ಕ್ಷೇತ್ರ ಹೊರತುಪಡಿಸಿ ಉಳಿದ ಮೂರು ಕಡೆ ಬಿಜೆಪಿ, ಎರಡು ಕಡೆ ಜೆಡಿಎಸ್ 2018ರಲ್ಲಿ ಗೆದ್ದಿದ್ದವು.ಪ್ರಸ್ತುತ ವಿಧಾನಪರಿಷತ್‍ನಲ್ಲಿ ಬಿಜೆಪಿ 32, ಜೆಡಿಎಸ್ 7 ಸ್ಥಾನ ಹೊಂದಿದ್ದು, ಎನ್‍ಡಿಎ ಮಿತ್ರಕೂಟ 39 ಸಂಖ್ಯಾಬಲ ಹೊಂದಿದೆ. ಕಾಂಗ್ರೆಸ್ 29 ಸದಸ್ಯರನ್ನು ಹೊಂದಿದ್ದು, ಒಬ್ಬರು ಪಕ್ಷೇತರರು ಮತ್ತು ಒಬ್ಬ ಸಭಾಪತಿ ಇದ್ದಾರೆ.
9
+ ತೇಜಸ್ವಿನಿಗೌಡ, ಕೆ.ಪಿ.ನಂಜುಂಡಿ ಅವರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆಯಿಂದ ವಿಧಾನಪರಿಷತ್‍ಗೆ ಆಯ್ಕೆಯಾಗಿರುವ 9 ಮಂದಿ ಸದಸ್ಯರ ಅವಧಿ ಜೂ.17ಕ್ಕೆ ಮುಕ್ತಾಯಗೊಳ್ಳುತ್ತಿದೆ. ಇಲ್ಲಿ ಕಾಂಗ್ರೆಸ್ 5ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಅವಕಾಶ ಹೊಂದಿದೆ.
10
+ ದ್ವೈವಾರ್ಷಿಕ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದರೆ ಜೆಡಿಎಸ್ ಮತ್ತು ಬಿಜೆಪಿಗಿಂತಲೂ ಹೆಚ್ಚು ಸಂಖ್ಯಾಬಲವನ್ನು ಪಡೆದುಕೊಂಡು ಮೇಲ್ಮನೆಯಲ್ಲು ವಿಧೇಯಕಗಳನ್ನು ಅಂಗೀಕರಿಸಿಕೊಳ್ಳಲು ಅವಕಾಶ ಮಾಡಿಕೊಂಡಂತಾಗುತ್ತದೆ.
eesanje/url_46_148_7.txt ADDED
@@ -0,0 +1,6 @@
 
 
 
 
 
 
 
1
+ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಮೂರು ದಿನ ಮುಂದುವರಿಕೆ
2
+ ಬೆಂಗಳೂರು, ಮೇ12- ಮುಂಗಾರು ಪೂರ್ವ ಮಳೆ ಚುರುಕಾಗಿದ್ದು, ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ. ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.
3
+ ಮೇ 15ರ ವರೆಗೂ ಎಲ್ಲಾ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದೂವರೆ ಕಿ.ಮೀ.ಎತ್ತರದಲ್ಲಿ ನಿರ್ಮಾಣಗೊಂಡಿರುವ ಪರಿಣಾಮ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಮಿಂಚು, ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಗಳಿವೆ.
4
+ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಮಳೆಯಾಗುತ್ತಿದೆ. ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಕೆಲವು ಕಡೆಗಳಲ್ಲಿ ಮಳೆ, ಗಾಳಿ ಹೆಚ್ಚಾಗಿದ್ದು, ಮರ, ವಿದ್ಯುತ್ ಕಂಬಗಳು ಹಾನಿಗೊಳಗಾಗಿವೆ. ತೀವ್ರ ಬಿಸಿಲಿನ ಬೇಗೆಯಿದ್ದ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲೂ ಮಳೆ ಆರಂಭಗೊಂಡಿದೆ. ಇದರಿಂದ ತಾಪಮಾನ ತಗ್ಗುತ್ತಿದೆ. ಸರಾಸರಿ ಇನ್ನೂ ಒಂದು ವಾರ ಮಳೆ ಮುಂದುವರೆಯುವ ಲಕ್ಷಣವಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
5
+ ಈಗಾಗಲೇ ಬಿದ್ದಿರುವ ಮಳೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಹೆಚ್ಚಳವಾಗಿದ್ದ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗಿರುವುದು ಕಂಡುಬಂದಿದೆ. ನಿರಂತರ ಮಳೆಯಿಂದಾಗಿ ವಾತಾವರಣದಲ್ಲೂ ಆದ್ರ್ರತೆ ಪ್ರಮಾಣ ಹೆಚ್ಚಳವಾಗಿದೆ. ಇದರಿಂದ ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರು ನಿಟ್ಟುಸಿರು ಬಿಡುವಂತಾಗಿದೆ.
6
+ ಮಾರ್ಚ್ ಮತ್ತು ಏಪ್ರಿಲ್‍ನಲ್ಲಿ ಕೈ ಕೊಟ್ಟಿದ್ದ ಪೂರ್ವ ಮುಂಗಾರು ಮಳೆ ಮೇ ತಿಂಗಳಲ್ಲಿ ಆರಂಭವಾಗಿರುವುದು ರೈತರು ಹಾಗೂ ಜನರಲ್ಲಿ ಆಶಾಭಾವನೆ ಮೂಡಿಸಿದೆ. ಈ ತಿಂಗಳಲ್ಲಿ ವಾಡಿಕೆ ಪ್ರಮಾಣ ಮತ್ತು ಅದಕ್ಕಿಂತ ಹೆಚ್ಚಾದರೆ, ಬೇಸಾಯಕ್ಕೂ ಅನುಕೂಲವಾಗುವುದಲ್ಲದೆ, ಕಾಡು ಪ್ರಾಣಿಗಳ ಹಾಗೂ ಜಾನುವಾರುಗಳ ಮೇವಿನ ಸಮಸ್ಯೆ ನಿವಾರಣೆಗೂ ಅನುಕೂಲವಾಗಲಿದೆ.
eesanje/url_46_148_8.txt ADDED
@@ -0,0 +1,6 @@
 
 
 
 
 
 
 
1
+ ಭೀಕರ ಅಪಘಾತ: ಸರ್ಕಾರಿ ಪ್ರೌಢಶಾಲೆಯ ಇಬ್ಬರು ಶಿಕ್ಷಕರು ದುರ್ಮರಣ..
2
+ ಪಾವಗಡ,ಮೇ12- ಚಾಲಕನ ಅತಿ ವೇಗದಿಂದಾಗಿ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಿಬ್ಬರು ಸಾವನ್ನಪ್ಪಿ, ಇಬ್ಬರು ಗಂಭೀರಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಕಣವೆನಹಳ್ಳಿ ಗೇಟ್ ಬಳಿ ತಡರಾತ್ರಿ ನಡೆದಿದೆ.
3
+ ಪಾವಗಡ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಪ್ರಾಂಶುಪಾಲರಾದ ಓ ಧನಂಜಯ ಹಾಗೂ ಗೌಡಹಟ್ಟಿ ಪ್ರೌಡ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಕೃಷ್ಣ ಮೃತಪಟ್ಟ ದುದೈರ್ವಿಗಳು. ಶಿಕ್ಷಕರಾದ ನರಸಿಂಹಮೂರ್ತಿ ಹಾಗೂ ವೆಂಕಟಾಚಲಪತಿ ಅವರಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
4
+ ನಾಲ್ವರು ಶಿಕ್ಷಕರು ಕಳೆದ ರಾತ್ರಿ ತುಮಕೂರಿನಲ್ಲಿ ನಡೆದ ಶಿಕ್ಷಕರೊಬ್ಬರ ಪುತ್ರಿಯ ವಿವಾಹ ಆರತಕ್ಷತೆ ಮುಗಿಸಿಕೊಂಡು ಒಂದೆ ಕಾರಿನಲ್ಲಿ ಪಾವಗಡಕ್ಕೆ ವಾಪಸ್ ತೆರಳುತ್ತಿದ್ದಾಗ ತಡರಾತ್ರಿ 2.30ರ ಸಮಯದಲ್ಲಿ ಕಣವೆನಹಳ್ಳಿ ಗೇಟ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದ್ದು ಕಾರಿನ ಕೆಳಗೆ ಸಿಲುಕಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
5
+ ಸುದ್ದಿ ತಿಳಿಯುತ್ತಿದ್ದಂತೆ ಪಾವಗಡ ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈ ಗೊಂಡಿದ್ದಾರೆ. ಚಾಲಕ ನಿದ್ರೆಗೆ ಜಾರಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಾರು ಪಲ್ಟಿಹೊಡೆದ ರಭಸಕ್ಕೆ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
6
+ ಆಕ್ರಂಧನ: ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕುಟುಂಬ ಸದಸ್ಯರ ಆಕ್ರಂಧನ ಮುಗಿಲು ಮುಟ್ಟಿತ್ತು. ಜೊತೆಗೆ ತಾಲೂಕಿನ ಎಲ್ಲಾ ಶಾಲೆಗಳ ಶಿಕ್ಷಕರು ಸಹದ್ಯೋಗಿಗಳು ಕಂಬನಿ ಮಿಡಿದಿದ್ದು ದುಃಖ ಭರಿಸುವ ಶಕ್ತಿಯನ್ನು ಕುಟುಂಬದ ಸದಸ್ಯರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
eesanje/url_46_148_9.txt ADDED
@@ -0,0 +1,6 @@
 
 
 
 
 
 
 
1
+ ಒಂದು ಬಿಂದಿಗೆ ನೀರಿಗಾಗಿ ರಾತ್ರಿಯವರೆಗೂ ಕಾದು ಕುಳಿತ ಮಹಿಳೆಯರು
2
+ ಬೆಂಗಳೂರು,ಮೇ12- ನಾಡಿನ ಹಲವು ಕಡೆ ಬಿರು ಮಳೆಯಿಂದಾಗಿ ತಂಪಿನ ವಾತಾವರಣ ನಿರ್ಮಾಣವಾಗಿದ್ದರೆ, ಇದೇ ಸಮಯದಲ್ಲಿ ಬಯಲುಸೀಮೆ ಸೇರಿದಂತೆ ಹಲವಾರು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಕಾಡಲಾರಂಭಿಸಿದೆ.
3
+ ಈವರೆಗೂ ಲೋಕಸಭೆಯ ಚುನಾವಣೆಯ ಹಿನ್ನಲೆಯಲ್ಲಿ ರಾಜಕಾರಣಿಗಳು, ಮರಿ ಪುಡಾರಿಗಳು ಸ್ವಂತ ಖರ್ಚಿನಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಿ ಜನರಿಗೆ ಸಮಸ್ಯೆ ಅರಿವಾಗದಂತೆ ಪರಿಸ್ಥಿತಿ ನಿಭಾಯಿಸಿದ್ದರು.ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೂ ಚುನಾವಣೆ ಮುಗಿಯುತ್ತಿದ್ದಂತೆ ನೀರಿನ ಸಮಸ್ಯೆ ತೀವ್ರವಾಗಲಾರಂಭಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಕೆಂಚಾಪುರ ಗ್ರಾಮದಲ್ಲಿ ಒಂದು ಬಿಂದಿಗೆ ನೀರಿಗಾಗಿ ಬೆಳಗ್ಗೆಯಿಂದ ಮಧ್ಯರಾತ್ರಿಯವರೆಗೂ ಕಾದು ಕುಳಿತುಕೊಳ್ಳುವ ಪರಿಸ್ಥಿತಿ ಇದೆ.
4
+ ಕಳೆದ ಎರಡು ದಿನಗಳಿಂದಲೂ ಇದೇ ವಾತಾವರಣವಿದ್ದು, ನೀರಿಗಾಗಿ ಜನ ಪರಿತಪಿಸುತ್ತಿದ್ದಾರೆ. ರಸ್ತೆಯ ಉದ್ದಗಲಕ್ಕೂ ಖಾಲಿ ಕೊಡಗಳನ್ನು ಸಾಲು ಸಾಲಾಗಿ ಜೋಡಿಸಿದ್ದು, ಟ್ಯಾಂಕರ್ ಬರುವಿಕೆಗಾಗಿ ಚಾತಕಪಕ್ಷಿಯಂತೆ ಕಾದು ಬಳಿಕ ನೀರು ಪಡೆದುಕೊಳ್ಳುವ ಪರಿಸ್ಥಿತಿ ಇದೆ. ನಿನ್ನೆ ಮಧ್ಯರಾತ್ರಿಯ ಬಳಿಕ ಟ್ಯಾಂಕರ್ ಬಂದಿದ್ದು, ಆವರೆಗೂ ಮಹಿಳೆಯರು ಕಾದು ಕುಳಿತಿದ್ದ ದಯಾನೀಯ ಸ್ಥಿತಿ ಕರುಳು ಹಿಂಡುವಂತಿತ್ತು.
5
+ ಕೆಲವು ಕಡೆ ಮಳೆ ಸುರಿಯುತ್ತಿದೆಯಾದರೂ ನೀರಿನ ಬವಣೆ ನೀಗಿಲ್ಲ. ಕೆರೆಕಟ್ಟೆಗಳಿಗೆ ನೀರು ತುಂಬಿಕೊಂಡು ಅಂರ್ತಜಲ ಚೇತರಿಕೆಯಾಗಿ ಬತ್ತಿ ಹೋಗಿರುವ ಕೊಳವೆ ಬಾವಿಗಳು ಮರುಜೀವ ಪಡೆಯಲು ಕಾಲಾವಕಾಶದ ಅಗತ್ಯವಿದೆ. ಮಳೆ ಇನ್ನೆರಡು ವಾರ ನಿಂತರವಾಗಿ ಸುರಿದರೆ ನೀರಿನ ಸಮಸ್ಯೆ ತಗ್ಗುವ ನಿರೀಕ್ಷೆ ಇದೆ. ಬಯಲುಸೀಮೆ ಹಾಗೂ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಈಗಲೂ ಕುಡಿಯುವ ನೀರಿಗಾಗಿ ಹಾಹಾಕಾರ ಮುಂದುವರೆದಿದೆ.
6
+ ಚುನಾವಣೆ ಮುಗಿಯುತ್ತಿದ್ದಂತೆ ಜನರ ಸಮಸ್ಯೆಗಳತ್ತ ಕಣ್ಣೆತ್ತಿ ನೋಡದ ರಾಜಕೀಯ ನಾಯಕರ ವಿರುದ್ಧ ಜನಸಾಮಾನ್ಯರು ಕೆಂಡ ಕಾರುತ್ತಿದ್ದಾರೆ.
eesanje/url_46_149_1.txt ADDED
@@ -0,0 +1,7 @@
 
 
 
 
 
 
 
 
1
+ ಪರಿಷತ್‌ ಚುನಾವಣೆ : 2 ಕ್ಷೇತ್ರಗಳಲ್ಲಿ ಜೆಡಿಎಸ್‌‍ ಸ್ಪರ್ಧೆ.. ?
2
+ ಬೆಂಗಳೂರು, ಮೇ 11-ಲೋಕಸಭಾ ಚುನಾವಣೆಯಂತೆ ವಿಧಾನ ಪರಿಷತ್ತಿನ ಆರು ಕ್ಷೇತ್ರಗಳ ಚುನಾವಣೆಯಲ್ಲೂ ಮೈತ್ರಿ ಮುಂದುವರೆಯಲಿದ್ದು, ಜೆಡಿಎಸ್‌‍ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆಗಿಳಿಯುವ ಸಾಧ್ಯತೆಗಳಿವೆ.
3
+ ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌‍ ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿ 25 ಹಾಗೂ ಜೆಡಿಎಸ್‌‍ 3 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದವು. ವಿಧಾನ ಪರಿಷತ್ತಿನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರರ ಕ್ಷೇತ್ರಗಳಿಗೆ ಜೂನ್‌ 3ರಂದು ಮತದಾನ ನಡೆಯಲಿದೆ.
4
+ ಇನ್ನೂ ಉಭಯ ಪಕ್ಷಗಳ ನಡುವೆ ಮೇಲನೆಯ ಚುನಾವಣೆಯ ಕ್ಷೇತ್ರಗಳ ಹಂಚಿಕೆ ಪ್ರಕ್ರಿಯೆ ಅಂತಿಮಗೊಂಡಿಲ್ಲ. ಜೆಡಿಎಸ್‌‍ ಎರಡು ಶಿಕ್ಷಕರ ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ಉಳಿದ ನಾಲ್ಕು ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಡಲಿದೆ.
5
+ ಜೆಡಿಎಸ್‌‍ನಿಂದ ಸ್ಪರ್ಧಿಸಿ ಚುನಾಯಿತರಾಗಿದ್ದ ಮರಿತಿಬ್ಬೇಗೌಡ ಅವರು ವಿಧಾನ ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಜೆಡಿಎಸ್‌‍ ತೊರೆದು ಕಾಂಗ್ರೆಸ್‌‍ ಸೇರಿದ್ದಾರೆ. ಹೀಗಾಗಿ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‌‍ ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ.ಈ ಕ್ಷೇತ್ರದಿಂದ ವಿಧಾನ ಪರಿಷತ್‌ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹಾಗೂ ವಿವೇಕಾನಂದ ಎಂಬುವರು ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ. ಇವರಿಬ್ಬರಲ್ಲಿ ಒಬ್ಬರನ್ನು ಕಣಕ್ಕಿಳಿಸುವ ಉದ್ದೇಶವಿದೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ.
6
+ ವಿಧಾನ ಪರಿಷತ್‌ ಸದಸ್ಯರಾಗಿರುವ ಎಸ್‌‍.ಎಲ್‌ ಭೋಜೇಗೌಡ ಅವರು, ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಮರು ಸ್ಪರ್ಧೆಗಿಳಿಯುವ ಸಾಧ್ಯತೆಗಳಿವೆ. ಬಿಜೆಪಿ ನಾಯಕರೊಂದಿಗೆ ಮೈತ್ರಿ ಮಾತುಕತೆ ಅಂತಿಮಗೊಂಡ ಬೆನ್ನಲ್ಲೇ ಜೆಡಿಎಸ್‌‍ ನಾಯಕರು ಸಭೆ ನಡೆಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ.
7
+ ಬೆಂಗಳೂರು ಪದವೀಧರ ಕ್ಷೇತ್ರದಿಂದಲೂ ಜೆಡಿಎಸ್‌‍ನಿಂದ ಸ್ಪರ್ಧಿಸಲು ಹಲವು ಆಕಾಂಕ್ಷಿಗಳಿದ್ದಾರೆ. ಆದರೆ, ಈ ಕ್ಷೇತ್ರದಲ್ಲಿ ಹಾಲಿ ವಿಧಾನ ಪರಿಷತ್‌ ಸದಸ್ಯರು ಇರುವುದರಿಂದ ಜೆಡಿಎಸ್‌‍ಗೆ ಈ ಕ್ಷೇತ್ರ ಬಿಟ್ಟುಕೊಡುವ ಸಾಧ್ಯತೆ ಇಲ್ಲವೆಂದೇ ಹೇಳಲಾಗುತ್ತಿದೆ.
eesanje/url_46_149_10.txt ADDED
@@ -0,0 +1,8 @@
 
 
 
 
 
 
 
 
 
1
+ ಗಗನಕ್ಕೇರಿದ ವೀಳ್ಯದೆಲೆ ಬೆಲೆ
2
+ ಬೆಂಗಳೂರು, ಮೇ 11-ಶುಭಕಾರ್ಯಗಳಲ್ಲಿ ವೀಳ್ಯದೆಲೆ ಅಗ್ರಗಣ್ಯ ಸ್ಥಾನ ಪಡೆದಿದ್ದು, ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬೆಳೆಗಾರರಿಗೆ ಲಾಭವಾಗುತ್ತಿದ್ದರೆ ಗ್ರಾಹಕರಿಗೆ ಹೊರೆಯಾಗುತ್ತಿದೆ.
3
+ ಮೇ ತಿಂಗಳಲ್ಲಿ ಶುಭಕಾರ್ಯಗಳು ಹೆಚ್ಚಾಗಿ ನಡೆಯಲಿದ್ದು, ಬೇಡಿಕೆ ಹೆಚ್ಚಾದ ಬೆನ್ನಲ್ಲೆ ಬೆಲೆಯೂ ಸಹ ಹೆಚ್ಚಳವಾಗುತ್ತಿದೆ. ಪ್ರತಿ ಮೆನೆಗಳಲ್ಲೂ ಪೂಜಾಕಾರ್ಯ, ಕಳಶಕ್ಕೆ ಎಲೆಗಳನ್ನು ಬಳಸುತ್ತಾರೆ. ಈ ಋತುವಿನಲ್ಲಿ ಮದುವೆ, ಗೃಹಪ್ರವೇಶ, ಧಾರ್ಮಿಕ ಕಾರ್ಯಗಳು ಹೆಚ್ಚಾಗಿ ನಡೆಯಲಿವೆ. ಈ ಸಮಯದಲ್ಲಿ ಎಲ್ಲಾ ಪೂಜಾ ವಸ್ತುಗಳಿಗಿಂತ ವೀಳ್ಯದೆಲೆ ಎದ್ದು ಕಾಣಿಸುತ್ತದೆ.
4
+ ಬರ, ಹವಾಮಾನ ವೈಪರೀತ್ಯ, ರೋಗಬಾಧೆ, ಕಾರ್ಮಿಕರ ಸಮಸ್ಯೆಯಿಂದ ಇಳುವರಿ ಕುಂಠಿತವಾಗಿ ಬೇಡಿಕೆ ಹೆಚ್ಚಾದ ಪರಿಣಾಮ ಬೆಲೆ ಏರಿಕೆಯಾಗಿದೆ. ಒಂದು ಪೆಂಡಿಯಲ್ಲಿ 100 ಎಲೆಗಳ 100 ಕಟ್ಟುಗಳನ್ನಾಗಿ ಮಾಡಿ ಮಾರಾಟ ಮಾಡಲಾಗುತ್ತದೆ. ಪ್ರಸ್ತುತದಲ್ಲಿ ಒಂದು ಪೆಂಡಿ 12 ರಿಂದ 16 ಸಾವಿರದವರೆಗೂ ಮಾರುಕಟ್ಟೆಯಲ್ಲಿ ಬೆಲೆ ಇದೆ. ಅಂದರೆ ಬೆಳೆಗಾರರಿಗೆ ಒಂದು ಎಲೆಗೆ ಒಂದೂವರೆ ರೂ. ಸಿಗುತ್ತದೆ. ಚಿಲ್ಲರೆಯಾಗಿ ಒಂದು ಎಲೆ ಮೂರರಿಂದ ನಾಲ್ಕು ರೂ. ಚಿಲ್ಲರೆಯಾಗಿ ಮಾರಾಟವಾಗುತ್ತಿದೆ. ಕಟ್ಟಿನ ಲೆಕ್ಕದಲ್ಲಿ ನೋಡೋದಾದ್ರೆ ಉತ್ತಮ ಗುಣಮಟ್ಟದ ಅಂಬಾಡಿ ಎಲೆ 150 ರೂ. ಇದೆ.
5
+ ಇಲ್ಲಿ ಬೆಳೆಗಾರರಿಗೆ ಅಷ್ಟೆನೂ ಲಾಭ ಸಿಗುತ್ತಿಲ್ಲ. ಮಾರಾಟಗಾರರಿಗೆ, ಮಂಡಿಯವರಿಗೆ ಮಾತ್ರ ಲಾಭವಾಗುತ್ತಿದೆ. ತುಮಕೂರು ಜಿಲ್ಲೆಯ ಮಧುಗಿರಿ, ಶಿರಾ, ಕೊರಟಗೆರೆ, ಭಾಗದಲ್ಲಿ ಒಂದು ಕಾಲದಲ್ಲಿ ಎಲೆ ತೋಟಗಳು ಹೆಚ್ಚಾಗಿ ಕಾಣ ಸಿಗುತ್ತಿದ್ದವು. ನೀರಿನ ಕೊರತೆ, ರೋಗ, ಕೂಲಿಯಾಳುಗಳ ಸಮಸ್ಯೆಯಿಂದ ಇಂದು ತೋಟಗಳಲ್ಲಿ ಎಲೆ ಅಂಬು ಕಾಣಸಿಗದಾಗಿದೆ.
6
+ ವೀಳ್ಯದೆಲೆ ಬಳ್ಳಿಯನ್ನು ಪ್ರತಿ ವರ್ಷ ಭೂಮಿಯೊಳಗೆ ರಿಂಗ್‌ ಮಾದರಿಯಲ್ಲಿ ಅಗಿಯಬೇಕು. ಇದಕ್ಕೆ ನುರಿತ ಕಾರ್ಮಿಕರು ಬೇಕು. ಇಂದಿನ ದಿನಗಳಲ್ಲಿ ಬಳ್ಳಿ ಅದಿಯುವವರು ಸಿಗುತ್ತಿಲ್ಲ. ಜತೆಗೆ ಎಲೆಗಳನ್ನು ಕೊಯ್ಯಲು ಕೆಲ ನಿಯಮಗಳು ಇವೆ. ಆದರೆ ಇಂದಿನ ದಿನಗಳಲ್ಲಿ ಹಲವಾರು ಸಮಸ್ಯೆಗಳಿಂದ ಬೆಳೆ ಬೆಳೆಯಲು ರೈತರು ಹಿಂದೇಟು ಹಾಕುತ್ತಿದ್ದಾರೆ. ಹಾಗಾಗಿ ಬೆಳೆ ಇಲ್ಲದೆ ಬೆಲೆ ಹೆಚ್ಚಳವಾಗಿದೆ.
7
+ ಈ ಬಾರಿ ದಾಖಲೆಯ ಉಷ್ಣಾಂಶದಿಂದ ಬಳ್ಳಿಯಲ್ಲಿ ಎಲೆ ಕಚ್ಚದೆ ಮುದುಡುತ್ತಿವೆ. ನೀರಿನ ಕೊರತೆಯಿಂದ ಇಳುವರಿ ಕುಂಠಿತವಾಗಿ ತಿಂಗಳಿಗೆ 10 ರಿಂದ 15 ಪೆಂಡಿ ಎಲೆ ಮಾರುಕಟ್ಟೆಗೆ ಸರಬರಾಜು ಮಾಡುತ್ತಿದ್ದೆ. ಆದರೆ ಈಗ ಕೇವಲ 5 ರಿಂದ 6 ಪೆಂಡಿ ಮಾತ್ರ ಮಾರಾಟ ಮಾಡುತ್ತಿದ್ದೇನೆ ಎಂದು ತುಮಕೂರು ಜಿಲ್ಲೆ ಕೊರಟಗೆರೆಯ ರೈತ ಬಸವರಾಜು ತಿಳಿಸಿದ್ದಾರೆ.
8
+ ಈ ಬಾರಿ ಉತ್ತಮ ಮಳೆಯಾಗಿ ಇಳುವರಿ ಬಂದರೆ ಮಾತ್ರ ಬೆಲೆ ಕಡಿಮೆಯಾಗಲಿದೆ. ಇಲ್ಲದೆ ಇದ್ದರೆ ಬೆಲೆ ಕಡಿಮೆಯಾಗದು ಎಂದು ವ್ಯಾಪಾರಿ ಭದ್ರಣ್ಣ ತಿಳಿಸಿದ್ದಾರೆ.
eesanje/url_46_149_11.txt ADDED
@@ -0,0 +1,4 @@
 
 
 
 
 
1
+ ಪರಿಷತ್‌ ಚುನಾವಣೆಯಲ್ಲಿ ಬಲಗೈ ತೋರು ಬೆರಳಿಗೆ ಶಾಯಿ ಗುರುತು
2
+ ಬೆಂಗಳೂರು, ಮೇ11-ಬೆಂಗಳೂರು ಪದವೀಧರರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯಲಿರುವ ದೈವಾರ್ಷಿಕ ಚುನಾವಣೆಯಲ್ಲಿ ಬಲಗೈನ ತೋರು ಬೆರಳಿಗೆ ಅಳಿಸಲಾಗದ ಶಾಯಿ ಹಾಕಲಾಗುವುದು.
3
+ ಪರಿಷತ್ತಿನ ಮೂರು ಪದವೀಧರರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳಿಗೆ ಜೂನ್‌ 3 ರಂದು ಮತದಾನ ನಡೆಯಲಿದೆ. ಮತದಾನದ ದಿನದಂದು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಪದವೀಧರರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೆಯ ಶಿಕ್ಷಕರ ಕ್ಷೇತ್ರದ ಮತದಾರರ ಬಲಗೈನ ತೋರು ಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಚ್ಚಲಾಗುತ್ತದೆ ಎಂದು ಬೆಂಗಳೂರು ಪ್ರಾದೇಶಿಕ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
4
+ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಹಾಗೂ ಸುರಪುರ ವಿಧಾನಸಭೆ ಉಪ ಚುನಾವಣೆಯಲ್ಲಿ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಾಕಲಾಗಿತ್ತು.
eesanje/url_46_149_12.txt ADDED
@@ -0,0 +1,9 @@
 
 
 
 
 
 
 
 
 
 
1
+ ಪೆನ್‌ಡ್ರೈವ್‌ ವಿಚಾರದಲ್ಲಿ ಕೀಳು ರಾಜಕಾರಣದ ವಿರುದ್ಧ ಬೇಸತ್ತ ಜನ, ವ್ಯಾಪಕ ಆಕ್ರೋಶ
2
+ ಬೆಂಗಳೂರು,ಮೇ11-ದೇಶಾದ್ಯಂತ ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿರುವ ಬೆನ್ನಲ್ಲೇ ಹಾಸನ ಸಂಸದ ರೇವಣ್ಣ ಅವರ ಅಶ್ಲೀಲ ಆಡಿಯೋ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಒದಗಿಸುವ ಬದಲು ರಾಜಕೀಯ ಪಕ್ಷಗಳ ಕೆಸರೆರಚಾಟಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅದರಲ್ಲೂ ಇದು ಸಾಮಾಜಿಕ ಜಾಲತಾಣಗಳ ಯುಗ. ಆಡಳಿತ ಮತ್ತು ಪ್ರತಿಪಕ್ಷ ಯಾವುದನ್ನೂ ಲೆಕ್ಕಿಸದೆ ಪ್ರತಿಯೊಂದನ್ನು ಸೂಕ್ಷ್ಮವಾಗಿ ಗಮನಿಸಿ ರಾಜಕಾರಣಿಗಳಿಗೆ ಛೀಮಾರಿ ಹಾಕುತ್ತಿದ್ದಾರೆ.
3
+ ಪ್ರಜ್ವಲ್‌ ಪ್ರಕರಣ ದಿನ ಕಳೆದಂತೆ ಒಂದೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಅವರ ವಿರುದ್ಧ ಮೂರು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಇನ್ನೊಂದೆಡೆ ಅವರ ತಂದೆ ಎಚ್‌.ಡಿ.ರೇವಣ್ಣ ಈಗಾಗಲೇ ಜೈಲು ಪಾಲಾಗಿದ್ದಾರೆ. ಇದೇ ಪ್ರಕರಣದಲ್ಲಿ ಅವರ ತಾಯಿ ಭವಾನಿ ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌‍ಐಟಿ ನೋಟಿಸ್‌‍ ಜಾರಿ ಮಾಡಿದೆ.
4
+ ಅಸಲಿಗೆ ಪೆನ್‌ಡ್ರೈವ್‌ನಲ್ಲಿ ಎಷ್ಟು ಮಹಿಳೆಯರು ಇದ್ದಾರೆ ಎಂಬ ವಾಸ್ತವ ಯಾರಿಗೂ ಗೊತ್ತಿಲ್ಲ. ಎಲ್ಲವೂ ಅಂತೆಕಂತೆಗಳ ಮೇಲೆಯೇ ಚರ್ಚೆಯಾಗುತ್ತಿದೆ. ಪ್ರಾರಂಭದಲ್ಲಿ 2,960 ನೊಂದ ಸಂತ್ರಸ್ತ ಮಹಿಳೆಯರು ಇದ್ದಾರೆ ಎಂಬ ಗುಸುಗುಸು ಹಬ್ಬಿತ್ತು.ಕೆಲವು ವಿಡಿಯೋಗಳು ಹೊರಬಂದವು. ಆ ವೇಳೆಗೆ ಎಸ್‌‍ಐಟಿ ಇಂತಹ ಅಶ್ಲೀಲ ಆಡಿಯೋಗಳನ್ನು ಯಾರಾದರೂ ಹಂಚಿಕೊಂಡರೆ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಕೆ ಕೊಟ್ಟ ನಂತರ ಪೆನ್‌ಡ್ರೈವ್‌ ಚರ್ಚೆ ಒಂದು ಹಂತಕ್ಕೆ ನಿಂತಿತು.
5
+ ಆದರೆ ಯಾವಾಗ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಪ್ರಜ್ವಲ್‌ ರೇವಣ್ಣ ಮತದಾನ ಮುಗಿದ ಬಳಿಕ ಬಂಧನದ ಭೀತಿಯಿಂದ ವಿದೇಶಕ್ಕೆ ಪರಾರಿಯಾದರೋ ಅಲ್ಲಿಂದ ಆರಂಭವಾದ ರಾಜಕೀಯ ಕೆಸರೆರಾಚಾಟ ಈ ಕ್ಷಣದವರೆಗೂ ನಿಂತಿಲ್ಲ. ಅವರನ್ನು ಸ್ವದೇಶಕ್ಕೆ ಕರೆತರಲು ಸರ್ಕಾರ ರೆಡ್‌ ಕಾರ್ನರ್‌, ಬ್ಲೂ ಕಾರ್ನರ್‌ ನೋಟಿಸ್‌‍ ಸೇರಿದಂತೆ ಎಲ್ಲಾ ರಾಜತಾಂತ್ರಿಕ ಮಾರ್ಗಗಳ ಮೂಲಕ ಕಾನೂನಿನ ಕುಣಿಕೆಯನ್ನು ಬಿಗಿ ಮಾಡಿದೆ. ಈಗ ಎಲ್ಲೆಡೆ ಕೇಳಿಬರುತ್ತಿರುವ ಒಂದೇ ಮಾತೆಂದರೆ ಪ್ರಜ್ವಲ್‌ ಎಲ್ಲಿದ್ದೀಯಪ್ಪಾ?.. ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಆಗುತ್ತಿದೆ.
6
+ ಬೆಂಗಳೂರಿನಿಂದ ತೆರಳಿದ ಮೇಲೆ ಫ್ರಾಂಕ್‌ಫರ್ಟ್‌, ದುಬೈ ಹೀಗೆ ಹಲವು ರಾಷ್ಟ್ರಗಳಲ್ಲಿ ವಾಸ್ತವ್ಯಹೂಡಿದ್ದಾರೆ ಎಂದು ಹೇಳಲಾಗುತ್ತಿದೆಯಾದರೂ ಅಸಲಿಗೆ ಪ್ರಜ್ವಲ್‌ ಎಲ್ಲಿದ್ದಾನೆ ಎಂಬ ಕಟುಸತ್ಯ ಯಾರಿಗೂ ಗೊತ್ತಿಲ್ಲ.ಇದರ ನಡುವೆ ಕಾಂಗ್ರೆಸ್‌‍, ಬಿಜೆಪಿ, ಜೆಡಿಎಸ್‌‍ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಪ್ರಕರಣವನ್ನು ತಮ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ತುತ್ತಾಗಿದೆ.
7
+ ಪ್ರಜ್ವಲ್‌ ರೇವಣ್ಣ ಅವರಿಂದ ಅನ್ಯಾಯಕ್ಕೊಳಗಾದ ಮಹಿಳೆಯರಿಗೆ ನ್ಯಾಯ ಒದಗಿಸಿಕೊಡುವ ಉದ್ದೇಶ ಯಾರೊಬ್ಬರಿಗೂ ಇಲ್ಲ. ಎಲ್ಲರೂ ಲೋಕಸಭೆ ಚುನಾವಣೆಯಲ್ಲಿ ತಮಗೆ ಎಷ್ಟು ಲಾಭವಾಗಬಹುದು ಎಂಬುದನ್ನೇ ಮುಖ್ಯ ಅಂಶ ಮಾಡಿಕೊಂಡಿದ್ದಾರೆ. ಈಗಾದರೆ ನಿಜವಾಗಿಯೂ ಸಂತ್ರಸ್ತ ಮಹಿಳೆಗೆ ನ್ಯಾಯ ಸಿಗುವುದಾದರೂ ಹೇಗೆ ಎಂಬ ಮೂಲಭೂತ ಪ್ರಶ್ನೆ ಎದುರಾಗಿದೆ.
8
+ ಇಂತಹ ಘಟನೆಗಳು ಸಮಾಜದ ಮೇಲೆ ಖಂಡಿತಾ ಪರಿಣಾಮ ಬೀರುತ್ತದೆ. ಇಲ್ಲಿ ಜನಪ್ರತಿನಿಧಿ ತನ್ನ ಜವಾಬ್ದಾರಿಯನ್ನು ಮರೆತು ಮಹಿಳೆಯರ ಮೇಲೆ ದೌರ್ಜನ್ಯ ಎಸಗುತ್ತಾನೆ. ಮತ್ತೊಂದು ಕಡೆಯಲ್ಲಿ ಈ ವಿಡಿಯೋ ರಾಜಕೀಯ ದಾಳವಾಗಿ ಬಳಕೆಯಾಗುತ್ತಿದೆ. ಇಲ್ಲಿ ಹೆಣ್ಣನ್ನು ಸರಕಾಗಿ ಹೇಗೆ ಸಮಾಜ ಬಳಕೆ ಮಾಡುತ್ತಿದೆ ಎಂಬುವುದರ ದೋತ್ಯಕವಾಗಿದೆ ಎಂಬ ಮಾತು ಕೇಳಿಬರುತ್ತಿದೆ.
9
+ ಸರ್ಕಾರದ ಮುಂದಿನ ಸವಾಲೇನು?:ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಮುಂದೆ ಬಹುದೊಡ್ಡ ಸವಾಲಿದೆ. ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳುವುದರ ಜೊತೆಗೆ ಸಂತ್ರಸ್ತೆಯ ರಕ್ಷಣೆಗೂ ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಈ ಪ್ರಕರಣವನ್ನು ರಾಜಕೀಯವಾಗಿ ನೋಡದೆ ಸಾಮಾಜಿಕ ಆಯಾಮದಲ್ಲಿ ನೋಡಬೇಕಾಗಿದೆ. ಸದ್ಯ ಎಸ್‌‍ಐಟಿ ವಿಡಿಯೋ ಹಂಚಿಕೆ ವಿಚಾರವಾಗಿ ಕೆಲವೊಂದು ಬಿಗಿಯಾದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ ಇದು ಕೇವಲ ಪತ್ರಿಕಾ ಹೇಳಿಕೆಗಳ ಬಿಡುಗಡೆಗಷ್ಟೇ ಸೀಮಿತವಾಗಬಾರದು. ಬದಲಾಗಿ ಕ್ರಮದ ಮೂಲಕ ಸಾಬೀತುಪಡಿಸಬೇಕಾಗಿದೆ.
eesanje/url_46_149_2.txt ADDED
@@ -0,0 +1,4 @@
 
 
 
 
 
1
+ ಅಧಿಕಾರಿ ಪತ್ನಿ, ಹೈಕೋರ್ಟ್ ವಕೀಲೆ ಆತ್ಮಹತ್ಯೆ
2
+ ಬೆಂಗಳೂರು, ಮೇ 11- ಕೆ.ಎ.ಎಸ್ ಅಧಿಕಾರಿ ಶಿವಕುಮಾರ್ ಅವರ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಸಂಜಯ್ ನಗರದಲ್ಲಿ ನಡೆದಿದೆ.
3
+ ವೃತ್ತಿಯಲ್ಲಿ ವಕೀಲೆಯಾಗಿರುವ ಚೈತ್ರಾ ಗೌಡ ಅವರ ಮೃತದೇಹ ಗೆದ್ದಲಹಳ್ಳಿಯ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪತಿ ಕೆ.ಎ.ಎಸ್ ಅಧಿಕಾರಿ, ಹೈಕೋರ್ಟ್ ವಕೀಲೆಯಾಗಿದ್ದರೂ ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳಲು ಕಾರಣವೇನು? ಎಂಬುದೇ ನಿಗೂಢವಾಗಿದೆ.
4
+ ಶಿವಕುಮಾರ್ ಹಾಗೂ ಚೈತ್ರಾ ದಂಪತಿಗೆ 5 ವರ್ಷದ ಮಗ ಕೂಡ ಇದ್ದಾನೆ. ಸಾಮಾಜಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಚೈತ್ರಾ ಗೌಡ ಈಗ ಇದ್ದಕ್ಕಿದ್ದಂತೆ ಸಂಜಯ್ ನಗರದ ಮನೆಯಲ್ಲಿ ಬೆಡ್ ರೂಮ್ ನಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ. ಘಟನಾ ಸ್ಥಳಕ್ಕೆ ಸಂಜಯ್ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ
eesanje/url_46_149_3.txt ADDED
@@ -0,0 +1,6 @@
 
 
 
 
 
 
 
1
+ ಲೋಕಸಭೆ ಟಿಕೆಟ್ ಅನ್ಯಾಯವನ್ನು ಪರೋಕ್ಷವಾಗಿ ಪ್ರಸ್ತಾಪಿಸಿದ ಪ್ರತಾಪ ಸಿಂಹ
2
+ ಮೈಸೂರು,ಮೇ11-ಸ್ವಂತ ಪರಿಶ್ರಮದ ಮೂಲಕ ರಾಜಕೀಯವಾಗಿ ಉನ್ನತಿ ಸಾಧಿಸಿದ ಪೀಳಿಗೆ, ಮುಂದಿನ ದಿನಗಳಲ್ಲಿ ಕಾಣಸಿಗುವುದು ಕಷ್ಟಸಾಧ್ಯ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.
3
+ ಮೈಸೂರಿನಲ್ಲಿ ನಡೆದ ರಾಜಕೀಯ ಮುತ್ಸದ್ದಿ ಶ್ರೀನಿವಾಸ್‌‍ ಪ್ರಸಾದ್‌ ಅವರ ಶ್ರದ್ದಾಂಜಲಿ ಮತ್ತು ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮಾಜಿ ಸಚಿವ ಶ್ರೀನಿವಾಸ್‌‍ ಪ್ರಸಾದ್‌, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೆಲದಿಂದ ಎದ್ದು ಬಂದು ಸ್ವಂತ ಶಕ್ತಿ ಹಾಗೂ ಹೋರಾಟದ ಹಿನ್ನಲೆಯಿಂದ ಬೆಳೆದು ರಾಜಕಾರಣದಲ್ಲಿ ಪ್ರಭುತ್ವ ಸಾಧಿಸಿ ರಾಜ್ಯವನ್ನು ಆಳಿದ್ದಾರೆ ಮತ್ತು ಆಳುತ್ತಿದ್ದಾರೆ. ಸ್ವಂತ ಶಕ್ತಿಯಿಂದ ಬೆಳೆದು ಬಂದು ಅಧಿಕಾರ ಹಿಡಿದು ಜನರ ಬಗ್ಗೆ ಯೋಚಿಸಿ ಆಡಳಿತ ನಡೆಸಿದ ಪೀಳಿಗೆ ಬಹುಶಃ ಇದೇ ಕೊನೆ ಇರಬಹುದು ಎಂದರು.
4
+ ಪ್ರಸ್ತುತ ರಾಜಕಾರಣದಲ್ಲಿ ಒಂದಿಲ್ಲ ಒಂದು ಶಕ್ತಿಯಿಂದಲೇ ಅವಕಾಶ ಪಡೆದುಕೊಂಡ ಪೀಳಿಗೆಯೇ ಉಳಿದಿದೆ. ಹಿರಿಯ ನಾಯಕರು ನಮಗೆ ಮೇಲ್ಪಂಕ್ತಿ ಎಂದು ಹೇಳುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ತಮಗಾದ ಅನ್ಯಾಯವನ್ನು ಪರೋಕ್ಷವಾಗಿ ಪ್ರಸ್ತಾಪಿಸಿದರು. ಗ್ರಾಮಪಂಚಾಯ್ತಿ ಸದಸ್ಯರಿಂದ ಎಲ್ಲರು ನನ್ನನ್ನು ಟೀಕಿಸಿದ್ದಾರೆ.
5
+ ಆದರೆ ಶ್ರೀನಿವಾಸ್‌‍ ಪ್ರಸಾದ್‌ ಅವರು ಸಾರ್ವಜನಿಕವಾಗಿ ನನ್ನ ಬಗ್ಗೆ ಸಣ್ಣ ಟೀಕೆಯನ್ನೂ ಮಾಡಲಿಲ್ಲ. ಹದ್ದುಮೀರಿದ ಹೇಳಿಕೆಗಳನ್ನು ನೀಡಿದಾಗಲೂ ಕರೆದು ನಾಲ್ಕು ಗೋಡೆಗಳ ಮಧ್ಯೆ ನನಗೆ ಬುದ್ದಿ ಹೇಳಿದ್ದಾರೆ. ಅವರನ್ನು ಕಳೆದುಕೊಂಡಾಗ ತಂದೆ ಸಮಾನರಾದವರನ್ನು ಕಳೆದುಕೊಂಡ ನೋವು ಕಾಡಿತ್ತು ಎಂದರು.
6
+ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರತಾಪ್‌ ಸಿಂಹ ಹಾಡಿ ಹೊಗಳಿದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಎಚ್‌.ಸಿ.ಮಹದೇವಪ್ಪ , ಮಾಜಿ ಸಚಿವ ಪಿಜಿಆರ್‌ ಸಿಂಧ್ಯಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
eesanje/url_46_149_4.txt ADDED
@@ -0,0 +1,9 @@
 
 
 
 
 
 
 
 
 
 
1
+ ಪೆನ್‌ಡ್ರೈವ್‌ ಪ್ರಕರಣ ಮುಚ್ಚಿ ಹಾಕಲು ಸಿಬಿಐ ತನಿಖೆಗೆ ಒಪ್ಪಿಸಬೇಕೇ..? : ಪಾಟೀಲ್‌ ಪ್ರಶ್ನೆ
2
+ ಬೆಂಗಳೂರು,ಮೇ 11-ಪೆನ್‌ಡ್ರೈವ್‌ ಪ್ರಕರಣದಲ್ಲಿ ಕೇಂದ್ರ ಗೃಹಸಚಿವ ಅಮಿತ್‌ ಷಾ ನಿರ್ದೇಶನ ನೀಡಿದ್ದು ಎಂದು ಬಂಧಿತ ಬಿಜೆಪಿ ಮುಖಂಡ ದೇವರಾಜೇಗೌಡ ಹೇಳಿಕೊಂಡಿರುವ ಆಡಿಯೋ ಸಾಕ್ಷ್ಯ ಲಭ್ಯವಿದೆ. ಹೀಗಿರುವಾಗ ಪ್ರಕರಣವನ್ನು ಮುಚ್ಚಿ ಹಾಕಲು ಸಿಬಿಐ ತನಿಖೆಗೆ ಒತ್ತಾಯಿಸಲಾಗುತ್ತಿದೆಯೇ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಪ್ರಶ್ನಿಸಿದ್ದಾರೆ.
3
+ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನದ ಪೆನ್‌ಡ್ರೈವ್‌ ಪ್ರಕರಣವನ್ನು ಈಗಾಗಲೇ ಎಸ್‌‍ಐಟಿ ತನಿಖೆಗೆ ವಹಿಸಲಾಗಿದೆ. ನಮ ರಾಜ್ಯದ ಅಧಿಕಾರಿಗಳು ಸಮರ್ಥರಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೂ ಕಾದುನೋಡಬೇಕಿದೆ ಎಂದರು.
4
+ ಸಿಬಿಐ ಎಂಬುದು ಬಿಜೆಪಿಯ ವಾಷಿಂಗ್‌ ಮಿಷಿನ್‌ ಇದ್ದಂತೆ. ಅಲ್ಲಿಗೆ ಹಾಕಿ ಆರೋಪಿಗಳನ್ನು ಸಿದ್ಧಗೊಳಿಸಿಕೊಳ್ಳುವುದು ಬಿಜೆಪಿಯ ಹುನ್ನಾರ. ಅದಕ್ಕಾಗಿಯೇ ಪೆನ್‌ಡ್ರೈವ್‌ ಪ್ರಕರಣವನ್ನು ಸಿಬಿಐಗೆ ವಹಿಸಿ ಎಂದು ಕೇಳುತ್ತಿರಬಹುದು ಎಂದು ಹೇಳಿದರು. ಪ್ರಜ್ವಲ್‌ ರೇವಣ್ಣ ಖುದ್ದು ಶರಣಾಗುವುದು ಸೂಕ್ತ. ಈಗಾಗಲೇ ಲುಕೌಟ್‌ ನೋಟಿಸ್‌‍ ಜಾರಿಯಾಗಿದೆ. ಹೊರ ದೇಶದಲ್ಲಿ ಅಡಗಿರುವ ಅವರನ್ನು ಕರೆತರಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.
5
+ ಸರ್ಕಾರ ಪತನ ಅಸಾಧ್ಯ:ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಕಾಂಗ್ರೆಸ್‌‍ ಸರ್ಕಾರ ಪತನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌‍ ನಾಯಕ ಕುಮಾರಸ್ವಾಮಿ ಅವರ ಅಭಿಪ್ರಾಯ ರಾಜಕೀಯ ಪ್ರೇರಿತ ಹೇಳಿಕೆ. ಇದು ಅಸಾಧ್ಯದ ಮಾತು ಎಂದು ಹೇಳಿದರು. ಮಹಾರಾಷ್ಟ್ರದಲ್ಲಿ 3ನೇ 2ರಷ್ಟು ಶಾಸಕರನ್ನು ಬಿಜೆಪಿ ಸೆಳೆದುಕೊಂಡು ಮಹಾ ವಿಕಾಸ ಅಘಾಡಿ ಸರ್ಕಾರವನ್ನು ಪತನಗೊಳಿಸಿತ್ತು.
6
+ ಆದರೆ ಕರ್ನಾಟಕದಲ್ಲಿ ಆ ರೀತಿಯ ವಾತಾವರಣವಿಲ್ಲ. ಇಲ್ಲಿ ಕಾಂಗ್ರೆಸ್‌‍ ಸರ್ಕಾರವನ್ನು ತೆಗೆಯಬೇಕೆಂದರೆ 65 ಶಾಸಕರನ್ನು ಸೆಳೆಯಬೇಕು. ಬಿಜೆಪಿಯವರು 2ರಿಂದ 4 ಮಂದಿ ಕಾಂಗ್ರೆಸ್‌‍ ಶಾಸಕರನ್ನು ಸೆಳೆಯಲು ಪ್ರಯತ್ನಿಸಿದರೆ ಬಿಜೆಪಿ, ಜೆಡಿಎಸ್‌‍ನಿಂದ ಬಹಳಷ್ಟು ಮಂದಿ ಕಾಂಗ್ರೆಸ್‌‍ನತ್ತ ವಲಸೆ ಬರುವ ಸಾಧ್ಯತೆ ಇದೆ.
7
+ ಬಿಜೆಪಿಯ ಹಲವು ಮಂದಿ ನಮ್ಮ ಸಂಪರ್ಕದಲ್ಲಿದ್ದಾರೆ, ಇನ್ನು ಜೆಡಿಎಸ್‌‍ ಮುಳುಗುವ ಹಡಗು. ಈ ಕಡೆಯಿಂದ ಶಾಸಕರು ಆ ಕಡೆಗೆ ವಲಸೆ ಹೋಗುವ ಸಾಧ್ಯತೆ ಕಡಿಮೆ ಇದೆ. ಆದರೆ ಆ ಕಡೆಯಿಂದ ಈ ಕಡೆಗೆ ಬರುವವರ ಸಂಖ್ಯೆ ಹೆಚ್ಚಿದೆ ಎಂದು ವಿವರಿಸಿದರು.
8
+ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್‌‍ ಮೈತ್ರಿ ಮಾಡಿಕೊಂಡಿದ್ದರಿಂದಾಗಿ ಆ ಪಕ್ಷದ ಬಹಳಷ್ಟು ಮಂದಿ ಅಸಮಾಧಾನಗೊಂಡಿದ್ದಾರೆ. ಜೆಡಿಎಸ್‌‍ನಲ್ಲಿ ಅಲ್ಪಸಂಖ್ಯಾತರು ಸೇರಿದಂತೆ ಹಲವು ನಾಯಕರು ನಾವು ಕರೆಯದೇ ಇದ್ದರೂ ನಮ್ಮ ಪಕ್ಷಕ್ಕೆ ಬರಲು, ನಮ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ತುದಿಗಾಲಲ್ಲಿ ನಿಂತಿದ್ದರು ಎಂದು ಪ್ರತಿಪಾದಿಸಿದರು.
9
+ ರಾಜ್ಯದ ಬರ ಪರಿಹಾರಕ್ಕೆ ಕೇಂದ್ರದಿಂದ ಹೆಚ್ಚಿನ ಪರಿಹಾರ ಪಡೆದುಕೊಳ್ಳಲು ರಾಜ್ಯ ಸರ್ಕಾರ ಕಾನೂನು ಹೋರಾಟವನ್ನು ಮುಂದುವರೆಸಲಿದೆ. ಎನ್‌ಡಿಎಆರ್‌ಎಫ್‌, ಎಸ್‌‍ಡಿಆರ್‌ಎಫ್‌ ನಿಯಮದಡಿ ಪರಿಹಾರದ ಮೊತ್ತ ಅತ್ಯಲ್ಪ. ಹೀಗಿರುವಾಗ ರಾಜ್ಯ ಸರ್ಕಾರ 18 ಸಾವಿರ ಕೋಟಿ ಕೇಳಿದರೆ, ಕೇಂದ್ರ ಸರ್ಕಾರ ನ್ಯಾಯಾಲಯದ ಮಧ್ಯಪ್ರವೇಶದ ಬಳಿಕ ಮೂರೂವರೆ ಸಾವಿರ ಕೋಟಿ ರೂ. ಮಾತ್ರ ಕೊಟ್ಟಿದೆ. ಅದನ್ನು ರೈತರ ಖಾತೆಗಳಿಗೆ ಜಮೆಗೊಳಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ. ಪೂರ್ಣ ಪ್ರಮಾಣದ ಪರಿಹಾರ ಪಡೆದುಕೊಳ್ಳಲು ನ್ಯಾಯಾಂಗ ಹೋರಾಟ ಮುಂದುವರೆಯಲಿದೆ ಎಂದು ನುಡಿದರು.
eesanje/url_46_149_5.txt ADDED
@@ -0,0 +1,9 @@
 
 
 
 
 
 
 
 
 
 
1
+ ಪೆನ್‌ಡ್ರೈವ್‌ ಪಾತ್ರಧಾರಿ ಪ್ರಜ್ವಲ್‌ ಪತ್ತೆ ಹಚ್ಚುವಲ್ಲಿ ಎಸ್‌‍ಐಟಿ ವಿಫಲ
2
+ ಬೆಂಗಳೂರು, ಮೇ 11-ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಹಾಸನ ಪೆನ್‌ಡ್ರೈವ್‌ ಪ್ರಕರಣದ ಪ್ರಮುಖ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ತಲೆಮರೆಸಿಕೊಂಡು ಬರೋಬ್ಬರಿ 15 ದಿನಗಳಾಗಿವೆ. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ ಅವರನ್ನು ಪತ್ತೆ ಹಚ್ಚಿ ಕರೆತರುವಲ್ಲಿ ವಿಶೇಷ ತನಿಖಾ ತಂಡ ಸಂಪೂರ್ಣ ವಿಫಲವಾಗಿದೆ.
3
+ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಏ.27ರಂದು ಪ್ರಜ್ವಲ್‌ ವಿದೇಶಕ್ಕೆ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಪೆನ್‌ಡ್ರೈವ್‌, ಲೈಂಗಿಕ ದೌರ್ಜನ್ಯ ಪ್ರಕರಣದ ಪತ್ತೆಗೆ ಸರ್ಕಾರ ಬಿ.ಕೆ. ಸಿಂಗ್‌ ನೇತೃತ್ವ ದ ಎಸ್‌‍ಐಟಿ ತಂಡ ರಚನೆ ಮಾಡಿತ್ತು. ತನಿಖೆಗೆ ಇಳಿದ ಎಸ್‌‍ಐಟಿ ತಂಡ ಪ್ರಜ್ವಲ್‌ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍ ನೀಡಿತ್ತಲ್ಲದೇ ಪ್ರಜ್ವಲ್‌ ಅವರಿಗೆ ಲುಕ್‌ಔಟ್‌ ನೋಟಿಸ್‌‍ ಜಾರಿ ಮಾಡಿತ್ತು.
4
+ ಎಲ್ಲಾ ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಕಂಡು ಬಂದರೆ ಬಂಧಿಸುವಂತೆ ಸೂಚನೆ ಕೂಡ ಹೊರಡಿಸಲಾಗಿತ್ತು. ವಿದೇಶದಲ್ಲಿ ಇರುವುದರಿಂದ ತಕ್ಷಣದಲ್ಲಿ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಏಳು ದಿನಗಳ ಕಾಲ ಕಾಲಾವಕಾಶ ನೀಡಬೇಕು ಎಂದು ತಮ ವಕೀಲರ ಮೂಲಕ ಎಸ್‌‍ಐಟಿ ಮುಂದೆ ಪ್ರಜ್ವಲ್‌ ಮನವಿ ಮಾಡಿದ್ದರು.
5
+ ಈ ಮನವಿ ಪುರಸ್ಕರಿಸದ ಎಸ್‌‍ಐಟಿ ತಂಡ ಮತ್ತೆ ನೋಟಿಸ್‌‍ ನೀಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍ ನೀಡಿ ಸೂಚನೆ ನೀಡಿತ್ತು. ಕೇಂದ್ರ ಸರ್ಕಾರದ ನೆರವಿನೊಂದಿಗೆ ಬ್ಲೂಕಾರ್ನರ್‌ ನೋಟಿಸ್‌‍ ಜಾರಿ ಗೊಳಿಸಿ ಪ್ರಜ್ವಲ್‌ ಪತ್ತೆಗೆ ಪ್ರಯತ್ನ ನಡೆಸುತ್ತಿದೆ. ಆದರೂ ಪ್ರಜ್ವಲ್‌ ನಾಪತ್ತೆಯಾಗಿ 15 ದಿನಗಳಾದರೂ ಇನ್ನು ಸುಳಿವು ಸಿಕ್ಕಿಲ್ಲ.
6
+ ಪ್ರಜ್ವಲ್‌ ಅವರು ಈಗ ಬರುತ್ತಾರೆ, ಮಧ್ಯಾಹ್ನ ಬರುತ್ತಾರೆ, ನಾಳೆ ಬರುತ್ತಾರೆ, ಮೂರು ದಿನಗಳಲ್ಲಿ ಬರುತ್ತಾರೆ ಎಂದು ಪೊಲೀಸರು ಬೆಂಗಳೂರು, ಮಂಗಳೂರು, ಗೋವಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಯುತ್ತಲೇ ಇದ್ದಾರೆ.ಪ್ರಜ್ವಲ್‌ ಎಲ್ಲಿದ್ದಾರೆ ? ಯಾವ ದೇಶದಲ್ಲಿ ತಲೆ ಮರೆಸಿಕೊಂಡಿದ್ದಾರೆ ?ಯಾರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಯಾವ ಮಾಹಿತಿಯೂ ಈ ವರೆಗೆ ಲಭ್ಯವಾಗಿಲ್ಲ.
7
+ ಜರ್ಮನಿಗೆ ತೆರಳಿದ್ದಾರೆ, ದುಬೈಗೆ ಆಗಮಿಸಿದ್ದಾರೆ, ದುಬೈನಿಂದ ನೇರವಾಗಿ ಬೆಂಗಳೂರಿಗೆ ಬರುತ್ತಾರೆ ಎಂಬಿತ್ಯಾದಿ ವದಂತಿಗಳು ಮಾತ್ರ ಕೇಳಿ ಬರುತ್ತಿವೆ, ಈ ವರೆಗೆ ಪ್ರಜ್ವಲ್‌ ಪತ್ತೆಯಾಗಿಲ್ಲ. ಪ್ರಜ್ವಲ್‌ ಇರುವಿಕೆಯನ್ನು ಪತ್ತೆ ಮಾಡುವಲ್ಲಿ ಎಸ್‌‍ಐಟಿ ತಂಡ ಸಂಪೂರ್ಣ ವಿಫಲವಾಗಿದೆ. ಇತ್ತ ಪೆನ್‌ಡ್ರೈವ್‌ ಪ್ರಕರಣ ರಾಜ್ಯಾದ್ಯಂತ ಭಾರಿ ಸದ್ದು ಮಾಡುತ್ತಿದೆ.
8
+ ಮಹಿಳೆ ಅಪಹರಣ ಪ್ರ���ರಣದಲ್ಲಿ ಪ್ರಜ್ವಲ್‌ ತಂದೆ ರೇವಣ್ಣ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು ಹೊಳೆನರಸೀಪುರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
9
+ ಪೆನ್‌ಡ್ರೈವ್‌ ಪ್ರಕರಣದಲ್ಲಿ ಹಲವು ಸಂತ್ರಸ್ತ ಮಹಿಳೆಯರು ದೂರು ದಾಖಲಿಸಿದ್ದಾರೆ.ಒಟ್ಟಾರೆ ಈ ಪ್ರಕರಣ ದಿನಕ್ಕೊಂದು, ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು ಪ್ರಮುಖ ಆರೋಪಿ ಪ್ರಜ್ವಲ್‌ ರೇವಣ್ಣ ಅವರನ್ನ ಪತ್ತೆ ಹಚ್ಚಿ ಯಾವಾಗ ಕರೆ ಎಂಬುದನ್ನು ಕಾದು ನೋಡಬೇಕಿದೆ.
eesanje/url_46_149_6.txt ADDED
@@ -0,0 +1,7 @@
 
 
 
 
 
 
 
 
1
+ ವಿದ್ಯಾರ್ಥಿನಿಯನ್ನು ಕೊಂದು ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಅರೆಸ್ಟ್
2
+ ಕೊಡಗು. ಮೇ 11-ಎಸ್‌‍ಎಸ್‌‍ಎಲ್‌ಸಿ ವಿದ್ಯಾರ್ಥಿನಿಯನ್ನು ಕೊಲೆ ಮಾಡಿ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿಯನ್ನು ಸೋಮವಾರಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಮಿಯಾಲ ಗ್ರಾಮದ ಮೊನ್ನಂಡ ಪ್ರಕಾಶ್‌ (32) ಬಂಧಿತ ಆರೋಪಿ.
3
+ ಸೂರ್ಲಬ್ಬಿ ಸಮೀಪದ ಕುಂಬಾರಗಡಿಗೆ ಗ್ರಾಮದ ನಿವಾಸಿ ಸುಬ್ರಹಣಿ ಎಂಬುವವರ ಪುತ್ರಿ ಮೀನಾ (16) ಜೊತೆ ಪ್ರಕಾಶ್‌ಗೆ ಮದುವೆ ನಿಶ್ಚಿಯವಾಗಿ ನಿಶ್ಚಿತಾರ್ಥವಾಗಿತ್ತು. ಅಪ್ರಾಪ್ತ ಬಾಲಕಿಗೆ ಬಾಲ್ಯವಿವಾಹ ಮಾಡಲಾಗುತ್ತಿದೆ ಎಂಬ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಹೋಗಿ ಕುಟುಂಬದವರಿಗೆ ಮನವರಿಕೆ ಮಾಡಿ ಮದುವೆ ನಿಲ್ಲಿಸಿದ್ದರು.
4
+ ಇದರಿಂದ ಕೋಪಗೊಂಡ ಪ್ರಕಾಶ್‌ ಮೊನ್ನೆ ಸಂಜೆ ಬಾಲಕಿ ಮನೆಗೆ ಹೋಗಿ ಪೋಷಕರೊಂದಿಗೆ ಜಗಳವಾಡಿ ಆಕೆಯನ್ನು ಮನೆಯಿಂದ ಎಳೆದೊಯ್ದು ಮಚ್ಚಿನಿಂದ ತಲೆ ಕತ್ತರಿಸಿ ಭೀಕರವಾಗಿ ಕೊಲೆ ಮಾಡಿ ರುಂಡದೊಂದಿಗೆ ಪರಾರಿಯಾಗಿದ್ದನು.
5
+ ಈ ಬಗ್ಗೆ ಸೋಮವಾರ ಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸ್ಥಳದಲ್ಲಿ ದೊರೆತ ಮಚ್ಚು ಹಾಗೂ ಬಾಲಕಿಯ ಮುಂಡವನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡು ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಅರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
6
+ ಬಾಲಕಿ ರುಂಡ ಪತ್ತೆ:ಹತ್ಯೆ ನಡೆಸಿದ ಸ್ಥಳದಲ್ಲಿ ಬಾಲಕಿ ಮುಂಡ ಮಾತ್ರ ಪತ್ತೆಯಾಗಿತ್ತು. ರುಂಡಕ್ಕಾಗಿ (ತಲೆ) ಪೊಲೀಸ್‌‍ ತಂಡವೊಂದು ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಪೊಲೀಸರು ಆರೋಪಿ ಪ್ರಕಾಶ್‌ನನ್ನು ಸ್ಥಳ ಮಹಜರಿಗೆ ಹಾಗೂ ಬಾಲಕಿಯ ರುಂಡಪತ್ತೆಗಾಗಿ ಕರೆದುಕೊಂಡು ಹೋಗಿದ್ದರು.
7
+ ಹತ್ಯೆ ನಡೆಸಿದ ಸ್ಥಳದಿಂದ ರುಂಡವನ್ನು ತೆಗೆದುಕೊಂಡು ಹೋಗಿ 300 ಮೀಟರ್‌ ದೂರದ ಪೊದೆಯಲ್ಲಿಟ್ಟಿರುವುದನ್ನು ಆರೋಪಿ ಪೊಲೀಸರಿಗೆ ತೋರಿಸಿದ್ದು, ಪೊಲೀಸರು ಪೊದೆಯಲ್ಲಿದ್ದ ಬಾಲಕಿ ರುಂಡವನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.
eesanje/url_46_149_7.txt ADDED
@@ -0,0 +1,4 @@
 
 
 
 
 
1
+ ಪ್ರಜ್ವಲ್‌ ರೇವಣ್ಣನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ ಘೋಷಣೆ
2
+ ಬೆಂಗಳೂರು, ಮೇ 11-ಲೋಕಸಭಾ ಚುನಾವನೆ ಮುಗಿಯುತ್ತಿದ್ದಂತೆ ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ್‌ನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಕೊಡುವುದಾಗಿ ಜನತಾ ಪಕ್ಷ ಪ್ರಕಟಿಸಿದೆ.
3
+ ಆರೋಪಿ ಪ್ರಜ್ವಲ್‌ನನ್ನು ಹುಡುಕುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಫಲವಾಗಿದೆ. ಪ್ರಕಣದ ತನಿಖೆ ನಡೆಸುತ್ತಿರುವ ಎಸ್‌‍ಐಟಿಗೆ ಇದುವರೆಗೆ ಪತ್ತೆ ಹಚ್ಚಿ ಬಂಧಿಸಲು ಸಾಧ್ಯವಾಗಿಲ್ಲ. ಹಾಗಾಗಿ ಪ್ರಜ್ವಲ್‌ನನ್ನು ಹುಡುಕಿ ಕೊಟ್ಟವರಗೆ 1 ಲಕ್ಷ ರೂ. ಬಹುಮಾನ ಕೊಡುವುದಾಗಿ ಪೋಸ್ಟರ್‌ನಲ್ಲಿ ಪ್ರಕಟಿಸಿದೆ.
4
+ ಪೊಲೀಸ್‌‍ ವಶಕ್ಕೆ :ಈ ನಡುವೆ ನಗರದ ಶಿವಾನಂದ ಸರ್ಕಲ್‌ನಲ್ಲಿ ಈ ಬಗ್ಗೆ ಪೋಸ್ಟರ್‌ ಅಂಟಿಸಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ನಾಗೇಶ್‌ ಎಂಬಾತನನ್ನು ಹೈಗ್ರೌಂಡ್‌್ಸ ಠಾಣೆ ಪೊಲೀಸರು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
eesanje/url_46_149_8.txt ADDED
@@ -0,0 +1,7 @@
 
 
 
 
 
 
 
 
1
+ ವಿಧಾನಪರಿಷತ್‌ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್‌ ಮೈತ್ರಿ : ಯಡಿಯೂರಪ್ಪ
2
+ ಮೈಸೂರು, ಮೇ 11-ಲೋಕಸಭಾ ಚುನಾವಣೆಯ ಬಳಿಕ ವಿಧಾನಪರಿಷತ್‌ ಚುನಾವಣೆಯಲ್ಲಿಯೂ ಬಿಜೆಪಿ- ಜೆಡಿಎಸ್‌ ಮೈತ್ರಿ ಮುಂದುವರೆಯಲಿದೆ. ಯಾವುದೇ ಭಂಗವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮೈತ್ರಿಯಾಗಿ ಚುನಾವಣೆಯನ್ನು ಸಮರ್ಥವಾಗಿ ನಿಭಾಯಿಸಲಾಗಿದೆ. ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹೆಚ್ಚು ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ.
4
+ ಪ್ರಧಾನಿ ನರೇಂದ್ರ ಮೋದಿಯವರು ಮತ್ತೆ ಗದ್ದುಗೆ ಏರಲಿದ್ದಾರೆ. ಸೂರ್ಯ- ಚಂದ್ರ ಇರೋದು ಎಷ್ಟು ಸತ್ಯನೋ ಮೋದಿಯವರು ಮೂರನೇ ಭಾರಿಗೆ ಪ್ರಧಾನಿಯಾಗುವುದು ಅಷ್ಟೇ ಸತ್ಯ ಎಂದು ತಿಳಿಸಿದರು. ಮುಂದೆ ಪ್ರಧಾನಿಯಾಗಿ ಏನು ಕೆಲಸ ಕಾರ್ಯ ಮಾಡಬೇಕೆಂಬುದನ್ನು ಈಗಲೇ ರೂಪರೇಷೆಗಳನ್ನು ಮೋದಿಯವರು ಸಿದ್ಧಮಾಡಿಕೊಂಡು ದೇಶದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಲಿದ್ದಾರೆ.
5
+ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಕನಿಷ್ಠ 24ರಿಂದ 25 ಸ್ಥಾನ ಗೆದ್ದೇ ಗೆಲ್ಲುತ್ತೇವೆ. ಕಾಂಗ್ರೆಸ್‌ನವರು ಏನೇ ಹೇಳಿದರೂ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಕಾಂಗ್ರೆಸ್‌ ಪ್ರಧಾನಿಯಾಗುವ ಅರ್ಹತೆ ಯಾರಿಗಿದೆ ಎಂದು ಪ್ರಶ್ನಿಸಿದರು.
6
+ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪಾರದರ್ಶಕವಾಗಿ ನಡೆಯಬೇಕೆಂದರೆ ಸಿಬಿಐ ಗೆ ಕೊಡಬೇಕು. ಈಶ್ವರಪ್ಪನವರ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅವರ ಬಗ್ಗೆ ಮಾತನಾಡಲು ಇಷ್ಟ ಪಡುವುದಿಲ್ಲ. ಶಿವಮೊಗ್ಗದಲ್ಲಿ ರಾಘವೇಂದ್ರ ಅವರ ಎರಡೂವರೆ ಲಕ್ಷ ಲೀಡ್‌ನಿಂದ ಗೆದ್ದೇ ಗೆಲ್ಲುತ್ತಾರೆ.
7
+ ವಿಧಾಪರಿಷತ್‌ ಚುನಾವಣೆ ಮೈತ್ರಿ ಕುರಿತಂತೆ ಜೆಡಿಎಸ್‌ಗೆ ಎರಡು ಸ್ಥಾನ ಬಿಟ್ಟುಕೊಟ್ಟು ನಾವು ನಾಲ್ಕು ಸ್ಥಾನದಲ್ಲಿ ಸ್ಪರ್ಧೆ ಮಾಡುತ್ತೇವೆ. ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನವಾಗಿಲ್ಲ ಎಂದರು.
eesanje/url_46_149_9.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಪದವೀಧರ-ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ : ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ..?
2
+ ಬೆಂಗಳೂರು,ಮೇ11-ಮುಂದಿನ ತಿಂಗಳು ಜೂನ್‌ 3ರಂದು ನಡೆಯಲಿರುವ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಬಿಜೆಪಿ ಇಂದು ಸಂಜೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. ನಾಮಪತ್ರ ಸಲ್ಲಿಸಲು ಇದೇ ತಿಂಗಳ 16(ಗುರುವಾರ) ಕೊನೆಯ ದಿನವಾಗಿರುವುದರಿಂದ ಅಭ್ಯರ್ಥಿಗಳು ಅಫಿಡೆವಿಟ್‌ ಸಿದ್ದತೆ ಮಾಡಿಕೊಳ್ಳಲು ಅನುಕೂಲವಾಗುವಂತೆ ಬಿಜೆಪಿ ಇಂದೇ ಪಟ್ಟಿಯನ್ನು ಬಿಡುಗಡೆ ಮಾಡುವ ಸಂಭವವಿದೆ.
3
+ ಈಗಾಗಲೇ ಕೇಂದ್ರ ವರಿಷ್ಠರಿಗೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಕಳುಸಿಕೊಡಲಾಗಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಂಕಿತ ಬಿದ್ದ ನಂತರ ಅಧಿಕೃತವಾಗಿ ಪಟ್ಟಿ ಪ್ರಕಟವಾಗಲಿದೆ. ಕೆಲವು ಕ್ಷೇತ್ರಗಳಿಗೆ ಒಂದೇ ಹೆಸರುಗಳನ್ನು ಶಿಫಾರಸ್ಸು ಮಾಡಿದ್ದರೆ ಇನ್ನು ಕೆಲವು ಕ್ಷೇತ್ರಗಳಿಗೆ ಎರಡು ಹೆಸರುಗಳನ್ನು ರಾಜ್ಯ ಬಿಜೆಪಿ ಘಟಕ ಕಳುಹಿಸಿಕೊಟ್ಟಿದೆ.
4
+ ಪ್ರತಿಷ್ಠೆಯ ಕಣವಾಗಿರುವ ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಯುವ ಮುಖಂಡ ಎ.ಎಚ್‌.ಆನಂದ್‌ಗೆ ಬಹುತೇಕ ಟಿಕೆಟ್‌ ಖಾತರಿಯಾಗಿದೆ. ಹಾಲಿ ಅಭ್ಯರ್ಥಿ ಅ.ದೇವೇಗೌಡ ಅವರಿಗೆ ಟಿಕೆಟ್‌ ನೀಡಲು ಪಕ್ಷ ನಿರಾಕರಿಸಿರುವುದರಿಂದ ಆನಂದ್‌ ಅವರಿಗೆ ನಾಮಪತ್ರ ಸಲ್ಲಿಕೆಗೆ ಬೇಕಾದ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪರೋಕ್ಷವಾಗಿ ಪಕ್ಷ ಸೂಚನೆ ಕೊಟ್ಟಿದೆ.
5
+ ಎಬಿವಿಪಿ ಹಿನ್ನಲೆಯಿಂದ ಬಂದ ಆನಂದ್‌ ಪಕ್ಷದ ವಿವಿಧ ಸ್ತರಗಳಲ್ಲಿ ಕೆಲಸ ಮಾಡಿದ ಅನುಭವವಿದೆ. ಸಂಘ ಪರಿವಾರ ಹಾಗೂ ಬಹುತೇಕ ಬಿಜೆಪಿಯ ಎಲ್ಲಾ ಮುಖಂಡರು ಸ್ಪರ್ಧೆಗೆ ಒಲವು ತೋರಿರುವುದರಿಂದ ಈ ಬಾರಿ ಟಿಕೆಟ್‌ ಖಚಿತವಾಗಿದೆ ಎಂದು ಹೇಳಲಾಗುತ್ತಿದೆ.
6
+ ಆಗ್ನೇಯ ಪದವೀಧರ ಕ್ಷೇತ್ರದಿಂದ ಹಾಲಿ ಸದಸ್ಯ ವೈ.ಎ.ನಾರಾಯಣಸ್ವಾಮಿ ಪುನಃ ಅಭ್ಯರ್ಥಿಯಾಗುವುದು ಬಹುತೇಕ ಖಚಿತ. ಈ ಕ್ಷೇತ್ರದಿಂದ ಒಂದೇ ಹೆಸರನ್ನು ರಾಜ್ಯ ಘಟಕ ಶಿಫಾರಸು ಮಾಡಿದೆ.
7
+ ಈಶಾನ್ಯ ಪದವೀಧರ ಕ್ಷೇತ್ರದಿಂದ ಮಾಜಿ ವಿಧಾನಪರಿಷತ್‌ ಸದಸ್ಯ ಅಮರನಾಥ್‌ ಪಾಟೀಲ್‌ ಸ್ಪರ್ಧಿಸಲು ಒಲವು ತೋರಿದ್ದಾರೆ. ಇದೇ ಕ್ಷೇತ್ರದಿಂದ ಮತ್ತೊಬ್ಬ ಮುಖಂಡ ಸುರೇಶ್‌ ಸಜ್ಜನ್‌ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಹೀಗಾಗಿ ಕೊನೆ ಕ್ಷಣದಲ್ಲಿ ಯಾರಿಗೇ ಬೇಕಾದರೂ ಅದೃಷ್ಟ ಖುಲಾಯಿಸಬಹುದೆಂದು ಪಕ್ಷದ ಮೂಲಗಳು ತಿಳಿಸಿವೆ.
8
+ ನೈರುತ್ಯ ಪದವೀಧರ ಕ್ಷೇತ್ರದಿಂದ ಶಿವಮೊಗ್ಗದ ಖ್ಯಾತ ವೈದ್ಯ ಧನಂಜಯ ಸರ್ಜಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಕಳೆದ ಬಾರಿಯೇ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಆಕಾಂಕ್ಷಿಯಾಗಿದ್ದ ಅವರಿಗೆ ಕೊನೆ ಕ್ಷಣದಲ್ಲಿ ಟಿಕೆಟ್‌ ತಪ್ಪಿತ್ತು.
9
+ ಮೂಲತಃ ಚನ್ನಗಿರಿಯವರಾದ ಡಾ.ಸರ್ಜಿ ಶಿವಮೊಗ್ಗದಲ್ಲಿ ಹಲವಾರು ವರ್ಷಗಳಿಂದ ವೈದ್ಯಕೀಯ ಕ್ಷೇತ್ರದಲ್ಲಿ ತಮದೇ ಆದ ಛಾಪು ಮೂಡಿಸಿದ್ದಾರೆ. ಆದರೆ ಇದ��� ಕ್ಷೇತ್ರದಿಂದ ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್‌ ಕೂಡ ಕಣಕ್ಕಿಳಿಯುವ ಸುಳಿವು ಕೊಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಆಪ್ತ ವಲಯದಲ್ಲಿ ಸರ್ಜಿ ಗುರುತಿಸಿಕೊಂಡಿರುವುದರಿಂದ ಅವರಿಗೆ ಟಿಕೆಟ್‌ ಸಿಕ್ಕಿದರೂ ಆಶ್ಚರ್ಯವಿಲ್ಲ.
10
+ ಉಳಿದಂತೆ ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಮೈತ್ರಿ ಪಕ್ಷವಾದ ಜೆಡಿಎಸ್‌‍ಗೆ ಬಿಟ್ಟುಕೊಡಲಾಗಿದೆ. ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಹಾಲಿ ಸದಸ್ಯ ಎಸ್‌‍.ಎಲ್‌.ಬೋಜೇಗೌಡ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಜೆಡಿಎಸ್‌‍ನಿಂದ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಜೆಡಿಎಸ್‌‍ ಸೋಮವಾರದೊಳಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಬಹುದೆಂದು ಪಕ್ಷದ ಮೂಲಗಳು ತಿಳಿಸಿವೆ.
eesanje/url_46_14_1.txt ADDED
@@ -0,0 +1,8 @@
 
 
 
 
 
 
 
 
 
1
+ ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-09-2024)
2
+ ' - 21-09-2024
3
+ ನಿತ್ಯ ನೀತಿ :ಮನುಷ್ಯನ ದುಃಖಕ್ಕೆ ಎರಡು ಮುಖ್ಯ ಕಾರಣಗಳಿರುತ್ತವೆ. ಒಂದು; ಅವನು ಶ್ರಮಕ್ಕಿಂತಲೂ ಹೆಚ್ಚಿನದನ್ನು ನಿರೀಕ್ಷಿಸುತ್ತಾನೆ. ಎರಡನೆಯದು; ಸಮಯಕ್ಕಿಂತ ಮುಂಚಿತವಾಗಿ ಬಯಸುತ್ತಾನೆ.
4
+ ಪಂಚಾಂಗ : ಶನಿವಾರ, 21-09-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ /ತಿಥಿ: ಚತುರ್ಥಿ / ನಕ್ಷತ್ರ: ಭರಣಿ / ಯೋಗ: ವ್ಯಾಘಾತ / ಕರಣ: ಭವ
5
+ ಸೂರ್ಯೋದಯ – ಬೆ.06.09ಸೂರ್ಯಾಸ್ತ – 06.16ರಾಹುಕಾಲ – 9.00-10.30ಯಮಗಂಡ ಕಾಲ – 1.30-3.00ಗುಳಿಕ ಕಾಲ – 6.00-7.30
6
+ ರಾಶಿಭವಿಷ್ಯ :ಮೇಷ: ನಿಮ್ಮದಲ್ಲದ ತಪ್ಪಿಗೆ ಸಣ್ಣದೊಂದು ಶಿಕ್ಷೆ ಅನುಭವಿಸಬೇಕು. ಹಣದ ಕೊರತೆ ಇರುವುದಿಲ್ಲ.ವೃಷಭ: ಪತ್ನಿ ಹಾಗೂ ಮಕ್ಕಳ ಸಹಕಾರದಿಂದ ಕೆಲಸ-ಕಾರ್ಯಗಳು ಸುಗಮವಾಗಿ ನೆರವೇರಲಿವೆ.ಮಿಥುನ: ಜೀವನ ಸಂಗಾತಿಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.ಕಟಕ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.ಸಿಂಹ: ಹಿತಶತ್ರುಗಳು ನಿಮ್ಮ ಹೆಸರನ್ನು ಹಾಳು ಮಾಡುವ ಪ್ರಯತ್ನ ಮಾಡಬಹುದು.ಕನ್ಯಾ:ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ.ತುಲಾ: ಯಾರ ಮೇಲೂ ವೈಯಕ್ತಿಕವಾಗಿ ದ್ವೇಷ ಸಾಧಿಸಲು ಹೋಗದಿರಿ. ಕಷ್ಟ ಎದುರಿಸಬೇಕಾಗುತ್ತದೆ.ವೃಶ್ಚಿಕ: ಬುದ್ಧಿವಂತಿಕೆ ಯಿಂದ ಕೆಲಸ ಮಾಡುವಿರಿ ಮತ್ತು ಅದರಲ್ಲಿ ನೀವು ಯಶಸ್ಸು ಸಾಧಿಸುವಿರಿ.
7
+ ಧನುಸ್ಸು: ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಒಳ್ಳೆಯದು.ಮಕರ: ನಿರೀಕ್ಷಿತ ಮೂಲಗಳಿಂದ ಆದಾಯ ಬರ ಲಿದೆ.ಅಮೂಲ್ಯ ವಸ್ತುಗಳ ಖರೀದಿಗೆ ಉತ್ತಮ ದಿನ.
8
+ ಕುಂಭ: ನಿಮ್ಮ ನಡವಳಿಕೆಯಲ್ಲಿನ ಬದಲಾವಣೆ ಇತರರಿಗೆ ಚರ್ಚೆಯ ವಿಷಯವಾಗಲಿದೆ.ಮೀನ: ಬಂದ ಅವಕಾಶ ಕೈ ತಪ್ಪುವುದು. ಉದ್ಯೋಗದಲ್ಲಿ ಒತ್ತಡ ಹೆಚ್ಚಾಗಲಿದೆ.
eesanje/url_46_14_10.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ದಾವಣಗೆರೆ ಉದ್ವಿಗ್ನ : 30 ಮಂದಿ ಬಂಧನ, ಹೆಚ್ಚುವರಿ ಪೊಲೀಸರ ನಿಯೋಜನೆ
2
+ : 30 ,
3
+ ಬೆಂಗಳೂರು, ಸೆ.20– ದಾವಣಗೆರೆಯಲ್ಲಿ ರಾತ್ರಿ ಗಣೇಶ ಮೂರ್ತಿ ವಿಸರ್ಜನಾ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ಈ ತನಕ 30 ಮಂದಿಯನ್ನು ಬಂಧಿಸಲಾಗಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಹಿತೇಂದ್ರ ಅವರು ತಿಳಿಸಿದ್ದಾರೆ.
4
+ ದಾವಣಗೆರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ಈ ಸಂಜೆಯೊಂದಿಗೆ ಮಾತನಾಡಿದ ಅವರು ದಾವಣಗೆರೆಯಲ್ಲಿ ಪರಿಸ್ಥಿತಿ ಸದ್ಯ ಶಾಂತಿಯುತವಾಗಿದೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಎಸ್ಪಿ ಅವರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ ಎಂದರು.
5
+ ಬೇರೆ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸರನ್ನು ಹಾಗೂ ಕೆಎಸ್ಆರ್ಪಿ ತುಕಡಿಗಳನ್ನು ಕರೆಸಿಕೊಂಡು ಸ್ಥಳದಲ್ಲಿ ನಿಯೋಜಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಗಸ್ತಿನಲ್ಲಿದ್ದಾರೆ ಎಂದು ತಿಳಿಸಿದರು.
6
+ ಕಿಡಿಕೇಡಿಗಳಿಂದ ಕಲ್ಲು ತೂರಾಟ:ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಕಲ್ಲುತೂರಾಟ ನಡೆಸಿ ದಾಂಧಲೆ ನಡೆಸಿದ ಘಟನೆ ಮಾಸುವ ಮುನ್ನವೇ ರಾತ್ರಿ ಇಲ್ಲಿನ ಇಮಾಂನಗರದಲ್ಲಿ ಕಲ್ಲುತೂರಾಟ ನಡೆಸಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ.ಈ ಘಟನೆಯಿಂದ ನಗರಾದಾದ್ಯಂತ ಭಯದ ವಾತಾವರಣ ಮನೆ ಮಾಡಿದ್ದು, ಕಲ್ಲು ತೂರಾಟ ನಡೆದ ಇಮಾಂ ನಗರದಲ್ಲಿ ರಸ್ತೆಯುದ್ದಕ್ಕೂ ಪೊಲೀಸರು ಬಿಗಿ ಬಂದೋಬಸ್ತ್‌ ಮಾಡಿದ್ದಾರೆ.
7
+ ಸ್ಥಳೀಯ ಪೊಲೀಸರ ಜೊತೆಗೆ ಹಾವೇರಿ, ಶಿವಮೊಗ್ಗ ಜಿಲ್ಲೆಗಳ ರಿಸರ್ವ್‌ ಪೊಲೀಸ್‌‍ ತುಕಡಿಗಳು ಸ್ಥಳದಲ್ಲಿ ಬೀಡುಬಿಟ್ಟು, ರಾತ್ರಿಯಿಡೀ ನಿದ್ದೆಗೆಟ್ಟು ಗಸ್ತು ನಡೆಸಿವೆ. ಕೆಲ ಕಾಲ ಈ ಪ್ರದೇಶದಲ್ಲಿ ಉದ್ವಿಘ್ನ ವಾತಾವರಣ ಉಂಟಾಗಿದ್ದು, ಪ್ರಸ್ತುತ ನಗರ ಬೂದಿ ಮುಚ್ಚಿದ ಕೆಂಡದಂತಿದೆ.
8
+ ಸ್ಥಳದಲ್ಲಿ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಎಸ್ಪಿ ಉಮಾ ಅವರು, ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.ಈ ಘಟನೆಯಿಂದಾಗಿ ಜನ ಜಂಗುಳಿಯಿಂದ ತುಂಬಿರುತ್ತಿದ್ದ ಇಮಾಂ ನಗರದ ಜನನಿಬಿಡ ರಸ್ತೆಗಳು ಬೆಳ್ಳಂಬೆಳ್ಳಗ್ಗೆ ಖಾಲಿಖಾಲಿಯಾಗಿದ್ದು ಬಿಕೊ ಎನ್ನುತ್ತಿವೆ.ಇಲ್ಲಿರುವ ಮಸೀದಿ ಬಳಿ 10ಕ್ಕೂ ಹೆಚ್ಚು ಪೊಲೀಸ್‌‍ ವಾಹನಗಳನ್ನು ಸ್ಥಳದಲ್ಲಿರಿಸಿ ಬಿಗಿ ಭದ್ರತೆ ಒದಗಿಸಲಾಗಿದೆ. ಹಾಗೆಯೇ ಬೆಳಗಿನ ಜಾವ 5 ಗಂಟೆಗೆ ವ್ಯಾಪಾರ ವಹಿವಾಟಿಗೆ ತೆರಳುತಿದ್ದ ಜನರು ತಡವಾಗಿ ಹೊರಬರುತ್ತಿದ್ದು ನಾಗರಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
9
+ ಬೇತೂರು ರಸ್ತೆಯಲ್ಲಿ ನಿನ್ನೆ ಸಂಜೆ ಗಣೇಶಮೂರ್ತಿ ವಿಸರ್ಜನೆ ವೇಳೆ ಏಕಾಏಕಿ ಮೆರವಣಿಗೆ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ಮಾಡಿದ್ದಾರೆ. ನಗರದ ಅರಳಿಮರ ಸರ್ಕಲ್‌ ಬಳಿ ಮೊದಲು ಕಲ್ಲು ತೂರಾಟ ಶುರುವಾಗಿದ್ದು, ಬಳಿಕ ಕೆ.ಆರ್‌ ರಸ್ತೆ, ��ಂಸಬಾವಿ ಸರ್ಕಲ್‌, ಕೆಆರ್‌ ಮಾರ್ಕೆಟ್‌ ಸೇರಿದಂತೆ ಬಂಬೂ ಬಜಾರ್‌ ರಸ್ತೆ, ಮಟ್ಟಿಕಲ್ಲು ಏರಿಯಾದಲ್ಲಿಯೂ ಕಲ್ಲುತೂರಾಟ ನಡೆದಿದೆ.
10
+ ತಕ್ಷಣವೇ ಘಟನಾಸ್ಥಳಕ್ಕೆ ಆಗಮಿಸಿದ ಪೊಲೀಸರು ಎಷ್ಟೇ ನಿಯಂತ್ರಿಸಿದರೂ ಪೊಲೀಸರ ಎದುರೇ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಪೊಲೀಸರು ಪೊಲೀಸರು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಆಗಮಿಸುತ್ತಿದ್ದಂತೆ ಕಿಡಿಗೇಡಿಗಳು ಅಲ್ಲಿಂದ ಪಾರಾಗಿ, ಏರಿಯಾಗಳಿಗೆ ನುಗ್ಗಿ, ಮಟ್ಟಿಕಲ್ಲು, ಅನೆಕೊಂಡ ಪ್ರದೇಶದ ಮನೆಗಳ ಕಿಟಕಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಗಾಬರಿಯಾಗಿ ನಿವಾಸಿಗಳು ಮನೆಗಳಿಂದ ಹೊರಗೆ ಬಂದು ದೊಣ್ಣೆ ಹಿಡಿದು ಓಡಿಸಿದ್ದಾರೆ.
11
+ ಸುಮಾರು 60 ರಿಂದ 70 ಯುವಕರ ಗುಂಪುಗಳು ಹಲವು ಕಡೆಗಳಲ್ಲಿ ಕಲ್ಲು ತೂರಾಟ ನಡೆಸಿದ್ದಲ್ಲದೆ, ಮನೆ ಮುಂಭಾಗದಲ್ಲಿ ನಿಲ್ಲಿಸಿದಂತಹ ವಾಹನಗಳಿಗೆ ಹಾನಿ ಮಾಡಿದ್ದಾರೆ. ಏಕಾಎಕಿ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ ಹಿನ್ನಲೆ ಭಯದ ವಾತಾವರಣ ಸೃಷ್ಟಿಯಾಗಿದೆ. ಮನೆಗಳಿಗೂ ಕೂಡ ಬೀಗ ಹಾಕಿಕೊಂಡು ನಿವಾಸಿಗಳು ಬೇರೆಡೆ ಹೋಗಿದ್ದಾರೆ.