CoolCoder44 commited on
Commit
ca8f0e7
·
verified ·
1 Parent(s): ce1717b

c2a91aaecf8664bee52925b771ba433e167bb85f8b9b49de9d549de32a2df17e

Browse files
Files changed (50) hide show
  1. eesanje/url_46_108_2.txt +6 -0
  2. eesanje/url_46_108_3.txt +4 -0
  3. eesanje/url_46_108_4.txt +11 -0
  4. eesanje/url_46_108_5.txt +14 -0
  5. eesanje/url_46_108_6.txt +8 -0
  6. eesanje/url_46_108_7.txt +7 -0
  7. eesanje/url_46_108_8.txt +8 -0
  8. eesanje/url_46_108_9.txt +6 -0
  9. eesanje/url_46_109_1.txt +5 -0
  10. eesanje/url_46_109_10.txt +15 -0
  11. eesanje/url_46_109_11.txt +7 -0
  12. eesanje/url_46_109_12.txt +7 -0
  13. eesanje/url_46_109_2.txt +9 -0
  14. eesanje/url_46_109_3.txt +6 -0
  15. eesanje/url_46_109_4.txt +14 -0
  16. eesanje/url_46_109_5.txt +12 -0
  17. eesanje/url_46_109_6.txt +7 -0
  18. eesanje/url_46_109_7.txt +6 -0
  19. eesanje/url_46_109_8.txt +8 -0
  20. eesanje/url_46_109_9.txt +9 -0
  21. eesanje/url_46_10_1.txt +7 -0
  22. eesanje/url_46_10_10.txt +5 -0
  23. eesanje/url_46_10_11.txt +8 -0
  24. eesanje/url_46_10_12.txt +13 -0
  25. eesanje/url_46_10_2.txt +6 -0
  26. eesanje/url_46_10_3.txt +13 -0
  27. eesanje/url_46_10_4.txt +12 -0
  28. eesanje/url_46_10_5.txt +7 -0
  29. eesanje/url_46_10_6.txt +17 -0
  30. eesanje/url_46_10_7.txt +12 -0
  31. eesanje/url_46_10_8.txt +11 -0
  32. eesanje/url_46_10_9.txt +8 -0
  33. eesanje/url_46_110_1.txt +6 -0
  34. eesanje/url_46_110_10.txt +5 -0
  35. eesanje/url_46_110_11.txt +6 -0
  36. eesanje/url_46_110_12.txt +4 -0
  37. eesanje/url_46_110_2.txt +8 -0
  38. eesanje/url_46_110_3.txt +7 -0
  39. eesanje/url_46_110_4.txt +9 -0
  40. eesanje/url_46_110_5.txt +10 -0
  41. eesanje/url_46_110_6.txt +10 -0
  42. eesanje/url_46_110_7.txt +5 -0
  43. eesanje/url_46_110_8.txt +6 -0
  44. eesanje/url_46_110_9.txt +4 -0
  45. eesanje/url_46_111_1.txt +6 -0
  46. eesanje/url_46_111_10.txt +6 -0
  47. eesanje/url_46_111_11.txt +5 -0
  48. eesanje/url_46_111_12.txt +6 -0
  49. eesanje/url_46_111_2.txt +4 -0
  50. eesanje/url_46_111_3.txt +6 -0
eesanje/url_46_108_2.txt ADDED
@@ -0,0 +1,6 @@
 
 
 
 
 
 
 
1
+ ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ ಹಿಂಪಡೆಯದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ
2
+ ಬೆಂಗಳೂರು, ಜೂ, 16:ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳನ್ನು ಅವೈಜ್ಞಾನಿಕವಾಗಿ ಏರಿಕೆ ಮಾಡಿರುವುದನ್ನು ಇಂಡಿಯನ್‌ ವೆಹಿಕಲ್‌ ಡ್ರೈವರ್‌ ಅಸೋಸಿಯೇಷನ್‌ ಖಂಡಿಸಿದ್ದು, ಕೂಡಲೇ ದರ ಏರಿಕೆ ಕೈಬಿಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದೆ.
3
+ ಈ ಕುರಿತು ಹಣಕಾಸು ಇಲಾಖೆ ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದ್ದು, ತಕ್ಷಣವೇ ದರ ಇಳಿಕೆ ಮಾಡಬೇಕು ಎಂದು ಅಸೋಸಿಯೇಷನ್‌ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ ತಿಳಿಸಿದ್ದಾರೆ.
4
+ ಕ್ಯಾಬ್‌‍, ಟ್ಯಾಕ್ಸಿ ಕಾರುಗಳು, ಸರಕು ಸಾಗಾಣೆ ಹಾಗೂ ಖಾಸಗಿ ಬಸ್‌‍, ಹಾಲಿನ ವಾಹನಗಳು, ಜೆಸಿಬಿ, ಟ್ಯಾಂಕರ್‌ ಗಳು ಒಳಗೊಂಡಂತೆ 83ಲಕ್ಷಕ್ಕೂ ಅಧಿಕ ಹಳದಿ ಬೋರ್ಡ್‌ ವಾಹನಗಳು ರಾಜ್ಯದಲ್ಲಿ ಸಂಚರಿಸುತ್ತವೆ. ದರ ಏರಿಕೆಯಿಂದ ಎಲ್ಲಾ ವಸ್ತುಗಳ ಬೆಲೆ ಹೆಚ್ಚಳಕ್ಕೆ ದಾರಿಯಾಗುತ್ತದೆ. ವಾಣಿಜ್ಯ ವಾಹನಗಳ ಮಾಲೀಕರು ಮತ್ತು ಚಾಲಕರಿಗೆ ದರ ಏರಿಕೆ ಬರೆ ಎಳೆದಂತಾಗಿದೆ ಎಂದು ಅವರು ತಿಳಿಸಿದ್ದಾರೆ.
5
+ ಗ್ಯಾರೆಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸಾಗಾಣೆ ವಲಯದ ಮೇಲೆ ಹೊರೆ ಹೇರಿರುವುದು ಅತ್ಯಂತ ಅಮಾನವೀಯ. ಬೆಲೆ ಏರಿಕೆಯಿಂದ ಬಸವಳಿದಿರುವ ಜನ ಸಾಮಾನ್ಯರ ಬದುಕಿಗೆ ಸರ್ಕಾರ ಕೊಳ್ಳಿ ಇಟ್ಟಿದೆ. ಯಾವುದೇ ಸುಳಿವು ನೀಡದೇ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಹೆಚ್ಚಿಸಿರುವುದು ಅತ್ಯಂತ ಖಂಡನೀಯ ಎಂದು ಗಂಡಸಿ ಸದಾನಂದ ಸ್ವಾಮಿ ತಿಳಿಸಿದ್ದಾರೆ.
6
+ ಈ ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
eesanje/url_46_108_3.txt ADDED
@@ -0,0 +1,4 @@
 
 
 
 
 
1
+ ಮೂವರು ಶಾಸಕರ ರಾಜೀನಾಮೆ ಅಂಗೀಕರಿಸಿದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌
2
+ ಬೆಂಗಳೂರು, ಜೂ.16-ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಚುನಾಯಿತರಾಗಿ ಸಂಸತ್‌ ಪ್ರವೇಶಿಸಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್‌.ಡಿ.ಕುಮಾರಸ್ವಾಮಿ, ಬಸವರಾಜ ಬೊಮಾಯಿ ಹಾಗೂ ಇ. ತುಕಾರಾಂ ಅವರು ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಅಂಗೀಕರಿಸಿದ್ದಾರೆ.
3
+ ಶಾಸಕ ಸ್ಥಾನದ ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ ಮೂರು ವಿಧಾನಸಭಾ ಕ್ಷೇತ್ರಗಳ ಸದಸ್ಯತ್ವ ತೆರವಾಗಿರುವ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ. ಇದರಿಂದ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ.
4
+ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಸದಸ್ಯ ಸ್ಥಾನಕ್ಕೆ , ಬಸವರಾಜ ಬೊಮಾಯಿ ಅವರು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಸದಸ್ಯ ಸ್ಥಾನಕ್ಕೆ ನಿನ್ನೆ ಹಾಗೂ ಇ ತುಕಾರಾಂ ಅವರು ಸಂಡೂರು ವಿಧಾನಸಭಾ ಕ್ಷೇತ್ರದ ಸದಸ್ಯ ಸ್ಥಾನಕ್ಕೆ ಜೂ.14ರಂದು ರಾಜೀನಾಮೆ ನೀಡಿದ್ದರು. ಸಭಾಧ್ಯಕ್ಷರು ಈ ಮೂರು ರಾಜೀನಾಮೆಗಳನ್ನು ನಿನ್ನೆ ಅಂಗೀಕರಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
eesanje/url_46_108_4.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರೂ ಏರಿಕೆಯಾಗಿಲ್ಲ ಜಲಾಶಯಗಳ ನೀರಿನ ಮಟ್ಟ
2
+ ಬೆಂಗಳೂರು, ಜೂ.16-ರಾಜ್ಯದಲ್ಲಿ ನೈರುತ್ಯ ಮುಂಗಾರು ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರೂ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಸಂಗ್ರಹ ಮಾತ್ರ ಶೇ.21ರಷ್ಟಿದೆ. ನಾರಾಯಣಪುರ ಹಾಗೂ ವಾಣಿವಿಲಾಸ ಸಾಗರ ಜಲಾಶಯ ಹೊರತುಪಡಿಸಿದರೆ, ಉಳಿದ ಯಾವ ಜಲಾಶಯದಲ್ಲೂ ಶೇ.50ಕ್ಕಿಂತ ಹೆಚ್ಚು ನೀರಿಲ್ಲ.
3
+ ಮೇ ತಿಂಗಳಲ್ಲಿ ಪೂರ್ವ ಮುಂಗಾರು ಮಳೆ ಹಾಗೂ ಕಳೆದ ಎರಡು ವಾರಗಳಿಂದ ಮುಂಗಾರು ಮಳೆ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಾಗಿದೆ. ಇದರಿಂದ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು, ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಪರಿಹಾರ ದೊರೆತಂತಾಗಿದೆ.
4
+ ಆದರೆ, ಜಲ ವಿದ್ಯುತ್‌ ಉತ್ಪಾದಿಸುವ ಹಾಗೂ ಕೃಷಿಗೆ ನೀರು ಪೂರೈಸುವ ಜಲಾಶಯಗಳಿಗೆ ಮಾತ್ರ ಗಣನೀಯವಾಗಿ ಒಳ ಹರಿವು ಹೆಚ್ಚಾಗಿಲ್ಲ. ಮುಂಗಾರು ಮಳೆ ಆರಂಭ ಉತ್ತಮವಾಗಿದ್ದು, ಜಲಾಶಯಗಳ ಒಳಹರಿವು ಆರಂಭಗೊಂಡಿದ್ದರೂ ಸಾಕಷ್ಟು ಪ್ರಮಾಣದಲ್ಲಿ ಒಳ ಹರಿವು ಬರುತ್ತಿಲ್ಲ. ಕಳೆದ ವರ್ಷ ಮುಂಗಾರು ದುರ್ಬಲವಾಗಿತ್ತು, ಅಲ್ಲದೆ, ರಾಜ್ಯದಲ್ಲಿ ಬರದ ಕರಾಳ ಛಾಯೆ ಆವರಿಸಿ ಜನ-ಜಾನುವಾರುಗಳನ್ನು ಸಂಕಷ್ಟಕ್ಕೆ ದೂಡಿತ್ತು.
5
+ ಈ ಬಾರಿ ಮುಂಗಾರು ಉತ್ತಮವಾಗಿದ್ದರೂ ಈತನಕ ಜಲಾಶಯಗಳು ಭರ್ತಿಯಾಗುವ ಪ್ರಮಾಣಕ್ಕೆ ಅನುಗುಣವಾಗಿ ಒಳಹರಿವು ಇಲ್ಲದಿರುವುದು ಮತ್ತೊಂದು ಆತಂಕಕ್ಕೆ ಕಾರಣವಾಗಿದೆ.
6
+ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ನಿನ್ನೆಯವರೆಗೆ ರಾಜ್ಯದ 14 ಪ್ರಮುಖ ಜಲಾಶಯಗಳಲ್ಲಿ 187.46 ಟಿಎಂಸಿ ಅಡಿಯಷ್ಟು ನೀರಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 185.85 ಟಿಎಂಸಿ ಅಡಿಯಷ್ಟು ನೀರಿತ್ತು. ಕಳೆದ ವರ್ಷಕ್ಕಿಂತ ಎರಡು ಟಿಎಂಸಿಯಷ್ಟು ಮಾತ್ರ ನೀರು ಹೆಚ್ಚಿದೆಯಷ್ಟೇ.
7
+ ಜಲವಿದ್ಯುತ್‌ ಉತ್ಪಾದಿಸುವ ಲಿಂಗನಮಕ್ಕಿ ಜಲಾಶಯದಲ್ಲಿ ಶೇ.10ರಷ್ಟು, ಸೂಪಾ ಜಲಾಶಯದಲ್ಲಿ ಶೇ.22ರಷ್ಟು ಹಾಗೂ ವರಾಹಿ ಜಲಾಶಯದಲ್ಲಿ ಶೇ.11ರಷ್ಟು ಮಾತ್ರ ನೀರು ಸಂಗ್ರಹವಾಗಿದೆ. ಈ ಮೂರು ಜಲಾಶಯಗಳಿಗೆ ಒಟ್ಟಾರೆ 1300 ಕ್ಯುಸೆಕ್‌್ಸನಷ್ಟು ಮಾತ್ರ ಒಳಹರಿವಿದೆ.
8
+ ಕಾವೇರಿ ನದಿ ಪಾತ್ರದ ಕಬಿನಿಯಲ್ಲಿ ಶೇ.45, ಹಾರಂಗಿಯಲ್ಲಿ ಶೇ.38, ಹೇಮಾವತಿಯಲ್ಲಿ ಮತ್ತು ಕೆಆರ್‌ಎಸ್‌‍ನಲ್ಲಿ ಶೇ.28ರಷ್ಟು ನೀರು ಸಂಗ್ರಹವಿದೆ. ಈ ನಾಲ್ಕು ಜಲಾಶಯಗಳಿಗೆ ಒಟ್ಟಾರೆ 4000 ಕ್ಯುಸೆಕ್‌್ಸಗೂ ಹೆಚ್ಚು ಒಳಹರಿವಿದೆ.
9
+ ಕೃಷ್ಣಾ ಕೊಳದ ಭದ್ರಾದಲ್ಲಿ ಶೇ.21, ತುಂಗಭದ್ರಾದಲ್ಲಿ ಕೇವಲ ಶೇ.6ರಷ್ಟು ಮಾತ್ರ ನೀರಿದೆ. ಘಟಪ್ರಭಾದಲ್ಲಿ ಶೇ.16, ಮಲಪ್ರಭಾದಲ್ಲಿ ಶೇ.17, ಆಲಮಟ್ಟಿಯಲ್ಲಿ ಶೇ.21, ನಾರಾಯಣಪುರದಲ್ಲಿ ಶೇ.63 ಹಾಗೂ ವಾಣಿ ವಿಲಾಸ ಸಾಗರದಲ್ಲಿ ಶೇ. 60ರಷ್ಟು ನೀರು ಸಂಗ್ರಹವಾಗಿದೆ.
10
+ ಕೃಷ್ಣಾ ಕೊಳ್ಳದ ಆರು ಜಲಾಶಯಗಳಲ್ಲಿ 17 ಸಾವಿರ ಕ್ಯುಸೆಕ್‌್ಸಗೂ ಹೆಚ್ಚಿನ ಒಳಹರಿವಿದೆ. ಇತ್ತೀಚೆಗೆ ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಹೆಚ್ಚಾದ್ದರಿಂದ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.
11
+ ಸದ್ಯಕ್ಕೆ ಮುಂಗಾರು ದುರ್ಬಲಗೊಂಡಿದ್ದು, ರಾಜ್ಯದಲ್ಲಿ ಮಳೆ ಪ್ರಮಾಣ ಇಳಿಮುಖವಾಗಿದೆ. ಮತ್ತೆ ವಾರಾಂತ್ಯಕ್ಕೆ ಚೇತರಿಸಿಕೊಳ್ಳುವ ಲಕ್ಷಣಗಳಿವೆ. ವಾಡಿಕೆಗಿಂತ ಹೆಚ್ಚು ಮಳೆ ಎರಡು ವಾರಗಳಲ್ಲಿ ಆಗಿದ್ದರೂ ಭಾರೀ ಮಳೆಯಾಗಿಲ್ಲ. ಹೀಗಾಗಿ ಬರದ ತೀವ್ರತೆ ತಗ್ಗಿದೆಯೇ ಹೊರತು ಜಲಾಶಯಗಳ ಒಳ ಹರಿವು ಗಣನೀಯವಾಗಿ ಹೆಚ್ಚಳವಾಗಿಲ್ಲ. ಹೀಗಾಗಿ ಮಳೆ ಬಂದರೂ ನೀರಿಗೆ ಬರ ಎನ್ನುವಂತಾಗಿದೆ. ಪ್ರಸಕ್ತ ಜಲ ವರ್ಷದ ಆರಂಭವಾಗಿದ್ದು, ನೆರೆಯ ರಾಜ್ಯಗಳ ಪಾಲಿನ ನೀರನ್ನು ಬಿಡಬೇಕಾದ ಸಂಕಷ್ಟ ಮುಂದಿನ ತಿಂಗಳಿನಿಂದ ಪ್ರಾರಂಭವಾಗಲಿದೆ.
eesanje/url_46_108_5.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಪೆಟ್ರೋಲ್‌- ಡೀಸೆಲ್‌ ತೆರಿಗೆ ಏರಿಕೆ ಬೆನ್ನಲ್ಲೇ ಬಸ್‌‍ ದರ ಹೆಚ್ಚಳ ‘ಗ್ಯಾರಂಟಿ’
2
+ ಬೆಂಗಳೂರು, ಜೂ.16-ಡೀಸೆಲ್‌ ಹಾಗೂ ಪೆಟ್ರೋಲ್‌ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಳ ಮಾಡಿದ ಬೆನ್ನಲ್ಲೇ ರಾಜ್ಯಸರ್ಕಾರ ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆೆಎಸ್‌‍ಆರ್‌ಟಿಸಿ ಹಾಗೂ ಬಿಎಂಟಿಸಿ) ಬಸ್‌‍ ದರವನ್ನು ಹೆಚ್ಚಳ ಮಾಡಲು ಮುಂದಾಗಿದೆ.
3
+ ಈಗಾಗಲೇ ಶೇ.25 ರಿಂದ 35 ರಷ್ಟು ಟಿಕೆಟ್‌ ದರ ಹೆಚ್ಚಳದ ಪ್ರಸ್ತಾವನೆಯನ್ನು ಸಾರಿಗೆ ಇಲಾಖೆ ಸಲ್ಲಿಸಿದ್ದು, ಅಂತಿಮವಾಗಿ ದರ ಪರಿಷ್ಕರಣೆಯ ತೀರ್ಮಾನವನ್ನು ಮುಖ್ಯಮಂತ್ರಿಗಳ ವಿವೇಚನೆಗೆ ಬಿಡಲಾಗಿದೆ. ಮೂಲಗಳ ಪ್ರಕಾರ, ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಬಸ್‌‍ದರ ಪರಿಷ್ಕರಣೆ ಕುರಿತಂತೆ ಸರ್ಕಾರ ಯಾವುದಾದರೂ ಒಂದು ನಿರ್ಧಾರ ತೆಗೆದುಕೊಳ್ಳುವ ಸಂಭವವಿದೆ.
4
+ ಮೂಲಗಳ ಪ್ರಕಾರ, ಸರ್ಕಾರ ಈ ಬಾರಿ ಬಸ್‌‍ ಪ್ರಯಾಣದ ದರವನ್ನು ಶೇ.15 ರಿಂದ 25 ರಷ್ಟು ಹೆಚ್ಚಳ ಮಾಡುವ ಸಾಧ್ಯತೆಯಿದೆ. ಈ ಹಿಂದೆ ಲೋಕಸಭಾ ಚುನಾವಣೆಗೂ ಮುನ್ನವೇ ಟಿಕೆಟ್‌ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಜೊತೆಗೆ ಚುನಾವಣಾ ಸಂದರ್ಭದಲ್ಲೇ ದರ ಹೆಚ್ಚಳ ಮಾಡಿದರೆ ಮತದಾರರ ಆಕ್ರೋಶಕ್ಕೆ ಗುರಿಯಾಗಬಹುದೆಂಬ ಕಾರಣದಿಂದ ಸರ್ಕಾರವು ತನ್ನ ನಿಲುವಿನಿಂದ ಹಿಂದೆ ಸರಿದಿತ್ತು.
5
+ ಇದೀಗ ಲೋಕಸಭಾ ಚುನಾವಣೆ ಮುಗಿದಿದ್ದು, ಪ್ರತೀ ಲೀಟರ್‌ ಡೀಸೆಲ್‌ಗೆ 3 ರೂ. ಹಾಗೂ ಪೆಟ್ರೋಲ್‌ಗೆ 3.50 ರೂ. ಮಾರಾಟ ತೆರಿಗೆಯನ್ನು ಹೆಚ್ಚಳ ಮಾಡಲಾಗಿದ್ದು, ಶನಿವಾರದಿಂದಲೇ ಪರಿಷ್ಕೃತ ದರ ರಾಜ್ಯಾದ್ಯಂತ ಜಾರಿಯಾಗಿದೆ. ಈಗ ಸಾರಿಗೆ ಸಂಸ್ಥೆಯಲ್ಲಿ ಉಂಟಾಗುತ್ತಿರುವ ನಷ್ಟವನ್ನು ಸರಿದೂಗಿಸಲು ಸರ್ಕಾರ ಬಸ್‌‍ ದರವನ್ನು ಹೆಚ್ಚಳ ಮಾಡುವ ಅನಿವಾರ್ಯತೆಗೆ ಸಿಲುಕಿದೆ.
6
+ ಡೀಸೆಲ್‌ ಹಾಗೂ ಪೆಟ್ರೋಲ್‌ ದರ ಹೆಚ್ಚಳ ಮಾಡುವುದರಿಂದ ಕೆಎಸ್‌‍ಆರ್‌ಟಿಸಿಗೆ ವಾರ್ಷಿಕ 65 ಕೋಟಿ ರೂ. ಹಾಗೂ ಬಿಎಂಟಿಸಿಗೆ 32 ಕೋಟಿ ರೂ. ಹೊರೆಯಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಕೆಎಸ್‌‍ಆರ್‌ಟಿಸಿ ಪ್ರತಿದಿನ ಬಸ್‌‍ಗಳ ಕಾರ್ಯಾಚರಣೆಗೆ 6.2 ಲಕ್ಷ ಲೀಟರ್‌ ಡೀಸೆಲ್‌ ಖರೀದಿಸುತ್ತಿದೆ. ಇದರಿಂದ ತಿಂಗಳಿಗೆ 5.4 ಕೋಟಿ ಹಾಗೂ ವಾರ್ಷಿಕ 65 ಕೋಟಿಗೆ ಹೆಚ್ಚಳವಾಗಲಿದೆ.
7
+ ಹೀಗಾಗಿ ಬಸ್‌‍ ದರ ಏರಿಸುವುದು ಅನಿವಾರ್ಯ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಇದೇ ರೀತಿ ಬಿಎಂಟಿಸಿಗೂ ದಿನಕ್ಕೆ 8.7 ಲಕ್ಷ ರೂ. ಮೌಲ್ಯದ ಬೆಲೆಯ ಡೀಸೆಲ್‌ ಖರೀದಿಸಬೇಕಾಗುತ್ತದೆ. ವಾರ್ಷಿಕವಾಗಿ ನಮಗೆ 32 ಕೋಟಿ ರೂ. ಬೇಕು. ಪ್ರತಿ ಕಿ.ಮೀ.ಗೆ ನಿರ್ವಹಣಾ ವೆಚ್ಚ 66 ರಿಂದ 78 ರೂ. ಆಗುತ್ತದೆ. ಇದರಿಂದ ಸಂಸ್ಥೆ ನಿರ್ವಹಣೆ ಕಷ್ಟವಾಗುತ್ತದೆ ಎಂದು ಅಧಿಕಾರಿಗಳು ಅಳಲು ತೋಡಿಕೊಂಡಿದ್ದಾರೆ.
8
+ ಆರ್ಥಿಕ ಸಂಕಷ್ಟ :ರಾಜ್ಯಸರ್ಕಾರ ರಾಜ್ಯದಲ್ಲಿ ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದ ಮೇಲೆ ಮಹಿಳೆಯರಿಗೆ ಸಾರಿಗೆ ಮತ್ತು ಬಿಎಂಟಿಸಿ ಬಸ್ಸುಗಳಲ್ಲಿ ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಲು ಶಕ್ತಿ ಯೋಜನೆಯನ್ನು ಜಾರಿಗೆ ತಂದಿತು. ಈ ಯೋಜನೆ ಜಾರಿಗೆ ಬಂದ ಮೇಲೆ ಮಹಿಳೆಯರೇನೋ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಆದರೆ ಬಸ್ಸುಗಳಿಗೆ ಆದಾಯವಿಲ್ಲದೆ, ಈಶಾನ್ಯ ಸಾರಿಗೆ ಸಂಸ್ಥೆ, ವಾಯವ್ಯ, ನೈರುತ್ಯ ಹಾಗೂ ಬಿಎಂಟಿಸಿ ಸಂಸ್ಥೆಗಳು ಕನಿಷ್ಟ ಪಕ್ಷ ಸಿಬ್ಬಂದಿಗಳಿಗೆ ವೇತನ ನೀಡಲೂ ಸಾಧ್ಯವಾಗದ ಸ್ಥಿತಿ ಬಂದಿದೆ.
9
+ ಸಂಸ್ಥೆ ನಷ್ಟದಲ್ಲಿಲ್ಲ ಎಂದು ಸರ್ಕಾರ ಹೇಳಿಕೊಳ್ಳುತ್ತಿದೆಯಾದರೂ ವಾಸ್ತವ ಚಿತ್ರಣ ಬೇರೆಯದೇ ಇದೆ. 2020 ರಲ್ಲಿ ಕೊನೆಯ ಬಾರಿಗೆ ಟಿಕೆಟ್‌ ದರವನ್ನು ಪರಿಷ್ಕರಣೆ ಮಾಡಲಾಗಿತ್ತು. ಅಂದು ಡೀಸೆಲ್‌ ದರ 61 ರೂ. ಇದ್ದರೆ, ಪೆಟ್ರೋಲ್‌ ದರ 90 ಇತ್ತು. ಪ್ರಸ್ತುತ ರಾಜ್ಯದಲ್ಲಿ ಡೀಸೆಲ್‌ ದರ ಶನಿವಾರದಿಂದ ಬೆಂಗಳೂರಿನಲ್ಲಿ 88.93 ಪೈಸೆ ಇದ್ದರೆ, ಪೆಟ್ರೋಲ್‌ ದರ 102.83 ಪೈಸೆ ಇದೆ. ಕೇವಲ ನಾಲ್ಕು ವರ್ಷಗಳಲ್ಲಿ ಅಜಗಜಾಂತರ ವ್ಯತ್ಯಾಸವಿರುವುದರಿಂದ ದರ ಹೆಚ್ಚಳ ಮಾಡುವುದು ಅನಿವಾರ್ಯ ಎಂದು ಅಧಿಕಾರಿಗಳೇ ಹೇಳುತ್ತಾರೆ.
10
+ ಡೀಸೆಲ್‌ ಬೆಲೆ ಏರಿಕೆ, ಸಿಬ್ಬಂದಿಯ ತುಟ್ಟಿ ಭತ್ಯೆ ಹೆಚ್ಚಳದಿಂದಾಗಿ ಸಂಸ್ಥೆಗೆ ಆರ್ಥಿಕ ಹೊರೆ ಬೀಳುತ್ತಿದೆ. ಸಾರ್ವಜನಿಕ ಪ್ರಯಾಣಿಕರ ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ಹೊರೆಯಾಗದಂತೆ ಟಿಕೆಟ್‌ ದರವನ್ನು ಹೆಚ್ಚಳ ಮಾಡಲಾಗುತ್ತದೆ. ಅಂತಿಮವಾಗಿ ಸರ್ಕಾರ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ ಎಂಬುದು ಅಧಿಕಾರಿಗಳ ವಿವರಣೆಯಾಗಿದೆ.
11
+ ನಮ ಗಳಿಕೆಯ ಶೇ.45 ಕ್ಕಿಂತ ಹೆಚ್ಚು ಡೀಸೆಲ್‌ಗೆ ಹೋಗುತ್ತದೆ. ಅದರ ಬೆಲೆ ಕಳೆದ ನಾಲ್ಕು ವರ್ಷಗಳಲ್ಲಿ ಹೆಚ್ಚಾಗಿದೆ. ಮೊದಲು ದಿನಕ್ಕೆ 3 ಕೋಟಿ ರೂ. ಖರ್ಚು ಮಾಡಿತ್ತ್ದೆಿವು. ಆದರೆ ಈಗ 5 ಕೋಟಿ ರೂ.ಗೂ ಹೆಚ್ಚು ಖರ್ಚು ಮಾಡಬೇಕಾಗಿದೆ. ಹೀಗಾದರೆ, ನಮ ಆರ್ಥಿಕ ಸಂಪನೂಲಗಳನ್ನು ನಾವು ಹೇಗೆ ನಿರ್ವಹಿಸುವುದು ಎಂದು ಪ್ರಶ್ನಿಸಿದ್ದಾರೆ.
12
+ ಸಗಟು ಬೆಲೆ ಸೂಚ್ಯಂಕಕ್ಕೆ (ಡಬ್ಲ್ಯುಪಿಐ) ಅನುಗುಣವಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ವಾರ್ಷಿಕವಾಗಿ ಹೆದ್ದಾರಿ ಟೋಲ್‌ಗಳನ್ನು ಹೇಗೆ ಹೆಚ್ಚಿಸುತ್ತದೆಯೋ ಹಾಗೆಯೇ ಬಸ್‌‍ ನಿಗಮಗಳು ಸಹ ಒಂದು ಸೂತ್ರವನ್ನು ಹೊಂದಿವೆ.
13
+ ಶೇ.20ರಷ್ಟು ಏರಿಕೆಯಾಗಿರುವ ವೇತನ, ಶೇ.46ರಷ್ಟು ಏರಿಕೆಯಾಗಿರುವ ಡೀಸೆಲ್‌ ಬೆಲೆ ಮತ್ತು ಬಿಡಿಭಾಗಗಳು ಮತ್ತು ಇತರ ಬೆಲೆಗಳನ್ನು ಪರಿಗಣಿಸಿದರೆ, ಟಿಕೆಟ್‌ ದರವನ್ನು ಸುಮಾರು ಶೇ.40ರಷ್ಟು ಹೆಚ್ಚಿಸಬೇಕಾಗುತ್ತದೆ. ಆದರೆ ಇದು ಸಾರ್ವಜನಿಕ ಬಸ್‌‍ ನಿಗಮವಾಗಿದ್ದು, ನಮ ಆದ್ಯತೆ ಲಾಭ ಗಳಿಸುವುದಲ್ಲ, ಅದು ಜನರ ಸೇವೆ. ಟಿಕೆಟ್‌ ದರವನ್ನು ತೀವ್ರವಾಗಿ ಹೆಚ್ಚಿಸಲು ನಾವು ಬಯಸುವುದಿಲ್ಲ, ಅದು ಜನರನ್ನು ಕಷ್ಟಕ್ಕೆ ನೂಕುತ್ತದೆ ಎಂದು ಹೇಳಿದ್ದಾರೆ.
14
+ ಈ ವರ್ಷ ಸರ್ಕಾರವು ಟಿಕೆಟ್‌ ದರ ಹೆಚ್ಚಳದ ಪ್ರಸ್ತಾವನೆಯನ್ನು ಅನುಮೋದಿಸುತ್ತದೆ. ಪ್ರತಿ ವರ್ಷ ಬಜೆಟ್‌��ಲ್ಲಿ ಹೊಸ ಬಸ್‌‍ಗಳನ್ನು ಖರೀದಿಸಲು, ನೌಕರರಿಗೆ ವೇತನ ನೀಡಿಕೆ ತೆರವುಗೊಳಿಸಲು, ಕಟ್ಟಡಗಳಿಗೆ ಮತ್ತು ಇತರರಿಗೆ ವಿಶೇಷ ಅನುದಾನವನ್ನು ನಾವು ಪಡೆಯುತ್ತೇವೆ. ಆದರೆ ಶಕ್ತಿ ಯೋಜನೆಯ ನಂತರ, ಸರ್ಕಾರವು ಯಾವುದೇ ಅನುದಾನವನ್ನು ನೀಡುತ್ತಿಲ್ಲ. ನಮ ಆದಾಯದಿಂದ ನಮ ನಿಗಮಗಳನ್ನು ನಡೆಸಬೇಕಾಗಿದೆ. ಹೆಚ್ಚಳದ ಪ್ರಸ್ತಾವನೆಯು ಶೇ. 25-30 ಆಗಿದ್ದರೆ, ಸರ್ಕಾರವು 15-20 ಪ್ರತಿಶತ ಹೆಚ್ಚಳವನ್ನು ಒಪ್ಪಿಕೊಳ್ಳಬಹುದು ಎಂದು ಮಾಹಿತಿ ನೀಡಿದ್ದಾರೆ.
eesanje/url_46_108_6.txt ADDED
@@ -0,0 +1,8 @@
 
 
 
 
 
 
 
 
 
1
+ ಮತ್ತೆ ಸೆಂಚುರಿಯತ್ತ ಟಮೊಟೋ ಬೆಲೆ
2
+ ಬೆಂಗಳೂರು, ಜೂ.16-ಲಾಟರಿ ಬೆಳೆ ಎಂದು ಹೇಳಲಾಗುವ ಕೆಂಪು ಸುಂದರಿ ಟಮೊಟೋ ಬೆಲೆ ಮತ್ತೆ ಏರುತ್ತಿದ್ದು ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿದೆ.ಕಳೆದ ಕೆಲ ತಿಂಗಳ ಹಿಂದೆ ಡಬ್ಬಲ್‌ ಸೆಂಚುರಿ ಭಾರಿಸಿ ಭಾರಿ ಸುದ್ದಿಯಾಗಿದ್ದ ಟಮೋಟೋ ಮತ್ತೆ ಸೆಂಚುರಿಯತ್ತ ಮುನ್ನುಗ್ಗುತ್ತಿದೆ, ಅಡುಗೆ ಮಾಡಲು ಯಾವ ತರಕಾರಿ ಇಲ್ಲದ್ದರೂ ಪರವಾಗಿಲ್ಲ ಒಂದೆ ಒಂದು ಟಮೋಟೋ ಇದ್ದರೆ ಸಾಕು ಅಂದಿನ ದಿನ ಕಳೆಯಬಹುದು ಅಷ್ಟರ ಮಟ್ಟಿಗೆ ಅಡುಗೆ ಮನೆಯಲ್ಲಿ ಪ್ರಾಮುಖ್ಯತೆಯನ್ನು ಪಡೆದು ಕೊಂಡಿದೆ.
3
+ ಐಮೋಟೋ ಬೆಳೆದು ಶ್ರೀಮಂತರಾದವರು ಇದ್ದರೆ ಸಾಲದ ಸುಳಿಗೆ ಸಿಲುಕಿರುವವರ ಹಲವಾರು ನಿದರ್ಶನಗಳನ್ನು ಕಾಣಬಹುದಾಗಿದೆ. ಅದಕ್ಕೆ ಗ್ರಾಮಾಂತರ ಭಾಗದಲ್ಲಿ ಇದು ಲಾಟರಿ ಬೆಳೆ ಎಂದು ಹೇಳುತ್ತಾರೆ. ಬೆಳೆ ಕೈ ಹಿಡಿದರೆ ಅದೃಷ್ಟ ಒಲಿಯುತ್ತದೆ, ಇಲ್ಲದಿದ್ದರೆ ಕೆ.ಜಿ.ಗೆ 2 ರಿಂದ 5 ರೂ. ದರವಾಗಿ ರೋಡಿಗೆ ಸುರಿಯ ಬೇಕಾಗುತ್ತದೆ, ಬೆಲೆ ಯಾವಾಗ ಬರುತ್ತದೆ, ಯಾವಾಗ ಕಡಿಮೆಯಾಗುತ್ತದೆ ಎಂದು ಯಾರಿಂದಲೂ ಊಹಿಸಲಾಗದು.
4
+ ಕಳೆದ ಕೆಲ ದಿನಗಳ ಹಿಂದೆ ಬರೋಬ್ಬರಿ ಸುಮಾರು ಎರಡು ತಿಂಗಳುಗಳ ಕಾಲ ಮೇಲೇರಿದ ಬೆಲೆ ಕೆಳಗೆ ಇಳಿದೇ ಇರಲಿಲ್ಲ. ಈ ಸಂದರ್ಭದಲ್ಲಿ ಬೆಳೆ ಬೆಳೆದಿದ್ದ ರೈತರು ಲಕ್ಷಾಧೀಶ್ವರರು ಹಾಗೂ ಕೋಟ್ಯಾಧಿಪತಿಗಳಾದ ಉದಾಹರಣೆಗಳನ್ನು ಕಾಣಬಹುದಾಗಿದೆ.ಕಳೆದ ಎರಡು ಮೂರು ತಿಂಗಳು ಬಿಸಿಲು ಜಾಸ್ತಿ ಇತ್ತು. ನೀರಿಲ್ಲದೆ ಇಳುವರಿ ಇರಲಿಲ್ಲ. ಈಗ ಕೆಲವು ಕಡೆ ಮಳೆಯಾಗುತ್ತಿದೆ ಇದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಬೆಳೆ ಬಂದಿಲ್ಲ ಹಾಗಾಗಿ ಬೆಲೆ ಏರಿಕೆಯಾಗುತ್ತಿದೆ.
5
+ ಏಷ್ಯಾದಲ್ಲೆ ದೊಡ್ಡ ಮಾರುಕಟ್ಟೆಯಾದ ಕೋಲಾರ ಮಾರುಕಟ್ಟೆಯಲ್ಲೆ ಬೆಲೆ ದುಬಾರಿಯಾಗಿದೆ. 15 ಕೆ.ಜಿ. ತೂಕದ ಒಂದು ಕ್ರೇಟ್‌ 800 ರಿಂದ ಸಾವಿರ ರೂ.ಗೆ ಮಾರಾಟವಾಗುತ್ತಿದೆ. ಆಂಧ್ರ, ತಮಿಳುನಾಡು, ಮಹಾರಾಷ್ಟ್ರ ರಾಜ್ಯಗಳಿಗೆ ಪಾರ್ಸೆಲ್‌ ಹೊಗುತ್ತಿದ್ದು, ಕೋಲಾರ ಚಿಕ್ಕಬಳ್ಳಾಪುರ, ಮಾಲೂರು, ಹೊಸಕೋಟೆ, ಚಿಂತಾಮಣಿ, ಗೌರಿಬಿದರನೂರು ತಾಲ್ಲೂಕುಗಳಲ್ಲಿ ಹೆಚ್ಚಾಗಿ ಬೆಳೆ ಬೆಳೆಯುವ ಪ್ರದೇಶವಾಗಿದ್ದು, ಕೆಲ ದಿನಗಳಿಂದ ಸುರಿದ ಮಳೆಗೆ ಬೆಳೆ ನಾಶವಾಗಿದ್ದು, ಮಾರುಕಟ್ಟೆಗೆ ನಿರೀಕ್ಷಿತ ಪ್ರಮಾಣದಲ್ಲಿ ಮಾಲು ಬಾರದಿರುವುದರಿಂದ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಹೇಳಬಹುದು.
6
+ ತುಮಕೂರು, ರಾಮನಗರ, ಮಾಗಡಿ, ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ಗ್ರಾಮಾಂತರ ಪ್ರದೇಶದಿಂದಲೂ ಟಮೋಟೋ ಮಾರುಕಟ್ಟಗೆ ಹೆಚ್ಚಾಗಿ ಬಾರದಿರುವುದರಿಂದ ಬೆಲೆ ಹೆಚ್ಚಳವಾಗಿದೆ.
7
+ ಚಿಲ್ಲರೆಯಾಗಿ ಬೆಂಗಳೂರಿನಲ್ಲಿ ಕೆ.ಜಿ.ಗೆ 70 ರಿಂದ 80 ರೂ.ಗೆ ಮರಾಟವಾಗುತ್ತಿದೆ. ಮಳೆ ಬಂದ ಹಿನ್ನಲೆಯಲ್ಲಿ ರೈತರು ಈಗ ಗಿಡಗಳನ್ನು ನಾಟಿ ಮಾಡಿದ್ದು, ಬೆಳೆ ಬರಲು ಇನ್ನೂ ಒಂದೂವರೆ ಎರಡು ತಿಂಗಳು ಕಾಲಾವಕಾಶ ಬೇಕು. ಅಲ್ಲದೆ ಇರುವ ಬೆಳೆ ಮಳೆಗೆ ನಾಶವಾಗಿದ್ದು ಹೊಸ ಮಾಲು ಮಾರುಕಟ���ಟೆಗೆ ಬರುವ ವರೆಗೂ ಬೆಲೆ ಇಳಿಯುವ ಲಕ್ಷಣಗಳಿಲ್ಲ ಎಂದು ವ್ಯಾಪಾರಿ ಗೊವಿಂದರಾಜು ಎನ್ನುವವರು ತಿಳಿಸಿದ್ದಾರೆ.
8
+ ಬೆಲೆ ಹೆಚ್ಚಾದರೆ ರೈತರಿಗೇನೂ ಅಷ್ಟೇನೂ ಸಿಗುವುದಿಲ್ಲ. ಇಲ್ಲಿ ವ್ಯಾಪಾರಿಗಳಿಗೆ ಹಾಗೂ ದಲ್ಲಾಳಿಗಳಿಗೆ ಲಾಭವಾಗುತ್ತದೆ. ರೈತರ ಬಳಿ ಕಡಿಮೆ ಬೆಲೆಗೆ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತದೆ. ಕೂಲಿ, ಗೊಬ್ಬರ, ಬಿತ್ತನೆ ಬೀಜ, ಔಷಧಿ ಎಲ್ಲವನ್ನೂ ಲೆಕ್ಕ ಹಾಕಿದರೆ ರೈತರಿಗೇನೂ ಉಳಿಯವುದಿಲ್ಲ.
eesanje/url_46_108_7.txt ADDED
@@ -0,0 +1,7 @@
 
 
 
 
 
 
 
 
1
+ ರೇಣುಕಾಸ್ವಾಮಿ ಕೊಲೆ ಪ್ರಕರಣ: ಎಲ್ಲಾ ಆರೋಪಿಗಳು ಮತ್ತೆ 5 ದಿನ ಪೊಲೀಸರ ವಶಕ್ಕೆ
2
+
3
+
4
+ ಬೆಂಗಳೂರು.ಜೂ.15 : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪವಿತ್ರ ಗೌಡ ಪವನ್ ಸೇರಿದಂತೆ ಎಲ್ಲಾ ಆರೋಪಿಗಳನ್ನು 42ನೇ ಎಸಿಎಂ ಎಂ ನ್ಯಾಯಾಲಯ ಮತ್ತೆ ಐದು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.
5
+ ಆರೋಪಿಗಳ ವಿಚಾರಣೆಗಾಗಿ ಆರು ದಿನಗಳ ಕಾಲ ವಶಕ್ಕೆ ಪಡೆದಿದ್ದ ಪೊಲೀಸರು ಇಂದು ನ್ಯಾಯಾಲಯ ಮುಂದೆ ಆರೋಪಿಗಳನ್ನ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡಬೇಕೆಂದು ಮಾಡಿದ ಮನವಿಯನ್ನು ಪುರಸ್ಕರಿಸಿದ 42ನೇ ಎಸಿ ಎಮ್ ಎಮ್ ನ್ಯಾಯಾಲಯದ ನ್ಯಾಯಾಧೀಶರಾದ ವಿಶ್ವನಾಥ್ ಗೌಡ ರವರು ಜೂನ್ 20ರವರೆಗೆ ಎಲ್ಲ ಹದಿಮೂರು ಆರೋಪಿಗಳನ್ನ ಪೊಲೀಸ್ ವಶಕ್ಕೆ ನೀಡಿದರು.
6
+ ಆರೋಪಿಗಳ ಹೆಚ್ಚಿನ ವಿಚಾರಣೆಯ ಅಗತ್ಯವಿದೆ ಮೈಸೂರಿನಲ್ಲಿ ಸ್ಥಳಮಹಜರು ಮಾಡಬೇಕಾಗಿದೆ ಮೃತ ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ನೀಡಲಾಗಿದೆ ಈ ಸಂಬಂಧ ಡಿವೈಸ್ ವಶಪಡಿಸಿಕೊಳ್ಳಬೇಕಾಗಿದೆ ಆರೋಪಿಗಳನ್ನು ಕನಿಷ್ಠ 9 ದಿನಗಳ ಕಾಲ ಪೊಲೀಸ್ ಕಷ್ಟಡಿಗೆ ನೀಡಬೇಕೆಂದು ಸರ್ಕಾರಿ ಪರ ಪ್ರಬಲವಾದ ಮಂಡಿಸಿದರು.
7
+ ಎಲ್ಲದಕ್ಕೂ ದರ್ಶನ್ ಕಾರಣ ಎನ್ನಲಾಗುತ್ತಿದೆ ಆರೋಪಿಗಳ ಹೇಳಿಕೆಗಳು ಸೋರಿಕೆಯಾಗುತ್ತಿವೆ. ಈಗಾಗಲೇ ಆರು ದಿನ ಪೊಲೀಸರ ವಿಚಾರಣೆ ನಡೆಸಲಾಗಿದೆ ವಾದ ಮಂಡಿಸಿದರುವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಐದು ದಿನಗಳ ಕಾಲ 13 ಆರೋಪಿಗಳನ್ನು ಪೊಲೀಸ್ ಕಷ್ಟಡಿಗೆ ನೀಡಿ ಆದೇಶಿಸಿದರು.
eesanje/url_46_108_8.txt ADDED
@@ -0,0 +1,8 @@
 
 
 
 
 
 
 
 
 
1
+ ಚನ್ನಪಟ್ಟಣ ಉಪ ಚುನಾವಣೆ ಘೋಷಣೆ ಬಳಿಕ ಅಭ್ಯರ್ಥಿ ಆಯ್ಕೆ : ಹೆಚ್‌ಡಿಕೆ
2
+ ಬೆಂಗಳೂರು, ಜೂ.15-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾದ ಬಳಿಕ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ಮಾಡುವುದಾಗಿ ಕೇಂದ್ರ ಉಕ್ಕು ಹಾಗೂ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.
3
+ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ಘೋಷಣೆಯಾಗಲಿ. ಆ ನಂತರ ಅಭ್ಯರ್ಥಿ ಆಯ್ಕೆ ಕುರಿತು ಮಾತನಾಡೋಣ ಎಂದರು.
4
+ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರು ದೊಡ್ಡವರು, ಅವರು ಏನು ಬೇಕಾದರೂ ಮಾತನಾಡಲಿ ಎಂದು ತಿರುಗೇಟು ನೀಡಿದರು. ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ನೀಡುವುದಿಲ್ಲ ಎಂಬ ಸುರೇಶ್‌ ಅವರ ಹೇಳಿಕೆಗೆ ಮೇಲಿನಂತೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.
5
+ ಕುಮಾರಸ್ವಾಮಿ ಅವರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃದು ಧೋರಣೆ ಅನುಸರಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಗಳ ನಡೆಯನ್ನು ಸ್ವಾಗತ ಮಾಡೋಣ ಬಿಡಿ ಎಂದು ಹೇಳಿದರು.
6
+ ಲೋಕಸಭೆಗೆ ಆಯ್ಕೆಯಾದ ಮೇಲೆ ಸಂಸತ್‌ ಸದಸ್ಯ ಸ್ಥಾನ ಇಲ್ಲವೆ ಶಾಸಕ ಸ್ಥಾನ ಎರಡರಲ್ಲಿ ಒಂದು ಮಾತ್ರ ಉಳಿಸಿಕೊಳ್ಳಬೇಕು. ಹೀಗಾಗಿ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಇಂದು ಸಲ್ಲಿಸಿರುವುದಾಗಿ ಕುಮಾರಸ್ವಾಮಿ ತಿಳಿಸಿದರು.ದಕ್ಷಿಣ ಕನ್ನಡ ಜಿಲ್ಲೆ ಕೈಗಾರಿಕೆಗೆ ಪ್ರೋತ್ಸಾಹ: ದಕ್ಷಿಣ ಕನ್ನಡ ಜಿಲ್ಲೆಯ ಕೈಗಾರಿಕಾ ಯೋಜನೆಗಳಿಗೆ ಪ್ರೋತ್ಸಾಹ ನೀಡುವಂತೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಸಲಹೆ ಮಾಡಿದರು.
7
+ ಕುಮಾರಸ್ವಾಮಿ ಅವರು ಶಾಸಕ ಸ್ಥಾನಕ್ಕೆ ತಮ ಕಚೇರಿಯಲ್ಲಿ ರಾಜೀನಾಮೆ ನೀಡಿದ ಸಂದರ್ಭದಲ್ಲಿ ಮಾತನಾಡಿದ ಸಭಾಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐದಾರು ಕೈಗಾರಿಕಾ ಯೋಜನೆಗಳಿವೆ. ಅವುಗಳಿಗೆ ನಿಮ ಬೆಂಬಲ ಬೇಕು. ನಿಮಿಂದ ರಾಜ್ಯ ಯೋಜನೆಗಳ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ ಎಂದರು.
8
+ ಆಗ ಮಾತನಾಡಿದ ಕುಮಾರಸ್ವಾಮಿ ಅವರು, ಕೈಗಾರಿಕೆಗಳಿಗೆ ಸಂಬಂಧಿಸಿದ ಯೋಜನೆಗಳ ಮಾಹಿತಿಯನ್ನು ಗಮನಕ್ಕೆ ತಂದರೆ, ಕೈಲಾದ ಬೆಂಬಲ ನೀಡುವೆ ಎಂದು ಭರವಸೆ ನೀಡಿದ್ದಾರೆ.
eesanje/url_46_108_9.txt ADDED
@@ -0,0 +1,6 @@
 
 
 
 
 
 
 
1
+ ಕೃಷ್ಣಾ, ಕಾವೇರಿ ಜಲ ವಿವಾದಗಳಿಗೆ ಸಂಸತ್ತಿನಲ್ಲಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತೇನೆ : ಬೊಮ್ಮಾಯಿ
2
+ ಬೆಂಗಳೂರು,ಜೂ.15-ಸಂಸತ್ತಿನಲ್ಲಿ ಕರ್ನಾಟಕದ ನೀರಾವರಿ ಯೋಜನೆಗಳಾದ ಕೃಷ್ಣಾ, ಕಾವೇರಿ ಅಂತರಾಜ್ಯ ಜಲ ವಿವಾದಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುತ್ತೇನೆ. ಸಂಸತ್ತಿನಲ್ಲಿ ಪ್ರಮಾಣಿಕವಾಗಿ ಕನ್ನಡಿಗರ ಪರವಾಗಿ ಧ್ವನಿ ಎತ್ತುವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
3
+ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಮೇಲೆ ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಸಂಸದನಾಗಿ ಆಯ್ಕೆಯಾಗಿ ದೆಹಲಿಗೆ ಹೋದರೂ, ಕರ್ನಾಟಕದ ರಾಜಕಾರಣದಲ್ಲಿ ನಾನು ಸಕ್ರಿಯನಾಗಿರುತ್ತೇನೆ. ನಮ ವರಿಷ್ಠರು ಅದೇ ಕಾರಣಕ್ಕೆ ಕೆಲವು ನಿರ್ಣಯ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.
4
+ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಪಡೆಯುವ ಬಗ್ಗೆ ರಾಜ್ಯ ಸರ್ಕಾರ ನಿಯಮಾನುಸಾರ ಮನವಿ ಸಲ್ಲಿಸಬೇಕು. ಹಿಂದೆ ನಾವು ಎಐಬಿಪಿಯಲ್ಲಿ ಸುಮಾರು ಆರು ತಿಂಗಳು ದೆಹಲಿಯಲ್ಲಿ ನಮ ಅಧಿಕಾರಿಗಳನ್ನು ಇಟ್ಟು ಸುಮಾರು 3800 ಕೊಟಿ ರೂ. ತಂದಿದ್ದೆ. ಕೇಂದ್ರದ ಬಜೆಟ್‌ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಮೀಸಲಿಟ್ಟಿರುವ 5000 ಕೋಟಿ ರೂ ತರಲು ರಾಜ್ಯದ ಸಚಿವರು ಹಾಗೂ ಕೇಂದ್ರ ಸರ್ಕಾರದ ಸಚಿವರ ಜೊತೆ ಮಾತನಾಡಿ ಹಣ ತರಲು ಪ್ರಯತ್ನಿಸುತ್ತೇನೆ ಎಂದರು.
5
+ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ನಾವು ಎಲ್ಲ ರೀತಿಯ ಸಿದ್ದತೆ ಮಾಡಿಕೊಂಡಿದ್ದೇವು. ಇದುವರೆಗೂ ಕೇಂದ್ರ ಸರ್ಕಾರ ಯಾವುದೇ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಿಲ್ಲ. ಆದರೆ, ನಮ್ಮ ಒತ್ತಾಸೆಯ ಕಾರಣಕ್ಕೆ ಈ ಯೋಜನೆಗೆ ವಿಶೇಷವಾಗಿ 5000 ಕೋಟಿ ರೂ. ನೀಡುವ ಭರವಸೆ ನೀಡಿದ್ದರು ಎಂದು ತಿಳಿಸಿದರು.
6
+ ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಆಯ್ಕೆಯಾದ ಹಿನ್ನೆಲೆ ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಶಿಗ್ಗಾವಿ ಕ್ಷೇತ್ರದ ಜನತೆಗೆ ಕೃತಜ್ಞತೆ ಹೇಳುತ್ತೇನೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಇನ್ನಷ್ಟು ಅಭಿವೃದ್ಧಿಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿದ್ದೇನೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಹಾಜರಿದ್ದರು.
eesanje/url_46_109_1.txt ADDED
@@ -0,0 +1,5 @@
 
 
 
 
 
 
1
+ ಸೆಮಿಕಂಡಕ್ಟರ್‌ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ : ಹೆಚ್‌ಡಿಕೆ ಭರವಸೆ
2
+ ಬೆಂಗಳೂರು, ಜೂ.15-ಸೆಮಿಕಂಡಕ್ಟರ್‌ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಕೈ ಜೋಡಿಸಿ ಕೆಲಸ ಮಾಡುವುದಾಗಿ ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
3
+ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಿನ್ನೆ ಬೆಂಗಳೂರಿಗೆ ಆಗಮಿಸಿದ ಕುಮಾರಸ್ವಾಮಿ ಅವರು, ಜೆಪಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಸನಾನ ಸ್ವೀಕರಿಸಿ ಮಾತನಾಡುವ ವೇಳೆ ಸೆಮಿಕಂಡಕ್ಟರ್‌ ತಯಾರಿಸಲು ಬಂಡವಾಳ ಹೂಡಿಕೆಗೆ ಆಗಮಿಸಿರುವ ಅಮೇರಿಕಾದ ಕಂಪನಿಯೊಂದಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೀಡಲಾಗುವ ಬೃಹತ್‌ ಪ್ರಮಾಣದ ಸಬ್ಸಿಡಿಯ ಬಗ್ಗೆ ಪ್ರಸ್ತಾಪಿಸಿದ್ದರು. ಇದು ನಾನಾ ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿತ್ತು.
4
+ ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ತಮ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿರುವ ಕುಮಾರಸ್ವಾಮಿ ಅವರು, ಸೆಮಿಕಂಡಕ್ಟರ್‌ ಕೈಗಾರಿಕೆಯು ಕಾರ್ಯತಂತ್ರದ ವಲಯವಾಗಿದೆ. ಎಲೆಕ್ಟ್ರಾನಿಕ್‌್ಸ ಮತ್ತು ಆಟೋಮೊಬೈಲ್‌ ಉತ್ಪಾದನೆಗೆ ಮೂಲಭೂತಸೌಲಭ್ಯಗಳು ಅಗತ್ಯ. ಇವೆರಡೂ ಕ್ಷೇತ್ರಗಳು ಸಾಕಷ್ಟು ಉದ್ಯೋಗಗಳನ್ನು ಸೃಷ್ಟಿಸಿವೆ ಎಂದಿದ್ದಾರೆ.
5
+ ಸೆಮಿಕಂಡಕ್ಟರ್‌ ಕ್ಷೇತ್ರದ ಅಭಿವೃದ್ಧಿಯ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡಿರುವ ಕ್ರಮಗಳನ್ನು ನಾನು ಪ್ರಶಂಸಿಸುತ್ತೇನೆ. ಭವಿಷ್ಯದಲ್ಲಿ ಈ ವಲಯದ ಅಭಿವೃದ್ಧಿಗೆ ತಮ ಇಲಾಖೆಯಿಂದ ಸಹಭಾಗಿಯಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.
eesanje/url_46_109_10.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ಅಮೆರಿಕದ ವರ್ಜೀನಿಯಾದಲ್ಲಿ ಆ.30, ಸೆ.1ರವರೆಗೆ 12ನೇ ಅಕ್ಕ ವಿಶ್ವ ಸಮ್ಮೇಳನ
2
+ ಬೆಂಗಳೂರು, ಜೂನ್‌ 14:ಕನ್ನಡ ನಾಡಿನ ಶ್ರೀಮಂತ ಭಾಷೆ, ಕಲೆ, ಪರಂಪರೆ, ಸಂಸ್ಕೃತಿಯನ್ನು ಸಪ್ತ ಸಾಗರದಾಚೆ ಪಸರಿಸುವ, ಬೆಳೆಸುವ 12ನೇ ಅಕ್ಕ ವಿಶ್ವ ಸಮ್ಮೇಳನ – 2024 ಅಮೆರಿಕದ ವರ್ಜೀನಿಯಾ ರಾಜ್ಯದ ರಿಚ್‌ಮಂಡ್‌ ನಗರದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಎಂದು ಅಮೆರಿಕ ಕನ್ನಡ ಕೂಟಗಳ ಒಕ್ಕೂಟದ (ಅಕ್ಕ) ಅಧ್ಯಕ್ಷರಾದ ರವಿ ಬೋರೆಗೌಡ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇದರಲ್ಲಿ ಒಟ್ಟು 42 ಅಮೆರಿಕ ಕನ್ನಡ ಸಂಘಗಳು ಸೇರಿ ಈ ವಿಶಿಷ್ಠ ಕಾರ್ಯಕ್ರಮವನ್ನು ಆಯೋಜಿಸುತ್ತಿವೆ ಎಂದು ಅವರು ತಿಳಿಸಿದರು.
3
+ ಸಮ್ಮೇಳನದ ವೈಶಿಷ್ಟ್ಯಗಳು:ಸಾಂಸ್ಕೃತಿಕ ಕಾರ್ಯಕ್ರಮಗಳು: ಕರ್ನಾಟಕದ ಭಾಷೆ, ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಅಮೆರಿಕದಲ್ಲಿ ಪ್ರಚಾರ ಮಾಡುವ ಉದ್ದೇಶದಿಂದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.ಸ್ಪರ್ಧೆಗಳು: ಎಲ್ಲಾ ವಯೋಮಾನದವರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ. ವಿಜೇತರಿಗೆ ಕರ್ನಾಟಕದಿಂದ ಆಗಮಿಸುವ ಗಣ್ಯರಿಂದ ಬಹುಮಾನ ವಿತರಿಸಲಾಗುತ್ತದೆ.
4
+ ಫ್ಯಾಶನ್‌ ಶೋ:ಕನ್ನಡ ನಾಡಿನ ಕಲೆ, ಸಂಸ್ಕೃತಿಯ ವಿವಿಧ ಮಾದರಿಯ ವಸ್ತ್ರ ಮಾದರಿಗಳ ಪ್ರದರ್ಶನ ಆಯೋಜಿಸಲಾಗಿದೆ.ಸಾಹಿತ್ಯ ಗೋಷ್ಠಿಗಳು: ಅಮೆರಿಕ ಮತ್ತು ಕರ್ನಾಟಕದ ಸಾಹಿತಿಗಳ ನಡುವೆ ಸಮ್ಮಿಲನ ಮತ್ತು ಸಾಹಿತ್ಯ ವಿಚಾರಗೋಷ್ಠಿಗಳು ಜರುಗಲಿವೆ.
5
+ ವಿಶೇಷ ಬಿಸಿನೆಸ್‌‍ ಫೋರಂ:ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗ ವಾಣಿಜ್ಯೋದ್ಯಮಿಗಳಿಗೆ ಹಾಗೂ ಅಲ್ಲಿ ಉದ್ಯಮ ಆರಂಭಿಸಲು ಮತ್ತು ಕೆಲಸ ನಿರ್ವಹಿಸಲು ಇರುವ ಅವಕಾಶಗಳ ಕುರಿತು ಆಸಕ್ತ ಕನ್ನಡಿಗರಿಗಾಗಿ ವಿಶೇಷ ಬಿಸಿನೆಸ್‌‍ ಫೋರಂ ಮೂಲಕ ಚರ್ಚಿ ನಡೆಸಲಾಗುತ್ತದೆ.
6
+ ವಿಶೇಷ ಖಾದ್ಯ:ಮೂರು ದಿನಗಳ ಸಮ್ಮೇಳನದಲ್ಲಿ ಕನ್ನಡ ನಾಡಿನ ವಿಶಿಷ್ಠ ಭಕ್ಷ್ಯ ಬೋಜನ ಸವಿಯುವ ಅವಕಾಶ ಲಭಿಸಲಿದೆ. ಕರ್ನಾಟಕದ ಬಹುತೇಕ ಮಾದರಿಯ ಊಟವನ್ನು ಪ್ರಸಿದ್ಧ ಅಡುಗೆ ತಯಾರಕರು ತಯಾರಿಸಿ ಬಡಿಸಲಿದ್ದಾರೆ.
7
+ ಪ್ರದರ್ಶನ ಮಳಿಗೆಗಳು:ಅಮೆರಿಕ, ಭಾರತ ಮತ್ತು ಕರ್ನಾಟಕದ ವಿವಿಧ ಇಲಾಖೆ ಮತ್ತು ಮಳಿಗೆಗಳ ಪ್ರದರ್ಶನಗೊಳ್ಳಲಿವೆ.
8
+ ಸಂಗೀತ ಕಾರ್ಯಕ್ರಮಗಳು:ಪ್ರತಿದಿನ ಕರ್ನಾಟಕದ ಜಾನಪದ, ಸಾಹಿತ್ಯ, ಸಿನಿಮಾ ಕುರಿತಾದ ಸಂಗೀತ ಕಾರ್ಯಕ್ರಮಗಳು, ಖ್ಯಾತ ಗಾಯಕರಾದ ವಿಜಯ್‌ ಪ್ರಕಾಶ್‌‍, ರಾಜೇಶ್‌ ಕೃಷ್ಣ, ನವೀನ್‌ ಸಜ್ಜು, ಅನುರಾಧ ಭಟ್‌ ಮತ್ತು ಅವರ ತಂಡದಿಂದ ಸಂಗೀತ ಕಾರ್ಯಕ್ರಮಗಳು ಜರುಗಲಿವೆ.
9
+ ಪುನೀತ್‌ ನಮನ:ಅಕಾಲಿಕವಾಗಿ ನಮ್ಮನ್ನು ಅಗಲಿದ ಕರ್ನಾಟಕ ರತ್ನ ಪುನೀತ್‌ ರಾಜ್‌ಕುರ್ಮಾ ಅವರಿಗೆ ಸಮರ್ಪಿತ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.
10
+ ಪಾರಂಪರಿಕ ನೃತ್ಯಗಳು:ಕರ್ನಾಟಕದ ಪಾರಂಪರಿಕ ನೃತ್ಯ ರೂಪಗಳು, ಯಕ್ಷಗಾನ, ಡೊಳ್ಳು ಕುಣಿತ ಮತ್ತು ವೀರಗಾಸೆ ಪ್ರದರ್ಶನ ಇರಲಿದೆ.
11
+ ನಾ��ಕ ಮತ್ತು ರಂಗಭೂಮಿ:ಕರ್ನಾಟಕದ ಪ್ರಸಿದ್ಧ ರಂಗಭೂಮಿ ತಂಡಗಳಿಂದ ಕನ್ನಡ ನಾಟಕಗಳು ಪ್ರದರ್ಶನಗೊಳ್ಳಲಿವೆ.
12
+ ವಿಶೇಷ ಅತಿಥಿಗಳು:ರಾಜಕೀಯ ಗಣ್ಯರು: ಕರ್ನಾಟಕದ ವಿವಿಧ ಇಲಾಖೆಗಳ ಸಚಿವರು.ಆಧ್ಯಾತ್ಮಿಕ ನಾಯಕರು: ಕರ್ನಾಟಕದ ಗೌರವಾನ್ವಿತ ಆಧ್ಯಾತ್ಮಿಕ ನಾಯಕರು.ಚಲನಚಿತ್ರ ತಾರೆಗಳು: ಕನ್ನಡ ಚಲನಚಿತ್ರ ರಂಗದ ಪ್ರಮುಖ ತಾರೆಯರು, ಗಣ್ಯರು, ಪ್ರಮುಖರು ಭಾಗವಹಿಸುತ್ತಾರೆ.ಸಾಹಿತ್ಯ ಕ್ಷೇತ್ರದ ಗಣ್ಯರು: ಪ್ರಸಿದ್ಧ ಸಾಹಿತಿಗಳು ಮತ್ತು ಕವಿಗಳು.ಉದ್ಯಮಿಗಳು: ನಾಡಿನ ಯಶಸ್ವಿ ಉದ್ಯಮಿಗಳು ಸಮ್ಮೇಳನದಲ್ಲಿ ಭಾಗವಹಿಸುತ್ತಾರೆ.
13
+ ವಿಶೇಷ ಆಕರ್ಷಣೆಗಳು:ಕ್ರೀಡಾ ಚಟುವಟಿಕೆಗಳು: ಯುವಕ, ಯುವತಿಯರಿಗಾಗಿ ವಿಶೇಷ ಕ್ರೀಡಾ ಸ್ಪರ್ಧೆಗಳು ಮತ್ತು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.ತಂತ್ರಜ್ಞಾನ ವೇದಿಕೆ: ತಂತ್ರಜ್ಞಾನದಲ್ಲಿ ನಾವಿನ್ಯತೆಗಳು, ನವೀನ ತಂತ್ರಜ್ಞಾನ ಉತ್ಪನ್ನಗಳು ಮತ್ತು ಕನ್ನಡಿಗರ ಮೇಲೆ ಬೀರಬಹುದಾದ ಪರಿಣಾಮಗಳ ಕುರಿತು ಚರ್ಚೆಗಳು ನಡೆಯಲಿವೆ.ವರ್ಕ್‌ಶಾಪ್‌ಗಳು ಮತ್ತು ಪರಿಷತ್ತುಗಳು: ಆರೋಗ್ಯ ಮತ್ತು ಆಯುಷ್‌‍, ಶಿಕ್ಷಣ ಮತ್ತು ಕನ್ನಡಿಗರಿಗೆ ಸಂಬಂಧಿಸಿದ ಸಾಮಾಜಿಕ ಸಮಸ್ಯೆಗಳ ಕುರಿತ ಸಂವಾದಗಳು.ಕಲಾ ಪ್ರದರ್ಶನ: ಕನ್ನಡ ಕಲಾವಿದರ ಚಿತ್ರಗಳು, ಶಿಲ್ಪಿಗಳು ಮತ್ತು ಕರಕುಶಲ ವಸ್ತುಗಳ ಪ್ರದರ್ಶನ.ನೆಟ್‌ವರ್ಕಿಂಗ್‌‍ ಕಾರ್ಯಕ್ರಮಗಳು: ವಿಶ್ವದಾದ್ಯಂತ ಇರುವ ಕನ್ನಡಿಗರನ್ನು ಸಂಪರ್ಕಿಸಲು ನೆಟ್‌ ವರ್ಕಿಂಗ್‌ ಕಾರ್ಯಕ್ರಮಗಳ ಆಯೋಜನೆ.
14
+ ವಿಶೇಷ ಕಾರ್ಯಕ್ರಮ: ಕನ್ನಡ ಕಲಿಯೋಣ ಬನ್ನಿಕನ್ನಡ ಕಲಿಯೋಣ ಬನ್ನಿ (ಬನ್ನಿ, ಕನ್ನಡ ಕಲಿಯೋಣ) ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಈ ಯೋಜನೆಯು ಈಗಾಗಲೇ ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಮತ್ತು ಕನ್ನಡ ಭಾಷೆಯ ಕಲಿಕೆಯಲ್ಲಿ ಆಸಕ್ತಿ ತೋರಿಸುವ ಎಲ್ಲರಿಗೂ ಕಲಿಸುವ ಉದ್ದೇಶವನ್ನು ಹೊಂದಿದೆ.ಈ ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲಾ ಸಂಘಟನೆಗಳು ಸೇರಿ ಅಮೆರಿಕದ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವಾಗಿ ಪರಿಗಣಿಸುವಂತೆ ಕೋರಲು ಪ್ರಯತ್ನ ನಡೆಸುವುದಾಗಿ ತಿಳಿಸಿವೆ. ಈ ಕಾರ್ಯಕ್ರಮವು ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗರಿಗೆ ಅನುಕೂಲವಾಗಲಿದೆ.ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದವರು: ಅಕ್ಕ ಅಧ್ಯಕ್ಷರಾದ ರವಿ ಬೋರೇಗೌಡ, ಕಾರ್ಯದರ್ಶಿ ಮಾದೇಶ ಬಸವರಾಜು, ಸಂಚಾಲಕರಾದ ಡಾ. ನವೀನ್‌ ಕೃಷ್ಣ, ಅಕ್ಕ ಭಾರತದ ಸಂಚಾಲಕರಾದ ತಿಮ್ಮಪ್ಪಗೌಡ ಮತ್ತು ಇತರ ಪದಾಧಿಕಾರಿಗಳು.
15
+ ಹೆಚ್ಚಿನ ಮಾಹಿತಿಗಾಗಿ:ಸಿ.ಆರ್‌. ಮಂಜುನಾಥ್‌ಮಾಧ್ಯಮ ಸಂಚಾಲಕರು, ಅಕ್ಕಸಂಪರ್ಕ ಸಂಖ್ಯೆ: 9980765001
eesanje/url_46_109_11.txt ADDED
@@ -0,0 +1,7 @@
 
 
 
 
 
 
 
 
1
+ ದರ್ಶನ್‌ ಹಾಗೂ ಅವರ ಸಿನಿಮಾಗಳನ್ನು ಬ್ಯಾನ್‌ ಮಾಡಬೇಕು : ಎಟಿಆರ್‌ ಆಗ್ರಹ
2
+ ಹಾಸನ,ಜೂನ್‌.14-ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಆರೋಪಿಯಾಗಿರುವ ನಟ ದರ್ಶನ್‌ ಸಿನಿಮಾಗಳನ್ನು ಬ್ಯಾನ್‌ ಮಾಡಬೇಕು ಎಂದು ಮಾಜಿ ಶಾಸಕ ಎ ಟಿ ರಾಮಸ್ವಾಮಿ ಆಗ್ರಹಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಉರಿದವರು ಬೂದಿ ಆಗಲೇಬೇಕು ಉರಿದವರು ಒಂದಲ್ಲ ಒಂದು ದಿನ ನಾಶ ಆಗುತ್ತಾರೆ ಎನ್ನುವುದಕ್ಕೆ ನಟ ದರ್ಶನ್‌ ಸ್ಪಷ್ಟ ಉದಾಹರಣೆಯಾಗಿದ್ದಾರೆ.ಇವರನ್ನು ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಹೊರದಬ್ಬ ಬೇಕು ಹಾಗೂ ಇವರ ಸಿನಿಮಾಗಳನ್ನು ಬ್ಯಾನ್‌ ಮಾಡಬೇಕು ಎಂದು ಆಗ್ರಹಿಸಿದರು .
3
+ ನಟ ದರ್ಶನ್‌ ಮಾಡಿರುವ ಘನ ಘೋರ ಅಪರಾಧಗಳನ್ನು ನಾವೆಲ್ಲರೂ ಖಂಡಿಸಲೇಬೇಕು, ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಸಿನಿಮಾ ಶೈಲಿಯಲ್ಲಿ ಅಪಹರಣ ಮಾಡಿ ಬೆಂಗಳೂರಿಗೆ ಕರೆತಂದು ಹತ್ಯೆ ಮಾಡಿದ್ದಾರೆ. ಓರ್ವ ನಟನಾದವನು ನಾಡಿನ ಕಲೆ ಸಂಸ್ಕೃತಿ ಸಂಪ್ರದಾಯವನ್ನು ಎತ್ತಿ ಹಿಡಿಯಬೇಕಿತ್ತು, ಆದರೆ ಮೇರು ನಟ ಎಂದು ಹೆಸರು ಪಡೆದಿದ್ದ ದರ್ಶನ್‌ ಹಾಗೂ ಅವರ ಪಟಾಲಂಗಳು ಹತ್ಯೆ ಮಾಡಿರುವುದು ನೋಡಿ ಧಿಗ್ಭ್ರಮೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು .
4
+ ಇಂತಹ ವ್ಯಯಕ್ತಿಗಳಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ ಹಣ ಹೆಸರು ಬೆಳೆಸಿ ಇಂತಹ ಹೇಯ ಕೃತ್ಯವನ್ನು ಮಾಡಿರುವುದು ನಾಡಿಗೆ ಅಗೌರವ ತಂದಂತಾಗಿದೆ. ಹಿಂದೆ ಆರೋಪಿಗಳು ಹಣದಿಂದ ಇಂತಹ ಪ್ರಕರಣಗಳಲ್ಲಿ ಕುಲಾಸಿಯಾಗಿದ್ದಾರೆ. ಇದು ಕಾನೂನಿನ ದೌರ್ಬಲ್ಯವೋ? ಎನ್ನುವುದು ತಿಳಿಯುತ್ತಿಲ್ಲ .ಆದರೆ ಈಗ ರಣರೋಚಕ ದುರ್ಘಟನೆ ನಡೆದಿದ್ದು, ಪೊಲೀಸ್‌‍ ಇಲಾಖೆ ದರ್ಶನ್‌ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಿಂದೆ ಹಲವು ದೇಶದ್ರೋಹಿ ಕೋಟಾ ನೋಟು ಮುದ್ರಣ ದಂತಹ ಪ್ರಕರಣಗಳಲ್ಲೂ ಖುಲಾಸೆಯಾಗಿರುವ ಸನ್ನಿವೇಶನಗಳನ್ನು ಕಂಡಿದ್ದೇವೆ ಸರ್ಕಾರ ಮತ್ತು ಇಲಾಖೆಗಳು ಕಾನೂನು ಕ್ರಮದ ಜೊತೆಗೆ ಎಷ್ಟು ಜನಕ್ಕೆ ಶಿಕ್ಷೆಯಾಯಿತು ಎನ್ನುವುದನ್ನು ಗಮನಿಸಬೇಕು. ಈ ರೀತಿಯ ಪ್ರಕರಣಗಳಲ್ಲಿ ಶೀಘ್ರ ಶಿಕ್ಷೆಯಾದರೆ ಮಾತ್ರ ಸಮಾಜಕ್ಕೆ ಉತ್ತಮ ಸಂದೇಶ ರವಾನಿಯಾಗುತ್ತದೆ ಎಂದರು.ರೇಣುಕಸ್ವಾಮಿ ಹತ್ಯೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡು ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ ಅನ್ನು ತೆರೆಯುವ ಮೂಲಕ ಕನಿಷ್ಠ ಮೂರು ತಿಂಗಳಲ್ಲಿ ದರ್ಶನ್‌ ಗೆ ಶಿಕ್ಷೆ ಆಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
5
+ ಇನ್ನು ವಾಲ್ಮೀಕಿ ನಿಗಮದ ಹಣ ಲೂಟಿಕೋರರ ಪಾಲಾಗಿದ್ದು ಇದರ ಹಿಂದೆ ದೊಡ್ಡ ಶಕ್ತಿಯೇ ಅಡಗಿದ್ದು ಈ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ರಾಮಸ್ವಾಮಿ ಒತ್ತಾಯಿಸಿದರು .ಈ ಹಿಂದೆಯೂ ಹಲವಾರು ನಿಗಮ ಮಂಡಳಿಗಳಲ್ಲಿ ಅವ್‌ಯವಹಾರ ನಡೆದಿದೆ. ಆಡಳಿತ ನಡೆಸುವವರು ಬಾಯಲ್ಲಿ ಮಾತ್ರ ಪಾರದರ್ಶಕತೆ ಆಡಳಿತ ನೀಡುವುದಾಗಿ ಹೇಳುತ್ತಾರೆ. ಆದರೆ ಅಂತಹ ಆ���ಳಿತ ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
6
+ ಒಳ್ಳೆಯ ಬೆಳೆ ಬರಲು ಕಳೆ ಕೀಳಬೇಕು ಅಂತಯೇ ಉತ್ತಮ ಆಡಳಿತಕ್ಕೆ ಭ್ರಷ್ಟಾಚಾರ ನಿರ್ಮೂಲನೆ ಆಗಲೇಬೇಕು ಇದು ದೊಡ್ಡ ಹಗರಣವಾಗಿದ್ದು ಸಣ್ಣವರಿಂದ ಅಪರಾಧ ನಡೆದಿಲ್ಲ, ದೊಡ್ಡವರೆ ಇಂತಹ ಕೃತ್ಯ ಮಾಡಿದ್ದಾರೆ ಎಂದರು. ಸರ್ಕಾರಕ್ಕೆ ಬದ್ಧತೆ ಇದ್ದರೆ ಇಂತಹ ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಬೇಕು ಈ ಮೂಲಕ ಜನರಿಗೆ ದೊಡ್ಡ ಸಂದೇಶವನ್ನು ಸಾರಬೇಕಿದೆ. ಇಂತಹ ಭ್ರಷ್ಟಾಚಾರ ಬೆಳೆಯಲು ಬಿಡದೆ ನಿಯಂತ್ರಣ ಮಾಡಬೇಕಿದ್ದು ತುರ್ತು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
7
+ ಸಾರ್ವಜನಿಕರ ಆಸ್ತಿ ಹಣ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್‌ಯವಾಗಿದೆ. ಆದರೆ ಈ ನಿಟ್ಟಿನಲ್ಲಿ ಕಠಿಣ ಕ್ರಮಗಳು ಜರುಗುತ್ತಿರುವುದು ಕಡಿಮೆಯಾಗಿದೆ, ಎಂಜಲು ತಿಂದವರು ಆರೋಗ್ಯವಾಗಿರಲು ಸಾಧ್ಯವಿಲ್ಲ ಇಂತಹ ಪ್ರಕರಣದಲ್ಲಿ ಸಿಲುಕಿರುವವರು ಹೆಚ್ಚು ದಿನ ಕಾನೂನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.ಪತ್ರಿಕಾಗೋಷ್ಠಿಯಲ್ಲಿ ಜನಾರ್ಧನ್‌‍, ಮಾದೇಶ್‌‍, ಲೋಕೇಶ್‌ ಇದ್ದರು.
eesanje/url_46_109_12.txt ADDED
@@ -0,0 +1,7 @@
 
 
 
 
 
 
 
 
1
+ ಸಿದ್ದಗಂಗಾ ಮಠಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಬೇಟಿ
2
+
3
+ ತುಮಕೂರು,ಜೂನ್‌.14-ಕೇಂದ್ರ ಸಚಿವರಾದ ನಂತರ ಸೋಮಣ್ಣನವರು ಮೊಟ್ಟಮೊದಲ ಇಂದು ಬೆಳಿಗ್ಗೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ತಮ್ಮ ಆರಾಧ್ಯ ದೈವ ಡಾ.ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿ, ಮಠಾಧೀಶ ಶ್ರೀ ಸಿದ್ದಲಿಂಗ ಸ್ವಾಮಿಯವರ ಆಶೀರ್ವಾದ ಪಡೆದರು.
4
+ ನಂತರ ಎಲೆರಾಂಪುರ ಮಠ, ಸಿದ್ದರಬೆಟ್ಟದ ಮಠ, ಬೆಳ್ಳಾವಿ ಕಾರದೇಶ್ವರ ಮಠ, ಗೋಡೆಕೆರೆ ಮಠ, ತಿಪಟೂರು ಮಠ, ರಂಗಾಪುರ ಮಠ, ನೊಣವಿನಕೆರೆ ಮಠಗಳಿಗೆ ಭೇಟಿ ನೀಡಿ ಅಲ್ಲಿನ ಶ್ರೀಗಳ ಆಶೀರ್ವಾದ ಪಡೆಯುವರು .
5
+ ಮಾಜಿ ಸಂಸದ ಜಿ ಎಸ್‌‍ ಬಸವರಾಜು, ಶಾಸಕ ಜ್ಯೋತಿಗಣೇಶ್‌ ,ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್‌ ಹೆಬ್ಬಾಕ . ಜಿಲ್ಲಾ ಜೆಡಿಎಸ್‌‍ ಅಧ್ಯಕ್ಷ ಆರ್‌.ಸಿ.ಆಂಜನಪ್ಪ, ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂದೀಪ್‌ಗೌಡ, ಉಪಾಧ್ಯಕ್ಷರಾದ ನಾಗರತ್ನಮ್ಮ, ಅನಿತಾ, ಕಾರ್ಯದರ್ಶಿಗಳಾದ ಕೆಂಪೇಗೌಡ, ಜ್ಯೋತಿ ತಿಪ್ಪೇಸ್ವಾಮಿ, ಜೆಡಿಎಸ್‌‍ ನಗರಾಧ್ಯಕ್ಷ ವಿಜಯ್‌ಗೌಡ, ವಕ್ತಾರ ಮಧು, ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್‌ ಜೆ.ಜಗದೀಶ್‌ ಹಾಜರಿದ್ದರು.
6
+ ಭಾನುವಾರ ಜೂನ್‌.16)ರಂದು ನಗರದ ಬಾವಿಕಟ್ಟೆ ಕಲ್ಯಾಣ ಮಂಟಪದಲ್ಲಿ ನಡೆಯುವ ಸಮಾರಂಭದಲ್ಲಿ ಸಚಿವ ಸೋಮಣ್ಣ ಅವರು ಲೋಕಸಭಾಚುನಾವಣೆಯಲ್ಲಿ ತಮ್ಮ ಗೆಲುವಿಗೆ ಸಹಕರಿಸಿದ ಮತದಾರರಿಗೆ ಹಾಗೂ ಬೆಜೆಪಿ ಹಾಗು ಜೆಡಿಎಸ್‌‍ ಪಕ್ಷಗಳ ಮುಖಂಡರು, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲು ಮೈತ್ರಿ ಪಕ್ಷಗಳ ಕಾರ್ಯಕರ್ತರ ಸಮಾವೇಶ ಏರ್ಪಡಿಸಲಾಹಿದೆ.
7
+ ಇದೇ ವೇಳೆ ಬಿಜೆಪಿ ಹಾಗೂ ಜೆಡಿಎಸ್‌‍ನಿಂದ ವಿ.ಸೋಮಣ್ಣ ಅವರನ್ನು ಅಭಿನಂದಿಸಲಾಗುವುದು ಕಾರ್ಯಕ್ರಮಕ್ಕೆ ಮುನ್ನಾ ನಗರದ ಎಸ್‌‍ಐಟಿ ಬ್ಯಾಕ್‌ ಗೇಟ್‌ ಬಳಿಯಿಂದ ಸೋಮಣ್ಣ ಅವರನ್ನು ಅದ್ದೂರಿ ಮೆರವಣಿಗೆಯಲ್ಲಿ ಕರೆದೊಯ್ಯಲಾಗುವುದು, ಎರಡೂ ಪಕ್ಷಗಳ ಕಾರ್ಯಕರ್ತರ ಬೃಹತ್‌ ಬೈಕ್‌ ಕ್ಯಾಲಿ, ಜನಪದ ಕಲಾತಂಡಗಳ ಆಕರ್ಷಕ ಪ್ರದರ್ಶನದೊಂದಿಗೆ ಸಚಿವರನ್ನು ಬರಮಾಡಿಕೊಳ್ಳಲು ಸಿದ್ದತೆಗಳನ್ನು ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
eesanje/url_46_109_2.txt ADDED
@@ -0,0 +1,9 @@
 
 
 
 
 
 
 
 
 
 
1
+ ನೀಟ್‌ ಮರು ಪರೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ
2
+ ಬೆಂಗಳೂರು, ಜೂ.15-ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಸಂಬಂಧಪಟ್ಟಂತೆ ನೀಟ್‌ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಮರು ಪರೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರಿಗೆ ಫಸ್ಟ್‌ ರ್ಯಾಂಕ್‌ ನೀಡಲಾಗಿದೆ. ಕಷ್ಟಪಟ್ಟು ಓದಿ ಬರೆದಂತಹ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಬೇಕು ಹಾಗೂ ಮರು ಪರೀಕ್ಷೆ ನಡೆಸಬೇಕು ಎಂದರು.
3
+ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ನೀಟ್‌ ಪರೀಕ್ಷೆಯನ್ನು ಸರಿಯಾಗಿ ನಡೆಸಿಲ್ಲ. ಗ್ರೇಸ್‌‍ ಅಂಕ ಕೊಟ್ಟು ಪಾಸ್‌‍ ಮಾಡುವುದು ಕೆಟ್ಟ ಅಭ್ಯಾಸ. ಯಾರಿಗೂ ಗ್ರೇಸ್‌‍ ಅಂಕ ಕೊಡಬಾರದು ಎಂದು ಹೇಳಿದರು.ಕೇಂದ್ರ ಸರ್ಕಾರದಿಂದ ಬರ ನಿರ್ವಹಣೆಗಾಗಿ ಬಿಡುಗಡೆ ಮಾಡಲಾದ ಹಣವನ್ನು ರಾಜ್ಯ ಸರ್ಕಾರ ರೈತರ ಖಾತೆಗಳಿಗೆ ವರ್ಗಾವಣೆ ಮಾಡುತ್ತಿದೆ. ಯಾವುದನ್ನೂ ಉಳಿಸಿಕೊಳ್ಳುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
4
+ ದಕ್ಷಿಣ ಭಾರತಕ್ಕೆ 8 ಸಚಿವ ಸ್ಥಾನಗಳನ್ನು ನೀಡುವ ಮೂಲಕ ಬಿಜೆಪಿ ತನ್ನ ಪಕ್ಷ ಸಂಘಟನೆಯನ್ನು ವಿಸ್ತರಣೆ ಮಾಡಿಕೊಳ್ಳುವ ಪ್ರಯತ್ನ ನಡೆಸಿದೆ ಎಂಬ ಟೀಕೆಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಏನೇ ಮಾಡಿದರೂ ದಕ್ಷಿಣ ಭಾರತದಲ್ಲಿ ಜನರು ಬಿಜೆಪಿಯನ್ನು ಬೆಂಬಲಿಸುವುದಿಲ್ಲ. ಏಕೆಂದರೆ, ಅದು ಆರ್‌ಎಸ್‌‍ಎಸ್‌‍ ಮೂಲದ ಪಕ್ಷ ಎಂದು ವ್ಯಾಖ್ಯಾನಿಸಿದರು.
5
+ ಉತ್ತರ ಭಾರತದಲ್ಲೂ ಈ ಬಾರಿ ಜನರು ಬಿಜೆಪಿಯನ್ನು ಬೆಂಬಲಿಸಿಲ್ಲ. ಆರ್‌ಎಸ್‌‍ಎಸ್‌‍ನವರೇ ಚುನಾವಣಾ ಫಲಿತಾಂಶದ ಬಗ್ಗೆ ಹೇಳಿಕೆ ನೀಡಿದ್ದು, ಅಹಂಕಾರವಿದ್ದರೆ ಜನ ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. ಆದರೂ ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುವುದನ್ನು ಬಿಟ್ಟಿಲ್ಲ. ಮೊದಲಿನಿಂದಲೂ ಅದೇ ಪರಿಪಾಠ ಅನುಸರಿಸುತ್ತಾ ಬಂದಿದ್ದಾರೆ. ಈಗಲೂ ಅದನ್ನೇ ಮುಂದುವರೆಸಿದ್ದಾರೆ.
6
+ ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿಲ್ಲ ಎಂದರು.ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಳಿಬರುತ್ತಿರುವ ಟೀಕೆಗಳಿಗೆ ಉತ್ತರಿಸಿದ ಅವರು, ನನ್ನ ಮೇಲೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ಅವರ ಮೇಲೆ ಕೇಸು ದಾಖಲಿಸಿರುವುದನ್ನು ಏನೆಂದು ಕರೆಯಬೇಕು ಎಂದು ಮರು ಪ್ರಶ್ನೆ ಹಾಕಿದರು.
7
+ ರಾಹುಲ್‌ ಗಾಂಧಿ ಅವರ ವಿರುದ್ಧ ಪ್ರಕರಣ ದಾಖಲಿಸಿ, ಸದಸ್ಯತ್ವವೇ ರದ್ದುಗೊಳ್ಳುವಂತೆ ಮಾಡಿರಲಿಲ್ಲವೇ? ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರನ್ನು ಜೈಲಿಗೆ ಕಳುಹಿಸಿದ್ದಾರೆ. ಅದನ್ನು ದ್ವೇಷದ ರಾಜಕಾರಣ ಎನ್ನಬೇಕೇ ಅಥವಾ ಪ್ರೀತಿಯ ರಾಜಕಾರಣ ಎನ್ನಬೇಕೇ? ಸೇ���ಿನ ರಾಜಕಾರಣ ಮಾಡುವವರು ಅವರು. ನಾವಲ್ಲ. ನಾನು ಎಂದೂ ಸೇಡಿನ ರಾಜಕಾರಣ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
8
+ ಪರಿಶಿಷ್ಟ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶಿಷ್ಯವೇತನಕ್ಕೆ ನಿಗದಿಯಾಗಿದ್ದ ಶೇಕಡಾವಾರು ಅಂಕಗಳ ಪ್ರಮಾಣವನ್ನು ಶೇ. 60ರಿಂದ 75ಕ್ಕೆ ಹಾಗೂ ಆದಾಯ ಮಿತಿಯನ್ನು ಆರು ಲಕ್ಷ ರೂ.ಗಳಿಗೆ ಹೆಚ್ಚಿಸಿರುವ ಬಗ್ಗೆ ಪರಿಶೀಲನೆ ನಡೆಸಿ ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚಿಸುವುದಾಗಿ ಹೇಳಿದರು.
9
+ ಎಂಜಿನಿಯರಿಂಗ್‌ ಕಾಲೇಜುಗಳ ಶೈಕ್ಷಣಿಕ ಶುಲ್ಕವನ್ನು ಶೇ.10ರಷ್ಟು ಹೆಚ್ಚಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಕಾಲೇಜು ಆಡಳಿತಮಂಡಳಿಗಳ ಒತ್ತಾಯದ ಮೇರೆಗೆ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಹೇಳಿದರು.ತಾಲ್ಲೂಕು ಮತ್ತು ಜಿಲ್ಲಾ ಪಂಚಾಯ್ತಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ಶೀಘ್ರವೇ ಚುನಾವಣೆ ನಡೆಸಲು ನಮ ಸರ್ಕಾರ ಬದ್ಧವಾಗಿದೆ ಎಂದರು.
eesanje/url_46_109_3.txt ADDED
@@ -0,0 +1,6 @@
 
 
 
 
 
 
 
1
+ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಕೇಂದ್ರ ಸಚಿವ ಹೆಚ್‌ಡಿಕೆ
2
+ ಬೆಂಗಳೂರು, ಜೂ.15-ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ.
3
+ ನಿನ್ನೆ ರಾತ್ರಿ ಕುಟುಂಬ ಸದಸ್ಯರೊಂದಿಗೆ ತಿರುಪತಿಗೆ ತೆರಳಿದ್ದ ಅವರು ಬೆಳಗಿನಜಾವ ಸುಪ್ರಭಾತ ಪೂಜೆಯ ಸಮಯದಲ್ಲಿ ವೆಂಕಟೇಶ್ವರಸ್ವಾಮಿಯ ದರ್ಶನ ಪಡೆದಿದ್ದಾರೆ. ತಿರುಪತಿಯಿಂದ ಬೆಂಗಳೂರಿಗೆ ಮರಳಿದ ಬಳಿಕ ಅವರು ವಿಧಾನಸೌಧದಲ್ಲಿ ವಿಧಾನಸಭಾಧ್ಯಕ್ಷರಿಗೆ ತಮ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
4
+ ನಂತರ ತಮ ತವರು ಕ್ಷೇತ್ರ ಚನ್ನಪಟ್ಟಣಕ್ಕೆ ತೆರಳಿದರು. ಶಾಸಕರಾಗಿ ಇಂದು ಕೊನೆಯ ದಿನವಾಗಿರುವ ಹಿನ್ನೆಲೆಯಲ್ಲಿ ತಮ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಪೂರ್ವ ನಿಯೋಜಿತವಾಗಿದ್ದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಚನ್ನಪಟ್ಟಣಕ್ಕೆ ಆಗಮಿಸಿದ ಕುಮಾರಸ್ವಾಮಿ ಅವರಿಗೆ ಅದ್ಧೂರಿ ಸ್ವಾಗತ ಕೋರಿ ಅಭಿನಂದಿಸಲಾಯಿತು.
5
+ ಇಂದು ಸಂಜೆ ತಮ ಲೋಕಸಭಾ ಕ್ಷೇತ್ರವಾದ ಮಂಡ್ಯಕ್ಕೆ ತೆರಳಲಿದ್ದಾರೆ. ಮಂಡ್ಯದಲ್ಲಿ ಸಂಸದರ ಕಚೇರಿ ಪೂಜೆ ನೆರವೇರಿಸಲಿದ್ದು, ಬಳಿಕ ಬೆಂಗಳೂರಿಗೆ ಮರಳುವ ಕಾರ್ಯಕ್ರಮವಿದೆ. ನಿನ್ನೆ ಬೆಂಗಳೂರಿನಲ್ಲಿ ಜೆಡಿಎಸ್‌‍ ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದಿಸಿದಂತೆ ಮಂಡ್ಯದಲ್ಲೂ ಅಭಿನಂದನೆ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ.
6
+ ಲೋಕಸಭಾ ಚುನಾವಣೆಯಲ್ಲಿ ಚುನಾಯಿತರಾದ ನಂತರ ಹಾಗೂ ಕೇಂದ್ರ ಸಚಿವರಾದ ಮೇಲೆ ಹೆಚ್‌ಡಿಕೆ ಮೊದಲ ಬಾರಿಗೆ ಮಂಡ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಜೆಡಿಎಸ್‌‍ ಮುಖಂಡರು ಹಾಗೂ ಕಾರ್ಯಕರ್ತರು ಉತ್ಸಾಹದಿಂದ ಕುಮಾರಸ್ವಾಮಿ ಅವರನ್ನು ಬರಮಾಡಿಕೊಳ್ಳಲು ಹಾಗೂ ಅಭಿನಂದಿಸಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ. ಸಂಸದರ ಕಚೇರಿ ಪೂಜೆ ನೆರವೇರಿಸುವ ಕುಮಾರಸ್ವಾಮಿ ಅವರು, ತಮನ್ನು ಚುನಾಯಿಸಿದ ಮತದಾರರಿಗೆ ಧನ್ಯವಾದ ಅರ್ಪಿಸಲಿದ್ದಾರೆ.
eesanje/url_46_109_4.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಮೋದಿಗೆ ಮತ್ತಷ್ಟು ಹತ್ತಿರವಾದ ಕುಮಾರಸ್ವಾಮಿ, ಬಿಜೆಪಿಯಲ್ಲಿ ಕೆಲವರಿಗೆ ಉರಿ ಉರಿ
2
+ ಬೆಂಗಳೂರು,ಜೂ.15-ಲೋಕಸಭೆ ಚುನಾವಣೆ ನಡೆದು ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಕೇಂದ್ರದ ನರೇಂದ್ರಮೋದಿ ಸಂಪುಟದಲ್ಲಿ ಸಚಿವರಾಗಿರುವ ಹೆಚ್‌‍.ಡಿ.ಕುಮಾರಸ್ವಾಮಿಗೆ ಹೆಚ್ಚಿನ ಮನ್ನಣೆ ಸಿಗುತ್ತಿರುವುದು ಒಂದು ಬಣದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.
3
+ ಕೇಂದ್ರದಲ್ಲಿ ಕೃಷಿ ಖಾತೆಯನ್ನು ನಿರೀಕ್ಷೆ ಮಾಡಿದ್ದ ಕುಮಾರಸ್ವಾಮಿಗೆ ಸ್ವತಃ ಅವರೇ ಶಾಕ್‌ ಆಗುವಂತೆ ಭಾರೀ ಕೈಗಾರಿಕೆ ಖಾತೆಯನ್ನು ನೀಡಲಾಗಿತ್ತು. ಪ್ರಮಾಣ ವಚನ ಸ್ವೀಕರಿಸುವ ವೇಳೆ ಎನ್‌ಡಿಎ ಮೈತ್ರಿ ಪಕ್ಷಗಳ ಪೈಕಿ ಹೆಚ್‌ಡಿಕೆ ಮೊದಲನೇಯವರಾಗಿ ಸ್ವೀಕಾರ ಮಾಡಿದ್ದರು.
4
+ ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಜೆಡಿಎಸ್‌‍ ಜತೆಗಿನ ಮೈತ್ರಿಯಿದ ಬಿಜೆಪಿಗೆ ಹೆಚ್ಚಿನ ಲಾಭವೇನೂ ಆಗಿಲ್ಲ. ಆದರೆ ಈ ಮೈತ್ರಿಯಿಂದ ಲಾಭ ಪಡೆದಿರುವ ಮಾಜಿ ಮುಖ್ಯಮಂತ್ರಿ ಎಚ್‌‍.ಡಿ.ಕುಮಾರಸ್ವಾಮಿ ಗೆದ್ದ ನಂತರ ಉರುಳಿಸುತ್ತಿರುವ ಒಂದೊಂದೇ ದಾಳ ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಅದಕ್ಕಿಂತ ಹೆಚ್ಚಾಗಿ ಸಂಘ ಪರಿವಾರದ ಹಿನ್ನಲೆಯಿಂದ ಬಂದಿರುವ ಮೂಲ ಬಿಜೆಪಿ ಮುಖಂಡರಿಗೆ ಹೆಚ್ಚು ಕಿರಿಕಿರಿ ಉಂಟು ಮಾಡಿದೆ.
5
+ ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವ ಮಾಜಿ ಸಚಿವರಾದ ವಿ.ಸೋಮಣ್ಣ, ಡಾ.ಸುಧಾಕರ್‌ ಹಾಗೂ ತೇಜಸ್ವೀ ಸೂರ್ಯ ಸೇರಿದಂತೆ ಕೆಲವರು ನೇರವಾಗಿ ಜೆಡಿಎಸ್‌‍ನ ಪ್ರಶ್ನಾತೀತ ನಾಯಕ, ಮಾಜಿ ಪ್ರಧಾನಿ ಎಚ್‌‍.ಡಿ.ದೇವೇಗೌಡರು ಹಾಗೂ ಕುಮಾರ ಸ್ವಾಮಿಯವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದರು.
6
+ ಅದರಲ್ಲೂ ತುಮಕೂರು ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳಿಂದ ಗೆದ್ದಿರುವ ವಿ.ಸೊಮಣ್ಣ ಮತ್ತು ಡಾ.ಸುಧಾಕರ್‌ ತಮ ಗೆಲುವಿಗೆ ಜೆಡಿಎಸ್‌‍ ನಾಯಕತ್ವದ ಬೆಂಬಲವೇ ಪ್ರಮುಖ ಕಾರಣ ಎಂದು ಬಹಿರಂಗವಾಗೇ ಘೋಷಿಸಿರುವುದು ಮತ್ತು ಫಲಿತಾಂಶ ಘೋಷಣೆಯಾದ ಮರುಕ್ಷಣವೇ ಜೆಡಿಎಸ್‌‍ ನಾಯಕರನ್ನು ಭೇಟಿ ಮಾಡಿರುವುದು ಬಿಜೆಪಿಯ ವರಿಷ್ಠರಿಗೆ ಅಸಮಾಧಾನ ತಂದಿದೆ.
7
+ ವಿಶೇಷ ಎಂದರೆ ಈ ಇಬ್ಬರೂ ಮುಖಂಡರೂ ಬೇರೆ ಪಕ್ಷಗಳಿಂದ ಬಿಜೆಪಿಗೆ ವಲಸೆ ಬಂದವರು ಮತ್ತು ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಧಿಕಾರ ಅನುಭವಿಸಿದವರು ಎಂಬುದು ಇಲ್ಲಿ ಗಮನಿಸಬೇಕಾದ ಅಂಶ. ಹಾಗೆಯೇ ಇತ್ತೀಚಿನ ದಿನಗಳಲ್ಲಿ ಸೋಮಣ್ಣ ಪಕ್ಷದ ಹಿರಿಯ ನಾಯಕ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ನೇರವಾಗೇ ಸಮರ ಸಾರಿದ್ದರು.
8
+ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ವರುಣಾ ಹಾಗೂ ಚಾಮರಾಜ ನಗರ ಕ್ಷೇತ್ರಗಳಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತ ಸೋಮಣ್ಣ ತಮ ಸೋಲಿಗೆ ಯಡಿಯೂರಪ್ಪ ಮತ್ತು ಅವರ ಪುತ್ರ ಹಾಗೂ ಅವರ ಬೆಂಬಲಿಗರೇ ಕಾರಣ ಎಂದು ವರಿಷ್ಠರಿಗೆ ದೂರಿದ್ದು ಈಗ ಗುಟ್ಟೇನಲ್ಲ ಎಂಬುದು ಬಿಜೆಪಿ ಪಾಳಯದಲ್ಲಿ ಕೇಳಿ ಬರುತ್ತಿರುವ ಮಾತು.
9
+ ಈಗ ಚುನಾವಣೆಯಲ್ಲಿ ಗೆದ್ದ ನಂತರ ಸೋಮಣ್ಣ ತಮ ಗೆಲುವಿಗೆ ಜೆಡಿಎಸ್‌‍ ನಾಯಕರು, ಕಾರ್ಯಕರ್ತರು ಹಾಗೂ ಬಿಜೆಪಿ ವರಿಷ್ಠರೇ ಕಾರಣ ಎಂದೂ ಹೇಳುತ್ತಿರುವುದನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರನ್ನು ಗುರಿಯಾಗಿಸಿಕೊಂಡಿರುವುದು ಕಾಣುತ್ತದೆ.
10
+ ಇದೇ ಮಾದರಿಯಲ್ಲಿ ಡಾ. ಸುಧಾಕರ್‌ ಕೂಡ ಪ್ರತಿಕ್ರಿಯಿಸಿದ್ದಾರೆ. ಅಲ್ಲಿಗೆ ಬಿಜೆಪಿಯ ದೆಹಲಿ ವರಿಷ್ಠರ ಪಗಡೆಯಾಟಕ್ಕೆ ರಾಜ್ಯದಲ್ಲಿ ಇಬ್ಬರು ಪ್ರಮುಖ ಮುಖಂಡರು ಸಿಕ್ಕಂತಾಗಿದೆ. ಈ ಅವಕಾಶವನ್ನು ಬಳಸಿಕೊಂಡು ಮುಂದಿನ ದಿನಗಳಲ್ಲಿ ಯಡಿಯೂರಪ್ಪ ಅವರನ್ನು ಮೂಲೆಗೊತ್ತುವ ಪ್ರಯತ್ನ ಶುರುವಾಗಿದೆ ಎಂಬುದನ್ನು ಹೆಸರು ಬಹಿರಂಗಪಡಿಸಲು ಇಚ್ಛಿಸದ ಬಿಜೆಪಿ ಮುಖಂಡರು ಒಪ್ಪಿಕೊಳ್ಳುತ್ತಾರೆ.
11
+ ಬಿಜೆಪಿಯಲ್ಲಿನ ಈ ವಿದ್ಯಮಾನಗಳನ್ನು ಅರಿತಿರುವ ಕುಮಾರಸ್ವಾಮಿ ಯಡಿಯೂರಪ್ಪ ವಿರುದ್ಧ ಒಳಗೊಳಗೇ ಕುದಿಯುತ್ತಿರುವ ಪ್ರಮುಖ ಮುಖಂಡರುಗಳನ್ನು ತಾವಾಗೇ ಸಂಪರ್ಕಿಸಿ ವಿಶ್ವಾಸಕ್ಕೆ ತಗೆದುಕೊಳ್ಳುವ ಪ್ರಯತ್ನ ಮಾಡುತ್ತಿರುವುದು ಈಗಿನ ಬೆಳವಣಿಗೆ.ಒಂದಂತೂ ಸ್ಪಷ್ಟ.
12
+ ಲೋಕಸಭಾ ಚುನಾವಣೆಗೆ ಮುನ್ನ ಜೆಡಿಎಸ್‌‍ ಅಸ್ತಿತ್ವ ಮುಗಿದೇ ಹೋಯಿತು ಎಂದು ಟೀಕಿಸುತ್ತಿದ್ದವರಿಗೆ ಮಂಡ್ಯದಲ್ಲಿ ಕುಮಾರಸ್ವಾಮಿ ಹಾಗೂ ಕೋಲಾರದಲ್ಲಿ ಜೆಡಿಎಸ್‌‍ ಅಭ್ಯರ್ಥಿ ಮಲ್ಲೇಶ ಬಾಬು ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ದೇವೇಗೌಡರ ಅಳಿಯ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌.ಮಂಜುನಾಥ್‌ ಅವರ ಗೆಲವು ಮತ್ತೆ ಉತ್ಸಾಹ ಪುಟಿಯುವಂತೆ ಮಾಡಿದೆ.
13
+ ಅದರಲ್ಲೂ ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಸೋದರ ಡಿ.ಕೆ.ಸುರೇಶ್‌ ಅವರನ್ನು ಭಾರೀ ಮತಗಳ ಅಂತರದಿಂದ ಸೋಲಿಸಿದ್ದು ಕುಮಾರಸ್ವಾಮಿಯವರ ಗೆಲುವಿನ ಓಟದ ಹುಮಸ್ಸನ್ನು ಅಧಿಕಗೊಳಿಸಿದೆ.
14
+ ಕೇಂದ್ರ ಸಂಪುಟದಲ್ಲಿ ಕುಮಾರಸ್ವಾಮಿ ಸಚಿವರಾಗಿದ್ದು, ಈ ಅವಕಾಶವನ್ನು ಬಳಸಿಕೊಂಡು ರಾಜ್ಯದಲ್ಲಿ ಮತ್ತೆ ತಮ ಪಕ್ಷಕ್ಕೆ ಜೀವ ತುಂಬಲು ಕುಮಾರಸ್ವಾಮಿ ಸಿದ್ಧವಾಗುತ್ತಿದ್ದಾರೆ. ಬಿಜೆಪಿ ನಾಯಕತ್ವಕ್ಕೂ ಇದೇ ಬೇಕಾಗಿದೆ. ಕಾಂಗ್ರೆಸ್‌‍ನಲ್ಲಿ ಪ್ರಬಲರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಪ್ರಾಬಲ್ಯ ಮಣಿಸಲು ಕುಮಾರಸ್ವಾಮಿ ಪ್ರಮುಖ ಅಸ್ತ್ರವಾಗುತ್ತಾರೆ ಎಂಬ ಅಚಲ ನಂಬಿಕೆ ಅವರಿಗಿದೆ. ಈ ಅವಶ್ಯಕತೆ ಪೂರೈಸುವವರೆಗೆ ಕುಮಾರಸ್ವಾಮಿ ಬಿಜೆಪಿ ದೆಹಲಿ ನಾಯಕರ ಪಾಲಿಗೆ ಆಪದ್ಭಾಂದವನಾಗಿರುತ್ತಾರೆ.
eesanje/url_46_109_5.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಕುತೂಹಲ ಮೂಡಿಸಿದೆ ಬಂಧನ ಬಲೆಯಿಂದ ತಪ್ಪಿಸಿಕೊಂಡ ಬಿಎಸ್ವೈ ಮುಂದಿನ ನಡೆ
2
+ ಬೆಂಗಳೂರು,ಜೂ.15– ಸದ್ಯ ಬೀಸುವ ದೊಣ್ಣೆಯಿಂದ ಪಾರಾದಂತೆ ಕಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಅವರ ಮುಂದಿನ ರಾಜಕೀಯ ನಡೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಬಿಎಸ್‌‍ವೈ ಅವರನ್ನು ಹೈಕೋರ್ಟ್‌ ಮುಂದಿನ ವಿಚಾರಣೆವರೆಗೂ ಬಂಧಿಸದಂತೆ ಸಿಐಡಿಗೆ ಸೂಚನೆ ನೀಡಿದೆ.
3
+ ನ್ಯಾಯಾಲಯದ ಆದೇಶದಿಂದ ನಿಟ್ಟುಸಿರು ಬಿಟ್ಟಿರುವ ಯಡಿಯೂರಪ್ಪ, ತಮ ವಿರುದ್ಧದ ರಾಜಕೀಯ ಪಿತೂರಿಯ ವಿರುದ್ಧ ಸಿಡಿದೇಳುತ್ತಾರಾ ಎಂಬುದು ಸದ್ಯಕ್ಕೆ ಕುತೂಹಲ ಮೂಡಿಸಿದೆ.
4
+ ನಾಲ್ಕು ದಶಕಗಳ ಅವರ ರಾಜಕೀಯ ನಡೆಯನ್ನು ಗಮನಿಸುತ್ತಾ ಬಂದಿರುವವರಿಗೆ ಯಡಿಯೂರಪ್ಪ ಸುಮನೆ ಕೂರುವ ವ್ಯಕ್ತಿಯಲ್ಲ ಎಂಬುದು ತಿಳಿದೇ ಇದೆ. ವಿಶೇಷ ಎಂದರೆ ಈ ಪ್ರಕರಣದಲ್ಲಿ ವಿರುದ್ಧ ಆರೋಪಗಳು ಕೇಳಿ ಬಂದಾಗ ಬಿಜೆಪಿಯ ರಾಜ್ಯ ನಾಯಕರು ಅವರ ಬೆಂಬಲಕ್ಕೆ ನಿಂತರೆ, ಲೋಕಸಭೆ ಚುನಾವಣೆಯಲ್ಲಿ ತಮ ಪುತ್ರನಿಗೆ ಬಿಜೆಪಿ ಟಿಕೆಟ್‌ ತಪ್ಪಿದ ಸಿಟ್ಟಿಗೆ ಯಡಿಯೂರಪ್ಪ ಕುಟುಂಬದ ವಿರುದ್ಧ ಬಹಿರಂಗವಾಗೇ ಸಿಡಿದು ನಿಂತ ಮಾಜಿ ಸಚಿವ ಕೆ.ಎಸ್‌‍. ಈಶ್ವರಪ್ಪ ಕೂಡ ಬಿಎಸ್‌‍ವೈ ಪರವೇ ನಿಂತು ಸಮರ್ಥಿಸಿಕೊಂಡಿದ್ದರು. ರಾಜಕೀಯಕ್ಕೆ ಈ ಪ್ರಕರಣವನ್ನು ಬಳಸಿಕೊಳ್ಳುವ ಸಣ್ಣತನ ತೋರಿಸಲಿಲ್ಲ ಎಂಬುದು ಪ್ರಮುಖ ಅಂಶ.
5
+ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಯಡಿಯೂರಪ್ಪನವರ ನಡುವೆ ಸರ್ಕಾರದ ಆಡಳಿತ, ನೀತಿ ನಿರೂಪಣೆ ವಿಚಾರಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್‌‍ ಪಕ್ಷದ ನಿಲುವುಗಳಿಗೆ ಸಂಬಂಧಿಸಿದಂತೆ ಅನೇಕ ಸಂದರ್ಭದಲ್ಲಿ ತೀವ್ರ ಸ್ವರೂಪದ ವಾಕ್ಸಮರ ನಡೆದಿದೆ. ಆದರೆ ವೈಯಕ್ತಿಕ ಮಟ್ಟದಲ್ಲಿ ಅವರಿಬ್ಬರ ನಡುವೆ ಪಕ್ಷ ರಾಜಕಾರಣ ಮೀರಿದ ಸ್ನೇಹ, ಸಂಬಂಧ ಇದೆ.
6
+ ರಾಜಕಾರಣದ ವಿವಿಧ ಸಂದರ್ಭಗಳಲ್ಲಿ ಪರಸ್ಪರ ಒಬ್ಬರಿಗೊಬ್ಬರು ನೆರವಾಗಿದ್ದೂ ಈಗ ಗುಟ್ಟೇನಲ್ಲ. ಇದು ಕಾಂಗ್ರೆಸ್‌‍ ನಲ್ಲಿರುವ ಸಿದ್ದರಾಮಯ್ಯ ವಿರೋಧಿ ಗುಂಪಿಗೆ ಅಸಹನೆ ತಂದಿದೆ. ಇದು ಈ ಪ್ರಕರಣದಲ್ಲಿ ರಾಜಕೀಯ ಕೈವಾಡ ಇದೆಯೆ? ಎಂಬ ಸಂಶಯಗಳನ್ನು ಹುಟ್ಟುಹಾಕಿದೆ.
7
+ ಇಡೀ ಪ್ರಕರಣದ ಹಿಂದೆ ಬಿಜೆಪಿ ನಾಯಕರು ದೂಷಿಸುತ್ತಿರುವಂತೆ ರಾಜಕೀಯ ಪಿತೂರಿ ಇದೆಯಾ? ಇದ್ದರೆ ಅದು ಯಾರಿಗೆ? ಎಂಬ ಪ್ರಶ್ನೆಗೆ ಉತ್ತರ ಸಿಗಬೇಕಿದೆ.ಒಂದು ವೇಳೆ ಈ ಪ್ರಕರಣದಲ್ಲಿ ಯಡಿಯೂರಪ್ಪನವರು ಬಂಧನಕ್ಕೀಡಾಗಿದ್ದರೆ ಬಿಜೆಪಿ ರಾಜ್ಯ ಮಟ್ಟದಲ್ಲಿ ಮುಜುಗರದ ಪರಿಸ್ಥಿತಿ ಎದುರಿಸಬೇಕಾಗಿತ್ತು. ಆದರೆ ಸದ್ಯಕ್ಕೆ ಅಂಥದೊಂದು ಬಿಕ್ಕಟ್ಟಿನ ಸನ್ನಿವೇಶದಿಂದ ಪಕ್ಷವೂ ಪಾರಾಗಿದೆ.
8
+ ಇಡೀ ಪ್ರಕರಣ ಹೈಕೊರ್ಟ್‌ ಮುಂದಿರುವುದರಿಂದ ವಿಚಾರಣೆ ಆರಂಭವಾದ ನಂತರ ಅನೇಕ ಸತ್ಯ ಸಂಗತಿಗಳು ಹೊರ ಬರಬಹುದು. ಆದರೆ ಈ ಪ್ರಕರಣದಲ್ಲಿ ಲೋಕಸಭೆ ಚುನಾವಣೆಗೆ ಮೊದಲೇ ���ೂರು ದಾಖಲಾದಾಗ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ಕಾದು ನೋಡುವ ನಿರ್ಧಾರಕ್ಕೆ ಬಂದಿತ್ತು. ಸ್ವಯಂ ಗೃಹಸಚಿವ ಡಾ. ಪರಮೇಶ್ವರ್‌ ಅವರ ಹೇಳಿಕೆಯೇ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬುದನ್ನು ಬಯಲುಗೊಳಿಸಿತ್ತು.
9
+ ಚುನಾವಣೆ ಸಂದರ್ಭದಲ್ಲಿ ದೂರು ಬಂದಾಗಲೇ ಸರ್ಕಾರ ಪ್ರಕರಣದ ತನಿಖೆಗೆ ಹಿಂಜರಿಯಲು ಯಡಿಯೂರಪ್ಪ ಪ್ರಭಾವಿ ರಾಜಕೀಯ ನಾಯಕ ಎಂಬುದು ಒಂದು ಕಾರಣವಾದರೆ ಮತ್ತೊಂದು ಬಿಜೆಪಿ ಈ ಪ್ರಕರಣವನ್ನು ಚುನಾವಣಾ ರಾಜಕೀಯಕ್ಕೆ ಬಳಸಿಕೊಳ್ಳುವ ಸಾಧ್ಯತೆಗಳನ್ನೂ ಸರ್ಕಾರ ಗುರುತಿಸಿತ್ತು. ಈ ಕಾರಣಕ್ಕಾಗೇ ಕ್ರಮಕ್ಕೆ ಹಿಂದೇಟು ಹಾಕಿತ್ತು. ಆದರೆ ಚುನಾವಣೆ ಮುಗಿದು ಫಲಿತಾಂಶ ಬಂದ ನಂತರ ಇದ್ದಕ್ಕಿದ್ದಂತೆ ಸರ್ಕಾರ ಚುರುಕಾಗಿದ್ದರ ಹಿಂದೆ ರಾಜಕೀಯ ಪ್ರಭಾವ ಇತ್ತು ಎಂಬ ಸಂಶಯಗಳು ಈಗ ತಲೆ ಎತ್ತಿದೆ.
10
+ ಹಾಗಿದ್ದಲ್ಲಿ ಅಂತಹ ರಾಜಕೀಯ ಲಾಭ ಪಡೆಯಲು ಯತ್ನಿಸಿದ್ದ ಪ್ರಭಾವೀ ನಾಯಕರು ಯಾರು? ಯಡಿಯೂರಪ್ಪ ಪ್ರಕರಣವನ್ನು ತಮ ಅನುಕೂಲಕ್ಕೆ ಬಳಸಿಕೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಇಕ್ಕಟ್ಟಿಗೆ ಸಿಲುಕಿಸುವ ಹುನ್ನಾರಗಳೂ ಇತ್ತು ಎಂಬ ಮಾತುಗಳು ರಾಜಕೀಯ ವಲಯಗಳಲ್ಲಿ ಕೇಳಿ ಬರುತ್ತಿವೆ.
11
+ ಸದ್ಯಕ್ಕಂತೂ ಯಡಿಯೂರಪ್ಪ ಬಂಧನದ ಭಿತಿಯಿಂದ ಪಾರಾಗಿದ್ದಾರೆ. ಇವತ್ತಿನ ರಾಜಕೀಯ ಸನ್ನಿವೇಶದಲ್ಲಿ ಅವರ ಮುಂದಿನ ನಡೆ ಕುತೂಹಲ ಮೂಡಿಸಿದೆ. ಇದಕ್ಕೆ ಕಾರಣವೂ ಇದೆ. ಬಿಜೆಪಿಯಲ್ಲಿ ಅವರು ಪ್ರಭಾವೀ ನಾಯಕರಾಗಿದ್ದರೂ ಈ ಬಾರಿ ನಡೆದ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಅವರ ಮಾತನ್ನು ಬಿಜೆಪಿ ವರಿಷ್ಠರು ಪೂರ್ಣವಾಗಿ ಪರಿಗಣಿಸಲಿಲ್ಲ.
12
+ ತುಮಕೂರು ಮತ್ತು ಚಿಕ್ಕ ಬಳ್ಳಾಪುರ ಸೇರಿದಂತೆ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂದರ್ಭದಲ್ಲಿ ಅವರ ಮಾತಿಗೆ ವರಿಷ್ಠರು ಮನ್ನಣೆ ನೀಡಲಿಲ್ಲ. ಫಲಿತಾಂಶದ ನಂತರವೂ ಪಕ್ಷದ ವೈಫಲ್ಯಗಳನ್ನು ಅವರ ತಲೆಗೇ ಕಟ್ಟುವ ಪ್ರಯತ್ನಗಳು ದೆಹಲಿ ಮಟ್ಟದಲ್ಲಿ ರಾಜ್ಯದ ಕೆಲವು ನಾಯಕರುಗಳಿಂದ ನಡೆದವು ಸಚಿವ ಸಂಪುಟ ರಚನೆ ವಿಚಾರದಲ್ಲೂ ಅವರ ವಿರೋಧಿ ವಿ. ಸೋಮಣ್ಣ ಅವರಿಗೆ ಮಣೆ ಹಾಕಲಾಯಿತು. ಅಸಮಾಧಾನ, ಅಪಮಾನಗಳಿಂದ ಯಡಿಯೂರಪ್ಪ ಕುದಿಯುತ್ತಿದ್ದಾರೆ.
eesanje/url_46_109_6.txt ADDED
@@ -0,0 +1,7 @@
 
 
 
 
 
 
 
 
1
+ ಶಾಸಕ ಸ್ಥಾನಕ್ಕೆ ಹೆಚ್‌‍.ಡಿ.ಕುಮಾರಸ್ವಾಮಿ ಮತ್ತು ಇ.ತುಕಾರಾಂ ರಾಜೀನಾಮೆ
2
+ ಬೆಂಗಳೂರು,ಜೂ.15– ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ವಿಜೇತರಾಗಿ ಸಂಸತ್‌ ಗೆ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ಕೇಂದ್ರ ಸಚಿವ ಹೆಚ್‌‍.ಡಿ.ಕುಮಾರಸ್ವಾಮಿ ಹಾಗೂ ಬಳ್ಳಾರಿ ಸಂಸದ. ಇ.ತುಕಾರಾಂ ಅವರುಗಳು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
3
+ ಬಳ್ಳಾರಿಯಿಂದ ಸ್ಪರ್ಧಿಸಿ ಭರ್ಜರಿ ಜಯ ಸಾಧಿಸಿದ್ದ ಕಾಂಗ್ರೆಸ್‌‍ ಸಂಸದ ಇ.ತುಕಾರಾಂ ಅವರು, ಸಂಸತ್‌ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಬೆಂಗಳೂರಿಗೆ ಮರಳಿ ರಾಜೀನಾಮೆ ನೀಡಿದ್ದು, ವಿಧಾನಸಭಾಧ್ಯಕ್ಷರ ಅನುಮತಿ ಮೇರೆಗೆ ನಿನ್ನೆಯೇ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.
4
+ ಸಂಡೂರು ಕ್ಷೇತ್ರದಿಂದ ಸತತ ನಾಲ್ಕು ಬಾರಿ ಕಾಂಗ್ರೆಸ್‌‍ ಶಾಸಕರಾಗಿ ಆಯ್ಕೆಯಾಗಿದ್ದ ತುಕಾರಾಂ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಶ್ರೀರಾಮುಲು ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದರು. ಶ್ರೀರಾಮುಲು ವಿರುದ್ಧ 98,992 ಮತಗಳಿಂದ ತುಕಾರಾಂ ಜಯಭೇರಿ ಭಾರಿಸಿದ್ದರು. ಕಾಂಗ್ರೆಸ್ನ ಇ. ತುಕಾರಾಮ್‌ ಅವರು 7,30,845 ಮತಗಳು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀರಾಮುಲಗೆ 6,31,853 ಮತಗಳು ಬಂದಿದ್ದವು.
5
+ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್‌‍ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಕುಮಾರಸ್ವಾಮಿ ಅವರು ಭರ್ಜರಿ ಗೆಲುವು ಸಾಧಿಸಿದ್ದರು. ಪ್ರಸ್ತುತ ಪ್ರಧಾನಿ ನರೇಂದ್ರಮೋದಿ ಸರ್ಕಾರದಲ್ಲಿ ಭಾರೀ ಕೈಗಾರಿಕಾ ಸಚಿವರಾಗಿದ್ದಾರೆ.ಇಂದು ವಿಧಾನಸಭೆಯಲ್ಲಿ ಸ್ಪೀಕರ್‌ ಯು.ಟಿ.ಖಾದರ್‌ ಅವರನ್ನು ಭೇಟಿ ಮಾಡಿ ತಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
6
+ ಇದೇ ರೀತಿ ಹಾವೇರಿ ಲೋಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಗೆದ್ದಿರುವ ಮಾಜಿ ಮುಖ್ಯಮಂತ್ರಿ ಬಸವರಾಜ್‌ ಬೊಮಯಿ ಕೂಡಾ ಯಾವುದೇ ಕ್ಷಣದಲ್ಲಿ ತಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಪ್ರಸ್ತುತ ಅವರು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
7
+ ನಿಯಮಗಳ ಪ್ರಕಾರ ಯಾವುದೇ ಒಬ್ಬ ಅಭ್ಯರ್ಥಿ ಏಕಕಾಲಕ್ಕೆ ಎರದು ಸದನಗಳ ಸದಸ್ಯರಾಗುವಂತಿಲ್ಲ. ಆರು ತಿಂಗಳೊಳಗೆ ಯಾವುದಾದರೂ ಒಂದು ಸ್ಥಾನಕ್ಕೆ ರಾಜೀನಾಮೆ ನೀಡಿ, ಒಂದು ಸದನದ ಸದಸ್ಯರಾಗಬೇಕೆಂಬ ನಿಯಮವಿದೆ. ತೆರವಾಗಲಿರುವ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಿಗೆ ಸದ್ಯದಲ್ಲೇ ಕೇಂದ್ರ ಚುನಾವಣಾ ಆಯೋಗ ಉಪಚುನಾವಣೆಗೆ ದಿನಾಂಕ ಪ್ರಕಟಿಸುವ ಸಾಧ್ಯತೆ ಇದೆ.
eesanje/url_46_109_7.txt ADDED
@@ -0,0 +1,6 @@
 
 
 
 
 
 
 
1
+ ಪೋಕ್ಸೋ ಪ್ರಕರಣ : ಯಡಿಯೂರಪ್ಪನವರನ್ನು ಬಂಧಿಸದಂತೆ ಹೈಕೋರ್ಟ ಆದೇಶ
2
+ ಬೆಂಗಳೂರು.ಜೂ14 : ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠದ ನ್ಯಾಯಾಧೀಶರಾದ ಕೃಷ್ಣ ದೀಕ್ಷಿತ್ ಅವರು ಬಿಎಸ್ ವೈ ಅವರನ್ನು ಬಂಧಿಸದಂತೆ ಆದೇಶಿಸಿ ಜೂನ್ 17ರಂದು ಯಡಿಯೂರಪ್ಪ ಅವರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದರು.
3
+ ಬಿಎಸ್ ವೈ ಯವರು ಓಡಿ ಹೋಗುವ ವ್ಯಕ್ತಿಯಲ್ಲ ಅವರ ವಿರುದ್ಧ ಒತ್ತಾಯದ ಕ್ರಮ ಕೈಗೊಳ್ಳುದಂತೆ ಕೋರ್ಟ್ ಸೂಚನೆ ನೀಡಿತು ನ್ಯಾಯಾಲಯದಲ್ಲಿ ಅರ್ಜಿ ಇತ್ಯರ್ಥವಾಗುವವರೆಗೂ ಬಿ ಎಸ್ ವೈ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ.
4
+ ಮಾರ್ಚ್ 14ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಬಂಧಿಸುವ ಅಗತ್ಯವಿದೆಯೆಂದು ಸಿಐಡಿ ಎಸಿಎಂಎಂ ನ್ಯಾಯಾಲಯದ ಮುಂದೆ ಮನವಿ ಸಲ್ಲಿಸಿ ವಾರೆಂಟ್ ಆದೇಶ ಪಡೆದಿತ್ತು ಬಂಧನದ ಭೀತಿಯಿಂದ ಬಿ ಎಸ್ ವೈ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.
5
+ ಯಡಿಯೂರಪ್ಪ ಅವರ ಪರ ಹಿರಿಯವಕೀಲರಾದ ಸಿವಿ ನಾಗೇಶ್ ಅವರು ವಾದ ಮಂಡಿಸಿ ಬಿಎಸ್ ವೈ ಅವರ ವಿರುದ್ಧನೀಡಿರುವ ಮಹಿಳೆಗೆ ದೂರು ಕೊಡುವುದೇ ಹವ್ಯಾಸ, ದೂರು ದಾ ರೇ ತನ್ನ ಗಂಡ ಹಾಗೂ ಮನೆಯವರ ವಿರುದ್ಧ ವೇ ದೂರು ನೀಡಿದ್ದರು. ಲೈಂಗಿಕ ದೌರ್ಜನರ ಪ್ರಕರಣ ಜಾಮೀನು ಸಹಿತ ಪ್ರಕರಣವಾಗಿದೆ ಸಿಐಡಿಬಂದನದ ಆತುರ ತೋರುತ್ತಿದ್ದಾರೆ.
6
+ ಪ್ರಕರಣದಲ್ಲಿ ನಮ್ಮ ಕಕ್ಷಿದಾರರು ವಿಚಾರಣೆಗೆ ಹಾಜರಾಗಿದ್ದಾರೆ .ನಿಯಮ ಬಹಿರವಾಗಿ ವಿಷಯಗಳನ್ನು ಮುಚ್ಚಿಟ್ಟು ಅರೆಸ್ಟ್ ವಾರಂಟ್ ಪಡೆಯಲಾಗಿದೆ. ತನಿಖಾಧಿಕಾರಿಗಳು ರಾಜಕೀಯ ಮಾಸ್ಟರಗಳ ಆಜ್ಞೆ ಪಾಲಿಸುತ್ತಿದ್ದಾರೆ ಎಂದು ಪ್ರಬಲವಾದ ಮಂಡಿಸಿದರು ಯಡಿಯೂರಪ್ಪ ಅವರ ವಿರುದ್ಧ ಬಂಧನದ ವಾರೆಂಟ್ ಜಾರಿಯಾಗಿದೆ ನೋಟಿಸ್ ನೀಡಿದರೂ ಅವರ ವಿಚಾರಣೆಗೆ ಹಾಜರಾಗಿಲ್ಲ ಬೆಂಗಳೂರು ಬಿಟ್ಟು ಹೋಗುವುದು ಅವರ ಉದ್ದೇಶವಾಗಿತ್ತು ಸಂತ್ರಸ್ತೆಯ ಮೇಲೆ ಒತ್ತಡ ತಂದು ಸಾಕ್ಷ ನಾಶ ಮಾಡಿದ್ದಾರೆ ಸಾಕ್ಷ ನಾಶ ತಡೆಯಲು ಅವರ ಬಂಧಿಸುವ ಅಗತ್ಯವಿದೆ ಬೇರೆ ರಾಜ್ಯದಲ್ಲಿ ಇರುವುದರಿಂದ ಅವರ ವಿರುದ್ಧ ವಾರಂಟ್ ಪಡೆಯಲಾಗಿದೆ ಹೀಗಾಗಿ ಜಾಮೀನು ನೀಡಬಾರದು ಎಂದು ಸರ್ಕಾರಿ ಪರ ವಕಿಲರು ಮನವಿ ಮಾಡಿದರು .ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಿ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸೂಚಿಸಿ ವಿಚಾರಣೆಯನ್ನು ಮುಂದೂಡಿದರು
eesanje/url_46_109_8.txt ADDED
@@ -0,0 +1,8 @@
 
 
 
 
 
 
 
 
 
1
+ ಕೇಂದ್ರ ಸಚಿವರಾಗಿ ರಾಜ್ಯಕ್ಕಾಗಮಿಸಿದ ನಂತರ ಹೆಚ್ಡಿಕೆ ಹೇಳಿದ್ದೇನು..?
2
+ ಬೆಂಗಳೂರು,ಜೂ.14-ರಾಜ್ಯದ ಜನರ ಸಮಸ್ಯೆಗೆ ಪರಿಹಾರ ಸಿಗಬೇಕೆ ಹೊರತು ರಾಜಕೀಯವಲ್ಲ ಎಂದು ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು. ಕೇಂದ್ರ ಸಚಿವರಾದ ನಂತರ ಮೊದಲ ಬಾರಿಗೆ ಆಗಮಿಸಿದ ಕುಮಾರಸ್ವಾಮಿ ಅವರನ್ನು ಸಾದರಹಳ್ಳಿ ಗೇಟ್‌ ಬಳಿ ಜೆಡಿಎಸ್‌‍ ಪಕ್ಷದ ಮುಖಂಡರು, ಕಾರ್ಯಕರ್ತರು ಅಭಿನಂದಿಸಿದರು.
3
+ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಕೃಷಿ ಸಚಿವರಾಗಿ ಕೆಲಸ ಮಾಡಬೇಕೆಂಬ ಆಸೆ ಇತ್ತು. ಕೈಗಾರಿಕೆ ಸಚಿವ ಸ್ಥಾನ ಸಿಕ್ಕಿದೆ. ನರೇಂದ್ರಮೋದಿ ಅವರು ಎರಡು ದೊಡ್ಡ ಖಾತೆಗಳ ಜವಾಬ್ದಾರಿಯನ್ನು ನೀಡಿದ್ದಾರೆ. ಯುವಕರಿಗೆ ಉದ್ಯೋಗ ಸೃಷ್ಟಿ ಮಾಡುತ್ತೇನೆ. ಸಮಯ ವ್ಯರ್ಥ ಮಾಡುವುದಿಲ್ಲ. ಎಲ್ಲ ಇಲಾಖೆಯಲ್ಲಿ ನಮ ರಾಜ್ಯದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡುವುದಾಗಿ ಹೇಳಿದರು.
4
+ ಜೆಡಿಎಸ್‌‍ನ್ನು ಮುಗಿಸಿದ್ದೇವೆ ಎಂದು ದುರಹಂಕಾರದಲ್ಲಿ ಮಾತನಾಡಿರುವವರಿಗೆ ಉತ್ತರ ಕೊಡುವುದಿಲ್ಲ. ನನಗೆ ಬೇಕಾಗಿರುವುದು ರಾಜಕೀಯವಲ್ಲ ರಾಜ್ಯದ ಜನರ ಸಮಸ್ಯೆಗಳಿಗೆ ಪರಿಹಾರ ಎಂದು ಹೇಳಿದರು.
5
+ ಲೋಕಸಭೆ ಚುನಾವಣೆ ಸಮಯದಲ್ಲಿ ರಾಜ್ಯ ರಾಜಕಾರಣ ಯಾವ ರೀತಿ ನಡೆಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ಎಲ್ಲವನ್ನು ಸರಿಪಡಿಸುವ ಕೆಲಸ ಮಾಡುತ್ತೇನೆ. ರೈತರ ಕೃಷಿಗೆ ತೊಂದರೆಯಾಗದಂತೆ ಕಾರ್ಖಾನೆಗಳು ಕೆಲಸ ಮಾಡುವಂತೆ ಮಾಡುತ್ತೇನೆ ಎಂದರು.
6
+ ನಾಲ್ಕು ದಿನ ದೆಹಲಿಯಲ್ಲಿ ಕೆಲಸ ಮಾಡುವೆ. ಎರಡು ದಿನ ಕರ್ನಾಟಕದಲ್ಲಿರುತ್ತೇನೆ. ಅದರಲ್ಲೂ ಮಂಡ್ಯದಲ್ಲಿ ಇರುತ್ತೇನೆ ಎಂದು ಅವರು ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳನ್ನು ನಮ ಸ್ವಯಂಕೃತ ಅಪರಾಧಗಳಿಂದ ಸೋತಿದ್ದೇವೆ ಎಂದ ಅವರು, ಪ್ರಧಾನಿ ನರೇಂದ್ರಮೋದಿಯವರ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ.
7
+ ಕೇಂದ್ರ ಸಚಿವರಾದ ಬಳಿಕ ನನ್ನ ಕರ್ಮಭೂಮಿಗೆ ಬಂದಿದ್ದೇನೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ಬಿಜೆಪಿ ಮತ್ತು ಜೆಡಿಎಸ್‌‍ ಕಾರ್ಯಕರ್ತರನ್ನು ಅದರಲ್ಲೂ ವಿಶೇಷವಾಗಿ ರಾಮನಗರ ಮತ್ತು ಮಂಡ್ಯ ಜಿಲ್ಲೆ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
8
+ ಈ ಸಂದಭದಲ್ಲಿ ಜೆಡಿಎಸ್‌‍ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು, ಜೆಡಿಎಸ್‌‍ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ರಮೇಶ್‌ ಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್‌‍ ಅಧ್ಯಕ್ಷ ಬಿ.ಮುನೇಗೌಡ ಮತ್ತಿತರರು ಇದ್ದರು
eesanje/url_46_109_9.txt ADDED
@@ -0,0 +1,9 @@
 
 
 
 
 
 
 
 
 
 
1
+ ರೇಣುಕಾಸ್ವಾಮಿ ಪ್ರಕರಣದಲ್ಲಿ ಹಲವು ಅನುಮಾನ ಮೂಡಿಸಿದೆ ಪೊಲೀಸರು ನಡೆ : ಸಿ.ಟಿ.ರವಿ
2
+ ಬೆಂಗಳೂರು,ಜೂ.14-ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ನಡೆದುಕೊಳ್ಳುತ್ತಿರುವ ರೀತಿ ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಅಸಮಾಧಾನ ಹೊರಹಾಕಿದ್ದಾರೆ.
3
+ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊಲೆ ಆರೋಪ ಹೊತ್ತ ಚಿತ್ರನಟ ದರ್ಶನ್‌ ಅವರನ್ನು ರಕ್ಷಣೆ ಮಾಡಲು ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಪ್ರಯತ್ನಿಸಿದಂತೆ ಕಾಣಿಸುತ್ತಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಠಾಣೆಗೆ ಶಾಮಿಯಾನ ಹಾಕಿರುವುದು ನಾಚಿಕೆಗೇಡಿನ ಸಂಗತಿ ಎಂದು ವಾಗ್ದಾಳಿ ನಡೆಸಿದರು.
4
+ ರೇಣುಕಾಸ್ವಾಮಿ ಹತ್ಯೆ ಮನುಕುಲ ಕ್ಷಮಿಸುವಂತದ್ದಲ್ಲ. ಯಾವುದೇ ನಾಗರಿಕ ಸಮಾಜವು ಒಪ್ಪುವುದಿಲ್ಲ. ಆದರೆ ಪೊಲೀಸರ ವರ್ತನೆ ನೋಡಿದರೆ ಪ್ರಕರಣವನ್ನು ಮುಚ್ಚಿ ಹಾಕಲು ವ್ಯವಸ್ಥಿತ ಸಂಚು ರೂಪಿಸಿದಂತೆ ಕಾಣುತ್ತಿದೆ. ಸಾರ್ವಜನಿಕ ಹಿತದೃಷ್ಟಿಯಿಂದಲಾದರೂ ಪೊಲೀಸರು ಸರಿಯಾಗಿ ನಡೆದುಕೊಳ್ಳಿ, ಜನರನಂಬಿಕೆ ಉಳಿಸಿಕೊಳ್ಳುವ ಕೆಲಸ ನೀವು ಮಾಡದಿದ್ದರೆ ಮನುಕುಲ ಕ್ಷಮಿಸುವುದಿಲ್ಲ ಎಂದು ಶಾಪ ಹಾಕಿದರು.
5
+ ಪೊಲೀಸ್‌‍ ಠಾಣೆಗೆ ಶಾಮಿಯಾನ ಹಾಕಿರುವುದು ಮಾಧ್ಯಮಗಳಿಗೆ ನಿರ್ಬಂಧ, ಠಾಣೆಯ ಸುತ್ತಮುತ್ತ 200 ಮೀಟರ್‌ ಸೆಕ್ಷನ್‌ ಜಾರಿ ಮಾಡಿರುವುದನ್ನು ಅವಲೋಕಿಸಿದರೆ ಪೊಲೀಸ್‌‍ ಠಾಣೆಯೊಳಗೆ ಏನೋ ನಡೆಯುತ್ತಿದೆ ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ.ಪ್ರಕರಣದಲ್ಲಿ ಪಾರದರ್ಶಕತೆಯಿಂದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂಬ ಅನುಮಾನ ನನಗೆ ಮಾತ್ರವಲ್ಲ. ಸಾರ್ವಜನಿಕ ವಲಯದಲ್ಲೂ ಕೇಳಿಬರುತ್ತಿದೆ. ಅವರ ಸಂಶಯಗಳನ್ನು ಮುಖ್ಯಮಂತ್ರಿ, ಡಿಸಿಎಂ, ಗೃಹಸಚಿವರು ನಿವಾರಿಸಬೇಕು ಎಂದು ಆಗ್ರಹಿಸಿದರು.
6
+ ಪ್ರಕರಣವನ್ನು ಮುಚ್ಚಿ ಹಾಕಲು ಆರೋಪಿಗಳು ಪೊಲೀಸರಿಗೆ ದೊಡ್ಡ ಮಟ್ಟದ ಆಫರ್‌ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ರಜಾದಲ್ಲಿದ್ದ ಸಬ್‌ ಇನ್‌ಸ್ಪೆಕ್ಟರ್‌ ಅವರೊಬ್ಬರನ್ನು ಏಕಾಏಕಿ ಕರ್ತವ್ಯಕ್ಕೆ ಕರೆಸಿಕೊಂಡಿದ್ದು ಏಕೆ ಎಂದು ಪ್ರಶ್ನಿಸಿದರು.ಮೃತ ರೇಣುಕಾಸ್ವಾಮಿಗೆ 15 ಕಡೆ ಗಾಯಗಳಾಗಿವೆ. ಆತ ಸಾಯುವವರೆಗೂ ಬಿಡದೆ ಹೊಡೆದು ಸಾಯಿಸಿದ್ದಾರೆ. ಮರ್ಮಾಂಗಕ್ಕೆ ರಾಡಿನಿಂದ ಒಡೆದು ಕೊಲೆ ಮಾಡಲಾಗಿದೆ.
7
+ ವೃತ್ತಿಪರ ರೌಡಿಗಳು ಕೂಡ ಈ ರೀತಿ ಹತ್ಯೆ ಮಾಡುವುದಿಲ್ಲ. ಸಾವಿನ ಹಿಂದೆ ಯಾರೇ ಇದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಿ ಎಂದು ಒತ್ತಾಯಿಸಿದರು.ರೇಣುಕಾಸ್ವಾಮಿ ಪತ್ನಿ ಈಗ 5 ತಿಂಗಳ ಗರ್ಭಿಣಿ. ಬೇಕರಿ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಈಗ ಅವರಿಗೆ ಯಾರು ಆಸರೆ, ಸರ್ಕಾರ ಅವರಿಗೆ ಆರ್ಥಿಕ ನೆರವು ನೀಡಲಿ. ಜೊತೆಗೆ ಪಿಯುಸಿ ಓದಿರುವ ಸಹನಾ ಅವರಿಗೆ ಮಾನವೀಯತೆ ದೃಷ್ಟಿಯಿಂದ ��ರ್ಕಾರಿ ಹುದ್ದೆ ನೀಡಬೇಕೆಂದು ಆಗ್ರಹಿಸಿದರು.
8
+ ವಿಧಾನಪರಿಷತ್‌ ಸದಸ್ಯ ರವಿಕುಮಾರ್‌ ಮಾತನಾಡಿ, ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದ್ದೆ. ಅತ್ಯಂತ ಬಡ ಕುಟುಂಬ ಅನಾಥವಾಗಿದೆ. ಆ ಕುಟುಂಬ 15 ಕಡೆ ರೇಣುಕಾಸ್ವಾಮಿ ಮೈಮೇಲೆ ಗಾಯಗಳಾಗಿವೆ ಭೀಕರವಾಗಿ ಹಿಂಸೆ ನೀಡಿ ಕೊಂದಿದ್ದಾರೆ.ಮರ್ಮಾಂಗದಲ್ಲಿ ರಕ್ತ ಬಂದಿದೆ. ರೌಡಿಗಳೂ ಕೊಲೆ ಮಾಡುವ ರೀತಿ ಮಾಡಿದ್ದಾರೆ ತಪ್ಪಿತಸ್ತರ ಜನ್ಮ ಜಾಲಾಡಬೇಕು ಎಂದರು.
9
+ ರಾಜ್ಯದಲ್ಲಿ ನೇಹಾ, ಅರ್ಜುನ್‌ ಮಡಿವಾಳ್‌ ಹೀಗೆ ನಿರಂತರ ಹತ್ಯೆ ಆಗ್ತಿದೆ. ಸರ್ಕಾರ ಯಾವ ಕ್ರಮವೂ ವಹಿಸುತ್ತಿಲ್ಲ. ಕಾನೂನು ಸುವ್‌ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶ ಮಾಡಬೇಕು ಎಂದು ಆಗ್ರಹಿಸಿದರು. ಸರ್ಕಾರದ ಯಾವ ಪ್ರತಿನಿಧಿಯು ರೇಣುಕಾಸ್ವಾಮಿ ಮನೆಗೆ ಹೋಗಿಲ್ಲ. ಪ್ರಕರಣ ನಡೆದು ಇಷ್ಟು ದಿನಗಳಾದರೂ ರೇಣುಕಾಸ್ವಾಮಿ ಮನೆಗೆ ಸಿಎಂ, ಸಚಿವರು, ಸ್ಥಳೀಯ ಶಾಸಕರು ಹೋಗಿಲ್ಲ. ದರ್ಶನ್‌ ಆಗಿರಲಿ, ಬೇರೆಯವರೇ ಆಗಿರಲಿ, ಕೊಲೆ ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದರು.
eesanje/url_46_10_1.txt ADDED
@@ -0,0 +1,7 @@
 
 
 
 
 
 
 
 
1
+ ಹಣದಾಸೆಗೆ ಅಧಿಕಾರಿಗಳಿಂದಲೇ ನಟ ದರ್ಶನ್‌ ಹಾಗೂ ರೌಡಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ; ತನಿಖಾ ವರದಿ
2
+
3
+ ಬೆಂಗಳೂರು, ಸೆ.25-ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಟ ದರ್ಶನ್‌, ರೌಡಿ ವಿಲ್ಸನ್‌ಗಾರ್ಡನ್‌ ನಾಗ ಹಾಗೂ ಇನ್ನಿತರರಿಗೆ ಜೈಲಿನ ಕೆಲವು ಅಧಿಕಾರಿಗಳು ಹಾಗೂ ಸಿಬ್ಬಂದಿಗಳೇ ರಾಜಾತಿಥ್ಯ ನೀಡಿರುವುದು ತನಿಖೆಯಿಂದ ಗೊತ್ತಾಗಿದೆ.
4
+ ಆಗ್ನೇಯ ವಿಭಾಗದ ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡು ಹಲವು ಮಾಹಿತಿಗಳನ್ನು ಕಲೆಹಾಕಿ, ಹೇಳಿಕೆಗಳನ್ನು ಪಡೆದುಕೊಂಡು ವರದಿ ಸಿದ್ಧಪಡಿಸಿದ್ದಾರೆ. ಶೀಘ್ರದಲ್ಲೇ ಆಗ್ನೇಯ ಭಾಗದ ಡಿಸಿಪಿ ಸಾ.ರಾ. ಪಾತೀಮಾ ಅವರು ನಗರ ಪೊಲೀಸ್‌‍ ಆಯುಕ್ತ ದಯಾನಂದ ಅವರಿಗೆ ಈ ವರದಿಯನ್ನು ನೀಡಲಿದ್ದಾರೆ.
5
+ ಜೈಲಿನ ಕೆಲ ಅಧಿಕಾರಿ ಹಾಗೂ ಸಿಬ್ಬಂದಿ ಹಣದ ಆಮಿಷಕ್ಕೆ ಒಳಗಾಗಿ ರಾಜಾತಿಥ್ಯ ನೀಡಿದ್ದಾರೆಂಬುವುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.
6
+ ಜೈಲಿನಲ್ಲಿ ನಟ ದರ್ಶನ್‌, ರೌಡಿ ವಿಲ್ಸನ್‌ಗಾರ್ಡನ್‌ ನಾಗ ಹಾಗೂ ಇನ್ನಿತರರು ಬ್ಯಾರಕ್‌ ಎದುರಿನ ಆವರಣದಲ್ಲಿ ಚೇರ್‌ನಲ್ಲಿ ಕುಳಿತು ಕಾಫಿ ಕುಡಿಯುತ್ತಿರುವುದು ಹಾಗೂ ಕೈಯಲ್ಲಿ ಸಿಗರೇಟ್‌ ಹಿಡಿದುಕೊಂಡಿದ್ದ ಫೋಟೋಗಳು ವೈರಲ್‌ ಆಗುತ್ತಿದ್ದಂತೆ ಪರಪ್ಪನ ಅಗ್ರಹಾರ ಪೊಲೀಸ್‌‍ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ.
7
+ ಒಂದು ಪ್ರಕರಣವನ್ನು ಎಸಿಪಿ ಹಾಗೂ ಇನ್ನೆರಡು ಪ್ರಕರಣಗಳು ಇನ್‌್ಸಪೆಕ್ಟರ್‌ಗಳು ತನಿಖೆ ಮಾಡುತ್ತಿದ್ದು, ತನಿಖೆಯ ಭಾಗವಾಗಿ ಜೈಲಿಗೆ ಭೇಟಿ ನೀಡಿ ಅಲ್ಲಿನ ಅಧಿಕಾರಿ ಹಾಗೂ ಸಿಬ್ಬಂದಿಗಳು, ಖೈದಿಗಳು ಹಾಗೂ ವಿಚಾರಣಾಧಿನ ಖೈದಿಗಳಿಂದ ಹೇಳಿಕೆ ಪಡೆದುಕೊಂಡಿರುವುದಲ್ಲದೆ, ಸಿಸಿ ಟಿವಿಗಳಲ್ಲಿರುವ ದೃಶ್ಯಾವಳಿಗಳನ್ನು ಆಧರಿಸಿ ಮಾಹಿತಿಗಳನ್ನು ಸಂಗ್ರಹಿಸಿ ವರದಿ ಸಿದ್ಧಪಡಿಸಿದ್ದಾರೆ.
eesanje/url_46_10_10.txt ADDED
@@ -0,0 +1,5 @@
 
 
 
 
 
 
1
+ ಸಿಇಟಿ/ನೀಟ್‌ : 2ನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಪ್ರವೇಶ ಪ್ರಕ್ರಿಯೆಗೆ ದಿನಾಂಕ ವಿಸ್ತರಣೆ
2
+ / : 2nd
3
+ ಬೆಂಗಳೂರು,ಸೆ.25-ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಯುಜಿ ಸಿಇಟಿ ಮತ್ತು ಯುಜಿ ನೀಟ್‌ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಪ್ರವೇಶ ಪ್ರಕ್ರಿಯೆ ಮುಗಿಸಿಕೊಳ್ಳಲು ದಿನಾಂಕಗಳನ್ನು ವಿಸ್ತರಿಸಲಾಗಿದೆ.
4
+ ಸಿಇಟಿ ಸೀಟು ಪಡೆದವರು ಛಾಯ್ಸ್‌‍ ದಾಖಲಿಸಲು ನಾಳೆಯವರೆಗೆ ಹಾಗೂ ಶುಲ್ಕ ಪಾವತಿ ಮತ್ತು ದಾಖಲೆ ಸಲ್ಲಿಸಲು ಸೆ.27ರವರೆಗೆ ವಿಸ್ತರಿಸಲಾಗಿದೆ. ಪ್ರವೇಶ ಪತ್ರ ಡೌನ್ಲೋಡ್‌ ಮಾಡಿಕೊಂಡು ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೆ.28ರವರೆಗೆ ಅವಕಾಶ ನೀಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
5
+ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್‌ ಕೋರ್ಸ್‌ ಗಳಿಗೆ ಛಾಯ್ಸ್‌‍ ದಾಖಲಿಸಲು ಅವಕಾಶ ಇಲ್ಲ. ಆದರೆ, ಶುಲ್ಕ ಪಾವತಿ, ಪ್ರವೇಶ ಪತ್ರ ಡೌನ್ಲೋಡ್‌ ಮಾಡಿಕೊಳ್ಳಲು ಇದೇ ದಿನಾಂಕಗಳು ಅನ್ವಯವಾಗಲಿವೆ ಎಂದು ಅವರು ವಿವರಿಸಿದ್ದಾರೆ.
eesanje/url_46_10_11.txt ADDED
@@ -0,0 +1,8 @@
 
 
 
 
 
 
 
 
 
1
+ ನಂದಿನಿ ಹೊರತುಪಡಿಸಿ ಎಲ್ಲಾ ಬ್ರ್ಯಾಂಡ್‌ಗಳ ತುಪ್ಪ ಪರಿಶೀಲನೆಗೆ ಸರ್ಕಾರ ಆದೇಶ
2
+
3
+ ಬೆಂಗಳೂರು,ಸೆ.25-ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಜನ್ಯ ಕೊಬ್ಬು ಬಳಕೆ ವರದಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ರಾಜ್ಯದಲ್ಲಿ ಕೆಎಂಎಫ್‌ ನಂದಿನಿ ತುಪ್ಪವನ್ನು ಹೊರತುಪಡಿಸಿ ಉಳಿದ ಎಲ್ಲಾ ಬ್ರ್ಯಾಂಡ್‌ಗಳ ತುಪ್ಪ ಪರಿಶೀಲನೆಗೆ ಆದೇಶ ನೀಡಿದೆ.
4
+ ರಾಜ್ಯದಲ್ಲಿ ಕೆಎಂಎಫ್‌ ನಂದಿನಿ ತುಪ್ಪ ಹೊರತುಪಡಿಸಿ ಉಳಿದ ಬ್ರ್ಯಾಂಡ್‌ಗಳ ತುಪ್ಪ ಪರಿಶೀಲನೆ ನಡೆಸುವಂತೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಸೂಚನೆ ನೀಡಿದ್ದಾರೆ.
5
+ ರಾಜ್ಯದಲ್ಲಿ ಮಾರಾಟ ಆಗುತ್ತಿರುವ ನಂದಿನಿ ತುಪ್ಪವನ್ನು ಹೊರತುಪಡಿಸಿ ಉಳಿದ ಎಲ್ಲಾ ತುಪ್ಪಗಳ ಮಾದರಿ ಸಂಗ್ರಹಿಸಿ, ಪರಿಶೀಲಿಸಿ ಗುಣಮಟ್ಟ ಕಾಪಾಡಲು ಸೂಚಿಸಲಾಗಿದೆ. ದೇವಸ್ಥಾನಗಳಲ್ಲಿ ಕೊಡುವ ಪ್ರಸಾದಗಳ ಮಾದರಿ ಪರೀಕ್ಷಿಸುವ ಬದಲು, ಬಳಸುವ ತುಪ್ಪದ ಪರಿಶೀಲನೆ ಕೈಗೊಳ್ಳುವಂತೆ ಇಲಾಖೆಗೆ ಸೂಚನೆ ನೀಡಲಾಗಿದೆ.
6
+ ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಕರ್ನಾಟಕಕ್ಕೆ ತುಪ್ಪ ಪೂರೈಕೆ ಆಗುತ್ತಿದೆ. ಈ ಎಲ್ಲ ತುಪ್ಪಗಳ ಮಾದರಿ ಸಂಗ್ರಹಿಸಿ ಪರಿಶೀಲಿಸಲು ಸೂಚಿಸಲಾಗಿದೆ. ತಿರುಪತಿ ಲಡ್ಡು ವಿಚಾರದಲ್ಲಿ ಜನರಲ್ಲಿ ಬಹಳ ಗೊಂದಲ ಆರಂಭವಾಗಿರುವುದು ಆಘಾತಕಾರಿ. ಹೀಗಾಗಿ, ರಾಜ್ಯದಲ್ಲಿ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ.
7
+ ಆರಂಭಿಕ ಪರೀಕ್ಷೆಗಳನ್ನು ನಡೆಸಲಾಗುವುದು. ಸುರಕ್ಷತಾ ಮಾನದಂಡಗಳ ಉಲ್ಲಂಘನೆ ಕಂಡುಬಂದಲ್ಲಿ, ತಯಾರಕರಿಂದ ಹೆಚ್ಚುವರಿ ಮಾದರಿಗಳನ್ನು ಪಡೆಯಲಾಗುವುದು. ಪರೀಕ್ಷಾ ಫಲಿತಾಂಶಗಳ ಆಧಾರದ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ 2006 ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ತುಪ್ಪ ಉತ್ಪಾದನೆಯ ಮೇಲೆ ನಿಷೇಧವನ್ನೂ ಹೇರಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
8
+ ಆಹಾರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಪ್ರಸಾದ ತಯಾರಿಸಲು ಎಲ್ಲಾ ಸರ್ಕಾರಿ ದೇವಸ್ಥಾನಗಳಲ್ಲಿ ನಂದಿನಿ ತುಪ್ಪವನ್ನು ಮಾತ್ರ ಬಳಸಬೇಕೆಂದು ಆದೇಶಿಸಿತ್ತು.
eesanje/url_46_10_12.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಹೈಕೋರ್ಟ್‌ ತೀರ್ಪಿನ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ
2
+ '
3
+ ಬೆಂಗಳೂರು,ಸೆ.24-ಮುಡಾ ಪ್ರಕರಣದಲ್ಲಿ ಹೈಕೋರ್ಟ್‌ ತೀರ್ಪು ಪ್ರಕಟಗೊಂಡ ಹಿನ್ನೆಲೆಯಲ್ಲಿ ತಮ ಅಭಿಪ್ರಾಯ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾವು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದಿದ್ದಾರೆ.
4
+ ಹೈಕೋರ್ಟ್‌ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್‌ ಬಿಎನ್‌ಎಸ್‌‍ಎಸ್‌‍ 218ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್‌ 17 ಎಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ ಎಂದು ವಿವರಿಸಿದ್ದಾರೆ.
5
+ ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್‌ 218 ಬಿಎನ್‌ಎಸ್‌‍ಎಸ್‌‍, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ ನಿರಾಕರಿಸಿದ್ದರು. ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್‌ಎಸ್‌‍ಎಸ್‌‍ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ ಎಂದಿದ್ದಾರೆ.
6
+ ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
7
+ ಇದು ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ದದ ಹೋರಾಟ. ಬಿಜೆಪಿ, ಜೆಡಿಎಸ್‌‍ನ ಈ ಸೇಡಿನ ರಾಜಕೀಯದ ವಿರುದ್ದ ನಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ. ನಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್‌‍ ಹೈಕಮಾಂಡ್‌ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
8
+ ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್‌‍ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ. ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜ���ೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ ಎಂದಿದ್ದಾರೆ.
9
+ ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್‌‍ ಪಕ್ಷಗಳ ಮುಖ್ಯ ಉದ್ದೇಶ. ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ನಾನು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
10
+ ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ. ಇದೇ ಬಿಜೆಪಿ, ಜೆಡಿಎಸ್‌‍ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್‌ ಯೋಜನೆಗಳನ್ನು ವಿರೋಧಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
11
+ ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್‌ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್‌ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ ಪಕ್ಷಕ್ಕೆ 136 ಸದಸ್ಯರ ಬಲ ನೀಡಿ ಗೆಲ್ಲಿಸಿದರು.
12
+ ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್‌‍ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ದ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಿದ್ದಾರೆ ಎಂದು ಕಿಡಿಕಾರಿದ್ದಾರೆ.
13
+ ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರಮೋದಿ ನೇತೃತ್ವದ ಬಿಜೆಪಿ ದೇಶಾದ್ಯಂತ ನಡೆಸುತ್ತಿದೆ. ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್‌‍ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
eesanje/url_46_10_2.txt ADDED
@@ -0,0 +1,6 @@
 
 
 
 
 
 
 
1
+ ಕಾನೂನು ಹೋರಾಟದ ಬಗ್ಗೆ ಸಿಎಂ ಸರಣಿ ಸಭೆ
2
+ '
3
+ ಬೆಂಗಳೂರು,ಸೆ.25-ಹೈಕೋರ್ಟ್‌ ತೀರ್ಪಿನ ಬಳಿಕ ಮುಡಾ ಪ್ರಕರಣದಲ್ಲಿ ಅನುಸರಿಸಬೇಕಾದ ಕಾನೂನು ಹಾಗೂ ರಾಜಕೀಯ ಹೋರಾಟಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸರಣಿ ಸಭೆಗಳನ್ನು ನಡೆಸಿದ್ದಾರೆ.
4
+ ಇಂದು ಬೆಳಿಗ್ಗೆ ಕಾನೂನು ಸಲಹೆಗಾರ ಎ.ಎಸ್‌‍.ಪೊನ್ನಣ್ಣ ಅವರು ಮುಖ್ಯಮಂತ್ರಿ ಗೃಹಕಚೇರಿ ಕಾವೇರಿಗೆ ಆಗಮಿಸಿ ಸಮಾಲೋಚನೆ ನಡೆಸಿದರು.ಸಚಿವರಾದ ಲಕ್ಷ್ಮೀಹೆಬ್ಬಾಳ್ಕರ್‌ ಹಾಗೂ ಇತರರು ಇಂದು ಬೆಳಿಗ್ಗೆ ಮುಖ್ಯಮಂತ್ರಿ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು. ಹಲವು ಶಾಸಕರು, ಸಚಿವರು ಆಗಮಿಸಿ ಮುಖ್ಯಮಂತ್ರಿಯವರಿಗೆ ನೈತಿಕ ಬೆಂಬಲ ವ್ಯಕ್ತಪಡಿಸಿದರು.
5
+ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೇಮಕಾತಿಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಬೇಕಿತ್ತು.
6
+ ಆದರೆ ಅದನ್ನು ಬದಿಗಿಟ್ಟು ಮುಖ್ಯಮಂತ್ರಿಯವರು ಕಾನೂನು ಹಾಗೂ ರಾಜಕೀಯ ಸಂಘರ್ಷದ ಬಗ್ಗೆ ಹಲವರ ಜೊತೆ ಭೌತಿಕವಾಗಿ ಹಾಗೂ ದೂರವಾಣಿಯ ಮೂಲಕ ಸಮಾಲೋಚನೆ ನಡೆಸಿದರು.ಮಧ್ಯಾಹ್ನ ಕೇರಳಕ್ಕೆ ಭೇಟಿ ನೀಡುವ ಮುನ್ನ ಸಿದ್ದರಾಮಯ್ಯ ಸಾಕಷ್ಟು ತಯಾರಿಗಳನ್ನು ನಡೆಸಿದರು.
eesanje/url_46_10_3.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಸಿಎಂ ಸ್ಥಾನ ಪಲ್ಲಟ ಗ್ಯಾರಂಟಿ : ವಿಜಯೇಂದ್ರ ಭವಿಷ್ಯ
2
+
3
+ ಬೆಂಗಳೂರು,ಸೆ.25-ಮುಡಾ ಪ್ರಕರಣದಲ್ಲಿ ಹೈಕೋರ್ಟ್‌ ತನಿಖೆಗೆ ಆದೇಶ ನೀಡಿರುವ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಎಷ್ಟೇ ಬಂಡತನ ತೋರಿದರೂ ಮುಖ್ಯಮಂತ್ರಿ ಸ್ಥಾನ ಪಲ್ಲಟವಾಗುವುದು ಗ್ಯಾರಂಟಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
4
+ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ನಾನೇಕೆ ರಾಜೀನಾಮೆ ನೀಡಬೇಕೆಂದು ಸಿದ್ದರಾಮಯ್ಯ ನವರು ಪ್ರಶ್ನಿಸಿದ್ದಾರೆ. ನೀವು ಎಷ್ಟೇ ಬಂಡತನ ತೋರಿದರೂ ಮುಖ್ಯಮಂತ್ರಿ ಸ್ಥಾನ ಪಲ್ಲಟವಾಗುವುದು ದಿಟ. ಹೈಕೋರ್ಟ್‌ ತೀರ್ಪು ಬಂದ ನಂತರ ಆಡಳಿತಾರೂಢ ಕಾಂಗ್ರೆಸ್‌‍ನಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ ಎಂದು ಹೇಳಿದರು.
5
+ ಮುಡಾ ಹಗರಣದಲ್ಲಿ ಮೇಲ್ನೋಟಕ್ಕೆ ಸಿದ್ದರಾಮಯ್ಯನವರ ಕುಟುಂಬದವರು ಫಲಾನುಭವಿಗಳಾಗಿದ್ದಾರೆ ಎಂದು ಹೈಕೋರ್ಟ್‌ ತನ್ನ ಆದೇಶದಲ್ಲಿ ತೀರ್ಪು ನೀಡಿದೆ. ಯಾವ ನೈತಿಕತೆ ಮೇಲೆ ಅವರು ಅಧಿಕಾರದಲ್ಲಿ ಮುಂದುವರೆಯುತ್ತಾರೆ ಎಂದು ಪ್ರಶ್ನಿಸಿದರು.ನಿನ್ನೆ ಹೈಕೋರ್ಟ್‌ ತಿರ್ಪು ನೀಡಿದೆ. ಸಿಎಂ ಗಮನಕ್ಕೆ ಬರದೆ ಇಷ್ಟು ದೊಡ್ಡ ಹಗರಣ ಆಗಲಿಕ್ಕೆ ಸಾಧ್ಯವಿಲ್ಲ. ಹೀಗಾಗಿ ಸಮಗ್ರ ತನಿಖೆ ಅಗತ್ಯವಿದೆ ಎಂದಿದೆ.
6
+ ತಪ್ಪು ಮಾಡಿಲ್ಲ ರಾಜೀನಾಮೆ ನೀಡಲ್ಲ ಎಂದಿದ್ದಾರೆ. ನ್ಯಾಯಾಲಯ ತೀರ್ಪಿನಲ್ಲಿ ಸ್ಪಷ್ಟವಾಗಿ ಹೇಳಿದೆ. ಆದರೂ ಸಿಎಂ ರಾಜಕೀಯ ಪ್ರೇರಿತ ಎನ್ನುತ್ತಾರೆ. ನ್ಯಾಯಾಲಯದ ತೀರ್ಪಿಗೆ ತಲೆದೂಗಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
7
+ ಬಿಜೆಪಿ ನಾಯಕರು ಈಶ್ವರಪ್ಪ ಭೇಟಿ ಕುರಿತು ಮಾತನಾಡಿದ ಅವರು, ಯತ್ನಾಳ್‌ ಮತ್ತೆ ಯಾರು ಯಾರು ಹೋಗಿದ್ದರು ಗೊತ್ತಿಲ್ಲ.. ಅವರನ್ನೇ ಕೇಳಿ.. ನಾನು ಈಶ್ವರಪ್ಪ ಹೇಳಿಕೆ ಬಗ್ಗೆ ಮಾತನಾಡಬಾರದು ಅಂದುಕೊಂಡಿದ್ದೆ. ಬಹಳ ಕಾಳಜಿ ಇಟ್ಟುಕೊಂಡು ಬಿಜೆಪಿ ಪರವಾಗಿ ಮಾತನಾಡಿದ್ದಾರೆ ಈಶ್ವರಪ್ಪ ಎಂದರು.
8
+ ನಾವು ವಿಜಯೇಂದ್ರ ನಾಯಕತ್ವ ಒಪ್ಪಲ್ಲ ಎನ್ನುತ್ತಾರೆ. ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದರಿಂದ ಅವರ ಉಚ್ಚಾಟನೆ ಆಗಿದೆ. ಸ್ವಾತಂತ್ರವಾಗಿ ಸ್ಪರ್ಧೆ ಮಾಡಿದ್ದರು. ಪಕ್ಷಕ್ಕಾಗಿ ಸ್ಪರ್ಧೆ ಮಾಡಲಿಲ್ಲ, ಮಗನಿಗಾಗಿ ಆ ರೀತಿ ಮಾಡಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.ಈಶ್ವರಪ್ಪ ಕರೆತರುವ ಯಾವುದೇ ಪ್ರಯತ್ನ ರಾಷ್ಟ್ರ ಮಟ್ಟದಲ್ಲಿ ನಡೆಯುತ್ತಿಲ್ಲ. ಒಂದು ವೇಳೆ ರಾಷ್ಟ್ರ ನಾಯಕರು ಕೇಳಿದರೆ ಮಾಹಿತಿ ನೀಡುತ್ತೇವೆ ಎಂದರು.
9
+ ಬಿಜೆಪಿಯಲ್ಲಿ ಒಗ್ಗಟ್ಟು ಇಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, ಯಾವ ಒಗ್ಗಟ್ಟು ಇಲ್ಲ ಹೇಳಿ. ಒಗ್ಗಟ್ಟಿನಿಂದಲೇ ಪಾದಯಾತ್ರೆ ಮಾಡಿದ್ದು. ಪಾದಯಾತ್ರೆ ಯಶಸ್ವಿಯಾಗಿದೆ ಕೋರ್ಟ್‌ ತನಿಖೆಗೆ ಅನುಮತಿ ಕೊಟ್ಟಿದೆ ಎಂದು ಹೇಳಿದರು.
10
+ ಮಾಜಿ ಸಚಿವ ಮುರುಗೇಶ್‌ ನಿರಾಣಿ ಮಾತನಾಡಿ, ಸಿದ್ದರಾಮಯ್ಯ ಐದು ದಶಕ ರಾಜಕೀಯ ಮಾಡಿದ್ದಾರೆ. ಹಿಂದೆ ಇಂತಹ ಕೋರ್ಟ್‌ ತೀರ್ಪು ಕೊಟ್ಟಾಗ ಹೋರಾಟ ಮೂಲಕ ಹಲವರು ರಾಜೀನಾಮೆ ಪಡೆದಿದ್ದಾರೆ. ಈಶ್ವರಪ್ಪ ಅವರ ರಾಜೀನಾಮೆ ಪಡೆದಿದ್ದರು. ಅದು ಮೂಲಕ ಹೋರಾಟ ಸಿದ್ದರಾಮಯ್ಯ ಅವರದಾಗಿತ್ತು. ಕೋರ್ಟ್‌ ತನಿಖೆ ಆದೇಶ ನೀಡಿರುವುದರಿಂದ ಅವರು ರಾಜೀನಾಮೆ ನೀಡಬೇಕು. ತನಿಖೆ ಎದುರಿಸಬೇಕು ಎಂದರು.
11
+ ಮಂಡ್ಯದ ನಾಗಮಂಗಲದಲ್ಲಿ ನಮ ಕಾರ್ಯಕರ್ತೆ ಛಾಯ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಭಾಗಿ ಆಗಿದ್ದರು. ಅವರನ್ನು ರಾತ್ರಿ 12 ಗಂಟೆ ತನಕ ಪೊಲೀಸ್‌‍ ಠಾಣೆಯಲ್ಲಿ ಕೂರಿಸಿದ್ದರು. ಒಟಿಪಿ ಡೌನ್ಲೋಡ್‌ ಮಾಡ್ತಾ ಇದ್ದೀರಿ ಎಂದು ಕಾರಣ ನೀಡಿ ಕೂರಿಸಿದ್ದರು. ಇದನ್ನು ನಾವು ಸಹಿಸುವುದಿಲ್ಲ. ಪದೇ ಪದೇ ನಮ ಕಾರ್ಯಕರ್ತರಿಗೆ ತೊಂದರೆ ನೀಡುತ್ತಾ ಇದ್ದಾರೆ. ಇದು ಸಣ್ಣ ವಿಷಯ ಅಲ್ಲ. ಗೃಹ ಸಚಿವರು ಗಮನ ಹರಿಸಬೇಕು. ಇಲ್ಲವಾದರೆ ಪೊಲೀಸ್‌‍ ಠಾಣೆಗೆ ನಾವು ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಸಿದರು.
12
+ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಮಾತನಾಡಿ, ನಾಡಿನ ಜನರಿಗೆ ಪ್ರಾಮಾಣಿಕ ಉತ್ತರಬೇಕು. ಬುದ್ದಿವಂತಿಕೆ ಉತ್ತರದಿಂದ ಕೆಲವರನ್ನು ನಂಬಿಸಬಹುದು. ಪರಿಸ್ಥಿತಿ ನೋಡಿದರೆ ಅವರ ಪಕ್ಷದವರಿಂದಲೇ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಸನ್ನಿವೇಶ ಬರುತ್ತದೆ. ಇದೊಂದು ರೀತಿ ಐಸಿಯುನಲ್ಲಿರುವ ಸರ್ಕಾರ ಆಕ್ಸಿಜನ್‌ ಇರುವವರೆಗೆ ಉಸಿರಾಡುತ್ತೇ ಆಮೇಲೆ ಇದ್ದೇ ಇದೆಯಲ್ಲ ಎಂದು ವ್ಯಂಗ್ಯವಾಡಿದರು.
13
+ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ನಾಳೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದೇವೆ. ಬಿಜೆಪಿಯಿಂದ ದೊಡ್ಡ ಹೋರಾಟಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದೆ. ಶಾಸಕರು, ಸಂಸದರು ಹಾಗೂ ಹಿರಿಯ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
eesanje/url_46_10_4.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡಲ್ಲ : ಗೃಹಸಚಿವ ಪರಮೇಶ್ವರ್‌
2
+
3
+ ಬೆಂಗಳೂರು,ಸೆ.25– ಮುಖ್ಯಮಂತ್ರಿ ಸಿದ್ದರಾಮಯ್ಯ ಕಲ್ಲುಬಂಡೆಯಂತೆ ಗಟ್ಟಿಯಾಗಿದ್ದು, ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕಾನೂನಿನ ಹೋರಾಟವನ್ನು ಮುಂದುವರೆಸಲಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವುದೇ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿಲ್ಲ ಎಂದು ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಲಾಗಿತ್ತು.
4
+ ಆದರೆ ವ್ಯತಿರಿಕ್ತವಾದ ತೀರ್ಪು ಬಂದಿದೆ. ತೀರ್ಪನ್ನು ಗೌರವಿಸುತ್ತೇನೆ. ಆದರೆ ಎಲ್ಲೋ ಒಂದು ಕಡೆ ನ್ಯಾಯ ಸಿಕ್ಕಿಲ್ಲ ಎಂದು ಮನಸ್ಸಿಗೆ ನೋವಾಗಿದೆ. ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದ್ದು, ನ್ಯಾಯಾಂಗ ಹೋರಾಟವನ್ನು ಮುಂದುವರೆಸಲಾಗುವುದು ಎಂದರು.
5
+ ಈ ನಡುವೆ ವಿರೋಧಪಕ್ಷಗಳು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಅದು ಸಾಧ್ಯವಿಲ್ಲ ಎಂದು ಈಗಾಗಲೇ ಸಿದ್ದರಾಮಯ್ಯರಾದಿಯಾಗಿ ಎಲ್ಲರೂ ಸ್ಪಷ್ಟಪಡಿಸಿದ್ದಾರೆ. ನಾನು ಅದನ್ನು ದೃಢಪಡಿಸುತ್ತೇನೆ. ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನು ಸಲ್ಲಿಸಲಾಗುವುದು. ನ್ಯಾಯಾಂಗ ಹೋರಾಟ ಮುಂದುವರೆಸುವುದರಿಂದ ರಾಜೀನಾಮೆ ನೀಡುವ ಮಾತು ಬರುವುದಿಲ್ಲ ಎಂದು ತಿಳಿಸಿದರು.
6
+ ಸಿದ್ದರಾಮಯ್ಯನವರ 40 ವರ್ಷಗಳ ರಾಜಕೀಯ ಜೀವನದಲ್ಲಿ ಯಾವುದೇ ರೀತಿಯ ಆಪಾದನೆಗಳು ಅವರ ವಿರುದ್ಧ ಬಂದಿರಲಿಲ್ಲ. ಈಗ ರಾಜಕೀಯ ದುರುದ್ದೇಶದಿಂದ ಆರೋಪ ಮಾಡಿದ್ದಾರೆ ಎಂಬ ಭಾವನೆ ಜನಸಾಮಾನ್ಯರಿಗೆ ಬರುತ್ತಿದೆ. ಅದನ್ನು ನಾವು ರಾಜಕೀಯವಾಗಿಯೇ ಹೋರಾಟ ಮಾಡಿ ಜನರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಹೇಳಿದರು.
7
+ ಹೈಕೋರ್ಟ್‌ ತೀರ್ಪನ್ನು ದ್ವಿಸದಸ್ಯ ಪೀಠದ ಮುಂದೆ ಪ್ರಶ್ನಿಸುತ್ತೇವೆ. ಆದರೆ ಈ ಹಿಂದೆ ವಾದ-ಪ್ರತಿವಾದದ ವೇಳೆ ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಪಾತ್ರ ಏನು ಎಂದು ಹೇಳುವಂತೆ ನ್ಯಾಯಾಧೀಶರೇ ಪ್ರಶ್ನಿಸಿದರು.
8
+ ವಾದ-ಪ್ರತಿವಾದದ ಸಂದರ್ಭದಲ್ಲಿ ನ್ಯಾಯಾಧೀಶರ ಉಲ್ಲೇಖಗಳೇ ಬೇರೆ, ತೀರ್ಪೇ ಬೇರೆ ಎಂಬಂತಾಗಿದೆ. ಈ ಹಿನ್ನೆಲೆಯಲ್ಲಿ ದ್ವಿಸದಸ್ಯ ಪೀಠದ ಮುಂದೆ ಹೋರಾಟ ಮಾಡಬೇಕೆ ಅಥವಾ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಬೇಕೇ ಎಂಬುದರ ಕುರಿತು ಪರಿಶೀಲಿಸುತ್ತಿದ್ದೇವೆ ಎಂದು ಹೇಳಿದರು.
9
+ ಹೈಕೋರ್ಟ್‌ ತೀರ್ಪಿನಲ್ಲಿ ರಾಜ್ಯಪಾಲರು ತಮ ಆದೇಶ ಹೊರಡಿಸುವಾಗ ವಿವೇಚನಾಧಿಕಾರ ಬಳಸಿದ್ದಾರೆ ಎಂಬುದಕ್ಕೆ ಸಮರ್ಥನೆ ನೀಡಿಲ್ಲ ಎಂದು ನ್ಯಾಯಾಧೀಶರು ಉಲ್ಲೇಖಿಸಿದ್ದಾರೆ. ಇದರ ಬಗ್ಗೆ ಚರ್ಚೆಯಾಗಬೇಕಿತ್ತು. ತೀರ್ಪಿನಲ್ಲಿ ನಮಗೆ ನ್ಯಾಯ ಸಿಕ್ಕಿಲ್ಲ ಎಂಬುದಂತೂ ಸತ್ಯ. ನ್ಯಾಯಾಧೀಶರ ಉಲ್ಲೇಖ ಮತ್ತು ತೀರ್ಪಿನಲ್ಲಿ ವೈರುಧ್ಯಗಳು ಕಂಡುಬರುತ್ತಿವೆ ಎಂದರು.ದ್ವಿಸದಸ್ಯ ಪೀಠದ ಮುಂದೆ ನ್ಯಾಯ ಸಿಗಬಹುದು ಎಂಬ ನಿರೀಕ್ಷೆ ಇದೆ. ಅಲ್ಲಿ ಯಾವ ರೀತಿಯ ತೀರ್ಪು ಬರುತ್ತದೋ ಗೊತ್ತಿಲ್ಲ. ಒಂದು ವೇಳೆ ಇದೇ ರೀತಿ ತೀರ್ಪು ಹೊರಬಿದ್ದರೆ ನಾವು ಏನು ಮಾಡಲು ಸಾಧ್ಯ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.
10
+ ಸಿದ್ದರಾಮಯ್ಯನವರ ಪ್ರಕರಣದಲ್ಲಿ ಹೈಕೋರ್ಟ್‌ ತೀರ್ಪಿನಿಂದಾಗಿ ಇತರ ಸಚಿವರುಗಳ ಮೇಲಿನ ದೂರುಗಳಿಗೂ ಬಲ ಬಂದಂತಾಗಿದೆ ಎಂಬ ವಿಶ್ಲೇಷಣೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್‌ರವರು, ರಾಜ್ಯಪಾಲರು ಎಲ್ಲಾ ದೂರುಗಳನ್ನೂ ಏಕರೂಪತೆಯಿಂದ ನೋಡಬೇಕಿತ್ತು. ಎಚ್‌.ಡಿ.ಕುಮಾರಸ್ವಾಮಿ, ಮುರುಗೇಶ್‌ ನಿರಾಣಿ, ಜನಾರ್ಧನ ರೆಡ್ಡಿ, ಶಶಿಕಲಾ ಜೊಲ್ಲೆ ಎಲ್ಲರಿಗೂ ಇದೇ ರೀತಿಯ ಮಾನದಂಡಗಳನ್ನು ಅನುಸರಿಸಬೇಕಿತ್ತು. ಕೆಲವರಿಗೆ ಮಾತ್ರ ತುರ್ತು ಅನುಮತಿ ನೀಡಿ ಉಳಿದ ಕಡತಗಳನ್ನು ಮರೆಯುವುದು ಮೇಲ್ನೋಟಕ್ಕೆ ತಾರತಮ್ಯ ಎಂದು ಕಂಡುಬರುತ್ತಿದೆ.
11
+ ಲೋಕಾಯುಕ್ತಕ್ಕೆ ಕಡತ ವಾಪಸ್‌‍ ಬಂದಿದ್ದರೆ ಅಗತ್ಯ ವಿವರಣೆಗಳನ್ನು ನೀಡಿ ಮರುಸಲ್ಲಿಕೆ ಮಾಡಲಾಗುವುದು. ಆಗ ರಾಜ್ಯಪಾಲರು ಅಷ್ಟೇ ವೇಗವಾಗಿ ನಿರ್ಣಯ ಕೈಗೊಳ್ಳಬೇಕಲ್ಲವೇ? ಎಂದು ಹೇಳಿದರು.ಕುಮಾರಸ್ವಾಮಿಯವರ ಕಡತ ಇನ್ನೂ ರಾಜ್ಯಪಾಲರ ಬಳಿಯೇ ಇದೆ ಎಂದರು.
12
+ ರಾಜ್ಯಪಾಲರ ವಿರುದ್ಧ ಹೋರಾಟದ ಬಗ್ಗೆ ಪಕ್ಷ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು. ರಾಜ್ಯಪಾಲರು ಸಚಿವ ಸಂಪುಟ ಸಭೆಯ ಸಲಹೆ ಮೇರೆಗೆ ಕೆಲಸ ಮಾಡಬೇಕಿತ್ತು. ಆದರೆ ಅದನ್ನು ಬಿಟ್ಟು ವಿವೇಚನಾಧಿಕಾರವನ್ನು ಬಳಸಬಹುದು. ಆದರೆ ಇಲ್ಲಿ ಅದು ಕಂಡುಬರುತ್ತಿಲ್ಲ. ಹೈಕೋರ್ಟ್‌ ತೀರ್ಪಿನಿಂದ ನಮಗೆ ಸಮಾಧಾನವಾಗಿಲ್ಲ. ಆದರೆ ಈ ಪ್ರಕರಣದಿಂದ ಸಿದ್ದರಾಮಯ್ಯ ಅವರು ಕುಗ್ಗಿಲ್ಲ. ಕಲ್ಲುಬಂಡೆಯಂತೆ ಗಟ್ಟಿಯಾಗಿದ್ದಾರೆ. ಹೈಕಮಾಂಡ್‌ ಕೂಡ ಅವರಿಗೆ ಬೆಂಬಲ ವ್ಯಕ್ತಪಡಿಸಿದೆ. ವರಿಷ್ಠ ನಾಯಕರು ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದರು.
eesanje/url_46_10_5.txt ADDED
@@ -0,0 +1,7 @@
 
 
 
 
 
 
 
 
1
+ ಮುಡಾ ಪ್ರಕರಣ : ಲೋಕಾಯುಕ್ತ ಪೊಲೀಸರಿಗೆ ದೂರು
2
+ :
3
+ ಮೈಸೂರು,ಸೆ.25– ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಿ ನೇರ ವಿಚಾರಣೆ ಆರಂಭಿಸುವಂತೆ ಜೆಡಿಎಸ್‌‍ನ ಪ್ರದೀಪ್‌ಕುಮಾರ್ ಮೈಸೂರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ.
4
+ ಇಂದು ಬೆಳಿಗ್ಗೆ ಪಕ್ಷದ ಕೆಲ ಮುಖಂಡರ ಜೊತೆ ಲೋಕಾಯುಕ್ತ ಕಚೇರಿಗೆ ತೆರಳಿ ಎರಡನೇ ಬಾರಿಗೆ ದೂರು ಸಲ್ಲಿಸಿದ್ದಾರೆ.ಕಳೆದ ಜುಲೈನಲ್ಲೇ ನಾನು ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದೆ. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ರಾಜ್ಯಪಾಲರು ಅಭಿಯೋಜನೆಗೆ ನೀಡಿದ್ದ ಪೂರ್ವಾನುಮತಿಯನ್ನು ನಿನ್ನೆ ಹೈಕೋರ್ಟ್‌ ತೀರ್ಪು ಎತ್ತಿಹಿಡಿದಿದೆ. ಜೊತೆಗೆ ಪ್ರಕರಣ ದಾಖಲಿಸಲು ಯಾರ ಪೂರ್ವಾನುಮತಿಯೂ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಹೀಗಾಗಿ ತಮ ದೂರು ಆಧರಿಸಿ ಎಫ್‌ಐಆರ್‌ ದಾಖಲಿಸಬೇಕು ಎಂದು ಒತ್ತಾಯಿಸಿದರು.
5
+ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಕೆಯಾಗಿದ್ದು, ತನಿಖೆಗೂ ಮುನ್ನ ಪ್ರಕರಣ ದಾಖಲಿಸಲು ಸೂಚನೆ ನೀಡುವಂತೆ ಕೆಲವರು ಮನವಿ ಮಾಡಿದ್ದಾರೆ. ಆದರೆ ಹೈಕೋರ್ಟ್‌ ಯಾವುದೇ ಪೂರ್ವಾನುಮತಿಯ ಅಗತ್ಯವಿಲ್ಲ ಎಂದು ಹೇಳಿರುವುದರಿಂದ ಲೋಕಾಯುಕ್ತ ಸಂಸ್ಥೆ ನ್ಯಾಯೋಚಿತವಾಗಿ ಕ್ರಮ ಕೈಗೊಳ್ಳಬೇಕು. ಕಳೆದ ಮೂರು ತಿಂಗಳಿನಿಂದಲೂ ಉದ್ದೇಶಪೂರಕವಾಗಿ ಕಾಲಾಹರಣ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
6
+ ತಮ ದೂರಿನ ಅಡಿ ಪ್ರಕರಣ ದಾಖಲಿಸದೇ ಇದ್ದರೆ ಲೋಕಾಯುಕ್ತ ಕಚೇರಿ ಎದುರು ಧರಣಿ ನಡೆಸುವುದಾಗಿಯೂ ಅವರು ಎಚ್ಚರಿಸಿದರು.ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಪುತ್ರ ಯತೀಂದ್ರ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಇತರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಎರಡನೇ ದೂರು ನೀಡಿದ್ದಾರೆ.
7
+ ಲೋಕಾಯುಕ್ತ ಅಧಿಕಾರಿಗಳು 197 ಪುಟಗಳ ದೂರಿದ್ದು, ಇದನ್ನು ಪರಿಶೀಲಿಸಲು ಕಾಲಾವಕಾಶ ನೀಡುವಂತೆ ಸೂಚಿಸಿದ್ದಾರೆ. ಅರ್ಧಗಂಟೆ ನಾನು ಈ ಬಗ್ಗೆ ಕಾಯುತ್ತೇನೆ. ನಂತರ ಧರಣಿ ನಡೆಸುತ್ತೇನೆ ಎಂದು ಸುದ್ದಿಗಾರರೊಂದಿಗೆ ತಿಳಿಸಿದರು.ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಒತ್ತಡಕ್ಕೆ ಮಣಿದಂತೆ ಕಂಡುಬರುತ್ತಿದೆ. ಹೀಗಾಗಿ ಈ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವುದು ಸೂಕ್ತ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
eesanje/url_46_10_6.txt ADDED
@@ -0,0 +1,17 @@
 
 
 
 
 
 
 
 
 
 
 
 
 
 
 
 
 
 
1
+ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಿ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ
2
+
3
+ ಬೆಂಗಳೂರು,ಸೆ.25– ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸುವ ಮೂಲಕ ಮಹತ್ವದ ತೀರ್ಪು ಪ್ರಕಟಿಸಿದೆ. ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆದು, ಇಂದು ತೀರ್ಪು ಪ್ರಕಟವಾಗಿದ್ದು, ಸಿಆರ್‌ಪಿಸಿ ಅಡಿಯೇ ಕಾನೂನ ಪ್ರಕ್ರಿಯೆಗಳನ್ನು ಮುಂದುವರೆಸುವಂತೆ ಸೂಚಿಸಲಾಗಿದೆ.
4
+ ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಹಾಗೂ ಕಾನೂನಿನ ಕುಣಿಕೆ ಎದುರಾಗಿದೆ.ದೂರುದಾರ ಸ್ನೇಹಮಯಿ ಕೃಷ್ಣ ಅವರ ಪರವಾಗಿ ವಕೀಲರಾದ ಲಕ್ಷ್ಮೀ ಅಯ್ಯಂಗಾರ್‌ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರು ನೀಡಿರುವ ಪೂರ್ವಾನುಮತಿ ಹಾಗೂ ಅದನ್ನು ಪ್ರಶ್ನಿಸಿ ಸಿದ್ದರಾಮಯ್ಯನವರು ಹೈಕೋರ್ಟ್‌ಗೆ ಸಲ್ಲಿಸಿದ್ದ ರಿಟ್‌ ಅರ್ಜಿ ಮತ್ತು ಈ ಕುರಿತು ಹೈಕೋರ್ಟ್‌ ನೀಡಿರುವ ತೀರ್ಪನ್ನು ಜನಪ್ರತಿನಿಧಿಗಳ ನ್ಯಾಯಾಲಯದ ಗಮನಕ್ಕೆ ತಂದರು.
5
+ ಜೊತೆಗೆ ಮೈಸೂರಿನ ಕೆಸರೆ ಗ್ರಾಮದಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಬಡಾವಣೆ ನಿರ್ಮಾಣಕ್ಕಾಗಿ ಬಿಡಿಎ ಸ್ವಾದೀನಪಡಿಸಿಕೊಂಡು ಮೂಲ ಮಾಲೀಕರಿಗೆ ಪರಿಹಾರವನ್ನು ಪಾವತಿಸಲು ಹಣ ಠೇವಣಿ ಇಡಲಾಗಿತ್ತು. ನಿವೇಶನಗಳನ್ನು ಅಭಿವೃದ್ಧಿಪಡಿಸಿ ರಸ್ತೆ, ಪಾರ್ಕ್‌ಗಳನ್ನು ನಿರ್ಮಿಸಲಾಗಿತ್ತು ಎಂದು ವಿವರಿಸಿದರು.
6
+ ಮುಡಾ ಸ್ವಾದೀನಪಡಿಸಿಕೊಂಡಿದ್ದ ಭೂಮಿಯನ್ನು ಸಿದ್ದರಾಮಯ್ಯನವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಖರೀದಿಸಿದ್ದಾರೆ. ನಂತರ ತಮ ಸಹೋದರಿ ಹಾಗೂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರಿಗೆ ದಾನಪತ್ರ ಮಾಡಿಕೊಟ್ಟಿದ್ದಾರೆ. ಮಲ್ಲಿಕಾರ್ಜುನ ಸ್ವಾಮಿ ಅವರು ದೇವರಾಜು ಅವರಿಂದ ಭೂಮಿ ಖರೀದಿಸಿದ್ದಾರೆ. ಆದರೆ ಇಲ್ಲಿ ದೇವರಾಜು ಭೂಮಿಯ ಮಾಲೀಕರೇ ಅಲ್ಲ ಎಂದು ವಾದಿಸಿದರು.
7
+ ಭೂಸ್ವಾದೀನ ಪ್ರಕ್ರಿಯೆಗಳು ಪೂರ್ಣಗೊಂಡಿದ್ದ ಜಮೀನನ್ನು ಜಿಲ್ಲಾಡಳಿತ ರಾಜಕೀಯ ಪ್ರಭಾವಕ್ಕೆ ಮಣಿದು ಮತ್ತೊಮೆ ನಿಯಮಬಾಹಿರವಾಗಿ ಭೂಪರಿವರ್ತನೆ ಮಾಡಿದೆ ಎಂದು ವಕೀಲರು ದೂರಿದರು.
8
+ ಈ ನಡುವೆ ಸಿದ್ದರಾಮಯ್ಯನವರು ಉಪ ಮುಖ್ಯಮಂತ್ರಿಯಾಗಿದ್ದಾಗ ಜಮೀನಿನ ಖರೀದಿ ಹಾಗೂ ಡಿ ನೋಟಿಫಿಕೇಷನ್‌ ಪ್ರಕ್ರಿಯೆಗಳಾಗಿವೆ. ಅವರು ಮುಖ್ಯಮಂತ್ರಿಯಾಗಿದ್ದಾಗ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಸಲಾಗಿದೆ ಮತ್ತು ಮುಡಾದಲ್ಲಿ 60:40 ರ ಬದಲಾಗಿ 50:50ರ ಅನುಪಾತದಡಿ ನಿವೇಶನ ಹಂಚಿಕೆಯಾಗಬೇಕು ಎಂಬ ನಿರ್ಣಯವಾಗಿದೆ. ಆ ಸಭೆಯಲ್ಲಿ ಸಿದ್ದರಾಮಯ್ಯನವರ ಪುತ್ರ ಯತೀಂ��್ರ ಭಾಗವಹಿಸಿದ್ದರು.
9
+ ಸಿದ್ದರಾಮಯ್ಯ ವಿರೋಧಪಕ್ಷದ ನಾಯಕರಾಗಿದ್ದಾಗ 14 ನಿವೇಶನಗಳ ಮಂಜೂರಾತಿಯಾಗಿದೆ ಎಂದು ವಿವರಿಸಿದರು.ಪಾರ್ವತಿ ಅವರು ಜಮೀನಿನ ಮಾಲೀಕರಾಗಿದ್ದರೂ ಕೂಡ 4,800 ಚದರ ಅಡಿ ಅಂದರೆ 4 ನಿವೇಶನಗಳನ್ನು ಪಡೆಯಲು ಅರ್ಹರಾಗಿದ್ದರೂ, ಮೈಸೂರಿನ ಪ್ರತಿಷ್ಠಿತ ಬಡಾವಣೆಯಲ್ಲಿ 14 ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ಒಟ್ಟು 11 ಅಂಶಗಳ ಆಧಾರದ ಮೇಲೆ ವಾದ ಮಂಡಿಸಿದ್ದರು.
10
+ ಈ ಪ್ರಕರಣದಲ್ಲಿ ಸ್ಪಷ್ಟವಾಗಿ ನಿಯಮದ ಉಲ್ಲಂಘನೆಯಾಗಿದೆ. ಅನಪೇಕ್ಷಿತ ರಾಜಕೀಯ ಪ್ರಭಾವ ಬಳಕೆಯಾಗಿದೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಬೇಕು ಎಂದು ಮನವಿ ಮಾಡಿದರು.
11
+ ಈ ವೇಳೆ ನ್ಯಾಯಾಧೀಶರು ಕಾನೂನು ಪ್ರಕ್ರಿಯೆಯನ್ನು ಹೊಸದಾಗಿ ಜಾರಿಯಾಗಿರುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌‍ಎಸ್‌‍) ಅಡಿ ಅಥವಾ ಈ ಮೊದಲು ಜಾರಿಯಲ್ಲಿದ್ದ ಕೋಡ್‌ ಆಫ್‌ ಕ್ರಿಮಿನಲ್‌ ಪ್ರೊಸಿಸರ್‌(ಸಿಆರ್‌ಪಿಸಿ) ಅಡಿ ಮುಂದುವರೆಸಬೇಕೆ ಎಂಬ ಪ್ರಶ್ನೆಯನ್ನು ಮುಂದಿಟ್ಟರು.
12
+ ಅರ್ಜಿದಾರರ ಪರ ವಕೀಲರು, ಹೊಸದಾಗಿ ಜಾರಿಯಾಗಿರುವ ಬಿಎನ್‌ಎಸ್‌‍ಎಸ್‌‍ ಅಡಿಯೇ ಕಾನೂನು ಪ್ರಕ್ರಿಯೆಗಳಿಗೆ ಆದೇಶ ನೀಡಬೇಕೆಂದು ಮನವಿ ಮಾಡಿದರು.ಒಂದು ವೇಳೆ ವಿಚಾರಣೆ ಸಂದರ್ಭದಲ್ಲಿ ಕಾನೂನಿನ ಸಂಘರ್ಷ ಎದುರಾದರೆ ಪದ್ಧತಿಯನ್ನು ಬದಲಾವಣೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಗುಜರಾತ್‌ ಹಾಗೂ ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ತೀರ್ಪನ್ನು ಉಲ್ಲೇಖಿಸಿದರು. ಸದ್ಯಕ್ಕೆ ಬಿಎನ್‌ಎಸ್‌‍ಎಸ್‌‍ ಅಡಿಯೇ ಕಾನೂನು ಪ್ರಕ್ರಿಯೆಗಳಿಗೆ ಸೂಚನೆ ನೀಡಬೇಕು ಎಂದು ಸಲಹೆ ನೀಡಿದರು. ಈ ವೇಳೆ ನ್ಯಾಯಾಧೀಶರು ಕಲಾಪವನ್ನು ಕೆಲಕಾಲ ಮುಂದೂಡಿದರು.
13
+ ಮತ್ತೆ ನ್ಯಾಯಾಲಯದ ಕಲಾಪ ಆರಂಭವಾದಾಗ ನ್ಯಾಯಾಧೀಶರು ತಮ ತೀರ್ಪನ್ನು ಪ್ರಕಟಿಸಿದ್ದು, ಡಿ.24 ರೊಳಗೆ ಅಂದರೆ ಮೂರು ತಿಂಗಳ ಕಾಲಾವಧಿಯಲ್ಲಿ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿದ್ದಾರೆ.
14
+ ಕಾನೂನು ಪ್ರಕ್ರಿಯೆ ಜಿಜ್ಞಾಸೆ :ಮುಡಾ ನಿವೇಶನ ಹಂಚಿಕೆ ಪ್ರಕರಣ 2004 ರಿಂದಲೂ ಆರಂಭಗೊಂಡಿದೆ. ಬಿಎನ್‌ಎಸ್‌‍ಎಸ್‌‍ 2024 ರ ಜುಲೈ 1 ರಿಂದ ಅನುಷ್ಠಾನಕ್ಕೆ ಬಂದಿದ್ದು, ಅನಂತರ ಘಟಿಸಿದ ಅಪರಾಧಗಳನ್ನು ಹೊಸ ಪದ್ಧತಿಯಡಿ ವಿಚಾರಣೆ ನಡೆಸಬೇಕಾಗುತ್ತದೆ. ಹಳೆಯ ಪ್ರಕರಣ ಆಗಿರುವುದರಿಂದ ಸಿಆರ್‌ಪಿಸಿಯನ್ನೇ ಪಾಲನೆ ಮಾಡಬೇಕು ಎಂಬ ವಾದಗಳು ಇವೆ.
15
+ ಮುಖ್ಯಮಂತ್ರಿ ವಿರುದ್ಧ ಅಭಿಯೋಜನೆಗೆ ಪೂರ್ವಾನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದ ದೂರುದಾರರಾದ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್‌ ಕುಮಾರ್‌ ಅವರನ್ನು ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆಕ್ಷನ್‌ 17 ಎ ಮತ್ತು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌‍) ಕಾಯಿದೆ ಸೆಕ್ಷನ್‌ 218 ರ ಅಡಿ ತನಿಖೆ ಹಾಗೂ ಅಭಿಯೋಜನೆಗೆ ಅನುಮತಿ ನೀಡುವಂತೆ ಮನವಿ ಮಾಡಿದರು.
16
+ ರಾಜ್ಯಪಾಲರ��� ಪೂರ್ವಾನುಮತಿಯನ್ನು ನೀಡಿದರು. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದಾಗ ನ್ಯಾ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಭ್ರಷ್ಟಾಚಾರ ನಿಗ್ರಹ ಕಾಯಿದೆ 17 ಎ ಅಡಿ ತನಿಖೆಗೆ ರಾಜ್ಯಪಾಲರು ಪೂರ್ವಾನುಮತಿ ನೀಡಿರುವುದನ್ನು ಎತ್ತಿಹಿಡಿದಿತ್ತು. ಬಿಎನ್‌ಎಸ್‌‍ 218ರ ಅಡಿ ನೀಡಿದ್ದ ಅನುಮತಿಯನ್ನು ರದ್ದುಗೊಳಿಸಿದರು.ಇಂದು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹೈಕೋರ್ಟ್‌ ತೀರ್ಪಿನ ದೃಢೀಕೃತ ಪ್ರತಿಯನ್ನು ಸಲ್ಲಿಸಲಾಯಿತು. ವಿಚಾರಣೆ ಹಂತದಲ್ಲಿ ಅನುಸರಿಸಬೇಕಾದ ಕಾನೂನು ಪ್ರಕ್ರಿಯೆಗಳ ಬಗ್ಗೆ ಜಿಜ್ಞಾಸೆ ವ್ಯಕ್ತವಾಗಿತ್ತು. ಅದಕ್ಕೆ ಸ್ಪಷ್ಟನೆ ಸಿಕ್ಕ ಬಳಿಕ ಜನಪ್ರತಿನಿಧಿಗಳ ನ್ಯಾಯಾಲಯ ತನ್ನ ತೀರ್ಪನ್ನು ಪ್ರಕಟಿಸಿದೆ.
17
+ ಇದರಿಂದಾಗಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರಿಗೆ ಸಂಕಷ್ಟಗಳು ಎದುರಾಗಿವೆ. ಹೈಕೋರ್ಟ್‌ ನಿನ್ನೆ ನೀಡಿದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‌ನ ದ್ವಿಸದಸ್ಯ ಪೀಠಕ್ಕೆ ಮೇಲನವಿ ಸಲ್ಲಿಸಲು ಮುಖ್ಯಮಂತ್ರಿಯವರ ಕಾನೂನು ತಂಡ ತಯಾರಿ ನಡೆಸಿತು.ಹೈಕೋರ್ಟ್‌ ಅಥವಾ ಸುಪ್ರೀಂಕೋರ್ಟ್‌ನಲ್ಲಿ ಕಾನೂನು ಹೋರಾಟವನ್ನು ಮುಂದುವರೆಸಬೇಕೇ ಎಂಬ ಬಗ್ಗೆ ಚರ್ಚೆಗಳು ನಡೆದಿದ್ದವು. ಇದರ ನಡುವೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ಮತ್ತೊಂದು ಸಂಕಷ್ಟವನ್ನು ತಂದೊಡ್ಡಿದೆ.
eesanje/url_46_10_7.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
2
+ - '
3
+ ಬೆಂಗಳೂರು,ಸೆ.25– ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶದ ನೀಡಿದ ಬೆನ್ನಲ್ಲೇ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ, ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿವೆ.ರಾಜಧಾನಿ ಬೆಂಗಳೂರು, ಮೈಸೂರು, ಯಾದಗಿರಿ, ಶಿವಮೊಗ್ಗ, ದಾವಣಗೆರೆ, ರಾಯಚೂರು, ಬಳ್ಳಾರಿ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವೆಡೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುವ ಮೂಲಕ ಸಿದ್ದರಾಮಯ್ಯನವರ ರಾಜೀನಾಮೆಗೆ ತೀವ್ರ ಒತ್ತಡ ತಂದಿದ್ದಾರೆ.
4
+ ಅಲ್ಲದೆ ರಾಜೀನಾಮೆ ನೀಡುವವರೆಗೂ ಹೋರಾಟ ನಡೆಸಲು ಉಭಯ ಪಕ್ಷಗಳು ನಿರ್ಧರಿಸಿದ್ದು, ಜಂಟಿಯಾಗಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸುವುದಾಗಿ ಘೋಷಿಸಿವೆ. ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ ಘೋಷಣೆಗಳನ್ನು ಕೂಗಿ, ಫಲಕಗಳನ್ನು ಪ್ರದರ್ಶಿಸಿ, ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿವೆ.
5
+ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಸೇರಿದಂತೆ ಮೋರ್ಚಾದ ನೂರಾರು ಕಾರ್ಯಕರ್ತರು, ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.ಶಿವಾನಂದ ವೃತ್ತದಿಂದ ಮುಖ್ಯಮಂತ್ರಿ ವಿರುದ್ಧದ ಫಲಕಗಳನ್ನು ಹಿಡಿದು ಸಿದ್ದರಾಮಯ್ಯ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಕುಮಾರಕೃಪ ಅತಿಥಿ ಗೃಹದ ಬಳಿ ಬರುತ್ತಿದ್ದಂತೆ ಪ್ರತಿಭಟನಾನಿರತರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.
6
+ ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಧೀರಜ್ ಮುನಿರಾಜ್, ಪ್ರಕರಣದಲ್ಲಿ ಸಿದ್ದರಾಮಯ್ಯ ಅವರೇ ಆರೋಪಿ ಸ್ಥಾನದಲ್ಲಿರುವುದರಿಂದ ನೈತಿಕ ಹೊಣೆ ಹೊತ್ತು ಅವರು ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆಯಿದ್ದರೆ ಅವರು ನ್ಯಾಯಾಲಯದ ತೀರ್ಪು ಹೊರಬರುತ್ತಿದ್ದಂತೆ ರಾಜೀನಾಮೆ ನೀಡಬೇಕಿತ್ತು ಎಂದು ಹೇಳಿದರು.
7
+ ನ್ಯಾಯಾಲಯದ ಆದೇಶ ಸ್ಪಷ್ಟವಾಗಿದ್ದು, ಅವರು ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಉಳಿಸಿಕೊಂಡಿಲ್ಲ. ಇನ್ನೊಬ್ಬರ ಬಗ್ಗೆ ಮಾತನಾಡುವ ಸಿದ್ದರಾಮಯ್ಯನವರು ಮೊದಲು ನೈತಿಕತೆ ಪ್ರದರ್ಶಿಸಿ ಇನ್ನೊಬ್ಬರಿಗೆ ಮಾದರಿಯಾಗಲಿ. ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
8
+ ಅವರು ರಾಜೀನಾಮೆ ನೀಡುವವರೆಗೂ ನಮ ಹೋರಾಟ ಮುಂದುವರೆಯುತ್ತದೆ. ಬೆಂಗಳೂರಿನಿಂದ ಮೈಸೂರುವರೆಗೆ ನಾವು ಹೋರಾಟ ನಡೆಸಿದ ಪರಿಣಾಮದಿಂದ ಪ್ರಕರಣ ಹೊ��ಬಂದಿದೆ. ಕೇಂದ್ರ ಸರ್ಕಾರ ಮತ್ತು ಬಿಜೆಪಿ ಬಗ್ಗೆ ಮಾತನಾಡುವ ಸಿದ್ದರಾಮಯ್ಯನವರು ತಮ ಬುಡಕ್ಕೆ ಬೆಂಕಿ ಬಿದ್ದಾಗ ಕಾನೂನು ಬಗ್ಗೆ ಮಾತನಾಡುವುದು ಸರಿಯೇ ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯನವರು ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರೆಯುತ್ತದೆ. ಯಾವುದೇ ಕಾರಣಕ್ಕೂ ನಾವು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಎಚ್ಚರಿಸಿದರು.
9
+ ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ, ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ, ಕೆ.ಎ.ತಿಪ್ಪೇಸ್ವಾಮಿ ಮೊದಲಾದವರ ನೇತೃತ್ವದಲ್ಲಿ ಫ್ರೀಡಂಪಾರ್ಕ್ ಮುಂಭಾಗದಲ್ಲಿರುವ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಲಾಯಿತು.ಮುಖ್ಯಮಂತ್ರಿ ವಿರದ್ಧದ ಫಲಕಗಳನ್ನು ಪ್ರದರ್ಶಿಸಿ, ಅವರ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟಾಗ ಪೊಲೀಸರು ಪ್ರತಿಭಟನಾನಿರತರನ್ನು ವಶಕ್ಕೆ ಪಡೆದರು.
10
+ ಇದಕ್ಕೂ ಮುನ್ನ ಮಾತನಾಡಿದ ಎಚ್.ಎಂ.ರಮೇಶ್ಗೌಡ, ಬಿಜೆಪಿ-ಜೆಡಿಎಸ್ ತಮ ವಿರುದ್ಧ ಷಡ್ಯಂತ್ರ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಆರೋಪಿಸಿ ರಾಜೀನಾಮೆ ಕೇಳುವ ನೈತಿಕ ಹಕ್ಕು ವಿಪಕ್ಷಗಳಿಲ್ಲ ಎಂದಿದ್ದಾರೆ. ಸಿದ್ದರಾಮಯ್ಯನವರಿಗೆ ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ಕೊಡಬೇಕು. ರಾಜ್ಯಪಾಲರು ನೀಡಿದ ಅನುಮತಿಯನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಹೀಗಾಗಿ ರಾಜೀನಾಮೆ ನೀಡಿ ತನಿಖೆಯನ್ನು ಎದುರಿಸಿ ಎಂದು ಆಗ್ರಹಿಸಿದರು.
11
+ ತಿಪ್ಪೇಸ್ವಾಮಿ ಮಾತನಾಡಿ, ಹೈಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಈ ಹಿಂದೆ ಆರೋಪ ಕೇಳಿಬಂದಾಗ ರಾಮಕೃಷ್ಣ ಹೆಗಡೆ, ಎಸ್.ಆರ್.ಬೊಮಾಯಿ ರಾಜೀನಾಮೆ ನೀಡಿದ್ದರು. ಅಲ್ಲದೆ, ಬಿ.ಎಸ್.ಯಡಿಯೂರಪ್ಪ ಸಹ ರಾಜೀನಾಮೆ ನೀಡಿ ತನಿಖೆ ಎದುರಿಸಿದ್ದಾರೆ. ಹೀಗಾಗಿ ಸಿದ್ದರಾಮಯ್ಯನವರು ಅಧಿಕಾರಕ್ಕೆ ಅಂಟಿಕೊಂಡು ಕೂರಬಾರದು. ತಕ್ಷಣವೇ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಇಲ್ಲದಿದ್ದರೆ ರಾಜೀನಾಮೆ ನೀಡುವವರೆಗೂ ನಿರಂತರವಾಗಿ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಹೇಳಿದರು.
12
+ ಟಿ.ಎ.ಶರವಣ ಮಾತನಾಡಿ, ಹೈಕೋರ್ಟ್ ತನಿಖೆಗೆ ಆದೇಶ ನೀಡಿರುವ ಹಿನ್ನಲೆಯಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ ಎಂದರು. ಕಾನೂನು ಹೋರಾಟ ನಡೆಸಲು ನಮದೇನು ತಕರಾರು ಇಲ್ಲ. ಆದರೆ ನೈತಿಕ ಹೊಣೆ ಹೊತ್ತು ತಕ್ಷಣ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
eesanje/url_46_10_8.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಸಿಎಂಗೆ ಸಂಕಷ್ಟ : ಮುಡಾ ಪ್ರಕರಣದ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಸೂಚನೆ
2
+ '
3
+ ಬೆಂಗಳೂರು,ಸೆ.25-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಪ್ರಕರಣದಲ್ಲಿ ಕ್ರಮ ಕೈಗೊಳ್ಳುವ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ತನಿಖೆಗೆ ಸೂಚನೆ ನೀಡಿದೆ.ನಮ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಎದುರು ಸ್ನೇಹಮಯಿ ಕೃಷ್ಣ ಹಾಗೂ ಟಿ.ಜೆ.ಅಬ್ರಹಾಂ ಅವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಯಿತು.
4
+ ದೂರುದಾರರ ಪರವಾಗಿ ವಕೀಲ ಲಕ್ಷ್ಮೀ ಅಯ್ಯಂಗಾರ್‌ ವಾದ ಮಂಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರು ನೀಡಿರುವ ಪೂರ್ವಾನುಮತಿ ಹಾಗೂ ಅದನ್ನು ಪ್ರಶ್ನಿಸಿ ಸಿದ್ದರಾಮಯ್ಯನವರು ಹೈಕೋರ್ಟ್‌ಗೆ ಸಲ್ಲಿಸಿದ್ದ ರಿಟ್‌ ಅರ್ಜಿ ಮತ್ತು ಈ ಕುರಿತು ಹೈಕೋರ್ಟ್‌ ನೀಡಿರುವ ತೀರ್ಪನ್ನು ಜನಪ್ರತಿನಿಧಿಗಳ ನ್ಯಾಯಾಲಯದ ಗಮನಕ್ಕೆ ತಂದರು.
5
+ ಈ ವೇಳೆ ನ್ಯಾಯಾಧೀಶರು ಕಾನೂನು ಪ್ರಕ್ರಿಯೆಯನ್ನು ಹೊಸದಾಗಿ ಜಾರಿಯಾಗಿರುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌‍ಎಸ್‌‍) ಅಡಿ ಅಥವಾ ಈ ಮೊದಲು ಜಾರಿಯಲ್ಲಿದ್ದ ಕೋಡ್‌ ಆಫ್‌ ಕ್ರಿಮಿನಲ್‌ ಪ್ರೊಸಿಸರ್‌(ಸಿಆರ್‌ಪಿಸಿ) ಅಡಿ ಮುಂದುವರೆಸಬೇಕೆ ಎಂಬ ಪ್ರಶ್ನೆಯನ್ನು ಮುಂದಿಟ್ಟರು.
6
+ ಅರ್ಜಿದಾರರ ಪರ ವಕೀಲರು, ಹೊಸದಾಗಿ ಜಾರಿಯಾಗಿರುವ ಬಿಎನ್‌ಎಸ್‌‍ಎಸ್‌‍ ಅಡಿಯೇ ಕಾನೂನು ಪ್ರಕ್ರಿಯೆಗಳಿಗೆ ಆದೇಶ ನೀಡಬೇಕೆಂದು ಮನವಿ ಮಾಡಿದರು.ಒಂದು ವೇಳೆ ವಿಚಾರಣೆ ವೇಳೆ ಕಾನೂನಿನ ಸಂಘರ್ಷ ಎದುರಾದರೆ ಪದ್ಧತಿಯನ್ನು ಬದಲಾವಣೆ ಮಾಡಿಕೊಳ್ಳಲು ಅವಕಾಶವಿದೆ.
7
+ ಸದ್ಯಕ್ಕೆ ಬಿಎನ್‌ಎಸ್‌‍ಎಸ್‌‍ ಅಡಿಯೇ ಕಾನೂನು ಪ್ರಕ್ರಿಯೆಗಳಿಗೆ ಸೂಚನೆ ನೀಡಬೇಕು ಎಂದು ಸಲಹೆ ನೀಡಿದರು. ಈ ವೇಳೆ ನ್ಯಾಯಾಧೀಶರು ಕಲಾಪವನ್ನು ಕೆಲಕಾಲ ಮುಂದೂಡಿದರು. ನಂತರ ನ್ಯಾಯಾಲಯದ ಕಲಾಪ ಮರು ಸಮಾವೇಶಗೊಂಡಾಗ ನ್ಯಾಯಾಧೀಶರು ತಮ ತೀರ್ಪನ್ನು ಪ್ರಕಟಿಸಿದರು.
8
+ ಕಾನೂನು ಪ್ರಕ್ರಿಯೆ ಜಿಜ್ಞಾಸೆ :ಮುಡಾ ನಿವೇಶನ ಹಂಚಿಕೆ ಪ್ರಕರಣ 2004 ರಿಂದಲೂ ಆರಂಭಗೊಳ್ಳಲಿದೆ. ಬಿಎನ್‌ಎಸ್‌‍ಎಸ್‌‍ 2024 ರ ಜುಲೈ 1 ರಿಂದ ಅನುಷ್ಠಾನಕ್ಕೆ ಬಂದಿದ್ದು, ಅನಂತರ ಘಟಿಸಿದ ಅಪರಾಧಗಳನ್ನು ಹೊಸ ಪದ್ಧತಿಯಡಿ ವಿಚಾರಣೆ ನಡೆಸಬೇಕಾಗುತ್ತದೆ. ಹಳೆಯ ಪ್ರಕರಣ ಆಗಿರುವುದರಿಂದ ಸಿಆರ್‌ಪಿಸಿಯನ್ನೇ ಪಾಲನೆ ಮಾಡಬೇಕು ಎಂಬ ವಾದಗಳು ಇವೆ.
9
+ ಮುಖ್ಯಮಂತ್ರಿ ವಿರುದ್ಧ ಅಭಿಯೋಜನೆಗೆ ಪೂರ್ವಾನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದ ದೂರುದಾರರಾದ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್‌ ಕುಮಾರ್‌ ಅವರನ್ನು ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆಕ್ಷನ್‌ 17 ಎ ಮತ್ತು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌‍) ಕಾಯಿದೆ ಸೆಕ್ಷನ್‌ 218 ರ ಅಡಿ ತನಿಖೆ ಹಾಗೂ ಅಭಿಯೋಜನೆಗೆ ಅನುಮತಿ ನೀಡುವಂತೆ ಮನವಿ ಮಾಡಿದರು.
10
+ ರಾಜ್ಯಪಾಲರು ಪೂರ್ವಾನುಮತಿಯನ್ನು ನೀಡಿದರು. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದಾಗ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಭ್ರಷ್ಟಾಚಾರ ನಿಗ್ರಹ ಕಾಯಿದೆ 17 ಎ ಅಡಿ ತನಿಖೆಗೆ ರಾಜ್ಯಪಾಲರು ಪೂರ್ವಾನುಮತಿ ನೀಡಿರುವುದನ್ನು ಎತ್ತಿಹಿಡಿದಿತ್ತು. ಬಿಎನ್‌ಎಸ್‌‍ 218ರ ಅಡಿ ನೀಡಿದ್ದ ಅನುಮತಿಯನ್ನು ರದ್ದುಗೊಳಿಸಿದರು.ಇಂದು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹೈಕೋರ್ಟ್‌ ತೀರ್ಪಿನ ದೃಢೀಕೃತ ಪ್ರತಿಯನ್ನು ಸಲ್ಲಿಸಲಾಯಿತು. ವಿಚಾರಣೆ ಹಂತದಲ್ಲಿ ಅನುಸರಿಸಬೇಕಾದ ಕಾನೂನು ಪ್ರಕ್ರಿಯೆಗಳ ಬಗ್ಗೆ ಜಿಜ್ಞಾಸೆ ವ್ಯಕ್ತವಾಗಿತ್ತು. ಅದಕ್ಕೆ ಸ್ಪಷ್ಟನೆ ಸಿಕ್ಕ ಬಳಿಕ ಜನಪ್ರತಿನಿಧಿಗಳ ನ್ಯಾಯಾಲಯ ತನ್ನ ತೀರ್ಪನ್ನು ಪ್ರಕಟಿಸಿದೆ.
11
+ ಇದರಿಂದಾಗಿ ಸಿದ್ದರಾಮಯ್ಯನವರಿಗೆ ಮತ್ತಷ್ಟು ಸಂಕಷ್ಟಗಳು ಎದುರಾಗಿವೆ. ಹೈಕೋರ್ಟ್‌ ನಿನ್ನೆ ನೀಡಿದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‌ನ ದ್ವಿಸದಸ್ಯ ಪೀಠಕ್ಕೆ ಮೇಲನವಿ ಸಲ್ಲಿಸಲು ಮುಖ್ಯಮಂತ್ರಿಯವರ ಕಾನೂನು ತಂಡ ತಯಾರಿ ನಡೆಸಿತು.ಹೈಕೋರ್ಟ್‌ ಅಥವಾ ಸುಪ್ರೀಂಕೋರ್ಟ್‌ನಲ್ಲಿ ಕಾನೂನು ಹೋರಾಟವನ್ನು ಮುಂದುವರೆಸಬೇಕೇ ಎಂಬ ಬಗ್ಗೆ ಚರ್ಚೆಗಳು ನಡೆದಿದ್ದವು. ಇದರ ನಡುವೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ಮತ್ತೊಂದು ಸಂಕಷ್ಟವನ್ನು ತಂದೊಡ್ಡಿದೆ.
eesanje/url_46_10_9.txt ADDED
@@ -0,0 +1,8 @@
 
 
 
 
 
 
 
 
 
1
+ ಸಿದ್ದರಾಮಯ್ಯ ಹಳೆಯ ವಿಡಿಯೋ ವೈರಲ್, ನೆಟ್ಟಿಗರಿಂದ ಸಿಎಂಗೆ ‘ನೈತಿಕತೆ’ ಪ್ರಶ್ನೆ
2
+ ' , ''
3
+ ಬೆಂಗಳೂರು,ಸೆ.25-ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ವಿರುದ್ಧ ರಾಜೀನಾಮೆಗೆ ಒತ್ತಾಯಿಸಿ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ ಮಾತು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ಲಾಗಿದೆ.
4
+ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಎಫ್‌ಐಆರ್‌ ರದ್ದುಪಡಿಸುವುದಿಲ್ಲ ಎಂದು ಆದೇಶ ನೀಡಿತ್ತು. ಅಂದು ಪ್ರತಿಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯನವರು, ಯಡಿಯೂರಪ್ಪ ಮುಖ್ಯಮಂತ್ರಿಯಾಗಿರುವುದರಿಂದ ತನಿಖೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ.
5
+ ಮುಕ್ತ ಮತ್ತು ನಿಕ್ಷಪಾತ ತನಿಖೆ ನಡೆಯಬೇಕಾದರೆ, ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದರು. ಅಲ್ಲದೆ ಯಾವ ನೈತಿಕತೆ ಮೇಲೆ ಯಡಿಯೂರಪ್ಪ ಅಧಿಕಾರದಲ್ಲಿ ಮುಂದುವರೆಯುತ್ತಾರೆ. ಅವರು ನೈತಿಕತೆ ಇದ್ದರೆ ಮೊದಲು ರಾಜೀನಾಮೆ ಕೊಡಲಿ.
6
+ ಮುಖ್ಯಮಂತ್ರಿಯಾಗಿ ಅವರನ್ನು ತನಿಖಾಧಿಕಾರಿಗಳು ಹೇಗೆ ವಿಚಾರಣೆಗೊಳಪಡಿಸುತ್ತಾರೆ. ನಿಷ್ಪಕ್ಷಪಾತ ತನಿಖೆ ನಡೆಯಲು ಸಾಧ್ಯವೇ ಎಂದು ಪ್ರಶ್ನಿಸಿದ್ದರು. ಈಗ ಸಿದ್ದರಾಮಯ್ಯನವರು ಆಡಿದ್ದ ಮಾತು ಸಾಮಾಜಿಕ ಜಾಲತಾಣದಲ್ಲಿ ವೈರಲ್ಲಾಗುತ್ತಿದ್ದು, ಸಿದ್ದರಾಮಯ್ಯನವರೇ ನೀವು ರಾಜೀನಾಮೆ ಕೊಡುವುದು ಯಾವಾಗ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.
7
+ ಇನ್ನೊಬ್ಬರ ನೈತಿಕತೆ ಬಗ್ಗೆ ಮಾತನಾಡುವ ನೀವು ಮೊದಲು ನಿಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮಾತನಾಡಿ. ಹೈಕೋರ್ಟ್‌ ನಿಮ ಅರ್ಜಿಯನ್ನು ವಜಾಗೊಳಿಸಿ ತನಿಖೆ ನಡೆಯಬೇಕೆಂದು ಹೇಳಿದೆ. ನೀವು ಅಧಿಕಾರದಲ್ಲಿದ್ದರೆ ಮುಕ್ತ ಮತ್ತು ನ್ಯಾಯಸಮತ ತನಿಖೆ ಸಾಧ್ಯವೇ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
8
+ ಲೋಕಾಯುಕ್ತ ಸ್ವಾಯತ್ತ ಸಂಸ್ಥೆ ಎಂದು ಹೇಳಿದರೂ ಅಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಸರ್ಕಾರದ ಅಣತಿ ಮೇರೆಗೆ ಕೆಲಸ ಮಾಡುತ್ತಾರೆ. ನೀವು ತನಿಖಾಧಿಕಾರಿಗಳ ಮೇಲೆ ಪ್ರಭಾವ ಬೀರುವುದಿಲ್ಲ ಎಂಬುದಕ್ಕೆ ಗ್ಯಾರಂಟಿಯಾದರೂ ಏನು? ಅಂದು ಯಡಿಯೂರಪ್ಪ ಅವರ ನೈತಿಕತೆ ಪ್ರಶ್ನಿಸಿದ ನಿಮಗೆ ಅದೇ ನೈತಿಕತೆ ಅನ್ವಯವಾಗುವುದಿಲ್ಲವೇ? ಎಂಬುದು ಅನೇಕರ ಪ್ರಶ್ನೆಯಾಗಿದೆ.
eesanje/url_46_110_1.txt ADDED
@@ -0,0 +1,6 @@
 
 
 
 
 
 
 
1
+ ರಕ್ತದಾನ ಕುರಿತು ಜಾಗೃತಿ ಜಾಥಾಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಚಾಲನೆ
2
+ ಬೆಂಗಳೂರು, ಜೂ.14-ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ನಗರದಲ್ಲಿ ಇಂದು ವಿಧಾನ ಸೌಧದಿಂದ ಕಂಠೀರವ ಕ್ರೀಡಾಂಗಣದವರೆಗೆ ರಕ್ತದಾನದ ಕುರಿತು ಜಾಗೃತಿ ಜಾಥಾಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಚಾಲನೆ ನೀಡಿದರು.ಸಚಿವ ದಿನೇಶ್‌ ಗುಂಡೂರಾವ್‌ ಮಾತನಾಡಿ, ಒಬ್ಬರ ಜೀವ ಉಳಿಸಲು ವೈದ್ಯರೇ ಆಗಬೇಕಿಲ್ಲ. ರಕ್ತದಾನ ಮಾಡುವ ಮೂಲಕವು ಒಬ್ಬರ ಜೀವ ಉಳಿಸಬಹುದು. ರಕ್ತದಾನ ಮಾಡುವ ಮೂಲಕ ಹಲವರ ಜೀವನದಲ್ಲಿ ಬದಲಾವಣೆ ತರಬಹುದು ಎಂದು ಹೇಳಿದರು.
3
+ ದೇಶದಲ್ಲಿ ರಕ್ತಕ್ಕಿರುವ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ರಕ್ತದಾನಕ್ಕೆ ನಾವೆಲ್ಲರೂ ಮುಂದಾಗಬೇಕಿದೆ. ಹೆಚ್ಚು ರಕ್ತದಾನದ ಅಗತ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.ರಕ್ತದಾನದ ಕುರಿತು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವತ್ತ ಆರೋಗ್ಯ ಇಲಾಖೆ ಹಾಗೂ ಕರ್ನಾಟಕ ಸ್ಟೇಟ್‌ ಏಡ್ಸ್ ಪ್ರಿವೆನ್ಷನ್‌ ಸೊಸೈಟಿ ಅವರು ಹಮಿಕೊಂಡಿದ್ದ ಈ ರೀತಿಯ ಜಾಥಾ ಕಾರ್ಯಕ್ರಮಗಳು ಉತ್ತಮವಾದವು ಎಂದರು.
4
+ ಮಾನವನ ರಕ್ತದ ಪ್ರತಿಯೊಂದು ಹನಿಯೂ ಅಮೃತಕ್ಕೆ ಸಮಾನ. ರಕ್ತದಾನ ಮಾಡುವ ನಮ್ಮ ಒಂದು ಜವಾಬ್ದಾರಿಯುತ ನಡೆ ಮತ್ತೊಬ್ಬರ ಬಾಳಿನಲ್ಲಿ ಅತೀದೊಡ್ಡ ಬದಲಾವಣೆಗೆ ಕಾರಣವಾಗಲಿದೆ. ಈ ನಿಟ್ಟಿನಲ್ಲಿ ಇಂದು ವಿಶ್ವ ರಕ್ತದಾನಿಗಳ ದಿನಾಚರಣೆಯ ಪ್ರಯುಕ್ತ ರಕ್ತದಾನ ಕುರಿತು ಜಾಗೃತಿ ಮೂಡಿಸಲು ಹೈಕೋರ್ಟ್‌ ನ ಮುಂಭಾಗದಿಂದ ಕಂಠೀರಬವ ಕ್ರೀಡಾಂಗಣದವರೆಗೆ ವಾಕಾಥಾನ್…../jMdgiD1Mwg
5
+ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಪ್ರತಿ ವರ್ಷ ಜೂನ್‌ 14ರಂದು ಜಗತ್ತಿನಾದ್ಯಂತ 2004 ರಿಂದ ಆಚರಿಸಿಕೊಂಡು ಬರಲಾಗಿತ್ತಿದೆ. ಪ್ರತಿವರ್ಷದಂತೆ ಈ ವರ್ಷವೂ ಸಹ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಜಾಥಾದ ಮೂಲಕ ಆಚರಿಸಿ, ಸಾರ್ವಜನಿಕರಲ್ಲಿ ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಯಿತು.
6
+ ರಕ್ತವನ್ನು ಸಕಾಲದಲ್ಲಿ ಪೂರೈಕೆ ಮಾಡುವ ಮುಖಾಂತರ ಜೀವಗಳನ್ನು ಉಳಿಸಬಹುದು. ಈ ನಿಟ್ಟಿನಲ್ಲಿ ಯಾವುದೇ ಪ್ರತಿಲಾಪೇಕ್ಷೆ ಇಲ್ಲದೇ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ದಾನಿಗಳನ್ನು ಗೌರವಿಸಿ ಇತರರನ್ನು ರಕ್ತದಾನ ಮಾಡುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಇಂದು ಆರೋಗ್ಯ ಇಲಾಖೆ ಹಾಗೂ ಕೆಎಸ್‌‍ಎಪಿಎಸ್‌‍ ಸಂಸ್ಥೆಯಿಂದ ಜಾಥಾ ಹಮಿಕೊಳ್ಳಲಾಗಿತ್ತು.ಜಾಥಾದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಸ್ವಯಂ ಸೇವಕರು ರಕ್ತದಾನ ಮಾಡುವ ಕುರಿತು ಪ್ರತಿಜ್ಞೆ ಸ್ವೀಕರಿದರು.
eesanje/url_46_110_10.txt ADDED
@@ -0,0 +1,5 @@
 
 
 
 
 
 
1
+ ಚುನಾವಣೆ ಸೋಲು ಅರಗಿಸಿಕೊಳ್ಳಲಾಗದೆ ಯಡಿಯೂರಪ್ಪನವರ ವೈಷಮ್ಯ ಸಾಧಿಸಲಾಗುತ್ತಿದೆ : ಜೋಶಿ
2
+ ಹುಬ್ಬಳ್ಳಿ, ಜೂ.14-ರಾಜ್ಯದಲ್ಲಿ ಕಾಂಗ್ರೆಸ್‌‍ಗೆ ಲೋಕಸಭೆ ಚುನಾವಣೆ ಸೋಲನ್ನು ಅರಗಿಸಿಕೊಳ್ಳಲಾಗಿಲ್ಲ. ಹೀಗಾಗಿ ಮಾಜಿ ಸಿಎಂ ಬಿ.ಎಸ್‌‍.ಯಡಿಯೂರಪ್ಪ ಅವರ ಮೇಲೆ ರಾಜಕೀಯ ವೈಷಮ್ಯ ತೋರುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಸರ್ಕಾರದ ವಿರುದ್ಧ ಆಕೋಶ ವ್ಯಕ್ತಪಡಿಸಿದ್ದಾರೆ.
3
+ ರಾಜ್ಯ ಕಾಂಗ್ರೆಸ್‌‍ ಸರ್ಕಾರ ತನ್ನ ದುರಾಡಳಿತ ಮರೆಮಾಚಲು ಮಾಜಿ ಸಿಎಂ, 81 ವರ್ಷದ ಬಿ.ಎಸ್‌‍.ಯಡಿಯೂರಪ್ಪ ಅವರ ಮೇಲೆ ಇಲ್ಲಸಲ್ಲದ ಪ್ರಕರಣ ದಾಖಲಿಸಿ ಷಡ್ಯಂತ್ರ ನಡೆಸುತ್ತಿದೆ ಎಂದು ಸಚಿವ ಜೋಶಿ ಹರಿ ಹಾಯ್ದಿದ್ದಾರೆ.ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಸೋಲುಂಡ ಕಾಂಗ್ರೆಸ್‌‍ ಅದನ್ನು ಜೀರ್ಣಿಸಿಕೊಳ್ಳಲಾಗದೆ ಆಡಳಿತವನ್ನು ಮನಬಂದಂತೆ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
4
+ ಮೂರ್ನಾಲ್ಕು ತಿಂಗಳ ಹಿಂದೆ ಮಾಜಿ ಸಿಎಂ ಬಿ.ಎಸ್‌‍.ವೈ ವಿರುದ್ಧ ಪೋಸ್ಕೋ ಪ್ರಕರಣ ದಾಖಲಿಸಿದ ಮಹಿಳೆ ಮಾನಸಿಕ ಅಸ್ವಸ್ಥಳು, ದುರುದ್ದೇಶದಿಂದ ದೂರು ನೀಡಿದ್ದಾಳೆ ಎಂದು ಆಗಲೇ ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ. ಆದರೆ ಈಗ ಚುನಾವಣೆ ಮುಗಿದ ಮೇಲೆ ರಾಜ್ಯ ಕಾಂಗ್ರೆಸ್‌‍ ನಾಯಕರು ಹೊಸ ಡ್ರಾಮಾ ಶುರು ಮಾಡಿದ್ದಾರೆ ಎಂದು ಜೋಶಿ ಖಂಡಿಸಿದ್ದಾರೆ.
5
+ ಆ ಮಹಿಳೆ ಈಗಾಗಲೇ ಐಎಎಸ್‌‍, ಐಪಿಎಸ್‌‍ ಅಧಿಕಾರಿಗಳು ಸೇರಿದಂತೆ ರಾಜಕಾರಣಿಗಳ ಮೇಲೆ 60ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾಳೆ ಎಂದೂ ಗೃಹಮಂತ್ರಿಗಳೇ ಖುದ್ದಾಗಿ ಈ ಹಿಂದೆ ಹೇಳಿದ್ದರು. ಈಗ ತಮ ದುರಾಡಳಿತವನ್ನು ಮರೆಮಾಚಲು ಬಿಜೆಪಿ ವರಿಷ್ಠ ಬಿಎಸ್‌‍ವೈ ಅವರನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದು ಸಚಿವರು ಟ್ವೀಟ್‌ ಮೂಲಕ ತೀವ್ರ ಆಕೋಶ ಹೊರ ಹಾಕಿದ್ದಾರೆ.ಇಲ್ಲ ಸಲ್ಲದ ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಎಳೆಯುತ್ತಿರುವುದು ರಾಜಕೀಯ ವೈಷಮ್ಯ ಸರಿ. ಅವರ ಈ ದುರ್ಬುದ್ಧಿಗೆ ತಕ್ಕ ಪಾಠ ಕಲಿಯಲಿದ್ದಾರೆ ಎಂದು ಎಚ್ಚರಿಸಿದ್ದಾರೆ.
eesanje/url_46_110_11.txt ADDED
@@ -0,0 +1,6 @@
 
 
 
 
 
 
 
1
+ ಚುನಾವಣಾ ಸೋಲಿನ ಹತಾಶೆಯಿಂದ ಬಿಎಸ್‌‍ವೈ ವಿರುದ್ಧ ಷಡ್ಯಂತ್ರ : ಬಿಜೆಪಿ
2
+ ಬೆಂಗಳೂರು, ಜೂ.14-ಚುನಾವಣೆಯ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್‌‍ ನಾಯಕರು ಬಿಜೆಪಿ ವಿರುದ್ಧ ಒಂದಿಲ್ಲೊಂದು ಷಡ್ಯಂತ್ರ ರೂಪಿಸುವಲ್ಲಿ ತಲ್ಲೀನರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.
3
+ ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಬಿಜೆಪಿ, ತಮ ಪಕ್ಷದ ವಿರುದ್ಧ ಅಪಪ್ರಚಾರ ಮಾಡಿದ್ದ ರಾಹುಲ್‌ ಗಾಂಧಿ ಅವರನ್ನು ಕೋರ್ಟ್‌ ಮೆಟ್ಟಿಲು ಹತ್ತಿಸಿದ್ದಕ್ಕಾಗಿ ದ್ವೇಷ ರಾಜಕಾರಣ ಮಾಡಲು ಹೊರಟಿರುವ ಕಾಂಗ್ರೆಸ್‌‍ ಸರ್ಕಾರ ಮಾನಸಿಕ ಅಸ್ವಸ್ಥೆ ನೀಡಿದ್ದ ದೂರನ್ನು ಆಧರಿಸಿ ರೈತ ನಾಯಕ ಮಾನ್ಯ ಬಿ.ಎಸ್‌‍.ಯಡಿಯೂರಪ್ಪ ಅವರನ್ನು ಬಂಧಿಸಲು ಹವಣಿಸುತ್ತಿದೆ ಎಂದು ದೂರಿದೆ.
4
+ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಲ್ಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ತಲೆದಂಡ ಹಾಗೂ ಸ್ವತಃ ಸರ್ಕಾರದ ಮೇಲೆ ಆರೋಪ ಬಂದಿರುವ ಬೆನ್ನಲ್ಲೇ ಭ್ರಷ್ಟಾಚಾರ ಪ್ರಕರಣದ ದಿಕ್ಕು ತಪ್ಪಿಸುವ ಉದ್ದೇಶದಿಂದ ಯಡಿಯೂರಪ್ಪನವರ ಮೇಲೆ ಅಪಪ್ರಚಾರದ ಷಡ್ಯಂತ್ರ ರೂಪಿಸಿದ್ದಾರೆ.
5
+ ಈ ಹಿಂದೆ ಸ್ವತಃ ಗೃಹ ಸಚಿವ ಡಾ. ಪರಮೇಶ್ವರ್‌ ಅವರೇ ಮಾನಸಿಕ ಅಸ್ವಸ್ಥೆ ದುರುದ್ದೇಶಪೂರಿತವಾಗಿ ದೂರು ನೀಡಿದ್ದಾಳೆಂದು ಹೇಳಿಕೆ ನೀಡಿ ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂಬುದು ಜಗಜ್ಜಾಹೀರಾಗಿತ್ತು. 3 ತಿಂಗಳ ನಂತರ ಈ ಪ್ರಕರಣಕ್ಕೆ ಮರುಜೀವ ತುಂಬಲು ಹೊರಟಿರುವುದು ವಿಪರ್ಯಾಸ.
6
+ ಮಾನಸಿಕ ಅಸ್ವಸ್ಥೆ ಸ್ವತಃ ತನ್ನ ಮಕ್ಕಳು ಹಾಗೂ ಗಂಡನ ವಿರುದ್ಧವೇ ದೂರು ನೀಡಿರುವುದೂ ಸೇರಿದಂತೆ 53 ಜನರ ವಿರುದ್ಧದ ದೂರುಗಳಲ್ಲಿ ಯಡಿಯೂರಪ್ಪನವರ ಪ್ರಕರಣಕ್ಕೇ ಸರ್ಕಾರ ವಿಶೇಷ ಒತ್ತು ನೀಡಿದ್ದು ಏಕೆ? ಪ್ರಕರಣ ದಾಖಲಾಗಿ 3 ತಿಂಗಳಾದ ಮೇಲೆ ದಿಢೀರ್‌ ಬಂಧನ ಮಾಡುವ ಸಂಚು ರೂಪಿಸಿದ್ದು ಏಕೆ? ಎಂದು ಬಿಜೆಪಿ ಪ್ರಶ್ನಿಸಿದೆ. ಕಾಂಗ್ರೆಸ್ಸಿನ ದೆಹಲಿ ನಾಯಕರ ನೀಚ ದ್ವೇಷ ರಾಜಕಾರಣಕ್ಕೆ ಕಟ್ಟುಬಿದ್ದು ಯಡಿಯೂರಪ್ಪನವರನ್ನು ಕೆಣಕಲು ಹೋದರೆ ಕರ್ನಾಟಕದಲ್ಲಿ ಕಾಂಗ್ರೆಸ್‌‍ ನಿರ್ನಾಮವಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಬಿಜೆಪಿ ಕಿಡಿ ಕಾರಿದೆ.
eesanje/url_46_110_12.txt ADDED
@@ -0,0 +1,4 @@
 
 
 
 
 
1
+ ಹುಬ್ಬಳ್ಳಿ-ರಾಮೇಶ್ವರಂ ರೈಲು ಸಂಚಾರ ಸೌಲಭ್ಯ ವಿಸ್ತರಣೆ
2
+ ಹುಬ್ಬಳಿ,ಜೂ.14-ನೈರುತ್ಯ ರೈಲ್ವೆಯು ವಿವಿಧ ವಿಶೇಷ ರೈಲುಗಳ ಸಂಚಾರ ಸೌಲಭ್ಯ ವಿಸ್ತರಣೆ ಮಾಡಲು ನಿರ್ಧರಿಸಿದ್ದು, ಹುಬ್ಬಳ್ಳಿ-ರಾಮೇಶ್ವರಂ (07355) ವಿಶೇಷ ರೈಲು ಸಂಚಾರವನ್ನು ಜು.6 ರಿಂದ ಡಿ.28 ರವರೆಗೆ, ರಾಮೇಶ್ವರಂ-ಹುಬ್ಬಳ್ಳಿ (07356) ರೈಲು ಸಂಚಾರವನ್ನು ಜು.1ರಿಂದ ಡಿ.31ರವರೆಗೆ ವಿಸ್ತರಿಸಿದೆ.
3
+ ಹುಬ್ಬಳ್ಳಿ-ಕೆಸಿಆರ್‌ ಬೆಂಗಳೂರು (07339) ರೈಲು ಸಂಚಾರವನ್ನು ಜು. 1ರಿಂದ ಡಿ.31ರವರೆಗೆ, ಕೆಸಿಆರ್‌ ಬೆಂಗಳೂರು-ಹುಬ್ಬಳ್ಳಿ (07340) ರೈಲು ಸಂಚಾರವನ್ನು ಜು. 2ರಿಂದ 2025ರ ಜ.1ರವರೆಗೆ ವಿಸ್ತರಿಸಲಾಗಿದೆ. ಹುಬ್ಬಳ್ಳಿ-ಡಾ.ಎಂ.ಜಿ.ಆರ್‌. ಚೆನ್ನೈ ಸೆಂಟ್ರಲ್‌‍-ಹುಬ್ಬಳ್ಳಿ (22697/22698) ಸಾಪ್ತಾಹಿಕ ರೈಲು ಯಶವಂತಪುರ ನಿಲ್ದಾಣದ ಬದಲು, ಯಶವಂತಪುರ ಬೈಪಾಸ್‌‍ ಮೂಲಕ ಸಂಚರಿಸಲಿದೆ.
4
+ ಸೆ. 7ರಿಂದ ಹುಬ್ಬಳ್ಳಿ- ಡಾ.ಎಂ.ಜಿ.ಆರ್‌. ಚೆನ್ನೈ ಸೆಂಟ್ರಲ್‌ (22697) ರೈಲು, ಸೆ.8ರಿಂದ ಡಾ.ಎಂ.ಜಿ.ಆರ್‌. ಚೆನ್ನೈ ಸೆಂಟ್ರಲ್‌‍-ಹುಬ್ಬಳ್ಳಿ (22698) ರೈಲು ಬದಲಿ ಮಾರ್ಗದಲ್ಲಿ ಸಂಚರಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.
eesanje/url_46_110_2.txt ADDED
@@ -0,0 +1,8 @@
 
 
 
 
 
 
 
 
 
1
+ ಬಿಜೆಪಿಯವರು ನಮ್ಮ ಮೇಲೆ ಕೇಸು ಹಾಕಿ ದ್ವೇಷ ರಾಜಕಾರಣ ಮಾಡಿದ್ದರು : ಡಿಕೆಶಿ
2
+ ಬೆಂಗಳೂರು, ಜೂ.14-ಕಾಂಗ್ರೆಸ್‌‍ ಯಾರ ವಿರುದ್ಧವೂ ದ್ವೇಷ ರಾಜಕಾರಣ ಮಾಡುವುದಿಲ್ಲ. ಬಿಜೆಪಿಯವರು ನಮ್ಮ ಮೇಲೆ ಕೇಸು ಹಾಕಿಸಿ ಕೋರ್ಟಿಗೆ ಹೋಗುವಂತೆ ಮಾಡಿದ್ದು ದ್ವೇಷ ರಾಜಕಾರಣವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.
3
+ ಬಿಬಿಎಂಪಿ ವತಿಯಿಂದ ಕಬ್ಬನ್‌ಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದ್ವೇಷ ರಾಜಕಾರಣದ ಬಗ್ಗೆ ನಾನು ಮಾತನಾಡಲು ಆರಂಭಿಸಿದರೆ ಅದು ಎಲ್ಲೆಲ್ಲಿಗೋ ಹೋಗುತ್ತದೆ. ನನಗೆ ಅದರ ನೋವು ಗೊತ್ತು. ನಾನು ಅನುಭವಿಸಿದ್ದೇನೆ ಎಂದು ಹೇಳಿದರು.
4
+ ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ. ಹಿಂದಿನ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜಾಹೀರಾತು ನೀಡಿದ್ದು, ನಮ ಮೇಲೆ ಕೇಸು ದಾಖಲಿಸಲಿ, ಅದನ್ನು ಎದುರಿಸುತ್ತೇವೆ. ಆದರೆ ರಾಹುಲ್‌ಗಾಂಧಿಯವರನ್ನು ಮಧ್ಯಕ್ಕೆ ತರಲು ಅವರೇನು ಕೆಪಿಸಿಸಿ ಅಥವಾ ಎಐಸಿಸಿ ಅಧ್ಯಕ್ಷರಾಗಿದ್ದರೇ? ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಕಾಮನ್‌ಸೆನ್‌್ಸ ಇರಲಿಲ್ಲವೇ? ಅವರ ಪಕ್ಷದ ಎಂಎಲ್‌ಸಿ ಮೂಲಕ ಕೇಸು ಹಾಕಿಸಿದ್ದೇಕೆ? ಎಂದು ಪ್ರಶ್ನಿಸಿದರು.
5
+ ಕಾಂಗ್ರೆಸ್‌‍ನವರು ದ್ವೇಷ ರಾಜಕಾರಣ ಮಾಡುವುದಿಲ್ಲ. ರಾಹುಲ್‌ಗಾಂಧಿಯವರಿಗೆ ಅವರದ್ದೇ ಆದ ತೊಂದರೆಗಳಿವೆ. ಯಡಿಯೂರಪ್ಪ ಅವರ ಪ್ರಕರಣದಲ್ಲಿ ಮೂಗು ತೂರಿಸುವ ಅಗತ್ಯ ಅವರಿಗಿಲ್ಲ . ಕಾಂಗ್ರೆಸ್‌‍ನವರು ದ್ವೇಷ ಸಾಧಿಸಲು ನೀಚ ರಾಜಕಾರಣ ಮಾಡುವುದಿಲ್ಲ ಎಂದರು.2028ಕ್ಕೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷವನ್ನು ಮರಳಿ ಅಧಿಕಾರಕ್ಕೆ ತಂದೇ ತರುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಎಲ್ಲಾ ಸದಸ್ಯರು ಇದಕ್ಕಾಗಿ ಹಗಲು-ರಾತ್ರಿ ಕೆಲಸ ಮಾಡುತ್ತೇವೆ ಎಂದರು.
6
+ ನಾವು ವಿಶ್ವಮಾನವರಾಗಲು ಸಮಾಜದ ಅಭಿಪ್ರಾಯ ಮುಖ್ಯ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷಕ್ಕೆ ಹಿನ್ನಡೆಯಾಗಿರುವುದು ಹಾಗೂ ಮತದಾನ ಏಕೆ ಈ ರೀತಿ ಆಗಿದೆ ಎಂಬುದರ ಕುರಿತು ನಿನ್ನೆ ರಾತ್ರಿ ಒಕ್ಕಲಿಗ ಮುಖಂಡರ ಸಭೆಯಲ್ಲಿ ದೊಡ್ಡ ಚರ್ಚೆಯಾಗಿದೆ ಎಂದು ಹೇಳಿದರು.
7
+ ಕಾಂಗ್ರೆಸ್‌‍ ಪಕ್ಷ ಸೋತಿದೆ. ಸೋಲನ್ನು ಒಪ್ಪಿಕೊಳ್ಳುತ್ತೇವೆ. ರಾಜಕಾರಣದಲ್ಲಿ ಸೋಲು-ಗೆಲುವು ಸಾಮಾನ್ಯ. ಚೆಲುವರಾಯಸ್ವಾಮಿ, ಬಾಲಕೃಷ್ಣ, ಬಂಡಿ ಸಿದ್ದನಗೌಡ ಸೇರಿದಂತೆ ಹಲವರು 50 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದರು. ಅದರ ನಂತರದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಇವೆಲ್ಲಾ ಸಾಮಾನ್ಯ. ಆರು ತಿಂಗಳಲ್ಲಿ ಪರಿಸ್ಥಿತಿ ಬದಲಾಗುತ್ತಿದೆ. ಜನರ ಭಾವನೆಗಳು, ಕೆಲಸ ಕಾರ್ಯಗಳು ಬದಲಾಗುತ್ತವೆ. ಯಾವುದೂ ಶಾಶ್ವತವಲ್ಲ ಎಂದರು.
8
+ ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಒಂದೇ ಸ್ಥಾನದಲ್ಲಿ ಗೆದ್ದಿತ್ತು. ಈಗ 9 ಸ್ಥಾನಗಳನ್ನು ಗೆದ್ದಿದ್ದೇವೆ. ಇನ್ನೂ ನಾಲ್ಕೈದು ಕ್ಷೇತ್ರಗಳಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಹಿನ್ನಡೆಯಾಗಿದೆ. ಕಾರ್ಯಕರ್ತರು ಚಿಂತೆ ಮಾಡುವ ಅಗತ್ಯವಿಲ್ಲ. ಮುಂದೆ ನಮ ಸರ್ಕಾರದ ಅಧಿಕಾರವೇ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
eesanje/url_46_110_3.txt ADDED
@@ -0,0 +1,7 @@
 
 
 
 
 
 
 
 
1
+ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5 ಸಾವಿರ ಕೋಟಿ ಬಳಕೆ : ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು, ಜೂ.14-ಕಲ್ಯಾಣ ಕರ್ನಾಟಕ ಭಾಗದಲ್ಲಿ 5 ಸಾವಿರ ಕೋಟಿ ರೂ.ಗಳ ವೆಚ್ಚದ ಯೋಜನೆಗಳನ್ನು ಜಾರಿ ಮಾಡಲು ಅನುವಾಗುವಂತೆ ಜು.15 ರೊಳಗೆ ಕ್ರಿಯಾಯೋಜನೆ ಸಿದ್ಧಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.ಗೃಹ ಕಚೇರಿ ಕೃಷ್ಣಾದಲ್ಲಿಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯ ಪ್ರಗತಿ ಪರಿಶೀಲನೆ ನಡೆಸಿದರು.
3
+ ಚುನಾವಣಾ ಪ್ರಣಾಳಿಕೆಯಲ್ಲಿ ಹಾಗೂ ಆಯವ್ಯಯದಲ್ಲಿ ವರ್ಷಕ್ಕೆ 5 ಸಾವಿರ ಕೋಟಿ ರೂ. ಒದಗಿಸುವ ಭರವಸೆ ನೀಡಲಾಗಿದೆ. ಈ ಮೊತ್ತವನ್ನು ವೆಚ್ಚ ಮಾಡಲು ಅನುವಾಗುವಂತೆ ಜು. 15 ರೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚಿಸಿದರು. ಈಗ ಅನುಮೋದನೆಯಾದ ಟೆಂಡರ್‌ ಕರೆಯದೆ ಇರುವ ಕಾಮಗಾರಿಗಳಿಗೆ ಕೂಡಲೇ ಟೆಂಡರ್‌ ಕರೆಯಬೇಕು, ಕಾಮಗಾರಿಗಳ ಮೌಲ್ಯಮಾಪನ ಮಾಡಬೇಕು ಎಂದು ಆದೇಶಿಸಿದರು.
4
+ ಒಟ್ಟು 14,228 ಕೋಟಿ ಅನುದಾನದಲ್ಲಿ 10,342.90 ಕೋಟಿ ವೆಚ್ಚವಾಗಿದೆ. 2885.90 ಕೋಟಿ ಉಳಿದಿದೆ. ಬಾಕಿ ಉಳಿದ ಕಾಮಗಾರಿಗಳ ಕುರಿತು ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಿ, ಅನುಷ್ಠಾನಕ್ಕೆ ಇರುವ ತೊಡಕುಗಳನ್ನು ನಿವಾರಿಸಬೇಕು, ಬಾಕಿ ಉಳಿದಿರುವ 3528 ಕಾಮಗಾರಿಗಳನ್ನು ಜುಲೈ ಅಂತ್ಯದೊಳಗೆ ಪ್ರಾರಂಭಿಸಬೇಕು ಎಂದು ಸೂಚಿಸಿದರು.
5
+ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಸೃಜನೆಗೆ ಹೆಚ್ಚು ಒತ್ತು ನೀಡಬೇಕು ಎಂದು ಸಲಹೆ ನೀಡಲಾಯಿತು.ಎರಡು ವರ್ಷಗಳನ್ನು ಶೈಕ್ಷಣಿಕ ವರ್ಷ ಎಂದು ಘೋಷಿಸಿ, ಶೇ.25 ರಷ್ಟು ಅನುದಾನ ವೆಚ್ಚ ಮಾಡಬೇಕು. ಆರೋಗ್ಯ ಕ್ಷೇತ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬೇಡಿಕೆ ಇದ್ದು, ಇದಕ್ಕೆ ಒತ್ತು ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ನಿಗದಿತ ಮಾನದಂಡಗಳಂತೆಯೇ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
6
+ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ 41 ಮಹಿಳಾ ಪದವಿ ಕಾಲೇಜು ಪ್ರಾರಂಭಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ. ಇದನ್ನು ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು. ಅರಣ್ಯೀಕರಕ್ಕೆ ಮತ್ತು ಶುದ್ಧ ಕುಡಿಯುವ ನೀರು, ಚೆಕ್‌ ಜಲಾಶಯಗಳಿಗೆ ಆದ್ಯತೆ ನೀಡುವ ಮೂಲಕ ಅಂತರ್ಜಲ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಂಡು, ಕಾರ್ಯಕ್ರಮಗಳನ್ನು ರೂಪಿಸುವಂತೆ ಸೂಚನೆ ನೀಡಿದರು.
7
+ ಸಭೆಯಲ್ಲಿ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ, ರಹೀಂ ಖಾನ್‌, ಈಶ್ವರ್‌ ಖಂಡ್ರೆ, ಜಮೀರ್‌ ಅಹಮದ್‌ ಖಾನ್‌, ಶರಣಬಸಪ್ಪ ದರ್ಶನಾಪೂರ, ಎನ್‌.ಎಸ್‌‍. ಭೋಸರಾಜು, ಶಿವರಾಜ್‌ ತಂಗಡಗಿ, ಡಿ.ಸುಧಾಕರ್‌, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಅಜಯ್‌ ಸಿಂಗ್‌, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
eesanje/url_46_110_4.txt ADDED
@@ -0,0 +1,9 @@
 
 
 
 
 
 
 
 
 
 
1
+ ಸುಧಾಕರ್‌ ನನ್ನ ಸವಾಲನ್ನು ಸ್ವೀಕರಿಸಿರಲಿಲ್ಲ, ನಾನು ರಾಜೀನಾಮೆ ಕೊಡಲ್ಲ : ಪ್ರದೀಪ್‌ ಈಶ್ವರ್‌
2
+ ಬೆಂಗಳೂರು, ಜೂ.14-ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್‌ ಗೆದ್ದರೆ ರಾಜೀನಾಮೆ ನೀಡುವುದಾಗಿ ನಾನು ಹಾಕಿದ್ದ ಸವಾಲನ್ನು ಪ್ರತಿಸ್ಪರ್ಧಿಗಳು ಸ್ವೀಕರಿಸಿರಲಿಲ್ಲ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನಿಡುವ ಅಗತ್ಯವಿಲ್ಲ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್‌ ಈಶ್ವರ್‌ ಸಮರ್ಥಿಸಿಕೊಂಡಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಸವಾಲನ್ನು ಅವರು ಸ್ವೀಕರಿಸಿದರೆ ಈಗಲೂ ನಾನು ರಾಜೀನಾಮೆ ನೀಡಲು ಸಿದ್ಧ. ಪ್ರಶ್ನೆಪತ್ರಿಕೆಯನ್ನೇ ಕೊಡದೆ ಉತ್ತರ ತಪ್ಪಾಗಿದೆ ಎಂದು ಆರೋಪ ಹಾಕುವುದು ಸರಿಯಲ್ಲ. ರಾಜಕೀಯದಲ್ಲಿ ಎಲ್ಲಾ ನಡೆಯುತ್ತಿರುತ್ತದೆ. ತಲೆ ಕೆಡಿಸಿಕೊಳ್ಳುವುದು ಬೇಡ ಎಂದು ಬಿಟ್ಟಾಕಿ ಎಂದು ಹೇಳಿದರು.
4
+ ಲೋಕಸಭಾ ಚುನಾವಣೆ ಅಖಾಡದಲ್ಲಿ ನಾನು ಇದ್ದಿದ್ದರೆ ಕಥೆಯೇ ಬೇರೆ ಇರುತ್ತಿತ್ತು. ಎಲ್ಲರೂ ಪ್ರದೀಪ್‌ ಈಶ್ವರ್‌ ಆಗಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಕಾರ್ಯಕರ್ತರೊಂದಿಗೆ ಮನೆಮನೆ ಸುತ್ತುತ್ತೇನೆ. ಪಕ್ಷ ಸಂಘಟನೆ ಮಾಡುತ್ತೇನೆ. ಇಲ್ಲಿ ವ್ಯಕ್ತಿ ಮುಖ್ಯ ಅಲ್ಲ, ಪಕ್ಷ ದೊಡ್ಡದು ಎಂದರು.
5
+ ಕಾಂಗ್ರೆಸ್‌‍ ಪಕ್ಷ ನನ್ನಂತಹ ಅಹಿಂದ ಹುಡುಗನಿಗೆ ಬೆನ್ನುಲುಬಾಗಿರುತ್ತದೆ. ಹೀಗಾಗಿ ಈ ಸಿದ್ಧಾಂತ ನನಗೆ ಇಷ್ಟ ಎಂದ ಅವರು, ಕಾಂಗ್ರೆಸ್‌‍ ಪಕ್ಷ ಚುನಾವಣೆ ಕಾರಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ತಂದಿರಲಿಲ್ಲ. ನಮ ಸರ್ಕಾರ ಅವುಗಳನ್ನು ನಿಲ್ಲಿಸುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.
6
+ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಮಗೆ ಸೋಲಾಗಿಲ್ಲ. ಬದಲಾಗಿ ಗೆಲುವು 5 ವರ್ಷ ಮುಂದೂಡಿಕೆಯಾಗಿದೆ. ಮುಂದಿನ ಅವಧಿಯಲ್ಲಿ ಮತ್ತೆ ನಾವು ಗೆಲ್ಲುತ್ತೇವೆ. ಫಲಿತಾಂಶ ಪ್ರಕಟಗೊಂಡ ಬಳಿಕ ನಮ ಮನೆಯ ಮೇಲೆ ಕಲ್ಲು ತೂರಿದ ಆರೋಪಿಗಳನ್ನು ಗುರುತಿಸಿ ನೋಟಿಸ್‌‍ ನೀಡಲಾಗಿದೆ. ಮೈಸೂರಿನ ಮೂವರು ಹುಡುಗರು ನಕಲಿ ರಾಜೀನಾಮೆ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವುದು ಪತ್ತೆಯಾಗಿದೆ. ಅವರ ಬಂಧನಕ್ಕೂ ಕಾರ್ಯಾಚರಣೆ ನಡೆಯುತ್ತದೆ ಎಂದು ಹೇಳಿದರು.
7
+ ಲೋಕಸಭಾ ಚುನಾವಣೆಯಲ್ಲಿ ಗೆದ್ದಿರುವ ಡಾ.ಕೆ.ಸುಧಾಕರ್‌ ದೆಹಲಿಯಲ್ಲಿ ಸಂಸದರಾಗಿ ನಾನು ಶಾಸಕನಾಗಿ ಬೆಂಗಳೂರಿನಲ್ಲಿ ಆರಾಮಾಗಿರುತ್ತೇವೆ. ನಮಗೆ ನಮ ಹೆಂಡತಿ, ಮಕ್ಕಳೇ ಮುಖ್ಯ. ಕಾರ್ಯಕರ್ತರು ತಮ ವಿಚಾರದಲ್ಲಿ ತಲೆಕೆಡಿಸಿಕೊಂಡು ಹೊಡೆದಾಡಬಾರದು. ಎಲ್ಲಾದರೂ ಸಿಕ್ಕರೆ ಜೊತೆಯಲ್ಲಿ ತಿಂಡಿ ತಿನ್ನೋಣ. ಅನಗತ್ಯವಾಗಿ ದ್ವೇಷ ಬೆಳೆಸಿಕೊಳ್ಳಬೇಡಿ ಎಂದು ಸಲಹೆ ನೀಡಿದರು.
8
+ ಕಳೆದ ಒಂದೂವರೆ ವರ್ಷದಿಂದಲೂ ನಾನು ಅತ್ಯಂತ ಸಹನೆಯಿಂದ ಇದ್ದೇನೆ. ನನ್ನ ಮನೆಯ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ, ನಾಲ್ಕೈದು ಕಡೆ ದಾಳಿಯಾಗಿದೆ. ಅದಕ್ಕೆಲ್ಲಾ ತಕ್ಷಣ ಪ್ರತಿಕ್ರಿಯಿಸಿದರೆ ನಮ ಕಾರ್ಯಕರ��ತರು ರೊಚ್ಚಿಗೇಳುತ್ತಾರೆ, ಕಾನೂನು ಸುವ್ಯವಸ್ಥೆಗೆ ತೊಡಗಕಾಗುತ್ತದೆ ಎಂಬ ವಿಷಯಕ್ಕೆ ಸುಮನಿದ್ದೇನೆ. ಕಾರ್ಯಕರ್ತರನ್ನು ಗುಂಪುಕಟ್ಟಿಕೊಂಡು ಸುದ್ದಿಗೋಷ್ಠಿ ಮಾಡಿ ನಾನು ಯಾರನ್ನೂ ಟೀಕಿಸುವಂತೆ ಮಾಡುವುದಿಲ್ಲ. ಏನೇ ಇದ್ದರೂ ನಾನು ಒಬ್ಬನೇ ಅಖಾಡಕ್ಕೆ ಇಳಿಯುತ್ತೇನೆ. ಎದುರಿಸುತ್ತೇನೆ ಎಂದು ಹೇಳಿದರು.
9
+ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ತಾವು ಖಂಡಿಸುತ್ತಿದ್ದು, ಯಾರೇ ತಪ್ಪು ಮಾಡಿದ್ದರೂ ತಕ್ಷ ಶಿಕ್ಷೆಯಾಗಬೇಕು. ಇದರಲ್ಲಿ ರಾಜಕೀಯ ಹಸ್ತಕ್ಷೇಪವಿಲ್ಲ. ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸುತ್ತಿದ್ದಾರೆ ಎಂದರು.
eesanje/url_46_110_5.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಕೇಂದ್ರ ಸಚಿವರಾದ ಮೇಲೆ ಮೊದಲ ಬಾರಿಗೆ ರಾಜ್ಯಕ್ಕೆ ಬಂದ ಹೆಚ್ಡಿಕೆಗೆ ಅದ್ಧೂರಿ ಸ್ವಾಗತ
2
+ ಬೆಂಗಳೂರು, ಜೂ.14-ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವರಾದ ನಂತರ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರನ್ನು ಜೆಡಿಎಸ್‌‍ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಅದ್ಧೂರಿ ಸ್ವಾಗತಕೋರಿ ಅಭಿನಂದಿಸಿದರು.
3
+ ಇಂದು ಮಧ್ಯಾಹ್ನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕುಮಾರಸ್ವಾಮಿ ಅವರನ್ನು ಜೆಡಿಎಸ್‌‍ನ ಮುಖಂಡರು ಸ್ವಾಗತಿಸಿದರು. ಬಳಿಕ ಸಾದರಹಳ್ಳಿ ಬಳಿ ಜೆಡಿಎಸ್‌‍ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಭಿನಂದನೆ ಸ್ವೀಕರಿಸಿದರು.
4
+ ನಂತರ ಜೆಡಿಎಸ್‌‍ ಕಚೇರಿ ಜೆಪಿಭವನಕ್ಕೆ ಕುಮಾರಸ್ವಾಮಿ ಆಗಮಿಸಿದರು. ಕಚೇರಿಯಲ್ಲಿ ಹಮಿಕೊಂಡಿದ್ದ ಅಭಿನಂದನಾ ಸಮಾರಂಭ ಹಾಗೂ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾಜಿ ಸಚಿವರು, ಶಾಸಕರು, ಪಕ್ಷದ ಮುಖಂಡರು, ಕುಮಾರಸ್ವಾಮಿ ಅವರನ್ನು ಅಭಿನಂದಿಸಿದರು.
5
+ ಅಭಿನಂದನೆ ಸ್ವೀಕರಿಸಿದ ಕುಮಾರಸ್ವಾಮಿ ಅವರು, ತಮಗೆ ಶುಭ ಕೋರಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡು ಮುಂಬರುವ ಚುನಾವಣೆಗಳಿಗೆ ಈಗಿನಿಂದಲೇ ತಯಾರಿ ನಡೆಸುವಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದರು. ಬಳಿಕ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಪದನಾಭನಗರದ ನಿವಾಸಕ್ಕೆ ತೆರಳಿ, ತಂದೆತಾಯಿ ಆಶೀರ್ವಾದ ಪಡೆದುಕೊಂಡರು. ಸಂಜೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್‌ಚಂದ್‌ ಗೆಲ್ಹೋಟ್‌ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಲಿದ್ದಾರೆ.
6
+ ರಾತ್ರಿ ತಿರುಪತಿಗೆ:ಇಂದು ರಾತ್ರಿ ತಿರುಪತಿಗೆ ತೆರಳಲಿರುವ ಕುಮರಸ್ವಾಮಿ ಅವರು ನಾಳೆ ಪ್ರಾತಃ ಕಾಲ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ಸುಪ್ರಭಾತ ಸೇವೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಪತ್ನಿ ಅನಿತಾಕುಮಾರಸ್ವಾಮಿ ಸೇರಿದಂತೆ ಕುಟುಂಬದ ಸದಸ್ಯರು ದೇವರ ದರ್ಶನದಲ್ಲಿ ಭಾಗಿಯಾಗಲಿದ್ದಾರೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ.
7
+ ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಕನಕಪುರ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಸಂಸತ್‌ ಪ್ರವೇಶಿಸುವ ಮೂಲಕ ರಾಜಕೀಯ ಪ್ರವೇಶ ಮಾಡಿದ್ದರು. ಆನಂತರ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದ ಅವರು ಬಿಜೆಪಿ ಜೆಡಿಎಸ್‌‍ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.
8
+ 2ನೇ ಬಾರಿ ರಾಮನಗರದಿಂದ ಚುನಾಯಿತರಾದ ಬಳಿಕ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿ ಲೋಕಸಭೆ ಪ್ರವೇಶಿಸಿದರು.ಆನಂತರ ಮತ್ತೆ ರಾಮನಗರ ಕ್ಷೇತ್ರದಿಂದ 3ನೇ ಬಾರಿ ಆಯ್ಕೆಯಾದರು. 2018ರಲ್ಲಿ ರಾಮನಗರ ಹಾಗೂ ಚನ್ನಪಟ್ಟಣ ಎರಡೂ ಕ್ಷೇತ್ರಗಳಲ್ಲಿ ಜಯಗಳಿಸಿದ್ದ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರವನ್ನು ಉಳಿಸಿಕೊಂಡು ರಾಮನಗರ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು.
9
+
10
+ ಜೆಡಿಎಸ್‌‍-ಕಾಂಗ್ರೆಸ್‌‍ ಮೈತ್ರಿ ಸರ್ಕಾರದಲ್ಲಿ 2ನೇ ಬಾರಿಗೆ ಮುಖ್ಯಮಂತ್ರಿಯಾದರು. 2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ 2ನೇ ಬಾರಿಗೆ ಚುನಾಯಿತರಾಗಿದ್ದರು. ಮಂಡ್ಯ ಲೋಕಸಭಾ ಕ್ಷೇತ್ರದಿಂದ 3ನೇ ಬಾರಿಗೆ ಲೋಕಸಭೆ ಪ್ರವೇಶ ಮಾಡಿರುವ ಕುಮಾರಸ್ವಾಮಿ ಪ್ರಧಾನಿ ನರೇಂದ್ರಮೋದಿ ಸಂಪುಟದಲ್ಲಿ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
eesanje/url_46_110_6.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಯಡಿಯೂರಪ್ಪನವರು ವಿಚಾರಣೆಗೆ ಹಾಜರಾದರೆ ಒಳ್ಳೆಯದು, ಇಲ್ಲವಾದರೆ ಪೊಲೀಸರೇ ಕರೆತರುತ್ತಾರೆ : ಪರಮೇಶ್ವರ್‌
2
+ ಬೆಂಗಳೂರು, ಜೂ.14-ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣದಲ್ಲಿ ಬಂಧನದ ವಾರೆಂಟ್‌ ಜಾರಿಯಾಗಿದೆ. ಆದಷ್ಟು ಬೇಗ ಬಂದು ಅವರಾಗಿಯೇ ವಿಚಾರಣೆಗೆ ಹಾಜರಾದರೆ ಒಳ್ಳೆಯದು, ಇಲ್ಲವಾದರೆ ಪೊಲೀಸರೇ ಕರೆತರುತ್ತಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೊಟ್ಟಿರುವ ನೋಟೀಸ್‌‍ಗೆ ಉತ್ತರ ಕೊಟ್ಟಿರುವ ಯಡಿಯೂರಪ್ಪ, ತಾವು ದೆಹಲಿಗೆ ಭೇಟಿ ನೀಡುತ್ತಿದ್ದು, 17 ರಂದು ವಾಪಸ್‌‍ ಬರುವುದಾಗಿ ತಿಳಿಸಿದ್ದಾರೆ. ಅವರನ್ನು ಕರೆತಂದು, ಕಾನೂನು ಪ್ರಕಾರ ಮಾಹಿತಿ ಪಡೆದು ಪೊಲೀಸರು ಮುಂದಿನ ಕ್ರಮಗಳನ್ನು ಜರುಗಿಸುತ್ತಾರೆ ಎಂದರು.
4
+ ಮೂರು ತಿಂಗಳ ಕಾಲ ಸುಮನಿದ್ದು ಈಗ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ಬಿಜೆಪಿಯ ಟೀಕೆಗೆ ಪ್ರತಿಕ್ರಿಯಿಸಿದ ಅವರು, ವಿರೋಧಪಕ್ಷಗಳು ಅದೇ ರೀತಿಯ ಟೀಕೆ ಮಾಡಬೇಕು, ಅದನ್ನು ಬಿಟ್ಟು ಬೇರೆ ರೀತಿ ಹೇಳಲು ಸಾಧ್ಯವಿಲ್ಲ. ಯಡಿಯೂರಪ್ಪ ದೊಡ್ಡವರಿದ್ದಾರೆ.
5
+ ವಿವಿಐಪಿ ಆಗಿರುವುದರಿಂದ ಯಾವುದೇ ತಪ್ಪಾದರೂ ಪೊಲೀಸರೇ ಹೊಣೆಯಾಗಬೇಕಾಗುತ್ತದೆ. ಆ ಕಾರಣಕ್ಕಾಗಿ ಎಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದ್ದಾರೆ. ಸಾಕ್ಷ್ಯಾಧಾರಗಳನ್ನು ಎಫ್‌ಎಸ್‌‍ಎಲ್‌ಗೆ ಕಳುಹಿಸಿ ವರದಿಗಳನ್ನು ಕಾಯಲಾಗುತ್ತಿತ್ತು. ಈಗ ಆ ಪ್ರಕ್ರಿಯೆಗಳು ಮುಗಿದಿವೆ. ನಿಯಮಾನುಸಾರ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಹೇಳಿದರು.
6
+ ರಾಹುಲ್‌ಗಾಂಧಿಯವರು ಬೆಂಗಳೂರಿಗೆ ಬಂದಾಗ ವಿಮಾನನಿಲ್ದಾಣದಲ್ಲಿ ಸೂಚನೆ ನೀಡಿದ್ದಾರೆ ಎಂಬ ಟೀಕೆಗಳಿಗೆ ಪ್ರತಿಕ್ರಿಯಿಸಿದ ಪರಮೇಶ್ವರ್‌, ಸುಮನೆ ಕಥೆ ಕಟ್ಟಿದರೆ ಪ್ರಯೋಜನವಿಲ್ಲ. ಇದು ಇಲ್ಲಿಯ ಸಮಸ್ಯೆ. ಅವರೆಲ್ಲಾ ಹಸ್ತಕ್ಷೇಪ ಮಾಡುವುದಿಲ್ಲ . ಯಾರ ಒತ್ತಡವೂ ಇದರಲ್ಲಿ ಇಲ್ಲ ಎಂದರು.
7
+ ನಟ ದರ್ಶನ್‌ ಅವರ ವಿಚಾರಣೆ ವಿಷಯವಾಗಿ ಅನ್ನಪೂರ್ಣೇಶ್ವರಿ ಠಾಣೆಯ ಪೊಲೀಸರು ರಸ್ತೆಗೆ ಬ್ಯಾರಿಕೇಡ್‌ ಹಾಕಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲಾಗುವುದು.
8
+ ದರ್ಶನ್‌ ಪ್ರಕರಣದಲ್ಲಿ ವಿಶೇಷ ರಾಜಾತೀಥ್ಯ ನೀಡುವುದಿಲ್ಲ. ಎಲ್ಲಾ ಸಾಮಾನ್ಯ ಖೈದಿಗಳಂತೆ ಕಾನೂನು ಪ್ರಕಾರವೇ ನಡೆಸಿಕೊಳ್ಳಲಾಗುವುದು. ಬಿರಿಯಾನಿ ಕೊಟ್ಟು ಸತ್ಕರಿಸುತ್ತಿಲ್ಲ. ತಾವು ಪೊಲೀಸ್‌‍ ಆಯುಕ್ತರ ಬಳಿ ಈ ಕುರಿತು ವಿಚಾರಿಸಿದ್ದು, ರಾಜಾತೀಥ್ಯ ನೀಡುತ್ತಿಲ್ಲ, ನೀಡುವುದೂ ಇಲ್ಲ ಎಂದಿದ್ದಾರೆ. ಅದಕ್ಕೆ ಅವಕಾಶವೂ ಇಲ್ಲ. ಸದ್ಯಕ್ಕೆ ಮುಕ್ತವಾಗಿ ತನಿಖೆ ಮಾಡಲು ಪೊಲೀಸರಿಗೆ ಸಮಯಾವಕಾಶ ನೀಡಬೇಕಿದೆ ಎಂದರು.
9
+ ಠಾಣೆಗೆ ಭೇಟಿ ನೀಡುವ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸುವಂತೆ ಪೊಲೀಸ್‌‍ ಅಧಿಕಾರಿಗಳಿಗೆ ಸೂಚಿಸಲಾಗುವು��ು ಎಂದು ಹೇಳಿದರು.ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಚೆನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರಿನ ಪ್ರಕರಣದಲ್ಲಿ ಸರ್ಕಾರ ತುರ್ತು ಸ್ಪಂದನೆ ಮಾಡಿದೆ. ಇಬ್ಬರು ಮೃತಪಟ್ಟಿದ್ದಾರೆ. ಹಲವರು ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಲ ಅಧಿಕಾರಿಗಳನ್ನು ಅಮಾನತುಪಡಿಸಲಾಗಿದೆ ಎಂದರು.
10
+ ಜಾತ್ರೆ ಇದ್ದಿದ್ದರಿಂದ ಬೆಟ್ಟದ ಮೇಲಿಂದ ನೀರು ತಂದು ತಂಬಿಟ್ಟು ಮಾಡಲಾಗಿತ್ತು. ಅದನ್ನು ಸೇವಿಸಿದ ಬಳಿಕ ಅನಾರೋಗ್ಯ ಕಾಣಿಸಿಕೊಂಡಿದ್ದಾಗಿ ಗ್ರಾಮಸ್ಥರು ಹೇಳುತ್ತಿದ್ದಾರೆ. ಅದೇನಿದ್ದರೂ ಪರಿಶೀಲನೆ ನಡೆಸುತ್ತೇವೆ ಎಂದು ತಿಳಿಸಿದರು.
eesanje/url_46_110_7.txt ADDED
@@ -0,0 +1,5 @@
 
 
 
 
 
 
1
+ ಪೋಕ್ಸೊ ಪ್ರಕರಣ : ಯಡಿಯೂರಪ್ಪ ಅವರಿಗಾಗಿ ಪೊಲೀಸರ ತಲಾಷ್‌
2
+ ಬೆಂಗಳೂರು, ಜೂ.14– ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ವಿರುದ್ಧ ವಾರಂಟ್‌ ಜಾರಿಯಾದ ಹಿನ್ನೆಲೆಯಲ್ಲಿ ಆರೋಪಿಯ ಬಂಧನಕ್ಕೆ ಶೋಧ ತೀವ್ರಗೊಳಿಸಿರುವ ಸಿಐಡಿ ಪೊಲೀಸರು ಇಂದು ಶಿವಮೊಗ್ಗ ಮತ್ತು ಬೆಂಗಳೂರು ಸೇರಿದಂತೆ ಹಲವೆಡೆ ಯಡಿಯೂರಪ್ಪ ಅವರಿಗಾಗಿ ತಲಾಷ್‌ ನಡೆಸಿದ್ದಾರೆ.
3
+ ಯಡಿಯೂರಪ್ಪ ಅವರು ದೆಹಲಿಯಲ್ಲಿದ್ದಾರೆ ಎಂಬ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳ ತಂಡ ಬಿಎಸ್‌‍ವೈ ಪುತ್ರ ಸಂಸದ ಬಿ.ವೈ.ರಾಘವೇಂದ್ರ ಅವರ ಮನೆ ಕರ್ನಾಟಕ ಭವನ ಸೇರಿದಂತೆ ಹಲವೆಡೆ ನಿನ್ನೆ ಹುಡುಕಾಟ ನಡೆಸಿದ್ದರೂ ಯಡಿಯೂರಪ್ಪ ಸಿಕ್ಕಿರಲಿಲ್ಲ.ಅವರಿಗಾಗಿ ಹುಡುಕಾಟ ಮುಂದುವರೆಸಿದ ಸಿಐಡಿ ತಂಡ ಶಿವಮೊಗ್ಗದ ಸಂಸದರ ನಿವಾಸ, ಯಡಿಯೂರಪ್ಪ ನಿವಾಸ, ಕಚೇರಿ ಸೇರಿದಂತೆ ಹಲವೆಡೆ ಹುಡುಕಾಟ ನಡೆಸಿದ್ದರೂ ಪತ್ತೆಯಾಗಿಲ್ಲ.
4
+ ಬೆಂಗಳೂರಿನ ಸದಾಶಿವನಗರದ ಮನೆ, ಕಚೇರಿಯಲ್ಲಿ ಕೂಡ ಬಂಧನಕ್ಕಾಗಿ ಬಲೆ ಬೀಸಿ ಶೋಧ ನಡೆಸಿದ್ದಾರೆ. ಆದರೆ ಈವರೆಗೆ ಯಡಿಯೂರಪ್ಪ ಅವರು ಸಿಕ್ಕಿಲ್ಲ.ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಪ್ರಕರಣದ ರದ್ದು ಕೋರಿ ಅರ್ಜಿ ಸಲ್ಲಿಸಿರುವುದಲ್ಲದೆ, ನಿರೀಕ್ಷಣಾ ಜಾಮೀನು ನೀಡುವಂತೆ ಮನವಿಯನ್ನು ಸಲ್ಲಿಸಿದ್ದಾರೆ.
5
+ ಈ ಎರಡು ಅರ್ಜಿಗಳ ವಿಚಾರಣೆ ಇಂದೇ ನಡೆಯುವ ಸಾಧ್ಯತೆ ಇದೆ. ಒಂದು ವೇಳೆ ಯಡಿಯೂರಪ್ಪನವರಿಗೆ ನಿರೀಕ್ಷಣಾ ಜಾಮೀನು ದೊರೆತರೆ ಬಂಧನದಿಂದ ಬಚಾವ್‌ ಆಗಲಿದ್ದಾರೆ.
eesanje/url_46_110_8.txt ADDED
@@ -0,0 +1,6 @@
 
 
 
 
 
 
 
1
+ ಯಡಿಯೂರಪ್ಪ ಬಂಧನ ವಾರಂಟ್‌ ವಿಚಾರದಲ್ಲಿ ರಾಜಕೀಯ ಮಾಡಿಲ್ಲ : ಎಂ.ಬಿ.ಪಾಟೀಲ್‌
2
+ ಹುಬ್ಬಳ್ಳಿ, ಜೂ.14-ಪೋಕ್ಸೋ ಪ್ರಕ್ರರಣ ಅತ್ಯಂತ ಸೂಕ್ಷ ಹಾಗೂ ಗಂಭೀರವಾಗಿದ್ದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾನೂನು ಇದರಲ್ಲಿ ಯಾವುದೇ ರಾಜಕೀಯ ಮಾಡುತ್ತಿಲ್ಲ ಎಂದು ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.
3
+ ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಏನಾದರೂ ಅಹಿತಕರ ಘಟನೆಗಳು ನಡೆದರೆ ಇದು ಪೋಕ್ಸೋ ಕಾಯ್ದೆ ವ್ಯಾಪ್ತಿಗೆ ಬರುತ್ತದೆ. ಇದರಲ್ಲಿ ಯಾವುದೇ ಸರ್ಕಾರ ಹಾಗೂ ಪಕ್ಷ ಹಸ್ತಕ್ಷೇಪ ಮಾಡಲು ಬರುವುದಿಲ್ಲ. ಪೊಲೀಸರು ತನ್ನದೇ ಆದ ತನಿಖೆಯನ್ನು ಮಾಡತ್ತಾರೆ ಎಂದರು.
4
+ ಚಿತ್ರದುರ್ಗ ಮುರುಘಾಶರಣರ ಮೇಲೆ ಪೋಕ್ಸೋ ಕಾಯ್ದೆ ಮೇಲೆ ಬಂಧನ ಮಾಡಿದ್ದು ಏನಾಯಿತು ಗೊತ್ತು. ಹೀಗಾಗಿ ಪೋಕ್ಸೋ ಕಾಯ್ದೆ ಹಿನ್ನೆಲೆಯಲ್ಲಿ ನ್ಯಾಯಾಲಯ ಬಂಧನದ ವಾರಂಟ್‌ ಜಾರಿ ಮಾಡಿದೆ. ಕೋರ್ಟ್‌ ನಿರ್ದೇಶನ ಮೇರೆಗೆ ಪೊಲೀಸರು ದೂರು ದಾಖಲು ಮಾಡಿದ್ದಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು.ಇನ್ನು ನಟ ದರ್ಶನ ಬಂಧನ ಕುರಿತು ಮಾತನಾಡಿದ ಅವರು, ದರ್ಶನ ಆರೋಪಿ ಆಗಿದ್ದು ಆರೋಪಿನೇ ಎಂದರು.
5
+ ಸಚಿವ ಕೆ.ಎನ್‌.ರಾಜಣ್ಣ ಮೂರು ಉಪ ಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿ ಮಾಡಬೇಕು ಎನ್ನುವ ಕುರಿತು ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಇದೊಂದು ಪಕ್ಷದ ಆಂತರಿಕ ವಿಚಾರವಾಗಿದ್ದು ಪಕ್ಷದ ವೇದಿಕೆಯಲ್ಲಿ ಮಾತನಾಡುವೆ ಎಂದರು.ಇನ್ನು ಲೋಕಸಭಾ ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಸೋಲಾಗಿದ್ದು, ಕೆಲವರು ತೆಲೆದಂಡ ಆಗುತ್ತದೆ ಎಂಬ ವಿಚಾರ ಕೇವಲ ಊಹಾಪೋಹವಷ್ಟೇ ಎಂದು ತಿಳಿಸಿದರು.
6
+ ರಾಜ್ಯ ಸರ್ಕಾರ ಉರುಳುತ್ತದೇ ಎಂಬ ವಿಚಾರ ಕುರಿತು ಸಹ ಮಾತನಾಡಿದ ಅವರು, ಮೊದಲು ಅವರು ಮಹಾರಾಷ್ಟ್ರ ಸರ್ಕಾರ ಉಳಿಸಿಕೊಳ್ಳಲಿ ಎಂದರು. ನಮವರೇ ಕೇಂದ್ರದಲ್ಲಿ ಬೃಹತ್‌ ಕೈಗಾರಿಕಾ ಸಚಿವರಾಗಿದ್ದು ಕೆಲವು ಬೇಡಿಕೆಗಳನ್ನು ಶೀಘ್ರವಾಗಿ ಸಲ್ಲಿಸಲಾಗುತ್ತದೆ ಎಂದು ಎಂ.ಬಿ.ಪಾಟೀಲ್‌ ತಿಳಿಸಿದರು.
eesanje/url_46_110_9.txt ADDED
@@ -0,0 +1,4 @@
 
 
 
 
 
1
+ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಶೆಟ್ಟರ್‌ ಸಮಾಲೋಚನೆ
2
+ ಬೆಳಗಾವಿ,ಜೂ.14-ನೂತನ ಬೆಳಗಾವಿ ಸಂಸದರಾದ ಜಗದೀಶ್‌ ಶೆಟ್ಟರ್‌ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ವಿಮಾನ ನಿಲ್ದಾಣದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾಹಿತಿ ಪಡೆದರು.
3
+ ಬೆಳಗಾವಿ ವಿಮಾನಯಾನ ಪ್ರಾಧಿಕಾರ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
4
+ 322 ಕೋಟಿ ರೂಪಾಯಿ ಅನುದಾನದ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಡೊಮೆಸ್ಟಿಕ್‌ ಟರ್ಮಿನಲ್‌ – 2 ಅಭಿವೃದ್ಧಿ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಕಾರ್ಯಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಏರ್‌ಪೋರ್ಟ್‌ ಡೈರೆಕ್ಟರ್‌ ಎಸ್‌‍. ತ್ಯಾಗರಾಜನ್‌, ಡಿಜಿಎಂ ಪಿ.ಎಸ್‌‍ ದೇಸಾಯಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
eesanje/url_46_111_1.txt ADDED
@@ -0,0 +1,6 @@
 
 
 
 
 
 
 
1
+ ಹೋಟಲ್‌, ಮದುವೆ, ಸಮಾರಂಭಗಳಲ್ಲಿ ಆಹಾರ ವ್ಯರ್ಥವಾಗುವುದನ್ನು ತಡೆಯಲು ಕ್ರಮ : ಸಚಿವ ಮುನಿಯಪ್ಪ
2
+ ಬೆಂಗಳೂರು,ಜೂ.13-ಐಶಾರಾಮಿ ಹೋಟಲ್‌ಗಳಲ್ಲಿ ಮದುವೆ ಮಂಟಪಗಳು, ಸಾರ್ವಜನಿಕ ಸಮಾರಂಭದಲ್ಲಿ ಜನರು ಆಹಾರವನ್ನು ಶೇಕಡಾ 10 ರಷ್ಟು ಪದಾರ್ಥಗಳನ್ನು ತಟ್ಟೆಯಲ್ಲೇ ಬಿಟ್ಟು ವ್ಯರ್ಥ ಮಾಡುತ್ತಿದ್ದಾರೆ. ಅದನ್ನು ತಡೆಯಲು ನಾವು ಕ್ರಮವನ್ನು ತೆಗೆದುಕೊಳ್ಳಲು ಮುಂದಾಗಿದ್ದೇವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ ಕರೆ ನೀಡಿದ್ದಾರೆ.
3
+ ನಗರದ ತ್ರಿಪುರವಾಸಿನಿಯಲ್ಲಿ ನಡೆಯುತ್ತಿರುವ ಇನ್‌ಕ್ರೆಡಿಬಲ್‌ ಚೆ್‌‍ ಚಾಲೆಂಜ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಆಹಾರ ಪದ್ದತಿ ವಿಭಿನ್ನವಾಗಿದ್ದು, ಆರೋಗ್ಯ ಹದಗೆಡುತ್ತಿದೆ. ಪಾಲೀಶ್‌ ಮಾಡಲಾದ ಅಕ್ಕಿ ಬಳಕೆಯಿಂದ ಸಾರ್ವಜನಿಕರಲ್ಲಿ ಮಧುಮೇಹದಂತಹ ಕಾಯಿಲೆಗಳು ಹೆಚ್ಚಾಗುತ್ತಿವೆ. ಇವನ್ನು ತಡೆಯಲು ರಾಗಿಯನ್ನು ಹೆಚ್ಚಾಗಿ ಬಳಸಬೇಕು ಎಂದು ಹೇಳಿದರು.
4
+ ಮೂರು ದಿನಗಳ ಕಾಲ ನಡೆಯುವ ಈ ಪ್ರದರ್ಶನದ ಪ್ರಯೋಜನವನ್ನು ಸಾರ್ವಜನಿಕರು ಹಾಗೂ ಹೋಟೆಲ್‌ ಮಾಲಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.ಈಗಿನ ಜನರು ಫಾಸ್ಟ್‌ ಫುಡ್‌ ಕಡೆ ಹೆಚ್ಚಿನ ಒತ್ತು ನೀಡುವುದರಿಂದ ಬೇರೆಬೇರೆ ಸ್ವರೂಪದ ಖಾದ್ಯ ಪದಾರ್ಥಗಳು ದೊರೆಯುತ್ತಿವೆ. ಇವುಗಳಿಂದ ಜನರ ಆರೋಗ್ಯ ಹಾಳಾಗುತ್ತಿದೆ. ಈ ಮೊದಲು ಜನರು ರಾಗಿ, ನವಣೆ, ಸಜ್ಜೆ, ಆಕಾರ್‌ ಮೊದಲಾದ ಧಾನ್ಯಗಳನ್ನು ಬಳಕೆ ಮಾಡುತ್ತಿದ್ದರು. ಇದರಿಂದ ಆರೋಗ್ಯ ಉತ್ತಮವಾಗಿರುತ್ತಿತ್ತು.
5
+ ಆತಿಥ್ಯ, ಸಾರಿಗೆ ಹಾಗು ಪ್ರವಾಸೋದ್ಯಮ ಕ್ಷೇತ್ರಕ್ಕೆ ಇನ್ನೊಂದು ಹೆಸರೇ ನಮ ಕರ್ನಾಟಕ. ನಮ ರಾಜ್ಯದ ಮುಕುಟ ಮಣಿಯಂತಿರುವ ಬೆಂಗಳೂರಿನಲ್ಲಿ ಐತಿಹಾಸಿಕ ಸಮೇಳನಕ್ಕೆ ಸಾಕ್ಷಿಯಾಗುತ್ತಿದೆ.
6
+ ದಕ್ಷಿಣ ಭಾರತ ಬಾಣಸಿಗರ ಸಂಘದ ಸಹಯೋಗದಲ್ಲಿ ನಡೆಯುತ್ತಿರುವ ಇನ್‌ಕ್ರೆಡಿಬಲ್‌ ಚೆ್‌‍ ಚಾಲೆಂಜ್‌ ಸ್ಪರ್ಧೆ ಯುವ ಪಾಕಶಾಲೆಯ ಪ್ರತಿಭೆಗಳಿಗೆ ವೇದಿಕೆಯಾಗಲಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ, ರಮೇಶ್‌ ಚಂದ್ರ ಲಹೋಟೆ ಅಧ್ಯಕ್ಷರು ಎ್‌‍ ಕೆಸಿಸಿ, ಧಾಮೋದರ್‌, ಪಂಕಜ್‌ ಕೊರಾಠಿ, ಪಿಸಿ ರಾವ್‌ ಅಧ್ಯಕ್ಷರು ಬಿ.ಬಿ.ಎಚ್‌.ಎ ಮುಂತಾದವರು ಉಪಸ್ಥಿತರಿದ್ದರು.
eesanje/url_46_111_10.txt ADDED
@@ -0,0 +1,6 @@
 
 
 
 
 
 
 
1
+ ಮೃತಪಟ್ಟ ಕೆಎಸ್‌‍ಆರ್‌ಟಿಸಿ ನೌಕರರು, ಪ್ರಯಾಣಿಕರ ಕುಟುಬದವರಿಗೆ ಪರಿಹಾರ ವಿತರಣೆ
2
+ ಬೆಂಗಳೂರು,ಜೂ.13-ಅನಾರೋಗ್ಯ ಹಾಗೂ ಅಪಘಾತದಲ್ಲಿ ಮೃತಪಟ್ಟ ಕೆಎಸ್‌‍ಆರ್‌ಟಿಸಿ ನೌಕರರ ಅವಲಂಬಿತರಿಗೆ ಒಂದು ಕೋಟಿ ರೂ. ವಿಮಾ ಪರಿಹಾರ ಹಾಗೂ ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರ ಅವಲಂಬಿತರಿಗೆ ತಲಾ 10 ಲಕ್ಷ ರೂ.ಗಳ ಪರಿಹಾರದ ಚೆಕ್‌ ಅನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವಿತರಿಸಿದರು.
3
+ ಶಾಂತಿನಗರದ ಕೆಎಸ್‌‍ಆರ್‌ಟಿಸಿ ಕಚೇರಿಯಲ್ಲಿ ಹಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕರ್ತವ್ಯದಲ್ಲಿರುವಾಗಲೇ ಮೃತಪಟ್ಟ ನಾಲ್ಕು ಮಂದಿ ಸಂಸ್ಥೆಯ ನೌಕರರ ಅವಲಂಬಿತರಿಗೆ ಒಂದು ಕೋಟಿ ರೂ. ವಿಮಾ ಪರಿಹಾರ, ಕುಟುಂಬ ಕಲ್ಯಾಣ ಯೋಜನೆಯಡಿ 23 ನೌಕರರ ಅವಲಂಬಿತರಿಗೆ ತಲಾ 10 ಲಕ್ಷ ರೂ. ಪರಿಹಾರ ಹಾಗೂ ಅಪಘಾತದಲ್ಲಿ ಸಾವನ್ನಪ್ಪಿದ ನಾಲ್ವರು ಪ್ರಯಾಣಿಕರ ಅವಲಂಬಿತರಿಗೆ 10 ಲಕ್ಷ ರೂ.ಗಳ ಪರಿಹಾರದ ಚೆಕ್‌ ಅನ್ನು ವಿತರಿಸಲಾಯಿತು.
4
+ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಸೇವೆಯಲ್ಲಿದ್ದ ನೌಕರರ 4 ಅವಲಂಭಿತರಿಗೆ ಅಪಘಾತ ಪರಿಹಾರ ( / ) ವಿಮೆ ತಲಾ ₹1 ಕೋಟಿಯನ್ನು ಇಂದು ವಿತರಿಸಿದೆ.ಒಟ್ಟು ಇಲ್ಲಿಯವರೆಗೆ ಇದೂ ಸೇರಿ 17 ಸಿಬ್ಬಂದಿಗಳ ಕುಟುಂಬಕ್ಕೆ ವಿಮಾ‌ ನೀಡಿಕೆಹಾಗೂ ಕುಟುಂಬ ಕಲ್ಯಾಣ ಯೋಜನೆಯಡಿ ಸೇವೆಯಲ್ಲಿದ್ದು ಮೃತ ಪಟ್ಟ 23 ನೌಕರರ…../t5liZSNXO3
5
+ ಈ ವೇಳೆ ಮಾತನಾಡಿದ ಸಚಿವರು, ಕೆಎಸ್‌‍ಆರ್‌ಟಿಸಿ ಸಂಸ್ಥೆಯ ಪ್ರಯಾಣಿಕರು ಹಾಗೂ ನೌಕರರ ಹಿತರಕ್ಷಣೆಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಿದೆ. ಜೀವ ಅಮೂಲ್ಯವಾದುದು. ಅದಕ್ಕೆ ಬೆಲೆ ಕಟ್ಟಲಾಗದು. ಆದರೆ, ಮೃತ ನೌಕರರ ಕುಟುಂಬದ ಆರ್ಥಿಕ ಸ್ವಾವಲಂಬನೆಗಾಗಿ ಜಾರಿಗೆ ತಂದಿರುವ ಯೋಜನೆಗಳು ದೂರದರ್ಶಿತ್ವ ಹೊಂದಿದೆ. ಪರಿಹಾರದ ಮೊತ್ತವನ್ನು ಮಕ್ಕಳ ವಿದ್ಯಾಭ್ಯಾಸ, ಮನೆ ನಿರ್ಮಾಣ ಕಾರ್ಯಗಳಿಗೆ ಬಳಸಿಕೊಳ್ಳಬೇಕು. ಇತರೆ ಉದ್ದೇಶಗಳಿಗೆ ಹಣವನ್ನು ವೃಥಾ ಖರ್ಚು ಮಾಡಬೇಡಿ ಎಂದು ಸಲಹೆ ನೀಡಿದರು.
6
+ ಕೆಎಸ್‌‍ಆರ್‌ಟಿಸಿ ಅಧ್ಯಕ್ಷ ಶ್ರೀನಿವಾಸ್‌‍ ಮಾತನಾಡಿ, ನಿಗಮದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳು ಶ್ರಮ ಜೀವಿಗಳಾಗಿದ್ದು, ಅವರಿಗೆ ಸಲ್ಲಬೇಕಾದ ಎಲ್ಲಾ ಸೌಲಭ್ಯಗಳನ್ನೂ ಕಲ್ಪಿಸಿಕೊಡುವುದು ನಮ ಆದ್ಯ ಕರ್ತವ್ಯವಾಗಿದೆ ಎಂದರು.ಈ ಸಂದರ್ಭದಲ್ಲಿ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್‌, ಕಾರ್ಮಿಕ ಸಂಘಟನೆಗಳ ಮುಖಂಡ ಅನಂತ ಸುಬ್ಬರಾವ್‌, ವಿಜಯ ಭಾಸ್ಕರ್‌, ರೇವಪ್ಪ, ಮಂಜುನಾಥ್‌ ಮತ್ತಿತರರು ಉಪಸ್ಥಿತರಿದ್ದರು.
eesanje/url_46_111_11.txt ADDED
@@ -0,0 +1,5 @@
 
 
 
 
 
 
1
+ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ರೇಣುಕಾಸ್ವಾಮಿ ಕುಟುಂಬ ಪಟ್ಟು
2
+ ಬೆಂಗಳೂರು,ಜೂ.13-ನಟ ದರ್ಶನ್‌ ಪ್ರಕರಣದಲ್ಲಿ ರಾಜ್ಯದ ಪೊಲೀಸರಿಂದ ನ್ಯಾಯ ಸಿಗುವ ಅನುಮಾನಗಳಿರುವುದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೊಲೆಯಾದ ರೇಣುಕಾಸ್ವಾಮಿ ಕುಟುಂಬ ಪಟ್ಟು ಹಿಡಿದಿದೆ.
3
+ ತನಿಖೆ ನಡೆಸುತ್ತಿರುವ ಪೊಲೀಸರು ಠಾಣೆಯ ಸುತ್ತ ಟೆಂಟ್‌ ಹಾಕಿಕೊಂಡು ದರ್ಶನ್‌ ಅವರನ್ನು ಮರೆಮಾಚುವ ಪ್ರಯತ್ನ ಮಾಡುತ್ತಿದ್ದಾರೆ. ವಿಚಾರಣಾಧೀನ ಆರೋಪಿಗಳಿಗೆ ಬಿರಿಯಾನಿ ಸೇರಿದಂತೆ ಭಕ್ಷ್ಯ ಭೋಜನದ ಆತಿಥ್ಯ ನೀಡಲಾಗುತ್ತಿದೆ. ಹೀಗಿರುವಾಗ ತನಿಖೆಯಲ್ಲಿ ನ್ಯಾಯ ಸಿಗುವ ಅನುಮಾನಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ.
4
+ ನಿನ್ನೆ ವೀರಶೈವ ಮಹಾಸಭಾದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಗರ ಪೊಲೀಸ್‌‍ ಆಯುಕ್ತರಿಗೆ ಪತ್ರ ಬರೆಯಲಾಗಿದ್ದು, ಪ್ರಕರಣದಲ್ಲಿ ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ದೊರಕಿಸುವುಂತೆ ಆಗ್ರಹಿಸಲಾಗಿದೆ.
5
+ ಅದರ ಹೊರತಾಗಿಯೂ ದರ್ಶನ್‌ ಅವರ ವಿಚಾರದಲ್ಲಿ ಮೃದು ಧೋರಣೆ ಅನುಸರಿಸಲಾಗುತ್ತಿದೆ ಎಂಬ ಅನುಮಾನಗಳು ಜನಸಾಮಾನ್ಯರನ್ನು ಕಾಡುತ್ತಿದೆ. ಹೀಗಾಗಿ ಒಟ್ಟಾರೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ.
eesanje/url_46_111_12.txt ADDED
@@ -0,0 +1,6 @@
 
 
 
 
 
 
 
1
+ ದರ್ಶನ್‌ ಪ್ರಕರಣ ಕುರಿತು ಹೇಳಿಕೆ ನೀಡದಂತೆ ಕಾಂಗ್ರೆಸ್‌‍ ಮುಖಂಡರಿಗೆ ಸಿಎಂ ತಾಕೀತು
2
+ ಬೆಂಗಳೂರು,ಜೂ.13– ನಟ ದರ್ಶನ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಯಿ ತಪ್ಪಿದ ಹೇಳಿಕೆಗಳನ್ನು ನೀಡಬಾರದು ಹಾಗೂ ತನಿಖಾ ಸಂಸ್ಥೆಯ ಮೇಲೆ ಅನಗತ್ಯ ಒತ್ತಡ ಹೇರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ ಸಂಪುಟದ ಸದಸ್ಯರು ಹಾಗೂ ಪಕ್ಷದ ನಾಯಕರಿಗೆ ಸೂಚನೆ ನೀಡಿದ್ದಾರೆ.
3
+ ನಟ ದರ್ಶನ್‌ ಪ್ರಕರಣದಲ್ಲಿ ಕಾಂಗ್ರೆಸ್‌‍ನ ಹಲವು ಶಾಸಕರು, ನಾಯಕರು, ವಿರೋಧಪಕ್ಷಗಳ ಕೆಲವು ಶಾಸಕರು ಪ್ರಭಾವ ಬೀರಲು ಯತ್ನಿಸಿದರು ಎಂದು ಹೇಳಲಾಗಿದೆ. ಆದರೆ ಅದಕ್ಕೆ ಸೊಪ್ಪು ಹಾಕದ ಸಿದ್ದರಾಮಯ್ಯ, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಸತ್ಯಾಸತ್ಯತೆ ಬೆಳಕಿಗೆ ಬರಲಿ. ಈ ವಿಷಯದಲ್ಲಿ ಯಾರೂ ಹಸ್ತಕ್ಷೇಪ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
4
+ ದರ್ಶನ್‌ ಪ್ರಕರಣ ಬಿಟ್ಟರೆ ಸಚಿವರಿಗೆ, ಶಾಸಕರಿಗೆ ಮಾಡಲು ಬೇರೆ ಕೆಲಸಗಳಿವೆ. ಕಳೆದ ಮೂರು ತಿಂಗಳಿನಿಂದಲೂ ಚುನಾವಣಾ ನೀತಿ ಸಂಹಿತೆಯಿಂದಾಗಿ ಆಡಳಿತ ವ್ಯವಸ್ಥೆ ಸ್ಥಗಿತಗೊಂಡಿತ್ತು. ಈಗ ನೀತಿ ಸಂಹಿತೆ ತೆರವಾಗಿದೆ. ಬಜೆಟ್‌ನಲ್ಲಿ ಘೋಷಿಸಿದ್ದ ಯೋಜನೆಗಳನ್ನು ಪೂರ್ಣಪ್ರಮಾಣದಲ್ಲಿ ಅನುಷ್ಠಾನಕ್ಕೆ ತರಬೇಕು. ಈ ನಿಟ್ಟಿನಲ್ಲಿ ಆಯಾ ಇಲಾಖೆಯ ಸಚಿವರು ಹೆಚ್ಚಿನ ಗಮನ ಹರಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.
5
+ ದರ್ಶನ್‌ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳು ಹಾಗೂ ಸತ್ಯಾಂಶ ಆಧರಿಸಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಉಪ್ಪು ತಿಂದವರು ನೀರು ಕುಡಿಯುತ್ತಾರೆ. ತಪ್ಪು ಮಾಡದವರು ಗಾಬರಿಗೊಳ್ಳುವ ಅಗತ್ಯವಿಲ್ಲ. ಈ ವಿಷಯದಲ್ಲಿ ಪೊಲೀಸರಿಗೆ ಒತ್ತಡ ಹೇರುವುದಾಗಲೀ, ಪ್ರಭಾವ ಬೀರುವುದಾಗಲೀ ಸರಿಯಲ್ಲ. ಅಂತಹ ವಿಚಾರಗಳು ತಮ ಗಮನಕ್ಕೆ ಬಂದರೆ ಸಹಿಸುವುದಿಲ್ಲ ಎಂದು ಖಡಕ್‌ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.
6
+ ನಟ ದರ್ಶನ್‌ ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿಯ ಪರವಾಗಿ ಚುನಾವಣಾ ಪ್ರಚಾರ ಮಾಡಿದ್ದರು. ಅದರ ಹಿಂದಿನ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍, ಬಿಜೆಪಿ ಎಂಬ ಭೇದ ಮಾಡದೇ ತಮ ಆಪ್ತ ಬಳಗದಲ್ಲಿರುವ ಅಭ್ಯರ್ಥಿಗಳ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಿದ್ದರು.
eesanje/url_46_111_2.txt ADDED
@@ -0,0 +1,4 @@
 
 
 
 
 
1
+ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಲಿದೆ : ಸಚಿವ ಚೆಲುವರಾಯಸ್ವಾಮಿ
2
+ ಬೆಂಗಳೂರು,ಜೂ.13-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 100 ಕ್ಕೆ 100 ರಷ್ಟು ನಿಷ್ಪಕ್ಷಪಾತ ತನಿಖೆ ನಡೆಯಲಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
3
+ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಪ್ರಜ್ವಲ್‌ ರೇವಣ್ಣ ಅವರ ಪ್ರಕರಣದಲ್ಲಿ ಯಾವ ಪ್ರಭಾವಕ್ಕೂ ಮಣಿಯದೆ ನಿಷ್ಪಕ್ಷಪಾತ ತನಿಖೆ ನಡೆದಿದೆ. ಅದೇ ರೀತಿ ದರ್ಶನ್‌ ಪ್ರಕರಣದಲ್ಲೂ ನ್ಯಾಯೋಚಿತವಾದ ತನಿಖೆ ನಡೆಯಲಿದೆ ಎಂದು ಹೇಳಿದರು.
4
+ ಪೊಲೀಸರ ತನಿಖೆ ಒಂದು ಹಂತ. ಅನಂತರ ಅದು ನ್ಯಾಯಾಲಯಕ್ಕೆ ತಲುಪಲಿದೆ. ಶಿಕ್ಷೆ ಕೊಡುವುದು, ಜಾಮೀನು ನೀಡುವುದು, ಮಾನ್ಯತೆ ಕೊಡುವುದು ಅಂತಿಮವಾಗಿ ನ್ಯಾಯಾಲಯ ಎಂದರು.ದರ್ಶನ್‌ ಪ್ರಕರಣದಲ್ಲಿ ಯಾವ ಪ್ರಭಾವಿಗಳ ಹಸ್ತಕ್ಷೇಪವೂ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
eesanje/url_46_111_3.txt ADDED
@@ -0,0 +1,6 @@
 
 
 
 
 
 
 
1
+ ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಬಂಧನದ ಭೀತಿ
2
+ ಬೆಂಗಳೂರು,ಜೂ.13– ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್‌‍.ಯಡಿಯೂರಪ್ಪ ಅವರಿಗೆ ಬಂಧನದ ಭೀತಿ ಎದುರಾಗಿದೆ. ಯಡಿಯೂರಪ್ಪ ಅವರನ್ನು ಬಂಧಿಸಲು ಸಿಐಡಿ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಜಾಮೀನುರಹಿತ ವಾರೆಂಟ್‌ ಹೊರಡಿಸಬೇಕೆಂದು ಪೊಲೀಸರು ನಿನ್ನೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಇಂದು 42 ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ, ವಾರೆಂಟ್‌ ಜಾರಿ ಮಾಡಿದರೆ ಪೊಲೀಸರು ಬಿ.ಎಸ್‌‍.ಯಡಿಯೂರಪ್ಪ ಅವರನ್ನು ಬಂಧಿಸುವ ಸಾಧ್ಯತೆ ಇದೆ.
3
+ ಮತ್ತೊಂದೆಡೆ ತನಿಖೆಗೆ ಹಾಜರಾಗುವಂತೆ ಪೊಲೀಸರು ನೀಡಿದ್ದ ನೋಟೀಸ್‌‍ಗೆ ಯಡಿಯೂರಪ್ಪ ಈಗಾಗಲೇ ಉತ್ತರಿಸಿದ್ದಾರೆ. ಕಳೆದ ಮಾ.28 ರಂದು ನೀಡಿದ್ದ ನೋಟೀಸ್‌‍ನಂತೆ ಹಾಜರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದೆ. ಜೂ.12 ರಂದು ತಾವು ನೀಡಿರುವ ನೋಟೀಸ್‌‍ ನನಗೆ ನಿನ್ನೆಯಷ್ಟೇ ತಲುಪಿದೆ.
4
+ ನಾನು ಪೂರ್ವ ನಿಗದಿತ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿರುವುದರಿಂದ ದೆಹಲಿಗೆ ತೆರಳುತ್ತಿದ್ದೇನೆ. ಹೀಗಾಗಿ ಈ ಬಾರಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಜೂ. 17 ರಂದು ನಾನು ಖುದ್ದಾಗಿ ವಿಚಾರಣೆಗೆ ಹಾಜರಾಗುತ್ತೇನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ನಾನು ತನಿಖೆಗೆ ಸಹಕರಿಸಿದ್ದೇನೆ. ಹೀಗಾಗಿ ವಿನಾಯಿತಿ ನೀಡಬೇಕೆಂದು ಮನವಿ ಮಾಡಿದ್ದರು.
5
+ ತಮ ಅಪ್ರಾಪ್ತ ಪುತ್ರಿಯೊಂದಿಗೆ ಬಿಎಸ್‌‍ವೈ ಅವರು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಕಳೆದ ಮಾರ್ಚ್‌ನಲ್ಲಿ ಮಹಿಳೆಯೊಬ್ಬರು ದೂರು ನೀಡಿದ್ದರು. ಆ ಮಹಿಳೆ ಅನಾರೋಗ್ಯದಿಂದ ಮೃತಪಟ್ಟರು. ಮಹಿಳೆಯ ದೂರಿಗೆ ಸಂಬಂಧಿಸಿದಂತೆ ಬಿ.ಎಸ್‌‍.ಯಡಿಯೂರಪ್ಪ ಅವರಿಗೆ ನೋಟೀಸ್‌‍ ಜಾರಿಗೊಳಿಸಿದ್ದ ಪೊಲೀಸರು ನಿನ್ನೆ ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದರು.
6
+ ಮತ್ತೊಂದೆಡೆ ಯಡಿಯೂರಪ್ಪ ಅವರು ಈ ಪ್ರಕರಣದ ರದ್ದು ಕೋರಿ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಅಲ್ಲದೆ, ವಿಚಾರಣೆಗೆ ಹಾಜರಾಗುವಂತೆ ನೀಡಿರುವ ನೋಟೀಸ್‌‍ಗೂ ಉತ್ತರ ನೀಡಿ ಜೂನ್‌ 17 ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.ಇಂದು ಮಧ್ಯಾಹ್ನ 42ನೇ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಪೊಲೀಸರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದೆ. ನ್ಯಾಯಾಧೀಶರು ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದರ ಮೇಲೆ ಯಡಿಯೂರಪ್ಪನವರ ಬಂಧನ ನಿರ್ಧಾರವಾಗಲಿದೆ.