de1b0b8d6e18c146d1ea1e0eb69a5cb70e4b0dc4507530df554c73706123105a
Browse files- eesanje/url_46_201_9.txt +11 -0
- eesanje/url_46_202_1.txt +4 -0
- eesanje/url_46_202_10.txt +15 -0
- eesanje/url_46_202_11.txt +7 -0
- eesanje/url_46_202_12.txt +6 -0
- eesanje/url_46_202_2.txt +5 -0
- eesanje/url_46_202_3.txt +4 -0
- eesanje/url_46_202_4.txt +4 -0
- eesanje/url_46_202_5.txt +9 -0
- eesanje/url_46_202_6.txt +5 -0
- eesanje/url_46_202_7.txt +6 -0
- eesanje/url_46_202_8.txt +7 -0
- eesanje/url_46_202_9.txt +6 -0
- eesanje/url_46_203_1.txt +9 -0
- eesanje/url_46_203_10.txt +4 -0
- eesanje/url_46_203_11.txt +8 -0
- eesanje/url_46_203_12.txt +6 -0
- eesanje/url_46_203_2.txt +7 -0
- eesanje/url_46_203_3.txt +8 -0
- eesanje/url_46_203_4.txt +6 -0
- eesanje/url_46_203_5.txt +5 -0
- eesanje/url_46_203_6.txt +10 -0
- eesanje/url_46_203_7.txt +7 -0
- eesanje/url_46_203_8.txt +6 -0
- eesanje/url_46_203_9.txt +8 -0
- eesanje/url_46_204_1.txt +5 -0
- eesanje/url_46_204_10.txt +7 -0
- eesanje/url_46_204_11.txt +9 -0
- eesanje/url_46_204_12.txt +5 -0
- eesanje/url_46_204_2.txt +7 -0
- eesanje/url_46_204_3.txt +6 -0
- eesanje/url_46_204_4.txt +5 -0
- eesanje/url_46_204_5.txt +4 -0
- eesanje/url_46_204_6.txt +9 -0
- eesanje/url_46_204_7.txt +11 -0
- eesanje/url_46_204_8.txt +5 -0
- eesanje/url_46_204_9.txt +5 -0
- eesanje/url_46_205_1.txt +5 -0
- eesanje/url_46_205_10.txt +7 -0
- eesanje/url_46_205_11.txt +9 -0
- eesanje/url_46_205_12.txt +7 -0
- eesanje/url_46_205_2.txt +10 -0
- eesanje/url_46_205_3.txt +4 -0
- eesanje/url_46_205_4.txt +4 -0
- eesanje/url_46_205_5.txt +3 -0
- eesanje/url_46_205_6.txt +7 -0
- eesanje/url_46_205_7.txt +8 -0
- eesanje/url_46_205_8.txt +7 -0
- eesanje/url_46_205_9.txt +9 -0
- eesanje/url_46_206_1.txt +6 -0
eesanje/url_46_201_9.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕೃಷ್ಣಗಿರಿಯಲ್ಲಿ ಉಗ್ರರಿಗೆ ತರಬೇತಿ ನೀಡುತ್ತಿರುವ ಮಾಹಿತಿಯಿದ್ದರೂ ಕೇಂದ್ರ ಸುಮ್ಮನಿರೋದೇಕೆ..? : ಡಿ.ಕೆ.ಸುರೇಶ್ ಪ್ರಶ್ನೆ
|
2 |
+
ಬೆಂಗಳೂರು,ಮಾ.20-ಭಯೋತ್ಪಾದಕರಿಗೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ತರಬೇತಿ ನೀಡಲಾಗುತ್ತಿದೆ, ಅವರು ಬೆಂಗಳೂರು ಸೇರಿದಂತೆ ವಿವಿಧ ಕಡೆ ಬಾಂಬ್ ಸ್ಪೋಟಿಸುತ್ತಿದ್ದಾರೆ ಎಂಬ ಮಾಹಿತಿ ಗೊತ್ತಿದ್ದರೂ ಕ್ರಮ ತೆಗೆದುಕೊಳ್ಳದೆ ಕೇಂದ್ರ ಸರ್ಕಾರ ಮುಚ್ಚಿಟ್ಟಿರುವುದು ಯಾವ ಕಾರಣಕ್ಕೆ ಎಂದು ಸಂಸದ ಡಿ.ಕೆ.ಸುರೇಶ್ ಪ್ರಶ್ನಿಸಿದ್ದಾರೆ.
|
3 |
+
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 10 ವರ್ಷಗಳಿಂದಲೂ ಕೇಂದ್ರದ ತನಿಖಾ ಸಂಸ್ಥೆಗಳು ಬಿಜೆಪಿಯವರ ಅಧೀನದಲ್ಲಿವೆ. ಬೇಹುಗಾರಿಕೆಯನ್ನು ಕಾಂಗ್ರೆಸ್ನವರ ವಿರುದ್ಧ ಛೂ ಬಿಡುವ ಬದಲಾಗಿ ಭಯೋತ್ಪಾದಕರ ವಿರುದ್ಧ ಬಳಸಿದ್ದರೆ ಬಾಂಬ್ ಸ್ಪೋಟದಂತಹ ಅನಾಹುತಗಳು ನಡೆಯುತ್ತಿರಲಿಲ್ಲ ಎಂದರು.
|
4 |
+
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ಭಯೋತ್ಪಾದಕರಿಗೆ ತರಬೇತಿ ನೀಡಲಾಗುತ್ತಿದೆ. ಅವರು ದೇಶದ ವಿವಿಧೆಡೆ ಹೋಗಿ ವಿಧ್ವಂಸಕ ಕೃತ್ಯಗಳನ್ನು ನಡೆಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಅಂದ ಮೇಲೆ ಭಯೋತ್ಪಾದನಾ ತರಬೇತಿ ಬಗ್ಗೆ ಅವರಿಗೆ ಮಾಹಿತಿ ಇದೆ ಎಂದರ್ಥ ಎಂದರು.
|
5 |
+
ಎಲ್ಲವೂ ಗೊತ್ತಿದ್ದರೂ ಏಕೆ ಕ್ರಮ ಕೈಗೊಳ್ಳಲಿಲ್ಲ, ಮುಚ್ಚಿಟ್ಟಿರುವುದು ಏಕೆ, ಯಾವ ಉದ್ದೇಶಕ್ಕೆ ಇದನ್ನು ಬಳಸಿಕೊಳ್ಳಲು ಬಯಸುತ್ತಿದ್ದಾರೆ . ಮುಚ್ಚಿಟ್ಟಿರುವುದರ ವಿರುದ್ಧ ತನಿಖೆ ಮತ್ತು ಕ್ರಮ ಎರಡೂ ಆಗಬೇಕಿದೆ ಎಂದು ಡಿ.ಕೆ.ಸುರೇಶ್ ಒತ್ತಾಯಿಸಿದರು.
|
6 |
+
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಟೀಕೆಗಳಿಗೆ ಉತ್ತರಿಸುವ ಸ್ಥಿತಿಯಲ್ಲಿ ನಾನಿಲ್ಲ. ಅವರು ಆರೋಗ್ಯ ಸರಿಯಿಲ್ಲ ಎಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊದಲು ಅವರು ಗುಣಮುಖರಾಗಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅನಂತರ ಅವರ ಟೀಕೆಗಳಿಗೆ ಪ್ರತಿಕ್ರಿಯಿಸುತ್ತೇನೆ ಎಂದರು.
|
7 |
+
ರಾಜಕಾರಣದಲ್ಲಿ ಎದುರಾಳಿ ಬಲಿಷ್ಠವಾಗಿರಬೇಕು. ಆಗಲೇ ಪ್ರಜಾಪ್ರಭುತ್ವಕ್ಕೆ ಅರ್ಥ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಕುಮಾರಸ್ವಾಮಿ ಆರೋಗ್ಯ ಚೇತರಿಸಿಕೊಳ್ಳಲಿ. ಆದಷ್ಟು ಬೇಗ ಚುನಾವಣೆಗೆ ಮರಳಲಿ ಎಂದು ಹೇಳಿದರು.
|
8 |
+
ಕಾಂಗ್ರೆಸ್ ಪಕ್ಷ ಯಾರ ಕುತ್ತಿಗೆಯನ್ನೂ ಕೊಯ್ದಿಲ್ಲ, ಎಚ್.ಡಿ.ದೇವೇಗೌಡವರನ್ನು ದೇಶದ ಪ್ರಧಾನಿ ಮಾಡಿತ್ತು. ಹೀಗಾಗಿ ಅವರು ದೇಶಾದ್ಯಂತ ಗುರುತಿಸಿಕೊಂಡರು. ಇಲ್ಲವಾದರೆ 30 ಮಂದಿ ಮಾಜಿ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿರುತ್ತಿದ್ದರು. ಕಾಂಗ್ರೆಸ್ ಪಕ್ಷ ಯಾರಿಗೂ ಅನ್ಯಾಯ ಮಾಡಿಲ್ಲ ಎಂದರು.
|
9 |
+
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಜಾತ್ಯತೀತ ನಿಲುವಿನ ಬಗ್ಗೆ ಈ ಹಿಂದೆ ನೀಡಿದ್ದ ಹೇಳಿಕೆಗಳು ಸ್ಮರಣಾರ್ಹ. ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆ. ನರೇಂದ್ರ ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗು��್ತೇನೆ. ಈ ರಾಜ್ಯಕ್ಕೆ ರಾಷ್ಟ್ರೀಯ ಪಕ್ಷಗಳು ಬೇಕಿಲ್ಲ. ಪ್ರಾದೇಶಿಕ ಪಕ್ಷಗಳು ಸಾಕು ಎಂದು ಅವರು ಹೇಳಿದ್ದನ್ನು ನೆನಪಿಸಿಕೊಳ್ಳಬೇಕು ಎಂದರು. ಬಿಜೆಪಿಯವರು ಸಣ್ಣದನ್ನು ದೊಡ್ಡದಾಗಿ ಮಾಡುವ ಕಲೆಯಲ್ಲಿ ಸಿದ್ಧ ಹಸ್ತರು. ನಗರ್ತಪೇಟೆಯಲ್ಲಿನ ಪ್ರಕರಣವನ್ನು ವ್ಯಾಪಕವಾಗಿ ಬೆಂಬಲಿಸಿದ್ದಾರೆ. ಮಾಧ್ಯಮಗಳು ಅವರಿಗೆ ವ್ಯಾಪಕ ಪ್ರಚಾರ ನೀಡುತ್ತವೆ ಎಂಬ ಕಾರಣಕ್ಕಾಗಿಯೇ ಗಲಾಟೆ ಮಾಡುತ್ತಾರೆ ಎಂದು ಹೇಳಿದರು.
|
10 |
+
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಅಭ್ಯರ್ಥಿ ಬಲಿಷ್ಠವಾಗಿದ್ದಾರೆ. ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ, ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಬೆಂಗಳೂರು ಗ್ರಾಮಾಂತರದಲ್ಲಿ ನಾನು ಕೆಲಸ ಮಾಡಿದ್ದೇನೆ, ಅದಕ್ಕೆ ಕೂಲಿ ಕೇಳುತ್ತಿದ್ದೇನೆ. ಇಡೀ ದೇಶವೇ ಕೋವಿಡ್ ಸಂದರ್ಭದಲ್ಲಿ ಮನೆಯಲ್ಲಿದ್ದಾಗ ನಾನು ಬೀದಿಯಲ್ಲಿನ ಜನರ ನಡುವೆ ಕೆಲಸ ಮಾಡುತ್ತಿದ್ದೆ. ನಾನು ಮಾಡಿದ ಒಳ್ಳೆಯ ಕೆಲಸಗಳ ಬಗ್ಗೆ ಚರ್ಚೆಯಾಗುವುದಿಲ್ಲ. ಅನಗತ್ಯವಾಗಿ ವಿವಾದಕ್ಕೆ ಸಿಲುಕಿಸಲಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
|
11 |
+
ಬೆಂಗಳೂರು ಗ್ರಾಮಾಂತರದಲ್ಲಿ ಚುನಾವಣಾ ಅಕ್ರಮಗಳು ನಡೆಯುತ್ತವೆ ಎಂದು ಕುಮಾರಸ್ವಾಮಿಯವರು ಮಾಡಿದ ಟೀಕೆಗೆ ಪ್ರತಿಕ್ರಿಯಿಸಿದ ಡಿ.ಕೆ.ಸುರೇಶ್, ಉಡುಗೊರೆಗಳನ್ನು ಕೊಟ್ಟು, ಜನರ ಮನವೊಲಿಸುವ ಅವಶ್ಯಕತೆ ನಮಗಿಲ್ಲ. ಕುಮಾರಸ್ವಾಮಿ ಪ್ರಚಾರಕ್ಕಾಗಿ ಟೀಕೆ ಮಾಡಿದ್ದಾರೆ ಎಂದು ತಿರುಗೇಟು ನೀಡಿದರು.
|
eesanje/url_46_202_1.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಬೆಂ.ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಿಂದ ಸೀರೆ ಹಂಚಿಕೆ : ಜೆಡಿಎಸ್ ಆರೋಪ
|
2 |
+
ಬೆಂಗಳೂರು,ಮಾ.20-ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತದಾರರಿಗೆ ಕಾಂಗ್ರೆಸ್ ಅಭ್ಯರ್ಥಿ ಸೀರೆ ಹಂಚಿಕೆ ಮಾಡಲು ಪ್ರಯತ್ನಿಸಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ. ರಾಮನಗರದ ದ್ಯಾವರಸೇಗೌಡನದೊಡ್ಡಿ ಬಳಿ ಸೀರೆ ಬಂಡಲ್ಗಳಿದ್ದ ಲಾರಿ ಪತ್ತೆಯಾಗಿತ್ತು. ಇದು ಕಾಂಗ್ರೆಸ್ ಅಭ್ಯರ್ಥಿಗೆ ಸೇರಿದ್ದು ಎಂದು ಜೆಡಿಎಸ್ ಆಪಾದಿಸಿದೆ.
|
3 |
+
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕುಕ್ಕರ್ ಹಂಚಲಾಗುತ್ತದೆ ಎಂದು ಆರೋಪ ಮಾಡಿದ್ದರು. ಜೆಡಿಎಸ್ ಕಾರ್ಯಕರ್ತರು ಈ ಬಗ್ಗೆ ಹೆಚ್ಚಿನ ನಿಗಾ ವಹಿಸಿದ್ದು, ಮತದಾರರಿಗೆ ಆಮಿಷ ಒಡ್ಡುತ್ತಿರುವುದನ್ನು ಬಯಲು ಮಾಡುತ್ತಿದ್ದಾರೆ.
|
4 |
+
ಚುನಾವಣಾ ಅಕ್ರಮ ನಡೆಯುತ್ತಿದ್ದರೂ ಅಧಿಕಾರಿಗಳು ಮಾತ್ರ ಕಣ್ಣಿಗೆ ಕಾಣದಂತೆ ವರ್ತಿಸುತ್ತಿದ್ದಾರೆ. ಇದು ಕಾಂಗ್ರೆಸ್ ಅಭ್ಯರ್ಥಿಗೆ ಸಹಕಾರ ನೀಡಲಾಗುತ್ತಿದೆ ಎಂಬ ಅನುಮಾನ ಉಂಟಾಗಿದೆ ಎಂದು ಜೆಡಿಎಸ್ ಪ್ರಕಟಣೆಯಲ್ಲಿ ಆರೋಪಿಸಿದೆ.
|
eesanje/url_46_202_10.txt
ADDED
@@ -0,0 +1,15 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಹನುಮಾನ್ ಚಾಲೀಸಾ ವಿವಾದ : ಹಿಂದೂ-ಬಿಜೆಪಿ ಕಾರ್ಯಕರ್ತರ ಭಾರಿ ಪ್ರತಿಭಟನೆ, ನಗರ್ತಪೇಟೆ ಉದ್ವಿಗ್ನ
|
2 |
+
ಬೆಂಗಳೂರು, ಮಾ.19-ಮೊಬೈಲ್ ಶಾಪ್ನಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರು ಹಾಗೂ ಹಿಂದೂ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ನಗರ್ತಪೇಟೆಯಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಹಲ್ಲೆ ನಡೆಸಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರೂ, ಬಂಧನಕ್ಕೆ ಒಳಗಾದವರು ಹಲ್ಲೆ ಮಾಡಿದ ವ್ಯಕ್ತಿಗಳಲ್ಲ. ಹಲ್ಲೆ ಮಾಡಿದ ಯುವಕರನ್ನು ರಕ್ಷಿಸಲು ಬೇರೆ ಯುವಕರನ್ನು ಬಂಧಿಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಲು ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದರು.
|
3 |
+
ಹಲ್ಲೆಗೊಳಗಾದ ಯುವಕ ಮುಖೇಶ್ ಅಂಗಡಿಯಿಂದ ಭಾಗವಧ್ವಜದೊಂದಿಗೆ ಹನುಮಾನ್ ಚಾಲೀಸ ಪಠಣ ಮಾಡಿಕೊಂಡು ಶಾಂತಿಯುತ ಮೆರವಣಿಗೆಯಲ್ಲಿ ಹಮ್ಮಿಕೊಂಡಿದ್ದರು.ಇದರಂತೆ ನೂರಾರು ಸಂಖ್ಯೆಯ ಹಿಂದೂಪರ ಕಾರ್ಯಕರ್ತರು ನಗರತ್ ಪೇಟೆಗೆ ಸೇರಿದ್ದರು. ಈ ಮೆರವಣಿಗೆಗೆ ಬಿಜೆಪಿ ನಾಯಕರಾದ ಸುರೇಶ್ ಕುರ್ಮಾ, ಸಂಸದರಾದ ಶೋಭಾ ಕರಂದ್ಲಾಜೆ , ತೇಜಸ್ವೀ ಸೂರ್ಯ, ಪಿ.ಸಿ. ಮೋಹನ್ ಕೂಡ ಭಾಗಿಯಾಗಿದ್ದರು. ಆದರೆ, ಇದಕ್ಕೆ ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಹಿಂದೂಪರ ಸಂಘಟನೆಯ ಕಾರ್ಯಕರ್ತರೊಂದಿಗೆ ಮಾತಿನ ಚಕಮಕಿ ನಡೆಯಿತು.
|
4 |
+
ಭಾರೀ ಸಂಖ್ಯೆಯಲ್ಲಿ ಸೇರಿದ್ದ ಹಿಂದೂ ಕಾರ್ಯಕರ್ತರು ಕೇಸರಿ ಶಾಲು ಧರಿಸಿ, ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿ, ಸ್ಥಳದಲ್ಲೇ ಭಜನೆ ಮಾಡಲು ಮುಂದಾದರು. ಜೊತೆಗೆ ನಮಗೆ ರ್ಯಾಲಿ ನಡೆಸಲು ಅನುಮತಿ ನೀಡಬೇಕು ಎಂದು ಪಟ್ಟು ಹಿಡಿದರು. ಆದರೆ, ಪೂರ್ವಾನುಮತಿ ಪಡೆಯದ ಕಾರಣ ಪೊಲೀಸರು ನಿರಾಕರಿಸಿದ್ದು, ಪರಿಸ್ಥಿತಿಯನ್ನು ಕೈ ಮೀರುವಂತೆ ಮಾಡಿತು.
|
5 |
+
ರ್ಯಾಲಿಗೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದಕ್ಕೆ ಸ್ಥಳದಲ್ಲೇ ಜಮಾಯಿಸಿದ್ದ ಕಾರ್ಯಕರ್ತರು ಪೊಲೀಸರ ವರ್ತನೆಗೆ ಕಿಡಿಕಾರಿದರು. ಘಟನಾ ಸಂಬಂಧ ರ್ಯಾಲಿಯಲ್ಲಿ ಅಂಗಡಿ ಮಾಲೀಕನಾದ ಮುಖೇಶ್ ಕೂಡ ಭಾಗಿಯಾಗಿದ್ದ. ಆತನನ್ನು ಪೊಲೀಸರು ಬಂಧಿಸಿ ಕರೆದುಕೊಂಡು ಹೋಗುತ್ತಿದ್ದಾಗ ರ್ಯಾಲಿಗೆ ಬಂದಿದ್ದ ಶಾಸಕ ಸುರೇಶ್ ಅವರು ಪೊಲೀಸ್ ಜೀಪಿಗೆ ಅಡ್ಡ ನಿಂತರು. ಈ ವೇಳೆ ಪೊಲೀಸರು ಸುರೇಶ್ ಕುಮಾರ್ ಅವರನ್ನೇ ಎಳೆದಾಡಿದ ಘಟನೆ ನಡೆಯಿತು.
|
6 |
+
ಸುರೇಶ್ ಕುಮಾರ್ ಅವರನ್ನು ಪೊಲೀಸರು ಕೈ ಹಿಡಿದು ಎಳೆದಾಡಿದ್ದು, ಪರಿಸ್ಥಿತಿಯನ್ನು ಇನ್ನಷ್ಟು ವಿಕೋಪಕ್ಕೆ ತಿರುಗುವಂತೆ ಮಾಡಿತು. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಕಂಡ ಪೊಲೀಸರು ದಾರಿಮಧ್ಯೆಯೇ ಧರಣಿ ನಡೆಸಲು ಮುಂದಾಗಿದ್ದ ಶೋಭಾ ಕರದ್ಲಾಂಜೆ , ಸುರೇಶ್ ಕುಮಾರ್ ಅವರನ್ನು ವಶಕ್ಕೆ ಪಡೆಯಲು ಮುಂದಾದಗ ತಳ್ಳಾಟ-ನೂಕಾಟ, ಗದ್ದಲ-ಕೋಲಾಹಲ ಉಂಟಾಯಿತು.
|
7 |
+
ಮುಖೇಶ್ ಮೇಲೆ ಹಲ್ಲೆಖಂಡಿಸಿ ಆ ರಸ್ತೆಯಲ್��ಿನ ವರ್ತಕರು ಪೊಲೀಸ್ ಠಾಣೆ ಮುಂದೆ ನ್ಯಾಯಕ್ಕಾಗಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟಿಸಿದರು. ಕೆಲವು ವರ್ತಕರು ಮುಖೇಶ್ ಅಂಗಡಿ ಬಳಿ ಹನುಮಾನ್ ಚಾಲೀಸಾ ಪಠಿಸಿದರೆ, ಇನ್ನೂ ಕೆಲವರು ಸ್ವಯಂ ಪ್ರೇರಿತರಾಗಿ ಅಂಗಡಿಗಳನ್ನು ಬಂದ್ ಮಾಡಿದ್ದರು.
|
8 |
+
ಹಿಂದೂ ವಿರೋಧಿ ಸರ್ಕಾರ:ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರದ್ಲಾಂಜೆ, ರಾಜ್ಯದಲ್ಲಿ ಹಿಂದೂ ವಿರೋಧಿ ಸರ್ಕಾರ ಆಡಳಿತದಲ್ಲಿದೆ. ಒಂದು ಕೋಮಿನವರು ತಾವು ಏನು ಬೇಕಾದರೂ ಮಾಡಬಹುದು. ನಮ್ಮನ್ನು ಸರ್ಕಾರ ರಕ್ಷಣೆ ಮಾಡುತ್ತದೆ ಎಂಬ ಭಾವನೆ ಇದೆ. ಹನುಮಾನ್ ಚಾಲೀಸಾ ಹಾಕಿದ್ದ ಎಂಬ ಒಂದೇ ಒಂದು ಕಾರಣಕ್ಕಾಗಿ ಅಮಾನುಷವಾಗಿ ಹಲ್ಲೆ ಮಾಡುತ್ತಾರೆ ಎಂದರೆ, ಇವರಿಗೆ ಕುಮ್ಮಕ್ಕು ಕೊಟ್ಟವರು ಯಾರು ಎಂದು ಆಕ್ರೋಶ ವ್ಯಕ್ತಪಡಿಸಿದರು.
|
9 |
+
ಪೊಲೀಸರು ಬಂಧಿಸಿರುವುದಕ್ಕೂ ಈ ಪ್ರಕಣಕ್ಕೂ ಸಂಬಂಧವೇ ಇಲ್ಲ. ಪ್ರಮುಖ ಆರೋಪಿಗಳನ್ನು ಬಿಟ್ಟು, ಬೇರೆಯವರನ್ನು ಬಂಧಿಸಿದ್ದಾರೆ. ಮೇಲ್ನೋಟಕ್ಕೆ ಈ ಪ್ರಕಣದಲ್ಲಿ ಪೊಲೀಸರು ಶಾಮೀಲಾಗಿರುವಂತೆ ಕಂಡು ಬಂದಿದೆ. ಈಗ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ, ಸರಿಯಾದ ತನಿಖೆ ನಡೆಯುವುದು ಅನುಮಾನ ಎಂದು ಹೇಳಿದರು.
|
10 |
+
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಒಂದು ಸಮುದಾಯದವರ ಆಟಾಟೋಪ ಹೇಳತೀರದಾಗಿದೆ. ಇದಕ್ಕೆ ಸರ್ಕಾರ ಕೂಡಾ ಕುಮ್ಮಕ್ಕು ನೀಡುತ್ತಿದೆ. ಇದು ಸ್ಪಷ್ಟವಾಗಿ ಹಿಂದೂ ವಿರೋಧಿ ಸರ್ಕಾರವಾಗಿದೆ. ನಮಗೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಕೆ ಕೊಟ್ಟರು.
|
11 |
+
ಘಟನೆ ಹಿನ್ನೆಲೆ:ನಮಾಜ್ ಮಾಡುವ ಸಮಯಕ್ಕೆ ಹನುಮಾನ್ ಚಾಲೀಸಾ ಹಾಕಿದ ಎಂಬ ಕಾರಣಕ್ಕೆ ಅನ್ಯಕೋಮಿನ ಕೆಲ ಯುವಕರು ಮೊಬೈಲ್ ಅಂಗಡಿ ಮಾಲೀಕನ ಮೇಲೆ ಹಲ್ಲೆ ಮಾಡಿದ್ದರು. ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನಗರ್ತಪೇಟೆಯ ಸಿದ್ದಣ್ಣ ಗಲ್ಲಿಯಲ್ಲಿ ಭಾನುವಾರ ಸಂಜೆ ನಡೆದಿತ್ತು.
|
12 |
+
ಅಂಗಡಿ ಮಾಲೀಕ ಕಬ್ಬನ್ ಪೇಟೆ ನಿವಾಸಿಯಾಗಿರುವ ಮುಖೇಶ್ (26) ನಗರ್ತಪೇಟೆಯ ಸಿದ್ದಣ್ಣ ಗಲ್ಲಿಯ ಮಸೀದಿ ರಸ್ತೆಯಲ್ಲಿ ಅಂಗಡಿ ಇಟ್ಟಿದ್ದರು. ಇವರ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದರು. ಘಟನೆ ಬಳಿಕ ಬಿಜೆಪಿ ಇಬ್ಬರು ಸಂಸದರು ಅಂಗಡಿ ಮಾಲೀಕನನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದರು.
|
13 |
+
ಮೊಬೈಲ್ ಬಿಡಿಭಾಗಗಳ ಅಂಗಡಿಯ ಮುಖೇಶ್ ಮೇಲೆ ಭಾನುವಾರ ದಾಳಿ ನಡೆಸಿದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಬಳಿಕ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಮುಖೇಶ್ ದೂರು ನೀಡಿದ್ದಾರೆ.
|
14 |
+
ಹಲ್ಲೆಗೊಳಗಾದ ಮುಖೇಶ್ ಕೃಷ್ಣ ಟೆಲಿಕಾಂ ಹೆಸರಿನಲ್ಲಿ ಅಂಗಡಿ ನಡೆಸುತ್ತಿದ್ದ. ಘಟನೆ ದಿನ ಹನುಮಾನ್ ಚಾಲೀಸಾ ಹಾಕಿ ಕೇಳುತ್ತಿದ್ದ. ಈ ವೇಳೆ ಅಲ್ಲಿಗೆ ಬಂದ ಈ ಬಂತ ಮೂವರು ಆರೋಪಿಗಳು ನಿನ್ನ ಅಂಗಡಿಯಿಂದ ಹೆಚ್ಚು ಸೌಂಡ್ ಬಂದು ಬೇರೆಯವರಿಗೆ ತೊಂದರೆ ಆಗುತ್ತಿದೆ ಎಂದು ಕೆಣದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ��ಲಾಟೆ ಆಗಿದೆ.
|
15 |
+
ನೋಡ ನೋಡುತ್ತಿದ್ದಂತೆ ಅಂಗಡಿ ಒಳಗಿನಿಂದ ಮುಖೇಶ್ನನ್ನು ಎಳೆದಾಡಿದ್ದಾರೆ. ಮೂವರು ಸೇರಿ ರಸ್ತೆ ಎಳೆದು ತಂದು ಆತನನ್ನು ಕೆಡವಿ ಮನಬಂದಂತೆ ಥಳಿಸಿದ್ದಾರೆ. ಉಗುರುಗಳಿಂದ ಮುಖ ಪರಚಿದ್ದಾರೆ ಎನ್ನಲಾಗಿದೆ. ಕಾಲಲ್ಲಿ ಒದ್ದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಬಳಿಕ ಅಲ್ಲಿಂದ ಆರೋಪಿಗಳು ತೆರಳಿದ್ದಾರೆ. ಹಲ್ಲೆಗೆ ಒಳಗಾದ ಸಂತ್ರಸ್ತ ಕೂಡಲೇ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
|
eesanje/url_46_202_11.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಶೆಟ್ಟರ್ಗೆ ಟಿಕೆಟ್ ತಪ್ಪಿದರೇ ಉಗ್ರ ಹೋರಾಟ : ವೀರಶೈವ ಲಿಂಗಾಯತ ಮಹಾಸಭಾ ಎಚ್ಚರಿಕೆ
|
2 |
+
ಹುಬ್ಬಳ್ಳಿ,ಮಾ.19-ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಲೋಕಸಭಾ ಟಿಕೆಟ್ ತಪ್ಪಿಸುವ ಕುತಂತ್ರ ನಡೆದಿದೆ. ಒಂದು ವೇಳೆ ಬೆಳಗಾವಿ ಕ್ಷೇತ್ರದ ಟಿಕೆಟ್ ತಪ್ಪಿದ್ದೇ ಆದರೇ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಎಚ್ಚರಿಕೆ ನೀಡಿದೆ.
|
3 |
+
ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಮಹಾಸಭಾದ ಉಪಾಧ್ಯಕ್ಷ ಪ್ರೊ ವಿ.ಸಿ.ಸವಡಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪಕ್ಷವನ್ನ ಕಟ್ಟಿ ಬೆಳೆಸಿದ್ದಾರೆ. ಈ ಹಿಂದೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸುವ ಹುನ್ನಾರ ನಡೆಯಿತು. ಧಾರವಾಡ, ಹಾವೇರಿ ಲೋಕಸಭಾ ಕ್ಷೇತ್ರಗಳ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಎರಡೂ ಕ್ಷೇತ್ರಗಳಲ್ಲೂ ಅವರಿಗೆ ಟಿಕೆಟ್ ನೀಡಲಿಲ್ಲ ಎಂದರು.
|
4 |
+
ಈಗ ಅವರ ಹೆಸರು ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಆದ್ರೆ ಶೆಟ್ಟರ್ಗೆ ಆಗದ ಕೆಲವರು ಕುತಂತ್ರ ಮಾಡಿ ವ್ಯವಸ್ಥಿತವಾಗಿ ಅವರಿಗೆ ಟಿಕೆಟ್ ತಪ್ಪಿಸುವ ಹುನ್ನಾರ ನಡೆದಿದೆ. ಬಿಜೆಪಿ ವರಿಷ್ಠರು ಅವರ ಕುತಂತ್ರಕ್ಕೆ ಒಳಗಾದಗೆ ಶೆಟ್ಟರ್ಗೆ ಟಿಕೆಟ್ ನೀಡಬೇಕು. ಟಿಕೆಟ್ ನೀಡದೆ ಹೋದ್ರೆ ಬೀದಿಗಿಳಿದು ಉಗ್ರವಾದ ಹೋರಾಟ ಮಾಡಿ, ಚುನಾವಣೆಯಲ್ಲಿ ನಮ್ಮ ಶಕ್ತಿ ತೋರಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಶೇಖರ ಕವಳಿ, ರಾಜಶೇಖರ ಉಪ್ಪಿನ, ಪರಮೇಶ್ವರ ನಿಗದಿ ಮುಂತಾದವರಿದ್ದರು.
|
5 |
+
ಶೆಟ್ಟರ್ ದೆಹಲಿಗೆ :ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಟಿಕೇಟ್ ಆಕಾಂಕ್ಷಿಯಾಗಿರುವ ಶೆಟ್ಟರ್ ಈಗ ಮತ್ತೇ ವರಿಷ್ಠರ ಭೇಟಿಗೆ ದೆಹಲಿಗೆ ಹೋಗಿದ್ದಾರೆ. ಶೆಟ್ಟರ್ ಅವರೇ ಬೆಳಗಾವಿ ಅಭ್ಯರ್ಥಿ ಆಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಆದರೆ ನಾಯಕರೊಬ್ಬರ ನಿವಾಸದಲ್ಲಿ ಸಭೆ ನಡೆಸಿದ ವಿರೀ ಪಡೆ ನಾಯಕರು ಬೇರ ತಂತ್ರ ರೂಪಿಸಿದ್ದಾರೆ.
|
6 |
+
ಈ ನಡುವೆ ಕಾಟಾಚಾರಕ್ಕೆ ಬೆಳಗಾವಿಗೆ ಜಗದೀಶ ಶೆಟ್ಟರ್ ಹೆಸರು ಮುಂಚೂಣಿಯಲ್ಲಿದ್ದು, ರಾಷ್ಟ್ರೀಯ ನಾಯಕರ ತೀರ್ಮಾನವೇ ಅಂತಿಮ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಷಿ ಹೇಳಿದ್ದಾರೆ ಆದೆ ಇದ್ದಕ್ಕೆ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಬಿ.ಎಲ್ ಸಂತೋಷ ಬಣವಾದ ಪ್ರಭಾಕರ್ ಕೋರೆ, ಈರಣ್ಣ ಕಡಾಡಿ, ಮಹಾಂತೇಶ ಕವಟಿಗಿಮಠ ಸೇರಿದಂತೆ ಅನೇಕರು ವಿರೋಧ ವ್ಯಕ್ಕತಪಡಿಸಿದ್ದಾರೆ.
|
7 |
+
ಜಗದೀಶ್ ಶೆಟ್ಟರ್ ಅವರ ಬೀಗರಾದ ಹಾಲಿ ಬೆಳಗಾವಿ ಸಂಸದೆ ಮಂಗಳಾ ಅಂಗಡಿ ಅವರನ್ನು ಬದಲಿಸಲು ಸಿದ್ಧತೆ ಆಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಮಿತಿ ಮೀರಿರುವ ಭಿನ್ನಮತವನ್ನು ಈ ಮೂಲಕ ನಿಯಂತ್ರಿಸಬಹುದುಧಾರವಾಡ ಸಹಿತ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೆಟ್ಟರ್ ಪ್ರಭಾವವಿದೆ. ಕಿತ್ತೂರು ಕರ್���ಾಟಕ ಭಾಗದಲ್ಲಿ ಬಿಜೆಪಿ ಮತ ಚದುರದಂತೆ ನೋಡಿಕೊಳ್ಳುವುದು ಎನ್ನಲಾಗಿದೆ.
|
eesanje/url_46_202_12.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಟಿಕೆಟ್ಗಾಗಿ ಸಿಎಂ ಮನೆಗೆ ವೀಣಾ ಬೆಂಬಲಿಗರ ಮುತ್ತಿಗೆ
|
2 |
+
ಬೆಂಗಳೂರು, ಮಾ.18- ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ಅವರ ಬೆಂಬಲಿಗರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ನುಗ್ಗುವ ಪ್ರಯತ್ನ ನಡೆಸಿದರು. ಬಾಗಲಕೋಟೆಯಿಂದ ಆಗಮಿಸಿದ ಮಹಿಳೆಯರ ತಂಡ ಇಂದು ಬೆಂಗಳೂರಿನಲ್ಲಿ ಹಿರಿಯ ನಾಯಕರನ್ನು ಭೇಟಿ ಮಾಡಲು ಯತ್ನಿಸಿತ್ತು.
|
3 |
+
ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯ ಬಳಿ ಬಿಗಿ ಕಾವಲು ಆಯೋಜಿಸಲಾಗಿದ್ದು, ಸಾಮಾನ್ಯ ಕಾರ್ಯಕರ್ತರನ್ನು ಒಳಗೆ ಬಿಡಲು ಪೊಲೀಸರು ಹಿಂದೆಮುಂದೆ ನೋಡುತ್ತಾರೆ. ಈ ಹಂತದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಲೇಬೇಕು ಎಂದು ಹಠಕ್ಕೆ ಬಿದ್ದ ಮಹಿಳೆಯರು ಒಳ ಹೋಗಲು ಯತ್ನಿಸಿದರು. ಪೊಲೀಸರು ಅವರ ಮನವೋಲಿಸಿ ವಾಪಾಸ್ ಕಳುಹಿಸಿದರು.
|
4 |
+
ಈ ಸಂದರ್ಭದಲ್ಲಿ ಮಾತನಾಡಿದ ಮಹಿಳೆಯರು, ಬಾಗಲಕೋಟೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿದ್ದಾಗಿನಿಂದಲೂ ವೀಣಾ ಕಾಶಪ್ಪನವರು ಜನಸಾಮಾನ್ಯರ ಹಾಗೂ ಮಹಿಳೆಯರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಅವರಿಗೆ ಟಿಕೆಟ್ ನೀಡುವ ಬದಲು ಮುಖ ಪರಿಚಯ ಇಲ್ಲದವರನ್ನು ಕಣಕ್ಕಿಳಿಸಿದರೆ ನಾವು ಮತದಾನ ಮಾಡದೇ ಚುನಾವಣೆಗೆ ಬಹಿಷ್ಕಾರ ಹಾಕುತ್ತೇವೆ ಎಂದು ಎಚ್ಚರಿಸಿದರು.
|
5 |
+
ಕೋವಿಡ್ ಸಂದರ್ಭದಲ್ಲೂ ಸಾಕಷ್ಟು ಕೆಲಸ ಮಾಡಿದ್ದಾರೆ, ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಬೇರೆ ಯಾರಿಗೂ ಟಿಕೆಟ್ ನೀಡುವುದನ್ನು ಸಹಿಸುವುದಿಲ್ಲ, ವೀಣಾ ಕಾಶಪ್ಪನವರಿಗೆ ಟಿಕೆಟ್ ನೀಡಬೇಕು. ಈ ನಿಟ್ಟಿನಲ್ಲಿ ಹೈಕಮಾಂಡ್ ಗಮನಕ್ಕೆ ತನ್ನಿ ಎಂದು ಮಾಧ್ಯಮದವರ ಕಾಲಿಗೆ ಬೀಳುವ ಮೂಲಕ ಮಹಿಳೆಯರು ಮನವಿ ಮಾಡಿಕೊಂಡರು.
|
6 |
+
ವೀಣ ಕಾಶಪ್ಪನವರಿಗೆ ಟಿಕೆಟ್ ಕೊಡದಿದ್ದರೆ ನಾವು ಮನೆ ಮನೆಗೆ ಹೋಗಿ ಮತದಾನ ಮಾಡದಂತೆ ಪ್ರಚಾರ ಮಾಡುತ್ತೇವೆ. ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು ಎಚ್ಚರಿಸಿದರು. ಕಳೆದ ಐದು ವರ್ಷಗಳಿಂದಲೂ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾಗಲೇ ನಿಮಗೆ ಟಿಕೆಟ್ ನೀಡುವುದಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಬೇಕಿತ್ತು. ಇಷ್ಟು ವರ್ಷ ಕೆಲಸ ಮಾಡಿದ ಅವರಿಗೆ ಕೊನೆ ಕ್ಷಣದಲ್ಲಿ ಮೋಸ ಮಾಡಲಾಗುತ್ತಿದೆ ಎಂದು ಮಹಿಳೆಯರು ಆಕ್ರೋಶ ವ್ಯಕ್ತ ಪಡಿಸಿದರು.
|
eesanje/url_46_202_2.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಾಳೆ ಹೆಚ್ಡಿಕೆಗೆ ಶಸ್ತ್ರಚಿಕಿತ್ಸೆ
|
2 |
+
ಬೆಂಗಳೂರು,ಮಾ.20-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ನಿನ್ನೆ ಚೆನ್ನೈಗೆ ತೆರಳಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಕುಮಾರಸ್ವಾಮಿ ಅವರಿಗೆ ಕೆಲ ಪರೀಕ್ಷೆಗಳನ್ನು ನಡೆಸಿದ್ದು, ನಾಳೆ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
|
3 |
+
ಶಸ್ತ್ರಚಿಕಿತ್ಸೆ ಬಳಿಕ ಮೂರ್ನಾಲ್ಕು ದಿನ ವಿಶ್ರಾಂತಿ ಪಡೆಯಲಿದ್ದಾರೆ. ಮಾ.25 ರಂದು ಆಸ್ಪತ್ರೆಯಿಂದ ಬಿಡುಗಡೆಗೊಂಡು ಬೆಂಗಳೂರಿಗೆ ಮರಳಲಿದ್ದಾರೆ. ಅಮೆರಿಕದ ಪರಿಣಿತ ವೈದ್ಯರು ಕುಮಾರಸ್ವಾಮಿಯವರಿಗೆ ಶಸ್ತ್ರಚಿಕಿತ್ಸೆ ಮಾಡಲಿದ್ದಾರೆ.
|
4 |
+
ಶಸ್ತ್ರಚಿಕಿತ್ಸೆ ಬಗ್ಗೆ ಕುಮಾರಸ್ವಾಮಿಯವರೇ ಮಾಹಿತಿ ನೀಡಿ ಹುಟ್ಟಿನಿಂದ ಹೃದಯ ಸಂಬಂಧಿ ಸಮಸ್ಯೆಯಿದೆ. ಈಗಾಗಲೇ 2 ಬಾರಿ ಹೃದಯ ಶಸ್ತ್ರಚಿಕಿತ್ಸೆಯನ್ನು ಮಾಡಿಸಿಕೊಳ್ಳಲಾಗಿದೆ. ಬಿಡುವಿಲ್ಲದ ರಾಜಕೀಯ ಜೀವನದ ಶೈಲಿಯಿಂದಾಗಿ ಸಮಸ್ಯೆ ಉಂಟಾಗಿದೆ.
|
5 |
+
ಈ ಬಾರಿ ಉನ್ನತ ಮಟ್ಟದ ಶಸ್ತ್ರಚಿಕಿತ್ಸೆ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಹೇಳಿದ್ದರು.ಆಸ್ಪತ್ರೆಯಿಂದ ಮರಳಿದ ಬಳಿಕ ಲೋಕಸಭಾ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
|
eesanje/url_46_202_3.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಏ.1ರಿಂದ ದುಬಾರಿಯಾಗಲಿವೆ ಔಷಧಗಳು
|
2 |
+
ಬೆಂಗಳೂರು,ಮಾ.19-ಏಪ್ರಿಲ್ 1ರಿಂದ ಔಷಧಗಳ ಬೆಲೆಯಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ಪೈನ್ಕಿಲ್ಲರ್, ಆ್ಯಂಟಿ ಇನೆಕ್ಷನ್ ಸೇರಿದಂತೆ ಸುಮಾರು 800 ಪ್ರಮುಖ ಔಷಧಗಳ ಬೆಲೆಯಲ್ಲಿ ಏರಿಕೆ ಕಂಡು ಬರಲಿದೆ. ಹೋಲ್ಸೇಲ್ ಪ್ರೈಸ್ ಇಂಡೆಕ್ಸ್ ಬದಲಾವಣೆಯ ನಂತರ ರಾಷ್ಟ್ರೀಯ ಅಗತ್ಯ ಪಟ್ಟಿಯಲ್ಲಿ ಔಷಧಿಗಳ ಬೆಲೆಯಲ್ಲಿ ಶೇ. 0.0055ರಷ್ಟು ಹೆಚ್ಚಳವನ್ನು ಸರ್ಕಾರ ಅನುಮೋದಿಸಲಿದೆ.
|
3 |
+
ಹಣದುಬ್ಬರದ ಪರಿಣಾಮವಾಗಿ ಔಷಧ ಕಂಪನಿಗಳು ಬೆಲೆ ಏರಿಕೆ ಮಾಡುವಂತೆ ಕೆಲ ದಿನಗಳಿಂದ ಬೇಡಿಕೆ ಇಟ್ಟಿದ್ದವು. 2022ರಲ್ಲಿ ಔಷಧಗಳ ಬೆಲೆಯನ್ನು ಶೇ.10ರಿಂದ 12ರವರೆಗೆ ಹೆಚ್ಚಿಸಲಾಯಿತು. ಔಷಧ ತಯಾರಿಕೆಗೆ ಬಳಸುವ ಪದಾರ್ಥಗಳ ಬೆಲೆ ಶೇ.15ರಿಂದ 130ರಷ್ಟು ಏರಿಕೆಯಾಗಿದೆ ಎಂದು ಉದ್ಯಮಿ ಮತ್ತು ಔಷಧಿ ತಜ್ಞರು ಹೇಳಿದ್ದಾರೆ.
|
4 |
+
ಸಾವಿರಕ್ಕೂ ಹೆಚ್ಚು ಔಷಧಿ ತಯಾರಿಕರ ನೇತೃತ್ವದ ಗುಂಪು ಬೆಲೆ ಏರಿಕೆಗೆ ಸರ್ಕಾರಕ್ಕೆ ಮನವಿ ಮಾಡಿತ್ತು.ಈ ಹಿನ್ನೆಲೆಯಲ್ಲಿ ಇದೀಗ ಔಷಧಿಗಳ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ. ಅಗತ್ಯ ಔಷಧಿಗಳ ಪಟ್ಟಿಯಲ್ಲಿ ಹೆಚ್ಚಿನ ಜನರಿಗೆ ಉಪಯುಕ್ತವಾಗುವ ಔಷಧಿಗಳನ್ನು ಸೇರಿಸಲಾಗಿದೆ.
|
eesanje/url_46_202_4.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಈ ಬಾರಿ ಸಿಇಟಿಗೆ ದಾಖಲೆಯ 3.75 ಲಕ್ಷ ಅಭ್ಯರ್ಥಿಗಳು ನೋಂದಣಿ
|
2 |
+
ಬೆಂಗಳೂರು, ಮಾ.19-ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಪರೀಕ್ಷೆಗೆ ಈ ಬಾರಿ ದಾಖಲೆ ಮಟ್ಟದ ನೋಂದಣಿಯಾಗಿದೆ. ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಸಾಮಾನ್ಯ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಏಪ್ರಿಲ್ನಲ್ಲಿ ನಡೆಸುವ ಸಿಇಟಿ ಪರೀಕ್ಷೆಗೆ 3.75. 399 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಕಳೆದ ವರ್ಷಕ್ಕಿಂತ ಈ ಬಾರಿಯ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದಾರೆ.
|
3 |
+
ಸಿಇಟಿಗೆ ಅರ್ಜಿ ಸಲ್ಲಿಸಲು ನೀಡಿದ ಗಡುವು ಮುಕ್ತಾಯಗೊಂಡಿದ್ದರೂ, ವಿದ್ಯಾರ್ಥಿಗಳು ಮತ್ತು ಪೊಷಕರ ಬೇಡಿಕೆ ಮೇರೆಗೆ ಮಾ.18 ರಿಂದ 20ರವರೆಗೆ 3 ದಿನಗಳ ಅವಕಾಶ ನೀಡಲಾಗಿದೆ. ನೋಂದಾಯಿಸಿದವರಿಗೆ ಶುಲ್ಕ ಪಾವತಿಸಲು ಮಾ.21 ಕೊನೆಯ ದಿನವಾಗಿರುತ್ತದೆ. ಇದು ಕಡೆಯ ಅವಕಾಶವಾಗಿದ್ದು, ಮತ್ತೆ ಕಾಲಾವಯನ್ನು ವಿಸ್ತರಿಸುವುದಿಲ್ಲವೆಂದು ಪರೀಕ್ಷಾ ಪ್ರಾಧಿಕಾರ ಹೇಳಿದೆ.
|
4 |
+
ಪ್ರಾಧಿಕಾರದ ವೆಬ್ಸೈಟ್ // .. ಮೂಲಕ ಅರ್ಜಿ ಸಲ್ಲಿಸಬಹುದು. ನೋಂದಣಿ ಮಾಡಿಕೊಳ್ಳಬಹುದು. ಏ.18 ಮತ್ತು 19ರಂದು ಸಿಇಟಿ ಪರೀಕ್ಷೆ ನಡೆಯಲಿದ್ದು, ಈಗ ಅರ್ಜಿ ಸಲ್ಲಿಸುವವರು ಬೆಂಗಳೂರು ನಗರ ಪರೀಕ್ಷಾ ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಇದೆ ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
|
eesanje/url_46_202_5.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಬ್ರದರ್ಸ್ ಕುಕ್ಕರ್ ಹಂಚುತ್ತಿದ್ದಾರೆ : ಹೆಚ್ಡಿಕೆ ಆರೋಪ
|
2 |
+
ಬೆಂಗಳೂರು,ಮಾ.19-ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತದಾರರಿಗೆ ಹಂಚಲು ನಾಲ್ಕು ಲಕ್ಷ ಕುಕ್ಕರ್ಗಳನ್ನು ಕಾಂಗ್ರೆಸ್ನವರು ಲೋಡ್ ಮಾಡಿದ್ದಾರೆಂದು ಆರೋಪಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡಿ ಈ ರೀತಿಯ ಆಮಿಷವೊಡ್ಡುವುದನ್ನು ತಡೆಯಬೇಕೆಂದು ಒತ್ತಾಯಿಸಿದರು.
|
3 |
+
ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಚುನಾವಣಾ ಸಂದರ್ಭದಲ್ಲಿ ಕುಕ್ಕರ್ ಹಂಚುತ್ತಿದ್ದಾರೆಂದು ಪೊಟೋ ಸಹಿತ ಆರೋಪಿಸಿದರು.
|
4 |
+
ಯಾವುದೇ ಸ್ಟಿಕ್ಕರ್ ಇಲ್ಲದೆ ಹಂಚಿಕೆ ಮಾಡಲಾಗುತ್ತಿದೆ. ಮರಳವಾಡಿಯಲ್ಲಿ ಮತದಾರರಿಗೆ ಹಂಚಲು ತಂದಿದ್ದ 2 ಲಾರಿ ಕುಕ್ಕರ್ಗಳನ್ನು ಜೆಡಿಎಸ್ ಕಾರ್ಯಕರ್ತರು ಪತ್ತೆಹಚ್ಚಿದ್ದಾರೆ.ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳು ಹೋಗಿದ್ದಾಗ ಏನು ಇರಲಿಲ್ಲವೆಂದು ಹೇಳುತ್ತಾರೆಂದರು. ಈಗಾಗಲೇ ಸೀರೆ ಮತ್ತು ಕುಕ್ಕರ್ಗಳನ್ನು ಹಂಚಲಾಗಿದೆ.
|
5 |
+
ಮತ್ತೆ ಹಂಚಿಕೆ ಮಾಡಲು ಉದ್ದೇಶಿಸಿದ್ದಾರೆಂದು ಆರೋಪಿಸಿದರು. ಮತದಾರರಿಗೆ ಆಮಿಷವೊಡ್ಡುವುದನ್ನು ಚುನಾವಣಾ ಆಯೋಗ ಗಮನಿಸಬೇಕು. ಕಠಿಣ ಕ್ರಮ ಕೈಗೊಳ್ಳುವ ಅಧಿಕಾರಿಗಳನ್ನು ನಿಯೋಜಿಸಬೇಕೆಂದು ಹೇಳಿದರು. ಮಂಡ್ಯದಲ್ಲಿ ಒಂದು ಕೋಟಿ ರೂ. ಹಣ ಸೀಸ್ ಆಗಿದ್ದು, ಅದು ಅಡಿಕೆ ವ್ಯಾಪಾರಿಗೆ ಸಂಬಂಧಿಸಿದ್ದಾ? ಎಂದು ಪ್ರಶ್ನಿಸಿದರು.
|
6 |
+
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಅವರನ್ನು ಸೋಲಿಸಲು ಈ ರೀತಿಯ ಪ್ರಯತ್ನ ಮಾಡುತ್ತಿದ್ದಾರೆಂದು ಆರೋಪಿಸಿದರು.
|
7 |
+
ಗೊಂದಲವಿಲ್ಲ:
|
8 |
+
ಬಿಜೆಪಿ ಮತ್ತು ಜೆಡಿಎಸ್ ನಡುವೆ ಯಾವುದೇ ರೀತಿಯ ಗೊಂದಲವಿಲ್ಲ. ನಿನ್ನೆ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಚುನಾವಣಾ ಮೈತ್ರಿ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ಕ್ಷಣದವರೆಗೂ ಯಾವ ಕ್ಷೇತ್ರ ಎಂಬ ಬಗ್ಗೆ ಸ್ಪಷ್ಟತೆಯಿಲ್ಲ ಎಂದರು.
|
9 |
+
ದೇವೇಗೌಡರ ಸಲಹೆ ಮೇರೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಮೂರು ಕ್ಷೇತ್ರಗಳಲ್ಲಿ ನಾವು ಸ್ಪರ್ಧೆ ಮಾಡುವುದಾಗಿ ಹೇಳಿದ್ದೇವೆ. ಕೋರ್ ಕಮಿಟಿ ಸಭೆಯಲ್ಲಿ 2 ಕ್ಷೇತ್ರಗಳಿಗೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ ಎಂಬ ವಿಚಾರ ಚರ್ಚೆಯಾಗಿತ್ತು. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಗೆಲ್ಲಲೇಬೇಕೆಂದು ಎರಡೂ ಪಕ್ಷಗಳೂ ಹೋರಾಟ ನಡೆಸುತ್ತಿವೆ.
|
eesanje/url_46_202_6.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಕಡಿಮೆ ಮತದಾನವಾಗಿದ್ದ 1786 ಬೂತ್ಗಳ ಮೇಲೆ ಚುನಾವಣಾ ಆಯೋಗದ ಕಣ್ಣು
|
2 |
+
ಬೆಂಗಳೂರು, ಮಾ.19-ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾದ 1786 ಬೂತ್ಗಳ ಮೇಲೆ ಚುನಾವಣಾ ಆಯೋಗದ ಅಧಿಕಾರಿಗಳು ಹದ್ದಿನಕಣ್ಣಿಟ್ಟಿದ್ದಾರೆ. ನಗರದ ಮತಗಟ್ಟೆ ಸಮೀಕ್ಷೆ ನಡೆಸಿರುವ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಕಳೆದ ಎರಡು ಲೋಕಸಬಾ ಚುನಾವಣೆಗಳಲ್ಲೂ 1786ಬೂತ್ಗಳಲ್ಲಿ ಕಡಿಮೆ ಮತದಾನವಾಗಿರುವುದು ಕಂಡು ಬಂದಿದೆ.
|
3 |
+
ಹೀಗಾಗಿ ಆ ಬೂತ್ಗಳಲ್ಲಿ ಈ ಬಾರಿ ಹೆಚ್ಚು ಮತದಾನವಾಗುವಂತೆ ನೋಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಡಿಮೆ ಮತದಾನ ಆಗಿರೋ ಪ್ರದೇಶಗಳ ಪಟ್ಟಿಮಾಡಿರುವ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿಗಳು ಈ ಬಾರಿ 1700 ಬೂತ್ಗಳಲ್ಲಿ ಯಾವುದೇ ಕಾರಣಕ್ಕೂ ಕಡಿಮೆ ಮತದಾನವಾಗದಂತೆ ನೋಡಿಕೊಳ್ಳಿ ಎಂದು ಚುನಾವಣಾ ಸಿಬ್ಬಂಧಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
|
4 |
+
ಹಾಗಾದರೆ ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲಿ ಅತ್ಯಂತ ಕಡಿಮೆ ಮತದಾನವಾದ 1786ಬೂತ್ಗಳು ಯಾವುದು ಎಂದರೆ ಅವು ಹೀಗೀವೆ ನೋಡಿ. ಯಲಹಂಕ ವಿಧಾನಸಭಾ ಕ್ಷೇತ್ರದ 123 ಬೂತ್ಗಳು, ಬ್ಯಾಟರಾಯನಪುರದ 114, ಯಶವಂತಪುರದ 131, ದಾಸರಹಳ್ಳಿಯ 99, ಮಹದೇವಪುರದ 135, ಬೆಂಗಳೂರು ದಕ್ಷಿಣದ 139, ಆನೇಕಲ್ನ 103, ಕೆ.ಆರ್.ಪುರದ 86, ಮಹಾಲಕ್ಷ್ಮೀ ಬಡಾವಣೆಯ 41, ಮಲ್ಲೇಶ್ವರಂನ 51, ಹೆಬ್ಬಾಳದ 40, ಪುಲಿಕೇಶಿನಗರದ 41, ಸರ್ವಜ್ಞನಗರದ 50, ಸರ್.ಸಿ.ವಿ.ರಾಮನ್ನಗರದ 44, ರಾಜರಾಜೇಶ್ವರಿನಗರದ 43, ಶಿವಾಜಿನಗರದ 27, ಶಾಂತಿನಗರದ 26, ಗಾಂ„ನಗರದ 55, ರಾಜಾಜಿನಗರದ 29, ಚಾಮರಾಜಪೇಟೆಯ 47 ಹಾಗೂ ಚಿಕ್ಕಪೇಟೆಯ 20 ಬೂತ್ಗಳಲ್ಲಿ ಶೇ.55ಕ್ಕಿಂತ ಕಡಿಮೆ ಮತದಾನವಾಗಿದೆ.
|
5 |
+
ಅದೇ ರೀತಿ ಗೋವಿಂದರಾಜನಗರದ 51, ವಿಜಯನಗರದ 46, ಬಸವನಗುಡಿಯ 24, ಪದ್ಮನಾಭನಗರದ 40, ಬಿಟಿಎಂ ಬಡಾವಣೆಯ 39, ಜಯನಗರದ 36 ಹಾಗೂ ಬೊಮ್ಮನಹಳ್ಳಿಯ 98 ವಿಧಾನಸಭಾ ಕ್ಷೇತ್ರಗಳ 1786 ಬೂತ್ಗಳಲ್ಲಿ ಕಡಿಮೆ ಮತದಾನವಾಗಿತ್ತು ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.
|
eesanje/url_46_202_7.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಮೊಬೈಲ್ ಅಂಗಡಿ ಮಾಲೀಕನ ಮೇಲೆ ಹಲ್ಲೆ ಪ್ರಕರಣದಲ್ಲಿ ಮತ್ತಿಬ್ಬರ ಬಂಧನ
|
2 |
+
ಬೆಂಗಳೂರು,ಮಾ.19-ಮೊಬೈಲ್ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ತರುಣ್ ಮತ್ತು ಜಾಹಿದ್ ಬಂಧಿತ ಆರೋಪಿಗಳು. ನಿನ್ನೆ ಕುಂಬಾರಪೇಟೆಯ ಸುಲೇಮಾನ್, ಶಹಾನವಾಜ್ ಮತ್ತು ರೋಹಿತ್ನನ್ನು ಬಂಧಿಸಿದ್ದು, ಇದೀಗ ಮತ್ತಿಬ್ಬರನ್ನು ಬಂಧಿಸುವ ಮೂಲಕ ಆರೋಪಿಗಳ ಸಂಖ್ಯೆ ಐದಕ್ಕೆ ಏರಿದೆ.
|
3 |
+
ನಗರ್ತಪೇಟೆಯ ಸಿದ್ದಣ್ಣಗಲ್ಲಿಯಲ್ಲಿನ ಮೊಬೈಲ್ ಅಂಗಡಿ ಮಾಲೀಕ ಮುಖೇಶ್ ಮೊನ್ನೆ ಸಂಜೆ ಹಿಂದಿ ಭಜನೆ ಹಾಕಿದ್ದಾಗ ಧ್ವನಿ ವರ್ಧಕ ಶಬ್ದ ಜೋರಾಗಿ ಕೇಳಿಸುತ್ತಿದೆಯೆಂದು ಗುಂಪೊಂದು ಏಕಾಏಕಿ ಅಂಗಡಿ ಬಳಿ ಹೋಗಿ ನೀವು ಹಾಕಿದ ಹಾಡಿನಿಂದ ಪ್ರಾರ್ಥನೆ ನಡೆಸಲು ತೊಂದರೆಯಾಗುತ್ತಿದೆ, ಹಾಡನ್ನು ನಿಲ್ಲಿಸುವಂತೆ ಮುಖೇಶ್ ಜೊತೆಗೆ ಜಗಳವಾಡಿ ಅವರನ್ನು ಅಂಗಡಿಯಿಂದ ಹೊರಗೆಳೆದು ಕೈಗಳಿಂದ ಮುಖಕ್ಕೆ ಗುದ್ದಿ ದೊಣ್ಣೆಯಿಂದ ಹೊಡೆದು ಪರಾರಿಯಾಗಿತ್ತು. ಹಲ್ಲೆಗೊಳಗಾದ ಮುಖೇಶ್ ಅವರು ಪೊಲೀಸರಿಗೆ ದೂರು ನೀಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
|
4 |
+
ಅಂದು ಘಟನೆ ಖಂಡಿಸಿ ನಗರ್ತಪೇಟೆಯ ನೂರಾರು ವರ್ತಕರು ಹಲಸೂರು ಗೇಟ್ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿ, ಹಲ್ಲೆ ನಡೆಸಿದ ಪುಂಡರನ್ನು ಆದಷ್ಟು ಬೇಗ ಬಂಧಿಸಬೇಕೆಂದು ಒತ್ತಾಯಿಸಿದ್ದರು. ಹಲಸೂರು ಗೇಟ್ ಠಾಣೆ ಪೊಲೀಸರು ಸ್ಥಳಕ್ಕೆ ಹೋಗಿ ಆ ರಸ್ತೆಗಳಲ್ಲಿನ ಸಿಸಿ ಟಿವಿ ಪರಿಶೀಲಿಸಿ ಅದರಲ್ಲಿ ಸೆರೆಯಾಗಿದ್ದ ದೃಶ್ಯಾವಳಿ ಆಧರಿಸಿ ನಿನ್ನೆ ಮೂವರು ಹಾಗೂ ಇದೀಗ ಇಬ್ಬರನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
|
5 |
+
ಆರೋಪಿಗಳ ಪೈಕಿ ಸುಲೇಮಾನ್ ವಿರುದ್ಧ ಅಪಹರಣ ಹಲ್ಲೆ, ಪ್ರಕರಣಗಳಲ್ಲಿ ಭಾಗಿಯಾಗಿ ಜೈಲಿನಲ್ಲಿದ್ದು, ನಂತರದ ದಿನಗಳಲ್ಲಿ ಬಿಡುಗಡೆಯಾಗಿದ್ದನು. ಉಳಿದ ಆರೋಪಿಗಳ ವಿರುದ್ಧ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾದ ಹಲ್ಲೆ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
|
6 |
+
ಮತ್ತೊಂದೆಡೆ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು ಬಿಜೆಪಿ ಸಂಸದರಾದ ತೇಜಸ್ವಿ ಸೂರ್ಯ, ಪಿ.ಸಿ.ಮೋಹನ್ ಹಾಗೂ ಮುಖಂಡರು, ಕಾರ್ಯಕರ್ತರು ಘಟನಾ ಸ್ಥಳಕ್ಕೆ ಹೋಗಿ ಮುಖೇಶ್ ಅವರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಶೀಘ್ರ ಎಲ್ಲ ಆರೋಪಿಗಳನ್ನು ಬಂಸದಿದ್ದರೆ ನಗರ್ತಪೇಟೆ ಬಂದ್ ಮಾಡುವುದಾಗಿ ಎಚ್ಚರಿಸಿದ್ದರು.
|
eesanje/url_46_202_8.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಗೊಂದಲಗಳನ್ನು ವರಿಷ್ಠರೇ ನಿವಾರಿಸುತ್ತಾರೆ : ವಿಜಯೇಂದ್ರ
|
2 |
+
ಬೆಂಗಳೂರು,ಮಾ.19-ಬಿಜೆಪಿ ಹಾಗೂ ಜೆಡಿಎಸ್ ನಡುವೆ ಹೊಂದಾಣಿಕೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗದಂತೆ ರಾಷ್ಟ್ರೀಯ ನಾಯಕರು ಎಲ್ಲ ವನ್ನು ಬಗೆಹರಿಸುತ್ತಾರೆ ಎಂದು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
|
3 |
+
ಬಿಜೆಪಿ ಜೊತೆ ಮೈತ್ರಿಯ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ ಬೆನ್ನಲ್ಲೇ ವಿಜಯೇಂದ್ರ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,ಎರಡೂ ಪಕ್ಷಗಳ ನಡುವೆ ಸಣ್ಣಪುಟ್ಟ ಗೊಂದಲಗಳಿದ್ದರೆ ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಮಧ್ಯ ಪ್ರವೇಶ ಮಾಡಿ ಗೊಂದಲ ಬಗೆಹರಿಸುತ್ತಾರೆ. ಬಿಜೆಪಿ ಮತ್ತು ಜೆಡಿಎಸ್ ನಡುವೆ ಯಾವುದೇ ರೀತಿಯ ಗೊಂದಲ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
|
4 |
+
ಜೆಡಿಎಸ್ನವರಿಗೂ ಸಮಾಧಾನ ಆಗುವ ರೀತಿಯಲ್ಲಿ ನಮ್ಮ ರಾಷ್ಟ್ರೀಯ ನಾಯಕರು ಸಮರ್ಪಕ ತೀರ್ಮಾನ ಮಾಡುವ ವಿಶ್ವಾಸ ಇದೆ. ಚರ್ಚೆಯಿಂದ ವಿಷಯ ಬಗೆಹರಿಯಲಿದೆ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕಳೆದ ತಡರಾತ್ರಿ ರಾಷ್ಟ್ರೀಯ ನಾಯಕರ ಜೊತೆ ಚರ್ಚೆ ಮಾಡಲಾಗಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಟರಾದ ಹೆಚ್.ಡಿ.ದೇವೆಗೌಡರ ಜೊತೆಗೂ ರಾತ್ರಿ ಚರ್ಚೆ ನಡೆಸಲಾಗಿದೆ. ಇಂದು ಬೆಳಿಗ್ಗೆ ದೂರವಾಣಿ ಮೂಲಜ ಕುಮಾರಸ್ವಾಮಿಗೂ ಮಾಹಿತಿ ನೀಡಿದ್ದೇನೆ ಎಂದು ಹೇಳಿದರು.
|
5 |
+
ಯಾವ ಸಂದರ್ಭದಲ್ಲಿ ಏನೇನು ಮಾಡಬೇಕು ಎಂಬುದರ ಕುರಿತು ನಮ್ಮ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಏನೆ ಸಣ್ಣಪುಟ್ಟ ಗೊಂದಲಗಳಿದ್ದರೂ ಸುಖಾಂತ್ಯವಾಗುತ್ತೆದೆ ಎಂದರು.ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಬಹುತೇಕ ಯಶಸ್ವಿಯಾಗಿದೆ.ಒಂದು ವಾರಗಳ ಕಡಿಮೆ ಅವಧಿಯಲ್ಲಿ ಕಲಬುರಗಿ ಶಿವಮೊಗ್ಗ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿದೆ.ಅವರನಪ್ರಿಯತೆ ದಿನೇ ದಿನೆ ಎತ್ತರಕ್ಕೆ ಹೋಗುತ್ತಿದೆ.ಇದರಿಂದ ರಣಭೂಮಿಯಲ್ಲಿದ್ದ ಕಾರ್ಯಕರ್ತರಿಗೆ ಉತ್ಸಾಹ ಬಂದಿದೆ ಎಂದು ಮಚ್ಚುಗೆ ವ್ಯಕ್ತಪಡಿಸಿದರು.
|
6 |
+
ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡಗೆ ಕಾಂಗ್ರೆಸ್ ಗಾಳ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಬಿ.ವೈ.ವಿಜಯೇಂದ್ರ ಅವರು, ಕಳೆದ ಒಂದು ವಾರದ ಘಟನೆಗಳನ್ನ ಅವಲೋಕಿಸಲಾಗಿದೆ. ಕಾಂಗ್ರೆಸ್ ನಾಯಕರಿಗೆ ಅವರ ಮುಖಂಡರಿಗಿಂತ ಬಿಜೆಪಿ ನಾಯಕರ ಮೇಲೆ ಪ್ರೀತಿ ವಿಶ್ವಾಸ ಬಂದಿದೆ.ನನಗೆ ವಿಶ್ವಾಸ ಇದೆ ಎಲ್ಲವೂ ಸರಿ ಹೋಗುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
|
7 |
+
ಸದಾನಂದಗೌಡರು ನಮ್ಮ ಪಕ್ಷದಲ್ಲೇ ಉಳಿಯುತ್ತಾರೆ. ಇದೇ ರೀತಿ ನಮ್ಮ ಪಕ್ಷದ ಮತ್ತೊಬ್ಬ ಹಿರಿಯರಾದ ಕೆ.ಎಸ್.ಈಶ್ವರಪ್ಪಗೆ ಸತ್ಯ ಅರ್ಥಾವಾದ ಮೇಲೆ ಸರಿ ಹೋಗುತ್ತೆದೆ. ಜಗೀಶ್ ಶೆಟ್ಟರ್ ಸ್ಪರ್ಧೆ ಕುರಿತು ಬಹಿರಂಗ ಚರ್ಚೆ ಮಾಡುವುದಿಲ್ಲ. ಇಂದು ಮತ್ತು ನಾಳೆ ಕೇಂದ್ರ ಚುನಾವಣಾ ಸಮಿತಿ ���ಭೆ ನಡೆಯಲಿದೆ. ಸಭೆಯಲ್ಲಿ ಎಲ್ಲವೂ ತೀರ್ಮಾನ ಆಗುತ್ತೆದೆ ಎಂದು ಹೇಳಿದರು.
|
eesanje/url_46_202_9.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ವಿದೇಶಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ 50 ಲಕ್ಷದವರೆಗೆ ಸಾಲ
|
2 |
+
ಬೆಂಗಳೂರು,ಮಾ.18: ದೇಶೀಯ ಮಾರುಕಟ್ಟೆ ಶಿಕ್ಷಣ ಸಾಲ ನೀಡುವ ಫಿನ್ಟೆಕ್ ಸ್ಟಾರ್ಟ್ಅಪ್ನಲ್ಲಿನ ತಮ್ಮ ಯಶಸ್ಸಿನಿಂದ ಉತ್ತೇಜಿತರಾದ ಪ್ರೊಫೆಲ್ಡ್ , ಮೆಟ್ರೋಗಳಲ್ಲಿ ಮತ್ತು ಭಾರತದ ಶ್ರೇಣಿ 2 ಮತ್ತು ಶ್ರೇಣಿ 3 ನಗರಗಳಲ್ಲಿ ವಾಸಿಸುವ ವಿದ್ಯಾರ್ಥಿಗಳಿಂದ ಶಿಕ್ಷಣ ಸಾಲಗಳಿಗೆ ಗಮನಾರ್ಹ ಬೇಡಿಕೆಯನ್ನು ನಿಸುವುದಕ್ಕಾಗಿ ತಮ್ಮ ಅಧ್ಯಯನದ ವಿದೇಶಿ ಸಾಲಗಳನ್ನು ಘೋಷಿಸಿದೆ. ವಿದ್ಯಾರ್ಥಿಗಳ/ಪೊಷಕರ ಅರ್ಹತೆಗೆ ಅನುಗುಣವಾಗಿ ವಿಶಿಷ್ಟವಾದ ವಿಮೆಯ ವಿಧಾನದ ಮೂಲಕ ಗರಿಷ್ಠ 10 ವರ್ಷಗಳ ಅವಗೆ ವಿದೇಶಗಳಿಗೆ ಪ್ರಯಾಣಿಸುವ ಅರ್ಹ ವಿದ್ಯಾರ್ಥಿಗಳಿಗೆ 50 ಲಕ್ಷದವರೆಗಿನ ಸಾಲಗಳು ಲಭ್ಯವಿರುತ್ತವೆ. ಈ ಉಪಕ್ರಮವು ಉದ್ಯೋಗಿ ವ್ಯಕ್ತಿಗಳಿಗೆ ವೇಗವಾದ ಮತ್ತು ಹೆಚ್ಚು ತಡೆರಹಿತ ಹಣಕಾಸು ಪ್ರಕ್ರಿಯೆಯನ್ನು ಬಯಸುತ್ತದೆ, ಹಾಗೆಯೇ ಸ್ವಯಂ ಉದ್ಯೋಗಿ ವ್ಯಕ್ತಿಗಳಿಗೆ ಸಹಾಯ ಮಾಡುತ್ತದೆ.
|
3 |
+
ಪ್ರೊಫೆಲ್ಡ್ ನಲ್ಲಿ , ಶಿಕ್ಷಣದ ಪ್ರವೇಶವನ್ನು ಪ್ರಜಾಪ್ರಭುತ್ವಗೊಳಿಸುವ ನಮ್ಮ ದೃಷ್ಟಿಗೆ ನಾವು ಬದ್ಧರಾಗಿದ್ದೇವೆ. 2030 ರ ವೇಳೆಗೆ 7 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ ಭಾರತದ ಮಹತ್ವಾಕಾಂಕ್ಷೆಯನ್ನು ಪೂರೈಸುವ ಭವಿಷ್ಯದ ನಾಯಕರ ಕೌಶಲ್ಯಗಳನ್ನು ತರಬೇತಿ ಮತ್ತು ಅಭಿವೃದ್ಧಿಗೊಳಿಸುವುದು ಕಡಿಮೆ ಬ್ಯಾಂಕಿನ ಜನಸಂಖ್ಯೆಯ ಹೆಚ್ಚಿನ ಭಾಗವನ್ನು ಪೂರೈಸುವ ಒಂದು ಸಮಗ್ರ ವಿಧಾನವಾಗಿದೆ. ಇದಕ್ಕಾಗಿ, ಭಾರತೀಯ ವಿದ್ಯಾರ್ಥಿಗಳು ಅತ್ಯುತ್ತಮವಾಗಿ ತರಬೇತಿ ಪಡೆಯುವುದು ಮುಖ್ಯವಾಗಿದೆ. ಜಗತ್ತಿನಲ್ಲಿ. ಅರ್ಹ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ನಾವು ಈ ವರ್ಷ 100 ಕೋಟಿ ವಿನಿಯೋಗವನ್ನು ನೋಡುತ್ತಿದ್ದೇವೆ”ಎಂದು ಪ್ರೊಫೆಲ್ಡ್ ಸಹ-ಸಂಸ್ಥಾಪಕ ಬ್ರಿಜೇಶ್ ಸಾಮಂತರಾಯರು ಹೇಳಿದರು.
|
4 |
+
ಪೊ್ರಪೆಲ್ಡ್ನ ಉತ್ಪನ್ನ ಕೊಡುಗೆಗಳು ಎಲ್ಲಾ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಬಯಸುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಿಗಲಿದೆ. ಪೊ್ರಪೆಲ್ಡ್ ಮೇಲಾಧಾರ-ಮುಕ್ತ ಸಾಲಗಳನ್ನು ನೀಡುತ್ತದೆ, ತ್ವರಿತ ಅನುಮೋದನೆಗಳನ್ನು ಖಾತ್ರಿಪಡಿಸುತ್ತದೆ ಮತ್ತು ಕನಿಷ್ಠ ದಾಖಲೆಗಳನ್ನು ಕೇಳುವ ಮೂಲಕ ತೊಡಕಿನ ಪ್ರಕ್ರಿಯೆಗಳನ್ನು ಕಡಿತಗೊಳಿಸುತ್ತದೆ.
|
5 |
+
ಪೊ್ರಪೆಲ್ಡ್ ಶೈಕ್ಷಣಿಕ ನೇರ ಮಾರಾಟದ ಏಜೆಂಟ್ಗಳು ಮತ್ತು ಶಿಕ್ಷಣ ಸಾಲದ ಆSಂಗಳೊಂದಿಗೆ ವಿದೇಶದಲ್ಲಿ ಶಿಕ್ಷಣ ಹಣಕಾಸು ವ್ಯಾಪ್ತಿಯನ್ನು ವಿಸ್ತರಿಸಲು ಕಾರ್ಯತಂತ್ರದ ಪಾಲುದಾರಿಕೆಯನ್ನು ಹೊಂದಿದೆ. ಈ ಮೈತ್ರಿಗಳು ಹೆಚ್ಚಿನ ಪ್ರೇಕ್ಷಕರಿಗೆ ಹಣಕಾಸು ಆಯ್ಕೆಗಳನ್ನು ವಿಸ್ತರಿಸುವ ಮೂಲಕ ಪೊ್ರಪೆಲ್ಡ್ ಮತ್ತು ಆSಂ ಗಳೆರಡಕ್ಕೂ ಪ್ರಯೋಜನವನ್ನು ನೀಡುತ್ತವೆ ನಿರ್ದಿಷ್ಟವಾಗಿ ಕಟ್ಟುನಿಟ್ಟಾದ ವಿಮೆ ಅಥವಾ ದೀರ್ಘವಾದ ಅನುಮೋದನೆ ಪ್ರಕ್ರಿಯೆಗಳಿಂದಾಗಿ ಸಾಂಪ್ರದಾಯಿಕ ಸಾಲದಾತರಿಂದ ತಿರಸ್ಕರಿಸಲ್ಪಟ್ಟ ವ್ಯಕ್ತಿಗಳು ಮತ್ತು ಗ್ರಾಹಕರ ತೃಪ್ತಿ ಮತ್ತು ನಿಷ್ಠೆಯನ್ನು ಹೆಚ್ಚಿಸುತ್ತವೆ.
|
6 |
+
ಪೊ್ರಪೆಲ್ಡ್ ವೇಗವಾದ ಅನುಮೋದನೆ ಪ್ರಕ್ರಿಯೆ, ಕನಿಷ್ಠ ದಾಖಲಾತಿ ಮತ್ತು ಅನನ್ಯ ಅಂಡರ್ರೈಟಿಂಗ್ನಿಂದಾಗಿ ಶ್ರೇಣಿ 3 ನಗರಗಳನ್ನು ತಲುಪಲು ತಮ್ಮ ಗ್ರಾಹಕರ ನೆಲೆಯನ್ನು ವಿಸ್ತರಿಸಲು ಡಿಎಸ್ಐ ಗಳಿಗೆ ಸಹಾಯ ಮಾಡುತ್ತಿದೆ. ಕಡಿಮೆ ಟರ್ನ್ಅರೌಂಡ್ ಸಮಯ ಮತ್ತು ವಿಶಾಲ ವ್ಯಾಪ್ತಿಯು ಉದ್ಯೋಗಿ ಮತ್ತು ಸ್ವಯಂ ಉದ್ಯೋಗಿಗಳ ವಿಶಾಲ ಪೊ್ರಫೈಲ್ಗಳನ್ನು ಪೂರೈಸಲು ಅವರಿಗೆ ಸಹಾಯ ಮಾಡುತ್ತದೆ ಎಂದು ರವಿ ಗೋಯಲ್ ಹೇಳಿದರು.
|
eesanje/url_46_203_1.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಶಿವಮೊಗ್ಗದಲ್ಲಿ ಮೋದಿ ಗರ್ಜನೆ
|
2 |
+
ಬೆಂಗಳೂರು,ಮಾ.18- ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಪ್ರಧಾನಿ ನರೇಂದ್ರಮೋದಿ ಅವರು ಕರ್ನಾಟಕದಲ್ಲಿ ಮತ್ತೆ ರಣಕಹಳೆ ಮೊಳಗಿಸುವ ಮೂಲಕ ಚುನಾವಣಾ ಕಾವು ರಂಗೇರುವಂತೆ ಮಾಡಿದ್ದಾರೆ. ಎರಡು ದಿನಗಳ ಹಿಂದಷ್ಟೇ ಕಲ್ಯಾಣ ಕರ್ನಾಟಕದ ಮುಖ್ಯ ಕೇಂದ್ರ ಕಲಬರುಗಿಯಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿದ್ದ ಮೋದಿಯವರು ಇಂದು ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಮಧ್ಯ ಕರ್ನಾಟಕದ ನಾಲ್ಕು ಜಿಲ್ಲೆಗಳ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿ ಬಿಜೆಪಿಯಲ್ಲಿ ಮಿಂಚಿನ ಸಂಚಲನ ಸೃಷ್ಟಿಸಿದರು.
|
3 |
+
ಶಿವಮೊಗ್ಗದ ಅಲ್ಲಮ್ಮಪ್ರಭು ಕ್ರೀಡಾಂಗಣದಲ್ಲಿ ದಾವಣಗೆರೆ, ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲಾ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ ಮೋದಿ, ರಾಜ್ಯದಲ್ಲಿ ಈ ಬಾರಿ 28 ಕ್ಷೇತ್ರಗಳಲ್ಲೂ ಬಿಜೆಪಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲ ನೀಡಬೇಕೆಂದು ಕೋರಿದರು.
|
4 |
+
ಎಂದಿನಂತೆ ಕನ್ನಡದಲ್ಲೇ ತಮ್ಮ ಭಾಷಣವನ್ನು ಆರಂಭಿಸಿದ ಮೋದಿಯವರು ತಮ್ಮ ಅರ್ಧಗಂಟೆಗಳ ಭಾಷಣದಲ್ಲಿ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟಗಳನ್ನು ತರಾಟೆಗೆ ತೆಗೆದುಕೊಂಡರು.ಕರ್ನಾಟಕದಲ್ಲಿ ಇಲ್ಲಿನ ಜನತೆ ನನಗೆ ಒಂದು ಗ್ಯಾರಂಟಿಯನ್ನು ನೀಡಬೇಕು. ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳನ್ನು ಗೆಲ್ಲಿಸಿ ಕಾಂಗ್ರೆಸ್ಗೆ ಒಂದೇ ಒಂದು ಕ್ಷೇತ್ರವನ್ನು ಸಹ ಬಿಟ್ಟು ಕೊಡುವುದಿಲ್ಲ ಎಂದು ವಾಗ್ದಾನ ಮಾಡಬೇಕು. ಕರುನಾಡಿನಲ್ಲಿ ಎಲ್ಲಾ ಕಡೆ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಗೆಲ್ಲಬೇಕೆಂದು ಮನವಿ ಮಾಡಿಕೊಂಡರು.
|
5 |
+
ಕಾಂಗ್ರೆಸ್ ಕರ್ನಾಟಕವನ್ನು ಗ್ಯಾರಂಟಿ ನೆಪದಲ್ಲಿ ಲೂಟಿ ಹೊಡೆಯುತ್ತಿದೆ. ಇಲ್ಲಿನ ಹಣವು ದೆಹಲಿ ಪಾಲಾಗುತ್ತದೆ. ಅಲ್ಲಿನ ನಾಯಕರು ಕರುನಾಡನ್ನು ಎಟಿಎಂ ಮಾಡಿಕೊಂಡಿದ್ದಾರೆ. ಇದಕ್ಕೆ ಅವಕಾಶ ಮಾಡಿಕೊಡಬೇಡಿ. ಎನ್ಡಿಎ ಅಭ್ಯರ್ಥಿಗಳನ್ನು ಬಹುಮತದಿಂದ ಗೆಲ್ಲಿಸಿ ಎಂದು ಹೇಳಿದರು.
|
6 |
+
ಹತ್ತು ವರ್ಷಗಳಲ್ಲಿ ನಾವು ಒಂದೇ ಒಂದು ಹಗರಣವಿಲ್ಲದೆ ಸರ್ಕಾರವನ್ನು ಮುನ್ನಡೆಸಿದ್ದೇವೆ. ಕೇಂದ್ರದಲ್ಲಿ ಮೂರನೇ ಬಾರಿಗೆ ನಾವು ಅಕಾರಕ್ಕೆ ಬರುವುದು ನೂರಕ್ಕೆ ನೂರರಷ್ಟು ಖಚಿತ. ಗ್ಯಾರಂಟಿಗಳನ್ನು ನಂಬಿ ಕಾಂಗ್ರೆಸ್ಗೆ ಮರಳಾಗಬೇಡಿ. ವಿಶ್ವದಲ್ಲಿ ಭಾರತವನ್ನು ಮೊದಲ ಸ್ಥಾನಕ್ಕೆ ಕೊಂಡೊಯ್ಯಬೇಕಾದರೆ ಬಿಜೆಪಿಯನ್ನು ಗೆಲ್ಲಿಸಿ ಎಂದು ವಿನಮ್ರವಾಗಿ ಕೋರಿದರು.
|
7 |
+
ರಾಜ್ಯದ ರೈತರಿಗೆ ಬಿಜೆಪಿ ಸಾಲು ಸಾಲು ಅನ್ಯಾಯ:ಸಿಎಂ ಟೀಕೆ
|
8 |
+
ಕರ್ನಾಟಕದಲ್ಲಿ ಎಟಿಎಂ ಸರ್ಕಾರವನ್ನು ಬುಡಸಮೇತವಾಗಿ ಕಿತ್ತೊಯ್ಯುವ ಸಂಕಲ್ಪವನ್ನು ಮತದಾರರು ಮಾಡಬೇಕು. ಕಳೆದ ಬಾರಿ 25 ಕ್ಷೇತ್ರಗಳಲ್ಲಿ ಗೆಲ್ಲಿಸಿಕೊಟ್ಟಿದ್ದೀರಿ. ಈ ಬಾರಿ 28 ಕ್ಷೇತ್ರಗಳನ್ನು ಗೆಲ್ಲಿಸಿ ದಾಖಲೆ ಬರೆಯಬೇಕೆಂದು ಮನವಿ ಮಾಡಿದರು. ಇದಕ್ಕೂ ಮುನ್ನ ತೆಲಂಗಾಣದಿಂದ ವಿಶೇಷ ವಿಮಾನದಲ್ಲಿ ಸೋಗಾನೆ ಬಳಿ ಇರುವ ವಿಮಾ�� ನಿಲ್ದಾಣಕ್ಕೆ ಆಗಮಿಸಿದ ಮೋದಿ ಅವರನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಶಿವಮೊಗ್ಗ ಜಿಲ್ಲಾ ಘಟಕ ಆತ್ಮೀಯವಾಗಿ ಬರಮಾಡಿಕೊಂಡರು.
|
9 |
+
ಅಲ್ಲಿಂದ ಅಲ್ಲಮ್ಮಪ್ರಭು ಕ್ರೀಡಾಂಗಣಕ್ಕೆ ಆಗಮಿಸಿದ ಮೋದಿ ಅವರು ನಂತರ ತೆರೆದ ಜೀಪ್ನಲ್ಲಿ ಕ್ರೀಡಾಂಗಣದ ಮಧ್ಯಭಾಗದಿಂದ ಸಮಾವೇಶ ನಡೆಯುವ ಸ್ಥಳಕ್ಕೆ ಆಗಮಿಸಿದರು. ಈ ವೇಳೆ ಮೋದಿಯವರಿಗೆ ನೆರೆದಿದ್ದ ಭಾರೀ ಕಾರ್ಯಕರ್ತರ ಹರ್ಷೋದ್ಘಾರ, ಜೈಕಾರ, ಜೈ ಮೋದಿ ಎಂಬ ಘೋಷಣೆಗಳು ಮಾರ್ಧನಿಸಿದವು.ಹಾವೇರಿಯಿಂದ ಟಿಕೆಟ್ ಸಿಗದೆ ಮುನಿಸಿಕೊಂಡಿರುವ ಈಶ್ವರಪ್ಪ ಗೈರುಹಾಜರು ಎದ್ದು ಕಾಣುತ್ತಿತ್ತು.
|
eesanje/url_46_203_10.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ದಕ್ಷಿಣ ಕನ್ನಡದಲ್ಲಿ ಶುರುವಾದ ನಕ್ಸಲ್ ಚಟುವಟಿಕೆ
|
2 |
+
ಮಂಗಳೂರು, ಮಾ.18-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಕ್ಸಲರು ಮತ್ತೆ ಕಾಣಿಸಿಕೊಂಡಿದ್ದು ಜನರು ಆತಂಕ ವ್ಯಕ್ತಪಡಿಸಿದ್ದಾರೆ. ಕಳೆದ 5 ವರ್ಷಗಳಿಂದ ನಿಯಂತ್ರಣದಲ್ಲಿದ್ದ ನಕ್ಸಲ್ ಚಟುವಟಿಕೆ ಮತ್ತೆ ಶುರುವಾಗಿದೆ. ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ಇರುವ ಅಂಗಡಿಯೊಂದಕ್ಕೆ ಎಂಟು ಮಂದಿ ನಕ್ಸಲರ ತಂಡ ಆಗಮಿಸಿ ದಿನಸಿ ಖರೀದಿಸಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ.
|
3 |
+
ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಎಚ್ಚೆತ್ತ ಪೆಪೊಲೀಸ್ ಪಡೆ ನಕ್ಸಲರಿಗಾಗಿ ತೀವ್ರ ಶೋಧ ನಡೆಸಿದ್ದಾರೆ. ನಕ್ಸಲರು ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಕೂಜಿಮಲೆ, ಕಲ್ಮಕಾರ್ಕ್ಕೆ ನಕ್ಸಲ್ ನಿಗ್ರಹ ಪಡೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಕೆಲ ದಿನಗಳ ಹಿಂದೆ ಕೊಲ್ಲೂರು ಭಾಗದಲ್ಲಿ ಕಾಣಿಸಿಕೊಂಡಿದ್ದ ನಕ್ಸಲರು, ಇದೀಗ ದಕ್ಷಿಣ ಕನ್ನಡದ ಗಡಿ ಭಾಗದಲ್ಲಿ ಪ್ರತ್ಯಕ್ಷವಾಗಿದ್ದಾರೆ.
|
4 |
+
ಕಳೆದ ಫೆಬ್ರವರಿಯಲ್ಲಿ ಕೇರಳದಿಂದ ಬೈಂದೂರುಗೆ ಆಗಮಿಸಿರುವ ಅನುಮಾನ ವ್ಯಕ್ತವಾಗಿತ್ತು. ಉಡುಪಿಯ ಹೆಬ್ರಿ ಮೂಲದ ವಿಕ್ರಮ್ ಗೌಡ ನೇತೃತ್ವದ ನಕ್ಸಲರ ತಂಡ ಬೈಂದೂರು ತಾಲ್ಲೂಕಿನ ಕೊಲ್ಲೂರು, ಮುದೂರು, ಜಡ್ಕಲ್, ಬೆಳ್ಕಲ್ ಗ್ರಾಮ ಸುತ್ತಮುತ್ತ ಓಡಾಡಿರುವ ಶಂಕೆ ಮೂಡಿತ್ತು. 20 ವರ್ಷಗಳ ಹಿಂದೆ ಆತ ನಕ್ಸಲೈಟ್ ಆಗಿದ್ದು ಕೇರಳದಲ್ಲಿ ಈತ ತನ್ನ ಚಟುವಟಿಕೆ ಇತ್ತು. ಮೂವರು ಸಶಸ್ತ್ರಧಾರಿಯಾಗಿ ಬೈಂದೂರಿಗೆ ಆಗಮಿಸಿರುವ ಮಾಹಿತಿ ಲಭ್ಯವಾಗಿತ್ತು. ನಕ್ಸಲರ ಓಡಾಟ ಮಾಹಿತಿ ಬೆನ್ನಲ್ಲೇ ಪೊಲೀಸರು ಅಲರ್ಟ್ ಆಗಿದ್ದಾರೆ.
|
eesanje/url_46_203_11.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯದ ಬರ ಪರಿಸ್ಥಿತಿ ನಿವಾರಣೆಗೆ ಮೋದಿ ನಿರಾಕರಣೆ: ಕಾಂಗ್ರೆಸ್
|
2 |
+
ನವದೆಹಲಿ, ಮಾ.18 (ಪಿಟಿಐ)- ಬಹುತೇಕ ಭಾಗಗಳಲ್ಲಿ ಭೀಕರ ಬರ ಪರಿಸ್ಥಿತಿಯಿಂದಾಗಿ ಕರ್ನಾಟಕ ತೀವ್ರ ನೀರಿನ ಸಮಸ್ಯೆಯಿಂದ ತತ್ತರಿಸುತ್ತಿದೆ ಆದರೂ ಮೋದಿ ಸರಕಾರವು ರಾಜ್ಯದ ಜನತೆಗೆ ಸಹಾಯ ಮಾಡಲು ನಿರಾಕರಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತ ನಾಡಲಿರುವ ದಿನದಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
|
3 |
+
ಪ್ರಧಾನಿ ಇಂದು ಕರ್ನಾಟಕದ ಶಿವಮೊಗ್ಗದಲ್ಲಿದ್ದಾರೆ, ಅವರು ತಮ್ಮ ಭಾಷಣದಲ್ಲಿ ರಾಜ್ಯದ ಕೆಲವುಪ್ರಮುಖ ಸಮಸ್ಯೆಗಳನ್ನು ತಿಳಿಸುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದು ಅವರು ಹೇಳಿದರು.ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಎದುರಿಸುತ್ತಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಭೀಕರ ಬರ ಪರಿಸ್ಥಿತಿಯಿಂದಾಗಿ ಕರ್ನಾಟಕವು ತೀವ್ರ ನೀರಿನ ಸಮಸ್ಯೆಯಿಂದ ತತ್ತರಿಸುತ್ತಿದೆ ಎಂದು ರಮೇಶ್ ಹೇಳಿದರು.
|
4 |
+
ಬರ ಪರಿಹಾರಕ್ಕಾಗಿ 18,172 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಮೋದಿ ಸರ್ಕಾರಕ್ಕೆ ಮನವಿ ಮಾಡಿದೆ, ಮೋದಿ ಸರ್ಕಾರ ಇದುವರೆಗೆ ಕರ್ನಾಟಕದ ಜನರಿಗೆ ಸಹಾಯ ಮಾಡಲು ಏಕೆ ನಿರಾಕರಿಸಿದೆ? ಅವರು ಎಕ್ಸ್ನಲ್ಲಿನ ಪೋಸ್ಟ್ನಲ್ಲಿ ಹೇಳಿದರು.
|
5 |
+
ಗ್ರಾಮೀಣ ಆರ್ಥಿಕತೆಯ ಮೇಲಿನ ಬರ-ಸಂಬಂ„ತ ಒತ್ತಡವನ್ನು ನಿವಾರಿಸಲು ಸಹಾಯ ಮಾಡಲು, ಕರ್ನಾಟಕ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೆಗಾ) ಅಡಿಯಲ್ಲಿ ಕೆಲಸದ ದಿನಗಳ ಸಂಖ್ಯೆಯನ್ನು 100 ರಿಂದ 150 ಕ್ಕೆ ಹೆಚ್ಚಿಸಲು ಪ್ರಯತ್ನಿಸಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದರು.
|
6 |
+
ಆನ್ಲೈನ್ ಹಣ ವರ್ಗಾವಣೆ ಮೇಲೆ ಚು.ಆಯೋಗ ಹದ್ದಿನ ಕಣ್ಣು
|
7 |
+
ಬರಗಾಲದ ಅವಧಿಯಲ್ಲಿ ಹಾಗೆ ಮಾಡಲು ಯೋಜನೆಯಲ್ಲಿ ಅವಕಾಶವಿದೆ, ಆದರೆ, ಮೋದಿ ಸರ್ಕಾರವು ಯೋಜನೆಯ ವಿಸ್ತರಣೆಯನ್ನು ಅನುಮೋದಿಸುವಲ್ಲಿ ವಿಫಲವಾಗಿದೆ, ಅದು ಅವರಿಗೆ ವೇತನ ಪಾವತಿಗೆ 1600 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ವಿಫಲವಾಗಿದೆ. ಕರ್ನಾಟಕದ ಎಂಜಿಎನ್ಆರ್ಇಜಿಎಸ್ ಕಾರ್ಮಿಕರಿಗೆ ಮೋದಿ ಸರ್ಕಾರ ಯಾವಾಗ ವೇತನ ನೀಡಲಿದೆ ಎಂದು ಅವರು ಪ್ರಶ್ನಿಸಿದರು.
|
8 |
+
2023 ರಲ್ಲಿ ಅಧಿಕಾರ ವಹಿಸಿಕೊಂಡ ನಂತರ, ಕರ್ನಾಟಕ ಸರ್ಕಾರವು ತನ್ನ ಅನ್ನ ಭಾಗ್ಯ ಯೋಜನೆಯ ಮೂಲಕ ಬಡ ಕುಟುಂಬಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ನೀಡುವ ಪ್ರಯತ್ನವನ್ನು ಮೋದಿ ಸರ್ಕಾರವು ಅಡ್ಡಿಪಡಿಸಿದೆ ಎಂದು ಅವರು ಹೇಳಿದರು. ಯೋಜನೆಯ ಬೇಡಿಕೆಗಳನ್ನು ಪೂರೈಸಲು ಅಗತ್ಯವಿರುವ 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಪ್ರತಿ ಕೆಜಿಗೆ 34 ರೂ.ಗೆ ಕರ್ನಾಟಕ ಸರ್ಕಾರಕ್ಕೆ ಮಾರಾಟ ಮಾಡಲು ಆರಂಭದಲ್ಲಿ ಒಪ್ಪಿಕೊಂಡ ನಂತರ, ಭಾರತೀಯ ಆಹಾರ ನಿಗಮ ನಂತರ ಕರ್ನಾ���ಕ ಸರ್ಕಾರಕ್ಕೆ ಅಕ್ಕಿ ಮಾರಾಟ ಮಾಡಲು ನಿರಾಕರಿಸಿದೆ ಎಂದು ಅವರು ಆರೋಪಿಸಿದರು.
|
eesanje/url_46_203_12.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಆನ್ಲೈನ್ ಹಣ ವರ್ಗಾವಣೆ ಮೇಲೆ ಚು.ಆಯೋಗ ಹದ್ದಿನ ಕಣ್ಣು
|
2 |
+
ನವದೆಹಲಿ,ಮಾ.18 – ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾರರಿಗೆ ಆನ್ಲೈನ್ ಮೂಲಕ ಹಣದ ಆಮಿಷವೊಡ್ಡುವವರ ಮೇಲೆ ಆಯೋಗ ಹದ್ದಿನ ಕಣ್ಣಿಟ್ಟಿದೆ. ಫೋನ್ ಪೇ, ಪೇಟಿಎಂ ಸೇರಿದಂತೆ ಯಾವುದೇ ರೀತಿಯ ಯುಪಿಐ ಆಪ್ಗಳ ಮೂಲಕ ರವಾನೆಯಾಗುವ ಹಣಕಾಸು ವಹಿವಾಟಿನ ಮೇಲೆ ಚುನಾವಣಾ ಆಯೋಗ ನಿಗಾವಹಿಸಿದೆ. ಮತದಾರರಿಗೆ ಯಾವುದೇ ಸ್ವರೂಪದಲ್ಲಿ ಆಮಿಷ ಒಡ್ಡಿ ಮತಗಳನ್ನು ಸೆಳೆಯಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.
|
3 |
+
ಇಷ್ಟಾದರೂ ಕೆಲವು ರಾಜಕಾರಣಿಗಳು ತಂತ್ರಜ್ಞಾನಗಳನ್ನು ಬಳಸಿಕೊಂಡು ಜನರಿಗೆ ಹಣ ರವಾನೆ ಮಾಡುತ್ತಿದ್ದಾರೆ. ಅದರಲ್ಲೂ ತಾಂತ್ರಿಕವಾಗಿ ಸಾಕಷ್ಟು ಜ್ಞಾನ ಸಂಪಾದಿಸಿರುವ ಬೆಂಗಳೂರು ಜನತೆಗೆ ವಿನೂತನ ತಂತ್ರಜ್ಞಾನದ ಮೂಲಕ ಹಣ ರವಾನಿಸುವುದು ಕಷ್ಟವೇನಲ್ಲ. ಹೀಗಾಗಿ, ಚುನಾವಣಾ ಆಯೋಗ ಇದಕ್ಕಾಗಿ ಪ್ರತ್ಯೇಕ ತಂಡವನ್ನೇ ರಚನೆ ಮಾಡಿ ನಿಗಾ ವಹಿಸಿದೆ.
|
4 |
+
28 ಸ್ಥಾನಗಳನ್ನು ಗೆಲ್ಲುವಲ್ಲಿ ವಿಜಯೇಂದ್ರ ಯಶಸ್ವಿಯಾಗಲಿ: ಈಶ್ವರಪ್ಪ
|
5 |
+
ಫೋನ್ ಪೇನ್ ಪೇ, ಗೂಗಲ್ ಪೇ ಹಾಗೂ ಪೆಟಿಎಂ ಸಂಸ್ಥೆಗಳ ಜೊತೆ ಸಭೆ ನಡೆಸಿ ಪ್ರತಿ ದಿನದ ವಹಿವಾಟು, ಯಾವುದೇ ವ್ಯಕ್ತಿಯಿಂದ ನಿರ್ದಿಷ್ಟ ಮೊತ್ತದ ಹಣ ಹೆಚ್ಚಿನ ಸಂಖ್ಯೆಯ ಜನರಿಗೆ ರವಾನೆ ಮಾಡುತ್ತಿದ್ದರೆ ಅಂಥವರನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಲು ಮುಂದಾಗಿದ್ದು ಪ್ರತಿದಿನದ ಯುಪಿಐ ಡಿಜಿಟಲ್ ಹಣದ ವಹಿವಾಟಿನ ಮೇಲೆ ನಿಗಾ ಇಡಲು ಮುಂದಾಗಿದ್ದಾರೆ.
|
6 |
+
ಮತದಾರರನ್ನು ಓಲೈಕೆ ಮಾಡಲು ಪೋನ್ ಪೇ, ಗೂಗಲ್ ಪೇ, ಯುಪಿಐ ತಂತ್ರಜ್ಞಾನದ ನೆರವಿನೊಂದಿಗೆ ಆದಷ್ಟು ಬೇಗ ಬಹುತೇಕ ಜನರಿಗೆ ಹಣ ಕಳಿಸಬಹುದು, ಯಾರಿಂದಲೂ ಪತ್ತೆ ಮಾಡಲು ಸಾಧ್ಯವಿಲ್ಲ ಎಂಬ ಭ್ರಮೆ ಇದ್ರೆ ಬಿಟ್ಟು ಬಿಡಿ ಆಯೋಗ ಪ್ರತಿಯೊಂದು ಡಿಜಿಟಲ್ ವಹಿವಾಟಿನ ಮೇಲೂ ಹದ್ದಿನ ಕಣ್ಣಿಟ್ಟಿದ್ದು ಅನುಮಾನ ಬಂದ ಖಾತೆ ಗಳ ಮೇಲೆ ತನಿಖೆ ನಡೆಸಲು ಕೂಡಾ ಮುಂದಾಗಿದೆ.
|
eesanje/url_46_203_2.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ವಜ್ರದ ಹರಳೆಂದು ನಂಬಿಸಿ ಕೋಟ್ಯಂತರ ಹಣ ಲಪಟಾಯಿಸಲು ಯತ್ನ
|
2 |
+
ಬೆಂಗಳೂರು,ಮಾ.18- ವಜ್ರದ ಹರಳುಗಳನ್ನು ಕಡಿಮೆ ಬೆಲೆಗೆ ಕೊಡುವುದಾಗಿ ಹೈದರಾಬಾದ್ನಿಂದ ವ್ಯಕ್ತಿಯೊಬ್ಬರನ್ನು ಕರೆಸಿಕೊಂಡು ನಕಲಿ ವಜ್ರದ ಹರಳುಗಳನ್ನು ಅಸಲಿ ಎಂದು ನಂಬಿಸಿ ಕೋಟ್ಯಂತರ ಹಣ ಲಪಟಾಯಿಸಲು ಯತ್ನಿಸಿರುವ ನಾಲ್ವರ ವಿರುದ್ಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
|
3 |
+
ಹೈದರಾಬಾದ್ ಮೂಲದ ಲಕ್ಷ್ಮಿನಾರಾಯಣ ಎಂಬುವರಿಗೆ ರವಿ ಎಂಬಾ ವಾಟ್ಸಪ್ ಕರೆ ಮಾಡಿ ವ್ಯವಹಾರದ ಸಂಬಂಧ ಬೆಂಗಳೂರಿನ ಏರ್ಪೋರ್ಟ್ನಲ್ಲಿನ ತಾಜ್ ಹೋಟೆಲ್ಗೆ ಬರುವಂತೆ ತಿಳಿಸಿದ್ದಾನೆ. ಅದರಂತೆ ಲಕ್ಷ್ಮಿನಾರಾಯಣ ಅವರು ಮಾ.15ರಂದು ಬೆಳಗ್ಗೆ 11.30 ಸುಮಾರಿಗೆ ಹೈದರಾಬಾದ್ನಿಂದ ಸ್ನೇಹಿತರಾದ ನಾಗೇಂದ್ರ ಮತ್ತು ರಾಮ್ಕುಮಾರ್ ಜೊತೆ ಬಂದಿದ್ದಾರೆ.
|
4 |
+
ಹೋಟೆಲ್ನ ಲಾಬಿಯಲ್ಲಿ ಈ ಮೂವರು ಕುಳಿತಿದ್ದಾಗ ರವಿ ಅಲ್ಲಿಗೆ ಬಂದಿದ್ದು, ತನ್ನೊಂದಿಗಿದ್ದ ನವೀನ್ಕುಮಾರ್, ಗೂರ್ ಅಹಮ್ಮದ್, ಅಬ್ದುಲ್ ದಸ್ತಗೀರ್ ಎಂದು ಪರಿಚಿಯಿಸಿ ಇವರು ವಜ್ರದ ವ್ಯವಹಾರ ಮಾಡುತ್ತಿರುವುದಾಗಿ ಹೇಳಿದ್ದಾನೆ. ನಂತರ ತನ್ನ ಬಳಿಯಿದ್ದ ಬ್ಯಾಗ್ನಿಂದ 10 ಒಡವೆ ಬಾಕ್ಸ್ಗಳನ್ನು ಒಂದೊಂದಾಗಿ ತೆಗೆದು ತೋರಿಸಿ ಇವು ವಜ್ರದ ಹರಳುಗಳು, ಮಾರುಕಟ್ಟೆಯಲ್ಲಿ ಸುಮಾರು 10 ಕೋಟಿ ರೂ.ಗಳಾಗುತ್ತದೆ ಎಂದು ತಿಳಿಸಿದ್ದಾನೆ.
|
5 |
+
ತೆಲಂಗಾಣ ರಾಜ್ಯಪಾಲೆ ತಮಿಳುಸಾಯಿ ಸೌಂದರರಾಜನ್ ರಾಜೀನಾಮೆ
|
6 |
+
ಆ ಹರಳುಗಳನ್ನು ಯಾವುದೋ ಎರಡು ಮೆಷಿನ್ಗಳಿಂದ ಪರಿಶೀಲಿಸಿದವರಂತೆ ನಟಿಸಿ ಅವುಗಳು ಅಸಲಿ ಎಂದು ಲಕ್ಷಿನಾರಾಯಣ ಅವರನ್ನು ನಂಬಿಸಲು ಯತ್ನಿಸಿದ್ದಾರೆ. ನೀವು ಈ ಹರಳುಗಳನ್ನು ಖರೀದಿಸಲು ಒಪ್ಪಿದರೆ 1ರಿಂದ 3 ಕೋಟಿ ರೂ. ಕಡಿಮೆ ಬೆಲೆಗೆ ಕೊಡುವುದಾಗಿ ತಿಳಿಸಿದ್ದಾರೆ. ಲಕ್ಷ್ಮಿನಾರಾಯ ಅವರಿಗೆ ಹರಳುಗಳ ಬಗ್ಗೆ ಅನುಮಾನ ಬಂದು ಖುದ್ದು ತಮ್ಮ ಜೊತೆಯಲ್ಲಿದ್ದ ಸ್ನೇಹಿತರೊಂದಿಗೆ ಪರೀಕ್ಷಿಸಿದಾಗ ಅವು ನಕಲಿ ಎಂಬುದು ಗೊತ್ತಾಗಿದೆ.
|
7 |
+
ತಕ್ಷಣ ಲಕ್ಷ್ಮಿನಾರಾಯಣ ಅವರು ತಮ್ಮ ಸ್ನೇಹಿತರೊಂದಿಗೆ ಅಲ್ಲಿಂದ ತೆರಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಗೆ ಬಂದು ನಕಲಿ ವಜ್ರದ ಹರಳುಗಳನ್ನು ಅಸಲಿ ಎಂದು ತಮಗೆ ತೋರಿಸಿ ಹಣ ಲಪಟಾಯಿಸಲು ಯತ್ನಿಸಿದ ರವಿ ಸೇರಿದಂತೆ ನಾಲ್ವರ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಶೋಧ ಕೈಗೊಂಡಿದ್ದಾರೆ.
|
eesanje/url_46_203_3.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯದ ರೈತರಿಗೆ ಬಿಜೆಪಿ ಸಾಲು ಸಾಲು ಅನ್ಯಾಯ:ಸಿಎಂ ಟೀಕೆ
|
2 |
+
ಬೆಂಗಳೂರು, ಮಾ.18- ನೀರಾವರಿ ಯೋಜನೆಗಳಲ್ಲಿ ಅನ್ಯಾಯ, ಬಿಡುಗಡೆಯಾಗದ ಬರ ಪರಿಹಾರ, ನರೇಗಾ ಕೆಲಸದ ದಿನಗಳ ಹೆಚ್ಚಳಕ್ಕೆ ಸಿಗದ ಅನುಮತಿ ಹೀಗೆ ರಾಜ್ಯದ ರೈತರಿಗೆ ಬಿಜೆಪಿಯಿಂದ ಸಾಲು ಸಾಲು ಅನ್ಯಾಯವಾಗಿದೆ. ಹೀಗಿರುವಾಗ ರಾಜ್ಯದ ರೈತರು ಯಾಕೆ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ ಎಂದಿದ್ದಾರೆ.
|
3 |
+
ರೈತ ಚಳವಳಿಗಳ ತವರು ನೆಲ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಬಿ.ಎಸ್ ಯಡಿಯೂರಪ್ಪ ಅವರು ಹಿಂದೊಮ್ಮೆ ರೈತರ ಸಾಲ ಮನ್ನಾದ ಭರವಸೆ ನೀಡಿ ನಂತರ ಮುಖ್ಯಮಂತ್ರಿಯಾದ ಮೇಲೆ ನಮ್ಮ ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ ಎಂದು ಹೇಳಿದ್ದರು. ಹಾವೇರಿಯಲ್ಲಿ ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದರು. ಇಂದು ಅದೇ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ? ಎಂದು ಪ್ರಧಾನಿಯವರನ್ನು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
|
4 |
+
2018ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಬಿಜೆಪಿ ಅಕಾರಕ್ಕೆ ಬಂದ ನಂತರ ಮೊದಲ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 1 ಲಕ್ಷದ ವರೆಗಿನ ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದರು. ಅಧಿಕಾರ ಸಿಕ್ಕ ಮೇಲೆ ಕೊಟ್ಟ ಮಾತನ್ನು ಈಡೇರಿಸದೆ, ತಮಗೆ ದ್ರೋಹ ಬಗೆದ ಬಿಜೆಪಿಯನ್ನು ನಾಡಿನ ರೈತರು ಯಾಕೆ ಬೆಂಬಲಿಸಬೇಕು ಎಂದು ಪ್ರಶ್ನಿಸಿದ್ದಾರೆ.
|
5 |
+
ತೆಲಂಗಾಣ ರಾಜ್ಯಪಾಲೆ ತಮಿಳುಸಾಯಿ ಸೌಂದರರಾಜನ್ ರಾಜೀನಾಮೆ
|
6 |
+
ರಾಜ್ಯದಲ್ಲಿ ಬರ ಘೋಷಣೆ ಮಾಡಿ 6 ತಿಂಗಳುಗಳ ಕಳೆದಿದೆ. ರೂ.18,177 ಕೋಟಿ ಪರಿಹಾರದ ಹಣ ಬಿಡುಗಡೆಗೆ ಒತ್ತಾಯಿಸಿ ಹಲವು ಬಾರಿ ಪತ್ರ ಬರೆದಿದ್ದೇನೆ. ಖುದ್ದಾಗಿ ತಮ್ಮನ್ನು ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಆದರೂ ಈ ವರೆಗೆ ನಯಾಪೈಸೆ ಪರಿಹಾರದ ಹಣ ಬಿಡುಗಡೆ ಆಗಿಲ್ಲ. ರಾಜ್ಯದ ರೈತರ ಮೇಲೆ ಯಾಕಿಷ್ಟು ದ್ವೇಷ ಎಂದು ಕಿಡಿಕಾರಿದ್ದಾರೆ.
|
7 |
+
ಬರದಿಂದ ಜನರು ಗುಳೆ ಹೋಗುವುದನ್ನು ತಪ್ಪಿಸಲು ನರೇಗಾ ಯೋಜನೆಯಡಿ ಕೆಲಸದ ದಿನಗಳನ್ನು 100 ರಿಂದ 150ಕ್ಕೆ ಹೆಚ್ಚಳ ಮಾಡ ಬೇಕು ಎಂದು ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿದರೂ ಈ ವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ರೂ.5,300 ಕೋಟಿ ಅನುದಾನ ಘೋಷಿಸಿ ವರ್ಷಗಳೇ ಕಳೆದರೂ ಈ ವರೆಗೆ ನಯಾಪೈಸೆ ರಾಜ್ಯಕ್ಕೆ ಬಂದಿಲ್ಲ. ಮಹದಾಯಿ ಮತ್ತು ಮೇಕೆದಾಟು ಯೋಜನೆಗಳಿಗೆ ಕೇಂದ್ರದ ಅನುಮತಿ ಸಿಗದೆ ನೆನೆ���ುದಿಗೆ ಬಿದ್ದಿವೆ. ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ಸಂಕಷ್ಟಸೂತ್ರ ರಚನೆಗೆ ಮಧ್ಯಸ್ಥಿಕೆ ವಹಿಸದೆ ಕೇಂದ್ರ ಸರ್ಕಾರ ನಾಡಿನ ರೈತರನ್ನು ಕೈಬಿಟ್ಟಿದೆ. ರಾಜ್ಯದ ರೈತರಿಗೆ ಮಾತ್ರ ಯಾಕೆ ಈ ಸಾಲು ಸಾಲು ಅನ್ಯಾಯಗಳು ಎಂದು ಕೆಣಕಿದ್ದಾರೆ.
|
8 |
+
ದೇಶದ ಕೃಷಿ ಕ್ಷೇತ್ರವನ್ನು ಅದಾನಿ, ಅಂಬಾನಿಯಂತಹ ಉದ್ಯಮಿಗಳ ಕೈಗಿಡುವ ದುಷ್ಟ ಆಲೋಚನೆಯೊಂದಿಗೆನ ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ 3 ರೈತ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಜಾರಿ ಮಾಡಿತು. ಈ ಕಾಯ್ದೆಗಳನ್ನು ವಾಪಾಸು ಪಡೆಯುವಂತೆ ಹೋರಾಟ ಮಾಡುತ್ತಿದ್ದ 750ಕ್ಕೂ ಹೆಚ್ಚು ರೈತರು ಅನಾರೋಗ್ಯ, ಹವಾಮಾನ ವೈಪರಿತ್ಯ, ಪೊಲೀಸ್ ದೌರ್ಜನ್ಯಗಳಿಗೆ ಬಲಿಯಾದರು. ಇವರಿಗೆ ನ್ಯಾಯ ಕೊಡಿಸಬೇಕಾದವರು ನೀವಲ್ಲವೇ ನರೇಂದ್ರ ಮೋದಿ ಅವರೇ ಎಂದು ಕೆಂಡ ಕಾರಿದ್ದಾರೆ.
|
eesanje/url_46_203_4.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ನೀತಿ ಸಂಹಿತೆ: ಬೆಂಗಳೂರಿನಾದ್ಯಂತ ಕಟ್ಟೆಚ್ಚರ
|
2 |
+
ಬೆಂಗಳೂರು,ಮಾ.18- ಲೋಕಸಭೆ ಚುನಾವಣೆ ನಿಮಿತ್ತ ನೀತಿ ಸಂಹಿತೆ ಜಾರಿಯಾದ ಹಿನ್ನಲೆಯಲ್ಲಿ ನಗರ ಪೊಲೀಸರು ನಗರದಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಲಾ 3ರಂತೆ ನಗರಾದ್ಯಂತ 100ಕ್ಕೂ ಹೆಚ್ಚು ಚೆಕ್ಪೋಸ್ಟ್ಗಳನ್ನು ನಿರ್ಮಿಸಲಾಗುತ್ತಿದೆ. ನಗರದಲ್ಲಿ ಈಗಾಗಲೇ ಕೆಲವು ಕಡೆಗಳಲ್ಲಿ ಚೆಕ್ಪೋಸ್ಟ್ಗಳನ್ನು ತೆರೆದು ವಾಹನಗಳ ಪರಿಶೀಲನೆ ನಡೆಸಲಾಗುತ್ತಿದೆ.
|
3 |
+
ಉತ್ತರ ವಿಭಾಗದಲ್ಲಿ 20, ಪಶ್ಚಿಮ 22, ಕೇಂದ್ರ ವಿಭಾಗದಲ್ಲಿ 22 ಚೆಕ್ಪೋಸ್ಟ್ ಗಳನ್ನು ತೆರೆಯಲಾಗಿದ್ದು, ಈ ಚೆಕ್ಪೋಸ್ಟ್ಗಳಲ್ಲಿ ಅಕಾರಿ ಮತ್ತು ಸಿಬ್ಬಂದಿಗಳು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುತ್ತಾರೆ.ಚೆಕ್ಪೋಸ್ಟ್ಗಳಲ್ಲಿ ಪೊಲೀಸರ ಜೊತೆಗೆ ಬಿಬಿಎಂಪಿ, ಆರ್ಟಿಒ ಅಬಕಾರಿ, ಕಮರ್ಷಿಯಲ್ ಟಾಕ್ಸ್ ಅಧಿಕಾರಿಗಳು ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಗೂ ಸಿಬ್ಬಂದಿ ಇರುತ್ತಾರೆ.
|
4 |
+
ಚೆಕ್ಪೋಸ್ಟ್ ಮಾರ್ಗವಾಗಿ ಬರುವಂತಹ ಎಲ್ಲ ವಾಹನಗಳನ್ನು ಸಂಪೂರ್ಣ ಪರಿಶೀಲಿಸಲಾಗುತ್ತಿದ್ದು, ಅಕ್ರಮವಾಗಿ ಹಣ, ಮದ್ಯ, ದಾಖಲೆ ಇಲ್ಲದ ವಸ್ತುಗಳನ್ನು ಸಾಗಿಸುವುದು ಕಂಡುಬಂದರೆ ಅವುಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗುತ್ತದೆ. ಒಂದು ವೇಳೆ ಸಾಗಿಸುವ ಹಣ ಅಥವಾ ವಸ್ತುಗಳಿಗೆ ಸೂಕ್ತ ದಾಖಲೆ ಒದಗಿಸಿದರೆ ಅವುಗಳನ್ನು ಹಿಂದಿರುಗಿಸಲಾಗುತ್ತದೆ.
|
5 |
+
ಕ್ಷೇತ್ರ ಹಂಚಿಕೆ ಗೊಂದಲವಿಲ್ಲ : ಜಿ.ಟಿ.ದೇವೇಗೌಡ
|
6 |
+
ನೀತಿ ಸಂಹಿತೆ ಜಾರಿಯಾದ ಮೊದಲ ದಿನವಾದ ನಿನ್ನೆ ಅಶೋಕನಗರ ಪೊಲೀಸ್ ಠಾಣೆಯ ರೆಸಿಡೆನ್ಸಿ ರಸ್ತೆಯ ಚೆಕ್ಫೋಸ್ಟ್ನಲ್ಲಿ ವಾಹನಗಳ ತಪಾಸಣೆ ವೇಳೆ ಕಾರಿನಲ್ಲಿ 13.16 ಲಕ್ಷ ದಾಖಲೆ ಇಲ್ಲದ ಹಣ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಒಟ್ಟಾರೆ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಗರದೆಲ್ಲೆಡೆ ಖಾಕಿ ಕಣ್ಗಾವಲಿದ್ದು, ಮುಕ್ತ ಹಾಗೂ ಶಾಂತಿಯುತ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.
|
eesanje/url_46_203_5.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಕ್ಷೇತ್ರ ಹಂಚಿಕೆ ಗೊಂದಲವಿಲ್ಲ : ಜಿ.ಟಿ.ದೇವೇಗೌಡ
|
2 |
+
ಬೆಂಗಳೂರು,ಮಾ.18-ಲೋಕಸಭೆ ಚುನಾವಣೆಗೆ ಸಂಬಂಸಿದಂತೆ ಕ್ಷೇತ್ರಗಳ ಹಂಚಿಕೆ ಗೊಂದಲವಿಲ್ಲ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ಗೆ ಯಾವ ಯಾವ ಕ್ಷೇತ್ರಗಳನ್ನು ನೀಡಲಾಗಿದೆ ಎಂಬುದರ ಬಗ್ಗೆ ಸ್ಪಷ್ಟತೆ ಇದೆ ಎಂದರು.
|
3 |
+
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ನಮಗೆ ಬಿಟ್ಟುಕೊಡಿ ಎಂದು ನಾವು ಕೇಳಿಲ್ಲ. ಆದರೆ ಬಿಜೆಪಿಯವರೇ ತೆಗೆದುಕೊಳ್ಳಿ ಎಂದು ಹೇಳುತ್ತಿರುವುದಾಗಿ ಪತ್ರಿಕೆಗಳಲ್ಲಿ ವರದಿಯಾಗಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿಯಾಗಿ ಕ್ಷೇತ್ರ ಹಂಚಿಕೆ ಬಗ್ಗೆ ಮಾತುಕತೆ ನಡೆಸಿ ಬಂದಿದ್ದಾರೆ. ನಾವು ಅವರೊಂದಿಗೆ ಮಾತನಾಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.
|
4 |
+
ಎರಡು ಬ್ಯಾಂಕ್ಗಳಲ್ಲಿ ಒಂದೇ ಆಸ್ತಿಪತ್ರ ಅಡಮಾನವಿಟ್ಟು ಸಾಲ ಪಡೆದ ಚಾಲಾಕಿ ದಂಪತಿ
|
5 |
+
ಜೆಡಿಎಸ್ಗೆ ಮೂರು ಅಥವಾ ನಾಲ್ಕು ಕ್ಷೇತ್ರಗಳನ್ನು ಬಿಟ್ಟು ಕೊಡಿ ಎಂದು ಬಿಜೆಪಿಯವರನ್ನು ಕೇಳಿದ್ದೇವೆ ಹೊರತು ಎಂಟ್ಹತ್ತು ಕ್ಷೇತ್ರಗಳನ್ನು ಕೇಳಿಲ್ಲ. ಗೆಲ್ಲಲು ಅವಕಾಶ ಇರುವ ನಮ್ಮ ಪಕ್ಷದ ಶಕ್ತಿ ಇರುವ ಕ್ಷೇತ್ರಗಳನ್ನು ಮಾತ್ರ ಕೇಳಿದ್ದೇವೆ. ಬಿಜೆಪಿ ಅಭ್ಯರ್ಥಿ ಇರುವ ಕಡೆಯೂ ನಮ್ಮ ಪಕ್ಷದ ಮತಗಳು ಸಾಕಷ್ಟಿವೆ. ಅವುಗಳನ್ನು ಬಿಜೆಪಿ ಅಭ್ಯರ್ಥಿಗಳಿಗೆ ಹಾಕಿಸುತ್ತೇವೆ. ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು.
|
eesanje/url_46_203_6.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮಾಜಿ ಸಿಎಂ ಡಿ.ವಿ.ಸದಾನಂದಗೌಡರಿಗೆ `ಕೈ’ ಗಾಳ.!
|
2 |
+
ಬೆಂಗಳೂರು,ಮಾ.18- ಕೇಂದ್ರದ ಮಾಜಿ ಸಚಿವ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾಗಿ ಮತ್ತೊಮ್ಮೆ ಸ್ರ್ಪಧಿಸುವ ಇಂಗಿತದಲ್ಲಿದ್ದ ಡಿ.ವಿ.ಸದಾನಂದಗೌಡ ನಾಳೆ ಪತ್ರಿಕಾಗೋಷ್ಠಿ ಕರೆದಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ಕರೆದಿರುವ ಸದಾನಂದಗೌಡ, ತಮ್ಮ ಮುಂದಿನ ರಾಜಕೀಯ ನಿರ್ಧಾರದ ಬಗ್ಗೆ ಪ್ರಕಟಿಸುವ ಸಾಧ್ಯತೆ ಇದೆ.
|
3 |
+
ಇದರ ಬೆನ್ನಲ್ಲೇ ನನಗೆ ಕಾಂಗ್ರೆಸ್ ಸೇರುವಂತೆ ಕೆಲವು ನಾಯಕರು ಸಂಪರ್ಕಿಸಿರುವುದು ನಿಜ. ಈ ಬಗ್ಗೆ ಕುಟುಂಬದವರ ಜೊತೆ ನಾನು ಚರ್ಚಿಸಿ ತೀರ್ಮಾನಿಸಬೇಕೆಂದು ಡಿವಿಎಸ್ ಹೇಳಿರುವುದು ಬಿಜೆಪಿ ತೊರೆದು ಕೈನತ್ತ ಮುಖ ಮಾಡಿದ್ದರಾ ಎಂಬ ಅನುಮಾಗಳು ವ್ಯಕ್ತವಾಗಿದೆ. ನನ್ನನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡಿರುವುದು ನಿಜ. ಇನ್ನು ಕಾಂಗ್ರೆಸ್ ನಾಯಕರು ಚರ್ಚೆ ಮಾಡಿದ್ದರೂ ನಾನು ಯಾವುದೇ ನಿರ್ಧಾರವನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುವುದಿಲ್ಲ. ನನ್ನ ನಿರ್ಧಾರಗಳನ್ನು ನನ್ನ ಕುಟುಂಬದ ಸದಸ್ಯರ ಜತೆ ಚರ್ಚಿಸಬೇಕು. ನಂತರ, ನಾನು ಮುಂದಿನ ತೀರ್ಮಾನವನ್ನು ಬಹಿರಂಗವಾಗಿ ಹೇಳುತ್ತೇನೆ ಎಂದರು.
|
4 |
+
ನನ್ನ ಪಕ್ಷದ ಪ್ರಮುಖರೊಬ್ಬರು ನನ್ನ ಜೊತೆಗೆ ಸಮಾಲೋಚನೆ ಮಾಡಿದ್ದಾರೆ. ನಿನ್ನೆ ನಮ್ಮ ಮನೆಗೆ ಆಗಮಿಸಿ, ಮಾತುಕತೆ ನಡೆಸಿದ್ದಾರೆ. ಅವರು ಹೇಳಿರುವ ಮಾತನ್ನು ನಾನು ಈಗ ಹೇಳಲು ಆಗುವುದಿಲ್ಲ. ನಿಮಗೆ ಏನೇ ಸುದ್ದಿ ಬಂದರೂ ಅರ್ಧ ಘಂಟೆ, ಒಂದು ಘಂಟೆ ಮಾತ್ರ. ನಾಳೆ ಎಲ್ಲವನ್ನೂ ತಿಳಿಸುತ್ತೇನೆ ಎಂದು ಹೇಳಿದ್ದಾರೆ.
|
5 |
+
ನರೇಂದ್ರ ಮೋದಿ ಆಗಮನದ ಸಂದರ್ಭದಲ್ಲಿ ಕೆ.ಎಸ್.ಈಶ್ವರಪ್ಪರ ಬಂಡಾಯ ವಿಚಾರವಾಗಿ ಮಾತನಾಡಿದ ಡಿವಿಎಸ್, ನಾನು ಈಶ್ವರಪ್ಪರ ಬಳಿ ಮಾತನ್ನಾಡಿದ್ದೇನೆ. ನಾನು ಅವರಿಗೆ ಹೇಳಿದ್ದೆ. ಯಾರಿಗೆಲ್ಲಾ ಅನ್ಯಾಯ ಆಗಿದೆಯೋ, ಅವರೆಲ್ಲಾ ಒಂದುಗೂಡಿ ಹೈಕಮಾಂಡ್ ನಾಯಕರ ಬಳಿ ಹೋಗೋಣ ಎಂದಿದ್ದೆ. ಆದರೆ ಈಶ್ವರಪ್ಪನವರು ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ. ಅದು ಅವರ ನಿಲುವು. ಅವರ ನಿಲುವು ಬಗ್ಗೆ ನಾನೇನು ಹೇಳುವುದಿಲ್ಲ. ನಾನು ನಾಳೆ ನನ್ನ ನಿರ್ಧಾರ ಪ್ರಕಟ ಮಾಡುತ್ತೇನೆ ಎಂದು ಮಾಹಿತಿ ನೀಡಿದರು.
|
6 |
+
ಬೆಂಗಳೂರು ಉತ್ತರದಲ್ಲಿ ಶೇ.100 ನನ್ನ ಹೆಸರು ಮಾತ್ರ ಬಂತು. ದೆಹಲಿ ಹಾಗೂ ಸ್ಥಳೀಯವಾಗಿ ಒಂದಷ್ಟು ವಿದ್ಯಮಾನ ನಡೆದಿರುವುದು ನನ್ನ ಗಮನಕ್ಕೆ ಬಂದಿದೆ. ನಿಮಗೇ ಟಿಕೆಟ್ ಎಂದೇಳಿ ಕೊನೇ ಕ್ಷಣದಲ್ಲಿ ನನ್ನ ರಕ್ಷಣೆಗೆ ಬರಲಿಲ್ಲ ಎಂದು ಹೇಳಿದರು. ರಾಜ್ಯದಲ್ಲಿ ನನಗೆ ಆಗಿರುವ ಅನ್ಯಾಯದ ಬಗ್ಗೆ ಕೆಲವೊಂದು ಮನದಾಳದ ವಿಚಾರಗಳನ್ನು ಹೇಳಿಕೊಳ್ಳಬೇಕಿದೆ. ಅದಕ್ಕಾಗಿ ನಾಳೆ ಸುದ್ದಿಗೋಷ್ಠಿ ಕರೆಯುತ್ತೇನೆ. ನಾಳೆ ಯಾವ ನಿರ್ಣಯ ಎಂದು ಈಗಲೇ ಹೇಳಿಬಿಟ್ಟರೆ, ನಾಳೆಗೆ ಏನೂ ಉಳಿಯೊಲ್ಲ. ರಾಜಕೀಯದಲ್ಲಿ ಏರುಪ���ರು, ಮುಜುಗರ ಸಹಜ. ಆದರೆ, ತಿಳಿದೂ ತಿಳಿದು ಹೀಗೆ ಮಾಡಿರುವುದು ಬೇಜಾರಾಗಿದೆ ಎಂದು ಬೆಂಗಳೂರಿನಲ್ಲಿ ಸದಾನಂದಗೌಡ ಹೇಳಿದರು.
|
7 |
+
ಈ ಹಿಂದೆ ಬೆಂಗಳೂರು ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಸದಾನಂದಗೌಡರು ಕೆಲ ತಿಂಗಳ ಹಿಂದೆ ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳುವುದಾಗಿ ಘೋಷಣೆ ಮಾಡಿದ್ದರು. ಆದರೆ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಪುನಃ ಇದೇ ಕ್ಷೇತ್ರದಿಂದ ಮತ್ತೊಮ್ಮೆ ಸ್ರ್ಪಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದರು. ಆದರೆ ಬಿಜೆಪಿ ವರಿಷ್ಠರು ಈ ಕ್ಷೇತ್ರಕ್ಕೆ ಹಾಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದ್ದು, ಅವರಿಗೆ ಅಸಮಾಧಾನ ಉಂಟು ಮಾಡಿತ್ತು.
|
8 |
+
ಪ್ರಧಾನಿ ಮೋದಿ ಭಾಷಣವನ್ನು ಕನ್ನಡದಲ್ಲೇ ಕೇಳಿಸಲು ಮೊರೆ ಹೋದ ಬಿಜೆಪಿ
|
9 |
+
ಟಿಕೆಟ್ ಸಿಕ್ಕೇ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಸದಾನಂದ ಗೌಡ ಅವರು ಹೈಕಮಾಂಡ್ ನಿರ್ಧಾರಕ್ಕೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಸೌಜನ್ಯಕ್ಕಾದರೂ ವರಿಷ್ಠರು ನನ್ನ ಅಭಿಪ್ರಾಯ ಕೇಳಲಿಲ್ಲ ಎಂದು ಆಪ್ತರ ಬಳಿ ತಮ್ಮ ನೋವು ತೋಡಿಕೊಂಡಿದ್ದರು. ಇದೀಗ ಏಕಾಏಕಿ ಸದಾನಂದಗೌಡ ಅವರು ತಮ್ಮ ನಿಲುವು ಬದಲಾಯಿಸಿದ್ದಾರೆ. ಈ ಬೆಳವಣಿಗೆಗಳ ನಡುವೆ ಅವರನ್ನು ಕಾಂಗ್ರೆಸ್ಗೆ ಸೆಳೆಯಲು ಖುದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಖಾಡಕ್ಕೆ ಇಳಿದಿದ್ದಾರೆ ಎಂದು ತಿಳಿದುಬಂದಿದೆ.
|
10 |
+
ಒಂದು ವೇಳೆ ಡಿವಿಎಸ್ ಕಾಂಗ್ರೆಸ್ಗೆ ಸೇರ್ಪಡೆಯಾದರೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದಲೇ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಂಭವವಿದೆ. ಹೀಗಾಗಿ ಮಂಗಳವಾರ ನಡೆಯಲಿರುವ ಪತ್ರಿಕಾಗೋಷ್ಠಿ ಎಲ್ಲರ ಕುತೂಹಲವನ್ನು ಕೆರಳಿಸಿದೆ.
|
eesanje/url_46_203_7.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ
|
2 |
+
ಬೆಂಗಳೂರು, ಮಾ.18- ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದನ್ನುಪ್ರಶ್ನಿಸಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಮೂವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಸುಲೇಮಾನ್, ಶನವಾಜ್ ಮತ್ತು ರೋಹಿತ್ ಬಂಧಿತರು. ಉಳಿದವರಿಗಾಗಿ ಶೋಧ ಮುಂದುವರೆದಿದೆ.ನಗರ್ತಪೇಟೆಯ ಸಿದ್ದಣ್ಣ ಗಲ್ಲಿಯಲ್ಲಿ ಮುಖೇಶ್ ಎಂಬುವರು ಮೊಬೈಲ್ ಬಿಡಿ ಭಾಗಗಳ ಅಂಗಡಿ ಇಟ್ಟುಕೊಂಡಿದ್ದಾರೆ.
|
3 |
+
ಇಲ್ಲಿನ ಪ್ರಾರ್ಥನಾ ಮಂದಿರದ 200 ಮೀಟರ್ ದೂರದಲ್ಲಿ ಮುಖೇಶ್ ಅವರ ಅಂಗಡಿ ಇದೆ. ನಿನ್ನೆ ಸಂಜೆ 7.30ರ ಸುಮಾರಿನಲ್ಲಿ ತಮ್ಮ ಅಂಗಡಿಯಲ್ಲಿ ಹಿಂದಿ ಭಜನೆ ಹಾಡು ಹಾಕಿದ್ದರು. ಇದರಿಂದ ಕೋಪಗೊಂಡ ಅನ್ಯಕೋಮಿನ ಆರೇಳು ಮಂದಿಯ ಗುಂಪು ಏಕಾಏಕಿ ಅಂಗಡಿ ಬಳಿ ಹೋಗಿ ನಿಮ್ಮ ಅಂಗಡಿಯಲ್ಲಿ ಹಾಕಿರುವ ಹಾಡಿನಿಂದ ಪ್ರಾರ್ಥನೆ ನಡೆಸಲು ತೊಂದರೆಯಾಗುತ್ತಿದೆ ಹಾಡನ್ನು ನಿಲ್ಲಿಸುವಂತೆ ಹೇಳಿ ಜಗಳವಾಡಿದ್ದಾರೆ.ಮಾತಿಗೆ ಮಾತು ಬೆಳೆದಾಗ ಗಲಾಟೆ ವಿಕೋಪಕ್ಕೆ ತಿರುಗಿ ಮುಖೇಶ್ ಅವರನ್ನು ಅಂಗಡಿಯಿಂದ ಹೊರಗೆಳೆದು ಕೈ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಿ ಗಂಪು ಪರಾರಿಯಾಗಿದೆ.
|
4 |
+
ಪ್ರಧಾನಿ ಮೋದಿ ಭಾಷಣವನ್ನು ಕನ್ನಡದಲ್ಲೇ ಕೇಳಿಸಲು ಮೊರೆ ಹೋದ ಬಿಜೆಪಿ
|
5 |
+
ಘಟನೆಯನ್ನು ಖಂಡಿಸಿ ವರ್ತಕರು ಠಾಣೆ ಮುಂದೆ ಜಮಾಯಿಸಿ ಹಲ್ಲೆ ಮಾಡಿದ ಪುಂಡರನ್ನು ಆದಷ್ಟು ಬೇಗ ಬಂಧಿಸುವಂತೆ ಒತ್ತಾಯಿಸಿದರು. ಕಳೆದ 15 ದಿನಗಳಿಂದಲೂ ಅಂಗಡಿ ಬಳಿ ಬಂದು ಕೆಲ ಪುಂಡರು ಕಿರುಕುಳ ನೀಡುತ್ತಿದ್ದಾರೆಂದು ವರ್ತಕರು ಆರೋಪಿಸಿದ್ದಾರೆ.
|
6 |
+
ಸರ್ವ ಜನಾಂಗದ ಶಾಂತಿಯ ತೋಟ ಕರ್ನಾಟಕ@INCKarnatakaದ ಕೈಗೆ ಸಿಕ್ಕು ತಾಲಿಬಾನ್ ಆಗಿ ಬದಲಾಗುತ್ತಿದೆ.ಬೆಂಗಳೂರಿನ ಸಿದ್ದಣ್ಣ ಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಮೊಬೈಲ್ ಅಂಗಡಿಗೆ ನುಗ್ಗಿದ ಮತಾಂಧ ಕಿಡಿಗೇಡಿಗಳು ಮುಖೇಶ್ ಎಂಬ ಹಿಂದೂ ಯುವಕನ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿ ಓಡಿ ಹೋಗಿದ್ದಾರೆ.ಅಂಗಡಿ ಮಾಲೀಕ ಮುಖೇಶ್ ಸಂಜೆ ಪೂಜೆ…../XYSDTZN0GT
|
7 |
+
ಹಲ್ಲೆಗೊಳಗಾದ ಮುಖೇಶ್ ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಂಗಡಿ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ಹಲ್ಲೆ ನಡೆಸಿದ ಮೂವರನ್ನು ಬಂಸಿ ಉಳಿದವರಿಗಾಗಿ ಶೋಧ ನಡೆಸುತ್ತಿದ್ದಾರೆ.
|
eesanje/url_46_203_8.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಎರಡು ಬ್ಯಾಂಕ್ಗಳಲ್ಲಿ ಒಂದೇ ಆಸ್ತಿಪತ್ರ ಅಡಮಾನವಿಟ್ಟು ಸಾಲ ಪಡೆದ ಚಾಲಾಕಿ ದಂಪತಿ
|
2 |
+
ಮೈಸೂರು, ಮಾ. 18- ಒಂದೇ ಆಸ್ತಿಯನ್ನು ಎರಡು ಬ್ಯಾಂಕ್ ಗಳಲ್ಲಿ ಅಡಮಾನವಿಟ್ಟ ಚಾಲಾಕಿ ದಂಪತಿ ವಿರುದ್ಧ ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಸರಸ್ವತಿಪುರಂ ಬ್ರಾಂಚ್ ನಲ್ಲಿ 49.99 ಲಕ್ಷ ಸಾಲ ಪಡೆದು ಅದೇ ದಾಖಲಾತಿಯನ್ನ ತಿದ್ದುಪಡಿ ಮಾಡಿ ಬೆಂಗಳೂರಿನ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ನಲ್ಲೂ ಸಾಲ ಪಡೆದು ವಂಚಿಸಿರುವ ಆರೋಪದಡಿ ಪ್ರಕರಣ ದಾಖಲಾಗಿದೆ.
|
3 |
+
ಮೈಸೂರಿನ ಜೆಪಿ ನಗರ ನಿವಾಸಿಗಳಾದ ನಿರಂಜನ್ ಹಾಗೂ ನಂದಿನಿ ದಂಪತಿ ವಿರುದ್ದ ಚೀಟಿಂಗ್ ಪ್ರಕರಣ ದಾಖಲಾಗಿದೆ. ನಿರಂಜನ್ ಹಾಗೂ ನಂದಿನಿ ರವರಿಗೆ ಸೇರಿದ ಆಸ್ತಿಯ ಮೂಲ ದಾಖಲಾತಿಗಳನ್ನ ಸರಸ್ವತಿಪುರಂ ಬ್ರಾಂಚ್ ನ ಬ್ಯಾಂಕ್ ಆಫ್ ಬರೋಡದಲ್ಲಿ ಅಡಮಾನವಿಟ್ಟು 2016 ರಲ್ಲಿ 49.99 ಲಕ್ಷ ಸಾಲ ಪಡೆದಿದ್ದಾರೆ.
|
4 |
+
ದಕ್ಷಿಣ ಕನ್ನಡದಲ್ಲಿ ಶುರುವಾದ ನಕ್ಸಲ್ ಚಟುವಟಿಕೆ
|
5 |
+
ಸಾಲ ಪಡೆದು 8 ವರ್ಷಗಳಾದರೂ ಹಣ ಮರುಪಾವತಿಸಿಲ್ಲ. ಸಾಲದ ಹಣ ಬಡ್ಡಿ ಸೇರಿ 79,71,306 ರೂ. ಪಾವತಿಸಬೇಕಿರುತ್ತದೆ. ಈ ಮಧ್ಯೆ ಬೆಂಗಳೂರಿನ ಬನಶಂಕರಿ ಬಡಾವಣೆಯಲ್ಲಿರುವ ಸುರಭಿ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ನಲ್ಲೂ ಸಹ ಇದೇ ದಾಖಲಾತಿಗಳನ್ನ ತಿದ್ದುಪಡಿ ಮಾಡಿ ಸಾಲ ಪಡೆದಿರುವುದು ಬ್ಯಾಂಕ್ ಆಫ್ ಬರೋಡಾ ವ್ಯವಸ್ಥಾಪಕರ ಗಮನಕ್ಕೆ ಬಂದಿದೆ. ಅಲ್ಲದೆ ಈ ಬಗ್ಗೆ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ನವರೂ ಸಹ ಪತ್ರ ವ್ಯವಹಾರ ಮಾಡಿ ದಂಪತಿಯ ವಂಚನೆ ಬಯಲಿಗೆ ತಂದಿದ್ದಾರೆ.
|
6 |
+
ಈ ಸಂಬಂಧ ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕ ಎಂ.ಯೋಗೇಶ್ ರವರು ದಂಪತಿ ವಿರುದ್ದ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ.
|
eesanje/url_46_203_9.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಪ್ರಧಾನಿ ಮೋದಿ ಭಾಷಣವನ್ನು ಕನ್ನಡದಲ್ಲೇ ಕೇಳಿಸಲು ಮೊರೆ ಹೋದ ಬಿಜೆಪಿ
|
2 |
+
ಬೆಂಗಳೂರು,ಮಾ.18- ಲೋಕಸಭಾ ಚುನಾವಣಾ ಪ್ರಚಾರ ದಲ್ಲಿ ಬಿಜೆಪಿಯು ತಮ್ಮ ರಾಷ್ಟ್ರೀಯ ನಾಯಕರು ಸಾಮಾನ್ಯವಾಗಿ ಹಿಂದಿಯಲ್ಲಿ ಮಾಡುವ ಭಾಷಣಗಳನ್ನು ಇತರ ಭಾರತೀಯ ಭಾಷೆಗಳಿಗೆ ಭಾಷಾಂತರಿಸಲು ಕೃತಕ ಬುದ್ದಿಮತ್ತೆ(ಎಐ) ಆಧರಿತ ತಂತ್ರಜ್ಞಾನವನ್ನು ಬಳಸುತ್ತಿದೆ.
|
3 |
+
ಬಿಜೆಪಿ ಈಗಾಗಲೇ ರೆಕಾರ್ಡ್ ಮಾಡಿದ ಭಾಷಣಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಪ್ರಸಾರ ಮಾಡಲು ಪ್ರಾರಂಭಿಸಿದ್ದು, ಶೀಘ್ರದಲ್ಲೇ ಭಾಷಣ ಮಾಡುವ ಸಮಯದಲ್ಲೇ ಇತರ ಭಾಷೆಗಳಿಗೆ ಅನುವಾದಿಸಲು ಮುಂದಾಗಿದೆ.
|
4 |
+
ಮೂರು ತಿಂಗಳ ಹಿಂದೆ, ವಾರಣಾಸಿಯಲ್ಲಿ ಕಾಶಿ ತಮಿಳು ಸಂಗಮಂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರಮೋದಿ ಭಾಗವಹಿಸಿದ್ದರು. ಈ ವೇಳೆ ಭಾರತ ಸರ್ಕಾರ ಅಭಿವೃದ್ಧಿಪಡಿಸಿದ ಆ್ಯಪ್ ಭಾಷಿಣಿ ಮೂಲಕ ಮೋದಿಯವರ ಹಿಂದಿ ಭಾಷಣವನ್ನು ತಮಿಳಿಗೆ ನೇರ ಭಾಷಾಂತರಿಸಲು ಪ್ರಯತ್ನಿಸಲಾಯಿತು. ಪ್ರೇಕ್ಷಕರು ತಮ್ಮ ಸ್ಮಾರ್ಟ್ಫೋನ್ಗಳನ್ನು ಬಳಸಿಕೊಂಡು ತಮಿಳಿನಲ್ಲಿ ಅದನ್ನು ಕೇಳಲು ಸಾಧ್ಯವಾಯಿತು. ಆದರೆ ಕೆಲವು ತಾಂತ್ರಿಕ ದೋಷಗಳು ಕಂಡುಬಂದಿತ್ತು ಮತ್ತು ಭಾವನಾತ್ಮಕ ವಿಚಾರ ಕಣ್ಮರೆಯಾಗಿತ್ತು.
|
5 |
+
ಆನ್ಲೈನ್ ಹಣ ವರ್ಗಾವಣೆ ಮೇಲೆ ಚು.ಆಯೋಗ ಹದ್ದಿನ ಕಣ್ಣು
|
6 |
+
ಇದೀಗ ಅವರು ಅದರ ಮೇಲೆ ಕೆಲಸ ಮಾಡುತ್ತಿದ್ದಾರೆ. ಶೀಘ್ರದಲ್ಲೇ ಪ್ರೇಕ್ಷಕರು ಯಾವುದೇ ಭಾರತೀಯ ಭಾಷೆಯಲ್ಲಿ ನೇರವಾಗಿ ಭಾಷಣಗಳನ್ನು ಕೇಳಲು ಸಾಧ್ಯವಾಗುತ್ತದೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ. ಈ ಪ್ರಯೋಗ ಈಗಾಗಲೇ ಪ್ರಾರಂಭವಾಗಿದೆ ಮತ್ತು ಸೀಮಿತ ಪ್ರೇಕ್ಷಕರಿಗೆ ಪ್ರಾಯೋಗಿಕ ಆಧಾರದ ಮೇಲೆ ಮಾಡಲಾಗಿದೆ. ಈಗಾಗಲೇ, ಪಕ್ಷದ ಸಾಮಾಜಿಕ ಮಾಧ್ಯಮ ಮತ್ತು ಸಂವಹನ ತಂಡಗಳು ಹೆಚ್ಚಿನ ಸಂಖ್ಯೆಯ ಜನರನ್ನು ತಲುಪಲು ಎಐಅನ್ನು ವ್ಯಾಪಕವಾಗಿ ಬಳಸುತ್ತಿವೆ. ಇತರ ಭಾಷೆಗಳಲ್ಲಿ ಮಾತನಾಡುವ ಮೋದಿ ಮತ್ತು ಪಕ್ಷದ ಇತರ ನಾಯಕರ ಕೆಲವು ಕ್ಲಿಪ್ಪಿಂಗ್ಗಳನ್ನು ಆಯ್ಕೆ ಮಾಡುತ್ತಿದ್ದೇವೆ. ಬಳಸಿ, ನಾವು ಅದೇ ವಿಡಿಯೋಗೆ ಕನ್ನಡದಲ್ಲಿ ಧ್ವನಿಯನ್ನು ನೀಡುತ್ತೇವೆ. ಕ್ಲಿಪ್ಗಳನ್ನು ನಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್ಗಳಲ್ಲಿ ಬಳಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
|
7 |
+
ಕರ್ನಾಟಕದಲ್ಲಿ ಬಿಜೆಪಿ 32,835 ವಾಟ್ಸಾಪ್ ಗುಂಪುಗಳನ್ನು ಹೊಂದಿದೆ ಮತ್ತು ಅದರ ಬ್ರಾಡ್ಕಾಸ್ಟ್ ಪಟ್ಟಿಯಲ್ಲಿ 3.58 ಲಕ್ಷ ಜನರನ್ನು ಹೊಂದಿದೆ. ನಾವು ವಾಟ್ಸಾಪ್ ಗ್ರೂಪ್ಗಳಲ್ಲಿ ಕನ್ನಡದಲ್ಲಿ (ವಾಯ್ಸ್ಓವರ್ ಮತ್ತು ಪಠ್ಯ) ಭಾಷಣಗಳನ್ನು ಹೊಂದಿರುವ ಎಐ ಆಧರಿತ ವಿಡಿಯೋಗಳನ್ನು ಹಂಚಿಕೊಳ್ಳುತ್ತೇವೆ ಮತ್ತು ಅವುಗಳನ್ನು ಪ್ರಸಾರ ಮಾಡುತ್ತೇವೆ.
|
8 |
+
ಕೆಲವೇ ಸೆಕೆಂಡುಗಳಲ್ಲಿ ನಾವು ಹಲವಾರು ಜನರನ್ನು ತಲುಪುತ್ತೇವೆ. ಅವರು ಇತರ ಗುಂಪುಗಳಲ್ಲಿ ಹಂಚಿಕೊಳ್ಳಲು ಪ್ರಾರಂಭಿಸುತ್ತಾರೆ. ಈ ಮೂಲಕ ನಾವು ಮೋದಿ, ಕೇಂದ್ರ ಗೃಹ ಸಚಿ�� ಅಮಿತ್ ಶಾ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಥವಾ ಕನ್ನಡೇತರ ಭಾಷೆಗಳಲ್ಲಿ ಮಾತನಾಡುವ ಯಾವುದೇ ನಾಯಕರ ಭಾಷಣಗಳನ್ನು ಕನ್ನಡ ಮಾತನಾಡುವ ಜನರಿಗೆ ತಲುಪಿಸಬಹುದು ಎಂದು ಮೂಲಗಳು ತಿಳಿಸಿವೆ.
|
eesanje/url_46_204_1.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ
|
2 |
+
ಬೆಂಗಳೂರು,ಮಾ.18- ಮುಂದಿನ ಎರಡು ಮೂರು ದಿನಗಳಲ್ಲಿ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಮಲೆನಾಡು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಳೆದವಾರ ಚಿಕ್ಕಮಗಳೂರು ಜಿಲ್ಲೆಯ ಹಲವಡೆ ಮಳೆಯಾಗಿತ್ತು. ನಿನ್ನೆ ಬೀದರ್ ಮತ್ತು ಕಲಬುರಗಿಯಲ್ಲಿ ಮಳೆಯಾಗಿದ್ದು, ಮುಂದಿನ 2-3 ದಿನಗಳಲ್ಲಿ ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶದಲ್ಲಿ ಸಾಧಾರಣವಾಗಿ ಮಳೆಯಾಗಲಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ.
|
3 |
+
ತಮಿಳುನಾಡಿನಲ್ಲಿ ಕಾಣಿಸಿಕೊಂಡಿರುವ ಟ್ರಪ್ (ವಾತಾವರಣದಲ್ಲಿ ಗಾಳಿಯ ಚಲನೆಯಿಂದ ಉಂಟಾಗುವ ಪರಿಣಾಮ) ಕರ್ನಾಟಕದ ಮೇಲೂ ಬೀರಲಿದ್ದು, ದಕ್ಷಿಣ ಒಳನಾಡು ಮತ್ತು ಮಲೆನಾಡು ಇತರ ಪ್ರದೇಶಗಳಲ್ಲಿ ಮಳೆಯಾಗುವ ಸಂಭವ ಇದೆ.
|
4 |
+
28 ಸ್ಥಾನಗಳನ್ನು ಗೆಲ್ಲುವಲ್ಲಿ ವಿಜಯೇಂದ್ರ ಯಶಸ್ವಿಯಾಗಲಿ: ಈಶ್ವರಪ್ಪ
|
5 |
+
ಸದ್ಯ ಈ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು, ಇನ್ನೆರಡು ದಿನದಲ್ಲಿ ಮಳೆ ನಿರೀಕ್ಷಿಸಲಾಗಿದೆ. ಈ ಬಾರಿ ರಾಜ್ಯದಲ್ಲಿ ಬೇಸಿಗೆಯಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆಯಿದೆ.ಮಾರ್ಚ್ನಿಂದ ಮೇ ವರೆಗೆ ರಾಜ್ಯದ ಉತ್ತರ ಒಳಭಾಗಗಲ್ಲಿ ತಾಪಮಾನ ಹೆಚ್ಚಾಗಿರುತ್ತದೆ. ತಿಂಗಳಾಂತ್ಯದಲ್ಲಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಭಾಗಗಳಲ್ಲಿ ಸುಡುವ ಶಾಖದಿಂದ ಜನರು ನಿರಾಳವಾಗಬಹುದು.
|
eesanje/url_46_204_10.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಕರ್ನಾಟಕದಲ್ಲಿ 2 ಹಂತದಲ್ಲಿ ಲೋಕಸಭಾ ಚುನಾವಣೆ : ಇಲ್ಲಿದೆ ಡೀಟೇಲ್ಸ್
|
2 |
+
ನವದೆಹಲಿ,ಮಾ.16-ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಕಳೆದ ಬಾರಿಯಂತೆ ಈ ಬಾರಿಯೂ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.ಏ.26ರಂದು 14 ಲೋಕಸಭಾ ಕ್ಷೇತ್ರಗಳಿಗೆ ಹಾಗೂ ಮೇ 7ರಂದು ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆದು, ಜೂನ್4ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
|
3 |
+
ಮೊದಲ ಹಂತ 14 ಲೋಕಸಭಾ ಕ್ಷೇತ್ರಗಳಿಗೆ ಮಾ.28ರಂದು ಅಧಿಸೂಚನೆ ಹೊರಡಲಿದ್ದು, ಮಾ.28ರಿಂದ ಏಪ್ರಿಲ್ 4 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಮೇ 5ರಂದು ನಾಮಪತ್ರಗಳ ಪರಿಶೀಲನೆ ನಡೆದು, ಏ.8ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಎರಡನೇ ಹಂತದ ಮತದಾನ ನಡೆಯಲಿರುವ ಮೇ 7ರ 14 ಲೋಕಸಭಾ ಕ್ಷೇತ್ರಗಳಿಗೆ ಏ.12ರಂದು ಅಸೂಚನೆ ಹೊರಡಲಿದೆ. ಏ.12ರಿಂದ ಏ.19ರವರೆಗೆ ನಾಮಪತ್ರ ಸಲ್ಲಿಸಬಹುದು.
|
4 |
+
ಏ.20ರಂದು ನಾಮಪತ್ರಗಳ ಪರಿಶೀಲನೆ, ಏ.22ಕ್ಕೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಮೇ 7ಕ್ಕೆ 2ನೇ ಹಂತದ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಈ ಬಾರಿ ಒಟ್ಟು – 5,37,85,815 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ನಡೆಸಲು ಆಯೋಗ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ರಾಜೀವ್ಕುಮಾರ್ ತಿಳಿಸಿದರು.
|
5 |
+
ಏ.26ರಂದು ಮೊದಲ ಹಂತದ ಮತದಾನವು ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು , ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
|
6 |
+
ಮೇ 7ರಂದು ಎರಡನೇ ಹಂತದ ಮತದಾನವು ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ರಾಯಚೂರು, ಬೀದರ್, ಕೊಪ್ಪಳ,ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಿಗೆ ನಡೆಯಲಿದೆ.
|
7 |
+
ರಾಜ್ಯದ ಒಟ್ಟು ಮತದಾರರು 5,37,85,815ಪುರುಷ -2,69,33,750ಮಹಿಳಾ – 2,68,47,145ಇತರೆ ಮತದಾರರು – 4,920ಒಟ್ಟು ಮತಗಟ್ಟೆಗಳ ಸಂಖ್ಯೆ-58,834
|
eesanje/url_46_204_11.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮದರಸಾದಿಂದ ಮಾನವ ಕಳ್ಳ ಸಾಗಣೆ..!
|
2 |
+
ಬೆಂಗಳೂರು,ಮಾ.16-ಸಂಪಿಗೆಹಳ್ಳಿಯ ಅಶ್ವಥನಗರದ ಮದರಸಾ ಮೇಲೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ದಾಳಿ ಮಾಡಿ ನೀಡಿರುವ ದೂರನ್ನು ಮಕ್ಕಳ ರಕ್ಷಣಾ ನಿರ್ದೇಶನಾಲಯ(ಸಿಡಬ್ಲ್ಯುಸಿ)ಕ್ಕೆ ವರ್ಗಾಯಿಸಿದ್ದು, ಅವರು ನೀಡುವ ವರದಿ ಆಧರಿಸಿ ಕ್ರಮ ಕೈಗೊಳ್ಳುವುದಾಗಿ ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮಿಪ್ರಸಾದ್ ತಿಳಿಸಿದ್ದಾರೆ.
|
3 |
+
ಈ ಸಂಜೆಯೊಂದಿಗೆ ಮಾತನಾಡಿದ ಅವರು, ಈ ದೂರಿನ ಬಗ್ಗೆ ಪರಿಶೀಲನೆ ನಡೆಸಿ ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ತನಿಖೆ ನಡೆಸುವುದಾಗಿ ಹೇಳಿದರು. ಮಾನವ ಕಳ್ಳಸಾಗಾಣೆ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನಲೆಯಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಪ್ರಿಯಾಂಕ್ ಕಂಗೂನ್ ಅವರು ಸಂಪಿಗೆಹಳ್ಳಿ ಸಮೀಪದ ಅಮರಜ್ಯೋತಿ ಲೇಔಟ್ನ ಅಶ್ವಥನಗರದಲ್ಲಿರುವ ಮದರಸಾ ಮೇಲೆ ನಿನ್ನೆ ದಾಳಿ ಮಾಡಿದ್ದಾರೆ.
|
4 |
+
ಆ ಸಂದರ್ಭದಲ್ಲಿ 20 ಬಾಲಕಿಯರು ಮದರಸಾದಲ್ಲಿ ಪತ್ತೆಯಾಗಿದ್ದಾರೆ. ದಾಳಿ ವೇಳೆ ಕೆಲವು ಗೂಂಡಾಗಳನ್ನು ಕರೆಸಿ ಧಮ್ಕಿ ಹಾಕಲಾಗಿದೆ. ಪೊಲೀಸರ ಮಧ್ಯಪ್ರವೇಶದಿಂದ ಯಾವುದೇ ಗಲಾಟೆ ನಡೆದಿಲ್ಲ. ಮದರಸಾದಲ್ಲಿರುವ ಬಾಲಕಿಯರನ್ನು ಬೆಳೆಸಿ ಗಲ್ ರಾಷ್ಟ್ರಗಳಿಗೆ ಮಾನವ ಕಳ್ಳಸಾಗಾಣೆ ಮಾಡಲಾಗುತ್ತಿದೆ ಎಂಬ ದೂರು ಕೇಳಿಬಂದಿದೆ.
|
5 |
+
ಮದರಸಾದಲ್ಲಿದ್ದ ಈ ಮಕ್ಕಳಿಗೆ ಸೂಕ್ತ ಶಿಕ್ಷಣ ನೀಡದೆ ಧಾರ್ಮಿಕ ಶಿಕ್ಷಣ ನೀಡುತ್ತಿದುದು ಗೊತ್ತಾಗಿದೆ. ಯಾವುದೇ ಲೈಸನ್ಸ್ ಇಲ್ಲದೆ ಮದರಸಾ ನಡೆಸುತ್ತಿದ್ದಾರೆ ಎಂಬ ಆರೋಪ ಸಹ ಇದೆ. ಮದರಸಾದಲ್ಲಿದ್ದವರ ಪೈಕಿ ಕೆಲವರು ಅನಾಥರಾಗಿದ್ದರೆ ಇನ್ನು ಕೆಲವು ಬಾಲಕಿಯರು ಪೊಷಕರಿದ್ದು ಅನಾಥರಾಗಿ ಇಲ್ಲಿ ಬೆಳೆಯುತ್ತಿರುವ ವಿಷಯ ತಿಳಿದು ಪ್ರಿಯಾಂಕ್ ಕಂಗೂನ್ ಅವರ ನೇತೃತ್ವದ ತಂಡ ದಾಳಿ ಮಾಡಿದೆ.
|
6 |
+
ದಾಳಿ ಸಂದರ್ಭದಲ್ಲಿ ಆಯೋಗದ ಮಹಿಳಾ ಆಪ್ತ ಸಮಾಲೋಚಕಿಯರು ಬಾಲಕಿಯರ ಜೊತೆ ಮಾತನಾಡಿದಾಗ ಅನಾಥ ಆಶ್ರಮದ ಮುಖ್ಯಸ್ಥೆ ಸಲ್ಮಾ ಎಂಬುವರು ಕುವೈತ್ನಲ್ಲಿರುವ ಯುವಕರ ಜೊತೆ ಮದುವೆ ಮಾಡಿಸಲು ನಮ್ಮನ್ನು ಬೆಳೆಸಿ ಅಲ್ಲಿಗೆ ಕಳುಹಿಸುತ್ತಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಮಾನವ ಕಳ್ಳಸಾಗಾಣೆದಾರರ ಜೊತೆ ಈ ಮದರಸಾ ನಂಟು ಹೊಂದಿರುವ ಶಂಕೆ ವ್ಯಕ್ತವಾಗಿದೆ.
|
7 |
+
ಕಂಗೂನ್ ಟ್ವೀಟ್:
|
8 |
+
ದಾಳಿಯ ಬಗ್ಗೆ ಎಕ್ಸ್ನಲ್ಲಿ ಪ್ರಿಯಾಂಕ್ ಕಂಗೂನ್ ಅವರು ಟ್ವೀಟ್ ಮಾಡಿದ್ದು, ಮದರಸಾದ ಬಾಲಕಿಯರನ್ನು ಸಿಡಬ್ಲ್ಯಡಿಸಿ ಮುಂದೆ ಹಾಜರುಪಡಿಸಲು ಮುಂದಾದಾಗ ಸಲ್ಮಾ ಎಂಬ ಮಹಿಳೆ ಮತ್ತು ಶಮೀರ್ ಎಂಬಾತ ಗೂಂಡಾಗಳನ್ನು ಕರೆಸಿ ಜಗಳಕ್ಕೆ ಯತ್ನಿಸಿದ್ದು, ಪೊಲೀಸರ ಮಧ್ಯಪ್ರವೇಶದಿಂದ ಗೂಂಡಾಗಳನ್ನು ನಿಯಂತ್ರಿಸಲಾಗಿದೆ.
|
9 |
+
ಪೊಲೀಸರ ಸಲಹೆ ಮೇರೆಗೆ ತಮ್ಮ ಜೊತೆಯಲ್ಲಿದ್ದ ಮಹಿಳಾ ಅಧಿಕಾರಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಠಾಣೆಗೆ ಬರಲಾಯಿತು ಎಂದು ಅವರು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
|
eesanje/url_46_204_12.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಮೋಸದಿಂದ ತಂದೆಯ ಸ್ವತ್ತನ್ನು ಪಡೆದ ಸಹೋದರಿ ಸೇರಿ ನಾಲ್ವರ ವಿರುದ್ಧ ಕೇಸ್
|
2 |
+
ಬೆಂಗಳೂರು,ಮಾ.16-ತಂದೆಗೆ ಸೇರಿದ ಎರಡು ಕಂಪೆನಿಗಳ ಸ್ವತ್ತನ್ನು ಮೋಸ ಮಾಡಿ ಪಡೆದುಕೊಂಡು ತಂದೆಯ ಅನಾರೋಗ್ಯದ ನೆಪವೊಡ್ಡಿ ಅಕ್ರಮ ಬಂಧನದಲ್ಲಿಟ್ಟುಕೊಂಡಿರುವ ಸಹೋದರಿ ಸೇರಿದಂತೆ ನಾಲ್ವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳ ಬೇಕೆಂದು ಭರತ್ರಾಜ್ ಅವರು ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
|
3 |
+
ಭರತ್ರಾಜ್ ಅವರ ತಂದೆವೆಂಕಟಪ್ಪ ಲಕ್ಷ್ಮೀ ನಾರಾ ಯಣ್ ಎಂಬುವವರು ನಾರಿಮನ್ ಶೆಲ್ಟರ್ ಪ್ರೈವೇಟ್ ಲಿಮಿಟೆಡ್ ಮತ್ತು ನವ ನಾರಿಮನ್ ಎಂಬ ಎರಡು ಕಂಪೆನಿ ತೆರೆದಿದ್ದು, ಡೈರೆಕ್ಟರ್-ಛೇರ್ಮನ್ ಆಗಿರುತ್ತಾರೆ.ಈ ನಡುವೆ ವೆಂಕಟಪ್ಪ ಅವರು ಅನಾರೋಗ್ಯದಿಂದಾಗಿ ಹಾಸಿಗೆ ಹಿಡಿದಿದ್ದು, ಕಂಪೆನಿ ರಕ್ಷಣೆ ಮಾಡಲು ಭರತ್ರಾಜ್ ಅವರಿಗೆ ಎಂಡಿ ಹಾಗೂ ಡೈರೆಕ್ಟರ್ ಆಗಿ ನೇಮಿಸಿದ್ದು, ಇವರು ಕಂಪೆನಿಗಳ ಹಣಕಾಸಿನ ಬಗ್ಗೆ ಮಾಹಿತಿ ಪಡೆದು ಪರಿಶೀಲಿಸಿದ್ದಾರೆ.
|
4 |
+
ಆ ಸಂದರ್ಭದಲ್ಲಿ ಕಂಪೆನಿಯ ಚೀಫ್ ಅಕೌಂಟೆಂಟ್ ಚೌಡರೆಡ್ಡಿ ಮತ್ತು ಆಟಿಡರ್ ಮೋಹನ್ ಮೋಸದಿಂದ 10 ರಿಂದ 15 ಕೋಟಿ ರೂ.ಗಳ ಸುಳ್ಳು ಲೆಕ್ಕ ನೀಡಿ ಮೋಸ ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಭರತ್ರಾಜ್ ಅವರು ದೂರು ನೀಡಿದ್ದಾರೆ.ಅಲ್ಲದೆ, ತಂದೆ ವೆಂಕಟಪ್ಪ ಅವರ ಸಹಿಯನ್ನು ನಕಲಿ ಮಾಡಿ ಶೇರ್ಗಳನ್ನು ಸಹೋದರಿ ತೇಜವತಿ ವಿಜಯಲಕ್ಷ್ಮಿ ನಾರಾಯಣ್ ಹಾಗೂ ಪ್ರೇಮ ಜವರೇಗೌಡ ಅವರ ಹೆಸರಿಗೆ ವರ್ಗಾವಣೆ ಮಾಡಿಕೊಂಡಿರುತ್ತಾರೆ.
|
5 |
+
ಸಹೋದರಿ ತೇಜವತಿ ಅವರು ತಮ್ಮ ತಂದೆಯನ್ನು ಅಕ್ರಮವಾಗಿ ಬಂಧನದಲ್ಲಿಟ್ಟುಕೊಂಡಿದ್ದು, ತಾವು ಭೇಟಿಯಾಗಲು ಬಿಡದೆ ಬೆದರಿಕೆ ಹಾಕಿದ್ದಲ್ಲದೆ ಯಾವುದೋ ಔಷಗಳನ್ನು ಅವರಿಗೆ ಕೊಟ್ಟು ಅವರ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ತೊಂದರೆ ಉಂಟುಮಾಡಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಸಹೋದರಿ ತೇಜವತಿ, ಪ್ರೇಮಾ ಹಾಗೂ ಚೌಡರೆಡ್ಡಿ ಮತ್ತು ಮೋಹನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಭರತ್ರಾಜ್ ಅವರು ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
|
eesanje/url_46_204_2.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
28 ಸ್ಥಾನಗಳನ್ನು ಗೆಲ್ಲುವಲ್ಲಿ ವಿಜಯೇಂದ್ರ ಯಶಸ್ವಿಯಾಗಲಿ: ಈಶ್ವರಪ್ಪ
|
2 |
+
ಶಿವಮೊಗ್ಗ,ಮಾ.18- ಮುಂಬರುವ ಲೋಕಸಭೆ ಚುನಾವಣೆಯಲ್ಲಿ 28 ಸ್ಥಾನಗಳನ್ನು ಬಿಜೆಪಿ ಗೆಲ್ಲುವಲ್ಲಿ ವಿಜಯೇಂದ್ರ ಯಶಸ್ವಿಯಾಗಲಿ ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಹಾರೈಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ಪ್ರಪಂಚ ಭಾರತದ ಲೋಕಸಭಾ ಚುನಾವಣೆಯನ್ನು ಎದುರು ನೋಡುತ್ತಿದೆ. ನಮ್ಮ ದೇಶದ ಪ್ರತಿ ಹಳ್ಳಿಯ ಜನ ಮೋದಿ ಮೋದಿ ಎನ್ನುತ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಾವು 25 ಸ್ಥಾನ ಗೆದ್ದಿದ್ದೇವೆ. ಈ ಬಾರಿ 28ಕ್ಕೆ 28 ಸ್ಥಾನ ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
|
3 |
+
ಕಾಂಗ್ರೆಸ್ನವರು ದೇಶದಲ್ಲಿ ಬಿಜೆಪಿ ಒಡೆದ ಮನೆ ಅನ್ನುತ್ತಿದ್ದಾರೆ. ಇಡೀ ದೇಶದಲ್ಲಿ ಬಿಜೆಪಿ ಪಕ್ಷ ಒಂದೇ ಇದೆ. ಆದರೆ ಕನ್ಯಾಕುಮಾರಿಯಿಂದ ಕಾಶ್ಮೀರ ತನಕ ಒಂದೇ ಒಂದು ಕಾಂಗ್ರೆಸ್ ಪಕ್ಷ ಒಟ್ಟಿಗೆ ಇಲ್ಲ. ಕರ್ನಾಟಕದಲ್ಲೂ ಕೂಡ ಕಾಂಗ್ರೆಸ್ ಎಷ್ಟು ಹೋಳಾಗಿದೆ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ ಎಂದು ಟಕ್ಕರ್ ನೀಡಿದರು. ಕುಟುಂಬ ರಾಜಕಾರಣದ ಬಗ್ಗೆ ಟ್ವೀಟ್ ಮಾಡುವ ಅಧಿಕಾರ ಕಾಂಗ್ರೆಸ್ಗೆ ಇದೆಯೇ ಎಂಬುದು ನನ್ನ ಪ್ರಶ್ನೆ. ಕಾಂಗ್ರೆಸ್ನಲ್ಲಿ ನೆಹರು, ಇಂದಿರಾಗಾಂಧಿ ಕುಟುಂಬದವರೇ ಆಳಿದ್ದಾರೆ. ಕಾಂಗ್ರೆಸ್ ಪಕ್ಷ ಇರುವುದೇ ಒಂದು ಕುಟುಂಬದ ಹಿಡಿತದಲ್ಲಿ ಎಂದು ಕಿಡಿಕಾರಿದರು.
|
4 |
+
ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ವಿರೋಧವೇ ಇದೆ. ಬಿಜೆಪಿ ಪಕ್ಷ ವ್ಯಕ್ತಿ ಮೇಲೆ ನಿಂತಿಲ್ಲ, ಪಕ್ಷ ಉಳಿಸಬೇಕು ಎಂದಿರುವ ಪಕ್ಷ. ನಮ್ಮ ಎಲ್ಲಾ ನಾಯಕರು ಒಟ್ಟಿಗೆ ಇರುತ್ತೇವೆ. ಬಿಜೆಪಿಯಲ್ಲಿ ಸ್ಥಾನಮಾನದ ಪ್ರಶ್ನೆ ಇಲ್ಲ. ಪಕ್ಷದಲ್ಲಿ ಎಲ್ಲರೂ ಕಾರ್ಯಕರ್ತರೇ. ಪ್ರಧಾನಮಂತ್ರಿ ಮೋದಿ ಅವರು ಕಾರ್ಯಕರ್ತರೇ ಎಂದರು.
|
5 |
+
ಪೊನ್ಮುಡಿಗೆ ಪ್ರಮಾಣ ವಚನ ಬೋಧಿಸಲು ರಾಜ್ಯಪಾಲರ ನಿರಾಕರಣೆ
|
6 |
+
ನಾವು 28 ಸ್ಥಾನಗಳನ್ನು ಗೆದ್ದು ಮತ್ತೆ ಮೋದಿ ಅವರನ್ನು ಪ್ರಧಾನಿ ಮಾಡುತ್ತೇವೆ. ಮೊದಲು ದೇಶ. ಅಮೇಲೆ ಪಕ್ಷ ಮತ್ತು ವ್ಯಕ್ತಿ. ನಮ್ಮ ಪಕ್ಷಕ್ಕೆ ಮೊದಲು ದೇಶ ಮುಖ್ಯ. ನಾವು ಯಾವ ವ್ಯಕ್ತಿಯನ್ನು ಮುಂದಿಟ್ಟುಕೊಂಡು ಹೋಗಲ್ಲ. ಒಟ್ಟಾಗಿ ನಾವು ಹೋಗುತ್ತೇವೆ, ಒಟ್ಟಿಗೆ ಗೆಲ್ಲುತ್ತೇವೆ. ಮೋದಿಯವರನ್ನು ಮತ್ತೆ ಪ್ರಧಾನಿ ಮಾಡುವುದೇ ನಮ್ಮ ಗುರಿ ಎಂದು ಹೇಳಿದರು.
|
7 |
+
ಸ್ವತಂತ್ರ ಬಂದಾಗಿನಿಂದಲೂ ಒಂದೇ ಕುಟುಂಬದ ಕೈಯಲ್ಲಿ ಕಾಂಗ್ರೆಸ್ ಪಕ್ಷ ಇದೆ. ಇವರಿಗೆ ಯಡಿಯೂರಪ್ಪ, ಅವರ ಮಗನ ಬಗ್ಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ಹಕ್ಕಿಲ್ಲ. ನನಗೆ ಪಕ್ಷ ಏನು ಜವಾಬ್ದಾರಿ ಕೊಡುತ್ತದೆಯೋ ಅದನ್ನು ನಿರ್ವಹಿಸುತ್ತೇನೆ. ನಮ್ಮದು ಸಾಮೂಹಿಕ ನೇತೃತ್ವದ ಪಕ್ಷವಾಗಿದ್ದು ಲೋಕಸಭೆ ಟಿಕೆಟ್ ಹಂಚಿಕೆ, ಲೋಕಸಭೆ ಚುನಾವಣಾ ಪ್ರಚಾರ ಎಲ್ಲಾ ಸಾಮೂಹಿಕವಾಗಿಯೆ ನಡೆಯುತ್ತದೆ ಎಂದು ತಮ್ಮ ಪಕ್ಷವನ್ನು ಸಮರ್ಥಿಸಿಕೊಂಡರು.
|
eesanje/url_46_204_3.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಆರ್ಸಿಬಿ ಕಪ್ ಗೆಲ್ಲುತ್ತಿದ್ದಂತೆ ವೈರಲ್ ಆದ ಪವರ್ ಸ್ಟಾರ್ ಪುನೀತ್ ಮಾತು
|
2 |
+
ಬೆಂಗಳೂರು, ಮಾ.18- ಹದಿನಾರು ವರ್ಷಗಳ ವನವಾಸದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊನೆಗೂ ಕಪ್ ನಮ್ದೇ ಎಂಬ ಮಾತಿಗಿಂತ ಕಪ್ಪು ನಮ್ದು ಎಂಬ ಮಾತನ್ನು ಆಡುತ್ತಿದ್ದಾರೆ. ಈ ನಡುವೆ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಜನ್ಮದಿನದಿಂದಲೇ ಆರ್ಸಿಬಿ ಆಟಗಾರ್ತಿಯರು ಕಪ್ ಗೆದ್ದಿರುವುದು ವಿಶೇಷವಾಗಿತ್ತು. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಪುನೀತ್ ಆಡಿದ ಮಾತು ವೈರಲ್ ಆಗಿದೆ.
|
3 |
+
ಮಾರ್ಚ್ 17 ರಂದು ನವದೆಹಲಿಯ ಅರುಣ್ಜೇಟ್ಲಿ ಕ್ರೀಡಾಂಗಣದಲ್ಲಿ ಆರ್ಸಿಬಿ ವನಿತೆಯರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 8 ವಿಕೆಟ್ಗಳ ರೋಚಕ ಗೆಲುವು ಸಾಧಿಸಿ ಡಬ್ಲ್ಯುಪಿಎಲ್ ಟ್ರೋಫಿಗೆ ಮುತ್ತಿಕ್ಕಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಟನೆಯ ಜಾಕಿ ಚಿತ್ರದ ಒಂದು ಗೀತೆಯಲ್ಲಿ ಹೆಣ್ಮಕ್ಳೇ ಸ್ಟ್ರಾಂಗು ಗುರು ಎಂಬ ಸಾಲಿದ್ದು , ಈ ಮಾತು ಆರ್ಸಿಬಿ ಆಟಗಾರ್ತಿಯರಿಗೇ ಸೂಕ್ತವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮಂದಿ ಕಾಮೆಂಟ್ ಮಾಡಿದ್ದಾರೆ.
|
4 |
+
ಇನ್ನು ಕರುನಾಡಿನ ಕಣ್ಮಣಿ ಪುನೀತ್ ರಾಜ್ಕುಮಾರ್ ನಟನೆಯ ಯುವ ಚಿತ್ರದಲ್ಲಿ ಹುಡುಗರಲ್ಲಿ ರೋಷ ಹುಟ್ಟಿಸಬೇಕಾದರೆ ಅವರನ್ನು ಕಿಚಾಯಿಸಬೇಕು. ಅಲ್ಲದೆ ಕಪ್ ಅನ್ನು ಹುಡುಗರೇ ಗೆಲ್ಲಲಿ ಅಥವಾ ಹುಡುಗಿಯರೇ ಗೆಲ್ಲಲಿ ಕಪ್ ಗೆಲ್ಲುವುದೇ ಮುಖ್ಯ ತಾನೇ ಎಂಬ ಪವರ್ಫುಲ್ ಡೈಲಾಗ್ ಹೊಡೆದಿದ್ದರು. ಈ ಡೈಲಾಗ್ ಕೂಡ ಈಗ ಸಾಕಷ್ಟು ವೈರಲ್ ಆಗಿದ್ದು , ಡಬ್ಲ್ಯುಪಿಎಲ್ನಲ್ಲಿ ಸ್ಮೃತಿ ಮಂಧಾನಾ ಪಡೆ ಕಪ್ ಗೆದ್ದ ರೀತಿಯಂತೆ ಐಪಿಎಲ್ನಲ್ಲಿ ಫಾಫ್ ಡುಪ್ಲೆಸಿಸ್ ಸಾರಥ್ಯದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟ್ರೋಫಿ ಗೆಲ್ಲಲಿ ಎಂದು ಕೋಟ್ಯಾನುಕೋಟಿ ಅಭಿಮಾನಿಗಳು ಹಂಬಲಿಸುತ್ತಿದ್ದಾರೆ.
|
5 |
+
ಅಂದಹಾಗೆ 2ನೇ ಆವೃತ್ತಿಯ ಡಬ್ಲ್ಯುಪಿಎಲ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಶೆಫಾಲಿ ವರ್ಮಾ (44 ರನ್) ಸ್ಪೋಟಕ ಆಟದ ನೆರವಿದ್ದರೂ ಕನ್ನಡತಿ ಶ್ರೇಯಾಂಕಾ ಪಾಟೀಲ್ (12ಕ್ಕೆ 4), ಸೋಫಿ ಮೊಲಿನಾಕ್ಸ್ (3 ವಿಕೆಟ್) ಮತ್ತು ಶೋಭನಾ ಆಶಾ(2 ವಿಕೆಟ್) ಅವರ ಸ್ಪಿನ್ ಚಮತ್ಕಾರದಿಂದ 113 ರನ್ಗಳಿಗೆ ನಿಯಂತ್ರಿಸಿದರು.
|
6 |
+
ನಂತರ ಬ್ಯಾಟ್ ಮಾಡಿದ ಆರ್ಸಿಬಿ ನಾಯಕಿ ಸ್ಮೃತಿ ಮಂಧಾನಾ (31 ರನ್), ಸೋಫಿ ಡಿವೈನ್ (32 ರನ್) ಹಾಗೂ ಎಲೀಸ್ ಪೆರಿ (ಅಜೇಯ 35) ರನ್ಗಳ ನೆರವಿನಿಂದ 19.3 ಓವರ್ಗಳಲ್ಲೇ 135 ರನ್ ಗಳಿಸಿ ಚಾಂಪಿಯನ್ಪಟ್ಟವನ್ನು ಮುಡಿಗೇರಿಸಿಕೊಂಡಿತು. ಆರ್ಸಿಬಿಯ ಎಲಿಸ್ ಪೆರಿ ಆರೆಂಜ್ ಕ್ಯಾಪ್ , ಶ್ರೇಯಾಂಕ ಪಾಟೀಲ್ ಪರ್ಪಲ್ ಕ್ಯಾಪ್ ಗೆದ್ದರೆ, ಫೈನಲ್ ಪಂದ್ಯದಲ್ಲಿ ಮನಮೋಹಕ ಬೌಲಿಂಗ್ ಪ್ರದರ್ಶನ ತೋರಿಸಿದ ಸೋಫಿ ಮೊಲಿನಾಕ್ಸ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು.
|
eesanje/url_46_204_4.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಸಾಹಿತ್ಯ ಅಕಾಡೆಮಿ ಸದಸ್ಯತ್ವ ತಿರಸ್ಕರಿಸಿದ ಅಕ್ಕಯ್ ಪದ್ಮಶಾಲಿ, ಕಾಂಗ್ರೆಸ್ ನಾಯಕರಿಗೆ ಮುಜುಗರ
|
2 |
+
ಬೆಂಗಳೂರು,ಮಾ.17-ಲೈಂಗಿಕ ಅಲ್ಪಸಂಖ್ಯಾತ ಹಕ್ಕುಗಳ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ಅವರು ರಾಜ್ಯಸರ್ಕಾರ ನೀಡಿದ್ದ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯತ್ವವನ್ನು ತಿರಸ್ಕರಿಸಿರುವುದರಿಂದ ಕಾಂಗ್ರೆಸ್ ನಾಯಕರಿಗೆ ಮುಜುಗರ ಉಂಟಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಅಕ್ಕಯ್ ಪದ್ಮಶಾಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರನ್ನಾಗಿ ನನ್ನನ್ನು ಗುರುತಿಸಿ, ಆಯ್ಕೆ ಮಾಡಿದ್ದಕ್ಕೆ ಸರ್ಕಾರಕ್ಕೆ ಅಭಿನಂದನೆಗಳು. ಆದರೆ ನನ್ನ ಸದಸ್ಯತ್ವವನ್ನು ಕೈಬಿಡಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.
|
3 |
+
ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಸಾಮಾಜಿಕ ಹಾಗೂ ರಾಜಕೀಯ ವಿಚಾರವಾಗಿ ತಾವು ನಡೆಸಿರುವ ಹೋರಾಟ ಪ್ರಪಂಚದಾದ್ಯಂತ ಪಸರಿಸಿದೆ. ನಮ್ಮ ಸಮುದಾಯದ ಸಂಪೂರ್ಣ ಶ್ರೇಯೋಭಿವೃದ್ಧಿಗಾಗಿ ಮತ್ತು ಸಾಮಾಜಿಕ ಬಹಿಷ್ಕಾರದ ವಿರುದ್ಧ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ.
|
4 |
+
ತಮ್ಮ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡುವ ಸಲುವಾಗಿ ಕರ್ನಾಟಕ ರಾಜ್ಯ ವಿಧಾನಪರಿಷತ್ನ ಸದಸ್ಯತ್ವ ಅಥವಾ ರಾಜ್ಯಸಭೆಯ ಸದಸ್ಯತ್ವ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
|
5 |
+
ಸರ್ವಜನಾಂಗದ ಸಾಂಕೇತದಡಿಯಲ್ಲಿ ನಾವು ಸಾಕ್ಷಿಯಾಗಬೇಕಾಗಿರುವ ವಾತಾವರಣ ನಿರ್ಮಾಣವಾಗಬೇಕಿದೆ. ಹೀಗಾಗಿ ವಿಶೇಷ ಕಾಳಜಿ ವಹಿಸಿ ನಮ್ಮ ಸಮುದಾಯಕ್ಕೆ ಆದ್ಯತೆ ನೀಡಬೇಕೆಂದು ಮನವಿ ಸಲ್ಲಿಸಿದರು.
|
eesanje/url_46_204_5.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಏ.1ರಿಂದ ಪೂರ್ವಾನ್ವಯವಾಗುವಂತೆ 7ನೇ ರಾಜ್ಯ ವೇತನ ಆಯೋಗ ವರದಿ ಜಾರಿಗೆ ಒತ್ತಾಯ
|
2 |
+
ಬೆಂಗಳೂರು,ಮಾ.17-ರಾಜ್ಯಸರ್ಕಾರಿ ನೌಕರರು, ನಿವೃತ್ತಿ ನೌಕರರು ಹಾಗೂ ಕುಟುಂಬ ಪಿಂಚಣಿದಾರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ರಾಜ್ಯ ವೇತನ ಆಯೋಗ ನೀಡಿರುವ ವರದಿಯ ಶಿಫಾರಸ್ಸುಗಳನ್ನು 2023 ರ ಏಪ್ರಿಲ್ 1 ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೊಳಿಸಬೇಕೆಂದು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ರಾಜ್ಯಸರ್ಕಾರವನ್ನು ಒತ್ತಾಯಿಸಿದೆ.
|
3 |
+
7 ನೇ ವೇತನ ಆಯೋಗವು ನಿನ್ನೆ ತನ್ನ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಇದಕ್ಕಾಗಿ ಆಯೋಗ ಅಧ್ಯಕ್ಷರಾಗಿದ್ದ ಸುಧಾಕರ್ ಅವರನ್ನು ಹಾಗೂ ವರದಿ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಸಂಘದ ಅಧ್ಯಕ್ಷ ಡಾ.ಎಲ್.ಭೈರಪ್ಪ ತಿಳಿಸಿದ್ದಾರೆ.
|
4 |
+
ರಾಜ್ಯ ಸರ್ಕಾರಿ ನೌಕರರಿಗೆ, ನಿವೃತ್ತಿ ನೌಕರರಿಗೆ, ಕುಟುಂಬ ಪಿಂಚಣಿದಾರರಿಗೆ ವೇತನ, ಭತ್ಯೆಗಳನ್ನು, ನಿವೃತ್ತ ವೇತನ ಹಾಗೂ ಪಿಂಚಣಿಯನ್ನು ಆಯೋಗದ ಶಿಫಾರಸ್ಸಿನಂತೆ ಪರಿಷ್ಕರಿಸಲು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
|
eesanje/url_46_204_6.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ವಾಟರ್ ಟ್ಯಾಂಕರ್ಗಳಿಗೆ ಜಿಪಿಎಸ್ ಟ್ರಾಕರ್ ಅಳವಡಿಸುವಂತೆ ಆರ್.ಅಶೋಕ್ ಒತ್ತಾಯ
|
2 |
+
ಬೆಂಗಳೂರು,ಮಾ.17-ಅಕ್ರಮ ತಡೆಯಲು ನೀರು ಸರಬರಾಜು ಮಾಡುವ ಟ್ಯಾಂಕರ್ಗಳಿಗೆ ಜಿಪಿಎಸ್ ಟ್ರಾಕರ್ ಅಳವಡಿಸಬೇಕು. ಜನಸಾಂದ್ರತೆ ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ಟ್ಯಾಂಕರ್ ವ್ಯವಸ್ಥೆ ಮಾಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
|
3 |
+
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನೋಂದಣಿಗೊಂಡಿರುವ ಖಾಸಗಿ ಟ್ಯಾಂಕರ್ಗಳಿಗೆ ವಿಶೇಷ ಸಂಖ್ಯೆ ನೀಡಿ, ಗುರುತಿನಚೀಟಿ ಅಂಟಿಸಬೇಕು. ಜಿಲ್ಲಾಡಳಿತ ನೀಡಿರುವ ದರ ಪಟ್ಟಿ ಹಾಗೂ ದೂರು ಸಂಖ್ಯೆಯನ್ನು ಟ್ಯಾಂಕರ್ಗಳ ಮೇಲೆ ಕಡ್ಡಾಯವಾಗಿ ನಮೂದಿಸಬೇಕು ಎಂದು ಸಲಹೆ ಮಾಡಿದ್ದಾರೆ.
|
4 |
+
ಬೆಂಗಳೂರಿನ ನೀರಿನ ಸಮಸ್ಯೆ ಕುರಿತಂತೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ ಸಂಬಂಧಪಟ್ಟವರ ಸಭೆ ಕರೆದಿದ್ದಾರೆ. ಬರಗಾಲವಿದೆ ಎಂದು ಗೊತ್ತಿದ್ದರೂ ಕಳೆದ ಆರೇಳು ತಿಂಗಳಿಂದ ಯಾವುದೇ ಮುಂಜಾಗ್ರತೆ ವಹಿಸದೆ, ಪೂರ್ವಸಿದ್ಧತೆ ಮಾಡಿಕೊಳ್ಳದೆ, ಪರ್ಯಾಯ ಮಾರ್ಗಗಳನ್ನು ಹುಡುಕದೆ ಕಾಲಹರಣ ಮಾಡಿದ ಸಿದ್ದರಾಮಯ್ಯನವರ ಸರ್ಕಾರದ ಬೇಜವಾಬ್ದಾರಿ, ನಿರ್ಲಕ್ಷ್ಯ ಧೋರಣೆಯೇ ನೀರಿನ ಸಮಸ್ಯೆಗೆ ಕಾರಣ ಎಂದು ಅವರು ಆರೋಪಿಸಿದ್ದಾರೆ.
|
5 |
+
ನಾಳೆ ಕರೆದಿರುವ ಸಭೆಯೂ ಸಹ ಕೇವಲ ಕಾಟಾಚಾರಕ್ಕೆ ನಡೆಯುವ ಮತ್ತೊಂದು ನಾಮಕಾವಸ್ತೆ ಸಭೆ ಆಗದಿರಲಿ ಎನ್ನುವ ಉದ್ದೇಶದಿಂದ ಸರ್ಕಾರಕ್ಕೆ ಕೆಲವು ಸಲಹೆಗಳನ್ನು ನೀಡುತ್ತಿರುವುದಾಗಿ ಹೇಳಿದ್ದಾರೆ.
|
6 |
+
ಟ್ಯಾಂಕರ್ಗಳ ನೋಂದಣಿಗೆ ನೀಡಲಾಗಿದ್ದು ಗಡುವು ಮುಕ್ತಾಯವಾಗಿ ಎರಡು ದಿನಗಳು ಕಳೆದಿದ್ದರೂ, ಇನ್ನೂ ಟ್ಯಾಂಕರ್ ಗಳ ನೋಂದಣಿ ಪೂರ್ತಿಯಾಗಿಲ್ಲ. ಬೆಂಗಳೂರಲ್ಲಿ 3,500ಕ್ಕೂ ಹೆಚ್ಚು ಖಾಸಗಿ ಟ್ಯಾಂಕರ್ಗಳಿವೆ. ಆದರೆ ನೋಂದಣಿ ಆಗಿರುವುದು ಕೇವಲ 1,700 ಮಾತ್ರ. ಅಂದರೆ ಶೇ.50ಕ್ಕೂ ಹೆಚ್ಚು ಟ್ಯಾಂಕರ್ಗಳು ಇನ್ನೂ ನೋಂದಣಿ ಆಗಿಲ್ಲ. ಟ್ಯಾಂಕರ್ ಮಾಫಿಯಾ, ಸುಲಿಗೆಗೆ ಕಡಿವಾಣ ಹಾಕಬೇಕಾದರೆ ಕಡ್ಡಾಯವಾಗಿ ಯಾವುದೇ ಮುಲಾಜಿಲ್ಲದೆ ಎಲ್ಲಾ ಟ್ಯಾಂಕರ್ಗಳ ನೋಂದಣಿ ಮಾಡಿಸಬೇಕು ಎಂದು ಆಗ್ರಹಿಸಿದ್ದಾರೆ.
|
7 |
+
ಜಲಮಂಡಳಿ ವತಿಯಿಂದ ಉಚಿತವಾಗಿ ನೀರು ಸರಬರಾಜು ಮಾಡುವ ಟ್ಯಾಂಕರ್ಗಳ ಮೇಲೆ ಸ್ಟಿಕ್ಕರ್ ಅಂಟಿಸುವುದು ಕಡ್ಡಾಯ ಎಂಬ ನಿಯಮ ಇದ್ದರೂ ಇನ್ನೂ ಹಲವಾರು ಕಡೆ ಸ್ಟಿಕ್ಕರ್ ಅಂಟಿಸಿಲ್ಲ. ಸ್ಟಿಕ್ಕರ್ ಇಲ್ಲದಿದ್ದರೆ ನೀರಿನ ದುರ್ಬಳಕೆಯಾಗುವ ಸಾಧ್ಯತೆ ಇದ್ದು, ಅಕಾರಿಗಳು ಕಡ್ಡಾಯವಾಗಿ ಸ್ಟಿಕ್ಕರ್ ಅಳವಡಿಸಲು ಕ್ರಮ ಕೈಗೊಳ್ಳಬೇಕು.
|
8 |
+
ಸಾರ್ವಜನಿಕರಿಗೆ ನೀಡಿರುವ ಜಲಮಂಡಳಿ/ ಬಿಬಿಎಂಪಿ ಸಹಾಯವಾಣಿ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳಿದ್ದು, ಖಾಸಗಿ ಕಾಲ್ ಸೆಂಟರ್ ತೆರೆಯುವ ಮೂಲಕ ಜಲಮಂಡಳಿ ಸಹಾಯವಾಣಿಯನ್ನು ಜನಸ್ನೇಹಿ ಮಾಡಲು ಕ್ರಮಕೈಗೊಳ್ಳಬೇಕು. ಕೇವಲ ಬೆಂಗಳೂರ���ನ ಹೃದಯ ಭಾಗ ಮತ್ತು ಪ್ರತಿಷ್ಠಿತ ಬಡಾವಣೆಗಳಲ್ಲಿ ಮಾತ್ರವಲ್ಲದೆ ಬಿಬಿಎಂಪಿ ಹೊರವಲಯ ವ್ಯಾಪ್ತಿಯ 35 ವಾರ್ಡ್ಗಳಲ್ಲಿನ 110 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸುವ ಬಗ್ಗೆ ಕೂಡ ವಿಶೇಷ ಗಮನಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
|
9 |
+
ಸರ್ಕಾರ ಸಮರೋಪಾದಿಯಲ್ಲಿ ಈ ಮೇಲಿನ ಕ್ರಮಗಳನ್ನು ಜಾರಿ ಮಾಡಿದರೆ ಮಾತ್ರ ನಾಳಿನ ಸಭೆಯಲ್ಲಿ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿ, ಗುರಿ ಹಾಗೂ ಕಾಲಮಿತಿ ನಿಗದಿ ಮಾಡಲು ಸಾಧ್ಯ. ಇಲ್ಲವಾದರೆ ಇದು ಮತ್ತೊಂದು ಕಾಟಾಚಾರದ ಸಭೆ ಆಗುವುದರಲ್ಲಿ ಸಂದೇಹವಿಲ್ಲ ಎಂದು ಅವರು ಹೇಳಿದ್ದಾರೆ.
|
eesanje/url_46_204_7.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮತ್ತೆರಡು ಹೊಸ ಗ್ಯಾರಂಟಿಗಳನ್ನು ಘೋಷಿಸಿದ ಕಾಂಗ್ರೆಸ್
|
2 |
+
ಬೆಂಗಳೂರು,ಮಾ.16- ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಕಾಂಗ್ರೆಸ್ ಪಕ್ಷ ಮತ್ತೆರಡು ಹೊಸ ಗ್ಯಾರಂಟಿಗಳನ್ನು ರಾಷ್ಟ್ರೀಯ ಮಟ್ಟದಲ್ಲಿ ಘೋಷಣೆ ಮಾಡಿದೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಖಾಸಗಿ ಹೋಟೆಲ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಶ್ರಮಿಕ್ ನ್ಯಾಯ್ ಮತ್ತು ಹಿಸ್ಸೇದಾರ್ ನ್ಯಾಯ್ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವುದಾಗಿ ಭರವಸೆ ನೀಡಿದರು.
|
3 |
+
ಈಗಾಗಲೇ ಯುವ, ಮಹಿಳೆಯರು, ಕೃಷಿಕರ ಹೆಸರಿನಲ್ಲಿ ಮೂರು ಗ್ಯಾರಂಟಿಗಳನ್ನು ಘೋಷಿಸಲಾಗಿದೆ. ಇಂದು ಹೆಚ್ಚುವರಿಯಾಗಿ ಶ್ರಮಿಕ್ ನ್ಯಾಯ್ ಮತ್ತು ಹಿಸ್ಸೇದಾರ್ ನ್ಯಾಯ್ ಘೋಷಣೆಗಳನ್ನು ಹೊಸದಾಗಿ ಪ್ರಕಟಿಸಿದರು.ಕಳೆದ ಹತ್ತು ವರ್ಷಗಳಿಂದಲೂ ಕೇಂದ್ರ ಸರ್ಕಾರ ಕಾರ್ಮಿಕ ಕಾನೂನುಗಳನ್ನು ದಿಕ್ಕು ತಪ್ಪಿಸಿ ಶ್ರಮಿಕರಿಗೆ ಅನ್ಯಾಯ ಮಾಡಿದೆ. ಈ ಹಿಂದೆ ನಮ್ಮ ಸರ್ಕಾರ ಹಲವು ಯೋಜನೆಗಳ ಮೂಲಕ ಕಾರ್ಮಿಕರಿಗೆ, ಶ್ರಮಿಕರಿಗೆ ಸಹಾಯ ಮಾಡಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ದುರ್ಬಲರ ಬಗ್ಗೆ ಆಸಕ್ತಿ ಇಲ್ಲ. ಶ್ರೀಮಂತರ ಮೇಲಷ್ಟೇ ಅವರ ಗಮನ. ಹೀಗಾಗಿ ಹಲವು ಕಾರ್ಮಿಕ ಕಾನೂನುಗಳನ್ನು ದುರ್ಬಲಗೊಳಿಸಿದ್ದಾರೆ ಎಂದು ಹೇಳಿದರು.
|
4 |
+
ದೇಶಾದ್ಯಂತ ಕಾಂಗ್ರೆಸ್ ಪಕ್ಷ ಹಲವು ಕಡೆ ಪ್ರವಾಸ ಮಾಡಿ, ಕಾರ್ಮಿಕ ಸಂಘಟನೆಗಳ ಜೊತೆ ಚರ್ಚೆ ನಡೆಸಿದ ಬಳಿಕ ಕಾರ್ಮಿಕರ ಹಿತರಕ್ಷಣೆಗೆ ಶ್ರಮಿಕ್ ನ್ಯಾಯ್ ಭರವಸೆಯನ್ನು ಘೋಷಿಸುತ್ತಿದ್ದೇವೆ. ಸಂಘಟಿತ, ಅಸಂಘಟಿತ ಕಾರ್ಮಿಕರಿಗೆ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಕನಿಷ್ಠ ವೇತನ, ಸಾಮಾಜಿಕ ನ್ಯಾಯ, ಭವಿಷ್ಯ ನಿ, ಆರೋಗ್ಯ ಮತ್ತು ಜೀವವಿಮೆಯಂತಹ ಕಾರ್ಯಕ್ರಮಗಳನ್ನು ರೂಪಿಸಲಾಗುವುದು.
|
5 |
+
ಉದ್ಯೋಗ ಖಾತ್ರಿ ಯೋಜನೆಯನ್ನು ಈ ಮೊದಲು ಮೋದಿ ಟೀಕಿಸಿದ್ದರು. ಅದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುತ್ತಿಲ್ಲ. ಬರಪೀಡಿತ ಪ್ರದೇಶಗಳಲ್ಲಿ 150 ಉದ್ಯೋಗಗಳನ್ನು ಜಾರಿ ಮಾಡುತ್ತಿಲ್ಲ. ನಮ್ಮ ಸರ್ಕಾರ ಅಕಾರಕ್ಕೆ ಬಂದರೆ ನರೇಗಾ ಯೋಜನೆ ದಿನಗೂಲಿಯನ್ನು 400 ರೂ.ಗಳಿಗೆ ಹೆಚ್ಚಿಸಲಾಗುವುದು ಎಂದರು.ಭವಿಷ್ಯ ನಿ ಬಡ್ಡಿದರವನ್ನು ನಾನು ಕಾರ್ಮಿಕ ಸಚಿವನಾಗಿದ್ದಾಗ ಶೇ.9.5 ರಷ್ಟು ನೀಡಲಾಗಿತ್ತು. ಆನಂತರ 10 ವರ್ಷದಲ್ಲಿ ಶೇ.9 ರ ಮೇಲೆ ಭವಿಷ್ಯ ನಿಗೆ ಬಡ್ಡಿಯನ್ನೇ ನೀಡಿಲ್ಲ ಎಂದು ಹೇಳಿದರು.
|
6 |
+
ಹಿಸ್ಸೇದಾರ್ ನ್ಯಾಯ್ ಭರವಸೆ ಬಡವ ಮತ್ತು ಶ್ರೀಮಂತರ ನಡುವಿನ ಅಂತರವನ್ನು ಕಡಿಮೆ ಮಾಡುವ ಮಹತ್ವದ ಉಪಕ್ರಮವಾಗಿದೆ. ಮೋದಿ ಅವರ ಆಡಳಿತಾವಯಲ್ಲಿ ಬಡವರು ಹೆಚ್ಚು ಬಡವರಾಗುತ್ತಿದ್ದಾರೆ, ಶ್ರೀಮಂತರು ಶ್ರೀಮಂತರಾಗುತ್ತಿದ್ದಾರೆ. ಸಂಪತ್ತಿನ ಸಮಾನ ಹಂಚಿಕೆಯಾಗಿಲ್ಲ, ಇದಕ್ಕಾಗಿ ಜಾತಿ ಜನಗಣತಿ ಆಗಬೇಕು. ಜಾತಿ, ಸಮುದಾಯ ಎಷ್ಟು ಸೌಲಭ್ಯ ಪಡೆದಿದೆ, ಅಭಿವೃದ್ಧಿಯಾಗಿದೆ ಎಂಬುದನ್ನು ಗುರುತಿಸಿ ಅದರ ಆಧಾರದ ಮೇಲೆ ಯೋಜನೆಗಳನ್ನು ರೂಪಿಸಬೇಕು ಎಂದರು.
|
7 |
+
ರಾಜ್ಯದಲ್ಲಿ ನಡೆದಿರುವ ಜಾತಿ ಜನಗಣತಿಗೆ ಸ್ವಪಕ್ಷೀಯರು ವಿರೋಧ ಮಾಡುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷ ತನ್ನ ನಿರ್ಧಾರವನ್ನು ಹೇಳಿಯಾಗಿದೆ. ಅದನ್ನು ಸಿದ್ದರಾಮಯ್ಯ ಆಗಲಿ, ಡಿ.ಕೆ.ಶಿವಕುಮಾರ್ ಆಗಲೀ ಯಾರೇ ಆಗಲಿ ಅನುಸರಿಸಲೇಬೇಕು ಎಂದು ಕಟ್ಟಾದೇಶ ಹೊರಡಿಸಿದರು.
|
8 |
+
1951 ರಲ್ಲಿ ನೆಹರೂ ನೇತೃತ್ವದಲ್ಲಿ ಚುನಾವಣೆ ನಡೆಸಿದಾಗ ಬೆಂಗಳೂರಿನಲ್ಲೇ ಪ್ರಣಾಳಿಕೆಗೆ ಅಂತಿಮ ರೂಪ ನೀಡಲಾಯಿತು. ಈ ಊರು ನಮಗೆ ಅದೃಷ್ಟ ತರುತ್ತದೆ ಎಂದರು. 5 ಪ್ರಮುಖ ಆಶ್ವಾಸನೆಗಳಲ್ಲಿ ಒಟ್ಟು 25 ಭರವಸೆಗಳನ್ನು ಕಾಂಗ್ರೆಸ್ ಜನರ ಮುಂದಿಡುತ್ತಿದೆ. ಸರ್ಕಾರಿ ನೇಮಕಾತಿಗಳಿಗೆ ಒತ್ತು ನೀಡುವುದು, ಅರಕ್ಷಣಾ ಭರವಸೆಯಡಿ ಮೀಸಲಾತಿ ಮಿತಿಯನ್ನು ಶೇ.50 ಕ್ಕಿಂತಲೂ ಹೆಚ್ಚು ವಿಸ್ತರಿಸುವುದು, ರೈತರಿಗೆ ಸುಭದ್ರ ಆದಾಯದ ಭರವಸೆ, ಆದಿವಾಸಿಗಳಿಗೆ ಮರ ಕಡಿಯುವ ಅಕಾರ, ಶ್ರಮಿಕ್ ಸನ್ಮಾನ್ ಯೋಜನೆಯಡಿ ನರೇಗಾ ಯೋಜನೆಯ ಕೂಲಿ ಹೆಚ್ಚಳ, ನಗರ ಪ್ರದೇಶದವರ ಉದ್ಯೋಗ ಖಾತ್ರಿಗೆ ಶೆಹರಿ ರೋಜ್ಗಾರ್ ಯೋಜನೆ, ಸಾಮಾಜಿಕ ಸುರಕ್ಷಾ ಯೋಜನೆ ನಮ್ಮ ಭರವಸೆಗಳಾಗಿವೆ ಎಂದು ಹೇಳಿದರು.
|
9 |
+
ನಾವು ಕೊಟ್ಟ ಭರವಸೆಗಳನ್ನು ತಪ್ಪದೇ ಈಡೇರಿಸಿದ್ದೇವೆ. ಅದಕ್ಕೆ ಈಗಾಗಲೇ ಹಲವು ರಾಜ್ಯಗಳ ಚುನಾವಣೆಯಲ್ಲಿ ನೀಡಿದ ಭರವಸೆ ಮತ್ತು ಅನುಷ್ಠಾನಕ್ಕೆ ತಂದ ಮಾದರಿಗಳೇ ಸಾಕ್ಷಿ ಎಂದರು.ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶೇ. 75 ಕ್ಕಿಂತಲೂ ಹೆಚ್ಚಿನ ಸುಳ್ಳು ಹೇಳುತ್ತಾರೆ. ಆದರೆ ಮಾಧ್ಯಮದವರು ಅವರನ್ನೇ ಬೆಂಬಲಿಸುತ್ತಾರೆ. ಇದಕ್ಕೆ ಮಾಧ್ಯಮ ಸಂಸ್ಥೆಯ ಮಾಲೀಕತ್ವದ ನಿಲುವುಗಳು ಕಾರಣವಾಗಿರಬಹುದು ಎಂದು ಹೇಳಿದರು.
|
10 |
+
ಪ್ರಧಾನಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ, ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ., ರೈತರ ಆದಾಯ ತ್ರಿಗುಣ ಸೇರಿದಂತೆ ಹಲವು ಭರವಸೆಗಳನ್ನು ನೀಡಿದ್ದರು. ಯಾವುದೂ ಈಡೇರಿಲ್ಲ.ಗುಜರಾತ್ನಲ್ಲಿ ಬುಲೆಟ್ ಟ್ರೈನ್ ಕಾಣುತ್ತಿಲ್ಲ, ಕರ್ನಾಟಕಕ್ಕೆ ನಾನು ರೈಲ್ವೆ ಸಚಿವನಾಗಿ 9 ತಿಂಗಳು ಕೆಲಸ ಮಾಡಿದಾಗ 21 ಹೊಸ ರೈಲುಗಳನ್ನು ನೀಡಿದ್ದೆ. 10 ವರ್ಷದಲ್ಲಿ 1 ಹೊಸ ರೈಲು ಬಂದಿಲ್ಲ. ಬಣ್ಣ ಬಳಿದು, ಹೆಸರು ಬದಲಾಯಿಸಿ, ವಂದೇ ಭಾರತ್ ಎಂದು ಹೇಳುವ ಮೂಲಕ ಮೋದಿ ಪ್ರಚಾರ ಪಡೆಯುತ್ತಿದ್ದಾರೆ ಎಂದು ಕಿಡಿಕಾರಿದರು.
|
11 |
+
ಇಂದು ನನ್ನ ಕ್ಷೇತ್ರ ಕಲಬುರಗಿಗೆ ಪ್ರಧಾನಿ ಬರುತ್ತಿದ್ದಾರೆ. ಬರಲಿ, ಸಂತೋಷ. ಆದರೆ ಅವರ ಕೊಡುಗೇ ಏನೆಂದು ತಿಳಿಸಲಿ, ಏಮ್ಸ್ ಆಸ್ಪತ್ರೆ ಮಂಜೂರು ಮಾಡುವಂತೆ ನಾನು ಮನವಿ ಮಾಡಿದ್ದೆ. ಸಿದ್ದರಾಮಯ್ಯ ಜಮೀನು ನೀಡುತ್ತಿಲ್ಲ ಎಂದು ಸುಳ್ಳು ಹೇಳಿದರು. ಸಿದ್ದರಾಮಯ್ಯ ಅಕಾರಕ್ಕೆ ಬರುವ ಮುನ್ನವೇ ಕಲಬುರಗಿಯಲ್ಲಿ ಮೆಡಿಕಲ್ ಕಾಲೇಜು ಸೇರಿದಂತೆ 4 ವೈದ್ಯಕೀಯ ಶಿಕ್ಷಣ ಸಂಸ್ಥೆಗಳಿಗೆ ಜಾಗವೂ ಇತ್ತು. ಆದರೆ ಮೋದಿ ಏಮ್ಸ್ ಮಂಜೂರು ಮಾಡಲಿಲ್ಲ ಎಂದು ಆಕ್ರೋಶ ಹೊರಹಾಕಿದರು.ರಾಜ್ಯಗಳಿಗೆ ನ್ಯಾಯಯುತವಾಗಿ ಬ���ಬೇಕಾದ ತೆರಿಗೆ ಪಾಲಿನಲ್ಲಿಯೂ ಮೋದಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
|
eesanje/url_46_204_8.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
543 ಕ್ಷೇತ್ರಗಳಲ್ಲೂ ಇಂಡಿಯಾ ಮಿತ್ರಕೂಟ ಸ್ಪರ್ಧೆ : ಖರ್ಗೆ
|
2 |
+
ಬೆಂಗಳೂರು,ಮಾ.16-ಇಂಡಿಯಾ ರಾಜಕೀಯ ಮೈತ್ರಿಕೂಟದ ನಡುವೆ ಯಾವುದೇ ಗೊಂದಲಗಳಿಲ್ಲ. ಕ್ಷೇತ್ರಗಳ ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿದ್ದು, ಬಹುತೇಕ ಮಾ.17 ಅಥವಾ 18 ರಂದು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
|
3 |
+
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿಯಾ ಮೈತ್ರಿಕೂಟ ಲೋಕಸಭೆಯ 543 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದೆ. ಕೆಲವು ಕಡೆ ನಮಗೆ ಬೇಕಾದ ಕ್ಷೇತ್ರವನ್ನು ಅವರು ಕೇಳುತ್ತಾರೆ. ಅವರಿಗೆ ಬೇಕಾದ ಕ್ಷೇತ್ರಗಳನ್ನು ನಾವು ಕೇಳುತ್ತಿದ್ದೇವೆ. ಹೀಗಾಗಿ ಚರ್ಚೆಗಳು ಚಾಲನೆಯಲ್ಲಿವೆ. ತಮಿಳುನಾಡಿನಲ್ಲಿ ಕಾಂಗ್ರೆಸ್ಗೆ 10 ಸ್ಥಾನಗಳನ್ನು ಬಿಟ್ಟುಕೊಡಲಾಗಿದೆ. ಉತ್ತರ ಪ್ರದೇಶದಲ್ಲೂ ಈಗಾಗಲೇ ಒಪ್ಪಂದವಾಗಿದೆ. ಆಪ್ ಪಕ್ಷ ದೆಹಲಿಯಲ್ಲಿ ಸ್ಥಾನಗಳನ್ನು ಬಿಟ್ಟುಕೊಟ್ಟಿದೆ. ಸಣ್ಣಪುಟ್ಟ ಸಮಸ್ಯೆಗಳನ್ನು ಚರ್ಚೆ ಮೂಲಕ ಬಗೆಹರಿಸಿದ್ದೇವೆ. ಮಹಾರಾಷ್ಟ್ರಕ್ಕೆ ಕಾಂಗ್ರೆಸ್ ನಾಯಕರು ತೆರಳಿದ್ದು, ಕ್ಷೇತ್ರಗಳ ಹೊಂದಾಣಿಕೆ ಬಗ್ಗೆ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.
|
4 |
+
ಮೋದಿಯವರು 400 ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದಾರೆ, ಮೋದಿ ಇದ್ದ ಮೇಲೆ ಎಲ್ಲವೂ ಸಾಧ್ಯ ಎಂದು ಬಿಂಬಿಸಿಕೊಳ್ಳುತ್ತಾರೆ. ಆದರೂ ಚುನಾವಣೆಯಲ್ಲಿ ಮಾತ್ರ ಪರದಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ. ಇಂಡಿಯಾ ಮೈತ್ರಿಕೂಟಗಳ ನಡುವೆ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ನಿರ್ಧಾರವಾದರೆ ಅದನ್ನೂ ಅಳವಡಿಸಿಕೊಂಡು ಚುನಾವಣೆಯಲ್ಲಿ ದೇಶಾದ್ಯಂತ ಪ್ರಚಾರ ಮಾಡುವುದಾಗಿ ತಿಳಿಸಿದರು.
|
5 |
+
ರಾಜ್ಯದಲ್ಲಿ ಎಷ್ಟು ಸ್ಥಾನಗಳನ್ನು ಗೆಲ್ಲಬೇಕು ಎಂಬ ಗುರಿಯನ್ನು ಈಗಾಗಲೇ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರಿಗೆ ನೀಡಿದ್ದೇವೆ. ಅದು ರಹಸ್ಯ, ಬಹಿರಂಗಪಡಿಸುವುದಿಲ್ಲ ಎಂದು ಹಾಸ್ಯ ಚಟಾಕಿ ಹಾರಿಸಿದ ಖರ್ಗೆಯಯವರು, ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರು, ಶಾಸಕರು, ಶಾಸಕರಲ್ಲದೇ ಇರುವ ಪ್ರಭಾವಿ ನಾಯಕರ ಸಹಭಾಗಿತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿದರು. ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯನ್ನು ಮಿತ್ರ ಪಕ್ಷಗಳು ನಿರ್ಧರಿಸಲಿವೆ ಎಂದರು.
|
eesanje/url_46_204_9.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೂ ದಿನಾಂಕ ನಿಗದಿ
|
2 |
+
ನವದೆಹಲಿ,ಮಾ.16-ಲೋಕಸಭೆ ಚುನಾವಣೆ ಜೊತೆಯಲ್ಲೇ ಕರ್ನಾಟಕದ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ನಡೆಯಲಿದೆ.ಕಾಂಗ್ರೆಸ್ ಶಾಸಕ ರಾಜ ವೆಂಕಟಪ್ಪ ನಾಯ್ಕ್ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಭಾರತದ ಚುನಾವಣಾ ಆಯೋಗ ಉಪಚುನಾವಣೆ ಘೋಷಿಸಿದೆ.
|
3 |
+
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಭಾರತದ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ 26 ವಿಧಾನಸಭಾ ಕ್ಷೇತ್ರಗಳಿಗೂ ಲೋಕಸಭೆ ಚುನಾವಣೆ ಸಂದರ್ಭದಲ್ಲೇ ಚುನಾವಣೆ ನಡೆಸುವುದಾಗಿ ಪ್ರಕಟಿಸಿದರು.
|
4 |
+
ಉಪಚುನಾವಣೆಗೆ ಏಪ್ರಿಲ್ 12 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಸಬಹುದು. ಏ.19 ರಂದು ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ. ಏ.20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ವಾಪಸ್ ಪಡೆಯಲು ಏ.22 ರವರಗೆ ಕಾಲಾವಕಾಶವಿದೆ.
|
5 |
+
ಮೇ 7 ರಂದು ಮತದಾನ ನಡೆಯಲಿದ್ದು, ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯುವ ಜೂನ್ 4 ರಂದೇ ಈ ಉಪಚುನಾವಣೆಯ ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.
|
eesanje/url_46_205_1.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಲೋಕಸಭಾ ಚುನಾವಣೆ ಬೆನ್ನಲ್ಲೇ ಸಿಎಂ ಕಡತ ಯಜ್ಞ
|
2 |
+
ಬೆಂಗಳೂರು,ಮಾ.16-ಲೋಕಸಭಾ ಚುನಾವಣೆ ಘೋಷಣೆಯಾಗುವ ನಿರೀಕ್ಷೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಡತ ಯಜ್ಞಕ್ಕೆ ಕೈ ಹಾಕಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆ ವೇಳೆಗೆ ಕೇಂದ್ರ ಚುನಾವಣಾ ಆಯೋಗ ಮಾಧ್ಯಮ ಗೋಷ್ಠಿಯನ್ನು ಕರೆದಿದೆ. ಬಹುತೇಕ ಲೋಕಸಭೆಗೆ ಚುನಾವಣೆ ದಿನಾಂಕ ಘೋಷಣೆಯಾಗಲಿದ್ದು, ತತ್ಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ.
|
3 |
+
ಮುಂದಿನ 2 ತಿಂಗಳ ಕಾಲ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದು, ನೀತಿ ಸಂಹಿತೆ ಜಾರಿಯಲ್ಲಿರು ವುದರಿಂದ ಬೇರೆ ಯಾವುದೇ ಯೋಜನೆಗಳಿಗೆ ಮಂಜೂರಾತಿ ನೀಡುವುದು ಕಷ್ಟಸಾಧ್ಯವಾಗುತ್ತದೆ. ಅದಕ್ಕಾಗಿ ಸಂಪುಟದ ವಿವಿಧ ಸಚಿವರು ಮುಖ್ಯಮಂತ್ರಿಯವರ ಬೆನ್ನು ಬಿದ್ದಿದ್ದು, ಬಾಕಿ ಇರುವ ಕಡತಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಿದ್ದಾರೆ.
|
4 |
+
ಬೃಹತ್ ಮಧ್ಯಮ ಕೈಗಾರಿಕೆ, ಲೋಕೋಪಯೋಗಿ, ಕೆಐಡಿಪಿ, ಹಿಂದುಳಿದ ವರ್ಗಗಳು, ಕನ್ನಡ ಮತ್ತು ಸಂಸ್ಕøತಿ, ವಸತಿ, ಅಲ್ಪಸಂಖ್ಯಾತರ ಅಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ಕಡತಗಳಿಗೆ ತರಾತುರಿಯಲ್ಲಿ ಅನುಮೋದನೆ ಪಡೆದುಕೊಳ್ಳುವ ಪ್ರಯತ್ನಗಳಾಗಿವೆ.
|
5 |
+
ಮುಖ್ಯಮಂತ್ರಿಯವರು ಇಂದು ತಮ್ಮ ಅಕೃತ ನಿವಾಸದಿಂದ ಹೊರಹೋಗಿದ್ದು ರಹಸ್ಯ ಸ್ಥಳದಲ್ಲಿ ಕುಳಿತು ಕಡತಗಳನ್ನು ಇತ್ಯರ್ಥಪಡಿಸುವುದರಲ್ಲಿ ಕಾರ್ಯೋನ್ಮುಖರಾಗಿದ್ದರು. ಇದಕ್ಕೂ ಮುನ್ನ ಅಕೃತ ನಿವಾಸ ಕಾವೇರಿಯಲ್ಲಿ ನೂರಾರು ಜನ ಅರ್ಜಿಗಳೊಂದಿಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದರು.
|
eesanje/url_46_205_10.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
7ನೇ ವೇತನ ಆಯೋಗ ವರದಿ ಸ್ವೀಕಾರಕ್ಕೆ ಸರ್ಕಾರ ಹಿಂದೇಟು.!
|
2 |
+
ಬೆಂಗಳೂರು,ಮಾ.15-ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗದ ವರದಿ ಸಿದ್ಧಗೊಂಡಿದ್ದು, ಅದನ್ನು ಸ್ವೀಕರಿಸಲು ರಾಜ್ಯಸರ್ಕಾರ ಹಿಂದೇಟು ಹಾಕುತ್ತಿದೆ. ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ 7ನೇ ರಾಜ್ಯ ವೇತನ ಆಯೋಗದ ಅವ ಇಂದಿಗೆ ಮುಕ್ತಾಯಗೊಳ್ಳುತ್ತಿದೆ. ಉನ್ನತ ಮೂಲಗಳ ಪ್ರಕಾರ, ಸಿದ್ಧವಾಗಿರುವ ವರದಿ ಸಲ್ಲಿಸಲು ಆಯೋಗ ತಯಾರಿದೆ. ಆದರೆ ಸರ್ಕಾರವೇ ಹಿಂದೇಟು ಹಾಕುತ್ತಿದೆ ಎಂದು ತಿಳಿದುಬಂದಿದೆ.
|
3 |
+
ಈಗಾಗಲೇ ಪಂಚಖಾತ್ರಿ ಯೋಜನೆಗಳಿಗೆ 52 ಸಾವಿರ ಕೋಟಿ ರೂ. ಬಳಕೆ ಸೇರಿದಂತೆ ಒಟ್ಟು ಯೋಜನಾ ವೆಚ್ಚಕ್ಕೆ 1.20 ಲಕ್ಷ ಕೋಟಿ ರೂ.ಗಳನ್ನು ನಿಗದಿ ಮಾಡಿರುವ ಸರ್ಕಾರಕ್ಕೆ ರಾಜ್ಯಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಹಣಕಾಸಿನ ಕೊರತೆ ಎದುರಾಗಿದೆ ಎಂದು ಹೇಳಲಾಗುತ್ತಿದೆ.
|
4 |
+
ಈ ಹಿನ್ನೆಲೆಯಲ್ಲಿ ವರದಿಯನ್ನು ಸ್ವೀಕರಿಸುವ ಬದಲು ಮತ್ತಷ್ಟು ಕಾಲ ಆಯೋಗದ ಅವಧಿ ವಿಸ್ತರಣೆ ಮಾಡಲು ಉದ್ದೇಶಿಸಲಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲೇ ಈಗಾಗಲೇ 2 ಬಾರಿ ಮುಖ್ಯಮಂತ್ರಿ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಸಿದ್ಧಪಡಿಸಲಾಗಿರುವ ಆಯೋಗದ ವರದಿಯಲ್ಲಿ ಸರ್ಕಾರಿ ನೌಕರರಿಗೆ ಶೇ.30 ರಷ್ಟು ವೇತನ ಹೆಚ್ಚು ಮಾಡಬೇಕು ಎಂಬ ಶಿಫಾರಸ್ಸುಗಳಿವೆ ಎನ್ನಲಾಗಿದೆ. ಈಗಾಗಲೇ ಮಧ್ಯಂತರ ಪರಿಹಾರವಾಗಿ ಶೇ.17ರಷ್ಟು ವೇತನ ಹೆಚ್ಚಳವನ್ನು ಹಿಂದಿನ ಸರ್ಕಾರವೇ ಜಾರಿ ಮಾಡಿತ್ತು.
|
5 |
+
ಚುನಾವಣಾ ಪ್ರಣಾಳಿಕೆಯಲ್ಲಿಯೇ 7ನೇ ವೇತನ ಆಯೋಗದ ವರದಿ ಜಾರಿಯ ಭರವಸೆ ಕಾಂಗ್ರೆಸ್ ನೀಡಿತ್ತು. ಸಿದ್ದರಾಮಯ್ಯನವರ ಸರ್ಕಾರ ಅಧಿಕಾರ ಕ್ಕೆ ಬಂದ ಬಳಿಕ ಪಂಚಖಾತ್ರಿ ಯೋಜನೆಗಳಿಗೆ ಆದ್ಯತೆ ನೀಡುತ್ತಿದ್ದು, ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಗಮನ ಹರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿವೆ.
|
6 |
+
ಇಂದು ಆಯೋಗದ ಅವಧಿ ಮುಗಿಯುತ್ತಿದೆ. ನಾಳೆ ಮಧ್ಯಾಹ್ನ ಕೇಂದ್ರ ಚುನಾವಣಾ ಆಯೋಗ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡುವ ನಿರೀಕ್ಷೆಗಳಿವೆ. ಅಷ್ಟರೊಳಗಾಗಿ ವರದಿ ಸ್ವೀಕರಿಸಬೇಕು. ಇಲ್ಲವೇ ಆಯೋಗದ ಅವಧಿಯನ್ನು ವಿಸ್ತರಿಸಬೇಕಿದೆ.ವೇಳಾಪಟ್ಟಿ ಪ್ರಕಟಗೊಂಡ ಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಲಿದ್ದು, ಸರ್ಕಾರವು ಯಾವುದೇ ಹೊಸ ಯೋಜನೆ ಅಥವಾ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಾಗಿ ವೇತನ ಪರಿಷ್ಕರಣೆಯ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರು ಸಹಜವಾಗಿಯೇ ಗೊಂದಲಕ್ಕೆ ಒಳಗಾಗಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ವೇತನ ಪರಿಷ್ಕರಣೆಯಾಗುವ ಸಾಧ್ಯತೆ ತೀರಾ ವಿರಳವಾದಂತಾಗಿದೆ.
|
7 |
+
ಎರಡು ಬಾರಿ ಅವಧಿ ವಿಸ್ತರಣೆ:ಸುಧಾಕರ್ ರಾವ್ ನೇತೃತ್ವದಲ್ಲಿ ರಾಜ್ಯಸರ್ಕಾರ 2022 ರ ನವೆಂಬರ್ 19 ರಂದು ಆಯೋಗವನ್ನು ರಚಿಸಿ ಆರು ತಿಂಗಳಲ್ಲಿ ವರದಿ ನೀಡುವ ಗಡುವು ನೀಡಿತ್ತು. ಆನಂತರ 2023 ರ ಮೇ 15 ರಂದು ಮತ್ತೆ ಆರು ತಿಂಗಳ ಅವಧಿಗೆ ಆಯೋಗದ ಅವಧಿಯನ್ನು ವಿಸ್ತರಿಸಲಾಗಿತ್ತು. ಬಳಿಕ 2023 ರ ನವೆಂಬರ್ 6 ರಂದು ಆಯೋಗದ ಅವಧಿಯನ್ನು ಇಂದಿನವರೆಗೆ ವಿಸ್ತರಿಸಿ ಆದೇಶಿಸಲಾಗಿತ್ತು.
|
eesanje/url_46_205_11.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಬಿಎಸ್ ವೈ ವಿರುದ್ಧದ ಪೋಕ್ಸೋ ಕೇಸ್
|
2 |
+
ಬೆಂಗಳೂರು,ಮಾ.15-ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಕ್ಸೋ ಕಾಯ್ದೆ ದಾಖಲಾಗಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ರಾಜ್ಯದ ಪ್ರಭಾವಿ ಜನನಾಯಕರಾಗಿರುವ ಬಿಎಸ್ ವೈ ವಿರುದ್ಧ ಮಹಿಳೆಯೊಬ್ಬಳು ತನ್ನ ಪುತ್ರಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರು ಕೊಟ್ಟಿರುವುದು ಹಲವು ಸಂಶಯಗಳನ್ನು ಹುಟ್ಟು ಹಾಕಿದೆ.
|
3 |
+
ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವರ್ಗಾಯಿಸಿದ್ದು, ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಾಗುವುದು ಎಂದು ಹೇಳಿದೆ. ಇದರ ಬೆನ್ನಲ್ಲೇ ಸದಾಶಿವನಗರ ಪೊಲೀಸರು ಡಾಲರ್ಸ್ ಕಾಲೋನಿಯ ನಿವಾಸಕ್ಕೆ ಬಂದು ಯಡಿಯೂರಪ್ಪ ನವರಿಂದ ಹೇಳಿಕೆ ದಾಖಲಿಸಿಕೊಂಡು ಹೋಗಿದ್ದಾರೆ.
|
4 |
+
ತಮ್ಮ ಪುತ್ರಿಗೆ ಲೈಂಗಿಕ ಕಿರುಕುಳವಾಗಿದೆ ಎಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಮಹಿಳೆ, ಈ ಹಿಂದೆ ಇದೇ ರೀತಿ 50ಕ್ಕೂ ಹೆಚ್ಚು ದೂರುಗಳನ್ನು ಪ್ರಭಾವಿಗಳ ಮೇಲೆ ನೀಡಿರುವುದು ಗಮನಾರ್ಹವಾಗಿದೆ. ಈ ನಡುವೆ ದೂರು ನೀಡಿರುವ ಮಹಿಳೆ ಯಡಿಯೂರಪ್ಪನವರ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಲಾಗಿದ್ದು, ಇದು ಹಲವು ಸಂಶಯಗಳನ್ನು ಹುಟ್ಟುಹಾಕಿದೆ.
|
5 |
+
ವಿಡಿಯೋದಲ್ಲಿ ಯಡಿಯೂರಪ್ಪ ಅವರನ್ನು ಉದ್ದೇಶಪೂರ್ವಕವಾಗಿ ಹನಿಟ್ರಾಪ್ನಲ್ಲಿ ಕೆಡವಲು ದೂರು ನೀಡಿರುವ ಮಹಿಳೆ ಸತತ ಪ್ರಯತ್ನ ನಡೆಸಿದ್ದಾರೆ.ಈ ಹಿಂದೆಯೂ ಇದೇ ಮಹಿಳೆ ಯಡಿಯೂರಪ್ಪ ಅವರನ್ನು ನಾನು ಮೂಲತಃ ಶಿವಮೊಗ್ಗದವರೆಂದು ಪರಿಚಯ ಮಾಡಿಕೊಂಡು ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸಕ್ಕೆ ಭೇಟಿ ಕೊಟ್ಟು ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದರು.
|
6 |
+
ಅಲ್ಲದೆ ಹಾಲಿ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಜೊತೆ ಫೋಟೊ ಮತ್ತು ಸೆಲ್ಫಿ ತೆಗೆದುಕೊಂಡಿರುವ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಕುಟುಂಬದವರಿಂದ ವರದಕ್ಷಿಣೆ ಕಿರುಕುಳ ನೀಡಲಾಗಿದೆ ಎಂದು ಬಿಎಸ್ವೈ ಬಳಿ ಅವಲತ್ತು ತೋಡಿಕೊಂಡಿದ್ದ ಮಹಿಳೆಗೆ ಖುದ್ದು ಸಹಾಯ ಮಾಡಿ ನ್ಯಾಯ ಒದಗಿಸಿಕೊಡುವ ಭರವಸೆಯನ್ನು ನೀಡಿದ್ದರು ಎನ್ನಲಾಗಿದೆ.
|
7 |
+
ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಯಡಿಯೂರಪ್ಪನವರೇ ಕರೆ ಮಾಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮಾಡುವಂತೆ ಸೂಚನೆ ನೀಡಿದ್ದರು. ಏಕಾಏಕಿ ಯಡಿಯೂರಪ್ಪ ವಿರುದ್ಧವೇ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿರುವುದು ಹುಬ್ಬೇರುವಂತೆ ಮಾಡಿದೆ. ಅದರಲ್ಲೂ ಲೋಕಸಭೆ ಚುನಾವಣೆ ಸಂದರ್ಭದಲ್ಲೇ ಅವರ ರಾಜಕೀಯ ಎದುರಾಳಿಗಳ ಕೈವಾಡ ಇದೆಯೇ ಎಂಬ ಸಂಶಯ ಎದುರಾಗಿದೆ.
|
8 |
+
ಇನ್ನು ಪ್ರಕರಣ ಕುರಿತಂತೆ ಕಾನೂನು ಮೂಲಕವೇ ಹೋರಾಟ ನಡೆಸುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಉಪಕಾರ ಮಾಡಿದವರಿಗೆ ಇಂತಹ ದೂರುಗಳು ಬರುತ್ತದೆ ಎಂದು ನಾನು ನಿರೀಕ್ಷೆ ಮಾಡಿರಲಿಲ್ಲ. ಪ್ರಕರಣದಲ್ಲಿ ರಾಜಕೀಯ ಬೆರೆಸಲು ಹೋಗುವುದಿಲ್ಲ ಎಂದು ಹೇಳಿದ್ದಾರೆ.
|
9 |
+
ಇದೊಂದು ಸೂಕ್ಷ್ಮ ಪ್ರಕರಣವಾಗಿದ್ದು, ಯಡಿಯೂರಪ್ಪನವರು ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಜೊತೆಗೆ ಪ್ರಭಾವಿ ನಾಯಕರು. ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ದೂರು ದಾಖಲಾದ ತಕ್ಷಣ ಅವರನ್ನು ಬಂಸಬೇಕೆಂಬ ನಿಯಮವಿಲ್ಲ. ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಯಾರು ಏನು ಹೇಳಬೇಕೋ ಅದನ್ನು ಮಾತನಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಾಣ್ಮೆಯಿಂದ ಪ್ರತಿಕ್ರಿಯೆ ಕೊಟ್ಟಿದ್ದಾರೆ.
|
eesanje/url_46_205_12.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ನಾಳೆ ರಾಜ್ಯಕ್ಕೆ ಮೋದಿ ಆಗಮನ, ಮೊಳಗಲಿದೆ ರಣಕಹಳೆ
|
2 |
+
ಬೆಂಗಳೂರು,ಮಾ.15-ಲೋಕ ಸಭೆ ಚುನಾವಣೆ ಮಹಾಸಮರಕ್ಕೆ ದಿನಗಣನೆ ಪ್ರಾರಂಭವಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಕರುನಾಡಿನಲ್ಲಿ ಬಹಿರಂಗ ಪ್ರಚಾರಕ್ಕೆ ಚಾಲನೆ ನೀಡುವ ಮೂಲಕ ರಣ ಕಹಳೆ ಮೊಳಗಿಸಲಿದ್ದಾರೆ. ಕಲಬುರಗಿಯ ಎನ್ಎಂಆರ್ವಿ ಕಾಲೇಜಿನಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಅಂದಾಜು ಒಂದು ಲಕ್ಷಕ್ಕೂ ಹೆಚ್ಚಿನ ಕಾರ್ಯಕರ್ತರನ್ನು ಉದ್ದೇಶಿಸಿ ಮೋದಿಯವರು ಭಾಷಣ ಮಾಡಲಿದ್ದಾರೆ.
|
3 |
+
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಬಿಜೆಪಿಯ ಅನೇಕ ನಾಯಕರು ಭಾಗಿಯಾಗಲಿದ್ದಾರೆ. ಕಲಬುರಗಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ ಸೇರಿದಂತೆ ಕಲ್ಯಾಣ ಕರ್ನಾಟಕದ ಲೋಕಸಭಾ ಕ್ಷೇತ್ರಗಳನ್ನು ಗುರಿಯಾಗಿಟ್ಟು ಕೊಂಡು ಮೋದಿ ಬಿಜೆಪಿ ಪರವಾಗಿ ಪ್ರಚಾರವನ್ನು ನಡೆಸಲಿದ್ದಾರೆ.
|
4 |
+
2019ರ ಲೋಕಸಭಾ ಚುನಾವಣೆ ಯಲ್ಲಿ ಬಿಜೆಪಿ ಕಲ್ಯಾಣ ಕರ್ನಾಟಕದ ಎಲ್ಲಾ ಲೋಕಸಭಾ ಕ್ಷೇತ್ರಗಳನ್ನು ತನ್ನ ಬುಟ್ಟಿಗೆ ಹಾಕಿಕೊಂಡಿತ್ತು. ಆದರೆ 2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಈ ಭಾಗದಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ತನ್ನ ವಶಕ್ಕೆ ತೆಗೆದುಕೊಂಡಿತ್ತು.
|
5 |
+
ಇದೀಗ ಪುನಃ ಬಿಜೆಪಿ ತನ್ನ ಪಾರುಪತ್ಯ ಮೆರೆಯಲು ಮುಂದಾಗಿದ್ದು, ಲೋಕಸಭೆ ದಿನಾಂಕ ಘೋಷಣೆಯಾಗುವ ಮೊದಲೇ ಬಿಜೆಪಿಯ ತಾರಾ ಪ್ರಚಾರಕರು ಆಗಿರುವ ಮೋದಿ ಅವರಿಂದ ಭರ್ಜರಿ ಸಾರ್ವಜನಿಕ ಸಮಾರಂಭ ನಡೆಸಿ ಮತ ಬುಟ್ಟಿಗೆ ಕೈಹಾಕಲಿದೆ.ಬಿಜೆಪಿ ಬಿಡುಗಡೆ ಮಾಡಿರುವ 20 ಕ್ಷೇತ್ರಗಳ ಪಟ್ಟಿಯಲ್ಲಿ ಕಲಬುರಗಿಯಿಂದ ಡಾ.ಉಮೇಶ್ ಜಾಧವ್, ಬಳ್ಳಾರಿಯಿಂದ ಶ್ರೀರಾಮುಲು, ಕೊಪ್ಪಳದಿಂದ ಬಸವರಾಜ್ ಕ್ಯಾವಟಗಿ, ಬಾಗಲಕೋಟೆಯಿಂದ ಗದ್ದಿಗೌಡರ್, ಬೀದರ್ನಿಂದ ಭಗವಂತ ಕೂಬ, ಬಿಜಾಪುರದಿಂದ ರಮೇಶ್ ಜಿಗಜಿಣಗಿಗೆ ಟಿಕೆಟ್ ಘೋಷಣೆ ಮಾಡಿದೆ.
|
6 |
+
ಆದರೆ ಬೇರೆ ಬೇರೆ ಕಾರಣಗಳಿಂದ ರಾಯಚೂರಿಗೆ ಟಿಕೆಟ್ ಘೋಷಣೆ ಮಾಡಿಲ್ಲ. ಕಲಬುರಗಿಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಬಿಜೆಪಿ ನಾಯಕರು ಟೊಂಕ ಕಟ್ಟಿ ನಿಂತಿದ್ದಾರೆ. ಏಳು ಲೋಕಸಭಾ ಕ್ಷೇತ್ರಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರನ್ನು ಕರೆತರುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ.
|
7 |
+
ಕಲಬುರಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭದ್ರಕೋಟೆಯಾಗಿದೆ. ಸೋಲಿಲ್ಲದ ಸರದಾರ ಎಂದೇ ಖ್ಯಾತಿಯಾಗಿದ್ದ ಖರ್ಗೆ ಅವರನ್ನು ಕಳೆದ ಬಾರಿ ಬಿಜೆಪಿ ವಿಶೇಷ ರಣತಂತ್ರ ಹೆಣೆದು ಸೋಲಿನ ರುಚಿ ತೋರಿಸಿತ್ತು. ಇದೀಗ ಕಾಂಗ್ರೆಸ್ ಈ ಕ್ಷೇತ್ರಕ್ಕೆ ತನ್ನ ಹುರಿಯಾಳನ್ನು ಈವರೆಗೂ ಘೋಷಣೆ ಮಾಡಿಲ್ಲ. ಆದರೂ ಬಿಜೆಪಿ ತನ್ನ ಕಮಲವನ್ನು ಅರಳಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿದೆ.
|
eesanje/url_46_205_2.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸಿಎಂಗೆ 7ನೇ ರಾಜ್ಯ ವೇತನ ಆಯೋಗ ವರದಿ ಸಲ್ಲಿಕೆ, ಶೇ.27.5ರಷ್ಟು ವೇತನ ಪರಿಷ್ಕರಣೆಗೆ ಶಿಫಾರಸ್ಸು
|
2 |
+
ಬೆಂಗಳೂರು,ಮಾ.16-ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ರಚಿಸಲಾಗಿದ್ದ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅಧ್ಯಕ್ಷತೆಯ 7ನೇ ರಾಜ್ಯ ವೇತನ ಆಯೋಗ ಇಂದು ವರದಿ ಸಲ್ಲಿಸಿದ್ದು, ಶೇ.27.5ರಷ್ಟು ವೇತನ ಪರಿಷ್ಕರಣೆಗೆ ಶಿಫಾರಸ್ಸು ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ವರದಿಯನ್ನು ಪಡೆದುಕೊಂಡರು.
|
3 |
+
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 7ನೇ ವೇತನ ಆಯೊಗದ ವರದಿಯಲ್ಲಿ ಹಲವಾರು ಶಿಫಾರಸ್ಸುಗಳಿವೆ. ಅವುಗಳಲ್ಲಿ ಪ್ರಮುಖವಾಗಿ ಸರ್ಕಾರಿ ನೌಕರರ ವೇತನವನ್ನು ಶೇ.27.5ರಷ್ಟು ಹೆಚ್ಚಿಸಬೇಕು ಎಂಬುದು ಸೇರಿದೆ. ಆಯೋಗದ ಶಿಫಾರಸ್ಸನ್ನು ಆರ್ಥಿಕ ಇಲಾಖೆ ಪರಿಶೀಲನೆ ನಡೆಸಿ ಸರ್ಕಾರಕ್ಕೆ ಸಲಹೆ ನೀಡಲಿದೆ. ಆ ಬಳಿಕ ವರದಿ ಅನುಷ್ಠಾನಗೊಳ್ಳಲಿದೆ ಎಂದು ತಿಳಿಸಿದರು.
|
4 |
+
2022ರ ನವೆಂಬರ್ 19ರಂದು ರಾಜ್ಯ ಸರ್ಕಾರ 7ನೇ ವೇತನ ಆಯೋಗವನ್ನು ರಚನೆ ಮಾಡಿತ್ತು. ಮಧ್ಯಂತರ ವರದಿಯಲ್ಲಿ ಸರ್ಕಾರಿ ನೌಕರರ ಮೂಲ ವೇತನದಲ್ಲಿ ಶೇ.17ರಷ್ಟನ್ನು ಹೆಚ್ಚಳ ಮಾಡಿ ಹಿಂದಿನ ಸರ್ಕಾರ ಆದೇಶ ಹೊರಡಿಸಿತ್ತು. ಇಂದು ಸಲ್ಲಿಕೆಯಾಗಿರುವ ಅಂತಿಮ ವರದಿ ಅನುಷ್ಠಾನಕ್ಕೆ ಬರುವವರೆಗೂ ಶೇ.17ರ ಪ್ರಮಾಣ ಮಧ್ಯಂತರ ಪರಿಹಾರ ಮುಂದುವರೆಯಲಿದೆ ಎಂದು ಹೇಳಿದರು.
|
5 |
+
ಆಯೋಗಕ್ಕೆ ಅಂತಿಮ ವರದಿ ನೀಡಲು ಈಗಾಗಲೇ ಮೂರು ತಿಂಗಳ ಕಾಲಾವಕಾಶ ವಿಸ್ತರಣೆ ಮಾಡಲಾಗಿತ್ತು. ನಿನ್ನೆಗೆ ಅದು ಮುಕ್ತಾಯಗೊಂಡಿದೆ. ತಾವು ನಿನ್ನೆ ಮೈಸೂರಿನಲ್ಲಿ ಇದ್ದುದ್ದರಿಂದ ವರದಿ ಪಡೆದುಕೊಳ್ಳಲಾಗಿರಲಿಲ್ಲ. ಇಂದು ವರದಿ ಸ್ವೀಕರಿಸಿದ್ದೇನೆ. ಅಂತಿಮ ವರದಿಯಲ್ಲಿ ಕನಿಷ್ಠ ಮೂಲ ವೇತನವನ್ನು 17 ಸಾವಿರದಿಂದ 27 ಸಾವಿರ ರೂ.ಗೆ ಹೆಚ್ಚಿಸಬೇಕೆಂದು ಶಿಫಾರಸ್ಸು ಮಾಡಲಾಗಿದೆ. ಉಳಿದಂತೆ ಹಲವು ಶಿಫಾರಸ್ಸುಗಳ ಬಗ್ಗೆ ಆರ್ಥಿಕ ಇಲಾಖೆ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದರು.
|
6 |
+
ಆಯೋಗದ ಅಧ್ಯಕ್ಷರಾಗಿದ್ದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರು ವರದಿ ಬಗ್ಗೆ ಮಾಹಿತಿ ನೀಡಿದ್ದು, ಮೂಲ ವೇತನದಲ್ಲಿ ಶೇ.27.5ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸ್ಸು ಮಾಡಲಾಗಿದೆ. ಈಗಾಗಲೇ ಜಾರಿಯಲ್ಲಿರುವ ಶೇ.17ರಷ್ಟು ವೇತನ ಪರಿಷ್ಕರಣೆ ಅಂತಿಮ ವರದಿ ಜಾರಿಯಾದ ಬಳಿಕ ಸ್ಥಗಿತಗೊಳ್ಳಲಿದೆ. ಒಟ್ಟಾರೆ. 27.5ರ ಒಳಗಿನ ಪ್ರಮಾಣದಲ್ಲಿ ಸರ್ಕಾರ ವೇತನ ಪರಿಷ್ಕರಣೆ ಮಾಡಬಹುದು ಎಂದು ಹೇಳಿದರು.
|
7 |
+
ಈಗಾಗಲೇ ಶೇ.31ರಷ್ಟು ಡಿಎ ಹೆಚ್ಚಳವಾಗಿದೆ. 2017-18ರಲ್ಲಿ ಮೂಲ ವೇತನ 17 ಸಾವಿರ ರೂ.ಗಳಷ್ಟಾಗಿದ್ದು, ಈ ಎಲ್ಲ ಆರ್ಥಿಕ ಅನುಕೂಲಗಳನ್ನು ಒಳಗೊಂಡು 27 ಸಾವಿರ ರೂ.ಗಳಿಗೆ ಹೆಚ್ಚಾಗಬಹುದು ಎಂದು ತಿಳಿಸಿದರು. ಎಚ್ಆರ್ಎ ಸೇರಿದಂತೆ ಇತರೆ ಆರ್ಥಿಕ ಸೌಲಭ್ಯಗಳನ್ನು ಹೆಚ್ಚಿಸಲು ಸಲಹೆ ನೀಡಲಾಗಿದೆ. ಜೊತೆಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಕೇಂದ್ರ ಸರ್ಕಾರದ ಪದ್ಧತಿಯನ್ನೇ ರೂಢಿಸಿಕೊಳ್ಳುವಂತೆ ಶಿಫಾರಸ್ಸು ಮಾಡಲಾಗಿದೆ. ಪ್ರತಿ 5 ವರ್ಷಕ್ಕೊಮ್ಮೆ ವೇತನ ಆಯೋಗ ರಚಿಸುವುದು ಮತ್ತು ವೇತನ ಹೆಚ್ಚಳ ಮಾಡಲಾಗುತ್ತಿದೆ.
|
8 |
+
ಆದರೆ ಕೇಂದ್ರ ಸರ್ಕಾರಿ ನೌಕರರ ವೇತನಕ್ಕೆ ಸರಿಸಮನಾಗಿ ರಾಜ್ಯ ಸರ್ಕಾರಿ ನೌಕರರ ವೇತನಗಳು ಹೆಚ್ಚಳವಾಗಿಲ್ಲ. ಇದಕ್ಕಾಗಿ ಕೇಂದ್ರದ ಮಾರ್ಗಸೂಚಿಗಳನ್ನೇ ಪಾಲನೆ ಮಾಡಿದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ನಡುವಿನ ತಾರತಮ್ಯ ತಗ್ಗಲಿದೆ. ಕೇಂದ್ರ ಸರ್ಕಾರಿ ವೇತನ ಆಯೋಗಕ್ಕೆ ಸರಿಸಮನಾಗಿ ರಾಜ್ಯ ಸರ್ಕಾರದ ಆಯೋಗಗಳು ಅಸ್ತಿತ್ವಕ್ಕೆ ಬರಲಿದೆ ಎಂದು ವಿವರಿಸಿದರು.
|
9 |
+
ಶೇ.27.5ರಷ್ಟು ವೇತನ ಪರಿಷ್ಕರಣೆಯನ್ನು 2022ರ ಜುಲೈ 1ರಿಂದ ಪೂರ್ವಾನ್ವಯಗೊಳಿಸುವಂತೆ ಅಂತಿಮ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ. ಆದರೆ ರಾಜ್ಯ ಸರ್ಕಾರ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.ಆಯೋಗದ ಶಿಫಾರಸ್ಸನ್ನು ಪರಿಪೂರ್ಣವಾಗಿ ಅನುಷ್ಠಾನಕ್ಕೆ ತಂದರೆ 2024-25ನೇ ಸಾಲಿಗೆ 17,447 ಕೋಟಿ ರೂ.ಗಳ ಆರ್ಥಿಕ ಹೊರೆಯಾಗಲಿದೆ ಎಂದು ಸುಧಾಕರ್ ರಾವ್ ತಿಳಿಸಿದರು.
|
10 |
+
ಆಯೋಗದ ಸದಸ್ಯರಾದ ಪಿ.ಬಿ.ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ, ಸದಸ್ಯ ಕಾರ್ಯದರ್ಶಿ ಹೆಪ್ಸಿಬಾರಾಣಿ ಪೊರ್ಲಾಪಾಟಿ, ಸಚಿವರಾದ ಜಮೀರ್ ಅಹಮ್ಮದ್ ಖಾನ್, ಶಿವರಾಜ್ ತಂಗಡಗಿ, ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾದ ಬಸವರಾಜರಾಯ ರೆಡ್ಡಿ, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್ ಮತ್ತಿತರರು ಉಪಸ್ಥಿತರಿದ್ದರು.
|
eesanje/url_46_205_3.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಕೆಎಸ್ಆರ್ಟಿಸಿ ಸಿಬ್ಬಂದಿ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಆದೇಶ
|
2 |
+
ಬೆಂಗಳೂರು,ಮಾ.16-ಕೆಎಸ್ಆರ್ಟಿಸಿ ಸಿಬ್ಬಂದಿಗಳ ತುಟ್ಟಿಭತ್ಯೆ ಹಿಂಬಾಕಿ, ಗಳಿಕೆ ರಜೆ ನಗದೀಕರಣ ಹಾಗೂ ಉಪಧನದ ಬಾಕಿ ಮೊತ್ತ ಒಟ್ಟು 84 ಕೋಟಿ ರೂ.ಗಳನ್ನು ಪಾವತಿಸಲು ಆದೇಶಿಸಲಾಗಿದೆ. ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಕೆಎಸ್ಆರ್ಟಿಸಿ ಅಧ್ಯಕ್ಷರ ನಿರ್ದೇಶನದಂತೆ ಪಾವತಿಸಲು ಕೆಎಸ್ಆರ್ಟಿಸಿ ಯ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಆದೇಶಿಸಿದ್ದಾರೆ.
|
3 |
+
ಕೆಎಸ್ಆರ್ಟಿಸಿ ಯ ಸಿಬ್ಬಂದಿಗಳಿಗೆ (ನಿವೃತ್ತ ಸಿಬ್ಬಂದಿ ಸೇರಿ) 2022-23ರ ಮೇಯಿಂದ ಗಳಿಕೆ ರಜೆ ನಗದೀಕರಣದ ಮೊತ್ತ 24 ಕೋಟಿ ರೂ. ಹಾಗೂ 2022ರ ಜುಲೈನಿಂದ ನವೆಂಬರ್ವರೆಗೆ 5 ತಿಂಗಳು, 2023 ಜನವರಿಯಿಂದ ಜುಲೈವರೆಗಿನ 7 ತಿಂಗಳು ಮತ್ತು ಕಳೆದ ಜುಲೈನಿಂದ ಅಕ್ಟೋಬರ್ವರೆಗಿನ 4 ತಿಂಗಳುಗಳ ಹಿಂಬಾಕಿ ತುಟ್ಟಿಭತ್ಯೆ ಮೊತ್ತ 54 ಕೋಟಿ ರೂ. ಪಾವತಿಸಲು ಆದೇಶಿಸಲಾಗಿದೆ.
|
4 |
+
2024ರ ಜನವರಿಯಲ್ಲಿ ಸಂಸ್ಥೆಯ ಸೇವೆಯಿಂದ ನಿವೃತ್ತರಾದ ಸಿಬ್ಬಂದಿಗಳ ಉಪಧನ 6 ಕೋಟಿ ರೂ. ಮೊತ್ತವನ್ನು ನಿನ್ನೆ ಬಿಡುಗಡೆಗೊಳಿಸಲು ಆದೇಶಿಸಲಾಗಿದೆ ಎಂದು ಕೆಎಸ್ಆರ್ಟಿಸಿ ಪ್ರಕಟಣೆ ತಿಳಿಸಿದೆ.
|
eesanje/url_46_205_4.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಚುನಾವಣೆ ಹಿನ್ನೆಲೆಯಲ್ಲಿ ಪರವಾನಗಿ ಪಡೆದ ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗಳಲ್ಲಿ ಒಪ್ಪಿಸಲು ಆದೇಶ
|
2 |
+
ಬೆಂಗಳೂರು,ಮಾ.16-ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಪರವಾನಗಿ ಪಡೆದ ಶಸ್ತ್ರಾಸ್ತ್ರಗಳನ್ನು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಠೇವಣಿ ಮಾಡಬೇಕಾಗಿದೆ.ಲೋಕಸಭೆ ಚುನಾವಣೆಗೆ ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಮತ್ತು ಚುನಾವಣೆಯನ್ನು ಮುಕ್ತ ಮತ್ತು ಶಾಂತಿಯುತವಾಗಿ ನಡೆಸಲು ಪರವಾನಗಿ ಪಡೆದ ಶಸ್ತ್ರಾಸ್ತ್ರಗಳ ಠೇವಣಿ ಕುರಿತು ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಕ್ರೀನಿಂಗ್ ಸಮಿತಿ ರಚಿಸಿ ಆದೇಶಿಸಲಾಗಿದೆ.
|
3 |
+
ಪರವಾನಗಿ ಪಡೆದ ಶಸ್ತ್ರಾಸ್ತ್ರಗಳ ಠೇವಣಿಯಿಂದ ವಿನಾಯಿತಿ ಪಡೆಯಲಿಚ್ಚಿಸುವವರು ಮಾರ್ಚ್ 19ರೊಳಗೆ ತಮ್ಮ ಮನವಿಗಳನ್ನು ಸಕಾರಣದೊಂದಿಗೆ ತಮ್ಮ ವ್ಯಾಪ್ತಿಯ ಡಿವೈಎಸ್ಪಿ ಕಚೇರಿಗೆ ಸಲ್ಲಿಸಬಹುದಾಗಿದೆ.
|
4 |
+
ಸಾರ್ವಜನಿಕರಿಂದ ಸ್ವೀಕೃತವಾದ ಮನವಿಗಳನ್ನು ಸ್ಕ್ರೀನಿಂಗ್ ಕಮಿಟಿಯಲ್ಲಿ ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ. ಸ್ಕ್ರೀನಿಂಗ್ ಕಮಿಟಿಯ ನಿರ್ಣಯವು ಅಂತಿಮವಾಗಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಚುನಾವಣಾಧಿಕಾರಿ ಡಾ.ಶಿವಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
|
eesanje/url_46_205_5.txt
ADDED
@@ -0,0 +1,3 @@
|
|
|
|
|
|
|
|
|
1 |
+
ವಾಹನಗಳಿಗೆ ಪ್ಯಾನಿಕ್ ಬಟನ್ ಅಳವಡಿಕೆಗೆ 6 ತಿಂಗಳ ಕಾಲಾವಕಾಶ
|
2 |
+
ಬೆಂಗಳೂರು,ಮಾ.16- ರಾಜ್ಯದಲ್ಲಿನ ಸಾರ್ವಜನಿಕ ಸೇವಾ ವಲಯಗಳಿಗೆ ಹಾಗೂ ರಾಷ್ಟ್ರೀಯ ರಹದಾರಿ ಹೊಂದಿರುವ ಸರಕು ಸಾಗಾಣಿಕೆ ವಾಹನಗಳಿಗೆ ವೈಕಲ್ ಲೊಕೇಶನ್ ಟ್ರಾಕಿಂಗ್ ಡೇವಿಸ್ ವಿತ್ ಎಮೆರ್ಜೆನ್ಸಿ ಪ್ಯಾನಿಕ್ ಬಟನ್ (ವಿಎಲ್ಟಿಡಿಇಪಿಬಿ) ಸಾಧನಗಳನ್ನು ಅಳವಡಿಸಿಕೊಳ್ಳುವ ಕಾಲಮಿತಿಯನ್ನು 6 ತಿಂಗಳವರೆಗೆ ನೀಡಲಾಗಿದೆ.
|
3 |
+
ಸೆ.10 ರವರೆಗೂ ವಿಎಲ್ಟಿಡಿಇಪಿಬಿ ಸಾಧನ ಅಳವಡಿಸಿಕೊಳ್ಳಲು ಸಾರಿಗೆ ಇಲಾಖೆ ಕಾಲಾವಕಾಶ ನೀಡಿ ತಿದ್ದುಪಡಿ ಆದೇಶ ಹೊರಡಿಸಿದೆ.ಈ ಸಾಧನ ಅಳವಡಿಸುವ ಯೋಜನೆಯನ್ನು 2023 ರ ಡಿಸೆಂಬರ್ 1 ರಿಂದ ಜಾರಿಗೆ ಬರುವಂತೆ ನಿಗದಿಪಡಿಸಲಾಗಿತ್ತು. ಆದರೆ ಜನವರಿ 2 ರಂದು ತಿದ್ದುಪಡಿ ಆದೇಶ ಹೊರಡಿಸಿ ಮುಂದಿನ ಆದೇಶದವರೆಗೆ ಮುಂದೂಡಲಾಗಿತ್ತು. ಈ ಯೋಜನೆಯನ್ನು ಮಾ.11 ರಿಂದ ಜಾರಿಗೆ ಬರುವಂತೆ ನಿಗದಿಪಡಿಸಿ ಆದೇಶಿಸಲಾಗಿದೆ.
|
eesanje/url_46_205_6.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಇಂದಿನಿಂದ ವೈರಮುಡಿ ಜಾತ್ರೋತ್ಸವ ಪ್ರಾರಂಭ
|
2 |
+
ಮೇಲುಕೋಟೆ,ಮಾ.16- ಐತಿಹಾಸಿಕ ಬಹ್ಮೋತ್ಸವಗಳಲ್ಲಿ ಪ್ರಮುಖವಾದ ಶ್ರೀ ಚೆಲುವನಾರಾಯಣ ಸ್ವಾಮಿಯವರ ವೈರಮುಡಿ ಕಿರೀಟಧಾರಣ ಮಹೋತ್ಸವ ಇದೇ 21ರಿಂದ ರಾತ್ರಿ 8ಗಂಟೆಗೆ ಆರಂಭವಾಗಲಿದೆ.ಹತ್ತು ದಿನಗಳ ಬ್ರಹ್ಮೋತ್ಸವದಲ್ಲಿ ನಾಲ್ಕನೆ ತಿರುನಾಳ್ ದಿನವಾದ ಮಾ.21ರ ರಾತ್ರಿ ಶ್ರೀದೇವಿ, ಭೂದೇವಿ ಸಮೇತರಾಗಿ ಗರುಡಾರೂಢನಾದ ಚೆಲುವನಾರಾಯಣನ ವೈರಮುಡಿ ಉತ್ಸವ ರಾತ್ರಿ 8 ಗಂಟೆಗೆ ಮಹಾಮಂಗಳಾರತಿಯೊಂದಿಗೆ ಆರಂಭವಾಗಲಿದೆ.
|
3 |
+
ತಡರಾತ್ರಿ ವೈರಮುಡಿ ಉತ್ಸವ ಮುಗಿದ ತಕ್ಷಣ ಸ್ವಾಮಿಗೆ ವಜ್ರ ಖಚಿತ ರಾಜಮುಡಿ ಉತ್ಸವ ನೆರವೇರಲಿದೆ. ಭಾರತದಲ್ಲಿ ಒಂದೇ ರಾತ್ರಿ ಎರಡು ವಜ್ರಖಚಿತ ಕಿರೀಟ ತೊಡಿಸುವ ಸಂಪ್ರದಾಯ ಮೇಲುಕೋಟೆಯಲ್ಲಿ ಮಾತ್ರ ಆಚರಣೆಯಲ್ಲಿದ್ದು ರಾಜ್ಯ ಹೊರ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಪಾಲ್ಗೊಳ್ಳಲಿದ್ದಾರೆ.
|
4 |
+
ಬ್ರಹ್ಮೋತ್ಸವದ ಪ್ರಮುಖ ಉತ್ಸವಗಳು:ವೈರಮುಡಿ ಜಾತ್ರಾಮಹೋತ್ಸವ ಇಂದು ಅಂಕುರಾರ್ಪಣದೊಂದಿಗೆ ಆರಂಭವಾಗಿ ಮಾ. 28 ರ ಶೇರ್ತಿ ಸೇವೆಯವರೆಗೆ 13 ದಿನಗಳ ಕಾಲ ನಡೆಯಲಿದೆ. ಬ್ರಹ್ಮೋತ್ಸವದಲ್ಲಿ ಮಾ.24 ರ ಭಾನುವಾರ ನಡೆಯುವ ಮಹಾರಥೋತ್ಸವ 25 ರಂದು ರಾತ್ರಿ ಕಲ್ಯಾಣಿಯಲ್ಲಿ ನಡೆಯುವ ತೆಪ್ಪೋತ್ಸವ 26 ರಂದು ಬೆಳಿಗ್ಗೆ 11 ಗಂಟೆಗೆ ತೀರ್ಥಸ್ನಾನ ಸಂಜೆ 5 ಗಂಟೆಗೆ ನಡೆಯುವ ಪಟ್ಟಾಭಿಷೇಕ ಮಹೋತ್ಸವಗಳು ಅತ್ಯಂತ ಪ್ರಮುಖ ಉತ್ಸವಗಳಾಗಿವೆ.
|
5 |
+
ನಾಳೆ ಸಂಜೆ 5 ಗಂಟೆಗೆ ಕಲ್ಯಾಣಿಯ ಧಾರಾಮಂಟಪದಲ್ಲಿ ಕಲ್ಯಾಣೋತ್ಸವ ಮಾ.18 ರಂದು ಬೆಳಿಗ್ಗೆ 9 ಗಂಟೆಗೆ ದ್ವಜಾರೋಹಣ, 19 ರಂದು ರಾಮಾನುಜಾಚಾರ್ಯರಿಗೆ ಅಭಿಷೇಕ 20 ರಂದು ಸಂಜೆ ಕಲ್ಯಾಣಿಯಲ್ಲಿ ನಾಗವಲ್ಲೀ ಮಹೋತ್ಸವ 22 ರ ಪ್ರಹ್ಮಾದ ಪರಿಪಾಲನೋತ್ಸವ 23 ರಂದು ರಾತ್ರಿ ಗಜೇಂದ್ರಮೋಕ್ಷ ಉತ್ಸವ 27 ರಂದು ನಡೆಯುವ ಮಹಾಭಿಷೇಕ ಮಹೋತ್ಸವಗಳು ವಿಶೇಷ ಉತ್ಸವಗಳಾಗಿದೆ.
|
6 |
+
ಸ್ವಾಮಿಗೆ ವಾಹನೋತ್ಸವ ವೈಭವ :ವಿಶೇಷ ಉತ್ಸವಗಳ ಜೊತೆಗೆ ವಾಹನೋತ್ಸವಗಳು ಸಹ ಚೆಲುವನಾರಾಯಣನಿಗೆ ನೆರವೇರುತ್ತದೆ. ವಾಹನೋತ್ಸವಗಳು ಪ್ರತಿದಿನ ರಾತ್ರಿ ನಡೆಯಲಿದ್ದು, ಮಾ.18ರಂದು ಹಂಸ ವಾಹನ 19ರಂದು ಶೇಷವಾಹನ, 20ರಂದು ಚಂದ್ರಮಂಡಲ ವಾಹನ, 22ರಂದು ಗರುಡ ವಾಹನ, 23ರಂದು ಗಜ ಮತ್ತು ಅಶ್ವವಾಹನ, 24 ರಂದು ರಾತ್ರಿ ಬಂಗಾರದ ಪಲ್ಲಕ್ಕಿ, 25ರಂದು ಅಶ್ವವಾಹನೋತ್ಸವ, 26 ಪುಷ್ಪಮಂಟಪ ವಾಹನ, 27 ಹಮುಮಂತ ವಾಹನೋತ್ಸವಗಳು ನಡೆಯಲಿದೆ.
|
7 |
+
ವಿಶೇಷ ವ್ಯವಸ್ಥೆ:ಇಡೀ ಮೇಲುಕೋಟೆಗೆ ಆಕರ್ಷಕ ದೀಪಾಲಂಕಾರ, ಸ್ವಾಮಿಯ ಉತ್ಸವಕ್ಕೆ ವಿಶೇಷ ತೋಮಾಲೆಗಳ ಅಲಂಕಾರ, ಮೈಸೂರು, ಬೆಂಗಳೂರು, ಮಂಡ್ಯ ಹಾಸನ ಚನ್ನರಾಯಪಟ್ಟಣ ನಾಗಮಂಗಲ ಮುಂತಾದ ಸ್ಥಳಗಳಿಂದ ವಿಶೇಷಬಸ್ ಸೌಕರ್ಯ, ಸುಜ್ಜಿತ ವೈಧ್ಯಕೀಯ ಸೇವೆ, ನಿರಂತರ ಸ್ವಚ್ಚತೆ ಶುದ್ಧಕುಡಿಯುವ ನೀರಿನ ಪೂರೈಕೆ, ವೈರಮುಡಿ, ರಥೋತ್ಸವ ನಾಗವಲ್ಲೀ ಉತ್ಸವಗಳಂದು ದೇವಾಲಯದ ಆವರಣಗಳಿಗೆ ಪುಷ್ಪಾಲಂಕಾರ, ಪ್ರತಿ ಉತ್ಸವ ಹಾಗೂ ವಾಹನೋತ್ಸವಗಳಿಗೆ ಕನ್ನಡ ಸಂಸ್ಕøತಿ ಇಲಾಖೆ ಪ್ರಾಯೋಜನೆ ಹಾಗೂ ಎಸ್.ಎಸ್ ಐ. ಸಾಂಸ್ಕøತಿಕ ವೇದಿಕೆ ಸಹಯೋಗದಲ್ಲಿ ನಾದೋಪಾಸನ ಸೇವೆ ಮಂಗಳವಾದ್ಯ ನಿಯೋಜನೆ ಇರಲಿದೆ.
|
eesanje/url_46_205_7.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಲೈಂಗಿಕ ದೌರ್ಜನ್ಯ ಆರೋಪ ಕುರಿತು ಯಡಿಯೂರಪ್ಪ ಹೇಳಿದ್ದೇನು..?
|
2 |
+
ಬೆಂಗಳೂರು,ಮಾ.15-ಹದಿನೇಳು ವರ್ಷದ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪವನ್ನು ಸಾರಾ ಸಗಾಟಾಗಿ ನಿರಾಕರಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕಾನೂನು ಮೂಲಕವೇ ಹೋರಾಟ ನಡೆಸುವುದಾಗಿ ಹೇಳಿದ್ದಾರೆ.
|
3 |
+
ತಮ್ಮ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆ ದೂರು ದಾಖಲಾದ ಬೆನ್ನಲ್ಲೇ ತುರ್ತು ಪತ್ರಿಕಾಗೋಷ್ಟಿ ನಡೆಸಿದ ಅವರು, ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂಬ ಆರೋಪವನ್ನು ಸಾರಾಸಗಟಾಗಿ ತಿರಸ್ಕರಿಸಿದರು. ಖಂಡಿತವಾಗಿ ನಾನು ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಉಪಕಾರ ಮಾಡಲು ಹೋಗಿ ನನಗೆ ಸಂಕಷ್ಟ ಎದುರಾಗಿದೆ. ಕಾನೂನು ಮೂಲಕವೇ ಹೋರಾಟ ಮಾಡುತ್ತೇನೆ. ಇದರಲ್ಲಿ ರಾಜಕೀಯ ಬೆರೆಸಲು ನಾನು ಇಷ್ಟಪಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
|
4 |
+
ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಹಿಳೆ ಮತ್ತು ಮಗಳು ನನ್ನ ಬಳಿ ಸಹಾಯ ಕೇಳಿ ಬಂದಿದ್ದರು. ನಾನು ಕೈಲಾದಷ್ಟು ಸಹಾಯ ಮಾಡಿ ಕಳುಹಿಸಿದ್ದೆ. ಉಪಕಾರ ಮಾಡಿದವರಿಗೆ ಈ ರೀತಿ ಕಾನೂನಿನ ಸಂಕಷ್ಟ ಎದುರಾಗುತ್ತದೆ ಎಂಬುದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
|
5 |
+
ತಾಯಿ-ಮಗಳು ಅನೇಕ ಬಾರಿ ಬಂದು ಹೋಗಿದ್ದಾರೆ. ಅದಾದನಂತರ ಅವರು ಏನೇನೊ ಮಾತನಾಡಿದರು. ನಾನು ಯಾವುದಕ್ಕೂ ತಲೆ ಕೆಡಿಸಿಕೊಂಡಿರಲಿಲ್ಲ. ಈ ರೀತಿ ನನ್ನ ವಿರುದ್ಧವೇ ದೂರು ದಾಖಲಾಗಿರುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಕೆಲವರು ಬಾರಿ ಸಹಾಯ ಮಾಡುವಾಗಲೂ ಹತ್ತಾರು ಬಾರಿ ಯೋಚನೆ ಮಾಡಬೇಕಾಗುತ್ತದೆ. ಇಲ್ಲದಿದ್ದರೆ ನನ್ನ ಪರಿಸ್ಥಿತಿ ಬೇರೆಯವರಿಗೂ ಬರಬಹುದು ಎಂದು ಎಚ್ಚರಿಸಿದರು.
|
6 |
+
ಒಂದೂವರೆ ತಿಂಗಳ ಹಿಂದೆ ನಮ್ಮ ಮನೆಗೆ ಕಣ್ಣೀರು ಹಾಕುತ್ತಾ ಬಂದಿದ್ದರು. ನನಗೆ ಅನ್ಯಾಯವಾಗಿದೆ ನ್ಯಾಯ ಒದಗಿಸಿ ಎಂದು ಕೇಳಿಕೊಂಡಿದ್ದರು. ನಾನೇ ಆ ಮಹಿಳೆಯನ್ನು ನಗರ ಪೊಲೀಸ್ ಆಯುಕ್ತರ ಬಳಿ ಕಳುಹಿಸಿ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದೆ. ಈಗ ಯಾರೋ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇರಲಿ ಬಿಡಿ. ಕಾನೂನು ಮೂಲಕವೇ ಹೋರಾಟ ಮಾಡುತ್ತೇನೆ ಎಂದರು.
|
7 |
+
ಇದು ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ದೂರು ನೀಡಿರುವುದು ರಾಜಕೀಯ ಪ್ರೇರಿತವೇ ಎಂಬ ಮಾಧ್ಯಮದವರ ಪ್ರಶ್ನೆಗೆ ನಾನು ಖಂಡಿತವಾಗಿಯೂ ಹಾಗೆ ಹೇಳಲಾರೆ. ಮಹಿಳೆ ಯಾವ ಕಾರಣಕ್ಕಾಗಿ ದೂರು ಕೊಟ್ಟಿದ್ದಾರೋ ಗೊತ್ತಿಲ್ಲ ಎಂದು ಅಸಮಾಧಾನದಿಂದಲೇ ಹೇಳಿದರು.
|
8 |
+
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರ ವಾತಾವರಣವಿದೆ. ಈ ಬಾರಿ ನಾವು ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದೇವೆ. ದೇಶದಲ್ಲಿ ಮತ್ತೆ ಮೋದಿಯವರು ಪ್ರಧಾನಿಯಾಗುವುದು 100ಕ್ಕೆ ನೂರರಷ್ಟು ಖಚಿತ ಎಂಬ ವಿಶ್ವಾಸವನ್ನು ಯಡಿಯೂರಪ್ಪ ವ್ಯಕ್ತಪಡಿಸಿದರು. 17 ವರ್ಷದ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನಲೆಯಲ್ಲಿ ಯಡ��ಯೂರಪ್ಪ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಎಫ್ಐಆರ್ ದಾಖಲಿಸಲಾಗಿದೆ.
|
eesanje/url_46_205_8.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ವಾರಣಾಸಿ ಮಾದರಿಯಲ್ಲಿ ತುಮಕೂರು ಅಭಿವೃದ್ಧಿ : ವಿ.ಸೋಮಣ್ಣ
|
2 |
+
ತುಮಕೂರು, ಮಾ.15-ಹೊರಗಿನ ಅಭ್ಯರ್ಥಿ ಎನ್ನುವ ವಿಷಯ ನಿನ್ನೆಗೆ ಮುಗಿದು ಹೋಗಿದೆ. ನಾಳೆಯಿಂದ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೆಲಸ ಆರಂಭಿಸುತ್ತೇನೆ. ಕಲ್ಪತರು ನಾಡನ್ನು ವಾರಣಾಸಿ ರೀತಿಯಲ್ಲಿ ಅಭಿವೃದ್ಧಿ ಪಡಿಸುತ್ತೇನೆ ಎಂದು ಲೋಕಸಭಾ ಅಭ್ಯರ್ಥಿ ಹಾಗೂ ಮಾಜಿ ಸಚಿವ ವಿ. ಸೋಮಣ್ಣ ಇಂದಿಲ್ಲಿ ತಿಳಿಸಿದ್ದಾರೆ.
|
3 |
+
ಲೋಕಸಭಾ ಟಿಕೇಟ್ ದೊರೆತ ಹಿನ್ನೆಲೆಯಲ್ಲಿ ಸಿದ್ದಗಂಗಾಮಠಕ್ಕೆ ಭೇಟಿ ನೀಡಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸಿ ನಂತರ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗಸ್ವಾಮೀಜಿಯವರ ಆಶೀರ್ವಾದ ಪಡೆದು ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಇದ್ದ ಕ್ಷೇತ್ರವನ್ನು ಬಿಟ್ಟುಕೊಟ್ಟು ಬೇರೆ ಎರಡು ಕ್ಷೇತ್ರದಲ್ಲಿ ಸ್ರ್ಪಧಿಸಿ ಸೋತಿದ್ದೆ.
|
4 |
+
ಹೈಕಮಾಂಡ್ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ಕೆಲಸಗಾರ ಮನೆಯಲ್ಲೇ ಕೂರೋದು ಬೇಡ ಅಂತ ಲೋಕಸಭೆ ಟಿಕೆಟ್ನ್ನು ತುಮಕೂರು ಕ್ಷೇತ್ರದಿಂದ ನೀಡಿದೆ. ನನಗೆ ಕ್ಷೇತ್ರ ಹೊಸ ದೇನು ಅಲ್ಲ. ಮೊದಲಿನಿಂ ದಲೂ ಚಿರಪರಿಚಿತ.ಶ್ರೀ ಸಿದ್ದಗಂಗಾ ಶ್ರೀಗಳು, ಬಾಲಗಂಗಾಧರನಾಥ ಶ್ರೀಗಳು ಸೇರಿದಂತೆ ವಿವಿಧ ಮಠಾೀಶರ ಆಶೀರ್ವಾದ ಇದೆ. ರಾಷ್ಟ್ರದಲ್ಲಿ ಒಂದೇ ವಾರಣಾಸಿ ಇರೋದು.
|
5 |
+
ತುಮಕೂರು ಕೂಡ ಒಂದು ವಾರಣಾಸಿ ಆಗಬೇಕೆಂದು ಸಂಕಲ್ಪ ಮಾಡಿದ್ದೇನೆ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿಷಾ, ನಮ್ಮ ಮುಖಂಡರಾದ ಬಿ.ಎಸ್. ಯಡಿಯೂರಪ್ಪ ಅವರೆಲ್ಲರೂ ನನ್ನನ್ನು ಆಯ್ಕೆ ಮಾಡಿ ತುಮಕೂರಿಗೆ ಕಳುಹಿಸಿದ್ದಾರೆ. ನಾಳೆಯಿಂದಲೇ ಚುನಾವಣೆ ಪ್ರಚಾರ ಪ್ರಾರಂಭ ಮಾಡುತ್ತೇನೆ ಎಂದರು.
|
6 |
+
ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು 28 ಕ್ಷೇತ್ರಗಳನ್ನು ಗೆಲ್ಲಬೇಕು. ಹೊರಗೆ- ಒಳಗೆ ಎಂಬುದನ್ನು ನಿನ್ನೆಗೆ ಮುಗಿದುಹೋದ ವಿಚಾರ. ಎಲ್ಲರೂ ಒಳಗಿನವರೇ. 32 ಜಿಲ್ಲೆಗಳು ನಮ್ಮದೇ. ಮಾಜಿ ಸಚಿವ ಮಾಧುಸ್ವಾಮಿ ಅವರ ವೈಯಕ್ತಿಕ ಹೇಳಿಕೆ ಸಹಜ. ನಾಳೆ ಅವರನ್ನು ಭೇಟಿ ಮಾಡುತ್ತೇನೆ. ಮಠ, ಗುರುಕುಲ ದೇವಾಲಯ ಸೇರಿದಂತೆ ಸಂಜೆಯವರೆಗೂ ವಿವಿಧ ಕಡೆ ಭೇಟಿ ನೀಡುತ್ತೇನೆ.
|
7 |
+
ನಂತರ ಮಾಧುಸ್ವಾಮಿಯನ್ನು ಭೇಟಿಯಾಗುತ್ತೇನೆ. ಪ್ರಧಾನಿಯಾಗಿ ನರೇಂದ್ರ ಮೋದಿಯವರು ಮೂರನೇ ಭಾರಿ ಆಯ್ಕೆಯಾಗಬೇಕು ಎಂಬುದೇ ನಮ್ಮ ಗುರಿ ಎಂದು ತಿಳಿಸಿದರು. ಶಾಸಕರಾದ ಜ್ಯೋತಿ ಗಣೇಶ್, ಸುರೇಶ್ಗೌಡ, ಮಾಜಿ ಶಾಸಕ ಲಕ್ಷ್ಮೀನಾರಾಯಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿ, ಬಾವಿಕಟ್ಟೆ ನಾಗಣ್ಣ, ಮಧುಗಿರಿ ಗಂಗರಾಜು, ಭೀಮನಕುಂಟೆ ಹನುಮಂತೇಗೌಡ ಮತ್ತಿತರರಿದ್ದರು.
|
eesanje/url_46_205_9.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಡಾ.ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಗೆ ಚಾಲನೆ
|
2 |
+
ಬೆಂಗಳೂರು,ಮಾ.15-ಹಠಾತ್ ಹಾಗೂ ತೀವ್ರ ಹೃದಯಾಘಾತದ ಪ್ರಕರಣಗಳಲ್ಲಿ ಸುವರ್ಣ ಸಮಯದ ಚಿಕಿತ್ಸೆ ನೀಡಿ ಜೀವ ರಕ್ಷಿಸುವ ಕರ್ನಾಟಕ ರತ್ನ ಡಾ.ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಧಾರವಾಡದಲ್ಲಿಂದು ಚಾಲನೆ ನೀಡಿದರು.
|
3 |
+
ಕಾರ್ಮಿಕ ಸಚಿವ ಸಂತೋಷ್ ಲಾಡ್, ಶಾಸಕ ಕೋನ ರೆಡ್ಡಿ, ಇಲಾಖೆಯ ಆಯುಕ್ತ ರಂದೀಪ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಅತ್ಯಂತ ಜನಪ್ರಿಯ ನಟ ಡಾ.ಪುನೀತ್ ರಾಜಕುಮಾರ್ ಕೇವಲ ನಟನೆಯಿಂದಷ್ಟೇ ಅಲ್ಲ, ಜನಪರ ಹಾಗೂ ಮಾನವೀಯ ಸೇವೆಗಳ ಮೂಲಕ ಪ್ರಖ್ಯಾತರಾಗಿದ್ದರು. ಅವರಿಗೆ ತೀವ್ರ ಹೃದಯಾಘಾತವಾದಾಗ ಟೆನೆಕ್ಟ್ ಪ್ಲೇಸ್ ಇಂಜೆಕ್ಷನ್ ದೊರೆತಿದ್ದರೆ ಕಿರಿಯ ವಯಸ್ಸಿನಲ್ಲೇ ಸಾವನ್ನಪ್ಪುತ್ತಿರಲಿಲ್ಲ ಎಂದರು.
|
4 |
+
ಹೃದಯಾಘಾತ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿವೆ. ತುರ್ತು ಸಂದರ್ಭದಲ್ಲಿ ಚಿಕಿತ್ಸೆ ದೊರೆತರೆ ಜೀವರಕ್ಷಣೆ ಸಾಧ್ಯವಾಗಲಿದೆ. ಬಹಳಷ್ಟು ಪ್ರಕರಣಗಳಲ್ಲಿ ಹೃದಯಾಘಾತಕ್ಕೊಳದಾಗ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲೇ ಜೀವಹಾನಿಯಾಗುತ್ತಿದೆ. ಒಂದು ವೇಳೆ ಆಸ್ಪತ್ರೆ ತಲುಪಿದ ಬಳಿಕವೂ ಜೀವ ಉಳಿದರೆ ಹೃದಯ ತೀವ್ರವಾಗಿ ದುರ್ಬಲಗೊಂಡಿರುತ್ತದೆ. ಇದನ್ನು ಮನಗಂಡು ನಮ್ಮ ಸರ್ಕಾರ 71 ತಾಲೂಕು ಹಾಗೂ 15 ಜಿಲ್ಲಾಸ್ಪತ್ರೆಗಳಲ್ಲಿ ಟೆಲಿ ಸಂಪರ್ಕ ಆಧಾರಿತವಾಗಿ ತುರ್ತು ಚಿಕಿತ್ಸೆ ನೀಡುವ ಯೋಜನೆಯನ್ನು ಆರಂಭಿಸಿದೆ ಎಂದು ಹೇಳಿದರು.
|
5 |
+
ಟೆನೆಕ್ಟ್ ಪ್ಲೇಸ್ ಇಂಜೆಕ್ಷನ್ಗೆ 30 ಸಾವಿರ ರೂ.ಗಳ ವೆಚ್ಚ ತಗುಲಲಿದೆ. ತೀವ್ರ ಅಪಘಾತಕ್ಕೀಡಾದವರಿಗೆ ತಕ್ಷಣ ಇದನ್ನು ನೀಡಿದರೆ ಜೀವರಕ್ಷಣೆಯಷ್ಟೇ ಅಲ್ಲ, ಹೃದಯ ದುರ್ಬಲತೆ ತಪ್ಪಲಿದೆ. 71 ತಾಲೂಕು ಹಾಗೂ 15 ಜಿಲ್ಲಾಸ್ಪತ್ರೆಗಳಲ್ಲಿ ಟೆಲಿ ಸಂಪರ್ಕ ವ್ಯವಸ್ಥೆಯಿದ್ದು, 65 ಕ್ಕೂ ಹೆಚ್ಚು ತಜ್ಞ ವೈದ್ಯರು ಹಬ್ಗಳಲ್ಲಿ ಕೆಲಸ ಮಾಡುತ್ತಾರೆ.
|
6 |
+
ತುರ್ತು ಸಂದರ್ಭದಲ್ಲಿ ತಾಲೂಕು ಹಾಗೂ ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳಿಗೆ ಮೊದಲು ಇಸಿಜಿ ಮಾಡಲಾಗುತ್ತದೆ. ಮೊಬೈಲ್ ಮತ್ತು ಕೃತಕ ಬುದ್ದಿಮತ್ತೆ ತಂತ್ರಜ್ಞಾನ ಬಳಕೆಯಾಗುವುದರಿಂದ ತಜ್ಞ ವೈದ್ಯರು ಅದನ್ನು ನೇರವಾಗಿ ಪರಿಶೀಲನೆ ನಡೆಸಲಿದ್ದಾರೆ. ಗಂಭೀರ ಸ್ವರೂಪದ ಹೃದಯಾಘಾತವಾಗಿದ್ದರೆ 6 ನಿಮಿಷದಲ್ಲಿ ಪತ್ತೆ ಹಚ್ಚಿ ಟೆನೆಕ್ಟ್ ಪ್ಲೇಸ್ ಇಂಜೆಕ್ಷನ್ ನೀಡಲು ಸ್ಥಳೀಯ ಅಧಿಕಾರಿಗಳಿಂದ ಮುನ್ಸೂಚನೆ ನೀಡಲಾಗುತ್ತದೆ. ಅನಂತರ ಹೆಚ್ಚುವರಿ ಚಿಕಿತ್ಸೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ರವಾನಿಸಲಾಗುವುದು ಎಂದರು.
|
7 |
+
ಇದರ ಜೊತೆಗೆ ತುರ್ತು ಸಂದರ್ಭದಲ್ಲಿಯೂ ಎಲೆಕ್ಟ್ರಾನ್ ಶಾಕ್ ಮೂಲಕ ಜೀವ ರಕ್ಷಿಸುವ ಸ್ಟೆಮಿ ಕಿಟ್ಗಳನ್ನು ರೈಲ್ವೆ, ಬಸ್ ಹಾಗೂ ವಿಮಾನನಿಲ್ದಾಣ, ಜನನಿಬಿಡ ಪ್ರದೇಶಗಳಲ್ಲಿ ಸ್ಥಾಪಿಸಲಾಗುತ್ತದೆ. ಅಲ್ಲಿ ಆರೋಗ್ಯ ಸಿಬ್ಬಂದಿಗಳೂ ಇರುತ್ತಾರೆ. ಹೃದಯಾಘಾತಕ್ಕೆ ಒಳಗಾಗಿದ್ದರೆ ಪ್ರಾಥಮಿಕ ಚಿಕಿತ್ಸೆ ಕೊಡಲು ಈ ಕಿಟ್ಗಳು ಸಹಾಯ ಮಾಡಲಿದೆ ಎಂದರು.
|
8 |
+
ಅತ್ಯಂತ ಮಹತ್ವಾಕಾಂಕ್ಷೆಯ ಈ ಯೋಜನೆಯನ್ನು ಪುನೀತ್ ರಾಜ್ಕುಮಾರ್ ಹುಟ್ಟಿದ ದಿನವಾದ ಮಾ.17 ರಂದು ಉದ್ಘಾಟನೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಕೇಂದ್ರ ಚುನಾವಣಾ ಆಯೋಗ ಯಾವ ಕ್ಷಣದಲ್ಲಾದರೂ ಲೋಕಸಭೆಗೆ ಚುನಾವಣೆ ಘೋಷಣೆ ಮಾಡುವ ನಿರೀಕ್ಷೆ ಇರುವುದರಿಂದ ಎರಡು ದಿನ ಮೊದಲೇ ಚಾಲನೆ ನೀಡುತ್ತಿದ್ದೇವೆ ಎಂದರು.
|
9 |
+
ರಾಜ್ಯಾದ್ಯಂತ 2,800 ಸ್ಟೆಮಿ ಉಪಕರಣಗಳನ್ನು ಒದಗಿಸಲಾಗಿದೆ. ಟೆನೆಕ್ಟ್ ಪ್ಲೇಸ್ ಇಂಜೆಕ್ಷನ್ನಿಂದ ಹಲವು ಜೀವರಕ್ಷಣೆಯಾಗಿದ್ದು, ಅದರಲ್ಲಿ 25 ವರ್ಷದೊಳಗಿನ ನಾಲ್ವರು ಯುವಜನರಿದ್ದಾರೆ ಎಂದು ಹೇಳಿದರು.ತಮ್ಮ ಸರ್ಕಾರ ಪ್ರತಿಯೊಂದು ಜೀವವನ್ನು ಅತ್ಯಮೂಲ್ಯ ಎಂದು ಪರಿಗಣಿಸಿದೆ. ಆರಂಭಿಕ ಹಂತದಲ್ಲಿ 71 ತಾಲೂಕು ಆಸ್ಪತ್ರೆಗಳಲ್ಲಿ ಟೆಲಿ ಸಂಪರ್ಕ ಸೌಲಭ್ಯವಿದ್ದು, ಮುಂದಿನ ಹಂತದಲ್ಲಿ ರಾಜ್ಯಾದ್ಯಂತ ಎಲ್ಲಾ ಆಸ್ಪತ್ರೆಗಳಲ್ಲೂ ವಿಸ್ತರಣೆ ಮಾಡಲಾಗುವುದು. ಖಾಸಗಿ ಆಸ್ಪತ್ರೆಗಳಿಗೆ ಕಡಿಮೆ ಇಲ್ಲದಂತೆ ಸರ್ಕಾರಿ ತಾಲೂಕು ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸುತ್ತೇವೆ. ಬಡವರಷ್ಟೇ ಅಲ್ಲ, ಶ್ರೀಮಂತರು ಕೂಡ ಸರ್ಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯುವ ವಾತಾವರಣ ನಿರ್ಮಿಸುವ ಗುರಿ ನಮ್ಮದು ಎಂದರು.
|
eesanje/url_46_206_1.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ನನ್ನ ರಾಜಕೀಯ ಪ್ರವೇಶಕ್ಕೆ ರಾಜಮಾತೆಯ ವಿರೋಧವಿದೆ ಎಂಬುದು ಸುಳ್ಳು : ಯದುವೀರ್ ಒಡೆಯರ್
|
2 |
+
ಮೈಸೂರು,ಮಾ.15-ಮೈಸೂರು ರಾಜಮನೆತನದಲ್ಲಿ ನಮ್ಮ ಪೂರ್ವಿಕರ ಬಗ್ಗೆ ಜನ ಪೂಜ್ಯನೀಯ ಭಾವನೆ ಹೊಂದಿದ್ದಾರೆ, ಅದಕ್ಕೆ ನಾನು ಚಿರ ಋಣಿ. ನಮ್ಮ ವೃತ್ತಿ ಬದುಕಿನ ಅವಕಾಶವನ್ನು ಸೃಷ್ಟಿಸಿಕೊಳ್ಳುವ ಸಮಯ ಈಗ ಬಂದಿದೆ ಎಂದು ಬಿಜೆಪಿ ಅಭ್ಯರ್ಥಿಯೂ ಆಗಿರುವ ರಾಜ ಮನೆತನದ ಯದುವೀರ್ ಒಡೆಯರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ರಾಜಕೀಯಕ್ಕೆ ಪ್ರವೇಶಿಸಲು ರಾಜಮಾತೆ ಪ್ರಮೋದಾ ದೇವಿಯವರ ವಿರೋಧ ಇತ್ತು ಎಂಬುದು ಸತ್ಯಕ್ಕೆ ದೂರವಾದ ವಿಚಾರ. ಅವರ ಆಶೀರ್ವಾದ ಮತ್ತು ಸಹಮತಿ ಇಲ್ಲದೆ ಏನೂ ನಡೆಯುವುದಿಲ್ಲ ಎಂದು ಹೇಳಿದರು.
|
3 |
+
ಮೈಸೂರು ಲೋಕಸಭಾ ಕ್ಷೇತ್ರವನ್ನು ದಕ್ಷಿಣ ಭಾರತದಲ್ಲಿ ಆಕರ್ಷಣೀಯವಾದ ಪ್ರವಾಸೋದ್ಯಮ ಕೇಂದ್ರ ಮಾಡುವುದು ತಮ್ಮ ಗುರಿ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.ಜೀವನದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಆದರೆ ಅವುಗಳಿಗೆ ಮೌಲ್ಯವಿದ್ದರೆ ಮಾನ್ಯತೆ ದೊರೆಯುತ್ತದೆ. ಇಲ್ಲವಾದರೆ ನಿರ್ಲಕ್ಷಿಸಬೇಕಾಗುತ್ತದೆ. ಸಾಮಾನ್ಯ ಜೀವನದಲ್ಲಿ ಟೀಕೆಗಳು ಸಹಜ, ರಾಜಕಾರಣದಲ್ಲಿ ಅದು ಇನ್ನೂ ಒಂದಿಷ್ಟು ಹೆಚ್ಚಾಗಿರಬಹುದು. ಆದರೆ ಎಲ್ಲವನ್ನೂ ನುಂಗಿಕೊಳ್ಳಬೇಕಾಗುತ್ತದೆ ಎಂದರು.
|
4 |
+
ನಮ್ಮ ಪೂರ್ವಿಕರ ಮೇಲೆ ಮೈಸೂರು ಜನ ಪೂಜ್ಯನೀಯ ಭಾವನೆ ಹೊಂದಿದ್ದಾರೆ. ಅದನ್ನು ನಮ್ಮ ಬಗ್ಗೆ ಎಂದು ಭಾವಿಸಲಾಗುವುದಿಲ್ಲ. ಜನಸೇವೆಗೆ ಅಕಾರ ಬಹಳ ಮುಖ್ಯ. ನೀತಿ, ನಿರೂಪಣೆಯಿಂದಲೇ ಜನರಿಗೆ ಸಹಾಯ ಮಾಡಲು ಅವಕಾಶವಿದೆ. ಹೀಗಾಗಿ ನಾನು ರಾಜಕೀಯಕ್ಕೆ ಬರಲು ನಿರ್ಧರಿಸಿದ್ದೆ. ಇದಕ್ಕಾಗಿ ಸಾಕಷ್ಟು ಪೂರ್ವ ತಯಾರಿಗಳನ್ನುಮಾಡಿಕೊಂಡಿದ್ದೆ ಎಂದು ಹೇಳಿದರು.
|
5 |
+
ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪ್ರಿನ್ಸಿಪಾಲರ ಬಳಿ ಹೋಗಿ ನನಗೆ ಏಕೆ ರ್ಯಾಂಕ್ ನೀಡಲಾಗಿದೆ ಎಂದು ನಾನು ಪ್ರಶ್ನೆ ಮಾಡಲಾಗುವುದಿಲ್ಲ. ರಾಜಕಾರಣದಲ್ಲಿ ಇದೆಲ್ಲಾ ಸಹಜ. ಟಿಕೆಟ್ ಘೋಷಣೆಯಾಗುವ ಸಂದರ್ಭದಲ್ಲಿ ಪ್ರತಾಪ್ ಸಿಂಹ ತಮಗೆ ಕರೆ ಮಾಡಿದ್ದರು, ಎಲ್ಲಾ ಸಹಕಾರ ನೀಡುವುದಾಗಿ ಭರವಸೆ ನೀಡಿ ಶುಭ ಹಾರೈಸಿದ್ದರು ಎಂದರು.
|
6 |
+
ತಾವು ಎಸಿಯಲ್ಲಿ ಕುಳಿತಿದ್ದ ವ್ಯಕ್ತಿ, ಜನಸಾಮಾನ್ಯರೊಂದಿಗೆ ಸಂಪರ್ಕ ಇರುವುದಿಲ್ಲ ಎಂಬುದು ಸರಿಯಲ್ಲ. ಕಳೆದ 9 ವರ್ಷಗಳಿಂದಲೂ ನಾನು ಹಲವು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದೇನೆ. ಬಿಜೆಪಿ ರಾಷ್ಟ್ರೀಯ ನಾಯಕರು ತಮಗೆ ಪ್ರೇರಣೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾಗತಿಕವಾಗಿ ಪ್ರಖ್ಯಾತರಾಗಿರುವುದಷ್ಟೇ ಅಲ್ಲ, ಹಲವಾರು ಗಂಭೀರ ಸಮಸ್ಯೆಗಳನ್ನು ಬಗೆಹರಿಸಿದ್ದಾರೆ ಎಂದು ಹೇಳಿದರು.
|