0ed89b1efb059c722b3891b2cdf7f1b0e149e73185c4fa50d3146e671bee82d1
Browse files- eesanje/url_47_137_6.txt +5 -0
- eesanje/url_47_137_7.txt +6 -0
- eesanje/url_47_137_8.txt +6 -0
- eesanje/url_47_137_9.txt +5 -0
- eesanje/url_47_138_1.txt +5 -0
- eesanje/url_47_138_10.txt +7 -0
- eesanje/url_47_138_11.txt +5 -0
- eesanje/url_47_138_12.txt +5 -0
- eesanje/url_47_138_2.txt +6 -0
- eesanje/url_47_138_3.txt +10 -0
- eesanje/url_47_138_4.txt +7 -0
- eesanje/url_47_138_5.txt +4 -0
- eesanje/url_47_138_6.txt +5 -0
- eesanje/url_47_138_7.txt +7 -0
- eesanje/url_47_138_8.txt +7 -0
- eesanje/url_47_138_9.txt +6 -0
- eesanje/url_47_139_1.txt +4 -0
- eesanje/url_47_139_10.txt +4 -0
- eesanje/url_47_139_11.txt +5 -0
- eesanje/url_47_139_12.txt +3 -0
- eesanje/url_47_139_2.txt +8 -0
- eesanje/url_47_139_3.txt +4 -0
- eesanje/url_47_139_4.txt +5 -0
- eesanje/url_47_139_5.txt +4 -0
- eesanje/url_47_139_6.txt +5 -0
- eesanje/url_47_139_7.txt +3 -0
- eesanje/url_47_139_8.txt +4 -0
- eesanje/url_47_139_9.txt +5 -0
- eesanje/url_47_13_1.txt +6 -0
- eesanje/url_47_13_10.txt +5 -0
- eesanje/url_47_13_11.txt +6 -0
- eesanje/url_47_13_12.txt +6 -0
- eesanje/url_47_13_2.txt +9 -0
- eesanje/url_47_13_3.txt +5 -0
- eesanje/url_47_13_4.txt +7 -0
- eesanje/url_47_13_5.txt +9 -0
- eesanje/url_47_13_6.txt +7 -0
- eesanje/url_47_13_7.txt +11 -0
- eesanje/url_47_13_8.txt +9 -0
- eesanje/url_47_13_9.txt +9 -0
- eesanje/url_47_140_1.txt +4 -0
- eesanje/url_47_140_10.txt +8 -0
- eesanje/url_47_140_11.txt +5 -0
- eesanje/url_47_140_12.txt +5 -0
- eesanje/url_47_140_2.txt +6 -0
- eesanje/url_47_140_3.txt +5 -0
- eesanje/url_47_140_4.txt +7 -0
- eesanje/url_47_140_5.txt +5 -0
- eesanje/url_47_140_6.txt +5 -0
- eesanje/url_47_140_7.txt +8 -0
eesanje/url_47_137_6.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ದೆಹಲಿ : ರೆಸ್ಟೋರೆಂಟ್ ಮಾಲೀಕನ ಗುಂಡಿಕ್ಕಿ ಹತ್ಯೆ
|
2 |
+
ನವದೆಹಲಿ, ಮಾ 27-ರೆಸ್ಟೋರೆಂಟ್ ಮಾಲೀಕನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿರುವ ಘಟನೆ ಕಳೆದ ರಾತ್ರಿ ಈಶಾನ್ಯ ದೆಹಲಿಯ ನ್ಯೂ ಉಸ್ಮಾನ್ಪುರ ಪ್ರದೇಶದಲ್ಲಿ ನಡೆದಿದೆ.ಸಂಜಯ್ ಸಿಂಗ್ (32)ಕೊಲೆಯಾದ ರೆಸ್ಟೋರೆಂಟ್ ಮಾಲೀಕ ಎಂದು ಗುರುತಿಸಲಾಗಿದೆ.
|
3 |
+
ಮಧ್ಯರಾತ್ರಿ ರೆಸ್ಟೋರೆಂಟ್ನಿಂದ ಹಿಂತಿರುಗುತ್ತಿದ್ದಾಗ ಅವರ ಮನೆಯ ಬಳಿ ದಾಳಿ ನಡೆಸಿದ್ದರು.ಸಿಂಗ್ನ ಸ್ನೇಹಿತರೊಬ್ಬರು ರಸ್ತೆಯಲ್ಲಿ ಗಾಯಗೊಂಡು ಬಿದ್ದಿರುವುದನ್ನು ಕಂಡು ಸಂಜಯ್ ಸಿಂಗ್ನ ಕಿರಿಯ ಸಹೋದರ ನಿತಿನ್ಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
|
4 |
+
ನಿತಿನ್ ಸ್ಥಳಕ್ಕೆ ಧಾವಿಸಿದಾಗ ಸಿಂಗ್ ಹನುಮಾನ್ ಮಂದಿರ ವಾಲಿ ಗಾಲಿ ಸರ್ವಿಸ್ ರಸ್ತೆಯ ಬಳಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಆತಂಕಗೊಂಡಿದ್ದಾರೆ.ಸಿಂಗ್ ಅವರ ತಲೆ, ಬಲ ಭುಜ ಮತ್ತು ಮೊಣಕೈ ಮತ್ತು ಹೊಟ್ಟೆಗೆ ಗಾಯವಾಗಿ ಆತನನ್ನು ತಕ್ಷಣವೇ ಜಗ ಪ್ರವೇಶ್ ಚಂದ್ರ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
|
5 |
+
ಸ್ಥಳದಲ್ಲಿ ಏಳು ಖಾಲಿ ಬುಲೆಟ್ ಶೆಲ್ಗಳುಹಾಗು ಇತರ ವಸ್ತು ಪತ್ತೆಯಾಗಿದೆ ರವೀಂದರ್ ಎಂಬ ವ್ಯಕ್ತಿಯ ಹತ್ಯೆಗೆ ಸಂಬಂಧಿಸಿದಂತೆ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿತ್ತು ಇದೇ ದ್ವೇಷಕ್ಕೆ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲನೆ ಮಾಡಲಾಗುತ್ತಿದೆ ,ಪ್ರಕರಣದ ಎಲ್ಲಾ ಕೋನಗಳನ್ನು ನೋಡಲಾಗುತ್ತಿದೆ ಮತ್ತು ಕೊಲೆಗಾರರ ಪತ್ತೆಗೂ ಮುಂದಾಗಿದ್ದೇವೆ ಎಂದು ಹೇಳಿದರು.
|
eesanje/url_47_137_7.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಎನ್ಐಎ ಮಹಾನಿರ್ದೇಶಕರಾಗಿ ಸದಾನಂದ ವಸಂತ್ ನೇಮಕ
|
2 |
+
ನವದೆಹಲಿ, ಮಾ.27 (ಪಿಟಿಐ) :ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥ ಸದಾನಂದ ವಸಂತ್ ದಾಟೆ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಮಹಾನಿರ್ದೇಶಕರನ್ನಾಗಿ ನೇಮಿಸಲಾಗಿದೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶ ತಿಳಿಸಿದೆ. ಮಹಾರಾಷ್ಟ್ರ ಕೇಡರ್ನ 1990-ಬ್ಯಾಚ್ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಯಾಗಿರುವ ಸದಾನಂದ ಅವರು ಡಿಸೆಂಬರ್ 31, 2026 ರಂದು ಅವರ ನಿವೃತ್ತಿಯ ಅವಧಿಯವರೆಗೆ ಎನ್ಐಎಯ ಡೈರೆಕ್ಟರ್ ಜನರಲ್ (ಡಿಜಿ) ಆಗಿ ಸೇವೆ ಸಲ್ಲಿಸಲಿದ್ದಾರೆ. ಅವರು ಮಾರ್ಚ್ 31 ರಂದು ನಿವೃತ್ತರಾಗಲಿರುವ ದಿನಕರ್ ಗುಪ್ತಾ ಅವರ ಉತ್ತರಾಧಿಕಾರಿಯಾಗಲಿದ್ದಾರೆ.
|
3 |
+
ರಾಜಸ್ಥಾನ ಕೇಡರ್ನ 1990-ಬ್ಯಾಚ್ ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್ ಶರ್ಮಾ ಅವರನ್ನು ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಬ್ಯೂರೋದ ಮಹಾನಿರ್ದೇಶಕರನ್ನಾಗಿ ನೇಮಿಸಿತು. ಅವರು ಜೂನ್ 30, 2026 ರಂದು ತಮ್ಮ ನಿವೃತ್ತಿಯಾಗುವವರೆಗೆ ಅಧಿಕಾರಾವಧಿಯನ್ನು ಹೊಂದಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
|
4 |
+
ಮಾರ್ಚ್ ಅಂತ್ಯಕ್ಕೆ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸುವ ಬಾಲಾಜಿ ಶ್ರೀವಾಸ್ತವ ಅವರ ನಂತರ ಶರ್ಮಾ ಅವರು ಅಧಿಕಾರ ವಹಿಸಿಕೊಳ್ಳುತ್ತಾರೆ.ಪಿಯೂಷ್ ಆನಂದ್ ಅವರು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) ನೂತನ ಮುಖ್ಯಸ್ಥರಾಗಲಿದ್ದಾರೆ.
|
5 |
+
ಉತ್ತರ ಪ್ರದೇಶ ಕೇಡರ್ನ 1991-ಬ್ಯಾಚ್ನ ಐಪಿಎಸ್ ಅಧಿಕಾರಿ, ಆನಂದ್ ಪ್ರಸ್ತುತ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ವಿಶೇಷ ಡಿಜಿಯಾಗಿದ್ದಾರೆ. ಅವರನ್ನು ಎರಡು ವರ್ಷಗಳ ಅವಧಿಗೆ ನ ಡಿಜಿಯಾಗಿ ನೇಮಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಅತುಲ್ ಕರ್ವಾಲ್ ಅವರ ಸ್ಥಾನಕ್ಕೆ ಆನಂದ್ ಅವರು ಮಾರ್ಚ್ 31 ರಂದು ನಿವೃತ್ತರಾಗಲಿದ್ದಾರೆ.
|
6 |
+
ಎಸಿಸಿಯು ಕೇರಳ ಕೇಡರ್ನ 1995-ಬ್ಯಾಚ್ ಐಪಿಎಸ್ ಅಧಿಕಾರಿ ಎಸ್ ಸುರೇಶ್ ಅವರನ್ನು ವಿಶೇಷ ರಕ್ಷಣಾ ಗುಂಪಿನ (ಎಸ್ಪಿಜಿ) ಹೆಚ್ಚುವರಿ ಮಹಾನಿರ್ದೇಶಕರನ್ನಾಗಿ ನೇಮಿಸಿದೆ.
|
eesanje/url_47_137_8.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಗಾಂಧಿಗಳ ಆಸ್ಥಾನಿಕ ಜೈರಾಮ್ ರಮೇಶ್ : ಇರಾನಿ
|
2 |
+
ನವದೆಹಲಿ,ಮಾ.26-ಭಾರತೀಯ ಜನತಾ ಪಕ್ಷದ ನಾರಿ ಶಕ್ತಿ ಘೋಷಣೆಗಳು ನಿಜವಾದ ಕ್ರಿಯೆಯಿಲ್ಲದ ಪದಗಳಾಗಿ ಉಳಿದಿವೆ ಎಂದು ಆರೋಪಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.
|
3 |
+
ಮಹಿಳೆಯರಿಗೆ ಸಂಬಂಧಿಸಿದ ವಿಷಯಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಜೈರಾಮ್ ರಮೇಶ್ ಅವರನ್ನು ಗಾಂಧಿಗಳ ಆಸ್ಥಾನಿಕ ಎಂದು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ಪೊಸ್ಟ್ ಮಾಡಿದ್ದಾರೆ.
|
4 |
+
ಭಾರತದ ನಿಜವಾದ ವಾರಸುದಾರರು ಅದರ ಸಂಪತ್ತನ್ನು ಲೂಟಿ ಮಾಡಿದ್ದಾರೆ, ಅವರ ಪತನದ ನಂತರವೂ, ಅವರ ಆಸ್ಥಾನಿಕರು ಸತ್ಯಗಳನ್ನು ತಿರುಚುವುದನ್ನು ಮುಂದುವರೆಸಿದ್ದಾರೆ, ಮಹಿಳಾ ಕಲ್ಯಾಣಕ್ಕಾಗಿ ಬಿಜೆಪಿ ಸರ್ಕಾರದ ಪ್ರಯತ್ನಗಳನ್ನು ಹಾಳುಮಾಡಲು ಅಂಕಿಅಂಶಗಳನ್ನು ದುರ್ಬಳಕೆ ಮಾಡುತ್ತಿದ್ದಾರೆ ಎಂದು ಇರಾನಿ ವಾಗ್ದಾಳಿ ನಡೆಸಿದ್ದಾರೆ. ಕಳೆದ 10 ವರ್ಷಗಳಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ದೊಡ್ಡ ವೈಫಲ್ಯ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಸೋಮವಾರ ಆರೋಪಿಸಿದ್ದರು.
|
5 |
+
ಜೂನ್ 2024 ರಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯು ಮಹಿಳೆಯರಿಗೆ 10 ವರ್ಷಗಳ ಅನ್ಯಾಯ-ಕಾಲ ಕೊನೆಗೊಳ್ಳುತ್ತದೆ ಎಂದು ಅವರು ಹೇಳಿದರು. 10 ವರ್ಷಗಳಿಂದ, ಸಚಿವಾಲಯವು ಅಸಮರ್ಥತೆ, ನಿರಾಸಕ್ತಿ ಮತ್ತು ಮಹಿಳಾ ವಿರೋ ಮನಸ್ಥಿತಿಯನ್ನು ಮಾತ್ರ ನೋಡಿದೆ ಎಂದು ಅವರು ಆರೋಪಿಸಿದ್ದರು.
|
6 |
+
ಕಾಂಗ್ರೆಸ್ನ ಆರೋಪದ ನಂತರ, ಸ್ಮೃತಿ ಇರಾನಿ ಎಕ್ಸ್ನಲ್ಲಿ ಸುದೀರ್ಘ ಸಂದೇಶದ ಥ್ರೆಡ್ ಅನ್ನು ಪೊಸ್ಟ್ ಮಾಡಿ, ಮೂರ್ಖರು ಇತರರನ್ನು ಮರುಳು ಮಾಡಲು ಪ್ರಯತ್ನಿಸಿದಾಗ, ಅವರು ಎಷ್ಟು ಮೂರ್ಖರು ಎಂಬುದನ್ನು ಅವರು ನಿಜವಾಗಿ ತೋರಿಸುತ್ತಾರೆ. ಶಾಶ್ವತ ಉತ್ತರಾಧಿಕಾರಿಯ ಪರವಾಗಿ ದಯಪಾಲಿಸುವ ಅಬ್ಬರದ ಮತ್ತು ಸ್ವಲ್ಪ ಕರುಣಾಜನಕ ಪ್ರಯತ್ನದಲ್ಲಿ, ಒಬ್ಬ ನಿರ್ದಿಷ್ಟ ಆಸ್ಥಾನಿಕನು ಅರಿವಿಲ್ಲದೆ ತನ್ನದೇ ಆದ ಪ್ರಜ್ವಲಿಸುವ ಅಸಾಮಥ್ರ್ಯವನ್ನು ಬಹಿರಂಗಪಡಿಸಿದ್ದಾನೆ, ಬೌದ್ಧಿಕತೆಯ ಸೋಗಿನಲ್ಲಿ ಅವನ ದಾರಿತಪ್ಪಿದ ಪ್ರಯತ್ನಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಪಾತ್ರ ಮತ್ತು ಆದೇಶದ ಮುಜುಗರದ ತಪ್ಪು ವ್ಯಾಖ್ಯಾನಕ್ಕೆ ಕಾರಣವಾಗಿವೆ ಎಂದಿದ್ದಾರೆ.
|
eesanje/url_47_137_9.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಹೋಳಿ ಹಬ್ಬದ ವೇಳೆ ಪತ್ನಿಯ ಕತ್ತು ಸೀಳಿ ರಕ್ತದೊಕುಳಿಯಾಡಿದ ಪತಿ..!
|
2 |
+
ನವದೆಹಲಿ,ಮಾ.26-ಹೋಳಿ ಹಬ್ಬದ ಸಂದರ್ಭದಲ್ಲೇ ನೀಚ ಪತಿಯೊಬ್ಬ ತನ್ನ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿ ರಕ್ತದೊಕುಳಿ ನಡೆಸಿರುವ ಘಟನೆ ರಾಷ್ಟ್ರ ರಾಜಧಾನಿಯನ್ನು ಬೆಚ್ಚಿ ಬೀಳಿಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪತ್ನಿಯ ಕತ್ತು ಸೀಳಿ ಕೊಂದ ಆರೋಪದ ಮೇಲೆ ಮಂಜೀತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಹೋಳಿ ಹಬ್ಬದ ದಿನವೇ ತನ್ನ ಪತ್ನಿ ಆರತಿ ಎಂಬಾಕೆಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
|
3 |
+
ಆರು ವರ್ಷಗಳ ಹಿಂದೆ ಮದುವೆಯಾಗಿರುವ ದಂಪತಿಗೆ ಕ್ರಮವಾಗಿ 5 ಮತ್ತು 3 ವರ್ಷದ ಇಬ್ಬರು ಮಕ್ಕಳಿದ್ದಾರೆ ಆದ್ದರಿಂದ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ 176 ಅಡಿಯಲ್ಲಿ ಕಾರ್ಯವಿಧಾನಗಳನ್ನು ಪ್ರಾರಂಭಿಸಲು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ಗೆ ತಿಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
|
4 |
+
ದೇಶವೇ ಹೋಳಿ ಹಬ್ಬವನ್ನು ಆಚರಿಸುತ್ತಿದ್ದ ಸಂದರ್ಭದಲ್ಲಿ ಅಲಿಪುರ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಬಖ್ತಾವರ್ಪುರದ ಬಲ್ಧಾವರ್ ಕಾಲೋನಿಯಲ್ಲಿ ಈ ಕೊಲೆ ನಡೆದಿದೆ. ನಿನ್ನೆ ಸಂಜೆ 6:50 ಕ್ಕೆ ಪೊಲೀಸ್ ಕಂಟ್ರೋಲ್ ರೂಮ್ಗೆ ಕರೆ ಬಂದಿತ್ತು. ಸ್ಥಳಕ್ಕೆ ತಲುಪಿದಾಗ ಮಹಿಳೆ ಆರತಿ ಗಂಟಲು ಸೀಳಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂತು ಎಂದು ಪೊಲೀಸರು ತಿಳಿಸಿದ್ದಾರೆ.
|
5 |
+
ಅಪರಾಧದ ಸ್ಥಳದ ತಪಾಸಣೆ ಮತ್ತು ಅಪರಾಧದ ಸ್ಥಳದಲ್ಲಿ ಹಾಜರಿದ್ದ ಜನರೊಂದಿಗೆ ವಿಚಾರಣೆ ನಡೆಸಿದಾಗ ಆರತಿಯನ್ನು ಆಕೆಯ ಪತಿ ಮಂಜೀತ್ ಮುಂಜಾನೆ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಪತಿಯನ್ನು ಬಂಧಿಸಲಾಗಿದೆ. ಭಾರತೀಯ ದಂಡ ಸಂಹಿತೆ ಸೆಕ್ಷನ್ 302 ಮತ್ತು 304 ಬಿ ಅಡಿಯಲ್ಲಿ ಅಲಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
|
eesanje/url_47_138_1.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಮಸೀದಿ ಮೇಲೆ ರಾಮ ನಾಮ : ಮುಸ್ಲಿಂಮರಿಂದ ಭಾರೀ ಪ್ರತಿಭಟನೆ, ಎಫ್ಐಆರ್ ದಾಖಲು
|
2 |
+
ಮುಂಬೈ,ಮಾ.26-ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪ್ರಮುಖ ಮಸೀದಿಯೊಂದರ ಗೋಡೆಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಧಾರ್ಮಿಕ ಘೋಷವಾಖ್ಯ ಬರೆದು ಕೋಮು ಗಲಭೆಗೆ ಕಾರಣವಾಗಿದ್ದು, ಸ್ಥಳದಲ್ಲಿ ಇನ್ನೂ ಉದ್ವಿಗ್ನ ವಾತಾವರಣವಿದೆ.
|
3 |
+
ಮಜಲ್ಗಾಂವ್ನ ಮರ್ಕಝಿ ಮಸೀದಿಯ ಗೋಡೆಯ ಮೇಲೆ ನಿನ್ನೆ ಸಂಜೆಯ ಈ ಘೋಷಣೆಯನ್ನು ಬರೆಯಲಾಗಿತ್ತು. ಇದರಿಂದ ರೊಚ್ಚುಗೆದ್ದ ಮುಸ್ಲಿಂ ಸಮುದಾಯದವರು ಮಸೀದಿ ಮತ್ತು ಸ್ಥಳೀಯ ಪೊಲೀಸ್ ಠಾಣೆಯ ಹೊರಗೆ ಸಾಕಷ್ಟು ಸಂಖ್ಯೆಯಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದರು.
|
4 |
+
ಈ ಸಂಬಂಧ ಎಫ್ಐಆರ್ ದಾಖಲಾಗಿದ್ದು, ಕೆಲವು ಸಮಾಜ ವಿರೋಧಿಗಳು ಮಸೀದಿಯ ಗೋಡೆಯ ಮೇಲೆ ಶ್ರೀರಾಮ ಎಂದು ಬರೆದಿದ್ದಾರೆ. ನಾವು ಸೆಕ್ಷನ್ 295 (ಉದ್ದೇಶಪೂರ್ವಕವಾಗಿ ಪೂಜಾ ಸ್ಥಳವನ್ನು ನಾಶಪಡಿಸಲು ಅಥವಾ ಅಪವಿತ್ರಗೊಳಿಸಲು)ರಡಿ ದೂರು ದಾಖಲಿಸಿಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
|
5 |
+
ನಾವು ದುಷ್ಕರ್ಮಿಯನ್ನು ಪತ್ತೆಹಚ್ಚುತ್ತಿದ್ದೇವೆ ಮತ್ತು ಘಟನೆಗೆ ಕಾರಣರಾದವರನ್ನು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ಮಜಲಗಾಂವ್ ಉಪವಿಭಾಗೀಯ ಪೊಲೀಸ್ ಅಧಿಕಾರಿ ಧೀರಜ್ ಕುಮಾರ್ ತಿಳಿಸಿದ್ದಾರೆ.
|
eesanje/url_47_138_10.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಗೋವಾದಲ್ಲಿ ಮೊದಲ ಬಾರಿಗೆ ಬಿಜೆಪಿಯಿಂದ ಮಹಿಳಾ ಅಭ್ಯರ್ಥಿ ಕಣಕ್ಕೆ
|
2 |
+
ಪಣಜಿ,ಮಾ.25-ಚಿಕ್ಕರಾಜ್ಯ ಗೋವಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿಯಿಂದ ಮಹಿಳಾ ಅಭ್ಯರ್ಥಿಯೊಬ್ಬರು ಕಣಕ್ಕಿಳಿಯುತ್ತಿದ್ದಾರೆ. ಡೆಂಪೊ ಇಂಡಸ್ಟ್ರೀಸ್ನ ಕಾರ್ಯ ನಿರ್ವಾಹಕ ನಿರ್ದೇಶಕಿ ಪಲ್ಲವಿ ಡೆಂಪೊ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
|
3 |
+
ಗೋವಾದ ವಾಣಿಜ್ಯೋದ್ಯಮಿ ಹಾಗೂ ಶಿಕ್ಷಣತಜ್ಞೆಯೂ ಆಗಿರುವ ಪಲ್ಲವಿ ಡೆಂಪೊ ಅವರು ಪುಣೆಯ ಎಂಐಟಿಯಿಂದ ರಸಾಯನಶಾಸ್ತ್ರದಲ್ಲಿ ಪದವಿ ಮತ್ತು ವ್ಯವಹಾರ ನಿರ್ವಹಣೆಯಲ್ಲಿ (ಎಂಬಿಎ) ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸದ್ಯ 49 ವರ್ಷದ ಪಲ್ಲವಿ ಅವರು, ಡೆಂಪೊ ಇಂಡಸ್ಟ್ರೀಸ್ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಹಾಗೂ ಮಾಧ್ಯಮ ಮತ್ತು ರಿಯಲ್ ಎಸ್ಟೇಟ್ ವಿಭಾಗವನ್ನು ನಿರ್ವಹಣೆ ಮಾಡುತ್ತಿದ್ದಾರೆ.
|
4 |
+
ಇಂಡೋ-ಜರ್ಮನ್ ಎಜುಕೇಶನಲ್ ಅಂಡ್ ಕಲ್ಚರಲ್ ಸೊಸೈಟಿಯ ಅಧ್ಯಕ್ಷರಾಗಿದ್ದಾರೆ, ಇದು ಜರ್ಮನಿ ಮತ್ತು ಗೋವಾ ನಡುವಿನ ಸಾಂಸ್ಕೃತಿಕ ಬಾಂಧವ್ಯವವನ್ನು ಮತ್ತಷ್ಟು ಇಮ್ಮಡಿಗೊಳಿಸುತ್ತಿದೆ. ಅಲ್ಲದೇ ಪಲ್ಲವಿ ಅವರು ಪ್ರಾರಂಭಿಸಿದ ಫ್ಯಾಷನ್ ಮತ್ತು ಜವಳಿ ವಸ್ತುಸಂಗ್ರಹಾಲಯವಾದ ಮೋಡಾ ಗೋವಾ ಫೌಂಡೇಶನ್ನ ಟ್ರಸ್ಟಿಯಾಗಿದ್ದಾರೆ.
|
5 |
+
ಜೊತೆಗೆ 2012ರಿಂದ 2016ರವರೆಗೆ ಗೋವಾ ವಿಶ್ವವಿದ್ಯಾಲಯದ ಸಂಯೋಜಿತ ಶೈಕ್ಷಣಿಕ ಮಂಡಳಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಗೋವಾ ಕ್ಯಾನ್ಸರ್ ಸೊಸೈಟಿಯ ವ್ಯವಸ್ಥಾಪಕ ಸಮಿತಿಯ ಭಾಗವಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
|
6 |
+
ಪಲ್ಲವಿ ಡೆಂಪೊಅವರ ಪತಿ ಶ್ರೀನಿವಾಸ್ ಡೆಂಪೊ ಗೋವಾ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಮುಖ್ಯಸ್ಥರಾಗಿದ್ದಾರೆ. ಇದರೊಂದಿಗೆ ಡೆಂಪೊ ಕುಟುಂಬವು ಬಡ ಹೆಣ್ಣುಮಕ್ಕಳಿಗೆ ಗ್ರಾಮೀಣ ಶಾಲೆ ದತ್ತು ಕಾರ್ಯಕ್ರಮದಡಿ ಸರ್ಕಾರಿ ಪ್ರೌಢ ಶಾಲೆಗಳನ್ನು ದತ್ತು ಪಡೆದಿದೆ. ಈ ಮೂಲಕ ವೃತ್ತಿಪರ ತರಬೇತಿ ನೀಡುವ ಕೆಲಸ ಮಾಡುತ್ತಿದೆ.
|
7 |
+
ದಕ್ಷಿಣ ಗೋವಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಫ್ರಾನ್ಸಿಸ್ಕೊ ಸರ್ದಿನ್ಹಾ ಪ್ರತಿನಿಧಿಸುತ್ತಿದ್ದಾರೆ. 1962 ರಿಂದ ಕಾಂಗ್ರೆಸ್ ಭದ್ರಕೋಟೆಯಾಗಿರುವ ಕ್ಷೇತ್ರದಲ್ಲಿ ಬಿಜೆಪಿ ಕೇವಲ ಎರಡು ಬಾರಿ (1999 ಮತ್ತು 2014 ರಲ್ಲಿ) ಗೆದ್ದಿದೆ. ಈ ಬಾರಿ ಪಲ್ಲವಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
|
eesanje/url_47_138_11.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಪತ್ನಿಯ ಕಾರು ಕಳವು
|
2 |
+
ನವದೆಹಲಿ,ಮಾ.25-ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಪತ್ನಿಯ ಬಿಳಿ ಬಣ್ಣದ ಫಾರ್ಚುನರ್ ಕಾರು ಕಳ್ಳತನವಾಗಿರುವ ಸುದ್ದಿ ಬೆಳಕಿಗೆ ಬಂದಿದೆ. ಚಾಲಕ, ಮಲ್ಲಿಕಾ ನಡ್ಡಾ ಅವರ ಫಾರ್ಚುನರ್ ಕಾರನ್ನು ಸರ್ವೀಸ್ಗೆ ತೆಗೆದುಕೊಂಡು ಹೋಗಿದ್ದರು. ಕಳೆದ ಮಾರ್ಚ್ 19ರಂದು ಮಧ್ಯಾಹ್ನ 3 ಗಂಟೆಯಿಂದ 4 ಗಂಟೆಯೊಳಗೆ ಅರೋರಾ ಪ್ರಾಪರ್ಟೀಸ್ ಆರ್ಡಿ ಮಾರ್ಗದ ಮುಂಭಾಗದಲ್ಲಿರುವ ಗೋವಿಂದಪುರಿಯಿಂದ ಎಚ್ಪಿ03ಡಿ0021 ಸಂಖ್ಯೆಯ ಕಾರು ಕಳವಾಗಿದೆ.
|
3 |
+
ಜೆ.ಪಿ.ನಡ್ಡಾ ಅವರ ಪತ್ನಿಯ ಕಾರು ಸಂಖ್ಯೆ ಹಿಮಾಚಲ ಪ್ರದೇಶದ್ದು ಎಂಬ ಮಾಹಿತಿ ಲಭಿಸಿದೆ. ಕಾರು ಚಾಲಕ ಸರ್ವೀಸ್ ಸೆಂಟರ್ನಲ್ಲಿ ಕಾರನ್ನು ನಿಲ್ಲಿಸಿ ಊಟ ಮಾಡಲು ಮನೆಗೆ ತೆರಳಿದ್ದ. ಆದರೆ ವಾಪಸ್ ಬಂದಾಗ ಕಾರು ನಾಪತ್ತೆಯಾಗಿತ್ತು.
|
4 |
+
ಕೂಡಲೇ ಚಾಲಕ ಜೋಗಿಂದರ್ ಸ್ಥಳೀಯ ಪೂಲೀಸ್ ಠಾಣೆಗೆ ದೂರು ನೀಡಿದ್ದು, ಕಾರ್ಯಾಚರಣೆ ಕೈಗೊಂಡಿರುವ ಪೂಲೀಸರು ಸರ್ವೀಸ್ ಸೆಂಟರ್ ಆಸುಪಾಸಿನ ಸಿಸಿಟಿವಿಗಳನ್ನು ಪರಿಶೀಲಿಸುತ್ತಿದ್ದಾರೆ, ಅಲ್ಲದೆ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
|
5 |
+
2022 ಮತ್ತು 2023ರ ನಡುವೆ ಭಾರತದಲ್ಲಿ ವಾಹನ ಕಳ್ಳತನ ಘಟನೆಗಳು 2.5% ರಷ್ಟು ಹೆಚ್ಚಾಗಿದೆ.ದೆಹಲಿ ಸೇರಿದಂತೆ ಹಲವು ಮಹಾನಗರಗಳಲ್ಲಿ ವಾಹನ ಕಳ್ಳತನ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದು ಗಮನಾರ್ಹ. ದೆಹಲಿ-ಎನ್ಸಿಆರ್ನಲ್ಲಿ ಪ್ರತಿ 14 ನಿಮಿಷಕ್ಕೆ ಒಂದು ವಾಹನ ಕಳ್ಳತನವಾಗುತ್ತದೆ.
|
eesanje/url_47_138_12.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಚುನಾವಣಾ ಬಾಂಡ್ ಹಗರಣದ ಮರೆಮಾಚಲು ಕೇಜ್ರಿವಾಲ್ ಬಂಧನ ; ಪಿಣರಾಯಿ ವಿಜಯನ್
|
2 |
+
ಕಣ್ಣೂರು, ಮಾ.25 (ಪಿಟಿಐ) –ಚುನಾವಣಾ ಬಾಂಡ್ ಹಗರಣದ ಗಮನ ಬೇರೆಡೆ ಸೆಳೆಯುವ ಉದ್ದೇಶದಿಂದ ಕೇಂದ್ರ ಸರ್ಕಾರವೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
|
3 |
+
ವಿವಾದಿತ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರುದ್ಧ ಸಿಪಿಐ(ಎಂ) ಇಲ್ಲಿ ಆಯೋಜಿಸಿದ್ದ ಸತತ ಮೂರನೇ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ವಿಜಯನ್, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಸಂಘ ಪರಿವಾರವು ಕಾನೂನು ಸುವ್ಯವಸ್ಥೆಗೆ ಕಿಂಚಿತ್ತೂ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು. ಸಂಘಪರಿವಾರವು ಸಾಂವಿಧಾನಿಕ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಲು ಪ್ರಯತ್ನಿಸುತ್ತಿದೆ ಮತ್ತು ದೇಶದ ನ್ಯಾಯಾಂಗಕ್ಕೆ ಬೆದರಿಕೆ ಹಾಕುತ್ತಿದೆ ಎಂದು ಅವರು ಆರೋಪಿಸಿದರು.
|
4 |
+
ಕೇಂದ್ರ ಸರ್ಕಾರ, ಬಿಜೆಪಿ, ಸಂಘಪರಿವಾರ, ಚುನಾವಣಾ ಬಾಂಡ್ ಹಗರಣದ ಸುಪ್ರೀಂ ಕೋರ್ಟ್ ಆದೇಶವು ತಮಗೆ ಹಾನಿಕರ ಎಂದು ಅವರಿಗೆ ಚೆನ್ನಾಗಿ ತಿಳಿದಿದೆ. ಅವರು ಈ ವಿಷಯದಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಬಯಸಿದ್ದರು ಮತ್ತು ಅದಕ್ಕಾಗಿ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ ಎಂದು ವಿಜಯನ್ ಹೇಳಿದರು.ಚುನಾವಣಾ ಬಾಂಡ್ಗಳ ಕಲ್ಪನೆಯನ್ನು ತೇಲಿಬಿಟ್ಟಾಗ, ಸಿಪಿಐ(ಎಂ) ಭ್ರಷ್ಟಾಚಾರದ ಸಾಧನವಾಗಿರುವುದರಿಂದ ಅದನ್ನು ವಿರೋಧಿಸಿತು ಮತ್ತು ಅದರ ವಿರುದ್ಧ ಸುಪ್ರೀಂ ಕೋರ್ಟ್ಗೆ ಹೋಗಿತ್ತು ಎಂದು ಮುಖ್ಯಮಂತ್ರಿ ಹೇಳಿದರು.
|
5 |
+
ಚುನಾವಣಾ ಬಾಂಡ್ ಹಗರಣವು ಭಾರತದಲ್ಲಿ ಇದುವರೆಗೆ ಕಂಡಿರುವ ಅತಿದೊಡ್ಡ ಭ್ರಷ್ಟಾಚಾರವಾಗಿದೆ. ಅಂತಹ ಘೋರ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಳ್ಳಲು ಅವರಿಗೆ ಹೇಗೆ ಧೈರ್ಯ ಬಂತು? ಅವರು (ಬಿಜೆಪಿ) ತಮ್ಮನ್ನು ಎಂದಿಗೂ ಪ್ರಶ್ನಿಸುವುದಿಲ್ಲ ಎಂದು ಭಾವಿಸಿದ್ದರು ಎಂದು ತೋರುತ್ತದೆ ಎಂದಿದ್ದಾರೆ.ಕೇಜ್ರಿವಾಲ್ ಅವರ ಬಂಧನದೊಂದಿಗೆ, ಸಂಘಪರಿವಾರವು ತಾವು ದೇಶದ ಕಾನೂನಿಗಿಂತ ಮೇಲಿದ್ದೇವೆ ಮತ್ತು ತಮ್ಮ ಕಾರ್ಯಸೂಚಿಯನ್ನು ಜಾರಿಗೆ ತರಲು ಏನು ಬೇಕಾದರೂ ಮಾಡಲಿದೆ ಎಂಬ ಸಂದೇಶವನ್ನು ರವಾನಿಸಲು ಪ್ರಯತ್ನಿಸುತ್ತಿದೆ ಎಂದು ವಿಜಯನ್ ಹೇಳಿದರು..
|
eesanje/url_47_138_2.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ದರೋಡೆಕೋರ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ ಆಸ್ಪತ್ರೆಗೆ ದಾಖಲು
|
2 |
+
ಲಖ್ನೋ,ಮಾ.26-ಉತ್ತರಪ್ರದೇಶದ ಬಂದಾ ಜೈಲಿನಲ್ಲಿರುವ ದರೋಡೆಕೋರ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆತನನ್ನು ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಮೂರು ದಿನಗಳಿಂದ ಮೂತ್ರದ ಸೋಂಕಿನಿಂದ ಬಳಲುತ್ತಿದ್ದ ಅನ್ಸಾರಿ ಮುಖ್ತಾರ್ ಪ್ರಸ್ತುತ ವೈದ್ಯಕೀಯ ಕಾಲೇಜಿನ ತುರ್ತು ನಿಗಾಘಟಕದಲ್ಲಿ(ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ.
|
3 |
+
ನಿನ್ನೆ ಮುಖ್ತಾರ್ ಅನ್ಸಾರಿಗೆ ಸ್ವಲ್ಪ ಹೊಟ್ಟೆ ನೋವು ಕಾಣಿಸಿಕೊಂಡಿತು ಮತ್ತು ಶೌಚಾಲಯಕ್ಕೆ ಹೋಗುವಾಗ ಬಿದ್ದಿದ್ದಾರೆ. ಇದಾದ ಬಳಿಕ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು. ಸದ್ಯ ಯಾವುದೇ ಆತಂಕದ ಪರಿಸ್ಥಿತಿ ಇಲ್ಲ ಮತ್ತು ಮುಖ್ತಾರ್ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಜೈಲು ಆಡಳಿತಾಧಿಕಾರಿಗಳು ತಿಳಿಸಿದ್ದಾರೆ. ಮುಖ್ತಾರ್ ಕುಟುಂಬಕ್ಕೆ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ಅವರನ್ನು ಆಸ್ಪತ್ರೆಗೆ ತಲುಪುವಂತೆ ತಿಳಿಸಲಾಗಿದೆ ಎಂದು ಜೈಲು ಆಡಳಿತ ತಿಳಿಸಿದೆ.
|
4 |
+
ಇತ್ತೀಚೆಗಷ್ಟೇ ಮುಖ್ತಾರ್ ಅನ್ಸಾರಿ ಬಂದಾ ಜೈಲಿನಲ್ಲಿ ತನಗೆ ಜೀವ ಬೆದರಿಕೆಯ ಕುರಿತು ಹೇಳಿದ್ದು, ಸ್ಲೋ ಪಾಯ್ಸನ್ ನೀಡಿರುವುದಾಗಿ ಆರೋಪಿಸಿದ್ದರು. ಆದರೆ ಬಂದಾ ಜೈಲು ಆಡಳಿತವು ಮುಕ್ತಾರ್ ಅನ್ಸಾರಿ ಆರೋಪವನ್ನು ತಳ್ಳಿಹಾಕಿದೆ.
|
5 |
+
ಸೋದರನ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡುತ್ತಿಲ್ಲ:ಮುಕ್ತರ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಮತ್ತು ಬಂದಾದ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದಾರೆ ಎಂದು ನಮಗೆ ಮೊಹಮ್ಮದಾಬಾದ್ ಪೊಲೀಸ್ ಠಾಣೆಯಿಂದ ಸಂದೇಶ ಬಂದಿದೆ. ಅವರ ಸಹಾಯಕ್ಕೆ ಬರುವಂತೆ ಕುಟುಂಬ ಸದಸ್ಯರನ್ನು ಕೇಳಲಾಗಿದೆ ಎಂದು ಅಫ್ಜಲ್ ಅನ್ಸಾರಿ ತಿಳಿಸಿದ್ದಾರೆ.
|
6 |
+
ಆದರೆ ಜಿಲ್ಲಾ, ಜೈಲು ಮತ್ತು ಆಸ್ಪತ್ರೆ ಅಧಿಕಾರಿಗಳು ಮುಖ್ತಾರ್ ಆರೋಗ್ಯ ಸ್ಥಿತಿಯ ಕುಟುಂಬದ ವಿವರಗಳನ್ನು ನೀಡುತ್ತಿಲ್ಲ. ಇದಷ್ಟೇ ಅಲ್ಲ, ಮುಖ್ತಾರ್ ಅವರ ವಕೀಲರಿಗೂ ಅವರನ್ನು ಭೇಟಿ ಮಾಡಲು ಅವಕಾಶ ನೀಡುತ್ತಿಲ್ಲ ಎಂದು ಹೇಳಿದ್ದಾರೆ. ಬಂದಾಗೆ ತೆರಳುವ ಮೊದಲು ಮುಖ್ಯಮಂತ್ರಿ ಕಚೇರಿಗೆ ಕರೆ ಮಾಡಿದ್ದೆ ಆದರೆ ಗೋರಖ್ಪುರದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ. ಬಂದಾ ಮೆಡಿಕಲ್ ಕಾಲೇಜಿನಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸದಿದ್ದಲ್ಲಿ ಮುಖ್ತಾರ್ ಅವರನ್ನು ಲಕ್ನೋದ ಮೇದಾಂತ ಆಸ್ಪತ್ರೆಗೆ ಅಥವಾ ಇನ್ನಾವುದೇ ದೊಡ್ಡ ಆಸ್ಪತ್ರೆಗೆ ದಾಖಲಿಸುವಂತೆ ಮನವಿ ಮಾಡಲು ಮುಖ್ಯಮಂತ್ರಿಗಳ ಕಚೇರಿಗೆ ಕರೆ ಮಾಡಿದ್ದಾಗಿ ಅವರು ತಿಳಿಸಿದ್ದಾರೆ.
|
eesanje/url_47_138_3.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕಂಗನಾ ವಿರುದ್ಧ ಅಶ್ಲೀಲ ಪೋಸ್ಟ್ ಮಾಡಿದ್ದ ಸುಪ್ರಿಯಾ ಶ್ರಿನೇಟ್ ವಿರುದ್ಧ ದೂರು
|
2 |
+
ನವದೆಹಲಿ,ಮಾ.26-ಬಾಲಿವುಡ್ ನಟಿ ಕಂಗನಾ ರಾವತ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿ ಪೋಸ್ಟ್ ಮಾಡಿ ವಿವಾದಕ್ಕೆ ಸಿಲುಕಿರುವ ಎಐಸಿಸಿ ವಕ್ತಾರೆ ಸುಪ್ರಿಯ ಶ್ರಿನೇಟ್ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವಂತೆ ರಾಷ್ಟ್ರೀಯ ಮಹಿಳಾ ಆಯೋಗ, ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.
|
3 |
+
ಇಂತಹ ವರ್ತನೆಯನ್ನು ಹಾಗೂ ಮಹಿಳೆಯರ ಘನತೆಯನ್ನು ಕುಂದಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಈ ಕೂಡಲೇ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಎಲ್ಲಾ ಮಹಿಳೆಯರ ಗೌರವ ಹಾಗೂ ಘನತೆಯನ್ನು ಎತ್ತಿಹಿಡಿಯೋಣ ಎಂದು ಆಯೋಗ ತಿಳಿಸಿದೆ. ಕಾಂಗ್ರೆಸ್ ಮಾಧ್ಯಮ ವಿಭಾಗದ ಮುಖ್ಯಸ್ಥೆಯಾಗಿರುವ ಸುಪ್ರಿಯಾ ಶ್ರೀನೇಟ್ ಅವರು, ಕಂಗನಾ ಅಲ್ಪ ಬಟ್ಟೆ ಧರಿಸಿರುವ ಫೋಟೊ ಒಂದನ್ನು ಇನ್ಸ್ಟ್ರಾಗ್ರಾಂನಲ್ಲಿ ಹಂಚಿಕೊಂಡು, ಅಕ್ಷೇಪಾರ್ಹ ಶೀರ್ಷಿಕೆ ನೀಡಿದ್ದರು.
|
4 |
+
ಶ್ರೀನೇಟ್ ಪೋಸ್ಟ್ ವೈರಲ್ ಆಗುತ್ತಿದ್ದಂತೆ ತಿರುಗೇಟು ನೀಡಿದ ಬಿಜೆಪಿ ನಾಯಕರು, ಕಾಂಗ್ರೆಸ್ ನಾಯಕರ ಮನಸ್ಥಿತಿ ತೀರಾ ಕೆಳಮಟ್ಟಕ್ಕೆ ಇಳಿದಿದೆ. ಒಬ್ಬ ಮಹಿಳೆಯಾಗಿ ಮತ್ತೊಬ್ಬ ಮಹಿಳೆಯನ್ನು ಹೀನವಾಗಿ ನೋಡುವ ನಾಯಕರು ಪಕ್ಷದ ಸಾಮಾಜಿಕ ಜಾಲತಾಣದ ಹೊಣೆ ಹೊತ್ತಿದ್ದಾರೆ ಎಂದು ಟೀಕಿಸಿದ್ದಾರೆ.
|
5 |
+
ಸುಪ್ರಿಯಾ ಶ್ರೀನೇಟ್ ಅವರಿಗೆ ಮರುತ್ತರ ನೀಡಿರುವ ಕಂಗನಾ ರಣಾವತ್, ಕಳೆದ 20 ವರ್ಷದಿಂದ ನಾನು ಚಿತ್ರರಂಗದಲ್ಲಿದ್ದೇನೆ. ಹಲವು ಪಾತ್ರ ನಿಭಾಯಿಸಿದ್ದೇನೆ. ಕ್ವೀನ್ನ ನಿಷ್ಕಪಟ ಹುಡುಗಿ ಪಾತ್ರದಿಂದ ಹಿಡಿದು ಧಾಕಡ್ನ ಮೋಹಕ ಗೂಢಚಾರಿಣಿ ಪಾತ್ರದವರೆಗೂ, ದೇವಕನ್ಯೆ ಮಣಿಕರ್ಣಿಕದಿಂದ ಹಿಡಿದು ರಾಕ್ಷಸಿ ಅವತಾರದ ಚಂದ್ರಮುಖಿವರೆಗೆ, ರಜ್ಜೋದ ವೇಶ್ಯೆ ಪಾತ್ರದಿಂದ ಕ್ರಾಂತಿಕಾರಿ ತಲೈವಿಯ ಪಾತ್ರಗಳವರೆಗೆ ವೈವಿಧ್ಯಮಯ ಪಾತ್ರ ನಿರ್ವಹಿಸಿರುವೆ.
|
6 |
+
ನಾವು ನಮ್ಮ ಹೆಣ್ಣು ಮಕ್ಕಳನ್ನು ಪೂರ್ವಾಗ್ರಹ ಮನಸ್ಥಿತಿಯ ಸಂಕೋಲೆಯಿಂದ ಬಿಡುಗಡೆ ಮಾಡಬೇಕು. ದೇಹದ ಭಾಗಗಳ ಮೇಲಿರುವ ಕುತೂಹಲ ಮೀರಿ ಮುನ್ನಡೆಯಬೇಕು. ದಿನ ನಿತ್ಯ ಜೀವನದಲ್ಲಿ ಹೆಣ್ಣು ಅನುಭವಿಸುವ ನಿಂದನೆಯನ್ನು ತಡೆಯಲು ಗಮನ ಕೊಡಬೇಕು. ಎಲ್ಲಾ ಮಹಿಳೆಯರು ತಮ್ಮ ಘನತೆಗೆ ಅರ್ಹರು, ಎಂದಿದ್ದಾರೆ.
|
7 |
+
ಕಂಗನಾ ಅವರ ಬಗ್ಗೆ ಆಕ್ಷೇಪಾರ್ಹ ಫೋಟೋ ಹಾಕಿ ಅವಹೇಳನಕಾರಿ ಶೀರ್ಷಿಕೆ ನೀಡಿದ ಸುಪ್ರಿಯಾ ಶ್ರೀನೇಟ್ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಆಗ್ರಹಿಸಿದ್ದಾರೆ.
|
8 |
+
ತಮ್ಮ ಚುನಾವಣಾ ಪ್ರವೇಶ ಕುರಿತು ಗುಜರಾತ್ ಕಾಂಗ್ರೆಸ್ ನಾಯಕರೊಬ್ಬರ ಕೀಳು ಮಟ್ಟದ ಸಂಭಾಷಣೆಯ ಸ್ಕ್ರೀನ್ಶಾಟ್ನ್ನು ಕೂಡ ಕಂಗನಾ ಹಂಚಿಕೊಂಡಿದ್ದಾರೆ. ವಿಕ್ರಮ್ ಎಂಬುವವರ ಪೋಸ್ಟ್ ಗೆ ಗುಜರಾತ್ ಕಾಂಗ್ರೆಸ್ ���ಾಯಕ ಎಚ್ಎಸ್ ಅಹೀರ್ ನಗುವಿನ ಮೋಜಿ ಹಾಕಿದ್ದರು.
|
9 |
+
ಯುವ ನಾಯಕನಿಗೆ ಟಿಕೆಟ್ ದೊರೆತರೆ, ಆತನ ಸಿದ್ಧಾಂತದ ಮೇಲೆ ದಾಳಿ ನಡೆಯುತ್ತದೆ. ಯುವ ನಾಯಕಿಗೆ ಟಿಕೆಟ್ ಸಿಕ್ಕರೆ, ಆಕೆಯ ಮೇಲೆ ಲೈಂಗಿಕವಾಗಿ ದಾಳಿ ನಡೆಸಲಾಗುತ್ತದೆ. ವಿಚಿತ್ರ! ಜತೆಗೆ, ಕಾಂಗ್ರೆಸ್ ನಾಯಕರು ಸಣ್ಣ ಪಟ್ಟಣದ ಹೆಸರನ್ನೂ ಲೈಂಗಿಕಗೊಳಿಸುತ್ತಿದ್ದಾರೆ. ಮಂಡಿಯಲ್ಲಿ ಯುವ ಮಹಿಳೆ ಅಭ್ಯರ್ಥಿಯಾಗಿದ್ದಾಳೆ ಎಂಬ ಕಾರಣಕ್ಕಾಗಿಯೇ ಎಲ್ಲಾ ಕಡೆ ಆ ಪಟ್ಟಣವನ್ನು ಲೈಂಗಿಕ ಕಂಟೆಕ್ಸ್ನಲ್ಲಿ ಬಳಸಲಾಗುತ್ತಿದೆ. ಸೆಕ್ಸಿಸ್ಟ್ ಪ್ರವೃತ್ತಿಯನ್ನು ಪ್ರದರ್ಶಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು ಎಂದು ಕಂಗನಾ ಕಿಡಿಕಾರಿದ್ದಾರೆ.
|
10 |
+
ನಕಲಿ ಅಕೌಂಟ್ ಎಂದ ಸುಪ್ರಿಯಾವೈರಲ್ ಪೋಸ್ಟ್ ಬಗ್ಗೆ ಸ್ಪಷ್ಟೀಕರಣ ನೀಡಿರುವ ಸುಪ್ರಿಯಾ ಶ್ರೀನೇಟ್, ನನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆದಿರುವ ಕಿಡಿಗೇಡಿಗಳು ಪೋಸ್ಟ್ ಮಾಡಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಪೋಸ್ಟ್ ಡಿಲೀಟ್ ಮಾಡಲಾಗಿದೆ. ಈ ಮೋಜಿ ಸಂಬಂಧ ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ. ಯಾರೋ ನಕಲಿ ಖಾತೆಯಿಂದ ಆ ಪೋಸ್ಟ್ ಅನ್ನು ಕಾಪಿ ಮಾಡಿ, ನನ್ನ ಇನ್ಸ್ಟಗ್ರಾಂ ಮತ್ತು ಫೇಸ್ಬುಕ್ ಖಾತೆಗಳಲ್ಲಿ ಪೋಸ್ಟ್ ಮಾಡಿದ್ದಾರೆ. ನನ್ನ ಖಾತೆಗೆ ಪ್ರವೇಶ ಹೊಂದಿರುವ ಯಾರು ಈ ಕೆಲಸ ಮಾಡಿದ್ದಾರೆ ಎಂದು ತಿಳಿಯಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
|
eesanje/url_47_138_4.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ತೆಲಂಗಾಣದಲ್ಲಿ ಫೋನ್ ಕದ್ದಾಲಿಕೆ ಸದ್ದು
|
2 |
+
ಹೈದರಾಬಾದ್,ಮಾ.26-ತೆಲಂಗಾಣದಲ್ಲಿ ಫೋನ್ ಕದ್ದಾಲಿಕೆ ಪ್ರಕರಣ ವರದಿಯಾಗಿದೆ. ರಾಜ್ಯದ ಕೆಲ ಪೊಲೀಸರು ಹಿಂದಿನ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಅವರ ಅಣತಿ ಮೇರೆಗೆ ಹಾಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೇರಿದಂತೆ ಹಲವಾರು ಪ್ರತಿಪಕ್ಷಗಳ ನಾಯಕರ ಫೋನ್ ಕದ್ದಾಲಿಕೆ ನಡೆಸಿದ್ದರು ಎಂದು ತಿಳಿದುಬಂದಿದೆ. ಇದರ ಜೊತೆಗೆ ಬಿಆರ್ಎಸ್ ಪಕ್ಷದ ನಿಧಿಗೆ ಬೃಹತ್ ಮೊತ್ತದ ಕೊಡುಗೆ ನೀಡುವಂತೆ ಉದ್ಯಮಿಗಳನ್ನು ಬ್ಲ್ಯಾಕ್ಮೇಲ್ ಮಾಡಲು ಸಹ ಕಣ್ಗಾವಲು ಬಳಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಆರೋಪಗಳಿಗೆ ಬಿಆರ್ಎಸ್ ಇನ್ನೂ ಪ್ರತಿಕ್ರಿಯಿಸಿಲ್ಲ.
|
3 |
+
ಈ ಸಂಬಂಧ ಮೂವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಬಂಧಿಸಲಾಗಿದ್ದು, ಇದೀಗ ಅಮೆರಿಕದಲ್ಲಿರುವ ರಾಜ್ಯ ಗುಪ್ತಚರ ವಿಭಾಗದ ಮಾಜಿ ಮುಖ್ಯಸ್ಥ ಟಿ ಪ್ರಭಾಕರ ರಾವ್ ವಿರುದ್ಧ ಲುಕ್ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಇಬ್ಬರು ಹಿರಿಯ ಅಧಿಕಾರಿಗಳಾದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಭುಜಂಗ ರಾವ್ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿರುಪತಣ್ಣ ಅವರುಗಳು ಅಕ್ರಮ ಕಣ್ಗಾವಲು ಮತ್ತು ಸಾಕ್ಷ್ಯ ನಾಶವನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
|
4 |
+
ಆಗಿನ ಬಿಆರ್ಎಸ್ ಸರ್ಕಾರದ ಅಡಿಯಲ್ಲಿ ರಾಜ್ಯ ಗುಪ್ತಚರ ಬ್ಯೂರೋದ ತಾಂತ್ರಿಕ ಸಲಹೆಗಾರ ರವಿ ಪಾಲ್ ಅವರು, ರೆಡ್ಡಿ ಅವರ ಸಂಭಾಷಣೆಗಳನ್ನು ಕೇಳಲು ಅವರ ನಿವಾಸದ ಬಳಿ -ಫೋನ್ ಟ್ಯಾಪಿಂಗ್ ಉಪಕರಣಗಳನ್ನು ಆಮದು ಮಾಡಿಕೊಳ್ಳಲು ಮತ್ತು ಸ್ಥಾಪಿಸಲು ಸಹಾಯ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
|
5 |
+
ಸಾಫ್ಟ್ ವೇರ್ ಕಂಪನಿಯನ್ನು ಮುಂಭಾಗವಾಗಿ ಬಳಸಿಕೊಂಡು ಇಸ್ರೇಲ್ನಿಂದ ಉಪಕರಣಗಳನ್ನು ಆಮದು ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಅಂತಹ ಆಮದುಗಳಿಗೆ ಕೇಂದ್ರದಿಂದ ಯಾವುದೇ ಅನುಮತಿಯನ್ನು ತೆಗೆದುಕೊಳ್ಳಲಾಗಿಲ್ಲ ಎಂದು ತಿಳಿದುಬಂದಿದೆ. ಈ ಸೆಟಪ್ನೊಂದಿಗೆ, 300 ಮೀಟರ್ ವ್ಯಾಪ್ತಿಯಲ್ಲಿ ಮಾತನಾಡುವ ಯಾವುದನ್ನಾದರೂ ಕೇಳಬಹುದು ಎಂದು ವರದಿಗಳು ಹೇಳುತ್ತವೆ.
|
6 |
+
ರವಿ ಪಾಲ್ ಅವರು ರೆಡ್ಡಿ ನಿವಾಸದ ಬಳಿ ಕಚೇರಿಯನ್ನು ಸ್ಥಾಪಿಸಿ ಸಾಧನವನ್ನು ಅಳವಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಆತನನ್ನು ವಿಚಾರಣೆಗೆ ಒಳಪಡಿಸಲು ಪೊಲೀಸರು ಮುಂದಾಗಿದ್ದಾರೆ.ತೆಲುಗು ಟಿವಿ ಚಾನೆಲ್ ಐ ನ್ಯೂಸ್ ನಡೆಸುತ್ತಿರುವ ಶರ್ವಣ್ ರಾವ್ ಮತ್ತು ಸಿಟಿ ಟಾಸ್ಕ್ -ಫೋರ್ಸ್ ನ ಪೊಲೀಸ್ ಅಧಿಕಾರಿ ರಾಧಾ ಕಿಶನ್ ರಾವ್ ಅವರಿಗೂ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.
|
7 |
+
ಕಣ್ಗಾವಲು ವಿರೋಧ ಪಕ್ಷದ ನಾಯಕರಿಗೆ ಮಾತ್ರ ಸೀಮಿತವಾಗಿಲ್ಲ. ರಿಯಲ್ ಎಸ್ಟೇಟ್ ವ್ಯಾಪಾರಿಗಳು ಮತ್ತು ಆಭರಣ ವ್ಯಾಪಾರಿಗಳು ಸೇರಿದಂತೆ ಪ್ರಮುಖ ಉದ್ಯಮಿಗಳು ಮತ್ತು ಸೆಲೆಬ್ರಿಟಿಗಳ ಮೇಲೂ ನಿಗಾ ಇರಿಸಲಾಗಿತ್ತು. ವಾಸ್ತವವಾಗಿ, -ಫೋನ್ ಸಂಭಾಷಣೆಗಳ ಕದ್ದಾಲಿಕೆಯು ಸೆಲೆಬ್ರಿಟಿ ದಂಪತಿಗಳ ವಿಚ್ಛೇದನಕ್ಕೆ ಕಾರಣವಾಗಿತ್ತು ಎಂದು ವರದಿಗಳು ಹೇಳುತ್ತವೆ.
|
eesanje/url_47_138_5.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಮರಕ್ಕೆ ಜೀಪ್ ಡಿಕ್ಕಿಯಾಗಿ ಮೂವರ ಸಾವು
|
2 |
+
ದಾಮೋಹ್, ಮಾ 26-ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ದೇವದೋಗರ ಗ್ರಾಮದ ಬಳಿ ಜೀಪೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ,ಇಬ್ಬರು ಗಾಯಗೊಂಡಿದ್ದಾರೆ.ಪಟೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ ಎಂದು ಪಟೇರಾ ಪೊಲೀಸ್ ಠಾಣೆ ಉಸ್ತುವಾರಿ ಅಮಿತ್ ಮಿಶ್ರಾ ಹೇಳಿದ್ದಾರೆ.
|
3 |
+
ವೇಗವಾಗಿ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.
|
4 |
+
ಇನ್ನೂ ಗಾಯಗೊಂಡ ಇಬ್ಬರನ್ನು ಜಬಲ್ಪುರದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು , ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಿಶ್ರಾ ತಿಳಿಸಿದ್ದಾರೆ. ಮೃತರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಅಪಘಾತ ಸಂಭಂದ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
|
eesanje/url_47_138_6.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಜಗಳದ ವೇಳೆ ಯುವಕನಿಗೆ ಗುಂಡಿಕ್ಕಿ ಹತ್ಯೆ
|
2 |
+
ನವದೆಹಲಿ, ಮಾ.26-ಈಶಾನ್ಯ ದೆಹಲಿಯ ಶಾಸ್ತ್ರಿ ಪಾರ್ಕ್ನ ಮನೆಯೊಂದರಲ್ಲಿ ಕಳೆದ ರಾತ್ರಿ ನಡೆದ ಜಗಳದ ವೇಳೆ ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆಮಾಡಲಾಗಿದೆ. ಚಾಂದಿನಿ ಚೌಕ್ನ ಗಾಮೆರ್ಂಟ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮುಸ್ತಾಕಿಮ್(22) ಕೊಲೆಯಾದ ಯುವಕ .
|
3 |
+
ಅತನ ಎದೆಗೆ ಗುಂಡು ಹಾರಿ ಕೊಂದ ಆರೋಪಿ ಯಾಸೀನ್ (24) ಎಂಬಾತ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ರಾತ್ರಿ, ಮುಸ್ತಾಕಿಮ್ ಬಾರ್ನಲ್ಲಿ ಕೆಲಸ ಮಾಡುವ ಇಶ್ರತ್ ಎಂಬಾಕೆಯ ಮನೆಗೆ ಹೋಗಿದ್ದರು ಅಲ್ಲಿ ಯಾಸೀನ್ ಕೂಡ ಬಂದಿದ್ದ .ಈ ವೇಳೆ ವಾಗ್ವಾದ ನಡೆದು ಜಗಳ ಶುರುವಾಗಿದೆ.
|
4 |
+
ಇದು ವಿಕೋಪಕ್ಕೆ ತಿರುಗಿ ಯಾಸೀನ್ ತನ್ನ ಬಳಿಯಿದ್ದ ಪಿಸ್ತೂಲಿನಿಂದ ಮುಸ್ತಾಕಿಮ್ ಮೇಲೆ ಮೂರು ಬಾರಿ ಗುಂಡು ಹಾರಿಸಿದ್ದಾನೆ.ಒಂದು ಗುಂಡು ಮುಸ್ತಕಿಮ್ನ ಎದೆಗೆ ತಗುಲಿ ಆತ ಕುಸಿದು ಬಿದ್ದಿದ್ದಾನೆ ನಂತರ ಆತನನ್ನು ಜಗ್ ಪ್ರವೇಶ್ ಚಂದ್ರ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದರು.
|
5 |
+
ಮಾಹಿತಿ ಪಡೆದು ಸ್ಥಳಕ್ಕೆ ದಾವಿಸಿದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ದೇಹವನ್ನು ಜಿಟಿಬಿ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ಉಪ ಪೊಲೀಸ್ಆಯುಕ್ತ (ಈಶಾನ್ಯ) ಜಾಯ್ ಟಿರ್ಕಿ ಹೇಳಿದ್ದಾರೆ.ಸ್ಥಳದಲ್ಲಿ ಎರಡು ಬುಲೆಟ್ ಪತ್ತೆಯಾಗಿದೆ ಪರಾರಿಯಾಗಿರುವ ಯಾಸೀನ್ನನ್ನು ಬಂಧಿಸಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ಡಿಸಿಪಿ ತಿಳಿಸಿದ್ದಾರೆ.ಪೊಲೀಸರ ಪ್ರಕಾರ, ಕಳೆದ ವರ್ಷ ನವೆಂಬರ್ನಲ್ಲಿ ಸೊಹೈಲ್ ಮತ್ತು ಇಶ್ರತ್ ವಿಚ್ಛೇದನ ಪಡೆದಿದ್ದರು ಎಂದು ತಿಳಿದುಬಂದಿದೆ.
|
eesanje/url_47_138_7.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷನಾದ ದಲಿತ ವಿದ್ಯಾರ್ಥಿ
|
2 |
+
ನವದೆಹಲಿ, ಮಾ 25 (ಪಿಟಿಐ)-ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟವು (ಜೆಎನ್ಯುಎಸ್ಯು) ಸುಮಾರು ಮೂರು ದಶಕಗಳ ನಂತರ ಎಡ ಬೆಂಬಲಿತ ಗುಂಪುಗಳಿಂದ ತನ್ನ ಮೊದಲ ದಲಿತ ಅಧ್ಯಕ್ಷರನ್ನು ಆಯ್ಕೆ ಮಾಡಿದೆ. ಯುನೈಟೆಡ್ ಲೆಫ್ಟ್ ಪ್ಯಾನೆಲ್ ಜೆಎನ್ಯುಎಸ್ಯು ಚುನಾವಣೆಯಲ್ಲಿ ಕ್ಲೀನ್ ಸ್ವೀಪ್ ಸಾಧಿಸಿದೆ, ಅದರ ಸಮೀಪದ ಪ್ರತಿಸ್ರ್ಪ ಆರ್ಎಸ್ಎಸ್-ಸಂಯೋಜಿತ ಎಬಿವಿಪಿ ಅಭ್ಯರ್ಥಿಯನ್ನು ಸೋಲಿಸಿದೆ.
|
3 |
+
ನಾಲ್ಕು ವರ್ಷಗಳ ವಿರಾಮದ ನಂತರ ನಡೆದ ಚುನಾವಣೆಯಲ್ಲಿ ಅಖಿಲ ಭಾರತ ವಿದ್ಯಾರ್ಥಿ ಸಂಘದ (ಎಐಎಸ್ಎ) ಧನಂಜಯ್ ಅವರು 1,676 ಮತಗಳನ್ನು ಗಳಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ (ಎಬಿವಿಪಿ) ಉಮೇಶ್ ಸಿ ಅಜ್ಮೀರಾ ವಿರುದ್ಧ 2,598 ಮತಗಳನ್ನು ಪಡೆಯುವ ಮೂಲಕ ಜೆಎನ್ಯುಎಸ್ಯು ಅಧ್ಯಕ್ಷ ಸ್ಥಾನವನ್ನು ಗೆದ್ದರು.
|
4 |
+
ಧನಂಜಯ್ ಬಿಹಾರದ ಗಯಾ ಮೂಲದವರಾಗಿದ್ದು, 1996-97ರಲ್ಲಿ ಚುನಾಯಿತರಾದ ಬಟ್ಟಿ ಲಾಲ್ ಬೈವಾರ್ ನಂತರ ಎಡಪಕ್ಷದಿಂದ ಆಯ್ಕೆಯಾದ ಮೊದಲ ದಲಿತ ಅಧ್ಯಕ್ಷರಾಗಿದ್ದಾರೆ. ಗೆಲುವಿನ ನಂತರ ಪಿಟಿಐ ಜೊತೆ ಮಾತನಾಡಿದ ಧನಂಜಯ, ಈ ಗೆಲುವು ಜೆಎನ್ಯು ವಿದ್ಯಾರ್ಥಿಗಳು ದ್ವೇಷ ಮತ್ತು ಹಿಂಸಾಚಾರದ ರಾಜಕೀಯವನ್ನು ತಿರಸ್ಕರಿಸುವ ಜನಾಭಿಪ್ರಾಯವಾಗಿದೆ.
|
5 |
+
ವಿದ್ಯಾರ್ಥಿಗಳು ಮತ್ತೊಮ್ಮೆ ನಮ್ಮ ಮೇಲೆ ವಿಶ್ವಾಸವನ್ನು ತೋರಿಸಿದ್ದಾರೆ. ನಾವು ಅವರ ಹಕ್ಕುಗಳಿಗಾಗಿ ಹೋರಾಟವನ್ನು ಮುಂದುವರಿಸುತ್ತೇವೆ. ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸಮಸ್ಯೆಗಳ ಮೇಲೆ ಕೆಲಸ ಮಾಡುತ್ತೇವೆ ಎಂದಿದ್ದಾರೆ. ಕ್ಯಾಂಪಸ್ನಲ್ಲಿ ಮಹಿಳೆಯರ ಸುರಕ್ಷತೆ, ನಿಧಿ ಕಡಿತ, ವಿದ್ಯಾರ್ಥಿವೇತನ ಹೆಚ್ಚಳ, ಮೂಲಸೌಕರ್ಯ ಮತ್ತು ನೀರಿನ ಬಿಕ್ಕಟ್ಟು ಪ್ರಾರಂಭವಾಗುವ ವಿದ್ಯಾರ್ಥಿಗಳ ಒಕ್ಕೂಟದ ಪ್ರಮುಖ ಆದ್ಯತೆಗಳಲ್ಲಿ ಸೇರಿವೆ ಎಂದು ಅವರು ಹೇಳಿದರು.
|
6 |
+
ಲಾಲ್ ಸಲಾಂ ಮತ್ತು ಜೈ ಭೀಮ್ ಘೋಷಣೆಗಳ ನಡುವೆ ವಿಜೇತ ವಿದ್ಯಾರ್ಥಿಗಳನ್ನು ಅವರ ಬೆಂಬಲಿಗರು ಶ್ಲಾಸಿದರು. ಅಭ್ಯರ್ಥಿಗಳ ಗೆಲುವಿಗಾಗಿ ವಿದ್ಯಾರ್ಥಿಗಳು ಕೆಂಪು, ಬಿಳಿ ಮತ್ತು ನೀಲಿ ಬಾವುಟಗಳನ್ನು ಬೀಸಿದರು.
|
7 |
+
ಭಾರತೀಯ ವಿದ್ಯಾರ್ಥಿ ಒಕ್ಕೂಟದ (ಎಸ್ಎಫ್ ಐ) ಅವಿಜಿತ್ ಘೋಷ್ ಅವರು ಎಬಿವಿಪಿಯ ದೀಪಿಕಾ ಶರ್ಮಾ ಅವರನ್ನು 927 ಮತಗಳಿಂದ ಸೋಲಿಸಿ ಉಪಾಧ್ಯಕ್ಷ ಸ್ಥಾನವನ್ನು ಗೆದ್ದಿದ್ದಾರೆ. ಶರ್ಮಾ ಅವರ 1,482 ಮತಗಳ ವಿರುದ್ಧ ಘೋಷ್ ಅವರು 2,409 ಮತಗಳನ್ನು ಪಡೆದರು. ಎಡಪಕ್ಷಗಳ ಬೆಂಬಲಿತ ಬಿರ್ಸಾ ಅಂಬೇಡ್ಕರ್ ವಿದ್ಯಾರ್ಥಿಗಳ ಸಂಘದ (ಬಾಪ್ಸಾ) ಅಭ್ಯರ್ಥಿ ಪ್ರಿಯಾಂಶಿ ಆರ್ಯ ಅವರು ಎಬಿವಿಪಿಯ ಅರ್ಜುನ್ ಆನಂದ್ ಅವರನ್ನು 926 ಮತಗಳಿಂದ ಸೋಲಿಸುವ ಮೂಲಕ ಪ್ರಧಾನ ಕಾರ್ಯದರ್ಶಿ ಸ್ಥಾನವನ್ನು ಗೆದ್ದಿದ್ದಾರೆ. ಆರ್ಯ 2,887 ಮತಗಳನ್ನು ಪಡೆದರೆ, ಆನಂದ್ 1961 ಮತಗಳನ್ನು ಪಡೆದರು.
|
eesanje/url_47_138_8.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ಸಣ್ಣ ರಾಮಲಲ್ಲಾ ವಿಗ್ರಹ ವೈರಲ್
|
2 |
+
ಲಕ್ನೋ,ಮಾ.25-ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರ ಸಣ್ಣ ರಾಮ ಲಲ್ಲಾ ವಿಗ್ರಹ ಕೆತ್ತನೆ ಕಾರ್ಯ ಇದೀಗ ಭಾರಿ ವೈರಲ್ ಆಗಿದೆ. ರಾಮ ಲಲ್ಲಾನ ಮುಖ್ಯ ಮೂರ್ತಿಯನ್ನು ಆಯ್ಕೆ ಮಾಡಿದ ನಂತರ, ನಾನು ಅಯೋಧ್ಯೆಯಲ್ಲಿ ನನ್ನ ಬಿಡುವಿನ ವೇಳೆಯಲ್ಲಿ ಮತ್ತೊಂದು ಸಣ್ಣ ರಾಮಲಲ್ಲಾ ಮೂರ್ತಿಯನ್ನು (ಕಲ್ಲು) ಕೆತ್ತಿದ್ದೇನೆ ಎಂದು ಯೋಗಿರಾಜ್ ಎಕ್ಸ್ನಲ್ಲಿ ಹೇಳಿಕೊಂಡು ವಿಡಿಯೋ ಹಂಚಿಕೊಂಡಿದ್ದಾರೆ.
|
3 |
+
ಇದಕ್ಕೂ ಮೊದಲು ಅವರು ಪ್ರತಿಮೆಯ ಕಣ್ಣುಗಳನ್ನು ಕೆತ್ತಲು ಬಳಸಿದ ವಿಶೇಷ ಸಾಧನಗಳ ಚಿತ್ರವನ್ನು ಸಹ ಹಂಚಿಕೊಂಡಿದ್ದಾರೆ. ನಾನು ಅಯೋಧ್ಯೆಯ ರಾಮ್ ಲಲ್ಲಾನ ದಿವ್ಯ ಕಣ್ಣುಗಳನ್ನು (ನೆಟ್ರೋನ್ಮಿಲನ) ಕೆತ್ತಿದ ಚಿನ್ನದ ಉಳಿಯೊಂದಿಗೆ ಈ ಬೆಳ್ಳಿಯ ಸುತ್ತಿಗೆಯನ್ನು ಬಳಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.
|
4 |
+
51 ಇಂಚಿನ ಎತ್ತರದ ವಿಗ್ರಹವನ್ನು ರಾಮ ಲಲ್ಲಾ ಐದು ವರ್ಷದ ಕಮಲದ ಮೇಲೆ ನಿಂತಿರುವಂತೆ ತೋರಿಸುತ್ತದೆ, ಇದನ್ನು ಯೋಗಿರಾಜ್ ಅವರು ಕೃಷ್ಣ ಶಿಲಾದಿಂದ ರಚಿಸಿದ್ದಾರೆ. ಕೃಷಿ ಪ್ಲಾಟ್ನಲ್ಲಿ ನೆಲಸಮಗೊಳಿಸುವ ಕಾರ್ಯದಲ್ಲಿ ಬಂಡೆಯನ್ನು ಪತ್ತೆ ಮಾಡಿ ಅಗೆದ ನಂತರ ಕರ್ನಾಟಕದಿಂದ ಬಂಡೆಯನ್ನು ತರಲಾಗಿತ್ತು.
|
5 |
+
ವಿಗ್ರಹವನ್ನು ಹೊಸದಾಗಿ ನಿರ್ಮಿಸಲಾದ ರಾಮ ಜನ್ಮಭೂಮಿ ದೇವಾಲಯದ ಗರ್ಭಗುಡಿ ಅಥವಾ ಗರ್ಭ ಗೃಹ ದಲ್ಲಿ ಇರಿಸಿದ ನಂತರ, ಕರ್ನಾಟಕ ಮೂಲದ ಶಿಲ್ಪಿ ತಾನು ಭೂಮಿಯ ಮೇಲಿನ ಅದೃಷ್ಟ ವ್ಯಕ್ತಿ ಎಂದು ಪರಿಗಣಿಸುತ್ತೇನೆ ಎಂದು ಹೇಳಿಕೊಂಡಿದ್ದರು. ನಾನು ಈಗ ಭೂಮಿಯ ಮೇಲಿನ ಅತ್ಯಂತ ಅದೃಷ್ಟಶಾಲಿ ವ್ಯಕ್ತಿ ಎಂದು ನಾನು ಭಾವಿಸುತ್ತೇನೆ. ನನ್ನ ಪೂರ್ವಜರು, ಕುಟುಂಬ ಸದಸ್ಯರು ಮತ್ತು ಭಗವಾನ್ ರಾಮನ ಆಶೀರ್ವಾದ ಯಾವಾಗಲೂ ನನ್ನೊಂದಿಗಿದೆ. ಕೆಲವೊಮ್ಮೆ ನಾನು ಕನಸಿನ ಲೋಕದಲ್ಲಿದ್ದೇನೆ ಎಂದು ನನಗೆ ಅನಿಸುತ್ತದೆ ಎಂದು ಯೋಗಿರಾಜ್ ತಿಳಿಸಿದ್ದರು.
|
6 |
+
ದೇಶದ ಅತ್ಯಂತ ಬೇಡಿಕೆಯ ಶಿಲ್ಪಿಗಳಲ್ಲಿ ಒಬ್ಬರಾದ ಅರುಣ್ ಯೋಗಿರಾಜ್ ಅವರು ಕುಶಲತೆಯ ಶ್ರೀಮಂತ ಪರಂಪರೆಯನ್ನು ಹೊಂದಿರುವ ಕುಟುಂಬದಿಂದ ಬಂದವರು. ಅವರ ತಂದೆ ಮತ್ತು ಅಜ್ಜ ಪ್ರಸಿದ್ಧ ಶಿಲ್ಪಿಗಳಾಗಿದ್ದರು. ಪದವಿ ಮುಗಿಸಿದ ನಂತರ ಯೋಗಿರಾಜ್ ಸ್ವಲ್ಪ ಕಾಲ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿದರು. ಆದರೆ ತಮ್ಮ ಪೂರ್ವಜರ ಪರಂಪರೆಯನ್ನು ಅನುಸರಿಸಲು ಬಯಸಿದ್ದರು. 2008 ರಿಂದ ಅವರು ಪ್ರತಿಮೆಗಳನ್ನು ರಚಿಸು ತ್ತಿದ್ದಾರೆ, ರಾಷ್ಟ್ರವ್ಯಾಪಿ ಮನ್ನಣೆಯನ್ನು ಗಳಿಸಿದ್ದಾರೆ.
|
7 |
+
ಇಂಡಿಯಾ ಗೇಟ್ನಲ್ಲಿರುವ ಅಮರ್ ಜವಾನ್ ಜ್ಯೋತಿಯ ಹಿಂಭಾಗದ ಭವ್ಯವಾದ ಮೇಲಾವರಣದಲ್ಲಿ ಆಕರ್ಷಣೆಯ ಕೇಂದ್ರವಾದ ಸುಭಾಷ್ ಚಂದ್ರ ಬೋಸ್ ಅವರ 30 ಅಡಿ ಪ್ರತಿಮೆಯನ್ನು ಯೋಗಿರಾಜ್ ಅವರು ರಚಿಸಿದ್ದಾರೆ.ಅವರ ಇತರ ಕೃತಿಗಳಲ್ಲಿ, ಕೇದಾರನಾಥದಲ್ಲಿ 12 ಅಡಿ ಎತ್ತರದ ಆದಿ ಶಂಕರಾಚಾರ್ಯರ ಪ್ರತಿಮೆ ಮತ್ತು ಮೈಸೂರು ಜಿಲ್ಲೆಯ ಚುಂ���ನಕಟ್ಟೆಯಲ್ಲಿರುವ 21 ಅಡಿ ಎತ್ತರದ ಹನುಮಾನ್ ಪ್ರತಿಮೆಯು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿದೆ.
|
eesanje/url_47_138_9.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಕೇಜ್ರಿವಾಲ್ ಮೊಬೈಲ್ ಫೋನ್ ನಾಪತ್ತೆ..!
|
2 |
+
ನವದೆಹಲಿ,ಮಾ.25-ಎರಡು ವರ್ಷಗಳ ಹಿಂದೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮದ್ಯ ಹಗರಣ ನಡೆದಾಗ ಬಳಸಿದ್ದ ಫೋನ್ ನಾಪತ್ತೆಯಾಗಿದೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ತಿಳಿಸಿವೆ.
|
3 |
+
ಈ ಬಗ್ಗೆ ಕೇಳಿದಾಗ, ಅದು ಎಲ್ಲಿದೆ ಎಂದು ನನಗೆ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದು 171 ನೇ ಫೋನ್ ಆಗಿರಬಹುದು ಎಂದು ಮೂಲಗಳು ತಿಳಿಸಿವೆ, ಇದು ದೆಹಲಿ ಮದ್ಯದ ಪ್ರಕರಣದಲ್ಲಿ ನಾಪತ್ತೆಯಾಗಿರುವ ಸಂಬಂಧಿತ ಡೇಟಾವನ್ನು ಒಳಗೊಂಡಿರುತ್ತದೆ. ಈ ಹಿಂದೆ 36 ಆರೋಪಿಗಳಿಗೆ ಸೇರಿದ ಇಂತಹ 170 -ಫೋನ್ಗಳು ಪತ್ತೆಯಾಗಿಲ್ಲ ಎಂದು ಇಡಿ ಹೇಳಿಕೊಂಡಿದೆ.
|
4 |
+
ಅಂತಿಮವಾಗಿ, ಸಂಸ್ಥೆಯು 17 -ಫೋನ್ಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ, ಅವರು ಡೇಟಾವನ್ನು ಮರುಪಡೆದುಕೊಂಡು ಪ್ರಕರಣವನ್ನು ಒಟ್ಟಿಗೆ ಸೇರಿಸಿದ್ದಾರೆ, ಇಡಿ ತನ್ನ ಆರೋಪಪಟ್ಟಿಯಲ್ಲಿ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಆರೋಪಿ ಎಂದು ಹೆಸರಿಸಿದೆ.
|
5 |
+
ಸಾಕ್ಷ್ಯ ನಾಶಪಡಿಸಲು ಉಳಿದ -ಫೋನ್ಗಳನ್ನು ಒಡೆಯಲಾಗಿದೆ ಎಂದು ತನಿಖಾ„ಕಾರಿಗಳು ಆರೋಪಿಸಿದ್ದಾರೆ. ಇಲ್ಲಿಯವರೆಗೆ, -ಫೋನ್ಗಳು ಮತ್ತು ಲ್ಯಾಪ್ಟಾಪ್ಗಳು ಪ್ರಕರಣದಲ್ಲಿ ಗರಿಷ್ಠ ಪ್ರಮಾಣದ ಸಾಕ್ಷ್ಯವನ್ನು ಒದಗಿಸಿವೆ ಎಂದು ಸಂಸ್ಥೆ ಆರೋಪಪಟ್ಟಿಯಲ್ಲಿ ತಿಳಿಸಿದೆ.ಆದರೆ ಮೇ 2022 ಮತ್ತು ಆಗಸ್ಟ್ 2022 ರ ನಡುವೆ ಗರಿಷ್ಠ ಸಂಖ್ಯೆಯ ಆರೋಪಿಗಳು ತಮ್ಮ -ಫೋನ್ ಮತ್ತು ಲ್ಯಾಪ್ಟಾಪ್ಗಳನ್ನು ಬದಲಾಯಿಸಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.
|
6 |
+
ಇಡಿಯ ಈ ಆರೋಪಕ್ಕೆ ಎಎಪಿ ಅಪಹಾಸ್ಯ ಮಾಡಿದೆ. ಜಾರಿ ನಿರ್ದೇಶನಾಲಯದ ತನಿಖೆಯನ್ನು ಬಿಜೆಪಿ ಕಚೇರಿಯಿಂದಲೇ ನಡೆಸಲಾಗಿದೆ ಎಂದು ಪಕ್ಷದ ಮೂಲಗಳು ಆರೋಪಿಸಿವೆ. ಜಾರಿ ನಿರ್ದೇಶನಾಲಯ ಬಿಜೆಪಿಯ ರಾಜಕೀಯ ಪಾಲುದಾರ ಎಂದು ದೂರಿವೆ.
|
eesanje/url_47_139_1.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ರಥದ ಚಕ್ರಕ್ಕೆ ಸಿಲುಕಿ ಬಾಲಕಿ ಬಲಿ
|
2 |
+
ಕೊಲ್ಲಂ, ಮಾ 25 (ಪಿಟಿಐ) –ಇಲ್ಲಿಗೆ ಸಮೀಪದ ಪ್ರಸಿದ್ಧ ಕೊಟ್ಟನ್ಕುಲಂಗರ ದೇವಸ್ಥಾನದಲ್ಲಿ ವಾರ್ಷಿಕ ಉತ್ಸವದ ಸಂದರ್ಭದಲ್ಲಿ ಐದು ವರ್ಷದ ಮಗವೊಂದು ರಥದ ಚಕ್ರಗಳ ಅಡಿಯಲ್ಲಿ ಸಿಕ್ಕಿ ಸಾವನ್ನಪ್ಪಿದೆ. ಭಕ್ತರು ಎಳೆಯುವ ವಿಧಿವತ್ತಾದ ರಥದ ದೊಡ್ಡ ಟೈರ್ಗಳ ಅಡಿಯಲ್ಲಿ ಆಕಸ್ಮಿಕವಾಗಿ ಬಿದ್ದು ಚವರ ನಿವಾಸಿ ದಂಪತಿಯ ಪುತ್ರಿ ಕ್ಷೇತ್ರ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
|
3 |
+
ತಡರಾತ್ರಿ 11.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಆಕೆ ತನ್ನ ಪೋಷಕರೊಂದಿಗೆ ದೇವಸ್ಥಾನಕ್ಕೆ ಬಂದಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಥ ಎಳೆಯುತ್ತಿದ್ದ ಬಯಲಿನಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
|
4 |
+
ಕೆಲವೊಮ್ಮೆ ಮಕ್ಕಳು ರಥಕ್ಕೆ ಕಟ್ಟಿದ ಹಗ್ಗವನ್ನು ಎಳೆಯುತ್ತಾರೆ ಕ್ಷೇತ್ರ ಆಕಸ್ಮಿಕವಾಗಿ ಬಿದ್ದಿದ್ದಾಳೆಂದು ತೋರುತ್ತದೆ ಎಂದು ಪೊಲೀಸರು ಹೇಳಿದರು. ಮಗುವನ್ನು ದ್ದಾಷಕರು ಮತ್ತು ಪೊಲೀಸರು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು ಆದರೆ ಉಳಿಸಲು ಸಾಧ್ಯವಾಗಲಿಲ್ಲ.
|
eesanje/url_47_139_10.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಇಡಿ ಕಸ್ಟಡಿಯಿಂದಲೇ ಮೊದಲ ನಿರ್ದೇಶನ ನೀಡಿದ ಕೇಜ್ರಿವಾಲ್
|
2 |
+
ನವದೆಹಲಿ,ಮಾ.24-ಇಡಿ ಕಸ್ಟಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ನಗರಾಡಳಿತ ಸಂಬಂಧ ತಮ್ಮ ಮೊದಲ ನಿರ್ದೇಶನ ನೀಡಿದ್ದಾರೆ ಎಂದು ಎಎಪಿ ಮೂಲಗಳು ಭಾನುವಾರ ತಿಳಿಸಿವೆ.
|
3 |
+
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂವಿದ್ದ ಅಬಕಾರಿ ನೀತಿಯ ಆರೋಪದ ಮೇಲೆ ಕೇಜ್ರಿವಾಲ್ ಅವರನ್ನು ಅವರ ಅಧಿಕೃತ ನಿವಾಸದಿಂದ ಗುರುವಾರ ಜಾರಿ ನಿರ್ದೇಶನಾಲಯ(ಇಡಿ)ವು ಬಂಧಿಸಿತ್ತು. ನ್ಯಾಯಾಲಯವ ಶ್ರುಕವಾರ ಎಎಪಿ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ರನ್ನು ಮಾರ್ಚ್ 28ರವರೆಗೆ ಇಡಿ ವಶಕ್ಕೆ ಒಪ್ಪಿಸಿತು.
|
4 |
+
ಅವರು(ಕೇಜ್ರಿವಾಲ್) ಇಡಿ ಕಸ್ಟಡಿಯಿಂದಲೇ ತಮ್ಮ ಮೊದಲ ನಿರ್ದೇಶನ ನೀಡಿದ್ದಾರೆ. ಸರ್ಕಾರದ ಜಲಸಂಪನ್ಮೂಲ ಇಲಾಖೆಗೆ ಸಂಬಂಸಿದಂತೆ ಈ ನಿರ್ದೇಶನ ನೀಡಲಾಗಿದೆ. ಜಲಸಂಪನ್ಮೂಲ ಸಚಿವೆ ಆತಿಶಿ ಅವರು ಮುಂದೆ ಈ ನಿರ್ದೇಶನಗಳನ್ನು ಪ್ರಕಟಿಸುತ್ತಾರೆ ಎಂದು ಪಕ್ಷದ ಮೂಲಗಳು ಹೇಳಿವೆ. ಕೇಜ್ರಿವಾಲ್ ಅವರನ್ನು ಜೈಲಿಗೆ ಕಳುಹಿಸಿದರೂ ಮುಖ್ಯಮಂತ್ರಿಯನ್ನಾಗಿಯೇ ಮುಂದುವರೆಸಲಾಗುವುದು ಎಂದು ಎಎಪಿ ಪ್ರತಿಪಾದಿಸಿದೆ.
|
eesanje/url_47_139_11.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ದೆಹಲಿಯಲ್ಲಿ 3 ಕೋಟಿ ರೂ. ನಗದು ಹೊಂದಿದ್ದ ನಾಲ್ವರ ಬಂಧನ
|
2 |
+
ನವದೆಹಲಿ,ಮಾ.24-ಸುಮಾರು 3 ಕೋಟಿ ರೂ. ನಗದು ಹೊಂದಿದ್ದ ನಾಲ್ವರನ್ನು ಬಂಧಿಸಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ ನೈಋತ್ಯ ದೆಹಲಿಯ ಝರೇರಾ ಮೇಲ್ಸೇತುವೆ ಬಳಿ ನಡೆದಿದೆ.
|
3 |
+
ಬಂಧಿತ ನಾಲ್ವರು ನಗರದ ಶಹದಾರಾದ ನಿವಾಸಿಗಳು. ಇವರು 22 ಮತ್ತು 27 ರ ನಡುವಿನ ವಯಸ್ಸಿನವರಾಗಿದ್ದಾರೆ. ಹವಾಲಾ ಹಣ ಶಹದಾರಾದಲ್ಲಿನ ಸ್ಕ್ರ್ಯಾಪ್ ಡೀಲರ್ಗೆ ಸೇರಿದ್ದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
|
4 |
+
ಪ್ರಕರಣ ಸಂಬಂಧ ಬಂಧಿತರ ದ್ವಿಚಕ್ರವಾಹನಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಎರಡು ದೊಡ್ಡ ಕಪ್ಪು ಚೀಲಗಳನ್ನು ಹೊತ್ತ ನಾಲ್ವರಿದ್ದ ಎರಡು ಮೋಟಾರ್ಸೈಕಲ್ಗಳನ್ನು ತಂಡವು ಅಡ್ಡಗಟ್ಟಿತು. ತಂಡವು ಎರಡು ಬ್ಯಾಗ್ಗಳಲ್ಲಿ ಸುಮಾರು 3 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದೆ. ಇದು ಹವಾಲಾ ಹಣ ಎಂಬುದು ನಮ್ಮ ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
|
5 |
+
ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಅನುಸರಿಸಿ, ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಮತ್ತು ಆದಾಯ ತೆರಿಗೆ ಅಧಿಕಾರಿಗಳಿಗೆ ಮಾಹಿತಿಯನ್ನು ರವಾನಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದರು.
|
eesanje/url_47_139_12.txt
ADDED
@@ -0,0 +1,3 @@
|
|
|
|
|
|
|
|
|
1 |
+
ಎಎಪಿ ಎಂಎಲ್ಎ ಗುಲಾಬ್ ಸಿಂಗ್ ಯಾದವ್ ಮನೆ ಮೇಲೆ ಐಟಿ ದಾಳಿ
|
2 |
+
ನವದೆಹಲಿ, ಮಾ 23 (ಪಿಟಿಐ) –ತೆರಿಗೆ ವಂಚನೆ ತನಿಖೆಯ ಭಾಗವಾಗಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ದೆಹಲಿಯಲ್ಲಿ ಎಎಪಿ ಶಾಸಕ ಗುಲಾಬ್ ಸಿಂಗ್ ಯಾದವ್ ಮತ್ತು ಇತರ ಕೆಲವರ ವಿರುದ್ಧ ಶೋಧ ನಡೆಸಿದ್ದಾರೆ.ಗುಲಾಬ್ಸಿಂಗ್ ಯಾದವ್ (45) ಅವರು ಎರಡು ಬಾರಿ ಶಾಸಕರಾಗಿದ್ದಾರೆ ಮತ್ತು ದೆಹಲಿ ವಿಧಾನಸಭೆಯಲ್ಲಿ ಮಟಿಯಾಲಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
|
3 |
+
ತೆರಿಗೆ ವಂಚನೆ ತನಿಖೆಯ ಭಾಗವಾಗಿ ದೆಹಲಿಯ ಘುಮ್ಮನ್ಹೆಡಾ ಗ್ರಾಮದಲ್ಲಿರುವ ಎಎಪಿ ಶಾಸಕ ಮತ್ತು ಇತರ ಕೆಲವರ ನಿವಾಸಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ತೆರಿಗೆ ಅಧಿಕಾರಿಗಳನ್ನು ದೆಹಲಿ ಪೊಲೀಸರು ಬೆಂಗಾವಲು ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೆಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಕೆಲವು ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ.
|
eesanje/url_47_139_2.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಕಮಲ್ ಮೌಲಾ ಮಸೀದಿ ಸರಸ್ವತಿ ದೇವಸ್ಥಾನವಾಗಿತ್ತು : ಕೆ.ಕೆ.ಮುಹಮ್ಮದ್
|
2 |
+
ಗ್ವಾಲಿಯರ್,ಮಾ.25 (ಪಿಟಿಐ)-ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ ಅಥವಾ ಕಮಲ್ ಮೌಲಾ ಮಸೀದಿ ಸಂಕೀರ್ಣವನ್ನು ಮೊದಲು ಸರಸ್ವತಿ ದೇವಸ್ಥಾನವಾಗಿತ್ತು ಮತ್ತು ನಂತರ ಅದನ್ನು ಇಸ್ಲಾಮಿಕ್ ಪೂಜಾ ಸ್ಥಳವಾಗಿ ಪರಿವರ್ತಿಸಲಾಗಿತ್ತು ಎಂದು ಖ್ಯಾತ ಪುರಾತತ್ವಶಾಸಜ್ಞ ಕೆ ಕೆ ಮುಹಮ್ಮದ್ ತಿಳಿಸಿದ್ದಾರೆ.
|
3 |
+
ಹಿಂದೂಗಳು ಮತ್ತು ಮುಸ್ಲಿಮರು ನ್ಯಾಯಾಲಯದ ತೀರ್ಪಿಗೆ ಬದ್ಧರಾಗಿರಬೇಕು ಮತ್ತು ಪೂಜಾ ಸ್ಥಳಗಳ ಕಾಯಿದೆ 1991 ಅನ್ನು ಗೌರವಿಸಬೇಕು ಮತ್ತು ಅಂತಹ ಸ್ಥಳಗಳ ಮೇಲಿನ ಭಿನ್ನಾಭಿಪ್ರಾಯಗಳನ್ನು ನಿವಾರಿಸಲು ಒಟ್ಟಿಗೆ ಕುಳಿತುಕೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು. ಮಥುರಾ ಮತ್ತು ಕಾಶಿಯಲ್ಲಿ ಹಿಂದೂಗಳ ಭಾವನೆಗಳನ್ನು ಮುಸ್ಲಿಮರು ಗೌರವಿಸಬೇಕು ಎಂದು ಅವರು ಹೇಳಿದರು.
|
4 |
+
ಮಧ್ಯಪ್ರದೇಶ ಹೈಕೋರ್ಟ್ನ ನಿರ್ದೇಶನದ ನಂತರ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಬುಡಕಟ್ಟು ಪ್ರಾಬಲ್ಯವಿರುವ ಜಿಲ್ಲೆಯ ವಿವಾದಿತ ಭೋಜಶಾಲಾ ಸಂಕೀರ್ಣದ ಸಮೀಕ್ಷೆಯನ್ನು ನಡೆಸುತ್ತಿದೆ.ಹಿಂದೂಗಳು ಇದು ವಾಗ್ದೇವಿ (ಸರಸ್ವತಿ) ದೇವಿಯ ದೇವಸ್ಥಾನ ಎಂದು ನಂಬುತ್ತಾರೆ ಮತ್ತು ಮುಸ್ಲಿಂ ಸಮುದಾಯವು ಕಮಲ್ ಮೌಲಾ ಮಸೀದಿ ಎಂದು ಕರೆಯುತ್ತಾರೆ.
|
5 |
+
ಧಾರ್ (ಭೋಜಶಾಲಾ) ಬಗ್ಗೆ ಐತಿಹಾಸಿಕ ಸತ್ಯವೆಂದರೆ ಅದು ಸರಸ್ವತಿ ದೇವಸ್ಥಾನವಾಗಿತ್ತು. ಇದನ್ನು ನಂತರ ಇಸ್ಲಾಮಿಕ್ ಮಸೀದಿಯಾಗಿ ಪರಿವರ್ತಿಸಲಾಯಿತು. ಇದು 1947 ರಲ್ಲಿ ದೇವಾಲಯವಾಗಿದ್ದರೆ ಅದು ದೇವಾಲಯ ಮತ್ತು ಅದು ಮಸೀದಿಯಾಗಿದ್ದರೆ ಅದು ಮಸೀದಿಯಾಗಲಿದೆ ಎಂದು ಮಾಜಿ ಎಎಸ್ಐ ಮುಹಮ್ಮದ್ ಹೇಳಿದರು.
|
6 |
+
ಮುಹಮ್ಮದ್ ಅವರು 1976-77ರಲ್ಲಿ ಅಯೋಧ್ಯೆಯಲ್ಲಿ ಪ್ರೊಫೆಸರ್ ಬಿ ಬಿ ಲಾಲ್ ನೇತೃತ್ವದ ಮೊದಲ ಉತ್ಖನನ ತಂಡದ ಭಾಗವಾಗಿದ್ದರು. ಪದ್ಮಶ್ರೀ ಪುರಸ್ಕøತರು ಈ ಹಿಂದೆ ಬಾಬರಿ ಮಸೀದಿಯ ಕೆಳಗಿರುವ ರಾಮ ಮಂದಿರದ ಅವಶೇಷಗಳನ್ನು ಮೊದಲು ನೋಡಿರುವುದಾಗಿ ಹೇಳಿಕೊಂಡಿದ್ದರು.
|
7 |
+
ಈ ಸಂಕೀರ್ಣವು ಸರಸ್ವತಿ ದೇವಸ್ಥಾನವಾಗಿತ್ತು ಎಂಬುದರಲ್ಲಿ ಸಂದೇಹವಿಲ್ಲ ಎಂದು ಮುಹಮ್ಮದ್ ಹೇಳಿದರು. ಎಲ್ಲರಿಗೂ ಸಮಸ್ಯೆಗಳನ್ನು ಸೃಷ್ಟಿಸುವ ಯಾವುದನ್ನೂ ಮಾಡಬೇಡಿ ಎಂದು ಅವರು ಎರಡೂ ಕಡೆಯವರಿಗೆ ಸಲಹೆ ನೀಡಿದರು.ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಮುಹಮ್ಮದ್ , ಮಥುರಾ ಮತ್ತು ಕಾಶಿ ಹಿಂದೂಗಳಿಗೆ ಎಷ್ಟು ಮುಖ್ಯವೋ ಹಾಗೆಯೇ ಮುಸ್ಲಿಮರಿಗೆ ಮೆಕ್ಕಾ ಮತ್ತು ಮದೀನವೂ ಅಷ್ಟೇ ಮುಖ್ಯ.
|
8 |
+
ಮುಸ್ಲಿಮರು ಹಿಂದೂಗಳ ಭಾವನೆಗಳನ್ನು ಅರ್ಥಮಾಡಿಕೊಳ್ಳಬೇಕು. ಕಾಶಿಯು ಭಗವಾನ್ ಶಿವನೊಂದಿಗೆ ಸಂಬಂಧ ಹೊಂದಿದೆ ಮತ್ತು ಮಥುರಾ ಭಗವಾನ್ ಕೃಷ್ಣನ ಜನ್ಮಸ್ಥಳವಾಗಿದೆ. ಹಿಂದೂಗಳು ಅವರನ್ನು ಇತರ ಸ್ಥಳಗಳಿಗೆ ಸ್ಥಳಾಂತರಿಸಲು ಸಾಧ್ಯವಿಲ್ಲ ಆದರೆ ಇದು ಮುಸ್ಲಿಮರಿಗೆ ಮಾತ್ರ ಮಸೀದಿಗಳು, ಇದು ಪ್ರವಾದಿ ಮೊಹಮ್ಮದ್ ಅಥವಾ ಔಲಿಯಾಗಳೊಂದ��ಗೆ ನೇರವಾಗಿ ಸಂಬಂಧ ಹೊಂದಿಲ್ಲ. ಅವುಗಳನ್ನು (ಮಸೀದಿಗಳನ್ನು) ಬೇರೆಡೆಗೆ ಸ್ಥಳಾಂತರಿಸಬಹುದು, ಎಂದು ಅವರು ಹೇಳಿದರು.
|
eesanje/url_47_139_3.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಅಸ್ಸಾಂನಲ್ಲಿ “ಕೈ”ಬಿಟ್ಟ ಮತ್ತೊಬ್ಬ ಶಾಸಕ
|
2 |
+
ಗುವಾಹಟಿ, ಮಾ 25 (ಪಿಟಿಐ) :ಅಸ್ಸಾಂನ ಲಖಿಂಪುರ ಜಿಲ್ಲೆಯ ನೌಬೋಚಾದ ಶಾಸಕ ಭರತ್ ಚಂದ್ರ ನರಹ್ ಅವರು ಇಂದು ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ. ಉದಯ್ ಶಂಕರ್ ಹಜಾರಿಕಾ ಅವರನ್ನು ಲಖಿಂಪುರ ಲೋಕಸಭಾ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಿಸಿದ ಎರಡು ದಿನಗಳ ನಂತರ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
|
3 |
+
ನರಹ್ ಅವರು ತಮ್ಮ ಪತ್ನಿ ರಾನೀ ನರಹ್ ಅವರನ್ನು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸುವ ಸಾಧ್ಯತೆ ಇದೆ ಎಂದು ಭರವಸೆ ಹೊಂದಿದ್ದರು. ಅವರು ಪಿಟಿಐ ಜೊತೆ ಹಂಚಿಕೊಂಡ ಒಂದು ಸಾಲಿನ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಳುಹಿಸಿದ್ದಾರೆ.
|
4 |
+
ತಕ್ಷಣದಿಂದ ಜಾರಿಗೆ ಬರುವಂತೆ ನಾನು ಈ ಮೂಲಕ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಗೆ ರಾಜೀನಾಮೆ ನೀಡುತ್ತೇನೆ ಎಂದು ಶಾಸಕರು ಪತ್ರದಲ್ಲಿ ತಿಳಿಸಿದ್ದಾರೆ. ನಿನ್ನೆ ಅಸ್ಸಾಂ ಕಾಂಗ್ರೆಸ್ನ ಮಾಧ್ಯಮ ಘಟಕದ ಅಧ್ಯಕ್ಷ ಸ್ಥಾನಕ್ಕೂ ಅವರು ರಾಜೀನಾಮೆ ನೀಡಿದ್ದರು.
|
eesanje/url_47_139_4.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಇವನು ಸಾಮಾನ್ಯ ಕಳ್ಳನಲ್ಲ, ‘ಫೈವ್ ಸ್ಟಾರ್’ ಕಳ್ಳ..!
|
2 |
+
ಭುವನೇಶ್ವರ, ಮಾ.25 –ಹಗಲು ವೇಳೆ ಮನೆಗಳಿಗೆ ನುಗ್ಗಿ ಕಳ್ಳತನ ಮಾಡಿ ರಾತ್ರಿ ಪಂಚತಾರಾ ಹೋಟೆಲ್ಗಳಲ್ಲಿ ವಾಸ್ತವ್ಯ ಮಾಡುತ್ತಿದ್ದ ಖತರ್ನಾಕ್ ಕಳ್ಳನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಹಲವಾರು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಪರಶುರಾಮ ಗಿರಿ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಸ್ಥಾಪಿಸಿದ್ದ ಚೆಕ್ ಪೋಸ್ಟ್ ನಲ್ಲಿ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸ್ ಕಮಿಷನರ್ ಸಂಜೀಬ್ ಪಾಂಡಾ ತಿಳಿಸಿದ್ದಾರೆ.
|
3 |
+
ಕಳೆದ ಒಂದು ವರ್ಷದಲ್ಲಿ ನಗರದಲ್ಲಿ ನಡೆದಿರುವ ಕನಿಷ್ಠ 21 ಕಳ್ಳತನ ಪ್ರಕರಣಗಳಲ್ಲಿ ಪರಶುರಾಮ ಗಿರಿ ಬೇಕಾಗಿದ್ದ,ಸಾಮಾನ್ಯವಾಗಿ ನಗರದಲ್ಲಿ ಬೀಗ ಹಾಕಿರುವ ವಸತಿ ಕಟ್ಟಡಗಳನ್ನು ಗುರಿಯಾಗಿಸಿಕೊಂಡು ಕಿಟಕಿಗಳನ್ನು ಒಡೆದು ಒಳನುಗ್ಗಿ ನಗದು ಮತ್ತು ಚಿನ್ನಾಭರಣ ದೋಚುತ್ತಿದ್ದ ಆತ ಏಕಾಂಗಿಯಾಗಿ ಕಳ್ಳತನ ಮಾಡುತ್ತಿದ್ದ ಎಂದು ಹೇಳಿದ್ದಾರೆ.
|
4 |
+
ಆತನಿಂದ 21 ಲಕ್ಷ ರೂಪಾಯಿ ನಗದು, ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳು, ಎರಡು ಅತ್ಯಾಧುನಿಕ ಮೋಟಾರ್ ಸೈಕಲ್ಗಳು ಮತ್ತು ರಾಜ್ಯ ರಾಜಧಾನಿಯ ಐದು ಫ್ಲಾಟ್ಗಳ ದಾಖಲೆಗಳು ಸೇರಿವೆ.
|
5 |
+
ಈ ಕೆಲವು ಫ್ಲಾಟ್ಗಳನ್ನು ಅತ ಬಾಡಿಗೆಗೆ ನೀಡಿದ್ದಾರೆ. ಬಾಲಸೋರ್ ಜಿಲ್ಲೆಯ ಸೊರೊದಲ್ಲಿ ತಮ್ಮ ಸ್ಥಳೀಯರಿನಲ್ಲಿ ಬಂಗಲೆ ಸಹ ನಿರ್ಮಿಸುತ್ತಿದ್ದಾರೆ ಎಂದು ತನಿಖೆ ವೇಳೆ ತಿಳಿದುಂದಿದೆ.ಕದ್ದ ವಸ್ತುಗಳನ್ನು ಮಾರಿ ಅದ್ದೂರಿ ಜೀವನಶೈಲಿಯನ್ನು ನಿರ್ವಹಿಸುತ್ತಿದ್ದರು ಮತ್ತು ವಿವಿಧ ಮಹಾನಗರಗಳಲ್ಲಿನ ಪಂಚತಾರಾ ಹೋಟೆಲ್ಗಳಲ್ಲಿ ತಂಗುವುದು ಆತನ ಖಯಾಲಿಯಾಗಿತು, ಬಾರ್, ಪಬ್ ಗಳಲ್ಲೂ ಬೇಕಾಬಿಟ್ಟಿ ಹಣ ಖರ್ಚು ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
|
eesanje/url_47_139_5.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಉಜ್ಜಯಿನಿ ಮಹಾಕಾಲ್ ದೇವಸ್ಥಾನದಲ್ಲಿ ಆರತಿ ವೇಳೆ ಬೆಂಕಿ ತಗುಲಿ 13 ಮಂದಿ ಅರ್ಚಕರಿಗೆ ಗಾಯ
|
2 |
+
ಉಜ್ಜಯಿನಿ, ಮಾ 25- ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಲ್ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ಭಸ್ಮ ಆರತಿ ವೇಳೆ ಸಂಭವಿಸಿದ ಬೆಂಕಿಯಲ್ಲಿ 13 ಮಂದಿ ಅರ್ಚಕರು ಗಾಯಗೊಂಡಿದ್ದಾರೆ.
|
3 |
+
ದೇವಾಲಯದ ಗರ್ಭಗೃಹ ದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಉಜ್ಜಯಿನಿ ಕಲೆಕ್ಟರ್ ನೀರಜ್ ಕುಮಾರ್ ಸಿಂಗ್ ಹೇಳಿದ್ದಾರೆ. ಹದಿಮೂರು ಪುರೋಹಿತರಿಗೆ ಸುಟ್ಟ ಗಾಯಗಳಾಗಿದ್ದು, ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ ಎಂದು ಸಿಂಗ್ ಸೇರಿಸಲಾಗಿದೆ.
|
4 |
+
ಹೋಳಿ ಹಬ್ಬದ ಅಂಗವಾಗಿ ಧಾರ್ಮಿಕ ಸಮಾರಂಭದ ನಡೆಯುತ್ತಿತ್ತು ಈ ಸಮಯದಲ್ಲಿ ಬಳಸುವ ಬಣ್ಣದ ಪುಡಿ ಎಸೆಯುವ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
|
eesanje/url_47_139_6.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ನಾಲ್ವರು ಮಕ್ಕಳನ್ನು ಬಲಿ ಪಡೆದ ಮೊಬೈಲ್ ಚಾರ್ಜರ್..!
|
2 |
+
ಮೀರುತ್ (ಉತ್ತರಪ್ರದೇಶ), ಮಾ.24-ಮೊಬೈಲ್ ಚಾರ್ಜರ್ನಿಂದ ಕಾಣಿಸಿಕೊಂಡ ಬೆಂಕಿ ಮನೆಗೆ ವ್ಯಾಪಿಸಿಕೊಂಡು ನಾಲ್ವರು ಸಹೋದರರು ಸಾವನ್ನಪ್ಪಿ , ಪೋಷಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಪಲ್ಲವಪುರ ಪ್ರದೇಶದಲ್ಲಿ ಸಂಭವಿಸಿದೆ.
|
3 |
+
ಕಳೆದ ತಡರಾತ್ರಿ ಪಲ್ಲವಪುರದ ಜನತಾ ಕಾಲೋನಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೊಬೈಲ್ ಚಾರ್ಜರ್ನಿಂದ ಕಾಣಿಸಿಕೊಂಡ ಬೆಂಕಿ ಮನೆಯೆಲ್ಲಾ ವ್ಯಾಪಿಸಿದ ಪರಿಣಾಮ ಈ ದುರಂತ ಸಂಭವಿಸಿದೆ.ದುರ್ಘಟನೆಯಲ್ಲಿ ಮೃತಪಟ್ಟವರನ್ನು ಸಾರಿಕಾ (10), ನಿಹಾರಿಕಾ (8), ಶಾಶಂಕರ್ (6), ಕಲು (6) ಮೃತಪಟ್ಟಿದ್ದು , ಪೋಷಕರಾದ ಜಾನ್ (41) ಹಾಗೂ ಬಾಬಿತಾ (37) ಗಂಭೀರವಾಗಿ ಗಾಯ ಗೊಂಡಿದ್ದಾರೆ.
|
4 |
+
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಪೊಲೀಸರು ಪೋಷಕರು ಹಾಗೂ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಿಸದೆ ನಾಲ್ವರು ಮಕ್ಕಳು ಮೃತಪಟ್ಟರೆ, ಪೋಷಕರು ಪ್ರಾಣಾಪಾಯದಿಂದ ಪಾರಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
|
5 |
+
ಮೊಬೈಲ್ ಫೋನ್ ಚಾರ್ಜರ್ನಿಂದ ಕಾಣಿಸಿಕೊಂಡ ಬೆಂಕಿ ಹಾಸಿಗೆ ಮತ್ತು ಬೆಡ್ಶಿಟ್ಗೂ ವ್ಯಾಪಿಸಿಕೊಂಡು ಈ ದುರಂತ ಸಂಭವಿಸಿದೆ ಎಂದು ಚಿಕಿತ್ಸೆ ಪಡೆಯುತ್ತಿರುವ ಜಾನ್ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪಲ್ಲಮಪುರ ಠಾಣೆ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.ನಾಲ್ವರು ಮಕ್ಕಳನ್ನು ಕಳೆದುಕೊಂಡ ಪೋಷಕರು ಹಾಗೂ ಸಂಬಂಕರ ಆಕ್ರಂದನ ಮುಗಿಲು ಮುಟ್ಟಿದೆ.
|
eesanje/url_47_139_7.txt
ADDED
@@ -0,0 +1,3 @@
|
|
|
|
|
|
|
|
|
1 |
+
ಬಿಜೆಪಿ ಸೇರಿದ ಭಾರತೀಯ ವಾಯುಪಡೆ ಮಾಜಿ ಮುಖ್ಯಸ್ಥ ಬದೌರಿಯಾ
|
2 |
+
ನವದೆಹಲಿ, ಮಾ.24- ಭಾರತೀಯ ವಾಯುಪಡೆಯ(ಐಎಎಫ್) ಮಾಜಿ ಮುಖ್ಯಸ್ಥ ಆರ್ಕೆಎಸ್ ಬದೌರಿಯಾ ಅವರು ಇಂದು ಬಿಜೆಪಿಗೆ ಸೇರ್ಪಡೆಯಾದರು. ಭಾರತೀಯ ವಾಯುಪಡೆಯಲ್ಲಿ ಭದೌರಿಯಾ ಅವರ ಸುದೀರ್ಘ ಸೇವೆಯನ್ನು ಶ್ಲಾಘಿಸಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರು, ರಕ್ಷಣಾ ಪಡೆಗಳಲ್ಲಿ ಸಕ್ರಿಯ ಪಾತ್ರವಹಿಸಿದ ನಂತರ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ಕೊಡುಗೆ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
|
3 |
+
ಭದೌರಿಯಾ ಅವರು ಐಎಎಫ್ನಲ್ಲಿ ಸುಮಾರು 40 ವರ್ಷಗಳನ್ನು ಕಳೆದಿದ್ದಾರೆ ಮತ್ತು ಪ್ರಧಾನಿ ನರೇಂದ್ರಮೋದಿಯವರ ಆತ್ಮನಿರ್ಭರ್ ಭಾರತ್ ಕಾರ್ಯಕ್ರಮಕ್ಕೆ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.ಭದೌರಿಯಾ ಉತ್ತರ ಪ್ರದೇಶದವರು. ಲೋಕಸಭೆ ಚುನಾವಣೆಗೆ ರಾಜ್ಯದ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಗಳನ್ನು ಹೆಸರಿಸಿಲ್ಲ.
|
eesanje/url_47_139_8.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಡೇಟಾ ನಾಶ, ಫೋನ್ ಕದ್ದಾಲಿಕೆ ಆರೋಪದಲ್ಲಿ ಮತ್ತಿಬ್ಬರು ತೆಲಂಗಾಣ ಪೊಲೀಸರ ಬಂಧನ
|
2 |
+
ಹೈದರಾಬಾದ್, ಮಾ 24 (ಪಿಟಿಐ) -:ಫೋನ್ ಟ್ಯಾಪಿಂಗ್ ಮತ್ತು ಕೆಲವು ಕಂಪ್ಯೂಟರ್ ಸಿಸ್ಟಮ್ಗಳು ಮತ್ತು ಅಧಿಕೃತ ಡೇಟಾವನ್ನು ನಾಶಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಪೊಲೀಸರು ಮತ್ತಿಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಬಂಧಿಸಿದ್ದಾರೆ.
|
3 |
+
ತನಿಖೆಯ ಸಂದರ್ಭದಲ್ಲಿ, ಹೆಚ್ಚುವರಿ ಡಿಸಿಪಿ ತಿರುಪತಣ್ಣ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಕಾರಿ ಎನ್ ಭುಜಂಗ ರಾವ್ ಅವರನ್ನು ಬಂಸಲಾಗಿದೆ ಎಂದು ಹೈದರಾಬಾದ್ ಪೊಲೀಸರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳು ಈ ಹಿಂದೆ ಕ್ರಮವಾಗಿ ವಿಶೇಷ ಇಂಟೆಲಿಜೆನ್ಸ್ ಬ್ಯೂರೋ (ಎಸ್ಐಬಿ) ಮತ್ತು ಗುಪ್ತಚರ ಇಲಾಖೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಕೆಲಸ ಮಾಡಿದ್ದರು.
|
4 |
+
ಹಿಂದಿನ ಬಿಆರ್ಎಸ್ ಆಡಳಿತದ ಅವಯಲ್ಲಿ ವಿವಿಧ ಎಲೆಕ್ಟ್ರಾನಿಕ್ ಗ್ಯಾಜೆಟ್ಗಳಿಂದ ಗುಪ್ತಚರ ಮಾಹಿತಿಯನ್ನು ಅಳಿಸಿಹಾಕಿದ ಆರೋಪದಲ್ಲಿ ಹಾಗೂ ಆಪಾದಿತ ಫೋನ್ ಟ್ಯಾಪಿಂಗ್ ಆರೋಪದ ಮೇಲೆ ಹೈದರಾಬಾದ್ ಪೊಲೀಸರು ಈ ಹಿಂದೆ ಬಂಸಲ್ಪಟ್ಟಿದ್ದ ಎಸ್ಐಬಿಯ ಅಮಾನತುಗೊಂಡ ಡಿಎಸ್ಪಿ ಡಿ ಪ್ರಣೀತ್ ರಾವ್ ಅವರೊಂದಿಗೆ ಸಹಕರಿಸಿದ್ದಾರೆ ಎಂದು ಆರೋಪಿಸಲಾಗಿತ್ತು.
|
eesanje/url_47_139_9.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ಡೌಟ್..?
|
2 |
+
ಲಖ್ನೋ,ಮಾ.24-ಸ್ವಪಕ್ಷೀಯರ ವಿರುದ್ಧವೇ ಆಗಾಗ್ಗೆ ಗುಡುಗುತ್ತಿದ್ದ ಗಾಂಧಿ ಕುಟುಂಬದ ಕುಡಿ ಹಾಗೂ ಕೇಂದ್ರದ ಮಾಜಿ ಸಚಿವೆ ಮನೇಕಾ ಗಾಂಧಿ ಪುತ್ರ ವರುಣ್ ಗಾಂಧಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ. ಉತ್ತರಪ್ರದೇಶದ ಫಿಲಿಬಿಟ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಸುತ್ತಿದ್ದ ವರುಣ್ ಗಾಂಧಿ ಹೆಸರನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಘೋಷಣೆ ಮಾಡಿರುವ ಪಟ್ಟಿಯಲ್ಲಿ ಅವರ ಹೆಸರನ್ನು ಬಿಡುಗಡೆ ಮಾಡಿಲ್ಲ.
|
3 |
+
ಮೂಲಗಳ ಪ್ರಕಾರ ಈ ಬಾರಿ ವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆಗಳು ಕ್ಷೀಣಿಸಿದ್ದು ಹೊಸ ಮುಖಕ್ಕೆ ಈ ಕ್ಷೇತ್ರದಿಂದ ಟಿಕೆಟ್ ನೀಡಲು ಪಕ್ಷ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.
|
4 |
+
ಇನ್ನೊಂದು ಮೂಲಗಳ ಪ್ರಕಾರ ವರುಣ್ ಗಾಂಧಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದ್ದು ಇದೇ ಕ್ಷೇತ್ರದಿಂದ ಕೈ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಗೆದ್ದಿದ್ದ ವರುಣ್ ಗಾಂಧಿ ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದರು. ನಂತರ ಅವರು ಸರ್ಕಾರದ ಕೆಲವು ತೀರ್ಮಾನಗಳ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿ ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರ ಸೃಷ್ಟಿಸುತ್ತಿದ್ದರು.
|
5 |
+
ಕಾಂಗ್ರೆಸ್ ಸೇರಲು ಒಂದು ಹೆಜ್ಜೆ ಮುಂದಿಟ್ಟಿರುವ ವರುಣ್ ಗಾಂಧಿಗೆ ಫಿಲಿಪಿಟ್ ಕ್ಷೇತ್ರದಿಂದ ಟಿಕೆಟ್ ನೀಡದೆ ಸ್ಥಳೀಯ ಅಭ್ಯರ್ಥಿಗೆ ಮಣೆ ಹಾಕಲು ಬಿಜೆಪಿ ಮುಂದಾಗಿದೆ. ಈ ಹಿಂದೆ ವರುಣ್ ಗಾಂಧಿ ಅವರ ತಾಯಿ ಮನೇಕಾ ಗಾಂಧಿ ಬಿಜೆಪಿಯಿಂದ ಗೆದ್ದು 2014ರಲ್ಲಿ ಕೇಂದ್ರದ ಸಚಿವರಾಗಿದ್ದರು. ಆ ನಂತರ ಅವರಿಗೆ ಟಿಕೆಟ್ ನಿರಾಕರಿಸಲಾಗಿತ್ತು.
|
eesanje/url_47_13_1.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ರಾಗಿಯಲ್ಲಿ ಮೂಡಿದ ಮೋದಿ ಚಿತ್ರ, ದಾಖಲೆ ಬರೆದ 13ರ ಬಾಲಕಿ
|
2 |
+
13-- 800
|
3 |
+
ಚೆನ್ನೈ,ಸೆ.16-ಹದಿಮೂರು ವರ್ಷದ ಶಾಲಾ ವಿದ್ಯಾರ್ಥಿಯೊಬ್ಬ 800 ಕೆಜಿ ತೂಕದ ರಾಗಿಯನ್ನು ಬಳಸಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು 12 ಗಂಟೆಗಳ ಕಾಲ ಬಿಡುವಿಲ್ಲದಂತೆ ಚಿತ್ರಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾನೆ.ಪ್ರೀಸ್ಲಿ ಶೆಕಿನಾ ಅವರು ನಾಳಿನ ಅವರ ಜನದಿನದಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ಸಲ್ಲಿಸುವ ವಿಶ್ವದ ಅತಿದೊಡ್ಡ ರಾಗಿ ಪೇಂಟಿಂಗ್ ಅನ್ನು ಅನಾವರಣಗೊಳಿಸಿದರು.
|
4 |
+
ಪ್ರೀಸ್ಲಿ ಶೆಕಿನಾ ಚೆನ್ನೈನ ಕೋಲ್ಪಾಕ್ಕಂ ಪ್ರದೇಶದಲ್ಲಿ ವಾಸಿಸುತ್ತಿರುವ ಪ್ರತಾಪ್ ಸೆಲ್ವಂ ಮತ್ತು ಸಂಕೀರಾಣಿ ಅವರ ಮಗಳು. ಪ್ರೀಸ್ಲಿ ಶೆಕಿನಾ ಖಾಸಗಿ ಶಾಲೆಯಲ್ಲಿ 8 ನೇ ತರಗತಿಯಲ್ಲಿ ಓದುತ್ತಿದ್ದಾಳೆ.
|
5 |
+
ಶೇಕಿನಾ ಅವರು 800 ಕೆಜಿ ರಾಗಿಯನ್ನು ಬಳಸಿ 600 ಚದರ ಅಡಿಗಳಲ್ಲಿ ಪ್ರಧಾನಿ ಮೋದಿಯವರ ಬಹತ್ ಭಾವಚಿತ್ರವನ್ನು ಚಿತ್ರಿಸಿದ್ದಾರೆ. 12 ಗಂಟೆಗಳ ಕಠಿಣ ಪರಿಶ್ರಮದ ನಂತರ ಅವಳು ತನ್ನ ಪ್ರಯತ್ನವನ್ನು ಪೂರ್ಣಗೊಳಿಸಿದಳು. 13 ವರ್ಷ ವಯಸ್ಸಿನವರು ಬೆಳಿಗ್ಗೆ 8.30 ಕ್ಕೆ ಪ್ರಾರಂಭಿಸಿ ರಾತ್ರಿ 8.30 ಕ್ಕೆ ಪೂರ್ಣಗೊಳಿಸಿದರು.
|
6 |
+
ಪ್ರೀಸ್ಲಿಯು ಯೂಎನ್ಐಸಿ ವರ್ಲ್ಡ್ ರೆಕಾರ್ಡ್ನಿಂದ ಗುರುತಿಸಲ್ಪಟ್ಟಿದ್ದಾರೆ ಮತ್ತು ಇದನ್ನು ವಿದ್ಯಾರ್ಥಿ ಸಾಧನೆ ವಿಭಾಗದ ಅಡಿಯಲ್ಲಿ ನೋಂದಾಯಿಸಲಾಗಿದೆ. ಯೂಎನ್ಐಸಿ ವಿಶ್ವ ದಾಖಲೆಗಳ ನಿರ್ದೇಶಕ ಆರ್ ಶಿವರಾಮನ್ ಅವರು ಪ್ರೀಸ್ಲಿ ಶೆಕಿನಾ ಅವರಿಗೆ ವಿಶ್ವ ದಾಖಲೆ ಪ್ರಮಾಣಪತ್ರ ಮತ್ತು ಪದಕವನ್ನು ನೀಡಿ ಗೌರವಿಸಿದರು.ಬಾಲಕಿಯ ಸಾಧನೆಗೆ ಶಾಲೆಯ ಆಡಳಿತಾಧಿಕಾರಿ, ಪ್ರಾಂಶುಪಾಲರು, ಪೋಷಕರು, ಸಂಬಂಧಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
|
eesanje/url_47_13_10.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಯುವತಿ ಮೇಲೆ ಅತ್ಯಾಚಾರವೆಸಗಿದ ಟಿಎಂಸಿ ನಾಯಕ
|
2 |
+
|
3 |
+
ಕೋಲ್ಕತ್ತಾ,ಸೆ.15-ಯುವತಿ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ತಣಮೂಲ ಕಾಂಗ್ರೆಸ್ ನಾಯಕನನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ.
|
4 |
+
ಟ್ರೇಡ್ ಯೂನಿಯನ್ ನಾಯಕರಾಗಿರುವ ಆರೋಪಿ ನಾರಾಯಣ ಮಿತ್ರನನ್ನು ಯುವತಿ ಕುಟುಂಬ ನೀಡಿರುವ ದೂರಿನ ಮೇರೆಗೆ ಬಂಧಿಸಲಾಗಿದೆ, ಮಿತ್ರ ಅವರು ಬಂಕೂರಿನ ತನ್ನ ಮನೆಯಲ್ಲಿ 2-3 ದಿನಗಳ ಕಾಲ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ.
|
5 |
+
ಎಫ್ಐಆರ್ ದಾಖಲಾಗಿದ್ದು, ಮಿತ್ರನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಂತರ, ತಣಮೂಲ ಕಾಂಗ್ರೆಸ್ ನಾಯಕನನ್ನು ಟ್ರೇಡ್ ಯೂನಿಯನ್ನಿಂದ ಅಮಾನತುಗೊಳಿಸಲಾಗಿದೆ.
|
eesanje/url_47_13_11.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಮೂರು ಅಂತಸ್ತಿನ ಮನೆ ಕುಸಿದು 10 ಮಂದಿ ಸಾವು
|
2 |
+
10 ' ,
|
3 |
+
ಮೀರತ್, ಸೆ 15 (ಪಿಟಿಐ)ಇಲ್ಲಿನ ಝಾಕಿರ್ ನಗರದಲ್ಲಿ ಮೂರು ಅಂತಸ್ತಿನ ಮನೆಯೊಂದು ಕುಸಿದು ಬಿದ್ದ ಪರಿಣಾಮ ಹತ್ತು ಮಂದಿ ಮೃತಪಟ್ಟಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯ ಇನ್ನೂ ನಡೆಯುತ್ತಿದೆ ಮೀರತ್ ಜಿಲ್ಲಾಡಳಿತ ತಿಳಿಸಿದೆ.ಘಟನಾ ಸ್ಥಳದಲ್ಲಿಒಬ್ಬ ವ್ಯಕ್ತಿ ಇನ್ನೂ ಅವಶೇಷಗಳಡಿ ಸಿಲುಕಿಕೊಂಡಿರುವ ಸಾಧ್ಯತೆ ಇದೆ ಎಂದು ಆಡಳಿತವು ಹೇಳಿಕೆಯಲ್ಲಿ ತಿಳಿಸಿದೆ.
|
4 |
+
ಮತರನ್ನು ಸಾಜಿದ್ (40), ಅವರ ಮಗಳು ಸಾನಿಯಾ (15), ಮಗ ಸಾಕಿಬ್ (11), ಸಿವ್ರಾ (ಒಂದೂವರೆ ವರ್ಷ), ರೀಜಾ (7), ನಫೊ (63), ಫರ್ಹಾನಾ (20), ಅಲಿಸಾ ಎಂದು ಗುರುತಿಸಲಾಗಿದೆ. ಅಲಿಯಾ (6) ಮತ್ತು ರಿವ್ಸಾ (5 ತಿಂಗಳು).ಸೋಫಿಯಾನ್ (6) ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
|
5 |
+
ಗಾಯಗೊಂಡವರಲ್ಲಿ ನಯೀಮ್ (22), ನದೀಮ್ (26), ಸಾಕಿಬ್ (20) ಮತ್ತು ಸೈನಾ (38) ಲಾಲಾ ಲಜಪತ್ ರಾಯ್ ಸಾರಕ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
|
6 |
+
ಮೀರತ್ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಡಿ ಕೆ ಠಾಕೂರ್, ವಿಭಾಗೀಯ ಕಮಿಷನರ್ ಸೆಲ್ವ ಕುಮಾರಿ ಜೆ, ಪೊಲೀಸ್ ಮಹಾನಿರೀಕ್ಷಕ ನಚಿಕೇತ ಝಾ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವಿಪಿನ್ ತಾಡಾ ಸೇರಿದಂತೆ ಹಿರಿಯ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆಗಾಗಿ ಸ್ಥಳಕ್ಕೆ ತಲುಪಿದ್ದಾರೆ. ಎನ್ಡಿಆರ್ಎಫ್, ಅಗ್ನಿಶಾಮಕ ದಳ ಮತ್ತು ಪೊಲೀಸ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.
|
eesanje/url_47_13_12.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಕೋಹ್ಲಿ ನನ್ನ ನಾಯಕತ್ವದಲ್ಲಿ ಕ್ರಿಕೆಟ್ ಆಡಿದ್ದರು ; ತೇಜಸ್ವಿ ಯಾದವ್
|
2 |
+
‘ …’:
|
3 |
+
ಪಾಟ್ನಾ,ಸೆ.15-ವಿರಾಟ್ ಕೋಹ್ಲಿ ಅವರು ನನ್ನ ನಾಯಕತ್ವದಲ್ಲಿ ಕ್ರಿಕೆಟ್ ಆಡಿದ್ದರು ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಹೇಳಿದ್ದಾರೆ.
|
4 |
+
ಕೋಹ್ಲಿ ಅವರಲ್ಲದೆ ಅನೇಕ ಕ್ರಿಕೆಟಿಗರು ನನ್ನ ನಾಯಕತ್ವದಲ್ಲಿ ಕ್ರಿಕೆಟ್ ಆಡಿದ್ದಾರೆ ಆದರೆ, ನಾನು ಕ್ರೀಡೆಯಲ್ಲಿ ಯಶಸ್ವಿಯಾಗಲಿಲ್ಲ ಎಂದು ಅವರು ತಿಳಿಸಿದ್ದಾರೆ. ನಾನು ಕ್ರಿಕೆಟಿಗನಾಗ್ದೆಿ ಮತ್ತು ಅದರ ಬಗ್ಗೆ ಯಾರೂ ಮಾತನಾಡುವುದಿಲ್ಲ.
|
5 |
+
ವಿರಾಟ್ ಕೊಹ್ಲಿ ನನ್ನ ನಾಯಕತ್ವದಲ್ಲಿ ಆಡಿದ್ದಾರೆ – ಯಾರಾದರೂ ಅದರ ಬಗ್ಗೆ ಮಾತನಾಡಿದ್ದಾರೆಯೇ? ಅವರು ಏಕೆ ಹಾಗೆ ಮಾಡುವುದಿಲ್ಲ? ವತ್ತಿಪರನಾಗಿ ನಾನು ಉತ್ತಮ ಕ್ರಿಕೆಟ್ ಆಡಿದ್ದೇನೆ. ಅನೇಕ ಟೀಂ ಇಂಡಿಯಾ ಆಟಗಾರರು ನನ್ನ ಬ್ಯಾಚ್ಮೇಟ್ಗಳು ಎಂದು ಅವರು ಮಾಧ್ಯಮಕ್ಕ ನೀಡಿರುವ ಸಂದರ್ಶನದಲ್ಲಿತಿಳಿಸಿದ್ದಾರೆ.
|
6 |
+
ನನ್ನ ಎರಡೂ ಅಸ್ಥಿರಜ್ಜುಗಳು ಮುರಿತಗೊಂಡಿದ್ದರಿಂದ ನಾನು ಕ್ರಿಕೆಟ್ ತ್ಯಜಿಸಬೇಕಾಯಿತು ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.ತೇಜಸ್ವಿ ಅವರು ತಮ ವತ್ತಿಜೀವನದಲ್ಲಿ ಒಟ್ಟು 1 ಪ್ರಥಮ ದರ್ಜೆ, 2 ಲಿಸ್ಟ್ ಎ ಮತ್ತು 4 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅವರು ದೇಶೀಯ ಸ್ಪೆಕ್ಟ್ರಮ್ನಲ್ಲಿ ಜಾರ್ಖಂಡ್ ಅನ್ನು ಪ್ರತಿನಿಧಿಸಿದರು, ನವೆಂಬರ್ 2009 ರಲ್ಲಿ ವಿದರ್ಭ ವಿರುದ್ಧ ಪ್ರಥಮ ದರ್ಜೆಗೆ ಪಾದಾರ್ಪಣೆ ಮಾಡಿದರು.
|
eesanje/url_47_13_2.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ವಾಮಾಚಾರ ಮಾಡುತ್ತಿದ್ದಾರೆಂಬ ಶಂಕೆಯಿಂದ ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಿದ ಗ್ರಾಮಸ್ಥರು
|
2 |
+
5 , 3 , ‘’ ; 5
|
3 |
+
ಛತ್ತೀಸ್ಗಢ,ಸೆ.16-ವಾಮಾಚಾರ ನಡೆಸುತ್ತಾರೆಂಬ ಗುಮಾನಿ ಮೇರೆಗೆ ಗ್ರಾಮಸ್ಥರು ಮನೆಗೆ ನುಗ್ಗಿ ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಿರುವ ಘಟನೆ ಸುಕಾ ಜಿಲ್ಲೆಯಲ್ಲಿ ನಡೆದಿದೆ. ಮೃತರಲ್ಲಿ ಮೂವರು ಮಹಿಳೆಯರು ಮತ್ತು ಹೆಡ್ ಕಾನ್ಸ್ಟೆಬಲ್ ಕೂಡ ಸೇರಿದ್ದಾರೆ.
|
4 |
+
ಮೃತರನ್ನು ಮೌಸಂ ಕನ್ನಾ, ಮೌಸಂ ಬುಚ್ಚಾ, ಮೌಸಂ ಬಿರಿ, ಕರ್ಕ ಲಚ್ಚಿ ಮತ್ತು ಮೌಸಂ ಅರ್ಜೋ ಎಂದು ಗುರುತಿಸಲಾಗಿದೆ. ಹಲ್ಲೆ ಮಾಡಿದವರನ್ನು ಅದೇ ಗ್ರಾಮದ ಸವ್ಲಾಮ್ ರಾಜೇಶ್ (21), ಸವ್ಲಾಮ್ ಹಿದಾ, ಕರಮ್ ಸತ್ಯಂ (35), ಕುಂಜಮ್ ಮುಖೇಶ್ (28) ಮತ್ತು ಪೊಡಿಯಮ್ ಎಂಕಾ ಎಂಬ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ.
|
5 |
+
ಗ್ರಾಮದ ಕೆಲವು ಜನರು ವಾಮಾಚಾರವನ್ನು ನಡೆಸುತ್ತಾರೆ, ಇದು ಗ್ರಾಮಸ್ಥರಿಗೆ ಹಾನಿಯನ್ನುಂಟು ಮಾಡುತ್ತಿದೆ ಎಂದು ಗ್ರಾಮದ ಸುಮಾರು 15 ಮಂದಿಯ ತಂಡ ಮನೆಗೆ ನುಗ್ಗಿ ಕುಟುಂಬ ಸದಸ್ಯರೆಲ್ಲರ ಮೇಲೆ ಒಬ್ಬೊಬ್ಬರಾಗಿ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
|
6 |
+
ದೊಣ್ಣೆ, ಕೊಡಲಿಯಿಂದ ತೀವ್ರವಾಗಿ ಥಳಿಸಲಾಗಿದೆ. ಬಳಿಕ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಇದಾದ ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದಾಗ ಮನೆಯವರು ವಾಮಾಚಾರ ನಡೆಸುತ್ತಿದ್ದಾರೆ ಎಂದು ಗ್ರಾಮಸ್ಥರೆಲ್ಲರೂ ಆರೋಪಿಸಿದ್ದಾರೆ.
|
7 |
+
ಇದರಿಂದ ಹಳ್ಳಿಯ ಮಕ್ಕಳಿಗೆ ಆರೋಗ್ಯ ಸಮಸ್ಯೆಗಳು ಮತ್ತು ಜನರಿಗೆ ವೈಯಕ್ತಿಕ ಹಾನಿ ಉಂಟಾಗುತ್ತದೆ ಎಂದು ಅವರು ನಂಬಿದ್ದರು. ಸುಕಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕಿರಣ್ ಜಿ.ಚವಾಣ್ ತಿಳಿಸಿದ್ದಾರೆ.
|
8 |
+
ಮಾಟಮಂತ್ರ ಅಥವಾ ವಾಮಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಕುಟುಂಬದ ವಿರುದ್ಧ ಈ ಹಿಂದೆ ಯಾವುದಾದರೂ ವಿವಾದವಿದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
|
9 |
+
ಮಾಟಮಂತ್ರದ ಶಂಕೆಯಲ್ಲಿ ಹತ್ಯೆಗೈದ ಮತ್ತೊಂದು ಘಟನೆ ಸೆಪ್ಟೆಂಬರ್ 13 ರಂದು ಛತ್ತೀಸ್ಗಢದ ಬಲೋಡಾ ಬಜಾರ್ ಜಿಲ್ಲೆಯಲ್ಲಿ ನಡೆದಿತ್ತು. ಅಂಬೆಗಾಲಿಡುವ ಮಗು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದರು. ಕುಟುಂಬದ ವ್ಯಕ್ತಿಯೋರ್ವ ಮಾಟಮಂತ್ರ ಮಾಡುತ್ತಿದ್ದಾನೆ ಎಂಬ ಶಂಕೆಯಿಂದ ಕೊಂದು ಹಾಕಲಾಗಿತ್ತು.
|
eesanje/url_47_13_3.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ರಸ್ತೆ ಬದಿ ಕುಳಿತ್ತಿದ್ದವರ ಮೇಲೆ ಪಿಕಪ್ ಟ್ರಕ್ ಹರಿದು ನಾಲ್ವರ ಸಾವು
|
2 |
+
: 4 , 5
|
3 |
+
ಸಂಭಾಲ್ (ಯುಪಿ), ಸೆ 16 (ಪಿಟಿಐ)ಇಂದು ಬೆಳಗ್ಗೆ ಇಲ್ಲಿ ವೇಗವಾಗಿ ಬಂದ ಪಿಕಪ್ ಟ್ರಕ್ ರಸ್ತೆ ಬದಿ ಕುಳಿತ್ತಿದ್ದವರ ಮೇಲೆ ಹರಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಅಲಿಗಢಕ್ಕೆ ಕಳುಹಿಸಲಾಗಿದ್ದು, ವಾಹನದ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
|
4 |
+
ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಭೋಪತ್ಪುರ ಗ್ರಾಮದ ಕೆಲವರು ರಸ್ತೆ ಬದಿ ಕುಳಿತಿದ್ದಾಗ ಗಾವಾದಿಂದ ಎದುರಿಗೆ ಬರುತ್ತಿದ್ದ ವಾಹನವೊಂದು ಅವರಿಗೆ ಅತಿವೇಗದಲ್ಲಿ ಡಿಕ್ಕಿ ಹೊಡೆದಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕ್ರಿಶನ್ ಕುಮಾರ್ ತಿಳಿಸಿದ್ದಾರೆ.
|
5 |
+
ಮತರನ್ನು ಲೀಲಾಧರ್ (60), ಧರಮಲ್ (40), ಓಂಪಾಲ್ (32), ಮತ್ತು ಪುರಾನ್ ಸಿಂಗ್ (45) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ತಕ್ಷಣವೇ ರಾಜಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು, ಅಲ್ಲಿಂದ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಅಲಿಗಢಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
|
eesanje/url_47_13_4.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಚಂಡೀಗಢ ಗ್ರೆನೇಡ್ ಸ್ಫೋಟ : 2ನೇ ಆರೋಪಿ ಬಂಧನ
|
2 |
+
|
3 |
+
ಚಂಡೀಗಢ, ಸೆ 15-ನಗರದಲ್ಲಿ ಸಂಭವಿಸಿದ ಗ್ರೆನೇಡ್ ಸ್ಫೋಟ ಘಟನೆಯಲ್ಲಿ ಭಾಗಿಯಾಗಿದ್ದ ಎರಡನೇ ಶಂಕಿತ ಆರೋಪಿಯನ್ನು ಬಂಧಿಸಿರುವುದಾಗಿ ಪಂಜಾಬ್ ಪೊಲೀಸರು ತಿಳಿಸಿದ್ದಾರೆ. ಗುರುದಾಸ್ಪುರದ ಬಟಾಲಾದ ರೈಮಲ್ ಗ್ರಾಮದ ನಿವಾಸಿ ವಿಶಾಲ್ ಮಸಿಹ್ ಅವರನ್ನು ದೆಹಲಿಯಿಂದ ಬಂಧಿಸಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ತಿಳಿಸಿದ್ದಾರೆ.
|
4 |
+
ಕಳೆದ ಸೆ.11ರಂದು ಇಲ್ಲಿನ ಚಂಡೀಗಢ ಸೆಕ್ಟರ್ 10ರ ಮನೆಯೊಂದ ಬಳಿ ಆಟೋ ರಿಕ್ಷಾದಲ್ಲಿ ಬಂದು ಇಬ್ಬರು ಶಂಕಿತರು ಗ್ರೆನೇಡ್ ಸ್ಫೋಟ ನಡೆಸಿದ್ದರು ಇದು ಭಾರಿ ಆತಂಕ ಮೂಡಿಸಿತ್ತು.
|
5 |
+
ಸ್ಫೋಟದ ಘಟನೆಯಲ್ಲಿ ಭಾಗಿಯಾಗಿರುವ ಪ್ರಮುಖ ಅಪರಾಧಿ ರೋಹನ್ ಮಸಿಹ್ ನನ್ನು ಪೊಲೀಸರು ಈಗಾಗಲೆ ಬಂಧಿಸಿದ್ದಾರೆ.ಘಟನೆ ನಡೆದ 72 ಗಂಟೆಗಳ ಒಳಗೆ ಕೇಂದ್ರೀಯ ಏಜೆನ್ಸಿಗಳ ಸಮನ್ವಯದೊಂದಿಗೆ ಸ್ಫೋಟದ ಎರಡನೇ ಅಪರಾಧಿಯನ್ನು ಬಂಧಿಸಿದೆ ಎಂದು ಯಾದವ್ ಎಕ್್ಸನಲ್ಲಿ ಪೋಸ್ಟ್ ಮಾಡಿದ್ದಾರೆ.ಸ್ಪೋಟದ ಕುರಿತ್ತು ನಡೆದಿದ್ದ ಪಿತೂರಿಯನ್ನು ಬಹಿರಂಗಪಡಿಸಲು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
|
6 |
+
ಚಂಡೀಗಢ ಗ್ರೆನೇಡ್ ಸ್ಫೋಟದ ಮಾಸ್ಟರ್ ಮೈಂಡ್ ಅನ್ನು ಪಾಕ್ ಮೂಲದ ಭಯೋತ್ಪಾದಕ ಹರ್ವಿಂದರ್ ಸಿಂಗ್ ರಿಂದಾ, ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್ಐ ಮತ್ತು ಯುಎಸ್ ಮೂಲದ ದರೋಡೆಕೋರ ಹರ್ಪ್ರೀತ್ಸಿಂಗ್ ಅಲಿಯಾಸ್ ಹ್ಯಾಪಿ ಪಾಸಿಯಾ ಎಂದು ಪೊಲೀಸರು ಹೇಳಿದ್ದಾರೆ..
|
7 |
+
ತನ್ನ ಸಹಚರರ ಮೂಲಕ ಹ್ಯಾಂಡ್ ಗ್ರೆನೇಡ್ ಮತ್ತು ಶಸ್ತ್ರಾಸ್ತ್ರಗಳನ್ನು ಒದಗಿಸಿದ ಪಾಸಿಯಾ ಅವರ ಆಜ್ಞೆಯ ಮೇರೆಗೆ ರೋಹನ್ ಗ್ರೆನೇಡ್ ಸ್ಫೋಟದಲ್ಲಿ ಭಾಗಿಯಾಗಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
|
eesanje/url_47_13_5.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ನಾಗಮಂಗಲ ಗಲಭೆ ಹಿಂದೆ ನಿಷೇಧಿತ ಪಿಎಫ್ಐ..?
|
2 |
+
|
3 |
+
ನವದೆಹಲಿ,ಸೆ.15-ಕರ್ನಾಟಕದ ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲಿ ಗಣೇಶ ವಿಸರ್ಜನೆ ವೇಳೆ ಎರಡು ಸಮುದಾಯಗಳ ನಡುವೆ ನಡೆದ ಕೋಮುಗಲಭೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ) ಕೈಗೆತ್ತಿಕೊಳ್ಳಲು ಮುಂದಾಗಿದೆ. ಏಕೆಂದರೆ ನಾಗಮಂಗಲ ಪೊಲೀಸರ್ ಎಫ್ಐಆರ್ನಲ್ಲಿ ದಾಖಲಿಸಿರುವ 76 ಆರೋಪಿಗಳ ಪೈಕಿ ಇಬ್ಬರು ಆರೋಪಿಗಳು ನಿಷೇಧಿತ ಪಾಪುಲರ್ ಫ್ರಂಟ್ ಆಫ್ ಇಂಡಿಯ(ಪಿಎಫ್ಐ) ಸಂಘಟನೆಗೆ ಸೇರಿದವರೆಂಬುದು ಬೆಳಕಿಗೆ ಬಂದಿದೆ.
|
4 |
+
ಕೇರಳ ರಾಜ್ಯದ ಮಲ್ಲಾಪುರಂ ನಿವಾಸಿಗಳಾದ 44ನೇ ಆರೋಪಿ ಯುಸೋಫ್ ಮತ್ತು 61ನೇ ಆರೋಪಿ ನಾಸೀರ್ ಇಬ್ಬರು ಈ ಹಿಂದೆ ಪಿಎಫ್ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಕೇರಳ ಸೇರಿದಂತೆ ದೇಶದ ಬೇರೆ ಬೇರೆ ಮಾರ್ಗಗಳಲ್ಲಿ ನಡೆದ ಕೋಮುಗಲಭೆಯಲ್ಲಿ ಈ ಇಬ್ಬರು ಭಾಗಿಯಾಗಿರುವ ಶಂಕೆಯಿದ್ದು, ಇದೀಗ ನಾಗಮಂಗಲ ಪೊಲೀಸರು ದಾಖಲಿಸಿರುವ ಎಫ್ಐಆರ್ನಲ್ಲಿ ಈ ಇಬ್ಬರು ಹೆಸರುಗಳು ಇರುವುದರಿಂದ ಎನ್ಐಎ ತನಿಖೆ ನಡೆಸುವ ಸಾಧ್ಯತೆ ಇದೆ.
|
5 |
+
ಇದೊಂದು ಪೂರ್ವನಿಯೋಜಿತ ಕೃತ್ಯ ಎಂದು ಬಿಜೆಪಿ ಮತ್ತು ಜೆಡಿಎಸ್ನ ಅನೇಕ ನಾಯಕರುಗಳು ಆರೋಪಿಸಿದ್ದರು. ಘಟನೆ ಆಕಸಿಕ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದರಾದರೂ ಮೇಲ್ನೋಟಕ್ಕೆ ವ್ಯವಸ್ಥಿತ ಸಂಚು ಎಂಬ ಅನುಮಾನ ವ್ಯಕ್ತವಾಗಿದೆ.
|
6 |
+
ನಾಗಮಂಗಲ ಪಟ್ಟಣದ ಮಸೀದಿ ಬಳಿ ಗಲಭೆಗೆ ಬಳಸಿರುವ ಪೆಟ್ರೋಲ್ ಬಾಂಬ್, ತಲವಾರ್, ಗಲಾಟೆ ನಡೆದ ದಿನ ಮೆಡಿಕಲ್ ಶಾಪ್ನಲ್ಲಿ 200 ಮಾಸ್ಕ್ಗಳನ್ನು ಖರೀದಿ ಮಾಡಿರುವುದು ಪೂರ್ವ ನಿಯೋಜಿತ ಕೃತ್ಯಕ್ಕೆ ಸಾಕ್ಷಿಯಾಗಿವೆ. ದುಷ್ಕೃತ್ಯಕ್ಕೆ ಬಳಸಿರುವ ಕೆಲವು ಮಾರಕಾಸ್ತ್ರಗಳು ಕೇರಳದ ಮಲ್ಲಪುರಂನಿಂದ ಬಂದಿದ್ದವು ಎಂಬ ಶಂಕೆ ವ್ಯಕ್ತವಾಗಿದೆ.
|
7 |
+
ಈ ಹಿಂದೆ ಶಿವಮೊಗ್ಗದ ರಾಗಿಗುಡ್ಡದ ಬಳಿ ಟಿಪ್ಪು ಜಯಂತಿ ಆಚರಣೆ ವೇಳೆಯು ನಿಷೇಧಿತ ಪಿಎಫ್ಐ ಸಂಘಟನೆಯವರೇ ಗಲಭೆ ಎಬ್ಬಿಸಿದ್ದರೆಂಬುದು ತನಿಖೆಯಿಂದ ಗೊತ್ತಾಗಿತ್ತು. ಶಾಂತಿಪ್ರಿಯವಾಗಿದ್ದ ನಾಗಮಂಗಲದಲ್ಲಿ ಏಕಾಏಕಿ ಇಷ್ಟು ದೊಡ್ಡ ಮಟ್ಟದ ಕೋಮುಗಲಭೆ ನಡೆಯಲು ಹಲವು ದಿನಗಳಿಂದ ವ್ಯವಸ್ಥಿತವಾದ ಪಿತೂರಿಯನ್ನು ನಡೆಸಿರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ ಎಂದು ಎನ್ಐಎ ಮೂಲಗಳು ತಿಳಿಸಿವೆ.
|
8 |
+
ಎಫ್ಐಆರ್ನಲ್ಲಿ ದಾಖಲಾಗಿರುವ ಯುಸೋಫ್ ಮತ್ತು ನಾಸೀರ್ನನ್ನು ಶೀಘ್ರದಲ್ಲೇ ಎನ್ಐಎ ವಶಕ್ಕೆ ಪಡೆಯಲಿದ್ದು, ಅಧಿಕೃತವಾಗಿ ಪ್ರಕರಣವನ್ನು ಕೈಗೆತ್ತಿಕೊಳ್ಳಲಿದೆ ಎಂದು ತಿಳಿದುಬಂದಿದೆ. ಕಳೆದ ಸೆ.2ರಂದು ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಕ್ಷುಲ್ಲಕ ಕಾರಣಕ್ಕಾಗಿ ಎರಡು ಸಮುದಾಯಗಳ ನಡುವೆ ಗಲಭೆ ನಡೆದಿತ್ತು. ಘಟನೆಯಲ್ಲಿ ಎರಡು ಸಮುದಾಯಗಳಿಗೆ ಸೇರಿದ ಅಂಗಡಿಗಳು ಹಾಗೂ ದ್ವಿಚಕ್ರ ವಾಹನಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದವು.
|
9 |
+
ಈ ಪ್ರಕರಣ ಅಡಳಿತರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರಕ್ಕ��� ಕಾರಣವಾಗಿದೆ. ಇದೊಂದು ಸಣ್ಣ ಆಕಸಿಕ ಘಟನೆ ಎಂದು ಸರ್ಕಾರ ಹೇಳಿದೆ. ಆದರೆ ವ್ಯವಸ್ಥಿತ ಪೂರ್ವ ನಿಯೋಜಿತ ಕೃತ್ಯ ಎಂದು ಪ್ರತಿಪಕ್ಷಗಳ ಆರೋಪವಾಗಿದೆ.ಘಟನೆ ಸಂಬಂಧ ಪೊಲೀಸರು ಈಗಾಗಲೇ 54 ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ನಾಗಮಂಗಲ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಮಾನತುಗೊಂಡ ಬೆನ್ನಲೇ ಗುಪ್ತಚರ ವಿಭಾಗದ ಎಡಿಜಿಪಿ ಶರತ್ಶ್ಚಂದ್ರ ಅವರನ್ನು ವರ್ಗಾವಣೆ ಮಾಡಿತ್ತು.
|
eesanje/url_47_13_6.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕೇಜ್ರಿವಾಲ್ ಘೋಷಣೆ
|
2 |
+
' 2
|
3 |
+
ನವದೆಹಲಿ,ಸೆ.15-ಇನ್ನೆರಡು ದಿನದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಘೋಷಿಸಿರುವುದರಿಂದ ದೆಹಲಿಯ ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬ ಕುತೂಹಲ ಕೆರಳಿಸಿದೆ. ಅಬಕಾರಿ ನೀತಿ ಪ್ರಕರಣದಲ್ಲಿ ಜೈಲು ಪಾಲಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯ ಕೂಡ ಮುಂದಿನ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಸ್ವತಃ ಕ್ರೇಜಿವಾಲ್ ಸ್ಪಷ್ಟಪಡಿಸಿದ್ದಾರೆ.
|
4 |
+
ಹಾಗಾದರೆ ರಾಷ್ಟ್ರ ರಾಜಧಾನಿಯ ಮುಂದಿನ ಮುಖ್ಯಮಂತ್ರಿ ಸ್ಥಾನ ಯಾರಿಗೆ ಒಲಿಯಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.ನಾವು ವಿಧಾನಸಭೆಯನ್ನು ವಿಸರ್ಜಿಸುವುದಿಲ್ಲ, ಕೇಂದ್ರ ಸರ್ಕಾರ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆ ಜೊತೆಯಲ್ಲಿ ದೆಹಲಿಗೂ ಚುನಾವಣೆ ನಡೆಸಲಿ ಎಂದು ಹೇಳಿದ್ದಾರೆ.
|
5 |
+
ಇದೀಗ ಕೇಜ್ರಿವಾಲ್ ರಾಜೀನಾಮೆ ನೀಡಿದರೆ ಅವರ ಸ್ಥಾನಕ್ಕೆ ಕಲ್ಕಾಜಿ ವಿಧಾನಸಭಾ ಕ್ಷೇತ್ರದ ಶಾಸಕರು ಆಗಿರುವ ಶಿಕ್ಷಣ, ಲೋಕೋಪಯೋಗಿ, ಇಂಧನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವರಾಗಿರುವ ಅತಿಶಿ ಸಿಂಗ್ ಹೆಸರು ಮುಂಚೂಣಿಯಲ್ಲಿದೆ.ಕ್ರೇಜಿವಾಲ್ ಮತ್ತು ಮನೀಶ್ ಸಿಸೋಡಿಯ ಬಂಧನಕ್ಕೊಳಪಟ್ಟ ಮೇಲೆ ಅಸ್ಥಿರತೆಯಿಂದ ಕೂಡಿದ್ದ ದೆಹಲಿ ಸರ್ಕಾರವನ್ನು ಅತ್ಯಂತ ಚಾಣಾಕ್ಷತದಿಂದ ಮುನ್ನಡೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.
|
6 |
+
ಶಿಕ್ಷಣ ಸಚಿವರಾಗಿ ದೆಹಲಿ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಗಳನ್ನು ಖಾಸಗಿಯವರು ನಾಚಿಸುವಂತೆ ಉನ್ನತೀಕರಿಸಿದ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.ವಿದೇಶದಲ್ಲಿ ಉತ್ತಮ ಶಿಕ್ಷಣ ಪಡೆದುಕೊಂಡಿರುವ ಅವರ ಮೇಲೆ ಯಾವುದೇ ರೀತಿಯ ಭ್ರಷ್ಟಾಚಾರದ ಆರೋಪಗಳಿಲ್ಲ. ಯಾವುದೇ ವಿಷಯದಲ್ಲೂ ಅತ್ಯಂತ ಎದೆಗಾರಿಕೆಯಿಂದ ಮಾತನಾಡುವ ಕೌಶಲ್ಯ ಹೊಂದಿದ್ದಾರೆ.
|
7 |
+
ಪ್ರಧಾನಿ ನರೇಂದ್ರಮೋದಿ ಮತ್ತು ಕೇಂದ್ರ ಸರ್ಕಾರವನ್ನು ಅತ್ಯಂತ ಕಠಿಣ ಪದಗಳಲ್ಲಿ ಟೀಕಿಸುತ್ತಿದ್ದ ಕೆಲವೇ ಕೆಲವು ಪ್ರಮುಖರಲ್ಲಿ ಇವರು ಕೂಡ ಒಬ್ಬರು. ಸಹಜವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಅತಿಶಿ ಸಿಂಗ್ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ.
|
eesanje/url_47_13_7.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಏಕಕಾಲಕ್ಕೆ ಆರು ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ
|
2 |
+
'
|
3 |
+
ನವದೆಹಲಿ,ಸೆ.15-ದೇಶಾದ್ಯಂತ ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನರೇಂದ್ರ ಮೋದಿ ಅವರು ಇಂದು ಏಕಕಾಲಕ್ಕೆ ಆರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ನೀಡಿದರು. ಈ ರೈಲುಗಳು ಟಾಟಾನಗರ-ಪಾಟ್ನಾ, ಭಾಗಲ್ಪುರ್-ದುಮ್ಕಾ-ಹೌರಾ, ಬ್ರಹಪುರ-ಟಾಟಾನಗರ, ಗಯಾ-ಹೌರಾ, ದಿಯೋಘರ್-ವಾರಾಣಸಿ ಮತ್ತು ರೂರ್ಕೆಲಾ-ಹೌರಾ ಮಾರ್ಗದಲ್ಲಿ ಸಂಚರಿಸಲಿವೆ.
|
4 |
+
ಹೊಸ ಮಾರ್ಗದಲ್ಲಿ ಪರಿಚಯಿಸಲಾಗಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಸಾಮಾನ್ಯ ಪ್ರಯಾಣಿಕರು, ವೃತ್ತಿಪರರು, ವ್ಯಾಪಾರ ಮತ್ತು ವಿದ್ಯಾರ್ಥಿ ಸಮುದಾಯಕ್ಕೆ ಅನುಕೂಲ ಒದಗಿಸಲಿವೆ. ಈ ರೈಲುಗಳು ದಿಯೋಘರ್ (ಜಾರ್ಖಂಡ್ನ ಬೈದ್ಯನಾಥ ಧಾಮ), ವಾರಾಣಸಿಯ ಕಾಶಿ ವಿಶ್ವನಾಥ ದೇವಸ್ಥಾನ (ಉತ್ತರ ಪ್ರದೇಶ), ಕಾಳಿಘಾಟ್, ಕೋಲ್ಕತ್ತಾದ ಬೇಲೂರು ಮಠ (ಪಶ್ಚಿಮ ಬಂಗಾಳ) ಮತ್ತಿತರ ಯಾತ್ರಾ ಸ್ಥಳಗಳಿಗೆ ಪ್ರಯಾಣ ಮಾಡುವ ಭಕ್ತರಿಗೆ ಅನುಕೂಲವಾಗಿದೆ ಎಂದು ರೈಲ್ವೆ ಇಲಾಖೆ ಹೇಳಿದೆ.
|
5 |
+
ಈ ಪ್ರದೇಶಗಳ ಧಾರ್ಮಿಕ ಪ್ರವಾಸೋದ್ಯಮಕ್ಕೆ ಹೆಚ್ಚು ಸಹಾಯಕವಾಗಲಿದೆ. ಧನ್ಬಾದ್ನ ಕಲ್ಲಿದ್ದಲು ಗಣಿ ಉದ್ಯಮಗಳು, ಕೋಲ್ಕತ್ತಾದ ಸೆಣಬು ಕೈಗಾರಿಕೆಗಳು, ದುರ್ಗಾಪುರದಲ್ಲಿ ಕಬ್ಬಿಣ ಮತ್ತು ಉಕ್ಕಿನ ಸಂಬಂಧಿತ ಕೈಗಾರಿಕೆಗಳಿಗೆ ಸಹ ವಂದೇ ಭಾರತ್ ರೈಲು ಸಂಪರ್ಕದಿಂದ ಅನುಕೂಲವಾಗುವ ನಿರೀಕ್ಷೆ ಇದೆ.
|
6 |
+
ಹುಬ್ಬಳ್ಳಿ-ಪುಣೆ ರೈಲಿಗೆ ಚಾಲನೆ: ಸುಮಾರು 8,000 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಾಗಿದ್ದು, 30 ಮೆಗಾವ್ಯಾಟ್ ಸೋಲಾರ್ ಸಿಸ್ಟಮ್ ಉದ್ಘಾಟಿಸಿದ್ದಾರೆ.
|
7 |
+
ಮೋದಿ ಭುಜ್-ಅಹಮದಾಬಾದ್ ಮಾರ್ಗದ ಭಾರತದ ಮೊದಲ ವಂದೇ ಮೆಟ್ರೋ ಸೇರಿದಂತೆ ಹಲವಾರು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಹಸಿರುನಿಶಾನೆ ತೋರಲಿದ್ದಾರೆ. ಇವುಗಳಲ್ಲಿ ನಾಗ್ಪುರ-ಸಿಕಂದರಾಬಾದ್, ಕೊಲ್ಹಾಪುರ-ಪುಣೆ, ಆಗ್ರಾ ಕ್ಯಾಂಟ್- ಬನಾರಸ್, ದುರ್ಗ್-ವಿಶಾಖಪಟ್ಟಣಂ ಮತ್ತು ಪುಣೆ-ಹುಬ್ಬಳ್ಳಿ ಮತ್ತು ವಾರಣಾಸಿ-ದೆಹಲಿಗೆ 20 ಕೋಚ್ಗಳಿರುವ ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.
|
8 |
+
ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿ ಮತ್ತು ಮಹರಾಷ್ಟ್ರದ ಪುಣೆ ನಡುವೆ ವಂದೇ ಭಾರತ್ ರೈಲುಗಳ ಸಂಚಾರ ಆರಂಭವಾಗಲಿದೆ. ಈ ಮೂಲಕ ಹುಬ್ಬಳ್ಳಿ ನಗರಕ್ಕೆ 2ನೇ ವಂದೇ ಭಾರತ್ ರೈಲು ಸಿಕ್ಕಿದೆ. ಈಗಾಗಲೇ ಕೆಎಸ್ಆರ್ ಬೆಂಗಳೂರು-ಧಾರವಾಡ ರೈಲು ವಯಾ ಹುಬ್ಬಳ್ಳಿ ಸಂಚಾರವನ್ನು ನಡೆಸುತ್ತಿದೆ.
|
9 |
+
ವರ್ಧಿತ ಸಂಪರ್ಕಕ್ಕಾಗಿ ಹೊಸ ರೈಲು ಸೇವೆಗಳನ್ನು ಸೇರಿಸುವುದರೊಂದಿಗೆ ವಂದೇ ಭಾರತ್ ಪೋರ್ಟ್ ಫೋಲಿಯೊ ನಿರಂತರವಾಗಿ ವಿಸ್ತರಿಸುತ್ತಿದೆ.ಮೇಕ್ ಇನ್ ಇಂಡಿಯಾ ಉಪಕ್ರಮದಡಿ ಸ್ಥಳೀಯವಾಗಿ ವಿನ್ಯಾಸಗೊಳಿಸಲಾಗಿ��ೆ, ಇದು ಲಕ್ಷಾಂತರ ಪ್ರಯಾಣಿಕರಿಗೆ ಐಷಾರಾಮಿ ಮತ್ತು ದಕ್ಷತೆಯನ್ನು ತಲುಪಿಸುವ ಅತ್ಯಾಧುನಿಕ ವೈಶಿಷ್ಟ್ಯಗಳನ್ನು ನೀಡುತ್ತದೆ ಎಂದು ಅದು ಸೇರಿಸಿದೆ.
|
10 |
+
ವಂದೇ ಭಾರತ್ ಭಾರತದ ಮೊದಲ ಸ್ವದೇಶಿ ವಿನ್ಯಾಸ ಮತ್ತು ತಯಾರಿಸಿದ ಅರೆ-ಹೈ-ವೇಗದ ರೈಲು. ಮೊದಲ ವಂದೇ ಭಾರತ್ ರೈಲನ್ನು ಫೆಬ್ರವರಿ 15, 2019ರಂದು ಉದ್ಘಾಟಿಸಲಾಗಿತ್ತು. ರೈಲ್ವೇಯ ಪ್ರಕಾರ, ಇದುವರೆಗೆ ದೇಶಾದ್ಯಂತ 54 ವಂದೇ ಭಾರತ್ ರೈಲುಗಳು ಓಡುತ್ತಿವೆ. ಅವರು ಒಟ್ಟು ಸುಮಾರು 36,000 ಟ್ರಿಪ್ಗಳನ್ನು ಪೂರ್ಣಗೊಳಿಸಿದ್ದಾರೆ ಮತ್ತು 3.17 ಕೋಟಿ ಪ್ರಯಾಣಿಕರನ್ನು ಪ್ರಯಾಣಿಸಿದ್ದಾರೆ.
|
11 |
+
ಮೂಲ ವಂದೇ ಭಾರತ್ ರೈಲು ಸೆಟ್ ಈಗ ವಂದೇ ಭಾರತ್ 2.0 ಆಗಿ ವಿಸ್ತರಿಸಿದೆ, ವೇಗದ ವೇಗವರ್ಧನೆ, ಕವಚ್, ಆಂಟಿ-ವೈರಸ್ ಸಿಸ್ಟಮ್ ಮತ್ತು ವೈಫೈ ಮುಂತಾದ ಇನ್ನಷ್ಟು ಸುಧಾರಿತ ವೈಶಿಷ್ಟ್ಯಗಳನ್ನು ಹೊಂದಿದೆ.ಭಾರತದ ರೈಲು ಜಾಲವು ವಿಸ್ತರಿಸುತ್ತಲೇ ಇರುವುದರಿಂದ, ಪ್ರಯಾಣಿಕರು ರಾಷ್ಟ್ರದ ವೈವಿಧ್ಯಮಯ ಅಗತ್ಯಗಳನ್ನು ಪೂರೈಸುವ ತಡೆರಹಿತ, ಆರಾಮದಾಯಕ ಮತ್ತು ಪರಿಣಾಮಕಾರಿ ಪ್ರಯಾಣದ ಭವಿಷ್ಯವನ್ನು ಎದುರು ನೋಡಬಹುದು.
|
eesanje/url_47_13_8.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
2025ರ ಜೂನ್ 30ರೊಳಗೆ ಪೂರ್ಣವಾಗಲಿದೆ ರಾಮಮಂದಿರ ಕಾಮಗಾರಿ
|
2 |
+
2025
|
3 |
+
ಅಯೋಧ್ಯೆ,ಸೆ.15-ರಾಮ ಮಂದಿರದ ಸಂಪೂರ್ಣ ಕಾಮಗಾರಿ 2025ರ ಜೂನ್ 30ರೊಳಗೆ ಪೂರ್ಣಗೊಳ್ಳಲಿದೆ ಎಂದು ರಾಮ ಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನ್ರಿಪೆಂದ್ರ ಮಿಶ್ರಾ ತಿಳಿಸಿದ್ದಾರೆ.
|
4 |
+
ರಾಮ ಮಂದಿರ ನಿರ್ಮಾಣ ಸಮಿತಿಯಿಂದ ನಡೆದ ಸಭೆಯಲ್ಲಿ ಈ ವಿಷಯ ತಿಳಿಸಿದ ಅವರು, ದೇಗುಲದ ಶಿಖರ ನಿರ್ಮಾಣಕ್ಕೆ 120 ದಿನಗಳ ತೆಗೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ. ಡಿಸೆಂಬರ್ ಒಳಗೆ ದೇಗುಲದ ಶಿಖರ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆಯಾದರೂ ಇದು ಪೂರ್ಣಗೊಳ್ಳುವುದಿಲ್ಲ. 2025ರ ಫೆಬ್ರವರಿಯೊಳಗೆ ದೇಗುಲದ ಸಂಪೂರ್ಣವಾಗಿ ನಿರ್ಮಾಣಗೊಳ್ಳಲಿದೆ. ದೇಗುಲದೊಳಗೆ ನಿರ್ಮಾಣವಾಗುವ ಸಪ್ತ ಮಂದಿರದ ಮೂರ್ತಿಗಳನ್ನು ಜೈಪುರದಲ್ಲಿ ತಯಾರಿಸಲಾಗುತ್ತಿದೆ ಎಂದರು.
|
5 |
+
ಋಷಿ-ಸಂತರ ಮೂರ್ತಿಗಳ ನಿರ್ಮಾಣ:ಈ ಸಪ್ತ ಮಂದಿರದೊಳಗೆ ಋಷಿ ಮತ್ತು ಸಂತರ ಮೂರ್ತಿಗಳನ್ನು ನಿರ್ಮಾಣ ಮಾಡಲಾಗುವುದು. ಈ ಕೆಲಸವೂ 2024ರ ಡಿಸೆಂಬರ್ನೊಳಗೆ ಪೂರ್ಣ ಮಾಡಲಾಗುವುದು. ಉಳಿದ ರಾಮ ಮಂದಿರದ ಕೆಲಸಗಳು 2025, ಜೂನ್ 20ರೊಳಗೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
|
6 |
+
ಶ್ರೀ ರಾಮ್ ಜನಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯ ಅನಿಲ್ ಮಿಶ್ರಾ ಮಾತನಾಡಿ, ದೇಗುಲದ ಮೇಲಿನ ಮಹಡಿ ನಿರ್ಮಾಣ ಮಾಡಲು ಬೇಕಾದ ಶಿಲೆ, ಕಲ್ಲು ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆ ಮತ್ತು ಕಾರ್ಯ ನಿರ್ವಹಣೆಗೆ ಅಗತ್ಯವಾದ ಕಾರ್ಮಿಕರ ವ್ಯವಸ್ಥೆಗಾಗಿ ಟ್ರಸ್ಟ್ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು.
|
7 |
+
ಬಿಳಿ ಮಾರ್ಬಲ್ನಲ್ಲಿ ಗರ್ಭಗುಡಿ:ಮೊದಲ ಮಹಡಿಯು ಇನ್ನೇನು ಮುಗಿಯುವ ಹಂತ ತಲುಪಿದ್ದು, ನೆಲ ಸಮತಟ್ಟು (ಫ್ರೋರಿಂಗ್) ಕಾರ್ಯ ನಡೆಯುತ್ತಿದೆ. ಎರಡನೇ ಮಹಡಿ ಅಭಿವೃದ್ಧಿಯು ಕೂಡ ವೇಗವಾಗಿ ಸಾಗುತ್ತಿದ್ದು, ಯಾವುದೆ ಕಲೆ ಇರದ ಬಿಳಿ ಬಣ್ಣ ಮಾರ್ಬಲ್ ಕಲ್ಲಿನಲ್ಲಿ ಗರ್ಭಗುಡಿ ನಿರ್ಮಾಣ ಮಾಡಲಾಗುವುದು. 1,600 ಕಾರ್ಮಿಕರು ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಅವಿರತವಾಗಿ ಬದ್ದರಾಗಿದ್ದಾರೆ. ನಿಗದಿತ ಸಮಯದೊಳಗೆ ದೇಗುಲ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಟ್ರಸ್ಟ್ನ ಸದಸ್ಯರು ತಿಳಿಸಿದ್ದಾರೆ.
|
8 |
+
ಜಿಎಂಆರ್ ಗ್ರೂಪ್ನಿಂದ ಕಟ್ಟಡದ ಅಲಂಕಾರ:ಜೊತೆಗೆ ಸಪ್ತ ಮಂಟಪದ ದೇಗುಲದ ಕಾರ್ಯ ಕೂಡ ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಜಿಎಂಆರ್ ಗ್ರೂಪ್, ರಾಮ ಜನಭೂಮಿ ಕಟ್ಟಡದ ಅಲಂಕಾರವನ್ನು ನಿರ್ವಹಿಸಲಿದೆ. ವರದಿ ಪ್ರಕಾರ ದೇಗುಲದಲ್ಲಿ ಹಸಿರು ಗಿಡಗಳ ಹೊದಿಕೆಯನ್ನು ನಿರ್ವಹಿಸುವ ಚಿಂತನೆ ಇದೆ ಎಂದು ನೃಪೇಂದ್ರ ಮಿಶ್ರಾ ತಿಳಿಸಿದರು.
|
9 |
+
ವಿಭಿನ್ನ ಲೈಟಿಂಗ್ ಪ್ರಯೋಗ:ದೇಗುಲದಲ್ಲಿ ಬರುವ ಭಕ್ತರಲ್ಲಿ ಭಕ್ತಿಭಾವ ಹೆಚ್ಚಿಸುವ ರೀತಿಯಲ್ಲಿ ಲೈಂಟಿಂಗ್ ವ್ಯವಸ್ಥೆ ಮಾಡಲಾಗುತ್ತಿದ್ದು, ಈ ಸಂಬಂಧ ಅನೇಕ ಬಾರಿ ಪ್ರಯೋಗಗಳನ್ನು ನಡೆಸಲಾಗಿದೆ. ಶೀಘ್ರದಲ್ಲೇ ಈ ಸಂಬಂಧ ಟೆಂಡರ್ ಬಿಡುಗಡೆ ಮಾಡಲ���ಗುವುದು. ಭಾರತ ಮತ್ತು ವಿದೇಶದ ದೊಡ್ಡ ಕಂಪನಿಗಳಿಗೆ ಈ ಪ್ರದರ್ಶನಕ್ಕೆ ಸಮಯ ನೀಡಲಾಗುವುದು. ಈ ಯೋಜನೆ ಅಡಿ ದೇಗುಲದ ಒಳಗೆ 360 ಡಿಗ್ರಿ ಕೋನದಲ್ಲಿ ಲೈಟ್ ಹೊರಸೂಸುವ ಪೊಜೆಕ್ಟರ್ ಬಳಕೆ ಮಾಡಲಾಗಿವುದು. ಎಷ್ಟು ಪ್ರಾಜೆಕ್ಟರ್ ಬಳಕೆ ಮಾಡುವುದು ಎಂಬ ಕುರಿತು ನವೆಂಬರ್ನಲ್ಲಿ ನಿರ್ಧಿರಸಲಾಗುವುದು ಎಂದು ತಿಳಿಸಿದರು.
|
eesanje/url_47_13_9.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬಿಹಾರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಒಂದೇ ಗಂಟೆಯೊಳಗೆ ಮದ್ಯ ನಿಷೇಧ ತೆರವು
|
2 |
+
' ':
|
3 |
+
ಪಾಟ್ನಾ,ಸೆ.15– ಬಿಹಾರದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದ ಒಂದೇ ಗಂಟೆಯೊಳಗೆ ಮದ್ಯದ ಮೇಲಿನ ನಿಷೇಧವನ್ನು ರದ್ದುಗೊಳಿಸುವುದಾಗಿ ಎಂದು ರಾಜಕೀಯ ತಂತ್ರಜ್ಞ ಮತ್ತು ಕಾರ್ಯಕರ್ತ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.
|
4 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದಲ್ಲಿ 2025ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಜನ್ ಸೂರಜ್ ಪಕ್ಷವು ಗೆದ್ದರೆ ಮದ್ಯ ನಿಷೇಧವನ್ನು ಅಂತ್ಯಗೊಳಿಸುವುದಾಗಿ ಭರವಸೆ ನೀಡಿದ್ದಾರೆ. ಅಕ್ಟೋಬರ್ 2 ರಂದು ಪ್ರಾರಂಭವಾಗಲಿರುವ ತಮ ರಾಜಕೀಯ ಪಕ್ಷ ಜನ್ ಸೂರಾಜ್ ಮುಂದಿನ ವರ್ಷ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 243 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಖಚಿತಪಡಿಸಿದರು.
|
5 |
+
ಕಳೆದ ಎರಡು ವರ್ಷಗಳಿಂದ ತಯಾರಿ ನಡೆಸುತ್ತಿದ್ದೇವೆ. ಜನ್ ಸೂರಜ್ ಸರ್ಕಾರ ರಚನೆಯಾದರೆ ಒಂದು ಗಂಟೆಯೊಳಗೆ ಮದ್ಯ ನಿಷೇಧವನ್ನು ಕೊನೆಗೊಳಿಸುತ್ತೇವೆ.ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಇಬ್ಬರೂ ನಾಯಕರ ಅವಧಿಯಲ್ಲಿ ಬಿಹಾರ ನಷ್ಟ ಅನುಭವಿಸಿದೆ ಎಂದರು.
|
6 |
+
ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಮತ್ತು ನಿತೀಶ್ ಕುಮಾರ್ ನಡುವೆ ಯಾರು ಯಾರೊಂದಿಗೆ ಕೈಜೋಡಿಸಿದ್ದಾರೆ, ಯಾರ ಕಾಲಿಗೆ ಬಿದ್ದಿದ್ದಾರೆ ಎಂಬುದು ತಿಳಿದಿಲ್ಲ, ಎರಡೂ ಸಂದರ್ಭಗಳಲ್ಲಿ ಬಿಹಾರ ಸೋತಿದೆ, ಬಿಹಾರದ ಜನರು ಇಬ್ಬರನ್ನೂ ಬೆಂಬಲಿಸಿದ್ದಾರೆ ಎಂದು ಪ್ರಶಾಂತ್ ಕಿಶೋರ್ ಹೇಳಿದರು. ಬಿಹಾರದ ಜನರು 30 ವರ್ಷಗಳಿಂದ ಅವರಿಬ್ಬರನ್ನೂ ನೋಡಿದ್ದಾರೆ ಎಂದು ಹೇಳಿದ್ದಾರೆ.
|
7 |
+
ನಿಷೇಧ ಕಾನೂನು ನಿತೀಶ್ ಕುಮಾರ್ ಅವರ ಪಾಲಿಗೆ ಧಕೋಸ್ಲಾ (ಶಮ್) ಹೊರತು ಬೇರೇನೂ ಅಲ್ಲ ಎಂದ ಅವರು, ಪ್ರಸ್ತುತ ನಿಷೇಧವು ನಿಷ್ಪರಿಣಾಮಕಾರಿಯಾಗಿದೆ. ಇದು ಮದ್ಯದ ಅಕ್ರಮ ವಿತರಣೆಗೆ ಕಾರಣವಾಗಿದೆ ಮತ್ತು ರಾಜ್ಯಕ್ಕೆ 20,000 ಕೋಟಿ ರೂ.ಗಳ ಸಂಭಾವ್ಯ ಅಬಕಾರಿ ಆದಾಯವನ್ನು ವಂಚಿತಗೊಳಿಸಿದೆ.
|
8 |
+
ಅಕ್ರಮ ಮದ್ಯ ವ್ಯಾಪಾರದಿಂದ ರಾಜಕಾರಣಿಗಳು ಮತ್ತು ಅಧಿಕಾರಿಗಳು ಲಾಭ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.ಬಿಹಾರದ ದುಃಸ್ಥಿತಿಗೆ ನಿತೀಶ್ಕುಮಾರ್ ಮತ್ತು ಅವರ ಹಿಂದಿನ ಲಾಲು ಪ್ರಸಾದ್ ಕಾರಣ. ಆದರೆ ಕಾಂಗ್ರೆಸ್ ಮತ್ತು ಬಿಜೆಪಿ ಕೂಡ ಆಪಾದನೆಯನ್ನು ಹಂಚಿಕೊಂಡಿವೆ ಎಂದು ಹೇಳಿದ್ದಾರೆ.
|
9 |
+
ಜನ್ ಸೂರಾಜ್ ಎಲ್ಲಾ 243 ಸ್ಥಾನಗಳಲ್ಲಿ ಸ್ಪರ್ಧಿಸುತ್ತಾರೆ ಎಂದು ನಾನು ಸ್ಪಷ್ಟಪಡಿಸುತ್ತೇನೆ, ಒಂದು ಕಡಿಮೆ ಅಲ್ಲ ಎಂದು ಕಿಶೋರ್ ಹೇಳಿದರು, ಅವರ ಹಿಂದಿನ ಅವತಾರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಆಮ್ ಆದಿ ಪಕ್ಷದಂತಹ ನಾಯಕರ ಚುನಾವಣಾ ಪ್ರಚಾರವನ್ನು ನಿರ್ವಹಿಸಿದ್ದಾರೆ.
|
eesanje/url_47_140_1.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಅಶಿಸ್ತು ಮತ್ತು ಪಕ್ಷ ವಿರೋಧಿ ಚಟುವಟಿಕೆ : ಬಿಎಸ್ಪಿ ಸಂಸದನ ಉಚ್ಛಾಟನೆ
|
2 |
+
ಬಲರಾಂಪುರ, ಮಾ 23 (ಪಿಟಿಐ) :ಉತ್ತರ ಪ್ರದೇಶದ ಶ್ರಾವಸ್ತಿಯ ಬಹುಜನ ಸಮಾಜ ಪಕ್ಷದ ಸಂಸದ ರಾಮ್ ಶಿರೋಮಣಿ ವರ್ಮಾ ಅವರನ್ನು ಅಶಿಸ್ತು ಮತ್ತು ಪಕ್ಷ ವಿರೋಧಿ ಚಟುವಟಿಕೆಯ ಆರೋಪದ ಮೇಲೆ ಪಕ್ಷದಿಂದ ಉಚ್ಚಾಟಿಸಲಾಗಿದೆ.
|
3 |
+
ವರ್ಮಾ ಅವರು ಪಕ್ಷ ವಿರೋಧಿ ಚಟುವಟಿಕೆಗಳು ಮತ್ತು ಅಶಿಸ್ತುಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ ಎಂದು ಬಿಎಸ್ಪಿ ಜಿಲ್ಲಾಧ್ಯಕ್ಷ ಲಾಲ್ ಚಂದ್ ಕೋರಿ ತಿಳಿಸಿದ್ದಾರೆ. ಹಲವು ಬಾರಿ ಎಚ್ಚರಿಕೆ ನೀಡಿದರೂ ಅವರ ಕಾರ್ಯಶೈಲಿಯಲ್ಲಿ ಸುಧಾರಣೆ ಕಾಣಲಿಲ್ಲ.
|
4 |
+
ಇದನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಹಿತದೃಷ್ಟಿಯಿಂದ ಶ್ರಾವಸ್ತಿ ಸಂಸದರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಲಕ್ನೋದಲ್ಲಿರುವ ಪಕ್ಷದ ಕಚೇರಿಯ ನಿರ್ದೇಶನದಂತೆ ವರ್ಮಾ ಅವರನ್ನು ಉಚ್ಚಾಟಿಸಲಾಗಿದೆ ಎಂದು ಕೋರಿ ಹೇಳಿದ್ದಾರೆ.
|
eesanje/url_47_140_10.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಕೇಜ್ರಿವಾಲ್ ಬಂಧನ ಕುರಿತು ಅಖಿಲೇಶ್ ಏನಂತಾರೆ..?
|
2 |
+
ನವದೆಹಲಿ,ಮಾ.22-ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಬಂಧನ ಹೊಸ ಸಾಮೂಹಿಕ ಚಳವಳಿಗೆ ಮುನ್ನುಡಿ ಬರೆದಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ. ಎಕ್ಸ್ನಲ್ಲಿನ ಪೊಸ್ಟ್ನಲ್ಲಿ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭಯವಿದೆ ಮತ್ತು ಆದ್ದರಿಂದ ಪ್ರತಿಪಕ್ಷದ ನಾಯಕರನ್ನು ಸಾರ್ವಜನಿಕರಿಂದ ದೂರವಿರಿಸಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದ್ದಾರೆ.
|
3 |
+
ಸೋಲಿನ ಭೀತಿಯಲ್ಲಿ ಜೈಲು ಸೇರಿರುವವರು ಬೇರೆಯವರನ್ನು ಜೈಲಿಗೆ ಹಾಕುವ ಮೂಲಕ ಏನನ್ನು ಸಾಧಿಸುತ್ತಾರೆ? ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಿಜೆಪಿಗೆ ಗೊತ್ತಿದೆ. ಈ ಭಯವನ್ನು ಹೋಗಲಾಡಿಸಿ, ಯಾವುದೇ ವಿಧಾನದಿಂದ ವಿರೋಧ ಪಕ್ಷದ ನಾಯಕರನ್ನು ಸಾರ್ವಜನಿಕರ ಕಣ್ಣಿನಿಂದ ತೆಗೆದುಹಾಕಲು ಅದು ಬಯಸುತ್ತದೆ ಎಂದು ಅವರು ಆರೋಪಿಸಿದ್ದಾರೆ.
|
4 |
+
ಕೇಜ್ರಿವಾಲ್ ಅವರ ಬಂಧನವು ತಕ್ಷಣವೇ ವಿರೋಧ ಪಕ್ಷದ ನಾಯಕರ ಕೋಪಕ್ಕೆ ಕಾರಣವಾಗಿದೆ. ಕಾಂಗ್ರೆಸ್ನ ಉನ್ನತ ನಾಯಕ ರಾಹುಲ್ ಗಾಂಧಿ ಅವರು, ಹೆದರಿರುವ ಸರ್ವಾಧಿಕಾರಿ ಸತ್ತ ಪ್ರಜಾಪ್ರಭುತ್ವವನ್ನು ರಚಿಸಲು ಬಯಸುತ್ತಾರೆ ಎಂದು ಆರೋಪಿಸಿದ್ದಾರೆ.
|
5 |
+
ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಎಎಪಿ ಕರೆ :ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದ ನಂತರ ಬಿಜೆಪಿ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಎಎಪಿ ದೆಹಲಿ ಘಟಕ ಕರೆ ನೀಡಿದೆ. ಕೇಜ್ರಿವಾಲ್ ಅವರ ಬಂಧನವು ಪ್ರಜಾಪ್ರಭುತ್ವದ ಕೊಲೆ ಮತ್ತು ಸರ್ವಾಧಿಕಾರದ ಘೋಷಣೆ ಎಂದು ಪಕ್ಷದ ಸಂಚಾಲಕ ಗೋಪಾಲರ್ ಆರೋಪಿಸಿದ್ದಾರೆ.
|
6 |
+
ಈ ಸರ್ವಾಕಾರದ ವಿರುದ್ಧ ದೇಶಾದ್ಯಂತ ಬಿಜೆಪಿ ಕಚೇರಿಗಳ ಹೊರಗೆ ಪ್ರತಿಭಟಿಸುವಂತೆ ನಾನು ದೇಶವಾಸಿಗಳಿಗೆ ಮನವಿ ಮಾಡುತ್ತೇನೆ. ನಾವು ಬಿಜೆಪಿ ಪ್ರಧಾನ ಕಚೇರಿಯ ಹೊರಗೆ ಪ್ರತಿಭಟನೆ ಮಾಡುತ್ತೇವೆ ಎಂದು ದೆಹಲಿ ಸರ್ಕಾರದ ಸಚಿವ ರೈ ಹೇಳಿದರು. ಕೇಜ್ರಿವಾಲ್ ಅವರನ್ನು ಬಂಧಿಸಬಹುದಾದರೆ, ಯಾರನ್ನಾದರೂ ಬಂಧಿಸಬಹುದು ಮತ್ತು ಅವರ ಧ್ವನಿಯನ್ನು ಹತ್ತಿಕ್ಕಬಹುದು. ಇಂದಿನಿಂದ, ಹೋರಾಟ ಪ್ರಾರಂಭವಾಗಿದೆ. ಅರವಿಂದ್ ಕೇಜ್ರಿವಾಲ್ ಒಬ್ಬ ವ್ಯಕ್ತಿಯಲ್ಲ, ಆವರು ಒಂದು ಸಿದ್ಧಾಂತ ಎಂದು ರೈ ಹೇಳಿದರು.
|
7 |
+
ಇಂಡಿಯಾ ಒಕ್ಕೂಟ ರಚನೆಯಾದಾಗಿನಿಂದ ಕೇಂದ್ರದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಮುಂಬರುವ ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಪಡೆಯುವುದಿಲ್ಲ ಎಂದು ಭಾವಿಸುತ್ತದೆ ಆದರೆ ಕೇವಲ 40 ಸ್ಥಾನಗಳಿಗೆ ಸೀಮಿತವಾಗಲಿದೆ ಎಂದು ರೈ ಹೇಳಿದ್ದಾರೆ.
|
8 |
+
ಹೀಗಾಗಿ ಕೇಸರಿ ಪಕ್ಷ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸುತ್ತಿದೆ ಎಂದು ಆರೋಪಿಸಿದರು. ಇಂದು, ಅವರು ಎಲ್ಲಾ ಮಿತಿಗಳನ್ನು ದಾಟಿದ್ದಾರೆ. ನೀವೆಲ್ಲರೂ ಇಂದು ರಾತ್ರಿ ಮನೆಗೆ ಹೋಗುತ್ತೀರಿ. ಹೋರಾಟದಲ್ಲಿ ���ಾಲ್ಗೊಳ್ಳುವಂತೆ ನಾನು ದೆಹಲಿಯವರಿಗೆ ಮನವಿ ಮಾಡುತ್ತೇನೆ ಎಂದು ಅವರು ಕರೆ ನೀಡಿದರು.
|
eesanje/url_47_140_11.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ನಾಯಕಿ ಕವಿತಾಗೆ ಜಾಮೀನು ನೀಡಲು ಸುಪ್ರಿಂ ನಕಾರ
|
2 |
+
ನವದೆಹಲಿ, ಮಾ 22 (ಪಿಟಿಐ) –ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಸಲ್ಪಟ್ಟಿರುವ ಬಿಆರ್ಎಸ್ ನಾಯಕಿ ಕೆ.ಕವಿತಾ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
|
3 |
+
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಎಂಎಂ ಸುಂದ್ರೇಶ್ ಮತ್ತು ಬೇಲಾ ಎಂ ತ್ರಿವೇದಿ ಅವರ ಪೀಠವು ಕವಿತಾ ಅವರನ್ನು ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಕೇಳಿದೆ, ಇದು ಈ ನ್ಯಾಯಾಲಯವು ಅನುಸರಿಸುತ್ತಿರುವ ಅಭ್ಯಾಸವಾಗಿದೆ ಮತ್ತು ಪೊ್ರೀಟೋಕಾಲ್ ಅನ್ನು ಬೈಪಾಸ್ ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ.
|
4 |
+
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ನಿಬಂಧನೆಗಳನ್ನು ಪ್ರಶ್ನಿಸಿ ಕವಿತಾ ಸಲ್ಲಿಸಿರುವ ಮನವಿಗೆ ಸಂಬಂಧಿಸಿದಂತೆ ನ್ಯಾಯಾಲಯವು ಇಡಿಗೆ ನೋಟಿಸ್ ಜಾರಿ ಮಾಡುತ್ತಿದೆ ಮತ್ತು ಆರು ವಾರಗಳಲ್ಲಿ ಅದರ ಪ್ರತಿಕ್ರಿಯೆಯನ್ನು ಕೇಳುತ್ತಿದೆ ಎಂದು ಪೀಠ ಹೇಳಿದೆ.
|
5 |
+
ನಿಬಂಧನೆಗಳನ್ನು ಪ್ರಶ್ನಿಸುವ ಅರ್ಜಿಯು ಬಾಕಿ ಉಳಿದಿರುವ ವಿಷಯಗಳೊಂದಿಗೆ ಬರಲಿದೆ ಎಂದು ಕವಿತಾ ಪರ ವಾದ ಮಂಡಿಸಿದ ಪೀಠವು ಹಿರಿಯ ವಕೀಲ ಕಪಿಲ್ ಸಿಬಲ್ಗೆ ತಿಳಿಸಿದೆ. ಆರಂಭದಲ್ಲಿ, ಅನುಮೋದಕರ ಹೇಳಿಕೆಯ ಆಧಾರದ ಮೇಲೆ ಜನರನ್ನು ಬಂ„ಸಲಾಗುತ್ತಿದೆ ಎಂದು ಸಿಬಲ್ ಹೇಳಿದರು. ಸದ್ಯಕ್ಕೆ ಪ್ರಕರಣದ ಮೆರಿಟ್ಗೆ ಹೋಗುವುದಿಲ್ಲ ಎಂದು ಪೀಠ ಹೇಳಿದೆ.
|
eesanje/url_47_140_12.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
2ಜಿ ಹಗರಣದ ಮರು ವಿಚಾರಣೆಗೆ ದೆಹಲಿ ಹೈಕೋರ್ಟ್ ಸಮ್ಮತಿ
|
2 |
+
ನವದೆಹಲಿ,ಮಾ.22-ಹಿಂದಿನ 2ಜಿ ತರಂಗಾಂತರ ಹಂಚಿಕೆ ಹಗರಣ ಪ್ರಕರಣದಲ್ಲಿ ಮಾಜಿ ದೂರಸಂಪರ್ಕ ಸಚಿವ ಎ ರಾಜಾಮತ್ತು ಇತರರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ದೆಹಲಿ ಹೈಕೋರ್ಟ್ ಇಂದು ಮರು ವಿಚಾರಣೆಗೆ ಅಂಗೀಕರಿಸಿದೆ.
|
3 |
+
ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರು ದಾಖಲಾದ ವಸ್ತು ಮತ್ತು ಕಕ್ಷಿದಾರರ ಪರ ವಕೀಲರು ಸಲ್ಲಿಸಿದ ಸಲ್ಲಿಕೆಗಳ ಆಧಾರದ ಮೇಲೆ, ಸಿಬಿಐನಿಂದ ಪ್ರಾಥಮಿಕ ಪ್ರಕರಣವನ್ನು ಮಾಡಲಾಗಿದೆ, ಇದು ಆಳವಾದ ಪರಿಶೀಲನೆಯ ಅಗತ್ಯವಿರುತ್ತದೆ ಮತ್ತು ಮೇಲ್ಮನವಿಯನ್ನು ವಿವರವಾಗಿ ಆಲಿಸುವ ಅಗತ್ಯವಿದೆ ಎಂದು ಹೇಳಿದರು.
|
4 |
+
ಮೇಲ್ಮನವಿ ಸಲ್ಲಿಸಲು ರಜೆ ನೀಡಲಾಗಿದೆ. ಮೇಲ್ಮನವಿಯನ್ನು ಮೇ ತಿಂಗಳಲ್ಲಿ ವಿಚಾರಣೆಗೆ ಪಟ್ಟಿ ಮಾಡಿ ಎಂದು ನ್ಯಾಯಾಧೀಶರು ಹೇಳಿದರು. ಮೇಲ್ಮನವಿ ಸಲ್ಲಿಸಲು ಬಿಡು ಎಂಬುದು ಉನ್ನತ ನ್ಯಾಯಾಲಯದಲ್ಲಿ ನಿರ್ಧಾರವನ್ನು ಪ್ರಶ್ನಿಸಲು ಪಕ್ಷಕ್ಕೆ ನ್ಯಾಯಾಲಯವು ನೀಡಿದ ಔಪಚಾರಿಕ ಅನುಮತಿಯಾಗಿದೆ.
|
5 |
+
ವಿಶೇಷ ನ್ಯಾಯಾಲಯವು ಡಿಸೆಂಬರ್ 21, 2017 ರಂದು 2ಜಿ ಹಗರಣಕ್ಕೆ ಸಂಬಂಧಿಸಿದ ಸಿಬಿಐ ಮತ್ತು ಇಡಿ ಪ್ರಕರಣಗಳಲ್ಲಿ ರಾಜಾ, ಡಿಎಂಕೆ ಸಂಸದೆ ಕನಿಮೊಳಿ ಮತ್ತು ಇತರರನ್ನು ಖುಲಾಸೆಗೊಳಿಸಿತ್ತು.
|
eesanje/url_47_140_2.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಹಿಮಾಚಲದ ಮಾಜಿ ಶಾಸಕರು ಬಿಜೆಪಿ ಸೇರ್ಪಡೆ
|
2 |
+
ನವದೆಹಲಿ,ಮಾ.23-ಹಿಮಾಚಲ ಪ್ರದೇಶ ವಿಧಾನ ಸಭೆಯ ಹಲವಾರು ಮಾಜಿ ಶಾಸಕರು ಬಿಜೆಪಿಗೆ ಸೇರ್ಪಡೆ ಗೊಳ್ಳುವ ನಿರೀಕ್ಷೆಯಿದೆ ಮತ್ತು ಮುಂಬರುವ ಉಪ ಚುನಾವಣೆಯಲ್ಲಿ ಅದರ ಟಿಕೆಟ್ನಲ್ಲಿ ಸ್ಪರ್ಧಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
|
3 |
+
ಸದನದಲ್ಲಿ ಹಾಜರಿರಲು ಮತ್ತು ಹಿಮಾಚಲ ಪ್ರದೇಶ ಸರ್ಕಾರದ ಪರವಾಗಿ ಮತ ಚಲಾಯಿಸಲು ಪಕ್ಷದ ವಿಪ್ ಅನ್ನು ಉಲ್ಲಂಘಿಸಿದ್ದಕ್ಕಾಗಿ ಆರು ಬಂಡಾಯ ಕಾಂಗ್ರೆಸ್ ಶಾಸಕರಾದ ಸುೀಧಿರ್ ಶರ್ಮಾ, ರವಿ ಠಾಕೂರ್, ರಾಜಿಂದರ್ ರಾಣಾ, ಇಂದರ್ ದತ್ ಲಖನ್ಪಾಲ, ಚೆತನ್ಯ ಶರ್ಮಾ ಮತ್ತು ದೇವಿಂದರ್ ಕುಮಾರ್ ಭುಟ್ಟೊ ಅವರನ್ನು ಫೆಬ್ರವರಿ 29 ರಂದು ಅನರ್ಹಗೊಳಿಸಲಾಗಿತ್ತು. ಇದೀಗ ಚುನಾವಣಾ ಆಯೋಗ ಅವರ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಿಸಿದೆ.
|
4 |
+
ಮೂವರು ಸ್ವತಂತ್ರ ಶಾಸಕರಾದ ಆಶಿಶ್ ಶರ್ಮಾ, ಹೋಶಿಯಾರ್ ಸಿಂಗ್ ಮತ್ತು ಕೆಎಲ್ ಠಾಕೂರ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ಸ್ಥಾನಗಳಿಗೂ ಉಪಚುನಾವಣೆ ನಡೆಯುವ ನಿರೀಕ್ಷೆ ಇದೆ.ನಾವು ನಮ್ಮ ರಾಜೀನಾಮೆ ಯನ್ನು ಸಲ್ಲಿಸಿದ್ದೇವೆ. ನಾವು ಬಿಜೆಪಿಗೆ ಸೇರುತ್ತೇವೆ ಮತ್ತು ಅದರ ಟಿಕೆಟ್ನಲ್ಲಿ ಚುನಾವಣೆಗೆ ಸ್ರ್ಪಧಿಸುತ್ತೇವೆ ಎಂದು ಸಿಂಗ್ ನಂತರ ಸುದ್ದಿಗಾರರಿಗೆ ತಿಳಿಸಿದರು.
|
5 |
+
ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ನೇತೃತ್ವದ ಕಾಂಗ್ರೆಸ್ ಸರ್ಕಾರವು ಕಳೆದ ತಿಂಗಳು ರಾಜ್ಯಸಭಾ ಚುನಾವಣೆಯಲ್ಲಿ ಈ ಒಂಬತ್ತು ಶಾಸಕರ ಬೆಂಬಲದಿಂದ ರಾಜ್ಯದ ಏಕೈಕ ಸ್ಥಾನಕ್ಕೆ ಬಿಜೆಪಿ ಗೆದ್ದ ನಂತರ ಬಿಕ್ಕಟ್ಟು ಸೃಷ್ಟಿಯಾಗಿತ್ತು.
|
6 |
+
ಆರು ಕಾಂಗ್ರೆಸ್ ಶಾಸಕರ ಅನರ್ಹತೆಯೊಂದಿಗೆ, ಈಗ 62 ಸದಸ್ಯರ ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಬಲ 39 ರಿಂದ 33 ಕ್ಕೆ ಇಳಿದಿದೆ. ಇದರ ಮೂಲ ಬಲ 68. ಬಿಜೆಪಿ 25 ಸದಸ್ಯರನ್ನು ಹೊಂದಿದೆ. ವಿಶ್ವಾಸಮತ ಯಾಚನೆಯ ವೇಳೆ ಸಮಬಲದ ಸಂದರ್ಭದಲ್ಲಿ ಮಾತ್ರ ಮತ ಚಲಾಯಿಸುವ ಸ್ಪೀಕರ್ಕಾಂಗ್ರೆಸ್ಗೆ ಸೇರಿದ್ದಾರೆ.
|
eesanje/url_47_140_3.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಬಿಜೆಪಿಯನ್ನು ದ್ವೇಷಿಸಬೇಡಿ : ಕಾರ್ಯಕರ್ತರಿಗೆ ಕೇಜ್ರಿವಾಲ್ ಮನವಿ
|
2 |
+
ನವದೆಹಲಿ,ಮಾ.23-ನನ್ನ ಬಂಧನದ ಉದ್ದೇಶದಿಂದ ನೀವು ಬಿಜೆಪಿ ಸದಸ್ಯರನ್ನು ದ್ವೇಷಿಸಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿಕೊಂಡಿದ್ದಾರೆ. ಜೈಲಿನಲ್ಲಿದ್ದುಕೊಂಡೇ ದೆಹಲಿ ಜನರಿಗೆ ಅರವಿಂದ್ ಕೇಜ್ರಿವಾಲ್ ಅವರು ಬರೆದಿರುವ ಭಾವನಾತ್ಮಕ ಪತ್ರವನ್ನು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಬಹಿರಂಗಪಡಿಸಿದ್ದಾರೆ.
|
3 |
+
ಪತ್ರದಲ್ಲಿ ಕೇಜ್ರಿವಾಲ್ ಯಾವುದೇ ಜೈಲು ನನ್ನನ್ನು ಒಳಗೆ ಇಡಲು ಸಾಧ್ಯವಿಲ್ಲ ಮತ್ತು ನಾನು ಹೊರಗೆ ಬಂದು ನನ್ನ ಭರವಸೆಗಳನ್ನು ಈಡೇರಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.ಸಮಾಜ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಕೆಲಸ ಮಾಡುವ ಆಮ್ ಆದ್ಮಿ ಪಕ್ಷದ (ಎಎಪಿ) ಎಲ್ಲಾ ಕಾರ್ಯಕರ್ತರಿಗೆ ನಾನು ಮನವಿ ಮಾಡುತ್ತೇನೆ, ನಾನು ಜೈಲಿಗೆ ಹೋಗುವುದನ್ನು ನಿಲ್ಲಿಸಬಾರದು.
|
4 |
+
ಈ ಕಾರಣಕ್ಕಾಗಿ ಬಿಜೆಪಿ ಜನರನ್ನು ದ್ವೇಷಿಸಬೇಡಿ. ಅವರು ನಮ್ಮ ಸಹೋದರ ಸಹೋದರಿಯರು. ನಾನು ಶೀಘ್ರದಲ್ಲೇ ಹಿಂತಿರುಗುತ್ತೇನೆ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
|
5 |
+
ನನ್ನ ಪ್ರೀತಿಯ ದೇಶವಾಸಿಗಳೇ, ನನ್ನನ್ನು ಬಂಧಿಸಲಾಗಿದೆ, ನಾನು ಜೈಲಿನಲ್ಲಿದ್ದರೂ ಇಲ್ಲದಿದ್ದರೂ, ನಾನು ದೇಶ ಸೇವೆಯನ್ನು ಮುಂದುವರಿಸುತ್ತೇನೆ, ನನ್ನ ಇಡೀ ಜೀವನ ದೇಶಕ್ಕಾಗಿ ಮುಡಿಪಾಗಿದೆ, ನನ್ನ ಜೀವನದಲ್ಲಿ ನಾನು ಸಾಕಷ್ಟು ಹೋರಾಟ ಮಾಡಿದ್ದೇನೆ ಮತ್ತು ಇದು ನನಗೆ ತಿಳಿದಿದೆ. ಮುಂದುವರಿಯು ತ್ತದೆ. ಆದ್ದರಿಂದ, ಈ ಬಂಧನವು ನನಗೆ ಆಶ್ಚರ್ಯ ತಂದಿಲ್ಲ ಎಂದು ಕೇಜ್ರಿವಾಲ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
|
eesanje/url_47_140_4.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಜೈಲಿನಿಂದ ಗ್ಯಾಂಗ್ಗಳನ್ನು ನಡೆಸಬಹುದು ಸರ್ಕಾರವನ್ನಲ್ಲ ; ಮನೋಜ್ ತಿವಾರಿ
|
2 |
+
ನವದೆಹಲಿ,ಮಾ.23-ಅರವಿಂದ್ ಕೇಜ್ರಿವಾಲ್ ದೆಹಲಿ ಸರ್ಕಾರವನ್ನು ಜೈಲಿನಿಂದ ನಡೆಸುತ್ತಾರೆ ಎಂಬ ದೆಹಲಿ ಸಚಿವೆ ಅತಿಶಿ ಅವರ ಹೇಳಿಕೆಗೆ ಭಾರತೀಯ ಜನತಾ ಪಕ್ಷದ ಸಂಸದ ಮನೋಜ್ ತಿವಾರಿ ಇಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಗ್ಯಾಂಗ್ಗಳು ಜೈಲಿನಿಂದ ನಡೆಸಲ್ಪಡುತ್ತವೆ, ಸರ್ಕಾರಗಳಲ್ಲ ಎಂದಿದ್ದಾರೆ.
|
3 |
+
ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ತಿವಾರಿ, ಅರವಿಂದ್ ಕೇಜ್ರಿವಾಲ್ ದೆಹಲಿಯನ್ನು ಲೂಟಿ ಮಾಡಿದ್ದಾರೆ ಮತ್ತು ಅವರ ಬಂಧನದ ಬಗ್ಗೆ ಯಾರೂ ಚರ್ಚಿಸುತ್ತಿಲ್ಲ ಎಂದು ಜನರು ತುಂಬಾ ಸಂತೋಷಪಟ್ಟಿದ್ದಾರೆ ಎಂದಿದ್ದಾರೆ.ದೆಹಲಿಯನ್ನು ದುಃಸ್ಥಿತಿಗೆ ತರಲು ಕೇಜ್ರಿವಾಲ್ ಕಾರಣ, ದೆಹಲಿಯ ಜನರು ಅವರ ಮೇಲೆ ತುಂಬಾ ಕೋಪಗೊಂಡಿದ್ದಾರೆ ಮತ್ತು ಅದಕ್ಕಾಗಿಯೇ, ಅವರನ್ನು ಬಂಧಿಸಿದ ನಂತರ ಸಿಹಿ ಹಂಚಲಾಗಿದೆ. ಅವರ ಸರ್ಕಾರವು ದೆಹಲಿಯಲ್ಲಿ ಯಾವುದೇ ಕೆಲಸ ಮಾಡಲಿಲ್ಲ ಮತ್ತು ಅವರು ಕೇವಲ ಲೂಟಿ ಮಾಡಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
|
4 |
+
ಎಎಪಿಯ ಪ್ರತಿಭಟನೆಗಳು ಮತ್ತು ದೆಹಲಿ ಮುಖ್ಯಮಂತ್ರಿಯ ಬಂಧನವು ಮಾಧ್ಯಮಗಳಲ್ಲಿ ಮಾತ್ರ ಎಳೆತವನ್ನು ಪಡೆಯುತ್ತಿದೆ ಮತ್ತು ದೆಹಲಿಯ ಜನರು ಅದರ ಬಗ್ಗೆ ಚರ್ಚಿಸುತ್ತಿಲ್ಲ ಎಂದು ದೆಹಲಿ ಬಿಜೆಪಿ ಸಂಸದರು ಹೇಳಿದರು.ಮದ್ಯದ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾಗಿಯಾಗಿದ್ದಾರೆ ಎಂಬ ಸತ್ಯವನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್ದೇವ ಅವರು ಈ ಹಿಂದೆ ಹೇಳಿದ್ದರು.
|
5 |
+
ಕಾನೂನು ಅದರ ಹಾದಿ ಹಿಡಿಯುತ್ತಿದೆ… ನಿನ್ನೆ ಅವರು (ಅರವಿಂದ್ ಕೇಜ್ರಿವಾಲï) ತಾವು ದೆಹಲಿಯ ಮುಖ್ಯಮಂತ್ರಿ ಎಂದು ನ್ಯಾಯಾಲಯದಲ್ಲಿ ಚೌಕಾಶಿ ಮಾಡುತ್ತಿದ್ದರು, ಆದ್ದರಿಂದ ಅವರಿಗೆ ಎರಡು ತಿಂಗಳ ಕಾಲಾವಕಾಶ ನೀಡಬೇಕು ಆದರೆ ದೇಶದಲ್ಲಿ ಕಾನೂನು ಆಡಳಿತವಿದೆ. ಕಾನೂನು ಪ್ರತಿಯೊಬ್ಬ ಅಪರಾಧಿಯನ್ನು ಒಂದೇ ರೀತಿ ಪರಿಗಣಿಸುತ್ತಾನೆ, ಅದು ಇಂದು ಸಾಬೀತಾಗಿದೆ. ಶೀಘ್ರದಲ್ಲೇ ಅರವಿಂದ್ ಕೇಜ್ರಿವಾಲ್ ಮದ್ಯದ ಹಗರಣದಲ್ಲಿ ಭಾಗಿಯಾಗಿರುವ ಸತ್ಯ ಎಲ್ಲರಿಗೂ ಬಹಿರಂಗವಾಗಲಿದೆ ಎಂದು ಸಚ್ದೇವ್ ಆರೋಪಿಸಿದರು.
|
6 |
+
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯಿಂದ ಬಂ„ಸಲ್ಪಟ್ಟ ಒಂದು ದಿನದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಶುಕ್ರವಾರ ಏಳು ದಿನಗಳ ಕಾಲ ಅಂದರೆ ಮಾರ್ಚ್ 28 ರವರೆಗೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲಾಗಿದೆ.
|
7 |
+
ನ್ಯಾಯಾಲಯದ ಮುಂದೆ ತನ್ನ ವಾದದಲ್ಲಿ, ಜಾರಿ ನಿರ್ದೇಶನಾಲಯವು ಉದ್ಯಮಿಗಳಿಂದ ಕಿಕ್ಬ್ಯಾಕ್ಗೆ ಬೇಡಿಕೆಯಿಡುವಲ್ಲಿ ದೆಹಲಿ ಮುಖ್ಯಮಂತ್ರಿ ಪ್ರಮುಖ ಸಂಚುಕೋರ ಮತ್ತು ಕಿಂಗ್ಪಿನ್ ಎಂದು ಆರೋಪಿಸಿದೆ. ಅಬಕಾರಿ ನೀತಿಯ ರಚನೆಯಲ್ಲಿ ಕೇಜ್ರಿವಾಲ್ ನೇರವಾಗಿ ಭಾಗಿಯಾಗಿದ್ದಾರೆ ಎಂದು ಸಂಸ್ಥೆ ಹೇಳಿಕೊಂಡಿದೆ. ಎಎಪಿಯ ಮಾಧ್ಯಮದ ಉಸ್ತುವಾರಿ ವಹಿಸಿದ್ದ ವಿಜಯ್ ನಾಯರ್ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಇಡಿ ವಕೀಲರು ಹೇಳಿದ್ದಾರೆ.
|
eesanje/url_47_140_5.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಪೊಲೀಸ್ ಅಧಿಕಾರಿಯಿಂದ ಅನುಚಿತ ವರ್ತನೆ : ಕೇಜ್ರಿ ಆರೋಪ
|
2 |
+
ನವದೆಹಲಿ,ಮಾ.23-ನ್ಯಾಯಾಲಯದ ಆವರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಮಾನುಷವಾಗಿ ನಡೆಸಿಕೊಂಡಿದ್ದ ದಿಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಇದೀಗ ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.
|
3 |
+
ದೆಹಲಿಯ ರೂಸ್ ಅವೆನ್ಯೂ ಕೋರ್ಟ್ಗೆ ಸಲ್ಲಿಸಿದ ಅರ್ಜಿಯಲ್ಲಿ ಎಎಪಿ ಮುಖ್ಯಸ್ಥರು ಈ ವಿಷಯ ತಿಳಿಸಿದ್ದಾರೆ, ಇದರಲ್ಲಿ ಅಧಿಕಾರಿಯನ್ನು ತಮ್ಮ ಭದ್ರತಾ ಕವಚದಿಂದ ತೆಗೆದುಹಾಕುವಂತೆ ಕೋರಿದ್ದಾರೆ. ಅರ್ಜಿಯಲ್ಲಿ ಕೇಜ್ರಿವಾಲ್ ಸಲ್ಲಿಸಿದ ರಿಮಾಂಡ್ ಅರ್ಜಿಯಲ್ಲಿ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತರುತ್ತಿದ್ದಾಗ ಸಹಾಯಕ ಪೊಲೀಸ್ ಕಮಿಷನರ್ ಎಕೆ ಸಿಂಗ್ ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.
|
4 |
+
ಕಳೆದ ವರ್ಷ ಇದೇ ನ್ಯಾಯಾಲಯದ ಆವರಣದಲ್ಲಿ ಪತ್ರಕರ್ತರು ಪ್ರಶ್ನೆ ಕೇಳುತ್ತಿದ್ದಾಗ ಸಿಸೋಡಿಯಾ ಅವರನ್ನು ಕುತ್ತಿಗೆಗೆ ಬಿಗಿದು ನಿಲ್ಲಿಸಿದ ಆರೋಪಕ್ಕೆ ಗುರಿಯಾಗಿದ್ದ ಅದೇ ಪೊಲೀಸ್ ಸಿಂಗ್ ವಿರುದ್ಧ ಸಿಸೋಡಿಯಾ ಅವರು ಲಿಖಿತ ದೂರು ದಾಖಲಿಸಿದ್ದರು. ದೆಹಲಿ ಪೊಲೀಸರು ಯಾವುದೇ ತಪ್ಪನ್ನು ನಿರಾಕರಿಸಿದ್ದಾರೆ ಮತ್ತು ವೀಡಿಯೊದಲ್ಲಿ ತೋರಿಸಿರುವ ಕ್ರಮವು ಭದ್ರತೆಗೆ ಅಗತ್ಯವಾಗಿದೆ ಮತ್ತು ಯಾವುದೇ ಆರೋಪಿಗಳು ಮಾಧ್ಯಮಗಳಿಗೆ ಹೇಳಿಕೆಗಳನ್ನು ನೀಡುವುದು ಕಾನೂನಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದರು.
|
5 |
+
ಕಳೆದ ವರ್ಷ -ಫೆಬ್ರವರಿಯಲ್ಲಿ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ವಶಕ್ಕೆ ತೆಗೆದುಕೊಂಡರೆ,ಕೇಜ್ರಿವಾಲ್ ಅವರನ್ನು ಗುರುವಾರ ರಾತ್ರಿ ಇಡಿ ಬಂಧಿಸಿತು, ಅಂತಹ ಕ್ರಮವನ್ನು ಎದುರಿಸಿದ ಮೊದಲ ಹಾಲಿ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಎಎಪಿ ಮುಖ್ಯಸ್ಥರನ್ನು ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
|
eesanje/url_47_140_6.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಮಹುವಾ ಮೊಹಿತ್ರಾ ನಿವಾಸದಲ್ಲಿ ಸಿಬಿಐ ಶೋಧ
|
2 |
+
ನವದೆಹಲಿ,ಮಾ.23-ನಗದು ಪ್ರಶ್ನೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಅವರ ಕೋಲ್ಕತ್ತಾದ ಮನೆಯನ್ನು ಕೇಂದ್ರ ತನಿಖಾ ದಳ (ಸಿಬಿಐ) ಇಂದು ಶೋಧಿಸಿದೆ.ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ಪ್ರಥಮ ಮಾಹಿತಿ ವರದಿ ದಾಖಲಿಸಿದ ಒಂದು ದಿನದ ನಂತರ ಶೋಧ ನಡೆಸಲಾಗಿದೆ.
|
3 |
+
ಮೊಯಿತ್ರಾ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸಿ ಆರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಲೋಕಪಾಲ್ ಈ ವಾರದ ಆರಂಭದಲ್ಲಿ ಸಿಬಿಐಗೆ ಸೂಚಿಸಿತ್ತು. ಪ್ರತಿ ತಿಂಗಳು ತನಿಖೆಯ ಸ್ಥಿತಿಗತಿ ಕುರಿತು ನಿಯತಕಾಲಿಕ ವರದಿಗಳನ್ನು ಸಲ್ಲಿಸುವಂತೆ ಸಿಬಿಐಗೆ ಸೂಚಿಸಲಾಗಿತ್ತು.
|
4 |
+
ಮಹುವಾ ಮೊಯಿತ್ರಾ ಅವರನ್ನು ಕಳೆದ ವರ್ಷ ಡಿಸೆಂಬರ್ನಲ್ಲಿ ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು. ಸಂಸತ್ತಿನಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳಲು ಬದಲಾಗಿ ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಲಂಚ ಪಡೆದ ಆರೋಪದ ಮೇಲೆ ಮಾಜಿ ಸಂಸದೆಯನ್ನು ತೆಗೆದುಹಾಕಲು ನೈತಿಕ ಸಮಿತಿಯು ಶಿಫಾರಸು ಮಾಡಿತ್ತು.
|
5 |
+
ಮೊಯಿತ್ರಾ ಲಂಚದ ಆರೋಪಗಳನ್ನು ನಿರಾಕರಿಸಿದರು ಆದರೆ ಲಾಗ್ಇನ್ ವಿವರಗಳನ್ನು ಹಂಚಿಕೊಳ್ಳಲು ಒಪ್ಪಿಕೊಂಡರು. ಈ ವಿವರಗಳನ್ನು ಹಂಚಿಕೊಳ್ಳುವುದು ಸಂಸದರಲ್ಲಿ ಸಾಮಾನ್ಯ ಅಭ್ಯಾಸವಾಗಿದೆ ಎಂದು ಅವರು ವಾದಿಸಿದ್ದರು.
|
eesanje/url_47_140_7.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಹಣವಿಲ್ಲದೆ ರಾಜಕೀಯ ಪಕ್ಷ ನಡೆಸುವುದು ಸಾಧ್ಯವಿಲ್ಲ : ನಿತಿನ್ ಗಡ್ಕರಿ
|
2 |
+
ಅಹಮದಾಬಾದ್, ಮಾ.23 (ಪಿಟಿಐ) :ಸಂಪನ್ಮೂಲವಿಲ್ಲದೆ ಯಾವುದೇ ರಾಜಕೀಯ ಪಕ್ಷಗಳು ಬದುಕುಳಿಯಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅಭಿಪ್ರಾಯಪಟ್ಟಿದ್ದಾರೆ. ಹಣವಿಲ್ಲದೆ ರಾಜಕೀಯ ಪಕ್ಷವನ್ನು ನಡೆಸುವುದು ಸಾಧ್ಯವಿಲ್ಲ ಹೀಗಾಗಿ ಕೇಂದ್ರ ಸರ್ಕಾರವೂ ಚುನಾವಣಾ ಬಾಂಡ್ಗಳ ಯೋಜನೆಯನ್ನು ಪರಿಚಯಿಸಿದೆ, ಒಂದು ಒಳ್ಳೆಯ ಉದ್ದೇಶ ಎಂದು ಅವರು ಹೇಳಿದರು.
|
3 |
+
ಸುಪ್ರೀಂ ಕೋರ್ಟ್ ಈ ವಿಷಯದ ಬಗ್ಗೆ ಹೆಚ್ಚಿನ ನಿರ್ದೇಶನ ನೀಡಿದರೆ ಎಲ್ಲಾ ರಾಜಕೀಯ ಪಕ್ಷಗಳು ಒಟ್ಟಾಗಿ ಕುಳಿತು ಚರ್ಚಿಸಬೇಕಾಗಿದೆ ಎಂದು ಅವರು ಗಾಂಧಿನಗರದ ಗಿಫ್ಟ್ ಸಿಟಿಯಲ್ಲಿ ಮಾಧ್ಯಮ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಈ ವಿಷಯ ತಿಳಿಸಿದರು. ಅರುಣ್ ಜೇಟ್ಲಿ (ಕೇಂದ್ರ ಹಣಕಾಸು) ಸಚಿವರಾಗಿದ್ದಾಗ, ನಾನು ಆ ಚರ್ಚೆಯಲ್ಲಿ (ಚುನಾವಣಾ ಬಾಂಡ್ಗಳಿಗೆ ಸಂಬಂಧಿಸಿದಂತೆ) ಭಾಗವಾಗಿದ್ದೇನೆ. ಸಂಪನ್ಮೂಲವಿಲ್ಲದೆ ಯಾವುದೇ ಪಕ್ಷವು ಬದುಕಲು ಸಾಧ್ಯವಿಲ್ಲ. ಕೆಲವು ದೇಶಗಳಲ್ಲಿ ಸರ್ಕಾರಗಳು ರಾಜಕೀಯ ಪಕ್ಷಗಳಿಗೆ ಹಣ ನೀಡುತ್ತವೆ. ಭಾರತದಲ್ಲಿ ಅಂತಹ ವ್ಯವಸ್ಥೆ ಇಲ್ಲ. ಹೀಗಾಗಿ, ನಾವು ರಾಜಕೀಯ ಪಕ್ಷಗಳಿಗೆ ಹಣಕಾಸು ಒದಗಿಸುವ ಈ ವ್ಯವಸ್ಥೆಯನ್ನು ಆಯ್ಕೆ ಮಾಡಿಕೊಂಡಿದ್ದೇವೆ ಎಂದು ಗಡ್ಕರಿ ಚುನಾವಣಾ ಬಾಂಡ್ಗಳ ಕುರಿತ ಪ್ರಶ್ನೆಗೆ ಹೇಳಿದರು.
|
4 |
+
ಚುನಾವಣಾ ಬಾಂಡ್ಗಳನ್ನು ಪರಿಚಯಿಸುವುದರ ಹಿಂದಿನ ಮುಖ್ಯ ಉದ್ದೇಶವೆಂದರೆ ರಾಜಕೀಯ ಪಕ್ಷಗಳು ನೇರವಾಗಿ ಹಣವನ್ನು ಪಡೆಯುವುದು, ಆದರೆ (ದಾನಿಗಳ) ಹೆಸರುಗಳನ್ನು ಬಹಿರಂಗಪಡಿಸುವುದಿಲ್ಲ ಏಕೆಂದರೆ ಅಧಿಕಾರದಲ್ಲಿರುವ ಪಕ್ಷವು ಬದಲಾದರೆ ಸಮಸ್ಯೆಗಳು ಉದ್ಭವಿಸುತ್ತವೆ ಎಂದು ಅವರು ತಿಳಿಸಿದರು.
|
5 |
+
ಕಾರ್ಯಕ್ರಮ ನಡೆಸುವುದಕ್ಕೆ ಹಣಕಾಸು ಒದಗಿಸಲು ಮಾಧ್ಯಮ ಸಂಸ್ಥೆಗೆ ಪ್ರಾಯೋಜಕರ ಅಗತ್ಯವಿರುವಂತೆ, ರಾಜಕೀಯ ಪಕ್ಷಗಳಿಗೂ ತಮ್ಮ ವ್ಯವಹಾರಗಳನ್ನು ನಡೆಸಲು ಹಣದ ಅಗತ್ಯವಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು ಹೇಳಿದರು.ನೀವು ನೆಲದ ವಾಸ್ತವವನ್ನು ನೋಡಬೇಕು. ಪಕ್ಷಗಳು ಹೇಗೆ ಚುನಾವಣೆಗೆ ಹೋರಾಡಬೇಕು? ನಾವು ಪಾರದರ್ಶಕತೆ ತರಲು ಈ ಚುನಾವಣಾ ಬಾಂಡ್ಗಳ ವ್ಯವಸ್ಥೆಯನ್ನು ತಂದಿದ್ದೇವೆ.
|
6 |
+
ಹಾಗಾಗಿ ನಾವು ಚುನಾವಣಾ ಬಾಂಡ್ಗಳನ್ನು ತಂದಾಗ ನಮ್ಮ ಉದ್ದೇಶ ಚೆನ್ನಾಗಿತ್ತು ಎಂದಿದ್ದಾರೆ.ನಮ್ಮ ದೇಶ ಮತ್ತು ಮೌಲ್ಯಾಧಾರಿತ ಪ್ರಜಾಪ್ರಭುತ್ವದ ಹಿತಾಸಕ್ತಿಯಲ್ಲಿ, ಪ್ರತಿಯೊಬ್ಬರೂ ಪಾರದರ್ಶಕ ಮಾರ್ಗವನ್ನು ಕಂಡುಹಿಡಿಯಬೇಕು (ಹಣಕಾಸು ಪಕ್ಷಗಳು) ಏಕೆಂದರೆ ಹಣವಿಲ್ಲದೆ, ಪಕ್ಷಗಳು ಯಾವುದೇ ಚಟುವಟಿಕೆಯನ್ನು ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸಚಿವರು ಪ್ರತಿಪಾದಿಸಿದರು.
|
7 |
+
ಕಳೆದ ತಿಂಗಳು ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ , ಏಪ್ರಿಲ್ -ಮೇ ಲೋಕಸಭೆ ಚುನಾವಣೆಗೆ ಮುನ್ನ ಚುನಾವಣಾ ಬಾಂಡ್ಗಳ ಯೋಜನೆಯನ್ನು ರದ್ದುಗೊಳಿಸಿತು.ಈ ಯೋಜನೆಯು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಸಾಂವಿಧಾನಿಕ ಹಕ್ಕು ಮತ್ತು ಮಾಹಿತಿಯ ಹಕ್ಕನ್ನು ಉಲ್ಲಂಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
|
8 |
+
ಅಂದಿನಿಂದ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಚುನಾವಣಾ ಬಾಂಡ್ಗಳಿಗೆ ಸಂಬಂಧಿಸಿದ ವಿವಿಧ ಸೆಟ್ ಡೇಟಾವನ್ನು ಬಿಡುಗಡೆ ಮಾಡಿದೆ, ಈ ಯೋಜನೆಯಡಿಯಲ್ಲಿ ರಾಜಕೀಯ ಪಕ್ಷಗಳು ಪಡೆದ ಹಣದ ವಿವರಗಳನ್ನು ಚುನಾವಣಾ ಆಯೋಗಕ್ಕೆ ಬಿಡುಗಡೆ ಮಾಡಿದೆ.
|