CoolCoder44 commited on
Commit
da4cbca
·
verified ·
1 Parent(s): 03367e1

dfc4a4649b9cc31142f5af8d3a2e03662ef1bb202f13809359c52de8d44317de

Browse files
Files changed (50) hide show
  1. eesanje/url_46_130_2.txt +8 -0
  2. eesanje/url_46_130_3.txt +12 -0
  3. eesanje/url_46_130_4.txt +5 -0
  4. eesanje/url_46_130_5.txt +11 -0
  5. eesanje/url_46_130_6.txt +7 -0
  6. eesanje/url_46_130_7.txt +6 -0
  7. eesanje/url_46_130_8.txt +6 -0
  8. eesanje/url_46_130_9.txt +12 -0
  9. eesanje/url_46_131_1.txt +6 -0
  10. eesanje/url_46_131_10.txt +7 -0
  11. eesanje/url_46_131_11.txt +6 -0
  12. eesanje/url_46_131_12.txt +5 -0
  13. eesanje/url_46_131_2.txt +13 -0
  14. eesanje/url_46_131_3.txt +5 -0
  15. eesanje/url_46_131_4.txt +10 -0
  16. eesanje/url_46_131_5.txt +5 -0
  17. eesanje/url_46_131_6.txt +6 -0
  18. eesanje/url_46_131_7.txt +6 -0
  19. eesanje/url_46_131_8.txt +8 -0
  20. eesanje/url_46_131_9.txt +8 -0
  21. eesanje/url_46_132_1.txt +4 -0
  22. eesanje/url_46_132_10.txt +5 -0
  23. eesanje/url_46_132_11.txt +6 -0
  24. eesanje/url_46_132_12.txt +8 -0
  25. eesanje/url_46_132_2.txt +6 -0
  26. eesanje/url_46_132_3.txt +6 -0
  27. eesanje/url_46_132_4.txt +6 -0
  28. eesanje/url_46_132_5.txt +4 -0
  29. eesanje/url_46_132_6.txt +7 -0
  30. eesanje/url_46_132_7.txt +7 -0
  31. eesanje/url_46_132_8.txt +5 -0
  32. eesanje/url_46_132_9.txt +11 -0
  33. eesanje/url_46_133_1.txt +10 -0
  34. eesanje/url_46_133_10.txt +9 -0
  35. eesanje/url_46_133_11.txt +6 -0
  36. eesanje/url_46_133_12.txt +9 -0
  37. eesanje/url_46_133_2.txt +5 -0
  38. eesanje/url_46_133_3.txt +10 -0
  39. eesanje/url_46_133_4.txt +6 -0
  40. eesanje/url_46_133_5.txt +4 -0
  41. eesanje/url_46_133_6.txt +6 -0
  42. eesanje/url_46_133_7.txt +3 -0
  43. eesanje/url_46_133_8.txt +10 -0
  44. eesanje/url_46_133_9.txt +4 -0
  45. eesanje/url_46_134_1.txt +5 -0
  46. eesanje/url_46_134_10.txt +5 -0
  47. eesanje/url_46_134_11.txt +12 -0
  48. eesanje/url_46_134_12.txt +6 -0
  49. eesanje/url_46_134_2.txt +5 -0
  50. eesanje/url_46_134_3.txt +8 -0
eesanje/url_46_130_2.txt ADDED
@@ -0,0 +1,8 @@
 
 
 
 
 
 
 
 
 
1
+ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ವಿಚಾರದ ಕುರಿತು ಸಚಿವ ಬಿ.ನಾಗೇಂದ್ರ ಸ್ಪಷ್ಟನೆ
2
+ ಬೆಂಗಳೂರು, ಮೇ 28-ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆಯಲ್ಲಿ ತಮ್ಮ ಪಾತ್ರ ಇಲ್ಲ. ನಿಗಮದ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ತನಿಖೆ ನಡೆಯುತ್ತಿದ್ದು, ಅವರ ವಿರುದ್ಧ ಶೀಘ್ರವೇ ಕ್ರಮ ಜರುಗಿಸಲಾಗುವುದು. ಹಣ ದುರುಪಯೋಗವಾಗಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಸಚಿವ ಬಿ.ನಾಗೇಂದ್ರ ಸ್ಪಷ್ಟಪಡಿಸಿದ್ದಾರೆ.
3
+ ವಿಧಾನಸೌಧದ ತುರ್ತು ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ವಾಲೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಹಣವಿತ್ತು. 87 ಕೋಟಿ ರೂ.ಗಳನ್ನು ಯೂನಿಯನ್‌ ಬ್ಯಾಂಕ್‌ನ ನಿಗಮದ ಖಾತೆಯಿಂದ ಅದೇ ಬ್ಯಾಂಕಿನ ಮತ್ತೊಂದು ಶಾಖೆಯ ನಕಲಿ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಇದರ ಹಿಂದೆ ಬ್ಯಾಂಕ್‌ ಅಧಿಕಾರಿಗಳ ಪಾತ್ರ ಇರುವ ಶಂಕೆ ಇದೆ ಎಂದರು.
4
+ ವರ್ಗಾವಣೆಯಾಗಿದ್ದ ಹಣದ ಪೈಕಿ ನಿನ್ನೆಯವರೆಗೆ 28 ಕೋಟಿ ರೂ.ಗಳನ್ನು ಮರು ವಸೂಲಿ ಮಾಡಿ ನಿಗಮದ ಖಾತೆಯಲ್ಲಿಡಲಾಗಿದೆ. ಬಾಕಿ ಇರುವ ಸುಮಾರು 50 ಕೋಟಿ ರೂ.ಗಳನ್ನು ಇಂದು ಸಂಜೆಯೊಳಗಾಗಿ ಮರಳಿಸಬೇಕು, ಇಲ್ಲದೇ ಹೋದರೆ ಯೂನಿಯನ್‌ ಬ್ಯಾಂಕ್‌ನ ಅಧ್ಯಕ್ಷರು, ನಿರ್ದೇಶಕರು ಮತ್ತು ಸಿಬ್ಬಂದಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
5
+ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದನಾಭ್‌ ಅವರು ತಮ ಗಮನಕ್ಕೆ ಬರದೆ, ಸಹಿಯನ್ನು ನಕಲು ಮಾಡಿ ಹಣ ವರ್ಗಾವಣೆ ಮಾಡಲಾಗಿದೆ. ಸದರಿ ಹಣವನ್ನು ಸೋಮವಾರದೊಳಗೆ ವಸೂಲಿ ಮಾಡಿ ನಿಗಮದ ಬ್ಯಾಂಕ್‌ ಖಾತೆಗೆ ವಾಪಸ್‌‍ ತರಿಸಬೇಕು ಎಂದು ತಾವು ಸೂಚನೆ ನೀಡಿದ್ದು, ಅದರ ಬಳಿಕ ಭ್ರಷ್ಟಾಚಾರಿ ಚಂದ್ರಶೇಖರ್‌ ಆತಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ನಿಗಮದ ಹಣ ವರ್ಗಾವಣೆ ಆಗಿರುವ ಹಾಗೂ ಸಹಿಯನ್ನು ನಕಲು ಮಾಡಿರುವ ಬಗ್ಗೆ ದೂರು ನೀಡಲಾಗಿದ್ದು, ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಯುತ್ತಿದೆ.
6
+ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ಸಿಐಡಿ ತನಿಖೆಗೆ ಆದೇಶಿಸಲಾಗಿದೆ. ವರದಿಯ ಬಳಿಕ ಯಾರೇ ಆಗಿದ್ದರೂ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು. ವ್ಯವಸ್ಥಾಪಕ ನಿರ್ದೇಶಕರೂ ಸೇರಿದಂತೆ ಯಾರ ವಿರುದ್ಧವೂ ಮೃದು ಧೋರಣೆ ಅನುಸರಿಸುವುದಿಲ್ಲ ಎಂದು ತಿಳಿಸಿದರು.
7
+ ಇಷ್ಟು ಬೃಹತ್‌ ಮೊತ್ತದ ಹಣವನ್ನು ವರ್ಗಾವಣೆ ಮಾಡುವಾಗ ನನ್ನ ಗಮನಕ್ಕೆ ತರದೇ ಇರುವುದು ವ್ಯವಸ್ಥಾಪಕ ನಿರ್ದೇಶಕರ ಲೋಪವಾಗಿದೆ. ಈ ಕಾರಣಕ್ಕೆ ಅವರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ. ಪ್ರಕರಣದ ಬಗ್ಗೆ ನನಗೆ ಯಾವ ಮಾಹಿತಿಯೂ ಇರಲಿಲ್ಲ. ನಿಗಮ ಪ್ರತ್ಯೇಕವಾದ ಸಂಸ್ಥೆಯಾಗಿದೆ. ಹೀಗಾಗಿ ವಿರೋಧಪಕ್ಷಗಳು ಒತ್ತಾಯಿಸುವಂತೆ ತಾವು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಲ್ಲದೆ, ಬಿಜೆಪಿಯ ಮಾಜಿ ಸಚಿವ ಕೆ.ಎಸ್‌‍.ಈಶ್ವರಪ್ಪ ಅವ��� ಪ್ರಕರಣವೇ ಬೇರೆ, ನನ್ನ ಪ್ರಕರಣವೇ ಬೇರೆ ಎಂದು ಸಮರ್ಥಿಸಿಕೊಂಡರು.
8
+ ನಿಗಮದ ಉಳಿತಾಯ ಖಾತೆ ಲೆಕ್ಕಾಧಿಕಾರಿ ಚಂದ್ರಶೇಖರ್‌ ಅವರ ಹೆಸರಿನಲ್ಲಿರುತ್ತದೆ. ಅವರ ಮೇಲೆ ಯಾರು ಒತ್ತಡ ಹೇರಿ ಹಣ ವರ್ಗಾವಣೆ ಮಾಡಿಸಿದ್ದಾರೆ ಎಂದು ಗೊತ್ತಿಲ್ಲ.ಸಿಐಡಿ ಅಧಿಕಾರಿಗಳು ನಿಷ್ಪಕ್ಷಪಾತ ತನಿಖೆ ನಡೆಸಲಿದ್ದಾರೆ. ವ್ಯವಸ್ಥಾಪಕ ನಿರ್ದೇಶಕರ ಸಹಿಯ ಸಾಚಾತನದ ಬಗ್ಗೆ ಶೀಘ್ರವೇ ಎಫ್‌ಎಸ್‌‍ಎಲ್‌ ವರದಿ ಪಡೆಯಲಾಗುವುದು. ಆತಹತ್ಯೆ ಮಾಡಿಕೊಂಡ ಚಂದ್ರಶೇಖರ್‌, ನನ್ನ ಹೆಸರನ್ನು ಏಕೆ ಉಲ್ಲೇಖ ಮಾಡಿದ್ದಾರೋ ಗೊತ್ತಿಲ್ಲ. ನಾನು ಯಾವುದೇ ಆದೇಶವನ್ನೂ ಮೌಖಿಕವಾಗಿ ನೀಡಿಲ್ಲ. ಎಲ್ಲವನ್ನೂ ಲಿಖಿತವಾಗಿಯೇ ಸೂಚನೆ ನೀಡುತ್ತೇನೆ ಎಂದು ಸ್ಪಷ್ಟಪಡಿಸಿದರು.
eesanje/url_46_130_3.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಚಂದ್ರಶೇಖರನ್‌ ಆತಹತ್ಯೆ ಪ್ರಕರಣದಲ್ಲಿ ಇಡೀ ಸಚಿವ ಸಂಪುಟವೇ ಶಾಮೀಲಾಗಿದೆ : ಆರ್‌.ಅಶೋಕ್‌ ಗಂಭೀರ ಆರೋಪ
2
+ ಬೆಂಗಳೂರು, ಮೇ 28-ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಆತಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಇಡೀ ಸಚಿವ ಸಂಪುಟವೇ ಶಾಮೀಲಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ.
3
+ ಅವರ ಆತಹತ್ಯೆಗೆ ಪ್ರತಿಪಕ್ಷದ ನಾಯಕರ ಬಳಿ ಸಾಕ್ಷಿ ಇಲ್ಲವೇ, ದಾಖಲೆ ಇದೆ ಎಂದು ಕಾಂಗ್ರೆಸ್‌‍ ನಾಯಕರು ನಮನ್ನೇ ಕೇಳುತ್ತಿದ್ದರು. ಡೆತ್‌ನೋಟ್‌ನಲ್ಲಿ ಅನೇಕ ಅಂಶಗಳನ್ನು ಬರೆದಿಟ್ಟು ಚಂದ್ರಶೇಖರನ್‌ ಆತಹತ್ಯೆಗೆ ಶರಣಾಗಿದ್ದಾರೆ. ಇದಕ್ಕಿಂತ ಸಾಕ್ಷಿ ಬೇಕೇ? ಎಂದು ಅವರು ಪ್ರಶ್ನಿಸಿದರು.
4
+ ರಾಜ್ಯಸರ್ಕಾರದ ವೈಫಲ್ಯಗಳನ್ನು ಖಂಡಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ವತಿಯಿಂದ ಹಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅಶೋಕ್‌, ಒಬ್ಬ ಅಧಿಕಾರಿ ಪತ್ರ ಬರೆದು ಆತಹತ್ಯೆ ಮಾಡಿಕೊಂಡಿದ್ದಾನೆ. 187 ಕೋಟಿ ಲೂಟಿ ಮಾಡಿದ್ದಾರೆ ಅದು ಚೆಕ್‌ನಲ್ಲಿಯೇ ಲೂಟಿಯಾಗಿದೆ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. ಇದಕ್ಕಿಂತ ಸಾಕ್ಷಿ ಏನು ಬೇಕು ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
5
+ ಮಾಜಿ ಸಚಿವ ಕೆ.ಎಸ್‌‍.ಈಶ್ವರಪ್ಪ ಅವರ ಮೇಲೆ ಆರೋಪ ಕೇಳಿಬಂದಾಗ ನೈತಿಕ ಹೊಣೆ ಹೊತ್ತು ತಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಸಚಿವರೊಬ್ಬರ ಮೇಲೆ ಇದೇ ರೀತಿ ಆರೋಪ ಕೇಳಿಬಂದಿರುವುದರಿಂದ ಸಚಿವ ನಾಗೇಂದ್ರ ತಕ್ಷಣವೇ ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಇಲ್ಲವೇ ಮುಖ್ಯಮಂತ್ರಿಯವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದರು.
6
+ ಸರ್ಕಾರದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸಗಳೂ ನಡೆಯುತ್ತಿಲ್ಲ. ಲಂಚ ಕೊಟ್ಟರೆ ಮಾತ್ರ ಎಲ್ಲವೂ ಸರಾಗವಾಗಿ ನಡೆಯುತ್ತವೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತದೆ. ಅಧಿಕಾರಕ್ಕೆ ಬಂದ ನಂತರ ಒಂದೇ ಒಂದು ಕಿಲೋಮೀಟರ್‌ ರಸ್ತೆಗೆ ಡಾಂಬರು ಹಾಕಿಲ್ಲ, ಗುಂಡಿಗಳನ್ನು ಮುಚ್ಚಲು ಇವರ ಹಣೆಬರಹಕ್ಕೆ ಸಾಧ್ಯವಾಗಿಲ್ಲ, ಕರ್ನಾಟಕ ಮಾದರಿ ಇದೇನಾ? ಎಂದು ಪ್ರಶ್ನಿಸಿದರು.
7
+ ನಾವು ಏನಾದರೂ ಆರೋಪ ಮಾಡಿದರೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನಮ ಬ್ರದರ್‌ರ‍ಸ ಎಂದು ವ್ಯಂಗ್ಯವಾಡುತ್ತಾರೆ. ಈಗ ಬೆಂಗಳೂರನ್ನು ಹಾಳು ಮಾಡುತ್ತಿರುವುದು ಇದೇ ಬ್ರದರ್‌ರ‍ಸ ಅಕ್ಕಪಕ್ಕ ಇರುವವರು. ಬ್ರಾಂಡ್‌ ಬೆಂಗಳೂರು ಈಗ ಗಬ್ಬೆದ್ದು ನಾರುವ ಸ್ಥಿತಿಗೆ ಬಂದಿದೆ ಎಂದು ಹರಿಹಾಯ್ದರು.
8
+ ಮಾಜಿ ಸಚಿವ ಅಶ್ವತ್ಥ ನಾರಾಯಣ ಮಾತನಾಡಿ, ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿದೆ. ಬೆಂಗಳೂರು ಇರಲಿ, ಕರ್ನಾಟಕದಲ್ಲೂ ಅಭಿವೃದ್ಧಿ ಕಾರ್ಯ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಐದು ಗ್ಯಾರಂಟಿ ಕೊಟ್ಟ��ದ್ದೇವೆಂದು ಹೇಳುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.
9
+ ಐಟಿಬಿಟಿ ಮೂಲಕ ಬೆಂಗಳೂರು ಇಡೀ ವಿಶ್ವಕ್ಕೇ ಮಾದರಿಯಾಗಿತ್ತು. ಇಂದು ಅದೇ ಬೆಂಗಳೂರು ರಸ್ತೆಗಳಲ್ಲಿ ಗುಂಡಿಗಳಿಗೆ ಬಿದ್ದು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಒಂದು ಗುಂಡಿಯನ್ನೂ ಮುಚ್ಚಲು ಆಗದ ಸರ್ಕಾರ ಕರ್ನಾಟಕ ಮಾದರಿ ಬಗ್ಗೆ ಮಾತನಾಡುತ್ತಿರುವುದು ಐತಿಹಾಸಿಕ ವ್ಯಂಗ್ಯ ಎಂದು ಕುಹಕವಾಡಿದರು.
10
+ ಸರ್ಕಾರದಲ್ಲಿ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ಗುತ್ತಿಗೆದಾರರು ಕೆಲಸ ಮಾಡಲು ಮುಂದೆ ಬರುತ್ತಿಲ್ಲ. ಅವರ ರಕ್ತವನ್ನು ಹೀರುವ ಕೆಲಸ ಸರ್ಕಾರವೇ ಮಾಡುತ್ತಿದೆ. ಕಾಮಗಾರಿಗಳಿಗೆ ಹಣವನ್ನು ಬಿಡುಗಡೆ ಮಾಡುತ್ತಿಲ್ಲ. ಮಲಗಿರುವ ಸರ್ಕಾರವನ್ನು ಎಬ್ಬಿಸುವ ಕೆಲಸ ಬಿಜೆಪಿ ಮಾಡಲಿದೆ ಎಂದರು.
11
+ ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡದಿರುವುದೇ ಲೇಸು. ಪ್ರತಿ ಸ್ಟೇಷನ್‌ಗಳಿಗೂ ಇಂತಿಷ್ಟು ಮಾಮೂಲಿ ಕೊಡಬೇಕೆಂದು ನಿಗದಿಪಡಿಸಲಾಗಿದೆ. ಪೊಲೀಸರು ಎಲ್ಲೆಂದರಲ್ಲಿ ವಸೂಲಿ ಮಾಡುವ ಕಾಯಕದಲ್ಲಿ ತೊಡಗಿದ್ದಾರೆ. ಹೆಣ್ಣು ಮಕ್ಕಳು ಮನೆಯಿಂದ ಹೊರಹೋದರೆ ಸುರಕ್ಷಿತವಾಗಿ ವಾಪಸ್‌‍ ಬರುತ್ತೇವೆ ಎಂಬ ಖಾತರಿ ಇಲ್ಲ. ಮುಂದಿನ ದಿನಗಳಲ್ಲಿ ನಾವು ಸರ್ಕಾರದ ವಿರುದ್ಧ ಮತ್ತಷ್ಟು ಹೋರಾಟ ಮಾಡಲಿದ್ದೇವೆ ಎಂದು ಎಚ್ಚರಿಸಿದರು.ಮಾಜಿ ಸಚಿವ ಗೋಪಾಲಯ್ಯ ಮಾತನಾಡಿ, ಕಾಂಗ್ರೆಸ್‌‍ ಸರ್ಕಾರ ಇಲ್ಲಿನ ಸಮಸ್ಯೆಗಳನ್ನು ಇಟ್ಟುಕೊಂಡು ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿದೆ. ಸಾಲದ್ದಕ್ಕೆ ಸುಪ್ರೀಂಕೋರ್ಟ್‌ಗೂ ಹೋಗಿದ್ದರು.
12
+ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಿಗೆ ಎಷ್ಟೆಷ್ಟು ಅನುದಾನ ಕೊಟ್ಟಿದ್ದಾರೆ ಎಂದು ಶ್ವೇತಪತ್ರ ಹೊರಡಿಸಿ, ಕುಡಿಯುವ ನೀರಿಗೂ ತೊಂದರೆಯಾಗಿದೆ, ರಸ್ತೆಗಳು ಗುಂಡಿಮಯವಾಗಿವೆ, ಕಾಂಗ್ರೆಸ್‌‍ ಶಾಸಕರಿಗೆ ಮಾತ್ರ ಅನುದಾನ ಸಿಗುತ್ತದೆ, ನಮ ಕ್ಷೇತ್ರಕ್ಕೆ ನಯಾಪೈಸೆ ಹಣ ಬಿಡುಗಡೆಯಾಗಿಲ್ಲ ಎಂದು ಕಿಡಿಕಾರಿದರು.ಪ್ರತಿಭಟನೆಯಲ್ಲಿ ಶಾಸಕರಾದ ಎಸ್‌‍.ಆರ್‌.ವಿಶ್ವನಾಥ್‌, ಭೈರತಿ ಬಸವರಾಜು, ಸಿ.ಕೆ.ರಾಮಮೂರ್ತಿ, ಎಂ.ಕೃಷ್ಣಪ್ಪ ಮತ್ತಿತರರು ಭಾಗವಹಿಸಿದ್ದರು.
eesanje/url_46_130_4.txt ADDED
@@ -0,0 +1,5 @@
 
 
 
 
 
 
1
+ ವಿಧಾನಪರಿಷತ್‌ ಸದಸ್ಯತ್ವಕ್ಕಾಗಿ ರಮೇಶ್‌ಕುಮಾರ್‌ ಲಾಬಿ
2
+ ಬೆಂಗಳೂರು, ಮೇ 28-ವಿಧಾನಪರಿಷತ್‌ನ ಸದಸ್ಯ ಸ್ಥಾನಕ್ಕಾಗಿ ಮಾಜಿ ಸಚಿವ ರಮೇಶ್‌ಕುಮಾರ್‌ ಲಾಬಿ ನಡೆಸಿದ್ದಾರೆ. ಇಂದು ಬೆಳಿಗ್ಗೆ ಕೋಲಾರ ಜಿಲ್ಲೆಯ ಶಾಸಕರಾದ ಪ್ರದೀಪ್‌ ಈಶ್ವರ್‌, ಕೊತ್ತನೂರು ಮಂಜುನಾಥ್‌, ವಿಧಾನಪರಿಷತ್‌ ಸದಸ್ಯರಾದ ನಜೀರ್‌ ಅಹಮದ್‌, ಅನಿಲ್‌ಕುಮಾರ್‌ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಮನೆಗೆ ಭೇಟಿ ನೀಡಿದ ನಿಯೋಗ ರಮೇಶ್‌ಕುಮಾರ್‌ ಅವರನ್ನು ವಿಧಾನಪರಿಷತ್‌ ಸದಸ್ಯರನ್ನಾಗಿ ನೇಮಿಸಬೇಕು ಎಂದು ಒತ್ತಡ ಹೇರಿದೆ.
3
+ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದರೂ ರಮೇಶ್‌ಕುಮಾರ್‌ ಜಿಲ್ಲಾ ರಾಜಕಾರಣದಲ್ಲಿ ಪ್ರಬಲ ಹಿಡಿತ ಹೊಂದಿದ್ದಾರೆ. ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧಪಟ್ಟಂತೆ ಗಂಭೀರ ಚರ್ಚೆಗಳು ನಡೆಯುವ ವೇಳೆಯಲ್ಲಿ ಸಚಿವ ಕೆ.ಎಚ್‌.ಮುನಿಯಪ್ಪ ಅವರಿಗೆ ಪ್ರತಿತಂತ್ರ ರೂಪಿಸಿ ರಮೇಶ್‌ಕುಮಾರ್‌ ಯಶಸ್ವಿಯಾಗಿದ್ದರು.
4
+ ಮುನಿಯಪ್ಪ ತಮ್ಮ ಅಳಿಯ ದೊಡ್ಡಪೆದ್ದಣ್ಣ ಅವರಿಗೆ ಟಿಕೆಟ್‌ ಕೊಡಿಸಲು ನಡೆಸುತ್ತಿದ್ದ ಲಾಬಿಗೆ ಎದುರೇಟು ನೀಡಿದ್ದ ರಮೇಶ್‌ಕುಮಾರ್‌, ಶಾಸಕರು ಹಾಗೂ ಸಚಿವರಿಂದ ರಾಜೀನಾಮೆ ಕೊಡಿಸಲು ಮುಂದಾಗಿದ್ದರು.
5
+ ಕೊನೆಗೆ ಎರಡೂ ಬಣವನ್ನು ಸರಿದೂಗಿಸುವ ಸಲುವಾಗಿ ಹೈಕಮಾಂಡ್‌ ಬೇರೆಯ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕೈ ತೊಳೆದುಕೊಂಡಿದ್ದರು. ಈಗ ರಮೇಶ್‌ಕುಮಾರ್‌ ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೆ ತೀವ್ರ ಲಾಬಿ ನಡೆಸಲಾರಂಭಿಸಿದ್ದಾರೆ. ಮುನಿಯಪ್ಪ ಅವರ ಬಣ ಯಾವ ರೀತಿ ಪ್ರತಿಕ್ರಿಯಿಸಲಿದೆ ಎಂಬುದು ಕುತೂಹಲ ಕೆರಳಿಸಿದೆ.
eesanje/url_46_130_5.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಸಿಎಂ, ಡಿಸಿಎಂ ವಿರುದ್ಧ ಗೃಹಸಚಿವ ಪರಮೇಶ್ವರ ಅಸಮಾಧಾನ
2
+ ಬೆಂಗಳೂರು, ಮೇ 28-ವಿಧಾನಪರಿಷತ್‌ ಸದಸ್ಯರ ಆಯ್ಕೆ ವಿಚಾರದಲ್ಲಿ ಹಿರಿಯರು ಹಾಗೂ ಅನುಭವಿಗಳ ಜೊತೆ ಸಮಾಲೋಚನೆ ನಡೆಸದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ಏಕಾಏಕಿ ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ಅಸಮಾಧಾನ ಹೊರಹಾಕಿದ್ದಾರೆ.
3
+ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ರವರು ನಮ್ಮನ್ನೂ ಸೇರಿದಂತೆ ಪಕ್ಷದ ಹಿರಿಯರ ಜೊತೆ ಚರ್ಚೆ ಮಾಡಬೇಕು. ಪಕ್ಷ ಹಾಗೂ ಸರ್ಕಾರದಲ್ಲಿ ಕೆಲಸ ಮಾಡಿದವರ ಸಂಪರ್ಕದಲ್ಲಿರುವವರ ಬಗ್ಗೆ ಚರ್ಚೆ ಮಾಡಬೇಕು. ಇದರಿಂದ ಪಕ್ಷಕ್ಕೆ ಅನುಕೂಲವಾಗುತ್ತದೆ.
4
+ ಕೆಪಿಸಿಸಿ ಅಧ್ಯಕ್ಷರಾಗಿದ್ದವರು ಪಕ್ಷದಲ್ಲಿ ಅನೇಕ ಜವಾಬ್ದಾರಿ ನಿಭಾಯಿಸಿ ಅನುಭವಿಗಳಾಗಿರುವವರ ಸಲಹೆ ಸೂಚನೆಗಳನ್ನು ತೆಗೆದುಕೊಳ್ಳಬೇಕು. ಜಿಲ್ಲಾವಾರು, ಜಾತಿವಾರು ಹಾಗೂ ಪಕ್ಷ ಸಂಘಟನೆಯಲ್ಲಿ ಸಹಾಯ ಮಾಡಿದವರು ಯಾವ ಜಾತಿ ಕಾಂಗ್ರೆಸ್‌‍ ಜೊತೆ ದೃಢವಾಗಿ ನಿಂತಿದೆ ಎಂಬುದನ್ನು ನಮೊಂದಿಗೆ ಚರ್ಚೆ ಮಾಡಬೇಕಿದೆ. ಏಕಾಏಕಿ ಇಬ್ಬರೇ ಕುಳಿತು ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ ಎಂದರು.
5
+ ಬಿಜೆಪಿಯವರು ಯಾವುದೇ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಮಾಡಲಿ, ಅದು ಅವರ ಹಕ್ಕು. ಅವರ ಟೀಕೆಗಳಿಗೆ ನಾವು ಸರಿಯಾದ ಉತ್ತರ ನೀಡುತ್ತೇವೆ ಎಂದು ಹೇಳಿದರು.ಸರ್ಕಾರದ ಸಚಿವರು ಪಕ್ಷದ ಕಚೇರಿಗೆ ಭೇಟಿ ನೀಡಬೇಕು. ಜಿಲ್ಲಾ ಪ್ರವಾಸದಲ್ಲೂ ಜಿಲ್ಲಾ ಕಾಂಗ್ರೆಸ್‌‍ ಕಚೇರಿಗಳಿಗೆ ಭೇಟಿ ನೀಡಿ ಕಾರ್ಯಕರ್ತರ ಮುಖಂಡರ ಜೊತೆ ಚರ್ಚೆ ಮಾಡಬೇಕು ಎಂಬುದು ಹೊಸದಲ್ಲ. ಈ ಹಿಂದೆ ನಾನು ಎಂಟು ವರ್ಷ ಪಕ್ಷದ ಅಧ್ಯಕ್ಷನಾಗಿದ್ದಾಗ ಇದೇ ಕೆಲಸ ಮಾಡಿದ್ದೇನೆ. ಇತ್ತೀಚೆಗೆ ಸಚಿವರು ಪಕ್ಷದ ಕಚೇರಿಯತ್ತ ಬರುತ್ತಿರಲಿಲ್ಲ ಎಂಬುದನ್ನು ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಗಮನಿಸಿದ್ದಾರೆ. ನಿನ್ನೆ ಒಳ್ಳೆಯ ಸೂಚನೆ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
6
+ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಬೇಕೋ ಅಥವಾ ಬೇಡವೋ ಎಂಬುದನ್ನು ಪಕ್ಷದ ಹೈಕಮಾಂಡ್‌ ನಾಯಕರು ತೀರ್ಮಾನ ಮಾಡುತ್ತಾರೆ. ಡಿ.ಕೆ.ಶಿವಕುಮಾರ್‌ ಅವರನ್ನು ಬದಲಾಯಿಸಬೇಕು ಎಂದರೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇಲ್ಲವಾದರೆ ಮುಂದುವರೆಸುತ್ತಾರೆ. ನಾನು ಎಂಟು ವರ್ಷ ಅಧ್ಯಕ್ಷನಾಗಿದ್ದೆ. ಎರಡು ಬಾರಿ ಚರ್ಚೆಗಳು ಬಂದಾಗಲಾದರೂ ಬದಲಾವಣೆ ಮಾಡದೇ ಮುಂದುವರೆಸಲಾಗಿತ್ತು. ಈಗಲೂ ಅದೇ ರೀತಿ ಹೈಕಮಾಂಡ್‌ ನಿರ್ಧರಿಸುತ್ತಿದೆ.
7
+ ಈ ವಿಚಾರವನ್ನು ಡಿ.ಕೆ.ಶಿವಕುಮಾರ್‌ ಆಗಲೀ, ಮುಖ್ಯಮಂತ್ರಿ ಸಿದ್ದರಾಮಯ್ಯನವರಾಗಲೀ ತೀರ್ಮಾನ ಮಾಡುವುದಿಲ್ಲ. ಡಿ.ಕೆ.ಶಿವಕುಮಾರ್‌ರವರು ಉಪಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷರಾಗಿ ಎರಡೂ ಹುದ್ದೆಗಳನ್ನು ನಿಭಾಯಿಸಲು ಸಮರ್ಥರಿದ್ದಾರೆ. ಅದು ಹೊರೆಯಾಗಿದ್ದರೆ ಅದನ್���ು ಅವರು ಹೇಳುತ್ತಾರೆ. ಜವಾಬ್ದಾರಿ ಹೆಚ್ಚಾಗಿದೆ ಎಂದು ಹೈಕಮಾಂಡ್‌ಗೆ ಅನಿಸಿದರೆ ಆಗ ಬದಲಾವಣೆಯಾಗುವ ಸಂಭವವಿದೆ. ಆದರೆ ಯಾವುದೇ ನಿರ್ಧಾರವಾಗಲು ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
8
+ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಫೋಕ್ಸೊ ಕಾಯ್ದೆಯಡಿ ದೂರು ದಾಖಲಿಸಿದ್ದ ಮಹಿಳೆ ಕ್ಯಾನ್ಸರ್‌ನಿಂದಾಗಿ ವಾರದ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು, ನಿಧನರಾಗಿದ್ದಾರೆ ಎಂಬ ಮಾಹಿತಿ ಇದೆ. ಅನಂತರ ಯಾವೆಲ್ಲಾ ಬೆಳವಣಿಗೆಗಳಾಗಿವೆ ಎಂಬುದನ್ನು ಪರಿಶೀಲಿಸಲಾಗಿದೆ ಎಂದು ತಿಳಿಸಿದರು.
9
+ ತಮನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದರೆ ನಿಭಾಯಿಸಲು ಸಿದ್ಧ ಎಂದು ಸಚಿವ ಕೆ.ಎನ್‌.ರಾಜಣ್ಣ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ, ಪಕ್ಷಕ್ಕಾಗಿ ತ್ಯಾಗ ಮಾಡಲು ಬಹಳಷ್ಟು ಜನ ಇದ್ದಾರೆ. ಈ ಸಂಖ್ಯೆಯೇನು ಕಡಿಮೆಯಿಲ್ಲ. ರಾಜಣ್ಣ ಅವರು ಸಚಿವ ಸ್ಥಾನ ತ್ಯಾಗ ಮಾಡುವುದಾಗಿ ಹೇಳಿರುವುದು ಸಂತೋಷದ ವಿಚಾರ ಎಂದರು.
10
+ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಪಟ್ಟಂತೆ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಕಾನೂನು ಪ್ರಕಾರ ಕ್ರಮಗಳು ಚಾಲ್ತಿಯಲ್ಲಿವೆ. ಈಗಾಗಲೇ ಬ್ಲೂ ಕಾರ್ನರ್‌ ನೋಟೀಸ್‌‍ ಜಾರಿ ಮಾಡಲಾಗಿದೆ. ಎಸ್‌‍ಐಟಿ ಅಧಿಕಾರಿಗಳು ಸಿಆರ್‌ಪಿಸಿ 41 ಎ ನೋಟೀಸ್‌‍ ಜಾರಿ ಮಾಡಲಾಗಿದೆ. ವಿದೇಶದಲ್ಲಿ ಇರುವ ಅವರನ್ನು ಬಂಧಿಸಿ ಕರೆತರುವ ಎಲ್ಲಾ ಪ್ರಕ್ರಿಯೆಗಳು ಚಾಲನೆಯಲ್ಲಿದ್ದು, ವಿಳಂಬವಾಗಿಲ್ಲ ಎಂದು ಸಮರ್ಥಿಸಿಕೊಂಡರು.
11
+ ಸಂಸದರಾಗಿರುವ ಪ್ರಜ್ವಲ್‌ ರೇವಣ್ಣ ಅವರಿಗೆ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ಸೌಲಭ್ಯವಿದೆ. ಒಂದು ವೇಳೆ ಲೋಕಸಭಾ ಚುನಾವಣೆಯಲ್ಲಿ ಅವರು ಸೋಲು ಕಂಡರೆ ಅದು ತನ್ನಷ್ಟಕ್ಕೆ ತಾನೇ ರದ್ದುಗೊಳ್ಳುತ್ತದೆ. ಈ ನಡುವೆ ಕೇಂದ್ರ ಸರ್ಕಾರ ಕೂಡ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಗೊಳಿಸುವ ಪ್ರಕ್ರಿಯೆ ಆರಂಭಿಸಿದೆ. ಇದನ್ನೆಲ್ಲಾ ತಿಳಿದುಕೊಂಡು ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಮರಳುವುದಾಗಿ ಹೇಳಿರಬಹುದು. ನಾವು 31 ರವರೆಗೂ ಕಾದು ನೋಡುತ್ತೇವೆ. ಒಂದು ವೇಳೆ ಬರದೇ ಇದ್ದರೆ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಪ್ರಜ್ವಲ್‌ ರೇವಣ್ಣ ಅವರಿಗೆ ಶರಣಾಗುವ ಅವಕಾಶ ನೀಡುವುದುಅಥವಾ ಬಂಧಿಸುವ ಬಗ್ಗೆ ಎಸ್‌‍ಐಟಿ ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಪರಮೇಶ್ವರ ಹೇಳಿದರು.
eesanje/url_46_130_6.txt ADDED
@@ -0,0 +1,7 @@
 
 
 
 
 
 
 
 
1
+ ರೈತರಿಗೆ ಬರ ಪರಿಹಾರ ಬಿಡುಗಡೆ ಮಾಡದ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ
2
+ ಬೆಂಗಳೂರು, ಮೇ 28– ಕೇಂದ್ರದಿಂದ ರಾಜ್ಯಕ್ಕೆ ಬರಪರಿಹಾರ ಬಿಡುಗಡೆಯಾಗಿದ್ದರೂ ರೈತರ ಖಾತೆಗೆ ಜಮೆ ಮಾಡಲು ವಿಫಲವಾಗಿರುವ ರಾಜ್ಯಸರ್ಕಾರದ ವಿರುದ್ಧ ಬಿಜೆಪಿ ಮುಗಿಬಿದ್ದಿದೆ. ಈ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಪ್ರತ್ಯೇಕವಾಗಿ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
3
+ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಂಕಷ್ಟಿತ ರೈತರ ಗೋಳನ್ನು ಹೇಳುವವರು, ಕೇಳುವವರು ಯಾರೂ ಇಲ್ಲದ ಪರಿಸ್ಥಿತಿ ಉಂಟಾಗಿದೆ. ಕಳೆದ ಬಾರಿಯ ಮುಂಗಾರು ಹಾಗೂ ಹಿಂಗಾರು ವಿಲತೆಯಿಂದ ನೊಂದಿರುವ ರೈತರು ಸದ್ಯ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೈಯಲ್ಲಿ ಕಾಸಿಲ್ಲದೇ ಬಿತ್ತನೆ ಕಾರ್ಯ ಕೈಗೊಳ್ಳಲು ಆಗದ ಪರಿಸ್ಥಿತಿ ಉದ್ಭವಿಸಿದೆ ಎಂದು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
4
+ ಇಂತಹ ಕಷ್ಟದ ಸಮಯದಲ್ಲಾದರೂ ಸರ್ಕಾರ ನಿಗಽಪಡಿಸಿರುವ ಬರ ಪರಿಹಾರವೂ ರೈತನ ಖಾತೆಗೆ ಜಮೆಯಾಗುತ್ತಿಲ್ಲ, ಬೆಳೆ ವಿಮೆ ನಗದೀಕರಣದ ಪರಿಸ್ಥಿತಿಯೂ ಇದೇ ಆಗಿದೆ ಎಂದು ಕಿಡಿಕಾರಿದ್ದಾರೆ. ಕಾಂಗ್ರೆಸ್‌‍ ಸರ್ಕಾರ ಬಂದು ಒಂದು ವರ್ಷದ ಅವಧಿಯಿಂದಲೂ ರೈತರು ಒಂದಲ್ಲ ಒಂದು ಸಂಕಷ್ಟಕ್ಕೆ ಸಿಲುಕುತ್ತಿದ್ದರೂ, ಕೇವಲ ಮತ ಬ್ಯಾಂಕ್‌ ರಾಜಕಾರಣವನ್ನು ಹೊರತುಪಡಿಸಿ ಈ ಸರ್ಕಾರ ಯಾವುದೇ ಜನಪರ ಕಾರ್ಯಗಳಿಗೂ ಕಿಂಚಿತ್ತು ಗಮನ ಹರಿಸಲಿಲ್ಲ. ಅನ್ನದಾತ ರೈತನ ನೆರವಿಗೆ ಈಗಲಾದರೂ ಧಾವಿಸಿ ಬಂದು ತಾಂತ್ರಿಕ ತೊಡಕಿನ ಹೆಸರಿನಲ್ಲಿ ಹಣ ಕೈ ಸೇರದೇ ಹತಾಶೆಯ ಸ್ಥಿತಿಯಲ್ಲಿರುವ ರೈತನಿಗೆ ನೆರವಾಗಲಿ ಎಂದು ಮನವಿ ಮಾಡಿದ್ದಾರೆ.
5
+ ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ನೀಡಿರುವ ನಿರ್ದೇಶನಕ್ಕೂ ಕಿಮತ್ತಿಲ್ಲದ ಪರಿಸ್ಥಿತಿ ನಿರ್ಮಾಣವಾಗಿರುವುದನ್ನು ನೋಡಿದರೆ ಬ್ಯಾಂಕಿಂಗ್‌ ವ್ಯವಸ್ಥೆಯ ಮೇಲೆ ಹಿಡಿತ ಸಾಧಿಸಲಾಗದ ಅಸಮರ್ಥ ಆಡಳಿತದ ಅವ್ಯವಸ್ಥೆಯನ್ನು ಎತ್ತಿ ತೋರಿಸುತ್ತಿದೆ ಎಂದು ವಿಜಯೇಂದ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
6
+ ಮತ್ತೊಂದು ಪೋಸ್ಟ್‌ನಲ್ಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ರವರು, ಉತ್ತಮ ಮಳೆಯಾಗುತ್ತಿರುವ ಈ ಸಂದರ್ಭದಲ್ಲಾದರೂ ರೈತರ ನೆರವಿಗೆ ಕಾಂಗ್ರೆಸ್‌‍ ಸರ್ಕಾರ ಬಾರದಿದ್ದಲ್ಲಿ ಈ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಮೂರೂ ಇಲ್ಲವೆಂದು ಜನತೆ ತೀರ್ಮಾನಿಸುತ್ತಾರೆ ಎಂದು ಎಚ್ಚರಿಸಿದ್ದಾರೆ.
7
+ ದೇವರು ಕೊಟ್ಟರೂ ಪೂಜಾರಿ ಕೊಡಲಿಲ್ಲ ಎನ್ನುವಂತೆ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ರೈತರ ಬರ ಪರಿಹಾರಕ್ಕಾಗಿ 3,454 ಕೋಟಿ ರೂಪಾಯಿ ಬಿಡುಗಡೆ ಮಾಡಿ ಒಂದು ತಿಂಗಳ ಕಳೆದರೂ ಅದನ್ನು ರೈತರ ಬ್ಯಾಂಕ್‌ ಖಾತೆಗೆ ಹಾಕದೆ ಸತಾಯಿಸುತ್ತಿದೆ ಈ ರೈತ ವಿರೋಧಿ ಕಾಂಗ್ರೆಸ್‌‍ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ. ಒಟ್ಟಿನಲ್ಲಿ ಈ ದರಿದ್ರ ಕಾಂಗ್ರೆಸ್‌‍ ಸರ್ಕಾರ ತೊಲಗುವವರೆಗೂ ನಾಡಿನ ಅನ್ನದಾತರಿಗೆ ನೆಮದಿಯಿಲ್ಲ ಎಂದು ಅಶೋಕ್‌ ಟೀಕಾಪ್ರಹಾರ ನಡೆಸಿದ್ದಾರೆ.
eesanje/url_46_130_7.txt ADDED
@@ -0,0 +1,6 @@
 
 
 
 
 
 
 
1
+ ಕಿರಿಕ್ ಕೋತಿ : ಹುಳಿಯಾರಿನಲ್ಲಿ ಒಂಟಿ ವಾನರನ ಉಪಟಳ
2
+ ಹುಳಿಯಾರು, ಮೇ 28-ಪಟ್ಟಣದಲ್ಲಿ ಒಂದು ವಾರದಿಂದ ಒಂಟಿ ವಾನರನ ಉಪಟಳ ಹೆಚ್ಚಾಗಿದ್ದು, ಈಗಾಗಲೇ ಐದಾರು ಮಂದಿಯನ್ನು ಕಡಿದಿರುವುದರಿಂದ ಗ್ರಾಮಸ್ಥರು ಭಯಬೀತರಾಗಿದ್ದಾರೆ.
3
+ ಅರಣ್ಯ ಇಲಾಖೆಯವರು ಕೋತಿ ಸೆರೆಯಿಡಿದು ನಿರ್ಭಯವಾಗಿ ಜನ ಓಡಾಡುವಂತೆ ಮಾಡಬೇಕಿದೆ ಎಂಬುದು ಸ್ಥಳೀಯರ ಒತ್ತಾಯವಾಗಿದೆ.ಒಂದು ವಾರದ ಹಿಂದೆ ಪಟ್ಟಣಕ್ಕೆ ಬಂದಿರುವ ಈ ಕೋತಿಯ ಕಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
4
+ ಮೊದಮೊದಲು ಅಂಗಡಿಗಳಿಗೆ ನುಗ್ಗುತ್ತಿದ್ದ ಕೋತಿ ಇಷ್ಟ ಬಂದ ಪದಾರ್ಥಗಳನ್ನು ತಿಂದು ಹೋಗುತ್ತಿತ್ತು. ಆದರೆ ಈಗ ಹೋಟೆಲ್‌, ಅಂಗಡಿಗಳಿಗೆ ನುಗ್ಗಿ ದಾಂದಲೆ ಮಾಡುತ್ತಿದೆ. ಸಿಕ್ಕಿದನ್ನೆಲ್ಲಾ ಕಿತ್ತು ಚೆಲ್ಲಾಡಿ ಅಪಾರ ನಷ್ಟ ಉಂಟುಮಾಡುತ್ತಿದೆ. ಕೋತಿಗಳ ಈ ಕಾಟದಿಂದಾಗಿ ಜನರು ಹೈರಾಣಾಗಿ ಹೋಗಿದ್ದಾರೆ.
5
+ ಬಸ್‌‍ ನಿಲ್ದಾಣದಲ್ಲಂತೂ ಪ್ರಾಯಾಣಿಕರ ನೆಮದಿ ಕಿತ್ತುಕೊಳ್ಳುತ್ತಿದೆ. ಬಸ್‌‍ ಒಳಗೆ ಹತ್ತಿ ಎಲ್ಲರನ್ನೂ ಗಾಭರಿ ಮಾಡುತ್ತಿದೆ. ಪ್ರಾಯಾಣಿಕರ ಕೈ ಚೀಲ ಕಿತ್ತುಕೊಳ್ಳುವುದು, ಮಕ್ಕಳ ಮೇಲೆ ಎಗರುವುದು ಹೀಗೆ ಈ ಕಪಿಯ ಚೇಷ್ಟೆಯಿಂದಾಗಿ ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದಾರೆ.ಮನೆಯ ಮುಂದೆ ಒಣಹಾಕಿದ ದವಸ-ಧಾನ್ಯಗಳೆಲ್ಲ ಕೋತಿ ಪಾಲಾಗುತ್ತಿವೆ.
6
+ ಬಟ್ಟೆಗಳನ್ನು ಎತ್ತಿಕೊಂಡು ಹೋಗುತ್ತಿವೆ. ಮನೆಯ ಮೇಲೆ ಕೋತಿಗಳು ಮಾಡುತ್ತಿರುವ ದಾಂಧಲೆಯಿಂದಾಗಿ ಜನರು ರೋಸಿ ಹೋಗಿದ್ದಾರೆ. ಕೋತಿಯ ಕಾಟದಿಂದ ಮುಕ್ತಿ ಕೊಡಿಸುವಂತೆ ಅರಣ್ಯ ಇಲಾಖೆಗೆ ಹುಳಿಯಾರು ಜನ ಮನವಿ ಮಾಡಿದ್ದಾರೆ.
eesanje/url_46_130_8.txt ADDED
@@ -0,0 +1,6 @@
 
 
 
 
 
 
 
1
+ : ಒಂದು ತಿಂಗಳ ನಂತರ ವಿಡಿಯೋ ಮೂಲಕ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ
2
+ ಬೆಂಗಳೂರು, ಮೇ 27-ಕರ್ನಾಟಕ ಮಾತ್ರವಲ್ಲದೆ, ದೇಶಾದ್ಯಂತ ವಿವಾದದ ಬಿರುಗಾಳಿಯನ್ನೇ ಎಬ್ಬಿಸಿದ್ದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಾಸನ ಸಂಸದ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಒಂದು ತಿಂಗಳ ನಂತರ ಪ್ರತ್ಯಕ್ಷವಾಗಿದ್ದು, ಶುಕ್ರವಾರ ಎಸ್‍ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದ್ದಾಗೆ ತಿಳಿಸಿದ್ದಾರೆ.
3
+ ಈ ಸಂಬಂಧದ ಪ್ರಕರಣ ಹೊರಬಿದ್ದ ನಂತರ ಬಂಧನದ ಬೀತಿಯಿಂದ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಇಂದು ಇದ್ದಕ್ಕಿದ್ದಂತೆ ವಿಡಿಯೋ ಒಂದನ್ನು ಹೊರಬಿಟ್ಟಿದ್ದು, ತಾವು ಮೇ 31ರಂದು ಸ್ವದೇಶಕ್ಕೆ ಆಗಮಿಸಿ ಎಸ್‍ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ.
4
+ ಅಜ್ಞಾತ ಸ್ಥಳದಿಂದ 2 ನಿಮಿಷ 57 ಸೆಕೆಂಡ್‍ಗಳ ವಿಡಿಯೋ ಮಾಡಿದ್ದು, ಎಲ್ಲಿಂದ ಈ ವಿಡಿಯೋ ಮಾಡಿ ಬಿಡುಗಡೆ ಮಾಡಿದ್ದಾರೆ ಎಂಬುದು ರಹಸ್ಯವಾಗಿಯೇ ಉಳಿದಿದೆ. ಇನ್ನೂ ತಮ್ಮ ವಿಡಿಯೋದಲ್ಲಿ ತಮ್ಮ ಕುಟುಂಬದ ವಿರುದ್ಧ ರಾಜಕೀಯ ಷಡ್ಯಂತರ ನಡೆಯುತ್ತಿದೆ. ಕಾನೂನು ಮೂಲಕ ಹೋರಾಟ ನಡೆಸುತ್ತೇನೆ. ನಾನು ಯಾವುದೇ ತಪ್ಪು ಮಾಡಿಲ್ಲವೆಂದು ಸಮರ್ಥಿಸಿಕೊಂಡಿದ್ದಾರೆ.
5
+ ಮುಂದುವರೆದು ತಂದೆ, ತಾಯಿ, ತಾತ ಮತ್ತು ಕುಮಾರಣ್ಣನ ಕ್ಷಮೆ ಕೇಳಿದ್ದಾರೆ. ಅಲ್ಲದೆ, ಪಕ್ಷದ ಕಾರ್ಯಕರ್ತರ ಹಾಗೂ ನಾಡಿನ ಜನರ ಕ್ಷಮೆ ಯಾಚಿಸಿದ್ದಾರೆ.ವಿದೇಶಕ್ಕೆ ಹೋಗುವುದು ಪೂರ್ವ ನಿರ್ಧಾರವಾಗಿತ್ತು. ನಾನು ಪ್ರಯಾಣ ಕೈಗೊಂಡಾಗ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ ಎಂದಿದ್ದಾರೆ.
6
+ ವಿದೇಶದಲ್ಲಿ ಯೂ ಟ್ಯೂಬ್ ನ್ಯೂಸ್ ನೋಡಿದಾಗ ನನ್ನ ಮೇಲೆ ಗಂಭೀರ ಆರೋಪ ಕೇಳಿಬಂದಿರುವುದು ಗೊತ್ತಾಯಿತು. ಎಸ್‍ಐಟಿ ರಚನೆ ಮಾಡಿ ನೋಟಿಸ್ ನೀಡಿರುವುದು ತಿಳಿಯಿತು. ನಾನು ರಾಜಕೀಯವಾಗಿ ಬೆಳೆಯಬಾರದು ಎಂಬ ಕಾರಣಕ್ಕೆ ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ ಎಂಬ ವಿಡಿಯೋ ಸಂದೇಶ ರವಾನಿಸಿದ್ದಾರೆ.
eesanje/url_46_130_9.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ನೆಹರೂ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮೋದಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು, ಮೇ 27-ವಿಕಸಿತ ಭಾರತ ಮಾಡುವುದಾಗಿ ಹೇಳುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಕಳೆದ 10 ವರ್ಷಗಳಲ್ಲಿ ಒಂದೇ ಒಂದು ಸಾರ್ವಜನಿಕ ಉದ್ಯಮವನ್ನೂ ಆರಂಭಿಸಿಲ್ಲ. ಇರುವ ಸರ್ಕಾರಿ ಆಸ್ತಿಗಳನ್ನೇ ಮಾರಾಟ ಮಾಡಿಕೊಂಡರು. ಈಗ ತಮ್ಮನ್ನು ತಾವು ದೇವರು ಕಳುಹಿಸಿದ ವ್ಯಕ್ತಿ ಎಂದು ಬಿಂಬಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
3
+ ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಮಾಜಿ ಪ್ರಧಾನಿ ಪಂಡಿತ್‌ ಜವಹರಲಾಲ್‌ ನೆಹರೂ ಅವರ ಪುಣ್ಯಸರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೋದಿಯೇನು ದೇವರ ಅವತಾರವೇ? ಎಂದು ಸಿಡಿಮಿಡಿಯಾದರು.
4
+ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್‌ ನೆಹರೂ. ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿ ಮಾಡಲು ಮುಂದಾದರು. 17 ವರ್ಷಗಳ ದೀರ್ಘ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಭವಿಷ್ಯದ ಭಾರತವನ್ನು ಕಟ್ಟುವ ಕೆಲಸ ಮಾಡಿದರು. ಇಡೀ ವಿಶ್ವದಲ್ಲಿ ಶಾಂತಿ ನೆಲೆಸಬೇಕು ಎನ್ನುವ ಬದ್ಧತೆ ಉಳ್ಳವರಾಗಿದ್ದರು. ಆಗ ಮಾತ್ರ ವಿಶ್ವದ ಅಭಿವೃದ್ಧಿ ಸಾಧ್ಯ ಎನ್ನುವ ನಂಬಿಕೆ ಹೊಂದಿದ್ದರು ಎಂದು ವಿವರಿಸಿದರು.
5
+ ನೆಹರೂ ಇತಿಹಾಸಕಾರರೂ ಆಗಿದ್ದರು. ದೇಶದ ಇತಿಹಾಸ ಗೊತ್ತಿದ್ದರಿಂದಲೇ ಅವರು ದೇಶದ ಭವಿಷ್ಯ ರೂಪಿಸಿದರು. ಅಂಬೇಡ್ಕರ್‌ಅವರ ಮಾತಿನಂತೆ, ಇತಿಹಾಸ ಗೊತ್ತಿದ್ದವರು ಮಾತ್ರ ದೇಶದ ಭವಿಷ್ಯ ರೂಪಿಸಬಲ್ಲರು. ನೆಹರೂ ಈ ಕೆಲಸ ಮಾಡಿ ದೇಶವನ್ನು ಕಟ್ಟಿ ಬೆಳೆಸಿದರು ಎಂದು ಉದಾಹರಣೆಗಳ ಸಮೇತ ವಿವರಿಸಿದರು.
6
+ ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಅನಕ್ಷರತೆ, ಬಡತನ, ನಿರುದ್ಯೋಗ ವ್ಯಾಪಕವಾಗಿತ್ತು. ಆರ್ಥಿಕ ಚೈತನ್ಯ ಇರಲಿಲ್ಲ. ದೇಶದ ಐದೂವರೆ ಲಕ್ಷ ಹಳ್ಳಿಗಳು ಸಂಕಷ್ಟದಲ್ಲಿದ್ದವು. ಈ ಎಲ್ಲದಕ್ಕೂ ಪರಿಹಾರವಾಗಿ ಪಂಚವಾರ್ಷಿಕ ಯೋಜನೆಗಳನ್ನು ರೂಪಿಸಿ ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಮೇಲೆತ್ತಲು ಜೀವನದುದ್ದಕ್ಕೂ ಶ್ರಮಿಸಿದರು. ದೇಶವನ್ನು ವೈಜ್ಞಾನಿಕ, ಆಧುನಿಕತೆ ಆಧಾರದಲ್ಲಿ ನಿರ್ಮಿಸುತ್ತಾ ಭಾರತೀಯರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ನಿರಂತರ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದರು ಎಂದು ವಿವರಿಸಿದರು. ಮೋದಿಯವರು ಯೋಜನಾ ಆಯೋಗವನ್ನು ಬದಲಾವಣೆ ಮಾಡಿ ನೀತಿ ಆಯೋಗ ಮಾಡಿದ್ದಾರೆ. ಇದರಲ್ಲಿ ಏನೂ ಇಲ್ಲ. ಹಿಂದೆ ಯೋಜನಾ ಆಯೋಗವಿದ್ದಾಗ ರಾಜ್ಯದ ಬಜೆಟ್‌ನ ಗಾತ್ರ, ಸಂಪನೂಲ ಸೇರಿದಂತೆ ಹಲವು ವಿಚಾರಗಳನ್ನು ಚರ್ಚಿಸಿ ಅಂಗೀಕಾರ ನೀಡುತ್ತಿತ್ತು, ಬಳಿಕ ಅನುಷ್ಠಾನಗೊಳ್ಳುತ್ತಿತ್ತು ಎಂದು ವಿವರಿಸಿದರು.
7
+ ಭಾರತವನ್ನು ಇಡೀ ವಿಶ್ವದಲ್ಲಿ ಅತಿದೊಡ್ಡ ಮತ್ತು ಸದೃಢ ಪ್ರಜಾಪ್ರಭುತ್ವ ದೇಶವನ್ನಾಗಿ ರೂಪಿಸಿದ್ದು ನೆ���ರೂ. ದೇಶದಲ್ಲಿರುವ ಬಹುತೇಕ ಅಣೆಕಟ್ಟು, ಶಿಕ್ಷಣ ಸಂಸ್ಥೆಗಳು, ಸಾರ್ವಜನಿಕ ಉದ್ಯಮಗಳು ನಿರ್ಮಾಣಗೊಂಡಿದ್ದು, ನೆಹರೂ ಕಾಲದಲ್ಲಿ. ಕಾಂಗ್ರೆಸ್‌‍ ಏನೂ ಮಾಡಿಲ್ಲ ಎನ್ನುವ ನರೇಂದ್ರ ಮೋದಿ ಇವತ್ತಿನವರೆಗೂ ಒಂದೇ ಒಂದು ಅಣೆಕಟ್ಟನ್ನಾಗಲೀ, ಸಾರ್ವಜನಿಕ ಉದ್ದಿಮೆಯನ್ನಾಗಲೀ ಸ್ಥಾಪಿಸಲಿಲ್ಲ. ಇವರಿಗೆ ನೆಹರೂ ಬಗ್ಗೆ ಮಾತನಾಡುವ ಯೋಗ್ಯತೆ ಏನಿದೆ? ಎಂದು ಪ್ರಶ್ನಿಸಿದರು.
8
+ ಮೋದಿಗೆ ಸೋಲು ಖಚಿತವಾಗಿದೆ :ಪ್ರಧಾನಿ ಮೋದಿಯವರಿಗೆ ಬಿಜೆಪಿ, ಎನ್‌ ಡಿ ಎ ಸೋಲು ಖಚಿತವಾಗಿ ಗೊತ್ತಾಗಿದೆ. ಹತಾಶರಾಗಿ ವಿಚಿತ್ರ ವಿಚಿತ್ರವಾಗಿ ಮಾತಾಡುತ್ತಿದ್ದಾರೆ. ದೇವರೇ ನನ್ನನ್ನು ಕಳುಹಿಸಿದ್ದು ಎಂದು ಮಾತಾಡುತ್ತಿದ್ದಾರೆ. ಅವರ ಸೋಲು ಮೋದಿಯವರನ್ನು ಈ ಮಟ್ಟಕ್ಕೆ ಮಾಡಿಟ್ಟಿದೆ ಎಂದು ವ್ಯಂಗ್ಯವಾಡಿದರು.
9
+ ನಮ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ದೇಶವನ್ನು ಮಾರ್ಪಡಿಸಲು ಬಿಜೆಪಿ ಮತ್ತು ಮೋದಿ ಯತ್ನಿಸುತ್ತಿದ್ದು ಇದಕ್ಕೆ ಭಾರತೀಯರು ಅವಕಾಶ ಕೊಡುವುದಿಲ್ಲ ಎಂದರು. ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಭಾರತ ಬಹುತ್ವದ ದೇಶ. ಈ ಬಹುತ್ವದ ದೇಶವನ್ನು ನಾಶ ಮಾಡಿ ಬಿಜೆಪಿ ಮೂಗಿನ ನೇರದ ಹಿಂದೂ ದೇಶ ಮಾಡುವುದು ಅಸಾಧ್ಯ. ಈ ದೇಶ ಪ್ರತಿಯೊಬ್ಬ ಭಾರತೀಯರಿಗೆ ಸೇರಿದ್ದು ಎಂದರು.
10
+ ತಮನ್ನು ತೀವ್ರವಾಗಿ ಟೀಕಿಸುತ್ತಿದ್ದ ಲೋಹಿಯಾ ಅವರ ಮಾತನ್ನು ಪಾರ್ಲಿಮೆಂಟಿನಲ್ಲಿ ಕುಳಿತು ನೆಹರೂ ಆಲಿಸುತ್ತಿದ್ದರು. ಸ್ಪಂದಿಸುತ್ತಿದ್ದರು. ಇದು ನೆಹರೂ ರೂಢಿಸಿಕೊಂಡಿದ್ದ ರಾಜಕೀಯ ಮೌಲ್ಯ ಎಂದರು. ನಮ ಸರ್ಕಾರದ ಸಾಧನೆಗಳ ಕುರಿತು ಬಿಜೆಪಿ ಸರಣಿ ಸುಳ್ಳುಗಳನ್ನು ಹೇಳುತ್ತಿದೆ. 28 ಗೆಲ್ಲುತ್ತೇವೆ ಎನ್ನುತ್ತಿದ್ದ ಬಿಜೆಪಿಗೆ ಈಗ ಸತ್ಯ ಗೊತ್ತಾಗಿದೆ.
11
+ ಕಾಂಗ್ರೆಸ್‌‍ ಕಾರ್ಯಕರ್ತರ ಶ್ರಮದಿಂದ ಲೋಕಸಭೆಯಲ್ಲಿ ಕಾಂಗ್ರೆಸ್‌‍ 15-20 ಸ್ಥಾನ ಗೆದ್ದೇ ಗೆಲ್ಲುತ್ತದೆ. 28 ಕ್ಕೆ 28 ಗೆಲ್ಲುತ್ತೇವೆ ಎನ್ನುತ್ತಿದ್ದ ಬಿಜೆಪಿ ಬಾಯಿ ಬಂದಾಗಿದೆ. ಇಡೀ ದೇಶದಲ್ಲಿ ಬಿಜೆಪಿ ತಿರಸ್ಕೃತಗೊಂಡಿದೆ ಎಂದರು.
12
+ ದಿನೇಶ್‌ ಗುಂಡೂರಾವ್‌ ಮಾತನಾಡಿ, ಕಾಂಗ್ರೆಸ್‌‍ ಪಕ್ಷವನ್ನು ಮುಳುಗಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ನೆಹರೂ ಬಗ್ಗೆ ಹಗುರವಾಗಿ ಟೀಕಿಸುತ್ತಾರೆ. ಬ್ರಿಟಿಷರ ಜೊತೆ ಕೈ ಜೋಡಿಸಿದ ಅವರು, ನೆಹರು ಬಗ್ಗೆ ಮಾತನಾಡುವ ನೈತಿಕತೆ ಹೊಂದಿಲ್ಲ ಎಂದರು.ಬಿ.ಕೆ.ಹರಿಪ್ರಸಾದ್‌ ಮಾತನಾಡಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್‌, ಮಂಜುನಾಥ್‌ ಭಂಡಾರಿ, ಮಾಜಿ ಸಚಿವೆ ರಾಣಿ ಸತೀಶ್‌, ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
eesanje/url_46_131_1.txt ADDED
@@ -0,0 +1,6 @@
 
 
 
 
 
 
 
1
+ ಪ್ರಧಾನಿಯವರ ಆತಿಥ್ಯದ ಬಾಕಿ ವೆಚ್ಚ ಭರಿಸಲು ಸರ್ಕಾರ ಸಿದ್ಧ : ಖಂಡ್ರೆ
2
+ ಬೆಂಗಳೂರು, ಮೇ 27-ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ 2023ರ ಏಪ್ರಿಲ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್‌ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
3
+ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ, ರಾಷ್ಟ್ರಪತಿ ಮೊದಲಾದ ಗಣ್ಯರು ಆಗಮಿಸಿದಾಗ ಆತಿಥ್ಯ ನೀಡುವುದು ರಾಜ್ಯ ಸರ್ಕಾರದ ಸಂಪ್ರದಾಯವಾಗುತ್ತದೆ.
4
+ ಆದರೆ ಕಳೆದ ವರ್ಷ ಏಪ್ರಿಲ್‌ನಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿತ್ತು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ರಾಜ್ಯ ಸರ್ಕಾರ ಈ ಕಾರ್ಯಕ್ರಮದ ಆಯೋಜನೆಯಲ್ಲಿ ಯಾವುದೇ ಪಾತ್ರ ವಹಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಉಂಟಾಗಿರುವ ಗೊಂದಲ ನಿವಾರಿಸಲು ರಾಜ್ಯ ಸರ್ಕಾರವೇ ಮೈಸೂರಿನ ರಾಡಿಸನ್‌ ಬ್ಲೂ ಹೊಟೆಲ್‌ ಬಿಲ್‌ ಬಾಕಿ ಪಾವತಿಸಲು ನಿರ್ಧರಿಸಿದೆ ಎಂದು ತಿಳಿಸಿದರು.
5
+ 2023ರ ಏಪ್ರಿಲ್‌ನಲ್ಲಿ ನಡೆದ ಕಾರ್ಯಕ್ರಮವನ್ನು ಸಂಪೂರ್ಣವಾಗಿ ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರವೇ ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಒಟ್ಟಾರೆ 6 ಕೋಟಿ 33 ಲಕ್ಷ ರೂ. ವೆಚ್ಚವಾಗಿದ್ದು, ಎನ್‌.ಟಿ.ಸಿ.ಎ. ರಾಜ್ಯಕ್ಕೆ 3 ಕೋಟಿ ರೂ. ಪಾವತಿಸಿದೆ.
6
+ ಉಳಿದ ಹಣ ಪಾವತಿಸಿಲ್ಲ. ಹೀಗಾಗಿ ಮೈಸೂರಿನ ರಾಡಿಸನ್‌ ಬ್ಲೂ ಹೊಟೆಲ್‌ನವರು ಕಾರ್ಯಕ್ರಮದ ಆಯೋಜನೆಗೆ ಸ್ಥಳೀಯ ಬೆಂಬಲ ನೀಡಿದ್ದ ಅರಣ್ಯ ಇಲಾಖೆಗೆ ಪತ್ರ ಬರೆದಿದ್ದಾರೆ ಎಂದರು. ರಾಜ್ಯ ಸರ್ಕಾರವೇ ಆತಿಥ್ಯದ 80 ಲಕ್ಷ ರೂ. ಹಣ ಪಾವತಿಸುವ ಮೂಲಕ ವಿವಾದಕ್ಕೆ ತೆರೆ ಎಳೆಯಲಿದೆ ಎಂದು ತಿಳಿಸಿದರು.
eesanje/url_46_131_10.txt ADDED
@@ -0,0 +1,7 @@
 
 
 
 
 
 
 
 
1
+ ಚನ್ನಗಿರಿ ಪೊಲೀಸ್‌‍ ಠಾಣೆ ಮೇಲೆ ದಾಳಿಗೆ ಸಂಬಂಧಿಸಿದಂತೆ 25 ಜನರ ಬಂಧನ
2
+ ದಾವಣಗೆರೆ , ಮೇ 27-ಚನ್ನಗಿರಿ ಪೊಲೀಸ್‌‍ ಠಾಣೆ ಮೇಲೆ ಉದ್ರಿಕ್ತರ ಗುಂಪು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಕನಿಷ್ಠ 25 ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
3
+ ಹಿಂಸಾತ್ಮಕ ದಾಳಿಯಿಂದ ಪೊಲೀಸ್‌‍ ಠಾಣೆಯನ್ನು ಧ್ವಂಸಗೊಳಿಸಲಾಗಿದೆ,ಹಲವಾರು ವಾಹನಗಳನ್ನು ಹಾನಿಗೊಳಿಸಿದೆ. ಘಟನೆಯಲ್ಲಿ ಕನಿಷ್ಠ 11 ಪೊಲೀಸ್‌‍ ಸಿಬ್ಬಂದಿ ಗಾಯಗೊಂಡಿದ್ದಾರೆ. ಇದೀಗ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ ವಹಿಸಲಾಗಿದೆ.
4
+ ಘಟನೆಗೆ ಸಂಭಂಧಿಸಿದಂತೆ 25 ಜನರನ್ನು ಬಂಧಿಸಲಾಗಿದೆ ಐಪಿಸಿ ಸೆಕ್ಷನ್‌ 353 (ಸಾರ್ವಜನಿಕ ಸೇವಕನ ಕರ್ತವ್ಯದಿಂದ ತಡೆಯಲು ಹಲ್ಲೆ ಅಥವಾ ಕ್ರಿಮಿನಲ್‌ ಬಲ) ಮತ್ತು 307 (ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
5
+ ಘಟನೆಯ ತನಿಖೆಗಾಗಿ ಐದು ಪೊಲೀಸ್‌‍ ತಂಡಗಳನ್ನು ರಚಿಸಲಾಗಿದೆ ಮತ್ತು ಸಿಸಿಟಿವಿ ದೃಶ್ಯಾವಳಿಗಳು ಮತ್ತು ಲಭ್ಯವಿರುವ ವೀಡಿಯೊ ತುಣುಕುಗಳನ್ನು ಆಧರಿಸಿ ಬಂಧಿಸಲಾಗಿದೆ ಎಂದು ಅವರು ಹೇಳಿದರು. ಜಿಲ್ಲೆಯಲ್ಲಿ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ ಆದಿಲ್‌ (30) ಅವರನ್ನು ಕಳೆದ ಮೇ 24 ರಂದು ಬಂಧಿಸಲಾಯಿತು, ನಂತರ ತನ ಆರೋಗ್ಯ ಸ್ಥಿತಿ ಹದಗೆಟ್ಟು ಸಾವನ್ನಪ್ಪಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
6
+ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆತನ ಸಂಬಂಧಿಕರು ದೊಡ್ಡ ಗುಂಪಿನೊಂದಿಗೆ ಮೃಬಂದು ಪೊಲೀಸ್‌‍ ವಾಹನಗಳನ್ನು ಹಾನಿಗೊಳಿಸಿ ನಂತರ ಪೊಲೀಸ್‌‍ ಠಾಣೆಗೆ ಕಲ್ಲು ತೂರಿದರು ಕೆಲವರು ಪೊಲೀಸರಿಗೆ ಕೊಲೆ ಬೆದರಿಕೆ ಹಾಕಿ ಠಾಣೆಯನ್ನು ದೌಂಸಗೊಳಿಸಿದ್ದಾರೆ.
7
+ ಕರ್ತವ್ಯ ಲೋಪದ ಕಾರಣ ನೀಡಿ ಎಸಿಪಿ ಹಾಗೂ ಚನ್ನಗಿರಿ ಠಾಣೆ ಇನ್‌್ಸಪೆಕ್ಟರ್‌ ಅವರನ್ನು ಅಮಾನತುಗೊಳಿಸಲಾಗಿದೆ.ಘಟನೆ ನಡೆಯಬಾರದಿತ್ತು.ಮೃತ ಆರೋಪಿ ಮಟ್ಕಾ ,ಜೂಜಿನಲ್ಲಿ ತೊಡಗಿಸಿಕೊಂಡಿದ್ದರಿಂದ, ಪೊಲೀಸರು ಅವನನ್ನು ಹಿಡಿದಿದ್ದರು, ಆ ಸಮಯದಲ್ಲಿ ಹೃದಯಾಘಾತ ಅಥವಾ ಕಡಿಮೆ ಬಿಪಿ (ರಕ್ತದೊತ್ತಡ) ಕೊನೆಯುಸಿರಳೆದಿದ್ದಾನೆ ,ಮರಣೋತ್ತರ ಪರೀಕ್ಷೆಯ ವರದಿಗೆ ಕಾಯಲಾಗುತ್ತಿದೆ ಎಂದು ಎಸ್‌‍ಪಿ ತಿಳಿಸಿದ್ದಾರೆ.
eesanje/url_46_131_11.txt ADDED
@@ -0,0 +1,6 @@
 
 
 
 
 
 
 
1
+ ವಿಧಾನಪರಿಷತ್‌ ಚುನಾವಣೆ ಕುರಿತು ಜೆ.ಪಿ.ಭವನದಲ್ಲಿ ಬಿಜೆಪಿ-ಜೆಡಿಎಸ್‌‍ ಸಮನ್ವಯ ಸಮಿತಿ ಸಭೆ
2
+ ಬೆಂಗಳೂರು, ಮೇ 26-ವಿಧಾನಪರಿಷತ್‌ನ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್‌‍ ಸಮನ್ವಯ ಸಮಿತಿ ಸಭೆ ಇಂದು ಜೆ.ಪಿ.ಭವನದಲ್ಲಿ ನಡೆಯಿತು.ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ವಿಧಾನಸಭಾ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ನೇತೃತ್ವದಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಮಾಜಿ ಸಚಿವ ಗೋಪಾಲಯ್ಯ, ಮುನಿರತ್ನ, ಸಿ.ಪಿ.ಯೋಗೇಶ್ವರ್‌, ವಿಧಾನಪರಿಷತ್‌ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಮಂಜುನಾಥ್‌, ಡಾ.ಶ್ರೀನಿವಾಸ ಮೂರ್ತಿ, ಮುಖಂಡರಾದ ರಮೇಶ್‌ಗೌಡ, ಸಿ.ರಾಜಣ್ಣ, ಆರ್‌.ಪ್ರಕಾಶ್‌, ಡಾ.ನಾರಾಯಣಗೌಡ ಮೊದಲಾದ ಉಭಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.
3
+ ಬೆಂಗಳೂರು ಪದವೀಧರ ಕ್ಷೇತ್ರದ ಬಿಜೆಪಿ-ಜೆಡಿಎಸ್‌‍ ಅಭ್ಯರ್ಥಿ ಆರ್‌.ದೇವೇಗೌಡ ಅವರೂ ಸಹ ಸಭೆಯಲ್ಲಿ ಹಾಜರಿದ್ದರು. ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಹೆಚ್ಚು ಮತಗಳ ಅಂತರದಿಂದ ಗೆಲ್ಲುವಂತೆ ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಶ್ರಮಿಸಲು ಸಭೆಯಲ್ಲಿ ಸಲಹೆ ಮಾಡಲಾಯಿತು.
4
+ ನೊಂದಾಯಿತ ಪದವೀಧರ ಮತದಾರರನ್ನು ಸಂಪರ್ಕಿಸಿ ಮೈತ್ರಿ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಕೋರಲು ನಿರ್ಧರಿಸಲಾಯಿತು. ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಗೆಲುವಿನ ಕಾರ್ಯತಂತ್ರಗಳ ಬಗ್ಗೆ ಮಾರ್ಗದರ್ಶನ ಮಾಡಲಾಯಿತು.
5
+ ಸಭೆಯಲ್ಲಿ ಉಭಯ ಪಕ್ಷಗಳ ಮುಖಂಡರು ಮಾತನಾಡಿ, ಕಳೆದ ಬಾರಿಯಂತೆ ಈ ಬಾರಿಯ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯೇ ಗೆಲ್ಲಬೇಕು. ಸಾಕಷ್ಟು ಪೈಪೋಟಿ ಇರುವುದರಿಂದ ಎಲ್ಲೂ ಕೂಡ ಲೋಪವಾಗದಂತೆ ಮುನ್ನೆಚ್ಚರಿಕೆ ವಹಿಸಿ ಮತದಾರರ ಮನವೊಲಿಸಲು ಕಾರ್ಯಪ್ರವೃತ್ತರಾಗುವಂತೆ ಕರೆ ನೀಡಿದರು.
6
+ ಇದೇ ಸಂದರ್ಭದಲ್ಲಿ ಇತರೆ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಸ್ಪರ್ಧಿಸಿರುವ ಮೈತ್ರಿ ಅಭ್ಯರ್ಥಿಗಳ ಗೆಲುವಿನ ಕಾರ್ಯತಂತ್ರದ ಬಗ್ಗೆಯೂ ಉಭಯ ಪಕ್ಷಗಳ ನಾಯಕರು ಸಮಾಲೋಚನೆ ನಡೆಸಿದ್ದಾರೆ.
eesanje/url_46_131_12.txt ADDED
@@ -0,0 +1,5 @@
 
 
 
 
 
 
1
+ ರಾಜ್ಯಕ್ಕೆ ಜೂನ್‌ ಮೊದಲ ವಾರ ರಾಜ್ಯ ಪ್ರವೇಶಿಸಲಿದೆ ಮುಂಗಾರು
2
+ ಬೆಂಗಳೂರು, ಮೇ 26-ಪ್ರಸಕ್ತ ಸಾಲಿನ ನೈರುತ್ಯ ಮುಂಗಾರು ಮೇ 31ಕ್ಕೆ ಕೇರಳ ಪ್ರವೇಶಿಸುವ ಮುನ್ಸೂಚನೆ ಇದ್ದು, ಜೂನ್‌ ಮೊದಲ ವಾರದಲ್ಲಿ ರಾಜ್ಯಕ್ಕೆ ಪ್ರವೇಶಿಸುವ ಸಾಧ್ಯತೆಗಳಿವೆ. ಬಂಗಾಳಕೊಲ್ಲಿಯಲ್ಲಿ ಚಂಡ ಮಾರುತ ಉಂಟಾಗಿದ್ದರೂ, ಮುಂಗಾರು ಮಳೆ ಆರಂಭಕ್ಕೆ ಪೂರಕವಾದ ವಾತಾವರಣ ಸೃಷ್ಟಿಯಾಗುತ್ತಿದೆ. ಚಂಡಮಾರುತ ಪಶ್ಚಿಮ ಬಂಗಾಲ ಹಾಗೂ ಬಾಂಗ್ಲಾ ಕಡೆಗೆ ಸಾಗುತ್ತಿರುವುದರಿಂದ ಮುಂಗಾರು ಮಳೆಯ ಮೇಲೆ ವ್ಯತಿರಿಕ್ತ ಪರಿಣಾಮಗಳಿಲ್ಲ. ಈಗಾಗಲೇ ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪ ಸಮೂಹದಲ್ಲಿ ಮಳೆ ಆರಂಭವಾಗಿದೆ. ಅರಬ್ಬೀ ಸಮುದ್ರದಲ್ಲೂ ನಿರೀಕ್ಷೆಯಂತೆ ಮುಂಗಾರು ಆರಂಭಕ್ಕೆ ಪೂರಕ ವಾತಾವರಣವಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
3
+ ಕಳೆದ ಎರಡು ವಾರಗಳಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಒಳನಾಡಿನಲ್ಲಿ ಸಾಕಷ್ಟು ಮಳೆಯಾಗಿದೆ. ತೀವ್ರ ಬರ ಹಾಗೂ ಬಿರು ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮುಂಗಾರು ಪೂರ್ವ ಮಳೆ ತಂಪೆರೆದಿದೆ. ಜತೆಗೆ ವಾಡಿಕೆಗಿಂತ ಹೆಚ್ಚು ಮಳೆ ಬೇಸಿಗೆಯಲ್ಲೂ ಹಲವೆಡೆ ಆಗುತ್ತಿದೆ.
4
+ ಮುಂಗಾರು ಆರಂಭವಾಗುವ ಪ್ರಕ್ರಿಯೆ ಹಿನ್ನೆಲೆಯಲ್ಲಿ ರಾಜ್ಯ ಒಳನಾಡಿನಲ್ಲಿ ನಾಲ್ಕು ದಿನಗಳ ಕಾಲ ಮಳೆ ಪ್ರಮಾಣ ಕಡಿಮೆಯಾಗಲಿದೆ. ಆದರೆ, ಪೂರ್ಣವಾಗಿ ಮಳೆ ನಿಲ್ಲುವುದಿಲ್ಲ. ಮೋಡ ಕವಿದ ವಾತಾವರಣವಿದ್ದು, ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ.ಆದರೆ, ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ಮುಂದುವರೆಯಲಿದೆ. ನಾಲ್ಕೈದು ದಿನಗಳ ನಂತರ ಮುಂಗಾರು ವ್ಯಾಪಕವಾಗಿ ವ್ಯಾಪಿಸುವ ಲಕ್ಷಣಗಳಿವೆ. ಚಾಮರಾಜನಗರ ಮೂಲಕ ರಾಜ್ಯಕ್ಕೆ ಆಗಮಿಸುವ ಮುಂಗಾರು ಮಳೆ ಒಂದು ವಾರದೊಳಗೆ ರಾಜ್ಯಾದ್ಯಂತ ವ್ಯಾಪಿಸಲಿದೆ.
5
+ ಮುಂಗಾರು ಮಳೆ ಆರಂಭಗೊಳ್ಳುತ್ತಿದ್ದಂತೆ ವ್ಯಾಪಕ ಪ್ರಮಾಣದಲ್ಲಿ ಎಲ್ಲೆಡೆ ಮಳೆಯಾಗಲಿದೆ. ವಾಡಿಕೆ ಪ್ರಮಾಣದ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಬಾರಿಯ ಮುಂಗಾರು ಆಶಾದಾಯಕವಾಗಿರಲಿದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ಈ ವರ್ಷಉತ್ತಮವಾದ ಮಳೆಯಾಗುವ ನಿರೀಕ್ಷೆ ಹಿನ್ನೆಲೆಯಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಲ್ಲಿ ರೈತರು ನಿರತರಾಗಿದ್ದಾರೆ,
eesanje/url_46_131_2.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಕಾಂಗ್ರೆಸ್‌ನ್ನು ಕೇಡರ್‌ಬೇಸ್‌‍ ಆಗಿ ಸಂಘಟಿಸಲು ‘ಕಾಂಗ್ರೆಸ್‌‍ ಕುಟುಂಬ’ ರಚನೆ : ಡಿಕೆಶಿ
2
+ ಬೆಂಗಳೂರು, ಮೇ 27-ಕಾಂಗ್ರೆಸ್‌‍ ಅನ್ನು ಕೇಡರ್‌ಬೇಸ್‌‍ ಆಗಿ ಸಂಘಟಿಸಲು ಕಾಂಗ್ರೆಸ್‌‍ ಕುಟುಂಬ ಎಂಬ ಕಾರ್ಯಕ್ರಮವನ್ನು ರೂಪಿಸಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಮಾಜಿ ಪ್ರಧಾನಿ ದಿ.ನೆಹರೂ ಅವರ 68 ನೇ ಪುಣ್ಯಸರಣೆಯಲ್ಲಿ ಮಾತನಾಡಿದ ಅವರು, ಜೂನ್‌ 1 ರಂದು ಕೆಪಿಸಿಸಿ ಪದಾಧಿಕಾರಿಗಳ ಸಭೆ ಕರೆಯಲಾಗಿದೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯನ್ನು ಬಲಗೊಳಿಸಲು ಬೂತ್‌ ಮಟ್ಟದಿಂದಲೂ ಕೇಡರ್‌ ಆಧಾರಿತವಾಗಿ ರೂಪಿಸಬೇಕಿದೆ.
3
+ ಪ್ರತಿ ಬೂತ್‌ ಮಟ್ಟದಲ್ಲೂ 50 ಸದಸ್ಯರನ್ನು ನೊಂದಾಯಿಸಬೇಕು. ಯಾವುದೇ ಕಾರ್ಯಕ್ರಮ ಮಾಡಬೇಕಾದರೂ ಅವರ ಸಹಭಾಗಿತ್ವ ಅಗತ್ಯ. ಪ್ರತಿ ನಿರ್ಧಾರಗಳಿಗೂ ಅವರ ಸಹಮತ ಇರಬೇಕು. ಕಾಂಗ್ರೆಸ್‌‍ ಕುಟುಂಬ ಎಂಬ ಹೆಸರಿನ ಈ ಕಾರ್ಯಕ್ರಮಕ್ಕೆ ಪಕ್ಷದ ಪದಾಧಿಕಾರಿಗಳು, ನಿಗಮಮಂಡಳಿ ಅಧ್ಯಕ್ಷರು, ಸದಸ್ಯರು, ಸಚಿವರು, ಶಾಸಕರು ಎಲ್ಲರೂ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು.
4
+ ಮುಖ್ಯಮಂತ್ರಿ ಮತ್ತು ಸಚಿವರು ತಿಂಗಳಲ್ಲಿ ಒಂದು ದಿನ ಕಾಂಗ್ರೆಸ್‌‍ ಕಚೇರಿಯಲ್ಲಿ ಕುಳಿತು ಪಕ್ಷದ ಕಾರ್ಯಕರ್ತರ ಅಹವಾಲು ಕೇಳಬೇಕಿದೆ. ಮುಖ್ಯಮಂತ್ರಿಯವರು ಮೂರು ಗಂಟೆ ಪಕ್ಷದ ಕಚೇರಿಯಲ್ಲಿರಲು ಒಪ್ಪಿಕೊಂಡಿದ್ದಾರೆ. ಸಚಿವರು ದಿನಪೂರ್ತಿ ಇದ್ದು, ಅಹವಾಲು ಸ್ವೀಕರಿಸಬೇಕು.
5
+ ಕಾಟಾಚಾರಕ್ಕೆ ಬಂದು ಹೋಗಲು ಅವಕಾಶವಿಲ್ಲ. ಸಚಿವರು, ಮುಖ್ಯಮಂತ್ರಿಗಳು ಕಚೇರಿಗೆ ಬರುವುದಕ್ಕೆ ಒಂದು ವಾರ ಮೊದಲೇ ಸಮಯ ತಿಳಿಸಬೇಕು, ಅವರನ್ನು ಭೇಟಿ ಮಾಡಲು ಬರುವವರು ನೊಂದಾಯಿಸಿಕೊಳ್ಳಬೇಕು. ಈ ಕೆಲಸಕ್ಕಾಗಿ ಒಬ್ಬರು ಕಾರ್ಯಾಧ್ಯಕ್ಷರು ಹಾಗೂ ಇಬ್ಬರು ಪದಾಧಿಕಾರಿಗಳನ್ನು ನಿಯೋಜಿಸುತ್ತೇನೆ. ರಾಜ್ಯಾದ್ಯಂತ ಯಾರೇ ಬರುವುದಾದರೂ ಅವರು ನೊಂದಾವಣಿ ಮಾಡುವ ವೇಳೆ ತಮ ಪಕ್ಷದ ಸದಸ್ಯತ್ವದ ಸಂಖ್ಯೆಯನ್ನೂ ನಮೂದಿಸಬೇಕು ಎಂದು ವಿವರಿಸಿದರು.
6
+ ಸದಸ್ಯರಲ್ಲದೇ ಇರುವವರನ್ನು ನೆಂಟ, ಸಂಬಂಧಿಕ ಎಂದು ಕರೆತಂದು ಸಚಿವರ ಬಳಿ ಮಾತನಾಡಿಸಲು ಅವಕಾಶ ಇಲ್ಲ. ಪೂರ್ಣವಾಗಿ ಕಾರ್ಯಕರ್ತರಿಗೆ ನೊಂದಣಿಗೆ ಅವಕಾಶವಿದೆ. ಸಚಿವರು, ಮುಖ್ಯಮಂತ್ರಿ ಬಂದಾಗ ಅವರ ಸುತ್ತಮುತ್ತ ಶಾಸಕರು, ಪದಾಧಿಕಾರಿಗಳೇ ಕುಳಿತುಕೊಳ್ಳುವುದು ಬೇಡ. ಕಾರ್ಯಕರ್ತರನ್ನು ಭೇಟಿ ಮಾಡಲು ನನಗೂ ಕೂಡ ಸಮಯ ಸಿಗುವುದಿಲ್ಲ. ಅಷ್ಟರ ಮಟ್ಟಿಗೆ ಅವರ ಸುತ್ತಲೂ ಜನ ಸುತ್ತುವರೆದಿರುತ್ತಾರೆ ಎಂದು ಆಕ್ಷೇಪಿಸಿದರು.
7
+ ದೂರದೂರಿಂದ ಬರುವ ಕಾರ್ಯಕರ್ತರನ್ನು ಭೇಟಿ ಮಾಡದೇ ಇರುವುದಕ್ಕೆ ನನಗೆ ಮುಜುಗರವಾಗುತ್ತದೆ. ನಮ ಕಚೇರಿಗಳಲ್ಲಿ ಆಪ್ತಸಹಾಯಕರು, ಗನ್‌ಮ್ಯಾನ್‌ಗಳು ಕೋಟು, ಸೂಟು ಬೂಟು ಹಾಕಿದವರನ್ನು ಕರೆದುಕೊಂಡು ಹೋಗಿ ಆ್ಯಂಟಿ ಛೇಂಬರ್‌ನಲ್ಲಿ ಕೂರಿಸಿರುತ್ತಾರ���. ಸಾಮಾನ್ಯ ಕಾರ್ಯಕರ್ತರನ್ನು ವಿಚಾರಿಸಿರುವುದಿಲ್ಲ ಎಂದರು.ಈ ವೇಳೆ ಪ್ರಮುಖರೊಬ್ಬರು ಮಧ್ಯಪ್ರವೇಶಿಸಿದಾಗ ಸಿಟ್ಟಾದ ಡಿ.ಕೆ.ಶಿವಕುಮಾರ್‌, ಜಾಸ್ತಿಯಾಯಿತು ನಿನ್ನ ಚೇಷ್ಠೆ, ನನಗೆ ಗೊತ್ತಿರುವುದನ್ನು ನಾನು ಹೇಳುತ್ತಿದ್ದೇನೆ, ನಿನ್ನದೇನು? ಎಂದು ತರಾಟೆಗೆ ತೆಗೆದುಕೊಂಡರು.
8
+ ನಾವು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯುವಕರಿಗೆ, ಪಕ್ಷ ನಿಷ್ಠರಿಗೆ ಹೆಚ್ಚಿನ ಆದ್ಯತೆ ನೀಡಿದ್ದೇವೆ. ಕಾಂಗ್ರೆಸ್‌‍ ಬಿಟ್ಟು ಹೋಗಿದ್ದ ಇಬ್ಬರನ್ನು ಕರೆತಂದು ಟಿಕೆಟ್‌ ಕೊಟ್ಟಿದ್ದನ್ನು ಬಿಟ್ಟರೆ ಉಳಿದ ಎಲ್ಲಾ ಕಡೆ ಪಕ್ಷನಿಷ್ಠರಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಇದು ಮುಂದಿನ ನಾಲ್ಕು ವರ್ಷಗಳ ಸರ್ಕಾರ ಅಲ್ಲ, ಮುಂದಿನ ಹತ್ತು ವರ್ಷಗಳ ಕಾಲವೂ ಅಧಿಕಾರದಲ್ಲಿ ಮುಂದುವರೆಯಲಿದೆ. ಅದಕ್ಕಾಗಿ ಪಕ್ಷವನ್ನು ಬಲಿಷ್ಠವಾಗಿ ಕಟ್ಟುತ್ತೇವೆ ಎಂದರು.
9
+ ಇತ್ತೀಚೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಇನ್ನು ಮುಂದೆ ಆರ್‌ಎಸ್‌‍ಎಸ್‌‍ ಇಲ್ಲದೆಯೂ ನಾವು ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದ್ದಾರೆ. ಆರ್‌ಎಸ್‌‍ಎಸ್‌‍ನವರನ್ನು ಬಳಸಿಕೊಂಡು ಈಗ ಬಿಜೆಪಿ ಕೈಬಿಡುತ್ತಿದೆ. ಆರ್‌ಎಸ್‌‍ಎಸ್‌‍ ಇಲ್ಲದೇ ಇದ್ದರೆ, ಬಿಜೆಪಿ ಶೂನ್ಯ ಎಂದು ಹೇಳಿದರು.
10
+ 5-10 ವರ್ಷಗಳಿಂದಲೂ ನಿರಂತರವಾಗಿ ಅಧಿಕಾರದಲ್ಲಿರುವವರ ಬ್ಲಾಕ್‌ ಹಾಗೂ ಜಿಲ್ಲಾ ಸಮಿತಿಗಳನ್ನು ವಿಸರ್ಜನೆಗೊಳಿಸಿ ಹೊಸ ರಕ್ತಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದರು.ಇದೇ ವೇಳೆ ಜವಹರಲಾಲ್‌ ನೆಹರೂ ಅವರ ಜನದಿನಾಚರಣೆ ಎಂದು ಬಾಯ್ತಪ್ಪಿ ಹೇಳುವ ಮೂಲಕ ಡಿ.ಕೆ.ಶಿವಕುಮಾರ್‌ ಮುಜುಗರಕ್ಕೆ ಒಳಗಾದರು. ವೇದಿಕೆಯಲ್ಲಿದ್ದ ಇತರ ನಾಯಕರು ಲೋಪವನ್ನು ತಿದ್ದಿದರು.
11
+ ಜಿಲ್ಲಾ ಕಾಂಗ್ರೆಸ್‌‍ ಅಧ್ಯಕ್ಷರು ಪದಾಧಿಕಾರಿಗಳಿದ್ದಂತೆ ಅವರು ವೇದಿಕೆಯಲ್ಲಿ ಕುಳಿತುಕೊಳ್ಳುವುದಲ್ಲ, ಮಾರ್ಗದರ್ಶಕರಾಗಿ ಕೆಲಸ ಮಾಡಬೇಕು ಎಂದು ಖಾರವಾಗಿ ಹೇಳಿದರು.
12
+ ಎಲ್ಲಾ ಜಿಲ್ಲೆಗಳಲ್ಲೂ ಪಕ್ಷದ ಕಚೇರಿ ನಿರ್ಮಿಸಲು ಶಾಸಕರು, ಸಚಿವರು ಜವಾಬ್ದಾರಿ ತೆಗೆದುಕೊಳ್ಳಬೇಕು. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಪ್ರಾರಂಭವಾಗಿದೆ. ನಿನ್ನೆ ಸಚಿವ ಮಹದೇವಪ್ಪ ಅವರ ಜೊತೆ ನಾನು ಮತ್ತು ಮುಖ್ಯಮಂತ್ರಿಯವರು ಚರ್ಚೆ ಮಾಡಿದ್ದೇವೆ. ನೀವು ಜವಾಬ್ದಾರಿ ತೆಗೆದುಕೊಳ್ಳದೇ ಇದ್ದರೆ ಬಿಟ್ಟು ಬೇರೆ ಕಡೆ ಹೋಗಬೇಕಾಗುತ್ತದೆ ಎಂದು ಹೇಳಿದ್ದೇವೆ ಎಂದರು.
13
+ ವೇದಿಕೆಯಲ್ಲಿ ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಅವರು ಜಂಟಿಯಾಗಿ ಮೊಬೈಲ್‌ ನೋಡುತ್ತಾ ಚರ್ಚೆ ನಡೆಸಿದ್ದು ಗಮನ ಸೆಳೆಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಿಂಗಳಲ್ಲಿ ಒಂದು ದಿನ ನಾನು ಕೂಡ ಪಕ್ಷದ ಕಚೇರಿಗೆ ಆಗಮಿಸುತ್ತೇನೆ. ಕಾರ್ಯಕರ್ತರ ಜೊತೆ ಚರ್ಚೆ ಮಾಡುತ್ತೇನೆ ಎಂದು ಭರವಸೆ ನೀಡಿದರು.
eesanje/url_46_131_3.txt ADDED
@@ -0,0 +1,5 @@
 
 
 
 
 
 
1
+ ರಾಜ್ಯದಲ್ಲಿ ತಗ್ಗಿದ ಮಳೆ ಆರ್ಭಟ
2
+ ಬೆಂಗಳೂರು, ಮೇ 27-ಕಲ್ಯಾಣ ಕರ್ನಾಟಕ ಭಾಗದಲ್ಲಿ ಪೂರ್ವ ಮುಂಗಾರು ಮಳೆ ಆರ್ಭಟಿಸಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಕ್ಷೀಣಿಸಿದೆ. ಯಾದಗಿರಿ, ಕೊಪ್ಪಳ, ಇಳಕಲ್‌, ನಾರಾಯಣಪುರ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಕಡಿಮೆಯಾಗಿದೆ.
3
+ ಹವಾಮಾನ ಮುನ್ಸೂಚನೆ ಪ್ರಕಾರ, ಮೇ 31ರವರೆಗೆ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕರಾವಳಿಯಲ್ಲಿ ಹಗುರದಿಂದ ಸಾಧಾರಣ ಮಳೆ ಮುಂದುವರೆಯಲಿದೆ. ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಹಗುರ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
4
+ ಕಳೆದ ಎರಡು ವಾರಗಳಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗಿತ್ತು. ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತದ ಪರಿಣಾಮದಿಂದ ರಾಜ್ಯದಲ್ಲಿ ಮಳೆ ಪ್ರಮಾಣ ಇಳಿಕೆಯಾಗಿದ್ದು, 5 ದಿನಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ವಿರಳವಾಗಿ ಮಳೆಯಾಗಬಹುದು. ಬಹುತೇಕ ಒಣಹವೆ ಮುಂದುವರೆಯಲಿದೆ.
5
+ ಸ್ಥಳೀಯ ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಚದುರಿದಂತೆ ಹಗುರ ಮಳೆಯಾಗಬಹುದು ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
eesanje/url_46_131_4.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಲೋಕಸಭಾ ಚುನಾವಣೆ ಫಲಿತಾಂಶ ಕುರಿತು ರಾಜ್ಯ ಬಿಜೆಪಿಯಲ್ಲಿ ಒಂದಿಷ್ಟು ಆತಂಕ
2
+ ಬೆಂಗಳೂರು, ಮೇ 27-ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವ ಬೆನ್ನಲ್ಲೇ, ಮೂರು ಪಕ್ಷಗಳಲ್ಲೂ ಸೋಲು ಗೆಲುವಿನ ಲೆಕ್ಕಾಚಾರಗಳು ನಡೆಯುತ್ತಿದೆ. ಇದರ ನಡುವೆ ಬಿಜೆಪಿ ನಾಯಕರ ಕೈಗೆ ಚುನಾವಣೆಯ ಆಂತರಿಕ ಫಲಿತಾಂಶದ ವರದಿ ಸಿಕ್ಕಿದ್ದು, ಕಮಲ ಪಾಳಯದಲ್ಲಿ ಒಂದಿಷ್ಟು ಆತಂಕ ಎದ್ದು ಕಾಣುತ್ತಿದೆ.
3
+ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ಕನಸು ಇಟ್ಟುಕೊಂಡಿದ್ದ ಕಮಲ-ದಳ ನಾಯಕರಿಗೆ ಆಂತರಿಕ ವರದಿ ಕೊಂಚ ನೆಮದಿ ಕೆಡುವಂತೆ ಮಾಡಿದೆ. ಅಂದರೆ, ಬಿಜೆಪಿಯೇ ರಾಜ್ಯದ ಬೂತ್‌ ಮಟ್ಟದ ಹಂತದಿಂದ ನಡೆಸಿರುವ ಆಂತರಿಕ ವರದಿಯನ್ನು ನೋಡಿದ ಮೇಲೆ ರಾಜ್ಯದ ಎಲ್ಲ ಕ್ಷೇತ್ರಗಳನ್ನು ಗೆಲ್ಲುವುದು ಅಸಾಧ್ಯ ಎಂಬುದು ಬಿಜೆಪಿ ನಾಯಕರಿಗೆ ಗೊತ್ತಾಗಿದೆ.
4
+ ಬಿಜೆಪಿಯ ಬೂತ್‌, ಜಿಲ್ಲಾ, ತಾಲ್ಲೂಕು ಹಾಗೂ ಮುಖಂಡರ, ಕಾರ್ಯಕರ್ತರ ಅಭಿಪ್ರಾಯಗಳನ್ನು ಒಳಗೊಂಡಿರುವ ಆಂತರಿಕ ವರದಿಯೂ ಬಿಜೆಪಿ ನಾಯಕರಿಗೆ ಆಘಾತಕಾರಿ ಸುದ್ದಿ ಕೊಟ್ಟಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಬರೋಬ್ಬರಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಈ ಬಾರಿಯ ಚುನಾವಣೆಯಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳನ್ನು ಗೆಲ್ಲುವ ಟಾರ್ಗೆಟ್‌ ಹಾಕಿಕೊಂಡಿದ್ದ ಬಿಜೆಪಿಯೂ ಈ ಬಾರಿ ಹಲವು ಸ್ಥಾನಗಳನ್ನು ಕಳೆದುಕೊಳ್ಳುವ ಆತಂಕ ಎದುರಾಗಿದೆ.
5
+ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದ್ದ ಬಿಜೆಪಿಯೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌‍ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದರೂ ಟಾರ್ಗೆಟ್‌ ಹಾಕಿಕೊಂಡಿತ್ತು. ಆದರೆ, ಆಂತರಿಕ ವರದಿ ಬಿಜೆಪಿ ನಾಯಕರ ಕೈ ಸೇರಿದೆ.
6
+ ಲೋಕಸಭಾ ಚುನಾವಣೆಯಲ್ಲಿ ್ಲ ಜೆಡಿಎಸ್‌‍ ಜೊತೆಗಿನ ಮೈತ್ರಿ ಸಕ್ಸಸ್‌‍ ಆಗಿದ್ದರೂ ಕೂಡ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಎಡವುವ ಸಾಧ್ಯತೆ ಇದೆ ಎಂದು ಆಂತರಿಕ ವರದಿ ಹೇಳಿದೆ ಎನ್ನಲಾಗುತ್ತಿದೆ.ಆಂತರಿಕ ವರದಿಯ ಪ್ರಕಾರ, ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್‌‍ಗಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿ ಕಮಲ ಪಡೆಯ ನಾಯಕರು ಇದ್ದಾರೆ. ಆದರೆ, ಅವರು ಅಂದುಕೊಂಡ ಗುರಿ ಮುಟ್ಟುವುದು ಇರಲಿ, ಕಳೆದ ಬಾರಿ ಪಡೆದ ಸ್ಥಾನಗಳನ್ನು ಪಡೆಯುವುದು ಅನುಮಾನ ಎಂದು ಹೇಳಲಾಗಿದೆ.
7
+ ತಮ್ಮ ಆಂತರಿಕ ವರದಿ ಪ್ರಕಾರ 17 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸದಲ್ಲಿ ಬಿಜೆಪಿ ನಾಯಕರು ಇದ್ದು, ಐದು ಕ್ಷೇತ್ರಗಳಲ್ಲಿ 50 – 50 ಚಾನ್ಸ್ ಇದ್ದು, ಅಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌‍ ನಡುವೆ ಭಾರೀ ಪೈಪೋಟಿ ಇದೆ ಎನ್ನಲಾಗಿದೆ. 6 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವುದು ಕಷ್ಟ ಎಂದು ಆಂತರಿಕ ವರದಿ ಹೇಳಿದೆ.
8
+ ಬಿಜೆಪಿಯ ಇಂಟರ್ನಲ್‌ ರಿಪೋರ್ಟ್‌ ಪ್���ಕಾರ, ಹಳೇ ಮೈಸೂರು ಪ್ರಾಂತ್ಯದ ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಬಹುದು. ಅದೇ ರೀತಿ ಬೆಂಗಳೂರಿನ ನಾಲ್ಕು ಕ್ಷೇತ್ರಗಳು ಅಂದರೆ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಲ್ಲಿ ಬಿಜೆಪಿ ನಾಯಕರು ಗೆಲುವಿನ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.
9
+ ಇನ್ನು, ಮಲೆನಾಡು ಹಾಗೂ ಕರಾವಳಿ ಭಾಗದ ಉಡುಪಿ – ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿಯೂ ಕಮಲ ಚಿಹ್ನೆಯ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ವಿಶ್ವಾಸದಲ್ಲಿ ಕೇಸರಿ ನಾಯಕರು ಇದ್ದಾರೆ. ಇತ್ತ, ಮುಂಬೈ ಕರ್ನಾಟಕದ ಕಡೆ ಬಂದರೆ ಹುಬ್ಬಳ್ಳಿ – ಧಾರವಾಡ, ಬಾಗಲಕೋಟೆ, ಹಾವೇರಿ, ವಿಜಯಪುರ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ಸಾಧ್ಯತೆ ಇದೆ ಎಂದು ಕಮಲ ಪಾಳಯದ ಆಂತರಿಕ ವರದಿ ಹೇಳಿದೆ. ಈ 17 ಕ್ಷೇತ್ರಗಳ ಪೈಕಿ ನಾಲ್ಕು 6 ಕ್ಷೇತ್ರಗಳನ್ನು ಹೊರತುಪಡಿಸಿದರೆ ಉಳಿದ 11 ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಮತದಾನ ನಡೆದಿತ್ತು.
10
+ ಬೆಳಗಾವಿ, ದಾವಣಗೆರೆ, ಹಾಸನ, ಕಲಬುರಗಿ ಹಾಗೂ ಬಳ್ಳಾರಿಯಲ್ಲಿ ಬಿಜೆಪಿಗೆ 50-50 ಚಾನ್ಸ್ ಇದೆ ಎಂದು ಕಮಲದ ಆಂತರಿಕ ವರದಿ ಹೇಳಿದೆ. ಆದರೆ, ಚಾಮರಾಜನಗರ, ಚಿಕ್ಕೋಡಿ, ಬೀದರ್‌, ರಾಯಚೂರು, ಕೊಪ್ಪಳ, ಚಿತ್ರದುರ್ಗ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಸೋಲುವ ಆತಂಕ ಇದೆ ಎಂದು ಆಂತರಿಕ ವರದಿ ಹೇಳಿದೆ. ಜೆಡಿಎಸ್‌‍ ಸ್ಪರ್ಧಿಸಿದ ಮೂರು ಕ್ಷೇತ್ರಗಳಲ್ಲಿ ಎರಡನ್ನು ಗೆಲ್ಲಬಹುದು ಎಂದು ಹೇಳಲಾಗಿದ್ದು, ಒಂದು ಕ್ಷೇತ್ರದಲ್ಲಿ 50-50 ಚಾನ್‌್ಸ ಇದೆ ಎಂದು ಆಂತರಿಕ ವರದಿ ಹೇಳಿದೆ.
eesanje/url_46_131_5.txt ADDED
@@ -0,0 +1,5 @@
 
 
 
 
 
 
1
+ ಧರ್ಮಸ್ಥಳದ ಮಂಜುನಾಥನ ಮೊರೆಹೋದ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ
2
+ ಬೆಂಗಳೂರು, ಮೇ 27-ಮಾಜಿ ಸಚಿವ ಹೆಚ್‌.ಡಿ. ರೇವಣ್ಣ ಅವರು ಇಂದು ಧರ್ಮಸ್ಥಳದ ಮಂಜುನಾಥಸ್ವಾಮಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದಿದ್ದಾರೆ. ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುವುದನ್ನು ರೇವಣ್ಣ ಮುಂದುವರೆಸಿದ್ದಾರೆ.
3
+ ಮಹಿಳೆಯೊಬ್ಬರ ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಗಳಲ್ಲಿ ರೇವಣ್ಣ ಅವರು ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ. ವಿಧಾನ ಪರಿಷತ್‌ನ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲೂ ಪಾಲ್ಗೊಂಡಿದ್ದರು.ಕುಟುಂಬದ ಸದಸ್ಯರಿಲ್ಲದೆ, ಒಬ್ಬರೇ ದೇವಾಲಯಗಳಿಗೆ ಭೇಟಿ ನೀಡಿ ದರ್ಶನ ಪಡೆಯುತ್ತಿರುವುದು ವಿಶೇಷವಾಗಿದೆ.
4
+ ಕಳೆದ ಶುಕ್ರವಾರ ಕಲಬುರಗಿಯ ಗಾಣಗಾಪುರದಲ್ಲಿರುವ ಪ್ರಸಿದ್ಧ ದತ್ತಾತ್ರೇಯ ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಇದಕ್ಕೂ ಮುನ್ನ ಬೆಂಗಳೂರಿನ ಕೆಲವು ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು.
5
+ ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ ಅವರು, ಕಳೆದ 40 ವರ್ಷಗಳಿಂದ ರಾಜಕೀಯದಲ್ಲಿದ್ದು, 25 ವರ್ಷಗಳಿಂದ ಶಾಸಕನಾಗಿ ಜನರ ಸೇವೆ ಮಾಡುತ್ತಿದ್ದೇನೆ. ಪ್ರಗತಿಪರ ಚಿಂತಕರ ವೇದಿಕೆಯಿಂದ ಹಾಸನ ಚಲೋ ಪ್ರತಿಭಟನೆ ನಡೆಸುತ್ತಿರುವುದು ಗೊತ್ತಿಲ್ಲ. ತಮ ಮೇಲಿನ ಆರೋಪ ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಮಂಜುನಾಥಸ್ವಾಮಿ ಮೇಲೆ ನಮಗೆ ನಂಬಿಕೆ ಇದೆ. ಹಾಗೆಯೇ ರಾಜ್ಯದ ಜನರ ಮೇಲೆ ವಿಶ್ವಾಸವಿದೆ ಎಂದು ಹೇಳಿದ್ದಾರೆ.
eesanje/url_46_131_6.txt ADDED
@@ -0,0 +1,6 @@
 
 
 
 
 
 
 
1
+ ಡ್ರಗ್ಸ್ ಮಾಫಿಯಾ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಬೀದಿಗಿಳಿದು ಹೋರಾಟ : ವಿಜಯೇಂದ್ರ ಎಚ್ಚರಿಕೆ
2
+ ಬೆಂಗಳೂರು, ಮೇ 27-ಕಳಪೆ ಔಷಧ ಪೂರೈಸಿ ಜನರ ಆರೋಗ್ಯದ ಜತೆ ಚೆಲ್ಲಾಟವಾಡುತ್ತಿರುವ ಜಾಲದ ವಿರುದ್ಧ ಈ ಕೂಡಲೇ ಸರ್ಕಾರ ಕಾರ್ಯಾಚರಣೆ ಆರಂಭಿಸದಿದ್ದರೆ ನಾಗರಿಕ ಸಮಾಜದ ಸುಭದ್ರತೆಗಾಗಿ ಬೀದಿಗಿಳಿದು ಹೋರಾಡುವುದು ಅನಿವಾರ್ಯವಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ.
3
+ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ರೇವ್‌ ಪಾರ್ಟಿಗಳು ಹಾಗೂ ಹಾದಿ-ಬೀದಿಗಳಲ್ಲಿ ಡ್ರಗ್ಸ್ ಮಾಫಿಯಾ ಜಾಲ ಹರಡುತ್ತಿರುವುದರ ವಿರುದ್ಧ ತತ್‌ಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.
4
+ ರಾಜ್ಯದಲ್ಲಿ ಮೇರೆ ಮೀರಿರುವ ಕ್ರಿಮಿನಲ್‌ ಚಟುವಟಿಕೆಗಳ ಬೆನ್ನಲೇ ನಿಷೇಧಿತ ಡ್ರಗ್ಸ್ ಮಾದರಿಯ ಮಾತ್ರೆಗಳ ಮಾರಾಟದ ದಂಧೆ ಅನೇಕ ಔಷಧ ಮಳಿಗೆಗಳಲ್ಲೇ ರಾಜಾರೋಷವಾಗಿ ನಡೆಯುತ್ತಿದ್ದು ಡ್ರಗ್ಸ್ , ಗಾಂಜಾ ಪದಾರ್ಥಗಳ ವಹಿವಾಟೂ ಸಹ ಎಗ್ಗಿಲ್ಲದೆ ನಡೆಯುತ್ತಿದೆ, ಇದರ ಪರಿಣಾಮವಾಗಿ ಇಬ್ಬರು ಅಮಾಯಕರು ಡ್ರಗ್ಸ್ ವ್ಯಸನಿಯೊಬ್ಬನಿಂದ ಕೊಲೆಗೀಡಾಗಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
5
+ ಕಾಂಗ್ರೆಸ್‌‍ ಸರ್ಕಾರದ ನಿಷ್ಕ್ರಿಯಗೊಂಡಿರುವ ಕಾನೂನು ಸುವ್ಯವಸ್ಥೆಯ ನೆರಳಿನಲ್ಲಿ ಬೆಳಕಿಗೆ ಬಾರದ ಅದೆಷ್ಟು ಜನರು ಡ್ರಗ್ಸ್‌‍ ಜಾಲಕ್ಕೆ ಸಿಲುಕಿ ಕ್ರಿಮಿನಲ್‌ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೋ ಎಂಬ ಆತಂಕದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
6
+ ಕಾಂಗ್ರೆಸ್‌‍ ಸರ್ಕಾರದ ಅಸಮರ್ಥತೆಯಿಂದಾಗಿ ಕಾಳಸಂತೆಕೋರರು, ಕೊಲೆಗಡುಕರ ಹಾಗೂ ಡ್ರಗ್ಸ್ ಮಾಫಿಯಾದ ಚಟುವಟಿಕೆಗಳು ಸ್ವೇಚ್ಛೆಯಾಗಿ ನಡೆಯುತ್ತಿದೆ.ಸಮಾಜ ಹಾಗೂ ದೇಶದ ಭವಿಷ್ಯ ಬೆಳಗಬೇಕಾದ ವಿದ್ಯಾರ್ಥಿಗಳು, ಯುವಜನರನ್ನು ದಿಕ್ಕು ತಪ್ಪಿಸುವ ವಿದೋಹಿ ಮಾಫಿಯಾ ಶಕ್ತಿಗಳು ರಾಜ್ಯದಲ್ಲಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುತ್ತಿರುವುದು ಕಂಡು ಬರುತ್ತಿದ್ದು, ಈ ಸರ್ಕಾರ ಪ್ರಜೆಗಳಿಗೆ ಯಾವ ಭಾಗ್ಯ ಕರುಣಿಸುತ್ತದೋ ಇಲ್ಲವೋ ಗೊತ್ತಿಲ್ಲ ಆದರೆ ಜೀವರಕ್ಷಣೆಯ ಭಾಗ್ಯವನ್ನಾದರೂ ಕಲ್ಪಿಸಿ ನಾಗರಿಕ ಸಮಾಜದಲ್ಲಿ ಸುರಕ್ಷತಾ ಭಾವ ಮೂಡಿಸಲಿ. ಆ ಮೂಲಕ ಜನರ ಶಾಪದಿಂದ ಮುಕ್ತಿ ಕಾಣಲಿ ಎಂದು ವಿಜಯೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
eesanje/url_46_131_7.txt ADDED
@@ -0,0 +1,6 @@
 
 
 
 
 
 
 
1
+ ತಿಂಗಳು ಕಳೆದರೂ ಪತ್ತೆಯಾಗದ ಪೆನ್‌ಡ್ರೈವ್‌ ಪ್ರಜ್ವಲ್‌
2
+ ಬೆಂಗಳೂರು, ಮೇ 27-ಅತ್ಯಾಚಾರ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ತಿಂಗಳು ಕಳೆದರೂ ಪತ್ತೆಯಾಗಿಲ್ಲ. ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಗಿದ ಬಳಿಕ ಅವರು ನಾಪತ್ತೆಯಾಗಿದ್ದಾರೆ. ರಾಜ್ಯ ಸರ್ಕಾರವು ಈ ಆರೋಪ ಪ್ರಕರಣದ ತನಿಖೆಗೆ ಎಸ್‌‍ಐಟಿ ರಚಿಸಿದ್ದು, ತನಿಖೆ ನಡೆಯುತ್ತಿದೆ. ವಿಚಾರಣೆಗೆ ಹಾಜರಾಗಲು ಎಸ್‌‍ಐಟಿ ನೀಡಿದ್ದ ನೋಟಿಸ್‌‍ಗೆ ವಕೀಲರ ಮೂಲಕ ಒಂದು ವಾರ ಸಮಯ ಕೇಳಿದ್ದನ್ನು ಬಿಟ್ಟರೆ, ಈವರೆಗೆ ಪ್ರಜ್ವಲ್‌ ಸುಳಿವಿಲ್ಲ.
3
+ ಇಂದು ಬರುತ್ತಾರೆ, ನಾಳೆ ಬರುತ್ತಾರೆ, ಈ ದೇಶದಲ್ಲಿದ್ದಾರೆ. ಆ ದೇಶದಲ್ಲಿದ್ದಾರೆ ಎಂಬಂತಹ ವದಂತಿಗಳು ಹರಿದಾಡಿದವು ಅಷ್ಟೇ. ಅವರು ಎಲ್ಲಿದ್ದಾರೆ, ಯಾವಾಗ ಬರುತ್ತಾರೆ ಎಂಬ ಮಾಹಿತಿಯೂ ಈತನಕ ಲಭ್ಯವಿಲ್ಲ.
4
+ ಕುಟುಂಬದವರ ಸಂಪರ್ಕದಲ್ಲೂ ಪ್ರಜ್ವಲ್‌ ಇಲ್ಲವೆಂದು ಜೆಡಿಎಸ್‌‍ ಮುಖಂಡರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಪ್ರಜ್ವಲ್‌ ವಿದೇಶಕ್ಕೆ ತೆರಳಿದ್ದಾರೆ ಎನ್ನಲಾಗಿದ್ದು, ಅವರನ್ನು ವಾಪಸ್ಸು ಕರೆತರುವ ಹಲವು ಪ್ರಯತ್ನಗಳು ನಡೆದರೂ ಈತನಕ ಫಲ ನೀಡಿಲ್ಲ. ಪ್ರಜ್ವಲ್‌ ಅವರ ರಾಜ ತಾಂತ್ರಿಕ ಪಾಸ್‌‍ ಪೋರ್ಟ್‌ ರದ್ದುಪಡಿಸುವಂತೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಪಾಸ್‌‍ ಪೋರ್ಟ್‌ ರದ್ದತಿ ಪ್ರಕ್ರಿಯೆ ಆರಂಭಗೊಂಡಿದೆ ಎಂಬ ಮಾಹಿತಿ ಹೊರ ಬಿದ್ದಿದೆ.
5
+ ಎಲ್ಲೇ ಇದ್ದರೂ ಕೂಡಲೇ ಎಸ್‌‍ಐಟಿ ಮುಂದೆ ಹಾಜರಾಗಿ ವಿಚಾರಣೆ ಎದುರಿಸಬೇಕು. ಇಲ್ಲದಿದ್ದರೆ ಕುಟುಂಬದಿಂದಲೇ ಹೊರ ಹಾಕುವ ಎಚ್ಚರಿಕೆಯನ್ನು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ನೀಡಿದ್ದಾರೆ. ಈ ಪ್ರಕರಣದಿಂದ ತುಂಬಾ ನೊಂದಿರುವ ಗೌಡರು ತಮ ಹುಟ್ಟುಹಬ್ಬದ ಆಚರಣೆಯನ್ನು ಖುಷಿಯಿಂದ ಆಚರಿಸಿಕೊಳ್ಳಲಿಲ್ಲ.
6
+ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸಹ ಎಸ್‌‍ಐಟಿ ಮುಂದೆ ಹಾಜರಾಗುವಂತೆ ಸೂಚಿಸಿದರು. ಇದ್ಯಾವುದಕ್ಕೂ ಪ್ರಜ್ವಲ್‌ ಮನ್ನಣೆಯನ್ನೇ ನೀಡಲಿಲ್ಲ. ಸ್ವದೇಶಕ್ಕೆ ಮರಳಲೂ ಇಲ್ಲ. ಎಸ್‌‍ಐಟಿ ಮುಂದೆ ವಿಚಾರಣೆಗೆ ಇನ್ನೂ ಹಾಜರಾಗಿಲ್ಲ.ಪ್ರಜ್ವಲ್‌ ಪತ್ತೆಗಾಗಿ ಎಸ್‌‍ಐಟಿ ಲುಕ್‌ ಔಟ್‌ ನೋಟಿಸ್‌‍ ಹಾಗೂ ಬ್ಲೂ ಕಾರ್ನರ್‌ ನೋಟಿಸ್‌‍ ಹೊರಡಿಸಿದರೂ ಪ್ರಯೋಜನವಾಗಿಲ್ಲ. ಆದರೆ, ಆಡಳಿತ ಮತ್ತು ಪ್ರತಿ ಪಕ್ಷಗಳ ನಡುವೆ ಆರೋಪ ಮತ್ತು ಪ್ರತ್ಯಾರೋಪಗಳು ನಿರಂತರವಾಗಿ ಕೇಳಿಬರುತ್ತಿವೆ.
eesanje/url_46_131_8.txt ADDED
@@ -0,0 +1,8 @@
 
 
 
 
 
 
 
 
 
1
+ ನಾಳೆ ದೆಹಲಿಗೆ ಹಾರಲಿದ್ದಾರೆ ಸಿಎಂ, ಡಿಸಿಎಂ : ಪರಿಷತ್‌ನ ಅಭ್ಯರ್ಥಿಗಳ ಆಯ್ಕೆ ಕುರಿತು ಹೈಕಮಾಂಡ್‌ ಜೊತೆ ಚರ್ಚೆ
2
+ ಬೆಂಗಳೂರು, ಮೇ 27-ವಿಧಾನಪರಿಷತ್‌ನ ಅಭ್ಯರ್ಥಿಗಳ ಆಯ್ಕೆ ಸಂಬಂಧ ಪೈಪೋಟಿ ತೀವ್ರಗೊಂಡಿದ್ದು, ಹೈಕಮಾಂಡ್‌ ಜೊತೆ ಚರ್ಚಿಸಲು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿಗೆ ತೆರಳುತ್ತಿದ್ದಾರೆ. ಸುಮಾರು 80ಕ್ಕೂ ಹೆಚ್ಚು ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ.
3
+ 7 ಸ್ಥಾನಗಳ ಪೈಕಿ ಸಚಿವ ಎನ್‌.ಎಸ್‌‍.ಬೋಸ್‌‍ರಾಜ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹಾಗೂ ಹಾಲಿ ಸದಸ್ಯ ಕೆ.ಗೋವಿಂದರಾಜು ಸೇರಿದಂತೆ ಮೂರು ಮಂದಿಗೆ ಅವಕಾಶ ಸಿಗುವುದು ಬಹುತೇಕ ಖಚಿತವಾಗಿದೆ. ಬಾಕಿ ಇರುವ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾಂಗ್ರೆಸಿಗರು ತಲೆಕೆಡಿಸಿಕೊಂಡಿದ್ದಾರೆ.
4
+ ನಿನ್ನೆ ರಜೆ ದಿನವಾದ್ದರಿಂದ ಆಕಾಂಕ್ಷಿಗಳ ದಂಡು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ನಿವಾಸದ ಎದುರು ಜಮಾಯಿಸಿತ್ತು. ಇಂದು ಬೆಳಿಗ್ಗೆ ಕೂಡ ನೂರಾರು ಮಂದಿ ಪ್ರಮುಖ ನಾಯಕರುಗಳ ಮನೆಮುಂದೆ ಭೇಟಿ ಮಾಡಲು ಬೆಂಬಲಿಗರೊಂದಿಗೆ ಆಗಮಿಸಿದ್ದರು.
5
+ ಕುಮಾರಕೃಪ ಅತಿಥಿಗೃಹದಲ್ಲಿ ಕಾಂಗ್ರೆಸಿಗರು ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಹರಿದಾಡಿದ್ದು, ಅಲ್ಲಿಗೆ ನೂರಾರು ಮಂದಿ ನಾಯಕರು ಆಗಮಿಸಿದ್ದು ಕಂಡುಬಂದಿತು.ಮುಖ್ಯಮಂತ್ರಿಯವರ ಗೃಹಕಚೇರಿ ಕೃಷ್ಣ, ಅಧಿಕೃತ ನಿವಾಸ ಕಾವೇರಿ ಈ ಎರಡೂ ಕಡೆಗಳಲ್ಲೂ ಜನ ಸಾಲುಗಟ್ಟಿ ನಿಂತಿದ್ದರು. ತೀವ್ರ ಪೈಪೋಟಿಯ ನಡುವೆ ಯಾರಿಗೆ ಅವಕಾಶ ಸಿಗಲಿದೆ ಎಂಬುದು ಕುತೂಹಲ ಕೆರಳಿಸಿದೆ.
6
+ ಸಂಜೆ ಸಭೆ :ವಿಧಾನಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ 6 ಕ್ಷೇತ್ರಗಳಿಗೆ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆ ತಯಾರಿಗೆ ಸಂಬಂಧಪಟ್ಟಂತೆ ಇಂದು ಸಂಜೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವರ್ಚ್ಯುಯಲ್‌ ಸಭೆ ನಡೆಸಲಿದ್ದಾರೆ.
7
+ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರು, ಸಚಿವರು, ಶಾಸಕರು, ಸಂಸದರು, ಉಸ್ತುವಾರಿ ಪದಾಧಿಕಾರಿಗಳು 2023 ರ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು ಮುಂಚೂಣಿ ಘಟಕದ ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು ಹಾಗೂ ಚುನಾವಣೆಗೆ ಸಂಬಂಧಪಟ್ಟವರ ಜೊತೆ ಚರ್ಚೆ ನಡೆಸಲಾಗುತ್ತಿದೆ.
8
+ ಬೆಂಗಳೂರು ಪದವೀಧರರು, ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ, ಪದವೀಧರರ ಕ್ಷೇತ್ರ, ಈಶಾನ್ಯ ಪದವೀಧರರು ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರಗಳಿಗೆ ಹಂತಹಂತವಾಗಿ ಸಭೆ ನಡೆಯಲಿದೆ.
eesanje/url_46_131_9.txt ADDED
@@ -0,0 +1,8 @@
 
 
 
 
 
 
 
 
 
1
+ ಐತಿಹಾಸಿಕ ಕ್ಷೇತ್ರ ವಿದುರಾಶ್ವತ್ಥದಲ್ಲಿ ನಾಗರ ಹಾವುಗಳ ದರ್ಶನ, ಭಕ್ತರಲ್ಲಿ ಅಚ್ಚರಿ
2
+ ಗೌರಿಬಿದನೂರು, ಮೇ 27-ಐತಿಹಾಸಿಕ ಕ್ಷೇತ್ರ ವಿದುರಾಶ್ವತ್ಥದಲ್ಲಿ ನಾಗರ ಕಲ್ಲುಗಳ ಮುಂದೆ ಎರಡು ನಾಗರ ಹಾವುಗಳು ಹೆಡೆ ಎತ್ತಿ ಕಾಣಿಸಿಕೊಂಡಿದ್ದು, ಭಕ್ತಾಧಿಗಳಲ್ಲಿ ಆಶ್ಚರ್ಯಚಕಿತರನ್ನಾಗಿಸಿದೆ.
3
+ ವಿದುರಾಶ್ವತ್ಥ ಕ್ಷೇತ್ರದಲ್ಲಿ ಪ್ರಾತಃಕಾಲದ ಸಮಯ 5-30ರಲ್ಲಿ ನಾಗರ ಕಲ್ಲುಗಳನ್ನು ಪ್ರತಿಷ್ಠಾಪನೆ ಮಾಡಲು ಭೂಮಿ ಪೂಜೆ ಮಾಡಲು ಕ್ಷೇತ್ರದ ಅರ್ಚಕರಾದ ಅಶ್ವತ್ಥನಾರಾಯಣ ಪ್ರಸಾದ್‌, ನಾಗೇಂದ್ರ ಶಾಸಿಗಳು ಭೂಮಿ ಪೂಜೆ ಮಾಡಲು ಮುಂದಾದ ಸಂದರ್ಭದಲ್ಲಿ ನಾಲ್ಕು ನಾಗರ ಹಾವುಗಳ ಮರಿಗಳು ಕಾಣಿಸಿಕೊಂಡಿದ್ದು, ಇದರಲ್ಲಿ ಎರಡು ಮರಿಗಳು ಹರಿದು ಹೋಗಿದ್ದು, ಉಳಿದೆರಡು ಮರಿಗಳು ಹೆಡೆಯನ್ನು ಬಿಚ್ಚಿ ಕೆಲಕಾಲ ಭಕ್ತಾಧಿಗಳಿಗೆ ದರ್ಶನ ಭಾಗ್ಯವನ್ನು ನೀಡಿವೆ.
4
+ ಬೆಂಗಳೂರಿನಿಂದ ಆಗಮಿಸಿದ್ದ ಮೇಘನ ದಂಪತಿಗಳು ನಾಗರ ಪ್ರತಿಷ್ಠಾಪನೆಗೆ ಮುಂದಾಗಿದ್ದ ಸಂದರ್ಭದಲ್ಲಿ ಈ ಅಪರೂಪದ ಘಟನೆ ನಡೆದಿದೆ.
5
+ ಕ್ಷೇತ್ರದ ಹಿನ್ನೆಲೆ:ವಿದುರಾಶ್ವತ್ಥ ಕ್ಷೇತ್ರವು ಮಹಾಭಾರತದ ಕಾಲದಲ್ಲಿ ವಿದುರನು ಇಲ್ಲಿಗೆ ಬಂದು ತಪ್ಪಸ್ಸು ಮಾಡಿದ್ದು, ಒಂದು ದಿನ ಇಲ್ಲಿನ ಉತ್ತರ ಪಿನಾಕಿನಿ ನದಿಯಲ್ಲಿ ಪ್ರಾತಃಕಾಲದಲ್ಲಿ ಸಂಧ್ಯಾವಂದನೆ ಮಾಡುವ ಸಮಯದಲ್ಲಿ ಕಾಷ್ಟಕ (ಅರಳಿ ವೃಕ್ಷದ ಕಡ್ಡಿ) ಕೈಗೆ ಸಿಕ್ಕಿದ್ದು, ಅದನ್ನು ಮಹಾಪ್ರಸಾದವೆಂದು ವಿದುರನು ವಿದುರಾಶ್ವತ್ಥದಲ್ಲಿ ನೆಟ್ಟಿರುವುದಾಗಿ ಇತಿಹಾಸ ಹೇಳುತ್ತಿದೆ.
6
+ ಆ ಅರಳಿ ವೃಕ್ಷವು ಇಂದು ಬೃಹದಾಕಾರವಾಗಿ ಬೆಳೆದು ಇದರಡಿಯಲ್ಲಿ ಶ್ರೀ ಅಶ್ವತ್ಥನಾರಾಯಾಣ ಸ್ವಾಮಿ ಸನ್ನಿದಿಯೂ ಇದೆ, ಈ ಕ್ಷೇತ್ರದಲ್ಲಿ ನಾಗರ ಕಲ್ಲುಗಳನ್ನು ಪ್ರತಿಷ್ಠಾಪಿಸಿ ಮಕ್ಕಳು ಆಗದವರು, ಮದುವೆಯಾಗದವರು ನಾಗರ ಕಲ್ಲುಗಳನ್ನು ಪೂಜಿಸಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎಂಬ ಪ್ರತೀತಿ ಹಾಗೂ ಅಪಾರ ನಂಬಿಕೆ ಇದೆ. ಈ ನಿಟ್ಟಿನಲ್ಲಿ ಈ ಕ್ಷೇತ್ರದಲ್ಲಿ ಸಾವಿರಾರು ನಾಗರ ಕಲ್ಲುಗಳು ಹಿಂದಿನಿಂದಲೂ ಪ್ರತಿಷ್ಠವಾಗಿರುವುದು ವಿಶೇಷವಾಗಿದೆ.
7
+ ಭಕ್ತಸಾಗರ:ವಿದುರಾಶ್ವತ್ಥ ಕ್ಷೇತ್ರದಲ್ಲಿ ಎರಡು ನಾಗರಹಾವುಗಳ ಮರಿಗಳು ನಾಗರ ಕಲ್ಲುಗಳ ಮುಂದೆ ಹೆಡೆಬಿಚ್ಚಿ ನಿಂತಿರುವುದನ್ನು ನೋಡಲು ಭಕ್ತಾದಿಗಳು ಮುಗಿಬಿದ್ದರು, ಶ್ರದ್ಧಾ-ಭಕ್ತಿಯಿಂದ ನಾಗೇಂದ್ರನೇ ಬಂದಿದ್ದಾನೆ ಎಂದು ಭಕ್ತರು ನಮಸ್ಕರಿಸುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿತ್ತು. ಕೆಲ ಸಮಯದ ನಂತರ ಎರಡು ನಾಗರಹಾವಿನ ಮರಿಗಳು ಹಿಂದೆ ಸರಿದು ನಾಗರ ಕಲ್ಲುಗಳ ಮದ್ಯ ಹೋದವು ಎಂದು ದೇವಾಲಯದ ಅರ್ಚಕರು ತಿಳಿಸಿದ್ದಾರೆ.
8
+ ವಿದುರಾಶ್ವತ್ಥದಲ್ಲಿ ನಾಗರ ಹಾವುಗಳು ಆಗ್ಗಾಗ್ಗೆ ಕಾಣಿಸಿಕೊಳ್ಳುತ್ತಿರುತ್ತವೆ, ಎಷ್ಟೋ ಭಾರಿ ಶ್ರೀ ಅಶ್ವತ್ಥನಾರಾಯಣ ಸ್ವಾಮಿ ಗರ್ಭಗುಡಿಯ ಬಾಗಿಲು ತೆರೆದ ಸಂದರ್ಭದಲ್ಲೂ ನಾಗರ ಹಾವುಗಳು ಕಾಣಿಸಿಕೊಂಡಿವೆ. ಆದರೆ ಇದೇ ಮೊದಲ ಬಾರಿಗೆ ನಾಗರ ಹಾವಿನ ಮರಿಗಳು ಹೆಡೆಬಿಚ್ಚಿ ಕಾಣಿಸಿವೆ ಎಂದುವಿದುರಾಶ್ವತ್ಥ ಕ್ಷೇತ್ರದ ಅರ್ಚಕರಾದ ಅಶ್ವತ್ಥನಾರಾಯಣ ಪ್ರಸಾದ್‌ ತಿಳಿಸಿದ್ದಾರೆ.
eesanje/url_46_132_1.txt ADDED
@@ -0,0 +1,4 @@
 
 
 
 
 
1
+ ಕರ್ನಾಟಕ ಕಾನೂನು ವಿವಿಗೆ ದಿನೇಶ್‌ ಗೂಳಿಗೌಡ ನಾಮನಿರ್ದೇಶನ
2
+ ಬೆಂಗಳೂರು, ಮೇ 26-ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್‌ನ ಸದಸ್ಯರನ್ನಾಗಿ ವಿಧಾನಪರಿಷತ್‌ ಶಾಸಕ ದಿನೇಶ್‌ ಗೂಳಿಗೂಡ ಅವರನ್ನು ನಾಮನಿರ್ದೇಶನ ಮಾಡಿ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಆದೇಶಿಸಿದ್ದಾರೆ.
3
+ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಧಿನಿಯಮ 2009ರ ಸೆಕ್ಷನ್‌ 33 (1) (ಎಲ್‌‍) ರಂತೆ ಮಾರ್ಚ್‌ 14ರಿಂದ ನಾಮನಿರ್ದೇಶನ ಮಾಡಿರುವುದಾಗಿ ರಾಜ್ಯಪಾಲರ ಆದೇಶದಲ್ಲಿ ತಿಳಿಸಲಾಗಿದೆ.
4
+ ದಿನೇಶ್‌ ಗೂಳಿಗೌಡ ಅಭಿನಂದನೆ :ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್‌ಗೆ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿರುವುದಕ್ಕೆ ಶಿಾರಸು ಮಾಡಿದ ವಿಧಾನಪರಿಷತ್‌ನ ಸಭಾಪತಿಗಳಾದ ಬಸವರಾಜ್‌ ಹೊರಟ್ಟಿ ಅವರಿಗೆ ವಿಧಾನಪರಿಷತ್‌ ಶಾಸಕರಾದ ದಿನೇಶ್‌ ಗೂಳಿಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.
eesanje/url_46_132_10.txt ADDED
@@ -0,0 +1,5 @@
 
 
 
 
 
 
1
+ ಚನ್ನಗಿರಿ ಪೊಲೀಸ್‌‍ ಠಾಣೆ ಮೇಲೆ ಕಲ್ಲು ತೂರಾಟ : 11 ಸಿಬ್ಬಂದಿಗೆ ಗಾಯ, 10ಕ್ಕೂ ಹೆಚ್ಚು ವಾಹನಗಳು ಜಖಂ
2
+ ದಾವಣಗೆರೆ, ಮೇ 25-ಲಾಕಪ್‌ ಡೆತ್‌ ಎಂದು ಆರೋಪಿಸಿ ಮೃತನ ಸಂಬಂಧಿಕರು ರಾತ್ರಿ ಚನ್ನಗಿರಿ ಪೊಲೀಸ್‌‍ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ 11 ಮಂದಿ ಪೊಲೀಸ್‌‍ ಸಿಬ್ಬಂದಿ ಗಾಯಗೊಂಡಿದ್ದು, 10 ಕ್ಕೂ ಹೆಚ್ಚು ಪೊಲೀಸ್‌‍ ವಾಹನಗಳು ಜಖಂ ಗೊಂಡಿವೆ. ಚನ್ನಗಿರಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್‌‍ ಬಂದೋಬಸ್ತು ಮಾಡಲಾಗಿದೆ.
3
+ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಉಮಾಪ್ರಶಾಂತ್‌, ಮಟ್ಕ ಆಡಿಸುತ್ತಿದ್ದ ಆರೋಪದ ಮೇಲೆ ಆದಿಲ್‌(30) ಎಂಬ ಯುವಕನನ್ನು ಠಾಣೆಗೆ ಕರೆತಂದ ಐದಾರು ನಿಮಿಷದಲ್ಲಿಯೇ ಆತನ ಆರೋಗ್ಯದಲ್ಲಿ ಏರಿಪೇರಾಗಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.
4
+ ವೈದ್ಯರು ಪರೀಕ್ಷಿಸಿ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ. ಆದರೂ ಕೂಡ ಈತನ ಸಂಬಂಧಿಕರು ಲಾಕಪ್‌ ಡೆತ್‌ ಎಂದು ಹೇಳುತ್ತಿದ್ದಾರೆ. ನಮಲ್ಲಿ ಸಿಸಿ ಕ್ಯಾಮೆರಾ ಇದ್ದು ಪರಿಶೀಲನೆ ಮಾಡಿ ಪ್ರಮಾಣಿಕ ತನಿಖೆ ನಡೆಸುತ್ತೇವೆ ಎಂದು ಅವರು ತಿಳಿಸಿದ್ದಾರೆ.
5
+ ಈ ಸಂಬಂಧ ಮೃತನ ತಂದೆ ದೂರು ಕೊಟ್ಟಿದ್ದಾರೆ. ಇದು ಗಂಭೀರ ಪ್ರಕರಣವಾದ ಹಿನ್ನೆಲೆಯಲ್ಲಿ ಸೂಕ್ತ ತನಿಖೆ ಮಾಡಲಾಗುವುದು. ಈಗಾಗಲೇ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ ಎಂದರು.ನಿನ್ನೆ ಸಂಜೆ ಕಲ್ಲು ತೂರಾಟ ನಡೆಸಿದ್ದರಿಂದ ನಾಲ್ಕು ಪ್ರಕರಣ ದಾಖಲಿಸಲಾಗಿದೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅವರು ಹೇಳಿದರು.
eesanje/url_46_132_11.txt ADDED
@@ -0,0 +1,6 @@
 
 
 
 
 
 
 
1
+ ಬಸ್‌‍ ಸೋರದಿದ್ದರೂ ಕೊಡೆ ಹಿಡಿದು ವಿಡಿಯೋ ಮಾಡಿದ್ದ ಚಾಲಕ-ನಿರ್ವಾಹಕಿ ಅಮಾನತು
2
+ ಹುಬ್ಬಳ್ಳಿ, ಮೇ 25-ಮೋಜಿಗಾಗಿ ಮಾಡಿದ ವಿಡಿಯೋ ಚಾಲಕ ಹಾಗೂ ನಿರ್ವಾಹಕರ ಸೇವೆಗೆ ಕುತ್ತು ತಂದೊಡ್ಡಿದೆ. ಬಸ್‌‍ ಮೇಲ್ಛಾವಣಿ ಸೋರದಿದ್ದರೂ ಕೊಡೆ ಹಿಡಿದು ಬಸ್‌‍ ಚಾಲನೆ ಮಾಡಿದ ವಾಯವ್ಯ ಸಾರಿಗೆ ಸಂಸ್ಥೆಯ ಚಾಲಕ ಹಾಗೂ ಅದನ್ನು ಚಿತ್ರೀಕರಣ ಮಾಡಿದ ನಿರ್ವಾಹಕಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಗ್‌ ತಿಳಿಸಿದ್ದಾರೆ.
3
+ ಈ ಕುರಿತು ಮಾಹಿತಿ ನೀಡಿದ ಅವರು, ಚಾಲಕ ಹನುಮಂತ ಕಿಲ್ಲೇದಾರ ಹಾಗೂ ನಿರ್ವಾಹಕಿ ಎಚ್‌.ಅನಿತಾ ಅವರನ್ನು ಅಮಾನತು ಮಾಡಲಾಗಿದೆ. ಮೇ 23ರಂದು ಉಪ್ಪಿನಬೆಟಗೇರಿ-ಧಾರವಾಡ ಮಾರ್ಗದಲ್ಲಿ ಬಸ್‌‍ ಹೋಗುತ್ತಿರುವಾಗ ಈ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು.
4
+ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಧಾರವಾಡ ವಿಭಾಗೀಯ ನಿಯಂತ್ರಣಾಧಿಕಾರಿ ಬಸ್‌‍ನ ವಾಸ್ತವತೆ ಕುರಿತು ಸ್ಥಳೀಯ ತಾಂತ್ರಿಕ ಅಧಿಕಾರಿ ಹಾಗೂ ಮುಖ್ಯ ತಾಂತ್ರಿಕ ಅಧಿಕಾರಿಗಳ ಜೊತೆಗೆ ವರದಿ ನೀಡಿದ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಅಧಿಕಾರಿಗಳು ವಾಹನ ತಪಾಸಣೆ ಮಾಡಿ, ಚಾಲಕ ಕುಳಿತುಕೊಳ್ಳುವ ಸ್ಥಳ ಅಥವಾ ಇತರೆ ಯಾವುದೇ ಭಾಗದಲ್ಲಿ ಮಳೆಯಿಂದ ಬಸ್‌‍ ಮೇಲ್ಛಾವಣಿ ಸೋರುತ್ತಿರಲಿಲ್ಲ ಎನ್ನುವ ಪರಿಶೀಲನಾ ವರದಿ ಸಲ್ಲಿಸಿದ್ದರು.
5
+ ಬಸ್‌‍ನಲ್ಲಿ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಮನರಂಜನೆಗಾಗಿ ವಿಡಿಯೋ ಮಾಡಿದ್ದಾರೆ. ವಾಹನದ ಛಾವಣಿ ಸೋರಿಕೆ ಬಗ್ಗೆ ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕರ ಯಾವುದೇ ದೂರು ದಾಖಲು ಮಾಡಿಲ್ಲ. ಇನ್ನೂ ಈ ವಿಡಿಯೋ ಕುರಿತು ಚಾಲನಾ ಸಿಬ್ಬಂದಿಯಿಂದ ಸ್ಪಷ್ಟೀಕರಣ ಪಡೆದಾಗ ತಾವು ಮನರಂಜನೆಗಾಗಿ ಚಿತ್ರೀಕರಣ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖೀಸಲಾಗಿದೆ.
6
+ ವರದಿ ಆಧಾರದ ಮೇಲೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಸಿಬ್ಬಂದಿಯ ಕರ್ತವ್ಯ ಲೋಪ ಹಾಗೂ ಸಂಸ್ಥೆ ಘನತೆಗೆ ಧಕ್ಕೆಯಾಗುವಂತಹ ಕೆಲಸವಾಗಿದ್ದರಿಂದ ಚಾಲಕ-ನಿರ್ವಾಹಕಿಯನ್ನು ಅಮಾನತು ಮಾಡಿ ಆದೇಶ ಎಂಡಿ ಹೊರಡಿಸಿದ್ದಾರೆ.
eesanje/url_46_132_12.txt ADDED
@@ -0,0 +1,8 @@
 
 
 
 
 
 
 
 
 
1
+ ರೇವ್‌ ಪಾರ್ಟಿ ಪ್ರಕರಣ : 5 ಮಂದಿಯ ಬ್ಯಾಂಕ್‌ ಖಾತೆ ಸೀಸ್‌‍
2
+ ಬೆಂಗಳೂರು, ಮೇ 25-ಫಾರ್ಮ್‌ಹೌಸ್‌‍ನಲ್ಲಿ ನಡೆದ ರೇವ್‌ ಪಾರ್ಟಿ ಪ್ರಕರಣದಲ್ಲಿ ಬಂಧಿತರಾಗಿರುವ 5 ಮಂದಿಯ ಬ್ಯಾಂಕ್‌ ಅಕೌಂಟ್‌ಗಳಲ್ಲಿ ಲಕ್ಷ ಲಕ್ಷ ಹಣ ಪತ್ತೆಯಾಗಿದೆ.ಈ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಐದು ಮಂದಿಯ ಬ್ಯಾಂಕ್‌ ಖಾತೆಗಳನ್ನು ಸೀಸ್‌‍ ಮಾಡಿಸಲು ಮುಂದಾಗಿದ್ದಾರೆ.
3
+ ಈ ರೀತಿಯ ರೇವ್‌ ಪಾರ್ಟಿಗಳನ್ನು ಎಲ್ಲೆಲ್ಲಿ ಮಾಡಿಸಲಾಗಿದೆ, ಯಾರೆಲ್ಲಾ ಭಾಗಿಯಾಗಿದ್ದರು, ಎಷ್ಟೆಷ್ಟು ಹಣ ಸಂಗ್ರಹಿಸಲಾಗಿತ್ತು, ಪಾರ್ಟಿಗೆ ಎಲ್ಲಿಂದ ಮಾದಕ ವಸ್ತು ಸರಬರಾಜು ಆಗುತ್ತಿತ್ತು ಎಂಬೆಲ್ಲಾ ಮಾಹಿತಿಗಳನ್ನು ಪತ್ತೆ ಹಚ್ಚುವ ಸಲುವಾಗಿ ಈ ಐದು ಮಂದಿಯ ಮೊಬೈಲ್‌ಗಳ ಮಿರರ್‌ ಇಮೇಜ್‌ ಮಾಡಿಸಲು ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
4
+ ವಾಸು ಎಂಬಾತನ ಹುಟ್ಟು ಹಬ್ಬದ ಅಂಗವಾಗಿ ಸನ್‌ಸೆಟ್‌ ಟು ಸನ್‌ರೈಸ್‌‍ ವಿಕ್ಟರಿ ಎಂಬ ಶೀರ್ಷಿಕೆಯಲ್ಲಿ ಆಯೋಜಿಸಿದ್ದ ರೇವ್‌ ಪಾರ್ಟಿ ಯಲ್ಲಿ 103 ಮಂದಿ ಪಾಲ್ಗೊಂಡಿದ್ದರು. ಪಾರ್ಟಿಯಲ್ಲಿ ದೊಡ್ಡಮಟ್ಟದಲ್ಲಿ ಮಾದಕ ವಸ್ತು ಬಳಸಿರುವ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿದ್ದಲ್ಲದೇ, ದಾಳಿ ಸಂದರ್ಭದಲ್ಲಿ ಎಂಡಿಎಂಎ, ಕೊಕೇನ್‌ ಹಾಗೂ ಹೈಡ್ರೋ ಗಾಂಜಾ ಪತ್ತೆಯಾಗಿತ್ತು.
5
+ ಈ ಹಿನ್ನೆಲೆಯಲ್ಲಿ ಪಾರ್ಟಿಯಲ್ಲಿ ಭಾಗಿಯಾಗಿದ್ದವರ ರಕ್ತದ ಮಾದರಿಯನ್ನು ಸಂಗ್ರಹಿಸಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ 86 ಮಂದಿ ಡ್ರಗ್‌ ಸೇವಿಸಿರುವುದ ದೃಢಪಟ್ಟಿದೆ.ಈ ಪಾರ್ಟಿಯಲ್ಲಿ ಇಬ್ಬರು ತೆಲುಗು ನಟಿಯರು, ಕಿರುತೆರೆ ನಟಿಯರು, ಸಾಫ್‌್ಟ ವೇರ್‌ ಎಂಜಿನಿಯರ್‌ಗಳು ಭಾಗವಹಿಸಿದ್ದರು.
6
+ ಆಂಧ್ರ ಸಚಿವರ ಆಪ್ತರು ವಶಕ್ಕೆ :ನಗರದ ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಫಾರ್ಮ್‌ ಹೌಸ್‌‍ನಲ್ಲಿ ನಡೆದ ರೇವ್‌ ಪಾರ್ಟಿ ಪ್ರಕರಣದ ತನಿಖೆಯನ್ನು ತೀವ್ರ ಗೊಳಿಸಿರುವ ಸಿಸಿಬಿ ಪೊಲೀಸರು ಆಂಧ್ರ ಪ್ರದೇಶದ ಸಚಿವ ಮತ್ತು ಶಾಸಕರೊಬ್ಬರ ಆಪ್ತರುಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
7
+ ದಾಳಿ ಸಂದರ್ಭದಲ್ಲಿ ಕಾರೊಂದರಲ್ಲಿ ಎಮ್‌ಎಲ್‌ಎ ಪಾಸ್‌‍ ಪತ್ತೆಯಾಗಿತ್ತು. ಅದರ ಜಾಡುಹಿಡಿದು ಪೊಲೀಸರು ತನಿಖೆ ಕೈಗೊಂಡು ಆಪ್ತನನ್ನು ವಶಕ್ಕೆ ಪಡೆದಿದ್ದಾರೆ.ರೇವ್‌ ಪಾರ್ಟಿ ಆಯೋಜನೆಯಲ್ಲಿ ಆಂಧ್ರದ ಸಚಿವರೊಬ್ಬರ ಆಪ್ತನ ಪ್ರಮುಖ ಪಾತ್ರವಿದೆ ಎಂಬುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿಲಾಗಿದೆ.
8
+ ಮೇ 19 ರಂದು ಸಂಜೆ ಆಯೋಜಿಸಿದ್ದ ಸನ್‌ಸೆಟ್‌ ಟು ಸನ್‌ರೈಸ್‌‍ ಪಾರ್ಟಿಯಲ್ಲಿ ಪಾಲ್ಗೊಂಡಿದ್ದವರ ಪೈಕಿ 86 ಮಂದಿ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಅವರೆಲ್ಲರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍ ನೀಡಿದ್ದಾರೆ.ಇದೆಲ್ಲದರ ನಡುವೆ ಕರ್ತವ್ಯಲೋಪದಲ್ಲಿ ಹೆಬ್ಬಗೋಡಿ ಪೊಲೀಸ್‌‍ ಠಾಣೆಯ ಮೂವರು ಸಿಬ್ಬಂದಿಗಳ ತಲೆದಂಡ ಸಹ ಆಗಿದೆ.
eesanje/url_46_132_2.txt ADDED
@@ -0,0 +1,6 @@
 
 
 
 
 
 
 
1
+ ಮೋದಿ ಪ್ರಧಾನಿಯಾಗಿ ಇಂದಿಗೆ 10 ವರ್ಷ ಪೂರ್ಣ, ಶುಭ ಹಾರೈಸಿದ ವಿಜಯೇಂದ್ರ
2
+ ಬೆಂಗಳೂರು, ಮೇ 26-ನಿರೀಕ್ಷಿತ ಗುರಿ ತಲುಪಿ ಭಾರತ ಗೆಲ್ಲಲು ಸಾಗಲೇ ಬೇಕಿದೆ ಮತ್ತೊಂದು ಅವಧಿಗೂ ನಿಮ್ಮ ಸಾರಥ್ಯದ ವಿಜಯ ರಥ ಇದು ಶತಕೋಟಿ ಭಾರತೀಯರ ಒಕ್ಕೊರಲ ಪ್ರಾರ್ಥನೆ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಶುಭ ಹಾರೈಸಿದ್ದಾರೆ.
3
+ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಇಂದಿಗೆ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶುಭ ಕೋರಿರುವ ವಿಜಯೇಂದ್ರ ಹತ್ತು ವರುಷದ ನಿಮ್ಮ ದಿಟ್ಟ ನಿಲುವುಗಳು, ಯುಗ ಮರೆಯದ ಹೆಜ್ಜೆ ಗುರುತುಗಳು ಎಂದು ಬಣ್ಣಿಸಿದ್ದಾರೆ.
4
+ ಅಂದು ಪ್ರಜಾಪ್ರಭುತ್ವದ ದೇಗುಲ ಸಂಸತ್‌ ಭವನದ ಬಾಗಿಲಿಗೆ ತಲೆ ಇಟ್ಟು ನಮಿಸಿ ಅಡಿಯಿಟ್ಟ ಪ್ರಥಮ ಪ್ರಧಾನಿ ನೀವು, ಸುದೀರ್ಘ ಹತ್ತು ವರುಷದ ಆಡಳಿತದಲ್ಲಿ ಜಗತ್ತಿನೆದುರು ಭಾರತ ತಲೆ ಎತ್ತಿ ಬೀಗುವಂತೆ ಸಾಧನೆ ಮಾಡಿದ ಸಾರ್ಥಕ ನೇತಾರ ನೀವು ಎಂದು ಹಾಡಿ ಹೊಗಳಿದ್ದಾರೆ.
5
+ ಜನಭೂಮಿಯಲ್ಲಿ ರಾಮ ಮಂದಿರ, ಭಾರತ ಮಾತೆಗೆ ತೊಡಿಸಿದ ಕಾಶೀರ ಕಿರೀಟ ನೀವು ತೊಟ್ಟ ಸಂಕಲ್ಪದ ಸಾಕಾರಗಳು. ರಾಷ್ಟ್ರ ಭಕ್ತರ ಪಾಲಿಗೆ ನೀವು ಅವತಾರ ಪುರುಷ, ಭಾರತಮಾತೆಗೆ ಹೆಮೆಯ ಸುಪುತ್ರ ನೀವು ಎಂದು ಕೊಂಡಾಡಿದ್ದಾರೆ.
6
+ ವಿಶ್ವ ಮೂಂಚೂಣಿಯಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲಲು ಭಾರತ ಬಯಸುತ್ತಿದೆ ನಿಮ ಸಂತ ತೇಜಸ್ಸು, ತಪಸ್ವಿ ವರ್ಚಸ್ಸು ನಿಮ ದಿಟ್ಟ ನಡೆ, ನುಡಿಯ ಪ್ರಖರ ಧೀರತೆಯ ಯಶಸ್ಸು ಎಂದು ಮೋದಿಯವರ ಆಡಳಿತವನ್ನು ವಿಜಯೇಂದ್ರ ತಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪ್ರಶಂಸೆಯ ಸುರಿಮಳೆಗೈದಿದ್ದಾರೆ.
eesanje/url_46_132_3.txt ADDED
@@ -0,0 +1,6 @@
 
 
 
 
 
 
 
1
+ ಮಟ್ಕಾ ಆಡಿಸುವವರಿಂದ ಪೊಲೀಸರ ಮಾಸಿಕ ಚಂದಾ ವಸೂಲಿ ದೃಢಪಟ್ಟರೆ ಸೇವೆಯಿಂದ ವಜಾ : ಪರಮೇಶ್ವರ್
2
+ ಬೆಂಗಳೂರು, ಮೇ 26-ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್‌‍ ಠಾಣೆ ದಾಂಧಲೆ ಪ್ರಕರಣವನ್ನು ಸಮಗ್ರ ತನಿಖೆಗೆ ವಹಿಸಲಾಗಿದ್ದು, ಮಟ್ಕಾ ದಂಧೆ ನಡೆಸುವವರಿಂದ ಮಾಸಿಕ ಹಣ ವಸೂಲಿ ಮಾಡುತ್ತಿರುವುದು ದೃಢಪಟ್ಟರೆ ಅಂತಹವರನ್ನು ಸೇವೆಯಿಂದ ವಜಾ ಮಾಡಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.
3
+ ಮಟ್ಕಾ ಆಡಿಸುವವರಿಂದ ಮಾಸಿಕ ಹಣ ಪಡೆಯುತ್ತಿರುವ ಆರೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ ಎಲ್ಲಾ ವಿಚಾರವನ್ನೂ ತನಿಖೆಗೆ ಒಳಪಡಿಸಲಾಗುವುದು ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖಾ ವರದಿ ಬಂದ ನಂತರ ಕಾನೂನು ರೀತಿ ಕ್ರಮ ಜರುಗಿಸುತ್ತೇವೆ. ಈಗಾಗಲೇ ಠಾಣೆ ಇನ್ಸ್ ಪೆಕ್ಟರ್‌ ಹಾಗೂ ಡಿವೈಎಸ್ಪಿಯನ್ನು ಅಮಾನತು ಮಾಡಲಾಗಿದೆ ಎಂದರು.
4
+ ಪೊಲೀಸರು ಸರಿಯಾದ ರೀತಿಯಲ್ಲಿ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಲಾಗಿದೆ. ಮಟ್ಕಾ ಆಡಿಸುವುದರಲ್ಲಿ ಭಾಗಿಯಾಗಿದ್ದ ಎಂಬ ಆರೋಪದ ಮೇಲೆ ಠಾಣೆಗೆ ಕರೆದುಕೊಂಡು ಬಂದಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ಯಾವ ಕಾರಣಕ್ಕೆ ಮೃತಪಟ್ಟಿದ್ದಾರೆ ಎಂಬುದು ಮರಣೋತ್ತರ ವರದಿ ನಂತರ ತಿಳಿಯಲಿದೆ. ತನಿಖೆ ನಂತರ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದರು.
5
+ ಕಾನೂನು ಮತ್ತು ಸುವ್ಯವಸ್ಥೆ ಹಾಳಾಗಲು ಬಿಡುವುದಿಲ್ಲ :ಶಾಸಕರೇ ಪೊಲೀಸ್‌‍ ಠಾಣೆಗೆ ನುಗ್ಗಿ ದಾಂಧಲೆ ಮಾಡುವುದು ಸರಿಯಲ್ಲ. ಯಾರೇ ಆದರೂ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಶಾಸಕರಿರಲಿ, ಸಂಸದರಿರಲಿ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಗೃಹಸಚಿವರು ಹೇಳಿದರು.
6
+ ರಾಜ್ಯದಲ್ಲಿ ಗೂಂಡಾ ವರ್ತನೆ, ದಾದಾಗಿರಿ, ಗೂಂಡಾಗಿರಿ ಮಾಡಲು ಅವಕಾಶವಿಲ್ಲ. ಒಂದು ವೇಳೆ ಅಂತಹ ಘಟನೆ ನಡೆದರೆ ಸಹಿಸುವುದಿಲ್ಲ. ಹತ್ತಿಕ್ಕುತ್ತೇವೆ. ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಹಾಳಾಗಲು ಬಿಡುವುದಿಲ್ಲ ಎಂದರು.ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಯಾವ ರೀತಿ ಕಾನೂನು ಸುವ್ಯವಸ್ಥೆ ಇದೆ. ಗುಜರಾತಿನಲ್ಲಿ ನಿನ್ನೆ ಸಂಭವಿಸಿರುವ ಅಗ್ನಿ ದುರಂತಕ್ಕೆ ಯಾರು ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಹೇಳಿಕೆಗೆ ತಿರುಗೇಟು ನೀಡಿದರು.
eesanje/url_46_132_4.txt ADDED
@@ -0,0 +1,6 @@
 
 
 
 
 
 
 
1
+ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 283 ಕೋಟಿ ರೂ ಬಾಕಿ ಉಳಿಸಿಕೊಂಡ ಗ್ಯಾರಂಟಿ ಸರ್ಕಾರ
2
+ ಹುಬ್ಬಳ್ಳಿ, ಮೇ 26-ಸಾರಿಗೆ ಸಂಸ್ಥೆಯ ಬಸ್‌‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿರುವ ಕರ್ನಾಟಕ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಮರು ಪಾವತಿಸಬೇಕಾದ ಮೊತ್ತದಲ್ಲಿ ರಾಜ್ಯ ಸರ್ಕಾರ 283 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ.
3
+ 2023ರ ಜೂನ್‌ 11ರಂದು ಈ ಯೋಜನೆ ಜಾರಿಗೆ ಬಂದಿತ್ತು. ಅಂದಿನಿಂದ ಇಲ್ಲಿಯವರೆಗೆ ಯಾವುದೇ ತಿಂಗಳು ಸಹ ರಾಜ್ಯ ಸರ್ಕಾರ ಪೂರ್ಣ ಮೊತ್ತವನ್ನು ಮರು ಪಾವತಿ ಮಾಡಿಲ್ಲ. ಇದರ ಪರಿಣಾಮವಾಗಿ ಬಾಕಿ 300 ಕೋಟಿ ರೂ. ಸಮೀಪ ಬಂದು ಮುಟ್ಟಿದೆ. ಯೋಜನೆ ಆರಂಭದಿಂದ ಈ ವರ್ಷದ ಏಪ್ರಿಲ್‌ ಅಂತ್ಯದವರೆಗೆ ಮಹಿಳೆಯರಿಗೆ 46,42,11,425 ಶೂನ್ಯ ಟಿಕೆಟ್‌ಗಳನ್ನು ವಿತರಿಸಲಾಗಿದೆ. ಇದರ ಒಟ್ಟು ಪ್ರಯಾಣ ವೆಚ್ಚ 1193,86,33,524 ರೂ. ಗಳಾಗಿವೆ. ಇದರಲ್ಲಿ ರಾಜ್ಯ ಸರ್ಕಾರ, ವಾಕರಸಾ ಸಂಸ್ಥೆಗೆ ಇಲ್ಲಿಯವರೆಗೆ 894,90,52,000 ರೂ. ಪಾವತಿ ಮಾಡಿದೆ.
4
+ ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರ, ವಾಕರಸಾ ಸಂಸ್ಥೆಗೆ ಮರು ಪಾವತಿಯಲ್ಲಿ ಪ್ರತಿ ತಿಂಗಳು 15ರಿಂದ 40 ಕೋಟಿ ರೂ. ವರೆಗೆ ಬಾಕಿ ಉಳಿಸಿಕೊಳ್ಳುತ್ತ ಬಂದಿದೆ. ಆದರೆ, ಮಾರ್ಚ್‌ ತಿಂಗಳಲ್ಲಿ ಶೂನ್ಯ ಟಿಕೆಟ್‌ ಮೊತ್ತಕ್ಕಿಂತ ಹೆಚ್ಚಿನ ಹಣ ಮರು ಪಾವತಿ ಮಾಡಿರುವುದು ವಿಶೇಷ. ಎರಡು ಕಂತುಗಳಲ್ಲಿ 157.36 ಕೋಟಿ ರೂ. ಪಾವತಿಸಿತ್ತು. ಆರ್ಥಿಕ ವರ್ಷದ ಕೊನೆಯ ತಿಂಗಳು ಎಂಬುದು ಇದಕ್ಕೆ ಕಾರಣ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.
5
+ ಇತ್ತೀಚಿನ ತಿಂಗಳಲ್ಲಿ ಶಕ್ತಿಯೋಜನೆಯ ಲಾನುಭವಿಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. ಏಪ್ರಿಲ್‌ ತಿಂಗಳು ಹೊರತು ಪಡಿಸಿ ಶೂನ್ಯ ಟಿಕೆಟ್‌ ಮೊತ್ತದಲ್ಲೂ ಗಮನಾರ್ಹ ಏರಿಕೆ ಏನೂ ಆಗಿಲ್ಲ. ಸಮಾಧಾನಕರ ಸಂಗತಿಯೆಂದರೆ ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳ ಮರು ಪಾವತಿ ಮೊತ್ತ ಏರಿಕೆಯಾಗಿರುವುದು. ಏಪ್ರಿಲ್‌ ತಿಂಗಳಲ್ಲಿ ಅತ್ಯಧಿಕ 102.68 ಕೋಟಿ ರೂ. ಪಾವತಿಸಿದೆ. ಮೇ ತಿಂಗಳು ಮುಗಿಯುವ ಮೊದಲೇ 102.68 ಕೋಟಿ ರೂ. ಪಾವತಿಸಿರುವುದು ಗಮನಾರ್ಹ ಅಂಶವಾಗಿದೆ.
6
+ ವಾಕರಸಾ ಸಂಸ್ಥೆಯು ಧಾರವಾಡ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಗದಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದೆ.ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರ, ಸಂಸ್ಥೆಗೆ ಇಲ್ಲಿಯವರೆಗೆ 895 ಕೋಟಿ ರೂ. ಮರು ಪಾವತಿ ಮಾಡಿದೆ. 298 ಕೋಟಿ ರೂ. ಬಾಕಿ ಬರಬೇಕಿದೆ. ಪ್ರತಿ ತಿಂಗಳು ಸರ್ಕಾರದಿಂದ ಬರಬೇಕಾದ ಮರು ಪಾವತಿ ಮೊತ್ತ ಹಾಗೂ ಬಾಕಿ ಮೊತ್ತದ ಬಗ್ಗೆ ವರದಿ ಸಲ್ಲಿಸಲಾಗುತ್ತದೆ ಎಂಬ ಕುರಿತು ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಎಂಡಿ ಪ್ರಿಯಾಂಗಾ ಮಾಹಿತಿ ನೀಡಿದ್ದಾರೆ.
eesanje/url_46_132_5.txt ADDED
@@ -0,0 +1,4 @@
 
 
 
 
 
1
+ ನಾಳೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌ ದಂಪತಿ
2
+ ಬೆಂಗಳೂರು, ಮೇ 26-ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌ ಮತ್ತು ಅವರ ಪತ್ನಿ ಸುದೇಶ್‌ ಧನಕರ್‌ ನಾಳೆ ಬೆಳಗಾವಿ ಮತ್ತು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಇಂಡಿಯನ್‌ ಕೌನ್ಸಿಲ್‌ ಫಾರ್‌ ಮೆಡಿಕಲ್‌ ರಿಸರ್ಚ್‌-ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಆ್‌‍ ಟ್ರಡಿಷನಲ್‌ ಮೆಡಿಸಿನ್‌ (ಎನ್‌ಐಟಿಎಂ) ಸಂಸ್ಥಾಪನಾ ದಿನ ಮತ್ತು ಬೆಳಗಾವಿಯ ಕೆಎಲ್‌‍ಇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
3
+ ನಂತರ, ಧನಕರ್‌ ಅವರು ಸಿಎಸ್‌‍ ಐಆರ್‌ – ಎನ್‌ ಎಎಲ್‌ ಬೆಂಗಳೂರು ಕ್ಯಾಂಪಸ್‌‍ಗೆ ಭೇಟಿ ನೀಡಲಿದ್ದು, ಲಘು ಯುದ್ಧ ವಿಮಾನ (ಎಲ್ಸಿಎ) ಘಟಕಗಳು ಮತ್ತು ಸಾರಸ್ನ ಪ್ರದರ್ಶನವನ್ನು ವೀಕ್ಷಿಸಲಿದ್ದಾರೆ.ರಾಷ್ಟ್ರೀಯ ಏರೋಸ್ಪೇಸ್‌‍ ಲ್ಯಾಬೋರೇಟರೀಸ್‌‍ (ಎನ್‌ಎಎಲ್‌‍) ವಿನ್ಯಾಸಗೊಳಿಸಿದ ಲಘು ಸಾರಿಗೆ ವಿಮಾನ ವಿಭಾಗದಲ್ಲಿ ಸಾರಸ್‌‍ ಮೊದಲ ಭಾರತೀಯ ಬಹುಪಯೋಗಿ ನಾಗರಿಕ ವಿಮಾನವಾಗಿದೆ.
4
+ ಇದರೊಂದಿಗೆ ಧನಕರ್‌ ಅವರು ರಾಷ್ಟ್ರೀಯ ಏರೋನಾಟಿಕ್ಸ್‌‍ ಲಿಮಿಟೆಡ್‌ನಲ್ಲಿ (ಎನ್‌ಎಎಲ್‌‍) ಕೆಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದೇ ವೇಳೆ ಬೆಂಗಳೂರಿನ ರಾಜಭವನಕ್ಕೂ ಭೇಟಿ ನೀಡಲಿದ್ದಾರೆ. ಉಪ ರಾಷ್ಟ್ರಪತಿ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿ ಹಾಗೂ ಬೆಂಗಳೂರಿನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
eesanje/url_46_132_6.txt ADDED
@@ -0,0 +1,7 @@
 
 
 
 
 
 
 
 
1
+ ಮೇಲ್ಮನೆ ಚುನಾವಣೆಗೆ ನಾಳೆ ಅಧಿಸೂಚನೆ, ಅಂತಿಮಗೊಳ್ಳದ ಅಭ್ಯರ್ಥಿಗಳ ಆಯ್ಕೆ
2
+ ಬೆಂಗಳೂರು, ಮೇ 26-ವಿಧಾನಸಭಾ ಸದಸ್ಯರಿಂದ ವಿಧಾನಪರಿಷತ್‌ನ 11 ಸ್ಥಾನಗಳಲ್ಲಿ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ನಾಳೆ ಅಧಿಸೂಚನೆ ಹೊರಬೀಳಲಿದ್ದು, ನಾಳೆಯಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
3
+ 11 ಸ್ಥಾನಗಳ ಪೈಕಿ ವಿಧಾನಸಭೆಯಲ್ಲಿ ಹೊಂದಿರುವ ಶಾಸಕರ ಸಂಖ್ಯೆಯ ಆಧಾರದ ಮೇಲೆ ಆಡಳಿತಾರೂಢ ಕಾಂಗ್ರೆಸ್‌‍ 7, ಪ್ರತಿಪಕ್ಷ ಬಿಜೆಪಿ 3 ಹಾಗೂ ಜೆಡಿಎಸ್‌‍ 1 ಸ್ಥಾನವನ್ನು ಸುಲಭವಾಗಿ ಗೆಲ್ಲಬಹುದಾಗಿದೆ.ಇದುವರೆಗೂ ಮೂರೂ ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಅಂತಿಮಗೊಳಿಸಿಲ್ಲ. ಆಕಾಂಕ್ಷಿಗಳ ಸಂಖ್ಯೆ ಸಾಕಷ್ಟಿರುವುದರಿಂದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಮೂರು ಪಕ್ಷಗಳು ವಿಳಂಬ ಮಾಡುತ್ತಿವೆ.
4
+ ನಾಮಪತ್ರ ಸಲ್ಲಿಸಲು ಜೂನ್‌ 3 ರವರೆಗೂ ಕಾಲಾವಕಾಶ ಇರುವುದರಿಂದ ಈ ವಾರಾಂತ್ಯದೊಳಗೆ ಅಭ್ಯರ್ಥಿಗಳ ಆಯ್ಕೆ ಮಾಡಿ ಅಂತಿಮಗೊಳಿಸಲಾಗುತ್ತದೆ. ಕಾಂಗ್ರೆಸ್‌‍ನಲ್ಲಿ 70 ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದರೆ ಬಿಜೆಪಿಯಲ್ಲಿ 10 ಕ್ಕೂ ಹೆಚ್ಚು ಮಂದಿ ಇದ್ದಾರೆ.ಜೆಡಿಎಸ್‌‍ನಲ್ಲೂ ನಾಲ್ಕು ಮಂದಿ ಪ್ರಬಲ ಆಕಾಂಕ್ಷಿಗಳಿರುವುದು ಅಭ್ಯರ್ಥಿ ಆಯ್ಕೆಗೆ ಕಗ್ಗಂಟಾಗಿ ಪರಿಣಮಿಸಿದೆ.
5
+ ಜೂನ್‌ 17 ರಂದು ವಿಧಾನಪರಿಷತ್‌ ಸದಸ್ಯರಾದ ಅರವಿಂದ ಕುಮಾರ್‌ ಅರಳಿ, ಸಚಿವ ಎನ್‌.ಎಸ್‌‍.ಬೋಸರಾಜ್‌, ಕೆ.ಗೋವಿಂದರಾಜ್‌, ಮುನಿರಾಜೇಗೌಡ, ಬಿ.ಎಂ.ಫಾರೂಕ್‌, ರಘುನಾಥರಾವ್‌ ಮಲ್ಕಾಪುರೆ, ಎನ್‌.ರವಿಕುಮಾರ್‌, ಎಸ್‌‍.ರುದ್ರೇಗೌಡ, ಕೆ.ಹರೀಶ್‌ಕುಮಾರ್‌ ನಿವೃತ್ತಿಯಾಗಲಿದ್ದಾರೆ.
6
+ ಡಾ.ತೇಜಸ್ವಿನಿಗೌಡ ಹಾಗೂ ಕೆ.ಪಿ.ನಂಜುಂಡಿ ವಿಶ್ವಕರ್ಮ ಅವರು ಈಗಾಗಲೇ ತಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.ರಾಜೀನಾಮೆ ಹಾಗೂ ನಿವೃತ್ತಿಯಿಂದ ತೆರವಾಗುವ 11 ಸ್ಥಾನಗಳಿಗೆ ಭಾರತದ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.ನಾಳೆ ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ಜೂನ್‌ 3 ರಂದು ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ.
7
+ ಜೂನ್‌ 4 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಜೂನ್‌ 6 ರವರೆಗೂ ನಾಮಪತ್ರ ವಾಪಸ್‌‍ ಪಡೆಯಲು ಕಾಲಾವಕಾಶ ಇದೆ. 11 ಕ್ಕಿಂತ ಹೆಚ್ಚು ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದರೆ ಜೂನ್‌ 13 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ.ಸಂಜೆ 5 ಗಂಟೆ ನಂತರ ಮತ ಎಣಿಕೆ ನಡೆದು ಅಂದೇ ಫಲಿತಾಂಶ ಹೊರಬೀಳಲಿದೆ. ಜೂನ್‌ 15 ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
eesanje/url_46_132_7.txt ADDED
@@ -0,0 +1,7 @@
 
 
 
 
 
 
 
 
1
+ ಕಂಟೈನರ್‌-ಕಾರ್ ನಡುವೆ ಭೀಕರ ಅಪಘಾತ, ಮಗು ಸೇರಿ 6 ಜನ ಸ್ಥಳದಲ್ಲೇ ಸಾವು
2
+ ಹಾಸನ,ಮೇ 26-ಕಂಟೈನರ್‌ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಆರು ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-75ರ ಈಚನಹಳ್ಳಿ ಬಳಿ ಇಂದು ಬೆಳಿಗ್ಗೆ ನಡೆದಿದೆ.ನಾರಾಯಣಸ್ವಾಮಿ, ಸುನಂದ, ರವಿಕುಮಾರ್‌, ನೇತ್ರ, ಚೇತನ್‌ (ಬಾಲಕ), ರಾಕೇಶ್‌ (ಚಾಲಕ) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
3
+ ಮೃತರು ಚಿಕ್ಕಬಳ್ಳಾಪುರ ಜಿಲ್ಲೆ ಹೊಸಕೋಟೆ ತಾಲೂಕಿನ ಅಂದರಹಳ್ಳಿ ಹಾಗೂ ದೇವನಹಳ್ಳಿ ಬಳಿಯ ಕಾರಹಳ್ಳಿ ಮೂಲದವರೆಂದು ತಿಳಿದುಬಂದಿದೆ.ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಈಟಿಯೋಸ್‌‍ ಕಾರಿನಲ್ಲಿ ತೆರಳಿದ್ದ ಒಂದೇ ಕುಟುಂಬದ ಸದಸ್ಯರು ಸಂಬಂಧಿಕರ ಆರೋಗ್ಯವನ್ನು ವಿಚಾರಿಸಿಕೊಂಡು ವಾಪಸ್‌‍ ಗ್ರಾಮಕ್ಕೆ ಬರುತ್ತಿದ್ದಾಗ ಬೆಳಗಿನ ಜಾವ 6.30 ರ ಸುಮಾರಿನಲ್ಲಿ ನಿದ್ದೆ ಮಂಪರಿನಲ್ಲಿದ್ದ ಕಾರಿನ ಚಾಲಕ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿ ಕಂಟೈನರ್‌ಗೆ ಅಪ್ಪಳಿಸಿದೆ.
4
+ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಎಲ್ಲರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಸುದ್ದಿ ತಿಳಿಯುತ್ತಿದ್ದ ಹಾಸನ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಕಾರಿನೊಳಗೆ ಸಿಲುಕಿರುವ ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಟ್ಟರು.
5
+ ನಂತರ ಕ್ರೇನ್‌ ಮೂಲಕ ಕಾರನ್ನು ಮೇಲಕ್ಕೆ ಎತ್ತಿ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.ಈ ಸಂಬಂಧ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಮಹಮದ್‌ ಸುಜೀತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
6
+ ಆಕ್ರಂದನ:ಅಪಘಾತದಲ್ಲಿ ತಮವರನ್ನು ಕಳೆದುಕೊಂಡ ಕುಟುಂಬ ಸದಸ್ಯರ ಆಕ್ರಂದನ ಮುಗಿಲುಮುಟ್ಟಿತ್ತು.
7
+ ಸಂತಾಪ :ಭೀಕರ ಅಪಘಾತದಲ್ಲಿ ಮೃತಪಟ್ಟವರ ಆತಕ್ಕೆ ಶಾಂತಿ ದೊರೆಯಲಿ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಸಂತಾಪ ವ್ಯಕ್ತಪಡಿಸಿದ್ದು, ಇವರ ಅಗಲಿಕೆ ದುಃಖ ಭರಿಸುವ ಶಕ್ತಿ ಕುಟುಂಬ ಸದಸ್ಯರಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
eesanje/url_46_132_8.txt ADDED
@@ -0,0 +1,5 @@
 
 
 
 
 
 
1
+ ಪರಿಷತ್‌ ಚುನಾವಣೆ : ಅಭ್ಯರ್ಥಿಗಳ ಆಯ್ಕೆ ಕುರಿತು ಸಚಿವರ ಜೊತೆ ಡಿಸಿಎಂ ಸಮಾಲೋಚನೆ
2
+ ಬೆಂಗಳೂರು, ಮೇ 25-ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡಯುವ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧಪಟ್ಟಂತೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಮ್ಮ ನಿವಾಸದಲ್ಲಿಂದು ಪ್ರಮುಖ ಸಚಿವರುಗಳ ಸಭೆ ನಡೆಸಿ ಸಮಾಲೋಚನೆ ಮಾಡಿದ್ದಾರೆ.
3
+ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ, ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌, ಕಂದಾಯ ಸಚಿವ ಕೃಷ್ಣಾಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ಡಿ.ಕೆ.ಶಿವಕುಮಾರ್‌ರವರು ರಹಸ್ಯ ಸಭೆ ನಡೆಸಿದರು.
4
+ ಮೂಲಗಳ ಪ್ರಕಾರ, 7 ಸ್ಥಾನಗಳ ಪೈಕಿ ಎಸ್‌‍ಸಿ/ಎಸ್ಟಿ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಆದ್ಯತೆ ನೀಡಬೇಕು. ಅದರಲ್ಲೂ ಎಸ್‌‍ಸಿಯಲ್ಲಿ ಲಂಬಾಣಿ ಸಮುದಾಯಕ್ಕೆ ಅವಕಾಶ ನೀಡಬೇಕಿದೆ. ಈ ಬಾರಿ ಅಲ್ಪಸಂಖ್ಯಾತರಿಗೆ ಅವಕಾಶ ನೀಡಬೇಕು.
5
+ ಕಳೆದ ಜೂನ್‌ನಲ್ಲಿ ನಡೆದ ನಾಮನಿರ್ದೇಶನದಲ್ಲಿ ಅಲ್ಪಸಂಖ್ಯಾತರನ್ನು ಕಡೆಗಣಿಸಲಾಗಿದೆ ಎಂಬ ಒತ್ತಾಯಗಳಿವೆ. ಹೀಗಾಗಿ ಡಿ.ಕೆ.ಶಿವಕುಮಾರ್‌ರವರು ಸಚಿವರ ಜೊತೆ ಸಮಾಲೋಚನೆ ನಡೆಸಿ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ವಿಚಾರ ವಿನಿಮಯ ಮಾಡಿದ್ದಾರೆ. ಶೀಘ್ರವೇ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
eesanje/url_46_132_9.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಸಿದ್ದರಾಮಯ್ಯನವರೇ ನಿಮ್ಮ ಈ ಊಸರವಳ್ಳಿ, ಬಣ್ಣಗೇಡಿ ವರ್ತನೆಯನ್ನು ನಿರೀಕ್ಷಿಸಿರಲಿಲ್ಲ : ಕುಮಾರಸ್ವಾಮಿ ಕೆಂಡ
2
+ ಬೆಂಗಳೂರು, ಮೇ 25-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ. ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯ ಮೇಲೆ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ? ನನಗಂತೂ ಅನುಮಾನ ಎಂದು ಹೇಳಿದ್ದಾರೆ.
3
+ ಇಷ್ಟು ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ ನಾನು. ಅತೀವ ವಿಷಾದ ಮತ್ತು ನೋವಿನಿಂದಲೇ ಈ ಮಾತು ಹೇಳುತ್ತಿದ್ದೇನೆ ಸಿದ್ದರಾಮಯ್ಯನವರೇ. ಮೈಸೂರಿನಲ್ಲಿ ಇವತ್ತು ಬೆಳಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದೀರಿ.
4
+ •ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ! ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯ ಮೇಲೆ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ? ನನಗಂತೂ ಅನುಮಾನ!! ಇಷ್ಟು ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ ನಾನು. ಅತೀವ ವಿಷಾದ ಮತ್ತು ನೋವಿನಿಂದಲೇ ಈ ಮಾತು ಹೇಳುತ್ತಿದ್ದೇನೆ@siddaramaiahನವರೇ..…../AwI9R1G43p
5
+ ನೊಂದ ಮಹಿಳೆಯರ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹಂಚುವುದು, ಹರಡುವುದು ಮುಖ್ಯವಲ್ಲ. ಅದು ಅಪರಾಧವೂ ಅಲ್ಲ. ಅಶ್ಲೀಲ ವಿಡಿಯೋಗಳನ್ನು ವೈರಲ್‌ ಮಾಡಿದ್ದು ದೊಡ್ಡ ಅಪರಾಧ ಎನ್ನುವುದು ಯಾವ ಸೆಕ್ಷನ್‌ನಲ್ಲಿದೆ? ಅದನ್ನು ಯಾವ ಸೆಕ್ಷನ್‌ನಲ್ಲಿ ಉಲ್ಲೇಖಿಸಿದ್ದಾರೆ? ಕುಮಾರಸ್ವಾಮಿ ಪ್ರಕಾರ ಯಾವುದಾದರೂ ಹೊಸ ಸೆಕ್ಷನ್‌ ಇದ್ದರೆ ಹೇಳಲಿ ಎಂದು ನನಗೆ ಪ್ರಶ್ನೆ ಮಾಡಿದ್ದೀರಿ ಎಂದಿದ್ದಾರೆ.
6
+ ನಿಜ, ನೀವು ಸ್ವಯಂಘೋಷಿತ ಸಂವಿಧಾನ ತಜ್ಞರು. ಪ್ರಖ್ಯಾತ ಮಾಜಿ ವಕೀಲರು. ಹಾಲಿ ಮುಖ್ಯಮಂತ್ರಿಗಳು. ಆದರೂ ನಿಮ್ಮ ಪ್ರಶ್ನೆಗೆ ಉತ್ತರ ಕೊಡುವುದು ನನ್ನ ಧರ್ಮ. ಆದರೆ, ನಿಮಗೆ ಈ ಪರಿ ಅಜ್ಞಾನವೇ ಎನ್ನುವುದು ನನಗೆ ಸೋಜಿಗ. ಮಾತೆತ್ತಿದರೆ, ‘ನಾನು ಲಾಯರ್‌ ಗಿರಿ ಮಾಡ್ತಾ ಇದ್ದೆ. ಸುಮ್ಕೆ ಕೂತ್ಕಳಿ ಎಂದು ಎಲ್ಲರ ಬಾಯಿ ಮುಚ್ಚಿಸುತ್ತಿದ್ದ ನೀವು, ಈಗ ನೀವೇ ಬಾಯಿ ಮುಚ್ಚಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಹೇಳಿದ್ದಾರೆ.
7
+ ಇದೇ ಕಾರಣಕ್ಕೆ ನಾನು ನಿಮನ್ನು ಅತ್ಯಂತ ವಿನಮ್ರತೆಯಿಂದ ವಿನಂತಿ ಮಾಡಿಕೊಂಡಿದ್ದು, ‘ದಯಮಾಡಿ ವಕೀಲಿಕೆ ಮಾಡಬೇಡಿ’ ಎಂದು. ಕಾನೂನಿನ ಬಗ್ಗೆ ಸಾಸಿವೆ ಕಾಳಿನಷ್ಟು ತಿಳಿವಳಿಕೆ ಇಲ್ಲದವರೊಬ್ಬರು ‘ನಾನೂ ವಕೀಲ. ನಾನೂ ವಕೀಲಿಕೆ ಮಾಡ್ತಾ ಇದ್ದೆ’ ಎಂದು ಹೇಳಿಕೊಳ್ಳುವುದು ಗೌರವಾನ್ವಿತ ವಕೀಲ ಸಮುದಾಯಕ್ಕೆ ಮಾಡುವ ಅಪಚಾರ. ತಮಗೆ ಇನ್ನಾದರೂ ಇರಲಿ ಶಿಷ್ಟಾಚಾರ ಎಂದಿದ್ದಾರೆ.
8
+ ನೊಂದ ಮಹಿಳೆಯರ ವಿಡಿಯೋಗಳನ್ನು ಹಂಚುವುದು ಅಪರಾಧ ಎಂದು ಯಾವ ಸೆಕ್ಷನ್‌ ನಲ್ಲಿ ಹೇಳಿದ್ದಾರೆ ಎಂ���ು ಒಂದನೇ ಕ್ಲಾಸು ಮಗುವಿನಂತೆ ಕೇಳಿದ್ದೀರಿ. ನಿಮ್ಮ ಸರ್ಕಾರದ ಅಧೀನದಲ್ಲಿರುವ, ನೀವೇ ಆದೇಶಿಸಿ ರಚನೆ ಮಾಡಿಸಿರುವ ವಿಶೇಷ ತನಿಖಾ ತಂಡ ಹೊರಡಿಸಿರುವ ಪತ್ರಿಕಾ ಪ್ರಕಟಣೆ, ರೂಪಿಸಿರುವ ಕಾನೂನುಬದ್ಧ ನಿಯಮಗಳು ‘ಸಾಕ್ಷಾತ್‌ ಸಿಎಂ’ ಆಗಿರುವ ನಿಮ್ಮ ಗಮನಕ್ಕೇ ಬಂದಿಲ್ಲವೆಂದರೆ ತಾವು ಸರ್ಕಾರ ನಡೆಸುತ್ತಿರುವಿರೋ ಅಥವಾ ವಿಧಾನಸೌಧವನ್ನು ಟೈಮ್‌ ಪಾಸ್‌‍ ಕ್ಲಬ್‌ ಮಾಡಿಕೊಂಡಿರುವಿರೋ? ಎಂದು ಪ್ರಶ್ನಿಸಿದ್ದಾರೆ,
9
+ ನಿಮ್ಮ ಘನತವೆತ್ತ ಅವಗಾಹನೆಗೆ ಹೊರಡಿಸಿರುವ ಪ್ರತಿಕಾ ಪ್ರಕಟಣೆಯನ್ನು ಇಲ್ಲಿ ಲಗತ್ತಿಸಿದ್ದೇನೆ. ದಯಮಾಡಿ ಓದಿಕೊಳ್ಳಿ, ಅರ್ಥ ಮಾಡಿಕೊಳ್ಳಿ. ನೀವು ಕೇಳಿದ ಎಲ್ಲಾ ಸೆಕ್ಷನ್‌ಗಳು ಅದರಲ್ಲಿಯೇ ಇವೆ. ಒಂದಲ್ಲಾ. ಹತ್ತಾರು ಸಲ ಓದಿ ಮನನ ಮಾಡಿಕೊಳ್ಳಿ. ನಿಮ್ಮನ್ನು ಅಪಮಾನಿಸುತ್ತಿದ್ದೇನೆ ಎಂದು ಅನ್ಯತಾ ಭಾವಿಸಬೇಡಿ. ವಯಸ್ಸಿನಲ್ಲಿ ಹಿರಿಯರು, ಹೆಚ್ಚು ಅನುಭವಸ್ಥರು ನೀವು. ಆದರೆ, ಪೆನ್‌ ಡ್ರೈವ್‌ ಪ್ರಕರಣದಲ್ಲಿ ನಿಮ್ಮನಡವಳಿಕೆ ಪ್ರಶ್ನಾರ್ಹ ಎಂದಿದ್ದಾರೆ.
10
+ ಅಮಾಯಕ ಹೆಣ್ಣು ಮಕ್ಕಳ ಮಾನವನ್ನು ವೋಟಿಗೆ ಒತ್ತೆ ಇಟ್ಟ ಕ್ರಿಮಿನಲ್‌ ಅನ್ನು ಪಕ್ಕದಲ್ಲೇ ಕೂರಿಸಿಕೊಂಡು ಮಾತನಾಡುತ್ತಿದ್ದೀರಿ. ಸಂವಿಧಾನಬದ್ಧವಾಗಿ ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿ ಸಂವಿಧಾನ ದ್ರೋಹಿ ಕೃತ್ಯ ಎಸಗಿರುವ ವ್ಯಕ್ತಿ ನಿಮ್ಮಸಂಪುಟದಲ್ಲಿ ಉಪ ಮುಖ್ಯಮಂತ್ರಿ. ಇದಕ್ಕಿಂತ ನಿರ್ಲಜ್ಜತೆ ಉಂಟೇ? ಎಂದು ಪ್ರಶ್ನಿಸಿದ್ದಾರೆ.
11
+ ನೀವು, ನಿಮ್ಮ ಇಡೀ ಕಾಂಗ್ರೆಸ್‌‍ ಪಕ್ಷ ಸಿಡಿ ಶಿವು ರಕ್ಷಣೆಗೆ ಟೊಂಕ ಕಟ್ಟಿ ನಿಂತಿದ್ದೀರಿ. ನಿಮ ಇಡೀ ಕ್ಯಾಬಿನೆಟ್‌ ಆ ವ್ಯಯಕ್ತಿಯ ಹಿತಾಸಕ್ತಿಗಾಗಿ, ಆತ ರೂಪಿಸಿರುವ ಒಳಸಂಚಿನಲ್ಲಿ ಭಾಗಿಯಾಗಿದೆ. ನಿಮದು ಕ್ಯಾಬಿನೆಟ್‌ ಆಫ್‌ ಕರ್ನಾಟಕ ಅಲ್ಲ, ಅದು ಕ್ಯಾಬಿನೆಟ್‌ ಆಫ್‌ ಕಾನ್‌್ಸಪಿರೆಸಿ ಎಂದು ಬಹಳ ನೊಂದು ಈ ಮಾತು ಹೇಳುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.
eesanje/url_46_133_1.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಚನ್ನಗಿರಿ ಪೊಲೀಸ್‌‍ ಠಾಣೆಯ ಪ್ರಕರಣ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ
2
+ ಮೈಸೂರು, ಮೇ 25-ವಿಚಾರಣೆಗಾಗಿ ಕರೆತಂದಿದ್ದ ವ್ಯಕ್ತಿ ಪೊಲೀಸರ ವಶದಲ್ಲಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರದೂ ತಪ್ಪಿದ್ದು, ಡಿವೈಎಸ್ಪಿ ಮತ್ತು ಇನ್ಸ್ ಪೆಕ್ಟರ್‌ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆಯ ಚನ್ನಗಿರಿ ಪೊಲೀಸ್‌‍ ಠಾಣೆಯ ಪ್ರಕರಣದ ಬಗ್ಗೆ ತಾವು ವಿಚಾರಿಸಿ ಮಾಹಿತಿ ಪಡೆದುಕೊಂಡಿದ್ದು, ಅದು ಲಾಕಪ್‌ಡೆತ್‌ ಅಲ್ಲ, ಮೃತಪಟ್ಟ ಆದಿಲ್‌ಗೆ ಪಿಡ್ಸ್ ಇತ್ತು. ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮೃತಪಟ್ಟಿದ್ದಾನೆ ಎಂದು ಹೇಳಿದರು.
3
+ ಎಫ್‌ಐಆರ್‌ ದಾಖಲಾಗದೆ ವ್ಯಕ್ತಿಯನ್ನು ವಿಚಾರಣೆಗೆ ಕರೆತಂದು ಠಾಣೆಯಲ್ಲಿ ಕೂರಿಸಿಕೊಳ್ಳುವುದು ನಿಯಮಬಾಹಿರ. ಈ ಕಾರಣಕ್ಕಾಗಿ ಸಂಬಂಧಪಟ್ಟ ಉಪವಿಭಾಗದ ಡಿವೈಎಸ್ಪಿ ಹಾಗೂ ಚನ್ನಗಿರಿ ಪೊಲೀಸ್‌‍ ಠಾಣೆಯ ಇನ್ಸ್ ಪೆಕ್ಟರ್‌ರನ್ನು ಅಮಾನತುಗೊಳಿಸಲಾಗಿದೆ ಎಂದರು. ಯಾವುದೇ ವ್ಯಕ್ತಿಯ ಮೇಲೆ ದೂರು ದಾಖಲಾಗದೇ ಇದ್ದರೆ, ವಿಚಾರಣೆ ನಡೆಸಿ ವಾಪಸ್‌‍ ಕಳುಹಿಸಬೇಕು. ಅನಧಿಕೃತವಾಗಿ ಠಾಣೆಯಲ್ಲಿರಿಸಿ ಕೊಂಡಿರುವುದು ಅಪರಾಧ ಎಂದು ಹೇಳಿದರು.
4
+ ಪ್ರತ್ಯೇಕ ಕ್ರಿಮಿನಲ್‌ ಕಾನೂನುಗಳಿದ್ದರೆ ತಿಳಿಸಲಿ :ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ವಿಡಿಯೋಗಳನ್ನು ವೈರಲ್‌ ಮಾಡಿರುವುದು ಅತ್ಯಾಚಾರಕ್ಕಿಂತಲೂ ಮಹಾಪರಾಧ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌‍ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳುತ್ತಿದ್ದಾರೆ. ಇದು ಯಾವ ಸೆಕ್ಷನ್‌ನಲ್ಲಿ ಮಹಾಪರಾಧ ಎಂಬುದನ್ನು ಅವರು ಸ್ಪಷ್ಟಪಡಿಸಬೇಕು ಎಂದು ಸವಾಲು ಹಾಕಿದರು.
5
+ ಮುಖ ಕಾಣುವ ಹಾಗೆ ವಿಡಿಯೋಗಳನ್ನು ಬಹಿರಂಗಗೊಳಿಸಿರುವುದು ಸರಿಯಲ್ಲ. ಅದು ಅಪರಾಧ ಎಂಬುದಕ್ಕೆ ನನ್ನ ಸಹಮತ ಇದೆ. ಆದರೆ ಯಾವುದೇ ಅಪರಾಧಕ್ಕೆ ಶಿಕ್ಷೆಯಾಗಬೇಕಾದರೆ ಭಾರತ ದಂಡಸಂಹಿತೆಯ ಸೆಕ್ಷನ್‌ಗಳು ಇರುತ್ತವೆ.
6
+ ಕುಮಾರಸ್ವಾಮಿಯವರು ಯಾವ ಸೆಕ್ಷನ್‌ನಡಿ ಅಪರಾಧ ಎಂದು ಹೇಳುತ್ತಿದ್ದಾರೆ? ಐಪಿಸಿ ಹೊರತುಪಡಿಸಿ ಅವರಿಗಾಗಿ ಪ್ರತ್ಯೇಕವಾದ ಕ್ರಿಮಿನಲ್‌ ಕಾನೂನುಗಳೇನಾದರೂ ಇವೆಯೇ? ಎಂದು ಮುಖ್ಯಮಂತ್ರಿ ವ್ಯಂಗ್ಯವಾಡಿದರು.
7
+ ಅವರ ಅಣ್ಣನ ಮಗ ಅತ್ಯಾಚಾರ ಮಾಡಿದ್ದಾನೆ. ಅದು ಮಹಾಪರಾಧ ಎಂದ ಮುಖ್ಯಮಂತ್ರಿಯವರು, ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಗೊಳಿಸುವುದು ಜಠಿಲ ಪ್ರಕ್ರಿಯೆ ಎಂದು ಹೇಳಲು ಕುಮಾರಸ್ವಾಮಿಯವರೇನು ವಿದೇಶಾಂಗ ಸಚಿವರೇ? ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು, ಕೇಂದ್ರ ಸಚಿವರಾಗಿರಲಿಲ್ಲ ಎಂದು ತಿರುಗೇಟು ನೀಡಿದರು.
8
+ ತಮ ಪುತ್ರ ರಾಕೇಶ್‌ ಸಿದ್ದರಾಮಯ್ಯ 2016 ರಲ್ಲಿ ಮೃತಪಟ್ಟಿದ್ದಾನೆ. 8 ವರ್ಷಗಳ ಬಳಿಕ ಈಗ ಆ ವಿಚಾರವನ್ನು ಪ್ರಸ್ತಾಪಿಸುತ್ತಿರುವುದು ಕುಮಾರಸ್ವಾಮಿಯ ಮೂರ್ಖತನ. ತಮ ಪುತ್ರನ ಸಾವಿಗೂ, ಇಂದಿನ ಪೆನ್‌ಡ್ರೈವ್‌ ಪ್ರಕರಣಕ್ಕೂ ಏನು ಸಂಬಂಧ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
9
+ ಈಗಲಾದರೂ ರದ್ದುಪಡಿಸಲಿ :ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ನೀಡಿದ್ದು ಕೇಂದ್ರ ವಿದೇಶಾಂಗ ಸಚಿವರು. ಅದನ್ನು ರದ್ದುಪಡಿಸಬೇಕಾಗಿರುವುದೂ ಅವರದೇ ಕೆಲಸ. ಈ ನಿಟ್ಟಿನಲ್ಲಿ ತಾವು ಬರೆದ ಪತ್ರ ತಡವಾಗಿ ತಲುಪಿದೆ ಎಂದು ವಿದೇಶಾಂಗ ಸಚಿವ ಜಯಶಂಕರ್‌ ನೆಪ ಹೇಳುತ್ತಿದ್ದಾರೆ. ನಾನು 15 ದಿನಗಳ ಹಿಂದೆಯೇ ಮೊದಲ ಬಾರಿಗೆ ಪ್ರಧಾನಿಯವರಿಗೆ ಪತ್ರ ಬರೆದಿದ್ದೆ. ಅನಂತರ ಎಸ್‌‍ಐಟಿ ಅಧಿಕಾರಿಗಳೂ ಬರೆದಿದ್ದರು. ನಾನು ಎರಡನೇ ಸುತ್ತಿನಲ್ಲೂ ಪತ್ರ ಬರೆದಿದ್ದೇನೆ ಎಂದು ವಿವರಿಸಿದರು.
10
+ ಒಂದು ವೇಳೆ ಪತ್ರ ತಲುಪಿದ್ದು ತಡವಾಗಿದೆ ಎಂದು ವಾದವನ್ನು ಒಪ್ಪಿಕೊಂಡರೂ ಈಗಲಾದರೂ ಪತ್ರ ಸಿಕ್ಕಿದೆಯಲ್ಲಾ? ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ಅನ್ನು ತಕ್ಷಣವೇ ರದ್ದುಗೊಳಿಸಲಿ ಎಂದು ಮುಖ್ಯಮಂತ್ರಿ ಆಗ್ರಹಿಸಿದರು.
eesanje/url_46_133_10.txt ADDED
@@ -0,0 +1,9 @@
 
 
 
 
 
 
 
 
 
 
1
+ ಠಾಣೆಗೆ ನುಗ್ಗಿ ದಾಂಧಲೆ ಮಾಡಿ, ತಲೆ ಕತ್ತರಿಸುತ್ತೇವೆಂದು ಪೊಲೀಸರಿಗೆ ಬೆದರಿಕೆ ಹಾಕುವುದನ್ನು ಸಹಿಸಲ್ಲ : ಪರಮೇಶ್ವರ್‌
2
+ ಬೆಂಗಳೂರು, ಮೇ 25-ಪೊಲೀಸ್‌‍ ಠಾಣೆಗೆ ನುಗ್ಗಿ ದಾಂಧಲೆ ಮಾಡುವುದು, ತಲೆ ಕತ್ತರಿಸುತ್ತೇವೆ ಎಂದು ಪೊಲೀಸರಿಗೆ ಬೆದರಿಕೆ ಹಾಕುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ, ಅಂತವರ ವಿರುದ್ಧ ಕಾನೂನಿನ ಪ್ರಕಾರ ಅಗತ್ಯವಾದ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಎಚ್ಚರಿಸಿದ್ದಾರೆ.
3
+ ದಾವಣಗೆರೆ ಜಿಲ್ಲೆ ಚನ್ನಗಿರಿಯ ಪೊಲೀಸ್‌‍ ಠಾಣೆಗೆ ನುಗ್ಗಿ ಗಲಭೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅವರು, ದೂರೊಂದರ ವಿಚಾರಣೆಗಾಗಿ ವ್ಯಕ್ತಿಯೊಬ್ಬನನ್ನು ಪೊಲೀಸ್‌‍ ಠಾಣೆ ಕರೆತರಲಾಗಿತ್ತು. ಆತ ಅಲ್ಲಿ 7 ನಿಮಿಷ ಮಾತ್ರ ಉಳಿದಿದ್ದು, ಸಾವನ್ನಪ್ಪಿದ್ದಾನೆ ಎಂದು ಹೇಳಿದರು.
4
+ ಪೊಲೀಸರ ಹಲ್ಲೆಯಿಂದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಭಾವಿಸಿ ಆತನ ಕಡೆಯವರು ಪ್ರತಿಭಟನೆ ಮಾಡಿ ಪೊಲೀಸ್‌‍ ಠಾಣೆಗೆ ನುಗ್ಗಿದ್ದಾರೆ. ಈ ವೇಳೆ ಟಿಯರ್‌ ಗ್ಯಾಸ್‌‍ ಬಳಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಕಲ್ಲು ತೂರಾಟದಿಂದ ಅಲ್ಲಿದ್ದವರಿಗೆ ಗಾಯಗಳಾಗಿವೆ ಎಂದು ವಿವರಿಸಿದರು.
5
+ ವ್ಯಕ್ತಿಯ ಸಾವಿಗೆ ನಿಖರ ಕಾರಣಗಳೇನು ಎಂದು ತಿಳಿಯಲು ಶವಪರೀಕ್ಷೆಯ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಅದರ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ ಅವರು, ಠಾಣೆಗೆ ಬಂದು ಧಮ್ಕಿ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಕೆಜೆ ಹಳ್ಳಿ, ಡಿಜೆ ಹಳ್ಳಿ ಮಾದರಿಯಲ್ಲಿ ಗಲಭೆ ಮಾಡಲು ಚನ್ನಗಿರಿಯಲ್ಲೂ ಸಂಚು ನಡೆದಿತ್ತು ಎಂಬುದನ್ನು ನಾನು ಕೇಳಿಸಿಕೊಂಡಿದ್ದೇನೆ ಎಂದು ಹೇಳಿದರು.
6
+ ಉಡುಪಿಯಲ್ಲಿನ ಗುಂಪು ಗಲಭೆ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಅವರು, ಅಲ್ಲಲ್ಲಿ ಗಲ್ಲಿಗಳಲ್ಲಿ ಸಣ್ಣಪುಟ್ಟ ಗಲಭೆಗಳಾದರೆ ಅದನ್ನು ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಪರಿಗಣಿಸಲಾಗುವುದಿಲ್ಲ. ಕ್ರಿಕೆಟ್‌ ಆಟದ ವೇಳೆ ಗಲಭೆಗಳಾಗುತ್ತವೆ ಎಂದು ಮೊದಲೇ ಮಾಹಿತಿ ಇರುವುದಿಲ್ಲ. ಗಲಾಟೆ ನಡೆದಾಗ ಅದನ್ನು ನಿಯಂತ್ರಣಕ್ಕೆ ತರಲಾಗುವುದು. ಗಲಭೆಕೋರರನ್ನು ಮುಕ್ತವಾಗಿ ಓಡಾಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು.ದಕ್ಷಿಣ ಕನ್ನಡದಲ್ಲಿ ಬಿಜೆಪಿ ಶಾಸಕ ಹರೀಶ್‌ ಪೂಂಜಾ ಪೊಲೀಸ್‌‍ ಠಾಣೆಗೆ ಹೋಗಿ ಗಲಾಟೆ ಮಾಡಿದ್ದರು. ಅವರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಮುಂದಿನ ವಿಚಾರಣೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆಯಲಿದೆ ಎಂದರು.
7
+ ಪೆನ್‌ಡ್ರೈವ್‌ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬರೆದಿರುವ ಪತ್ರ ವಿದೇಶಾಂಗ ಸಚಿವಾಲಯಕ್ಕೆ ತಲುಪಿಲ್ಲ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ. ಹಾಗಾದರ�� ಕೇಂದ್ರ ಸರ್ಕಾರ ಯಾವ ರೀತಿ ಕೆಲಸ ಮಾಡುತ್ತಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬಹುದಾಗಿದೆ. ಕೇಂದ್ರ ವಿದೇಶಾಂಗ ಸಚಿವಾಲಯ ಮೇ 21 ರಂದು ಮುಖ್ಯಮಂತ್ರಿಗಳ ಪತ್ರ ತಲುಪಿದೆ ಎಂದು ಹೇಳಿದೆ. ಇದಕ್ಕೂ ಮೊದಲು ಬರೆದ ಪತ್ರ ಎಲ್ಲಿ ಹೋಗಿದೆ? ಎಂದು ಪರಮೇಶ್ವರ್‌ ಪ್ರಶ್ನಿಸಿದರು.
8
+ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಗೊಂಡರೆ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ಉಳಿಯಲು ಅವಕಾಶವಾಗುವುದಿಲ್ಲ. ಅನಂತರ ನಾವು ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ ಎಂದರು.
9
+ ಬೆಂಗಳೂರಿಗೆ ಅಪಕೀರ್ತಿ ಸಲ್ಲ :ಬೆಂಗಳೂರಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಕೆಟ್ಟ ಹೆಸರು ತರಲು ವಿರೋಧಪಕ್ಷಗಳು ಯತ್ನಿಸುತ್ತಿವೆ ಎಂದು ಗೃಹಸಚಿವರು ಆಕ್ಷೇಪಿಸಿದರು.ಮಳೆ ಬಂದಾಗ ರಸ್ತೆ ಹದಗೆಡುವುದು ಸಾಮಾನ್ಯ. ಅದನ್ನು ಸರಿಪಡಿಸಲಾಗುತ್ತದೆ. ಬೆಂಗಳೂರಿನ ನಿರ್ವಹಣೆ ನಿಟ್ಟಿನಲ್ಲಿ ಲೋಪಗಳಾಗಿದ್ದರೆ ಅದನ್ನು ಸರ್ಕಾರದ ಗಮನಕ್ಕೆ ತರಬಹುದು. ಅಥವಾ ಟೀಕೆ ಮಾಡಬಹುದು. ನಾವು ಸರಿಪಡಿಸಿಕೊಳ್ಳುತ್ತೇವೆ. ಅದನ್ನು ಬಿಟ್ಟು ಉಡ್ತಾ ಬೆಂಗಳೂರು, ಗುಂಡಿಗಳ ನಗರ ಎಂದೆಲ್ಲಾ ವಿರೋಧಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಇದರಿಂದ ಬೆಂಗಳೂರಿನ ವರ್ಚಸ್ಸಿಗೆ ಧಕ್ಕೆಯಾಗಲಿದೆ. ಬಂಡವಾಳ ಹೂಡಿಕೆಗೂ ಸಮಸ್ಯೆಯಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.
eesanje/url_46_133_11.txt ADDED
@@ -0,0 +1,6 @@
 
 
 
 
 
 
 
1
+ ಖಾಲಿ ಇರುವ 4,002 ವಿವಿಧ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಪ್ರಕಟ
2
+ ಬೆಂಗಳೂರು, ಮೇ 25-ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆ, ಸಂಸ್ಥೆಗಳಲ್ಲಿ ಖಾಲಿ ಇರುವ 4,002 ವಿವಿಧ ಹುದ್ದೆಗಳಿಗೆ ನಡೆಸಲಿರುವ ನೇಮಕಾತಿ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಿದೆ.
3
+ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಹಾಯಕ ಲೆಕ್ಕಿಗ, ಸಹಾಯಕ ಸಂಚಾರ ನಿರೀಕ್ಷಕ, ಕುಶಲಕರ್ಮಿ, ತಾಂತ್ರಿಕ ಸಹಾಯಕ ಸೇರಿದಂತೆ 36 ಹುದ್ದೆಗಳಿಗೆ ಜುಲೈ 12,13 ಹಾಗೂ 14 ರಂದು ಸ್ಪರ್ಧಾತಕ ಪರೀಕ್ಷೆ ನಡೆಸಲು ತಾತ್ಕಾಲಿಕ ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
4
+ ಕರ್ನಾಟಕ ನೀರು ನಗರ ಸರಬರಾಜು ಮತ್ತು ಒಳಚರಂಡಿಯ ಸಹಾಯಕ ಇಂಜಿನಿಯರ್‌ (ಸಿವಿಲ್‌) ಪ್ರಥಮ ದರ್ಜೆ ಲೆಕ್ಕ ಸಹಾಯಕರು – ಗ್ರೂಪ್‌ಸಿ ಯ 64 ಹುದ್ದೆಗಳಿಗೆ ಆಗಸ್ಟ್‌ 11 ರಂದು ಪರೀಕ್ಷೆ ನಡೆಸಲಾಗುತ್ತದೆ.
5
+ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನಿರ್ವಾಹಕ ದರ್ಜೆ 3 ಮೇಲ್ವಿಚಾರಕೇತರ 2,500 ಹುದ್ದೆಗಳಿಗೆ ಸೆಪ್ಟೆಂಬರ್‌ 1 ರಂದು ಹಾಗೂ ಪೊಲೀಸ್‌‍ ಇಲಾಖೆಯ 402 ಪಿಎಸ್‌‍ಐ ಹುದ್ದೆಗಳಿಗೆ ಸೆಪ್ಟೆಂಬರ್‌ 22 ರಂದು ಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಿದೆ.
6
+ ಕಂದಾಯ ಇಲಾಖೆಯ ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಅಕ್ಟೋಬರ್‌ 27 ರಂದು ಪರೀಕ್ಷೆ ನಡೆಸಲಿದ್ದು, ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಅನ್ವಯಿಸುವ ಹುದ್ದೆಗಳಿಗೆ ನಡೆಸಲಿರುವ ಪರೀಕ್ಷೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸುವುದಾಗಿ ಹೇಳಿದೆ.
eesanje/url_46_133_12.txt ADDED
@@ -0,0 +1,9 @@
 
 
 
 
 
 
 
 
 
 
1
+ ಬೆಳಗಾವಿಯಲ್ಲೊಬ್ಬ ಪಾಗಲ್‌ ಪ್ರೇಮಿ, ಎಂದಿನಂತೆ ಪೊಲೀಸರ ನಿರ್ಲಕ್ಷ್ಯ…!?
2
+ ಬೆಳಗಾವಿ,ಮೇ 25-ಇಡೀ ರಾಜ್ಯವನ್ನೇ ಬೆಚ್ಚಿ ಬಿಳಿಸಿರುವ ಹುಬ್ಬಳ್ಳಿಯ ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ನಂತರವೂ ಪಾಗಲ್‌ ಪ್ರೀಮಿಗಳ ಕಾಟ ತಣ್ಣಗಾಗಿಲ್ಲ.ಬೆಳಗಾವಿಯಲ್ಲಿ ಸೈಕೋಪಾತ್‌ ಪಾಗಲ್‌ ಪ್ರೀಮಿಯ ಕಾಟದಿಂದ ಇಡೀ ಕುಟುಂಬವೇ ನರಕಯಾತನೆ ಅನುಭವಿಸುತ್ತಿರುವ ಘಟನೆ ತಾಲೂಕಿನ ಕಿಣೆಯ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
3
+ ಕಿಣೆಯ ಗ್ರಾಮದ ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಆಕೆಯ ಮನೆ ಮೇಲೆಯೇ ಕಲ್ಲು ತೂರಿ ಕಿಟಕಿ ಗ್ಲಾಸ್‌‍ ಪುಡಿ ಪುಡಿ ಮಾಡಿ ಗ್ರಾಮದ ಜನರನ್ನೇ ಬೆಚ್ಚಿ ಬೀಳಿಸಿದ್ದಾನೆ. ಈ ಪಾಗಲ್‌ ಪ್ರೀಮಿಯ ಹುಚ್ವಾಟದಿಂದ ಜನರು ಕಕ್ಕಾಬಿಕ್ಕಿಯಾಗಿದ್ದಾರೆ.
4
+ ತಾಲೂಕಿನ ಕಿಣೆಯ ಗ್ರಾಮದ ತಿಪ್ಪಣ್ಣ ಡೋಕರೆ (27) ಎಂಬಾತ ಯುವತಿಗೆ ತನ್ನನ್ನು ಪ್ರೀತಿಸುವಂತೆ, ಮದುವೆಯಾಗುವಂತೆ ಹುಚ್ಚಾಟವಾಡುತ್ತಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
5
+ ಅದೇ ಗ್ರಾಮದ ಬಿಕಾಂ ಓದುತ್ತಿರುವ ಯುವತಿ ಬೆನ್ನು ಬಿದ್ದು, ಪೀಡಿಸುತ್ತಿರುವ ತಿಪ್ಪಣ್ಣ ನಿತ್ಯ ಕಾಲೇಜಿಗೆ ಹೋಗುವಾಗಲೇ ಹಿಂಬಾಲಿಸಿಕೊಂಡು ಹೋಗಿ ಕಿರುಕುಳ ನೀಡುತ್ತಿದ್ದಾನೆ ಎಂದು ಯುವತಿಯ ಕುಟುಂಸ್ಥರು ಅಳಲು ತೋಡಿಕೊಂಡಿದ್ದಾರೆ.
6
+ ಆತನ ಹುಚ್ಚಾಟಕ್ಕೆ ಬೇಸತ್ತು ಕಾಲೇಜಿಗೆ ಹೋಗುವುದನ್ನೇ ಯುವತಿ ನಿಲ್ಲಿಸಿದ್ದಾಳೆವಾಸವಿದ್ದಾಳೆ. ಯುವತಿ ಜೊತೆಗೆ ಮದುವೆ ಮಾಡಿ ಕೊಡುವಂತೆ, ಇಲ್ಲದಿದ್ದರೆ ಹತ್ಯೆಗೈಯ್ಯುವುದಾಗಿ ಯುವತಿ ಹಾಗೂ ತಾಯಿಗೆ ತಿಪ್ಪಣ್ಣ ಬೇದರಿಕೆ ಹಾಕಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
7
+ ಕೆಲ ತಿಂಗಳ ಹಿಂದೆಯೇ ಯುವತಿ ಮನೆಯ ಹಿಂಬಾಗಿಲಿಗೆ ಬೆಂಕಿ ಹಚ್ಚಿ ಹುಚ್ಚಾಟ ಮೆರೆದಿದ್ದನಂತೆ ಈತ. ಇದಾದಬಳಿಕ ಮೂರ ದಿನಗಳ ಹಿಂದೆಯೂ ಮನೆ ಬಳಿ ಹೋಗಿ ಗಲಾಟೆ ಮಾಡಿದ್ದಲ್ಲದೆ, ಮನೆಯಲ್ಲಿ ಯಾರೂ ಇಲ್ಲದಿರುವಾಗ ಕಿಟಕಿ ಗ್ಲಾಸ್‌‍ ಒಡೆದು ಪುಂಡಾಟ ಮೆರೆದಿದ್ದಲ್ಲದೆ, ಮನೆಯ ಪಕ್ಕದಲ್ಲಿಯೇ ಜಮೀನಿಗೆ ಬರುವ ನೆಪವೊಡ್ಡಿ ಕಿರುಕುಳ ನೀಡಿದ್ದಾನೆ.
8
+ ಯಾವುದೇ ಕೆಲಸ ಮಾಡದೇ ಊರಲ್ಲಿ ಸುತ್ತಾಡುವ ಈ ಪಾಗಲ್‌ ಪ್ರೇಮಿಯ ಕಿರಿಕಿರಿಗೆ ಬೇಸತ್ತು ಯುವತಿ ಕುಟುಂಬಸ್ಥರು ಪೊಲೀಸರ ಮೊರೆ ಹೋಗಿದ್ದಾರೆ.ಕಳೆದ ಮೂರು ವರ್ಷಗಳ ಹಿಂದೆಯೇ ತಿಪ್ಪಣ್ಣ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆಗ ಪೊಲೀಸರು ಠಾಣೆಗೆ ಆತನನ್ನು ಕರೆದು ಎಚ್ಚರಿಕೆ ನೀಡಿದ್ದರಿಂದ ಕೆಲ ದಿನಗಳ ಕಾಲ ಯುವತಿ ತಂಟೆಗೆ ಹೋಗದೇ ಸೈಲೆಂಟ್‌ ಆಗಿದ್ದ.
9
+ ಈಗ ಆತ ಮತ್ತೆ ಬಾಲ ಬಿಚ್ಚಿರುರುವುದರಿಂದ ಮತ್ತೆ ಕುಟುಂಬಸ್ಥರು ಪೊಲೀಸರ ಮೊರೆ ಹೋಗಿದ್ದಾರೆ.ಎರಡು ಬಾರಿಯೂ ನಾಳೆ ಬನ್ನಿ ಎಂದು ಹೇಳಿ ಕಳಿಸಿರುವ ಪೊಲೀಸರ ನಿರ್ಲಕ್ಷ್ಯಕ್ಕೆ ಜೀವ ಭಯದಲ್ಲೇ ಜೀವನ ನಡೆಸುತ್ತಿರುವ ಯುವತಿ ಹಾಗೂ ಆಕೆಯ ತಾಯಿ ಬಗ್ಗೆ ಈಗ ಸರಕಾರ ಗಮನ ಹರಿಸಬೇಕಿದೆ ಎಂಬುದು ಸ್ಥಳೀಯರ ಕಳಕಳಿಯಾಗಿದೆ.
eesanje/url_46_133_2.txt ADDED
@@ -0,0 +1,5 @@
 
 
 
 
 
 
1
+ “ಮುಂಗಾರು ಮಳೆಯ ಮೇಲೆ ರೆಮೆಲ್‌ ಚಂಡಮಾರುತ ಪರಿಣಾಮ ಬೀರಲ್ಲ”
2
+ ಬೆಂಗಳೂರು, ಮೇ 25-ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ರೆಮೆಲ್‌ ಚಂಡ ಮಾರುತದ ಪರಿಣಾಮ ನೈರುತ್ಯ ಮುಂಗಾರಿನ ಮೇಲೆ ಹೆಚ್ಚು ಉಂಟಾಗುವುದಿಲ್ಲ. ಒಡಿಸ್ಸಾ ಹಾಗೂ ಬಾಂಗ್ಲಾ ದೇಶದ ಕಡೆಗೆ ಚಲಿಸುತ್ತಿರುವುದರಿಂದ ಅದರ ನೇರ ಪರಿಣಾಮ ಮುಂಗಾರಿನ ಮೇಲೆ ಆಗುವುದಿಲ್ಲ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್‌‍.ಪ್ರಕಾಶ್‌ ತಿಳಿಸಿದರು.
3
+ ರಾಜ್ಯದ ಮೇಲೆ ಚಂಡ ಮಾರುತದ ಪರಿಣಾಮವಿಲ್ಲ. ಆದರೆ, ಭಾಗಶಃ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಚದುರಿದಂತೆ ಮಳೆಯಾಗಬಹುದು. ನಾಲ್ಕೈದು ದಿನಗಳ ಕಾಲ ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಅವರು ಹೇಳಿದರು.
4
+ ಮುಂಗಾರು ಮಳೆ ನಿರೀಕ್ಷೆಗಿಂತ ಮುಂಚೆಯೇ ಆಗಮಿಸುವ ಸಾಧ್ಯತೆಗಳಿವೆ. ಹೀಗಾಗಿ ಐದು ದಿನಗಳ ನಂತರ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಉತ್ತಮ ಮಳೆ ನಿರೀಕ್ಷಿಸಬಹುದಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗಲಿದೆ. ಅಂದರೆ ಕರಾವಳಿ ಭಾಗದಲ್ಲಿ 100ರಿಂದ 150 ಮಿ.ಮೀ., ಮಲೆನಾಡು ಭಾಗದಲ್ಲಿ 100 ಮಿ.ಮೀ.ವರೆಗೆ, ಉತ್ತರ ಒಳನಾಡಿನಲ್ಲಿ 15ರಿಂದ 50 ಮಿ.ಮೀ. ಹಾಗೂ ದಕ್ಷಿಣ ಒಳನಾಡಿನಲ್ಲಿ 15ರಿಂದ 40 ಮಿ.ಮೀ.ನಷ್ಟು ಮಳೆಯಾಗುವ ಲಕ್ಷಣಗಳಿವೆ ಎಂದರು.
5
+ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಿದ್ದರೂ ಅರಬ್ಬೀ ಸಮುದ್ರದಲ್ಲಿ ಮುಂಗಾರು ಮಳೆ ಆರಂಭಕ್ಕೆ ಪೂರಕ ವಾತಾವರಣಗಳು ನಿರ್ಮಾಣಗೊಂಡಿವೆ. ಇದರಿಂದ ಅವಧಿಗೂ ಮುನ್ನ ಹೆಚ್ಚು ಮಳೆ ನಿರೀಕ್ಷಿಸಬಹುದಾಗಿದೆ. ಈಗಾಗಲೇ ಪೂರ್ವ ಮುಂಗಾರು ಮಳೆ ಕಳೆದ ಎರಡು ವಾರಗಳಿಂದ ರಾಜ್ಯದ ಹಲವು ಕಡೆಗಳಲ್ಲಿ ಬಿದ್ದಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿದೆ ಎಂದು ಅವರು ತಿಳಿಸಿದರು.
eesanje/url_46_133_3.txt ADDED
@@ -0,0 +1,10 @@
 
 
 
 
 
 
 
 
 
 
 
1
+ ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ಸಮರ್ಥವಾಗಿ ನಿಭಾಯಿಸುತ್ತೇನೆ : ಕೆ.ಎನ್‌.ರಾಜಣ್ಣ
2
+ ಹಾಸನ ಮೇ 25-ಕೆಪಿಸಿಸಿ ಅಧ್ಯಕ್ಷ ಸ್ಥಾನ ತಮಗೆ ಕೊಟ್ಟರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಹಾಗೂ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣಾ ಫಲಿತಾಂಶದ ಬಳಿಕ ದೆಹಲಿಯಲ್ಲಿ ನಡೆದ ಚರ್ಚೆಯ ಬಗ್ಗೆ ಹೈಕಮಾಂಡ್‌ 3 ವಿಚಾರಗಳನ್ನು ಹೇಳಿತ್ತು. ಅದರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿದ್ದಾರೆ.
3
+ ಡಿ.ಕೆ.ಶಿವಕುಮಾರ್‌ ಏಕೈಕ ಉಪಮುಖ್ಯಮಂತ್ರಿ, ಲೋಕಸಭಾ ಚುನಾವಣೆವರೆಗೂ ಅವರನ್ನೇ ಪಕ್ಷದ ಅಧ್ಯಕ್ಷರನ್ನಾಗಿ ಮುಂದುವರೆಸಲಾಗುವುದು ಎಂದು ತಿಳಿಸಿತ್ತು. ಯಾರೇ ಆದರೂ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಹೇಳಿದ್ದರು. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್‌ ನನ್ನನ್ನು ಆಯ್ಕೆ ಮಾಡುವುದಾದರೆ ತನು-ಮನ ಪೂರ್ವಕವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತೇನೆ. ನಾನು ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ. ಹೀಗಾಗಿ ಮುಖ್ಯಮಂತ್ರಿ ಹುದ್ದೆ ಸೇರಿದಂತೆ ಯಾವುದೇ ರಾಜಕೀಯ ಅಧಿಕಾರವನ್ನೂ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
4
+ ವಿಧಾನಪರಿಷತ್‌ ಚುನಾವಣೆಯಲ್ಲಿ ಅವಕಾಶ ವಂಚಿತರಿಗೆ ಮಣೆ ಹಾಕಬೇಕು. ಯಾರಿಗೆ ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ ಅಥವಾ ಈವರೆಗೂ ವಿಧಾನಪರಿಷತ್‌, ವಿಧಾನಸಭೆಯಲ್ಲಿ ಪ್ರಾತಿನಿಧ್ಯ ದೊರೆಯದೆ ಇರುವ ತಳ ಸಮುದಾಯದವರಿಗೆ ಅವಕಾಶ ನೀಡಬೇಕು. ನನ್ನ ಕಡೆಯಿಂದ ಯಾವ ಅಭ್ಯರ್ಥಿಯೂ ಇಲ್ಲ ಎಂದು ಪ್ರತಿಪಾದಿಸಿದರು.
5
+ ಪೆನ್‌ಡ್ರೈವ್‌ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ ಎಲ್ಲಿದ್ದಾರೆ ಎಂದು ಕೇಂದ್ರಸರ್ಕಾರ, ರಾಜ್ಯಸರ್ಕಾರ, ಎಸ್‌‍ಐಟಿ ಎಲ್ಲರಿಗೂ ಗೊತ್ತಿದೆ. ಆದರೆ ಕಾನೂನು ಪ್ರಕಾರ, ಸಹಜ ನ್ಯಾಯದಂತೆ ಆರೋಪಿಗೆ ಕಾಲಾವಕಾಶ ನೀಡಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಕಾನೂನಿನ ಲೋಪಗಳಾಗದಂತೆ ಈಗಿನಿಂದಲೇ ಎಚ್ಚರಿಕೆ ವಹಿಸಲಾಗುತ್ತಿದೆ ಎಂದು ಹೇಳಿದರು.
6
+ ಪೆನ್‌ಡ್ರೈವ್‌ ಅನ್ನು ಬಿಡುಗಡೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ವಾದಗಳು ನಡೆಯುತ್ತಿವೆ. ಈ ಹಿಂದೆ ರಮೇಶ್‌ ಜಾರಕಿಹೊಳಿ ಪ್ರಕರಣದಲ್ಲಿ ಅಶ್ಲೀಲ ವಿಡಿಯೋಗಳನ್ನು ಬಿಡುಗಡೆ ಮಾಡಿದವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂಬ ಪ್ರಶ್ನೆ ಉದ್ಭವಿಸುತ್ತವೆ. ರಾಜ್ಯದಲ್ಲಿ ಪೆನ್‌ಡ್ರೈವ್‌ಗಳ ಜನಕ ಎಂದರೆ ಅದು ಎಚ್‌.ಡಿ.ಕುಮಾರಸ್ವಾಮಿ ಎಂದು ಟೀಕಿಸಿದರು.
7
+ ಪ್ರಜ್ವಲ್‌ ರೇವಣ್ಣ ಅವರ ವಿಚಾರಕ್ಕೆ ಸಂಬಂಧಪಟ್ಟಂತೆ ಎಷ್ಟು ವಿಡಿಯೋಗಳಿವೆ, ಎಷ್ಟು ಜನ ಸಂತ್ರಸ್ತೆಯರು ಎಂಬುದನ್ನು ಖುದ್ದು ಅವರೇ ಹೇಳಬೇಕು. ನಾನಂತೂ ಇಂತ ವಿಚಾರಗಳಿಂದ ದೂರ. ಯಾರಾದರೂ ಹೆಣ್ಣು ಮಗಳು ಕರೆ ಮಾಡಿ, ನಾನು ಬೆಳಗಾವಿ, ಬಾಗಲಕೋಟೆ ಎಂದು ಹೇಳಿಕೊಂಡರೆ, ಪಕ್ಷದ ಕಾರ್ಯಕರ್ತೆ ಎಂದು ಪರಿಚಯಿಸಿಕೊಂಡರೆ ತಕ್ಷಣವೇ ನಾನು ಆ ನಂಬರ್‌ಗಳನ್ನು ಬ್ಲಾಕ್‌ ಮಾಡುತ್ತೇನೆ. ನನ್ನ ಮೊಬೈಲ್‌ ಬೇಕಾದರೆ ನಿಮಗೆ ಕೊಡುತ್ತೇನೆ, ಎಷ್ಟು ಬ್ಲಾಕ್‌ ನಂಬರ್‌ಗಳಿವೆ ಎಂದು ಪರಿಶೀಲಿಸಿ ಎಂದು ಪತ್ರಕರ್ತರಿಗೆ ಹೇಳಿದರು.
8
+ ಹನಿಟ್ರಾಪ್‌ ಸೇರಿದಂತೆ ಏನೇನೋ ವಿಚಾರಗಳು ಕೇಳಿಬರುತ್ತಿವೆ. ತೇಜೋವಧೆ ಮಾಡುವ ವಿಚಾರಗಳು ರಾಜಕೀಯದಲ್ಲಿ ನಿರಂತರ. ಹಾಗಾಗಿ ನಾವು ಎಚ್ಚರಿಕೆಯಿಂದಿರುವುದು ಅಗತ್ಯ ಎಂದರು. ಪ್ರಜ್ವಲ್‌ ರೇವಣ್ಣ ಅವರನ್ನು ವಿದೇಶಕ್ಕೆ ಹೋಗಲು ಕಳುಹಿಸಿಕೊಟ್ಟಿದ್ದು ದೇವೇಗೌಡರು ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಈಗ ದೇವೇಗೌಡರು ಎಚ್ಚರಿಕೆ ಪತ್ರ ಬರೆದಿರಬಹುದು. ರೇವಣ್ಣ ಕುಟುಂಬ ಮತ್ತು ತಮ್ಮ ಕುಟುಂಬ ಬೇರೆ ಎಂದು ಕುಮಾರಸ್ವಾಮಿಯವರು ಹೇಳಿದ್ದರು. ಈಗ ದೇವೇಗೌಡರು ಯಾವ ಕುಟುಂಬವನ್ನು ಪ್ರಸ್ತಾಪಿಸಿ ಪತ್ರ ಬರೆದಿದ್ದಾರೆ ಎಂದು ತಮಗೆ ಮಾಹಿತಿ ಇಲ್ಲ ಎಂದು ರಾಜಣ್ಣ ಹೇಳಿದರು.
9
+ ಪೆನ್‌ಡ್ರೈವ್‌ ಪ್ರಕರಣದಿಂದ ರಾಜಕೀಯ ಲಾಭವಾಗುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಹಾಸನದಲ್ಲಿ ಕಾಂಗ್ರೆಸ್‌‍ಗೆ ಒಳ್ಳೆಯ ಅಭ್ಯರ್ಥಿಯಿದ್ದಾರೆ. 30 ವರ್ಷಗಳಿಂದ ಒಂದೇ ಕುಟುಂಬದಲ್ಲಿರುವ ಹಿಡಿತವನ್ನು ತಪ್ಪಿಸಲು ಜನ ಈ ಬಾರಿ ನಮ ಪಕ್ಷಕ್ಕೆ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.
10
+ ಲಿಂಕ್‌ಕೆನಲ್‌ ಮೂಲಕ ರಾಮನಗರಕ್ಕೆ ಹೇಮಾವತಿ ನೀರು ತೆಗೆದುಕೊಂಡು ಹೋಗುವುದರಿಂದ ತುಮಕೂರು, ಕೊರಟಗೆರೆ, ಮಧುಗಿರಿ, ಗುಬ್ಬಿ, ತುರುವೇಕೆರೆ ಸೇರಿದಂತೆ ಹಲವು ಭಾಗಗಳಲ್ಲಿ ನೀರಿನ ಸಮಸ್ಯೆಯಾಗುತ್ತಿದೆ. ಇದಕ್ಕೆ ನಮ ವಿರೋಧವಿದೆ. ಮುಖ್ಯಮಂತ್ರಿಯ ಬಳಿ ಈ ವಿಚಾರವಾಗಿ ಚರ್ಚೆ ಮಾಡುತ್ತೇನೆ ಎಂದರು.ಮಾದಕ ವಸ್ತುಗಳ ಪಿಡುಗನ್ನು ತಪ್ಪಿಸಲು ನಿರಂತರ ಕಾರ್ಯಾಚರಣೆ ನಡೆಯುತ್ತಿದೆ. ಮತ್ತಷ್ಟು ಕ್ರಮಗಳು ಅಗತ್ಯ ಎಂದು ಹೇಳಿದರು.
eesanje/url_46_133_4.txt ADDED
@@ -0,0 +1,6 @@
 
 
 
 
 
 
 
1
+ ಸಿಎಂ ಪುತ್ರ ಯತೀಂದ್ರಗೆ ವಿಧಾನಪರಿಷತ್‌ ಸ್ಥಾನ ಸಿಕ್ಕೇ ಸಿಗುತ್ತದೆ : ಸತೀಶ್‌ ಜಾರಕಿಹೊಳಿ
2
+ ಬೆಂಗಳೂರು, ಮೇ 25-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರಿಗೆ ವಿಧಾನಪರಿಷತ್‌ನ ಸದಸ್ಯತ್ವ ಸ್ಥಾನ ಸಿಕ್ಕೇ ಸಿಗುತ್ತದೆ. ಅದರಲ್ಲಿ ಎರಡು ಮಾತಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.
3
+ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ಸಭೆಯಲ್ಲಿ ಜಾತಿವಾರು ಹಾಗೂ ಪ್ರಾಂತ್ಯವಾರು ಅವಕಾಶ ನೀಡುವ ಬಗ್ಗೆ ಚರ್ಚೆಗಳಾಗಿವೆ. ನಾವು ನಮ್ಮ ಸಲಹೆಗಳನ್ನು ನೀಡಿದ್ದೇವೆ ಎಂದರು.
4
+ ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಮಂಗಳೂರು ಕರಾವಳಿ ಕರ್ನಾಟಕ ಸೇರಿದಂತೆ ಎಲ್ಲಾ ಪ್ರಾಂತ್ಯವಾರು ಆಯ್ಕೆಗಳಾಗಬೇಕು. ಬೆಂಗಳೂರಿನವರನ್ನು ಮಾತ್ರ ಪರಿಗಣಿಸುವುದು ಸರಿಯಲ್ಲ. ಅದೇ ರೀತಿ ಜಾತಿ ಸಮುದಾಯವಾರು ಹಂಚಿಕೆ ಮಾಡಬೇಕು ಎಂದು ಹೇಳಿದರು. ಕಾಂಗ್ರೆಸ್‌‍ ಪಕ್ಷದಲ್ಲಿ ಲಂಬಾಣಿ ಸಮುದಾಯದ ಅಭ್ಯರ್ಥಿಗಳು ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ.
5
+ ಆ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು. ಅಲ್ಪಸಂಖ್ಯಾತರ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು. ಕಾಂಗ್ರೆಸ್‌‍ ಪಕ್ಷಕ್ಕೆ ಮತ ಹಾಕುವ ಜಾತಿ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಹೈಕಮಾಂಡ್‌ ನಾಯಕರಿಗೆ ಸಲಹೆ ನೀಡಿದ್ದೇನೆ ಎಂದರು.
6
+ ಕೆಲ ಸದಸ್ಯರ ಪುನರ್‌ ಆಯ್ಕೆ ಅನಿವಾರ್ಯ. ಹಾಗೆಯೇ ಹೊಸಬರನ್ನು ಗುರುತಿಸದೇ ಇದ್ದರೆ ಪಕ್ಷ ಸಂಘಟನೆ ಮಾಡುವುದು ಕಷ್ಟವಾಗುತ್ತದೆ. ಹೀಗಾಗಿ ಕನಿಷ್ಟ ನಾಲ್ಕೈದು ಜನರಿಗಾದರೂ ಹೊಸಬರಿಗೆ ಅವಕಾಶ ನೀಡಿ ಎಂದು ಮನವಿ ಮಾಡಿರುವುದಾಗಿ ತಿಳಿಸಿದರು.
eesanje/url_46_133_5.txt ADDED
@@ -0,0 +1,4 @@
 
 
 
 
 
1
+ ಇರೋದು 7 ಸ್ಥಾನ ಯಾರಿಗಂತ ಕೊಡೋದು : ಅಸಹಾಯಕತೆ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ
2
+ ಮೈಸೂರು, ಮೇ 25-ಇರುವುದು 7 ಸ್ಥಾನ. ಯಾರಿಗೆಂದು ಹಂಚಿಕೆ ಮಾಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ತಂಗಿರುವ ಅವರನ್ನು ಇಂದು ಬೆಳಿಗ್ಗೆ ಪಕ್ಷದ ಹಲವು ನಾಯಕರು ಭೇಟಿ ಮಾಡಿ ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕಾಗಿ ಬೇಡಿಕೆ ಇಟ್ಟರು. ಈ ವೇಳೆ ಎಸ್‌‍ಸಿ/ಎಸ್‌‍ಟಿಗೆ ಕೊಡಬೇಕು. ಯಾರಿಗೆಂದು ಕೊಡೋಣ. ನಮ್ಮ ಕಷ್ಟ ನಿಮಗೆ ಅರ್ಥವಾಗುವುದಿಲ್ಲ ಎಂದು ಸಿಡಿಮಿಡಿಗೊಂಡಿದ್ದಾರೆ.
3
+ ಇದೇ ವೇಳೆ ಮತ್ತೊಬ್ಬ ವ್ಯಕ್ತಿ ತಮ್ಮ ಸಮಸ್ಯೆ ಪರಿಹರಿಸಿಕೊಡುವಂತೆ ಅರ್ಜಿ ನೀಡಲು ಬಂದಿದ್ದರು. ಅವರನ್ನು ಗದರಿದ ಸಿದ್ದರಾಮಯ್ಯ, ಎಷ್ಟು ಬಾರಿ ಅರ್ಜಿ ಕೊಡುತ್ತೀಯ. ಈಗಾಗಲೇ ಮೂರು ಬಾರಿ ಕೊಟ್ಟಿರಬಹುದು ಎಂದು ಖಾರವಾಗಿ ಹೇಳಿದರು.
4
+ ತುಂಬಾ ಜನ ಮುಖ್ಯಮಂತ್ರಿಯವರ ಬೆನ್ನಿಗೆ ಬಿದ್ದಾಗ ತಿಂಡಿ ತಿಂದು ಬರುತ್ತೇನೆ, ಸ್ವಲ್ಪ ಹೊತ್ತು ಇರಿ ಎಂದು ಹೇಳಿ ಹೊರಟರು. ನಿನ್ನೆ ಕೂಡಾ ಮುಖ್ಯಮಂತ್ರಿಯವರು ಮೈಸೂರಿನ ಮೈಲಾರಿ ಹೋಟೆಲ್‌ನಲ್ಲಿ ದೋಸೆ ರುಚಿ ಸವಿದಿದ್ದರು. ಇಂದು ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್‌ಗೆ ಸಚಿವ ವೆಂಕಟೇಶ್‌ರೊಂದಿಗೆ ತೆರಳಿ ಉಪಹಾರ ಸೇವಿಸಿದರು.
eesanje/url_46_133_6.txt ADDED
@@ -0,0 +1,6 @@
 
 
 
 
 
 
 
1
+ “ನನ್ನ ಮಗ ಲೋ ಬಿಪಿಯಿಂದಾಗಿ ಮೃತಪಟ್ಟಿದ್ದಾನೆ, ಪೊಲೀಸರ ವಿರುದ್ಧ ಆರೋಪ ಮಾಡಲ್ಲ” : ಆದಿಲ್‌ ತಂದೆ
2
+ ದಾವಣಗೆರೆ, ಮೇ 25-ಲೋ ಬಿಪಿಯಿಂದಾಗಿ ತಮ್ಮ ಪುತ್ರ ಸಾವನ್ನಪ್ಪಿದ್ದು, ಅನಗತ್ಯವಾಗಿ ನಾನು ಪೊಲೀಸರ ವಿರುದ್ಧ ಆರೋಪ ಮಾಡಲು ಬಯಸುವುದಿಲ್ಲ ಎಂದು ಚನ್ನಗಿರಿ ನಿವಾಸಿ ಕರೀಂ ಉಲ್ಲಾ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪುತ್ರ ಆದಿಲ್‌ ಬಡಗಿ ಕೆಲಸ ಮಾಡುತ್ತಿದ್ದ. ದೇವರ ವಿಗ್ರಹಗಳನ್ನು ನಿರ್ಮಿಸುತ್ತಿದ್ದ. ವಿನ್ಯಾಸಕಾರನಾಗಿದ್ದ ಆತನಿಗೆ ದಿನಕ್ಕೆ 2 ಸಾವಿರ ರೂ. ಸಂಬಳ ಸಿಗುತ್ತಿತ್ತು. ನಮ್ಮ ಮನೆಯ ಹತ್ತು ಜನರನ್ನು ಸಾಕುತ್ತಿದ್ದ ಎಂದು ಹೇಳಿದ್ದಾರೆ.
3
+ ಆತನ ಸಾವಿಗೆ ಕಾರಣ ಗೊತ್ತಿಲ್ಲ. ನಾನು ಅನಗತ್ಯವಾಗಿ ಪೊಲೀಸರ ಮೇಲೆ ದೂರಲು ಬಯಸುವುದಿಲ್ಲ. ಮೃತ ದೇಹದ ಮೇಲೆ ಹಲ್ಲೆಯ ಗುರುತುಗಳನ್ನು ನಾನು ಗಮನಿಸಲಿಲ್ಲ. ಹೆಚ್ಚಿನ ವಿವರಗಳನ್ನು ಹೇಳಲು ನಾನು ವೈದ್ಯನಲ್ಲ. ಅನಕ್ಷರಸ್ಥ. ಹಮಾಲಿ ಕೆಲಸ ಮಾಡಿ ಮಕ್ಕಳನ್ನು ಸಾಕಿ ಓದಿಸಿದೆ. ಈಗ ಬೆಳೆದ ಮಗನನ್ನು ಕಳೆದುಕೊಂಡಿದ್ದೇನೆ. ಪರಿಹಾರ ಕೊಡಿ ಎಂದು ಕೇಳಿಕೊಳ್ಳುತ್ತೇನೆ ಎಂದರು.
4
+ ನಮ್ಮ ಮಗನ ಹೆಣವನ್ನು ಇಟ್ಟುಕೊಂಡು ಪೊಲೀಸ್‌‍ ಠಾಣೆಗೆ ಕಲ್ಲು ಹೊಡೆಯಲು ಸಾಧ್ಯವೇ? ಸಾವಿನ ಮನೆಯಲ್ಲಿದ್ದವರು ಯಾರಾದರೂ ಈ ಕೆಲಸ ಮಾಡಲು ಆಗುತ್ತದೆಯೇ? ನಾವು, ನಮ್ಮ ಸಂಬಂಧಿಕರು, ನಮ್ಮ ಅಣ್ಣ-ತಮಂದಿರು ಎಲ್ಲರೂ ಪೊಲೀಸ್‌‍ ಠಾಣೆ ಒಳಗಡೆ ಇದ್ದೆವು. ಹೊರಗಡೆ ಯಾರು ಕಲ್ಲು ಹೊಡೆದಿದ್ದಾರೋ ಗೊತ್ತಿಲ್ಲ, ಕುಡುಕರು ಮಾಡಿರುವ ಕೆಲಸಕ್ಕೆ ನಮ್ಮ ಹೆಸರು ಹೇಳುವುದು ಸರಿಯಲ್ಲ ಎಂದು ಹೇಳಿದರು.
5
+ ನನ್ನ ಮಗ ಓಸಿ ಬರೆಯುವಂತಹ ಕೆಲಸ ಮಾಡುತ್ತಿರಲಿಲ್ಲ. ಆತನನ್ನು ಬೆಳೆಸಿ, ಮದುವೆ ಮಾಡಿದ ನನಗೆ ಅವನ ಇತಿಹಾಸ ಗೊತ್ತು. ಆತನಿಗೆ ಮೂರು ಮಕ್ಕಳಿವೆ. ಯಾವುದೇ ಖಾಯಿಲೆ ಇರಲಿಲ್ಲ. ಮೂರ್ಛೆರೋಗದಿಂದ ಮೃತಪಟ್ಟಿದ್ದಾನೆ ಎಂಬುದು ಸರಿಯಲ್ಲ. ಲೋ ಬಿಪಿಯಿಂದಾಗಿ ಸಾವನ್ನಪ್ಪಿರಬಹುದು ಎಂದು ಹೇಳಿದ್ದಾರೆ.
6
+ ಪೊಲೀಸ್‌‍ ಠಾಣೆಗೆ ಕರೆದುಕೊಂಡು ಬಂದ 10 ನಿಮಿಷದೊಳಗಾಗಿಯೇ ಕುಸಿದು ಮೃತಪಟ್ಟಿದ್ದಾನೆ. ಮುಂದೆ ನಾವೂ ಸಾಯುತ್ತೇವೆ, ಇನ್ನೊಬ್ಬರ ಮೇಲೆ ದೂರು ಹೇಳಿ ಪಾಪ ಮಾಡಲು ಬಯಸುವುದಿಲ್ಲ ಎಂದಿದ್ದಾರೆ.
eesanje/url_46_133_7.txt ADDED
@@ -0,0 +1,3 @@
 
 
 
 
1
+ ಬೆಳಗಾವಿ : ಸಿಲಿಂಡರ್‌ ಸ್ಫೋಟದಲ್ಲಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಿಸದೆ ಸಾವು
2
+ ಬೆಳಗಾವಿ, ಮೇ 25-ಸಿಲಿಂಡರ್‌ ಸ್ಫೋಟದಿಂದ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ದಂಪತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಕಾಕತಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
3
+ ತಾಲೂಕಿನ ಸುಳ್ಯ ಗ್ರಾಮದ ಕಲ್ಲಪ್ಪ ಪಾಟೀಲ (63) ಮತ್ತು ಸುಮನಾ ಪಾಟೀಲ (60) ಮೃತಪಟ್ಟ ದಂಪತಿ.ಮೇ 18 ರಂದು ಇವರ ಮನೆಯಲ್ಲಿ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರು.ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ರಾತ್ರಿ ದಂಪತಿ ಮೃತಪಟ್ಟಿದ್ದಾರೆ.
eesanje/url_46_133_8.txt ADDED
@@ -0,0 +1,10 @@
 
 
 
 
 
 
 
 
 
 
 
1
+ ವಿಧಾನಪರಿಷತ್‌ ಚುನಾವಣೆಯಲ್ಲೂ ಕುಟುಂಬ ರಾಜಕಾರಣ : ಕಾರ್ಯಕರ್ತರ ಅಸಮಾಧಾನ
2
+ ಬೆಂಗಳೂರು, ಮೇ 25-ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯಲ್ಲೂ ಕುಟುಂಬ ರಾಜಕಾರಣಕ್ಕೆ ಹಾಗೂ ಈಗಾಗಲೇ ಸಾಕಷ್ಟು ಅವಕಾಶ ಪಡೆದವರಿಗೆ ಮತ್ತೆ ಮಣೆ ಹಾಕುತ್ತಿರುವುದು ಕಾರ್ಯಕರ್ತರ ಅಸಹನೆಗೆ ಕಾರಣವಾಗಿದೆ. 2023 ರ ಜೂನ್‌ 23 ರಂದು ಸಚಿವ ಎನ್‌.ಎಸ್‌‍.ಬೋಸರಾಜ್‌ ಅವರನ್ನು ವಿಧಾನಪರಿಷತ್‌ಗೆ ನೇಮಕ ಮಾಡಲಾಗಿತ್ತು. ಈಗ ಮರಳಿ ಅವರನ್ನು ಮೇಲ್ಮನೆಗೆ ಕಳುಹಿಸಲು ತಯಾರಿಗಳಾಗುತ್ತಿವೆ. ಕೆ.ಎ.ಗೋವಿಂದರಾಜು ಕೂಡ ಎರಡನೇ ಬಾರಿ ಅವಕಾಶದ ನಿರೀಕ್ಷೆಯಲ್ಲಿದ್ದಾರೆ.
3
+ ಇದರ ಜೊತೆಗೆ ಮಾಜಿ ಸಚಿವ ಎಚ್‌.ಎಂ.ರೇವಣ್ಣ ಪಂಚಖಾತ್ರಿಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿದ್ದು, ಕ್ಯಾಬಿನೇಟ್‌ ದರ್ಜೆಯ ಸ್ಥಾನಮಾನ ಹೊಂದಿದ್ದಾರೆ. ಆದರೂ ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ. ಆರ್‌.ವಿ.ವೆಂಕಟೇಶ್‌, ವಿ.ಆರ್‌.ಸುದರ್ಶನ್‌, ಬಿ.ಎಲ್‌.ಶಂಕರ್‌, ವಿ.ಎಸ್‌‍.ಉಗ್ರಪ್ಪ, ರಾಣಿಸತೀಶ್‌, ಬಿ.ಆರ್‌.ಪಾಟೀಲ್‌, ಎಂ.ಸಿ.ವೇಣುಗೋಪಾಲ್‌, ಪಿ.ಆರ್‌.ರಮೇಶ್‌, ಐವಾನ್‌ ಡಿಸೋಜಾ, ನಾರಾಯಣ ಸ್ವಾಮಿ, ಧರ್ಮಸೇನ, ಜಲಜಾ ನಾಯಕ್‌, ಮಲ್ಲಾಜಮ, ತೇಜಸ್ವಿನಿ ಗೌಡ, ಆರ್‌.ಶಂಕರ್‌, ಎಸ್‌‍.ಜಿ.ನಂಜಯ್ಯ ಹಿರೇಮಠ್‌, ಕೆ.ಶಿವಮೂರ್ತಿ, ಎಲ್‌.ಹನುಮಂತಯ್ಯ ಸೇರಿದಂತೆ ಅನೇಕರು ಈಗಾಗಲೇ ಅವಕಾಶ ಪಡೆದಿದ್ದು, ಮತೊಮ್ಮೆ ಪ್ರಯತ್ನಿಸುತ್ತಿದ್ದಾರೆ.
4
+ ಸಂಭವನೀಯ ಪಟ್ಟಿಯಲ್ಲಿರುವವರ ಪೈಕಿ ಯತೀಂದ್ರ ಸಿದ್ದರಾಮಯ್ಯ ಕುಟುಂಬ ರಾಜಕಾರಣದ ಅಪವಾದಕ್ಕೆ ಗುರಿಯಾಗಿದ್ದಾರೆ. ಇನ್ನು ಬಿಜೆಪಿಯಿಂದ ಕಾಂಗ್ರೆಸ್‌‍ಗೆ ವಲಸೆ ಬಂದಿರುವ ಕಲಬುರಗಿಯ ಬಾಬುರಾಜ್‌ ಚಿಂಚನಸೂರು ಮತ್ತು ಮಾಲೀಕಯ್ಯ ಗುತ್ತೇದಾರ್‌ ಅವರು ಟಿಕೆಟ್‌ಗಾಗಿ ಹಿರಿಯ ನಾಯಕರ ದುಂಬಾಲು ಬಿದ್ದಿದ್ದಾರೆ.
5
+ ಒಂದು ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ತವರು ಜಿಲ್ಲೆಯ ನಾಯಕರಿಗೆ ಅವಕಾಶ ನೀಡಲು ಇಚ್ಛಿಸಿದರೆ 7 ಸ್ಥಾನಗಳಲ್ಲಿ ಒಂದು ಕಡಿತಗೊಳ್ಳುತ್ತದೆ. ಹಾಗೂ ಹೀಗೂ ಉಳಿಯುವ ಮೂರ್ನಾಲ್ಕು ಸ್ಥಾನಗಳಿಗೆ ಮತ್ತದೇ ಹಳಬರು ಕುಟುಂಬದ ಹಿನ್ನಲೆಯುಳ್ಳವರೇ ಲಾಬಿ ನಡೆಸುತ್ತಿದ್ದಾರೆ. ಪಕ್ಷಕ್ಕಾಗಿ ದುಡಿದವರು ಪ್ರತಿಬಾರಿಯಂತೆ ಮೂಲೆಗುಂಪಾಗುವ ಚಡಪಡಿಕೆ ಕಂಡುಬರುತ್ತಿದೆ.
6
+ ಈ ಹಿಂದೆ ಮೂರು ನಾಮನಿರ್ದೇಶನದ ಸ್ಥಾನಗಳಿಗೆ ಐಆರ್‌ಎಸ್‌‍ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದು ಹೊಸದಾಗಿ ರಾಜಕಾರಣಕ್ಕೆ ಬಂದ ಸುಧಾಂದಾಸ್‌‍ ಅವರಿಗೆ ತೀವ್ರ ವಿರೋಧದ ನಡುವೆಯೂ ಮಣೆ ಹಾಕಲಾಯಿತು.
7
+ ಮಾಜಿ ಸಚಿವ ಎಂ.ಆರ್‌.ಸೀತಾರಾಮ್‌ ಕಾಂಗ್ರೆಸ್‌‍ನಿಂದ ಒಂದು ಕಾಲು ಹೊರಗಿಟ್ಟಿದ್ದರು. ಅವರಿಗೆ ಎಂ.ಎಲ್‌.ಸಿ ಸ್ಥಾನ ನೀಡಿದ್ದಲ್ಲದೆ, ಅವರ ಪುತ್ರ ರಕ್ಷಾ ರಾಮಯ್ಯ ಅವರಿಗೆ ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿದೆ. ಮಾಜಿ ಸಚಿವೆ ಉಮಾಶ್ರೀ ಕೂಡ ಅವಕಾಶ ಪಡೆದುಕೊಂಡರು.
8
+ ಮೂರು ಸ್ಥಾನಗಳಲ್ಲಿ ಸಾಮಾನ್ಯ ಕಾರ್ಯಕರ್ತರನ್ನು ಪರಿಗಣಿಸಲೇ ಇಲ್ಲ. ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್‌‍ ಪಕ್ಷಕ್ಕೆ ಗೆಲ್ಲುವ ಅನಿವಾರ್ಯತೆ ಇರುವುದರಿಂದಾಗಿ ಕುಟುಂಬ ರಾಜಕಾರಣ ಹಣದ ಪ್ರಭಾವಕ್ಕೆ ಅವಕಾಶ ನೀಡುವುದನ್ನು ಕಾರ್ಯಕರ್ತರು ಸಹಿಸಿಕೊಳ್ಳುತ್ತಿದ್ದಾರೆ.
9
+ ಆದರೆ ಪ್ರಸ್ತುತ ಪ್ರಮುಖ ಚುನಾವಣೆಗಳು ಮುಗಿದಿವೆ. ಈಗಲಾದರೂ ನಿಷ್ಠಾವಂತರನ್ನು ಗುರುತಿಸದೇ ಇದ್ದರೆ ಪಕ್ಷಕ್ಕೆ ಉಳಿಗಾಲ ಇರುವುದಿಲ್ಲ ಎಂಬ ಚರ್ಚೆಗಳು ನಡೆಯುತ್ತಿವೆ. ಪಕ್ಷ ಸಂಘಟನೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವವರು ಅಥವಾ ಕನಿಷ್ಠ 5 ವರ್ಷ ಜವಾಬ್ದಾರಿ ನಿಭಾಯಿಸುವವರಿಗೆ ಅವಕಾಶ ನೀಡಬೇಕು. ದಶಕದಿಂದ ಅವಕಾಶ ವಂಚಿತರನ್ನು ಪರಿಗಣಿಸಬೇಕು.
10
+ ನಿಷ್ಠಾವಂತ ಹಾಗೂ ಹೊಸ ಮುಖಗಳನ್ನು ಪರಿಗಣಿಸಬೇಕು. 7 ವಿಧಾನಪರಿಷತ್‌ನ ಸ್ಥಾನಗಳ ಪೈಕಿ ಕನಿಷ್ಠ ಮೂರಕ್ಕಾದರೂ ಪ್ರಭಾವರಹಿತ, ಕೌಟುಂಬಿಕ ಹಿನ್ನೆಲೆ ಇಲ್ಲದಿರುವ ಪಕ್ಷನಿಷ್ಠರಿಗೆ ಅವಕಾಶ ನೀಡಬೇಕು ಎಂಬ ಒತ್ತಾಯಗಳು ಕೇಳಿಬಂದಿವೆ.
eesanje/url_46_133_9.txt ADDED
@@ -0,0 +1,4 @@
 
 
 
 
 
1
+ ವಿಧಾನಪರಿಷತ್‌ ಚುನಾವಣೆ : ನಾಳೆ ಬಿಜೆಪಿ – ಜೆಡಿಎಸ್‌‍ ಸಮನ್ವಯ ಸಭೆ
2
+ ಬೆಂಗಳೂರು, ಮೇ 25-ವಿಧಾನಪರಿಷತ್‌ನ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ನಾಳೆ ಬಿಜೆಪಿ ಮತ್ತು ಜೆಡಿಎಸ್‌‍ ಸಮನ್ವಯ ಸಭೆ ನಡೆಯಲಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಜೆಡಿಎಸ್‌‍ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಸಭೆ ನಡೆಯಲಿದ್ದು, ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಅ.ದೇವೇಗೌಡ ಅವರ ಗೆಲುವಿಗೆ ಸಭೆಯಲ್ಲಿ ಕಾರ್ಯತಂತ್ರ ರೂಪಿಸಲಾಗುತ್ತದೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ.
3
+ ಸಭೆಯಲ್ಲಿ ಜೆಡಿಎಸ್‌‍ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ವಿಧಾನಸಭೆ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಜೆಡಿಎಸ್‌‍ ಯುವಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸೇರಿದಂತೆ ಉಭಯ ಪಕ್ಷಗಳ ಪ್ರಮುಖರು ಭಾಗವಹಿಸಲಿದ್ದಾರೆ.
4
+ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌‍ ಜಂಟಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ದೇವೇಗೌಡ ಅವರ ಗೆಲುವಿಗೆ ಎಲ್ಲರೂ ಶ್ರಮವಹಿಸಿ ಕಾರ್ಯ ನಿರ್ವಹಿಸಬೇಕು ಎಂಬ ಸಂದೇಶವನ್ನು ಸಭೆಯಲ್ಲಿ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
eesanje/url_46_134_1.txt ADDED
@@ -0,0 +1,5 @@
 
 
 
 
 
 
1
+ ಅಂತ್ಯ ಸಂಸ್ಕಾರದ ವೇಳೆ ಮರುಜೀವ ಪಡೆದ ಎಳೆಮಗು, ಬಾಗಲಕೋಟೆಯಲೊಂದು ಅಚ್ಚರಿ
2
+ ಬಾಗಲಕೋಟೆ, ಮೇ 24-ಎಳೆಯ ಮಗುವೊಂದು ಮೃತಪಟ್ಟಿದೆ ಎಂದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಆ ಮಗು ಕೆಮ್ಮಿದ್ದು ಪೋಷಕರಲ್ಲಿ ಅಚ್ಚರಿ ಮೂಡಿಸಿದ ಘಟನೆ ಜಿಲ್ಲೆಯ ಇಳಕಲ್‌ ನಗರದಲ್ಲಿ ನಡೆದಿದೆ.
3
+ ಬಸವರಾಜ ಭಜಂತ್ರಿ ಹಾಗೂ ನೀಲಮ ದಂಪತಿಯ 13 ತಿಂಗಳ ದ್ಯಾಮಣ್ಣ ಭಜಂತ್ರಿ ಮೃತ ಪಟ್ಟಿದೆ ಎಂದು ಭಾವಿಸಿದ್ದ ಮಗು. ಉಸಿರಾಟ ತೊಂದರೆ ಸೇರಿದಂತೆ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಗುವನ್ನು ನಾಲ್ಕೈದು ದಿನಗಳ ಹಿಂದೆ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
4
+ ವೈದ್ಯರು ಪರೀಕ್ಷಿಸಿ ಮಗು ಬದುಕುವುದು ಕಷ್ಟ ಎಂದು ಹೇಳಿದ್ದರು. ಹೀಗಾಗಿ ವಾಪಸ್‌‍ ಮನೆಗೆ ವಾಹನದಲ್ಲಿ ಹಿಂದಿರುಗುವಾಗ ಮಗು ಪ್ರಜ್ಞೆ ತಪ್ಪಿದೆ. ಪ್ರಜ್ಞೆ ತಪ್ಪಿದ ಮಗು ಮೃತಪಟ್ಟಿದೆ ಎಂದು ಭಾವಿಸಿ ಪೋಷಕರು ಸಂಬಂಧಿಕರಿಗೆ ಸಾವಿನ ಸುದ್ದಿ ಮುಟ್ಟಿಸಿದ್ದರು.
5
+ ಅದರಂತೆ ಸಂಬಂಧಿಕರು ಅಂತ್ಯಸಂಸ್ಕಾರಕ್ಕೆ ಬಂದು ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಗು ಕೆಮ್ಮಿದೆ. ಈ ವೇಳೆ ಮಗು ಬದುಕಿದೆ ಎಂದು ಪೋಷಕರು ನಿಟ್ಟುಸಿರು ಬಿಟ್ಟರೆ, ಇತ್ತ ಅಂತ್ಯಸಂಸ್ಕಾರಕ್ಕೆಂದು ಬಂದ ಸಂಬಂಧಿಕರಿಗೆ ಅಚ್ಚರಿಯಾಗಿದೆ. ಸದ್ಯ ಮಗುವಿಗೆ ಇಳಕಲ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
eesanje/url_46_134_10.txt ADDED
@@ -0,0 +1,5 @@
 
 
 
 
 
 
1
+ ಕೆಪಿಟಿಸಿಎಲ್‌ 902 ಹುದ್ದೆಗಳ ನೇಮಕ ಮಾಡಿ ಆದೇಶ ಹೊರಡಿಸಿದ ಸರ್ಕಾರ
2
+ ಬೆಂಗಳೂರು, ಮೇ 24-ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತವು (ಕೆಪಿಟಿಸಿಎಲ್‌‍) ಒಟ್ಟು 902 ಹುದ್ದೆಗಳ ಭರ್ತಿಗೆ ನೇಮಕ ಆದೇಶ ಹೊರಡಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನ ಅಂದರೆ ಕಳೆದ ಮಾರ್ಚ್‌ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಎಂಜಿನಿಯರ್‌(ವಿದ್ಯುತ್‌), 17 ಸಹಾಯಕ ಎಂಜಿನಿಯರ್‌(ಸಿವಿಲ್‌‍), 15-ಕಿರಿಯ ಇಂಜಿನಿಯರ್‌(ಸಿವಿಲ್‌‍) ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್‌ ನಡೆಸಿ ನೇಮಕ ಆದೇಶ ನೀಡಲಾಗಿದೆ.
3
+ ಅದೇ ರೀತಿ, 535 ಅಭ್ಯರ್ಥಿಗಳ ಪೈಕಿ 502 (ಕಿರಿಯ ಇಂಜಿನಿಯರ್‌) ಅಭ್ಯರ್ಥಿಗಳಿಗೆ ಬುಧವಾರ ಮತ್ತು ಗುರುವಾರ ಕೌನ್ಸೆಲಿಂಗ್‌ ನಡೆಸಿ ನೇಮಕ ಆದೇಶ ನೀಡಲಾಗಿದೆ. ಈ ಪೈಕಿ 73 ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶ ವೃಂದಕ್ಕೆ ಸೇರಿದವರಾಗಿದ್ದು, ಉಳಿದ 429 ಅಭ್ಯರ್ಥಿಗಳು ಇತರ ವೃಂದದವರು.
4
+ ಇನ್ನುಳಿದಂತೆ, 360 ಕಿರಿಯ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಶುಕ್ರವಾರ (ಮೇ 24, 2024) ಕಡೆಯ ದಿನವಾಗಿದೆ. ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮ ವಹಿಸಲಾಗುವುದು.
5
+ ಅಂತಿಮ ಆಯ್ಕೆ ಪಟ್ಟಿ ಪ್ರಕಟಗೊಂಡ ನಂತರ, ಎಲ್ಲಾ ಅಭ್ಯರ್ಥಿಗಳ ವಿದ್ಯಾರ್ಹತೆ ಹಾಗೂ ಮೀಸಲು ಕೋರಿರುವ ದಾಖಲೆಗಳ ಬಗ್ಗೆ ಸಂಬಂಧಿಸಿದ ಪ್ರಾಧಿಕಾರದಿಂದ ದೃಢೀಕರಣ ಪಡೆದು ತ್ವರಿತವಾಗಿ ಸ್ಥಳ ನಿಯುಕ್ತಿ ಹಾಗೂ ನೇಮಕ ಆದೇಶ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಟಿಸಿಎಲ್‌ ಪ್ರಕಟಣೆ ತಿಳಿಸಿದೆ.
eesanje/url_46_134_11.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಪರಿಷತ್ ಚುನಾವಣೆ : ಕಾಂಗ್ರೆಸ್‌ಗೆ 4 ಕ್ಷೇತ್ರಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ
2
+ ಬೆಂಗಳೂರು, ಮೇ 24-ಪ್ರಸ್ತುತ ನಡೆಯುತ್ತಿರುವ ಶಿಕ್ಷಕರ ಹಾಗೂ ಪದವೀಧರರ ದ್ವೈವಾರ್ಷಿಕ 6 ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷ ಕನಿಷ್ಟ 4 ನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ. ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆದ್ದು, ಪಕ್ಷೇತರರ ಬೆಂಬಲದೊಂದಿಗೆ 137 ರವರೆಗೂ ಸಂಖ್ಯಾಬಲವನ್ನು ಹೊಂದಿರುವ ಕಾಂಗ್ರೆಸ್‌‍ ಪಕ್ಷ ಭರ್ಜರಿ ಬಹುಮತ ಸಾಧಿಸಿದೆ.
3
+ ಪಕ್ಷಗಳ ಬಲಾಬಲ :ಆದರೆ ಮೇಲನೆ ವಿಧಾನಪರಿಷತ್‌ನಲ್ಲಿ ಬಿಜೆಪಿ ಮುಂದಿದ್ದು, ಜೆಡಿಎಸ್‌‍, ಬಿಜೆಪಿ ಮೈತ್ರಿಯಿಂದಾಗಿ ಕಾಂಗ್ರೆಸ್‌‍ ಪಕ್ಷ ಅಲ್ಪ ಮತಕ್ಕೆ ಕುಸಿದಿದೆ. 2024ರ ಏಪ್ರಿಲ್‌ 24ರವರೆಗಿನ ಸಂಖ್ಯಾಬಲದ ಪ್ರಕಾರ, ಬಿಜೆಪಿ 32, ಜೆಡಿಎಸ್‌‍ 7, ಸಭಾಪತಿ 1 ಸ್ಥಾನ ಸೇರಿ 40 ಬಲಾಬಲ ಹೊಂದಿದೆ.
4
+ ಪಕ್ಷೇತರರಾಗಿ ಆಯ್ಕೆಯಾಗಿರುವ ಲಖನ್‌ ಲಕ್ಷ್ಮಣರಾವ್‌ ಜಾರಕಿಹೊಳಿ ಯಾವ ಪಕ್ಷಕ್ಕೆ ಬೆಂಬಲ ನೀಡುತ್ತಾರೆ ಎಂಬುದು ಆಯಾ ಸಂದರ್ಭದ ಪರಿಸ್ಥಿತಿಯನ್ನು ಆಧರಿಸಿದೆ. ಕಾಂಗ್ರೆಸ್‌‍ 29 ಸದಸ್ಯರನ್ನು ಹೊಂದಿದ್ದು, ಈ ಮೊದಲು ಎಪಿಎಂಸಿ ಕಾಯ್ದೆಯನ್ನು ಅಂಗೀಕಾರ ಪಡೆದುಕೊಳ್ಳಲು ಸಾಧ್ಯವಾಗದೇ ವೈಫಲ್ಯ ಅನುಭವಿಸಿತ್ತು.
5
+ ಸದಸ್ಯರ ರಾಜೀನಾಮೆ :ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌‍ ಸೇರಿದ್ದ ಜಗದೀಶ್‌ ಶೆಟ್ಟರ್‌ ಅವರನ್ನು ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಆಯ್ಕೆ ಮಾಡಲಾಗಿತ್ತು. ಅವರಿಗೆ 2028 ರ ಜೂನ್‌ 14 ರವರೆಗೂ ಅಧಿಕಾರವಧಿಯಿತ್ತು. ಆದರೆ ಅವರು ಕಾಂಗ್ರೆಸ್‌‍ ಹಾಗೂ ವಿಧಾನಪರಿಷತ್‌ನ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಮರಳಿದ್ದಾರೆ.
6
+ ಬಿಜೆಪಿಯ ಸದಸ್ಯರಾಗಿದ್ದ ತೇಜಸ್ವಿನಿ ರಮೇಶ್‌, ಕೆ.ಪಿ.ನಂಜುಂಡಿ ಅವರ ಅಧಿಕಾರವಧಿ ಈ ವರ್ಷದ ಜೂನ್‌ 17 ಕ್ಕೆ ಮುಕ್ತಾಯಗೊಳ್ಳುತ್ತಿದ್ದರೆ, ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಆಯನೂರು ಮಂಜುನಾಥ್‌ ವಿಧಾನಸಭೆಗೆ ಸ್ಪರ್ಧಿಸುವ ಸಲುವಾಗಿ ರಾಜೀನಾಮೆ ನೀಡಿದ್ದರು. ಅದರ ಅಧಿಕಾರವಧಿ ಜೂ. 21 ರವರೆಗೆ ಇತ್ತು. ಜೆಡಿಎಸ್‌‍ ಸದಸ್ಯರಾಗಿದ್ದ ಮರಿತಿಬ್ಬೇಗೌಡ ಅವರು ಜೂನ್‌ 21 ಕ್ಕೆ ನಿವೃತ್ತರಾಗಬೇಕಿತ್ತು. ಆದರೆ ಪಕ್ಷ ಹಾಗೂ ವಿಧಾನಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌‍ ಸೇರಿ ಹೆಚ್ಚಿನ ಪದವೀಧರ ಕ್ಷೇತ್ರದಿಂದ ಮರು ಆಯ್ಕೆಯಾಗಲು ಸ್ಪರ್ಧಿಸಿದ್ದಾರೆ. ಈ ಐವರು ರಾಜೀನಾಮೆ ನೀಡಿರುವುದು ಮಹತ್ವದ ಬೆಳವಣಿಗೆಯಾಗಿದೆ.
7
+ ತೆರವಾಗುವ ಸ್ಥಾನಗಳು :32 ಸದಸ್ಯರನ್ನು ಹೊಂದಿರುವ ಬಿಜೆಪಿಯಲ್ಲಿ ವಿಧಾನಸಭೆಯಿಂದ ಆಯ್ಕೆಯಾಗಿರುವ ಹಾಗೂ ಪದವೀಧರ ಶಿಕ್ಷಕರ ಕ್ಷೇತ್ರಗಳ ಸದಸ್ಯರಿಂದ 8 ಸ್ಥಾನಗಳು ತೆರವಾಗುತ್ತಿವೆ. ಕಾಂಗ್ರೆಸ್‌‍ನಲ್ಲಿ 7, ಜೆಡಿಎಸ್‌‍ನಲ್ಲಿ 2 ಸ್ಥಾನಗಳು ತೆರವಾಗುತ್ತಿವೆ.
8
+ ವಿಧಾನಸಭೆಯಿಂದ ಆಯ್ಕೆಗೆ ಚುನಾವಣೆ :11 ಸದಸ್ಯರ ಅಧಿಕಾರವಧಿ ಜೂನ್‌ 16 ಕ್ಕೆ ಮುಕ್ತಾಯಗೊಳ್ಳಲಿದೆ. ಅದರಲ್ಲಿ ಬಿಜೆಪಿಯ 6, ಕಾಂಗ್ರೆಸ್‌‍ನ 4, ಜೆಡಿಎಸ್‌‍ನ ಒಬ್ಬರು ಸದಸ್ಯರಿದ್ದರು. ಈ ಸ್ಥಾನಗಳಿಗೆ ಜೂನ್‌ 13 ರಂದು ಚುನಾವಣೆ ನಡೆಯುತ್ತಿದ್ದು, ಅಲ್ಲಿ ಕಾಂಗ್ರೆಸ್‌‍ 7, ಬಿಜೆಪಿ 3, ಜೆಡಿಎಸ್‌‍ 1 ಕ್ಷೇತ್ರಗಳಲ್ಲಿ ಗೆಲ್ಲುವ ಅವಕಾಶ ಹೊಂದಿದೆ.
9
+ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಚುನಾವಣೆ ನಡೆದ ಬಳಿಕ ಬಿಜೆಪಿಯ ಸಂಖ್ಯಾಬಲ 27, ಕಾಂಗ್ರೆಸ್‌‍ 31, ಜೆಡಿಎಸ್‌‍ 6 ಸದಸ್ಯರನ್ನು ಹೊಂದಲಿದೆ. ಸಭಾಪತಿಯವರನ್ನೂ ಒಳಗೊಂಡ ಬಳಿಕ ಜೆಡಿಎಸ್‌‍, ಬಿಜೆಪಿ ಮೈತ್ರಿಯ ಸಂಖ್ಯಾಬಲ 34 ಆಗಲಿದೆ.ಕಾಂಗ್ರೆಸ್‌‍ ಎರಡೂ ಪಕ್ಷಗಳನ್ನು ಮೀರಿಸಬೇಕಾದರೆ ಶಿಕ್ಷಕರ ಪದವೀಧರರ ದ್ವೈವಾರ್ಷಿಕ ಚುನಾವಣೆಯಲ್ಲಿ 4 ಕ್ಷೇತ್ರಗಳನ್ನು ಗೆಲ್ಲಲೇಬೇಕಿದೆ. ಈ ನಡುವೆ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿರುವ ಬಿಜೆಪಿಯ ಕೋಟಾ ಶ್ರೀನಿವಾಸ್‌‍ ಪೂಜಾರಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿದ್ದಾರೆ.
10
+ ಸಂಸತ್‌ಗೆ ಒಂದು ವೇಳೆ ಅವರು ಆಯ್ಕೆಯಾದರೆ ಮೇಲನೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು. ಆಗ ಬಿಜೆಪಿಗೆ ಮತ್ತೊಂದು ಸ್ಥಾನ ಕೊರತೆಯಾಗುವ ಸಾಧ್ಯತೆಗಳಿವೆ. ಆಡಳಿತಾರೂಢ ಕಾಂಗ್ರೆಸ್‌‍ ವಿಧಾನಮಂಡಲದಲ್ಲಿ ಯಾವುದೇ ವಿಧೇಯಕ ಹಾಗೂ ನಿಯಮಗಳಿಗೆ ಸರಾಗವಾಗಿ ಅಂಗೀಕಾರ ಪಡೆದುಕೊಳ್ಳಬೇಕಾದರೆ ತನ್ನ ಸಂಖ್ಯಾಬಲವನ್ನು ಹೆಚ್ಚಿಸಿಕೊಳ್ಳಲೇಬೇಕಾದ ಅನಿವಾರ್ಯತೆ ಇದೆ.
11
+ ಇದೇ ವರ್ಷ ಅಕ್ಟೋಬರ್‌ 29 ಕ್ಕೆ ನಾಮನಿರ್ದೇಶಿತ ಕಾಂಗ್ರೆಸ್‌‍ ಸದಸ್ಯರಾದ ಯು.ಬಿ.ವೆಂಕಟೇಶ್‌, ಪ್ರಕಾಶ್‌ ಕೆ. ರಾಥೋಡ್‌ ನಿವೃತ್ತರಾಗುತ್ತಿದ್ದು, ಆ ಎರಡೂ ಸ್ಥಾನಗಳಿಗೂ ನಾಮನಿರ್ದೇಶನ ಮಾಡಿಕೊಳ್ಳಲು ಸರ್ಕಾರಕ್ಕೆ ಅವಕಾಶ ಇದೆ.ಈ ಲೆಕ್ಕಾಚಾರದ ಆಧಾರದ ಮೇಲೆ ಕನಿಷ್ಟ 2 ಸ್ಥಾನಗಳನ್ನು ಗೆದ್ದರೂ ಕಾಂಗ್ರೆಸ್‌‍ ಮೇಲನೆಯಲ್ಲಿ ಸಂಖ್ಯಾಬಲ ಸಾಧಿಸಿಕೊಳ್ಳುವ ಅವಕಾಶಗಳಿವೆ.
12
+ ಸಾಮಾನ್ಯವಾಗಿ ವಿಧಾನಪರಿಷತ್‌ನ ಚುನಾವಣೆಯ ಫಲಿತಾಂಶಗಳು ಆಡಳಿತಾರೂಢ ಪಕ್ಷಕ್ಕೆ ಅನುಕೂಲವಾಗಿರುತ್ತವೆ ಎಂಬ ಪ್ರತೀತಿ ಇದೆ. ಪ್ರಸ್ತುತ ಬಿಜೆಪಿ ಮತ್ತು ಜೆಡಿಎಸ್‌‍ ಚುನಾವಣೋತ್ತರ ಮೈತ್ರಿ ಮಾಡಿಕೊಂಡಿರುವುದರಿಂದ ಕಾಂಗ್ರೆಸ್‌‍ಗೆ ಸವಾಲಿನ ಪರಿಸ್ಥಿತಿ ಎದುರಾಗಿದೆ.
eesanje/url_46_134_12.txt ADDED
@@ -0,0 +1,6 @@
 
 
 
 
 
 
 
1
+ ಹದಗೆಟ್ಟ ಕಾನೂನು ಸುವ್ಯವಸ್ಥೆ, ನೆರೆರಾಜ್ಯಗಳತ್ತ ಹೂಡಿಕೆದಾರರು ಎಂದ ಬಿಜೆಪಿಗೆ ಡಿಕೆಶಿ ಸವಾಲ್
2
+ ಬೆಂಗಳೂರು, ಮೇ 24-ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಿರುಕುಳದಿಂದ ಹೂಡಿಕೆದಾರರು ದೇಶವನ್ನೇ ಬಿಟ್ಟು ಹೋಗಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಾಗ್ದಾಳಿ ನಡೆಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ಯಮಿಗಳು ಕರ್ನಾಟಕದ ಬದಲಾಗಿ ನೆರೆರಾಜ್ಯಗಳಿಗೆ ಹೂಡಿಕೆ ಮಾಡಲು ಬಯಸುತ್ತಿದ್ದಾರೆ ಎಂಬ ಬಿಜೆಪಿಯ ಆರೋಪಕ್ಕೆ ಕಿಡಿಕಾರಿರುವ ಅವರು, ಬಿಜೆಪಿಗೆ ನಾಚಿಕೆಯಾಗಬೇಕು. ಮೊದಲು ದಾಖಲಾತಿಗಳನ್ನು ಪರಿಶೀಲನೆ ನಡೆಸಬೇಕು ಎಂದು ಸವಾಲು ಹಾಕಿದ್ದಾರೆ.
4
+ ಬಿಜೆಪಿಯ ಆಡಳಿತದ ಅವಧಿಯಲ್ಲಿ ಕಿರುಕುಳಕ್ಕಾಗಿ ಎಷ್ಟು ಉದ್ಯಮಿಗಳು ದೇಶ ಬಿಟ್ಟು ಹೋಗಿದ್ದರು ಎಂಬುದನ್ನು ನೋಡಲಿ, ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಾಕಷ್ಟು ಹೂಡಿಕೆಯಾಗುತ್ತಿದೆ. ನಮ ಸರ್ಕಾರದ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌, ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಇವರಿಬ್ಬರೂ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ರಾಜ್ಯದಲ್ಲಿ ಎಷ್ಟು ಮಂದಿ ಹೂಡಿಕೆ ಮಾಡಿದ್ದಾರೆ ಎಂಬುದನ್ನು ತೋರಿಸುತ್ತೇವೆ ಎಂದು ಹೇಳಿದರು.
5
+ ಕರ್ನಾಟಕ ರಾಜ್ಯ ಅಭಿವೃದ್ಧಿಗೆ, ಶಾಂತಿಗೆ ಜಾಗತಿಕವಾಗಿ ಹೆಸರುವಾಸಿಯಾಗಿದೆ. ಅದರಲ್ಲೂ ಬೆಂಗಳೂರಿಗೆ ತನ್ನದೇ ಆದ ವಿಶೇಷ ಸ್ಥಾನಮಾನವಿದೆ ಎಂದರು.ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಪ್ರಜ್ವಲ್‌ ರೇವಣ್ಣ ಅವರಿಗೆ ಬಹಿರಂಗ ಪತ್ರ ಬರೆದು ಭಾರತಕ್ಕೆ ಮರಳುವಂತೆ ಸೂಚಿಸಿರುವುದು ಕೌಟುಂಬಿಕ ವಿಚಾರ. ಇದರ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದರು.
6
+ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿರುವುದು ಶೋಕಿಗಾಗಿ ಎಂದು ಬಿಜೆಪಿಯ ಮಾಜಿ ಮುಖ್ಯಮಂತ್ರಿ ಬಸವರಾಜು ಬೊಮಾಯಿ ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್‌, ಅವರಿಗೆ ಏನು ಬೇಕೋ ಅದನ್ನು ಟೀಕೆ ಮಾಡಿಕೊಳ್ಳಲಿ. ನಾವು ಜನರೊಂದಿಗಿದ್ದೇವೆ, ಜನ ನಮೊಂದಿಗಿದ್ದಾರೆ ಎಂದು ಹೇಳಿದರು.
eesanje/url_46_134_2.txt ADDED
@@ -0,0 +1,5 @@
 
 
 
 
 
 
1
+ ಗುಂಡು ಪ್ರಿಯರಿಗೆ ಒಂದು ವಾರ ಗಂಡಾಂತರ : ಜೂನ್‌ ಮೊದಲ ಸಿಗಲ್ಲ ಎಣ್ಣೆ
2
+ ಬೆಂಗಳೂರು,ಮೇ.24-ಎಣ್ಣೆ ಪ್ರಿಯರಿಗೆ ಬ್ಯಾಡ್‌ ನ್ಯೂಸ್‌‍! ಜೂ.1 ರಿಂದ 6ರವರೆಗೆ ನಗರದಲ್ಲಿ ಮದ್ಯ ಸಿಗೋದಿಲ್ಲ. ಇದೆನಪ್ಪಾ ಅರು ದಿನ ಮದ್ಯ ಏಕೆ ಸಿಗೊಲ್ಲ ಅಂತಾ ಯೋಚನೆ ಮಾಡ್ತಿದ್ದಿರಾ ಅದಕ್ಕೆ ಲೋಕಸಭಾ ಚುನಾವಣಾ ಫಲಿತಾಂಶ ಹಾಗೂ ಎಂಎಲ್‌ಸಿ ಚುನಾವಣೆ ನಡೆಯುತ್ತಿರುವುದೆ ಕಾರಣವಾಗಿದೆ.
3
+ ಎಂಎಲ್‌ ಸಿ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವುದರಿಂದ ಜೂ.5 ಹೊರತುಪಡಿಸಿ ಜೂ.1 ರಿಂದ 6ರವರೆಗೆ ನಗರದಲ್ಲಿರುವ ಮದ್ಯದಂಗಡಿಗಳು ಕ್ಲೋಸ್‌‍ ಆಗಿರುತ್ತವೆ.ಜೂನ್‌ 3 ರಂದು ಪದವೀಧರ ಕ್ಷೇತ್ರದ ಮತದಾನದ ಹಿನ್ನೆಲೆಯಲ್ಲಿ ಜೂನ್‌ 1 ರ ಮಧ್ಯಾಹ್ನ 4 ಗಂಟೆಯಿಂದ ಜೂನ್‌ 3 ರ ವರೆಗೆ ನಗರದಲ್ಲಿರುವ ಎಲ್ಲಾ ಮದ್ಯದಂಗಡಿಗಳನ್ನು ಕ್ಲೋಸ್‌‍ ಮಾಡುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
4
+ ಅದೇ ರೀತಿ ಜೂನ್‌ 4 ರಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯುವುದರಿಂದ ಅಂದು ಸಹ ಇಡೀ ರಾಜ್ಯದಲ್ಲಿ ಎಲ್ಲ ಮಾದರಿಯ ಬಾರ್‌ ಅಂಡ್‌ ರೆಸ್ಟೋರೆಂಟ್‌ ವೈನ್‌ಸ್ಟೋರ್‌ಗಳನ್ನು ಬಂದ್‌ ಮಾಡಲಾಗುತ್ತಿದೆ. ಐದರಂದು ಮಾತ್ರ ಎಣ್ಣೆ ಅಂಗಡಿ ಓಪನ್‌ ಆಗಿರುತ್ತದೆ ಮತ್ತೆ ಜೂನ್‌ 6 ರಂದು ಎಂಎಲ್‌ಸಿ ಚುನಾವಣೆಯ ಮತ ಎಣಿಕೆ ಇರೋದಿಂದ ಅಂದು ಸಹ ಮದ್ಯದಂಗಡಿಗಳನ್ನು ಬಂದ್‌ ಮಾಡಲಾಗುತ್ತಿದೆ.
5
+ ಜೂನ್‌ ಮೊದಲ ವಾರದ ಮೊದಲ ಆರು ದಿನದಲ್ಲಿ ಜೂ.5ರಂದು ಹೊರತುಪಡಿಸಿದರೆ ಉಳಿದ ದಿನಗಳಲ್ಲಿ ಎಣ್ಣೆ ಸಿಗುವುದಿಲ್ಲ ಹೀಗಾಗಿ ಈಗಲೇ ಸ್ಟಾಕ್‌ ಮಾಡಿಕೊಳ್ಳಿ ಇಲ್ಲದಿದ್ದರೆ ಅಂದು ನಿಮಗ್‌ ಡ್ರೈ ಡೇ ಆಗಿರಲಿದೆ ಇರಲಿ ಎಚ್ಚರ.
eesanje/url_46_134_3.txt ADDED
@@ -0,0 +1,8 @@
 
 
 
 
 
 
 
 
 
1
+ ಸೌಂದರ್ಯ ಜಗದೀಶ್‌ ಆತಹತ್ಯೆ ಪ್ರಕರಣದಲ್ಲಿ ಮೂವರ ವಿರುದ್ಧ ಎಫ್‌ಐಆರ್‌ ದಾಖಲು
2
+ ಬೆಂಗಳೂರು, ಮೇ 24-ಚಲನ ಚಿತ್ರ ನಿರ್ಮಾಪಕ ಹಾಗೂ ಉದ್ಯಮಿ ಸೌಂದರ್ಯ ಜಗದೀಶ್‌ ಆತಹತ್ಯೆ ಪ್ರಕರಣ ಸಂಬಂಧ ಮೂವರು ಪಾಲದಾರರ ವಿರುದ್ಧ ಮಹಾಲಕ್ಷ್ಮೀ ಲೇಔಟ್‌ ಪೊಲೀಸ್‌‍ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
3
+ ಉದ್ಯಮದ ಪಾಲುದಾರರಾದ ಸುರೇಶ್‌, ಹೊಂಬಣ್ಣ ಹಾಗೂ ಸುಧೀಂದ್ರ ಎಂಬುವವರು ಮೋಸ ಮಾಡಿದ್ದರಿಂದ ಮಾನಸಿಕವಾಗಿ ನೊಂದು ನನ್ನ ಪತಿ ಆತಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತ್ನಿ ಶಶಿರೇಖಾ ಅವರು ದೂರು ನೀಡಿದ್ದಾರೆ.
4
+ ಅಲ್ಲದೇ ಇವರುಗಳಿಂದ ನಮ್ಮ ಕುಟುಂಬಕ್ಕೆ ಜೀವಬೆದರಿಕೆ ಇದೆ ಎಂದು ಆರೋಪಿಸಿದ್ದಾರೆ. ಈ ದೂರಿನನ್ವಯ ಪೊಲೀಸರು ಈ ಮೂವರ ವಿರುದ್ಧ ಎಫ್‌ಐಆರ್‌ ದಾಖಲಿಸಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.ಸೌಂದರ್ಯ ಜಗದೀಶ್‌ ಅವರು ಆತಹತ್ಯೆಗೂ ಮುನ್ನ ಬರೆದಿಟ್ಟಿರುವ ಡೆತ್‌ ನೋಟ್‌ ಸಿಕ್ಕಿದೆ ಎಂದು ಶಶಿರೇಖಾ ಅವರು ಪೊಲೀಸರಿಗೆ ತಿಳಿಸಿದ್ದಾರೆ.
5
+ ಮೇ 18ರಂದು ಜಗದೀಶ್‌ ಅವರ ರೂಮಿನಲ್ಲಿದ್ದ ಬಟ್ಟೆಯನ್ನು ಪೂಜೆಗಿಡಲು ತೆಗೆದುಕೊಳ್ಳುವಾಗ ಡೆತ್‌ ನೋಟ್‌ ಪತ್ತೆಯಾಗಿದೆ. ಅದರಲ್ಲಿ, ಸೌಂದರ್ಯ ಕನ್‌ಸ್ಟ್ರಕ್ಷನ್‌ನ ಸಹ ಪಾಲುದಾರರಾದ ವಿ.ಎಸ್‌‍.ಸುರೇಶ್‌, ಹೊಂಬಣ್ಣ ಎಸ್‌‍.ಪಿ ಹಾಗೂ ಸುಧೀಂದ್ರ ಎಂಬವರು ಜಗದೀಶ್‌ ಅವರಿಂದ ಹಣವನ್ನು ಹೂಡಿಕೆ ಮಾಡಿಸಿದ್ದರು.
6
+ ಕಂಪನಿ ಲಾಭದಲ್ಲಿದ್ದರೂ ಸಹ ಸುಳ್ಳು ನಷ್ಟ ತೋರಿಸಿ ತಮ ಕುಟುಂಬದ ಆಸ್ತಿಗಳನ್ನು ಬ್ಯಾಂಕ್‌ನಲ್ಲಿ ಅಡವಿರಿಸಿ ಸಾಲ ಪಡೆದು ಸುಮಾರು 60 ಕೋಟಿ ರೂ.ನಷ್ಟು ಹಣವನ್ನು ವೈಯಕ್ತಿಕವಾಗಿ ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.
7
+ ಈ ಮೂವರು ಸಬೂಬು ಹೇಳಿ ಖಾಲಿ ಚೆಕ್‌ ಹಾಗೂ ಖಾಲಿ ಹಾಳೆಗಳ ಮೇಲೆ ಜಗದೀಶ್‌ ಸಹಿ ಪಡೆದು ಹಣ ದುರುಪಯೋಗಪಡಿಸಿಕೊಂಡಿದ್ದಾರೆ. ಇದನ್ನು ಪ್ರಶ್ನಿಸಿದ ಜಗದೀಶ್‌ ಅವರಿಗೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
8
+ ಈ ವಿಚಾರವಾಗಿ ಸುರೇಶ್‌ ಹಾಗೂ ಹೊಂಬಣ್ಣ ಅವರ ಬಳಿ ಕೇಳಿದಾಗ ಅವರು ಹಣ ಕೊಡುವುದಾಗಿ ಹೇಳಿ ಮೋಸ ಮಾಡಿದ್ದಾರೆ. ಆತಹತ್ಯೆ ಮಾಡಿಕೊಳ್ಳುವ ಒಂದು ವಾರಗಳ ಹಿಂದೆ ಸುರೇಶ್‌ ಹಾಗೂ ಹೊಂಬಣ್ಣ ಅವರು ಜಗದೀಶ್‌ ಅವರಿಗೆ ನಿರಂತರವಾಗಿ ಕರೆ ಮಾಡುತ್ತಿದ್ದರು. ಆ ಕರೆಗಳು ಬಂದಾಗ ಜಗದೀಶ್‌ ಜರ್ಜರಿತರಾಗುತ್ತಿದ್ದರು ಎಂದು ಶಶಿರೇಖಾ ಆರೋಪಿಸಿದ್ದಾರೆ.