CoolCoder44 commited on
Commit
c5d0cf0
·
verified ·
1 Parent(s): 6628da7

31bfed9e11642a0905954b5faf76a465a4ea615e725330cc8ca0b1a0242408f2

Browse files
Files changed (50) hide show
  1. eesanje/url_46_115_6.txt +11 -0
  2. eesanje/url_46_115_7.txt +4 -0
  3. eesanje/url_46_115_8.txt +5 -0
  4. eesanje/url_46_115_9.txt +7 -0
  5. eesanje/url_46_116_1.txt +4 -0
  6. eesanje/url_46_116_10.txt +10 -0
  7. eesanje/url_46_116_11.txt +4 -0
  8. eesanje/url_46_116_12.txt +12 -0
  9. eesanje/url_46_116_2.txt +5 -0
  10. eesanje/url_46_116_3.txt +11 -0
  11. eesanje/url_46_116_4.txt +7 -0
  12. eesanje/url_46_116_5.txt +10 -0
  13. eesanje/url_46_116_6.txt +7 -0
  14. eesanje/url_46_116_7.txt +4 -0
  15. eesanje/url_46_116_8.txt +4 -0
  16. eesanje/url_46_116_9.txt +7 -0
  17. eesanje/url_46_117_1.txt +9 -0
  18. eesanje/url_46_117_10.txt +6 -0
  19. eesanje/url_46_117_11.txt +3 -0
  20. eesanje/url_46_117_12.txt +4 -0
  21. eesanje/url_46_117_2.txt +10 -0
  22. eesanje/url_46_117_3.txt +5 -0
  23. eesanje/url_46_117_4.txt +8 -0
  24. eesanje/url_46_117_5.txt +13 -0
  25. eesanje/url_46_117_6.txt +9 -0
  26. eesanje/url_46_117_7.txt +7 -0
  27. eesanje/url_46_117_8.txt +5 -0
  28. eesanje/url_46_117_9.txt +6 -0
  29. eesanje/url_46_118_1.txt +5 -0
  30. eesanje/url_46_118_10.txt +7 -0
  31. eesanje/url_46_118_11.txt +6 -0
  32. eesanje/url_46_118_12.txt +5 -0
  33. eesanje/url_46_118_2.txt +10 -0
  34. eesanje/url_46_118_3.txt +3 -0
  35. eesanje/url_46_118_4.txt +6 -0
  36. eesanje/url_46_118_5.txt +3 -0
  37. eesanje/url_46_118_6.txt +6 -0
  38. eesanje/url_46_118_7.txt +4 -0
  39. eesanje/url_46_118_8.txt +7 -0
  40. eesanje/url_46_118_9.txt +9 -0
  41. eesanje/url_46_119_1.txt +8 -0
  42. eesanje/url_46_119_10.txt +6 -0
  43. eesanje/url_46_119_11.txt +8 -0
  44. eesanje/url_46_119_12.txt +7 -0
  45. eesanje/url_46_119_2.txt +3 -0
  46. eesanje/url_46_119_3.txt +11 -0
  47. eesanje/url_46_119_4.txt +6 -0
  48. eesanje/url_46_119_5.txt +8 -0
  49. eesanje/url_46_119_6.txt +12 -0
  50. eesanje/url_46_119_7.txt +6 -0
eesanje/url_46_115_6.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಪ್ರಭಾವಿ ರಾಜಕೀಯ ವ್ಯಕ್ತಿಯೊಬ್ಬರ ಕಿರುಕುಳ : ಸಾಮೂಹಿಕ ಆತಹತ್ಯೆಗೆ ಯತ್ನಿಸಿದ ಅಪ್ರಾಪ್ತೆ ಮತ್ತು ಕುಟುಂಬ
2
+ ಬೆಂಗಳೂರು,ಜೂ.10-ಹುಬ್ಬಳ್ಳಿ-ಧಾರವಾಡದಲ್ಲಿ ಇಬ್ಬರು ಯುವತಿಯರ ಕೊಲೆ ಪ್ರಕರಣದ ಕಹಿನೆನಪು ಮಾಸುವ ಮುನ್ನವೇ ರಾಜಕೀಯ ಪ್ರಭಾವಿ ವ್ಯಕ್ತಿಯೊಬ್ಬರ ಕಿರುಕುಳಕ್ಕೆ ಬೇಸತ್ತು ಅಪ್ರಾಪ್ತೆ ಮತ್ತು ಆಕೆಯ ಕುಟುಂಬದ ಸದಸ್ಯರು ಸಾಮೂಹಿಕ ಆತಹತ್ಯೆಗೆ ಯತ್ನಿಸಿರುವುದು ಸಾರ್ವಜನಿಕರ ಆಕ್ರೋಶವನ್ನು ಹೆಚ್ಚಿಸಿದೆ.
3
+ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ 44 ವರ್ಷದ ಲೋಕೇಶ್‌ ಅಲಿಯಾಸ್‌‍ ಯುಗ ಫೋಟೊಗಳನ್ನು ತೆಗೆದುಕೊಂಡಿದ್ದು ಅದನ್ನು ಅಶ್ಲೀಲ ವಿಡಿಯೋ ಮಾಡಿ ವೈರಲ್‌ ಮಾಡುವುದಾಗಿ ಬೆದರಿಸಿದ್ದ ಎಂಬ ಆರೋಪ ಕೇಳಿಬಂದಿದೆ.
4
+ ಅಷ್ಟಕ್ಕೇ ಸುಮನಾಗದ ಬಾಲಕಿ ಅಪ್ರಾಪ್ತೆಯ ತಾಯಿಯ ಕುರಿತು ಅವಹೇಳನಕಾರಿಯಾಗಿ ನಡೆದುಕೊಂಡಿದ್ದ ಎನ್ನಲಾಗಿದೆ. ಈತನ ಕಿರುಕುಳದಿಂದ ಬೇಸತ್ತ ಕುಟುಂಬದ ಸದಸ್ಯರು ಕೆ.ಆರ್‌.ನಗರ ಪೊಲೀಸ್‌‍ ಠಾಣೆಗೆ ದೂರು ನೀಡಿದ್ದಾರೆ.
5
+ ಆರೋಪಿ ಕಿರುಕುಳ ನೀಡಿದ ಸಾಕ್ಷ್ಯಗಳಿದ್ದರೆ ತೋರಿಸಿ ಎಂದು ಪೊಲೀಸರು ಕುಟುಂಬದ ಸದಸ್ಯರನ್ನೇ ನಿಂದಿಸಿದ್ದು, ಅಪಮಾನಕಾರಿಯಾಗಿ ನಡೆದುಕೊಂಡರು ಎಂಬ ಆರೋಪಗಳಿವೆ. ಮೂರು ದಿನ ಠಾಣೆಗೆ ಅಲೆದರೂ ಎಫ್‌ಐಆರ್‌ ದಾಖಲಿಸಲಿಲ್ಲ. ಇತ್ತ ಆರೋಪಿ ಅಪ್ರಾಪ್ತೆಯ ಮನೆಬಾಗಿಲಿಗೆ ಬಂದು ಗಲಾಟೆ ಮಾಡಿದ್ದ.
6
+ ಒಂದೆಡೆ ನ್ಯಾಯ ಸಿಗುತ್ತಿಲ್ಲ, ಮತ್ತೊಂದೆಡೆ ಮರ್ಯಾದೆಗೆ ಕುಂದಾಗುತ್ತದೆ ಎಂದು ನೊಂದುಕೊಂಡ ಕುಟುಂಬ ಅಸಹಾಯಕ ಸ್ಥಿತಿಯಲ್ಲಿ ಮಲೆಮಾದೇಶ್ವರ ಬೆಟ್ಟಕ್ಕೆ ತೆರಳಿ ಕಾಡುಪ್ರದೇಶದಲ್ಲಿ ವಿಷ ಸೇವಿಸಿ ಆತಹತ್ಯೆಗೆ ಯತ್ನಿಸಿದೆ.
7
+ ಅಜ್ಜ ಮಹದೇವನಾಯ್ಕ ಸ್ಥಳದಲ್ಲೇ ಮೃತಪಟ್ಟಿದ್ದು, ಸ್ಥಳೀಯರು ನೋಡಿ ಮೂವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ತಾಯಿ ಮತ್ತು ಮಗಳು ಗಂಭೀರ ಪರಿಸ್ಥಿತಿಯಲ್ಲಿದ್ದಾರೆ. ಅಜ್ಜಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.
8
+ ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿಸ ಚಂದಗಾಲ ಗ್ರಾಮಸ್ಥರು ದೂರು ನೀಡಿದ್ದು, ಕ್ರಮ ಕೈಗೊಂಡಿಲ್ಲ, ಮೂರು ಬಾರಿ ಠಾಣೆಗೆ ಹೋದರೂ ಸ್ಪಂದಿಸದೆ ಕಿರುಕುಳವಾಗಿರುವುದಕ್ಕೆ ದಾಖಲೆ ಕೊಡಿ ಎಂದು ಪೊಲೀಸರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ, ಇದರಿಂದ ಮನನೊಂದ ನಾಲ್ಕು ಮಂದಿ ಆತಹತ್ಯೆಗೆ ಯತ್ನಿಸಿದ್ದಾರೆ.
9
+ ಮೃತಪಟ್ಟ ಮಹದೇವನಾಯ್ಕ ಅವರ ಪಾರ್ಥೀವ ಶರೀರವನ್ನು ಮುಖ್ಯರಸ್ತೆಯಲ್ಲಿ ಗ್ರಾಮಕ್ಕೆ ತರಬಾರದು, ಪೊಲೀಸ್‌‍ ಠಾಣೆ ಬಳಿಯೂ ಬರಬಾರದು ಎಂದು ತಡೆಯೊಡ್ಡಲಾಗಿದೆ ಎಂದು ಗ್ರಾಮದ ಹಿರಿಯರು ಆರೋಪಿಸಿದ್ದಾರೆ.ತಾವು ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ ಬಳಿಕ ದೂರು ಸ್ವೀಕರಿಸಿ ಆರೋಪಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಕಿಡಿಕಾರಿದರು.
10
+ ಅಮಾನತು:ಘಟನೆಗೆ ಸಂಬಂಧಪಟ್ಟಂತೆ ಹಿರಿಯ ಅಧಿಕಾರಿಗಳು ಕೆ.ಆರ್‌.ನಗರ ಇನ್‌್ಸಪೆಕ್ಟರ್‌ ಪಿ.ಪ���.ಸಂತೋಷ್‌ ಮತ್ತು ಹೆಡ್‌ ಕಾನ್‌್ಸಟೇಬಲ್‌ರನ್ನು ಅಮಾನತುಗೊಳಿಸಲಾಗಿದೆ. ತಡವಾಗಿ ಎಚ್ಚೆತ್ತುಕೊಂಡ ಪೊಲೀಸರು ಆರೋಪಿ ಲೋಕೇಶ್‌ನನ್ನು ಬಂಧಿಸಿದ್ದಾರೆ. ಈ ಹಿಂದೆ ಹುಬ್ಬಳ್ಳಿ-ಧಾರವಾಡದಲ್ಲಿ ಅಂಜಲಿ ಅಂಬೀಗರ್‌ ಎಂಬ ಯುವತಿಗೆ ಗಿರೀಶ್‌ ಎಂಬಾತ ಕಿರುಕುಳ ನೀಡುತ್ತಿದ್ದ.
11
+ ಆಕೆಯ ಕುಟುಂಬ ಠಾಣೆಗೆ ದೂರು ನೀಡಿದರೂ ಕ್ರಮ ಕೈಗೊಂಡಿರಲಿಲ್ಲ. ಕೊನೆಗೆ ಆರೋಪಿ ಯುವತಿಯ ಮನೆಗೆ ನುಗ್ಗಿ ಭೀಕರವಾಗಿ ಹತ್ಯೆ ಮಾಡಿದ್ದ. ಅದರ ನಂತರವೂ ಎಚ್ಚೆತ್ತುಕೊಳ್ಳದ ಕೆ.ಆರ್‌.ನಗರ ಪೊಲೀಸರ ನಿರ್ಲಕ್ಷ್ಯದಿಂದ ಇಡೀ ಕುಟುಂಬವೊಂದು ಪ್ರಾಣಾಂತಿಕ ಸ್ಥಿತಿಗೆ ತಲುಪಿದೆ.
eesanje/url_46_115_7.txt ADDED
@@ -0,0 +1,4 @@
 
 
 
 
 
1
+ ಮೊದಲ ನಿರ್ಧಾರದಲ್ಲಿ ರೈತರ ಬಗ್ಗೆ ಬದ್ಧತೆ ಪ್ರದರ್ಶಿಸಿದ ಪ್ರಧಾನಿ ಮೋದಿಗೆ ಹೆಚ್‌ಡಿಕೆ ಧನ್ಯವಾದ
2
+ ಬೆಂಗಳೂರು,ಜೂ.10-ನರೇಂದ್ರ ಮೋದಿಯವರು ಮೂರನೇ ಅವಧಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ಅನ್ನದಾತರ ಪರವಾಗಿ ಮಹತ್ವದ ನಿರ್ಧಾರ ಕೈಗೊಳ್ಳುವುದಕ್ಕೆ ಸಮಸ್ತ ರೈತಬಂಧುಗಳ ಪರವಾಗಿ ಧನ್ಯವಾದಗಳನ್ನು ಕೇಂದ್ರದ ನೂತನ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸಲ್ಲಿಸಿದ್ದಾರೆ.
3
+ 3ನೇ ಅವಧಿಗೆ ಭಾರತದ ಪ್ರಧಾನಮಂತ್ರಿಗಳಾಗಿ ಪ್ರಮಾಣ ಸ್ವೀಕರಿಸಿದ ಮರುದಿನವೇ ಅನ್ನದಾತರ ಪರವಾಗಿ ಮಹತ್ವದ ನಿರ್ಧಾರ ಕೈಗೊಂಡ ಸನ್ಮಾನ್ಯ ಶ್ರೀ@narendramodiಅವರಿಗೆ ಸಮಸ್ತ ರೈತ ಬಂಧುಗಳ ಪರವಾಗಿ ಅನಂತ ಧನ್ಯವಾದಗಳು. @' 3rd …../
4
+ ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರಧಾನಮಂತ್ರಿಗಳ ಕಿಸಾನ್‌ ನಿಧಿಯಿಂದ 9.3 ಕೋಟಿ ರೈತರುಗಳಿಗೆ 20 ಸಾವಿರ ಕೋಟಿ ರೂ.ಗಳ ಬಿಡುಗಡೆಗೆ ತೀರ್ಮಾನ ಕೈಗೊಂಡಿದ್ದಾರೆ. ಇದು ಎನ್‌ಡಿಎ ಸರ್ಕಾರಕ್ಕೆ ನಮ್ಮ ರೈತರ ಬಗ್ಗೆ ಇರುವ ಬದ್ಧತೆಯನ್ನು ತೋರುತ್ತದೆ ಎಂದು ಹೇಳಿದ್ದಾರೆ.
eesanje/url_46_115_8.txt ADDED
@@ -0,0 +1,5 @@
 
 
 
 
 
 
1
+ ಮಂಗಳೂರು : ಮೋದಿ ಪ್ರಮಾಣವಚನ ವಿಜಯೋತ್ಸವ ವೇಳೆ ಇಬ್ಬರಿಗೆ ಚೂರಿ ಇರಿತ
2
+ ಮಂಗಳೂರು, ಜೂ.10-ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಜಯೋತ್ಸವ ಆಚರಿಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಸುಮಾರು 20 ರಿಂದ 25 ಮಂದಿಯ ಗುಂಪೊಂದು ಹಲ್ಲೆ ನಡೆಸಿ ಇಬ್ಬರಿಗೆ ಚೂರಿಯಿಂದ ಇರಿದಿರುವ ಘಟನೆ ಕಳೆದ ರಾತ್ರಿ ನಗರದ ಮುಡಿಪು ಸಮೀಪದ ಬೋಳಿಯಾರ್‌ನಲ್ಲಿ ನಡೆದಿದೆ.
3
+ ಘಟನೆಯಲ್ಲಿ ಹರೀಶ್‌ (40) ಹಾಗೂ ನಂದಕುಮಾರ್‌ ಎಂಬುವವರು ಚೂರಿ ಇರಿತದಿಂದ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬ ಕೃಷ್ಣಕುಮಾರ್‌ ಎಂಬುವವರಿಗೆ ಹಲ್ಲೆಯಿಂದ ಗಾಯಗಳಾಗಿದ್ದು, ಅವರಿಗೆ ಇಲ್ಲಿನ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.
4
+ ಸುಮಾರು ನಾಲ್ಕೈದು ಮಂದಿ ಬಿಜೆಪಿಗೆ ಜೈಕಾರ ಕೂಗಿ ವಿಜಯೋತ್ಸವ ಆಚರಿಸುತ್ತಿದ್ದರು. ಈ ವೇಳೆ ಕೆಲವರು ಅವರ ಬಳಿ ಬಂದು ಜಗಳ ತೆಗೆದಿದ್ದಾರೆ. ನಂತರ ಕೆಲವರನ್ನು ದೂರವಾಣಿ ಮೂಲಕ ಕರೆಸಿದ್ದಾರೆ. ಅಪಾಯ ಅರಿತ ಯುವಕರು ಅಲ್ಲಿಂದ ಓಡಿ ಹೋಗಲು ಪ್ರಯತ್ನಿಸಿದರೂ ಅವರನ್ನು ಹಿಂಬಾಲಿಸಿ ಚೂರಿಯಿಂದ ಇರಿಯಲಾಗಿದೆ.
5
+ ಒಬ್ಬ ಪ್ರಾಣಾಪಾಯದಿಂದ ಪಾರಾಗಿದ್ದು, ಮತ್ತೊಬ್ಬರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಕೋಣಾಂಜೆ ಪೊಲೀಸ್‌‍ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
eesanje/url_46_115_9.txt ADDED
@@ -0,0 +1,7 @@
 
 
 
 
 
 
 
 
1
+ ಬಿಬಿಎಂಪಿ ಚುನಾವಣೆ ಮೇಲೆ ಸಿಎಂ-ಡಿಸಿಎಂ ಕಣ್ಣು, ಶಾಸಕರ ಜೊತೆ ಸಮಾಲೋಚನೆ
2
+ ಬೆಂಗಳೂರು,ಜೂ.10-ಲೋಕಸಭೆ, ವಿಧಾನಪರಿಷತ್‌ ಸೇರಿದಂತೆ ಎಲ್ಲಾ ಚುನಾವಣೆಗಳನ್ನೂ ಮುಗಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಿಬಿಎಂಪಿ ಚುನಾವಣೆ ಮೇಲೆ ಕಣ್ಣಿಟ್ಟಿದ್ದು ಇಂದು ಪಕ್ಷದ ಶಾಸಕರ ಜೊತೆ ಸಮಾಲೋಚನೆ ನಡೆಸಲಿದ್ದಾರೆ.
3
+ ಸಂಜೆ ಮುಖ್ಯಮಂತ್ರಿಯವರ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು, ಬೆಂಗಳೂರಿನ ವ್ಯಾಪ್ತಿಯ 3 ಲೋಕಸಭಾ ಕ್ಷೇತ್ರಗಳಲ್ಲಿನ ಸೋಲಿನ ಬಗ್ಗೆಯೂ ಪರಾಮರ್ಶೆ ನಡೆಯಲಿದೆ. ಈ ಬಾರಿ ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಗೆಲ್ಲುವ ವಿಶ್ವಾಸವಿತ್ತು.
4
+ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಗರದ ಮತದಾರರು ಕಾಂಗ್ರೆಸ್‌‍ ಪಕ್ಷವನ್ನು ಬೆಂಬಲಿಸಿದರು. ಆದರೆ ಈಗ ಲೋಕಸಭಾ ಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲೂ ಗೆಲ್ಲಲು ಸಾಧ್ಯವಾಗದೇ ಇರುವುದು ಏಕೆ? ಎಂಬ ಪ್ರಶ್ನೆ ಕಾಂಗ್ರೆಸ್‌‍ ಅನ್ನು ಕಾಡುತ್ತಿದೆ. ಹೀಗಾಗಿ ಸೋಲಿನ ಕಾರಣಗಳ ಬಗ್ಗೆ ಪಕ್ಷದ ಶಾಸಕರ ಜೊತೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಮಾಲೋಚನೆ ನಡೆಸಲಿದ್ದಾರೆ.
5
+ ಇತ್ತೀಚೆಗೆ ಬೇಸಿಗೆಯ ಕಾರಣಕ್ಕೆ ಕುಡಿಯುವ ನೀರಿನ ಅಭಾವವನ್ನು ನಗರದ ಜನತೆ ಎದುರಿಸಿದರು. ಅದರ ಬೆನ್ನಲ್ಲೇ ಮುಂಗಾರು ಮಳೆ ಚುರುಕುಗೊಂಡಿದ್ದು, ವಾಡಿಕೆಗಿಂತ ಸ್ವಲ್ಪ ಹೆಚ್ಚು ಮಳೆಯಾದರೂ ನಗರ ಜಲಾವೃತಗೊಳ್ಳುತ್ತಿದ್ದು, ಮನೆಗಳಿಗೆ ನೀರು ನುಗ್ಗುತ್ತಿದೆ, ರಸ್ತೆಗಳಲ್ಲಿ, ಸೇತುವೆಗಳಲ್ಲಿ ನೀರು ನಿಂತು ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ತೆಗೆದುಕೊಳ್ಳಬೇಕಾದ ಶಾಶ್ವತ ಪರಿಹಾರದ ಕಾರ್ಯಗಳ ಬಗ್ಗೆಯೂ ಪಕ್ಷದ ಶಾಸಕರೊಂದಿಗೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
6
+ ಕಳೆದ 5 ವರ್ಷಗಳಿಂದಲೂ ಬಿಬಿಎಂಪಿಗೆ ಚುನಾವಣೆ ನಡೆದಿಲ್ಲ. ಸ್ಥಳೀಯ ಜನಪ್ರತಿನಿಧಿಗಳಿಲ್ಲದೆ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಸಬೇಕು ಎಂದು ಸಾರ್ವಜನಿಕ ವಲಯದಿಂದ ತೀವ್ರ ಒತ್ತಡ ಕೇಳಿಬರುತ್ತಿದೆ.ಮುಖ್ಯಮಂತ್ರಿಯವರು ಚುನಾವಣೆ ನಡೆಸಬೇಕು ಎಂಬ ಉಮೇದಿನಲ್ಲಿದ್ದಾರೆ. ಆದರೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಲು ಸುಪ್ರೀಂಕೋರ್ಟ್‌ ನಿರ್ಬಂಧ ವಿಧಿಸಿರುವುದರಿಂದ ಚುನಾವಣಾ ಪ್ರಕ್ರಿಯೆಗಳು ವಿಳಂಬವಾಗುತ್ತಿವೆ.
7
+ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಬದಿಗಿರಿಸಿ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿಲ್ಲ. ಮೀಸಲಾತಿಯ ಮರು ಅನುಷ್ಠಾನದ ಅಧ್ಯಯನಕ್ಕಾಗಿ ಸಮಿತಿ ರಚಿಸಲಾಗಿದೆ.ಈ ಎಲ್ಲಾ ಅಂಶಗಳನ್ನೂ ಪರಿಗಣಿಸಿ ಬಿಬಿಎಂಪಿಗೆ ಚುನಾವಣೆ ನಡೆಸಬೇಕು ಎಂಬ ಚರ್ಚೆ ನಡೆಯುತ್ತಿದೆ.
eesanje/url_46_116_1.txt ADDED
@@ -0,0 +1,4 @@
 
 
 
 
 
1
+ ನಿವೃತ್ತ ನ್ಯಾ. ನಾಗಮೋಹನ್‌ದಾಸ್‌ಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ
2
+ ಬೆಂಗಳೂರು, ಜೂ.9- ಕನ್ನಡ ಶಕ್ತಿ ಕೇಂದ್ರ ಕೊಡಮಾಡುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‍ದಾಸ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿ 25 ಸಾವಿರ ರೂ. ನಗದು, ಕಂಚಿನ ಪದಕ, ಪ್ರಶಸ್ತಿ ಪತ್ರಗಳನ್ನು ಒಳಗೊಂಡಿದೆ.
3
+ ನಾಳೆ ಸಂಜೆ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ನಾಗಮೋಹನ್‍ದಾಸ್ ಅವರಿಗೆ ನ್ಯಾಯಮೂರ್ತಿ ಡಾ.ಶಿವರಾಜ್ ಪಾಟೀಲ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
4
+ ಬೆಂಗಳೂರು ವಿವಿಯ ವಿಶ್ರಾಂತ ಪ್ರಾಧ್ಯಾಪಕ ಡಾ.ರಾಜಪ್ಪ ದಳವಾಯಿ ಅಧ್ಯಕ್ಷತೆ ವಹಿಸಲಿರುವ ಸಮಾರಂಭದಲ್ಲಿ ಕಸಾಪ ನಿಕಟ ಪೂರ್ವ ಕೋಶಾಧ್ಯಕ್ಷ ಪಿ.ಮಲ್ಲಿಕಾರ್ಜುನಪ್ಪ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ.ರಾಮೇಗೌಡ ತಿಳಿಸಿದ್ದಾರೆ.
eesanje/url_46_116_10.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಮೋದಿ ದುರ್ಬಲ ಮೈತ್ರಿ ಸರ್ಕಾರ 5 ವರ್ಷ ಪೂರೈಸುವುದು ಕಷ್ಟ : ಎಂ.ಬಿ.ಪಾಟೀಲ್‌
2
+ ಬೆಂಗಳೂರು, ಜೂ.8-ಪ್ರಧಾನಮಂತ್ರಿ ನರೇಂದ್ರಮೋದಿ ಮೈತ್ರಿ ಸರ್ಕಾರ ದುರ್ಬಲರಾಗಿದ್ದು, ಐದು ವರ್ಷ ಪೂರ್ಣಾವಧಿ ಸರ್ಕಾರ ನಡೆಯುವುದು ಕಷ್ಟಸಾಧ್ಯವಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿಯವರು, ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು, ಬಿಹಾರದ ನಿತೀಶ್‌ಕುಮಾರ್‌ ಅವರ ಮೇಲೆ ಅವಲಂಬಿತರಾಗಬೇಕಿದೆ.
3
+ ನಿತೀಶ್‌ಕುಮಾರ್‌ ಅವರು ಯಾವಾಗ, ಯಾವ ಕ್ಷಣದಲ್ಲಿ ಬೇಕಾದರೂ ತಮ ನಿಲುವನ್ನು ಬದಲಾವಣೆ ಮಾಡುತ್ತಿರುತ್ತಾರೆ. ಹಾಗಾಗಿ ಸರ್ಕಾರದ ಅವಧಿ ಪೂರ್ಣಗೊಳಿಸುವುದು ಸುಲಭದ ವಿಚಾರ ಅಲ್ಲ ಎಂದರು.
4
+ ರಾಜಸ್ಥಾನ, ಮಹಾರಾಷ್ಟ್ರ, ಬಿಹಾರ ಸೇರಿದಂತೆ ಹಲವು ಕಡೆ ಬಿಜೆಪಿಗೆ ಹಿನ್ನಡೆಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌‍ 9 ಸ್ಥಾನ ಪಡೆದುಕೊಂಡಿದ್ದು, ಇನ್ನೂ 5 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆಯಿದ್ದರೂ ಸೋಲು ಕಂಡಿದ್ದೇವೆ. ಅದಕ್ಕೆ ಕಾರಣಗಳೇನು ಎಂಬುದು ಎಲ್ಲರಿಗೂ ಗೊತ್ತಿದೆ. ನಾಲ್ಕು ಗೋಡೆಗಳ ಮಧ್ಯೆ ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
5
+ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಚಿವ ಶರಣ ಪ್ರಕಾಶ ಪಾಟೀಲರ ಹೆಸರು ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸದ ಅವರು, ಅವರೊಬ್ಬ ಅಪ್ಪಟ ಪ್ರಾಮಾಣಿಕ ವ್ಯಕ್ತಿ. ಸ್ವಚ್ಛ ವ್ಯಕ್ತಿತ್ವ ಹೊಂದಿದ್ದಾರೆ ಎಂಬುದನ್ನು ನಾವು ಗರ್ವದಿಂದ ಹೇಳುತ್ತೇವೆ. ಕ್ರಿಯಾಶೀಲ ಸಚಿವರಾಗಿರುವ ಶರಣಪ್ರಕಾಶ್‌ ಪಾಟೀಲರು ಸಾಕ್ಷ್ಯ ನಾಶಪಡಿಸುವ ಮತ್ತು ಭ್ರಷ್ಟಾಚಾರ ನಡೆಸುವ ವ್ಯಕ್ತಿ ಅಲ್ಲ ಎಂದು ಇಡೀ ರಾಜ್ಯದ ಜನರಿಗೆ ಗೊತ್ತಿದೆ. ಅಪ್ಪಿತಪ್ಪಿಯೂ ಅವರ ಹೆಸರನ್ನು ಇದರಲ್ಲಿ ಥಳಕು ಹಾಕಬೇಡಿ ಎಂದರು.
6
+ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದನಾಬ್‌ ಅತ್ಯಂತ ಭ್ರಷ್ಟ ವ್ಯಕ್ತಿ. ಆತ ನಾಳೆ ನನ್ನ ಹೆಸರು ಬರೆಯಬಹುದು. ಆಗಲೂ ಪ್ರಶ್ನೆ ಕೇಳಲು ಸಾಧ್ಯವೇ? ಯಾವುದೋ ಚಾನಲ್‌ ಹೆಸರು ಬರೆದಿಟ್ಟರೆ, ಪ್ರಧಾನಿ ನರೇಂದ್ರ ಮೋದಿಯವರು ಮೌಖಿಕ ಸೂಚನೆ ನೀಡಿದ್ದರು ಎಂದರೆ ಅದನ್ನು ನಂಬಲಾಗುತ್ತದೆಯೇ? ಇದು ಒಂದು ಪಕ್ಷಕ್ಕೆ ಸೀಮಿತವಲ್ಲ. ಯಾವುದೇ ಪಕ್ಷಕ್ಕಾದರೂ ಎಚ್ಚರಿಕೆಯಿಂದ ಮಾತನಾಡಬೇಕು. ಸಿಕ್ಕಿಬಿದ್ದ ಭ್ರಷ್ಟರ ಮಾತುಗಳನ್ನು ನಂಬುವಾಗ ಯೋಚಿಸಬೇಕಾಗುತ್ತದೆ ಎಂದು ಹೇಳಿದರು.
7
+ ಬಹಳಷ್ಟು ನಿಗಮಗಳಲ್ಲಿ ಈ ರೀತಿ ಹಣ ದುರುಪಯೋಗ ಮಾಡಿಕೊಳ್ಳುವ ವ್ಯಕ್ತಿಗಳಿರುತ್ತಾರೆ. ನಮ ಇಲಾಖೆಯಲ್ಲೂ ಬಹಳಷ್ಟು ಲೋಪಗಳನ್ನು ನಾನೇ ಕಂಡುಹಿಡಿದಿದ್ದೇನೆ. ಅದು ಭ್ರಷ್ಟಾಚಾರ ಅಲ್ಲದೇ ಇರಬಹುದು, ಆದರೆ ಲೋಪಗಳಂತೂ ನಡೆದಿವೆ ಎಂದು ಹೇಳುವ ಮೂಲಕ ಸಚಿವ ಶರಣಪ್ರಕಾಶ್‌ ಪಾಟೀಲ್‌ ಪರವಾಗಿ ಬ್ಯಾಟಿಂಗ್‌ ಮಾಡಿದರು.ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷ ಹಿನ್ನಡೆಯಾಗಿರುವ ಬಗ್���ೆ ನಿನ್ನೆ ನಡೆದ ಸಭೆಯಲ್ಲಿ ರಾಹುಲ್‌ಗಾಂಧಿ ಚರ್ಚೆ ನಡೆಸಿದ್ದಾರೆ.
8
+ ಜಾತಿ ಸಮೀಕರಣವಾಗಿರುವ ಬಗ್ಗೆ ರಣದೀಪ್‌ ಸಿಂಗ್‌ ಸುರ್ಜೇವಾಲ ಪ್ರಾಥಮಿಕ ವಿವರಣೆ ನೀಡಿದರು. ವಿಸ್ತೃತ ವರದಿ ತಯಾರಿಸುವಂತೆ ಹೈಕಮಾಂಡ್‌ ನಾಯಕರು ಸೂಚಿಸಿದ್ದಾರೆ ಎಂದರು. ರಾಜಕೀಯ ಭವಿಷ್ಯ ದೃಷ್ಟಿಯಿಂದಾಗಿ ಸೋಲಿನ ಆತಾವಲೋಕನ ನಡೆಸಲಾಗುವುದು, ಸೋಲುಗಳಿಗೆ ಕಾರಣ, ಲೋಪಗಳ ಬಗ್ಗೆ ಕಾರಣವನ್ನು ಪತ್ತೆ ಹಚ್ಚಿ ಮುಂದಿನ ದಿನಗಳಲ್ಲಿ ಅದನ್ನು ಸರಿಪಡಿಸಲು ಪ್ರಯತ್ನ ನಡೆಸಲಾಗುವುದು ಎಂದರು.
9
+ ಲೋಕಸಭೆ ಚುನಾವಣಾ ಹಿನ್ನೆಲೆಯಲ್ಲಿ ಸಚಿವರ, ಶಾಸಕರ ಮೌಲ್ಯಮಾಪನ ನಡೆಸುವ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ ಎಂದು ಹೇಳಿದ ಸಚಿವರು, ಕಾಂಗ್ರೆಸ್‌‍ ಪಕ್ಷಕ್ಕೆ ಸೋಲಾಗಿದೆ ಎಂಬ ಕಾರಣಕ್ಕೆ ಯಾವುದೇ ಒಂದು ಸಮುದಾಯಕ್ಕೆ ಅದನ್ನು ಹೊಣೆಯನ್ನಾಗಿಸಲು ಸಾಧ್ಯವಿಲ್ಲ. ಕಲ್ಯಾಣ ಕರ್ನಾಟಕದ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್‌‍ ಗೆದ್ದಿದೆ. ಲಿಂಗಾಯತ ಸಮುದಾಯ ಬೆಂಬಲ ನೀಡಿದ್ದಕ್ಕಾಗಿಯೇ ಅಲ್ಲಿ ಗೆಲ್ಲಲು ಸಾಧ್ಯವಾಗಿದೆ. ಉಳಿದ ಕಡೆ ಹೆಚ್ಚು ಕಮಿ ಆಗಿರುವ ಬಗ್ಗೆ ಚರ್ಚೆಯಾಗಲಿದೆ ಎಂದು ಹೇಳಿದರು.
10
+ ಕರ್ನಾಟಕದ ಕಾಂಗ್ರೆಸ್‌‍ ಸರ್ಕಾರ ಮಹಾರಾಷ್ಟ್ರದ ಮಾದರಿಯಲ್ಲೇ ಪತನಗೊಳ್ಳಲಿದೆ ಎಂದು ಹೇಳಿಕೆ ನೀಡಿದ್ದ ಅಲ್ಲಿನ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಹೇಳಿಕೆ ನೀಡಿದ್ದರು. ಆದರೆ ಮಹಾರಾಷ್ಟ್ರದಲ್ಲೇ ಅವರಿಗೆ ಜನಬೆಂಬಲ ಸಿಕ್ಕಿಲ್ಲ. ಸಾಕಷ್ಟು ಕ್ಷೇತ್ರಗಳಲ್ಲಿ ಸೋಲು ಕಂಡಿದ್ದಾರೆ ಎಂದರು.
eesanje/url_46_116_11.txt ADDED
@@ -0,0 +1,4 @@
 
 
 
 
 
1
+ ಸ್ಥಳ ಮಹಜರ್‌ಗಾಗಿ ಪ್ರಜ್ವಲ್‌ ರೇವಣ್ಣನನ್ನು ಹೊಳೆನರಸೀಪುರ ಕರೆತಂದ ಎಸ್‌‍ಐಟಿ ತಂಡ
2
+ ಹಾಸನ,ಜೂ.8-ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಸ್ಥಳ ಮಹಜರ್‌ಗಾಗಿ ವಿಶೇಷ ತನಿಖಾ ತಂಡ ಹೊಳೆನರಸೀಪುರದ ಚೆನ್ನಾಂಬಿಕಾ ನಿವೇಶನಕ್ಕೆ ಕರೆತಂದಿದ್ದು ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದೆ.
3
+ ಕ್ಯೂಆರ್‌ಟಿ ವಾಹನದಲ್ಲಿ ಪ್ರಜ್ವಲ್‌ರೇವಣ್ಣ ಕರೆತಂದ ಎಸ್‌‍ಐಟಿ, ಕ್ಯಾಮೆರಾಗಳಿಗೂ ಕಾಣದಂತೆ ಪ್ರಜ್ವಲ್‌ ರೇವಣ್ಣ ಅವರನ್ನು ವಾಹನದಲ್ಲಿ ನಿವಾಸಕ್ಕೆ ಕರೆದೊಯ್ಯಿತು.ಪ್ರಜ್ವಲ್‌ ಮೇಲಿನ ಪ್ರಕರಣಗಳ ಘಟನಾ ಸ್ಥಳಗಳ ಮಹಜರ್‌ಗಾಗಿ ಎಸ್‌‍ಐಟಿ ಅವರನ್ನು ಜಿಲ್ಲೆಗೆ ಕರೆತಂದಿದ್ದು, ಮೊದಲು ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಪ್ರಕ್ರಿಯೆ ನಡೆಯಲಿದೆ.
4
+ ಹೀಗಾಗಿ ಎಎಸ್‌‍ಪಿ ವೆಂಕಟೇಶ್‌ ನಾಯ್ಡು ನೇತೃತ್ವದಲ್ಲಿ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಏರ್ಪಡಿಸಲಾಗಿದೆ.ಮತದಾನ ಮುಕ್ತಾಯಗೊಂಡ ದಿನವೇ ಜರ್ಮನಿಗೆ ತೆರಳಿದ್ದ ಪ್ರಜ್ವಲ್‌ ರೇವಣ್ಣ ಅವರನ್ನು 43 ದಿನಗಳ ಬಳಿಕ ಹೊಳೆನರಸೀಪುರಕ್ಕೆ ವಿಶೇಷ ತಂಡ ಕರೆತಂದಿದೆ.
eesanje/url_46_116_12.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಮೋದಿ ಸಂಪುಟದಲ್ಲಿ ಕರ್ನಾಟಕದಿಂದ ಯಾರಿಗೆ, ಎಷ್ಟು ಸಚಿವ ಸ್ಥಾನ..?
2
+ ಬೆಂಗಳೂರು,ಜೂ.8– ಪ್ರಧಾನಿ ನರೇಂದ್ರಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದರೂ ಕರ್ನಾಟಕದಿಂದ ಸಚಿವ ಸ್ಥಾನ ಯಾರಿಗೆ ಸಿಗಲಿದೆ ಎಂಬ ಗುಟ್ಟು ಈಗಲೂ ಗುಟ್ಟಾಗಿಯೇ ಉಳಿದಿದೆ. ಭಾನುವಾರ ರಾತ್ರಿ7.15ಕ್ಕೆ ಮೋದಿಯವರು ಪ್ರಧಾನಿಯಾಗಿ ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸುತ್ತಿದ್ದಾರೆ. ಕರ್ನಾಟಕದಿಂದ ಈ ಬಾರಿ ಕೇಂದ್ರದಲ್ಲಿ ಯಾರಿಗೆ ಸಚಿವ ಸ್ಥಾನ ಎಂಬುದು ಈ ಕ್ಷಣದವರೆಗೂ ಯಾರಿಗೂ ತಿಳಿಯದಿರುವುದು ಗೊಂದಲಕ್ಕೆ ಕಾರಣವಾಗಿದೆ.
3
+ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ-ಜೆಡಿಎಸ್‌‍ ಎನ್‌ಡಿಎ ಮೈತ್ರಿಕೂಟ 19 ಕ್ಷೇತ್ರಗಳನ್ನು ಗೆದ್ದಿದೆ. ಕೇಂದ್ರದಲ್ಲಿ ರಾಜ್ಯಕ್ಕೆ ಪ್ರತಿ ಬಾರಿ ಸಂಪುಟದಲ್ಲಿ ಎರಡು ಸಂಪುಟ ದರ್ಜೆ ಹಾಗೂ 2-3 ರಾಜ್ಯ ಖಾತೆಗಳು ಲಭಿಸುತ್ತಿದ್ದವು.
4
+ ಈ ಬಾರಿ ಮೋದಿ ಸಂಪುಟದಲ್ಲಿ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬುದು ಊಹೆಗೂ ನಿಲುಕದ ಯಕ್ಷ ಪ್ರಶ್ನೆಯಾಗಿದೆ. ಸದ್ಯ ಎಲ್ಲಾ ನೂತನ ಸಂಸದರು ದೆಹಲಿಗೆ ದೌಡಾಯಿಸಿದ್ದರೂ ಪ್ರಧಾನಿ ಕಾರ್ಯಾಲಯದಿಂದ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ದೂರವಾಣಿ ಕರೆ ಯಾರಿಗೂ ಬಂದಿಲ್ಲ ಎಂದು ಗೊತ್ತಾಗಿದೆ.
5
+ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಳೇ ಮೈಸೂರು ಭಾಗದಲ್ಲಿಯಾವ ರೀತಿಯಲ್ಲಿ ಬೆಂಬಲ ಸಿಕ್ಕಿದೆಯೋ, ಅಷ್ಟೇ ಬೆಂಬಲ ಕಿತ್ತೂರ ಕರ್ನಾಟಕದಲ್ಲಿಯೂ ದೊರೆತಿದೆ. ಈ ಭಾಗದ ಏಳು ಲೋಕಸಭಾ ಕ್ಷೇತ್ರಗಳ ಪೈಕಿ 6ರಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಅಲ್ಲದೇ ಆಯ್ಕೆಯಾದವರಲ್ಲಿ ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ವಿಧಾನಸಭೆ ಸ್ಪೀಕರ್‌ಗಳು, 5ರಿಂದ 7 ಬಾರಿ ಸಂಸದರಾದ ಘಟನುಘಟಿಗಳಿದ್ದಾರೆ.
6
+ ರಾಜ್ಯದಲ್ಲಿ ಕಾಂಗ್ರೆಸ್‌‍ ಸರಕಾರ ಅಸ್ತಿತ್ವದಲ್ಲಿ ಇರುವುದರಿಂದ ಇನ್ನೂ ನಾಲ್ಕು ವರ್ಷ ಬಿಜೆಪಿ ಶಾಸಕರಿಗೆ ಯಾವುದೇ ಅಧಿಕಾರವಿಲ್ಲ. ಸಂಸದರಾದರೆ ಕೇಂದ್ರದಲ್ಲಿ ಸಚಿವ ಸ್ಥಾನ ಸಿಗಬಹುದೆಂಬ ಮಹತ್ವಕಾಂಕ್ಷೆಯಿಂದಲೇ ಶಾಸಕರಾಗಿದ್ದ ಮಾಜಿ ಸಿಎಂ ಬಸವರಾಜ ಬೊಮಾಯಿ ಹಾವೇರಿ ಲೋಕಸಭೆಗೆ ಟಿಕೆಟ್‌ ಪಡೆದು ಪ್ರಥಮ ಬಾರಿಗೆ ಸಂಸತ್‌ಗೆ ಆಯ್ಕೆಯಾಗಿದ್ದಾರೆ.
7
+ ಇನ್ನು ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡಿದ್ದ ಮಾಜಿ ಸಿಎಂ ಜಗದೀಶ ಶೆಟ್ಟರ್‌ ಸಹ ಮೊದಲ ಬಾರಿ ಸಂಸತ್‌ ಪ್ರವೇಶಿಸುವ ಮೂಲಕ ರಾಜಕೀಯ ಮರು ಹುಟ್ಟು ಪಡೆದಿದ್ದಾರೆ. ಮೋದಿಯವರ ಎರಡನೇ ಅವಧಿ ಸರಕಾರದಲ್ಲಿ ಐದು ವರ್ಷ ಯಶಸ್ವಿ ಸಚಿವರಾಗಿ ಕಾರ್ಯ ನಿರ್ವಹಿಸಿದ ಪ್ರಹ್ಲಾದ್‌ ಜೋಶಿ ಈಗ 5ನೇ ಬಾರಿ ಆಯ್ಕೆಯಾಗಿ ಹೊಸ ದಾಖಲೆ ಸೃಷ್ಟಿಸಿದ್ದಾರೆ.ಇನ್ನು ಸ್ಪೀಕರ್‌ ಆಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಥಮ ಬಾರಿಗೆ, ಪಿ.ಸಿ.ಗದ್ದಿಗೌಡರ 5ನೇ ಬಾರಿಗೆ, ರಮೇಶ ಜಿಗಜಿಣಗಿ 7ನೇ ಬಾರಿಗೆ ಆಯ್ಕೆಯಾಗಿದ್ದಾರೆ.
8
+ ಕಿತ್ತೂರ ಕರ್ನಾಟಕದಿಂದ ಲೋಕಸಭೆಗೆ ಆಯ್ಕೆಯಾಗಿರುವ ಎಲ್ಲಸಂಸದರೂ ಹಿರಿಯರು, ಅನುಭವಿಗಳು ಹಾಗೂ ಉನ್ನತ ಸ್ಥಾನಗಳನ್ನು (ಗದ್ದಿಗೌಡರ, ಜಿಗಜಿಣಗಿ ಹೊರತುಪಡಿಸಿ) ಅಲಂಕರಿಸಿದ್ದಾರೆ. ಹೀಗಾಗಿ ಇವರೆಲ್ಲರೂ ಸಚಿವ ಸ್ಥಾನಕ್ಕೆ ಅರ್ಹರೇ. ಹೀಗಾಗಿ ಪೈಪೋಟಿ ಏರ್ಪಟ್ಟಿದೆ.
9
+ ಆದರೆ ಕೇವಲ ಹಿರಿತನ, ಅನುಭವದ ಆಧಾರದ ಮೇಲೆ ಸಚಿವ ಸ್ಥಾನ ಹಂಚಿಕೆ ಆಗುವುದಿಲ್ಲ. ಜಾತಿ, ಪ್ರಾದೇಶಿಕತೆ ಹಾಗೂ ಪಕ್ಷದಲ್ಲಿ ಅವರಿಗೆ ಇರುವ ಸ್ಥಾನಮಾನ ಕೂಡಾ ಪರಿಗಣಿಸಲ್ಪಡುತ್ತದೆ.
10
+ ಕರ್ನಾಟಕಕ್ಕೆ 2-3 ಸಚಿವ ಸ್ಥಾನ ಸಿಗುವ ಸಾಧ್ಯತೆಯಿದೆ. ಅದರಲ್ಲಿ ಒಂದು ಹಳೇ ಮೈಸೂರ ಭಾಗದಲ್ಲಿಒಕ್ಕಲಿಗರಿಗೆ ಅವಕಾಶ ನೀಡಿದರೆ, ಇನ್ನೊಂದು ಸ್ಥಾನವನ್ನು ಉತ್ತರ ಕರ್ನಾಟಕದ ಲಿಂಗಾಯತರಿಗೆ ಅವಕಾಶ ನೀಡಬೇಕಾಗುತ್ತದೆ. ಆಗ ಮಾಜಿ ಸಿಎಂಗಳಾದ ಜಗದೀಶ ಶೆಟ್ಟರ್‌ ಹಾಗೂ ಬಸವರಾಜ ಬೊಮಾಯಿ ಇವರಿಬ್ಬರಲ್ಲಿ ಒಬ್ಬರಿಗೆ ಅವಕಾಶ ದೊರೆಯುವ ಸಾಧ್ಯತೆ ಹೆಚ್ಚು. ಒಂದು ವೇಳೆ ರಾಜ್ಯ ಖಾತೆ ನೀಡುವುದಾದರೆ ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರಿಗೂ ಅವಕಾಶ ಸಿಗಬಹುದು ಎಂದು ಹೇಳಲಾಗುತ್ತದೆ.
11
+ 2014, 2019ರ ಸೂತ್ರ ಪಾಲಿಸುತ್ತಾ ಎನ್‌ಡಿಎ?:ಇನ್ನು ಬ್ರಾಹಣ ಸಮುದಾಯಕ್ಕೆ ಒಂದು ಅವಕಾಶ ನೀಡಿದರೆ, ಪ್ರಲ್ಹಾದ ಜೋಶಿ ಹಾಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಇದ್ದಾರೆ. ಇವರಲ್ಲಿಒಬ್ಬರಿಗೆ ಅವಕಾಶ ಸಿಗುವ ಸಾಧ್ಯತೆಗಳಿವೆ. ಈಗಾಗಲೇ ಒಂದು ಅವಧಿಗೆ ಸಚಿವರಾಗಿ ಉತ್ತಮ ಕಾರ್ಯ ನಿರ್ವಹಣೆ ಮಾಡಿದ್ದಲ್ಲದೇ, ರಾಜಸ್ಥಾನ ಚುನಾವಣಾ ಉಸ್ತುವಾರಿ ಹೊತ್ತು ಬಿಜೆಪಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಪ್ರಹ್ಲಾದ್‌ ಜೋಶಿ ಅವರಿಗೆ ಹೆಚ್ಚಿನ ಅವಕಾಶಗಳಿವೆ. ಒಂದು ವೇಳೆ ದಲಿತ ಸಮುದಾಯಕ್ಕೆ ಅವಕಾಶ ಸಿಕ್ಕರೆ ವಿಜಯಪುರದ ಸಂಸದ ರಮೇಶ್‌ ಜಿಗಜಿಣಗಿ ಹೆಸರು ಮುಂಚೂಣಿಗೆ ಬರುವ ಸಾಧ್ಯತೆಯಿದೆ.
12
+ ಸಚಿವ ಸ್ಥಾನಕ್ಕೆ ಲಾಬಿ:ಜೋಶಿಯವರ ಬೆನ್ನಿಗೆ ಪ್ರಧಾನಿ ಮೋದಿ, ಶಾ ಇದ್ದರೆ, ಬೊಮ್ಮಾಯಿ ಅವರಿಗೆ ಅಮಿತ್‌ ಶಾ, ಜೋಶಿ ಬೆನ್ನಿಗಿದ್ದಾರೆ. ಜಗದೀಶ ಶೆಟ್ಟರ್‌ ಪರ ಮಾಜಿ ಸಿಎಂ ಯಡಿಯೂರಪ್ಪ ಬ್ಯಾಟಿಂಗ್‌ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತದೆ. ಯಾರಿಗೆ ಅವಕಾಶ ಸಿಗಲಿದೆ, ಯಾರ ಕೈ ಮೇಲಾಗುತ್ತದೆ ಎಂಬುದಕ್ಕೆ ನಾಳೆಯವರೆಗೂ ಕಾಯಬೇಕಿದೆ.
eesanje/url_46_116_2.txt ADDED
@@ -0,0 +1,5 @@
 
 
 
 
 
 
1
+ ಜೆಡಿಎಸ್ ಶಾಸಕರು, ಮುಖಂಡರ ದಂಡೇ ದೆಹಲಿಗೆ
2
+ ಬೆಂಗಳೂರು,ಜೂ.9- ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸಂಪುಟದ ಸಚಿವರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲು ಜೆಡಿಎಸ್ ಪಕ್ಷದ ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಸೇರಿದಂತೆ ಪಕ್ಷದ ಮುಖಂಡರ ದಂಡೇ ಇಂದು ದೆಹಲಿಗೆ ತೆರಳಿದೆ. ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗಲು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಶಾಸಕರಾದ ಜಿ.ಡಿ.ಹರೀಶ್‍ಗೌಡ, ಸ್ವರೂಪ್ ಪ್ರಕಾಶ್, ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ.ರಮೇಶ್‍ಗೌಡ, ವಿಧಾನ ಪರಿಷತ್‍ಗೆ ನೂತನವಾಗಿ ಆಯ್ಕೆಯಾಗಿರುವ ವಿವೇಕಾನಂದ, ಟಿ.ಎನ್.ಜವರಾಯಿಗೌಡರು ಮಾಜಿ ಶಾಸಕ ಅಶ್ವಿನ್, ಪಿರಿಯಾಪಟ್ಟಣ ಮಹದೇವ್ ಅವರು ಸೇರಿದಂತೆ ಪಕ್ಷದ ಹಲವು ಮುಖಂಡರು ಈಗಾಗಲೇ ದೆಹಲಿ ತಲುಪಿದ್ದಾರೆ.
3
+ ಇಂದು ಬೆಳಿಗ್ಗೆ ವಿವಿಧ ವಿಮಾನಗಳಲ್ಲಿ ಜೆಡಿಎಸ್ ಮುಖಂಡರು ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದರು. ಲೋಕಸಭಾ ಹಾಗೂ ವಿಧಾನ ಪರಿಷತ್ ಗೆಲುವಿನ ಉತ್ಸಾಹದಲ್ಲಿರುವ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ಪಕ್ಷದ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾಗುತ್ತಿರುವುದರಿಂದ ಸಂಭ್ರಮ ಇಮ್ಮಡಿಗೊಂಡಿದೆ. ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುತ್ತಿರುವ ಹಾಗೂ ಕುಮಾರಸ್ವಾಮಿ ಕೇಂದ್ರ ಸಚಿವರಾಗುತ್ತಿರುವುದರ ಸಂಭ್ರಮ ಆಚರಿಸಲು ದೆಹಲಿಗೆ ಹೋಗಿದ್ದಾರೆ.
4
+ ದೆಹಲಿಯಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸದಲ್ಲೂ ಸಂಭ್ರಮ ಜೋರಾಗಿದೆ. ಅವರ ನಿವಾಸವನ್ನು ಶೃಂಗಾರಗೊಳಿಸಲಾಗಿದ್ದು, ಹಬ್ಬದ ವಾತಾವರಣ ಕಂಡುಬರುತ್ತಿದೆ. ಪ್ರಮಾಣ ವಚನದಲ್ಲಿ ಭಾಗಿಯಾಗಲು ರಾಜ್ಯದಿಂದ ಹೋಗಿರುವ ಪಕ್ಷದ ಮುಖಂಡರು ಸಹ ದೇವೇಗೌಡರ ನಿವಾಸಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ನಿವಾಸ ಹಾಗೂ ಅಂಗಳವನ್ನು ವಿಶಿಷ್ಟ ರೀತಿಯಲ್ಲಿ ಸಿಂಗರಿಸಲಾಗಿದೆ.
5
+ ದೇವೇಗೌಡರು ಪ್ರಧಾನಿಯಾದ ಬಳಿಕ ಗೌಡರ ಕುಟುಂಬ ಹಾಗೂ ಜೆಡಿಎಸ್‍ನಿಂದ ಯಾರು ಕೇಂದ್ರ ಸಚಿವರಾಗಿರಲಿಲ್ಲ. ಮೊದಲ ಬಾರಿ ಮುಖ್ಯಮಂತ್ರಿಯಾದಾಗಲೂ ಕುಮಾರಸ್ವಾಮಿ ಅವರು, ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರದಲ್ಲೇ ಆಗಿದ್ದರು. ಈಗ ಅದೇ ರೀತಿ ಎನ್‍ಡಿಎ ಮೈತ್ರಿ ಕೂಟದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಸಚಿವರಾಗುತ್ತಿದ್ದಾರೆ. ಹೀಗಾಗಿ ಜೆಡಿಎಸ್ ಪಾಳೆಯಲ್ಲಿ ಹಬ್ಬದ ವಾತಾವರಣ ಕಂಡು ಬಂದಿದ್ದು, ಉತ್ಸಾಹದ ಅಲೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ತೇಲುತ್ತಿದ್ದಾರೆ.
eesanje/url_46_116_3.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಮೋದಿ ಸಂಪುಟದಲ್ಲಿ ಹೆಚ್‌ಡಿಕೆ, ಜೋಶಿ, ಶೋಭಾ, ಸೋಮಣ್ಣ!
2
+ ಬೆಂಗಳೂರು,ಜೂ.9- ನರೇಂದ್ರ ಮೋದಿಯವರು ಮೂರನೇ ಅವಧಿಗೆ ಪ್ರಧಾನಿ ಆಗಿ ಅಧಿಕಾರ ಸ್ವೀಕರಿಸುವುದ ರೊಂದಿಗೆ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಇಂದಿನಿಂದ ವಿದ್ಯುಕ್ತವಾಗಿ ಅಧಿಕಾರಕ್ಕೆ ಬರಲಿದೆ.ಇಂದು ಸಂಜೆ 7.15 ಕ್ಕೆ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ನಡೆಯುವ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಗೌಪ್ಯತೆ ಬೋಧಿಸಲಿದ್ದಾರೆ.
3
+ ಪಂಡಿತ್ ಜವಹರಲಾಲ್ ನೆಹರೂ ನಂತರ ಸತತವಾಗಿ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಕಾಂಗ್ರೆಸೇತರ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿಯವರು ಪಾತ್ರರಾಗಲಿದ್ದಾರೆ. ಪ್ರಧಾನಿಯವರೊಂದಿಗೆ 30ಕ್ಕೂ ಹೆಚ್ಚು ಸಚಿವರು ಅಧಿಕಾರ ಸ್ವೀಕರಿಸಲಿದ್ದು, 2014 ಹಾಗೂ 2019 ರಲ್ಲಿ ಸ್ವಂತಬಲದ ಮೇಲೆ ಅಧಿಕಾರ ಗದ್ದುಗೆ ನಡೆಸಿದ್ದ ಬಿಜೆಪಿ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಮೈತ್ರಿ ಧರ್ಮವನ್ನು ಪಾಲಿಸಬೇಕಾದ ಅನಿವಾರ್ಯತೆ ಇದೆ.
4
+ ಎನ್‍ಡಿಎ ಮಿತ್ರಪಕ್ಷಗಳಾದ ಜೆಡಿಯು, ಟಿಡಿಪಿ, ಜೆಡಿಎಸ್, ಎಚ್‍ಎಎಂ, ಅಪ್ನಾ ದಳ, ಶಿವಸೇನೆ, ಆರ್‍ಎಲ್‍ಡಿ ಸೇರಿದಂತೆ ಮೈತ್ರಿಪಕ್ಷಗಳಿಗೂ ಸಂಪುಟದಲ್ಲಿ ಸಿಂಹಪಾಲು ಸಿಗಲಿದೆ. ಕೇಂದ್ರದ ಪ್ರಮುಖ ಖಾತೆಗಳಾದ ಗೃಹ, ವಿದೇಶಾಂಗ ವ್ಯವಹಾರ, ಹಣಕಾಸು, ರೈಲ್ವೆ, ಸಾರಿಗೆ, ಮಾಹಿತಿ ತಂತ್ರಜ್ಞಾನ, ಶಿಕ್ಷಣ ಸೇರಿದಂತೆ ಹಲವು ಖಾತೆಗಳನ್ನು ಬಿಜೆಪಿ ತನ್ನಲ್ಲೇ ಉಳಿಸಿಕೊಳ್ಳಲಿದೆ. ಕರ್ನಾಕಟದಿಂದ ಪ್ರಹ್ಲಾದ್ ಜೋಶಿ-ಧಾರವಾಡ, ಎಚ್.ಡಿ.ಕುಮಾರಸ್ವಾಮಿ-ಮಂಡ್ಯ, ಶೋಭಾ ಕರಂದ್ಲಾಜೆ-ಬೆಂಗಳೂರು ಉತ್ತರ ಅವರುಗಳಿಗೆ ಪ್ರಮಾಣ ವಚನ ಸ್ವೀಕರಿಸಲು ಪ್ರಧಾನಿ ಕಾರ್ಯಾಲಯದಿಂದ ಸೂಚನೆ ಬಂದಿದೆ.
5
+ ಆದರೆ ವೀರಶೈವ ಲಿಂಗಾಯತ ಸಮುದಾಯದಿಂದ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಹಾಗೂ ಮಾಜಿ ಸಚಿವ ವಿ.ಸೋಮಣ್ಣ ಅವರ ಹೆಸರುಗಳು ಕೇಳಿ ಬಂದಿವೆ.ಎನ್‍ಡಿಎ ಮಿತ್ರಪಕ್ಷಗಳಾದ ಜೆಡಿಯು, ಟಿಡಿಪಿ, ಶಿವಸೇನೆ, ಆರ್‍ಎಲ್‍ಡಿ, ಅಪ್ನಾದಳ್, ಎಲ್‍ಜೆಪಿ ಪಕ್ಷಗಳಿಗೆ ಸಂಪುಟದಲ್ಲಿ ಒಂದು ಸಂಪುಟ ದರ್ಜೆ ಹಾಗೂ ಒಂದು ರಾಜ್ಯಖಾತೆ ಲಭಿಸಲಿದೆ.
6
+ ಮೋದಿಯವರ ಸಂಪುಟಕ್ಕೆ ಕಳೆದ ಬಾರಿ ಸಚಿವರಾಗಿದ್ದ ಅಮಿತ್ ಶಾ, ನಿತಿನ್ ಗಡ್ಕರಿ, ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್, ಜಯಶಂಕರ್, ಅರ್ಜುನ್ ಮೇಗರ್‍ವಾಲ್, ಜ್ಯೋತಿರಾಧ್ಯ ಸಿಂಧ್ಯಾ, ಕಿಶನ್ ರೆಡ್ಡಿ, ಸಂಜಯ್ ಬಂಡಿ, ಸುರೇಶ್ ಗೋಪಿ, ಶಿವರಾಜ್ ಸಿಂಗ್ ಚೌವ್ಹಾಣ್, ಸ್ವರ್ಬಾನಂದ್ ಸೋನಾವಾಲ್, ಕೆ.ಅಣ್ಣಮಲೆ, ಮನೋಹರ್‍ಲಾಲ್ ಕಟ್ಟರ್, ಧಮೇಂದ್ರ ಪ್ರಧಾನ್, ಮಾಲ್ಸುಕ್ ಮಾಂಡವಿಯ, ಪುರಂದರೇಶ್ವರಿ, ಕಿರಣ್ ರಿಜ್ಸುಜು, ಅಶ್ವಿನಿ ವೈಷ್ಣವ್, ಕಮಲ್‍ದೀಪ್ ಶರಾವತ್, ರಾವ್ ಇಂದ್ರಜಿತ್ ಸಿಂಗ್, ಜಿತಿನ್, ಹರ್ಜಿತ್ ಸಿಂಗ್, ಗಿರಿದತ್‍ಸಿಂಗ್ ಸೇರಿದಂತೆ ಮತ್ತಿತರರು ಬಿಜೆಪಿಯಿಂದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಟಿಡಿಪಿ ವತಿಯಿಂದ ಕೇಂದ್ರದ ಮಾಜಿ ಸಚಿವ ದಿ.ಎರ್ರಂನಾಯ್ಡು ಅವರ ಪುತ್ರ ರಾಮಮೋಹನ್ ನಾಯ್ಡು ಕಿಂಗ್‍ಜರಪು ಸಂಪುಟಕ್ಕೆ ಸೇರ್ಪಡೆಯಾಗಲಿದ್ದು, ದೇಶದಲ್ಲೇ ಅತ್ಯಂತ ಕಿರಿ ವಯಸ್ಸಿನ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
7
+ ಜೊತೆಗೆ ದೇಶದಲ್ಲೇ ಅತ್ಯಂತ ಶ್ರೀಮಂತ ಅಭ್ಯರ್ಥಿ ಎಂದು ಬಿಂಬಿತವಾಗಿದ್ದ ಚಂದ್ರಶೇಖರ್ ಪೆಮ್ಮಸಾನಿ ಅವರಿಗೆ ರಾಜ್ಯಖಾತೆ ಲಭಿಸಲಿದೆ. ಅಲ್ಲದೆ, ರಾಮ್‍ಮೋಹನ್ ನಾಯ್ಡು ಕೂಡ ಸಂಪುಟಕ್ಕೆ ಸೇರಿಕೊಳ್ಳುವ ಸಾಧ್ಯತೆಯಿದೆ.ಬಿಹಾರದಿಂದ ಜೆಡಿಯುನ ಲಾಲನ್‍ಸಿಂಗ್, ಪ್ರತಾಪ್‍ರಾವ್ ಜಾದವ್, ಎಚ್‍ಎಎಂನ ಜಿತಿನ್ ರಾಮ್‍ಮಾಂಜಿ, ಅಪ್ನಾದಳ್‍ನ ಅನುಪ್ರಿಯಾ ಪಟೇಲ್, ಆರ್‍ಎಲ್‍ಡಿಯ ಜಯಂತ್ ಚೌಧರಿ, ಶಿವಸೇನೆಯ ಪ್ರಪುಲ್ ಪಟೇಲ್, ಎಲ್‍ಜೆಪಿಯ ಚಿರಾಗ್ ಪಾಸ್ವಾನ್ ಸಂಪುಟಕ್ಕೆ ಸೇರ್ಪಡೆಯಾಗುವ ಸಂಭವನೀಯ ಪಟ್ಟಿಯಲ್ಲಿದ್ದಾರೆ.ಈ ಬಾರಿ ಮಿತ್ರಪಕ್ಷಗಳಿಗೆ ಸಂಪುಟದಲ್ಲಿ ಸ್ಥಾನಮಾನ ಕಲ್ಪಿಸಬೇಕಾಗಿರುವುರಿಂದ ಬಿಜೆಪಿ ಕೆಲವರಿಗೆ ಸ್ಥಾನ ತ್ಯಾಗ ಮಾಡುವಂತೆ ಸೂಚನೆ ನೀಡಿದೆ. ಮೋದಿಯವರು ಪ್ರದೇಶವಾರು, ಜಾತಿ, ಪಕ್ಷಕ್ಕೆ ಸಲ್ಲಿಸಿರುವ ಸೇವೆ, ಅನುಭವ, ಹಿರಿತನ, ಶೈಕ್ಷಣಿಕ ಹಿನ್ನೆಲೆ ಮತ್ತಿತರ ಅಂಶಗಳ ಮೇಲೆ ಸಂಪುಟಕ್ಕೆ ತೆಗೆದುಕೊಂಡಿದ್ದಾರೆ.
8
+ ಯಾರೆಗೆಲ್ಲ ಆಹ್ವಾನ..?:ಮೋದಿ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಪೌರ ಕಾರ್ಮಿಕರು, ಸೆಂಟ್ರಲ್ ವಿಸ್ತಾ ಯೋಜನೆ, ನೂತನ ಸಂಸತ್ ಕಟ್ಟಡ ನಿರ್ಮಾಣ ಕಾರ್ಮಿಕರು, ತೃತೀಯ ಲಿಂಗಿಗಳು, ಕೇಂದ್ರ ಸರ್ಕಾರದ ಕಲ್ಯಾಣ ಯೋಜನೆಗಳ ಫಲಾನುಭವಿಗಳು, ಉತ್ತರಾಖಂಡ್ ಗಣಿ ಕಾರ್ಮಿಕರ ರಕ್ಷಿಸಿದ ತಂಡ, ವಂದೇ ಭಾರತ್, ಮೆಟ್ರೋದಂಥ ರೈಲ್ವೆ ಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದವರು, ಎಲ್ಲಾ ಧರ್ಮಗಳ 50 ಧರ್ಮ ಗುರುಗಳಿಗೂ ಜೊತೆಗೆ ಪದ್ಮಭೂಷಣ, ಪದ್ಮವಿಭೂಷಣ, ಪದ್ಮಶ್ರೀ ಪುರಸ್ಕøತರಿಗೆ, ವಿಕಸಿತ ಭಾರತ್ ಅಂಬಾಸಿಡರ್‍ಗಳು ಹಾಗೂ ಆದಿವಾಸಿ ಮಹಿಳೆಯರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು.
9
+ ವಿದೇಶಿ ಗಣ್ಯರು :ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ಸೀಷೆಲ್ಸ ಅಧ್ಯಕ್ಷ ವಾವೆಲ್ ರಾಮ್ಕಾಲಾವನ್, ಭೂತಾನ್ ಪ್ರಧಾನಿ ತ್ಶೆರಿಂಗ್ ತೋಗ್ಬೆ, ಮಾರಿಷಸ್ ಪ್ರಧಾನಿ ಪ್ರವೀಂದ್ ಜುಗ್ನಾಥ್, ಬಾಂಗ್ಲಾ ದೇಶದ ಪ್ರಧಾನಿ ಶೇಖ್ ಹಸೀನಾ, ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಹಾಗೂ ಮಾಲ್ಡಿವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜುಗೆ ಆಹ್ವಾನ ನೀಡಲಾಗಿತ್ತು.
10
+ ಬಿಗಿಭದ್ರತೆ:ಮೋದಿ ಪ್ರಮಾಣ ವಚನ ಕಾರ್ಯಕ್ರಮ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ದೆಹಲಿ ಪೊಲೀಸರು 5 ಹಂತದಲ್ಲಿ ಭದ್ರತೆ ಹೆಚ್ಚಿಸಿದ್ದಾರೆ. ಅರೆಸೈನಿಕ ಸಿಬ್ಬಂದಿ, ಎನ್‍ಎಸ್ಜಿ ಕಮಾಂಡೋಗಳು, ಡ್ರೋನ್‍ಗಳು, ಸ್ನೈಪರ್‍ಗಳು ಸೇರಿ ಬಹು ಹಂತದ ಭದ್ರತೆ ಕೈಗೊಳ್ಳಲಾಗಿತ್ತು.
11
+ ರಾಷ್ಟ್ರಪತಿ ಭವನದ ಒಳಗೆ ಹಾಗ�� ಹೊರಗೆ 3 ಹಂತದಲ್ಲಿ ಭದ್ರತೆ ನೀಡಲಾಗಿತ್ತು. 5 ಕಂಪನಿಗಳ ಅರೆಸೇನಾಪಡೆ, ದೆಹಲಿ ಸಶಸ್ತ್ರ ಪೊಲೀಸ್ ಹೀಗೆ ಭದ್ರತೆಗಾಗಿ 2,500 ಪೆÇಲೀಸರ ಸುತ್ತಲೂ ನೇಮಕ ಮಾಡಲಾಗಿದೆ. ಗಣ್ಯರ ಮಾರ್ಗದಲ್ಲಿ ಸ್ನೈಪರ್‍ಗಳು, ಶಸ್ತ್ರಸಜ್ಜಿತ ಪೆÇಲೀಸರನ್ನು ನಿಯೋಜನೆ ಮಾಡಲಾಗಿದೆ. ವಿದೇಶಿ ಗಣ್ಯರು ಉಳಿಯುವ ಲೀಲಾ, ತಾಜ್, ಐಟಿಸಿ ಮರ್ಯ, ಕ್ಲಾರಿಡ್ಜಸ್ ಮತ್ತು ಒಬೆರಾಯ್ ಹೋಟೆಲ್‍ಗಳಲ್ಲೂ ಜಿ-20 ಮಾದರಿಯಲ್ಲೇ ವಿಶೇಷ ಭದ್ರತೆ ನಿಯೋಜನೆ ಮಾಡಲಾಗಿತ್ತು.
eesanje/url_46_116_4.txt ADDED
@@ -0,0 +1,7 @@
 
 
 
 
 
 
 
 
1
+ ಹಣ ಅವ್ಯವಹಾರ ತನಿಖೆ ಕುರಿತು ಸಿಬಿಐ ಪತ್ರ ಬರೆದಿಲ್ಲ: ಪರಮೇಶ್ವರ್
2
+ ಬೆಂಗಳೂರು,ಜೂ.9- ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅವ್ಯವಹಾರ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ರಾಜ್ಯಸರ್ಕಾರಕ್ಕೆ ಅಧಿಕೃತವಾಗಿ ಇನ್ನೂ ಪತ್ರ ಬರೆದಿಲ್ಲ. ಆದರೆ ಸಹಪಾಠಿ ಅಧಿಕಾರಿಗಳ ಬಳಿ ಮಾಹಿತಿ ನೀಡುವಂತೆ ಕೇಳಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
3
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೇಳಿದಾಕ್ಷಣ ಸಚಿವರು, ಮುಖ್ಯಮಂತ್ರಿ ರಾಜೀನಾಮೆ ನೀಡಲು ಸಾಧ್ಯವಿಲ್ಲ. ಈಗಾಗಲೇ ತನಿಖೆ ನಡೆಯುತ್ತಿದೆ. ಎಸ್‍ಐಟಿಗಾಗಲೀ, ಸಿಬಿಐಗಾಗಲೀ ಸಮಯಾವಕಾಶ ನೀಡಬೇಕಾಗುತ್ತದೆ. ಕಾಲಮಿತಿ ನಿಗದಿ ಮಾಡುವುದು ಸೂಕ್ತ ಅಲ್ಲ ಎಂದರು. ಸಚಿವ ಶರಣಪ್ರಕಾಶ್ ಪಾಟೀಲರ ಕಚೇರಿಯಲ್ಲಿ ಸಭೆ ನಡೆದಿದೆ ಎನ್ನುವ ಬಗ್ಗೆ ಎಸ್‍ಐಟಿ ಅಧಿಕಾರಿಗಳು ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಿದ್ದಾರೆ ಎಂದು ಹೇಳಿದರು.
4
+ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ಅ„ಕಾರಿಗಳು ಈಗಾಗಲೇ ತನಿಖೆ ಆರಂಭಿಸಿದ್ದಾರೆ. ಸರ್ಕಾರದ ಇಲಾಖೆಗಳ ತನಿಖೆಗೆ ಇನ್ನೂ ಅ„ಕೃತವಾಗಿ ಪತ್ರ ಬರೆದಿಲ್ಲ. ಬ್ಯಾಚ್‍ಮೇಟ್ ಅ„ಕಾರಿಗಳ ಜೊತೆ ಚರ್ಚೆ ಮಾಡಿದ್ದಾರೆ ಎಂಬ ಮಾಹಿತಿ ಇದೆ. ಒಂದು ವೇಳೆ ಸಿಬಿಐ ಅ„ಕೃತವಾಗಿ ಪತ್ರ ಬರೆದರೆ ಸರ್ಕಾರ ಪರಿಶೀಲನೆ ಮಾಡಲಿದೆ ಎಂದರು. ಲೋಕಸಭಾ ಚುನಾವಣೆಯಲ್ಲಿ ನನ್ನನ್ನೂ ಸೇರಿದಂತೆ 17 ಸಚಿವರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತಗಳಿಕೆಯಲ್ಲಿ ಹಿನ್ನಡೆಯಾಗಿದೆ. ಈ ನಿಟ್ಟಿನಲ್ಲಿ ಪರಿಶೀಲನೆ ಮತ್ತು ಆತ್ಮಾವಲೋಕನ ನಡೆಯಲಿದೆ. ಹೈಕಮಾಂಡ್ ನೀಡುವ ಯಾವುದೇ ಸಲಹೆಗಳನ್ನು ಒಪ್ಪಲು ನಾವು ತಯಾರಿದ್ದೇವೆ. ಎಐಸಿಸಿ ನಿರ್ದೇಶನವನ್ನು ಪಾಲಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
5
+ ಕಾಂಗ್ರೆಸ್‍ನಲ್ಲಿ ಯಾವುದೇ ಒಳಜಗಳು ಇಲ್ಲ. ಅಭಿಪ್ರಾಯ ಬೇಧಗಳು ಸಹಜ. ಸಂದರ್ಭಾನುಸಾರ ನಾವು ನಮ್ಮ ಅಭಿಪ್ರಾಯಗಳನ್ನು ಹೇಳುತ್ತೇವೆ. ಬೇರೆಯವರು ಹೇಳಿದ್ದನ್ನು ಒಪ್ಪಲೇಬೇಕು ಎಂದೇನಿಲ್ಲ. ಅಂದ ಮಾತ್ರಕ್ಕೆ ಅದು ಒಳಜಗಳ ಅಲ್ಲ ಎಂದು ಹೇಳಿದರು. ಸಚಿವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ಸಚಿವ ಸಂಪುಟ ಸಭೆ ಇದೆ. ಅಲ್ಲಿ ನಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತೇವೆ. ಪಕ್ಷದಲ್ಲಿ ಚರ್ಚೆ ನಡೆಸಲು ಉನ್ನತಾಧಿಕಾರ ಸಮಿತಿ, ಸಮನ್ವಯ ಸಮಿತಿ ಅಥವಾ ಪದಾಧಿಕಾರಿಗಳ ನಿಯೋಗ ಸೇರಿ ಯಾವುದಾದರೂ ಒಂದರ ಅಗತ್ಯವಿದೆ. ಈ ನಿಟ್ಟಿನಲ್ಲಿ ಪಕ್ಷದ ಅಧ್ಯಕ್ಷರು ಕ್ರಮ ಕೈಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದರು.
6
+ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ತಿಳಿಸಲು ಬಯಸುತ್ತೇನೆ. ಜನರ ದೃಷ್ಟಿಯಿಂದ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಮುಂದಿನ ದಿನಗಳಲ್ಲಿ ಅವರು ಗಂಭೀರ ಚಿಂತನೆ ನಡೆ���ಬೇಕಿದೆ. ಕಳೆದ ಹತ್ತು ವರ್ಷಗಳಲ್ಲಿ ಜನಪರವಾಗಿ ಯಾವುದೇ ಕಾನೂನು ಕಾಯ್ದೆಗಳು ರೂಪುಗೊಂಡಿಲ್ಲ. ಇನ್ನು ಮುಂದಾದರೂ ಈ ನಿಟ್ಟಿನಲ್ಲಿ ಆಲೋಚನೆಗಳನ್ನು ಮಾಡಲಿ ಎಂದು ಕರೆ ನೀಡಿದರು.
7
+ ರಾಜ್ಯಕ್ಕೆ ಹೆಚ್ಚಿನ ಸಚಿವ ಸ್ಥಾನ ಸಿಗಲಿ. ಈ ಹಿಂದಿನ ಸಚಿವರಿಂದ ರಾಜ್ಯಕ್ಕೆ ಯಾವುದೇ ಉಪಯೋಗವಾಗಿಲ್ಲ. ಮುಂದೆ ಅವಕಾಶ ಪಡೆಯುವವರಾದರೂ ರಾಜ್ಯದ ಪರವಾಗಿ ಕೇಂದ್ರದಲ್ಲಿ ಧ್ವನಿ ಎತ್ತಲಿ ಎಂದು ಪರಮೇಶ್ವರ್ ಆಶಿಸಿದರು.
eesanje/url_46_116_5.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಸರ್ಕಾರದಿಂದ ಪಂಚ ಗ್ಯಾರಂಟಿ ಯೋಜನೆ ಮರು ಪರಿಶೀಲನೆ..
2
+ ಬೆಂಗಳೂರು,ಜೂ.9- ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿರುವ ನಡುವೆಯೇ ರಾಜ್ಯಸರ್ಕಾರ ಅವುಗಳ ಸಾಧಕ ಬಾಧಕ ಪರಿಶೀಲನೆಗಾಗಿ ಹಿರಿಯರ ಹಾಗೂ ಅನುಭವಿಗಳ ಸಮಿತಿ ರಚನೆ ಮಾಡಿ ಅನರ್ಹ ಫಲಾನುಭವಿಗಳನ್ನು ಪರಿಷ್ಕರಣೆ ಮಾಡುವ ಚಿಂತನೆಯಲ್ಲಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಪ್ರಮುಖ ಸಚಿವರ ಸಭೆಯಲ್ಲಿ ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಔಪಚಾರಿಕ ವಿಮರ್ಶೆಯಾಗಿದ್ದು, ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿದಿಲ್ಲ ಎಂಬ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
3
+ 52 ಸಾವಿರ ಕೋಟಿ ರೂ.ಗಳಷ್ಟು ಹಣ ವೆಚ್ಚ ಮಾಡಿ ಜನರ ಆರ್ಥಿಕ ಸಬಲೀಕರಣಕ್ಕಾಗಿ ರೂಪಿಸಲಾದ ಯೋಜನೆಗಳು ರಾಜಕೀಯವಾಗಿ ಕಾಂಗ್ರೆಸ್‍ಗೆ ಲಾಭ ತಂದುಕೊಡಬಹುದು ಎಂಬ ಅಂದಾಜಿತ್ತು. ಆದರೆ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿಯ ಮೈತ್ರಿಯಿಂದಾಗಿ ಜಾತಿ ಸಮೀಕರಣವೇ ಮೇಲುಗೈ ಸಾಧಿಸಿದೆ. ಯೋಜನೆಯ ಲಾಭ ಪಡೆದ ಫಲಾನುಭವಿಗಳು ಕಾಂಗ್ರೆಸ್ ಜೊತೆ ನಿಲ್ಲಲಿದ್ದಾರೆ ಎಂಬ ಅಂದಾಜು ತಲೆಕೆಳಗಾಗಿದೆ.
4
+ ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡಿ ಅರ್ಹ ಫಲಾನುಭವಿಗಳಿಗೆ ಮಾತ್ರ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದು ಸೂಕ್ತ ಎಂಬ ಅಭಿಪ್ರಾಯ ಕೇಳಿಬಂದಿದೆ. ಲೋಕಸಭಾ ಚುನಾವಣೆಗೂ ಮೊದಲೇ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾಕಷ್ಟು ವಿಮರ್ಶೆಗಳಾಗಿದ್ದವು. ಮಹಿಳೆಯರಿಗೆ ಸಂಪೂರ್ಣ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಜಾರಿಗೊಳಿಸುವ ಬದಲಾಗಿ ಬಡವರಿಗೆ ಆರ್ಥಿಕವಾಗಿ ಅಗತ್ಯವಿರುವವರಿಗೆ ಸೌಲಭ್ಯ ನೀಡಬೇಕು.
5
+ ರಾಜ್ಯವ್ಯಾಪಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬದಲಾಗಿ ಸೀಮಿತ ಅಂತರವನ್ನು ನಿಗದಿ ಮಾಡಬೇಕು. ಸರ್ಕಾರಿ ನೌಕರರು, ತೆರಿಗೆ ಪಾವತಿದಾರರು ಸೇರಿದಂತೆ ಅಗತ್ಯ ಇಲ್ಲದೇ ಇರುವವರೆಗೆ ಶಕ್ತಿ ಯೋಜನೆಯಡಿ ಕಡಿವಾಣ ಹಾಕಿ ಸ್ಮಾರ್ಟ್ ಕಾರ್ಡ್ ವ್ಯವಸ್ಥೆಯನ್ನು ಜಾರಿಗೊಳಿಸುವ ಮೂಲಕ ಅರ್ಹ ಫಲಾನುಭವಿಗಳಿಗೆ ಮಾತ್ರ ದೊರಕುವಂತೆ ಮಾಡಬೇಕು ಎಂಬ ಪ್ರಸ್ತಾವನೆ ಚರ್ಚೆಯಲ್ಲಿತ್ತು. ಆದರೆ ಚುನಾವಣೆ ಕಾರಣಕ್ಕಾಗಿ ಅದನ್ನು ತಡೆಹಿಡಿದಿದ್ದರು.
6
+ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ಪೂರಕವಾಗಿ ಬಂದಿದ್ದರೆ ಗ್ಯಾರಂಟಿ ಯೋಜನೆಗಳು ಯಥಾರೀತಿ ಅಬಾಧಿತವಾಗಿ ಮುಂದುವರೆಯುವ ನಿರೀಕ್ಷೆಗಳಿದ್ದವು. ಕಾಂಗ್ರೆಸ್ ನಾಯಕರು 22 ಸ್ಥಾನಗಳನ್ನು ಅಂದಾಜಿಸಿದರೆ ಜನ ಗೆಲ್ಲಿಸಿದ್ದು ಕೇವಲ 9ರಲ್ಲಿ ಮಾತ್ರ. ಅವುಗಳಲ್ಲಿಯೂ ಚಾಮರಾಜನಗರ, ದಾವಣಗೆರೆ, ಚಿಕ್ಕೋಡಿ ಕ್ಷೇತ್ರಗಳಲ್ಲಿ ಆಯಾ ಜಿಲ್ಲೆಗಳ ಪ್ರಭಾವಿಗಳ ವರ್ಚಸ್ಸು ಕೆಲಸ ಮಾಡಿದ್ದರೆ, ಕಲ್ಯಾಣ ಕರ್ನಾಟಕ ಭಾಗದ 5 ಜಿಲ್ಲೆಗಳಲ್ಲಿ ಮಲ್ಲಿಕಾರ್ಜುನ ಖರ್ಗೆಯವರ ಭಾವನಾತ್ಮಕ ಹೇಳಿಕೆಗಳು ಹಾಗೂ 371 ಜೆ ಮತ ತಂದು ಕೊಟ್ಟಿದೆ.
7
+ ಹ��ಸನದಲ್ಲಿ ಪೆನ್‍ಡ್ರೈವ್ ಪ್ರಕರಣದಿಂದಾಗಿ ಮುಜುಗರಕ್ಕೊಳಗಾದ ಜೆಡಿಎಸ್ ಕಾರ್ಯಕರ್ತರು ಮತದಾನದ ಕೊನೆಯ ದಿನಗಳಲ್ಲಿ ಪ್ರಚಾರಕ್ಕೆ ಹೋಗದ ಕಾರಣ ಕಾಂಗ್ರೆಸ್ ಗೆಲುವು ಕಂಡಿದೆ ಎಂಬ ವಿಶ್ಲೇಷಣೆ ಇದೆ. ಉಳಿದಂತೆ ಗೆಲುವು ಸಾಧ್ಯವಾಗಬಹುದಾಗಿದ್ದ ಚಿತ್ರದುರ್ಗ, ಚಿಕ್ಕಬಳ್ಳಾಪುರ, ಮೈಸೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪಂಚಖಾತ್ರಿಗಳು ಕೈ ಹಿಡಿದಿಲ್ಲ. ಹೀಗಾಗಿ ಇವುಗಳನ್ನು ಪರಿಷ್ಕರಣೆ ಮಾಡುವುದು ಸೂಕ್ತ ಎಂಬ ಒತ್ತಡ ಸಚಿವರು ಹಾಗೂ ಶಾಸಕರಲ್ಲಿ ಕೇಳಿಬಂದಿದೆ.
8
+ ಏಕಾಏಕಿ ಯೋಜನೆಗಳ ಪರಿಷ್ಕರಣೆಗೆ ಮುಂದಾದರೆ ರಾಜಕೀಯವಾಗಿ ಪ್ರತಿರೋಧ ಅನುಭವಿಸಬೇಕಾಗಬಹುದು ಎಂಬ ಕಾರಣಕ್ಕೆ ಅನುಭವಿಗಳ ಹಾಗೂ ಹಿರಿಯರ ಸಮಿತಿಯನ್ನು ರಚಿಸಿ ಸಮಗ್ರ ಅಧ್ಯಯನದ ಮೂಲಕ ವರದಿ ಪಡೆದುಕೊಂಡು ನಂತರ ಯೋಜನೆಗಳನ್ನು ಅರ್ಹಫಲಾನುಭವಿಗಳಿಗೆ ತಲುಪಿಸುವಂತೆ ಮಾಡುವುದು ಸೂಕ್ತ ಎಂಬ ಚರ್ಚೆ ನಡೆದಿದೆ.
9
+ ಪಂಚಖಾತ್ರಿಗಳಿಗೆ ಹೆಚ್ಚು ಹಣ ಬಳಕೆ ಮಾಡುವುದರಿಂದ ಶಾಸಕರಿಗೆ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ. ಇದು ಸಹಜವಾಗಿ ಪಕ್ಷ ಸಂಘಟನೆಗೂ ತೊಂದರೆಯಾಗುತ್ತಿದೆ. ಹಾಗಾಗಿ ಪಂಚಖಾತ್ರಿಗಳ ಯೋಜನಾ ವೆಚ್ಚವನ್ನು ಕಡಿತ ಮಾಡಬೇಕು ಎಂಬ ಆಗ್ರಹ ಶಾಸಕರಿಂದ ಹೆಚ್ಚಾಗಿ ಕೇಳಿಬರುತ್ತಿದೆ. ಏಕಾಏಕಿ ಯೋಜನೆಗಳ ಪರಿಷ್ಕರಣೆಗೆ ಮುಂದಾದರೆ ಬಿಬಿಎಂಪಿ ಸೇರಿದಂತೆ ನಗರ ಮತ್ತು ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಹಿನ್ನಡೆಯಾಗಬಹುದು. ಇದರಿಂದ ಸ್ಥಳೀಯ ನಾಯಕತ್ವ ಹಾಗೂ ಪಕ್ಷ ಸಂಘಟನೆಯ ಮೇಲೆ ಅಡ್ಡಪರಿಣಾಮವಾಗಬಹುದು ಎಂಬ ಆತಂಕವೂ ಇದೆ.
10
+ ಬಹುತೇಕ ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸುವ ಸಾಧ್ಯತೆಗಳಿವೆ. ಇದೆಲ್ಲದರ ಹೊರತಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯಾದಿಯಾಗಿ ಎಲ್ಲರೂ ಪಂಚಖಾತ್ರಿಗಳು ನಿಲ್ಲುವುದಿಲ್ಲ ಎಂದು ಪದೇಪದೇ ಹೇಳುತ್ತಿದ್ದಾರೆ. ಮೂಲಗಳ ಪ್ರಕಾರ, ಯೋಜನೆಗಳು ನಿಲ್ಲುವುದಿಲ್ಲ. ಆದರೆ ಅರ್ಹ -Àಲಾನುಭವಿಗಳಿಗೆ ಎಂಬ ಷರತ್ತಿಗೆ ಒಳಪಟ್ಟು ವೆಚ್ಚ ಕಡಿವಾಣಕ್ಕೆ ಮಾರ್ಗಸೂಚಿ ರೂಪಿಸಲು ತಯಾರಿಗಳು ನಡೆದಿವೆ.
eesanje/url_46_116_6.txt ADDED
@@ -0,0 +1,7 @@
 
 
 
 
 
 
 
 
1
+ ಫೈನಲ್ಸ್ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತದ ಪೂಜಾ ತೋಮರ್
2
+ ಲೂಯಿಸ್ವಿಲ್ಲೆ, ಜೂ.9- ಅಲ್ಟಿಮೇಟ್ ಫೈಟಿಂಗ್ ಚಾಂಪಿಯನ್‍ಶಿಪ್ ()ನಲ್ಲಿ ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಫೈನಲ್ಸ್ ಗೆಲ್ಲುವ ಮೂಲಕ ಭಾರತದ ಯುವ ಮಹಿಳಾ ಬಾಕ್ಸರ್ ಪೂಜಾ ತೋಮರ್ ಇತಿಹಾಸ ಸೃಷ್ಟಿಸಿದ್ದಾರೆ. ಇಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬ್ರೆಜಿಲ್ ರಾಯನ್ನೆ ಡಾಸ್ ಸ್ಯಾಂಟೋಸ್‍ರ ಪ್ರಬಲ ಪೈಪೋಟಿ ಎದುರಿಸಿದ ಉತ್ತರಪ್ರದೇಶದ ಮುಜಾಫರ್ ನಗರದ ಪೂಜಾ ತೋಮರ್ ಗೆಲುವು ಸಾಧಿಸಿ ಇಡೀ ದೇಶವೇ ತನ್ನತ್ತ ತಿರುಗುವಂತೆ ಮಾಡಿದ್ದಾರೆ.
3
+ ಮೊದಲ ಸುತ್ತಿನಿಂದಲೇ ತಮ್ಮಲ್ಲಿರುವ ತಂತ್ರಗಳನ್ನು ಸಮರ್ಥವಾಗಿ ಬಳಸಿಕೊಂಡ ಪೂಜಾ ತೋಮರ್ ಎದುರಾಳಿ ತಂಡದ ಮಹಿಳಾ ಬಾಕ್ಸರ್‍ಗೆ ಬಲವಾದ ಪೆಟ್ಟು ನೀಡುವ ಮೂಲಕ 30-27 ಅಂಕಗಳ ಅಂತರದಿಂದ ಗೆಲುವಿನ ನಗೆ ಚೆಲ್ಲಿದ್ದಾರೆ. ಎರಡನೇ ಸುತ್ತನ್ನು ಗೆಲ್ಲುವ ಮೂಲಕ ಪದಕವನ್ನು ಕೊರಳಿಗೇರಿಸಿಕೊಳ್ಳುವ ಹಂಬಲ ಹೊಂದಿದ್ದ ಪೂಜಾಗೆ ಎರಡನೇ ಸುತ್ತಿನಲ್ಲಿ ರಾಯನ್ನೆ ಡಾಸ್ ಸ್ಯಾಂಟೋಸ್ ತಿರುಗೇಟು ನೀಡಿದರು.ಎರಡನೇ ಸುತ್ತಿನ ಆರಂಭದಲ್ಲಿ ಮೇಲುಗೈ ಸಾ„ಸಿದ್ದ ಪೂಜಾರ ಹೊಡೆತಗಳನ್ನು ನಂತರ ಸಮರ್ಥವಾಗಿ
4
+ ಡಿಫೆನ್ಸ್ ಮಾಡಿದ ಬ್ರೆಜಿಲ್ ಬಾಕ್ಸರ್ 27-30 ಅಂತರದ ಮುನ್ನೆಡೆ ಸಾಧಿಸಿದರು. ನಂತರ ಗೆಲುವಿಗಾಗಿ ನಿರ್ಣಾಯಕವಾಗಿದ್ದ ಸುತ್ತು ತೀರಾ ಜಿದಾ-ಜಿದ್ದಿನಿಂದ ಕೂಡಿತ್ತು. ಆದರೆ ತಮ್ಮಲ್ಲಿರುವ ಕೌಶಲ್ಯತೆಯನ್ನು ಸಮಯಕ್ಕೆ ಸರಿಯಾಗಿ ಬಳಸಿಕೊಂಡ ಪೂಜಾ 29-28 ಅಂಕಗಳ ಕೂದಲೆಳೆಯ ಅಂತರದಿಂದ ಜಯಮಾಲೆಯನ್ನು ತಮ್ಮ ಕೊರಳಿಗೇರಿಸಿಕೊಂಡರು.
5
+ ಭಾರತದ ಬಾಕ್ಸರ್‍ಗಳಿಗೆ ಗೆಲುವು ಅರ್ಪಣೆ: ಫೈನಲ್ಸ್ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತದ ಪೂಜಾ ತೋಮರ್ನಲ್ಸ್‍ನಲ್ಲಿ ಜಯಭೇರಿ ಬಾರಿಸಿ ಇತಿಹಾಸ ಸೃಷ್ಟಿಸಿದ ನಂತರ ಮಾತನಾಡಿದ ಪೂಜಾ ತೋಮರ್, ನನ್ನ ಈ ಗೆಲುವನ್ನು ಭಾರತದ ಬಾಕ್ಸರ್ಸ್ ಮತ್ತು ಎಂಎಂಎ ಅಭಿಮಾನಿಗಳಿಗೆ ಅರ್ಪಿಸಿದ್ದಾರೆ. ಭಾರತದಫೈಟರ್ಸ್ ಚಾಂಪಿಯನ್‍ಶಿಪ್‍ನಲ್ಲಿ ಗೆಲುವು ಸಾಧಿಸಲು ಅನರ್ಹರಲ್ಲ ಎಂದು ವಿಶ್ವದೆಲ್ಲೆಡೆ ಮಾತುಗಳು ಕೇಳಿಬಂದಿದ್ದವು. ಆದರೆ ಈ ಗೆಲುವು ಟೀಕಾಕಾರರಿಗೆ ತಕ್ಕ ಉತ್ತರ ನೀಡಿದಂತಾಗಿದೆ.
6
+ ಭಾರತದ ಹೋರಾಟಗಾರರು ಸೋಲುವವರಲ್ಲ ಎಂಬುದನ್ನು ಇಡೀ ವಿಶ್ವಕ್ಕೆ ತೋರಿಸುವುದು ನನ್ನ ಮುಖ್ಯ ಉದ್ದೇಶವಾಗಿತ್ತು. ನಾವು ಎಲ್ಲ ರಂಗಗಳಲ್ಲೂ ಉನ್ನತ ಸ್ಥಾನಕ್ಕೇರುತ್ತಿದ್ದೇವೆ. ಮತ್ತೆ ನಾವು ಹಿಂದಿರುಗಿ ನೋಡುವ ಪ್ರಶ್ನೆಯೇ ಇಲ್ಲ. ನಾವು ಬೇಗ ಚಾಂಪಿಯನ್ ಶಿಪ್ ಪಟ್ಟವನ್ನು ಗೆಲ್ಲುತ್ತೇವೆ ಎಂದು ಹೇಳಿದ್ದೆ. ಈಗ ಸಿಕ್ಕಿರುವ ಗೆಲುವು ಖಂಡಿತಾವಾಗಿಯೂ ನನ್ನ ಗೆಲುವಲ್ಲ. ಇದು ಎಲ್ಲಾ ಭಾರತದ ಹೋರಾಟಗಾರರು ಹಾಗೂ ಅಭಿಮಾನಿಗಳಿಗೆ ದೊರೆತ ಗೆಲುವಾಗಿದೆ' ಎಂದು ಪೂಜಾ ತೋಮರ್ ತಮ್ಮ ಸಂತಸ ಹಂಚಿಕೊಂಡಿದ್ದಾರೆ.ಫೈನಲ್ ಪಂದ್ಯಕ್ಕೂ ಮುನ್ನ ಸ್ಟೇಡಿಯಂನಲ್ಲಿ ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆಯೂ ಕಂಠಘೋಷವಾಗಿ ಮೊಳಗಿತ್ತು. ಇದು ನಿಜಕ್ಕೂ ನನಗೆ ಹೆಮ್ಮೆ ಮೂಡಿಸಿತು. ಅಲ್ಲದೆ ರೋಮಾಂಚನವಾಯಿತು. ಪಂದ್ಯದಲ್ಲಿ ನನಗೆ ಯಾವುದೇ ಒತ್ತಡವಿರಲಿಲ್ಲ, ಅಲ್ಲದೆ ಚಾಂಪಿಯನ್ ಪಟ್ಟವನ್ನು ಗೆಲ್ಲುತ್ತೇನೆ ಎಂಬ ಅಚಲ ವಿಶ್ವಾಸ ಹೊಂದಿದ್ದೆ. ಪಂದ್ಯದಲ್ಲಿ ನಾನು ಎದುರಾಳಿ ಸ್ಪರ್ಧಿಯಿಂದ ಒಂದೆರಡು ಬಲವಾದ ಪಂಚ್‍ಗಳನ್ನು ಪಡೆದಿದ್ದೆ. ಆದರೂ ಅದರಿಂದ ಚೇತರಿಸಿಕೊಂಡು ನನ್ನ ಆಟವನ್ನು ಉತ್ತಮಪಡಿಸಿಕೊಳ್ಳುತ್ತಾ ಸಾಗಿದ ನಾನು ಕೊನೆಗೂ ಟ್ರೋಫಿ ಗೆದ್ದು ಸಂಭ್ರಮಿಸಿದ್ದೇನೆ’ ಎಂದು ಪೂಜಾ ತೋಮರ್ ತಿಳಿಸಿದರು.
7
+ ಈ ಹಿಂದೆ ಚಾಂಪಿಯನ್‍ಶಿಪ್‍ನಲ್ಲಿ ಭಾರತದವರೇ ಆದ ಭಾರತ್ ಖಂಡ್ರೆ ಹಾಗೂ ಅನ್ಷುಲ್ ಜುಬ್ಲಿ ಅವರು ಕಾದಾಟ ನಡೆಸಿದ್ದರಾದರೂ ಚಾಂಪಿಯನ್ ಪಟ್ಟ ಗೆಲ್ಲಲು ಸಾಧ್ಯವಾಗಿರಲಿಲ್ಲ. ಆದರೆ ಬ್ರೆಜಿಲ್‍ನ ರಾಯನ್ನೆ ಡಾಸ್ ಸ್ಯಾಂಟೋಸ್ ಅವರನ್ನು ಮಣಿಸಿದ ಪೂಜಾ ತಾಮೋರ್ ಇತಿಹಾಸ ಸೃಷ್ಟಿಸಿದ್ದಾರೆ.
eesanje/url_46_116_7.txt ADDED
@@ -0,0 +1,4 @@
 
 
 
 
 
1
+ ಯಶಸ್ವಿನಿ ಕಾರ್ಡ್ ಫಲಾನುಭವಿಗಳಿಗೆ ಸಿಹಿ ಸುದ್ದಿ
2
+ ಬೆಂಗಳೂರು, ಜೂ.9- ಯಶಸ್ವಿನಿ ಯೋಜನೆಯಡಿ ಬರುವ 200 ಕ್ಕೂ ಹೆಚ್ಚು ಚಿಕಿತ್ಸಾ ದರಗಳನ್ನು ರಾಜ್ಯಸರ್ಕಾರ ಪರಿಷ್ಕರಣೆ ಮಾಡಿದೆ. ಇದರ ಜೊತೆಗೆ ಆಸ್ಪತ್ರೆಗಳು ಸಹ ಹೆಚ್ಚಾಗಿದ್ದು, ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಇದರಿಂದ ಭರ್ಜರಿ ಲಾಭವಾಗಲಿದೆ. 2003 ರಲ್ಲಿ ಆರಂಭವಾಗಿದ್ದ ಈ ಯೋಜನೆಯು ಕಾರಣಾಂತರಗಳಿಂದ 2018 ರಲ್ಲಿ ಸ್ಥಗಿತವಾಗಿತ್ತು. 2023ರ ಜನವರಿಯಲ್ಲಿ ಸಹಕಾರ ಸಂಘದ ಅಡಿ ಮರು ಜಾರಿಗೊಳಿಸಿತ್ತು. 2023-24 ನೇ ಸಾಲಿಗೆ ಈಗಾಗಲೇ ಸದಸ್ಯರ ನೋಂದಣಿಗೆ ಮಾ.31 ರವರೆಗೆ ವಿಸ್ತರಣೆಯಾಗಿತ್ತು. ಇದರ ಬೆನ್ನಲ್ಲೇ 200ಕ್ಕೂ ಹೆಚ್ಚು ಚಿಕಿತ್ಸಾ ದರಗಳನ್ನು ಪರಿಷ್ಕರಣೆ ಮಾಡಲಾಗಿದೆ.
3
+ ಯಶಸ್ವಿನಿ ಕಾರ್ಡ್ ಹೊಂದಿರುವ ಫಲಾನುಭವಿಗಳು ಗರಿಷ್ಠ 5 ಲಕ್ಷದವರೆಗೆ ನಗದುರಹಿತ ಚಿಕಿತ್ಸೆ ಪಡೆಯಬಹುದು. ಈ ಯೋಜನೆಯಡಿ ವ್ಯಕ್ತಿಯು ನೋಂದಣಿ ಮಾಡಿಕೊಂಡಿರುವ ನೆಟ್‍ವರ್ಕ್ ಆಸ್ಪತ್ರೆಗಳಿಗೆ ನೇರವಾಗಿ ತೆರಳಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ.
4
+ ಇದರಿಂದ ಯೋಜನೆಯ ಫಲಾನುಭವಿಗಳಿಗೆ ಸುಲಭವಾಗಿ ಚಿಕಿತ್ಸೆ ದೊರೆಯಲಿದೆ. ಯಶಸ್ವಿನಿ ಯೋಜನೆಯಡಿ ಬರುವ 200ಕ್ಕೂ ಹೆಚ್ಚು ಚಿಕಿತ್ಸಾ ದರಗಳ ಪರಿಷ್ಕರಣೆ ಮಾಡಲಾಗಿದೆ. ಈ ಯೋಜನೆಯಡಿ 370ರಷ್ಟಿದ್ದ ಖಾಸಗಿ ಆಸ್ಪತ್ರೆಗಳ ಸಂಖ್ಯೆ ಈಗ 600 ರ ಗಡಿ ದಾಟಿದೆ.
eesanje/url_46_116_8.txt ADDED
@@ -0,0 +1,4 @@
 
 
 
 
 
1
+ ಮೋದಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಎಚ್‍ಡಿಡಿ ಗೈರು
2
+ ಬೆಂಗಳೂರು, ಜೂ.9-ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಭಾಗಿಯಾಗುತ್ತಿಲ್ಲ. ಪ್ರಸಕ್ತ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ಜೂನ್ 7ರಂದು ಬೆಳಿಗ್ಗೆ ದೆಹಲಿ ಪ್ರವಾಸ ನಿಗದಿ ಮಾಡಿದ್ದ ಗೌಡರು, ಕಾರಣಾಂತರಗಳಿಂದ ಮುಂದೂಡಿದ್ದರು.
3
+ ಎನ್‍ಡಿಎ ಒಕ್ಕೂಟದ ಸಭೆಯಲ್ಲಿ ಜೆಡಿಎಸ್‍ಅನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರತಿನಿಧಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಎನ್‍ಡಿಎ ಸರ್ಕಾರ ರಚನೆಗೆ ಬೆಂಬಲ ಸೂಚಿಸಿದ್ದರು.ಇಂದು ರಾತ್ರಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಹಾಗೂ ಅವರ ಸಂಪುಟದ ಸಚಿವರ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಸ್ವೀಕರ ಮಾಡಲಿದ್ದಾರೆ.
4
+ ಮೋದಿ ಅವರ ಸಂಪುಟದಲ್ಲಿ ಕುಮಾರಸ್ವಾಮಿ ಅವರು ಸೇರ್ಪಡೆಗೊಳ್ಳುವುದು ಖಚಿತವಾಗಿದೆ. ಆದರೂ ಗೌಡರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿಲ್ಲ. ಪ್ರಧಾನಿ ಹಾಗೂ ಅವರ ಸಂಪುಟದ ಸಚಿವರಿಗೆ ಶುಭ ಕೋರಿದ್ದಾರೆ.
eesanje/url_46_116_9.txt ADDED
@@ -0,0 +1,7 @@
 
 
 
 
 
 
 
 
1
+ ಹೆಚ್‌ಡಿಕೆಗೆ ಮೊದಲ ಬಾರಿ ಕೇಂದ್ರ ಸಚಿವ ಸ್ಥಾನ
2
+ ಬೆಂಗಳೂರು, ಜೂ.9- ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗುವುದು ಬಹುತೇಕ ಖಚಿತವಾಗಿದ್ದು, ಜೆಡಿಎಸ್‍ನಲ್ಲಿ ಸಂಭ್ರಮಾಚರಣೆ ನಡೆಸಲು ಸಿದ್ಧತೆ ನಡೆಸಲಾಗಿದೆ. ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂಬ ವಿಶ್ವಾಸದಿಂದ ಜೆಡಿಎಸ್‍ನಲ್ಲಿ ಸಂಭ್ರಮ ಮನೆ ಮಾಡಿದೆ.
3
+ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭಾರೀ ಅಂತರದಿಂದ ಗೆದ್ದಿರುವ ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಲೋಕಸಭೆ ಪ್ರವೇಶ ಮಾಡಿದ್ದಾರೆ. ಮೊದಲ ಬಾರಿಗೆ ಕೇಂದ್ರ ಸಚಿವರಾಗುತ್ತಿದ್ದಾರೆ. ಕುಮಾರಸ್ವಾಮಿ ಕೇಂದ್ರ ಸಚಿವರಾಗುವುದನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ನೂತನ ಸಂಸದ ಡಾ.ಸಿ.ಎನ್.ಮಂಜುನಾಥ್ ಖಚಿತ ಪಡಿಸಿದ್ದಾರೆ.
4
+ ಕುಮಾರಸ್ವಾಮಿ ಮಂತ್ರಿಯಾಗುತ್ತಿರುವುದು ಅವರ ಕುಟುಂಬಕ್ಕಷ್ಟೇ ಅಲ್ಲ, ಜೆಡಿಎಸ್ ಪಕ್ಷದ ನಾಯಕರು, ಕಾರ್ಯಕರ್ತರಿಗೆ ಖುಷಿ ತಂದಿದೆ. ಜತೆಗೆ ಆತ್ಮವಿಶ್ವಾಸ ತುಂಬಿ ಉತ್ಸಾಹದಿಂದ ಕಾರ್ಯ ನಿರ್ವಹಿಸುವಂತೆ ಮಾಡಿದೆ. ಹೀಗಾಗಿ ಇಂದು ರಾತ್ರಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸಂಪುಟದ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಮಾರಂಭವನ್ನು ಜೆಡಿಎಸ್ ಕಚೇರಿಯಲ್ಲಿ ದೊಡ್ಡ ಎಲ್‍ಇಡಿ ಪರದೆ ಅಳವಡಿಸಿಕೊಂಡು ವೀಕ್ಷಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರದ ಬಳಿಕ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಲಿದ್ದಾರೆ.
5
+ ಎನ್‍ಡಿಎ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದ ಹೆಚ್.?ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲೇ ಬೀಡು ಬಿಟ್ಟಿದ್ದು, ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಖಾತ್ರಿ ಇರುವುದರಿಂದಲೇ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ , ಸೊಸೆ ರೇವತಿ ಸೇರಿದಂತೆ ಕುಟುಂಬ ಸದಸ್ಯರು ನಿನ್ನೆಯೇ ದೆಹಲಿಗೆ ತೆರಳಿದ್ದಾರೆ.
6
+ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಶಾಸಕ ಜಿ.ಟಿ.ದೇವೇಗೌಡರು, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್, ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ.ರಮೇಶ್‍ಗೌಡ ಸೇರಿದಂತೆ ಪಕ್ಷದ ಹಲವು ನಾಯಕರು ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಕೇಂದ್ರದ ಮಂತ್ರಿ ಆಗುತ್ತಿರುವುದು ಬಹಳ ಸಂತೋಷವಾಗಿದೆ. ಕರ್ನಾಟಕ ಜನತೆ ತುಂಬಾ ಖುಷಿ ಪಡುತ್ತಾರೆ ಎಂದು ಹೇಳಿದ್ದಾರೆ.
7
+ ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಕನಕಪುರ ಲೋಕಸಭಾ ಕ್ಷೇತ್ರದಿಂದ ಸಂಸದರಾಗುವ ಮೂಲಕ ರಾಜಕೀಯ ಪ್ರವೇಶ ಮಾಡಿದ್ದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿ ಲೋಕಸಭೆ ಪ್ರವೇಶ ಮಾಡಿದ್ದರು. ಈಗ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭಾರೀ ಅಂತರದಿಂದ ಜಯಗಳಿಸಿ ಸಂಸತ್ ಪ್ರವೇಶ ಮಾಡಿದ್ದಾರೆ.
eesanje/url_46_117_1.txt ADDED
@@ -0,0 +1,9 @@
 
 
 
 
 
 
 
 
 
 
1
+ ಎಸ್‌‍ಐಟಿ ತನಿಖೆಯಿಂದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮಗಳ ಸತ್ಯಾಸತ್ಯತೆ ಹೊರಬರಲಿದೆ : ಪರಮೇಶ್ವರ್‌
2
+ ಬೆಂಗಳೂರು, ಜೂ.8-ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರೋಪಿಗಳು ಉಲ್ಲೇಖಿಸಿರುವ ಹೆಸರುಗಳನ್ನು ಎಸ್‌‍ಐಟಿ ಅಧಿಕಾರಿಗಳು ಪರಿಶೀಲಿಸಿ ಸತ್ಯಾಸತ್ಯತೆಯ ತನಿಖೆ ನಡೆಸಲಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿತ ಆರೋಪಿಗಳು ಹೇಳಿಕೆ ನೀಡುವಾಗ ಅನೇಕರ ಹೆಸರುಗಳನ್ನು, ಸನ್ನಿವೇಶಗಳನ್ನು ಉಲ್ಲೇಖಿಸಿದ್ದಾರೆ. ತನಿಖಾಧಿಕಾರಿಗಳು ಅದನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದರು.ತನಿಖೆಯ ಹಂತದಲ್ಲಿ ನಾವು ಯಾವುದೇ ರೀತಿಯ ಹೇಳಿಕೆಗಳನ್ನು ನೀಡಿ, ಶಿಫಾರಸ್ಸು ಮಾಡಲು ಅಥವಾ ಮಧ್ಯಪ್ರವೇಶಿಸಲು ಬಯಸುವುದಿಲ್ಲ. ನಾವು ಯಾವುದೇ ರೀತಿಯ ವ್ಯಾಖ್ಯಾನ ಮಾಡುವುದಿಲ್ಲ ಎಂದು ಹೇಳಿದರು.
4
+ ಆರೋಪಿಗಳಷ್ಟೇ ಅಲ್ಲ, ಸಾರ್ವಜನಿಕರು ನಾನಾ ರೀತಿಯ ಅಭಿಪ್ರಾಯಗಳನ್ನ ಹೇಳುತ್ತಿರುತ್ತಾರೆ. ಹಗರಣದ ಆರೋಪಿ ಹೇಳಿದಂತೆ ಸಚಿವರ ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿಕೊಂಡು ಪರಿಶೀಲಿಸುವ ನಿಟ್ಟಿನಲ್ಲಿಯೂ ಎಸ್‌‍ಐಟಿ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ ಎಂದರು.
5
+ ಲೋಕಸಭಾ ಚುನಾವಣೆ ಪ್ರಕ್ರಿಯೆ ನಡೆಯುತ್ತಿದ್ದರಿಂದಾಗಿ ಪಿಎಸ್‌‍ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗಳು ವಿಳಂಬವಾಗಿದ್ದವು. ಈಗ ನೀತಿಸಂಹಿತೆ ಪೂರ್ಣಗೊಂಡಿದೆ. ಇನ್ನು ಮುಂದೆ ನೇಮಕಾತಿ ಚುರುಕುಗೊಳ್ಳಲಿದೆ ಎಂದು ಹೇಳಿದರು.
6
+ ಪ್ರಧಾನಿಗೆ ಅಭಿನಂದನೆ :ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರೇ ಹೇಳಿಕೊಂಡಂತೆ ಜವಹರಲಾಲ್‌ನಂತೆ ನರೇಂದ್ರ ಮೋದಿಯವರು ಮೂರನೇ ಬಾರಿ ನಿರಂತರವಾಗಿ ಪ್ರಧಾನಿಯಾಗಲಿದ್ದಾರೆ. ಅವರಿಗೆ ಶುಭವಾಗಲಿ ಎಂದರು.
7
+ ಲೋಕಸಭಾ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಚರ್ಚೆಯಾಗಬೇಕು ಮತ್ತು ಸೋಲಿನ ವಿಶ್ಲೇಷಣೆ ನಡೆಯಬೇಕು ಎಂಬುದು ಹೈಕಮಾಂಡ್‌ನ ಆಸಕ್ತಿಯಾಗಿದೆ. ನನ್ನನ್ನೂ ಒಳಗೊಂಡಂತೆ ಹಿನ್ನಡೆಯಾಗಿರುವ ಜಿಲ್ಲೆಗಳ ಸಚಿವರ ಜೊತೆ ಚರ್ಚೆ ನಡೆಯಲಿದೆ. ಸೋಲಿಗೆ ಕಾರಣಗಳನ್ನು ಹುಡುಕುವ ಪ್ರಯತ್ನ ಮಾಡಲಾಗುವುದು. ಹೈಕಮಾಂಡ್‌ ನೀಡುವ ಸಲಹೆ ಸೂಚನೆಗಳನ್ನು ನಾವು ಪಾಲನೆ ಮಾಡುತ್ತೇವೆ ಎಂದು ಹೇಳಿದರು.
8
+ ಲೋಕಸಭೆಯಲ್ಲಿ ರಾಹುಲ್‌ಗಾಂಧಿ ವಿರೋಧಪಕ್ಷದ ನಾಯಕರಾಗಬೇಕು ಎಂಬುದು ನಮೆಲ್ಲರ ಆಸೆ. ಅದನ್ನು ಕಾಂಗ್ರೆಸ್‌‍ ಪಕ್ಷ ಮತ್ತು ಇಂಡಿಯಾ ಮೈತ್ರಿಕೂಟ ತೀರ್ಮಾನ ಮಾಡಲಿದೆ. ರಾಹುಲ್‌ಗಾಂಧಿ ದೇಶಾದ್ಯಂತ ಪಾದಯಾತ್ರೆ ಮಾಡಿ ಜನರ ಸಮಸ್ಯೆಗಳನ್ನು ಅರ್ಥೈಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಜ್ವಲಂತ ಸಮಸ್ಯೆಗಳನ್ನು ಸಂಸತ್‌ನಲ್ಲಿ ಪ್ರಸ್ತಾಪಿಸಲು ರಾಹುಲ್‌ಗಾಂಧಿ ಸಮರ್ಥರಿದ್ದಾರೆ. ಅವರ ಆಯ್ಕೆಯಾದರೆ ಕಾಂಗ್ರೆಸ್‌‍ ಪಕ್ಷಕ್ಕೂ ಒಳ್ಳೆಯದಾಗಲಿದೆ ಎಂದರು.
9
+ ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅಜೆಂಡಾ ಏನಿದೆಯೋ ಗೊತ್ತಿಲ್ಲ, ಈವರೆಗೂ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ರಾಜ್ಯಸರ್ಕಾರದ ಇಲಾಖೆಗಳನ್ನು ಸಿಬಿಐ ತನಿಖೆಗೆ ಒಳಪಡಿಸುವ ವಿಷಯದ ಚರ್ಚೆ ಕುರಿತು ಯಾವುದೇ ಅಜೆಂಡಾ ನಿಗದಿಯಾಗಿಲ್ಲ ಎಂದು ಹೇಳಿದರು.
eesanje/url_46_117_10.txt ADDED
@@ -0,0 +1,6 @@
 
 
 
 
 
 
 
1
+ ಲೋಕಸಭೆ ಚುನಾವಣೆಯಲ್ಲಿ ಮೋದಿಗೆ ನೈತಿಕ, ರಾಜಕೀಯ ಮತ್ತು ವೈಯಕ್ತಿಕ ಸೋಲು : ಕಾಂಗ್ರೆಸ್‌‍
2
+ ನವದೆಹಲಿ, ಜೂ.8-ಲೋಕಸಭೆ ಚುನಾವಣೆಯ ಜನಾದೇಶವು ಪ್ರಧಾನಿ ನರೇಂದ್ರ ಮೋದಿಯವರಿಗೆ ನೈತಿಕ, ರಾಜಕೀಯ ಮತ್ತು ವೈಯಕ್ತಿಕ ಸೋಲು ಎಂದು ಕಾಂಗ್ರೆಸ್‌‍ ವಾಗ್ದಾಳಿ ನಡೆಸಿದೆ.
3
+ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆದ್ದುಕೊಂಡಿದೆ, 543 ಸದಸ್ಯ ಬಲದ ಸದನದಲ್ಲಿ ಅರ್ಧದಷ್ಟು ಕಡಿಮೆಯಾಗಿದೆ. ಆದರೆ ರಾಷ್ಟ್ರೀಯ ಪ್ರಜಾಸತ್ತಾತಕ ಒಕ್ಕೂಟ (ಎನ್‌ಡಿಎ) ಒಟ್ಟಾಗಿ 293 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್‌‍ 99 ಸ್ಥಾನಗಳನ್ನು ಗೆದ್ದಿದೆ. ಮೋದಿಯವರಿಗೆ ನೈತಿಕ, ರಾಜಕೀಯ ಮತ್ತು ವೈಯಕ್ತಿಕ ಸೋಲು ನೀಡಿದ ಜನಾದೇಶದಲ್ಲಿ ಬೆಳ್ಳಿಗೆರೆಗಳನ್ನು ಹುಡುಕುವ ಡೊಳ್ಳು ಕುಣಿತ ಆರಂಭವಾಗಿದೆ ಎಂದು ಕಾಂಗ್ರೆಸ್‌‍ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಹೇಳಿದ್ದಾರೆ.
4
+ ಜವಾಹರಲಾಲ್‌ ನೆಹರು ನಂತರ ಸತತವಾಗಿ ಮೂರು ಬಾರಿ ಜನಾದೇಶ ಪಡೆದವರು ನರೇಂದ್ರ ಮೋದಿಯವರು ಎಂದು ಪ್ರಚಾರ ಮಾಡಲಾಗುತ್ತಿದೆ. ಪಕ್ಷವನ್ನು 240 ಸ್ಥಾನಗಳಿಗೆ ಮುನ್ನಡೆಸುವುದು ಮತ್ತು ಮೂರನೇ ಒಂದು ಭಾಗ ಪ್ರಧಾನ ಮಂತ್ರಿ ಜನಾದೇಶ ಹೇಗೆ ಎಂಬುದನ್ನು ವಿವರಿಸಲಾಗಿಲ್ಲ ಎಂದು ಕಾಂಗ್ರೆಸ್‌‍ ಮುಖಂಡರು ಹೇಳಿದ್ದಾರೆ.
5
+ ಇನ್ನೊಂದೆಡೆ ನೆಹರೂ ಅವರು 1952ರಲ್ಲಿ 364 ಸ್ಥಾನಗಳನ್ನು ಪಡೆದಿದ್ದರು, 957ರಲ್ಲಿ 371 ಸ್ಥಾನಗಳನ್ನು ಮತ್ತು 1962ರಲ್ಲಿ 361 ಸ್ಥಾನಗಳನ್ನು ಪಡೆದಿದ್ದರು. ಪ್ರತಿ ಬಾರಿ 2/3ನೇ ಬಹುಮತ. ಆದರೂ ಅವರು ಸಂಪೂರ್ಣ ಪ್ರಜಾಪ್ರಭುತ್ವವಾದಿಯಾಗಿ ಉಳಿದಿದ್ದರು. ತಮ ನಿರಂತರ ಉಪಸ್ಥಿತಿಯಿಂದ ಸಂಸತ್ತನ್ನು ಬಹಳ ಎಚ್ಚರಿಕೆಯಿಂದ ಪೋಷಿಸಿದರು ಎಂದಿದ್ದಾರೆ.
6
+ ನೆಹರೂ ನಂತರ ಸತತವಾಗಿ ಮೂರು ಬಾರಿ ಪ್ರಮಾಣ ವಚನ ಸ್ವೀಕರಿಸಿದ ಏಕೈಕ ವ್ಯಕ್ತಿ ಮೋದಿ ಅಲ್ಲ ಎಂದ ಅವರು, ಅಟಲ್‌ ಬಿಹಾರಿ ವಾಜಪೇಯಿ ಅವರು 1996, 1998 ಮತ್ತು 1999ರಲ್ಲಿ ಮೂರು ಬಾರಿ ಪ್ರಮಾಣ ವಚನ ಸ್ವೀಕರಿಸಿದರು. ಇಂದಿರಾ ಗಾಂಧಿಯವರು 1966, 1967, 1971 ಮತ್ತು 1980 ರಲ್ಲಿ 4 ಬಾರಿ ಪ್ರಮಾಣ ವಚನ ಸ್ವೀಕರಿಸಿದ್ದರು ಎಂದು ಹೇಳಿದ್ದಾರೆ. 2024ರಲ್ಲಿ ನರೇಂದ್ರ ಮೋದಿಯವರ ಕರುಣಾಜನಕ ಚುನಾವಣಾ ಸಾಧನೆಯನ್ನು ಸಮರ್ಥಿಸಲು ಡ್ರಮ್‌ಬೀಟರ್‌ಗಳು ಏನನ್ನೂ ಹುಡುಕುತ್ತಾರೆ ಎಂದು ರಮೇಶ್‌ ಪ್ರಶ್ನಿಸಿದರು.
eesanje/url_46_117_11.txt ADDED
@@ -0,0 +1,3 @@
 
 
 
 
1
+ ಮೈಸೂರು ವಿಮಾನ ನಿಲ್ದಾಣ ಮೇಲ್ದರ್ಜೆಗೆ
2
+ ಮೈಸೂರು, ಜೂ.8-ಮೈಸೂರು ಮತ್ತು ಕೊಡಗು ಕ್ಷೇತ್ರದ ನೂತನ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಬೆಂಗಳೂರಿನಿಂದ ನವದೆಹಲಿಗೆ ಪ್ರಯಾಣಿಸುವ ಮುನ್ನ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
3
+ ಮೈಸೂರಿನ ವಿಮಾನ ನಿಲ್ದಾಣ ಹಾಗೂ ವಿಮಾನಯಾನವನ್ನು ಮೇಲ್ದರ್ಜೆಗೆ ಏರಿಸುವ ಸಂಬಂಧ ಅಗತ್ಯವಿರುವ ಕಾರ್ಯಗಳನ್ನು ಕೈಗೊಳ್ಳಲು ಅಧಿಕಾರಿಗಳೊಂದಿಗೆ ಯದುವೀರ್‌ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು. ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಶೀಘ್ರ ಕಾರ್ಯರೂಪಕ್ಕೆ ತರುವ ಬಗ್ಗೆ ಯದುವೀರ್‌ ಭರವಸೆ ನೀಡಿದರು.
eesanje/url_46_117_12.txt ADDED
@@ -0,0 +1,4 @@
 
 
 
 
 
1
+ ನದಿ ಪಕ್ಕದಲ್ಲೇ ಇದ್ದರೂ ಕುಡಿಯಲು ನೀರಿಲ್ಲ
2
+ ಮೈಸೂರು,ಜೂ. 8– ಕಪಿಲಾ ನದಿ ದಂಡೆ ಕೂಗಳತೆ ದೂರದಲ್ಲಿದ್ದರೂ ಸಹ ಸ್ಥಳೀಯರಿಗೆ ನೀರಿನ ಸಮಸ್ಯೆ ತಪ್ಪಿಲ್ಲ. ಬಿಂದಿಗೆ ಹಿಡಿದು ನೀರಿಗಾಗಿ ಅಲೆದಾಡುವಂತಾಗಿದೆ.ಪ್ರತಿದಿನ ಬಿಂದಿಗೆ ಹಿಡಿದು ನೀರಿಗಾಗಿ ಅಲೆದಾಡುವ ಗೋಳೂರು ಗ್ರಾಮಸ್ಥರ ಪರಿಪಾಟಲಿಗೆ ಸ್ಪಂದಿಸುವವರೇ ಇಲ್ಲದಂತಾಗಿದೆ.
3
+ ಸುಮಾರು ಮೂರು ಸಾವಿರ ಕುಟುಂಬಗಳಿರುವ ಈ ಗ್ರಾಮ ನಿರ್ಲಕ್ಷಕ್ಕೆ ಒಳಗಾಗಿ ನೀರಿನ ಅಭಾವ ಇಲ್ಲಿನ ಜನಗಳಿಗೆ ನಿರಂತರವಾಗಿ ಕಾಡುತ್ತಿದೆ.ನೀರಿಗಾಗಿ ಪರದಾಡುತ್ತಿರುವ ಗ್ರಾಮಸ್ಥರ ಸಂಯಮ ಮೀರಿದೆ. ತಾಲೂಕು ಆಡಳಿತ ಹಾಗೂ ಜನಪ್ರತಿನಿಧಿ ಗಳ ವಿರುದ್ಧ ಆಕೋಶ ವ್ಯಕ್ತಪಡಿಸಿದ್ದಾರೆ.
4
+ ನೀರಿನ ಸಮಸ್ಯೆ ಬಗೆಹರಿಸುವಂತೆ ಖಾಲಿ ಬಿಂದಿಗೆಗಳನ್ನು ಪ್ರದರ್ಶಿಸಿ ಮಹಿಳೆಯರು ಆಕೋಶ ವ್ಯಕ್ತಪಡಿಸಿದ್ದಾರೆ. ಮನೆಗೆ ಅಳವಡಿಸಲಾದ ಕೊಳಾಯಿಗಳು ಬರಿದಾಗಿವೆ. ನೀರಿನ ಸಮಸ್ಯೆ ಬಗೆಹರಿಯದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ಕೊಟ್ಟಿದ್ದಾರೆ.
eesanje/url_46_117_2.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್‌‍ಗೆ ಹಿನ್ನಡೆ : ತಮ್ಮದೇ ಶಾಸಕರ ಮೇಲೆ ಸತೀಶ್‌ ಜಾರಕಿಹೊಳಿ ಅಸಮಾಧಾನ
2
+ ಬೆಂಗಳೂರು, ಜೂ.8-ಬೆಳಗಾವಿ ಜಿಲ್ಲೆಯ ರಾಜಕಾರಣದಲ್ಲಿ ಸಾಕಷ್ಟು ವ್ಯತ್ಯಾಸಗಳಿದ್ದು, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ 2 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌‍ಗೆ ಹಿನ್ನಡೆಯಾಗಿದೆ ಎಂಬ ಅಸಮಾಧಾನ ಇದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ಗೆ 70 ಸಾವಿರ ಲೀಡ್‌ ಇತ್ತು. ಈಗ 8 ಸಾವಿರ ಕಡಿಮೆಯಾಗಿದೆ. ಶಶಿಕಲಾ ಜೊಲ್ಲೆ ಕ್ಷೇತ್ರದಲ್ಲಿ 30 ಸಾವಿರ ಲೀಡ್‌ ಸೇರಿದಂತೆ ದುರ್ಬಲ ಕ್ಷೇತ್ರದಲ್ಲೂ ಕಾಂಗ್ರೆಸ್‌‍ ಉತ್ತಮವಾಗಿ ಮತ ಗಳಿಸಿದೆ. ಆದರೆ ಅಥಣಿಯಲ್ಲಿ ಮತ್ತು ಕುಡಚಿಯಲ್ಲಿ ಹಿನ್ನಡೆಯಾಗಿದೆ ಎಂದರು.
4
+ ಕುಡಚಿ ಕ್ಷೇತ್ರದ ಶಾಸಕ ಮಹೇಂದ್ರ ಕೆ.ತಮಣ್ಣನವರ್‌ ಮತದಾನಕ್ಕೆ ಎರಡು ದಿನ ಮೊದಲೇ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡು ಎಲ್ಲೋ ಹೋಗಿ ಮಲಗಿದ್ದರು. ನಾನು ಮೂರು ದಿನ ಅದೇ ಕ್ಷೇತ್ರದಲ್ಲಿ ಉಳಿದು ಕೆಲಸ ಮಾಡಬೇಕಾಯಿತು. ಮತದಾನದ ದಿನ ಮತಗಟ್ಟೆಗಳಿಗೆ ಭೇಟಿ ನೀಡುವುದು ಶಾಸಕರ ಕರ್ತವ್ಯ. ಅಂದೂ ಕೂಡ ಮಹೇಂದ್ರ ಅವರು ಪತ್ತೆ ಇರಲಿಲ್ಲ ಎಂದು ಹೇಳಿದರು.
5
+ ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌‍ಗೆ ಹಿನ್ನಡೆಯಾಗಲು ಶಾಸಕರುಗಳೇ ಕಾರಣ. ಅವರ ಕಾರ್ಯಕರ್ತರು ಹಾಗೂ ಅನ್ಯಾಯಿಗಳು ಯಾರ ಪರವಾಗಿ ಕೆಲಸ ಮಾಡಿದ್ದಾರೆ ಎಂದು ಗೊತ್ತಿದೆ. ಇದರ ಹಿಂದೆ ರಾಜ್ಯ ನಾಯಕರಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ಹಿನ್ನಡೆಗೆ ಕಾರಣವನ್ನು ಶಾಸಕರು ಹೇಳಿದಾಗ ಮಾತ್ರ ವಿಷಯ ಗೊತ್ತಾಗಲಿದೆ ಎಂದರು.
6
+ ಲಕ್ಷ್ಮಣ್‌ ಸವದಿ ಲೋಕಸಭಾ ಚುನಾವಣೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ರಾಜಕೀಯವಾಗಿ ನಮ್ಮ ಜೊತೆ ಮತ್ತಷ್ಟು ಗಟ್ಟಿಗೊಳ್ಳುವ ಅವಕಾಶವಿತ್ತು. ಆದರೆ ಈಗ ಯತಾಸ್ಥಿತಿ ಮುಂದುವರೆದಿದೆ ಎಂದು ಅಸಹನೆ ವ್ಯಕ್ತಪಡಿಸಿದರು.
7
+ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸುವ ಕ್ಷೇತ್ರಗಳಲ್ಲಿ ವಿಶ್ಲೇಷಣೆ ನಡೆಯುವುದು ಸಹಜ. ಆದರೆ ಸಚಿವರ ತಲೆದಂಡ ಆಗುವುದಿಲ್ಲ. ಸೋಲು-ಗೆಲುವಿಗೆ ಸಚಿವರನ್ನು ಹೊಣೆ ಮಾಡುವುದಾಗಿಯೂ ಯಾರೂ ಸೂಚನೆ ನೀಡಿರಲಿಲ್ಲ. ಅಂತಹ ಚರ್ಚೆಗಳೂ ನಡೆದಿರಲಿಲ್ಲ. ಮತದಾರರು ರಾಷ್ಟ್ರ ರಾಜಕಾರಣಕ್ಕೆ ಮತ್ತು ರಾಜ್ಯ ರಾಜಕಾರಣಕ್ಕೆ ಬೇರೆಯದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ ಎಂದು ಹೇಳಿದರು.
8
+ ಸಚಿವರ ಪ್ರಗತಿ ಕುರಿತು ವರದಿ ನೀಡಬೇಕು ಎಂದು ರಾಹುಲ್‌ಗಾಂಧಿ ಹೇಳಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸತೀಶ್‌ ಜಾರಕಿಹೊಳಿ, ನಾವೇನು ಸರ್ಕಾರಿ ನೌಕರರಲ್ಲ. ಪ್ರಗತಿಪತ್ರ ಅಗತ್ಯವಿಲ್ಲ ಎಂದರು.
9
+ ಗ್ಯಾರ��ಟಿ ಯೋಜನೆಗಳು ಕಾಂಗ್ರೆಸ್‌‍ ಕೈ ಹಿಡಿದಿರುವುದರಿಂದಾಗಿಯೇ ಬಿಜೆಪಿಯವರ ಗೆಲುವಿನ ಅಂತರ ಕಡಿಮೆಯಾಗಿದೆ. ಈ ಮೊದಲೆಲ್ಲಾ 2-3 ಲಕ್ಷ ದಅಂತರದಲ್ಲಿ ಫಲಿತಾಂಶ ಬರುತ್ತಿತ್ತು. ಅದು ಕುಸಿದಿದೆ. ಏನೇ ಆದರೂ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಹಾಗಾಗಿ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
10
+ ಜೆಡಿಎಸ್‌‍ -ಬಿಜೆಪಿ ಮೈತ್ರಿ ಕಾಂಗ್ರೆಸ್‌‍ಗೆ ಮುಂದಿನ ದಿನಗಳಲ್ಲಿ ಸವಾಲಾಗಿದ್ದು, ಅದನ್ನು ಎದುರಿಸಲು ಈಗಿನಿಂದಲೇ ಕಾರ್ಯತಂತ್ರ ರೂಪಿಸುವ ಅಗತ್ಯವಿದೆ ಎಂದು ಹೇಳಿದರು.
eesanje/url_46_117_3.txt ADDED
@@ -0,0 +1,5 @@
 
 
 
 
 
 
1
+ ಎಸ್‌‍ಐಟಿ ಕಚೇರಿಯಲ್ಲಿ ಅಮ್ಮ-ಮಗ ಒಬ್ಬರನ್ನೊಬ್ಬರು ನೋಡಲಾಗದ ಸನ್ನಿವೇಶ
2
+ ಬೆಂಗಳೂರು, ಜೂ.8-ಕೆಆರ್‌ ನಗರದ ಮಹಿಳೆಯ ಅಪಹರಣ ಪ್ರಕರಣದಲ್ಲಿ ವಿಚಾರಣೆಗಾಗಿ ಎಸ್‌‍ಐಟಿ ಕಚೇರಿಗೆ ಭವಾನಿ ರೇವಣ್ಣ ಅವರು ಆಗಮಿಸಿದಾಗ ಪಕ್ಕದ ಕೊಠಡಿಯಲ್ಲಿ ಮಗ ಪ್ರಜ್ವಲ್‌ ಇದ್ದರೂ ಒಬ್ಬರನ್ನೊಬ್ಬರು ನೋಡಲಾಗದ ಸನ್ನಿವೇಶ ಮನಕಲಕುವಂತಿತ್ತು.
3
+ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಎಸ್‌‍ಐಟಿ ವಶದಲ್ಲಿದ್ದು, ನಿನ್ನೆ ಭವಾನಿ ಅವರು ಎಸ್‌‍ಐಟಿ ವಿಚಾರಣೆಗಾಗಿ ಕಚೇರಿಗೆ ಹಾಜರಾದಾಗ ಅಮ್ಮ-ಮಗ ಅಕ್ಕಪಕ್ಕದ ಕೊಠಡಿಯಲ್ಲಿದ್ದರೂ ಮುಖ ನೋಡಲಾಗಲಿಲ್ಲ.
4
+ ಕೆಆರ್‌ ನಗರದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ನಿನ್ನೆ ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿತ್ತು. ಆದರೆ, ಭವಾನಿ ಅವರನ್ನು ಯಾವುದೇ ಕಾರಣಕ್ಕೂ ಎಸ್‌‍ಐಟಿ ಬಂಧಿಸುವಂತಿಲ್ಲ ಎಂದು ಹೈಕೋರ್ಟ್‌ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಎಸ್‌‍ಐಟಿ ಕಚೇರಿಗೆ ವಕೀಲರೊಂದಿಗೆ ವಿಚಾರಣೆಗಾಗಿ ಭವಾನಿ ರೇವಣ್ಣ ತೆರಳಿದಾಗ ಪಕ್ಕದ ಕೊಠಡಿಯಲ್ಲೇ ಪ್ರಜ್ವಲ್‌ ಇದ್ದರೂ ನೋಡಲಿಕ್ಕೆ ಆಗಲಿಲ್ಲ.
5
+ ಸುಮಾರು ಒಂದೂವರೆ ತಿಂಗಳಿನಿಂದ ಮಗನ ಮುಖವನ್ನು ಭವಾನಿ ಅವರು ನೋಡಿಲ್ಲ. ನಿನ್ನೆ ಎಸ್‌‍ಐಟಿ ವಿಚಾರಣೆ ಮುಗಿಸಿ ಸೀದಾ ಹೊರಬಂದಿದ್ದಾರೆ. ಪ್ರಜ್ವಲ್‌ ಹಾಗೂ ಭವಾನಿ ಅವರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿ ಎಸ್‌‍ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡಿದ್ದಾರೆ.
eesanje/url_46_117_4.txt ADDED
@@ -0,0 +1,8 @@
 
 
 
 
 
 
 
 
 
1
+ ಲೋಕಸಭೆ-ವಿಧಾನಪರಿಷತ್‌ ಚುನಾವಣೆ ನಂತರ ಇಮ್ಮಡಿಗೊಂಡ ಜೆಡಿಎಸ್‌‍ ಉತ್ಸಾಹ
2
+ ಬೆಂಗಳೂರು, ಜೂ.8-ಲೋಕಸಭೆ ಮತ್ತು ವಿಧಾನಪರಿಷತ್‌ ಚುನಾವಣೆ ನಂತರ ಜೆಡಿಎಸ್‌‍ ಮುಖಂಡರು ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಯಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉಂಟಾಗಿದ್ದ ಹೀನಾಯ ಸೋಲಿನಿಂದ ಕಂಗೆಟ್ಟಿದ್ದ ಜೆಡಿಎಸ್‌‍ ಪಕ್ಷದ ಮುಖಂಡರು, ಕಾರ್ಯಕರ್ತರು ಮಂಕಾಗಿ ಉತ್ಸಾಹವನ್ನೇ ಕಳೆದುಕೊಂಡಿದ್ದರು.
3
+ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧೆಗಿಳಿದಿದ್ದು, ನಿರೀಕ್ಷೆಗೂ ಮೀರಿದ ಫಲ ನೀಡಿದೆ. ಹೀಗಾಗಿ ಜೆಡಿಎಸ್‌‍ ಪುಟಿದೆದ್ದಿದ್ದು, ಮೈತ್ರಿ ಟಾನಿಕ್‌ ನೀಡಿದಂತಾಗಿದೆ.
4
+ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್‌‍ ಕಳೆಗುಂದಿದಂತೆ ವಿಧಾನಸಭೆ ಚುನಾವಣೆ ನಂತರ ಕಂಡುಬಂದಿತ್ತು. ಆದರೆ ಲೋಕಸಭಾ ಚುನಾವಣೆಗಳಲ್ಲಿ ಮೈತ್ರಿ ಪಕ್ಷಗಳಿಗೆ ಲಾಭವಾಗಿದೆ. ಬಿಜೆಪಿ ಮತ್ತು ಜೆಡಿಎಸ್‌‍ನ ಸಾಂಪ್ರದಾಯಿಕ ಮತಗಳು ಒಗ್ಗೂಡಿದ್ದು ಇದಕ್ಕೆ ಪ್ರಮುಖ ಕಾರಣ.
5
+ ವಿಧಾನಪರಿಷತ್‌ನ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್‌‍ ಜಯಭೇರಿ ಭಾರಿಸಿದೆ. ಆದರೆ ನಾಲ್ಕು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಮಿತ್ರ ಪಕ್ಷ ಬಿಜೆಪಿ ಒಂದು ಕ್ಷೇತ್ರದಲ್ಲಷ್ಟೇ ಗೆಲ್ಲಲು ಸಾಧ್ಯವಾಗಿದೆ. ಇದರಿಂದ ಬಿಜೆಪಿಗಿಂತ ಜೆಡಿಎಸ್‌‍ಗೆ ಹೆಚ್ಚಿನ ಅನುಕೂಲವಾಗುತ್ತಿದೆ.
6
+ ಕಾಂಗ್ರೆಸ್‌‍ನೊಂದಿಗೆ ಮೈತ್ರಿ ಮಾಡಿಕೊಂಡ ಸಂದರ್ಭದಲ್ಲಿ ನಿರೀಕ್ಷಿತ ಫಲಿತಾಂಶ ದೊರೆಯದೆ ಅಸಮಾಧಾನ ಉಂಟಾಗುತ್ತಿತ್ತು. ಆದರೆ ಈ ಬಾರಿ ಬಿಜೆಪಿಯೊಂದಿಗಿನ ಮೈತ್ರಿ ಹೆಚ್ಚಿನ ಅನುಕೂಲವಾಗಿದ್ದು, ಮುಂಬರುವ ಬಿಬಿಎಂಪಿ ನಗರ ಸ್ಥಳೀಯ ಸಂಸ್ಥೆಗಳು, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲೂ ಮೈತ್ರಿಯನ್ನು ಮುಂದುವರೆಸಲು ಉತ್ಸುಕವಾಗಿದೆ.
7
+ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭಾರೀ ಬಹುಮತದಿಂದ ಚುನಾಯಿತರಾಗಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಪ್ರಧಾನಿ ನರೇಂದ್ರ ಮೋದಿಯವರ ಸಚಿವ ಸಂಪುಟ ಸೇರುತ್ತಿರುವುದು ಪಕ್ಷದಲ್ಲಿನ ಉತ್ಸಾಹವನ್ನ ಮತ್ತಷ್ಟು ಹೆಚ್ಚಿಸಿದೆ. ಇದು ಪಕ್ಷದ ಮೇಲೆ ಪ್ರಭಾವ ಬೀರುತ್ತಿದ್ದು, ಪಕ್ಷ ಸಂಘಟನೆಯ ಜೊತೆಗೆ ಹೋರಾಟಗಳಲ್ಲೂ ಹೆಚ್ಚಿನ ಉತ್ಸಾಹದಿಂದ ಪಕ್ಷದ ಮುಖಂಡರು, ಕಾರ್ಯಕರ್ತರು ತೊಡಗಿಸಿಕೊಳ್ಳಲು ಕಾತರಿಸುತ್ತಿದ್ದಾರೆ.
8
+ ಕುಮಾರಸ್ವಾಮಿಯವರು ಕೇಂದ್ರ ಸಚಿವರಾದ ನಂತರ ಪಕ್ಷದ ಸಭೆ ನಡೆಸಿ ಮುಂದಿನ ಹೋರಾಟ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ಧಪಡಿಸಲಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಹಳೆ ಮೈಸೂರು ಭಾಗದಲ್ಲಿ ಸಿಂಹಪಾಲು ಪಡೆದಿತ್ತು. ಅದೇ ರೀತಿ ಈಗ ಬಿಜೆಪಿ-ಜೆಡಿಎಸ್‌‍ ಮೈತ್ರಿ ಲೋಕಸಭಾ ಚುನಾವಣೆಯಲ್ಲಿ ಸಿಂಹಪಾಲು ಪಡೆದಿವೆ. ಇದನ್ನು ಇನ್ನಷ್ಟು ಹೆಚ್ಚಿಸಿ ಮುನ್ನಡೆಯುವ ಉದ್ದೇಶವನ್ನು ಮಿತ್ರಪಕ್ಷಗಳು ಹೊಂದಿವೆ. ಅದಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಹಮಿಕೊಳ್ಳಲು ಯೋಚಿಸುತ್ತಿದೆ.
eesanje/url_46_117_5.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಇನ್ನೂ ಹಲವು ಸಚಿವರ ತಲೆದಂಡ..?
2
+ ಬೆಂಗಳೂರು, ಜೂ.8-ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಆರೋಪ ಪ್ರಕರಣ ರಾಜ್ಯಸಚಿವ ಸಂಪುಟದ ಹಲವರ ತಲೆದಂಡದ ಮುನ್ಸೂಚನೆ ನೀಡಿದ್ದು, ಸರ್ಕಾರದ ಬುಡವನ್ನೇ ಅಲುಗಾಡಿಸುವಷ್ಟು ಬ್ರಹ್ಮಾಂಡವಾಗಿ ಬೆಳೆಯುತ್ತಿದೆ 187 ಕೋಟಿ ರೂ.ಗಳ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌‍ಐಟಿ ಅಧಿಕಾರಿಗಳು ಈಗಾಗಲೇ ನಿಗಮ ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ.
3
+ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ಪಡೆದುಕೊಂಡಾಗಿದೆ. ಆದರೆ ಹಣ ವರ್ಗಾವಣೆ ಮತ್ತು ಅದು ತಲುಪಿರುವ ಮೂಲಗಳ ಬಗ್ಗೆ ಸಾಕಷ್ಟು ಚರ್ಚೆಗಳಿಗೆ ಗ್ರಾಸವಾಗುತ್ತಿವೆ. ರಾಜ್ಯಸರ್ಕಾರದ ತನಿಖೆಗೆ ಎಸ್‌‍ಐಟಿ ರಚಿಸಿದೆ. ಅದೇ ಸಮಯಕ್ಕೆ ಯೂನಿಯನ್‌ ಬ್ಯಾಂಕಿನ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರ ದೂರಿನ ಆಧಾರದ ಮೇಲೆ ಸಿಬಿಐ ಕೂಡ ಎಫ್‌ಐಆರ್‌ ದಾಖಲಿಸಿದೆ.
4
+ ರಾಜ್ಯಸರ್ಕಾರದ ಎಸ್‌‍ಐಟಿ ಅಧಿಕಾರಿಗಳು ತನಿಖೆಯಲ್ಲಿ ಲೋಪ ಮಾಡಿದರೆ ಮುಂದಿನ ದಿನಗಳಲ್ಲಿ ಸಿಬಿಐನ ತನಿಖೆಯ ಕುಣಿಕೆಗೆ ಸಿಲುಕಿಕೊಳ್ಳುವ ಅಪಾಯವಿದೆ.ಹೀಗಾಗಿ ಪ್ರತಿಯೊಂದನ್ನೂ ಕಾನೂನುಬದ್ಧವಾಗಿ, ಪಾರದರ್ಶಕವಾಗಿ ಮತ್ತು ಪ್ರಾಮಾಣಿಕವಾಗಿ ವಿಚಾರಣೆಗೊಳಪಡಿಸಲಾಗುತ್ತಿದೆ. ಪ್ರಕರಣವನ್ನು ಬಯಲಿಗೆ ಬರುವಂತೆ ಮಾಡಿ ಆತಹತ್ಯೆ ಮಾಡಿಕೊಂಡ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಅವರು ಮರಣ ಪತ್ರದಲ್ಲಿ ಉಲ್ಲೇಖಿಸಿರುವ ಲೆಕ್ಕಾಧಿಕಾರಿ ಪರಶುರಾಮ್‌ ದುರ್ಗಣ್ಣನವರ್‌ ಅವರನ್ನು ಎಸ್‌‍ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಸ್ಫೋಟಕ ಮಾಹಿತಿಯನ್ನು ಕಲೆ ಹಾಕಿದ್ದಾರೆ.
5
+ ಆದರೆ, ಮಾಹಿತಿಯನ್ನು ಹೇಳಿಕೆ ರೂಪದಲ್ಲಷ್ಟೇ ಸಂಗ್ರಹಿಸದೆ ಸಂಬಂಧಿಸಿದ ನ್ಯಾಯಾಲಯಕ್ಕೆ ಆರೋಪಿ ಅಧಿಕಾರಿಯಿಂದಲೇ ಪ್ರಮಾಣಪತ್ರ ರೂಪದಲ್ಲಿ ಸಲ್ಲಿಕೆ ಮಾಡಲಾಗಿದೆ. ಹೀಗಾಗಿ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮತ್ತಷ್ಟು ಜನರಿಗೆ ಸಂಕಷ್ಟವಾಗುವ ಸಾಧ್ಯತೆಯಿದೆ.
6
+ ಅಧಿಕಾರಿ ಪರಶುರಾಮ್‌ ಮೇ 24 ರಂದು ವಿಧಾನಸೌಧದ ಮೂರನೇ ಮಹಡಿಯಲ್ಲಿ ಸಚಿವ ಶರಣಪ್ರಕಾಶ್‌ ಪಾಟೀಲ್‌ ಅವರ ಕೊಠಡಿಯಲ್ಲಿ ಬೆಳಿಗ್ಗೆ 10.30 ರಿಂದ ಸಂಜೆ 4.30 ರವರೆಗೂ ಸಭೆ ನಡೆಸಿದ್ದು, ಪ್ರಕರಣದಲ್ಲಿ ಸಾಕ್ಷ್ಯಗಳನ್ನು ಹಾಗೂ ದಾಖಲಾತಿಗಳನ್ನು ನಾಶಪಡಿಸುವ ಕುರಿತು ಸಮಾಲೋಚನೆ ನಡೆಸಲಾಗಿದೆ ಎನ್ನಲಾಗಿದೆ.
7
+ ಸಭೆಯಲ್ಲಿ ಸಚಿವರಾದ ಶರಣಪ್ರಕಾಶ್‌ ಪಾಟೀಲ್‌, ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು ಎಂಬ ಮಾಹಿತಿ ಇದೆ.ಇದನ್ನೇ ಆಧಾರವಾಗಿಟ್ಟುಕೊಂಡಿರುವ ಪ್ರತಿಪಕ್ಷಗಳು ಸಚಿವ ಶರಣಪ್ರಕಾಶ್‌ ಪಾಟೀಲ್‌ ಅವರ ರಾಜೀನಾಮೆಗೆ ಪಟ್ಟು ಹಿಡಿದಿವೆ. ಜೊತೆಗೆ ಬಸವನಗೌಡ ದದ್ದಲ್‌ ಅವರನ್ನೂ ಅಧ್ಯಕ್ಷ ಸ್ಥಾನದ��ಂದ ವಜಾಗೊಳಿಸಬೇಕು ಎಂಬ ಆಗ್ರಹಗಳು ಹೆಚ್ಚಾಗುತ್ತಿವೆ.
8
+ ನಿಗಮದ ಹಣ ಬ್ಯಾಂಕ್‌ನ ಮೂಲ ಖಾತೆಯಿಂದ ಉಪಖಾತೆಗೆ ವರ್ಗಾವಣೆಗೊಂಡು ಅಲ್ಲಿಂದ ತೆಲಂಗಾಣದ ಹಲವು ಕಂಪನಿಗಳಿಗೆ ಹಂಚಿಕೆಯಾಗಿದೆ. ಈ ಹಣವನ್ನು ಲೋಕಸಭಾ ಚುನಾವಣೆಗಾಗಿಯೇ ಬಳಕೆ ಮಾಡಲಾಗಿದೆ ಎಂದು ಅನುಮಾನ ವ್ಯಕ್ತಪಡಿಸುತ್ತಿರುವ ಪ್ರತಿಪಕ್ಷ ತೆಲಂಗಾಣದ ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದ ಸಚಿವ ಎನ್‌.ಎಸ್‌‍.ಬೋಸರಾಜ್‌ ಅವರ ರಾಜೀನಾಮೆಗೂ ಒತ್ತಾಯಗಳು ಕೇಳಿಬರುತ್ತಿವೆ.
9
+ ಮುಂದುವರೆದ ಮಾಹಿತಿಯಲ್ಲಿ ತೆಲಂಗಾಣ ಮೂಲದಿಂದ ಹಣವನ್ನು ಕಲ್ಯಾಣ ಕರ್ನಾಟಕ ಭಾಗದ ಚುನಾವಣಾ ವೆಚ್ಚಕ್ಕೆ ಬಳಕೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.ಐಟಿಬಿಟಿ ಕಂಪನಿಗಳ ಹೆಸರು ಉಲ್ಲೇಖವಾಗಿರುವುದರಿಂದಾಗಿ ಪ್ರಕರಣ ಎಲ್ಲಿಂದ ಎಲ್ಲಿಗೋ ಸಂಪರ್ಕಗೊಳ್ಳುತ್ತಿದ್ದು, ಹಲವು ಸಚಿವರುಗಳ ಹೆಸರು ಥಳಕು ಹಾಕಿಕೊಳ್ಳುವಂತೆ ಮಾಡಿದೆ.ಶೋಷಿತರ ಅಭಿವೃದ್ಧಿಗಾಗಿ ಬಳಕೆಯಾಗಬೇಕಾದ ಕೋಟ್ಯಂತರ ರೂ.ಗಳು ಹಿಡಿಗಂಟಾಗಿ ವರ್ಗಾವಣೆಗೊಂಡಿರುವುದು ನಿಯಮಗಳನ್ನು ಗಾಳಿಗೆ ತೂರಿ ಖಾಸಗಿ ವ್ಯಕ್ತಿಗಳಿಗೆ ಹಂಚಿಕೆಯಾಗಿರುವುದು ತನಿಖಾಧಿಕಾರಿಗಳ ಹುಬ್ಬೇರುವಂತೆ ಮಾಡಿದೆ.
10
+ ಆರಂಭದಲ್ಲಿ ಹಣ ವರ್ಗಾವಣೆಯಾಗಿರುವುದು ತಮ ಗಮನದಲ್ಲಿರಲಿಲ್ಲ ಎಂಬ ಹೇಳಿಕೆ ನೀಡಿದ್ದ ಆಗಿನ ಸಚಿವ ನಾಗೇಂದ್ರ ವರ್ಗಾವಣೆಯಾಗಿರುವ ಹಣ ಎಲ್ಲಿಯೂ ಹೋಗಿಲ್ಲ. ಖಾಸಗಿಯಾಗಿ ಅದನ್ನು ನಗದೀಕರಿಸಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಹಣ ಮರಳಿ ನಿಗಮದ ಖಾತೆಗೆ ಬರಲಿದೆ ಎಂದು ಹೇಳುತ್ತಿದ್ದರು. ಹಣ ಪೋಲಾಗುವುದಿಲ್ಲ ಎಂಬುದೇ ಆಗಿದ್ದರೆ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಆತಹತ್ಯೆ ಮಾಡಿಕೊಳ್ಳುವ ಗಂಭೀರ ಪರಿಸ್ಥಿತಿ ಏಕಿತ್ತು ಎಂಬ ಪ್ರಶ್ನೆಗಳು ಉದ್ಭವಿಸಿದ್ದವು.
11
+ ಆದರೆ ತನಿಖೆ ಆಳಕ್ಕಿಳಿದಂತೆಲ್ಲಾ ಕೋಟ್ಯಂತರ ರೂ.ಗಳನ್ನು ನುಂಗಿ ಪಂಗನಾಮ ಹಾಕುವ ಷಡ್ಯಂತರಗಳು ಒಂದೊಂದಾಗಿ ಬಯಲಾಗುತ್ತಿವೆ.ಇದರಲ್ಲಿ ಕೆಲ ಸಚಿವರಷ್ಟೇ ಅಲ್ಲ ಪ್ರಭಾವಿಗಳ ಹಸ್ತಕ್ಷೇಪವೂ ಇರುವ ಸಾಧ್ಯತೆ ಇದೆ ಎಂಬ ವದಂತಿಗಳಿವೆ.ಹೀಗಾಗಿ ವಸತಿ ನಿಗಮದ ಹಗರಣ ನಾಗೇಂದ್ರ ಅವರ ತಲೆದಂಡಕ್ಕಷ್ಟೇ ಸೀಮಿತಗೊಳ್ಳದೆ ಮತ್ತಷ್ಟು ಸಚಿವ ಸ್ಥಾನಗಳನ್ನು ಅಪೋಷಣ ತೆಗೆದುಕೊಳ್ಳುವ ಸಾಧ್ಯತೆಯಿದೆ.
12
+ ಹಿಂದೇಟು ಹಾಕುತ್ತಿರುವ ಸರ್ಕಾರ :ಪ್ರಕರಣದ ಆಳದ ಅರಿವಾಗುತ್ತಿದ್ದಂತೆ ಸರ್ಕಾರ ಸಿಬಿಐ ತನಿಖೆಯನ್ನು ಬ್ಯಾಂಕಿನ ವಹಿವಾಟಿಗೆ ಸೀಮಿತಗೊಳಿಸುವ ಪ್ರಯತ್ನ ನಡೆಸುತ್ತಿದೆ. 3 ಕೋಟಿ ರೂ.ಗಳಿಗೆ ಮೇಲ್ಪಟ್ಟ ಬ್ಯಾಂಕ್‌ ಅವ್ಯವಹಾರಗಳು ಸಹಜವಾಗಿಯೇ ಸಿಬಿಐ ತನಿಖೆಗೆ ಒಳಪಡುತ್ತವೆ. ಅದೇ ರೀತಿ ವಾಲೀಕಿ ನಿಗಮದ ಹಗರಣ ಈಗಾಗಲೇ ತನಿಖೆ ಶುರುವಾಗಿದೆ. ಆದರೆ ಇದು ಬ್ಯಾಂಕಿನ ವಹಿವಾಟಿಗಷ್ಟೇ ಸೀಮಿತಗೊಳ್ಳದೆ ಪರಿಶಿಷ್ಟ ವರ್ಗಗಳ ಕಲ್ಯಾಣ, ಸಹಕಾರ, ಹಣಕಾಸು ಸೇರಿದಂತೆ ವಿವಿಧ ಇಲಾಖೆಗಳ ನಿರ್ದೇಶನಾಲಯಗಳನ್ನು ತನಿಖೆಗೊಳಪಡಿಸಬೇಕಾದ ಸಾಧ್ಯತೆಯಿದೆ.
13
+ ಇಲಾಖೆಗಳನ್ನು ಸಿಬಿಐ ತನಿಖೆಗೊಳಪಡಿಸಲು ಸರ್ಕಾರದ ಅನುಮತಿ ಅಗತ್ಯವಿದೆ. ರಾಜ್ಯಸರ್ಕಾರ ನೀತಿ ಸಂಹಿತೆಯ ನೆಪದಲ್ಲಿ ಈವರೆಗೂ ತನ್ನ ಇಲಾಖೆಗಳ ವ್ಯಾಪ್ತಿಯ ವಿಚಾರಣೆಗೆ ಅನುಮತಿಸಿಲ್ಲ. ಒಂದು ವೇಳೆ ಪೂರ್ಣ ಪ್ರಮಾಣದ ತನಿಖೆಗೆ ಅವಕಾಶ ನೀಡಿದ್ದೇ ಆದರೆ ಮತ್ತುಷ್ಟು ಬ್ರಹಾಂಡ ಸತ್ಯಗಳು ಬಯಲಾಗುವ ಸಾಧ್ಯತೆಗಳಿವೆ.
eesanje/url_46_117_6.txt ADDED
@@ -0,0 +1,9 @@
 
 
 
 
 
 
 
 
 
 
1
+ ರಾಜ್ಯದಲ್ಲಿ ನಿರಂತರ ಮಳೆ, ಬರದಿಂದ ಕಂಗೆಟ್ಟಿದ್ದ ರೈತರಲ್ಲಿ ಹರ್ಷ
2
+ ಬೆಂಗಳೂರು, ಜೂ.8-ಮೇ ತಿಂಗಳ ನಂತರ ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದ್ದು, ಬರದಿಂದ ಕಂಗೆಟ್ಟಿದ್ದ ರೈತ ಸಮುದಾಯಕ್ಕೆ ಖುಷಿ ತಂದಂತಾಗಿದೆ. ಜೊತೆಗೆ ಪ್ರಮುಖ ಜಲಾಶಯಗಳ ಒಳ ಹರಿವು ಪ್ರಾರಂಭವಾಗಿರುವುದು ಮತ್ತಷ್ಟು ಸಂತೋಷವನ್ನು ನೀಡುತ್ತಿದೆ.
3
+ ರಾಜ್ಯದ 14 ಪ್ರಮುಖ ಜಲಾಶಯಗಳ ಪೈಕಿ ಮಲಪ್ರಭಾ ಜಲಾಶಯವನ್ನು ಹೊರತುಪಡಿಸಿ ಉಳಿದೆಲ್ಲಾ ಜಲಾಶಯಗಳ ಒಳಹರಿವು ಪ್ರಾರಂಭವಾಗಿದೆ. ನಿರೀಕ್ಷಿತ ಪ್ರಮಾಣದಲ್ಲಿ ಒಳಹರಿವು ಬಾರದಿದ್ದರೂ ಸ್ವಲ್ಪ ಪ್ರಮಾಣದ ಒಳಹರಿವು ಎಲ್ಲಾ ಜಲಾಶಯಗಳಲ್ಲಿ ಕಂಡುಬರುತ್ತಿದೆ. ಕಳೆದ ವರ್ಷದ ಮುಂಗಾರು ಮತ್ತು ಹಿಂಗಾರು ಮಳೆಯ ತೀವ್ರ ಕೊರತೆಯಿಂದ ರಾಜ್ಯ ಬರದ ಕರಾಳ ಛಾಯೆಗೆ ಸಿಲುಕಿತ್ತು. ಕಳೆದ ಬೇಸಿಗೆಯಲ್ಲಿ ಅಕ್ಷರಶಃ ಬಿಸಿಲ ನಾಡಾಗಿ ಪರಿಣಮಿಸಿತ್ತು.
4
+ ಈಗಾಗಲೇ ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ನಿರಂತರವಾಗಿ ಬೀಳುತ್ತಿದೆ. ಇದರಿಂದ ಕೃಷಿ ಚಟುವಟಿಕೆಗಳು ಪ್ರಾರಂಭವಾಗಿವೆ. ರಾಜ್ಯದ 14 ಪ್ರಮುಖ ಜಲಾಶಯಗಳಲ್ಲಿ 174.32 ಟಿಎಂಸಿ ಅಡಿಯಷ್ಟು ಮಾತ್ರ ನೀರಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 192.75 ಟಿಎಂಸಿ ಅಡಿಯಷ್ಟು ನೀರಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ 18 ಟಿಎಂಸಿಯಷ್ಟು ನೀರು ಕಡಿಮೆ ಸಂಗ್ರಹವಾಗಿದೆ.
5
+ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ಪ್ರಕಾರ, 22 ಸಾವಿರ ಕ್ಯೂಸೆಕ್‌್ಸಗೂ ಹೆಚ್ಚಿನ ಒಳಹರಿವಿದೆ. 7 ಸಾವಿರಕ್ಕೂ ಹೆಚ್ಚು ಕ್ಯೂಸೆಕ್‌್ಸ ಒಳಹರಿವು ಇದೆ. ನಿರಂತರ ಮಳೆಯಾಗುತ್ತಿರುವುದರಿಂದ ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
6
+ ಕೃಷ್ಣಾಕೊಳ್ಳದ ತುಂಗಭದ್ರಾ ಜಲಾಶಯಕ್ಕೆ 1,400 ಕ್ಕೂ ಹೆಚ್ಚು ಕ್ಯೂಸೆಕ್‌್ಸ, ಆಲಮಟ್ಟಿಗೆ 2,500 ಕ್ಕೂ ಹೆಚ್ಚು ಕ್ಯೂಸೆಕ್ಸ್ , ನಾರಾಯಣಪುರ ಜಲಾಶಯಕ್ಕೆ 12,000 ಕ್ಕೂ ಹೆಚ್ಚು ಕ್ಯೂಸೆಕ್‌್ಸ ಒಳಹರಿವು ಇದೆ. ಒಟ್ಟಾರೆ ಕಾವೇರಿ ಜಲಾನಯನದ ಜಲಾಶಯಗಳಲ್ಲಿ 15,000 ಕ್ಯೂಸೆಕ್‌್ಸಗಿಂತಲೂ ಹೆಚ್ಚಿನ ಒಳಹರಿವಿದೆ.
7
+ ಜಲವಿದ್ಯುತ್‌ ಉತ್ಪಾದಿಸುವ ಲಿಂಗನಮಕ್ಕಿ, ಸೂಪ, ವರಾಹಿ ಜಲಾಶಯಗಳಿಗೆ 1,500 ಕ್ಕೂ ಹೆಚ್ಚು ಕ್ಯೂಸೆಕ್‌್ಸ ನೀರು ಹರಿದುಬರುತ್ತಿದೆ. ಕಾವೇರಿ ಕೊಳ್ಳದ ಹಾರಂಗಿ, ಹೇಮಾವತಿ ಜಲಾಶಯಕ್ಕೆ ಅಲ್ಪಪ್ರಮಾಣದ ಒಳಹರಿವಿದೆ. ಕೆಆರ್‌ಎಸ್‌‍ ಜಲಾಶಯಕ್ಕೆ 1,400 ಕ್ಯೂಸೆಕ್ಸ್ ಗೂ ಹೆಚ್ಚು ಒಳಹರಿವಿದ್ದರೆ ಕಬಿನಿ ಜಲಾಶಯಕ್ಕೆ 3,000 ಕ್ಕೂ ಹೆಚ್ಚು ಕ್ಯೂಸೆಕ್‌್ಸ ಒಳಹರಿವಿದೆ.
8
+ ಈ ನಾಲ್ಕೂ ಜಲಾಶಯಗಳಲ್ಲಿ 34 ಟಿಎಂಸಿ ಅಡಿಯಷ್ಟು ಮಾತ್ರ ನೀರಿದೆ. ಕಳೆದ ವರ್ಷ 33.50 ಅಡಿ ಟಿಎಂಸಿಯಷ್ಟು ನೀರಿತ್ತು. ಈ ಬಾರಿಯ ಮುಂಗಾರು ವಾಡಿಕೆ ಪ್ರಮಾಣದಲ್ಲಿ ಆಗಲಿದೆ ಎಂಬ ಮುನ್ಸೂಚನೆಯಿದೆ. ಅಲ್ಲದೆ, ಸದ್ಯಕ್ಕೆ ಇನ್ನೂ ಒಂದು ವಾರ ಮಳೆ ಬೀಳುವ ಮುನ್ಸೂಚನೆಗಳಿವೆ. ಹೀಗಾಗಿ ಒಳಹರಿವು ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ.
9
+ ಆದರೆ ಕೇರಳದ ವಯ���ಾಡು ಭಾಗದಲ್ಲಿ ಮುಂಗಾರು ಅವಧಿಗೂ ಮುನ್ನ ಆರಂಭವಾಗಿದ್ದರೂ ಈ ತನಕ ಭಾರಿ ಮಳೆಯಾಗಿಲ್ಲ. ವಯನಾಡು ಮತ್ತು ಕೊಡಗಿನ ಭಾಗದಲ್ಲಿ ಮುಂಗಾರು ಆರಂಭವಾಗಿ ಎಂಟು-ಹತ್ತು ದಿನ ಕಳೆದರೂ ಭಾರಿ ಮಳೆಯಾಗುತ್ತಿಲ್ಲ. ಆದರೆ ನಿರಂತರ ಮಳೆಯಾಗುತ್ತಿದೆ. ಇದರಿಂದ ಜಲಾಶಯದ ಒಳಹರಿವು ಹೆಚ್ಚಾಗುವ ನಿರೀಕ್ಷೆ ಇದೆ.
eesanje/url_46_117_7.txt ADDED
@@ -0,0 +1,7 @@
 
 
 
 
 
 
 
 
1
+ ವಾಲ್ಮೀಕಿ ಅಭಿವೃದ್ಧಿ ನಿಗಮಗದ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ : ಸಚಿವ ಶರಣಪ್ರಕಾಶ್‌
2
+ ಬೆಂಗಳೂರು, ಜೂ.8-ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ, ಆರೋಪಿ ಪ್ರಮಾಣಪತ್ರದಲ್ಲಿ ಉಲ್ಲೇಖಿಸಿರುವ ದಿನ ನಾನು ಕಚೇರಿಗೇ ಹೋಗಿರಲಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್‌ ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಎಸ್‌‍ಐಟಿ ವಿಚಾರಣೆಯಲ್ಲಿರುವ ಆರೋಪಿ ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂಬುದು ನನ್ನ ಗಮನಕ್ಕೂ ಬಂದಿದೆ. ನಾನು ಓದಿದ ಪ್ರಕಾರ, ಸಚಿವರ ಕಚೇರಿಯಲ್ಲಿ ನಾನು ಒಬ್ಬರನ್ನು ಭೇಟಿ ಮಾಡಿದ್ದೇನೆ. ಈ ಹಿನ್ನೆಲೆಯಲ್ಲಿ ಅಲ್ಲಿನ ದೃಶ್ಯಾವಳಿಗಳನ್ನು ಸಂರಕ್ಷಿಸಿ ಎಂದು ತಿಳಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವರು ಸಭೆಯಲ್ಲಿದ್ದರು ಎಂದು ಹೇಳಿಲ್ಲ ಎಂದರು.
4
+ ಪ್ರಮಾಣಪತ್ರದ ಆಧಾರದ ಮೇಲೆ ನ್ಯಾಯಾಲಯ ನಿರ್ದೇಶನ ಕೊಟ್ಟು ತನಿಖೆ ಮಾಡಿಸಲಿ. ನನ್ನ ಅಭ್ಯಂತರವಿಲ್ಲ. 24 ರಂದು ನಾನು ಸಚಿವರ ಕಚೇರಿಗೆ ಹೋಗಿಲ್ಲ. ಆಗ ನೀತಿ ಸಂಹಿತೆ ಜಾರಿಯಲ್ಲಿತ್ತು. ವಿಕಾಸಸೌಧದಲ್ಲಿರುವ ತಮ್ಮ ಕಚೇರಿ ಸರ್ಕಾರಿ ಸ್ವತ್ತಾಗಿದೆ. ಅಲ್ಲಿಗೆ ಬಹಳಷ್ಟು ಮಂದಿ ಬರುತ್ತಾರೆ, ಕೂರುತ್ತಾರೆ, ಹೋಗುತ್ತಾರೆ. ನಾನು ಇಲ್ಲದೇ ಇದ್ದಾಗಲೂ ಅನೇಕ ಶಾಸಕರು ಬಂದು ಕುಳಿತು ಮಾತನಾಡಿ ಹೋಗಿರುವುದು ಸಾಮಾನ್ಯ. ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.
5
+ ಅದು ನನ್ನ ಖಾಸಗಿ ಕಚೇರಿಯಲ್ಲ. ಸರ್ಕಾರಿ ಕಚೇರಿ. ಹಾಗಾಗಿ ನಾನು ಸಿಸಿಟಿವಿಯನ್ನು ಪರಿಶೀಲಿಸುವ ಅಗತ್ಯವಿಲ್ಲ. ವಿಚಾರಣೆಗೆ ನನಗೆ ನೋಟೀಸ್‌‍ ಕೊಟ್ಟರೆ ನಾನು ಸಹಕರಿಸುತ್ತೇನೆ. ಕಚೇರಿಯಲ್ಲಿ ಅಂತಹ ಚರ್ಚೆಗಳು, ಸಭೆಗಳಾಗಿದ್ದರೆ ತನಿಖೆಯಾಗಲಿ. ಮಾಧ್ಯಮದಲ್ಲಿ ಈ ವಿಚಾರ ಬಂದ ಮೇಲೆ ನನಗೆ ಅರಿವಾಗಿದೆ. ಅದರ ಹೊರತಾಗಿ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು.
6
+ ಪ್ರಮಾಣಪತ್ರದ ವಿಷಯ ಹೊರಬರುತ್ತಿದ್ದಂತೆ ನಾನು ವಿಚಾರಣೆ ಮಾಡಿದ್ದೇನೆ. ಆದರೆ ಅಂತಹ ಯಾವುದೇ ಸಭೆಗಳು ನಡೆದಿರಲಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್‌ ಅವರನ್ನು ನಾನು ವಿಚಾರಿಸಿದಾಗ ನಿಮನ್ನು ಭೇಟಿ ಮಾಡಲು ನಾನು ಕಚೇರಿಗೆ ಬಂದಿದ್ದೆ. ಅಲ್ಲಿಗೆ ಈಗ ಪ್ರಮಾಣಪತ್ರ ಸಲ್ಲಿಸಿರುವ ಆರೋಪಿತ ಅಧಿಕಾರಿ ಬಂದು ಹಗರಣದ ಬಗ್ಗೆ ಒಂದು ಪತ್ರ ನೀಡಿದ್ದ ಎಂದು ತಿಳಿಸಿದ್ದಾರೆ.
7
+ ನನ್ನ ಕಚೇರಿಯಲ್ಲಿ ಏನಾಗಿದೆ ಎಂಬ ಬಗ್ಗೆ ತನಿಖೆಯಾಗಿ ಸತ್ಯಾಂಶ ಹೊರಗೆ ಬರಲಿ ನನ್ನ ಗೈರುಹಾಜರಿಯಲ್ಲಿ ನಡೆದಿರುವುದಕ್ಕೆ ನಾನು ಹೊಣೆಯಲ್ಲ ಎಂದರು.ವಿರೋಧಪಕ್ಷಗಳು ನನ್ನ ರಾಜೀನಾಮೆ ಕೇಳುತ್ತಿರುವುದಲ್ಲಿ ತರ್ಕವೇ ಇಲ್ಲ. ಯಾವ ಆಧಾರದ ಮೇಲೆ ಆ ರೀತಿ ಆಗ್ರಹ ಮಾಡುತ್ತಿದ್ದಾರೆ. ನನಗೂ ಇದಕ್ಕೂ ಸಂಬಂಧವೇ ಇಲ್ಲ. ನಾನು �� ಹಿಂದೆ 5 ವರ್ಷಗಳ ಕಾಲ ಸಚಿವನಾಗಿ ಕೆಲಸ ಮಾಡಿದ್ದೇನೆ. ಯಾವುದೇ ಆರೋಪಗಳಿಲ್ಲ. ಭ್ರಷ್ಟಾಚಾರ, ಹಗರಣಗಳಿಗೆ ನಾನು ತದ್ವಿರುದ್ಧನಾಗಿದ್ದೇನೆ. ಪಾರದರ್ಶಕ ವ್ಯವಸ್ಥೆಯ ಮೇಲೆ ನನಗೆ ನಂಬಿಕೆ ಇದೆ ಎಂದು ಹೇಳಿದರು.
eesanje/url_46_117_8.txt ADDED
@@ -0,0 +1,5 @@
 
 
 
 
 
 
1
+ ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ ರೇವಣ್ಣ ಗೆಳತಿಗೆ ಎಸ್‌‍ಐಟಿ ನೋಟಿಸ್‌‍
2
+ ಬೆಂಗಳೂರು, ಜೂ.8-ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನವಾಗಿರುವ ಆರೋಪಿ ಪ್ರಜ್ವಲ್‌ ರೇವಣ್ಣಗೆ ವಿದೇಶದಲ್ಲಿದ್ದಾಗ ಸಹಾಯ ಮಾಡಿದ ಆತನ ಗೆಳತಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌‍ಐಟಿ ನೋಟಿಸ್‌‍ ನೀಡಿದೆ. ಪೆನ್‌ಡ್ರೈವ್‌ಗಳ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಪ್ರಜ್ವಲ್‌ ಮತದಾನ ಮುಗಿಸಿಕೊಂಡು ಜರ್ಮನಿಗೆ ಹೋಗಿ ಅಡಗಿಕೊಂಡಿದ್ದರು.
3
+ ಸುಮಾರು 34 ದಿನಗಳ ಕಾಲ ಯಾರ ಸಂಪರ್ಕಕ್ಕೂ ಸಿಗದೆ ಜರ್ಮನಿಯಲ್ಲಿದ್ದಾಗ ಪ್ರಜ್ವಲ್‌ಗೆ ಆತನ ಗೆಳತಿ ಸಹಾಯ ಮಾಡಿರುವುದು ಎಸ್‌‍ಐಟಿ ತನಿಖೆಯಿಂದ ಬೆಳಕಿಗೆ ಬಂದಿದೆ.ಈ ಹಿನ್ನೆಲೆಯಲ್ಲಿ ಎಸ್‌‍ಐಟಿ ಅಧಿಕಾರಿಗಳು ಪ್ರಜ್ವಲ್‌ ಗೆಳತಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍ ನೀಡಿದ್ದಾರೆ ಎಂದು ತಿಳಿದುಬಂದಿದೆ.
4
+ ಪ್ರಜ್ವಲ್‌ ವಿದೇಶದಲ್ಲಿದ್ದಾಗ ಆತನ ಗೆಳತಿ ಸಹಾಯ ಮಾಡಿರುವ ಬಗ್ಗೆ ಎಸ್‌‍ಐಟಿಗೆ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಎಸ್‌‍ಐಟಿ ಅಧಿಕಾರಿಗಳು ಪ್ರಜ್ವಲ್‌ ಸ್ನೇಹಿತೆಗೆ ನೋಟಿಸ್‌‍ ನೀಡಿದ್ದಾರೆ.ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ತನಿಖೆಗಾಗಿ ಸರ್ಕಾರ ಎಸ್‌‍ಐಟಿ ರಚನೆ ಮಾಡಿದೆ.
5
+ ಪ್ರಕರಣ ದಾಖಲಾದ ನಂತರ ಪ್ರಜ್ವಲ್‌ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍ ನೀಡಿದ್ದರೂ ಬಂದಿರಲಿಲ್ಲ. ಎರಡು ಬಾರಿ ವಿಮಾನದ ಟಿಕೆಟ್‌ ಬುಕ್‌ ಮಾಡಿ ಕೊನೆ ಕ್ಷಣದಲ್ಲಿ ಪ್ರಜ್ವಲ್‌ ಅದನ್ನು ರದ್ದುಪಡಿಸಿದ್ದರು. ತದನಂತರ ಮೇ 31ರಂದು ಮಧ್ಯರಾತ್ರಿ ಬೆಂಗಳೂರಿಗೆ ಪ್ರಜ್ವಲ್‌ ಬಂದಾಗ ಎಸ್‌‍ಐಟಿ ಅಧಿಕಾರಿಗಳು ವಿಮಾನನಿಲ್ದಾಣದಲ್ಲೇ ವಶಕ್ಕೆ ಪಡೆದು ನಂತರ ಬಂಧಿಸಿದ್ದಾರೆ.
eesanje/url_46_117_9.txt ADDED
@@ -0,0 +1,6 @@
 
 
 
 
 
 
 
1
+ ವಾಲ್ಮೀಕಿ ಅಭಿವೃದ್ದಿ ನಿಗಮದ ಭ್ರಷ್ಟಾಚಾರದಲ್ಲಿ ಕೆಲವು ಸಚಿವರು-ಶಾಸಕರು ಭಾಗಿ : ಸಿಬಿಐಗೆ ತನಿಖೆಗೆ ಬಿಜೆಪಿ ಒತ್ತಾಯ
2
+ ಬೆಂಗಳೂರು,ಜೂ.8– ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದಲ್ಲಿ ಇನ್ನೂ ಕೆಲವು ಸಚಿವರು ಮತ್ತು ಶಾಸಕರು ಭಾಗಿಯಾಗಿರುವ ಸಂಶಯ ವ್ಯಕ್ತವಾಗಿದ್ದು, ರಾಜ್ಯ ಸರ್ಕಾರ ಇದನ್ನು ಸಿಬಿಐಗೆ ಒತ್ತಾಯಿಸಬೇಕೆಂದು ಪ್ರತಿಪಕ್ಷ ಬಿಜೆಪಿ ಒತ್ತಾಯಿಸಿದೆ. ಎಸ್‌‍ಐಟಿಯಿಂದ ಈ ಪ್ರಕರಣವನ್ನು ಬೇಧಿಸಲು ಸಾಧ್ಯವಿಲ್ಲ. ಏಕೆಂದರೆ ಇದು ಸರ್ಕಾರದ ಕೆಳಗೆಯೇ ಕಾರ್ಯ ನಿರ್ವಹಿಸುವುದರಿಂದ ಸಚಿವರು ಮತ್ತು ಶಾಸಕರನ್ನು ವಿಚಾರಣೆಗೆ ಕರೆಸಲು ಸಾಧ್ಯವಿಲ್ಲ. ಹೀಗಾಗಿ ಸರ್ಕಾರ ಕೂಡಲೇ ಸಿಬಿಐಗೆ ವಹಿಸುವಂತೆ ಒತ್ತಾಯಿಸಿದೆ.
3
+ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ, ಸಚಿವರಾದ ಶರಣ ಪ್ರಕಾಶ್‌ ಪಾಟೀಲ್‌ ಅವರ ಕಾರ್ಯಾಲಯದ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಯೂನಿಯನ್‌ ಬ್ಯಾಂಕಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ನಾಶ ಮಾಡುವ ಸಂಭವವಿದ್ದು ಅವುಗಳನ್ನು ಕೂಡ ಸಾಕ್ಷಿಯಾಗಿ ಪರಿಗಣಿಸಬೇಕು ಎಂದು ನ್ಯಾಯಾಲಯದಲ್ಲಿ ಎಸ್‌‍ಐಟಿ ವಶದಲ್ಲಿರುವ 8ನೇ ಆರೋಪಿ ಹೇಳಿರುವುದು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕೆಂದು ಆಗ್ರಹಿಸಿದೆ.
4
+ ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದ ಅವ್ಯವಹಾರ ಸರ್ಕಾರದ ಮುಖ್ಯಮಂತ್ರಿ ಆದಿಯಾಗಿ ಕಾಂಗ್ರೆಸ್ಸಿನ ಬಹುತೇಕ ನಾಯಕರು ಸೇರಿಕೊಂಡು ಮಾಡಿರುವ ಮಹಾನ್‌ ಭ್ರಷ್ಟಾಚಾರ ಎಂದು ವಾಗ್ದಾಳಿ ನಡೆಸಿದೆ.
5
+ ತನ್ನ ಮೊಬೈಲ್‌ನಲ್ಲಿ ನಿಗಮದ ಅಧ್ಯಕ್ಷರಾದ ಬಸವರಾಜ್‌ ದದ್ದಲ್‌ ಜೊತೆ ನಡೆಸಿರುವ ಸಂಭಾಷಣೆಯನ್ನು ವಶಪಡಿಸಿಕೊಂಡಿದ್ದು ಅದನ್ನು ನಾಶ ಮಾಡುವ ಸಂಭವವಿರುತ್ತದೆ. ಹಾಗಾಗಿ ಅದರ ಒಂದು ಪ್ರತಿಯನ್ನು ನ್ಯಾಯಾಲಯ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದೆ.
6
+ ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಭಾಗಿಯಾಗಿರುವ ಈ ಒಂದು ಹಗರಣವನ್ನು ಎಸ್‌‍ಐಟಿ ನಿಷ್ಪಕ್ಷಪಾತ ತನಿಖೆ ನಡೆಸುವುದು ಅಸಾಧ್ಯ, ಆದಕಾರಣ ಸಿದ್ದರಾಮಯ್ಯನವರು ಈ ಪ್ರಕರಣವನ್ನು ಸಿಬಿಐಗೆ ವಹಿಸಿ ತಾವು ಕೂಡ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
eesanje/url_46_118_1.txt ADDED
@@ -0,0 +1,5 @@
 
 
 
 
 
 
1
+ ಮೇ ತಿಂಗಳಿನಲ್ಲಿ ರಾಜ್ಯ ವಾಣಿಜ್ಯ ತೆರಿಗೆ ಸಂಗ್ರಹಣೆಯಲ್ಲಿ 2240.32 ಕೋಟಿ ರೂ. ಕುಸಿತ
2
+ ಬೆಂಗಳೂರು,ಜೂ.8-ರಾಜ್ಯ ವಾಣಿಜ್ಯ ತೆರಿಗೆ ಸಂಗ್ರಹಣೆಯು ಮೇ ತಿಂಗಳಿನಲ್ಲಿ 7424.31 ಕೋಟಿ ರೂ. ಆಗಿದೆ. ಕಳೆದ ಏಪ್ರಿಲ್‌ ತಿಂಗಳಿಗೆ ಹೋಲಿಸಿದರೆ ಮೇ ತಿಂಗಳ ತೆರಿಗೆ ಸಂಗ್ರಹ 2240.32 ಕೋಟಿ ರೂ.ನಷ್ಟು ಕಡಿಮೆಯಾಗಿದೆ.
3
+ ಆದರೆ ಕಳೆದ ವರ್ಷದ ಮೇ ತಿಂಗಳಿಗೆ ಹೋಲಿಸಿದರೆ ಈ ಬಾರಿ ತೆರಿಗೆ ಸಂಗ್ರಹ ಪ್ರಮಾಣ ಏರಿಕೆಯಾಗಿದೆ. ಸುಮಾರು 3 ಸಾವಿರ ಕೋಟಿಗೂ ಹೆಚ್ಚು ಹೆಚ್ಚಳವಾಗಿದೆ. ಸರಕು ಸೇವಾ ತೆರಿಗೆ ಕರ್ನಾಟಕ ಮಾರಾಟ ತೆರಿಗೆ ಹಾಗೂ ವೃತ್ತಿ ತೆರಿಗೆ ಸೇರಿ ಏಪ್ರಿಲ್‌-ಮೇ ತಿಂಗಳಿನಲ್ಲಿ 17088.94 ಕೋಟಿ ರೂ. ಸಂಗ್ರಹ ಇರುವುದು ವಾಣಿಜ್ಯ ತೆರಿಗೆಗಳ ಇಲಾಖೆಯ ಮಾಹಿತಿಯಿಂದ ತಿಳಿದುಬಂದಿದೆ.
4
+ ಮೇ ತಿಂಗಳಿನಲ್ಲಿ 5,573.23 ಕೋಟಿ ಸರಕು ಸೇವಾ ತೆರಿಗೆ, 1731.48 ಮಾರಾಟ ತೆರಿಗೆ ಹಾಗೂ 119.60 ಕೋಟಿ ರೂ. ವೃತ್ತಿ ತೆರಿಗೆ ಸಂಗ್ರಹವಾಗಿದೆ. ಏಪ್ರಿಲ್‌-ಮೇ ತಿಂಗಳಿನಲ್ಲಿ 13,251.10 ಕೋಟಿ ಸರಕು ಸೇವಾ ತೆರಿಗೆ, 3542.80 ಮಾರಾಟ ತೆರಿಗೆ ಹಾಗೂ 295.04 ವೃತ್ತಿ ತೆರಿಗೆ ಸಂಗ್ರಹ ಮಾಡಲಾಗಿದೆ.
5
+ ಕಳೆದ ವರ್ಷಕ್ಕೆ ಹೋಲಿಸಿದರೆ ಏಪ್ರಿಲ್‌-ಮೇ ತಿಂಗಳಿನಲ್ಲಿ ಈ ವರ್ಷ ತೆರಿಗೆ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ.
eesanje/url_46_118_10.txt ADDED
@@ -0,0 +1,7 @@
 
 
 
 
 
 
 
 
1
+ ಚಾಲಕನ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಪಲ್ಟಿಯಾಗಿ 3 ಮಂದಿ ಸ್ಥಳದಲ್ಲೇ ಸಾವು
2
+ ಗೌರಿಬಿದನೂರು, ಜೂ.7-ಚಾಲಕನ ನಿಯಂತ್ರಣ ತಪ್ಪಿದ ಕಾರು ಅಪಘಾತಕ್ಕೀಡಾಗಿ ಅದರಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ನಗರಗೆರೆ ಹೋಬಳಿಯ ವಾಟದ ಹೊಸಹಳ್ಳಿ ಗ್ರಾಮದ ಬಳಿಯ ತಿರುವಿನಲ್ಲಿ ತಡರಾತ್ರಿ ನಡೆದಿದೆ.
3
+ ತಾಲೂಕಿನ ಬಿ.ತಾಂಡ ವಾಸಿ ಶ್ರೀಧರ್‌ ನಾಯಕ್‌ (28), ಚಿಕ್ಕಬಳ್ಳಾಪುರದ ಪೆರೆಸಂದ್ರದ ವೇಣುಗೋಪಾಲ್‌(38), ಬೆಲ್ಲಾಳಹಳ್ಳಿಯ ಮಂಜುನಾಥ್‌ (37) ಮೃತಪಟ್ಟವರು. ದಾವಣಗೆರೆ ನಿವಾಸಿ ಶಿವಕುಮಾರ್‌ (38) ಗಾಯಗೊಂಡಿದ್ದಾರೆ. ಇವರೆಲ್ಲರೂ ಬೆಸ್ಕಾಂ ನೌಕರರು ಎಂದು ಪೊಲೀಸರು ತಿಳಿಸಿದ್ದಾರೆ.
4
+ ಕರ್ತವ್ಯ ನಿಮಿತ್ತ ವೇಣುಗೋಪಾಲ್‌ ಅವರ ಬ್ರಿಜಾ ಕಾರಿನಲ್ಲಿ ನಗರಗೆರೆಗೆ ತೆರಳಿದ್ದು, ಗೌರಿಬಿದನೂರಿಗೆ ವಾಪಸ್‌ ಬರುವಾಗ ಈ ದುರಂತ ಸಂಭವಿಸಿದೆ.ಅಪಘಾತದ ರಭಸಕ್ಕೆ ಕಾರು ಹಳ್ಳಕ್ಕೆ ಉರುಳಿ ಬಿದ್ದು ಮರವೊಂದಕ್ಕೆ ಕಚ್ಚಿಕೊಂಡಿದೆ. ಅದರಲ್ಲಿದ್ದ ಮೂವರು ಚೆಲ್ಲಾಪಿಲ್ಲಿಯಾಗಿ ಹೊರಗೆ ಬಿದ್ದು ರೆಂಬೆಕೊಂಬೆಗಳಿಗೆ ಕಚ್ಚಿಕೊಂಡು ಮೃತಪಟ್ಟಿದ್ದರೆ, ಒಬ್ಬರು ಕಾರಿನಲ್ಲೇ ಸಿಲುಕಿದ್ದರು.
5
+ ಮೃತರು ವಾಟದಹೊಸಹಳ್ಳಿ ಬೆಸ್ಕಾಂ ವಿಭಾಗದಲ್ಲಿ ಲೈನ್‌ಮೆನ್‌ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಾರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ.
6
+ ಈ ಘೋರ ಅಪಘಾತ ರಾತ್ರಿ ನಡೆದಿದ್ದು , ಇಂದು ಬೆಳಗಿನವರೆಗೂ ಯಾರಿಗೂ ಗೊತ್ತಾಗಿಲ್ಲ. ಗ್ರಾಮಸ್ಥರು ಇದನ್ನು ನೋಡಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಶಿವಕುಮಾರ್‌ ಪ್ರಜ್ಞೆ ತಪ್ಪಿ ರಾತ್ರಿ ಇಡೀ ಅಲ್ಲೇ ಕಳೆದಿದ್ದಾರೆ.
7
+ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಎಸ್‌ಪಿ ಡಿ.ಎಲ್‌.ನಾಗೇಶ್‌, ಅಡಿಷನಲ್‌ ಎಸ್‌ಪಿ ಕಾಸೀಮ್‌, ಡಿವೈಎಸ್‌ಪಿ ಶಿವಕುಮಾರ್‌, ಸಿಪಿಐ ಕೆ.ಪಿ.ಸತ್ಯನಾರಾಯಣ್‌, ಗ್ರಾಮಾಂತರ ಠಾಣೆಯ ಎಸ್‌ಐ ರಮೇಶ್‌ ಗುಗ್ಗರಿ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರೇನ್‌ ಮೂಲಕ ಮೃತ ದೇಹಗಳನ್ನು ಹೊರತೆಗೆಸಿದ್ದಾರೆ.ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
eesanje/url_46_118_11.txt ADDED
@@ -0,0 +1,6 @@
 
 
 
 
 
 
 
1
+ ಜೆಡಿಎಸ್‌ಗೆ ಮತ್ತೊಂದು ಜಯ; ಮೈಸೂರಿನಲ್ಲಿ ಕಾಂಗ್ರೆಸ್‌ಗೆ ಮುಖಭಂಗ
2
+ ಬೆಂಗಳೂರು, ಜೂ.6- ವಿಧಾನ ಪರಿಷತ್ತಿನ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕೆ.ವಿವೇಕಾನಂದ ಅವರು ಭರ್ಜರಿ ಜಯ ಸಾಧಿಸಿದ್ದಾರೆ. ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ವಿವೇಕಾನಂದ ಅವರು ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಅವರ ವಿರುದ್ಧ ಗೆಲುವಿನ ನಗೆ ಬೀರಿದ್ದಾರೆ.
3
+ ಲೋಕಸಭೆ ಚುನಾವಣೆಯ ಗೆಲುವಿನ ಸಂಭ್ರಮದಲ್ಲಿರುವ ಜೆಡಿಎಸ್‍ಗೆ ವಿವೇಕಾನಂದ ಅವರ ಗೆಲುವು ಮತ್ತಷ್ಟು ಖುಷಿ ತಂದರೆ, ಕಾಂಗ್ರೆಸ್‍ನ ಹೀನಾಯ ಸೋಲು ಪಕ್ಷಕ್ಕೆ ಶಾಕ್ ನೀಡಿದೆ. ಮೈಸೂರು-ಕೊಡಗು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರು ಸೋಲುಂಡ ಬೆನ್ನಲ್ಲೇ ಈಗ ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಹೀನಾಯವಾಗಿ ಸೋಲನ್ನು ಅನುಭವಿಸಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೀವ್ರ ಮುಖಭಂಗವಾದಂತಾಗಿದೆ. ಮುಖ್ಯಮಂತ್ರಿ ತವರಿನಲ್ಲಿ ಈ ಎರಡೂ ಚುನಾವಣೆಯಲ್ಲೂ ಪರಾಭವವಾಗಿರುವುದು ಗಮನಾರ್ಹ.
4
+ ವಾಲ್ಮೀಕಿ ಹಗರಣವನ್ನು ಗಂಭೀರವಾಗಿ ಪರಿಗಣಿಸಿದ ಇಡಿ
5
+ ಮತ ಎಣಿಕೆಯ ಆರಂಭದಿಂದಲ್ಲೂ ವಿವೇಕಾನಂದ ಅವರು ಮುನ್ನಡೆ ಕಾಯ್ದುಕೊಂಡು ಬಂದಿದ್ದರು. ಗೆಲುವಿನ ಖೋಟಾ ತಲುಪಿದ ಕೂಡಲೇ ಅವರ ಜಯ ಅ„ಕೃತವಾಗಿ ದಾಖಲಾಯಿತು. ಸತತವಾಗಿ ಶಿಕ್ಷಕರ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತಿದ್ದ ಮರಿತಿಬ್ಬೇಗೌಡ ಅವರಿಗೆ ಈ ಸೋಲಿನಿಂದ ತೀವ್ರ ಮುಖಭಂಗವಾಗಿದೆ. ಮೊದಲ ಬಾರಿಗೆ ಸ್ಪರ್ಧಿಸಿದ್ದ ವಿವೇಕಾನಂದ ಅವರು ಮೂರುವರೆ ಸಾವಿರಕ್ಕೂ ಹೆಚ್ಚು ಬಹುಮತಗಳಿಂದ ಗೆಲುವು ಸಾಧಿಸಿದ್ದು ವಿಶೇಷವಾಗಿತ್ತು.
6
+ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕರೇ ಚಲಾಯಿಸಿದ್ದ ಮತಗಳ ಪೈಕಿ ಏಳು ನೂರಕ್ಕೂ ಹೆಚ್ಚು ಮತಗಳು ಅಸಿಂಧುವಾಗಿರುವುದು ಗಮನಾರ್ಹವಾಗಿದೆ.
eesanje/url_46_118_12.txt ADDED
@@ -0,0 +1,5 @@
 
 
 
 
 
 
1
+ ಇನ್ನೊಂದು ವಾರ ರಾಜ್ಯದಲ್ಲಿ ಮಳೆ ಮುಂದುವರಿಕೆ
2
+ ಬೆಂಗಳೂರು, ಜೂ.6-ನೈರುತ್ಯ ಮುಂಗಾರು ಮಳೆ ಚೇತರಿಕೆ ಕಂಡಿದ್ದು, ರಾಜ್ಯಾದ್ಯಂತ ಮಳೆಯಾಗುತ್ತಿದೆ. ಇದರಿಂದ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಕೆಲವೆಡೆ ಭಾರಿ ಮಳೆಯಾಗಿದ್ದರೆ, ಮತ್ತೆ ಕೆಲವೆಡೆ ಸಾಧಾರಣ ಮಳೆಯಾಗಿದೆ.
3
+ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜೂನ್‌ 14 ರವರೆಗೆ ರಾಜ್ಯಾದ್ಯಂತ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಜೂನ್‌ 9 ರವರೆಗೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮತ್ತು ಜೂನ್‌ 8 ರಿಂದ 12 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಕರಾವಳಿಗೆ ಹೊಂದಿಕೊಂಡಿರುವ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.
4
+ ಉತ್ತರ ಕರ್ನಾಟಕ ಭಾಗದಲ್ಲಿ ಜೂ. 11 ರವರೆಗೆ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಜೂನ್‌ 8 ರಿಂದ 11 ರವರೆಗೆ ಕೃಷ್ಣಾ ನದಿಯ ಜಲಾನಯನ ಪ್ರದೇಶದ ಮೇಲ್ಭಾಗದಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಒಳಹರಿವು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.
5
+ ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸುತ್ತ ಮುತ್ತಲ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಹಲವು ಕಡೆಗಳಲ್ಲಿ ಮಳೆಯಾಗಲಿದೆ.ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ,ಬೆಳಗಾವಿ ಸೇರಿದಂತೆ ಕರಾವಳಿ ಹಾಗೂ ಉತ್ತರ ಕರ್ನಾಟದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆಯು ಯಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.
eesanje/url_46_118_2.txt ADDED
@@ -0,0 +1,10 @@
 
 
 
 
 
 
 
 
 
 
 
1
+ ರೌಡಿಶೀಟರ್‌ ಚೈಲ್ಡ್‌‍ ರವಿ ಮರ್ಡರ್‌ ಪ್ರಕರಣದಲ್ಲಿ ನಾಲ್ವರ ಬಂಧನ
2
+ ಹಾಸನ, ಜೂ.8-ರೌಡಿಶೀಟರ್‌, ಚೈಲ್ಡ್‌‍ ರವಿ ಹತ್ಯೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಮಹಮದ್‌ ಸುಜಿತ ತಿಳಿಸಿದರು.
3
+ ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಹತ್ಯೆ ಪ್ರಕರಣ ಸಂಬಂಧ ಹಾಸನ ನಗರದ ಪ್ರೀತಮ್‌ (27), ಕೀರ್ತಿ( 26), ರಂಗನಾಥ್‌ (26), ಅಮಿತ್‌ (31) ಎಂಬುವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
4
+ ರವಿ ಹಾಗೂ ಪ್ರೀತಂ ನಡುವೆ ಕ್ಷುಲ್ಲಕ ಕಾರಣಕ್ಕೆ ಪದೇಪದೇ ಮಾತಿನ ಚಕಮಕಿ ಹಾಗೂ ಗಲಾಟೆಗಳು ನಡೆದಿದ್ದು, ಕೊಲೆ ನಡೆಯುವ ದಿನವೂ ಸಹ ಚೈಲ್ಡ್‌‍ ರವಿಯೊಂದಿಗೆ ಪ್ರೀತಂ ಮೊಬೈಲ್‌ ಸಂಭಾಷಣೆ ವೇಳೆ ಮಾತಿಗೆ ಮಾತು ಬೆಳೆದು ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದರು.
5
+ ಹತ್ಯೆ ಆರೋಪಿ ಪ್ರೀತಂ ವಿರುದ್ಧ ಈಗಾಗಲೇ ನಾಲ್ಕು ಕೊಲೆ ಪ್ರಕರಣ ದಾಖಲಾಗಿದ್ದು , ಹತ್ಯೆಗೀಡಾದ ರವಿ ವಿರುದ್ಧ ಕೊಲೆ ಸೇರಿದಂತೆ 304 , 307, 504ರ ಅಡಿ ಏಳು ಪ್ರಕರಣಗಳು ದಾಖಲಾಗಿದ್ದವು. ರವಿ ಹತ್ಯೆಯಾದ ನಂತರ ರವಿ ಪತ್ನಿ , ಪ್ರೀತಂ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿದ್ದರು. ಈ ದೂರಿನ ಅನ್ವಯ ತನಿಖೆ ಕೈಗೊಂಡು ಮಾಹಿತಿ ಕಲೆ ಹಾಕುವ ಮೂಲಕ ಹಾಸನ ತಾಲೂಕಿನ ಗ್ಯಾರಹಳ್ಳಿ ಮಧ್ಯದ ಅಂಗಡಿ ಬಳಿ ಆರೋಪಿಗಳನ್ನು ವಶಕ್ಕೆ ಪಡೆಯಲಾಯಿತು ಎಂದು ಎಸ್ಪಿ ತಿಳಿಸಿದರು.
6
+ ರೌಡಿಸಂ ವಿರುದ್ಧ ಕಠಿಣ ಕ್ರಮ :ಜಿಲ್ಲೆಯಲ್ಲಿ ಅಪರಾಧ ಪ್ರಕರಣ ಹಾಗೂ ರೌಡಿಸಂ ತಹಬದಿಗೆ ತರುವಲ್ಲಿ ಇಲಾಖೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ, ಚುನಾವಣೆ ಸಂದರ್ಭದಲ್ಲಿಯೂ 59 ಮಂದಿಯನ್ನು ಗಡಿಪಾರು ಮಾಡಲಾಗಿತ್ತು ಎಂದು ಎಸ್ಪಿ ವಿವರಿಸಿದರು.ಅಪರಾಧ ಪ್ರಕರಣವನ್ನು ತಡೆಯುವ ನಿಟ್ಟಿನಲ್ಲಿ ಗೊಂಡಾ ಕಾಯ್ದೆಯಡಿ 11 ಮಂದಿ ವಿರುದ್ಧ ಈಗಾಗಲೇ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದರು.
7
+ ಟ್ರಾಫಿಕ್‌ ಸಮಸ್ಯೆಗೆ ಶೀಘ್ರದಲ್ಲಿ ಕ್ರಮ:ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್‌ ಸಮಸ್ಯೆಗೆ ಮುಕ್ತಿಯಾಡಲು ಇನ್ನೆರಡು ದಿನದಲ್ಲಿ ಪ್ರಮುಖವಾಗಿ ಬಿಎಮ್‌ ರಸ್ತೆ, ಎನ್‌.ಆರ್‌. ಸರ್ಕಲ್‌‍, ಸಾಲಿಗಾಮೆ ರಸ್ತೆ, ಸೇರಿದಂತೆ ಪ್ರಮುಖ ವೃತ್ತಗಳ ಅಂಗಡಿ ಮಾಲೀಕರ ಸಭೆಯನ್ನು ಕರೆಯಲಾಗುತ್ತಿದೆ ಎಂದರು.
8
+ ಈಗಾಗಲೇ ಶಾಲೆಗಳು ಆರಂಭವಾಗಿರುವುದರಿಂದ ಶಂಕರಮಠ ರಸ್ತೆ, ಕೆ.ಆರ್‌.ಪುರಂ ಸಂಪಿಗೆ ರಸ್ತೆ ಹಾಗೂ ಇತರೆ ಬಡಾವಣೆಗಳಲ್ಲಿನ ಆಸ್ಪತ್ರೆ ಮತ್ತು ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರನ್ನು ಕರೆದು ಪಾರ್ಕಿಂಗ್‌ ಸಮಸ್ಯೆ ಉಂಟಾಗದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು ಹಾಗೂ ಪಾರ್ಕಿಂಗ್‌ಗೆ ಸೂಕ್ತ ಸ್ಥಳವನ್ನು ಗುರುತಿಸಲಾಗುವುದು ಎಂದರು.
9
+ ನಗರದಲ್ಲಿ ಮತ್ತೆ ವೀಲಿಂಗ್‌ ಹಾಗೂ ಕರ್ಕಶ ದ್ವನಿವುಳ್ಳ ಸೈಲೆನ್ಸರ���‌ ಗಳನ್ನು ಬಳಕೆ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬರುತ್ತಿದ್ದು ಆಟೋ ಚಾಲಕರು ಸಹ ಗ್ರಾಹಕರೊಂದಿಗೆ ಅಂಚಿತವಾಗಿ ವರ್ತಿಸುತ್ತಿರುವುದು ಮತ್ತು ಬೇಕಾಬಿಟ್ಟಿ ಪಾರ್ಕಿಂಗ್‌ ಮಾಡುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿದೆ.
10
+ ಆದ್ದರಿಂದ ಆಟೋ ಚಾಲಕರ ಮಾಲೀಕರ ಸಭೆ ಕರೆದು ಕಟ್ಟುನಿಟಿನ ಸೂಚನೆ ನೀಡಲಾಗುವುದು ಮತ್ತು ವೀಲಿಂಗ್‌ ಹಾಗೂ ಕರ್ಕಶ ಸೈಲೆನ್ಸರ್‌ ಬಳಸಿ ದ್ವಿಚಕ್ರ ವಾಹನ ಚಾಲನೆ ಮಾಡುವವರಿಗೆ ಇಲಾಖೆಯಿಂದ ದಂಡ ಹಾಗೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌‍ಪಿ ಎಚ್ಚರಿಕೆ ನೀಡಿದರು.
eesanje/url_46_118_3.txt ADDED
@@ -0,0 +1,3 @@
 
 
 
 
1
+ 30 ಮಂಗಗಳನ್ನು ಕೊಂದ ಮನುಷ್ಯತ್ವ ಮರೆತ ಮಾನವರು
2
+ ಚಿಕ್ಕಮಗಳೂರು, ಜೂ.8-ಬಾಳೆಹಣ್ಣಿಗೆ ಮತ್ತು ಬರುವ ಔಷಧವಿಟ್ಟು 30 ಮಂಗಗಳನ್ನು ಕೊಂದ ಅಮಾನುಷ ಘಟನೆ ಎನ್‌.ಆರ್‌.ಪುರ ತಾಲೂಕಿನ ದ್ಯಾವಣ ಬಳಿ ನಡೆದಿದೆ.ಒಟ್ಟು 16 ಗಂಡು, 14 ಹೆಣ್ಣು, 4 ಮರಿಗಳನ್ನು ಕೊಂದಿದ್ದು, ರಸ್ತೆ ಬದಿಗೆ ತಂದು ಪಾಪಿಗಳು ಎಸೆದು ಹೋಗಿದ್ದಾರೆ.
3
+ ಮಂಗಗಳು ಜ್ಞಾನ ತಪ್ಪಿದ ಬಳಿಕ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. 30 ಮಂಗಗಳ ತಲೆಯಲ್ಲೂ ಒಂದೇ ರೀತಿ ಗಾಯವಾಗಿದ್ದು, ರಕ್ತ ಸುರಿದು ಮೃತಪಟ್ಟಿವೆ.ಸ್ಥಳಕ್ಕೆ ಡಿ.ಎಫ್‌.ಓ, ಆರ್‌.ಎಫ್‌.ಓ, ಪಿ.ಎಸ್‌‍.ಐ. ಪಶುಸಂಗೋಪನೆ, ಪಶುವೈದ್ಯ, ಪಂಚಾಯಿತಿ, ಆಶಾಕಾರ್ಯರ್ತೆಯರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಂಗಗಳ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಂಗಗಳ ಮಾರಣ ಹೋಮಕ್ಕೆ ಪ್ರಾಣಿಪ್ರಿಯರು ಕಿಡಿ ಕಾರಿದ್ದಾರೆ.
eesanje/url_46_118_4.txt ADDED
@@ -0,0 +1,6 @@
 
 
 
 
 
 
 
1
+ ಉತ್ತರಾಖಂಡ್‌ದಲ್ಲಿ ಮೃತಪಟ್ಟಿದ್ದ 9 ಮಂದಿಯ ಮೃತ ದೇಹಗಳು ಸಂಬಂಧಿಕರಿಗೆ ಹಸ್ತಾಂತರ
2
+ ಬೆಂಗಳೂರು,ಜೂ.6-ಉತ್ತರಾಖಂಡ್‌ ಶಹಸ್ತ್ರತಾಳ್‌ ಪ್ರದೇಶದಲ್ಲಿ ಚಾರಣದ ವೇಳೆ ಹಿಮಪಾತಕ್ಕೆ ಸಿಲುಕಿ ಜೀವನರಣದ ಹೋರಾಟದಲ್ಲಿದ್ದ ರಾಜ್ಯದ 13 ಚಾರಣಿಗರ ತಂಡವನ್ನು ರಕ್ಷಿಸಿ ಬೆಂಗಳೂರಿಗೆ ಕರೆತರಲಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ಮೃತಪಟ್ಟಿದ್ದ 9 ಮೃತ ದೇಹಗಳನ್ನು ಬೆಂಗಳೂರಿಗೆ ತಂದು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ.
3
+ ಮೃತ ದೇಹಗಳು ವಿಮಾನದ ಮೂಲಕ ಇಂದು ಬೆಳಿಗ್ಗೆ ಬೆಂಗಳೂರು ತಲುಪಿವೆ. ಬದುಕುಳಿದಿದ್ದ ಚಾರಣಿಗರು ನಿನ್ನೆ ರಾತ್ರಿ ಬೆಂಗಳೂರಿಗೆ ಆಗಮಿಸಿದರು. ಸುರಕ್ಷಿತವಾಗಿ ಚಾರಣಿಗರು ಮರಳಿರುವುದನ್ನು ಕಂಡು ಅವರ ಪೋಷಕರು, ಬಂಧು, ಮಿತ್ರರು ನಿಟ್ಟುಸಿರು ಬಿಟ್ಟಿದ್ದಾರೆ. ಮಕ್ಕಳು ಸುರಕ್ಷಿತವಾಗಿ ಮರಳಿರುವುದನ್ನು ಕಂಡು ಪೋಷಕರು ರಾಜ್ಯ ಸರ್ಕಾರ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
4
+ ಉತ್ತರಾಖಂಡ್‌ಗೆ ತೆರಳಿ ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸಿದ ಕೃಷ್ಣಬೈರೇಗೌಡ ಅವರಿಗೆ ಕರ್ನಾಟಕ ಪರ್ವತಾರೋಹಣ ಸಂಘದ ಸದಸ್ಯರು ಧನ್ಯವಾದ ಅರ್ಪಿಸಿದ್ದಾರೆ.ಉತ್ತರಾಖಂಡ್‌ ಶಹಸ್ತ್ರತಾಳ್‌ ಪ್ರದೇಶದಲ್ಲಿ ಮೃತಪಟ್ಟಿದ್ದ 9 ಚಾರಣಿಗರ ಮೃತ ದೇಹಗಳನ್ನು ದೆಹಲಿಯಿಂದ ವಿವಿಧ ವಿಮಾನಗಳ ಮೂಲಕ ಬೆಂಗಳೂರಿಗೆ ತರಲಾಗಿದ್ದು, ಮೃತದೇಹಗಳನ್ನು ಅವರ ಬಂಧುಗಳಿಗೆ ಹಸ್ತಾಂತರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದ್ದಾರೆ.
5
+ ಪದಿನಿ ಹೆಗ್ಡೆ, ವೆಂಕಟೇಶ ಪ್ರಸಾದ್‌, ಆಶಾ ಸುಧಾಕರ್‌, ಪದನಾಭ ಕುಂದಾಪು ಕೃಷ್ಣಮೂರ್ತಿ, ಸಿಂಧು ವಕೇಕಲಂ, ವಿನಾಯಕ ಮುಂಗೂರ್ವಾಡಿ, ಸುಜಾತ ಮುಂಗೂರ್ವಾಡಿ, ಚೈತ್ರ ಪ್ರಣೀತ್‌, ಅನಿತ ರಂಗಪ್ಪ ಅವರ ಮೃತ ದೇಹಗಳನ್ನು ಬೆಂಗಳೂರಿಗೆ ತರಲಾಗಿದೆ.ವಿಮಾನದ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೃತ ದೇಹಗಳನ್ನು ತರಲಾಗಿದ್ದು, ಆಯಾ ಮೃತ ದೇಹಗಳನ್ನು ಸಂಬಂಧಿಕರಿಗೆ ನೀಡಲಾಗಿದೆ.
6
+ ಸತತ ಎರಡು ದಿನಗಳ ಕಾಲ ನಿರಂತರ ಶ್ರಮವಹಿಸಿ ಬದುಕಿದ್ದ ಚಾರಣಿಗರನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಹಾಗೆಯೇ ಮೃತದೇಹಗಳನ್ನು ವಾರಸುದಾರರಿಗೆ ತಲುಪಿಸಿ ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದೆ.ಮೃತಪಟ್ಟವರ ಆತಕ್ಕೆ ಸದ್ಗತಿ ದೊರೆಯಲಿ ಹಾಗೂ ಮೃತರ ಬಂಧು ಬಾಂಧವರಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಅವರು ಈ ಸಂದರ್ಭದಲ್ಲಿ ಪ್ರಾರ್ಥಿಸಿದ್ದಾರೆ.
eesanje/url_46_118_5.txt ADDED
@@ -0,0 +1,3 @@
 
 
 
 
1
+ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ನಿವೃತ್ತ ಐಜಿಪಿ ಯು.ನಿಸಾರ್‌ ಅಹಮದ್ ನೇಮಕ
2
+ ಬೆಂಗಳೂರು,ಜೂ.6-ಲೋಕಸಭಾ ಚುನಾವಣೆ ನೀತಿ ಸಂಹಿತೆ ಮುಗಿದ ಬೆನ್ನಲ್ಲೇ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ನಿವೃತ್ತ ಐಜಿಪಿ ಯು.ನಿಸಾರ್‌ ಅಹದ್‌ ಅವರನ್ನು ರಾಜ್ಯ ಸರ್ಕಾರ ನಾಮ ನಿರ್ದೇಶನ ಮಾಡಿದೆ.
3
+ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿ ನಿಸಾರ್‌ ಅಹದ್‌ ಅವರನ್ನು ನೇಮಕ ಮಾಡಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇಂದು ಆದೇಶ ಹೊರಡಿಸಿದೆ. ಇಂದಿನಿಂದ ಮುಂದಿನ ಆದೇಶದವರೆಗೆ ಅವರು ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಬಹುದಾಗಿದೆ.ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಕಾಯ್ದೆ 1994ರ ಸೆಕ್ಷನ್‌ 3(1) ಮತ್ತು 4 (1)ರಡಿಯಲ್ಲಿ ಸರ್ಕಾರ ಈ ಆದೇಶ ಹೊರಡಿಸಿದೆ.
eesanje/url_46_118_6.txt ADDED
@@ -0,0 +1,6 @@
 
 
 
 
 
 
 
1
+ ಉತ್ತರಾಖಂಡ ಚಾರಣ ದುರಂತದಲ್ಲಿ ಹುಟ್ಟಿದ ದಿನವೇ ಸಾವನ್ನಪ್ಪಿದ ಹುಬ್ಬಳ್ಳಿಯ ದಂಪತಿ
2
+ ಹುಬ್ಬಳ್ಳಿ,:ಉತ್ತರಾಖಂಡದ ಸಹಸ್ರತಾಲ್ ಶಿಖರಕ್ಕೆ ಟ್ರಕ್ಕಿಂಗ್ ತೆರಳಿದ್ದ ರಾಜ್ಯದ 22 ಜನರಲ್ಲಿ 9 ಮಂದಿ ಮೃತಪಟ್ಟಿದ್ದು, ಇದರಲ್ಲಿ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ದಂಪತಿಯೂ ಸೇರಿದ್ದಾರೆ. ಹುಬ್ಬಳ್ಳಿಯ ವಿನಾಯಕ ಮುಂಗರವಾಡಿ ಹಾಗೂ ಸುಜಾತಾ ಮುಂಗರವಾಡಿ ಮೃತ ದುರ್ದೈವಿಗಳು. ವಿಶೇಷವೆಂದರೆ, ಇವರಿಬ್ಬರ ಹುಟ್ಟಿದ ದಿನಾಂಕವೂ ಒಂದೇ. ಆದರೆ, ಹುಟ್ಟಿದ ವರ್ಷ ಬೇರೆ ಇದೆ. ವಿನಾಯಕ ಜನ್ಮ ದಿನಾಂಕ 03-10-1969 ಆದರೆ, ಸುಜಾತಾ ಮುಂಗರವಾಡಿ ಜನ್ಮ ದಿನಾಂಕ 03-10-1972 ಆಗಿದೆ. ಇಬ್ಬರೂ ಒಂದೇ ದಿನ ಮೃತಪಟ್ಟಿದ್ದು ಕಾಕತಾಳೀಯ.
3
+ ಚಾರಣಕ್ಕೆ ಹೋದ 22 ಮಂದಿಯ ಪೈಕಿ ಹುಬ್ಬಳ್ಳಿಯಲ್ಲಿ ವಾಸವಿದ್ದ ದಂಪತಿ ಜೂನ್ ನಾಲ್ಕರಂದು ಮೃತಪಟ್ಟಿದ್ದಾರೆ. ಮೃತ ದಂಪತಿ ಹುಬ್ಬಳ್ಳಿಯ ಬಿವಿಬಿ ಕಾಲೇಜ್‌ನಲ್ಲಿ 1994ರಲ್ಲಿ ಇಂಜಿನೀಯರಿಂಗ್ ಪದವಿ ಪಡೆದಿದ್ದರು‌. ಇಬ್ಬರೂ 1996 ರಲ್ಲಿ ಉದ್ಯೋಗ ಅರಿಸಿಕೊಂಡು ಬೆಂಗಳೂರಿಗೆ ಹೋಗಿದ್ದರು.
4
+ ಸಮಾಜ ಸೇವೆಯಲ್ಲೂ ಮುಂದುಉತ್ತರ ಕರ್ನಾಟಕ ಸ್ನೇಹಲೋಕ ಟ್ರಸ್ಟ್ ಎಂಬ ಸಂಸ್ಥೆ ಹುಟ್ಟು ಹಾಕಿದ್ದ ವಿನಾಯಕ ಮುಂಗರವಾಡಿ, ಸುಜಾತಾ ಮುಂಗರವಾಡಿ ದಂಪತಿ ಸಮಾಜ ಸೇವೆಯಲ್ಲಿಯೂ ಮುಂದಿದ್ದರು. ಪ್ರತಿ ವರ್ಷ ಚಾರಣಕ್ಕೆ ಹೋಗುತ್ತಿದ್ದರು.
5
+ ದೊರೆಯದ ಟಿಕೆಟ್, ಮಕ್ಕಳು ಜೀವ ಉಳಿಯಿತು :ಈ ಬಾರಿ ಮಕ್ಕಳನ್ನು ಕೂಡ ಚಾರಣಕ್ಕೆ ಕರೆದೊಯ್ಯಲು ದಂಪತಿ ಯೋಜನೆ ಹಾಕಿಕೊಂಡಿದ್ದರು. ಆದರೆ, ಅವರಿಗೆ ಕೇವಲ 2 ಟಿಕೆಟ್ ಮಾತ್ರ ದೊರೆತಿತ್ತು. ಹೀಗಾಗಿ ದಂಪತಿ ಮಾತ್ರ ಚಾರಣಕ್ಕೆ ಹೋಗಿದ್ದರು.
6
+ ಚಾರಣದ ವೇಳೆ ಸಾವಿಗೀಡಾದವರ ಪಾರ್ಥಿವ ಶರೀರವನ್ನು ತವರಿಗೆ ತರುವ ಪ್ರಕ್ರಿಯೆ ಮುಂದುವರಿದಿದೆ. ಸದ್ಯ, ಪತ್ತೆಯಾಗಿರುವ 9 ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಈಗಾಗಲೇ ದೆಹಲಿಯಿಂದ ಎರಡು ಪ್ರತ್ಯೇಕ ಇಂಡಿಗೋ ವಿಮಾನಗಳಲ್ಲಿ 4 ಮೃತದೇಹಗಳನ್ನು ಬೆಂಗಳೂರಿಗೆ ತರಲಾಗಿದೆ. ಇನ್ನು ಅಂತ್ಯಕ್ರಿಯೆನ್ನ ಯಾವಾಗ ಮಾಡತಾರ ಎಂಬಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಬೇಕಾಗಿದೆ
eesanje/url_46_118_7.txt ADDED
@@ -0,0 +1,4 @@
 
 
 
 
 
1
+ ನ್ಯಾಯಾಲಯದ ಮುಂದೆ ರಾಹುಲ್‌ ಹಾಜರ್, ಜಾಮೀನು ಮಂಜೂರು, ಜು.30ಕ್ಕೆ ವಿಚಾರಣೆ ಮುಂದೂಡಿಕೆ
2
+ ಬೆಂಗಳೂರು,ಜೂ.7-ಬಿಜೆಪಿ ನಾಯಕರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಕಾಂಗ್ರೆಸ್‌‍ನ ವರಿಷ್ಠ ನಾಯಕ ರಾಹುಲ್‌ ಗಾಂಧಿ ಇಂದು ನಗರದ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾರೆ. ನಿಯಮಗಳು ಎರಡು ಬಾರಿ ರಾಹುಲ್‌ ಗಾಂಧಿ ವಿಚಾರಣೆಗೆ ಗೈರು ಹಾಜರಾಗಿದ್ದರು. ಖುದ್ದು ಹಾಜರಾಗುವಂತೆ ನ್ಯಾಯಾಧೀಶರು ಸೂಚಿಸಿದ ಹಿನ್ನಲೆಯಲ್ಲಿ ಇಂದು ಬೆಳಗ್ಗೆ ದೆಹಲಿಯಿಂದ ಆಗಮಿಸಿದ್ದ ರಾಹುಲ್‌ ಗಾಂಧಿ ನ್ಯಾಯಾಲಯಕ್ಕೆ ಹಾಜರಾದರು.
3
+ 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರು ಅವರಿಗೆ ಜಾಮೀನು ಮಂಜೂರು ಮಾಡಿ, ಮುಂದಿನ ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿದ್ದಾರೆ.ರಾಹುಲ್‌ ಗಾಂಧಿ ಆಗಮನದ ಹಿನ್ನಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಿಟಿ ಸಿವಿಲ್‌ ಕೋರ್ಟ್‌ವರೆಗೂ ವ್ಯಾಪಕ ಭದ್ರತೆಯನ್ನು ಒದಗಿಸಲಾಗಿತ್ತು.
4
+ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್‌ ಸಿಂಗ್‌ ಸುರ್ಜೆವಾಲ, ಕೆ.ಸಿ.ವೇಣುಗೋಪಾಲ್‌ ಸೇರಿದಂತೆ ಅನೇಕರು ರಾಹುಲ್‌ ಗಾಂಧಿ ಅವರ ಜೊತೆ ಕೋರ್ಟ್‌ಗೆ ಆಗಮಿಸಿದ್ದರು. ವಿಚಾರಣೆಯಲ್ಲಿ ರಾಹುಲ್‌ ಗಾಂಧಿಗೆ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರು 70 ಲಕ್ಷ ರೂ. ಮೌಲ್ಯದ ಆಸ್ತಿಯ ವೈಯಕ್ತಿಕ ಬಾಂಡ್‌ನ ಭದ್ರತೆ ಒದಗಿಸಿದ್ದಾರೆ.
eesanje/url_46_118_8.txt ADDED
@@ -0,0 +1,7 @@
 
 
 
 
 
 
 
 
1
+ 3 ಶಿಕ್ಷಕರ ಹಾಗೂ 3 ಪದವೀಧರ ಕ್ಷೇತ್ರಗಳ ಚುನಾವಣೆ : ಐದು ಕ್ಷೇತ್ರಗಳ ಫಲಿತಾಂಶ ಪ್ರಕಟ
2
+ ಬೆಂಗಳೂರು,ಜೂ.6-ರಾಜ್ಯದ ವಿಧಾನಪರಿಷತ್‌ನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರ ಕ್ಷೇತ್ರಗಳ ಮತ ಎಣಿಕೆ ಪೂರ್ಣಗೊಂಡಿದ್ದು, ಐದು ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್‌‍, ಜೆಡಿಎಸ್‌‍ ತಲಾ ಎರಡು ಕ್ಷೇತ್ರಗಳಲ್ಲಿ ಹಾಗೂ ಬಿಜೆಪಿ ಒಂದು ಕ್ಷೇತ್ರದಲ್ಲಿ ಜಯಗಳಿಸಿವೆ. ಬೆಂಗಳೂರು ಪದವೀಧರ ಕ್ಷೇತ್ರದ ಮತ ಎಣಿಕೆ ತಡರಾತ್ರಿವರೆಗೂ ನಡೆದಿದ್ದು, ಕಾಂಗ್ರೆಸ್‌‍ ಅಭ್ಯರ್ಥಿ ರಾಮೋಜಿಗೌಡ 36729 ಮತಗಳನ್ನು ಪಡೆದು ಜಯಗಳಿಸಿದ್ದಾರೆ.
3
+ ಬಿಜೆಪಿ ಅಭ್ಯರ್ಥಿ ಅ. ದೇವೇಗೌಡ ಅವರು 34888 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. 11841 ಮತಗಳ ಅಂತರದಿಂದ ರಾಮೋಜಿಗೌಡ ಚುನಾಯಿತರಾಗಿದ್ದಾರೆ. ಚಲಾವಣೆಯಾಗಿದ್ದ 80080 ಮತಗಳಲ್ಲಿ 8482 ಮತಗಳು ತಿರಸ್ಕೃತಗೊಂಡಿದ್ದವು. 71598 ಮತಗಳು ಸಿಂಧುವಾಗಿದ್ದವು.
4
+ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‌‍ ಜಯಗಳಿಸಿದ್ದು, ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಪರಾಭವಗೊಂಡಿದ್ದಾರೆ.ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌‍ ಅಭ್ಯರ್ಥಿ ಕೆ.ವಿವೇಕಾನಂದ ಅವರು ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಜಯಗಳಿಸಿದ್ದಾರೆ. ಕಾಂಗ್ರೆಸ್‌‍ ಅಭ್ಯರ್ಥಿ ಮರಿತಿಬ್ಬೇಗೌಡ ಅವರಿಗೆ ಸೋಲುಂಟಾಗಿದೆ.
5
+ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌‍ ಅಭ್ಯರ್ಥಿ ಎಸ್‌‍.ಎಲ್‌.ಭೋಜೇಗೌಡ ಅವರು ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಗೆಲುವು ಸಾಧಿಸಿ ಎರಡನೇ ಬಾರಿಗೆ ಮೇಲನೆ ಪ್ರವೇಶಿಸಿದ್ದಾರೆ.ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ವಿಜೇತರಾಗಿದ್ದಾರೆ. ಕಾಂಗ್ರೆಸ್‌‍ ಅಭ್ಯರ್ಥಿ ಆಯನೂರು ಮಂಜುನಾಥ್‌ ಪರಾಭವಗೊಂಡಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿಭಟ್‌ಗೆ ಮೂರನೇ ಸ್ಥಾನ ದೊರೆತಿದೆ.
6
+ ಈಶಾನ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್‌‍ ಅಭ್ಯರ್ಥಿ ಡಾ.ಚಂದ್ರಶೇಖರ್‌ ಬಸವರಾಜ್‌ ಪಾಟೀಲ್‌ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಅಮರ್‌ನಾಥ್‌ ಪಾಟೀಲ್‌ ಹಿನ್ನಡೆಯಲ್ಲಿದ್ದಾರೆ. ಗೆಲುವಿನ ಕೋಟಾ ಮೊದಲ ಪ್ರಾಶಸ್ತ್ಯದ ಮತ ಲಭಿಸದ ಹಿನ್ನೆಲೆಯಲ್ಲಿ ಎರಡನೆ ಪ್ರಾಶಸ್ತ್ಯದ ಮತ ಎಣಿಕೆ ನಡೆಯುತ್ತಿದ್ದು, ಅಧಿಕೃತ ಫಲಿತಾಂಶ ಪ್ರಕಟವಾಗಬೇಕಿದೆ.
7
+ ಲೋಕಸಭಾ ಚುನಾವಣೆಯಂತೆ ವಿಧಾನ ಪರಿಷತ್‌ ಚುನಾವಣೆಯಲ್ಲೂ ಬಿಜೆಪಿ ಮತ್ತು ಜೆಡಿಎಸ್‌‍ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದವು. ಜೆಡಿಎಸ್‌‍ ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರೆ, ಬಿಜೆಪಿ ಎರಡು ಕ್ಷೇತ್ರ ಸೋತಿದ್ದು, ಒಂದು ಕ್ಷೇತ್ರದಲ್ಲಿ ಜಯಗಳಿಸಿದೆ. ಆದರೆ, ಆಡಳಿತಾರೂಢ ಕಾಂಗ್ರೆಸ್‌‍ ಆರು ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿ ಮೂರು ಕ್ಷೇತ್ರಗಳಲ್ಲಿ ಸೋತು ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದೆ.
eesanje/url_46_118_9.txt ADDED
@@ -0,0 +1,9 @@
 
 
 
 
 
 
 
 
 
 
1
+ ಲೋಕಸಭೆ ಫಲಿತಾಂಶದ ಬೆನ್ನಲ್ಲೇ ಕಾಂಗ್ರೆಸ್‌‍ನಲ್ಲಿ ಮೂಲ-ವಲಸಿಗರ ನಡುವೆ ಕಿತ್ತಾಟ ಜೋರು
2
+ ಬೆಂಗಳೂರು,ಜೂ.7-ಲೋಕಸಭೆಯ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಕಾಂಗ್ರೆಸ್‌‍ನಲ್ಲಿ ಮೂಲ ಹಾಗೂ ವಲಸಿಗ ಕಾಂಗ್ರೆಸಿಗರ ನಡುವೆ ಒಳಬೇಗುದಿ ಹೆಚ್ಚಾಗಿದ್ದು, ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ್‌ ಸವದಿ ವಿರುದ್ದ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ.
3
+ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌‍ ಗೆದ್ದಿದೆ. ಅಥಣಿಯಲ್ಲೂ ಕಾಂಗ್ರೆಸ್‌‍ ಗೆದ್ದಿದೆ ಎಂದು ಹೇಳಲಾಗುತ್ತಿದೆ. ಇಲ್ಲಿಂದ ನಾವು 30ರಿಂದ 40 ಸಾವಿರ ಲೀಡ್‌ಗಳನ್ನು ನಿರೀಕ್ಷಿಸಿದ್ದೆವು. ಆದರೆ ಚುನಾವಣಾ ಪ್ರಚಾರದಲ್ಲಿ ಶಾಸಕರು ತೊಡಗಿಸಿಕೊಳ್ಳದೆ ನಂಬಿಕೆಗೆ ಮಹಾಮೋಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
4
+ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಮಹೇಶ್‌ ಕುಮ್ಟಳ್ಳಿ ಬಳಿಕ ಕಾಂಗ್ರೆಸ್‌‍ ಗೆದ್ದಿರಲಿಲ್ಲ. ಲಕ್ಷ್ಮಣ್‌ ಸವದಿ ಕಾಂಗ್ರೆಸ್‌‍ಗೆ ಬಂದಾಗ ಆಶಾಕಿರಣ ಬಂದಂತಾಗಿದೆ ಎಂದು ಭಾವಿಸಲಾಗಿತ್ತು. ಆದರೆ ಅವರು ಪಕ್ಷದ ತರಬೇತಿ ಕಾರ್ಯಕ್ರಮಗಳಲ್ಲೂ ಭಾಗವಹಿಸಿರಲಿಲ್ಲ. ಚುನಾವಣಾ ಕಾಲದಲ್ಲಿ ಅವರಿಗೆ ಕ್ಷೇತ್ರದ ಪೂರ್ಥಿ ಜವಾಬ್ದಾರಿ ನೀಡಲಾಗಿತ್ತು. ಅವರು ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡದೆ ನಿಧಾನಗತಿ ಅನುಸರಿಸಿದರು. ತಾವು ಅನುಮಾನಗೊಂಡು ಸ್ಥಳೀಯ ಮೂಲಕ ಕಾರ್ಯಕರ್ತರಿಗೆ ಎಚ್ಚರದಿಂದ ಕೆಲಸ ಮಾಡುವಂತೆ ಸಲಹೆ ನೀಡಿದ್ದಾಗಿ ತಿಳಿಸಿದರು.
5
+ ಅವರ ಉದ್ದೇಶ ಏನಿತ್ತೋ ಗೊತ್ತಿಲ್ಲ. ಚುನಾವಣೆಯಲ್ಲಿ ಯಾರನ್ನು ಗೆಲ್ಲಿಸಬೇಕು ಎಂದುಕೊಂಡಿದ್ದರೋ ಮಾಹಿತಿ ಇಲ್ಲ. ಆದರೆ ಕಾಂಗ್ರೆಸ್‌‍ ಪಕ್ಷಕ್ಕೆ ಅವರಿಂದ ಮೋಸ ಆಗಿದ್ದಂತೂ ನಿಜ ಎನ್ನುವ ಮೂಲಕ ಹೆಸರು ಹೇಳದೆ ಬಹಿರಂಗ ವಾಗ್ದಾಳಿ ನಡೆಸಿದ್ದಾರೆ.
6
+ ನಾಯಕರು ಬರುತ್ತಾರೆ ಹೋಗುತ್ತಾರೆ ಆದರೆ ಕಾರ್ಯಕರ್ತರು ಸ್ಥಿರವಾಗಿದ್ದಾರೆ. ಹಲವಾರು ನಾಯಕರು ಬದಲಾವಣೆಯಾದರೂ ಮೂಲ ಕಾಂಗ್ರೆಸಿಗರು ಪಕ್ಷ ನಿಷ್ಠೆ ತೊರೆದಿಲ್ಲ. ಇದೇ ನಮ ಶಕ್ತಿ. ಇನ್ನು ಮುಂದೆ ನಮೊಂದಿಗೆ ನೇರವಾಗಿ ಸಂಪರ್ಕದಲ್ಲಿರಿ ಅಭಿವೃದ್ಧಿ ಕೆಲಸಗಳನ್ನು ಮಾಡೋಣ ಎಂದು ಹೇಳುವ ಮೂಲಕ ಸತೀಶ್‌ಜಾರಕಿಹೊಳಿ ರಾಜ್ಯ ರಾಜಕೀಯದಲ್ಲಿ ಹೊಸ ಗೊಂದಲಕ್ಕೆ ಕಾರಣರಾಗಿದ್ದಾರೆ.
7
+ ನಿನ್ನೆ ಸತೀಶ್‌ ಜಾರಕಿಹೊಳಿಯವರ ಸಹೋದರ ಹಾಗೂ ಪಕ್ಷೇತರ ವಿಧಾನಪರಿಷತ್‌ ಸದಸ್ಯ ಲಖನ್‌ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಕಿಡಿಕಾರಿದ್ದರು. ಈಗ ಸತೀಶ್‌ ಜಾರಕಿಹೊಳಿ ವಲಸಿಗ ನಾಯಕ ಲಕ್ಷ್ಮಣ್‌ ಸವದಿ ವಿರುದ್ಧವೇ ಕೆಂಡಕಾರಿದ್ದಾರೆ.
8
+ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯಿತ ಸಮುದಾಯದ ಜಗದೀಶ್‌ಶೆಟ್ಟರ್‌, ಲಕ್ಷ್ಮಣ್‌ ಸವದಿ ಬಿಜೆಪಿ ಟಿಕೆಟ್‌ ವಂಚಿತರಾಗಿದ್ದರು. ಅವರನ್ನು ಸೆಳೆದುಕೊಂಡ ಕಾಂಗ್ರೆಸ್��‍ ಬಿ ಫಾರಂ ಕೊಟ್ಟು ಅಖಾಡಕ್ಕಿಳಿಸಿತ್ತು. ಜಗದೀಶ್‌ ಶೆಟ್ಟರ್‌ ಸೋಲು ಕಂಡರೆ ಲಕ್ಷ್ಮಣ್‌ ಸವದಿ ಗೆಲುವು ಕಂಡಿದ್ದರು.
9
+ ಬೆಳಗಾವಿ ಜಿಲ್ಲೆಯ ರಾಜಕಾರಣ ರಾಜ್ಯದ ಮಟ್ಟಿಗೆ ಸಿಡಿಮದ್ದಿನಂತಿತ್ತು. ಈ ಹಿಂದೆ ಕಾಂಗ್ರೆಸ್‌‍-ಜೆಡಿಎಸ್‌‍ ಸಮಿಶ್ರ ಸರ್ಕಾರದ ಪತನಕ್ಕೆ ಕಾರಣವಾಗಿತ್ತು. ಕಳೆದ ಒಂದು ವರ್ಷದಲ್ಲಿ ಕಾಂಗ್ರೆಸ್‌‍ ಸರ್ಕಾರದ ಅವಧಿಯಲ್ಲಿ ಬೂದಿ ಮುಚ್ಚಿದ ಕೆಂಡದಂತಿದ್ದ ಜಿಲ್ಲೆಯ ಒಳಬೇಗುದಿಗಳು ಲೋಕೋಪಯೋಗಿ ಚುನಾವಣೆ ಬಳಿಕ ಹಂತ ಹಂತವಾಗಿ ಬಯಲಿಗೆ ಬರಲಾರಂಭಿಸಿವೆ.
eesanje/url_46_119_1.txt ADDED
@@ -0,0 +1,8 @@
 
 
 
 
 
 
 
 
 
1
+ ವಾಲ್ಮೀಕಿ ಹಗರಣವನ್ನು ಗಂಭೀರವಾಗಿ ಪರಿಗಣಿಸಿದ ಇಡಿ
2
+ ಬೆಂಗಳೂರು,ಜೂ.6-ಮಹರ್ಷಿ ವಾಲೀಕಿ ಪರಿಶಿಷ್ಟ ವರ್ಗ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂ.ಅವ್ಯವಹಾರ ಕುರಿತಂತೆ ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ಎನ್‌.ಆರ್‌.ರಮೇಶ್‌ ಅವರು ನೀಡಿರುವ ದೂರನ್ನು ಜಾರಿ ನಿರ್ದೇಶನಾಲಯ ( ಇಡಿ) ಗಂಭೀರವಾಗಿ ಪರಿಗಣಿಸಿದೆ.
3
+ ಈ ಅವ್ಯವಹಾರದ ಪ್ರಮುಖ ದಾಖಲೆಗಳನ್ನು ಎನ್‌.ಆರ್‌.ರಮೇಶ್‌ ಅವರು ಇಡಿ ಅಧಿಕಾರಿಗಳಿಗೆ ಸಲ್ಲಿಸಿದ್ದರು. ಅವರ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಲು ಮುಂದಾಗಿದ್ದಾರೆ.
4
+ ರಾಜ್ಯ ಆರ್ಥಿಕ ಅಪರಾಧ ಪ್ರಕರಣವಾಗಿರುವ ಈ ಬಹತ್‌ ಹಗರಣದಲ್ಲಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಬಿ. ನಾಗೇಂದ್ರ, ಅವರ ಆಪ್ತ ನಾಗರಾಜ್‌ ಸೇರಿದಂತೆ ಕರ್ನಾಟಕ ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಜೆ. ಜಿ. ಪದನಾಭ್‌,ಲೆಕ್ಕಾಧಿಕಾರಿ ಪರಶುರಾಮ್‌ ಜಿ ದುರಗಣ್ಣನವರ್‌ ಮತು ಯೂನಿಯನ್‌ ಬ್ಯಾಂಕ್‌ ಮುಖ್ಯ ವ್ಯವಸ್ಥಾಪಕಿ ಶುಚಿಸಿತಾ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ.
5
+ ಸ್ವತಃ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಆದೇಶವಿಲ್ಲದೇ ಕರ್ನಾಟಕ ರಾಜ್ಯ ಸರ್ಕಾರದ ಸಂಸ್ಥೆಯಿಂದ ಪಕ್ಕದ ತೆಲಂಗಾಣ ರಾಜ್ಯದ ಖಾಸಗಿ ಬ್ಯಾಂಕಿನ ಖಾಸಗಿ ಸಂಸ್ಥೆಗಳ ಖಾತೆಗಳಿಗೆ 89.62 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ವರ್ಗಾವಣೆಯಾಗಲೂ ಸಾಧ್ಯವೇ ಇರುವುದಿಲ್ಲ.
6
+ ಮುಖ್ಯಮಂತ್ರಿ ಸಿದ್ಧರಾಮಯ್ಯನವರೇ ಹಣಕಾಸು ಖಾತೆಯನ್ನೂ ಸಹ ಹೊಂದಿರುವುದರಿಂದ, ಅವರ ಆದೇಶವಿಲ್ಲದೆ ಅಥವಾ ಅವರ ಗಮನಕ್ಕೆ ಬಾರದೆ ಈ ಅಕ್ರಮ್‌ ಹಣ ವರ್ಗಾವಣೆ ಕಾರ್ಯ ನಡೆದಿರುವುದು ಸಾಧ್ಯವಿಲ್ಲ.
7
+ ಹೀಗಾಗಿ ಸಿದ್ಧರಾಮಯ್ಯ, ಸಚಿವ ಬಿ. ನಾಗೇಂದ್ರ,ನಾಗರಾಜ್‌‍, ಪದನಾಭ್‌‍, . ಪರಶುರಾಮ್‌ ಜಿ ದುರಗಣ್ಣನವರ್‌ , ಶುಚಿಸಿತಾ ಸೇರಿದಂತೆ ಈ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನಿತರ ಪ್ರಮುಖರ ವಿರುದ್ಧ ಅಧಿಕಾರ ದುರುಪಯೋಗ, ವಂಚನೆ, ನಕಲಿ ದಾಖಲೆ ತಯಾರಿಕೆ, ಅಕ್ರಮ ಹಣ ವರ್ಗಾವಣೆ ಹಾಗೂ ಸರ್ಕಾರಿ ಹಣ ದುರ್ಬಳಕೆ ಪ್ರಕರಣಗಳನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಜಾರಿ ನಿರ್ದೇಶನಾಲಯ (ಇಡಿ) ದಲ್ಲಿ ದಾಖಲೆಗಳ ಸಹಿತ ರಮೇಶ್‌ ದೂರು ದಾಖಲಿಸಿದ್ದಾರೆ.
8
+ ಹಾಗೆಯೇ, ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವದ್ಧಿ ನಿಗಮ ದಲ್ಲಿ ಹಣಕಾಸು ಅಕ್ರಮಗಳು ನಡೆದಿರುವಂತೆಯೇ ರಾಜ್ಯ ಸರ್ಕಾರದ ಇನ್ನುಳಿದ ನಿಗಮಗಳಲ್ಲಿಯೂ ಸಹ ಅಕ್ರಮ ಹಣ ವರ್ಗಾವಣೆ ನಡೆದಿರುವ ಸಾಧ್ಯತೆಗಳು ಇರುವುದರಿಂದ ಕೂಡಲೇ ಎಲ್ಲಾ ನಿಗಮಗಳ ಖಾತೆಗಳನ್ನು ತಮ ವಶಕ್ಕೆ ಪಡೆದು ತನಿಖೆ ನಡೆಸಬೇಕೆಂದೂ ಸಹ ಜಾರಿ ನಿರ್ದೇಶನಾಲಯಕ್ಕೆ ಅವರು ಮನವಿ ಮಾಡಿಕೊಂಡಿದ್ದಾರೆ.
eesanje/url_46_119_10.txt ADDED
@@ -0,0 +1,6 @@
 
 
 
 
 
 
 
1
+ ಎಚ್‌.ಡಿ.ಕುಮಾರಸ್ವಾಮಿಗೆ ಕೇಂದ್ರ ಸಚಿವ ಸ್ಥಾನ ಫಿಕ್ಸ್..?
2
+ ಬೆಂಗಳೂರು, ಜೂ.6-ಮೂರನೇ ಬಾರಿಗೆ ಲೋಕಸಭೆ ಪ್ರವೇಶಿಸಿರುವ ಜೆಡಿಎಸ್‌‍ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಕೇಂದ್ರ ಸಚಿವರಾಗುವುದು ಬಹುತೇಕ ಖಚಿತವಾಗಿದೆ.
3
+ ಲೋಕಸಭಾ ಚುನಾವಣಾ ಪೂರ್ವದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಎನ್‌ಡಿಎ ಮೈತ್ರಿ ಕೂಟ ಸೇರಿರುವ ಜೆಡಿಎಸ್‌‍ಗೆ ಒಂದು ಸಚಿವ ಸ್ಥಾನ ನೀಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗುತ್ತಿದ್ದು, ಅವರ ನೂತನ ಸಂಪುಟದಲ್ಲಿ ಕುಮಾರಸ್ವಾಮಿ ಸಚಿವರಾಗುವುದು ನಿಶ್ಚಿತ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ.
4
+ ಕನಕಪುರ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿ ಸಂಸದರಾಗಿದ್ದ ಕುಮಾರಸ್ವಾಮಿ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಎರಡನೇ ಬಾರಿ ಲೋಕಸಭೆ ಪ್ರವೇಶ ಮಾಡಿದ್ದರು. ಈಗ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭಾರೀ ಅಂತರದಿಂದ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ್ದಾರೆ.
5
+ ಕೆಂದ್ರ ಸರ್ಕಾರ ರಚನೆ ಕುರಿತಂತೆ ನಿನ್ನೆ ನಡೆದ ಎನ್‌ಡಿಎ ಸಭೆಯಲ್ಲಿ ಭಾಗವಹಿಸಿದ್ದ ಕುಮಾರಸ್ವಾಮಿ ಅವರು ನಗರಕ್ಕೆ ಮರಳಿದ್ದಾರೆ. ನಾಳೆ ಮತ್ತೆ ದೆಹಲಿಗೆ ತೆರಳಲಿದ್ದು, ಜೂ.8ರಂದು ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಅವರೊಂದಿಗೆ ಎಷ್ಟು ಮಂದಿ ಸಚಿವರು ಪ್ರಮಾಣ ವಚನ ಸೀಕರಿಸಬೇಕು. ಯಾರ್ಯಾರು ಸಂಪುಟ ಸೇರಬೇಕು. ಯಾವ ಸಚಿವರಿಗೆ ಯಾವ ಖಾತೆ ನೀಡಬೇಕು ಎಂಬ ವಿಚಾರದ ಬಗ್ಗೆ ನಾಳೆ ಎನ್‌ಡಿಎ ನಾಯಕರು ಚರ್ಚೆ ನಡೆಸಿ ನಿರ್ಧಾರ ಮಾಡಲಿದ್ದಾರೆ ಎಂದು ಮೂಲಗಳು ಹೇಳಿವೆ.
6
+ ಶನಿವಾರ ನಡೆಯುವ ಪ್ರಮಾಣ ವಚನ ಸಮಾರಂಭದಲ್ಲೇ ಕುಮಾರಸ್ವಾಮಿ ಅವರು ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
eesanje/url_46_119_11.txt ADDED
@@ -0,0 +1,8 @@
 
 
 
 
 
 
 
 
 
1
+ ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಿಎಂ ಬಿಎಸ್ವೈ ಅವರ ಆಪ್ತ ಸಹಾಯಕ ಕಾ.ಪು.ಸಿದ್ದಲಿಂಗಾಸ್ವಾಮಿ ನಿಧನ
2
+ ಬೆಂಗಳೂರು, ಜೂ.6-ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ಆಪ್ತ ಸಹಾಯಕ ಹಾಗೂ ಬಿಜೆಪಿ ಮುಖಂಡ ಕಾ.ಪು.ಸಿದ್ದಲಿಂಗಾಸ್ವಾಮಿ ಅವರು ಇಂದು ಮುಂಜಾನೆ ಮೈಸೂರಿನ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
3
+ ಕಳೆದ ಆರೇಳು ತಿಂಗಳಿನಿಂದ ಕಾ.ಪು. ಸಿದ್ದಲಿಂಗಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
4
+ ಸಂಜೆ 4 ಗಂಟೆಗೆ ಕಾ.ಪು.ಸಿದ್ದಲಿಂಗಸ್ವಾಮಿ ಅಂತ್ಯಕ್ರಿಯೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ನಡೆಯಲಿದೆ. ಲಿಂಗಾಯತ ವಿಧಿ -ವಿಧಾನದಂತೆ ಅಂತ್ಯಕ್ರಿಯೆ ನಡೆಯಲಿದೆ. ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ಪ್ರಮುಖರು ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲಿದ್ದಾರೆ.
5
+ ಕಾ.ಪು.ಸಿದ್ದಲಿಂಗಸ್ವಾಮಿ ಹಲವು ವರ್ಷಗಳ ಕಾಲ ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಆಪ್ತರಾಗಿ ಕೆಲಸ ನಿರ್ವಹಣೆ ಮಾಡಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗಲೂ ಜೊತೆಗಿದ್ದರು. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಮುಖ್ಯಮಂತ್ರಿ ಯಡಿಯೂರಪ್ಪ ಕಾ.ಪು.ಸಿದ್ದಲಿಂಗಸ್ವಾಮಿ ಅವರನ್ನು ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿಯೂ ನೇಮಕ ಮಾಡಲಾಗಿತ್ತು.
6
+ ಯಡಿಯೂರಪ್ಪ ಆಪ್ತರಾಗಿದ್ದ ಕಾ.ಪು. ಸಿದ್ದಲಿಂಗಸ್ವಾಮಿ ಯಡಿಯೂರಪ್ಪ ಕೆಜೆಪಿ ಪಕ್ಷವನ್ನು ಕಟ್ಟಿದಾಗ ಅವರ ಜೊತೆಗೆ ಇದ್ದರು. ಆ ಕಾರಣಕ್ಕಾಗಿಯೇ ವರುಣ ಕ್ಷೇತ್ರದಲ್ಲಿ ಅವರನ್ನು ಕೆಜೆಪಿ ಅಭ್ಯರ್ಥಿಯಾಗಿ ಕಾಂಗ್ರೆಸ್‌ನ ಸಿದ್ದರಾಮಯ್ಯ ವಿರುದ್ಧ ಕಣಕ್ಕಿಳಿಸಲಾಗಿತ್ತು.
7
+ ಕೆಜೆಪಿ ಅಭ್ಯರ್ಥಿಯಾಗಿದ್ದ ಅವರು 54,744 ಮತಗಳನ್ನು ಪಡೆದು, ಕಾಂಗ್ರೆಸ್‌ನ ಸಿದ್ದರಾಮಯ್ಯ ವಿರುದ್ಧ (84,385 ಮತ) ಸೋಲು ಕಂಡಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ವರುಣದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಕಾಂಗ್ರೆಸ್‌ ಅಭ್ಯರ್ಥಿಯಾದರು. ಆದರೆ ಕಾ.ಪು. ಸಿದ್ದಲಿಂಗಸ್ವಾಮಿಗೆ ಕಣಕ್ಕಿಳಿಯಲಿಲ್ಲ.
8
+ 2023ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾ.ಪು.ಸಿದ್ದಲಿಂಗಸ್ವಾಮಿ ಕಾಂಗ್ರೆಸ್‌ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು. ಆಗ ಪ್ರತಿಕ್ರಿಯೆ ನೀಡಿದ್ದ ಅವರು, ಯಾವುದೇ ಕಾರಣಕ್ಕೂ ನಾನು ಬಿಜೆಪಿ ಪಕ್ಷವನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳಿದ್ದರು. ನಾನು ಕಾಂಗ್ರೆಸ್‌ ಸೇರುತ್ತಿದ್ದೇನೆ ಎಂಬ ಸಂಗತಿ ಉಹಾಪೋಹವಾಗಿದ್ದು, ನನ್ನ ಕತ್ತು ಸೀಳಿದರೂ ಸಹ ಅದು ಸಾಧ್ಯವಾಗುವುದಿಲ್ಲ. ಬಿಜೆಪಿಯ ನಿಷ್ಠಾವಂತ ಕಾರ್ಯಕರ���ತನಾದ ನಾನು ವರುಣದಲ್ಲಿ ವಿ. ಸೋಮಣ್ಣ ಗೆಲುವಿಗಾಗಿ ಪಣ ತೊಟ್ಟಿದ್ದೇನೆ. ನನ್ನ ಮೊದಲ ಮತ್ತು ಕೊನೆಯ ಮತ ಬಿಜೆಪಿಗೆ ಎಂದು ತಿಳಿಸಿದ್ದರು.
eesanje/url_46_119_12.txt ADDED
@@ -0,0 +1,7 @@
 
 
 
 
 
 
 
 
1
+ ಬೋವಿ ನಿಗಮದಲ್ಲಿ 100 ಕೋಟಿ ಅವ್ಯವಹಾರ : ಗೂಳಿಹಟ್ಟಿ ಶೇಖರ್‌ ಗಂಭೀರ ಆರೋಪ
2
+ ಬೆಂಗಳೂರು, ಜೂ.6– ಬೋವಿ ನಿಗಮದಲ್ಲಿ 100 ಕೋಟಿ ಅವ್ಯವಹಾರ ಆಗಿದೆ ಎಂದು ಬೋವಿ ನಿಗಮದ ಮಾಜಿ ಅಧ್ಯಕ್ಷ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್‌ ಅವರು ನೂತನ ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
3
+ ಈ ಕುರಿತು ವಾಯ್ಸ್ ಮೆಸೇಜ್‌ ಮೂಲಕ ಗೂಳಿಹಟ್ಟಿ ಶೇಖರ್‌ ಅವರು,ಉಡುಪಿ-ಚಿಕ್ಕಮಗಳೂರು ನೂತನ ಸಂಸದರಾದ ಕೋಟ ಶ್ರೀನಿವಾಸ್‌ ಪೂಜಾರಿ ಅವರು ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ಸಚಿವರಾಗಿದ್ದಾಗ ಹಗರಣ ನಡೆದಿದೆ. ಬೋವಿ ನಿಗಮದ ಹಗರಣವನ್ನು ಸಿಐಡಿ ತನಿಖೆಗೆ ನೀಲಾಗಿದೆ. ಪ್ರಕರಣ ಸಂಬಂಧ ಇಬ್ಬರ ಕೊಲೆ ಆಗಿದೆ ಆರೋಪ ಮಾಡಿದ್ದಾರೆ.
4
+ ಸಿಬಿಐ ತನಿಖೆ ಬೇಡ, ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮಾಡಿಸಿ. ಕೋಟ ಶ್ರೀನಿವಾಸ್‌ ಪೂಜಾರಿಯಂಥ ಪ್ರಾಮಾಣಿಕರು ದೇಶದಲ್ಲಿಲ್ಲ. ಈಗ 50-60 ಕೋಟಿ ಆಸ್ತಿ ಮಾಡಿದ್ದು ಎಲ್ಲಿಂದ ಬಂತು? ಎಸ್ಟಿ ನಿಗಮ, ಬೋವಿ ನಿಗಮ ಎಲ್ಲ ಹಗರಣಗಳ ಬಗ್ಗೆ ತನಿಖೆ ಮಾಡಿ. ಸಿದ್ದರಾಮಯ್ಯ ಸಿಎಂ ಆದ ಬಳಿಕ ತನಿಖೆ ಸ್ಥಗಿತ ಆಗಿದೆ.
5
+ ಬಿಎಸ್‌ ಯಡಿಯೂರಪ್ಪ ಕೇಸ್‌ ತನಿಖೆ ಮಾಡದೆ ಯಾಕೆ ಮುಚ್ಚಿ ಹಾಕಿದ್ರಿ? ದೂರುದಾರ ಮಹಿಳೆ ಸಾವಿಗೀಡಾದ ಸುದ್ದಿ ಎಲ್ಲೆಡೆ ಬಂದಿದೆ. ಪ್ರಜ್ವಲ್‌ ಕೇಸ್‌ ಮಾತ್ರ ತನಿಖೆ ಮಾಡ್ತೀರಾ ಎಂದು ಶೇಖರ್‌ ಕಿಡಿ ಕಾರಿದ್ದಾರೆ.
6
+ ಕೊಟ್ಟ ಸಾಲ ವಾಪಸ್‌ ಕೇಳಿದ್ದಕ್ಕೆ ಕೊಲೆ: ಕೊಟ್ಟ ಸಾಲ ವಾಪಸ್‌ ಕೇಳಿದ್ದಕ್ಕೆ ಕೊಲೆ ಮಾಡಿ ಶವ ಹೂತಿಟ್ಟಿದ್ದಾನೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಶ್ರೕನಿವಾಸನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, 55 ವರ್ಷದ ಸುನಂದಮ್ಮ ಕೊಲೆಯಾದ ದುರ್ದೈವಿ. ಆರೋಪಿ ರವಿಕುಮಾರ್‌ ಒಂದು ವರ್ಷದ ಹಿಂದೆ ಸುನಂದಮ್ಮ ಬಳಿ 20 ಸಾವಿರ ರೂಪಾಯಿ ಸಾಲ ಪಡೆದಿದ್ದಾನೆ.
7
+ ವಾಪಸ್‌ ಕೊಟ್ಟಿರಲಿಲ್ಲ. ಆದ್ರೆ, ನಿನ್ನೆ ಸಾಲದ ಹಣ ಕೊಡೋದಾಗಿ ಸುನಂದಮ್ಮನನ್ನು ಆರೋಪಿ ಕರೆದಿದ್ದಾನೆ. ಆರೋಪಿ ರವಿ ಮಾತಿನಂತೆ ಮೃತ ಸುನಂದಮ್ಮ ಟಿ.ಗೊಲ್ಲಹಳ್ಳಿಗೆ ತೆರಳಿದ್ದಾರು ಎಂದು ಹೇಳಿದ್ದಾರೆ.
eesanje/url_46_119_2.txt ADDED
@@ -0,0 +1,3 @@
 
 
 
 
1
+ ಪ್ರಜ್ವಲ್ ರೇವಣ್ಣ ಮತ್ತೆ ಕಸ್ಟಡಿಗೆ
2
+ ಬೆಂಗಳೂರು, ಜೂ.6- ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‍ಐಟಿಯಿಂದ ಬಂಧನಕ್ಕೆ ಒಳಗಾಗಿರುವ ಪ್ರಜ್ವಲ್ ರೇವಣ್ಣ ಅವರ ಕಸ್ಟಡಿ ಅವಧಿಯನ್ನು ಜೂನ್ 10ರವರೆಗೆ ವಿಸ್ತರಿಸಲಾಗಿದೆ. ಆರು ದಿನಗಳ ಕಾಲ ಎಸ್‍ಐಟಿ ವಶಕ್ಕೆ ನೀಡಿದ್ದ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಎಸ್‍ಐಟಿ ಅಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ ಮತ್ತೆ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ನ್ಯಾಯಾಧಿಶರು ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಜೂ.10ರವರೆಗೆ ಎಸ್‍ಐಟಿ ವಶಕ್ಕೆ ನೀಡಿದರು.
3
+ ಹೊಳೆನರಸೀಪುರ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಎಸ್‍ಐಟಿ ಮಾಹಿತಿ ಕಲೆ ಹಾಕಿ ಸಾಕ್ಷಾಧಾರ ಸಂಗ್ರಹಿಸಲು ಪ್ರಯತ್ನಿಸುತ್ತಿವೆ. ಆದರೆ, ಪ್ರಜ್ವಲ್ ಸೂಕ್ತ ರೀತಿಯಲ್ಲಿ ಸ್ಪಂದಿಸದ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆ ಅಗತ್ಯವಿದೆ. ಮತ್ತೆ ಕಸ್ಟಡಿಗೆ ನೀಡುವಂತೆ ಮಾಡಿದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ 4 ದಿನಗಳ ಕಾಲ ಎಸ್‍ಐಟಿ ವಶಕ್ಕೆ ನೀಡಿದೆ.
eesanje/url_46_119_3.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ರಾಜ್ಯದ ನಾಲ್ವರು ಸಂಸದರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ..?
2
+ ಬೆಂಗಳೂರು,ಜೂ.6-ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ರಾಜ್ಯದಿಂದ ನಾಲ್ವರು ಸಂಪುಟಕ್ಕೆ ಸೇರ್ಪಡೆಯಾಗುವ ಸಂಭವವಿದೆ.ಜೆಡಿಎಸ್‌‍, ಎನ್‌ಡಿಎ ಮೈತ್ರಿ ಭಾಗವಾಗಿರುವುದರಿಂದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿಯಿಂದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌, ಶೋಭಾ ಕರಂದ್ಲಾಜೆ, ಪ್ರಹ್ಲಾದ್‌ ಜೋಶಿ ಹಾಗೂ ರಮೇಶ್‌ ಜಿಗಜಿಣಗಿ ಇಲ್ಲವೇ ಗೋವಿಂದ ಕಾರಜೋಳ ಸಂಪುಟಕ್ಕೆ ಸೇರ್ಪಡೆಯಾಗುವ ಸಂಭವನೀಯ ಪಟ್ಟಿಯಲ್ಲಿದ್ದಾರೆ.
3
+ ಸದ್ಯಕ್ಕೆ ಈ ನಾಲ್ವರಿಗೆ ಸೇರ್ಪಡೆ ಕುರಿತು ಯಾವುದೇ ಮಾಹಿತಿಯನ್ನು ನೀಡಿಲ್ಲವಾದರೂ ಎಲ್ಲಾ ಸಂಸದರು ದೆಹಲಿಗೆ ಬರುವಂತೆ ಬುಲಾವು ನೀಡಲಾಗಿದ್ದು, ರಾಜ್ಯಕ್ಕೆ ಈ ಬಾರಿ 3 ರಿಂದ 4 ಸ್ಥಾನಗಳು ಕೇಂದ್ರದಲ್ಲಿ ಸಿಗುವುದು ಖಚಿತ ಎಂದು ಹೇಳಲಾಗುತ್ತಿದೆ. ಬಿಜೆಪಿ ಈ ಬಾರಿ ಪೂರ್ಣ ಪ್ರಮಾಣದಲ್ಲಿ ಬಹುಮತ ಗಳಿಸಲು ಸಾಧ್ಯವಾಗದ ಕಾರಣ ಮಿತ್ರಪಕ್ಷಗಳಿಗೆ ಸಂಪುಟದಲ್ಲೂ ಅವಕಾಶ ಕಲ್ಪಿಸಬೇಕಾಗಿದೆ. ಹೀಗಾಗಿ ಮೊದಲ ಕಂತಿನಲ್ಲೇ ಎಚ್‌.ಡಿ.ಕುಮಾರಸ್ವಾಮಿ ಸಚಿವ ಸ್ಥಾನ ಬಹುತೇಕ ಗ್ಯಾರಂಟಿ.
4
+ ಉಳಿದಂತೆ ಬಿಜೆಪಿಯು ರಾಜ್ಯದಲ್ಲಿ ಈ ಬಾರಿ 17 ಸ್ಥಾನಗಳನ್ನು ಗೆದ್ದಿರುವುದರಿಂದ ಹಿರಿತನ ಪ್ರದೇಶವಾರು ಜಾತಿ, ಪಕ್ಷಕ್ಕೆ ಸೇರಿಸುವ ಸೇವೆ, ಸಂಘಟನೆ ಹೀಗೆ ಹತ್ತು ಹಲವು ಮಾನದಂಡಗಳ ಮೇಲೆ ಸಂಪುಟಕ್ಕೆ ತೆಗೆದುಕೊಳ್ಳಬೇಕಾಗುತ್ತದೆ.ಜಗದೀಶ್‌ ಶೆಟ್ಟರ್‌ ಮಾಜಿ ಮುಖ್ಯಮಂತ್ರಿಯಾಗಿರುವುದರಿಂದ ಹಿರಿತನದ ಮೇಲೆ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ.
5
+ ಕಳೆದ ವಿಧಾನಸಭಾ ಚುನಾವಣೆ ವೇಳೆ ಪಕ್ಷ ತೊರೆದಿದ್ದ ಅವರು, ನಂತರ ನಡೆದ ಬೆಳವಣಿಗೆಯಲ್ಲಿ ಪುನಃ ಮಾತೃಪಕ್ಷಕ್ಕೆ ವಾಪಸ್ಸಾಗಿದ್ದರು. ಈ ವೇಳೆ ಕೇಂದ್ರದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಂದರೆ ನಿಮಗೆ ಮಂತ್ರಿ ಸ್ಥಾನ ನೀಡಲಾಗುತ್ತದೆ ಎಂದು ಖುದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಗೃಹಸಚಿವ ಅಮಿತ್‌ ಶಾ ಆಶ್ವಾಸನೆ ನೀಡಿದ್ದರು.ಗೆದ್ದಿರುವ ಬಿಜೆಪಿ ಸಂಸದರಲ್ಲಿ ಶೆಟ್ಟರ್‌ ಹಿರಿಯರಾಗಿದ್ದು, ಸಂಪುಟಕ್ಕೆ ಸೇರ್ಪಡೆಯಾಗುವುದು ಖಚಿತವಾಗಿದೆ. ಲಿಂಗಾಯತ ಕೋಟದಲ್ಲಿ ಅವರಿಗೆ ಸ್ಥಾನ ಕಲ್ಪಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.
6
+ ಬಸವರಾಜ ಬೊಮಾಯಿ ಮುಖ್ಯಮಂತ್ರಿಯಾಗಿರುವುದರಿಂದ ಸದ್ಯಕ್ಕೆ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳುವ ಅವಕಾಶ ಕ್ಷೀಣಿಸಿವೆ. ಹಿಂದಿನ ಮೋದಿ ಸರ್ಕಾರದಲ್ಲಿ ಸಂಸದೀಯ ವ್ಯವಹಾರಗಳ ಸಚಿವರಾಗಿ ಉತ್ತಮ ಕಾರ್ಯ ನಿರ್ವಹಿಸಿದ್ದ ಪ್ರಹ್ಲಾದ್‌ ಜೋಶಿ ಪುನಃ ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಹೆಚ್ಚಾಗಿದೆ.
7
+ ಕೆಲವು ಸಂದರ್ಭಗಳಲ್ಲಿ ಮಸೂದೆ ಅಂಗೀಕಾರ ಸೇರಿದಂತೆ ವಿರೋಧಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊ��್ಳುವಲ್ಲಿ ಜೋಶಿ ನಿರ್ವಹಿಸಿದ ಪಾತ್ರಕ್ಕೆ ಖುದ್ದು ಮೋದಿಯವರೇ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹೀಗಾಗಿ ಮೊದಲ ಸಂಪುಟದಲ್ಲೇ ಜೋಶಿಗೆ ಈ ಬಾರಿಯೂ ಅದೃಷ್ಟ ಖುಲಾಯಿಸಬಹುದು.
8
+ ಈ ಬಾರಿಯೂ ಬಿಜೆಪಿಗೆ ಒಕ್ಕಲಿಗ ಮತಗಳು ಹೆಚ್ಚಿನ ಪ್ರಮಾಣದಲ್ಲಿ ಲಭಿಸಿರುವ ಕಾರಣ ಮಹಿಳಾ ಕೋಟದಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದೆ ಶೋಭಾಕರಂದ್ಲಾಜೆ ಎರಡನೇ ಬಾರಿ ಸಂಪುಟಕ್ಕೆ ಸೇರುವ ಸಂಭವನೀಯ ಪಟ್ಟಿಯಲ್ಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
9
+ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಗೆದ್ದಿರುವ ಡಾ.ಸಿ.ಎನ್‌.ಮಂಜುನಾಥ್‌ ಅವರನ್ನು ಸಹ ಸಂಪುಟಕ್ಕೆ ತೆಗೆದುಕೊಳ್ಳುವ ಬಗ್ಗೆ ಬಿಜೆಪಿ ಸಕಾರಾತಕವಾದ ನಿಲುವು ಇಟ್ಟುಕೊಂಡಿದೆ.ಒಂದು ಕಡೆ ಕುಮಾರಸ್ವಾಮಿ, ಮತ್ತೊಂದು ಕಡೆ ಡಾ.ಸಿ.ಎನ್‌.ಮಂಜುನಾಥ್‌ ಸೇರ್ಪಡೆಯಾದರೆ ಹಳೆ ಮೈಸೂರು ಭಾಗದಲ್ಲಿ ಬಿಜೆಪಿಗೆ ಆನೆಬಲ ಬರಲಿದೆ ಎಂಬ ಲೆಕ್ಕಾಚಾರವು ಇದೆ.ಇನ್ನೊಂದು ಮೂಲದ ಪ್ರಕಾರ, ಡಾ.ಸಿ.ಎನ್‌.ಮಂಜುನಾಥ್‌ಗೆ ಎರಡನೇ ಅವಧಿಯಲ್ಲಿ ಸಚಿವ ಸಂಪುಟ ಪುನರ್‌ ರಚನೆಯಾಗುವ ವೇಳೆ ಅವಕಾಶ ಸಿಗಬಹುದು ಎಂಬ ಮಾತುಗಳು ಕೇಳಿಬಂದಿವೆ.
10
+ ಪರಿಶಿಷ್ಟ ಜಾತಿ ಕೋಟದಲ್ಲಿ 7 ಬಾರಿ ಗೆದ್ದಿರುವ ವಿಜಯಾಪುರದ ಸಂಸದ ರಮೇಶ್‌ ಜಿಗಜಿಣಗಿ ಸಚಿವರಾಗಬಹುದು. ಈ ಹಿಂದೆ ಒಂದು ಬಾರಿ ರಾಜ್ಯಖಾತೆ ಸಚಿವರಾಗಿದ್ದ ಅವರಿಗೆ ಈ ಬಾರಿ ಸಂಪುಟ ದರ್ಜೆಯ ಖಾತೆ ಸಿಗಲಿದೆ ಎಂದು ಹೇಳಲಾಗುತ್ತಿದೆ.ಅಚ್ಚರಿಯ ಬೆಳವಣಿಗೆಯಲ್ಲಿ ಚಿತ್ರದುರ್ಗದಲ್ಲಿ ಗೆದ್ದಿರುವ ಗೋವಿಂದ ಕಾರಜೋಳ ಕೂಡ ಎಸ್‌‍ಸಿ ಕೋಟದಲ್ಲಿ ಸಚಿವ ಸ್ಥಾನ ಮೇಲೆ ಕಣ್ಣಿಟ್ಟಿದ್ದಾರೆ.
11
+ ಆದರೆ ಜಿಗಜಿಣಗಿ ಹಿರಿಯರಾಗಿರುವುದರಿಂದ ಹೆಚ್ಚಿನ ಅವಕಾಶಗಳು ಅವರಿಗೆ ಸಿಗಬಹುದು. ಹಿಂದುಳಿದ ವರ್ಗದ ಕೋಟದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದಾರೆ.ವಿಧಾನಪರಿಷತ್‌ನಲ್ಲಿ ಪ್ರತಿಪಕ್ಷದ ನಾಯಕರಾಗಿ, ಸಚಿವರಾಗಿ ಸುಮಾರು ಮೂರು ದಶಕಗಳ ಸುದೀರ್ಘ ರಾಜಕೀಯ ಅನುಭವ ಹೊಂದಿರುವ ಅವರಿಗೆ ಮೋದಿ ಸಂಪುಟದಲ್ಲಿ ಸಚಿವರಾಗುವ ಅದೃಷ್ಟ ಖುಲಾಯಿಸಿದರೂ ಅಚ್ಚರಿಯಿಲ್ಲ ಎಂದು ಹೇಳಲಾಗುತ್ತಿದೆ.ಸಂಪುಟಕ್ಕೆ ಸೇರ್ಪಡೆಯಾಗುವವರೆಗೂ ಗುಟ್ಟು ಬಿಟ್ಟುಕೊಡದೆ ಎಲ್ಲವನ್ನೂ ರಹಸ್ಯವಾಗಿಯೇ ಉಳಿಸಿಕೊಳ್ಳುವ ಮೋದಿ, ಅಮಿತ್‌ ಶಾ ಜೋಡಿ ಕೃಪೆ ಯಾರ ಮೇಲೆ ಎಂಬುದು ಶನಿವಾರದವರೆಗೂ ಕಾದು ನೋಡಲೇಬೇಕು.
eesanje/url_46_119_4.txt ADDED
@@ -0,0 +1,6 @@
 
 
 
 
 
 
 
1
+ ಯಾರಾಗಲಿದ್ದಾರೆ ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕರು..?
2
+ ಬೆಂಗಳೂರು, ಜೂ.6-ಪ್ರಸಕ್ತ ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕರು ಯಾರಾಗಲಿದ್ದಾರೆ ಎಂಬ ಚರ್ಚೆ ಪ್ರಾರಂಭವಾಗಿದೆ. ಶಾಸಕಾಂಗ ಪಕ್ಷದ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಸಂಸದರಾಗಿರುವ ಹಿನ್ನೆಲೆಯಲ್ಲಿ ಆ ಸ್ಥಾನ ತೆರವಾಗಲಿದೆ.
3
+ ಜೆಡಿಎಸ್‌‍ನಲ್ಲಿ ಮಾಜಿ ಸಚಿವರಾದ ಹೆಚ್‌.ಡಿ.ರೇವಣ್ಣ, ಜಿ.ಟಿ.ದೇವೇಗೌಡ ಹಾಗೂ ಶ್ರೀನಿವಾಸಪುರ ಕ್ಷೇತ್ರದ ವೆಂಕಟಶಿವಾರೆಡ್ಡಿ ಅವರು ಹಿರಿಯ ಶಾಸಕರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಕುಮಾರಸ್ವಾಮಿ ಸಂಸದರಾಗಿದ್ದ ಸಂದರ್ಭದಲ್ಲೂ ರೇವಣ್ಣ ಅವರು ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕರಾಗಿದ್ದರು.
4
+ ಜಿ.ಟಿ.ದೇವೇಗೌಡ ಅವರು ಪ್ರಸ್ತುತ ಜೆಡಿಎಸ್‌‍ ಕೋರ್‌ ಕಮಿಟಿ ಅಧ್ಯಕ್ಷರಾಗಿದ್ದಾರೆ. ಕಟಶಿವಾರೆಡ್ಡಿ ಅವರಿಗೆ ಇಂತಹ ಯಾವ ಜವಾಬ್ದಾರಿಯನ್ನು ಈತನಕ ನೀಡಿಲ್ಲ. ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ವಿಚಾರದಲ್ಲಿ ಜಿ.ಟಿ.ದೇವೇಗೌಡರ ಹೆಸರು ಮುಂಚೂಣಿಯಲ್ಲಿದೆ. ಆದರೆ, ಪ್ರಸಕ್ತ ವಿಧಾನಸಭೆಯಲ್ಲಿ ರೇವಣ್ಣ ಅವರು ಎಲ್ಲರಿಗಿಂತ ಹಿರಿಯ ಶಾಸಕರಾಗಿದ್ದಾರೆ.
5
+ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಹಾಗೂ ಆಡಳಿತ ಪಕ್ಷವನ್ನು ತೀವ್ರ ತರಾಟೆಗೆ ತೆಗೆದುಕೊಳ್ಳುವ ಉತ್ತಮ ಸಂಸದೀಯಪಟುವಾಗಿರುವವರು ಶಾಸಕಾಂಗ ಪಕ್ಷದ ನಾಯಕರಾಗಬೇಕು ಎಂಬ ಅಭಿಪ್ರಾಯ ರಾಜಕೀಯ ವಲಯದಲ್ಲಿದೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕುಮಾರಸ್ವಾಮಿ ಚುನಾಯಿತರಾಗಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಶಾಸಕಾಂಗ ಪಕ್ಷದ ನಾಯಕನ ಸ್ಥಾನವು ರದ್ದಾಗಲಿದೆ.
6
+ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೂ ಉಪ ಚುನಾವಣೆ ಎದುರಾಗಲಿದೆ. ಕೇಂದ್ರ ಸರ್ಕಾರ ರಚನೆ ಪ್ರಕ್ರಿಯೆ ಮುಗಿದ ಬಳಿಕ ಪಕ್ಷದ ನಾಯಕರು ಸಭೆ ಸೇರಿ ನೂತನ ಶಾಸಕಾಂಗ ಪಕ್ಷದ ನಾಯಕ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದು ಜೆಡಿಸ್‌‍ ಮೂಲಗಳು ತಿಳಿಸಿವೆ.
eesanje/url_46_119_5.txt ADDED
@@ -0,0 +1,8 @@
 
 
 
 
 
 
 
 
 
1
+ ಉತ್ತರಕಾಂಡ್‌ನ ಚಾರಣ ದುರಂತ : 13 ಕನ್ನಡಿಗರ ರಕ್ಷಣೆ, ವಿಶೇಷ ವಿಮಾನದಲ್ಲಿ 9 ಜನರ ಶವ ಬೆಂಗಳೂರಿಗೆ
2
+ ಬೆಂಗಳೂರು, ಜೂ.6– ಉತ್ತರಕಾಂಡ್‌ನ ಚಾರಣಕ್ಕೆ ತೆರಳಿದ್ದ 22 ಕನ್ನಡಿಗರ ಪೈಕಿ 13 ಜನರನ್ನು ರಕ್ಷಿಸಲಾಗಿದ್ದು, ಮೃತಪಟ್ಟ 9 ಜನರ ಶವಗಳನ್ನು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತರಲಾಗಿದೆ.
3
+ ಸಂತ್ರಸ್ತರ ರಕ್ಷಣೆಗಾಗಿ ಉತ್ತರಾಕಾಂಡ್‌ಗೆ ತೆರಳಿರುವ ಕಂದಾಯ ಸಚಿವ ಕೃಷ್ಣಾಭೈರೇಗೌಡ ಅವರ ಮಾಹಿತಿ ಪ್ರಕಾರ, ನಿನ್ನೆ ನಡೆದ ಕಾರ್ಯಾಚರಣೆಯಲ್ಲಿ ಸೌಮ್ಯಾ ಕೆನಾಲೆ , ಸತಿ ಡೋಲಾಸ್‌‍, ಶೀನಾ ಲಕ್ಷಿ, ಎಸ್‌‍. ಶಿವ ಜ್ಯೋತಿ, ಅನಿಲ್‌ ಜಮತಿಗೆ ಅರುಣಾಚಲ ಭಟ್‌, ಭರತ್‌ ಬೊಮನ ಗೌಡರ್‌, ಮಧು ಕಿರಣ್‌ ರೆಡ್ಡಿ, ಜೈಪ್ರಕಾಶ್‌ ಬಿ.ಎಸ್‌‍. ಅವರನ್ನು ರಕ್ಷಿಸಲಾಗಿತ್ತು.
4
+ ಇಂದು ಬೆಳಿಗ್ಗೆ ಎಸ್‌‍ ಸುಧಾಕರ್‌,ವಿನಯ್‌ ಎಂ.ಕೆ, ವಿವೇಕ್‌ ಶ್ರೀಧರ್‌, ನವೀನ್‌.ಎ, ರಿತಿಕಾ ಜಿಂದಾಲ್‌ ಸೇರಿ 5 ಮಂದಿಯನ್ನು ರಕ್ಷಿಸಿ ಉತ್ತರಕಾಶಿಯಿಂದ ಡೆಹ್ರಾಡೂನ್‌ಗೆ ವಿಮಾನದ ಮೂಲಕ ಕಳುಹಿಸಲಾಗಿದೆ. ವಿಪತ್ತಿನಿಂದ ಪಾರಾದವರಿಗೆ ಡೆಹ್ರಾಡೂನ್‌ನಲ್ಲಿ ಅಗತ್ಯ ಊಟೋಪಚಾರ ಹಾಗೂ ವಸತಿ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಕರ್ನಾಟಕ ಹಾಗೂ ಉತ್ತರಕಾಂಡ್‌ನ ಸರ್ಕಾರಗಳ ತ್ವರಿತ ಪ್ರತಿಕ್ರಿಯೆಗೆ ಪ್ರಾಣಾಪಾಯದಿಂದ ಪಾರಾಗಿ ಬಂದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
5
+ ಚಾರಣದ ನಡುವೆ ಹವಾಮಾನ ವೈಪರೀತ್ಯ, ವಿಪರೀತ ಮಳೆ, ಹಿಮಪಾತದಿಂದಾಗಿ ದಿಕ್ಕುತಪ್ಪಿ ಮೃತಪಟ್ಟಿರುವ 9 ಜನರ ಪೈಕಿ ಸಿಂಧು ವಕೆಲಂ,ಆಶಾ ಸುಧಾಕರ್‌, ಸುಜಾತಾ ಮುಂಗುರವಾಡಿ, ವಿನಾಯಕ್‌ ಮುಂಗುರವಾಡಿ, ಚಿತ್ರಾ ಪ್ರಣೀತ್‌ ಅವರ ಶವಗಳನ್ನು ನಿನ್ನೆ ಪತ್ತೆ ಹಚ್ಚಿ ಕಣಿವೆಯಿಂದ ಮೇಲಕ್ಕೆ ತಂದು ಉತ್ತರಕಾಶಿಗೆ ರವಾನಿಸಲಾಗಿತ್ತು.
6
+ ಮುಂದುವರೆದ ಕಾರ್ಯಾಚರಣೆಯಲ್ಲಿ ಇಂದು ಬೆಳಿಗ್ಗೆ ಪದನಾಭ ಕೆ.ಪಿ., ವೆಂಕಟೇಶ್‌ ಪ್ರಸಾದ್‌.ಕೆ, ಅನಿತಾ ರಂಗಪ್ಪ, ಪದಿನಿ ಹೆಗ್ಡೆ ಅವರ ಶವಗಳನ್ನು ಬೇಸ್‌‍ಕ್ಯಾಂಪ್‌ಗೆ ತಂದು ಅಲ್ಲಿಂದ ವಿಮಾನದ ಮೂಲಕ ಉತ್ತರಕಾಶಿಗೆ ತರಲಾಗುತ್ತಿದೆ.ಅಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಡೆಹ್ರಾಡೂನ್‌ನಲ್ಲಿ ಎಂಬಾಮಿಂಗ್‌ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ರವಾನಿಸಲಾಗಿದೆ.
7
+ ಸಚಿವರ ಚುರುಕು ಕಾರ್ಯಾಚರಣೆ:ಇಂದು ಬೆಳಿಗ್ಗೆ ಸಚಿವ ಕೃಷ್ಣಭೈರೇಗೌಡ ಅವರು ಉತ್ತರಕಾಂಡ್‌ನ ಮುಖ್ಯ ಕಾರ್ಯದರ್ಶಿ ರಾಧಾರತೌರಿ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯದರ್ಶಿ ಡಾ.ರಂಜಿತ್‌ ಸಿನ್ಹಾ, ಬಿಎಸ್‌‍ಎಫ್‌ನ ಡಿಐಜಿ ರಾಜಕುಮಾರ್‌ ನೇಗಿ ಅವರೊಂದಿಗೆ ಸಮಾಲೋಚನೆ ನಡೆಸಿದ್ದು, ಪಾರ್ಥೀವ ಶರೀರಗಳನ್ನು ಸ್ಥಳಾಂತರಿಸಲು ಸಹಕರಿಸುವಂತೆ ಮನವಿ ಮಾಡಿದರು. ಅದಕ್ಕೆ ಸ್ಥಳೀಯಾಧಿಕಾರಿಗಳು ಸಹಮತಿ ಸೂಚಿಸಿದ್ದು, ವಿಶೇಷ ವಿಮಾನದ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.ಡೆಹ್ರಾಡೂನ್‌ನಿಂದ ಮಧ್ಯಾಹ್ನದ ವೇಳೆಗೆ ಬೆಂಗಳೂರಿಗೆ ಪಾರ್ಥೀವ ಶರೀರಗಳನ್ನು ಸಾಗಿಸಲಾಯಿತು.
8
+ ಮನ���ಲಕಿದ ವೈರಲ್‌ ವಿಡಿಯೋ :ಈ ನಡುವೆ ವಿಪತ್ತಿಗೆ ಸಿಲುಕುವ ಮುನ್ನ ಚಾರಣಿಗರು ತಮ ಕ್ಯಾಂಪ್‌ನಲ್ಲಿ ಸಂತಸದಿಂದಿರುವುದು, ಗ್ರೂಪ್‌ ಫೋಟೊಗೆ ಫೋಸ್‌‍ ಕೊಟ್ಟಿರುವುದು ಮತ್ತು ಸೇನೆಯ ಯೋಧರೊಂದಿಗೆ ಸಮಯ ಕಳೆದಿರುವುದು, ಯೋಧರು ಚಾರಣಿಗರಿಗೆ ಬಿಸ್ಕೆಟ್‌ ನೀಡಿ ಉಪಚರಿಸಿರುವುದೂ ಸೇರಿದಂತೆ ಹಲವು ದೃಶ್ಯಗಳ ವಿಡಿಯೋ ವೈರಲ್‌ ಆಗಿದ್ದು, ಕರಳು ಕಿವುಚುವಂತಿದೆ.ನಗರದ ಎಚ್‌ಎಸ್‌‍ಆರ್‌ ಲೇ ಔಟ್‌, ಗಿರಿನಗರ, ಪ್ರಿಸ್ಟೇಜ್‌ ಸಿಟಿ, ಎಸ್‌‍ಆರ್‌ಕೆ ನಗರ ಮುಂತಾದ ಪ್ರದೇಶಗಳಿಂದ 22 ಮಂದಿ ಉತ್ತರಕಾಂಡ್‌ನ ಚಾರಣಕ್ಕೆ ತೆರಳಿದ್ದರು.
eesanje/url_46_119_6.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ರಾಜಕಾರಣದಲ್ಲಿ ಮತ್ತೊಮ್ಮೆ ಸದ್ದು ಮಾಡುತ್ತಿದೆ ಜಾರಕಿಹೊಳಿ ಕುಟುಂಬ
2
+ ಬೆಂಗಳೂರು, ಜೂ.6-ಲೋಕಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಬೆಳಗಾವಿ ರಾಜಕಾರಣ ಮತ್ತೆ ಸದ್ದು ಮಾಡುತ್ತಿದ್ದು, ಜಾರಕಿಹೊಳಿ ಕುಟುಂಬ ಮತ್ತೆ ಚರ್ಚೆಯಲ್ಲಿದೆ. ಲೋಕಸಭೆ ಚುನಾವಣೆಯಲ್ಲಿ ಚಿಕ್ಕೋಡಿಯಿಂದ ಅಭ್ಯರ್ಥಿಯಾಗಿದ್ದ ಸಚಿವ ಸತೀಶ್‌ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕ ಗೆಲುವು ಕಂಡಿದ್ದಾರೆ.
3
+ ಬೆಳಗಾವಿಯಿಂದ ಅಭ್ಯರ್ಥಿಯಾಗಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಪುತ್ರ ಮೃಣಾಲ್‌ ಸೋಲು ಕಂಡಿದ್ದಾರೆ. ಈ ಮೂಲಕ ಜಿಲ್ಲೆಯ ರಾಜಕಾರಣದಲ್ಲಿ ಮತ್ತೆ ಜಾರಕಿಹೊಳಿ ಕುಟುಂಬದ ಅಧಿಪತ್ಯ ಹೆಚ್ಚಾಗಿದೆ ಎಂಬ ಅಭಿಪ್ರಾಯಗಳಿವೆ.
4
+ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಸಚಿವ ಸತೀಶ್‌ ಜಾರಕಿಹೊಳಿ, ರಾಜ್ಯಾದ್ಯಂತ ಫಲಿತಾಂಶ ಹಿನ್ನಡೆಗೆ ಚುನಾವಣೆ ನಾಯಕತ್ವ ವಹಿಸಿದ್ದ ನಿರ್ದೇಶಕರು, ನಿರ್ಮಾಪಕರು ಹೊಣೆಯಾಗುತ್ತಾರೆ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ಪರೋಕ್ಷ ಅಸಹನೆ ಹೊರಹಾಕಿದರು.
5
+ ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌‍ನ ಕಾರ್ಯಕರ್ತರಿಗೆ ಟಿಕೆಟ್‌ ಕೊಡಬೇಕು ಎಂದು ಸತೀಶ್‌ ಜಾರಕಿಹೊಳಿ ಹಲವು ಬಾರಿ ಪ್ರತಿಪಾದಿಸಿದ್ದರು. ಆದರೆ ಲಕ್ಷ್ಮೀ ಹೆಬ್ಬಾಳ್ಕರ್‌ ರಾಜ್ಯಮಟ್ಟದಲ್ಲಿ ತಮ ಪ್ರಭಾವ ಬೆಳೆಸಿಕೊಂಡು ಪುತ್ರ ಮೃಣಾಲ್‌ನನ್ನು ಕಣಕ್ಕಿಳಿಸಲು ಲಾಬಿ ಮಾಡಿದ್ದರು.
6
+ ಒಂದು ವೇಳೆ ಮೃಣಾಲ್‌ಗೆ ಟಿಕೆಟ್‌ ಕೊಟ್ಟು ಜಾರಕಿಹೊಳಿ ಕುಟುಂಬಕ್ಕೆ ಅವಕಾಶ ಸಿಗದೇ ಇದ್ದರೆ ಫಲಿತಾಂಶದಲ್ಲಿ ಏರುಪೇರಾಗಲಿದೆ ಎಂಬ ಆತಂಕದಲ್ಲಿ ಕಾಂಗ್ರೆಸ್‌‍ನ ವರಿಷ್ಠರು ಸತೀಶ್‌ ಜಾರಕಿಹೊಳಿ ಪುತ್ರಿಗೂ ಬಿ ಫಾರಂ ಕೊಟ್ಟು ಕೈ ತೊಳೆದುಕೊಂಡರು.
7
+ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಜಿಲ್ಲೆಯ ರಾಜಕಾರಣದಲ್ಲಿನ ಆಂತರಿಕ ಬೇಗುದಿ ಹೊರಬರದಂತೆ ಎಚ್ಚರಿಕೆ ವಹಿಸಲಾಗಿತ್ತು. ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ, ಸಚಿವೆ ಲಕ್ಷ್ಮೀಹೆಬ್ಬಾಳ್ಕರ್‌ ವಿರುದ್ಧ ಪರೋಕ್ಷವಾಗಿ ಕೆಂಡ ಕಾರುತ್ತಿದ್ದರು. ಆದರೆ ನೇರವಾಗಿ ಹೆಸರು ಹೇಳದೆ ಕುತೂಹಲ ಹುಟ್ಟುಹಾಕಿದ್ದರು. ಜೂನ್‌ 4 ರ ನಂತರ ಮಾತನಾಡುತ್ತೇನೆ ಎಂದು ಸೂಚ್ಯವಾಗಿ ಹೇಳಿದರು.
8
+ ಈಗ ರಮೇಶ್‌ ಜಾರಕಿಹೊಳಿ ಅವರ ಬದಲಿಗೆ ಅವರದೇ ಕುಟುಂಬ ಸಹೋದರ ಹಾಗೂ ಪಕ್ಷೇತರ ವಿಧಾನಪರಿಷತ್‌ ಸದಸ್ಯ ಲಕನ್‌ ಜಾರಕಿಹೊಳಿ ಮಾತನಾಡಿದ್ದಾರೆ. ತಾವು ಪಕ್ಷೇತರರಾಗಿದ್ದು, ಚಿಕ್ಕೋಡಿಯಲ್ಲಿ ಕಾಂಗ್ರೆಸ್‌‍ನ ಪ್ರಿಯಾಂಕ ಜಾರಕಿಹೊಳಿ ಅವರನ್ನು ಬೆಳಗಾವಿಯಲ್ಲಿ ಬಿಜೆಪಿಯ ಜಗದೀಶ್‌ ಶೆಟ್ಟರ್‌ ಅವರನ್ನು ಬೆಂಬಲಿಸಿದ್ದಾಗಿ ಹೇಳಿದ್ದಾರೆ.
9
+ ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಜಾರಕಿಹೊಳಿ ಕುಟುಂಬ ಮತ್ತೆ ಪ್ರಬಲವಾಗಿದೆಯೇ ಎಂಬ ಪ್ರಶ್ನೆಗೆ, ಜನರ ಆಶೀರ್ವಾದ ಇರುವವರೆಗೂ ನಮನ್ನು ಯಾರೂ ಏನೂ ಮಾಡಲಾಗುವುದಿಲ್ಲ ಎಂದು ವಿರೋಧಿ ಬಣಕ್ಕೆ ತಿರುಗೇಟು ನೀಡಿದ್ದಾರೆ.ಸತೀಶ್‌ ಜಾರಕಿಹೊಳಿ ಉಪಮುಖ್ಯಮಂತ್ರಿಯಾಗಬೇಕು ಎಂಬ ಬೇಡಿಕೆಗೆ ಲಕನ್‌ ಜಾರಕಿಹೊಳಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಅವರು ಕಾಂಗ್ರೆಸ್‌‍ನಲ್ಲಿ ಹಿರಿಯ ನಾಯಕರಿದ್ದಾರೆ. ಅದನ್ನು ಪರಿಗಣಿಸಿ ಪಕ್ಷದ ವರಿಷ್ಠರು ಸತೀಶ್‌ ಅವರಿಗೆ ಅವಕಾಶ ನೀಡಬಹುದು.
10
+ ರಾಜ್ಯದಲ್ಲಿ ಕಾಂಗ್ರೆಸ್‌‍ ಸರ್ಕಾರ ಪತನವಾಗುವುದಿಲ್ಲ, ಇನ್ನಷ್ಟು ಮಳೆ ಬೀಳಬಹುದೇ ಹೊರತು ಸರ್ಕಾರ ಬೀಳುವುದಿಲ್ಲ. ಸತೀಶ್‌ ಜಾರಕಿಹೊಳಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಆತೀಯವಾಗಿ ಇದ್ದಾರೆ. ಹೀಗಾಗಿ ಬೆಳಗಾವಿ ರಾಜಕಾರಣ ಸರ್ಕಾರದ ಭವಿಷ್ಯಕ್ಕೆ ಧಕ್ಕೆ ಆಗುವುದಿಲ್ಲ. ಸಿದ್ದರಾಮಯ್ಯ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಸ್ಫೋಟಕ ಮಾಹಿತಿ ನೀಡಿದ್ದಾರೆ.
11
+ ಬೆಳಗಾವಿಯ ಬಿಜೆಪಿ ಅಭ್ಯರ್ಥಿಯಾಗಿದ್ದ ಜಗದೀಶ್‌ ಶೆಟ್ಟರ್‌ ಸೌಮ್ಯ ಸ್ವಭಾವದವರಾಗಿದ್ದರು. ಅವರ ಒಳ್ಳೆತನ ನೋಡಿ ಜನ ಮತ ಹಾಕಿದ್ದಾರೆ. ಮೃಣಾಲ್‌ ಹೆಬ್ಬಾಳ್ಕರ್‌ ಅವರು ಶೆಟ್ಟರ್‌ ಬಗ್ಗೆ ಅಗೌರವವಾಗಿ ಮಾತನಾಡಿದ್ದಕ್ಕೆ ಸೋಲು ಕಂಡಿದ್ದಾರೆ ಎಂದರು.ಬೆಳಗಾವಿ ರಾಜಕಾರಣದಲ್ಲಿ ಸೇಡಿನ ಪ್ರಶ್ನೆಯಿಲ್ಲ. ಇಲ್ಲಿ ಯಾರಿಗೂ ಅಧಿಕಾರ ಶಾಶ್ವತವಲ್ಲ. ಮುಂದಿನ ನಾಲ್ಕು ವರ್ಷ ಎಲ್ಲರೂ ಒಟ್ಟಾಗಿಯೇ ಕೆಲಸ ಮಾಡಬೇಕು. ಒಳ್ಳೆಯ ಕೆಲಸ ಮಾಡಿದರೆ ಜನ ಪುನರ್‌ ಆಯ್ಕೆ ಮಾಡುತ್ತಾರೆ. ಇಲ್ಲವಾದರೆ ಸೋಲಿಸಿ ಮನೆಗೆ ಕಳುಹಿಸುತ್ತಾರೆ ಎಂದು ಹೇಳಿದರು.
12
+ ಸತೀಶ್‌ ಜಾರಕಿಹೊಳಿ, ರಮೇಶ್‌ ಜಾರಕಿಹೊಳಿ ಮತ್ತು ಲಕನ್‌ ಜಾರಕಿಹೊಳಿ ಸಹೋದರರ ಹೇಳಿಕೆಗಳು ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಹಿಂದೆ ಜೆಡಿಎಸ್‌‍-ಕಾಂಗ್ರೆಸ್‌‍ ಸಮಿಶ್ರ ಸರ್ಕಾರಕ್ಕೆ ರಮೇಶ್‌ ಜಾರಕಿಹೊಳಿ ಹಳ್ಳ ತೋಡಿದ್ದರು. ಹೀಗಾಗಿ ಬೆಳಗಾವಿ ಜಿಲ್ಲಾ ರಾಜಕಾರಣ ರಾಜ್ಯಸರ್ಕಾರ ಹಾಗೂ ರಾಜ್ಯ ರಾಜಕಾರಣದ ಮೇಲೆ ಹೆಚ್ಚು ಪ್ರಭಾವಿಯಾಗಿಯೇ ಕಾಣಿಸಿಕೊಳ್ಳುತ್ತದೆ.
eesanje/url_46_119_7.txt ADDED
@@ -0,0 +1,6 @@
 
 
 
 
 
 
 
1
+ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಪ್ರಮುಖ ಆರೋಪಿ ಪ್ರಭಾವಿ ರಾಜಕಾರಣಿ ಜೊತೆ ಲಿಂಕ್
2
+ ಬೆಂಗಳೂರು, ಜೂ.6-ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ನೆಕ್ಕುಂಟೆ ನಾಗರಾಜ್‌ ಅವರು ಸಚಿವ ನಾಗೇಂದ್ರ ಅವರಿಗೆ ಆಪ್ತರಲ್ಲದೆ ರಾಜ್ಯದ ಪ್ರಭಾವಿ ರಾಜಕಾರಣಿ ಒಬ್ಬರಿಗೂ ಪರಮಾಪ್ತ ಎನ್ನಲಾಗಿದೆ.
3
+ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ. ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಎಸ್‌‍ಐಟಿ ಈಗಾಗಲೇ ನಿಗಮದ ಹಿಂದಿನ ಎಂ.ಡಿ. ಪದನಾಭ, ಮುಖ್ಯ ಲೆಕ್ಕಾಧಿಕಾರಿ ಪರಶುರಾಮು, ನೆಕ್ಕುಂಟೆ ನಾಗರಾಜ್‌, ನಾಗೇಶ್ವರ ರಾವ್‌, ಸತ್ಯನಾರಾಯಣ್‌ರನ್ನ ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದೆ.
4
+ ಕೊಪ್ಪಳ ಜಿಲ್ಲೆ ಕರಟಗಿ ತಾಲೂಕಿನ ಉಳಕ್ಯಾಳ ಕ್ಯಾಂಪಸ್‌‍ನ ನಿವಾಸಿ ನೆಕ್ಕುಂಟೆ ನಾಗರಾಜ್‌ ಪ್ರಕರಣದ ಪ್ರಮುಖ ಆರೋಪಿ ಇವರು ಸಚಿವ ನಾಗೇಂದ್ರ ಅವರ ಪರಮಾಪ್ತ. ಅಷ್ಟೇ ಅಲ್ಲದೆ, ರಾಜ್ಯದ ಪ್ರಭಾವಿ ಸಚಿವರೊಬ್ಬರಿಗೂ ಕೂಡ ಆಪ್ತ ಎಂದು ತಿಳಿದುಬಂದಿದೆ.
5
+ ರಾಜಕಾರಣಿಗಳ ಜೊತೆ ವ್ಯವಹಾರ ಮಾಡುತ್ತಿದ್ದ ಆರೋಪಿ ನಾಗರಾಜ್‌ ಅಧಿಕಾರದಲ್ಲಿರುವ ಪಕ್ಷದ ನಾಯಕರ ಜೊತೆ ಸದಾ ಇರುತ್ತಿದ್ದ. ಶ್ರೀರಾಮಲು ಸ್ಥಾಪಿಸಿದ್ದ ಬಿಎಸ್‌‍ಆರ್‌ ಪಕ್ಷದಿಂದ 2013 ರಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶ್ರೀರಾಮಲು ಜೊತೆ ಹೆಚ್ಚಾಗಿ ಇರುತ್ತಿದ್ದ ನಾಗರಾಜ್‌ ನಂತರ ನಾಗೇಂದ್ರ ಜೊತೆ ಗುರುತಿಸಿಕೊಂಡಿದ್ದ.
6
+ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ತೊರೆದಿದ್ದ ನಾಗರಾಜ್‌ ನಂತರ ಕೊಪ್ಪಳದಲ್ಲಿ ಕಾಂಗ್ರೆಸ್‌‍ ಸೇರಲು ಮುಂದಾಗಿದ್ದ. ಆದರೆ ನಾಗರಾಜ್‌ ಕಾಂಗ್ರೆಸ್‌‍ ಸೇರ್ಪಡೆಗೆ ಶಿವರಾಜ್‌ ತಂಗಡಗಿ ಒಲವು ತೋರಿರಲಿಲ್ಲ. ಹೀಗಾಗಿ ನಾಗೇಂದ್ರ ಅವರ ಜೊತೆ ಗುರುತಿಸಿಕೊಂಡಿದ್ದಈ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌‍ಐಟಿ ಹಗರಣ ಸಂಬಂಧ ಹೈದ್ರಾಬಾದ್‌ನ ಫಸ್ಟ್‌ ಫೈನಾನ್‌್ಸ ಸಹಕಾರಿ ಬ್ಯಾಂಕ್‌ನಲ್ಲಿದ್ದ 45 ಕೋಟಿ ರೂ. ಹಣವನ್ನು ಜಪ್ತಿ ಮಾಡಿದೆ.