CoolCoder44 commited on
Commit
ea34e85
·
verified ·
1 Parent(s): a2c3385

b801f632d0c4c2f074dd5c8f388fe344343a82a0fab01f4b7f0896d71c85e119

Browse files
Files changed (50) hide show
  1. eesanje/url_46_35_10.txt +10 -0
  2. eesanje/url_46_35_11.txt +9 -0
  3. eesanje/url_46_35_12.txt +11 -0
  4. eesanje/url_46_35_2.txt +7 -0
  5. eesanje/url_46_35_3.txt +8 -0
  6. eesanje/url_46_35_4.txt +8 -0
  7. eesanje/url_46_35_5.txt +7 -0
  8. eesanje/url_46_35_6.txt +6 -0
  9. eesanje/url_46_35_7.txt +7 -0
  10. eesanje/url_46_35_8.txt +12 -0
  11. eesanje/url_46_35_9.txt +11 -0
  12. eesanje/url_46_36_1.txt +8 -0
  13. eesanje/url_46_36_10.txt +12 -0
  14. eesanje/url_46_36_11.txt +8 -0
  15. eesanje/url_46_36_12.txt +9 -0
  16. eesanje/url_46_36_2.txt +7 -0
  17. eesanje/url_46_36_3.txt +15 -0
  18. eesanje/url_46_36_4.txt +5 -0
  19. eesanje/url_46_36_5.txt +5 -0
  20. eesanje/url_46_36_6.txt +7 -0
  21. eesanje/url_46_36_7.txt +3 -0
  22. eesanje/url_46_36_8.txt +6 -0
  23. eesanje/url_46_36_9.txt +8 -0
  24. eesanje/url_46_37_1.txt +15 -0
  25. eesanje/url_46_37_10.txt +5 -0
  26. eesanje/url_46_37_11.txt +4 -0
  27. eesanje/url_46_37_12.txt +6 -0
  28. eesanje/url_46_37_2.txt +8 -0
  29. eesanje/url_46_37_3.txt +9 -0
  30. eesanje/url_46_37_4.txt +9 -0
  31. eesanje/url_46_37_5.txt +5 -0
  32. eesanje/url_46_37_6.txt +12 -0
  33. eesanje/url_46_37_7.txt +4 -0
  34. eesanje/url_46_37_8.txt +7 -0
  35. eesanje/url_46_37_9.txt +12 -0
  36. eesanje/url_46_38_1.txt +6 -0
  37. eesanje/url_46_38_10.txt +5 -0
  38. eesanje/url_46_38_11.txt +8 -0
  39. eesanje/url_46_38_12.txt +14 -0
  40. eesanje/url_46_38_2.txt +12 -0
  41. eesanje/url_46_38_3.txt +8 -0
  42. eesanje/url_46_38_4.txt +7 -0
  43. eesanje/url_46_38_5.txt +11 -0
  44. eesanje/url_46_38_6.txt +18 -0
  45. eesanje/url_46_38_7.txt +10 -0
  46. eesanje/url_46_38_8.txt +8 -0
  47. eesanje/url_46_38_9.txt +8 -0
  48. eesanje/url_46_39_1.txt +18 -0
  49. eesanje/url_46_39_10.txt +5 -0
  50. eesanje/url_46_39_11.txt +5 -0
eesanje/url_46_35_10.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬಸ್ ಪ್ರಯಾಣ ದರ ಏರಿಕೆ ಸುಳಿವು ನೀಡಿದ ಸಚಿವ ರಾಮಲಿಂಗಾರೆಡ್ಡಿ
2
+
3
+ ಬೆಂಗಳೂರು, ಆ.24– ಪೆಟ್ರೋಲ್‌-ಡೀಸೆಲ್‌, ಹಾಲು ಸೇರಿದಂತೆ ದಿನಕ್ಕೊಂದು ದರ ಏರಿಕೆಯಾಗುತ್ತಿರುವ ಪಟ್ಟಿಯಲ್ಲಿ ನೀರಿನ ದರ ಮತ್ತು ಬಸ್‌‍ ಪ್ರಯಾಣ ದರವೂ ಸೇರ್ಪಡೆಯಾಗುತ್ತಿರುವುದು ಮಧ್ಯಮ ವರ್ಗದವರ ದುಗುಡವನ್ನು ಹೆಚ್ಚಿಸಿದ್ದು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿರೋಧಪಕ್ಷದ ನಾಯಕರಿಗೆ ಉತ್ತರಿಸುವ ಭರದಲ್ಲಿ ಪ್ರಯಾಣದರ ಏರಿಕೆಯ ಸುಳಿವು ನೀಡಿದ್ದಾರೆ.
4
+ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌, ಬಸ್‌‍ ಪ್ರಯಾಣ ದರ ಏರಿಕೆಗೆ ಹೊಸ ಆಯೋಗ ರಚನೆ ಮಾಡುವ ಮೂಲಕ ರಾಜ್ಯಸರ್ಕಾರ ಜನರ ಜೇಬುಗಳ್ಳತನ ಮಾಡಲು ಮುಂದಾಗಿದೆ ಎಂದು ಟೀಕಿಸಿದರು.ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ರಾಮಲಿಂಗಾರೆಡ್ಡಿಯವರು, ಅಶೋಕ್‌ರವರೇ, ನೀವು ಸಾರಿಗೆ ಸಚಿವರಾಗಿದ್ದವರು, ಸಾರಿಗೆ ಸಂಸ್ಥೆಗಳ ಬಗ್ಗೆ ತಿಳಿದೂ ಕೂಡ ಈ ರೀತಿ ಮಾತನಾಡುತ್ತಿರುವುದು ಆಶ್ಚರ್ಯವಾಗುತ್ತಿದೆ ಎಂದಿದ್ದಾರೆ.
5
+ 2013 ರಲ್ಲಿ ತಾವು ಸಾರಿಗೆ ಸಚಿವರಾಗಿದ್ದಾಗ ಬಸ್‌‍ ಪ್ರಯಾಣ ದರ ಶೇ.10.5 ಏರಿಕೆ ಮಾಡಿರುವುದು ಮರೆತುಬಿಟ್ಟಿದ್ದೀರಾ ? ಎಂದು ಪ್ರಶ್ನಿಸಲಾಗಿದ್ದು, 2020 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಬಸ್‌‍ ಪ್ರಯಾಣ ದರ ಶೇ.12 ಹೆಚ್ಚಳ ಮಾಡಲಾಗಿತ್ತು. ಆಗ ಅಶೋಕ್‌ ಸಂಪುಟದ ಸಚಿವರಾಗಿದ್ದು, ಏಕೆ ವಿರೋಧ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.
6
+ ನಿವೃತ್ತ ಐಎಎಸ್‌‍ ಅಧಿಕಾರಿ ಎಂ.ಆರ್‌.ಶ್ರೀನಿವಾಸ್‌‍ಮೂರ್ತಿ ಅವರ ಅಧ್ಯಕ್ಷತೆಯ ಏಕ ಸದಸ್ಯತ್ವ ಸಮಿತಿಯನ್ನು ಬಿ.ಜೆ.ಪಿ ಸರ್ಕಾರವೇ 2021 ರ ನವೆಂಬರ್‌ 15 ರಂದು ರಚಿಸಿತ್ತು. ಆ ಸಮಿತಿ ಅನೇಕ ಶಿಾರಸು ನೀಡಿದ್ದು, ಪ್ರಮುಖವಾಗಿ ಬಸ್‌‍ ಪ್ರಯಾಣ ದರ ಪರಿಷ್ಕರಣೆಗೆ ಕೆಇಆರ್‌ಸಿ ಮಾದರಿಯಲ್ಲಿ ಸಾಂಸ್ಥಿಕ ವ್ಯವಸ್ಥಾಪನಾ ಸಮಿತಿ ಅಗತ್ಯ ಎಂದು ಸಲಹೆ ನೀಡಿದೆ.
7
+ ಇನ್‌ಸ್ಟ್ಟೂಷನಲ್‌ ಅರೇಂಜ್‌ಮೆಂಟ್‌ ಫಾರ್‌ ರಿವಿಜನ್‌ ಆಫ್‌ ಬಸ್‌‍ ಪೇರ್‌ ಶೀರ್ಷಿಕೆಯಡಿ ಆಂತರಿಕ ಸಂಸ್ಥೆಯನ್ನು ರಚಿಸಬೇಕು ಮತ್ತು ಕಾಲಕಾಲಕ್ಕೆ ಬಸ್ ದರವನ್ನು ಹೆಚ್ಚಿಸಬೇಕು. ಆಗಷ್ಟೇ ಸಾರಿಗೆ ಸಂಸ್ಥೆಗಳು ಉಳಿಯಲು ಸಾಧ್ಯವೆಂದು ವರದಿ ನೀಡಲಾಗಿದೆ.ಅಶೋಕ್‌ ಅವರು ಸಚಿವರಾಗಿದ್ದಾಗ ಈ ವರದಿಯನ್ನು ಏಕೆ ತಿರಸ್ಕರಿಸಲಿಲ್ಲ. ಅವರದೇ ಸರ್ಕಾರ ಅಂಗೀಕರಿಸಿದ ವರದಿಯನ್ನು ಈಗ ಸರಿಯಿಲ್ಲವೆಂದು ಹೇಳುತ್ತಿರುವುದು ಅಚ್ಚರಿಯಾಗಿದೆ ಎಂದು ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ.
8
+ ಕರ್ನಾಟಕ ಸರ್ಕಾರ 2000ರ ಸೆಪ್ಟೆಂಬರ್‌ 30ರಂದು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ ಹೆಚ್ಟಿಡಿ/85/ಟಿಆರ್‌ಎ/2000 ರ ಅನ್ವಯ ಕರಾರಸಾ ನಿಗಮ ಹಾಗೂ ಇತರೆ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಡೀಸೆಲ್‌ ತೈಲದ ಬೆಲೆಯಲ್ಲಿ ಹೆಚ್ಚಳವಾದಾಗ ಮತ್ತು ನೌಕರರಿಗೆ ನೀಡುವ ತುಟ್ಟಿಭತ್ಯೆ ದರಗಳಲ್ಲಿ ಹೆಚ್ಚಳವಾದಾಗ ಪ್ರಯಾಣ ದರಗಳನ್ನು ಸ್ವಯಂಚಾಲಿತ ದರ ಹೊಂದಾಣಿಕೆ ನೀತಿಯಂತೆ ಪರಿಷ್ಕರಿಸಲು ���ನುಮತಿ ನೀಡಿರುತ್ತದೆ ಎಂಬ ಮಾಹಿತಿಯೇ ತಮಗೆ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.
9
+ ಅವರದೇ ಬಿ.ಜೆ.ಪಿ ಸರ್ಕಾರ ಕಳೆದ 5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳನ್ನು ರೂ.5900 ಕೋಟಿ ನಷ್ಟದಲ್ಲಿಟ್ಟು ಹೋಗಿದ್ದು, ಈಗ ಸಾರಿಗೆ ಸಂಸ್ಥೆಗಳ ಪಾಡೇನು ಎಂಬುದರ ಬಗ್ಗೆ ತಾವು ಉತ್ತರ ನೀಡುವಿರಾ? ಎಂಬುದಕ್ಕೆ ಅಶೋಕ್‌ರವರು ಉತ್ತರಿಸಲು ಸಾಧ್ಯವೇ ಎಂದಿರುವ ಅವರು, ನನಗೆ ರಾಜಕೀಯವೇ ಮುಖ್ಯ. ಸಾರಿಗೆ ಸಂಸ್ಥೆಗಳು ಉಳಿದರೇನು? ಮುಳುಗಿದರೆ ನನಗೇನು? ಅನ್ನುವ ಮನಸ್ಥಿತಿಯೇ ತಿಳಿಯದಾಗಿದೆ ಎಂದು ಸಿಡಿಮಿಡಿ ವ್ಯಕ್ತಪಡಿಸಿದ್ದಾರೆ.
10
+ ಅಶೋಕ್‌ ಅವರು ಸರ್ಕಾರದ ಭಾಗವಾಗಿ ತೆಗೆದುಕೊಂಡ ಎಲ್ಲಾ ಕ್ರಮಗಳನ್ನು ಇಂದು ಮರೆಮಾಚಿ ಜನರಿಗೆ ತಪ್ಪು ಮಾಹಿತಿ ನೀಡುತ್ತಿರುವುದು ಎಷ್ಟು ಸಮಂಜಸ? ಎಂದು ಕಿಡಿಕಾಡಿರುವ ರಾಮಲಿಂಗಾರೆಡ್ಡಿ ವಿರೋಧಪಕ್ಷದ ನಾಯಕರು ತಮ ಹೇಳಿಕೆಯ ಬಗ್ಗೆ ಆತಾವಲೋಕನ ಮಾಡಿಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.
eesanje/url_46_35_11.txt ADDED
@@ -0,0 +1,9 @@
 
 
 
 
 
 
 
 
 
 
1
+ ಕಾರ್ಕಳ ಅತ್ಯಾಚಾರ ಪ್ರಕರಣ : ಸರ್ಕಾರದ ವಿರುದ್ಧ ಸುನೀಲ್‌ ಕುಮಾರ್‌ ಆಕ್ರೋಶ
2
+ ಬೆಂಗಳೂರು,ಆ.24-ಅನ್ಯಕೋಮಿನ ಯುವಕ ಹಿಂದೂ ಯುವತಿಯನ್ನು ಅಪಹರಿಸಿ ಮಧ್ಯದಲ್ಲಿ ಮತ್ತುಭರಿಸಿ ಅತ್ಯಾಚಾರ ನಡೆಸಿರುವುದು ಪೈಶಾಚಿಕ ಕೃತ್ಯ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬದುಕಿದೆಯೇ ಎಂದು ಬಿಜೆಪಿ ಶಾಸಕ ಎಸ್‌‍.ಸುನೀಲ್‌ಕುಮಾರ್‌ ಪ್ರಶ್ನಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಲು ಬರುವ ಪದಾರ್ಥಗಳನ್ನು ನೀಡಿ ಅತ್ಯಾಚಾರ ಮಾಡುತ್ತಾರೆಂದರೆ ಇದು ಆತಂಕದ ವಿಷಯ. ಹುಬ್ಬಳ್ಳಿ ಘಟನೆ ಮರೆಯುವ ಮುನ್ನ ಮತ್ತೊಂದು ಘಟನೆ ಮರುಕಳಿಸಿದ್ದು, ರಾಜ್ಯದಲ್ಲಿ ಪೊಲೀಸರ ಬಗ್ಗೆ ಭಯ ಇಲ್ಲ. ಹೇಳುವವರು ಕೇಳುವರಿಲ್ಲ ಎಂದು ವಾಗ್ದಾಳಿ ನಡೆಸಿದರು.
4
+ ಕಾರ್ಕಳದಲ್ಲಿ ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪೈಶಾಚಿಕ ಕೃತ್ಯ. ಯುವತಿಯನ್ನ ಅಮಲು ಬರಿಸಿ ಅತ್ಯಾಚಾರ ಮಾಡುವ ಮಾನಸಿಕತೆ ಇದೆ ಅಂದರೆ ಇದನ್ನು ನಂಬಲು ಸಾಧ್ಯವಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು. ಪೊಲೀಸರು ದಿಟ್ಟತನದ ಕ್ರಮ ಕೈಗೊಂಡು ಎಲ್ಲಾ ಆರೋಪಿಗಳನ್ನುಸದೆಬಡೆಯಬೇಕು. ಇದೊಂದು ಲವ್‌ ಜಿಹಾದ್‌ ನ ಮುಂದುವರಿದ ಭಾಗವಾಗಿದೆ. ಪೂರ್ವ ಯೋಜಿತವಾಗಿ ಕೃತ್ಯ ನಡೆಸಲಾಗಿದೆ. ಜಿಲ್ಲಾಡಳಿತ ಮಾನಸಿಕ ಧೈರ್ಯ ನೀಡಬೇಕು ಎಂದು ಮನವಿ ಮಾಡಿದರು.
5
+ ಸಂತ್ರಸ್ತ ಯುವತಿಯ ಚಿಕಿತ್ಸೆಯ ಸಂಪೂರ್ಣ ವೆಚ್ಚ ಸರ್ಕಾರವೇ ಭರಿಸಬೇಕು. ಇದರಲ್ಲಿ ಯಾವುದೇ ರಾಜಕೀಯ ಮೇಲಾಟ ನಡೆಯಬಾರದು. ಇದರ ಹಿಂದೆ ಯಾರೇ ಇದ್ದರೂ ಮುಲಾಜಿಲ್ಲದೇ ಬಂಧಿಸಬೇಕು. ಯುವತಿಗೆ ರಕ್ಷಣೆ ನೀಡಬೇಕು ಎಂದರು.ಇನ್ನು ಮುಂದೆ ಯಾರು ಈ ರೀತಿಯ ಕೃತ್ಯ ಎಸಗಬಾರದು. ಅಂತಹ ಕಠಿಣ ಕ್ರಮ ಕೈಗೊಂಡು ಪೊಲೀಸರು ದಿಟ್ಟತನದಿಂದ ಕೆಲಸ ಮಾಡಬೇಕು ಎಂದು ಹೇಳಿದರು.
6
+ ಘಟನೆ ಸಂಬಂಧ ಸ್ಥಳೀಯ ಕಾರ್ಯಕರ್ತರ ಜೊತೆಗೆ ಸಂಪರ್ಕದಲ್ಲಿದ್ದೇನೆ. ನಾವು ಲವ್‌ ಜಿಹಾದ್‌ ಬಗ್ಗೆ ಜನಜಾಗೃತಿ ಕಾರ್ಯಕ್ರಮ ಮಾಡುತ್ತೇವೆ. ಎರಡೂ ಜಿಲ್ಲೆಯ ಕೇಂದ್ರವಾಗಿಸಿಕೊಂಡು ದೊಡ್ಡ ಜನಜಾಗೃತಿ ಕಾರ್ಯಕ್ರಮ ಮಾಡುತ್ತೇವೆ ಎಂದು ತಿಳಿಸಿದರು.
7
+ ಹಿಂದೂ ಹೆಣ್ಣುಮಕ್ಕಳನ್ನು ರಕ್ಷಿಸಬೇಕಿದೆ. ಅವರನ್ನು ಉಳಿಸಿಕೊಳ್ಳಬೇಕು. ಸಂತ್ರಸ್ತೆಯ ಪೋಷಕರ ಜೊತೆಗೆ ಮಾಡುತ್ತಿದ್ದೇನೆ. ಪೊಲೀಸರು ಹಾಗೂ ಅಧಿಕಾರಿಗಳ ಜೊತೆಗೆ ಬೆಳಗ್ಗೆಯಿಂದಲೇ ಸಂಪರ್ಕದಲ್ಲಿ ಇದ್ದೇನೆ ಎಂದು ಹೇಳಿದರು. ದೆಹಲಿಯಲ್ಲಿ ರಾಜ್ಯಪಾಲರ ವಿರುದ್ಧ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌‍ ತಮ ತಪ್ಪನ್ನ ಮುಚ್ಚಿಕೊಳ್ಳಲು ಪ್ರಯತ್ನ ಮಾಡುತ್ತಿದೆ. ಕೇಂದ್ರದ ಮೇಲೆ ರಾಜ್ಯಪಾಲರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
8
+ ಬಿಲ್‌ಗಳನ್ನ ವಾಪಸ್‌‍ ಕಳಿಸುವ ಪ್ರಕ್ರಿಯೆ ಇದೇ ಮೊದಲೇನು ನಡೆದಿಲ್ಲ. ಈ ಹಿಂದೆ ಅನೇಕ ಬಾರಿ ಈ ರೀತಿಯ ಘಟನೆ ನಡೆದಿದೆ. ಈ ಹಿಂದೆ ರಾಜ್ಯಪಾಲರಾದ ಹಂಸರಾಜ್‌ ಭಾರದ್ವಾಜ್‌ ಅನೇಕ ಬಿಲ್‌ ವಾಪಸ್‌‍ ಕಳಿಸಿದ್ದರು. ಹಂಸರಾಜ್‌ ಭಾರದ್ವಾಜ್‌ ಮಾಡಿದರೆ ತಪ್ಪಲ್ಲ, ದಲಿತ ರಾಜ್ಯಪಾಲ ಗೆಹ್ಲೋಟ್‌ ಮಾಡಿದರೆ ತಪ್ಪೇ ಎಂದು ಪ್ರಶ್ನಿಸಿದರು.
9
+ ಕಾಂಗ್ರೆಸ್ ದ್ವಂದ್ವ ನೀತಿಯನ್ನು ಬಿಡಬೇಕು. ರಾಜ್ಯದಲ್ಲಿ ಒಬ್ಬ ಮಂತ್ರಿಇಲ್ಲ.ಎಲ್ಲರೂ ದೆಹಲಿಗೆ ಹೋಗಿ ಕುಳಿತಿದ್ದಾರೆ. ದೆಹಲಿಯಲ್ಲಿ ಆಡಳಿತ ನಡೆಸುವುದಲ್ಲ ಕರ್ನಾಟಕದಲ್ಲಿ ಆಡಳಿತ ನಡೆಸಿ ಎಂದು ಸರ್ಕಾರಕ್ಕೆ ಟಾಂಗ್‌ ನೀಡಿದರು.
eesanje/url_46_35_12.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಧರ್ಮ, ಜಾತಿ ಹೆಸರಲ್ಲಿ ಅಸಮಾನತೆ ಹೆಚ್ಚುತ್ತಿದೆ : ಸಿಎಂ ಸಿದ್ದರಾಮಯ್ಯ
2
+ , :
3
+ ಬೆಂಗಳೂರು,ಆ.24-ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ 21ನೇ ಶತಮಾನಕ್ಕೆ ಮಹಾತಗಾಂಧೀಜಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.
4
+ ಜಾತಿ ವ್ಯವಸ್ಥೆ ಕಾರಣದಿಂದ ಬಹು ಜನರು ಶಿಕ್ಷಣದಿಂದ ವಂಚಿತರಾದರು. ಈ ಕಾರಣಕ್ಕೆ ಅಸಮಾನತೆ ಹೆಚ್ಚಾಯ್ತು. ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ. ಜಾತಿ ಅಸಮಾನತೆಯ ಪೋಷಕರೇ ಮಹಾತಗಾಂಧಿಯವರನ್ನು ಕೊಂದರು ಎಂದು ಆಕೋಶ ವ್ಯಕ್ತಪಡಿಸಿದರು.
5
+ ಗಾಂಧೀಜಿ ವಿಚಾರಗಳು, ಸಮಾಜಕ್ಕೆ ನೀಡಿದ ಮಾರ್ಗದರ್ಶನಗಳು 20ನೇ ಶತಮನಕ್ಕೆ ಮಾತ್ರ ಸೀಮಿತವಾಗಿಲ್ಲ. ಈಗಿನ ಕಾಲಕ್ಕೂ ಪ್ರಸ್ತುತವಾಗಿವೆ. ಗಾಂಧೀಜಿಯವರು ಶಾಂತಿ, ಸತ್ಯ, ನ್ಯಾಯ ಮತ್ತು ಬ್ರಾತೃತ್ವವನ್ನು ಬದುಕಿನುದ್ದಕ್ಕೂ ಆಚರಿಸಿಕೊಂಡು ಬಂದಿದ್ದಾರೆ. ಇಡೀ ವಿಶ್ವವೇ ಪರಸ್ಪರ ಪ್ರೆತಿಸುವ ಗುಣವನ್ನು ರೂಢಿಸಿಕೊಂಡರೆ ಇಡೀ ಸಮಾಜ ನೆಮದಿಯಿಂದ ಇರಬಹುದು ಎಂದರು.
6
+ ಮನುಷ್ಯ ತನ್ನ ನೆಮದಿಗಾಗಿ ಬೇರೆ ಗ್ರಹಗಳನ್ನು ಹುಡುಕಿಕೊಂಡು ಹೋಗುವಂತಾಗಬಾರದು ಎನ್ನುವ ಸ್ಟೀನ್ ಹಾಕಿಂಗ್ ಅವರ ಮಾತನ್ನು ಪ್ರಸ್ತಾಪಿಸಿ, ಮನುಷ್ಯ ಮನುಷ್ಯರ ನಡುವೆ ಸಹಿಷ್ಣುತೆ ರೂಢಿಸಿಕೊಳ್ಳದಿದ್ದರೆ ಸರ್ವನಾಶವಾಗುತ್ತದೆ. ಕೋಮು ಭಾವನೆ ಹೀಗೇ ಬೆಳೆದರೆ ಕುವೆಂಪು ಅವರ ವಿಶ್ವ ಮಾನವ ಆಶಯ ಈಡೇರುವುದು ಕಷ್ಟವಾಗುತ್ತದೆ ಎಂದು ಹೇಳಿದರು.
7
+ ಪ್ರಕೃತಿ ನಮ ಅಗತ್ಯಗಳನ್ನು ಈಡೇರಿಸುತ್ತದೆಯೇ ಹೊರತು, ದುರಾಸೆಗಳನ್ನು ಅದು ಪೂರೈಸುವುದಿಲ್ಲ ಎನ್ನುವುದು ಗಾಂಧಿಯವರ ನಂಬಿಕೆಯಾಗಿತ್ತು. ಕೇರಳದ ವಯನಾಡ್ ಮತ್ತು ರಾಜ್ಯದ ನಾನಾ ಕಡೆ ನಡೆಯುತ್ತಿರುವ ಪರಿಸರ ಅವಘಡಗಳಿಗೆ ಮನುಷ್ಯನ ದುರಾಸೆಗಳೇ ಕಾರಣವಾಗಿದೆ ಎಂದರು.
8
+ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರೆ ಅವರ ಕಾಲಗುಣದಿಂದ ರಾಜ್ಯಕ್ಕೆ ಬರಗಾಲ ಬರುತ್ತದೆ ಎಂದು ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಗಳೇ ಮೌಢ್ಯ ಬಿತ್ತುವ ಕುಟಿಲ ಪ್ರಯತ್ನ ಮಾಡಿದ್ದರು. ಆದರೆ ಈಗ ಸಿಕ್ಕಾಪಟ್ಟೆ ಮಳೆ ಬರುತ್ತಿದೆ. ಬಹಳ ಮಂದಿ ಶಿಕ್ಷಿತರೇ ಕಂದಾಚಾರ, ಕರ್ಮ ಸಿದ್ಧಾಂತ, ಮೌಢ್ಯವನ್ನು ಆಚರಿಸುತ್ತಾರೆ. ಇದಕ್ಕೆ ಸರಿಯಾದ ವೈಜ್ಞಾನಿಕ ಶಿಕ್ಷಣದ ಕೊರತೆಯೇ ಕಾರಣ. 850 ವರ್ಷಗಳ ಹಿಂದೆಯೇ ಬಸವಾದಿ ಶರಣರು ಕರ್ಮ ಸಿದ್ಧಾಂತವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದರು. ಆದರೆ ಈಗಿನ ಕೆಲವು ಶಿಕ್ಷಿತರೇ ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
9
+ ನೆಹರೂ ಅವರು ವೈಜ್ಞಾನಿಕ ಮತ್ತು ವೈಚಾರಿಕ ಮಾರ್ಗದಲ್ಲಿ ಸಮಾಜವನ್ನು ಸನ್ನದ್ಧಗೊಳಿಸಿ ದೇಶವನ್ನು ಮುನ್ನಡೆಸುತ��ತಿದ್ದರು ಎಂದರು. ಸರ್ವರನ್ನೂ ಒಳಗೊಳ್ಳುವ ಮತ್ತು ಅಹಿಂಸೆ ಗಾಂಧಿಯವರ ಮಾರ್ಗವಾಗಿತ್ತು. ಇದನ್ನು ಯುವಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ. ದೇಶದ ಶೇ.85 ರಷ್ಟು ಆಸ್ತಿ ಶೇ.1 ಶ್ರೀಮಂತರ ಕೈಗೆ ಸೇರುತ್ತಿದೆ. ಇದು ಅಪಾಯಕಾರಿ. ಈ ಆರ್ಥಿಕ ಅಸಮಾನತೆ ಹೋಗಲಾಡಿಸಲು ಗಾಂಧಿಯವರು ವಿಚಾರಗಳಲ್ಲಿ ಮಾರ್ಗಗಳಿವೆ ಎಂದರು.
10
+ ಮಹಾತಗಾಂಧಿಯವರು ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ನ ಬೆಳಗಾವಿ ಅಧಿವೇಶನದ ಶತಮಾನೋತ್ಸವವನ್ನು ಹೆಚ್ಚು ಅರ್ಥಪೂರ್ಣವಾಗಿ ಆಚರಿಸುತ್ತೇವೆ ಎಂದು ತಿಳಿಸಿದರು. ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ಈಡೇರಿಸಬೇಕಾಗಿದೆ. ಗಾಂಧಿಯವರ ಆಶಯದಂತೆ ರಾತ್ರಿ 12 ಗಂಟೆಗೂ ನಮ ಹೆಣ್ಣು ಮಕ್ಕಳು ನಿರ್ಭಯದಿಂದ ಓಡಾಡುವಂತಾಗಬೇಕಿದೆ ಎಂದರು.
11
+ ಗಾಂಧಿ ಸಾರಕ ನಿಧಿ ಅಧ್ಯಕ್ಷ ರಾಮಚಂದ್ರ ರಾಹಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಕಾರ್ಯಾಧ್ಯಕ್ಷ ವಿಶುಕುಮಾರ್, ನವದೆಹಲಿ ಸಾರಕ ನಿಧಿ ಅಧ್ಯಕ್ಷ ಸಂಜೋಯ್ ಸಿಂಗ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
eesanje/url_46_35_2.txt ADDED
@@ -0,0 +1,7 @@
 
 
 
 
 
 
 
 
1
+ ದಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕುರಿತ ಜಂಟಿ ಪರಿಶೀಲನಾ ಸಮಿತಿ ರಚನೆ
2
+ ಬೆಂಗಳೂರು,ಆ.25-ದಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕುರಿತ ಜಂಟಿ ಪರಿಶೀಲನಾ ಸಮಿತಿ ರಚಿಸಲಾಗಿದೆ, ಸಮಿತಿಗೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ರವರು 13 ಸದಸ್ಯರನ್ನು ನೇಮಕ ಮಾಡಿದ್ದು, ಇಬ್ಬರು ಸಚಿವರನ್ನು ಸಮಿತಿಯ ಸದಸ್ಯರಾಗಿ ನಾಮನಿರ್ದೇಶನ ಮಾಡಿದ್ದಾರೆ.
3
+ ವಿಧಾನಸಭಾಧ್ಯಕ್ಷರು ವಿಧಾನಪರಿಷತ್ನ ಸಭಾಪತಿ ಬಸವರಾಜ ಹೊರಟ್ಟಿ ಅವರ ಸಹಮತಿಯೊಂದಿಗೆ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮ 250 ರ ಮೇರೆಗೆ ವಿಧಾನಸಭೆಯ 10 ಮತ್ತು ವಿಧಾನಪರಿಷತ್ನ ಮೂವರು ಸದಸ್ಯರನ್ನೊಳಗೊಂಡ ಜಂಟಿ ಪರಿಶೀಲನಾ ಸಮಿತಿಯನ್ನು ರಚನೆ ಮಾಡಿದ್ದಾರೆ.
4
+ ಜೊತೆಗೆ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮ 255 (2 ರ ಮೇರೆಗೆ) ವಿಧೇಯಕಕ್ಕೆ ಸಂಬಂಧಪಟ್ಟ ಇಲಾಖೆಯ ಸಚಿವರಾದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲರನ್ನು ಸಮಿತಿಯ ಸದಸ್ಯರಾಗಿ ನಾಮನಿರ್ದೇಶನ ಮಾಡಲಾಗಿದೆ.
5
+ 2024 ನೇ ಸಾಲಿನ ದಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಸಮಗ್ರವಾಗಿ ಪರಿಶೀಲಿಸಿ ವರದಿ ನೀಡಲು ಸಮಿತಿಗೆ ಮೂರು ತಿಂಗಳ ಕಾಲಾವಕಾಶ ನಿಗಧಿಪಡಿಸಲಾಗಿದೆ.ಆದರೆ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮ 260ರ ಪ್ರಕಾರ, ಜಂಟಿ ಪರಿಶೀಲನಾ ಸಮಿತಿಯು ತನ್ನ ಅಧ್ಯಕ್ಷನನ್ನು ತಾನೇ ಚುನಾಯಿಸಿಕೊಳ್ಳಬೇಕಿದೆ.
6
+ ಸಮಿತಿಯಲ್ಲಿ ವಿಧಾನಸಭಾ ಸದಸ್ಯರಾದ ರಿಜ್ವಾನ್ ಅರ್ಷದ್, ಎನ್.ಎ.ಹ್ಯಾರಿಸ್, ಬಿ.ಶಿವಣ್ಣ, ಎಸ್.ಟಿ.ಸೋಮಶೇಖರ್, ಪ್ರಿಯಕೃಷ್ಣ, ಎ.ಸಿ.ಶ್ರೀನಿವಾಸ್, ಎಸ್.ಸುರೇಶ್ಕುಮಾರ್, ಎಸ್.ಆರ್.ವಿಶ್ವನಾಥ್, ಎಸ್.ರಘು, ಜಿ.ಟಿ.ದೇವೇಗೌಡರು, ವಿಧಾನಪರಿಷತ್ ಸದಸ್ಯರಾದ ಪುಟ್ಟಣ್ಣ, ಯು.ಬಿ.ವೆಂಕಟೇಶ್, ಎಚ್.ಎಸ್.ಗೋಪಿನಾಥ್ ಅವರನ್ನು ಸಭಾಧ್ಯಕ್ಷರನ್ನು ಸದಸ್ಯರನ್ನಾಗಿ ನೇಮಕ ಮಾಡಿದ್ದಾರೆ.
7
+ 16ನೇ ವಿಧಾನಸಭೆಯ ನಾಲ್ಕನೇ ಅಧಿವೇಶನದಲ್ಲಿ ಜು.25 ರಂದು 2024ನೇ ಸಾಲಿನ ದಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಪರ್ಯಾಲೋಚನೆ ಮತ್ತು ಅಂಗೀಕಾರಕ್ಕಾಗಿ ಮಂಡಿಸಲ್ಪಟ್ಟ ಸಂದರ್ಭದಲ್ಲಿ ಹಲವು ಶಾಸಕರ ಕೋರಿಕೆ ಮೇರೆಗೆ ಈ ವಿಧೇಯಕವನ್ನು ಸಮಗ್ರವಾಗಿ ಪರಿಶೀಲಿಸಿ ವರದಿಯನ್ನು ನೀಡಲು ಜಂಟಿ ಪರಿಶೀಲನಾ ಸಮಿತಿಗೆ ವಹಿಸಲಾಗಿತ್ತು. ಸದನದ ನಿರ್ಣಯದಂತೆ ಸಭಾಧ್ಯಕ್ಷರು ಜಂಟಿ ಪರಿಶೀಲನಾ ಸಮಿತಿಯನ್ನು ರಚಿಸಿದ್ದಾರೆ..
eesanje/url_46_35_3.txt ADDED
@@ -0,0 +1,8 @@
 
 
 
 
 
 
 
 
 
1
+ ಹೈಟೆಕ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ‘ದುಬಾರಿ ಬಿಲ್‌’ ಕಟ್ಟಿದ ಶಾಸಕರು, ಇಲ್ಲಿದೆ ಅನಾರೋಗ್ಯಕ್ಕೊಳಗಾದವರ ಪಟ್ಟಿ
2
+ ಬೆಂಗಳೂರು,ಆ.25-ಸರ್ಕಾರಿ ಹಣ ಎಂದರೆ ನನಗೂ ಇರಲಿ, ನನ್ನ ಮನೆಯವರಿಗೂ ಇರಲಿ ಎಂಬಂತೆ ಕೋಟಿ ಕೋಟಿ ತೂಕ ಬಾಳುವ ವಿಧಾನಪರಿಷತ್‌ ಸದಸ್ಯರು ಮತ್ತು ಶಾಸಕರು ಒಂದೇ ವರ್ಷದಲ್ಲಿ ಲಕ್ಷಾಂತರ ರೂಪಾಯಿ ವೈದ್ಯಕೀಯ ಬಿಲ್‌ಗಳನ್ನು ಸರ್ಕಾರದಿಂದ ಕ್ಲೈಮ್‌ ಮಾಡಿಕೊಂಡಿದ್ದಾರೆ.
3
+ ಬಿಜೆಪಿಯ ವಿಧಾನಪರಿಷತ್‌ ಸದಸ್ಯೆ ಭಾರತಿಶೆಟ್ಟಿ ಒಂದೇ ವರ್ಷದ ಅವಧಿಯಲ್ಲಿ ಅತೀ ಹೆಚ್ಚು ಅಂದರೆ 48.70 ಲಕ್ಷ ಹಣವನ್ನು ಸರ್ಕಾರದಿಂದ ಆರೋಗ್ಯಕ್ಕಾಗಿ ಬಿಲ್‌ ಪಾವತಿಸಿಕೊಂಡಿದ್ದಾರೆ.
4
+ ಎರಡನೇ ಸ್ಥಾನದಲ್ಲಿ ಮಾಜಿ ಸಚಿವ ಹಾಗೂ ಹಾಲಿ ವಿಧಾನಪರಿಷತ್‌ ಸದಸ್ಯರಾಗಿರುವ ಸಿ.ಪಿ.ಯೋಗೇಶ್ವರ್‌ 39.64 ಲಕ್ಷ, ಸಚಿವೆ ಲಕ್ಷ್ಮೀಹೆಬ್ಬಾಳ್ಕರ್‌ ಸಹೋದರ ಚನ್ನರಾಜ್‌ ಹಟ್ಟಿಹೊಳಿ 17.03 ಲಕ್ಷ ಹಣವನ್ನು ಒಂದೇ ವರ್ಷದಲ್ಲಿ ಪಡೆದುಕೊಂಡಿದ್ದಾರೆ.ಸಾಮಾಜಿಕ ಹೋರಾಟಗಾರ ವೆಂಕಟೇಶ್‌ ಎಂಬುವರು ಮಾಹಿತಿ ಹಕ್ಕು ಆಯೋಗದಿಂದ ಪಡೆದುಕೊಂಡಿರುವ ದಾಖಲೆಗಳಲ್ಲಿ ಇದು ಬಹಿರಂಗವಾಗಿದೆ.
5
+ ಶಾಸಕರು ಮತ್ತು ವಿಧಾನಪರಿಷತ್‌ ಸದಸ್ಯರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾದರೆ ಅವರಿಗೆ ಸರ್ಕಾರದ ವತಿಯಿಂದಲೇ ಹಣವನ್ನು ಕ್ಲೈಮ್‌ ಮಾಡಲಾಗುತ್ತದೆ. ನಿಯಮಗಳ ಪ್ರಕಾರ ಸರ್ಕಾರಿ ಆಸ್ಪತ್ರೆ ಹಾಗೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು.
6
+ ಆದರೆ ಸರ್ಕಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುವ ಜನಪ್ರತಿನಿಧಿಗಳು ತಾವು ಮಾತ್ರ ಹೈಟೆಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬೇಕು ಎಂಬ ನೀತಿ ಬೋಧನೆ ಮಾಡುತ್ತಾರೆ.ವಿಶೇಷವೆಂದರೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಆಸ್ತಿ ವಿವರಗಳಲ್ಲಿ ಕೋಟಿಕೋಟಿ ಬಾಳುವ ಜನಪ್ರತಿನಿಧಿಗಳೇ ಈ ವರ್ಷ ಸರ್ಕಾರದ ಹಣದಿಂದಲೇ ಚಿಕಿತ್ಸೆ ಪಡೆದುಕೊಂಡಿದ್ದಾರೆ.
7
+ ಮೊದಲನೇ ಸ್ಥಾನ ಭಾರತಿಶೆಟ್ಟಿಗೆ ಸಲ್ಲಿದರೆ, ಸಿ.ಪಿ.ಯೋಗೇಶ್ವರ್‌, ಚೆನ್ನರಾಜ ಹಟ್ಟಿಹೊಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌, ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ್‌ ಸವದಿ, ವಿಧಾನಪರಿಷತ್‌ ಸದಸ್ಯ ಟಿ.ಎ.ಶರವಣ ಕೂಡ ಈ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.
8
+ ಹೆಚ್ಚು ವೈದ್ಯಕೀಯ ಬಿಲ್‌ ಕ್ಲೈಮ್‌ ಮಾಡಿದವರು :ಭಾರತಿಶೆಟ್ಟಿ – 48.70 ಲಕ್ಷಸಿ.ಪಿ.ಯೋಗೇಶ್ವರ್‌ – 39.64 ಲಕ್ಷಚನ್ನರಾಜ ಹಟ್ಟಿಹೊಳಿ – 17.03 ಲಕ್ಷಗೋವಿಂದ ರಾಜ್‌ – 7.26 ಲಕ್ಷಲಕ್ಷ್ಮಣ್‌ ಸವದಿ – 2.41 ಲಕ್ಷಟಿ.ಎ.ಶರವಣ – 2.14 ಲಕ್ಷಹರೀಶ್‌ ಕುಮಾರ್‌ – 2 ಲಕ್ಷ ರೂಪಾಯಿಮರಿತಿಬ್ಬೇಗೌಡ – 1,54,995 ರೂಪಾಯಿಎನ್‌‍. ವಾಯ್‌ ನಾರಾಯಣಸ್ವಾಮಿ – 3 ಲಕ್ಷ ರೂಪಾಯಿಅಬ್ದುಲ್‌ ಜಬ್ಬಾರ್‌- 1,1,345 ರೂಪಾಯಿಸುಧಾಮ್‌ ದಾಸ್‌‍ – 2,04,542 ರೂಪಾಯಿಸುನೀಲ್‌ ವಲ್ಯಾಪುರೆ – 2,75,000 ರೂಪಾಯಿಛಲವಾದಿ ನಾರಾಯಣಸ್ವಾಮಿ – 1,18,828 ರೂಪಾಯಿವೈ.ಎಂ.ಸತೀಶ್‌ – 2,77,559 ರೂಪಾಯಿಮಧು ಮಾದೇಗೌಡ – 2,46,233 ರೂಪಾಯಿಮಧು ಮಾದೇಗೌಡ – 2,46,233 ರೂಪಾಯಿರಘುನಾಥ್‌ ಮಲ್ಕಾಪುರೆ – 1,34,823 ರೂಪಾಯಿಎಂ.ಜಿ.ಮೂಳೆ – 2,24,282 ರೂಪಾಯಿ
eesanje/url_46_35_4.txt ADDED
@@ -0,0 +1,8 @@
 
 
 
 
 
 
 
 
 
1
+ ಸ್ವಪಕ್ಷದವರಿಂದಲೇ ಸಿಎಂ ಕೆಳಗಿಳಿಸುವ ಪಿತೂರಿ : ಅಶೋಕ್ ಬಾಂಬ್‌
2
+ :
3
+ ಬೆಂಗಳೂರು,ಆ.24-ರಾಜ್ಯದಲ್ಲಿ ಕಾಂಗ್ರೆಸ್‌‍ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಪ್ರತಿಪಕ್ಷಗಳು ಮಾಡುವುದಿಲ್ಲ. ಆ ಪಕ್ಷದೊಳಗೇ ಮುಖ್ಯಮಂತ್ರಿಯನ್ನು ಕೆಳಗಿಳಿಸುವ ಪಿತೂರಿ ನಡೆಯುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಬಾಂಬ್‌ ಸಿಡಿಸಿದ್ದಾರೆ.
4
+ ಬಿಜೆಪಿ ಇಲ್ಲವೇ ಜೆಡಿಎಸ್‌‍ ಈ ಸರ್ಕಾರವನ್ನು ಕೆಡುವ ಪ್ರಯತ್ನ ಮಾಡುತ್ತಿಲ್ಲ. ನಾವು ಪ್ರತಿಪಕ್ಷವಾಗಿ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ ನಡೆಸುತ್ತಿದ್ದೇವೆ. ಆಡಳಿತಾರೂಢ ಪಕ್ಷದಲ್ಲೇ ಇಕ್ಕಟ್ಟು ಬಿಕ್ಕಟ್ಟು ಎದ್ದು ಕಾಣುತ್ತಿದೆ. ತಾನಾಗೆ ಸರ್ಕಾರ ಅಸ್ಥಿರಗೊಂಡರೆ ನಾವೇನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.
5
+ ಸಿದ್ದರಾಮಯ್ಯ ನಂತರ ಯಾರನ್ನು ಸಿಎಂ ಮಾಡಬೇಕು ಎಂದು ಕಾಂಗ್ರೆಸ್‌‍ ಪಕ್ಷದಲ್ಲಿ ಚರ್ಚೆಯಾಗುತ್ತಿದೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌, ಗೃಹಸಚಿವ ಪರಮೇಶ್ವರ್‌, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಎಂ.ಬಿ. ಪಾಟೀಲ್‌, ಸತೀಶ್‌ ಜಾರಕಿಹೊಳಿ, ಜಮೀರ್‌ ಅಹಮದ್‌ ಸೇರಿದಂತೆ ಬಹಳಷ್ಟು ಜನ ಓಡಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
6
+ ಬಿಜೆಪಿ, ಜೆಡಿಎಸ್‌‍ನವರು ಸರ್ಕಾರ ಬೀಳಿಸುವುದಿಲ್ಲ.ನಾವು ಯಾವತ್ತೂ ಸರ್ಕಾರ ಬೀಳಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ. ಯಾವುದೇ ಕಾಂಗ್ರೆಸ್‌‍ ಶಾಸಕರನ್ನೂ ಸಹ ಭೇಟಿಯಾಗಿಲ್ಲ. ಸಿಎಂ ಸೀಟ್‌ಗಾಗಿ ಅವರ ಪಕ್ಷದಲ್ಲೇ ಮ್ಯೂಸಿಕ್‌ ಅಂಡ್‌ ಚೇರ್‌ ನಡೆಯುತ್ತಿದೆ ಎಂದು ಟೀಕಿಸಿದರು.
7
+ ನೀರಿನ ಬಿಲ್‌ ದರ ಹೆಚ್ಚಿಸಲು ಮುಂದಾಗಿದ್ದಾರೆ. ಜನ ವಿರೋಧದ ನಡುವೆಯೂ ನೀರಿನ ಬಿಲ್‌ ದರ ಹೆಚ್ಚಿಸಲು ಮುಂದಾಗಿರುವುದು ಸಂವಿಧಾನ ವಿರೋಧ ತಾನೆ ಎಂದು ಪ್ರಶ್ನಿಸಿದರು.
8
+ ಸಾರ್ವಜನಿಕರನ್ನು ಹಿಯಾಳಿಸಿದರೆ ಕಾಂಗ್ರೆಸ್‌‍ಗೆ ತಕ್ಕ ಪಾಠ ಕಲಿಸುತ್ತಾರೆ. ಬೆಂಗಳೂರಿನ ಜನರ ಬಗ್ಗೆ ಮಾತನಾಡುವ ಹಕ್ಕು ಕಾಂಗ್ರೆಸ್‌‍ಗೆ ಇಲ್ಲ. ನೀರು ಕೊಡುವುದು ಸರ್ಕಾರದ ಕರ್ತವ್ಯ ಈಗ ಏರಿಕೆ ಮಾಡಲು ಮುಂದಾಗಿರುವ ನಿಮಗೆ ನಾಚಿಕೆಯಾಗಬೇಕು ಎಂದು ತರಾಟೆಗೆ ತೆಗೆದುಕೊಂಡರು. ಕಾಂಗ್ರೆಸ್‌‍ನವರು ದಾರಿಯಲ್ಲಿ ರಾಜಪಾಲರ ಬಗ್ಗೆ ಏಕವಚದಲ್ಲಿ ಮಾತಾಡಿದ್ದಾರೆ. ಮಂತ್ರಿಗಳು ಅಗೌರವವಾಗಿ ಮಾತಾಡಿದ್ದು ಸರಿಯಲ್ಲ ಎಂದು ಆಕ್ಷೇಪಿಸಿದರು.
eesanje/url_46_35_5.txt ADDED
@@ -0,0 +1,7 @@
 
 
 
 
 
 
 
 
1
+ ಡಿಕೆಶಿ ಯೋಜನೆ ಪ್ರಪಂಚದ 7ನೇ ಅದ್ಭುತ : ಮುನಿರತ್ನ ವ್ಯಂಗ್ಯ
2
+ 7th :
3
+ ಬೆಂಗಳೂರು,ಆ.24– ನಗರದಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಟನಲ್‌ ರಸ್ತೆ ನಿರ್ಮಾಣ ಮಾಡಲು ಮುಂದಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಕನಸಿನ ಯೋಜನೆ ಪ್ರಪಂಚದ 7ನೇ ಅದ್ಭುತಗಳಲ್ಲಿ ಒಂದು ಎಂದು ಮಾಜಿ ಸಚಿವ ಹಾಗೂ ಶಾಸಕ ಮುನಿರತ್ನ ವ್ಯಂಗ್ಯವಾಡಿದ್ದಾರೆ.
4
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಂಡಿ ಮುಚ್ಚಲು ಒಂದು ವಾರ್ಡ್‌ಗೆ 15 ಲಕ್ಷ ರೂ. ಕೊಡುತ್ತಿದ್ದಾರೆ. 224 ಕಿಲೋ ಮೀಟರ್‌ಗೆ 15 ಲಕ್ಷ ರೂ. ಭಾಗ ಮಾಡಿದರೆ 4 ಗುಂಡಿಯನ್ನು ಮುಚ್ಚಲು ಆಗುವುದಿಲ್ಲ. ಇನ್ನು ಟನಲ್‌ ರಸ್ತೆ ಮಾಡಿದರೆ, ಏಳು ಅದ್ಭುತಗಳಲ್ಲಿ ಇದು ಏಂಟನೇ ಅದ್ಬುತವಾಗಲಿದೆ ಎಂದು ಟೀಕಿಸಿದರು.
5
+ ನೀರಿನ ಬೆಲೆ ಹೆಚ್ಚು ಮಾಡಿದ್ದಾರೆ. ನೀರು ಕೊಟ್ಟು ನೀರಿನ ಬೆಲೆ ಹೆಚ್ಚಿಸಿದರೆ ಪರವಾಗಿಲ್ಲ. ಕೊಳಾಯಿ ತಿರುಗಿಸಿದ ತಕ್ಷಣವೇ ಗಾಳಿ ಬರುತ್ತದೆ. ಗಾಳಿ ಬಂದ ತಕ್ಷಣ ಮೀಟರ್‌ ಓಡುತ್ತದೆ. ಆ ಗಾಳಿಗೂ ಸಹ ದುಡ್ಡು ಕೊಡಬೇಕು. ನೀರಿಗೂ ದುಡ್ಡು, ಗಾಳಿಗೂ ದುಡ್ಡು, ಕೊಡಬೇಕು ಎಂದು ಆಕ್ಷೇಪಿಸಿದರು.
6
+ ಕಾಂಗ್ರೆಸ್‌‍ನ ಪಂಚ ಗ್ಯಾರಂಟಿಗಳಿಗೆ ದುಡ್ಡಿಲ್ಲ. ಹಾಗಾಗಿ ನೀರಿನ ದರ ಏರಿಕೆ ಮಾಡುತ್ತಿದ್ದಾರೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಏನೊ ಮಾಡಬೇಕು ಅಂದುಕೊಂಡಿದ್ದರೋ ಅದೂ ಆಗಿಲ್ಲ ಎಂದು ವ್ಯಂಗ್ಯವಾಡಿದರು.
7
+ ಬೆಂಗಳೂರಿನ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು, ಬೆಂಗಳೂರಿಗರಿಗೆ ಕೃತಜ್ಞತೆ ಇಲ್ಲ. ಇವರಿಗೆ ಏನೂ ಮಾಡಬಾರದು ಕೃತಜ್ಞತೆ ಇಲ್ಲ ಎಂದಿದ್ದಾರೆ. ಇವರು ಏನ್‌ ಹೇಳಿದರೂ ಕೇಳ್ಬೇಕು, ನಾವು ಹೇಳಿದ್ದನ್ನೇ ಒಪ್ಪಿಕೊಳ್ಳಬೇಕು. ಹೇಳಿದಂತೆ ಕೇಳಿದರೆ ಇವರಿಗೆ ಒಳ್ಳೆಯವರು ಎಂದು ಮುನಿರತ್ನ ತಿರುಗೇಟು ಕೊಟ್ಟರು.
eesanje/url_46_35_6.txt ADDED
@@ -0,0 +1,6 @@
 
 
 
 
 
 
 
1
+ ಸುಳ್ಳು ಆರೋಪ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ : ಶ್ರೇಯಸ್‌ ಪಟೇಲ್‌ ಎಚ್ಚರಿಕೆ
2
+ ಬೆಂಗಳೂರು,ಆ.24-ಅನಗತ್ಯವಾಗಿ ಸುಳ್ಳು ಆರೋಪ ಮಾಡಿ ನಮ್ಮ ಕುಟುಂಬವನ್ನು ಎಳೆದುತರುವುದರ ವಿರುದ್ಧ ಮಾನನಷ್ಟ ಮೊಕದ್ದಮೆ ಸೇರಿದಂತೆ ಅಗತ್ಯ ಕಾನೂನು ಕ್ರಮ ಕೈಗೊಳ್ಳುವುದಾಗಿ ಹಾಸನದ ಸಂಸದ ಶ್ರೇಯಸ್‌‍ ಪಟೇಲ್‌ ಎಚ್ಚರಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ ಹೈಕೋರ್ಟ್‌ನಿಂದ ಯಾವುದೇ ನೋಟೀಸ್‌‍ ಬಂದಿಲ್ಲ. ಬಿಜೆಪಿಯ ಮುಖಂಡ ದೇವರಾಜೇಗೌಡ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು.
3
+ ಒಬ್ಬ ಮನುಷ್ಯನಿಗೆ ಎಷ್ಟು ಕಿರುಕುಳ ನೀಡಲು ಸಾಧ್ಯ? ಉದ್ದೇಶಪೂರ್ವಕವಾಗಿ ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆಗೆ ಮುನ್ನವೇ ನಾನಾ ರೀತಿಯ ಆರೋಪಗಳನ್ನು ಮಾಡಿದರು. ಚುನಾವಣೆಯಲ್ಲಿ ಗೆಲ್ಲುವ ಸಾಧ್ಯತೆಗಳು ಕಂಡುಬರುತ್ತಿದ್ದಂತೆ ಮತ್ತಷ್ಟು ಟೀಕೆಗಳು ಕೇಳಿಬಂದವು. ಯಾವುದೂ ಸಾಬೀತಾಗಿಲ್ಲ ಎಂದು ಹೇಳಿದರು.
4
+ ಯಾವುದೇ ಆರೋಪಗಳಿದ್ದರೂ ನೇರಾನೇರ ನನ್ನೊಂದಿಗೆ ಚರ್ಚೆಗೆ ಬರಬಹುದು. ತೆರಿಗೆ ಪಾವತಿಯ ರಶೀದಿ ತೋರಿಸಿ ತಪ್ಪು ಮಾಹಿತಿ ನೀಡಲಾಗುತ್ತಿದೆ. ಚುನಾವಣೆಯಲ್ಲಿ ನಿಗದಿತ ಪ್ರಮಾಣಕ್ಕಿಂತಲೂ ಹೆಚ್ಚು ಖರ್ಚು ಮಾಡಿದ್ದರೆ ಆಯೋಗ ತಮ ವಿರುದ್ಧ ಕ್ರಮ ಕೈಗೊಳ್ಳುತ್ತಿತ್ತು. ಚುನಾವಣೆಯಲ್ಲಿ ಕೆಲಸ ಮಾಡಲು ಐಎಎಸ್‌‍, ಐಪಿಎಸ್‌‍, ಐಆರ್‌ಎಸ್‌‍ನಂತಹ ಉನ್ನತ ಅಧಿಕಾರಿಗಳನ್ನು ನಿಯೋಜಿಸಿರುತ್ತಾರೆ. ಅವರ್ಯಾರೂ ಕೈಕಟ್ಟಿ ಕೂರುವುದಿಲ್ಲ. ಪ್ರತಿಯೊಂದರ ಮೇಲೂ ನಿಗಾ ವಹಿಸುತ್ತಾರೆ ಎಂದರು.
5
+ ನ್ಯಾಯಾಲಯದಲ್ಲಿ ತಮಗೆ ನ್ಯಾಯ ಸಿಗಲಿದೆ. ಚುನಾವಣಾ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದೇನೆ ಎಂದು ಹೇಳುತ್ತಿದ್ದಾರೆ. ನಾನು ನನ್ನ ಪತ್ನಿ ಹಾಗೂ ಮಕ್ಕಳಿಗೆ ಸೇರಿದ ಎಲ್ಲಾ ವಿವರಗಳನ್ನೂ ದಾಖಲಿಸಿದ್ದೇನೆ. ತಂಗಿಗೆ ನೀಡಿದ್ದ ಆಸ್ತಿಗಳ ಮಾಹಿತಿಯನ್ನು ತೋರಿಸಲು ಸಾಧ್ಯವೇ? ದುರುದ್ದೇಶಪೂರಿತವಾಗಿ ಕುಟುಂಬದ ಸದಸ್ಯರನ್ನು ಏಕೆ ಎಳೆದು ತರಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
6
+ ಸಮೂಹ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಡಿಎಸ್‌‍ನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು ಕಾನೂನಿನಿಗಿಂತ ಯಾರೂ ದೊಡ್ಡವರಲ್ಲ, ಎಷ್ಟೇ ದೊಡ್ಡವರಾದರೂ ತಲೆ ಬಾಗಲೇಬೇಕು. ಈ ಬಗ್ಗೆ ತಾವು ಹೆಚ್ಚು ಚರ್ಚೆ ನಡೆಸಲು ಬಯಸುವುದಿಲ್ಲ ಎಂದು ಹೇಳಿದರು.
eesanje/url_46_35_7.txt ADDED
@@ -0,0 +1,7 @@
 
 
 
 
 
 
 
 
1
+ ಸಿಎಂ ವಿರುದ್ಧದ 73 ಹಗರಣಗಳನ್ನು ಸಿಬಿಐ ಅಥವಾ ಸಿಐಡಿ ತನಿಖೆಗೆ ವಹಿಸಲು ಆಗ್ರಹ
2
+ 73
3
+ ಬೆಂಗಳೂರು,ಆ.24– ಅನ್ಯ ಪಕ್ಷದ ನಾಯಕರ ಹಗರಣಗಳನ್ನು ಎಸ್‌‍ಐಟಿ ತನಿಖೆಗೆ ವಹಿಸುವ ಮತ್ತು ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಬಗ್ಗೆ ರಾಜ್ಯಪಾಲರನ್ನು ಒತ್ತಾಯಿಸುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ ವಿರುದ್ಧ ದಾಖಲಾಗಿರುವ 73 ಬಹತ್‌ ಹಗರಣಗಳನ್ನು ಸಿಬಿಐ, ಸಿಐಡಿ ಇಲ್ಲವೇ ಲೋಕಾಯುಕ್ತ ತನಿಖೆಗೆ ವಹಿಸುವ ಬಗ್ಗೆ ಆದೇಶ ನೀಡಲು ಹಿಂಜರಿಯುತ್ತಿರುವುದು ಏಕೆ ಎಂದು ಬಿಜೆಪಿ ಮುಖಂಡ ಎನ್.ಆರ್‌.ರಮೇಶ್‌ ಪ್ರಶ್ನಿಸಿದ್ದಾರೆ.
4
+ 2013 ರಿಂದ 2018 ರವರೆಗಿನ 5 ವರ್ಷಗಳ ಅವಧಿಯಲ್ಲಿ ರಾಜ್ಯದ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸಿರುವ ಸಿದ್ಧರಾಮಯ್ಯನವರ ಆಡಳಿತಾವಧಿಯಲ್ಲಿ 120 ಕ್ಕೂ ಹೆಚ್ಚು ಬಹತ್‌ ಹಗರಣಗಳು ನಡೆದಿದ್ದು, ಇವುಗಳ ಪೈಕಿ 73 ಬಹತ್‌ ಹಗರಣಗಳಲ್ಲಿ ಖುದ್ದಾಗಿ ಸಿದ್ಧರಾಮಯ್ಯನವರೇ ಭಾಗಿಯಾಗಿರುವ ಬಗ್ಗೆ ದಾಖಲೆಗಳ ಸಹಿತ ಮುಖ್ಯಮಂತ್ರಿಗಳ ಅಧಿಕತ ಕಛೇರಿಗೆ ದೂರುಗಳನ್ನು ಸಲ್ಲಿಸಲಾಗಿತ್ತು. ಅಲ್ಲದೇ, ಲೋಕಾಯುಕ್ತ, ಎಸಿಬಿ, ಬಿಎಂಟಿಎಫ್‌ನಂತಹ ತನಿಖಾ ಸಂಸ್ಥೆಗಳಲ್ಲಿಯೂ ಸಹ ದಾಖಲೆಗಳ ಸಹಿತ ದೂರುಗಳನ್ನು ಸಲ್ಲಿಸಲಾಗಿತ್ತು.
5
+ ಈ 73 ಹಗರಣಗಳಿಗೆ ಸಂಬಧಿಸಿದಂತೆ 1,17,236 ಪುಟಗಳ ಸಂಪೂರ್ಣ ದಾಖಲೆಗಳನ್ನು ಆಯಾ ಹಗರಣಗಳನ್ನು ಬಯಲಿಗೆಳೆದ ದಿನವೇ ಮುಖ್ಯಮಂತ್ರಿಗಳ ಅಧಿಕತ ಕಛೇರಿಗೆ ತಲುಪಿಸಿ ಸ್ವೀಕತಿ ಪತ್ರವನ್ನು ಪಡೆದಿರುತ್ತೇವೆ.
6
+ ಸಿದ್ಧರಾಮಯ್ಯನವರು ಭಾಗಿಯಾಗಿರುವ ಸದರಿ 73 ಬಹತ್‌ ಹಗರಣಗಳ ಪೈಕಿ ಅವರ ರಾಜಕೀಯ ಪ್ರಭಾವವನ್ನು ಬಳಸಿ ಅಥವಾ ಸಿದ್ಧರಾಮಯ್ಯನವರ ಅಧಿಕಾರದ ಪ್ರಭಾವಕ್ಕೆ ಒಳಗಾಗಿ ಲೋಕಾಯುಕ್ತ ಪೋಲೀಸರು ಬಿ ರಿಪೋರ್ಟ್‌ಅನ್ನು ಸಲ್ಲಿಸಿರುತ್ತಾರೆ ಹಾಗೂ 19 ಪ್ರಕರಣಗಳನ್ನು ಮುಕ್ತಾಯಗೊಳಿಸಿರುತ್ತಾರೆ.
7
+ ಇವುಗಳನ್ನು ಹೊರತುಪಡಿಸಿ ಇನ್ನುಳಿದ ಸಿದ್ಧರಾಮಯ್ಯನವರ ವಿರುದ್ಧದ 54 ಪ್ರಕರಣಗಳು ಲೋಕಾಯುಕ್ತದಲ್ಲಿ ಇನ್ನೂ ಚಾಲ್ತಿಯಲ್ಲಿರುತ್ತದೆ ಹಾಗೂ ನಿಜಕ್ಕೂ ಸಿದ್ಧರಾಮಯ್ಯನವರು ಮಾಧ್ಯಮಗಳ ಮುಂದೆ ನನ್ನದು ಅತ್ಯಂತ ಸ್ವಚ್ಛವಾದ ರಾಜಕಾರಣ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ ಎಂದು ಹೇಳಿರುವುದು ನಿಜಕ್ಕೂ ಅವರ ಮನಸ್ಸಾಕ್ಷಿಯಿಂದ ಬಂದ ಮಾತುಗಳೇ ಆಗಿದ್ದರೆ, ಅವರು ಈ ಕೂಡಲೇ 54 ಬಹತ್‌ ಹಗರಣಗಳ ತನಿಖೆಯನ್ನು ಸಿಬಿಐ, ಸಿಐಡಿ ಅಥವಾ ಲೋಕಾಯುಕ್ತಕ್ಕೆ ವಹಿಸುವ ಬಗ್ಗೆ ಆದೇಶ ನೀಡಬೇಕೆಂದು ರಮೇಶ್‌ ಸಿದ್ಧರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.
eesanje/url_46_35_8.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ “ಖರ್ಗೆ ರಾಜ್ಯ ರಾಜಕಾರಣಕ್ಕೆ ಮರಳುವುದಿಲ್ಲ”
2
+ :
3
+ ಬೆಂಗಳೂರು,ಆ.24-ಎಐಸಿಸಿ ಅಧ್ಯಕ್ಷ ಮಲ್ಲಿ ಕಾರ್ಜುನ ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಮರಳುವುದಿಲ್ಲ, ದೆಹಲಿಯಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಮುಂದುವರೆಯಲಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಯವರು ರಾಜ್ಯ ರಾಜ ಕಾರಣಕ್ಕೆ ಮರಳುವಂತಹ ಯಾವುದೇ ವಿಚಾರಗಳು ಚರ್ಚೆಯಾಗಿಲ್ಲ ಎಂದು ಪುನರುಚ್ಚರಿಸಿದರು.
4
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಅಭಿಯೋಜನೆಗೆ ಅನುಮತಿ ನೀಡಬಾರದು ಎಂದು ಸಚಿವ ಸಂಪುಟ ಸಭೆ ನಿರ್ಧಾರ ತೆಗೆದುಕೊಂಡು ರಾಜ್ಯಪಾಲರಿಗೆ ಸಲಹೆ ನೀಡಿತ್ತು. ಅದನ್ನು ಮೀರಿ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿದ್ದಾರೆ.
5
+ ಅದೇ ರೀತಿ ಜೆಡಿಎಸ್‌‍ನ ಮುಖಂಡರೂ ಆಗಿರುವ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿಯ ಮೂರ್ನಾಲ್ಕು ಶಾಸಕರ ವಿರುದ್ಧದ ಪ್ರಕರಣಗಳಿಗೆ ಅಭಿಯೋಜನೆಗೆ ಅನುಮತಿ ನೀಡಿಲ್ಲ. ಇದು ಪಕ್ಷಪಾತ ಎಂಬುದು ಸ್ಪಷ್ಟವಾಗಿದೆ. ಸಚಿವ ಸಂಪುಟದಲ್ಲಿ ಚರ್ಚೆಯೂ ಆಗಿದೆ ಎಂದರು.
6
+ ಆರೋಪಕ್ಕೆ ಗುರಿಯಾದ ಬಹಳಷ್ಟು ನಾಯಕರು ಬಿಜೆಪಿ ಸೇರಿದ್ದಾರೆ. ಮಹಾರಾಷ್ಟ್ರದಲ್ಲಿ ಅಜಿತ್‌ ಪವಾರ್‌, ಎನ್‌ಸಿಪಿ ಪಡೆದು ಬಿಜೆಪಿ ಜೊತೆ ಸೇರಿಕೊಂಡ ಬಳಿಕ ಅವರ ಮೇಲಿನ ಆರೋಪಗಳು ಚರ್ಚೆಯಾಗುತ್ತಿಲ್ಲ. ವಾಷಿಂಗ್‌ ಪೌಡರ್‌ ನಿರ್ಮಾ ಹಾಕಿ ತೊಳೆದಂತಾಗಿದೆ ಎಂದು ಹೇಳಿದರು.
7
+ ಹಲವು ರಾಜ್ಯಗಳಲ್ಲಿ ಬಿಜೆಪಿಯವರ ಸರ್ಕಾರಗಳಿವೆ. ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ವಿರುದ್ಧ ಯಾರಾದರೂ ಅಭಿಯೋಜನೆಗೆ ಕೇಳಬಹುದು. ಮುಂದಿನ ದಿನಗಳಲ್ಲಿ ಬಿಜೆಪಿಯವರ ತಂತ್ರಗಾರಿಕೆಗಳೇ ತಿರುಗುಬಾಣವಾಗಲಿವೆ ಎಂದು ಎಚ್ಚರಿಸಿದರು.
8
+ ರಾಜ್ಯಸರ್ಕಾರವನ್ನು ಅಸ್ತಿರಗೊಳಿಸಲು ಜೆಡಿಎಸ್‌‍ ಸಂಚು ರೂಪಿಸಿದ್ದು, ಬಿಜೆಪಿಯವರು ಅವರ ಜೊತೆ ಕೈಜೋಡಿಸುವುದು ಕಾಂಗ್ರೆಸ್‌‍ನ ಶಾಸಕಾಂಗ ಸಭೆಯಲ್ಲಿ ಚರ್ಚೆಯಾಗಿದೆ. ನಮ ಪಕ್ಷದ ಶಾಸಕರು ಬಿಜೆಪಿ-ಜೆಡಿಎಸ್‌‍ನವರ ಆಮಿಷಗಳಿಗೆ ಒಳಗಾಗುವುದಿಲ್ಲ. ಎರಡು ಪಕ್ಷಗಳೂ ಸೇರಿ ಏನೇ ಹರಸಾಹಸ ನಡೆಸಿದರೂ ಅದು ಯಶಸ್ವಿಯಾಗುವುದಿಲ್ಲ ಎಂದರು.ಮುಂದಿನ ನಾಲ್ಕು ವರ್ಷಗಳ ಬಳಿಕ ಮತ್ತೆ ವಿಧಾನಸಭಾ ಚುನಾವಣೆ ನಡೆಯಲಿದೆ.
9
+ ಕಾಂಗ್ರೆಸ್‌‍ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿಗೆ ತೆರಳಿ ಕಾಂಗ್ರೆಸ್‌‍ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಕಳೆದ ಒಂದು ತಿಂಗಳಿನಿಂದ ನಡೆದ ಬೆಳವಣಿಗೆಗಳ ಬಗ್ಗೆ ವಿವರಣೆ ನೀಡಿದ್ದಾರೆ. ರಾಜ್ಯಪಾಲರ ನಡವಳಿಕೆಗಳ ಬಗ್ಗೆಯೂ ಮಾಹಿತಿ ನೀಡಲಾಗಿದೆ ಎಂದರು.
10
+ ದೆಹಲಿ ಹಾಗೂ ಪಶ್ಚಿಮ ಬಂಗ��ಳ ಸೇರಿ ಹಲವು ರಾಜ್ಯಗಳಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಪತನಗೊಳಿಸಲು ರಾಜ್ಯಪಾಲರ ಕಚೇರಿಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ರಾಜ್ಯಪಾಲರು ಒಳ್ಳೆಯವರು. ಆದರೆ ಅವರ ಮೇಲೆ ಬೇರೆ ರೀತಿಯ ಒತ್ತಡಗಳಿವೆ. ಹೀಗಾಗಿ ರಾಜ್ಯಪಾಲರ ಸ್ಥಾನಕ್ಕೆ ಚ್ಯುತಿ ತರುವಂತಹ ಕೆಲಸಗಳು ನಡೆಯುತ್ತಿವೆ ಎಂದರು.
11
+ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಯಾವ ಸಮುದಾಯಕ್ಕೆ ಸೇರಿದವರು ಎಂಬ ಮಾಹಿತಿ ಇಲ್ಲ. ಈ ಹಿಂದೆ ಅವರು ಕೇಂದ್ರದಲ್ಲಿ ಸಚಿವರಾಗಿದ್ದರು. ಬಿಜೆಪಿಯವರಿಗೆ ನೈಜ್ಯವಾಗಿ ಅವರ ಮೇಲೆ ಕಾಳಜಿ ಇದ್ದಿದ್ದರೆ ಅವರನ್ನು ಕೇಂದ್ರ ಸಂಪುಟದಲ್ಲೇ ಮುಂದುವರೆಸಬಹುದಿತ್ತು, ರಾಜ್ಯಪಾಲರನ್ನಾಗಿ ಮಾಡಿದ್ದೇಕೆ? ಆ ಬಳಿಕ ಸಂವಿಧಾನ ವಿರುದ್ಧವಾಗಿ ನಡೆದುಕೊಳ್ಳುವಂತೆ ಒತ್ತಡ ಹೇರುತ್ತಿರುವುದೇಕೆ? ಜನರೆದುರು ರಾಜ್ಯಪಾಲರನ್ನು ಕೆಟ್ಟವರಂತೆ ಬಿಜೆಪಿ ಬಿಂಬಿಸುತ್ತಿರುವುದೇಕೆ? ಎಂದು ಪ್ರಶ್ನಿಸಿದರು.
12
+ ಬಿಜೆಪಿಯವರ ಹಗರಣಗಳನ್ನು ತ್ವರಿತವಾಗಿ ಚರ್ಚೆ ನಡೆಸಲಾಗುತ್ತಿದೆ. ಕೆಲವು ಪ್ರಕರಣಗಳಿಗೆ ನ್ಯಾಯಾಲಯದಿಂದ ತಡೆಯಾಜ್ಞೆ ಇದೆ. ಅವನ್ನು ತೆರವುಗೊಳಿಸಲು ಪ್ರಯತ್ನಿಸಲಾಗುವುದು. ಬಿಜೆಪಿಯವರು ಸತ್ಯ ಹರಿಶ್ಚಂದ್ರರಂತೆ ಆಡುತ್ತಿದ್ದಾರೆ. ಹಲವಾರು ಹಗರಣಗಳಲ್ಲಿ ಆರೋಪಿಗಳಾಗಿದ್ದಾರೆ ಎಂದು ತಿರುಗೇಟು ನೀಡಿದರು.
eesanje/url_46_35_9.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಕಾರ್ಕಳದಲ್ಲಿ ಮತ್ತುಬರಿಸಿ ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಅಲ್ತಾಫ್‌ ಅರೆಸ್ಟ್
2
+ ಬೆಂಗಳೂರು,ಆ.24-ದೇಶದ್ಯಾಂತ ಭಾರೀ ಸದ್ದು ಮಾಡಿದ್ದ ಕೋಲ್ಕತ್ತಾದ ಆರ್‌ಜಿಕರ್‌ ಅಸ್ಪತ್ರೆಯ ತರಬೇತಿ ನಿರತ ವೈದ್ಯೆಯ ಸಾಮೂಹಿಕ ಅತ್ಯಾಚಾರ ಬೆನ್ನಲ್ಲೇ ಇದೀಗ ಉಡುಪಿಯಲ್ಲಿ ಮತ್ತೊಂದು ಅಂತಹದ್ದೇ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆಇನ್‌ಸ್ಟಾಗ್ರಾಂನಲ್ಲಿ ಸ್ನೇಹ ಬೆಳೆಸಿದ ಹಿಂದೂ ಯುವತಿಯನ್ನು ಕರೆದೊಯ್ದ ಮುಸ್ಲಿಂ ಯುವಕ, ಆಕೆಗೆ ಬಿಯರ್ನಲ್ಲಿ ಮತ್ತುಭರಿಸುವ ಔಷಧ ಬೆರೆಸಿ ಅತ್ಯಾಚಾರ ಎಸಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ.
3
+ ಯುವತಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಲ್ತಾಫ್‌ ಬಂಧಿತ ಆರೋಪಿಯಾಗಿದ್ದಾನೆ. ಅರೋಪಿಗೆ ಬಿಯರ್‌ ಬಾಟಲ್‌ ತಂದುಕೊಟ್ಟಿದ್ದ ಇಬ್ಬರು ಆರೋಪಿಗಳ ಪೈಕಿ ಸುಬೇರ್‌ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ತಲೆಮರೆಸಿಕೊಂಡಿರುವ ಮತ್ತೊರ್ವ ಆರೋಪಿಗೆ ಬಲೆ ಬೀಸಲಾಗಿದೆ.
4
+ ಕೃತ್ಯಕ್ಕೆ ಬಳಸಿದ ವಾಹನವನ್ನು ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಸಂತ್ರಸ್ತೆಗೆ ಮಣಿಪಾಲ ಕೆಎಂಸಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಯುವತಿಗೆ ಯಾವುದೇ ರೀತಿಯ ಪ್ರಾಣಾಪಾಯ ಇಲ್ಲ ಎಂದು ತಿಳಿದುಬಂದಿದೆ. ಆಘಾತಕ್ಕೆ ಒಳಗಾಗಿರುವ ಯುವತಿ ನಿಧನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಪ್ರಕರಣ ಸಂಬಂಧ ಕಾರ್ಕಳ ನಗರ ಠಾಣೆಯಲ್ಲಿ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.
5
+ ಯುವತಿ ಜೇನು ಕೃಷಿ ಇಲಾಖೆಯಲ್ಲಿ ಕೆಲಸಕ್ಕಿದ್ದಳು. ಇನ್‌ಸ್ಟಾಗ್ರಾಂನಲ್ಲಿ ಇವರಿಗೆ ಸ್ನೇಹ ಬೆಳೆದಿತ್ತು ಎನ್ನಲಾಗಿದೆ. ಅಲ್ತಾಫ್‌ ಮತ್ತು ಇಬ್ಬರ ವಿರುದ್ಧ ಕಾರಿನಲ್ಲಿ ಯುವತಿಯನ್ನು ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಆತ್ಯಾಚಾರ ನಡೆಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.
6
+
7
+ ಇದು ಅತ್ಯಾಚಾರ ಪ್ರಕರಣವಲ್ಲ. ಸಾಮೂಹಿಕ ಅತ್ಯಾಚಾರ. ಉಳಿದ ಆರೋಪಿಗಳನ್ನು ಬಂಧಿಸಬೇಕೆಂದು ಹಿಂದೂ ಸಂಘಟನೆಗಳು ಎಂದು ಆಗ್ರಹಿಸಿವೆ.ಸಾಮೂಹಿಕ ಅತ್ಯಾಚಾರ ನಡೆದಿದೆಯೇ ಎಂಬುದು ಇನ್ನೂ ದೃಢಪಟ್ಟಿಲ್ಲ. ಪೋಷಕರ ಹೇಳಿಕೆಯಂತೆ ಅತ್ಯಾಚಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಂತ್ರಸ್ತ ಯುವತಿಯ ಹೇಳಿಕೆ ಮತ್ತು ವೈದ್ಯಕೀಯ ವರದಿ ನಂತರ ಮುಂದಿನ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.
8
+ ಸಂತ್ರಸ್ತ ಯುವತಿಗೆ ಅಲ್ತಾಫ್‌ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ. ನಂತರ ಯುವತಿಯನ್ನು ಪುಸಲಾಯಿಸಿ ಸುತ್ತಾಡಲು ಆರೋಪಿ ಕರೆದುಕೊಂಡು ಹೋಗಿದ್ದಾನೆ. ಇಬ್ಬರು ಸ್ನೇಹಿತರ ಕರೆಸಿ ಬಿಯರ್‌ ಬಾಟಲಿ ತರಿಸಿದ್ದ. ಬಿಯರ್ನಲ್ಲಿ ಮಾದಕ ವಸ್ತು ಬೆರೆಸಿ ಸಾಮೂಹಿಕ ಅತ್ಯಾಚಾರ ಎಸಗಿದ ಬಳಿಕ ಆಕೆಯನ್ನು ಮನೆ ಸಮೀಪ ಬಿಟ್ಟು ಹೋಗಿದ್ದಾರೆ ಎಂದು ಹಿಂದೂ ಸಂಘಟನೆಗಳು ಆರೋಪವಾಗಿದೆ.
9
+ ಪ್ರಕರಣ ಆಚೆ ಬರುತ್ತಿದ್ದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಠಾಣೆಯ ಮುಂದೆ ಜಮಾವಣೆಗೊಂಡು ಯುವಕನ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
10
+ ಎಸ್‌‍ಪಿ ಹೇಳಿದ್ದೇನು?:ಕರ್ಕಾಳ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನ ಅಪಹರಿಸಿ ಅತ್ಯಾಚಾರ ಮಾಡಿರುವ ಬಗ್ಗೆ ದೂರು ಬಂದಿದೆ. ಯುವತಿಗೆ ಅರೋಪಿ ಮೂರು ತಿಂಗಳಿಂದ ಇನ್‌್ಸಟಗ್ರಾಮ್‌ ಮೂಲಕ ಪರಿಚಯವಿತ್ತು. ಶುಕ್ರವಾರ ಆರೋಪಿ ಅಲ್ತಾಫ್‌ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಆಕೆ ಬಂದಾಗ ಅಲ್ಲಿಂದ ಅಪಹರಿಸಿದ್ದ ಆರೋಪಿ ಮದ್ಯದಲ್ಲಿ ಏನನ್ನೋ ಬೆರೆಸಿ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತೆ ತಿಳಿಸಿದ್ದಾಳೆ.
11
+ ಸದ್ಯ ಸಂತ್ರಸ್ತೆ ಹೇಳಿಕೆ ಆಧರಿಸಿ ಆರೋಪಿ ಅಲ್ತಾಫ್‌ನನ್ನು ಬಂಧಿಸಲಾಗಿದೆ. ಆರೋಪಿಗೆ ಬಿಯರ್‌ ಬಾಟಲ್‌ ತಂದುಕೊಟ್ಟಿದ್ದ ಇಬ್ಬರ ಪೈಕಿ ಸುಬೇರ್‌ ಎಂಬಾತನನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ ವಾಹನ ಸೀಜ್‌ ಮಾಡಲಾಗಿದೆ. ಸಂತ್ರಸ್ತೆಗೆ ಮಣಿಪಾಲ್‌ ಕೆಎಂಸಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಕಾನೂನು ಕ್ರಮ ಜರುಗಿಸಲಾಗುವುದು ಜಿಲ್ಲಾ ಪೊಲೀಸ್‌‍ ವರಿಷ್ಟಧಿಕಾರಿ ಡಾ.ಅರುಣ್‌ ಕುಮಾರ್‌ ಹೇಳಿದ್ದಾರೆ.
eesanje/url_46_36_1.txt ADDED
@@ -0,0 +1,8 @@
 
 
 
 
 
 
 
 
 
1
+ ಗೆಜೆಟೆಡ್‌ ಪ್ರೊಫೆಷನ್ಸ್ ಹುದ್ದೆಗಳ ಪರೀಕ್ಷೆ ಮುಂದೂಡುವುದಿಲ್ಲ, ಒಂದು ವಿಷಯಕ್ಕೆ ಮಾತ್ರ ದಿನಾಂಕ ಬದಲಾವಣೆ : ಸಿಎಂ
2
+ :
3
+ ಬೆಂಗಳೂರು,ಆ.24-ಕೆಪಿಎಸ್‌‍ಸಿ ವತಿಯಿಂದ ಗೆಜೆಟೆಡ್‌ ಪ್ರೊಫೆಷನ್ಸ್ ಹುದ್ದೆಗಳಿಗೆ ನಡೆಯುತ್ತಿರುವ ಪರೀಕ್ಷೆಯನ್ನು ಮುಂದೂಡುವುದಿಲ್ಲ. ಆದರೆ ಒಂದು ವಿಷಯಕ್ಕೆ ಸಂಬಂಧಪಟ್ಟ ಪರೀಕ್ಷಾ ದಿನಾಂಕವನ್ನು ಬದಲಾವಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
4
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆ ಮುಂದೂಡಬೇಕು ಎಂದು ಹಲವರು ಹೇಳುತ್ತಿದ್ದಾರೆ. ಇದರಲ್ಲಿ ಯಾವುದೇ ಗೊಂದಲವಿಲ್ಲ. ಪರೀಕ್ಷೆ ಮುಂದೂಡಲು ಅವಕಾಶವಿಲ್ಲ. ಕೃಷ್ಣ ಜನಾಷ್ಟಮಿಯ ದಿನ ನಿಗದಿಯಾಗಿರುವ ವಿಷಯದ ಪರೀಕ್ಷಾ ದಿನವನ್ನು ಬದಲಾಯಿಸಲು ಪರಿಗಣಿಸುವುದಾಗಿ ಹೇಳಿದರು.
5
+ ನೀರಿನ ದರ ಇನ್ನೂ ಹೆಚ್ಚಳವಾಗಿಲ್ಲ :ಬೆಂಗಳೂರಿನಲ್ಲಿ ನೀರು ಸೇರಿದಂತೆ ಯಾವುದೇ ದರಗಳು ಹೆಚ್ಚಳವಾಗಿಲ್ಲ. ಮಾಧ್ಯಮಗಳಲ್ಲಿ ದರ ಹೆಚ್ಚಳ ಎಂಬ ಚರ್ಚೆಗಳು ನಡೆಯುತ್ತಿವೆ. ಬಹಳ ವರ್ಷಗಳಿಂದ ನೀರಿನ ದರ ಪರಿಷ್ಕರಣೆಯಾಗಿಲ್ಲ. ಪಿಡಬ್ಲ್ಯೂಎಸ್‌‍ಎಸ್‌‍ಬಿಯಲ್ಲಿ ಕಷ್ಟದ ಪರಿಸ್ಥಿತಿ ಇದೆ. ಅದಕ್ಕಾಗಿ ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ದರ ಹೆಚ್ಚಳ ಮಾಡಿಯೇ ಮಾಡುತ್ತೇವೆ ಎಂದು ಮಾತನಾಡಿರಬಹುದು. ಆ ಕುರಿತು ಪ್ರಸ್ತಾವನೆ ಮತ್ತು ಆಲೋಚನೆಗಳಿವೆ. ಚರ್ಚೆ ಮಾಡಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.
6
+ ಎಲ್ಲಾ ಅವಕಾಶಗಳು ಮುಕ್ತ :ಮುಡಾ ಪ್ರಕರಣದಲ್ಲಿ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಣಯವನ್ನು ಸಚಿವ ಸಂಪುಟದಲ್ಲಿ ವಿರೋಧಿಸಲಾಗಿದೆ. ನ್ಯಾಯಾಲಯದಲ್ಲೂ ಪ್ರಶ್ನಿಸಲಾಗಿದೆ. ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡುವುದೂ ಸೇರಿದಂತೆ ಎಲ್ಲಾ ಆಯ್ಕೆಗಳು ಮುಕ್ತವಾಗಿವೆ ಎಂದರು.
7
+ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ವಿಧಾನಸಭಾ ಮತ್ತು ವಿಧಾನಪರಿಷತ್‌ನಲ್ಲಿ ಅಂಗೀಕಾರಗೊಂಡಿದ್ದ ಆರು ವಿಧೇಯಕಗಳನ್ನು ವಾಪಸ್‌‍ ಕಳುಹಿಸಿದ್ದಾರೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
8
+ ಇದರಿಂದಾಗಿ ರಾಜಭವನ ಹಾಗೂ ಸರ್ಕಾರದ ನಡುವೆ ಸಂಘರ್ಷ ನಡೆಯುತ್ತಿದೆ ಎಂಬ ವಿಶ್ಲೇಷಣೆ ಸೂಕ್ತ ಅಲ್ಲ ಎಂದರು.ನಿನ್ನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಪರಮೇಶ್ವರ್‌, ಎಚ್‌.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್‌ ಸೇರಿದಂತೆ ಎಲ್ಲರೂ ದೆಹಲಿಗೆ ತೆರಳಿ ಪಕ್ಷದ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇವೆ. ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ತೆಗೆದುಕೊಂಡಿರುವ ನಿರ್ಣಯಗಳನ್ನು ಹಾಗೂ ರಾಜಕೀಯ ಬೆಳವಣಿಗೆಗಳನ್ನು ವಿಸ್ತೃತವಾಗಿ ಚರ್ಚಿಸಲಾಗಿದೆ ಎಂದು ಹೇಳಿದರು.
eesanje/url_46_36_10.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಸಿಎಂಗೆ ಶೋಕಾಸ್‌‍ ನೋಟೀಸ್‌‍ ನೀಡಿ ವಿಚಾರಣೆಗೆ ಖುದ್ದು ಹಾಜಾರಾಗಲು ಸೂಚಿಸುವಂತೆ ಕೋರ್ಟ್ ಆದೇಶ
2
+
3
+ ಬೆಂಗಳೂರು,ಆ.23-ಸಿದ್ಧರಾಮಯ್ಯ ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ ಲೋಕಾಯುಕ್ತ ಎಡಿಜಿಪಿ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿರುವ ಜನಪ್ರತಿನಿಧಿಗಳ ನ್ಯಾಯಾಲಯ ಕೂಡಲೇ ಶೋಕಾಸ್‌‍ ನೋಟೀಸ್‌‍ ಜಾರಿ ಮಾಡಿ ಮುಂದಿನ ವಿಚಾರಣೆ ಸಂದರ್ಭದಲ್ಲಿ ಅವರು ಖುದ್ದು ಹಾಜಾರಾಗಲು ಸೂಚಿಸಬೇಕು ಎಂದು ಆದೇಶಿಸಿದೆ.
4
+ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ತಮ್ಮ ಅತ್ಯಂತ ಆಪ್ತ ಸ್ನೇಹಿತ ವಿವೇಕಾನಂದ (ಕಿಂಗ್ಸ್ ಕೋರ್ಟ್‌ ವಿವೇಕ್‌‍) ಅವರಿಂದ ಒಂದು ಕೋಟಿ ಮೂವತ್ತು ಲಕ್ಷ ರೂಪಾಯಿ (1,30,000) ಗಳನ್ನು ಚೆಕ್‌ ರೂಪದಲ್ಲಿ ಪಡೆದು ಟರ್ಫ್‌ ಕ್ಲಬ್‌ನ ಅತ್ಯಂತ ಆಯಕಟ್ಟಿನ ಹುದ್ದೆಯಾದ ಸ್ಟಿವರ್ಡ್‌ ಹ್ದುೆಗೆ ನಿಯೋಜಿಸುವ ಮೂಲಕ ಪ್ರಜಾ ಪ್ರತಿನಿಧಿಗಳ ಕಾಯ್ದೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದ ಆರೋಪಕ್ಕೆ ಗುರಿಯಾಗಿದ್ದರು.
5
+ ಹತ್ತಾರು ಸಾವಿರ ಕೋಟಿ ರೂಪಾಯಿ ವಹಿವಾಟನ್ನು ಹೊಂದಿರುವ ಟರ್ಫ್‌ ಕ್ಲಬ್‌ನ ಎಲ್ಲಾ ಆರ್ಥಿಕ ವ್ಯವಸ್ಥೆಯನ್ನು ನಿಭಾಯಿಸುವ ಸ್ಟಿವರ್ಡ್‌ ಹ್ದುೆಗೆ ನಿಯೋಜನೆ ಮಾಡುವ ಮೂಲಕ ಸಿದ್ದರಾಮಯ್ಯ ತಮ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿತ್ತು.’
6
+ ಈ ಸಂಬಂಧ ಎನ್‌.ಆರ್‌ ರಮೇಶ್‌ 2022ರಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರಲ್ಲದೇ, ಜನಪ್ರತಿನಿಧಿಗಳ ಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರನ್ನೂ ಸಹ ದಾಖಲಿಸಿದ್ದರು.ಸದರಿ ಪ್ರಕರಣದ ತನಿಖೆಯನ್ನು ಏಕ ಪಕ್ಷೀಯವಾಗಿ ನಡೆಸಿದ್ದ ಲೋಕಾಯುಕ್ತರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿದ್ಧರಾಮಯ್ಯನವರ ಪ್ರಭಾವಕ್ಕೆ ಒಳಗಾಗಿ ಬಿ ರಿಪೋರ್ಟ್‌ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
7
+ ಆದರೆ, ರಮೇಶ್‌ ರವರ ವಕೀಲರು ದಾಖಲೆಗಳ ಸಹಿತ ಮಂಡಿಸಿದ್ದ ವಾದವನ್ನು ಆಲಿಸಿದ್ದ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರು ಸದರಿ ಪ್ರಕರಣದ ತನಿಖೆಯನ್ನು ಮೊದಲಿನಿಂದ ಹೊಸದಾಗಿ ಪ್ರಾರಂಭಿಸಿ ಆರು ತಿಂಗಳ ಒಳಗಾಗಿ ಸಮರ್ಪಕವಾದ ಹೊಸ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಕಳೆದ ಫೆಬ್ರವರಿಯಲ್ಲಿ ಆದೇಶಿಸಿದ್ದರು.
8
+ ನ್ಯಾಯಾಧೀಶರು ವಿಧಿಸಿದ್ದ ಆರು ತಿಂಗಳ ಗಡುವು ಮೀರಿದ್ದರಿಂದ ನಿನ್ನೆ ವಿಚಾರಣೆಯನ್ನು ಕೈಗೆತ್ತಿಕೊಂಡ ಜನಪ್ರತಿನಿಧಿಗಳ ನ್ಯಾಯಾಲಯ ಲೋಕಾಯುಕ್ತದ ಎಡಿಜಿಪಿ (ಅಪರ ಪೋಲೀಸ್‌‍ ಮಹಾ ನಿರ್ದೇಶಕ, ಲೋಕಾಯುಕ್ತ) ರವರು ಖುದ್ದು ಹಾಜರಿ ಇಲ್ಲದೇ ಇರುವುದನ್ನು ಮತ್ತು ಆರು ತಿಂಗಳ ಗಡುವು ಮುಗಿದರೂ ಹೊಸ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸದೇ ಇದ್ದುದರಿಂದ ಲೋಕಾಯುಕ್ತದ ಪರವಾದ ವಕೀಲರನ್ನು ನ್ಯಾಯಾಲಯದಲ್ಲಿ ತೀವ್ರ ತರಾಟೆಗೆ ತೆಗೆದುಕೊಂಡಿತು.
9
+ ಲೋಕಾಯುಕ್ತದ ವ��ೀಲರು ನ್ಯಾಯಾಲಯವು ಮರು ತನಿಖೆಗೆ ಆದೇಶಿಸಿರುವ ವಿಷಯ ಲೋಕಾಯುಕ್ತದ ಎಡಿಜಿಪಿ ಅವರಿಗೆ ತಿಳಿದಿಲ್ಲದೇ ಇರುವುದರಿಂದ ಹೊಸದಾದ ತನಿಖೆ ಇನ್ನೂ ಪ್ರಾರಂಭವಾಗಿಲ್ಲ ಎಂಬ ಮಾತನ್ನು ಹೇಳುತ್ತಿದ್ದಂತೆ ಕೆಂಡಾಮಂಡಲರಾದ ನ್ಯಾಯಾಧೀಶರು ಈ ಪ್ರಕರಣದ ಮರು ತನಿಖೆಗೆ ನ್ಯಾಯಾಲಯವು ಆದೇಶಿಸಿ ಆರು ತಿಂಗಳು ಈಗಾಗಲೇ ಮುಗಿದಿದ್ದು, ಎಲ್ಲಾ ಮಾಧ್ಯಮಗಳಲ್ಲಿ ಈ ಸಂಬಂಧ ವರದಿಗಳು ಪ್ರಸಾರವಾಗಿರುತ್ತದೆ ಮತ್ತು ನ್ಯಾಯಾಲಯದಿಂದ ಲೋಕಾಯುಕ್ತ ಪೋಲೀಸರಿಗೆ ಅಧಿಕತ ಮಾಹಿತಿ ತಲುಪಿರುತ್ತದೆ.
10
+ ಹೀಗಿರುವಲ್ಲಿ – ನ್ಯಾಯಾಧೀಶರೇ ಖುದ್ದಾಗಿ ಲೋಕಾಯುಕ್ತ ಕಛೇರಿಗೆ ಬಂದು ಎಡಿಜಿಪಿ ಅವರಿಗೆ ಮರು ತನಿಖೆ ಮಾಡುವ ಬಗ್ಗೆ ಆದೇಶ ನೀಡಿರುವುದಾಗಿ ತಿಳಿಸಬೇಕೇ ಎಂದು ಖಾರವಾಗಿ ಲೋಕಾಯುಕ್ತ ವಕೀಲರನ್ನು ಪ್ರಶ್ನಿಸಿತು.ತಕ್ಷಣವೇ ಲೋಕಾಯುಕ್ತದ ಎಡಿಜಿಪಿ ಅವರಿಗೆ ಈ ಸಂಬಂಧ ಕಾರಣ ಕೇಳಿ ನೋಟೀಸ್‌‍ ಜಾರಿ ಮಾಡಿ ಈ ಕೂಡಲೇ ಅವರು ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಆದೇಶವನ್ನು ನೀಡಿದರು.
11
+ ಆನಂತರ ಈ ಪ್ರಕರಣದ ತನಿಖಾಧಿಕಾರಿ ತಿಪ್ಪೇಸ್ವಾಮಿ ಅವರು ನ್ಯಾಯಾಲಯದಲ್ಲಿ ಹಾಜರಾಗಿ, ನ್ಯಾಯಾಲಯದ ಆದೇಶ ತಮ ಗಮನಕ್ಕೆ ಬಂದಿರಲಿಲ್ಲ ಮತ್ತು ಎರಡು ದಿನಗಳ ಹಿಂದಷ್ಟೇ ಹೊಸ ಎಡಿಜಿಪಿ ಅವರು ಲೋಕಾಯುಕ್ತಕ್ಕೆ ನಿಯೋಜನೆ ಆಗಿರುವ ಬಗ್ಗೆ ತಿಳಿಸಿದರು.
12
+ ಹೀಗಾಗಿ ಮುಂದಿನ ವಿಚಾರಣೆಯನ್ನು ಸೆ.9ಕ್ಕೆ ಮುಂದೂಡಿ ಅಂದು ಎಡಿಜಿಪಿ ನ್ಯಾಯಲಯಕ್ಕೆ ಖುದ್ದು ಹಾಜರಾಗುವಂತೆ ನ್ಯಾಯಧೀಶರು ಸೂಚಿಸಿದ್ದಾರೆ ಎಂದು ದೂರುದಾರ ಎನ್‌.ಆರ್‌.ರಮೇಶ್‌ ತಿಳಿಸಿದ್ದಾರೆ.
eesanje/url_46_36_11.txt ADDED
@@ -0,0 +1,8 @@
 
 
 
 
 
 
 
 
 
1
+ ರಾಜ್ಯಪಾಲರಿಗೆ ದೇವರು ಒಳ್ಳೆ ಬುದ್ದಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ : ಡಿಕೆಶಿ
2
+
3
+ ಬೆಂಗಳೂರು, ಆ.23-ಬಿಜೆಪಿಯ ಶಾಸಕರುಗಳ ಮಾತುಕೇಳಿ 15 ಬಿಲ್‌ಗಳನ್ನು ರಾಜ್ಯಪಾಲರು ವಾಪಸ್‌‍ ಕಳುಹಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಆರೋಪಿಸಿದ್ದಾರೆ. ತಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಬಿಜೆಪಿಯವರ ಮಾತನ್ನೇ ಕೇಳುವುದಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಏಕಿರಬೇಕು ಎಂದರು.
4
+ ಮಸೂದೆಗಳ ಬಗ್ಗೆ ರಾಜ್ಯಪಾಲರು ಸ್ಪಷ್ಟನೆ ಕೇಳಿದರೆ ಉತ್ತರ ನೀಡಬಹುದು. ಅದನ್ನು ತಪ್ಪು ಎಂದು ಹೇಳಲಾಗುವುದಿಲ್ಲ. ರಾಜ್ಯಪಾಲರಿಗೆ ದೇವರು ಒಳ್ಳೆ ಬುದ್ದಿ ಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದರು.
5
+ ಕಾಂಗ್ರೆಸ್‌‍ ಸರ್ಕಾರವನ್ನು ಪತನಗೊಳಿಸಲು ಯಾವ ಪ್ರಯತ್ನ ಮಾಡಿದರೂ ಪ್ರಯೋಜನ ಆಗುವುದಿಲ್ಲ. ನಾವೂ ಸಹ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ನಾವು ನಮ್ಮ ಕೆಲಸ ಮಾಡುತ್ತೇವೆ ಎಂದು ಖಾರವಾಗಿ ಉತ್ತರಿಸಿದರು.
6
+ ಜಿಂದಾಲ್‌ಗೆ ಭೂಮಿ ನೀಡಿದ್ದನ್ನು ಈ ಹಿಂದೆ ವಿರೋಧಿಸಿದ್ದ ಕಾಂಗ್ರೆಸ್‌‍ ಅದೇ ಜಿಂದಾಲ್‌ಗೆ ಭೂಮಿ ಮಾರಾಟ ಮಾಡಿದೆ ಎಂದು ಕೇಳಿದಾಗ, ಉದ್ಯೋಗ ಸೃಷ್ಟಿಯಾಗಬೇಕು. ರಾಜ್ಯಕ್ಕೆ ಕೈಗಾರಿಕೆಗಳು ಬರಬೇಕು. ಕರ್ನಾಟಕದಲ್ಲಿ ಇರುವ ಕೈಗಾರಿಕಾ ಕಾನೂನಿಗೆ ತಕ್ಕಂತೆ ಅವರಿಗೆ ಭೂಮಿ ನೀಡಿದ್ದೇವೆ. ನಾವು ಅವರಿಗೆ ಹೊಸದಾಗಿ ಭೂಮಿ ಕೊಟ್ಟಿಲ್ಲ.
7
+ ಈ ಹಿಂದೆ ಕೊಟ್ಟಿದ್ದನ್ನೇ ಪರಿಶೀಲಿಸಿ ಸೇಲ್‌ ಡೀಡ್‌ ಮಾಡಿಕೊಟ್ಟಿದ್ದೇವೆ. ಸಾವಿರಾರು ಲಕ್ಷಾಂತರ ಜನ ಕೈಗಾರಿಕೆಗಳಿಗೆ ಅನುಕೂಲ ಮಾಡಿಕೊಟ್ಟಂತೆ ಇಲ್ಲಿಯೂ ಅದನ್ನೇ ಮಾಡಲಾಗಿದೆ. ಬಿಜೆಪಿಯವರು ಮಾಡಿದ್ದನ್ನು ನಾವು ಸರಿ ಮಾಡಿಕೊಟ್ಟಿದ್ದೇವೆ ಎಂದರು.
8
+ ಗೃಹ ಸಚಿವ ಪರಮೇಶ್ವರ್‌ ದೆಹಲಿಗೆ ಭೇಟಿ ನೀಡುತ್ತಿರುವ ಬಗ್ಗೆ ಕೇಳಿದಾಗ, ಬರುವವರನ್ನು ಬೇಡ ಎನ್ನಲು ಆಗುತ್ತದೆಯೇ? ಅವರದೇ ಇಲಾಖೆ ಕೆಲಸ, ಪಕ್ಷದ ಕೆಲಸ ಇರುತ್ತದೆ. ನಮಗೂ ಸಹ ಎರಡೂ ಕೆಲಸಗಳಿದ್ದು. ಎಲ್ಲರು ಒಟ್ಟಿಗೆ ಹೋಗುತ್ತಿದ್ದೇವೆ ಎಂದು ಹೇಳಿದರು.
eesanje/url_46_36_12.txt ADDED
@@ -0,0 +1,9 @@
 
 
 
 
 
 
 
 
 
 
1
+ ಜೈಲಿನಲ್ಲಿ ದರ್ಶನ್‌ ಭೇಟಿ ಮಾಡಿದವರಿಗೂ ಕಾದಿದೆಯಾ ಸಂಕಷ್ಟ..!
2
+ .
3
+ ಬೆಂಗಳೂರು, ಅ.23– ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿದಾರರಾಗಿರುವವರು ಜೈಲಿನಲ್ಲಿರುವ ಆರೋಪಿ ನಟ ದರ್ಶನ್‌ರನ್ನು ಭೇಟಿ ಮಾಡುತ್ತಿರುವುದು ಪೊಲೀಸರ ಗಮನದಲ್ಲಿದ್ದು, ಈ ಕುರಿತು ಕಾನೂನಾತಕ ಅಂಶಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್‌‍ ಆಯುಕ್ತ ಬಿ.ದಯಾನಂದ್‌ ತಿಳಿಸಿದ್ದಾರೆ.
4
+ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಎಫ್‌ಎಸ್‌‍ಎಲ್‌ನಿಂದ ಎಲ್ಲಾ ವರದಿಗಳು ಬಂದಿವೆ. ಮತ್ತಷ್ಟು ಪೂರಕ ಮಾಹಿತಿಗಳನ್ನು ಪಡೆಯುವ ವಿಚಾರಣಾ ಪ್ರಕ್ರಿಯೆ ನಡೆಯುತ್ತಿದೆ ಎಂದರು.
5
+ ವಿದ್ಯುನಾನ (ಎಲೆಕ್ಟ್ರಾನಿಕ್‌್ಸ) ಸಲಕರಣೆಗಳನ್ನು ಹೈದರಾಬಾದ್‌ನ ಸಿಎಫ್‌ಎಸ್‌‍ಎಲ್‌ಗೆ ಕಳುಹಿಸಲಾಗಿತ್ತು. ಅವುಗಳ ಪರಿಶೀಲನೆ ಮುಗಿದಿದೆ ಎಂಬ ಮಾಹಿತಿ ಇದೆ. ಶೀಘ್ರವೇ ಆ ವರದಿ ನಮ ಕೈ ಸೇರಲಿದೆ. ಎರಡು ವರದಿಗಳನ್ನೂ ಕ್ರೋಢಿಕರಿಸಿ ನ್ಯಾಯಾಲಯಕ್ಕೆ ಅಂತಿಮ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗುವುದು ಎಂದರು.
6
+ ಕೊಲೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲು 90 ದಿನಗಳ ಕಾಲಾವಕಾಶ ಇರಲಿದೆ. ಆ ಕಾಲಮಿತಿಯಲ್ಲೇ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಾಗುವುದು ಎಂದು ಸ್ಪಷ್ಟ ಪಡಿಸಿದರು.
7
+ ಪ್ರಕರಣದಲ್ಲಿ ಸಾಕ್ಷಿಗಳಾಗಿ ಪರಿಗಣಿಸಿರುವ ಕೆಲವರು ಜೈಲಿಗೆ ಹೋಗಿ ದರ್ಶನ್‌ರನ್ನು ಭೇಟಿ ಮಾಡಿ ಬರುತ್ತಿದ್ದಾರೆ. ಇದು ನಮ ಗಮನದಲ್ಲಿದೆ. ಕಾನೂನಾತಕ ಕ್ರಮಗಳ ಪರಿಶೀಲನೆ ನಡೆಯುತ್ತಿದೆ. ಅವರಿಗೆ ಮತ್ತೆ ನೋಟಿಸ್‌‍ ಕೊಟ್ಟು ಕರೆಸುವುದು ಸೇರಿದಂತೆ ಇರುವ ಸಾಧ್ಯಾಸಾಧ್ಯತೆಗಳ ಬಗ್ಗೆ ಸದ್ಯಕ್ಕೆ ಬಹಿರಂಗವಾಗಿ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
8
+ ಗೌರಿ ಗಣೇಶ ಹಬ್ಬದ ಪ್ರಯುಕ್ತ ಈಗಾಗಲೇ ಬಿಬಿಎಂಪಿ ಮತ್ತು ಪೊಲೀಸ್‌‍ ಇಲಾಖೆಯು ಸಮನ್ವತೆಯಿಂದ ಏಕಗವಾಕ್ಷಿ ಪದ್ಧತಿಯನ್ನು ಜಾರಿಗೆ ತರಲಾಗುತ್ತಿದೆ. ಕಳೆದ ವಾರ ಈ ಕುರಿತು ಸಭೆಗಳನ್ನು ನಡೆಸಲಾಗಿದೆ. ಹಬ್ಬದ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಶೀಘ್ರದಲ್ಲಿ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.ಜಿಲ್ಲಾಧಿಕಾರಿಗಳ ನೇತೃತ್ವದಲ್ಲೂ ಸಭೆ ನಡೆಯಲಿದೆ. ಶಾಂತಿ ಸೌಹಾರ್ಧತೆಯಲ್ಲಿ ಹಬ್ಬ ಆಚರಣೆಗೆ ಗಣೇಶ ಮಂಡಳಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಬಿಬಿಎಂಪಿ ಪ್ರತ್ಯೇಕ ಸಭೆ ನಡೆಸಿ ಸಣ್ಣಪುಟ್ಟ ವಿಚಾರಗಳನ್ನು ಬಗೆ ಹರಿಸಲಿದೆ. ಮುಂದಿನ ವಾರ ಹಬ್ಬಕ್ಕಾಗಿ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುವುದು ಎಂದರು.
9
+ ರಸ್ತೆಗಳಲ್ಲಿನ ಜಗಳದಲ್ಲಿ ಪದೇ ಪದೇ ಭಾಗಿಯಾಗುವ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗುವುದು. ರಸ್ತೆ ಜಗಳದ ನೆಪದಲ್ಲಿ ಸುಲಿಗೆ ಹಾಗೂ ಡಕಾಯಿತಿ ಮಾಡುವವರನ್ನು ನಿಯಂತ್ರಿಸಲು ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಸ್ಪಷ್ಟ ಪಡಿಸಿದರು.ಯಲಹಂಕದಲ್ಲಿ ರೌಡಿಗಳ ನಡುವೆ ನಡೆದ ಗ್ಯಾಂಗ್‌ ವಾರ್‌ಗೆ ಸಂಬಂಧ ಪಟ್ಟಂತೆ ಕೆಲವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
eesanje/url_46_36_2.txt ADDED
@@ -0,0 +1,7 @@
 
 
 
 
 
 
 
 
1
+ ದಸರಾ ಗಜಪಡೆ ತೂಕ ಪರಿಶೀಲನೆ, 5560 ಕೆ.ಜಿ. ತೂಗಿದ ಕ್ಯಾಪ್ಟನ್‌ ಅಭಿಮನ್ಯು
2
+ .
3
+ ಮೈಸೂರು,ಆ.24-ನಾಡಹಬ್ಬ ದಸರಾ ಮಹೋತ್ಸವದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುತ್ತಿರುವ ಗಜಪಡೆಗೆ ಇಂದು ತೂಕ ಪರಿಶೀಲನೆ ಮಾಡಲಾಗಿದ್ದು, ಕ್ಯಾಪ್ಟನ್‌ ಅಭಿಮನ್ಯು ಬಲುಭಾರ ಹೊಂದಿದ್ದಾನೆ. ದಸರಾ ಹಿನ್ನೆಲೆಯಲ್ಲಿ ಆ.21 ರಂದು ವೀರನಹೊಸಹಳ್ಳಿ ಕ್ಯಾಂಪ್‌ನಿಂದ ನಗರಕ್ಕೆ ಆಗಮಿಸಿದ ಗಜಪಡೆ ನಿನ್ನೆ ಅದ್ಧೂರಿಯಾಗಿ ಅರಮನೆ ಆವರಣ ಪ್ರವೇಶಿಸಿದ್ದು, ಇಂದು ಆನೆಗಳ ತೂಕ ಪರಿಶೀಲಿಸಲಾಯಿತು.
4
+ ಯಾವ ಆನೆ, ಎಷ್ಟೆಷ್ಟು ತೂಕ :ಅಭಿಮನ್ಯು 5,560 ಕೆ.ಜಿ., ಭೀಮ 4,945 ಕೆ.ಜಿ., ಏಕಲವ್ಯ 4,730 ಕೆ.ಜಿ., ಕಂಜನ್‌ 4,515 ಕೆ.ಜಿ., ಧನಂಜಯ 5,155 ಕೆ.ಜಿ., ಲಕ್ಷ್ಮಿ 2,480 ಕೆ.ಜಿ., ವರಲಕ್ಷ್ಮಿ 3,495 ಕೆ.ಜಿ., ರೋಹಿತ 3,625 ಕೆ.ಜಿ., ಗೋಪಿ 4,970 ಕೆ.ಜಿ. ಹೊಂದಿದ್ದು, ಇದರಲ್ಲಿ ಕ್ಯಾಪ್ಟನ್‌ ಅಭಿಮನ್ಯು ಬಲು ಭಾರ ಹೊಂದಿದ್ದಾನೆ.
5
+ ಆನೆಗಳ ಆರೋಗ್ಯದ ಮೇಲೆ ಗಮನ ಹರಿಸಲಾಗಿದ್ದು, ತೂಕದ ಮೇಲೆ ಪೌಷ್ಠಿಕ ಆಹಾರ ನೀಡಲಾಗುತ್ತದೆ. ಎಲ್ಲಾ ಆನೆಗಳ ಆರೋಗ್ಯ ಉತ್ತಮವಾಗಿದ್ದು, ನಾಳೆಯಿಂದಲೇ ಗಜಪಡೆಗೆ ತಾಲೀಮು ಪ್ರಾರಂಭವಾಗಲಿದೆ ಎಂದು ಬಿಸಿಎಫ್‌ಒ ಡಾ.ಪ್ರಭುಗೌಡ ತಿಳಿಸಿದ್ದಾರೆ.
6
+ ಬೆಳಿಗ್ಗೆ ಮತ್ತು ಸಂಜೆ ಅರಮನೆಯಿಂದ ಬನ್ನಿಮಂಟಪದವರೆಗೆ ತಾಲೀಮು ನಡೆಯಲಿದ್ದು, ನಗರದ ಗದ್ದಲಗಳಿಗೆ ಬೆಚ್ಚಿ ಬೀಳದಂತೆ ತರಬೇತಿ ನೀಡುವುದೇ ತಾಲೀಮಿನ ಉದ್ದೇಶವಾಗಿದೆ.
7
+ ಮೊದಲ ಬಾರಿಗೆ ಏಕಲವ್ಯ ದಸರಾ ಉತ್ಸವದಲ್ಲಿ ಭಾಗಿಯಾಗುತ್ತಿದ್ದು, ಮುಂಬರುವ ವರ್ಷಗಳಲ್ಲಿ ಅಂಬಾರಿ ಹೊರುವ ಭಾರ ಅವನ ಹೆಗಲಿಗೆ ಬರುವುದರಿಂದ ಈಗಿನಿಂದಲೇ ತರಬೇತಿಯನ್ನು ಮಾವುತರು ಮತ್ತು ಕಾವಾಡಿಗರು ಆರಂಭಿಸಿದಂತಿದೆ.
eesanje/url_46_36_3.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ಸಿನಿಮಾ ಮೀರಿಸುವಂತಿದೆ ಖತರ್ನಾಕ್‌ ದಂಪತಿಯ “ಡೂಪ್ಲಿಕೇಟ್” ಮರ್ಡರ್ ಸ್ಟೋರಿ..!
2
+
3
+ ಹಾಸನ,ಆ.24-ಜೀವವಿಮಾ ಸಂಸ್ಥೆಯಿಂದ ಒಂದು ಕೋಟಿ ರೂ. ಪರಿಹಾರದ ಹಣ ಪೀಕಲು ಗಂಡನ ತದ್ರೂಪಿಯಂತೇ ಇದ್ದ ಅಮಾಯಕನನ್ನು ಕೊಂದು ಅಪಘಾತದಲ್ಲಿ ಮೃತಪಟ್ಟಿರುವಂತೆ ತನಿಖೆಯ ಹಾದಿ ತಪ್ಪಿಸಿದ್ದ ಖತರ್ನಾಕ್‌ ಆರೋಪಿ ದಂಪತಿಯನ್ನು ಗಂಡಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
4
+ ಹೊಸಕೋಟೆ ತಾಲೂಕಿನ ಚಿಕ್ಕಕೋಲಿಗ ಗ್ರಾಮದ ಮುನಿಸ್ವಾಮಿಗೌಡ ಹಾಗೂ ಶಿಲ್ಪರಾಣಿ ಬಂಧಿತ ದಂಪತಿ.ಅಮಾಯಕನ ಹತ್ಯೆ ಘಟನೆ ನಡೆದ ಹತ್ತು ದಿನಗಳ ನಂತರ ಪ್ರಕರಣ ಬಯಲಾಗಿದ್ದು, ಕೊಲೆಯಾಗಿರುವ ವ್ಯಕ್ತಿ ಭಿಕ್ಷುಕ ಎನ್ನಲಾಗಿದ್ದು, ಆತನ ಗುರುತು ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
5
+ ಘಟನೆ ವಿವರ :ಆ.12 ರಂದು ಅರಸೀಕೆರೆ ತಾಲ್ಲೂಕಿನ ಗೊಲ್ಲರಹೊಸಳ್ಳಿ ಗೇಟ್‌ ಬಳಿ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿತ್ತು. ಅದೇ ಸ್ಥಳದಲ್ಲಿ ಪಂಕ್ಚರ್‌ ಆಗಿದ್ದ ಕಾರು ಹಾಗೂ ಒಂದು ಲಾರಿ ಸಿಕ್ಕಿದ್ದವು. ಮೇಲ್ನೋಟಕ್ಕೆ ಪಂಕ್ಚರ್‌ ಆಗಿದ್ದ ಕಾರಿನ ಟೈರ್‌ ಬದಲಿಸುತ್ತಿದ್ದ ವ್ಯಕ್ತಿಯ ಮೇಲೆ ಲಾರಿ ಹರಿದು ಮೃತಪಟ್ಟಿರುವಂತೆ ಕಾಣಿಸುತ್ತಿತ್ತು.
6
+ ಅಪರಿಚಿತ ಮೃತದೇಹವನ್ನು ಹಾಸನ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದ ಗಂಡಸಿ ಠಾಣೆ ಪೊಲೀಸರು ಗುರುತು ಪತ್ತೆಗೆ ಮುಂದಾಗಿದ್ದರು. ಆ.13 ರಂದು ಜಿಲ್ಲಾಸ್ಪತ್ರೆಗೆ ಬಂದಿದ್ದ ಹೊಸಕೋಟೆಯ ಆರೋಪಿತೆ ಶಿಲ್ಪರಾಣಿ ಈ ಮೃತದೇಹ ನನ್ನ ಪತಿ ಮುನಿಸ್ವಾಮಿಗೌಡರದ್ದು ಎಂದು ಗುರುತಿಸಿದ್ದಳು.
7
+ ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ಕೊಂಡೊಯ್ದಿದ್ದ ಆಕೆ ಅಂದೇ ಹೊಸಕೋಟೆ ತಾಲ್ಲೂಕಿನ, ಚಿಕ್ಕಕೋಲಿಗ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಸಿದ್ದಳು. ಗಂಡಸಿ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಮೃತ ವ್ಯಕ್ತಿಯ ಕುತ್ತಿಗೆಯಲ್ಲಿ ಗಾಯದ ಗುರುತು ಇದ್ದಿದ್ದರಿಂದ ಪ್ರಕರಣದ ಬಗ್ಗೆ ಅನುಮಾನಗೊಂಡು ತನಿಖೆ ಆರಂಭಿಸಿದ್ದರು.
8
+ ಪ್ರಕರಣದ ಬಗ್ಗೆ ಎಸ್ಪಿ ಮಹಮದ್‌ ಸುಜೀತಾಗೆ ಮಾಹಿತಿ ನೀಡಿದ್ದ ಗಂಡಸಿ ಠಾಣೆ ಪೊಲೀಸರು ಹಾಗೂ ಅರಸೀಕೆರೆ ವೃತ್ತ ನಿರೀಕ್ಷರಿಗೆ ತನಿಖೆ ವೇಳೆ ಆಘಾತಕಾರಿ ಅಂಶ ಬೆಳಕಿಗೆ ಬಂದಿತ್ತು.
9
+ ಸತ್ತವನು ಮುನಿಸ್ವಾಮಿಗೌಡ ಅಲ್ಲ! :ಬೆಂಗಳೂರು ಸಮೀಪದ ಹೊಸಕೋಟೆಯಲ್ಲಿ ಟೈರ್‌ ಮಾರಾಟ ಮಳಿಗೆ ಹೊಂದಿರುವ ಮುನಿಸ್ವಾಮಿಗೌಡ ಸಾಲದಲ್ಲಿ ಮುಳುಗಿ ಹೋಗಿದ್ದ. ಇದರಿಂದ ಪಾರಾಗಲು ದಾರಿ ಕಾಣದೇ ಒದ್ದಾಡುತ್ತಿದ್ದ ಆತ ತನ್ನ ಮರಣಾನಂತರ ದೊರೆಯುವ ಜೀವವಿಮೆ ಹಣವನ್ನು ಬದುಕಿದ್ದಾಗಲೇ ಲಪಟಾಯಿಸಲು ಪತ್ನಿ ಜತೆಗೂಡಿ ತಂತ್ರ ರೂಪಿಸಿದ್ದ.
10
+ ಅದರಂತೆ ಭಿಕ್ಷುಕನೊಬ್ಬನನ್ನು ಮಾತನಾಡಿಸಿ ವಿಶ್ವಾಸಕ್ಕೆ ಪಡೆದಿದ್ದ ಮುನಿಸ್ವಾಮಿಗೌಡ ತನ್ನೊಂದಿಗೆ ಕಾರಿನಲ್ಲಿ ಭಿಕ್ಷುಕನನ್ನು ಕೂರಿಸಿಕೊಂಡು ಪ್ರಯಾಣ ಆರಂಭಿಸಿದ್ದ. ಮಾರ್ಗಮಧ್ಯ ಗೊಲ್ಲರ ಹೊಸಳ್ಳಿ ಗೇಟ್‌ ಬಳಿ ಕಾ��ಿನ ಚಕ್ರ ಪಂಕ್ಚರ್‌ ಆಗಿದ್ದು ಚಕ್ರ ಬದಲಿಸುವಂತೆ ಭಿಕ್ಷುಕನಿಗೆ ಹೇಳಿದ್ದ.
11
+ ಅದರಂತೆ ಆತ ಪಂಕ್ಚರ್‌ ಆದ ಚಕ್ರ ಬಿಚ್ಚಲು ಕುಳಿತಿದ್ದಾಗ ಆತನ ಕುತ್ತಿಗೆಗೆ ಚೈನ್‌ ಹಾಕಿ ಎಳೆದು ರಸ್ತೆಗೆ ಬೀಳಿಸಿದ್ದ. ಆಗ ಆತನ ಸಂಚಿನಂತೆ ಹಿಂಬಾಲಿಸಿಕೊಂಡು ಬಂದಿದ್ದ ಲಾರಿ ಚಾಲಕ ಲಾರಿಯನ್ನು ಭಿಕ್ಷುಕನ ಮೇಲೆ ಹರಿಸಿ ಕೊಲೆಗೈದಿದ್ದ. ನಂತರ ಲಾರಿ, ಕಾರುಗಳನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದ ಲಾರಿ ಚಾಲಕ ಹಾಗೂ ಮುನಿಸ್ವಾಮಿಗೌಡ ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡಿದ್ದರು.
12
+ ಮುನಿಸ್ವಾಮಿಗೌಡನ ಸಂಬಂಧಿಕರಾದ ಶಿಡ್ಲಘಟ್ಟ ಸಿಪಿಐ ಶ್ರೀನಿವಾಸ್‌‍ ಕೂಡ ಆತ ಸತ್ತಿದ್ದಾನೆ ಎಂದು ಎಲ್ಲರಂತೆ ನಂಬಿ ಸಮಾಧಿಗೆ ಹೂವಿನ ಹಾರ ಹಾಕಿ ಬಂದಿದ್ದರು. ಆದರೆ ಅಜ್ಞಾತ ಸ್ಥಳದಲ್ಲಿದ್ದ ಮುನಿಸ್ವಾಮಿಗೌಡನಿಗೆ ಹೊರಗೆ ಏನು ನಡೆಯುತ್ತಿದೆ ಎಂದು ಗೊತ್ತಾಗದೆ ಕಂಗಾಲಾಗಿದ್ದ. ಪಾಪಪ್ರಜ್ಞೆಯಿಂದ ಅಸ್ವಸ್ಥಗೊಂಡು ಒತ್ತಡ ತಡೆಯಲಾರದೇ ಸಂಬಂಧಿಕ ಸಿಪಿಐ ಶ್ರೀನಿವಾಸ್‌‍ ಎದುರು ಹಾಜರಾಗಿದ್ದಾನೆ.
13
+ ಮೃತಪಟ್ಟಿದ್ದ ಸಂಬಂಧಿ ಮುನಿಸ್ವಾಮಿಗೌಡ ಜೀವಂತವಾಗಿರುವುದನ್ನು ಕಂಡು ಸಿಪಿಐ ಅಚ್ಚರಿಗೊಂಡಿದ್ದಾರೆ. ಅವರಿಗೂ ಸುಳ್ಳು ಹೇಳಿದ ಆರೋಪಿ ತಾನು ಅಪಘಾತದಲ್ಲಿ ಕಾರು ಗುದ್ದಿಸ್ದೆಿ. ಆತ ಮೃತಪಟ್ಟಿದ್ದಾನೆ ಎಂದು ಹೇಳಿದ್ದ. ಆತನ ಮಾತಿನಿಂದ ಅನುಮಾನಗೊಂಡ ಅವರು ಆತನನ್ನು ಗಂಡಸಿ ಪೊಲೀಸರ ವಶಕ್ಕೆ ಒಪ್ಪಿಸಿದ್ದರು.
14
+ ಅತ್ತ ಪತಿಯ ಸಾವಿನ ದುಃಖದಲ್ಲಿರುವಂತೆ ನಟಿಸುತ್ತಿದ್ದ ಶಿಲ್ಪಾ ಅದುವರೆಗೂ ತನಿಖೆಗೆ ಸಹಕಾರ ನೀಡಿರಲಿಲ್ಲ. ಮುನಿಸ್ವಾಮಿಗೌಡ ತಮ ವಶಕ್ಕೆ ಸಿಕ್ಕಿರುವ ವಿಷಯ ತಿಳಿಸದೇ ಪೊಲೀಸರು ವಿಚಾರಣೆ ನಡೆಸಿದಾಗ ಆಕೆ ನಾಟಕ ಮುಂದುವರಿಸಿದ್ದಳು. ತಕ್ಷಣ ಪೊಲೀಸರು ಆಕೆಯ ಪತಿಯನ್ನು ಮುಂದೆ ನಿಲ್ಲಿಸಿದಾಗ ಕಕ್ಕಾಬಿಕ್ಕಿಯಾದ ಆಕೆ ಸತ್ಯ ಬಾಯ್ದಿಟ್ಟಿದ್ದಾಳೆ.
15
+ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದು ಈ ಖತರ್ನಾಕ್‌ ದಂಪತಿಯ ಸಂಚಿಗೆ ಬಲಿಯಾದ ಅಮಾಯಕನ ಗುರುತು ಇನ್ನೂ ಪತ್ತೆಯಾಗಬೇಕಾಗಿದೆ. ಲಾರಿ, ಕಾರು ವಶಕ್ಕೆ ಪಡೆದಿರುವ ಪೊಲೀಸರು ಲಾರಿ ಚಾಲಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
eesanje/url_46_36_4.txt ADDED
@@ -0,0 +1,5 @@
 
 
 
 
 
 
1
+ ದಸರಾಗೆ ದಿನಗಣನೆ ಶುರುವಾದ ಬೆನ್ನಲ್ಲೇ ಭಾರಿ ಸ್ಫೋಟಕಗಳು ಪತ್ತೆ, ಮೈಸೂರಿನಲ್ಲಿ ಆತಂಕ
2
+ ಮೈಸೂರು, ಆ.23:ನಾಡ ಹಬ್ಬ ದಸರಾ ಮಹೋತ್ಸವ ಕಳೆಗಟ್ಟಲಾರಂಭಿಸಿರುವಾಗಲೇ ಮೈಸೂರಿನಲ್ಲಿ ಭಾರಿ ಸ್ಫೋಟಕ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.ಮೈಸೂರು ಜಿಲ್ಲೆಯ ಟಿ.ನರಸಿಪುರ ತಾಲೂಕಿನ ಕೆಂಪಯ್ಯನಹುಂಡಿ ಸಮೀಪದ ಹೋಟೆಲ್ ನಲ್ಲಿ ಸ್ಫೋಟಕಗಳು ಪತ್ತೆಯಾಗಿವೆ.
3
+ ದುಷ್ಕರ್ಮಿಗಳು ನೀಲಿ ಬಣ್ಣದ ಬ್ಯಾಗ್ ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.ಸ್ಫೋಟಕ ವಸ್ತುಗಳನ್ನು ಗಮನಿಸಿದ ಹೋಟೆಲ್ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
4
+ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಪೊಲೀಸ್ ಸಿಬ್ಬಂದಿ ಧಾವಿಸಿ ಸ್ಫೋಟಕಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ. ಟ್ಯೂಬ್ ಆಕಾರದಲ್ಲಿರುವ 9 ಸ್ಫೋಟಕಗಳು ಹಾಗೂ ಒಂದು ನಾಡ ಬಾಂಬ್ ಆಕಾರದ ವಸ್ತು ಪತ್ತೆಯಾಗಿದೆ.
5
+ ವಿಶ್ವ ವಿಖ್ಯಾತ ದಸರಾ ಮಹೋತ್ಸವ ಕಳೆಗಟ್ಟಲಾರಂಭವಾದ ಹೊತ್ತಲ್ಲೇ ಸ್ಫೋಟಕ ಪತ್ತೆಯಾಗಿರುವುದು ಮೈಸೂರಿಗರಲ್ಲಿ ಆತಂಕ ಸೃಷ್ಟಿಸಿದೆ.
eesanje/url_46_36_5.txt ADDED
@@ -0,0 +1,5 @@
 
 
 
 
 
 
1
+ ಅರಮನೆ ಅವರಣ ಪ್ರವೇಶಿಸಿದ ಗಜಪಡೆ
2
+ ಮೈಸೂರು, ಆ.23– ನಾಡಹಬ್ಬ ದಸರಾಗೆ ಭರದ ಸಿದ್ಧತೆ ನಡೆಯುತ್ತಿದ್ದು, ಪ್ರಯಾಣ ಮಾಡಿ ವಿಶ್ರಾಂತಿಯಲ್ಲಿದ್ದ ಗಜಪಡೆ ಇಂದು ಅದ್ಧೂರಿಯಾಗಿ ಅರಮನೆ ಪ್ರವೇಶಿಸಿದೆ. ಆನೆಗಳ ಆಗಮನದಿಂದ ದಸರಾ ವೈಭವ ಸಾಂಸ್ಕೃತಿಕ ನಗರಿಯಲ್ಲಿ ಕಳೆಗಟ್ಟಿದೆ. ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಗಜಪಡೆಗೆ ಶಾಸೋಕ್ತವಾಗಿ ಪೂಜೆ ಸಲ್ಲಿಸಿ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು.
3
+ ವೀರನಹೊಸಳ್ಳಿ ಕ್ಯಾಂಪ್ನಿಂದ ಪ್ರಯಾಣ ಬೆಳೆಸಿ ನಗರದ ಅಶೋಕಪುರಂನ ಅರಣ್ಯ ಭವನದಲ್ಲಿ ತಂಗಿದ್ದ ಆನೆಗಳಿಗೆ ಇಂದು ಅರಣ್ಯ ಇಲಾಖೆ ವತಿಯಿಂದ ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು.
4
+ ಅಲ್ಲಿಂದ ಕಾಲ್ನಡಿಗೆ ಮೂಲಕ ಗಜಪಡೆ ಅರಮನೆಯತ್ತ ಹೆಜ್ಜೆ ಹಾಕಿದವು. ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಏಕಲವ್ಯ, ಭೀಮ, ಕಂಜನ್, ಲಕ್ಷ್ಮಿ, ವರಲಕ್ಷ್ಮಿ, ರೋಹಿತ್, ಗೋಪಿ, ಧನಂಜಯ ಆನೆಗಳು ಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿರುವುದನ್ನು ಜನರು ಕಣ್ತುಂಬಿಕೊಂಡರು.
5
+ ಅರಮನೆಯ ಮಾರ್ತಾಂಡ ದ್ವಾರದ ಬಳಿ ಬೆಳಗ್ಗೆ 10.30ರಲ್ಲಿ ನಡೆದ ತುಲಾ ಲಗ್ನದಲ್ಲಿ ಗಜಪಡೆಯನ್ನು ಸ್ವಾಗತಿಸಲಾಯಿತು. ಇಂದಿನಿಂದ ಅ.12ರ ಜಂಬು ಸವಾರಿ ಮೆರವಣಿಗೆ ಮುಗಿಯುವವರೆಗೂ ಅರಮನೆಯಲ್ಲೇ ಆನೆಗಳು ವಾಸ್ತವ್ಯ ಹೂಡಲಿವೆ. ನಾಳೆ ಆನೆಗಳ ತೂಕ ಪರಿಶೀಲನೆ ನಡೆಸಿದ ನಂತರ ಅವುಗಳಿಗೆ ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ವಿಶೇಷ ಆಹಾರ ನೀಡಿ ತಾಲೀಮು ನಡೆಸುವ ಮೂಲಕ ಮೆರವಣಿಗೆಗೆ ಸಿದ್ಧತೆ ಮಾಡಲಾಗುತ್ತಿದೆ.
eesanje/url_46_36_6.txt ADDED
@@ -0,0 +1,7 @@
 
 
 
 
 
 
 
 
1
+ ಸಿಎಂ-ಡಿಸಿಎಂ ಜೊತೆ ಪರಮೇಶ್ವರ್‌ ದೆಹಲಿಗೆ ಪ್ರಯಾಣ, ಕುತೂಹಲ ಮೂಡಿಸಿದೆ ವರಿಷ್ಠರಿಗೆ ಭೇಟಿ
2
+ ಬೆಂಗಳೂರು,ಆ.23-ಮುಡಾ ಪ್ರಕರಣದ ಬಳಿಕ ತೀವ್ರಗೊಂಡಿರುವ ರಾಜಕೀಯ ಚಟುವಟಿಕೆಗಳ ಬಗ್ಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಕಾಂಗ್ರೆಸ್‌‍ ವರಿಷ್ಠರಿಗೆ ಮಾಹಿತಿ ನೀಡಿದ್ದಾರೆ.
3
+ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿಗೆ ಪ್ರಯಾಣಿಸಿದರು. ಅವರೊಂದಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ.
4
+ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿದ ಬಳಿಕ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ. ತೆರೆಮರೆಯಲ್ಲಿ ಸಿದ್ದಾರಾಮಯ್ಯ ಅವರನ್ನು ಪದಚ್ಯುತಿಗೊಳಿಸಲು ಕಾಂಗ್ರೆಸ್‌‍ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಗಳು ನಡೆಯುತ್ತಿವೆ. ಜೆಡಿಎಸ್‌‍ ಹಾಗೂ ಬಿಜೆಪಿ ಮುಖಂಡರು ಮಧ್ಯವರ್ತಿಗಳ ಮೂಲಕ ಕೆಲ ಶಾಸಕರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದುಬಂದಿದೆ.
5
+ ಈ ನಡುವೆ ರಾಜ್ಯದಲ್ಲಿನ ಸಚಿವ ಸಂಪುಟ ಹಾಗೂ ಕಾಂಗ್ರೆಸ್‌‍ ಶಾಸಕರು ಸಿದ್ದರಾಮಯ್ಯನವರ ಬೆಂಬಲಕ್ಕೆ ನಿಂತಿದ್ದಾರೆ. ಇಡೀ ಕಾಂಗ್ರೆಸ್‌‍ ಪಕ್ಷ ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿದ್ದರಾಮಯ್ಯ ಅವರನ್ನು ಅಸ್ಥಿರಗೊಳಿಸುವುದು ಸರಿಯಲ್ಲ ಎಂಬ ನಿಲುವಿಗೆ ಬಂದಿದೆ. ಇದಕ್ಕೂ ಮೊದಲು ನಡೆದಿದ್ದ ಅಧಿಕಾರ ಹಂಚಿಕೆ ಸೂತ್ರಗಳು ಹಾಗೂ ಚರ್ಚೆಗಳು ಗೌಪ್ಯವಾಗಿಯೇ ಉಳಿದಿವೆ.
6
+ ಒಂದು ವೇಳೆ ಆ.29ರಂದು ಹೈಕೋರ್ಟ್‌ ವಿಚಾರಣೆ ವೇಳೆ ಕಾನೂನು ಸಮರದಲ್ಲಿ ಹಿನ್ನಡೆಯಾಗಿ ಎಫ್‌ಐಆರ್‌ ದಾಖಲಾದರೆ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರೆಯುವ ನೈತಿಕ ಪ್ರಶ್ನೆ ಎದುರಾಗುತ್ತದೆ. ಆ ಹಂತದಲ್ಲಿ ಉತ್ತರಾಧಿಕಾರಿ ಯಾರು ಎಂಬ ಚರ್ಚೆಗಳು ತೆರೆಮರೆಯಲ್ಲಿ ಪಿಸುಗುಡುತ್ತಿದ್ದು, ಹಲವರ ಹೆಸರುಗಳು ಬೇಕಾಬಿಟ್ಟಿ ಹರಿದಾಡುತ್ತಿವೆ.
7
+ ಇಂದು ಇದ್ದಕ್ಕಿದ್ದಂತೆ ಪರಮೇಶ್ವರ್‌ ಅವರು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಜೊತೆ ದೆಹಲಿಗೆ ತೆರಳಿರುವುದು ಹಲವು ಚರ್ಚೆಗಳನ್ನು ಹುಟ್ಟು ಹಾಕಿದೆ.
eesanje/url_46_36_7.txt ADDED
@@ -0,0 +1,3 @@
 
 
 
 
1
+ ರೇರಾ ಅಧ್ಯಕ್ಷರಾಗಿ ರಾಕೇಶ್‌ಸಿಂಗ್‌ ಅಧಿಕಾರ ಸ್ವೀಕಾರ
2
+ ಬೆಂಗಳೂರು, ಆ.23-ಕರ್ನಾಟಕ ರಿಯಲ್‌ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರ (ರೇರಾ) ಅಧ್ಯಕ್ಷರಾಗಿ ನಿವೃತ್ತ ಐಎಎಸ್‌‍ ಅಧಿಕಾರಿ ರಾಕೇಶ್‌ಸಿಂಗ್‌ ಅಧಿಕಾರ ಸ್ವೀಕರಿಸಿದರು.
3
+ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯಲ್ಲೇ ಇದ್ದುಕೊಂಡು ಏಕಕಾಲದಲ್ಲಿ ವಿವಿಧ ಇಲಾಖೆಗಳ ಹುದ್ದೆಗಳನ್ನು ಸಮರ್ಪಕವಾಗಿ ನಿಭಾಯಿಸಿದ್ದ ರಾಕೇಶ್‌ಸಿಂಗ್‌ ಅವರ ಸೇವಾನುಭವವನ್ನು ಬಳಸಿಕೊಳ್ಳಲು ಸರ್ಕಾರ ತೀರ್ಮಾನಿಸಿ ರೇರಾ ಅಧ್ಯಕ್ಷರನ್ನಾಗಿ ನೇಮಿಸಿದೆ.
eesanje/url_46_36_8.txt ADDED
@@ -0,0 +1,6 @@
 
 
 
 
 
 
 
1
+ ಇಂದಿನಿಂದ ತುಮಕೂರಿನಲ್ಲಿ ವಂದೇ ಭಾರತ್‌ ರೈಲು ನಿಲುಗಡೆ
2
+
3
+ ತುಮಕೂರು, ಆ.23- ಜಿಲ್ಲಾ ರೈಲ್ವೆ ಪ್ರಯಾಣಿಕರ ಒತ್ತಾಸೆಯಂತೆ ಬೆಂಗಳೂರು-ಹುಬ್ಬಳ್ಳಿ ನಡುವೆ ಸಂಚರಿಸುವ ಪ್ರತಿಷ್ಠಿತ ವಂದೇ ಭಾರತ್‌ ರೈಲು ಇಂದಿನಿಂದ ತುಮಕೂರು ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ.
4
+ ತುಮಕೂರು ನಾಗರಿಕರ ಆಶಯದಂತೆ ವಂದೇ ಭಾರತ್‌ ರೈಲು ಆರಂಭದ ದಿನದಿಂದಲೇ ನಗರದಲ್ಲಿ ನಿಲುಗಡೆಗೆ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸ್ಪಂದಿಸಿದ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ತಮ ಕಾರ್ಯಬದ್ಧತೆಯಿಂದ ಈ ರೈಲು ನಿಲುಗಡೆಗೆ ಕೇಂದ್ರ ಸರ್ಕಾರದ ಅನುಮತಿ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಇಂದು ಸಂಜೆ ರೈಲು ನಿಲುಗಡೆಗೆ ಹಸಿರು ನಿಶಾನೆ ತೋರಲಿದ್ದಾರೆ.
5
+ ಬೆಂಗಳೂರು-ತುಮಕೂರು ನಡುವೆ ಹೊಸ ಮೆಮೋ ರೈಲು ಸಂಚಾರಕ್ಕೆ ಅನುಮೋದನೆ ನೀಡಿದ್ದು, ತಿಂಗಳಾಂತ್ಯಕ್ಕೆ ಹೊಸ ಮೆಮೋ ರೈಲು ಸಂಚಾರ ಆರಂಭವಾಗಲಿದೆ. ಇದರಿಂದ ಬೆಳಗ್ಗೆ 9ರ ನಂತರ ತುಮಕೂರಿನಿಂದ ಬೆಂಗಳೂರಿಗೆ ಮತ್ತು ಸಂಜೆ 5 ಗಂಟೆ ನಂತರ ಬೆಂಗಳೂರಿನಿಂದ ತುಮಕೂರಿಗೆ ಮತ್ತೊಂದು ಪ್ಯಾಸೆಂಜರ್‌ ರೈಲಿನ ಅನುಕೂಲವಾಗಲಿದೆ.
6
+ ರೈಲ್ವೆ ಖಾತೆ ರಾಜ್ಯ ಸಚಿವರಾಗಿರುವ ಸೋಮಣ್ಣ ಅವರು ಆರಂಭದಿಂದಲೇ ರೈಲ್ವೆ ಪ್ರಯಾಣಿಕರ ಅಗತ್ಯತೆಗಳಿಗೆ ಸ್ಪಂದಿಸುತ್ತಿದ್ದು, ಹಂತ ಹಂತವಾಗಿ ರೈಲ್ವೆ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿದ್ದಾರೆ. ಸಚಿವರ ಕಾರ್ಯಕ್ಕೆ ತುಮಕೂರು ರೈಲ್ವೆ ಪ್ರಯಾಣಿಕರ ವೇದಿಕೆ ಅಭಿನಂದನೆ ಸಲ್ಲಿಸಿದೆ.
eesanje/url_46_36_9.txt ADDED
@@ -0,0 +1,8 @@
 
 
 
 
 
 
 
 
 
1
+ ಪರಿಸರ ಸ್ನೇಹಿ ಉತ್ಪನ್ನ ಸಂಶೋಧನೆಗೆ ಉತ್ತೇಜನ : ಸಚಿವ ಖಂಡ್ರೆ
2
+
3
+ ಬೆಂಗಳೂರು, ಆ.23-ಪರಿಸರ ಮಾಲಿನ್ಯ ತಡೆಗೆ ವಿನೂತನ ಪರಿಹಾರ ಹುಡುಕಲು ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಗೆ ಉತ್ತೇಜನ ನೀಡಲು ಯೋಜನೆ ರೂಪಿಸುವಂತೆ ಅರಣ್ಯ, ಜೀವಿಶಾಸ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಪರಿಸರ ಇಲಾಖೆಗೆ ಸೂಚನೆ ನೀಡಿದ್ದಾರೆ.
4
+ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಟ್ಟಡದಲ್ಲಿ ಅಳವಡಿಸಲಾಗಿರುವ ಸ್ವಯಂ ಚಾಲಿತ ಬಟ್ಟೆಯ ಕೈಚೀಲ ವಿತರಣಾ ಯಂತ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಏಕ ಬಳಕೆ ಪ್ಲಾಸ್ಟಿಕ್‌ನಿಂದ ಪರಿಸರಕ್ಕೆ ತೀವ್ರ ಹಾನಿ ಆಗುತ್ತಿದ್ದು, ಇದಕ್ಕೆ ಪರ್ಯಾಯವಾದ ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸುವಂತೆ ತಿಳಿಸಿದರು.
5
+ ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ವೈಪರೀತ್ಯ ಜಗತ್ತಿಗೇ ಸವಾಲಾಗಿದ್ದು, ಈ ಸಂದರ್ಭದಲ್ಲಿ ಪ್ರಕೃತಿ, ಪರಿಸರ ಸಂರಕ್ಷಣೆಗೆ ಕೈಗೊಳ್ಳುವ ಸಣ್ಣ ಪರಿಹಾರಗಳೂ ದೀರ್ಘ ಕಾಲದಲ್ಲಿ ದೊಡ್ಡ ಪರಿಣಾಮ ಬೀರುತ್ತವೆ ಎಂದರು. ಮಾಲಿನ್ಯ ನಿಯಂತ್ರಣಕ್ಕೆ ಸಾಂಪ್ರದಾಯಿಕ ವಿಧಾನಗಳ ಜೊತೆಗೆ ನಾವೀನ್ಯಪೂರ್ಣ ಮತ್ತು ಆಧುನಿಕ ತಂತ್ರಜ್ಞಾನ ಆಧಾರಿತ ಪರಿಹಾರ ಹುಡುಕುವ ನಿಟ್ಟಿನಲ್ಲಿ ಸಂಶೋಧನೆಗೂ ಉತ್ತೇಜನ ನೀಡಬೇಕು ಎಂದು ಈಶ್ವರ ಖಂಡ್ರೆ ಪ್ರತಿಪಾದಿಸಿದರು.
6
+ ಏಕ ಬಳಕೆ ಪ್ಲಾಸ್ಟಿಕ್‌ ಕ್ಯಾರಿ ಬ್ಯಾಗ್‌, ಬಾಟಲಿ, ಚಮಚ, ತಟ್ಟೆ, ಲೋಟ ಇವೆಲ್ಲವೂ ಪರಿಸರಕ್ಕೆ ಶತ್ರುಗಳಾಗಿದ್ದು, ಇದಕ್ಕೆ ಪರ್ಯಾಯವಾಗಿ ಜೈವಿಕ ವಿಘಟನೀಯ ವಸ್ತುಗಳ ಬಳಕೆಗೆ ಶೀಘ್ರ ಆದೇಶ ಹೊರಡಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
7
+ ಜೈವಿಕವಾಗಿ ವಿಘಟನೆಯಾಗುವ ಸಸ್ಯ ಜನ್ಯ ಪಾಲಿ ಲಿಕ್ವಿಡ್‌ ಆಸಿಡ್‌ ಪೋಲಿಮರ್‌ ಕೈಚೀಲ (ಕ್ಯಾರಿ ಬ್ಯಾಗ್‌)ಗಳ ತಯಾರಿಕೆ, ದಾಸ್ತಾನು, ಮಾರಾಟಕ್ಕೆ ಅವಕಾಶ ವಾಗುವಂತೆ ನಗರಾಭಿವೃದ್ಧಿ ಇಲಾಖೆಗೆ ಕಳಿಸಿರುವ ಪ್ರಸ್ತಾವನೆ ಕುರಿತು ತುರ್ತು ಕ್ರಮ ಕೈಗೊಳ್ಳ ಬೇಕು ಎಂದು ತಿಳಿಸಿದರು.
8
+ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯರಾದ ಶರಣು ಮೋದಿ, ಮರಿಸ್ವಾಮಿ ಗೌಡ, ಡಾ.ಪ್ರದೀಪ್‌, ಮಂಡಳಿ ಅಧ್ಯಕ್ಷ ವಿಜಯ ಮೋಹನ್‌ ರಾಜ್‌‍, ಸದಸ್ಯ ಕಾರ್ಯದರ್ಶಿ ಬಾಲಚಂದ್ರ ಮತ್ತಿತರರು ಪಾಲ್ಗೊಂಡಿದ್ದರು.
eesanje/url_46_37_1.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ 11 ಮಸೂದ ವಾಪಸ್‌‍ : ರಾಜ್ಯಪಾಲರಿಗೆ ಸರ್ಕಾರದ ಮೇಲೆ ವಿಶ್ವಾಸವಿಲ್ಲವೆ..? : ಪರಮೇಶ್ವರ್‌
2
+
3
+ ಬೆಂಗಳೂರು, ಆ.23-ವಿಧಾನಮಂಡಲದಲ್ಲಿ ಅಂಗೀಕಾರಗೊಂಡ 11 ಮಸೂದೆಗಳನ್ನು ರಾಜ್ಯಪಾಲ ಥಾವರ್‌ಚಂದ್‌ ಗೆಲ್ಹೋಟ್‌ರು ಸಾರಾಸಗಟಾಗಿ ವಾಪಾಸ್‌‍ ಕಳುಹಿಸಿರುವುದು, ರಾಜ್ಯ ಸರ್ಕಾರದೊಂದಿಗೆ ವಿಶ್ವಾಸವಿಲ್ಲ ಎಂಬುದರ ಸಂದೇಶವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.
4
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರಿಗೆ ಮತ್ತು ಸರ್ಕಾರಕ್ಕೆ ಹೊಂದಾಣಿಕೆಯಾಗದೆ ಇದ್ದಾಗ ಸಂಘರ್ಷಗಳು ಸಾಮಾನ್ಯ. ಈವರೆಗೂ ಒಂದೋ ಎರಡೋ ಮಸೂದೆಗಳನ್ನು ಮತ್ತಷ್ಟು ವಿವರಣೆ ನೀಡುವಂತೆ ವಾಪಸ್‌‍ ಕಳುಹಿಸಲಾಗುತ್ತಿತ್ತು. ಸಾರಾಸಗಟಾಗಿ ಇದೇ ಮೊದಲ ಬಾರಿಗೆ 11 ಮಸೂದೆಗಳನ್ನು ಪೂರ್ಣವಾಗಿ ವಾಪಸ್‌‍ ಕಳುಹಿಸಲಾಗಿದೆ. ಇದರಿಂದ ರಾಜ್ಯಪಾಲರಿಗೆ ಸರ್ಕಾರದ ಮೇಲೆ ವಿಶ್ವಾಸ ಕಡಿಮೆಯಾಗಿದೆ ಎಂಬ ಸಂದೇಶ ರವಾನೆಯಾಗಿದೆ. ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸುವ ಕಾರಣಕ್ಕೆ ಬಿಲ್‌ಗಳನ್ನು ವಾಪಸ್‌‍ ಕಳುಹಿಸುತ್ತಿರುವುದಾಗಿ ರಾಜ್ಯಪಾಲರು ಟಿಪ್ಪಣಿ ಬರೆದಿರುವುದು ತಮ ಗಮನಕ್ಕೆ ಬಂದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
5
+ ನಮ ಪಕ್ಷದ ವರಿಷ್ಠರ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿಗೆ ಹೋಗಿದ್ದಾರೆ. ಅವರ ಜೊತೆ ನಾವು ಸ್ವಯಂ ಪ್ರೇರಿತವಾಗಿ ಹೋಗುತ್ತಿದ್ದೇವೆ. ನಮನ್ನು ಹೈಕಮಾಂಡ್‌ ಆಹ್ವಾನಿಸಿಲ್ಲ, ವೈಯಕ್ತಿಕವಾಗಿ ನನಗೆ ಇಲಾಖೆಯ ಕೆಲಸಗಳಿವೆ. ಅದಕ್ಕಾಗಿ ಹೋಗುತ್ತಿದ್ದೇನೆ ಎಂದು ಹೇಳಿದರು.
6
+ ಮುಡಾ ಪ್ರಕರಣದಲ್ಲಿ ಹೈಕಮಾಂಡ್‌ನ ನಾಯಕರು ಬೆಂಗಳೂರಿಗೆ ಬಂದಾಗ ಸಾಕ್ಷಷ್ಟು ವಿವರಣೆ ನೀಡಲಾಗಿದೆ. ದೆಹಲಿಯ ಸಭೆಯಲ್ಲಿ ಯಾವ ವಿಚಾರ ಚರ್ಚೆಯಾಗಿಲಿದೆ ಎಂಬ ಮಾಹಿತಿ ಇಲ್ಲ. ತಮಿಳುನಾಡು, ಕೇರಳ ಹಾಗೂ ಪಶ್ಚಿಮಬಂಗಾಳದಲ್ಲಿ ರಾಜ್ಯಪಾಲರ ನಡವಳಿಕೆಗಳು ಸಂಸಯಾಸ್ಪದವಾಗಿದೆ. ಇದೇ ವಿಚಾರವಾಗಿ ಕಾಂಗ್ರೆಸ್‌‍ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟ ರಾಷ್ಟ್ರಮಟ್ಟದಲ್ಲಿ ಪ್ರತಿಭಟನೆ ನಡೆಸುವ ಕುರಿತು ಚರ್ಚೆಯಾಗಬಹುದು ಎಂದರು.
7
+ ಜಿಂದಾಲ್‌ನ ಜೆಡ್ಲ್ಯೂಎಸ್‌‍ ಸಂಸ್ಥೆಗೆ ಸಾವಿರಾರು ಎಕರೆ ಜಮೀನನ್ನು ಮಂಜೂರು ಮಾಡಲು ನಿನ್ನೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಂಡಿರುವುದನ್ನು ಸಮರ್ಥಿಸಿಕೊಂಡ ಪರಮೇಶ್ವರ್‌, ಹಿಂದೆ ನಾವು ವಿರೋಧ ಪಕ್ಷದಲ್ಲಿದ್ದಾಗ ಈ ರೀತಿ ಭೂಮಿ ನೀಡಲು ವಿರೋಧ ಮಾಡಿದ್ದೇವು. ಆಗ ಕೆಲ ಪ್ರಶ್ನೆಗಳಿದ್ದವು. ಈಗ ಅದಕ್ಕೆಲ್ಲಾ ಉತ್ತರ ಸಿಕ್ಕಿದೆ. ಜೊತೆಗೆ ನ್ಯಾಯಾಲಯವೂ ಆದೇಶ ಮಾಡಿದೆ.
8
+ ಕೋರ್ಟ್‌ ನಿರ್ದೇಶನದ ಮೇಲೆ ಮರು ಪರಿಶೀಲನೆ ಮಾಡಲಾಗಿದೆ. ಸ್ಥಳೀಯವಾಗಿ ಇರುವಂತೆ ಎಕರೆಗೆ ಒಂದು ಲಕ್ಷ, ಐವತ್ತು ಸಾವಿರ ದರ ನಿಗದಿ ಮಾಡಲಾಗಿದೆ. ಇದಾದ ಬಳಿಕ ಭೂಮಿ ಮಂಜೂರು ಮಾಡಿದ್ದೇವೆ ಎಂದರು.
9
+ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಿದಾಗ ಉದ್ಯಮಿಗಳನ್ನು ಆಹ್ವಾನಿಸಿ, ರಾಜ್ಯದಲ್ಲಿ ರಿಯಾಯಿತಿ ದರದಲ್ಲಿ ಭೂಮಿ, ನೀರು, ವಿದ್ಯುತ್‌ ನೀಡುತ್ತೇವೆ ಎಂದು ಭರವಸೆ ನೀಡುತ್ತೇವೆ. ಜಿಂದಾಲ್‌ ಸಂಸ್ಥೆ ರಾಜ್ಯದಲ್ಲಿ ಲಕ್ಷಾಂತರ ಕೋಟಿ ಬಂಡವಾಳ ಹೂಡಿಕೆ ಮಾಡಿದೆ. ಅಂತಹವರಿಗೆ ಒಂದಿಷ್ಟು ರಿಯಾಯಿತಿ ನೀಡಿ ಬೆಂಬಲಿಸಬೇಕಿದೆ. ಜಿಂದಾಲ್‌ನಿಂದ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸಿಕ್ಕಿದೆ ಎಂದರು.
10
+ ರಾಜ್ಯದಲ್ಲಿ ಈ ಹಿಂದೆ ಸಣ್ಣ ಘಟನೆ ನಡೆದಾಗ ಕೈಗಾರಿಕೆಗಳು ಕರ್ನಾಟಕ ಬಿಟ್ಟು ಹೋಗುತ್ತೇವೆ ಎಂದು ಬೆದರಿಕೆ ಹಾಕಿದ್ದವು. ಸ್ಪರ್ಧಾತಕ ಯುಗದಲ್ಲಿ ಕೆಲ ನಿರ್ಣಯ ಕೈಗೊಳ್ಳಬೇಕಿದೆ. ತೆಲಂಗಾಣ ಹಾಗೂ ಆಂಧ್ರ ಪ್ರದೇಶದಲ್ಲಿ ಉಚಿತವಾಗಿ ಭೂಮಿ ನೀಡಲಾಗುತ್ತಿದೆ. ಹಿಂದೆ ಬಿಜೆಪಿ ಆಡಳಿತ ಅವಧಿಯಲ್ಲಿ ಜಿಂದಾಲ್‌ ಸಂಸ್ಥೆಗೆ ಕೈಗಾರಿಕೆಗೆ ಅಭಿವೃದ್ಧಿಗೆ ಭೂಮಿ ನೀಡುತ್ತೇವೆ ಎಂದು ಹೇಳಿರಲಿಲ್ಲ.
11
+ ಕೈಗಾರಿಕೆಗೆ ಉತ್ತೇಜನಕ್ಕಾಗಿ ಭೂಮಿ ನೀಡುತ್ತಿದ್ದೇವೆ ಎಂದು ಮನವರಿಕೆ ಮಾಡಿಕೊಟ್ಟಿದ್ದರೆ ನಾವು ಸುಮನಾಗುತ್ತಿದ್ದೇವು. ಬಹುಶಃ ಬಿಜೆಪಿ ಕೈಗಾರಿಕೆ ಅಭಿವೃದ್ಧಿಗಾಗಿ ಭೂಮಿ ನೀಡುವ ಉದ್ದೇಶ ಇರಲಿಲ್ಲ ಎಂದರು.
12
+ ಬಿಜೆಪಿ ಸರ್ಕಾರದ ಹಗರಣಗಳನ್ನು ಒಂದೊಂದೇ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ. ನಿನ್ನೆ ಒಂದು ಪ್ರಕರಣದಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ. ಬೋವಿ ಅಭಿವೃದ್ಧಿ ನಿಗಮ, ದೇವರಾಜ್‌ ಅರಸ್‌‍ ಟ್ರಕ್‌ ಟರ್ಮಿನಲ್‌, ವಾಲೀಕಿ ಅಭಿವೃದ್ಧಿ ನಿಗಮ, ಜಂತಕಲ್‌ ಗಣಿ ಹಗರಣ ಸೇರಿ ಎಲ್ಲವನ್ನೂ ತಾರ್ಕಿಕ ಅಂತ್ಯ ಕಾಣಿಸಲಾಗುವುದು ಎಂದು ತಿಳಿಸಿದರು.
13
+ ಗೆಜೆಟೆಡೆ ಪ್ರೊಬೆಷನರಿ ಹುದ್ದೆಗಳ ನೇಮಕಾತಿಯಾಗಿ ಒಂದು ವಾರದ ಒಳಗೆ ಪರೀಕ್ಷೆ ನಡೆಸಬೇಕು ಎಂದು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಈ ಮೊದಲು ಎರಡು ಬಾರಿ ಕೆೆಎಎಸ್‌‍ ಪರೀಕ್ಷೆ ಮುಂದೂಡಲಾಗಿದೆ. ಮತ್ತೆ ಮುಂದೂಡುವ ಪ್ರಶ್ನೆಯಿಲ್ಲ. ಕೇಂದ್ರ ಲೋಕಸೇವಾ ಆಯೋಗವೂ ಪರೀಕ್ಷೆ ಮುಂದೂಡಬೇಕು ಎಂಬ ಚರ್ಚೆಯಿದೆ. ಅದಕ್ಕಾಗಿ ಕೆಪಿಸಿಸಿ ನಿಗದಿತ ಅವಧಿಯಲ್ಲೇ ಪರೀಕ್ಷೆ ನಡೆಸಲಿದೆ ಎಂದು ಸ್ಪಷ್ಟಪಡಿಸಿದರು.
14
+ ಮುಡಾ ಪ್ರಕರಣದಲ್ಲಿ ದಾಖಲೆಗಳನ್ನು ತಿದ್ದಿದ್ದರೆ ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ. ಸಹಿ ತಿದ್ದಿರುವ ಬಗ್ಗೆ ಎಫ್‌ಎಸ್‌‍ಎಲ್‌ನಿಂದ ಪರಿಶೀಲನೆಗೆ ಒಳಪಡಿಸಲಾಗುವುದು. ಆ ಕಡತದಲ್ಲಿ ಯಾರೆಲ್ಲಾ ಸಹಿ ಮಾಡಿದ್ದಾರೆ, ಬೇರೆ ಅಧಿಕಾರಿಗಳ ಶಿಫಾರಸುಗಳೇನು? ಕಡತ ಮುಖ್ಯಮಂತ್ರಿಗಳ ಹಂತಕ್ಕೆ ಬರುವ ವೇಳೆಗೆ ನಾಲ್ಕೈದು ಅಧಿಕಾರಿಗಳು ಶಿಫಾರಸ್ಸು ಮಾಡಬೇಕಿದೆ. ಅವರ ಶಿಫಾರಸುಗಳೇನು ? ಅಧಿಕಾರಿಗಳ ಸಲಹೆ ಮೀರಿ ಆದೇಶ ನೀಡಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಯಲಿದೆ.
15
+ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸ��ವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ ಪತ್ನಿ ಬರೆದಿರುವ ಪತ್ರಗಳ ಎರಡು ಪುಟಗಳನ್ನು ಮಾತ್ರ ಲಗತ್ತಿಸಿದ್ದಾರೆ. ಉಳಿದ ಪುಟಗಳನ್ನು ಮರೆ ಮಾಚಿದ್ದಾರೆ ಎಂಬ ಆರೋಪ ಸೇರಿದಂತೆ ಯಾರಿಗೆ ಏನೆಲ್ಲಾ ಅನುಮಾನಗಳಿವೆಯೋ ಅವುಗಳನ್ನು ವಿಚಾರಣಾ ಆಯೋಗದ ಮುಂದೆ ಸಲ್ಲಿಸಲಿ ಎಂದು ಸಲಹೆ ನೀಡಿದರು.
eesanje/url_46_37_10.txt ADDED
@@ -0,0 +1,5 @@
 
 
 
 
 
 
1
+ ಅಕ್ರಮ ಹಣ ಗಳಿಕೆ ಪ್ರಕರಣ : ಲೋಕಾಯುಕ್ತ ವಿಚಾರಣೆಗೆ ಹಾಜರಾದ ಡಿಕೆಶಿ
2
+ ಬೆಂಗಳೂರು,ಆ.22-ಅಕ್ರಮ ಹಣ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.ಸಚಿವ ಸಂಪುಟ ಸಭೆಯಲ್ಲಿ ಭಾಗಿಯಾಗಿದ್ದ ಡಿ.ಕೆ.ಶಿವಕುಮಾರ್ ಅರ್ಧದಲ್ಲೇ ಎದ್ದು ಹೊರಬಂದಿದ್ದು, ಲೋಕಾಯುಕ್ತ ಕಚೇರಿಗೆ ತೆರಳಿ ಹೇಳಿಕೆ ನೀಡಿದ್ದಾರೆ.
3
+ ಡಿವೈಎಸ್ಪಿ ಸತೀಶ್ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಈ ಹಿಂದೆ ಯಡಿಯೂರಪ್ಪ ಅವರ ಸರ್ಕಾರ ನೀಡಿದ್ದ ಅನುಮತಿಯನ್ನು ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸಭೆ ಹಿಂಪಡೆದಿತ್ತು.
4
+ ಬಳಿಕ ಡಿ.ಕೆ.ಶಿವಕುಮಾರ್ ಅವರ ಮೇಲಿರುವ ಆರೋಪವನ್ನು ಲೋಕಾಯುಕ್ತ ತನಿಖೆಗೆ ವಹಿಸಲಾಗಿತ್ತು. ಸಿಬಿಐ ರಾಜ್ಯಸರ್ಕಾರದ ನಿರ್ಣಯವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿತ್ತು. ಈಗಾಗಲೇ ಶೇ.90 ರಷ್ಟು ತನಿಖೆ ಪೂರ್ಣಗೊಂಡಿದೆ. ಈ ಹಂತದಲ್ಲಿ ಅನುಮತಿ ಹಿಂಪಡೆದಿರುವುದು ಸೂಕ್ತವಲ್ಲ ಎಂಬುದು ಸಿಬಿಐ ವಾದವಾಗಿತ್ತು. ನ್ಯಾಯಾಲಯ ಯಾವುದೇ ನಿರ್ದೇಶನ ನೀಡಿರಲಿಲ್ಲ.
5
+ ಸಿಬಿಐ ತನಿಖೆಯಿಂದ ತಪ್ಪಿಸಿಕೊಳ್ಳಲು ಲೋಕಾಯುಕ್ತ ತನಿಖೆಗೆ ಆದೇಶಿಸಲಾಗಿದೆ ಎಂಬ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತದಲ್ಲಿ ತನಿಖೆ ಚುರುಕುಗೊಂಡಿದ್ದು, ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ದಾಖಲು ಮಾಡಿಕೊಂಡಿರುವುದು ಮಹತ್ವದ ಬೆಳವಣಿಗೆಯಾಗಿದೆ.
eesanje/url_46_37_11.txt ADDED
@@ -0,0 +1,4 @@
 
 
 
 
 
1
+ ಇಬ್ಬರು ಸಮುದಾಯ ಸಂಘಟನಾಧಿಕಾರಿಗಳ ವರ್ಗಾವಣೆ
2
+ ಬೆಂಗಳೂರು, ಆ.22-ಪೌರಾಡಳಿತ ಸೇವೆಗೆ ಸೇರಿದ ಇಬ್ಬರು ಸಮುದಾಯ ಸಂಘಟನಾಧಿಕಾರಿಗಳನ್ನು ವರ್ಗಾವಣೆ ಮಾಡಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.
3
+ ಗದಗ ನಗರಸಭೆಯ ಸಮುದಾಯ ಸಂಘಟನಾಧಿಕಾರಿ ಸ್ಥಾನಕ್ಕೆ ಬಿ.ಪ್ರಸಾದ್‌ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಳವಳ್ಳಿ ಪುರಸಭೆಯ ಸಮುದಾಯ ಸಂಘಟನಾಧಿಕಾರಿ ಸ್ಥಾನಕ್ಕೆ ವರ್ಗಾಯಿಸಿರುವುದನ್ನು ಮಾರ್ಪಡಿಸಿ ವಿಜಯಲಕ್ಷ್ಮೀ ಹಿರೇಮಠ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಪ್ರಸಾದ್‌ ವರ್ಗಾವಾಗಿದ್ದಾರೆ.
4
+ ನರಗುಂದ ಪುರಸಭೆಯಲ್ಲಿ ಖಾಲಿ ಇದ್ದ ಸಮುದಾಯ ಸಂಘಟನಾಧಿಕಾರಿ ಸ್ಥಾನಕ್ಕೆ ವಿಜಯಲಕ್ಷ್ಮೀ ಹಿರೇಮಠ ಅವರನ್ನು ವರ್ಗಾವಣೆ ಮಾಡಲಾಗಿದೆ. ಇವರು ಗದಗ ನಗರಸಭೆಯ ಸಮುದಾಯ ಸಂಘಟನಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
eesanje/url_46_37_12.txt ADDED
@@ -0,0 +1,6 @@
 
 
 
 
 
 
 
1
+ ಕೆಸೆಟ್‌-2024ಗೆ ಅರ್ಜಿ ಸಲ್ಲಿಸುವ ದಿನಾಂಕ ಆ.28ರವರೆಗೆ ವಿಸ್ತರಣೆ
2
+ -2024 28
3
+ ಬೆಂಗಳೂರು, ಆ.22-ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್‌-2024)ಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಆ.28ರವರೆಗೆ ವಿಸ್ತರಿಸಿದೆ.
4
+ ರಾಜ್ಯ ಸರ್ಕಾರದ ನಿರ್ದೇಶನದಂತೆ ಕೆಸೆಟ್‌ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದ್ದು, ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಲು ಆ. 30 ಕಡೆಯ ದಿನವಾಗಿದೆ ಎಂದು ಕೆಇಎ ಪ್ರಕಟಣೆ ತಿಳಿಸಿದೆ.
5
+ ಜುಲೈ 7ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಕೆಸೆಟ್‌ಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಆ.22ಕ್ಕೆ ನಿಗದಿಗೊಳಿಸಲಾಗಿತ್ತು. ಕೊನೆಯ ದಿನಾಂಕ ವಿಸ್ತರಿಸಲು ಸರ್ಕಾರ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಕೆಇಎಯು ಆನ್‌ಲೈನ್‌ ಮೂಲಕ ಕೆಸೆಟ್‌ಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಆ.28ರವರೆಗೆ ವಿಸ್ತರಣೆ ಮಾಡಿದೆ.
6
+ ಅರ್ಹತಾ ನಿಬಂಧನೆಗಳು ಮತ್ತು ಪರೀಕ್ಷಾ ದಿನಾಂಕ ಹಾಗೂ ಇತರೆ ವಿವರಗಳು ಅಧಿಸೂಚನೆಯಲ್ಲಿರುವಂತೆ ಅನ್ವಯವಾಗಲಿವೆ ಎಂದು ತಿಳಿಸಲಾಗಿದೆ.
eesanje/url_46_37_2.txt ADDED
@@ -0,0 +1,8 @@
 
 
 
 
 
 
 
 
 
1
+ ರಾಜ್ಯ ಸರ್ಕಾರವನ್ನು ನಾವು ಅಸ್ಥಿರಗೊಳಿಸಲ್ಲ, ಆಂತರಿಕ ಕಚ್ಚಾಟದಿಂದ ಪತನವಾದರೆ ನಾವೇನು ಮಾಡಲು ಸಾಧ್ಯ : ಜೋಷಿ
2
+ ,
3
+ ಬೆಂಗಳೂರು,ಆ.23-ಯಾವುದೇ ಕಾರಣಕ್ಕೂ ಬಹುತ ಹೊಂದಿರುವ ಕಾಂಗ್ರೆಸ್ ಸರ್ಕಾರವನ್ನು ನಾವು ಅಸ್ಥಿರಗೊಳಿಸುವ ಪ್ರಯತ್ನ ಕೈ ಹಾಕುವುದಿಲ್ಲ. ಆದರೆ ಅವರ ಆಂತರಿಕ ಕಚ್ಚಾಟದಿಂದ ಅಸ್ಥಿರಗೊಂಡರೆ ನಾವೇನು ಮಾಡಲು ಸಾಧ್ಯವೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯಿಸಿದ್ದಾರೆ.
4
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆ ಕಾಂಗ್ರೆಸ್ಗೆ ಐದು ವರ್ಷ ಆಡಳಿತ ನಡೆಸಲು 136 ಸ್ಥಾನಗಳನ್ನು ನೀಡಿದ್ದಾರೆ. ಬಹುಮತ ಹೊಂದಿರುವ ಸರ್ಕಾರವನ್ನು ಅಭದ್ರಗೊಳಿಸುವುದು ಅಷ್ಟು ಸುಲಭದ ಮಾತಲ್ಲ ಎಂದು ಹೇಳಿದರು.ಪ್ರಧಾನಿ ನರೇಂದ್ರಮೋದಿ, ಕೇಂದ್ರ ಗೃಹಸಚಿವ ಅಮಿತ್ ಷಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ, ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿದಂತೆ ಯಾರೂ ಕೂಡ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸಕ್ಕೆ ಕೈ ಹಾಕಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
5
+ ತಮ ತಪ್ಪುಗಳನ್ನು ಮುಚ್ಚಿ ಹಾಕಿಕೊಳ್ಳಲು ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹಾಗೆ ನೋಡಿದರೆ ವಾಸ್ತವವಾಗಿ ಕುರ್ಚಿ ಕಳೆದುಕೊಳ್ಳುವ ಭೀತಿ ಸಿಎಂಗೆ ಎದುರಾಗಿದೆ. ಹೀಗಾಗಿ ತಮಗೆ ಬೆಂಬಲ ನೀಡಬೇಕೆಂದು ಶಾಸಕರಿಗೆ ಬಲವಂತವಾಗಿ ಒತ್ತಡ ಹಾಕುತ್ತಿದ್ದಾರೆ. ಇದು ವಾಸ್ತವವೂ ಹೌದು ಎಂದು ತಿಳಿಸಿದರು.
6
+ ನಿಮ ಮನೆಯನ್ನು ನೀವು ಮೊದಲು ಸರಿ ಮಾಡಿಕೊಳ್ಳಿ, ಬೇರೆಯವರ ಮೇಲೆ ಆರೋಪ ಬಿಡಿ. ಬಿಜೆಪಿ ಯಾವ ಕಾರಣಕ್ಕೂ ಈ ಸರ್ಕಾರ ತೆಗೆಯುವ ಉದ್ದೇಶ ಹೊಂದಿಲ್ಲ. ಸಿಎಂ ಮೇಲೆ ಆರೋಪ ಬಂದಿದೆ. ಅವರು ಶುದ್ಧರಾಗಿ ಹೊರಗೆ ಬರಲಿ. ಪಾರದರ್ಶಕ ತನಿಖೆ ನಡೆಯಲಿ ಎಂದರು.
7
+ ಸಿದ್ದರಾಮಯ್ಯ ಮೇಲೆ ನಮಗೇನೂ ಕೋಪ ಇಲ್ಲ. ಬಿಜೆಪಿ ಸರ್ಕಾರ ಅಸ್ಥಿರಗೊಳ್ಳುತ್ತಿಲ್ಲ. ಜನಾದೇಶ ನಮಗೆ ವಿರೋಧ ಪಕ್ಷದ ಸ್ಥಾನ ಕೊಟ್ಟಿದೆ. ಆ ಕೆಲಸವನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.
8
+ ಕಾಂಗ್ರೆಸ್ 58 ವರ್ಷ ಕಾಲ ದೇಶದಲ್ಲಿ ಆಡಳಿತ ಮಾಡಿದ್ದು, 92 ಬಾರಿ ಗಟ್ಟಿಮುಟ್ಟಾದ ಚುನಾಯಿತ ಸರ್ಕಾರಗಳನ್ನು ರಾಜ್ಯಪಾಲರ ಮೂಲಕ ಉರುಳಿಸಿದೆ. ಇಂಡಿಯಾ ಒಕ್ಕೂಟದಲ್ಲಿರುವ ಅನೇಕ ಪಕ್ಷಗಳ ಸರ್ಕಾರಗಳನ್ನು ಇವರೇ ತೆಗೆದಿದ್ದಾರೆ. ಇವರು ಈಗ ನಮಗೆ ರಾಜ್ಯಪಾಲರ ವಿಚಾರದಲ್ಲಿ ಬೋಧನೆ ಮಾಡುತ್ತಿರುವುದು ಬಹಳ ದೊಡ್ಡ ಆಶ್ಚರ್ಯ ಎಂದು ಅವರು ಠಕ್ಕರ್ ನೀಡಿದರು.
eesanje/url_46_37_3.txt ADDED
@@ -0,0 +1,9 @@
 
 
 
 
 
 
 
 
 
 
1
+ ಸಿದ್ದರಾಮಯ್ಯನವರೇ ತಾಕತ್ತಿದ್ರೆ ಧರ್ಮಸ್ಥಳಕ್ಕೆ ಬಂದು ಪ್ರಮಾಣಮಾಡಿ : ರವಿಕುಮಾರ್
2
+
3
+ ಬೆಂಗಳೂರು,ಆ.22-ಮುಡಾ ಪ್ರಕರಣದಲ್ಲಿ ದಾಖಲೆಗಳನ್ನು ಮುಚ್ಚಿ ಹಾಕಲು ವೈಟ್ನರ್‌ ಹಾಕಿಲ್ಲ ಎನ್ನುವುದಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ವಿಧಾನಪರಿಷತ್‌ ಸದಸ್ಯ ರವಿಕುಮಾರ್‌ ಬಹಿರಂಗ ಸವಾಲು ಹಾಕಿದ್ದಾರೆ.
4
+ ಫ್ರೀಡಂ ಪಾರ್ಕ್‌ನಲ್ಲಿ ಹಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಈ ಪ್ರಕರಣವನ್ನು ಮುಚ್ಚಿ ಹಾಕಲು ವ್ಯವಸ್ಥಿತವಾದ ಪಿತೂರಿ ನಡೆಸಿದ್ದಾರೆ. ಮೊದಲು ತಮ ಪತ್ನಿ ನಿರ್ದಿಷ್ಟ ಕಡೆ ನಿವೇಶನ ನೀಡುವಂತೆ ಪತ್ರ ಬರೆದಿಲ್ಲ ಎಂದು ಹೇಳುತ್ತಿದ್ದರು.
5
+ ಇದೀಗ ದಾಖಲಾತಿಗಳಲ್ಲಿ ಪಾರ್ವತಿಯವರು ಮೈಸೂರಿನ ವಿಜಯನಗರದ 2 ಮತ್ತು 3ನೇ ಹಂತದಲ್ಲಿ ನಿವೇಶನ ನೀಡಬೇಕೆಂದು ಕೋರಿ ಮುಡಾ ಆಯುಕ್ತರಿಗೆ ಪತ್ರ ಬರೆದಿರುವುದು ಬೆಳಕಿಗೆ ಬಂದಿದೆ.
6
+ ಇದನ್ನು ಮುಚ್ಚಿ ಹಾಕಲು ಅಧಿಕಾರಿ ಗಳು ವೈಟ್ನರ್‌ ಹಾಕಿರುವುದು ರುಜು ವಾತಾಗಿದೆ. ಇದು ಕಾನೂನು ಉಲ್ಲಂಘನೆ ಯಲ್ಲವೇ ಎಂದು ಪ್ರಶ್ನೆ ಮಾಡಿದರು.ನೀವು ಈ ಪ್ರಕರಣದಲ್ಲಿ ತಪ್ಪೇ ಮಾಡಿಲ್ಲ ಎನ್ನುವುದಾದರೆ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಿ. ನೀವು ಈಗ ಶುದ್ಧರಾಮಯ್ಯನೂ ಅಲ್ಲ, ಸಿದ್ದರಾಮಯ್ಯನೂ ಅಲ್ಲ. ನೀವು ಮುಡಾ ಸೈಟ್‌ ರಾಮಯ್ಯ ಎಂದು ವ್ಯಂಗ್ಯವಾಡಿದರು.
7
+ ಶಾಸಕ ರಾಮಮೂರ್ತಿ ಮಾತನಾಡಿ, ರಾಜಭವನಕ್ಕೆ ನುಗ್ಗುತ್ತೇವೆ ಎಂದು ಹೇಳಿಕೆ ನೀಡಿರುವ ವಿಧಾನಪರಿಷತ್‌ ಸದಸ್ಯ ಐವಾನ್‌ ಡಿಸೋಜ ಅವರು ತಕ್ಷಣವೇ ಪೊಲೀಸರು ಬಂಧಿಸಬೇಕು. ಅವರ ವಿರುದ್ಧ ರಾಷ್ಟ್ರದ್ರೋಹಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದರು.
8
+ ವಿಧಾನಪರಿಷತ್‌ ಸದಸ್ಯರಾಗಿರುವ ಐವಾನ್‌ ಡಿಸೋಜಾಗೆ ಕನಿಷ್ಠ ಪಕ್ಷ ಸಾಮಾನ್ಯಜ್ಞಾನ ಇಲ್ಲವೇ? ಅವರಿಗೆ ನಾಚಿಕೆ, ಮಾನ, ಮರ್ಯಾದೆ ಇದೆಯೇ? ಎಂದು ಪ್ರಶ್ನಿಸಿದರು.
9
+ ಕೂಡಲೇ ಪೊಲೀಸರು ಅವರ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ಕೊಟ್ಟ ಆರೋಪದ ಮೇಲೆ ದೂರು ದಾಖಲಿಸಿ ಮುಲಾಜಿಲ್ಲದೆ ಬಂಧಿಸಬೇಕೆಂದು ಒತ್ತಾಯಿಸಿದರು.ರಾಜ್ಯಸರ್ಕಾರ ನೀರಿನ ದರ ಹೆಚ್ಚಳ ಮಾಡಲು ಮುಂದಾಗಿರುವುದು ಖಂಡನೀಯ. ಇದು ಲೂಟಿ ಸರ್ಕಾರ. ಗ್ಯಾರಂಟಿ ನೆಪದಲ್ಲಿ ಜನರನ್ನು ಕೊಳ್ಳೆ ಹೊಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.
eesanje/url_46_37_4.txt ADDED
@@ -0,0 +1,9 @@
 
 
 
 
 
 
 
 
 
 
1
+ ಸರ್ಕಾರದ ವಿರುದ್ಧ ಅಶ್ವತ್ಥ್ ನಾರಾಯಣ್‌ ವಾಗ್ದಾಳಿ
2
+ ಬೆಂಗಳೂರು,ಆ.22-ಭ್ರಷ್ಟಾಚಾರವನ್ನೇ ಉಂಡೆದ್ದು ಮಲಗುತ್ತಿರುವ ಕಾಂಗ್ರೆಸ್‌‍ ನೇತೃತ್ವದ ಸರ್ಕಾರ ಅಧಿಕಾರದಲ್ಲಿ ಇದ್ದರೆಷ್ಟು? ಬಿಟ್ಟರೆಷ್ಟು? ಮೊದಲು ಅಧಿಕಾರದಿಂದ ತೊಲಗಲಿ ಎಂದು ಮಾಜಿ ಸಚಿವ ಡಾ.ಅಶ್ವತ್ಥ ನಾರಾಯಣ ತೀವ್ರ ವಾಗ್ದಾಳಿ ನಡೆಸಿದರು.
3
+ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ವತಿಯಿಂದ ಹಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭ್ರಷ್ಟಾಚಾರ ರಹಿತ ಆಡಳಿತ ನಡೆಸುತ್ತೇವೆ ಎಂದು ಜನತೆ ಮುಂದೆ ವಾಗ್ದಾನ ಮಾಡಿದ್ದ ಕಾಂಗ್ರೆಸ್‌‍ ಸರ್ಕಾರ ಭ್ರಷ್ಟಾಚಾರವನ್ನೇ ಒಂದಂಶದ ಕಾರ್ಯಕ್ರಮ ಮಾಡಿಕೊಂಡಿದೆ ಎಂದು ವ್ಯಂಗ್ಯವಾಡಿದರು.
4
+ ಎಷ್ಟು ಬೇಗ ಈ ಸರ್ಕಾರ ತೊಲಗುತ್ತದೆಯೋ ಎಂದು ರಾಜ್ಯದ ಜನತೆ ಎದುರು ನೋಡುತ್ತಿದ್ದಾರೆ. ಎಲ್ಲಿ ನೋಡಿದರೂ ಲಂಚ ಲಂಚ ಎಂದು ಜನರು ಹಿಡಿಶಾಪ ಹಾಕುತ್ತಿದ್ದಾರೆ. ಇಂತಹ ದರಿದ್ರ ಸರ್ಕಾರ ಇದ್ದರೂ ಒಂದೇ, ಇಲ್ಲದಿದ್ದರೂ ಒಂದೇ ಎಂದು ಕೆಂಡ ಕಾರಿದರು.
5
+ ಕಾರ್ಯಾಂಗದ ಮುಖ್ಯಸ್ಥನಾಗಿರುವ ರಾಜ್ಯಪಾಲರು ದಾಖಲೆಗಳನ್ನು ಪರಿಶೀಲಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಾರೆ. ಕಾನೂನುಬದ್ಧವಾಗಿ ಅದನ್ನು ಎದುರಿಸಬೇಕೇ ವಿನಃ ಬೆಂಬಲಿಗರನ್ನು ಛೂ ಬಿಟ್ಟು ಬಾಯಿಗೆ ಬಂದಂತೆ ಮಾತನಾಡಿಸುವುದು ಸಿದ್ದರಾಮಯ್ಯನವರಿಗೆ ಶೋಭೆ ತರುವುದಿಲ್ಲ ಎಂದು ಟೀಕಾ ಪ್ರಹಾರ ನಡೆಸಿದರು.
6
+ ರಾಜ್ಯಪಾಲರ ಅನುಮತಿಯನ್ನು ಪ್ರಶ್ನಿಸಿ ನೀವು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿ. ನ್ಯಾಯಾಲಯವು ಪರಿಶೀಲನೆ ನಡೆಸಿ ಆದೇಶ ನೀಡುತ್ತದೆ. ಅದನ್ನು ಬಿಟ್ಟು ರಾಜ್ಯಪಾಲರ ವಿರುದ್ಧ ಮನಸೋ ಇಚ್ಛೆ ಟೀಕೆ ಮಾಡುವುದು ಕಾಂಗ್ರೆಸ್‌‍ ಪಕ್ಷಕ್ಕಾಗಲೀ, ಸಿದ್ದರಾಮಯ್ಯನವರಿಗಾಗಲೀ ಶೋಭೆ ತರದು ಎಂದರು.
7
+ ಇದು ಭಂಡಗೆಟ್ಟ, ಮಾನಗೆಟ್ಟ ಸರ್ಕಾರ ಎಂದು ಪ್ರತಿಪಕ್ಷದವರಿಗಿಂತ ಆಡಳಿತ ಪಕ್ಷದ ಶಾಸಕರೇ ಹಿಡಿಶಾಪ ಹಾಕುತ್ತಿದ್ದಾರೆ. ವರ್ಗಾವಣೆ ದಂಧೆ ಬಿಟ್ಟರೆ ಅಭಿವೃದ್ಧಿ ಶೂನ್ಯ. ಸರ್ಕಾರದಲ್ಲಿ ಅಭಿವೃದ್ಧಿ ಎಂಬುದೇ ಮರೀಚಿಕೆಯಾಗಿದೆ. ಯಾವ ನೈತಿಕತೆ ಇಟ್ಟುಕೊಂಡು ಸರ್ಕಾರ ನಡೆಸುತ್ತಿದ್ದೀರಿ ಎಂದು ಅಶ್ವತ್ಥನಾರಾಯಣ ಪ್ರಶ್ನೆ ಮಾಡಿದರು.
8
+ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ಈ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ಯಾವುದೇ ನೈತಿಕತೆ ಉಳಿಸಿಕೊಂಡಿಲ್ಲ. ಸಾರ್ವಜನಿಕ ವೇದಿಕೆಯಲ್ಲಿ ಹೇಗೆ ಮಾತನಾಡಬೇಕೆಂಬ ಸಾಮಾನ್ಯ ಜ್ಞಾನವನ್ನು ಕಾಂಗ್ರೆಸ್‌‍ ಹೇಳಿಕೊಡಲಿರುವುದು ದುರಂತವೇ ಸರಿ ಎಂದು ವ್ಯಂಗ್ಯವಾಡಿದರು.
9
+ ಆಂಗ್ಲ ಮಾದರಿಯಲ್ಲಿ ರಾಜಭವನಕ್ಕೆ ನುಗ್ಗುತ್ತೇವೆ ಎನ್ನುತ್ತಿರುವ ವಿಧಾನಪರಿಷತ್‌ ಸದಸ್ಯ ಐವಾನ್‌ ಡಿಸೋಜಾ ವಿರುದ್ಧ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿ ತತ್‌ ಕ್ಷಣವೇ ಬಂಧಿಸಬೇಕು. ಇಂತವರು ಸಮಾಜದಲ್ಲಿ ಇದ್ದರೆ ಅದು ಅಪಾಯಕಾರಿ ಎಂದು ಆತಂಕ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲ��� ಶಾಸಕರಾದ ಕೆ.ಗೋಪಾಲಯ್ಯ, ವಿಧಾನಪರಿಷತ್‌ಸದಸ್ಯೆ ಭಾರತಿ ಶೆಟ್ಟಿ ಮತ್ತಿತರರು ಭಾಗಿಯಾಗಿದ್ದರು.
eesanje/url_46_37_5.txt ADDED
@@ -0,0 +1,5 @@
 
 
 
 
 
 
1
+ ಬಿಜೆಪಿ-ಜೆಡಿಎಸ್‌‍ ಕಿಡಿಗೇಡಿಗಳ ಕೃತ್ಯ ತಪ್ಪಿಸಲು ರಾಜ್ಯಪಾಲರಿಗೆ ಬುಲೆಟ್‌ಪ್ರೂಫ್‌ ಕಾರು : ಡಿಕೆಶಿ
2
+ -
3
+ ಬೆಂಗಳೂರು,ಆ.22-ರಾಜ್ಯಪಾಲರ ಕಾರಿಗೆ ಬಿಜೆಪಿ-ಜೆಡಿಎಸ್‌‍ನ ಕಿಡಿಗೇಡಿಗಳೇ ಕಲ್ಲು ಹೊಡೆದು ನಮ್ಮ ಮೇಲೆ ಆರೋಪ ಮಾಡುವ ಸಾಧ್ಯತೆ ಇದೆ. ಅದಕ್ಕಾಗಿ ಬುಲೆಟ್‌ಪ್ರೂಫ್‌ ಕಾರು ಒದಗಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.
4
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್‌‍ನವರು ರಾಜ್ಯಪಾಲರನ್ನು ಬಳಸಿಕೊಂಡು ಕಾಂಗ್ರೆಸ್‌‍ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ ನಡೆಸುತ್ತಿದ್ದಾರೆ. ಜೊತೆಗೆ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಿದ್ದಾರೆ ಎಂದು ದೂರಿದರು.
5
+ ನಮಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ರಾಜ್ಯಪಾಲರಿಗೆ ಸೂಕ್ತ ರಕ್ಷಣೆ ನೀಡಲಾಗಿದೆ. ಪ್ರಜಾಪ್ರಭುತ್ವದಲ್ಲಿ ಯಾರನ್ನು ಬೇಕಾದರೂ ಟೀಕಿಸುವ ಅವಕಾಶವಿದೆ. ಘನತೆವ್ಯಕ್ತ ರಾಜ್ಯಪಾಲರಿಗೆ ಸೂಕ್ತ ಗೌರವ ನೀಡಲಾಗುತ್ತಿದೆ ಎಂದು ಹೇಳಿದರು.
eesanje/url_46_37_6.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಚನ್ನಪಟ್ಟಣ ಉಪಚುನಾವಣೆ : ಜೆಡಿಎಸ್‌ನಿಂದ ಸ್ಥಳೀಯರಿಗೆ ಟಿಕೆಟ್, ಮುಂಚೂಣಿಯಲ್ಲಿ ಜಯಮುತ್ತು ಹೆಸರು
2
+ -
3
+ ಬೆಂಗಳೂರು, ಆ.22– ಚುನಾವಣೆ ಘೋಷಣೆಯಾಗುವ ಮುನ್ನವೇ ಕಾವೇರಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯರನ್ನು ಕಣಕ್ಕಿಳಿಸುವ ಬಗ್ಗೆ ಜೆಡಿಎಸ್ ಗಂಭೀರ ಚಿಂತನೆ ನಡೆಸಿದೆ.ಈಗಾಗಲೇ ಜಿದ್ದಾಜಿದ್ದಿನ ಕ್ಷೇತ್ರವೆಂದು ಪರಿಗಣಿತವಾಗಿದ್ದು, ರಾಜ್ಯಾದ್ಯಂತ ಉಪ ಚುನಾವಣೆ ವಿಚಾರ ಸದ್ದು ಮಾಡುತ್ತಿದೆ.
4
+ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರಕ್ಕೆ ಸದ್ಯದಲ್ಲಿಯೇ ಉಪ ಚುನಾವಣೆ ನಡೆಯಲಿದೆ. ಚನ್ನಪಟ್ಟಣ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಹೆಚ್.ಸಿ.ಜಯಮುತ್ತುಅವರ ಹೆಸರು ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳಲ್ಲಿ ಮುಂಚೂಣಿಯಲ್ಲಿದೆ.
5
+ ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ದೇವರಾಜು(ಹಾಪ್ಕಾಮ್ಸೌ) ಅವರ ಹೆಸರು ಕೂಡ ಕೇಳಿಬರುತ್ತಿದೆ. ಇವರಿಬ್ಬರಲ್ಲಿ ಒಬ್ಬರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಚಿಹ್ನೆಯಡಿ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಪರ್ಧಿಸದಿದ್ದರೆ, ಸ್ಥಳೀಯರಿಗೆ ಮಣೆ ಹಾಕಲು ಜೆಡಿಎಸ್ ಮುಂದಾಗಿದೆ.
6
+ ಜೆಡಿಎಸ್ ಉನ್ನತ ಮೂಲಗಳ ಪ್ರಕಾರ ಚನ್ನಪಟ್ಟಣ ಜೆಡಿಎಸ್ ಪಕ್ಷ ಗೆದ್ದಿದ್ದ ಕ್ಷೇತ್ರವಾಗಿದ್ದು, ಯೋಗೇಶ್ವರ್ ಅವರನ್ನು ಬಿಜೆಪಿ ಬದಲು ಜೆಡಿಎಸ್ ಚಿಹ್ನೆಯಡಿ ಸ್ಪರ್ಧೆ ಮಾಡುವಂತೆ ಸಲಹೆ ಮಾಡಲಾಗಿದೆ. ಆದರೆ, ಅವರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಅಲ್ಲದೆ, ಅವರು ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬಿಜೆಪಿ ವರಿಷ್ಠರ ಮೇಲೆ ಒತ್ತಡ ತರುತ್ತಿದ್ದಾರೆ.
7
+ ಯೋಗೇಶ್ವರ್ ಅಭ್ಯರ್ಥಿಯಾಗಲು ಎರಡೂ ಪಕ್ಷಗಳಲ್ಲಿ ತಕರಾರಿಲ್ಲ. ಆದರೆ, ಯಾವ ಚಿಹ್ನೆಯ ಮೇಲೆ ಸ್ಪರ್ಧಿಸಬೇಕು ಎಂಬುದೇ ಗೊಂದಲಕ್ಕೆ ಕಾರಣವಾಗಿದೆ. ಉಪ ಚುನಾವಣೆಯಲ್ಲೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮುಂದುವರೆಯಲಿದ್ದು, ಇನ್ನೂ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿಲ್ಲ. ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವ ಯೋಗೇಶ್ವರ್ ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸಲು ಮುಂದಾಗುತ್ತಿಲ್ಲ. ಬದಲಿಗೆ ಬಿಜೆಪಿಯಿಂದ ಟಿಕೆಟ್ ನೀಡುವಂತೆ ಆಗ್ರಹಿಸುತ್ತಿದ್ದಾರೆ.
8
+ ಒಂದು ವೇಳೆ ಟಿಕೆಟ್ ನೀಡದಿದ್ದರೆ, ಸ್ವತಂತ್ರ ಸ್ಪರ್ಧೆ ಮಾಡುವ ಬಗ್ಗೆಯೂ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ. ಈ ನಡುವೆ ಮತ್ತೆ ಕಾಂಗ್ರೆಸ್ ಸೇರಿ ಅಭ್ಯರ್ಥಿಯಾಗಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.ಆದರೆ, ಇತ್ತೀಚೆಗೆ ದೆಹಲಿಗೆ ತೆರಳಿದ್ದ ಯೋಗೇಶ್ವರ್ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಚನ್ನಪಟ್ಟಣ ಉಪಚುನಾವಣೆ ಬಗ್ಗೆ ಚರ್ಚಿಸಿದ್ದಾರೆ. ಪಕ್ಷದ ಹೈಕಮಾಂಡ್ ಟಿ��ೆಟ್ ನೀಡುವ ಭರವಸೆ ಇದೆ ಎಂಬ ಹೇಳಿಕೆಯನ್ನೂ ನೀಡಿದ್ದಾರೆ.
9
+ ಈ ಕ್ಷೇತ್ರವನ್ನು ತಮ ತೆಕ್ಕೆಗೆ ತೆಗೆದುಕೊಳ್ಳಲು ಮೂರು ಪಕ್ಷಗಳು ಕಾತರಿಸುತ್ತಿವೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಹೇಳಿಕೆ ನೀಡಿದ್ದಾರೆ. ಈಗಾಗಲೇ ಚುನಾವಣೆ ಸಿದ್ಧತೆಯನ್ನು ಕ್ಷೇತ್ರದಲ್ಲಿ ಆರಂಭಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಈಗಿನಿಂದಲೇ ತಂತ್ರಗಾರಿಕೆ ರೂಪಿಸುತ್ತಿದ್ದಾರೆ.
10
+ ಚುನಾವಣೆಯಲ್ಲಿ ಕಣಕ್ಕಿಳಿಯಲು ನಿರ್ಧರಿಸಿರುವ ಯೋಗೇಶ್ವರ್ ಕೂಡ ತಮದೇ ಆದ ರೀತಿಯಲ್ಲಿ ಕಾರ್ಯಕರ್ತರನ್ನು ಸಂಘಟಿಸಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವಂತೆ ಪಕ್ಷದಲ್ಲಿ ಒತ್ತಡವಿದೆ. ಆದರೆ, ಈಗಾಗಲೇ ಸ್ಪರ್ಧೆ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ನಿಖಿಲ್ ಕುಮಾರಸ್ವಾಮಿ ಸಾರಥ್ಯದಲ್ಲಿ ಜೆಡಿಎಸ್ ಚುನಾವಣೆ ಸಿದ್ಧತೆ ಆರಂಭಿಸಿದೆ.
11
+ ಕಳೆದ ಲೋಕಸಭಾ ಚುನಾವಣೆಯಲ್ಲಿ ಯೋಗೇಶ್ವರ ಸಾಧನೆಯ ಬಗ್ಗೆ ಜೆಡಿಎಸ್ಗೆ ಅಸಮಾಧಾನವಿದೆ. ಹೀಗಾಗಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಯೋಗೇಶ್ವರ್ ಬೆಂಬಲಿಸುವ ಬದಲು ಸ್ಥಳೀಯರನ್ನೇ ಕಣಕ್ಕಿಳಿಸಬೇಕು ಎಂಬ ಒತ್ತಡವನ್ನು ಜೆಡಿಎಸ್ ಕಾರ್ಯಕರ್ತರು ವರಿಷ್ಠರ ಮೇಲೆ ತರುತ್ತಿದ್ದಾರೆ.
12
+ ಜೆಡಿಎಸ್ನಲ್ಲಾಗುತ್ತಿರುವ ಬೆಳವಣಿಗೆಗಳು ಯೋಗೇಶ್ವರ್ಗೆ ನಿರಾಸೆಯನ್ನು ಉಂಟು ಮಾಡುತ್ತಿವೆ.ಉಪ ಚುನಾವಣೆಯಲ್ಲಿ ಗೆದ್ದು ಚನ್ನಪಟ್ಟಣ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎಂಬ ಉದ್ದೇಶ ಜೆಡಿಎಸ್ಗಿದೆ. ಹೀಗಾಗಿ ಮೈತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ? ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬ ಕುತೂಹಲ ಕ್ಷೇತ್ರದಲ್ಲಿ ಮಾತ್ರವಲ್ಲ. ರಾಜ್ಯ ರಾಜಕೀಯದಲ್ಲೂ ಹೆಚ್ಚಾಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.
eesanje/url_46_37_7.txt ADDED
@@ -0,0 +1,4 @@
 
 
 
 
 
1
+ ಇಂದು ಮೂರು ಬಿಟ್ಟ ಜನ ಪೀಡಕ ಸರ್ಕಾರ : ಬಿಜೆಪಿ ಕೆಂಡಾಮಂಡಲ
2
+ ಬೆಂಗಳೂರು,ಆ.22-ಜನರ ಪೀಡಕರಂತೆ ವರ್ತಿಸುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಂತವರನ್ನು ನೋಡಿಯೇ ಮೂರು ಬಿಟ್ಟವರು ಊರಿಗೆ ದೊಡ್ಡವರು ಎನ್ನುವ ನಾಣ್ನುಡಿ ಬರೆದಂತೆ ತೋರುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ವಾಗ್ದಳಿ ನಡೆಸಿದೆ.
3
+ ಈ ಕುರಿತು ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ದಿನಕ್ಕೊಂದು ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ಕಾಂಗ್ರೆಸ್ ಸರ್ಕಾರ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ ದರ್ಪದ ಮಾತುಗಳನ್ನು ಆಡುತ್ತಲೇ ಇದೀಗ ಕುಡಿಯುವ ನೀರಿನ ಬೆಲೆ ಏರಿಕೆ ಮಾಡಿ ಬೆಂಗಳೂರಿಗರ ಜೇಬಿಗೆ ಕತ್ತರಿ ಪ್ರಯೋಗಕ್ಕೆ ಮುಂದಾಗಿದ್ದಾರೆ ಎಂದು ಕಿಡಿಕಾರಿದೆ.
4
+ ಬೆಂಗಳೂರಿಗೆ ಬದುಕು ಕಟ್ಟಿಕೊಳ್ಳಲು ಬಂದಿರುವ ಜನಸಾಮಾನ್ಯರು ಬೆಲೆ ಏರಿಕೆಯ ಭೂತವಾಗಿರುವ ಈ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿಗಿಳಿಯುವ ಕಾಲ ದೂರವಿಲ್ಲ! ಎಂದು ಎಚ್ಚರಿಕೆ ಕೊಡಲಾಗಿದೆ.
eesanje/url_46_37_8.txt ADDED
@@ -0,0 +1,7 @@
 
 
 
 
 
 
 
 
1
+ ಸಿಎಂ ಸಿದ್ದರಾಮಯ್ಯ ಸಾಕ್ಷ್ಯ ನಾಶ ಮಾಡುತ್ತಿದ್ದಾರೆ : ಅಶೋಕ್ ಆಕ್ರೋಶ
2
+ ಬೆಂಗಳೂರು, ಆ.22– ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರ ಬಳಸಿಕೊಂಡು ಮುಡಾಕ್ಕೆ ಪತ್ನಿ ಪಾರ್ವತಿ ಬರೆದಿರುವ ಪತ್ರವನ್ನು ತಿರುಚಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಆರೋಪಿಸಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ತಮ ಪತ್ನಿ ಇಂತಹುದೇ ಬಡಾವಣೆಯಲ್ಲಿ ಸೈಟು ಕೊಡಿ ಎಂದು ಕೇಳಿಲ್ಲ ಎಂದು ಸಮರ್ಥನೆ ಮಾಡಿಕೊಳ್ಳುವ ಸಿಎಂ ಸಿದ್ದರಾಮಯ್ಯ ಅವರ ಮಾತಿನಲ್ಲಿ ಎಷ್ಟು ಸತ್ಯ ಅಡಗಿದೆ ಎಂಬ ಅನುಮಾನ ಈಗ ಮತ್ತಷ್ಟು ದಟ್ಟವಾಗಿದೆ.
3
+ ನಿವೇಶನ ಕೇಳಿ ಮುಖ್ಯಮಂತ್ರಿಗಳ ಪತ್ನಿ ಅವರು ಮೂಡಾಗೆ ಬರೆದಿರುವ ಪತ್ರವನ್ನು ತಿರುಚಿ, ಸಾಕ್ಷಿ ನಾಶ ಮಾಡಲು ಯತ್ನಿಸಿರುವ ಸಂದೇಹ ವ್ಯಕ್ತವಾಗುತ್ತಿದ್ದು, ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಗಬೇಕಾದರೆ, ಎಲ್ಲ ಅನುಮಾನಗಳು ಬಗೆಹರಿಯಬೇಕಾದರೆ ಸಿದ್ದರಾಮಯ್ಯ ಅವರು ತಮ ಸ್ಥಾನಕ್ಕೆ ರಾಜೀನಾಮೆ ನೀಡಿ ನಿಷ್ಪಕ್ಷಪಾತ, ಪಾರದರ್ಶಕ ತನಿಖೆಗೆ ಅನುವು ಮಾಡಿಕೊಡಬೇಕು ಎಂದು ಹೇಳಿದ್ದಾರೆ.
4
+ ಇದಕ್ಕೂ ಮುನ್ನ ಮತ್ತೊಂದು ಪೋಸ್ಟ್ ಮಾಡಿದ್ದ ಅಶೋಕ್ ಅವರು, ದುಷನ್ ಕಹಾ ಹೈ ಅಂದ್ರೆ ಕಾಂಗ್ರೆಸ್ ಪಾರ್ಟಿ ತುಂಬಾ ಹೈ. ಸಿಎಂ ಸಿದ್ದರಾಮಯ್ಯ ಅವರಿಗೆ ನಮ ಸಂಪೂರ್ಣ ಬೆಂಬಲ ಇದೆ ಅಂತ ಬಹಿರಂಗವಾಗಿ ಹೇಳಿಕೆ ಕೊಡುತ್ತಿರುವ ಬಹುತೇಕ ಕಾಂಗ್ರೆಸ್ ನಾಯಕರು ಅಂತರಂಗದಲ್ಲಿ ಬೇರೆಯದೇ ಲೆಕ್ಕಾಚಾರ ಹಾಕುತ್ತಿದ್ದಾರೆ.
5
+ ಸಿದ್ದರಾಮಯ್ಯ ಅವರೇ, ನಿಮ ಬೆನ್ನಿಗೆ ನಿಲ್ಲುತ್ತೇವೆ ಎನ್ನುತ್ತಲೇ ಬೆನ್ನಿಗೆ ಚೂರಿ ಹಾಕುವ ಹಿತಶತೃಗಳು ನಿಮ ಪಕ್ಷದಲ್ಲೇ ಬಹಳ ಮಂದಿ ಇದ್ದಾರೆ. ಇಡೀ ರಾಜ್ಯ ತಮ ರಾಜೀನಾಮೆಗಾಗಿ ಕಾತುರದಿಂದ ಎದುರು ನೋಡುತ್ತಿದೆ. ಕನ್ನಡಿಗರ ತಾಳೆ ಪರೀಕ್ಷೆ ಮಾಡಬೇಡಿ. ಆದಷ್ಟು ಬೇಗ ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳಿ ಎಂದಿದ್ದರು.
6
+ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿ, ಭ್ರಷ್ಟಾತಿ ಭ್ರಷ್ಟ ಸಿದ್ದರಾಮಯ್ಯನವರ ಮುಡಾ ಹಗರಣದ ಒಂದೊಂದೇ ದಾಖಲೆಗಳು ದಿನಕ್ಕೊಂದರಂತೆ ಬಯಲಾಗುತ್ತಲೇ ಇವೆ. ಇದರ ನಡುವೆ ಬಿಡುಗಡೆ ಆಗುತ್ತಿರುವ ದಾಖಲೆಗಳನ್ನು ಕುತಂತ್ರದ ಮೂಲಕ ಮುಚ್ಚಿ ಹಾಕಲಾಗುತ್ತಿದೆ. ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು ವಿಜಯನಗರದಲ್ಲೇ ಸೈಟು ಕೊಡಿ ಎಂದು ಪತ್ರ ಬರೆದಿದ್ದು ಬೆಳಕಿಗೆ ಬಂದಿದೆ. ಆದರೆ, ಸಿದ್ದರಾಮಯ್ಯ ಅವರು ಹಾಕಿದ ಭ್ರಷ್ಟಾಚಾರದ ಗಂಜಿಗೆ ಮುಡಾ ಅಧಿಕಾರಿಗಳು ಸಿಎಂ ಪತ್ನಿ ಬರೆದ ಪತ್ರದಲ್ಲಿನ ಸಾಲುಗಳಿಗೆ ವೈಟ್ನರ್ ಹಾಕಿ ಹಗರಣ ಮುಚ್ಚಿ ಹಾಕಲು ಸಾಕ್ಷ್ಯ ನಾಶ ಮಾಡಿದ್ದಾರೆ.
7
+ ತಮ ಭ್ರಷ್ಟಾಚಾರ ಮುಚ್ಚಿಕೊಳ್ಳಲು ವಾಮಮಾರ್ಗ ಹಿಡಿದಿರುವ ಸಿದ್ದರಾಮಯ್ಯನವರು ಕೊತ್ವಾಲ್ ಶಿಷ್ಯಂದಿರನ್ನು ರಾಜ್ಯದ ತುಂಬಾ ಬಿಟ್ಟು ದೊಂಬಿ ಎಬ್ಬಿಸುತ್ತಿದ್ದಾರೆ. ಭ್ರ��್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕೂಡಲೇ ರಾಜೀನಾಮೆ ನೀಡಬೇಕು. ಹಾಗಾದಾರೆ ಮಾತ್ರ ಭ್ರಷ್ಟಾಚಾರ ಹೊರ ಬರಲು ಸಾಧ್ಯ. ಇಲ್ಲದೆ ಹೋದರೆ ತಮಗೆ ತಾವೇ ಕ್ಲೀನ್ ಚಿಟ್ ಕೊಟ್ಟುಕೊಂಡು ಜಗತ್ತಿನ ಮುಂದೆ ನಾನು ಸತ್ಯಹರಿಶ್ಚಂದ್ರನ ತುಂಡು ಎಂದು ಲಜ್ಜೆಬಿಟ್ಟು ಬಿಂಬಿಸಿಕೊಂಡರೂ ಅಚ್ಚರಿ ಇಲ್ಲ ಎಂದು ಕಿಡಿಕಾರಿದೆ.
eesanje/url_46_37_9.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಬೆಂಗಳೂರಿಗರು ಉಪಕಾರ ಸ್ಮರಿಸಲ್ಲ, ನೀರಿನ ದರ ಏರಿಕೆ ಮಾಡೇ ತೀರುತ್ತೇವೆ : ಡಿಕೆಶಿ
2
+
3
+ ಬೆಂಗಳೂರು,ಆ.22-ಯಾರು, ಎಷ್ಟೇ ಟೀಕೆ ಮಾಡಲಿ, ನಾನಂತೂ ಬೆಂಗಳೂರಿನಲ್ಲಿ ನೀರಿನ ದರವನ್ನು ಹೆಚ್ಚಿಸುವುದು ಶತಸಿದ್ಧ ಎಂದು ಬೆಂಗಳೂರು ನಗರಾ ಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.ಬೆಂಗಳೂರಿಗೆ ಹೊಂದಿಕೊಂಡಿರುವ 110 ಹಳ್ಳಿಗಳಿಗೆ ಕಾವೇರಿ ನೀರು ಸಂಪರ್ಕ ಅಭಿಯಾನ, ಮಳೆನೀರು ಕೊಯ್ಲು ಜಾಗೃತಿ ಅಭಿಯಾನ, ವರುಣಮಿತ್ರ ತರಬೇತಿ ಕಾರ್ಯಕ್ರಮಕ್ಕೆ ವಿಧಾನಸೌಧದ ಮೆಟ್ಟಿಲುಗಳ ಮುಂಭಾಗ ಚಾಲನೆ ನೀಡಿ ಮಾತನಾಡಿದ ಅವರು, ವಿರೋಧಪಕ್ಷಗಳಾಗಲೀ, ಮಾಧ್ಯಮದವರಾಗಲೀ ಯಾರೇ ಟೀಕೆ ಮಾಡಿದರೂ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಚರ್ಚೆ ಮಾಡಲಿ, ಧರಣಿ ಮಾಡಲಿ, ಪ್ರತಿಭಟನೆ ಮಾಡಲಿ, ಯಾವುದಕ್ಕೂ ಜಗ್ಗುವುದಿಲ್ಲ, ನೀರಿನ ದರ ಹೆಚ್ಚಿಸಲು ಬದ್ಧವಾಗಿದ್ದೇನೆ ಎಂದರು.
4
+ ನೀರಿನ ದರ ಹೆಚ್ಚಿಸದೇ ಇದ್ದರೆ ಬಿಡಬ್ಲ್ಯೂಎಸ್ಎಸ್ಬಿ ಉಳಿಯುವುದಿಲ್ಲ. ಕಳೆದ 14 ವರ್ಷಗಳಿಂದ ವಿದ್ಯುತ್ ದರ ತೀವ್ರವಾಗಿ ಹೆಚ್ಚಾಗಿದೆ. ಬಿಬಿಎಂಪಿ, ಬಿಡಬ್ಲ್ಯೂಎಸ್ಎಸ್ಬಿ, ಬಿಎಂಆರ್ಸಿಎಲ್ ಸೇರಿ ಒಂದು ಕಂಪನಿ ಮಾಡಿ ತಲಾ ಶೇ.26 ರಷ್ಟು ಶೇರು ಬಂಡವಾಳ ಹಾಕುವ ಮೂಲಕ ಕ್ಯಾಪ್ಟಿವ್ ಆಗಿ ಸ್ವಂತಕ್ಕೆ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳುವ ವ್ಯವಸ್ಥೆ ಮಾಡಲಾಗುತ್ತದೆ. ಸೌರಶಕ್ತಿ ಹಾಗೂ ಇತರ ವಿದ್ಯುತ್ ಉತ್ಪಾದನೆಗಾಗಿ ಈಗಾಗಲೇ ಕಂಪೆನಿ ರಚಿಸಲಾಗಿದೆ. ಈ ರೀತಿ ಮಾಡುವುದರಿಂದ ವಿದ್ಯುತ್ ಬಿಲ್ನಲ್ಲಿ ಒಂದೆರೆಡು ರೂಪಾಯಿ ಉಳಿತಾಯವಾಗಲಿದೆ ಎಂದು ಹೇಳಿದರು.
5
+ ವಿದ್ಯುತ್ ಸರಬರಾಜಿನಿಂದ ಆಗುತ್ತಿರುವ ಲಾಭ-ನಷ್ಟಗಳ ಬಗ್ಗೆ ಸಾರ್ವಜನಿಕವಾಗಿ ಮಾಹಿತಿ ನೀಡಬೇಕು. ಎಷ್ಟು ಜನ ಬಿಲ್ ಕಟ್ಟುತ್ತಿದ್ದಾರೆ? ಸೋರಿಕೆ ಎಷ್ಟು? ಬಿಡಬ್ಲ್ಯೂಎಸ್ಎಸ್ಬಿಗೆ ಆಗುತ್ತಿರುವ ನಷ್ಟ ಎಷ್ಟಿದೆ? ಎಂದು ವಿರೋಧಪಕ್ಷಗಳಿಗೆ, ಸಾರ್ವಜನಿಕರಿಗೆ ಮಾಹಿತಿ ನೀಡಲು ಜಾಹೀರಾತು ನೀಡುವಂತೆ ಡಿ.ಕೆ.ಶಿವಕುಮಾರ್ ಸೂಚಿಸಿದರು.
6
+ ಈ ಹಿಂದೆ ಪಾವಗಡದಲ್ಲಿ ಸೋಲಾರ್ ಪಾರ್ಕ್ ನಿರ್ಮಿಸುವಾಗ ನನ್ನನ್ನು ನೋಡಿ ಇವನಿಗೆ ತಲೆಕೆಟ್ಟಿದೆ ಎಂದು ನಗುತ್ತಿದ್ದರು. ಆದರೆ ಕಾರ್ಯಾಚರಣೆ ಶುರುವಾದ ಬಳಿಕ ಮೂರುವರೆ ರೂಪಾಯಿಗೆ ಯೂನಿಟ್ ವಿದ್ಯುತ್ ದೊರೆಯುತ್ತಿದೆ. ಪ್ರತಿ ತಾಲ್ಲೂಕಿನಲ್ಲೂ 20ರಿಂದ 50 ಮೆಗಾವ್ಯಾಟ್ ಉತ್ಪಾದನೆಯಾಗುತ್ತಿತ್ತು. ಇದರಿಂದಾಗಿ ಸರಬರಾಜು ನಷ್ಟ ಬಹಳಷ್ಟು ತಗ್ಗಿದೆ ಎಂದರು.
7
+ ಇತ್ತೀಚೆಗೆ ಭೀಕರ ಬರಗಾಲ ಪರಿಸ್ಥಿತಿ ಎದುರಾದಾಗ ಬೆಂಗಳೂರಿನಲ್ಲಿ 7 ಸಾವಿರ ಬೋರ್ವೆಲ್ಗಳ ಬತ್ತಿ ಹೋಗಿದ್ದರೂ, ನೀರು ಸರಬರಾಜು ಮತ್ತು ಜಲಮಂಡಳಿ ಅಧಿಕಾರಿಗಳು ಹಗಲು-ರಾತ್ರಿ ಶ್ರಮ ವಹಿಸಿ ಜನರಿಗೆ ತೊಂದರೆಯಾಗದಂತೆ ಸೇವೆ ಸಲ್ಲಿಸಿದ್ದಾರೆ. ಆರಂಭದಲ್ಲಿ ಒಂದೆರೆಡು ದಿನ ಸಮಸ್ಯೆಗಳು ತೀವ್ರವಾಗಿ ಕಂಡುಬಂದವು. ಆನಂತರ ಪರಿಸ್ಥಿತಿಯನ್ನು ನಿಭಾಯಿಸಲಾ��ಿದೆ ಎಂದು ಹೇಳಿದರು.
8
+ ಬೆಂಗಳೂರಿನ ನಾಗರಿಕರಿಗೆ ಉಪಕಾರ ಸ್ಮರಣೆ ಇಲ್ಲ. ನೀರು ಬಂದರೆ ಬಂತು. ಇಲ್ಲವಾದರೆ ವಾಟ್ಸಾಪ್ನಲ್ಲಿ ಸಂದೇಶ ಕಳುಹಿಸಿ ನಿಂದಿಸಲಾರಂಭಿಸುತ್ತಾರೆ. ಪರಿಸ್ಥಿತಿ ನಿಭಾಯಿಸುವುದು ಎಷ್ಟು ಕಷ್ಟವಿದೆ ಎಂದು ಅವರಿಗೆ ಅರ್ಥವಾಗುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
9
+ ಅಂತರ್ಜಲ ಹೆಚ್ಚಿಸಲು ಮಳೆಕೊಯ್ಲು ಪದ್ಧತಿಯನ್ನು ರಚಿಸಬೇಕು. ಅಧಿಕಾರಿಗಳು ಜನಜಾಗೃತಿ ಮೂಡಿಸಬೇಕು. ವ್ಯಾಪಕ ಪ್ರಚಾರ ಮಾಡಬೇಕು. ಕಾವೇರಿ ನದಿಯಿಂದ ತಮಿಳುನಾಡಿಗೆ 179 ಟಿಎಂಸಿ ಹರಿಸಲಾಗಿದೆ. 99 ಟಿಎಂಸಿ ಹೆಚ್ಚುವರಿಯಾಗಿ ಹರಿದಿದೆ. ಇದನ್ನು ಸಮತೋಲಿತ ಅಣೆಕಟ್ಟಿನಲ್ಲಿ ಸಂಗ್ರಹಿಸಲು ಮೇಕೆದಾಟು ಯೋಜನೆ ರೂಪಿಸಲಾಗಿದೆ. ನ್ಯಾಯಾಲಯದಲ್ಲಿ ನಮಗೆ ಜಯವಾಗುವ ನಿರೀಕ್ಷೆಯಿದೆ. ಅಲ್ಲಿಂದ ಬೆಂಗಳೂರಿಗೆ ನೀರು ತರಬೇಕಿದೆ ಎಂದರು.
10
+ ಕೆಆರ್ಎಸ್ನಿಂದ ಪೈಪ್ಲೈನ್ ಮೂಲಕ ನೇರವಾಗಿ ಬೆಂಗಳೂರಿಗೆ ನಿಗದಿಪಡಿಸಲಾಗಿರುವ ನೀರನ್ನು ಸರಬರಾಜು ಮಾಡುವ ಚರ್ಚೆಗಳು ನಡೆಯುತ್ತಿವೆ. ಐದನೇ ಹಂತದ ಕಾವೇರಿ ನೀರು ಪೂರೈಕೆ ವ್ಯವಸ್ಥೆಗೆ 2-3 ದಿನದಲ್ಲಿ ಚಾಲನೆ ನೀಡಲಾಗುವುದು ಎಂದು ಹೇಳಿದರು.ಶರಾವತಿ ನದಿಯಿಂದ ನೀರು ತರಲು ಪ್ರಸ್ತಾವಿತ ಯೋಜನೆ ಇದೆ. ಅಲ್ಲಿ ಸಾಮೂಹಿಕ ವಿರೋಧ ವ್ಯಕ್ತವಾಗಬಹುದು. ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆ ರಾಜಕೀಯ ಕಾರಣಕ್ಕಾಗಿ ಬೇರೆ ಬೇರೆ ಕೆರೆಗಳಿಗೆ ತಿರುವು ಪಡೆದುಕೊಂಡಿದೆ. ಈಗ ಅದು ಒಂದು ಹಂತಕ್ಕೆ ಬಂದಿದೆ ಎಂದು ಹೇಳಿದರು.
11
+ ಕುಡಿಯುವ ನೀರು, ಅಂತರ್ಜಲಕ್ಕೆ ನೀರು ಬಳಸುವುದು ತಪ್ಪಲ್ಲ. ಬರುವ ನೀರನ್ನು ಕೃಷಿಗೆ ದುರುಪಯೋಗಪಡಿಸಿಕೊಳ್ಳುವುದು ಸರಿಯಲ್ಲ. ಕಾಲುವೆಗಳಿಗೆ ಪೈಪ್ಗಳನ್ನು ಹಾಕಿ ನೀರು ಕದಿಯುವುದನ್ನು ತಡೆಯಲು ವಿಶೇಷ ಮಸೂದೆ ರೂಪಿಸಲಾಗಿದ್ದು, ಅದಕ್ಕೆ ರಾಜ್ಯಪಾಲರು ಅಂಗೀಕಾರ ನೀಡಿದ್ದಾರೆ. ಎತ್ತಿನಹೊಳೆಯಿಂದ ತಿಪ್ಪಗೊಂಡನಹಳ್ಳಿಗೆ ನೀರು ತರುವಾಗ ಈ ರೀತಿಯ ಸಮಸ್ಯೆಗಳು ಎದುರಾಗಲಿವೆ ಎಂದರು.
12
+ ಜಲಮಂಡಳಿ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಕಾರ್ಯಯೋಜನೆ ರೂಪಿಸಿ ನನ್ನನ್ನು ಭೇಟಿ ಮಾಡಿ. ಜಲಮಂಡಳಿಯ ಅಧ್ಯಕ್ಷರು ಬರುತ್ತಾರೆ, ಹೋಗುತ್ತಾರೆ. ಅವರನ್ನು ಬಿಡಿ. ನೀರು ಸರಬರಾಜು ಹಾಗೂ ಒಳಚರಂಡಿ ಸಮಸ್ಯೆಗಳು ನನಗೆ ಗೊತ್ತಿದೆ. ಇದಕ್ಕೆ ಶಾಶ್ವತ ಪರಿಹಾರ ದೊರಕಿಸುವ ಅಗತ್ಯವಿದೆ ಎಂದು ಹೇಳಿದರು.ಬಿಡಿಎ ಆಯುಕ್ತ ಜಯರಾಂ, ಬಿಡಬ್ಲ್ಯೂಎಸ್ಎಸ್ಬಿ ವ್ಯವಸ್ಥಾಪಕ ನಿರ್ದೇಶಕ ರಾಮ್ಪ್ರಸಾದ್ ಮನೋಹರ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತಿತರರು ಉಪಸ್ಥಿತರಿದ್ದರು.
eesanje/url_46_38_1.txt ADDED
@@ -0,0 +1,6 @@
 
 
 
 
 
 
 
1
+ ದಸರಾ ಗಜಪಡೆಗೆ 2.50 ಕೋಟಿ ವಿಮೆ
2
+ 2.50
3
+ ಮೈಸೂರು,ಆ. 22-ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಮೈಸೂರಿಗೆ ಅಸಗಮಿಸುತ್ತಿರುವ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಗಜಪಡೆ ಹಾಗೂ ತಂಡಕ್ಕೆ 2.50 ಕೋಟಿ ರೂ. ವಿಮೆ ಮಾಡಿಸಲಾಗಿದೆ. ದಿ ನ್ಯೂ ಇಂಡಿಯಾ ಅಶ್ಯುರ್ಸೆ್‌ ಕಂಪನಿ ಲಿಮಿಟೆಡ್‌ ದಸರಾ ಗಜಪಡೆ ಹಾಗೂ ತಂಡಕ್ಕೆ 2.50 ಕೋಟಿ ರೂ. ವಿಮೆ ಸೌಲಭ್ಯ ಒದಗಿಸಲಿದೆ.
4
+ ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ತಲಾ 5 ಲಕ್ಷ ರೂ. ಹಾಗೂ ಮಾವುತರು, ಕಾವಾಡಿಗಳಿಗೆ ತಲಾ 2 ಲಕ್ಷ ರೂ. ವಿಮೆ ಸೌಲಭ್ಯ ಕಲ್ಪಿಸಲಾಗಿದೆ. ನಾಲ್ಕು ಮೀಸಲು ಆನೆಗಳು ಸೇರಿ ಒಟ್ಟು 18 ಆನೆಗಳಿಗೆ 87,50,000 ವಿಮೆ ಸೌಲಭ್ಯ ಸಿಗಲಿದೆ.ವಲಯ ಅರಣ್ಯಾಧಿಕಾರಿ, ಪಶು ವೈದ್ಯಾಧಿಕಾರಿ, ಸಹಾಯಕರು, ಸಿಬ್ಬಂದಿಗಳಿಗೂ ವಿಮೆ ಸೌಲಭ್ಯ ಮಾಡಿಸಲಾಗಿದೆ.
5
+ ಸಾರ್ವಜನಿಕ ಆಸ್ತಿ- ಪಾಸ್ತಿಗೆ 50 ಲಕ್ಷ ರೂ. ವಿಮೆ ಸೌಲಭ್ಯ ಕಲ್ಪಿಸಲಾಗಿದೆ. ಗಜಪಡೆ ನಾಡಿಗೆ ಬಂದ ಸಂದರ್ಭದಲ್ಲಿ ತಾಲೀಮು ಅಥವಾ ಇನ್ನಿತರ ಸಂದರ್ಭದಲ್ಲಿ ಗಜಪಡೆಯಿಂದ ಸಾರ್ವಜನಿಕರಿಗೆ ಅಥವಾ ಸಾರ್ವಜನಿಕ ಆಸ್ತಿಗೆ ತೊಂದರೆಯಾದರೆ 50 ಲಕ್ಷದವರೆಗೆ ವಿಮೆ ಸೌಲಭ್ಯ ಜಾರಿಯಲ್ಲಿರುತ್ತದೆ.
6
+ ಈ ವಿಮೆಯು 15-8-2024 ರಿಂದ 18-10-2024 ರವರಗೆ ಜಾರಿಯಲ್ಲಿರಲಿದ್ದು, 75 ಸಾವಿರ ರೂ.ಗಳ ವಿಮೆ ಮೊತ್ತವನ್ನು ಅರಣ್ಯ ಇಲಾಖೆ ಪಾವತಿಸಿದೆ.
eesanje/url_46_38_10.txt ADDED
@@ -0,0 +1,5 @@
 
 
 
 
 
 
1
+ ರೇಣುಕಾಸ್ವಾಮಿ ಕೊಲೆ ಪ್ರಕರಣ ಸೆಪ್ಟೆಂಬರ್ ಮೊದಲ ವಾರದಲ್ಲಿ ಚಾರ್ಜ್​​ಶೀಟ್ ಸಲ್ಲಿಕೆ.!
2
+ ಬೆಂಗಳೂರು, ಆ.21-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಾರೋಪಣ ಪಟ್ಟಿಯನ್ನು ಮುಂದಿನ ತಿಂಗಳ ಮೊದಲ ವಾರದಲ್ಲಿ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸಲ್ಲಿಸಲಿದ್ದಾರೆ.ವಿಜಯನಗರದ ಉಪ ವಿಭಾಗದ ಪೊಲೀಸರು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಅವರ ಮಾರ್ಗದರ್ಶನದಲ್ಲಿ ಚಾರ್ಜ್​​ಶೀಟ್ ಸಲ್ಲಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
3
+ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ತಲುಪಿದ್ದು, ಈಗಾಗಲೇ ಶೇ.70ರಷ್ಟು ಸಾಂದರ್ಭಿಕ ಹಾಗೂ ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.
4
+ ಬೆಂಗಳೂರಿನ ವಿಧಿ-ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದ ಸಾಕ್ಷ್ಯಗಳ ಪೈಕಿ ಶೇ.90ರಷ್ಟು ವರದಿ ಬಂದಿದೆ. ಅಲ್ಲದೆ, ಹೈದರಾಬಾದ್ಗೆ ಕಳುಹಿ ಸಿದ್ದ ವಸ್ತುಗಳಲ್ಲಿ ಶೇ.70ರಷ್ಟು ವರದಿಗಳು ಬಂದಿವೆ. ಉಳಿದ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.
5
+ ಈಗಾಗಲೇ ಈ ಪ್ರಕರಣದ ವೈದ್ಯಕೀಯ ವರದಿ ಹಾಗೂ ಅದಕ್ಕೆ ಸಂಬಂಧಿಸಿದ ಕೆಲವು ಪೂರಕ ದಾಖಲೆಗಳನ್ನು ತನಿಖಾಧಿಕಾರಿಗಳು ಸಂಗ್ರಹಿಸಿ ದ್ದಾರೆ. ಅಲ್ಲದೆ, ಬಹಳಷ್ಟು ಮಂದಿ ಸಾಕ್ಷಿಗಳಿಂದ ಹೇಳಿಕೆಗಳನ್ನು ಪಡೆದುಕೊಂಡಿದ್ದು, ಶೀಘ್ರದಲ್ಲೇ ಚಾರ್ಜ್ಶೀಟ್ ಸಲ್ಲಿಸಲಿದ್ದಾರೆ.ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 17 ಮಂದಿಯನ್ನು ಬಂಧಿಸಲಾಗಿದೆ.
eesanje/url_46_38_11.txt ADDED
@@ -0,0 +1,8 @@
 
 
 
 
 
 
 
 
 
1
+ ಸಂದರ್ಭ ಬಂದರೆ ಮುಲಾಜಿಲ್ಲದೇ ಕುಮಾರಸ್ವಾಮಿಯವರನ್ನು ಬಂಧಿಸುತ್ತೇವೆ : ಸಿಎಂ ಸಿದ್ದರಾಮಯ್ಯ
2
+ ಕೊಪ್ಪಳ,ಆ.21-ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿಯವರನ್ನು ಅರೆಸ್ಟ್ ಮಾಡುವುದಾಗಿ ನಾವು ಎಲ್ಲಿಯೂ ಹೇಳಿಲ್ಲ. ಬಂಧಿಸುವ ಸಂದರ್ಭ ಬಂದರೆ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
3
+ ಗಿಣಿಗೇರ ಏರ್ಸ್ಟ್ರಿಪ್ಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿಸಬೇಕಾದ ಸಂದರ್ಭ ಬಂದರೆ ಮುಲಾಜಿಲ್ಲದೆ ಬಂಧಿಸುತ್ತೇವೆ. ಸದ್ಯಕ್ಕೆ ಅಂತಹ ಯಾವುದೇ ಸಂದರ್ಭ ಇಲ್ಲ ಎಂದು ಹೇಳಿದರು. ಕುಮಾರಸ್ವಾಮಿ ಭಯ ಬಿದ್ದಿದ್ದಾರೆ. ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ಕೊಟ್ಟುಬಿಡಬಹುದು ಎಂಬ ಆತಂಕವಿದೆ. ಲೋಕಾಯುಕ್ತ ಸಂಸ್ಥೆ ತನಿಖೆ ಮಾಡಿ ಸಾಕ್ಷ್ಯ ಸಂಗ್ರಹಿಸಿ ನಂತರ ಅಭಿಯೋಜನೆಗೆ ಅನುಮತಿ ಕೇಳಿದೆ.
4
+ ಅದರ ಅರ್ಥ ಅವರ ವಿರುದ್ಧ ಸಾಕ್ಷ್ಯ ಇದೆ ಎಂದು. ಸಾಕ್ಷ್ಯ ಪುರಾವೆ ಇದ್ದರೂ ಅಂತಹ ಪ್ರಕರಣಗಳನ್ನು ಕೈಬಿಟ್ಟುಬಿಡಬೇಕೆ? ಎಂದು ಪ್ರಶ್ನಿಸಿದರು.ಗಣಿಗಾರಿಕೆಗೆ ಅನುಮತಿ ನೀಡಿದ ವಿಚಾರವಾಗಿ ತನಿಖೆಗೆ ಎಸ್ಐಟಿ ರಚಿಸಲಾಗಿತ್ತು. ಸದರಿ ತನಿಖಾ ಸಂಸ್ಥೆ ರಾಜ್ಯಪಾಲರಿಂದ ಅಭಿಯೋಜನೆಗೆ ಪೂರ್ವಾನುಮತಿ ಕೇಳಿದೆ. ನಾವಾಗಲೀ, ಖಾಸಗಿ ವ್ಯಕ್ತಿಯಾಗಲೀ ಅನುಮತಿ ಕೇಳಿಲ್ಲ. ರಾಜ್ಯಪಾಲರು ಅನುಮತಿ ಕೊಟ್ಟಿಲ್ಲ. ಹಲವು ದಿನಗಳಿಂದಲೂ ಅರ್ಜಿ ಬಾಕಿ ಉಳಿದಿದೆ. ಸೋಮವಾರ ಲೋಕಾಯುಕ್ತ ಸಂಸ್ಥೆ ಎರಡನೇ ಪತ್ರ ಬರೆದಿದೆ ಎಂದು ಹೇಳಿದರು.
5
+ ಟಿ.ಜೆ.ಅಬ್ರಹಾಂ ದೂರು ಕೊಟ್ಟ ಕೆಲವೇ ಗಂಟೆಗಳಲ್ಲಿ ನನಗೆ ಶೋಕಾಸ್ ನೋಟೀಸ್ ನೀಡಿದ್ದರು. ಮೈಸೂರಿನ ಮುಡಾ ಪ್ರಕರಣದಲ್ಲಿ ಯಾವುದೇ ಪೊಲೀಸ್ ಅಧಿಕಾರಿಗಳು ಅಥವಾ ಲೋಕಾಯುಕ್ತ ಪೊಲೀಸರು ಅಭಿಯೋಜನೆಗೆ ಅನುಮತಿ ಕೇಳಿರಲಿಲ್ಲ. ಪ್ರಾಥಮಿಕ ತನಿಖೆಯೂ ಆಗಿರಲಿಲ್ಲ. ಆದರೂ ರಾಜ್ಯಪಾಲರು ಪೂರ್ವಾನುಮತಿ ನೀಡಿದ್ದಾರೆ. ಕುಮಾರಸ್ವಾಮಿ ಪ್ರಕರಣದಲ್ಲಿ ತನಿಖೆಯಾಗಿದ್ದರೂ ಅನುಮತಿ ಕೊಟ್ಟಿಲ್ಲ. ಇದು ತಾರತಮ್ಯ ಅಲ್ಲವೇ? ಎಂದು ಪ್ರಶ್ನಿಸಿದರು.
6
+ ಕುಮಾರಸ್ವಾಮಿ ಸುಳ್ಳು ಹೇಳುವ ಮೂಲಕ ತಮನ್ನು ತಾವು ಸಮರ್ಥಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಮುಡಾ ಪ್ರಕರಣದಲ್ಲಿ ನಾನು ಯಾವುದೇ ಪತ್ರ ಬರೆದಿಲ್ಲ. ಕುಮಾರಸ್ವಾಮಿ ಸುಳ್ಳು ದಾಖಲೆ ನೀಡಿರಬಹುದು. ಅಂತಹ ಯಾವುದೇ ಪತ್ರಗಳನ್ನು ನಾನು ಬರೆದಿಲ್ಲ. ಪಾದಯಾತ್ರೆ ಮಾಡಿದಾಗ ಈ ವಿಚಾರವನ್ನು ವಿರೋಧಪಕ್ಷಗಳು ಏಕೆ ಹೇಳಿರಲಿಲ್ಲ ಎಂದು ಪ್ರಶ್ನಿಸಿದರು.
7
+ ಕುಮಾರಸ್ವಾಮಿ ಸದಾಕಾಲ ಹಿಟ್ ಅಂಡ್ ರನ್ ರೀತಿ ವರ್ತಿಸುತ್ತಾರೆ. ಯಾವುದನ್ನೂ ತಾರ್ಕಿಕ ಹಂತಕ್ಕೆ ತೆಗೆದುಕೊಂಡು ಹೋಗಿಲ್ಲ. ತಮ ಬಳಿ ಪೆನ್ಡ್ರೈವ್ ಇದೆ ಎಂದು ಜೇಬಿಂದ ತೆಗೆದು ತೋರಿಸಿದ್ದರು. ಇವತ್ತಿನವರೆಗೂ ಅದನ್ನು ಬಿಡುಗಡೆ ಮಾಡಿಲ್ಲ. ಅವರ ಮಾತು ನಂಬುವಂತಿಲ್ಲ ಎಂದು ಸಿದ್ದರಾಮಯ್ಯ ಲ��ವಡಿ ಮಾಡಿದರು.
8
+ ಕೊಪ್ಪಳದಲ್ಲಿ ವಿಮಾನ ಅಭಿವೃದ್ಧಿ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಕೆಲಸದಲ್ಲಿ ನಾವು ರಾಜಕಾರಣ ಮಾಡುವುದಿಲ್ಲ. ಕೊಪ್ಪಳದ ಬಗ್ಗೆ ವಿಶೇಷ ಪ್ರೀತಿಯಿದೆ. ಜಿಲ್ಲೆಯ ಜನರಿಗೆ ಅನುಮಾನ ಕಾಡದಂತೆ ನಾವು ನಡೆದುಕೊಳ್ಳುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಹೆಸರುಕಾಳು ಬೆಲೆ ಕುಸಿದಿದ್ದು, ಅದನ್ನು ಬೆಂಬಲ ಬೆಲೆಯಡಿ ಖರೀದಿಸಲು ಶೀಘ್ರವೇ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.
eesanje/url_46_38_12.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ರಾಜ್ಯಪಾಲರ ವಿಚಾರದಲ್ಲಿ ಜಾತಿ ರಾಜಕಾರಣ ಸರಿಯಲ್ಲ : ಪರಮೇಶ್ವರ್‌
2
+ ಬೆಂಗಳೂರು,ಆ.21– ರಾಜ್ಯಪಾಲರನ್ನು ಜಾತಿ ಆಧಾರದ ಮೇಲೆ ನೇಮಿಸುವುದಿಲ್ಲ. ಹೀಗಾಗಿ ಮುಖ್ಯಮಂತ್ರಿ ವಿರುದ್ಧ ಅಭಿಯೋಜನೆ ನೀಡಿರುವ ಪ್ರಕರಣದಲ್ಲಿ ರಾಜ್ಯಪಾಲರ ವಿರುದ್ಧ ಆರೋಪಗಳಿಗೆ ಜಾತಿ ರಾಜಕಾರಣ ಬೆರೆಸುವುದು ಸರಿಯಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಆಕ್ಷೇಪಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡುವಂತೆ ವೈಯಕ್ತಿಕವಾಗಿ ಮನವಿ ಸಲ್ಲಿಸಿದ್ದ ಟಿ.ಜೆ.ಅಬ್ರಹಾಂ ಅವರ ಅರ್ಜಿಯನ್ನು ರಾಜ್ಯಪಾಲರು ಪರಿಗಣಿಸುವುದಾದರೆ ಲೋಕಾಯುಕ್ತ ಸಂಸ್ಥೆ ಕೇಳುವ ಅಭಿಯೋಜನೆಗೆ ಏಕೆ ಅನುಮತಿ ನೀಡುವುದಿಲ್ಲ? ಎಂಬ ಪ್ರಶ್ನೆ ಉದ್ಭವಿಸಿದೆ ಎಂದು ಹೇಳಿದರು.ಅಸ್ತಿತ್ವದಲ್ಲೇ ಇಲ್ಲದ ಸಂಸ್ಥೆಗೆ 550 ಎಕರೆ ಜಮೀನನ್ನು ಮಂಜೂರು ಮಾಡಿದ್ದಾರೆ. ಇದರಲ್ಲಿ ಅಕ್ರಮಗಳಾಗಿವೆ. ತನಿಖೆ ನಡೆದಿದೆ.
4
+ ದೋಷಾರೋಪಣ ಪಟ್ಟಿ ಸಲ್ಲಿಸಲು ಅನುಮತಿ ನೀಡಿ ಎಂದು 2023 ರಲ್ಲಿ ಅಭಿಯೋಜನೆಗೆ ಮನವಿ ಸಲ್ಲಿಸಲಾಗಿದೆ. ಅದೇ ರೀತಿ ಶಶಿಕಲ ಜೊಲ್ಲೆ, ಮುರುಗೇಶ್‌ ನಿರಾಣಿ, ಜನಾರ್ಧನರೆಡ್ಡಿ ಅವರ ಪ್ರಕರಣದಲ್ಲೂ ಅಭಿಯೋಜನೆಗೆ ಮನವಿ ಸಲ್ಲಿಸಲಾಗಿತ್ತು. ಅದ್ಯಾವುದಕ್ಕೂ ಸಹಮತಿಸದ ರಾಜ್ಯಪಾಲರು ಏಕಾಏಕಿ ಸಿದ್ದರಾಮಯ್ಯ ಅವರ ಪ್ರಕರಣದಲ್ಲಿ ನಡೆದುಕೊಂಡ ರೀತಿ ಪ್ರಶ್ನಾರ್ಹವಾಗಿದೆ ಎಂದರು.
5
+ ಈ ಹಿಂದೆ ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳದಲ್ಲಿ ರಾಜ್ಯಪಾಲರು ನಡೆದುಕೊಂಡಿರುವ ರೀತಿ ಚರ್ಚೆಗೆ ಗ್ರಾಸವಾಗಿದೆ. ಈಗ ಕರ್ನಾಟಕದಲ್ಲೂ ಶುರುವಾಗಿದೆ. ಬಿಜೆಪಿಯೇತರ ಸರ್ಕಾರಗಳನ್ನು ಅಸ್ತಿರಗೊಳಿಸಲು ದೇಶಾದ್ಯಂತ ಹುನ್ನಾರಗಳು ನಡೆದಿವೆ ಎಂದು ಟೀಕಿಸಿದರು.
6
+ ರಾಜ್ಯಪಾಲರು ನಡೆದುಕೊಂಡ ರೀತಿ ಜಗತ್ತಿಗೆ ಗೊತ್ತಿದೆ. ಕಾನೂನಿನಲ್ಲಿ ಅವಕಾಶ ಇಲ್ಲದೇ ಇದ್ದರೂ ಅಭಿಯೋಜನೆಗೆ ಅನುಮತಿ ನೀಡಲಾಗಿದೆ. ಈ ವೇಳೆ ಸಚಿವ ಸಂಪುಟದ ಸಲಹೆಯನ್ನು ಪರಿಗಣಿಸಿಲ್ಲ. ಸೂಕ್ತ ಪರಿಶೀಲನೆಗಳನ್ನು ನಡೆಸಿಲ್ಲ ಎಂಬುದು ನಮ ಆಕ್ಷೇಪ. ಸಚಿವ ಸಂಪುಟದಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಗಿತ್ತು. ನಮ ಸಲಹೆಯನ್ನು ತಿರಸ್ಕರಿಸಬಹುದಿತ್ತು. ಆದರೆ ಅದಕ್ಕೆ ಸೂಕ್ತ ಸಮರ್ಥನೆ ನೀಡಬೇಕಿತ್ತು ಎಂದರು.
7
+ ರಾಜ್ಯಪಾಲರನ್ನು ಜಾತಿ ಆಧಾರದ ಮೇಲೆ ನೇಮಕಾತಿ ಮಾಡಿಲ್ಲ. ಬಿಜೆಪಿಯವರು ಇಲ್ಲಿ ಜಾತಿ ವಿಚಾರವನ್ನು ತರುವ ಮೂಲಕ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಐವಾನ್‌ ಡಿಸೋಜ ಅವರ ಆಕ್ಷೇಪಾರ್ಹ ಹೇಳಿಕೆಗಳನ್ನು ತಾವು ಸಮರ್ಥನೆ ಮಾಡುವುದಿಲ್ಲ ಎಂದು ಪರಮೇಶ್ವರ್‌ ಇದೇ ಸಂದರ್ಭದಲ್ಲಿ ತಿಳಿಸಿದರು.
8
+ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪಾಲನೆಗೆ ಸೂಕ್ತ ಕ್ರಮ ಕೈಗೊಂಡಿದ್ದೇವೆ. ಯಾವುದೇ ಪ್ರತಿಭಟನೆಗಳಾದರೂ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದೇವೆ. ದೊಡ��ಡ ಪ್ರಮಾಣದ ಹಿಂಸಾಚಾರ ನಡೆಯಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು.
9
+ ರಾಜ್ಯಪಾಲರು ಅನುಮೋದನೆ ನೀಡದೇ ಇದ್ದರೆ ಲೋಕಾಯುಕ್ತ ಸಂಸ್ಥೆಗೆ ನ್ಯಾಯಾಲಯದ ಮೊರೆ ಹೋಗುವುದೂ ಸೇರಿದಂತೆ ಹಲವು ಮಾರ್ಗಗಳಿವೆ. ಕುಮಾರಸ್ವಾಮಿ ಕೇಂದ್ರ ಸಚಿವರಾಗಿರುವುದರಿಂದಾಗಿ ಅನುಮತಿ ನೀಡುವ ಜಿಜ್ಞಾಸೆ ಎದುರಾಗುವ ಅಗತ್ಯ ಇಲ್ಲ. ಕುಮಾರಸ್ವಾಮಿ ಇಲ್ಲಿಯವರು. ಘಟನೆ ನಡೆದಿದ್ದು ಇಲ್ಲಿ. ಕಂಪೆನಿ ನೊಂದಾವಣೆ ಆಗಿರುವುದು ಇಲ್ಲಿ. ಜಮೀನು ಕೊಟ್ಟಿರುವುದು ರಾಜ್ಯದಲ್ಲಿ. ಹೀಗಾಗಿ ಅದರ ವ್ಯಾಪ್ತಿ ಕೂಡ ಕರ್ನಾಟಕದಲ್ಲೇ ಇದೆ ಎಂದು ಹೇಳಿದರು.
10
+ ರಾಜ್ಯಪಾಲರು ಅನುಮತಿ ಕೊಟ್ಟ ಬಳಿಕ ನಡೆಯುವ ಪ್ರಕ್ರಿಯೆಗಳು ನೈತಿಕತೆ ಅಥವಾ ರಾಜಕೀಯ ಪ್ರಶ್ನೆಗಳಿಗೆ ಕಾರಣವಾಗಬಹುದು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ಮಾಡಲು 29 ರಂದು ಕಾಲಾವಕಾಶ ನೀಡಿದ್ದಾರೆ ಎಂದು ಕಾಂಗ್ರೆಸ್‌‍ ಪಕ್ಷ ತನ್ನ ದೂರನ್ನು ದಾಖಲಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾಂಗ್ರೆಸ್‌‍ ಹೈಕಮಾಂಡ್‌ ಬೆಂಬಲ ವ್ಯಕ್ತಪಡಿಸಿದರು. ಇದರಲ್ಲಿ ಎರಡು ಮಾತಿಲ್ಲ.
11
+ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ರವರು ದೆಹಲಿಗೆ ಭೇಟಿ ನೀಡಿ ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್‌‍ ಹೈಕಮಾಂಡ್‌ಗೆ ಮಾಹಿತಿ ನೀಡಲಿದ್ದಾರೆ ಎಂದ ಅವರು, ಪ್ರತಿಭಟನೆಗೆ ನಮ ಆಕ್ಷೇಪವಿಲ್ಲ. ಆದರೆ ಕಾನೂನು ಸುವ್ಯವಸ್ಥೆ ಹಾಳಾಗದಂತೆ ನೋಡಿಕೊಳ್ಳುವುದು ಪೊಲೀಸರ ಜವಾಬ್ದಾರಿ.
12
+ ಕೋವಿಡ್‌ ಕಾಲದಲ್ಲಿ ನಡೆದ ಹಗರಣಗಳ ಬಗ್ಗೆ ತನಿಖೆ ಕುರಿತ ವರದಿ ಈ ತಿಂಗಳ ಅಂತ್ಯಕ್ಕೆ ಸರ್ಕಾರಕ್ಕೆ ಸಲ್ಲಿಕೆಯಾಗುವ ಸಾಧ್ಯತೆಯಿದೆ. ಅದರಲ್ಲಿ ಯಾವ ಅಂಶಗಳಿವೆ ಎಂಬುದು ತಮಗೆ ಗೊತ್ತಿಲ್ಲ. ವರದಿ ಬಂದ ಬಳಿಕ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
13
+ ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ಚರ್ಚೆಗಳು ನಡೆಯುತ್ತಿಲ್ಲ. ಒಂದು ವೇಳೆ ಅಂತಹ ಸಂದರ್ಭ ಬಂದರೆ ಯಾರಿಗೆ ಅವಕಾಶ ಎಂಬ ಚರ್ಚೆಗಳಾಗುತ್ತವೆ. ಆದರೆ ಸದ್ಯಕ್ಕೆ ಎಲ್ಲಿಯೂ ಅಂತಹ ಚರ್ಚೆಗಳ ಸಂದರ್ಭ ಬಂದಿಲ್ಲ ಎಂದರು.
14
+ ಬಿಜೆಪಿ ಅಧಿಕಾರವಧಿಯಲ್ಲಿನ ಹಲವು ಹಗರಣಗಳು ತನಿಖೆ ಹಂತದಲ್ಲಿವೆ. ಕೆಲವು ಪ್ರಕರಣಗಳಲ್ಲಿ ತಾರ್ಕಿಕ ಅಂತ್ಯವಾಗಲಿದೆ. ಇಲ್ಲಿ ಹೊಂದಾಣಿಕೆ ರಾಜಕಾರಣ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ.
eesanje/url_46_38_2.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಸಿಎಂ ರಾಜಿನಾಮೆಗೆ ಒತ್ತಾಯಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
2
+
3
+ ಬೆಂಗಳೂರು,ಆ.22-ಮುಡಾ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು.
4
+ ರಾಜಧಾನಿ ಬೆಂಗಳೂರು, ಮಂಗಳೂರು, ರಾಮನಗರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಯಿತು.
5
+ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿಧಾನಪರಿಷತ್‌ನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಡಾ.ಅಶ್ವತ್ಥ ನಾರಾಯಣ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು.ಇದೇ ರೀತಿ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಬಿಜೆಪಿಯ ಶಾಸಕರು, ವಿಧಾನಪರಿಷತ್‌ ಸದಸ್ಯರು, ಸಂಸದರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
6
+ ಮುಡಾ ಪ್ರಕರಣದಲ್ಲಿ ಕಾನೂನು ಉಲ್ಲಂಘಿಸಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರು ನಿವೇಶನವನ್ನು ಪಡೆದುಕೊಂಡಿದ್ದಾರೆ. ಕಾನೂನು ಉಲ್ಲಂಘನೆಯಾಗಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿರುವುದರಿಂದ ರಾಜ್ಯಪಾಲರು ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಅಭಿಯೋಜನೆಗೆ ಅನುಮತಿ ನೀಡಿದ್ದಾರೆ.
7
+ ಅದನ್ನು ಕೊಟ್ಟಿದ್ದೇ ತಪ್ಪು ಎಂದು ಹೇಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದರು.ರಾಜ್ಯಪಾಲರು ಕಾನೂನು ತಜ್ಞರ ಸಲಹೆ ಪಡೆದುಕೊಂಡೇ ಇಂತಹ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಮುಖ್ಯಮಂತ್ರಿ ವಿರುದ್ಧ ಅಭಿಯೋಜನೆಗೆ ನೀಡುವ ಮುನ್ನ ಸಾಕಷ್ಟು ಬಾರಿ ಕಾನೂನು ಅಭಿಪ್ರಾಯ ಪಡೆಯಲಾಗುತ್ತದೆ.
8
+ ಒಂದು ವೇಳೆ ರಾಜ್ಯಪಾಲರ ತೀರ್ಮಾನ ಸರಿ ಇಲ್ಲ ಎಂದು ಕಂಡುಬಂದರೆ ಸರ್ಕಾರ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು. ಅದನ್ನು ಬಿಟ್ಟು ಕಾರ್ಯಾಂಗದ ಮುಖ್ಯಸ್ಥರಾಗಿರುವ ರಾಜ್ಯಪಾಲರ ವಿರುದ್ಧ ಅವಮಾನಕಾರಿ ರೀತಿಯಲ್ಲಿ ಟೀಕೆ ಮಾಡುವುದು ಸರಿಯಲ್ಲ ಎಂದು ಪ್ರತಿಭಟನಾ ನಿರತರು ಕಿಡಿಕಾರಿದರು.
9
+ ರಾಜ್ಯಪಾಲರು ದಲಿತ ಸಮುದಾಯಕ್ಕೆ ಸೇರಿದವರು ಎಂಬ ಏಕೈಕ ಕಾರಣಕ್ಕೆ ಸಚಿವ ಜಮೀರ್‌ ಅಹಮದ್‌ ಹಾಗೂ ವಿಧಾನಪರಿಷತ್‌ ಸದಸ್ಯ ಐವಾನ್‌ ಡಿಸೋಜಾ ಅವರು ನಾಲಗೆ ಹರಿಬಿಟ್ಟು ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಕೂಡಲೇ ಅವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಲಾಯಿತು.
10
+ ಆರೋಪಿ ಸ್ಥಾನದಲ್ಲಿರುವ ಸ್ದಿರಾಮಯ್ಯನವರು ನೈತಿಕ ಹೊಣೆ ಹೊತ್ತು ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರು ಅಧಿಕಾರದಲ್ಲಿ ಮುಂದುವರೆದರೆ ನಿಸ್ಪಕ್ಷಪಾತ ಮತ್ತು ನ್ಯಾಯಯುತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ. ಆರೋಪಿ ಸ್ಥಾನದಲ್ಲಿ ಇರುವವರೇ ಉನ್ನತ ಸ್ಥಾನದಲ್ಲಿರುವಾಗ ತನಿಖಾಧಿಕಾರಿಗಳು ಮುಕ್ತವಾಗಿ ತನಿಖೆ ನಡೆಸಲು ಹೇಗೆ ಸಾಧ್ಯ. ಮೊದಲು ನೈತಿಕ ಹೊಣೆ ಹೊತ್ತು ತಮ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
11
+ ಪ್ರತಿಭಟನೆ ನೆಪದಲ್ಲಿ ಸಾರ್ವಜನಿಕರ ಆಸ್ತಿಗಳನ್ನು ಹಾಳು ಮಾಡಲು ಅವಕಾಶವಿಲ್ಲ. ಬಸ್‌‍ಗಳಿಗೆ ಕಲ್ಲು ಎಸೆಯುವುದು, ಸಾರ್ವಜನಿಕ ಆಸ್ತಿಗಳನ್ನು ಹಾಳು ಮಾಡಿದರೆ ಅಂತವರಿಂದಲೇ ಹಣ ವಸೂಲಿ ಮಾಡಬೇಕು. ಜವಾಬ್ದಾರಿಯುತ ಸ್ಥಾನದಲ್ಲಿರುವವರೇ ಸಾರ್ವಜನಿಕರ ಆಸ್ತಿ-ಪಾಸ್ತಿಗಳನ್ನು ಹಾಳು ಮಾಡಿದರೆ ಹೊಣೆ ಯಾರು ಎಂದು ಪ್ರತಿಭಟನಾನಿರತರು ಪ್ರಶ್ನಿಸಿದರು.
12
+ ನಮ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಸಿದ್ದರಾಮಯ್ಯನವರು ರಾಜೀನಾಮೆ ನೀಡುವವರೆಗೂ ಮುಂದುವರೆಯುತ್ತದೆ. ಈ ಪ್ರಕರಣವನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯುವವರೆಗೂ ವಿರಮಿಸುವುದಿಲ್ಲ ಎಂದು ಎಚ್ಚರಿಸಿದರು.
eesanje/url_46_38_3.txt ADDED
@@ -0,0 +1,8 @@
 
 
 
 
 
 
 
 
 
1
+ ಸಂಜೆ ಶಾಸಕಾಂಗ ಸಭೆ, ಸಿಎಂಗೆ ನೈತಿಕ ಬೆಂಬಲ ನೀಡುವ ಅಭಿಪ್ರಾಯ ಸಂಗ್ರಹ
2
+ ಬೆಂಗಳೂರು,ಆ.22-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೈತಿಕ ಬೆಂಬಲ ನೀಡುವ ನಿಟ್ಟಿನಲ್ಲಿ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಲು ನಿಗದಿಪಡಿಸಿರುವ ಶಾಸಕಾಂಗ ಸಭೆ ಸಂಜೆ ನಡೆಯಲಿದೆ.
3
+ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟಿ ಪೂರ್ವಾನುಮತಿ ನೀಡಿರುವ ಹಿನ್ನೆಲೆಯಲ್ಲಿ ರಾಜಕೀಯ ಸಮರ ತೀವ್ರಗೊಂಡಿದೆ.
4
+ ಕಾಂಗ್ರೆಸ್‌‍ ಹೈಕಮಾಂಡ್‌ ಈಗಾಗಲೇ ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ಬೆಂಬಲ ನೀಡಿದೆ. ಅದರ ನಡುವೆಯೂ ತೆರೆಮರೆಯಲ್ಲಿ ಕೆಲವು ಚಟುವಟಿಕೆಗಳು ನಡೆಯುತ್ತಿವೆ. ಜೆಡಿಎಸ್‌‍ ಮತ್ತು ಬಿಜೆಪಿ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸಲು ಆಪರೇಷನ್‌ ಕಮಲಕ್ಕೆ ಮುಂದಾಗುವ ಸುಳಿವು ದೊರೆತಿದೆ.
5
+ ಸಿದ್ದರಾಮಯ್ಯ ಅವರನ್ನು ಪದಚ್ಯುತಗೊಳಿಸುವ ವಾತಾವರಣ ನಿರ್ಮಿಸಿ ತನೂಲಕ ಕಾಂಗ್ರೆಸ್‌‍ನಲ್ಲಿ ಸೃಷ್ಟಿಯಾಗುವ ರಾಜಕೀಯ ಗೊಂದಲಗಳ ಲಾಭ ಪಡೆಯುವ ಹವಣಿಕೆ ನಡೆಯುತ್ತಿವೆ ಎಂಬ ಆರೋಪಗಳಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌‍ ಪ್ರತಿ ಹಂತದಲ್ಲೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.
6
+ ಈಗಾಗಲೇ ಎರಡು ಬಾರಿ ಸಚಿವ ಸಂಪುಟ ಸಭೆ ನಡೆಸಿ ರಾಜ್ಯಪಾಲರಿಗೆ ಸಲಹೆ ನೀಡಲಾಗಿತ್ತು. ಅದರ ಹೊರತಾಗಿಯೂ ಅಭಿಯೋಜನೆಗೆ ಅನುಮತಿ ನೀಡಿರುವುದರಿಂದಾಗಿ ಕಾಂಗ್ರೆಸ್‌‍ ಪಾಳೇಯ ರೊಚ್ಚಿಗೆದ್ದಿದೆ.
7
+ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನಾಳೆ ದೆಹಲಿಗೆ ತೆರಳುತ್ತಿದ್ದು, ಹೈಕಮಾಂಡ್‌ಗೆ ಪ್ರಕರಣದ ಸಮಗ್ರ ವಿವರಣೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಿಸಲು ಸಂಜೆ ಶಾಸಕಾಂಗ ಸಭೆ ವಿಧಾನಸೌಧದ ಸಮೇಳನ ಸಭಾಂಗಣದಲ್ಲಿ ನಡೆಯಲಿದೆ.
8
+ ಈ ಸಂದರ್ಭದಲ್ಲಿ ಕೆಲ ಶಾಸಕರು ಬೇಜವಾಬ್ದಾರಿ ಹಾಗೂ ಸ್ಪಂದನಾ ರಹಿತ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ಸಜ್ಜುಗೊಂಡಿದ್ದಾರೆ ಎಂದು ತಿಳಿದುಬಂದಿದೆ.
eesanje/url_46_38_4.txt ADDED
@@ -0,0 +1,7 @@
 
 
 
 
 
 
 
 
1
+ ಸಿಎಂ ಸಿದ್ದರಾಮಯ್ಯ ರಾಜಿನಾಮೆಗೆ ಒತ್ತಾಯಿಸಿ ನಾಳೆ ಬಿಜೆಪಿ ರಾಜ್ಯಾದ್ಯಂತ ಹೋರಾಟ
2
+ '
3
+ ಬೆಂಗಳೂರು,ಆ.21-ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಕಾರಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ನಾಳೆ ರಾಜ್ಯಾದ್ಯಂತ ಹೋರಾಟ ನಡೆಸಲಿದೆ.ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕೆಂದು ಬಿಜೆಪಿಯ ಎಲ್ಲಾ ಮೋರ್ಚಗಳಿಗೆ ಕರೆ ನೀಡಲಾಗಿದೆ.
4
+ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಸಂಸದರು, ಪದಾಧಿಕಾರಿಗಳು ಸೇರಿದಂತೆ ಬೃಹತ್‌ ಪ್ರಮಾಣದಲ್ಲಿ ಸೇರಬೇಕೆಂದು ಸೂಚಿಸಲಾಗಿದೆ.
5
+ ಈ ಹಿಂದೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಈಗ ಇದನ್ನು ರಾಜ್ಯಾದ್ಯಂತ ವಿಸ್ತರಿಸಲು ಮುಂದಾಗಿದೆ. ಕಾಂಗ್ರೆಸ್‌‍ ರಾಜ್ಯಪಾಲರು ಅಭಿಯೋಜನೆಗೆ ನೀಡಿದ್ದನ್ನು ವಿರೋಧಿಸಿ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಬಿಜೆಪಿ ಕೂಡ ನಾಳೆ ರಾಜ್ಯಾದ್ಯಂತ ಬೀದಿಗಿಳಿಯಲಿದೆ.
6
+ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರು ನೇರವಾಗಿ ಫಲಾನುಭವಿಗಳಾಗಿದ್ದಾರೆ. ಅವರ ಮೇಲೆ ಸೂಕ್ತ ದಾಖಲೆಗಳು ಲಭ್ಯವಾದ ಹಿನ್ನೆಲೆಯಲ್ಲಿ ಕಾರ್ಯಾಲಯದ ಮುಖ್ಯಸ್ಥರಾಗಿರುವ ರಾಜ್ಯಪಾಲರು ಪ್ರಾಸಿಕ್ಯೂಷನ್‌ ವಿಧಾನದ ಸಂವಿಧಾನದಡಿಯಲ್ಲೇ ಕಾನೂನುಬದ್ಧವಾಗಿ ಅನುಮತಿ ನೀಡಿದ್ದಾರೆ.ಆದರೆ ಕಾಂಗ್ರೆಸ್‌‍ ಇದನ್ನು ರಾಜಕೀಯ ಅಸ್ತ್ರವಾಗಿ ಬಳಸಿಕೊಂಡು ಆರೋಪ ಹೊತ್ತಿರುವ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿರುವುದನ್ನು ಬಿಜೆಪಿ ವಿರೋಧಿಸಿದೆ.
7
+ ಅಲ್ಲದೆ, ಥಾವರ್‌ಚಂದ್‌ ಗೆಹ್ಲೋಟ್‌ ದಲಿತ ಸಮುದಾಯಕ್ಕೆ ಸೇರಿರುವುದರಿಂದ ಅರವನ್ನು ಉದ್ದೇಶಪೂರ್ವಕವಾಗಿ ಅವಮಾನ ಮಾಡಲಾಗಿದೆ. ಸಚಿವ ಜಮೀರ್‌ ಅಹಮದ್‌, ವಿಧಾನಪರಿಷತ್‌ ಸದಸ್ಯ ಐವಾನ್‌ ಡಿಸೋಜ ಸೇರಿದಂತೆ ಅನೇಕರು ಅವರ ವಿರುದ್ಧ ಮನಸ್ಸಿಗೆ ಬಂದಂತೆ ಟೀಕಿಸಿದ್ದಾರೆ. ಇದರ ವಿರುದ್ಧವೂ ಹೋರಾಟ ನಡೆಸಬೇಕೆಂದು ಬಿಜೆಪಿ ಘಟಕ ಸೂಚನೆ ನೀಡಿದೆ.ಪ್ರತಿಭಟನೆ ಸಂದರ್ಭದಲ್ಲಿ ಯಾರೊಬ್ಬರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಶಾಂತಿಯುತವಾಗಿ ನಡೆಸಬೇಕೆಂದು ನಿರ್ದೇಶಿಸಲಾಗಿದೆ.
eesanje/url_46_38_5.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ರಾಜ್ಯಪಾಲರಿಗೆ ಬುಲೆಟ್‌ ಪ್ರೂಫ್‌ ಕಾರಿನ ಜೊತೆ ಹೆಚ್ಚಿನ ಭದ್ರತೆ
2
+ ಬೆಂಗಳೂರು,ಆ.21-ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಮೇಲೆ ಕೆಲವು ಸಮಾಜಘಾತುಕ ಶಕ್ತಿಗಳು ದಾಳಿ ನಡೆಸುವ ಸಾಧ್ಯತೆ ಇರುವುದರಿಂದ ತಕ್ಷಣವೇ ಅವರಿಗೆ ಬುಲೆಟ್‌ ಪ್ರೂಫ್‌(ಗುಂಡು ನಿರೋಧಕ) ಕಾರು ಒದಗಿಸುವಂತೆ ಕೇಂದ್ರ ಗುಪ್ತಚರ ವಿಭಾಗ ರಾಜ್ಯ ಗೃಹ ಇಲಾಖೆಗೆ ಸೂಚಿಸಿದೆ.ಈ ಹಿನ್ನೆಲೆಯಲ್ಲಿ ಥಾವರ್‌ಚಂದ್‌ ಗೆಹ್ಲೋಟ್‌ ಅವರಿಗೆ ಇದೀಗ ಬುಲೆಟ್‌ಪ್ರೂಫ್‌ ಕಾರು ಒದಗಿಸಲಾಗಿದ್ದು, ಹೆಚ್ಚಿನ ಭದ್ರತೆಯನ್ನು ಸಹ ತತ್‌ಕ್ಷಣದಿಂದಲೇ ಜಾರಿ ಬರುವಂತೆ ನೀಡಲಾಗಿದೆ.
3
+ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿಗೆ ಕೇಂದ್ರ ಗುಪ್ತಚರ ವಿಭಾಗದ ಮುಖ್ಯಸ್ಥರು ಪತ್ರ ಬರೆದಿದ್ದು, ರಾಜ್ಯಪಾಲರ ಮೇಲೆ ಕೆಲವು ಕಾರಣಗಳನ್ನಿಟ್ಟುಕೊಂಡು ಸಮಾಜಘಾತುಕ ಶಕ್ತಿಗಳು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ಕೊಟ್ಟಿದೆ.
4
+ ಆ. 20ರಂದು ಅವರು ಇಂದೋರ್‌ಗೆ ಕಾರ್ಯನಿಮಿತ್ತ ಹೋಗಿದ್ದ ಅವರು, ಆ. 21ರಂದು ಅಲ್ಲಿಂದ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಅಲ್ಲಿಂದ ಬರುತ್ತಲೇ ಅವರು ಬುಲೆಟ್ ಪ್ರೂಫ್‌ ಕಾರನ್ನು ತರಿಸಿಕೊಂಡು ಅದರಲ್ಲಿ ಪ್ರಯಾಣ ಬೆಳೆಸಿದ್ದಾರೆ. ಕರ್ನಾಟಕ ಪೊಲೀಸ್‌‍ ನ ಗುಪ್ತಚರ ಇಲಾಖೆಯಿಂದ ಅವರಿಗೆ ಬುಲೆಟ್‌ ಕಾರನ್ನು ನೀಡಲಾಗಿದೆ.
5
+ ಸಾಮಾನ್ಯವಾಗಿ ರಾಜ್ಯಪಾಲರಿಗೆ ಬುಲೆಟ್‌ ಪ್ರೂಫ್ ಕಾರಿನಲ್ಲಿ ಓಡಾಡಲು ಅವಕಾಶವಿರುತ್ತದೆ. ಅದನ್ನು ಗುಪ್ತಚರ ಇಲಾಖೆಯಿಂದ ಯಾವಾಗ ಬೇಕಾದರೂ ತರಿಸಿಕೊಂಡು ಅವರು ಅದರಲ್ಲಿ ಓಡಾಡಬಹುದು. ಆದರೆ, ಗೆಹ್ಲೋಟ್‌ ಅವರು, ಕರ್ನಾಟಕಕ್ಕೆ ರಾಜ್ಯಪಾಲರಾಗಿ ಬಂದಾಗಿನಿಂದ ಸಾಮಾನ್ಯ ಕಾರಿನಲ್ಲೇ ಓಡಾಡುತ್ತಿದ್ದರು. ಆದರೀಗ, ಆ. 21ರಿಂದ ಬುಲೆಟ್‌ ಪೂ್‌ ಕಾರಿನಲ್ಲಿ ಓಡಾಡಲು ಆರಂಭಿಸಿದ್ದಾರೆ. ಇದು ಈಗ ಕುತೂಹಲಕ್ಕೆ ಕಾರಣವಾಗಿದೆ.
6
+ ಮುಡಾ ಹಗರಣದಡಿ ಸಿದ್ದರಾಮಯ್ಯನವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆ. 16ರಂದು ಆದೇಶವನ್ನು ರಾಜ್ಯಪಾಲರು ಹೊರಡಿಸಿದರು. ಅಂದಿನಿಂದಲೇ ರಾಜ್ಯಾದ್ಯಂತ ಕಾಂಗ್ರೆಸ್‌‍ ಕಾರ್ಯಕರ್ತರು, ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಸೋಮವಾರದಂದು (ಆ. 19) ಕರ್ನಾಟಕ ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯನವರು ರಾಜ್ಯಪಾಲರ ಆದೇಶಕ್ಕೆ ಪ್ರತಿಯಾಗಿ ಎರಡು ರಿಟ್‌ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಅಂದಿನಿಂದ ಅವರ ಕಾನೂನು ಹೋರಾಟ ಆರಂಭವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್‌‍ ಕಾರ್ಯಕರ್ತರು ಮತ್ತಷ್ಟು ಉಗ್ರ ಸ್ವರೂಪದಲ್ಲಿ ಪ್ರತಿಭಟನೆ ನಡೆಸಿದ್ದು, ಅದಾಗಿ ಎರಡು ದಿನವಾದರೂ ಪ್ರತಿಭಟನೆಗಳು ನಿಂತಿಲ್ಲ.
7
+ ಆ ಹಿನ್ನೆಲೆಯಲ್ಲಿ ರಾಜ್ಯಪಾಲರು ಗಾಬರಿಯಾಗಿದ್ದಾರೆಯೇ ಅಥವಾ ಅವರಿಗೆ ಯಾರಿಂದಾದರೂ ಪ್ರಾಣಭೀತಿ ಆವರಿಸಿದೆಯೇ ಎಂಬುದಿನ್ನೂ ಖಚಿತವಾಗಿಲ್ಲ. ಆದರೂ, ಆ. 21ರವರೆಗೆ ಸಾಮಾನ್ಯ ಕಾರಿನಲ್ಲಿ ಓಡಾಡುತ್ತಿದ್ದ ರಾಜ್ಯಪಾಲರು, ಈಗ ದಿಢೀರನೆ ಬುಲೆಟ್‌ ಪೂ್‌ ಕ��ರಿನಲ್ಲಿ ಓಡಾಡುತ್ತಿರುವುದು ಅಚ್ಚರಿ ಮೂಡಿಸಿದೆ.
8
+ ರಾಜಭವನದ ಮೇಲೆ ದಾಳಿ ನಡೆಯುವ ಭೀತಿ :ರಾಜ್ಯಪಾಲರ ವಿರುದ್ಧ ರೊಚ್ಚಿಗೆದ್ದಿದ್ದ ಕಾಂಗ್ರೆಸ್‌‍ ನಾಯಕರು, ರಾಜಭವನಕ್ಕೆ ನುಗ್ಗುವುದಾಗಿ ಬೆದರಿಕೆ ಹಾಕಿದ್ದರು. ಅದನ್ನು ಬಿಜೆಪಿ ತೀವ್ರವಾಗಿ ಖಂಡಿಸಿತ್ತು. ರಾಜಭವನದ ಮೇಲೆ ದಾಳಿ ನಡೆಸುವುದಾಗಿ ಬಹಿರಂಗವಾಗಿ ಹೇಳಿಕೆ ನೀಡಿರುವ ಕಾಂಗ್ರೆಸ್ಸಿಗರದ್ದು ಎಂಥಾ ಮನಸ್ಥಿತಿ ಎಂಬುದನ್ನು ಈ ರಾಜ್ಯದ ಜನರು ನಿರ್ಧರಿಸುತ್ತಾರೆ ಎಂದು ಬಿಜೆಪಿ ನಾಯಕರು ಆಕೋಶ ವ್ಯಕ್ತಪಡಿಸಿದ್ದರು. ಈ ಕುರಿತಂತೆ ಟ್ವೀಟ್‌ ಮಾಡಿದ್ದ ಬಿಜೆಪಿ ಕರ್ನಾಟಕ, ಸಿಎಂ ಸಿದ್ದರಾಮಯ್ಯ ಮತ್ತವರ ಪಟಾಲಂ ಕಡು ದಲಿತ ವಿರೋಧಿ ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ ಎಂದು ಪ್ರಶ್ನಿಸಿತ್ತು.
9
+ ಅಪರೂಪದ ಸಂದರ್ಭದಲ್ಲಿ ಮಾತ್ರ ಅತಿ ಗಣ್ಯ ವ್ಯಕ್ತಿಗಳಿಗೆ ಬುಲೆಟ್‌ ಪ್ರೂಫ್‌ ಕಾರು ಒದಗಿಸಲಾಗುತ್ತಿದೆ. ರಾಜ್ಯಕ್ಕೆ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ, ಸುಪ್ರಿಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಪ್ರಾಣ ಬೆದರಿಕೆ ಇರುವ ಗಣ್ಯರಿಗೆ ಮಾತ್ರ ಇದನ್ನು ನೀಡಲಾಗುತ್ತದೆ. ರಾಜ್ಯಪಾಲರ ವಿರುದ್ದ ಕೆಲವು ಸಂಘಟನೆಗಳು ತೀವ್ರ ಆಕ್ರೋಶಗೊಂಡಿರುವ ಹಿನ್ನಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಒದಗಿಸಲಾಗಿದೆ ಎಂದು ತಿಳಿದುಬಂದಿದೆ.
10
+ ಕಾರ್ಯಕ್ರಮ ನಿಮಿತ್ತ ತಮ ತವರು ಜಿಲ್ಲೆ ಮಧ್ಯಪ್ರದೇಶದ ಇಂದೋರ್‌ಗೆ ತೆರಳಿದ ರಾಜ್ಯಪಾಲರು ಕಳೆದ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ.ವಿಶ್ವವಿದ್ಯಾನಿಲಯಗಳ ಕುಲಪತಿಗಳೂ ಆಗಿರುವ ರಾಜ್ಯಪಾಲರು ವಿಶ್ವವಿದ್ಯಾನಿಲಯಗಳ ಘಟಿಕೋತ್ಸವ, ಪ್ರಶಸ್ತಿ, ಪದವಿ ಪ್ರದಾನ ಕಾರ್ಯಕ್ರಮಗಳಿಗೆ ತೆರಳುತ್ತಾರೆ. ಹೀಗಾಗಿ ಭದ್ರತಾ ಕಾರಣಕ್ಕಾಗಿ ಬುಲೆಟ್‌ ಪ್ರೂಫ್‌ ಕಾರು ಒದಗಿಸಲಾಗಿದೆ.
11
+ ಇನ್ನು ರಾಜ್ಯಪಾಲರು ಯಾವುದಾದರೂ ಸಭೆ ಸಮಾರಂಭ, ಮತ್ತಿತರ ಕಾರ್ಯಕ್ರಮಗಳಿಗೆ ತೆರಳುವ ಸಂದರ್ಭದಲ್ಲಿ ಅವರಿಗೆ ಹೆಚ್ಚಿನ ಭದ್ರತೆಯನ್ನು ಒದಗಿಸುವಂತೆಯೂ ಸೂಚನೆ ನೀಡಲಾಗಿದೆ. ರಾಜ್ಯಪಾಲರಾಗಿ ಥಾವರ್‌ಚಂದ್‌ ಗೆಹ್ಲೋಟ್‌ ಅಧಿಕಾರ ವಹಿಸಿಕೊಂಡ ನಂತರ ಈವರೆಗೂ ಬುಲೆಟ್‌ ಪ್ರೂಫ್‌ ಕಾರು ಬಳಸುತ್ತಿರಲಿಲ್ಲ. ಇದೇ ಮೊದಲ ಬಾರಿಗೆ ಇದಕ್ಕೆ ಮೊರೆ ಹೋಗಿದ್ದಾರೆ.
eesanje/url_46_38_6.txt ADDED
@@ -0,0 +1,18 @@
 
 
 
 
 
 
 
 
 
 
 
 
 
 
 
 
 
 
 
1
+ ಮುಡಾ ಪ್ರಕರಣಕ್ಕೆ ಹೊಸ ಟ್ವಿಸ್ಟ್..?
2
+ ಬೆಂಗಳೂರು,ಆ.21– ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದ ಸೃಷ್ಟಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಈಗ ಮತ್ತೊಂದು ಹೊಸ ತಿರುವು ಪಡೆದುಕೊಂಡಿದೆ.
3
+ ಈಗಾಗಲೇ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆ(ಪ್ರಾಸಿಕ್ಯೂಷನ್‌) ನಡೆಸಲು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅನುಮತಿ ನೀಡಿರುವ ಬೆನ್ನಲ್ಲೇ ತಮಗೆ ಇಂತಹ ಕಡೆಗೆ ನಿವೇಶನ ನೀಡುವಂತೆ ಪಾರ್ವತಿ ಸಿದ್ದರಾಮಯ್ಯ ಮುಡಾ ಅಧಿಕಾರಿಗಳಿಗೆ ಪತ್ರ ಬರೆದಿರು ವುದು ಬೆಳಕಿಗೆ ಬಂದಿದೆ.
4
+ ವಿಶೇಷವೆಂದರೆ ಸಿದ್ದರಾಮಯ್ಯನವರು ಈ ಪ್ರಕರಣವನ್ನು ಬಲವಾಗಿ ಸಮರ್ಥಿಸಿಕೊಂಡು ನಾನಾಗಲಿ, ನನ್ನ ಧರ್ಮಪತ್ನಿಯಾಗಲಿ ಇಂತಹ ಕಡೆಯೇ ನಿವೇಶನ ನೀಡಬೇಕೆಂದು ಪತ್ರ ಬರೆದಿದ್ದೇವೆಯೇ? ಎಂಬ ಪ್ರಶ್ನೆಯನ್ನು ಮುಂದಿಟ್ಟಿದ್ದರು.
5
+ ಪತ್ರಿಕಾಗೋಷ್ಟಿ ಸೇರಿದಂತೆ ಅನೇಕ ಸಂದರ್ಭಗಳಲ್ಲಿ ನಾನಾಗಲಿ, ನನ್ನ ಕುಟುಂಬದ ಯಾವುದೇ ಸದಸ್ಯರು ನಿರ್ಧಿಷ್ಟ ಸ್ಥಳದಲ್ಲೇ ನಿವೇಶನ ಬೇಕೆಂದು ಪತ್ರ ಬರೆದಿಲ್ಲ. ಅವರು ಕೊಟ್ಟ ಕಡೆ ಕಾನೂನುಬದ್ಧವಾಗಿ ನಿವೇಶನ ಪಡೆದುಕೊಂಡಿದ್ದೇವೆ ಎಂದು ಸಮರ್ಥಿಸಿಕೊಂಡರು.
6
+ ಇದೀಗ ದಾಖಲೆಗಳ ಪ್ರಕಾರ ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರು ಮೈಸೂರಿನ ವಿಜಯನಗರದ ಎರಡು ಮತ್ತು ಮೂರನೇ ಹಂತದಲ್ಲಿ ತಮ ಭೂಮಿಗೆ 50:50ರ ಅನುಪಾತದಲ್ಲಿ ಪರ್ಯಾಯ ನಿವೇಶನ ನೀಡಬೇಕೆಂದು ಅಂದಿನ ಮುಡಾ ಆಯುಕ್ತರಿಗೆ ಪತ್ರ ಬರೆದಿರುವುದು ಬೆಳಕಿಗೆ ಬಂದಿದೆ.
7
+ ಪಾರ್ವತಿಯವರು ಖುದ್ದು ಪತ್ರ ಬರೆದು ಅದರಲ್ಲಿ ಸಹಿ ಹಾಕಿ ನಮಗೆ ಮೈಸೂರಿನ ವಿಜಯನಗರ ಮತ್ತು 2ನೇ ಮತ್ತು 3ನೇ ಹಂತದಲ್ಲಿ ನಿವೇಶನ ನೀಡಬೇಕೆಂದು ಕೋರಿ ಪತ್ರ ಬರೆದಿದ್ದು ಬಹಿರಂಗಗೊಂಡಿದೆ.ಮತ್ತೊಂದು ವಿಶೇಷವೆಂದರೆ ಈ ಪ್ರಕರಣ ಹೊರಬರುತ್ತಿದ್ದಂತೆ ಮುಡಾ ಅಧಿಕಾರಿಗಳು ನಡೆಸಿರುವ ಕರಾಮತ್ತು ಕೂಡ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿವೆ.
8
+ ಏಕೆಂದರೆ ನಿರ್ಧಿಷ್ಟ ಸ್ಥಳದಲ್ಲಿ ನಿವೇಶನ ನೀಡಬೇಕೆಂದು ಕೋರಿದ್ದ ಪತ್ರಕ್ಕೆ ಮುಡಾ ಅಧಿಕಾರಿಗಳು ವೈಟ್ನರ್‌ ಹಾಕಿ ಮುಚ್ಚುಹಾಕುವ ಪ್ರಯತ್ನ ನಡೆಸಿದ್ದಾರೆ ಎಂಬ ಶಂಕೆ ಕಾಡುತ್ತಿದೆ.
9
+ ಪ್ರಕರಣ ಹೊರಬರುತ್ತಿದ್ದಂತೆ ಅಧಿಕಾರಿಗಳು ವಿಜಯನಗರದ 2 ಮತ್ತು 3ನೇ ಹಂತದಲ್ಲಿ ನಿವೇಶನ ನೀಡಬೇಕೆಂಬ ಜಾಗಕ್ಕೆ ವೈಟ್ನರ್‌ ಹಾಕಿದ್ದಾರೆ. ಇದು ಸಹಜವಾಗಿ ಅನುಮಾನಗಳನ್ನು ಹುಟ್ಟುಹಾಕಿದೆ.
10
+ ಪ್ರಾಧಿಕಾರ ಬಡಾವಣೆ ನಿರ್ಮಿಸಿ ನಿವೇಶನ ಹಂಚಿದ ಮೇಲೆ ಆ ಜಮೀನನ್ನು ಸಿಎಂ ಪತ್ನಿಯ ಸಹೋದರ ಖರೀದಿಸಿದ್ದರೇ ಎಂಬ ಪ್ರಶ್ನೆಗೂ ಕಾರಣವಾಗಿದೆ. ಸಿಎಂ ಪತ್ನಿ ಪ್ರಾಽ ಕಾರಕ್ಕೆ ಬರೆದ ಪತ್ರದಲ್ಲಿ ಅದರ ಸ್ಪಷ್ಟ ಉಲ್ಲೇಖ.
11
+ ಪತ್ರದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಽ ಕಾರ 2001ರಲ್ಲೇ ದೇವನೂರು ಮೂರನೇ ಹಂತದ ಬಡಾವಣೆ ನಿರ್ಮಾಣ ಮಾಡಿ ನಿವೇಶನ ಹಂಚಿದೆ ಎಂದು ಪತ್ರದಲ್ಲಿ ನಮೂದಾಗಿದೆ. ಕೆಸರೆ ಗ್ರಾಮದ ಜಮೀನನ್ನು ದೇವನೂರು ಮೂರನೇ ಹಂತದ ಬಡಾವಣೆ ನಿರ್ಮಾಣಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸ್ವಾಽೕನ ಪಡಿಸಿಕೊಂಡಿತ್ತು.
12
+ ಆದರೆ ಈ ಜಮೀನನ್ನು ಸಿಎಂ ಪತ್ನಿ ಸಹೋದರ ಖರೀದಿ ಮಾಡಿರುವುದು 2004ರಲ್ಲಿ. ಹಾಗಾದರೆ ಸ್ವಾಽೕನ ಪಡಿಸಿಕೊಂಡು ನಿವೇಶನ ಹಂಚಿದ ಜಾಗವನ್ನು ಸಿಎಂ ಸಹೋದರ ಹೇಗೆ ಖರೀದಿ ಮಾಡಿದರು ಎಂಬ ಪ್ರಶ್ನೆಯೂ ಉದ್ಭವಿಸಿದೆ.
13
+ ನೋಂಣಿ ಸಂಖ್ಯೆಯಲ್ಲಿ ವ್ಯತ್ಯಾಸ:ಮುಡಾದಿಂದ ಮಂಜೂರಾದ ನಿವೇಶನಗಳ ಸಂಖ್ಯೆಗೂ, ಮುಡಾ ಅಽ ಕಾರಿಗಳು ಸರಕಾರಕ್ಕೆ ನೀಡಿರುವ ನಿವೇಶನಗಳ ನೋಂದಣಿ ಸಂಖ್ಯೆಯಲ್ಲಿ ಭಾರಿ ವ್ಯತ್ಯಾಸ ಇರುವುದು ಕಂಡುಬಂದಿದೆ.
14
+ ನಾಲ್ಕು ವರ್ಷದಲ್ಲಿ 4,829 ನಿವೇಶನ ಮಂಜೂರಿ ಪತ್ರ ನೀಡಲಾಗಿದೆ. 2021ರ ಏಪ್ರಿಲ್‌ನಿಂದ 2024ರ ಜುಲೈ 3ರವರೆಗೆ ಮುಡಾದಲ್ಲಿ ಮಂಜೂರಾತಿ ಪತ್ರ ನೀಡಲು ಬಳಕೆ ಆಗಿರುವ ಸೆಕ್ಯೂರಿಟಿ ಬಾಂಡ್‌ ಶೀಟ್‌ ದಾಖಲೆಯು ಲಭ್ಯ ವಾಗಿದೆ. ಕೇವಲ 54 ದಿನಗಳಲ್ಲಿ ಅಂದರೆ, 2024ರ ಮೇ 9ರಿಂದ ಜುಲೈ 3ರವರೆಗೆ 1,200 ಮಂಜೂರಾತಿ ಪತ್ರ ಬಳಕೆ ಮಾಡಿಕೊಳ್ಳಲಾಗಿದೆ.
15
+ ಮುಡಾದಲ್ಲಿ ಬಾರ್‌ಕೋಡ್‌ ಇರುವ ವಿಶಿಷ್ಟ ಬಾಂಡ್‌ ಶೀಟ್‌ ಬಳಸಿ ಅಽ ಕೃತವಾಗಿ ಮಂಜೂರಾತಿ ಪತ್ರ ನೀಡಲಾಗುತ್ತದೆ. ಸೀಮಿತ ಸಂಖ್ಯೆಯಲ್ಲಿ ಪತ್ರಗಳನ್ನು ಮುದ್ರಿಸಿದ ಬಳಿಕ ಅವುಗಳನ್ನು ಎಂಜಿನಿಯರ್‌ ದರ್ಜೆಯ ಅಽ ಕಾರಿಯ ವಶಕ್ಕೆ ನೀಡಲಾಗುತ್ತದೆ. ಯಾರೇ ಅಂತಹ ಪತ್ರಗಳನ್ನು ಬಳಸಿದರೂ ರಿಜಿಸ್ಟರ್‌ನಲ್ಲಿ ಪ್ರತಿ ಪತ್ರದ ವಿವರ ನಮೂದಿಸಬೇಕು. ಅದರಲ್ಲಿ ನಿವೇಶನ ಮಂಜೂರಾತಿ ಆದೇಶವನ್ನು ಮುದ್ರಿಸಿದ ಬಳಿಕ, ಯಾರಿಗೆ ಯಾವ ನಿವೇಶನ ಮಂಜೂರು ಮಾಡಲಾಗಿದೆ ಎಂಬ ಮಾಹಿತಿ ನೀಡಬೇಕು. ಆದರೆ, ಸಾಕಷ್ಟು ಪ್ರಕರಣಗಳಲ್ಲಿ ಮಾಹಿತಿಯನ್ನು ಅಧಿಕಾರಿಗಳು ದುರ್ಬಳಕೆ ಮಾಡಿಕೊಂಡಿದ್ದಾರೆ.
16
+ ನಿಯಮಗಳ ಪ್ರಕಾರ, ಮುಡಾ ಆಯುಕ್ತರಿಗೆ ಮಾತ್ರ ಈ ಪತ್ರ ಬಳಸುವ, ಇಲ್ಲವೇ ಬಳಕೆಗೆ ಅನುಮತಿ ನೀಡುವ ಅಧಿಕಾರವಿದೆ. ಆಯುಕ್ತರ ಒಪ್ಪಿಗೆ ಪಡೆದು ಕಾರ್ಯದರ್ಶಿಗಳು ಇದನ್ನು ಬಳಸಬಹುದು. ಹಾಳೆ ಹರಿದರೂ ಅದನ್ನು ಸಂಬಂಧಿಸಿದ ವಿಭಾಗಕ್ಕೆ ಹಿಂದಿರುಗಿಸಿ ರಿಜಿಸ್ಟರ್‌ನಲ್ಲಿ ನಮೂದಿಸಬೇಕು. ಆದರೆ ನಿಯಮ ಮೀರಿ ಸಿಬ್ಬಂದಿಗೂ ಪತ್ರ ದೊರೆತು ದುರ್ಬಳಕೆಯಾಗಿದೆ ಎನ್ನುತ್ತಾರೆ ಮುಡಾ ಅಧಿಕಾರಿಯೊಬ್ಬರು.
17
+ ಇಂತಹ ಪತ್ರಗಳನ್ನು ಬಳಸಿ ಅನಧಿಕೃತವಾಗಿ ನಿವೇಶನಗಳನ್ನು ಅನ್ಯರ ಹೆಸರಿಗೆ ನೋಂದಣಿ ಮಾಡಿಕೊಟ್ಟಿರುವ ಸಾಧ್ಯತೆ ಹೆಚ್ಚಿದೆ. ಸಾವಿರಾರು ಸಂಖ್ಯೆಯಲ್ಲಿ ಪತ್ರಗಳ ಬಳಕೆ ಆಗಿದ್ದು, ಭಾರಿ ಪ್ರಮಾಣದ ಅಕ್ರಮ ನಡೆದಿದೆ. ಹೀಗಾಗಿ ಇಡೀ ಪ್ರಕರಣವನ್ನು ಸಮಗ್ರ ತನಿಖೆಗೆ ಒಳಪಡಿಸಬೇಕು. ಈ ಹಿಂದಿನ ಆಯುಕ್ತರು, ಕಾರ್ಯದರ್ಶಿ, ವಿಶೇಷ ತಹಸೀಲ್ದಾರ್‌, ಆಯುಕ್ತರ ಆಪ್ತ ಸಹಾಯಕರನ್ನು ವಿಚಾರಣೆಗೆ ಒಳಪಡಿಸಬೇಕು ಎನ್ನುವ ಆಗ್ರಹ ಕೇಳಿಬಂದಿದೆ.
18
+ ಏನಿದು ಬಾಂಡ್‌ ಶೀಟ್?:ಮುಡಾದಲ್ಲಿ ಈ ಹಿಂದೆ ಅಧಿಕಾರಿಗಳ ಪತ್ರ, ಸಹಿ ನಕಲು ಮಾಡಿ ನಿವೇಶನಗಳ ಅಕ್ರ��� ದಾಖಲೆ ಸೃಷ್ಟಿಸಿ ನೋಂದಣಿ ಮಾಡಿಸುತ್ತಿದ್ದ ಜಾಲ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ 2007ರಲ್ಲಿ ಮುಡಾದಲ್ಲಿ ವಿಶೇಷ ವಿನ್ಯಾಸದ ಸೆಕ್ಯುರಿಟಿ ಬಾಂಡ್‌ ಶೀಟ್‌ ರೂಪದ ಮಂಜೂರಾತಿ ಪತ್ರಗಳ ಬಳಕೆ ಆರಂಭವಾಯಿತು. ವಿಶ್ವವಿದ್ಯಾಲಯಗಳ ಅಂಕಪಟ್ಟಿಗಳ ರೀತಿ ಇದನ್ನು ವಿನ್ಯಾಸಗೊಳಿಸಲಾಗಿದ್ದು, ನಕಲು ಮಾಡಲು ಆಗದು. ಪ್ರತಿ ಪತ್ರಕ್ಕೂ ಬಾರ್‌ ಕೋಡ್‌ ಆಧರಿತ ವಿಶಿಷ್ಟ ಸಂಖ್ಯೆ ಇದ್ದು, ಸ್ಕ್ಯಾನ್‌ ಮಾಡಿದಲ್ಲಿ ಅದರ ಆಸಲಿಯತ್ತು ಪತ್ತೆ ಮಾಡಬಹುದಾಗಿದೆ.
eesanje/url_46_38_7.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಡತದಲ್ಲಿರುವುದು ನನ್ನ ಹಸ್ತಾಕ್ಷರವಲ್ಲ : ಹೆಚ್ಡಿಕೆ
2
+ ಬೆಂಗಳೂರು,ಆ.21-ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿರುವ ಆದೇಶ ನನ್ನ ಸ್ವಹಸ್ತಾಕ್ಷರವಲ್ಲ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು.
3
+ ಜೆಪಿಭವನದಲ್ಲಿ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಯಾಗಿದ್ದಾಗ ನನ್ನ ಬಳಿ ಆ ಕಂಪನಿಯ ಕಡತ ಬಂದಿ ದೆಯೇ ಎಂಬುದು ಸಾಬೀತಾಗಬೇಕು. ಆ ಕಂಪನಿ ವಂಚಕ ಕಂಪನಿ ಎಂಬ ಆರೋಪವಿದೆ ಎಂದರು.
4
+ ಆಡಳಿತ ವ್ಯವಸ್ಥೆಯಲ್ಲಿ ಕೆಳಹಂತದಿಂದ ಅಧಿಕಾರಿಗಳು ಕಡತ ತಯಾರಿಸಿ ಸಿದ್ದಪಡಿಸುತ್ತಾರೆ. ಮುಖ್ಯಮಂತ್ರಿ ಮುಂದೆ ನೂರಾರು ಕಡತ ಬರುತ್ತವೆ. ಇದು ಬಂದಿತ್ತೇ ಇಲ್ಲವೇ ಎಂಬುದು ಸಾಬೀತಾಗಬೇಕು ಕಡತದಲ್ಲಿರುವುದು ನನ್ನ ಸ್ವಹಸ್ತಾಕ್ಷರದಲ್ಲ. ಎಫ್‌ಎಸ್‌‍ಎಲ್‌ ತನಿಖೆ ಬೇಕಾದರೂ ನಡೆಯಲಿ ಎಂದು ಹೇಳಿದರು.
5
+ ಕಳೆದ ವರ್ಷ ಮೇನಲ್ಲಿ ಸರ್ಕಾರ ರಚನೆಯಾದರೂ ಕಳೆದ ನವೆಂಬರ್‌ನಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯ ಪಾಲರ ಅನುಮತಿ ಕೋರಲಾಗಿದೆ. ಎರಡು ತಿಂಗಳ ಹಿಂದಷ್ಟೇ ಕೇಂದ್ರ ಸಚಿವನಾಗಿದ್ದೇನೆ ಎಂದರು. ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲು ಹೇಳಿತ್ತು. 2017ರಲ್ಲಿ ವಿಶೇಷ ತನಿಖಾ ತಂಡಕ್ಕೆ ತನಿಖೆ ನಡೆಸಿ ವರದಿ ಸಲ್ಲಿಸಲು ಹೇಳಲಾಗಿತ್ತು. ಇದುವರೆಗೂ ತನಿಖೆಯ ಪೂರ್ಣ ವರದಿಯನ್ನು ಎಸ್‌‍ಐಟಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಿಲ್ಲ. ಸುಪ್ರೀಂಕೋರ್ಟ್‌ ರಾಜ್ಯಪಾಲರ ಅನುಮತಿ ಕೋರಿ ಎಂದು ಹೇಳಿಲ್ಲ. ತನಿಖೆಗೆ ಅನುಮತಿಯನ್ನೇ ನೀಡಿತ್ತು ಎಂದರು.
6
+ ಕಾನೂನು ಹೋರಾಟ:ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿಯನ್ನು ಎಸ್‌‍ಐಟಿ ಕೋರಿದೆ. ಈ ಹಿನ್ನಲೆಯಲ್ಲಿ ಸಾಯಿ ವೆಂಕಟೇಶ್ವರ ಮಿನರಲ್‌್ಸಗೆ ಸಂಬಂಧಿಸಿದ ಆರೋಪದ ಬಗ್ಗೆ ಸಾಧ್ಯವಿರುವ ಕಾನೂನು ಹೋರಾಟವನ್ನು ನಡೆಸು ವುದು ಅನಿವಾರ್ಯವಾಗಿದೆ ಎಂದು ಹೇಳಿದರು.
7
+ 2006ರಲ್ಲಿ ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಸರ್ಕಾರಕ್ಕೆ ಬೆಂಬಲ ನೀಡಿದ ಪಕ್ಷದ ಶಾಸಕರೊಬ್ಬರಿಂದ ಗಣಿ ಮಾಲೀಕರಿಂದ 150 ಕೋಟಿ ರೂ. ಪಡೆದ ಆರೋಪ ಮಾಡಲಾಗಿತ್ತು. ಅದರ ಬಗ್ಗೆ ನ್ಯಾಯಾಂಗ ತನಿಖೆಗೆ ಯಾರೂ ಅರ್ಜಿ ಸಲ್ಲಿಸಿರಲಿಲ್ಲ. ಅಕ್ರಮ ಗಣಿಗಾರಿಕೆ ಬಗ್ಗೆ ಲೋಕಾಯುಕ್ತ ತನಿಖೆಗೆ ವಹಿಸಲಾಗಿತ್ತು. ಆ ತನಿಖಾ ವರದಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಸ್‌‍.ಎಂ.ಕೃಷ್ಣ, ಧರ್ಮಸಿಂಗ್‌ ಹೆಸರು ಪ್ರಸ್ತಾಪವಾಗಿ ಯಾವುದೇ ರೀತಿಯ ಕ್ರಮಕ್ಕೆ ಶಿಫಾರಸ್ಸು ಮಾಡದೆ ಅಂದಿನ ಸರ್ಕಾರಕ್ಕೆ ಬಿಡಲಾಗಿತ್ತು ಎಂದರು.
8
+ ಜಂತ್ಕಲ್‌ ಕಂಪನಿ ಕಂಪನಿಗೆ ಸಂಬಂಧಿಸಿದ ನನ್ನ ಮೇಲಿನ ಆರೋಪ ಪ್ರಕರಣವನ್ನು ಹೈಕೋರ್ಟ್‌ ರದ್ದು ಮಾಡಿ ಸಾಯಿ ವೆಂಕಟೇಶ್ವರ ಕಂಪನಿಗೆ ಸಂಬಂಧಿಸಿದ ಪ್ರಕರಣವನ್ನು ಮುಂದುವರೆಸ��ು ಆದೇಶ ನೀಡಿತ್ತು. ಎಸ್‌‍.ಎಂ.ಕೃಷ್ಣ ಅವರಿಗೆ ಸುಪ್ರೀಂಕೋರ್ಟ್‌ ರಿಲೀಫ್‌ ಕೊಟ್ಟಿದೆ.
9
+ 2014ರಲ್ಲಿ ಸಾಯಿ ವೆಂಕಟೇಶ್ವರ ಪ್ರಕರಣಕ್ಕೆ ಸುಪ್ರೀಂಕೋರ್ಟ್‌ನ ಮೊರೆ ಹೋಗಿದ್ದೆ. ಆಗ ರಾಜ್ಯ ಸರ್ಕಾರ ಎಸ್‌‍ಐಟಿ ತನಿಖೆಗೆ ಅವಕಾಶವನ್ನು ಸುಪ್ರೀಂಕೋರ್ಟ್‌ನಲ್ಲಿ ಕೋರಿತ್ತು. 2017ರಲ್ಲಿ ಎಸ್‌‍ಐಟಿ ರಚನೆಯಾಗಿ ನನಗೆ ನೋಟಿಸ್‌‍ ನೀಡಿ ಹೇಳಿಕೆಯನ್ನು ದಾಖಲಿಸಿಕೊಂಡರು.
10
+ ಸುಪ್ರೀಂಕೋರ್ಟ್‌ ಮೂರು ತಿಂಗಳಲ್ಲಿ ತನಿಖೆ ನಡೆಸಿ ವರದಿ ನೀಡಲು ನಿರ್ದೇಶನ ನೀಡಿತ್ತು ಎಂದು ಹೇಳಿದರು. ವಿಪರ್ಯಾಸವೆಂದರೆ 2018ರಲ್ಲಿ ಕಾಂಗ್ರೆಸ್‌‍ನವರೇ ನಮ ಜೊತೆಗೂಡಿ ಸರ್ಕಾರ ನಡೆಸಬೇಕಾಯಿತು ಎಂದರು. ಅಧಿಕಾರಿಯೊಬ್ಬರು ತಮ ಮಗನ ಖಾತೆಗೆ 20 ಲಕ್ಷ ರೂ. ಪಡೆದುಕೊಂಡಿದ್ದರು. ಅದನ್ನು ಬೆಳಕಿಗೆ ತಂದಿದ್ದು ನಾನೇ ಎಂದು ಹೇಳಿದರು.
eesanje/url_46_38_8.txt ADDED
@@ -0,0 +1,8 @@
 
 
 
 
 
 
 
 
 
1
+ ನವಿಲೆ ಬಳಿ ಸಮತೋಲಿತ ಜಲಾಶಯ ನಿರ್ಮಾಣ : ಡಿಕೆಶಿ
2
+ ಕೊಪ್ಪಳ,ಆ.21– ತುಂಗಭದ್ರಾ ಅಣೆಕಟ್ಟಿಗೆ ಪರ್ಯಾಯವಾಗಿ ನೀರು ಸಂಗ್ರಹಿಸಲು ನವಿಲೆ ಬಳಿ ಸಮತೋಲಿತ ಜಲಾಶಯ ನಿರ್ಮಿಸಲು ಚರ್ಚೆ ನಡೆಸುವುದಾಗಿ ಜಲಸಂಪನೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭರವಸೆ ನೀಡಿದ್ದಾರೆ.
3
+ ಗಿಣಿಗೇರ ಏರ್‌ಸ್ಟ್ರಿಪ್ಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಅಣೆಕಟ್ಟು ದುರಸ್ತಿ ಕಾರ್ಯದಲ್ಲಿ ಯಾರೂ ವಿಶ್ರಾಂತಿ ಪಡೆಯದೆ ಸಂಘಟನಾತಕವಾಗಿ ಕೆಲಸ ಮಾಡಿದ್ದಾರೆ. ಸಿಬ್ಬಂದಿಗಳು, ಸಚಿವರಾದಿಯಾಗಿ ಎಲ್ಲರೂ ಶ್ರಮಿಸಿದ್ದರಿಂದ ನಾಲ್ಕು ದಿನಗಳಲ್ಲಿ ಗೇಟ್‌ ಅಳವಡಿಕೆ ಯಶಸ್ವಿಯಾಗಿದೆ. ಅದೃಷ್ಟವಶಾತ್‌ ನಮ ಬಳಿಯೇ ಗೇಟ್‌ನ ವಿನ್ಯಾಸ ಇತ್ತು. ಖಾಸಗಿ ಕಂಪನಿಗಳು ಕಾಲಮಿತಿಯಲ್ಲಿ ಗೇಟ್‌ ಮಾಡಿಕೊಟ್ಟವು ಎಂದು ಹೇಳಿದರು.
4
+ ಕೇಂದ್ರ ಸರ್ಕಾರ ಸೇರಿದಂತೆ ಹಲವರ ಸಹಕಾರದೊಂದಿಗೆ ಕಾರ್ಯಾಚರಣೆ ಯಶಸ್ವಿಯಾಗಿದೆ. ಈಗ ಜಲಾಶಯದಲ್ಲಿ ನೀರು ತುಂಬುತ್ತಿದೆ. ಇಂದು ವಿಮಾನದಲ್ಲಿ ಬರುವಾಗ ವೀಕ್ಷಣೆ ನಡೆಸಿದ್ದೇವೆ. ಜಲಾಶಯದಲ್ಲಿ ನೀರು ಹೆಚ್ಚಾಗಿದೆ. ಶೀಘ್ರವೇ ಭರ್ತಿಯಾಗಲಿದೆ ಎಂದರು.
5
+ ಮುಖ್ಯಮಂತ್ರಿ ಜೊತೆಗೂಡಿ ಶೀಘ್ರವೇ ಬಂದು ಬಾಗಿನ ಅರ್ಪಿಸುತ್ತೇವೆ. ತುರ್ತು ಕಾರ್ಯಾಚರಣೆಯಿಂದ ರೈತರನ್ನು ಉಳಿಸಲಾಗಿದೆ. ಬಿಜೆಪಿಯ, ವಿರೋಧಪಕ್ಷಗಳ ಟೀಕೆಗಳು ನಶಿಸಿವೆ. ನಮ ಕೆಲಸಗಳು ಉಳಿದಿವೆ ಎಂದು ಹೇಳಿದರು.
6
+ ಜಲಾಶಯದಲ್ಲಿ ಹೂಳು ತುಂಬಿದೆ. ಹೀಗಾಗಿ ಪರ್ಯಾಯವಾಗಿ ನವಿಲೆ ಬಳಿ ಸಮತೋಲಿತ ಅಣೆಕಟ್ಟು ನಿರ್ಮಿಸಲು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಶೀಘ್ರವೇ ಈ ನಿಟ್ಟಿನಲ್ಲಿ ಪ್ರವಾಸ ಕೈಗೊಂಡು ಅಣೆಕಟ್ಟು ನಿರ್ಮಾಣದ ಚರ್ಚೆಯನ್ನು ಮುಂದುವರೆಸುತ್ತೇವೆ ಎಂದರು.
7
+ ಪ್ರತಿವರ್ಷ ಒಂದು ಟಿಎಂಸಿ ನೀರು ತಗ್ಗುವಷ್ಟು ಹೂಳು ತುಂಬುತ್ತದೆ ಎಂದು ಎಂ.ಬಿ.ಪಾಟೀಲ್‌ ಅವರು ಸಚಿವರಾಗಿದ್ದಾಗಲೇ ವರದಿ ಇತ್ತು. ಈ ಹಿನ್ನೆಲೆಯಲ್ಲಿ ಪರ್ಯಾಯ ಅಣೆಕಟ್ಟಿನ ಬಗ್ಗೆ ಚರ್ಚೆಗಳು ನಡೆದಿವೆ ಎಂದರು.ರಾಜ್ಯದ ಅಣೆಕಟ್ಟೆಗಳ ಸುರಕ್ಷತೆಗೆ ತಜ್ಞರ ಸಮಿತಿಯನ್ನು ರಚಿಸಲಾಗಿದ್ದು, ಅದು ಈಗಾಗಲೇ ರಾಜ್ಯಾದ್ಯಂತ ಪ್ರವಾಸ ನಡೆಸುತ್ತಿದ್ದು, ವರದಿ ನೀಡಿದ ಬಳಿಕ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
8
+ ಇದೇ ವೇಳೆ ಸಚಿವ ಎಂ.ಬಿ.ಪಾಟೀಲ್‌ ಮಾತನಾಡಿ, ಅಣೆಕಟ್ಟಿನಲ್ಲಿ ಅರ್ಧ ಟಿಎಂಸಿ ನೀರನ್ನು ತಗ್ಗಿಸುವಷ್ಟು ಹೂಳು ಪ್ರತಿವರ್ಷ ತುಂಬುತ್ತದೆ. ತುಂಗಭದ್ರಾ ನಿರ್ಮಿಸಿ 75 ವರ್ಷ ಕಳೆದಿವೆ. 35 ಟಿಎಂಸಿ ನೀರು ನಿಲ್ಲುವಷ್ಟು ಜಾಗದಲ್ಲಿ ಹೂಳು ತುಂಬಿದೆ. ನಮ ಸರ್ಕಾರ ಈ ಬಗ್ಗೆ ಗಮನ ಹರಿಸಿ ಹೆಚ್ಚು ನೀರು ನಿಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
eesanje/url_46_38_9.txt ADDED
@@ -0,0 +1,8 @@
 
 
 
 
 
 
 
 
 
1
+ ಲ್ಯಾಟರಲ್‌ ಎಂಟ್ರಿ ಶಿಫಾರಸು ಸಮರ್ಪಕ ಜಾರಿಯಾಗುತ್ತಿಲ್ಲ : ವೀರಪ್ಪ ಮೊಯ್ಲಿ
2
+ ನವದೆಹಲಿ,ಆ.21– ನನ್ನ ನೇತತ್ವದ ಎರಡನೇ ಆಡಳಿತ ಸುಧಾರಣಾ ಆಯೋಗವು (ಎಆರ್‌ಸಿ) ಸರಕಾರಿ ಸೇವೆಗಳಿಗೆ ಲ್ಯಾಟರಲ್ ಎಂಟ್ರಿಗೆ ಶಿಫಾರಸು ಮಾಡಿತ್ತು ಎಂದು ಮಾಜಿ ಕೇಂದ್ರ ಕಾನೂನು ಸಚಿವ ಎಂ.ವೀರಪ್ಪ ಮೊಯ್ಲಿ ಒಪ್ಪಿಕೊಂಡಿದ್ದಾರೆ, ಆದರೆ ಪ್ರಸ್ತುತ ಎನ್‌ಡಿಎ ಸರ್ಕಾರ ನಮ ಮಾರ್ಗಸೂಚಿಯನ್ನು ಅನುಸರಿಸುತ್ತಿಲ್ಲ ಎಂದು ಅವರು ಹೇಳಿದ್ದಾರೆ.
3
+ ಪಕ್ಷಾತೀತ ಮತ್ತು ನಿಷ್ಪಕ್ಷಪಾತವಾಗಿ ಪರಿಣಿತ ಜನರನ್ನು ಉನ್ನತ ಸರ್ಕಾರಿ ಹ್ದುೆಗಳಿಗೆ ನೇಮಕ ಮಾಡಲು ಸರಿಯಾದ ಚೌಕಟ್ಟನ್ನು ಹಾಕುವುದು ಇದರ ಉದ್ದೇಶವಾಗಿದೆ ಎಂದು ಅವರು ಮಾಧ್ಯಮಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ.
4
+ ಎಆರ್‌ಸಿ 15 ವರದಿಗಳನ್ನು ಸಿದ್ಧಪಡಿಸಿತ್ತು. ಲ್ಯಾಟರಲ್‌ ಎಂಟ್ರಿ ವರದಿಗಳಲ್ಲಿ ಒಂದಾಗಿತ್ತು, ಇದನ್ನು ರಿಫರ್ಬಿಶಿಂಗ್‌ ಪರ್ಸನಲ್‌ ಅಡಿನಿಸ್ಟ್ರೇಷನ್‌ ಎಂದು ಕರೆಯಲಾಯಿತು. ವರದಿಯು ಅಧಿಕಾರಶಾಹಿಯಲ್ಲಿ ಪಾರ್ಶ್ವ ಪ್ರವೇಶಕ್ಕೆ ಬಾಹ್ಯರೇಖೆಗಳು ಮತ್ತು ವಿಧಾನಗಳನ್ನು ಸೂಚಿಸಿದೆ. ಇದು ಹೊಸ ವಿಷಯವಲ್ಲ ಎಂದು ಅವರು ತಿಳಿಸಿದ್ದಾರೆ.
5
+ ಡಾ ಮನಮೋಹನ್‌ ಸಿಂಗ್‌ ಮತ್ತು ಮಾಂಟೆಕ್‌ ಸಿಂಗ್‌ ಅಹ್ಲುವಾಲಿಯಾ ಅವರಂತಹ ವ್ಯಕ್ತಿಗಳು ಲ್ಯಾಟರಲ್‌ ಎಂಟ್ರಿ ಮೂಲಕ ವ್ಯವಸ್ಥೆಗೆ ಬಂದರು. ಇನ್ನೂ ಅನೇಕ ಯಶಸ್ಸಿನ ಕಥೆಗಳೂ ಇವೆ. ಯಾವುದೇ ವ್ಯವಸ್ಥಿತ ವಿಧಾನವಿಲ್ಲದಿದ್ದರೂ, ಅದನ್ನು ಅರ್ಹತೆಯ ಮೇಲೆ ಮಾಡಲಾಗಿದೆ ಮತ್ತು ಫಲಿತಾಂಶಗಳು ಲಾಭದಾಯಕವಾಗಿವೆ.
6
+ ಆದಾಗ್ಯೂ, ಪ್ರಕ್ರಿಯೆಯನ್ನು ದಾಖಲೆಯಲ್ಲಿ ಹಾಕುವ ಅಗತ್ಯವಿತ್ತು. ಅದನ್ನು ಅಧ್ಯಯನ ಮಾಡುವ ಮತ್ತು ಲ್ಯಾಟರಲ್‌ ಎಂಟ್ರಿಗಾಗಿ ವ್ಯವಸ್ಥೆಯನ್ನು ವಿಕಸನಗೊಳಿಸುವ ಅವಶ್ಯಕತೆಯಿದೆ ಎಂದು ನಾವು ಭಾವಿಸಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.
7
+ ಇಂತಹ ಏಕೀಕರಣವನ್ನು ಹೆಚ್ಚುವರಿ ಕಾರ್ಯದರ್ಶಿ ಮಟ್ಟದಲ್ಲಿ ಮಾಡಬೇಕು ಎಂದು ಆಡಳಿತ ಸುಧಾರಣಾ ಆಯೋಗವು ಯೋಚಿಸಿದೆ, ಏಕೆಂದರೆ ಇದು ಹೊಸ ನೇಮಕಾತಿಗಳನ್ನು ಅಪೇಕ್ಷಿಸಲು ಮತ್ತು ಕಾರ್ಯದರ್ಶಿ ಶ್ರೇಣಿಯನ್ನು ತಲುಪಲು ಅನುಕೂಲವಾಗುತ್ತದೆ.
8
+ ಯುಎಸ್‌‍, ಆಸ್ಟ್ರೇಲಿಯಾ, ಬ್ರಿಟನ್ ಮತ್ತು ಇತರ ದೇಶಗಳಲ್ಲಿ ಅಸ್ತಿತ್ವದಲ್ಲಿರುವ ವಿವಿಧ ಮಾದರಿಗಳನ್ನು ಅಧ್ಯಯನ ಮಾಡಿದ ನಂತರ ನಾವು ಇದನ್ನು ಪ್ರಸ್ತಾಪಿಸಿದ್ದೇವೆ. ಭಾರತಕ್ಕೆ ಮಾದರಿಯನ್ನು ತೀರ್ಮಾನಿಸುವ ಮತ್ತು ವಿನ್ಯಾಸಗೊಳಿಸುವ ಮೊದಲು ನಾವು ಎಲ್ಲಾ ಮಾದರಿಗಳನ್ನು ಕೂಲಂಕಷವಾಗಿ ಪರಿಶೀಲಿಸಿದ್ದೇವೆ ಎಂದು ಅವರು ಹೇಳಿದ್ದಾರೆ.
eesanje/url_46_39_1.txt ADDED
@@ -0,0 +1,18 @@
 
 
 
 
 
 
 
 
 
 
 
 
 
 
 
 
 
 
 
1
+ ನನ್ನ ವಿರುದ್ಧ ಕಾಂಗ್ರೆಸ್ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ : ಹೆಚ್ಡಿಕೆ ಆರೋಪ
2
+ ಬೆಂಗಳೂರು,ಆ.21-ರಾಜ್ಯ ಕಾಂಗ್ರೆಸ್ ಸರ್ಕಾರದ ವರ್ಗಾವಣೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ಧ್ವನಿಯೆತ್ತಿದ್ದಕ್ಕಾಗಿ ತಮ್ಮ ವಿರುದ್ಧ ದ್ವೇಷದ ರಾಜಕಾರಣ ಮಾಡಲಾಗುತ್ತಿದ್ದು, ಅಭಿಯೋಜನೆಗೆ ಅನುಮತಿ ಪಡೆದುಕೊಳ್ಳುವ ಪ್ರಯತ್ನಗಳು ನಡೆಯುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ದೂರಿದ್ದಾರೆ.
3
+ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಮುಖ್ಯಮಂತ್ರಿಯಾಗಿದ್ದಾಗ ಆಗ ಬೆಂಬಲ ಕೊಟ್ಟಿದ್ದ ಬಿಜೆಪಿಯ ವಿಧಾನಪರಿಷತ್ ಸದಸ್ಯರೊಬ್ಬರು ತಮ್ಮ ವಿರುದ್ಧ ಗಣಿ ಹಗರಣದ ಆರೋಪ ಮಾಡಿದ್ದರು. ಅದರ ಕುರಿತು ತನಿಖೆ ನಡೆಸಿದ ಲೋಕಾಯುಕ್ತ ಸಂಸ್ಥೆ ಹಲವಾರು ಟ್ರಂಕ್ಗಳಲ್ಲಿ ದಾಖಲೆಗಳನ್ನು ತಂದಿದ್ದನ್ನು ಎಲ್ಲರೂ ಗಮನಿಸಿದ್ದೇವೆ ಎಂದರು.
4
+ ಜಂತಕಲ್ ಮೈನಿಂಗ್ ಮತ್ತು ಸಾಯಿ ವೆಂಕಟೇಶ್ವರ ಸಂಸ್ಥೆಗೆ ಗಣಿ ಪರವಾನಗಿ ನೀಡಿದ್ದು ಮತ್ತು ಒಂದೆರೆಡು ಡಿ ನೋಟಿಫಿಕೇಶನ್ ಪ್ರಕರಣಗಳ ಕುರಿತು ತನಿಖೆಗೆ ತಮ್ಮ ಕಾಲಾವಧಿಯಲ್ಲೇ ಆದೇಶ ಹೊರಡಿಸಲಾಗಿತ್ತು. ಇದ್ಯಾವುದೂ ಕಾಂಗ್ರೆಸ್ ಸರ್ಕಾರದ ಕಾಲದಲ್ಲಾದ ತನಿಖೆಗಳಲ್ಲ ಎಂದರು.
5
+ ಗಣಿ ಪ್ರಕರಣಗಳ ಕುರಿತು ಲೋಕಾಯುಕ್ತರು ನೀಡುವ ಮೂರು ಮಾಜಿ ಮುಖ್ಯಮಂತ್ರಿಗಳ ಹೆಸರುಗಳು ಇವೆ. ಹಳೆ ಪ್ರಕರಣವನ್ನು ಕೆದಕುವುದರ ಹಿಂದೆ ಕಾಂಗ್ರೆಸ್ನ ದ್ವೇಷದ ರಾಜಕಾರಣ ಅಡಗಿದೆ.
6
+ ಸರ್ಕಾರ ರಚನೆಯಾದ ಹೊಸದರಲ್ಲಿ ನಡೆಯುತ್ತಿದ್ದ ವರ್ಗಾವಣೆಯಲ್ಲಿನ ಭ್ರಷ್ಟಾಚಾರದ ವಿರುದ್ಧ ನಾನು ದೊಡ್ಡ ದನಿಯಲ್ಲಿ ಆರೋಪ ಮಾಡಿದ್ದೆ. ಈ ಹಿಂದೆ 2023 ರ ಸೆಪ್ಟೆಂಬರ್ನಲ್ಲಿ ಲೋಕಾಯುಕ್ತ ಎಸ್ಐಟಿ ಅಭಿಯೋಜನೆಗೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. ಈಗ ಮತ್ತೊಮೆ ಮನವಿ ಸಲ್ಲಿಸಲಾಗಿದೆ ಎಂದು ವಿವರಿಸಿದರು.
7
+ ತಮ್ಮ ವಿರುದ್ಧ ಕೇಳಿಬಂದಿದ್ದ 150 ಕೋಟಿ ರೂ.ಗಳ ಹಗರಣ ಹಾಗೂ ಜಂತಕಲ್ ಮೈನಿಂಗ್ಗೆ ಪರವಾನಗಿ ನೀಡಿದ್ದ ಎರಡು ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿದೆ. ಸಾಯಿ ವೆಂಕಟೇಶ್ವರ ಸಂಸ್ಥೆಗೆ ಅನುಮತಿ ನೀಡಿದ್ದ ವಿಚಾರದ ತನಿಖೆಗೆ ಬಾಕಿ ಉಳಿದಿದೆ. 2014 ರಲ್ಲಿ ಇದನ್ನು ಸುಪ್ರೀಂಕೋರ್ಟ್ನಲ್ಲಿ ಮೇಲನವಿ ಸಲ್ಲಿಸಿದೆ.
8
+ ಆಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು. ವಿಶೇಷ ತನಿಖಾ ದಳ ರಚನೆಗೆ ಅವಕಾಶ ನೀಡುವಂತೆ ರಾಜ್ಯಸರ್ಕಾರ ಸುಪ್ರೀಂಕೋರ್ಟ್ಗೆ ಮೇಲನವಿ ಸಲ್ಲಿಸಿದೆ. 2014ರ ಫೆ.3 ರಂದು ಸುಪ್ರೀಂಕೋರ್ಟ್ ತೀರ್ಪು ನೀಡಿ ಎಸ್.ಎಂ.ಕೃಷ್ಣ ಅವರ ಪ್ರಕರಣದ ಜೊತೆ ಈ ಅರ್ಜಿಯನ್ನು ವಿಚಾರಣೆ ನಡೆಸುವಂತೆ ಆದೇಶಿಸಿತ್ತು ಎಂದರು.
9
+ ಇದೇ ಪ್ರಕರಣದಲ್ಲಿ ಎಸ್.ಎಂ.ಕೃಷ್ಣ ಸಲ್ಲಿಸಿದ್ದ ಮೇಲನವಿಯನ್ನು ಪರಿಗಣಿಸಿ ಸುಪ್ರೀಂಕೋರ್ಟ್ ವಿನಾಯಿತಿ ನೀಡಿದೆ. ಧರ್ಮಸಿಂಗ್ ವಿರುದ್ಧವೂ ಕೆಲ ಆರೋಪಗಳಿದ್ದವು ಎಂದು ಹೇಳಿದರು. ನನ್ನನ್ನು ಹೇಗಾದರೂ ಮಾಡಿ ಜೈಲಿಗೆ ಕಳುಹಿಸಬೇಕು ಎಂಬ ಕಾರಣಕ್ಕೆ 2017 ರಲ್ಲಿ ���ಿದ್ದರಾಮಯ್ಯ ಅವರ ಸರ್ಕಾರ ಎಸ್ಐಟಿ ರಚನೆ ಮಾಡಿತ್ತು ಎಂದು ವಿವರಿಸಿದರು.
10
+ ಈ ಪ್ರಕರಣದಲ್ಲಿ ಎಸ್.ಎಂ.ಕೃಷ್ಣ ಅವರಿಗೆ ನೀಡಿದ್ದ ತಡೆಯಾಜ್ಞೆಯೇ ಮುಂದುವರೆದಿದೆ. ಈ ಪ್ರಕರಣದಲ್ಲಿ ತನಿಖೆಗೆ ಎಸ್ಐಟಿ ನನಗೆ ನೋಟೀಸ್ ನೀಡಿತ್ತು. ನಾನು ನೇರವಾಗಿ ಎಸ್ಐಟಿ ಮುಂದೆ ಹಾಜರಾಗಲು ನಿರ್ಧರಿಸಿದ್ದೆ. ಆದರೆ ತಮ ವಕೀಲರ ಸಲಹೆ ಮೇರೆಗೆ ಜಾಮೀನು ಪಡೆದು ಎಸ್ಐಟಿ ಮುಂದೆ ಹಾಜರಾದೆ.
11
+ ಆಗ ಎಸ್ಐಟಿ ಅಧಿಕಾರಿಗಳು ಹೇಳಿದ್ದ ವಿಚಾರ ಎಂದರೆ, ನೀವು ಜಾಮೀನು ಪಡೆಯುವ ಅಗತ್ಯವಿರಲಿಲ್ಲ. ನಾವು ಹೇಳಿಕೆ ಮಾತ್ರ ದಾಖಲಿಸುತ್ತಿದ್ದೆವು ಎಂದಿದ್ದರು. ಅಂದು ಹೇಳಿಕೆ ನೀಡಿ ನಾನು ವಾಪಸ್ ಬಂದೆ. ಅನಂತರ ತನಿಖೆಯ ಅಧಿಕಾರಿ ಕುಮಾರಸ್ವಾಮಿಯನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾಗಿ ಕಡತದಲ್ಲಿ ಉಲ್ಲೇಖಿಸಿದ್ದಾರೆ ಎಂದು ಕಿಡಿಕಾರಿದರು.
12
+ ಎಸ್ಐಟಿ ತನಿಖೆಗೆ ಅನುಮತಿ ನೀಡುವಾಗ ಸುಪ್ರೀಂಕೋರ್ಟ್ ಪ್ರಕರಣದ ವಿವರಗಳನ್ನು ಕಾಲಕಾಲಕ್ಕೆ ತನಗೆ ನೀಡಬೇಕು ಎಂದು ಸೂಚಿಸಿತ್ತು. ತನಿಖೆ ನಡೆಸಿದವರು ಸುಪ್ರೀಂಕೋರ್ಟ್ಗೆ ತನಿಖಾ ವರದಿಯನ್ನು ಸಲ್ಲಿಸಿದ್ದಾರೆಯೇ? ಏಕೆ ನೀಡಿಲ್ಲ? ರಾಜ್ಯಪಾಲರ ಮುಂದೆ ಅಭಿಯೋಜನೆಗೆ ಅರ್ಜಿ ಸಲ್ಲಿಸುವ ಅಗತ್ಯವೇನು? ಎಂದು ಪ್ರಶ್ನಿಸಿದರು.
13
+ ಒಂದು ದಿನವಾದರೂ ಕುಮಾರಸ್ವಾಮಿಯನ್ನು ಜೈಲಿಗೆ ಕಳುಹಿಸಬೇಕು ಎಂದು ಈಗಿನಂತೆ ಆಗಲೂ ಸಂಚುಗಳು ನಡೆದಿದ್ದವು. ಆ ವೇಳೆ ಮುಖ್ಯಮಂತ್ರಿಯವರು ನಿವೃತ್ತ ಪೊಲೀಸ್ ಅಧಿಕಾರಿಯನ್ನು ಸಲಹೆಗಾರರನ್ನಾಗಿ ಇಟ್ಟುಕೊಂಡಿದ್ದರು. ಈಗ ಕಾನೂನು ತಜ್ಞರನ್ನು ಜೊತೆಗಿಟ್ಟುಕೊಂಡಿದ್ದಾರೆ. ನನ್ನ ವಿರುದ್ಧ ಆರೋಪಗಳ ಜೊತೆಗೆ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
14
+ 2018 ರ ಜನವರಿಯಲ್ಲಿ ಎಸ್ಐಟಿ ಚಾರ್ಜ್ಶೀಟ್ ಹಾಕಿತ್ತು. ಅನಂತರ ನನ್ನನ್ನೇ ಮುಖ್ಯಮಂತ್ರಿ ಮಾಡಿ ನನ್ನ ಜೊತೆ ಸರ್ಕಾರ ಮಾಡಬೇಕಾದಂತಹ ಪರಿಸ್ಥಿತಿ ಕಾಂಗ್ರೆಸ್ನವರಿಗೆ ಎದುರಾಯಿತು ಎಂದು ಲೇವಡಿ ಮಾಡಿದರು.
15
+ ಸಿದ್ದರಾಮಯ್ಯನವರು ನನ್ನದು ತೆರೆದ ಪುಸ್ತಕ. ನಾನು ಮುಖ್ಯಮಂತ್ರಿಯಾಗಿರುವುದನ್ನು ವಿರೋಧಪಕ್ಷಗಳಿಗೆ ಸಹಿಸಲಾಗದೆ ಹೊಟ್ಟೆಕಿಚ್ಚಿನಿಂದ ಆರೋಪ ಮಾಡುತ್ತಿವೆ ಎಂದು ದಿನನಿತ್ಯ ಭಜನೆ ಮಾಡುತ್ತಿದ್ದಾರೆ. ನೀವು ಸರಿ ಇದ್ದರೆ ವಿರೋಧಪಕ್ಷದವರು ಏನು ಮಾಡುತ್ತಾರೆ. ಮುಖ್ಯಮಂತ್ರಿ ವಿರುದ್ಧ ಲೋಕಾಯುಕ್ತದಲ್ಲಿ 61 ಪ್ರಕರಣಗಳು ಭ್ರಷ್ಟಾಚಾರ, ಕರ್ತವ್ಯ ಲೋಪ ಸೇರಿ ವಿವಿಧ ಪ್ರಕರಣಗಳು ದಾಖಲಾಗಿವೆ.
16
+ ಅವುಗಳಲ್ಲಿ 50 ಪ್ರಕರಣಗಳಲ್ಲಿ ಇನ್ನೂ ತನಿಖೆಯೇ ಶುರುವಾಗಿಲ್ಲ. ತಮನ್ನು ತಾವು ಪ್ರಶ್ನೆ ಮಾಡಿಕೊಳ್ಳಲು ಲೋಕಾಯುಕ್ತದ ನರ ಕಿತ್ತು ಹಾಕಿ ಸಿದ್ದರಾಮಯ್ಯ ಅವರು ಎಸಿಬಿ ರಚನೆ ಮಾಡಿದ್ದರು ಎಂದು ವಾಗ್ದಾಳಿ ನಡೆಸಿದ್ದರು.
17
+ 2011-12ನೇ ಸಾಲಿನ ಪ್ರಕರಣವನ್ನು ಈಗ ಕೆದಕಿಕೊಂಡು ಕುಳಿತಿದ್ದಾರೆ. 2018 ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಎರಡು ಸೆಕೆಂಡಿನಲ್ಲಿ ಮುಚ್ಚಿಹಾಕಿಸಬಹುದಿತ್ತು. ಸಿದ್ದರಾಮಯ್ಯ ಅವರಂತೆ ನಾನು ಸಂಖ್ಯಾಬಲವನ್ನು ಬಳಸಿಕೊಂಡು ರಕ್ಷಣೆ ಪಡೆಯುವ ಪ್ರಯತ್ನ ಮಾಡುವುದಿಲ್ಲ ಎಂದರು.
18
+ ಕಳೆದೆರಡು ದಿನಗಳಿಂದ ಮತ್ತೊಂದು ಹೊಸ ಪ್ರಕರಣವನ್ನು ತೆರೆಯಲು ಸಭೆಗಳಾಗಿವೆ. ಡಿವೈಎಸ್ಪಿ ಬಸವರಾಜು ಮುಗ್ಧಂ ಎಂಬುವರು ಇದನ್ನು ನನಗೆ ಬಿಟ್ಟುಕೊಡಿ, ನೋಟೀಸ್ ಕೊಟ್ಟು ಕುಮಾರಸ್ವಾಮಿಯವರನ್ನು ಕರೆಸಿ ಮುಜುಗರ ಉಂಟುಮಾಡುತ್ತೇನೆ ಎಂದಿದ್ದಾರೆ. ಇಂತಹುದಕ್ಕೆಲ್ಲಾ ನಾನು ಹೆದರುವುದಿಲ್ಲ ಎಂದು ಹೇಳಿದರು.
eesanje/url_46_39_10.txt ADDED
@@ -0,0 +1,5 @@
 
 
 
 
 
 
1
+ ಎರಡು ಆಟೋಗಳಿಗೆ ಡಿಕ್ಕಿ ಹೊಡೆದಿದ್ದ ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆ
2
+ ಬೆಂಗಳೂರು,ಆ.20- ಕೋರಮಂಗಲದ ಮಂಗಳ ಜಂಕ್ಷನ್‍ನಲ್ಲಿ ಕಳೆದ 17ರ ಮಧ್ಯರಾತ್ರಿ ಎರಡು ಆಟೋಗಳಿಗೆ ಹಾಗೂ ಬೈಕ್‍ಗೆ ಡಿಕ್ಕಿ ಹೊಡೆದು ಜಖಂಗೊಳಿಸಿದ್ದು ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆ ವಿದ್ಯಾರ್ಥಿನಿ ಚಾಲನೆ ಮಾಡುತ್ತಿದ್ದ ಕಾರು ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ. ಕಳೆದ ಶನಿವಾರ ಮಧ್ಯರಾತ್ರಿ ಕಾರೊಂದು ಯೂಟರ್ನ್ ಪಡೆದುಕೊಳ್ಳುವ ವೇಳೆ ಮಂಗಳ ಜಂಕ್ಷನ್‍ನಲ್ಲಿ ನಿಯಂತ್ರಣ ತಪ್ಪಿ ಎರಡು ಆಟೋಗಳಿಗೆ ಡಿಕ್ಕಿ ಹೊಡೆದಿದ್ದು, ಕಾರು ಚಾಲನೆ ಮಾಡುತ್ತಿದ್ದವರು ವಾಹನ ನಿಲ್ಲಿಸದೆ ಮುಂದೆ ಹೋಗುತ್ತಿದ್ದರು.
3
+ ತಕ್ಷಣ ಇದನ್ನು ಗಮನಿಸಿದ ಆಟೋ ಚಾಲಕ ಹಾಗೂ ಬೈಕ್ ಸವಾರ ಕಾರನ್ನು ಹಿಂಬಾಲಿಸಿಕೊಂಡು ಹೋಗಿ ತಡೆದು ನಿಲ್ಲಿಸಿದ್ದಾರೆ. ಆ ವೇಳೆ ಕಾರಿನಲ್ಲಿದ್ದ ಯುವಕ-ಯುವತಿ ಜೊತೆ ಆಟೋ ಚಾಲಕ ಜಗಳವಾಡಿದ್ದು, ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಅದೇ ಸಂದರ್ಭದಲ್ಲಿ ಈ ರಸ್ತೆಯಲ್ಲಿ ಬಂದ ಹೊಯ್ಸಳ ಪೊಲೀಸರು ಗುಂಪು ಸೇರಿರುವುದು ಗಮನಿಸಿ ಸಮೀಪ ಹೋಗಿ ಇಬ್ಬರನ್ನು ಸಮಾಧಾನಪಡಿಸಿ ಕಳುಹಿಸುವಷ್ಟರಲ್ಲಿ ಇತ್ತ ಕಾರು ಚಾಲನೆ ಮಾಡುತ್ತಿದ್ದ ವಿದ್ಯಾರ್ಥಿನಿ ತಪ್ಪಿಸಿಕೊಳ್ಳಲು ಕಾರಿನಿಂದ ಇಳಿದು ಅದೇ ಮಾರ್ಗದಲ್ಲಿ ಬಂದ ಬೈಕ್ ಸವಾರನಿಗೆ ಡ್ರಾಪ್ ಕೇಳಿದ್ದಾಳೆ.
4
+ ನಂತರ ಡ್ರಾಪ್ ಕೊಡುವ ನೆಪದಲ್ಲಿ ಕೊರಿಯೊಗ್ರಾಫರ್ ಆಕೆಯನ್ನು ನಿರ್ಜನಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆಟೋ ಜಖಂಗೊಂಡ ಬಗ್ಗೆ ಆಟೋ ಚಾಲಕ ಅಂದೇ ಆಡಿಗೋಡಿ ಸಂಚಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರು ಯಾರದ್ದು? ಯಾರು ಕಾರು ಚಲಾಯಿಸುತ್ತಿದ್ದರು? ಎಂಬ ಬಗ್ಗೆ ತನಿಖೆ ಕೈಗೊಂಡಾಗ ಆ ಕಾರು ಸಂತ್ರಸ್ತೆಯ ಸ್ನೇಹಿತನದು. ಅಂದು ಕಾರನ್ನು ಆಕೆಯೇ ಚಾಲನೆ ಮಾಡುತ್ತಿದುದ್ದಾಗಿ ಗೊತ್ತಾಗಿದೆ.
5
+ ಕಾರಿನ ಮಾಲೀಕ ಹಾಗೂ ಸಂತ್ರಸ್ತೆ ಸ್ನೇಹಿತನಿಂದ ಹೇಳಿಕೆ ಪಡೆದುಕೊಂಡಿರುವ ಆಡುಗೋಡಿ ಸಂಚಾರಿ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
eesanje/url_46_39_11.txt ADDED
@@ -0,0 +1,5 @@
 
 
 
 
 
 
1
+ ಶ್ರೀ ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ ವೈಭವ
2
+ ಬೆಂಗಳೂರು,ಆ.20- ಶ್ರೀ ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ ಪ್ರಯುಕ್ತ ಬೆಂಗಳೂರಿನ ಜಯನಗರದ ಐದನೇ ಬಡಾವಣೆಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಬೆಳಗಿನ ಜಾವ ಸುಪ್ರಭಾತ ನಾದಸ್ವರ ವಾದ್ಯದೊಂದಿಗೆ ಪ್ರಾರಂಭವಾಯಿತು.ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಅರ್ಚಕರಿಂದ ವಿಶೇಷವಾಗಿ ಹಾಲು (ಮೊಸರು) ಮಜ್ಜಿಗೆ, ತುಪ್ಪ, ಜೇನುತುಪ್ಪ, ಸಕ್ಕರೆ ಎಳೆನೀರು, ಇತ್ಯಾದಿ ನಾನಾ ಬಗೆಯ ಫಲಗಳಿಂದ ಫಲ ಪಂಚಾಮೃತ ಅಭಿಷೇಕವನ್ನು ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟೋತ್ತರ ಪಾರಾಯಣದೊಂದಿಗೆ ನೆರವೇರಿಸಲಾಯಿತು.
3
+ ನಂತರ ಶ್ರೀ ಮಠದ ವತಿಯಿಂದ ಆರ್.ಕೆ. ವಾದಿಂದ್ರಾಚಾರ್ಯರು, ಜಿ.ಕೆ. ಆಚಾರ್ಯರು ಮತ್ತು ಶ್ರೀ ನಂದಕಿಶೋರಾಚಾರ್ಯರು ಲೋಕ-ಕಲ್ಯಾಣಕ್ಕಾಗಿ ಗುರು ರಾಯರಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ ಸ್ವರ್ಣ ಸಿಂಹಾಸನದಲ್ಲಿ ಶ್ರೀ ರಾಯರಿಗೆ ಪಾದಪೂಜೆ ನೆರವೇರಿಸಿದರು.ಭಕ್ತರು ಕೂಡ ಸಾಮೂಹಿಕವಾಗಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಪಾದಕ್ಕೆ ಪಾದಪೂಜೆ ಫಲ ಸಮರ್ಪಣೆ ಸಮರ್ಪಿಸಿದರು, ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಸುಗಂಧ ದ್ರವ್ಯ ನಾನಾ ವಿಧವಾದ ಪುಷ್ಪಗಳಿಂದ ಅಲಂಕರಿಸಲಾಯಿತು.
4
+ ಶ್ರೀ ಮಠಕ್ಕೆ ಆಗಮಿಸುವ ಸಹಸ್ರಾರು ಭಕ್ತರಿಗೆ ಅನ್ನಸಂತರ್ಪಣೆಯು ನೆರವೇರಿತು. ಗುರು ರಾಯರ ದರ್ಶನಕ್ಕೆ ಆಗಮಿಸುವ ಭಕ್ತರಿಗಾಗಿ ಅಚ್ಚುಕಟ್ಟಾದ ಕ್ಯೂ ವ್ಯವಸ್ಥೆ, ಪ್ರಸಾದಕ್ಕೂ ಕ್ಯೂ ವ್ಯವಸ್ಥೆ, ಹಿರಿಯ ನಾಗರಿಕ ವಯೋವೃದ್ಧರಿಗೂ ಪ್ರತ್ಯೇಕ ಕ್ಯೂ ವ್ಯವಸ್ಥೆಯನ್ನು ಮಾಡಲಾಗಿತ್ತು.
5
+ ಈ ದಿನ ಸಂಜೆ ಪ್ರವಚನ ವಿಶೇಷವಾಗಿ ರಜತ – ಸ್ವರ್ಣ -ಲೇಪಿತ ಗಜವಾಹನ ಉತ್ಸವದೊಂದಿಗೆ ಸಂಜೆ 7 ಕ್ಕೆ ದಾಸ-ಲಹರಿ ವಿದ್ವಾನ್- ಪ್ರಾದೇಶಾಚಾರ್ಯ ವೃಂದದಿಂದ ಗಾಯನ ಕಾರ್ಯಕ್ರಮವು ಜರುಗಲಿದೆ. ಈ ಎ¯್ಲÁ ಕಾರ್ಯಕ್ರಮಗಳು ರಾಯರ ಅನುಗ್ರಹ ಮತ್ತು ಭಕ್ತರ, ಸ್ವಯಂ ಸೇವಕರ ಸಿಬ್ಬಂದಿಗಳ, ಸಹಕಾರ ಹಾಗೂ ಮಂತ್ರಾಲಯ ಶ್ರೀಗಳ ಆಶೀರ್ವಾದದಿಂದ, ಆರ್.ಕೆ.ವಾದಿಂದ್ರಾಚಾರ್ಯರ ನೇತೃತ್ವದಲ್ಲಿ ನೆರವೇರುತ್ತಿದೆ.