CoolCoder44 commited on
Commit
bab7c9c
·
verified ·
1 Parent(s): da4cbca

78803c9675ae306df63fcb43bd2cd37ac280614caf89aff0abdeb015baf9d89b

Browse files
Files changed (50) hide show
  1. eesanje/url_46_134_4.txt +5 -0
  2. eesanje/url_46_134_5.txt +9 -0
  3. eesanje/url_46_134_6.txt +6 -0
  4. eesanje/url_46_134_7.txt +7 -0
  5. eesanje/url_46_134_8.txt +6 -0
  6. eesanje/url_46_134_9.txt +4 -0
  7. eesanje/url_46_135_1.txt +8 -0
  8. eesanje/url_46_135_10.txt +11 -0
  9. eesanje/url_46_135_11.txt +5 -0
  10. eesanje/url_46_135_12.txt +6 -0
  11. eesanje/url_46_135_2.txt +4 -0
  12. eesanje/url_46_135_3.txt +8 -0
  13. eesanje/url_46_135_4.txt +6 -0
  14. eesanje/url_46_135_5.txt +7 -0
  15. eesanje/url_46_135_6.txt +8 -0
  16. eesanje/url_46_135_7.txt +6 -0
  17. eesanje/url_46_135_8.txt +10 -0
  18. eesanje/url_46_135_9.txt +5 -0
  19. eesanje/url_46_136_1.txt +7 -0
  20. eesanje/url_46_136_10.txt +5 -0
  21. eesanje/url_46_136_11.txt +6 -0
  22. eesanje/url_46_136_12.txt +12 -0
  23. eesanje/url_46_136_2.txt +8 -0
  24. eesanje/url_46_136_3.txt +12 -0
  25. eesanje/url_46_136_4.txt +5 -0
  26. eesanje/url_46_136_5.txt +9 -0
  27. eesanje/url_46_136_6.txt +13 -0
  28. eesanje/url_46_136_7.txt +8 -0
  29. eesanje/url_46_136_8.txt +9 -0
  30. eesanje/url_46_136_9.txt +6 -0
  31. eesanje/url_46_137_1.txt +5 -0
  32. eesanje/url_46_137_10.txt +7 -0
  33. eesanje/url_46_137_11.txt +9 -0
  34. eesanje/url_46_137_12.txt +6 -0
  35. eesanje/url_46_137_2.txt +11 -0
  36. eesanje/url_46_137_3.txt +5 -0
  37. eesanje/url_46_137_4.txt +9 -0
  38. eesanje/url_46_137_5.txt +7 -0
  39. eesanje/url_46_137_6.txt +5 -0
  40. eesanje/url_46_137_7.txt +4 -0
  41. eesanje/url_46_137_8.txt +5 -0
  42. eesanje/url_46_137_9.txt +15 -0
  43. eesanje/url_46_138_1.txt +5 -0
  44. eesanje/url_46_138_10.txt +15 -0
  45. eesanje/url_46_138_11.txt +4 -0
  46. eesanje/url_46_138_12.txt +6 -0
  47. eesanje/url_46_138_2.txt +7 -0
  48. eesanje/url_46_138_3.txt +8 -0
  49. eesanje/url_46_138_4.txt +11 -0
  50. eesanje/url_46_138_5.txt +12 -0
eesanje/url_46_134_4.txt ADDED
@@ -0,0 +1,5 @@
 
 
 
 
 
 
1
+ ಪಿ.ಆರ್‌.ರಮೇಶ್‌, ಬಸವರಾಜ್‌ಗೆ ವಿಧಾನ ಪರಿಷತ್‌ ಟಿಕೆಟ್‌ ನೀಡುವಂತೆ ತಿಗಳ ಮಹಾಸಭಾ ಆಗ್ರಹ
2
+ ಬೆಂಗಳೂರು,ಮೇ.24-ಸಮುದಾಯದ ಮುಖಂಡರಾದ ಪಿ.ಆರ್‌.ರಮೇಶ್‌ ಹಾಗೂ ಎ.ಎಚ್‌.ಬಸವರಾಜ್‌ ಅವರನ್ನು ವಿಧಾನ ಪರಿಷತ್‌ ಸದಸ್ಯರನ್ನಾಗಿ ಆಯ್ಕೆ ಮಾಡುವಂತೆ ಕರ್ನಾಟಕ ರಾಜ್ಯ ತಿಗಳರ ಮಹಾ ಸಭಾ ಆಗ್ರಹಿಸಿದೆ.
3
+ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ಅಧ್ಯಕ್ಷ ಎಲ್‌.ಎ. ಮಂಜುನಾಥ್‌ ಅವರು ಸಮುದಾಯದ ಮುಖಂಡರಾಗಿದ್ದು ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ ಎ.ಎಚ್‌.ಬಸವರಾಜ್‌ ಅವರಿಗೆ ಮುಂಬರುವ ವಿಧಾನಪರಿಷತ್‌ ಚುನಾವಣೆಯಲ್ಲಿ ಟಿಕೆಟ್‌ ನೀಡಬೇಕು ಎಂದು ಆಗ್ರಹಿಸಿದರು.
4
+ ನಮ್ಮ ಸಮುದಾಯಕ್ಕೆ ಇದುವರೆಗೂ ರಾಜಕೀಯದಲ್ಲಿ ಸೂಕ್ತ ಸ್ಥಾನಮಾನ ಸಿಗದಿರುವ ಹಿನ್ನೆಲೆಯಲ್ಲಿ ಬಿಜೆಪಿಯವರು ಪಕ್ಷಕ್ಕಾಗಿ ನಿರಂತರವಾಗಿ ದುಡಿಯುತ್ತಿರುವ ಬಸವರಾಜ್‌ ಅವರಿಗೆ ಪರಿಷತ್‌ ಟಿಕೆಟ್‌ ನೀಡಿ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಮನವಿ ಮಾಡಿಕೊಂಡರು.
5
+ ಎ.ಎಚ್‌.ಬಸವರಾಜ್‌ ಮಾತನಾಡಿ, ನಮ ಸಮುದಾಯದ ಹಿರಿಯ ಮುಖಂಡರಾಗಿರುವ ಪಿ.ಆರ್‌.ರಮೇಶ್‌ ಅವರು ಬೆಂಗಳೂರು ಮಹಾನಗರ ಪಾಲಿಕೆ ಮಹಾಪೌರರಾಗಿ ಹಾಗೂ ಎಂಎಲ್‌ಸಿಯಾಗಿ ಉತ್ತಮ ಕಾರ್ಯ ನಿರ್ವಹಿಸಿದ್ದಾರೆ. ಅವರ ಸೇವೆಯನ್ನು ಗಂಭೀರವಾಗಿ ಪರಿಗಣಿಸಿ ಕಾಂಗ್ರೆಸ್‌‍ ಪಕ್ಷದ ವರಿಷ್ಠರು ಮತ್ತೊಂದು ಅವಧಿಗೆ ಅವರಿಗೆ ಪರಿಷತ್‌ ಟಿಕೆಟ್‌ ನೀಡಿ ನಮ್ಮ ಸಮುದಾಯದ ಏಳಿಗೆಗೆ ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಸಮುದಾಯದ ಹಲವಾರು ಮುಖಂಡರುಗಳು ಹಾಜರಿದ್ದರು.
eesanje/url_46_134_5.txt ADDED
@@ -0,0 +1,9 @@
 
 
 
 
 
 
 
 
 
 
1
+ ಕರ್ನಾಟಕದಲ್ಲಿರುವ ಅಧಿಕೃತ ಖಾಸಗಿ ಶಾಲೆಗಳ ಪಟ್ಟಿ ಬಿಡುಗಡೆ
2
+ ಬೆಂಗಳೂರು,ಮೇ24-ಕರ್ನಾಟಕದಲ್ಲಿರುವ 17,000ಕ್ಕೂ ಹೆಚ್ಚು ಅಧಿಕೃತ ಖಾಸಗಿ ಶಾಲೆಗಳ ಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಡಿಎಸ್‌‍ಇಎಲ್‌‍) ಬಿಡುಗಡೆ ಮಾಡಿದೆ. ಆದರೆ ಅವುಗಳಲ್ಲಿ ಎಷ್ಟೋ ಶಾಲೆಗಳಿಗೆ ಇಲಾಖೆಯ ಒಪ್ಪಿಗೆ ಸಿಕ್ಕಿಲ್ಲ ಎಂಬ ಬಗ್ಗೆ ಯಾವುದೇ ಸೂಚನೆ ನೀಡದ ಕಾರಣ, ಈಗಾಗಲೇ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯವೇನು ಎಂಬ ಬಗ್ಗೆ ಪೋಷಕರು ಆತಂಕದಲ್ಲಿದ್ದಾರೆ.
3
+ ಡಿಎಸ್‌‍ಇಎಲ್‌ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌‍ ಮಾಡಲಾದ ಪಟ್ಟಿಯು ಜಿಲ್ಲಾವಾರು ಶಾಲೆಗಳ ಹೆಸರುಗಳನ್ನು ಪ್ರಕಟಿಸುತ್ತದೆ, ಅದರ ಅಡಿಯಲ್ಲಿ ಬ್ಲಾಕ್‌ ಆಯ್ಕೆ ಮಾಡಬೇಕು ಮತ್ತು ಅವರ ಮಗುವಿನ ಶಾಲೆಯು ಅಧಿಕೃತವಾಗಿದೆಯೇ ಎಂದು ನೋಡಲು ಪಟ್ಟಿ ಮಾಡಲಾದ ಹೆಸರುಗಳ ಸರಣಿಯನ್ನು ನೋಡಬೇಕು ಜೊತೆಗೆ ಅನುಮತಿ ನೀಡಿದ ಅವಧಿಯನ್ನು ಪರಿಶೀಲಿಸಬೇಕು. ಪಟ್ಟಿಯಲ್ಲಿ ಶಾಲೆಯು ನೀಡಬಹುದಾದ ಬೋರ್ಡ್‌ಗಳು ಮತ್ತು ತರಗತಿಗಳನ್ನು ಸಹ ಉಲ್ಲೇಖಿಸುತ್ತದೆ.
4
+ ಬೆಂಗಳೂರು ಒಂದರಲ್ಲೇ 3,064 ಶಾಲೆಗಳು ಅನುಮೋದನೆಯ ಮುದ್ರೆ ಪಡೆದಿದ್ದು, ಬೆಂಗಳೂರು ದಕ್ಷಿಣ -1,312 ಉತ್ತರ – 1,302 ಮತ್ತು ಗ್ರಾಮಾಂತರದಲ್ಲಿ 449 ಗರಿಷ್ಠ ಶಾಲೆಗಳಿವೆ. ಎಷ್ಟು ಶಾಲೆಗಳನ್ನು ತಿರಸ್ಕರಿಸಲಾಗಿದೆ ಎಂಬುದರ ಕುರಿತು ನಿಖರವಾದ ಸಂಖ್ಯೆಯನ್ನು ಪಡೆಯಲು ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ಅವುಗಳ ಒಟ್ಟು ನಿಖರ ಸಂಖ್ಯೆ ದೊರೆತಿಲ್ಲ ಎಂದು ತಿಳಿದು ಬಂದಿದೆ.
5
+ ನಾವು ಅನಧಿಕೃತ ಪಟ್ಟಿಯನ್ನು ನೀಡುತ್ತಿಲ್ಲ. ಬದಲಾಗಿ ಸಕಾರಾತ್ಮಕ ನಿರ್ಮಾಣಕ್ಕೆ ಹೋಗುತ್ತಿದ್ದೇವೆ ಇದರಿಂದ ಯಾವ ಶಾಲೆಗಳು ಅಧಿಕೃತವಾಗಿವೆ ಎಂಬುದನ್ನು ಪೋಷಕರು ತಿಳಿದುಕೊಳ್ಳಬಹುದು. ಇದು ಈ ಶೈಕ್ಷಣಿಕ ವರ್ಷದಿಂದಲೇ ಅನ್ವಯವಾಗಲಿದೆ. ನಾವು ಪೋಷಕರನ್ನು ಎಚ್ಚರಿಸಲು ಬಯಸುತ್ತೇವೆ ಮತ್ತು ಶೀಘ್ರದಲ್ಲೇ ಕ್ರಮ ತೆಗೆದುಕೊಳ್ಳುತ್ತೇವೆ ಡಿಎಸ್‌‍ಇಎಲ್‌ನ ಪ್ರಧಾನ ಕಾರ್ಯದರ್ಶಿಗಳು ತಿಳಿಸಿದ್ದಾರೆ.
6
+ ಅನಧಿಕೃತ ಶಾಲೆಗಳಲ್ಲಿ ಪ್ರವೇಶಗಳು ಕಡಿಮೆಯಾಗುವ ಸಾಧ್ಯತೆಯಿದೆ. ಮಕ್ಕಳ ಹಿತಾಸಕ್ತಿಗಳನ್ನು ಗಮನದಲ್ಲಿರಿಸಿಕೊಂಡು ಪಟ್ಟಿಯಲ್ಲಿಲ್ಲದ ಶಾಲೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಪ್ರಕರಣದ ಸೂಕ್ತ ಅಧ್ಯಯನ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.
7
+ ಶೈಕ್ಷಣಿಕ ವರ್ಷವು ಮೇ 28 ರಂದು ಪ್ರಾರಂಭವಾಗಲಿದ್ದು, ಏತನಧ್ಯೆ, ಅಧಿಕೃತ ಶಾಲೆಗಳ ಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡುವ ಇಲಾಖೆಯ ಉದ್ದೇಶದ ಬಗ್ಗೆ ಪ್ರಶ್ನಿಸಲಾಗಿದೆ. ಕೆಲವು ಶಾಲಾ ಮಾಲೀಕರ ಹಿತಾಸಕ್ತಿ ಕಾಪಾಡಲು ಈ ರೀತಿ ಮಾಡಲಾಗುತ್ತಿದೆ, ಇದು ಆಡಳಿತದ ವೈಫಲ್ಯ ಎಂಬ ಆರೋಪವಿದೆ.
8
+ ಎನ್‌ಜಿಒ ಚೈಲ್ಡ್ ರೈಟ್ಸ್ ಟ್ರಸ್ಟ್‌ (ಸಿಆರ್‌ಟಿ) ಸರ್ಕಾರವು ಪೋಷಕರಿಗಾಗಿ ಸಹಾಯವಾಣಿಯನ್ನು ಪ್ರಾರಂಭಿಸ���ೇಕು ಮತ್ತು ಶಾಲೆಯು ಅಧಿಕೃತವಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು ಸಹಾಯ ಮಾಡಬೇಕು ಎಂದು ಸಲಹೆ ನೀಡಿದೆ.
9
+ ಗ್ರಾಮೀಣ ಪ್ರದೇಶದ ಅನೇಕ ಪಾಲಕರು ವೆಬ್‌ಸೈಟ್‌ಗೆ ಪ್ರವೇಶಿಸಲು ಮತ್ತು ತಾಲ್ಲೂಕುವಾರು ಡೇಟಾವನ್ನು ಪರಿಶೀಲಿಸಲು ಸಾಧ್ಯವಾಗುವುದಿಲ್ಲ. ಜೂನ್‌ ತಿಂಗಳಿಗೆ ಸಹಾಯವಾಣಿಯನ್ನು ಪ್ರಾರಂಭಿಸುವುದು ಪ್ರಯೋಜನಕಾರಿಯಾಗಲಿದೆ. ಶಾಲೆಯು ಇನ್ನೂ ಅನುಮತಿ ಹೊಂದಿದೆ ಎಂದು ಹೇಳಿಕೊಳ್ಳುವುದರಿಂದ ಹಲವಾರು ಪೋಷಕರು ವಿಷಯ ತಿಳಿದುಕೊಳ್ಳಲು ನಮ್ಮ ಬಳಿ ಬಂದಿದ್ದರು ಎಂದು ಇಲಾಖೆಯ ಮುಖ್ಯಸ್ಥರೊಬ್ಬರು ತಿಳಿಸಿದ್ದಾರೆ.
eesanje/url_46_134_6.txt ADDED
@@ -0,0 +1,6 @@
 
 
 
 
 
 
 
1
+ ಕಾಂಗ್ರೆಸ್‌‍ ಸರ್ಕಾರ ಆಡಳಿತದಲ್ಲಿ ಐಟಿಬಿಟಿ ಸಿಟಿ ‘ಉಡ್ತಾ ಬೆಂಗಳೂರು’ ಆಗುತ್ತಿದೆ : ಬಿಜೆಪಿ ಆರೋಪ
2
+ ಬೆಂಗಳೂರು,ಮೇ24-ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಐಟಿಬಿಟಿ ಖ್ಯಾತಿಯ ಬೆಂಗಳೂರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌‍ ಸರ್ಕಾರ ಉಡ್ತಾ ಬೆಂಗಳೂರು ಮಾಡಲು ಹೊರಟಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
3
+ ಈ ಕುರಿತು ತನ್ನ ಅಧಿಕೃತ ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ, ಸಿಲಿಕಾನ್‌ ಸಿಟಿಯು ಇತ್ತೀಚೆಗೆ ಉಡ್ತಾ ಬೆಂಗಳೂರು ಆಗುವತ್ತಾ ಹೊರಟಿದೆ. ಕಾನೂನು ಸುವ್ಯವಸ್ಥೆ ಎಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂಬುದಕ್ಕೆ ನಿದರ್ಶನ ಎಂದು ಕೆಂಡಕಾರಿದೆ.
4
+ ಬೆಂಗಳೂರು ಮಾದಕಮತ್ತು ರೇವ್‌ ಪಾರ್ಟಿ ಅಡ್ಡವಾಗುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬೆಂಗಳೂರಿನಲ್ಲಿ ಅನೈತಿಕ ಸಭೆಗಳು ನಡೆಯುತ್ತಿವೆ ಎಂದು ಬಿಜೆಪಿ ಆರೋಪಿಸಿದೆ.
5
+ ಕಾಂಗ್ರೆಸ್‌‍ ಸರಕಾರ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಅನೈತಿಕ ಕೂಟಗಳು ನಡೆಯುತ್ತಿವೆ. ಸಿಲಿಕಾನ್‌ ಸಿಟಿ ಈಗ ಡ್ರಗ್ಸ್ , ಗಾಂಜಾ, ರೇವ್‌ ಪಾರ್ಟಿಗಳಿಂದ ತುಂಬಿ ತುಳುಕುತ್ತಿದೆ ಎಂದು ಬಿಜೆಪಿ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿದೆ.
6
+ ಬ್ಯಾಡ್‌ ಬೆಂಗಳೂರು ಮತ್ತು ಕಾಂಗ್ರೆಸ್‌‍ ಫೇಲ್‌ ಕರ್ನಾಟಕ ಎಂಬ ಹ್ಯಾಶ್‌ಟ್ಯಾಗ್‌ಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇರುವ ಪೋಸ್ಟರ್‌ ಅನ್ನು ಬಳಸಿದೆ.
eesanje/url_46_134_7.txt ADDED
@@ -0,0 +1,7 @@
 
 
 
 
 
 
 
 
1
+ ಪೆನ್‌ಡ್ರೈವ್ ಪ್ರಜ್ವಲ್‌ಗೆ ಶೋಕಾಸ್‌‍ ನೋಟಿಸ್‌‍ ಜಾರಿ ಮಾಡಿದ
2
+ ಬೆಂಗಳೂರು,ಮೇ24-ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್‌ ರೇವಣ್ಣನಿಗೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಕಾರಣ ಕೇಳಿ ಶೋಕಾಸ್‌‍ ನೋಟಿಸ್‌‍ ಜಾರಿ ಮಾಡಿದೆ. ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ಮತ್ತು ವೀಸಾ ಎರಡನ್ನೂ ರದ್ದುಪಡಿಸಬೇಕೆಂದು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ(ಎಸ್‌‍ಐಟಿ) ಪತ್ರ ಬರೆದ ಬೆನ್ನಲ್ಲೇ ವಿದೇಶಾಂಗ ವ್ಯವಹಾರಗಳ ಇಲಾಖೆ ಶೋಕಾಸ್‌‍ ನೋಟಿಸ್‌‍ ನೀಡಿದೆ.
3
+ ಆದಷ್ಟು ಶೀಘ್ರ ನೀವು ಶೋಕಾಸ್‌‍ ನೋಟಿಸ್‌‍ಗೆ ಉತ್ತರ ನೀಡದಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಶೋಕಾಸ್‌‍ ನೋಟಿಸ್‌‍ನಲ್ಲಿ ಎಚ್ಚರಿಸಿದೆ.ನೀವು ಶೋಕಾಸ್‌‍ ನೋಟಿಸ್‌‍ಗೆ ಸರಿಯಾದ ಉತ್ತರ ಕೊಡದಿದ್ದರೆ ನಿಮ ಪ್ರಯಾಣದ ಮೇಲೆ ನಿರ್ಬಂಧ ಹಾಕಬೇಕಾಗುತ್ತದೆ. ಮುಂದಿನ ಕಾನೂನಿನ ಬಿಕ್ಕಟ್ಟುಗಳಿಗೆ ನೀವೇ ಹೊಣೆಯಾಗುತ್ತೀರಿ ಎಂದು ಸೂಚನೆ ಕೊಡಲಾಗಿದೆ.
4
+ ಒಂದು ವೇಳೆ ಶೋಕಾಸ್‌‍ ನೋಟಿಸ್‌‍ಗೂ ಉತ್ತರ ನೀಡದಿದ್ದರೆ ಅವರಿಗೆ ಇನ್ನಷ್ಟು ಕಾನೂನಿನ ಕುಣಿಕೆ ಬಿಗಿಯಾಗಲಿದೆ. ವಿದೇಶಾಂಗ ವ್ಯವಹಾರಗಳ ಪಾಸ್‌‍ಪೋರ್ಟ್‌ ರದ್ದುಗೊಂಡರೆ ವಿಧಿ ಇಲ್ಲದೆ ಶರಣಾಗಬೇಕು ಇಲ್ಲವೇ ತನಿಖಾ ಸಂಸ್ಥೆಗಳ ಮೂಲಕ ಬಂಧನಕ್ಕೊಳಪಡಬೇಕು.
5
+ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ನರೇಂದ್ರಮೋದಿ ಅವರಿಗೆ ಎರಡು ಪುಟಗಳ ಪತ್ರ ಬರೆದು ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿಬಂದಿರುವ ಆರೋಪಗಳು ಗಂಭೀರವಾಗಿವೆ. ನೋಟೀಸ್‌‍ ನೀಡಿದರೂ ತನಿಖೆಗೆ ಸಹಕಾರ ಕೊಡುತ್ತಿಲ್ಲ. ವಿದೇಶದಲ್ಲಿರುವ ಅವರನ್ನು ಕರೆತರುವ ಹಿನ್ನೆಲೆಯಲ್ಲಿ ಪಾಸ್‌‍ಪೋರ್ಟ್‌ ಮತ್ತು ರಾಜತಾಂತ್ರಿಕ ವೀಸಾ ರದ್ದುಪಡಿಸಬೇಕೆಂದು ಮನವಿ ಮಾಡಿದ್ದರು.
6
+ ಇದರ ಬೆನ್ನಲ್ಲೇ ಎಸ್‌‍ಐಟಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆಯ ಮುಖ್ಯಸ್ಥರಿಗೆ ಪತ್ರ ಬರೆದು, ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ವೀಸಾವನ್ನು ರದ್ದುಗೊಳಿಸುವಮತೆ ಒತ್ತಾಯಿಸಿದ್ದರು. ವಿಚಾರಣೆಗೆ ಹಾಜರಾಗುವಂತೆ ಎಸ್‌‍ಐಟಿ ಈಗಾಗಲೇ ಅವರಿಗೆ ಮೂರು ಬಾರಿ ನೋಟಿಸ್‌‍ ಜಾರಿ ಮಾಡಿತ್ತು. ಗೈರು ಹಾಜರಾದ ಹಿನ್ನಲೆಯಲ್ಲಿ ಕಾನೂನು ಕ್ರಮದ ಮೂಲಕವೇ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.
7
+ ಹಾಸನ ಅಶ್ಲೀಲ ವಿಡಿಯೋ ಪ್ರಕರಣ ಹೊರಬಂದ ನಂತರ ರಾಜ್ಯ ಸರ್ಕಾರ ಎಸ್‌‍ಐಟಿ ತನಿಖೆಗೆ ಆದೇಶಿಸಿತ್ತು. ಯಾವಾಗ ಪೊಲೀಸರು ತಮನ್ನು ಬಂಧಿಸುತ್ತಾರೋ ಎಂಬುದು ಖಾತರಿಯಾಯಿತೋ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿದೇಶಕ್ಕೆ ಪರಾರಿಯಾಗಿದ್ದರು. ಅಂದಿನಿಂದ ಇಂದಿನವರೆಗೂ ಅವರು ಎಲ್ಲಿದ್ದಾರೆ ಎಂಬುದು ಯಾರಿಗೂ ಗೊತ್ತಿಲ್ಲ.
eesanje/url_46_134_8.txt ADDED
@@ -0,0 +1,6 @@
 
 
 
 
 
 
 
1
+ ಕಾಂಗ್ರೆಸ್ ದುರಾಡಳಿತದಿಂದಾಗಿ ರಾಜ್ಯದಲ್ಲಿ ಬಂಡವಾಳ ಹೂಡಿಕೆಯಿಂದ ಗೂಗಲ್‌ ಹಿಂದೆ ಸರಿದಿದೆ : ವಿಜಯೇಂದ್ರ
2
+ ಬೆಂಗಳೂರು,ಮೇ24-ಕರ್ನಾಟಕದಲ್ಲಿನ ದುರಾಡಳಿತ ಮತ್ತು ಭ್ರಷ್ಟಾಚಾರದಿಂದಾಗಿ ರಾಜ್ಯದಲ್ಲಿ ಸಾರ್ಟ್‌ಫೋನ್‌ ಮತ್ತು ಡ್ರೋಣ್‌ ಉತ್ಪಾದಿಸಲು ಮುಂದಾಗಿದ್ದ ಗೂಗಲ್‌ ಇದೀಗ ಶತಕೋಟಿ ಬಂಡವಾಳ ಹೂಡಿಕೆಯಿಂದ ಹಿಂದೆ ಸರಿದಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜೇಂದ್ರ ವಾಗ್ದಾಳಿ ನಡೆಸಿದ್ದಾರೆ.
3
+ ಈ ಕುರಿತು ತಮ್ಮ ಅಧಿಕೃತ ಖಾತೆ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಸಾರ್ಟ್‌ಫೋನ್‌ ಮತ್ತು ಡ್ರೋಣ್‌ ಉತ್ಪಾದನೆ ಮಾಡುವ ಕ್ಷೇತ್ರದಲ್ಲಿ ಗೂಗಲ್‌ ಶತಕೋಟಿ ಬಂಡವಾಳ ಹೂಡಿಕೆಯಿಂದ ಹಿಂದೆಸರಿದು ತಮಿಳುನಾಡಿನಲ್ಲಿ ಹೂಡಿಕೆ ಮಾಡಲು ಮುಂದಾಗಿದೆ.
4
+ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ವಿಜಯೇಂದ್ರ, ಕರ್ನಾಟಕವು ತನ್ನ ದುರಾಡಳಿತ ಮತ್ತು ತಪ್ಪಾದ ಆದ್ಯತೆಗಳಿಂದ ರಾಜ್ಯವನ್ನು ವಿಪತ್ತಿನತ್ತ ಕೊಂಡೊಯ್ಯುವ ಮತ್ತು ದಿಕ್ಕಿಲ್ಲದ ರೀತಿಯಲ್ಲಿ ತನ್ನ ದಾರಿಯನ್ನು ಸಂಪೂರ್ಣವಾಗಿ ಕಳೆದುಕೊಂಡಿರುವ ಜಡ, ನಿದ್ರಿಸುತ್ತಿರುವ ಕಾಂಗ್ರೆಸ್‌‍ ಸರ್ಕಾರದ ನೇರ ಪರಿಣಾಮಗಳನ್ನು ಹೊಂದುತ್ತಿದೆ ಎಂದು ದೂರಿದ್ದಾರೆ.
5
+ ಹೂಡಿಕೆಗಳನ್ನು ಆಕರ್ಷಿಸುವಲ್ಲಿ ಭಾರತ ಯಶಸ್ವಿಯಾಗಿದ್ದರೆ, ಕರ್ನಾಟಕವನ್ನು ಉನ್ನತ ಹೂಡಿಕೆಯ ತಾಣ ಎಂದು ತೋರಿಸುವಲ್ಲಿ ಮತ್ತು ಹೂಡಿಕೆದಾರರಲ್ಲಿ ವಿಶ್ವಾಸವನ್ನು ತುಂಬುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
6
+ ಮೈತ್ರಿಕೂಟದ ಪಾಲುದಾರ ಡಿಎಂಕೆ ಪರವಾಗಿ ನಮ ಪಾಲಿನ ಕಾವೇರಿ ನೀರನ್ನು ರಕ್ಷಿಸಲು ಸಾಧ್ಯವಾಗದೆ ಕರ್ನಾಟಕದ ರೈತರನ್ನು ಹಾಳು ಮಾಡಿದ್ದು ಇದೇ ಸರ್ಕಾರ. ಬಹು ಶತಕೋಟಿ ಡಾಲರ್‌ ಹೂಡಿಕೆಗಳು ತಮಿಳುನಾಡಿಗೆ ದಾರಿ ಮಾಡಿಕೊಡುವುದರೊಂದಿಗೆ ಅದೇ ಟ್ರೆಂಡ್‌ ಮುಂದುವರೆಯುವುದರಲ್ಲಿ ಆಶ್ಚರ್ಯವಿಲ್ಲ ಎಂದು ಟೀಕೆ ಮಾಡಿದ್ದಾರೆ.
eesanje/url_46_134_9.txt ADDED
@@ -0,0 +1,4 @@
 
 
 
 
 
1
+ ಕಬಿನಿ, ಕೆಆರ್‌ಎಸ್‌‍ ಜಲಾಶಯಗಳ ಒಳಹರಿವು ಹೆಚ್ಚಳ
2
+ ಬೆಂಗಳೂರು,ಮೇ24-ಕೇರಳ ಹಾಗೂ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಕಾವೇರಿ ಜಲಾನಯನ ಭಾಗದ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಕೇರಳದ ವಯನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದ ಒಳಹರಿವು ನಿರಂತರವಾಗಿ ಏರಿಕೆಯಾಗುತ್ತಿದೆ. ಇಂದು 6400 ಕ್ಯೂಸೆಕ್‌ಗೂ ಹೆಚ್ಚು ನೀರು ಹರಿದುಬರುತ್ತಿದೆ.
3
+ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಜಲಾಶಯದಲ್ಲಿ ಗರಿಷ್ಠ ಮಟ್ಟ 19.52 ಟಿಎಂಸಿಯಾಗಿದ್ದು ಪ್ರಸ್ತುತ 7.23 ಟಿಎಂಸಿ ಅಡಿ ಮಾತ್ರ ನೀರಿದೆ. ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಕಾವೇರಿ ನದಿಯಲ್ಲಿ ಒಳಹರಿವು ಹೆಚ್ಚಾಗಿರುವುದು ಜನರಲ್ಲಿ ಸಂತಸ ಉಂಟು ಮಾಡಿದೆ.
4
+ ಕೆಆರ್‌ಎಸ್‌‍ ಜಲಾಶಯಕ್ಕೆ ಎರಡೂವರೆ ಸಾವಿರ ಕ್ಯೂಸೆಕ್‌ಗೂ ಹೆಚ್ಚು ಒಳಹರಿವು ಇದೆ. 49.45 ಟಿಎಂಸಿ ಅಡಿ ಗರಿಷ್ಠ ಸಾಮರ್ಥ್ಯ ಈ ಜಲಾಶಯದಲ್ಲಿ ಪ್ರಸ್ತುತ 11.60 ಟಿಎಂಸಿ ನೀರು ಮಾತ್ರ ಇದ್ದು, ಕಳೆದ ವರ್ಷಕ್ಕಿಂತ ಕಡಿಮೆ ಇದೆ. ಹಾರಂಗಿ ಜಲಾಶಯಕ್ಕೆ 400 ಕ್ಯೂಸೆಕ್‌ ಹಾಗೂ ಹೇಮಾವತಿ ಜಲಾಶಯಕ್ಕೆ 600 ಕ್ಯೂಸೆಕ್‌ನಷ್ಟು ಒಳಹರಿವು ಇದೆ. ಇದೇ ರೀತಿ ಮಳೆ ಮುಂದುವರೆದರೆ ಒಳಹರಿವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.
eesanje/url_46_135_1.txt ADDED
@@ -0,0 +1,8 @@
 
 
 
 
 
 
 
 
 
1
+ ರೀಮಲ್‌ ಚಂಡಮಾರುತ ಎಫೆಕ್ಟ್ : ಕರಾವಳಿ-ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆ ಸಾಧ್ಯತೆ
2
+ ಬೆಂಗಳೂರು, ಮೇ 24-ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ರೀಮಲ್‌ ಚಂಡಮಾರುತದ ಪರಿಣಾಮ ರಾಜ್ಯದ ಮೇಲೆ ಅಷ್ಟಾಗಿ ಆಗುವುದಿಲ್ಲ, ಆದರೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಇದರಿಂದ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ.
3
+ ಪಶ್ಚಿಮಬಂಗಾಳ ಹಾಗೂ ಬಾಂಗ್ಲಾ ದೇಶದ ಕಡೆಗೆ ಚಂಡಮಾರುತ ಸಾಗುತ್ತಿರುವುದರಿಂದ ಕರ್ನಾಟಕದ ಮೇಲೆ ಅದರ ನೇರ ಪರಿಣಾಮ ಉಂಟಾಗುವುದಿಲ್ಲ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಕೆಲವೆಡೆ ಚದುರಿದಂತೆ ಇನ್ನೆರೆಡು ದಿನ ಮಳೆಯಾಗಬಹುದು.
4
+ ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ಇಳಿಮುಖವಾಗಲಿದೆ. ಆದರೂ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ಮುಂದುವರೆದಿದೆ. ಜನವರಿಯಿಂದ ಮಾರ್ಚ್‌ವರೆಗೆ ಪೂರ್ವ ಮುಂಗಾರು ಮಳೆ ಕೈಕೊಟ್ಟು ಆತಂಕವನ್ನು ಸೃಷ್ಟಿ ಮಾಡಿತ್ತು. ಆದರೆ ಮೇ ತಿಂಗಳಿನಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಆತಂಕವನ್ನು ದೂರ ಮಾಡಿದೆ.
5
+ ವಾಡಿಕೆಗಿಂತ ಹೆಚ್ಚು ಮಳೆ ರಾಜ್ಯದಲ್ಲಾಗಿದ್ದು, ಮುಂಗಾರು ಮಳೆಯು ವಾಡಿಕೆ ಪ್ರಮಾಣದಲ್ಲಿ ಆಗಲಿದೆ ಎಂಬ ಮುನ್ಸೂಚನೆ ಇರುವುದರಿಂದ ರೈತ ಸಮುದಾಯದಲ್ಲಿ ಆಸೆ ಚಿಗುರೊಡೆದಿದೆ.
6
+ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಿರುವುದರಿಂದ ನೈರುತ್ಯ ಮುಂಗಾರಿನ ಮೇಲೆ ಅಷ್ಟಾಗಿ ಪರಿಣಾಮ ಬೀರುವ ಸಾಧ್ಯತೆ ಕಡಿಮೆ. ಆದರೂ ಇದರಿಂದ ಯಾವ ಪರಿಣಾಮ ಉಂಟಾಗಬಹುದು ಎಂಬುದನ್ನು ಕಾದುನೋಡಬೇಕಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
7
+ ಕೆಲವೊಮೆ ಚಂಡಮಾರುತದ ಪರಿಣಾಮದಿಂದ ಮಳೆಯ ಪ್ರಮಾಣ ಹೆಚ್ಚಾದರೂ ಆಗಬಹುದು. ಸದ್ಯಕ್ಕಿರುವ ಹವಾಮಾನ ಮುನ್ಸೂಚನೆ ಪ್ರಕಾರ, ಮೇ ಅಂತ್ಯದ ವೇಳೆ ಮುಂಗಾರು ಕೇರಳ ಪ್ರವೇಶಿಸುವ ಸಾಧ್ಯತೆಗಳಿವೆ.ನಿರೀಕ್ಷೆಯಂತೆ ಮುಂಗಾರು ಆರಂಭವಾದರೆ ಭರದಿಂದ ಕಂಗೆಟ್ಟಿದ್ದ ರಾಜ್ಯಕ್ಕೆ ಮಳೆಯ ಆಸರೆ ದೊರೆತಂತಾಗಲಿದೆ.
8
+ ಈಗಾಗಲೇ ಮಲೆನಾಡು, ಕರಾವಳಿ ಭಾಗದಲ್ಲಿ ಸಾಕಷ್ಟು ಮಳೆಯಾಗಿದೆ. ಕೇರಳದ ವಯನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಒಟ್ಟಾರೆ ಕಾವೇರಿ ಜಲನಯನ ಭಾಗದಲ್ಲಿನ ಜಲಾಶಯಗಳಿಗೆ ಒಳಹರಿವು ಪ್ರಾರಂಭವಾಗಿರುವುದು ಸದ್ಯದ ಮಟ್ಟಿಗೆ ನಿರಾಳವಾಗುವಂತೆ ಮಾಡಿದೆ.
eesanje/url_46_135_10.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ನೀತಿ ಸಂಹಿತೆ ಸಡಿಲಗೊಂಡ ಬೆನ್ನಲ್ಲೇ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ
2
+ ಬೆಂಗಳೂರು, ಮೇ 23-ರಾಜ್ಯ ಸರ್ಕಾರದ ಮನವಿಯ ಮೇರೆಗೆ ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಗೊಳಿಸಿದ್ದು, ಅಧಿಕಾರಿಗಳು ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಿ, ವರ್ಷದ ಕೆಲಸವನ್ನು 10 ತಿಂಗಳಿನಲ್ಲಿ ಪೂರ್ಣಗೊಳಿಸಲು ಕಟಿಬದ್ಧರಾಗಿ ಕೆಲಸ ಮಾಡಬೇಕು, ಬಜೆಟ್‌ ಘೋಷಣೆಗಳಿಗೆ ಜೂನ್‌ ಕೊನೆಯ ವೇಳೆಗೆ ಆದೇಶ ಹೊರಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
3
+ ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು ಆರಂಭಿಕವಾಗಿ ಮಾತನಾಡಿ, ಯೋಜನಾ ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್‌ ಪ್ರಕ್ರಿಯೆ ಕೂಡ ಶೀಘ್ರವಾಗಿ ನಡೆಸುವಂತೆ ಆದೇಶಿಸಿದ್ದಾರೆ.
4
+ ಟೆಂಡರ್‌ ಕರೆಯಲು ಯಾವುದೇ ನೀತಿ ಸಂಹಿತೆ ಅಡ್ಡ ಬರುವುದಿಲ್ಲ. ಟೆಂಡರ್‌ ಕರೆದು, ಅಂತಿಮಗೊಳಿಸಿ, ಕಾರ್ಯಾದೇಶ ನೀಡಲು ಪ್ರಯತ್ನಿಸಬೇಕು. ಇದರಲ್ಲಿ ವಿಳಂಬವಾದರೆ ರಾಜ್ಯದ ಅಭಿವೃದ್ಧಿಯಲ್ಲಿ ವಿಳಂಬವಾಗುತ್ತದೆ ಎಂಬುದನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು. ಬಜೆಟ್‌ನಲ್ಲಿ 500 ಕ್ಕೂ ಹೆಚ್ಚು ಘೋಷಣೆಗಳನ್ನು ಮಾಡಲಾಗಿದೆ. ಈ ಬಗ್ಗೆ ಎಲ್ಲ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು. ಅಭಿವೃದ್ಧಿ ಕಡೆ ಅಧಿಕ ಆದ್ಯತೆ ನೀಡಬೇಕಿದೆ ಎಂದು ಹೇಳಿದರು.
5
+ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಾರ್ಚ್‌ 16ರಿಂದ ಜೂನ್‌ 6ರವರೆಗೆ ಸುದೀರ್ಘ ಕಾಲದ ನೀತಿ ಸಂಹಿತೆ ಜಾರಿಯಲ್ಲಿತ್ತು. ಸರ್ಕಾರದ ಆಡಳಿತಕ್ಕೆ ಲಕ್ವ ಹೊಡೆದಂತಾಗಿತ್ತು. ಎಲ್ಲ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿದ್ದರು. ಚುನಾವಣಾ ಕೆಲಸದಲ್ಲಿ ನಿರತರಾಗಿದ್ದರಿಂದ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲು ಸಾಧ್ಯವಾಗಿರಲಿಲ್ಲ. ನಮ್ಮ ಮನವಿ ಮೇರೆಗೆ ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಿಸಿದೆ. ತಕ್ಷಣದಿಂದಲೇ ತುರ್ತು ಕೆಲಸಗಳಿಗೆ ಗಮನ ಕೊಡಿ ಎಂದು ಮುಖ್ಯಮಂತ್ರಿ ಪುನರುಚ್ಚರಿಸಿದರು.
6
+ ಎಲ್ಲ ಜಿಲ್ಲಾ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲು ಪ್ರಾರಂಭಿಸಬೇಕು. ಫೆಬ್ರುವರಿಯಲ್ಲಿ ಬಜೆಟ್‌ ಮಂಡಿಸಲಾಗಿದೆ. ಆರ್ಥಿಕ ವರ್ಷದ ಎರಡು ತಿಂಗಳು ಕಳೆದು ಹೋಗುತ್ತಿದೆ. ಒಂದು ವರ್ಷದಲ್ಲಿ ಮಾಡುವ ಕೆಲಸವನ್ನು 10 ತಿಂಗಳಲ್ಲಿ ಮಾಡಿ ಮುಗಿಸುವ ಅನಿವಾರ್ಯತೆ ಇದೆ ಎಂದ ಅವರು, ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಯದರ್ಶಿಗಳ ಸಭೆ ನಡೆಸಲಾಗಿದ್ದು ಅಗತ್ಯ ಸೂಚನೆ ನೀಡಲಾಗಿದೆ ಎಂದು ಹೇಳಿದರು.
7
+ ಪ್ರಸ್ತುತ, ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಕೃಷಿ ಚಟುವಟಿಕೆ ಆರಂಭವಾಗಿದೆ. ಬೀತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕು. ಕೃಷಿ ಯಂತ್ರೋಪಕರಣಗಳ ಹೆಸರಿನಲ್ಲಿ ರೈತರಿಂದ ಅಧಿಕ ಹಣ ವಸೂಲಿ ಮಾಡುವವರ ಮೇಲೆ ನಿಗಾವಹಿಸಬೇಕು. ಬಿ���್ತನೆ ಸಮಯದಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ಮಾದರಿ, ಮಣ್ಣಿನ ಫಲವತ್ತತೆ, ಮಾರುಕಟ್ಟೆ ನಿರೀಕ್ಷೆ, ರೋಗ ನಿಯಂತ್ರಣ ಕುರಿತು ರೈತರಿಗೆ ಮಾಹಿತಿ ನೀಡಬೇಕು.
8
+ ನೀರು, ಮಣ್ಣಿನ ಫಲವತ್ತತೆ ರಕ್ಷಣೆಯ ಜೊತೆಗೆ, ಕಡಿಮೆ ಭೂಮಿಯಲ್ಲಿ ಹೆಚ್ಚು ಇಳುವರಿ ಪಡೆಯುವ ತಳಿಗಳ ಬಗ್ಗೆ ತಿಳಿವಳಿಕೆ ನೀಡಬೇಕು. ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆ, ರೇಷ್ಮೆ, ಸಹಕಾರ, ಕಂದಾಯ, ಗ್ರಾಮೀಣಾಭಿವೃದ್ಧಿ ಇಲಾಖೆಗಳು ಪರಸ್ಪರ ಸಹಕಾರದಿಂದ ಕೆಲಸ ಮಾಡುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.
9
+ ಮೇ ತಿಂಗಳಲ್ಲಿ ಗುರಿ 2.95 ಲಕ್ಷ ಹೆಕ್ಟೇರ್‌ ಪ್ರದೇಶ. ಸಾಧನೆಯಾಗಿರುವುದು 68,000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಇನ್ನೂ 13 ದಿನ ಬಾಕಿದೆ. ಪೂರ್ವ ಮುಂಗಾರಿನಲ್ಲಿ ಗುರಿ ಮೀರಿ ಬಿತ್ತನೆಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು. ಈ ವರ್ಷದ ಸಾಲ ಯೋಜನೆ ಈಗಾಗಲೇ ಜಿಲ್ಲಾಡಳಿತಗಳಿಗೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಲು ಸೂಚಿಸಲಾಯಿತು.
10
+ ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.ಬೆಳೆ ವಿಮೆ ಕ್ಲೇಮ್‌ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್‌ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದಾರೆ. ಕಂಪನಿಗಳು ಆಡುವ ಆಟದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಅಪಾಯವಿದೆ ಎನ್ನುವ ಸಲಹೆ ಸಚಿವ ಲಾಡ್‌ ಅವರಿಂದ ಬಂತು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಈ ಕುರಿತು ಮುಂಚಿತವಾಗಿಯೇ ವಿಮಾ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.
11
+ ಸಂವಾದದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಕೃಷ್ಣ ಭೈರೇಗೌಡ, ಹೆಚ್‌.ಕೆ. ಪಾಟೀಲ್‌, ಕೆ.ಹೆಚ್‌. ಮುನಿಯಪ್ಪ, ಚೆಲುವರಾಯಸ್ವಾಮಿ, ಭೈರತಿ ಸುರೇಶ್‌, ಶಿವರಾಜ್‌ ತಂಗಡಗಿ, ಪ್ರಿಯಾಂಕ್‌ ಖರ್ಗೆ, ರಹೀಂ ಖಾನ್‌, ಶಿವಾನಂದ ಪಾಟೀಲ, ಎಸ್‌‍. ಎಸ್‌‍. ಮಲ್ಲಿಕಾರ್ಜುನ್‌, ಸಂತೋಷ್‌ ಲಾಡ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್‌.ಕೆ. ಅತೀಕ್‌ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
eesanje/url_46_135_11.txt ADDED
@@ -0,0 +1,5 @@
 
 
 
 
 
 
1
+ ಅಧಿಕಾರ ದುರುಪಯೋಗ ಬಿಟ್ಟು ನ್ಯಾಯಯುತವಾಗಿ ಆಡಳಿತ ನಡೆಸಿ : ನಿಖಿಲ್‌ ಕುಮಾರಸ್ವಾಮಿ
2
+ ಬೆಂಗಳೂರು,ಮೇ23-ಕಾಂಗ್ರೆಸ್‌‍ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಳ್ಳುವುದನ್ನು ಬಿಟ್ಟು ನ್ಯಾಯಯುತವಾಗಿ ರಾಜ್ಯದಲ್ಲಿ ಆಡಳಿತ ನಡೆಸಬೇಕು ಎಂದು ಜೆಡಿಎಸ್‌‍ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಆಗ್ರಹಿಸಿದರು.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬವನ್ನು ಟಾರ್ಗೆಟ್‌ ಮಾಡಿ ಕಾಂಗ್ರೆಸ್‌‍ ರಾಜಕಾರಣ ಮಾಡುತ್ತಿದೆ ಎಂದು ಹಳ್ಳಿಯ ಜನರೇ ಮಾತನಾಡುತ್ತಿದ್ದಾರೆ ಎಂದರು. ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರನ್ನು ಟಾರ್ಗೆಟ್‌ ಮಾಡಿ ಜೈಲಿಗೆ ಕಳುಹಿಸಿದ್ದರು. ಇದು ಬಹಳ ದಿನ ನಡೆಯುವುದಿಲ್ಲ. ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂದು ಅವರು ಹೇಳಿದರು.
4
+ ಆರೋಪ ಕೇಳಿಬಂದಿರುವ ಹಾಸನ ಸಂಸದರು ರಾಜ್ಯಕ್ಕೆ ಆಗಮಿಸಿ ಎಸ್‌‍ಐಟಿ ತನಿಖೆಯನ್ನು ಎದುರಿಸಬೇಕು. ಆರೋಪ ಕೇಳಿಬಂದಾಗ ತನಿಖೆ ಎದುರಿಸುವುದು ಸೂಕ್ತ. ಈಗಾಗಲೇ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸಹ ಬಹಿರಂಗ ಆಹ್ವಾನ ನೀಡಿದ್ದಾರೆ ಎಂದರು.
5
+ ಫೋನ್‌ ಟ್ಯಾಪಿಂಗ್‌ ಬಗ್ಗೆ ಕುಮಾರಸ್ವಾಮಿ ಅವರಿಗೆ ಮಾಹಿತಿ ಇರಬಹುದು. ಎಸ್‌‍ಐಟಿ ರಚನೆಯಾದ ಮೇಲೆ ಪಾರದರ್ಶಕ ತನಿಖೆ ನಡೆಯುತ್ತಿಲ್ಲ ಎಂದು ಅವರು ಆರೋಪಿಸಿದರು.
eesanje/url_46_135_12.txt ADDED
@@ -0,0 +1,6 @@
 
 
 
 
 
 
 
1
+ ಮಕ್ಕಳ ಶಾಲೆ ಪ್ರವೇಶಾತಿ ವಯೋಮಿತಿಯ ನಿಯಮಕ್ಕೆ ಪೋಷಕರಿಂದ ತೀವ್ರ ವಿರೋಧ
2
+ ಬೆಂಗಳೂರು, ಮೇ 23-ಒಂದನೇ ತರಗತಿ ಪ್ರವೇಶಾತಿಗೆ 2025-26ನೇ ಸಾಲಿನಿಂದ ಮಕ್ಕಳ ಕನಿಷ್ಠ ವಯೋಮಿತಿಯನ್ನು 6 ವರ್ಷಕ್ಕೆ ನಿಗದಿ ಮಾಡಿರುವುದು ಮತ್ತು ಎಲ್‌ಕೆಜಿಗೆ ದಾಖಲಿಸಲು ಮಕ್ಕಳ ವಯಸ್ಸು ಜೂನ್‌ 1ರೊಳಗೆ 4 ವರ್ಷ ಆಗಿರಬೇಕು (2023-24ರ ಶೈಕ್ಷಣಿಕ ವರ್ಷದಿಂದ) ಎಂಬ ನಿಯಮಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
3
+ ಈ ಕಟ್ಟುನಿಟ್ಟಿನ ವಯೋಮಿತಿಗಳು ಮಕ್ಕಳನ್ನು ಸಕಾಲಿಕ ಶಿಕ್ಷಣದಿಂದ ವಂಚಿತಗೊಳಿಸುತ್ತಿವೆ. ಅದರಲ್ಲೂ ವಿಶೇಷವಾಗಿ ಕೇವಲ ಒಂದು ದಿನದ ಅಂತರದಲ್ಲಿ ವಯಸ್ಸು ಪೂರ್ಣಗೊಂಡಿರದಿದ್ದರೆ ಅಂಥ ಮಕ್ಕಳಿಗೆ ಅನ್ಯಾಯವಾಗುತ್ತದೆ. ಮಕ್ಕಳು ಇಡೀ ವರ್ಷ ಶಾಲಾ ಶಿಕ್ಷಣದಿಂದ ವಂಚಿತರಾಗುತ್ತಾರೆ ಎಂದು ಪೋಷಕರು ಹೇಳಿದ್ದು, ನಿಯಮದಲ್ಲಿ ಸಡಿಲಿಕೆಗೆ ಒತ್ತಾಯಿಸಿದ್ದಾರೆ.
4
+ ಗೊಂದಲಗಳ ಮಧ್ಯೆಯೂ ಇದೀಗ ಖಾಸಗಿ ಶಾಲೆಗಳು ಹೊಸ ನಿಯಮಗಳಿಗೆ ಬದ್ಧವಾಗಿದ್ದು, ವಯಸ್ಸು ಪೂರ್ಣಗೊಂಡಿರದ ಮಕ್ಕಳ ದಾಖಲಾತಿಗೆ ನಿರಾಕರಿಸುತ್ತಿವೆ. ಇದು ಅನೇಕ ಪೋಷಕರನ್ನು ನಿರಾಶೆಗೊಳಿಸಿದೆ. ಕೆಲವು ಪ್ರಕರಣಗಳಲ್ಲಿ ಸುಳ್ಳು ಮಾಹಿತಿ ನೀಡಿ ಇನ್ನೂ 4 ವರ್ಷ ತುಂಬದ ಮಕ್ಕಳನ್ನು ಶಾಲೆಗಳಿಗೆ ಸೇರಿಸಲಾಗುತ್ತಿದೆ ಎಂದು ವರದಿಯಾಗಿದೆ.
5
+ ಈ ದಾಖಲಾತಿಗಳಿಗೆ ಅನುಮತಿ ನೀಡುವ ಅಧಿಕೃತ ಆದೇಶವಿದೆ ಎಂದು ಪೋಷಕರನ್ನು ತಪ್ಪುದಾರಿಗೆ ಎಳೆಯಲಾಗುತ್ತಿದೆ. ಆದರೆ, ಶಿಕ್ಷಣ ಇಲಾಖೆಯು ಅಂತಹ ಯಾವುದೇ ಮೌಖಿಕ ಸೂಚನೆ ಅಥವಾ ಆದೇಶಗಳನ್ನು ನೀಡಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದೆ.ಇಲಾಖೆಯ ವೆಬ್‌ ಪೋರ್ಟಲ್‌ನಲ್ಲಿ ಎಲ್‌ ಕೆಜಿ ಮತ್ತು ಯುಕೆಜಿ ಪ್ರವೇಶದ ಬಗ್ಗೆ ಮಾಹಿತಿ ನಮೂದಿಸುವಂತಿಲ್ಲ, ಆದರೆ ಒಂದನೇ ತರಗತಿಗೆ ದಾಖಲಾದ ಮಕ್ಕಳ ವಿವರಗಳನ್ನು ಕಡ್ಡಾಯವಾಗಿ ದಾಖಲಿಸಬೇಕು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದು ಗೊಂದಲಕ್ಕೆ ಕಾರಣವಾಗಿದೆ.
6
+ 1ನೇ ತರಗತಿ ಪ್ರವೇಶಕ್ಕೆ 6 ವರ್ಷ ವಯೋಮಿತಿ ನಿಗದಿ:ಶಿಕ್ಷಣ ಇಲಾಖೆ ಆದೇಶ ಈ ಮಧ್ಯೆ, ವಯೋಮಿತಿ ಸಡಿಲಿಕೆ ಸರ್ಕಾರದ ಪರಿಗಣನೆಯಲ್ಲಿಲ್ಲ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ತಪ್ಪಾದ ಮಾಹಿತಿಯಿಂದ ದಾರಿತಪ್ಪಿಸಬೇಡಿ ಮತ್ತು ಶಾಲಾ ಪ್ರವೇಶಕ್ಕಾಗಿ ಪ್ರಸ್ತುತ ವಯಸ್ಸಿನ ನಿಯಮಗಳಿಗೆ ಬದ್ಧವಾಗಿರುವಂತೆ ಪೋಷಕರಿಗೆ ತಿಳಿಸಿದ್ದಾರೆ.
eesanje/url_46_135_2.txt ADDED
@@ -0,0 +1,4 @@
 
 
 
 
 
1
+ ತಿರುಪತಿಗೆ ತೆರಳುತ್ತಿದ್ದ ಕಾರು ಉರುಳಿ ಬಿದ್ದು ಒಂದೇ ಕುಟುಂಬದ ನಾಲ್ವರ ಸಾವು
2
+ ರಾಣಿಬೆನ್ನೂರು. ಮೇ24-ತಿರುಪತಿಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ ಆರು ಮಂದಿ ಗಂಭಿರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಹಲಗೇರಿ ಬೈಪಾಸ್‌‍ ನಲ್ಲಿ ತಡರಾತ್ರಿ ನಡೆದಿದೆ.
3
+ ಹಾವೇರಿ ಪಟ್ಟಣದ ಅಶ್ವಿನಿನಗರದ ನಿವಾಸಿಗಳಾದ ಸುರೇಶ್‌(45) ಐಶ್ವರ್ಯ(22) ಪ್ರಮೀಳಾ (28) ಹಾಗೂ ಚೇತನಾ(7) ಮೃತಪಟ್ಟ ದುರ್ದೈವಿಗಳೆಂದು ಗುರುತಿಸಲಾಗಿದೆ. ಇವರೆಲ್ಲರೂ ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಹಾವೇರಿಯಿಂದ ಕಾರಿನಲ್ಲಿ ತೆರಳುತ್ತಿದ್ದಾಗ ರಾತ್ರಿ 12, 45 ರ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ ಎನ್ನನಾಗಿದೆ, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಗಾಯಾಳುಗಳನ್ನು ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
4
+ ಸುದ್ದಿ ತಿಳಿಯುತ್ತಿದ್ದಂತೆ ರಾಣಿಬೆನ್ನೂರು ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಭೀಕರ ಅಫಘಾತದಲ್ಲಿ ತಮವರನ್ನು ಕಳೆದು ಕೊಂಡು ಕುಟುಂಬ ಸದಸ್ಯರ ಆಕಂದ್ರನ ಮುಗಿಲು ಮುಟ್ಟಿತ್ತು.
eesanje/url_46_135_3.txt ADDED
@@ -0,0 +1,8 @@
 
 
 
 
 
 
 
 
 
1
+ ರಾಜ್ಯಾದ್ಯಂತ ಪೂರ್ವ ಮುಂಗಾರು ಅಬ್ಬರ, ಉತ್ತರ ಕರ್ನಾಟಕದಲ್ಲಿ ಸಿಡಿಲಿಗೆ ಇಬ್ಬರು ಬಲಿ
2
+ ಬೆಂಗಳೂರು, ಮೇ 24-ರಾಜ್ಯಾದ್ಯಂತ ಪೂರ್ವ ಮುಂಗಾರಿನ ಮಳೆಯಬ್ಬರ ಮುಂದುವರೆದಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಸಿಡಿಲಿಗೆ ಸಿಲುಕಿ ಇಬ್ಬರು ಬಲಿಯಾಗಿ, ಆರು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
3
+ ಬೆಳಗಾವಿ ಜಿಲ್ಲೆಯಲ್ಲಿ ನಿನ್ನೆ ಸಂಜೆಯಿಂದಲೂ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ರಾಯಭಾಗ ಪಟ್ಟಣದ ಜಮೀನೊಂದರಲ್ಲಿ ಕಬ್ಬು ನಾಟಿ ಮಾಡುವಾಗ ಸಿಡಿಲು ಬಡಿದು ಶೋಭಾ ಕೃಷ್ಣ ಕುಲಗೋಡೆ (45) ಎಂಬ ಮಹಿಳೆ ಮೃತಪಟ್ಟರೆ, ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ರಾಯಭಾಗ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದೆ.
4
+ ಸುದ್ದಿ ತಿಳಿದ ಕೂಡಲೇ ರಾಯಭಾಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮತ್ತೊಂದು ಘಟನೆಯಲ್ಲಿ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಗುರು ಪುಂಡಲೀಕ (35) ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
5
+ ಜಮೀನಿನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುವಾಗ ಭಾರಿ ಮಳೆ ಬಂದಿದ್ದು, ಈ ವೇಳೆ ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದು ಈ ಘಟನೆ ಸಂಭವಿಸಿದೆ.ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರವಲಯದಲ್ಲಿ ಸಿಡಿಲಬ್ಬರಕ್ಕೆ 12 ಕುರಿಗಳು ನಿಧನ ಹೊಂದಿವೆ.
6
+ ಯಾದಗಿರಿ ಜಿಲ್ಲೆಯಾದ್ಯಂತ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದ್ದು, ನಗರದಲ್ಲಿ ನೂರಾರು ಬೃಹತ್‌ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ. ಪಟ್ಟಣದ ಮಾತಾ ಮಾಣಿಕೇಶ್ವರಿ ಬಡಾವಣೆಯಲ್ಲಿ ಮನೆಯ ಮೇಲ್ಛಾವಣಿ ಹಾರಿಹೋಗಿದೆ.ವಿದ್ಯುತ್‌ ಕಂಬಗಳು ಉರುಳಿಬಿದ್ದ ಪರಿಣಾಮ ವಿದ್ಯುತ್‌ ಸಂಪರ್ಕ ಕಡಿತಗೊಂಡು ರಾತ್ರಿಯಿಡೀ ಕತ್ತಲಲ್ಲಿ ಕಾಲ ಕಳೆಯುವಂತಾಗಿತ್ತು.
7
+ ಯಾದಗಿರಿ ಪಿಡಬ್ಲ್ಯೂಡಿ ಕಚೇರಿ ಆವರಣಕ್ಕೆ ನೀರು ನುಗ್ಗಿದ್ದು, ಕೆಸರುಗದ್ದೆಯಾಗಿ ನಿರ್ಮಾಣವಾಗಿತ್ತು.ಹುಬ್ಬಳ್ಳಿ, ಧಾರವಾಡ, ಬಿಜಾಪುರ, ರಾಯಚೂರು, ಯಾದಗಿರಿ, ಹಂಪೆ, ಕೊಪ್ಪಳ ಸೇರಿದಂತೆ ಮತ್ತಿತರೆಡೆ ಭಾರಿ ಮಳೆಯಾಗುತ್ತಿದ್ದು, ಹಳ್ಳಕೊಳ್ಳಗಳು ತುಂಬಿಹರಿಯುತ್ತಿವೆ.
8
+ ಒಂದೆಡೆ ಅನ್ನದಾತರಲ್ಲಿ ಸಂತಸ ಮನೆ ಮಾಡಿದ್ದರೆ, ಮತ್ತೊಂದೆಡೆ ಮಳೆರಾಯ ಭಾರಿ ಅನಾಹುತವನ್ನೇ ಸೃಷ್ಟಿಸಿದ್ದಾನೆ. ಬೆಳೆದು ನಿಂತಿದ್ದ ಬೆಳೆಗಳು ನೀರಿನಲ್ಲಿ ಮುಳುಗಿ ಹೋಗಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ.
eesanje/url_46_135_4.txt ADDED
@@ -0,0 +1,6 @@
 
 
 
 
 
 
 
1
+ ವಿವಿಧ ಹುದ್ದೆಗಳಿಗಾಗಿ ಸಿಎಂ ಸಿದ್ದರಾಮಯ್ಯಗೆ ದುಂಬಾಲು ಬಿದ್ದು ಆಕಾಂಕ್ಷಿಗಳು
2
+ ಬೆಂಗಳೂರು, ಮೇ 23-ರಾಜ್ಯಸರ್ಕಾರದ ವಿವಿಧ ಹುದ್ದೆಗಳಿಗಾಗಿ ಲಾಬಿ ನಡೆಸುತ್ತಿರುವವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದುಂಬಾಲು ಬಿದ್ದು ಮನವಿ ನೀಡುತ್ತಿದ್ದಾರೆ. ವಿಧಾನಸಭೆಯಿಂದ ವಿಧಾನಪರಿಷತ್‌ನ 11 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಮುಂದಿನ ತಿಂಗಳು ಒಂದಷ್ಟು ನಾಮನಿರ್ದೇಶನಗಳು ಬಾಕಿ ಇವೆ. ಹೀಗಾಗಿ ಮೇಲನೆಯ ಸದಸ್ಯತ್ವ ಗಿಟ್ಟಿಸಲು ಆಕಾಂಕ್ಷಿಗಳ ದಂಡು ಹೆಚ್ಚಿದೆ.
3
+ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಸಚಿವರು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲು ಗೃಹಕಚೇರಿ ಕೃಷ್ಣಾಗೆ ಆಗಮಿಸಿದರು.ಈ ವೇಳೆ ವಿವಿಧ ಹುದ್ದೆಗಳ ಆಕಾಂಕ್ಷಿಗಳು ಕಾಲಿಗೆ ಬಿದ್ದು ಆಶೀರ್ವಾದ ಪಡೆಯುವುದು, ದುಂಬಾಲು ಬೀಳುವುದು ಸಾಮಾನ್ಯವಾಗಿ ಕಂಡುಬಂದಿತು.
4
+ ಅದರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ತಮ ಬಗ್ಗೆ ಹೇಳಿಕೊಳ್ಳುವವರ ಸಂಖ್ಯೆ ಹೆಚ್ಚಾಗಿತ್ತು. ಹೆಜ್ಜೆಹೆಜ್ಜೆಗೂ ಆಶೀರ್ವಾದ ಪಡೆಯುವವರ ಅಡಚಣೆಯಿಂದಾಗಿ ಸಿಡಿಮಿಡಿಗೊಂಡ ಸಿದ್ದರಾಮಯ್ಯನವರು ದಾರಿ ಬಿಡುವಂತೆ ಗದರಿಸಿದರು. ಇನ್ನೂ ಕೆಲವರು ಅರ್ಜಿಗಳನ್ನು ಹಿಡಿದು ವಿವಿಧ ಕೆಲಸಗಳಿಗಾಗಿ ಮುಖ್ಯಮಂತ್ರಿಯವರಿಗೆ ಮನವಿ ಮಾಡುತ್ತಿದ್ದರು.
5
+ ಇತ್ತೀಚೆಗೆ ಲೋಕಸಭಾ ಚುನಾವಣೆ ಕಾರಣಕ್ಕಾಗಿ ಕಾರ್ಯಕರ್ತರ ಭೇಟಿಯನ್ನು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಕಡಿಮೆ ಮಾಡಿದ್ದರು. ರಾಜ್ಯದಲ್ಲಿ ನೀತಿ ಸಂಹಿತೆ ಸಡಿಲಗೊಂಡಿದ್ದು, ಇಂದಿನಿಂದ ಅಧಿಕೃತ ಕಾರ್ಯಕಲಾಪಗಳು ಚುರುಕು ಪಡೆದುಕೊಂಡಿವೆ.
6
+ ಇದೇ ವೇಳೆ ಕಾರ್ಯಕರ್ತರ ಆಗಮನವೂ ಹೆಚ್ಚಾಗಿದೆ. ರಾಜ್ಯದ ನಾನಾ ಭಾಗಗಳಿಂದ ಬಂದ ವಿವಿಧ ಹುದ್ದೆಗಳ ಆಕಾಂಕ್ಷಿಗಳು ಸಚಿವರ ಹಾಗೂ ಪ್ರಮುಖರ ಮನೆ ಬಳಿ ಜಾತ್ರೆಯೋಪಾದಿಯಲ್ಲಿ ಜಮಾಯಿಸುತ್ತಿರುವುದು ಕಂಡುಬರುತ್ತಿದೆ.
eesanje/url_46_135_5.txt ADDED
@@ -0,0 +1,7 @@
 
 
 
 
 
 
 
 
1
+ ಬೆಂಗಳೂರಿನ ಬನಶಂಕರಿ ಬಳಿ ಒತ್ತವರಿಯಾಗಿದ್ದ 5 ಎಕರೆ ಅರಣ್ಯಭೂಮಿಯನ್ನು ತೆರವು ಮಾಡಲಾಗಿದೆ : ಖಂಡ್ರೆ
2
+ ಬೆಂಗಳೂರು, ಮೇ 23-ಬೆಂಗಳೂರು ಬನಶಂಕರಿ ಬಳಿಯ ಬಿ.ಎಂ.ಕಾವಲ್‌ ಸರ್ವೆ ನಂ. 92ರಲ್ಲಿ ಒತ್ತವರಿ ಮಾಡಲಾಗಿದ್ದ ಸುಮಾರು 60 ಕೋಟಿ ರೂ. ಮೌಲ್ಯದ 5 ಎಕರೆ ಅರಣ್ಯಭೂಮಿಯನ್ನು ತೆರವು ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
3
+ ವಿಕಾಸಸೌಧದಲ್ಲಿಂದು ತಮನ್ನು ಭೇಟಿ ಮಾಡಿದ್ದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಾರ ಅರಣ್ಯ ಭವನದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಈಗಾಗಲೇ ಆದೇಶ ಆಗಿರುವ ಪ್ರಕರಣಗಳಲ್ಲಿ ಒತ್ತುವರಿಯನ್ನು ತೆರವುಗೊಳಿಸುವಂತೆ ನೀಡಿದ್ದ ಸ್ಪಷ್ಟ ಸೂಚನೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಕಾರ್ಯಪ್ರವೃತ್ತರಾದ ಬೆಂಗಳೂರು ಅರಣ್ಯಾಧಿಕಾರಿಗಳು 5.2 ಎಕರೆ ಒತ್ತುವರಿ ತೆರವು ಮಾಡಿಸಿರುವುದಾಗಿ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.
4
+ ಬಿ.ಎಂ. ಕಾವಲ್‌ ವ್ಯಾಪ್ತಿಯ ಗೊಟ್ಟೆಗೆರೆಪಾಳ್ಯದ ವೆಂಕಟಪ್ಪ ಮತ್ತು ಅವರ ತಾಯಿ ತಿಮಕ್ಕ ಎಂಬುವವರು 5 ಎಕರೆ 20 ಗುಂಟೆ ಅರಣ್ಯ ಭೂಮಿ ಒತ್ತುವರಿ ಮಾಡಿದ್ದರು. ಎ.ಸಿ.ಎಫ್‌. ನ್ಯಾಯಾಲಯದ ಆದೇಶದ ಮೇರೆಗೆ ಈ ಭೂಮಿ ತೆರವು ಮಾಡಲಾಗಿದೆ. ಈ ಸಂಬಂಧ ಜೆ.ಎಂ.ಎಫ್‌.ಸಿ. ನ್ಯಾಯಾಲಯದಲ್ಲಿ ಪ್ರತಿವಾದಿಗಳು ಹಾಕಿದ್ದ ದಾವೆ ವಜಾ ಆಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದರು.
5
+ 20 ಸ್ಥಾನಗಳಲ್ಲಿ ಗೆಲುವು :ಈ ಬಾರಿ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಎಲ್ಲಿಯೂ ಮೋದಿ ಅಲೆ ಕಾಣಲೇ ಇಲ್ಲ. ಗ್ಯಾರಂಟಿ ಅಲೆ ಎಲ್ಲೆಡೆ ಪಸರಿಸಿದ್ದು, ಕಾಂಗ್ರೆಸ್‌‍ ಪಕ್ಷ ಕನಿಷ್ಠ 20 ಸ್ಥಾನಗಳಲ್ಲಿ ಜಯ ಸಾಧಿಸಲಿದೆ. ಗ್ಯಾರಂಟಿ ಯೋಜನೆಗಳು ಫಲ ನೀಡಿವೆ ಎಂದರು.ನಮ ಸರ್ಕಾರಕ್ಕೆ ಒಂದು ವರ್ಷ ತುಂಬಿದೆ. ಈ ಅವಧಿಯಲ್ಲಿ ಪಾರದರ್ಶಕ ಮತ್ತು ಜನಪರವಾದ ಆಡಳಿತವನ್ನು ನೀಡಿದ್ದು, ಜನರ ವಿಶ್ವಾಸ ಇಮಡಿಯಾಗಿದೆ. ಇದು ಚುನಾವಣೆಯ ಲಿತಾಂಶದಲ್ಲೂ ಪ್ರತಿಲಿಸಲಿದೆ ಎಂದು ಹೇಳಿದರು.
6
+ ಪ್ರತಿಪಕ್ಷಗಳಿಂದ ದಿಕ್ಕು ತಪ್ಪಿಸುವ ಪ್ರಯತ್ನ:ಪ್ರಜ್ವಲ್‌ ರೇವಣ್ಣ ಲೈಂಗಿಕ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಅತ್ಯಂತ ಹೇಯವಾದುದಾಗಿದ್ದು, ದೇಶದಾದ್ಯಂತ ಚರ್ಚೆಯ ವಸ್ತುವಾಗಿದೆ. ಈ ಪ್ರಕರಣದ ತನಿಖೆಯನ್ನು ಎಸ್‌‍.ಐ.ಟಿ. ಗೆ ವಹಿಸಲಾಗಿದ್ದು, ಪ್ರಾಮಾಣಿಕವಾಗಿ ಅಧಿಕಾರಿಗಳು ತಮ ಕಾರ್ಯ ಮಾಡುತ್ತಿದ್ದಾರೆ. ಈ ಹಂತದಲ್ಲಿ ಅನುಮಾನ ವ್ಯಕ್ತಪಡಿಸುವುದು, ಅನಗತ್ಯ ಆರೋಪ ಮಾಡುವುದು ಸರಿಯಲ್ಲ ಎಂದರು.
7
+ ಕೇಂದ್ರ ಪ್ರಜ್ವಲ್‌ ಬಂಧನಕ್ಕೆ ಸಹಕರಿಸಬೇಕು:ಪ್ರಜ್ವಲ್‌ ರೇವಣ್ಣಗೆ ನೀಡಲಾಗಿರುವ ರಾಜತಾಂತ್ರಿಕ ಪಾಸ್‌‍ ಪೋರ್ಟ್‌ ರದ್ದು ಮಾಡುವಂತೆ ಕೋರಿ ರಾಜ್ಯದಿಂದ ಪತ್ರ ಬರೆಯಲಾಗಿದೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡು, ಇಂಟರ್‌ ಪೋಲ್‌ ನೆರವಿನಿಂದ ಆರೋಪಿಯ ಬಂಧನಕ್ಕೆ ಸಹಕಾರ ನೀಡಬೇಕು ಎಂದು ���ಶ್ವರ ಖಂಡ್ರೆ ಒತ್ತಾಯಿಸಿದರು.
eesanje/url_46_135_6.txt ADDED
@@ -0,0 +1,8 @@
 
 
 
 
 
 
 
 
 
1
+ ಕಲುಷಿತ ನೀರಿನ ಸಮಸ್ಯೆ : ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
2
+ ಬೆಂಗಳೂರು, ಮೇ 23-ಇನ್ನು ಮುಂದೆ ರಾಜ್ಯದ ಯಾವುದೇ ಭಾಗದಲ್ಲಿ ಕಲುಷಿತ ನೀರಿನ ತೊಂದರೆಗಳು ಕಂಡುಬಂದರೆ ಆಯಾ ಜಿಲ್ಲಾಧಿಕಾರಿಗಳನ್ನೇ ಹೊಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
3
+ ಲೋಕಸಭಾ ಚುನಾವಣಾ ನೀತಿ ಸಂಹಿತೆಯನ್ನು ಆಯೋಗ ಸಡಿಲಗೊಳಿಸಿದ ಬೆನ್ನಲ್ಲೇ ಇಂದು ಮುಖ್ಯಮಂತ್ರಿಯವರು ಗೃಹಕಚೇರಿ ಕೃಷ್ಣಾದಿಂದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.
4
+ ಮೈಸೂರಿನ 2 ಹಳ್ಳಿಗಳಲ್ಲಿ ಕಾಲರಾ ತಲೆದೋರಿದೆ. ಟಿ.ನರಸೀಪುರ ತಾಲೂಕು ತಗಡೂರು ಹಾಗೂ ಕೆ.ಸಾಲಹುಂಡಿ ಗ್ರಾಮಗಳಲ್ಲಿ ಕಲುಷಿತ ನೀರಿನ ಪ್ರಕರಣಗಳಿಂದ ಕಾಲರಾ ಪ್ರಕರಣಗಳು ಹೆಚ್ಚಾಗಿವೆ. ನೀರು ಕಲುಷಿತಗೊಳ್ಳಲು ಇಂಜಿನಿಯರ್‌ಗಳ ಬೇಜವಾಬ್ದಾರಿತನ ಕಾರಣ ಎಂದು ತರಾಟೆಗೆ ತೆಗೆದುಕೊಂಡರು.
5
+ ನೀರಿನ ಗುಣಮಟ್ಟವನ್ನು ದಿನನಿತ್ಯ ಪರೀಕ್ಷೆಗೊಳಪಡಿಸಿ ಅದು ಕುಡಿಯಲು ಯೋಗ್ಯವೇ, ಅಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕಾಗಿದೆ. ಅದನ್ನು ಮಾಡದೆ ನಿರ್ಲಕ್ಷ್ಯ ವಹಿಸುವುದು ಅಧಿಕಾರಿಗಳು ಮಾಡುವ ದೊಡ್ಡ ಅಪರಾಧ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನಸಾಮಾನ್ಯರು ಸಂಕಷ್ಟಕ್ಕೊಳಗಾಗುತ್ತಿದ್ದಾರೆ ಎಂದು ಕೆಂಡಕಾರಿದರು.
6
+ ಇನ್ನು ಮುಂದೆ ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ನಡೆಯಬೇಕು. ಯಾವುದೇ ಭಾಗದಲ್ಲೂ ಕಲುಷಿತ ನೀರಿನ ಪ್ರಕರಣ ವರದಿಯಾದರೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳನ್ನು ಹೊಣೆ ಮಾಡಲಾಗುವುದು. ಕಾಲರಾ ಹಾಗೂ ಇತರ ಸಾಂಕ್ರಾಮಿಕ ರೋಗಗಳ ವಿಷಯದಲ್ಲಿ ಕರ್ತವ್ಯ ಲೋಪವೆಸಗಿದ ಜಿಲ್ಲಾಮಟ್ಟದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
7
+ ಅಧಿಕಾರಿಗಳ ನಿರ್ಲಕ್ಷ್ಯ :ಕೆ.ಸಾಲಹುಂಡಿ ಗ್ರಾಮದಲ್ಲಿ ಕಲುಷಿತ ನೀರಿನಿಂದ 40 ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರೆ ಒಬ್ಬ ಯುವಕ ಮೃತಪಟ್ಟ ಪ್ರಕರಣ ಇತ್ತೀಚೆಗೆ ವರದಿಯಾಗಿತ್ತು. ಕಳೆದ ವರ್ಷ ವಿಜಯಪುರ, ಕಲಬುರಗಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪದೇಪದೇ ಕಲುಷಿತ ನೀರಿನ ಪ್ರಕರಣಗಳು ವರದಿಯಾಗಿದ್ದವು. ಮಹಾನಗರಿ ಬೆಂಗಳೂರಿನಲ್ಲೂ ಅಲ್ಲಲ್ಲಿ ಕಲುಷಿತ ನೀರಿನ ಪ್ರಕರಣಗಳು ಕಂಡುಬಂದಿವೆಯಾದರೂ ತತ್‌ಕ್ಷಣದ ಚಿಕಿತ್ಸೆಯಿಂದಾಗಿ ಹೆಚ್ಚಿನ ಅನಾಹುತಗಳಾಗಿಲ್ಲ.
8
+ ಅಧಿಕಾರಿಗಳು ಕುಡಿಯುವ ನೀರಿನ ಜೊತೆ ಕಲುಷಿತ ನೀರು ಮಿಶ್ರಣಗೊಳ್ಳುವ ದಿವ್ಯ ನಿರ್ಲಕ್ಷ್ಯ ವಹಿಸಿದ್ದು, ಜನಸಾಮಾನ್ಯರು ಅದರಲ್ಲೂ ಬಡಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಇಂದು ನಡೆದ ಸಭೆಯಲ್ಲಿ ಮುಖ್ಯಮಂತ್ರಿಯವರು ಈ ವಿಚಾರದ ಬಗ್ಗೆ ಆದ್ಯತೆ ನೀಡಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
eesanje/url_46_135_7.txt ADDED
@@ -0,0 +1,6 @@
 
 
 
 
 
 
 
1
+ ಲೋಕಸಭಾ ಚುನಾವಣೆ : ರಾಜ್ಯದಲ್ಲಿ ಮತ ಎಣಿಕೆಗೆ ಪೂರ್ವ ಸಿದ್ಧತೆ
2
+ ಬೆಂಗಳೂರು, ಮೇ 23-ಪ್ರಸಕ್ತ ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಸಂಬಂಧಿಸಿದಂತೆ ಆಯಾ ಕ್ಷೇತ್ರದಲ್ಲಿ ಪೂರ್ವ ಸಿದ್ಧತೆ ಆರಂಭಗೊಂಡಿದೆ. ಅಪರ ಚುನಾವಣಾಧಿಕಾರಿಗಳು, ಚುನಾವಣೆಯ ಅಧಿಕಾರಿ ಮತ್ತು ಸಿಬ್ಬಂದಿಗೆ ಮತ ಎಣಿಕೆ ಕಾರ್ಯಕ್ಕೆ ಸಿದ್ಧತೆ ಹೇಗೆ ಮಾಡಿಕೊಳ್ಳಬೇಕೆಂಬ ಬಗ್ಗೆ ಸಭೆ ನಡೆಸಿ ಮಾರ್ಗದರ್ಶನಗಳನ್ನು ನೀಡಿದ್ದಾರೆ.
3
+ ರಾಜ್ಯದಲ್ಲಿ ಈಗಾಗಲೇ 2 ಹಂತದಲ್ಲಿ ಮತದಾನ ಮುಗಿದಿದ್ದು, ಮತಯಂತ್ರಗಳು ಸ್ಟ್ರಾಂಗ್‌ ರೂಂನಲ್ಲಿ ಇರಿಸಲಾಗಿದೆ. ಜೂನ್‌ 4 ರಂದು ಬೆಳಿಗ್ಗೆ ಮತ ಎಣಿಕೆ ಆರಂಭಗೊಂಡು ಸಂಜೆ ವೇಳೆಗೆ ಫಲಿತಾಂಶ ಪ್ರಕಟಗೊಳ್ಳಲಿದೆ. ಮತ ಎಣಿಕೆಯ ದಿನದಂದು ಯಾವ ರೀತಿ ಸಿದ್ಧತೆ ಮಾಡಿಕೊಳ್ಳಬೇಕು. ಮತ ಎಣಿಕೆ ಕಾರ್ಯದಲ್ಲಿ ನಿರತರಾಗುವ ಸಿಬ್ಬಂದಿ ಹಾಗೂ ರಾಜಕೀಯ ಪ್ರತಿನಿಧಿಗಳು ಚುನಾವಣಾ ಏಜೆಂಟರುಗಳಿಗೆ ಮತ ಎಣಿಕೆ ಕೇಂದ್ರದ ಮುಖ್ಯದ್ವಾರದಿಂದ ಮೊಬೈಲ್‌ ತರುವುದಾಗಲೀ, ಬಳಸುವುದಾಗಲೀ ನಿಷೇಧಿಸುವಂತೆ ಸೂಚಿಸಲಾಗಿದೆ.
4
+ ಮತ ಎಣಿಕೆ ದಿನದಂದು ವಿದ್ಯುತ್‌ ವ್ಯತ್ಯಯವಾಗುವಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವುದು, ಏಜೆಂಟರಿಗೆ ಹಾಗೂ ಮತ ಎಣಿಕೆ ಸಿಬ್ಬಂದಿಗೆ ಗುರುತಿನ ಚೀಟಿ ನೀಡುವುದು, ಮತ ಎಣಿಕೆಗೆ ಅಗತ್ಯವಿರುವ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ನೇಮಕ ಮಾಡುವುದು… ಮೊದಲಾದ ವಿಚಾರಗಳ ಬಗ್ಗೆ ಸಭೆ ನಡೆಸಿ ಮಾಹಿತಿ ನೀಡಲಾಗಿದೆ.
5
+ ಮತ ಎಣಿಕೆ ಸಿಬ್ಬಂದಿಗೆ ಅಗತ್ಯವಿರುವ ಊಟೋಪಚಾರ, ನೀರಿನ ವ್ಯವಸ್ಥೆ, ಮೂಲಸೌಲಭ್ಯ ಕಲ್ಪಿಸುವುದು ಸೇರಿದಂತೆ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ನಿರ್ದೇಶನಗಳನ್ನು ಈಗಾಗಲೇ ನೀಡಿದ್ದಾರೆ.ಯಾವುದೇ ರೀತಿಯ ಲೋಪ ಮತ ಎಣಿಕೆ ದಿನದಂದು ಉಂಟಾಗದಂತೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
6
+ ಮತ ಎಣಿಕೆಗೆ ಇನ್ನು ಕೇವಲ 12 ದಿನಗಳು ಬಾಕಿ ಉಳಿದಿದ್ದು, ಅದಕ್ಕೆ ಪೂರಕವಾದ ಸಿದ್ಧತೆಯನ್ನು ಆಯಾ ಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಡಳಿತ ಮಾಡಿಕೊಳ್ಳುತ್ತಿವೆ.
eesanje/url_46_135_8.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಪ್ರಜ್ವಲ್ ರೇವಣ್ಣನಿಗೆ ದೇವೇಗೌಡರ ಎಚ್ಚರಿಕೆ, ಮುಂದೆ ಶರಣಾಗಲು ಸೂಚನೆ
2
+ ಬೆಂಗಳೂರು, ಮೇ 23- ಪ್ರಜ್ವಲ್ ಎಲ್ಲಿದ್ದರೂ ಬಂದು, ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡ ರವರು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಗೌಡರು, ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳುತ್ತಿದ್ದೇನೆ. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ ಎಂದು ಕಠೋರವಾಗಿ ಎಚ್ಚರಿಸಿದ್ದಾರೆ.
3
+ ಪ್ರಜ್ವಲ್ ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ಅವನು ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಅವನು ಕೂಡಲೆ ಹಿಂದಿರುಗಿ ಬರಬೇಕು ಎಂದು ಒತ್ತಾಯಿಸಿದ್ದಾರೆ.ಪ್ರಜ್ವಲ್ ಗೆ ದೇವೇಗೌಡರು ಬರೆದಿರುವ ಎಚ್ಚರಿಕೆ ಸಂದೇಶ ಈ ಕೆಳಕಂದಂತಿದೆ.
4
+ @ . .../
5
+ ಪ್ರಜ್ವಲ್ ರೇವಣ್ಣನಿಗೆ ನನ್ನ ಎಚ್ಚರಿಕೆನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ, ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ದಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಹೆಚ್. ಡಿ. ಕುಮಾರಸ್ವಾಮಿಯವರು ಹಗರಣ ಹೊರಬಿದ್ದ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ.
6
+ ಈ ಕೆಲವು ವಾರಗಳಿಂದ ಜನರು ನನ್ನ ಮತ್ತು ನನ್ನ ಕುಟುಂಬದವರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಹಗರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು ಎಂದು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ. ಪ್ರಜ್ವಲನ ಚಟುವಟಿಕೆಗಳ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ನಾನು ಅವರಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಿಲ್ಲ. ಅವನನ್ನು ರಕ್ಷಿಸುವ ಯಾವುದೇ ಇರಾದೆಯೂ ನನಗಿಲ್ಲ. ಅವನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ ಎಂದು ನಾನ�� ಜನರಿಗೆ ಅರ್ಥಮಾಡಿಸಲು ಸಾಧ್ಯವಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲಾ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ.
7
+ ನಾನು ಈಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ಪ್ರೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ ಮತ್ತು ತಾವು ಎಸಗಿದ ಕೃತ್ಯಗಳಿಗೆ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂದು ನಂಬಿದ್ದೇನೆ. ನನ್ನ ಸತ್ಯ ಮತ್ತು ನೋವಿನ ಹೊರೆಯನ್ನು ಭಗವಂತನ ಪದತಲದಲ್ಲಿ ಇರಿಸಿದ್ದೇನೆ.
8
+ ಈ ಸಂದರ್ಭದಲ್ಲಿ ನಾನು ಈಗ ಒಂದು ಕೆಲಸವನ್ನಷ್ಟೆ ಮಾಡಬಲ್ಲೆ. ಅದೇನೆಂದರೆ, ಪ್ರಜ್ವಲನು ಎಲ್ಲಿದ್ದರೂ ಬಂದು, ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳಬಲ್ಲೆ ಮತ್ತು ಹೇಳುತ್ತಿದ್ದೇನೆ. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ. ಅವನು ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ಅವನು ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಅವನು ಕೂಡಲೆ ಹಿಂದಿರುಗಿ ಬರಬೇಕು.
9
+ ನಾನಾಗಲಿ, ನನ್ನ ಕುಟುಂಬದವರಾಗಲಿ ಈ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಭರವಸೆ ಕೊಡುತ್ತೇನೆ. ಇದರಲ್ಲಿ ಯಾವುದೇ ಭಾವನೆಗೆ ಸಿಲುಕದೆ, ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗುವುದಷ್ಟೆ ನನಗೆ ಮುಖ್ಯ. ಜನರ ವಿಶ್ವಾಸವನ್ನು ಮರಳಿ ಪಡೆಯುವುದಷ್ಟೆ ನನ್ನ ಗುರಿ. ಜನರು ಆರು ದಶಕಗಳ ಕಾಲದ ನನ್ನ ರಾಜಕೀಯ ಜೀವನದುದ್ದಕ್ಕೂ ನನ್ನ ಜೊತೆಗೆ ನಿಂತಿದ್ದಾರೆ. ಅವರಿಗೆ ನಾನು ಸದಾ ಋಣಿ ಮತ್ತು ನಾನು ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ.
10
+ ಹೆಚ್. ಡಿ. ದೇವೇಗೌಡ
eesanje/url_46_135_9.txt ADDED
@@ -0,0 +1,5 @@
 
 
 
 
 
 
1
+ ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಿದೆ : ಜೋಶಿ
2
+ ಕಲಬುರಗಿ, ಮೇ 23-ಹಾಸನ ಜೆಡಿಎಸ್‌‍ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮೆ ಪ್ರಧಾನಿ ನರೇಂದ್ರಮೋದಿಗೆ ಪತ್ರ ಬರೆದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಿದೆ. ಪಾಸ್‌‍ಪೋರ್ಟ್‌ ರದ್ದತಿಗೆ ಅದರದ್ದೇ ಆದ ಪ್ರಕ್ರಿಯೆಗಳು ಇವೆ. ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದತಿಗೆ ಕೋರ್ಟ್‌ನಲ್ಲಿ ಅರ್ಜಿ ಹಾಕಲಾಗಿದೆ ಎಂದು ಹೇಳಿದರು.
3
+ ನನ್ನ ಪ್ರಶ್ನೆಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಹಾಗೂ ಪರಮೇಶ್ವರ್‌ ಈವರೆಗೂ ಉತ್ತರಿಸಿಲ್ಲ. ಪ್ರಜ್ವಲ್‌ ಪೆನ್‌ಡ್ರೈವ್‌ ಹೊರಬಂದಿದ್ದು ಏ.21ರಂದು. ಆದರೆ ಪ್ರಜ್ವಲ್‌ ವಿದೇಶಕ್ಕೆ ಹೋಗಿದ್ದು ಏ.27ರಂದು. ಹಾಗಾದರೆ ಅಲ್ಲಿಯವರೆಗೆ ಇವರೇನು ಕತ್ತೆ ಕಾಯುತ್ತಿದ್ದಾರಾ ಎಂದು ಪ್ರಶ್ನಿಸಿದರು.
4
+ ವಿದೇಶಕ್ಕೆ ಹೋದವರನ್ನು ಕರೆತರಲು ಪ್ರಕ್ರಿಯೆಗಳಿವೆ. ರಾಜ್ಯ ಸರ್ಕಾರಕ್ಕೆ ಸಹಕಾರ ನೀಡಲು ಕೇಂದ್ರ ತಯಾರಿದೆ. ಪತ್ರ ಬರೆದ ತಕ್ಷಣ ಪಾಸ್‌‍ಪೋರ್ಟ್‌ ರದ್ದಾಗಬೇಕು ಎಂದರೆ ಹೇಗೆ? ಇದೀಗ ಪ್ರಕರಣವನ್ನು ಬಿಜೆಪಿ ಮೇಲೆ ಹಾಕುವ ಪ್ರಯತ್ನ ಕಾಂಗ್ರೆಸ್‌‍ ಮಾಡುತ್ತಿದೆ. ಒಕ್ಕಲಿಗ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟು ಚುನಾವಣೆ ಮುಗಿಯುವವರೆಗೂ ಏನೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
5
+ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಗಂಭೀರ ಪ್ರಕರಣ. ಪ್ರಜ್ವಲ್‌ ವಿಚಾರಣೆ ಎದುರಿಸಬೇಕು. ಅವರು ತಪ್ಪು ಮಾಡಿದ್ದೇ ಆಗಿದ್ದರೆ ಕಠಿಣ ಕ್ರಮ ಆಗಲೇಬೇಕು. ಇದರಲ್ಲಿ ಯಾವುದೇ ಅನುಕಂಪ ಇಲ್ಲವೇ ಇಲ್ಲ ಎಂದೂ ಜೋಶಿ ಹೇಳಿದರು.ಪ್ರಜ್ವಲ್‌ ಪ್ರಕರಣದಲ್ಲಿ ರಾಜ್ಯ ಸರ್ಕಾರ ತನಿಖೆಗಿಂತ ಹೆಚ್ಚು ರಾಜಕಾರಣ ಮಾಡುತ್ತಿದೆ ಎಂದು ಅವರು ದೂರಿದ್ದಾರೆ.
eesanje/url_46_136_1.txt ADDED
@@ -0,0 +1,7 @@
 
 
 
 
 
 
 
 
1
+ ಬೆಳ್ತಂಗಡಿ ಪೊಲೀಸ್‌‍ ಠಾಣೆಗೆ ಬಂದು ವಿಚಾರಣೆಗೆ ಹಾಜರಾದ ಶಾಸಕ ಹರೀಶ್‌ ಪೂಂಜಾ
2
+ ಮಂಗಳೂರು,ಮೇ23-ಬೆಳ್ತಂಗಡಿಯಲ್ಲಿ ದಿನವಿಡೀ ನಡೆದ ಹೈಡ್ರಾಮಾ ಬಳಿಕ ಬಿಜೆಪಿ ಶಾಸಕ ಹರೀಶ್‌ ಪೂಂಜಾ ರಾತ್ರಿಯೇ ಬೆಳ್ತಂಗಡಿ ಪೊಲೀಸ್‌‍ ಠಾಣೆಗೆ ಬಂದು ವಿಚಾರಣೆಗೆ ಹಾಜರಾದರು. ಶಾಸಕರ ವಿಚಾರಣೆ ನಡೆಸಿದ ಪೊಲೀಸರು, ಬಳಿಕ ಸ್ಟೇಷನ್‌ ಜಾಮೀನಿನಡಿ ಬಿಡುಗಡೆ ಮಾಡಿದ್ದಾರೆ. ಪೊಲೀಸರಿಗೆ ಧಮ್ಕಿ, ಬೆದರಿಕೆ ಪ್ರಕರಣ ಸಂಬಂಧ ಪೂಂಜಾ ಅವರನ್ನು ಬಂಧಿಸಲು ಬಂದಿದ್ದ ಪೊಲೀಸರು ಕೊನೆಗೆ ನೋಟಿಸ್‌‍ ನೀಡಿ ತೆರಳಿದ್ದರು.
3
+ ಶಾಸಕ ಹರೀಶ್‌ ಪೂಂಜಾ ಅವರನ್ನು ಬಂಧಿಸಬೇಕೆಂದು ಬೆಳಗ್ಗೆಯಿಂದಲೇ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ಪೊಲೀಸರು ಠಿಕಾಣಿ ಹೂಡಿದ್ದರು. ಕೊನೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍ ನೀಡಿ ವಾಪಸಾಗಿದ್ದರು. ಬಳಿಕ ರಾತ್ರಿ 9.30ರ ಸುಮಾರಿಗೆ ಶಾಸಕ ಹರೀಶ್‌ ಪೂಂಜಾ ಪೊಲೀಸ್‌‍ ಠಾಣೆಗೆ ಹಾಜರಾಗಿದ್ದಾರೆ.
4
+ ಶಾಸಕ ಹರೀಶ್‌ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ಠಾಣೆಗೆ ಕರೆತರಲು ಬೆಳ್ತಂಗಡಿ ಠಾಣೆ ಪೊಲೀಸರು ಅವರ ಮನೆಗೆ ತೆರಳಿದ್ದರು. ಈ ವೇಳೆ ಸ್ಥಳದಲ್ಲಿದ್ದ ದಕ್ಷಿಣ ಕನ್ನಡ ಸಂಸದ ನಳೀನ್‌ ಕುಮಾರ್‌ ಕಟೀಲ್‌ ಅವರು, ತಾನೇ ಖುದ್ದಾಗಿ ಹರೀಶ್‌ ಪೂಂಜಾರನ್ನು ವಿಚಾರಣೆಗೆ ಠಾಣೆಗೆ ಕಳುಹಿಸುವುದಾಗಿ ವಿನಂತಿಸಿಕೊಂಡಿದ್ದರು. ಹಾಗೂ ಅದರಂತೆ ಸಂಸದರು ಆರೋಪಿತರಾದ ಹರೀಶ್‌ ಪೂಂಜಾರನ್ನು ಪೊಲೀಸ್‌‍ ಠಾಣೆಗೆ ಕಳುಹಿಸಿದ್ದರು.ಬಳಿಕ ಠಾಣೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್‌ ಪೂಂಜ ಅವರ ವಿಚಾರಣೆ ನಡೆಸಲಾಗಿದೆ.
5
+ ಬೆಳ್ತಂಗಡಿ ಠಾಣೆ 58/2024, ಕಲಂ: 143, 147, 341, 504, 506 ಜೊತೆಗೆ 149 ಐಪಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್‌ ಪೂಂಜಾರನ್ನು ವಿಚಾರಣೆ ನಡೆಸಿ, ಸ್ಟೇಷನ್‌ ಜಾಮೀನಿನಡಿ ಬಿಡುಗಡೆ ಮಾಡಲಾಗಿದೆ.ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಶಾಸಕ ಪೂಂಜಾ ಅವರು, ಪೊಲೀಸರ ಮೇಲೆ ಹೆಚ್ಚಿನ ದೌಜನ್ಯ ಮಾಡಿರುವುದು ಕಾಂಗ್ರೆಸ್‌‍. ಬಿಜೆಪಿ ನಾಯಕರಿಗೆ ಬುದ್ದಿ ಹೇಳುವ ಅವಶ್ಯಕತೆ ಇಲ್ಲ.
6
+ ತುರ್ತು ಪರಿಸ್ಥಿತಿಯಿಂದ ಹಿಡಿದು ಅವತ್ತಿನಿಂದ ಇವತ್ತಿನ ವರೆಗೆ ಪೊಲೀಸರನ್ನು ಹಿಡಿದುಕೊಂಡು ಕಾಂಗ್ರೆಸ್‌‍ ದೌರ್ಜನ್ಯ ಮಾಡುತ್ತಿದೆ. ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಕಾಂಗ್ರೆಸ್‌‍ ಪ್ರತಿಭಟನೆ ಮಾಡುತ್ತಿಲ್ಲವಾ? ಆವಾಗ ಯಾವ ನ್ಯಾಯ ಕಾನೂನು ಇತ್ತು. ಬಿಜೆಪಿ ಕಾರ್ಯಕರ್ತನಿಗೆ ಅನ್ಯಾಯ ಆದಾಗ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಇದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
7
+ ಒಬ್ಬ ಅಮಾಯಕನ ಬಂಧನವಾಗಿದೆ. ಆತ ಬಿಜೆಪಿಯಲ್ಲಿ ಮುಂಚೂಣಿಯಲ್ಲಿದ್ದಾನೆ ಎಂದು ಬಂಧಿಸಿದ್ದಾರೆ. ಅದನ್ನು ನಾನು ಜನಪ್ರತಿನಿಧಿಯಾಗಿ ಖಂಡಿಸಿರುವುದು. ದ್ವೇಷದ ರಾಜಕಾರಣ ಮಾಡಿದರೆ ಒಪುವುದಿಲ್ಲ ಎಂದು ಪೊಲೀಸರ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಅದನ್ನೇ ನೆಪವಾಗಿ ಇಟ್ಟು ಮೂರು ಕೇಸ್‌‍ ಹಾಕಿದ್ದಾರೆ. ಅಧಿಕಾರಕ್ಕೆ ನಾನು ಪೊಲೀಸರಿಗೆ ಬೈದಿಲ್ಲ. ಸಿದ್ದರಾಮಯ್ಯ ಅಧಿಕಾರಕ್ಕಾಗಿ ಪೊಲೀಸ್‌‍ ಅಧಿಕಾರಿ ಶಂಕರ್‌ ಬಿದರಿ ಕಾಲರ್‌ ಪಟ್ಟಿ ಹಿಡಿದಿಲ್ಲವೇ? ಕಾರ್ಯಕರ್ತರ ಶಕ್ತಿಗಾಗಿ ಪೊಲೀಸರಿಗೆ ಬೈದದ್ದು ಅಧಿಕಾರಕ್ಕಾಗಿ ಅಲ್ಲ ಎಂದು ಸ್ಪಷ್ಟಪಡಿಸಿದರು.
eesanje/url_46_136_10.txt ADDED
@@ -0,0 +1,5 @@
 
 
 
 
 
 
1
+ ಮೇಲ್ಮನೆ ಒಂದು ಸ್ಥಾನಕ್ಕೆ ಜೆಡಿಎಸ್‌‍ನಿಂದ ನಾಲ್ವರು ಆಕಾಂಕ್ಷಿಗಳು
2
+ ಬೆಂಗಳೂರು, ಮೇ 23-ವಿಧಾನಸಭೆಯಿಂದ ವಿಧಾನಪರಿಷತ್‌ನ 11 ಸದಸ್ಯ ಸ್ಥಾನಗಳಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ಜೆಡಿಎಸ್‌‍ನಿಂದ ಸ್ಪರ್ಧಿಸಲು ನಾಲ್ವರು ಪ್ರಬಲ ಆಕಾಂಕ್ಷಿಗಳಿದ್ದಾರೆ.
3
+ ಜೂನ್‌ 17 ರಂದು ನಿವೃತ್ತಿಯಿಂದ ತೆರವಾಗಲಿರುವ 11 ಸದಸ್ಯರಲ್ಲಿ ಜೆಡಿಎಸ್‌‍ನ ಬಿ.ಎಂ.ಫಾರುಕ್‌ ಅವರು ಇದ್ದಾರೆ. ಈ ಚುನಾವಣೆಯಲ್ಲಿ ಜೆಡಿಎಸ್‌‍ ಒಂದು ಸ್ಥಾನವನ್ನು ಸುಲಭವಾಗಿ ಗೆಲ್ಲಬಹುದಾಗಿದೆ.
4
+ ವಿಧಾನಸಭೆಯಲ್ಲಿ 19 ಶಾಸಕರನ್ನು ಹೊಂದಿರುವ ಜೆಡಿಎಸ್‌‍ ಒಂದು ಸ್ಥಾನ ಮಾತ್ರ ಪಡೆಯಲಷ್ಟೇ ಸಾಧ್ಯವಾಗಲಿದೆ. ಹೀಗಾಗಿ ಒಂದು ಸ್ಥಾನಕ್ಕೆ ನಾಲ್ವರು ಆಕಾಂಕ್ಷಿಗಳು ಇದ್ದಾರೆ. ವಿಧಾನಪರಿಷತ್‌ ಸದಸ್ಯ ಬಿ.ಎಂ.ಫಾರುಕ್‌ ಮರು ಆಯ್ಕೆ ಬಯಸುತ್ತಿದ್ದರೆ, ರಾಜ್ಯಸಭಾ ಮಾಜಿ ಸದಸ್ಯ ಕುಪೇಂದ್ರರೆಡ್ಡಿ, ವಿಧಾನಪರಿಷತ್‌ ಮಾಜಿ ಸದಸ್ಯ ಎಚ್‌.ಎಂ.ರಮೇಶ್‌ಗೌಡ ಹಾಗೂ ಪಕ್ಷದ ಮುಖಂಡ ಟಿ.ಎನ್‌.ಜವರಾಯೇಗೌಡ ಅವರು ಜೆಡಿಎಸ್‌‍ ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ.
5
+ ಜೂನ್‌ 13 ರಂದು ವಿಧಾನಪರಿಷತ್‌ನ 11 ಸ್ಥಾನಗಳ ಆಯ್ಕೆಗಾಗಿ ನಡೆಯುವ ಚುನಾವಣೆಗೆ ಮೇ 27 ರಂದು ಅಧಿಸೂಚನೆ ಹೊರಬೀಳಲಿದೆ.ಜೂನ್‌ 3 ರವರೆಗೂ ಉಮೇದುವಾರಿಕೆ ಸಲ್ಲಿಸಲು ಕಾಲಾವಕಾಶವಿದೆ. ಹೀಗಾಗಿ ಅಭ್ಯರ್ಥಿ ಆಯ್ಕೆ ಕುರಿತಂತೆ ಜೆಡಿಎಸ್‌‍ನಲ್ಲಿ ಸದ್ಯಕ್ಕೆ ಯಾವುದೇ ಸಭೆಯೂ ನಡೆದಿಲ್ಲ. ಮುಂದಿನ ವಾರ ಅಭ್ಯರ್ಥಿ ಆಯ್ಕೆ ಕುರಿತ ಸಭೆ ನಡೆಯಲಿದ್ದು, ಈ ನಾಲ್ವರಲ್ಲಿ ಒಬ್ಬರಿಗೆ ಅವಕಾಶ ಸಿಗಲಿದೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ.
eesanje/url_46_136_11.txt ADDED
@@ -0,0 +1,6 @@
 
 
 
 
 
 
 
1
+ ಕಡಿಮೆಯಾಯ್ತು ಮಳೆ, ಮತ್ತೆ ಹೆಚ್ಚಾಯ್ತು ತಾಪಮಾನ
2
+ ಬೆಂಗಳೂರು, ಮೇ 22-ರಾಜ್ಯದಲ್ಲಿ ಮೇ 24ರ ನಂತರ ಮಳೆಯ ಪ್ರಮಾಣ ಇಳಿಕೆಯಾಗಲಿದ್ದು, ಮತ್ತೆ ತಾಪಮಾನದಲ್ಲಿ ಏರಿಕೆ ಕಂಡುಬರುವ ಮುನ್ಸೂಚನೆಗಳಿವೆ. ಕಳೆದ ಎರಡು ವಾರಗಳಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಅದರಲ್ಲಿ ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ.
3
+ ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೆರೆಡು ದಿನ ಕರಾವಳಿ, ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳಿದ್ದು, ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಕೇರಳ ಭಾಗದಲ್ಲಿ ಮೇಲೈ ಸುಳಿಗಾಳಿ ಉಂಟಾಗಿರುವುದರಿಂದ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್‌ ಅನ್ನು ಹವಾಮಾನ ಇಲಾಖೆ ಘೋಷಿಸಿದೆ.
4
+ ಅಲ್ಲದೆ ಅರಬ್ಬಿಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ಸಂದೇಶ ನೀಡಲಾಗಿದೆ. ಬೆಂಗಳೂರು, ಮಂಡ್ಯ, ರಾಮನಗರ, ಮಂಡ್ಯ, ಮೈಸೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಕೆಲವೆಡೆ ವ್ಯಾಪಕ ಪ್ರಮಾಣದ ಮಳೆಯಾಗಿದ್ದರೆ, ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗಿದೆ.
5
+ ಹವಾಮಾನ ಮುನ್ಸೂಚನೆ ಪ್ರಕಾರ ಉತ್ತರ ಕನ್ನಡ ಭಾಗದಲ್ಲಿ ಕೆಲವೆಡೆ ಹಗರುದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕರ್ನಾಟಕದಲ್ಲಿ ಹಗುರದಿಂದ ಸಾಧಾರಣ ಮಳೆ ಹಲವೆಡೆ ಬೀಳುವ ಸಾಧ್ಯತೆಗಳು ಹೆಚ್ಚಾಗಿವೆ.ಮೇ 24 ರ ನಂತರ ಮಳೆ ಕಡಿಮೆಯಾಗಲಿದ್ದು, ಒಣಹವೆ ಕಂಡುಬರುತ್ತದೆ. ಇದರಿಂದ ತಾಪಮಾನದಲ್ಲಿ ಮತ್ತೆ ಹೆಚ್ಚಳ ಕಂಡುಬರಲಿದೆ. ನೈರುತ್ಯ ಮುಂಗಾರು ಮಾಸಾಂತ್ಯಕ್ಕೆ ಆರಂಭವಾಗುವ ಸಾಧ್ಯತೆಗಳಿರುವುದರಿಂದ ಈ ರೀತಿಯ ಬದಲಾವಣೆ ಸಹಜ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
6
+ ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.
eesanje/url_46_136_12.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಭಾರೀ ಕುತೂಹಲ ಕೆರಳಿಸಿದೆ ಸಿಎಂ-ಡಿಸಿಎಂ ಆಯೋಜಿಸಿರುವ ಸಚಿವರ ಔತಣಕೂಟ
2
+ ಬೆಂಗಳೂರು, ಮೇ 22-ಸಚಿವ ಸಂಪುಟದ ಎಲ್ಲಾ ಸಚಿವರಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಔತಣಕೂಟ ಆಯೋಜಿಸಿರುವುದು ಭಾರೀ ಕುತೂಹಲ ಕೆರಳಿಸಿದೆ.
3
+ ರಾಜ್ಯಸರ್ಕಾರ ಒಂದು ವರ್ಷ ಪೂರೈಸಿರುವುದು, ಲೋಕಸಭಾ ಚುನಾವಣೆ ಮುಗಿದ ಹಿನ್ನೆಲೆಯಲ್ಲಿ ಜೊತೆಗೆ ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಸಂಸದ ಡಿ.ಕೆ.ಸುರೇಶ್‌ ಅವರ ಮನೆಯಲ್ಲಿ ಇಂದು ಸಂಜೆ ಔತಣಕೂಟ ಆಯೋಜಿಸಲಾಗಿದೆ. ಸಂಪುಟದ ಎಲ್ಲಾ ಸಚಿವರಿಗೆ ಹಾಗೂ ಪ್ರಮುಖ ನಾಯಕರಿಗೆ ಆಹ್ವಾನ ನೀಡಲಾಗಿದೆ.
4
+ ರಾಜ್ಯಸರ್ಕಾರಕ್ಕೆ ಒಂದು ವರ್ಷ ಪೂರ್ಣಗೊಂಡಿದ್ದು, ಯಶಸ್ವಿ ಆಡಳಿತ ನಡೆಸಲಾಗಿದೆ. ಪಂಚಖಾತ್ರಿಗಳ ಜಾರಿ ಸೇರಿದಂತೆ ಹಲವು ಮೈಲಿಗಲ್ಲುಗಳನ್ನು ರಾಜ್ಯಸರ್ಕಾರ ದಾಟಿದೆ. ಜೊತೆಗೆ ಲೋಕಸಭಾ ಚುನಾವಣೆಯಲ್ಲಿ ಸಚಿವರು ಉಸ್ತುವಾರಿ ವಹಿಸಿಕೊಂಡು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಔತಣಕೂಟವನ್ನು ಏರ್ಪಡಿಸಲಾಗಿದೆ.
5
+ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಬ್ಬರೂ ಸಚಿವರಿಗೆ ಆಹ್ವಾನ ನೀಡಿದ್ದಾರೆ. ಔತಣಕೂಟದಲ್ಲಿ ಪ್ರಸಕ್ತ ರಾಜಕೀಯ ಬೆಳವಣಿಗೆಯ ಬಗ್ಗೆ ಚರ್ಚೆ ನಡೆಯಲಿದೆ. ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ಕಾಂಗ್ರೆಸ್‌‍ ಪಕ್ಷವನ್ನು ಬಿಜೆಪಿ ಹಾಗೂ ಜೆಡಿಎಸ್‌‍ ನಾಯಕರು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿದ್ದಾರೆ.
6
+ ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡುವಲ್ಲಿ ಕಾಂಗ್ರೆಸ್‌‍ ವೈಫಲ್ಯಗಳು ಕಂಡುಬಂದಿವೆ. ಹೀಗಾಗಿ ಅಪಪ್ರಚಾರಗಳು ವೈಭವೀಕರಿಸಿದ್ದು, ಅವುಗಳನ್ನು ಸಮರ್ಥವಾಗಿ ನಿಭಾಯಿಸಲು ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
7
+ ಲೋಕಸಭಾ ಚುನಾವಣೆ ಫಲಿತಾಂಶದ ಕುರಿತು ಸಭೆಯಲ್ಲಿ ಚರ್ಚೆಗಳು ನಡೆಯಲಿವೆ. ಯಾವ ಯಾವ ಕ್ಷೇತ್ರಗಳಲ್ಲಿ ಕಾಂಗ್ರೆಸ್‌‍ ಗೆಲ್ಲುವ ಸಾಧ್ಯತೆಯಿದೆಯೋ, ಹಿನ್ನಡೆಯಾಗುವ ಕ್ಷೇತ್ರಗಳಾವುವು, ಅದಕ್ಕೆ ಕಾರಣಗಳೇನು? ಎಂಬ ಬಗ್ಗೆಯೂ ಸಮಾಲೋಚನೆ ನಡೆಯಲಿದೆ ಎಂದು ತಿಳಿದುಬಂದಿದೆ.
8
+ ಮುಂದಿನ ದಿನಗಳಲ್ಲಿ ಇಲಾಖಾವಾರು ಸಾಧನೆಗಳ ಬಗ್ಗೆ ಕೂಡ ಚರ್ಚೆಯಾಗಲಿದೆ. ಕಳೆದ ಬಜೆಟ್‌ನಲ್ಲಿ ಹಲವಾರು ಯೋಜನೆಗಳನ್ನು ಪ್ರಕಟಿಸಲಾಗಿದೆ. ಆದರೆ ಅವುಗಳಿಗೆ ಈವರೆಗಿನ ಅಧಿಕೃತ ಆದೇಶ ಜಾರಿಯಾಗಿಲ್ಲ. ಅನುದಾನದ ಕೊರತೆ ಪ್ರಮುಖ ಕಾರಣವಾಗಿದ್ದರೆ, ಲೋಕಸಭಾ ಚುನಾವಣೆ ನೀತಿ ಸಂಹಿತೆ ಮತ್ತೊಂದು ಕಾರಣವಾಗಿತ್ತು.
9
+ ಹೀಗಾಗಿ ಮುಂದಿನ ದಿನಗಳಲ್ಲಿ ಎಲ್ಲಾ ಸಚಿವರು ಆಯಾ ಇಲಾಖೆಗಳಿಗೆ ಸಂಬಂಧಪಟ್ಟ ಅಧಿಸೂಚನೆಗಳನ್ನು ಹಾಗೂ ಆಡಳಿತಗಳನ್ನು ಹೊರಡಿಸಬೇಕೆಂದು ಮುಖ್ಯಮಂತ್ರಿ ಸೂಚಿಸಲಿದ್ದಾರೆ.
10
+ ಚುನಾವಣಾ ನೀತಿ ಸಂಹಿತೆ ಇನ್ನೂ 15 ದಿನಗಳ ಕಾಲ ಚಾಲ್ತಿಯಲ್ಲಿರಲಿದೆ. ಆವರೆಗೂ ಆಡಳಿತವನ್ನು ನಿಷ್ಕ್ರಿಯವಾಗಿಡಲು ಸಾಧ್ಯವಿಲ್ಲ. ಹೀಗಾಗಿ ಸಚಿವರು ಕಾಲಕಾಲಕ್ಕೆ ಅಧಿಕ���ರಿಗಳಿಂದ ಪ್ರಗತಿ ಪರಿಶೀಲನೆಯ ಮಾಹಿತಿ ಪಡೆದುಕೊಳ್ಳಬೇಕು, ಸೂಚನೆಗಳನ್ನು ನೀಡಿ ಆಡಳಿತವನ್ನು ಜನಪರವಾಗಿ ಚುರುಕುಗೊಳಿಸಬೇಕೆಂದು ಸೂಚಿಸಲು ಮುಖ್ಯಮಂತ್ರಿ ನಿರ್ಧರಿಸಲಿದ್ದಾರೆ.
11
+ ಸಂಜೆ ನಡೆಯುವ ಸಭೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ತಯಾರಿ ಬಗ್ಗೆ ಕೂಡ ಚರ್ಚೆಯಾಗಲಿದ್ದು, ಬಿಬಿಎಂಪಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳ ಕಾರ್ಯಕರ್ತರು ಸಜ್ಜುಗೊಳಿಸಲು ಚರ್ಚೆಯಾಗಲಿದೆ.ಇದೇ ವೇಳೆ ಆರ್‌ಸಿಬಿ ಹಾಗೂ ಆರ್‌ಆರ್‌ ತಂಡಗಳ ಐಪಿಎಲ್‌ ಮ್ಯಾಚ್‌ಗಳು ಕೂಡ ಇದ್ದು, ಅದನ್ನು ವೀಕ್ಷಿಸಲು ವ್ಯವಸ್ಥೆ ಕಲ್ಪಿಸಲಾಗಿದೆ.
12
+ ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ ಎಂದು ಮುಖ್ಯಮಂತ್ರಿ ಈಗಾಗಲೇ ಹೇಳಿಕೆ ನೀಡಿದ್ದಾರೆ. ಆದರೆ ಹೈಕಮಾಂಡ್‌ನ ನಿರ್ಧಾರಗಳಲ್ಲಿ ಕುತೂಹಲಗಳಿವೆ. ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಬದಲಾವಣೆಯ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ.
eesanje/url_46_136_2.txt ADDED
@@ -0,0 +1,8 @@
 
 
 
 
 
 
 
 
 
1
+ ವಿಧಾನಪರಿಷತ್ ಚುನಾವಣೆ : ಬಿಜೆಪಿ-ಜೆಡಿಎಸ್‌‍ ಮೈತ್ರಿ ಪ್ರಚಾರ ಆರಂಭ
2
+ ಬೆಂಗಳೂರು,ಮೇ23-ಜೂನ್‌ 3ರಂದು ನಡೆಯಲಿರುವ ಮೂರು ಶಿಕ್ಷಕ ಕ್ಷೇತ್ರ ಮತ್ತು ಮೂರು ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳನ್ನೂ ಗೆಲ್ಲಲು ಬಿಜೆಪಿ ಮತ್ತು ಜೆಡಿಎಸ್‌‍ ಮೈತ್ರಿ ನಾಯಕರು ನಿರ್ಧರಿಸಿದ್ದು, ಪ್ರಚಾರ ಕಾರ್ಯಾರಂಭಿಸಿದ್ದಾರೆ.ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಂಡಾಯ ಹೊರತುಪಡಿಸಿದರೆ ಇತರ ಐದು ಕ್ಷೇತ್ರಗಳಲ್ಲಿ ಮೈತ್ರಿಕೂಟ ನಿರಾತಂಕವಾಗಿ ಚುನಾವಣೆ ಎದುರಿಸುತ್ತಿದೆ. ಕೇಸರಿ ನಾಯಕರು, ದಳಪತಿಗಳು ಒಟ್ಟಾಗಿ ಸ್ಥಳೀಯ ಮಟ್ಟದಿಂದಲೇ ಚುನಾವಣೆಗೆ ಬೇಕಾದ ಸಿದ್ಧತೆಯಲ್ಲಿ ತೊಡಗಿದ್ದಾರೆ.
3
+ ಶಿಕ್ಷಕರ ಮತ್ತು ಪದವೀಧರ ಸೇರಿ ಎಲ್ಲಾ ಆರು ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ ಮಾಡಲಾಗಿದೆ. ಆರು ಕ್ಷೇತ್ರಗಳಲ್ಲಿ ಬಿಜೆಪಿ ನಾಲ್ಕು ಮತ್ತು ಜೆಡಿಎಸ್‌‍ ಎರಡು ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೂ ಕೂಡ ಮಿತ್ರಪಕ್ಷದ ನೆರವಿಗೆ ಪರಸ್ಪರ ನಾಯಕರು ಮುಂದಾಗಿದ್ದಾರೆ. ಅದರ ಭಾಗವಾಗಿ ಬಿಜೆಪಿಯು ಜೆಡಿಎಸ್‌‍ ಅಭ್ಯರ್ಥಿಗಳ ಕ್ಷೇತ್ರಕ್ಕೂ ಉಸ್ತುವಾರಿಗಳನ್ನು ನಿಯೋಜಿಸಿ ಚುನಾವಣೆಗೆ ಅಗತ್ಯ ಸಹಕಾರ ನೀಡಿದೆ.
4
+ ಈಶಾನ್ಯ ಪದವೀಧರ ಕ್ಷೇತ್ರ:ವಿಪಕ್ಷ ಮುಖ್ಯ ಸಚೇತಕ ರವಿಕುಮಾರ್, ನೈಋತ್ಯ ಪದವೀಧರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‌ ಕುಮಾರ್‌ (ಉಸ್ತುವಾರಿ), ವಿಧಾನಪರಿಷತ್‌ ಸದಸ್ಯ ಡಿ.ಎಸ್‌‍.ಅರುಣ್‌ (ಸಹ ಉಸ್ತುವಾರಿ) ಆಗಿದ್ದು, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವಿಧಾನಪರಿಷತ್‌ ಸದಸ್ಯ ಕೆ.ಎಸ್‌‍.ನವೀನ್‌‍, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ ಅವರನ್ನು ಉಸ್ತುವಾರಿಗಳನ್ನಾಗಿ ಬಿಜೆಪಿ ನೇಮಿಸಿದೆ.
5
+ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್‌.ಅಶೋಕ್‌‍, ಹಿರಿಯ ನಾಯಕ ಬಿ.ಎಸ್‌‍.ಯಡಿಯೂರಪ್ಪ, ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಸೇರಿದಂತೆ ಹಿರಿಯ ನಾಯಕರು ಮತ್ತು ಆಯಾ ಕ್ಷೇತ್ರಗಳ ಪ್ರಮುಖ ನಾಯಕರು ಎನ್‌‍ಡಿಎ ಮೈತ್ರಿಕೂಟದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ.
6
+ ಜೆಡಿಎಸ್‌‍ ರಾಜ್ಯಾಧ್ಯಕ್ಷ ಹೆಚ್‌.ಡಿ.ಕುಮಾರಸ್ವಾಮಿ, ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಹಿರಿಯ ನಾಯಕರಾದ ಸಾ.ರಾ.ಮಹೇಶ್‌‍, ಸಿಎಸ್‌‍ ಪುಟ್ಟರಾಜು ಸೇರಿದಂತೆ ಹಲವು ನಾಯಕರು ಜೆಡಿಎಸ್‌‍ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದು, ಸ್ಥಳೀಯ ನಾಯಕರು ಬಿಜೆಪಿ ನಾಯಕರ ಜೊತೆ ಕೈಜೋಡಿಸಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧೆ ಮಾಡಿರುವ ಕಡೆ ಪ್ರಚಾರ ಮಾಡುತ್ತಿದ್ದಾರೆ.
7
+ ಕುಮಾರಸ್ವಾಮಿ ಕೂಡ ಮೈತ್ರಿಕೂಟದ ನಾಯಕರಾಗಿ ಬಿಜೆಪಿ ಅಭ್ಯರ್ಥಿಗಳ ಪ�� ಪ್ರಚಾರ ನಡೆಸಲಿದ್ದಾರೆ. ಜೆಡಿಎಸ್‌‍ ಪಾಲಿನ ಎರಡು ಕ್ಷೇತ್ರಗಳಿಗೆ ಉಸ್ತುವಾರಿಗಳ ನೇಮಿಸಿ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ.
8
+ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ನಾಯಕರಾದ ಸಾ.ರಾ.ಮಹೇಶ್‌‍, ಸಿ.ಎಸ್‌‍.ಪುಟ್ಟರಾಜುಗೆ ಉಸ್ತುವಾರಿ ವಹಿಸಿದ್ದು, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಶಾಸಕಿ ಶಾರದಾ ಪೂರ್ಯಾ ನಾಯ್ಕ, ವೈಎಸ್ವಿ ದತ್ತಾ ಸೇರಿ ಇತರರಿಗೆ ಜವಾಬ್ದಾರಿ ವಹಿಸಲಾಗಿದೆ. ಕ್ಷೇತ್ರದಲ್ಲೇ ಬೀಡುಬಿಟ್ಟಿರುವ ನಾಯಕರು ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದಾರೆ.
eesanje/url_46_136_3.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಸಭಾಪತಿ ಮತ್ತು ಉಪಸಭಾಪತಿ ಸ್ಥಾನ ಉಳಿಸಿಕೊಳ್ಳಲು ಮಿತ್ರಪಕ್ಷಗಳ ಮಾಸ್ಟರ್‌ ಪ್ಲಾನ್‌
2
+ ಬೆಂಗಳೂರು,ಮೇ23-ವಿಧಾನಸಭೆಯಲ್ಲಿ ಪ್ರಚಂಡ ಬಹುಮತದೊಂದಿಗೆ ಕಾಂಗ್ರೆಸ್‌‍ ಅಧಿಕಾರದಲ್ಲಿದ್ದರೂ ವಿಧಾನಪರಿಷತ್‌‍ನಲ್ಲಿ ಬಿಜೆಪಿ ಮತ್ತು ಜೆಡಿಎಸ್‌‍ ಮೈತ್ರಿಕೂಟ ಬಹುಮತದೊಂದಿಗೆ ಸಭಾಪತಿ ಮತ್ತು ಉಪಸಭಾಪತಿ ಸ್ಥಾನವನ್ನು ಪಡೆದುಕೊಂಡಿದೆ.
3
+ ಆದರೆ ಶಿಕ್ಷಕರ, ಪದವೀಧರರ ಕ್ಷೇತ್ರದ ಚುನಾವಣೆ ಹಾಗೂ ವಿಧಾನಸಭೆಯಿಂದ ವಿಧಾನಪರಿಷತ್‌‍ಗೆ ಈಗ ನಡೆಯುತ್ತಿರುವ ಚುನಾವಣೆಯಲ್ಲಿ ಮೈತ್ರಿಕೂಟದ ಬಹುಮತಕ್ಕೆ ತಡೆಯೊಡ್ಡಲು ಆಡಳಿತರೂಢ ಕಾಂಗ್ರೆಸ್‌‍ ಮುಂದಾಗಿದೆ. ಅದೇ ರೀತಿ ತಮ್ಮ ಬಹುಮತ ಉಳಿಸಿಕೊಳ್ಳಲು ಮಿತ್ರಪಕ್ಷಗಳ ಕೂಟ ಮಾಸ್ಟರ್‌ ಪ್ಲಾನ್‌ ಮಾಡುತ್ತಿದೆ.
4
+ 75 ಸದಸ್ಯ ಬಲ ಹೊಂದಿರುವ ವಿಧಾನಪರಿಷತ್‌‍ನಲ್ಲಿ ಬಿಜೆಪಿ 35, ಕಾಂಗ್ರೆಸ್‌‍ 29, ಜೆಡಿಎಸ್‌‍ 8, ಸಭಾಪತಿ 1, ಪಕ್ಷೇತರ 1 ಸ್ಥಾನ ಹೊಂದಿದ್ದು, 1 ಸ್ಥಾನ ಖಾಲಿ ಇದೆ. ಜಗದೀಶ್‌ ಶೆಟ್ಟರ್‌ ರಾಜೀನಾಮೆ ನೀಡಿದ್ದರಿಂದ ಆ ಸ್ಥಾನ ಸದ್ಯಕ್ಕೆ ಖಾಲಿ ಇದೆ. ಈಗ ಚುನಾವಣೆ ನಡೆಯುತ್ತಿಲ್ಲ. ಈಗ ನಡೆಯುತ್ತಿರುವ ಚುನಾವಣೆಯ ಸ್ಥಾನಗಳನ್ನು ಕಳೆದು ಚುನಾವಣೆಯಲ್ಲಿ ಗಳಿಸುವ ಸ್ಥಾನಗಳ ಆಧಾರದಲ್ಲಿ ಸಭಾಪತಿ ಸ್ಥಾನದ ಭವಿಷ್ಯವೂ ನಿರ್ಧಾರವಾಗಲಿದೆ.
5
+ ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಂದುವರೆಯುತ್ತಾರಾ ಅಥವಾ ಆಡಳಿತ ಪಕ್ಷಕ್ಕೆ ಸಭಾಪತಿ ಸ್ಥಾನ ಸಿಗಲಿದೆಯಾ ಎನ್ನುವುದೂ ಫಲಿತಾಂಶದ ಮೇಲೆ ಅವಲಂಭಿತವಾಗಿದೆ. ಆಯನೂರು ಮಂಜುನಾಥ್‌‍, ತೇಜಸ್ವಿನಿಗೌಡ, ಮರಿತಿಬ್ಬೇಗೌಡರು ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಆ ಸ್ಥಾನಗಳಿಗೂ ಈ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆ ಸ್ಥಾನಗಳಲ್ಲಿ ಖಾಲಿ ಎಂದು ಈಗ ಪರಿಗಣಿಸುವ ಅಗತ್ಯವಿಲ್ಲ. ಚುನಾವಣೆ ನಡೆಯದೇ ಇರುವುದು ಜಗದೀಶ್‌ ಶೆಟ್ಟರ್‌ ಸ್ಥಾನಕ್ಕೆ ಮಾತ್ರ. ಹಾಗಾಗಿ ಒಂದು ಸ್ಥಾನ ಖಾಲಿ ಇದೆ ಎನ್ನಬಹುದಾಗಿದೆ.
6
+ 75 ಸದಸ್ಯ ಬಲ ಈಗ 74 ಆಗಲಿದೆ. ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿ ವಿಚಾರದಲ್ಲಿ ಬರುವುದಾದರೆ ಈಗಿರುವ 35 ಸ್ಥಾನಗಳಲ್ಲಿ ಶಿಕ್ಷಕರ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಪಾಲಿನ ಮೂರು ಸ್ಥಾನಕ್ಕೆ ಚುನಾವಣೆ ಎದುರಾಗಿದೆ. ಹಾಗಾಗಿ 35 ಸದಸ್ಯ ಬಲ 32 ಆಗಲಿದೆ. ಜೊತೆಗೆ ವಿಧಾನಸಭೆಯಿಂದ ವಿಧಾನ ಪರಿಷತ್‌‍ಗೆ ನಡೆಯುವ 11 ಸ್ಥಾನಗಳ ಚುನಾವಣೆಯಲ್ಲಿ ಬಿಜೆಪಿಯ 6 ಸದಸ್ಯರಿದ್ದರು. ಅವರ ಸಂಖ್ಯೆ ಕಳೆದರೆ ಸದಸ್ಯ ಬಲ 26 ಆಗಲಿದೆ. ವಿಧಾನಸಭೆಯಿಂದ ವಿಧಾನ ಪರಿಷತ್‌‍ಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಮೂರು ಸ್ಥಾನಗಳನ್ನು ಸಂಖ್ಯಾಬಲದ ಆಧಾರದಲ್ಲಿ ದಕ್ಕಿಸಿಕೊಳ್ಳಲಿದೆ.
7
+ ಹಾಗಾಗಿ ಬಿಜೆಪಿ ಸಂಖ್ಯೆ 29 ಆಗಲಿದೆ. ಶಿಕ್ಷಕರು ಮತ್ತು ಪದವೀಧರ ಕ್ಷೇತ್ರದಲ್ಲಿ ಎಷ್ಟು ಸ್ಥಾನ ಬರಲಿವೆ ಎನ್ನುವುದನ್ನು ಕಾದು ನೋಡಬೇಕಿದೆ.ಇನ್ನು, ಮಿತ್ರ ಪಕ್ಷ ಜೆಡಿಎಸ್‌‍ ವಿಚಾರಕ್ಕೆ ಬರುವುದಾದಲ್ಲಿ 8 ಜನರ ಸದಸ್ಯ ಬಲವನ್ನು ಹ��ಂದಿದೆ. ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್‌‍ನ ಎರಡು ಸ್ಥಾನ ಇದ್ದು, ಅವುಗಳನ್ನು ಕಳೆದರೆ ಜೆಡಿಎಸ್‌‍ ಬಲ 6 ಆಗಲಿದೆ. ವಿಧಾನಸಭೆಯಿಂದ ವಿಧಾನ ಪರಿಷತ್‌‍ಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್‌‍ನ ಒಂದು ಸ್ಥಾನ ತೆರವಾದರೂ ಒಂದು ಸ್ಥಾನ ಸಂಖ್ಯಾಬಲದ ಆಧಾರದಲ್ಲಿ ಬರಲಿದೆ. ಹಾಗಾಗಿ ಸಂಖ್ಯೆ 6 ಆಗಿಯೇ ಉಳಿಯಲಿದೆ.
8
+ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಷ್ಟು ಸ್ಥಾನ ಬರಲಿವೆ ಎನ್ನುವುದರ ಮೇಲೆ ಅಂತಿಮವಾಗಿ ಜೆಡಿಎಸ್‌‍ ಬಲ ಎಷ್ಟು ಎಂದು ಗೊತ್ತಾಗಲಿದೆ.ಜೂನ್‌ 3ರಂದು ನಡೆಯುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯನ್ನು ಬಿಟ್ಟು ಪಕ್ಷದ ಬಲಾಬಲ ಬಿಜೆಪಿ-ಜೆಡಿಎಸ್‌‍ ಮೈತ್ರಿಗೆ 35 ಸ್ಥಾನ ಆಗಲಿದೆ. ಸಭಾಪತಿ ಸ್ಥಾನ ಸೇರಿದಲ್ಲಿ 36 ಆಗಲಿದೆ.
9
+ ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕನಿಷ್ಠ ಎರಡು ಸ್ಥಾನವನ್ನಾದರೂ ಬಿಜೆಪಿ ಮತ್ತು ಜೆಡಿಎಸ್‌‍ ಮೈತ್ರಿ ಗೆದ್ದರೆ ಸದ್ಯದ ಮಟ್ಟಿಗೆ ಮಿತ್ರಪಕ್ಷದ ಬಳಿಯೇ ಸಭಾಪತಿ ಸ್ಥಾನ ಇರಲಿದೆ. ಒಂದು ವೇಳೆ ಯಾವುದೇ ಸ್ಥಾನ ಗೆಲ್ಲದೇ ಹೋದಲ್ಲಿ, ಈಗಲೇ ಸಭಾಪತಿ ಸ್ಥಾನವನ್ನು ಬಸವರಾಜ ಹೊರಟ್ಟಿ ಕಳೆದಕೊಳ್ಳಬೇಕಾಗಲಿದೆ.
10
+ ಶ್ರೀಮಂತ ದೇವಾಲಯಗಳ ದೇಣಿಗೆ ಹಣವನ್ನು ಕಡಿಮೆ ಆದಾಯದ ದೇವಾಲಯಗಳಿಗೆ ಹಂಚಲು ಅವಕಾಶ ಕಲ್ಪಿಸುವ ಹಿಂದೂ ಧಾರ್ಮಿಕ ತಿದ್ದುಪಡಿ ವಿಧೇಯಕ ಒಳಗೊಂಡು ಹಲವು ಪ್ರಮುಖ ಶಾಸನಗಳ ರಚನೆಗೆ ಕಾಂಗ್ರೆಸ್‌‍ ಸರಕಾರಕ್ಕೆ ಮೇಲನೆಯಲ್ಲಿ ಹಿನ್ನಡೆಯಾಗಿತ್ತು.
11
+ ಕಳೆದ ಬಜೆಟ್‌ ಅಧಿವೇಶನದಲ್ಲಿ ಪ್ರಮುಖ ವಿಧೇಯಕಗಳಿಗೆ ಪರಿಷತ್‌‍ನಲ್ಲಿ ಸೋಲಾಗಿತ್ತು. ಮತ್ತೆ ಕೆಲವು ಸೆಲೆಕ್ಟ್‌ ಕಮಿಟಿಗೆ ಶಿಫಾರಸ್ಸಾಗಿದ್ದವು. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳಿಗೆ ಇರುವ ಅಸ್ತ್ರವೇ ಪರಿಷತ್‌ನಲ್ಲಿನ ಬಹುಮತವಾಗಿದೆ.
12
+ ಹಾಗಾಗಿ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಹಾಲಿ ಸ್ಥಾನಗಳನ್ನು ಉಳಿಸಿಕೊಳ್ಳಬೇಕು ಎನ್ನುವ ಟಾರ್ಗೆಟ್‌ ಇದ್ದರೂ ಬಿಜೆಪಿ ಕನಿಷ್ಠ 3 ಸ್ಥಾನ ಮತ್ತು ಒಂದು ಸ್ಥಾನವನ್ನು ಜೆಡಿಎಸ್‌‍ ಗೆಲ್ಲಬೇಕು ಎನ್ನುವ ಗುರಿ ಹಾಕಿಕೊಳ್ಳಲಾಗಿದೆ. ಅದಕ್ಕೆ ಬೇಕಾದ ಸಿದ್ಧತೆಗಳ ಕುರಿತು ಬಿಜೆಪಿ ನಾಯಕರು ಸಭೆ ನಡೆಸಿ ಕಾರ್ಯತಂತ್ರಗಳನ್ನು ರೂಪಿಸಿದ್ದಾರೆ
eesanje/url_46_136_4.txt ADDED
@@ -0,0 +1,5 @@
 
 
 
 
 
 
1
+ ರಾಜ್ಯದಲ್ಲಿನ ಕೆಲವು ಜಲಾಶಯಗಳ ಒಳಹರಿವು ಹೆಚ್ಚಳ
2
+ ಬೆಂಗಳೂರು, ಮೇ 23-ಮಲೆನಾಡು ಹಾಗೂ ಕೇರಳದ ವೈನಾಡು ಭಾಗದಲ್ಲಿ ಕಳೆದ ಕೆಲದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ರಾಜ್ಯದಲ್ಲಿನ ಕೆಲವು ಜಲಾಶಯಗಳ ಒಳಹರಿವು ಏರಿಕೆಯಾಗುತ್ತಿದೆ. ಮುಂಗಾರುಪೂರ್ವ ಮಳೆ ಸಾಕಷ್ಟು ಪ್ರಮಾಣದಲ್ಲಿ ಆಗುತ್ತಿರುವುದರಿಂದ ಬತ್ತಿದ ನದಿ, ಹಳ್ಳಕೊಳ್ಳಗಳಲ್ಲಿ ನೀರು ಹರಿಯಲಾರಂಭಿಸಿದೆ. ನಿಂತು ಹೋಗಿದ್ದ ಒಳಹರಿವಿನ ಪ್ರಮಾಣ ಮತ್ತೆ ಆರಂಭವಾಗಿದ್ದು, ಹೊಸ ಆಶಾಭಾವನೆಯನ್ನು ಜನರಲ್ಲಿ ಮೂಡಿಸುವಂತಾಗಿದೆ.
3
+ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿನ್ನೆಯ ಮಾಹಿತಿ ಪ್ರಕಾರ, ಲಿಂಗನಮಕ್ಕಿ ಜಲಾಶಯಕ್ಕೆ 1369 ಕ್ಯೂಸೆಕ್‌್ಸ ನೀರು ಹರಿದುಬರುತ್ತಿದೆ. ಜಲವಿದ್ಯುತ್‌ ಉತ್ಪಾದಿಸುವ ಮೂರು ಜಲಾಶಯಗಳಲ್ಲಿ ಒಟ್ಟು 1694 ಕ್ಯೂಸೆಕ್‌್ಸನಷ್ಟು ಒಳಹರಿವು ಕಂಡುಬಂದಿದೆ.
4
+ ಬೆಂಗಳೂರಿಗೆ ನೀರು ಪೂರೈಸುವ ಕಾವೇರಿ ಜಲಾನಯನ ಭಾಗದ ನಾಲ್ಕು ಜಲಾಶಯಗಳಲ್ಲಿ ಒಳಹರಿವು ಆರಂಭಗೊಂಡಿದೆ. ಒಟ್ಟಾರೆ 6 ಸಾವಿರ ಕ್ಯೂಸೆಕ್‌್ಸಗೂ ಹೆಚ್ಚಿನ ನೀರು ಜಲಾಶಯಗಳಿಗೆ ಬರುತ್ತಿದೆ. 6ನೇ ಜಲಾಶಯಕ್ಕೆ 400, ಹೇಮಾವತಿ ಜಲಾಶಯಕ್ಕೆ 2,800, ಕೆಆರ್‌ಎಸ್‌‍ಗೆ 1,400, ಕಬಿನಿ ಜಲಾಶಯಕ್ಕೆ 1,800 ಕ್ಯೂಸೆಕ್‌್ಸನಷ್ಟು ಒಳಹರಿವು ಬರುತ್ತಿದೆ.
5
+ ಇದೇ ರೀತಿ ಮಳೆ ಮುಂದುವರೆದರೆ ಒಳಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಜೂ.31 ಕ್ಕೆ ನೈರುತ್ಯ ಮುಂಗಾರು ಕೇರಳ ತಲುಪಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅದರಂತೆ ಮುಂಗಾರು ಸದ್ಯಕ್ಕೆ ಆರಂಭವಾದರೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಗಳು ಇವೆ. ಹೀಗಾಗಿ ಜಲಾಶಯಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಒಳಹರಿವು ಬರಲು ಸಾಧ್ಯವಾಗುತ್ತದೆ. ನೀರಿನ ಬವಣೆಯೂ ನೀಗಲು ಸಹಕಾರವಾಗಲಿದೆ.
eesanje/url_46_136_5.txt ADDED
@@ -0,0 +1,9 @@
 
 
 
 
 
 
 
 
 
 
1
+ ಒಂದು ವರ್ಷದಲ್ಲಿ ಕಾಂಗ್ರೆಸ್‌‍ ಸರ್ಕಾರ ರಾಜ್ಯಕ್ಕೆ ಏನು ಕೊಡುಗೆ ನೀಡಿದೆ.? : ಎಚ್‌.ಡಿ ರೇವಣ್ಣ
2
+ ಹಾಸನ,ಮೇ.23-ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಒಂದು ವರ್ಷದಲ್ಲಿ ರಾಜ್ಯಕ್ಕೆ ಏನು ಕೊಡುಗೆ ನೀಡಿದೆ. ಅವರ ಮಂತ್ರಿಗಳೇ ಸರ್ಕಾರಕ್ಕೆ ಧಮ್ಕಿ ಹಾಕುತ್ತಿದ್ದಾರೆ ಎಂದು ಶಾಸಕ ಎಚ್‌.ಡಿ ರೇವಣ್ಣ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಮ್ಮಲ್ಲಿ ಇದ್ದು ಆ ಕಡೆ ಹೋಗಿದ್ದಾರಲ್ಲ ಕೆಲವರು ಸರ್ಕಾರ ಬಂದು ಒಂದು ವರ್ಷ ಆಗಿದೆ ಏನು ಕೊಡುಗೆ ಕೊಡಿಸಿದ್ದಾರೆ. ನಾವು ಶಾಲಾ-ಕಾಲೇಜಿಗೆ ಮೂಲಭೂತ ಸೌಕರ್ಯ ಕೊಟ್ಟಿ ತೋರಿಸಿದ್ದೇವೆ ಎಂದರು .
3
+ ಸರ್ಕಾರ ರಚನೆಯಾಗಿ ಒಂದು ವರ್ಷ ಕಳೆದಿದೆ ರಾಜ್ಯದಲ್ಲಿ ಯಾವುದಾದರೂ ರಸ್ತೆ ಗುಂಡಿ ಮುಚ್ಚಿದ್ದಾರೆಯೇ? ಶಿಕ್ಷಕರ ಹುದ್ದೆ ಭರ್ತಿ ಮಾಡಿದ್ದಾರಾ ಎಂದು ಪ್ರಶ್ನಿಸಿದರು. ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರ ಆಡಳಿತದಲ್ಲಿ 1500 ಹೈಸ್ಕೂಲು, 240 ಪ್ರಥಮ ದರ್ಜೆ ಕಾಲೇಜು ತೆರಿಯಲಾಗಿತ್ತು , ಖಾಲಿ ಇದ್ದಂತಹ ನೂರಾರು ಶಿಕ್ಷಕರ ಹುದ್ದೆ ಭರ್ತಿ ಮಾಡಿದ್ದು ಅವರ ಅವಧಿಯಲ್ಲಿಯೇ ಎಂದರು .
4
+ 50 ವರ್ಷ ಆಡಳಿತದಲ್ಲಿ ಇದ್ದಂತಹ ಕಾಂಗ್ರೆಸ್‌‍ ಸರ್ಕಾರ ಏನು ಮಾಡಲು ಹಾಗಿರಲಿಲ್ಲ ಕುಮಾರಸ್ವಾಮಿ ಯಡಿಯೂರಪ್ಪ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ಕೊಟ್ಟಿದ್ದಾರೆ ಇಡೀ ದೇಶದಲ್ಲಿ ಶಿಕ್ಷಣಕ್ಕೆ ಒತ್ತು ಕೊಟ್ಟಿದ್ದು ದೇವೇಗೌಡರು , ಕುಮಾರಸ್ವಾಮಿ, ನಮ್ಮ ಜೆಡಿಎಸ್‌‍ ಶಾಸಕರು ಎಂದರು .
5
+ ದೇವೇಗೌಡರ ಕುಟುಂಬ ಯಾವುದೇ ಖಾಸಗಿ ಶಾಲೆಯನ್ನು ತೆರೆದಿಲ್ಲ ಎಂದು ಹೇಳಿದ ಅವರು ಶಿಕ್ಷಕರ ಮಕ್ಕಳ 10% ಮೀಸಲಾತಿ ಕೊಡಬೇಕು ಎಂದು ಆಗ್ರಹಿಸಿದರು.ಎಸ್‌‍ ಎಸ್‌‍ ಎಲ್‌ ಸಿ ಫಲಿತಾಂಶದಲ್ಲಿ ನಮ್ಮ ಜಿಲ್ಲೆ ಈಗ 15ನೇ ಸ್ಥಾನದಲ್ಲಿದೆ ನಮ್ಮ ಸರ್ಕಾರ ಆಡಳಿತದ ಅವಧಿಯಲ್ಲಿ ಮೊದಲನೇ ಸ್ಥಾನದಲ್ಲಿತ್ತು . ಈ ರೀತಿ ಆಗಲು ಕಾರಣ ಯಾರು? ಈ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು .
6
+ ಲೋಕಸಭೆ ಚುನಾವಣೆಯಲ್ಲಿ ಫಲಿತಾಂಶವನ್ನು ಜನತೆಯ ಶಕ್ತಿಗೆ ಬಿಟ್ಟಿದ್ದೇನೆ, ಜನತೆಯ ತೀರ್ಪಿಗೆ ತಲೆಬಾಗುತ್ತೇನೆ . ನಾವು ಅಧಿಕಾರಕ್ಕೋಸ್ಕರ ಹೋರಾಟ ಮಾಡಲ್ಲ ಅಧಿಕಾರ ಇದ್ದರೂ ಕೆಲಸ ಮಾಡುತ್ತೇವೆ. ಅಧಿಕಾರ ಇಲ್ಲದಿದ್ದರೂ ಕೆಲಸ ಮಾಡುತ್ತೇವೆ ಎಂದು ಹೇಳಿದರು.
7
+ ಎರಡು ಪ್ರಕರಣ ದಾಖಲು ವಿಚಾರವಾಗಿ ಪ್ರತಿಕ್ರಿಯೆ ನೀಡಿದ ರೇವಣ್ಣ ಅವರು ಯಾರು ಆತಂಕ ಪಡಬೇಕಾಗಿಲ್ಲ, ಕಾಲವೇ ಉತ್ತರ ಕೊಡುತ್ತೆ. ಟೈಮ್‌ ಬೇಕು ಅಷ್ಟೇ ! ನಮ್ಮ ಜಿಲ್ಲೆಯ ಜನರನ್ನು 60 ವರ್ಷ ದೇವೇಗೌಡರು ಕಾಪಾಡಿದ್ದಾರೆ. ನಾನಿದ್ದೇನೆ ಎ. ಮಂಜು, ಸ್ವರೂಪ್ರಕಾಶ್‌ ಇದ್ದಾರೆ ಎಂದರು. ಯಾರು ಭಯಪಡುವ ಆತಂಕ ಪಡುವ ಅಗತ್ಯವಿಲ್ಲ ನನಗೂ ಜಿಲ್ಲೆಯ ಜನ 25 ವರ್ಷ ಆಶೀರ್ವಾದ ಮಾಡಿದ್ದಾರೆ.
8
+ 48 ಗಂಟೆಗಳಲ್ಲಿ ಪ್ರಜ್ವಲ್‌ ರೇವಣ್ಣ ಬಾ ಎಂಬ ಕುಮಾರಸ್ವಾಮಿ ಮನವಿ ವಿಚಾರವಾಗಿ, ಕೋರ್ಟ್‌ ನಲ್ಲಿ ಕೇಸ್‌‍ ಇದ್ದಾಗ ನಾನು ಮಾತನಾಡಲ್ಲ ಎಂದರು. ಈ ವೇಳೆ ಮಧ್ಯ ಪ್ರವೇಶಿಸಿದ ಶಾಸಕ ಎ.ಮಂಜು ಅವರು ಅದರ ಬಗ್ಗೆ ಮಾತನಾಡಲು ಆಗಲ್ಲ ಎಂದರು.
9
+ ಶಾಸಕ ಸ್ವರೂಪ್‌ ಪ್ರಕಾಶ್‌ , ಜೆಡಿಎಸ್‌‍ ಜಿಲ್ಲಾ ಘಟಕದ ಅಧ್ಯಕ್ಷ ಕೆ ಎಸ್‌‍ ಲಿಂಗೇಶ್‌ , ದಕ್ಷಿಣ ಶಿಕ್ಷರ ಕ್ಷೇತ್ರದ ಜೆಡಿಎಸ್‌‍ ಬಿಜೆಪಿ ಮೈತ್ರಿ ಅಭ್ಯರ್ಥಿ ವಿವೇಕಾನಂದ ನಿರಂಜನ್‌ ಮೂರ್ತಿ , ಜೆಡಿಎಸ್‌‍ ಮುಖಂಡರಾದ ಬಿ ವಿ ಕರೀಗೌಡ , ರಾಜೇಗೌಡ , ಜೆಡಿಎಸ್‌‍ ತಾಲ್ಲೂಕು ಘಟಕದ ಅಧ್ಯಕ್ಷ ಎಸ್‌‍ ದ್ಯಾವೇಗೌಡ , ಎಸ್‌‍ ಮಂಜೇಗೌಡ , ದೊಡ್ಡ ದಿಣ್ಣೆ ಸೋಮಶೇಖರ್‌ ಇದ್ದರು.
eesanje/url_46_136_6.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಮೇಲ್ಮನೆ ಚುನಾವಣೆಗೆ ಆಕಾಂಕ್ಷಿಗಳ ಲಾಬಿ ಜೋರು
2
+
3
+ ಬೆಂಗಳೂರು, ಮೇ 23-ವಿಧಾನಸಭೆಯಿಂದ ವಿಧಾನಪರಿಷತ್‌ನ 11 ಸದಸ್ಯರ ಆಯ್ಕೆಗೆ ನಡೆಯುವ ಚುನಾವಣೆಯಲ್ಲಿ ಅವಕಾಶ ಗಿಟ್ಟಿಸಲು 50ಕ್ಕೂ ಹೆಚ್ಚು ಆಕಾಂಕ್ಷಿಗಳು ಬೆಂಗಳೂರಿನಿಂದ ದಿಲ್ಲಿಯವರೆಗೂ ಲಾಬಿ ನಡೆಸಲಾರಂಭಿಸಿದ್ದಾರೆ.ಅರವಿಂದ್‌ ಕುಮಾರ್‌ ಅರಳಿ, ಎನ್‌.ಎಸ್‌‍.ಬೋಸರಾಜ್‌, ಡಾ.ಕೆ.ಗೋವಿಂದರಾಜು, ಡಾ.ತೇಜಸ್ವಿನಿ ಗೌಡ, ಮುನಿರಾಜುಗೌಡ, ಕೆ.ಪಿ.ನಂಜುಂಡಿ, ಬಿ.ಎಂ.ಫಾರುಖ್‌, ರಘುನಾಥರಾವ್‌ ಮಲ್ಕಾಪುರೆ, ಎನ್‌.ರವಿಕುಮಾರ್‌, ಎಸ್‌‍.ರುದ್ರೇಗೌಡ, ಕೆ.ಹರೀಶ್‌ಕುಮಾರ್‌ ಅವರು ಜೂನ್‌ 17ಕ್ಕೆ ನಿವೃತ್ತರಾಗುತ್ತಿದ್ದಾರೆ.
4
+ ಮೇ 27 ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡು ಜೂನ್‌ 13 ಕ್ಕೆ ಚುನಾವಣೆ ನಡೆಯಲಿದೆ. 11 ಸ್ಥಾನಗಳ ಪೈಕಿ ಕಾಂಗ್ರೆಸ್‌‍ 7, ಬಿಜೆಪಿ 3, ಜೆಡಿಎಸ್‌‍ 1 ಸ್ಥಾನಗಳನ್ನು ಆಯ್ಕೆ ಮಾಡಿಕೊಳ್ಳಲು ಶಾಸಕರ ಸಂಖ್ಯಾಬಲ ಹೊಂದಿದೆ.ಆಡಳಿತಾರೂಢ ಕಾಂಗ್ರೆಸ್‌‍ನಲ್ಲಿ 7 ಸ್ಥಾನಗಳಿಗೆ ಆಕಾಂಕ್ಷಿಗಳ ಸಂಖ್ಯೆ ದಂಡಿಯಾಗಿದೆ. ಹಾಲಿ ಸದಸ್ಯರ ಪೈಕಿ ಸಣ್ಣ ನೀರಾವರಿ ಸಚಿವ ಎನ್‌.ಎಸ್‌‍.ಬೋಸರಾಜ್‌ ಮತ್ತು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು ಮರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
5
+ ಅರವಿಂದ ಕುಮಾರ್‌ ಅರಳಿ, ಹರೀಶ್‌ಕುಮಾರ್‌ ಅವರು ಮತ್ತೊಮೆ ಅವಕಾಶ ಕೇಳುತ್ತಿದ್ದಾರೆ. ಇತ್ತ ಬಿಜೆಪಿಯಲ್ಲಿದ್ದ ತೇಜಸ್ವಿನಿ ರಮೇಶ್‌ ಮತ್ತು ಕೆ.ಪಿ.ನಂಜುಂಡಿ ಅವರು ಲೋಕಸಭಾ ಚುನಾವಣೆಗೂ ಮುನ್ನವೇ ವಿಧಾನಪರಿಷತ್‌ ಸದಸ್ಯತ್ವ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌‍ ಸೇರಿದ್ದು, ಮತ್ತೊಮೆ ಮೇಲನೆ ಪ್ರವೇಶಿಸುವ ಉಮೇದಿನಲ್ಲಿದ್ದಾರೆ.
6
+ ಇದರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರ ಹೆಸರು ಪ್ರಬಲವಾಗಿ ಕೇಳಿಬಂದಿದೆ. ತಂದೆಗಾಗಿ ವರುಣ ಕ್ಷೇತ್ರವನ್ನು ಬಿಟ್ಟುಕೊಟ್ಟ ಯತೀಂದ್ರ ಅವರಿಗೆ ವಿಧಾನಪರಿಷತ್‌ನಲ್ಲಿ ಅವಕಾಶ ಕಲ್ಪಿಸಬೇಕೆಂಬ ಒತ್ತಾಯಗಳಿವೆ.ಉನ್ನತ ಮೂಲಗಳ ಪ್ರಕಾರ, 7 ಸ್ಥಾನಗಳಲ್ಲಿ ಕಾಂಗ್ರೆಸ್‌‍ ಒಕ್ಕಲಿಗ ಸಮುದಾಯಕ್ಕೆ 2, ಹಿಂದುಳಿದ ವರ್ಗಕ್ಕೆ 2, ಪರಿಶಿಷ್ಟ ಜಾತಿಗೆ 2, ಲಿಂಗಾಯತ ಸಮುದಾಯಕ್ಕೆ 1 ಸ್ಥಾನ ನೀಡುವ ಚಿಂತನೆ ನಡೆಸಿದೆ ಎನ್ನಲಾಗಿದೆ.
7
+ ಡಾ.ಕೆ.ಗೋವಿಂದರಾಜು ಅವರು ಪುನರ್‌ ಆಯ್ಕೆಯಾಗುವ ಸಾಧ್ಯತೆ ಇದೆ. ಒಕ್ಕಲಿಗ ಕೋಟಾದ ಒಂದು ಸ್ಥಾನ ಭರ್ತಿಯಾಗಲಿದ್ದು, ಮತ್ತೊಂದು ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆಯಾಗಬೇಕಿದೆ. ಎನ್‌.ಎಸ್‌‍.ಬೋಸರಾಜು ಪುನರ್‌ ಆಯ್ಕೆಯಾಗಿದ್ದೇ ಆದರೆ ಓಬಿಸಿ ವರ್ಗದ ಒಂದು ಸ್ಥಾನ ಮಾತ್ರ ಬಾಕಿ ಉಳಿಯಲಿದೆ.
8
+ ಮಹಿಳೆಯರಿಗೂ ಅವಕಾಶ ನೀಡುವ ಚರ್ಚೆಗಳಾಗಿದ್ದು, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್‌, ಮಹಾನಗರ ಘಟಕದ ಮಾಜಿ ಅಧ್ಯಕ್ಷೆ ಕಮಲ ಸಿ.ರಾಜಣ್ಣ ಅವರ ಹೆಸರುಗಳು ಕೇಳಿಬಂದಿವೆ.ಪರಿಶಿಷ್ಟ ಜಾತಿಯ 2 ಕ್ಷೇತ್��ಗಳ ಪೈಕಿ ಒಂದನ್ನು ಬಲಗೈಗೆ, ಮತ್ತೊಂದನ್ನು ಲಂಬಾಣಿ ಅಥವಾ ಬೋವಿ ಸಮುದಾಯಕ್ಕೆ ನೀಡುವ ಚರ್ಚೆ ನಡೆದಿದೆ. ಇದರ ನಡುವೆ ಕಳೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಅವಕಾಶ ವಂಚಿತರು, ಬಂಡಾಯಗಾರರನ್ನು ಸಮಾಧಾನಪಡಿಸುವಾಗ ವಿಧಾನಪರಿಷತ್‌ನ ಸದಸ್ಯರನ್ನಾಗಿ ಮಾಡುವ ಆಸೆ ತೋರಿಸಲಾಗಿತ್ತು. ಆ ರೀತಿ ಅವಕಾಶಕ್ಕಾಗಿ ಕಾಯುತ್ತಿರುವವರ ಪೈಕಿ ಮಾಜಿ ಶಾಸಕರು, ಮಾಜಿ ಸಚಿವರು, ಮಾಜಿ ಸಂಸದರು ಬಹಳಷ್ಟು ಮಂದಿ ಇದ್ದಾರೆ.
9
+
10
+
11
+ ಪ್ರಮುಖವಾಗಿ ಬಿ.ಎಲ್‌.ಶಂಕರ್‌, ವಿ.ಆರ್‌.ಸುದರ್ಶನ್‌, ಹಿರಿಯರ ಪೈಕಿ ಲಾಬಿ ನಡೆಸುತ್ತಿದ್ದಾರೆ. ಕೆಪಿಸಿಸಿಯ ಆಡಳಿತಾತಕ ಪ್ರಧಾನ ಕಾರ್ಯದರ್ಶಿ ವಿಜಯ್‌ ಕೆ.ಮುಳಗುಂದ್‌, 15ಕ್ಕೂ ಹೆಚ್ಚು ಅಧ್ಯಕ್ಷರುಗಳ ಜೊತೆ ಕಚೇರಿ ಕಾರ್ಯದರ್ಶಿಯಾಗಿ ಯಶಸ್ವಿ ಕಾರ್ಯ ನಿರ್ವಹಿಸಿರುವ ಎನ್‌.ನಾರಾಯಣ್‌, ಹಿಂದುಳಿದ ವರ್ಗದ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್‌‍.ದ್ವಾರಕಾನಾಥ್‌, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ರಫೀಖ್‌ ಅಹಮದ್‌, ಕೆಪಿಸಿಸಿ ಖಜಾಂಚಿ ವಿನಯ್‌ ಕಾರ್ತಿಕ್‌, ಪದವೀಧರರ ಕ್ಷೇತ್ರದ ಅಧ್ಯಕ್ಷ ನಟರಾಜ್‌ಗೌಡ, ಬಿಬಿಎಂಪಿ ಮಾಜಿ ಮೇಯರ್‌ ರಾಮಚಂದ್ರಪ್ಪ, ಮುಂಡರಗಿ ನಾಗರಾಜ್‌, ಎಂ.ಎಸ್‌‍.ಬಸವರಾಜು, ಎಐಸಿಸಿಯಲ್ಲಿ ಕೆಲಸ ಮಾಡಿದ ಸೂರಜ್‌ ಹೆಗ್ಡೆ, ಸಂದೀಪ್‌ ಅವರು ಆಕಾಂಕ್ಷಿಗಳಾಗಿದ್ದಾರೆ.
12
+ ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್‌ ಬಾಬು, ಕಳೆದ ಬಾರಿ ವಿಧಾನಸಭೆ ಹಾಗೂ ಲೋಕಸಭೆ ಎರಡಲ್ಲೂ ಟಿಕೆಟ್‌ ವಂಚಿತ ಡಾ.ಬಿ.ಸಿ.ಮುದ್ದುಗಂಗಾಧರ್‌, ಬಿಜೆಪಿ ತೊರೆದು ಕಾಂಗ್ರೆಸ್‌‍ ಸೇರಿದ ಮಾಜಿ ಸಂಸದ ಕರಡಿ ಸಂಗಣ್ಣ ಮತ್ತಿತರರು ಆಕಾಂಕ್ಷಿಗಳಾಗಿದ್ದಾರೆ.ಈ ಬಾರಿ ಪಕ್ಷನಿಷ್ಠರಿಗೆ ಅವಕಾಶ ನೀಡಬೇಕು ಎಂಬುದು ಹಿರಿಯ ನಾಯಕರ ಇರಾದೆಯಾಗಿದೆ. ಪದವೀಧರ ಹಾಗೂ ಶಿಕ್ಷಕರ ಒಟ್ಟು 6 ಕ್ಷೇತ್ರಗಳಲ್ಲಿ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆಗಳಲ್ಲಿ ವಲಸಿಗರಿಗೆ ಕಾಂಗ್ರೆಸ್‌‍ ಮಣೆ ಹಾಕಿದೆ.
13
+ ಈ ಹಿನ್ನೆಲೆಯಲ್ಲಿ ವಿಧಾನಸಭೆಯಿಂದ ಆಯ್ಕೆಯಾಗುವ ಕ್ಷೇತ್ರಗಳಿಗೆ ಪಕ್ಷನಿಷ್ಠರಿಗೆ ಅವಕಾಶ ನೀಡಬೇಕು ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ ಹೈಕಮಾಂಡ್‌ನ ಸೂಚನೆಗಳು ಮತ್ತು ರಾಜ್ಯ ನಾಯಕರುಗಳ ನಿರ್ಧಾರಗಳು ಯಾವ ರೀತಿ ಇರಲಿವೆ ಎಂಬುದು ಕುತೂಹಲ ಕೆರಳಿಸಿವೆ.
eesanje/url_46_136_7.txt ADDED
@@ -0,0 +1,8 @@
 
 
 
 
 
 
 
 
 
1
+ ಚುನಾವಣಾ ಆಯೋಗ ಕಾಂಗ್ರೆಸ್‌‍ ಪಕ್ಷವನ್ನು ಬೆದರಿಸುವುದನ್ನು ಬಿಟ್ಟು ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಲಿ : ಹರಿಪ್ರಸಾದ್‌
2
+ ಬೆಂಗಳೂರು, ಮೇ 23-ಚುನಾವಣಾ ಆಯೋಗ ಕಾಂಗ್ರೆಸ್‌‍ ಪಕ್ಷವನ್ನು ಬೆದರಿಸುವುದು, ಕಿವಿ ಹಿಂಡುವುದನ್ನು, ಬುದ್ದಿ ಹೇಳುವುದನ್ನು ಬಿಟ್ಟು, ನ್ಯಾಯ ಸಮ್ಮತ, ನಿಷ್ಪಕ್ಷಪಾತವಾಗಿ ತನ್ನ ಜವಾಬ್ದಾರಿ ನಿರ್ವಹಿಸಿಲಿ ಎಂದು ಕಾಂಗ್ರೆಸ್‌‍ನ ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಒತ್ತಾಯಿಸಿದ್ದಾರೆ.
3
+ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದಲ್ಲಿ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯೂ ಹಿಂದೆಂದೂ ನಡೆಯದ ದ್ವೇಷ, ಅರಾಜಕತೆ, ಪಕ್ಷಪಾತಿತನದಿಂದಲೇ ನಡೆಯುತ್ತಿರುವುದನ್ನು ಮತದಾರರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಈ ಬಾರಿಯ ಚುನಾವಣೆ ಪ್ರಜಾಪ್ರಭುತ್ವ, ಸಂವಿಧಾನದ ಅಳಿವು-ಉಳಿವಿನ ಪ್ರಶ್ನೆಯಾಗಿದೆ. ಇಂತಹ ಅಪಾಯವನ್ನು ದೇಶದ ಜನರಿಂದ ಮುಚ್ಚಿಡಬೇಕೆಂದು ಚುನಾವಣಾ ಆಯೋಗ ತಾಕೀತು ಮಾಡಿರುವುದು ಆಶ್ಚರ್ಯ ಎಂದು ಹೇಳಿದ್ದಾರೆ.
4
+ ಬಿಜೆಪಿ ಸಂಸದರು, ಹಿರಿಯ ನಾಯಕರುಗಳು ಈ ಬಾರಿ ಅಧಿಕಾರಕ್ಕೆ ಬಂದರೆ ನಾವು ಸಂವಿಧಾನ ಬದಲಾವಣೆ ಮಾಡಿಯೇ ಸಿದ್ಧ ಎಂದು ಬಹಿರಂಗ ಹೇಳಿಕೆಗಳನ್ನು ನೀಡಿದ್ದಾರೆ. ದೇಶದ ಹಿತಕ್ಕಾಗಿ ಸಂವಿಧಾನ ಬದಲಾವಣೆ ಮಾಡುವುದು ಅನಿವಾರ್ಯ ಎಂದು ಬಹಿರಂಗ ಚುನಾವಣಾ ಪ್ರಚಾರದಲ್ಲಿ ರಾಜಸ್ತಾನದ ನಾರ್ಗೌ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜ್ಯೋತಿ ಮಿರ್ಧಾ ಹೇಳಿಕೆ ನೀಡಿದ್ದಾರೆ.
5
+ ಮತ್ತೆ ಅಧಿಕಾರಕ್ಕೆ ಬಂದರೆ ದೇಶಕ್ಕೆ ಹೊಸ ಸಂವಿಧಾನ ನೀಡುತ್ತೇವೆ ಎಂದು ಅಯೋಧ್ಯೆಯ ಹಾಲಿ ಸಂಸದ, ಬಿಜೆಪಿ ಅಭ್ಯರ್ಥಿ ಲಲ್ಲೂ ಸಿಂಗ್‌ ಕೂಡಿ ಹೇಳಿಕೆ ನೀಡಿದ್ದಾರೆ. ಇನ್ನೂ ಮುಂದುವರೆದು ಹಾಲಿ ಸಂಸದ, ಕೇಂದ್ರದ ಮಾಜಿ ಮಂತ್ರಿ ಅನಂತ್‌ ಕುಮಾರ್‌ ಹೆಗಡೆ ಸಂವಿಧಾನ ಬದಲಾವಣೆ ಮಾಡಲು 400 ಸ್ಥಾನಗಳು ಬಿಜೆಪಿಗೆ ಅನಿವಾರ್ಯ ಎಂದು ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ. ಇಂತಹ ಅಪಾಯಕಾರಿ ಹೇಳಿಕೆಗಳಿಗೆ ಪ್ರಧಾನಿ ನರೇಂದ್ರ ಮೋದಿಯಾಗಲಿ, ಬಿಜೆಪಿ ಪಕ್ಷವಾಗಲಿ ಕನಿಷ್ಟ ಸ್ಪಷ್ಟನೆಯನ್ನೂ ನೀಡಿಲ್ಲ ಎಂದು ಆಕ್ಷೇಪಿಸಿದ್ದಾರೆ.
6
+ ಪ್ರಧಾನಿ ಮೋದಿಯ ಸುತ್ತಮುತ್ತ ಸಂವಿಧಾನ ಬದಲಾಯಿಸುವವರನ್ನೇ ಆರ್ಥಿಕ ಸಲಹೆಗಾರರನ್ನಾಗಿ ಮಾಡಿಕೊಂಡಿದ್ದಾರೆ. ಪ್ರಧಾನಿಯ ಆರ್ಥಿಕ ಮುಖ್ಯ ಸಲಹೆಗಾರ ಬಿಬೇಕ್‌ ದೇಬ್ರಾಯ ಹೊಸ ಸಂವಿಧಾನದ ಅಗತ್ಯವಿದೆ ಎಂದು ಅಂಕಣವೇ ಬರೆದಿದ್ದು ಜಗಜ್ಜಾಹೀರಾಗಿದೆ. ಸಂವಿಧಾನ ಹಾಗೂ ಮೀಸಲಾತಿ ವಿರೋಧಿ ಮನಸ್ಥಿತಿ ಬಿಜೆಪಿಯ ಹುಟ್ಟಿನಿಂದಲೇ ಇರುವುದು ಗೌಪ್ಯ ವಿಷಯವಲ್ಲ. ಆದರೆ ಸಂವಿಧಾನದಡಿಯಲ್ಲಿ ಕಾರ್ಯ ನಿರ್ವಹಿಸಬೇಕಾದ ಚುನಾವಣಾ ಆಯೋಗದ ಮೌನದ ಹಿಂದಿನ ಉದ್ದೇಶವೇನು? ಈ ಕ್ಷಣದವರೆಗೂ ನೋಟಿಸ್‌‍ ನೀಡಲು ಕೂಡ ಯಾರ ಒಪ್ಪಿಗೆಗೆ ಕಾಯುತ್ತಿದೆ? ದೇಶದ ಅತಿದೊಡ್ಡ ವಿರೋಧ ಪಕ್ಷವನ್ನು ಬೆದರಿಸುತ್ತಿರುವುದು ಯಾರ ಅ���ತಿಯಂತೆ? ಎಂದು ಪ್ರಶ್ನಿಸಿದ್ದಾರೆ.
7
+ ದೇಶದ ಸಂವಿಧಾನವನ್ನು ರದ್ದುಪಡಿಸಬಹುದು ಎಂಬಂತಹ ತಪ್ಪು ಭಾವನೆ ಮೂಡಿಸುವ ಹೇಳಿಕೆಗಳನ್ನು ನೀಡಬಾರದು ಎಂದು ಕಾಂಗ್ರೆಸ್‌‍ ಪಕ್ಷವನ್ನು ತಾಕೀತು ಮಾಡುತ್ತಿರುವುದನ್ನು ನೋಡಿದರೆ ಸಂವಿಧಾನ ಬದಲಾವಣೆ ಮಾಡುವ ಬಿಜೆಪಿಯ ಉದ್ದೇಶಕ್ಕೆ ಚುನಾವಣಾ ಆಯೋಗದ ಸಮಿತಿ ಇದೆಯೇ? ಸಂವಿಧಾನ ಅಪಾಯದಲ್ಲಿರುವುದು ದೇಶದ ಜನರಿಗೆ ತಿಳಿಸುವುದು ತಪ್ಪೇ? ಧರ್ಮದ ಆಧಾರದಲ್ಲಿ ಪ್ರಧಾನಿಯಾದಿಯಾಗಿ ಬಿಜೆಪಿಯ ನಾಯಕರು ಬಹಿರಂಗವಾಗಿ ದ್ವೇಷ ಭಾಷಣವನ್ನು ಮಾಡುತ್ತಿದ್ದರೂ ಚುನಾವಣಾ ಆಯೋಗ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ಷೇಪಿಸಿದ್ದಾರೆ.
8
+ ಭಾರತದ ಚುನಾವಣಾ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಚುನಾವಣಾ ಆಯೋಗದ ಪಕ್ಷಪಾತಿತನ ಹಾಗೂ ನಿಷ್ಕ್ರಿಯತೆಯನ್ನು ದೇಶ ನೋಡುತ್ತಿದೆ. ದೇಶದ ಮತದಾರರೂ ಚುನಾವಣಾ ಆಯೋಗದ ಮೇಲಿನ ಸಂಪೂರ್ಣ ಭರವಸೆ ಕಳೆದುಕೊಳ್ಳುವ ಮೊದಲು, ತನ್ನ ಘನತೆ, ಪರಂಪರೆಗೆ ಪೂರಕವಾಗಿ ಕಾರ್ಯ ನಿರ್ವಹಿಸಲಿ ಎಂದು ಒತ್ತಾಯಿಸಿದ್ದಾರೆ.
eesanje/url_46_136_8.txt ADDED
@@ -0,0 +1,9 @@
 
 
 
 
 
 
 
 
 
 
1
+ ಪ್ರಜ್ವಲ್‌ ಪಾಸ್‌‍ಪೋರ್ಟ್‌ ರದ್ದು ಮಾಡುವಂತೆ ಪ್ರಧಾನಿಗೆ ಸಿಎಂ 2ನೇ ಬಾರಿ ಪತ್ರ
2
+ ಬೆಂಗಳೂರು, ಮೇ 23-ಪೆನ್‌ಡ್ರೈವ್‌ ಪ್ರಕರಣದ ಕೇಂದ್ರಬಿಂದು ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ಅನ್ನು ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿಯವರಿಗೆ ಎರಡನೇ ಬಾರಿ ಪತ್ರ ಬರೆದಿದ್ದಾರೆ.
3
+ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಗೊಂಡರೆ ಅವರು ಭಾರತಕ್ಕೆ ಮರಳಬೇಕಾಗುತ್ತದೆ. ಅವರನ್ನು ವಶಕ್ಕೆ ಪಡೆದು ಕ್ರಮ ಕೈಗೊಳ್ಳಲು ಅನುಕೂಲವಾಗಲಿದೆ ಎಂದು ವಿವರಿಸಿದ್ದಾರೆ. ಗಂಭೀರ ಸ್ವರೂಪದ ಸರಣಿ ಕೃತ್ಯಗಳಲ್ಲಿ ಪ್ರಜ್ವಲ್‌ ರೇವಣ್ಣ ಭಾಗಿಯಾಗಿರುವುದು ಜನರಿಗೆ ಘಾಸಿಯುಂಟು ಮಾಡಿರುವುದಷ್ಟೇ ಅಲ್ಲ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಕಳವಳಕ್ಕೆ ಕಾರಣವಾಗಿದೆ.
4
+ ಪ್ರಜ್ವಲ್‌ ರೇವಣ್ಣ ಅವರ ಕೃತ್ಯ ನಾಚಿಕೆಗೇಡು. ಮಾಜಿ ಪ್ರಧಾನಿಗಳ ಮೊಮಗ ಮತ್ತೊಮೆ ಮರು ಆಯ್ಕೆ ಬಯಸಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ ಎಂದು ಮುಖ್ಯಮಂತ್ರಿ ವಿವರಿಸಿದ್ದಾರೆ.
5
+ ಕೃತ್ಯಕ್ಕೆ ಸಂಬಂಧಪಟ್ಟಂತೆ ಎಫ್‌ಐಆರ್‌ ದಾಖಲಾಗುವ ಕೆಲವೇ ಗಂಟೆಗಳ ಮೊದಲು ಹಾಗೂ ಲೋಕಸಭಾ ಚುನಾವಣೆ ಮುಗಿದ ಬಳಿಕ ಏ.22 ರಂದು ರಾಜತಾಂತ್ರಿಕ ಪಾಸ್‌‍ಪೋರ್ಟ್‌ (ಸಂಖ್ಯೆ ಬಿ 1135500) ಬಳಸಿ ಜರ್ಮನಿಗೆ ಪರಾರಿಯಾಗಿದ್ದಾರೆ. ರಾಜತಾಂತ್ರಿಕ ಶಿಷ್ಟಾಚಾರಗಳನ್ನು ಅವರು ದೇಶ ಬಿಟ್ಟು ಪರಾರಿಯಾಗಲು ಮತ್ತು ಅಪರಾಧ ಪ್ರಕರಣಗಳ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದ್ದಾರೆ.
6
+ ಕರ್ನಾಟಕ ಸರ್ಕಾರ ಪ್ರಾಮಾಣಿಕ ಕ್ರಮ ಕೈಗೊಂಡು ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ ಮಾಡಿದೆ. ಮಹಿಳೆಯರ ಮೇಲೆ ಪ್ರಜ್ವಲ್‌ ರೇವಣ್ಣ ನಡೆಸಿದ್ದಾರೆ ಎನ್ನಲಾದ ದೌರ್ಜನ್ಯವನ್ನು ಎಸ್‌‍ಐಟಿ ತನಿಖೆ ನಡೆಸುತ್ತಿದೆ. ಆರೋಪಿ ತಲೆಮರೆಸಿಕೊಂಡಿದ್ದು, ಬ್ಲೂ ಕಾರ್ನರ್‌ ನೋಟೀಸ್‌‍ ಕೂಡ ಜಾರಿಯಾಗಿದೆ.
7
+ ತನಿಖಾಧಿಕಾರಿಗಳು ಸೆಕ್ಷನ್‌ 41 ಎ ಸಿಆರ್‌ಪಿಸಿ ಅಡಿ ಎರಡು ನೋಟೀಸ್‌‍ಗಳನ್ನು ಜಾರಿಗೊಳಿಸಿದ್ದಾರೆ. ಪ್ರಜ್ವಲ್‌ ವಿರುದ್ಧ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಮಹಿಳೆಯರ ಘನತೆಗೆ ಕುಂದು ತಂದಿರುವುದು, ಅಶ್ಲೀಲ ವಿಡಿಯೋ ಸೇರಿದಂತೆ ಹಲವು ಕಾಯ್ದೆಗಳಡಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತರಿಗೆ ಬೆದರಿಕೆ ಹಾಕಿರುವ ಆರೋಪವೂ ಸೇರಿದೆ.
8
+ ಆರೋಪಿಯನ್ನು ಬಂಧಿಸಿ ಕರೆತರಲು ಕೇಂದ್ರಸರ್ಕಾರದಿಂದ ಸಹಕಾರ ಸಿಗುತ್ತಿಲ್ಲ. ಅನಗತ್ಯವಾದ ಶಿಷ್ಟಾಚಾರಗಳನ್ನು ಪ್ರಸ್ತಾಪಿಸಿ ಉದ್ದೇಶಪೂರಕವಾಗಿಯೇ ವಿಳಂಬ ಮಾಡಲಾಗುತ್ತಿದೆ. ಈ ಹಿಂದೆಯೇ ತಾವು ಪ್ರಕರಣದ ಬಗ್ಗೆ ಕಳವಳ ವ್ಯಕ್ತಪಡಿಸಿ ತಮಗೆ ಪತ್ರ ಬರೆದಿದ್ದು, ಕ್ರಮ ಕೈಗೊಳ್ಳಲು ಮನವಿ ಮಾಡಿದ್ದೆ. ಕೃತ್ಯದ ಗಂಭೀರತೆಯನ್ನು ಅರ್ಥೈಸಿಕೊಂಡು ಆ ಕ್ಷಣಕ್ಕೆ ಕ್ರಮ ತೆಗೆದುಕೊಳ್ಳಬೇಕಿತ್ತು ಎಂದು ಮುಖ್ಯಮಂತ್ರಿ ಅಸಹನೆ ವ್ಯಕ್ತಪಡಿಸಿದ್ದಾರೆ.
9
+ ಈಗಲಾದರೂ ಇದನ್ನು ಅತ್ಯಂತ ಗಂಭೀರ ಎಂದು ಭಾವಿಸಿ ಕಾನೂನು ಕ್ರಮಗಳನ್ನು ಕೈಗೊಂಡು ಪಾಸ್‌‍ಪೋರ್ಟ್‌ ಆ್ಯಕ್ಟ್‌ 1967 ಸೆಕ್ಷನ್‌ 10 (3) (ಎಚ್‌) ಅಡಿ ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ಅನ್ನು ರದ್ದುಗೊಳಿಸಿ ಸಾರ್ವಜನಿಕ ಹಿತಾಸಕ್ತಿಯಿಂದ ಆತ ರಾಜ್ಯಕ್ಕೆ ಮರಳುವಂತೆ ಮಾಡಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.
eesanje/url_46_136_9.txt ADDED
@@ -0,0 +1,6 @@
 
 
 
 
 
 
 
1
+ ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದು?
2
+ ನವದೆಹಲಿ, ಮೇ 23 (ಪಿಟಿಐ)ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಗೊಳಿಸುವ ಪ್ರಕ್ರಿಯೆಗೆ ವಿದೇಶಾಂಗ ವ್ಯವಹಾರಗಳ ಸಚಿವ ಚಾಲನೆ ನೀಡಿದೆ. ಪ್ರಜ್ವಲ್‌ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರದಿಂದ ವಿದೇಶಾಂಗ ವ್ಯವಹಾರ ಸಚಿವಾಲಯಕ್ಕೆ ಪತ್ರ ಬಂದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
3
+ ಮಾಜಿ ಪ್ರಧಾನಿ ಹೆಚ್‌‍.ಡಿ.ದೇವೇಗೌಡರ ಮೊಮಗ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಪ್ರಕರಣದ ಕೇಂದ್ರಬಿಂದುವಾಗಿದ್ದು, ತಮ್ಮ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ಮತದಾನ ನಡೆದ ಒಂದು ದಿನದ ನಂತರ ದೇಶ ತೊರೆದಿದ್ದಾರೆ ಅವರು ಇದುವರೆಗೂ ಎಲ್ಲಿದ್ದಾರೆ ಎಂಬ ಸುಳಿವು ಯಾರಿಗೂ ಲಭಿಸಿಲ್ಲ.
4
+ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸಂಬಂಧಿಸಿದಂತೆ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಪಡಿಸಲು ಕರ್ನಾಟಕ ಸರ್ಕಾರದಿಂದ ಎಂಇಎ ಪತ್ರವನ್ನು ಸ್ವೀಕರಿಸಿದೆ, ಇದನ್ನು ಪ್ರಕ್ರಿಯೆಗೊಳಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
5
+ ಜೆಡಿಎಸ್‌‍ ಮುಖಂಡ ಪ್ರಜ್ವಲ್‌ ವಿರುದ್ಧ ಬಂಧನ ವಾರಂಟ್‌ ಹೊರಡಿಸಿರುವ ಹಿನ್ನೆಲೆಯಲ್ಲಿ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಪಡಿಸುವ ಮನವಿಗೆ ಕೇಂದ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದರು. ಎಸ್‌‍ಐಟಿ ಸಲ್ಲಿಸಿದ ಅರ್ಜಿಯ ಮೇರೆಗೆ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪ್ರಜ್ವಲ್‌ ವಿರುದ್ಧ ಬಂಧನ ವಾರಂಟ್‌ ಹೊರಡಿಸಿದೆ.
6
+ ಈ ತಿಂಗಳ ಆರಂಭದಲ್ಲಿ, ವಿದೇಶಾಂಗ ಇಲಾಖೆ ವಕ್ತಾರ ರಣಧೀರ್‌ ಜೈಸ್ವಾಲ್‌‍ ಅವರು, ರೇವಣ್ಣ ಅವರು ರಾಜತಾಂತ್ರಿಕ ಪಾಸ್‌‍ಪೋರ್ಟ್‌ನಲ್ಲಿ ಜರ್ಮನಿಗೆ ಪ್ರಯಾಣಿಸಿದ್ದಾರೆ ಮತ್ತು ಪ್ರವಾಸಕ್ಕೆ ರಾಜಕೀಯ ಅನುಮತಿಯನ್ನು ಪಡೆದಿಲ್ಲ ಎಂದು ಹೇಳಿದ್ದರು.
eesanje/url_46_137_1.txt ADDED
@@ -0,0 +1,5 @@
 
 
 
 
 
 
1
+ 400 ಮಹಿಳೆಯರ ಅತ್ಯಾಚಾರ ಹೇಳಿಕೆ : ರಾಹುಲ್‌ ಗಾಂಧಿ ವಿರುದ್ಧ ಪೊಲೀಸರಿಗೆ ಜೆಡಿಎಸ್‌‍ ದೂರು
2
+ ಬೆಂಗಳೂರು, ಮೇ 22-ಶಿವಮೊಗ್ಗ ಮತ್ತು ರಾಯಚೂರಿನ ಚುನಾವಣಾ ರ್ಯಾಲಿಗಳಲ್ಲಿ ಸಂಸದ ರಾಹುಲ್‌ಗಾಂಧಿಯವರು ಪ್ರಜ್ವಲ್‌ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿದ್ದಾರೆ ಎಂಬ ಆರೋಪದ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ರಾಜ್ಯ ಪೊಲೀಸ್‌‍ ಮಹಾ ನಿರ್ದೇಶಕ ಅಲೋಕ್‌ ಮೋಹನ್‌ ಅವರಿಗೆ ಜೆಡಿಎಸ್‌‍ ನಿಯೋಗ ಮನವಿ ಸಲ್ಲಿಸಿದೆ.
3
+ ವಿಧಾನಪರಿಷತ್‌ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಮಂಜೇಗೌಡ, ಜೆಡಿಎಸ್‌‍ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಎಚ್‌.ಎಂ.ರಮೇಶ್‌ ಗೌಡ ಹಾಗೂ ವಿಧಾನಪರಿಷತ್‌ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ ಅವರು, ಈ ಸಂಬಂಧ ಪೊಲೀಸ್‌‍ ಮಹಾ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.ರಾಹುಲ್‌ಗಾಂಧಿಯವರು ಚುನಾವಣಾ ರ್ಯಾಲಿಗಳಲ್ಲಿ ನೀಡಿರುವ ಹೇಳಿಕೆ ಪತ್ರಿಕೆಗಳಲ್ಲಿ ವರದಿಯಾಗಿದ್ದು, ವಿದ್ಯುನಾನ ಮಾಧ್ಯಮದಲ್ಲಿ ಪ್ರಸಾರವಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.
4
+ ರಾಹುಲ್‌ಗಾಂಧಿಯವರು ಇದೊಂದು ಲೈಂಗಿಕ ಹಗರಣವಲ್ಲ, ಸಾಮೂಹಿಕ ಅತ್ಯಾಚಾರ ಎಂದು ಆಪಾದಿಸಿದ್ದರು. ಆದರೂ ಈ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌‍ಐಟಿ ಇದುವರೆಗೂ ರಾಹುಲ್‌ಗಾಂಧಿಯವರಿಗೆ ನೋಟೀಸ್‌‍ ನೀಡಿಲ್ಲ ಹಾಗೂ ಅವರಿಂದ ಮಾಹಿತಿಯನ್ನು ಪಡೆದಿಲ್ಲ ಎಂದು ಮನವಿ ಪತ್ರದಲ್ಲಿ ಆರೋಪಿಸಿದ್ದಾರೆ.
5
+ ರಾಹುಲ್‌ಗಾಂಧಿಯವರು ನಿರ್ದಿಷ್ಟ ಹೇಳಿಕೆ ನೀಡಿರುವುದರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ 400 ಮಹಿಳೆಯರ ಮಾಹಿತಿ ವಿವರಗಳನ್ನು ಅವರು ತಿಳಿದಿದ್ದಾರೆ ಎಂದು ಆಪಾದಿಸಲಾಗಿದೆ.ರಾಹುಲ್‌ಗಾಂಧಿ ಅವರು ಹೇಳಿದಂತೆ ಸಂತ್ರಸ್ತ 400 ಮಹಿಳೆಯರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಮನವಿ ಪತ್ರದಲ್ಲಿ ಅವರು ಕೋರಿದ್ದಾರೆ.
eesanje/url_46_137_10.txt ADDED
@@ -0,0 +1,7 @@
 
 
 
 
 
 
 
 
1
+ ಪೌರತ್ವ ತಿದ್ದುಪಡಿ ಕಾಯ್ದೆ : ಕರ್ನಾಟಕದಲ್ಲಿ 145 ಮಂದಿಯಿಂದ ಪೌರತ್ವಕ್ಕಾಗಿ ಅರ್ಜಿ
2
+ ಬೆಂಗಳೂರು,ಮೇ22-ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯಡಿ ಕರ್ನಾಟಕದಲ್ಲಿ 145 ಮಂದಿ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಅವರು ತಮ ಅರ್ಜಿಗಳನ್ನು ಅಂಚೆ ಇಲಾಖೆಗೆ ಕಳುಹಿಸಿದ್ದಾರೆ ಎಂದು ಅಂಚೆ ಮೂಲಗಳು ತಿಳಿಸಿವೆ. ಅಚ್ಚರಿ ಎಂದರೆ ಇವರೆಲ್ಲಾ ರಾಜ್ಯದ ಎರಡು ಜಿಲ್ಲೆಗಳವರಾಗಿದ್ದಾರೆ.
3
+ ರಾಯಚೂರಿನಿಂದ 143 ಮತ್ತು ದಕ್ಷಿಣ ಕನ್ನಡದಿಂದ ಎರಡು ಅರ್ಜಿಗಳು ಬಂದಿವೆ. ಅವರಲ್ಲಿ ಹೆಚ್ಚಿನವರು ಪಾಕಿಸ್ತಾನದ ಹಿಂದೂಗಳು. ಇದು ನಿರಂತರ ಪ್ರಕ್ರಿಯೆಯಾಗಿರುವುದರಿಂದ ಅರ್ಜಿಗಳನ್ನು ಕಳುಹಿಸಲು ಯಾವುದೇ ಗಡುವು ಇರುವುದಿಲ್ಲ ಎಂದು ಮೂಲಗಳು ತಿಳಿಸಿವೆ.ಈ ವ್ಯಕ್ತಿಗಳು ರಾಯಚೂರಿಗೆ ಯಾವಾಗ ಸ್ಥಳಾಂತರಗೊಂಡರು ಎಂಬುದು ನಮಗೆ ತಿಳಿದಿಲ್ಲ, ಆದರೆ ನಮ್ಮ ವಿಭಾಗೀಯ ಕಚೇರಿಗೆ 143 ಅರ್ಜಿಗಳು ಬಂದಿವೆ. ಬೆಂಗಳೂರಿನಲ್ಲಿ ನಾಲ್ಕು ವಿಭಾಗೀಯ ಕಚೇರಿಗಳಿದ್ದು, ಒಂದು ಅರ್ಜಿಯನ್ನೂ ಸ್ವೀಕರಿಸಿಲ್ಲ ಎಂದು ಮತ್ತೊಂದು ಮೂಲ ತಿಳಿಸಿದೆ.
4
+ ಡಿಸೆಂಬರ್‌ 31, 2014 ರ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವವನ್ನು ನೀಡುತ್ತದೆ. ಈ ವರ್ಷದ ಮಾರ್ಚ್‌ 11 ರಂದು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಿದ ನಂತರ ಅಧಿಸೂಚನೆ ಹೊರಡಿಸಲಾಯಿತು. ಅಂಚೆ ಮತ್ತು ರೈಲ್ವೆ ನೌಕರರಿಗೆ ಪ್ರಮಾಣಪತ್ರಗಳನ್ನು ಪರಿಶೀಲಿಸಲು ಮತ್ತು ವಿತರಿಸಲು ಅಧಿಕಾರ ನೀಡಲಾಗಿದೆ.
5
+ ದೇಶಾದ್ಯಂತ ಸುಮಾರು 12,000 ಮಂದಿ ಅರ್ಜಿ ಸಲ್ಲಿಸಿದ್ದು, ಇತ್ತೀಚೆಗೆ 300 ಮಂದಿಗೆ ಪೌರತ್ವ ಪ್ರಮಾಣಪತ್ರಗಳನ್ನು ಹಸ್ತಾಂತರಿಸಲಾಗಿದೆ. ಅರ್ಜಿದಾರರು ಎಲ್ಲಾ ಅಗತ್ಯ ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್‌‍ ಮಾಡಬೇಕಾಗುತ್ತದೆ. ಮೊದಲ ವೈಯಕ್ತಿಕ ಮೇ 25ರಂದು ರಾಯಚೂರಿನಲ್ಲಿ ನಡೆಯುತ್ತದೆ ಮತ್ತು ಅರ್ಜಿದಾರರು ಎಲ್ಲಾ ಮೂಲ ದಾಖಲೆಗಳನ್ನು ಒದಗಿಸುವ ನಿರೀಕ್ಷೆಯಿದೆ.
6
+ ಒಂದು ದಿನದಲ್ಲಿ 28 ನೀಡಿರುವುದರಿಂದ ಎಲ್ಲಾ ಅರ್ಜಿಗಳನ್ನು ಮೇ 31ರೊಳಗೆ ಪೂರ್ಣಗೊಳಿಸಲು ಅಂಚೆ ಸಿಬ್ಬಂದಿ ಯೋಜಿಸಿದ್ದಾರೆ. ಜೂನ್‌ 5ರಂದು ಇಬ್ಬರು ಅರ್ಜಿದಾರರಿಗೆ ನೀಡಿದ್ದಾರೆ, ಜೂನ್‌ 5ರೊಳಗೆ ಅಂಚೆ ಇಲಾಖೆಯ ಕೆಲಸ ಮುಗಿಯುತ್ತದೆ. ಪ್ರಕ್ರಿಯೆ ಮುಗಿದ ನಂತರ ಅಂಚೆ ಇಲಾಖೆಯು ಅರ್ಜಿಗಳನ್ನು ರಾಜ್ಯ ಮಟ್ಟದ ಅಧಿಕಾರ ಸಮಿತಿಗೆ ಕಳುಹಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
7
+ ಅವರು ಅದನ್ನು ಮತ್ತೊಮೆ ಪರಿಶೀಲಿಸುತ್ತಾರೆ ಮತ್ತು ಪರಿಶೀಲನೆಯ ವಿವರಗಳು ಮತ್ತು ದಾಖಲೆಗಳನ್ನು ಸಿಎಎ ಪೋರ್ಟಲ್‌ನಲ್ಲಿ ಅಪ್‌ಲೋಡ್‌‍ ಮಾಡಲಾಗುತ್ತದೆ. ಗೃಹ ಸಚಿವಾಲಯವು ಅರ್ಜಿಗಳ ಕುರಿತು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಎಂದು ಅಧಿಕಾರಿಯೊ��್ಬರು ತಿಳಿಸಿದ್ದಾರೆ.
eesanje/url_46_137_11.txt ADDED
@@ -0,0 +1,9 @@
 
 
 
 
 
 
 
 
 
 
1
+ ಚುನಾವಣೆ ಲಾಭಕ್ಕಾಗಿ ಅಶ್ಲೀಲ ವಿಡಿಯೋಗಳನ್ನ ವಿತರಿಸುದ್ದು ಅಪರಾಧವಲ್ಲವೇ..? : ಹೆಚ್ಡಿಕೆ ಪ್ರಶ್ನೆ
2
+ ಮೈಸೂರು,ಮೇ22-ಅಶ್ಲೀಲ ವಿಡಿಯೋವನ್ನು ಚುನಾವಣೆ ಲಾಭಕ್ಕಾಗಿ ವಿತರಣೆ ಮಾಡಿದ್ದು ಅಪರಾಧವಲ್ಲವೇ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಡಿಯೋ ಮಾಡಿರುವುದು ಒಂದು ಭಾಗವಾದರೆ ಅಂಥ ವಿಡಿಯೋವನ್ನು ಹಂಚಿರುವುದು ಅಪರಾಧವಲ್ಲವೇ? ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಕಂಡರೆ ನನಗೆ ಅಸೂಯೆ ಎಂದು ಹೇಳಿದ್ದಾರೆ. ಏಕೆ ಅಸೂಯೆ ಪಡೆಯಲಿ, ಅಧಿಕಾರ ಯಾರಪ್ಪನ ಆಸ್ತಿಯೂ ಅಲ್ಲ. ರಾಜಕಾರಣದಲ್ಲಿ ಏಳುಬೀಳು ಸಹಜ. ಭಗವಂತನ ಇಚ್ಛೆಯಂತೆ ಆಗುತ್ತದೆ. ಅದರಲ್ಲಿ ಏಕೆ ಅಸೂಯೆ ಪಡೆಯಲಿ ಎಂದು ಪ್ರಶ್ನಿಸಿದರು.
4
+ ಪ್ರಧಾನಿ ಸ್ಥಾನವನ್ನು ಅತ್ಯಂತ ಸುಲಭವಾಗಿ ತೆರವು ಮಾಡಿದ ವಂಶ ನಮದು. ಈಗಾಗಲೇ ಎಲ್ಲಾ ಅಧಿಕಾರವನ್ನು ನಾವು ನೋಡಿಯಾಗಿದೆ. ಅಧಿಕಾರ ಬೇಡವೆಂದರೂ ಬಂದಿದೆ. ನಾವೆಂದೂ ಅಧಿಕಾರವನ್ನು ಹುಡುಕಿಕೊಂಡು ಹೋಗಿರಲಿಲ್ಲ ಎಂದು ತಿರುಗೇಟು ನೀಡಿದರು.
5
+ ಮಹಾನುಭಾವರು 1980ರಲ್ಲೇ ಸಿಡಿ ಫ್ಯಾಕ್ಟ್ರಿ ಓಪನ್‌ ಮಾಡಿದ್ದರು. ಈಗಾಗಲೇ ಸಂಚಲನ ಮೂಡಿಸಿರುವ ಪೆನ್‌ಡ್ರೈವ್‌ ಮೂಲವೇ ಕಾರ್ತಿಕ್‌. ಆತ ಹಾಸನದ ಕಾಂಗ್ರೆಸ್‌‍ ಅಭ್ಯರ್ಥಿ ಮೂಲಕ ಸಂಸದ ಡಿ.ಕೆ.ಸುರೇಶ್‌ ಅವರ ಬಳಿಗೆ ಮೊದಲು ಹೋಗಿದ್ದರು. ನಂತರ ಅದನ್ನು ಸಿ.ಡಿ ಶಿವಕುಮಾರ್‌ ಕಾಪಿ ಮಾಡಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಆರೋಪ ಕೇಳಿಬಂದಿರುವ ಸಂಸದ ಪ್ರಜ್ವಲ್‌ ಪರವಾಗಿ ಇಲ್ಲ. ಒಂದು ವೇಳೆ ಆರೋಪ ಸಾಬೀತಾಗಿ ಅಪರಾಧ ಮಾಡಿರುವುದು ದೃಢಪಟ್ಟರೆ ಕಾನೂನು ರೀತಿ ಶಿಕ್ಷೆ ಕೊಡಲಿ ಎಂದರು.
6
+ ವಕೀಲ ದೇವರಾಜೇಗೌಡ, ಮಾಜಿ ಸಂಸದ ಶಿವರಾಮೇಗೌಡ, ಡಿ.ಕೆ.ಶಿವಕುಮಾರ್‌ ಅವರು ಪೆನ್‌ಡ್ರೈವ್‌ ವಿತರಣೆಯ ಹಿಂದಿದ್ದಾರೆ. ಅರ್ಧ ನಿಮಿಷದಲ್ಲೇ ಎಲ್ಲವೂ ತೀರ್ಮಾನವಾಗಿದೆ ಎಂದು ಆರೋಪಿಸಿದರು.
7
+ ನನ್ನ ಬಳಿ ಇರುವ ಪೆನ್‌ಡ್ರೈವ್‌ ರಾಜ್ಯ ಸರ್ಕಾರದ ವರ್ಗಾವಣೆಯ ಭ್ರಷ್ಟಾಚಾರಕ್ಕೆ ಸಂಬಂಧಿಸಿದ್ದು, ಅದನ್ನು ಬಹಿರಂಗಪಡಿಸಿದರೆ ನನ್ನದೇ ಸೃಷ್ಟಿ ಎಂದು ಹೇಳುತ್ತೀರ. ಇದುವರೆಗೂ ಎಸ್‌‍ಐಟಿಗೆ ನೀಡಿರುವ ಯಾವ ಪ್ರಕರಣ ತಾರ್ಕಿಕ ಅಂತ್ಯ ಕಂಡಿದೆ ಹೇಳೀ ಎಂದರು.
8
+ ನಾನು ಮುಖ್ಯಮಂತ್ರಿಯಾಗಿದ್ದಾಗ ಯಾವ ಪ್ರಕರಣವನ್ನು ಎಸ್‌‍ಐಟಿಗೆ ಕೊಟ್ಟಿರಲಿಲ್ಲ ಎಂದ ಅವರು, ಫೋನ್‌ ಟ್ಯಾಪ್‌ ಮಾಡಲು ಅವರೇನು ಟೆರರಿಸ್ಟಾ ಎಂದು ಕೆಲವರು ಕೇಳಿದ್ದಾರೆ. ಅವರ ಸುತ್ತಮುತ್ತ ಟೆರರಿಸ್ಟ್‌ಗಳೇ ಇದ್ದಾರೆ ಎಂದು ಆಪಾದಿಸಿದರು.
9
+ ಪೆನ್‌ಡ್ರೈವ್‌ ಅವರ ಬುಡಕ್ಕೆ ಬರುತ್ತಿರುವುದನ್ನು ಗಮನಿಸಿ ಮುಖ್ಯಮಂತ್ರಿ ಯಾರೂ ಆ ಬಗ್ಗೆ ಮಾತನಾಡಬೇಡಿ ಎಂದು ಸೂಚಿಸಿದ್ದಾರೆ, ಬಿಜೆಪಿ ಮತ್ತು ಜೆಡಿಎಸ್‌‍ ಮೈತ್ರಿಗೂ ಹಾಗೂ ಪೆನ್‌ಡ್ರೈವ್‌ ಪ್ರಕರಣಕ್ಕೂ ಸಂಬಂಧವಿಲ್ಲ. ಈ ಪ್ರಕರಣದಿಂದ ನಮ ಕುಟುಂಬಕ್ಕೆ ಸ್ವ��್ಪ ಡ್ಯಾಮೇಜ್‌ ಆಗಿರುವುದು ಸತ್ಯ. ಪ್ರಜ್ವಲ್‌ ರೇವಣ್ಣ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಸಂಪರ್ಕದಲ್ಲೂ ಇಲ್ಲ. ಈ ಸಂದರ್ಭದಲ್ಲಿ ನಾನು ವಿದೇಶಕ್ಕೆ ಹೋದರೆ ಪ್ರಜ್ವಲ್‌ ರಕ್ಷಣೆಗೆ ಹೋಗಿದ್ದಾರೆ ಎಂದು ಸುದ್ದಿ ಹಬ್ಬಿಸಿಬಿಡುತ್ತಾರೆ. ಭಯದಿಂದ ಹೋಗಿರಬಹುದು. ವಕೀಲರ ಸಲಹೆ ಪಡೆಯುವುದು ಬೇಡ, ನೈತಿಕತೆ ಉಳಿಸಿಕೊಳ್ಳಲು ದೇಶಕ್ಕೆ ವಾಪಸ್‌‍ ಬಾ ಎಂದು ಮತ್ತೊಮೆ ಬಹಿರಂಗ ಕರೆಯನ್ನು ಕುಮಾರಸ್ವಾಮಿ ನೀಡಿದರು.
eesanje/url_46_137_12.txt ADDED
@@ -0,0 +1,6 @@
 
 
 
 
 
 
 
1
+ 8 ತಿಂಗಳಿನಿಂದ ರೈತರಿಗೆ ಹಾಲಿನ ಪ್ರೋತ್ಸಾಹಧನ ನೀಡದ ಕಾಂಗ್ರೆಸ್‌‍ ಸರ್ಕಾರ : ಆರ್‌‍.ಅಶೋಕ್‌‍ ಕಿಡಿ
2
+ ಬೆಂಗಳೂರು,ಮೇ22-ರಾಜ್ಯದ ವಿವಿಧ ಹಾಲು ಒಕ್ಕೂಟಗಳಿಗೆ ಹಾಲು ಸರಬರಾಜು ಮಾಡುವ 26 ಲಕ್ಷಕ್ಕೂ ಹೆಚ್ಚು ರೈತರಿಗೆ ನೀಡಬೇಕಾದ 703 ಕೋಟಿ ರೂ. ಪ್ರೋತ್ಸಾಹಧನವನ್ನು ಕಳೆದ 8 ತಿಂಗಳಿನಿಂದ ಬಾಕಿ ಉಳಿಸಿಕೊಂಡಿದೆ ಈ ರೈತ ವಿರೋಧಿ ಕಾಂಗ್ರೆಸ್‌‍ ಸರ್ಕಾರ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌‍.ಅಶೋಕ್‌‍ ಕಿಡಿಕಾರಿದ್ದಾರೆ.
3
+ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌‍ ಮಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಚುನಾವಣೆ ಸಂದರ್ಭದಲ್ಲಿ ನಂದಿನಿ ಹೆಸರಲ್ಲಿ ರಾಜಕೀಯ ಮಾಡಿ ಈಗ ಅಮೃತದಂತಹ ಹಾಲು ಕೊಡುವ ರೈತರ ಬಾಳಲ್ಲಿ ವಿಷ ಹಿಂಡುವ ಪಾಪದ ಕೆಲಸ ಮಾಡುತ್ತಿದ್ದೀರಲ್ಲ, ಇದೇನಾ ನೀವು ನಮ ನಂದಿನಿ ಬ್ರ್ಯಾಂಡ್‌‍ ಉಳಿಸುವ ಪರಿ? ಪ್ರಶ್ನಿಸಿದ್ದಾರೆ.
4
+ ನಂದಿನಿ ಸಂಸ್ಥೆಯ ಕೋಟ್ಯಂತರ ರೂ. ಬಳಸಿಕೊಂಡು ಅಂತಾರಾಷ್ಟ್ರೀಯ ಕ್ರಿಕೆಟ್‌‍ ಪಂದ್ಯಗಳ ಪ್ರಾಯೋಜಕತ್ವ ಪಡೆಯಲು ನಿಮ್ಮ ಸರ್ಕಾರದ ಬಳಿ ಹಣ ಇದೆ. ಆದರೆ ನಂದಿನಿ ಬ್ರ್ಯಾಂಡ್‌‍ ಅನ್ನ ಕಟ್ಟಿ, ಬೆಳೆಸಿ, ಪೋಷಿಸುತ್ತಿರುವ ಹೈನುಗಾರರಿಗೆ ಸಮಯಕ್ಕೆ ಸರಿಯಾಗಿ ಪ್ರೋತ್ಸಾಹಧನ ನೀಡಲು ತಮ್ಮ ಬಳಿ ಹಣವಿಲ್ಲ ಅಲ್ಲವೇ ಸಿದ್ದರಾಮಯ್ಯನವರೇ? ನಾಡಿನ ರೈತರ ಶಾಪ ತಮಗೆ ತಟ್ಟದೇ ಇರದು ಎಂದು ಅಸಮಾಧಾನ ವ್‌ಯಕ್ತಪಡಿಸಿದ್ದಾರೆ.
5
+ ಮತ್ತೊಂದುಟ ಟ್ವೀಟ್‌‍ನಲ್ಲಿ, ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ ಕಾಪಾಡಲು ಮತ್ತೊಮೆ ವಿಫಲವಾಗಿರುವ ಸರ್ಕಾರ, ಬರಗಾಲದ ನಡುವೆಯೂ ಮೇ ತಿಂಗಳಿನಲ್ಲಿ ಮತ್ತೊಮೆ ತಮಿಳುನಾಡಿಗೆ 2.5 ಟಿಸಿಂಸಿ ನೀರು ಬಿಡಲು ಶರಣಾಗಿದೆ ಎಂದು ಎಂದು ಬೇಸರ ವ್‌ಯಕ್ತಪಡಿಸಿದ್ದಾರೆ.
6
+ ರಾಜ್ಯದ ಪರವಾಗಿ ಸಮರ್ಥವಾದ ವಾದ ಮಂಡಿಸಲು ಸಿದ್ಧರಾಗಿ ಎಂದು ಎಷ್ಟು ಬಾರಿ ಎಚ್ಚರಿಸಿದರೂ ನಿರ್ಲಕ್ಷ್ಯ ಮಾಡುತ್ತಾ ಕಾಲಹರಣ ಮಾಡಿದ ಸಿಎಂ ಹಾಗು ಡಿಸಿಎಂ ಅವರು ಈಗ ಮತ್ತೊಮೆ ಕಾವೇರಿಯ ಮಡಿಲನ್ನು ಬರಿದು ಮಾಡಿ ಕನ್ನಡಿಗರಿಗೆ ದ್ರೋಹ ಬಗೆದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
eesanje/url_46_137_2.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಮಲಗಿದಲ್ಲೇ ಮರಣವನ್ನಪ್ಪಿದ ಒಂದೇ ಕುಟುಂಬದ ನಾಲ್ವರು, ಸಿಲಿಂಡರ್‌ ಸೋರಿಕೆ ಶಂಕೆ
2
+ ಮೈಸೂರು, ಮೇ 22-ಮನೆಯೊಂದರಲ್ಲಿ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಆಲನಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
3
+ ಯರಗನಹಳ್ಳಿಯ ಕಾವೇರಿ ಆಸ್ಪತ್ರೆ ಸಮೀಪದ ನಿವಾಸಿ, ಬಟ್ಟೆ ಐರನ್‌ ಕೆಲಸ ಮಾಡುತ್ತಿದ್ದ ಕುಮಾರಸ್ವಾಮಿ(45) ಇವರ ಪತ್ನಿ ಮಂಗಳ(39) ಮತ್ತು ಮಕ್ಕಳಾದ ಅರ್ಚನಾ(19), ಸ್ವಾತಿ(17) ಮೃತಪಟ್ಟವರು.
4
+ ಈ ಕುಟುಂಬದವರು ಹೇಗೆ ಸಾವನ್ನಪ್ಪಿದ್ದಾರೆ ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಉಸಿರುಗಟ್ಟಿ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ.
5
+ ಕುಟುಂಬದವರೆಲ್ಲರೂ ಊಟ ಮಾಡಿ ನಿದ್ರೆಗೆ ಜಾರಿದ್ದಾರೆ. ಆ ಸಂದರ್ಭದಲ್ಲಿ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿರುವುದು ಇವರ ಗಮನಕ್ಕೆ ಬಂದಿಲ್ಲ. ಬೆಳಗಾಗುವಷ್ಟರಲ್ಲಿ ನಾಲ್ಕು ಜನ ಮಲಗಿದ್ದ ಜಾಗದಲ್ಲೇ ಶವವಾಗಿದ್ದಾರೆ.
6
+ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಸಖರಾಯಪಟ್ಟಣದವರಾದ ಈ ಕುಟುಂಬ 30 ವರ್ಷಗಳ ಹಿಂದೆ ಮೈಸೂರಿಗೆ ಬಂದು ನೆಲೆಸಿತ್ತು. ಸಿದ್ದಾರ್ಥ ಲೇಔಟ್‌ನ ಜೆಎಸ್‌‍ಎಸ್‌‍ ಪಬ್ಲಿಕ್‌ ಶಾಲೆ ಬಳಿ ಕುಮಾರಸ್ವಾಮಿ ಅವರು ಇಸ್ತ್ರಿ ಅಂಗಡಿ ಇಟ್ಟುಕೊಂಡಿದ್ದು, ಐರನ್‌ಗೆ ಗ್ಯಾಸ್‌‍ ಸಿಲಿಂಡರ್‌ ಬಳಸುತ್ತಿದ್ದರು. ಹಾಗಾಗಿ ಇವರ ಮನೆಯಲ್ಲಿ ಮೂರು ಸಿಲಿಂಡರ್‌ಗಳನ್ನು ಸಂಗ್ರಹಿಸಿಟ್ಟಿದ್ದರು.
7
+ ಭಾನುವಾರ ಸಂಬಂಧಿಕರ ಮದುವೆಗೆಂದು ಕಡೂರಿಗೆ ಹೋಗಿದ್ದ ಈ ಕುಟುಂಬ ಸೋಮವಾರ ವಾಪಸ್‌‍ ಬಂದು ರಾತ್ರಿ ಮಲಗಿದ್ದು, ಬೆಳಗಾಗುವಷ್ಟರಲ್ಲಿ ಮಲಗಿದ್ದಲ್ಲಿಯೇ ನಾಲ್ಕೂ ಜನ ಸಾವನ್ನಪಿದ್ದಾರೆ. ಆದರೆ ಇದು ಯಾರ ಗಮನಕ್ಕೂ ಬಂದಿಲ್ಲ.
8
+ ಎರಡು ದಿನಗಳಿಂದ ಅರ್ಚಅನಾ ಕಾಲೇಜಿಗೆ ಬಾರದಿದ್ದಾಗ ಆಕೆಯ ಸ್ನೇಹಿತರು ಇಂದು ಬೆಳಗ್ಗೆ ಮನೆ ಬಳಿ ಹೋಗಿದ್ದಾರೆ. ಬಾಗಿಲು ಬಡಿದರೂ ತೆಗೆಯದಿದ್ದಾಗ ಕಿಟಕಿ ತಳ್ಳಿ ನೋಡಿದ್ದು, ಹಾಲ್‌ನಲ್ಲಿ ಮಕ್ಕಳಿಬ್ಬರು ಒಂದೊಂದು ಕಡೆ ಮಲಗಿರುವುದು ಕಂಡು ಕೂಗಿದ್ದಾರೆ. ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ನೆರೆಹೊರೆಯವರನ್ನು ಕರೆದು ವಿಷಯ ತಿಳಿಸಿ ನಂತರ ಪೊಲೀಸರಿಗೆ ಹೇಳಿದ್ದಾರೆ.
9
+ ಸ್ಥಳಕ್ಕಾಗಮಿಸಿದ ಪೊಲೀಸರು ಬಾಗಿಲು ಒಡೆದು ಒಳಗೆ ಹೋಗಿ ನೋಡಿದಾಗ ನಾಲ್ವರೂ ಮೃತಪಟ್ಟಿರುವುದು ಕಂಡುಬಂದಿದೆ. ಮನೆಯೊಳಗೆ ಗ್ಯಾಸ್‌‍ ವಾಸನೆ ಬರುತ್ತಿರುವುದು ಗಮನಿಸಿ ತಕ್ಷಣ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಮೂರು ಸಿಲಿಂಡರ್‌ಗಳನ್ನು ಹೊರಗೆ ತಂದಿಟ್ಟಿದ್ದಾರೆ.
10
+ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎಫ್‌ಎಸ್‌‍ಎಲ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರ ಪೊಲೀಸ್‌‍ ಆಯುಕ್ತ ರಮೇಶ್‌ ಬಾನೋತ್‌ ಅವರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು.
11
+ ನಾಲ್ವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ���ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.ಮರಣೋತ್ತರ ಪರೀಕ್ಷೆ ವರದಿ ಬಂದ ನಂತರವಷ್ಟೇ ಈ ನಾಲ್ವರ ಸಾವು ಹೇಗಾಯಿತು ಎಂಬುವುದು ನಿಖರವಾಗಿ ಗೊತ್ತಾಗಲಿದೆ.
eesanje/url_46_137_3.txt ADDED
@@ -0,0 +1,5 @@
 
 
 
 
 
 
1
+ “ಯಾವುದೇ ಕಾರಣಕ್ಕೂ ದೇವೇಗೌಡರು ರಾಜೀನಾಮೆ ನೀಡಬಾರದು”
2
+ ಬೆಂಗಳೂರು,ಮೇ 22-ಯಾವುದೇ ಕಾರಣಕ್ಕೂ ಎಚ್.ಡಿ.ದೇವೇಗೌಡರು ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಬಾರದು ಎಂದು ಒಕ್ಕಲಿಗರ ಜಾಗೃತಿ ವೇದಿಕೆ ಅಧ್ಯಕ್ಷ ಕೆ.ಸಿ.ಗಂಗಾಧರ್ ಮನವಿ ಮಾಡಿದ್ದಾರೆ.
3
+ ಜೀವನದುದ್ದಕ್ಕೂ ರೈತರ ಪರವಾಗಿ, ಬಡವರ ಪರವಾಗಿ, ದೀನ ದಲಿತರ ಪರವಾಗಿ ದುಡಿದ ದೇಶದ ಮಹಾನ್ ನಾಯಕರಾಗಿರುವ ದೇವೇಗೌಡರು ಕೆಲವರ ಷಡ್ಯಂತ್ರದಿಂದಾಗಿ ಮನನೊಂದು ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಇದು ನಮಗೆಲ್ಲರಿಗೂ ಆಘಾತ ತಂದಿದೆ ಎಂದು ಹೇಳಿದ್ದಾರೆ.
4
+ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪೆನ್ಡ್ರೈವ್ ಪ್ರಕರಣದಲ್ಲಿ ಕೆಲ ಸಚಿವರು, ಶಾಸಕರ ಕೈವಾಡವಿದ್ದು, ಇದು ಒಕ್ಕಲಿಗ ಸಮುದಾಯವನ್ನು ತುಳಿಯುವಂತಹ ಪ್ರವೃತ್ತಿಯಾಗಿದೆ. ಇದಲ್ಲದೆ, ದೇವೇಗೌಡರ ಕುಟುಂಬಕ್ಕೆ ಮಸಿ ಬಳಿಯುವ ಷಡ್ಯಂತ್ರವಾಗಿದೆ. ಈ ಬಗ್ಗೆ ಒಕ್ಕಲಿಗ ಸಮುದಾಯ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟಕ್ಕೆ ಸಿದ್ಧವಾಗಬೇಕಿದೆ ಎಂದು ಅವರು ತಿಳಿಸಿದ್ದಾರೆ.
5
+ ದೇವೇಗೌಡರ ಮನಸ್ಸಿಗೆ ನೋವುಂಟು ಮಾಡಿದ ಯಾರೇ ಆದರೂ ಅವರನ್ನು ರಾಜ್ಯದ ಜನತೆ ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.
eesanje/url_46_137_4.txt ADDED
@@ -0,0 +1,9 @@
 
 
 
 
 
 
 
 
 
 
1
+ ರದ್ದಾಗುತ್ತಾ ಸಂಸದ ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌‍ಪೋರ್ಟ್..?
2
+ ಬೆಂಗಳೂರು, ಮೇ 22-ಹಾಸನ ಪೆನ್‌ಡ್ರೈವ್‌ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ನೀಡಲಾಗಿರುವ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ಅನ್ನು ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಎರಡು ಬಾರಿ ಪತ್ರ ಬರೆಯಲಾಗಿದೆ. ಆದರೆ ಈವರೆಗೂ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದೆ ಕೇವಲ ಟೀಕೆ, ಟಿಪ್ಪಣಿಗಳನ್ನು ಮಾಡಲಾಗುತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಆಕ್ಷೇಪ ವ್ಯಕ್ತಪಡಿಸಿದರು.
3
+ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿಯವರಿಗೆ ಪತ್ರ ಬರೆದಿದ್ದರು. ಸ್ಥಳೀಯ ನ್ಯಾಯಾಲಯ ಜಾಮೀನುರಹಿತ ಬಂಧನ ಆದೇಶ ಹೊರಡಿಸಿದ ಬಳಿಕ ಅದನ್ನು ಆಧಾರವಾಗಿಟ್ಟುಕೊಂಡು ಎಸ್‌‍ಐಟಿ ಮುಖ್ಯಸ್ಥರು ಕೇಂದ್ರ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಆದರೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
4
+ ನ್ಯಾಯಾಲಯದಿಂದ ವಾರಂಟ್‌ ಜಾರಿಯಾದ ಮೇಲೆ ಡಿಪ್ಲೊಮೇಟಿಕ್‌ ಪಾಸ್‌‍ ಅನ್ನು ರದ್ದು ಮಾಡುವುದು ಕೇಂದ್ರ ಸರ್ಕಾರದ ಕರ್ತವ್ಯ. ಈ ನಿಟ್ಟಿನಲ್ಲಿ ಅಧಿಕೃತವಾದ ಮಾದರಿಯಲ್ಲೇ ಪತ್ರ ಬರೆಯಲಾಗಿದೆ. ಇದು ಪ್ರಜ್ವಲ್‌ ರೇವಣ್ಣ ಅವರಿಗೆ ಸೀಮಿತವಾಗುವ ವಿಷಯವಲ್ಲ. ಕಾನೂನಿಗೆ ಸಂಬಂಧಪಟ್ಟ ವಿಚಾರ. ಕೇಂದ್ರ ಸರ್ಕಾರ ಇಂತಹ ಸಂದರ್ಭದಲ್ಲಿ ಸಹಕಾರ ನೀಡಬೇಕು. ಕಾನೂನು ರಕ್ಷಣೆ ಮಾಡುವ ಜವಾಬ್ದಾರಿಯನ್ನು ನಿಭಾಯಿಸಬೇಕು ಎಂದು ಒತ್ತಾಯಿಸಿದರು.
5
+ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಪ್ರತಿಯೊಂದು ವಿಚಾರಕ್ಕೂ ಟೀಕೆ, ಟಿಪ್ಪಣಿ ಮಾಡುತ್ತಿದ್ದಾರೆ. ತಾವು ಹೇಳಿದಂತೆಯೇ ಎಲ್ಲವೂ ನಡೆಯಬೇಕು ಎಂಬ ಮನೋಭಾವನೆಯನ್ನು ಕುಮಾರಸ್ವಾಮಿ ಹೊಂದಿರುವಂತೆ ಕಂಡುಬರುತ್ತಿದೆ ಎಂದು ಆಕ್ಷೇಪಿಸಿದರು.
6
+ ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಬಿಜೆಪಿಯವರು ತಮ ವಿರುದ್ಧ ಟೀಕೆ ಮಾಡಿ ರಾಜೀನಾಮೆ ಕೇಳುತ್ತಿದ್ದಾರೆ. ಈಗಾಗಲೇ ಮುಖ್ಯಮಂತ್ರಿಯವರು ಅಪರಾಧ ಪ್ರಕರಣಗಳ ಅಂಕಿ ಅಂಶಗಳನ್ನು ನೀಡಿ ಸ್ಪಷ್ಟನೆ ಕೊಟ್ಟಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದು ಪರಮೇಶ್ವರ್‌ ಹೇಳಿದರು.
7
+ ಖಾಸಗಿ ವಲಯದಲ್ಲಿ ಮೀಸಲಾತಿ ನೀಡಬೇಕೆಂದು ಹಲವು ವರ್ಷಗಳಿಂದಲೂ ನಮ ಪಕ್ಷ ಒತ್ತಾಯ ಮಾಡುತ್ತಾ ಬಂದಿದೆ. ಈ ಸಂದರ್ಭದಲ್ಲಿ ಮೆರಿಟ್‌ ವಿಷಯದಲ್ಲಿ ರಾಜಿಯಾಗುವ ಅಗತ್ಯವಿಲ್ಲ. ಗುಣಮಟ್ಟ ಪಾಲನೆ ಮುಖ್ಯ ಎಂಬುದು ನಮ್ಮ ನಿಲುವು. ಈಗ ರಾಜ್ಯಸರ್ಕಾರ ಹೊರಗುತ್ತಿಗೆಯಲ್ಲಿ ರೋಸ್ಟರ್‌ ಪದ್ಧತಿಯಂತೆ ಮೀಸಲಾತಿ ಜಾರಿಗೊಳಿಸಲು ನಿರ್ಧಾರ ಕೈಗೊಂಡಿದೆ.
8
+ ನಗರ ಹಾಗೂ ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ಸಂಬಂಧಪಟ್ಟಂತೆ ನ್ಯಾಯಾಲಯದಲ್ಲಿನ ಪ್ರಕರಣ ಯಾವಾಗ ಬೇಕಾದರೂ ಇತ್ಯರ್ಥಗೊಳ್ಳಬಹುದು. ಬಹಳ ದಿನಗಳಿಂದ ನನೆಗು���ಿಗೆ ಬಿದ್ದಿರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳಿಗೆ ರಾಜ್ಯ ಚುನಾವಣಾ ಆಯೋಗ ಕೂಡ ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆ ಮಾಡಬಹುದು. ಹೀಗಾಗಿ ತಯಾರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಚರ್ಚೆಗಳು ನಡೆದಿವೆ ಎಂದರು.
9
+ ಸ್ಥಳೀಯ ಸಂಸ್ಥೆಗಳಿಗೆ ಜನಪ್ರತಿನಿಧಿಗಳಿಲ್ಲದೆ ಕೆಲಸ ಕಾರ್ಯಗಳು ಸುಗಮವಾಗಿ ನಡೆಯುತ್ತಿಲ್ಲ ಎಂಬ ಆಕ್ಷೇಪಗಳನ್ನು ರಾಜ್ಯಸರ್ಕಾರ ಪರಿಗಣಿಸಲಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಯಾವುದೇ ಚರ್ಚೆಗಳು ನಡೆಯುತ್ತಿಲ್ಲ. ಹೈಕಮಾಂಡ್‌ ಬಯಸಿದ್ದಾದರೆ ಆ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳಬಹುದು ಎಂದರು.
eesanje/url_46_137_5.txt ADDED
@@ -0,0 +1,7 @@
 
 
 
 
 
 
 
 
1
+ ನಾನು ಬದುಕಿರುವವರೆಗೂ ಹಾಸನ ಜಿಲ್ಲೆಯ ಜನರ ಜೊತೆಗಿರುತ್ತೇನೆ : ಎಚ್‌.ಡಿ.ರೇವಣ್ಣ
2
+ ಹಾಸನ, ಮೇ 22-ಹಾಸನ ಜಿಲ್ಲೆಯ ಜನರು ನನಗೆ ಸಹಕಾರ ನೀಡಿದ್ದು, ಆ ಸಹಕಾರಕ್ಕೆ ಋಣಿಯಾಗಿರುತ್ತೇನೆ. ನಮ್ಮ ಕಾರ್ಯಕರ್ತರ ಸಂಕಷ್ಟಕ್ಕೆ ಸ್ಪಂದಿಸುತ್ತೇನೆ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ತಿಳಿಸಿದರು.
3
+ ಹೊಳೆನರಸೀಪುರದ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಕುಟುಂಬದ ಸದಸ್ಯರ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ ಎಂದರು.
4
+ ನನಗೆ ನ್ಯಾಯಾಲಯದ ಬಗ್ಗೆ ಗೌರವವಿದೆ. ಹಾಗೆಯೇ ದೇವರ ಮೇಲೆಯೂ ನಂಬಿಕೆಯಿದೆ ಎಂದ ಅವರು, ಜಿಲ್ಲೆಯಲ್ಲಿನ ಯಾರೂ ಧೃತಿಗೆಡಬೇಕಾದ ಪ್ರಮೇಯ ಇಲ್ಲ. ರಾಜ್ಯದ, ಜಿಲ್ಲೆಯ ಹಾಗೂ ಹೊಳೆನರಸೀಪುರದ ಜನರು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರಿಗೆ 60 ವರ್ಷದಿಂದ ರಾಜಕೀಯ ಶಕ್ತಿ ಕೊಟ್ಟಿದ್ದಾರೆ ಎಂದು ಹೇಳಿದರು.
5
+ 25 ವರ್ಷದಿಂದ ಶಾಸಕನಾಗಿ ಕೆಲಸ ಮಾಡುತ್ತಿದ್ದೇನೆ. ಹೊಳೆನರಸೀಪುರ ಹಾಗೂ ಜಿಲ್ಲೆಯ ಜನರ ಜೊತೆ ನಾನು ಬದುಕಿರುವವರೆಗೂ ಇರುತ್ತೇನೆ ಹಾಗೆಯೇ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ನಮ್ಮ ಕುಟುಂಬ ಜನರೊಂದಿಗೆ ಇರುತ್ತದೆ. ಕುಮಾರಸ್ವಾಮಿ ಸೇರಿದಂತೆ ನಮ್ಮ ಕುಟುಂಬಕ್ಕೆ ಜನರು ಶಕ್ತಿ ಕೊಟ್ಟಿದ್ದಾರೆ ಎಂದು ಅವರು ತಿಳಿಸಿದರು.
6
+ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಒತ್ತು ಕೊಟ್ಟಿದ್ದಾರೆ. ವಿಧಾನಪರಿಷತ್‌ನ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಸಭೆಯಲ್ಲಿ ಭಾಗವಹಿಸುತ್ತಿರುವುದಾಗಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
7
+ ನನಗೇನೂ ಗೊತ್ತಿಲ್ಲ :ಸಂಸದ ಪ್ರಜ್ವಲ್‌ ರೇವಣ್ಣ ಅವರು ವಿದೇಶದಿಂದ ವಾಪಸ್‌‍ ಬರುವ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ರೇವಣ್ಣ, ನಾನು ಯಾರ ಬಗ್ಗೆಯೂ ಮಾತನಾಡುವುದಿಲ್ಲ, ಅದರ ಬಗ್ಗೆ ನನಗೇನೂ ಗೊತ್ತಿಲ್ಲ ಎಂದರು. ಲೈಂಗಿಕ ದೌರ್ಜನ್ಯದ ಆರೋಪ ಪ್ರಕರಣ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಮೇಲೆ ಪರಿಣಾಮ ಬೀರಬಹುದೇ ಎಂಬ ವಿಚಾರಕ್ಕೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
eesanje/url_46_137_6.txt ADDED
@@ -0,0 +1,5 @@
 
 
 
 
 
 
1
+ ಕಲಬುರಗಿಯ ಮಾಜಿ ಸಂಸದ ಇಕ್ಬಾಲ್‌ ಅಹ್ಮದ್ ಸರಡಗಿ ನಿಧನ
2
+ ಬೆಂಗಳೂರು, ಮೇ 22-ಕಲಬುರಗಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಇಕ್ಬಾಲ್‌ ಅಹ್ಮದ್ ಸರಡಗಿ (81) ವಿಧಿವಶರಾಗಿದ್ದಾರೆ.ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇಕ್ಬಾಲ್‌ ಅಹ್ಮದ್ ಸರಡಗಿ ಅವರು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ.
3
+ ಪತ್ನಿ, ಪುತ್ರ ರ್ಇಾನ್‌ ಅಹ್ಮದ್ ಸರಡಗಿ, ಪುತ್ರಿ ಡಾ. ಜಹೇರಾ ಸರಡಗಿ ಅವರನ್ನು ಅಗಲಿದ್ದಾರೆ. ನಗರದ ಐವಾನ್‌- ಇ-ಶಾಹಿ ಪ್ರದೇಶದಲ್ಲಿರುವ ಸರಡಗಿ ನಿವಾಸದಲ್ಲಿ ಇಂದು ಇಡೀ ದಿನ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗುತ್ತಿದೆ. ಸಂಜೆ 6 ಗಂಟೆ ನಂತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.ಸರಡಗಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಸಿಎಂ ದಿ. ಧರ್ಮಸಿಂಗ್‌ ಪರಮಾಪ್ತರಲ್ಲಿ ಒಬ್ಬರಾಗಿದ್ದರು.
4
+ ಕಲಬುರಗಿ ನಗರದಲ್ಲಿ 1944 ಜೂನ್‌ 5ರಂದು ಜನಿಸಿದ ಸರಡಗಿ, ಉಸಾನಿಯಾ ವಿಶ್ವವಿದ್ಯಾಲಯದಿಂದ ಬಿಎ, ಎಲ್‌‍ಎಲ್‌ಬಿ ಪದವಿ ಪಡೆದು, ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ನಂತರ ಗುಲ್ಬರ್ಗ ಸಾಮಾನ್ಯ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್‌‍ ಟಿಕೆಟ್‌ ಪಡೆದು ಸ್ಪರ್ಧಿಸಿ ಎರಡು ಬಾರಿ ಆಯ್ಕೆಯಾಗಿದ್ದರು. ಒಂದು ಬಾರಿ ವಿಧಾನ ಪರಿಷತ್‌ ಸದಸ್ಯರಾಗಿದ್ದರು.
5
+ ಕೇಂದ್ರ ಹಜ್‌ ಸಮಿತಿ, ವಕ್‌್ಫ ಮಂಡಳಿಗಳ ಸದಸ್ಯರೂ ಆಗಿದ್ದರು, ಕಳೆದ ಎರಡು ವರ್ಷದಿಂದ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದರು.ಕಳೆದ ಕೆಲವು ವರ್ಷದಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಕಳೆದ ಕೆಲವು ದಿನಗಳ ಹಿಂದೆ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.ಎರಡು ದಿನಗಳ ಹಿಂದಷ್ಟೆ ಕಲಬುರಗಿಗೆ ಮರಳಿ ಬಂದು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
eesanje/url_46_137_7.txt ADDED
@@ -0,0 +1,4 @@
 
 
 
 
 
1
+ ದ್ವಿತೀಯ ಪಿಯುಸಿ ತೇರ್ಗಡೆಯಾಗಿರುವ ವಿದ್ಯಾರ್ಥಿಗಳೇ ಇಲ್ಲಿ ಗಮನಿಸಿ
2
+ ಬೆಂಗಳೂರು, ಮೇ 22-ಸಿಇಟಿ 2024ಕ್ಕೆ ಸಂಬಂಧಿಸಿದಂತೆ ಸಿಬಿಎಸ್ಸಿ, ಐಸಿಎಸ್ಸಿಇ, ಐಜಿಸಿಎಸ್‌‍ಇ ಯ ಹಾಗೂ 2024 ಕ್ಕಿಂತ ಮೊದಲೇ ದ್ವಿತೀಯ ಪಿಯುಸಿ ಹಾಗೂ 12ನೇ ತರಗತಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ತಮ್ಮ ಅಂಕಗಳನ್ನು ದಾಖಲಿಸಲು ಮೇ 25 ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ಮಾಡಿಕೊಟ್ಟಿದೆ.
3
+ ಕೆಇಎ ಪೋರ್ಟಲ್‌ ಮೂಲಕ 12ನೇ ತರಗತಿಯ ಅಂಕಗಳನ್ನು ದಾಖಲಿಸಲು ಮೇ 20 ರವರೆಗೆ ಕಾಲಾವಕಾಶ ನೀಡಲಾಗಿತ್ತು.ಆದರೆ ಇದುವರೆಗೆ ಅಂಕಗಳನ್ನು ದಾಖಲಿಸದೇ ಇರುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಮೇ 23 ರ ಸಂಜೆ 4 ರಿಂದ ಮೇ 25 ರ ಸಂಜೆ 5.30 ರವರೆಗೆ ಅಂಕಗಳನ್ನು ದಾಖಲಿಸಲು ಕೆಇಎ ಪೋರ್ಟಲ್‌ ಅನ್ನು ಮತ್ತೊಮೆ ತೆರೆಯುವುದಾಗಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
4
+ ಆರ್ಕಿಟೆಕ್ಚರ್‌ ಪೋಸ್ಟ್‌ನ ಪ್ರವೇಶಕ್ಕಾಗಿ ಅಭ್ಯರ್ಥಿಗಳು 2024 ರ ನಾಟಾ ಪರೀಕ್ಷೆಯ ಅಂಕಗಳನ್ನು ಅರ್ಹತೆ ಅನುಗುಣವಾಗಿ ದಾಖಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಪ್ರಾಧಿಕಾರದ ವೆಬ್‌ಸೈಟ್‌ ಸಂಪರ್ಕಿಸಲು ಕೋರಲಾಗಿದೆ.
eesanje/url_46_137_8.txt ADDED
@@ -0,0 +1,5 @@
 
 
 
 
 
 
1
+ ದ್ವೇಷ ರಾಜಕಾರಣ ಮಾಡುವುದಷ್ಟೇ ಕಾಂಗ್ರೆಸ್‌‍ ಸರ್ಕಾರದ ಕೆಲಸವಾಗಿದೆ : ಕುಮಾರಸ್ವಾಮಿ
2
+ ಮೈಸೂರು,ಮೇ22-ವಿರೋಧಿಗಳಿಗೆ ತೊಂದರೆ ಕೊಡುವುದು, ದ್ವೇಷ ರಾಜಕಾರಣ ಮಾಡುವುದಷ್ಟೇ ಕಾಂಗ್ರೆಸ್‌‍ ಸರ್ಕಾರದ ಕೆಲಸವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ದಿ ವಿಚಾರದಲ್ಲಿ ನಮನ್ನು ಟೀಕೆ ಮಾಡುವ ನೈತಿಕತೆ ಮುಖ್ಯಮಂತ್ರಿಯವರಿಗಿಲ್ಲ ಎಂದರು.
3
+ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜಕೀಯ ಜೀವನದ ಕೊನೆಯ ಹಂತದಲ್ಲಿದ್ದಾರೆ. ಈಗಲಾದರೂ ಮೈಸೂರು ಜಿಲ್ಲೆಯ ಅಭಿವೃದ್ಧಿ ಮಾಡಲಿ. ಮೈಸೂರು ಅಭಿವೃದ್ಧಿಗೆ ಸಿದ್ದರಾಮಯ್ಯನವರ ಕೊಡುಗೆ ಏನೆಂಬುದನ್ನು ಹೇಳಲಿ ಎಂದು ಆಗ್ರಹಿಸಿದರು.ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಕಲುಷಿತ ನೀರು ಕುಡಿದು ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ನಾಲ್ಕು ಬಾರಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಸಿದ್ದರಾಮಯ್ಯನವರು ಯಾವ ರೀತಿ ಕೆಲಸ ಮಾಡಿದ್ದಾರೆ ಎಂಬುದು ಇದರಿಂದ ಗೊತ್ತಾಗುತ್ತದೆ ಎಂದು ಟೀಕಿಸಿದರು.
4
+ ಬಿಜೆಪಿಯನ್ನು ದೂರುವುದಷ್ಟೇ ಕಾಂಗ್ರೆಸ್‌‍ನ ಕೆಲಸವಾಗಿದೆ. ರಾಜ್ಯದ ಹಲವೆಡೆ ಬೆಳೆ ನಾಶವಾಗಿದ್ದರೂ ಸರ್ಕಾರ ಹೇಳಿಕೆಗೆ ಮಾತ್ರ ಸೀಮಿತವಾಗಿದೆ. ರಾಜ್ಯದಲ್ಲಿ ರೈತರ ಆತಹತ್ಯೆಗಳು ನಿಂತಿಲ್ಲ. ಈ ವಿಚಾರ ಸರ್ಕಾರದ ಗಮನಕ್ಕೆ ಬಂದಿದೆಯೋ ಇಲ್ಲವೋ ಅದು ಗೊತ್ತಿಲ್ಲ. ಮದ್ದೂರು ಮತ್ತು ಗದಗದಲ್ಲಿ ರೈತರು ಆತಹತ್ಯೆ ಮಾಡಿಕೊಂಡಿದ್ದಾರೆ. ಅವರ ಮನೆಗಳಿಗೆ ಹೋಗಿ ಸಾಂತ್ವಾನ ಹೇಳುವ ಕೆಲಸವನ್ನು ಸರ್ಕಾರದಿಂದ ಮಾಡುತ್ತಿಲ್ಲ ಎಂದು ಆರೋಪಿಸಿದರು.
5
+ ಸರ್ಕಾರದ ಪ್ರಾಯೋಜಕತ್ವದಲ್ಲಿ ಮೇ 30ರಂದು ಹಾಸನದಲ್ಲಿ ಪ್ರತಿಭಟನೆ ಆಯೋಜಿಸಲಾಗುತ್ತಿದ್ದು, ಅಂಗನವಾಡಿ ಕಾರ್ಯಕರ್ತರನ್ನು ಪ್ರತಿಭಟನೆಗೆ ಕರೆತರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ನನಗೆ ಹೇಳಿದರೆ ನಾನೇ ಒಂದಿಷ್ಟು ಮಹಿಳೆಯರನ್ನು ಪ್ರತಿಭಟನೆಗೆ ಕಳುಹಿಸಿಕೊಡುತ್ತಿದ್ದೆ ಎಂದು ವ್ಯಂಗ್ಯವಾಡಿದ್ದಾರೆ.
eesanje/url_46_137_9.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ವಿಧಾನಪರಿಷತ್‌ ಚುನಾವಣೆಯಲ್ಲಿ ಕುತೂಹಲಕಾರಿ ತ್ರಿಕೋನ ಸ್ಪರ್ಧೆ
2
+ ಬೆಂಗಳೂರು,ಮೇ22-ವಿಧಾನಪರಿಷತ್‌ನ ಶಿಕ್ಷಕ ಹಾಗೂ ಪದವೀಧರ ಕ್ಷೇತ್ರಗಳಿಗೆ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ರಾಜ್ಯದ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಕ್ಕೆ ಬಂಡಾಯ ತಲೆನೋವಾಗಿ ಪರಿಣಮಿಸಿದ್ದು, ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಲು ನಿರಾಕರಿಸಿದ ಹಿನ್ನೆಲೆಯಲ್ಲಿ ನೈರುತ್ಯ ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳ ಪರಿಷತ್‌ ಚುನಾವಣೆ ಕುತೂಹಲಕಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
3
+ ಪದವೀಧರ ಮತ್ತು ಶಿಕ್ಷಕರ ಆರು ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯು ವಿಧಾನಪರಿಷತ್‌‍ನಲ್ಲಿ ಬಹುಮತವನ್ನು ನಿರ್ಧರಿಸುತ್ತದೆ. ಹೀಗಾಗಿ ಆಡಳಿತ ಪಕ್ಷ ಮತ್ತು ಪ್ರತಿಪಕ್ಷವಾದ ಬಿಜೆಪಿಯು ಈ ಚುನಾವಣೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿವೆ. ಇದರ ಮಧ್ಯೆ ಬಿಜೆಪಿಯ ಮಿತ್ರಪಕ್ಷವಾದ ಜೆಡಿಎಸ್‌‍ಗೆ ತನ್ನ ಅಸ್ತಿತ್ವವನ್ನು ಕಾಪಾಡಿಕೊಳ್ಳುವ ಕಾರಣಕ್ಕೆ ಈ ಚುನಾವಣೆ ಪ್ರತಿಷ್ಠೆಯಾಗಿದೆ. ಇವೆಲ್ಲದರಿಂದಾಗಿ ಈ ಬಾರಿಯ ವಿಧಾನ ಪರಿಷತ್‌ ಚುನಾವಣೆ ಬಹಳ ಪೈಪೋಟಿಯಿಂದ ಕೂಡಿದೆ.
4
+ ನೈಋತ್ಯ ಪದವೀಧರ ಕ್ಷೇತ್ರ ಅಸ್ತಿತ್ವಕ್ಕೆ ಬಂದಾಗಿನಿಂದ ಬಿಜೆಪಿ ಸೋಲನ್ನೇ ಕಂಡಿಲ್ಲ. ಕಾಂಗ್ರೆಸ್‌‍ ಪಾಲಿಗೆ ಜಯ ಗಗನ ಕುಸುಮವಾಗಿದೆ. ಈ ಬಾರಿ ಮೊದಲ ಜಯದ ಕನಸು ಕಾಣುತ್ತಿದ್ದ ಕಾಂಗ್ರೆಸ್‌‍ಗೆ ಮತ್ತು ಕ್ಷೇತ್ರವನ್ನು ತನ್ನ ತೆಕ್ಕೆಯಲ್ಲೇ ಉಳಿಸಿಕೊಳ್ಳಬೇಕೆಂಬ ಬಿಜೆಪಿ ಆಕಾಂಕ್ಷೆಗೆ ಅವರದೇ ಪಕ್ಷದ ಮುಖಂಡರು ಅಡ್ಡಗಾಲು ಹಾಕಿದ್ದಾರೆ. ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಹಾಲಿ ಸದಸ್ಯ ಎಸ್‌‍ಎಲ್‌ ಭೋಜೇಗೌಡ ಎನ್‌‍ಡಿಎ ಮೈತ್ರಿ ಅಭ್ಯರ್ಥಿಯಾಗಿದ್ದು, ಬಿಜೆಪಿಯಲ್ಲಿ ಬಂಡಾಯವೆದ್ದ ಸತೀಶ್‌ ಆಚಾರ್ಯ ಅವರು ಪೈಪೋಟಿ ನೀಡಲಿದ್ದಾರೆ.
5
+ ಕಾಂಗ್ರೆಸ್‌‍ ಟಿಕೆಟ್‌ ವಂಚಿತರಾದ ಎಸ್ಪಿ ದಿನೇಶ್‌ ಅವರು ಪಕ್ಷದ ಅಧಿಕೃತ ಅಭ್ಯರ್ಥಿ ಕೆ.ಕೆ.ಮಂಜುನಾಥ್‌ ಕುಮಾರ್‌ ವಿರುದ್ಧ ಇಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿಯಿಂದ ಡಾ.ಧನಂಜಯ ಸರ್ಜಿ ಕಣಕ್ಕಿಳಿದಿರುವ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಮೂರು ಬಾರಿ ಬಿಜೆಪಿ ಶಾಸಕರಾಗಿರುವ ಕೆ.ರಘುಪತಿ ಭಟ್‌ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.
6
+ ಕಳೆದ ಬಾರಿ ಬಿಜೆಪಿ ಟಿಕೆಟ್‌‍ನಲ್ಲಿ ಆಯ್ಕೆಯಾಗಿದ್ದ ಹಾಲಿ ಎಂಎಲ್‌‍ಸಿ ಅಯನೂರು ಮಂಜುನಾಥ್‌ ಅವರನ್ನು ಕಾಂಗ್ರೆಸ್‌‍ ಕಣಕ್ಕಿಳಿಸಿದೆ. ಇಬ್ಬರ ಬಂಡಾಯವು ಎರಡೂ ಪಕ್ಷಗಳಿಗೆ ದೊಡ್ಡ ಪೆಟ್ಟು ನೀಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಮಲೆನಾಡಿನಲ್ಲಿ ಕಾಂಗ್ರೆಸ್‌‍ಗೆ ಮತ್ತು ಕರಾವಳಿಯಲ್ಲಿ ಬಿಜೆಪಿಗೆ ಬರಬಹುದಾದ ಮತಗಳನ್ನು ಬಂಡಾಯ ಅಭ್ಯರ್ಥಿಗಳು ಸೆಳೆಯಬಹುದು. ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಅಭ್ಯರ್ಥಿ ಆಯ್ಕೆಯ ಬಗ್ಗೆ ಪಕ್ಷದ ನಾಯಕತ್ವದ ವಿರುದ್ಧ ಅಸಮಾಧಾನಗೊಂಡಿರುವುದರಿಂದ ಬಿಜೆಪ���ಗೆ ಬಂಡಾಯ ಬಿಸಿ ತಟ್ಟಿದೆ.
7
+ ಹಾಲಿ ಎಂಎಲ್‌‍ಸಿಯನ್ನು ಹೊಂದಿರುವುದರಿಂದ ನೈರುತ್ಯ ಶಿಕ್ಷಕರ ಕ್ಷೇತ್ರದ ಸ್ಥಾನವನ್ನು ಜೆಡಿಎಸ್‌‍ಗೆ ತ್ಯಾಗ ಮಾಡುವುದನ್ನು ಬಿಟ್ಟು ಬಿಜೆಪಿಗೆ ಬೇರೆ ದಾರಿಯಿಲ್ಲದಿದ್ದರೂ, ಕನಿಷ್ಠ ಪಕ್ಷ ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್‌, ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಹೋಗಬೇಕಿತ್ತು ಎಂದು ಕೇಸರಿ ಪಕ್ಷದ ಅನೇಕರು ಭಾವಿಸಿದ್ದಾರೆ.
8
+ ಲಿಂಗಾಯತ ಸಮುದಾಯದವರಾಗಿರುವ ಸರ್ಜಿ ಅವರು ಪಕ್ಷಕ್ಕೆ ಹೊಸಬರಾಗಿದ್ದರೂ ಲಿಂಗಾಯತ ಪ್ರಬಲ ನಾಯಕ ಯಡಿಯೂರಪ್ಪನವರ ಆಶೀರ್ವಾದದಿಂದ ಟಿಕೆಟ್‌ ಪಡೆಯಲು ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
9
+ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ನಿರ್ಲಕ್ಷ್ಯವು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರ ದೊಡ್ಡ ವರ್ಗದಲ್ಲಿ ಆತಂಕ ಉಂಟುಮಾಡಿದೆ. ವಿಶೇಷವಾಗಿ ಪಕ್ಷದ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ. ನಳೀನ್‌ಕುಮಾರ್‌ ಕಟೀಲ್‌ ಅವರ ಬದಲಿಗೆ ಕ್ಯಾಪ್ಟನ್‌ ಬ್ರಿಜೇಶ್‌ ಚೌಟಾ ಅವರನ್ನು ಲೋಕಸಭಾ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದಾಗ ಪಕ್ಷದಲ್ಲಿ ಅತೃಪ್ತಿ ಶುರುವಾಗಿ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ ಎಂದು ಹೆಸರು ಹೇಳಲು ಬಯಸುವ ಪಕ್ಷದ ಪದಾಧಿಕಾರಿಯೊಬ್ಬರು ಹೇಳಿದ್ದಾರೆ.
10
+ ಕಾಂಗ್ರೆಸ್‌‍ನ ಎಸ್‌‍.ಪಿ.ದಿನೇಶ್‌ ಈ ಹಿಂದೆ ಎರಡು ಬಾರಿ ಪಕ್ಷದ ಅಭ್ಯರ್ಥಿಯಾಗಿ ಸೋಲು ಕಂಡರೂ ಅಧಿಕ ಮತ ಗಳಿಸಿದ್ದರು. ಈ ಬಾರಿಯೂ ತಮಗೆ ಟಿಕೆಟ್‌ ಸಿಕ್ಕುವ ಭರವಸೆಯಲ್ಲಿ ಅವರು ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದರು. ಈಗಾಗಲೆ ಮತದಾರರಿಗೆ ಮೂರ್ನಾಲ್ಕು ಬಾರಿ ಕರಪತ್ರಗಳನ್ನು ರವಾನಿಸಿದ್ದಾರೆ. ಎಲ್ಲ ಪದವೀಧರ ಕ್ಷೇತ್ರದ ಮತದಾರರಿಗೆ ಗುರುತಿನ ಚೀಟಿಯನ್ನು ಕಳುಹಿಸಿದ್ದಾರೆ.
11
+ ಹಿಂದಿನ ಚುನಾವಣೆಯಲ್ಲಿ ಮತದಾರರೊಂದಿಗೆ ಇಟ್ಟುಕೊಂಡಿದ್ದ ನಿಕಟ ಸಂಪರ್ಕ ಮತ್ತು ಎರಡು ಬಾರಿ ಅನುಭವಿಸಿದ ಸೋಲಿನ ಕರುಣೆ ಸೃಷ್ಟಿಯಾದಲ್ಲಿ ಕಾಂಗ್ರೆಸ್‌‍ ಮತ ಬ್ಯಾಂಕ್‌‍ಗೆ ಪೆಟ್ಟು ನೀಡಬಹುದು ಎಂದು ಹೇಳಲಾಗುತ್ತಿದೆ.
12
+ ಈಶ್ವರಪ್ಪ ಬೆಂಬಲ:ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ ವಂಚಿತ ಮಾಜಿ ಶಾಸಕ ರಘುಪತಿಭಟ್‌ ಈ ಬಾರಿ ಪದವೀಧರ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಶಿಕ್ಷಕರ ಕ್ಷೇತ್ರವನ್ನು ಮಿತ್ರಪಕ್ಷ ಜೆಡಿಎಸ್‌‍ನ ಹಾಲಿ ಸದಸ್ಯ ಎಸ್‌‍.ಎಲ್‌‍.ಭೋಜೇಗೌಡರಿಗೆ ಬಿಟ್ಟು ಕೊಡುವುದರಿಂದ ಪದವೀಧರ ಕ್ಷೇತ್ರದಲ್ಲಿ ಕರಾವಳಿ ಕೋಟಾದಡಿ ತಮಗೆ ಸಿಗುತ್ತದೆ ಎಂದು ಭಾವಿಸಿದ್ದರು.
13
+ ಹೀಗಾಗಿ ಮತದಾರರ ಪಟ್ಟಿಗೆ ಅಧಿಕ ಸಂಖ್ಯೆಯಲ್ಲಿ ನೋಂದಣಿ ಮಾಡಿಸಿದ್ದರು. ಲೋಕಸಭೆ ಚುನಾವಣೆ ಪ್ರಚಾರದಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಆದರೆ, ಬಿಜೆಪಿ ಮುಖಂಡರು ಹೊಸ ಮುಖ ಡಾ. ಧನಂಜಯ ಸರ್ಜಿಗೆ ಅವಕಾಶ ಮಾಡಿಕೊಟ್ಟಿರುವುದು ಅವರಲ್ಲಿತೀವ್ರ ಅಸಮಾಧಾನ ಮೂಡಿಸಿದೆ.
14
+ ಎರಡೂ ಕ್ಷೇತ್ರಗಳ ಚುನಾವಣೆ���ಲ್ಲಿ ಕರಾವಳಿಯಿಂದ ಬಿಜೆಪಿ ಅಭ್ಯರ್ಥಿ ಇಲ್ಲಎಂಬುದನ್ನೇ ಮುಂದಿಟ್ಟುಕೊಂಡು ಅವರು ಪಕ್ಷದ ಮತಗಳನ್ನು ಸೆಳೆಯುವ ಪ್ರಯತ್ನ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರ ಆಸ್ಪತ್ರೆ ರಸ್ತೆಯಲ್ಲೇ ತಮ ಚುನಾವಣೆ ಕಚೇರಿಯನ್ನೂ ತೆರೆದಿದ್ದಾರೆ. ಇದರ ಮಧ್ಯೆ ಮಾಜಿ ಡಿಸಿಎಂ ಕೆ.ಎಸ್‌‍.ಈಶ್ವರಪ್ಪ ಅವರು ರಘುಪತಿ ಭಟ್‌ ಅವರಿಗೆ ಬೆಂಬಲ ಘೋಷಿಸಿದ್ದು, ಕಾರ್ಯಕರ್ತರ ಸಭೆ ಸಹ ನಡೆಸಿದ್ದಾರೆ.
15
+ ಶಿಕ್ಷಕರ ಕ್ಷೇತ್ರದಲ್ಲಿ ಒಂದೇ ಹೆಸರಿನ ಇಬ್ಬರು ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಕಾಂಗ್ರೆಸ್‌‍ ಅಭ್ಯರ್ಥಿ ಕೊಡಗಿನ ಕೆ.ಕೆ.ಮಂಜುನಾಥ ಕುಮಾರ್‌ ಅಲ್ಲದೆ ಚಿಕ್ಕಮಗಳೂರಿನ ಮಂಜುನಾಥ.ಕೆ.ಕೆ ಕಣದಲ್ಲಿದ್ದಾರೆ. ಇದು ಮತದಾರರಲ್ಲಿ ಗೊಂದಲ ಮೂಡಿಸುವ ಸಾಧ್ಯತೆಯೂ ಇದೆ.
eesanje/url_46_138_1.txt ADDED
@@ -0,0 +1,5 @@
 
 
 
 
 
 
1
+ ಪ್ರೀತಿಸಿದವಳ ಜೊತೆ ನೇಣಿಗೆ ಶರಣಾದ ಪೊಲೀಸ್‌‍ ಕಾನ್‌ಸ್ಟೇಬಲ್‌
2
+ ಹುಬ್ಬಳ್ಳಿ,ಮೇ.22-ಪ್ರೀತಿಸುತ್ತಿದ್ದ ಮಹಿಳೆಯೊಂದಿಗೆ ಪೊಲೀಸ್‌‍ ಕಾನ್ಸ್ ಟೇಬಲ್‌‍ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಗಾಮನಗಟ್ಟಿಯಲ್ಲಿ ನಡೆದಿದೆ. ಆತಹತ್ಯೆಗೆ ಮಾಡಿಕೊಂಡವರನ್ನು ಮಹೇಶ ಹೆಸರೂರು(32) ಮತ್ತು ವಿಜಯಲಕ್ಷ್ಮೀ (30)ಎಂದು ಗುರುತಿಸಲಾಗಿದೆ.
3
+ ಧಾರವಾಡ ಸಂಚಾರಿ ಪೊಲೀಸ್‌‍ ಠಾಣೆಯ ಕಾನ್‌ಸ್ಟೇಬಲ್‌ ಆಗಿ ಸೇವೆ ಸಲ್ಲಿಸುತ್ತಿದ್ದ ಮಹೇಶ ಹೆಸರೂರು ಈಗಾಗಲೇ ಮದುವೆಯಾಗಿದ್ದರೂ ವಿಜಯಲಕ್ಷ್ಮೀ ಜೊತೆ ಸಂಬಂಧ ಹೊಂದಿದ್ದರು .
4
+ ಕಳೆದ 15 ದಿನದ ಹಿಂದೆ ಗಾಮನಗಟ್ಟಿಯಲ್ಲಿ ಬಾಡಿಗೆ ಮನೆ ಮಾಡಿ ಅಲ್ಲಿ ವಿಜಯಲಕ್ಷ್ಮೀ ಅವರು ವಾಸವಿದ್ದರು ತಿಳಿದುಬಂದಿದೆ. ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಷಯ ತಿಳಿದು ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಆಗಮಿಸಿ ಬಾಗಿಲು ಒಡೆದು ನೋಡಿದಾಗ ಇಬ್ಬರು ನೇಣಿಗೆ ಶರಣಾಗಿರುವುದು ಕಂಡು ಬಂದಿದೆ.
5
+ ಪ್ರಾಥಮಿಕ ತನಿಖೆ ನಡೆಸಿದಾಗ ಮಹೇಶ ಹೆಸರೂರು ಪೊಲೀಸ್‌‍ಕಾನ್‌್ಸಟೇಬಲ್‌‍ ಎಂದು ಗೊತ್ತಾಗಿದೆ. ಎರಡು ಮೂರು ದಿನಗಳ ಹಿಂದೆ ಮನೆಯೊಂದರಲ್ಲಿ ಆತಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಮಹೇಶ ಮನೆಗೆ ಬರದಿದ್ದಾಗ ಅವರು ಎಲ್ಲೂ ಹೋಗಿರಬಹುದು ಎಂದು ತಿಳಿದಿದ್ದರು ಆದರೆ ಈಗ ಈ ಘಟನೆ ಆತಂಕ ಮೂಡಿಸಿದೆ. ನವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
eesanje/url_46_138_10.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ಸರಣಿ ಚುನಾವಣೆ: ನೀತಿ ಸಂಹಿತೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆ
2
+ ಬೆಂಗಳೂರು, ಮಾ 21-ಪ್ರಸಕ್ತ ಲೋಕಸಭಾ ಚುನಾವಣೆ ನಂತರ ಒಂದರ ಹಿಂದೆ ಮತ್ತೊಂದು ಎಂಬಂತೆ ಚುನಾವಣೆ ಸರಣಿ ಆರಂಭವಾಗಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ನಿರಂತರವಾಗಿ ಮುಂದುವರೆಯುತ್ತಿದೆ. ಇದರಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆ ಉಂಟಾಗಲಿದೆ.
3
+ ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆಗೆ ಮತದಾನ ಮುಕ್ತಾಯವಾಗಿದೆ. ಇದರ ಬೆನ್ನಲ್ಲೇ ವಿಧಾನಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ 6 ಸ್ಥಾನಗಳಿಗೆ ಜೂ.3ರಂದು ಮತದಾನ ನಡೆಯಲಿದೆ.
4
+ ಇದಲ್ಲದೆ, ವಿಧಾನಸಭಾ ಸದಸ್ಯರಿಂದ ವಿಧಾನಪರಿಷತ್‌ನ 11 ಸದಸ್ಯ ಸ್ಥಾನಗಳಿಗೆ ಜೂ.13 ರಂದು ಮತ್ತೊಂದು ಚುನಾವಣೆ ಎದುರಾಗಿದೆ. ಈ ಚುನಾವಣೆಗಳು ಮುಗಿಯುತ್ತಿದ್ದಂತೆ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಎದುರಾಗುವ ಸಾಧ್ಯತೆಗಳಿವೆ.
5
+ ವಿಧಾನಪರಿಷತ್‌ನ 3 ಪದವೀಧರ, 3 ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಒಬ್ಬ ಮಹಿಳೆ ಸೇರಿದಂತೆ 78 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.ನಾಮಪತ್ರ ವಾಪಸ್‌‍ ಪಡೆಯಲು ಕಡೆಯ ದಿನವಾಗಿದ್ದ ನಿನ್ನೆ 12 ಅಭ್ಯರ್ಥಿಗಳು ತಮ ಉಮೇದುವಾರಿಕೆ ಹಿಂದಕ್ಕೆ ಪಡೆದಿದ್ದಾರೆ. ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಅತೀ ಹೆಚ್ಚು 19, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 15, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಒಬ್ಬ ಮಹಿಳೆ ಸೇರಿದಂತೆ 15 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ.
6
+ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 8, ನೈರುತ್ಯ ಪದವೀಧರ ಕ್ಷೇತ್ರದಲ್ಲಿ 10 ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ. ಜೂ.3 ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಜೂ.6 ರಂದು ಈ ಆರು ಕ್ಷೇತ್ರಗಳಿಗೆ ಮತ ಎಣಿಕೆ ನಡೆಯಲಿದೆ.
7
+ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 99,121 ಪುರುಷ, 57,483 ಮಹಿಳೆ, ಇತರೆ 19 ಸೇರಿದಂತೆ 1,56,623 ಮತದಾರರು ಇದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ 43,720 ಪುರುಷ, 41,369 ಮಹಿಳೆ, ಇತರೆ ಒಬ್ಬರು ಸೇರಿದಂತೆ 85,090 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ.
8
+ ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 58,791 ಪುರಷ, 63,055 ಮಹಿಳೆಯರು ಹಾಗೂ ಇತರೆ 14 ಸೇರಿದಂತೆ ಒಟ್ಟು 1,21,860 ಮತದಾರರು ಇದ್ದಾರೆ.ಈ ಮೂರು ಪದವೀಧರ ಕ್ಷೇತ್ರಗಳಲ್ಲಿ ಒಟ್ಟು 2,01,632 ಪುರುಷ, 1,61,907 ಮಹಿಳಾ, ಇತರೆ 34 ಸೇರಿದಂತೆ 3,63,573 ಮತದಾರರಿದ್ದಾರೆ.
9
+ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 15,820 ಪುರುಷ, 9,489 ಮಹಿಳೆ ಸೇರಿದಂತೆ 25,309 ಮತದಾರರಿದ್ದಾರೆ.ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 10,487 ಪುರುಷ, 12,915 ಮಹಿಳೆ ಸೇರಿದಂತೆ 23,402 ಮತದಾರರಿದ್ದು, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 11,998 ಪುರುಷ, 9,550 ಮಹಿಳೆ, ಇತರೆ ಒಬ್ಬರು ಸೇರಿದಂತೆ 21,549 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ.
10
+ ಮೂರೂ ಶಿಕ್ಷಕರ ಕ್ಷೇತ್ರದಲ್ಲಿ 38,305 ಪುರುಷ, 31,954 ಮಹಿಳೆ ಹಾಗೂ ಇತರೆ ಒಬ್ಬರು ಸೇರಿದಂತೆ 70,260 ಮತದಾರರು ಮತ ಚಲಾಯಿಸುವ ಹಕ್ಕುಳ್ಳವರಾಗಿದ್ದಾರೆ. ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 47, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 79, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 44 ಸೇರಿದಂತೆ 170 ಮತಗಟ್ಟೆಗಳನ್ನು ತೆರೆಯಲಾಗುತ್ತದೆ.
11
+ ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 159, ನೈರುತ್ಯ ಪದವೀಧರ ಕ್ಷೇತ್ರದಲ್ಲಿ 108, ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 194 ಸೇರಿದಂತೆ ಒಟ್ಟು 461 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ.
12
+ ಮತದಾನಕ್ಕೆ ಒಂದು ದಿನ ಮುಂಚೆ ಕ್ಯೂ ಆರ್‌ ಕೋಡ್‌ ಇರುವ ಮತದಾರರ ಮಾಹಿತಿ ಸ್ಲಿಪ್‌ ಅನ್ನು ನೀಡಲಾಗುತ್ತದೆ. ಮತದಾನ ಮಾಡಲು ಮತದಾರರ ಗುರುತಿನ ಚೀಟಿ, ಆಧಾರ್‌ಕಾರ್ಡ್‌, ಡ್ರೈವಿಂಗ್‌ ಲೈಸೆನ್‌್ಸ, ಪಾನ್‌ಕಾರ್ಡ್‌, ಪಾಸ್‌‍ಪೋರ್ಟ್‌ ಸೇರಿದಂತೆ ಇತರೆ ಗುರುತಿನ ಚೀಟಿಗಳನ್ನು ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ.
13
+ ಜೂನ್‌ 13 ಕ್ಕೆ ಮತ್ತೊಂದು ಮೇಲನೆ ಚುನಾವಣೆ :ವಿಧಾನಪರಿಷತ್‌ ಸದಸ್ಯರಾದ ಅರವಿಂದ ಕುಮಾರ್‌ ಅರಳಿ, ಎನ್‌.ಎಸ್‌‍.ಬೋಸರಾಜ್‌, ಕೆ.ಗೋವಿಂದರಾಜ್‌, ಮುನಿರಾಜುಗೌಡ, ಬಿ.ಎಂ. ಫಾರುಕ್‌, ರಘುನಾಥರಾವ್‌ ಮಲ್ಕಾಪುರ, ಎನ್‌.ರವಿಕುಮಾರ್‌, ಎಸ್‌‍.ರುದ್ರೇಗೌಡ, ಕೆ.ಹರೀಶ್‌ಕುಮಾರ್‌ ಅವರು ಜೂ.17 ರಂದು ನಿವೃತ್ತಿಯಾಗಲಿದ್ದಾರೆ.
14
+ ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೆ ಡಾ.ತೇಜಸ್ವಿನಿಗೌಡ, ಕೆ.ಪಿ.ನಂಜುಂಡಿ ವಿಶ್ವಕರ್ಮ ಅವರು ಈಗಾಗಲೇ ರಾಜೀನಾಮೆ ನೀಡಿದ್ದಾರೆ.ನಿವೃತ್ತಿ ಹಾಗೂ ರಾಜೀನಾಮೆಯಿಂದ ತೆರವಾಗುವ ವಿಧಾನಪರಿಷತ್‌ನ 11 ಸದಸ್ಯ ಸ್ಥಾನಗಳಿಗೆ ಜೂ.13 ರಂದು ಚುನಾವಣೆ ನಡೆಯಲಿದೆ.
15
+ ವಿಧಾನಸಭಾ ಸದಸ್ಯರಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆ ಇದಾಗಿದ್ದು, ಮೇ 27 ರಂದು ಅಧಿಸೂಚನೆ ಹೊರಬೀಳಲಿದೆ.ನಾಮಪತ್ರ ಸಲ್ಲಿಸಲು ಜೂ.3 ಕಡೆಯ ದಿನವಾಗಿದ್ದು, ಜೂ. 3 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್‌‍ ಪಡೆಯಲು ಜೂ.6 ರವರೆಗೆ ಕಾಲಾವಕಾಶವಿದ್ದು, ಅಗತ್ಯವಿದ್ದರೆ ಜೂ.13 ರಂದು ಬೆಳಿಗ್ಗೆ 9 ರಿಂದ ಸಂಜೆ 4 ರವರಗೆ ಮತದಾನ ನಡೆದು, ಸಂಜೆ 5 ಗಂಟೆಯ ನಂತರ ಮತ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ.
eesanje/url_46_138_11.txt ADDED
@@ -0,0 +1,4 @@
 
 
 
 
 
1
+ ಗ್ಯಾರಂಟಿ ಸರ್ಕಾರ ಅಧಿಕಾರಕ್ಕೆ ವರ್ಷ ಕಳೆದರೂ ಎತ್ತಿನಹೊಳೆ ಯೋಜನೆ ಇನ್ನೂ ಅತಂತ್ರ : ಜೆಡಿಎಸ್‌‍
2
+ ಬೆಂಗಳೂರು, ಮಾ 21-ರಾಜ್ಯ ಕಾಂಗ್ರೆಸ್‌‍ ಸರ್ಕಾರಕ್ಕೆ ಒಂದು ವರ್ಷ ತುಂಬಿದರೂ ಎತ್ತಿನಹೊಳೆ ಯೋಜನೆ ಇನ್ನೂ ತೆವಳುತ್ತಲೇ ಇದೆ ಎಂದು ಜೆಡಿಎಸ್‌‍ ಆರೋಪಿಸಿದೆ. ಕಳೆದ 2014ರ ಮಾರ್ಚ್‌ 3 ರಂದು ಚಿಕ್ಕಬಳ್ಳಾಪುರದಲ್ಲಿ ಅಂದಿನ, ಇಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅಡಿಗಲ್ಲು ಭಾಗ್ಯ ಕಂಡ ಈ ಯೋಜನೆ ಇವತ್ತು ಅತ್ತಲೂ ಇಲ್ಲ, ಇತ್ತಲೂ ಇಲ್ಲ ಎನ್ನುವಂತಾಗಿದೆ ಎಂದು ಎಕ್ಸ್ ಖಾತೆಯಲ್ಲಿ ಟೀಕಿಸಿದೆ.
3
+ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಜಲ ಸಂಪನೂಲಕ್ಕಿಂತ ಬೆಂಗಳೂರು ನಗರಾಭಿವೃದ್ಧಿ ಮೇಲೆಯೇ ಆಸಕ್ತಿ ಜಾಸ್ತಿ. ಒಮೆಯಷ್ಟೇ ಎತ್ತಿನಹೊಳೆಗೆ ಕಾಟಾಚಾರದ ಭೇಟಿ ನೀಡಿದ್ದ ಅವರು, ಹೂತಿಟ್ಟ ನಿಧಿಯಂತಿರುವ ರಾಜಧಾನಿಯನ್ನು ಬ್ರ್ಯಾಂಡ್‌ ಬೆಂಗಳೂರು ಮಾಡಲು ಅತ್ಯುತ್ಸಾಹ ತೋರುತ್ತಿದ್ದಾರೆ ಎಂದು ವ್ಯಂಗ್ಯವಾಡಿದೆ.
4
+ ಕಳಪೆ ಕಾಮಗಾರಿ, ಅಧಿಕಾರಿ-ಮಂತ್ರಿಗಳ ನಿರ್ಲಕ್ಷ್ಯದಿಂದ ಇಡೀ ಯೋಜನೆ ಹಳ್ಳ ಹಿಡಿಯುವ ಸ್ಥಿತಿಗೆ ಬಂದಿದೆ. ಪೈಪುಗಳು ತುಕ್ಕು ಹಿಡಿಯುತ್ತಿದ್ದರೆ, ತಡೆಗೋಡೆಗಳು ಕುಸಿದು ಬೀಳುತ್ತಿವೆ. 10 ವರ್ಷ ಕಳೆದರೂ ಹನಿ ನೀರೂ ಹರಿಯುವ ನಿರೀಕ್ಷೆ ಇಲ್ಲ. ಗುತ್ತಿಗೆದಾರರ ಜೇಬು ತುಂಬಿದ್ದಷ್ಟೇ ಭಾಗ್ಯ ಎಂದು ಆರೋಪಿಸಿದೆ.
eesanje/url_46_138_12.txt ADDED
@@ -0,0 +1,6 @@
 
 
 
 
 
 
 
1
+ ಪ್ರಜ್ವಲ್‌ ರೇವಣ್ಣ ಎಲ್ಲಿದ್ರೂ ವಾಪಾಸ್ ಬಾ : ಕುಮಾರಸ್ವಾಮಿ ಬಹಿರಂಗ ಕರೆ
2
+ ಬೆಂಗಳೂರು,ಮೇ20-ಸಂಸದ ಪ್ರಜ್ವಲ್‌ ರೇವಣ್ಣ ಅವರು ಸ್ವದೇಶಕ್ಕೆ ವಾಪಸ್‌‍ ಬಂದು ಎಸ್‌‍ಐಟಿ ತನಿಖೆಗೆ ಸಹಕಾರ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬಹಿರಂಗ ಕರೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಪರವಾಗಿ ನಾನೇ ಈ ಬಹಿರಂಗ ಕರೆಯನ್ನು ಕೊಡುತ್ತಿದ್ದೇನೆ. ಮುಂದಿನ 24 ಗಂಟೆ ಇಲ್ಲವೇ 48 ಗಂಟೆಯೊಳಗೆ ವಾಪಸ್ಸಾಗಿ ತನಿಖೆಯನ್ನು ಎದುರಿಸಬೇಕು ಎಂದರು.
3
+ ಈ ನೆಲದ ಕಾನೂನಿಗೆ ಯಾರೂ ದೊಡ್ಡವರಲ್ಲ. ಕೇಳಿಬಂದಿರುವ ಆರೋಪದ ಸತ್ಯಾಸತ್ಯತೆ ತನಿಖೆಯಿಂದ ಹೊರಬೇಕು ಎಂದು ಹೇಳಿದರು. ಅಶ್ಲೀಲ ಪೆನ್‌ಡ್ರಯನ್‌ ಹಂಚಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಅದರ ಚಿತಾವಣೆಯ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇದ್ದಾರೆ ಎಂಬುದು ಮಾಜಿ ಸಂಸದ ಶಿವರಾಮೇಗೌಡ ಹಾಗೂ ವಕೀಲ ದೇವರಾಜಗೌಡ ಅವರ ೇನ್‌ ಸಂಭಾಷಣೆಯಿಂದ ಬಹಿರಂಗವಾಗಿದೆ ಎಂದರು.
4
+ ನಮ ಸುತ್ತಮುತ್ತ ಇರುವ 45 ಜನರ ಫೋನ್‌ ಟ್ಯಾಪ್‌ ಮಾಡಲಾಗುತ್ತಿದೆ. ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ೇನ್‌ ಟ್ಯಾಪ್‌ ಮಾಡಲಾಗುತ್ತಿದೆ. ಹೊಸ ೇನ್‌ ಬಳಸಿದರೂ ಅದು ಕೂಡ ಟ್ಯಾಪ್‌ ಆಗುತ್ತಿದೆ ಎಂದು ಆರೋಪಿಸಿದರು.
5
+ ಪ್ರಜ್ವಲ್‌ ಮೇಲೆ ಆರೋಪ ಕೇಳಿಬಂದ ಕೂಡಲೇ ಬಹಳಷ್ಟು ನೊಂದಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾಗಿದ್ದರು. ರಾಜ್ಯದ ಹಿತಕ್ಕಾಗಿ ನೀವು ರಾಜ್ಯಸಭೆಯಲ್ಲಿ ಇರಬೇಕು ಎಂದು ಅವರ ಮನವೊಲಿಸಿದ್ದೇನೆ ಎಂದು ಹೇಳಿದರು.
6
+ ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು, ಆ ಅವಧಿಯಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡಿರುವುದನ್ನು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಹೊಂದುವುದಾಗಿ ಹೇಳಿದರು. ಎಸ್‌‍ಐಟಿಯಿಂದ ಪಾರದರ್ಶಕ ತನಿಖೆ ನಡೆಯಬೇಕಾದರೆ ಶಿವರಾಮೇಗೌಡ ಹಾಗೂ ಶಿವಕುಮಾರ್‌ ಅವರ ಮೇಲೂ ಕೇಸು ದಾಖಲಿಸಬೇಕು ಎಂದು ಒತ್ತಾಯಿಸಿದರು.
eesanje/url_46_138_2.txt ADDED
@@ -0,0 +1,7 @@
 
 
 
 
 
 
 
 
1
+ ಸಿಎಂ ತವರು ಜಿಲ್ಲೆಯಲ್ಲಿ ಕಲುಷಿತ ನೀರು ಕುಡಿದು ಯುವಕ ಸಾವು
2
+ ಮೈಸೂರು, ಮೇ 21-ಕಲುಷಿತ ನೀರು ಸೇವಿಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಬಿ.ಸಾಲುಂಡಿಯಲ್ಲಿ ನಡೆದಿದೆ.ಕನಕರಾಜ್‌ (20) ಮೃತಪಟ್ಟ ಯುವಕ. ಗ್ರಾಮಕ್ಕೆ ಸರಬರಾಜಾಗುತ್ತಿದ್ದ ನೀರನ್ನು ಸೇವಿಸಿದ ಕೆಲ ಮಂದಿ ವಾಂತಿ-ಭೇದಿಯಿಂದ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
3
+ ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕನಕರಾಜ್‌ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ. ಉಳಿದವರ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗ್ರಾಮಕ್ಕೆ ಸರಬರಾಜಾಗುತ್ತಿದ್ದ ನೀರಿಗೆ ಕಲುಷಿತ ನೀರು ಹೇಗೆ ಸೇರ್ಪಡೆಯಾಗಿದೆ ಎಂಬುದರ ಬಗ್ಗೆ ಪರಿಶೀಲಿಸಲಾಗುತ್ತಿದೆ.
4
+ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ಜಿ.ಟಿ.ದೇವೇಗೌಡ ಸ್ಥಳಕ್ಕೆ ಭೇಟಿ ನೀಡಿ ಮೃತನ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ.ಘಟನೆ ಕುರಿತು ವೈದ್ಯರಿಂದ ಮಾಹಿತಿ ಪಡೆದು ಕಲುಷಿತ ನೀರಿನ ಬಗ್ಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಮಾಹಿತಿ ಸಂಗ್ರಹಿಸಿ ಶೀಘ್ರ ಶುದ್ಧ ಕುಡಿಯುವ ನೀರು ಸರಬರಾಜಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಗ್ರಾಮಕ್ಕೆ ವೈದ್ಯಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
5
+ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ, ತುರ್ತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.ಮೈಸೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿದ್ದು, ಕಲುಷಿತ ನೀರಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅನುಮಾನಗಳಿವೆ, ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇಂದು ಮಧ್ಯಾಹ್ನದೊಳಗೆ ವರದಿ ಬರಲಿದೆ ಎಂದು ವಿವರಿಸಿದ್ದಾರೆ.
6
+ ಸುಮಾರು 120 ಜನ ಆಸ್ಪತ್ರೆಗೆ ದಾಖಲಾಗಿದ್ದರು, 100 ಜನ ಚಿಕಿತ್ಸೆ ಪಡೆದು ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ಕೆಲವರನ್ನು ಮೈಸೂರಿನ ಆಸ್ಪತ್ರೆಗೆ ಸೇರಿಸಲಾಗಿದೆ. ಕನಕರಾಜು ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಆಂಬುಲೆನ್‌್ಸ ವ್ಯವಸ್ಥೆ ಮಾಡಲಾಗಿದೆ. ಆಸ್ಪತ್ರೆಗಳಲ್ಲಿ ಬೆಡ್‌ಗಳನ್ನು ಕಾಯ್ದಿರಿಸಲಾಗಿದೆ. ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಡಿಎಚ್‌ಒ ವಿವರಣೆ ನೀಡಿದ್ದಾರೆ.
7
+ ರಾಜ್ಯಮಟ್ಟದ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಸಭೆ ನಡೆಸಿದೆ, ಆರೋಗ್ಯ ಇಲಾಖಾಧಿಕಾರಿಗಳ ಜೊತೆ ಕೂಡ ಚರ್ಚೆ ನಡೆದಿದೆ ಎಂದು ವಿವರಿಸಿದ್ದಾರೆ.ಈ ವೇಳೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿರುವ ಮುಖ್ಯಮಂತ್ರಿಗಳು, ನೀರು ಕಲುಷಿತಗೊಳ್ಳಲು ಕಾರಣವೇನು ಎಂಬ��ದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಆದೇಶಿಸಿದರು.
eesanje/url_46_138_3.txt ADDED
@@ -0,0 +1,8 @@
 
 
 
 
 
 
 
 
 
1
+ ಸರ್ಕಾರ ವರ್ಷ ಪೂರೈಸಿದ ಬೆನ್ನಲ್ಲೇ ಡಿಕೆಶಿ ಕುರಿತು ಸಿಎಂ ಸಿದ್ದರಾಮಯ್ಯ ಸಿಡಿಮಿಡಿ ಮಾತು..!
2
+ ಬೆಂಗಳೂರು, ಮಾ 21-ಜೋಡೆತ್ತುಗಳಂತೆ ಬರೋಬ್ಬರಿ ಒಂದು ವರ್ಷ ಯಶಸ್ವಿ ಆಡಳಿತ ಪೂರೈಸಿದ ಮಾರನೆ ದಿನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕುರಿತಂತೆ ಅಸಮಾಧಾನದ ಚಡಪಡಿಕೆ ವ್ಯಕ್ತಪಡಿಸಿದ ಘಟನೆ ನಡೆದಿದೆ.
3
+ ಮೇ 21 ದಿ. ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಅವರ ಪುಣ್ಯಸರಣೆ ಅಂಗವಾಗಿ ಆಚರಿಸಲಾಗುವ ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಿಧಿ ಬೋಧನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
4
+ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮಯಕ್ಕೆ ಸರಿಯಾಗಿ ಕಾರ್ಯಕ್ರಮಕ್ಕೆ ಹಾಜರಾಗಿದ್ದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇನ್ನೂ ಕಾರ್ಯಕ್ರಮಕ್ಕೆ ಆಗಮಿಸಿರಲಿಲ್ಲ. ಡಿ.ಕೆ.ಶಿವಕುಮಾರ್‌ ಅವರ ದಿನಚರಿಯಲ್ಲಿ ವೇಳಾಪಟ್ಟಿಯಲ್ಲಿ ವಿಧಾನಸೌಧದ ಸಮೇಳನ ಸಭಾಂಗಣದಲ್ಲಿ ನಡೆಯುವ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಕಾರ್ಯಕ್ರಮವಿತ್ತು.
5
+ 11 ಗಂಟೆಗೆ ಸರಿಯಾಗಿ ಸಿದ್ದರಾಮಯ್ಯ ಆಗಮಿಸಿದಾಗ ಮುಖ್ಯ ಕಾರ್ಯದರ್ಶಿ ರಜನೀಶ್‌ ಘೋಯಲ್‌ ಅವರು ಉಪಮುಖ್ಯಮಂತ್ರಿಯವರು ಕೆಳಗಡೆ ಇದ್ದಾರೆ. ನಾವು ಸ್ವಾಗತ ಭಾಷಣ ಮುಗಿಸುವ ವೇಳೆಗೆ ಅವರೂ ಬಂದು ಸೇರಿಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿಯವರಿಗೆ ವಿವರಿಸಿದರು.
6
+ ಇದಕ್ಕೆ ಸಿಡಿಮಿಡಿಗೊಂಡ ಮುಖ್ಯಮಂತ್ರಿಯವರು ಬಂದ್ರೆ ಬರ್ತಾರೆ, ನೀವು ಶುರು ಮಾಡಿ, ನಾನು ಹೋಗಬೇಕಿದೆ ಎಂದು ತಾಕೀತು ಮಾಡಿದರು.ಸ್ವಲ್ಪ ಹೊತ್ತಿನಲ್ಲೇ ಮುಖ್ಯಮಂತ್ರಿಯವರು ಆಪ್ತ ಕಾರ್ಯದರ್ಶಿ ವೆಂಕಟೇಶ್‌ ಅವರು ಬಂದು ಉಪಮುಖ್ಯಮಂತ್ರಿಯವರು ಕೆಳಗಡೆ ಇದ್ದಾರೆ, ಬರುತ್ತಾರೆ ಎಂದು ಮತ್ತೊಮೆ ವಿವರಿಸಿದರು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದ ಸಿದ್ದರಾಮಯ್ಯನವರು ಕಾರ್ಯಕ್ರಮ ಮುಂದುವರೆಸುವಂತೆ ಸೂಚಿಸಿದ್ದಲ್ಲದೆ, ಪ್ರತಿಜ್ಞಾವಿಧಿಯನ್ನೂ ಬೋಧಿಸಿದರು.
7
+ ಇದೇ ವೇಳೆ ಕಾರ್ಯಕ್ರಮಕ್ಕೆ ಹಿರಿಯ ಅಧಿಕಾರಿಗಳು ಹಾಜರಾಗದಿರುವ ಬಗ್ಗೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಅಸಹನೆ ಹೊರಹಾಕಿದ್ದು ಕಂಡುಬಂದಿತು. ಕೊನೆಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ. ವಿಧಾನಸೌಧದ ನೆಲಮಹಡಿಯಲ್ಲಿದ್ದ ಡಿ.ಕೆ.ಶಿವಕುಮಾರ್‌, ಕಾರ್ಯಕ್ರಮ ಶುರುವಾದ ಮಾಹಿತಿ ದೊರೆಯುತ್ತಿದ್ದಂತೆ ಅನ್ಯಮನಸ್ಕರಾಗಿ ವಿಧಾನಸೌಧದಿಂದ ನಿರ್ಗಮಿಸಿ ಕೆಪಿಸಿಸಿಯಲ್ಲಿ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ರಾಜೀವ್‌ಗಾಂಧಿ ಪುಣ್ಯಸರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
8
+ ಇದಕ್ಕೆ ಪೂರಕವಾಗಿ ಕೆಪಿಸಿಸಿ ಕಚೇರಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್‌, ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಇನ್ನೆಷ್ಟು ದಿನ ನಾನು ಈ ಹುದ್ದೆಯಲ್ಲಿರುತ್ತೇನೋ ಗೊತ್ತಿಲ್ಲ, ಆದರೆ ಪಕ್ಷದ ಸಂಘಟನೆಗೆ ಸಂಬಂಧಪಟ್ಟಂತೆ ���ಾನು ಭದ್ರ ಬುನಾದಿ ತಳಪಾಯ ಹಾಕಿಕೊಡುತ್ತೇನೆ ಎಂದು ಹೇಳಿದ್ದು ವಿಶೇಷವಾಗಿತ್ತು.
eesanje/url_46_138_4.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ‘ಡ್ರಗ್ಸ್ ಮುಕ್ತ ಕರ್ನಾಟಕ’ ಸಂಕಲ್ಪಕ್ಕೆ ಸರ್ಕಾರ ಬದ್ಧ : ಗೃಹಸಚಿವ ಪರಮೇಶ್ವರ್‌
2
+ ಬೆಂಗಳೂರು, ಮಾ 21-ಮಾದಕವಸ್ತು ಮುಕ್ತ ಕರ್ನಾಟಕದ ಸಂಕಲ್ಪಕ್ಕೆ ರಾಜ್ಯಸರ್ಕಾರ ಬದ್ಧವಾಗಿದೆ. ರೇವು ಪಾರ್ಟಿಯಲ್ಲಿ ಅಕ್ರಮವಾಗಿ ಡ್ರಗ್ಸ್ ಬಳಕೆಯ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುವುದರ ಜೊತೆಗೆ ಡ್ರಗ್‌ ಪೆಡ್ಲರ್‌ಗಳನ್ನು ಮಟ್ಟ ಹಾಕಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ರೇವು ಪಾರ್ಟಿಯನ್ನು ಸ್ಥಳೀಯರು ಆಯೋಜಿಸಲಾಗಿದ್ದು, ಹೊರರಾಜ್ಯದವರು ಅದರಲ್ಲಿ ಭಾಗವಹಿಸಿದ್ದು, ಸಿಂಥೆಟಿಕ್‌ ಡ್ರಗ್‌್ಸ ಬಳಸಿರುವ ಬಗ್ಗೆ ಪೊಲೀಸರು ವರದಿ ಮಾಡಿದ್ದಾರೆ. ಪೊಲೀಸರು ದಾಳಿ ನಡೆಸಿ ಮಾಹಿತಿ ಕಲೆ ಹಾಕಿದ್ದು, ತನಿಖೆ ಮುಂದುವರೆದಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
4
+ ಕರ್ನಾಟಕ ರಾಜ್ಯವನ್ನು ಮಾದಕವಸ್ತು ಮುಕ್ತವನ್ನಾಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಾವು ಈಗಾಗಲೇ ಹೇಳಿಕೆ ನೀಡಿದ್ದೇವೆ. ಅದಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳಿಗೂ ಎಚ್ಚರಿಕೆ ನೀಡಿ ಸೂಕ್ಷ್ಮವಾಗಿ ಕೆಲಸ ನಿರ್ವಹಿಸಲು ತಾಕೀತು ಮಾಡಲಾಗಿದೆ ಎಂದರು.
5
+ ಈಗಾಗಲೇ ಹಲವು ಕಡೆ ದಾಳಿ ಮಾಡಿ ಸಾವಿರಾರು ಕೋಟಿ ರೂ.ಗಳ ಮಾದಕವಸ್ತುಗಳನ್ನು ಹಿಡಿದು ಸುಟ್ಟುಹಾಕಲಾಗಿದೆ. ಆದರೂ ಕೂಡ ಇಂತಹ ಕೃತ್ಯಗಳು ಮರುಕಳಿಸುತ್ತಿವೆ. ಪೊಲೀಸರು ಯಾವುದೇ ಕಾರಣಕ್ಕೂ ಈ ವಿಷಯದಲ್ಲಿ ಸಹನೆಯಿಂದಿರುವುದಿಲ್ಲ ಎಂದು ಹೇಳಿದರು.
6
+ ಎಲ್ಲೆಲ್ಲಿ ಮಾದಕವಸ್ತು ದೊರೆತಿವೆಯೋ ಅಲ್ಲೆಲ್ಲಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹೊರರಾಜ್ಯದಿಂದ ಕರ್ನಾಟಕ ಪ್ರವೇಶಿಸುವ ಮಾದಕವಸ್ತುಗಳನ್ನೂ ನಿರ್ಬಂಧಿಸಲು ಇಲಾಖೆಯಲ್ಲಿರುವ ಪ್ರತ್ಯೇಕ ಘಟಕ ಕೆಲಸ ನಿರ್ವಹಿಸುತ್ತಿದೆ ಎಂದರು. ಹೈಡ್ರೋಪೋನಿಕ್‌ ಗಾಂಜಾವನ್ನು ಬಾಟಲಿಯ ನೀರಿನಲ್ಲಿಟ್ಟು ಮನೆಯ ಮೇಲ್ಛಾವಣಿ ಮೇಲೆ ಬೆಳೆಸಿಕೊಳ್ಳುತ್ತಿದ್ದಾರೆ. ಅಂತಹುದ್ದನ್ನೆಲ್ಲಾ ಹಿಡಿಯುವುದು ಕಷ್ಟದ ಕೆಲಸ. ಆದರೆ ಈ ರೀತಿ ಎಲ್ಲೆಲ್ಲಿ ಬಳಕೆಯಾಗುತ್ತಿದೆ ಎಂಬ ಮಾಹಿತಿಯನ್ನು ಕಲೆ ಹಾಕಿ ಕ್ರಮ ಕೈಗೊಳ್ಳಲಾಗುತ್ತಿದೆ. ಮಾದಕವಸ್ತು ಕಳ್ಳಸಾಗಾಣಿಕೆ ಮಾಡುವವರ ಮೇಲೆ ನಿಗಾ ವಹಿಸಲಾಗಿದೆ ಎಂದು ಹೇಳಿದರು.
7
+ ವಿದೇಶಿಯರು, ವಿದೇಶದ ವಿದ್ಯಾರ್ಥಿಗಳು ಮಾದಕವಸ್ತು ಸಾಗಾಣಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅಂತವರನ್ನು ಬಂಧಿಸಿ ಸಂಬಂಧಪಟ್ಟ ದೇಶದ ವಿದೇಶಾಂಗ ಸಚಿವಾಲಯಕ್ಕೆ ಮಾಹಿತಿ ನೀಡಿ ಗಡಿಪಾರು ಮಾಡುವ ಪ್ರಕ್ರಿಯೆ ಚಾಲನೆಯಲ್ಲಿರುತ್ತದೆ. ದೇಶ ಬಿಟ್ಟು ತೊಲಗಿಸುವವರೆಗೂ ನಮ ಕಸ್ಟಡಿಯಲ್ಲೇ ಇಟ್ಟುಕೊಳ್ಳಬೇಕಾದ ಅನಿವಾರ್ಯತೆ ಇರುತ್ತದೆ. ಇಷ್ಟೆಲ್ಲಾ ಕ್ರಮ ಕೈಗೊಂಡರೂ ಅಲ್ಲಿ, ಇಲ್ಲಿ ಸಣ್ಣ ಪ್ರಮಾಣದ ಮಾದಕವಸ್ತು ಪತ್ತೆಯಾಗುತ್ತಲೇ ಇದೆ. ಇದನ್ನು ಸಮರ್ಥವಾಗಿ ಹತ್ತಿಕ್ಕುವ ಕೆಲಸ ಮಾಡುತ್ತೇವೆ ಎಂದರು.
8
+ ಹಾಸನದ ಪೆನ್‌ಡ್ರೈವ್‌ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ಅನ್ನು ರದ್ದು ಮಾಡುವಂತೆ ಎಸ್‌‍ಐಟಿಯ ಮುಖ್ಯಸ್ಥರು ನ್ಯಾಯಾಲಯದ ವಾರೆಂಟ್‌ ಆಧಾರಿತವಾಗಿ ಕೇಂದ್ರ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಈ ಮೊದಲು ಮುಖ್ಯಮಂತ್ರಿಯವರು ಪ್ರಧಾನಮಂತ್ರಿಯವರಿಗೆ ಈ ವಿಚಾರವಾಗಿ ಪತ್ರ ಬರೆದು ಮನವಿ ಮಾಡಿದ್ದರು. ಆದರೆ ಯಾವುದೇ ಪರಿಣಾಮವಾಗಲಿಲ್ಲ. ನ್ಯಾಯಾಲಯದ ಆರೋಪಿ ವಿರುದ್ಧ ವಾರಂಟ್‌ ಜಾರಿ ಮಾಡಿದ ಆಧಾರದ ಮೇಲೆ ಪೊಲೀಸ್‌‍ ಇಲಾಖಾಧಿಕಾರಿಗಳು ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆಯಲು ಸಾಧ್ಯವಾಗಿದೆ.
9
+ ಇದರ ಆಧಾರದ ಮೇಲೆ ಕ್ರಮ ಕೈಗೊಂಡು ರಾಜತಾಂತ್ರಿಕತೆಯ ಪಾಸ್‌‍ಪೋರ್ಟ್‌ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿರಲು ಸಾಧ್ಯವಾಗುವುದಿಲ್ಲ, ವಾಪಸ್‌‍ ಮರಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪರಮೇಶ್ವರ್‌ ಆಗ್ರಹಿಸಿದರು.
10
+ ಪ್ರಜ್ವಲ್‌ ರೇವಣ್ಣ ವಾಪಸ್‌‍ ಬಂದು ಶರಣಾಗಬೇಕು ಎಂದು ಕುಮಾರಸ್ವಾಮಿಯವರು ಮನವಿ ಮಾಡಿರುವುದು ಅವರ ಕುಟುಂಬಕ್ಕೆ ಸಂಬಂಧಪಟ್ಟ ವಿಚಾರ. ಪೊಲೀಸರು ಕಾನೂನು ರೀತಿಯ ಕ್ರಮ ಮುಂದುವರೆಸುತ್ತಾರೆ ಎಂದು ಹೇಳಿದರು.ಜೆಡಿಎಸ್‌‍ ನಾಯಕರ ಫೋನ್‌ ಟ್ಯಾಪಿಂಗ್‌ ಮಾಡಿಲ್ಲ, ಕುಮಾರಸ್ವಾಮಿಯವರ ಬಳಿ ಇದಕ್ಕೆ ಸಂಬಂಧಪಟ್ಟಂತೆ ಮಾಹಿತಿಗಳಿದ್ದರೆ ಕೊಡಲಿ, ಇನ್ನು ಎಲ್‌.ಆರ್‌.ಶಿವರಾಮೇಗೌಡರ ಆಡಿಯೋ ಪ್ರಕರಣದ ತನಿಖೆ ನಡೆಸುವ ಬಗ್ಗೆ ಎಸ್‌‍ಐಟಿ ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ಸರ್ಕಾರ ಪ್ರತಿ ಹಂತದಲ್ಲೂ ಮಧ್ಯಪ್ರವೇಶಿಸಿ ಸೂಚನೆ ನೀಡುವುದಿಲ್ಲ ಎಂದರು.
11
+ ದೇವೇಗೌಡರ ಕುಟುಂಬವನ್ನು ಮುಗಿಸಲು ಕಾಂಗ್ರೆಸ್‌‍ ಸಂಚು ನಡೆಸಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನಮ ಸರ್ಕಾರಕ್ಕೆ ಮಾಡಬೇಕಾದ ಕೆಲಸ ಸಾಕಷ್ಟಿದೆ. ಬರ ನಿರ್ವಹಣೆ, ಅಭಿವೃದ್ಧಿಯಂತಹ ಗಂಭೀರ ಕೆಲಸಗಳಿವೆ ಎಂದು ತಿರುಗೇಟು ನೀಡಿದರು.ಕಾಂಗ್ರೆಸ್‌‍ ಕಾರ್ಯಕ್ರಮಗಳ ಬಗ್ಗೆ ಬಿಜೆಪಿಯವರಿಗೆ ಹೊಟ್ಟೆ ಉರಿ ಇದೆ. ಬಡವರ ಅಭಿವೃದ್ಧಿ ಅವರಿಗೆ ಸಹಿಸಲಾಗುತ್ತಿಲ್ಲ. ರಾಜ್ಯಸರ್ಕಾರಕ್ಕೆ ಕೇಂದ್ರದಿಂದ ಪರಿಹಾರ ಕೊಡಿಸಲು ವಿಫಲರಾಗಿರುವ ಬಿಜೆಪಿಗರು ಟೀಕೆ ಮಾಡುವ ನೈತಿಕ ಹಕ್ಕು ಹೊಂದಿಲ್ಲ, ಹೆಚ್ಚು ಸ್ಥಾನ ಗಳಿಸುವುದು ಕಾಂಗ್ರೆಸ್‌‍ನ ಹಗಲುಗನಸು ಎನ್ನುವುದಾಗಿದ್ದರೆ ಬಿಜೆಪಿಯವರೇನು ರಾತ್ರಿ ಕನಸು ಕಾಣುತ್ತಿದ್ದಾರೆಯೇ? ಎಂದು ಪ್ರಶ್ನಿಸಿದರು.
eesanje/url_46_138_5.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಅಪಹರಣ-ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ರಿಲೀಫ್ ಸಿಕ್ಕ ಬೆನ್ನಲ್ಲೇ ರೇವಣ್ಣಗೆ ಹೊಸ ಸಂಕಷ್ಟ ಶುರು
2
+ ಬೆಂಗಳೂರು,ಮೇ21-ಮಹಿಳೆಯ ಅಪಹರಣ, ಲೈಂಗಿಕ ದೌರ್ಜನ್ಯ ಸೇರಿದಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರಿಗೆ ಮತ್ತೆ ಕಾನೂನಿನ ಸಂಕಷ್ಟ ಎದುರಾಗಿದೆ.
3
+ ಮೈಸೂರು ಜಿಲ್ಲೆ ಕೆ.ಆರ್‌.ನಗರ ಹಾಗೂ ಹಾಸನದ ಹೊಳೆನರಸೀಪುರದ ಪೊಲೀಸ್‌‍ ಠಾಣೆಗಳಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳಲ್ಲಿ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ಹಾಗೂ 42ನೇ ಎಸಿಎಂಎಂ ನ್ಯಾಯಾಲಯ ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿತ್ತು.
4
+ ಈ ಪ್ರಕರಣವನ್ನು ತನಿಖೆ ಮಾಡುತ್ತಿರುವ ವಿಶೇಷ ತನಿಖಾ ದಳ(ಎಸ್‌‍ಐಟಿ) ಎಚ್‌.ಡಿ.ರೇವಣ್ಣಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ವಿಶೇಷ ಮೇಲನವಿ ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ಪಡೆದು ಬಂಧನದ ಭೀತಿಯಿಂದ ಪಾರಾಗಿದ್ದ ರೇವಣ್ಣಗೆ ಎಸ್‌‍ಐಟಿಯ ಈ ನಿರ್ಧಾರ ಮತ್ತೆ ಕಾನೂನಿನ ಸಂಕೋಲೆಯನ್ನು ಬಿಗಿಗೊಳಿಸಿದೆ.
5
+ ನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಎಸ್‌‍ಐಟಿ ಅರ್ಜಿ ಸಲ್ಲಿಸಿದ್ದು, ಈ ಬಾರಿ ಖ್ಯಾತ ವಕೀಲ ರವಿವರ್ಮ ಕುಮಾರ್‌ ಅವರು ಎಸ್‌‍ಐಟಿ ಪರ ವಾದ ಮಂಡಿಸಲಿದ್ದಾರೆ. ಹೀಗಾಗಿಯೇ ಸರ್ಕಾರ ಸೋಮವಾರ ರವಿವರ್ಮ ಕುಮಾರ್‌ ಅವರನ್ನು ವಿಶೇಷ ಸಾರ್ವಜನಿಕ ಅಭಿಯೋಜಕ(ಎಸ್‌‍ಪಿಪಿ)ರನ್ನಾಗಿ ನೇಮಿಸಿತ್ತು. ಇನ್ನು ರೇವಣ್ಣ ಪರವಾಗಿ ವಕೀಲ ಸಿ.ವಿ.ನಾಗೇಶ್‌ ವಾದ ಮಂಡಿಸುವ ಸಾಧ್ಯತೆ ಇದೆ.
6
+ ತಮ್ಮ ವಿರುದ್ಧ ಎಸ್‌‍ಐಟಿ ದಾಖಲಿಸಿರುವ ಎಫ್‌ಐಆರ್‌ಗಳನ್ನು ರದ್ದುಗೊಳಿಸಬೇಕೆಂದು ಹೈಕೋರ್ಟ್‌ನಲ್ಲಿ ಮೇಲನವಿ ಸಲ್ಲಿಸಿದ್ದಾರೆ. ಇದರ ಜೊತೆಗೆ ಎಸ್‌‍ಐಟಿ ಕೆಳಹಂತದ ನ್ಯಾಯಾಲಯ ನೀಡಿರುವ ಜಾಮೀನು ಪ್ರಶ್ನಿಸಿ ಮೇಲನವಿ ಸಲ್ಲಿಸಿದ್ದಾರೆ. ರೇವಣ್ಣ ಜಾಮೀನು ಆದೇಶ ವಜಾ ಮಾಡುವಂತೆ ಹೈಕೋರ್ಟ್‌ಗೆ ಎಸ್‌‍ಐಟಿ ಅರ್ಜಿ ಸಲ್ಲಿಸಿದೆ.
7
+ ಪ್ರಕರಣವೇನು?:ನನ್ನ ತಾಯಿ ಮೇಲೆ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಮಾಡಿದ್ದಾರೆ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆ. ಎಚ್‌‍.ಡಿ.ರೇವಣ್ಣ ಕೂಡ ಲೈಂಗಿಕ ಕಿರುಕುಳ ನೀಡಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರು, ಸಹಕರಿಸದಿದ್ದರೆ ತನ್ನ ಗಂಡನ ಕೆಲಸವನ್ನು ಕಸಿದುಕೊಳ್ಳುವುದಾಗಿಯೂ ಮತ್ತು ನಿನ್ನ ಮಗಳ ಮೇಲೆ ಅತ್ಯಾಚಾರ ಮಾಡುತ್ತೇನೆ ಎಂದು ತಾಯಿಗೆ ಬೆದರಿಕೆ ಹಾಕುತ್ತಿದ್ದನು. ನಾವು ದೂರು ದಾಖಲಿಸಿದ ನಂತರ ತನ್ನ ತಂದೆಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಸಂತ್ರಸ್ತೆ ಮಹಿಳೆ ತಾನು ಅನುಭವಿಸಿರುವ ಕಷ್ಟಗಳನ್ನು ವಿವರಿಸಿದ್ದಾರೆ.
8
+ ನಾಲ್ಕೈದು ವರ್ಷಗಳ ಹಿಂದೆ ಬೆಂಗಳೂರಿನ ನಿವಾಸದಲ್ಲಿ ಪ್ರಜ್ವಲ್‌ ರೇವಣ್ಣ ತನ್ನ ತಾಯಿಯ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಮಹಿಳೆ ತಿಳಿಸಿದ್ದಾರೆ. ವಿಶೇಷ ತನಿಖಾ ತಂಡದ (ಎಸ್‌‍ಐಟಿ) ಮೂಲಗಳ ಪ್ರಕಾರ, ಅವರು ಘಟನೆಗಳನ್ನು ವಿವರಿಸುವ ವಿವರವಾದ ಸಾಕ್ಷ್ಯವನ್ನು ನೀಡಿದ್ದಾರೆ ಎನ್ನಲಾಗಿದೆ.
9
+ 2020 ಮತ್ತು 2021ರ ನಡುವೆ, ಪ್ರಜ್ವಲ್‌ ರೇವಣ್ಣ ಅವರು ವಿಡಿಯೋ ಕರೆಗಳಿಗೆ ಉತ್ತರಿಸುವಂತೆ ಮಾಡಿದ್ದರು. ತನಗೆ ಮತ್ತು ತನ್ನ ತಾಯಿಗೆ ತೊಂದರೆ ಮಾಡುವ ಬೆದರಿಕೆ ಹಾಕಿ ನನ್ನ ಬಟ್ಟೆಗಳನ್ನು ಬಿಚ್ಚುವಂತೆ ಮಾಡಿದ್ದಾರೆ. ಘಟನೆಗಳ ಬಗ್ಗೆ ತಿಳಿದ ನಂತರ ನಮ್ಮ ಕುಟುಂಬವು ನಮಗೆ ಬೆಂಬಲ ನೀಡಿತು. ಹೀಗಾಗಿ ನಾವು ದೂರು ದಾಖಲಿಸಿದ್ದೇವೆ ಎಂದು ತಿಳಿಸಿದ್ದಾರೆ.
10
+ ನಿರಂತರ ಕಿರುಕುಳವು ತನ್ನ ಕುಟುಂಬಕ್ಕೆ ದೊಡ್ಡ ನಷ್ಟವನ್ನು ಉಂಟುಮಾಡಿದೆ. ನಾವು ನಮ್ಮ ಮೊಬೈಲ್‌ ನಂಬರ್‌ಗಳನ್ನು ಬದಲಿಸಬೇಕಾಯಿತು ಎಂದು ಮಹಿಳೆ ಎಸ್‌‍ಐಟಿಗೆ ತಿಳಿಸಿದ್ದಾರೆ.
11
+ ಪ್ರಜ್ವಲ್‌ ರೇವಣ್ಣ ತಮ್ಮ ಮನೆಯಲ್ಲಿ ಮಹಿಳಾ ಕೆಲಸಗಾರರಿಗೆ ಲೈಂಗಿಕ ಕಿರುಕುಳ ನೀಡುತ್ತಾರೆ. ರೇವಣ್ಣ ಅವರು ಹಣ್ಣು ಕೊಡುವ ನೆಪದಲ್ಲಿ ಮಹಿಳಾ ಕೆಲಸಗಾರರಿಗೆ ಲೈಂಗಿಕ ಕಿರುಕುಳ ನೀಡುವುದು ನಿಜ. ಪ್ರಜ್ವಲ್‌ ನನ್ನ ತಾಯಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಸದ್ಯಕ್ಕೆ ಈ ಘಟನೆಗಳ ಬಗ್ಗೆ ಕೇವಲ ಮೂರು ಜನರು ಹೊರಬಂದು ಸಾರ್ವಜನಿಕವಾಗಿ ಮಾತನಾಡಿದ್ದಾರೆ. ಇನ್ನೂ ಮೂರು ಕೆಲಸಗಾರರರು ಈ ಬಗ್ಗೆ ಮಾತಾಡಿಲ್ಲ. ಅವರು ಕೂಡ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎಂದು ಮಹಿಳೆ ಹೇಳಿಕೊಂಡಿದ್ದಾರೆ.
12
+ ಘಟನೆ ನಡೆದು ಎರಡು ವರ್ಷಗಳ ನಂತರ ತಮ್ಮ ಜಮೀನನ್ನು ಮಾರಾಟ ಮಾಡುವಂತೆ ಮಾಡಲಾಯಿತು. ನನ್ನ ತಾಯಿ ನಾಲ್ಕೈದು ತಿಂಗಳಿಗೊಮೆ ಮನೆಗೆ ಬರುತ್ತಿದ್ದರು. ಅವರಿಗೆ ತುಂಬಾ ಕಿರುಕುಳ ನೀಡುತ್ತಿದ್ದರು. ಆಕೆ ನಮಗೆ ತಡರಾತ್ರಿ 1 ಅಥವಾ 2 ಗಂಟೆಯ ಸುಮಾರಿಗೆ ಮಾತ್ರ ಕರೆ ಮಾಡುತ್ತಿದ್ದರು. ಆದರೂ ನಮೊಂದಿಗೆ ಅಷ್ಟೇನೂ ಮಾತನಾಡುತ್ತಿರಲಿಲ್ಲ. ಅವರು ನನ್ನ ತಾಯಿಯನ್ನು ಗುಲಾಮಳಂತೆ ನಡೆಸಿಕೊಳ್ಳುತ್ತಿದ್ದರು. ನನ್ನ ತಂದೆಯ ಮೇಲೆ ಹಲ್ಲೆ ನಡೆಸಿದ್ದಾರೆ. ನಮಗೆ ನ್ಯಾಯ ಬೇಕು ಎಂದು ಮನವಿ ಮಾಡಿದ್ದಾರೆ.