8a602d2b8bfffb17c5938dbbe4e5ece48ee63d7ad38586894f5fecfaace8feb5
Browse files- eesanje/url_46_119_8.txt +5 -0
- eesanje/url_46_119_9.txt +6 -0
- eesanje/url_46_11_1.txt +7 -0
- eesanje/url_46_11_10.txt +11 -0
- eesanje/url_46_11_11.txt +9 -0
- eesanje/url_46_11_12.txt +9 -0
- eesanje/url_46_11_2.txt +11 -0
- eesanje/url_46_11_3.txt +12 -0
- eesanje/url_46_11_4.txt +8 -0
- eesanje/url_46_11_5.txt +8 -0
- eesanje/url_46_11_6.txt +9 -0
- eesanje/url_46_11_7.txt +5 -0
- eesanje/url_46_11_8.txt +11 -0
- eesanje/url_46_11_9.txt +6 -0
- eesanje/url_46_120_1.txt +6 -0
- eesanje/url_46_120_10.txt +12 -0
- eesanje/url_46_120_11.txt +5 -0
- eesanje/url_46_120_12.txt +5 -0
- eesanje/url_46_120_2.txt +6 -0
- eesanje/url_46_120_3.txt +7 -0
- eesanje/url_46_120_4.txt +14 -0
- eesanje/url_46_120_5.txt +7 -0
- eesanje/url_46_120_6.txt +6 -0
- eesanje/url_46_120_7.txt +6 -0
- eesanje/url_46_120_8.txt +6 -0
- eesanje/url_46_120_9.txt +4 -0
- eesanje/url_46_121_1.txt +5 -0
- eesanje/url_46_121_10.txt +30 -0
- eesanje/url_46_121_11.txt +4 -0
- eesanje/url_46_121_12.txt +5 -0
- eesanje/url_46_121_2.txt +8 -0
- eesanje/url_46_121_3.txt +11 -0
- eesanje/url_46_121_4.txt +5 -0
- eesanje/url_46_121_5.txt +6 -0
- eesanje/url_46_121_6.txt +5 -0
- eesanje/url_46_121_7.txt +4 -0
- eesanje/url_46_121_8.txt +5 -0
- eesanje/url_46_121_9.txt +4 -0
- eesanje/url_46_122_1.txt +9 -0
- eesanje/url_46_122_10.txt +4 -0
- eesanje/url_46_122_11.txt +5 -0
- eesanje/url_46_122_12.txt +9 -0
- eesanje/url_46_122_2.txt +7 -0
- eesanje/url_46_122_3.txt +8 -0
- eesanje/url_46_122_4.txt +6 -0
- eesanje/url_46_122_5.txt +6 -0
- eesanje/url_46_122_6.txt +3 -0
- eesanje/url_46_122_7.txt +9 -0
- eesanje/url_46_122_8.txt +4 -0
- eesanje/url_46_122_9.txt +15 -0
eesanje/url_46_119_8.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ನ್ಯಾಯಾಲಯದ ವಿಚಾರಣೆಗೆ ಹಾಜರಾಗಲು ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ ರಾಹುಲ್
|
2 |
+
ಬೆಂಗಳೂರು, ಜೂ.6-ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗಲು ಸಂಸದ ರಾಹುಲ್ ಗಾಂಧಿಯವರು ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ.
|
3 |
+
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಶೇ. 40 ಕಮಿಷನ್, ಸಿಎಂ ಹುದ್ದೆಗೆ 2,500 ಕೋಟಿ ರೂ. ಸೇರಿ ವಿವಿಧ ಆರೋಪಗಳ ಬಗ್ಗೆ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ ಸಂಬಂಧ ಬಿಜೆಪಿಯ ಕೇಶವಪ್ರಸಾದ್ ಎಂಬುವರು ಸಿಎಂ, ಡಿಸಿಎಂ, ರಾಹುಲ್ಗಾಂಧಿ ವಿರುದ್ಧ ದಾಖಲಿಸಿದ್ದ ಖಾಸಗಿ ದೂರಿನ ಅನ್ವಯ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದಿದ್ದರು.
|
4 |
+
ಪ್ರತಿವಾದಿಯಾಗಿದ್ದ ರಾಹುಲ್ಗಾಂಧಿಯವರು ವಿಚಾರಣೆಗೆ ಹಾಜರಾಗದೇ ಇದ್ದುದಕ್ಕೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿ ಜೂ. 7 ರಂದು ಖುದ್ದು ಹಾಜರಾತಿಗೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ನಾಳೆ ರಾಹುಲ್ಗಾಂಧಿಯವರು ಜನಪ್ರತಿನಿಧಿಗಳ ನ್ಯಾಯಾಲಯದ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ.
|
5 |
+
ದೆಹಲಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಇಂಡಿ ಮೈತ್ರಿಕೂಟದ ನೇತೃತ್ವ ವಹಿಸಿರುವ ರಾಹುಲ್ಗಾಂಧಿಯವರು ಬಿಡುವಿಲ್ಲದ ಕಾರ್ಯದೊತ್ತಡದಲ್ಲಿದ್ದಾರೆ. ಈ ನಡುವೆ ರಾಹುಲ್ಗಾಂಧಿಯವರು ನಾಳೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕಿದೆ.
|
eesanje/url_46_119_9.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಸ್ವಯಂ ಪ್ರೇರಿತ ರಾಜೀನಾಮೆ
|
2 |
+
ಬೆಂಗಳೂರು,ಜೂ.6-ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಯುವಜನ ಸೇವೆ, ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಸಚಿವ ಬಿ.ನಾಗೇಂದ್ರ ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
|
3 |
+
ಪಕ್ಷದ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಮುಖ್ಯಮಂತ್ರಿಯವರು ನಾನು ಮತ್ತು ಗೃಹ ಸಚಿವರು ಸಚಿವ ನಾಗೇಂದ್ರ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರು ಈ ಅಕ್ರಮದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದರು.
|
4 |
+
ಮುಂದುವರೆದು ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಆದರೆ ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂಬ ಕಾರಣಕ್ಕೆ ಸ್ವತಃ ನಾಗೇಂದ್ರ ಅವರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದು ಅವರು ರಾಜೀನಾಮೆ ನೀಡಬಹುದು ಎಂದು ಹೇಳಿದರು.ಸರ್ಕಾರ ರಾಜೀನಾಮೆ ಸ್ವೀಕರಿಸಲಿದೆಯೇ ಎಂದು ಕೇಳಿದಾಗ, ಮುಖ್ಯಮಂತ್ರಿಗಳು ಪಕ್ಷದ ಹೈಕಮಾಂಡ್ ಜತೆ ಚರ್ಚೆ ಮಾಡಿ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
|
5 |
+
ಲೋಕಸಭೆ ಚುನಾವಣೆ ಲಿತಾಂಶದ ಬಗ್ಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ದೇಶದಲ್ಲಿ ಇಂಡಿಯಾ ಮೈತ್ರಿಕೂಟ ಉತ್ತಮ ಪ್ರದರ್ಶನ ನೀಡಿರುವುದಕ್ಕೆ ಸಂತೋಷವಾಗಿದೆ. ನಮ ಮೈತ್ರಿಕೂಟ ಅಧಿಕಾರದ ಸನಿಹಕ್ಕೆ ಬಂದರೂ ಸರ್ಕಾರ ರಚನೆ ಪ್ರಯತ್ನದಿಂದ ದೂರವಿರಲು ನಿರ್ಧರಿಸಿದೆ. ಪ್ರತಿಪಕ್ಷಗಳು ಬಲಿಷ್ಠವಾಗಿರಬೇಕು ಎಂದು ದೇಶ ಅಭಿಪ್ರಾಯ ಪಟ್ಟಿದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನ ರಕ್ಷಣೆಗೆ ಹೊಸ ಭರವಸೆ ಸಿಕ್ಕಿದೆ. ಭವಿಷ್ಯದ ಬಗ್ಗೆ ಎಐಸಿಸಿ ಅಧ್ಯಕ್ಷರು ತೀರ್ಮಾನ ಮಾಡಲಿದ್ದಾರೆ ಎಂದರು.
|
6 |
+
ಗ್ಯಾರಂಟಿ ಜಾರಿ ವಿಚಾರವಾಗಿ ಕೇಳಿದಾಗ, ನಮ ಸರ್ಕಾರ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗುವುದು. ಕಾಂಗ್ರೆಸ್ ಪಕ್ಷ ಎಂದಿಗೂ ಇಟ್ಟ ಹೆಜ್ಜೆಯನ್ನು ಹಿಂದಕ್ಕೆ ಪಡೆಯುವುದಿಲ್ಲ. ಕಾಂಗ್ರೆಸ್ ಸರ್ಕಾರ ಬಂದಾಗ ಗ್ಯಾರಂಟಿ ಯೋಜನೆ ಜಾರಿ ಮಾಡಲಾಗುವುದು ಎಂದು ಪುನರುಚ್ಚರಿಸಿದರು.
|
eesanje/url_46_11_1.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಶಿವಮೊಗ್ಗದಿಂದ ಚೆನ್ನೈ-ಹೈದರಾಬಾದ್ಗೆ ನೇರ ವಿಮಾನ
|
2 |
+
-
|
3 |
+
ಬೆಂಗಳೂರು, ಸೆ.24– ಶಿವಮೊಗ್ಗದಿಂದ ಚೆನ್ನೈ ಮತ್ತು ಹೈದರಾಬಾದ್ಗೆ ಸಂಪರ್ಕ ಕಲ್ಪಿಸುವ ಎರಡು ಹೊಸ ನೇರ ವಿಮಾನ ಸೇವೆಯನ್ನು ಸ್ಪೈಸ್ ಜೆಟ್ ಪರಿಚಯಿಸಲಿದ್ದು, ಅ.10 ರಿಂದ ಆರಂಭವಾಗಲಿವೆ. ವಿಮಾನ ಯಾನ ಸಂಸ್ಥೆಯ ಅಧಿಕೃತ ವೆಬ್ಸೈಟ್ನಲ್ಲಿ ಬುಕ್ಕಿಂಗ್ ಆರಂಭಿಸಲಾಗಿದೆ.
|
4 |
+
ಈ ಬಗ್ಗೆ ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಕೂಡ ಎಕ್ಸ್ ಸಂದೇಶದ ಮೂಲಕ ಮಾಹಿತಿ ನೀಡಿದ್ದು, ಚವಿಮಾನ ಆಗಮನ, ನಿರ್ಗಮನ ಸಮಯ ಮತ್ತಿತರ ವಿವರಗಳನ್ನು ನೀಡಿದ್ದಾರೆ. ಶಿವಮೊಗ್ಗಕ್ಕೆ ಮತ್ತೊಂದು ಮಹತ್ವದ ಸುದ್ದಿ! ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆಯು ಶಿವಮೊಗ್ಗದಿಂದ ಎರಡು ಹೊಸ ವಿಮಾನ ಮಾರ್ಗಗಳನ್ನು ಸೇವೆಗೆ ಸೇರಿಸಲಿದೆ.
|
5 |
+
ಅ.10ರಿಂದ ಪ್ರಾರಂಭವಾಗುವಂತೆ ಚೆನ್ನೈ ಮತ್ತು ಹೈದರಾಬಾದ್ಗೆ ನೇರ ವಿಮಾನಯಾನ ಸೇವೆ ದೊರೆಯಲಿದೆ ಎಂದು ರಾಘವೇಂದ್ರ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ. ಸ್ಪೈಸ್ ಜೆಟ್ ವಿಮಾನ ಚೆನ್ನೈನಿಂದ ಪ್ರತಿದಿನ ಬೆಳಿಗ್ಗೆ 10.40 ಕ್ಕೆ ಹೊರಟು ಮಧ್ಯಾಹ್ನ 12.10 ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಶಿವಮೊಗ್ಗದಿಂದ ಹೈದರಾಬಾದ್ಗೆ ತೆರಳುವ ವಿಮಾನಗಳು ಮಧ್ಯಾಹ್ನ 12.35 ಕ್ಕೆ ಹೊರಡಲಿದ್ದು, 2.05 ಕ್ಕೆ ಹೈದರಾಬಾದ್ ತಲುಪಲಿವೆ.
|
6 |
+
ಹೈದರಾಬಾದ್ನಿಂದ ಹಿಂತಿರುಗುವ ವಿಮಾನ ಮಧ್ಯಾಹ್ನ 2.40 ಕ್ಕೆ ಹೊರಡಲಿದ್ದು, ಸಂಜೆ 4.10 ಕ್ಕೆ ಶಿವಮೊಗ್ಗ ತಲುಪಲಿದೆ. ಚೆನ್ನೈಗೆ ತೆರಳುವ ವಿಮಾನ ಶಿವಮೊಗ್ಗದಿಂದ ಸಂಜೆ 4.25ಕ್ಕೆ ಹೊರಟು 5.55ಕ್ಕೆ ಚೆನ್ನೈ ತಲುಪಲಿದೆ.
|
7 |
+
ಈ ಹೊಸ ವಿಮಾನ ಸೇವೆ ಶಿವಮೊಗ್ಗದ ಪ್ರವಾಸೋದ್ಯಮ ಮತ್ತು ವ್ಯಾಪಾರಕ್ಕೆ ಉತ್ತೇಜನವನ್ನು ನೀಡುತ್ತದೆ ಮತ್ತು ಸಂಪರ್ಕವನ್ನು ಹೆಚ್ಚಿಸುವ ನಿರೀಕ್ಷೆಯಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿವಮೊಗ್ಗಕ್ಕೆ ಸೇವೆಗಳನ್ನು ವಿಸ್ತರಿಸಿದ್ದಕ್ಕಾಗಿ ಅವರು ಸ್ಪೈಸ್ ಜೆಟ್ಗೆ ಕೃತಜ್ಞತೆ ಸಲ್ಲಿಸಿದ್ದಾರೆ.
|
eesanje/url_46_11_10.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
: ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿ ಹಿಡಿದ ಹೈಕೋರ್ಟ್, ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ..!
|
2 |
+
'
|
3 |
+
ಬೆಂಗಳೂರು,ಸೆ.24-ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಅಭಿಯೋಜನೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ನಿಲುವನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಿಟ್ ಅರ್ಜಿಯನ್ನು ವಜಾಗೊಳಿಸಿದೆ.
|
4 |
+
ಸುದೀರ್ಘ ವಾದ, ಪ್ರತಿವಾದದ ಬಳಿಕ ಪ್ರಕರಣದ ತನಿಖೆಯ ಅಗತ್ಯವಿದೆ ಎಂದು ಪ್ರತಿಪಾದಿಸಿರುವ ಹೈಕೋರ್ಟ್ನ ಏಕ ಸದಸ್ಯ ಪೀಠದ ನ್ಯಾ. ನಾಗಪ್ರಸನ್ನ ಅವರು, ಭ್ರಷ್ಟಾಚಾರ ನಿಗ್ರಹ ಕಾಯ್ದೆ 17ಎ ಮತ್ತು ಭಾರತೀಯ ನ್ಯಾಯಸಂಹಿತೆ 218 ರಡಿ ರಾಜ್ಯಪಾಲರು ನೀಡಿದ್ದ ಅಭಿಯೋಜನೆ ಮತ್ತು ತನಿಖೆಯ ಪೂರ್ವಾನುಮತಿಯನ್ನು ಎತ್ತಿ ಹಿಡಿದಿದ್ದಾರೆ.
|
5 |
+
ಭ್ರಷ್ಟಾಚಾರ ನಿಗ್ರಹ ಕಾಯ್ದೆ 17ಎ ಅಡಿ ಪೊಲೀಸ್ ಅಧಿಕಾರಿಯೇ ಪೂರ್ವಾನುಮತಿಗೆ ಅರ್ಜಿ ಸಲ್ಲಿಸಬೇಕು ಎಂಬ ಕಡ್ಡಾಯ ನಿಯಮಗಳಿಲ್ಲ. ಖಾಸಗಿ ದೂರಿನ ಸಂದರ್ಭಗಳಲ್ಲಿ ಇದಕ್ಕೆ ವಿನಾಯಿತಿ ಇದೆ. ರಾಜ್ಯಪಾಲರು ಸ್ವಯಂ ವಿವೇಚನಾಧಿಕಾರ ಬಳಸಿ ನಡೆಸಿರುವ ಪ್ರಕ್ರಿಯೆಗಳಲ್ಲಿ ದೋಷಗಳು ಕಂಡುಬಂದಿಲ್ಲ ಎಂದು ಪೀಠ ಹೇಳಿದೆ.
|
6 |
+
ಸಂವಿಧಾನದ 163 ನೇ ವಿಧಿಯಡಿ ರಾಜ್ಯಪಾಲರು ಸಂಪುಟದ ಸಲಹೆ ಆಧಾರಿತವಾಗಿ ಕರ್ತವ್ಯ ನಿರ್ವಹಣೆ ಮಾಡಬೇಕು ಎಂದು ಹೇಳಲಾಗಿದೆ. ಆದರೆ ಕೆಲ ಸಂದರ್ಭಗಳಲ್ಲಿ ರಾಜ್ಯಪಾಲರು ಸ್ವಯಂ ವಿವೇಚನಾಧಿಕಾರವನ್ನು ಬಳಸಿಯೂ ನಿರ್ಧಾರ ತೆಗೆದುಕೊಳ್ಳಬಹುದು.
|
7 |
+
ಮುಡಾ ನಿವೇಶನ ಹಂಚಿಕೆಯಲ್ಲಿ ಮುಖ್ಯಮಂತ್ರಿಗಳ ಕುಟುಂಬ ಫಲಾನುಭವಿಯಾಗಿರುವುದರಿಂದ ರಾಜ್ಯಪಾಲರು ಪೂರ್ವಾನುಮತಿ ನೀಡಲು ತೆಗೆದುಕೊಂಡಿರುವ ಕ್ರಮ ಸಮರ್ಥನೀಯವಾಗಿದೆ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.
|
8 |
+
ಈ ಎಲ್ಲಾ ಕಾರಣಗಳಿಂದಾಗಿ ರಾಜ್ಯಪಾಲರು ಸ್ವಂತ ವಿವೇಚನೆ ಬಳಸಿಲ್ಲ ಎಂಬ ವಾದವನ್ನು ತಳ್ಳಿಹಾಕಿದೆ. ಸಿದ್ದರಾಮಯ್ಯ ಅವರ ಪರ ವಕೀಲರು ತಮ ವಾದ ಮಂಡನೆಯ ಸಂದರ್ಭದಲ್ಲಿ ಎತ್ತಿದ್ದ ಎಲ್ಲಾ ಪ್ರಶ್ನೆಗಳಿಗೂ ಹೈಕೋರ್ಟ್ ಉತ್ತರ ನೀಡಿದೆ.ಯಾವ ರೀತಿಯ ವಿಚಾರಣೆ ಎಂಬುದನ್ನು ಕೆಳಹಂತದ ನ್ಯಾಯಾಲಯ ನಿರ್ಧರಿಸಬಹುದಾಗಿದೆ. ಈವರೆಗೂ ರಾಜ್ಯಪಾಲರ ಅಭಿಯೋಜನೆ ಆಧರಿಸಿದ ಪ್ರಕ್ರಿಯೆಗಳಿಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವು ಮಾಡಿದೆ.
|
9 |
+
ಹೈಕೋರ್ಟ್ನ ನ್ಯಾಯಮೂರ್ತಿಗಳು ತೀರ್ಪು ಪ್ರಕಟಿಸಿದ ವೇಳೆ ಸಿದ್ದರಾಮಯ್ಯ ಅವರ ಪರ ವಕೀಲರಾದ ಅಭಿಷೇಕ್ ಮನುಸಿಂಘ್ವಿ ಎರಡು ವಾರಗಳ ತಡೆ ನೀಡುವಂತೆ ಮನವಿ ಮಾಡಿದರು. ನಾನೇ ನೀಡಿದ ತೀರ್ಪಿಗೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ. ಇಂದು ಮಧ್ಯಾಹ್ನದ ವೇಳೆಗೆ ತೀರ್ಪಿನ ಪ್ರತಿ ಕೈ ಸೇರಲಿದೆ. ಮುಂದಿನ ಪ್ರಕ್ರಿಯೆಗಳನ್ನು ಅರ್ಜಿದಾರರು ಪಾಲಿಸಬಹುದು ಎಂದು ನ್ಯಾಯಮೂರ್ತಿಗಳು ಹೇಳಿದರು.
|
10 |
+
ರಾಜ್ಯಪಾಲರ ಪೂರ್ವಾನುಮತಿಯನ್ನು ಹೈಕೋರ್ಟ್ ಎತ್ತಿಹಿಡಿದ ಬೆನ್ನಲ್ಲೇ ರಾಜಕೀಯವಾಗಿ ಬಿರು��ಾಳಿಯೇ ಎದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ವಾದಗಳು ಕೇಳಿಬಂದ ವೇಳೆ ಹೈಕೋರ್ಟ್ನಿಂದ ರಾಜ್ಯಪಾಲರ ಆದೇಶಕ್ಕೆ ತಡೆಯಾಜ್ಞೆ ಸಿಗಬಹುದು ಎಂಬ ಅಂದಾಜುಗಳಿದ್ದವು. ಆದರೆ ಎಲ್ಲವೂ ಹುಸಿಯಾಗಿವೆ.
|
11 |
+
ಇಂದು ಬೆಳಿಗ್ಗೆಯಿಂದಲೂ ತೀರ್ಪಿಗಾಗಿ ಮುಖ್ಯಮಂತ್ರಿ ಮತ್ತು ಅವರ ತಂಡ ತೀವ್ರ ಕುತೂಹಲದಿಂದ ನಿರೀಕ್ಷಿಸಿತ್ತು. ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಕೆಳಹಂತದ ನ್ಯಾಯಾಲಯಕ್ಕೆ ತನ್ನ ವಿಚಾರಣೆಯನ್ನು ಮುಂದುವರೆಸಲು ಅವಕಾಶ ಸಿಕ್ಕಿದ್ದು, ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಲು ಅವಕಾಶ ಸಿಕ್ಕಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
|
eesanje/url_46_11_11.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಇಂದು ಸಿಎಂ ವಿರುದ್ಧದ ಅಭಿಯೋಜನೆ ತೀರ್ಪು : ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಒಂದೆಡೆ ಸೇರಿದ ಸಚಿವರು
|
2 |
+
’
|
3 |
+
ಬೆಂಗಳೂರು,ಸೆ.24-ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆ ಹಾಗೂ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಣಯವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯ ತೀರ್ಪು ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಹೈ ಅಲರ್ಟ್ ಮಾದರಿಯಲ್ಲಿ ಪೂರ್ವ ತಯಾರಿ ನಡೆಸಿತ್ತು.
|
4 |
+
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒತ್ತಡದ ನಡುವೆಯೂ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಉಳಿದಂತೆ ಸಚಿವರಾದ ಕೃಷ್ಣಾಭೈರೇಗೌಡ, ಎಚ್.ಕೆ.ಪಾಟೀಲ್, ಡಾ.ಜಿ.ಪರಮೇಶ್ವರ್, ದಿನೇಶ್ಗುಂಡೂರಾವ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಸಂಪುಟದ ಕೋರ್ಟೀಂನಲ್ಲಿರುವ ಸದಸ್ಯರು ತಮೆಲ್ಲಾ ಪ್ರವಾಸ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಕೇಂದ್ರಸ್ಥಾನದಲ್ಲಿ ಬೀಡುಬಿಟ್ಟಿದೆ.
|
5 |
+
ತೀರ್ಪಿನ ಬಳಿಕ ಯಾವುದೇ ರೀತಿಯ ಪರಿಸ್ಥಿತಿಗಳು ಎದುರಾದರೂ ಅದನ್ನು ನಿಭಾಯಿಸಲು ಸರ್ಕಾರ ತಯಾರಿ ನಡೆಸಿದೆ. ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವುದೇ ರಾಜಕೀಯಪ್ರೇರಿತ ಎಂಬ ಹಿನ್ನೆಲೆಯಲ್ಲಿ ರಾಜಕೀಯ ಹಾಗೂ ಕಾನೂನು ಸಂಘರ್ಷಕ್ಕಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ತಂಡ ಮುಂದಾಗಿತ್ತು.
|
6 |
+
ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜಭವನವನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪವನ್ನು ಆರಂಭದಿಂದಲೂ ಮಾಡಲಾಗುತ್ತಿದೆ. ರಾಜ್ಯಪಾಲರು ಉದ್ದೇಶಪೂರ್ವಕವಾಗಿಯೇ ಕ್ಷುಲ್ಲಕ ವಿಚಾರಗಳಿಗೆಲ್ಲಾ ಹಸ್ತಕ್ಷೇಪ ನಡೆಸುವ ಮೂಲಕ ಪದೇಪದೇ ಮುಜುಗರ ಉಂಟುಮಾಡುತ್ತಿದ್ದಾರೆ. ಸಾಂವಿಧಾನಿಕ ಬಾಧ್ಯತೆಗಳು ಹಾಗೂ ವಿಧಿಗಳನ್ನು ಮೀರಿ ರಾಜಕೀಯ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂಬೆಲ್ಲಾ ಟೀಕೆಗಳನ್ನು ಕಾಂಗ್ರೆಸ್ನ ನಾಯಕರು, ಸಚಿವರು ಹಾಗೂ ಶಾಸಕರು ಬಹಿರಂಗವಾಗಿಯೇ ಮಾಡಿದರು.
|
7 |
+
ಅಭಿಯೋಜನೆಗೆ ಅನುಮತಿ ನೀಡಿದ ಬಳಿಕವಂತೂ ಕಾಂಗ್ರೆಸ್ ನೇರವಾಗಿ ಬೀದಿಗಿಳಿದಿತ್ತು. ರಾಜ್ಯಪಾಲರ ನಡವಳಿಕೆಯನ್ನು ಕಾನೂನಾತಕವಾಗಿ ಎದುರಿಸುವುದಾಗಿ ಘೋಷಿಸಿದ್ದಲ್ಲದೆ, ಹಲವು ಸುತ್ತಿನ ಸಂಘರ್ಷದ ನಡವಳಿಕೆಗಳನ್ನು ಅನುಸರಿಸಿತ್ತು.ಈಗಾಗಲೇ ಹೈಕೋರ್ಟ್ನಲ್ಲಿ ಕಾನೂನು ಸಮರ ನಡೆಸಲಾಗಿದೆ. ಯಾವುದೇ ಸಂದರ್ಭ ಬಂದರೂ ಕುಗ್ಗದೆ ಮುಖ್ಯಮಂತ್ರಿಯವರು ಎಂದಿನಂತೆಯೇ ಜವಾಬ್ದಾರಿಯಿಂದ ಮುಂದುವರೆಯಬೇಕೆಂದು ಒಂದಷ್ಟು ಜನ ಪ್ರತಿಪಾದಿಸುತ್ತಿದ್ದಾರೆ.
|
8 |
+
ಮೇಲ್ನೋಟಕ್ಕೆ ಸಂಪುಟದ ಸಚಿವರಲ್ಲಿ ಹಾಗೂ ಹೈಕಮಾಂಡ್ ನಾಯಕರಿಂದಲೂ ಇದೇ ಅಭಿಪ್ರಾಯಗಳು ಕೇಳಿಬರುತ್ತಿವೆ. ಆದರೆ ಒಳಗೊಳಗೇ ಸಿದ್ದರಾಮಯ್ಯ ವಿರುದ್ಧ ಮಸಲತ್ತುಗಳು ನಡೆಯುತ್ತಲೇ ಇವೆ.
|
9 |
+
ಒಂದು ವೇಳೆ ಎಫ್ಐಆರ್ ದಾಖಲಾಗಿದ್ದೇ ಆದರೆ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆಯನ್ನು ಕಳೆದುಕೊಳ್ಳುತ್ತಾರೆ ಎಂಬ ವಿರೋಧಪಕ್ಷಗಳ ಅಭಿಪ್ರಾಯಗಳಿಗೆ ಆಡಳಿತ ಪಕ್ಷದಲ್ಲೂ ಮೌನಸಮತಿ ದೊರೆಯುತ್ತಿದೆ. ಹೀಗಾಗಿ ಹೈಕೋರ್ಟ್ನ ತೀರ್ಪು ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯವನ್ನು ನಿರ್ಣಯಿಸುವುದಷ್ಟೇ ಅಲ್ಲ, ರಾಜ್ಯ ರಾಜಕೀಯಕ್ಕೂ ಹೊಸ ದಿಕ್ಕು ನೀಡಲಿದೆ.
|
eesanje/url_46_11_12.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕೆಂಪಣ್ಣ ಆಯೋಗ ವರದಿಯನ್ನು ಸದನದಲ್ಲಿ ಮಂಡಿಸಲು ಸಿ.ಟಿ.ರವಿ ಆಗ್ರಹ
|
2 |
+
|
3 |
+
ಬೆಂಗಳೂರು,ಸೆ.23– ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಕುರಿತಂತೆ ತನಿಖೆ ನಡೆಸಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ಆಯೋಗದ ವರದಿಯನ್ನು ತಕ್ಷಣವೇ ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕೆಂದು ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಸಿ.ಟಿ.ರವಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
|
4 |
+
ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರೀಡೂ ಹೆಸರಿನಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು 450ಕ್ಕೂ ಹೆಚ್ಚು ಎಕರೆ ಡಿನೋಟಿಫಿಕೇಷನ್ ಮಾಡಿರುವ ಆರೋಪಕ್ಕೆ ಸಿಲುಕಿದ್ದಾರೆ.
|
5 |
+
ಇದರ ಬಗ್ಗೆ ಅಂದಿನ ಸರ್ಕಾರವೇ ತನಿಖಾ ಆಯೋಗವನ್ನು ರಚಿಸಿತ್ತು. ಹಲವು ವರ್ಷಗಳು ಕಳೆದರೂ ಆಯೋಗದ ವರದಿ ಬಹಿರಂಗಗೊಂಡಿಲ್ಲ. ಸರ್ಕಾರ ವಿಳಂಬ ಮಾಡದೆ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು. ಕೆಂಪಣ್ಣ ಆಯೋಗದ ವರದಿಯನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡನೆ ಮಾಡಬೇಕೆಂದು ನಾನೇ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದೆ. ಇದಕ್ಕೆ ಈಗಲೂ ಉತ್ತರ ಕೊಟ್ಟಿಲ್ಲ. ಇದು ಜಾಣ ವೌನವೇ ಎಂದು ಪ್ರಶ್ನಿಸಿದರು.
|
6 |
+
ಕೆಂಪಣ್ಣ ಆಯೋಗದ ವರದಿಯನ್ನು ಮಂಡಿಸಬೇಕು. ವರದಿ ಆಧಾರದ ಮೇಲೆ ಯಾರು ತಪ್ಪಿತಸ್ಥರು ಇದ್ದಾರೋ ಅವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಿ ಇಲ್ಲದಿದ್ದರೆ ಸಿದ್ದರಾಮಯ್ಯ ಪರಮ ಭ್ರಷ್ಟರು ಎನ್ನುವುದರಲ್ಲಿ ಇನ್ನೊಂದು ಮಾತಿಲ್ಲ ಎಂದರು.ನಿನ್ನೆ ಸಿಎಂ ಸಿದ್ಧರಾಮಯ್ಯ ಪತ್ರಕರ್ತರ ಪ್ರಶ್ನೆ ಅರ್ಧ ಹೇಳಿಕೆ ಕೊಟ್ಟಿದ್ದಾರೆ. ರಿಡೂ ಮಾಡಿದ್ದು ನಾನಲ್ಲ. ಅದು ಸುಪ್ರೀಂಕೋರ್ಟ್ ತೀರ್ಪು ಎಂದಿದ್ದಾರೆ. ಸಮಿತಿ ಕೊಟ್ಟ ವರದಿ ಬೇರೆ ಇತ್ತು. ಒಟ್ಟು 880 ಎಕರೆ ರಿಡೂ ಮಾಡಿದ್ದಾರೆ.
|
7 |
+
ಬಿಡಿಎ ಅಭಿವೃದ್ಧಿ ಪಡಿಸಿದ ಲೇಔಟ್ ಇದ್ದರೇ, ಡಿನೋಟಿಫಿಕೇಶನ್ ಮಾಡಲು ತಿಳಿಸಿತ್ತು. ಆದರೆ 16 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸ್ಥಳಕ್ಕೆ ಡಿನೋಟಿಫಿಕೇಶನ್ ಮಾಡಿಕೊಟ್ಟಿದ್ದಾರೆ. ಆರ್ಕಾವತಿ ಬಡಾವಣೆಗೆ ನಿವೇಶನ ಸಿಕ್ಕಿತ್ತು. ಕೆಂಪೇಗೌಡ ಬಡಾವಣೆಗೆ ಅವಕಾಶ ಕೊಟ್ಟಿದ್ದೀರಿ. ಬಂಡೂರು ರಾಮಸ್ವಾಮಿ ಆಯೋಗ ಕೊಟ್ಟಿದ್ದ ವರದಿಯಲ್ಲಿನ ನಿಯಮ ಗಾಳಿಗೆ ತೂರಿದ್ದೀರಿ. ವರದಿಯನ್ನು ಹೊರಗೆ ತರಬೇಕಿತ್ತು.
|
8 |
+
ಆರ್ಕಾವತಿ ಬಡಾವಣೆಯಲ್ಲಿ ನಿಮ್ಮ ಸರ್ಕಾರ ಅಕ್ರಮ ಮಾಡಿದೆ. ಅದನ್ನು ಟೇಬಲ್ ಮಾಡಬೇಕಿತ್ತು. ಆರ್ಕಾವತಿಯಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ. ಅದರಲ್ಲಿ ನಿಮ್ಮ ಪಾಲು ಇದೆ. ನೀವು ಭ್ರಷ್ಟಾಚಾರಿಗಳನ್ನು ಪೋಷಿಸಿದ್ದೀರಿ ಎಂದು ಸಿದ್ಧರಾಮಯ್ಯರ ವಿರುದ್ಧ ವಾಗ್ದಾಳಿ ನಡೆಸಿದರು.
|
9 |
+
ಶಾಸಕ ಮುನಿರತ್ನರ ವಿಚಾರದಲ್ಲಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಮುನಿರತ್ನರನ್ನು ರಾಜಕೀಯದಿಂದ ದೂರ ಸರಿಸಬೇಕೆಂದು ಹುನ್ನಾರ ನಡೆಸುತ್ತಿದ್ದಾರೆ. ಇದರ ಬಗ್ಗೆ ಕೋರ್ ಕಮ���ಟಿ ಸಭೆಯಲ್ಲಿ ಮಾತುಕತೆ ನಡೆಸಿದ್ದೇವೆ ಎಂದು ಇದೇ ವೇಳೆ ಅವರು ತಿಳಿಸಿದರು.
|
eesanje/url_46_11_2.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮೈಸೂರಿನಲ್ಲಿ ದಸರಾ ದೀಪಾಲಂಕಾರ, ಆಗಸದಲ್ಲಿ ಡ್ರೋನ್ಗಳ ಚಿತ್ತಾರ
|
2 |
+
|
3 |
+
ಮೈಸೂರು,ಸೆ.24– ವಿಶ್ವವಿಖ್ಯಾತ ಮೈಸೂರು ದಸರೆಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ದಸರಾ ದೀಪಾಲಂಕಾರಕ್ಕೆ ಈ ಬಾರಿ ಡೋನ್ ಪ್ರದರ್ಶನ ಹೊಸ ಮೆರಗು ನೀಡಲಿದ್ದು, 1500 ಡೋನ್ ಗಳು ಆಗಸದಲ್ಲಿ ಹೊಸ ಚಿತ್ತಾರ ಮೂಡಿಸಲಿವೆ.
|
4 |
+
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ದಸರಾ ದೀಪಾಲಂಕಾರದ ಪೋಸ್ಟರ್ ಗಳನ್ನು ಚೆಸ್ಕ್ ಕಚೇರಿಯಲ್ಲಿ ಬಿಡುಗಡೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಮಾಹಿತಿ ನೀಡಿದರು.ದಸರಾ ದೀಪಾಲಂಕಾರ ಪ್ರಮುಖ ಆಕರ್ಷಣೆಯಾಗಿದ್ದು, 21 ದಿನಗಳ ಕಾಲ ಮೈಸೂರು ನಗರವನ್ನು ಬೆಳಗಲಿದೆ.
|
5 |
+
ಈ ಬಾರಿಯ ದೀಪಾಲಂಕಾರವನ್ನು ಅತ್ಯಂತ ಆಕರ್ಷಣೀಯಗೊಳಿಸಲು ಸೆಸ್ಕ್ ಅಧಿಕಾರಿಗಳ ತಂಡ ಸಾಕಷ್ಟು ಮುತುವರ್ಜಿ ವಹಿಸಿದೆ. ಒಟ್ಟು 130 ಕಿ.ಮೀ. ದೀಪಾಲಂಕಾರ ಮಾಡುತ್ತಿದ್ದು, 100 ವೃತ್ತಗಳನ್ನು ಅಲಂಕರಿಸುವುದರ ಜತೆದೆ 65 ಪ್ರತಿಕೃತಿಗಳನ್ನು ನಿರ್ಮಿಸಲಾಗುತ್ತಿದೆ. ದಸರಾ ದೀಪಾಲಂಕಾರಕ್ಕಾಗಿ 6.50 ಕೋಟಿ ರೂ. ವೆಚ್ಚವಾಗುತ್ತಿದ್ದು, 2881 ಕಿ.ವ್ಯಾ. ಅಂದಾಜು ತಾತ್ಕಾಲಿಕ ವಿದ್ಯುತ್ ಸಂಪರ್ಕ ಭಾರ ಹಾಗೂ 242012 ಯೂನಿಟ್ಗಳ ವಿದ್ಯುತ್ ಬಳಕೆ ಮಾಡಲಾಗುತ್ತಿದೆ ಎಂದು ವಿವರಿಸಿದರು.
|
6 |
+
ಡೋನ್ ಶೋ ಆಕರ್ಷಣೆ:ದಸರಾ ದೀಪಾಲಂಕಾರದೊಂದಿಗೆ ಇದೇ ಮೊದಲ ಬಾರಿಗೆ ಡೋನ್ ಪ್ರದರ್ಶನ ಏರ್ಪಡಿಸಲಾಗಿದೆ. ಎಲ್.ಇ.ಡಿ. ಬಲ್್ಬ ಗಳನ್ನು ಅಳವಡಿಸಿರುವ ಸುಮಾರು 1500 ಡ್ರೋನ್ಗಳನ್ನು ಬಳಸಿ ಆಕಾಶದಲ್ಲಿ ಅದ್ಭುತ ವಿನ್ಯಾಸಗಳನ್ನು ಮೂಡಿಸಲಾಗುವುದು. ಅ. 6,7ರಂದು ಹಾಗೂ 11, 12ರಂದು ರಾತ್ರಿ 8 ಗಂಟೆಯಿಂದ 8.15ರವರೆಗೆ ಡೋನ್ ಪ್ರದರ್ಶನ ನಡೆಯಲಿದ್ದು, ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಅ. 6 ಮತ್ತು 7ರಂದು ಡೋನ್ ಪ್ರದರ್ಶನ ವೀಕ್ಷಿಸಲು ಉಚಿತ ಪ್ರವೇಶವಿರುತ್ತದೆ ಎಂದರು.
|
7 |
+
ವಿದ್ಯುತ್ ರಥ ಸಂಚಾರ: ದಸರಾ 2024ರ ಸಂದರ್ಭದಲ್ಲಿ ಪವರ್ ಮ್ಯಾನ್ಗಳ ಕರ್ತವ್ಯಗಳು, ಗೃಹಜ್ಯೋತಿ, ಕೃಷಿ ಬಳಕೆಗೆ ಸೌರ ವಿದ್ಯುತ್ ಪಂಪ್ ಸೆಟ್ಗಳು, ವಿದ್ಯುತ್ ಸುರಕ್ಷತೆ ಹಾಗೂ ನುಡಿದಂತೆ ನಡೆದ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ವಿದ್ಯುತ್ ರಥವನ್ನು ರೂಪಿಸಲಾಗುವುದು.
|
8 |
+
ಈ ರಥ ಅ.3ರಂದು ಉದ್ಘಾಟನೆಗೊಳ್ಳಲಿದ್ದು, ದಸರಾ ನವರಾತ್ರಿಯ 10 ದಿನಗಳ ಕಾಲ ಮೈಸೂರಿನ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಪ್ರದರ್ಶಿಸಲಾಗುವುದು ಎಂದು ಸಚಿವರು ವಿವರಿಸಿದರು.
|
9 |
+
ನಿಗಮದ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ ಮಾತನಾಡಿ, ದಸರಾ ದೀಪಾಲಂಕಾರದ ಜತೆಗೆ ಈ ಬಾರಿ ಡೋನ್ ಪ್ರದರ್ಶನ ನಡೆಸಲಾಗುತ್ತಿದೆ. ವಾರಣಾಸಿ, ಹರಿದ್ವಾರಗಳಲ್ಲಿ ಡೋನ್ ಪ್ರದರ್ಶನ ನೀಡಿರುವ ಕಂಪನಿಯ ಮೂಲಕ ಈ ಪ್ರದರ್ಶನ ನಡೆಸುತ್ತಿದ���ದು, 10-15 ವಿನ್ಯಾಸಗಳನ್ನು ಪ್ರದರ್ಶನ ಮಾಡಲಾಗುವುದು.
|
10 |
+
ಈ ಬಾರಿ ದಸರಾ ದೀಪಾಲಂಕಾರವನ್ನು ವಿಭಿನ್ನವಾಗಿ ನಡೆಸಲು ನಿಗಮದ ವತಿಯಿಂದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸುರಕ್ಷತೆಯ ಬಗ್ಗೆಯೂ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.
|
11 |
+
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷೀಕಾಂತ ರೆಡ್ಡಿ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಜಿ. ಶೀಲಾ, ತಾಂತ್ರಿಕ ವಿಭಾಗದ ನಿರ್ದೇಶಕ ಕೆ.ಎಂ.ಮುನಿಗೋಪಾಲ್ ರಾಜು, ಸೆಸ್ಕ್ ಹಣಕಾಸು ನಿರ್ದೇಶಕ ಶೇಖ್ ಮಹೀಮುಲ್ಲಾ, ಅಧೀಕ್ಷಕ ಇಂಜಿನಿಯರ್ ಸುನೀಲ್ ಕುಮಾರ್ ಸೇರಿದಂತೆ ಪ್ರಮುಖ ಅಧಿಕಾರಿಗಳು ಹಾಜರಿದ್ದರು.
|
eesanje/url_46_11_3.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ತಯಾರಿ
|
2 |
+
|
3 |
+
ಬೆಂಗಳೂರು,ಸೆ.24-ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಕಾನೂನು ಹೋರಾಟ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದು, ಹೈಕೋರ್ಟ್ನ ವಿಭಾಗೀಯ ಪೀಠಕ್ಕೆ ಮೇಲನವಿ ಸಲ್ಲಿಸುವ ತಯಾರಿ ನಡೆಸಿದ್ದಾರೆ.
|
4 |
+
ಅರ್ಜಿದಾರರಾದ ಟಿ.ಜೆ.ಅಬ್ರಹಾಂ ಹಾಗೂ ಇತರರು ಸುಪ್ರೀಂಕೋರ್ಟ್ನಲ್ಲಿ ಈಗಾಗಲೇ ಕೇವಿಯಟ್ ಸಲ್ಲಿಸಿರುವುದರಿಂದ ಪ್ರಕರಣವನ್ನು ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿದ್ದು, ಮುಂದಿನ ಕಾನೂನು ಹೋರಾಟಕ್ಕೆ ತಕ್ಷಣಕ್ಕೆ ತ್ವರಿತ ಕ್ರಮಗಳನ್ನು ಅನುಸರಿಸುತ್ತಿದ್ದಾರೆ.
|
5 |
+
ಹೈಕೋರ್ಟ್ನ ಏಕಸದಸ್ಯ ಪೀಠದ ನ್ಯಾ.ನಾಗಪ್ರಸನ್ನ ಅವರ ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ವಿಭಾಗೀಯ ಪೀಠದ ಮುಂದೆ ಮೇಲನವಿ ಸಲ್ಲಿಸಲು ವಕಾಲತ್ತಿನ ಕರಡನ್ನು ಸಿದ್ಧಪಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾನೂನು ತಜ್ಞರ ಜೊತೆ ಹಾಗೂ ಸಂಪುಟದ ಹಿರಿಯ ಸಚಿವರ ಜೊತೆ ಚರ್ಚೆ ನಡೆಸಿದ್ದಾರೆ. ಜೊತೆಯಲ್ಲೇ ಸುಪ್ರೀಂಕೋರ್ಟ್ನಲ್ಲೂ ಅರ್ಜಿ ಸಲ್ಲಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
|
6 |
+
ಇದೇ ಸಮಯದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲೂ ಸಿದ್ದರಾಮಯ್ಯನವರು ಕಾನೂನು ಹೋರಾಟ ಮುಂದುವರೆಸಬೇಕಿದೆ. ಒಂದೆಡೆ ಹೈಕೋರ್ಟ್ನಲ್ಲಿ ರಾಜ್ಯಪಾಲರ ಅಭಿಯೋಜನೆಯನ್ನು ಪ್ರಶ್ನಿಸಿ ವಿಭಾಗೀಯ ಪೀಠದ ಮುಂದೆ ವಾದ ಮಂಡಿಸಿದರೆ ಮತ್ತೊಂದೆಡೆ ತನಿಖೆ ಹಾಗೂ ಮುಂದಿನ ಕ್ರಮಗಳಿಗೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲೂ ವಾದ-ಪ್ರತಿವಾದಗಳನ್ನು ನಡೆಸಬೇಕಿದೆ.
|
7 |
+
ಸಿದ್ದರಾಮಯ್ಯನವರು ನಿಯಮ 482 ರ ಅಡಿ ರಿಟ್ ಅರ್ಜಿ ಸಲ್ಲಿಸಿರುವುದರಿಂದ ಇದು ಹೆಚ್ಚುವರಿ ಬಾಬ್ತುಗಳ ವ್ಯಾಪ್ತಿಗೆ ಒಳಪಡಲಿದ್ದು, ನೇರವಾಗಿ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸುವುದಕ್ಕಿಂತ ಹೈಕೋರ್ಟ್ನಲ್ಲೇ ವಾದ ಮಾಡಬೇಕಾದಂತಹ ಅನಿವಾರ್ಯತೆ ಎದುರಾಗಿದೆ.
|
8 |
+
ಅರ್ಜಿದಾರರಾದ ಟಿ.ಜೆ.ಅಬ್ರಹಾಂ ಹಾಗೂ ಇತರರು ನಾಳೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಹೈಕೋರ್ಟ್ ತೀರ್ಪನ್ನು ಪ್ರಸ್ತಾಪಿಸಿ ವಿಚಾರಣೆಗೆ ಅನುಮತಿ ಕೇಳುವ ಸಾಧ್ಯತೆಯಿದೆ. ಒಂದು ವೇಳೆ ಕೆಳಹಂತದ ನ್ಯಾಯಾಲಯ ತನಿಖೆಗೆ ಆದೇಶಿಸುವ ಅಥವಾ ಮತ್ತೊಂದು ದಿನಾಂಕವನ್ನು ನಿಗದಿಪಡಿಸುವ ಸಾಧ್ಯಾಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ.
|
9 |
+
ರಾಜ್ಯಪಾಲರು ಮುಡಾ ಪ್ರಕರಣದ ಅಭಿಯೋಜನೆ ಮತ್ತು ತನಿಖೆಗೆ ಪೂರ್ವಾನುಮತಿ ನೀಡಿರುವುದನ್ನು ಹೈಕೋರ್ಟ್ನ ಏಕಸದಸ್ಯ ಪೀಠ ಎತ್ತಿಹಿಡಿದ ಬೆನ್ನಲ್ಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮುಂದಿನ ಹಂತದ ವಿಚಾರಣೆ ನಡೆಯುವ ಸಾಧ್ಯತೆಯಿದೆ. ಈವರೆಗೂ ಹೈಕೋರ್ಟ್ನ ತಡೆಯಾಜ್ಞೆಯಿಂದಾಗಿ ಕೆಳಹಂತದ ನ್ಯಾಯಾಲಯದಲ್ಲಿನ ಪ್ರಕ್ರಿಯೆಗಳಿಗೆ ನಿರ್ಬಂಧವಿತ್ತು.
|
10 |
+
ನ್ಯಾ.ನಾಗಪ್ರಸನ್��� ಅವರ ಪೀಠದ ತೀರ್ಪು ಎಲ್ಲಾ ನಿರ್ಬಂಧಗಳನ್ನೂ ತೆರವು ಮಾಡಿರುವುದರಿಂದ ಯಾವ ಕ್ಷಣದಲ್ಲಾದರೂ ಜನಪ್ರತಿನಿಧಿಗಳ ನ್ಯಾಯಾಲಯ ಪ್ರಕರಣ ದಾಖಲಿಸಲು ಸೂಚಿಸಬಹುದಾಗಿದೆ ಅಥವಾ ಲೋಕಾಯುಕ್ತ ಪೊಲೀಸರು ಸ್ವಯಂ ಪ್ರೇರಿತವಾಗಿಯೂ ಪ್ರಕರಣ ದಾಖಲಿಸುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.
|
11 |
+
ಸಿದ್ದರಾಮಯ್ಯನವರಿಗೆ ಸಂಕಷ್ಟ :ಪ್ರಕರಣ ದಾಖಲಾದರೆ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತಪ್ಪಿದ್ದಲ್ಲ ಎಂದು ಹೇಳಲಾಗುತ್ತಿದೆ. ಮೇಲ್ನೋಟಕ್ಕೆ ಕಾಂಗ್ರೆಸ್ ಹೈಕಮಾಂಡ್ ಆದಿಯಾಗಿ ಸಚಿವರು, ಶಾಸಕರೆಲ್ಲರೂ ಸಿದ್ದರಾಮಯ್ಯನವರ ಬೆನ್ನಿಗೆ ನಿಲ್ಲುವುದಾಗಿ ಹೇಳುತ್ತಿದ್ದಾರೆ.ಪ್ರಕರಣ ದಾಖಲಾದರೂ, ನ್ಯಾಯಾಲಯದ ಹೋರಾಟದಲ್ಲಿ ಹಿನ್ನಡೆಯಾದರೂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂಬ ಸಮರ್ಥನೆಗಳು ಕೇಳಿಬರುತ್ತಿವೆ.
|
12 |
+
ಆದರೆ ಬಿಜೆಪಿ ತೀರ್ಪು ಪ್ರಕಟಗೊಂಡ ತಕ್ಷಣವೇ ಪತ್ರಿಕಾಗೋಷ್ಠಿ ನಡೆಸಿ ಸಿದ್ದರಾಮಯ್ಯನವರಿಗೆ ನೈತಿಕತೆಯ ಪ್ರಶ್ನೆಯನ್ನು ಮುಂದಿಟ್ಟಿದೆ. ಇದು ಕೇವಲ ರಾಜ್ಯಕ್ಕೆ ಸೀಮಿತವಾಗಿರುವ ವಿಚಾರವಾಗಿರದೇ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ನ ನೈತಿಕತೆಯನ್ನು ಅಣಕಿಸುವಂತೆ ಮಾಡಲಿದೆ. ಹೀಗಾಗಿ ಸಿದ್ದರಾಮಯ್ಯನವರು ಇಕ್ಕಟ್ಟಿನ ಪರಿಸ್ಥಿತಿಗೆ ಸಿಲುಕುವ ಸಾಧ್ಯತೆಯಿದೆ.
|
eesanje/url_46_11_4.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ನ್ಯಾಯಾಲಯ ತೀರ್ಪು ಗೌರವಿಸಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ : ವಿಜಯೇಂದ್ರ
|
2 |
+
:
|
3 |
+
ಬೆಂಗಳೂರು,ಸೆ.24– ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹೈಕೋರ್ಟಿನ ತೀರ್ಪನ್ನು ಗೌರವಿಸಿ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು.
|
4 |
+
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅವಕಾಶ ಕೊಟ್ಟಿದ್ದ ಮಾನ್ಯ ರಾಜ್ಯಪಾಲರ ಕ್ರಮವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿದೆ. ಸಿದ್ದರಾಮಯ್ಯನವರ ಅರ್ಜಿಯನ್ನು ವಜಾ ಮಾಡಿದ್ದಾರೆ. ಕಾನೂನಿನ ಎದುರು ಎಲ್ಲರೂ ಒಂದೇ ಎಂದು ಹೈಕೋರ್ಟ್ ತಿಳಿಸಿದೆ ಎಂದು ವಿಶ್ಲೇಷಿಸಿದರು.
|
5 |
+
ಹೈಕೋರ್ಟ್ನಲ್ಲಿ ಸುದೀರ್ಘ ವಾದ, ಪ್ರತಿವಾದದ ಬಳಿಕ ಈ ತೀರ್ಪು ಹೊರಬಿದ್ದಿದೆ. ಗೌರವಾನ್ವಿತ ರಾಜ್ಯಪಾಲರು ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಶನ್ಗೆ ಅನುಮತಿ ಕೊಟ್ಟಿದ್ದರು. ಕಾಂಗ್ರೆಸ್ಸಿಗರು ಗೌರವಾನ್ವಿತ ರಾಜ್ಯಪಾಲರು, ರಾಜಭವನವನ್ನು ಕೇಂದ್ರದ ಏಜೆಂಟ್ ಎಂದು ಆಕ್ಷೇಪಿಸಿದ್ದರು ಎಂದು ಟೀಕಿಸಿದರು.
|
6 |
+
ಕಳೆದ ಕೆಲವು ತಿಂಗಳಿನಿಂದ ಬಿಜೆಪಿ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ನಿರಂತರ ಹೋರಾಟ ನಡೆಸಿತ್ತು. ವಾಲೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದ ವಿರುದ್ಧ ನಿರಂತರ ಹೋರಾಟ ಮಾಡ್ದೆಿವು. ನಂತರ ಸ್ವತಃ ಸಿಎಂ ಕುಟುಂಬವೇ ಫಲಾನುಭವಿಗಳಾಗಿರುವ ಮೈಸೂರಿನ ಮುಡಾ ಹಗರಣ ವಿರುದ್ಧ ಹೋರಾಟ ಹಮಿಕೊಂಡ್ದೆವು. ಬೆಂಗಳೂರು- ಮೈಸೂರು ಪಾದಯಾತ್ರೆಯನ್ನು ನಡೆಸಿ ಬಿಜೆಪಿ- ಜೆಡಿಎಸ್ ಒಟ್ಟಾಗಿ ಯಶಸ್ವಿ ಹೋರಾಟ ಮಾಡಿದ್ದಾಗಿ ವಿವರಿಸಿದರು. ರಾಜ್ಯದ ಮೂಲೆಮೂಲೆಯಿಂದ ಲಕ್ಷ ಲಕ್ಷ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು ಎಂದರು.
|
7 |
+
ಗೌರವಾನ್ವಿತ ರಾಜ್ಯಪಾಲರಿಗೆ ಅನೇಕ ಆರ್ಟಿಐ ಕಾರ್ಯಕರ್ತರು ಖಾಸಗಿ ದೂರು ನೀಡಿದ್ದರು. ಸೂಕ್ತ ತನಿಖೆ ನಡೆಸಲು ಒತ್ತಾಯಿಸಿದ್ದರು ಎಂದು ಅವರು ತಿಳಿಸಿದರು. ಭ್ರಷ್ಟಾಚಾರರಹಿತ ಆಡಳಿತ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದರು ಎಂದ ಅವರು, ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಭ್ರಷ್ಟಾಚಾರದ ಕಳಂಕ ಹೊತ್ತ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿದರು. ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವ ವಿಶ್ವಾಸ ಇದೆ. ಅವರು ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಪ್ರಶ್ನೆಗೆ ಉತ್ತರಿಸಿದರು.
|
8 |
+
ಮುಡಾ ವಿಚಾರದಲ್ಲಿ ತಮ ಪಾತ್ರ ಇಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಬಳಿಕ ರಾಜಭವನ, ರಾಜ್ಯಪಾಲರ ವಿರುದ್ಧ ತೇಜೋವಧೆ ಮಾಡಿದ್ದರು. ಈಗ ಹೈಕೋರ್ಟ್ ಸ್ಪಷ್ಟ ಮಾತುಗಳಲ್ಲಿ ಹೇಳಿದೆ. ಆದ್ದರಿಂದ ಸಿಎಂ ರಾಜೀನಾಮೆ ಕೊ��ಲೇಬೇಕು ಎಂದು ಆಗ್ರಹವನ್ನು ಮುಂದಿಟ್ಟರು. ನಮ ಹೋರಾಟಕ್ಕೆ ಮೊದಲ ಹಂತದ ಜಯ ಸಿಕ್ಕಿದೆ ಎಂದೂ ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಪಕ್ಷದ ಮುಂದಿನ ನಡೆಯ ಕುರಿತು ಪ್ರಮುಖರು, ಹಿರಿಯರ ಜೊತೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದು ಉತ್ತರ ನೀಡಿದರು.ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ಉಪಸ್ಥಿತರಿದ್ದರು.
|
eesanje/url_46_11_5.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಸಾಲುಮರದ ತಿಮಕ್ಕ ಪ್ರಶಸ್ತಿಗೆ ಭಾಜನರಾದ ಸುರೇಶ್
|
2 |
+
|
3 |
+
ಬೆಂಗಳೂರು, ಸೆ.24-ಸಮಾಜ ಸೇವೆಯಲ್ಲಿ ಸದಾ ತೊಡಗಿಸಿಕೊಂಡು ಬಡವರ ಪರ ಹೋರಾಟಗಳನ್ನು ಮಾಡುತ್ತಾ ಯುವಕರಿಗೆ ಪ್ರೋತ್ಸಾಹ ನೀಡುತ್ತಿರುವ ಕುರುಡುಸೋಣ್ಣೇನಹಳ್ಳಿ ಗ್ರಾಮದ ಸುರೇಶ್(ಸೂರಿ) ಅವರು ಸಾಲುಮರದ ತಿಮಕ್ಕ ನ್ಯಾಷನಲ್ ಗ್ರೆನರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
|
4 |
+
ಸುರೇಶ್ ರವರು ಮೂಲತಃ ಮಹದೇವಪುರ ವಿಧಾನಸಭಾ ಕ್ಷೇತ್ರದ ಕುರುಡು ಸೊಣ್ಣೇನಹಳ್ಳಿ ಗ್ರಾಮದದವರಾಗಿದ್ದು, ಬಡಕುಟುಂಬದಿಂದ ಬೆಳೆದು ಬಂದವರು, ಬಡವರ ಕಷ್ಟಗಳ ಮಧ್ಯೆ ಬೆಳೆದಿರುವ ಇವರು ನಾವು ಪಟ್ಟಿರುವ ಕಷ್ಟಗಳು ಸುತ್ತಮುತ್ತಲಿನ ಬಡ ಜನರು ಪಡಬಾರದೆಂದು ತಮ ಕೈಲಾದ ಸಹಾಯ ಮಾಡುತ್ತಾ ಬಂದಿದ್ದಾರೆ.
|
5 |
+
ಸುಮಾರು 15 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಬಂದಿರುವ ಸುರೇಶ್ರವರು ಸರ್ಕಾರಿ ಶಾಲೆಗಳಿಗೆ 20 ಸಾವಿರ ತಟ್ಟೆ, 20 ಸಾವಿರ ಗ್ಲಾಸ್ಗಳು, ನೋಟ್ಪುಸ್ತಕಗಳು ನೀಡಿದ್ದಾರೆ. ಅಲ್ಲದೆ ಬಡ ಮಕ್ಕಳ ಶಾಲಾ ಶುಲ್ಕವನ್ನೂ ಸಹ ಇವರೆ ಕಟ್ಟಿದ್ದಾರೆ. ವಿಕಲಚೇತನರಿಗೆ ಸ್ಟಿಕ್, ಬಡವರಿಗೆ ಬೆಡ್ಶೀಟ್ಗಳು ನೀಡಿ ಇತರರಿಗೆ ಮಾದರಿಯಾಗಿದ್ದಾರೆ.
|
6 |
+
ಐಎಎಸ್, ಐಪಿಎಸ್ ಓದುವ ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡಿದ್ದಾರೆ, ಸಾವಿರಾರು ಸಸಿಗಳನ್ನು ನೆಟ್ಟು, ಪೋಷಿಸಲು ಯುವಕರಿಗೆ ಕರೆ ನೀಡಿದ್ದಾರೆ, ದೇವಾಲಯಗಳ ಅಭಿವೃದ್ಧಿಗೆ ಸಹಾಯದನ ಮಾಡಿದ್ದಾರೆ, ಬಡವರಿಗೆ ಉಚಿತ ಆರೋಗ್ಯ ಶಿಬಿರ, ರಕ್ತದಾನ ಶಿಬಿರಗಳನ್ನು ಹಮಿಕೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದ್ದಾರೆ.
|
7 |
+
ಪ್ರಶಸ್ತಿ ಬಗ್ಗೆ ಪ್ರತಿಕ್ರಿಯಿಸಿರುವ ಸುರೇಶ್, ಮಾಡಿರುವ ಸೇವೆ ಹೇಳಿಕೊಳ್ಳಬಾರದು ಅದನ್ನು ಗುರುತಿಸಿ ನಮಗೆ ಈ ಪ್ರಶಸ್ತಿ ನೀಡುತ್ತಿದ್ದಾರೆ ಇನ್ನಷ್ಟು ಹೆಚ್ಚು ಸಮಾಜ ಸೇವೆ ಮಾಡಲು ಉತ್ತೇಜನ ನೀಡಿದಂತಾಗಿದೆ ಎಂದು ಹೇಳಿದರು.
|
8 |
+
ತಮನ್ನು ಆಯ್ಕೆ ಮಾಡಿದ ಸಾಲುಮರದ ತಿಮಕ್ಕ ಇಂಟರ್ನ್ಯಾಷನಲ್ ೌಂಡೇಶನ್, ಸಾಲುಮರದ ತಿಮಕ್ಕ ಅಭಿನಂದನಾ ಸಮಿತಿಗೆ ಧನ್ಯವಾದ ತಿಳಿಸಿದ್ದಾರೆ.ಇದೇ ಸೆ.26 ರಂದು ನಗರದ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
|
eesanje/url_46_11_6.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮಹಾಲಕ್ಷ್ಮಿ ಹಂತಕನ ಚಾಣಾಕ್ಷತನ ಕಂಡು ಬೆಸ್ತು ಬಿದ್ದ ಪೊಲೀಸರು
|
2 |
+
' '
|
3 |
+
ಬೆಂಗಳೂರು, ಸೆ.24– ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸಿರುವ ವಯ್ಯಾಲಿ ಕಾವಲ್ನ ಮಹಾಲಕ್ಷ್ಮಿ ಕೊಲೆಯ ಹಂತಕ ಚಾಣಾಕ್ಷತನದಿಂದ ಕೃತ್ಯವೆಸಗಿರುವುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.
|
4 |
+
ಒಂಟಿ ಮಹಿಳೆ ಮಹಾಲಕ್ಷ್ಮಿಯನ್ನು ಮಚ್ಚಿನಿಂದ ಭೀಕರವಾಗಿ ಕೊಂದು ನಂತರ ತುಂಡು-ತುಂಡುಗಳನ್ನಾಗಿ ಕತ್ತರಿಸಿ, ಆಕ್ಸಲ್ ಬ್ಲೇಡ್ನಿಂದ ಕೊಯ್ದು ವಾಸನೆ ಬರದಂತೆ ಅವುಗಳಿಗೆ ರಾಸಾಯನಿಕ ಸಿಂಪಡಿಸಿ ಫ್ರಿಡ್ಜ್ ನಲ್ಲಿ ತರಕಾರಿ ಜೋಡಿಸುವಂತೆ ಜೋಡಿಸಿದ್ದಾನೆ.
|
5 |
+
ಮನೆಯೊಳಗೆ ಮಹಾಲಕ್ಷ್ಮಿ ಕೊಲೆ ಮಾಡಿದ ಸ್ಥಳದಲ್ಲಿ ಯಾವುದೇ ರಕ್ತದ ಕಲೆಗಳು ಕಾಣದಂತೆ ಆರೋಪಿಯು ಯಾವುದೋ ರಾಸಾಯನಿಕ ಸಿಂಪಡಿಸಿ, ಸ್ವಚ್ಚಪಡಿಸಿ ಮನೆಗೆ ಬೀಗ ಹಾಕಿಕೊಂಡು ಚಾಣಾಕ್ಷತನದಿಂದ ಜಾಗ ಖಾಲಿಮಾಡಿದ್ದಾನೆ.
|
6 |
+
ಒಂದು ವೇಳೆ ಈ ಮನೆಯೊಳಗೆ ಯಾರಾದರೂ ಬಂದರೆ ಕೊಲೆಯಾಗಿರುವುದು ಗೊತ್ತಾಗಬಾರದೆಂದು ಬಹಳ ಎಚ್ಚರಿಕೆಯಿಂದ ಆರೋಪಿಯು ಮೊದಲೇ ಮಾಡಿಕೊಂಡಿದ್ದ ಸಂಚಿನಂತೆ ತನ್ನ ಕೃತ್ಯವನ್ನು ಮಾಡಿಮುಗಿಸಿದ್ದಾನೆ. ಈ ಕೊಲೆ ಬೆಳಕಿಗೆ ಬಂದರೆ ಪೊಲೀಸರು ತನ್ನ ಜನ ಜಾಲಾಡುತ್ತಾರೆ ಎಂಬುದನ್ನು ಅರಿತು ಆರೋಪಿ ತನ್ನ ಊರಿಗೆಹೋಗದೆ ಈಶಾನ್ಯ ರಾಜ್ಯಗಳಲ್ಲಿ ತಲೆಮರೆಸಿಕೊಂಡು ಓಡಾಡುತ್ತಿದ್ದಾನೆ. ಅಲ್ಲದೆ ತನ್ನ ಮೊಬೈಲ್ ಸಹ ಸ್ವಿಚ್ಆಫ್ ಮಾಡಿಕೊಂಡಿದ್ದಾನೆ.
|
7 |
+
ಪೊಲೀಸರು ಮಹಾಲಕ್ಷ್ಮಿಯ ಮೊಬೈಲ್ನ್ನು ವಶಕ್ಕೆ ಪಡೆದು ಅದರಲ್ಲಿರುವಕರೆಗಳನ್ನು ಆಧರಿಸಿ, ಹೆಚ್ಚಿನ ಮಾಹಿತಿಗಳನ್ನು ಸಂಗ್ರಹಿಸಿ ಹಂತಕನ ಪತ್ತೆಗೆಬಲೆಬೀಸಿದ್ದಾರೆ.
|
8 |
+
ಹಂತಕ ಮಹಾಲಕ್ಷ್ಮಿಯನ್ನು ಕೊಲೆ ಮಾಡಿದ ಬಳಿಕ ಎರಡು-ಮೂರು ದಿನಗಳ ಕಾಲ ಆಕೆಯ ಮನೆಯಲ್ಲೇ ಉಳಿದುಕೊಂಡು ಎಲ್ಲಾ ಸಾಕ್ಷಗಳನ್ನು ಬಹಳ ಚಾಣಾಕ್ಷತನದಿಂದ ನಾಶಪಡಿಸಿ, ಇನ್ನೇನ್ನಾದರೂ ಕುರುಹುಗಳು ಪೊಲೀಸರಿಗೆ ಸಿಗುತ್ತದೆಯೇ ಎಂಬುದನ್ನು ಮನೆಯನೆಲ್ಲಾ ಪರಿಶೀಲಿಸಿದ ನಂತರ ಸ್ಥಳದಿಂದ ಜಾಗ ಖಾಲಿಮಾಡಿದ್ದಾನೆ.
|
9 |
+
ಒಟ್ಟಾರೆ ಒಂಟಿ ಮಹಿಳೆ ಮಹಾಲಕ್ಷ್ಮಿ ಕೊಲೆ ಪ್ರಕರಣ ನಗರ ಪೊಲೀಸರಿಗೆ ಒಂದು ಸವಾಲಾಗಿದ್ದು, ಹಂತಕ ಎಷ್ಟೇ ಚಾಣಾಕ್ಷತನದ ಬುದ್ಧಿ ತೋರಿಸಿದರೂ ಪೊಲೀಸರು ಅತೀ ಶೀಘ್ರದಲ್ಲೇ ಒಂದಲ್ಲಾ ಒಂದುದಿನ ಆತನ ಎಡೆಮುರಿ ಕಟ್ಟುವುದಂತೂ ಸತ್ಯ.
|
eesanje/url_46_11_7.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಹೈಕೋರ್ಟ್ ತೀರ್ಪು ಸತ್ಯಕ್ಕೆ ಸಂದ ಜಯ : ಸ್ನೇಹಮಯಿ ಕೃಷ್ಣ
|
2 |
+
:
|
3 |
+
ಬೆಂಗಳೂರು,ಸೆ.24-ಹೈಕೋರ್ಟ್ನ ತೀರ್ಪು ಸತ್ಯಕ್ಕೆ ಸಂದ ಜಯ ಎಂದು ಸಾಮಾಜಿಕ ಹೋರಾಟಗಾರ ಹಾಗೂ ಮುಡಾ ಪ್ರಕರಣದ ಅರ್ಜಿದಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.ತೀರ್ಪು ಪ್ರಕಟಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ನಮ ಹೋರಾಟಕ್ಕೆ ಸಿಕ್ಕ ಜಯ.
|
4 |
+
ರಾಜಕಾರಣಿಗಳು ತಮ ಅಧಿಕಾರವನ್ನ ದುರುಪಯೋಗಪಡಿಸಿಕೊಂಡು ಏನು ಮಾಡಿದರೂ ನಡೆಯುತ್ತದೆ ಎಂಬ ಧೋರಣೆಗೆ ತಕ್ಕ ಪಾಠವಾಗಿದೆ ಎಂದರು.ರಾಜ್ಯಪಾಲರ ಹುದ್ದೆ ಹಾಗೂ ಅವರ ವಿವೇಚನಾಧಿಕಾರಿಗಳ ಬಗ್ಗೆಯೂ ಚರ್ಚೆಯಾಗಿತ್ತು.
|
5 |
+
ಹೈಕೋರ್ಟ್ನ ತೀರ್ಪು ಎಲ್ಲದಕ್ಕೂ ತೆರೆ ಎಳೆದಿದೆ. ಮುಂದಿನ ದಿನಗಳಲ್ಲೂ ನಾವು ಕಾನೂನಾತಕ ಹೋರಾಟಗಳನ್ನು ಮುಂದುವರೆಸುತ್ತೇವೆ ಎಂದು ಅವರು ತಿಳಿಸಿದರು.
|
eesanje/url_46_11_8.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮುಡಾ ಪ್ರಕರಣದಲ್ಲಿ ಹೈಕೋರ್ಟ್ ತೀರ್ಪಿನ ಕುರಿತು ಅರ್ಜಿದಾರ ಟಿ.ಜೆ.ಅಬ್ರಹಾಂ ಮೊದಲ ಪ್ರತಿಕ್ರಿಯೆ
|
2 |
+
. '
|
3 |
+
ಬೆಂಗಳೂರು,ಸೆ.24-ಮುಡಾ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸಿರುವ ಅರ್ಜಿದಾರರಾದ ಟಿ.ಜೆ.ಅಬ್ರಹಾಂ ಸುಪ್ರೀಂಕೋರ್ಟ್ನಲ್ಲೂ ಕೇವಿಯಟ್ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.ತೀರ್ಪು ಪ್ರಕಟಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್ ನಮ ವಾದಕ್ಕೆ ಮತ್ತು ಆಕ್ಷೇಪಣೆಗಳಿಗೆ ಮನ್ನಣೆ ನೀಡಿದೆ. ರಾಜ್ಯಪಾಲರ ಪೂರ್ವಾನುಮತಿ ಸರಿಯಿಲ್ಲ ಎಂದು ವಾದ ಮಾಡುವುದು ಅವರ ಹಕ್ಕಾಗಿತ್ತು. ಆದರೆ ಹೈಕೋರ್ಟ್ ಅದನ್ನು ಮಾನ್ಯ ಮಾಡಿಲ್ಲ ಎಂದರು.
|
4 |
+
ತೀರ್ಪು ಸ್ವಾಗತಾರ್ಹ. ಇದನ್ನು ಪ್ರಶ್ನಿಸಿ ಮೇಲನವಿ ಸಲ್ಲಿಸುವ ಎಲ್ಲಾ ಹಕ್ಕುಗಳೂ ಅರ್ಜಿದಾರರಿಗಿವೆ. ಈಗಾಗಲೇ ನಾವು ಸುಪ್ರೀಂಕೋರ್ಟ್ನಲ್ಲಿ ಕೇವಿಯಟ್ ಸಲ್ಲಿಸಿದ್ದೇವೆ. ಹೈಕೋರ್ಟ್ನ ವಿಭಾಗೀಯ ಪೀಠದ ಮುಂದೆಯೂ ಕೇವಿಯಟ್ ಸಲ್ಲಿಸುತ್ತೇವೆ ಎಂದು ಹೇಳಿದರು.
|
5 |
+
ಮುಡಾ ಪ್ರಕರಣದ ವಿಚಾರಣೆಗೆ ಯಾವುದೇ ಅಡೆತಡೆ ಇರಲಿಲ್ಲ. ಹೈಕೋರ್ಟ್ ವಿಚಾರಣೆಯಿಂದಾಗಿ ಒಂದಿಷ್ಟು ಕಾಲ ಮುಂದೂಡಿಕೆಯಾಗಿತ್ತು. ಈಗ ತೀರ್ಪಿನಿಂದಾಗಿ ಎಲ್ಲವೂ ಇತ್ಯರ್ಥವಾಗಿದೆ ಎಂದರು.ತೀರ್ಪಿಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ್ದ ಟಿ.ಜೆ.ಅಬ್ರಹಾಂ, ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ನಾನು ಸಲ್ಲಿಸಿದ್ದ ದೂರಿಗೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ನೀಡಿರುವ ಅನುಮೋದನೆ ಕಾನೂನಾತಕವಾಗಿ ಸರಿಯಿದೆ ಎಂದು ಪ್ರತಿಪಾದಿಸಿದ್ದರು.
|
6 |
+
ಅಭಿಯೋಜನೆಗೆ ಅನುಮತಿ ನೀಡಿರುವುದು ತಪ್ಪು ಎಂದು ಮುಖ್ಯಮಂತ್ರಿಯವರ ಪರ ವಕೀಲರು ಹೈಕೋರ್ಟ್ನಲ್ಲಿ ವಾದ ಮಂಡಿಸಿದ್ದಾರೆ. ಯಾರ ಅರ್ಜಿಗೆ ಅನುಮತಿ ನೀಡಿರುವುದು ತಪ್ಪು ಎಂಬ ಪ್ರಶ್ನೆ ಕಾಡುತ್ತಿದೆ. ನಾನು ನಿಯಮ 154 ರ ಅಡಿ ಅನುಮತಿಗಾಗಿ ನೀಡಿದ್ದ ಅರ್ಜಿಯ ಜೊತೆ ಸಲ್ಲಿಸಬೇಕಾದ ದಾಖಲೆಗಳನ್ನು ಲಗತ್ತಿಸಿದ್ದೇನೆ. 154 (3) ಅಡಿ ಅಗತ್ಯ ದಾಖಲೆಗಳನ್ನು ಒದಗಿಸಲಾಗಿದೆ. ಇದನ್ನು ಆಧರಿಸಿ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿದ್ದರು.
|
7 |
+
ಮುಖ್ಯಮಂತ್ರಿಯವರಿಂದ ಉತ್ತರ ಪಡೆದು ಅದನ್ನು ಪರಿಶೀಲಿಸಿ ನಂತರ ಆದೇಶ ನೀಡಿದ್ದಾರೆ. ಹೀಗಾಗಿ ನನಗೆ ನೀಡಿರುವ ಅನುಮತಿ ತಪ್ಪು ಎಂದು ಹೇಳಲಾಗುವುದಿಲ್ಲ ಎಂದು ಹೇಳಿದರು.2004 ರಲ್ಲಿ ಸಿದ್ದರಾಮಯ್ಯ ಅವರ ಬಾಮೈದ ಜಮೀನು ಖರೀದಿ ಮಾಡಿದ್ದಾರೆ. 2010 ರಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ದಾನಪತ್ರ ಮಾಡಲಾಗಿದೆ. 2014 ರಲ್ಲಿ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.
|
8 |
+
2001 ರಲ್ಲೇ ಸದರಿ ಜಮೀನಿನಲ್ಲಿ ಲೇಔಟ್ ಸಿದ್ಧಪಡಿಸಿ, ಪಾರ್ಕ್ ಮಾಡಿ, ನಿವೇಶನಗಳನ್ನು ಹಂಚಿದ್ದಾರೆ ಎಂದು ಪಾರ್ವತಿಯವರು ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. ಹಾಗಿದ್ದ ಮೇಲೆ 2004 ರಲ್ಲಿ ಖರೀದಿಸಿದಾ�� ಅಲ್ಲಿ ಕೃಷಿಭೂಮಿ ಇರಲು ಹೇಗೆ ಸಾಧ್ಯ?, 2001 ರಲ್ಲಿ ನಿವೇಶನ ಹಂಚಿಕೆ ಮಾಡಿದ್ದ ಭೂಮಿಗೆ 2014 ರಲ್ಲಿ ಪರಿಹಾರ ಕೇಳಲು ಅವಕಾಶ ಇದೆಯೇ? ಎಂದು ಪ್ರಶ್ನಿಸಿದರು.
|
9 |
+
ವಾದಗಳು ಏನೇ ಇರಲಿ, ಅವರು ಹೇಳುವ ಮಾತುಗಳು, ಆರೋಪಗಳನ್ನು ಬದಿಗಿಟ್ಟರೂ ಪಾರ್ವತಿಯವರ ಪತ್ರದಲ್ಲೇ ಸತ್ಯಾಂಶ ಇದೆ. ಸಿದ್ದರಾಮಯ್ಯ ಅವರ ಪ್ರಭಾವ ಬಳಸಿ ಭೂಪರಿವರ್ತನೆ ಮಾಡಿಸಲಾಗಿದೆ ಎಂದು ಹೇಳಲಾಗಿದೆ. 2001 ರಲ್ಲಿ ನಿವೇಶನ ಹಂಚಿಕೆ ಮಾಡಿದ್ದರೆ 2005 ರಲ್ಲಿ ಭೂಪರಿವರ್ತನೆಗೆ ಹೇಗೆ ಅನುಮತಿ ಕೊಡಲು ಸಾಧ್ಯವಿದೆಯೇ ಎಂದು ವಿವರಿಸಿದರು.
|
10 |
+
ಅಭಿವೃದ್ಧಿಯಾಗಿರುವ ಜಮೀನು ಖಾಲಿ ಇತ್ತು ಎಂದು ಖರೀದಿ ಮಾಡಲು ಸಾಧ್ಯವೇ?, ಭೂಪರಿಹಾರಕ್ಕಾಗಿ 2021 ರಲ್ಲಿ ಪತ್ರ ಬರೆಯಲಾಗಿದೆ. 1998-99 ರಲ್ಲಿ ಮುಡಾ ಭೂಸ್ವಾಧೀನ ಮಾಡಿಕೊಂಡು ಭೂಮಿಯನ್ನು ತಮದು ಎಂದು ಪ್ರತಿಪಾದಿಸುತ್ತಿರುವ ಸಿದ್ದರಾಮಯ್ಯ ಅವರ ಕುಟುಂಬ 2014 ರಲ್ಲಿ ನೀಡಿರುವ ಅರ್ಜಿಯಲ್ಲಿ ಮುಡಾ ಅಕ್ರಮವಾಗಿ ನಿವೇಶನ ಮಾಡಿ ಮಾರಾಟ ಮಾಡಿದೆ ಎಂದು ಹೇಳುತ್ತಾರೆ.
|
11 |
+
ಒಂದು ವೇಳೆ ಅದು ನಿಜವೇ ಆಗಿದ್ದರೆ ಅಷ್ಟು ಸುದೀರ್ಘ ಅವಧಿಯಲ್ಲಿ ಯಾರು, ಯಾವುದೇ ತಕರಾರನ್ನು ಏಕೆ ಎತ್ತಿಲ್ಲ?, 2020 ರವರೆಗೂ ಭೂಮಿ ತಮದು ಎಂದು ಯಾರೂ ಹಕ್ಕು ಪ್ರತಿಪಾದಿಸಿಲ್ಲ. ಹೀಗಿದ್ದ ಮೇಲೆ ಜಮೀನು ಯಾರಿಗೆ ಸೇರಿದ್ದು? ಎಂದು ಪ್ರಶ್ನಿಸಿದರು.ದೇವನೂರು ಬಡಾವಣೆಯಲ್ಲಿ ನಿವೇಶನ ಅಭಿವೃದ್ಧಿಯಾಗಿದೆ, ಹಂಚಿಕೆಯೂ ಆಗಿದೆ. ಎಲ್ಲವನ್ನೂ ಮೌನವಾಗಿ ನೋಡಿಕೊಂಡಿದ್ದಾರೆ. ಅನಂತರ 20 ವರ್ಷಗಳ ಬಳಿಕ ತಕರಾರು ತೆಗೆದಿದ್ದಾರೆ. 14 ನಿವೇಶನಗಳನ್ನು ಅಕ್ರಮವಾಗಿ ಪಡೆದಿದ್ದಾರೆ. ಇದರಿಂದ ಸರ್ಕಾರಕ್ಕೆ 55 ಕೋಟಿ ರೂ.ಗಳ ನಷ್ಟವಾಗಿದೆ. ನಿವೇಶನ ವಾಪಸ್ ಕೊಡುವವರೆಗೂ ತಾವು ಪ್ರಕರಣದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.
|
eesanje/url_46_11_9.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಸಿಎಂ ವಿರುದ್ದದ ಪ್ರಾಸಿಕ್ಯೂಷನ್ ತೀರ್ಪು : ರಾಜ್ಯಾದ್ಯಂತ ಪೊಲೀಸರು ಅಲರ್ಟ್
|
2 |
+
:
|
3 |
+
ಬೆಂಗಳೂರು, ಸೆ.24-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ವಿಚಾರವಾಗಿ ಇಂದು ಹೈಕೋಟ್ನಲ್ಲಿ ತೀರ್ಪು ಬರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯಾದ್ಯಂತ ಪೊಲೀಸರು ಅಲರ್ಟ್ ಆಗಿರುವಂತೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್ ಅವರು ಸೂಚಿಸಿದ್ದಾರೆ.
|
4 |
+
ಮುಖ್ಯವಾಗಿ ಸಿಎಂ ನಿವಾಸ, ಕಛೇರಿ ಹಾಗೂ ಕಾವೇರಿ ಬಳಿ ಎರಡು ಕೆಎಸ್ಆರ್ಪಿ ತುಕಡಿ ಹಾಗೂ ಬಿಎಂಟಿಸಿ ಬಸ್ ನಿಯೋಜಿಸಲಾಗಿದ್ದು, ಪೊಲೀಸ್ ಸರ್ಪಗಾವಲು ಹಾಕಲಾಗಿದೆ.ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಂಗಳೂರು, ಮೈಸೂರುನಗರ ಸೇರಿದಂತೆ ಎಲ್ಲಾ ನಗರಗಳ ಆಯುಕ್ತರುಗಳು, ಜಿಲ್ಲೆಗಳ ಎಸ್ಪಿ ಹಾಗೂ ಹಿರಿಯ ಅಧಿಕಾರಿಗಳು ಬಂದೋಬಸ್ತ್ನಲ್ಲಿರುವಂತೆ ಅವರು ಸೂಚಿಸಿದ್ದಾರೆ.
|
5 |
+
ಒಂದು ವೇಳೆ ಸಿಎಂ ವಿರುದ್ಧ ತೀರ್ಪು ಬಂದರೆ, ರಾಜ್ಯದ ವಿವಿಧ ಕಡೆಗಳಲ್ಲಿ ಪ್ರತಿಭಟನೆ ನಡೆಯುವ ಸಾಧ್ಯತೆಯ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಬಂದೋಬಸ್ತ್ನಲ್ಲಿರುವಂತೆ ಡಿಜಿಪಿ ಅವರು ತಿಳಿಸಿದ್ದಾರೆ.
|
6 |
+
ಬೆಂಗಳೂರಿನ ಪೂರ್ವ, ಪಶ್ಚಿಮ, ಉತ್ತರ, ಆಗ್ನೇಯ, ಈಶಾನ್ಯ ಸೇರಿದಂತೆ ವೈಟ್ಫೀಲ್ಡ್ ವಿಭಾಗದಲ್ಲಿ ಕಟ್ಟೆಚ್ಚರ ವಹಿಸುವಂತೆ ಹಾಗೂ ಎಲ್ಲೆಡೆ ಹೊಯ್ಸಳ ವಾಹನ ಗಸ್ತು ಹೆಚ್ಚಿಸುವಂತೆ ಹಾಗೂ ಎಎಸ್ಐ ಸೇರಿದಂತೆ ಎಲ್ಲಾ ಪೊಲೀಸ್ ಸಿಬ್ಬಂದಿ ರೌಂಡ್್ಸನಲ್ಲಿರುವಂತೆ ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಆದೇಶಿಸಿದ್ದಾರೆ.
|
eesanje/url_46_120_1.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಮಂಡ್ಯದಲ್ಲಿ ಕಾಂಗ್ರೆಸ್ಗೆ ಹೀನಾಯ ಸೋಲು : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಚಲುವರಾಯಸ್ವಾಮಿ..?
|
2 |
+
ಬೆಂಗಳೂರು, ಜೂ.6-ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಸೋಲು ಹಿನ್ನೆಲೆಯಲ್ಲಿ ಎನ್.ಚಲುವರಾಯಸ್ವಾಮಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರಾ ಎಂಬ ಪ್ರಶ್ನೆ ಎದ್ದಿದೆ.
|
3 |
+
ಈ ಬಗ್ಗೆ ಮಂಡ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾದ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ತಮ್ಮ ರಾಜೀನಾಮೆ ಕುರಿತು ಸಚಿವ ಎನ್.ಚಲುವರಾಯಸ್ವಾಮಿ ಪ್ರಸ್ತಾಪಿಸಿರುವ ವಿಡಿಯೋ ಸಖತ್ ವೈರಲ್ ಆಗುತ್ತಿದೆ.
|
4 |
+
ಸ್ಟಾರ್ ಚಂದ್ರು ಸೋತರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ. ಚುನಾವಣೆ ಸೋತರೇ ನನಗೆ ಕೆಲಸ ಮಾಡುವುದಕ್ಕೆ ಮನಸು ಬರಲ್ಲ. ಟೇಬಲ್ ಕುಟ್ಟಲು ಆಗಲ್ಲ, ಸಂಪುಟದಲ್ಲಿ ತಲೆ ಎತ್ತಿ ಮಾತಾಡಲು ಆಗಲ್ಲ. ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಶಾಸಕನಾಗಿ ಕೆಲಸ ಮಾಡಬೇಕು. ಈ ಚುಣಾವಣೆಯಲ್ಲಿ ಸೋತರೆ ಅಳಲ್ಲ, ಯಾರ ಕೈಗೂ ಸಿಗುವುದಿಲ್ಲ. ಎರಡು ತಿಂಗಳು ಎಲ್ಲಾದರೂ ಹೊರಗಡೆ ಪ್ರವಾಸಕ್ಕೆ ಹೋಗುತ್ತೇನೆ.
|
5 |
+
ಮೊಬೈಲ್ನ ಹಳೇ ಸಿಮ್ ಕಿತ್ತೆಸೆದು ಹೊಸ ಸಿಮ್ ಹಾಕಿಕೊಳ್ತೇನೆ. ರಾಜಕೀಯ ನಿವೃತ್ತಿ ಘೋಷಣೆ ಮಾಡಿ, ನೆಮ್ಮದಿಯಾಗಿ ಇರ್ತೀನಿ ಎಂದು ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಚಲುವರಾಯಸ್ವಾಮಿ ಭಾಷಣ ಮಾಡಿದ್ದರು.
|
6 |
+
ಸದ್ಯ ಈಗ ಮಂಡ್ಯದಲ್ಲಿ ಹೆಚ್ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದು ಜೆಡಿಎಸ್ ಕಾರ್ಯಕರ್ತರು ಸಚಿವ ಚೆಲುವರಾಯಸ್ವಾಮಿ ಅವರ ಭಾಷಣದ ವಿಡಿಯೋ ವೈರಲ್ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಚಲುವರಾಯಸ್ವಾಮಿ ರಾಜೀನಾಮೆ ಬಗ್ಗೆ ಚರ್ಚೆ ಜೋರಾಗಿದೆ.
|
eesanje/url_46_120_10.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಉತ್ತರಾಖಂಡ್ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡಿಗರೂ ಸೇರಿದಂತೆ 22 ಮಂದಿಯಲ್ಲಿ 5 ಮಂದಿ ಸಾವು
|
2 |
+
ಬೆಂಗಳೂರು,ಜೂ.5-ಹಿಮಾಲಯ ತಪ್ಪಲಿನ ಉತ್ತರಕಾಶಿ ಹಾಗೂ ತೆಹರಿ ಜಿಲ್ಲೆಯ ಗಡಿಭಾಗದಲ್ಲಿ ಟ್ರೆಕ್ಕಿಂಗ್ನಲ್ಲಿ ಭಾಗಿಯಾಗಿದ್ದ ಕರ್ನಾಟಕದ 18 ಮಂದಿ ಸೇರಿ, 22 ಜನ ಮಳೆ, ಮಂಜು ಹಾಗೂ ಪ್ರತಿಕೂಲ ಹವಾಮಾನದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರಲ್ಲಿ 5 ಮಂದಿ ಮೃತಪಟ್ಟಿದ್ದಾರೆ.
|
3 |
+
ಈ ಘಟನೆ ನಿನ್ನೆ ಮಧ್ಯಾಹ್ನ ಬೆಳಕಿಗೆ ಬಂದಿದ್ದು, ಸಂಕಷ್ಟಕ್ಕೆ ಸಿಲುಕಿದವರ ರಕ್ಷಣೆಗೆ ರಾಜ್ಯಸರ್ಕಾರ ಧಾವಿಸಿದೆ. ಸಚಿವ ಕೃಷ್ಣಭೈರೇಗೌಡ ಉತ್ತರಾಖಂಡ್ಗೆ ತೆರಳಿ ಪರಿಹಾರ ಕಾರ್ಯಾಚರಣೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
|
4 |
+
ನಿನ್ನೆ ರಾತ್ರಿಯಿಂದ ನಡೆದ ಪ್ರಯತ್ನಗಳ ಪರಿಣಾಮ ಇಂದು ಬೆಳಿಗ್ಗೆ ವಾಯುಸೇನೆಯ ಎರಡು ಹೆಲಿಕಾಪ್ಟರ್ಗಳು ಹುಡುಕಾಟ ನಡೆಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದರಿಂದಾಗಿ ಕರ್ನಾಟಕದ ಹಲವಾರು ಮಂದಿಯನ್ನು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಕರೆತರಲಾಗಿದೆ.ಯಶಸ್ವಿ ರಕ್ಷಣಾ ಕಾರ್ಯಾಚರಣೆಯಲ್ಲಿ ಸೌಮ್ಯ ವಿವೇಕ್ (37), ವಿನಯ್ ಕೃಷ್ಣಮೂರ್ತಿ (47), ಶಿವಜ್ಯೋತಿ, ಸುಧಾಕರ್, ಬಿ.ಎನ್.ನಾಯ್ಡು (64), ಸತಿ ಗುರುರಾಜ್ (40), ಸೀನಾ (48) ಸೇರಿದಂತೆ ಹಲವರನ್ನು ರಕ್ಷಿಸಲಾಗಿದೆ.
|
5 |
+
ಕರ್ನಾಟಕದ ಸುಜಾತ (52), ಪದಿನಿ ಹೆಗಡೆ (35), ಚೈತ್ರಾ (48), ಸಿಂಧು (45), ವೆಂಕಟೇಶ್ ಪ್ರಸಾದ್ (55), ಅನಿತಾ (61), ಆಶಾ ಸುಧಾಕರ್ (72), ಪದನಾಭ್ ಕೆಪಿಎಸ್ (50), ವಿನಾಯಕ್ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. 13 ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆತಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
|
6 |
+
ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಶಿ ಮಹೇಶ್ ಈ ಸಂಜೆಯೊಂದಿಗೆ ಮಾತನಾಡಿ, ಬೆಂಗಳೂರಿನ 22 ಮಂದಿ ಚಾರಣಕ್ಕೆ ತೆರಳಿದ್ದು, ನಿನ್ನೆ ಮಧ್ಯಾಹ್ನ ಹವಾಮಾನ ವೈಪರೀತ್ಯದಿಂದ ತೊಂದರೆಗೆ ಸಿಲುಕಿದ್ದಾರೆ. ನಿನ್ನೆ ಸಂಜೆಯಿಂದ ಸ್ಥಳೀಯರು ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ರಕ್ಷಣಾ ಕಾರ್ಯಕ್ಕೆ ಪ್ರಯತ್ನ ಮಾಡಿದ್ದಾರೆ.
|
7 |
+
ಸಂಜೆ ಹಾಗೂ ರಾತ್ರಿ ವೇಳೆ ತೀವ್ರ ಹಿಮಪಾತ ಹಾಗೂ ಪ್ರತಿಕೂಲ ಹವಾಮಾನದಿಂದ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿತ್ತು. ಇಂದು ಬೆಳಿಗ್ಗೆ ವಾಯುಸೇನೆಯ ಹೆಲಿಕಾಪ್ಟರ್ ಬಳಕೆ ಮಾಡಿದ್ದು, ಹಲವರನ್ನು ರಕ್ಷಿಸಲಾಗಿದೆ. ಐದು ಮಂದಿ ಮೃತಪಟ್ಟಿರುವ ಮಾಹಿತಿ ಬಂದಿದೆ. ಉಳಿದವರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿಸಿದರು.
|
8 |
+
ಅಪಾಯಕಾರಿ ಚಾರಣ :ಮನೇರಿಯಾದ ಹಿಮಾಲಯ ವೀವ್ ಟ್ರೆಕ್ಕಿಂಗ್ ಸಂಸ್ಥೆ ಆಯೋಜಿಸಿದ್ದ ಟ್ರೆಕ್ಕಿಂಗ್ನಲ್ಲಿ ಒಟ್ಟು 22 ಮಂದಿ ಭಾಗವಹಿಸಿದ್ದರು. ಅವರಲ್ಲಿ ಕರ್ನಾಟಕದ 18 ಮಂದಿ, ಮಹಾರಾಷ್ಟ್ರದ ಒಬ್ಬರು ಹಾಗೂ ಮೂರು ಜನ ಸ್ಥಳೀಯರು ಭಾಗವಹಿಸಿದ್ದರು ಎಂದು ಉತ್ತರಕಾಶಿಯ ಜಿಲ್ಲಾಧಿಕಾರಿ ಮೆಹರ್ಬಾನ್ ಸಿಂಗ್ ಬಿಶತ್ ತಿಳಿಸಿದ್ದಾರೆ.
|
9 |
+
ಮೇ 29 ರಿಂದ ಉತ್ತರಕಾಶಿಯಿಂದ ಆರಂಭಗೊಂಡಿದ್ದ ಟ್ರೆಕ್ಕಿಂಗ್ 35 ಕಿ.ಮೀ. ದೀರ್ಘ ಪ್ರಯಾಣವಾಗಿದ್ದು, ಮಲ್ಲಾ-ಸಿಲ್ಲಾ-ಖುಷ್ಕಲ್ಯಾಣ್ ಸಹಸ್ತ್ರತಲ್ ಮಾರ್ಗವಾಗಿ ಮುಂದುವರೆದು ಜೂನ್ 7 ರಂದು ಅವರು ಮರಳಿ ಬರಬೇಕಿತ್ತು. ಆದರೆ ಹವಾಮಾನ ವೈಪರೀತ್ಯ, ಭಾರಿ ಮಳೆ, ಮಂಜು ಕವಿದ ವಾತಾವರಣದಿಂದಾಗಿ ಚಾರಣಿಗರು ಸಹಸ್ತ್ರತಲ್ನ ಆಲ್ಫೆನ್ಲೇಕ್ನ ಹಾದಿಯಲ್ಲಿ ದಿಕ್ಕು ತಪ್ಪಿದ್ದಾರೆ.
|
10 |
+
ವಿಷಯ ತಿಳಿದ ಜಿಲ್ಲಾಡಳಿತ ಕೂಡಲೇ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದು, ವಾಯುಸೇನೆಯ 2 ಚೇತಕ್ ಹೆಲಿಕಾಪ್ಟರ್ಗಳನ್ನು ಬಳಕೆ ಮಾಡಿಕೊಂಡು ಹುಡುಕಾಟ ಆರಂಭಿಸಲಾಯಿತು ಎಂದು ಉತ್ತರಖಂಡ್ನ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯದರ್ಶಿ ರಂಜಿತ್ ಸಿನ್ಹಾ ತಿಳಿಸಿದ್ದಾರೆ.
|
11 |
+
ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳು, ಎಸ್ಡಿಆರ್ಎಫ್ ದಳ, ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಕರಿಸಿದ್ದಾರೆ.ಎಸ್ಪಿ ಅರ್ಪಣ್ ಯದುವಂಶಿ ರಕ್ಷಣಾ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದು, ಡೆಹ್ರಾಡೂನ್ನಲ್ಲಿ ವಿಚಕ್ಷಣಾ ದಳಗಳನ್ನು ಸಜ್ಜುಗೊಳಿಸಲಾಗಿದೆ. ಉತ್ತರಕಾಶಿಯ ಜಿಲ್ಲಾಸ್ಪತ್ರೆ ಹಾಗೂ ಬಟವಾಡಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಪರಿಸ್ಥಿತಿ ನಿಭಾಯಿಸಲು ಸಿದ್ಧಗೊಳಿಸಲಾಗಿದ್ದು, 14 ವೈದ್ಯರು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
|
12 |
+
ಸಹಸ್ತ್ರತಲ್ 7 ಸರೋವರಗಳ ಸಮೂಹವಾಗಿದ್ದು, ಆಳವಾದ ಕಂದಕಗಳನ್ನು ಹೊಂದಿದೆ. ಪಾಂಡವರು ಈ ಸ್ಥಳದಿಂದ ಸ್ವರ್ಗಕ್ಕೆ ಹೋದರು ಎಂಬ ಪೌರಾಣಿಕ ಐತಿಹ್ಯವಿದೆ. ಸುಮಾರು 14,500 ಅಡಿಗೂ ಹೆಚ್ಚಿನ ಏರಿಳಿತಗಳ ಈ ಚಾರಣಕ್ಕೆ ಇದು ಸೂಕ್ತ ಸಮಯ ಅಲ್ಲ ಎಂದು ಹೇಳಲಾಗುತ್ತಿದೆ.ಅದರ ಹೊರತಾಗಿಯೂ ಖಾಸಗಿ ಸಂಸ್ಥೆ ಚಾರಣ ಆಯೋಜಿಸಿದ್ದು ಪ್ರಶ್ನಾರ್ಹವಾಗಿದೆ.
|
eesanje/url_46_120_11.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಎನ್ಡಿಎ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ ಎಚ್.ಡಿ.ಕುಮಾರಸ್ವಾಮಿ
|
2 |
+
ಬೆಂಗಳೂರು,ಜೂ.5-ಎನ್ಡಿಎ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಲು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಬೆಳಿಗ್ಗೆ ನವದೆಹಲಿಗೆ ತೆರಳಿದರು.ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸುವಂತೆ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಲಾಗಿತ್ತು.
|
3 |
+
ಇಂದು ಸಂಜೆ ನವದೆಹಲಿಯಲ್ಲಿ ಎನ್ಡಿಎ ಮೈತ್ರಿಕೂಟದ ಮಿತ್ರಪಕ್ಷಗಳ ಸಭೆ ನಡೆಯಲಿದ್ದು, ಲೋಕಸಭಾ ಚುನಾವಣಾ ಫಲಿತಾಂಶ, ಕೇಂದ್ರ ಸರ್ಕಾರ ರಚನೆಯ ರೂಪುರೇಷೆ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ಜೆಡಿಎಸ್, ಎನ್ಡಿಎ ಮೈತ್ರಿಕೂಟದ ಭಾಗವಾಗಿರುವುದರಿಂದ ಕುಮಾರಸ್ವಾಮಿಯವರಿಗೆ ಆಹ್ವಾನ ನೀಡಲಾಗಿದೆ. ರಾಜ್ಯದಲ್ಲಿ ಜೆಡಿಎಸ್ 2 ಕ್ಷೇತ್ರಗಳಲ್ಲಿ ಜಯ ಗಳಿಸಿದೆ.
|
4 |
+
ಇಂದು ಮಧ್ಯಾಹ್ನ ದೆಹಲಿ ತಲುಪಲಿರುವ ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹಸಚಿವ ಅಮಿತ್ ಶಾರನ್ನು ಭೇಟಿ ಮಾಡಿ ಲೋಕಸಭಾ ಚುನಾವಣಾ ಫಲಿತಾಂಶ, ಪ್ರಚಲಿತ ರಾಜಕೀಯ ವಿದ್ಯಮಾನ, ಎನ್ಡಿಎ ಸರ್ಕಾರ ರಚನೆ ಮೊದಲಾದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
|
5 |
+
ಎಚ್.ಡಿ.ಕೆ. ಗೆ ಸಚಿವ ಸ್ಥಾನ ? :ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭಾರಿ ಬಹುಮತದಿಂದ ಗೆದ್ದಿರುವ ಕುಮಾರಸ್ವಾಮಿ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಲಾಗುತ್ತದೆ ಎಂಬ ಅಚಲ ವಿಶ್ವಾಸವನ್ನು ಜೆಡಿಎಸ್ ಮುಖಂಡರು, ನಾಯಕರು ಹೊಂದಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡು ಎನ್ಡಿಎ ಮೈತ್ರಿಕೂಟ ಬಹುಮತ ಗಳಿಸುತ್ತಿದ್ದಂತೆ ಜೆಡಿಎಸ್ ಪಾಳಯದಲ್ಲಿ ಸಚಿವ ಸ್ಥಾನದ ಆಶೆ ಚಿಗುರೊಡೆದಿದೆ.ಕುಮಾರಸ್ವಾಮಿ ಸಚಿವರಾಗುವುದು ಬಹುತೇಕ ಖಚಿತ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
|
eesanje/url_46_120_12.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಸೆಲ್ಫೀ ವಿಡಿಯೋ ಮಾಡಿ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆ
|
2 |
+
ಮೈಸೂರು, ಜೂ. 5-ಮಾಡದ ತಪ್ಪಿಗೆ ನನ್ನನ್ನು ಹೊಣೆ ಮಾಡಿದ್ದಾರೆಂದು ಮನನೊಂದು ಫ್ಯಾಕ್ಟರಿ ಸೆಕ್ಯೂರಿಟಿ ಗಾರ್ಡ್ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನಂಜನಗೂಡು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ನಂಜೇಶ್ ಆತ್ಮಹತ್ಯೆ ಮಾಡಿಕೊಂಡ ಸೆಕ್ಯೂರಿಟಿ ಗಾರ್ಡ್.
|
3 |
+
ನಂಜನಗೂಡಿನ ಕಲ್ಮಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ರೆಹಾನ್ಸ್ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇತ್ತೀಚೆಗೆ ಫ್ಯಾಕ್ಟರಿಯಲ್ಲಿ ಕಳ್ಳತನವಾಗಿದ್ದು, ಈ ಆರೋಪವನ್ನು ನಂಜೇಶ್ ಮೇಲೆ ಹೊರಿಸಲಾಗಿತ್ತು ಎನ್ನಲಾಗಿದೆ. ಇದರಿಂದ ಮನನೊಂದು ಫ್ಯಾಕ್ಟರಿ ಆವರಣದಲ್ಲೇ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.
|
4 |
+
ಆತ್ಮಹತ್ಯೆಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಕ್ಷಮಿಸುವಂತೆ ಮನವಿ ಮಾಡಿದ್ದಾರೆ. ತಾನು ಮಾಡದ ತಪ್ಪಿಗೆ ಕೆಲವರು ನನ್ನನ್ನ ಹೊಣೆ ಮಾಡಿದ್ದಾರೆ. ಆದರೆ ನಂಜೇಶ್ ಸಹೋದರ ನೀಡಿರುವ ದೂರು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಸರಿಯಾದ ಕೆಲಸ ಇಲ್ಲದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ನೀಡಿರುವ ಹೇಳಿಕೆ ಅನುಮಾನಕ್ಕೆ ಕಾರಣವಾಗುತ್ತಿದೆ.
|
5 |
+
ನಂಜೇಶ್ ಮೇಲೆ ಹೇರಿದ ಒತ್ತಡವಾದರೂ ಏನು ಎಂಬ ಪ್ರಶ್ನೆ ಇದೀಗ ಉದ್ಭವವಾಗಿದೆ.ದೂರು ದಾಖಲಿಸಿಕೊಂಡಿರುವ ನಂಜನಗೂಡು ಟೌನ್ ಪೊಲೀಸರು ತನಿಖೆ ನಡೆಸಬೇಕಿದೆ.
|
eesanje/url_46_120_2.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಕುಮಾರಸ್ವಾಮಿ ಅವರಿಂದ ತೆರವಾಗುವ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಕ್ಕಾಗಿ ದೋಸ್ತಿಗಳ ನಡುವೆ ಪೈಪೋಟಿ ಶುರು..?
|
2 |
+
ಬೆಂಗಳೂರು, ಜೂ.6-ಚನ್ನಪಟ್ಟಣದ ಹಾಲಿ ಶಾಸಕರಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಚನ್ನಪಟ್ಟಣ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಲಿದ್ದು, ಬಿಜೆಪಿ ಮತ್ತು ಜೆಡಿಎಸ್ ಈ ಕ್ಷೇತ್ರಕ್ಕಾಗಿ ತೀವ್ರ ಪೈಪೋಟಿ ನಡೆಸುವ ಸಾಧ್ಯತೆ ಇದೆ.
|
3 |
+
ಕುಮಾರಸ್ವಾಮಿ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಅವರ ರಾಜೀನಾಮೆಯಿಂದ ತೆರವಾಗಲಿರುವ ಸ್ಥಾನಕ್ಕೆ ಆರು ತಿಂಗಳ ಒಳಗೆ ವಿಧಾನಸಭೆ ಉಪಚುನಾವಣೆ ನಡೆಯಲಿದೆ. ಒಕ್ಕಲಿಗ ಭದ್ರಕೋಟೆಯಲ್ಲಿ ಮೇಲುಗೈ ಸಾಧಿಸಲು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ದೇವೇಗೌಡರ ಕುಟುಂಬ ಮತ್ತೊಮ್ಮೆ ಸಿದ್ಧತೆ ನಡೆಸಿದೆ.
|
4 |
+
ಶಿವಕುಮಾರ್ ಅವರ ಕಿರಿಯ ಸಹೋದರ ಡಿಕೆ ಸುರೇಶ್ ಬೆಂಗಳೂರು ಗ್ರಾಮಾಂತರ ಲೋಕಸಬಾ ಕ್ಷೇತ್ರದಲ್ಲಿ ಸೋತ ನಂತರ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ರಾಮನಗರ ಜಿಲ್ಲೆಯ ರಾಜಕೀಯ ವಲಯಗಳಲ್ಲಿ ಈಗಾಗಲೇ ಚರ್ಚೆಗಳು ಪ್ರಾರಂಭವಾಗಿವೆ. ಮಂಡ್ಯದಿಂದ ಗೆದ್ದಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಚನ್ನಪಟ್ಟಣದಿಂದ ಹಾಲಿ ಶಾಸಕರಾಗಿದ್ದಾರೆ. ಇನ್ನು ಆರು ತಿಂಗಳೊಳಗೆ ಚನ್ನಪಟ್ಟಣಕ್ಕೆ ಉಪಚುನಾವಣೆ ನಡೆಯಲಿದೆ.
|
5 |
+
ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಚನ್ನಪಟ್ಟಣದಿಂದ ಕಣಕ್ಕಿಳಿಸುತ್ತಾರೋ ಅಥವಾ ಮೈತ್ರಿಕೂಟದ ಪಾಲುದಾರ ಬಿಜೆಪಿಗೆ ಕ್ಷೇತ್ರವನ್ನು ತ್ಯಾಗ ಮಾಡುತ್ತಾರೋ ಕಾದು ನೋಡಬೇಕಿದೆ. 2023ರ ಚುನಾವಣೆಯಲ್ಲಿ ರಾಮನಗರದಲ್ಲಿ ನಿಖಿಲ್ ಸೋತಿದ್ದರು.ಬಿಜೆಪಿಯಿಂದ ಮಾಜಿ ಶಾಸಕ ಹಾಗೂ ಎಂಎಲ್ಸಿ ಸಿ.ಪಿ.ಯೋಗೇಶ್ವರ್ ಆಕಾಂಕ್ಷಿಯಾಗಿದ್ದಾರೆ.
|
6 |
+
ಲೋಕಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ 80 ಸಾವಿರ ಮತಗಳನ್ನು ಗಳಿಸಿದ ಕಾಂಗ್ರೆಸ್ ಮತ್ತಷ್ಟು ಬಲಗೊಳ್ಳುವ ಸಾಧ್ಯತೆಯಿದೆ. ಕ್ಷೇತ್ರದಲ್ಲಿ ಅಸಾಧಾರಣ ನಾಯಕರಿಲ್ಲದಿದ್ದರೂ, ಲೋಕಸಭಾ ಚುನಾವಣೆಯಲ್ಲಿ ನಮ್ಮ ಸಾಧನೆ ಅದ್ಭುತವಾಗಿದೆ. ಉಪಚುನಾವಣೆಯಲ್ಲಿ ನಾವು 20,000ಕ್ಕೂ ಹೆಚ್ಚು ಮತಗಳನ್ನು ಗಳಿಸಬಹುದು ಮತ್ತು ಬಿಜೆಪಿ ಚನ್ನಪಟ್ಟಣ ಕ್ಷೇತ್ರವನ್ನು ಖಂಡಿತವಾಗಿಯೂ ವಶಪಡಿಸಿಕೊಳ್ಳಲಿದೆ ಎಂಬ ವಿಶ್ವಾಸ ಕಮಲ ಪಕ್ಷದ ನಾಯಕರಲ್ಲಿದೆ.
|
eesanje/url_46_120_3.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
3 ಶಿಕ್ಷಕರ ಹಾಗೂ 3 ಪದವೀಧರ ಕ್ಷೇತ್ರಗಳ ಮತ ಎಣಿಕೆ ಆರಂಭ, ಸಂಜೆ ವೇಳೆಗೆ ಫಲಿತಾಂಶ
|
2 |
+
ಬೆಂಗಳೂರು,ಜೂ.6-ರಾಜ್ಯದ ವಿಧಾನಪರಿಷತ್ನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರ ಕ್ಷೇತ್ರಗಳ ಮತ ಎಣಿಕೆ ಇಂದು ಬೆಳಿಗ್ಗೆ ಆರಂಭಗೊಂಡಿದ್ದು, ಸಂಜೆ ವೇಳೆಗೆ ಫಲಿತಾಂಶ ಹೊರಬೀಳುವ ಸಾಧ್ಯತೆಗಳಿವೆ.ಜೂನ್ 3 ರಂದು ಈ ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಮತಪತ್ರ ಬಳಕೆ ಮಾಡಿದ್ದು, ಪ್ರಾಶಸ್ತ್ಯದ ಮತಗಳನ್ನು ಎಣಿಕೆ ಮಾಡಬೇಕಾಗಿರುವುದರಿಂದ ಫಲಿತಾಂಶ ವಿಳಂಬವಾಗಲಿದೆ.
|
3 |
+
ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ನ ಆರು, ಬಿಜೆಪಿಯ ನಾಲ್ಕು, ಜೆಡಿಎಸ್ನ ಇಬ್ಬರು ಅಭ್ಯರ್ಥಿಗಳು ಸೇರಿದಂತೆ ಒಟ್ಟು 78 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು.ಇಂದು ಬೆಳಿಗ್ಗೆ 8 ಗಂಟೆಗೆ ಮೈಸೂರಿನ ಮಹಾರಾಣಿ ಕಾಲೇಜಿನ ಮತ ಎಣಿಕೆ ಕೇಂದ್ರದಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರಗಳ ಬೆಂಗಳೂರು ಸರ್ಕಾರಿ ಕಲಾ ಕಾಲೇಜಿನ ಮತ ಎಣಿಕೆ ಕೇಂದ್ರದಲ್ಲಿ ಬೆಂಗಳೂರು ಪದವೀಧರ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರಗಳ ಹಾಗೂ ಗುಲ್ಬರ್ಗ ವಿಶ್ವವಿದ್ಯಾಲಯದ ಮತ ಎಣಿಕೆ ಕೇಂದ್ರದಲ್ಲಿ ಈಶಾನ್ಯ ಪದವೀಧರ ಕ್ಷೇತ್ರದ ಮತ ಎಣಿಕೆ ಆರಂಭಗೊಂಡಿದೆ.
|
4 |
+
ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅ.ದೇವೇಗೌಡ, ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ, ಪಕ್ಷೇತರ ಅಭ್ಯರ್ಥಿಗಳಾದ ಎಂ.ಪುಟ್ಟಸ್ವಾಮಿ, ನೀಲಕಂಠ ಆರ್.ಗೌಡ ಸೇರಿದಂತೆ 15 ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದರು.ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ, ಕಾಂಗ್ರೆಸ್ ಅಭ್ಯರ್ಥಿ ಬಿ.ಟಿ.ಶ್ರೀನಿವಾಸ ಸೇರಿದಂತೆ 15 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
|
5 |
+
ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಬೋಜೇಗೌಡ, ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ.ಮಂಜುನಾಥ್ ಕುಮಾರ್ ಸೇರಿದಂತೆ ಒಟ್ಟು 8 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ, ಜೆಡಿಎಸ್ ಅಭ್ಯರ್ಥಿ ಕೆ.ವಿವೇಕಾನಂದ, ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ಸೇರಿದಂತೆ 11 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
|
6 |
+
ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್, ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ, ಪಕ್ಷೇತರ ಅಭ್ಯರ್ಥಿ ರಘುಪತಿಭಟ್ ಸೇರಿದಂತೆ 10 ಮಂದಿ ಸ್ಪರ್ಧಿಸಿದ್ದರು.ಈಶಾನ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಚಂದ್ರಶೇಖರ್ ಬಸವರಾಜ್ ಪಾಟೀಲ್, ಬಿಜೆಪಿ ಅಭ್ಯರ್ಥಿ ಅಮರ್ನಾಥ್ ಪಾಟೀಲ್ ಸೇರಿದಂತೆ 19 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
|
7 |
+
ಪ್ರತಿ ಕ್ಷೇತ್ರಕ್ಕೂ 14 ಟೇಬಲ್ಗಳು ಮತ್ತು ಒಂದು ಚುನಾವಣ��ಧಿಕಾರಿ ಟೇಬಲ್ ಅಳವಡಿಸಲಾಗಿದ್ದು, ಪ್ರತಿ ಟೇಬಲ್ಗೂ ಒಬ್ಬರು ಮೇಲ್ವಿಚಾರಕರು, ಇಬ್ಬರು ಸಹಾಯಕರು ನಿಯೋಜನೆ ಮಾಡಲಾಗಿದ್ದು, ಪ್ರತಿ ಟೇಬಲ್ಗೂ ಒಬ್ಬರಂತೆ ಏಜೆಂಟರನ್ನು ನೇಮಕ ಮಾಡಲಾಗಿದೆ.
|
eesanje/url_46_120_4.txt
ADDED
@@ -0,0 +1,14 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕರ್ನಾಟಕದಲ್ಲಿ ಬಿಜೆಪಿ 25 ರಿಂದ 17 ಸ್ಥಾನಗಳಿಗೆ ಕುಸಿದಿದ್ದೇಕೆ..? ಕಾರಣಗಳೇನು..?
|
2 |
+
ಬೆಂಗಳೂರು, ಜೂ.6– ಕಳೆದ ಬಾರಿ ರಾಜ್ಯದಲ್ಲಿ 25 ಲೋಕಸಭಾ ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿಗೆ ಈ ಬಾರಿ ಕೇವಲ 17 ಸ್ಥಾನಗಳನ್ನಷ್ಟೇ ಗೆಲ್ಲಲು ಸಾಧ್ಯವಾಗಿದೆ. ಚಿಕ್ಕೋಡಿ, ಕಲಬುರಗಿ, ಬಳ್ಳಾರಿ, ರಾಯಚೂರು, ಬೀದರ್, ಕೊಪ್ಪಳ, ದಾವಣಗೆರೆ, ಚಾಮರಾಜನಗರ, ಕೊಪ್ಪಳ, ಬಳ್ಳಾರಿ ಕ್ಷೇತ್ರಗಳನ್ನು ಪಕ್ಷ ಕಳೆದುಕೊಂಡಿದೆ.
|
3 |
+
ಟಿಕೆಟ್ ನೀಡುವಾಗಲೇ ತಲೆದೋರಿದ್ದ ಅಸಮಾಧಾನ, ಗೊಂದಲ ಸರಿಪಡಿಸಿಕೊಳ್ಳುವಲ್ಲಿ ಎಡವಿದ ಪರಿಣಾಮ ಗೆಲ್ಲುವ ಅವಕಾಶ ಕಳೆದುಕೊಂಡಿದೆ ಎಂಬ ವಿಶ್ಲೇಷಣೆ ನಡೆಯುತ್ತಿದೆ.ಮಧ್ಯ ಕರ್ನಾಟಕದ ಬಿಜೆಪಿ ಭದ್ರಕೋಟೆಯಾಗಿದ್ದ ದಾವಣಗೆರೆ ಕ್ಷೇತ್ರವನ್ನು ಕಳೆದುಕೊಳ್ಳಲು ಅಭ್ಯರ್ಥಿಗೆ ಎದುರಾದ ವಿರೋಧವೇ ಕಾರಣವಾಗಿದೆ. ಸಂಸದರಾಗಿದ್ದ ಜಿ.ಎಂ.ಸಿದ್ದೇಶ್ವರ್ ಮತ್ತು ಅವರ ಕುಟುಂಬಕ್ಕೆ ಟಿಕೆಟ್ ನೀಡದಂತೆ ಹಾಲಿ ಮಾಜಿ ಶಾಸಕರು, ಜಿಲ್ಲೆಯ ಹಿರಿಯ ನಾಯಕ ಎಸ್.ಎ.ರವೀಂದ್ರನಾಥ್, ಎಂ.ಪಿ.ರೇಣುಕಾಚಾರ್ಯ, ಬಿ.ಪಿ.ಹರೀಶ್, ಮಾಡಾಳ್ ವಿರೂಪಾಕ್ಷಪ್ಪ ಕುಟುಂಬ ಸೇರಿ ಅನೇಕರು ರಾಜ್ಯ ಬಿಜೆಪಿಗೆ ಮನವಿ ಮಾಡಿದ್ದರು.
|
4 |
+
ಈ ನಿಟ್ಟಿನಲ್ಲಿ ಬಿ.ಎಸ್.ಯಡಿಯೂರಪ್ಪ ಅವರನ್ನೂ ಭೇಟಿ ಮಾಡಿ ಒತ್ತಡ ಹೇರಿದ್ದರು. ಆದರೂ, ಸಿದ್ದೇಶ್ವರ್ ಅವರ ಪತ್ನಿಗೆ ಟಿಕೆಟ್ ನೀಡಲಾಯಿತು. ಇದನ್ನು ಬಹಿರಂಗವಾಗಿಯೇ ರೇಣುಕಾಚಾರ್ಯ ಅಂಡ್ ಟೀಂ ವಿರೋಧಿಸಿತು. ಪ್ರಚಾರ ಮಾಡದಿರುವ ನಿರ್ಧಾರ ಪ್ರಕಟಿಸಿತು. ೞಸಿದ್ದೇಶ್ವರ್ ಹಠಾವೋ, ದಾವಣಗೆರೆ ಬಚಾವೋ ಅಭಿಯಾನ ಸಹ ನಡೆಸಲಾಯಿತು. ಬಳಿಕ ಖುದ್ದು ಯಡಿಯೂರಪ್ಪ ಹೋಗಿ ಸಂಧಾನ ಮಾಡಿದರಾದರೂ, ಅಭ್ಯರ್ಥಿಗೆ ಜಿಲ್ಲಾ ನಾಯಕರಿಂದ ಸರಿಯಾದ ಸಾಥ್ ಸಿಗದೆ ಹಿನ್ನಡೆ ಅನುಭವಿಸಿದಂತಾಗಿದೆ.
|
5 |
+
ಬೀದರ್ ಕ್ಷೇತ್ರದ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧವೂ ಪಕ್ಷದಲ್ಲಿ ಸಾಕಷ್ಟು ವಿರೋಧ ಎದುರಾಗಿತ್ತು. ಟಿಕೆಟ್ ನೀಡದಂತೆ ಪಕ್ಷದ ನಾಯಕರು ಆಗ್ರಹಿಸಿದ್ದರು. ಅವರು ಪಕ್ಷದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ವಿಧಾನಸಭಾ ಚುನಾವಣೆ ಸಮಯದಲ್ಲಿ ನಮ್ಮ ಭವಿಷ್ಯ ಹಾಳುಮಾಡುವ ಪ್ರಯತ್ನ ನಡೆಸಿದ್ದರು ಎಂದು ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಶಾಸಕರು ಗಂಭೀರ ಆರೋಪ ಮಾಡಿದ್ದರು.
|
6 |
+
ಪಕ್ಷದ ವೇದಿಕೆಯಲ್ಲಿಯೇ ಖೂಬಾ ವಿರುದ್ಧ ನೇರ ಮಾಜಿ ಸಚಿವ, ಔರಾದ್ ಶಾಸಕ ಪ್ರಭು ಚವ್ಹಾಣ್ ವಾಗ್ದಾಳಿ ನಡೆಸಿದ್ದರು. ಬಸವಕಲ್ಯಾಣ ಶಾಸಕ ಶರಣು ಸಲಗರ ಕೂಡ ಬೆಂಬಲವಾಗಿ ಮಾತನಾಡಿ, ಖೂಬಾ ಅವರಿಗೆ ಟಿಕೆಟ್ ನೀಡುವುದನ್ನು ವಿರೋಧಿಸಿದ್ದರು. ಇತರ ಮಾಜಿ ಶಾಸಕರು, ಜಿಲ್ಲಾ ನಾಯಕರು ಇದನ್ನೇ ಹೇಳಿದ್ದರು. ಆದರೂ ಅಸಮಾಧಾನಿತರನ್ನು ವಿಶ್ವಾಸಕ್ಕೆ ಪಡೆಯದೆ ಖೂಬಾ ಅವರಿಗೆ ಟಿಕೆಟ್ ನೀಡಲಾಯಿತು. ಚವ್ಹಾಣ್, ಸಲಗಾರ ಸೇರಿ ಅಸಮಾಧಾನಿತರು ದೂರ ಉಳಿದ ಪರಿಣಾಮ ಖೂಬಾ ಅವರಿಗೆ ಹಿನ್ನಡೆಯಾಗಿದೆ ಎನ್ನಲಾಗುತ್ತಿದೆ.
|
7 |
+
ಕೊಪ್ಪಳ ಕ್ಷೇತ್ರದಲ್ಲಿಯೂ ಹಾಲಿ ಸಂಸದ ಕರಡಿ ಸಂಗಣ್ಣ ಅವರಿಗೆ ಟಿಕೆಟ್ ನೀಡದಂತೆ ವಿರೋಧ ವ್ಯಕ್ತವಾಗಿತ್ತು. ಸ್ಥಳೀಯ ನಾಯಕರ ಬೇಡಿಕೆ ಪರಿಗಣಿಸದ ರಾಜ್ಯ ನಾಯಕರು ಹೊಸ ಮುಖಕ್ಕೆ ಮಣೆ ಹಾಕಿ ಡಾ.ಬಸವರಾಜ್ ಕ್ಯಾವಟೂರ್ ಅವರಿಗೆ ಟಿಕೆಟ್ ನೀಡಿದರು. ಇದರಿಂದ ಕರಡಿ ಸಂಗಣ್ಣ ಅಸಮಾಧಾನಗೊಂಡರು. ಇವರನ್ನು ಮನವೊಲಿಕೆ ಮಾಡಿ ಪಕ್ಷದಲ್ಲಿ ಉಳಿಸಿಕೊಳ್ಳುವಲ್ಲಿ ಬಿಜೆಪಿ ನಾಯಕರು ವಿಫಲರಾದರು. ಕೇವಲ ಎನ್.ರವಿಕುಮಾರ್ ಮಾತ್ರ ಮನವೊಲಿಕೆ ಕಸರತ್ತು ನಡೆಸಿದರು. ಕೊನೆಗೆ ಕರಡಿ ಸಂಗಣ್ಣ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು. ಇದರ ಪರಿಣಾಮ ಫಲಿತಾಂಶದ ಮೇಲೆ ಬೀರಿರುವುದು ಸತ್ಯ.
|
8 |
+
ಕಲಬುರಗಿ ಕ್ಷೇತ್ರದ ಅಭ್ಯರ್ಥಿ ಉಮೇಶ್ ಜಾಧವ್ ಬಗ್ಗೆ ಯಾವುದೇ ವಿರೋಧ ಇರದೇ ಇರಲಿಲ್ಲ. ಆದರೆ, ಪಕ್ಷದ ಪ್ರಮುಖ ನಾಯಕರು ಕಾಂಗ್ರೆಸ್ ಸೇರಿದ್ದರಿಂದ ಪಕ್ಷಕ್ಕೆ ಹಿನ್ನಡೆಯಾಗಿದೆ. ಈ ಹಿಂದಿನ ಚುನಾವಣೆ ಸಮಯದಲ್ಲಿ ಪ್ರಭಾವಿ ನಾಯಕರಾದ ಬಾಬುರಾವ್ ಚಿಂಚನಸೂರ್, ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ಸೇರಿದ್ದರು. ಆದರೆ, ಈ ಚುನಾವಣೆಯ ಸಮಯದಲ್ಲಿ ಇಬ್ಬರೂ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಆಗಿದ್ದರು. 2019ರಲ್ಲಿ ಬಿಜೆಪಿ ನಡೆಸಿದ್ದ ತಂತ್ರವನ್ನೇ ಕಾಂಗ್ರೆಸ್ ಅನುಸರಿಸಿ ಪ್ರಭಾವಿಗಳನ್ನು ಸೆಳೆಯಿತು. ಪಕ್ಷ ತೊರೆಯುವ ನಾಯಕರನ್ನು ಉಳಿಸಿಕೊಳ್ಳುವಲ್ಲಿ ಬಿಜೆಪಿ ನಾಯಕರು ವಿಫಲರಾಗಿದ್ದರು. ಇದು ಸಹಜವಾಗಿಯೇ ಪೆಟ್ಟು ಕೊಟ್ಟಿದೆ.
|
9 |
+
ಚಿಕ್ಕೋಡಿ ಕ್ಷೇತ್ರದಲ್ಲೂ ಹಾಲಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದು, ರಮೇಶ್ ಕತ್ತಿ ಅಸಮಾಧಾನಕ್ಕೆ ಕಾರಣವಾಗಿತ್ತು. ಟಿಕೆಟ್ ಆಕಾಂಕ್ಷಿಯಾಗಿದ್ದ ಅವರ ಜೊತೆ ಸರಿಯಾಗಿ ಮಾತುಕತೆ ನಡೆಸಿ ವಿಶ್ವಾಸಕ್ಕೆ ಪಡೆಯಲು ಪಕ್ಷದ ನಾಯಕರು ಮುಂದಾಗಲಿಲ್ಲ. ಹೀಗಾಗಿ ರಮೇಶ್ ಕತ್ತಿ ನಿರೀಕ್ಷಿತ ಮಟ್ಟದಲ್ಲಿ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಲಿಲ್ಲ. ಇದು ಪಕ್ಷದ ಹಿನ್ನಡೆಗೆ ಕಾರಣವಾಗಿದೆ ಎನ್ನಲಾಗಿದೆ.
|
10 |
+
ರಾಯಚೂರು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ಗೆ ಮಾಜಿ ಸಂಸದ ಬಿ.ವಿ.ನಾಯಕ್ ಪಟ್ಟು ಹಿಡಿದಿದ್ದರು. ಅವರ ಅಭಿಮಾನಿಗಳು ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೂ ಯತ್ನಿಸಿದ್ದರು. ಇದಾದ ಬಳಿಕವೂ ಹಾಲಿ ಸಂಸದರಾಗಿದ್ದ ರಾಜಾ ಅಮರೇಶ್ವರ ನಾಯಕ್ ಅವರಿಗೆ ಟಿಕೆಟ್ ನೀಡಲಾಯಿತು.
|
11 |
+
ಒಂದೆಡೆ ಬಂಡಾಯದ ಬಿಸಿ ತಣಿಸಲು ಬಿಜೆಪಿ ನಾಯಕರು ಸೋತರೆ, ಅಭ್ಯರ್ಥಿ ವಿರುದ್ಧ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿರುವ ಆರೋಪ ಕೇಳಿಬಂದಿತು. ರಾಯಚೂರು ನಗರದಲ್ಲಿ ಕೆಲ ಬಿಜೆಪಿ ಕಾರ್ಯಕರ್ತರು ಹಾಲಿ ಸಂಸದರ ವಿರುದ್ಧ ಪ್ರತಿಭಟನೆ ನಡೆಸಿ, ೞಗೋಬ್ಯಾಕ್ ಅಮರೇಶ್ವರ ನಾಯಕ್ ಎನ್ನುವ ಘೋಷಣೆ ಕೂಗಿದರು.
|
12 |
+
ಈ ಟಿಕೆಟ್ ಫೈಟ್ ಅನ್ನು ನಿರ್ವಹಿಸಲು ನಾಯಕರು ಸರಿಯಾಗಿ ನಿರ್ವಹಿಸಿದ ಕಾರಣ ಬಿಜೆಪಿ ಬೆಲೆ ತೆರುವಂತೆ ಮಾಡಿದೆ.ಬಳ್ಳಾರಿ ಕ್ಷೇ���್ರದಲ್ಲಿ ಟಿಕೆಟ್ ಸಂಬಂಧ ಮೊಳಕಾಲ್ಮೂರು ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಅತೃಪ್ತಿ ಹೊಂದಿದ್ದರು. ಅಧಿ ಕೃತ ಅಭ್ಯರ್ಥಿ ಬಿ.ಶ್ರೀರಾಮುಲು ವಿರುದ್ಧ ತೊಡೆ ತಟ್ಟಿದ್ದರು.
|
13 |
+
ಅವರ ಮನವೊಲಿಕೆ ಮಾಡುವಲ್ಲೂ ಬಿಜೆಪಿ ನಾಯಕರು ವಿಫಲರಾದರು. ಅಲ್ಲದೇ, ಶ್ರೀರಾಮುಲು ಅತಿಯಾದ ಆತ್ಮವಿಶ್ವಾಸದಲ್ಲಿ ಬಂಡಾಯ ಕಡೆಗಣಿಸಿದರು. ಜೊತೆಗೆ ಜನಾರ್ದನ ರೆಡ್ಡಿ ಬಿಜೆಪಿ ಸೇರಿದ್ದರಿಂದಾಗಿ ಅನುಕೂಲವಾಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದರು. ಆದರೆ, ಜನಾರ್ದನ ರೆಡ್ಡಿ ಬಿಜೆಪಿಗೆ ಬಂದರೂ ಕ್ಷೇತ್ರ ಗೆಲ್ಲಲಾಗಿಲ್ಲ. ರೆಡ್ಡಿ ಫ್ಯಾಕ್ಟರ್ ಬಳ್ಳಾರಿ ಹಾಗೂ ಕೊಪ್ಪಳ ಎರಡೂ ಕಡೆಯೂ ಕೆಲಸ ಮಾಡಿಲ್ಲ.
|
14 |
+
ಚಾಮರಾಜನಗರ ಕ್ಷೇತ್ರದಲ್ಲಿ ಹಾಲಿ ಸಂಸದ ಶ್ರೀನಿವಾಸಪ್ರಸಾದ್ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಹಿನ್ನೆಲೆಯಲ್ಲಿ ಹೊಸಬರಿಗೆ ಬಿಜೆಪಿ ನಾಯಕರು ಹುಡುಕಾಟ ನಡೆಸಿದ್ದರು. ಶ್ರೀನಿವಾಸಪ್ರಸಾದ್ ಅಳಿಯ ಆಕಾಂಕ್ಷಿಯಾಗಿದ್ದರೂ ಅವರಿಗೆ ಟಿಕೆಟ್ ನೀಡಲಿಲ್ಲ. ಕಾಂಗ್ರೆಸ್?ನಲ್ಲಿ ವಿಧಾನಸಭೆ ಟಿಕೆಟ್ ಸಿಗದೆ ಬಿಜೆಪಿ ಸೇರಿದ್ದ ಬಾಲರಾಜ್ ಅವರಿಗೆ ಮಣೆ ಹಾಕಲಾಯಿತು. ಇದರಿಂದ ಸ್ವಪಕ್ಷೀಯರಲ್ಲಿ ಉಂಟಾದ ಅಸಮಾಧಾನ ಕಡೆಗಣಿಸಿದ್ದಕ್ಕೆ ಚುನಾವಣೆಯಲ್ಲಿ ಹಿನ್ನಡೆಯಾಗಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.
|
eesanje/url_46_120_5.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಫಲಿತಾಂಶದ ಹಿಂದಿರುವ ಜಾತಿ ಮತ ಲೆಕ್ಕಾಚಾರ
|
2 |
+
ಬೆಂಗಳೂರು, ಜೂ.6-ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ 19 ಸ್ಥಾನ ಗೆದ್ದರೆ, ಕಾಂಗ್ರೆಸ್ 9 ಸ್ಥಾನದಲ್ಲಿ ಗೆದ್ದಿದೆ. ಮೈತ್ರಿ ಪಕ್ಷಗಳ ಹಾಗೂ ಕಾಂಗ್ರೆಸ್ ಗೆಲುವು ಸೋಲಿನ ಹಿಂದೆ ಜಾತಿ ಮತ ಸಮೀಕರಣದ ಲೆಕ್ಕಾಚಾರ ಇದೆ.
|
3 |
+
ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕರ್ನಾಟಕದ ಕ್ಷೇತ್ರಗಳು ಬಹುವಾಗಿ ಜೆಡಿಎಸ್ ಹಾಗೂ ಬಿಜೆಪಿ ತೆಕ್ಕೆಗೆ ಬಿದ್ದಿವೆ. ಈ ಮೈತ್ರಿ ಒಕ್ಕಲಿಗರ ಮತ ಸಮೀಕರಣಕ್ಕೆ ಪ್ರಮುಖ ಕಾರಣವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಳೆ ಮೈಸೂರಲ್ಲಿ ಮೇಲುಗೈ ಸಾಧಿಸಿತ್ತು. ಅಂದು ಕಾಂಗ್ರೆಸ್ ಒಕ್ಕಲಿಗ ಸಮುದಾಯದ ಮತಗಳನ್ನು ತಮ್ಮತ್ತ ಸೆಳೆದಿತ್ತು. ಆದರೆ, ವಿಧಾನಸಭೆ ಚುನಾವಣೆ ವರ್ಷದ ಬಳಿಕ ನಡೆದ ಲೋಕಸಭೆ ಚುನಾವಣೆಯಲ್ಲಿ ಒಕ್ಕಲಿಗರ ಮತಗಳು ಜೆಡಿಎಸ್ ಹಾಗೂ ಬಿಜೆಪಿ ಕಡೆ ವಾಲಿವೆ.
|
4 |
+
ಒಕ್ಕಲಿಗರ ಪ್ರಾಬಲ್ಯ ಇರುವ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಆ ಮೂಲಕ ಹಳೆ ಮೈಸೂರು, ದಕ್ಷಿಣ ಕರ್ನಾಟಕದಲ್ಲಿ ಒಕ್ಕಲಿಗರ ಮತಗಳು ಬಿಜೆಪಿ ಹಾಗೂ ಜೆಡಿಎಸ್ಗೆ ಕ್ರೋಢೀಕರಣವಾಗಿದೆ. ಒಕ್ಕಲಿಗರ ಪ್ರಾಬಲ್ಯವಿರುವ ಚಿಕ್ಕಬಳ್ಳಾಪುರದಲ್ಲಿ ಶೇ.53.74, ಮಂಡ್ಯದಲ್ಲಿ ಶೇ.58.34, ಮೈಸೂರಿನಲ್ಲಿ ಶೇ.53.59, ಕೋಲಾರದಲ್ಲಿ ಶೇ.51.02, ಬೆಂಗಳೂರು ಗ್ರಾಮಾಂತರದಲ್ಲಿ ಶೇ.56.21, ತುಮಕೂರಿನಲ್ಲಿ ಶೇ.55.31ರಷ್ಟು ಮತ ಪಾಲು ದೋಸ್ತಿ ಅಭ್ಯರ್ಥಿಗಳು ಗಿಟ್ಟಿಸಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಒಕ್ಕಲಿಗರು ಭದ್ರಕೋಟೆಯನ್ನು ಜೆಡಿಎಸ್ ಮರಳಿ ಪಡೆದಿದೆ.
|
5 |
+
ಲಿಂಗಾಯತ, ಮರಾಠ ಮತಗಳು:ಅಲ್ಲದೇ, ಲಿಂಗಾಯತ ಮತಗಳೂ ಬಹುವಾಗಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳ ಪರ ವಾಲಿವೆ. ಮಧ್ಯ ಕರ್ನಾಟಕದಲ್ಲಿ ಬಹುತೇಕ ಲಿಂಗಾಯತ ಸಮುದಾಯ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳಿಗೆ ಕ್ರೋಢೀಕರಣವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯತ ಸಮುದಾಯದ ಮತಗಳು ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ಗೆ ವಾಲಿತ್ತು. ಆದರೆ, ಲೋಕಸಮರದಲ್ಲಿ ಲಿಂಗಾಯತ ಸಮುದಾಯ ಬಿಜೆಪಿ ಮತ್ತು ಅದರ ದೋಸ್ತಿ ಪಕ್ಷದ ಅಭ್ಯರ್ಥಿಗೆ ಕ್ರೋಢೀಕರಣವಾಗಿರುವುದು ಕಂಡು ಬರುತ್ತದೆ. ಹೀಗಾಗಿ ಮಧ್ಯ ಕರ್ನಾಟಕದ ಬಹುತೇಕ ಕ್ಷೇತ್ರಗಳಲ್ಲಿ ದೋಸ್ತಿ ಅಭ್ಯರ್ಥಿಗಳು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
|
6 |
+
ಉತ್ತರ ಕರ್ನಾಟಕದ ಬಹುತೇಕ ಕ್ಷೇತ್ರಗಳಲ್ಲಿ ಲಿಂಗಾಯತ ಹಾಗೂ ಮರಾಠ ಸಮುದಾಯದ ಮತಗಳು ಮರಳಿ ಬಿಜೆಪಿ ಕಡೆಗೆ ದೊಡ್ಡ ಪ್ರಮಾಣದಲ್ಲಿ ವಾಲಿವೆ. ಬೆಳಗಾವಿ, ಹುಬ್ಬಳ್ಳಿ ಧಾರವಾಡ, ಬಾಗಲಕೋಟೆ, ಹಾವೇರಿ, ವಿಜಯಪುರ, ಚಿತ್ರದುರ್ಗದಲ್ಲಿ ಲಿಂಗಾಯತ ಸಮುದಾಯದ ಮತಗಳು ಬಿಜೆಪಿ ಕೈ ಹಿಡಿದಿರುವುದು ಕಾಣುತ್ತದೆ. ಬಹುತೇಕ ಕಡೆ ಲಕ��ಷಕ್ಕೂ ಅಧಿ ಕ ಮತಗಳ ಅಂತರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.
|
7 |
+
ಕಾಂಗ್ರೆಸ್ನತ್ತ ಅಹಿಂದ ಮತಗಳು:ರಾಜ್ಯದಲ್ಲಿ ಅಲ್ಪಸಂಖ್ಯಾತರ ಮತಗಳು ಈ ಲೋಕ ಸಮರದಲ್ಲಿ ಕಾಂಗ್ರೆಸ್ನತ್ತ ಸಂಪೂರ್ಣವಾಗಿ ಕ್ರೋಢೀಕರಣವಾಗಿದೆ. ಅದರಲ್ಲೂ ಕಲ್ಯಾಣ ಕರ್ನಾಟಕದಲ್ಲಿ ಅಹಿಂದ (ಅಲ್ಪಸಂಖ್ಯಾತ, ಹಿಂದುಳಿದ, ದಲಿತ) ಮತಗಳು ಕಾಂಗ್ರೆಸ್ಗೆ ವಾಲಿವೆ. ಕಲ್ಯಾಣ ಕರ್ನಾಟಕದಲ್ಲಿನ ಕುರುಬ ಮತಗಳು, ದಲಿತ ಸಮುದಾಯದ ಮತಗಳು ಗಣನೀಯ ಪ್ರಮಾಣದಲ್ಲಿ ಕಾಂಗ್ರೆಸ್ ಬುಟ್ಟಿಗೆ ಸೇರಿವೆ. ಹೀಗಾಗಿ ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಬಹುತೇಕ ಅಹಿಂದ ಮತಗಳಿಂದ.
|
eesanje/url_46_120_6.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಸಾಲ ಕೊಟ್ಟ ಮಹಿಳೆಯನ್ನು ಕೊಂದು ತೋಟದಲ್ಲಿ ಹೂತುಹಾಕಿ ಪರಾರಿ
|
2 |
+
ಕನಕಪುರ, ಜೂ.6-ಸಾಲ ವಾಪಸ್ ಕೊಡುವುದಾಗಿ ಕರೆಸಿಕೊಂಡು ಮಹಿಳೆಯೊಬ್ಬರನ್ನು ಕೊಲೆ ಮಾಡಿ ರೇಷ್ಮೆ ತೋಟದಲ್ಲಿ ಹೂತುಹಾಕಿ ಆರೋಪಿಗಳು ಪರಾರಿಯಾಗಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಚೌಕಸಂದ್ರ ಗ್ರಾಮದಲ್ಲಿ ಜರುಗಿದೆ. ಟಿ.ಗೊಲ್ಲಹಳ್ಳಿ ಗ್ರಾಮದ ವಾಸಿ ಸುನಂದಮ್ಮ(65) ಕೊಲೆಯಾದ ನತದೃಷ್ಟೆಯಾಗಿದ್ದಾರೆ.
|
3 |
+
ಇವರ ಸಮೀಪದ ಸಂಬಂಧಿಗಳು ಎನ್ನಲಾದ ತಾಲೂಕಿನ ಶ್ರೀನಿವಾಸನಹಳ್ಳಿ ಗ್ರಾಮದ ರವಿಕುಮಾರ್ ಆತನ ಪತ್ನಿ ಆಶಾ ಎಂಬುವವರಿಂದ ಈ ಹತ್ಯೆಯಾಗಿದೆ ಎಂದು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮೂಲತಃ ಶ್ರೀನಿವಾಸನಹಳ್ಳಿ ಗ್ರಾಮದ ದಂಪತಿಗಳು ಚೌಕಸಂದ್ರ ತಾಂಡ್ಯ ಸಮೀಪದ ವೆಂಕಟೇಶ್ನಾಯ್ಕ ಎಂಬುವವರ ರೇಷೆ ತೋಟವನ್ನು ಗುತ್ತಿಗೆ ಪಡೆದಿದ್ದರು. ಕಳೆದ ಐದು ತಿಂಗಳಿನಿಂದ ಇದೇ ತೋಟದ ಮನೆಯಲ್ಲಿ ರವಿಕುಮಾರ್ ಮತ್ತವರ ಪತ್ನಿ ವಾಸವಾಗಿದ್ದರು.
|
4 |
+
ಸುನಂದಮ ಅವರಿಂದ 20 ಸಾವಿರ ಸಾಲ ಪಡೆದಿದ್ದರು. ಪಡೆದ ಸಾಲವನ್ನು ವರ್ಷಗಳಿಂದ ವಾಪಸ್ಸು ನೀಡಿರಲಿಲ್ಲ. ಈ ಸಂಬಂಧ ಸಾಲ ಮರುಪಾವತಿಸುವಂತೆ ಕೇಳಲಾಗಿತ್ತು. ಆರೋಪಿ ರವಿಕುಮಾರ್ ಸುನಂದಮನಿಗೆ ಫೋನ್ ಮಾಡಿ ನಿಮ ಸಾಲದ ಹಣವನ್ನು ವಾಪಸ್ ನೀಡುವುದಾಗಿ ಹೇಳಿ ಕೋಡಿಹಳ್ಳಿಗೆ ಕರೆಸಿಕೊಂಡು ನಂತರ ತೋಟದ ಮನೆಯಲ್ಲಿ ನೀಡುವುದಾಗಿ ಕರೆದುಕೊಂಡು ಹೋಗಿ ಸಂಜೆ ಕೊಲೆ ಮಾಡಿ ರೇಷ್ಮೆ ತೋಟದಲ್ಲಿ ಗುಂಡಿ ತೆಗೆದು ಮುಚ್ಚಿದ್ದಾರೆ.
|
5 |
+
ಸುನಂದಮ್ಮ ಮನೆಗೆ ಹಿಂದಿರುಗದ ಕಾರಣ ಕುಟುಂಬದ ಸದಸ್ಯರು ಸಂಬಂಧಿಕರ ಮನೆಗಳಲ್ಲಿ ಹುಡುಕಿ ಮಾಹಿತಿ ಸಿಗದ ಕಾರಣ ದೂರವಾಣಿ ಕರೆ ಮಾಡಿ ಹಣ ನೀಡುವುದಾಗಿ ಕರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದು ನೋಡಿದಾಗ ಅಲ್ಲಿಯೂ ಕಾಣದ್ದರಿಂದ ಆತಂಕಗೊಂಡ ಕುಟುಂಬದವರಿಗೆ ಗ್ರಾಮದಿಂದ ಆರೆ-ಸನಿಕೆಗಳನ್ನು ತೆಗೆದುಕೊಂಡು ತೋಟಕ್ಕೆ ಹೋಗಿದ್ದಾರೆಂಬ ಸುದ್ದಿಯ ಹಿನ್ನೆಲೆಯಲ್ಲಿ ಇಡೀ ತೋಟವನ್ನೇ ಶೋಧಿಸಿದಾಗ ಗುಂಡಿ ತೆಗೆದು ಮುಚ್ಚುವ ವೇಳೆ ಮಹಿಳೆಯ ಕೂದಲು ಹೊರ ಕಾಣುತ್ತಿದ್ದರಿಂದ ಕೂಡಲೇ ಗ್ರಾಮಾಂತರ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.
|
6 |
+
ಸುದ್ದಿ ತಿಳಿದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಸುರೇಶ್, ಡಿವೈಎಸ್ಪಿ ಗಿರೀಶ್, ಸರ್ಕಲ್ ಇನ್್ಸಪೆಕ್ಟರ್ ಕೆ.ಎಲ್.ಕೃಷ್ಣ, ಎಸ್.ಐ.ಹೇಮಂತ್, ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ತಹಶೀಲ್ದಾರ್ ಮಹಜರು ನಂತರ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀಸರಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.
|
eesanje/url_46_120_7.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಮರು ಮೌಲ್ಯಮಾಪನ ಫಲಿತಾಂಶ ಪ್ರಕಟ : ಸುದೀಕ್ಷಾ ರಾಜ್ಯಕ್ಕೆ 2ನೇ ಟಾಪರ್
|
2 |
+
ಬೆಂಗಳೂರು,ಜೂ.5-ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 2024ನೇ ಸಾಲಿನ ಎಸ್ಎಸ್ಎಲ್ಸಿ ಮರು ಮೌಲ್ಯಮಾಪನ ಫಲಿತಾಂಶ ಪ್ರಕಟಿಸಿದ್ದು, ಮೈಸೂರಿನ ದಿನೇಶ್ ಎಂಬುವರ ಅವರ ಪುತ್ರಿ ಸುದೀಕ್ಷಾ.ಎಂ.ಡಿ ಅವರು ರಾಜ್ಯಕ್ಕೆ ಎರಡನೇ ಟಾಪರ್ ಆಗಿದ್ದಾರೆ.
|
3 |
+
ಮರು ಮೌಲ್ಯಮಾಪನದಲ್ಲಿ 625ಕ್ಕೆ 624 ಅಂಕಗಳನ್ನು ಪಡೆಯುವ ಮೂಲಕ ದ್ವಿತೀಯ ಸ್ಥಾನವನ್ನು ಅಲಂಕರಿಸಿದ್ದಾರೆ.ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟದಾಗ ವಿದ್ಯಾರ್ಥಿನಿ ಸುದೀಕ್ಷಾ ಎಂ.ಡಿ ಅವರಿಗೆ 625ಕ್ಕೆ 620 ಅಂಕಗಳು ಬಂದಿದ್ದವು. ಐದು ವಿಷಯಗಳಲ್ಲಿ 100ಕ್ಕೆ 100 ಅಂಕ ಪಡೆದಿದ್ದ ಸುದೀಕ್ಷ ಎಂ.ಡಿ ಅವರಿಗೆ ಗಣಿತ ವಿಷಯದಲ್ಲಿ 95 ಅಂಕಳು ಬಂದಿದ್ದವು.
|
4 |
+
ಸಂಸ್ಕೃತ 125 ಇಂಗ್ಲಿಷ್ 100 ಕನ್ನಡ 100 ವಿಜ್ಞಾನ 100 ಸಮಾಜ 100 ಗಣಿತದಲ್ಲಿ 95 ಅಂಕ ಬಂದಿತ್ತು. ನಂತರ ಸುದೀಕ್ಷಾ ಗಣೀತ ವಿಷಯವನ್ನು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟವಾಗಿದ್ದು, ಸುಧೀಕ್ಷಾ ಗಣಿತದಲ್ಲಿ 99 ಅಂಕ ಪಡೆದಿದ್ದಾರೆ.
|
5 |
+
ಇದೀಗ 625ಕ್ಕೆ 624 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಎರಡನೇ ಟಾಪರ್ ಆಗಿದ್ದಾರೆ.ಬಾಗಲಕೋಟೆ ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು 625/625ಕ್ಕೆ ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
|
6 |
+
ಒಟ್ಟು 7 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದರು. ಮರು ಮೌಲ್ಯಮಾಪನದಲ್ಲಿ 624 ಅಂಕ ಪಡೆಯುವ ಮೂಲಕ ದ್ವಿತೀಯ ಸ್ಥಾನದ ಪಟ್ಟಿಯಲ್ಲಿ ಸುದೀಕ್ಷಾ 8ನೇಯವರಾಗಿದ್ದಾರೆ.
|
eesanje/url_46_120_8.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ 13 ಅಭ್ಯರ್ಥಿಗಳಿಗೆ ಠೇವಣಿ ನಷ್ಟ
|
2 |
+
ಬೆಂಗಳೂರು,ಜೂ.5-ಇಡೀ ರಾಷ್ಟ್ರದ ಗಮನಸೆಳೆದು ಹೈವೋಲ್ಟೇಜ್ ಕ್ಷೇತ್ರವೆಂದೇ ಪರಿಗಣಿತವಾಗಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ 13 ಅಭ್ಯರ್ಥಿಗಳು ನೋಟಾಗಿಂತಲೂ ಕಡಿಮೆ ಮತಗಳನ್ನು ಪಡೆದು ಠೇವಣಿ ಕಳೆದುಕೊಂಡಿದ್ದಾರೆ.ಮಂಜುನಾಥ್ ಮತ್ತು ಸುರೇಶ್ ಎಂಬ ಹೆಸರಿನ ಇತರೆ ಅಭ್ಯರ್ಥಿಗಳಿಗೂ ನೋಟಾಗಿಂತಲೂ ಕಡಿಮೆ ಮತಗಳು ದೊರೆತಿರುವುದು ವಿಶೇವಾಗಿದೆ.
|
3 |
+
ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹೃದಯ ತಜ್ಞ ಡಾ.ಸಿ.ಎನ್.ಮಂಜುನಾಥ್ 1079002 ಮತಗಳನ್ನು ಪಡೆದು ಒಟ್ಟಾರೆ ಶೇ.56.21ರಷ್ಟು ಮತ ಪಡೆದಿದ್ದಾರೆ. ಅಲ್ಲದೆ 2,69,647 ಮತಗಳ ಅಂತರದಿಂದ ಸಂಸದ ಡಿ.ಕೆ.ಸುರೇಶ್ ಅವರನ್ನು ಪರಾಭವಗೊಳಿಸಿದ್ದಾರೆ.
|
4 |
+
ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸುರೇಶ್ ಅವರು 8,09,355 ಮತಗಳನ್ನು ಪಡೆದಿದ್ದು ಶೇ.42.16ರಷ್ಟು ಮತ ಪಡೆದಿದ್ದಾರೆ. ಆದರೆ ಉಳಿದ ಯಾವೊಬ್ಬ ಅಭ್ಯರ್ಥಿಯೂ ಠೇವಣಿ ಉಳಿಸಿಕೊಂಡಿಲ್ಲ.
|
5 |
+
ನೋಟಾಗೆ 10,649 ಮತಗಳು ಚಲಾವಣೆಯಾಗಿವೆ. ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಅಭಿಷೇಕ್.ಕೆ 6202, ಪಕ್ಷೇತರ ಅಭ್ಯರ್ಥಿಗಳಾದ ಸುರೇಶ್.ಎಂ.ಎನ್ಗೆ 3236, ಹೇಮಾವತಿ.ಕೆ ಅವರಿಗೆ 1774, ಜಿ.ಟಿ.ಪ್ರಕಾಶ್ ಅವರಿಗೆ 1472, ಎನ್.ಕೃಷ್ಣಪ್ಪ 1402 ಮತಗಳು ದೊರೆತಿವೆ.
|
6 |
+
ಬಹುಜನ್ ಭಾರತ್ ಪಾರ್ಟಿಯ ಸಿ.ಎನ್.ಮಂಜುನಾಥ 1400, ಭಾರತೀಯ ಪ್ರಜೆಗಳ ಕಲ್ಯಾಣ ಪಕ್ಷದ ಅಭ್ಯರ್ಥಿ ಕುಮಾರ್.ಎಲ್ ಅವರಿಗೆ 1066, ಕರ್ನಾಟಕ ರಾಷ್ಟ್ರ ಸಮಿತಿಯ ಮೊಹಮದ್ ಮಜಾದಿ ಪಾಷ 821, ನರಸಿಂಹಮೂರ್ತಿ.ಜೆ.ಪಿ ಅವರಿಗೆ 813, ಕರುನಾಡ ಪಾರ್ಟಿಯ ಸುರೇಶ್.ಎಸ್ 798, ಸಿಸಿಪಿಯ ವಸಿಷ್ಠ.ಜೆ 584, ವೈಎಸ್ಇಪಿಯ ಮೊಹಮದ್ ದಸ್ತಗೀರ್ ಅವರಿಗೆ 486, ವಿಸಿಕೆಯ ಎಚ್.ವಿ.ಚಂದ್ರಶೇಖರ ಅವರಿಗೆ 480 ಮತಗಳು ಲಭಿಸಿವೆ. 5,516 ಅಂಚೆ ಮತಗಳು ಸೇರಿದಂತೆ 19,19,540 ಮತಗಳು ಈ ಕ್ಷೇತ್ರದಲ್ಲಿ ಚಲಾವಣೆಯಾಗಿದ್ದವು.
|
eesanje/url_46_120_9.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮತ್ತಿಬ್ಬರು ಎಸ್ಐಟಿ ವಶಕ್ಕೆ
|
2 |
+
ಬೆಂಗಳೂರು ಜೂ. 5– ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಮತ್ತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದೆ.ಈ ಪ್ರಕರಣದಲ್ಲಿ ನಾಗರಾಜ ಹಾಗೂ ನಾಗೇಶ ಎಂಬುವರನ್ನು ವಶಕ್ಕೆ ಪಡೆಯಲಾಗಿದ್ದು, ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಮಾಹಿತಿ ಸಂಗ್ರಹಿಸುತ್ತಿದೆ.
|
3 |
+
ಹೈದ್ರಾಬಾದ್ನ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಸತ್ಯನಾರಾಯಣ ಹಾಗೂ ಈಗಾಗಲೇ ಅಮಾನತುಗೊಂಡಿರುವ ನಿಗಮದ ಹಿಂದಿನ ಎಂ.ಡಿ. ಪದನಾಭ ಹಾಗೂ ಅಕೌಂಟೆಂಟ್ ಪರಶುರಾಮರನ್ನು ಬಂಧಿಸಲಾಗಿದೆ.ಈ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ಎಸ್ಐಟಿ ಹಲವು ಮಾಹಿತಿಗಳನ್ನು ಕಲೆ ಹಾಕಿದೆ.
|
4 |
+
ಎಂ.ಜಿ. ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಿಂದ ಹಲವು ಖಾತೆಗಳಿಗೆ ಹಣ ವರ್ಗಾವಣೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ.
|
eesanje/url_46_121_1.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಚುನಾವಣೆಯಲ್ಲಿ ಸೋತ ಡಿ.ಕೆ.ಸುರೇಶ್ ಅವರನ್ನು ಭೇಟಿ ಮಾಡಿದ ಸಚಿವ ಜಮೀರ್ ಅಹಮದ್
|
2 |
+
ಬೆಂಗಳೂರು,ಜೂ.5-ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸೋಲು ಕಂಡ ಸಂಸದ ಡಿ.ಕೆ.ಸುರೇಶ್ ಅವರನ್ನು ವಸತಿ ಹಾಗೂ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಸೇರಿದಂತೆ ಹಲವಾರು ಮಂದಿ ಭೇಟಿ ಮಾಡಿ ಬೆಂಬಲ ಸೂಚಿಸಿದ್ದಾರೆ.
|
3 |
+
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶದಲ್ಲೇ ಅತ್ಯುತ್ತಮವಾಗಿ ಕೆಲಸ ಮಾಡಿದ ಸಂಸದರ ಪೈಕಿ ಡಿ.ಕೆ.ಸುರೇಶ್ ಮುಂಚೂಣಿಯಲ್ಲಿದ್ದರು. ಬೇರೆಯವರು ಭಾನುವಾರ ರಜೆ ತೆಗೆದುಕೊಳ್ಳುತ್ತಿದ್ದರು. ಆದರೆ ಡಿ.ಕೆ.ಸುರೇಶ್ ಆ ದಿನವೂ ಕೂಡ ವಿಶ್ರಾಂತಿ ಪಡೆಯದೆ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಅಂಥವರು ಸೋತಿದ್ದು ನೋವು ತಂದಿದೆ ಎಂದರು.
|
4 |
+
ಜೆಡಿಎಸ್-ಬಿಜೆಪಿ ಮೈತ್ರಿಯಿಂದಾಗಿ ಡಿ.ಕೆ.ಸುರೇಶ್ ಸೋಲು ಕಂಡಿಲ್ಲ. ಜನ ಸೋಲಿಸಿದ್ದಾರೆ. ಉತ್ತಮವಾಗಿ ಕೆಲಸ ಮಾಡುವವರನ್ನು ಸೋಲಿಸಿದ್ದು ಅಚ್ಚರಿ ಮೂಡಿಸಿದೆ. ರಾಜ್ಯದಲ್ಲಿ ಕಳೆದ ಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಮಾತ್ರ ಗೆದ್ದಿದ್ದೆವು. ಈ ಬಾರಿ 9 ರಲ್ಲಿ ಗೆಲುವು ಕಂಡಿದ್ದೇವೆ. ಇದು ಸಮಾಧಾನ ತರುವ ವಿಚಾರ ಎಂದು ಹೇಳಿದರು.
|
5 |
+
ಬಿಜೆಪಿಯ ಶಾಸಕರಾದ ಎಸ್.ಡಿ.ಸೋಮಶೇಖರ್, ಶಿವರಾಂ ಹೆಬ್ಬಾರ್ ಅವರು ಡಿ.ಕೆ.ಸುರೇಶ್ ಅವರ ಮನೆಗೆ ಆಗಮಿಸಿ ಸುದೀರ್ಘ ಚರ್ಚೆ ನಡೆಸಿದರು.ಕಾಂಗ್ರೆಸ್ ಪಕ್ಷದ ಹಲವು ಶಾಸಕರು ಡಿ.ಕೆ.ಸುರೇಶ್ ಅವರಿಗೆ ಸಮಾಧಾನ ಹೇಳಿದ್ದು ಕಂಡುಬಂದಿತು.
|
eesanje/url_46_121_10.txt
ADDED
@@ -0,0 +1,30 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ
|
2 |
+
ಬೆಂಗಳೂರು,ಜೂ.4-ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದ ಅಭ್ಯರ್ಥಿಯಾಗಿದ್ದಾರೆ. ವಿಜೇತ ಕಾಗೇರಿ ಅವರು 3,33,590 ಮತಗಳ ಅಂತರದಿಂದ ಗೆದ್ದಿದ್ದಾರೆ. ಒಟ್ಟು 7,77,887 ಮತಗಳು ಪಡೆದರೆ, ಕಾಂಗ್ರೆಸ್ ಅಂಜಲಿ ನಿಂಬಾಳ್ಕರ್ ಅವರು 4,43,296 ಮತಗಳನ್ನು ಪಡೆದಿದ್ದಾರೆ.
|
3 |
+
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರು 2,84,620 ಮತಗಳ ಅಂತರದಿಂದ ಗೆದ್ದಿದ್ದಾರೆ.ರಾಜ್ಯದಲ್ಲಿ ಎರಡನೇ ಅತಿಹೆಚ್ಚು ಮತಗಳಿಂದ ಗೆದ್ದ ಅಭ್ಯರ್ಥಿ ಎಂಬ ಹೆಗ್ಗಳಿಕೆ ಕುಮಾರಸ್ವಾಮಿಗೆ ಸಲ್ಲುತ್ತದೆ. ಒಟ್ಟು 8,51,881 ಮತಗಳನ್ನು ಎಚ್ಡಿಕೆ ಪಡೆದರೆ, ಜೆಡಿಎಸ್ ಅಭ್ಯರ್ಥಿ ವೆಂಕಟರಮಣೇಗೌಡ ಅವರು 5,67,261 ಮತಗಳನ್ನು ಪಡೆದಿದ್ದಾರೆ.
|
4 |
+
ಬಾರೀ ಜಿದ್ದಾಜಿದ್ದಿನ ಕಣವಾಗಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರು 2,68,094 ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ.
|
5 |
+
ಒಟ್ಟು 10,75, 533 ಮತಗಳನ್ನು ಪಡೆದ ಡಾ.ಮಂಜುನಾಥ್ ಅವರು ತಮ ಪ್ರತಿಸ್ಪರ್ಧಿ ಕಾಂಗ್ರೆಸ್ನ ಡಿ.ಕೆ.ಸುರೇಶ್ ಅವರನ್ನು ಪರಾಭವಗೊಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ 8,74,059 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.
|
6 |
+
ಬಾಗಲಕೋಟೆ -ಬಿಜೆಪಿ- ಗದ್ದಿಗೌಡರ್ – 6,67,441ಕಾಂಗ್ರೆಸ್ ಸಂಯುಕ್ತ ಪಾಟಿಲ್ -6,00,741ಗೆಲುವಿನ ಅಂತರ- 66,700
|
7 |
+
ಬೆಂಗಳೂರು ಕೇಂದ್ರ -ಬಿಜೆಪಿ – ಪಿ.ಸಿ.ಮೋಹನ್- 6,14,800ಕಾಂಗ್ರೆಸ್ -ಮನ್ಸೂರ್ ಅಲಿಖಾನ್ -608366ಗೆಲುವಿನ ಅಂತರ- 35,000
|
8 |
+
ಬೆಂಗಳೂರು ಉತ್ತರ -ಬಿಜೆಪಿ- ಶೋಭಾ ಕರಂದ್ಲಾಜೆ – 9,15,553ಕಾಂಗ್ರೆಸ್ -ಪ್ರೊ.ರಾಜುಗೌಡ-2,61,465ಗೆಲುವಿನ ಅಂತರ -2,59,341ಬೆಂಗಳೂರು ಗ್ರಾಮಾಂತರ -ಬಿಜೆಪಿ- ಡಾ.ಸಿ.ಎನ್.ಮಂಜುನಾಥ್ – 10,75,553ಕಾಂಗ್ರೆಸ್- ಡಿ.ಕೆ.ಸುರೇಶ್ -807459ಗೆಲುವಿನ ಅಂತರ -2,68,049ಬೆಂಗಳೂರು ದಕ್ಷಿಣ -ಬಿಜೆಪಿ- ತೇಜಸ್ವಿ ಸೂರ್ಯ- 7,23,310ಕಾಂಗ್ರೆಸ್- ಸೌಮ್ಯ ರೆಡ್ಡಿ-4,56,661ಗೆಲುವಿನ ಅಂತರ – 2,65,649ಬೆಳಗಾವಿ -ಬಿಜೆಪಿ-ಜಗದೀಶ್ ಶೆಟ್ಟರ್-63,53,72ಕಾಂಗ್ರೆಸ್- ಮೃಣಾಳ್ ಹೆಬ್ಬಾಳ್ಕರ್-491657ಗೆಲುವಿನ ಅಂತರ – 1,43,715
|
9 |
+
ಬಳ್ಳಾರಿ -ಬಿಜೆಪಿ- ಬಿ.ಶ್ರೀರಾಮುಲು- 6,20,127ಕಾಂಗ್ರೆಸ್- ಬಿ.ತುಕಾರಾಂ-7,18,727ಗೆಲುವಿನ ಅಂತರ – 98600
|
10 |
+
ಬೀದರ್ -ಬಿಜೆಪಿ- ಭಗವಂತ ಖೂಬಾ- 5,65,766ಕಾಂಗ್ರೆಸ್- ಸಾಗರ್ ಈಶ್ವರ್ ಖಂಡ್ರೆ -6,65,162ಗೆಲುವಿನ ಅಂತರ – 1,29,369
|
11 |
+
ಬಿಜಾಪುರ -ಬಿಜೆಪಿ- ರಮೇಶ್ ಜಿಣಜಿಣಗಿ- 651634ಕಾಂಗ್ರೆಸ್- ರಾಜು ಅಲಗೂರು- 5,78,555ಗೆಲುವಿನ ಅಂತರ – 73,129
|
12 |
+
ಚಾಮರಾಜನಗರ -ಕಾಂಗ್ರೆಸ್- ಸುನೀಲ್ ಬೋಸ್- 5,75,234ಬಿಜೆಪಿ -ಬಾಲರಾಜ್.ಎಸ್- 444465ಗೆಲುವ��ನ ಅಂತರ – 130770
|
13 |
+
ಚಿಕ್ಕಬಳ್ಳಾಪುರ-ಬಿಜೆಪಿ-ಡಾ.ಕೆ.ಸುಧಾಕರ್- 819588ಕಾಂಗ್ರೆಸ್- ಎಂ.ಎಸ್.ರಕ್ಷಾ ರಾಮಾನ್ಯ-657489ಗೆಲುವಿನ ಅಂತರ – 162099
|
14 |
+
ಚಿಕ್ಕೋಡಿ -ಕಾಂಗ್ರೆಸ್- ಪ್ರಿಯಾಂಕ ಸತೀಶ್ ಜಾರಕಿಹೊಳಿ -627877ಬಿಜೆಪಿ- ಅಣ್ಣಾ ಸಾಹೇಬ್ ಜೊಲ್ಲೆ-531823ಗೆಲುವಿನ ಅಂತರ – 96,054
|
15 |
+
ಚಿತ್ರದುರ್ಗ- ಬಿಜೆಪಿ- ಗೋವಿಂದ ಕಾರಜೋಳ-684890ಕಾಂಗ್ರೆಸ್- ಬಿ.ಎನ್.ಚಂದ್ರಪ್ಪ – 636769ಗೆಲುವಿನ ಅಂತರ – 48121
|
16 |
+
ದಕ್ಷಿಣಕನ್ನಡ-ಬಿಜೆಪಿ- ಕ್ಯಾಪ್ಟನ್ ಬ್ರಿಜೇಶ್ ಚೌಟ- 764132ಕಾಂಗ್ರೆಸ್- ಪದರಾಜ್ ಪೂಜಾರಿ-614924ಗೆಲುವಿನ ಅಂತರ – 149202
|
17 |
+
ದಾವಣಗೆರೆ -ಕಾಂಗ್ರೆಸ್- ಪ್ರಭಾ ಮಲ್ಲಿಕಾರ್ಜುನ್- 573788ಬಿಜೆಪಿ- ಗಾಯತ್ರಿ ಸಿದ್ದೇಶ್ವರ್-552702ಗೆಲುವಿನ ಅಂತರ – 21086
|
18 |
+
ಧಾರವಾಡ -ಬಿಜೆಪಿ- ಪ್ರಹ್ಲಾದ್ ಜೋಷಿ- 713649ಕಾಂಗ್ರೆಸ್- ವಿನೋದ್ ಅಸುಟಿ-617616ಗೆಲುವಿನ ಅಂತರ – 96033
|
19 |
+
ಕಲಬುರಗಿ -ಕಾಂಗ್ರೆಸ್- ರಾಮಕೃಷ್ಣ ದೊಡ್ಡಮನಿ – 652321ಬಿಜೆಪಿ- ಡಾ.ಉಮೇಶ್.ಜೆ. ಜಾಧವ್ -625116ಗೆಲುವಿನ ಅಂತರ – 27205
|
20 |
+
ಹಾಸನ -ಕಾಂಗ್ರೆಸ್- ಶ್ರೇಯಸ್ ಎನ್.ಪಟೇಲ್- 6,70,274ಜೆಡಿಸ್-ಪ್ರಜ್ವಲ್ ರೇವಣ್ಣ -626536ಗೆಲುವಿನ ಅಂತರ – 43738
|
21 |
+
ಹಾವೇರಿ -ಬಿಜೆಪಿ-ಬಸವರಾಜ ಬೊಮಾಯಿ- 705538ಕಾಂಗ್ರೆಸ್- ಆನಂದ್ ಸ್ವಾಮಿಗದ್ದಿದೇವರ ಮಠ್-662025ಗೆಲುವಿನ ಅಂತರ – 43,513
|
22 |
+
ಕೋಲಾರ-ಜೆಡಿಎಸ್- ಕೆ.ಮಲ್ಲೇಶ್ ಬಾಬು- 691481ಕಾಂಗ್ರೆಸ್- ಕೆ.ವಿ.ಗೌತಮ್-620093ಗೆಲುವಿನ ಅಂತರ – 71388
|
23 |
+
ಕೊಪ್ಪಳ -ಕಾಂಗ್ರೆಸ್- ಕೆ.ರಾಜಶೇಖರ್ ಬಸವರಾಜ್ ಯತ್ನಾಳ್- 6,33,480ಬಿಜೆಪಿ-ಡಾ.ಬಸವರಾಜ್ -590030ಗೆಲುವಿನ ಅಂತರ – 43450
|
24 |
+
ಮಂಡ್ಯ -ಜೆಡಿಎಸ್- ಎಚ್.ಡಿ.ಕುಮಾರಸ್ವಾಮಿ- 851881ಕಾಂಗ್ರೆಸ್- ವೆಂಕಟರಮಣಗೌಡ-567261ಗೆಲುವಿನ ಅಂತರ -284620
|
25 |
+
ಮೈಸೂರು-ಕೊಡುಗು -ಬಿಜೆಪಿ- ಯದುವೀರ್ ಒಡೆಯರ್ -795503ಕಾಂಗ್ರೆಸ್- ಎಂ.ಲಕ್ಷ್ಮಣ- 656241ಗೆಲುವಿನ ಅಂತರ – 139262
|
26 |
+
ರಾಯಚೂರು -ಕಾಂಗ್ರೆಸ್- ಜಿ.ಕುಮಾರ್ ನಾಯಕ್-642212ಬಿಜೆಪಿ- ರಾಜ ಅಮರೇಶ್ ನಾಯಕ್- 563065ಗೆಲುವಿನ ಅಂತರ – 79147
|
27 |
+
ಶಿವಮೊಗ್ಗ -ಬಿಜೆಪಿ-ಬಿ.ವೈ.ರಾಘವೇಂದ್ರ-778721ಕಾಂಗ್ರೆಸ್-ಗೀತಾ ಶಿವರಾಜ್ಕುಮಾರ್-535006ಗೆಲುವಿನ ಅಂತರ -243715
|
28 |
+
ತುಮಕೂರು -ಬಿಜೆಪಿ-ವಿ.ಸೋಮಣ್ಣ-720946ಕಾಂಗ್ರೆಸ್-ಎಸ್.ಪಿ.ಮುದ್ದಹನುಮೇಗೌಡ-545352ಗೆಲುವಿನ ಅಂತರ – 175594
|
29 |
+
ಉಡುಪಿಚಿಕ್ಕಮಗಳೂರು-ಬಿಜೆಪಿ-ಕೋಟಾ ಶ್ರೀನಿವಾಸ್ಪೂಜಾರಿ- 716569ಕಾಂಗ್ರೆಸ್-ಜಯಪ್ರಕಾಶ್ ಹೆಗಡೆ -463498ಗೆಲುವಿನ ಅಂತರ – 253079
|
30 |
+
ಉತ್ತರಕನ್ನಡ-ಬಿಜೆಪಿ-ವಿಶ್ವೇಶ್ವರ ಹೆಗಡೆ ಕಾಗೇರಿ-777887ಕಾಂಗ್ರೆಸ್- ಡಾ.ಅಂಜಲಿ ನಿಂಬಾಳ್ಕರ್-443296ಗೆಲುವಿನ ಅಂತರ -334591
|
eesanje/url_46_121_11.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ರಾಜ್ಯದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆದ್ದರೂ, ಮತಗಳಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ
|
2 |
+
ಬೆಂಗಳೂರು, ಜೂ.4-ರಾಜ್ಯದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆದ್ದಿದ್ದರೂ ಆಡಳಿತಾರೂಢ ಕಾಂಗ್ರೆಸ್ ಮತಗಳಿಕೆಯಲ್ಲಿ ಮುಂದಿದೆ. ಬಿಜೆಪಿಗಿಂತಲೂ ಸರಿಸುಮಾರು ಶೇ.0.50 ರಷ್ಟು ಕಾಂಗ್ರೆಸ್ ಹೆಚ್ಚು ಮತ ಗಳಿಸಿದೆ. ಆದರೆ ಮತ ಕ್ರೋಡೀಕರಣದಲ್ಲಿ ವಿಫಲವಾಗಿದ್ದು, ಗೆಲುವಿನಲ್ಲಿ ಮುಗ್ಗರಿಸಿದೆ.
|
3 |
+
ಪ್ರಕಟಿತ ಫಲಿತಾಂಶಗಳ ಪ್ರಕಾರ, ಬಿಜೆಪಿ ಶೇ.45.01 ರಷ್ಟು ಮತ ಗಳಿಸಿತ್ತು. ಕಾಂಗ್ರೆಸ್ ಶೇ.45.45 ರಷ್ಟು ಮತ ಗಳಿಸಿದೆ. ಜೆಡಿಎಸ್ ಶೇ.6.67 ರಷ್ಟು ಮತ ಪಡೆದಿದೆ.ರಾಷ್ಟ್ರಮಟ್ಟದಲ್ಲಿ ಬಿಜೆಪಿ ಶೇ.38.40 ರಷ್ಟು ಮತ ಪಡೆದು ಎಲ್ಲಾ ಪಕ್ಷಗಳಿಗಿಂತಲೂ ಸಿಂಹಪಾಲು ಹೊಂದಿದೆ. ಕಾಂಗ್ರೆಸ್ ಶೇ.24.11 ರಷ್ಟು ಮತ ಪಡೆದು ಎರಡನೇ ಸ್ಥಾನದಲ್ಲಿದೆ.
|
4 |
+
ಅತೀ ಹೆಚ್ಚು ಮತ ಪಡೆದ ಮೂರನೇ ಪಕ್ಷದ ಸ್ಥಾನದಲ್ಲಿ ಸಮಾಜವಾದಿ ಪಕ್ಷವಿದ್ದು, ಶೇ.4.05 ರಷ್ಟು ಮತ ಗಳಿಸಿದೆ.ಟಿಡಿಪಿ, ವೈಎಸ್ಆರ್, ಇಐಟಿಸಿ, ಸಿಪಿಐಎಂ, ಡಿಎಂಕೆ ಪಕ್ಷಗಳೂ ಗಮನಾರ್ಹ ಮತಗಳಿಕೆ ಮಾಡಿವೆ.
|
eesanje/url_46_121_12.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ವಿಧಾನಪರಿಷತ್ ಚುನಾವಣೆ : 11 ಅಭ್ಯರ್ಥಿಗಳ ನಾಮಪತ್ರ , ಅವಿರೋಧ ಆಯ್ಕೆ ಖಚಿತ
|
2 |
+
ಬೆಂಗಳೂರು, ಜೂ.4– ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್ನ 11 ಸ್ಥಾನಗಳಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳ ಪರಿಶೀಲನೆ ನಡೆದಿದ್ದು, ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ನಾಮಪತ್ರಗಳು ಮಾನ್ಯಗೊಂಡಿದ್ದು ಅವಿರೋಧ ಆಯ್ಕೆಯಾಗುವುದು ಖಚಿತವಾಗಿದೆ.
|
3 |
+
ಕಾಂಗ್ರೆಸ್ ಅಭ್ಯರ್ಥಿಗಳಾದ ಐವಾನ್ ಡಿಸೋಜಾ, ಕೆ.ಗೋವಿಂದರಾಜ್, ಜಗದೇವ ಗುತ್ತೇದಾರ್, ಬಲ್ಕೀಸ್ ಬಾನು, ಎನ್.ಎಸ್.ಬೋಸರಾಜು, ಡಾ.ಯತೀಂದ್ರ.ಎಸ್. ಹಾಗೂ ಎ.ವಸಂತಕುಮಾರ್ ಅವರ ನಾಮಪತ್ರಗಳು ಮಾನ್ಯವಾಗಿದ್ದು , ಅವಿರೋಧ ಆಯ್ಕೆಯಾಗಲಿದ್ದಾರೆ.
|
4 |
+
ಜೆಡಿಎಸ್ನ ಅಭ್ಯರ್ಥಿ ಟಿ.ಎನ್.ಜವರಾಯಿಗೌಡ ಅವರ ನಾಮಪತ್ರವೂ ಮಾನ್ಯವಾಗಿದ್ದು ಅವಿರೋಧ ಆಯ್ಕೆಯಾಗಲಿದ್ದಾರೆ. ಬಿಜೆಪಿ ಅಭ್ಯರ್ಥಿಗಳಾದ ಸಿ.ಟಿ.ರವಿ, ಮೂಳೆ ಮಾರುತಿರಾವ್ ಹಾಗೂ ರವಿಕುಮಾರ್.ಎನ್ ಅವರ ನಾಮಪತ್ರಗಳು ಪುರಸ್ಕೃತವಾಗಿದ್ದು, ಅವಿರೋಧ ಆಯ್ಕೆಯಾಗಲಿದ್ದಾರೆ.
|
5 |
+
ಚುನಾವಣಾ ಕಣದಲ್ಲಿ 11 ಅಭ್ಯರ್ಥಿಗಳು ಮಾತ್ರ ಉಳಿದಿದ್ದು,ನಾಮಪತ್ರ ವಾಪಸ್ ಪಡೆಯಲು ಜೂನ್ 6 ಕೊನೆಯ ದಿನವಾಗಿದ್ದು, ಅಂದು ಸಂಜೆ ಎಲ್ಲ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಅಧಿಕೃತವಾಗಿ ಪ್ರಕಟಿಸಲಾಗುತ್ತದೆ.
|
eesanje/url_46_121_2.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಕೋಲಾರ-ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಸೋಲಿಗೆ ಒಳಜಗಳವೇ ಕಾರಣ :ಕೆ.ಎಚ್.ಮುನಿಯಪ್ಪ
|
2 |
+
ಬೆಂಗಳೂರು,ಜೂ.5-ಕೋಲಾರ-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲಿಗೆ ಒಳಜಗಳವೇ ಕಾರಣ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ವಿಶ್ಲೇಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಎರಡೂ ಕ್ಷೇತ್ರಗಳಲ್ಲಿ ವಿಧಾನಸಭಾ, ಲೋಕಸಭಾ ಚುನಾವಣೆಯಲ್ಲಿ ಹಲವಾರು ಬಾರಿ ಕಾಂಗ್ರೆಸ್ ಗೆದ್ದಿದೆ. ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ನಮಗೆ ಸೋಲಾಯಿತು ಎಂದರು.
|
3 |
+
ಕಾಂಗ್ರೆಸ್ನಲ್ಲಿ ಜನರಿಗೆ ಒಗ್ಗಟ್ಟಿನ ಸಂದೇಶ ರವಾನಿಸಲು ವೈಫಲ್ಯಗಳಾದವು. ತಾವು ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಜೊತೆ ಚರ್ಚಿಸಿ ಸಾಕಷ್ಟು ಪ್ರಯತ್ನ ಮಾಡಿದ್ದೆ. ಆದರೆ ಕೆಲವರು ಕಾಂಗ್ರೆಸ್ ಪಕ್ಷ ಮುಗಿದು ಹೋದರೂ ಸರಿ, ರಾಜಿಯಾಗುವುದು ಬೇಡ ಎಂದು ನಿರ್ಧಾರ ಮಾಡಿಕೊಂಡಂತಿದೆ. ಹಾಗಾಗಿ ಇಂತಹ ಫಲಿತಾಂಶ ಬಂದಿದೆ ಎಂದು ಹೇಳಿದರು.
|
4 |
+
30 ವರ್ಷ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿದವರಿಗೆ ಫಲಿತಾಂಶ ನೋವು ತಂದಿದೆ. ಮುಂದೆ ಇದನ್ನು ಸರಿಪಡಿಸಬೇಕು. ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿಯಲ್ಲಿ ಗೆಲ್ಲಲೇಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಗುಂಪುಗಾರಿಕೆಯನ್ನು ಸರಿಪಡಿಸಲು ರಾಜ್ಯ ನಾಯಕರು ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದರು.
|
5 |
+
ನಮ್ಮ ಕುಟುಂಬಕ್ಕೆ ಟಿಕೆಟ್ ನೀಡಬಾರದು ಎಂದು ಪಟ್ಟು ಹಿಡಿದವರು, ಚುನಾವಣೆಯ ನಾಯಕತ್ವ ವಹಿಸಿದವರು ಕೆ.ಎಚ್.ಮುನಿಯಪ್ಪ ಕೋಲಾರ ಚುನಾವಣೆಗೆ ಬರಬಾರದು ಎಂದು ಹಠ ಹಿಡಿದವರು ಚುನಾವಣೆ ಸೋಲಿನ ಹೊಣೆಗಾರಿಕೆಯನ್ನು ಹೊರಬೇಕಿದೆ ಎಂದು ಹೇಳಿದರು.ಹೈಕಮಾಂಡ್ ಸೂಚನೆ ನೀಡಿದ ಕಡೆಗಳಲೆಲ್ಲಾ ಪ್ರಚಾರ ಮಾಡಿದ್ದೇನೆ, ಜವಾಬ್ದಾರಿಯನ್ನು ನಿಭಾಯಿಸಿದ್ದೇನೆ. ಆದರೆ ಜನರಿಗೆ ಕಾಂಗ್ರೆಸ್ನ ಎರಡೂ ಬಣಗಳು ಒಟ್ಟಾಗಿವೆ ಎಂದು ಸಂದೇಶ ನೀಡುವಲ್ಲಿ ವಿಫಲವಾದೆವು ಎಂದು ಹೇಳಿದರು.
|
6 |
+
ದಕ್ಷಿಣ ಕರ್ನಾಟಕದಲ್ಲಿ ಕಾಂಗ್ರೆಸ್ಗೆ ವಿರುದ್ಧವಾಗಿ ಹೋರಾಟ ಮಾಡುತ್ತಿದ್ದುದು ಜೆಡಿಎಸ್. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಒಂದಾಗಿದ್ದರಿಂದಾಗಿ ಕಾಂಗ್ರೆಸ್ಗೆ ಹಿನ್ನಡೆಯಾಗಿದೆ. ರಾಜ್ಯಸರ್ಕಾರದ ಗ್ಯಾರಂಟಿಗಳು ಕೈ ಹಿಡಿದಿದ್ದರಿಂದಾಗಿ ಮತ ಗಳಿಕೆಯ ಪ್ರಮಾಣ ಹೆಚ್ಚಾಗಿದೆ ಎಂದು ವ್ಯಾಖ್ಯಾನಿಸಿದರು.
|
7 |
+
ಲೋಕಸಭಾ ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಸಚಿವರು ರಾಜೀನಾಮೆ ನೀಡಬೇಕು ಎಂದು ಎಲ್ಲಿಯೂ ಚರ್ಚೆಯಾಗಿಲ್ಲ. ಚುನಾವಣೆಯಲ್ಲಿ ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಫಲಿತಾಂಶದಲ್ಲಿ ಗೆಲುವಿನ ಸಂಖ್ಯೆಯಲ್ಲಿ ಹಿನ್ನಡೆಯಾಗಿದ್ದರೂ ಮತಗಳಿಕೆ ಹೆಚ್ಚಾಗಿದೆ. ಹೀಗಾಗಿ ಸಚಿವರ ತಲೆದಂಡದ ಪ್ರಶ್ನೆ ಇಲ್ಲ ಎಂದು ಹೇಳಿದರು.
|
8 |
+
ಜೆಡಿಎಸ್-ಬಿಜೆಪಿಯ ಮೈತ್ರಿ ಹಿನ್ನೆಲೆಯಲ್ಲಿ ನಾವು ಹೊಸ ಚಿಂತನೆ ಮಾಡಬೇಕು, ಕಾಂಗ್ರೆಸ್ನಲ್ಲಿದ್ದು ಕಾಂಗ್ರೆಸ್ ಪಕ್ಷವನ್ನೇ ಸೋಲಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವೇ ಅವರಿಗೆ ಬುದ್ಧಿ ಹೇಳಬೇಕಿದೆ ಎಂದು ಮುನಿಯಪ್ಪ ಕರೆ ನೀಡಿದರು.
|
eesanje/url_46_121_3.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಚುನಾವಣಾ ಫಲಿತಾಂಶದಿಂದ ಸಮಾಧಾನವಾಗಿದೆ, ಸಂತೋಷ ಇಲ್ಲ : ಸಚಿವ ಪರಮೇಶ್ವರ್
|
2 |
+
ಬೆಂಗಳೂರು,ಜೂ.5-ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ನಿರೀಕ್ಷಿತ ಫಲಿತಾಂಶ ಬಂದಿಲ್ಲ. 20 ಸ್ಥಾನಗಳನ್ನು ಗೆಲ್ಲುವ ಲೆಕ್ಕಾಚಾರ ಈಡೇರಿಲ್ಲ. ಆದರೆ ಒಂದು ಸ್ಥಾನದಲ್ಲಿದ್ದ ಕಾಂಗ್ರೆಸ್ 09 ಕ್ಕೆ ಏರಿಕೆಯಾಗಿದೆ. ಮತ ಗಳಿಕೆಯಲ್ಲೂ ಗಣನೀಯ ಏರಿಕೆಯಾಗಿದೆ. ಫಲಿತಾಂಶ ಸಮಾಧಾನ ತಂದಿದೆ. ಆದರೆ ಸಂತೋಷ ತಂದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಶ್ಲೇಷಿಸಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತಾರೂಢ ಪಕ್ಷ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಬೇಕಿತ್ತು. ಆದರೆ ಜನ ನಮಗೂ ಎಚ್ಚರಿಕೆ ನೀಡಿದ್ದಾರೆ. ಒಂದು ವರ್ಷದ ಆಡಳಿತ ಜನಸಾಮಾನ್ಯರಿಗೆ ಸಮಾಧಾನ ತಂದಿಲ್ಲ ಎಂಬುದನ್ನು ತೋರಿಸುತ್ತದೆ. ಮುಂದಿನ ನಾಲ್ಕು ವರ್ಷಗಳಲ್ಲಿ ಒಳ್ಳೆಯ ಆಡಳಿತ ನೀಡುವತ್ತ ಮುಖ್ಯಮಂತ್ರಿ, ಅಧ್ಯಕ್ಷರು ಸೇರಿ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಜನರ ತೀರ್ಪನ್ನು ಸ್ವಾಗತಿಸುತ್ತೇವೆ.
|
4 |
+
ಸರ್ಕಾರ ಗ್ಯಾರಂಟಿ ನೀಡಿದ ಹೊರತಾಗಿಯೂ ಜನರ ತೀರ್ಪು ಬೇರೆಯದೇ ಆಗಿದೆ ಎಂದು ಹೇಳಿದರು. 2019 ರ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಫಲ ನೀಡಲಿಲ್ಲ. ಈ ಬಾರಿಯ ಜೆಡಿಎಸ್-ಬಿಜೆಪಿ ಮೈತ್ರಿ ಪರಿಣಾಮ ಬೀರಿದೆ. ಬಹುಶಃ ಅದು ಪರಿಣಾಮ ಬೀರುವುದಿಲ್ಲ ಎಂಬ ಅಂದಾಜಿನಲ್ಲಿ ಕಾಂಗ್ರೆಸಿಗರಿದ್ದೆವು. ಆದರೆ ಅದು ಹುಸಿಯಾಗಿದೆ ಎಂದರು.
|
5 |
+
ಚುನಾವಣಾ ಫಲಿತಾಂಶದ ಬಗ್ಗೆ ಮಾಧ್ಯಮಗಳ ಸಮೀಕ್ಷೆಯಷ್ಟೇ ಸುಳ್ಳಾಗಿಲ್ಲ. ಕಾಂಗ್ರೆಸ್ಸಿಗರ ಲೆಕ್ಕಾಚಾರವೂ ಹುಸಿಯಾಗಿದೆ. ಹೀಗಾಗಿ ಮಾಧ್ಯಮ ಹಾಗೂ ಕಾಂಗ್ರೆಸ್ ಎರಡೂ ಒಂದೇ ವೇದಿಕೆಯಲ್ಲಿದ್ದೇವೆ. ಚುನಾವಣೆಯಲ್ಲಿ ಇನ್ನೂ ಸ್ವಲ್ಪ ಶ್ರಮ ಹಾಕಿದ್ದರೆ ಮತ್ತೆ ನಾಲ್ಕೈದು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿತ್ತು. 50 ಸಾವಿರ ಮತಗಳೊಳಗೆ ಸೋಲು ಕಂಡಿರುವ ಕ್ಷೇತ್ರಗಳಲ್ಲಿ ಗೆಲ್ಲಬಹುದಿತ್ತು ಎಂದರು.
|
6 |
+
ತುಮಕೂರಿನಲ್ಲಿ ನಮ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ 100 ಕ್ಕೆ 100 ಗೆಲ್ಲುತ್ತಾರೆ ಎಂಬ ವಿಶ್ವಾಸವಿತ್ತು. ಫಲಿತಾಂಶ ಏರುಪೇರಾಗಿದೆ. ಹೀಗಾಗಿ ತಾವು ಮತ್ತು ಸಚಿವ ಕೆ.ಎನ್.ರಾಜಣ್ಣ ಪಕ್ಷದ ವರಿಷ್ಠರಿಗೆ ವಿವರಣೆ ಕೊಡುತ್ತೇವೆ ಎಂದು ಹೇಳಿದರು.
|
7 |
+
ಐತಿಹಾಸಿಕ ಲೋಕಸಭಾ ಚುನಾವಣೆಯನ್ನು ಇಡೀ ವಿಶ್ವವೇ ಗಮನಿಸುತ್ತಿತ್ತು. ಆಧುನಿಕ ಯುಗದಲ್ಲಿ ಪ್ರಜಾಪ್ರಭುತ್ವ ಸಿದ್ಧಾಂತದಡಿ ಜನ ಹೇಗೆ ಮತ ಚಲಾಯಿಸಿದ್ದಾರೆ ಎಂಬ ಕುತೂಹಲವಿತ್ತು. ರಾಜ್ಯ ಸೇರಿದಂತೆ ದೇಶದ ಜನ ತಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಚುನಾವಣೋತ್ತರ ಸಮೀಕ್ಷಾ ವರದಿಯಲ್ಲಿ ಏಕಪಾಳಯದ ಒಲವು ವ್ಯಕ್ತವಾಗಲಿದೆ ಎಂದು ಬಿಂಬಿಸಲಾಗಿತ್ತು. ಇಂಡಿಯಾ ಮೈತ್ರಿಕೂಟ ಧೂಳೀಪಟವಾಗಲಿದೆ. ಮೋದಿ ನೇತೃತ್ವದ ಬಿಜೆಪಿ 400 ಸ್ಥಾನಗಳನ್ನು ಗೆಲ್ಲುತ್ತದೆ ಎಂಬ ವರದಿಗಳಿದ್ದವು. ಇದನ್ನು ಜನರ ತ���ರ್ಪು ತಿರುವು ಮುರುವು ಮಾಡಿರುವುದು ಫಲಿತಾಂಶದಲ್ಲಿ ಕಂಡುಬಂದಿದೆ.
|
8 |
+
ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿರುವುದಲ್ಲದೆ, ಪ್ರಜಾಪ್ರಭುತ್ವದಲ್ಲಿ ವಿರೋಧಪಕ್ಷ ಗಟ್ಟಿಯಾಗಿ ಉಳಿದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ 10 ವರ್ಷ ಆಡಳಿತಕ್ಕೆ ಎಚ್ಚರಿಕೆಯ ಗಂಟೆ ನೀಡಿದ್ದು, ಸಂಪೂರ್ಣ ಬಹುಮತ ನೀಡಿಲ್ಲ. ಅವರೂ ಕೂಡ ಮೈತ್ರಿಕೂಟದ ಮೇಲೆಯೇ ಅವಲಂಬಿತವಾಗಿರುವ ಪರಿಸ್ಥಿತಿ ಬಂದಿದೆ.
|
9 |
+
ಮೈತ್ರಿಕೂಟ ಸರ್ಕಾರದ ರಚನೆಗೆ ನಾನಾ ರೀತಿಯ ಕಸರತ್ತುಗಳು ನಡೆಯುತ್ತಿವೆ. ಮೋದಿ ನೇತೃತ್ವದ ಸರ್ಕಾರ ಅಥವಾ ಕಾಂಗ್ರೆಸ್ ನೇತೃತ್ವದ ಸರ್ಕಾರ ಯಾವುದು ರಚನೆಯಾಗಲಿದೆ ಎಂಬುದು ಕುತೂಹಲ ಇದೆ. ಈಗಲೂ ಇಂಡಿಯಾ ಕೂಟ ಸರ್ಕಾರ ರಚಿಸುವ ಸಾಧ್ಯತೆಯಿದೆ. ಆಂಧ್ರ ಪ್ರದೇಶದ ಚಂದ್ರಬಾಬು ನಾಯ್ಡು, ಬಿಹಾರದ ನಿತೀಶ್ ಕುಮಾರ್ ನಮಗೆ ಬೆಂಬಲ ನೀಡಿದರೆ ಸರ್ಕಾರ ರಚಿಸಬಹುದು ಎಂದರು.
|
10 |
+
ಈ ಹಿಂದೆ ಬಿಜೆಪಿ ಅವರನ್ನು ಯಾವ ರೀತಿ ನಡೆಸಿಕೊಂಡಿತ್ತು ಎಂಬುದನ್ನು ಸರಿಸಿಕೊಂಡು ಅವರಿಬ್ಬರೂ ಮನಸ್ಸು ಬದಲಾಯಿಸಿದರೆ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾಗಲಿದೆ. ಪ್ರಧಾನಿ ಯಾರಾಗಲಿದ್ದಾರೆ ಎಂಬುದನ್ನು ಸದ್ಯಕ್ಕೆ ನಾವು ಹೇಳಲಾಗುವುದಿಲ್ಲ ಎಂದು ಹೇಳಿದರು.
|
11 |
+
ಕಾಂಗ್ರೆಸ್ನ ರಾಷ್ಟ್ರೀಯ ನಾಯಕರು ದೇಶದಾದ್ಯಂತ ಪಾದಯಾತ್ರೆ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಿದರು. ಮಲ್ಲಿಕಾರ್ಜುನ ಖರ್ಗೆಯವರು ಇಳಿವಯಸ್ಸಿನಲ್ಲೂ ದೇಶದೆಲ್ಲೆಡೆ ಪ್ರಚಾರ ನಡೆಸಿದರು. ಪ್ರಿಯಾಂಕ ಗಾಂಧಿ ಕೂಡ ಪ್ರಚಾರದಲ್ಲಿ ತೊಡಗಿಸಿಕೊಂಡರು.ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎಲ್ಲೆಡೆ ಪ್ರವಾಸ ನಡೆಸಿದ್ದಲ್ಲದೆ, ಕಾರ್ಯಕರ್ತರೂ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದರು ಎಂದರು.
|
eesanje/url_46_121_4.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯ, ನಾಳೆ ಕೋರ್ಟ್ ಮುಂದೆ ಪ್ರಜ್ವಲ್ ರೇವಣ್ಣ ಹಾಜರು
|
2 |
+
ಬೆಂಗಳೂರು, ಜೂ. 4 –ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದೆ. ಬಂಧನಕ್ಕೊಳಗಾಗಿರುವ ಪ್ರಜ್ವಲ್ ಅವರ ಪೊಲೀಸ್ ಕಸ್ಟಡಿ ಅವಧಿ ನಾಳೆಗೆ ಮುಗಿಯಲಿರುವುದರಿಂದ ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ.
|
3 |
+
ಜರ್ಮನಿಯಿಂದ ಮೇ 31ರಂದು ಮಧ್ಯರಾತ್ರಿ ಬೆಂಗಳೂರಿಗೆ ಬಂದ ಪ್ರಜ್ವಲ್ ಅವರನ್ನು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ವಶಕ್ಕೆ ಪಡೆದು ನಂತರ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಅವರನ್ನು ನ್ಯಾಯಾಲಯ 6 ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡಿದೆ.
|
4 |
+
ಪ್ರಜ್ವಲ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಕೆಲವೊಂದು ಪ್ರಶ್ನೆಗಳಿಗೆ ನಿರ್ಧಿಷ್ಟವಾದ ಉತ್ತರ ನೀಡಿಲ್ಲ ಎಂಬುದು ಗೊತ್ತಾಗಿದೆ.ಹೊಳೆನರಸಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಕೇಳಲಾದ ಪ್ರಶ್ನೆಗಳಿಗೆ ಪ್ರಜ್ವಲ್ ಸೂಕ್ತ ಉತ್ತರ ನೀಡಿಲ್ಲ. ತಮ ಮನೆಕೆಲಸದಾಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಯಾರೆಂಬುದು ಗೊತ್ತಿಲ್ಲ, ನಮಗೆ ಅವರ ಪರಿಚಯವೇ ಇಲ್ಲ ಎಂದು ಉತ್ತರಿಸಿದ್ದಾರೆ.
|
5 |
+
ನಿಮ ತಾಯಿ ಇಲ್ಲದಿದ್ದಾಗ ನೀವು ಹೊಳೆನರಸೀಪುರದ ಮನೆಗೆ ಏಕೆ ಹೋಗುತ್ತಿದ್ದೀರಿ ಎಂದು ಎಸ್ಐಟಿ ಪ್ರಶ್ನಿಸಿದಾಗ ಮೌನವಾಗಿದ್ದಾರೆ. ಅಲ್ಲದೇ ಮೊಬೈಲ್ನಲ್ಲಿರುವ ಪೋಟೋಗಳನ್ನು ತೋರಿಸಿ ಇವರು ಯಾರೆಂದು ಕೇಳಿದರೆ ಅದಕ್ಕೂ ಸಹ ಉತ್ತರ ನೀಡಿಲ್ಲ ಎಂಬುದು ಗೊತ್ತಾಗಿದೆ.
|
eesanje/url_46_121_5.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಬೆಳ್ಳಂಬೆಳಿಗ್ಗೆ ಕುಖ್ಯಾತ ರೌಡಿಶೀಟರ್ ಚೈಲ್ಡ್ ರವಿಯ ಬರ್ಬರ ಹತ್ಯೆ
|
2 |
+
ಹಾಸನ, ಜೂ. 5-ಬೆಳ್ಳಂಬೆಳಿಗ್ಗೆ ಕುಖ್ಯಾತ ರೌಡಿಶೀಟರ್ ಚೈಲ್ಡ್ ರವಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಹೇಮಾವತಿ ನಗರ ಬಡಾವಣೆಯಲ್ಲಿ ನಡೆದಿದೆ.
|
3 |
+
ಕುಡಿಯಲು ನೀರು ತರಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ನಾಲ್ವರು ದುಷ್ಕರ್ಮಿಗಳು ಸಾರ್ವಜನಿಕರು ಓಡಾಡುತ್ತಿದ್ದ ಸಮಯದಲ್ಲೇ ಬೈಕಿಗೆ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿ ಮಚ್ಚಿನಿಂದ ಮನಬಂದಂತೆ ಕೊಚ್ಚಿ ಪರಾರಿಯಾಗಿದ್ದಾರೆ.
|
4 |
+
ವಾಯುವಿಹಾರ ಮಾಡುತ್ತಿದ್ದ ಜನರು ಶಾಲೆಗೆ ಹೋಗಲು ಬಸ್ಗಾಗಿ ಕಾಯುತ್ತಿದ್ದ ಮಕ್ಕಳು ಹಾಗೂ ಅಂಗಡಿಗಳಲ್ಲಿ ದಿನನಿತ್ಯ ವಸ್ತುಗಳನ್ನು ಖರೀದಿ ಮಾಡಲು ಜನರು ಬರುತ್ತಿದ್ದಾಗಲೇ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಈ ವೇಳೆ ಅದೇ ಸಮಯದಲ್ಲಿ ಶಾಲಾ ಬಸ್ಸೊಂದು ತೆರಳಿದ್ದು, ಅದರೊಳಗಿದ್ದ ಮಕ್ಕಳು ರಕ್ತವನ್ನು ಕಂಡು ಆಘಾತಕ್ಕೊಳಗಾಗಿದ್ದು, ಕೆಲ ಮಕ್ಕಳು ಜೋರಾಗಿ ಬಸ್ನಲ್ಲೇ ಚೀರಿದ್ದಾರೆ.
|
5 |
+
ಈ ಹಿಂದೆ ಚೈಲ್ಡ್ ರವಿ ಸಹ್ಯಾದ್ರಿ ಚಿತ್ರಮಂದಿರದ ಎದುರು ನಡೆದಿದ್ದ ಸ್ಲಂ ಮಂಜನ ಹತ್ಯೆ ಸೇರಿದಂತೆ ಕೊಲೆ, ಅತ್ಯಾಚಾರ, ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಜಾಮೀನು ಪಡೆದು ಜೈಲಿನಿಂದ ಹೊರಗೆ ಬಂದಿದ್ದ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಯಾರು ಕೊಲೆ ಮಾಡಿದ್ದಾರೆ ಎಂಬುದು ತಿಳಿದುಬಂದಿಲ್ಲ.
|
6 |
+
ಸುದ್ದಿ ತಿಳಿಯುತ್ತಿದ್ದಂತೆ ಪೆನ್ಷನ್ ಮೊಹಲ್ಲ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಸುತ್ತಮುತ್ತಲಿನ ಸಿಸಿಟಿವಿಗಳನ್ನು ಪರಿಶೀಲಿಸಿ ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.ಶಾಸಕರ ನಿವಾಸದ ಕೂಗಳತೆ ದೂರದಲ್ಲೇ ಬೆಳ್ಳಂಬೆಳಿಗ್ಗೆ ಹತ್ಯೆ ನಡೆದಿರುವುದು ಇಡೀ ಬಡಾವಣೆಯ ಜನರನ್ನು ಬೆಚ್ಚಿಬೀಳಿಸಿದೆ.
|
eesanje/url_46_121_6.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಉತ್ತರಖಾಂಡದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ 19 ಚಾರಣಿಗರ ರಕ್ಷಣೆಗೆ ಸರ್ಕಾರ ಯತ್ನ
|
2 |
+
ಬೆಂಗಳೂರು,ಜೂ.5-ಉತ್ತರಖಾಂಡದ ಶಾಸ್ತ್ರತಾಳ ಮಯಳಿಗೆಯಲ್ಲಿ ಪ್ರತಿಕೂಲ ವಾತಾವರಣದಿಂದ ಸಂಕಷ್ಟಕ್ಕೆ ಸಿಲುಕಿರುವ ಚಾರಣಿಗರನ್ನು ಕರ್ನಾಟಕ ಸರ್ಕಾರ ರಕ್ಷಿಸಲು ಎಲ್ಲಾ ಪ್ರಯತ್ನಗಳನ್ನೂ ಮಾಡಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
|
3 |
+
ಕರ್ನಾಟಕದ 19 ಚಾರಣಿಗರು ಹಾಗೂ ನಾಲ್ವರು ಮಾರ್ಗದರ್ಶಕರು ಉತ್ತರಖಾಂಡದ ಎತ್ತರದ ಶಾಸ್ತ್ರತಾಳ ಮಯಳಿಗೆ ಎಂಬ ಪ್ರದೇಶಕ್ಕೆ ತೆರಳಿದ ಸಂದರ್ಭದಲ್ಲಿ ಅಲ್ಲಿನ ಪ್ರತಿಕೂಲ ವಾತಾವರಣದಿಂದಾಗಿ ಈ ತಂಡ ಅಪಾಯದಲ್ಲಿದೆ ಎಂಬ ಮಾಹಿತಿ ನಿನ್ನೆ ರಾತ್ರಿ ನಮಗೆ ಬಂದಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
|
4 |
+
ಚಾರಣಿಗರ ತಂಡದ ಕೆಲವರು ಕೊಖ್ಲಿ ಶಿಬಿರದಲ್ಲಿ ಇದ್ದಾರೆ ಎಂಬ ಮಾಹಿತಿ ಇದೆ. ಕಷ್ಟದಲ್ಲಿರುವ ಚಾರಣಿಗರನ್ನು ರಕ್ಷಿಸಲು ನಾವು ಈಗಾಗಲೇ ಉತ್ತರಖಾಂಡ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಗೃಹ ಇಲಾಖೆಯೊಂದಿಗೆ ಸಂಪರ್ಕದಲ್ಲಿರುವುದಾಗಿ ಅವರು ಹೇಳಿದ್ದಾರೆ.
|
5 |
+
ಭಾರತೀಯ ವಾಯುಪಡೆಯ ಹೆಲಿಕಾಫ್ಟರ್ ಚಾರಣಿಗರ ರಕ್ಷಣೆಗಾಗಿ ಇಂದು ಬೆಳಿಗ್ಗೆ ಉತ್ತರ ಕಾಶಿ ತಲುಪಿದೆ. ಅಲ್ಲದೆ, 20 ನಿರ್ವಹಣಾ ಪಡೆ ಭೂಮಾರ್ಗವಾಗಿ ಶಿಬಿರದ ಬಳಿಗೆ ತೆರಳುತ್ತಿದೆ. ಸಂಕಷ್ಟದಲ್ಲಿರುವ ಚಾರಣಿಗರನ್ನು ರಕ್ಷಿಸುವ ಎಲ್ಲಾ ಪ್ರಯತ್ನವನ್ನೂ ಪ್ರಾರಂಭಿಸಿರುವುದಾಗಿ ಅವರು ತಿಳಿಸಿದ್ದಾರೆ.
|
eesanje/url_46_121_7.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು
|
2 |
+
ಚಿಕ್ಕಬಳ್ಳಾಪುರ, ಜೂ.5-ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಅವರ ಚಿಕ್ಕಬಳ್ಳಾಪುರದ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಿರುವ ಘಟನೆ ತಡರಾತ್ರಿ ನಡೆದಿದೆ. ನಗರದ ಬಿಬಿ ರಸ್ತೆಗೆ ಹೊಂದಿಕೊಂಡಂತಿರುವ ಕಂದವಾರ ರಸ್ತೆಯಲ್ಲಿನ ಶಾಸಕರ ಮನೆ ಮೇಲೆ ರಾತ್ರಿ ಸುಮಾರು 11.30ರ ಸಮಯದಲ್ಲಿ ಕಿಡಿಗೇಡಿಗಳು ಕಲ್ಲು ತೂರಿದಾಗ ಮನೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ.
|
3 |
+
ಕಳೆದ ಒಂದು ವರ್ಷದಿಂದ ಶಾಂತವಾಗಿದ್ದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ನಿನ್ನೆ ಲೋಕಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಶಾಸಕರು ಹಾಗೂ ನೂತನ ಸಂಸದರ ಬೆಂಬಲಿಗರ ಮಧ್ಯೆ ರಾಜಕೀಯ ದ್ವೇಷ ಆರಂಭಗೊಂಡಿದ್ದು, ಇದಕ್ಕೆ ಪ್ರಥಮವಾಗಿ ಶಾಸಕರ ನಿವಾಸದ ಮೇಲೆ ಕಲ್ಲು ತೂರಾಟವಾಗಿದೆ.
|
4 |
+
ಸುದ್ದಿ ತಿಳಿಯುತ್ತಿದ್ದಂತೆ ಇಂದು ಬೆಳಿಗ್ಗೆ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮನೆಯ ಸುತ್ತ ಪರಿಶೀಲನೆ ನಡೆಸಿ ನಂತರ ಮನೆಯಲ್ಲಿ ಸಿಸಿಟಿವಿಯಲ್ಲಿ ದಾಖಲಾಗಿರುವ ಪುಟೇಜ್ಗಳನ್ನು ಪರಿಶೀಲಿಸಿ ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
|
eesanje/url_46_121_8.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಲೋಕಸಭಾ ಚುನಾವಣೆ ಫಲಿತಾಂಶದಿಂದ ಜೆಡಿಎಸ್ ಪ್ರಾಬಲ್ಯ ಸಾಬೀತಾಗಿದೆ : ಶರವಣ
|
2 |
+
ಬೆಂಗಳೂರು,ಜೂ.5-ಪ್ರಸಕ್ತ ಲೋಕಸಭಾ ಚುನಾವಣೆ ಫಲಿತಾಂಶ ಜೆಡಿಎಸ್ ಮತ್ತೊಮೆ ಬಲಿಷ್ಠ ಪಕ್ಷ ಎನ್ನುವುದನ್ನು ಸಾಬೀತು ಮಾಡಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ತಿಳಿಸಿದ್ದಾರೆ.
|
3 |
+
ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಮಾಜಿ ಪ್ರಧಾನಿ ದೇವೇಗೌಡರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ದೇಶದ ಜನತೆ ಮನ್ನಣೆ ನೀಡಿದ್ದಾರೆ. ಸತತ ಮೂರನೇ ಬಾರಿಗೆ ಎನ್ಡಿಎ ಗೆಲುವಿನ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ ಎಂದು ಹೇಳಿದ್ದಾರೆ.
|
4 |
+
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ರಾಜ್ಯದ ಜನತೆ ಈ ಚುನಾವಣೆ ಮೂಲಕ ಅಧಿಕೃತ ಮುದ್ರೆ ಒತ್ತಿದ್ದಾರೆ. ಈ ಮೈತ್ರಿ ಒಂದು ಪ್ರಭಲ ರಾಜಕೀಯ ಶಕ್ತಿ ಎನ್ನುವುದು ಸಾಬೀತಾಗಿದೆ, ವಿಶೇಷವಾಗಿ ಇಡೀ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಮತ್ತೆ ಪ್ರಾಬಲ್ಯ ಸಾಧಿಸಿ ಬಲಿಷ್ಠ ಪಕ್ಷವಾಗಿ ಹೊರಬಂದಿದೆ.
|
5 |
+
ಜೆಡಿಎಸ್ ಪಕ್ಷವನ್ನು ಮುಗಿಸುವ ಸಂಚು ವಿಲವಾಗಿದ್ದು, ಎರಡು ಸ್ಥಾನಗಳಲ್ಲಿ ಗೆದ್ದಿರುವ ಜೆಡಿಎಸ್ 9 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವಿಗೆ ಸಹಕಾರ ನೀಡಿದೆ.ರಾಷ್ಟ್ರ ರಾಜಕಾರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಶ್ನಾತೀತ ನಾಯಕರಾಗಿ ಹೊರ ಹೊಮಿದ್ದಾರೆ. ಮತ್ತೊಮೆ ಎನ್ಡಿಎ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಆಡಳಿತ ಯಂತ್ರ ದುರುಪಯೋಗ ಮಾಡಿಕೊಂಡರೂ ಹೆಚ್ಚಿನ ಸ್ಥಾನ ಗೆಲ್ಲಲು ಆಗಿಲ್ಲ, ಗ್ಯಾರಂಟಿ ಯೋಜನೆಗಳು ಫಲ ನೀಡಿಲ್ಲ ಎಂದು ಅವರು ಟೀಕಿಸಿದ್ದಾರೆ.
|
eesanje/url_46_121_9.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಮೊದಲ ಪ್ರಯತ್ನದಲ್ಲೇ ಗೆಲುವು ಸಾಧಿಸಿದ ನಿವೃತ್ತ ಐಎಎಸ್ ಅಧಿಕಾರಿ ಜಿ.ಕುಮಾರ್ ನಾಯಕ್
|
2 |
+
ರಾಯಚೂರು,ಜೂ.4-ನಿವೃತ್ತ ಐಎಎಸ್ ಅಧಿಕಾರಿ ಜಿ.ಕುಮಾರ್ ನಾಯಕ್ ತಮ್ಮ ಮೊದಲ ಪ್ರಯತ್ನದಲ್ಲೇ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಪ್ರವೇಶಿಸಿದ್ದಾರೆ. ಐಎಎಸ್ ಅಧಿಕಾರಿಯಾಗಿ ಹಲವಾರು ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದ ಕುಮಾರ್ ನಾಯಕ್ ಸಾಕಷ್ಟು ಹೆಸರು ಮಾಡಿದ್ದರು.
|
3 |
+
ನಿವೃತ್ತಿಯ ಬೆನ್ನಲ್ಲೇ ಅಚ್ಚರಿ ಎಂಬಂತೆ ಕಾಂಗ್ರೆಸ್ನಿಂದ ಬಿ ಫಾರಂ ಪಡೆದುಕೊಂಡಿದ್ದರು.ರಾಯಚೂರು ಲೋಕಸಭೆ ಚುನಾವಣೆ ತೀವ್ರ ಕುತೂಹಲ ಕೆರಳಿಸಿತ್ತು. ಬಿಜೆಪಿ ಅಭ್ಯರ್ಥಿ ರಾಜ ಅಮರೇಶ್ ನಾಯ್ಕ ಅವರ ವಿರುದ್ಧ ಕುಮಾರ್ ನಾಯಕ್ಶೇ.52ರಷ್ಟು ಮತ ಪಡೆದುಕೊಂಡು ಆಯ್ಕೆಯಾಗಿದ್ದಾರೆ.
|
4 |
+
ರಾಯಚೂರು ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಪಾಲಿಗೆ ಕಬ್ಬಿಣದ ಕಡಲೆಯಾಗಿತ್ತು. ಹಿರಿಯ ರಾಜಕಾರಣಿ ರಾಜ ಅಮರೇಶ್ ನಾಯಕ ಅವರನ್ನು ಸೋಲಿಸುವ ಸವಾಲನ್ನು ತೆಗೆದುಕೊಂಡು ಅಖಾಡಕ್ಕಿಳಿದ ಕುಮಾರ್ ನಾಯಕ್ ಕಾಂಗ್ರೆಸಿಗರನ್ನು ಒಗ್ಗೂಡಿಸುವಲ್ಲಿ ಯಶಸ್ವಿಯಾದರು. ಯಾವುದೇ ವಿವಾದಗಳಿಲ್ಲದೆ ಸರ್ಕಾರಿ ಸೇವೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದ ಕುಮಾರ್ ನಾಯಕ್ ಈಗ ರಾಜ್ಯ ರಾಜಕಾರಣದಲ್ಲಿ 2ನೇ ಇನ್ನಿಂಗ್ಸ್ ಆರಂಭಿಸಿದ್ದಾರೆ.
|
eesanje/url_46_122_1.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ವಿ.ಸೋಮಣ್ಣ ಅವರ ಕೈ ಹಿಡಿದ ಕಲ್ಪತರು ನಾಡಿನ ಜನತೆ
|
2 |
+
ತುಮಕೂರು, ಜೂ. 4-ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜನಗರ ಹಾಗೂ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಮಾಜಿ ಸಚಿವ ವಿ. ಸೋಮಣ್ಣ ಅವರನ್ನು ಕಲ್ಪತರು ನಾಡಿನ ಮತದಾರರು ಆಶೀರ್ವದಿಸಿದ್ದಾರೆ. ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಜನಮನ ಗೆದ್ದಿದ್ದ ವಿ. ಸೋಮಣ್ಣನವರು ಪಕ್ಷದ ವರಿಷ್ಠರ ಮಾತಿಗೆ ಬೆಲೆಕೊಟ್ಟು ವರುಣಾ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹಾಗೂ ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್ನ ಪುಟ್ಟರಂಗಶೆಟ್ಟಿ ವಿರುದ್ಧ ಸ್ಪರ್ಧಿಸಿದರು. ಆದರೆ ಅಲ್ಲಿ ಭಾರಿ ಹಿನ್ನಡೆಯಾಗಿ ಸೋಲು ಕಂಡಿದ್ದರು.
|
3 |
+
ಈ ಸಂದರ್ಭದಲ್ಲಿ ಪಕ್ಷದ ಹೈಕಮಾಂಡ್ ಆತಸ್ಥೈರ್ಯ ತುಂಬಿ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡಿ ಕಣ್ಣಕ್ಕಿಳಿಸಿತ್ತು.ತುಮಕೂರಿಗೂ ಹಾಗೂ ಸೋಮಣ್ಣ ಅವರಿಗೂ ಅವಿನಾಭ ಸಂಬಂಧವಿದ್ದು, ಕಾಂಗ್ರೆಸ್ನ ಅಭ್ಯರ್ಥಿ ಮುದ್ದಹನುಮೇಗೌಡರ ಪರವಾಗಿ ಸ್ಪರ್ಧಿಸಿ ಜಿಲ್ಲೆಯಾದ್ಯಂತ ಪ್ರತಿ ತಾಲೂಕು, ಹೋಬಳಿ, ಗ್ರಾಮಗಳಿಗೆ ಭೇಟಿ ನೀಡಿ ನಿಮ ಸೇವೆಗೆ ಒಂದು ಅವಕಾಶ ಕಲ್ಪಿಸಿಕೊಡುವಂತೆ ಮನವಿ ಮಾಡಿದ್ದರು.
|
4 |
+
ಈ ವೇಳೆ ಹೊರಗಿನಿಂದ ಬಂದ ಸೋಮಣ್ಣ ನಮ ಕೈಗೆ ಸಿಕ್ತಾರ, ಅಭಿವೃದ್ಧಿ ಕೆಲಸ ಮಾಡುತ್ತಾರಾ ಎಂದು ವಿರೋಧಪಕ್ಷ ಕಾಂಗ್ರೆಸ್ ಅಪಪ್ರಚಾರ ಮಾಡಿತ್ತು. ಆದರೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಮಲಕ್ಕೆ ಮತ ನೀಡಿ ಆಯ್ಕೆ ಮಾಡಿದ್ದಾರೆ.
|
5 |
+
ಪ್ರಾರಂಭದಿಂದಲೂ 19 ರೌಂಡ್ಗಳಲ್ಲೂ ಮುದ್ದಹನುಮೇಗೌಡ ಅವರಿಗಿಂತ ಮುನ್ನಡೆ ಕಾಯ್ದುಕೊಂಡು ಬಂದಿದ್ದು, ವಿಜಯಲಕ್ಷ್ಮೀ ಸೋಮಣ್ಣ ಅವರಿಗೆ ಒಲಿದಿದ್ದಾಳೆ. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ಮತ ಎಣಿಕೆ ಕೇಂದ್ರದ ಮುಂಭಾಗ ಅಳವಡಿಸಲಾಗಿದ್ದ ಬೃಹತ್ ಎಲ್ಇಡಿ ಪರದೆಯ ಮೂಲಕ ಶಾಂತಚಿತ್ತವಾಗಿ ಪ್ರತಿ ರೌಂಡ್ನ ಫಲಿತಾಂಶವನ್ನು ಕುತೂಹಲದಿಂದ ಸೋಮಣ್ಣ ಅವರು ವೀಕ್ಷಿಸಿ ಗೆಲುವು ಸಾಧಿಸುತ್ತಿದ್ದಂತೆ ಅವರ ಮುಖವೂ ಕೂಡ ಕಮಲದಂತೆ ಅರಳಿತು.
|
6 |
+
ಸಚಿವರಿಗೆ ಮುಖಭಂಗ:ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದು, ಅವರಿಗೆ ಭಾರಿ ಮುಖಭಂಗವಾಗಿದೆ. ಶತಾಯಗತಾಯ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಅವರನ್ನು ಗೆಲ್ಲಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹಸಚಿವರು ಆಗಿರುವ ಜಿ. ಪರಮೇಶ್ವರ್ ಹಾಗೂ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಭಾರಿ ಕಸರತ್ತು ನಡೆಸಿದ್ದರು.
|
7 |
+
ಆದರೆ ಅವರ ಪ್ರಯತ್ನಗಳು ಫಲಕೊಡಲಿಲ್ಲ. ಮತದಾರರು ಜಿಲ್ಲೆಯಲ್ಲಿ ಮತ್ತೆ ಬಿಜೆಪಿಯ ಕೈಹಿಡಿದಿದ್ದಾರೆ. ಇಲ್ಲಿಯವರೆಗೂ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಹೊರಗಿನಿಂದ ಬಂದು ಸ್ಪರ್ಧಿಸಿ ಗೆದ್ದವರಿಲ್ಲ. ಆದರೆ ಸೋಮಣ್ಣ ಅವರು ರಾಜಧಾನಿಯಿಂದ ಬಂದು ಜಯ ಸಾಧಿಸಿರುವುದು ಇತಿಹಾಸವಾಗಿದೆ.
|
8 |
+
ಸಂಭ್ರಮಾಚರಣೆ:ವಿ. ಸೋಮಣ್ಣ ಅವರು ಮುನ್ನಡೆ ಸಾಧಿಸುತ್ತಿದ್ದಂತೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಅದೇ ರೀತಿ ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದಲ್ಲೂ ಸಹ ಕಾರ್ಯಕರ್ತರು ಪರಸ್ಪರ ಸಿಹಿ ತಿನಿಸಿ ಸಂಭ್ರಮಾಚರಣೆ ಮಾಡಿದರು.
|
9 |
+
ಕೃತಜ್ಞತೆ:ಹೊರಗಿನಿಂದ ಬಂದ ನನ್ನನ್ನು ಕ್ಷೇತ್ರದ ಮತದಾರರು ಗೆಲ್ಲಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಸರ್ವೋತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.
|
eesanje/url_46_122_10.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಪರಿಷತ್ ಟಿಕೆಟ್ ಸಿಕ್ಕ ಖುಷಿಯಲ್ಲಿ ಕಣ್ಣೀರಿಟ್ಟ ಜವರಾಯಿಗೌಡ
|
2 |
+
ಬೆಂಗಳೂರು, ಜೂ.3-ವಿಧಾನಸಭೆಯಿಂದ ವಿಧಾನಪರಿಷತ್ ಚುನಾವಣೆಗೆ ತಮನ್ನು ಅಭ್ಯರ್ಥಿ ಮಾಡಿದ ದೇವೇಗೌಡರ ಕುಟುಂಬಕ್ಕೆ ಋಣಿಯಾಗಿರುವುದಾಗಿ ಜೆಡಿಎಸ್ ಮುಖಂಡ ಜವರಾಯಿಗೌಡ ಕಣ್ಣೀರು ಹಾಕಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2009 ರಿಂದಲೂ ಯಶವಂತಪುರದಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ. 2013, 2014, 2023 ರ ಚುನಾವಣೆಗಳಲ್ಲಿ ಸೋಲು ಕಂಡಿದ್ದೇನೆ. ವಿಧಾನಪರಿಷತ್ಗೆ ಆಯ್ಕೆ ಮಾಡುವುದಾಗಿ ಕುಮಾರಸ್ವಾಮಿಯವರು ತಮಗೆ ಭರವಸೆ ನೀಡಿದ್ದರು. ಈಗ ಅದನ್ನು ಉಳಿಸಿಕೊಂಡಿದ್ದಾರೆ ಎಂದರು.
|
4 |
+
ಕಾರ್ಯಕರ್ತರ ಭಾವನೆಗಳಿಗೆ ಕುಮಾರಸ್ವಾಮಿ ಸ್ಪಂದಿಸಿದ್ದಾರೆ. ಪಕ್ಷಸಂಘಟನೆಯಲ್ಲಿ ನಾನು ಅವರ ಜೊತೆಗೆ ನಿಂತು ಕೆಲಸ ಮಾಡುತ್ತೇನೆ, ಶಕ್ತಿ ನೀಡುತ್ತೇನೆ. ಅವಕಾಶ ನೀಡಿದ ದೇವೇಗೌಡರು, ಕುಮಾರಸ್ವಾಮಿ, ಜಿ.ಟಿ.ದೇವೇಗೌಡರು ಪಕ್ಷದ ಎಲ್ಲಾ ಶಾಸಕರಿಗೂ ಧನ್ಯವಾದಗಳು ಎಂದು ಭಾವುಕರಾದರು.
|
eesanje/url_46_122_11.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
“ಸಂಪುಟದಿಂದ ವಜಾಗೊಳಿಸಿದರೆ ಉಳಿದವರ ಬಂಡವಾಳ ಬಯಲು ಮಾಡುವುದಾಗಿ ಬಿ.ನಾಗೇಂದ್ರ ಬ್ಲಾಕ್ಮೇಲ್ ಮಾಡಿದ್ದಾರೆ”
|
2 |
+
ಬೆಂಗಳೂರು, ಜೂ.3– ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಹಗರಣದ ಹಿನ್ನೆಲೆಯಲ್ಲಿ ತಮನ್ನು ಸಚಿವ ಸಂಪುಟದಿಂದ ಸಭೆಯಿಂದ ವಜಾಗೊಳಿಸಿದರೆ ಉಳಿದವರ ಬಂಡವಾಳ ಬಯಲು ಮಾಡುವುದಾಗಿ ಬಿ.ನಾಗೇಂದ್ರ ಮುಖ್ಯಮಂತ್ರಿಯವರನ್ನು ಬ್ಲಾಕ್ಮೇಲ್ ಮಾಡಿದ್ದಾರೆ ಎಂದು ವಿಧಾನಪರಿಷತ್ನ ವಿರೋಧಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ತಮ ಆರೋಪವನ್ನು ಪುನರ್ ಉಚ್ಚರಿಸಿದ್ದಾರೆ.
|
3 |
+
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮದಲ್ಲಿ 187 ಕೋಟಿ ರೂ.ಗಳ ದೊಡ್ಡ ಮೊತ್ತದ ಹಗರಣ ನಡೆದಿದೆ. ಅಕ್ರಮವಾಗಿ ವರ್ಗಾವಣೆಯಾಗಿರುವ ಹಣ ತೆಲಂಗಾಣಕ್ಕೆ ಹೋಗಿದೆ. ಈ ಸಂಬಂಧಪಟ್ಟಂತೆ ನಾಗೇಂದ್ರ ಅವರ ರಾಜೀನಾಮೆ ಪಡೆಯುವ ತಾಕತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಲ್ಲ ಎಂದೆನಿಸುತ್ತಿದೆ ಎಂದರು.
|
4 |
+
ನಾಗೇಂದ್ರ ಅವರ ಬ್ಲಾಕ್ಮೇಲ್ಗೆ ಹೆದರಿ ಸಿದ್ದರಾಮಯ್ಯ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಅವರು ಹೇಳಿದರು.ಮುಂದಿನ ದಿನಗಳಲ್ಲಿ ವಿಧಾನಪರಿಷತ್ನ ವಿರೋಧಪಕ್ಷದ ನಾಯಕನನ್ನಾಗಿ ಯಾರನ್ನು ಆಯ್ಕೆ ಮಾಡುತ್ತಾರೋ ಗೊತ್ತಿಲ್ಲ. ಸಿ.ಟಿ.ರವಿ ಸೇರಿದಂತೆ ಅನೇಕರು ಸಮರ್ಥರಿದ್ದಾರೆ. ಆದರೆ ಅಂತಿಮ ತೀರ್ಮಾನವನ್ನು ಪಕ್ಷ ತೆಗೆದುಕೊಳ್ಳಲಿದೆ ಎಂದರು.
|
5 |
+
ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ಎನ್ಡಿಎ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ತಿಳಿಸಿದೆ. ನರೇಂದ್ರಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ. ಸಮೀಕ್ಷೆಗಳು ಸರಿಯಾಗಿವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
|
eesanje/url_46_122_12.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸಚಿವ ನಾಗೇಂದ್ರ ಅವರಿಂದ ನಾವು ರಾಜೀನಾಮೆ ಕೇಳಿಲ್ಲ : ಸಿದ್ದರಾಮಯ್ಯ ಸ್ಪಷ್ಟನೆ
|
2 |
+
ಬೆಂಗಳೂರು, ಜೂ.3-ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ಸಚಿವ ನಾಗೇಂದ್ರ ಅವರಿಂದ ನಾವು ರಾಜೀನಾಮೆ ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
|
3 |
+
ಸಚಿವ ನಾಗೇಂದ್ರ ಅವರು ಬ್ಲಾಕ್ಮೇಲ್ ಮಾಡುತ್ತಿದ್ದಾರೆ. ಅದಕ್ಕಾಗಿ ಮುಖ್ಯಮಂತ್ರಿ ರಾಜೀನಾಮೆ ಪಡೆಯುತ್ತಿಲ್ಲ ಎಂದು ವಿಧಾನಪರಿಷತ್ ವಿರೋಧಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಅವರ ಹೇಳಿಕೆಗೆ ವಿಧಾನಸೌಧದಲ್ಲಿಂದು ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಯಾವ ಬೆದರಿಕೆಗಳೂ ಇಲ್ಲ. ನಾವು ರಾಜೀನಾಮೆ ಕೇಳಿಯೇ ಇಲ್ಲ ಎಂದರು.
|
4 |
+
ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ತನಿಖೆಗೆ ಮೊನ್ನೆಯಷ್ಟೇ ಎಸ್ಐಟಿ ರಚನೆ ಮಾಡಲಾಗಿದೆ. ಇನ್ನೂ ಯಾವುದೇ ವರದಿ ಬಂದಿಲ್ಲ. ಪ್ರಾಥಮಿಕ ವರದಿ ಬರಲಿ. ಅದರಲ್ಲಿ ಏನಿರುತ್ತದೆ ಎಂದು ನೋಡಿದ ಬಳಿಕ ನಿರ್ಧಾರ ತೆಗೆದುಕೊಳ್ಳುತ್ತೇವೆ. ನಾಗೇಂದ್ರ ಅವರಿಂದ ತಾವು ಯಾವುದೇ ವಿವರಣೆ ಕೇಳಿಲ್ಲ, ವರದಿ ಬರುವವರೆಗೂ ಕಾಯುತ್ತೇವೆ ಎಂದರು.
|
5 |
+
ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಜೂ.6ರವರೆಗೆ ಗಡುವು ನೀಡುವ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, ಅವರ್ಯಾರು ನಮಗೆ ಗಡುವು ನೀಡಲು? ಎಂದು ಪ್ರಶ್ನಿಸಿದರು.ವಿರೋಧಪಕ್ಷಗಳಿರುವುದೇ ಅನ್ಯಾಯದ ವಿರುದ್ಧ ಹೋರಾಟ ಮಾಡಬೇಕೆಂದು. ಆದರೆ ಸುಳ್ಳು ಹೇಳಿಕೊಂಡು ಹೋರಾಟ ಮಾಡುತ್ತಾರೆ ಎಂದು ವ್ಯಂಗ್ಯವಾಡಿದರು.
|
6 |
+
ಲೋಕಸಭಾ ಚುನಾವಣೋತ್ತರ ಸಮೀಕ್ಷೆ ಬಗ್ಗೆ ರಾಹುಲ್ಗಾಂಧಿಯವರು ಈಗಾಗಲೇ ಪ್ರತಿಕ್ರಿಯಿಸಿದ್ದಾರೆ. ಅದು ನರೇಂದ್ರ ಮೋದಿಯವರ ಮಾಧ್ಯಮ ಸಮೀಕ್ಷೆ ಎಂದು ಹೇಳಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಕನಿಷ್ಠ 15 ರಿಂದ 20 ಸ್ಥಾನಗಳನ್ನು ಗೆಲ್ಲಲಿದೆ. ಸಮೀಕ್ಷೆಯನ್ನು ನಾವು ತಳ್ಳಿಹಾಕುತ್ತೇವೆ ಎಂದು ಹೇಳಿದರು.
|
7 |
+
ವಿಧಾನಸಭೆಯಿಂದ ವಿಧಾನಪರಿಷತ್ಗೆ ಆಯ್ಕೆಯಾಗುವ 11 ಸದಸ್ಯರ ಪೈಕಿ ಕಾಂಗ್ರೆಸ್ನ 7 ಅಭ್ಯರ್ಥಿಗಳಿಂದ ನಾಮಪತ್ರ ಹಾಕಿಸಿದ್ದೇವೆ. ಪ್ರತಿ ಅಭ್ಯರ್ಥಿಗೂ 19 ರಿಂದ 20 ಮತಗಳು ಬೇಕಾಗುತ್ತದೆ. ನಮ ಸಂಖ್ಯಾಬಲದ ಆಧಾರದ ಮೇಲೆ ನಾವು ಏಳನ್ನೂ ಸುಲಭವಾಗಿ ಗೆಲ್ಲುತ್ತೇವೆ.
|
8 |
+
ಬಿಜೆಪಿ 3, ಜೆಡಿಎಸ್ನ ಒಬ್ಬರು ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. 11 ಕ್ಕಿಂತ ಹೆಚ್ಚು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದೇ ಇದ್ದರೆ ಚುನಾವಣೆ ನಡೆಯುವುದಿಲ್ಲ. ಅವಿರೋಧ ಆಯ್ಕೆಯಾಗುತ್ತದೆ. ಚುನಾವಣೆ ನಡೆದರೂ ನಮ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
|
9 |
+
8ನೇ ಅಭ್ಯರ್ಥಿಗಯನ್ನು ಕಣಕ್ಕಿಳಿಸುವ ಸಾಧ್ಯತೆಗಳಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಮುಂಗಾರು ಮಳೆ ಪ್ರಾರಂಭವಾಗಿದೆ. ಸರ್ಕಾರ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಆದರೂ ಮರ ಬೀಳುವುದು, ರಸ್ತೆಯಲ್ಲಿ ನೀರು ನಿಲ್ಲುವುದು ಸಾಮಾನ್ಯವಾಗಿದೆ. ರಸ್ತೆಗುಂಡಿಗಳನ್ನು ಮುಚ್ಚಲು ಈ ತಿಂಗಳ ಅಂತ್ಯದವರೆಗೂ ಗಡುವು ನೀಡಲಾಗಿದೆ ಎಂದರು.
|
eesanje/url_46_122_2.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಡಿಕೆ ಬ್ರದರ್ಸ್ಗೆ ಶಾಕ್, ಬೆಂಗಳೂರು ಗ್ರಾಮಾಂತರದಲ್ಲಿ ‘ಹೃದಯ’ವಂತ ಮಂಜುನಾಥ್ ಭರ್ಜರಿ ಗೆಲುವು
|
2 |
+
ಬೆಂಗಳೂರು,ಜೂ.4-ಜಿದ್ದಾಜಿದ್ದಿನ ರಣಕಣ ಎಂದೇ ಪರಿಗಣಿಸಲಾಗಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿಕೆ ಸಹೋದರರ ಸವಾಲು ಮೆಟ್ಟಿ ನಿಂತು ಗೆಲುವ ಸಾಧಿಸುವಲ್ಲಿ ಹೃದಯವಂತ ಡಾ.ಮಂಜುನಾಥ್ ಯಶಸ್ವಿಯಾಗಿದ್ದಾರೆ.ಒಟ್ಟು ಚಲಾವಣೆಯಾಗಿದ್ದ 1914030 ಮತಗಳಲ್ಲಿ ಡಾ.ಮಂಜುನಾಥ್ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
|
3 |
+
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ವೈದ್ಯಕೀಯ ವೃತ್ತಿಯಿಂದ ನಿವೃತ್ತಿ ಪಡೆದ ನಂತರ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಅಳಿಯ ಡಾ.ಮಂಜುನಾಥ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.
|
4 |
+
ದೇವೇಗೌಡರ ಕುಟುಂಬ ಹಾಗೂ ಡಿಕೆ ಸಹೋದರರ ನಡುವಿನ ಕಾಳಗ ಎಂದೇ ಬಿಂಬಿತವಾಗಿದ್ದ ಗ್ರಾಮಾಂತರ ಕ್ಷೇತ್ರದಲ್ಲಿ ಎರಡು ಕಡೆಯವರು ಗೆಲುವಿಗಾಗಿ ಇನ್ನಿಲ್ಲದ ಕಸರತ್ತು ನಡೆಸಿದ್ದ ಕಾರಣ ಈ ಕ್ಷೇತ್ರ ರಣಕಣವಾಗಿ ಮಾರ್ಪಾಡಾಗಿತ್ತು.
|
5 |
+
ಮಂಡ್ಯ ಮತ್ತು ಗ್ರಾಮಾಂತರ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡರೆ ತನ್ನ ವರ್ಚಸ್ಸು ವೃದ್ದಿಸುವುದರ ಜೊತೆಗೆ ಮುಖ್ಯಮಂತ್ರಿ ಪಟ್ಟಕ್ಕೆರಲು ಅನುಕೂಲವಾಗಲಿದೆ ಎಂಬ ದೃಷ್ಟಿಯಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ ಸಹೋದರನ ಗೆಲುವಿಗೆ ಪಣ ತೊಟ್ಟಿದ್ದರು.
|
6 |
+
ಆದರೆ ಕ್ಷೇತ್ರದಲ್ಲಿ ಸಹೋದರರ ಸವಾಲನ್ನು ಮೆಟ್ಟಿ ನಿಲ್ಲಬೇಕು ಎಂದು ಹಠ ಹಿಡಿದಿದ್ದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ವೈದ್ಯರಾಗಿ ನಾಡಿನಲ್ಲಿ ಮನೆ ಮಾತಾಗಿದ್ದ ಮಂಜುನಾಥ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು.
|
7 |
+
ಹೀಗಾಗಿ ಬೆಂಗಳೂರು ಗ್ರಾಮಾಂತರ ಕ್ಷೇತದ ಚುನಾವಣೆ ಮೂರು ಪಕ್ಷಗಳಿಗೂ ಪ್ರತಿಷ್ಠೆಯ ಪ್ರಶ್ನೆಯಾಗಿತ್ತು. ಸೋಲು ಗೆಲುವಿಗಾಗಿ ಕೋಟ್ಯಾಂತರ ರೂ.ಬೆಟ್ಟಿಂಗ್ ಕಟ್ಟಿಕೊಳ್ಳಲಾಗಿತ್ತು. ಇಲ್ಲಿ ಯಾರೇ ಗೆದ್ದರೂ ಬೆರಳೇಣಿಕೆ ಮತಗಳ ಅಂತರ ಎಂದೇ ಎಲ್ಲರೂ ಭಾವಿಸಿದ್ದರೂ ಆದರೆ, ಈ ಎಲ್ಲ ಅಂತೆ-ಕಂತೆಗಳಿಗೆ ಮುಕ್ತಿ ಹಾಡಿರುವ ಇಲ್ಲಿನ ಮತದಾರರು ಮಂಜುನಾಥ್ ಅವರನ್ನು ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ.
|
eesanje/url_46_122_3.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಯಶಸ್ವಿ
|
2 |
+
ಬೆಂಗಳೂರು,ಜೂ.4-ಕಾಂಗ್ರೆಸ್ನ ಗ್ಯಾರಂಟಿಗಳ ನಡುವೆಯೂ ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನ ಗೆಲ್ಲಿಸಿಕೊಡುವಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಯಶಸ್ವಿಯಾಗಿದ್ದು, ಕುರ್ಚಿಯನ್ನು ಗಟ್ಟಿಗೊಳಿಸಿದೆ. ವಿಧಾನಸಭೆ ಚುನಾವಣೆಯಲ್ಲಿ ಭಾರೀ ಮುಖಭಂಗ ಅನುಭವಿಸಿದ್ದ ಬಿಜೆಪಿ ಆರು ತಿಂಗಳ ನಂತರ ರಾಜ್ಯಾಧ್ಯಕ್ಷರ ಸ್ಥಾನವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರಗೆ ನೀಡಿದ್ದರು.
|
3 |
+
ಸೋತು ಸುಣ್ಣವಾಗಿದ್ದ ಪಕ್ಷವನ್ನು ಮುನ್ನಡೆಸುವ ಸವಾಲಿದ್ದ ವಿಜಯೇಂದ್ರ ಪ್ರಾರಂಭದಲ್ಲಿ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಲೋಕಸಭಾ ಚುನಾವಣೆಗೆ ಮುನ್ನಡೆಸುವ ಜವಾಬ್ದಾರಿಯನ್ನು ತೆಗೆದುಕೊಂಡರು. ಒಂದು ಕಡೆ ಕಾಂಗ್ರೆಸ್ ಪಂಚ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ಜನರ ಒಲವು ಗಳಿಸುವತ್ತ ಮುನ್ನಡೆಯುತ್ತಿರುವಾಗ ವಿಜಯೇಂದ್ರಗೆ ಪಕ್ಷದೊಳಗೆ ಸಾಕಷ್ಟು ಸವಾಲುಗಳು ಎದುರಾಗಿದ್ದವು.
|
4 |
+
ಇಂಥ ಸಂದರ್ಭದಲ್ಲೇ ಬೆಟ್ಟದಷ್ಟು ಸವಾಲಿನಂತಿದ್ದ ಲೋಕಸಭೆ ಚುನಾವಣೆಯಲ್ಲಿ 16 ಸ್ಥಾನಗಳನ್ನು ಗೆದ್ದಿರುವುದು ಸುಲಭದ ಮಾತಲ್ಲ. ಕಳೆದ ಬಾರಿ ಪ್ರಧಾನಿ ನರೇಂದ್ರಮೋದಿ ಅಲೆಯಲ್ಲಿ 25 ಸ್ಥಾನಗಳನ್ನು ಗೆದ್ದಿತ್ತಾದರೂ ಈ ಬಾರಿ ಕನಿಷ್ಟಪಕ್ಷ 18 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಕೇಂದ್ರ ವರಿಷ್ಠರು ನೀಡಿದ್ದರು.
|
5 |
+
ಬಿಜೆಪಿಗೆ ಬೆನ್ನೆಲುಬಾಗಿ ನಿಂತಿದ್ದ ವೀರಶೈವ ಲಿಂಗಾಯಿತ ಸಮುದಾಯವನ್ನು ತನ್ನತ್ತ ಸೆಳೆಯುವಲ್ಲಿ ಅವರ ತಂದೆ ಯಡಿಯೂರಪ್ಪನವರ ಮಾರ್ಗದರ್ಶನದಂತೆ ಪಕ್ಷವನ್ನು ಮುನ್ನಡೆಸಿಕೊಂಡರು.
|
6 |
+
ಪಕ್ಷದಿಂದ ದೂರವಾಗಿದ್ದ ಜಗದೀಶ್ ಶೆಟ್ಟರ್ ಹಾಗೂ ಕೆಳಹಂತದ ನಾಯಕನನ್ನು ಪಕ್ಷಕ್ಕೆ ಕರೆತರುವಲ್ಲಿ ಯಶಸ್ವಿಯಾದರು. ವೀರಶೈವ ಲಿಂಗಾಯಿತ ಸಮುದಾಯಕ್ಕೆ ಒಬ್ಬ ಪ್ರಬಲ ನಾಯಕನ ಅಗತ್ಯ ಇರುವಾಗಲೇ ವಿಜಯೇಂದ್ರ ಅವರಲ್ಲಿ ಅದನ್ನು ಸಮುದಾಯ ಕಂಡುಕೊಂಡಿರುವುದು ಫಲಿತಾಂಶದಿಂದಲೇ ಸ್ಪಷ್ಟವಾಗಿದೆ.
|
7 |
+
ಕಾಂಗ್ರೆಸ್ನ ಪ್ರಬಲ ನಾಯಕತ್ವದ ನಡುವೆಯೂ ಬಿಜೆಪಿಗೆ 16 ಸ್ಥಾನ ಬಂದಿದೆ ಎಂದರೆ ಸಾಮಾನ್ಯ ಮಾತಲ್ಲ. ಒಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮತ್ತೊಂದು ಕಡೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಂತಹ ಪ್ರಬಲ ನಾಯಕತ್ವದ ನಡುವೆಯೂ ಬಿಜೆಪಿ ಜಯಗಳಿಸಿರುವುದು ವಿಜಯೇಂದ್ರ ಅವರ ನಾಯಕತ್ವಕ್ಕೆ ಸಿಕ್ಕ ಮನ್ನಣೆ ಎಂದು ಹೇಳಲಾಗುತ್ತಿದೆ.
|
8 |
+
20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟುಕೊಳ್ಳಲಾಗಿತ್ತಾದರೂ ಸದ್ಯ ಬಿಜೆಪಿ ಇಷ್ಟು ಸ್ಥಾನವನ್ನು ಗೆದ್ದಿರುವುದರ ಹಿಂದೆ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ಪರಿಶ್ರಮ ಇದೆ ಎಂಬುದನ್ನು ಪಕ್ಷದವರು ಒಪ್ಪಿಕೊಳ್ಳುತ್ತಾರೆ.
|
eesanje/url_46_122_4.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಲೋಕಸಭೆ ಚುನಾವಣೆ : ಗೆಲುವು ಸಾಧಿಸಿದ ಮೂವರು ಮುಖ್ಯಮಂತ್ರಿಗಳು
|
2 |
+
ಬೆಂಗಳೂರು,ಜೂ.4-ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಮೂವರು ಮುಖ್ಯಮಂತ್ರಿಗಳು ಗೆಲುವು ಸಾಧಿಸಿದ್ದಾರೆ. ಎಚ್.ಡಿ.ಕುಮಾರಸ್ವಾಮಿ(ಮಂಡ್ಯ), ಜಗದೀಶ್ ಶೆಟ್ಟರ್(ಬೆಳಗಾವಿ), ಬಸವರಾಜ ಬೊಮಾಯಿ(ಹಾವೇರಿ) ಅವರು ಜಯಗಳಿಸಿದ್ದಾರೆ. ಅದರಲ್ಲೂ ಸಕ್ಕರೆ ಜಿಲ್ಲೆ ಮಂಡ್ಯದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರು ದಾಖಲೆಯ ಮತಗಳ ಅಂತರದಿಂದ ಗೆದ್ದಿದ್ದಾರೆ.
|
3 |
+
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಭಾರೀ ಹಿನ್ನಡೆ ಅನುಭವಿಸಿದ್ದ ಜೆಡಿಎಸ್ ಈ ಬಾರಿ ಜಿಲ್ಲೆಯಲ್ಲಿ ಏಳು ಶಾಸಕರಿದ್ದರೂ ಎಲ್ಲವನ್ನೂ ಮೆಟ್ಟಿ ಜೆಡಿಎಸ್ ಅಧಿಪತ್ಯ ಸಾಧಿಸಿರುವುದು ದಳಪತಿಗಳಿಗೆ ಹೊಸ ಟಾಕಿನ್ ನೀಡದಂತಾಗಿದೆ.2019ರ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ಸ್ಪರ್ಧಿಸಿದ್ದರು. ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಕಣಕ್ಕಿಳಿದಿದ್ದರು.
|
4 |
+
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉಂಟಾದ ಸೋಲಿನ ಅನುಕಂಪ ಈ ಬಾರಿ ಜೆಡಿಎಸ್ನ ಕೈ ಹಿಡಿದಿರುವುದು ಸ್ಪಷ್ಟವಾಗಿದೆ. ಜೆಡಿಎಸ್ ಅಭ್ಯರ್ಥಿ ಕುಮಾರಸ್ವಾಮಿ ಕಾಂಗ್ರೆಸ್ಗಿಂತ ಹೆಚ್ಚಿನ ಮತಗಳನ್ನು ಗಳಿಸಿದ್ದಾರೆ.ಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಕಾಂಗ್ರೆಸ್ನಿಂದ ಸ್ಪರ್ಧಿಸಿ ಸೋತ್ತಿದ್ದ ಜಗದೀಶ್ ಶೆಟ್ಟರ್ ಕೊನೆ ಕ್ಷಣದಲ್ಲಿ ಬಿಜೆಪಿ ಸೇರಿದ್ದು ಫಲ ಕೊಟ್ಟಿದೆ.
|
5 |
+
ತವರು ಕ್ಷೇತ್ರ ಧಾರವಾಡ ಬಿಟ್ಟು ಬೆಳಗಾವಿಗೆ ವಲಸೆ ಹೋಗಿದ್ದ ಶೆಟ್ಟರ್ಗೆ ಪ್ರಾರಂಭದಲ್ಲಿ ಹಿನ್ನಡೆಯಾದರೂ ಎಲ್ಲವನ್ನು ಮೀರಿ ಗೆಲ್ಲುವ ಮೂಲಕ ಬಿಜೆಪಿ ಭದ್ರಕೋಟೆಯನ್ನು ಉಳಿಸಿದ್ದಾರೆ.
|
6 |
+
ಆಡಳಿತಾರೂಢ ಕಾಂಗ್ರೆಸ್ನಲ್ಲಿ ಪ್ರಭಾವಿ ಸಚಿವೆಯಾಗಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ತಮ ಪುತ್ರ ಮೃಣಾಳ್ ಹೆಬ್ಬಾಳ್ಕರ್ ಅವರನ್ನು ಕಣಕ್ಕಿಳಿಸಿದ್ದರು. ಜಿಲ್ಲೆಯಲ್ಲಿ ಹಿಂದುತ್ವ ಮತ್ತು ಮರಾಠಿ ಮತಗಳು ಮತ್ತು ನರೇಂದ್ರಮೋದಿ ಅಲೆ ಜಗದೀಶ್ ಶೆಟ್ಟರ್ ಅವರನ್ನು ದಡ ಸೇರಿಸಿದೆ. ವಲ್ಲದ ಮನಸ್ಸಿನಿಂದಲೇ ಹಾವೇರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮಾಯಿ ಕೂಡ ಗೆಲುವು ಸಾಧಿಸಿದ್ದಾರೆ.
|
eesanje/url_46_122_5.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಮಂಡ್ಯದಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಹೆಚ್ಡಿಕೆ ಗೆಲುವು
|
2 |
+
ಬೆಂಗಳೂರು,ಜೂ.4-ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎರಡೂವರೆ ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಮಂಡ್ಯ ಜೆಡಿಎಸ್ನ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಿದ್ದಾರೆ.
|
3 |
+
ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರನ್ನು ಪರಾಭವಗೊಳಿಸಿದ್ದಾರೆ.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಪೈಕಿ ಕೇವಲ ಒಂದು ಕ್ಷೇತ್ರದಲ್ಲಷ್ಟೇ ಜೆಡಿಎಸ್ ಜಯ ಗಳಿಸಿತ್ತು. ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯ ಗಳಿಸುವ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಪ್ರಾಬಲ್ಯ ಮೆರೆದಿತ್ತು.
|
4 |
+
ಕೇವಲ ಒಂದೇ ವರ್ಷದಲ್ಲಿ ಜನಾದೇಶ ಬದಲಾಗಿದ್ದು, ಕಾಂಗ್ರೆಸ್ ಬದಲಾಗಿ ಜೆಡಿಎಸ್ಗೆ ಒಲವು ತೋರಿದ್ದಾರೆ. ತೀವ್ರ ಹಣಾಹಣಿ ಏರ್ಪಟ್ಟಿದ್ದ ಈ ಕ್ಷೇತ್ರದಲ್ಲಿ ಕಾಂಗ್ರೆಸ್ನ್ನು ಜನರು ಕೈ ಹಿಡಿದಿಲ್ಲ. ಮತ್ತೆ ಜೆಡಿಎಸ್ಗೆ ಮನ್ನಣೆ ನೀಡಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯಾಗಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದ್ದವು. ಈ ಕ್ಷೇತ್ರದಲ್ಲಿ ಪಕ್ಷೇತರ ಅ ಭ್ಯರ್ಥಿ ಸುಮಲತಾ ಜಯಗಳಿಸಿದ್ದರು.
|
5 |
+
|
6 |
+
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಫಲ ನೀಡಿದೆ. ನಿರೀಕ್ಷೆಗೂ ಮೀರಿದ ಬೆಂಬಲ ಎನ್ಡಿಎ ಮೈತ್ರಿಕೂಟಕ್ಕೆ ದೊರೆತಿರುವುದು ಇದರಿಂದ ಸಾಬೀತಾದಂತಾಗಿದೆ. ಜೆಡಿಎಸ್ನ ಮಾಜಿ ಸಚಿವರು, ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ನಡೆಸಿದ ಸಂಘಟಿತ ಹೋರಾಟ ಫಲ ನೀಡಿದ್ದು, ಜೆಡಿಎಸ್ ಮಂಡ್ಯ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದೆ.
|
eesanje/url_46_122_6.txt
ADDED
@@ -0,0 +1,3 @@
|
|
|
|
|
|
|
|
|
1 |
+
ಸುರಪುರ ಉಪಚುನಾವಣೆ ಫಲಿತಾಂಶ : ಕಾಂಗ್ರೆಸ್ ಅಭ್ಯರ್ಥಿ ವೇಣುಗೋಪಾಲ ನಾಯಕ್ ಮುನ್ನಡೆ
|
2 |
+
ಸುರಪುರ ಜೂ. 4-ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನಿಧನದಿಂದ ತೆರವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯ ಲಿತಾಂಶದ ಮತ ಎಣಿಕೆ ಆರಂಭಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ್ ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ರಾಜುಗೌಡ ಅವರು ಐದೂ ಸುತ್ತಿನಲ್ಲೂ ಹಿನ್ನಡೆ ಅನುಭವಿಸಿದ್ದಾರೆ.
|
3 |
+
ಕಾಂಗ್ರೆಸ್ ಮತ್ತು ಬಿಜೆಪಿಯ ಅಭ್ಯರ್ಥಿ ನಡುವೆ ನೇರ ಹಣಾಹಣಿ ನಡೆದಿದ್ದು, 5ನೇ ಸುತ್ತಿನ ಮತ ಏಣಿಕೆಯ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ್ ಅವರು 6000 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದರು.
|
eesanje/url_46_122_7.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ವಿಧಾನಪರಿಷತ್ ಚುನಾವಣೆ : ಮೂರೂ ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
|
2 |
+
ಬೆಂಗಳೂರು, ಜೂ.3-ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯಲಿರುವ 11 ಸ್ಥಾನಗಳ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಹಣಾಹಣಿಗೆ ವೇದಿಕೆ ಸಿದ್ಧಗೊಂಡಿದೆ. ನಾಮಪತ್ರ ಸಲ್ಲಿಸಲು ಸೋಮವಾರ ಕಡೆಯ ದಿನವಾಗಿದ್ದರಿಂದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
|
3 |
+
ಕಾಂಗ್ರೆಸ್ ಅಭ್ಯರ್ಥಿಗಳು ಪ್ರತ್ಯೇಕವಾಗಿ ಉಮೇದುವಾರಿಕೆ ಮಾಡಿದರೆ ಬಿಜೆಪಿ-ಜೆಡಿಎಸ್ ಎನ್ಡಿಎ ಮೈತ್ರಿಕೂಟ ಅಭ್ಯರ್ಥಿಗಳು ಜೊತೆಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದು ವಿಶೇಷವಾಗಿತ್ತು. ಒಂದು ವೇಳೆ ಯಾವುದೇ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡದಿದ್ದರೆ ಕಣದಲ್ಲಿರುವ ಮೂರು ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಾಗಿದೆ.
|
4 |
+
ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಗುರುವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಅಗತ್ಯಬಿದ್ದರೆ ಜೂ.13ರಂದು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 4 ಗಂಟೆವರೆಗೂ ಮತದಾನ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ.ಪಕ್ಷೇತರ ಅಭ್ಯರ್ಥಿಗಳ ನಾಮಪತ್ರಕ್ಕೆ ಸೂಚಕರಾಗಿ 10 ಶಾಸಕರು ಸಹಿ ಹಾಕಬೇಕು. ಒಂದು ವೇಳೆ ಯಾರ ಸಹಿಯೂ ಇಲ್ಲದಿದ್ದರೆ ನಾಮಪತ್ರ ತಿರಸ್ಕೃತವಾಗಲಿದೆ.
|
5 |
+
ನಾಮಪತ್ರ ಸಲ್ಲಿಕೆ:ಇದಕ್ಕೂ ಮುನ್ನ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನದವರೆಗೆ ಮೂರು ಪಕ್ಷಗಳ ಅಭ್ಯರ್ಥಿಗಳು ವಿಧಾನಸೌಧಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಮೊದಲು ಕಾಂಗ್ರೆಸ್ನ 7 ಅಭ್ಯರ್ಥಿಗಳಾದ ಎನ್.ಎಸ್. ಬೋಸರಾಜು, ವಸಂತ್ಕುಮಾರ್, ಡಾ.ಯತೀಂದ್ರ, ಕೆ.ಗೋವಿಂದರಾಜ್, ಐವನ್ ಡಿಸೋಜಾ, ಬಿಲ್ಕಿಸ್ ಬಾನೋ, ಜಗದೇವ್ ಗುತ್ತೇದಾರ್ ಅವರುಗಳು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ಉಮೇದುವಾರಿಕೆ ಮಾಡಿದರು.
|
6 |
+
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರು, ಶಾಸಕರು ಹಾಗೂ ಪಕ್ಷದ ಮುಖಂಡರು ಹಾಜರಿದ್ದರು. ಇನ್ನು ಬಿಜೆಪಿಯಿಂದ ಸಿ.ಟಿ.ರವಿ, ಎನ್.ರವಿಕುಮಾರ್ ಹಾಗೂ ಎಂ.ಜಿ.ಮುಳೆ ಅವರು ನಾಮಪತ್ರ ಸಲ್ಲಿಸಿದ್ದಾರೆ.
|
7 |
+
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಬಸವರಾಜ ಬೊಮಾಯಿ, ಡಿ.ವಿ.ಸದಾನಂದಗೌಡ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಶಾಸಕರು, ಮುಖಂಡರು ಅಭ್ಯರ್ಥಿಗಳಿಗೆ ಸಾಥ್ ನೀಡಿದರು. ಜೆಡಿಎಸ್ನಿಂದ ಹಿರಿಯ ಮುಖಂಡ ಜವರಾಯಗೌಡ ಅವರು ಉಮೇದುವಾರಿಕೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಮತ್ತಿತರರ�� ಈ ವೇಳೆ ಉಪಸ್ಥಿತರಿದ್ದರು.
|
8 |
+
ವಿಧಾನಸಭೆಯ ಬಲಾಬಲದಲ್ಲಿ ಆಡಳಿತಾರೂಢ ಕಾಂಗ್ರೆಸ್ 7, ಪ್ರತಿಪಕ್ಷ ಬಿಜೆಪಿ 3 ಹಾಗೂ ಜೆಡಿಎಸ್ 1 ಸ್ಥಾನಗಳನ್ನು ಸುಲಭವಾಗಿ ಗೆಲ್ಲಲಿದೆ. ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ಓರ್ವ ಅಭ್ಯರ್ಥಿ ಗೆಲ್ಲಬೇಕಾದರೆ 19 ಮತಗಳನ್ನು ಪಡೆಯಬೇಕು.
|
9 |
+
ವಿಧಾನಪರಿಷತ್ ಸದಸ್ಯರಾದ ಅರವಿಂದ್ಕುಮಾರ್ ಅರಳಿ, ಎನ್.ಎಸ್.ಬೋಸರಾಜು, ಕೆ.ಗೋವಿಂದರಾಜ್, ಡಾ. ತೇಜಸ್ವಿನಿ ಗೌಡ, ಮುನಿರಾಜು ಗೌಡಪಿ.ಎಂ, ಕೆ.ಪಿ.ನಂಜುಂಡಿ ವಿಶ್ವಕರ್ಮ ಬಿ.ಎಂ.ಫಾರೂಕ್, ರಘುನಾಥ ರಾವ್ ಮಲ್ಕಾಪುರೆ, ಎನ್. ರವಿ ಕುಮಾರ್, ಎಸ್.ರುದ್ರೇಗೌಡ, ಕೆ.ಹರೀಶ್ಕುಮಾರ್ ಅವರ ಅಧಿಕಾರಾವಧಿ ಮುಕ್ತಾಯವಾಗಲಿದ್ದು, ತೆರವಾಗಲಿರುವ ಈ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಇದರಲ್ಲಿ ಎನ್.ಎಸ್.ಬೋಸರಾಜ್, ಗೋವಿಂದರಾಜ್, ಎನ್.ರವಿಕುಮಾರ್ ಪುನಃ ಸ್ಪರ್ಧಿಸಿದ್ದಾರೆ.
|
eesanje/url_46_122_8.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಹೈಕೋರ್ಟ್ ಮೊರೆ
|
2 |
+
ಬೆಂಗಳೂರು, ಜೂ.3-ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣರ ನಿರೀಕ್ಷಣಾ ಜಾಮೀನು ನಿರಾಕರಿಸಿರುವ ಸೆಷನ್ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
|
3 |
+
ಎಸ್ಐಟಿ ಜಾರಿ ಮಾಡಿರುವ ನೋಟಿಸ್ನಲ್ಲಿ ಯಾವುದೇ ಕಾನೂನಿನ ನಿಬಂಧನೆ ಬಗ್ಗೆ ಉಲ್ಲೇಖಿಸಲಾಗಿಲ್ಲ. ಹೀಗಾಗಿ ಬಂಧನದ ಭೀತಿ ಇದೆ ಎಂದು ಅರ್ಜಿಯಲ್ಲಿ ಭವಾನಿ ರೇವಣ್ಣ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
|
4 |
+
ಕೆ.ಆರ್.ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿಯವರಿಗೆ ಎಸ್ಐಟಿ ನೋಟಿಸ್ ಜಾರಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿತ್ತು. ವಿಚಾರಣೆಗೊಳಗಾದರೆ ಬಂಧಿಸುವ ಸಾಧ್ಯತೆ ಇದೆ. ಆದ್ದರಿಂದ ನಿರೀಕ್ಷಣಾ ಜಾಮೀನು ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಪ್ರಕರಣದಲ್ಲಿ ಸೆಷನ್ ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿತ್ತು.
|
eesanje/url_46_122_9.txt
ADDED
@@ -0,0 +1,15 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ವಾಲೀಕಿ ಅಭಿವೃದ್ಧಿ ನಿಗಮ ಅವ್ಯವಹಾರ ಹೊಣೆ ಸಿಎಂ ಸಿದ್ದರಾಮಯ್ಯನವರೇ ಹೊರಬೇಕು :
|
2 |
+
ಬೆಂಗಳೂರು, ಜೂ.3-ವಾಲೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ಆರೋಪವನ್ನು ಸಚಿವ ನಾಗೇಂದ್ರ ಅವರ ಮೇಲೆ ಹೊರಿಸುವುದಕ್ಕಿಂತ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೊರಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.
|
3 |
+
ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಟಿ.ಎನ್.ಜವರಾಯಿಗೌಡ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಆರೋಪದ ಹೊಣೆಯನ್ನು ಮುಖ್ಯಮಂತ್ರಿ ಹೊರಬೇಕು. ಈ ಪ್ರಕರಣವನ್ನು ಮುಚ್ಚಿ ಹಾಕುವ ಉದ್ದೇಶದಿಂದ ತರಾತುರಿಯಲ್ಲಿ ಎಸ್ಐಟಿ ರಚನೆ ಮಾಡಲಾಗಿದೆ ಎಂದು ಆರೋಪಿಸಿದರು.
|
4 |
+
ವಾಲೀಕಿ ಅಭಿವೃದ್ಧಿ ನಿಗಮದಂತೆ ಹಲವು ನಿಗಮಮಂಡಳಿಗಳಲ್ಲೂ ಅವ್ಯವಹಾರ ಆಗಿರುವ ಶಂಕೆ ಇದೆ. ಕೇವಲ ಸಚಿವ ನಾಗೇಂದ್ರ ಅವರ ಮಟ್ಟದಲ್ಲಿ ಇದು ನಡೆದಿಲ್ಲ. ತೆಲಂಗಾಣಕ್ಕೆ ಹಣ ವರ್ಗಾವಣೆಯಾಗಿದೆ. 14 ಖಾತೆಗಳನ್ನು ತೆರೆದಿದ್ದಾರೆ. ಪರಿಶಿಷ್ಟ ಪಂಗಡದವರಿಗೆ ಮೀಸಲಿಟ್ಟ ಹಣವನ್ನು ವರ್ಗಾವಣೆ ಮಾಡಲಾಗಿದೆ. ಈ ವಿಚಾರದಲ್ಲಿ ಆಮೆ ವೇಗದಲ್ಲಿ ತನಿಖಾ ಕ್ರಮವಾಗುತ್ತಿದೆ. ಹಣ ವರ್ಗಾವಣೆ ಮಾಡುವಂತೆ ನಿಗಮದಲ್ಲಿ ಆಡಳಿತ ಮಂಡಳಿ ಸಭೆ ನಡೆಸಿ ತೀರ್ಮಾನ ಮಾಡಿಲ್ಲ, ಸ್ವೇಚ್ಛಾಚಾರವಾಗಿ ವರ್ಗಾವಣೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
|
5 |
+
ತೆಲಂಗಾಣ ಚುನಾವಣೆಗೆ ಹಣಬಳಕೆ ಮಾಡಿದ್ದಾರೆ. ಈ ಪ್ರಕರಣ ಬೆಳಕಿಗೆ ಬಂದು ಒಂದು ವಾರ ಕಳೆದಿದೆ. ಯಾವ ತನಿಖೆ ನಡೆಸುತ್ತಿದ್ದಾರೆ. ಇವರಿಗೆ ನಾಚಿಕೆಯಾಗಬೇಕು. ಈ ಪ್ರಕರಣವನ್ನು ಇನ್ನೊಬ್ಬರ ತಲೆಗೆ ಕಟ್ಟಲು ಹೋಗುತ್ತಿದ್ದಾರೆ. ರಾಜ್ಯದ ಜನತೆ ಬಗ್ಗೆ ಗೌರವವಿದ್ದರೆ ಮುಖ್ಯಮಂತ್ರಿ ಇದರ ಹೊಣೆಯನ್ನು ಹೊರಬೇಕು. ಇದು ಸರ್ಕಾರದ ಜವಾಬ್ದಾರಿ ಎಂದು ಆಗ್ರಹಿಸಿದರು.
|
6 |
+
ತೆಲಂಗಾಣದ ಚುನಾವಣೆ ಉಸ್ತುವಾರಿ ಜವಾಬ್ದಾರಿಯನ್ನು ಯಾರ್ಯಾರು ವಹಿಸಿಕೊಂಡಿದ್ದರು. ಕಾಂಗ್ರೆಸ್ ಪಕ್ಷದ ಹೈಕಮಾಂಡ್ನ ಮೂಗಿನ ನೇರಕ್ಕೆ ಈ ವ್ಯವಹಾರ ನಡೆದಿದೆ. ಸಚಿವರ ಮೌಖಿಕ ಆದೇಶದ ಮೇರೆಗೆ ಹಣ ವರ್ಗಾವಣೆ ಎಂಬುದು ಡೆತ್ನೋಟ್ನಲ್ಲಿ ಉಲ್ಲೇಖವಾಗಿದೆ. ಈ ಪ್ರಕರಣದಲ್ಲಿ ಯೂನಿಯನ್ ಬ್ಯಾಂಕ್ ಭಾಗಿಯಾಗಿರುವುದರಿಂದ ಸಿಬಿಐ ತನಿಖೆ ಆಗಲಿದೆ ಎಂದರು.
|
7 |
+
ಸಚಿವ ಪ್ರಿಯಾಂಕ್ ಖರ್ಗೆಯವರು ಪ್ರತಿಯೊಂದಕ್ಕೂ ಪ್ರತಿಕ್ರಿಯೆ ನೀಡುತ್ತಾರೆ. ಅವರ ಇಲಾಖೆಗೆ ಸಂಬಂಧಿಸಿದ ಎಆರ್ಡಿಎಲ್ ಗುತ್ತಿಗೆದಾರರೊಬ್ಬರು ಆತಹತ್ಯೆ ಮಾಡಿಕೊಂಡಿಲ್ಲವೇ? ಎಂದು ಪ್ರಶ್ನಿಸಿದರು.
|
8 |
+
ನಗರ ಪ್ರದಕ್ಷಿಣೆ ಪ್ರಯೋಜನವೇನು ? :ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಮಳೆ ಅನಾಹುತ ತಡೆಯುವ ಬಗ್ಗೆ ನಗರ ಪ್ರದಕ್ಷಿಣೆ ಮಾಡಿದ್ದಾರೆ. ಏನು ಪ್ರಯೋಜನವಾಗಿದೆ? ಏನು ಕ್ರಮ ಕೈಗೊಂಡಿದ್ದಾರೆ? ಕಳೆದ ��ರ್ಷವೂ ನಗರ ಪ್ರದಕ್ಷಿಣೆ ಮಾಡಿದ್ದರು, ಕಳೆದ ವಾರ ಕೂಡ ಮಾಡಿದ್ದರು, ಆದರೂ ಮಳೆ ಬಂದಾಗ ಅನಾಹುತ ಸಾಮಾನ್ಯವಾಗಿದೆ. ಜನರು ರಾತ್ರಿಯೆಲ್ಲಾ ಜಾಗರಣೆ ಮಾಡುವಂತಾಗಿದೆ.
|
9 |
+
ಯಾವುದಾದರೂ ಒಂದು ಭಾಗದಲ್ಲಿ ಸರಿಪಡಿಸಿದ್ದರೆ ಹೇಳಲಿ. ನಾನು ಮುಖ್ಯಮಂತ್ರಿಯಾಗಿದ್ದಾಗ ಗುಟ್ಟೇನಹಳ್ಳಿ ಕೆರೆ ಸಮಸ್ಯೆ ಉಂಟಾಗಿತ್ತು. ಅದಕ್ಕೆ ಶಾಶ್ವತ ಪರಿಹಾರವನ್ನು ಕಲ್ಪಿಸಲಾಗಿದೆ ಎಂದು ಸಮರ್ಥಿಸಿಕೊಂಡರು.
|
10 |
+
ದೇವರ ಬಗ್ಗೆ ಚೆಲ್ಲಾಟವಾಡಬಾರದು :ಶರಣರಷ್ಟೇ ಅಲ್ಲ ದೇವರೊಂದಿಗೆ ಚೆಲ್ಲಾಟವಾಡಬಾರದು, ದೇವರೇ ಅಂತಿಮ ತೀರ್ಮಾನ ಕೈಗೊಂಡು ಶಿಕ್ಷೆ ಕೊಡುತ್ತಾನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನೀಡಿದ್ದ ಶತ್ರು ಸಂಹಾರ ಭೈರವಿ ಯಾಗ ಕುರಿತ ಹೇಳಿಕೆಗೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.
|
11 |
+
ಶರಣರ ವಚನ, ದಾಸರ ವಾಣಿಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ಕೇರಳ ಸರ್ಕಾರ ಅವರ ಹೇಳಿಕೆಯನ್ನು ಅಲ್ಲಗಳೆದಿದೆ. ಕೇರಳದಲ್ಲಿ ಶತ್ರು ಸಂಹಾರಕ್ಕಾಗಿ ಕೋಣ, ಮೇಕೆ, ಹಂದಿ ಮೊದಲಾದ ಪ್ರಾಣಿಗಳನ್ನು ಬಲಿ ಕೊಡುತ್ತಿದ್ದಾರೆಂದು ಆರೋಪಿಸಿದ್ದರು. ರಾಜರಾಜೇಶ್ವರಿ ದೇವಾಲಯಕ್ಕೆ ನಾನೂ ಹೋಗಿದ್ದೇನೆ.
|
12 |
+
ಅಲ್ಲಿನ ಪೂಜಾ ವಿಧಿವಿಧಾನಗಳು ಗೊತ್ತಿಲ್ಲವೇ? ಕಳೆದ ಒಂದೂವರೆ ತಿಂಗಳಿನಿಂದ ನಡೆಸುತ್ತಿರುವ ಪೆನ್ಡ್ರೈವ್ನ ಮುಂದುವರೆದ ಭಾಗ ಅಷ್ಟೇ. ಪದೇಪದೇ ನಮ ಕುಟುಂಬವನ್ನು ಅವರು ನೆನಪಿಸಿಕೊಳ್ಳುವುದರಿಂದ ಈ ಬಗ್ಗೆ ಪ್ರತಿಕ್ರಿಯೆ ನೀಡಬೇಕಾಯಿತು. ನಮ ಕುಟುಂಬದಲ್ಲಿ ಎಂದೂ ಕೂಡ ಪ್ರಾಣಿಬಲಿ ಅರ್ಪಣೆ ಮಾಡಿಲ್ಲ. ನಾವು ದೈವಭಕ್ತರು. ನಮ ದೋಷ ಪರಿಹಾರಕ್ಕೆ ದೇವರ ಪೂಜೆ ಮಾಡುತ್ತೇವೆ. ಬಲಿ ವಿಚಾರಕ್ಕೂ ಸರ್ಕಾರ ಎಸ್ಐಟಿ ರಚನೆ ಮಾಡಬಹುದಿತ್ತಲ್ಲವೇ? ಎಂದು ಪ್ರಶ್ನಿಸಿದರು.
|
13 |
+
ನಮ ಕುಟುಂಬವನ್ನು ಸಂಪೂರ್ಣವಾಗಿ ನೆಲ ಕಚ್ಚಿಸಬೇಕೆಂಬ ಉದ್ದೇಶದಿಂದ ಇಂತಹ ಆರೋಪ ಮಾಡುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಹೊಂದಾಣಿಕೆಯಿಂದ ಅವರ ರಾಜಕೀಯ ಭವಿಷ್ಯ ಮಾರಕವಾಗುತ್ತಿದೆ. ಆ ಕಾರಣಕ್ಕಾಗಿ ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂದರು.
|
14 |
+
ಮೂರೂ ಕ್ಷೇತ್ರಗಳಲ್ಲಿ ಗೆಲುವು :ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮೂರೂ ಕ್ಷೇತ್ರಗಳಲ್ಲಿ ಗೆಲ್ಲುತ್ತದೆ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ 25 ಸ್ಥಾನ ಗೆಲ್ಲುವ ನಿರೀಕ್ಷೆಯಿತ್ತು. ಆ ನಿಟ್ಟಿನಲ್ಲಿ ಮತದಾನೋತ್ತರ ಸಮೀಕ್ಷಾ ವರದಿಗಳು ಬಂದಿದೆ. ಮೂರನೇ ಬಾರಿಗೆ ಎನ್ಡಿಎ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಎನ್ಡಿಎ ಅಭ್ಯರ್ಥಿಗಳ ಪರವಾಗಿ ಸಾಕಷ್ಟು ಶ್ರಮ ಹಾಕಿದ್ದಾರೆ. ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದಾರೆ. ಇದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು.
|
15 |
+
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಕೋರ್ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಶಾಸಕರಾದ ಹರೀಶ್, ಎಂ.ಟಿ.ಕೃಷ್ಣಪ್ಪ, ವಿಧಾನಪರಿಷತ್ ಸದಸ್ಯರಾದ ಶರವಣ, ತಿಪ್ಪೇಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.
|