CoolCoder44 commited on
Commit
c777d49
·
verified ·
1 Parent(s): 0f32eaa

9ba79c0a87b12a2883a45041617987aa87a96abf3876baab0fb62475ae018f8a

Browse files
Files changed (50) hide show
  1. eesanje/url_46_54_1.txt +9 -0
  2. eesanje/url_46_54_10.txt +5 -0
  3. eesanje/url_46_54_11.txt +7 -0
  4. eesanje/url_46_54_12.txt +10 -0
  5. eesanje/url_46_54_2.txt +19 -0
  6. eesanje/url_46_54_3.txt +7 -0
  7. eesanje/url_46_54_4.txt +7 -0
  8. eesanje/url_46_54_5.txt +5 -0
  9. eesanje/url_46_54_6.txt +7 -0
  10. eesanje/url_46_54_7.txt +8 -0
  11. eesanje/url_46_54_8.txt +9 -0
  12. eesanje/url_46_54_9.txt +10 -0
  13. eesanje/url_46_55_1.txt +10 -0
  14. eesanje/url_46_55_10.txt +7 -0
  15. eesanje/url_46_55_11.txt +6 -0
  16. eesanje/url_46_55_12.txt +6 -0
  17. eesanje/url_46_55_2.txt +10 -0
  18. eesanje/url_46_55_3.txt +4 -0
  19. eesanje/url_46_55_4.txt +5 -0
  20. eesanje/url_46_55_5.txt +11 -0
  21. eesanje/url_46_55_6.txt +8 -0
  22. eesanje/url_46_55_7.txt +5 -0
  23. eesanje/url_46_55_8.txt +11 -0
  24. eesanje/url_46_55_9.txt +15 -0
  25. eesanje/url_46_56_1.txt +6 -0
  26. eesanje/url_46_56_10.txt +9 -0
  27. eesanje/url_46_56_11.txt +9 -0
  28. eesanje/url_46_56_12.txt +6 -0
  29. eesanje/url_46_56_2.txt +5 -0
  30. eesanje/url_46_56_3.txt +7 -0
  31. eesanje/url_46_56_4.txt +6 -0
  32. eesanje/url_46_56_5.txt +9 -0
  33. eesanje/url_46_56_6.txt +14 -0
  34. eesanje/url_46_56_7.txt +10 -0
  35. eesanje/url_46_56_8.txt +10 -0
  36. eesanje/url_46_56_9.txt +9 -0
  37. eesanje/url_46_57_1.txt +6 -0
  38. eesanje/url_46_57_10.txt +8 -0
  39. eesanje/url_46_57_11.txt +18 -0
  40. eesanje/url_46_57_12.txt +12 -0
  41. eesanje/url_46_57_2.txt +7 -0
  42. eesanje/url_46_57_3.txt +6 -0
  43. eesanje/url_46_57_4.txt +10 -0
  44. eesanje/url_46_57_5.txt +11 -0
  45. eesanje/url_46_57_6.txt +8 -0
  46. eesanje/url_46_57_7.txt +7 -0
  47. eesanje/url_46_57_8.txt +4 -0
  48. eesanje/url_46_57_9.txt +6 -0
  49. eesanje/url_46_58_1.txt +5 -0
  50. eesanje/url_46_58_10.txt +5 -0
eesanje/url_46_54_1.txt ADDED
@@ -0,0 +1,9 @@
 
 
 
 
 
 
 
 
 
 
1
+ ಅಕ್ರಮ ರೆಸಾರ್ಟ್‌, ಹೋಂಸ್ಟೇಗಳ ತೆರವಿಗೆ ಕಾರ್ಯಪಡೆ ರಚನೆ : ಸಚಿವ ಖಂಡ್ರೆ
2
+ ಬೆಂಗಳೂರು, ಆ.4-ರಾಜ್ಯದ 10 ಜಿಲ್ಲೆಗಳಲ್ಲಿ ಆವರಿಸಿರುವ ಪಶ್ಚಿಮಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್‌, ಹೋಂ ಸ್ಟೇ ಮತ್ತು ಇಲ್ಲಿನ ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ ರಚಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಘೋಷಿಸಿದ್ದಾರೆ.
3
+ ಈ ಸಂಬಂಧ ಮಾಧ್ಯ ಹೇಳಿಕೆ ನೀಡಿರುವ ಅವರು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಈ ಕಾರ್ಯಪಡೆ ರಚಿಸಲಾಗಿದ್ದು, ನಾಳೆಯಿಂದಲೇ ಪಶ್ಚಿಘಟ್ಟದಲ್ಲಿನ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
4
+ ಪಶ್ಚಿಮಘಟ್ಟದಲ್ಲಿನ ಅರಣ್ಯದಲ್ಲಿ 2015ರ ನಂತರ ಆಗಿರುವ ಒತ್ತುವರಿಗೆ ಸಂಬಂಧಿಸಿದಂತೆ 64ಎ ಪ್ರಕ್ರಿಯೆ ಪೂರ್ಣಗೊಂಡಿರುವ ಎಲ್ಲ ಪ್ರಕರಣಗಳಲ್ಲಿ ಇಂದಿನಿಂದಲೇ ತೆರವು ಕಾರ್ಯಾಚರಣೆ ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
5
+ ಎಸಿಎಫ್‌, ಡಿಸಿಎಫ್‌, ಸಿಎಫ್‌, ಸಿಸಿಎಫ್‌, ಎ.ಪಿ.ಸಿಸಿಎಫ್‌ ಗಳಿಗೂ ಅರಣ್ಯ ಒತ್ತುವರಿ ಪ್ರಕರಣಗಳ ವಿಚಾರಣೆ ನಡೆಸಿ 64ಎ ಅಡಿಯಲ್ಲಿ ಆದೇಶ ನೀಡಲು ಅವಕಾಶವಿದ್ದು, ಬಾಕಿ ಇರುವ ಎಲ್ಲ 64 ಎ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಲು ಎಸಿಎಫ್‌ ಮೇಲ್ಪಟ್ಟ ದರ್ಜೆಯ ಎಲ್ಲ ಅಧಿಕಾರಿಗಳಿಗೂ ವಾರದಲ್ಲಿ ಎರಡು ದಿನ ತಮ ತಮ ವಲಯದಲ್ಲಿ ಪ್ರಕ್ರಿಯೆ ನಡೆಸಿ ತ್ವರಿತವಾಗಿ ಆದೇಶ ನೀಡಲು ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
6
+ ಈಗಾಗಲೇ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಅಡ್ವೊಕೇಟ್‌ ಜನರಲ್‌ ಅವರೊಂದಿಗೆ ಸಮಾಲೋಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ಕಾರ್ಯಪಡೆಗೆ ಸೂಚಿಸಿರುವುದಾಗಿ ಈಶ್ವರ ಖಂಡ್ರೆ ಹೇಳಿದ್ದಾರೆ.
7
+ ಮೊದಲಿಗೆ ದೊಡ್ಡ ಪ್ರಮಾಣದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಅಕ್ರಮ ರೆಸಾರ್ಟ್‌, ಹೋಂಸ್ಟೇಗಳನ್ನು ತೆರವು ಮಾಡಿ, ಬಳಿಕ ತೋಟ, ಕಟ್ಟಡಗಳನ್ನು ತೆರವು ಮಾಡಲು ಸೂಚಿಸಲಾಗಿದೆ. ಎಲ್ಲರೂ ಕಾನೂನಿನ ಮುಂದೆ ಸಮಾನರು. ಪಶ್ಚಿಮ ಘಟ್ಟವನ್ನು ಒತ್ತುವರಿ ಮಾಡಿ ವಾಣಿಜ್ಯ ಚಟುವಟಿಕೆ ನಡೆಸುವವರಿಗೆ ಅವಕಾಶ ನೀಡುವುದಿಲ್ಲ. ಇಂಥಹ ಚಟುವಟಿಕೆಯಿಂದ ಪರಿಸರಕ್ಕೆ ಆಗುವ ಹಾನಿಯನ್ನು ಸರಿದೂಗಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
8
+ ಅವೈಜ್ಞಾನಿಕ ರಸ್ತೆ ಕಾಮಗಾರಿ ವಿರುದ್ಧ ಕ್ರಮ:ಪಶ್ಚಿಮ ಘಟ್ಟ ಪ್ರದೇಶದಲ್ಲಿ ರಸ್ತೆಗಳ ಮೇಲ್ದರ್ಜೆ, ವಿಸ್ತರಣೆಯ ವೇಳೆ ಅವೈಜ್ಞಾನಿಕವಾಗಿ 90ಡಿಗ್ರಿಗೆ ಗುಡ್ಡ ಕಡಿದಿರುವುದೂ ಕುಸಿತಕ್ಕೆ ಕಾರಣವಾಗಿದ್ದು, ಇಂತಹ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಮತ್ತು ಎಂಜಿನಿಯರುಗ��ಿಗೂ ನೋಟಿಸ್‌‍ ನೀಡಿ ಕ್ರಮ ಜರುಗಿಸಲು ನಿರ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
9
+ ವಯನಾಡು ಮತ್ತು ಉತ್ತರ ಕನ್ನಡದ ಶಿರೂರಿನಲ್ಲಿ ಘೋರ ದುರಂತ ಸಂಭವಿಸಿದ್ದು ಜೀವಹಾನಿ ಆಗಿದೆ. ಸಹಸ್ರಾರು ವರ್ಷಗಳ ಗುಡ್ಡವೇ ಕಣರೆಯಾಗಿದೆ. ಶಿರಾಡಿ ಘಾಟ್‌, ಚಾರ್ಮಾಡಿ ಘಾಟ್‌ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟಗಳಲ್ಲಿ ನಿರಂತರವಾಗಿ ಗುಡ್ಡ ಕುಸಿತಗಳು ಸಂಭವಿಸುತ್ತಿವೆ. ಈಗಲೂ ನಾವು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ನಮನ್ನು ಕ್ಷಮಿಸುವುದಿಲ್ಲ ಎಂದು ಖಂಡ್ರೆ ಹೇಳಿದ್ದಾರೆ.
eesanje/url_46_54_10.txt ADDED
@@ -0,0 +1,5 @@
 
 
 
 
 
 
1
+ ಪಿಎಸ್‌‍ಐ ಪರಶುರಾಮ್ ಸಾವು ಭ್ರಷ್ಟ ಸರ್ಕಾರ ಮಾಡಿದ ಕೊಲೆ : ಸಿ.ಟಿ.ರವಿ
2
+ ಬೆಂಗಳೂರು,ಆ.3-ಭ್ರಷ್ಟ ಕಾಂಗ್ರೆಸ್‌‍ ಸರ್ಕಾರದ ರೇಟ್‌ ಕಾರ್ಡ್‌ ಮತ್ತು ಎಕ್ಸ್ಟ್ರಾ ಟಿಪ್ಸ್ ಹಾವಳಿಯಿಂದ ಯಾದಗಿರಿಯ ಪಿಎಸ್‌‍ಐ ಪರಶುರಾಮ ಅವರ ಜೀವ ಹೋಗಿದೆ. ಇದು ಸಾವಲ್ಲ. ಭ್ರಷ್ಟ ಸರ್ಕಾರ ಮಾಡಿದ ಕೊಲೆ ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಮಾಜಿ ಸಚಿವ ಸಿ.ಟಿ.ರವಿ ಸ್ಫೋಟಕ ಆರೋಪ ಮಾಡಿದ್ದಾರೆ.
3
+ ಈ ಕುರಿತು ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಅವರು, ಭ್ರಷ್ಟತನದ ಪರಮಾವಧಿ ಮುಟ್ಟಿದ ರಾಜ್ಯ ಕಾಂಗ್ರೆಸ್‌‍ ಸರ್ಕಾರ ಇನ್ನೊಬ್ಬ ಪೊಲೀಸ್‌‍ ಅಧಿಕಾರಿಯನ್ನು ಬಲಿಪಡೆದಿದೆ ಎಂದು ದೂರಿದ್ದಾರೆ.
4
+ ಅತ್ಯಂತ ಬಡತನದ ಹಿನ್ನೆಲೆಯಿಂದ ಬಂದರೂ, ತನ್ನ ಛಲ ಮತ್ತು ಸಾಧನೆಯಿಂದ ಪಿಎಸ್‌‍ಐ ಆದ ಪರಶುರಾಮ್‌ ಛಲವಾದಿ ಯಾದಗಿರಿಯಲ್ಲಿ ನಿನ್ನೆ ಸಾವಿಗೀಡಾಗಿದ್ದಾರೆ. ಮೃತರ ಪತ್ನಿ ತನ್ನ ಪತಿಯ ಸಾವಿಗೆ, ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು ಲಂಚದ ಹಣಕ್ಕಾಗಿ ಮಾಡಿದ ಒತ್ತಡದಿಂದ ತನ್ನ ಪತಿ ಸಾವನ್ನಪ್ಪಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಸಾವಿಗೆ ಭ್ರಷ್ಟ ಕಾಂಗ್ರೆಸ್‌‍ ಸರ್ಕಾರವೇ ನೇರ ಕಾರಣ ಎಂದು ಆರೋಪಿಸಿದ್ದಾರೆ.
5
+ ಮೃತ ಪಿಎಸ್‌‍ಐ ಪತ್ನಿ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್‌ ತುನ್ನೂರು ಅವರ ಹೆಸರೇಳಿದರೂ ಅವರನ್ಯಾಕೆ ಇನ್ನೂ ಬಂಧಿಸಿಲ್ಲ. ನಿಮ ಲಂಚದ ಹಾವಳಿಗೆ ಇನ್ನೆಷ್ಟು ಅಧಿಕಾರಿಗಳು ಬಲಿಯಾಗಬೇಕು? ಎಂದು ಪ್ರಶ್ನಿಸಿದರು. ಸಿಎಂ ಸಿದ್ದರಾಮಯ್ಯನವರೇ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರೇ, ಶಾಸಕ ಚನ್ನಾರೆಡ್ಡಿ ಪಾಟೀಲ್‌ ತುನ್ನೂರು ಮತ್ತವರ ಪುತ್ರನನ್ನು ಈ ಕೂಡಲೇ ಬಂಧಿಸಿ, ಮೃತ ಪಿಎಸ್‌‍ಐ ಸಾವಿಗೆ ನ್ಯಾಯ ದೊರಕಿಸಿ ಎಂದು ಆಗ್ರಹಿಸಿದ್ದಾರೆ.
eesanje/url_46_54_11.txt ADDED
@@ -0,0 +1,7 @@
 
 
 
 
 
 
 
 
1
+ ಪಿಎಎಸ್‌‍ಐ ಪರಶುರಾಮ್‌ ಅಸಹಜ ಸಾವು, ಸರ್ಕಾರಕ್ಕೆ ತಲೆನೋವು
2
+ ಬೆಂಗಳೂರು,ಆ.3-ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣಗಳಿಂದ ರಾಜ್ಯಸರ್ಕಾರ ಮುಜುಗರಕ್ಕೆ ಒಳಗಾಗಿರುವ ನಡುವೆಯೇ ಪೊಲೀಸ್‌‍ ಅಧಿಕಾರಿ ಅಸಹಜ ಸಾವು ರಾಜ್ಯಸರ್ಕಾರಕ್ಕೆ ಸಾಕಷ್ಟು ಇರಿಸುಮುರಿಸು ಉಂಟುಮಾಡಿದೆ.
3
+ ಯಾದಗಿರಿ ಪಿಎಎಸ್‌‍ಐ ಪರಶುರಾಮ್‌ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಂದು ಪರಶುರಾಮ್ ಅವರ ಪತ್ನಿ ಶ್ವೇತಾ ಅವರು ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಸಂಗೀತ ಅವರಿಗೆ ದೂರು ನೀಡಿದ್ದು, ತಮ ಪತಿಗೆ ಸ್ಥಳ ನಿಯೋಜನೆಗಾಗಿ ಹಣ ನೀಡುವಂತೆ ಸ್ಥಳೀಯ ಶಾಸಕ ಚೆನ್ನರೆಡ್ಡಿ ಪಾಟೀಲ್‌ ಮತ್ತು ಅವರ ಪುತ್ರ ಪದೇಪದೇ ಒತ್ತಡ ಹೇರುತ್ತಿದ್ದರು. ಇದರಿಂದ ಖಿನ್ನತೆಗೆ ಒಳಗಾಗಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ದೂರಿದ್ದಾರೆ.
4
+ ನಿನ್ನೆ ರಾತ್ರಿ ಆಸ್ಪತ್ರೆಯ ಮುಂಭಾಗ ದಲ್ಲೇ ಧರಣಿ ನಡೆಸಿದ ಶ್ವೇತಾ, ಶಾಸಕ ಚೆನ್ನರೆಡ್ಡಿ ಪಾಟೀಲ್‌ ಸ್ಥಳಕ್ಕೆ ಆಗಮಿಸ ಬೇಕೆಂದು ಪಟ್ಟು ಹಿಡಿದಿದ್ದರು.ಸಂಬಂಧಿಕರು ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕರ ದುಡ್ಡಿನ ಆಸೆ ಹೆಚ್ಚಾಗಿದೆ. 7 ತಿಂಗಳಲ್ಲೇ ವರ್ಗಾವಣೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
5
+ ಘಟನೆ ನಡೆದು 17 ಘಂಟೆಗಳಾದರೂ ಪೊಲೀಸರು ದೂರು ದಾಖಲಿಸಿಲ್ಲ. ಇದನ್ನು ವಿರೋಧಿಸಿ ವಿವಿಧ ಸಂಘಟನೆ ಗಳು ರಾಷ್ಟ್ರೀಯ ಹೆದ್ದಾರಿ -150 ರಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು.
6
+ ಕಿಮ್ಸೌ ಆಸ್ಪತ್ರೆಯ ಎದುರೇ ಪ್ರತಿಭಟನೆ ನಡೆದಿದ್ದರಿಂದಾಗಿ ಆಸ್ಪತ್ರೆಗೆ ಹೋಗಿಬರುವ ರೋಗಿಗಳಿಗೆ ತೀವ್ರ ತೊಂದರೆಯಾಯಿತು.ಪರಶುರಾಮ್‌ ಕುಟುಂಬದ ಸದಸ್ಯರೂ ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರಿಂದಾಗಿ ಕಾವೇರಿದ ವಾತಾವರಣ ನಿರ್ಮಾಣವಾಗಿತ್ತು. ವಿರೋಧಪಕ್ಷಗಳ ಮುಖಂಡರು ಪರಶುರಾಮ್‌ರ ಸಾವಿನ ಪ್ರಕರಣವನ್ನು ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
7
+ ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದಲೂ ವರ್ಗಾವಣೆಗೆ ಭಾರಿ ಪ್ರಮಾಣದ ಲಂಚ ಪಡೆಯಲಾಗುತ್ತಿದೆ. ಪ್ರಭಾವಿಗಳ ಹಸ್ತಕ್ಷೇಪದಿಂದ ವರ್ಗಾವಣೆಯಾಗುತ್ತಿದೆ. ಒಂದರ ಮೇಲೊಂದರ ಹಗರಣದ ಜೊತೆಗೆ ಅಧಿಕಾರಿಗಳ ವರ್ಗಾವಣೆಯಲ್ಲೂ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪ ಮಾಡಿದ್ದಾರೆ.
eesanje/url_46_54_12.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಸಿದ್ದರಾಮಯ್ಯನವರ ಬೆದರಿಕೆಗೆ ಜಗ್ಗುವುದಿಲ್ಲ, ಪಾದಯಾತ್ರೆ ನಿಲ್ಲಲ್ಲ : ವಿಜಯೇಂದ್ರ ಸವಾಲು
2
+ ಬೆಂಗಳೂರು,ಆ.3-ಭ್ರಷ್ಟಾಚಾರದ ಬಗ್ಗೆ ನಾವು ಮಾತನಾಡಿದರೆ ನಮಗೆ ಬೆದರಿಕೆ ಹಾಕಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆದರಿಕೆಗೆ ಹೆದರಿ ನಾವು ಪಾದಯಾತ್ರೆ ನಿಲ್ಲಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬಹಿರಂಗ ಸವಾಲು ಹಾಕಿದ್ದಾರೆ.
3
+ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ಜೆ.ಕೆ.ಗ್ರ್ಯಾಂಡ್‌ ಅರೇನ ಸೆಂಟರ್‌ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಮುಡಾ ಹಗರಣದ ಬಗ್ಗೆ ಪ್ರಸ್ತಾಪಿಸಿದರೆ ನಮಗೆ ಸಿದ್ದರಾಮಯ್ಯನವರು ಬೆದರಿಕೆ ಹಾಕುತ್ತಿದ್ದಾರೆ. ನಿಮ ಗೊಡ್ಡು ಬೆದರಿಕೆಗೆ ಹೆದರಿ ನಾವು ಪಾದಯಾತ್ರೆ ನಿಲ್ಲಿಸುತ್ತೇವೆ ಎಂದುಕೊಂಡಿದ್ದರೆ ಅದು ನಿಮ ಭ್ರಮೆ ಎಂದು ತಿರುಗೇಟು ನೀಡಿದರು.
4
+ ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸುವುದಿಲ್ಲ. ಎಷ್ಟೇ ಸವಾಲುಗಳು ಬಂದರೂ ಅದನ್ನು ಎದರಿಸುವ ಶಕ್ತಿ ನಮಗಿದೆ. ಸಮಾಜವಾದಿ ಎನ್ನುತ್ತಿರುವ ಸಿದ್ದರಾಮಯ್ಯನವರ ಮುಖವಾಡವು ಕಳಚಿ ಬಿದ್ದಿದೆ ಎಂದು ವಾಗ್ದಾಳಿ ನಡೆಸಿದರು.
5
+ ಮುಡಾ ಹಗರಣದಲ್ಲಿ ಖುದ್ದು ಸಿದ್ದರಾಮಯ್ಯನವರ ಕುಟುಂಬದವರೇ ಸಿಕ್ಕಿಕೊಂಡಿದ್ದಾರೆ. ಈ ಪ್ರಕರಣದ ಬಗ್ಗೆ ನೀವು ಏಕೆ ಮಾತನಾಡುತ್ತಿಲ್ಲ ಎಂದು ಕಾಂಗ್ರೆಸ್‌‍ ಶಾಸಕರೇ ನಮಗೆ ಪ್ರಶ್ನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
6
+ ಕಾಂಗ್ರೆಸ್‌‍ ಎಂದರೆ ಭ್ರಷ್ಟಾಚಾರ. ಭ್ರಷ್ಟಾಚಾರ ಎಂದರೆ ಕಾಂಗ್ರೆಸ್‌‍. ರಾಜ್ಯಪಾಲರು ನೀಡಿರುವ ಒಂದೇ ಒಂದು ಶೋಕಾಸ್‌‍ ನೋಟಿಸ್‌‍ಗೆ ಮುಖ್ಯಮಂತ್ರಿ ಸೇರಿದಂತೆ ಕಾಂಗ್ರೆಸ್‌‍ ಸರ್ಕಾರದ ಜಂಘಾಬಲವೇ ಉಡುಗಿ ಹೋಗಿದೆ. ಈಗ ನಮ ಮೇಲೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
7
+ ಮುಡಾ ಹಗರಣದ ಬಗ್ಗೆ ಸದನದಲ್ಲಿ ನಿಲುವಳಿ ಸೂಚನೆ ಮಂಡಿಸಿದರೆ ಅಲ್ಲಿಯೂ ನಮಗೆ ಅವಕಾಶ ಸಿಗುವುದಿಲ್ಲ. ನೂರೊಂದು ಕಾರಣಗಳನ್ನು ನೀಡಿ ನಿಲುವಳಿ ಸೂಚನೆಯನ್ನು ತಿರಸ್ಕರಿಸಿದರು. ಹೀಗಾಗಿ ಪಾದಯಾತ್ರೆ ಹಮಿಕೊಂಡಿದ್ದೇವೆ ಎಂದು ಸಮರ್ಥಿಸಿಕೊಂಡರು.
8
+ ಸಿದ್ದರಾಮಯ್ಯನವರೇ ನೇಮಕ ಮಾಡಿದ್ದ ಮುಡಾ ಅಧ್ಯಕ್ಷರೇ ಈ ಪ್ರಕರಣದಲ್ಲಿ 5 ಸಾವಿರ ಕೋಟಿ ಹಗರಣ ನಡೆದಿದೆ ಎಂದು ಹೇಳಿದ್ದಾರೆ. ಆದರೆ ಇಲ್ಲಿ ಏನೇನೂ ನಡೆದಿಲ್ಲ ಎಂದು ಸರ್ಕಾರ ತಿಪ್ಪೇ ಸಾರಿಸುವ ಕೆಲಸ ಮಾಡುತ್ತಿದ್ದಾರೆ. ಸಿಎಂ ರಾಜೀನಾಮೆ ನೀಡುವವರೆಗೂ ನಾವು ವಿರಮಿಸುವುದಿಲ್ಲ ಎಂದು ಶಪಥ ಮಾಡಿದರು.
9
+ ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿರುವ ಸರ್ಕಾರ ಇದು. ವಚನಭ್ರಷ್ಟ ಸರ್ಕಾರ ಆಗಿದೆ. ಅಹಿಂದ ಎಂದು ಹೇಳಿ, ಸಮಾಜಗಳನ್ನು ತುಳಿದಿದೆ. ವಾಲೀಕಿ ನಿಗಮದಲ್ಲಿ ಲೂಟಿ ಮಾಡಿದೆ. ಮೈಸೂರಿನ ಮುಡಾ ಒಂದು ಲಕ್ಷ ಅರ್ಜಿಗಳನ್ನು ಹಾಕಿಕೊಂಡು ನಿವೇಶನ ಕೊಡಲು ಹಾಗೆಯೇ ಕುಳಿತಿದ್ದಾರೆ. ಅಲ್ಲಿನ ಅರ್ಜಿದಾರರಿಗೆ ನಿವೇಶನ ಕೊಡುವ ಕೆಲಸ ಸಿದ್ಧರಾಮಯ್ಯ ಮಾಡಿಲ್ಲ ಎಂದು ದೂರಿದರು.
10
+ ಈ ಎರಡು ಹಗರಣಗಳ ಭ್ರಷ್ಟಾಚಾರ ಮಾಡಿರುವ ಅಧಿಕಾರಿಗಳು ಹಾಗೂ ರಾಜಕಾರಣಿಗಳಿಗೆ ರಕ್ಷಣೆ ಕೊಡುತ್ತಿರುವುದು ಸಿಎಂ ಸಿದ್ಧರಾಮಯ್ಯ ಅವರೇ ಎಂದು ಆರೋಪಿಸಿದರು.
eesanje/url_46_54_2.txt ADDED
@@ -0,0 +1,19 @@
 
 
 
 
 
 
 
 
 
 
 
 
 
 
 
 
 
 
 
 
1
+ ನಾನು ವಂಚನೆ ಮಾಡಿ ಭೂಮಿ ಖರೀದಿಸಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ : ಓಪನ್ ಚಾಲೆಂಜ್
2
+ ಬೆಂಗಳೂರು, ಆ.4- ನಾನು ಸಿನಿಮಾ ವಿತರಕ ಆಗಿದ್ದಾಗ ಭೂಮಿ ಖರೀದಿಸಿದೆ. ಯಾರಿಗೂ ಮೋಸ ಮಾಡಲಿಲ್ಲ. ನಾನು ವಂಚನೆ ಮಾಡಿ ಭೂಮಿ ಖರೀದಿಸಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಜೆಡಿಎಸ್‌‍ ರಾಜಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ.
3
+ ಬಿಡದಿಯಲ್ಲಿ ಎರಡನೇ ದಿನದ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಕೇತಗಾನಹಳ್ಳಿಯಲ್ಲಿ ನಾನು ಚಲನಚಿತ್ರ ಪ್ರದರ್ಶಕನಾಗಿದ್ದಾಗ ಚುನಾವಣೆಗೆ ನಿಲ್ಲುವ 15 ವರ್ಷಗಳ ಮುಂಚೆಯೇ 45 ಎಕರೆ ಜಮೀನು ತೆಗೆದುಕೊಂಡಿದ್ದೇನೆ. ಇದನ್ನು ನಾನು ಎಲ್ಲೂ ಮುಚ್ಚಿಟ್ಟಿಲ್ಲ ಎಂದಿದ್ದಾರೆ.
4
+ ಆದರೆ, ದಲಿತರಿಗೆ ಸೇರಬೇಕಾದ 68 ಎಕರೆ ಜಮೀನು ಡಿಸಿಎಂ ಲಪಟಾಯಿಸಿದ್ದಾರೆ. ದಲಿತರಿಗೆ ಸಿಗಬೇಕಾದ ನಿವೇಶನಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಅಸಲಿ ಸೊಸೈಟಿ ನಕಲಿ ಮಾಡಿ ದಲಿತರ ಭೂಮಿ ಲಪಟಾಯಿಸಿದ್ದಾರೆ. ಇಂಥವರ ಬಳಿ ನಾನು ಹೇಳಿಸಿಕೊಳ್ಳುವ ಅಗತ್ಯ ಇಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
5
+ ಹೆಣ್ಣು ಮಗಳೊಬ್ಬಳನ್ನು ಕಿಡ್ನಾಪ್‌ ಮಾಡಿ ಬೆದರಿಸಿ ಅವರಪ್ಪನಿಂದ ಸದಾಶಿವನಗರದಲ್ಲಿ ಸೈಟು ಬರೆಸಿಕೊಂಡಿದ್ದಾರೆ. ಅದೇನೋ ಬಿಚ್ಚಿಡುತ್ತೇನೆ ಅಂದ್ಯಲ್ಲಪ್ಪ, ಬಿಚ್ಚು ನೋಡೋಣ. ನಾನಿರೋದು ಬೀದಿಯಲ್ಲಿ, ನೀನಿರೋದು ಗಾಜಿನ ಮನೆಯಲ್ಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಬಿಚ್ಚೋಕ್ಕೆ ಹೋದರೆ ನಿಮದು ಪುಟ ಗಟ್ಟಲೆ ಇದೆ.ಅಜ್ಜಯ್ಯನ ಬಗ್ಗೆ ಶಿವಕುಮಾರ್‌ ಗೆ ಭಕ್ತಿ, ಗೌರವವಿದ್ದರೆ ಪ್ರಾಮಾಣಿಕವಾಗಿ ಬೆಳೆದು ಬಂದರಾ ಎಂದು ಪ್ರಮಾಣ ಮಾಡಲಿ. ನಾನೂ ಪ್ರಮಾಣ ಮಾಡುತ್ತೇನೆ ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
6
+ ಡಿಕೆಶಿಗೆ ಅಜ್ಜಯ್ಯನ ಶಾಪವೂ ಆರಂಭವಾಗಿದೆ. ಎಷ್ಟು ಮನೆಗಳನ್ನು ಒಡೆದು ನೀವು ಬೆಳೆದಿರಿ ಎಂಬುದು ಗೊತ್ತಿದೆ. ನಾನು ಯಾರಿಗೂ ದ್ರೋಹ ಮಾಡಲಿಲ್ಲ. ಜನರ ಆಶೀರ್ವಾದವೇ ನನ್ನ ಬಲ, ಅದೇ ನನ್ನನ್ನು ಬೆಳೆಸಿದೆ. ನಾನು ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಅವರಿಗೂ ದ್ರೋಹ ಮಾಡಲಿಲ್ಲ. ಆ ಸಂದರ್ಭದಲ್ಲಿ ಅನಿವಾರ್ಯ ಕಾರಣಗಳಿಂದ ಅಧಿಕಾರ ಹಂಚಿಕೆ ಆಗಲಿಲ್ಲ. ಈಗ ಬಿಜೆಪಿ, ಜೆಡಿಎಸ್‌‍ ಮೈತ್ರಿ ಕಾಂಗ್ರೆಸ್‌‍ ನಿದ್ದೆಗೆಡಿಸಿದೆ. ನನಗೆ ಮತ್ತೆ ಅಧಿಕಾರಕ್ಕೆ ಬರುವ ಆಸೆ ಇಲ್ಲ. ಈಗಾಗಲೇ ನಾನು ಎರಡು ಸಲ ಸಿಎಂ ಆಗಿದ್ದೇನೆ. ಆದರೆ ರಾಜ್ಯಕ್ಕೆ ಒಳ್ಳೆಯದಾಗಬೇಕು. ನಾನು ಅಧಿಕಾರ ಕೇಳಿ ನಿಮ ಬಳಿ ಬಂದಿರಲಿಲ್ಲ. ನೀವೇ ಗೋಗರೆದು ಸಿಎಂ ಮಾಡಿದವರು ಎಂದು ಶಿವಕುಮಾರ್‌ಗೆ ತಿರುಗೇಟು ನೀಡಿದ್ದಾರೆ.
7
+ ಸಂಸದ ಡಾಕ್ಟರ್‌ ಮಂಜುನಾಥ್‌ ಅವರು ವೈದ್ಯರ ಕೆಲಸ ಮಾತ್ರ ಮಾಡುತ್ತಿಲ್ಲ. ಅವರಲ್ಲೂ ರಾಜಕೀಯದ ರಕ್ತ ಹರೀತಿದೆ. ಅವರ ಬಗ್ಗೆನೂ ಶಿವಕುಮಾರ್‌ ಮಾತಾಡಿದ್ದಾರೆ ಎಂದು ಹೇಳಿದ್ದಾರೆ.ಈ ಪಾದಯಾತ್ರೆಯನ್ನು ಅಸೂಯೆಯಿಂದ ಹಮಿಕೊಂಡಿದ್ದಲ್ಲ. ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ಅಂಗಡಿ ಬಾಗಿಲು ತೆರೆದು ಕೂತಿದೆ. ಗ್ಯಾರಂಟಿಗಳಿಂದ ಬದಲಾವಣೆಗಳನ್ನು ತಂದಿದ್ದೇವೆ ಅಂದುಕೊಂಡಿದ್ದಾರೆ.
8
+ ಗ್ಯಾರಂಟಿಗಳಿಂದ ರಾಜ್ಯವನ್ನು ದರಿದ್ರದತ್ತ ತಗೊಂಡು ಹೋಗಿದ್ದಾರೆ. ಮಂತ್ರಿಗಳಲ್ಲಿ ಭ್ರಷ್ಟಾಚಾರ ನಡೆಸಲು ಪೈಪೋಟಿ ನಡೆಯುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸುವ ಕಾಂಗ್ರೆಸಿಗರಿಗೆ ಒಂದೇ ಒಂದು ದಾಖಲೆ ಕೊಡಲು ಆಗಿಲ್ಲ ಎಂದು ಟೀಕಿಸಿದ್ದಾರೆ.ನಮ್ಮ ಶಾಸಕರು ಇವರ ಅಕ್ರಮದ ಬಗ್ಗೆ ದಾಖಲೆಗಳ ಸಮೇತ ಮಾತಾಡಿದ್ದಾರೆ. ಮೈಸೂರು ನಗರದ ಉಸ್ತುವಾರಿಯನ್ನು ಮುಖ್ಯಮಂತ್ರಿಯವರೇ ವಹಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ತಮ ಪತ್ನಿ ಹೆಸರಲ್ಲಿ 15 ನಿವೇಶನ ಪಡೆಯಲು ನಮ ವಿರೋಧವಿಲ್ಲ.ಆದರೆ ಅಧಿಕಾರ ದುರುಪಯೋಗ ಪಡಿಸಿಕೊಂಡು, ನಕಲಿ ದಾಖಲೆ ಸೃಷ್ಟಿ ಸಿ15 ನಿವೇಶನಗಳನ್ನು ಪಡೆದಿದ್ದಾರೆ. ಕಾನೂನು ಬಾಹಿರವಾಗಿ ತೆಗೆದುಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
9
+ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಆಸ್ತಿ ಲಪಟಾಯಿಸಿದ್ದಾರೆ. ಇದರ ದಾಖಲೆ ಸದನದಲ್ಲಿ ಇಟ್ಟಿದ್ದೇವೆ. ಆದರೆ, ಉತ್ತರ ಕೊಡದೇ ಕಾಂಗ್ರೆಸ್‌‍ ನಾಯಕರು ಪಲಾಯನ ಮಾಡಿದ್ದಾರೆ. ಯಾರಿಗಾದರೂ ತಾಕತ್‌ ಇದ್ರೆ, ಗಟ್ಟಿ ಧ್ವನಿ ಇದ್ದರೆ ಅದು ಕುಮಾರಸ್ವಾಮಿಗೆ ಎಂದು ಡಿಸಿಎಂ ಹೇಳಿದ್ದಾರೆ.
10
+ ಡಿಸಿಎಂ ಅವರು ಏನು ಪ್ರಶ್ನೆ ಗಳನ್ನು ಹಾಕಿದಾರೋ ಅದಕ್ಕೆ ಉತ್ತರ ಕೊಡಲು ಇಲ್ಲಿದ್ದೇನೆ. ನನ್ನ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಗ್ಗೆ ಡಿಸಿಎಂ ಏಕವಚನದಲ್ಲಿ ಮಾತಾಡಿದ್ದಾರೆ. ನಾವೂ ಹಳ್ಳಿಯ ಮಕ್ಕಳೇ,ನಿಮಗಿಂತಲೂ ಏಕವಚನದಲ್ಲಿ ಮಾತಾಡಲು ನಮಗೂ ಗೊತ್ತು. ಆದರೆ ಆ ಕೆಳಮಟ್ಟಕ್ಕೆ ನಾವು ಇಳಿಯಲ್ಲ ಎಂದಿದ್ದಾರೆ. ಬೆಂಗಳೂರು, ಆ.4- ನಾನು ಸಿನಿಮಾ ವಿತರಕ ಆಗಿದ್ದಾಗ ಭೂಮಿ ಖರೀದಿಸಿದೆ. ಯಾರಿಗೂ ಮೋಸ ಮಾಡಲಿಲ್ಲ. ನಾನು ವಂಚನೆ ಮಾಡಿ ಭೂಮಿ ಖರೀದಿಸಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಜೆಡಿಎಸ್‌‍ ರಾಜಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ.
11
+ ಬಿಡದಿಯಲ್ಲಿ ಎರಡನೇ ದಿನದ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಕೇತಗಾನಹಳ್ಳಿಯಲ್ಲಿ ನಾನು ಚಲನಚಿತ್ರ ಪ್ರದರ್ಶಕನಾಗಿದ್ದಾಗ ಚುನಾವಣೆಗೆ ನಿಲ್ಲುವ 15 ವರ್ಷಗಳ ಮುಂಚೆಯೇ 45 ಎಕರೆ ಜಮೀನು ತೆಗೆದುಕೊಂಡಿದ್ದೇನೆ. ಇದನ್ನು ನಾನು ಎಲ್ಲೂ ಮುಚ್ಚಿಟ್ಟಿಲ್ಲ ಎಂದಿದ್ದಾರೆ. ಆದರೆ, ದಲಿತರಿಗೆ ಸೇರಬೇಕಾದ 68 ಎಕರೆ ಜಮೀನು ಡಿಸಿಎಂ ಲಪಟಾಯಿಸಿದ್ದಾರೆ.
12
+ ದಲಿತರಿಗೆ ಸಿಗಬೇಕಾದ ನಿವೇಶನಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಅಸಲಿ ಸೊಸೈಟಿ ನಕಲಿ ಮಾಡಿ ದಲಿತರ ಭೂಮಿ ಲಪಟಾಯಿಸಿದ್ದಾರೆ. ಇಂಥವರ ಬಳಿ ನಾನು ಹೇಳಿಸಿಕೊಳ್ಳುವ ಅಗತ್ಯ ಇಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.ಹೆಣ್ಣು ಮಗಳೊಬ್ಬಳನ್ನು ಕಿಡ್ನಾಪ್‌ ಮಾಡಿ ಬೆದರಿಸಿ ಅವರಪ್ಪನಿಂದ ಸದಾಶಿವನಗರದಲ್ಲಿ ಸೈಟು ಬರೆಸಿಕೊಂಡಿದ್ದಾರೆ.
13
+
14
+ ಅದೇನೋ ಬಿಚ್ಚಿಡುತ್ತೇನೆ ಅಂದ್ಯಲ್ಲಪ್ಪ, ಬಿಚ್ಚು ನೋಡೋಣ. ನಾನಿರೋದು ಬೀದಿಯಲ್ಲಿ, ನೀನಿರೋದು ಗಾಜಿನ ಮನೆಯಲ್ಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಬಿಚ್ಚೋಕ್ಕೆ ಹೋದರೆ ನಿಮದು ಪುಟ ಗಟ್ಟಲೆ ಇದೆ.ಅಜ್ಜಯ್ಯನ ಬಗ್ಗೆ ಶಿವಕುಮಾರ್‌ ಗೆ ಭಕ್ತಿ, ಗೌರವವಿದ್ದರೆ ಪ್ರಾಮಾಣಿಕವಾಗಿ ಬೆಳೆದು ಬಂದರಾ ಎಂದು ಪ್ರಮಾಣ ಮಾಡಲಿ. ನಾನೂ ಪ್ರಮಾಣ ಮಾಡುತ್ತೇನೆ ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
15
+ ಡಿಕೆಶಿಗೆ ಅಜ್ಜಯ್ಯನ ಶಾಪವೂ ಆರಂಭವಾಗಿದೆ. ಎಷ್ಟು ಮನೆಗಳನ್ನು ಒಡೆದು ನೀವು ಬೆಳೆದಿರಿ ಎಂಬುದು ಗೊತ್ತಿದೆ. ನಾನು ಯಾರಿಗೂ ದ್ರೋಹ ಮಾಡಲಿಲ್ಲ. ಜನರ ಆಶೀರ್ವಾದವೇ ನನ್ನ ಬಲ, ಅದೇ ನನ್ನನ್ನು ಬೆಳೆಸಿದೆ. ನಾನು ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಅವರಿಗೂ ದ್ರೋಹ ಮಾಡಲಿಲ್ಲ. ಆ ಸಂದರ್ಭದಲ್ಲಿ ಅನಿವಾರ್ಯ ಕಾರಣಗಳಿಂದ ಅಧಿಕಾರ ಹಂಚಿಕೆ ಆಗಲಿಲ್ಲ. ಈಗ ಬಿಜೆಪಿ, ಜೆಡಿಎಸ್‌‍ ಮೈತ್ರಿ ಕಾಂಗ್ರೆಸ್‌‍ ನಿದ್ದೆಗೆಡಿಸಿದೆ. ನನಗೆ ಮತ್ತೆ ಅಧಿಕಾರಕ್ಕೆ ಬರುವ ಆಸೆ ಇಲ್ಲ. ಈಗಾಗಲೇ ನಾನು ಎರಡು ಸಲ ಸಿಎಂ ಆಗಿದ್ದೇನೆ. ಆದರೆ ರಾಜ್ಯಕ್ಕೆ ಒಳ್ಳೆಯದಾಗಬೇಕು. ನಾನು ಅಧಿಕಾರ ಕೇಳಿ ನಿಮ ಬಳಿ ಬಂದಿರಲಿಲ್ಲ. ನೀವೇ ಗೋಗರೆದು ಸಿಎಂ ಮಾಡಿದವರು ಎಂದು ಶಿವಕುಮಾರ್‌ಗೆ ತಿರುಗೇಟು ನೀಡಿದ್ದಾರೆ.
16
+ ಸಂಸದ ಡಾಕ್ಟರ್‌ ಮಂಜುನಾಥ್‌ ಅವರು ವೈದ್ಯರ ಕೆಲಸ ಮಾತ್ರ ಮಾಡುತ್ತಿಲ್ಲ. ಅವರಲ್ಲೂ ರಾಜಕೀಯದ ರಕ್ತ ಹರೀತಿದೆ. ಅವರ ಬಗ್ಗೆನೂ ಶಿವಕುಮಾರ್‌ ಮಾತಾಡಿದ್ದಾರೆ ಎಂದು ಹೇಳಿದ್ದಾರೆ.ಈ ಪಾದಯಾತ್ರೆಯನ್ನು ಅಸೂಯೆಯಿಂದ ಹಮಿಕೊಂಡಿದ್ದಲ್ಲ. ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ಅಂಗಡಿ ಬಾಗಿಲು ತೆರೆದು ಕೂತಿದೆ. ಗ್ಯಾರಂಟಿಗಳಿಂದ ಬದಲಾವಣೆಗಳನ್ನು ತಂದಿದ್ದೇವೆ ಅಂದುಕೊಂಡಿದ್ದಾರೆ.
17
+ ಗ್ಯಾರಂಟಿಗಳಿಂದ ರಾಜ್ಯವನ್ನು ದರಿದ್ರದತ್ತ ತಗೊಂಡು ಹೋಗಿದ್ದಾರೆ. ಮಂತ್ರಿಗಳಲ್ಲಿ ಭ್ರಷ್ಟಾಚಾರ ನಡೆಸಲು ಪೈಪೋಟಿ ನಡೆಯುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸುವ ಕಾಂಗ್ರೆಸಿಗರಿಗೆ ಒಂದೇ ಒಂದು ದಾಖಲೆ ಕೊಡಲು ಆಗಿಲ್ಲ ಎಂದು ಟೀಕಿಸಿದ್ದಾರೆ.ನಮ್ಮ ಶಾಸಕರು ಇವರ ಅಕ್ರಮದ ಬಗ್ಗೆ ದಾಖಲೆಗಳ ಸಮೇತ ಮಾತಾಡಿದ್ದಾರೆ. ಮೈಸೂರು ನಗರದ ಉಸ್ತುವಾರಿಯನ್ನು ಮುಖ್ಯಮಂತ್ರಿಯವರೇ ವಹಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ತಮ ಪತ್ನಿ ಹೆಸರಲ್ಲಿ 15 ನಿವೇಶನ ಪಡೆಯಲು ನಮ ವಿರೋಧವಿಲ್ಲ.ಆದರೆ ಅಧಿಕಾರ ದುರುಪಯೋಗ ಪಡಿಸಿಕೊಂಡು, ನಕಲಿ ದಾಖಲೆ ಸೃಷ್ಟಿ ಸಿ15 ನಿವೇಶನಗಳನ್ನು ಪಡೆದಿದ್ದಾರೆ. ಕಾನೂನು ಬಾಹಿರವಾಗಿ ತೆಗೆದುಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
18
+ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಆಸ್ತಿ ಲಪಟಾಯಿಸಿದ್ದಾರೆ. ಇದರ ದಾಖಲೆ ಸದನದಲ್ಲಿ ಇಟ್ಟಿದ್ದೇವೆ. ಆದರೆ, ಉತ್ತರ ಕೊಡದೇ ಕಾಂಗ್ರೆಸ್‌‍ ನಾಯಕರು ಪಲಾಯನ ಮಾಡಿದ್ದಾರೆ. ಯಾರಿಗಾದರೂ ತಾಕತ್‌ ಇದ್ರೆ, ಗಟ್ಟಿ ಧ್ವನಿ ಇದ್ದರೆ ಅದು ಕುಮಾರಸ್ವಾಮಿಗೆ ಎಂದು ಡಿಸಿಎಂ ಹೇಳಿದ್ದಾರೆ.
19
+ ಡಿಸಿಎಂ ಅವರು ಏನು ಪ್ರಶ್ನೆ ಗಳನ್ನು ಹಾಕಿದಾರೋ ಅದಕ್ಕೆ ಉತ್ತರ ಕೊಡಲು ಇಲ್ಲಿದ್ದೇನೆ. ನನ್ನ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಗ್ಗೆ ಡಿಸಿಎಂ ಏಕವಚನದಲ್ಲಿ ಮಾತಾಡಿದ್ದಾರೆ. ನಾವೂ ಹಳ್ಳಿಯ ಮಕ್ಕಳೇ,ನಿಮಗಿಂತಲೂ ಏಕವಚನದಲ್ಲಿ ಮಾತಾಡಲು ನಮಗೂ ಗೊತ್ತು. ಆದರೆ ಆ ಕೆಳಮಟ್ಟಕ್ಕೆ ನಾವು ಇಳಿಯಲ್ಲ ಎಂದಿದ್ದಾರೆ.
eesanje/url_46_54_3.txt ADDED
@@ -0,0 +1,7 @@
 
 
 
 
 
 
 
 
1
+ “ಸಿಎಂ, ಡಿಸಿಎಂ ರಾಜ್ಯವನ್ನು ಲೂಟಿಮಾಡಿ ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ ಸಲ್ಲಿಸುತ್ತಿದ್ದಾರೆ”
2
+ ಬೆಂಗಳೂರು, ಆ.4-ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಭ್ರಷ್ಟ ಕಾಂಗ್ರೆಸ್‌‍ ಸರ್ಕಾರವು ಹಣ ಲೂಟಿ ಮಾಡಿ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರು ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಟೀಕಿಸಿದರು.
3
+ ಮೈಸೂರು ಚಲೋ ಪಾದಯಾತ್ರೆಯ ಎರಡನೇ ದಿನವಾದ ಇಂದು ಬಿಡದಿಯಲ್ಲಿ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ದೀನದಲಿತರು, ಪರಿಶಿಷ್ಟ ಜಾತಿ, ಪಂಗಡದ ಪರವಾಗಿ, ಬಡ ಜನರ ಪರವಾಗಿ ಪ್ರಶ್ನಿಸಿದ ವಿಪಕ್ಷಕ್ಕೆ ಉತ್ತರ ಕೊಡಬೇಕಾದ ಆಡಳಿತ ಪಕ್ಷದವರು ವಿಪಕ್ಷಕ್ಕೇ ಮರುಪ್ರಶ್ನೆ ಹಾಕುತ್ತಿದ್ದಾರೆ ಎಂದು ಆಕ್ಷೇಪಿಸಿದರು.
4
+ ಮಾನ್ಯ ಮುಖ್ಯಮಂತ್ರಿಯವರೇ, ನೀವು ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಹಿಂದದ ಅಭಿವೃದ್ಧಿ ಹೆಸರಿನಿಂದ ಅಧಿಕಾರಕ್ಕೆ ಬಂದಿದ್ದೀರಿ. ನಿಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅವರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿದ್ದನ್ನು ಸ್ವತಃ ಮುಖ್ಯಮಂತ್ರಿಗಳಾದ ನೀವೇ ಸದನದಲ್ಲಿ ಒಪ್ಪಿಕೊಂಡಿದ್ದೀರಿ. ವಾಲೀಕಿ ನಿಗಮದಲ್ಲಿ ಹಗರಣ ಆದುದನ್ನು ಒಪ್ಪಿಕೊಂಡಿದ್ದೀರಲ್ಲವೇ? ನೀವು ನಮಗೆ ಉತ್ತರ ಕೊಡಬೇಕಿದೆ ಎಂದು ಆಗ್ರಹಿಸಿದರು.
5
+ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅಧಿಕಾರದ ದರ್ಪ, ಅಧಿಕಾರದ ಅಹಂನಿಂದ ಉಪ ಮುಖ್ಯಮಂತ್ರಿಯವರು ಮಾತನಾಡುತ್ತಿದ್ದಾರೆ. ಅವರು ರಾಜ್ಯದ ಜನತೆಗೆ ಉತ್ತರ ಕೊಡಬೇಕಿದೆ ಎಂದು ಒತ್ತಾಯಿಸಿದರು.
6
+ ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದ ಬಳಿಕ ಬಿಡದಿಯಲ್ಲಿರುವ ಟೊಯೊಟಾ ್ಯಾಕ್ಟರಿ ಕೂಡ ಹೊರರಾಜ್ಯಕ್ಕೆ ಹೋಗುವ ಪರಿಸ್ಥಿತಿ ಉದ್ಭವವಾಗಿದೆ. ಹೊಸ ಉದ್ಯಮಗಳು, ಕೈಗಾರಿಕೆಗಳು ನಮ ರಾಜ್ಯಕ್ಕೆ ಬರುತ್ತಿಲ್ಲ. ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ನಿಮ ದುರಹಂಕಾರದ ನಡವಳಿಕೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ; ಲೂಟಿ ಮಾಡುತ್ತ ಕುಳಿತಿದ್ದೀರಿ ಎಂದು ಟೀಕಿಸಿದರು.
7
+ ಜೆಡಿಎಸ್‌‍ ರಾಜ್ಯಾಧ್ಯಕ್ಷ ಮತ್ತು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್‌ ಕುಮಾರ್‌, ಸತೀಶ್‌ ರೆಡ್ಡಿ, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ್‌‍, ಜೆಡಿಎಸ್‌‍ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ ಬಾಬು, ಮಂಜುನಾಥ್‌, ಶಾಸಕ ಕೃಷ್ಣಪ್ಪ, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಗೋಪಾಲಯ್ಯ, ಮುಖಂಡ ಮಹೇಶ್‌, ಬಿಜೆಪಿ ಹಾಗೂ ಜೆಡಿಎಸ್‌‍ ಪಕ್ಷಗಳ ಸಂಸದರು, ಶಾಸಕರು, ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.
eesanje/url_46_54_4.txt ADDED
@@ -0,0 +1,7 @@
 
 
 
 
 
 
 
 
1
+ ನಮ್ಮ ಪ್ರಶ್ನೆಗಳಿಗೆ ಉತ್ತರಿಸುವ ಬದಲು ನಮಗೇ ಪ್ರಶ್ನೆ ಹಾಕುತ್ತಿರುವುದು ಹಾಸ್ಯಾಸ್ಪದ : ವಿಜಯೇಂದ್ರ
2
+ ಬೆಂಗಳೂರು, ಆ.4-ನಮ್ಮದು ವಿರೋಧ ಪಕ್ಷ. ರಾಜ್ಯದ ಜನರ ಪರವಾಗಿ ನಾವು ಕೇಳುವ ಪ್ರಶ್ನೆಗಳಿಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಉತ್ತರ ನೀಡಬೇಕು. ಅದರ ಬದಲಾಗಿ ನಮಗೇ ಪ್ರಶ್ನೆ ಹಾಕುತ್ತಿದ್ದು, ಇದು ಹಾಸ್ಯಾಸ್ಪದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದರು.
3
+ ಮೈಸೂರು ಚಲೋ ಪಾದಯಾತ್ರೆಯ ಎರಡನೇ ದಿನವಾದ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸದನದಲ್ಲೂ ನಮ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಇವತ್ತೂ ಉತ್ತರ ಸಿಕ್ಕಿಲ್ಲ. ಈ ಪಾದಯಾತ್ರೆ ಮೂಲಕ ಇವರಿಗೆ ಚಾಟಿ ಬೀಸುವ ಮತ್ತು ಬುದ್ಧಿ ಕಲಿಸುವ ಕೆಲಸ ಮಾಡುತ್ತೇವೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.
4
+ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ದಿನಗಳು ಹತ್ತಿರ ಆಗುತ್ತಿವೆಯೇ ಎಂಬ ಪ್ರಶ್ನೆಗೆ ನನಗೇನೂ ಇದರಲ್ಲಿ ಅನುಮಾನ ಇಲ್ಲ ಎಂದು ಉತ್ತರಿಸಿದರು. ಸಿದ್ದರಾಮಯ್ಯನವರು ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳು; ತಮ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕಿ ಇಲ್ಲ ಎಂದು ಮೊಂಡುವಾದ ಮಾಡುತ್ತಿದ್ದರು.
5
+ ಇವತ್ತು ಅವರು ಹಗರಣಗಳ ಸರಮಾಲೆಯಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ. ನಿನ್ನೆ ಯಾದಗಿರಿಯಲ್ಲಿ ಪಿಎಸ್‌‍ಐ ಪರಶುರಾಮ್‌ ಆತಹತ್ಯೆ ಮಾಡಿಕೊಂಡಿದ್ದಾರೆ. ಇದರ ಹಿಂದಿನ ಕಾರಣ ರಾಜ್ಯದ ಜನತೆಗೆ ಗೊತ್ತಿದೆ. ರಾಜ್ಯದ ಆಡಳಿತ ಪಕ್ಷದ ಪರಿಸ್ಥಿತಿ ಹಿರಿಯಕ್ಕನ ಚಾಳಿ ಮನೆಮಂದಿಗೆ ಎಂಬಅತಾಗಿದೆ ಎಂದು ಟೀಕಿಸಿದರು.
6
+ ಮುಖ್ಯಮಂತ್ರಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಸ್ವತಃ ಮಂತ್ರಿಮಂಡಲ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅದೇ ರೀತಿ ಆಡಳಿತ ಪಕ್ಷದ ಶಾಸಕರೂ ಭ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ ಎಂದು ಆಕ್ಷೇಪಿಸಿದರು.ಕರ್ನಾಟಕದಲ್ಲಿ ಸರ್ಕಾರಿ ಅಧಿಕಾರಿಗಳು, ಗುತ್ತಿಗೆ ಹಣ ಸಿಗದೆ ಗುತ್ತಿಗೆದಾರರು ಆತಹತ್ಯೆ ಮಾಡಿಕೊಳ್ಳುತ್ತಿದ್ದಾರೆ.
7
+ ಶಾಸಕರು ಕೇಳಿದ ಲಂಚ ಕೊಡಲಾಗದೆ ಪಿಎಸ್‌‍ಐ ಪರಶುರಾಮ್‌ ನಿನ್ನೆ ಸಾವನ್ನಪ್ಪಿದ್ದಾರೆ. ಭ್ರಷ್ಟಾಚಾರರಹಿತ ಆಡಳಿತ ಕೊಡುವುದಾಗಿ ಹೇಳಿಕೊಂಡು ಆಧಿಕಾರಕ್ಕೆ ಬಂದ ಕಾಂಗ್ರೆಸ್‌‍ ಪಕ್ಷವು ಇಂದು ಹಗರಣಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದೆ ಎಂದು ಟೀಕಿಸಿದರು.
eesanje/url_46_54_5.txt ADDED
@@ -0,0 +1,5 @@
 
 
 
 
 
 
1
+ ಪಿಎಸ್‌‍ಐ ಪರಶುರಾಮ್‌ ಸಾವು : ಶಾಸಕ ಹಾಗೂ ಪುತ್ರನ ವಿರುದ್ಧ ದೂರು ದಾಖಲು
2
+ ಯಾದಗಿರಿ,ಆ.3-ಸೈಬರ್‌ ಠಾಣೆಯ ಪಿಎಸ್‌‍ಐ ಪರಶುರಾಮ್‌ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌‍ನ ಯಾದಗಿರಿ ಕ್ಷೇತ್ರದ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ಹಾಗೂ ಅವರ ಪುತ್ರ ಪಂಪನಗೌಡ ವಿರುದ್ಧ ಪ್ರಕರಣ ದಾಖಲಾಗಿದೆ.
3
+ ಪಿಎಸ್‌‍ಐ ಪರುಶುರಾಮ್‌ ನಿನ್ನೆ ಮೃತಪಟ್ಟಿದ್ದರು. ಅವರ ಪತ್ನಿ ಶ್ವೇತಾ ದೂರು ನೀಡಿದ್ದು, ತಮ ಪತಿಗೆ ವರ್ಗಾವಣೆ ಮತ್ತು ಸ್ಥಳ ನಿಯೋಜನೆಗಾಗಿ ಸ್ಥಳೀಯ ಶಾಸಕ ಮತ್ತು ಅವರ ಪುತ್ರ ಹಣದ ಬೇಡಿಕೆ ಇಟ್ಟಿದ್ದರು. ಇದರಿಂದ ಒತ್ತಡ ಹಾಗೂ ಮಾನಸಿಕ ಖಿನ್ನತೆಗೆ ಒಳಗಾದ ತಮ ಪತಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದರು.
4
+ ಮೂರು ಪುಟಗಳ ದೂರು ಆಧರಿಸಿ ಯಾದಗಿರಿ ನಗರ ಪೊಲೀಸ್‌‍ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಪಿಎಸ್‌‍ಐ ಮೃತಪಟ್ಟು 20 ಗಂಟೆಗಳಾದರೂ ದೂರು ದಾಖಲಿಸಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು. ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರೆ ಸರ್ಕಾರ ಅಳೆದುತೂಗಿ ಕೊನೆಗೂ ಎಫ್‌ಐಆರ್‌ ದಾಖಲಿಸಿದೆ.
5
+ ಆಡಳಿತ ಪಕ್ಷದ ಶಾಸಕರ ವಿರುದ್ಧ ಲಂಚ ಆರೋಪಕ್ಕೆ ಸಂಬಂಧಪಟ್ಟಂತೆ ದೂರು ದಾಖಲಾಗಿರುವುದು ವಿಪಕ್ಷಗಳಿಗೆ ರಾಜಕೀಯವಾಗಿ ಮತ್ತೊಂದು ಅಸ್ತ್ರ ನೀಡಿದಂತಾಗಿದೆ.
eesanje/url_46_54_6.txt ADDED
@@ -0,0 +1,7 @@
 
 
 
 
 
 
 
 
1
+ ಪಿಎಸ್‌‍ಐ ಸಾವಿನ ತನಿಖೆಗೆ ಸೂಚನೆ : ಗೃಹಸಚಿವ ಪರಮೇಶ್ವರ್‌
2
+ ಬೆಂಗಳೂರು,ಆ.3-ಯಾದಗಿರಿಯ ಪಿಎಸ್‌‍ಐ ಪರಶುರಾಮ್‌ ಅಸಹಜ ಸಾವಿನ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಸೂಚಿಸಿರುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಯ ಪತ್ನಿ ಶ್ವೇತಾ ಅವರ ಆರೋಪವನ್ನು ತನಿಖೆಯಲ್ಲಿ ಪರಿಗಣಿಸುವಂತೆ ಆದೇಶಿಸಲಾಗಿದೆ.
3
+ ವರ್ಗಾವಣೆಗಾಗಿ ಸ್ಥಳೀಯ ಶಾಸಕರಿಗೆ 30 ಲಕ್ಷ ರೂ. ಲಂಚ ನೀಡಿದ್ದರು ಎಂದು ಆರೋಪ ಮಾಡಿದ್ದಾರೆ. ಅದು ಆರೋಪ ಮಾತ್ರ. ತನಿಖೆ ನಡೆಯಬೇಕು. ಆರೋಪ ಮಾಡಿದ ತಕ್ಷಣವೇ ಅದು ಸತ್ಯ ಎಂದಾಗಲೀ ಅಥವಾ ಸುಳ್ಳು ಎಂದಾಗಲೀ ಹೇಳಲಾಗುವುದಿಲ್ಲ. ತನಿಖೆ ನಡೆಯಲಿ ಎಂದರು.
4
+ ಪರಶುರಾಮ್‌ ಸಾವು ಸಹಜವಾಗಿದೆ. ಆತಹತ್ಯೆ ಅಲ್ಲ. ಮರಣದ ಮುನ್ನ ಬರೆದಿರುವ ಯಾವುದೇ ಪತ್ರಗಳು ದೊರೆತಿಲ್ಲ. ಕುಟುಂಬದ ಸದಸ್ಯರು ವರ್ಗಾವಣೆ ಹಿನ್ನೆಲೆಯಲ್ಲಿ ಒತ್ತಡಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ ಎಂಬ ಆರೋಪ ಮಾಡಿದ್ದಾರೆ. ಅದನ್ನು ನಾವು ತಳ್ಳಿಹಾಕುವುದಿಲ್ಲ. ತನಿಖೆ ಮಾಡಲು ಸೂಚಿಸಿದ್ದೇನೆ ಎಂದು ಹೇಳಿದರು.
5
+ ಪ್ರಾಥಮಿಕ ಸಾಕ್ಷ್ಯ ಹಾಗೂ ಮಾಹಿತಿ ಕಲೆ ಹಾಕಿದ ಬಳಿಕ ಎಫ್‌ಐಆರ್‌ ದಾಖಲಿಸುತ್ತಾರೆ. ಹಾಗಾಗಿ ವಿಳಂಬವಾಗಿ ಪ್ರಕರಣ ದಾಖಲಿಸಲಾಗುತ್ತಿದೆ ಎಂಬುದು ಸರಿಯಲ್ಲ. ಪ್ರಕರಣದಲ್ಲಿ ಕಾನೂನಿನ ಪಾಲನೆಯನ್ನಷ್ಟೇ ನಾವು ಮಾಡುತ್ತೇವೆ. ಅಧಿಕಾರಿಯ ಸಮುದಾಯ ಅಥವಾ ಜಾತಿಯನ್ನು ನಾವು ಪರಿಗಣಿಸುವುದಿಲ್ಲ. ಬಿಜೆಪಿ ನಾಯಕರು ಆರೋಪ ಮಾಡುವ ವಿಚಾರ ಕುರಿತಂತೆ ತಾವು ಪ್ರತಿಕ್ರಿಯಿಸುವುದಿಲ್ಲ ಎಂದರು.
6
+ ಒಂದು ವೇಳೆ ಪ್ರಕರಣದಲ್ಲಿ ಶಾಸಕರು ಭಾಗಿಯಾಗಿದ್ದರೂ ಕೂಡ ಎಫ್‌ಐಆರ್‌ ದಾಖಲಾದ ಬಳಿಕ ತನಿಖೆ ಮುಂದುವರೆಯಲಿದೆ ಎಂದು ತಿಳಿಸಿದರು. ಬಿಜೆಪಿ-ಜೆಡಿಎಸ್‌‍ನ ಪಾದಯಾತ್ರೆಗೆ ಷರತ್ತುಗಳನ್ನು ವಿಧಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯಬಾರದು.
7
+ ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಎಚ್ಚರಿಕೆ ನೀಡಲಾಗಿದೆ. ಅವರು ನ್ಯಾಯಾಲಯಕ್ಕೆ ಹೋಗುವ ಮುನ್ನವೇ ನಾವೇ ಅನುಮತಿ ನೀಡುವುದಾಗಿ ಹೇಳಿದ್ದೆವು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿತ್ತು ಎಂದು ತಿಳಿಸಿದರು.
eesanje/url_46_54_7.txt ADDED
@@ -0,0 +1,8 @@
 
 
 
 
 
 
 
 
 
1
+ ಪಿಎಸ್‌‍ಐ ಪರಶುರಾಮ್‌ ಕುಟುಂಬಕ್ಕೆ ನ್ಯಾಯ ಕೊಡಿಸುತ್ತೇವೆ : ಸಚಿವ ಪ್ರಿಯಾಂಕ್‌ ಖರ್ಗೆ ಭರವಸೆ
2
+ ಬೆಂಗಳೂರು,ಆ.3– ಯಾದಗಿರಿ ಪಿಎಸ್‌‍ಐ ಪರಶುರಾಮ್‌ ಅವರ ಸಾವಿನ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಶಾಸಕರ ವಿರುದ್ಧ ದೂರು ಬಂದಿದೆ. ಅದನ್ನು ಪರಿಶೀಲನೆ ನಡೆಸಿ ಕುಟುಂಬದ ಸದಸ್ಯರ ಬೇಡಿಕೆಗ ನುಗುಣವಾಗಿ ನ್ಯಾಯ ದೊರಕಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಭರವಸೆ ನೀಡಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಬೆಳಿಗ್ಗೆ ನಾನು ಪಿಎಸ್‌‍ಐರವರ ಪತ್ನಿ ಶ್ವೇತಾ ಹಾಗೂ ಕುಟುಂಬದ ಸದಸ್ಯರ ಜೊತೆ ದೂರವಾಣಿಯಲ್ಲಿ ಚರ್ಚೆ ನಡೆಸಿದ್ದೇನೆ. ಕುಟುಂಬದ ಬೇಡಿಕೆಗನುಗುಣವಾಗಿ ಸರ್ಕಾರ ನಡೆದುಕೊಳ್ಳಲಿದೆ. ಅವರು ಕೇಳುವಂತಹ ತನಿಖೆಗೆ ಗೃಹಸಚಿವರು ಮತ್ತು ಮುಖ್ಯಮಂತ್ರಿಯವರು ಆದೇಶ ನೀಡಲಿದ್ದಾರೆ ಎಂದರು.
4
+ ಶಾಸಕರ ವಿರುದ್ಧ ನೀಡಿರುವ ದೂರನ್ನು ಸ್ವೀಕರಿಸಲಾಗಿದೆ. ಎಫ್‌ಐಆರ್‌ ದಾಖಲಿಸಬೇಕೆಂಬ ವಿಚಾರವನ್ನು ಪರಿಶೀಲಿಸಲಾಗುತ್ತಿದೆ. ಅಧಿಕಾರಿಯ ಸಾವಿನ ಸಂದರ್ಭದಲ್ಲಿ ಹೇಳಿಕೆಯಾಗಲೀ, ಮರಣಾ ಮುನ್ನ ಬರೆದಿರುವ ಪತ್ರವಾಗಲೀ ಸಿಕ್ಕಿಲ್ಲ. ಸಾವನ್ನು ಕೆಲವರು ಹೃದಯಾಘಾತ ಎಂದು ಹೇಳುತ್ತಿದ್ದಾರೆ. ಮತ್ತೆ ಕೆಲವರು ಬೇರೆಯ ರೀತಿ ವ್ಯಾಖ್ಯಾನಿಸಿದ್ದಾರೆ ಎಂದು ಹೇಳಿದರು.
5
+ ಪಿಎಸ್‌‍ಐ ಅವರ ಪತ್ನಿ ಶ್ವೇತಾ 8 ತಿಂಗಳ ಗರ್ಭಿಣಿ. ಆಕೆಯ ಆರೋಗ್ಯ ನಮಗೆ ಬಹಳ ಮುಖ್ಯ. ದೂರವಾಣಿಯಲ್ಲಿ ಮಾತನಾಡಿದಾಗ ಮೊದಲು ಆರೋಗ್ಯದ ಕಡೆ ಗಮನ ನೀಡುವಂತೆ ಸಲಹೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಇಲಾಖಾ ವಿಚಾರಣೆ, ಪರಿಹಾರ ಸೇರಿದಂತೆ ಲಭ್ಯವಿರುವ ಎಲ್ಲಾ ಅನುಕೂಲಗಳನ್ನೂ ಕುಟುಂಬದ ಸದಸ್ಯರಿಗೆ ಒದಗಿಸಲಾಗುವುದು. ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ್‌ ಅವರ ಜೊತೆಯೂ ಈ ಕುರಿತು ತಾವು ಚರ್ಚೆ ನಡೆಸಿರುವುದಾಗಿ ತಿಳಿಸಿದರು.
6
+ ಮೃತಪಟ್ಟ ಅಧಿಕಾರಿ ತಮ ಬಳಿ ಬಂದಿದ್ದರು. ವರ್ಗಾವಣೆಯಾಗಿ ಒಂದು ವರ್ಷವಾಗಿದೆ. ಈ ನಡುವೆ ಚುನಾವಣೆ ಕಾರಣಕ್ಕಾಗಿ ಮೂರು ತಿಂಗಳು ಅಫ್ಜಲ್‌ಪುರಕ್ಕೆ ಸ್ಥಳಾಂತರಿಸಲಾಗಿತ್ತು.ಮರಳಿ ಯಾದಗಿರಿಗೆ ವರ್ಗಾವಣೆಯಾಗಿದೆ. ಕಾರ್ಯ ನಿರ್ವಾಹಕ ಹುದ್ದೆಯನ್ನು ಕೊಟ್ಟರೆ ಇಲಾಖೆಯಲ್ಲಿ ತಮಗೂ ಸೇವಾ ಅನುಭವವಾಗುತ್ತದೆ ಎಂದು ಕೇಳಿಕೊಂಡಿದ್ದರು. ಕಲಬುರಗಿಯಲ್ಲಿ ಸಿಬ್ಬಂದಿಗಳ ಕೊರತೆಯಿದೆ. ಅಲ್ಲಿಗೆ ಬರುವುದಾದರೆ ಅನುಕೂಲ ಮಾಡಿಕೊಡುವುದಾಗಿ ತಾವು ಸಲಹೆ ನೀಡಿದ್ದು, ಈಗಷ್ಟೇ ಯಾದಗಿರಿಗೆ ಕುಟುಂಬವನ್ನು ಸ್ಥಳಾಂತರಿಸಿದ್ದೇನೆ, ಎರಡು ದಿನ ಸಮಯ ಕೊಡಿ. ಮನೆಯವರ ಬಳಿ ಚರ್ಚಿಸಿ ತಿಳಿಸುತ್ತೇನೆ ಎಂದಿದ್ದರು. ಅಷ್ಟರಲ್ಲಿ ಸಾವಾಗಿದೆ ಎಂದು ಪ್ರಿಯಾಂಕ್‌ ಖರ್ಗೆ ತಿಳಿಸಿದರು.
7
+ ತಮ ಬಳಿ ಚರ್ಚಿಸಿದಾಗ ಶಾಸಕರು 30 ಲಕ್ಷ ರೂ. ಲಂಚ ಕೇಳಿದ ವಿಚಾರವನ್ನಾಗಲೀ, ಬೇರೆ ಯಾವುದನ್ನೂ ಪರಶುರಾಮ್‌ ಚರ್ಚೆ ಮಾಡಿರಲಿಲ್ಲ. ಕುಟುಂಬದ ಸದಸ್ಯರು ಏನೇ ಆರೋಪ ಮಾಡಿದರೂ ಅದನ್ನು ತನಿಖೆ ನಡೆಸಲಾಗುವುದು. ದೂರನ್ನು ನಾವು ತಿರಸ್ಕರಿಸಿಲ್ಲ. ತನಿಖೆ ನಡೆಸುತ್ತೇವೆ. ಮರಣೋತ್ತರ ಪರೀಕ್ಷಾ ವರದಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಹೇಳಿದರು.
8
+ ಇದೇ ವೇಳೆ ಜೆಡಿಎಸ್‌‍-ಬಿಜೆಪಿಯ ಪಾದಯಾತ್ರೆ ಬಗ್ಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್‌ ಖರ್ಗೆ, ಬಿಜೆಪಿಯ ಹಲವು ನಾಯಕರು ವಿಜಯೇಂದ್ರರ ನಾಯಕತ್ವವನ್ನು ಒಪ್ಪಿಲ್ಲ. ಪಾದಯಾತ್ರೆಯಲ್ಲಿ ಎಲ್ಲರೂ ಭಾಗವಹಿಸುತ್ತಿಲ್ಲ. ಅವರಲ್ಲಿ ಒಗ್ಗಟ್ಟು ಕಾಣುತ್ತಿಲ್ಲ ಎಂದರು. ರಾಜ್ಯಪಾಲರನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡಲಾಗುತ್ತಿದೆ. ಸೂಕ್ತ ದಾಖಲೆಗಳಿಲ್ಲದೆ ಆರೋಪ ಮಾಡಲಾಗುತ್ತಿದೆ. ರಾಜಭವನವನ್ನು ಬಿಜೆಪಿಯವರು ಪ್ರಾದೇಶಿಕ ಕಚೇರಿಯಂತೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಪಾದಯಾತ್ರೆಗೆ ನಮ ಸರ್ಕಾರ ಅಡ್ಡಿಪಡಿಸಿಲ್ಲ ಎಂದು ಹೇಳಿದರು.
eesanje/url_46_54_8.txt ADDED
@@ -0,0 +1,9 @@
 
 
 
 
 
 
 
 
 
 
1
+ ಹೊಸ ಜಾಹೀರಾತು ನೀತಿ ಕೈ ಬಿಡಿ, 646 ಕೋಟಿ ಬಾಕಿ ವಸೂಲಿ ಮಾಡಿ : ಸಿಎಂ
2
+ ಬೆಂಗಳೂರು,ಆ.3– ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹೊಸ ಜಾಹೀರಾತು ನೀತಿಯನ್ನು ಈ ಕೂಡಲೇ ವಾಪಸ್‌‍ ಪಡೆಯಬೇಕು ಎಂದು ಬಿಜೆಪಿ ಮುಖಂಡ ಎನ್‌. ಆರ್‌. ರಮೇಶ್‌ ಆಗ್ರಹಿಸಿದ್ದಾರೆ.ಅಧಿಕತ ಜಾಹೀರಾತು ಏಜೆನ್ಸಿಗಳಿಂದ ಬಾಕಿ ಬರಬೇಕಿರುವ ಸುಮಾರು 646 ಕೋಟಿ ರೂ. ಗಳಿಗೂ ಅಧಿಕ ಮೊತ್ತದ ಜಾಹೀರಾತು ಶುಲ್ಕ ವಸೂಲಾತಿಗೆ ಕ್ರಮ ವಹಿಸುವ ಬದಲು ಉದ್ಯಾನನಗರಿಯ ಸೌದರ್ಯವನ್ನು ಹಾಳುಗೆಡಹುವ ಮತ್ತು ನಿರಂತರ ಅಪಘಾತಗಳಿಗೆ ಕಾರಣವಾಗುವ ಹೊಸ ಜಾಹೀರಾತು ನೀತಿ – 2024 ಯನ್ನು ಜಾರಿಗೆ ತಂದಿರುವ ಸರ್ಕಾರದ ಕಾನೂನುಬಾಹಿರ ನಡೆಯನ್ನು ಕೂಡಲೇ ಹಿಂಪಡೆಯಬೇಕೆಂದು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಬಿಬಿಎಂಪಿ ಆಡಳಿತಾಧಿಕಾರಿಗಳು ಮತ್ತು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
3
+ ಪ್ರಸ್ತುತ ಬಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ಅಳತೆಗಳ ಜಾಹೀರಾತು ಫಲಕಗಳನ್ನು ಅಳವಡಿಸುವ ಗುತ್ತಿಗೆಯನ್ನು ಪಡೆದಿದ್ದ ಒಟ್ಟು 110 ಅಧಿಕತ ಜಾಹೀರಾತು ಏಜೆನ್ಸಿಗಳು ಮತ್ತು ಒಟ್ಟು 2,621 ಅನಧಿಕತ ಜಾಹೀರಾತು ಏಜೆನ್ಸಿಗಳು ಇವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಜಾಹೀರಾತು ಫಲಕಗಳನ್ನು ನಿಷೇಧಿಸಿ ಉಚ್ಛ ನ್ಯಾಯಾಲಯವು 2018 ರಲ್ಲಿ ಮಧ್ಯಂತರ ಆದೇಶವನ್ನು ನೀಡಿರುತ್ತದೆ.
4
+ ಇದೇ ವಿಷಯಕ್ಕೆ ಸಂಬಂಧಿಸಿದಂತೆ 2016 ರಲ್ಲಿ ರಾಜ್ಯ ಉಚ್ಛ ನ್ಯಾಯಾ ಲಯದಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿದ್ದ ಪಾಲಿಕೆಯ ಅಂದಿನ ಆಯುಕ್ತ ರಾಗಿದ್ದ ಮಂಜುನಾಥ್‌ ಪ್ರಸಾದ್‌ ಅವರು ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 2,621 ಅನಧಿಕತ ಜಾಹೀರಾತು ಏಜೆನ್ಸಿಗಳಿದ್ದು, ಒಟ್ಟು . 331,92,20,410/- ಗಳಷ್ಟು ಜಾಹೀರಾತು ಶುಲ್ಕ ಅಧಿಕತ ಏಜೆನ್ಸಿಗಳಿಂದ ಬಾಕಿ ಬರಬೇಕಿರುತ್ತದೆ ಮತ್ತು ಈ ಸಂಬಂಧ ಒಟ್ಟು 5,507 ನೋಟೀಸ್‌‍ಗಳನ್ನು ನೀಡಲಾಗಿದೆ ಎಂಬ ವಿಷಯವನ್ನು ತಮ ಪ್ರಮಾಣ ಪತ್ರದಲ್ಲಿ ಸ್ಪಷ್ಟವಾಗಿ ತಿಳಿಸಿದ್ದರು.
5
+ ಅದಕ್ಕೂ ಮುಂಚೆ ಪಾಲಿಕೆ ಆಯುಕ್ತರಾಗಿದ್ದ ಜಿ. ಕುಮಾರ್‌ ನಾಯಕ್‌ ಅವರು ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 6,119 ಅನಧಿಕತ ಜಾಹೀರಾತು ಫಲಕಗಳು ಇವೆ ಎಂಬುದನ್ನು 2015 ರಂದು ಲೋಕಾಯುಕ್ತಕ್ಕೆ ತಮ ಪ್ರಮಾಣ ಪತ್ರ ಸಲ್ಲಿಸಿದ್ದರು.
6
+ ಈ ರೀತಿ, ಬೆಂಗಳೂರು ಮಹಾನಗರದ ಮುಖ್ಯ ರಸ್ತೆಗಳ ಇಕ್ಕೆಲಗಳಲ್ಲಿ ಮತ್ತು ವಾಣಿಜ್ಯ ಪ್ರದೇಶಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಿದ್ದ ಏಜೆನ್ಸಿಗಳು 2018 ರ ಫೆಬ್ರುವರಿ ವರೆಗೆ ಹಾಗೂ 2017 ರಿಂದ ಈವರೆಗೆ ಪಿಪಿಪಿ ಮಾದರಿಯಲ್ಲಿ ನಿರ್ಮಿಸಿರುವ ಜಾಹೀರಾತು ಫಲಕಗಳಿಗೆ ಸಂಬಂಧಿಸಿದಂತೆ – ಬಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ಒಟ್ಟು .
7
+ 646,17,73,682/ಗಳಷ್ಟು ಬಹತ್‌ ಮೊತ್ತವು ಈ ಎರಡು ಪ್ರಾಕಾರದ ಜಾಹೀರಾತು ಶುಲ್ಕಗಳು ಸದರಿ ಜಾಹೀರಾತು ಏಜೆನ್ಸಿಗಳಿಂದ ಬಾಕಿ ಬರಬೇಕಿರುತ್ತದೆ. ಈ ಪೈಕಿ ಕೆಂಪರಾಜ್‌ ಎಂಬ ಒಬ್ಬರೇ ಸುಮಾರು 80 ಕೋಟಿ ರೂ. ಗಳಿಗೂ ಹೆಚ್ಚು ಜಾಹೀರಾತು ಶುಲ್ಕವನ್ನು ಬಾಕಿ ಉಳಿಸಿಕೊಂಡಿರುತ್ತಾರೆ.
8
+ ಇಷ್ಟು ಮೊತ್ತ ಬಾಕಿ ಇದ್ದರೂ ಬೆಂಗಳೂರು ಮಹಾನಗರದ ಮುಖ್ಯ ರಸ್ತೆಗಳಲ್ಲಿ ಮತ್ತು ವಾಣಿಜ್ಯ ಸ್ಥಳಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಲು ಅನುಮತಿ ನೀಡುವ ನಿರ್ಣಯ ವನ್ನು ಕೈಗೊಳ್ಳುವ ಅಧಿಕಾರವನ್ನು ನೀಡಿರುವ ಹೊಸ ಜಾಹೀರಾತು ನೀತಿ – 2024 ದಿಂದ ಬಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ಕವಡೆ ಕಾಸಿನಷ್ಟು ಮಾತ್ರವೇ ಆದಾಯ ಬರುವುದಿಲ್ಲ.
9
+ ರಸ್ತೆ ಬದಿಯಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸುವುದರಿಂದ ಪ್ರತೀ ನಿತ್ಯ ಹತ್ತಾರು ಅಪಘಾತಗಳು ಸಂಭವಿಸುವ ಅವಕಾಶಗಳೇ ಅಧಿಕವಾಗಿರುತ್ತದೆ ಎಂಬ ಬೆಂಗಳೂರು ಸಂಚಾರಿ ಪೋಲೀಸರ ಅಭಿಪ್ರಾಯವನ್ನೂ ಸಹ ರಾಜ್ಯ ಸರ್ಕಾರ ಮತ್ತು ಬಹತ್‌ ಬೆಂಗಳೂರು ಮಹಾನಗರ ಪಾಲಿಕೆ ಕಡೆಗಣಿಸಿರುತ್ತದೆ ಎಂದು ಅವರು ಪತ್ರದಲ್ಲಿ ಆರೋಪಿಸಿದ್ದಾರೆ.
eesanje/url_46_54_9.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬಿಜೆಪಿ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್‌‍ ಜನಾಂದೋಲನ
2
+ ರಾಮನಗರ,ಆ.3-ಮುಡಾ ಹಾಗೂ ಮಹರ್ಷಿ ವಾಲೀಕಿ ಹಗರಣವನ್ನು ಮುಂದಿಟ್ಟುಕೊಂಡು ಬಿಜೆಪಿ-ಜೆಡಿಎಸ್‌‍ ನಡೆಸುತ್ತಿರುವ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್‌‍ ರಾಮನಗರದಲ್ಲಿಂದು ಜನಾಂದೋಲನ ನಡೆಸಿದೆ.ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಬಿಜೆಪಿ ಅವಧಿಯಲ್ಲಿ ನಡೆದ ವಿವಿಧ ಹಗರಣಗಳ ಕುರಿತು ವಿವರಣೆ ನೀಡಿದರು.
3
+ ಪ್ರತಿಯೊಂದು ಹಗರಣವನ್ನು ಬಿಜೆಪಿಯವರು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸುತ್ತಾರೆ. ಗುರು ರಾಘವೇಂದ್ರ ಬ್ಯಾಂಕಿನ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿದ್ದರೂ ಈವರೆಗೂ ತನಿಖಾಧಿಕಾರಿಯನ್ನು ನೇಮಿಸಿಲ್ಲ. ಮೊಟ್ಟೆ ಖರೀದಿ ಹಗರಣದಲ್ಲಿ ಬಿಜೆಪಿಯ ಸಚಿವರಾಗಿದ್ದ ಶಶಿಕಲಾ ಜೊಲ್ಲೆ ವಿರುದ್ಧ ಅಭಿಯೋಜನೆಗೆ ದೂರು ಸಲ್ಲಿಸಲಾಗಿದೆ. ಈವರೆಗೂ ಅನುಮತಿ ನೀಡಿಲ್ಲ ಎಂದು ಆರೋಪಿಸಿದರು.
4
+ ಬಿಜೆಪಿ-ಜೆಡಿಎಸ್‌‍ ಪಕ್ಷದವರು ಸುಳ್ಳು ಆರೋಪ ಮಾಡಿ ಪಾದಯಾತ್ರೆ ನಡೆಸುತ್ತಿದ್ದಾರೆ. ಇದು ಅವರ ಪಾಪದ ಪಾದಯಾತ್ರೆ. ಮೈಸೂರಿಗೆ ಬರಲಿ, ಕಾವೇರಿ ನದಿಯಲ್ಲಿ ಸ್ನಾನ ಮಾಡಿ ಹೋಗಲಿ ಎಂದು ಹೇಳಿದರು.
5
+ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಮಾತನಾಡಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವೇದಿಕೆಯಲ್ಲಿ ಕೂರಿಸಿಕೊಂಡು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಬಿಜೆಪಿ-ಜೆಡಿಎಸ್‌‍ನವರ ನೈತಿಕತೆಯನ್ನು ಪ್ರಶ್ನೆ ಮಾಡುವಂತಾಗಿದೆ. ಕುಮಾರಸ್ವಾಮಿ ಆರಂಭದಲ್ಲಿ ಚೆನ್ನಾಗಿ ಮಾತನಾಡುತ್ತಿದ್ದರು. ಇತ್ತೀಚೆಗೆ ಅವರ ಹೇಳಿಕೆಗಳು ತೀರಾ ಕೆಳಮಟ್ಟಕ್ಕಿಳಿದಿವೆ. ನಾವು ಅವರ ಹಂತಕ್ಕೆ ಇಳಿದು ಮಾತನಾಡುವುದು ಸರಿಯಲ್ಲ ಎಂದರು.
6
+ ಮುಡಾ ಕುಮಾರಸ್ವಾಮಿ ಸೇರಿದಂತೆ 125 ಮಂದಿಗೆ ಬದಲಿ ನಿವೇಶನ ನೀಡಿದೆ. ಈ ನಿವೇಶನಗಳನ್ನು ಹಂಚಿರುವುದು ಬಿಜೆಪಿಯ ಅಧಿಕಾರಾವಧಿಯಲ್ಲಿ ಎಂದು ವಾಗ್ದಾಳಿ ನಡೆಸಿದರು.ಕಾಂಗ್ರೆಸ್‌‍ ವಿರುದ್ಧ ಕೇಂದ್ರ ಸರ್ಕಾರ ಸಿಬಿಐ, ಇ.ಡಿ., ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಡೆಸುತ್ತಿದೆ. ಜನ ಇದನ್ನು ಅರ್ಥ ಮಾಡಿಕೊಂಡಿದ್ದಾರೆ ಎಂದರು.
7
+ ಶಾಸಕ ಪ್ರದೀಪ್‌ ಈಶ್ವರ್‌ ಮಾತನಾಡಿ, ಮಾಜಿ ಪ್ರಧಾನಿಯ ಮಗ ಮುಖ್ಯಮಂತ್ರಿಯಾಗುವುದು ದೊಡ್ಡ ವಿಚಾರವಲ್ಲ. ಕನಕಪುರದ ಮಣ್ಣಿನ ಮಗ ಉಪಮುಖ್ಯಮಂತ್ರಿಯಾಗುವುದು ಸಾಧನೆ. ಹಿಂದುಳಿದ ವರ್ಗದ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವುದನ್ನು ಸಹಿಸಿಕೊಳ್ಳಲು ಬಿಜೆಪಿ-ಜೆಡಿಎಸ್‌‍ ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಆಧಾರರಹಿತ ಆರೋಪ ಮಾಡುತ್ತಿದ್ದಾರೆ.
8
+ ಬಿಜೆಪಿಯ ಕಳ್ಳರು ಕೆಂಗೇರಿಯಿಂದ ಬಿಜೆಪಿ ಯಾತ್ರೆ ಆರಂಭಿಸಿದ್ದಾರೆ. ಏನೇ ಮಾಡಿದರೂ ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಅವರನ್ನು ಅಲುಗಾಡಿಸಲು ಸಾಧ್ಯವಾಗುವುದಿಲ್ಲ ಎಂದರು.
9
+ ಸಂಸದರಾಗಿ ಡಿ.ಕೆ.ಸುರೇಶ್‌ ಉತ್ತಮವಾಗಿ ಕೆಲಸ ಮಾಡಿದರು. ಆದ���ೆ ರಾಮನಗರದ ಜನ ಅವರನ್ನು ಸೋಲಿಸಿ ಮೋಸ ಮಾಡಿದ್ದಾರೆ ಎಂದು ಹೇಳಿದ ಅವರು, ಕೇಂದ್ರ ಸರ್ಕಾರ ರೈತರ ಅಭಿವೃದ್ಧಿಗೆ ಖರ್ಚು ಮಾಡಬೇಕಾಗಿದ್ದ 67 ಸಾವಿರ ಕೋಟಿ ರೂ.ಗಳನ್ನು ಬಾಕಿ ಉಳಿಸಿದೆ.
10
+ ಚೀನಾ ಭಾರತದ ಗಡಿಯೊಳಗೆ ನುಸುಳಿದೆ. ಈ ಯಾವ ವಿಚಾರಗಳನ್ನೂ ಬಿಜೆಪಿಯವರು ಪ್ರಸ್ತಾಪ ಮಾಡುತ್ತಿಲ್ಲ ಎಂದು ಕಿಡಿಕಾರಿದರು.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಎಂ.ಬಿ.ಪಾಟೀಲ್‌, ಡಾ.ಎಂ.ಸಿ.ಸುಧಾಕರ್‌, ರಹೀಂಖಾನ್‌, ಕೆ.ಎಚ್‌. ಮುನಿಯಪ್ಪ, ಶರಣಪ್ರಕಾಶ್‌ ಪಾಟೀಲ್‌, ಮಾಜಿ ಸಂಸದ ಡಿ.ಕೆ.ಸುರೇಶ್‌, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್‌, ಪ್ರಚಾರ ಸಮಿತಿ ಅಧ್ಯಕ್ಷ ವಿನಯ್‌ಕುಮಾರ್‌ ಸೊರಕೆ ಮತ್ತಿತರರು ಉಪಸ್ಥಿತರಿದ್ದರು.
eesanje/url_46_55_1.txt ADDED
@@ -0,0 +1,10 @@
 
 
 
 
 
 
 
 
 
 
 
1
+ ರಾಜಕೀಯದ ಹೊಟ್ಟೆ ಉರಿಗೆ ಔಷಧಿ ಇಲ್ಲ : ಕೇಂದ್ರ ಸಚಿವ ಕುಮಾರಸ್ವಾಮಿ
2
+ ಬೆಂಗಳೂರು, ಆ.3-ಹೊಟ್ಟೆಯ ಉರಿಗೆ, ಮನುಷ್ಯ ದೇಹಕ್ಕೆ ಔಷಧಿ ತೆಗೆದುಕೊಳ್ಳಬಹುದು. ಆದರೆ, ರಾಜಕೀಯದ ಹೊಟ್ಟೆ ಉರಿಗೆ ಔಷಧಿ ಇಲ್ಲ ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
3
+ ಅಹಿಂದ ನಾಯಕ ಮುಖ್ಯಮಂತ್ರಿಯಾಗಿದ್ದಾರೆ ಎಂಬುದನ್ನು ಸಹಿಸದೇ ಪಾದಯಾತ್ರೆ ಮಾಡುತ್ತಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ರಾಜಕೀಯ ವ್ಯವಸ್ಥೆಯಲ್ಲಿ ಅಹಿಂದ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿದ್ದಾರೆ. ಯಾವ ರೀತಿ ಎಸ್ಸಿ, ಎಸ್ಟಿ ಜನರ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ್ನು ಲೂಟಿ ಹೊಡೆದ್ದಾರೆ. ಇವರು ಅಹಿಂದ ರಕ್ಷಕರೇ? ಎಂದು ಪ್ರಶ್ನಿಸಿದ್ದಾರೆ.
4
+ ಇದಕ್ಕೆ ನಾವು ಹೊಟ್ಟೆ ಉರಿ ಪಡೆಯುತ್ತಿದ್ದೇವೆಯೇ? ಹೊಟ್ಟೆ ಉರಿ ಪಡೆಯಬೇಕಾದವರು ಅಹಿಂದ ವರ್ಗ. ಕಾಂಗ್ರೆಸ್‌‍ ಸರ್ಕಾರದ ವಿರುದ್ಧ ಜನರ ಆಕ್ರೋಶ ಇದೆ. ಅದಕ್ಕೆ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
5
+ ರಾಜ್ಯಪಾಲರ ಮೂಲಕ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂಬ ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇಂತಹ ಪರಿಸ್ಥಿತಿಯಲ್ಲಿ ಇದನ್ನೇ ಹೇಳಬೇಕು ತಾನೇ? ಎಲ್ಲರೂ ಹೇಳೋದು ಇದನ್ನೇ ತಾನೇ? ಅವರಿಗೆ ಬೇಕಾದಾಗ ರಾಜ್ಯಪಾಲರು ಒಳ್ಳೆಯವರು, ಬೇಡ ಅಂದಾಗ ಕೆಟ್ಟವರು. 75 ವರ್ಷಗಳಿಂದ ನೋಡಿಕೊಂಡು ಬಂದಿದ್ದಾರೆ ಎಂದು ಟೀಕಿಸಿದರು. ಅವರ ತಪ್ಪನ್ನು ಮುಚ್ಚಿಕೊಳ್ಳಲು ಈ ರೀತಿ ಹೇಳುತ್ತಿದ್ದಾರೆ. ವರ್ಗಾವಣೆಗಳಲ್ಲಿ ಪ್ರತಿಯೊಂದು ಸ್ಥಳಕ್ಕೆ ಹಣ ಕೊಡಬೇಕು. ಸಾವಿರಾರು ಉದಾಹರಣೆ ಕೊಡಬಲ್ಲೆ ಎಂದು ಮುಖ್ಯಮಂತ್ರಿ ವಿರುದ್ಧ ಅವರು ವಾಗ್ದಾಳಿ ನಡೆಸಿದರು.
6
+ ಮುಡಾ ಪ್ರಕರಣದ ಒಂದೇ ಅಲ್ಲ. ರಾಜ್ಯ ಸರ್ಕಾರದ ಹಲವಾರು ವಿಷಯಗಳಲ್ಲಿ ಜನ ವಿರೋಧಿ ನೀತಿ ಇದೆ. ಹಿಂದೆ ಸಿದ್ದರಾಮಯ್ಯ ಸರ್ಕಾರ ಇದ್ದಾಗ ಸದನ ಸಮಿತಿ ರಚನೆ ಮಾಡಲಾಗಿತ್ತು. ನೈಸ್‌‍ ರಸ್ತೆ ಯೋಜನೆ ಹೆಸರಲ್ಲಿ ರೈತರ ಜಮೀನು ಲೂಟಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಸದನ ಸಮಿತಿ ವರದಿ ಕೋಲ್‌್ಡ ಸ್ಟೋರೇಜ್‌ನಲ್ಲಿದೆ ಎಂದು ಬೇಸರ ವ್ಯಕ್ತಪಡಿಸಿದರು.
7
+ ರಾಜ್ಯ ಸರ್ಕಾರದ ವಿರುದ್ಧ ಜನಾಂದೋಲನ :ಜನಾಂದೋಲನ ಕಾಂಗ್ರೆಸ್‌‍ನಿಂದ ಆಗುವುದಲ್ಲ, ನಮಿಂದ ರಾಜ್ಯ ಸರ್ಕಾರದ ವಿರುದ್ಧ ಜನಾಂದೋಲನ ಆಗಬೇಕಿದ್ದು, ಅದು ಪಾದಯಾತ್ರೆ ಮೂಲಕ ಆಗುತ್ತಿದೆ ಎಂದು ಕುಮಾರಸ್ವಾಮಿ ತಿಳಿಸಿದರು.
8
+ ಮುಡಾ,ವಾಲೀಕಿ ಹಗರಣ, ಜನ ವಿರೋಧಿ ನೀತಿಯನ್ನು ವಿರೋಧಿಸಿ ಪಾದಯಾತ್ರೆ ನಡೆಸಲಾಗುತ್ತಿದೆ. ಪಾದಯಾತ್ರೆಗೆ ಕೌಂಟರ್‌ ಆಗಿ ಕಾಂಗ್ರೆಸ್‌‍ ಜನಾಂದೋಲನ ಕಾರ್ಯಕ್ರಮ ಹಮಿಕೊಳ್ಳಲಾಗಿದೆ. ಎಲ್ಲಕ್ಕೂ ಉತ್ತರ ಕೋಡೋಣ. ಅಲ್ಲಿ ಯಾರು ಪ್ರಶ್ನೆ ಮಾಡುತ್ತಿದ್ದಾರೆ ���ವರಿಗೆ ಪ್ರಶ್ನೆ ಮಾಡಲು ನೈತಿಕತೆ ಇದೆಯಾ? ರಾಮನಗರ, ಬಿಡದಿ, ಚನ್ನಪಟ್ಟಣದಲ್ಲಿ ನನ್ನನ್ನು ಬೆಳೆಸಿರುವ ಜನರ ಮುಂದೆ ಉತ್ತರ ಕೋಡೋಣ.
9
+ ಕಾಂಗ್ರೆಸ್‌‍ ಪಕ್ಷವು ರಾಜ್ಯದಲ್ಲಿ ಹಲವು ಅಕ್ರಮಗಳು, ಕಾನೂನು ಬಾಹಿರ ಕೆಲಸಗಳಲ್ಲಿ ತೊಡಗಿದೆ. ಇದು ಜನವಿರೋಧಿ ಸರ್ಕಾರವಾಗಿದ್ದು, ಮುಡಾ, ವಾಲೀಕಿ ನಿಗಮದ ಹಗರಣಗಳು ಬಯಲಿಗೆ ಬಂದಿವೆ. ಇದು ಜನರ ಆಸ್ತಿಗಳನ್ನು ನುಂಗಿದ ಸರ್ಕಾರ ಎಂದರು. ದೇವೇಗೌಡರ ಕುಟುಂಬದಿಂದ ನೈಸ್‌‍ ಸುತ್ತಮುತ್ತ ಅಕ್ರಮ ಆಸ್ತಿ ಮಾಡಲಾಗಿದೆ ಎಂಬ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರ ಅವರ ಕೈಯಲ್ಲೇ ಇದೆ.
10
+ ನಾವು ಅಕ್ರಮವಾಗಿ ಆಸ್ತಿ ಮಾಡಿದ್ದರೆ ಸರ್ಕಾರ ವಶಪಡಿಸಿಕೊಳ್ಳಲಿ. ಸರ್ಕಾರ ಅವರದ್ದೇ ಇದ್ದು ಮುಟ್ಟುಗೋಲು ಹಾಕಿಕೊಳ್ಳಲಿ. ಬೇಡವೆಂದು ಅವರನ್ನು ಯಾರು ಹಿಡಿದುಕೊಂಡಿದ್ದಾರೆ. ನಾವು ನ್ಯಾಯ ಬದ್ಧವಾಗಿ ಬದುಕಿದ್ದೇವೆ. ಇವರ ಥರ ನಾವು ಬದುಕಿಲ್ಲ ಎಂದು ಅವರು ವಾಗ್ದಾಳಿ ನಡೆಸಿದರು. ಜೆಡಿಎಸ್‌‍ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಮಾತನಾಡಿ, ವಾಲೀಕಿ ನಿಗಮ ಹಾಗೂ ಮೂಡಾ ವಿಚಾರದಲ್ಲಿ ಸರ್ಕಾರ ಪಲಾಯನವಾದ ಮಾಡುತ್ತಿದೆ. ಮುಖ್ಯಮಂತ್ರಿ ಅವರೇ 81 ಕೋಟಿ ರೂ.ಹಗರಣ ಆಗಿದೆ ಎಂದು ಸದನದಲ್ಲಿ ಒಪ್ಪಿಕೊಂಡಿದ್ದಾರೆ. ರಾಜ್ಯದ ಇತಿಹಾಸದಲ್ಲಿ ವಿರೋಧ ಪಕ್ಷ ಪ್ರಶ್ನೆ ಮಾಡುವುದು ಸಹಜ. ಆದರೆ, ಸರ್ಕಾರ ಅವರ ಕೈಯಲ್ಲಿದ್ದು ತನಿಖೆ ಮಾಡಲಿ ಎಂದರು.
eesanje/url_46_55_10.txt ADDED
@@ -0,0 +1,7 @@
 
 
 
 
 
 
 
 
1
+ ಬಿಜೆಪಿ-ಜೆಡಿಎಸ್‌‍ ಪಾದಯಾತ್ರೆ ಬೆನ್ನಲ್ಲೇ ಮೈಸೂರು ಭಾಗದ ಶಾಸಕರ ಜೊತೆ ಸಿಎಂ ಚರ್ಚೆ
2
+ ಬೆಂಗಳೂರು,ಆ.3– ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ತಮ್ಮ ನಿವಾಸದಲ್ಲಿಂದು ಚಾಮರಾಜನಗರ, ಮಡಿಕೇರಿ ಮತ್ತು ಮೈಸೂರು ಜಿಲ್ಲೆಯ ಕಾಂಗ್ರೆಸ್‌‍ ಮುಖಂಡರ ಜೊತೆ ಉಪಹಾರ ಕೂಟ ನಡೆಸಿ ಪ್ರಸಕ್ತ ರಾಜಕೀಯ ಬೆಳವಣಿಗೆಯ ಬಗ್ಗೆ ಸಮಾಲೋಚನೆ ನಡೆಸಿದರು.
3
+ ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣವನ್ನು ಮುಂದಿಟ್ಟುಕೊಂಡು ಬಿಜೆಪಿ-ಜೆಡಿಎಸ್‌‍ ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಹೈ ಅಲರ್ಟ್‌ ಆಗಿರುವ ಸಿಎಂ ರಾಜಕೀಯವಾಗಿ ತಿರುಗೇಟು ನೀಡಲು ತಯಾರಿ ನಡೆಸಿದ್ದಾರೆ.
4
+ ನಗರದಲ್ಲಿ ಸಚಿವರ ಜೊತೆ ಉಪಹಾರ ಕೂಟ ನಡೆಸಿ ಸಮಾಲೋಚನೆ ನಡೆಸಿದರು. ಅದರ ಬೆನ್ನಲ್ಲೇ ಮೈಸೂರಿನಲ್ಲಿ ಮೂರು ಜಿಲ್ಲೆಗಳ ಮುಖಂಡರ ಜೊತೆ ಉಪಹಾರ ಕೂಟ ನಡೆಸುವ ಮೂಲಕ ಸಿದ್ದರಾಮಯ್ಯ ಪಾದಯಾತ್ರೆಗೆ ಪ್ರತಿಯಾಗಿ ಮೈಸೂರಿನಲ್ಲಿ ಬೃಹತ್‌ ಸಮಾವೇಶ ನಡೆಸಲು ಸಿದ್ಧತೆ ಕೈಗೊಂಡಿದ್ದಾರೆ.
5
+ ಈಗಾಗಲೇ ಬಿಡದಿ, ರಾಮನಗರದಲ್ಲಿ ಎರಡು ದಿನ ಕಾಂಗ್ರೆಸ್‌‍ ಸಮಾವೇಶ ನಡೆದಿದೆ. ಆ.9 ರಂದು ಮೈಸೂರಿನಲ್ಲಿ ಬೃಹತ್‌ ಸಮಾವೇಶ ಆಯೋಜನೆ ಮಾಡಲಾಗಿದೆ. ಅದಕ್ಕೆ ಸುಮಾರು ಒಂದು ಲಕ್ಷ ಜನ ಸಮಾವೇಶಗೊಳ್ಳಬೇಕು. ಬಿಜೆಪಿ-ಜೆಡಿಎಸ್‌‍ನ ಪಾದಯಾತ್ರೆಗೆ ಪ್ರತಿಯಾಗಿ ಈ ಎರಡೂ ಪಕ್ಷಗಳ ನಾಯಕರ ಹಗರಣಗಳನ್ನು ಜನರ ಮುಂದಿಡಬೇಕು ಎಂಬ ಚರ್ಚೆಗಳಾಗಿವೆ.
6
+ ಮತ್ತೊಂದೆಡೆ ಕಾಂಗ್ರೆಸ್‌‍ನ ಒಳವಲಯದಲ್ಲೆ ಸಿದ್ದರಾಮಯ್ಯ ಅವರ ವಿರುದ್ಧ ಅಪಸ್ವರಗಳು ಹೊಗೆಯಾಡುತ್ತಿದ್ದು, ಈ ಕುರಿತು ಚರ್ಚೆಯಾಗಿದೆ.ಒಂದು ವೇಳೆ ಪಕ್ಷದ ಒಳಗೆ ಅಪಸ್ವರಗಳು ಹೆಚ್ಚಾದರೆ ಅದಕ್ಕೆ ತಿರುಗೇಟು ನೀಡುವ ಸಲುವಾಗಿ ತಮ ತವರು ಜಿಲ್ಲೆಯಲ್ಲಿನ ಸಂಘಟನೆಗಳನ್ನು ಬಲಪಡಿಸಿಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದು, ಈ ನಿಟ್ಟಿನಲ್ಲಿ ಗಂಭೀರ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಇದೆ.
7
+ ಸಚಿವರಾದ ಎಚ್‌.ಸಿ.ಮಹದೇವಪ್ಪ, ಕೆ.ವೆಂಕಟೇಶ್‌, ಶಾಸಕರಾದ ಪೊನ್ನಣ್ಣ, ವಿಧಾನಪರಿಷತ್‌ ಸದಸ್ಯ ವಿಜಯೇಂದ್ರ, ಮುಖಂಡರಾದ ಶಿವಣ್ಣ, ಮರಿತಿಬ್ಬೇಗೌಡ ಸೇರಿದಂತೆ ಅನೇಕರು ಸಭೆಯಲ್ಲಿ ಭಾಗವಹಿಸಿದ್ದರು.ರಾಜಕೀಯ ವಿಪ್ಲವದ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಜೊತೆ ದೃಢವಾಗಿ ನಿಲ್ಲುವುದಾಗಿ ಜಿಲ್ಲೆಯ ನಾಯಕರು ಭರವಸೆ ನೀಡಿದ್ದಾರೆ. ಜೊತೆಗೆ ಇದೇ ವೇಳೆ ಮೂರು ಜಿಲ್ಲೆಗಳಲ್ಲಿನ ಮಳೆಹಾನಿಗೆ ಸಂಬಂಧಪಟ್ಟಂತೆಯೂ ಚರ್ಚೆಗಳಾಗಿವೆ.
eesanje/url_46_55_11.txt ADDED
@@ -0,0 +1,6 @@
 
 
 
 
 
 
 
1
+ ಶಾಸಕರ ಹಣಕ್ಕಾಗಿ ಒತ್ತಡ ಹೇರಿದ್ದೇ ಪಿಎಸ್‌‍ಐ ಪರಶುರಾಮ್‌ ಸಾವಿಗೆ ಕಾರಣ : ಆರ್‌.ಅಶೋಕ್‌
2
+ ಬೆಂಗಳೂರು,ಆ.3-ಶಾಸಕರು ಹಣ ಕೇಳಿದ್ದಕ್ಕೆ ಒತ್ತಡದಿಂದಾಗಿ ಯಾದಗಿರಿ ಪಿಎಸ್‌‍ಐ ಪರಶುರಾಮ್‌ ಸಾವನ್ನಪ್ಪಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ.
3
+ ಯಾದಗಿರಿ ಪಿಎಸ್‌‍ಐ ಪರಶುರಾಮ್‌ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಒತ್ತಡದ ಮೇಲೆಯೇ ವಾಲೀಕಿ ನಿಗಮದ ಅಧಿಕಾರಿ ಆತಹತ್ಯೆ ಮಾಡಿಕೊಂಡಿದ್ದರು. ಈಗ ವರ್ಗಾವಣೆಗೆ ಶಾಸಕರು ಹಣ ಕೇಳಿದ್ದಕ್ಕೆ ಪರಶುರಾಮ್‌ ಅವರ ಸಾವಾಗಿದೆ ಎಂದು ಆಕೋಶ ವ್ಯಕ್ತಪಡಿಸಿದ್ದಾರೆ.
4
+ ಈ ಸರ್ಕಾರದಲ್ಲಿ ಎಲ್ಲರೂ ಲೂಟಿಗೆ ಇಳಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ, ರಾಜೀನಾಮೆ ಕೊಟ್ಟು ಹೋಗಲಿ ಎಂದು ಆಗ್ರಹಿಸಿದರು.
5
+ ಶಾಸಕ ಸುನಿಲ್‌ ಕುಮಾರ್‌ ಪ್ರತಿಕ್ರಿಯಿಸಿ, ಕಾಂಗ್ರೆಸ್‌‍ ಶಾಸಕರು ವರ್ಗಾವಣೆ ದಂಧೆಯಲ್ಲಿ ನೇರ ಪಾಲ್ಗೊಂಡಿದ್ದಾರೆ. ಅಲ್ಲಿನ ಶಾಸಕರು ವರ್ಗಾವಣೆಗೆ ದೊಡ್ಡ ಮೊತ್ತದ ಹಣ ಕೇಳುತ್ತಿದ್ದಾರೆ. ಪಿಎಸ್‌‍ಐ ಪರಶುರಾಮ್‌ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಯೇಕು ಎಂದು ಆಗ್ರಹಿಸಿದರು.
6
+ ಹಿಂದೆ ಯತೀಂದ್ರ ಅವರ ಹಲೋ ಅಪ್ಪ ಪ್ರಕರಣದಲ್ಲಿ ವರ್ಗಾವಣೆ ದಂಧೆ ಕೇಳಿ ಬಂದಿತ್ತು. ಈಗ ಮತ್ತೊಂದು ಪ್ರಕರಣ ಯಾದಗಿರಿಯಲ್ಲಿ ನಡೆಯುತ್ತಿದೆ. ಬಿಜೆಪಿ ಈಗ ಈ ಪ್ರಕರಣದ ಮಾಹಿತಿಯನ್ನು ಸಂಗ್ರಹ ಮಾಡುತ್ತಿದೆ ಎಂದು ತಿಳಿಸಿದರು.
eesanje/url_46_55_12.txt ADDED
@@ -0,0 +1,6 @@
 
 
 
 
 
 
 
1
+ ಯಾದಗಿರಿ ಪಿಎಸ್‌‍ಐ ಪರಶುರಾಮ್‌ ನಿಗೂಢ ಸಾವು, ಶಾಸಕರ ಮೇಲೆ ಲಂಚದ ಒತ್ತಡ ಆರೋಪ
2
+ ಬೆಂಗಳೂರು,ಆ.3– ಶಾಸಕರು ಹಣ ಕೇಳಿದ್ದಕ್ಕೆ ಒತ್ತಡದಿಂದಾಗಿ ಯಾದಗಿರಿ ಪಿಎಸ್‌‍ಐ ಪರಶುರಾಮ್‌ ಸಾವನ್ನಪ್ಪಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ.
3
+ ಯಾದಗಿರಿ ಪಿಎಸ್‌‍ಐ ಪರಶುರಾಮ್‌ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಒತ್ತಡದ ಮೇಲೆಯೇ ವಾಲ್ಮೀಕಿ ನಿಗಮದ ಅಧಿಕಾರಿ ಆತಹತ್ಯೆ ಮಾಡಿಕೊಂಡಿದ್ದರು. ಈಗ ವರ್ಗಾವಣೆಗೆ ಶಾಸಕರು ಹಣ ಕೇಳಿದ್ದಕ್ಕೆ ಪರಶುರಾಮ್‌ ಅವರ ಸಾವಾಗಿದೆ ಎಂದು ಆಕೋಶ ವ್ಯಕ್ತಪಡಿಸಿದ್ದಾರೆ.
4
+ ಈ ಸರ್ಕಾರದಲ್ಲಿ ಎಲ್ಲರೂ ಲೂಟಿಗೆ ಇಳಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ, ರಾಜೀನಾಮೆ ಕೊಟ್ಟು ಹೋಗಲಿ ಎಂದು ಆಗ್ರಹಿಸಿದರು.
5
+ ಶಾಸಕ ಸುನಿಲ್‌ ಕುಮಾರ್‌ ಪ್ರತಿಕ್ರಿಯಿಸಿ, ಕಾಂಗ್ರೆಸ್‌‍ ಶಾಸಕರು ವರ್ಗಾವಣೆ ದಂಧೆಯಲ್ಲಿ ನೇರ ಪಾಲ್ಗೊಂಡಿದ್ದಾರೆ. ಅಲ್ಲಿನ ಶಾಸಕರು ವರ್ಗಾವಣೆಗೆ ದೊಡ್ಡ ಮೊತ್ತದ ಹಣ ಕೇಳುತ್ತಿದ್ದಾರೆ. ಪಿಎಸ್‌‍ಐ ಪರಶುರಾಮ್‌ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಯೇಕು ಎಂದು ಆಗ್ರಹಿಸಿದರು.
6
+ ಹಿಂದೆ ಯತೀಂದ್ರ ಅವರ ಹಲೋ ಅಪ್ಪ ಪ್ರಕರಣದಲ್ಲಿ ವರ್ಗಾವಣೆ ದಂಧೆ ಕೇಳಿ ಬಂದಿತ್ತು. ಈಗ ಮತ್ತೊಂದು ಪ್ರಕರಣ ಯಾದಗಿರಿಯಲ್ಲಿ ನಡೆಯುತ್ತಿದೆ. ಬಿಜೆಪಿ ಈಗ ಈ ಪ್ರಕರಣದ ಮಾಹಿತಿಯನ್ನು ಸಂಗ್ರಹ ಮಾಡುತ್ತಿದೆ ಎಂದು ತಿಳಿಸಿದರು.
eesanje/url_46_55_2.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಪರಮೇಶ್ವರ್ ಅವರೇ ಪಿಎಸ್‌‍ಐ ಸಾವಿನ ಬಗ್ಗೆ ಉತ್ತರ ಕೊಡಿ : ಕೇಂದ್ರ ಸಚಿವ ಕುಮಾರಸ್ವಾಮಿ ಆಗ್ರಹ
2
+ ಬೆಂಗಳೂರು, ಆ.3-ಯಾದಗಿರಿಯಲ್ಲಿ ನಿಮ ಇಲಾಖೆಯ ಪಿಎಸ್‌‍ಐ ಒಬ್ಬರು ಆತಹತ್ಯೆ ಮಾಡಿಕೊಂಡಿದ್ದಾರೆ. ಅದರ ಬಗ್ಗೆ ಉತ್ತರ ಕೊಡಿ ಎಂದು ಜೆಡಿಎಸ್‌‍ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ಗೃಹ ಸಚಿವ ಪರಮೇಶ್ವರ್‌ ಅವರನ್ನು ಒತ್ತಾಯಿಸಿದರು.
3
+ ಕಾಂಗ್ರೆಸ್‌‍ ಸರ್ಕಾರದ ಹಗರಣಗಳ ವಿರುದ್ಧ ಬಿಜೆಪಿ-ಜೆಡಿಎಸ್‌‍ ಹಮಿಕೊಂಡಿರುವ ಬೆಂಗಳೂರಿನಿಂದ ಮೈಸೂರಿನವರೆಗಿನ ಪಾದಯಾತ್ರೆಗೆ ಕೆಂಗೇರಿ ಬಳಿ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಮ ಸಮಾಜದ ಅಧಿಕಾರಿಯೊಬ್ಬ ಆತಹತ್ಯೆ ಮಾಡಿಕೊಂಡಿದ್ದಾರೆ. 25 ಲಕ್ಷ ರೂ. ಲಂಚಕೊಟ್ಟಿಲ್ಲ ಎಂದು ಹೇಳಿ ಆತಹತ್ಯೆ ಮಾಡಿಕೊಂಡಿರುವುದಾಗಿ ಅವರ ಪತ್ನಿ ಹೇಳುತ್ತಾರೆ.
4
+ ನೀವು ಬಾಬಾಸಾಹೇಬ್‌ ಅಂಬೇಡ್ಕರ್‌ ಅವರಿಗೆ ಕೊಡುವ ಗೌರವ ಇದೇನಾ? ನಿಮದೇ ಸಮಾಜದ ಪೊಲೀಸ್‌‍ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅದನ್ನು ತಡೆಯುವ ಶಕ್ತಿ ನಿಮಗಿಲ್ಲವೇ? ಎಂದು ವಾಗ್ದಾಳಿ ನಡೆಸಿದರು.
5
+ ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್‌ ಅವರು ಆತ್ಮಹತ್ಯೆಗೆ ಏಕೆ ಶರಣಾದರು? ಪೊಲೀಸ್‌‍ ಅಧಿಕಾರಿಗಳಿಗೆ ರಕ್ಷಣೆ ಕೊಡದ ಸರ್ಕಾರದಿಂದ ಹಿಂದುಳಿದ ವರ್ಗಗಳಿಗೆ ರಕ್ಷಣೆ ಕೊಡಲು ಸಾಧ್ಯವೇ? ಈಗಲಾದರೂ ಹಿಂದುಳಿದ ವರ್ಗಗಳ ಮುಖಂಡರು ತಿಳಿದುಕೊಳ್ಳಬೇಕು ಎಂದು ಟೀಕಿಸಿದರು.
6
+ ಜೈಲಿಗೆ ಹೋಗಲು ಸಿದ್ಧ ಎಂದು (ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌) ಅವರೇ ನಿನ್ನೆ ಹೇಳಿದ್ದಾರೆ. ರಾಜಕಾರಣಕ್ಕೆ ಬರುವ ಮುಂಚೆ ಅವರ ಆಸ್ತಿ ಏನಿತ್ತು ಎಂಬುದನ್ನು ಅವರ ಗುರುಗಳು ಸೋಷಿಯಲ್‌ ಮೀಡಿಯಾದಲ್ಲಿ ಹೇಳಿದ್ದಾರೆ.
7
+ ಬ್ಲಾಕ್‌ ಅಂಡ್‌ ವೈಟ್‌ ಟಿವಿ ಮತ್ತು ಡಿವಿಡಿ ಇಟ್ಟುಕೊಂಡು ದೊಡ್ಡಾಲಹಳ್ಳಿ ಮತ್ತು ಕೋಡಿಹಳ್ಳಿಯಲ್ಲಿ ಏನು ಪ್ರದರ್ಶನ ಮಾಡುತ್ತಿದ್ದರು, ಅದರಿಂದ ಹೇಗೆ ಹಣ ಸಂಪಾದನೆ ಮಾಡುತ್ತಿದ್ದರು ಎಂಬುದಾಗಿ ಹೇಳಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್‌‍ ಸರ್ಕಾರದ ರಾಜ್ಯದ ಆಳ್ವಿಕೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳು, ಭ್ರಷ್ಟಾಚಾರ ಹಿಂದೆಂದೂ ಕಂಡಿರದಂತಹ ಸರ್ಕಾರ ಕಾಣುತ್ತಿದ್ದೇವೆ.
8
+ ಈ ಕೆಟ್ಟ ಕಾಂಗ್ರೆಸ್‌‍ ಜನವಿರೋಧಿ ಸರ್ಕಾರ ವಿರುದ್ಧ ತಾಯಿ ಕೆಂಪಮ ದೇವಿಗೆ ಪೂಜೆ ಸಲ್ಲಿಸಿದ್ದೇವೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌‍. ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಮೈಸೂರಿಗೆ ಪಾದಯಾತ್ರೆ ಮಾಡುತ್ತಿದ್ದೇವೆ ಎಂದರು.
9
+ ದಾಖಲೆ ಬಿಡುಗಡೆ: ನಾಡಿನ ಜನತೆಯ ಅಭಿಪ್ರಾಯ ಪರವಾಗಿ ನಾವು ಪಾದಯಾತ್ರೆ ಮಾಡುತ್ತಿದ್ದೇವೆ. ನಮ್ಮ ಕಾರ್ಯಕ್ರಮ ತಡೆಯಲು ಕಾಂಗ್ರೆಸ್‌‍ ನಾಯಕರು ಬಿಡದಿಯಲ್ಲಿ ಪ್ರಶ್ನೆ ಮಾಡಿದ್ದಾರೆ. ನನ್ನ ಪ���ರಶ್ನೆಗೆ ಬಿಡದಿ ರಾಮನಗರದಲ್ಲಿ ಉತ್ತರ ಕೊಡುತ್ತೇನೆ.
10
+ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ರಾಮನಗರಕ್ಕೆ ಬಂದ ನಂತರ ಎಷ್ಟು ಆಸ್ತಿ ಮಾಡಿದ್ದಾರೆ ಎಂದು ಕೇಳಿದ್ದಾರೆ. ಅದಕ್ಕೆ ನಾವು ಉತ್ತರ ಕೊಡುತ್ತೇವೆ. ನಾವು ಅವರದ್ದು ಎಷ್ಟಿದೆ ಅನ್ನೋದನ್ನು ಕೂಡಾ ಬಿಡುಗಡೆ ಮಾಡುತ್ತೇವೆ ಎಂದು ಅವರು ಹೇಳಿದರು. ನಾನು ಡಿಕೆಶಿ ಹಾಗೂ ಸಿಎಂ ಅವರ ದಾಖಲೆ ಪತ್ರಗಳನ್ನು ಕೇಂದ್ರಸರ್ಕಾರಕ್ಕೆ ಕೊಟ್ಟಿದ್ದೇನೆ. ನಮನ್ನು ಬಂಧನ ಮಾಡಲು ಬರುತ್ತಾರೆ ನಾವು ಬಂಧನಕ್ಕೂ ಸಿದ್ದವಿದ್ದೇವೆ ಎಂದು ಅವರೇ ಹೇಳಿಕೊಂಡಿದ್ದಾರೆ ಎಂದು ಅವರು ತಿಳಿಸಿದರು.
eesanje/url_46_55_3.txt ADDED
@@ -0,0 +1,4 @@
 
 
 
 
 
1
+ ಕ್ಯಾಶ್ ಫಾರ್ ಪೋಸ್ಟಿಂಗ್ ದಂಧೆಗೆ ಪರಶುರಾಂ ಬಲಿಯಾಗಿದ್ದಾರೆ : ಯತ್ನಾಳ್
2
+ ಬೆಂಗಳೂರು,ಆ.3– ಕ್ಯಾಶ್ ಫಾರ್ ಪೋಸ್ಟಿಂಗ್ ಪರಿಣಾಮ ಕರ್ನಾಟಕದಲ್ಲಿ ವರ್ಗಾವಣೆ ದಂಧೆಗೆ ಮತ್ತೊಂದು ಬಲಿಯನ್ನು ರಾಜ್ಯ ಸರ್ಕಾರ ಪಡೆದುಕೊಂಡಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
3
+ ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್ ಮಾಡಿರುವ ಅವರು, ಪಿಎಸ್ಐ ಪರಶುರಾಮ್ ಅವರಿಗೆ ಕಿರುಕುಳ ನೀಡಿ, ಹಣಕ್ಕಾಗಿ ಪೀಡಿಸಿ ಅವರ ಸಾವಿಗೆ ಯಾದಗರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಮತ್ತು ಅವರ ಮಗ ಸನ್ನಿ ಗೌಡ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ.
4
+ ಏಳು ತಿಂಗಳ ಹಿಂದಯಷ್ಟೇ 30 ಲಕ್ಷ ಹಣ ನೀಡಿ ನಗರ ಠಾಣೆಗೆ ಪೋಸ್ಟಿಂಗ್ ಪಡೆದುಕೊಂಡಿದ್ದ ಪರಶುರಾಮ ಅವರು ಸಾಲದ ಸುಳಿಗೆ ಸಿಲುಕಿದ್ದರು, ಇದೀಗ ಮತ್ತೆ ನಿಯಮಬಾಹಿರ ವರ್ಗಾವಣೆ ಮಾಡಿಸಿ ಹಣಕ್ಕಾಗಿ ಕಿರುಕುಳ ನೀಡಿದ್ದಾರೆ ಎಂದು ದೂರಿದ್ದಾರೆ. ಈ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಬಸನಗೌಡ ಯತ್ನಾಳ್ ಆಗ್ರಹಿಸಿದ್ದಾರೆ.
eesanje/url_46_55_4.txt ADDED
@@ -0,0 +1,5 @@
 
 
 
 
 
 
1
+ ಶಾಸಕರ ಭವನದ ವಾಹನಗಳ ಬಾಡಿಗೆ ಮೊತ್ತ ವೇತನದಲ್ಲಿ ಕಡಿತ
2
+ ಬೆಂಗಳೂರು, ಆ.3-ಶಾಸಕರ ಭವನದ ವಾಹನಗಳನ್ನು ಉಪಯೋಗಿಸಿಕೊಂಡ ಶಾಸಕರು, ಮಾಜಿ ಶಾಸಕರು ಆ ವಾಹನದ ಬಾಡಿಗೆಯ ಮೊತ್ತವನ್ನು ನಗದು ರೂಪದಲ್ಲಿ ನೀಡದಂತೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಸೂಚಿಸಿದ್ದಾರೆ.
3
+ ಶಾಸಕರ ಭವನದ ವಾಹನಗಳನ್ನು ಶಾಸಕರು, ಮಾಜಿ ಶಾಸಕರಿಗೆ ಬಾಡಿಗೆ ನೀಡುವ ಪದ್ಧತಿ ಜಾರಿಯಲ್ಲಿದೆ. ಬಾಡಿಗೆ ಮೊತ್ತವನ್ನು ನಗದು ರೂಪದಲ್ಲಿ ನೀಡುವ ವ್ಯವಸ್ಥೆಯನ್ನು ಆಗಸ್ಟ್‌ ಒಂದರಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಿದ್ದು, ನಗದು ರಹಿತ ವ್ಯವಸ್ಥೆ ಜಾರಿಗೆ ತರಲು ಸಭಾಧ್ಯಕ್ಷರು ಸೂಚಿಸಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
4
+ ಶಾಸಕರ ಭವನದ ವಾಹನಗಳನ್ನು ಉಪಯೋಗ ಮಾಡಿಕೊಂಡ ಸಂದರ್ಭದಲ್ಲಿ ಶಾಸಕರು, ಮಾಜಿ ಶಾಸಕರು ಬಾಡಿಗೆ ಮೊತ್ತವನ್ನು ಇನ್ನು ಮುಂದೆ ನಗದು ರೂಪದಲ್ಲಿ ಪಾವತಿ ಮಾಡದೇ ವಾಹನದ ಟ್ರಿಪ್‌ಶೀಟ್‌ನಲ್ಲಿ ಮಾತ್ರ ಸಹಿ ಮಾಡಬೇಕು. ಶಾಸಕರು, ಮಾಜಿ ಶಾಸಕರು ಟ್ರಿಪ್‌ಶೀಟ್‌ನಲ್ಲಿ ಸಹಿ ಮಾಡಿದ ನಂತರ ಬಳಸಿದ ವಾಹನದ ಬಾಡಿಗೆ ಮೊತ್ತ, ನಿರೀಕ್ಷಣಾ ಶುಲ್ಕ, ಜಿಎಸ್‌‍ಟಿ ಮೊತ್ತ ಸೇರಿಸಿ ಒಟ್ಟಾರೆ ಮೊತ್ತವನ್ನು ವೇತನದಲ್ಲಿ ಕಡಿತ ಮಾಡುವುದಾಗಿ ಅವರು ಹೇಳಿದ್ದಾರೆ.
5
+ ಶಾಸಕರ ವೇತನದಲ್ಲಿ ಮತ್ತು ಮಾಜಿ ಶಾಸಕರ ನಿವೃತ್ತಿ ವೇತನ, ರೈಲ್ವೇ ಭತ್ಯೆ ಮೊತ್ತದಲ್ಲಿ ಬಾಡಿಗೆ ಮೊತ್ತ ಕಡಿತ ಮಾಡುವುದಾಗಿ ಅವರು ತಿಳಿಸಿದ್ದಾರೆ.
eesanje/url_46_55_5.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಅರಣ್ಯ ಇಲಾಖೆಯಲ್ಲಿ ಹಗರಣ : ಸರ್ಕಾರಕ್ಕೆ ಬಡ್ತಿಯ ಉರುಳು
2
+ ಬೆಂಗಳೂರು,ಆ.3-ವಲಯ ಅರಣ್ಯಾಧಿಕಾರಿ ಹುದ್ದೆಯಿಂದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ದರ್ಜೆಗೆ ಬಡ್ತಿ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ತೋರಿಸುತ್ತಿರುವ ಆತುರ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದ್ದು, ನಿಯಮಗಳ ಉಲ್ಲಂಘನೆಯ ಆರೋಪಗಳು ಕೇಳಿ ಬಂದಿವೆ.
3
+ ಸರ್ಕಾರಿ ನೌಕರರಿಗೆ ಬಡ್ತಿ ನೀಡುವಾಗ ನೇರ ನೇಮಕಾತಿ ಆಗಿರುವವರು ಹಾಗೂ ಮುಂಬಡ್ತಿ ಪಡೆದ ಎರಡು ವೃಂದಗಳಿಂದಲೂ ಸರಾಸರಿ 50:50ರ ಅನುಪಾತವನ್ನು ಪರಿಗಣಿಸಬೇಕು ಎಂಬ ನಿಯಮ ಇದೆ. ಅರಣ್ಯ ಇಲಾಖೆಯ ಅಧಿಕಾರಿಗಳ ಸಂಘದ ಪ್ರಮುಖರು ಮುಂಬಡ್ತಿ ಮೂಲಕ ಉನ್ನತ ಹ್ದುೆಗೇರಿದವರಾಗಿದ್ದು, ಸಹಜವಾಗಿಯೇ ನೇರ ನೇಮಕಾತಿ ಆದವರನ್ನು ಕಡೆಗಣಿಸಿ, ಮುಂಬಡ್ತಿ ಪಡೆದವರ ಪರವಾಗಿ ಲಾಬಿ ನಡೆಸಿದ್ದಾರೆ ಎಂಬ ಟೀಕೆಗಳಿವೆ.
4
+ 1976ರ ಆದೇಶವನ್ನು ಉಲ್ಲಂಘಿಸಿ ಅರಣ್ಯ ಇಲಾಖೆಯು ಬ್ಲಾಕ್‌ ಅವಧಿ 17ರಲ್ಲಿ 13 ಹುದ್ದೆಗಳನ್ನು ಹಾಗೂ 27 ಮತ್ತು 29ರಲ್ಲಿ ತಲಾ 3 ಹೆಚ್ಚುವರಿ ಹ್ದುೆಗಳನ್ನು ಹೆಚ್ಚುವರಿಯಾಗಿ ಕ್ಲೈಮ್‌ ಮಾಡಿದೆ. ಜೊತೆಗೆ 2018ರ ಡಿಸೆಂಬರ್‌ 27ರಂದು ನಿಗದಿ ಪಡಿಸಿದ ನಮೂನೆಗಳಲ್ಲಿ ರಿಕ್ತಸ್ಥಾನವಹಿ ಹಾಗೂ ರೋಸ್ಟರ್‌ ರಿಜಿಸ್ಟರ್‌ ಪ್ರಕಟಿಸಿಲ್ಲ. ದೋಷಪೂರಿತ ಜೇಷ್ಠತಾ ಪಟ್ಟಿಯು 2020ರ ನವೆಂಬರ್‌ 19ರಂದು ರದ್ದುಗೊಂಡಿದೆ. ಜೇಷ್ಠತಾ ಪಟ್ಟಿಯಲ್ಲಾದ ಲೋಪಗಳನ್ನು ಪ್ರಶ್ನಿಸಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
5
+ ವಿಚಾರಣೆ ನಡೆಸಿದ ಹೈಕೋರ್ಟ್‌ ಪ್ರಕರಣ ಇತ್ಯರ್ಥಗೊಳ್ಳುವವರೆಗೂ ಬಡ್ತಿ ನೀಡದಂತೆ ಆದೇಶಿಸಿದೆ. ಇದರ ನಡುವೆ ನ್ಯಾಯಾಲಯದ ಮೆಟ್ಟಿಲು ಏರಿದವರ ಹೆಸರನ್ನು ಜೇಷ್ಠತಾ ಪಟ್ಟಿಗೆ ಸೇರಿಸಿ ತೇಪೆ ಹಚ್ಚುವ ಕೆಲಸವನ್ನು ಅರಣ್ಯ ಇಲಾಖೆ ಮಾಡಿದೆ. ಪರಿಷ್ಕೃತ ಜೇಷ್ಠತಾ ಪಟ್ಟಿಯಲ್ಲಿ ಸಣ್ಣಪುಟ್ಟ ಬದಲಾವಣೆ ಹೊರತು ಪಡಿಸಿ ನ್ಯಾಯೋಚಿತವಾದ ಕ್ರಮಗಳಾಗಿಲ್ಲ ಎಂದು ಅವಕಾಶ ವಂಚಿತ ಅಧಿಕಾರಿಗಳು ಆರೋಪಿಸಿದ್ದಾರೆ.
6
+ ಹೈಕೋರ್ಟ್‌ ತೀರ್ಪಿನ ಹೊರತಾಗಿಯೂ ಸರ್ಕಾರ ಈಗ 72 ಮಂದಿಗೆ ವಲಯ ಅರಣ್ಯ ಅಧಿಕಾರಿಗಳ ಹುದ್ದೆಯಿಂದ ಸಹಾಯಕ ಅರಣ್ಯ ಅಧಿಕಾರಿ ಹ್ದುೆಗೆ ಬಡ್ತಿ ನೀಡಲು ಮುಂದಾಗಿದೆ. ದೋಷಪೂರಿತ ಜೇಷ್ಠತಾ ಪಟ್ಟಿ ಹಾಗೂ ಹೈಕೋರ್ಟ್‌ ತೀರ್ಪಿನ ಹೊರತಾಗಿಯೂ ಬಡ್ತಿ ನೀಡಲು ಮುಂದಾಗಿರುವ ಹಿನ್ನೆಲೆಯಲ್ಲಿ ಕೆಲ ಅಧಿಕಾರಿಗಳು ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ್ದಾರೆ.
7
+ ಈ ನಡುವೆ ಅರಣ್ಯ ಇಲಾಖೆ ನೌಕರರಿಗೆ ಆತುರಾತುರವಾಗಿ ಮುಂಬಡ್ತಿ ನೀಡಲು ಸರ್ಕಾರ ಮುಂದಾಗಿದೆ. ಅದರಲ್ಲಿ ನೇರ ನೇಮಕಾತಿಯಾದವರನ್ನು ಕಡೆಗಣಿಸಲಾಗಿದೆ ಎಂಬ ದೂರುಗಳು ಇವೆ. ಕೆಲ ಪ್ರಭಾವಿಗಳು ಸರ್ಕಾರ ಮತ್ತು ಸಚಿವಾಲಯವನ್ನು ದಿಕ್ಕು ತಪ್ಪಿಸುವ ಯತ್ನ ನಡೆಸಿದ್ದಾರೆ ಎನ್ನಲಾಗುತ್ತಿದೆ. ಎಲ್ಲವೂ ಸರಿ ಇದೆ ಮತ್ತು ನಿಯಮಗಳ ಪಾಲನೆಯಾಗಿದೆ ಎಂದು ಸಚಿವಾಲಯವನ್ನು ನಂಬಿಸಿ ಜೇಷ್ಠತಾ ಪಟ್ಟಿಗೆ ಅಂಗೀಕಾರ ಪಡೆದು ಬಡ್ತಿ ನೀಡ��ವ ಪ್ರಯತ್ನ ನಡೆದಿದೆ.
8
+ ಬಡ್ತಿ ನೀಡುವ ಸಲುವಾಗಿ ನಡೆದಿರುವ ಡಿಪಿಸಿಯಲ್ಲೂ ಪಾರದರ್ಶಕತೆ ಕಾಯ್ದುಕೊಂಡಿಲ್ಲ ಎನ್ನಲಾಗಿದೆ. ಡಿಪಿಸಿ ಸಭೆಯ ಕಾರ್ಯಸೂಚಿ ಮಾಹಿತಿಯನ್ನು ರಹಸ್ಯವಾಗಿ ಇಡಲಾಗಿದೆ. ತೆರೆ ಮರೆಯಲ್ಲಿ ಎಲ್ಲವನ್ನೂ ಮುಗಿಸಿ, ಡಿಪಿಸಿ ಪ್ರಕಿಯೆಗೆ ಸದಸ್ಯರ ಸಹಿ ಪಡೆದುಕೊಳ್ಳಲಾಗಿದೆ.ಸಭೆಯಲ್ಲಿ ಆಖೈರುಗೊಳಿಸಲಾದ ಪಟ್ಟಿಯನ್ನು ಸಚಿವಾಲಯದ ಅನುಮೋದನೆಗೆ ಕಳುಹಿಸಲಾಗಿದೆ. ಅನಪೇಕ್ಷಿತ ಪ್ರಭಾವಗಳಿಂದಾಗಿ ನೇರ ನೇಮಕಾತಿಯ ಮೇಲೆ ಸೇವೆಗೆ ಸೇರಿ, ಮುಂಬಡ್ತಿಯ ನಿರೀಕ್ಷೆಯಲ್ಲಿದ್ದ 150ಕ್ಕೂ ಹೆಚ್ಚು ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗದ 371 ಜೆ ಅಡಿಯಲ್ಲಿ ಬರುವ ಅಧಿಕಾರಿಗಳಿಗೂ ದೋಷಪೂರಿತ ಜೇಷ್ಠತಾ ಪಟ್ಟಿಯಿಂದ ಅನ್ಯಾಯವಾಗುತ್ತಿದೆ ಎಂದು ಹೇಳಲಾಗಿದೆ.
9
+ ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆಯ ಪ್ರಕರಣ ಬಾಕಿ ಇದ್ದಾಗಲೂ ಕೂಡ ಡಿಪಿಸಿ ನಡೆಸಿ, ಮುಂಬಡ್ತಿ ನೀಡುವ ದುಸ್ಸಾಹಸ ಏಕೆ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಅವಕಾಶ ವಂಚಿತ ಅಧಿಕಾರಿಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಆ.19ಕ್ಕೆ ದಿನಾಂಕ ನಿಗದಿಯಾಗಿದೆ. ಅದಕ್ಕೂ ಮೊದಲು ಬಡ್ತಿ ನೀಡುವ ತಯಾರಿ ಶುರುವಾಗಿದೆ.
10
+ ಸದ್ಯಕ್ಕೆ ಮುಂಬಡ್ತಿ ನೀಡಿ, ಸ್ಥಳ ನಿಯೋಜನೆ ಮಾಡುವುದು, ನಂತರ ಕಾನೂನು ಸಂಘಷರ್ದಲ್ಲಿ ಕಾಲಹರಣ ಮಾಡಿ, ಬಡ್ತಿ ಪಡೆದವರು ಹುದ್ದೆಯ ಮೋಜನ್ನು ಅನುಭವಿಸುವುದು ಎಂಬ ಹುನ್ನಾರ ಅಡಗಿದಂತಿದೆ.
11
+ ರಾಜ್ಯದಲ್ಲಿ ಪ್ರಭಾವಿ ಸಂಸದರೊಬ್ಬರು ಮುಂಬಡ್ತಿ ಪಟ್ಟಿಗೆ ಅನುಮೋದನೆ ಕೊಡಿಸುವುದಾಗಿ ವ್ಯವಹಾರ ಕುದುರಿಸಿದ್ದಾರೆ, ಇದಕ್ಕಾಗಿ ಪಟ್ಟಿಯಲ್ಲಿ ಇರುವ ಅಧಿಕಾರಿಗಳಿಂದ ಭಾರೀ ಪ್ರಮಾಣದ ಹಣ ವಸೂಲಿ ಮಾಡಲಾಗಿದೆ ಎಂಬ ಆರೋಪಗಳಿವೆ. ರಾಜ್ಯ ಸರ್ಕಾರ ಈಗಾಗಲೇ ಹಲವು ರೀತಿಯ ಆರೋಪಗಳಿಂದ ಮುಜುಗರಕ್ಕೀಡಾಗಿರುವ ಹಂತದಲ್ಲಿ ಹಣಕ್ಕಾಗಿ ಬಡ್ತಿ ಎಂಬ ಹೊಸ ಆರೋಪ ನುಂಗಲಾರದ ತುತ್ತಾಗಿದೆ.
eesanje/url_46_55_6.txt ADDED
@@ -0,0 +1,8 @@
 
 
 
 
 
 
 
 
 
1
+ ಪಾದಯಾತ್ರೆ ಮುಗಿಯುವ ಮುನ್ನವೇ ಸಿಎಂ ರಾಜೀನಾಮೆ ಸಾಧ್ಯತೆ : ಬಿಎಸ್‌‍ವೈ ಸ್ಫೋಟಕ ಹೇಳಿಕೆ
2
+ ಬೆಂಗಳೂರು,ಆ.3-ಮುಡಾ ಅಕ್ರಮ ನಿವೇಶನ ಹಂಚಿಕೆ ಸಂಬಂಧ ಆರೋಪಿ ಸ್ಥಾನದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಜೆಪಿ-ಜೆಡಿಎಸ್‌‍ ಹಮಿಕೊಂಡಿರುವ ಜಂಟಿ ಪಾದಯಾತ್ರೆ ಮುಗಿಯುವುದರೊಳಗೆ ತಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಬಿ.ಎಸ್‌‍.ಯಡಿಯೂರಪ್ಪ ಸ್ಫೋಟಕ ಹೇಳಿಕೆ ನೀಡಿದ್ದಾರೆ.
3
+ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ಜೆ.ಕೆ.ಗ್ರ್ಯಾಂಡ್‌ ಅರೇನ ಸೆಂಟರ್‌ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಹಗರಣದಲ್ಲಿ ಸಿದ್ದರಾಮಯ್ಯನವರ ಕುಟುಂಬವೇ ಆರೋಪಿ ಸ್ಥಾನದಲ್ಲಿರುವುದರಿಂದ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಎಚ್ಚರಿಸಿದರು.
4
+ ನನಗಿರುವ ಮಾಹಿತಿ ಪ್ರಕಾರ ನಮ ಪಾದಯಾತ್ರೆ ಮುಗಿಯುವುದರೊಳಗೆ ಸಿಎಂ ರಾಜೀನಾಮೆ ನೀಡುವ ಸಾಧ್ಯತೆಗಳು ಹೆಚ್ಚಾಗಿವೆ. ಬಹುತೇಕ ಅವರು ಮಾನಸಿಕವಾಗಿಯೂ ಅಧಿಕಾರದಿಂದ ನಿರ್ಗಮಿಸಲು ಸಿದ್ಧರಾಗಿದ್ದಾರೆ. ಕುಟುಂಬದವರೇ ಶಾಮೀಲಾಗಿರುವುದರಿಂದ ಬೇರೆ ದಾರಿ ಇಲ್ಲ ಎಂದು ಹೇಳಿದರು.
5
+ ಬಿಜೆಪಿ ಮತ್ತು ಜೆಡಿಎಸ್‌‍ ಜಂಟಿಯಾಗಿ ಪಾದಯಾತ್ರೆ ನಡೆಸುತ್ತಿದ್ದೇವೆ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಎಲ್ಲರೂ ಹೊಂದಿಕೊಂಡು ಭ್ರಷ್ಟ ಕಾಂಗ್ರೆಸ್‌‍ ಸರ್ಕಾರದ ವಿರುದ್ಧ ಜಂಟಿ ಹೋರಾಟ ಮಾಡುತ್ತೇವೆ. ನಮಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು.
6
+ ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಐತಿಹಾಸಿಕ ಪಾದಯಾತ್ರೆ ಹಮಿಕೊಂಡಿದ್ದೇವೆ. ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ನಡೆಸುತ್ತೇವೆ. ಪ್ರತಿಯೊಂದು ಕಡೆ 8 ರಿಂದ 10 ಸಾವಿರ ಜನ ಸೇರುತ್ತಾರೆಂಬ ವಿಶ್ವಾಸ ಇದೆ. ಸಿದ್ದರಾಮಯ್ಯ ಅವರಿಗೆ ಇದು ಕೊನೆ ಅವಕಾಶ. ಅವರೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
7
+ ರಾಜೀನಾಮೆ ಅವರಾಗಿಯೇ ಕೊಟ್ಟರೆ ಅವರಿಗೆ ಅದು ಶೋಭೆ ತರುತ್ತದೆ, ಪಕ್ಷಕ್ಕೆ ಗೌರವ ಸಿಗುತ್ತದೆ. ಇಲ್ಲದಿದ್ದರೆ ಅನಿವಾರ್ಯವಾಗಿ ರಾಜ್ಯಪಾಲರೇ ಕ್ರಮ ತೆಗೆದುಕೊಳ್ಳಬಹುದು. ಇದಕ್ಕೆ ಅವಕಾಶ ಕೊಡದೇ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ನಾನು ಸಲಹೆ ಕೊಡುತ್ತೇನೆ ಎಂದರು. ಜನರಿಗೆ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ವಾಸ್ತವ ಸ್ಥಿತಿ ತಿಳಿದಿದೆ. ಹೀಗಾಗಿ ಅವರು ಯಾವುದೇ ಆರೋಪಗಳಿಂದ ಮುಕ್ತಿ ಪಡೆಯಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.
8
+ ರಾಜ್ಯಪಾಲರ ಕಚೇರಿ ದುರ್ಬಳಕೆಯಾಗಿದೆ ಎಂದು ಕಾಂಗ್ರೆಸ್‌‍ ಆರೋಪ ಮಾಡುತ್ತಿದೆ. ಈ ರೀತಿಯ ಆರೋಪ ಮಾಡಿ ತಮ ಮೇಲಿನ ಆರೋಪಗಳಿಂದ ಅವರು ಮುಕ್ತರಾಗಲು ಸಾಧ್ಯವೇ ಇಲ್ಲ ಎಂದರು.
eesanje/url_46_55_7.txt ADDED
@@ -0,0 +1,5 @@
 
 
 
 
 
 
1
+ ಸಿದ್ದರಾಮಯ್ಯ ಸತ್ಯಹರಿಶ್ಚಂದ್ರ ಆಗಿದ್ದರೆ ಮೊದಲು ರಾಜೀನಾಮೆ ನೀಡಲಿ : ಡಿವಿಎಸ್
2
+ ಬೆಂಗಳೂರು,ಆ.3-ನೀವು ನಿಜವಾಗಿಯೂ ಸತ್ಯಹರಿಶ್ಚಂದ್ರರೇ ಆಗಿ ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ ಎನ್ನುವುದಾದರೆ ಮೊದಲು ಮುಡಾ ಹಗರಣ ಪ್ರಕರಣದಲ್ಲಿ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಸಿಎಂ ಸಿದ್ದರಾಮಯ್ಯನವರೇ ಎಂದು ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಸವಾಲು ಹಾಕಿದ್ದಾರೆ.
3
+ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ಜೆ.ಕೆ.ಗ್ರ್ಯಾಂಡ್‌ ಅರೇನ ಸೆಂಟರ್‌ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸತ್ಯಹರಿಶ್ಚಂದ್ರರಾಗಿದ್ದರೆ ರಾಜೀನಾಮೆ ನೀಡಲು ಮೀನಾಮೇಷ ಏಕೆ ಎಂದು ಪ್ರಶ್ನೆ ಮಾಡಿದರು.
4
+ ಸಿದ್ದರಾಮಯ್ಯನವರು ಅಧಿಕಾರದಲ್ಲಿ ಲೂಟಿ ಮಾಡುವ ಕೆಲಸ ಮಾಡುತ್ತಿದ್ದಾರೆ. ಲಜ್ಜೆಗೆಟ್ಟ ಸರ್ಕಾರ ಇನ್ನಷ್ಟು ಉಂಡು ತಿಂದು ನೀರು ಕುಡಿಯುವ ಮನಃಸ್ಥಿತಿಯಲ್ಲಿದೆ ಎಂದು ವಾಗ್ದಾಳಿ ನಡೆಸಿದರು. ಭಸಾಸುರರಾಗಿ ಜನರ ತಲೆ ಮೇಲೆ ಕೈ ಇಟ್ಟಿದ್ದಾರೆ. ನಾನು ಸತ್ಯ ಹರಿಶ್ಚಂದ್ರ ಅನ್ನುತ್ತಾರೆ. ಇಂದು ಅವರ ಬಣ್ಣ ಬಯಲಾಗಿದೆ. ಆದರೂ ರಾಜೀನಾಮೆಗೆ ಮನಸ್ಸು ಮಾಡುತ್ತಿಲ್ಲ ಎಂದು ವ್ಯಂಗ್ಯವಾಡಿದರು.
5
+ ಇದು ಕೇವಲ ರಾಜ್ಯದ ಹಗರಣವಾಗಿ ಉಳಿದಿಲ್ಲ. ಸಿಎಂ ರಾಜ್ಯದ ಜನರ ಮನಸ್ಸಿನ ಭಾವನೆಗೆ ಗೌರವ ಕೊಟ್ಟು ರಾಜೀನಾಮೆ ಕೊಡಬೇಕು. ಇಲ್ಲವಾದರೆ ನಾವು ಇದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದ ಅವರು, ಇನ್ನೆರಡು ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
eesanje/url_46_55_8.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ “ಮುಡಾ ಹಗರಣದ ಕಿಂಗ್‌ಪಿನ್‌ ಭೈರತಿ ಸುರೇಶ್‌ ಇನ್ನೂ ಏಕೆ ಅರೆಸ್ಟ್ ಆಗಿಲ್ಲ..?”
2
+ ಬೆಂಗಳೂರು,ಆ.3-ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಬಹುಕೋಟಿ ಅಕ್ರಮಕ್ಕೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಅವರೇ ಇದರ ಕಿಂಗ್‌ಪಿನ್‌. ಅವನನ್ನು ಏಕೆ ಬಂಧಿಸಿಲ್ಲ ಎಂದು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.
3
+ ಸಭೆಯಲ್ಲಿ ಮಾತನಾಡಿದ ಅವರು, ಮುಡಾದಲ್ಲಿ ಅಂದಾಜು ನಾಲ್ಕು ಸಾವಿರ ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಇದರ ಸೂತ್ರಧಾರ ಭೈರತಿ ಸುರೇಶ್‌. ಅವನು ಏಕೆ ಹೊರಗಡೆ ಇದ್ದ ಎಂಬುದು ಯಾರಿಗೂ ತಿಳಿಯುತ್ತಿಲ್ಲ. ಸರ್ಕಾರ ಈತನನ್ನು ಏಕೆ ಬಂಧಿಸಿಲ್ಲ? ಎಂದು ಪ್ರಶ್ನೆ ಮಾಡಿದರು.
4
+ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ಒಬ್ಬ ಸಚಿವರು ಈಗಾಗಲೇ ಜೈಲು ಪಾಲಾಗಿದ್ದಾರೆ. ಇದರಲ್ಲಿ 189 ಕೋಟಿ ಹಗರಣ ಆಗಿದೆ. ಅದಕ್ಕಾಗಿ ಸಚಿವರ ರಾಜೀನಾಮೆ ಪಡೆದು ಅವರನ್ನು ಇ.ಡಿ ಬಂಧಿಸಿದೆ. ಹಾಗಾದರೆ ಭೈರತಿ ಸುರೇಶ್‌ ಯಾವ ಮುಖ ಇಟ್ಟುಕೊಂಡು ಸಚಿವರಾಗಿ ಮುಂದುವರೆದಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.
5
+ ವಾಲೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಒಂದು ನ್ಯಾಯ, ಮುಡಾಕ್ಕೆ ಇನ್ನೊಂದು ನ್ಯಾಯವೇ? ಮಾಜಿ ಸಚಿವ ಬಿ.ನಾಗೇಂದ್ರ ಜೈಲಿಗೆ ಹೋಗುವುದಾದರೆ ಸಾವಿರಾರು ಕೋಟಿ ಅಕ್ರಮ ಎಸಗಿರುವ ಭೈರತಿ ಸುರೇಶ್‌ ಕೂಡ ಜೈಲಿಗೆ ಹೋಗಬೇಕಲ್ಲವೇ ಎಂದು ವಿಶ್ವನಾಥ್‌ ಹರಿಹಾಯ್ದರು.
6
+ ಮುಡಾದಲ್ಲಿ ಅಕ್ರಮ ಎಸಗಿರುವ ಆಯುಕ್ತರ ಮೇಲೆ ಸರ್ಕಾರ ಏಕೆ ಕ್ರಮ ಜರುಗಿಸಿಲ್ಲ? ಅವರನ್ನು ರಕ್ಷಣೆ ಮಾಡಲು ನಗರಾಭಿವೃದ್ಧಿ ಸಚಿವರು ಮುಂದಾಗಿರಬಹುದು. ಪ್ರತಿಪಕ್ಷದವರು ನಿವೇಶನ ಪಡೆದುಕೊಂಡಿದ್ದಾರೆ. ಅವರ ದಾಖಲೆಗಳನ್ನು ಕಲೆ ಹಾಕುವುದರಲ್ಲಿ ಇವರು ನಿರತರಾಗಿದ್ದಾರೆಯೇ? ಎಂದು ಟೀಕಾ ಪ್ರಹಾರ ನಡೆಸಿದರು.
7
+ ಇನ್ನು ವಿಶ್ವನಾಥ್‌ ತಮ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ಕೆಂಡಕಾರಿದರು. ಸಿದ್ದರಾಮಯ್ಯನವರೇ ನಿಮಗೆ ರಾಜ್ಯಪಾಲರು ಶೋಕಾಸ್‌‍ ನೋಟಿಸ್‌‍ ಕೊಟ್ಟಿದ್ದಾರೆ. ಸಾರ್ವಜನಿಕರ ದೂರಿನ ಮೇರೆಗೆ ರಾಜ್ಯಪಾಲರು ನೋಟಿಸ್‌‍ ಕೊಟ್ಟಿರುವುದು ಸರಿ ಎಂದು ಸಮರ್ಥಿಸಿದರು.
8
+ ಅವರ ನೋಟಿಸ್‌‍ಗೆ ಸರಿಯಾದ ಉತ್ತರ ಕೊಡದೆ ನೀವು ಏನೇನೊ ಬಾಯಿಗೆ ಬಂದಂತೆ ಮಾತನಾಡಬೇಡಿ, ನೀವೊಬ್ಬ ವಕೀಲರಾಗಿ ಕಾನೂನಿನ ಅರಿವು ನಿಮಗಿಲ್ಲವೇ? ರಾಜ್ಯಪಾಲರ ನೋಟಿಸ್‌‍ಗೆ ಉತ್ತರ ಕೊಡಬೇಕಾಗಿದ್ದು ನಿಮ ಕರ್ತವ್ಯ. ಅದನ್ನು ಬಿಟ್ಟು ಅವರು ಆ ಪಕ್ಷದವರಿಗೆ , ಈ ಪಕ್ಷದವರಿಗೆ ಎಂದು ಹೇಳುವುದನ್ನು ಮಾಡಬೇಡಿ. ಈಗ ನಿಮಗೆ ಶೋಭೆ ತರುವುದಿಲ್ಲ ಎಂದು ವಿಶ್ವನಾಥ್‌ ಎಚ್ಚರಿಸಿದರು.
9
+ ಸಿದ್ಧರಾಮಯ್ಯನವರೇ ನೀವು ನಿಮ ಸ್ಥಾನಕ್ಕೆ ಗೌರವದಿಂದ ರಾಜೀನಾಮೆ ಕೊಟ್ಟು ಇರುವ ಅಲ್ಪಸ್ವಲ್ಪ ಘನತೆಯನ್ನು ಹೆಚ್ಚಿಸಿಕೊಳ್ಳಿ. ಬಾಯಿಗೆ ಬಂದಂತೆ ಮಾತನಾಡುವುದರ��ಂದ ನೀವು ದೊಡ್ಡವರಾಗುವುದಿಲ್ಲ. ನಿಮ ಇತ್ತೀಚಿನ ಬೆಳವಣಿಗೆಯನ್ನು ನೋಡಿದರೆ ನೀವು ಹಠಕ್ಕೆ ಬಿದ್ದು ಬಂಡತನ ಪ್ರದರ್ಶನ ಮಾಡುತ್ತಿದ್ದೀರಿ. ನಾವು-ನೀವು ಒಟ್ಟಿಗೆ ಬೆಳೆದವರು. ಒಟ್ಟಿಗೆ ಕಾನೂನು ಓದಿದ್ದೇವೆ ಎಂದು ಹೇಳಿದರು.
10
+ ನಿಮಗೆ ಅನುಕೂಲಕ್ಕೆ ಬೇಕಾದಾಗ ಕಾನೂನು ಸಂವಿಧಾನ, ರಾಜ್ಯಪಾಲರು ಎಲ್ಲವೂ ಸರಿ ಇರುತ್ತದೆ. ಒಂದು ಶೋಕಾಸ್‌‍ ನೋಟಿಸ್‌‍ ಕೊಟ್ಟಿಲ್ಲ ಎಂದ ತಕ್ಷಣ ಇಡೀ ವ್ಯವಸ್ಥೆಯೇ ಸರಿ ಇಲ್ಲ ಎಂದು ಹೇಳುವುದು ಸರಿಯಲ್ಲ. ಶೋಕಾಸ್‌‍ ನೋಟಿಸ್‌‍ಗೆ ಉತ್ತರ ಕೊಡದೆ ಸಚಿವ ಸಂಪುಟ ಸಭೆಯಲ್ಲಿ ನೋಟಿಸ್‌‍ ವಾಪಸ್‌‍ ಪಡೆಯಬೇಕೆಂದು ನಿಮ ಸಂಪುಟದ ಸಹೋದ್ಯೋಗಿಗಳಿಂದ ಒತ್ತಡ ಹಾಕುತ್ತೀರಿ.
11
+ ನಾಲ್ಕು ದಶಕಗಳ ರಾಜಕೀಯದಲ್ಲಿ ನನ್ನ ಮೇಲೆ ಒಂದೇ ಒಂದು ಕಪ್ಪುಚುಕ್ಕೆ ಇಲ್ಲ ಎನ್ನುವ ನೀವು ಈಗ ಆರೋಪಿ ಸ್ಥಾನದಲ್ಲಿ ಇದ್ದೀರಿ ಎಂಬುದನ್ನು ಮರೆಯಬೇಡಿ. ಗೌರವದಿಂದ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ವಿಶ್ವನಾಥ್‌ ಟೀಕೆಗಳ ಸುರಿಮಳೆ ಗೈದರು.
eesanje/url_46_55_9.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನಿಂದ ಮೈಸೂರುವರೆಗೆ ಬಿಜೆಪಿ-ಜೆಡಿಎಸ್‌‍ ಪಾದಯಾತ್ರೆ ಆರಂಭ
2
+ ಬೆಂಗಳೂರು,ಆ.3– ಅಕ್ರಮ ಗಣಿಗಾರಿಕೆ ವಿರುದ್ಧ ಬೆಂಗಳೂರಿನಿಂದ ಬಳ್ಳಾರಿವರೆಗೂ ಪಾದಯಾತ್ರೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಇಂದು ಅದೇ ಅಸ್ತ್ರವನ್ನು ಬಳಸಿ ರಾಜಧಾನಿ ಬೆಂಗಳೂರಿನಿಂದ ಮೈಸೂರುವರೆಗೆ ಬಿಜೆಪಿ-ಜೆಡಿಎಸ್‌‍ ದೋಸ್ತಿ ಪಕ್ಷಗಳ ಜಂಟಿ ಪಾದಯಾತ್ರೆಗೆ ಚಾಲನೆ ಸಿಕ್ಕಿದೆ.
3
+ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(ಮುಡಾ)ದಲ್ಲಿ ಕಾನೂನು ಬಾಹಿರ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಒಂದು ವಾರ ಕಾಲ ನಡೆಯಲಿರುವ ಪಾದಯಾತ್ರೆಗೆ ಕಾರ್ಯಕರ್ತರ ಹರ್ಷೋದ್ಘಾರ, ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳ ನಡುವೆಯೇ ಪಾದಯಾತ್ರೆಗೆ ಚಾಲನೆ ನೀಡಲಾಯಿತು.
4
+ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯ ಉಸ್ತುವಾರಿ ಡಾ. ರಾಧಾ ಮೋಹನ್‌ದಾಸ್‌‍ ಅಗರ್ವಾಲ್‌, ಕೇಂದ್ರ ಸಚಿವರಾದ ಶೊಭಾ ಕರಂದ್ಲಾಜೆ, ವಿ.ಸೋಮಣ್ಣ, ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌, ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆಯ ಜೆಡಿಎಸ್‌‍ ನಾಯಕ ಸಿ.ಬಿ. ಸುರೇಶ್‌ ಬಾಬು, ಮಾಜಿ ಸಚಿವ ಜಿ.ಟಿ. ದೇವೇಗೌಡ, ಕೇಂದ್ರ ಸಚಿವರು, ಕೋರ್‌ ಕಮಿಟಿ ಸದಸ್ಯರು, ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್‌ ಸದಸ್ಯರು, ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದರು.
5
+ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಅವರು ನಗಾರಿ ಬಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ಕೊಟ್ಟರು. ಪಾದಯಾತ್ರೆಗಾಗಿ ಕಾಂಗ್ರೆಸ್‌‍ ವಿರುದ್ಧ ರಚಿಸಿದ ಗೀತೆಯನ್ನು ಇದೇ ವೇಳೆ ಉಭಯ ಪಕ್ಷಗಳ ನಾಯಕರು ಬಿಡುಗಡೆ ಮಾಡಿದರು. ಕೆಂಗೇರಿಯ ಕೆಂಪಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸಮೀಪದ ಜೆ.ಕೆ.ಗ್ರ್ಯಾಂಡ್‌ ಅರೇನ ಸೆಂಟರ್‌ನಲ್ಲಿ ಕಾರ್ಯಕರ್ತರ ಬೃಹತ್‌ ಕಾರ್ಯಕ್ರಮ ಜರುಗಿತು.
6
+ ನಂತರ 10 ಗಂಟೆಗೆ ಪಾದಯಾತ್ರೆಗೆ ವಿದ್ಯುಕ್ತ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಬಹುತೇಕ ಎಲ್ಲಾ ಪ್ರಮುಖರು ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.
7
+ ಅದರಲ್ಲೂ ಮುಡಾ ನಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದವರೇ ಶಾಮೀಲಾಗಿರುವುದರಿಂದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ಕಿಡಿಕಾರಿದರು.
8
+ ವಿಶೇಷವಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ನಗರಾಭಿವೃದ��ಧಿ ಸಚಿವ ಭೈರತಿ ಸುರೇಶ್‌ ಅವರನ್ನು ಗುರಿಯಾಗಿಟ್ಟುಕೊಂಡು ವಾಗ್ದಾಳಿ ನಡೆಸಿದ ಮೈತ್ರಿ ಪಕ್ಷಗಳ ನಾಯಕರು ರಾಜ್ಯದಲ್ಲಿ ಸರ್ಕಾರ ಹೆಚ್ಚು ದಿನ ಉಳಿಯುವ ಲಕ್ಷಣಗಳಿಲ್ಲ ಎಂದು ಭವಿಷ್ಯ ನುಡಿದರು.
9
+ ಇಂದಿನಿಂದ ಆರಂಭವಾಗಿರುವ ಪಾದಯಾತ್ರೆ ಆ.10(ಶನಿವಾರ)ರವರೆಗೆ ಮೈಸೂರಿನಲ್ಲಿ ಸಮಾರೋಪ ಸಮಾರಂಭದೊಂದಿಗೆ ಮುಕ್ತಾಯಗೊಳ್ಳಲಿದೆ. ಒಟ್ಟು 140 ಕಿ.ಮೀ ಪಾದಯಾತ್ರೆ ಜರುಗಲಿದ್ದು, ಪ್ರತಿದಿನ 15ರಿಂದ 20 ಕಿ.ಮೀ ವರೆಗೂ ಶ್ರಮಿಸಲಿವೆ.
10
+ ಬಿಜೆಪಿ ರಾಜ್ಯ ಪದಾಧಿಕಾರಿಗಳು ಆಂತರಿಕ ಸಭೆ ನಡೆಸಿದ್ದು, ಮತ್ತೊಂದು ತಂಡ ಪಾದಯಾತ್ರೆ ಮಾರ್ಗಪಥದ ಸಮೀಕ್ಷೆ, ವಸತಿ, ಉಟೋಪಚಾರ ಸ್ಥಳ, ಜೊತೆಗೆ ಬಹಿರಂಗ ಸಭೆಗಳಿಗೆ ಅಗತ್ಯ ಮೈದಾನ ಗುರುತಿಸಿ ಅಂತಿಮಗೊಳಸಲಾಗಿದೆ.
11
+ ನಿರ್ವಹಣೆಗೆ ವಿವಿಧ ಮೋರ್ಚಾಗಳ ಜೊತೆಗೆ ತಂಡಗಳು ರಚನೆಯಾಗಿವೆ. ಮೊದಲ ದಿನದ ಪಾದಯಾತ್ರೆಯನ್ನು ಯುವ ಮೋರ್ಚಾ ನಿರ್ವಹಿಸಿದವು. ಕೆಂಗೇರಿಯಲ್ಲಿ ಉದ್ಘಾಟನೆ, ಮೈಸೂರಿನ ಸಮಾರೋಪ ಕಾರ್ಯಕ್ರಮ ಹೊರತುಪಡಿಸಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಶ್ರೀರಂಗಪಟ್ಟಣದಲ್ಲಿ ಬಹಿರಂಗ ಸಭೆಗಳು ನಡೆಯಲಿವೆ. ಬೆಳಗ್ಗೆ 10 ಕಿ.ಮೀ. ಮಧ್ಯಾಹ್ನ ಊಟದ ನಂತರ 10 ಕೀ.ಮೀನಂತೆ ಪ್ರತಿದಿನ 20 ಕಿ.ಮೀ. ಕ್ರಮಿಸಲು ಯೋಜಿಸಲಾಗಿದೆ.
12
+ ವಿಧಾನಸಭೆ ಕ್ಷೇತ್ರವಾರು 200 ಜನರು ಸೇರಿ ಪ್ರತಿದಿನ ಐದಾರು ಸಾವಿರ ಜನರು ಭಾಗಹಿಸಲಿದ್ದಾರೆ. ವಿಧಾನಸಭೆ, ವಿಧಾನ ಪರಿಷತ್‌ ಸದಸ್ಯರು ಸೇರಿ ರಾಜ್ಯದ ಎಲ್ಲ ಜಿಲ್ಲೆಗಳ ಮುಖಂಡರು, ಪದಾಧಿಕಾರಿಗಳು ಏಳು ದಿನವೂ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪಾದಯಾತ್ರೆಯ ಯಶಸ್ಸಿಗೆ 20ರಿಂದ 22 ವಿಭಾಗಗಳನ್ನು ರಚಿಸಲಾಗಿದೆ. ಆಗಸ್ಟ್‌ 10ರಂದು ಬೆಳಗ್ಗೆ 10.30ಕ್ಕೆ ಮೈಸೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.
13
+ ಬಿಗಿ ಭದ್ರತೆ: ಕೆಂಗೇರಿಯ ನೈಸ್‌‍ ರಸ್ತೆ ಸಮೀಪದ ಕೆಂಪಮದೇವಿ ದೇವಸ್ಥಾನ ಬಳಿ ಪಾದಯಾತ್ರೆಗೆ ಚಾಲನೆ ದೊರೆಯಲಿರುವ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ದಟ್ಟಣೆ ಏರ್ಪಡುವ ಸಾಧ್ಯತೆಯಿದೆ. ಮೈಸೂರು ರಸ್ತೆ ಮಾರ್ಗದಲ್ಲಿ ಬೆಳಗ್ಗೆ ತೆರಳುವವರು ಹಾಗೂ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರಿಗೆ ಸಂಚಾರ ದಟ್ಟಣೆಯ ಬಿಸಿ ತಟ್ಟಲಿದೆ.
14
+ ಪಾದಯಾತ್ರೆ ಆರಂಭವಾಗುವ ಸ್ಥಳದ ಬಳಿ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಸಂಚಾರ ಪೊಲೀಸ್‌‍ ವಿಭಾಗದ ಮೂವರು ಇನ್‌ಸ್ಪೆಕ್ಟರ್‌ ಹಾಗೂ 50 ಸಿಬ್ಬಂದಿ ನಿಯೋಜಿಸಲಾಗಿದೆ. ಉಳಿದಂತೆ ಸ್ಥಳದಲ್ಲಿ ಕೆಎಸ್‌‍ಆರ್‌ಪಿ ತುಕಡಿ ಸೇರಿದಂತೆ ಅಗತ್ಯ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
15
+ ಇದಕ್ಕೂ ಮುನ್ನ ಬೆಳಗ್ಗೆ ಮೈಸೂರಿಗೆ ತೆರಳಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಪಾದಯಾತ್ರೆ ಯಶಸ್ವಿಯಾಗಲಿದೆ ಎಂದು ಪ್ರಾರ್ಥಿಸಿದರು.
eesanje/url_46_56_1.txt ADDED
@@ -0,0 +1,6 @@
 
 
 
 
 
 
 
1
+ ಮರಕ್ಕೆ ಆಡಿ ಕಾರು ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳ ದುರ್ಮರಣ
2
+ ಕೋಲಾರ,ಆ.3-ಸ್ನೇಹಿತನ ಮನೆಗೆ ಹೋಗಿ ವಾಪಸ್‌‍ ಕಾರಿನಲ್ಲಿ ಹಿಂದಿರುಗುತ್ತಿದ್ದಾಗ ಅತಿ ವೇಗದಿಂದಾಗಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ ಗ್ರಾಮಾಂತರ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
3
+ ರೇವಾ ಯೂನಿವರ್ಸಿಟಿ ಕಾಲೇಜಿನ ವಿದ್ಯಾರ್ಥಿಗಳಾದ ಹಾಸನ ಮೂಲದ ಹರ್ಷವರ್ಧನ್‌, ಬಳ್ಳಾರಿಯ ಬಸವರಾಜ್‌ ಹಾಗೂ ಬಂಗಾರಪೇಟೆಯ ನಿಚ್ಚಲ್‌ ಮೃತಪಟ್ಟ ವಿದ್ಯಾರ್ಥಿಗಳು.ಕಾರಿನಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿ ಸಾಯಿಗಗನ್‌ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾನೆ.
4
+ ಬಂಗಾರಪೇಟೆಯಲ್ಲಿರುವ ಸಾಯಿಗಗನ್‌ ಮನೆಗೆ ಈ ಮೂವರೂ ವಿದ್ಯಾರ್ಥಿಗಳು ಹೋಗಿದ್ದರು. ರಾತ್ರಿ ಅವರ ಮನೆಯಲ್ಲೇ ಉಳಿದುಕೊಂಡು ಬೆಳಗಿನ ಜಾವ ವಾಪಾಸ್‌‍ ಆಡಿ ಕಾರಿನಲ್ಲಿ ನಾಲ್ವರು ಬೆಂಗಳೂರಿಗೆ ಹಿಂದಿರುಗುತ್ತಿದ್ದರು.
5
+ ಕೋಲಾರ ಹೊರವಲಯದ ಬಂಗಾರಪೇಟೆ ಮುಖ್ಯರಸ್ತೆಯ ಸಹಕಾರ ನಗರ ಬಳಿ ಬರುತ್ತಿದ್ದಾಗ ಅತಿವೇಗದಿಂದಾಗಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.
6
+ ಅಪಘಾತದ ತೀವ್ರತೆಗೆ ಆಡಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಸುದ್ದಿ ತಿಳಿಯುತ್ತಿದ್ದಂತೆ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾರಿನಲ್ಲಿ ಸಿಕ್ಕಿಕೊಂಡಿದ್ದ ಮೂವರ ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮೃತಪಟ್ಟಿರುವ ವಿದ್ಯಾರ್ಥಿಗಳ ಪೋಷಕರಿಗೆ ವಿಷಯ ತಿಳಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
eesanje/url_46_56_10.txt ADDED
@@ -0,0 +1,9 @@
 
 
 
 
 
 
 
 
 
 
1
+ ರಾಜ್ಯಪಾಲರ ನೋಟೀಸ್ : ಸಿಎಂ ಸಿದ್ದರಾಮಯ್ಯನವರಿಗೆ ಹೈಕಮಾಂಡ್‌ ನೈತಿಕ ಬೆಂಬಲ
2
+ ಬೆಂಗಳೂರು,ಆ.2-ಮುಡಾ ಹಗರಣದಲ್ಲಿ ರಾಜ್ಯಪಾಲರು ಶೋಕಾಸ್‌‍ ನೋಟಿಸ್‌‍ ನೀಡಿರುವ ಹಿನ್ನಲೆಯಲ್ಲಿ ಹೈಕಮಾಂಡ್‌ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರೆ ಮಾಡಿದ್ದು ನೈತಿಕ ಬೆಂಬಲ ವ್ಯಕ್ತಪಡಿಸಿದ್ದಾರೆ.
3
+ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಹೈಕಮಾಂಡ್‌ನ ಪ್ರಭಾವಿ ನಾಯಕ ಕೆ.ಸಿ.ವೇಣುಗೋಪಾಲ್‌, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರೆ ಮಾಡಿದ್ದು, ನಾವು ನಿಮ ಜೊತೆ ಇದ್ದೇವೆ. ಬಿಜೆಪಿಯ ಷಡ್ಯಂತ್ರವನ್ನು ಸಮರ್ಥವಾಗಿ ಎದುರಿಸೋಣ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.
4
+ ಬಿಜೆಪಿ ಮತ್ತು ಜೆಡಿಎಸ್‌‍ ಪಕ್ಷಗಳು ಪಾದಯಾತ್ರೆ ನಡೆಸುತ್ತಿರುವ ಕುರಿತಂತೆ ಪ್ರಸ್ತಾಪಿಸಿದ ಕೆ.ಸಿ.ವೇಣುಗೋಪಾಲ್‌ ಅದಕ್ಕೆ ಪ್ರತಿಯಾಗಿ ಕಾಂಗ್ರೆಸ್‌‍ ಪಕ್ಷ ನಡೆಸುವ ಹೋರಾಟದಲ್ಲಿ ತಾವು ರಾಜ್ಯಕ್ಕೆ ಬಂದು ಭಾಗವಹಿಸುವುದಾಗಿ ತಿಳಿಸಿದ್ದಾರೆ.
5
+ ನಿನ್ನೆ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯಗಳ ಬಗ್ಗೆಯೂ ಮಾಹಿತಿ ಪಡೆದುಕೊಂಡಿರುವ ಹೈಕಮಾಂಡ್‌ ಯಾವುದೇ ಸಂದರ್ಭವಾದರೂ ನಾವು ನಿಮ ಜೊತೆ ನಿಲ್ಲುತ್ತೇವೆ ಎಂದಿದ್ದಾರೆಂದು ಹೇಳಲಾಗಿದೆ.
6
+ ಇದು ಸಿದ್ದರಾಮಯ್ಯ ಅವರ ಆತವಿಶ್ವಾಸವನ್ನು ಹೆಚ್ಚಿಸಿದ್ದು, ಬಿಜೆಪಿ, ಜೆಡಿಎಸ್‌‍ನ ಪಾದಯಾತ್ರೆ ರಾಜ್ಯಪಾಲರಿಂದ ಅಭಿಯೋಜನೆಗೆ ಪೂರ್ವಭಾವಿ ಅನುಮತಿಯ ಸಾಧ್ಯತೆ ಸೇರಿದಂತೆ ಹಲವು ಒತ್ತಡಗಳಿಂದ ಮುಜುಗರಕ್ಕೊಳಗಾಗಿದ್ದ ಸಿದ್ದರಾಮಯ್ಯನವರಿಗೆ ಹೈಕಮಾಂಡ್‌ನ ಭರವಸೆ ಆತವಿಶ್ವಾಸ ಹೆಚ್ಚಿಸಿದೆ ಎಂದು ಹೇಳಲಾಗಿದೆ.
7
+ ನಿನ್ನೆ ನಡೆದ ಸಚಿವರ ಉಪಹಾರಕೂಟ ಹಾಗೂ ಅನಂತರ ನಡೆದ ಸಂಪುಟ ಸಭೆ ನಿರ್ಣಯಗಳು ಸಿದ್ದರಾಮಯ್ಯ ಅವರಲ್ಲಿ ಸಚಿವರು ವಿಶ್ವಾಸ ಇಟ್ಟಿರುವುದನ್ನು ಸಾಬೀತುಪಡಿಸಿದವು.
8
+ ದೆಹಲಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌‍ನ ಸಂಸದರು ಮೂಡಾ ನಿವೇಶನ ಹಂಚಿಕೆ ಹಾಗೂ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಪ್ರಸ್ತಾಪಿಸಿ ಸಂಸತ್‌ ಮುಂದೆ ಪ್ರತಿಭಟನೆ ನಡೆಸಿದ್ದಲ್ಲದೆ ರಾಜ್ಯಸಭೆ, ಲೋಕಸಭೆಯ ಒಳಗೂ ಪ್ರಸ್ತಾಪ ಮಾಡಿದ್ದರು.
9
+ ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ದೆಹಲಿಗೆ ಕರೆಸಿಕೊಂಡ ಹೈಕಮಾಂಡ್‌ನ ನಾಯಕರು ಪ್ರಕರಣಗಳ ಬಗ್ಗೆ ಸುಧೀರ್ಘ ವಿವರಣೆ ಪಡೆದುಕೊಂಡಿದ್ದರು.ಈಗ ಮತ್ತೂ ಒಂದು ಹೆಜ್ಜೆ ಮುಂದೆ ಹೋಗಿ ಸಂಪುಟ ಸಭೆಯ ನಿರ್ಣಯದ ಬಳಿಕ ಸಿದ್ಧರಾಮಯ್ಯ ಅವರಿಗೆ ಬೆಂಬಲ ಘೋಷಣೆ ಮಾಡಿರುವುದು ನಾಯಕತ್ವವನ್ನು ಗಟ್ಟಿಗೊಳಿಸಿದಂತಾಗಿದೆ. ರಾಜ್ಯಪಾಲರ ನಡವಳಿಕೆ ಹಾಗೂ ಬಿಜೆಪಿ-ಜೆಡಿಎಸ್‌‍ನ ಷಡ್ಯಂತರಗಳಿಗೆ ಕಾಂಗ್ರೆಸ್‌‍ ಪ್ರತ್ಯುತ್ತರಿಸಲಿದೆ ಎಂದು ಮೂಲಗಳು ತಿಳಿಸಿವೆ.
eesanje/url_46_56_11.txt ADDED
@@ -0,0 +1,9 @@
 
 
 
 
 
 
 
 
 
 
1
+ ಶೇ.91ರಷ್ಟು ಭರ್ತಿಯಾದ ಲಿಂಗನಮಕ್ಕಿ ಜಲಾಶಯ
2
+ ಬೆಂಗಳೂರು, ಆ.2-ರಾಜ್ಯದಲ್ಲಿ ನಿರಂತರವಾಗಿ ಬೀಳುತ್ತಿರುವ ಮಳೆಯಿಂದಾಗಿ ಜಲ ವಿದ್ಯುತ್‌ ಉತ್ಪಾದಿಸುವ ಪ್ರಮುಖ ಜಲಾಶಯವಾದ ಲಿಂಗನಮಕ್ಕಿಯಲ್ಲಿ ಶೇ.91ರಷ್ಟು ನೀರು ಸಂಗ್ರಹವಾಗಿದ್ದು, ಶೀಘ್ರದಲ್ಲೇ ಗರಿಷ್ಠ ಪ್ರಮಾಣದಲ್ಲಿ ಭರ್ತಿಯಾಗುವ ಸಾಧ್ಯತೆಗಳಿವೆ.
3
+ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ 151.75 ಟಿಎಂಸಿ ಅಡಿ ಗರಿಷ್ಠ ಸಾಮರ್ಥ್ಯದ ಈ ಜಲಾಶಯದಲ್ಲಿ ಇಂದು 138.42 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ. ಭರ್ತಿಯಾಗಲು ಇನ್ನು 11 ಟಿಎಂಸಿ ನೀರು ಬೇಕಾಗಿದೆ. ಜಲಾಶಯದ ಒಳ ಹರಿವು 51,961 ಕ್ಯುಸೆಕ್ಸ್ ಇದ್ದು, ಹೊರ ಹರಿವು 3570 ಕ್ಯುಸೆಕ್ಸ್ ಇದೆ.
4
+ ಕಳೆದ ವರ್ಷ ಇದೇ ಅವಧಿಯಲ್ಲಿ 69.77 ಟಿಎಂಸಿ ಮಾತ್ರ ನೀರಿತ್ತು. ರಾಜ್ಯದಲ್ಲೇ ಅತಿ ಹೆಚ್ಚು ನೀರು ಸಂಗ್ರಹ ಸಾಮರ್ಥ್ಯವಿರುವ ಜಲಾಶಯವಿದು. ಸೂಪಾ ಜಲಾಶಯದಲ್ಲೂ ಶೇ.77ರಷ್ಟು ನೀರು ಸಂಗ್ರಹವಾಗಿದೆ. 44613 ಕ್ಯುಸೆಕ್ಸ್ ಒಳಹರಿವಿದೆ. ಗರಿಷ್ಠ 145.33 ಟಿಎಂಸಿ ಸಾಮರ್ಥ್ಯದ ಈ ಜಲಾಶಯದಲ್ಲಿ 111.61 ಟಿಎಂಸಿ ನೀರಿದೆ.
5
+ ಹಾಗೆಯೇ ವಾರಾಹಿ ಜಲಾಶಯದ ಗರಿಷ್ಠ ಸಾಮರ್ಥ್ಯ 31.10 ಟಿಎಂಸಿ ಆಗಿದ್ದು, 18.83 ಟಿಎಂಸಿಯಷ್ಟು ನೀರಿದೆ. ಒಳ ಹರಿವು 5202 ಕ್ಯುಸೆಕ್ಸ್ ನಷ್ಟಿದೆ. ಈ ಎರಡು ಜಲಾಶಯಗಳಿಗೆ ಸಾಕಷ್ಟು ಒಳಹರಿವು ಇಲ್ಲದಿರುವುದರಿಂದ ಸದ್ಯಕ್ಕೆ ಭರ್ತಿಯಾಗುವ ಸಾಧ್ಯತೆ ವಿರಳ. ಈ ಮೂರು ಜಲಾಶಯಗಳಲ್ಲಿ ಶೇ.82ರಷ್ಟು ನೀರು ಸಂಗ್ರಹವಾಗಿದೆ. ಸಾಕಷ್ಟು ಒಳಹರಿವು ಇದ್ದು, ಜಲಾನಯನ ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಈ ಬಾರಿ ಜಲ ವಿದ್ಯುತ್‌ ಉತ್ಪಾದನೆಗೆ ಅನುಕೂಲವಾಗಲಿದೆ. ಅಂದರೆ, ಕಳೆದ ವರ್ಷಕ್ಕಿಂತ ಈ ಬಾರಿ ದುಪ್ಪಟ್ಟು ನೀರು ಈ ಜಲಾಶಯಗಳಲ್ಲಿದೆ.
6
+ ಸಂಘರ್ಷಕ್ಕೆ ತೆರೆ:ಕಾವೇರಿ ಕೊಳ್ಳದ ಜಲಾನಯನ ಭಾಗದ ಹಾರಂಗಿ, ಹೇಮಾವತಿ ಹಾಗೂ ಕಬಿನಿ ಜಲಾಶಯಗಳು ಭರ್ತಿಯಾಗಿದ್ದು, ಈ ನಾಲ್ಕು ಜಲಾಶಯಗಳಿಗೆ 1,55,696 ಕ್ಯುಸೆಕ್ಸ್ ಒಳಹರಿವು ಇದೆ. 1,51,110 ಕ್ಯುಸೆಕ್ಸ್ ಹೊರ ಹರಿವು ಇದೆ. ಕಾವೇರಿ ಜಲಾನಯನ ಭಾಗದಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಒಳ ಹರಿವು ಸಹ ಇಳಿಕೆಯಾಗುತ್ತಿದೆ.
7
+ ಈಗಾಗಲೇ 100ಕ್ಕೂ ಹೆಚ್ಚು ಟಿಎಂಸಿ ನೀರು ತಮಿಳುನಾಡಿಗೆ ಹರಿದು ಹೋಗಿದೆ. ಮೆಟ್ಟೂರು ಜಲಾಶಯವೂ ಭರ್ತಿಯಾಗಿದೆ. ಹೀಗಾಗಿ ಈ ಬಾರಿ ಕರ್ನಾಟಕ ಮತ್ತು ತಮಿಳುನಾಡು ನಡುವಿನ ನೀರು ಹಂಚಿಕೆ ಸಂಘರ್ಷಕ್ಕೆ ತೆರೆ ಬಿದ್ದಂತಾಗಿದೆ.
8
+ ಕೃಷ್ಣಾ ಕೊಳ್ಳದ ಮಲಪ್ರಭಾ ಜಲಾಶಯದಲ್ಲಿ ಶೇ.87ರಷ್ಟು ನೀರು ಸಂಗ್ರಹವಾಗಿದೆ. 19 ಸಾವಿರ ಕ್ಯುಸೆಕ್ಸ್ ಅಧಿಕ ಪ್ರಮಾಣದ ಒಳಹರಿವಿದೆ. ಈ ಜಲಾಶಯ ಹೊರತುಪಡಿಸಿ ಉಳಿದೆಲ್ಲಾ ಜಲಾಶಯಗಳು ಭರ್ತಿಯಾಗಿವೆ. ಕೃಷ್ಣಾ ಕೊಳ್ಳದ ಜಲಾಶಯಗಳಿಗೆ ಅಂದರೆ, ಭದ್ರಾ, ತುಂಗಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ, ನಾರಾಯಣಪುರ ಜಲಾಶಯಗಳಿಗೆ ಒಟ್ಟಾರೆ 5,24,181 ಕ್ಯುಸೆಕ್ಸ್ ನಷ್ಟು ಒಳಹರಿವಿದೆ. ಈ ಜಲಾಶಯಗಳಿಂದ 5,11,128 ಕ್ಯುಸೆಕ್ಸ್ ನಷ್ಟು ಹೊರ ಹರಿವಿದ��.
9
+ ರಾಜ್ಯದ14 ಪ್ರಮುಖ ಜಲಾಶಯಗಳಲ್ಲಿ 895.62 ಟಿಎಂಸಿಯಷ್ಟು ಗರಿಷ್ಠ ಸಂಗ್ರಹ ಸಾಮರ್ಥ್ಯವಿದೆ. ಪ್ರಸ್ತುತ 731.64 ಟಿಎಂಸಿನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 599.77 ಟಿಎಂಸಿಯಷ್ಟು ಸಂಗ್ರಹವಾಗಿತ್ತು. ರಾಜ್ಯದಲ್ಲಿ ಅತಿವೃಷ್ಟಿ ಪ್ರವಾಹ ಉಂಟಾಗುತ್ತಿದ್ದರೂ ವಾಣಿವಿಲಾಸ ಸಾಗರ ಜಲಾಶಯಕ್ಕೆ ಸಾಕಷ್ಟು ನೀರು ಬರುತ್ತಿಲ್ಲ. 728 ಕ್ಯುಸೆಕ್ಸ್ ಮಾತ್ರ ಒಳಹರಿವು ಇದೆ. 30.42 ಟಿಎಂಸಿ ಗರಿಷ್ಠ ಸಾಮರ್ಥ್ಯದ ಈ ಜಲಾಶಯದಲ್ಲಿ 18.57 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 24.70 ಟಿಎಂಸಿ ನೀರು ಸಂಗ್ರಹವಾಗಿತ್ತು.
eesanje/url_46_56_12.txt ADDED
@@ -0,0 +1,6 @@
 
 
 
 
 
 
 
1
+ ಮತ್ತೆ ಈರುಳ್ಳಿ ಬೆಲೆ ಏರಿಕೆ
2
+ ಬೆಂಗಳೂರು, ಜು.2-ಯಾವುದೇ ಅಡುಗೆ -ತಿಂಡಿ ಮಾಡಬೇಕಾದರೆ ಈರುಳ್ಳಿ ಇದ್ದರೆ ಚಂದ. ಇಲ್ಲ ಅಂದ್ರೆ ನಾಲಿಗೆಗೆ ರುಚಿ ತಟ್ಟುವುದಿಲ್ಲ. ಉತ್ತರ ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಮಳೆಯಾಗುತ್ತಿರುವುದರಿಂದ ಬೆಳೆ ನಾಶವಾಗಿದ್ದು, ಬೆಲೆ ಏರಿಕೆಯಾಗಿದೆ.
3
+ ಸಾಮಾನ್ಯವಾಗಿ ತರಕಾರಿ ಹಾಗೂ ದಿನಸಿಗಳನ್ನು ಸಾಮಾನ್ಯ ಜನರು ಗ್ರಾಂ.ಗಳಲ್ಲಿ ಖರೀದಿಸುತ್ತಾರೆ. ಆದರೆ, ಈರುಳ್ಳಿಯನ್ನು ಮಾತ್ರ ಕೆಜಿ ಲೆಕ್ಕದಲ್ಲಿ ಕೊಂಡೊಯ್ಯುತ್ತಾರೆ. ಮೊದಲೆಲ್ಲ ಕೆಜಿ ಲೆಕ್ಕದಲ್ಲಿ ಮಾರಾಟವಾಗುತ್ತಿದ್ದ ಈರುಳ್ಳಿ ಈಗ 100 ರೂ.ಗೆ 2 ಕೆಜಿ, 3 ಕೆಜಿ ಅಂತ ಮಾರಾಟ ಮಾಡಲಾಗುತ್ತಿದೆ.
4
+ ಹೆಚ್ಚಾಗಿ ಈರುಳ್ಳಿ ಬೆಳೆಯುವ ಉತ್ತರ ಕರ್ನಾಟಕ, ಮಹಾರಾಷ್ಟ್ರದಲ್ಲಿ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿದ್ದು, ಜಮೀನುಗಳೆಲ್ಲ ಜಲಾವೃತಗೊಂಡಿವೆ. ಜತೆಗೆ ದಾಸ್ತಾನು ಮಾಡಲಾಗಿದ್ದ ಮಾಲು ಕೂಡ ತೇವಾಂಶ ಹೆಚ್ಚಾಗಿ ಕೊಳೆಯುತ್ತಿದ್ದು , ಮಾರುಕಟ್ಟೆಗೆ ನಿರೀಕ್ಷಿತ ಪ್ರಮಾಣದಲ್ಲಿ ಈರುಳ್ಳಿ ಬರುತ್ತಿಲ್ಲ. ಹಾಗಾಗಿ ಗುಣಮಟ್ಟದ ಈರುಳ್ಳಿ ಮಾರುಕಟ್ಟೆಯಲ್ಲಿ ಕೆಜಿಗೆ 50 ರೂ.ಗೆ ಮರಾಟವಾಗುತ್ತದೆ.
5
+ ಕಳೆದ ಕೆಲ ದಿನಗಳ ಹಿಂದೆ 100 ರೂ.ಗೆ 5 ಕೆಜಿ ಮಾರಾಟವಾಗುತ್ತಿದ್ದ ಈರುಳ್ಳಿ ಈಗ 100ರೂ.ಗೆ 2 ಕೆಜಿಗೆ ಮಾರಾಟ ಮಾಡಲಾಗುತ್ತಿದೆ. ಮೊದಲೆಲ್ಲ ಕೆಜಿ ಲೆಕ್ಕದಲ್ಲಿ ಮಾರಾಟ ಹೆಚ್ಚಾಗಿ ನಡೆಯುತ್ತಿತ್ತು. ಇತ್ತೀಚೆಗೆ 100ರೂ.ಗೆ 2 ಕೆಜಿ, ಮೂರು ಕೆಜಿ ಅಂತ ಮಾರಾಟ ಮಾಡಲಾಗುತ್ತಿದೆ.
6
+ ಸದ್ಯಕ್ಕೆ ಬಿತ್ತನೆ ಮಾಡಿದ್ದ ಬೆಳೆ ಸಂಪೂರ್ಣವಾಗಿ ನಾಶವಾಗಿದ್ದು, ಮಳೆ ಬಿಡುವು ಕೊಟ್ಟರೆ ಮಾತ್ರ ಹೊಸ ಬೆಳೆ ಮಾರುಕಟ್ಟೆಗೆ ಬರಲಿದೆ. ಅಲ್ಲಿಯವರೆಗೂ ಸದಸ್ಯಕ್ಕೆ ಬೆಳೆ ಇಳಿಯುವ ಸಾಧ್ಯತೆ ಇಲ್ಲ. ಇನ್ನೂ ಹೆಚ್ಚಾಗುವ ಲಕ್ಷಣಗಳು ಕಾಣುತ್ತಿವೆ.ಈ ಹಿನ್ನೆಲೆಯಲ್ಲಿ ಚಿಲ್ಲರೆ ಮಾರಾಟಗಾರರು ಮೂಟೆಗಟ್ಟಲೆ ಈ ರುಳ್ಳಿಯನ್ನು ದಾಸ್ತಾನು ಮಾಡಿಕೊಳ್ಳುತ್ತಿದ್ದಾರೆ.
eesanje/url_46_56_2.txt ADDED
@@ -0,0 +1,5 @@
 
 
 
 
 
 
1
+ ಚಂದ್ರಶೇಖರ್‌ ಗುರೂಜಿ ಹತ್ಯೆ ಆರೋಪಿ ಜಾಮೀನು ಅರ್ಜಿ ವಜಾ
2
+ ಹುಬ್ಬಳ್ಳಿ,ಆ.3– ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಆರೋಪಿಗೆ ಜಾಮೀನು ನೀಡಲು ಧಾರವಾಡ ಹೈಕೋರ್ಟ್‌ ನಿರಾಕರಿಸಿದೆ.
3
+ ನ್ಯಾಯಮೂರ್ತಿ ಎಸ್‌‍.ರಾಚಯ್ಯ ಅವರಿದ್ದ ಏಕ ಸದಸ್ಯ ಪೀಠ ದುಮವಾಡ ಗ್ರಾಮದ ನಿವಾಸಿ ಆರೋಪಿ ಮಹಾಂತೇಶ ಶಿರೂರ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಇದೊಂದು ಪೂರ್ವ ನಿಯೋಜಿತ ಕೊಲೆಯಾಗಿದ್ದು, ಸಮಾಜದಲ್ಲಿ ಆತಂಕ ಸೃಷ್ಠಿಸಿದೆ.
4
+ ಅಷ್ಟೇ ಅಲ್ಲ ಗುರೂಜಿ ಕುಟುಂಬ ಸೇರಿದಂತೆ ಸಾಕ್ಷಿಗಳಿಗೆ ತೊಂದರೆಯಾಗುವ ಸಾದ್ಯತೆ ಇದೆ ಎಂದು ಕಾರಣ ನೀಡಿ ಜಾಮೀನು ತಿರಸ್ಕರಿಸಿದೆ.
5
+ 5, 2022 ರಂದು ಹುಬ್ಬಳ್ಳಿಯ ಉಣಕಲ್‌ ಸಮೀಪದ ಪ್ರೆಸಿಡೆಂಟ್‌ ಹೊಟೇಲ್‌ನಲ್ಲಿ ಮಹಾಂತೇಶ ಮತ್ತು ಆತನ ಸಹಚರ ಚೂರಿಯಿಂದ 50ಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಿದ್ದರು.ಆರೋಪಿಗಳು ಸದ್ಯಕ್ಕೆ ಧಾರವಾಡ ಕೇಂದ್ರ ಕಾರಾಗೃಹದಲ್ಲಿದ್ದು. ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು.
eesanje/url_46_56_3.txt ADDED
@@ -0,0 +1,7 @@
 
 
 
 
 
 
 
 
1
+ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ನಿರ್ದೇಶಕರಾದ ಎಂ.ಆರ್‌.ಮಮತಾ ನಿಧನ
2
+ ಬೆಂಗಳೂರು :ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಎಂ.ಆರ್‌. ಮಮತಾ (47) ಅವರು ನಿನ್ನೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
3
+ ಪ್ರಸ್ತುತ ತುಮಕೂರು ಜಿಲ್ಲಾ ವಾರ್ತಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಪತಿ ಹಿರಿಯ ಪತ್ರಕರ್ತ ಎಚ್‌.ಆರ್‌.ರವೀಶ್‌, ಮಗ ಪ್ರಜ್ವಲ್‌ ಹಾಗೂ ಅಪಾರ ಬಂಧುಗಳನ್ನು ಮಮತಾ ಅವರು ಅಗಲಿದ್ದಾರೆ.
4
+ ಬೆಂಗಳೂರಿನ ಅವರ ಮನೆಯಲ್ಲಿ ಇಂದು ಬೆಳಿಗ್ಗೆ 9 ಗಂಟೆಯವರೆಗೂ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ನಂತರ ಅವರ ಅಂತ್ಯಕ್ರಿಯೆಯನ್ನು ತುಮಕೂರು ತಾಲ್ಲೂಕು ಆಲನೂರು ಗ್ರಾಮದ ಅವರ ತೋಟದಲ್ಲಿ ಮಧ್ಯಾಹ್ನ ನೆರವೇರಿಸಲಾಯಿತು.
5
+ ಮಮತಾ ಅವರು 1999ರಲ್ಲಿ ಈ ಸಂಜೆ ಪತ್ರಿಕೆಯಲ್ಲಿ ಉಪಸಂಪಾದಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಮಮತಾ ಅವರ ನಿಧನಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರು, ಅಧಿಕಾರಿಗಳು, ಸಿಬ್ಬಂದಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬೆಂಗಳೂರು ಪ್ರೆಸ್‌‍ಕ್ಲಬ್‌, ಪತ್ರಕರ್ತರ ಸಹಕಾರ ಸಂಘ, ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್‌, ತುಮಕೂರು ಜಿಲ್ಲಾ ಪಂಚಾಯತ್‌ ಸಿಇಒ ಪ್ರಭು, ಎಸ್‌‍ಪಿ ಕೆ.ವಿ.ಅಶೋಕ್‌ ಸೇರಿದಂತೆ ವಿವಿಧ ಸಂಘಟನೆಗಳು ತೀವ್ರ ಸಂತಾಪ ವ್ಯಕ್ತಪಡಿಸಿವೆ.
6
+
7
+ ಕ್ರಿಯಾಶೀಲ ಅಧಿಕಾರಿಯಾಗಿದ್ದ ಮಮತಾ ಅವರ ಸಾವು ಅತ್ಯಂತ ನೋವಿನ ಸಂಗತಿಯಾಗಿದೆ. ಅವರ ಆತಕ್ಕೆ ಶಾಂತಿ ಸಿಗಲಿ. ಮೃತರ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪತ್ರಿಕಾ ಸಂಘಟನೆಗಳ ಮುಖಂಡರು ಪ್ರಾರ್ಥಿಸಿದ್ದಾರೆ.
eesanje/url_46_56_4.txt ADDED
@@ -0,0 +1,6 @@
 
 
 
 
 
 
 
1
+ 822 ಮೆಟ್ರಿಕ್ ಟನ್ ಮಾವಿನ ಹಣ್ಣು ರಫ್ತು ಮಾಡಿ ದಾಖಲೆ ನಿರ್ಮಿಸಿದ ಬೆಂಗಳೂರು ಏರ್ಪೋರ್ಟ್
2
+ ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು (/ ವಿಮಾನ ನಿಲ್ದಾಣ) ಮಾವು ರಫ್ತಿನಲ್ಲಿ ಗಮನಾರ್ಹ ಸಾಧನೆ ಮಾಡಿದೆ. 2024ನೇ ಸಾಲಿನಲ್ಲಿ 822 ಮೆಟ್ರಿಕ್ ಟನ್‌ () ಮಾವಿನ ಹಣ್ಣಿನ ಸಾಗಾಟಣೆ ಮಾಡುವ ಮೂಲಕ ಈ ಬಾರಿ ಶೇ. 20 ರಷ್ಟು ಬೆಳವಣಿಗೆ ಕಂಡಿದೆ.
3
+ ಕಳೆದ ವರ್ಷದಲ್ಲಿ 685 ಎಟ್ರಿಕ್‌ ಟನ್‌ ಮಾವಿನಹಣ್ಣನ್ನು ರಫ್ತು ಮಾಡಲಾಗಿತ್ತು. ಈ ಬಾರಿ ಒಟ್ಟು 27 ಲಕ್ಷ ಮಾವಿನ ಹಣ್ಣನ್ನು ರಫ್ತು ಮಾಡುವ ಮೂಲಕ ಹಿಂದಿನ ಋತುವಿಗೆ ಹೋಲಿಸಿದರೆ ಶೇ.59ರಷ್ಟು ಹೆಚ್ಚಳ ಕಂಡಿದೆ, ಸಾಗರೋತ್ತರ ಮಾರುಕಟ್ಟೆಗಳಲ್ಲಿ ಭಾರತೀಯ ಮಾವಿನಹಣ್ಣಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಪೆರಿಷಬಲ್‌ ಸರಕುಗಳನ್ನು ರಫ್ತು ಮಾಡುವಲ್ಲಿ ವಿಮಾನ ನಿಲ್ದಾಣದ ಕಾರ್ಯಾಚರಣೆಯ ಬದ್ಧತೆಯಿಂದ ರಫ್ತು ಪ್ರಮಾಣದಲ್ಲೂ ಏರಿಕೆ ಕಾಣುತ್ತಿದೆ.
4
+ ಈ ಋತುವಿನಲ್ಲಿ, ಯುಎಸ್‌ ಗೆ ಹೆಚ್ಚು ಮಾವಿನ ಹಣ್ಣುಗಳನ್ನು ರಫ್ತು ಮಾಡಲಾಗಿದೆ. ಪ್ರಮುಖವಾಗಿ, ವಾಷಿಂಗ್ಟನ್ ಡಲ್ಲೆಸ್ (ಐಎಡಿ), ಡಲ್ಲಾಸ್-ಫೋರ್ಟ್ ವರ್ತ್ (ಡಿಎಫ್‌ಡಬ್ಲ್ಯೂ), ಮತ್ತು ಸ್ಯಾನ್ ಫ್ರಾನ್ಸಿಸ್ಕೊ (ಎಸ್‌ಎಫ್‌ಒ) ನಂತಹ ವಿಮಾನ ನಿಲ್ದಾಣಗಳು ಭಾರತೀಯ ಮಾವು ಸಾಗಣೆಗೆ ಪ್ರಮುಖ ತಾಣವಾಗಿ ಹೊರಹೊಮ್ಮಿವೆ. ಇದರ ಜೊತೆಗೆ, ಚಿಕಾಗೋ (ಒಆರ್‌ಡಿ), ಸಿಯಾಟಲ್ (ಸಿಇಎ), ದುಬೈ (ಡಿಎಕ್ಸ್‌ಬಿ), ಲಂಡನ್ (ಎಲ್‌ಎಚ್‌ಆರ್‌), ಮತ್ತು ಹೂಸ್ಟನ್ (ಐಎಎಚ್‌) ನಂತಹ ಪ್ರಮುಖ ವಿಮಾನ ನಿಲ್ದಾಣಗಳು ಸೇರಿದಂತೆ 60 ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಸ್ಥಳಗಳಿಗೆ ರಫ್ತು ಮಾಡಲಾಗಿದೆ. ಈ ಮೂಲಕ ವಿಮಾನ ನಿಲ್ದಾಣವು ಭಾರತೀಯರ ಬೆಳೆಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದು, ಕೃಷಿ ಉತ್ಪನ್ನಗಳು ಜಾಗತಿಕ ಮಾರುಕಟ್ಟೆಗಳನ್ನು ತಲುಪಲು ಸಮರ್ಥವಾಗಿದೆ ಎಂಬುದನ್ನು ಸಾಬೀತು ಪಡಿಸಿದೆ.
5
+ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (ಬಿಐಎಎಲ್) ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಕಿ ರಘುನಾಥ್ ಮಾತನಾಡಿ, “ಬಿಎಲ್‌ಆರ್ ಏರ್‌ಪೋರ್ಟ್‌, ತಾಂತ್ರಿ ವಾಗಿ ಸುಧಾರಿತ ಕೋಲ್ಡ್ ಸ್ಟೋರೇಜ್ ಸೌಲಭ್ಯವಾದ ಡಬ್ಲ್ಯುಎಫ್‌ಎಸ್ ಬಿಎಲ್‌ಆರ್ ಕೂಲ್‌ಪೋರ್ಟ್ ಪೂರೈಕೆಯು ಪೆರಿಷೆಬಲ್‌ ಉತ್ಪನ್ನಗಳ ಗುಣಮಟ್ಟವನ್ನು ಕಾಪಾಡುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿವೆ. ಮಾವಿನ ರಫ್ತುಗಳನ್ನು ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಹೆಚ್ಚಿಸುವ ಈ ಸಾಧನೆಯು ಭಾರತೀಯ ಮಾವಿನಹಣ್ಣಿಗೆ, ವಿಶೇಷವಾಗಿ ಎರಡು ಪ್ರಮುಖ ಅಂತಾರಾಷ್ಟ್ರೀಯ ತಾಣಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುವ ಪ್ರಧಾನ ಗೇಟ್‌ವೇ ಆಗಿ ನಮ್ಮ ಸ್ಥಾನವನ್ನು ಬಲಪಡಿಸಿಕೊಂಡಿದ್ದೇವೆ ಎಂದರು.
6
+ ವ್ಯವಸ್ಥಾಪನಾ ಸಾಮರ್ಥ್ಯ, ಕಾರ್ಯತಂತ್ರದ ಪಾಲುದಾರಿಕೆ ಮತ್ತು ಕೃಷಿ ಕ್ಷೇತ್ರದ ಬೆಂಬಲದಿಂದ ವಿಮಾನ ನಿಲ್ದಾಣವು ಉತ್ತಮ ಗುಣಮಟ್ಟದ ತಾಜಾ ಉತ್ಪನ್ನ���ಳ ರಫ್ತಿನಲ್ಲಿ ತನ್ನ ಸ್ಥಾನವನ್ನು ಬಲಪಡಿಸಿಕೊಂಡಿದೆ. ಆರ್ಥಿಕ ಬೆಳವಣಿಗೆಯಲ್ಲೂ ತನ್ನ ಪಾತ್ರವನ್ನು ಮುಂದುವರೆಸಿಕೊಂಡು ಸಾಗಿದೆ.
eesanje/url_46_56_5.txt ADDED
@@ -0,0 +1,9 @@
 
 
 
 
 
 
 
 
 
 
1
+ ಪಾದಯಾತ್ರೆ ಮೂಲಕ ಬಲ ಪ್ರದರ್ಶನಕ್ಕೆ ಬಿಜೆಪಿ-ಜೆಡಿಎಸ್‌‍ ಸಜ್ಜು
2
+ ಬೆಂಗಳೂರು,ಆ.2-ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(ಮುಡಾ)ದಲ್ಲಿ ನಿಯಮ ಬಾಹಿರವಾಗಿ ನಿವೇಶನ ಪಡೆದ ಆರೋಪದ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್‌‍ ಜಂಟಿಯಾಗಿ ನಡೆಸಲು ಉದ್ದೇಶಿಸಿರುವ ಪಾದಯಾತ್ರೆ ನಾಳೆಯಿಂದ ಆರಂಭವಾಗಲಿದೆ.ನಾಳೆ ಬೆಳಗ್ಗೆ 8 ಗಂಟೆಗೆ ಕೆಂಗೇರಿ ಸಮೀಪದ ಮೈಸೂರು ರಸ್ತೆಯ ಕೆಂಪಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಗುತ್ತದೆ.
3
+ ಒಟ್ಟು ಏಳು ದಿನಗಳ ಕಾಲ ಅಂದರೆ ಆ.8ರವರೆಗೆ ಮೈಸೂರುವರೆಗೆ ಪಾದಯಾತ್ರೆ ಸಾಗಲಿದ್ದು, ಆ.10ರಂದು ಸಮಾರೋಪ ಸಮಾರಂಭ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಜೆಡಿಎಸ್‌‍ ವರಿಷ್ಠ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.
4
+ ನಾಳೆ ಬೆಳಗ್ಗೆ ಪ್ರಾರಂಭವಾಗಲಿರುವ ಪಾದಯಾತ್ರೆಯಲ್ಲಿ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾಗಿರುವ ಬಿ.ಎಸ್‌‍.ಯಡಿಯೂರಪ್ಪ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜೆಡಿಎಸ್‌‍ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಪ್ರಮುಖರಾದ ಆರ್‌.ಅಶೋಕ್‌, ಸುರೇಶ್‌ ಬಾಬು, ಛಲವಾದಿ ನಾರಾಯಣಸ್ವಾಮಿ, ಸಾ.ರಾ.ಮಹೇಶ್‌, ಬಂಡೆಪ್ಪ ಕಾಶ್ಯಂಪುರ್, ಅಶ್ವಥ್‌ ನಾರಾಯಣ, ಡಿ.ವಿ.ಸದಾನಂದಗೌಡ ಸೇರಿದಂತೆ ಎರಡು ಪಕ್ಷಗಳ ಪ್ರಮುಖರು ಭಾಗಿಯಾಗಲಿದ್ದಾರೆ.
5
+ ಮೊದಲ ದಿನ 16 ಕಿ.ಮೀ ಪಾದಯಾತ್ರೆ ಜರುಗಿದರೆ, 2ನೇ ದಿನ 22 ಕಿ.ಮೀ, ಎರಡನೇ ದಿನ 22 ಕಿ.ಮೀ, ಮೂರನೇ ದಿನ 20, 4ನೇ ದಿನ 20, ಐದನೇ ದಿನ 16, ಆರನೇ ದಿನ 17 ಹಾಗೂ ಕೊನೆಯ ದಿನದ 7 ಕಿ.ಮೀ ಪಾದಯಾತ್ರೆ ಸಾಗುವುದೊಂದಿಗೆಎ ಸಮಾರೋಪ ಸಮಾರಂಭದೊಂದಿಗೆ ಮುಕ್ತಾಯವಾಗಲಿದೆ.
6
+ 8 ಗಂಟೆಗೆ ಪಾದಯಾತ್ರೆ ಪ್ರಾರಂಭವಾಗಿ ಬಿಡದಿಯಲ್ಲಿ ಮಧ್ಯಾಹ್ನ 1 ಗಂಟೆಗೆ ವೆಂಟೇಶ್ವರ ದೇವಸ್ಥಾನದಲ್ಲಿ ಭೋಜನ ಸ್ವೀಕರಿಸಿ ರಾತ್ರಿ 8 ಗಂಟೆಗೆ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಭಾನುವಾರ ಮಾಯಗಾನಹಳ್ಳಿಯಿಂದ ಯಾತ್ರೆ ಪ್ರಾರಂಭವಾಗಿ ರಾಮನಗರದ ಪದಾವತಿ ದೇವಸ್ಥಾನದಲ್ಲಿ ಭೋಜ ಸ್ವೀಕರಿಸಿ ನಂತರ ಸಂಜೆ 4.30ಕ್ಕೆ ಸಾರ್ವಜನಿಕ ಸಭೆ ನಡೆಯಲಿದೆ. ಕೆಂಗಲ್‌ನ ಕೆವಿಕೆ ಕನ್ವೆಷನ್‌ ಹಾಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
7
+ ಸೋಮವಾರ ನಿಡಘಟ್ಟದ ಸುಮಿತ್ರಾ ದೇವಿ ಕನ್ವೆಷನ್‌ ಹಾಲ್‌ನಿಂದ ಪ್ರಾರಂಭವಾಗಿ ಮಧ್ಯಾಹ್ನ ದೊಡ್ಡಮಾಳೂರಿನ ಶ್ರೀ ಚೌಡೇಶ್ವರಿ ಕನ್ವೆಷನ್‌ ಹಾಲ್‌ನಲ್ಲಿ ಭೋಜನ, ಭೈರಾಪಟ್ಟಣದಲ್ಲಿ ಸಂಜೆ ಕಾಫಿ ಹಾಗೂ ನಿಡುಘಟ್ಟದ ಸುಮಿತ್ರಾ ದೇವಿ ಕನ್ಷೆಷನ್‌ ಹಾಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
8
+ ಮಂಗಳವಾರ ಬೆಳಗ್ಗೆ 11 ಗಂಟೆಗೆ ಮದ್ದೂರಿನಲ್ಲಿ ಸಾರ್ವಜನಿಕ ಸಭೆ ನಡೆದರೆ ಮಧ್ಯಾಹ್ನ ಬಾಲಾಜಿ ಕನ್ವೆಷನ್‌ ಹಾಲ್‌ನಲ್ಲಿ ಭೋಜನ ಹಾಗೂ ಮಂಡ್ಯದ ಶಶಿಕಿರಣ ಕನ್ವೆಷನ್‌ ಹಾಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಬುಧವಾರ ಮಂಡ್ಯದಲ್ಲಿ ಬೆಳಗ್ಗೆ 11 ಗಂಟೆಗೆ ಸಾರ್ವಜನಿಕ ಸಭೆ, ಸುಮಾ ರವಿ ಕನ್ವೆಷನ್‌ ಹಾಲ್‌ನಲ್ಲಿ ಮಧ್ಯಾಹ್ನ ಭೋಜನ, ರಾತ್ರಿ 8 ಗಂಟೆಗೆ ತೂಬಿನಕೆರೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
9
+ ಗುರುವಾರ ಗೌಡಹಳ್ಳಿಯಿಂದ ಪ್ರಾರಂಭವಾಗಿ ಶ್ರೀರಂಗಪಟ್ಟಣದ ಮಂಜುನಾಥ ಕಲ್ಯಾಣ ಮಂಟಪದಲ್ಲಿ ವಾಸ್ತವ್ಯ, ಶುಕ್ರವಾರ ಶ್ರೀರಂಗಪಟ್ಟಣದಿಂದ ಮೈಸೂರಿಗೆ ಸಾಗಿ ಸಮಾರೋಪ ಸಮಾರಂಭ ಶನಿವಾರ ನಡೆಯಲಿದೆ.
eesanje/url_46_56_6.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಎಲ್ಲರ ಚಿತ್ತ ರಾಜಭವನದತ್ತ : ರಾಜಕೀಯ ಬೆಳವಣಿಗೆಗಳ ಬಗ್ಗೆ ಹೆಚ್ಚಿದ ಕುತೂಹಲ
2
+ ಬೆಂಗಳೂರು,ಆ.2-ಮುಡಾ ನಿವೇಶನ ಅಕ್ರಮ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಖಾಸಗಿ ದೂರಿನ ಕುರಿತು ರಾಜ್ಯಪಾಲ ಥಾವರ್‌ ಚಂದ್‌ ಗೆಲ್ಹೋಟ್‌ ಅವರು ತೆಗೆದುಕೊಳ್ಳುವ ನಿರ್ಧಾರದತ್ತ ಎಲ್ಲರ ಚಿತ್ತ ನೆಟ್ಟಿದೆ.
3
+ ಮುಖ್ಯಮಂತ್ರಿಗೆ ನೀಡಿರುವ ನೋಟೀಸ್‌‍ನ್ನು ಹಿಂಪಡೆಯಬೇಕೆಂದು ಸಚಿವ ಸಂಪು ಸಭೆಯಲ್ಲಿ ತೀರ್ಮಾನವನ್ನು ರಾಜ್ಯಪಾಲರು ಅಂಗೀಕರಿಸುತ್ತಾರೆಯೇ ಇಲ್ಲವೇ ತಿರಸ್ಕರಿಸುವರೇಂಬುದರ ಮೇಲೆ ಮುಂದಿನ ರಾಜಕೀಯ ಬೆಳವಣಿಗೆಗಳು ನಿಂತಿವೆ. ಸಾಮಾನ್ಯವಾಗಿ ರಾಜ್ಯಪಾಲರು ಸಚಿವ ಸಂಪುಟದ ತೀರ್ಮಾನವನ್ನು ಒಪ್ಪುವ ಸಾಧ್ಯತೆಗಳು ತೀರಾ ಕಡಿಮೆ.
4
+ ತಮಗಿರುವ ವಿಶೇಷ ಅಧಿಕಾರವನ್ನು ಬಳಸಿಕೊಂಡು ಮುಖ್ಯಮಂತ್ರಿ ವಿರುದ್ಧ ದೂರು ದಾಖಲಿಸಲು ಅನುಮತಿ ನೀಡಿರುವ ನಿದರ್ಶನಗಳು ಸಾಕಷ್ಟಿವೆ.ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಅನೇಕ ರಾಜ್ಯಗಳಿಗೆ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬಾರದೆಂದು ಸಚಿವ ಸಂಪುಟ ಸಭೆಒಂದು ಸಾಲಿನ ನಿರ್ಣಯವನ್ನು ಕೈಗೊಂಡಿದ್ದರೂ ರಾಜ್ಯಪಾಲರು ಅನುಮತಿ ನೀಡಿರುವ ಉದಾಹರಣೆಗಳು ಮುಂದಿವೆ.
5
+ ಇದೀಗ ನವದೆಹಲಿ ಪ್ರವಾಸದಲ್ಲಿರುವ ರಾಜ್ಯಪಾಲರು ಸೋಮವಾರ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದ್ದು, ಅವರು ತೆಗೆದುಕೊಳ್ಳುವ ಮುಂದಿನ ನಿರ್ಧಾರ ಸಾಕಷ್ಟು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.ಈ ಕ್ಷಣದವರೆಗೂ ರಾಜ್ಯಪಾಲರು ಮಾಧ್ಯಮಗಳ ಮುಂದೆ ಯಾವುದೇ ರೀತಿಯ ಬಹಿರಂಗ ಹೇಳಿಕೆಯನ್ನು ಕೊಡದೆ ಎಲ್ಲವನ್ನೂ ಕಾಪಾಡಿಕೊಂಡು ಬಂದಿದ್ದಾರೆ. ಸರ್ಕಾರ ಶೋಕಾಸ್‌‍ ನೋಟಿಸ್‌‍ಗೆ ನೀಡುವ ಉತ್ತರವನ್ನು ನೋಡಿಕೊಂಡು ಕಾನೂನು ತಜ್ಞರ ಅಭಿಪ್ರಾಯ ತೆಗೆದುಕೊಂಡೇ ಮುಂದಿನ ಹೆಜ್ಜೆ ಇಡಲಿದ್ದಾರೆ ಎಂದು ಗೊತ್ತಾಗಿದೆ.
6
+ ನ್ಯಾಯಾಲಯದ ತೀರ್ಪುಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಕಾನೂನು ತಜ್ಞರ ಸಲಹೆ ಮೇರೆಗೆ ಅವರು ತಮ ಮುಂದಿನ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
7
+ ಭಾರದ್ವಾಜ್‌ ಮಾದರಿ ಆಗುವರೇ?:ಈ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಅವರ ವಿರುದ್ಧ ಕಾನೂನುಬಾಹಿರ ಡಿನೋಟಿಫಿಕೇಷನ್‌ಗಳ ಆರೋಪಗಳು ಕೇಳಿಬಂದಿದ್ದಾಗ ಅಂದಿನ ರಾಜ್ಯಪಾಲರಾಗಿದ್ದ ಹಂಸರಾಜ್‌ ಭಾರದ್ವಾಜ್‌ ಅವರು ಸಂಪುಟದ ನಿರ್ಣಯವನ್ನೇ ಲೆಕ್ಕಿಸದೇ ವಿಚಾರಣೆಗೆ ಅನುಮತಿ ನೀಡಿದ್ದರು. 2004ರ ಸುಪ್ರೀಂಕೋರ್ಟ್‌ ತೀರ್ಪಿನ ಒಂದು ಅಂಶವನ್ನು ಕೋಟ್‌ ಮಾಡಿ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು.
8
+ ಯಡಿಯೂರಪ್ಪ ಸಿಎಂ ಆಗಿದ್ದಾಗ ಅವರ ವಿರುದ್ಧ ಕಾನೂನುಬಾಹಿರ ಡಿನೋಟಿಫಿಕೇಷನ್‌ಗಳ ಆರೋಪಗಳು ಬಂದಿದ್ದವು. ಈ ಆರೋಪಗಳ ಬಗ್ಗೆ ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಸಲು ಮುಂದಾಗಿದ್ದ ವಕೀಲ ಸಿರಾಜಿನ್‌ ಬಾಷಾ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ 2011ರಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು.
9
+ ಬಳಿಕ ಬಿಜೆಪಿ ಹೈಕಮಾಂಡ್‌ ಹಲವರಿಂದ ಕಾನೂನು ಸಲಹೆ ಪಡೆದುಕೊಂಡು ಬಿಎಸ್‌‍ವೈ ಸರ್ಕಾರದ ಮೂಲಕ ರಾಜ್ಯಪಾಲರಿಗೆ ಉತ್ತರಿಸಿತ್ತು. ಆದರೂ ಸಹ ಅಂದಿನ ರಾಜ್ಯಪಾಲ ಹಂಸರಾಜ ಭಾರದ್ವಾಜ್‌ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು.
10
+ ಬಳಿಕ ಸಂಪುಟ ಸಭೆ ನಡೆಸಿ ಪ್ರಾಸಿಕ್ಯೂಷನ್‌ ವಿರುದ್ಧ ನಿರ್ಣಯ ಅಂಗೀಕರಿಸಲಾಗಿತ್ತು. ಆದರೆ ಸಂಪುಟ ನಿರ್ಣಯನ್ನು ಧಿಕ್ಕರಿಸಿ ಬಿಎಸ್‌‍ವೈ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ್ದರು.
11
+ 2004ರಲ್ಲಿ ಇಂತಹದೇ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯದ ಪೀಠವೊಂದು ಸ್ಪಷ್ಟವಾದ ತೀರ್ಪು ನೀಡಿದೆ. ರಾಜ್ಯಪಾಲರಾದವರು ಸಾಮಾನ್ಯವಾಗಿ ಸಚಿವರ ಸಲಹೆ, ಅಭಿಪ್ರಾಯವನ್ನು ಪಡೆದು ಕಾರ್ಯ ನಿರ್ವಹಿಸಬೇಕು ಹಾಗೂ ನಿರ್ಧಾರ ಪ್ರಕಟಿಸಬೇಕೇ ಹೊರತು ಅವರ ವಿವೇಚನೆಯಿಂದ ಅಲ್ಲ. ಕೆಲವೊಂದು ಸಂದರ್ಭಗಳಲ್ಲಿ ಮಾತ್ರ ರಾಜ್ಯಪಾಲರು ಸ್ವಂತ ವಿವೇಚನೆಯಿಂದ ತೀರ್ಮಾನ ತೆಗೆದುಕೊಳ್ಳುವುದು ಸಮಂಜಸ ಎನಿಸುತ್ತದೆ ಎಂದು ತೀರ್ಪು ನೀಡಿತ್ತು.
12
+ ಈ ಹಿಂದೆ ಕರ್ನಾಟಕದ ರಾಜ್ಯಪಾಲರಾಗಿದ್ದ ಹಂಸರಾಜ್‌ ಭಾರದ್ವಾಜ್‌ ಇದೇ ತೀರ್ಪನ್ನು ಆಧರಿಸಿ ಅಂದಿನ ಮುಖ್ಯಮಂತ್ರಿ ಬಿ.ಎಸ್‌‍ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು ಇತಿಹಾಸ.
13
+ ಸಾಂವಿಧಾನಿಕವಾಗಿ ಸ್ಪಷ್ಟವಾಗಿ ವ್ಯಾಖ್ಯಾನಿಸಲ್ಪಟ್ಟಿರುವ ನಿಯಮಗಳನ್ನು ರಾಜ್ಯಪಾಲರು ಪಾಲಿಸಲೇಬೇಕು. ಅನಿರ್ದಿಷ್ಟ ಕಾಲ ಯಾವುದೇ ನಿರ್ಧಾರ ಕೈಗೊಳ್ಳದೆ ಇರುವ ಆಯ್ಕೆಯನ್ನು ಸಂವಿಧಾನ ನೀಡಿಲ್ಲವಾದ್ದರಿಂದ ಸಂವಿಧಾನದ ಅನ್ವಯ ಮುಖ್ಯಮಂತ್ರಿ ಅಥವಾ ಸಚಿವ ಸಂಪುಟ ಸಲಹೆಗಳನ್ನು ಆಧರಿಸಿಯೇ ರಾಜ್ಯಪಾಲರು ಅಧಿಕಾರವನ್ನು ಚಲಾಯಿಸಬಹುದಾಗಿದೆ.
14
+ ಆದರೆ ಈ ಹಿಂದೆ ಯಡಿಯೂರಪ್ಪ ವಿರುದ್ಧ ವಿಚರಣೆಗೆ ಅನುಮತಿ ವಿರುದ್ಧ ಸಂಪುಟ ಸಭೆ ಒಂದು ಸಾಲಿನ ನಿರ್ಣಯ ಅಂಗೀಕರಿಸಿದ್ದರೂ ಸಹ ಅದನ್ನು ಲೆಕ್ಕಿಸಿದೇ ಹಂಸರಾಜ್‌ ಭಾರದ್ವಾಜ್‌ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು.
eesanje/url_46_56_7.txt ADDED
@@ -0,0 +1,10 @@
 
 
 
 
 
 
 
 
 
 
 
1
+ ನಾನೇನೂ ತಪ್ಪು ಮಾಡಿಲ್ಲ, ಏಕೆ ಹೆದರಬೇಕು..? : ಸಿಎಂ ಸಿದ್ದರಾಮಯ್ಯ
2
+ ಮೈಸೂರು ,ಆ.2-ಮುಡಾ ನಿವೇಶನ ಹಂಚಿಕೆಯಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ರಾಜ್ಯಪಾಲರ ನೋಟಿಸ್‌‍ಗೆ ಏಕೆ ಹೆದರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ರಾಜ್ಯಪಾಲರು ಕೇಂದ್ರ ಸರ್ಕಾರ, ಬಿಜೆಪಿ-ಜೆಡಿಎಸ್‌‍ನ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.ಮುಡಾ ಪ್ರಕರಣದಲ್ಲಿ ನನ್ನ ಪಾತ್ರವೇ ಇಲ್ಲ.
3
+ ಆದರೂ ಶೋಕಾಸ್‌‍ ನೋಟಿಸ್‌‍ ನೀಡುವ ಮೂಲಕ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆದಿದೆ ಎಂದು ಸಿದ್ಧರಾಮಯ್ಯ ಕಿಡಿಕಾರಿದರು. ರಾಜ್ಯಪಾಲರು ನೋಟಿಸ್‌‍ ನೀಡಿದ ತಕ್ಷಣ ಸಿದ್ದರಾಮಯ್ಯ ಹೆದರಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಅವರು, ಬಹುಶಃ ಅಶೋಕ್‌ ಹೆದರಿರಬಹುದು. ನಾನೇಕೆ ಹೆದರಬೇಕು? ನಾನು ಯಾವುದೇ ತಪ್ಪು ಮಾಡಿಲ್ಲ. ಅಂದಮೇಲೆ ಭಯಪಡುವ ಅಗತ್ಯವಿಲ್ಲ. ರಾಜ್ಯಪಾಲರು ಕಾನೂನಿನ ರೀತಿ ನಡೆದುಕೊಂಡಿಲ್ಲ ಎಂದು ಹೇಳಿದರು.
4
+ ಸಚಿವ ಸಂಪುಟ ಸಭೆಯಲ್ಲಿ ನಿನ್ನೆ ಶೋಕಾಸ್‌‍ ನೋಟಿಸ್‌‍ ಬಗ್ಗೆ ಚರ್ಚೆ ನಡೆಸಿ, ಕಾನೂನು ಬಾಹಿರವಾದ ನೋಟಿಸ್‌‍ನ್ನು ಹಿಂಪಡೆಯಬೇಕೆಂದು ರಾಜ್ಯಪಾಲರಿಗೆ ಸಲಹೆ ನೀಡುವ ನಿರ್ಣಯ ಕೈಗೊಳ್ಳಲಾಗಿದೆ. ದೂರು ನೀಡಿರುವ ಟಿ.ಜೆ.ಅಬ್ರಹಾಂ ಬ್ಲಾಕ್‌ಮೇಲರ್‌ ವ್ಯಕ್ತಿ. ಈ ರೀತಿ ಹಲವು ಜನರ ವಿರುದ್ಧ ದೂರು ನೀಡಿದ್ದಾನೆ. ನಾನು ಜನರಿಂದ ಚುನಾಯಿತರಾದ 136 ಶಾಸಕರ ಪ್ರತಿನಿಧಿಯಾದ ಮುಖ್ಯಮಂತ್ರಿ. ನನಗೆ ಶೋಕಾಸ್‌‍ ನೋಟಿಸ್‌‍ ನೀಡುವಾಗ ಕಾನೂನಾತಕ ಅಂಶಗಳ ಸಮಗ್ರ ಪರಿಶೀಲನೆ ನಡೆಯಬೇಕು. ಆದರೆ ಅದಾವುದೂ ಇಲ್ಲದೇ ಆತುರವಾಗಿ ನೋಟಿಸ್‌‍ ನೀಡಲಾಗಿದೆ ಎಂದು ದೂರಿದರು.
5
+ ಅಬ್ರಹಾಂ ಬೆಳಗ್ಗೆ 11.30ಕ್ಕೆ ದೂರು ನೀಡಿದ್ದಾರೆ. ಅದೇ ದಿನ ಸಂಜೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ರಾಜ್ಯಪಾಲರನ್ನು ಭೇಟಿ ಮಾಡಿ ಪ್ರಕರಣದ ಬಗ್ಗೆ ಸುದೀರ್ಘ ವಿವರಣೆ ನೀಡಿ ಲಿಖಿತ ಉತ್ತರ ನೀಡಿದ್ದಾರೆ.ಇದಾವುದನ್ನೂ ರಾಜ್ಯಪಾಲರು ಗಮನಿಸಿಲ್ಲ.
6
+ ದೂರು ಬಂದ ದಿನ ರಾತ್ರಿ 10 ಗಂಟೆಗೆ ರಾಜ್ಯಪಾಲರ ಕಾರ್ಯದರ್ಶಿ ಪ್ರಭುಲಿಂಗ ಸ್ವಾಮಿ ಅವರು ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್‌.ಕೆ.ಅತೀಕ್‌ ಅವರಿಗೆ ಕರೆ ಮಾಡಿ ಶೋಕಾಸ್‌‍ ನೋಟಿಸ್‌‍ ಸಿದ್ಧವಿದೆ ತೆಗೆದುಕೊಳ್ಳಿ ಎಂದಿದ್ದಾರೆ. ರಾತ್ರಿಯಾಗಿದ್ದಕ್ಕೆ ಅಂದು ನೋಟಿಸ್‌‍ ಸ್ವೀಕರಿಸಿಲ್ಲ. ಮಾರನೇ ದಿನ ಬೆಳಗ್ಗೆ 2 ಗಂಟೆಗೆ ನೋಟಿಸ್‍ ಕೊಟ್ಟಿದ್ದಾರೆ.ಇದೇ ರೀತಿ ಅಭಿಯೋಜನೆಗೆ ಅನುಮತಿ ನೀಡುವಂತೆ ರಾಜ್ಯಪಾಲರ ಮುಂದೆ ಹಲವಾರು ದೂರುಗಳಿವೆ. ಬಿಜೆಪಿಯ ಶಾಸಕರಾದ ಶಶಿಕಲಾ ಜೊಲ್ಲೆ, ಮುರುಗೇಶ್‌ ನಿರಾಣಿ, ಜನಾರ್ಧನ ರೆಡ್ಡಿ, ಅವರ ವಿರುದ್ಧದ ದೂರುಗಳು ಹಲವಾರು ವರ್ಷಗಳಿಂದ ಬಾಕಿ ಇವೆ. ಅ���ುಗಳ ವಿಚಾರದಲ್ಲಿ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.
7
+ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಯತ್ನ ನಡೆಯುತ್ತಿದೆ. ಕಾನೂನು ಬಾಹಿರವಾಗಿ ಸಂವಿಧಾನಕ್ಕೆ ವಿರುದ್ಧವಾದ ನಡವಳಿಕೆಯನ್ನು ಅನುಸರಿಸಲಾಗಿದ್ದು, ಪ್ರಜಾಪ್ರಭುತ್ವವನ್ನು ನಾಶ ಮಾಡುವ ಹುನ್ನಾರವಾಗಿದೆ. ನನ್ನ ಪಾತ್ರ ಇಲ್ಲದೇ ಇದ್ದರೂ ಅನಗತ್ಯವಾಗಿ ನೋಟಿಸ್‌‍ ನೀಡಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
8
+ ಸಂಪುಟದ ಸಲಹೆ ಮೇರೆಗೆ ರಾಜ್ಯಪಾಲರು ಕೆಲಸ ಮಾಡಬೇಕು. ಈ ವಿಚಾರವಾಗಿ ಸಂಪುಟದ ಸಲಹೆ ಕೇಳಿಲಿಲ್ಲ. ನಾವು ನೀಡಿಲ್ಲ. ಆದರೂ ನೋಟಿಸ್‌‍ ಕೊಟ್ಟಿದ್ದೇಕೆ? ಮುಡಾ ನಿವೇಶನ ಹಂಚಿಕೆ ಹಗರಣಗಳನ್ನು ತನಿಖೆ ನಡೆಸಲು ಜು.14ರಂದು ನ್ಯಾಯಾಂಗ ಆಯೋಗ ರಚಿಸಲಾಗಿದೆ. ಅದರ ವರದಿ ಬಂದಿಲ್ಲ ಎಂದು ತಿಳಿಸಿದರು.
9
+ ಜೆಡಿಎಸ್‌‍-ಬಿಜೆಪಿ ಪಾದಯಾತ್ರೆ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯನವರು, ಆರಂಭದಲ್ಲಿ ಈ ಪ್ರಕರಣದಲ್ಲಿ ಏನೂ ಇಲ್ಲ ಪಾದಯಾತ್ರೆ ಬೇಡ ಎಂದು ಕುಮಾರಸ್ವಾಮಿ ಹೇಳಿದರು.ರಾಜ್ಯದಲ್ಲಿ ಮಳೆಯಾಗುತ್ತಿದೆ. ಪ್ರವಾಹ ಪರಿಸ್ಥಿತಿಯಿಂದ ಜನರು ಸಂಕಷ್ಟದಲ್ಲಿದ್ದಾರೆ.
10
+ ಈಗ ಪಾದಯಾತ್ರೆ ಏಕೆ ಎಂದು ಕೇಂದ್ರ ಸಚಿವರಾಗಿರುವ ಎಚ್‌.ಡಿ.ಕುಮಾರಸ್ವಾಮಿ ಅವರು ಹೇಳಿದ್ದರು. ಈಗ ಅವರು ಪಾದಯಾತ್ರೆಗೆ ಹೋಗುತ್ತಿರುವುದು ಸ್ವ ಇಚ್ಛೆಯಿಂದಲ್ಲ ಎಂದರು. ಬಿಜೆಪಿ-ಜೆಡಿಎಸ್‌‍ ಪಕ್ಷಗಳು ಏನೇ ಹುನ್ನಾರ ನಡೆಸಿದರೂ ಅದನ್ನು ಎದುರಿಸಲು ನಾವು ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದ್ದೇವೆ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.
eesanje/url_46_56_8.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಭವಿಷ್ಯದ ಸವಾಲು ಎದುರಿಸಲು ನ್ಯಾನೋ ತಂತ್ರಜ್ಞಾನ ಬಳಕೆಗೆ ಸಿಎಂ ಸಿದ್ದರಾಮಯ್ಯ ಕರೆ
2
+ ಬೆಂಗಳೂರು, ಆ.2-ಆಹಾರ ಭದ್ರತೆ, ಇಂಧನ ಸುರಕ್ಷತೆ, ಶುದ್ಧ ಜಲ, ಮೂಲಸೌಕರ್ಯ, ಆರೋಗ್ಯ ಸೇವೆ, ಮೆಡಿಸಿನ್‌, ತ್ಯಾಜ್ಯವಸ್ತುಗಳ ನಿರ್ವಹಣೆ, ಪರಿಸರ ನಿರ್ವಹಣೆಯಂತಹ ಕ್ಷೇತ್ರಗಳಲ್ಲಿ ಎದುರಾಗುವ ಸವಾಲುಗಳಿಗೆ ವಿನೂತನ ನ್ಯಾನೋ ಟೆಕ್ನಾಲಜಿ ಆಧಾರಿತ ಪರಿಹಾರಗಳನ್ನು ಕಂಡುಕೊಳ್ಳಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
3
+ ದೇಶದಲ್ಲೇ ಪ್ರತಿಷ್ಠಿತವಾಗಿರುವ ಬೆಂಗಳೂರು ಇಂಡಿಯಾ ನ್ಯಾನೋ ಸಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೆಚ್ಚುತ್ತಿರುವ ನಗರೀಕರಣ, ಜನಸಂಖ್ಯೆ ಹೆಚ್ಚಳ ಹಾಗೂ ಬದಲಾಗುತ್ತಿರುವ ಜೀವನ ಶೈಲಿಯಿಂದ ಮುಂದಿನ ದಿನಗಳಲ್ಲಿ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆಗಳಿದೆ. ಇವುಗಳಿಗೆ ನ್ಯಾನೋ ತಂತ್ರಜ್ಞಾನ ಆಧಾರಿತ ಪರಿಹಾರಗಳನ್ನು ಸಂಶೋಧಿಸಲು ವಿಜ್ಞಾನಿಗಳಿಗೆ ಮತ್ತು ಇಂಜಿನಿಯರ್‌ಗಳು ಮುಂದಾಗಬೇಕು ಎಂದು ಹೇಳಿದರು.
4
+ ಹೊಸ ತಾಂತ್ರಿಕ ಕ್ಷೇತ್ರದ ಸಾಧ್ಯತೆಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ಅಂತಾರಾಷ್ಟ್ರೀಯ ಸಂಶೋಧನಾ ಸಹಭಾಗಿತ್ವ ಅತ್ಯಗತ್ಯವಾಗಿದೆ. ಇದಕ್ಕಾಗಿ ಮಾಹಿತಿಗಳ ಹಾಗೂ ತಾಂತ್ರಿಕತೆಗಳ ಪರಸ್ಪರ ವಿನಿಮಯ, ಈ ಕ್ಷೇತ್ರದಲ್ಲಿ ಎದುರಾಗುವ ಸವಾಲುಗಳ ಮತ್ತು ಅವುಗಳ ಪರಿಹಾರ ಸಾಧ್ಯತೆಗಳ ವಿಚಾರ ವಿನಿಮಯ ಮತ್ತು ಅಂತಿಮವಾಗಿ ಸಮಾಜದ ಶ್ರೇಯೋಭಿವೃದ್ಧಿಗೆ ಪೂರಕವಾಗಿ ಪ್ರತಿಭೆಗಳನ್ನು ಬೆಳೆಸುವ ಅಗತ್ಯವಿದೆ.
5
+ ಇಂತಹ ಅಂತಾರಾಷ್ಟ್ರೀಯ ಸಮಾವೇಶಗಳು ಪರಸ್ಪರ ಸಂಪರ್ಕ ಸಾಧಿಸಲು, ಜ್ಞಾನವನ್ನು ಹಂಚಿಕೊಳ್ಳಲು, ತಾಂತ್ರಿಕತೆಗಳ ವಿನಿಮಯಕ್ಕೆ, ಕೌಶಲ್ಯ ಅಭಿವೃದ್ಧಿಗೆ ಹಾಗೂ ಉದ್ಯಮ ಸಹಭಾಗಿತ್ವಕ್ಕೆ ಸಾಕಷ್ಟು ಅವಕಾಶವನ್ನು ಕಲ್ಪಿಸಲಿದೆ ಎಂದು ಅಭಿಪ್ರಾಯಪಟ್ಟರು.
6
+ ಯುವ ಉದ್ಯಮಿಗಳು ಈ ಕ್ಷೇತ್ರದ ತಜ್ಞರ ಮತ್ತು ದಿಗ್ಗಜರ ಸಹಕಾರ ಮತ್ತು ಸಹಭಾಗಿತ್ವದ ಸದುಪಯೋಗ ಪಡೆದುಕೊಂಡು ರಾಜ್ಯದಲ್ಲಿ ಹೊಸ ಉದ್ಯಮಗಳನ್ನು ಆರಂಭಿಸಲು ಮುಕ್ತ ಆಹ್ವಾನ ನೀಡುವುದಾಗಿ ಹೇಳಿದರು.ಕರ್ನಾಟಕದಲ್ಲಿ ಈ ವಿನೂತನ ಉದ್ಯಮ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸಲು ಸಾಧ್ಯವಿರುವ ಸಂಪೂರ್ಣ ಸಹಕಾರವನ್ನು ನಮ್ಮ ಸರ್ಕಾರ ಒದಗಿಸಲಿದೆ ಎಂದು ಭರವಸೆ ನೀಡಿದರು.
7
+ ಕರ್ನಾಟಕ ತನ್ನ ಶ್ರೀಮಂತ ಸಾಂಸ್ಕೃತಿಕ ಪರಂಪರೆಗಳಿಗೆ ಮಾತ್ರವಲ್ಲದೆ ಶೈಕ್ಷಣಿಕ ಮತ್ತು ಸಂಶೋಧನೆ ಚಟುವಟಿಕೆಗಳಿಗೆ ಭದ್ರ ತಳಹದಿಯನ್ನು ಕಲ್ಪಿಸುವ ಕಾರ್ಯದಲ್ಲಿ ಹೆಸರುವಾಸಿಯಾಗಿದೆ. ತಾಂತ್ರಿಕತೆ ಆಧಾರಿತ ಅನ್ವೇಷಣೆ ಕ್ಷೇತ್ರದಲ್ಲಿ ನಮ ರಾಜ್ಯ ಮುಂಚೂಣಿಯಲ್ಲಿದೆ. ಐಐಎಸ್ಸಿ, ಜೆಎನ್‌ಸಿಎಎಸ್‌‍ಆರ್‌, ಎನ್‌ಸಿಬಿಎಸ್‌‍, ಸಿಇಎನ್‌ಎಸ್‌‍ ನಂತಹ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳ ನೆರವಿನೊಂದಿಗೆ, ಬೆಂಗಳೂರು ರಾಷ್ಟ್ರದ ನ್ಯಾನೋ ಟೆಕ್‌ ಹಬ್‌ ಆಗಿ ರೂಪ��ಗೊಳ್ಳುವ ಪೂರ್ಣ ವಿಶ್ವಾಸ ತಮಗಿದೆ. ಮುಂಬರುವ ವರ್ಷಗಳಲ್ಲಿ ಬೆಂಗಳೂರು ಆಧುನಿಕ ತಾಂತ್ರಿಕ ಕ್ಷೇತ್ರದಲ್ಲಿ ಪ್ರಮುಖ ಪಾತ್ರ ನಿಭಾಯಿಸಲಿದೆ ಎಂದು ವಿಶ್ವಾಸವ್ಯಕ್ತ ಪಡಿಸಿದರು.
8
+ ದೇಶ, ವಿದೇಶಗಳ ಖ್ಯಾತ ವಿಜ್ಞಾನಿಗಳು, ತಂತ್ರಜ್ಞಾನಿಗಳು, ತಾಂತ್ರಿಕ ಚಿಂತಕರು, ಉದ್ಯಮಗಳ ಖ್ಯಾತನಾಮರು ಈ ಪ್ರತಿಷ್ಠಿತ ನ್ಯಾನೋ ತಂತ್ರಜ್ಞಾನ ಸಮಾವೇಶದಲ್ಲಿ ಭಾಗವಹಿಸಿದ್ದರು. ಬೆಂಗಳೂರು ಇಂಡಿಯಾ ನ್ಯಾನೋ ಸೈನ್ಸ್ ಪ್ರಶಸ್ತಿಗೆ ಭಾಜನರಾಗಿರುವ ಪ್ರೊ.ಅರಿಂದಮ್‌ ಘೋಷ್‌ ಅವರನ್ನು ಅಭಿನಂದಿಸಿದರು.
9
+ ನ್ಯಾನೋ ಸಮಾವೇಶವನ್ನು 2007ರಿಂದ ನಿರಂತರವಾಗಿ ಆಯೋಜಿಸಿಕೊಂಡು ಬರಲು ಮಾರ್ಗದರ್ಶನ ನೀಡುತ್ತಿರುವ ಭಾರತ ರತ್ನ ಪ್ರೊ.ಸಿ.ಎನ್‌.ಆರ್‌. ರಾವ್‌ ಅವರನ್ನು ಅಭಿನಂದಿಸುವುದಾಗಿ ಹೇಳಿದ ಮುಖ್ಯಮಂತ್ರಿಯವರು, 13 ನೇ ಬೆಂಗಳೂರು ಇಂಡಿಯಾ ನ್ಯಾನೋ ಅತ್ಯಂತ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.
10
+ ಭಾರತರತ್ನ ಪ್ರೊ.ಸಿ.ಎನ್‌.ಆರ್‌. ರಾವ್‌, ಸಚಿವರಾದ ಪ್ರಿಯಾಂಕ್‌ ಖರ್ಗೆ, ಎನ್‌.ಎಸ್‌‍.ಬೋಸರಾಜ್‌, ಶಾಸಕರಾದ ರಿಜ್ವಾನ್‌ ಅರ್ಹದ್, ಅಜಯ್‌ಸಿಂಗ್‌, ಕಿರಣ್‌ ಮಜೂಂದಾರ್‌ ಶಾ, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ ಮತ್ತಿತರಿದ್ದರು.
eesanje/url_46_56_9.txt ADDED
@@ -0,0 +1,9 @@
 
 
 
 
 
 
 
 
 
 
1
+ ರಾಜ್ಯದ ಹಲವೆಡೆ ಗುಡ್ಡ ಕುಸಿತ, ಜನರಲ್ಲಿ ಆತಂಕ
2
+ ಬೆಂಗಳೂರು, ಆ.2-ಮುಂಗಾರು ಮಳೆಯ ಅಬ್ಬರಕ್ಕೆ ಪಶ್ಚಿಮ ಘಟ್ಟಗಳು ನಲುಗಿ ಹೋಗಿವೆ. ಮಳೆಯ ರೌದ್ರ ನರ್ತನಕ್ಕೆ ಹಲವೆಡೆ ಭೂಕುಸಿತ ಉಂಟಾಗಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.ಮಲೆನಾಡು, ಕರಾವಳಿ ಭಾಗದಲ್ಲಿ ಬೆಟ್ಟ- ಗುಡ್ಡಗಳು ಕುಸಿದು ಬೀಳುತ್ತಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
3
+ ಅತ್ತ ಕೇರಳದ ವಯನಾಡಿನಲ್ಲಿ ಭೂಕುಸಿತ ದುರಂತ ಸಂಭವಿಸಿ ನೂರಾರು ಜನ ಸಾವನ್ನಪ್ಪಿ ಮತ್ತೆ ನೂರಾರು ಜನ ನಾಪತ್ತೆಯಾಗಿ ಬಿರುಸಿನ ಕಾರ್ಯಾಚರಣೆ ನಡೆಯುತ್ತಿದೆ.ಇತ್ತ ಕರ್ನಾಟಕದ ಕರಾವಳಿ, ಮಲೆನಾಡು ಭಾಗದಲ್ಲಿ ನಿಲ್ಲದ ಮಳೆಯ ಅಬ್ಬರಕ್ಕೆ ಹಲವೆಡೆ ಭೂಕುಸಿತ, ಗುಡ್ಡ ಕುಸಿತ ಉಂಟಾಗಿ ಹಲವು ಅನಾಹುತಗಳು ಸಂಭವಿಸುತ್ತಿವೆ.
4
+ ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಪ್ರಾಣಾಪಾಯ ಆಗದಿದ್ದರೂ ನಿರಂತರವಾಗಿ ಗುಡ್ಡ, ಭೂಮಿ ಕುಸಿಯುತ್ತಿರುವುದು ಜನರಲ್ಲಿ ಆತಂಕದ ವಾತಾವರಣ ಉಂಟು ಮಾಡಿದೆ. ಮಳೆ ಬೇಕು, ಬೇಕು ಎನ್ನುತ್ತಿದ್ದ ಜನ ಈಗ ಮಳೆ ಸಾಕಪ್ಪ ದೇವರೇ ಎಂದು ಹೇಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜನರು ಪ್ರವಾಹದ ಭೀತಿಯಲ್ಲಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಕಡೆ ಸೇತುವೆಗಳು, ರಸ್ತೆಗಳು, ಮಳೆಯ ಅಬ್ಬರಕ್ಕೆ ಕೊಚ್ಚಿಕೊಂಡು ಹೋಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
5
+ ಜಲಾಶಯಗಳು ಭರ್ತಿಯಾಗಿ ಭಾರಿ ಪ್ರಮಾಣದ ನೀರನ್ನು ಹೊರ ಬಿಡುತ್ತಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.ಈ ಭಾಗದಲ್ಲಿ ಜನರು ಜೀವ ಕೈಯಲ್ಲಿ ಹಿಡಿದು ಜೀವನ ಸಾಗಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ನಾಲ್ಕೈದು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದ್ದು, ಇನ್ನು ಯಾವ ಪ್ರಮಾಣದ ಅಪಾಯ ಎದುರಾಗಬಹುದೋ ಎಂಬ ಆತಂಕ ಉಂಟಾಗಿದೆ.
6
+ ಹಾಸನದ ಶಿರಾಡಿ ಘಾಟ್ನ ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡ ತಪ್ಪಲೆ ಬಳಿ ಭೂಕುಸಿತ ಮುಂದುವರೆದಿರುವುದರಿಂದ ಜನರಲ್ಲಿ ಆತಂಕ ಮನೆ ಮಾಡಿದೆ. ಶಿರಾಡಿ ಘಾಟ್ನಲ್ಲಿ ಕೆಸರಿನ ರಾಶಿ ಹರಿದು ಬರುತ್ತಿರುವುದರಿಂದ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ.
7
+ ಕಂದಾಯ ಸಚಿವ ಕೃಷ್ಣಭೈರೇಗೌಡ, ಶಾಸಕ ಸಿಮೆಂಟ್ ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿರಾಡಿ ಘಾಟ್ನಲ್ಲಿ ಸದ್ಯ ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.ಪುತ್ತೂರು, ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಇಂದು ಬೆಳಗಿನ ಜಾವ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು.
8
+ ಬದಲಿ ರಸ್ತೆ ಪುತ್ತೂರು ಪೇಟೆ ಬಳಸಿ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯಿತು. ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಗಾಗ್ಗೆ ಗುಡ್ಡ ಕುಸಿಯುತ್��ಲೇ ಇರುತ್ತದೆ. ಇಂದು ಭಾರೀ ಪ್ರಮಾಣದ ಮಣ್ಣು ರಸ್ತೆಯ ಮೇಲೆ ಬಿದ್ದಿದ್ದು, ನಗರ ಸಭೆ ಅಧಿಕಾರಿಗಳು, ಪೊಲೀಸರು ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
9
+ ಮುಂಗಾರು ಮಳೆಯ ಅಬ್ಬರ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ವ್ಯಾಪಿಸಿದೆ. ಹಲವೆಡೆ ಕಟ್ಟೆಚ್ಚರ ಘೋಷಿಸಲಾಗಿದೆ. ಮತ್ತೆ ಕೆಲವೆಡೆ ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ. ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ.ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
eesanje/url_46_57_1.txt ADDED
@@ -0,0 +1,6 @@
 
 
 
 
 
 
 
1
+ ಬಿಜೆಪಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಜೆಡಿಎಸ್‌‍ ನಾಯಕರಿಗೆ ಹೆಚ್‌ಡಿಕೆ ಸೂಚನೆ
2
+ ಬೆಂಗಳೂರು, ಆ.2-ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಹಗರಣದ ವಿರುದ್ಧ ಬಿಜೆಪಿ ನಾಳೆಯಿಂದ ಆರಂಭಿಸಲಿರುವ ಬೆಂಗಳೂರಿನಿಂದ ಮೈಸೂರುವರೆಗಿನ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಪಕ್ಷದ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರಿಗೆ ಜೆಡಿಎಸ್‌‍ ರಾಜ್ಯಾಧ್ಯಕ್ಷರಾದ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ.
3
+ ಬೆಂಗಳೂರಿನ ಕೆಂಗೇರಿಯಲ್ಲಿರುವ ಕೆಂಪಮ ದೇವಸ್ಥಾನದಿಂದ ಮೈಸೂರು ನಗರದವರೆಗೆ ಜೆಡಿಎಸ್‌‍ ಹಾಗೂ ಬಿಜೆಪಿ ಪಕ್ಷಗಳು ಜಂಟಿಯಾಗಿ ಪಾದಯಾತ್ರೆಯನ್ನು ಹಮಿಕೊಂಡಿವೆ.ಪಾದಯಾತ್ರೆ ವಿಚಾರದಲ್ಲಿ ನಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಮಾಜಿ ಶಾಸಕ ಪ್ರೀತಂಗೌಡ ಸಾರಥ್ಯದಲ್ಲಿ ನಡೆಯುವ ಪಾದಯಾತ್ರೆಗೆ ಬೆಂಬಲವಿಲ್ಲ ಎಂದು ಕುಮಾರಸ್ವಾಮಿ ಬಹಿರಂಗವಾಗಿ ಅಸಮಾಧಾನದ ಹೇಳಿಕೆ ನೀಡಿದ್ದರು.
4
+ ಇದರ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್‌ ದಾಸ್‌‍ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕುಮಾರಸ್ವಾಮಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಮನವೊಲಿಕೆ ಮಾಡಿದ್ದರು. ಮನವೊಲಿಕೆ ನಂತರ ಪಾದಯಾತ್ರೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಕುಮಾರಸ್ವಾಮಿ ತಮ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ನಿರ್ದೇಶನ ನೀಡಿದ್ದಾರೆ.
5
+ ನಾಳೆಯಿಂದ ಪ್ರಾರಂಭವಾಗುವ ಪಾದಯಾತ್ರೆಯಲ್ಲಿ ಪಕ್ಷದ ಮುಖಂಡರು, ಸಂಸದರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಅಭ್ಯರ್ಥಿಗಳು, ರಾಜ್ಯ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ವಿವಿಧ ವಿಭಾಗಗಳ ರಾಜ್ಯಾಧ್ಯಕ್ಷರು ಹಾಗೂ ತಮ ಬೆಂಬಲಿಗರೊಂದಿಗೆ ಪಾದಯಾತ್ರೆಯಲ್ಲಿ ಭಾಗವಹಿಸುವಂತೆ ಜೆಡಿಎಸ್‌‍ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ವೆಂಕಟರಾವ್‌ ನಾಡಗೌಡ ತಿಳಿಸಿದ್ದಾರೆ.
6
+ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್‌, ಡಿ. ಕುಮಾರಸ್ವಾಮಿರವರ ಸೂಚನೆ ಮೇರೆಗೆ ಪಕ್ಷದ ಮುಖಂಡರಿಗೆ ಪಾಲ್ಗೊಳ್ಳಲು ಅವರು ಕರೆ ನೀಡಿದ್ದಾರೆ.ಬೆಂಗಳೂರು ಮಹಾನಗರ ಘಟಕದ ಜೆಡಿಎಸ್‌‍ ಅಧ್ಯಕ್ಷ ಹೆಚ್‌.ಎಂ.ರಮೇಶ್‌ಗೌಡ ಅವರ ನೇತೃತ್ವದಲ್ಲಿ ಸಭೆ ಸೇರಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
eesanje/url_46_57_10.txt ADDED
@@ -0,0 +1,8 @@
 
 
 
 
 
 
 
 
 
1
+ ಆ.6ರವರೆಗೆ ಮಳೆ ಆರ್ಭಟ, ಹಲವು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ
2
+ ಬೆಂಗಳೂರು, ಆ.1– ರಾಜ್ಯಾದ್ಯಂತ ಕಳೆದೆರಡು ವಾರಗಳಿಂದ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದರಿಂದ ಅಪಾರ ಪ್ರಮಾಣದ ಬೆಳೆ ಹಾನಿಯುಂಟಾಗಿದೆ. ಆಗಸ್ಟ್‌ 6ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.
3
+ ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬೀದರ್‌, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು, ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲೂ ಕೂಡ ಮಳೆಯಾಗಲಿದೆ.
4
+ ರಾಜ್ಯದ ಬಹುತೇಕ ಜಲಾಶಯಗಳು ತುಂಬಿ ತುಳುಕುತ್ತಿದ್ದು, ಭಾರೀ ಪ್ರಮಾಣದಲ್ಲಿ ನೀರನ್ನು ಹೊರ ಬಿಡುತ್ತಿರುವುದರಿಂದ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗಿದೆ. ಹೊಲ- ಗದ್ದೆಗಳು ಜಲಾವೃತಗೊಂಡಿವೆ. ಭತ್ತ, ಕಬ್ಬು, ಈರುಳ್ಳಿ, ಮೆಣಸಿನಕಾಯಿ, ಹೆಸರುಕಾಳು ಸೇರಿದಂತೆ ವಿವಿಧ ಬೆಳೆಗಳು ನೀರಿನಲ್ಲಿ ಮುಳುಗಿ ಹೋಗಿವೆ.
5
+ ಉತ್ತರ ಕನ್ನಡ, ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ತಡರಾತ್ರಿಯವರೆಗೆ ಮಳೆ ಸುರಿದ ಪರಿಣಾಮ ಹಲವೆಡೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಜನರು ಜಾಗರಣೆ ಮಾಡುವಂತಾಗಿದೆ. ಉತ್ತರ ಕನ್ನಡ ಜಿಲ್ಲಾಧ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಜೋಯಿಡಾ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
6
+ ಕಾರವಾರ ನಗರದ ಗ್ರೀನ್‌ ಸ್ಟ್ರೀಟ್‌ ರಸ್ತೆ, ಹೈಚರ್ಚ್‌ ಅಬ್ಬುವಾಡ ರಸ್ತೆ, ಪದನಾಭನಗರ ಸಂಪೂರ್ಣ ಜಲಾವೃತಗೊಂಡಿದೆ.ಅಲ್ಲದೆ, ಅರಗ, ಚಂಡೀಯ ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರು, ಪ್ರವಾಸಿಗರಿಗೆ ಪ್ರವಾಸಿ ಸ್ಥಳಗಳಿಗೆ ನಿರ್ಬಂಧ ವಿಧಿಸಲಾಗಿದೆ.
7
+ ಮಲೆನಾಡು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಹಲವೆಡೆ ಮಣ್ಣು ಕುಸಿದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ವಣಗೆರೆಯಲ್ಲೂ ಕೂಡ ಮಳೆ ಆರ್ಭಟ ಮುಂದುವರೆದಿದೆ. ಜೀವನಡಿ ತುಂಗಭದ್ರಾ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಹರಿಹರ ಹಾಗೂ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಕೆಲ ಗ್ರಾಮಗಳ ಸೇತುವೆಗಳು ಜಲಾವೃತಗೊಂಡು ಸಂಪರ್ಕ ಖಡಿತಗೊಂಡಿವೆ.
8
+ ತುಂಗಭದ್ರಾ ಜಲಾಶಯದಿಂದ ಒಂದು ಲಕ್ಷಕ್ಕೂ ಅಧಿಕ ಕ್ಯುಸೆಕ್‌ ನೀರನ್ನು ನದಿಗೆ ಹರಿಸಿದ ಪರಿಣಾಮ ನದಿ ಪಾತ್ರದಲ್ಲಿ ಇರುವ ಜಮೀನು���ಳು ಜಲಾವೃತಗೊಂಡು ತೆಂಗು- ಅಡಿಕೆ, ಭತ್ತದ ಗದ್ದೆಗಳು ಮುಳುಗಡೆಯಾಗಿವೆ. ಮೆಕ್ಕೆ ಜೋಳದ ತೆನೆ ಮೊಳಕೆಯೊಡೆಯುವ ಮುನ್ನ ಸಸಿಗಳು ನೆಲಕಚ್ಚಿವೆ. ನದಿ ನೀರು ವಾರಗಟ್ಟಲೆ ಅಡಿಕೆ ತೋಟದಲ್ಲಿ ನಿಂತರೆ ಅಡಿಕೆ ಗಿಡದ ಕಾಂಡಗಳು ಕೊಳೆಯುವ ಆತಂಕ ಎದುರಾಗಿದೆ.
eesanje/url_46_57_11.txt ADDED
@@ -0,0 +1,18 @@
 
 
 
 
 
 
 
 
 
 
 
 
 
 
 
 
 
 
 
1
+ ಪ್ರಧಾನಿ ಭೇಟಿಯಾಗಿ ಡಿಸಿಎಂ ಡಿಕೆಶಿ ಮಾಡಿನ ಮನವಿಗಳೇನು..? ಇಲ್ಲಿದೆ ವಿವರ
2
+ ನವದೆಹಲಿ,ಜು.31-ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನವದೆಹಲಿಯಲ್ಲಿಂದು ಭೇಟಿ ಮಾಡಿ ಬೆಂಗಳೂರು ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಗೆ ಬಾಕಿ ಇರುವ ಯೋಜನೆಗಳಿಗೆ ಮಂಜೂರಾತಿ ಕೊಡಿಸುವಂತೆ ಮನವಿ ಮಾಡಿದ್ದಾರೆ.
3
+ ಪ್ರಧಾನಿಯವರಿಗೆ ನೀಡಲಾಗಿರುವ ಪತ್ರದಲ್ಲಿ ಮೂರನೇ ಬಾರಿ ಪ್ರಧಾನಿಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಲಾಗಿದೆ. ಈ ಹಿಂದೆ ಗಮನ ಸೆಳೆದಂತೆ ರಾಜ್ಯದ ಬಹುಮುಖ್ಯ ಗಂಭೀರ ವಿಚಾರಗಳು ಹಾಗೂ ಯೋಜನೆಗಳಿಗೆ ಅದರಲ್ಲೂ ನಗರಾಭಿವೃದ್ಧಿ ಮತ್ತು ಬೆಂಗಳೂರಿನ ಸುಧಾರಣೆಗೆ ನಿಮ ಮಾರ್ಗದರ್ಶನ ಹಾಗೂ ಬೆಂಬಲ ಅಗತ್ಯವಿದೆ ಎಂದು ಮನವಿ ಮಾಡಿದ್ದಾರೆ.
4
+ ನಿಮ ಅಮೂಲ್ಯವಾದ ದೃಷ್ಟಿಕೋನ ಮತ್ತು ತಜ್ಞತೆ ಕರ್ನಾಟಕದ ಪ್ರಗತಿಯಲ್ಲಿರುವ ಯೋಜನೆಗಳ ವೇಗೋತ್ಕರ್ಷಕ್ಕೆ ಹಾಗೂ ಸುಸ್ಥಿರ ಅಭಿವೃದ್ಧಿಗೆ ಅಗತ್ಯವಿದೆ. ಈಗಾಗಲೇ ಬೆಂಗಳೂರಿನ ಸುಧಾರಣೆ ಪ್ರಸ್ತಾವಿತ ಹಲವು ಯೋಜನೆಗಳ ಅನುಮೋದನೆಗೆ ನಿಮ ಮಧ್ಯಪ್ರವೇಶ ಅಗತ್ಯ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.
5
+ ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸುರಂಗ ರಸ್ತೆ ಹಾಗೂ ಮೇಲ್ಸೇತುವೆಗಳ ನಿರ್ಮಾಣ ಅಗತ್ಯವಿದೆ. ಬೆಂಗಳೂರು ವೇಗವಾಗಿ ಬೆಳೆಯುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 77.6 ಕಿ.ಮೀ. ನಗರದ ಒಳಗೆ ಹಾದುಹೋಗುತ್ತಿದೆ. ಇದರಿಂದ ಸಂಚಾರ ದಟ್ಟಣೆ ತೀವ್ರವಾಗಿದೆ. ವಾಹನಗಳ ಸುಗಮ ಓಡಾಟಕ್ಕಾಗಿ ಮೇಲ್ಸೇತುವೆ ಹಾಗೂ ಸುರಂಗಗಳ ನಿರ್ಮಾಣ ಅಗತ್ಯವಿದೆ. ರಾಷ್ಟ್ರೀಯ ಹೆದ್ದಾರಿ 7 ಕ್ಕೆ ಹೊಸೂರಿನಿಂದ ಬಳ್ಳಾರಿ ಸಂಪರ್ಕಗೊಳ್ಳುತ್ತಿದ್ದು, ಕೆ.ಆರ್‌.ಪುರಂ ರಸ್ತೆಯಿಂದ ಮೈಸೂರು ರಸ್ತೆಯವರೆಗೆ ಇದು ಸುರಂಗ ರಸ್ತೆ ನಿರ್ಮಾಣದ ಔಚಿತ್ಯದ ಅಧ್ಯಯನ ನಡೆಸಲಾಗಿದೆ. ಭೂ ಸ್ವಾದೀನದ ಖರ್ಚನ್ನು ತಗ್ಗಿಸುವ ಅಗತ್ಯವಿದೆ.
6
+ ಎರಡು ಮೇಲ್ಸೇತುವೆ ಹಾಗೂ ಸುರಂಗ ಮಾರ್ಗಗಳಿಗಾಗಿ 36,950 ಕೋಟಿ ರೂ. ವೆಚ್ಚವಾಗಲಿದ್ದು, ಅಗತ್ಯ ಅನುದಾನ ಒದಗಿಸುವಂತೆ ಮನವಿ ಮಾಡಿದ್ದಾರೆ.ಬೆಂಗಳೂರು ಮೆಟ್ರೋ ಯೋಜನೆಯ 5 ಕಾರಿಡಾರ್‌ಗಳಲ್ಲೂ ಉಪನಗರಗಳನ್ನು ಸಂಪರ್ಕಿಸುವಂತೆ ವಿಸ್ತರಣೆಯ ಅಗತ್ಯವಿದೆ. ಇದಕ್ಕೆ ಬೆಂಬಲ ನೀಡಬೇಕು ಎಂದು ಡಿ.ಕೆ.ಶಿವಕುಮಾರ್‌ ಮನವಿ ಮಾಡಿದ್ದಾರೆ.
7
+ ಬಿಟಿಎಂ ಲೇಔಟ್‌ನಲ್ಲಿ ರೂಪಿಸಲಾಗಿರುವ ಡಬ್ಬಲ್‌ ಡೆಕ್ಕರ್‌ ಯೋಜನೆ ಯಶಸ್ವಿಯಾಗಿದ್ದು, ಅದೇ ಮಾದರಿಯಲ್ಲಿ ಬೆಂಗಳೂರಿನಾದ್ಯಂತ ಮೆಟ್ರೊ ಮತ್ತು ಮೇಲ್ಸೇತುವೆ ರಸ್ತೆ ಸಂಯೋಜಿತ ಯೋಜನೆಗೆ ಪ್ರಧಾನಿಯವರ ಬೆಂಬಲ ಕೇಳಲಾಗಿದೆ. ಇದೊಂದು ಅನ್ವೇಷಣಾತಕ ಯೋಜನೆಯಾಗಿದೆ.
8
+ ಜನಸಂಖ್ಯೆಗನುಗುಣವಾಗಿ ಬೆಂಗಳೂರಿನ ಮೂಲಸೌಲಭ್ಯಕ್ಕಾಗಿ ಡಬ್ಬಲ್‌ ಡೆಕ್ಕರ್‌ ವ್ಯವಸ್ಥೆ ಅಗತ್ಯವಿದೆ. ಮೇಲ್ಸೇತುವೆ ಮಾರ್ಗದಲ್ಲಿ ಮೆಟ್ರೊ ಹಳಿಗಳು ಅದರ ಕೆಳಗೆ ಸಿಗ್ನಲ್‌ ಮುಕ್ತ ಮೇಲ್ಸ��ೕತುವೆ ರಸ್ತೆ ನಿರ್ಮಾಣದಿಂದ ಭೂಸ್ವಾಧೀನದ ವೆಚ್ಚ ಕಡಿಮೆಯಾಗುವುದರ ಜೊತೆಗೆ ತಡೆರಹಿತ ಸಂಚಾರ ನಡೆಯಲಿದೆ ಎಂದಿದ್ದಾರೆ.
9
+ ಸಿಲಿಕಾನ್‌ ಸಿಟಿ ಬೆಂಗಳೂರಿನ ಅಭಿವೃದ್ಧಿಯ ಬಗ್ಗೆ ಪ್ರಧಾನಿ ಬಗ್ಗೆ ಸುದೀರ್ಘ ವಿವರಣೆ ನೀಡಿರುವ ಡಿ.ಕೆ.ಶಿವಕುಮಾರ್, 73.04 ಕಿ.ಮೀ. ಉದ್ದದ 8 ಪಥಗಳ ಹೊರವರ್ತುಲ ರಸ್ತೆ ನಿರ್ಮಾಣದ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.ಬೆಂಗಳೂರು ನಗರಕ್ಕೆ ವಾಹನಗಳ ಪ್ರವೇಶವನ್ನು ತಪ್ಪಿಸಿ ಹೊರವಲಯದಿಂದಲೇ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಡಲು 27 ಸಾವಿರ ಕೋಟಿ ರೂ.ಗಳ ಹೊರವರ್ತುಲ ರಸ್ತೆ ನಿರ್ಮಿಸುವ ಅಗತ್ಯವಿದೆ. ರಸ್ತೆ ನಿರ್ಮಾಣದ ವೆಚ್ಚ 6 ಸಾವಿರ ಕೋಟಿ ರೂ. ಆದರೆ 21 ಸಾವಿರ ಕೋಟಿ ರೂ. ಭೂಸ್ವಾಧೀನಕ್ಕೆ ತಗುಲಲಿದೆ. ಇದಕ್ಕೆ ಬೆಂಬಲ ನೀಡುವಂತೆ ಬಜೆಟ್‌ ಪೂರ್ವಭಾವಿ ಸಭೆಯಲ್ಲೂ ಮನವಿ ಮಾಡಲಾಗಿತ್ತು ಎಂದು ವಿವರಿಸಿದ್ದಾರೆ.
10
+ ಬೆಂಗಳೂರಿನಲ್ಲಿ ಹೆಚ್ಚು ಧಾರಣ ಮತ್ತು ಕಡಿಮೆ ಅವಧಿಯ ಮಳೆಯಾಗಲಿದೆ. ಇದರಿಂದ ನಗರದಲ್ಲಿ ಸಾಕಷ್ಟು ನೆರೆಯ ಪರಿಸ್ಥಿತಿ ಉಂಟಾಗಿ ಜನಸಾಮಾನ್ಯರು ಸಂಕಷ್ಟಕ್ಕೊಳಗಾಗಿದ್ದಾರೆ. ವಿಶ್ವ ಬ್ಯಾಂಕ್‌ ನೆರವಿನಲ್ಲಿ 3 ಸಾವಿರ ಕೋಟಿ ರೂ. ವೆಚ್ಚ ಮಾಡಿ ಮಳೆ ಹಾನಿ ತಡೆಯ ಯೋಜನೆಗಳನ್ನು ಕೈಗೊಳ್ಳಬೇಕಿದೆ. ಕೆರೆಯ ಪುನಶ್ಚೇತನ ಹಾಗೂ ಇತರ ಕಾರ್ಯಕ್ರಮಗಳು ಇದರಡಿ ಬರಲಿವೆ ಎಂದು ತಿಳಿಸಿದ್ದಾರೆ.
11
+ 15ನೇ ಹಣಕಾಸು ಯೋಜನೆಯಡಿ ಬೆಂಗಳೂರಿನ ಅಂತರ್ಜಲ ವೃದ್ಧಿ, ಸಂಚಾರ ನಿರ್ವಹಣೆಗಾಗಿ 6 ಸಾವಿರ ಕೋಟಿ ರೂ. ವಿಶೇಷ ಅನುದಾನ ನೀಡಬೇಕು. ತ್ಯಾಜ್ಯ ವಿಲೇವಾರಿಗೆ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಪ್ರತಿದಿನ 6,500 ಮೆಟ್ರಿಕ್‌ ಟನ್‌ ತ್ಯಾಜ್ಯ ಉತ್ಪಾದನೆಯಾಗುತ್ತಿದ್ದು, ಈ ಯೋಜನೆಗೆ ಅಗತ್ಯ ನೆರವು ಕೊಡಿಸುವಂತೆ ಡಿ.ಕೆ.ಶಿವಕುಮಾರ್‌ ಮನವಿ ಮಾಡಿದ್ದಾರೆ.
12
+ ಈಜಿಪುರ ಒಳ ವರ್ತುಲ ರಸ್ತೆಯ ಸರ್ಜಾಪುರ ಮುಖ್ಯರಸ್ತೆಗೆ ರಕ್ಷಣಾ ಇಲಾಖೆಯ 17.50 ಎಕರೆ, ಬಾಣಸವಾಡಿಯ ರೈಲ್ವೆ ಮೇಲ್ಸೇತುವೆಗೆ 796.85 ಚ. =ಮೀ. ಭೂಮಿ ಹಾಗೂ ಬಯ್ಯಪ್ಪನಹಳ್ಳಿ ರೈಲ್ವೆ ಮೇಲ್ಸೇತುವೆಗೆ 4,454.78 ಚ.ಮೀ. ರಕ್ಷಣಾ ಭೂಮಿಯ ಅಗತ್ಯವಿದ್ದು, ಅದನ್ನು ಒದಗಿಸಿಕೊಡುವಂತೆ ಮನವಿ ಮಾಡಿದ್ದಾರೆ.
13
+ ಮೇಕೆದಾಟು ಯೋಜನೆಗೆ ಅಗತ್ಯ ಮಂಜೂರಾತಿಗೆ ಮನವಿರಾಜ್ಯ ಸರ್ಕಾರದ ಬಹುನಿರೀಕ್ಷಿತ ಮೇಕೆದಾಟು ಯೋಜನೆಗೆ ಕೇಂದ್ರ ಜಲಶಕ್ತಿ ಇಲಾಖೆಯ ಮಂತ್ರಾಲಯದ ಜಲ ಆಯೋಗದಿಂದ ಅಗತ್ಯ ಮಂಜೂರಾತಿ ಕೊಡಿಸುವಂತೆ ಜಲಸಂಪನೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.
14
+ ಕಾವೇರಿ ನ್ಯಾಯಾಧೀಕರಣ ಹಾಗೂ ಸುಪ್ರೀಂಕೋರ್ಟ್‌ನ ತೀರ್ಪಿನ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ. ಹೆಚ್ಚುವರಿಯಾಗಿರುವ ನೀರಿನ ಪೈಕಿ 57 ಟಿಎಂಸಿಯನ್ನು ಸಂಗ್ರಹಿಸಲು ಮತ್ತು 400 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆಗಾಗಿ ಮೇಕೆದಾಟುವಿಗಾಗಿ ಸಮತೋಲಿತ ಅಣೆಕಟ್��ು ನಿರ್ಮಾಣಕ್ಕೆ 2019ರ ಜನವರಿ 18 ರಂದು ಕೇಂದ್ರ ಜಲಶಕ್ತಿ ಆಯೋಗಕ್ಕೆ ವಿಸ್ತೃತ ಯೋಜನಾ ವರದಿಯನ್ನು ಸಲ್ಲಿಸಲಾಗಿದೆ. ಕೇಂದ್ರ ಜಲಶಕ್ತಿ ಆಯೋಗ ಯೋಜನೆಯನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರವಾನಿಸಿದ್ದು, 2024ರ ಫೆಬ್ರವರಿ 1 ರಂದು ನಡೆದ ಪ್ರಾಧಿಕಾರದ ಸಭೆಯಲ್ಲಿ ವಿಸ್ತೃತ ಯೋಜನಾ ವರದಿಯನ್ನು ಮತ್ತೆ ಕೇಂದ್ರ ಜಲಶಕ್ತಿ ಆಯೋಗಕ್ಕೆ ರವಾನಿಸಲಾಗಿದ್ದು, ತಾಂತ್ರಿಕ, ಆರ್ಥಿಕ ಅಂಶಗಳನ್ನು ಪರಿಶೀಲಿಸುವಂತೆ ಮನವಿ ಮಾಡಲಾಗಿದೆ.
15
+ ಈ ಹಂತದಲ್ಲಿ ಕೇಂದ್ರ ಮಧ್ಯಪ್ರವೇಶ ಮಾಡಿ ಯೋಜನೆಗೆ ಅಗತ್ಯ ಮಂಜೂರಾತಿ ಕೊಡಿಸುವಂತೆ ಡಿ.ಕೆ.ಶಿವಕುಮಾರ್‌ ಮನವಿ ಮಾಡಿದ್ದಾರೆ.ಕೃಷ್ಣ ಮೇಲ್ದಂಡೆ ನದಿ ವಿವಾದದಲ್ಲಿ ಕೃಷ್ಣ ನ್ಯಾಯಾಧಿಕರಣ ನೀಡಿರುವ ತೀರ್ಪಿನ ಅನುಸಾರ ಅಧಿಸೂಚನೆಯನ್ನು ಹೊರಡಿಸಬೇಕು. ಈ ನದಿ ಉತ್ತರ ಕರ್ನಾಟಕ ಭಾಗಕ್ಕೆ ಜೀವನದಿಯಾಗಿದೆ. ಆಲಮಟ್ಟಿ ಅಣೆಕಟ್ಟಿನಿಂದ 5.94 ಲಕ್ಷ ಹೆಕ್ಟೇರ್‌ಗೆ ನೀರು ಒದಗಿಸಲಾಗಿದೆ. ನ್ಯಾಯಾಧೀಕರಣದ ತೀರ್ಪು ಅಧಿಸೂಚನೆಯಾದರೆ ಮತ್ತಷ್ಟು ಯೋಜನೆಗಳನ್ನು ಕೈಗೊಳ್ಳಲು ಸಹಾಯವಾಗಲಿದೆ ಎಂದು ವಿವರಿಸಿದ್ದಾರೆ.
16
+ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ 367 ಸಣ್ಣ ಕೆರೆಗಳಿಗೆ ನೀರು ತುಂಬಿಸಲು ಭದ್ರಾ ಮೇಲ್ದಂಡೆಯ 29.90 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಲು ರೂಪಿಸಲಾದ ಭದ್ರಾ ಮೇಲ್ದಂಡೆ ಯೋಜನೆ ಈವರೆಗೂ 9,665 ಕೋಟಿ ರೂ. ಖರ್ಚು ಮಾಡಲಾಗಿದೆ. ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಬೇಕು. ಈ ಹಿಂದೆ ಬಜೆಟ್‌ನಲ್ಲಿ ಘೋಷಿಸಲಾದ 5,300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕು ಎಂದು ಡಿ.ಕೆ.ಶಿವಕುಮಾರ್‌ ಮನವಿ ಮಾಡಿದ್ದಾರೆ.
17
+ ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವುದಾಗಿ ಪ್ರಧಾನಿಯವರು ಭರವಸೆ ನೀಡಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.ಮಹದಾಯಿ ನದಿ ನೀರಿನ ವಿಚಾರವಾಗಿ ಪ್ರಧಾನಿಯವರ ಬಳಿ ಚರ್ಚೆ ನಡೆಸಿದ ಡಿ.ಕೆ.ಶಿವಕುಮಾರ್‌, ಕಳಸಾ ಬಂಡೂರಿ ಬಳಿ ಸಮತೋಲಿತ ಅಣೆಕಟ್ಟು ನಿರ್ಮಿಸಲು ಅನುಮತಿ ಕೊಡಿಸುವಂತೆ ಪ್ರಸ್ತಾವನೆ ಸಲ್ಲಿಸಿದ್ದಾರೆ.ರಾಷ್ಟ್ರೀಯ ನೀರು ಅಭಿವೃದ್ಧಿ ಸಂಸ್ಥೆ ಗೋದಾವರಿ, ಕಾವೇರಿ ನದಿ ಜೋಡಣೆ ಯೋಜನೆಯನ್ನು ಪ್ರಸ್ತಾಪಿಸಿದೆ.
18
+ ಇದರಿಂದ 146 ಟಿಎಂಸಿ ನೀರು ತಿರುವು ಪಡೆಯಲಿದೆ. ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ, ಪಾಂಡಿಚೇರಿ ರಾಜ್ಯಗಳ ನಡುವೆ ನದಿ ನೀರು ಹಂಚಿಕೆಯಾಗಲಿದೆ. ಈ ಯೋಜನೆ ಜಾರಿಯ ವಿಚಾರವಾಗಿ ಮಧ್ಯಪ್ರವೇಶಿಸಿ ರಾಜ್ಯಕ್ಕೆ ತನ್ನ ಪಾಲಿನ ನೀರನ್ನು ಪಡೆದುಕೊಳ್ಳಲು ಅಗತ್ಯ ನೆರವು ನೀಡುವಂತೆ ಪ್ರಧಾನಿಯವರಲ್ಲಿ ಡಿ.ಕೆ.ಶಿವಕುಮಾರ್‌ ಮನವಿ ಮಾಡಿದ್ದಾರೆ.
eesanje/url_46_57_12.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಮುಡಾ ಹಗರಣ : ಸಿಎಂ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡುವ ಸಾಧ್ಯತೆ
2
+ ಬೆಂಗಳೂರು,ಜು.31-ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದದ ಬಿರುಗಾಳಿ ಎಬ್ಬಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಚಾರಣೆ ನಡೆಸಲು ರಾಜ್ಯಪಾಲರು ಅನುಮತಿ ನೀಡುವ ಸಾಧ್ಯತೆ ಇದೆ.
3
+ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ನೀಡಿರುವ ಖಾಸಗಿ ದೂರಿನ ಆಧಾರದ ಮೇಲೆ ಕಾನೂನು ತಜ್ಞರ ಅಭಿಪ್ರಾಯ ಪಡೆದಿರುವ ರಾಜ್ಯಪಾಲ ಥಾವರ್‌ಚಂದ್‌ ಗೆಲ್ಹೋಟ್‌, ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಸಮತಿಸಿದ್ದಾರೆ ಎಂದು ತಿಳಿದುಬಂದಿದೆ.
4
+ ಭ್ರಷ್ಟಾಚಾರ ನಿರ್ಮೂಲನೆ ಕಾಯ್ದೆ 1988ರ ಸೆಕ್ಷನ್‌ 19/1 ಹಾಗೂ ಸಿಪಿಸಿ 1973ರ ಸೆಕ್ಷನ್‌ 197ರ ಅನ್ವಯ ಕ್ರಿಮಿನಲ್‌ ಮೊಕದ್ದಮೆ ದೂರು ದಾಖಲಿಸಲು ಮತ್ತು ವಿಚಾರಣೆ ನಡೆಸಲು ರಾಜ್ಯಪಾಲರು ಕಾನೂನು ತಜ್ಞರ ಸಲಹೆ ಮೇರೆಗೆ ಸಮತಿ ನೀಡುವ ಸಾಧ್ಯತೆಗಳು ಹೆಚ್ಚಾಗಿದೆ.
5
+ ಈ ಹಿಂದೆ ಅಕ್ರಮ ಡಿನೋಟಿಫಿಕೇಶನ್‌ ಸಂಬಂಧ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಅಂದಿನ ರಾಜ್ಯಪಾಲರಾದ ಹಂಸರಾಜ್‌ ಭಾರದ್ವಾಜ್‌ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು.
6
+ ವಕೀಲರಾದ ಸಿರಾಜುದ್ದೀನ್‌ ಪಾಷ ಹಾಗೂ ಬಾಲ್‌ರಾಜ್‌ ಅವರು ನೀಡಿದ ಖಾಸಗಿ ದೂರಿನ ಅನ್ವಯ ಯಡಿಯೂರಪ್ಪನವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ರಾಜ್ಯಪಾಲರು ಅನುಮತಿ ನೀಡಿದ್ದರು. ಇದನ್ನೇ ಆಧಾರವಾಗಿಟ್ಟುಕೊಂಡಿರುವ ಥಾವರ್‌ಚಂದ್‌ ಗೆಲ್ಹೋಟ್‌, ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅಸ್ತು ಎನ್ನಲಿದ್ದಾರೆ ಎಂದು ಉನ್ನತ ಮೂಲಗಳು ಖಚಿತಪಡಿಸಿವೆ.
7
+ ಮುಖ್ಯಮಂತ್ರಿ ಹಾಗೂ ಸಚಿವರ ವಿರುದ್ಧ ಪ್ರಾಸಿಕ್ಯೂಷನ್‌ ನಡೆಸಲು ರಾಜ್ಯಪಾಲರು ಅನುಮತಿ ನೀಡಬಹುದೆಂದು ಸುಪ್ರೀಂಕೋರ್ಟ್‌ನ ಐದು ಮಂದಿ ಸದಸ್ಯರ ಸಾಂವಿಧಾನಿಕ ಪೀಠ ಐತಿಹಾಸಿಕ ತೀರ್ಪು ನೀಡಿತ್ತು.ಕರ್ನಾಟಕದವರೇ ಆದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಹಾಗೂ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳೂ ಆಗಿದ್ದ ಸಂತೋಷ್‌ ಹೆಗ್ಡೆ ಅವರು ಸಾಂವಿಧಾನಿಕ ಪೀಠದ ಮುಖ್ಯಸ್ಥರಾಗಿದ್ದರು ಎಂಬುದು ಉಲೇಖಾರ್ಹ.
8
+ ಮಧ್ಯಪ್ರದೇಶದ ಇಂದೂರ್‌ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕಾನೂನು ಬಾಹಿರವಾಗಿ ಮಂಜೂರಾತಿ ಜಮೀನನ್ನು ನೀಡಿದ ಪ್ರಕರಣ ಸಂಬಂಧ ಇಬ್ಬರ ಸಚಿವರ ವಿರುದ್ಧ ಪ್ರಾಸಿಕ್ಯೂಷನ್‌ ನಡೆಸಲು ರಾಜ್ಯಪಾಲರು ಮುಖ್ಯಮಂತ್ರಿ ಇಲ್ಲವೇ ಸಚಿವರ ವಿರುದ್ಧ ಮೊಕದ್ದಮೆ ದಾಖಲಿಸಲು ಕಾನೂನಿನಲ್ಲಿ ಅವಕಾಶವಿದೆ ಎಂಬುದು ಈ ತೀರ್ಪಿನ ಸಾರಾಂಶವಾಗಿತ್ತು.
9
+ ಅಲ್ಲದೆ ಈ ಹಿಂದೆ ಅಕ್ರಮ ಆಸ್ತಿ ಸಂಪಾದನೆ ಕುರಿತು ಬಿಜೆಪಿ ರಾಜ್ಯಸಭಾ ಸದಸ್ಯರಾಗಿದ್ದ ಸುಬ್ರಹಣ್ಯ ಸ್ವಾ���ಿ ಅವರು ಸಲ್ಲಿಸಿದ್ದ ದೂರಿನ ಮೇರೆಗೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧವೂ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ರಾಜ್ಯಪಾಲ ಚೆನ್ನಾರೆಡ್ಡಿ ಅನುಮೋದನೆ ನೀಡಿದ್ದರು.
10
+ ರಾಜ್ಯಪಾಲರ ಈ ಕ್ರಮವನ್ನು ಮದ್ರಾಸ್‌‍ ಹೈಕೋರ್ಟ್‌ ಮತ್ತು ಸುಪ್ರಿಂಕೋರ್ಟ್‌ ಕೂಡ ಎತ್ತಿ ಹಿಡಿದಿತ್ತು. ಈ ಎಲ್ಲವನ್ನೂ ಕೂಲಂಕುಷವಾಗಿ ಅಧ್ಯಯನ ನಡೆಸಿರುವ ಥಾವರ್‌ ಚಂದ್‌ ಗೆಲ್ಹೋಟ್‌, ಮುಡಾ ಪ್ರಕರಣದಲ್ಲಿ ವಿಚಾರಣೆಗೆ ಅನುಮತಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
11
+ ಸಂಪುಟ ನಿರ್ಣಯ ತಿರಸ್ಕಾರ:ಈ ಹಿಂದೆ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಕೊಡಬಾರದೆಂದು ಅಂದು ಸಚಿವ ಸಂಪುಟ ಸಭೆಯಲ್ಲಿ ಒಂದು ಸಾಲಿನ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಸಂಪುಟದ ತೀರ್ಮಾನವನ್ನು ರಾಜ್ಯಪಾಲರಾಗಿದ್ದ ಹಂಸರಾಜ್‌ ಭಾರದ್ವಾಜ್‌ ಸಾರಸಗಟಾಗಿ ತಿರಸ್ಕರಿಸಿ ಪ್ರಾಸಿಕ್ಯೂಷನ್‌ಗೆ ಸಮತಿಸಿದ್ದರು.ಒಂದು ವೇಳೆ ಗುರುವಾರ ನಡೆಯುವ ಸಚಿವ ಸಂಪುಟದ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಂಡರೆ ರಾಜ್ಯಪಾಲರ ತೀರ್ಮಾನ ಏನೆಂಬುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.
12
+ ಸಂಪುಟದ ತೀರ್ಮಾನವನ್ನು ರಾಜ್ಯಪಾಲರು ತಮ ವಿವೇಚನೆಯಡಿ ಒಪ್ಪುವುದು ಇಲ್ಲವೇ ತಿರಸ್ಕರಿಸುವುದು ಅವರ ವಿವೇಚನೆಗೆ ಬಿಟ್ಟಿದ್ದು ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿತ್ತು. ರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ ಎಂಬುದು ರಾಜ್ಯಪಾಲರಿಗೆ ಮನವರಿಕೆಯಾದರೆ ಸಿಬಿಐ ಸೇರಿದಂತೆ ಕೇಂದ್ರದ ಯಾವುದಾದರೂ ತನಿಖಾ ಸಂಸ್ಥೆಯೂ ತನಿಖೆ ನಡೆಸಲು ಶಿಫಾರಸ್ಸು ಮಾಡುವ ಸಂಭವವೂ ಇದೆ.
eesanje/url_46_57_2.txt ADDED
@@ -0,0 +1,7 @@
 
 
 
 
 
 
 
 
1
+ ನೆರೆ ಪರಿಹಾರ ಪಡೆಯಲು ನಿರಾಕರಿಸಿದ್ದ ರೈತರ ಮನವೊಲಿಸಿದ ಸಚಿವ ಗುಂಡೂರಾವ್‌
2
+ ಬೆಂಗಳೂರು, ಆ.2-ಭಾರೀ ಮಳೆ ಹಾಗೂ ಪ್ರವಾಹದಿಂದ ತೋಟ, ಗದ್ದೆಗಳು ಮುಳುಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಅದ್ಯಪಾಡಿ ಸುತ್ತಮುತ್ತಲ ಗ್ರಾಮಗಳ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರವ್‌ ಸೂಚನೆ ನೀಡಿದ್ದಾರೆ.
3
+ ಅದ್ಯಪಾಡಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಸಂದರ್ಭದಲ್ಲಿ ಅಕ್ಕ ಪಕ್ಕದ ಗ್ರಾಮಗಳು ಜಲಾವೃತವಾಗಿರುವುದನ್ನು ಸ್ಥಳೀಯ ನಿವಾಸಿಗಳು ಸಚಿವರ ಗಮನಕ್ಕೆ ತಂದರು. ಪ್ರತಿ ವರ್ಷ ಅದ್ಯಪಾಡಿಯಲ್ಲಿ ಫಾಲ್ಗುಣಿ ನದಿಯ ನೆರೆ ಪ್ರವಾಹದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.
4
+ ಅದ್ಯಪಾಡಿಯ ಅಕ್ಕ ಪಕ್ಕದ ಹಳ್ಳಿಗಳಿಗೆ ಫಾಲ್ಗುಣಿ ನದಿ ನೆರೆ ಹಾವಳಿ ತಡೆಯಲು, ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಜ್ಞರಿಂದ ವರದಿ ಪಡೆದು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದ್ದಾರೆ.
5
+ ಇದೇ ವೇಳೆ ನೆರೆ ಪರಿಹಾರ ಪಡೆಯಲು ನಿರಾಕರಿಸಿದ ಅದ್ಯಪಾಡಿ ರೈತರ ಮನವೊಲಿಸಿದ ಸಚಿವರು, ನೆರೆ ಪರಿಹಾರಕ್ಕೂ ಶಾಶ್ವತ ಪರಿಹಾರಕ್ಕೂ ಸಂಬಂಧವಿಲ್ಲ. ನೆರೆ ಪರಿಹಾರ ಪಡೆದರೆ ಶಾಶ್ವತ ಪರಿಹಾರ ಆಗಲ್ಲ ಎಂಬ ಭಾವನೆ ಬೇಡ.
6
+ ಒಂದಕ್ಕೂಂದು ಸಂಬಂಧ ಕಲ್ಪಿಸುವ ಅಗತ್ಯವಿಲ್ಲ. ಭತ್ತದ ಗದ್ದೆ, ತೋಟ ಮುಳುಗಡೆಯಿಂದ ನಷ್ಟ ಅನುಭವಿಸಿರುವುದಕ್ಕೆ ಸರ್ಕಾರದಿಂದ ಸಿಗುವ ನೆರೆ ಪರಿಹಾರ ಪಡೆಯಿರಿ. ಫಾಲ್ಗುಣಿ ನದಿಯಿಂದಾಗುವ ನೆರೆ ಹಾವಳಿ ತಡೆಯುವ ಶಾಶ್ವತ ಪರಿಹಾರ ಒದಸುವ ಜವಾಬ್ದಾರಿ ನಮಗೆ ಬಿಡಿ ಎಂದು ರೈತರಲ್ಲಿ ಮನವಿ ಮಾಡಿದರು.
7
+ ಸಚಿವರ ಮನವಿಗೆ ಒಪ್ಪಿಗೆ ಸೂಚಿಸಿ ಪರಿಹಾರ ಪಡೆಯುವುದಾಗಿ ಸ್ಥಳೀಯ ನಿವಾಸಿಗಳು ಸಚಿವರಿಗೆ ತಿಳಿಸಿದರು. ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಕಳೆದ 11 ವರ್ಷದಿಂದ ನೆರೆ ಪರಿಹಾರವನ್ನು ಅದ್ಯಪಾಡಿ ನಿವಾಸಿಗಳು ತಿರಸ್ಕರಿಸುತ್ತಾ ಬಂದಿದ್ದರು.
eesanje/url_46_57_3.txt ADDED
@@ -0,0 +1,6 @@
 
 
 
 
 
 
 
1
+ ಸಿಎಂ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರು ಅನುಮತಿ ನೀಡಿದರೆ ಕಾನೂನು ಹೋರಾಟ : ಪ್ರಿಯಾಂಕ್‌ ಖರ್ಗೆ
2
+ ಬೆಂಗಳೂರು,ಆ.1-ರಾಜ್ಯಪಾಲರು ಮುಖ್ಯಮಂತ್ರಿಯವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿದ್ದೇ ಆದರೆ ರಾಜ್ಯ ಸರ್ಕಾರ ಕಾನೂನಾತಕ ಹೋರಾಟವನ್ನು ಮುಂದುವರೆಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನದಲ್ಲಿ ರಾಜ್ಯಪಾಲರ ನಡವಳಿಕೆ ಸೇರಿದಂತೆ ಕಾರ್ಯವಿಧಾನಗಳಿಗೆ ಸ್ಪಷ್ಟವಾದ ನಿಯಮಾವಳಿಗಳಿವೆ. ಸಂಪುಟದ ಸಚಿವರ ಸಲಹೆ ಆಧರಿಸಿ ರಾಜ್ಯಪಾಲರು ನಡೆದುಕೊಳ್ಳಬೇಕು. ಆದರೆ ಪ್ರಸ್ತುತ ಬೆಳವಣಿಗೆಯಲ್ಲಿ ರಾಜ್ಯಪಾಲರು ನಡೆದುಕೊಳ್ಳುವ ರೀತಿ ಅನುಮಾನಗಳಿಗೆ ಕಾರಣವಾಗಿದೆ ಎಂದು ಹೇಳಿದರು.
4
+ ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ ರಾಜ್ಯಪಾಲರನ್ನು ಭೇಟಿ ಮಾಡಿ ಸುದೀರ್ಘ ವಿವರಣೆ ನೀಡಿದ್ದಾರೆ. ದಾಖಲಾತಿಗಳನ್ನು ಸಲ್ಲಿಸಿದ್ದಾರೆ.ಅದರ ಬಳಿಕ ಕೂಡ ರಾಜ್ಯಪಾಲರು ನೋಟಿಸ್‌‍ ನೀಡಿರುವುದು ಪ್ರಶ್ನಾರ್ಹವಾಗಿದೆ. ಎಲ್ಲಿಂದ?, ಯಾರ ಮೂಲಕ ಸ್ಕ್ರಿಪ್ಟ್ ಗಳು ಬರುತ್ತಿವೆ ಎಂಬುದು ಪ್ರಶ್ನಾರ್ಹ. ಈ ಹಿಂದೆ ತಮಿಳುನಾಡು, ಪಶ್ಚಿಮಬಂಗಾಳ ಹಾಗೂ ದೆಹಲಿಯಲ್ಲಿ ರಾಜ್ಯಪಾಲರು ಲೆಫ್ಟಿನೆಂಟ್‌ ಜನರಲ್‌ರವರು ನಡೆದುಕೊಂಡಿರುವುದು ನಮ ಕಣ್ಣೆದುರಿಗೇ ಇದೆ.
5
+ ಜನಾಭಿಪ್ರಾಯ ಪಡೆದು ಸರ್ಕಾರವನ್ನು ಅಸ್ತಿರಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆಕ್ಷೇಪಿಸಿದರು. ರಾಜ್ಯಪಾಲರು ನೀಡಿರುವ ನೋಟಿಸ್‌‍ಗೆ ಸರ್ಕಾರ ಉತ್ತರ ನೀಡಲಿದೆ. ಅದನ್ನು ಮೀರಿ ಅಭಿಯೋಜನೆಗೆ ಅನುಮತಿ ನೀಡಿದರೆ ಕಾನೂನು ಹೋರಾಟ ಮುಂದುವರೆಸಲಾಗುವುದು.
6
+ ರಾಜ್ಯಪಾಲರ ಕಾರ್ಯವಿಧಾನ ಹಾಗೂ ನಡವಳಿಕೆಗಳ ಬಗ್ಗೆ ಈಗಾಗಲೇ ಸುಪ್ರೀಂಕೋರ್ಟ್‌ನ 5 ನ್ಯಾಯಮೂರ್ತಿಗಳ, 7 ನ್ಯಾಯಮೂರ್ತಿಗಳ ಪೀಠಗಳು ಪ್ರತ್ಯೇಕ ತೀರ್ಪು ನೀಡಿವೆ ಎಂದು ತಿಳಿಸಿದರು. ನಿನ್ನೆ ರಾತ್ರಿ ಮುಖ್ಯಮಂತ್ರಿಯವರು ನಡೆಸಿರುವ ಸಚಿವರ ಸಭೆಯ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಆದರೆ ನೋಟೀಸ್‌‍ ವಿಚಾರವಾಗಿ ಸಚಿವರ ಸಲಹೆ ಪಡೆಯುವುದು ಸಹಜ ಎಂದು ಹೇಳಿದರು.
eesanje/url_46_57_4.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಜೆಡಿಎಸ್ “ಬ್ಲಾಕ್‌ಮೇಲ್‌”ಗೆ ಬಗ್ಗದೆ ಪಾದಯಾತ್ರೆ ನಡೆಸುವಂತೆ ಬಿಜೆಪಿ ವರಿಷ್ಠರ ಸೂಚನೆ
2
+ ಬೆಂಗಳೂರು,ಆ.1-ಜೆಡಿಎಸ್ನ ಯಾವುದೇ ಬ್ಲಾಕ್ಮೇಲ್ಗೆ ಬಗ್ಗದೇ ಈಗಾಗಲೇ ನಿಗದಿ ಯಾಗಿರುವಂತೆ ಬೆಂಗಳೂ ರಿನಿಂದ ಮೈಸೂರುವರೆಗೆ ನಡೆಸಲು ಉದ್ದೇಶಿಸಿರುವ ಪಾದಯಾತ್ರೆಯನ್ನು ಮುಂದುವರೆಸಬೇಕೆಂದು ಕೇಂದ್ರ ಬಿಜೆಪಿ ವರಿಷ್ಠರು ರಾಜ್ಯಘಟಕಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೇಂದ್ರ ಸಚಿವರೂ ಆಗಿರುವ ಜೆಡಿಎಸ್ನ ಎಚ್.ಡಿ.ಕುಮಾರಸ್ವಾಮಿಯವರ ಹೇಳಿಕೆಗೆ ತಲೆಕೆಡಿಸಿಕೊಳ್ಳದೆ.
3
+ ಈಗಾಗಲೇ ತೀರ್ಮಾನಿಸಿರುವಂತೆ ಆ.3ರಿಂದ (ಶನಿವಾರ) ಮೈಸೂರುವರೆಗೆ ಪಾದಯಾತ್ರೆಯನ್ನು ನಡೆಸಿ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭ್ರಷ್ಟಾಚಾರವನ್ನು ಜನರಿಗೆ ಮನವರಿಕೆ ಮಾಡುವಂತೆ ಸೂಚನೆ ಕೊಡಲಾಗಿದೆ.
4
+ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿರುವ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಪಾದಯಾತ್ರೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಬೇಕೆಂದು ತಾಕೀತು ಮಾಡಿದ್ದಾರೆ.
5
+ ಜೆಡಿಎಸ್ ಪಾದಯಾತ್ರೆಗೆ ಏಕೆ ವಿರೋಧಪಡಿಸುತ್ತದೆ ಎಂಬುದು ನಮಗೆ ಗೊತ್ತಿದೆ. ಇದರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ. ಅವರು ಕೈಜೋಡಿಸಿದರೆ ಜೋಡಿಸಲಿ, ಇಲ್ಲದಿದ್ದರೆ ಬಿಡಲಿ, ಅವರ ನೈತಿಕ ಬೆಂಬಲವನ್ನೂ ನಿರೀಕ್ಷಿಸದೇ ಬಿಜೆಪಿ ವತಿಯಿಂದಲೇ ಪಾದಯಾತ್ರೆಯನ್ನು ಆಯೋಜಿಸಬೇಕೆಂದು ಅಮಿತ್ ಶಾ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.
6
+ ಒಂದು ಬಾರಿ ನಾವು ಜೆಡಿಎಸ್ನ ಒತ್ತಡಕ್ಕೆ ಮಣಿದು ಬಗ್ಗಿದರೆ ಭವಿಷ್ಯದಲ್ಲಿ ಇದೇ ತಂತ್ರವನ್ನು ಅನುಸರಿಸುತ್ತಾರೆ. ಪಾದಯಾತ್ರೆ ಯಶಸ್ವಿಯಾದರೆ ಅದು ನೇರವಾಗಿ ಜೆಡಿಎಸ್ನ ಅಸ್ತಿತ್ವಕ್ಕೆ ಧಕ್ಕೆ ಬರಲಿದೆ ಎಂಬುದು ಕುಮಾರಸ್ವಾಮಿಯವರ ಆತಂಕ.
7
+ ನಾವು ಒಂದು ರಾಷ್ಟ್ರೀಯ ಪಕ್ಷದವರಾಗಿ ನಮ ಗುರಿ ಏನಿದೆಯೋ ಅದನ್ನು ತಲುಪೋಣ. ಇಲ್ಲಿ ಪ್ರೀತಂಗೌಡ ಅವರ ಹೆಸರನ್ನು ಅನಗತ್ಯವಾಗಿ ಕುಮಾರಸ್ವಾಮಿ ಪ್ರಸ್ತಾಪಿಸಿದ್ದಾರೆ. ಇದರ ಮೂಲ ಕಾರಣ ಏನೆಂಬುದನ್ನು ನಾನು ಅರಿತಿದ್ದೇನೆ. ನಾಳೆ ಅವರನ್ನು ಪಕ್ಷದಿಂದ ಹೊರಹಾಕಿ ಎಂದು ಕುಮಾರಸ್ವಾಮಿ ಹೇಳಿದರೆ ಹಾಗೆ ಮಾಡಲು ಸಾಧ್ಯವೇ ಎಂದು ಅಮಿತ್ ಶಾ ಅವರು ವಿಜಯೇಂದ್ರರಿಗೆ ಪ್ರಶ್ನಿಸಿದ್ದಾರೆ.
8
+ ಸದ್ಯದಲ್ಲಿ ನಡೆಯಲಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕ್ಷೇತ್ರವನ್ನು ಬಿಜೆಪಿಯವರಿಗೆ ಬಿಟ್ಟುಕೊಡಲು ಮೀನಾಮೇಷ ಎಣಿಸುತ್ತಿರುವ ಕುಮಾರಸ್ವಾಮಿಯವರು ಪ್ರೀತಂಗೌಡ ಅವರ ಹೆಸರನ್ನು ಎಳೆದುತಂದಿದ್ದಾರೆ. ಅವರ ರಾಜಕೀಯ ಮರ್ಮವನ್ನು ಅರ್ಥ ಮಾಡಿಕೊಳ್ಳದಷ್ಟು ದಡ್ಡರು ಬಿಜೆಪಿಯಲ್ಲಿಲ್ಲ. ಅಷ್ಟಕ್ಕೂ ನಾವೇನೂ ಪಾದಯಾತ್ರೆಗೆ ಬೆಂಬಲ ಕೊಡಬೇಕೆಂದು ಜೆಡಿಎಸ್ನವರಿಂದ ನಿರೀಕ್ಷೆ ಮಾಡಿಲ್ಲ. ಕೊಡುವುದು, ಬಿಡುವುದು ಅವರಿಗೆ ಬಿಟ್ಟಿದ್ದು. ಪಾದಯಾತ್ರೆ ನಡೆಸಿಯೇ ತೀರಬೇಕೆಂದು ಹೇಳಿದ್ದಾರೆ.
9
+ ಮುಡಾ ಮತ್ತು ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣವು ಕಾಂಗ್ರೆಸ್ ಸರ್ಕಾರಕ್ಕೆ ಸಾಕಷ್ಟು ಹಾನಿಯುಂಟು ಮಾಡಿದೆ. ಇದನ್ನು ನಾವು ರಾಜಕೀಯವಾಗಿ ಬಳಸಿಕೊಳ್ಳಬೇಕು. ಸಿದ್ದರಾಮಯ್ಯ ಸರ್ಕಾರದ ಒಂದೊಂದು ಹಗರಣಗಳನ್ನು ಜನತೆಯ ಮುಂದೆ ಇಡಿ ಎಂದು ಅಮಿತ್ ಶಾ ಸೂಚಿಸಿರುವುದಾಗಿ ತಿಳಿದುಬಂದಿದೆ.
10
+ ಪಕ್ಷದ ವರಿಷ್ಠರಿಂದ ಸೂಚನೆ ಸಿಕ್ಕ ಬೆನ್ನಲ್ಲೇ ವಿಜಯೇಂದ್ರ ಪಾದಯಾತ್ರೆ ನಡೆಸಲು ರೂಪುರೇಷೆಗಳನ್ನು ಸಿದ್ಧಪಡಿಸಿದ್ದಾರೆ.ಸಮಾರೋಪ ಸಮಾರಂಭಕ್ಕೆ ಜೆ.ಪಿ.ನಡ್ಡಾ, ಅಮಿತ್ ಶಾ ಆಗಮಿಸಲಿದ್ದು, ಮೈಸೂರಿನ ಹೊರವಲಯದಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರನ್ನು ಸೇರಿಸಲು ಉದ್ದೇಶಿಲಾಗಿದೆ.
eesanje/url_46_57_5.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಅನ್ನಭಾಗ್ಯ ಯೋಜನೆಗೆ ಕೇಂದ್ರದಿಂದ ಅಕ್ಕಿ ನೀಡಲು ಸಿದ್ಧ : ಪ್ರಹ್ಲಾದ್ ಜೋಷಿ
2
+ ನವದೆಹಲಿ,ಆ.1-ಕರ್ನಾಟಕ ಸರ್ಕಾರ ಅನ್ನ ಭಾಗ್ಯ ಯೋಜನೆಗೆ ಅಕ್ಕಿಯನ್ನು ಕೇಳಿದರೆ ಕೇಂದ್ರ ಸರ್ಕಾರ ಅಕ್ಕಿಯನ್ನು ಕೊಡಲು ಸಿದ್ಧವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮಾಹಿತಿ ನೀಡಿದ್ದಾರೆ.ಈ ಕುರಿತು ನವದೆಹಲಿ ಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯಕ್ಕೆ ಅಕ್ಕಿ ಕೊಡಲು ಕೇಂದ್ರ ಸಿದ್ಧವಿದೆ. ಮನವಿ ಬಂದರೆ ಹೆಚ್ಚುವರಿ ಅಕ್ಕಿ ಕೊಡಲಿದ್ದೇವೆ. ಕೆಜಿಗೆ 28 ರೂ.ನಂತೆ ನಾವು ಅಕ್ಕಿ ಕೊಡಲು ಸಿದ್ಧರಿದ್ದೇವೆ.ಎಷ್ಟು ಬೇಕಾದರೂ ಅಕ್ಕಿ ಕೊಡಲಿದ್ದೇವೆ ಎಂದು ಹೇಳಿದ್ದಾರೆ.
3
+ ಕರ್ನಾಟಕ ಮಾತ್ರವಲ್ಲದೆ, ಯಾವುದೇ ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಅಕ್ಕಿಯನ್ನು ಕೇಳಿದರೆ ಕೇಂದ್ರ ಸರ್ಕಾರವು ಅಕ್ಕಿಯನ್ನು ಕೊಡಲಿ ಸಿದ್ಧವಿದೆ. ಇನ್ನು ಕಳೆದ ವರ್ಷ ಕರ್ನಾಟಕ ಸರ್ಕಾರ ಅಕ್ಕಿಯನ್ನು ಕೇಳಿದಾಗ ದೇಶದಾದ್ಯಂತ ಬರಗಾಲದ ಪರಿಸ್ಥಿತಿ ಇತ್ತು.
4
+ ಹೀಗಾಗಿ, ಕರ್ನಾಟಕದ ಮಾದರಿಯಲ್ಲಿಯೇ ಎಲ್ಲಾ ರಾಜ್ಯಗಳು ಅಕ್ಕಿಯನ್ನು ಕೇಳಿದರೆ ಸ್ಟಾಕ್ ಸಮಸ್ಯೆ ಆಗಬಹುದು ಎಂದು ಅಕ್ಕಿಯನ್ನು ಕೊಡದಿರಲು ತೀರ್ಮಾನ ಮಾಡಲಾಗಿತ್ತು ಎಂದು ಕೇಂದ್ರದ ನಿರ್ಧಾರವನ್ನು ಸಮರ್ಥನೆ ಮಾಡಿಕೊಂಡರು.
5
+ ಆದರೆ, ಈಗ ದೇಶದಲ್ಲಿ ಉತ್ತಮ ಮಳೆಯಾಗಿದ್ದು, ಎಲ್ಲೆಡೆ ಉತ್ತಮ ಬೆಳೆಯನ್ನು ನಿರೀಕ್ಷೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ರಾಜ್ಯಗಳು ಅಕ್ಕಿಯನ್ನು ಕೇಳಿದರೆ 28 ರುಪಾಯಿ ದರದಲ್ಲಿ ನಾವು ಅಕ್ಕಿ ಕೊಡಲು ಸಿದ್ಧರಿದ್ದೇವೆ. ಈಗ ಸದಸ್ಯಕ್ಕೆ ಯಾವುದೇ ರಾಜ್ಯದಿಂದ ಅಕ್ಕಿ ಬೇಕೆಂದು ಮನವಿ ಬಂದಿಲ್ಲ. ದೇಶದಲ್ಲಿ ನಾವು 80 ಕೋಟಿ ಜನರಿಗೆ ಪಡಿತರ ಮೂಲಕ ಅಕ್ಕಿ ಕೊಡ್ತಿವಿ. ರಾಜ್ಯಗಳು ಹರಾಜಿಗೂ ಭಾಗಿಯಾಗದೇ ನೇರವಾಗಿ 28 ರೂ. ಕೊಡ್ತಿವಿ. ರಾಜ್ಯದಿಂದ ಈತನಕ ಯಾವುದೇ ಬೇಡಿಕೆ ಬಂದಿಲ್ಲ ಎಂದು ಮಾಹಿತಿ ನೀಡಿದರು.
6
+ ಈ ಹಿಂದೆ ರಾಜ್ಯಕ್ಕೆ ಅಕ್ಕಿ ಕೊಡಲು ಕೇಂದ್ರ ಸುತರಾಂ ಒಪ್ಪಿರಲಿಲ್ಲ. ಇರುವ ಸ್ಟಾಕ್ನ್ನೆಲ್ಲ ರಾಜ್ಯಕ್ಕೆ ಮಾರಾಟ ಮಾಡಿ ಖಾಲಿ ಮಾಡಿದರೆ ತುರ್ತು ಸಂದರ್ಭಗಳಲ್ಲಿ ವಿತರಣೆ ಮಾಡಲು ಕಷ್ಟ ಎಂಬುದು ಕೇಂದ್ರದ ವಾದವಾಗಿತ್ತು.ಅಕ್ಕಿ ನೀಡುವಂತೆ ಕರ್ನಾಟಕ ಸರ್ಕಾರ ಹಲವು ಬಾರಿ ಕೇಂದ್ರಕ್ಕೆ ಮನವಿ ಮಾಡಿತ್ತು. ರಾಜ್ಯದಿಂದ ಸಚಿವ ಕೆ.ಹೆಚ್.ಮುನಿಯಪ್ಪ ಖುದ್ದು ದೆಹಲಿಗೆ ಬೇಟಿ ಮಾಡಿ ಕೇಂದ್ರ ಸಚಿವರ ಜತೆ ಮಾತುಕತೆಯನ್ನೂ ನಡೆಸಿದ್ದರು. ಆದರೆ, ಪ್ರಯೋಜನವಾಗಿರಲಿಲ್ಲ.
7
+ ಪಾದಯಾತ್ರೆ ವಿಚಾರದ ಬಗ್ಗೆ ಮಾತನಾಡಿ, ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಮಾತುಕೆ ಮಾಡಲಾಗುವುದು. ಬಿಜೆಪಿ ಪಾದಯಾತ್ರೆ ನಡೆಯುತ್ತದೆ. ಅವರು ಹಾಗೂ ನಾವು ಪಾದಯಾತ್ರೆಯಲ್ಲಿ ಭಾಗವಹಿಸುತ್ತೇವೆ. ಪಾದಯಾತ್ರೆ ಬಗ್ಗೆ ಬಿಜೆಪಿ ಅವರು ಅಪಸ್ವರ ಹಿನ್ನೆಲೆಯಲ್ಲಿ ಅವರ ಜೊತೆಯೂ ನಮ ನಾಯಕರು ಮಾತುಕತೆ ನಡೆಸುತ್ತಾರೆ. ಪಕ್ಷದ ನಾಯಕರಾದ ಬಸನಗೌಡ ���ಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಜೊತೆಯೂ ಮಾತನಾಡುತ್ತವೆ ಎಂದು ತಿಳಿಸಿದ್ದಾರೆ.
8
+ ವಾಲೀಕಿ ಹಗರಣ ವಿಚಾರದ ಬಗ್ಗೆ ಮಾತನಾಡಿದ ಜೋಶಿ ಅವರು, ರಾಜ್ಯಪಾಲರು ಸಂವಿಧಾನಾತಕ ವ್ಯಕ್ತಿಯಾಗಿದ್ದಾರೆ. ಅವರ ಬಗ್ಗೆ ಯಾಕೆ ಇವರಿಗೆ ಭಯ. ಮುಡಾ ಅಧಿಕಾರಿ ಚಂದ್ರಶೇಖರ್ ಡೆತ್ ನೋಟ್ ಬರೆಯದೇ ಇದ್ದಿದ್ದರೆ ಈ ಅವ್ಯವಹಾರ ಹೊರಗಡೆ ಬರುತ್ತಿಲ್ಲ. ನೀವು ಭ್ರಷ್ಟಾಚಾರ, ಹಗರಣ ಮಾಡಿದ್ದೀರಿ.
9
+ ಸಿದ್ದರಾಮಯ್ಯ ಅವರು ಮುಖಚರ್ಯೆ ನೋಡಿ. ಭಯಗ್ರಸ್ಥರಾಗಿ ಈ ರೀತಿಯಾಗಿ ಹೇಳಿಕೆ ನೀಡುತ್ತಿದ್ದಾರೆ. ಮೂಡಾ ಹಗರಣ- ದಾಖಲೆಗಳು ಅವರ ಪಕ್ಷದ ನಾಯಕರೇ ಕೊಟ್ಟಿದ್ದಾರೆ. 19 ಹಗರಣಗಳ ಪಟ್ಟಿಯ ಎಲ್ಲ ವಿವರಗಳನ್ನು ಮನೆ ಮನೆಗೆ ಹಂಚುತ್ತಾರೆ. ಯಾಕೆ ಹಂಚುತ್ತೀರಿ.. ನಿಮದೇ ಸರ್ಕಾರ ಇದೆ. ತನಿಖೆ ಮಾಡಿ.
10
+ ಎಲ್ಲರನ್ನು ಹೆದರಿಸಿ ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಸಾಧ್ಯವಿಲ್ಲ. ಅಹಿಂದ ಇರಲಿ ಅಥವಾ ಬೇರೆ ಯಾವುದೇ ಸಮುದಾಯದ ನಾಯಕ ಇರಲಿ. ಭ್ರಷ್ಟಾಚಾರ ಮಾಡಿ, ತನಿಖೆ ಮಾಡುವುದು ಬೇಡ ಎಂದರೆ ಹೇಗೆ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಆಕೋಶ ವ್ಯಕ್ತಪಡಿಸಿದ್ದಾರೆ.
11
+ ಅಕ್ರಮ ನಡೆದಿರುವ ಬಗ್ಗೆ ಸಿಎಂ ಒಪ್ಪಿಕೊಂಡಿದ್ದಾರೆ. ಹಿಂದೆ ನಾನು 100 ಪರ್ಸೆಂಟ್ ಸರ್ಕಾರದ ಎಂದ್ದೆಿ. ಬಹಳ ಅಂದರೆ, 70-80 ಪರ್ಸೆಂಟ್ ಎಂದು ರಿಯಾಯಿತಿ ಕೊಡಬಹುದು. ಹಿಂದೆ ರಾಜ್ಯಪಾಲರನ್ನು ಕಾಂಗ್ರೆಸ್ ನಾಯಕರು ಹೊಗಳಿದ್ದರು. ಈಗ ಯಾಕೆ ತೆಗಳುತ್ತಿದ್ದಾರೆ? ಬಿಜೆಪಿ ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡಲಿ, ಸರ್ಕಾರ ಅವರದ್ದೇ ಇದೆ. ನಮನ್ನು ಹೆದರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹಗರಣ ಇದ್ದಿದ್ದರೆ ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡುತ್ತಿದ್ದರೇ? ನಮ ರಾಜ್ಯ ಅಧ್ಯಕ್ಷರು ತನಿಖೆ ಮಾಡಿ ಎಂದು ಸವಾಲು ಹಾಕಿದ್ದಾರೆ ಎಂದು ಜೋಶಿ ಹೇಳಿದರು.
eesanje/url_46_57_6.txt ADDED
@@ -0,0 +1,8 @@
 
 
 
 
 
 
 
 
 
1
+ ರಾಜ್ಯಪಾಲರ ನೋಟಿಸ್ ಎದುರಿಸಲು ತಂತ್ರಗಾರಿಕೆ ಶುರು, ಒತ್ತಡದಲ್ಲಿ ಸಿಎಂ ಸಿದ್ದು
2
+ ಬೆಂಗಳೂರು,ಆ.1-ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೋಟಿಸ್ ನೀಡುತ್ತಿದ್ದಂತೆ ಅಲರ್ಟ್ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಾತ್ಮಕವಾಗಿ ನಾನಾ ರೀತಿಯ ತಂತ್ರಗಾರಿಕೆಗಳನ್ನು ಅನುಸರಿಸಲಾರಂಭಿಸಿದ್ದಾರೆ.
3
+ ನಿನ್ನೆ ರಾತ್ರಿ ಆಪ್ತಸಚಿವರ ಜೊತೆ ಕೆ.ಜೆ.ಜಾರ್ಜ್ ಅವರ ಮನೆಯಲ್ಲಿರಹಸ್ಯ ಸಭೆ ನಡೆಸಿ ಚರ್ಚೆ ನಡೆಸಿದ್ದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಇಂದು ಬೆಳಿಗ್ಗೆ ಸಂಪುಟದ ಬಹುತೇಕ ಸಚಿವರೊಂದಿಗೆ ಉಪಾಹಾರ ಕೂಟ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ.ಒಂದು ವೇಳೆ ರಾಜ್ಯಪಾಲರು ಅಭಿ ಯೋಜನೆಗೆ ಅನುಮತಿ ನೀಡಿದರೆ ಅನುಸರಿ ಸಬಹುದಾದ ಕಾನೂನಾತಕ ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ.
4
+ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿದ್ದರಾಮಯ್ಯನವರು ರಾಜ್ಯಪಾಲರನ್ನು ಭೇಟಿ ಮಾಡಿ ವಿವರಣೆ ನೀಡಿದ್ದು, ದಾಖಲಾತಿಗಳನ್ನು ಕೂಡ ಸಲ್ಲಿಸಿದ್ದಾರೆ. ಅದರ ಹೊರತಾಗಿಯೂ ಖಾಸಗಿ ವ್ಯಕ್ತಿ ಅಬ್ರಹಾಂ ಹಾಗೂ ಬಿಜೆಪಿ ನೀಡಿದ ದೂರು ಆಧರಿಸಿ ರಾಜ್ಯಪಾಲರು ನೋಟಿಸ್ ನೀಡಿರುವುದು ಪರಿಸ್ಥಿತಿಯನ್ನು ಬಿಗಿಗೊಳಿಸಿದೆ. ಮುಖ್ಯಮಂತ್ರಿಯವರು ರಾಜಕೀಯ ಒತ್ತಡಕ್ಕೆ ಸಿಲುಕಿದ್ದಾರೆ.
5
+ ರಾಜ್ಯಪಾಲರ ನೋಟಿಸ್ಗೆ ಇಂದು ಉಪಹಾರ ಕೂಟದಲ್ಲಿ ತೀವ್ರ ಆಕ್ರೋಶಗಳು ವ್ಯಕ್ತವಾಗಿವೆ. ಕೇಂದ್ರದ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಹಾಗೂ ಕೆಲವು ರಾಜ್ಯದ ಪ್ರಮುಖ ನಾಯಕರು ಷಡ್ಯಂತ್ರ ನಡೆಸಿ ಸಿದ್ದರಾಮಯ್ಯ ಅವರನ್ನು ಕಾನೂನಿನ ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಟೀಕೆಗಳು ವ್ಯಕ್ತವಾಗಿವೆ. ರಾಷ್ಟ್ರಮಟ್ಟದಲ್ಲೂ ಬಿಜೆಪಿ ಸಂಸತ್ನಲ್ಲಿ ಮುಡಾ ಹಾಗೂ ವಾಲೀಕಿ ಅಭಿವೃದ್ಧಿ ನಿಗಮದ ಪ್ರಕರಣವನ್ನು ಪ್ರಸ್ತಾಪಿಸಿದೆ.
6
+ ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನಾಯಕರ ಕರೆಯ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರವರು ದೆಹಲಿಗೆ ತೆರಳಿ ವಿವರಣೆ ನೀಡಿ ಬಂದಿದ್ದಾರೆ.ಇಂದಿನ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ನೋಟಿಸ್ಗೆ ಪ್ರತಿಕ್ರಿಯಿಸುವ ಹಾಗೂ ಅಭಿಯೋಜನೆಗೆ ವಿರೋಧ ವ್ಯಕ್ತಪಡಿಸುವ ನಿರ್ಣಯ ಕೈಗೊಳ್ಳುವಂತೆ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.
7
+ ರಾಜ್ಯಪಾಲರ ನಡವಳಿಕೆ ಸಾಂವಿಧಾನಿಕ ಸಂಘರ್ಷಕ್ಕೆ ಎಡೆಮಾಡಿಕೊಡುವ ಸಾಧ್ಯತೆ ಇದೆ. ಈ ಹಿಂದೆ ಯಡಿಯೂರಪ್ಪ ಅವರ ಪ್ರಕರಣದಲ್ಲಿ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿದ್ದರಿಂದಾಗಿಯೇ ಸಾಕಷ್ಟು ಕಾನೂನಾತಕ ಸಮಸ್ಯೆಗಳು ಎದುರಾದವು. ಈಗ ಮುಡಾ ಪ್ರಕರಣದಲ್ಲಿ ಯಾವುದೇ ಲೋಪ ಇಲ್ಲದೇ ಇದ್ದರೂ ಉದ್ದೇಶಪೂರಕವಾಗಿ ರಾಜಕೀಯ ಕಾರಣಕ್ಕೆ ಮುಖ್ಯಮಂತ್ರಿ ಹಾಗೂ ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿ���ೆ ಎಂಬ ಟೀಕೆಗಳು ಸಭೆಯಲ್ಲಿ ಕೇಳಿಬಂದಿವೆ.
8
+ ಉಪಹಾರಕೂಟ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಚೆಲುವರಾಯಸ್ವಾಮಿ, ಶಿವರಾಜ್ ತಂಗಡಗಿ, ರಾಮಲಿಂಗಾರೆಡ್ಡಿ, ಮಧುಬಂಗಾರಪ್ಪ, ಲಕ್ಷ್ಮಿ ಹೆಬ್ಬಾಳ್ಕರ್, ದಿನೇಶ್ ಗುಂಡೂರಾವ್, ಶಿವಾನಂದ ಪಾಟೀಲ್, ಜಮೀರ್ ಅಹಮದ್ ಖಾನ್, ಸಂತೋಷ್ ಲಾಡ್, ಎಚ್.ಸಿ.ಮಹದೇವಪ್ಪ, ಎಚ್.ಕೆ.ಪಾಟೀಲ್, ಕೆ.ಎನ್.ರಾಜಣ್ಣ, ಎಂ.ಬಿ.ಪಾಟೀಲ್, ಎನ್.ಎಸ್.ಬೋಸರಾಜ್, ಶರಣಬಸಪ್ಪ ದರ್ಶನಾಪೂರ್, ರಹೀಂಖಾನ್, ಕೆ.ವೆಂಕಟೇಶ್, ಈಶ್ವರ್ ಖಂಡ್ರೆ, ಡಿ.ಸುಧಾಕರ್, ಡಾ.ಎಂ.ಸಿ.ಸುಧಾಕರ್, ಶರಣಪ್ರಕಾಶ್ ಪಾಟೀಲ್, ಎಸ್.ಎಸ್.ಮಲ್ಲಿಕಾರ್ಜುನ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಬಹುತೇಕರು ಭಾಗವಹಿಸಿದ್ದರು. ಕೆ.ಎಚ್.ಮುನಿಯಪ್ಪ ಹಾಗೂ ಕೃಷ್ಣಭೈರೇಗೌಡ ಅವರು ಜಿಲ್ಲಾ ಪ್ರವಾಸದಲ್ಲಿದ್ದುದರಿಂದಾಗಿ ಸಭೆಯಿಂದ ದೂರ ಉಳಿದಿದ್ದರು.
eesanje/url_46_57_7.txt ADDED
@@ -0,0 +1,7 @@
 
 
 
 
 
 
 
 
1
+ ಉತ್ತರ ಒಳನಾಡಿನಲ್ಲೂ ಭಾರೀ ಮಳೆ ಮುನ್ಸೂಚನೆ, ಆರೆಂಜ್‌ ಅಲರ್ಟ್‌ ಘೋಷಣೆ
2
+ ಬೆಂಗಳೂರು, ಆ.1-ಕರಾವಳಿ, ಮಲೆನಾಡಿನ ಜೊತೆಗೆ ಉತ್ತರ ಕರ್ನಾಟಕ ಭಾಗದಲ್ಲೂ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಭಾರತೀಯ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.ಅರಬ್ಬೀ ಸಮುದ್ರದಲ್ಲಿ ಕೇರಳದ ಕರಾವಳಿಯಿಂದ ಗುಜರಾತಿನವರೆಗೂ ಸಮುದ್ರಮಟ್ಟದಲ್ಲಿ ಉಂಟಾಗಿರುವ ಮೇಲುಬ್ಬರ(ಟ್ರಫ್‌)ದ ಪರಿಣಾಮದಿಂದ ಭಾರೀ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
3
+ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಇಂದು ಮತ್ತು ನಾಳೆ ವ್ಯಾಪಕ ಪ್ರಮಾಣದ ಮಳೆಯಾಗಲಿದೆ. ಕೆಲವೆಡೆ ಭಾರೀ ಮಳೆಯಾಗಬಹುದು. ಇದರಿಂದ ರಸ್ತೆ ಸಂಚಾರಕ್ಕೆ ಕೆಲವೆಡೆ ಅಡಚಣೆಗಳು, ನದಿಗಳಲ್ಲಿ ಪ್ರವಾಹ, ಭೂಕುಸಿತ ಉಂಟಾಗುವ ಸಾಧ್ಯತೆಗಳು ಇವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಉಲ್ಲೇಖಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.
4
+ ನಿರಂತರವಾಗಿ ಅಧಿಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಲಿದೆ. ಪ್ರವಾಹ ಉಂಟಾಗುವುದರಿಂದ ನದಿ ತೀರದ ಪ್ರದೇಶಗಳ ಜನವಸತಿಗಳ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಜಾನುವಾರುಗಳ ಸಹಿತ ಜನರು ತೆರಳಲು ಸೂಚಿಸಿದೆ.
5
+ ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಒಂದೆರಡು ಕಡೆ ಮಾತ್ರ ಭಾರೀ ಮಳೆಯಾಗಬಹುದು ಎಂದು ಹೇಳಿದೆ.
6
+ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗು ಮುನ್ಸೂಚನೆಗಳಿದ್ದು, ಉಳಿದಂತೆ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ತಿಳಿಸಿದೆ.
7
+ ಆದರೆ, ಈಗಾಗಲೇ ನಿರಂತರ ಮಳೆಗೆ ಜಲಾಶಯಗಳು ಭರ್ತಿಯಾಗಿದ್ದು, ಭಾರೀ ಪ್ರಮಾಣದಲ್ಲಿ ಕೃಷ್ಣಾ ಹಾಗೂ ಕಾವೇರಿ ಕೊಳ್ಳದ ನದಿಗಳಲ್ಲಿ ನೀರು ಹರಿಯುತ್ತಿದೆ. ಇದರಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ವರ್ಷ ಮುಂಗಾರು ಹಂಗಾಮಿನ ಮಳೆ ಕೊರತೆಯಿಂದ ರಾಜ್ಯ ಬರದಿಂದ ತತ್ತರಿಸಿದ್ದರೆ, ಈ ವರ್ಷ ಅಧಿಕ ಮಳೆಯಿಂದ ಅತಿವೃಷ್ಟಿ ಹಾಗೂ ನೆರೆಹಾವಳಿಯಿಂದ ಸಂಕಷ್ಟ ಉಂಟಾಗಿದೆ.
eesanje/url_46_57_8.txt ADDED
@@ -0,0 +1,4 @@
 
 
 
 
 
1
+ ಕೆಎಸ್‌‍ಎಫ್‌ಸಿ ಆಡಳಿತ ಮಂಡಳಿ ನಿರ್ದೇಶಕರಾಗಿ ಜಿ.ರಘು ಆಚಾರ್‌ ಆಯ್ಕೆ
2
+ ಬೆಂಗಳೂರು, ಆ.1-ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರಾಗಿ ಜಿ.ರಘು ಆಚಾರ್‌ ಅವಿರೋಧವಾಗಿ ಚುನಾಯಿತರಾಗಿದ್ದಾರೆ.
3
+ ಜಿ.ರಘು ಆಚಾರ್‌ ಅವರ ನಿರ್ದೇಶಕರ ಅವಧಿಯು ಮೂರು ವರ್ಷಗಳ ಅವಧಿಗೆ ಅಂದರೆ, ಜುಲೈ 18 ರಿಂದ 2027ರ ಜುಲೈ 17ರವರೆಗೆ ಇರುತ್ತದೆ ಎಂದು ಕೆಎಸ್‌‍ಎಫ್‌ಸಿಯ ವ್ಯವಸ್ಥಾಪಕ ನಿರ್ದೇಶಕ ಡಾ.ರೇಜು.ಎಂ.ಟಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
4
+ ರಾಜ್ಯ ಹಣಕಾಸು ಸಂಸ್ಥೆಗಳ ಕಾಯಿದೆ 1951 (ತಿದ್ದುಪಡಿ ಕಾಯಿದೆ 2000)ರ ಅಧಿನಿಯಮ 10 (ಇ) ಅಡಿಯಲ್ಲಿ ಹಾಗೂ ಸಂಸ್ಥೆಯ ಸಾಮಾನ್ಯ ನಿಯಮಾವಳಿ-2002ರ 63ನೇ ನಿಬಂಧನೆಯ ಅನ್ವಯ ರಘು ಆಚಾರ್‌ ಅವಿರೋಧವಾಗಿ ಚನಾಯಿತರಾಗಿದ್ದಾರೆಂದು ಅವರು ಹೇಳಿದ್ದಾರೆ.
eesanje/url_46_57_9.txt ADDED
@@ -0,0 +1,6 @@
 
 
 
 
 
 
 
1
+ ವಾಹನ ಸವಾರರೇ ಗಮನಿಸಿ : ಇಂದಿನಿಂದ ಹೆದ್ದಾರಿಗಳಲ್ಲಿ 130 ಕಿ.ಮೀ. ವೇಗ ಮೀರಿದರೆ ಕೇಸ್ ಗ್ಯಾರಂಟಿ
2
+ ಬೆಂಗಳೂರು, ಆ.1– ವಾಹನ ಚಾಲಕರೇ ಎಚ್ಚರ… ರೋಡ್‌ ಚೆನ್ನಾಗಿದೆ ಎಂದು ವೇಗವಾಗಿ ವಾಹನ ಚಲಾಯಿಸಿದರೆ ಪ್ರಕರಣ ದಾಖಲಾಗುತ್ತೆ. ಮೈಸೂರು, ಬೆಂಗಳೂರು, ಎಕ್ಸ್ ಪ್ರೆಸ್‌‍ ವೇ ನಲ್ಲಿ ಹೆಚ್ಚಾಗಿ ಅಪಘಾತ ಪ್ರಕರಣಗಳು ಸಂಭವಿಸಿ ಅನೇಕ ಸಾವು-ನೋವುಗಳು ಸಂಭವಿಸಿದ್ದವು. ಎಚ್ಚೆತ್ತ ಹೆದ್ದಾರಿ ಪ್ರಾಧಿಕಾರ ಹಾಗೂ ಸಂಚಾರಿ ಪೊಲೀಸರು ರಸ್ತೆಯಲ್ಲಿ ಎಐ ಕ್ಯಾಮೆರಾ ಅಳವಡಿಸಿದ್ದರಿಂದ ಗಣನೀಯವಾಗಿ ಅಪಘಾತಗಳು ಇಳಿಮುಖವಾಗಿವೆ.
3
+ ಕಳೆದ ಕೆಲದಿನಗಳ ಹಿಂದೆ ಅಷ್ಟೇ ನೈಸ್‌‍ ರಸ್ತೆಯಲ್ಲಿ ಕಾರೊಂದು ಅತಿ ವೇಗವಾಗಿ ಚಲಾಯಿಸಿ ಅಪಘಾತವಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಹೀಗಾಗಿ ವೇಗಕ್ಕೆ ಕಡಿವಾಣ ಹಾಕಲು ಇಂದಿನಿಂದ ರಾಜ್ಯಾದ್ಯಂತ ಹೈವೆಗಳಲ್ಲಿ ಗಂಟೆಗೆ 130 ಕಿಲೋ ಮೀಟರ್‌ ವೇಗಕ್ಕಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ಮಾಲೀಕರ ಮೇಲೆ ಪ್ರಕರಣ ದಾಖಲಾಗಲಿದೆ.
4
+ ಜೊತೆಗೆ ಎರಡು ಸಾವಿರ ದಂಡ ಮತ್ತು ಗರಿಷ್ಠ ಆರು ತಿಂಗಳು ಜೈಲು ವಿಧಿಸಲಾಗುವುದು. ಜೊತೆಗೆ ಚಾಲನ ಪರವಾನಗಿಯನ್ನು ಕೂಡ ರದ್ದು ಪಡಿಸಲು ಪ್ರಾದೇಶಿಕ ಸಾರಿಗೆ ಕೇಂದ್ರಕ್ಕೆ ಪೊಲೀಸರು ಪತ್ರ ಬರೆಯಲಿದ್ದಾರೆ. ಇಲ್ಲಿಯವರೆಗೂ ನಿಗದಿ ಪಡಿಸಿದ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ವಾಹನ ಚಲಾಯಿಸಿದರೆ ಕೇವಲ ದಂಡ ವಿಧಿಸಲಾಗುತ್ತಿತ್ತು.
5
+ ಆದರೆ ಇಂದಿನಿಂದ ಹಾಗಾಗುವುದಿಲ್ಲ. ದಂಡದ ಜೊತೆಗೆ ಪ್ರಕರಣವನ್ನು ಸಹ ದಾಖಲಿಸಲಾಗುವುದು ಎಂದು ರಾಜ್ಯ ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್‌ ಅವರು ಸಾಮಾಜಿಕ ಜಾಲತಾಣ-ಎಕ್ಸ್ ನಲ್ಲಿ ತಿಳಿಸಿದ್ದಾರೆ.
6
+ ಎಕ್ಸ್ ಪ್ರೆಸ್‌‍ ಹೈವೆನಲ್ಲಿ ವಾಹನಗಳ ವೇಗ ನಿಯಂತ್ರಣಕ್ಕೆ ಪೊಲೀಸರು ಆರ್ಟಿಫಿಷಲ್‌ ಇಂಟಲಿಜೆಂಟ್ಸ್ ಮೊರೆ ಹೋಗಿದ್ದು, ಹೆದ್ದಾರಿಗಳಲ್ಲಿ ಕ್ಯಾಮೆರಾ ಅಳವಡಿಕೆ ಮಾಡಿದ್ದಾರೆ. ಈ ಕ್ಯಾಮೆರಾ ಸ್ವಯಂ ಚಾಲಿತ ನಂಬರ್‌ ಪ್ಲೇಟ್‌ ಗುರುತಿಸುವುದರೊಂದಿಗೆ ವಾಹನಗಳ ಮಾಹಿತಿಯನ್ನು ಕಂಟ್ರೋಲ್‌ ರೂಂಗೆ ರವಾನಿಸಿ ನಂತರ ಆರ್‌ಟಿಓ ಸಂಪರ್ಕ ಪಡೆದು ವಾಹನ ಮಾಲೀಕರಿಗೆ ದಂಡದ ನೊಟೀಸ್‌‍ ನೀಡಲಾಗುತ್ತದೆ. ಇದರಿಂದ ವಾಹನಗಳ ವೇಗ ತಗ್ಗಲಿದ್ದು, ಅಪಘಾತಗಳ ಸಂಖ್ಯೆ ಇಳಿಮುಖವಾಗುವ ಸಾಧ್ಯತೆ ಇದೆ.
eesanje/url_46_58_1.txt ADDED
@@ -0,0 +1,5 @@
 
 
 
 
 
 
1
+ ಬಿಬಿಎಂಪಿ ಆಸ್ತಿ ತೆರಿಗೆ ಪಾವತಿಗೆ ಓಟಿಎಸ್‌‍ ಸಮಯ ವಿಸ್ತರಿಸಿ : ಮುಖ್ಯಮಂತ್ರಿ ಚಂದ್ರು
2
+ ಬೆಂಗಳೂರು,ಜು.31– ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಾಲೀಕರಿಗೆ ಓಟಿಎಸ್‌‍ ವ್ಯವಸ್ಥೆಯಲ್ಲಿ ನೀಡಲಾಗಿದ್ದ ಸಮಯವನ್ನು ಮತ್ತೆ 15 ದಿವಸಗಳ ಕಾಲ ವಿಸ್ತರಣೆ ಮಾಡುವಂತೆ ಆಮ್‌ ಆದಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
3
+ ಈ ಕುರಿತು ಬೆಂಗಳೂರು ನಗರಾಭಿವದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಪತ್ರ ಬರೆದಿರುವ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿನ 2.87 ಲಕ್ಷ ಆಸ್ತಿಗಳಿಂದ 831 ಕೋಟಿ ತೆರಿಗೆ ಬಾಕಿ ಇದೆ .
4
+ ಬೆಂಗಳೂರಿನ ನಾಗರಿಕರು ಆಸ್ತಿ ತೆರಿಗೆಯನ್ನು ಕಟ್ಟಲು ಬೇಕಾಗುವ ವಲಯ ಘೋಷಿಸುವ ವಿಚಾರದಲ್ಲಿ ಸಾಕಷ್ಟು ಗೊಂದಲಗಳು ಇದೆ. ಬಿಬಿಎಂಪಿ ಪುನರ್‌ ನಿಗದಿ ಮಾಡಿರುವ ಬೇಡಿಕೆ ಪತ್ರದಲ್ಲಿಯೂ ಸಾಕಷ್ಟು ಗೊಂದಲಗಳಿರುವ ಕಾರಣದಿಂದ ಆಸ್ತಿ ತೆರಿಗೆ ಕಟ್ಟಲು ನಾಗರಿಕರುಗಳಿಗೆ ಸಾಧ್ಯವಾಗುತ್ತಿಲ್ಲ. ಈ ಎಲ್ಲಾ ವಿಚಾರಗಳನ್ನು ಪರಿಗಣಿಸಿ ಮತ್ತೆ 15 ದಿವಸಗಳ ಕಾಲ ಓ ಟಿ ಎಸ್‌‍ ಯೋಜನೆಯನ್ನು ವಿಸ್ತರಣೆ ಮಾಡಬೇಕು ಎಂದು ವಿನಂತಿಸಿದ್ದಾರೆ.
5
+ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಮಾಲೀಕರುಗಳ ಜೊತೆ ಕಂದಾಯಾಧಿಕಾರಿಗಳು ಖುದ್ದಾಗಿ ಚರ್ಚಿಸಬೇಕು ಹಾಗೂ ಗೊಂದಲಗಳನ್ನು ಪರಿಹಾರ ಮಾಡಬೇಕು. ಬೆಂಗಳೂರಿನ ನಾಗರಿಕರು ತಮ ಜೀವಿತಾವಧಿಯಲ್ಲಿ ಕಷ್ಟಪಟ್ಟು ಉಳಿಸಿದ ಹಣದಿಂದ ಕಟ್ಟಿರುವ ಆಸ್ತಿಗಳನ್ನು ಯಾವುದೇ ಕಾರಣಕ್ಕೂ ಅಟ್ಯಾಚ್‌ (ಋಣ ಭಾರ) ಮಾಡಿಕೊಳ್ಳುವ ಪ್ರಕ್ರಿಯೆಯನ್ನು ಕೈ ಬಿಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
eesanje/url_46_58_10.txt ADDED
@@ -0,0 +1,5 @@
 
 
 
 
 
 
1
+ ರಾಜ್ಯ ಸರ್ಕಾರದ ಅಭಿವೃದ್ಧಿ ಆಯುಕ್ತರಾಗಿ ಉಮಾ ಮಹದೇವನ್‌
2
+ ಬೆಂಗಳೂರು,ಜು.30-ರಾಜ್ಯ ಸರ್ಕಾರದ ಅಭಿವೃದ್ಧಿ ಆಯುಕ್ತರು ಹಾಗೂ ಹೆಚ್ಚುವರಿ ಕಾರ್ಯದರ್ಶಿ ಹುದ್ದೆಗೆ ಉಮಾ ಮಹದೇವನ್‌ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಅಭಿವೃದ್ಧಿ ಆಯುಕ್ತರ ಹುದ್ದೆಯ ಜೊತೆಗೆ ಕೌಶಲ್ಯಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯ ಜವಾಬ್ದಾರಿಯನ್ನು ಉಮಾ ಮಹದೇವನ್‌ ಅವರಿಗೆ ನೀಡಲಾಗಿದೆ.
3
+ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಮ್‌ ಫರ್ವೇಜ್‌ ಅವರಿಗೆ ಅದೇ ಇಲಾಖೆಯ ಪಂಚಾಯತ್‌ರಾಜ್‌ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ.ತೋಟಗಾರಿಕೆ ಇಲಾಖೆ ನಿರ್ದೇಶಕರಾದ ರಮೇಶ್‌.ಡಿ.ಎಸ್‌‍ ಅವರಿಗೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಹುದ್ದೆಯ ಹೊಣೆಗಾರಿಕೆ ವಹಿಸಿ ಸರ್ಕಾರ ಆದೇಶ ವಹಿಸಿದೆ.
4
+ ಪಂಚಾಯತ್‌ರಾಜ್‌ ಇಲಾಖೆಯ ಆಯುಕ್ತರಾದ ಡಾ.ಅರುಂಧತಿ ಚಂದ್ರಶೇಖರ್‌ ಅವರಿಗೆ ಮೈಸೂರಿನಲ್ಲಿರುವ ಅಬ್ದುಲ್‌ ನಜೀರ್‌ ಸಾಬ್‌, ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್‌ ಸಂಸ್ಥೆಯ ನಿರ್ದೇಶಕ ಹುದ್ದೆಯ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ.
5
+ ನಜೀರ್‌ಸಾಬ್‌ ಸಂಸ್ಥೆಯ ಹೊಣೆಗಾರಿಕೆಯಿಂದ ಶಿಲ್ಪಾ ನಾಗ್‌ ಅವರನ್ನು ಬಿಡುಗಡೆಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.