CoolCoder44 commited on
Commit
ebd362a
·
verified ·
1 Parent(s): 97742b1

cf98d789671c454e151422c2aad2fad8e2071b77ea65a6f6fdd6073e602d5ddd

Browse files
Files changed (50) hide show
  1. eesanje/url_46_259_6.txt +6 -0
  2. eesanje/url_46_259_7.txt +9 -0
  3. eesanje/url_46_259_8.txt +8 -0
  4. eesanje/url_46_259_9.txt +7 -0
  5. eesanje/url_46_25_1.txt +16 -0
  6. eesanje/url_46_25_10.txt +12 -0
  7. eesanje/url_46_25_11.txt +5 -0
  8. eesanje/url_46_25_12.txt +7 -0
  9. eesanje/url_46_25_2.txt +6 -0
  10. eesanje/url_46_25_3.txt +9 -0
  11. eesanje/url_46_25_4.txt +10 -0
  12. eesanje/url_46_25_5.txt +14 -0
  13. eesanje/url_46_25_6.txt +13 -0
  14. eesanje/url_46_25_7.txt +11 -0
  15. eesanje/url_46_25_8.txt +6 -0
  16. eesanje/url_46_25_9.txt +8 -0
  17. eesanje/url_46_260_1.txt +7 -0
  18. eesanje/url_46_260_10.txt +7 -0
  19. eesanje/url_46_260_11.txt +9 -0
  20. eesanje/url_46_260_12.txt +8 -0
  21. eesanje/url_46_260_2.txt +7 -0
  22. eesanje/url_46_260_3.txt +6 -0
  23. eesanje/url_46_260_4.txt +7 -0
  24. eesanje/url_46_260_5.txt +7 -0
  25. eesanje/url_46_260_6.txt +18 -0
  26. eesanje/url_46_260_7.txt +10 -0
  27. eesanje/url_46_260_8.txt +9 -0
  28. eesanje/url_46_260_9.txt +10 -0
  29. eesanje/url_46_261_1.txt +8 -0
  30. eesanje/url_46_261_10.txt +6 -0
  31. eesanje/url_46_261_11.txt +9 -0
  32. eesanje/url_46_261_12.txt +7 -0
  33. eesanje/url_46_261_2.txt +9 -0
  34. eesanje/url_46_261_3.txt +8 -0
  35. eesanje/url_46_261_4.txt +9 -0
  36. eesanje/url_46_261_5.txt +7 -0
  37. eesanje/url_46_261_6.txt +9 -0
  38. eesanje/url_46_261_7.txt +7 -0
  39. eesanje/url_46_261_8.txt +6 -0
  40. eesanje/url_46_261_9.txt +9 -0
  41. eesanje/url_46_262_1.txt +6 -0
  42. eesanje/url_46_262_10.txt +8 -0
  43. eesanje/url_46_262_11.txt +11 -0
  44. eesanje/url_46_262_12.txt +11 -0
  45. eesanje/url_46_262_2.txt +7 -0
  46. eesanje/url_46_262_3.txt +5 -0
  47. eesanje/url_46_262_4.txt +9 -0
  48. eesanje/url_46_262_5.txt +10 -0
  49. eesanje/url_46_262_6.txt +8 -0
  50. eesanje/url_46_262_7.txt +10 -0
eesanje/url_46_259_6.txt ADDED
@@ -0,0 +1,6 @@
 
 
 
 
 
 
 
1
+ ಪರ್ಯಾಯ ಪೀಠಾರೋಹಣ ಮಾಡಿದ ಸುಗುಣೇಂದ್ರ ತೀರ್ಥರು
2
+ ಮಂಗಳೂರು, ಜ.18 (ಪಿಟಿಐ) – ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರು ಉಡುಪಿ ಶ್ರೀಕೃಷ್ಣ ದೇವಸ್ಥಾನದಲ್ಲಿ ಇಂದು ಪರ್ಯಾಯ ಪೀಠಾರೋಹಣ ಮಾಡಿದರು. ಮುಂದಿನ ಎರಡು ವರ್ಷಗಳ ಕಾಲ, ಉಡುಪಿಯ ಎಂಟು ಮಠಗಳ ನಡುವೆ ಆಡಳಿತದ ಸಾಂಪ್ರದಾಯಿಕ ಸರದಿಯಂತೆ, ಸುಗುಣೇಂದ್ರ ತೀರ್ಥರು ಪರ್ಯಾಯವಾಗಿ ಕೃಷ್ಣ ದೇವಸ್ಥಾನದಲ್ಲಿ ಆಡಳಿತ ಮತ್ತು ಪೂಜೆಗಳನ್ನು ನೋಡಿಕೊಳ್ಳುತ್ತಾರೆ.
3
+ ಸುಗುಣೇಂದ್ರ ತೀರ್ಥ ಸ್ವಾಮಿಗಳು ಮಧ್ಯರಾತ್ರಿ 1.30 ಗಂಟೆಗೆ ಕಾಪುವಿನ ದಂಡತೀರ್ಥ ಸರೋವರದಲ್ಲಿ ಪುಣ್ಯಸ್ನಾನ ಮಾಡಿ ಜೋಡುಕಟ್ಟೆಗೆ ಆಗಮಿಸಿ ಧಾರ್ಮಿಕ ವಿಧಿ ವಿಧಾನಗಳು ಮತ್ತು ಭವ್ಯ ಪರ್ಯಾಯ ಮೆರವಣಿಗೆಯಲ್ಲಿ ಭಾಗವಹಿಸಿದರು. ಅವರ ಜೊತೆಯಲ್ಲಿ ಅವರ ಕಿರಿಯ ಮಠಾೀಧಿಶರಾದ ಸುಶೀಂದ್ರ ತೀರ್ಥರು ಇದ್ದರು.
4
+ ಅಪ್ಪ-ಅಮ್ಮನ ಹೆಸರು ಗೊತ್ತಿಲ್ಲದವರು ಜಾತ್ಯಾತೀತ ಹೆಸರು ಹೇಳುತ್ತಾರೆ ; ಹೆಗಡೆ
5
+ ಶ್ರೀ ಕೃಷ್ಣನ ದರ್ಶನದ ನಂತರ ಪುತ್ತಿಗೆ ಶ್ರೀಗಳಿಗೆ ಉಡುಪಿ ಶ್ರೀ ಕೃಷ್ಣ ದೇವಸ್ಥಾನದ ಉಸ್ತುವಾರಿಯನ್ನು ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥರು ಸರ್ವಜ್ಞ ಪೀಠಕ್ಕೆ ಕರೆದೊಯ್ಯುವ ಮೂಲಕ ಹಸ್ತಾಂತರಿಸಿದರು.ಇದಕ್ಕೂ ಮುನ್ನ ವಿವಿಧ ಟ್ಯಾಬ್‍ಲೋಗಳು, ಪಿಲಿ ವೇಷ ತಂಡಗಳು ಮತ್ತು ಸಂಗೀತ ತಂಡಗಳು ವರ್ಣರಂಜಿತ ಪರ್ಯಾಯ ಮೆರವಣಿಗೆಯಲ್ಲಿ ಸೇರಿಕೊಂಡವು. ತೆರೆದ ವಾಹನಗಳ ಮೇಲೆ ಸುಂದರವಾಗಿ ಅಲಂಕರಿಸಿದ ಪಲ್ಲಕ್ಕಿಯಲ್ಲಿ ಪುತ್ತಿಗೆ ಶ್ರೀಗಳನ್ನು ಕರೆದೊಯ್ಯಲಾಯಿತು.
6
+ ಉಡುಪಿ ಜಿಲ್ಲಾಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಉಡುಪಿ-ಚಿಕ್ಕಮಗಳೂರು ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಂಜೆ, ಶಾಸಕರಾದ ಯಶಪಾಲ್ ಸುವರ್ಣ, ವಿ ಸುನೀಲ್ ಕುಮಾರ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮತ್ತಿತರರು ಉಪಸ್ಥಿತರಿದ್ದರು.
eesanje/url_46_259_7.txt ADDED
@@ -0,0 +1,9 @@
 
 
 
 
 
 
 
 
 
 
1
+ ಉಡುಪಿಯ ಸಾಂಸ್ಕೃತಿಕ ಶ್ರೀಮಂತಿಕೆ ವಿಶ್ವಕ್ಕೆ ಮಾದರಿ : ಲಕ್ಷ್ಮಿ ಹೆಬ್ಬಾಳ್ಕರ್
2
+ ಉಡುಪಿ,ಜ.18- ಧಾರ್ಮಿಕ ಹಾಗೂ ಸಾಂಸ್ಕೃತಿಕವಾಗಿ ಉಡುಪಿಯ ಶ್ರೀಮಂತಿಕೆ ಇಡೀ ವಿಶ್ವಕ್ಕೇ ಮಾದರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಬಣ್ಣಿಸಿದರು. ಉಡುಪಿಯ ಶ್ರೀಕೃಷ್ಣ ಮಠದ ರಾಜಾÁಂಗಣದಲ್ಲಿ ನಡೆದ ಶ್ರೀ ಪುತ್ತಿಗೆ ಪರ್ಯಾಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉಡುಪಿ ಪರ್ಯಾಯ ಕಾರ್ಯಕ್ರಮ ನೋಡಿ ನಿಜಕ್ಕೂ ಬೆರಗಾದೆ.
3
+ ಸಾಂಸ್ಕೃತಿಕವಾಗಿ ಸಾಕಷ್ಟು ಶ್ರೀಮಂತಿಕೆ ಹೊಂದಿದೆ ಎಂದರು. ದೇಶದ ಪ್ರಸಿದ್ಧ ತೀರ್ಥಕ್ಷೇತ್ರವಾದ ಉಡುಪಿ ಅನೇಕ ವೈಶಿಷ್ಟ್ಯಗಳಿಂದ ಕೂಡಿದೆ. ಇಂತಹ ಜಿಲ್ಲೆಗೆ ಉಸ್ತುವಾರಿ ಸಚಿವೆಯಾಗಿ ಸೇವೆ ಸಲ್ಲಿಸುವ ಸೌಭಾಗ್ಯ ನನ್ನ ಪಾಲಿಗೆ ಬಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.
4
+ ಶ್ರೀ ಪುತ್ತಿಗೆ ಪರ್ಯಾಯೋತ್ಸವದ ಅಂಗವಾಗಿ ನಡೆದ ಮೆರವಣಿಗೆ ಹಾಗೂ ಕಾರ್ಯಕ್ರಮವು ಮೈಸೂರು ದಸರಾದ ವೈಭವ ನೆನಪಿಸುತ್ತದೆ. ಇದನೆಲ್ಲಾ ನೋಡಿದರೆ ಸಾಂಸ್ಕೃತಿಕವಾಗಿ ಭಾರತ ಸಾಕಷ್ಟು ಶ್ರೀಮಂತವಾಗಿದೆ. ಭಾರತ ಸಾಂಸ್ಕೃತಿಕವಾಗಿ ವಿಶ್ವಗುರು ಆಗುವ ಪಥದತ್ತ ಸಾಗಿದೆ ಎಂದು ಅಭಿಪ್ರಾಯಪಟ್ಟರು.
5
+ ಶ್ರೀಪುತ್ತಿಗೆ ಪರ್ಯಾಯೋತ್ಸವಕ್ಕೆ ಕರ್ನಾಟಕ ಸರ್ಕಾರ ಹಾಗೂ ಉಡುಪಿ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಿದೆ. ಪರ್ಯಾಯ ಕಾರ್ಯಕ್ರಮ ಮುಗಿಯುವವರೆಗೂ ಜಿಲ್ಲಾಡಳಿತ ಸಂಪೂರ್ಣ ಸಹಕಾರವನ್ನು ನೀಡಲಿದೆ ಎಂದು ಭರವಸೆ ನೀಡಿದರು. ಉಡುಪಿಯ ಪುತ್ತಿಗೆ ಶ್ರೀಗಳು ವಿದೇಶಗಳಲ್ಲಿ ಶಾಖಾಮಠಗಳನ್ನು ಸ್ಥಾಪಿಸಿ, ಭಾರತೀಯ ಸಂಸ್ಕೃತಿ ಬಗ್ಗೆ ವಿದೇಶಿಗರಿಗೆ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು.
6
+ ಅಪ್ಪ-ಅಮ್ಮನ ಹೆಸರು ಗೊತ್ತಿಲ್ಲದವರು ಜಾತ್ಯಾತೀತ ಹೆಸರು ಹೇಳುತ್ತಾರೆ ; ಹೆಗಡೆ
7
+ ಸಚಿವರ ಸಹಕಾರಕ್ಕೆ ಪುತ್ತಿಗೆ ಶ್ರೀಗಳ ಶ್ಲಾಘನೆ:ಪರ್ಯಾಯ ಮಹೋತ್ಸವಕ್ಕೆ ಸಹಕರಿಸಿದ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಅವರಿಗೆ ಅಭಿನಂದನೆ ಸಲ್ಲಿಸಿದ ಪುತ್ತಿಗೆ ಮಠಾೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಶ್ರೀಪುತ್ತಿಗೆ ಪರ್ಯಾಯೋತ್ಸವಕ್ಕೆ ಸಚಿವರ ಕೊಡುಗೆ ಅಪಾರ ಎಂದು ಶ್ಲಾಘಿಸಿದರು. ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಚಿವರಾಗಿ ಬಂದಿರುವುದಕ್ಕಿಂತ ಹೆಚ್ಚಾಗಿ, ಕೃಷ್ಣ ಭಕ್ತೆಯಾಗಿ ಕುಟುಂಬ ಸಮೇತ ಪರ್ಯಾಯೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಆರಂಭಿಕ ಹಂತದಿಂದಲೂ ಸಚಿವರು ಪರ್ಯಾಯದ ಯಶಸ್ಸಿಗೆ ಶ್ರಮಿಸಿದ್ದಾರೆ ಎಂದು ಹೇಳಿದರು.
8
+ ಚಿನ್ನದ ರಥ ನೀಡುವ ಸಂಕಲ್ಪ :ತಾವು ನಾಲ್ಕನೇ ಬಾರಿಗೆ ಪರ್ಯಾಯ ಅಲಂಕರಿಸುತ್ತಿದ್ದು, ಸನ್ಯಾಸ ಆಶ್ರಮ ಪೂರೈಸಿ 50 ವರ್ಷಗಳು ಸಂದಿರುವ ಹಿನ್ನೆಲೆಯಲ್ಲಿ ಕೃಷ್ಣನಿಗೆ ಚಿನ್ನದ ರಥ ಸಮರ್ಪಿಸುವ ಸಂಕಲ್ಪ ಹೊಂದಿದ್ದೇನೆ ಎಂದರು. ವಿದೇಶ ಪ್ರವಾಸ ಕ್ಕಿಂತ ಕೃಷ್ಣ ಪೂಜೆಯೇ ಮುಖ್ಯವಾಗಿದ್ದು, ಈ ಎರಡು ವರ್ಷಗಳ ಪರ್ಯಾಯದ ಅವಯಲ್ಲಿ ಸಂಪೂರ್ಣ ಸಮಯವನ್ನು ಕೃಷ್ಣನ ಪೂಜೆಗೆ ಮೀಸಲಿಡುವೆ ಎಂದು ಹೇಳಿದರು.
9
+ ಈ ವೇಳೆ ಕಿರಿಯ ಯತಿಗಳಾದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು, ಧರ್ಮಸ್ಥಳದ ಧರ್ಮಾಕಾರಿ ಡಾ.ವೀರೇಂದ್ರ ಹೆಗ್ಗಡೆ, ಇಸ್ಕಾನ್ ಮುಖ್ಯಸ್ಥ ಮಧುಪಂಡಿತ್ ದಾಸ್, ಮಾಜಿ ಸಿಎಂ .ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್, ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
eesanje/url_46_259_8.txt ADDED
@@ -0,0 +1,8 @@
 
 
 
 
 
 
 
 
 
1
+ ಪ್ರಧಾನಿಯನ್ನು ಬಹಿರಂಗ ಚರ್ಚೆಗೆ ಆಹ್ವಾನಿಸುವುದು ಉದ್ಧಟತನ : ಹೆಚ್‌ಡಿಕೆ
2
+ ನವದೆಹಲಿ,ಜ.18- ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಸುದೀರ್ಘ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ನೀಡಿರುವ ಕೊಡುಗೆ ಏನು? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ರಾಜ್ಯದ ಮುಖ್ಯಮಂತ್ರಿ ದೇಶದ ಪ್ರಧಾನಿಯನ್ನು ಬಹಿರಂಗ ಚರ್ಚೆಗೆ ಆಹ್ವಾನಿಸುವುದು ಉದ್ದಟತನ. ಇಂಥ ಹೇಳಿಕೆಗಳನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
3
+ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಕ್ಕೂಟ ವ್ಯವಸ್ಥೆಯಲ್ಲಿ ವಿಶ್ವಾಸದಿಂದ ಕೆಲಸ ಮಾಡಬೇಕು. ಬೀದಿಯಲ್ಲಿ ನಿಂತು ಇಂತಹ ಹೇಳಿಕೆಗಳನ್ನು ಕೊಡುವುದರಿಂದ ರಾಜ್ಯದ ಜನತೆಗೆ ಯಾವುದೇ ಉಪಯೋಗ ಆಗುವುದಿಲ್ಲ. ಕಾಂಗ್ರೆಸ್ ಆಡಳಿತದಲ್ಲಿದ್ದಾಗಲೇ ಹಣಕಾಸು ಆಯೋಗ ರಚನೆಯಾಗಿದೆ.
4
+ ಇದೀಗ 14-15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಬರಬೇಕಾಗಿದ್ದ ಆರ್ಥಿಕ ನೆರವು ಕಡಿಮೆಯಾಗಿದೆ ಎಂಬ ಆರೋಪ ಮಾಡುವ ಬದಲು ಅಂಕಿ-ಅಂಶಗಳನ್ನು ಕೇಂದ್ರ ಸರ್ಕಾರದ ಮುಂದಿಟ್ಟು ರಾಜ್ಯದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮನವರಿಕೆ ಮಾಡಿ ಸರಿಪಡಿಸಿಕೊಳ್ಳಬೇಕು ಎಂದರು.
5
+ ಅಪ್ಪ-ಅಮ್ಮನ ಹೆಸರು ಗೊತ್ತಿಲ್ಲದವರು ಜಾತ್ಯಾತೀತ ಹೆಸರು ಹೇಳುತ್ತಾರೆ ; ಹೆಗಡೆ
6
+ ಮುಂದಿನ ಲೋಕಸಭೆ ಚುನಾವಣೆಯಲ್ಲೂ ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲಲು ಬಿಜೆಪಿ ಕೇಂದ್ರ ನಾಯಕರ ಜೊತೆ ಸುದೀರ್ಘ ಚರ್ಚೆ ನಡೆಸಿದ್ದು, ರಾಜ್ಯ ಬಿಜೆಪಿ ಘಟಕ ಮತ್ತು ಜೆಡಿಎಸ್ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಲೋಕಸಭೆ ಚುನಾವಣೆಯಲ್ಲಿ ಯಾವ ಯಾವ ಕ್ಷೇತ್ರಗಳಲ್ಲಿ ಹಿನ್ನಡೆಯಾಗುತ್ತದೆ, ಯಾವ ಕ್ಷೇತ್ರದಲ್ಲಿ ಯಾವ ರೀತಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎಂಬುದನ್ನು ಚರ್ಚಿಸಲಾಗಿದೆ ಎಂದು ಹೇಳಿದರು.
7
+ ಕೇಂದ್ರ ಬಿಜೆಪಿ ತಂಡವು ಎರಡು,ಮೂರು ಸರ್ವೆಗಳನ್ನು ನಡೆಸಿದ್ದು, ಕ್ಷೇತ್ರವಾರು ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಅವನ್ನು ಅವಲೋಕಿಸಿ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲುವುದು ನಮ್ಮ ಮೈತ್ರಿಯ ಉದ್ದೇಶವಾಗಿದೆ ಎಂದರು. ಕೇಂದ್ರ ಮಂತ್ರಿಯಾಗುತ್ತೀರ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಲೋಕಸಭೆ ಚುನಾವಣೆ ಎರಡು, ಮೂರು ತಿಂಗಳು ಮಾತ್ರ ಬಾಕಿ ಉಳಿದಿದೆ. ಶೀಘ್ರದಲ್ಲೇ ನೀತಿ ಸಂಹಿತೆ ಜಾರಿಯಾಗುವುದರಿಂದ ಈ ಸಂದರ್ಭದಲ್ಲಿ ಮಂತ್ರಿಯಾಗಿ ರಾಜ್ಯಕ್ಕೆ ಮತ್ತು ಕೇಂದ್ರದಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ. ಇಂತಹ ವಿಷಯ ಏಕೆ ಚರ್ಚೆಗೆ ಬಂತು ಎಂಬುದೇ ನನಗೆ ಯಕ್ಷಪ್ರಶ್ನೆಯಾಗಿದೆ ಎಂದರು.
8
+ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಮಂಡ್ಯ ಮಾತ್ರವಲ್ಲದೆ ನನಗೆ ರಾಜಕೀಯ ಜನ್ಮ ನೀಡಿದ ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲೂ ಸ್ಪರ್ಧಿಸುವಂತೆ ಕೇಳುತ್ತಿದ್ದಾರೆ. ತುಮಕೂರಿನಲ್ಲಿ ಕಳೆದ ಬಾರಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಸೋಲಿಸಿದ್ದರು. ಬಿಜೆಪಿ ನಾಯಕರು ಸೇರಿದಂತೆ ಜೆಡಿಎಸ್ ಕಾರ್ಯಕರ್ತರು ನಾನು ಆ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಹೇಳಿದ್ದಾರೆ. ನಾನು ಸ್ಪರ್ಧೆ ಬಗ್ಗೆ ಯಾವುದನ್ನು ತೀರ್ಮಾನಿಸಿಲ್ಲ ಎಂದು ಹೇಳಿದರು.
eesanje/url_46_259_9.txt ADDED
@@ -0,0 +1,7 @@
 
 
 
 
 
 
 
 
1
+ ಸೂಕ್ತ ಸರ್ಕಾರಿ ನಿವಾಸಕ್ಕಾಗಿ ಸರ್ಕಾರಕ್ಕೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್.ಅಶೋಕ್‍
2
+ ಬೆಂಗಳೂರು,ಜ.18- ವಿಧಾನಸಭೆಯ ಪ್ರತಿ ಪಕ್ಷದ ನಾಯಕ ಆರ್.ಅಶೋಕ್‍ರವರು ತಮಗೆ ಸೂಕ್ತವಾದ ಕಡೆ ಸರ್ಕಾರಿ ನಿವಾಸವನ್ನು ಮಂಜೂರು ಮಾಡಬೇಕೆಂದು ಮುಖ್ಯಕಾರ್ಯ ದರ್ಶಿಗೆ ಪತ್ರ ಬರೆದಿದ್ದಾರೆ. ಛಾಯಾ ಮುಖ್ಯಮಂತ್ರಿಯೆಂದೇ ಗುರುತಿಸಿಕೊಂಡಿರುವ ವಿಧಾನಸಭೆಯ ಪ್ರತಿಪಕ್ಷದ ನಾಯಕರಿಗೆ ಬೆಂಗಳೂರಿನಲ್ಲಿ ಸುಸಜ್ಜಿತ ಬಂಗಲೆ, ಸರ್ಕಾರಿ ವಾಹನ, ಅಂಗರಕ್ಷಕರು ಸೇರಿದಂತೆ ಹಲವು ಸವಲತ್ತುಗಳನ್ನು ನೀಡಬೇಕಾಗುತ್ತದೆ.
3
+ ಇದೀಗ ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಅಶೋಕ್, ತಮಗೆ ಕಾರ್ಯಕರ್ತರನ್ನು ಭೇಟಿಯಾಗಲು ಅನುಕೂಲವಾಗುವಂತಹ ಸುಸಜ್ಜಿತ ಬಂಗಲೆಯನ್ನು ಮಂಜೂರು ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಘೋಯೆಲ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
4
+ ಮೂಲಗಳ ಪ್ರಕಾರ, ಆರ್.ಅಶೋಕ್ ತಮಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಇಬ್ಬರು ಸಚಿವರಿಗೆ ಈಗಾಗಲೇ ನಿಗದಿಯಾಗಿರುವ ಬಂಗಲೆಯನ್ನು ನೀಡುವಂತೆ ಬೇಡಿಕೆಯಿಟ್ಟಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ನಗರದ ಕುಮಾರಕೃಪಾ ದಕ್ಷಿಣದಲ್ಲಿರುವ ನಂಬರ್ 1 ನಿವಾಸ ಒದಗಿಸುವಂತೆ ಅಶೋಕ್ ಮನವಿ ಮಾಡಿದ್ದಾರೆ. ಆದರೆ, ಸದ್ಯ ಈ ನಿವಾಸ ಡಿಸಿಎಂ ಡಿಕೆ ಶಿವಕುಮಾರ್‍ಗೆ ಹಂಚಿಕೆಯಾಗಿದೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ರೇಸ್ ವ್ಯೂ ಕಾಟೇಜ್‍ನಲ್ಲಿ ನಂಬರ್ 1 ಮತ್ತು ನಂಬರ್ 3 ನಿವಾಸಕ್ಕೆ ಕೂಡಾ ಅಶೋಕ್ ಬೇಡಿಕೆ ಇಟ್ಟಿದ್ದಾರೆ. ಸದ್ಯ ರೇಸ್ ವ್ಯೂ ಕಾಟೇಜ್‍ನ ನಂಬರ್ 1 ನಿವಾಸ ಸಚಿವ ಎಂ.ಬಿ.ಪಾಟೀಲ್‍ಗೆ ಹಂಚಿಕೆಯಾಗಿದೆ. ನಂಬರ್ 3 ನಿವಾಸ ಸಚಿವ ಪ್ರಿಯಾಂಕ್ ಖರ್ಗೆಗೆ ಹಂಚಿಕೆಯಾಗಿದೆ.
5
+ ಅಪ್ಪ-ಅಮ್ಮನ ಹೆಸರು ಗೊತ್ತಿಲ್ಲದವರು ಜಾತ್ಯಾತೀತ ಹೆಸರು ಹೇಳುತ್ತಾರೆ ; ಹೆಗಡೆ
6
+ ಅಶೋಕ್‍ರವರು ಕೇಳಿಕೊಂಡಿರುವ ನಿವಾಸದಲ್ಲಿ ಈ ಹಿಂದೆ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಾಸ್ತವ್ಯ ಹೂಡಿದ್ದರು. ರಾಜಕಾರಣಿಗಳ ಪಾಲಿಗೆ ಇದನ್ನು ಅದೃಷ್ಟದ ನಿವಾಸವೆಂದೇ ಕರೆಯುತ್ತಾರೆ. ಹೀಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‍ರ ನಿವಾಸವನ್ನು ತಮಗೆ ನೀಡುವಂತೆ ಅಶೋಕ್ ಬೇಡಿಕೆಯಿಟ್ಟಿದ್ದಾರೆ.
7
+ ಇದಕ್ಕೆ ಸರ್ಕಾರ ಒಪ್ಪುತ್ತದೆಯೇ ಎಂಬ ಯಕ್ಷಪ್ರಶ್ನೆ ಎದುರಾಗಿದೆ. ಈ ಹಿಂದೆ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಅಂದಿನ ವಿಧಾನಸಭೆ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪನವರು ತಮ್ಮ ಪಾಲಿನ ಅದೃಷ್ಟದ ಮನೆಯೆಂದೇ ಹೇಳಲಾಗುವ ರೇಸ್ ವ್ಯೂ ಕಾಟೇಜ್‍ನ ನಂಬರ್ 1 ನಿವಾಸವನ್ನು ನೀಡಬೇಕೆಂದು ಕೇಳಿದ್ದರು. ಆದರೆ ಆ ವೇಳೆಗಾಗಲೇ ಅದು ಸಚಿವ ಸಾ.ರಾ.ಮಹೇಶ್‍ರವರಿಗೆ ನಿಗದಿಯಾಗಿದ್ದರಿಂದ ಬಿ.ಎಸ್.ವೈ ಬೇಡಿಕೆಯನ್ನು ಮನ್ನಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಯಡಿಯೂರಪ್ಪ ತಮ್ಮ ಡಾಲರ್ಸ್ ಕಾಲೋನಿ ನಿವಾಸದಿಂದಲೇ ಕಾರ್ಯ ನಿರ್ವಹಿಸಿದ್ದರು.
eesanje/url_46_25_1.txt ADDED
@@ -0,0 +1,16 @@
 
 
 
 
 
 
 
 
 
 
 
 
 
 
 
 
 
1
+ ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆಗೆ ಚಾಲನೆ, ಮನೆಮಾಡಿದ ಸಂಭ್ರಮ
2
+ ’ 23,000
3
+ ಬೆಂಗಳೂರು,ಸೆ.6-ಬಯಲುಸೀಮೆ ಜನತೆಯ ನೀರಿನ ದಾಹ ನೀಗಿಸುವ ಉದ್ದೇಶದಿಂದ ನಿರ್ಮಿಸಿರುವ ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆಗೆ ಗೌರಿ ಹಬ್ಬದ ದಿನವಾದ ಇಂದು ಚಾಲನೆ ನೀಡಲಾಯಿತು. ಸಿಎಂ ಸಿದ್ದರಾಮಯ್ಯ, ಜಲಸಂಪನೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಎನ್.ರಾಜಣ್ಣ, ಪರಮೇಶ್ವರ್, ಎಂ.ಬಿ.ಪಾಟೀಲ್, ಸಂಸದ ಶ್ರೇಯಸ್ ಪಟೇಲ್, ಶಾಸಕರು ಮತ್ತಿತರರು ಈ ಐತಿಹಾಸಿಕ ಘಳಿಗೆಗೆ ಸಾಕ್ಷಿಯಾದರು.
4
+ ವಿತರಣಾ ತೊಟ್ಟಿ 4ರ ದೊಡ್ಡನಾಗರ ಬಳಿ ಮೊದಲು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸೇರಿದಂತೆ ಮತ್ತಿತರರು ಗುಂಡಿ ಒತ್ತುವ ಮೂಲಕ ಯೋಜನೆಗೆ ಚಾಲನೆ ಕೊಟ್ಟರು. ನಂತರ ವಿತರಣಾ ತೊಟ್ಟಿ 3ರ ಬಳಿಯ ಹೆಬ್ಬನಹಳ್ಳಿ ಬಳಿ ಬೃಹತ್ ಬಹಿರಂಗ ಸಭೆ ನಡೆಸಲಾಯಿತು.
5
+ ಈ ಯೋಜನೆಯಿಂದ ಪಶ್ಚಿಮಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನ ಹೊಳೆ, ಕಾಡುಮನೆ ಹೊಳೆ, ಕೇರಿ ಹೊಳೆ ಮತ್ತು ಹೊಂಗದಹಳ್ಳದಿಂದ ಮುಂಗಾರು ಮಳೆ ಅವಧಿಯಲ್ಲಿ 24.01 ಟಿಎಂಸಿ ಪ್ರಮಾಣದ ಪ್ರವಾಹದ ನೀರನ್ನು 7 ಜಿಲ್ಲೆಗಳಿಗೆ ನೀರು ಹರಿಸಲಾಗುತ್ತದೆ.
6
+ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರಿನ ಬರಪೀಡಿತ 29 ತಾಲೂಕುಗಳ 38 ಪಟ್ಟಣ ಪ್ರದೇಶಗಳ ಹಾಗೂ 6,657 ಗ್ರಾಮಗಳ ಸುಮಾರು 75.59 ಲಕ್ಷ ಜನರಿಗೆ ಮತ್ತು ಜಾನುವಾರುಗಳಿಗೆ 14.056 ಟಿಎಂಸಿ ಕುಡಿಯುವ ನೀರನ್ನು ಒದಗಿಸುವುದು ಹಾಗೂ 5 ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಹಾಸನ, ತುಮಕೂರು ವ್ಯಾಪ್ತಿಯಲ್ಲಿ 527 ಕೆರೆಗಳಿಗೆ 9.953 ಟಿಎಂಸಿ ಪ್ರಮಾಣದ ನೀರನ್ನು ಕೆರೆಗಳ ಸಾಮರ್ಥ್ಯದ ಶೇ.50ರಷ್ಟು ತುಂಬಿಸಿ ಅಂರ್ತಜಲ ಮರುಪೂರಣ ಮಾಡುವ ಮಹತ್ವದ ಯೋಜನೆ ಇದಾಗಿದೆ.
7
+ ಈ ಯೋಜನೆಯ ಮೊದಲ ಹಂತದಲ್ಲಿ 8 ವಿಯರ್ಗಳ ಮೂಲಕ ನೀರನ್ನು ಮೇಲೆತ್ತಲು ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಆದರೆ ಮೂರನೇ ಸಂಖ್ಯೆಯ ವಿಯರ್ ಇನ್ನೂ ಸಿದ್ದವಾಗದ ಕಾರಣ ಉಳಿದ 7 ವಿಯರ್ಗಳೂ ಸಿದ್ದವಾಗಿವೆ. ಮೊದಲ ಹಂತದಲ್ಲಿ 1500 ಕ್ಯೂಸೆಕ್ ನೀರನ್ನು ಲಿಫ್‌್ಟ ಮಾಡಲಾಗುತ್ತದೆ. ತದನಂತರ 48 ಕಿಲೋಮೀಟರ್ ತೆರೆದ ಕಾಲುವೆಯಿಂದ ವೇದ ವ್ಯಾಲಿಯಿಂದ ವಾಣಿ ವಿಲಾಸ ಅಣೆಕಟ್ಟೆಗೆ ನೀರು ಹರಿಸಲಾಗುತ್ತದೆ.
8
+ ಏನಿದು ಈ ಯೋಜನೆ?:ಬರಪೀಡಿತ ಜಿಲ್ಲೆಗಳಿಗೆ ನೀರು ಹರಿಸುವ ಯೋಲಜನೆ ಇದಾಗಿದೆ. ಹಾಸನದ ಸಕಲೇಶಪುರ ತಾಲೂಕಿನ ಪಶ್ವಿಮ ಘಟ್ಟದ ಮೇಲ್ಭಾಗದಲ್ಲಿ ಹರಿಯುವ ಕಾಡುಮನೆ ಹೊಳೆ, ಎತ್ತಿನ ಹೊಳೆ, ಕೇರಿ ಹೊಳೆ ಮತ್ತು ಹೊಂಗದಹಳ್ಳದಿಂದ ನೀರು ತರುವ ಯೋಜನೆಯಾಗಿದೆ. ಮುಂಗಾರು ಮಳೆಯ ಸಂದರ್ಭದಲ್ಲಿ ಅಂದರೆ 139 ದಿನಗಳಲ್ಲಿ 24.01 ಟಿಎಂಸಿ ನೀರನ್ನು ಬಯಲು ಸೀಮೆ ಜಿಲ್ಲೆಗಳಿಗೆ ಹರಿಸಲಾಗುತ್ತದೆ.
9
+ ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ನ��ರು ತರುವುದಾಗಿದೆ.ಹಾಸನ, ಜಿಲ್ಲೆಯ ಪಶ್ಚಿಮಘಟ್ಟ ಪ್ರದೇಶದಲ್ಲಿ ಹರಿಯೋ ಎತ್ತಿನಹೊಳೆ ಪಶ್ಚಿಮಘಟ್ಟದಿಂದ ಪಶ್ಚಿಮ ದಿಕ್ಕಿನೆಡೆಗೆ ಅಂದರೆ ಸಮುದ್ರದ ಕಡೆಗೆ ಹರಿಯುತ್ತದೆ. ಹೀಗೆ ಸಮುದ್ರ ಸೇರಿ ಸುಮಾರು 24 ಟಿಎಂಸಿ ನೀರನ್ನು ಬಯಲುಸೀಮೆ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು, ರಾಮನಗರ ಹಾಗೂ ಹಾಸನ ಮತ್ತು ಚಿಕ್ಕಮಗಳೂರು ಸೇರಿ ಒಟ್ಟು ಏಳು ಜಿಲ್ಲೆಗಳತ್ತ ಅಂದ್ರೆ ಪೂರ್ವಾಭಿಮುಖವಾಗಿ ನದಿಯ ನೀರನ್ನೇ ತಿರುಗಿಸುವ ಮಹತ್ವದ ಯೋಜನೆ ಇದಾಗಿದೆ.
10
+ ಎತ್ತಿನಹೊಳೆ ರಾಜ್ಯದ ಬೃಹತ್ ಯೋಜನೆ:ಇತ್ತೀಚಿನ ವರ್ಷಗಳಲ್ಲಿ ನಮ ರಾಜ್ಯದಲ್ಲಿ ನಡೆಯುತ್ತಿರುವ ಅತಿದೊಡ್ಡ ನಿರಾವರಿ ಯೋಜನೆ ಈ ಎತ್ತಿನಹೊಳೆ ಯೋಜನೆ. ಒಟ್ಟು 24 ಟಿಎಂಸಿ ನೀರನ್ನು ಮೇಲೆತ್ತಿ ಹರಿಸುವ ಈ ಯೋಜನೆಯಲ್ಲಿ 14 ಟಿಎಂಸಿ ಕುಡಿಯೋ ನಿರಿಗಾಗಿಯೂ 10 ಟಿಎಂಸಿ ನೀರನ್ನ ಉದ್ದೇಶಿತ ಏಳು ಜಿಲ್ಲೆಗಳ ಸುಮಾರು 527 ಕರೆಗಳನ್ನ ತುಂಬಿಸುವ ನಿಟ್ಟಿನಲ್ಲಿ ಈ ಯೋಜನೆ ಜಾರಿ ಮಾಡಲಾಗಿದೆ. ಈ ಯೋಜನೆಗಾಗಿ ಒಟ್ಟು ನಾಲ್ಕು ಭಾಗಗಳಾಗಿ ವಿಭಾಗ ಮಾಡಲಾಗಿದೆ. ನೀರೆತ್ತೋ ತೊಟ್ಟಿಗಳು, ಗುರುತ್ವ ಕಾಲುವೆ, ಸಮತೋಲನ ಜಲಾಶಯ ಮತ್ತು ಪೈಪ್ ಲೈನ್?ಗಳಾಗಿ ನಾಲ್ಕು ಭಾಗಮಾಡಿ ಯೋಜನೆ ಜಾರಿ ಮಾಡಲಾಗುತ್ತಿದೆ. ಇದಕ್ಕಾಗಿ ಒಟ್ಟು ಎಂಟು ಜಲ ಮೂಲಗಳಿಂದ ನೀರು ಹರಿಸಲು ಎಂಟು ಪೈಪ್ ಲೈನ್ ಮಾಡಲಾಗಿದೆ.
11
+ 9 ಪಂಪ್ ಹೌಸ್, 8 ಸಬ್ಸ್ಟೇಷನ್ ಮೂಲಕ ಈ ಯೋಜನೆಯ ನೀರು ಹರಿಯುತ್ತದೆ. ಒಟ್ಟು 261 ಕಿ.ಮೀ ಈ ಯೋಜನೆಯಲ್ಲಿ ನೀರು ಹರಿಯೋ ಕಾಲುವೆಯ ಉದ್ದವಾಗಿದ್ದು ಈಗಾಗಲೇ ಮೂಲದಿಂದ ಸುಮಾರು 42 ಕಿ.ಮೀ ಅಂದರೆ ಬೇಲೂರಿನ ಐದಳ್ಳ ಕಾವಲುವೆರೆಗೂ ನೀರು ಸರಾಗವಾಗಿ ಹರಿಯಲು ಬೇಕಾದ ಕಾಮಗಾರಿ ಮುಗಿದಿದೆ. ಆದರೆ ಐದಳ್ಳ ಕಾವಲು ಬಳಿ 5 ಕಿ.ಮೀ ಅರಣ್ಯ ಭೂಮಿಯಲ್ಲಿ ಕಾಲುವೆ ಹೋಗಬೇಕಿರುವುದರಿಂದ ಅಲ್ಲಿ ಕಾಮಗಾರಿ ಆಗದೇ 32ನೇ ಕಿ.ಮೀನಲ್ಲಿ ನೀರನ್ನು ಬೇರೆಡೆ ತಿರುಗಿಸಿ ಚಿತ್ರದುರ್ಗ ಜಿಲ್ಲೆಯ ವಾಣಿವಿಲಾಸ ಸಾಗರದತ್ತ ಹರಿಸಲಾಗುತ್ತಿದೆ.
12
+ ಎತ್ತಿನಹೊಳೆಯ ಈ ಯೋಜನೆಗಾಗಿ ಸಕಲೇಶಪುರ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಎಂಟು ಪೈಪ್ಲೈನ್ಗಳ ಮೂಲಕ ನೀರು ಹರಿಯಲಿದ್ದು ಮೊದಲ ಪೈಪ್ಲೈನ್ನಲ್ಲಿ 6.6 ಟಿಎಂಸಿ ನೀರು ಸಿಗಲಿದೆ, ಎರಡನೇ ಪೈಪ್ ನಲ್ಲಿ 1.0 ಟಿಎಂಸಿ, ಮೂರನೇ ಪೈಪ್ ಲೈನ್ ನಲ್ಲಿ 1.4 ಟಿಎಂಸಿ, ನಾಲ್ಕನೆಯದ್ದರಲ್ಲಿ 0.98 ಟಿಎಂಸಿ, 5ನೇ ಪೈಪ್ಲೈನ್ನಲ್ಲಿ 1.73 ಟಿಎಂಸಿ, ಆರನೇ ಪೈಪ್ ಲೈನ್ ನಲ್ಲಿ 2.01 ಟಿಎಂಸಿ, ಎಳನೇ ಪೈಪ್ಲೈನ್ನಲ್ಲಿ 7.76 ಟಿಎಂಸಿ, ಎಂಟನೇಯದರಲ್ಲಿ 2.51 ಟಿಎಂಸಿ ಸೇರಿ ಒಟ್ಟು 24 ಟಿಎಂಸಿ ನೀರು ಸಿಗಲಿದ್ದು, ಈ ನೀರನ್ನು ಬಯಲುಸೀಮೆಗೆ ಹರಿಸುವುದು ಈ ಯೋಜನೆಯ ಬಹುಮುಖ್ಯ ಉದ್ದೇಶವಾಗಿದೆ.
13
+ ಲೋಕಾರ್ಪಣೆ ಸಂಭ್ರಮ :ಎತ್ತಿನಹೊಳೆ ಯೋಜನೆಯ ಉದ್ಘಾಟನೆಯ ಸಂದರ್ಭದಲ್ಲಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿತ್ತು. ಗೌರಿ ಹಬ್ಬದ ದಿನದಂದು ನಡೆದ ಉದ್ಘಾಟನ ಕಾರ್ಯಕ್ರಮಕ್ಕೂ ಮುನ್ನ ವಿಶೇಷ ಗಂಗಾಪೂಜೆ, ಯಜ್ಞ , ಹೋಮಗಳನ್ನು ನಡೆಸಲಾಯಿತು. ಬಹು ನಿರೀಕ್ಷಿತ ಸಮಗ್ರ ಕುಡಿಯುವ ನೀರಿನ ಎತ್ತಿನ ಹೊಳೆ ಯೋಜನೆಯ ಮೊದಲ ಹಂತಕ್ಕೆ ಸಕಲೇಶಪುರ ತಾಲೂಕಿನ ಬೈಕೆರೆ ದೊಡ್ಡನಗರ ಪಂಪ್ ಹೌಸ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
14
+ ಜಲಸಂಪನೂಲ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿಯವರ ಜೊತೆ ಜಂಟಿಯಾಗಿ ಆರತಿ ಬೆಳಗುವ ಮೂಲಕ ಗಮನ ಸೆಳೆದರು. ಬಳಿಕ ದೊಡ್ಡ ಸಾಗರದ ಗ್ರಾಮದ ವಿತರಣಾ ತೊಟ್ಟಿಯ 3 ರಲ್ಲಿ ಟೇಪ್ ಕತ್ತರಿಸಿ ಉದ್ಘಾಟಿಸಿದರು. ಯೋಜನೆಯನ್ನು ಪರಿಶೀಲಿಸುವ ವೇಳೆ ನೀರಿನ ಹರಿವು ಹಾಗೂ ಇತರ ಮಾಹಿತಿಗಳ ಕುರಿತು ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯವರಿಗೆ ಸುದೀರ್ಘ ವಿವರಣೆ ನೀಡಿದರು.
15
+ ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ ಸಚಿವರಾದ ಡಾ. ಜಿ. ಪರಮೇಶ್ವರ್, ಎಂ.ಬಿ. ಪಾಟೀಲ್ ಕೆ.ಜೆ. ಜಾರ್ಜ್, ಕೆ.ಎನ್. ರಾಜಣ್ಣ , ಎನ್.ಎಸ್. ಬೋಸ್ರಾಜ, ಕೆ.ಎಚ್. ಮುನಿಯಪ್ಪ ಹಾಗೂ 5 ತಾಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಇದಕ್ಕೂ ಮುನ್ನ 7 ಕಡೆ ಏತ ನೀರಾವರಿ ಯೋಜನೆಗಳಿಗೆ ಸಚಿವರುಗಳು ಚಾಲನೆ ನೀಡಿದರು.
16
+ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಂಗಳೂರು ಜಿಲ್ಲೆಗಳ 29 ತಾಲೂಕುಗಳಿಗೆ ಕುಡಿಯುವ ನೀರು ಹಾಗು ಅಂತರ್ಜಲ ಅಭಿವೃದ್ಧಿಗೆ ಎತ್ತಿನಹೊಳೆ ಯೋಜನೆಗೆ ನೀರನ್ನು ಬಳಕೆ ಮಾಡಲಾಗುತ್ತಿದೆ.ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿಯಲ್ಲಿ ನಡೆದ ಬೃಹತ್ ಸಾರ್ವಜನಿಕ ಸಮಾರಂಭದಲ್ಲಿ ಮುಖ್ಯಮಂತ್ರಿ ಹಾಗೂ ಸಂಪುಟ ಸಚಿವರು ಪಾಲ್ಗೊಂಡಿದ್ದರು.
eesanje/url_46_25_10.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಗೌರಿ-ಗಣೇಶ ಹಬ್ಬಕ್ಕೆ ಖರೀದಿ ಭರಾಟೆ
2
+ ,
3
+ ಬೆಂಗಳೂರು,ಸೆ.5-ಗೌರಿ-ಗಣೇಶ ಹಬ್ಬಕ್ಕೆ ರಾಜ್ಯದ ಜನತೆ ಸಜ್ಜಾಗುತ್ತಿದ್ದು, ಹಬ್ಬಕ್ಕೆ ಬೇಕಾಗುವ ಹೂ-ಹಣ್ಣು, ಪೂಜಾ ಸಾಮಗ್ರಿಗಳು, ಗೌರಿ-ಗಣೇಶ ಮೂರ್ತಿಗಳು ಸೇರಿದಂತೆ ಅಗತ್ಯ ವಸ್ತುಗಳ ಖರೀದಿ ಭರಾಟೆ ಜೋರಾಗಿದೆ.
4
+ ವರಮಹಾಲಕ್ಷ್ಮಿ ಹಬ್ಬದ ವೇಳೆ ಗಗನಕ್ಕೇರಿದ ಹೂ-ಹಣ್ಣಿನ ಬೆಲೆ ಇದೀಗ ಸ್ವಲ್ಪ ಇಳಿಕೆ ಕಂಡಿದೆ. ಆದರೆ ತರಕಾರಿ ಬೆಲೆ ಹೆಚ್ಚಾಗಿದ್ದು, ಗ್ರಾಹಕರಿಗೆ ಈ ಬಾರಿ ಬೆಲೆ ಏರಿಕೆಯ ಬಿಸಿ ಅಷ್ಟೇನೂ ತಟ್ಟಿಲ್ಲ.
5
+ ಬೆಂಗಳೂರಿನ ಕೆ.ಆರ್‌.ಮಾರುಕಟ್ಟೆ, ಯಶವಂತಪುರ, ದಾಸನಪುರ, ಸೀಗೆಹಳ್ಳಿ, ಮಲ್ಲೇಶ್ವರಂ ಸೇರಿದಂತೆ ಜಿಲ್ಲೆ ಹಾಗೂ ತಾಲೂಕು ಮಾರುಕಟ್ಟೆಗಳಲ್ಲಿ ಮುಂಜಾನೆಯೇ ಜನರು ಜಮಾಯಿಸಿ ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಕೊಳ್ಳುತ್ತಿದ್ದ ದೃಶ್ಯಗಳು ಕಂಡುಬಂದವು.
6
+ ಕನಕಾಂಬರ ಈಗಲೂ ದುಬಾರಿ :ವರಮಹಾಲಕ್ಷ್ಮಿ ಹಬ್ಬದಲ್ಲಿ ಹೆಚ್ಚಾಗಿದ್ದ ಹೂವಿನ ಬೆಲೆ ಇದೀಗ ತುಸು ಕಡಿಮೆಯಾಗಿದೆ. ಆದರೆ ಕನಕಾಂಬರ ಮಾತ್ರ ಅದರ ಹೆಸರಿಗೆ ತಕ್ಕಂತೆ ಅಂಬರದಲ್ಲಿದೆ. ಕೆಜಿಗೆ 2,500 ರೂ.ಗೆ ಮಾರಾಟವಾಗುತ್ತಿದೆ.
7
+ ಮಲ್ಲಿಗೆ ಪ್ರತಿ ಕೆಜಿಗೆ 300 ರಿಂದ 600, ಗುಲಾಬಿ 150 ರಿಂದ 200, ಸೇವಂತಿಗೆ 150 ರಿಂದ 200, ಸುಗಂಧರಾಜ 100 ರಿಂದ 200, ಮಾರಿಗೋಲ್ಡ್ 200 ರೂ.ಗಳಿಗೆ ಮಾರಾಟವಾಗುತ್ತಿದೆ.
8
+ ಗರಿಕೆ, ಬೇಲದಹಣ್ಣು, ಎಕ್ಕದ ಹೂವಿನ ಹಾರಕ್ಕೆ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಿದ್ದು, ಬಾಳೆಕಂದು, ಮಾವಿನಸೊಪ್ಪು ಮಾರಾಟ ಜೋರಾಗಿದೆ. ಜೋಡಿ ಬಾಳೆಕಂದಿಗೆ 60 ರೂ., ಮಾವಿನಸೊಪ್ಪಿನ ಕಟ್ಟಿಗೆ 20 ರೂ., ಗರಿಕೆ 30 ರೂ., ಬೆಲೆ ಇದೆ.
9
+ ಇನ್ನು ಥರೇವಾರಿ ಗೌರಿ-ಗಣೇಶ ಮೂರ್ತಿಗಳು ಮಾರುಕಟ್ಟೆಗೆ ಬಂದಿದ್ದು, ಗಾತ್ರಕ್ಕೆ ತಕ್ಕಂತೆ ಬೆಲೆ ನಿಗಧಿ ಮಾಡಿ ಮಾರಾಟ ಮಾಡಲಾಗುತ್ತಿದೆ.
10
+ ತರಕಾರಿ ಬೆಲೆಯಲ್ಲಿ ಏರಿಕೆ :ಅಡುಗೆ ಮನೆಯ ಕೆಂಪು ಸುಂದರಿ ಹಾಗೂ ಲಾಟರಿ ಬೆಳೆ ಎಂದೇ ಹೆಸರಾಗಿರುವ ಟೊಮ್ಯಾಟೊ ಹೊರತುಪಡಿಸಿದರೆ ಎಲ್ಲಾ ತರಕಾರಿಗಳ ಬೆಲೆ ಹೆಚ್ಚಾಗಿಯೇ ಇದೆ.ಕ್ಯಾರೆಟ್‌ ಕೆ.ಜಿ.ಗೆ 80 ರೂ., ಕ್ಯಾಪ್ಸಿಕಂ 60 ರೂ., ಈರುಳ್ಳಿ 60, ಬೀನ್ಸ್ 60 ರೂ., ಟೊಮ್ಯಾಟೊ 15 ರೂ., ಆಲೂಗಡ್ಡೆ 40 ರೂ., ಬೀಟರೂಟ್‌ 50 ರೂ., ಹಸಿಬಟಾಣಿ 250 ರೂ., ಬೆಳ್ಳುಳ್ಳಿ 500 ರೂ., ಶುಂಠಿ 200 ರೂ.ಗೆ ಮಾರಾಟ ಮಾಡಲಾಗುತ್ತಿದೆ.
11
+ ರಾಜ್ಯದ ವಿವಿಧೆಡೆ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಬೆಳೆಗಳು ನಾಶವಾಗಿದ್ದು, ತರಕಾರಿ ಬೆಲೆ ಏರಿಕೆಯಾಗಿದೆ. ಅದರಲ್ಲೂ ಸೊಪ್ಪಿಗೆ ಹಾನಿಯಾಗಿದ್ದು, ಕೆಲ ದಿನಗಳ ಹಿಂದೆ ಒಂದು ಕಟ್ಟಿಗೆ 20 ರೂ.ಗೆ ಮಾರಾಟವಾಗುತ್ತಿದ್ದ ಕೊತ್ತಂಬರಿ ಸೊಪ್ಪು ಏಕಾಏಕಿ 50 ರೂ.ಗೆ ಮಾಡಲಾಗುತ್ತಿದೆ.
12
+ ಅದೇನೇ ಬೆಲೆ ಹೆಚ್ಚಿರಲಿ, ಕಡಿಮೆಯಿರಲಿ, ನಮ ಸಂಪ್ರದಾಯವನ್ನು ಮುಂದುವರೆಸಿಕೊಂಡು ಹೋಗಬೇಕಲ್ಲ, ಹಬ್ಬಗಳನ್ನು ಮಾಡಲೇಬೇಕು ಎಂದು ನಗರದ ಜನತೆ ಖರೀದಿಯಲ್ಲಿ ತೊಡಗಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು.
eesanje/url_46_25_11.txt ADDED
@@ -0,0 +1,5 @@
 
 
 
 
 
 
1
+ ಬಿಎಂಟಿಸಿ ನಿರ್ವಾಹಕ ಹುದ್ದೆಗಳ ಪರೀಕ್ಷಾ ಕೀ ಉತ್ತರ ಪ್ರಕಟ
2
+
3
+ ಬೆಂಗಳೂರು. ಸೆ.4-ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ ನಿರ್ವಾಹಕ(ಆರ್‌ಪಿಸಿ) ಹುದ್ದೆಗಳ ನೇಮಕಾತಿಗೆ ಸೆ.1ರಂದು ನಡೆದ ಸ್ಪರ್ಧಾತಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಒಂದು ಮತ್ತು ಎರಡರ ಕೀ-ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್‌ಸೈಟಿನಲ್ಲಿ ಪ್ರಕಟಿಸಿದೆ.
4
+ ಪ್ರಕಟಿಸಿರುವ ಕೀ-ಉತ್ತರಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ನಾಳೆ ಸಂಜೆ 5.30 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಆಕ್ಷೇಪಣೆಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ ಪೋರ್ಟಲ್‌ ಮೂಲಕ ಸಲ್ಲಿಸಬೇಕು ಎಂದು ಕೆಇಎ ಪ್ರಕಟಣೆ ತಿಳಿಸಿದೆ.
5
+ ಪ್ರತಿ ಆಕ್ಷೇಪಣೆಗೆ 50 ರೂ. ಶುಲ್ಕ ನಿಗದಿಪಡಿಸಲಾಗಿದ್ದು, ಈ ಶುಲ್ಕವನ್ನು ಮರು ಪಾವತಿಸುವುದಿಲ್ಲ. ಆಕ್ಷೇಪಣೆ ಸಲ್ಲಿಸುವಾಗ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್‌ ಕೋಡ್‌, ಪ್ರಶ್ನೆ ಸಂಖ್ಯೆಗಳ ವಿವರ ಹಾಗೂ ಪೂರಕ ದಾಖಲೆಗಳನ್ನು ಪಿಡಿಎಫ್‌ ರೂಪದಲ್ಲಿ ಸಲ್ಲಿಸಬೇಕು. ಆಕ್ಷೇಪಣೆಗೆ ಸಂಬಂಧಿಸಿದಂತೆ ವಿಷಯ ತಜ್ಞರ ಸಮಿತಿ ನಿರ್ಧರಿಸಿ ತೀರ್ಮಾನಿಸುವ ಕೀ-ಉತ್ತರವು ಅಂತಿಮವಾಗಿರುತ್ತದೆ ಎಂದು ಕೆಇಎ ಹೇಳಿದೆ.
eesanje/url_46_25_12.txt ADDED
@@ -0,0 +1,7 @@
 
 
 
 
 
 
 
 
1
+ ಬಂಗಾಳಕೊಲ್ಲಿಯಲ್ಲಿ ಮೇಲೈ ಸುಳಿಗಾಳಿ : ಕಲ್ಯಾಣ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ
2
+
3
+ ಬೆಂಗಳೂರು. ಸೆ.4-ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದ ಬೆನ್ನಲ್ಲೇ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪರಿಣಾಮದಿಂದ ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇನ್ನೂ ಎರಡು ದಿನ ಮುಂದುವರೆಯಲಿದೆ. ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.
4
+ ಕಲ್ಯಾಣ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ. ಆದರೆ, ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆಗಾಗ್ಗೆ ಕೆಲವೆಡೆ ತುಂತುರು ಇಲ್ಲವೆ ಹಗುರ ಮಳೆಯಾಗುವ ಸಾಧ್ಯತೆಗಳಿವೆ.
5
+ ಕೆಲವೆಡೆ ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯು ಆಂಧ್ರ ಪ್ರದೇಶದ ಕಡೆಗೆ ಸಾಗುತ್ತಿರುವುದರಿಂದ ರಾಜ್ಯದ ಮೇಲೆ ನೇರ ಪರಿಣಾವಿಲ್ಲ. ಆದರೂ ರಾಜ್ಯದ ಈಶಾನ್ಯ ಭಾಗದ ಜಿಲ್ಲೆಗಳಾದ ರಾಯಚೂರು, ಯಾದಗಿರಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ತಜ್ಞರು ಹೇಳಿದ್ದಾರೆ.
6
+ ಈಗಾಗಲೇ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ. ಸದ್ಯಕ್ಕೆ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳಿಲ್ಲ. ಸೆಪ್ಟೆಂಬರ್ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಮುನ್ಸೂಚನೆಗಳಿವೆ. ಹೀಗಾಗಿ ಗೌರಿ-ಗಣೇಶ ಹಬ್ಬದ ನಂತರ ಮಳೆ ಹೆಚ್ಚಾಗಬಹುದು ಎಂದು ಅವರು ತಿಳಿಸಿದ್ದಾರೆ.
7
+ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಸೆ.7ರ ನಂತರ ಈ ಭಾಗದಲ್ಲಿ ಮಳೆಯ ತೀವ್ರತೆ ಕಡಿಮೆಯಾಗಲಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ, ಭಾರಿ ಮಳೆಯಾಗುವ ಮುನ್ಸೂಚನೆಗಳಿಲ್ಲ. ಹೀಗಾಗಿ ಯಾವುದೇ ಎಚ್ಚರಿಕೆಯನ್ನು ಘೋಷಣೆ ಮಾಡಿಲ್ಲ.
eesanje/url_46_25_2.txt ADDED
@@ -0,0 +1,6 @@
 
 
 
 
 
 
 
1
+ ಹೆಚ್‌ಎಂಟಿ ಕೈಗಡಿಯಾರ ಕಟ್ಟಲು ಯವಜನರಿಗೆ ನಿಖಿಲ್‌ ಕುಮಾರಸ್ವಾಮಿ ಕರೆ
2
+
3
+ ಬೆಂಗಳೂರು, ಸೆ.6-ನಮ್ಮ ನಾಡಿನ ಹೆಮ್ಮೆಯ ಪ್ರತೀಕವಾದ ಹೆಚ್‌ಎಂಟಿ ಕೈಗಡಿಯಾರಗಳನ್ನೇ ಯುವಜನರು ಕಟ್ಟಬೇಕು ಎಂದು ಜೆಡಿಎಸ್‌‍ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ವಿನಂತಿಸಿದ್ದಾರೆ.
4
+ ನಾನು ಹೆಚ್‌ಎಂಟಿ ಕೈಗಡಿಯಾರ ಕಟ್ಟಿದ್ದೇನೆ. ನೀವು ಕಟ್ಟಿ ಎಂದು ಅವರು ಎಕ್‌್ಸನಲ್ಲಿ ಪೊಸ್ಟ್‌ ಮಾಡಿದ್ದಾರೆ. ಹೆಚ್‌ಎಂಟಿ ಕೈಗಡಿಯಾರ ಒಂದು ಕಾಲದಲ್ಲಿ ಭಾರತದ ಹೃದಯ ಬಡಿತವಾಗಿತ್ತು. ಎಲ್ಲರ ಪಾಲಿಗೂ ಅದು ನಿತ್ಯ ನಾಡಿಯಾಗಿತ್ತು ಎಂದಿದ್ದಾರೆ.
5
+ ನಮ ತಲೆಮಾರಿನ ಯುವಜನರಿಗೆ ಎಚ್‌ಎಂಟಿ ವಾಚ್‌ ಎಂದರೆ ಅದೊಂದು ದಂತಕಥೆ. ಕೇಂದ್ರ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ನನ್ನ ತಂದೆಯವರು ಗೌರಿಹಬ್ಬದ ದಿನವಾದ ಇಂದು ಹೆಚ್‌ಎಂಟಿ ಕೈಗಡಿಯಾರವನ್ನು ಖರೀದಿಸಿ ನನ್ನ ಕೈಗೆ ಕಟ್ಟಿದರು ಎಂದು ಹೇಳಿದ್ದಾರೆ.
6
+ ಎಚ್‌ಎಂಟಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ ಕೋಹ್ಲಿ ಮತ್ತಿತರ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು ಎಂದು ಅವರು ತಿಳಿಸಿದ್ದಾರೆ.
eesanje/url_46_25_3.txt ADDED
@@ -0,0 +1,9 @@
 
 
 
 
 
 
 
 
 
 
1
+ ಅದ್ಧೂರಿ ದಸರಾಗೆ ಸಕಲ ಸಿದ್ಧತೆ
2
+
3
+ ಮೈಸೂರು, ಸೆ.5– ಈ ಬಾರಿ ಅದ್ದೂರಿ ದಸರಾ ಆಚರಣೆಗೆ ತೀರ್ಮಾನಿಸಿದ್ದು, ಅದಕ್ಕಾಗಿ ರಚಿಸಿರುವ 19 ಉಪಸಮಿತಿಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌ಸಿ ಮಹದೇವಪ್ಪ ತಿಳಿಸಿದರು.
4
+ ಅರಮನೆ ಸಭಾಂಗಣದಲ್ಲಿ ಹಮಿ ಕೊಂಡಿದ್ದ ದಸರಾ ಉಪಸಮಿತಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಎಲ್ಲಾ ಸಮಿತಿಯ ಅಧಿಕಾರಿಗಳು ಸೂಕ್ತ ತಯಾರಿ ಮಾಡಿಕೊಂಡು ಅಚ್ಚುಕಟ್ಟಾಗಿದಸರಾ ಆಚರಣೆ ಮಾಡಬೇಕು ಎಂದು ಸೂಚಿಸಿದರು.
5
+ ಸ್ತಬ್ಧ ಚಿತ್ರಗಳು ನಮ ಸಂಸ್ಕೃತಿಯನ್ನು ಬಿಂಬಿಸುವಂತೆ ಹಾಗೂ ಜನರಿಗೆ ಸಾಮಾಜಿಕ ಸಂದೇಶ ಸಾರುವಂತೆ ಇರಬೇಕು. ಸಂವಿಧಾನದ ಸಂದೇಶ, ಪೂರ್ವ ಪೀಠಿಕೆಯ ಮಹತ್ವವನ್ನು ತಿಳಿಸುವ ಸ್ಥಬ್ದ ಚಿತ್ರ ತಯಾರಿಕೆ ಮಾಡಬೇಕು ಎಂದು ಸಲಹೆ ನೀಡಿದರು.
6
+ ರೈತರು ದೇಶದ ಬೆನ್ನೆಲುಬು. ರೈತ ದಸರಾದಲ್ಲಿ ರೈತರಿಗೆ ಅನುಕೂಲ ವಾಗುವ ಕೃಷಿ ಸಾಧನ ಸಲಕರಣೆಗಳ ಪ್ರದರ್ಶನ ಏರ್ಪಡಿಸಬೇಕು. ಸಬ್ಸಿಡಿ ದರದಲ್ಲಿ ದೊರೆಯುವ ಆದುನಿಕ ಕೃಷಿ ಸಲಕರಣೆಗಳ ಬಗ್ಗೆ ಮಾಹಿತಿ ಒದಗಿಸಬೇಕು.
7
+ ದಸರಾ ಕ್ರೀಡಾಕೂಟಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸ್ಪರ್ಧಿಗಳು ಭಾಗವಹಿಸುತ್ತಾರೆ. ಇವರಿಗೆ ಉತ್ತಮ ಊಟ ಹಾಗೂ ವಸತಿ ಸೌಲಭ್ಯ ಕಲ್ಪಿಸಬೇಕು. ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಮ್ಮ ದೇಶದ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಬೇಕು ಎಂದರು.
8
+ ಮಕ್ಕಳಿಗೆ ಚಿತ್ರ ಕಲಾ ಸ್ಪರ್ಧೆಗಳನ್ನು ಆಯೋಜನೆ, ಕರಕುಶಲ ವಸ್ತುಗಳ ಸ್ಪರ್ಧೆ, ವಿಶಿಷ್ಟ ಕವಿಗೋಷ್ಠಿ ಆಯೋಜನೆ ಮಾಡಬೇಕು, ಆಹಾರ ಮೇಳದಲ್ಲಿ ಸ್ವಚ್ಚತೆಯನ್ನು ಕಾಪಾಡಿ ಕೊಳ್ಳಬೇಕು.
9
+ ದಸರಾ ಚಲನಚಿತ್ರೋತ್ಸವದಲ್ಲಿ ಸಾಮಾಜಿಕ ಕಳಕಳಿಯುಳ್ಳ ಕಲಾತಕ ಚಿತ್ರಗಳ ಪ್ರದರ್ಶನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷೀಕಾಂತ ರೆಡ್ಡಿ, ಜಿಪಂ ಸಿಇಒ ಕೆ ಎಂ ಗಾಯತ್ರಿ, ನಗರ ಪೊಲೀಸ್‌‍ ಆಯುಕ್ತರಾದ ಸೀಮಾ ಲಾಟ್ಕರ್‌, ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ವಿಷ್ಣುವರ್ಧನ್‌, ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು ಹಾಗೂ ಉಪಸಮಿತಿಗಳ ಅಧಿಕಾರಿಗಳು ಉಪಸ್ಥಿತರಿದ್ದರು.
eesanje/url_46_25_4.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಚಿತ್ರರಂಗದಲ್ಲಿ ಮಹಿಳೆಯರಿಗೆ ಕಿರುಕುಳ ಸಮಸ್ಯೆಗಳ ಅಧ್ಯಯನಕ್ಕೆ ಸಮಿತಿ ರಚನೆ : ಸಿಎಂ
2
+
3
+ ಬೆಂಗಳೂರು,ಸೆ.5-ಕನ್ನಡ ಚಿತ್ರರಂಗದಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಿಸುವುದು ಹಾಗೂ ಇತರ ಸಮಸ್ಯೆಗಳ ಅಧ್ಯಯನಕ್ಕಾಗಿ ಸಮಿತಿ ರಚಿಸುವ ಕುರಿತಂತೆ ಸವಿಸ್ತಾರ ಚರ್ಚೆಯ ಬಳಿಕ ನಿರ್ಧಾರ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಫೈರ್ ತಂಡಕ್ಕೆ ಭರವಸೆ ನೀಡಿದ್ದಾರೆ.
4
+ ಚಿತ್ರರಂಗದಲ್ಲಾಗುತ್ತಿರುವ ತಾರತಮ್ಯ ಹಾಗೂ ಕಿರುಕುಳದ ತನಿಖೆಗಾಗಿ ಕೇರಳದ ಮಾದರಿಯಲ್ಲಿ ನ್ಯಾಯಾಂಗ ಆಯೋಗ ರಚಿಸಬೇಕು ಎಂದು ಚಿತ್ರರಂಗದಲ್ಲಿನ ಹಕ್ಕುಗಳು ಹಾಗೂ ಸಮಾನತೆಗಾಗಿ ಶ್ರಮಿಸುತ್ತಿರುವ ಫೈರ್ ಸಂಘ ಟನೆ ಮುಖಂಡರು ಇಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ನೀಡಿದರು.
5
+ ಇದಕ್ಕೆ ಸಕಾರಾತಕವಾಗಿ ಸ್ಪಂದಿಸಿದ ಸಿದ್ದರಾಮಯ್ಯ ಅವರು, ಮನವಿಯನ್ನು ಸ್ವೀಕರಿಸಿ ಇದು ಗಂಭೀರವಾದ ವಿಚಾರ, ಮತ್ತೊಮೆ ನಿಮ ತಂಡದ ಜೊತೆ ಸವಿಸ್ತಾರವಾದ ಚರ್ಚೆ ನಡೆಸುತ್ತೇನೆ. ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.ಹಿರಿಯ ಪತ್ರಕರ್ತೆ ಡಾ. ವಿಜಯಮ, ಫೈರ್ ಸಂಘಟನೆಯ ಕಾರ್ಯದರ್ಶಿಯಾದ ನಟ ಚೇತನ್, ನಟಿಯರಾದ ಶೃತಿ ಹರಿಹರನ್ ಹಾಗೂ ನೀತು ಶೆಟ್ಟಿ ಒಳಗೊಂಡ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.
6
+ ಕೇರಳದ ಮಲಯಾಳಂ ಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಹಿಂಸೆ ಮತ್ತು ಇತರ ಸಮಸ್ಯೆಗಳನ್ನು ನ್ಯಾಯಮೂರ್ತಿ ಹೇಮಾ ಅವರ ಸಮಿತಿ ಬಹಿರಂಗಪಡಿಸಿದೆ. ಕನ್ನಡ ಚಿತ್ರರಂಗದಲ್ಲೂ ಈ ರೀತಿಯ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ದೇಶದಲ್ಲೇ ಮೊದಲ ಬಾರಿಗೆ ಫೈರ್ ಸಂಸ್ಥೆ ಕನ್ನಡ ಚಿತ್ರೋದ್ಯಮದಲ್ಲಿ ಆತಂರಿಕ ದೂರುಗಳ ಸಮಿತಿಯನ್ನು ರಚಿಸಿದೆ. ಚಲನಚಿತ್ರೋದ್ಯಮದಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಿಸಲು ಪ್ರಯತ್ನಿಸುತ್ತದೆ.
7
+ ಲೈಂಗಿಕ ಕಿರುಕುಳ ಸೇರಿದಂತೆ ಕನ್ನಡ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ತನಿಖೆ ಮಾಡಬೇಕು, ಎಲ್ಲಾ ಮಹಿಳೆಯರಿಗೂ ಸುರಕ್ಷಿತ ಹಾಗೂ ನ್ಯಾಯಯುತ ವಾತಾವರಣ ಸೃಷ್ಟಿಸಲು ಅಗತ್ಯ ನಿಯಮಾವಳಿಗಳನ್ನು ಮಾಡಿಕೊಡಬೇಕು ಎಂದು ಮನವಿ ಮಾಡಲಾಗಿತ್ತು.
8
+ ಸುಪ್ರೀಂಕೋರ್ಟ್ ಅಥವಾ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿತ್ತು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಟಿ ಶೃತಿ ಹರಿಹರನ್, ಕನ್ನಡ ಚಿತ್ರರಂಗದಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಿಸಬೇಕಿದೆ. ಲೈಂಗಿಕ ಕಿರುಕುಳ ಎಂಬುದು ಒಂದು ಭಾಗ ಮಾತ್ರ. ಅದಕ್ಕಿಂತಲೂ ಮುಖ್ಯವಾಗಿ ಕೆಲಸ ಮಾಡಲು ಪೂರಕವಾದ ವಾತಾವರಣ ಸೃಷ್ಟಿಸಬೇಕಿದೆ. ಉತ್ತಮ ಶಾಚಾಲಯ ವ್ಯವಸ್ಥೆ, ಸುರಕ್ಷಿತ ಸಾರಿಗೆ ಹಾಗೂ ಭದ್ರತೆಗಾ���ಿ ಅಗತ್ಯ ನಿಯಮಾವಳಿಗಳನ್ನು ರೂಪಿಸಬೇಕಿದೆ ಎಂದು ಹೇಳಿದರು.
9
+ ನೀತು ಶೆಟ್ಟಿ ಮಾತನಾಡಿ, ಚಿತ್ರರಂಗ ಹೆಣ್ಣುಮಕ್ಕಳಿಗೆ ಕೆಲಸ ಮಾಡಲು ಸುಂದರ ತಾಣವಾಗಬೇಕು. ಲೈಂಗಿಕ ಕಿರುಕುಳ ಎಂಬುದು ಪ್ರತ್ಯೇಕ ವಿಚಾರ. ಚೆಕ್ಬೌನ್‌್ಸ ಆದರೆ ಅದರ ಹಣ ವಾಪಸ್ ಬರುತ್ತದೆಯೋ, ಇಲ್ಲವೋ ಎಂಬ ಆತಂಕ ಕಾಡುತ್ತದೆ. ನಮ ಚಿತ್ರರಂಗ ಎಂಬ ಕಾರಣಕ್ಕೆ ಎಷ್ಟು ದಿನ ಸಹಿಸಿಕೊಳ್ಳಬೇಕು. ಕಾರ್ಪೆಟ್ ವಲಯದಲ್ಲಿ ಈ ರೀತಿ ನಡೆಯುವುದಿಲ್ಲ.
10
+ ಸುರಕ್ಷಿತೆಯ ವಿಷಯ ಬಂದಾಗ ಕ್ಯಾರವಾನ್ನಲ್ಲಿ ಏನು ನಡೆಯಿತು?, ಯಾರು ಚಿತ್ರೀಕರಿಸಿದರು?, ಕೆಟ್ಟ ಕಾಮೆಂಟ್ ಮಾಡಿದರು? ಎಂಬೆೆಲ್ಲಾ ಪ್ರಕರಣಗಳೂ ವರದಿಯಾಗುತ್ತಿವೆ. ಹೀಗಾಗಿ ಹೆಣ್ಣು ಮಕ್ಕಳಿಗೆ ಶಾಂತಿಯುತವಾದ ವಾತಾವರಣ ನಿರ್ಮಾಣವಾಗಬೇಕಿದೆ ಎಂದರು.ಕಡಿಮೆ ಅವಧಿಯಲ್ಲಿ ಸರ್ಕಾರಕ್ಕೆ ಮನವಿ ನೀಡಲು ನಿರ್ಧಾರ ತೆಗೆದುಕೊಳ್ಳಲಾಯಿತು. 162 ಮಂದಿ ಮನವಿ ಪತ್ರಕ್ಕೆ ಸಹಿ ಹಾಕಿದರು. ಬಹಳಷ್ಟು ಜನ ಇದಕ್ಕೆ ಧ್ವನಿಯಾಗಲಿದ್ದಾರೆ ಎಂದು ಹೇಳಿದರು.
eesanje/url_46_25_5.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಸನ್ನಡತೆ ಕೈದಿಗಳ ಬಿಡುಗಡೆ ಸಂಪುಟದಲ್ಲಿ ಚರ್ಚೆ
2
+
3
+ ಬೆಂಗಳೂರು,ಸೆ.5-ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ ಶಿಕ್ಷಾಬಂಧಿ ಖೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡುವ ಕುರಿತು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆಯಿದೆ.
4
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ವಿವಿಧ ಕೇಂದ್ರ ಕಾರಾಗೃಹದಲ್ಲಿರುವ 59 ಜೀವಾವಧಿ ಶಿಕ್ಷಾಬಂಧಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ ಮಾಡುವ ಕುರಿತು ವಿಷಯ ಪ್ರಸ್ತಾಪಗೊಂಡಿದೆ.
5
+ ರಾಜ್ಯಸರ್ಕಾರದ ಮಹತ್ವಾಕಾಂಕ್ಷೆಯ ಪಂಚಖಾತ್ರಿಗಳಲ್ಲೊಂದಾಗಿರುವ ಅನ್ನಭಾಗ್ಯ ಯೋಜನೆಯಡಿ ನೇರ ನಗದು ನೀಡುತ್ತಿದ್ದ ವ್ಯವಸ್ಥೆಯನ್ನು ಬದಲಾವಣೆ ಮಾಡಿ ಇನ್ನು ಮುಂದೆ ಆಹಾರದ ಕಿಟ್ ವಿತರಿಸುವ ಕುರಿತು ಸಮಾಲೋಚನೆ ನಡೆದಿದೆ.
6
+ ಅನ್ನಭಾಗ್ಯ ಯೋಜನೆ ಆರಂಭದಲ್ಲಿ ಅಕ್ಕಿ ಲಭ್ಯವಿಲ್ಲದ ಕಾರಣ ಪ್ರತಿ ಕೆಜಿಗೆ 34 ರೂ. ವಿನಂತೆ 5 ಕೆ.ಜಿ.ಗೆ 170 ರೂ.ಗಳನ್ನು ನೀಡಲಾಗುತ್ತಿತ್ತು. ಲೋಕಸಭೆ ಚುನಾವಣೆ ಬಳಿಕ ರಾಜ್ಯದವರೇ ಆದ ಪ್ರಹ್ಲಾದ್ ಜೋಷಿ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿದ್ದು, ರಾಜ್ಯಸರ್ಕಾರ ಬೇಡಿಕೆ ಸಲ್ಲಿಸಿದರೆ ಅನ್ನಭಾಗ್ಯ ಯೋಜನೆಗೆ ಅಗತ್ಯವಾದ ಅಕ್ಕಿ ಪೂರೈಸುವುದಾಗಿ ಹೇಳಿದರು.ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ದೆಹಲಿಗೆ ತೆರಳಿ ಪ್ರಸ್ತಾವನೆ ಸಲ್ಲಿಸಿ ಬಂದಿದ್ದರು. ಈ ಹಿನ್ನೆಲೆಯಲ್ಲಿ ನಗದು ಬದಲಾಗಿ ಆಹಾರಧಾನ್ಯ ವಿತರಿಸಲು ರಾಜ್ಯಸರ್ಕಾರ ಮುಂದಾಗಿದೆ.
7
+ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ 27.97 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಜವಳಿ ಪಾರ್ಕ್ ಸ್ಥಾಪಿಸಲು ಆಡಳಿತಾತಕ ಅನುಮೋದನೆ ನೀಡಲು ಚರ್ಚಿಸಲಾಗಿದೆ.
8
+ ಉದಯೋನುಖ ತಂತ್ರಜ್ಞಾನಗಳಲ್ಲಿ ಜಾಗತಿಕ ಸ್ಪರ್ಧಾತಕತೆಗೆ ಅನುಗುಣವಾಗಿ ಸ್ಥಳೀಯ ಉದ್ಯೋಗಿಗಳನ್ನು ಕೌಶಲ್ಯಗೊಳಿಸಲು 100 ಕೋಟಿ ರೂ. ವೆಚ್ಚದಲ್ಲಿ ನಿಪುನ್ ಕರ್ನಾಟಕ ಯೋಜನೆ ರೂಪಿಸಲಾಗಿತ್ತು. 24, 25ನೇ ಸಾಲಿನಲ್ಲಿ 10 ಕೋಟಿ ರೂ.ಗಳನ್ನು ಮಂಜೂರು ಮಾಡಿ ಪ್ರಾಯೋಗಿಕವಾಗಿ ಯೋಜನೆ ಜಾರಿಗೊಳಿಸಲು ಹಾಗೂ 2024-29ರ ನಡವಿನ ಕರ್ನಾಟಕ ಜೈವಿಕ ತಂತ್ರಜ್ಞಾನ ನೀತಿ 4.0 ಅನ್ನು ಸಂಪುಟದಲ್ಲಿ ಪರಾಮರ್ಶಿಸುವ ಸಾಧ್ಯತೆಯಿದೆ.
9
+ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯ ನಿರ್ವಹಿಸುತ್ತಿರುವ ಮುರಾರ್ಜಿ ದೇಸಾಯಿ ವಸತಿ ಶಾಲಾ-ಕಾಲೇಜುಗಳಿಗೆ 18.54 ಕೋಟಿ ರೂ. ವೆಚ್ಚದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ವಿವಿಧ ಕಾರ್ಮಿಕ ಕಾಯಿದೆಗಳಡಿ ನೋಂದಣಿ ನವೀಕರಣ, ತಿದ್ದುಪಡಿ ಮತ್ತಿತರ ಸೇವೆಗಳಿಗಾಗಿ ಬಳಕೆದಾರರಿಂದ ಸಂಗ್ರಹಿಸಲಾಗುತ್ತಿರುವ ಶುಲ್ಕ, ದಂಡ ಹಾಗೂ ಮತ್ತಿತರ ದರಗಳನ್ನು ಹೆಚ್ಚಿಸುವ ಚಿಂತನೆಯನ್ನು ಸಂಪುಟ ಸಭೆ ನಡೆಸಿದೆ.
10
+ ಕರ್ನಾಟಕ ನ್ಯಾಯಾಂಗ ಸೇವಾ ನೇಮಕಾತಿ ತಿದ್ದುಪಡಿಗಳನ್ನು ಪರಾಮರ್ಶಿಸಲಾಗಿದೆ. 70 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ಕಿದ್ವಾಯಿ ಸಾರಕ ಗಂಥಿ ಸಂಸ್ಥೆಗೆ ರೇಡಿಯೋ ಥೆರಪಿ ಚಿಕಿತ್ಸೆ ಹಾಗೂ ರೋಗನಿವಾರಕ ಉಪಕರಣಗಳನ್ನು ಖರೀದಿಸಲು, 117.11 ಕೋಟಿ ರೂ. ವೆಚ್ಚದಲ್ಲಿ ಮೈಸೂರಿನಲ್ಲಿ 40 ಹಾಸಿಗೆಗಳ ಸಾಮರ್ಥ್ಯದ ನೆಪ್ರೊ-ನ್ಯೂರಾಲಜಿ ಆಸ್ಪತ್ರೆಯನ್ನು 100 ಹಾಸಿಗೆಗಳ ಸಾಮರ್ಥ್ಯತೆ ಉನ್ನತೀಕರಿಸಲು, ಕಲಬುರಗಿಯಲ್ಲಿ 221.51 ಕೋಟಿ ರೂ. ವೆಚ್ಚದಲ್ಲಿ 150 ಹಾಸಿಗೆಗಳ ಸಾಮರ್ಥ್ಯದ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ ಸ್ಥಾಪಿಸಲು ಹಾಗೂ 16.15 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ನೆಪ್ರೊ-ನ್ಯೂರೊಲಜಿ ಸಂಸ್ಥೆ ಹೊರರೋಗಿ ವಿಭಾಗಕ್ಕೆ ನೂತನ ಕಟ್ಟಡ ನಿರ್ಮಿಸಲು ಆಡಳಿತಾತಕ ಅನುಮೋದನೆ ನೀಡಲು ಚರ್ಚಿಸಲಾಗಿದೆ.
11
+ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸೇವೆಗೆ ಸೇರಿದ ಕೇಂದ್ರ ಸೇವಾ ಸಹಾಯಕರು, ಹಿರಿಯ ಉಪನೋಂದಣಾಧಿಕಾರಿ, ಉಪನೋಂದಣಾಧಿಕಾರಿಗಳನ್ನು ಕೌನ್ಸಿಲಿಂಗ್ ಮೂಲಕ ಕಡ್ಡಾಯ ವರ್ಗಾವಣೆಗೆ ನಿಗಧಿಪಡಿಸಿದ್ದ ದಿನಾಂಕವನ್ನು ಆ.10 ರಿಂದ ಸೆ.30 ರವರೆಗೂ ವಿಸ್ತರಿಸುವ ಬಗ್ಗೆ ಸಚಿವರ ಅಭಿಪ್ರಾಯ ಸಂಗ್ರಹಿಸಲಾಗಿದೆ.
12
+ ಕಾಫಿ ಮಂಡಳಿಯ ಸಹಭಾಗಿತ್ವದಲ್ಲಿ ಸ್ವಸಹಾಯ ಗುಂಪುಗಳ ಸದಸ್ಯರಾಗಿರುವ 1 ಲಕ್ಷ ಮಹಿಳೆಯರಿಗೆ 2,500 ಕಡೆ 25 ಕೋಟಿ ರೂ. ವೆಚ್ಚದಲ್ಲಿ ಕಾಫಿ ಕಿಯೋಸ್ಗಳನ್ನು ಅಳವಡಿಸಲು ಮತ್ತು ಅವುಗಳ ನಿರ್ವಹಣೆಗೆ ತರಬೇತಿ ನೀಡಲು ಚರ್ಚಿಸಲಾಗಿದೆ.
13
+ ಕೇಂದ್ರ ಸರ್ಕಾರ ರೂಪಿಸಿರುವ ಸ್ಕ್ರಾಪಿಂಗ್ ಪಾಲಿಸಿಗೆ ಈ ಮೊದಲು ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿತ್ತು. ಆದರೆ ಅದೇ ಪಾಲಿಸಿಯನ್ನು ಈಗ ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. 15 ವರ್ಷ ಅವಧಿ ಪೂರೈಸಿರುವ ವಾಹನಗಳನ್ನು ಸಾರ್ವಜನಿಕರು ಸ್ವಯಂಪ್ರೇರಿತವಾಗಿ ನಾಶಗೊಳಿಸಲು ಉದ್ದೇಶಿಸಿರುವ ವಾಹನಗಳ ಮೇಲೆ ಕೊನೆಯ ಒಂದು ವರ್ಷದಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿನ ಬಾಕಿ ದಂಡಗಳ ವಸೂಲಿಯಿಂದ ವಿನಾಯಿತಿ ನೀಡುವ ಗಡುವನ್ನು 2026 ರ ಮಾ.31 ರವರೆಗೂ ವಿಸ್ತರಿಸಲು ಕೇಂದ್ರ ಪುರಸ್ಕೃತ ರಾಷ್ಟ್ರೀಯ ನಗರ ವಿದ್ಯುನಾನ ಕಾರ್ಯ ಯೋಜನೆಯನ್ನು ಕರ್ನಾಟಕ ಮುನ್ಸಿಪಾಲ್ ಡಾಟಾ ಸೊಸೈಟಿಯ ಮೂಲಕ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನುಷ್ಠಾನಗೊಳಿಸಲು 37.50 ಕೋಟಿ ರೂ.ಗಳನ್ನು ಒದಗಿಸಲಾಗುತ್ತಿದೆ.
14
+ ಮಹಾದಾಯಿ ಪ್ರವಾಹ್ ಪ್ರಾಧಿಕಾರದ ನಿಧಿಗೆ ಮೊದಲ ಹಂತದಲ್ಲಿ ರಾಜ್ಯದ ಪಾಲಿನ 1.67 ಕೋಟಿ ರೂ.ಗಳನ್ನು ಪಾವತಿಸಲು ಕರ್ನಾಟಕ ವಿಧಾನಮಂಡಲ ಅನರ್ಹತಾ ನಿವಾರಣೆ ವಿಧೇಯಕ 2027 ಅನ್ನು ಸಂಪುಟ ಪರಾಮರ್ಶಿಸಿದೆ.
eesanje/url_46_25_6.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಇವರೇನು ಮನುಷ್ಯರೋ.. ನರ ರಾಕ್ಷಸರೋ..? ರೇಣುಕಾಸ್ವಾಮಿ ತಂದೆ ಆಕ್ರೋಶ
2
+ -
3
+ ಚಿತ್ರದುರ್ಗ,ಸೆ.5-ರೇಣುಕಾ ಸ್ವಾಮಿ ಮಂಡಿಯೂರಿ ಅಂಗಲಾಚಿ ಬೇಡಿ ಕೊಂಡರೂ ಕರುಣೆ ತೋರಿಸದೆ ಕ್ರೂರವಾಗಿ ಕೊಲೆ ಮಾಡಿರುವುದನ್ನು ನೋಡಿ ಸಹಿಸಿಕೊಳ್ಳಲಾಗುತ್ತಿಲ್ಲ ಎಂದು ರೇಣುಕಾಸ್ವಾಮಿಯವರ ತಂದೆ ಕಾಶಿನಾಥಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.ರೇಣುಕಾಸ್ವಾಮಿಯವರ 2 ಫೋಟೊಗಳು ವೈರಲ್ ಆದ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ದರ್ಶನ್ ಹಾಗೂ ಅವರ ಗ್ಯಾಂಗ್ನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
4
+ ನನ್ನ ಮಗ ಎಷ್ಟು ಹಿಂಸೆಯಿಂದ ಒದ್ದಾಡಿರಬಹುದು. ಕಿರುಚಿ ಅತ್ತಿರಬಹುದು ಎಂದು ನೆನೆಸಿಕೊಂಡರೆ ಎದೆನೋವು ಹೆಚ್ಚಾಗುತ್ತದೆ. ಅವರನ್ನು ಬರೀ ರಾಕ್ಷಸರು ಎಂದು ಕರೆದರೆ ಸಾಲುವುದಿಲ್ಲ. ಚಿತ್ರಗಳಲ್ಲಿ ಮಾತ್ರ ನಾವು ರಾಕ್ಷಸರನ್ನು ನೋಡಿ ಕಲ್ಪಿಸಿಕೊಳ್ಳುತ್ತಿದ್ದೆವು. ಇವರು ನಿಜಜೀವನದಲ್ಲಿ ರಾಕ್ಷಸರಿಗಿಂತಲೂ ಭಯಾನಕ ರಾಕ್ಷಸರು.
5
+ ಎಳ್ಳುಕಾಳಷ್ಟೂ ಮಾನವೀಯತೆ ಇಲ್ಲದ ಇವರಿಗೆ ಸರ್ಕಾರವು ನನ್ನ ಮಗನಿಗಾದಂತೆ ಕಠಿಣ ಶಿಕ್ಷೆ ನೀಡಬೇಕು ಎಂದು ಅಳಲು ತೋಡಿಕೊಂಡರು.ನನ್ನ ಮಗನ ಮೇಲೆ ಹಲ್ಲೆ ಮಾಡಿರುವುದನ್ನು ಫೋಟೊದಲ್ಲಿ ನೋಡಿದರೆ ದಿಗ್ಭ್ರಮೆಯಾಗುತ್ತಿದೆ. ತಲೆಸುತ್ತು, ಎದೆನೋವು ಬರುತ್ತಿದೆ. ಆತ ಸಾಯುವಾಗ ಎಷ್ಟು ಒದ್ದಾಡಿರಬಹುದು ಎಂದು ಕಲ್ಪಿಸಿಕೊಳ್ಳಲೂ ಸಾಧ್ಯವಾಗುತ್ತಿಲ್ಲ.
6
+ ಮಗನ ಕೊಲೆಯ ಬಳಿಕ ಆತನ ತಾಯಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ನನ್ನ ತಾಯಿಯೂ ಹಾಸಿಗೆ ಹಿಡಿದಿದ್ದಾರೆ. ರೇಣುಕಾಸ್ವಾಮಿಯ ಪತ್ನಿ ಕುಗ್ಗಿ ಹೋಗಿದ್ದಾರೆ. ಆಕೆ ಗರ್ಭಿಣಿಯಾಗಿದ್ದು, ಮಗುವಿನ ತೂಕ ಕಡಿಮೆಯಾಗಿದೆ. ವೈದ್ಯರು ನಿರಂತರ ಉಪಚಾರ ಮಾಡುತ್ತಿದ್ದಾರೆ ಎಂದರು.
7
+ ಆರೋಪಿ ದರ್ಶನ್ ಸೇರಿದಂತೆ ಇತರರಿಗೆ ಜೈಲಿನಲ್ಲಿ ಸುಖಾಸೀನ ಸೌಲಭ್ಯ ನೀಡುತ್ತಿರುವುದು ಸರಿಯಲ್ಲ. ಹೀಗಾದರೆ ಶಿಕ್ಷೆಗೆ ಅರ್ಥವೇನಿದೆ. ಒಂದು ಮನೆಯಿಂದ ಮತ್ತೊಂದು ಮನೆ ಬದಲಾದಂತೆ ವಾತಾವರಣ ನಿರ್ಮಾಣವಾಗುತ್ತದೆಯೋ ಹೊರತು ಶಿಕ್ಷೆ ಎನಿಸುವುದಿಲ್ಲ. ಈ ವಿಚಾರವಾಗಿ ಸರ್ಕಾರ ನ್ಯಾಯೋಚಿತವಾಗಿ ನಡೆದುಕೊಳ್ಳಬೇಕು ಎಂದು ಹೇಳಿದರು.
8
+ ಕೆಲವರು ಈಗಲೂ ದರ್ಶನ್ ಮೇಲೆ ಅಭಿಮಾನ ಪ್ರದರ್ಶಿಸುತ್ತಿರುವುದನ್ನು ನೋಡಿದರೆ ನನಗೆ ಆತಂಕವಾಗುತ್ತಿದೆ. ನಮ ಮನೆಯ ಮಗನಿಗಾದಂತ ಪರಿಸ್ಥಿತಿ ಅಭಿಮಾನ ತೋರಿಸುವವರ ಮನೆಯಲ್ಲಿ ನಡೆದಿದ್ದರೆ ಏನು ಮಾಡುತ್ತಿದ್ದರು. ರೇಣುಕಾಸ್ವಾಮಿ ತಪ್ಪು ಮಾಡಿದ್ದರೆ ಪೊಲೀಸರಿಗೆ ದೂರು ನೀಡಬಹುದಿತ್ತು.
9
+ ಇಲ್ಲವೇ ತಂದೆ-ತಾಯಿಗಳಾದ ನಮಗೆ ಹೇಳಬಹುದಿತ್ತು, ರೇಣುಕಾಸ್ವಾಮಿ ಬುದ್ಧಿ ಮಾತು ಹೇಳಿದ್ದರೆ ತಿದ್ದಿಕೊಳ್ಳುವ ಸ್ವಭಾವದವನು. ಒಂದು ವೇಳೆ ಹಲ್ಲೆ ಮಾಡಿದ ಬಳಿಕವಾದರೂ ಬಿಟ್ಟು ಕಳುಹಿಸಬಹುದಿತ್ತು. ಅಷ್ಟು ಕ್ರೂರವಾಗಿ ಅತ್ತು ಬೇಡಾಡಿದರೂ ಬಿಡದೇ ಕ್ರೂರವಾಗಿ ಕೊಂದಿರುವುದು ಮಾನವೀಯತೆಯೇ? ಎಂದು ಪ್ರಶ��ನಿಸಿದರು.
10
+ ಸಮಾಜಕ್ಕೆ ಉತ್ತಮ ಸಂದೇಶ ನೀಡುವ, ಜವಾಬ್ದಾರಿ ಸ್ಥಾನದಲ್ಲಿರುವ ನಟ ಈ ರೀತಿ ನಡೆದುಕೊಂಡಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಆತ ಚಿತ್ರರಂಗದಲ್ಲಿ ನಟಿಸುವುದಕ್ಕಿಂತಲೂ ನಿಜ ಜೀವನದಲ್ಲಿ ವ್ಯತಿರಿಕ್ತವಾಗಿ ನಡೆದುಕೊಂಡಿದ್ದಾನೆ ಎಂದು ಕೇಳರಿಯದ, ನೋಡದ ಕ್ರೂರತ್ವವನ್ನು ದರ್ಶನ್ ಮತ್ತು ಅವರ ಸಂಗಡಿಗರು ಪ್ರದರ್ಶಿಸಿದ್ದಾರೆ ಎಂದರು.
11
+ ಅಭಿಮಾನ ಇರಬೇಕು ನಿಜ, ಆದರೆ ದುರಭಿಮಾನ ಇರಬಾರದು. ಕ್ರೂರ ಮನಸ್ಥಿತಿಯಲ್ಲಿ ತಪ್ಪು ಮಾಡಿದವರನ್ನೂ ಅಭಿಮಾನದ ಕಾರಣಕ್ಕಾಗಿ ಬೆಂಬಲಿಸುವುದು ಸರಿಯಲ್ಲ. ಮನುಷ್ಯತ್ವ ಇಲ್ಲದ ರಾಕ್ಷಸರ ಮುಖವಾಡಗಳು ಜನರ ಮುಂದೆ ಬಯಲುಗೊಂಡಿವೆ ಎಂದು ಹೇಳಿದರು. ದರ್ಶನ್ ಮತ್ತು ಆತನ ಸಂಗಡಿಗರಲ್ಲಿ ಯಾರಿಗೂ ಮನುಷ್ಯತ್ವವೇ ಇಲ್ಲವೇ?, ಅಷ್ಟು ಅಂಗಲಾಚಿದರೂ ಕೊಂದು ಹಾಕಿದ್ದಾರೆ ಎಂದರೆ ಇವರನ್ನು ಮನುಷ್ಯರು ಎನ್ನಬೇಕೇ? ಎಂದು ತಮ ದುಃಖ ತೋಡಿಕೊಂಡರು.
12
+ ಇದೇ ವೇಳೆ ಮಾತನಾಡಿದ ರೇಣುಕಾಸ್ವಾಮಿಯವರ ಸಹೋದರಿ ಸುಚಿತ್ರಾ, ದರ್ಶನ್ ಅವರು ರೇಣುಕಾಸ್ವಾಮಿಯನ್ನು ಸಹೋದರ ಎಂದು ಭಾವಿಸಿ ಬುದ್ಧಿ ಹೇಳಿ ಬಿಟ್ಟುಕಳುಹಿಸಬಹುದಿತ್ತು. ಜೈಲಿಗೆ ಹೋದರೂ ದರ್ಶನ್ ಬದಲಾಗಿಲ್ಲ ಎಂದರೆ ದೇವರೇ ಬುದ್ಧಿ ಕೊಡಬೇಕು. ಕಾನೂನು ಯಾವ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡುತ್ತೇವೆ ಎಂದರು.
13
+ ನನ್ನ ಸಹೋದರ ನರಳಿ ಪ್ರಾಣ ಭಿಕ್ಷೆ ಬೇಡಿದ ರೀತಿ ದರ್ಶನ್ ಕೂಡ ಜೀವ ಹಾಗೂ ಜೀವನಕ್ಕಾಗಿ ಅಂಗಲಾಚುವ ಪರಿಸ್ಥಿತಿ ಬರಬೇಕು. ರೇಣುಕಾಸ್ವಾಮಿಯ ಕೊನೆಕ್ಷಣದ ಫೋಟೊಗಳನ್ನು ನೋಡಿ ನಮ ತಂದೆ ಕುಸಿದುಹೋದರು. ಮತ್ತೊಮೆ ನನಗೆ ಆ ಫೋಟೊವನ್ನು ತೋರಿಸಬೇಡಿ ಎಂದು ಅಳಲಾರಂಭಿಸಿದರು. ನಮ ಕುಟುಂಬ ಎಂದಿಗೂ, ಯಾರ ಬಳಿಯೂ ಬೇಡಿರಲಿಲ್ಲ. ಆದರೆ ರೇಣುಕಾಸ್ವಾಮಿ ಕೊನೆಕ್ಷಣದಲ್ಲಿ ಅಂಗಲಾಚಿದ್ದರೂ ಬಿಡದೇ ಇರುವುದು ಘೋರ ಅನ್ಯಾಯ ಎಂದು ಹೇಳಿದರು.
eesanje/url_46_25_7.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ರೇಣುಕಾಸ್ವಾಮಿ ಪರಿ ಪರಿಯಾಗಿ ಬೇಡಿದರೂ ಬಿಡದೆ ಬಗೆಬಗೆಯಾಗಿ ಹಿಂಸಿಸಿ ಕೊಂದ ‘ಡಿ’ ಗ್ಯಾಂಗ್
2
+
3
+ ಬೆಂಗಳೂರು,ಸೆ.5-ಅಣ್ಣಾ….ನಾನು ನಿಮ್ಮ ಪಕ್ಕಾ ಅಭಿಮಾನಿ…. ಇನುಂದೆ ಅಂತಹ ಕೆಲಸ ಮಾಡಲ್ಲ ಪ್ಲೀಸ್ ನನ್ನ ಬಿಟ್ಟುಬಿಡಿ ಎಂದು ರೇಣುಕಾಸಾಮಿ ಕುಕ್ಕರ ಕಾಲಿನಲ್ಲಿ ಕುಳಿತು ಕೈ ಮುಗಿದು ಪರಿ ಪರಿಯಾಗಿ ಬೇಡಿಕೊಂಡರೂ ದರ್ಶನ್ ಅಂಡ್ ಗ್ಯಾಂಗ್ನ ರಾಕ್ಷಸ ಮನಸು ಕರಗದೆ ಆತನನ್ನು ನಿರ್ದಯಿಯಾಗಿ ಕೊಲೆ ಮಾಡಿರುವುದಕ್ಕೆ ಪೊಲೀಸರಿಗೆ ಪಕ್ಕಾ ಸಾಕ್ಷ್ಯ ದೊರೆತಿದೆ.
4
+ ಎರಡು ಲಾರಿಗಳ ಮಧ್ಯೆ ಬಿಳಿ ಬನಿಯನ್ ಮತ್ತು ನೀಲಿ ಜೀನ್‌್ಸ ತೊಟ್ಟ ರೇಣುಕಾಸ್ವಾಮಿ ಕುಕ್ಕರ ಕಾಲಿನಲ್ಲಿ ಕುಳಿತು ಪ್ರಾಣ ಬಿಕ್ಷೆ ನೀಡುವಂತೆ ಪರಿ ಪರಿಯಾಗಿ ಬೇಡಿಕೊಳ್ಳುತ್ತಿರುವ ಪೋಟೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಈ ನನ್ನ ಮಗನನ್ನು ಯಾವುದೆ ಕಾರಣಕ್ಕೂ ಜೀವ ಸಹಿತ ಉಳಿಸಬೇಡಿ ಎಂದು ಪವಿತ್ರಾಗೌಡ ಉಳಿದ ಆರೋಪಿಗಳನ್ನು ಪ್ರೋತ್ಸಾಹಿಸುತ್ತಿರುವುದನ್ನು ಆರೋಪಿಯೊಬ್ಬ ಸೆರೆ ಹಿಡಿದಿರುವುದರಿಂದ ದರ್ಶನ್ ಅಂಡ್ ಗ್ಯಾಂಗ್ನ ಪ್ರತಿಯೊಂದು ಕೃತ್ಯವೂ ರೆಕಾರ್ಡ್ ಅಗಿ ಹೋಗಿದೆ.
5
+ ಅಷ್ಟೆ ಆಗಿದ್ದರೆ ಪರ್ವಾಗಿಲ್ಲ.. ದರ್ಶನ್ ಅಂಡ್ ಟೀಮ್ನ ಪ್ರತಿಯೊಂದು ಕೃತ್ಯವನ್ನು ತನ್ನ ಫೋನಿನಲ್ಲಿ ಸೆರೆ ಹಿಡಿದ ಆರೋಪಿ ಅಷ್ಟು ದೃಶ್ಯಗಳನ್ನು ತನ್ನ ಮತ್ತೊಬ್ಬ ಸ್ನೇಹಿತನಿಗೆ ಕಳುಹಿಸಿರುವುದರಿಂದ ಎಲ್ಲಾ ಸಾಕ್ಷ್ಯಗಳು ಪೊಲೀಸರ ಕೈ ಸೇರಿವೆ. ಹೀಗಾಗಿಯೇ ಒಂದು ಜೀವ ತೆಗೆಯಲು ಪ್ರೋತ್ಸಾಹಿಸಿದ ಪವಿತ್ರಾಗೌಡ ಅವರನ್ನು ಎ-ಒನ್ ಆರೋಪಿಯನ್ನಾಗಿ ಮಾಡಲಾಗಿದೆ.
6
+ ಹೇಗೆ ನಡೆಯಿತು ಕೊಲೆ: ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಅಪಹರಿಸಿದ ದಾಸನ ಗ್ಯಾಂಗ್ ಸೀದಾ ಆತನನ್ನು ಪಟ್ಟಣಗೆರೆಯಲ್ಲಿನ ಜಯಣ್ಣ ಶೆಡ್ಗೆ ಕರೆತಂದಿದೆ. ನಂತರ ದರ್ಶನ್ ಸೇರಿದಂತೆ ಆತನ 12 ಮಂದಿ ಚೇಲಾಗಳು ಮನಸ್ಸೋ ಇಚ್ಚೆ ಥಳಿಸಿದ್ದಾರೆ.
7
+ ಮೊದಲು ರೇಣುಕಾಸ್ವಾಮಿಯ ಬಟ್ಟೆ ಬಿಚ್ಚಿಸಿದ ಗ್ಯಾಂಗ್ ಬಿಳಿ ಬನಿಯನ್ ಮತ್ತು ನೀಲಿ ಜೀನ್ಸ್ ನಲ್ಲಿದ್ದ ಆತನ ಮೇಲೆ ಲಾಠಿ, ರಿಪೀಸ್ ಪಟ್ಟಿಯಿಂದ ಎಲ್ಲೆಂದರಲ್ಲಿ ಥಳಿಸಿದ್ದಾರೆ. ಈ ಸಂದರ್ಭದಲ್ಲಿ ಪವಿತ್ರಾಗೌಡ ತನ್ನ ಚಪ್ಪಲಿ ತೆಗೆದು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಆಗ ಆಕೆ ಹೊಡೆಯುತ್ತಿದ್ದ ಚಪ್ಪಲಿಯನ್ನು ಕಿತ್ತುಕೊಂಡು ದರ್ಶನ್ ಕೂಡ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ.
8
+ ಮಾತ್ರವಲ್ಲ, ಮೆಗ್ಗಾನ್ ಯಂತ್ರದಿಂದ ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಲಾಗಿದೆ. ಆರೋಪಿಗಳ ಹಲ್ಲೆಯಿಂದ ತಲೆಯಲ್ಲಿ ರಕ್ತ ಸೋರುತ್ತಿದ್ದರೂ ಆತ ಕುಕ್ಕರ ಕಾಲಿನಲ್ಲಿ ಕುಳಿತು ತನ್ನ ಆರಾಧ್ಯ ದೈವ ಎಂದು ಭಾವಿಸಿದ್ದ ದರ್ಶನ್ಗೆ ತನ್ನ ಎರಡು ಕೈಗಳನ್ನು ಮುಗಿದು ಅಣ್ಣಾ ನಾನು ನಿಮ ಕಟ್ಟಾ ಅಭಿಮಾನಿ, ಇನುಂದೆ ಇಂತಹ ಕೆಲಸ ಮಾಡಲ್ಲ ತಪ್ಪಾಯ್ತು… ದಯವಿಟ್ಟು ನನ್ನ ಬಿಟ್ಟುಬಿಡಿ ಎಂದು ಬೇಡಿಕೊಳ್ಳುತ್ತಿದ್ದಾರೆ. ಪವಿತ್ರಾಗೌಡ ಈ ನನ್ನ ಮಗನನ್ನುಯಾವುದೇ ಕಾರಣಕ್ಕೂ ಜೀವ ಸಹಿತ ಉಳಿಸಬೇಡಿ ಎಂದು ಪ್ರೋತ್ಸಾಹಿಸಿದ್ದರಿಂದ ಪ್ರೇರೆಪಿತನಾದ ದರ್ಶನ್ ಆತನ ತಲೆಯನ್ನು ಹಿಂದಿದ್ದ ಲಾರಿಗೆ ಅಪ್ಪಳಿಸಿದ್ದಾರೆ.
9
+ ಅಷ್ಟಾದರೂ ಅವರ ರಾಕ್ಷಸ ಮನಸು ಕರಗದೆ ರೇಣುಕಾಸ್ವಾಮಿಯ ಪ್ಯಾಂಟ್ ಬಿಚ್ಚಿಸಿ ಆತನ ಮರ್ಮಾಂಗಕ್ಕೆ ಜಾಡಿಸಿ ಒದ್ದಾಗ ವಿಲ ವಿಲ ಒದ್ದಾಡಿ ಪ್ರಾಣ ಬಿಟ್ಟಿದ್ದಾನೆ.ರೇಣುಕಾಸ್ವಾಮಿಯ ಪ್ರಾಣ ಪಕ್ಷಿ ಹಾರಿಹೋಯಿತು ಎಂಬುದು ತಿಳಿದಾಗ ಈ ಶವವನ್ನು ಹೇಗಾದರೂ ವಿಲೇವಾರಿ ಮಾಡಿ ಎಂದು ತನ್ನ ಪಟಾಲಂಗೆ ಆದೇಶಿಸಿ ದರ್ಶನ್ ಸ್ಥಳದಿಂದ ಜಾಗ ಖಾಲಿ ಮಾಡುವ ಎಲ್ಲ ದೃಶ್ಯಗಳು ಮೊಬೈಲ್ ಫೋನಿನಲ್ಲಿ ಸೆರೆಯಾಗಿವೆ.
10
+ ಪ್ರಾಣ ಕಳೆದುಕೊಂಡಿದ್ದ ರೇಣುಕಾಸ್ವಾಮಿಯ ದೇಹದ ಮೇಲೆ 39 ಗಾಯದ ಗುರುತುಗಳು ಪತ್ತೆಯಾಗಿರುವುದು ದರ್ಶನ್ ಅಂಡ್ ಗ್ಯಾಂಗ್ನ ರಾಕ್ಷಸಿ ಕೃತ್ಯಕ್ಕೆ ಸಾಕ್ಷಿಯಾಗಿದೆ.12 ಆರೋಪಿಗಳ ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆದು ಎಫ್ಎಸ್ಎಲ್ಗೆ ಕಳುಹಿಸಿದಾಗ ಆರೋಪಿಗಳಲ್ಲೇ ಒಬ್ಬ ತನ್ನ ಫೋನಿನಲ್ಲಿ ಸೆರೆ ಹಿಡಿದಿದ್ದ ಎಲ್ಲಾ ದೃಶ್ಯಗಳು ಪೊಲೀಸರಿಗೆ ಸಿಕ್ಕಿವೆ.
11
+ ಅದರಲ್ಲೂ ರೇಣುಕಾಸ್ವಾಮಿ ಮೇಲೆ ದರ್ಶನ್ ಅಂಡ್ ಗ್ಯಾಂಗ್ ನಡೆಸಿದ್ದ ಭೀಕರ ಹಲ್ಲೇ ದೃಶ್ಯಗಳ ಪ್ರಮುಖ ನಾಲ್ಕು ಫೋಟೋಗಳು ಪೊಲೀಸರಿಗೆ ಪಕ್ಕಾ ಸಾಕ್ಷಿಯಾಗಿವೆ.ಈ ಎಲ್ಲಾ ಸಾಕ್ಷ್ಯಾಧಾರಗಳನ್ನು ಪೊಲೀಸರು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.
eesanje/url_46_25_8.txt ADDED
@@ -0,0 +1,6 @@
 
 
 
 
 
 
 
1
+ ದರ್ಶನ್‌ ಮದುವೆಯಾಗಲು ನಾನು ಸಿದ್ಧ ಎಂದು ಜೈಲಿನ ಬಳಿ ಮಹಿಳೆ ರಂಪಾಟ
2
+ ಬಳ್ಳಾರಿ,ಸೆ.5-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ ಅವರನ್ನು ನೋಡಲೇಬೇಕು ಎಂದು ಮಹಿಳಾ ಅಭಿಮಾನಿಯೊಬ್ಬರು ಬಳ್ಳಾರಿ ಕೇಂದ್ರ ಕಾರಾಗೃಹದ ಮುಂದೆ ಪಟ್ಟು ಹಿಡಿದ ಘಟನೆ ನಡೆದಿದೆ.
3
+ ಬೆಂಗಳೂರಿನಿಂದ ಬಳ್ಳಾರಿಗೆ ತೆರಳಿದ ಲಕ್ಷ್ಮಿ ಎಂಬ ಅಭಿಮಾನಿ ದರ್ಶನ್‌ ಏನು ತಪ್ಪು ಮಾಡಿದ್ದಾರೆ ಎಂದು ಜೈಲಿನಲ್ಲಿಟ್ಟಿದ್ದಾರೆ?, ಬೆಂಗಳೂರು ಜೈಲಿನಲ್ಲಿ ಸಿಗರೇಟ್‌ ಸೇದಿದರು ಎಂಬ ಕಾರಣಕ್ಕಾಗಿ ಬಳ್ಳಾರಿಗೆ ತಂದು ಹಾಕಿದ್ದಾರೆ. ಯಾರೂ ಬೀಡಿ, ಸಿಗರೇಟು ಸೇದುವುದೇ ಇಲ್ಲವೇ?, ಅದೇನು ಮಹಾಪರಾಧವೇ? ಎಂದು ಪ್ರಶ್ನಿಸಿದರು.
4
+ ದರ್ಶನ್‌ರನ್ನು ನೋಡಬೇಕೆಂಬ ಆಸೆ ತುಂಬಾ ಜನಕ್ಕೆ ಇರುತ್ತದೆ. ಬರುವವರಿಗೆ ಅವಕಾಶ ಮಾಡಿಕೊಡಬೇಕು. ಈ ಹಿಂದೆ ನಾನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದೆ. ಅಲ್ಲಿಯೂ ಭೇಟಿಯಾಗಲಿಕ್ಕಾಗಲಿಲ್ಲ. ಹೀಗಾಗಿ ಬಳ್ಳಾರಿಗೆ ಬಂದಿದ್ದೇನೆ. ನಾನು ಅವರೊಂದಿಗೆ ಮಾತನಾಡದೇ ಇದ್ದರೂ ಪರವಾಗಿಲ್ಲ, ನೋಡಲು ಅವಕಾಶ ಕೊಡಿ. ನಾನು ಹಣ್ಣುಹಂಪಲುಗಳನ್ನು ಮಾತ್ರ ತಂದಿದ್ದೇನೆ. ದರ್ಶನ್‌ ಇಷ್ಟಪಟ್ಟರೆ ಚಿಕನ್‌, ಮಟನ್‌ ಕೂಡ ತಂದುಕೊಡುತ್ತೇನೆ ಎಂದು ಹೇಳಿದರು.
5
+ ದರ್ಶನ್‌ ಮೇಲೆ ನನಗೆ ಅತಿಯಾದ ಅಭಿಮಾನ. ಅವರಿಷ್ಟಪಟ್ಟರೆ ನಾನು ಮದುವೆಯಾಗಲೂ ಸಿದ್ಧ. ವಿಜಯಲಕ್ಷ್ಮಿ ಒಬ್ಬರೇ ಹೆಂಡತಿಯಲ್ಲ, ನಾನೂ ಕೂಡ ದರ್ಶನ್‌ ಪತ್ನಿ ಇದ್ದಂತೆ ಎಂದು ಹೇಳಿ ರಂಪಾಟ ಮಾಡಿದ ಅವರು, ರಕ್ತಸಂಬಂಧಿಗಳನ್ನು ಮಾತ್ರ ಭೇಟಿ ಮಾಡಲು ಅವಕಾಶ ಮಾಡಿಕೊಡುವುದಕ್ಕಿಂತ ನಮಂತವರೂ ಭೇಟಿ ಮಾಡಲು ಒಳಗೆ ಬಿಡಬೇಕು ಎಂದು ಹೇಳಿದರು.
6
+ ನಾನು ಗುಲ್ಬರ್ಗದ ಮೂಲದವಳು. ಬೆಂಗಳೂರಿನ ಆರ್‌.ಆರ್‌.ನಗರದಲ್ಲಿದ್ದೆ. ದರ್ಶನ್‌ ಜೈಲಿಗೆ ಹೋದ ದಿನದಿಂದ ಅವರ ಭೇಟಿಗಾಗಿ ಸತತ ಪ್ರಯತ್ನ ಮಾಡುತ್ತಿದ್ದೇನೆ. ಪೊಲೀಸರು ಒಳಗೆ ಬಿಡುವುದಿಲ್ಲ ಎಂದು ಹೇಳುತ್ತಿದ್ದಾರೆ. ದರ್ಶನ್‌ ನೋಡದ ಹೊರತು ನಾನು ಇಲ್ಲಿಂದ ಹೋಗುವುದಿಲ್ಲ ಎಂದು ಮೊಂಡಾಟ ಮಾಡಿದರು.
eesanje/url_46_25_9.txt ADDED
@@ -0,0 +1,8 @@
 
 
 
 
 
 
 
 
 
1
+ ಸೆ.18 ರಂದು ಪಿಜಿಸಿಇಟಿ ಪರೀಕ್ಷೆ
2
+ 2024 ; 18
3
+ ಬೆಂಗಳೂರು,ಸೆ.5-ಎಂಇ, ಎಂಟೆಕ್‌, ಎಂ.ಆರ್ಕಿಟೆಕ್ಚರ್‌ ಕೋರ್ಸ್‌ಗಳ ಪ್ರವೇಶಕ್ಕೆ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (ಪಿಜಿಸಿಇಟಿ) – 2024 ರ ವೇಳಾಪಟ್ಟಿಯನ್ನು ಪರಷ್ಕರಿಸಿದ್ದು, ಸೆ.18 ರಂದು ನಡೆಯಲಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಅಂದು ಮಧ್ಯಾಹ್ನ 1.30 ರಿಂದ 4.30 ರವರೆಗೆ ಪಿಜಿ ಸಿಇಟಿ ಪರೀಕ್ಷೆ ನಡೆಯಲಿದೆ.
4
+ ಪಿಜಿಸಿಇಟಿ ಗೆ ನೋಂದಣಿ ಮಾಡಿ, ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು ಸೆ.11 ರಿಂದ ಪ್ರವೇಶ ಪತ್ರವನ್ನು ಪ್ರಾಧಿಕಾರದ ವೆಬ್‌ಸೈಟ್‌ನಿಂದ ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.ಪಿಜಿಸಿಇಟಿ ಪರೀಕ್ಷೆಯು ಓಎಂಆರ್‌ ಮಾದರಿಯಲ್ಲಿ ಆಫ್‌ಲೈನ್‌ ಮೂಲಕ ನಡೆಸಲಾಗುವುದು ಎಂದು ಕೆಇಎ ಪ್ರಕಟಣೆ ತಿಳಿಸಿದೆ.
5
+ ದಾಖಲೆಗಳ ಪರಿಶೀಲನೆ :2024ನೇ ಸಾಲಿನ ಮೇಕ್‌ಅಪ್‌ (ಮರುಪರೀಕ್ಷೆ) ಅರ್ಹತೆ ಪಡೆದು ಡಿಸಿಇಟಿ 2024ರ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳಿಗೆ ರ್ಯಾಂಕ್‌ ಅನ್ನು ವೆಬ್‌ಸೈಟ್‌ನಲ್ಲೇ ಪ್ರಕಟಿಸಲಾಗಿದೆ.
6
+ ಅರ್ಹ ಅಭ್ಯರ್ಥಿಗಳು ಸೆ.10 ರಂದು ನಿಗಧಿಪಡಿಸಿರುವ ಡಿಪ್ಲೋಮಾ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ ಎಲ್ಲಾ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಲು ಕೆಇಎ ಸೂಚಿಸಿದೆ.
7
+ ದಾಖಲೆಯ ಪರಿಶೀಲನೆಗೆ ಹಾಜರಾಗಿರಬೇಕಿರುವ ಪಾಲಿಟೆಕ್ನಿಕ್‌ ಕಾಲೇಜುಗಳ ವಿವರವನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಪರಿಶೀಲನೆ ಸಂದರ್ಭದಲ್ಲಿ ಅಭ್ಯರ್ಥಿಗಳು ಆನ್‌ಲೈನ್‌ ಅರ್ಜಿ ಸಲ್ಲಿಸುವಾಗ ಕೋರಿರುವ ಕ್ಲೈಮ್‌ಗಳಿಗೆ ಪೂರಕವಾದ ಎಲ್ಲಾ ಶೈಕ್ಷಣಿಕ ಮೂಲ ದಾಖಲೆಗಳನ್ನು ಮತ್ತು ದೃಢೀಕೃತ ಒಂದು ಜೆರಾಕ್‌್ಸ ಪ್ರತಿಗಳನ್ನು ಸಲ್ಲಿಸಲು ತಿಳಿಸಿದೆ.
8
+ ಪರಿಶೀಲನೆ ದಿನದಂದು ಯಾವುದೇ ದಾಖಲೆಯನ್ನು ಹಾಜರುಪಡಿಸಲು ವಿಫಲವಾದ ವಿದ್ಯಾರ್ಥಿಯ ದಾಖಲೆಗಳನ್ನು ಪರಿಶೀಲನೆ ಮಾಡುವುದಿಲ್ಲ ಹಾಗೂ ಅವರ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುವುದಿಲ್ಲ. ಅಂತಹ ವಿದ್ಯಾರ್ಥಿಗಳು ತಮ ಇಚ್ಛೆಯನ್ನು ನೀಡುವುದಕ್ಕೆ ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
eesanje/url_46_260_1.txt ADDED
@@ -0,0 +1,7 @@
 
 
 
 
 
 
 
 
1
+ ಪೀಣ್ಯ ಮೇಲ್ಸೇತುವೆ ಬಂದ್, ವಾಹನ ಸವಾರರು-ಪ್ರಯಾಣಿಕರು ಹೈರಾಣು
2
+ ಬೆಂಗಳೂರು, ಜ.17- ರಾಜಧಾನಿಯಿಂದ ಪ್ರಮುಖ ಜಿಲ್ಲೆ ಹಾಗೂ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ತುಮಕೂರು ರಸ್ತೆ ಪೀಣ್ಯ ಎಲಿವೇಟೆಡ್ ಹೈವೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿರುವ ಹಿನ್ನಲೆಯಲ್ಲಿ ಇಂದು ವಾಹನ ಸವಾರರು ಸಂಚಾರ ದಟ್ಟಣೆಯಲ್ಲಿ ಸಿಲುಕಿ ಪರದಾಡುವಂತಾಗಿತ್ತು.
3
+ ಮೇಲ್ಸೇತುವೆಯಲ್ಲಿ ವಯಾಡಕ್ಟ್ ದುರಸ್ಥಿ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೊಳ್ಳಲಾಗಿದ್ದು ಇದೀಗ ವಯಾಡಕ್ಟ್‍ನ ಗುಣಮಟ್ಟ ಮತ್ತು ಸಮಗ್ರತೆ ಪರಿಶೀಲನೆಗಾಗಿ ಲೋಡ್ ಟೆಸ್ಟಿಂಗ್ ಮಾಡುತ್ತಿರುವ ಹಿನ್ನಲೆಯಲ್ಲಿ ಕಳೆದ ರಾತ್ರಿ 11 ರಿಂದ ಜ.19ರ ಬೆಳಗ್ಗೆ 11 ಗಂಟೆವೆರಗೂ ಮೇಲ್ಸೇತುವೆ ಮೇಲೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದ್ದು ಸರ್ವೀಸ್ ರಸ್ತೆಯಲ್ಲಿ ಸಂಚರಿಸುವಂತೆ ಸಂಚಾರಿ ಪೊಲೀಸರು ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮನವಿ ಮಾಡಿದ್ದಾರೆ.
4
+ ತುಮಕೂರು ರಸ್ತೆಯಲ್ಲಿ ಸಾಮಾನ್ಯವಾಗಿ ವಾಹನಗಳ ದಟ್ಟಣೆ ಹೆಚ್ಚಾಗಿಯೇ ಇರುತ್ತದೆ ಹಗಲು ರಾತ್ರಿ ಒಂದೇ ರಿತಿ ಇರುತ್ತದೆ. ಲಕ್ಷಾಂತರ ವಾಹನಗಳು ಈ ರಸ್ತೆಯ ಮೂಲಕ ಸಂಚರಿಸುತ್ತವೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ದಾವಣಗೆರೆ, ಬಳ್ಳಾರಿ, ರಾಯಚೂರು, ಬೆಳಗಾವಿ, ಹುಬ್ಬಳ್ಳಿ. ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುತ್ತದೆ ಜೊತೆಗೆ ಪುಣೆ, ಮುಂಬೈ, ಮಹಾರಾಷ್ಟ, ರಾಜ್ಯಗಳಿಗೂ ಸಹ ಇದೆ ರಸ್ತೆ ಬಳಸಲಾಗುತ್ತದೆ ಹಾಗಾಗಿ ಈ ರಸ್ತೆ ಸದಾ ಒತ್ತಡದಿಂದ ಕೂಡಿರುತ್ತೆ.
5
+ ಮೂರು ದಿನ ಮೇಲ್ಸೇತುವೆ ಬಂದ್ ಆದ ಹಿನ್ನೆಲೆಯಲ್ಲಿ ಏಕ ಕಾಲದಲ್ಲಿ ಭಾರಿ ಹಾಗೂ ಲಘು ವಾಹನಗಳು ಸರ್ವಿಸ್ ರಸ್ತೆಗೆ ಇಳಿದಿದ್ದರಿಂದ ಭಾರಿ ಸಂಚಾರ ದಟ್ಟಣೆ ಉಂಟಾಗಿತ್ತು ಗೊರಗುಂಟೆ ಪಾಳ್ಯದಿಂದ ಎಂಟನೇ ಮೈಲಿ ತಲುಪಲು ಗಂಟೆಗಳೇ ಬೇಕಾಗುತ್ತಿದೆ. ಜೊತೆಗೆ ಸಿಗ್ನಲ್‍ನಿಂದ ಪ್ರಯಾಣಿಕರು ಹಾಗೂ ವಾಹನ ಸವಾರರು ರಾತ್ರಿಯಿಂದ ಟ್ರಾಫಿಕ್‍ನಲ್ಲಿ ಸಿಲುಕಿ ಹೈರಾಣರಾಗಿದ್ದಾರೆ. ಸಂಚಾರ ದಟ್ಟಣೆ ನಿಯಂತ್ರಿಸಲು ಸಂಚಾರಿ ಪೊಲೀಸರು ಹರಸಾಹಸ ಪಡುವಂತಾಗಿದೆ.
6
+ ಕೆನಡಾದಲ್ಲಿ ಕ್ಷೀಣಿಸಿದ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ
7
+ ಮೇಲ್ಸೇತುವೆ ಮೇಲೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಎರಡು ವರ್ಷಗಳೇ ಆಗಿದೆ. ಅಂದಿನಿಂದ ಬಸ್ ಲಾರಿಗಳು ಸರ್ವಿಸ್ ರಸ್ತೆಯಲ್ಲೇ ಸಂಚರಿಸುತ್ತಿವೆ. ಈಗ ಮೇಲ್ಸೇತುವೆ ಬಂದ್ ಆಗಿದ್ದರಿಂದ ಲಘುವಾಹನಗಳೂ ಕೂಡ ಸರ್ವಿಸ್ ರಸ್ತೆಯಲ್ಲಿ ಸಂಚಸರಿಸುತ್ತಿರುವುದರಿಂದ ದಟ್ಟಣೆ ಹೆಚ್ಚಾಗಿದೆ . ಈ ಮಾರ್ಗಕ್ಕೆ ಬರುವ ಸವಾರರು ಆದಷ್ಟು ಬದಲಿ ಮಾರ್ಗ ಬಳಸಿ ಇಲ್ಲವೆ ನಿಮ್ಮ ಪ್ರಯಾಣವನ್ನು ಮೂರು ದಿನ ಮೂಂದೂಡಿ ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಮೊದಲ ದಿನವಾದ ಇಂದು ಬೆಳಗ್ಗೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮೇಲ್ಸೇತ���ವೆ ಮೇಲೆ ಲೋಡ್ ಮಾಡಲಾಗಿದ್ದ ಭಾರಿ ಲಾರಿಗಳನ್ನು ಪರೀಕ್ಷಾರ್ಥವಾಗಿ ವಯಾಡಕ್ಟ್ ನ ಸಮಗ್ರತೆ ಹಾಗೂ ಗುಣಮಟ್ಟವನ್ನು ಹಂತ ಹಂತವಾಗಿ ಪರಿಶೀಲಿಸುತ್ತಿದ್ದಾರೆ.
eesanje/url_46_260_10.txt ADDED
@@ -0,0 +1,7 @@
 
 
 
 
 
 
 
 
1
+ ತೆರಿಗೆ ಪದ್ಧತಿ ಸರಳೀಕರಣ : ಶಿವಕುಮಾರ್
2
+ ಬೆಂಗಳೂರು,ಜ.16- ಬೆಂಗಳೂರು ನಾಗರಿಕರಿಗೆ ಹೊರೆಯಾಗಿರುವ ಆಸ್ತಿ ತೆರಿಗೆ ಪದ್ಧತಿಯನ್ನು ಜನಸ್ನೇಹಿ ಹಾಗೂ ಸರಳವಾಗಿ ಪರಿಷ್ಕರಣೆ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. ಮಲ್ಲೇಶ್ವರಂನ ಶಿರೂರು ಪಾರ್ಕ್‍ನ ಗುಂಡೂರಾವ್ ಮೆಮೋರಿಯಲ್ ಹಾಲ್‍ನಲ್ಲಿ ಆಯೋಜಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2020 ರಲ್ಲಿ ಬಿಜೆಪಿ ಸರ್ಕಾರ ರಚಿಸಿದ ಬಿಬಿಎಂಪಿ ಕಾಯ್ದೆಯಿಂದ ಆಸ್ತಿ ತೆರಿಗೆ ಮತ್ತು ದಂಡದ ಪ್ರಮಾಣ ದುಬಾರಿಯಾಗಿದೆ ಎಂಬ ಆರೋಪಗಳಿವೆ. ಹಲವು ಕ್ಷೇತ್ರಗಳಲ್ಲಿ ಜನಸ್ಪಂದನ ನಡೆಸಿದಾಗ ಈ ಸಮಸ್ಯೆ ಬಗ್ಗೆ ತಮ್ಮ ಗಮನಕ್ಕೆ ಬಂದಿದೆ. ಹಿರಿಯ ಶಾಸಕ ಅಶ್ವತ್ಥ ನಾರಾಯಣ ಅವರು ಇಂದು ಮಾಹಿತಿ ನೀಡಿದ್ದಾರೆ ಎಂದು ಹೇಳಿದರು.
3
+ ಬೆಂಗಳೂರಿನ ಜನರು ಸಮರ್ಪಕವಾದ ಆಸ್ತಿ ತೆರಿಗೆ ಪಾವತಿಸಬೇಕು. ಇದರಿಂದ ಮಾತ್ರ ಅಭಿವೃದ್ಧಿಪಡಿಸಲು ಸಾಧ್ಯ. 3 ಅಂತಸ್ತಿನ ಮನೆ ಕಟ್ಟಿ, 1 ಅಂತಸ್ತಿಗೆ ಮಾತ್ರ ತೆರಿಗೆ ಕಟ್ಟಿದರೆ ಅದು ಸರಿಯಲ್ಲ. ಸ್ವಯಂ ಘೋಷಿತ ಆಸ್ತಿ ತೆರಿಗೆ ದುಬಾರಿಯಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಅದೇ ರೀತಿ ಬಿಬಿಎಂಪಿ ನೂತನ ಕಾಯ್ದೆಯಲ್ಲಿನ ದುಬಾರಿ ತೆರಿಗೆ ವ್ಯವಸ್ಥೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿಯವರು ಪತ್ರ ಬರೆದಿದ್ದಾರೆ. ಇದರ ಪರಿಷ್ಕರಣೆ ಮಾಡುವ ಅಗತ್ಯವಿದೆ. 30-40 ಚದರ ಅಡಿ ವಿಸ್ತೀರ್ಣದ ನಿವೇಶನದ ಮನೆಗಳಿಗೆ, ಶೆಡ್‍ಗಳಿಗೆ ಸೂಚನೆ ಮಾಡಲಾಗಿದೆ. ಕಂದಾಯ ಮನ್ನಾ ಮಾಡಿ ಬಡವರಿಗೆ ಸಹಾಯವಾಗುವ ತೆರಿಗೆ ಪದ್ಧತಿಯನ್ನು ರೂಪಿಸಲು ಕ್ರಮ ಕೈಗೊಳ್ಳಲಾಗುವುದು. ಮೂರ್ನಾಲ್ಕು ದಿನದಲ್ಲೇ ತೆರಿಗೆ ಕಟ್ಟಿ ಎಂದು ಒತ್ತಡ ಹೇರುವುದನ್ನು ತಪ್ಪಿಸಲಾಗುವುದು ಎಂದರು.
4
+ ಎಲ್ಲರನ್ನೂ ತೆರಿಗೆ ವ್ಯಾಪ್ತಿಗೊಳಪಡಿಸಲಾಗುವುದು. ಮನೆಬಾಗಿಲಿಗೆ ಸಮರ್ಪಕ ಆಸ್ತಿ ದಾಖಲೆಗಳನ್ನು ತಲುಪಿಸಲಾಗುವುದು ಎಂದು ಹೇಳಿದರು. ಬೆಂಗಳೂರಿನಲ್ಲಿ ವಸತಿ ಸಮಸ್ಯೆ ಬಗೆಹರಿಸಿ ಆದ್ಯತೆ ನೀಡಲಾಗುವುದು. ಎಲ್ಲವನ್ನೂ ಉಚಿತವಾಗಿ ಕೊಡಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಫಲಾನುಭವಿಗಳ ವಂತಿಗೆಗೂ ಅವಕಾಶ ಕಲ್ಪಿಸಲಾಗಿದೆ.
5
+ ಮಂತ್ರಾಕ್ಷತೆಯಿಂದ ಹಸಿದ ಹೊಟ್ಟೆ ತುಂಬುವುದಿಲ್ಲ : ಸಚಿವ ಶಿವರಾಜ ತಂಗಡಗಿ
6
+ ಈ ಹಿಂದೆ 1 ಲಕ್ಷ ಮನೆ ಘೋಷಣೆ ಮಾಡಲಾಗಿತ್ತು. ಆದರೆ ಒಂದು ಮನೆಯನ್ನೂ ಕೊಟ್ಟಿಲ್ಲ. ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕಾರವಾಗುವ ಅರ್ಜಿಗಳನ್ನು ಪರಿಶೀಲಿಸಿ ವಸತಿ ಸಮಸ್ಯೆ ಬಗೆಹರಿಸಲು ಪ್ರತ್ಯೇಕ ಸಮಿತಿ ರಚಿಸಲಾಗುವುದು ಎಂದು ಹೇಳಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಫುಟ್‍ಪಾತ್ ವ್ಯಾಪಾರಿಗಳಿಗೆ ಸಹಾಯ ಮಾಡಲು ಸರ್ಕಾರ ಸಿದ್ಧವಿದೆ. ಆದರೆ ರಸ್ತೆ ಮಧ್ಯೆ ಖಾಯಂ ಅಂಗಡಿ ತೆರೆಯುವುದರ ಬದಲಾಗಿ ತಳ್ಳುವ ಗಾಡಿಯಲ್ಲಿ ರಸ್ತೆಯಲ್ಲಿ ವ್ಯಾಪಾರ ಮಾಡಿಕೊಂಡಿದ್ದರೆ ಆಕ್ಷೇಪಣೆಗಳಿಲ್ಲ. ಫುಟ್‍ಪಾತ್ ತೆರವಿಗೆ ಸಂಬಂಧಪಟ್ಟಂತೆ ಹೈಕೋರ್ಟ್‍ನ ಆದೇಶವಿದೆ. ಒತ್ತುವರಿ ತೆರವುಗೊಳಿಸದೇ ಇದ್ದರೆ ಬಿಬಿಎಂಪಿ ಆಯುಕ್ತರು ಜೈಲಿಗೆ ಹೋಗಬೇಕಾಗುತ್ತದೆ ಎಂದರು.
7
+ ಬೆಂಗಳೂರಿನಲ್ಲಿ ಶೀಘ್ರವೇ ನೂತನ ಜಾಹಿರಾತು ನೀತಿಯನ್ನು ಜಾರಿಗೆ ತರಲಾಗುವುದು. ಈಗಾಗಲೇ ಫ್ಲೆಕ್ಸ್, ಬ್ಯಾನರ್‍ಗಳನ್ನು ನಿಷೇಸಲಾಗಿದೆ. ನಿಯಮ ಉಲ್ಲಂಘಿಸಿ ಯಾರೇ ಫ್ಲೆಕ್ಸ್, ಬ್ಯಾನರ್‍ಗಳನ್ನು ಅಳವಡಿಸಿದರೂ, ಅದರಲ್ಲಿ ನನ್ನ ಫೋಟೋ ಹಾಕಿದ್ದರೂ ಕೂಡ ಕೇಸು ದಾಖಲಿಸಿ, ದಂಡ ವಿಸಿ ಎಂದು ಹೇಳಿದರು. ಸಂಚಾರ ದಟ್ಟಣೆ ದೊಡ್ಡ ಸಮಸ್ಯೆಯಾಗಿದೆ. ಇನ್ನು ಕಸ ವಿಲೇವಾರಿಯಲ್ಲಂತೂ ದೊಡ್ಡ ಗ್ಯಾಂಗೇ ಇದೆ. ಈ ಎಲ್ಲಾ ಸಮಸ್ಯೆಗಳಿಗೂ ಸೂಕ್ತ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವುದಾಗಿ ಹೇಳಿದರು.
eesanje/url_46_260_11.txt ADDED
@@ -0,0 +1,9 @@
 
 
 
 
 
 
 
 
 
 
1
+ ಅಯೋಧ್ಯೆ ಉಗ್ರರ ಟಾರ್ಗೆಟ್ , ಕರ್ನಾಟಕದಲ್ಲೂ ಕಟ್ಟೆಚ್ಚರಕ್ಕೆ ಕೇಂದ್ರ ಸೂಚನೆ
2
+ ನವದೆಹಲಿ,ಜ.16- ದೇಶಾದ್ಯಂತ ಹಬ್ಬದ ವಾತಾವರಣ ಉಂಟು ಮಾಡಿರುವ ಅಯೋಧ್ಯೆ ರಾಮಮಂದಿರಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆಯ ಧಾರ್ಮಿಕ ಕಾರ್ಯಕ್ಕೆ ಉಗ್ರರ ಕರಿನೆರಳು ಆವರಿಸಿದ್ದು, ಕರ್ನಾಟಕದಲ್ಲೂ ಹೈ ಅಲರ್ಟ್ ಘೋಷಿಸುವಂತೆ ಕೇಂದ್ರ ಗುಪ್ತಚರ ಇಲಾಖೆ ಸೂಚಿಸಿದೆ.
3
+ ವಿಮಾನ ನಿಲ್ದಾಣ, ಬಂದರುಗಳು, ಪ್ರಮುಖ ದೇವಾಲಯಗಳು, ಸೂಕ್ಷ್ಮ , ಅತಿಸೂಕ್ಷ್ಮ ಸೇರಿದಂತೆ ಎಲ್ಲೆಡೆ ಬಿಗಿಭದ್ರತೆ ಕೈಗೊಳ್ಳಬೇಕೆಂದು ಗುಪ್ತಚರ ವಿಭಾಗ ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.ಗುಪ್ತಚರ ವಿಭಾಗ ಸೂಚನೆ ಕೊಟ್ಟ ಹಿನ್ನಲೆಯಲ್ಲಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧ , ಹೈಕೋರ್ಟ್, ರಾಜಭವನ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬಜ್ಪೆ ವಿಮಾನ ನಿಲ್ದಾಣ,ಬಂದರುಗಳು, ಇಸ್ಕಾನ್ ದೇವಸ್ಥಾನ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಮತ್ತಿತರ ದೇಗುಲಗಳಲ್ಲಿ ಬಿಗಿಭದ್ರತೆಯನ್ನು ಕೈಗೊಳ್ಳಲಾಗಿದೆ.
4
+ ಅತಿಸೂಕ್ಷ್ಮ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರಕನ್ನಡ, ಶಿವಮೊಗ್ಗ, ದಾವಣಗೆರೆ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಕಲಬುರಗಿ ಸೇರಿದಂತೆ ಹಲವು ಕಡೆ ಹದ್ದಿನ ಕಣ್ಣಿಡಲಾಗಿದೆ. ಅಯೋಧ್ಯೆಯಲ್ಲಿ ಇದೇ 22ರಂದು ರಾಮಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದ ವೇಳೆ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆಗಳು ಹಾಗೂ ಐಸಿಸ್ ಪರ ಒಲವು ಹೊಂದಿರುವ ಕೆಲವು ಶಂಕಿತ ಉಗ್ರರು ಅಹಿತಕರ ಘಟನೆ ನಡೆಸಬಹುದೆಂಬ ಮುನ್ನೆಚ್ಚರಿಕೆ ಹಿನ್ನಲೆಯಲ್ಲಿ ಭದ್ರತೆ ಹೆಚ್ಚಿಸುವಂತೆ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರದಲ್ಲಿ ವಿವರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
5
+ ಮಥುರಾದ ಶಾಹಿ ಈದ್ಗಾ ಮಸೀದಿ ಸರ್ವೆಗೆ ಸುಪ್ರೀಂ ತಡೆ
6
+ ವಿಶೇಷವಾಗಿ ಹುಬ್ಬಳ್ಳಿಯ ವಿವಾದಿತ ಈದ್ಗಾ ಮೈದಾನ, ಭಟ್ಕಳ, ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ, ಶಿವಮೊಗ್ಗದ ಅಮೀರಮಾ ಸರ್ಕಲ್ ಮತ್ತಿತರ ಕಡೆ ತಕ್ಷಣವೇ ಭದ್ರತೆಯನ್ನು ಹೆಚ್ಚಳ ಮಾಡುವಂತೆ ಸೂಚನೆ ಕೊಡಲಾಗಿದೆ. ಕೇಂದ್ರ ಗುಪ್ತಚರ ವಿಭಾಗ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಾ ಕಡೆಗಳಲ್ಲಿಯೂ ಜ.22ರವರೆಗೂ ಹೈ ಅಲರ್ಟ್ ಆಗಿರಬೇಕು ಎಂದು ಜಿಲ್ಲಾ ಎಸ್‍ಪಿಗಳಿಗೂ ಪ್ರತ್ಯೇಕವಾಗಿ ಗುಪ್ತಚರ ವಿಭಾಗ ಸೂಚಿಸಿದೆ.
7
+ ಕಮೀಷನರೇಟ್ ಹಾಗೂ ಎಲ್ಲಾ ಜಿಲ್ಲಾ ಎಸ್‍ಪಿಗಳ ಜೊತೆ ನಡೆದ ಸಭೆಯಲ್ಲಿ ಶ್ರೀರಾಮನ ದೇವಸ್ಥಾನ, ಆಂಜನೇಯ ಸ್ವಾಮಿ ದೇವಸ್ಥಾನ ಬಳಿ ಪೆÇಲೀಸರ ಕಣ್ಗಾವಲಿಗೆ ಸೂಚನೆ ನೀಡಲಾಗಿದೆ.ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶದಲ್ಲಿನ ದೇವಾಲಯಗಳ ಬಳಿ ಅಲರ್ಟ್ ಇರಬೇಕು. ಸೂಕ್ಷ್ಮ ಪ್ರದೇಶವೆನ್ನಿಸಿದರೆ ಕೆಎಸ್‍ಆರ್‍ಪಿ ನಿಯೋಜನೆ ಮಾಡುವಂತೆಯೂ ಹೇಳಲಾಗಿದೆ.
8
+ ಪೊಲೀಸರ ಕಣ್ಗಾವಲು:ದೇವಾಲಯಗಳಲ್ಲಿ ಪೂಜೆ ಪುನಸ್ಕಾರ ಹೊರತುಪಡಿಸಿ ಬ��ರೆ ಯಾವುದೇ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಬಾರದು. ದೇವಸ್ಥಾನ ಬಳಿಯಲ್ಲಿ ರಾಜಕೀಯವಾಗಿ ಮಾತನಾಡುವುದು, ಪ್ರತಿಭಟನೆ ಮಾಡುವುದು, ಸಮಾಜದ ಶಾಂತಿಭಂಗ ತರುವ ಘೋಷಣೆ ಕೂಗುವುದು ಸೇರಿದಂತೆ ಇನ್ನಿತರ ಚಟುವಟಿಕೆಗಳ ಮೇಲೆ ಕಣ್ಗಾವಲು ಇರಿಸಬೇಕು ಎಂದು ನಿರ್ದೇಶನ ನೀಡಿದೆ.
9
+ ಇಷ್ಟೇ ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡುವವರ ಮೇಲೆ ಕಣ್ಣಿಡುವಂತೆ ಸೂಚಿಸಲಾಗಿದ್ದು, ಜನವರಿ 22ರವರೆಗೆ ಎಲ್ಲಾ ಅಧಿಕಾರಿಗಳು ತುರ್ತು ಪರಿಸ್ಥಿತಿ ಹೊರತುಪಡಿಸಿ ತಮ್ಮ ವ್ಯಾಪ್ತಿ ಬಿಟ್ಟು ಎಲ್ಲಿಯೂ ತೆರಳಬಾರದೆಂದು ಸೂಚನೆ ನೀಡಲಾಗಿದೆ.
eesanje/url_46_260_12.txt ADDED
@@ -0,0 +1,8 @@
 
 
 
 
 
 
 
 
 
1
+ ‘ಪೂಜಿಸಲೆಂದೇ ಹೂಗಳ ತಂದೆ’ ಕನ್ನಡ ಹಾಡಿಗೆ ಮನಸೋತ ಮೋದಿ
2
+ ಬೆಂಗಳೂರು,ಜ.16- ಕನ್ನಡದ ಹಾಡಿಗೆ ತಲೆದೂಗಿರುವ ಪ್ರಧಾನಿ ನರೇಂದ್ರಮೋದಿ ಆ ಬಗ್ಗೆ ಮೆಚ್ಚುಗೆಯ ನುಡಿಗಳನ್ನಾಡಿದ್ದಾರೆ. ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರು ಯೂಟೂಬ್‍ಲ್ಲಿ ಹಾಡಿರುವ, ಪೂಜಿಸಲೆಂದೇ ಹೂಗಳ ತಂದೆ ಹಾಡಿನ ಲಿಂಕ್‍ನ್ನು ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರಮೋದಿ, ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಿ ಮುಂದೆ ಕೊಂಡೊಯ್ಯುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ.
3
+ ಕನ್ನಡದಲ್ಲಿ ಶಿವಶ್ರೀ ಸ್ಕಂದಪ್ರಸಾದ್ ಅವರ ಈ ನಿರೂಪಣೆಯು ಪ್ರಭು ಶ್ರೀರಾಮನ ಭಕ್ತಿಯ ಭಾವವನ್ನು ಸುಂದರವಾಗಿ ಎತ್ತಿ ತೋರಿಸುತ್ತದೆ. ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವಲ್ಲಿ ಬಹಳ ದೂರ ಸಾಗುತ್ತವೆ ಎಂದು ಬಣ್ಣಿಸಿದ್ದಾರೆ.
4
+ . .#://./9wYmjhC4p5
5
+ ಪೂಜಿಸಲೆಂದೆ ಹೂಗಳ ತಂದೆ ಹಾಡು ಮೂಲತಃ ದೊರೈ-ಭಗವಾನ್ ಜೋಡಿಯಿಂದ ನಿರ್ದೇಶಿಸಲ್ಪಟ್ಟ ರಾಜ್‍ಕುಮಾರ್ ನಟನೆಯ ಎರಡು ಕನಸು ಸಿನಿಮಾದ ಹಾಡು. ಕನ್ನಡದ ಶ್ರೇಷ್ಠ ಪ್ರಣಯ ಚಲನಚಿತ್ರಗಳಲ್ಲಿ ಒಂದೆಂದು ಪರಿಗಣಿಸಲಾಗಿರುವ ಈ ಸಿನಿಮಾ 1974ರಲ್ಲಿ ಈ ಸಿನಿಮಾ ತೆರೆ ಕಂಡಿತ್ತು.
6
+ ಮಗನ ಕೈಯಲ್ಲಿ ಮೂಡಿಬಂದ ರಾಮ ಲಲ್ಲಾ ವಿಗ್ರಹ, ತಾಯಿ ಸಂತಸ
7
+ ಪೂಜಿಸಲೆಂದೆ ಹೂಗಳ ತಂದೆ ಹಾಡಿನ ಸಾಹಿತ್ಯ ಬರೆದವರು ಚಿ. ಉದಯಶಂಕರ್ ಅವರು. ಹಿನ್ನೆಲೆ ಗಾಯನ ಖ್ಯಾತ ಗಾಯಕಿ ಎಸ್ ಜಾನಕಿಯವರು. ಎಂದೆಂದೂ ನಿನ್ನನು ಮರೆತು, ಬಾಡಿಹೋದ ಬಳ್ಳ್ಳಿಯಿಂದ, ಎಂದೂ ನಿನ್ನ ನೋಡುವೆ ಇವುಗಳು ಎರಡು ಕನಸು ಸಿನಿಮಾದ ಇತರ ಹಾಡುಗಳು.
8
+ ಇದೀಗ ಅದೇ ಹಾಡನ್ನು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಭಾವನಾತ್ಮಕವಾಗಿ ಹಾಡಿ ಯೂಟ್ಯೂಬ್‍ನಲ್ಲಿ ಬಿತ್ತರಿಸಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಕೂಡ ಆಲಿಸಿ ತಲೆದೂಗಿದ್ದಾರೆ.
eesanje/url_46_260_2.txt ADDED
@@ -0,0 +1,7 @@
 
 
 
 
 
 
 
 
1
+ ಸೀಟು ಹಂಚಿಕೆ ಚರ್ಚೆ, ದೆಹಲಿಗೆ ಹಾರಿದ ಎಚ್‍ಡಿಕೆ
2
+ ಬೆಂಗಳೂರು, ಜ.17- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರ ಹಂಚಿಕೆ ಅಂತಿಮಗೊಳಿಸುವ ಸಂಬಂಧ ಬಿಜೆಪಿ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಲು ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಬೆಳಿಗ್ಗೆ ದೆಹಲಿಗೆ ತೆರಳಿದ್ದಾರೆ.
3
+ ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲಾಗುತ್ತಿದೆ. ಬಿಜೆಪಿಯೊಂದಿಗೆ ಕ್ಷೇತ್ರಗಳ ಹಂಚಿಕೆ ಇಂದು ಬಹುತೇಕ ಅಂತಿಮಗೊಳ್ಳಲಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಕ್ಷೇತ್ರ ಹಂಚಿಕೆ ಬಗ್ಗೆ ಕುಮಾರಸ್ವಾಮಿ ಮಾತುಕತೆ ನಡೆಸಲಿದ್ದಾರೆ.
4
+ ಸಾಧ್ಯವಾದರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಯಾಗಲಿದ್ದಾರೆ ಎಂದು ಜೆಡಿಎಸ್ ಮೂಲಗಳು ಹೇಳಿವೆ. ಇಂದು ಬೆಳಿಗ್ಗೆ ತಮ್ಮ ಪುತ್ರ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಕುಮಾರಸ್ವಾಮಿ ದೆಹಲಿಗೆ ತೆರಳಿದ್ದಾರೆ. ಬಿಜೆಪಿ ವರಿಷ್ಠರೊಂದಿಗಿನ ಮಾತುಕತೆ ಸಂಜೆಯಷ್ಟರಲ್ಲಿ ಪೂರ್ಣ ಗೊಂಡರೆ ರಾತ್ರಿಯೇ ನಗರಕ್ಕೆ ಅವರು ಮರಳಲಿದ್ದಾರೆ. ಮಾತು ಕತೆ ವಿಳಂಬವಾದರೆ ನಾಳೆ ವಾಪಸ್ಸಾಗಲಿದ್ದಾರೆ ಎಂದು ತಿಳಿಸಿವೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದು, ನಾಲ್ಕರಿಂದ ಐದು ಕ್ಷೇತ್ರಗಳಲ್ಲಿ ಮಾತ್ರ ಜೆಡಿಎಸ್ ಉತ್ಸುಕವಾಗಿದೆ. ಉಳಿದ ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಟ್ಟು ಚುನಾವಣೆಯಲ್ಲಿ ಬೆಂಬಲ ನೀಡಲಿದೆ.
5
+ ಕೆನಡಾದಲ್ಲಿ ಕ್ಷೀಣಿಸಿದ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ
6
+ ಜೆಡಿಎಸ್ ಪ್ರಾಬಲ್ಯವಿರುವ ಹಾಸನ, ಮಂಡ್ಯ, ತುಮಕೂರು, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಬಿಜೆಪಿಯ ಮುಂದೆ ಬೇಡಿಕೆ ಇಡಲಾಗಿದೆ. ತುಮಕೂರು ಕ್ಷೇತ್ರವನ್ನು ಬಿಜೆಪಿಯೇ ಉಳಿಸಿಕೊಳ್ಳುವ ವಿಚಾರವನ್ನು ಜೆಡಿಎಸ್ ಮುಂದಿಟ್ಟಿದೆ ಎನ್ನಲಾಗಿದೆ.
7
+ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಮೈತ್ರಿ ಅಭ್ಯರ್ಥಿಯನ್ನು ಸಹ ಮಾತುಕತೆ ಸಂದರ್ಭದಲ್ಲಿ ಅಂತಿಮಗೊಳಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
eesanje/url_46_260_3.txt ADDED
@@ -0,0 +1,6 @@
 
 
 
 
 
 
 
1
+ ಕಲಬುರ್ಗಿ ಜೈಲು ಬಿಜೆಪಿ ಮುಖಂಡರಿಂದ ತುಂಬಿದೆ : ಪ್ರಿಯಾಂಕ್ ಖರ್ಗೆ
2
+ ಬೆಂಗಳೂರು,ಜ.17-ಕಲಬುರ್ಗಿಯ ಜೈಲು ಬಿಜೆಪಿಯ ಮಾಜಿ ಅಭ್ಯರ್ಥಿಗಳು, ಮುಖಂಡರು, ಕಾರ್ಯಕರ್ತರಿಂದಲೇ ತುಂಬಿ ಹೋಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
3
+ ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಕಲಬುರ್ಗಿಯನ್ನು ತೆಕ್ಕೆಯಲ್ಲಿ ಇಟ್ಟುಕೊಂಡಂತೆ ಟ್ರೋಲ್ ಮಿನಿಸ್ಟರ್ ಪ್ರಿಯಾಂಕ್ ಖರ್ಗೆ ಅವರ ಉಸ್ತುವಾರಿಯಲ್ಲಿ ಬರೀ ಅಕ್ರಮಗಳದೇ ಸದ್ದು. ಜೈಲಿನಲ್ಲಿರುವ ವಿಚಾರಣಾೀಧಿನ ಖೈದಿ ಹಾಗೂ ಜೈಲು ಸಿಬ್ಬಂದಿ ನಡುವೆ ಗಾಂಜಾಕ್ಕಾಗಿ ಹೊಡೆದಾಟ ನಡೆದಿದೆ. ಕಲಬುರ್ಗಿಯಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವುದು ಮಾತ್ರವಲ್ಲದೆ, ಜೈಲುಗಳು ಅಕ್ರಮದ ತಾಣಗಳಾಗಿವೆ ಎಂದು ಆರೋಪಿಸಿತ್ತು.
4
+ ಕೆನಡಾದಲ್ಲಿ ಕ್ಷೀಣಿಸಿದ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ
5
+ ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಕಲಬುರ್ಗಿ ಜೈಲುಗಳು ಸದ್ಯ ಗೂಂಡಾಗಿರಿ, ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ನಿಮ್ಮದೇ ಪಕ್ಷದ ಮಾಜಿ ಅಭ್ಯರ್ಥಿಗಳು, ಮುಖಂಡರು, ಕಾರ್ಯಕರ್ತರಿಂದಲೇ ತುಂಬಿದ್ದು, ಅಲ್ಲಿಯೂ ಅವರ ಪುಂಡಾಟಿಕೆ ಮುಂದುವರೆದಿದೆ. ಆದರೆ ನಿಮಗೆ ಚಿಂತೆ ಬೇಡ. ಜೈಲಿನ ಒಳಗೂ ಅವರ ಪುಂಡಾಟಿಕೆಯನ್ನು ಮಟ್ಟ ಹಾಕುವುದು ನಮಗೆ ಗೊತ್ತಿದೆ ಎಂದು ಹೇಳಿದ್ದಾರೆ.
6
+ ಮುಂದಿನ ದಿನಗಳಲ್ಲಿ ನೀವು ಅವರ ಪೈಕಿ ಯಾರಿಗೆ ಪಕ್ಷದ ಉನ್ನತ ಹುದ್ದೆ ನೀಡಬಹುದು, ಯಾರಿಗೆ ಮುಂದಿನ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ನೀಡಬಹುದು ಎಂಬ ಬಗ್ಗೆ ಚಿಂತೆ ನಡೆಸಿ ಎಂದು ತಿರುಗೇಟು ನೀಡಿದ್ದಾರೆ.
eesanje/url_46_260_4.txt ADDED
@@ -0,0 +1,7 @@
 
 
 
 
 
 
 
 
1
+ : ಶಾಸಕರು-ಕಾರ್ಯಕರ್ತರೂ ಸೇರಿ 70 ಮಂದಿ ನಿಗಮ ಮಂಡಳಿ ಗ್ಯಾರಂಟಿ
2
+ ಬೆಂಗಳೂರು,ಜ.17- ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ನಿಗಮ ಮಂಡಳಿಗಳ ನೇಮಕಾತಿಗೆ ಕೊನೆಗೂ ಕಾಯಕಲ್ಪ ದೊರೆಯುವ ನಿರೀಕ್ಷೆಯಿದ್ದು, 36 ಮಂದಿ ಶಾಸಕರಿಗೆ, 24 ಕಾರ್ಯಕರ್ತರೂ ಸೇರಿದಂತೆ ಒಟ್ಟು 70 ಕ್ಕೂ ಹೆಚ್ಚು ಜನರಿಗೆ ಅಧ್ಯಕ್ಷ ಸ್ಥಾನ ಘೋಷಣೆಯಾಗುವ ಸಾಧ್ಯತೆಗಳಿವೆ.
3
+ ಸುಮಾರು ಕಳೆದೆರಡು ತಿಂಗಳಿನಿಂದಲೂ ನಿಗಮ ಮಂಡಳಿಯ ನೇಮಕಾತಿ ಕುರಿತು ವ್ಯಾಪಕ ಚರ್ಚೆಗಳು ನಡೆಯುತ್ತಲೇ ಇವೆ. ಸರ್ಕಾರ ಕಾಂಗ್ರೆಸ್ ಕಾರ್ಯಕರ್ತರನ್ನು ನಿರ್ಲಕ್ಷಿಸುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಇನ್ನೂ ವಿಳಂಬ ಮಾಡುವುದು ಸೂಕ್ತವಲ್ಲ ಎಂಬ ಕಾರಣಕ್ಕೆ ನಿಗಮ ಮಂಡಳಿಗಳಿಗೆ ನೇಮಕಾತಿ ಮಾಡುವ ನಿಟ್ಟಿನಲ್ಲಿ ಅಂತಿಮ ತೀರ್ಮಾನಗಳಾಗಿವೆ. ಕಾಂಗ್ರೆಸ್ ನಾಯಕರು ಕಳುಹಿಸಿದ್ದ ಪಟ್ಟಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂಕಿತ ಹಾಕಿದ್ದಾರೆ. ಇಂದು ಸಂಜೆಯೊಳಗೆ ಪಟ್ಟಿ ಪ್ರಕಟವಾಗಲಿದೆ ಎಂಬ ಮಾಹಿತಿಗಳಿವೆ.2-3ಕ್ಕಿಂತಲೂ ಹೆಚ್ಚು ಬಾರಿ ಗೆಲುವು ಸಾಸಿದ ಶಾಸಕರನ್ನು ಅದರಲ್ಲೂ ಹಿರಿಯರನ್ನು ನಿಗಮ ಮಂಡಳಿಗಳಿಗೆ ಪರಿಗಣಿಸಲಾಗಿದೆ.
4
+ ನಮ್ಮದು ರಾಜನೀತಿ ಅಲ್ಲ ಧರ್ಮನೀತಿ : ಆಚಾರ್ಯ ಸತ್ಯೇಂದ್ರ ದಾಸ್
5
+ ವಿಧಾನಸಭೆಯ ಉಪಾಧ್ಯಕ್ಷ ಸ್ಥಾನವನ್ನು ನಿರಾಕರಿಸಿ ಎಡವಟ್ಟು ಮಾಡಿಕೊಂಡು ಚಾಮರಾಜನಗರದ ಪುಟ್ಟರಂಗಶೆಟ್ಟಿ, ಕಳೆದ ವಿಧಾನಸಭೆಯ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಕೆ.ಎಂ.ಶಿವಲಿಂಗೇಗೌಡ, ಕೃಷಿ ಸಚಿವ ಚೆಲುವರಾಯಸ್ವಾಮಿಯವರ ಆಪ್ತರಾಗಿರುವ ಬಂಡಿ ಸಿದ್ದನಗೌಡ, ಬಂಗಾರಪೇಟೆ ಕ್ಷೇತ್ರದ ಎಸ್.ಎನ್.ನಾರಾಯಣಸ್ವಾಮಿ, ಸಾಗರ ಕ್ಷೇತ್ರದ ಬೇಳೂರು ಗೋಪಾಲಕೃಷ್ಣ, ಭದ್ರಾವತಿಯ ಬಿ.ಕೆ.ಸಂಗಮೇಶ್, ಶೃಂಗೇರಿಯ ರಾಜೇಗೌಡ,
6
+ ಬಿಳಗಿ ಕ್ಷೇತ್ರದ ಜೆ.ಟಿ.ಪಾಟೀಲ್, ಹಾನಗಲ್‍ನ ಶ್ರೀನಿವಾಸ್ ಮಾನೆ, ರಾಯಚೂರು ಗ್ರಾಮೀಣ ಕ್ಷೇತ್ರದ ಬಸನಗೌಡ ದದ್ದಲ್, ಚಳ್ಳಕೆರೆಯ ಟಿ.ರಘುಮೂರ್ತಿ, ಧಾರವಾಡದ ವಿನಯ್ ಕುಲಕರ್ಣಿ, ಮಾನ್ವಿಯ ಹಂಪಯ್ಯ ನಾಯ್ಕ, ಬೆಂಗಳೂರಿನ ಶಾಂತಿನಗರದ ಎನ್.ಎ.ಹ್ಯಾರಿಸ್, ಗೋವಿಂದರಾಜನಗರ ಕ್ಷೇತ್ರದ ಪ್ರಿಯಾಕೃಷ್ಣ ಸೇರಿದಂತೆ 36 ಕ್ಕೂ ಹೆಚ್ಚು ಮಂದಿ ಶಾಸಕರಿಗೆ ಮತ್ತು ಕೆಲವು ಜಿಲ್ಲಾಧ್ಯಕ್ಷರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ದೊರೆಯುವ ಸಾಧ್ಯತೆಯಿದೆ.
7
+ ಹಿರಿಯ ಶಾಸಕರ ಪೈಕಿ ಕೆ.ಎಂ.ಶಿವಲಿಂಗೇಗೌಡ ಅವರಿಗೆ ಕರ್ನಾಟಕ ಗೃಹ ಮಂಡಳಿ, ನರೇಂದ್ರಸ್ವಾಮಿ ಅವರಿಗೆ ಪರಿಸರ ಮಾಲಿನ್ಯ ನಿಯಂತ್ರಣಾ ಮಂಡಳಿ, ಪುಟ್ಟರಂಗಶೆಟ್ಟಿ ಅವರಿಗೆ ಎಂಎಸ್‍ಐಎಲ್, ಎಸ್.ಎನ್.ನಾರಾಯಣಸ್ವಾಮಿ ಅವರಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಎನ್.ಎ.ಹ್ಯಾರಿಸ್‍ಗೆ ಬಿಡಿಎ, ಬೇಳೂರು ಗೋಪಾಲಕೃಷ್ಣ ಅವರಿಗೆ ಅರಣ್ಯ ಅಭಿವೃದ್ಧಿ ನಿಗಮ, ಬಸನಗೌಡ ದದ್ದಲ್ ಅವರಿಗೆ ವಾಲ್ಮೀಕಿ ಅಭಿವೃದ್ಧಿ ನಿಗಮ ಸೇರಿದಂತೆ ಹಲವು ನಿಗ��ಗಳನ್ನು ಹಂಚಿಕೆ ಮಾಡಲಾಗಿದೆ. ಇಂದು ಸಂಜೆಯೊಳಗಾಗಿ ಪಟ್ಟಿ ಪ್ರಕಟಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.
eesanje/url_46_260_5.txt ADDED
@@ -0,0 +1,7 @@
 
 
 
 
 
 
 
 
1
+ ಖರ್ಗೆ ಎಚ್ಚರಿಕೆ ನಡುವೆಯೂ ಮತ್ತೊಂದು ಸುತ್ತಿನ ಚರ್ಚೆಗೆ ಗ್ರಾಸವಾದ ಯತೀಂದ್ರ ಹೇಳಿಕೆ
2
+ ಬೆಂಗಳೂರು,ಜ.17- ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಮಾಗಡಿ ಶಾಸಕ ಎಸ್.ಸಿ.ಬಾಲಕೃಷ್ಣ ಅವರ ಹೇಳಿಕೆಯ ಬೆನ್ನಲ್ಲೇ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಮಾಜಿ ಶಾಸಕ ಯತೀಂದ್ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯನವರೇ 5 ವರ್ಷ ಮುಂದುವರೆಯಲಿದ್ದಾರೆ ಎಂದು ನೀಡಿರುವ ಹೇಳಿಕೆ ಮತ್ತೊಂದು ಸುತ್ತಿನ ಚರ್ಚೆಗೆ ಗ್ರಾಸವಾಗಿದೆ.
3
+ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಹುದ್ದೆಯ ಕುರಿತು ಚರ್ಚೆ ಮಾಡಬೇಡಿ. ಲೋಕಸಭೆ ಚುನಾವಣೆಯತ್ತ ಗಮನ ಕೊಡಿ. ಸರ್ಕಾರದ ಯೋಜನೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಲು ಕೆಲಸ ಮಾಡಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕಟ್ಟೆಚ್ಚರದ ನಡುವೆಯೂ ಚರ್ಚೆಗಳು ಮತ್ತೆ ಚಾಲನೆಗೊಳ್ಳುತ್ತಿವೆ. ನಿನ್ನೆ ಯತೀಂದ್ರ ಅವರ ಹೇಳಿಕೆಗೆ ಪಕ್ಷದ ಸಚಿವರು, ಹಿರಿಯ ನಾಯಕರು ಅಂತರ ಕಾಯ್ದುಕೊಂಡಿದ್ದಾರೆ. ಯತೀಂದ್ರ ಅವರ ವೈಯಕ್ತಿಕ ಹೇಳಿಕೆ. ಅದಕ್ಕೂ, ಪಕ್ಷಕ್ಕೂ ಸಂಬಂಧವಿಲ್ಲ ಎಂದು ಬಹಳಷ್ಟು ಮಂದಿ ಜಾರಿಕೊಂಡಿದ್ದಾರೆ.
4
+ ನಮ್ಮದು ರಾಜನೀತಿ ಅಲ್ಲ ಧರ್ಮನೀತಿ : ಆಚಾರ್ಯ ಸತ್ಯೇಂದ್ರ ದಾಸ್
5
+ ಯತೀಂದ್ರ ಅವರ ಹೇಳಿಕೆ ಮುಖ್ಯಮಂತ್ರಿ ಹುದ್ದೆಯ ಅನಿಶ್ಚಿತತೆಯ ಸುಳಿವು ನೀಡಿದೆ ಎಂದು ವಿರೋಧ ಪಕ್ಷಗಳು ಟೀಕಿಸಲಾರಂಭಿಸಿವೆ. ಕಳೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಘೋಷಣೆಯಾದ ಬಳಿಕ ದೆಹಲಿಯಲ್ಲಿ ನಡೆದ ಮುಖ್ಯಮಂತ್ರಿ ಆಯ್ಕೆ ಕಸರತ್ತಿನಲ್ಲಿ ಯಾವ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂಬ ಬಗ್ಗೆ ಯಾರಿಗೂ ಸ್ಪಷ್ಟ ಮಾಹಿತಿ ಇಲ್ಲ. ಅದು ಕೆಲವೇ ಕೆಲವು ನಾಯಕರ ನಡುವೆ ನಡೆದ ಚರ್ಚೆಯಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವು ಶಾಸಕರು ಎರಡೂವರೆ ವರ್ಷದ ಬಳಿಕ ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಹೇಳಿಕೆ ನೀಡಿದ್ದರು.
6
+ ಇನ್ನೂ ಕೆಲವು ಹೆಜ್ಜೆ ಮುಂದೆ ಹೋಗಿ ಲೋಕಸಭೆ ಚುನಾವಣೆ ಬಳಿಕ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದರು. ಈ ವಿಚಾರಗಳು ವ್ಯಾಪಕ ಚರ್ಚೆಯಾಗುತ್ತಿವೆ. ಜೊತೆಯಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಕುರಿತು ನಾನಾ ರೀತಿಯ ವ್ಯಾಖ್ಯಾನಗಳು ನಡೆದಿದ್ದವು.
7
+ ಹೈಕಮಾಂಡ್ ಸೂಚನೆ ಬಳಿಕ ಎಲ್ಲವೂ ತಹಬದಿಗೆ ಬಂದಿದೆ ಎಂಬ ಸಂದರ್ಭದಲ್ಲೇ ಮಾಗಡಿಯ ಬಾಲಕೃಷ್ಣ ಮತ್ತು ಯತೀಂದ್ರ ಅವರ ಹೇಳಿಕೆಗಳು ತಿಳಿಗೊಳಕ್ಕೆ ಕಲ್ಲೆಸೆದಂತಾಗಿದೆ. ಲೋಕಸಭೆ ಚುನಾವಣೆಯಲ್ಲೇ ಮತ್ತೊಂದು ಸುತ್ತಿನ ಅಕಾರ ಹಂಚಿಕೆ ಹಾಗೂ ಇತರ ವಿಚಾರಗಳ ಕುರಿತು ಬಿರುಸಿನ ಚರ್ಚೆಗಳು ನಡೆಯುವ ನಿರೀಕ್ಷೆಗಳಿವೆ. ಮೇಲ್ನೋಟಕ್ಕೆ ಬಹಳಷ್ಟು ಮಂದಿ ಶಾಸಕರು ಯತೀಂದ್ರ ಅವರ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದ್ದಾರೆ.
eesanje/url_46_260_6.txt ADDED
@@ -0,0 +1,18 @@
 
 
 
 
 
 
 
 
 
 
 
 
 
 
 
 
 
 
 
1
+ ಕ್ರೈಮ್ ಕಂಟ್ರೋಲ್​ಗೆ ಎಐ ಮತ್ತು ಚಾಟ್‍ಬಾಟ್ ಮೊರೆಹೋದ ಕರ್ನಾಟಕ ಪೊಲೀಸರು
2
+ ಬೆಂಗಳೂರು,ಜ.16- ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಪೊಲೀಸ್ ಇಲಾಖೆ ಅತ್ಯಾಧುನಿಕ ತಂತ್ರಜ್ಞಾನವಾದ ಆರ್ಟಿಫಿಶಿಯಲ್ ಇಂಟಿಲಿಜೆನ್ಸ್(ಎಐ) ಮಿಷನ್ ಲರ್ನಿಂಗ್(ಎಂಎಲ್) ಮತ್ತು ಚಾಟ್‍ಜಿಪಿಟಿ ತಂತ್ರಜ್ಞಾನ ಚಾಟ್‍ಬಾಟ್ ಸೇವೆಗಳನ್ನು ಬಳಸಿ ಅಪರಾಧ ಚಟುವಟಿಕೆಗಳ ನಿಯಂತ್ರಣ ಮತ್ತು ದತ್ತಾಂಶ ಸಂಗ್ರಹಿಸಲು ಮುಂದಾಗಿದೆ.
3
+ ರಾಜ್ಯ ಪೋಲೀಸ್ ಇಲಾಖೆಯು ಗಣಕೀಕರಣಗೊಳಿಸುವಲ್ಲಿ ದೇಶದಲ್ಲಿ ಮುಂಚೂಣಿಯಲ್ಲಿದ್ದು, ಈಗ ಆಧುನಿಕ ತಂತ್ರಜ್ಞಾನಗಳನ್ನು ಬಳಸಿ ಪೊಲೀಸ್ ಐಟಿ ವಿ2 ತಂತ್ರಾಂಶ, ಐಟಿಪಿಎ ಸರಳ ಮೊಬೈಲ್ ಆಪ್, ಪೊಲೀಸ್ ಮಿತ್ರ ಚಾಟ್‍ಬಾಟ್, ಅನುಕಂಪದ ಆಧಾರದ ನೇಮಕಾತಿ ಪೋರ್ಟಲ್, ಕೆಎಸ್‍ಪಿಎಐ, ಆರ್ಥಿಕ ಅಪರಾಧಗಳ ತನಿಖಾ ತಂತ್ರಾಂಶ ಮತ್ತು ಕರ್ನಾಟಕ ರಾಜ್ಯ ಪೊಲೀಸ್ ಡೇಟಾಥಾನ್-2024 ಮತ್ತು ರಾಜ್ಯಪೊಲೀಸ್ ಹ್ಯಾಕಥಾನ್-2024ನ್ನು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟನೆ ನೆರವೇರಿಸಿದರು.
4
+ ಪೊಲೀಸ್ ಐಟಿ ವಿ2 ತಂತ್ರಾಂಶ: ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಪೂರ್ಣ ಪ್ರಮಾಣದಲ್ಲಿ ತನಿಖಾ ಪ್ರಕ್ರಿಯೆಯನ್ನು ಸಮಗ್ರವಾಗಿ ಕೈಗೊಳ್ಳಲು ನೋಂದಣಿಯಿಂದ ಪ್ರಕರಣದ ವಿಲೇವಾರಿವರೆಗಿನ ಎಲ್ಲಾ ಕಾರ್ಯ ಚಟುವಟಿಕೆಗಳನ್ನು ತಡೆರಹಿತವಾಗಿ ನಿರ್ವಹಿಸುತ್ತದೆ.
5
+ ಐಟಿಪಿಎ ಸರಳ ಮೊಬೈಲ್ ಆಪ್: ಮಾನವ ಕಳ್ಳಸಾಗಾಣಕೆಯು ಆಧುನಿಕ ಯುಗದ ಗುಲಾಮಗಿರಿ ರೂಪಕವಾಗಿದ್ದು, ಇದು ಜನರ ಘನತೆ ಮತ್ತು ಭದ್ರತೆಗೆ ಮಾರಕವಾಗಿದೆ. ಮಾನವ ಕಳ್ಳಸಾಗಾಣಿಕೆಯ ವಿರುದ್ಧದ ಕಾನೂನುಗಳು ನಿರ್ಣಾಯಕವಾಗುತ್ತದೆ. ಅದ್ದರಿಂದ ಅಧಿಕಾರಿಗಳಿಗೆ ಅಗತ್ಯವಿರುವ ದಾಖಲೆಗಳು, ಕಾರ್ಯ ವಿಧಾನಗಳು, ಅನ್ವಯವಾಗುವ ಕಾನೂನುಗಳು ಮತ್ತು ಸಂತ್ರಸ್ತರಿಗೆ ಆಶ್ರಯ ತಂಗುದಾಣಗಳ ಕುರಿತು ಸುಲಭವಾದ ಮಾರ್ಗದರ್ಶನ ನೀಡಲು ಸಹಕಾರಿಯಾಗಿರುತ್ತದೆ.
6
+ ಚಾಟ್‍ಬಾಟ್: ನಾಗರೀಕರ ಸಮಕಾಲಿನ ಸಮಸ್ಯೆಗಳಾದ ಸೈಬರ್ ಅಪರಾಧ ಸಂಚಾರ, ಮಹಿಳೆ ಮತ್ತು ಮಕ್ಕಳ ಮೇಲಿನ ಸಮಸ್ಯೆಗಳು ಮತ್ತು ಹಿರಿಯ ನಾಗರಿಕರ ಸಮಸ್ಯೆಗಳಿಗೆ ಸಂಬಂಸಿದಂತೆ ಕೇಳುವ ಪ್ರಶ್ನಾರ್ಥಕ ಅಂಶಗಳಿಗೆ ಉತ್ತರ ನೀಡಲು ಅನುಕೂಲಕರವಾಗುವಂತೆ ಪೊಲೀಸ್ ಮಿತ್ರ ಎಂಬ ಚಾಟ್‍ಬಾಟ್ ಸೇವೆಯನ್ನು ಚಾಟ್‍ಜಿಪಿಐ ತಂತ್ರಜ್ಞಾನದೊಂದಿಗ ಸಂಯೋಜನೆಗೊಳಿಸಿ ಅನುಷ್ಠಾನಪಡಿಸಲಾಗಿದೆ.
7
+ ಅನುಕಂಪ ಆಧಾರದ ನೇಮಕಾತಿ ಪೋರ್ಟಲ್:ಪೊಲೀಸ್ ಇಲಾಖೆಯ ಕರ್ತವ್ಯದಲ್ಲಿ ಪ್ರಾಣ ಕಳೆದುಕೊಂಡ ಪೊಲೀಸ್ ಅಧಿಕಾರಿಗಳ ಕುಟುಂಬಗಳಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಉದ್ದೇಶದಿಂದ ಅನುಕಂಪತ ನೇಮಕಾತಿಯನ್ನು ನೀಡಲು ಇಲಾಖೆಯು ಬದ್ದವಾಗಿರುತ್ತದೆ.ಕೆಎಸ್‍ಪಿ.ಎಐ:ಪೊಲೀಸ್ ಇಲಾಖೆಯ ಹೊಸದಾಗಿ ಅನುಷ್ಠಾನಗೊಳಿಸುತ್ತಿರುವ ಕೆಎಸ್‍ಪಿಎಐ ತಂತ್ರಾಂಶವು ಎ1 ಮತ್ತು ಎಂಎಲ್ ತಂತ್ರಜ್ಞ��ನಗಳನ್ನು ಬಳಸಿ ಪ್ರಕರಣ ಸಂಕ್ಷಿಪ್ತ ಸಂಗತಿಗಳನ್ನು ಉಪಸಂಗತಿಗಳಾಗಿ ವಿಭಜಿಸುವ, ಪ್ರಕ್ರಿಯೆಯನ್ನು ಸ್ವಯಂಚಾಲಿತಗೊಳ ಸಿಕೊಳ್ಳುವ ಮೂಲಕ ಪ್ರಕರಣದ ವಿಶ್ಲೇಷಣೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುತ್ತದೆ.
8
+ ಆರ್ಥಿಕ ಅಪರಾಧಗಳ ತನಿಖಾ ತಂತ್ರಾಂಶ:ಆಧುನಿಕ ಪ್ರಪಂಚದಲ್ಲಿ ಆನ್‍ಲೈನ್ ಹಣಕಾಸು ವಹಿವಾಟುಗಳು ಹೆಚ್ಚುತ್ತಿರುವ ಆರ್ಥಿಕ ಅಪರಾಧಗಳು, ದತ್ತಾಂಶವನ್ನು ವಿಶ್ಲೇಷಿಸಲು ಈ ತಂತ್ರಾಂಶವು ಸಹಕಾರಿಯಾಗುತ್ತದೆ.ಡೇಟಾಥಾನ್ 2024:ಪೆÇಲೀಸ್ ಇಲಾಖೆಯಲ್ಲಿ ಸಂಗ್ರಹವಾಗಿರುವ ದತ್ತಾಂಶವನ್ನು ಬಳಸಿಕೊಂಡು ಪೊಲೀಸ್ ಡೇಟಾಥಾನ್ ಆಯೋಜಿಸಲಾಗುತ್ತಿದ್ದು, ನೋಂದಣಿ ಕಾರ್ಯ ಇಂದಿನಿಂದ ಪ್ರಾರಂಭ ಮಾಡಲಾಗಿದೆ.ಈ ದತ್ತಾಂಶವನ್ನು ಬಳಸಿಕೊಂಡು ಡಾಟಾ ಅನಾಲಿಟಿಕ್ಸ್ , ಡಾಟಾ ವಿಸುಲೇಷನ್ ಮತ್ತು ಪ್ರಿಡೆಕ್ಟಿವ್ ಕ್ರೈಂ ಅನಾಲಿಟಿಕ್ಸ್ ಮಾಡಲು ಅನುಕೂಲವಾಗುವಂತೆ ಡೇಟಾಥಾನ್ ಪ್ರಾರಂಭಿಸಲಾಗಿದೆ.ಪೊಲೀಸ್ ಹ್ಯಾಕಥಾನ್-2024:ಪೊಲೀಸ್ ಇಲಾಖೆಯು ಡಾರ್ಕ್ ವೆಬ್ ಮಾನಿಟರಿಂಗ್, ಕ್ರಿಫ್ಟೋ ಕರೆನ್ಸಿ ಅನಾಲಿಸಿಸ್ ಮತ್ತು ಓಸಿಂಟ್ ಟೂಲ್ ಡೆವೆಲಪ್‍ಮೆಂಟ್ ವಿಷಯಗಳ ಮೇಲೆ ಕರ್ನಾಟಕ ರಾಜ್ಯ ಪೊಲೀಸ್ ಹ್ಯಾಕಥಾನ್ ಆಯೋಜಿಸಲಾಗುತ್ತಿದ್ದು, ಹ್ಯಾಕಥಾನ್‍ನ ನೋಂದಣಿ ಕಾರ್ಯವನ್ನು ಇಂದಿನಿಂದ ಪ್ರಾರಂಭ ಮಾಡಲಾಗಿದೆ.
9
+ ಬಾಂಬ್ ಪತ್ತೆಮೊಬೈಲ್ ಲ್ಯಾಬ್‍ಪರಿಶೀಲಿಸಿದ ಸಿಎಂಬೆಂಗಳೂರು, ಜ.16- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೆಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಮೊಬೈಲ್ ಲ್ಯಾಬ್, ವಿಧಿ ವಿಜ್ಞಾನ ಮೊಬೈಲ್ ಲ್ಯಾಬ್ ವಾಹನ, ಮೊಬೈಲ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ವಾಹನದ ಉನ್ನತೀಕರಣದ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು. ಬಳಿಕ ಪೊಲೀಸ್ ಐಟಿ-ಗಿ2, ಐಟಿಪಿಎ ಸರಳ ಆಪ್, ಪೊಲೀಸ್ ಮಿತ್ರ ಚಾಟ್ ಬಾಟ್, ಸಿಜಿ ನೋಂದಣಿ ಪೋರ್ಟಲ್, ರಾಜ್ಯ ಪೊಲೀಸ್ ಕೃತಕ ಬುದ್ದಿ ಮತ್ತೆ ತಂತ್ರಾಂಶ, ಆರ್ಥಿಕ ಇಂಟೆಲಿಜೆನ್ಸ್ ತಂತ್ರಾಂಶಗಳನ್ನು ಬಿಡುಗಡೆ ಮಾಡಿದರು.ಇದೇ ವೇಳೆ ಸಂಕ್ಷಿಪ್ತ ಸೈಬರ್ ಅಪರಾಧ ಕೈಪಿಡಿಯನ್ನು ಲೋಕಾರ್ಪಣೆಗೊಳಿಸಿದರು.
10
+ ಈ ಸಂದರ್ಭದಲ್ಲಿ ಗೃಹಸಚಿವ ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಉಪಸ್ಥಿತರಿದ್ದರು.
11
+
12
+ 206 ಎಸ್‍ಒಸಿಒಗಳ ನೇಮಕ..ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ವಿಧಿವಿಜ್ಞಾನ ವಿಷಯದಲ್ಲಿ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪಡೆದ 206 ಸೀನ್ ಆಫ್ ಕ್ರೈಮ್ ಆಫೀಸರ್ (ಎಸ್‍ಒಸಿಒ)ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಅಪರಾಧ ನಡೆದ ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂರಕ್ಷಿಸಿ, ಸಂಗ್ರಹಿಸಿ ��ೈಜ್ಞಾನಿಕವಾಗಿ ಪ್ಯಾಕ್ ಮಾಡಲು ಈ ಅಧಿಕಾರಿಗಳು ಸಹಾಯ ಮಾಡಲಿದ್ದಾರೆ. ಈಗಾಗಲೇ ಇವರಿಗೆ ಎಫ್‍ಎಸ್‍ಎಲ್, ಎನ್‍ಎಫ್‍ಎಸ್‍ಯು ಗುಜರಾತ್, ಕೆಪಿಎ, ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್, ಸಿಐಡಿ, ಫೋರೆನ್ಸಿಕ್ ಮೆಡಿಸನ್ ಸೇರಿದಂತೆ ಹಲವು ರೀತಿಯ ತರಬೇತಿಗಳನ್ನು ನೀಡಲಾಗಿದ್ದು , ಇವರು ಜಿಲ್ಲೆಗಳ ಡಿಪಿಒ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು , ಕೃತ್ಯ ನಡೆದ ಸ್ಥಳಕ್ಕೆ ತ್ವರಿತವಾಗಿ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಲು ಸ್ಥಳೀಯ ಪೆÇಲೀಸರಿಗೆ ಸಹಾಯ ನೀಡಲಿದ್ದಾರೆ.
13
+ ರಾಜ್ಯದಲ್ಲಿ 13 ಮೊಬೈಲ್ ಫೋರೆನ್ಸಿಕ್ ವಾಹನಗಳಿದ್ದು ವಿಶೇಷವಾಗಿ ಪ್ರಯೋಗಾಲಯದಿಂದ ಪರಿಸರವನ್ನು ವಿನ್ಯಾಸಗೊಳಿಸಲಾಗಿದೆ. ಇದರಲ್ಲಿ 16 ಬಗೆಯ ಕಿಟ್‍ಗಳು ಕ್ರೈಮ್ ಸೀನ್‍ಗಳಾದ ಕೊಲೆ, ಅತ್ಯಾಚಾರ, ಸ್ಪೋಟ, ಬೆಂಕಿ ಅವಘಡ, ಮಾದಕ ವಸ್ತು ಸೇರಿದಂತೆ ಹಲವು ಪ್ರಕರಣಗಳನ್ನು ಬೇಸಲು ಬಳಸಿಕೊಳ್ಳಲಾಗುತ್ತದೆ.
14
+ ಸಿಎಂ ಅವರಿಂದ ಸೈಬರ್ ಹ್ಯಾಕಥಾನ್ ಘೋಷಣೆಬೆಂಗಳೂರು,ಜ.16- ನಗರದಲ್ಲಿಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೈಬರ್ ಹ್ಯಾಕಥಾನ್‍ನ್ನು ಘೋಷಿಸಿದರು. ಸಿಐಡಿ-ಡಿಕೋಡ್ ಎಂಬ ಶೀರ್ಷಿಕೆಯಡಿ ಹ್ಯಾಕಥಾನ್ ತಂತ್ರಜ್ಞಾನ ಸಂಬಂಧಿತ ಸಮಸ್ಯೆಗಳನ್ನು ಎದುರಿಸುವಲ್ಲಿ ಸ್ವಯಂಪ್ರೇರಿತವಾಗಿ ತನಿಖಾ ಸಂಸ್ಥೆಗಳ ಸಾಮಥ್ರ್ಯಗಳನ್ನು ವೃದ್ಧಿಗೊಳಿಸುವ ಪ್ರಮುಖ ಉದ್ದೇಶದಿಂದ ಕೂಡಿದೆ. ರಾಜ್ಯದ ಸಿಐಡಿಯವರು ಡೇಟಾ ಸೆಕ್ಯುರಿಟಿ ಕೌನ್ಸಿಲ್ ಆ-ï ಇಂಡಿಯಾ(ಡಿಎಸ್‍ಸಿಐ), ಇನೋಸಿಸ್ -ಫಂËಂಡೇಷನ್ ಅವರ ಸಹಯೋಗದೊಂದಿಗೆ ಸ್ಥಾಪಿಸಲಾದ ಸೆಂಟರ್ -Áರ್ ಸೈಬರ್ ಕ್ರೈಂ ಟ್ರೈನಿಂಗ್ ಅಂಡ್ ರಿಸರ್ಚ್(ಸಿಸಿಐಟಿಆರ್) ನಿಂದ ಯೋಜಿಸಿ ಕಾರ್ಯಗತಗೊಳಿಸಲಾಗಿದೆ.
15
+ ಈ ಕಾರ್ಯಕ್ರಮದ ಅತಿಥೇಯ ಸಂಸ್ಥೆಯಾಗಿ ಪಿಇಎಸ್ ವಿಶ್ವವಿದ್ಯಾಲಯ ಪಾಲುದಾರಿಕೆ ಹೊಂದಿದೆ. 24 ಗಂಟೆಯ ಅವಧಿಗೆ ನಿರ್ಧಿಷ್ಟಪಡಿಸಲಾದ ಹ್ಯಾಕಥಾನ್‍ನಲ್ಲಿ ಡಾರ್ಕ್‍ವೆಬ್ ಮೇಲ್ವಿಚಾರಣೆ ಮತ್ತು ಪತ್ತೆ, ಕ್ರಿಫ್ಟೋ ಕರೆನ್ಸಿಗಳು ಮತ್ತು ಓಪನ್ ಸೋರ್ಸ್ ಇಂಟೆಲೆಜಿನ್ಸ್ ವಿಷಯ ಆಧಾರಿತ ಏಕೀಕೃತ ವೇದಿಕೆಯನ್ನು ಒಳಗೊಂಡಿದೆ.ತಾಂತ್ರಿಕ ಹಿನ್ನಲೆ ಹೊಂದಿರುವ ವಿದ್ಯಾರ್ಥಿಗಳು ಹ್ಯಾಕಥಾನ್‍ನಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಹ್ಯಾಕಥಾನ್ ಕುರಿತಂತೆ ಹೆಚ್ಚಿನ ಮಾಹಿತಿಯನ್ನು..inನಲ್ಲಿ ಕಾಣಬಹುದಾಗಿದೆ.
16
+ 27 ಕೋಟಿ ಮೌಲ್ಯದ ಗಾಂಜಾ-ಮಾದಕ ನಾಶಕ್ಕೆ ಸೂಚನೆಬೆಂಗಳೂರು,ಜ.16- ಸುಮಾರು 27 ಕೋಟಿ ಮೌಲ್ಯದ 4484 ಕೆಜಿ ಗಾಂಜಾ ಹಾಗೂ 23 ಕೆಜಿ ರಾಸಾಯನಿಕ ಮಾದಕ ವಸ್ತುಗಳನ್ನು ಫೆಬ್ರವರಿ ಮೊದಲ ವಾರದಂದು ರಾಜ್ಯಾದ್ಯಂತ ನಾಶಪಡಿಸಬೇಕಾಗಿ ಪೆÇಲೀಸ್ ಇಲಾಖೆಗೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ. ಕಳೆದ ಆರು ತಿಂಗಳಿನಲ್ಲಿ ರಾಜ್ಯಾದ್ಯಂತ ವಿವಿಧ ಕಡೆ ದಾಳಿ ನಡೆಸಿದ್ದ ಪೆÇಲೀಸರು ಗಾಂಜಾ ಹಾಗೂ ರಾಸಾಯನಿಕ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಡ್ರಗ್ಸ್ ಮುಕ್ತ ಕರ್ನಾಟಕ ಮಾಡುವ ನಿಟ್ಟಿನಲ್ಲಿ ಸರ್ಕಾರ ಈ ನಿಟ್ಟಿನಲ್ಲಿ ಈ ಒಂದು ದಿಟ್ಟ ಹೆಜ್ಜೆ ಇಟ್ಟಿದೆ.
17
+
18
+ ಅತ್ಯಾಧುನಿಕ ಬಾಂಬ್ ನಿಷ್ಕ್ರಿಯ ವಾಹನ ಹಸ್ತಾಂತರಬೆಂಗಳೂರು,ಜ.16-ಬಾಂಬ್ ಪತ್ತೆ ನಿಷ್ಕ್ರಿಯ ಕಾರ್ಯಕ್ಕಾಗಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಹೊಸ ತಂತ್ರಜ್ಞಾನವುಳ್ಳ ಮೂರು ಹೊಸ ಬಸ್‍ಗಳನ್ನು ರಾಜ್ಯ ಗುಪ್ತವಾರ್ತೆ ಘಟಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಸ್ತಾಂತರಿಸಿದರು. ಪ್ರಸ್ತುತ ರಾಜ್ಯದ್ಯಂತ 4 ಬಿಡಿಡಿಎಸ್ ಘಟಕಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಅವುಗಳ ಜೊತೆಗೆ ಈ ಮೂರು ಹೊಸ ಬಸ್‍ಗಳು ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ಉಪಕರಣಗಳನ್ನು ಹೊಂದಿದೆ. ಬಾಂಬ್ ಬೆದರಿಕೆ ಅಥವಾ ಸ್ಪೋಟದಂತಹ ಅವಘಡಗಳು ನಡೆದ ಘಟನಾ ಸ್ಥಳಕ್ಕೆ ತ್ವರಿತವಾಗಿ ಕೊಂಡಯ್ಯಲು ಇದರಿಂದ ಸಾಧ್ಯವಾಗುತ್ತದೆ.
eesanje/url_46_260_7.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಅವರಿವರನ್ನು ಛೂ ಬಿಡುವ ಬದಲು ನನ್ನೆದುರು ಬಂದು ಮಾತಾಡಿ : ಸಿಎಂ ಸಿದ್ದುಗೆ ಹೆಗಡೆ ಸವಾಲ್
2
+ ಶಿರಸಿ,ಜ.16- ಅವರಿವರನ್ನು ಛೂ ಬಿಟ್ಟು ನನ್ನ ವಿರುದ್ಧ ಮಾತನಾಡಿಸುವ ಬದಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧೈರ್ಯವಿದ್ದರೆ ನನ್ನ ಎದುರಿಗೆ ಬಂದು ಚರ್ಚೆ ಮಾಡಲಿ ಎಂದು ಉತ್ತರಕನ್ನಡ ಸಂಸದ ಅನಂತಕುಮಾರ್ ಹೆಗಡೆ ಬಹಿರಂಗ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ತಮ್ಮ ಹಿಂಬಾಲಕರನ್ನು ಛೂ ಬಿಟ್ಟು ನನ್ನ ವಿರುದ್ಧ ಮಾತನಾಡಿಸುವುದು ಬೇಡ. ಅವರ ಹಿಂಬಾಲಕರು ಮಾತನಾಡಿದರೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಚರ್ಚೆ ಮಾಡುವ ಧೈರ್ಯ ಇದ್ದರೆ ನನ್ನ ಎದುರಿಗೆ ಬನ್ನಿ ಎಂದು ಸವಾಲು ಎಸೆದರು.
3
+ ನೀವು ಯಾರಿಗೆ ಏನು ಬೇಕಾದರೂ ಮಾತನಾಡಬಹುದು. ನಾವು ನಿಮ್ಮ ಬಗ್ಗೆ ಮಾತನಾಡಿದರೆ ಅದಕ್ಕೆ ವಿವಾದ ಬೆಂಕಿ ಹಚ್ಚುತ್ತೀರಿ. ಇವರು ಯಾರ್ಯಾರ ಬಗ್ಗೆ ಕೀಳುಮಟ್ಟದ ಪದಪ್ರಯೋಗ ಮಾಡಿದ್ದಾರೆ ಎಂಬುದು ನನಗೆ ಗೊತ್ತು. ಬನ್ನಿ ಜನರ ಮುಂದೆಯೇ ಚರ್ಚೆ ಮಾಡೋಣ ಎಂದು ಪಂಥ ಆಹ್ವಾನ ನೀಡಿದರು. ತಮ್ಮ ಹೇಳಿಕೆಯನ್ನು ಮತ್ತೆ ಸಮರ್ಥಿಸಿಕೊಂಡ ಹೆಗಡೆ, ನಾನು ಏನು ಹೇಳಿದ್ದೇನೊ ಅದಕ್ಕೆ ಬದ್ದನಾಗಿದ್ದೇನೆ. ಯಾವುದೇ ಕಾರಣಕ್ಕೂ ಹೇಳಿಕೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಅಷ್ಟಕ್ಕೂ ನಾನು ಹೇಳುವುದರಲ್ಲಿ ತಪ್ಪೇನಿದೆ ಎಂದು ಅವರು ಮಾಧ್ಯಮದವರಿಗೆ ಮರುಪ್ರಶ್ನೆ ಹಾಕಿದರು.
4
+ ಮಗನ ಕೈಯಲ್ಲಿ ಮೂಡಿಬಂದ ರಾಮ ಲಲ್ಲಾ ವಿಗ್ರಹ, ತಾಯಿ ಸಂತಸ
5
+ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರಿಗೆ ಏಕವಚನದಲ್ಲಿ ಮಾಸ್ ಮರ್ಡರ್ ಎಂದು ಕರೆದರು. ಅವರಿಗೊಂದು ನ್ಯಾಯ ನಮಗೊಂದು ನ್ಯಾಯನಾ..? ಅದೆಲ್ಲ ನಮಗೆ ಗೊತ್ತಿಲ್ಲ ಯಾರಿಗೆ ಹೇಗೆ ಮಾತಾಡಬೇಕು ನಮಗೆ ಗೊತ್ತು. ಇದರ ಎಲ್ಲದರ ಬಗ್ಗೆ ಜನರ ಮುಂದೆ ಚರ್ಚೆ ಮಾಡೋಣ. ಎಲ್ಲೊ ಕೂತುಕೊಂಡು ಸಭೆಯಲ್ಲಿ ಮಾತನಾಡುವುದು ಸರಿ ಅಲ್ಲ ಎಂದರು.
6
+ ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತಾವು ಏಕವಚನ ಪ್ರಯೋಗ ಮಾಡಿದ ವಿಚಾರವಾಗಿ ಮಾತನಾಡಿದ ಅವರು, ನನ್ನ ಹೇಳಿಕೆಯನ್ನು ಖಂಡಿಸುವುದು ಸಹಜ. ಇದು ಪಕ್ಷದ ಹೇಳಿಕೆಯಲ್ಲ. ಇದು ನನ್ನ ವೈಯಕ್ತಿಕ ಹೇಳಿಕೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿರುವ ಮಾತು ಸರಿ ಇದೆ ಎಂದು ಸ್ಪಷ್ಟಪಡಿಸಿದರು.ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಪ್ರಧಾನಿ ಮೋದಿಯವರ ಮತ್ತು ನಮ್ಮ ದೇವಸ್ಥಾನಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅಸಭ್ಯವಾಗಿ ಮೊದಲು ಮಾತನಾಡಿದ್ದಾರೆ. ನಮ್ಮ ದೇವಸ್ಥಾನದ ಬಗ್ಗೆ ಅಷ್ಟು ಕೀಳಾಗಿ ಮಾತನಾಡುವುದು ಯಾಕೆ ಬೇಕಿತ್ತು? ನಮ್ಮ ಪ್ರಧಾನಿ ಮೋದಿ, ಅಮಿತ ಶಾ ಬಗ್ಗೆ ಯಾರೆಲ್ಲ ಏನು ಏನು ಮಾತನಾಡಿದ್ದಾರೆ ಹೇಳಬೇಕಾ? ಎಂದು ಪ್ರಶ್ನಿಸಿದರು.
7
+ ಸಲ್ಮಾನ ಖುರ್ಷದ ಕಪ್ಪೆ, ಮಂಗ, ನಪಸುಂಕ ಎಂದು ಕರೆದರು. ಶರದ್ ಪವಾರ ಮೋದಿಯರನ್ನು ಹಿಟ್ಲರ್ ಎಂದರು. ದಿಗ್ವಿಜಯ ಸಿಂಗ್ ಮೋದಿಯವರನ್ನು ರಾವಣ ಎಂದರೆ, ಜಯರಾಂ ರಮೇಶ್ ಭಸ್ಮಾಸೂರ ಎಂದಿದ್ದರು. ಮಣಿ ಅಯ್ಯರ್ ವಿಷಸರ್ಪ ಎಂದು ಕರೆದರು. ಇದಕ್ಕೆಲ್ಲ ಮಾಧ್ಯಮದ ದಾಖಲೆಗಳು ಇವೆ. ನನ್ನ ಪ್ರಧಾನಿ, ನನ್ನ ದೇಶ ಮತ್ತು ನನ್ನ ಧರ್ಮದ ಬಗ್ಗೆ ಹೇಳಿಕೆ ನೀಡುವಾಗ ಇವರಿಗೆ ಸಭ್ಯತೆ ನೆನಪಾಗುವುದಿಲ್ಲ. ಕಾಂಗ್ರೆಸ್‍ನವರಿಗೆ, ಸಿದ್ಧರಾಮಯ್ಯ ಅವರಿಗೆ ಇಲ್ಲದ ಸಭ್ಯತೆ ಬಿಜೆಪಿಯವರಿಗೆ ಏಕೆ? ಎಂದು ಪ್ರಶ್ನಿಸಿದರು.
8
+ ಮಂತ್ರಾಕ್ಷತೆಯಿಂದ ಹಸಿದ ಹೊಟ್ಟೆ ತುಂಬುವುದಿಲ್ಲ : ಸಚಿವ ಶಿವರಾಜ ತಂಗಡಗಿ
9
+ ರಾಮ ಮಂದಿರ ಬಗ್ಗೆ ಎಷ್ಟ ಅವಹೇಳನಕಾರಿಯಾಗಿ ಮಾತಾಡಿದರು. ಹಿಂದೂ ಸಮಾಜದ ಬಗ್ಗೆ ಎಷ್ಟು ಕೀಳಾಗಿ ಮಾತನಾಡಿದರು. ಹಿಂದೂ ಸಮಾಜ ಅಂದರೇ ಬೇವರ್ಸಿ ಸಮಾಜಾನಾ..? ಶೇ.20ರಷ್ಟು ಇರುವ ಜನರ ಮತಕ್ಕಾಗಿ ಎಷ್ಟೊಂದು ಜ್ವಲ್ಲೂ ಸುರಿಸಿ ಮಾತನಾಡುತ್ತಾರೆ. ಶೇ.80 ರಿಂದ 85ರಷ್ಟು ಇರುವ ಹಿಂದೂ ಸಮಾಜದ ಬಗ್ಗೆ ನಿಮಗೆ ಗೌರವ ಯಾಕಿಲ್ಲ? ಏಕವಚನದಲ್ಲಿ ನೀವೂ ಮಾತನಾಡಿದ್ದೂ ಸರಿ ಅನ್ನುವುದಾರೇ, ನಾನು ಮಾತನಾಡಿದ್ದೂ ಕೂಡ ಸರಿ. ಯಾರು ಒಪ್ಪಿಕೊಳ್ಳುತ್ತಾರೆ, ಬಿಡುತ್ತಾರೆ ಗೊತ್ತಿಲ್ಲ. ಆ ದೇವರು ಒಪ್ಪಿಕೊಳ್ಳುತ್ತಾನೆ. ಹಿಂದೂ ಸಮಾಜದ ಜನರು ಒಪ್ಪಿಕೊಳ್ಳುತ್ತಾರೆ ಎಂದರು.
10
+ ಆರೋಗ್ಯ ಸರಿ ನೋಡಿಕೊಳ್ಳಿ ಎಂಬ ಡಿಕೆ ಶಿವಕುಮಾರ ಹೇಳಿಕೆ ವಿಚಾರವಾಗಿ ಮಾತನಾಡಿದ ಅನಂತ್‍ಕುಮಾರ್, ನನ್ನ ಆರೋಗ್ಯ ಅತ್ಯಂತ ಚೆನ್ನಾಗಿದೆ. ಆರೋಗ್ಯದಲ್ಲಿ ಯಾವುದೇಸಂಶಯ ಇಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ. ಗೆಲ್ಲಿಸುತ್ತೇನೆ. ನನ್ನ ಟಿಕೆಟ್ ಬಗ್ಗೆ ಬೇರೆಯವರಿಗೆ ಯಾಕೆ ಚಿಂತೆ ಎಂದು ತಿರುಗೇಟು ನೀಡಿದರು.
eesanje/url_46_260_8.txt ADDED
@@ -0,0 +1,9 @@
 
 
 
 
 
 
 
 
 
 
1
+ ಡಿಕೆಶಿಗೆ ಸಿಎಂ ಹುದ್ದೆ ಚರ್ಚೆ ಮತ್ತೆ ಮುನ್ನೆಲೆಗೆ
2
+ ಬೆಂಗಳೂರು,ಜ.16- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಇತ್ತೀಚಿನ ದಿನಗಳಲ್ಲಿ ಈ ಕುರಿತು ಒಂದಿಷ್ಟು ಸದ್ದು ತಣ್ಣಗಾಗಿತ್ತು. ಮಾಗಡಿ ಕ್ಷೇತ್ರದ ಶಾಸಕ ಎಚ್.ಸಿ.ಬಾಲಕೃಷ್ಣ ಧ್ವನಿಯೆತ್ತಿದ್ದು, ತಮ್ಮ ಸಮುದಾಯಕ್ಕೆ ನಾಯಕರ ಶ್ರಮ ಗುರುತಿಸಿ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಪ್ರತಿಪಾದಿಸಿದ್ದಾರೆ.
3
+ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನ ಗಳಿಸಿ ಗೆದ್ದಿದೆಯೆಂದರೆ ಅದರ ಹಿಂದೆ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್ ಅವರ ಶ್ರಮ ಇದೆ. ಮುಖ್ಯಮಂತ್ರಿ ಯಾಗುವ ಅರ್ಹತೆ ಮತ್ತು ಯೋಗ್ಯತೆ ಎರಡೂ ಡಿ.ಕೆ.ಶಿವಕುಮಾರ್‍ರಿಗಿದೆ ಎಂದು ಹೇಳಿದ್ದಾರೆ. ಒಕ್ಕಲಿಗ ಸಮುದಾಯಕ್ಕೆ ಮುಖ್ಯಮಂತ್ರಿ ಹುದ್ದೆ ಸಿಗಬೇಕು ಎಂಬುದು ಎಲ್ಲರ ಆಗ್ರಹ. ನಾವೇನು ಈಗಲೇ ಕೊಡಿ ಎಂದು ಕೇಳುತ್ತಿಲ್ಲ, ಅವಕಾಶ ಬಂದಾಗ ಅಧಿಕಾರ ನೀಡಬೇಕು ಎಂದು ಪ್ರತಿಪಾದಿಸಿದರು.
4
+ ಈ ಅವಧಿಯಲ್ಲೇ ಕೊಡಿ ಎಂದು ಕೇಳುವ ಅಥವಾ ಮಾತನಾಡುವಷ್ಟು ಪ್ರಭಾವಿ ವ್ಯಕ್ತಿ ನಾನಲ್ಲ. ಆದರೆ ಪಕ್ಷಕ್ಕಾಗಿ ದುಡಿದವರ ಶ್ರಮವನ್ನು ಗುರುತಿಸಬೇಕು. ಹೈಕಮಾಂಡ್ ಈ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ನನ್ನ ವೈಯಕ್ತಿಕ ಅಭಿಪ್ರಾಯ ಸಮುದಾಯದವರಿಗೆ ಮುಖ್ಯಮಂತ್ರಿ ಅವಕಾಶ ಸಿಗಬೇಕು ಎಂಬುದಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‍ರವರು ಇಬ್ಬರೂ ಒಟ್ಟಾಗಿ ಶ್ರಮಿಸಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಅದನ್ನು ಪಕ್ಷ ಪರಿಗಣಿಸಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
5
+ ಕಳೆದ ಮೂರು ತಿಂಗಳ ಹಿಂದೆ ಮುಖ್ಯಮಂತ್ರಿ ಹುದ್ದೆಯ ಕುರಿತು ವ್ಯಾಪಕ ಚರ್ಚೆಗಳಾಗಿದ್ದವು. ಡಿ.ಕೆ.ಶಿವಕುಮಾರ್‍ರವರ ಬೆಂಬಲಿಗರು ಲೋಕಸಭೆ ಚುನಾವಣೆ ಬಳಿಕ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂದು ಪ್ರತಿಪಾದಿಸಿದ್ದರು.
6
+ ಮಗನ ಕೈಯಲ್ಲಿ ಮೂಡಿಬಂದ ರಾಮ ಲಲ್ಲಾ ವಿಗ್ರಹ, ತಾಯಿ ಸಂತಸ
7
+ ಉಪಮುಖ್ಯಮಂತ್ರಿ ಹುದ್ದೆಗೆ ಕೆಲವರು ಬೇಡಿಕೆ ಸಲ್ಲಿಸುತ್ತಿದ್ದಾರೆ. ಅದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ ಉಪಮುಖ್ಯಮಂತ್ರಿಗಳಾಗುವವರು 2 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ತೆಗೆದುಕೊಳ್ಳಬೇಕು. 5 ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯಾಗಬೇಕು ಎಂದು ಹೇಳುತ್ತಿದ್ದಾರೆ. ಅಷ್ಟೂ ಜನ ತಲಾ 2 ಕ್ಷೇತ್ರಗಳನ್ನು ನಿಗದಿ ಮಾಡಿಕೊಂಡು ಗೆಲ್ಲಿಸಿಕೊಂಡು ಬರಲಿ. ಆನಂತರ ಉಪಮುಖ್ಯಮಂತ್ರಿ ಹುದ್ದೆ ಪಡೆದುಕೊಳ್ಳಲಿ. ಇಲ್ಲವಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಿದ್ದಾರೆಯೇ ಎಂದು ಸವಾಲು ಹಾಕಿದರು.
8
+ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯಾಗಬೇಕೆ ಎಂಬುದರ ಬಗ್ಗೆ ಪರಸ್ಪರ ಕಾಲೆಳೆಯುವ ರಾಜಕಾರಣ ಇದೆ ಎಂದು ನಾನು ಭಾವಿಸುವುದಿಲ್ಲ. ರಾಜಕೀಯದಲ್ಲಿ ಅವಕಾಶ ಕೇಳುವುದು ಸಹಜ. ಆದರೆ ಅದಕ್ಕೆ ತಕ್ಕಂತೆ ಪಕ್ಷಕ್ಕೂ ಕೊಡುಗೆ ನೀಡಬೇಕು. ಲೋಕಸಭೆ ಚುನಾವಣೆಯನ್ನು ಸವಾಲಾಗಿ ತೆಗೆದುಕೊಳ್ಳಬೇಕೆಂದು ಹೇಳಿದರು. ಇದರ ಚರ್ಚೆಯ ನಡುವೆಯೇ ಸಿದ್ದರಾಮಯ್ಯ ಬೆಂಬಲಿಗರು ಜಾತಿ ಆಧಾರಿತವಾಗಿ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂದು ಧ್ವನಿಯೆತ್ತಿದರು. ಇದು ವ್ಯಾಪಕ ಚರ್ಚೆಗೊಳಗಾಯಿತು.
9
+ ಇತ್ತೀಚಿನ ದಿನದವರೆಗೂ ಈ ರೀತಿಯ ಚರ್ಚೆಗಳು ಚಾಲ್ತಿಯಲ್ಲಿದ್ದವು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಚರ್ಚೆಗಳು ಅನಗತ್ಯ. ಉತ್ತಮ ಆಡಳಿತ ನೀಡುವುದು ಮತ್ತು ಲೋಕಸಭೆ ಚುನಾವಣೆಯತ್ತ ಗಮನ ಹರಿಸಬೇಕು ಎಂದು ತಾಕೀತು ಮಾಡಿದರು. ಆ ಬಳಿಕ ಉಪಮುಖ್ಯಮಂತ್ರಿ ಹುದ್ದೆ ಕುರಿತು ಚರ್ಚೆಗಳು ತಣ್ಣಗಾಗಿದ್ದವು. ಅದರ ಬೆನ್ನಲ್ಲೇ ಎಚ್.ಸಿ.ಬಾಲಕೃಷ್ಣ ಮತ್ತೆ ಮುಖ್ಯಮಂತ್ರಿ ಹುದ್ದೆಯ ಚರ್ಚೆಯನ್ನು ಹರಿಯಬಿಟ್ಟಿದ್ದಾರೆ.
eesanje/url_46_260_9.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಜ.19ಕ್ಕೆ ಮೋದಿ ಬೆಂಗಳೂರಿಗೆ
2
+ ಬೆಂಗಳೂರು, ಜ.16- ಪ್ರಧಾನಿ ನರೇಂದ್ರಮೋದಿ ಅವರು ಇದೇ ತಿಂಗಳ 19ರಂದು ಬೆಂಗಳೂರಿಗೆ ಆಗಮಿಸಲಿದ್ದು, ರೋಡ್ ಶೋ ನಡೆಸುವ ಬಗ್ಗೆ ಈವರೆಗೂ ಅಧಿಕೃತವಾಗಿ ದೃಢಪಟ್ಟಿಲ್ಲ. ಕೇರಳದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಬೆಂಗಳೂರಿಗೆ ಆಗಮಿಸುವ ಪ್ರಧಾನಿ ಮೋದಿಯವರು ನಗರದ ಏರೋಸ್ಪೇಸ್ ಇಂಜಿನಿಯರಿಂಗ್ ಸ್ಪೆಷಾಲಿಟಿ ಇಂಡಿಯಾ ಇಂಜಿನಿಯರಿಂಗ್ ಟೆಕ್ನಾಲಜಿ ಸೆಂಟರ್‍ಗೆ ಆಗಮಿಸುವರು.
3
+ ಈ ಹಿಂದೆ ಬೆಂಗಳೂರಿನ ಇಸ್ರೋ ಕಚೇರಿಗೆ ನರೇಂದ್ರಮೋದಿ ಅವರು ಆಗಮಿಸಿದ್ದರೂ ಆ ವೇಳೆ ಬಿಜೆಪಿಯ ಯಾವುದೇ ಕಾರ್ಯಕರ್ತರನ್ನು ಭೇಟಿಯಾಗಿರಲಿಲ್ಲ. ಅದು ಸರ್ಕಾರಿ ಕಾರ್ಯಕ್ರಮವಾಗಿದ್ದರಿಂದ ಸಂಪೂರ್ಣವಾಗಿ ಪಕ್ಷದ ಪ್ರಮುಖರಿಂದ ಅಂತರವನ್ನು ಕಾಪಾಡಿಕೊಂಡಿದ್ದರು. ಇದೀಗ 19ರಂದು ಬೆಂಗಳೂರಿಗೆ ಆಗಮಿಸುವ ಮೋದಿ ಅವರನ್ನು ಬಿಜೆಪಿ ಅದ್ಧೂರಿಯಾಗಿ ಸ್ವಾಗತಿಸಲು ತೀರ್ಮಾನಿಸಿದೆ. ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರಿಗೆ ಭವ್ಯ ಸ್ವಾಗತ ಕೋರಲು ಪಕ್ಷದ ವೇದಿಕೆಯಲ್ಲಿ ಚರ್ಚಿಸಲಾಗಿದೆ.
4
+ ಮೋದಿ ಅವರಿಂದ ಬೆಂಗಳೂರು ಇಲ್ಲವೇ ಚಾಮರಾಜನಗರದಲ್ಲಿ ಬೃಹತ್ ರೋಡ್ ಶೋ ನಡೆಸಬೇಕೆಂಬ ಚಿಂತನೆ ಇದೆಯಾದರೂ ಪ್ರಧಾನಿ ಕಾರ್ಯಾಲಯದಿಂದ ಈವರೆಗೂ ಅನುಮತಿ ಸಿಕ್ಕಿಲ್ಲ ಎಂದು ತಿಳಿದುಬಂದಿದೆ. ಕಾರ್ಯಕ್ರಮ ನಡೆಯಲು ಇನ್ನು ಮೂರೇ ದಿನಗಳು ಇರುವುದರಿಂದ ಭದ್ರತಾ ದೃಷ್ಟಿಯಿಂದ ರೋಡ್ ಶೋಗೆ ಅನುಮತಿ ಸಿಗುತ್ತದೆಯೇ ಎಂಬ ಯಕ್ಷ ಪ್ರಶ್ನೆಯೂ ಇದೆ.
5
+ ‘ಪೂಜಿಸಲೆಂದೇ ಹೂಗಳ ತಂದೆ’ ಕನ್ನಡ ಹಾಡಿಗೆ ಮನಸೋತ ಮೋದಿ
6
+ ಬೆಂಗಳೂರಿನಲ್ಲಿ ಶುಕ್ರವಾರ ರೋಡ್ ಶೋ ನಡೆಸಿದರೆ ಸಂಚಾರ ದಟ್ಟಣೆಯಾಗುವ ಸಂಭವವಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಬೇಕಾಗುತ್ತದೆ. ಚಾಮರಾಜನಗರದಲ್ಲಿ ರೋಡ್ ಶೋ ನಡೆಸಿ ಮೈಸೂರು ಭಾಗದಲ್ಲಿ ಪಕ್ಷವನ್ನು ಬಲಪಡಿಸುವ ಲೆಕ್ಕಾಚಾರ ಬಿಜೆಪಿಯಲ್ಲಿದೆ. ಲೋಕಸಭೆ ಚುನಾವಣೆಗೆ ಭರ್ಜರಿ ಹುರುಪಿನಿಂದ ಮುನ್ನುಗ್ಗುತ್ತಿರುವ ಬಿಜೆಪಿ ಮೋದಿಯವರನ್ನೇ ಬಲವಾಗಿ ನಂಬಿಕೊಂಡಿದೆ. ಅವರು ರಾಜ್ಯದಲ್ಲಿ ಹೆಚ್ಚು ಹೆಚ್ಚು ಪ್ರಚಾರ ನಡೆಸಿದಷ್ಟು ಪಕ್ಷಕ್ಕೆ ಆನೆಬಲ ಬರಲಿದೆ ಎಂದು ಬಿಜೆಪಿಯೊಳಗಿನ ಚಿಂತಕರ ಛಾವಡಿ ಸಲಹೆ ಕೊಟ್ಟಿದೆ.
7
+ ಹೀಗಾಗಿ ಶುಕ್ರವಾರ ಬೆಂಗಳೂರಿಗೆ ಆಗಮಿಸಲಿರುವ ಮೋದಿ ಅವರು ರೋಡ್ ಶೋ ನಡೆಸಲಿದ್ದಾರೆ ಎಂಬುದು ಈ ಕ್ಷಣದವರೆಗೂ ಖಚಿತವಾಗಿಲ್ಲ. ಪ್ರಧಾನಿ ಭೇಟಿಯ ಹಿನ್ನಲೆಯಲ್ಲಿ ಜ.19ರಂದು ನಿಗದಿಯಾಗಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ.
8
+ ಪ್ರಧಾನಿಯವರು ಬೆಂಗಳೂರಿಗೆ ಭೇಟಿ ನೀಡುವ ಸಂಬಂಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಸಮಾಲೋಚನೆ ನಡೆಸಿದ್ದು, ಪ್ರಧಾನಿ ಕಾರ್ಯಾಲಯದಿಂದ ಹೆಚ್ಚಿನ ಮಾಹಿತಿಯ ನಿರೀಕ್ಷೆಯಲ್ಲಿ ಬಿಜೆಪಿ ರಾಜ್ಯ ನಾಯಕರಿದ್ದಾರೆ ಎನ್ನಲಾಗಿದೆ.
9
+ ಈ ಹಿಂದೆ ಚಂದ್ರಯ��ನ ಯೋಜನೆಯ ಯಶಸ್ಸಿನ ಬಳಿಕ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸುವುದಕ್ಕೆಂದೇ ಪ್ರಧಾನಿ ಬೆಂಗಳೂರಿಗೆ ಬಂದಿದ್ದರು. ಆ ಸಂದರ್ಭ ಪ್ರಧಾನಿಯವರು ರೋಡ್ ಶೋ ಮಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ನಾಯಕರು ಹೇಳಿಕೆ ನೀಡಿ ನಂತರ ಮುಜುಗರಕ್ಕೀಡಾದ ಸನ್ನಿವೇಶ ಸೃಷ್ಟಿಯಾಗಿತ್ತು. ಯಾಕೆಂದರೆ, ಬಿಜೆಪಿ ನಾಯಕರ ಹೇಳಿಕೆಗಳ ಬೆನ್ನಲ್ಲೇ ರೋಡ್‍ಶೋ ಉದ್ದೇಶವಿಲ್ಲ ಎಂದು ಪ್ರಧಾನಿ ಕಾರ್ಯಾಲಯದಿಂದ ಮಾಹಿತಿ ಬಂದಿತ್ತು.
10
+ ನಂತರ ಪ್ರಧಾನಿ ಭೇಟಿ ವೇಳೆ ಸ್ವಾಗತಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೆರಳದ ವಿಚಾರವೂ ರಾಜ್ಯ ರಾಜಕೀಯದಲ್ಲಿ ಜಿದ್ದಾಜಿದ್ದಿಗೆ ಕಾರಣವಾಗಿತ್ತು. ಸಿಎಂ ಹಾಗೂ ಡಿಸಿಎಂ ಶಿಷ್ಟಾಚಾರ ಪಾಲಿಸಿಲ್ಲ ಎಂದು ರಾಜ್ಯ ಬಿಜೆಪಿ ನಾಯಕರು ಟೀಕಿಸಿದ್ದರು. ಆದರೆ, ಪ್ರಧಾನಿ ಕಾರ್ಯಾಲಯದಿಂದಲೇ ಸೂಚನೆ ಬಂದ ಕಾರಣ ತಾವು ಅವರನ್ನು ಸ್ವಾಗತಿಸಲು ತೆರಳಲಿಲ್ಲ ಎಂದು ಸಿಎಂ, ಡಿಸಿಎಂ ಸ್ಪಷ್ಟನೆ ನೀಡಿದ್ದರು. ಇದು ಸಹ ರಾಜ್ಯ ಬಿಜೆಪಿ ನಾಯಕರನ್ನು ಮುಜುಗರಕ್ಕೀಡು ಮಾಡಿತ್ತು.ಹೀಗಾಗಿ ಈ ಬಾರಿ ಎಚ್ಚರಿಕೆಯ ಹೆಜ್ಜೆ ಇಡಲು ಬಿಜೆಪಿಯವರು ಯೋಜಿಸಿದ್ದಾರೆ ಎಂದು ತಿಳಿದುಬಂದಿದೆ.
eesanje/url_46_261_1.txt ADDED
@@ -0,0 +1,8 @@
 
 
 
 
 
 
 
 
 
1
+ ಹೆಗಡೆ ವಿರುದ್ಧ ಎಫ್‍ಐಆರ್ ದಾಖಲಾಗಿದೆ : ಪರಮೇಶ್ವರ್
2
+ ಬೆಂಗಳೂರು,ಜ.16- ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಉತ್ತರಕನ್ನಡ ಕ್ಷೇತ್ರದ ಅನಂತಕುಮಾರ್ ಹೆಗಡೆ ವಿರುದ್ಧ ಕುಮಟಾದಲ್ಲಿ ಎಫ್‍ಐಆರ್ ದಾಖಲಾಗಿದೆ. ಸಾಕ್ಷ್ಯ ಸಂಗ್ರಹಿಸಿ ಬಂಧಿಸಬೇಕೋ, ಬೇಡವೋ ಎಂಬುದನ್ನು ಸ್ಥಳೀಯ ಪೊಲೀಸರು ನಿರ್ಧರಿಸಲಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
3
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ದಾಖಲಾಗಿರುವ ಪ್ರಕರಣದ ಆಧಾರದ ಮೇಲೆ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ಬಂಧಿಸಬೇಕೋ, ಬೇಡವೋ ಎಂಬುದನ್ನು ಸ್ಥಳೀಯವಾಗಿ ನಿರ್ಧರಿಸುತ್ತಾರೆ. ನಾವು ಸ್ಥಳೀಯ ಪೊಲೀಸರಿಗೆ ಯಾವುದೇ ರೀತಿಯ ನಿರ್ದೇಶನಗಳನ್ನು ನೀಡುವುದಿಲ್ಲ. ಅವರನ್ನು ಬಂಧಿಸಿ ಅಥವಾ ಬಿಟ್ಟುಬಿಡಿ ಎಂದು ನಾವು ಯಾರಿಗೂ ಹೇಳುವುದಿಲ್ಲ ಎಂದರು.ಯಾವ ಸೆಕ್ಷನ್‍ನಡಿ ಪ್ರಕರಣ ದಾಖಲಿಸಿಕೊಳ್ಳಬೇಕು, ಮುಂದೆ ಯಾವ ರೀತಿ ಕ್ರಮ ಕೈಗೊಳ್ಳಬೇಕೆಂಬುದರ ಬಗ್ಗೆ ಸ್ಥಳೀಯ ಪೊಲೀಸರೇ ನಿರ್ಧರಿಸುತ್ತಾರೆ.
4
+ ಮಥುರಾದ ಶಾಹಿ ಈದ್ಗಾ ಮಸೀದಿ ಸರ್ವೆಗೆ ಸುಪ್ರೀಂ ತಡೆ
5
+ ಕನ್ನಡಪರ ಹೋರಾಟಗಾರರ ಮೇಲೆ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯಬೇಕು ಎಂದು ಈವರೆಗೂ ಯಾರೂ ಕೇಳಿಲ್ಲ. ಒಂದು ವೇಳೆ ಈ ನಿಟ್ಟಿನಲ್ಲಿ ಬೇಡಿಕೆಗಳು ಬಂದರೆ ಸರ್ಕಾರ ಸೂಕ್ತ ಉತ್ತರ ನೀಡಲಿದೆ. ಇಂದು ಪೊಲೀಸ್ ಹಿರಿಯ ಅಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ ಈ ವಿಚಾರ ಚರ್ಚೆಯಾಗುವುದಿಲ್ಲ. ಸಭೆಯ ಅಜೆಂಡಾವೇ ಬೇರೆ ಇದೆ ಎಂದು ಹೇಳಿದರು.
6
+ ಜೆಟ್‍ಲ್ಯಾಕ್ ಪಬ್ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು ಸರಿಯಾದ ಕ್ರಮ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ಶಾಸಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹಸಚಿವರು, ಕಾನೂನಾತ್ಮಕವಾಗಿ ಯಾವುದು ಸೂಕ್ತ, ಯಾವುದು ಕಾನೂನು ಬಾಹಿರ ಎಂಬುದನ್ನು ಸ್ಥಳೀಯ ಪೊಲೀಸರು ಮತ್ತು ಡಿಸಿಪಿ ನೋಡಿಕೊಳ್ಳುತ್ತಾರೆ.
7
+ ರಾಮಮಂದಿರ ಉದ್ಘಾಟನೆ ಸಮಾರಂಭದಲ್ಲಿ ಕರ್ನಾಟಕದ ವೀಣಾವಾದನ
8
+ ಗೃಹಸಚಿವನಾಗಿ ನಾನು ಕಾನೂನುಬಾಹಿರವಾಗಿದ್ದರೂ ಪರವಾಗಿಲ್ಲ ಬಿಟ್ಟುಬಿಡಿ ಎಂದು ಹೇಳಲು ಬರುವುದಿಲ್ಲ. ಕಾನೂನು ಎಲ್ಲರಿಗೂ ಒಂದೇ. ಕಾನೂನಾತ್ಮಕವಾಗಿ ತೆಗೆದುಕೊಂಡ ಕ್ರಮಗಳನ್ನು ಸರ್ಕಾರ ಒಪ್ಪಿಕೊಳ್ಳಲಿದೆ ಎಂದು ಹೇಳಿದರು. ವಿರೋಧಪಕ್ಷಗಳು ಪ್ರತಿಯೊಂದು ಪ್ರಕರಣಕ್ಕೂ ಎಸ್‍ಐಟಿ ರಚಿಸಿ ಸಿಬಿಐ, ಸಿಐಡಿ ತನಿಖೆ ಮಾಡಿ ಎಂದು ಹೇಳುತ್ತಿರುತ್ತಾರೆ. ಅವರು ಹೇಳಿದಂತೆಲ್ಲಾ ಕೇಳುತ್ತಾ ಕುಳಿತರೆ ನಾವು ಆಡಳಿತ ಮಾಡಲಾಗುವುದಿಲ್ಲ. ಹಿಂದೆ ನಾವು ವಿರೋಧಪಕ್ಷದಲ್ಲಿದ್ದಾಗ ಸಾಕಷ್ಟು ಬೇಡಿಕೆಗಳನ್ನು ಮುಂದಿಟ್ಟಿದ್ದೆವು. ಅದನ್ನೆಲ್ಲಾ ಅವರು ಕೇಳಿದರೆ, ವಿರೋಧ ಪಕ್ಷದವರು ಹೇಳಿದಂತೆಲ್ಲಾ ಕೇಳುತ್ತಾ ಕೂರಲಾಗುವುದಿಲ್ಲ. ಜನಪರವಾಗಿ ಆಡಳಿತ ನೀಡುವುದಷ್ಟೇ ನಮ್ಮ ಆದ್ಯತೆ ಎಂದು ಹೇಳಿದರು.
eesanje/url_46_261_10.txt ADDED
@@ -0,0 +1,6 @@
 
 
 
 
 
 
 
1
+ ಕಾರಿಗೆ ಪಂಚರ್ ಹಾಕುವಾಗ ಅಪರಿಚಿತ ವಾಹನ ಡಿಕ್ಕಿ : ವಕೀಲ ಸೇರಿ ಇಬ್ಬರ ಸಾವು
2
+ ಶಿರಾ ,ಜ.15- ಪಂಚರ್ ಆಗಿದ್ದ ಕಾರನ್ನು ರಿಪೇರಿ ಮಾಡುವಾಗ ಹಿಂದಿನಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-4ರ ಕುಂಟೇಗೌಡನಹಳ್ಳಿ ಗೇಟ್ ಬಳಿ ನಡೆದಿದೆ.
3
+ ಬೆಂಗಳೂರಿನ ಆವಲಹಳ್ಳಿ ನಿವಾಸಿ ವಕೀಲರಾದ ಮಹೇಶ್(40),ಮತ್ತು ವಕೀಲರ ಸಹಕಾರ ಬ್ಯಾಂಕ್ ನ ಉದ್ಯೋಗಿ ಉಮೇಶ್(40) ಮೃತ ದುರ್ದೈವಿಗಳು ಮಹೇಶ್‍ಮತ್ತು ಉಮೇಶ್ ಅವರು ಬೆಂಗಳೂರಿನಿಂದ ತಮ್ಮ ಹುಂಡೈ ಐ 10 ಕಾರಿನಲ್ಲಿ ಹರಿಹರಕ್ಕೆ ಹೋಗುತ್ತಿದ್ದಾಗ ಮಧ್ಯರಾತ್ರಿ 12.30ರ ಸಂದರ್ಭದಲ್ಲಿ ತುಮಕೂರು ದಾಟಿ ಶಿರಾ ಕಡೆಗೆ ಬರುವಾಗ ಕಾರಿನ ಟೈರ್ ಪಂಚರ್‍ಆಗಿದೆ.
4
+ ರಾಮನ ವಿರೋಧಿ ಕಾಂಗ್ರೆಸ್ ಬೆಲೆ ತೆರಬೇಕಾಗುತ್ತದೆ : ಮೋಹನ್ ಯಾದವ್
5
+ ನಂತರ ಕಾರನ್ನು ರಸ್ತೆ ಪಕ್ಕ ನಿಲ್ಲಿಸಿ ಪಂಚರ್ ಹಾಕುತ್ತಿರುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅವರ ಮೇಲೆ ಹರಿದಿದೆ ಇಬ್ಬರು ಸ್ತಳದಲ್ಲೇ ಸಾವನ್ನಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
6
+ ಸಂಕ್ರಾಂತಿ ಹಬ್ಬದ ಸಂಭ್ರಮದ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ.ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತವೆಸಗಿ ಪರಾರಿಯಾಗಿರುವ ವಾಹನ ಚಾಲಕನ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.
eesanje/url_46_261_11.txt ADDED
@@ -0,0 +1,9 @@
 
 
 
 
 
 
 
 
 
 
1
+ ನಿಗಮ-ಮಂಡಳಿಗಳಿಗೆ ನೇಮಕ ವಿಳಂಬ, ಕಾರ್ಯಕರ್ತರು ಸಿಡಿಮಿಡಿ
2
+ ಬೆಂಗಳೂರು,ಜ.15- ವಿಧಾನಸಭೆ ಚುನಾವಣೆಯಲ್ಲಿ ಹಗಲು-ರಾತ್ರಿ ದುಡಿದು ಪಕ್ಷ ಅಧಿಕಾರಕ್ಕೆ ತಂದ ಕಾರ್ಯ ಕರ್ತರಿಗೆ ಆಡಳಿತದಲ್ಲಿ ಸಹಭಾಗಿತ್ವ ಸಿಗದೆ ದಿನೇದಿನೇ ಅಸಹನೆ ಹೆಚ್ಚುತ್ತಿರುವುದು ಕಂಡುಬಂದಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದರೂ ರಾಜ್ಯದಲ್ಲಿ ನಿಗಮಮಂಡಳಿಗಳ ನೇಮಕಾತಿ ಸೇರಿದಂತೆ ವಿವಿಧ ರಾಜಕೀಯ ಸ್ಥಾನಮಾನಗಳು ಸಿಗದೆ ಕಾರ್ಯಕರ್ತರು ಸಿಡಿಮಿಡಿಗೊಳ್ಳುತ್ತಿದ್ದಾರೆ.
3
+ ಸುಮಾರು 80 ಕ್ಕೂ ಹೆಚ್ಚು ನಿಗಮ ಮಂಡಳಿಗಳು 3 ಸಾವಿರಕ್ಕೂ ಹೆಚ್ಚು ಸ್ಥಳೀಯ ಸಮಿತಿಗಳ ಹುದ್ದೆಗಳು, ಪ್ರಾಧಿಕಾರ, ಅಕಾಡೆಮಿ ಸೇರಿದಂತೆ ನಾನಾ ರೀತಿಯ ರಾಜಕೀಯ ಅವಕಾಶಗಳಿದ್ದರೂ ಈವರೆಗೂ ಯಾವುದಕ್ಕೂ ನೇಮಕಾತಿಗಳಾಗಿಲ್ಲ. ಪ್ರತಿ ಬಾರಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ದೆಹಲಿಗೆ ಭೇಟಿ ನೀಡುವಾಗ ನಿಗಮ ಮಂಡಳಿಗಳ ಕುರಿತು ಚರ್ಚೆ ನಡೆಸುವುದಾಗಿ ಕಾರ್ಯಕರ್ತರ ಮೂಗಿಗೆ ತುಪ್ಪ ಸವರಲಾಗುತ್ತದೆ.ಆದರೆ ಅಲ್ಲಿಗೆ ಹೋದ ಬಳಿಕ ಚರ್ಚೆಯಾಗುವುದೇ ಬೇರೆ ವಿಚಾರಗಳು.
4
+ ಹೀಗಾಗಿ ದಸರಾ, ದೀಪಾವಳಿ, ಹೊಸ ವರ್ಷ, ಸಂಕ್ರಾಂತಿ ಎಂದು ಒಂದೊಂದು ಹಬ್ಬದ ಸಂದರ್ಭದಲ್ಲೂ ಅವಕಾಶ ಸಿಗಬಹುದು ಎಂದು ಕಾದು ಕುಳಿತಿದ್ದವರಿಗೆ ನಿರಾಶೆಯ ಬುತ್ತಿ ಭಾರವಾಗಲಾರಂಭಿಸಿದೆ.ಹೀಗಾಗಿ ಕಾರ್ಯಕರ್ತರು ಉತ್ಸಾಹ ಕಳೆದುಕೊಳ್ಳುತ್ತಿದ್ದಾರೆ. ಸಚಿವರುಗಳು ಕೂಡ ಪ್ರತಿದಿನ ಕಾರ್ಯಕರ್ತರು, ಮುಖಂಡರುಗಳ ಅರ್ಜಿಗಳನ್ನು ಪಡೆದು ಭರವಸೆ ನೀಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ಒಂದಿಷ್ಟು ವರ್ಗಾವಣೆ ಹೊರತುಪಡಿಸಿ ಉಳಿದ ಯಾವ ಕೆಲಸಗಳೂ ಆಗುತ್ತಿಲ್ಲ ಎಂಬ ಅಸಹನೆಯನ್ನು ಹೊರಹಾಕುತ್ತಿದ್ದಾರೆ.
5
+ ಇತ್ತೀಚೆಗೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿಯೂ ನೇಮಕಾತಿಗಳ ಕುರಿತು ಪ್ರಸ್ತಾಪಗಳಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇರುವ ಹುದ್ದೆಗಳಿಗೇ ನೇಮಕಾತಿ ಮಾಡಿಲ್ಲ. ಅದರ ಜೊತೆಗೆ ಪಂಚಖಾತ್ರಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸುವುದಾಗಿ ಘೋಷಿಸಿದ್ದರು. ಇದು ಅನಗತ್ಯವಾಗಿ ವಿವಾದ ಹುಟ್ಟಿಹಾಕಿದ್ದನ್ನು ಹೊರತುಪಡಿಸಿದರೆ ಬೇರೆ ಯಾವ ಲಾಭವಾದಂತೆಯೂ ಕಂಡುಬರುತ್ತಿಲ್ಲ.
6
+ 56 ದೇಶಗಳ 10 ಕೋಟಿ ಮನೆಗಳಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ
7
+ ಇದೇ ತಿಂಗಳ 21 ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಪಕ್ಷದ ನಾಯಕರು ಈಗ ಅದರತ್ತ ಗಮನ ಹರಿಸುತ್ತಿದ್ದಾರೆ. ಅಷ್ಟರಲ್ಲಿ ಲೋಕಸಭೆ ಚುನಾವಣೆ ಎದುರಾಗಲಿದೆ. ಪೂರ್ವ ತಯಾರಿಗಳೂ ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ 2-3 ತಿಂಗಳು ಕಾಲಾಹರಣವಾಗುವ ನಿರೀಕ್ಷೆಗಳಿವೆ.ಒಟ್ಟಾರೆ ಒಂದು ವರ್ಷಕ್ಕೂ ಹೆಚ್ಚು ಕಾಲ ಇದೇ ರೀತಿ ಸಮಯ ವ್ಯರ್ಥ ಮಾಡಿ ಕೊನೆಗೆ ನೇಮಕಾತಿ ಮಾಡಿದರೂ ಕೂಡ ಕಾಲಾವ ಕಡಿಮೆ ಸಿಗಲಿದೆ ಎಂಬ ಅತೃಪ್ತಿ ಕಾರ್ಯಕರ್ತರನ್ನು ಕಾಡುತ್ತಿದೆ.
8
+ ಚುನಾವಣೆ ಸಂದರ್���ದಲ್ಲಿ ಕಾರ್ಯಕರ್ತರೇ ಆಸ್ತಿ ಎನ್ನುವ ನಾಯಕರು ಅಧಿಕಾರ ಸಿಗುತ್ತಿದ್ದಂತೆ ಅದರ ಮೋಜಿನಲ್ಲಿ ಮೈಮರೆಯುತ್ತಾರೆ ಎಂಬ ಟೀಕೆಗಳಿವೆ. ಸ್ಥಳೀಯವಾಗಿ ಆರಾಧನ, ಆಶಯ, ವಿವಿಧ ನಗರ ಪ್ರಾಧಿಕಾರಗಳು, ಸ್ಥಳೀಯ ಸಂಸ್ಥೆಗಳ ಸದಸ್ಯತ್ವ ಸೇರಿದಂತೆ ಕೆಳ ಹಂತದಲ್ಲಿ 3 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ. ಅವುಗಳಿಗೆ ಒಂದು ವಾರದಲ್ಲೇ ನೇಮಕಾತಿ ಮಾಡಬೇಕು ಎಂದು ಮುಖ್ಯಮಂತ್ರಿಯವರು ಎಲ್ಲಾ ಶಾಸಕರಿಗೂ ತಾಕೀತು ಮಾಡಿದರು. ಆದರೆ ಸ್ಥಳೀಯ ಮಟ್ಟದಲ್ಲಿ ಈವರೆಗೂ ನೇಮಕಾತಿಯ ಪಟ್ಟಿಗಳೇ ಸಿದ್ಧವಾಗಿಲ್ಲ.ನಿಗಮ ಮಂಡಳಿಗಳ ನೇಮಕಾತಿಯಂತೂ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡುವಿನ ಭಿನ್ನಮತದಿಂದಲೇ ನೆನೆಗುದಿಗೆ ಬಿದ್ದಿದೆ ಎಂಬ ಆರೋಪಗಳಿವೆ.
9
+ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಉಮೇದಿನಲ್ಲಿರುವ ಕಾಂಗ್ರೆಸ್‍ಗೆ ಕಾರ್ಯಕರ್ತರ ನಿರುತ್ಸಾಹ ಸವಾಲಾಗುವ ಸಾಧ್ಯತೆಗಳಿವೆ. ಒಂದೆಡೆ ನಿಗಮ ಮಂಡಳಿಗಳ ನೇಮಕಾತಿ ಮಾಡಿದರೆ ಅತೃಪ್ತರ ಬಂಡಾಯಗಳು ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕವೂ ನಾಯಕರನ್ನು ಕಾಡುತ್ತಿದೆ.ಒಟ್ಟಾರೆ ಕಾರ್ಯಕರ್ತರ ಮೂಗಿಗೆ ತುಪ್ಪ ಸವರುತ್ತಲೇ ಸಿದ್ದರಾಮಯ್ಯನವರ ಸರ್ಕಾರ ಒಂದು ವರ್ಷ ಕಾಲ ಕಳೆದಂತಾಗಿದೆ.
eesanje/url_46_261_12.txt ADDED
@@ -0,0 +1,7 @@
 
 
 
 
 
 
 
 
1
+ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸುಧೀರ್ ಮರೋಳಿ ರಾಜೀನಾಮೆ
2
+ ಚಿಕ್ಕಮಗಳೂರು,ಜ.15- ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಸುಧೀರ್ ಮುರೋಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಕಾರ್ಯಕರ್ತರ ಸಮ್ಮಿಲನ ಕಾರ್ಯಕ್ರಮದಲ್ಲಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿರುವ ಅವರು, ಲೋಕಸಭೆ ಚುನಾವಣೆಗೆ ತಾವು ಆಕಾಂಕ್ಷಿಯಾಗಿದ್ದು, ಅದಕ್ಕೆ ಸಂಬಂಧಪಟ್ಟಂತೆ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕಾಗಿರುವುದರಿಂದಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದರು.
3
+ ಕೆಪಿಸಿಸಿ ವಕ್ತಾರರ ಜವಾಬ್ದಾರಿಯಲ್ಲಿ ಮುಂದುವರೆಯುತ್ತೇನೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಹೊಸಬರಿಗೆ ಅವಕಾಶ ದೊರೆಯಬೇಕು ಎಂಬ ಕಾರಣಕ್ಕಾಗಿ ರಾಜೀನಾಮೆ ನೀಡುತ್ತಿದ್ದೇನೆ. ಇದನ್ನು ಅನ್ಯತಾ ಭಾವಿಸಬೇಡಿ ಎಂದು ಹೇಳಿದ್ದಾರೆ.
4
+ ಉಡುಪಿ ಮತ್ತು ಚಿಕ್ಕಮಗಳೂರು ಎರಡೂ ಜಿಲ್ಲೆಗಳಲ್ಲಿ ಚುನಾವಣೆ ತಯಾರಿಗಳಾಗಬೇಕಿದೆ. ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲುವ ಅವಕಾಶ ಹೆಚ್ಚಿವೆ. ಪ್ರತಿಯೊಬ್ಬ ಕಾರ್ಯಕರ್ತರಲ್ಲೂ ಉತ್ಸಾಹ ಕಂಡುಬರುತ್ತಿದೆ. ಕೇಂದ್ರ ಸರ್ಕಾರದ ವೈಫಲ್ಯಗಳು ಹಿಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನ ತುಲನೆ ಮಾಡಿ ನೋಡುತ್ತಿದ್ದಾರೆ. ಕಾಂಗ್ರೆಸ್ ಮಾತ್ರವೇ ಜನರ ಜೀವನ ಸುಧಾರಣೆಗೆ ಯೋಜನೆ ಮತ್ತು ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ ಎಂದು ಮನವರಿಕೆಯಾಗಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಸರ್ವಧರ್ಮ ಮತ್ತು ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡುವ ಬದ್ಧತೆ ಕಾಂಗ್ರೆಸ್‍ನಲ್ಲಿದೆ ಎಂದು ತಿಳಿಸಿದ್ದಾರೆ.
5
+ “ರಾಮಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವುದಿಲ್ಲ” ಎಂದು ಶ್ರೀರಾಮ ನನ್ನ ಕನಸಲ್ಲಿ ಬಂದು ಹೇಳಿದ್ದಾನೆ
6
+ ಪಕ್ಷದ ಸಂಘಟನೆ ವಿಷಯದಲ್ಲಿ ತಾವು ರಾಜ್ಯಾದ್ಯಂತ ಪ್ರವಾಸ ಮಾಡಿದ್ದು, ಮುಂದಿನ ದಿನಗಳಲ್ಲೂ ಇದೇ ಬದ್ಧತೆಯನ್ನು ಮುಂದುವರೆಸುತ್ತೇನೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍¸ ಹೆಚ್ಚು ಸ್ಥಾನ ಗೆಲ್ಲಬೇಕು. ಕೇಂದ್ರದಲ್ಲಿ ಜನಪರ ಆಡಳಿತ ಅಸ್ತಿತ್ವಕ್ಕೆ ಬರಬೇಕೆಂಬುದು ತಮ್ಮ ಅಭಿಲಾಷೆ ಎಂದರು.
7
+ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸುಧೀರ್ ಮುರೋಳಿ ರಾಜಿನಾಮೆ ಘೋಷಿಸುತ್ತಿದ್ದಂತೆ ಹಿರಿಯ ಮೂಖಂಡ ನಾಗೇಶ್ ಸೇರಿದಂತೆ ಹಲವರು ನಿರ್ಧಾರವನ್ನು ಹಿಂಪಡೆಯುವಂತೆ ಒತ್ತಾಯಿಸಿದರು. ಲೋಕಸಭೆ ಚುನಾವಣೆವರೆಗೂ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಬೇಕು. ಇದರಿಂದಾಗಿ ಪಕ್ಷಕ್ಕೆ ಅನುಕೂಲವಾಗಲಿದೆ ಎಂದು ಒತ್ತಾಯಿಸಿದರು.
eesanje/url_46_261_2.txt ADDED
@@ -0,0 +1,9 @@
 
 
 
 
 
 
 
 
 
 
1
+ ಮಂತ್ರಾಕ್ಷತೆಯಿಂದ ಹಸಿದ ಹೊಟ್ಟೆ ತುಂಬುವುದಿಲ್ಲ : ಸಚಿವ ಶಿವರಾಜ ತಂಗಡಗಿ
2
+ ಚಿತ್ರದುರ್ಗ,ಜ.16- ಮಂತ್ರಾಕ್ಷತೆಯಿಂದ ಹಸಿದ ಹೊಟ್ಟೆ ತುಂಬುವುದಿಲ್ಲ, ನಿರುದ್ಯೋಗಿಗಳ ಕಷ್ಟ ತಪ್ಪುವುದಿಲ್ಲ, ಬೀದಿಯಲ್ಲಿರುವವರಿಗೆ ಮನೆಯೂ ಸಿಗುವುದಿಲ್ಲ. ಪ್ರಧಾನಿಯವರು ದೇವಸ್ಥಾನ ತೊಳೆಯುವುದರ ಬದಲು ದೇಶದ ನಿರುದ್ಯೋಗ ಸಮಸ್ಯೆ ನಿವಾರಿಸಲಿ ಎಂದು ಕನ್ನಡ ಮತ್ತು ಸಂಸ್ಕøತ ಇಲಾಖೆ ಸಚಿವ ಶಿವರಾಜ ತಂಗಡಗಿ ಸವಾಲು ಹಾಕಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯವರಿಗೆ ಧರ್ಮ, ಪಾಕಿಸ್ತಾನ, ದೇವಸ್ಥಾನ, ಮಸೀದಿ ವಿಚಾರಗಳು ನೆನಪಾಗುತ್ತವೆ. ಪ್ರಧಾನಿ ನರೇಂದ್ರ ಮೋದಿಯವರು ಕಳೆದ 10 ವರ್ಷಗಳಲ್ಲಿ ಎಂದಿಗೂ ಬಡವರು, ದೀನದಲಿತರು, ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಒಂದೂ ಮಾತನಾಡಲಿಲ್ಲ. ಅವರಿಗಾಗಿ ರೂಪಿಸಿದ ಯೋಜನೆಗಳ ಮಟ್ಟಿಗೂ ಚರ್ಚೆಯಾಗಿಲ್ಲ ಎಂದು ಹೇಳಿದರು.
4
+ ರಾಮಮಂದಿರ ನಿರ್ಮಾಣವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ರಾಮಮಂದಿರದ ಬಾಗಿಲು ತೆರೆದಿದ್ದು ರಾಜೀವ್ ಗಾಂಧಿಯವರು. ಅದನ್ನು ಎಂದಿಗೂ ರಾಜಕೀಯಕ್ಕೆ ಬಳಸಿಕೊಳ್ಳಲಿಲ್ಲ. ಈಗ ಮಂತ್ರಾಕ್ಷತೆ ಹಿಡಿದುಕೊಂಡು ಮನೆಮನೆಗೆ ಓಡಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
5
+ ಅನ್ನಭಾಗ್ಯ ಯೋಜನೆಗೆ ಹಣ ಕೊಡುತ್ತೇವೆ, ಅಕ್ಕಿ ಕೊಡಿ ಎಂದು ಕೇಳಿದರೂ ಅಕ್ಕಿ ಪೂರೈಸಲಿಲ್ಲ. ಈಗ ಮಂತ್ರಾಕ್ಷತೆಯನ್ನು ತೆಗೆದುಕೊಂಡು ಮನೆಮನೆಗೆ ತಲುಪಿಸುತ್ತಿದ್ದಾರೆ. ಮಂತ್ರಾಕ್ಷತೆಯಿಂದ ಹೊಟ್ಟೆ ತುಂಬುವುದಿಲ್ಲ, ಹಸಿವು ನೀಗುವುದಿಲ್ಲ, ಬಡತನವೂ ಹೋಗುವುದಿಲ್ಲ, ಮನೆಯೂ ಸಿಗುವುದಿಲ್ಲ. ಬೀದಿಬೀದಿ ಅಲೆಯುತ್ತಿರುವ ಯುವಕರಿಗೆ ಉದ್ಯೋಗವೂ ದೊರಕುವುದಿಲ್ಲ. ಅದು ಕೇವಲ ಇವರ ರಾಜಕೀಯ ಲಾಭಕ್ಕಷ್ಟೇ ಬಳಕೆಯಾಗುತ್ತಿದೆ. ಮಂತ್ರಾಕ್ಷತೆಗಾಗಿ ಮನೆಮನೆ ಸುತ್ತುವವರು ಪ್ರತಿ ಮನೆಯ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲಿ. ಆ ಮೂಲಕ ಜನರಿಗಾಗಿ ಒಳ್ಳೆಯ ಯೋಜನೆ ಜಾರಿಗೊಳ್ಳುವಂತೆ ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸಿದರು.
6
+ ಮಾಜಿ ಸಚಿವ ಈಶ್ವರಪ್ಪ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಜೈಲು ಸೇರಬೇಕಿತ್ತು. ತಮ್ಮ ತಟ್ಟೆಯಲ್ಲಿ ಬಿದ್ದಿರುವ ಸತ್ತ ಕತ್ತೆಯನ್ನು ನೋಡಿಕೊಳ್ಳದೆ, ಇನ್ನೊಬ್ಬರ ತಟ್ಟೆಯ ನೊಣದ ಬಗ್ಗೆ ಮಾತನಾಡುತ್ತಾರೆ ಎಂದು ತಿರುಗೇಟು ನೀಡಿದರು.
7
+ ನೇಪಾಳ ನದಿಯಲ್ಲಿ ಭಾರತೀಯ ನಂಬರ್‌ ಪ್ಲೇಟ್‌ ವಾಹನ ಪತ್ತೆ
8
+ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ 4 ವರ್ಷದಿಂದ ಎಲ್ಲಿ ಹೋಗಿದ್ದರು. ಚುನಾವಣೆ ಸಮೀಪಿಸುತ್ತಿರುವಂತೆ ಹೊರಗೆ ಬಂದು ವಿವಾದಗಳನ್ನು ಸೃಷ್ಟಿಸುತ್ತಿದ್ದಾರೆ. ಮಸೀದಿಗಳ ಜಾಗದಲ್ಲಿ ದೇವಸ್ಥಾನಗಳಿದ್ದವು ಎಂದು ಹೇಳಿ ಶಾಂತಿ ಕದಡುವುದನ್ನು ಬಿಟ್ಟರೆ ಅವರ ಸಾಧನೆಯೇನು? ಕ್ಷೇತ್ರದ ಎಷ್ಟು ಜನರ ಸಮಸ್ಯೆ ಬಗೆಹರಿಸಿದ್ದಾರೆ? ಯ���ವ ಯೋಜನೆಗಳನ್ನು ಜನರಿಗಾಗಿ ಜಾರಿಗೆ ತಂದಿದ್ದಾರೆ ಎಂದು ಪ್ರಶ್ನಿಸಿದರು.
9
+ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಗ್ಗೆ ಮಾತನಾಡುವಾಗ ಎಚ್ಚರಿಕೆ ವಹಿಸಬೇಕು. ನಮಗೂ ಅವರದೇ ಭಾಷೆಯಲ್ಲಿ ಮಾತನಾಡಲು ಗೊತ್ತಿದೆ ಎಂದು ಏಕವಚನದಲ್ಲಿ ತಿರುಗೇಟು ನೀಡಿದರು.
eesanje/url_46_261_3.txt ADDED
@@ -0,0 +1,8 @@
 
 
 
 
 
 
 
 
 
1
+ ಮಗನ ಕೈಯಲ್ಲಿ ಮೂಡಿಬಂದ ರಾಮ ಲಲ್ಲಾ ವಿಗ್ರಹ, ತಾಯಿ ಸಂತಸ
2
+ ಅಯೋಧ್ಯೆ, ಜ.16- ರಾಮಮಂದಿರದಲ್ಲಿ ಇದೇ 22 ರಂದು ನಡೆಯಲಿರುವ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಲು ತನ್ನ ಮಗನ ರಾಮಲಲ್ಲಾ ವಿಗ್ರಹವನ್ನು ಆಯ್ಕೆ ಮಾಡಿದ ಬಗ್ಗೆ ಶಿಲ್ಪಿ ಅರುಣ್ ಯೋಗಿರಾಜ್ ಅವರ ತಾಯಿ ಸರಸ್ವತಿ ಸಂತಸ ವ್ಯಕ್ತಪಡಿಸಿದ್ದಾರೆ.
3
+ ನನಗೆ ತುಂಬಾ ಸಂತೋಷವಾಗಿದೆ, ಕಳೆದ ಆರು ತಿಂಗಳಿಂದ ಅವನು ಮಾಡಿದ್ದರ ಫಲ ಇದು. ಅವನ ಕಲೆಯನ್ನು ನೋಡಿ ಅವನ ತಂದೆ ಸಂತೋಷಪಡುತ್ತಿದ್ದರು ಎಂದು ಅರುಣ್ ಯೋಗಿರಾಜ್ ಅವರ ತಾಯಿ ಹೇಳಿದರು. ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿರುವ ರಾಮಲಲ್ಲಾ ಮೂರ್ತಿಯನ್ನು ಅಯೋಧ್ಯೆಯ ಐತಿಹಾಸಿಕ ದೇಗುಲದಲ್ಲಿ ಪ್ರತಿಷ್ಠಾಪನೆಗೆ ಆಯ್ಕೆ ಮಾಡಲಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ತಿಳಿಸಿದೆ. ಜನವರಿ 22 ರಂದು ರಾಮ್ ಲಲ್ಲಾ ಅವರ ಪ್ರಾಣ ಪ್ರತಿಷ್ಠಾ ಸಮಾರಂಭ ನಡೆಯಲಿದೆ.
4
+ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೃಷ್ಣ ಶಿಲೆಯ ಮೇಲೆ ಕೆತ್ತಿದ ಮೂರ್ತಿಯನ್ನು ಭಗವಾನ್ ಶ್ರೀ ರಾಮಲಲ್ಲಾ ವಿಗ್ರಹವನ್ನು ಅಂತೀಮವಾಗಿ ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್ ಎಕ್ಸ್‍ನಲ್ಲಿ ಪೋಸ್ಟ್‍ನಲ್ಲಿ ಬರೆದಿದೆ.
5
+ ಅಮೆರಿಕ ಅಧ್ಯಕ್ಷ ಸ್ಥಾನದ ಚುನಾವಣೆಯಿಂದ ಹಿಂದೆ ಸರಿದ ವಿವೇಕ್ ರಾಮಸ್ವಾಮಿ
6
+ ಇದಕ್ಕೂ ಮೊದಲು, ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ಅರುಣ್ ಯೋಗಿರಾಜ್ ಅವರ ಕೆಲಸದ ಒಳನೋಟಗಳನ್ನು ಹಂಚಿಕೊಂಡರು, ಪ್ರತಿಮೆಯ ರಚನೆಯ ಸಮಯದಲ್ಲಿ ಶಿಲ್ಪಿಯ ಗಮನಾರ್ಹ ಏಕಾಗ್ರತೆ ಮತ್ತು ತ್ಯಾಗವನ್ನು ಶ್ಲಾಘಿಸಿದ್ದಾರೆ. ಮೂರ್ತಿ ತಯಾರಿಸುವಾಗ ಕೆಲಸದಲ್ಲಿ ಆಗುವ ಅನಾಹುತ ತಪ್ಪಿಸಲು ತಿಂಗಳಾನುಗಟ್ಟಲೆ ಕುಟುಂಬಸ್ಥರೊಂದಿಗೂ ಮಾತನಾಡಿರಲಿಲ್ಲ. ಅವರು ಮಕ್ಕಳ ಮುಖವನ್ನೂ ನೋಡಿಲ್ಲ.ಪ್ರತಿಮೆ ನಿರ್ಮಾಣ ಕಾರ್ಯದ ವೇಳೆ ಅರುಣ್ ಯೋಗಿರಾಜ್ ಅವರ ಜೀವನಶೈಲಿಯನ್ನು ನೀವು ಊಹಿಸಲೂ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಕೆಲಸದ ವೇಳೆ ತಿಂಗಳಾನುಗಟ್ಟಲೆ ಫೋನ್ ಮುಟ್ಟಲೇ ಇಲ್ಲ. ಅವನು ತನ್ನ ಮಕ್ಕಳು ಮತ್ತು ಕುಟುಂಬದವರೊಂದಿಗೆ ಮಾತನಾಡಲಿಲ್ಲ.
7
+ ಅರುಣ್ ಯೋಗಿರಾಜ್ ಅವರು ಹಲವು ತಲೆಮಾರುಗಳಿಂದ ವಿಗ್ರಹ ನಿರ್ಮಾಣದ ಕೆಲಸದಲ್ಲಿ ಸಂಬಂಧ ಹೊಂದಿದ್ದಾರೆ ಎಂದು ರೈ ಹೇಳಿದರು. ಅವರ ಪೂರ್ವಜರೂ ಇದೇ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಮಾಹಿತಿ ಪ್ರಕಾರ ಕೇದಾರನಾಥದಲ್ಲಿ ಶಂಕರಾಚಾರ್ಯರ ಪ್ರತಿಮೆಯನ್ನು ಅವರೇ ತಯಾರಿಸಿದ್ದಾರೆ. ಅವರು ದೆಹಲಿಯ ಇಂಡಿಯಾ ಗೇಟ್ ಕೆಳಗೆ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಸಹ ರಚಿಸಿದ್ದಾರೆ ಎಂದು ತಿಳಿದುಬಂದಿದೆ.
8
+ ರಾಮ ಲಲ್ಲಾನ ವಿಗ್ರಹವನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ, ಅವರ ವಿಗ್ರಹವನ್ನು ಆಯ್ಕೆ ಮಾಡಲಾಯಿತು. ಅವರ ಕಾರ್ಯವನ್ನು ಎಲ್ಲಾ ಟ್ರಸ್ಟಿಗಳು ಶ್ಲಾಘಿಸಿದ್���ಾರೆ. ಜನವರಿ 18 ರಂದು ದೇವಾಲಯದ ಗರ್ಭ ಗೃಹದಲ್ಲಿ ರಾಮನ ವಿಗ್ರಹವನ್ನು ಅದರ ಸ್ಥಾನದಲ್ಲಿ ಇರಿಸಲಾಗುವುದು ಮತ್ತು ಜನವರಿ 22 ರಂದು ಮಧ್ಯಾಹ್ನ 12.20 ಕ್ಕೆ ಪ್ರಾಣ ಪ್ರತಿಷ್ಠೆ ನಡೆಯಲಿದೆ ಎಂದು ರೈ ಘೋಷಿಸಿದ್ದಾರೆ.
eesanje/url_46_261_4.txt ADDED
@@ -0,0 +1,9 @@
 
 
 
 
 
 
 
 
 
 
1
+ ಟರ್ಫ್‍ಕ್ಲಬ್‍ನ ಪದಾಧಿಕಾರಿ ವಜಾಗೊಳಿಸಿ ಆಡಳಿತಾಧಿಕಾರಿ ನೇಮಕಕ್ಕೆ ವೈ.ಎ.ನಾರಾಯಣಸ್ವಾಮಿ ಒತ್ತಾಯ
2
+ ಬೆಂಗಳೂರು,ಜ.16- ನಗರದ ಪ್ರತಿಷ್ಠಿತ ಬೆಂಗಳೂರು ಟರ್ಫ್‍ಕ್ಲಬ್‍ನ ಪದಾಕಾರಿಗಳನ್ನು ತಕ್ಷಣವೇ ವಜಾಗೊಳಿಸಿ ಆಡಳಿತಾಧಿಕಾರಿಯನ್ನು ನೇಮಕ ಮಾಡಬೇಕೆಂದು ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿರುವ ಅವರು ಟರ್ಫ್ ಕ್ಲಬ್ ಮೇಲೆ ಪೊಲೀಸರು ದಾಳಿ ನಡೆಸಿದಾಗ 3.45 ಕೋಟಿ ನಗದು ವಶಪಡಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿದೆ ಎಂದು ಹೇಳಿದ್ದಾರೆ.
3
+ ಕ್ಲಬ್‍ನಲ್ಲಿ ಕಾನೂನು ಬಾಹಿರವಾಗಿ ಬೆಟ್ಟಿಂಗ್ ದಂಧೆ ನಡೆಯುತ್ತಿರುವುದರ ಬಗ್ಗೆ ಸಿಸಿಬಿ ಪೊಲೀಸರು ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ್ದಾರೆ. ತನಿಖಾ ವರದಿ ಬರುವವರೆಗೂ ಪದಾಧಿಕಾರಿಗಳನ್ನು ವಜಾ ಮಾಡಿ ಆಡಳಿತಾಧಿಕಾರಿಯನ್ನು ನೇಮಿಸಬೇಕೆಂದು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.
4
+ ದಾಳಿಯ ವೇಳೆ ಟರ್ಫ್‍ಕ್ಲಬ್ ಲೆಕ್ಕಪತ್ರ ನಿರ್ವಹಣೆಯಲ್ಲಿ ಅನೇಕ ದೋಷಗಳು ಕಂಡುಬಂದಿವೆ. ನೂರಾರು ಕೋಟಿ ಜಿಎಸ್‍ಟಿ ವಂಚನೆ ಮತ್ತು ಅಕ್ರಮವಾಗಿ ನಡೆಯುತ್ತಿದ್ದ ಬೆಟ್ಟಿಂಗ್ ಅವ್ಯವಹಾರಗಳನ್ನು ದಾಳಿಯ ವೇಳೆ ಪತ್ತೆಯಾಗಿದೆ. ಈ ಸಂಬಂಧ 66 ಜನರನ್ನು ಕೂಡ ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಕಾನೂನು ಕ್ರಮದ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.
5
+ ಮನುಷ್ಯನ ದೇಹದಲ್ಲಿ ಮೈಕ್ರೋಚಿಪ್ ಆರೋಪ, ತನಿಖೆಗೆ ಕೋರ್ಟ್ ಸೂಚನೆ
6
+ ಟರ್ಫ್ ಕ್ಲಬ್ ಪದಾಧಿಕಾರಿಗಳು ಶಾಮೀಲಾಗದೇ ಈ ಪ್ರಮಾಣದಲ್ಲಿ ಬುಕ್ಕಿಗಳು ಅವ್ಯವಹಾರದಲ್ಲಿ ತೊಡಗಲು ಅಸಾಧ್ಯ ಮತ್ತು ಅನೇಕ ಸ್ಟುವಡ್ರ್ಸ್‍ಗಳೂ ಕೂಡ ಈ ವಂಚನೆಯಲ್ಲಿ ಪಾಲುದಾರರು ಹಾಗೂ ಫಲಾನುಭವಿಗಳಾಗಿದ್ದಾರೆಂದು ತಿಳಿದುಬಂದಿದೆ. ಸರ್ಕಾರ ಮೀನಾಮೇಷ ಎಣಿಸದೆ ಕಾನೂನು ಕ್ರಮ ಜರುಗಿಸಬೇಕೆಂದು ಮನವಿ ಮಾಡಿದ್ದಾರೆ.
7
+ ನಗರ ಮಧ್ಯಭಾಗದಲ್ಲಿ ರೇಸ್‍ಕೋರ್ಸ್ ಹೊಂದಿರುವ ಟರ್ಫ್ ಕ್ಲಬ್ ಶೇ.28ರಷ್ಟು ಜಿಎಸ್‍ಟಿ ನೀಡುವುದನ್ನು ತಪ್ಪಿಸಲು ಈ ವಂಚನೆಯಲ್ಲಿ ಪಾಲುದಾರರಾಗಿರುವುದರಲ್ಲಿ ಅನುಮಾನವಿಲ್ಲ. ಈ ದಂಧೆಯು ಅನೇಕ ವರ್ಷಗಳಿಂದ ನಡೆಯುತ್ತಿದೆ. ವಾಸ್ತವ ಹೀಗಿದ್ದರೂ ಕ್ಲಬ್ ಅಧಿಕಾರಿಗಳು ತಮಗೆ ತಿಳಿದಿರಲಿಲ್ಲ ಎಂದು ಹೇಳಿರುವುದನ್ನು ನಂಬಬಾರದು ಎಂದು ನಾರಾಯಣಸ್ವಾಮಿ ಹೇಳಿದ್ದಾರೆ.
8
+ ಮೆಲ್ನೋಟಕ್ಕೆ ಇದೊಂದು ಬಹುಕೋಟಿ ಹಗರಣ ಎಂಬುದು ಗೋಚರವಾಗುತ್ತದೆ. ಅನೇಕ ಪ್ರಭಾವಿ ಮತ್ತು ಪ್ರತಿಷ್ಠಿತ ವ್ಯಕ್ತಿಗಳು ಶಾಮೀಲಾಗಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ. ಆದ್ದರಿಂದ ಈ ವಂಚನೆಯ ಪ್ರಕರಣವನ್ನು ನಿವೃತ್ತ ಹೈಕೋರ್ಟ್ ನ್ಯಾಯಾೀಧಿಶರಿಂದ ತನಿಖೆಗೆ ಒಳಪಡಿಸಿದರೆ ಸತ್ಯವು ಹೊರಬರಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಸ್ಥಳದಲ್ಲಿ ಟ್ರೀಪಾರ್ಕ್ ನಿರ್ಮಿಸಿ ನಗರದ ನಾಗ��ಿಕರ ಉಪಯೋಗಕ್ಕೆ ಬಳಕೆ ಮಾಡುವುದು ಅತ್ಯಂತ ಸೂಕ್ತ ಯೋಜನೆಯಾಗುವುದು.
9
+ ಈಗಾಗಲೇ ರಾಜ್ಯ ಸರ್ಕಾರಗಳು ಹಲವು ಬಾರಿ ಟರ್ಫ್ ಕ್ಲಬ್ ಸ್ಥಳಾಂತರಕ್ಕೆ ಪ್ರಯತ್ನಿಸಿವೆ. ನಗರ ಮಧ್ಯ ಭಾಗದಿಂದ ಇದನ್ನು ಸ್ಥಳಾಂತರಗೊಳಿಸುವಪದು ಅನಿವಾರ್ಯವಾಗಿದೆ. ಆದ್ದರಿಂದ ಸರ್ಕಾರ ಕೂಡಲೇ ಇದನ್ನು ಆದ್ಯತೆಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು.
eesanje/url_46_261_5.txt ADDED
@@ -0,0 +1,7 @@
 
 
 
 
 
 
 
 
1
+ ಒಗ್ಗಟ್ಟು ಪ್ರದರ್ಶನಕ್ಕೆ ಕಾಂಗ್ರೆಸ್ ಹೈಕಮಾಂಡ್ ತಾಕೀತು
2
+ ಬೆಂಗಳೂರು,ಜ.15- ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಪ್ರತಿಪಕ್ಷಗಳಿಗೆ ತಕ್ಕ ಪ್ರತ್ಯುತ್ತರ ನೀಡಲು ಮತ್ತು ಕಾಂಗ್ರೆಸ್ ನಾಯಕತ್ವವನ್ನು ಸಮರ್ಥಿಸಿಕೊಳ್ಳಲು ಒಗ್ಗಟ್ಟು ಪ್ರದರ್ಶಿಸುವಂತೆ ಹೈಕಮಾಂಡ್ ರಾಜ್ಯ ನಾಯಕರಿಗೆ ತಾಕೀತು ಮಾಡಿದೆ. ಕಾಂಗ್ರೆಸ್‍ನಲ್ಲಿ ಹಲವು ಬಣಗಳು ತೆರೆಮರೆಯಲ್ಲಿ ಸಕ್ರಿಯವಾಗಿವೆ.
3
+ ಹೀಗಾಗಿ ರಾಜಕೀಯ ವಿಚಾರಗಳು ಬಂದಾಗ ಒಂದೊಂದು ಬಣವೂ ಒಂದೊಂದು ರೀತಿಯ ನಿಲುವುಗಳನ್ನು ಪ್ರದರ್ಶಿಸುತ್ತವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಪಕ್ಷಗಳು ವಾಗ್ದಾಳಿ ನಡೆಸಿದರೆ ಉಳಿದ ಬಣಗಳ ನಾಯಕರು ತಮಗೂ ಅದಕ್ಕೂ ಸಂಬಂಧವಿಲ್ಲ ಎಂಬಂತೆ ಮೌನಕ್ಕೆ ಶರಣಾಗಿದ್ದಾರೆ.
4
+ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಟೀಕೆಗಳು ಕೇಳಿಬಂದಾಗ ಸಿದ್ದರಾಮಯ್ಯ ಅವರ ಬಣದ ನಾಯಕರು ಪ್ರತಿರೋಧ ವ್ಯಕ್ತಪಡಿಸುವುದಿಲ್ಲ. ಕೆಲವೊಮ್ಮೆ ಎಐಸಿಸಿ ನಾಯಕರ ಕುರಿತಂತೆಯೂ ಕಟು ಟೀಕೆಗಳು ಕಂಡುಬಂದಾಗ ಅದಕ್ಕೆ ವಿರೋಧ ವ್ಯಕ್ತಪಡಿಸುವ ರಾಜಕೀಯ ಏಕತೆ ಕಾಂಗ್ರೆಸ್‍ನಲ್ಲಿ ಕಂಡುಬರುವುದಿಲ್ಲ. ಇದು ಒಳಪಂಗಡಗಳ ಅಂತರವನ್ನು ಹೆಚ್ಚಿಸುತ್ತಲೇ ಬಂದಿದೆ. ಲೋಕಸಭಾ ಚುನಾವಣೆಯಲ್ಲೂ ಇದೇ ರೀತಿ ಮುಂದುವರೆದರೆ ರಾಜಕೀಯವಾಗಿ ಹಿನ್ನಡೆಯಾಗಬಹುದು ಎಂಬ ಆತಂಕ ಪಕ್ಷದ ನಾಯಕರನ್ನು ಕಾಡುತ್ತಿದೆ. ಹೀಗಾಗಿ ಒಗ್ಗಟ್ಟು ಪ್ರದರ್ಶನ ಮಾಡುವಂತೆ ಹೈ ಕಮಾಂಡ್ ನಾಯಕರು ಸೂಚನೆ ನೀಡಿದ್ದಾರೆ.
5
+ ಟರ್ಕಿಯಲ್ಲಿ ಇಸ್ರೇಲ್ ಫುಟ್ಬಾಲ್ ಆಟಗಾರನ ಬಂಧನ
6
+ ಇತ್ತೀಚೆಗೆ ಸಂಸದ ಅನಂತಕುಮಾರ್ ಹೆಗಡೆ ಅವರು ಸಿದ್ದರಾಮಯ್ಯ ಅವರ ಬಗ್ಗೆ ಏಕವಚನ ಹಾಗೂ ಅವಹೇಳನಕಾರಿಯಾಗಿ ಟೀಕೆ ಮಾಡಿದ್ದರು. ಇದಕ್ಕೆ ಕಾಂಗ್ರೆಸ್‍ನ ಬಹಳಷ್ಟು ಸಚಿವರು ಮೃದು ಧೋರಣೆಯಲ್ಲೇ ಪ್ರತಿಕ್ರಿಯಿಸಿ ಜಾರಿಕೊಂಡಿದ್ದಾರೆ. ಶಿವರಾಜ್ ತಂಗಡಗಿ ಮಾತ್ರ ಕಟು ಶಬ್ಧಗಳಲ್ಲಿ ಪ್ರತಿಕ್ರಿಯಿಸಿದ್ದಾರೆ. ಶಾಸಕರ ಪೈಕಿ ಪ್ರದೀಪ್ ಈಶ್ವರ್‍ರನ್ನು ಹೊರತುಪಡಿಸಿದರೆ ಉಳಿದವರ್ಯಾರೂ ಸಿದ್ದರಾಮಯ್ಯ ಪರವಾಗಿ ಧ್ವನಿಯೆತ್ತಿದ್ದು ಕಂಡುಬಂದಿಲ್ಲ. ಹೀಗಾಗಿ ಹೈಕಮಾಂಡ್ ನೇರ ಎಚ್ಚರಿಕೆ ಸಂದೇಶ ರವಾನಿಸಿದ್ದು, ಬಿಜೆಪಿಯ ಟೀಕೆಗಳು, ಆರೋಪಗಳಿಗೆ ಪ್ರತಿಕ್ರಿಯಿಸುವಾಗ ಕಾಂಗ್ರೆಸ್‍ನ ಒಳಜಗಳವನ್ನು ಬದಿಗಿರಿಸುವಂತೆ ಸೂಚನೆ ನೀಡಿದೆ.
7
+ ಚುನಾವಣೆ ಸಂದರ್ಭದಲ್ಲೂ ಜನರಲ್ಲಿ ಕಂಡುಬರುವ ಗೊಂದಲಗಳನ್ನು ನಿವಾರಿಸುವುದು ಬಹಳ ಮುಖ್ಯ. ಈ ನಿಟ್ಟಿನಲ್ಲಿ ಬಿಜೆಪಿ ಸೃಷ್ಟಿಸುವ ಸುಳ್ಳುಗಳಿಗೆ ತಕ್ಷಣ ಪ್ರತಿಕ್ರಿಯಿಸಬೇಕು. ಅದರಲ್ಲೂ ಅಪಪ್ರಚಾರಗಳನ್ನು ವ್ಯಾಪಕಗೊಳ್ಳಲು ಬಿಡಬಾರದು ಎಂದು ಹೈಕಮಾಂಡ್ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.
eesanje/url_46_261_6.txt ADDED
@@ -0,0 +1,9 @@
 
 
 
 
 
 
 
 
 
 
1
+ ರಾಜ್ಯಸಭೆ ಸ್ಥಾನ ಕೇಳಿದ್ದೇನೆ : ಸೋಮಣ್ಣ
2
+ ಬೆಂಗಳೂರು,ಜ.15- ನನ್ನನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಪಕ್ಷವು ಸೂಕ್ತ ಸಂದರ್ಭದಲ್ಲಿ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳುವ ವಿಶ್ವಾಸವಿದೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಅವರು ಹೇಳಿದ್ದಾರೆ.
3
+ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಒಳ್ಳೆಯತನಕ್ಕೆ, ಒಳ್ಳೆಯ ನಡವಳಿಕೆಗೆ ಸಹಾಯ ಆಗುತ್ತದೆ. ಅದಕ್ಕೆ ದೆಹಲಿ ಭೇಟಿಯೇ ಒಂದು ಉದಾಹರಣೆ. ಅಮಿತ್ ಶಾ ನಡವಳಿಕೆ, ಅವರ ತೀರ್ಮಾನ, ಭಾವನೆ ಸಕಾರಾತ್ಮಕವಾಗಿಯೇ ಇತ್ತು. ಎಲ್ಲವೂ ಸುಖಾಂತ್ಯವಾಗಿದೆ.ಕೆಲಸ ಮಾಡಿ ಬಳಿಕ ಮುಂದಿನದ್ದನ್ನು ಚರ್ಚೆ ಮಾಡುತ್ತೇವೆ ಎಂದು ತಿಳಿಸಿರುವುದಾಗಿ ವಿವರಿಸಿದರು.
4
+ ನಾನು ರಾಜ್ಯಸಭೆ ಸ್ಥಾನ ಕೇಳಿದ್ದೇನೆ. ಜತೆಗೆ ನನಗೆ 3 ಕಷ್ಟದ ಲೋಕಸಭಾ ಕ್ಷೇತ್ರ ಕೊಡಿ. ಯಾವುದೇ 3 ಕ್ಷೇತ್ರಗಳನ್ನು ಕೊಟ್ಟರೂ ಗಲ್ಲಿಸಿಕೊಂಡು ಬರುತ್ತೇನೆ. 28 ಕ್ಷೇತ್ರಗಳ ಪೈಕಿ 3 ಕ್ಷೇತ್ರ ವಹಿಸಿದರೆ ಕೆಲಸ ಮಾಡುತ್ತೇನೆ. ಪಕ್ಷದಲ್ಲಿ ನನ್ನ ಶ್ರಮ ಇದೆ ಎಂದರು. ನಾನು ಐದತ್ತು ನಿಮಿಷ ಚರ್ಚೆಗೆ ಅವಕಾಶ ಕೇಳಿದ್ದೆ. ಆದರೆ, ಅವರು ಅರ್ಧ ಗಂಟೆ ಸಮಯ ಕೊಟ್ಟರು. ಎಲ್ಲವನ್ನೂ ಅವರ ಗಮನಕ್ಕೆ ತಂದಿದ್ದೇನೆ. ಕೆಲಸ ಮಾಡಿ ಮುಂದೆ ತೀರ್ಮಾನ ಮಾಡುತ್ತೇವೆ ಎಂಬ ಭರವಸೆ ನೀಡಿದ್ದಾರೆ. 28 ಲೋಕಸಭಾ ಕ್ಷೇತ್ರದಲ್ಲಿನ ಎಲ್ಲಾ ವಿವರ ನೀಡಿದ್ದೇನೆ ಎಂದು ತಿಳಿಸಿದರು.
5
+ ನಾನು ನನ್ನ ಮಗನಿಗಾಗಿ ಏನೂ ಕೇಳಿಲ್ಲ, ಈ ಕ್ಷೇತ್ರದಲ್ಲಿ ನನ್ನದೇ ಆದ ಕೊಡುಗೆ ಇದೆ. ಆದ್ದರಿಂದ ನನ್ನನ್ನು ಗಮನದಲ್ಲಿಟ್ಟು ಆಯ್ಕೆಗೆ ಪರಿಗಣಿಸಿ ಎಂದು ಹೇಳಿದ್ದೇನೆ. ಹೈಕಮಾಂಡ್ ಅವರ ಅಂತರಾಳದ ಮಾತು ಕೇಳಿದೆ. ರಾಷ್ಟ್ರೀಯ ನಾಯಕರ ಅಂತರಾಳದಲ್ಲಿ ಇಷ್ಟು ಒಳ್ಳೆಯ ಮನಸ್ಸಿದೆ ಎನ್ನುವುದು ತಿಳಿಯತು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
6
+ ಅರುಣ್ ಸೋಮಣ್ಣಗೆ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸ್ಥಾನ ಕೈ ತಪ್ಪಿದ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ನಾನು ವರಿಷ್ಠರ ಬಳಿ ಏನನ್ನೂ ಕೇಳಿಲ್ಲ. ಬೆಂಗಳೂರು ದಕ್ಷಿಣ ಕ್ಷೇತ್ರದ ಅಧ್ಯಕ್ಷರಾಗಿ ರಾಮಮೂರ್ತಿ ಆಗಿದ್ದಾರೆ. ಅವರು ನಮ್ಮ ಹುಡುಗನೇ. ಎರಡು ಬಾರಿ ಕಾಪೆರ್ರೇಟರ್ ಆಗಿದ್ದಾನೆ. ಈಗ ಶಾಸಕ ಕೂಡ ಆಗಿದ್ದಾನೆ ಒಳ್ಳೆಯದಾಗಲಿ.ರಾಜ್ಯಾಧ್ಯಕ್ಷರು ಒಳ್ಳೆಯ ಕ್ರಮ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.
7
+ 2024ರಲ್ಲಿ ಕುಸಿಯಲಿದೆಯಂತೆ ಜಾಗತೀಕ ಆರ್ಥಿಕತೆ
8
+ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅಂನತ್ ಕುಮಾರ್ ಹೆಗಡೆ ಅವರ ಹೇಳಿಕೆ ಗಮನಿಸಿದ್ದೇನೆ, ಅವರು ಹೇಳಿಕೆ ಕೊಡುವಾಗ ನನ್ನ ಹಾಗೇ ಏನೇನೋ ಹೇಳಿಬಿಡುತ್ತಾರೆ. ನಾವು ಮಾತನಾಡುವಾಗ ಅವರು ಏಳು ಕೋಟಿ ಜನರ ಸಿಎಂ ಎಂದು ನೋಡಿ ಮಾ���ನಾಡಬೇಕು, ಅವರು ಸಿಎಂ ಹೇಗಾದರೂ ಎನ್ನುವ ಚರ್ಚೆ ಬೇಡ. ಅವರ ಬಗ್ಗೆ ಮಾತನಾಡುವಾಗ ಹೇಳಿಕೆ ಹೇಗೆಂದರೆ, ಹಾಗೆ ಕೊಡಬಾರದು ಎಂದು ಸೋಮಣ್ಣ ಸಲಹೆ ಮಾಡಿದರು.ಸಂಸದ ಹೆಗಡೆ ಸುಸಂಸ್ಕøತ ಕುಟುಂಬದಿಂದ ಬಂದವರು. ನಮ್ಮ ನಡವಳಿಕೆಗಳು ವಿಭಿನ್ನವಾಗಿರಬೇಕು. ಸಿಎಂ ಸಿದ್ದರಾಮಯ್ಯ ಹೇಗಾದರೂ ಮಾತಾಡಲಿ, ನಮಗೆ ಬೇಡ. ಅನಂತಕುಮಾರ್‍ಹೆಗಡೆ ಸಂಸದರಾಗಿದ್ದಾರೆ ಎಂದಷ್ಟೇ ಹೇಳಿದರು.
9
+ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ರ್ಪಸಲು ಅನಿವಾರ್ಯವಾಗಿ ಒಪ್ಪಿಕೊಂಡು ಸೋತ ನಂತರ ಸೋಮಣ್ಣ ಪಕ್ಷದ ರಾಜ್ಯ ನಾಯಕರ ವಿರುದ್ಧ ಸಿಡಿದೆದ್ದಿದ್ದರು. ಹಲವು ನಾಯಕರ ವಿರುದ್ಧ ಬಹಿರಂಗ ಟೀಕೆಗಳನ್ನೂ ಮಾಡಿದ್ದರು. ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂಬ ವದಂತಿಗಳೂ ಹಬ್ಬಿದ್ದವು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಅವರು ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಿರುವುದು ಕುತೂಹಲ ಮೂಡಿಸಿತ್ತು. ಇದೀಗ ಅವರು ಆ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಿದ್ದಾರೆ.
eesanje/url_46_261_7.txt ADDED
@@ -0,0 +1,7 @@
 
 
 
 
 
 
 
 
1
+ ಹಾಸನ ಲೋಕಸಭೆ ಸಭೆ ಕ್ಷೇತ್ರದಿಂದ ಶಾಸಕ ಶಿವಲಿಂಗೇಗೌಡ ಕಣಕ್ಕೆ..?
2
+ ಹಾಸನ,ಜ.15- ಜೆಡಿಎಸ್‍ನ ಭದ್ರಕೋಟೆ ಹಾಸನದಲ್ಲಿ ಲೋಕಸಭೆ ಚುನಾವಣೆಯಲ್ಲಿ ಸಮರ್ಥ ಅಭ್ಯರ್ಥಿಯ ಕೊರತೆ ಎದುರಿಸುತ್ತಿರುವ ಕಾಂಗ್ರೆಸ್ ಹಾಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರನ್ನು ಕಣಕ್ಕಿಳಿಸುವ ಚಿಂತನೆ ನಡೆಸಿದೆ. ಪ್ರತಿ ಅವಧಿಯ ಚುನಾವಣೆಯಲ್ಲೂ ಕಾಂಗ್ರೆಸ್‍ನಲ್ಲಿ ಲೋಕಸಭೆ ಅಭ್ಯರ್ಥಿಗೆ ಸಂಬಂಧಪಟ್ಟಂತೆ ಬೇರೆ ಬೇರೆ ಅಭ್ಯರ್ಥಿಗಳು ಕಣಕ್ಕಿಳಿಯುತ್ತಿರುವುದು ಸಾಮಾನ್ಯವಾಗಿದೆ.
3
+ ಹಾಸನ ಲೋಕಸಭೆ ಕ್ಷೇತ್ರದಿಂದ ಪ್ರಸ್ತುತ ಬಿ.ಶಿವರಾಂ, ಜತ್ತೇನಹಳ್ಳಿ ರಾಮಚಂದ್ರ, ರಾಜ್‍ಶೇಖರ್, ಬಿಜೆಪಿಯಲ್ಲಿರುವ ಎ.ಟಿ.ರಾಮಸ್ವಾಮಿ ಸೇರಿದಂತೆ ಹಲವು ನಾಯಕರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಆದರೆ, ಸಮರ್ಥ ಅಭ್ಯರ್ಥಿ ಎನ್ನುವುದಾದರೆ ಅವರ್ಯಾರೂ ಜೆಡಿಎಸ್ ನಾಯಕರೆದುರು ಪ್ರಭಲವಾಗಿ ಕಾಣಿಸಿಕೊಳ್ಳುವುದಿಲ್ಲ ಎಂಬ ವಿಶ್ಲೇಷಣೆಗಳಿವೆ. ಹೀಗಾಗಿ ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರನ್ನೇ ಕಣಕ್ಕಿಳಿಸುವ ಪ್ರಯತ್ನಗಳಾಗುತ್ತಿವೆ.
4
+ ಶಿವಲಿಂಗೇಗೌಡ ಕಳೆದ ವಿಧಾನಸಭೆ ಚುನಾವಣೆಯಲ್ಲಷ್ಟೇ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಪ್ರಬಲ ಪೈಪೋಟಿ ನಡುವೆಯೂ ಅರಸೀಕೆರೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಕುರಿತು ಗೌರವಾಧಾರಗಳ ಜೊತೆಯಲ್ಲೇ ಮಾತನಾಡುವ ಶಿವಲಿಂಗೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಪದೇಪದೇ ಸಂಘರ್ಷಕ್ಕಿಳಿಯುತ್ತಿದ್ದಾರೆ.
5
+ 2ನೇ ದಿನದ ನ್ಯಾಯಯಾತ್ರೆಯಲ್ಲಿ ಜನರ ಸಮಸ್ಯೆ ಆಲಿಸಿದ ರಾಹುಲ್
6
+ 2014 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯೂ ಆಗಿದ್ದ ಎ.ಮಂಜು ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿಯತ್ತ ಮುಖ ಮಾಡಿ ಅಲ್ಲಿಂದ ಮತ್ತೆ ಜೆಡಿಎಸ್ ಸೇರ್ಪಡೆಯಾಗಿ ಈಗ ಶಾಸಕರಾಗಿದ್ದಾರೆ. ಜೆಡಿಎಸ್‍ನಲ್ಲೇ ಇದ್ದ ಎ.ಟಿ.ರಾಮಸ್ವಾಮಿ, ಬಿಜೆಪಿಯಲ್ಲಿದ್ದು ಲೋಕಸಭೆ ಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
7
+ ಮಾಜಿ ಶಾಸಕ ಪ್ರೀತಂ ಗೌಡ ಕೂಡ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಜೆಡಿಎಸ್‍ನ ಭದ್ರಕೋಟೆಯನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ಕಾಂಗ್ರೆಸ್‍ನಲ್ಲಿ ಚಾಲ್ತಿಯಲ್ಲಿರುವ ನಾಯಕರು ಗೆಲ್ಲುವ ಸಾಧ್ಯತೆಗಳು ಕ್ಷೀಣವಾಗಿದೆ ಎಂಬ ವಿಶ್ಲೇಷಣೆಗಳಿವೆ. ಇದಕ್ಕೆ ಪುಷ್ಠಿ ಎನ್ನುವಂತೆ ಟಿಕೆಟ್ ಆಕಾಂಕ್ಷಿಯಾಗಿರುವ ಬಿ.ಶಿವರಾಂ ಅವರೇ ಹಾಸನ ಲೋಕಸಭಾ ಕ್ಷೇತ್ರಕ್ಕೆ ಕೆ.ಎಂ.ಶಿವಲಿಂಗೇಗೌಡ ಪ್ರಬಲ ಅಭ್ಯರ್ಥಿ ಎಂದು ಹೇಳಿದ್ದಾರೆ. ಇದು ಪಕ್ಷದಲ್ಲಿ ಸಂಚಲನ ಮೂಡಿಸಿದೆ.
eesanje/url_46_261_8.txt ADDED
@@ -0,0 +1,6 @@
 
 
 
 
 
 
 
1
+ ಫೆಬ್ರವರಿ ತಿಂಗಳಿನಲ್ಲೇ ಬಜೆಟ್ ಮಂಡನೆ : ಸಿದ್ದರಾಮಯ್ಯ
2
+ ಹಾವೇರಿ,ಜ.15- ಮಾರ್ಚ್ ಮೊದಲ ವಾರದಲ್ಲಿ ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾಗುವುದರಿಂದ ಫೆಬ್ರವರಿ ತಿಂಗಳಿನಲ್ಲೇ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಾವೇರಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಅವರು, ನರಸೀಪುರ ಗ್ರಾಮ ಹ್ಯಾಲಿಪ್ಯಾಡ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
3
+ ಬರ ನಿರ್ವಹಣೆಗೆ ರಾಜ್ಯಸರ್ಕಾರ ತಾತ್ಕಾಲಿಕವಾಗಿ 2 ಸಾವಿರ ರೂ.ಗಳ ಪರಿಹಾರವನ್ನು ಮಾತ್ರ ನೀಡಿದೆ. ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ದೊರೆತ ತಕ್ಷಣ ರೈತರಿಗೆ ನಿಯಮಾನುಸಾರ ಹೆಚ್ಚಿನ ಪರಿಹಾರ ಪಾವತಿಸಲು ಕ್ರಮ ಕೈಗೊಳ್ಳುತ್ತೇವೆ ಎಂದರು. ರಾಜ್ಯಸರ್ಕಾರ ನೀಡಿರುವ ಪರಿಹಾರ ಸಾಲುವುದಿಲ್ಲ ಎಂಬುದು ನಮಗೂ ಗೊತ್ತಿದೆ. ಆದರೆ ಕೇಂದ್ರದಿಂದ ಈವರೆಗೂ ಯಾವುದೇ ನೆರವು ಬಂದಿಲ್ಲ. ರಾಜ್ಯದ ಬಿಜೆಪಿ ನಾಯಕರು ಇಲ್ಲಿ ಟೀಕೆ ಮಾಡುವ ಬದಲು ದೆಹಲಿಗೆ ಹೋಗಿ ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆ ಮಾಡಿಸಲಿ ಎಂದು ಸವಾಲು ಹಾಕಿದರು.
4
+ 2ನೇ ದಿನದ ನ್ಯಾಯಯಾತ್ರೆಯಲ್ಲಿ ಜನರ ಸಮಸ್ಯೆ ಆಲಿಸಿದ ರಾಹುಲ್
5
+ ತಮ್ಮ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಸಂಸದ ಅನಂತಕುಮಾರ್ ಹೆಗಡೆ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸಮರ್ಥಿಸಿಕೊಂಡಿದ್ದಾಗಿದ್ದರೆ ಅವರಿಗೂ ಸಂಸ್ಕøತಿ ಮತ್ತು ಮನುಷ್ಯತ್ವ ಇಲ್ಲ ಎಂದು ತಿಳಿದುಕೊಳ್ಳಬೇಕಾಗುತ್ತದೆ ಎಂದರು. ಅನಂತಕುಮಾರ್ ಹೆಗಡೆ ಈವರೆಗೂ ನಾಪತ್ತೆಯಾಗಿದ್ದರು. ಚುನಾವಣೆಯ ಕಾಲದಲ್ಲಿ ಕಾಣಿಸಿಕೊಂಡಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಸಂಸದರಾಗಿ, ಮಾಜಿ ಸಚಿವರಾಗಿ ಯಾವುದಾದರೂ ಕೆಲಸ ಮಾಡಿದ್ದಾರೆಯೇ? ಜನರ ಕಷ್ಟ ಕೇಳಿದ್ದಾರೆಯೇ ಎಂದು ಪ್ರಶ್ನಿಸಿದರು.
6
+ ಸಂಸ್ಕøತಿ ಎಂದರೆ ಜನರ ಸಂಕಷ್ಟಗಳನ್ನು ಕೇಳುವುದು. ಅದನ್ನು ಅನಂತಕುಮಾರ್ ಹೆಗಡೆ ಮಾಡಿಲ್ಲ. ರಾಜಕೀಯ ಕಾರಣಕ್ಕಾಗಿ ಟೀಕೆ ಮಾಡುತ್ತಾರೆಂದು ಹೇಳಿದರು.
eesanje/url_46_261_9.txt ADDED
@@ -0,0 +1,9 @@
 
 
 
 
 
 
 
 
 
 
1
+ ಸಿದ್ದರಾಮಯ್ಯನವರ ಕಾರ್ಯಗಳು ‘ಕಾಲನೇಮಿ’ ನಂತಿವೆ
2
+ ಬೆಂಗಳೂರು,ಜ.15- ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿನಲ್ಲಿ ರಾಮನಿರಬಹುದು. ಆದರೆ ಅವರ ಕಾರ್ಯಗಳು ಕಾಲನೇಮಿ (ಅಸುರ)ನಂತಿವೆ ಎಂದು ಹನುಮಗಿರಿ ದೇವಸ್ಥಾನದ ಅರ್ಚಕ ಮಹಂತ್ ರಾಜು ದಾಸ್ ವಿವಾದದ ಕಿಡಿ ಹೊತ್ತಿಸಿದ್ದಾರೆ. ಜನವರಿ 22 ರಂದು ನಡೆಯಲಿರುವ ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನ ಸಮಾರಂಭದಲ್ಲಿ ಪಾಲ್ಗೊಳ್ಳುವ ಆಹ್ವಾನವನ್ನು ತಿರಸ್ಕರಿಸಿದ ಕಾಂಗ್ರೆಸ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
3
+ ಸಿದ್ದರಾಮಯ್ಯನವರು ನನ್ನ ಹೆಸರಿನಲ್ಲೇ ರಾಮ ಇದ್ದಾನೆ. ಆದರೆ ಅವರ ಕಾರ್ಯವೈಖರಿ ಅಸುರನಂತಿದೆ. ಬಾಬರ್ ಬಗ್ಗೆ ಅವರಿಗೆ ಚಿಂತೆ, ದಾಳಿಕೋರರು ಹೆಚ್ಚಿನ ಜನರ ಭಾವನೆಗಳೊಂದಿಗೆ ಅವರು ಆಟವಾಡುತ್ತಿರುವ ರೀತಿ, ಬಿಜೆಪಿ ನಾಯಕ – ಸಿ.ಟಿ.ರವಿ ಹೇಳಿದ್ದು ತಪ್ಪಲ್ಲ ಎಂದು ಮಹಂತ್ ರಾಜು ದಾಸ್ ಸಮರ್ಥಿಸಿಕೊಂಡಿದ್ದಾರೆ. ಎಎನ್‍ಐಗೆ ಸುದ್ದಿ ಸಂಸ್ಥೆಗೆ ಮಾತನಾಡಿರುವ ಅವರು, ಗೈರು ಹಾಜರಾಗಲು ಮುಂದಾಗಿರುವುದು ದುರದೃಷ್ಟಕರ ಎಂದು ವಿಷಾದಿಸಿದ್ದಾರೆ.
4
+ ಲಕ್ಷ್ಮೀಕಾಂತ್ ದೀಕ್ಷಿತ್ ನೇತೃತ್ವದ ಪುರೋಹಿತರ ತಂಡವು ಜನವರಿ 22 ರಂದು ರಾಮ್ ಲಲ್ಲಾನ ಪ್ರಾಣ ಪ್ರತಿಷ್ಠೆಯ ಮುಖ್ಯ ವಿಧಿಗಳನ್ನು ನಡೆಸಲಿದೆ. ಮಾಜಿ ಸಚಿವ ಸಿ.ಟಿ.ರವಿ ಕೂಡಾ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ನಾಯಕರು ಹಾಗೂ ಪಕ್ಷವು ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮನ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗಿಯಾಗದಿರಲು ಕಾರಣ, ಬಾಬರ್‍ನನ್ನು ಬಿಡಲು ಸಾಧ್ಯವಿಲ್ಲ ಎಂದು ಸಂದೇಶವನ್ನು ಸಾರಿದ್ದಾರೆ ಎಂದು ಹೇಳಿದ್ದಾರೆ.
5
+ ಅವರ ಪಕ್ಷವು ಅವರು (ಪ್ರಾಣಪ್ರತಿಷ್ಠಾಪನೆಗೆ) ಹೋಗುವುದಿಲ್ಲ ಎನ್ನುವ ಮೂಲಕ ಕಾರ್ಯಕ್ರವನ್ನು ಬಹಿಷ್ಕಾರ ಹಾಕಿದ್ದಾರೆ. ಅವರು ಬಾಬರ್‍ನನ್ನು ಬಿಟ್ಟು ರಾಮನನ್ನು ಹಿಡಿಯಲು ಸಾಧ್ಯವಿಲ್ಲ. ಬಾಬರ್‍ನನ್ನು ಬಿಟ್ಟರೆ ರಾಮನನ್ನು ಹಿಡಿಯುವುದು ಸುಲಭ. ಆದರೆ, ಅದು ಅವರಿಗೆ ಸಿಗುವುದಿಲ್ಲ. ಬಾಬರ್ ಬಿಟ್ಟರೆ ಆ ಸಮುದಾಯದ ಓಲೈಕೆಗಾಗಿ ದೂರ ಸರಿದಿದ್ದಾರೆ. ರಾಮ ಎಲ್ಲರಿಗೂ ಸೇರಿದವನು. ಪ್ರಾಣ ಪ್ರತಿಷ್ಠಾಪನೆಯನ್ನು ಹಬ್ಬದಂತೆ ಆಚರಿಸಬೇಕು ಎಂದು ಮನವಿ ಮಾಡಿದ್ದಾರೆ.
6
+ 2ನೇ ದಿನದ ನ್ಯಾಯಯಾತ್ರೆಯಲ್ಲಿ ಜನರ ಸಮಸ್ಯೆ ಆಲಿಸಿದ ರಾಹುಲ್
7
+ ಈ ತಿಂಗಳ ಆರಂಭದಲ್ಲಿ ಖರ್ಗೆ, ಸೋನಿಯಾ ಮತ್ತು ಅೀಧಿರ್‍ಜನವರಿ 22 ರಂದು ಭವ್ಯವಾದ ರಾಮಮಂದಿರ ಉದ್ಘಾಟನೆಯ ಆಹ್ವಾನವನ್ನು ತಿರಸ್ಕರಿಸಿದ್ದು, ಇದನ್ನು ಬಿಜೆಪಿ-ಆರ್‍ಎಸ್‍ಎಸ್ ಕಾರ್ಯಕ್ರಮ ಎಂದು ಟೀಕಿಸಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷವು ರಾಮ ಮಂದಿರವನ್ನು ಚುನಾವಣಾ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಇಂಡಿಯಾ ಬ್ಲಾಕ್‍ನ ವಿರೋಧ ಪಕ್ಷಗಳು ಆರೋಪಿಸಿವೆ.
8
+ ರಾಮಮಂದಿರದ ಪ್ರಾಣ ಪ್ರತಿಷ್ಠಾಪನಾ ಸಮಾರಂಭವು ಜನವರಿ 22 ರಂದು ನಡೆಯಲಿದೆ. ಅಯೋಧ್ಯೆಯಲ್ಲಿ ರಾಮ್ ಲಲ್ಲಾನ ಪ್ರಾಣ-ಪ್ರತಿಷ್ಠಾಪನಾ ಸಮಾರಂಭದ ವೈದಿಕ ವಿವಿಧಾನಗಳು ಮುಖ್ಯ ಸಮಾರಂಭದ ಒಂದು ವಾರದ ಮೊದಲು ಜನವರಿ 16 ರಂದು ಪ್ರಾರಂಭವಾಗುತ್ತವೆ.
9
+ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನವರಿ 22 ರಂದು ಭವ್ಯ ಮಂದಿರದಲ್ಲಿ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾನೆಯ ಆಚರಣೆಗಳನ್ನು ನೆರವೇರಿಸಲಿದ್ದಾರೆ. ಲಕ್ಷ್ಮೀಕಾಂತ್ ದೀಕ್ಷಿತ್ ನೇತೃತ್ವದ ಪುರೋಹಿತರ ತಂಡವು ಜನವರಿ 22 ರಂದು ರಾಮ್ ಲಲ್ಲಾನ ಪ್ರಾಣ ಪ್ರತಿಷ್ಠಾಪನೆಯ ಮುಖ್ಯ ವಿಧಿಗಳನ್ನು ನಡೆಸಲಿದೆ. ಜನವರಿ 14 ರಿಂದ ಜನವರಿ 22 ರವರೆಗೆ ಅಯೋಧ್ಯೆಯಲ್ಲಿ ಅಮೃತ ಮಹೋತ್ಸವ ನಡೆಯಲಿದೆ.
eesanje/url_46_262_1.txt ADDED
@@ -0,0 +1,6 @@
 
 
 
 
 
 
 
1
+ ಹಣದ ಆಮಿಷವೊಡ್ಡಿ ಹಾನಗಲ್ ಪ್ರಕರಣ ಮುಚ್ಚಿಹಾಕಲು ಯತ್ನ
2
+ ಹುಬ್ಬಳ್ಳಿ,ಜ.14- ಹಾವೇರಿ ಜಿಲ್ಲೆಯ ಹಾನಗಲ್‍ನಲ್ಲಿ ನಡೆದ ನೈತಿಕ ಪೊಲೀಸ್‍ಗಿರಿ ಪ್ರಕರಣವನ್ನು ಸಂತ್ರಸ್ತರಿಗೆ ಹಣ ಕೊಟ್ಟು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾನಗಲ್ ಪ್ರಕರಣವನ್ನು ಅಲ್ಲಿನ ಪೊಲೀಸರು ಸಂತ್ರಸ್ತರಿಗೆ ದುಡ್ಡಿನ ಆಮಿಷವೊಡ್ಡಿ ಮುಚ್ಚಿ ಹಾಕಲು ಯತ್ನಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ ಹಾವೇರಿಗೆ ಭೇಟಿ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿಯಾದರೂ ಎಸ್‍ಐಟಿ ತನಿಖೆಗೆ ಘೋಷಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
3
+ ತನಿಖೆ ನೆಪದಲ್ಲಿ ಸಂತ್ರಸ್ತೆಯನ್ನು ಶಿರಸಿಗೆ ಕರದೊಯ್ಯಲಾಗುತ್ತಿದೆ. ಬಿಜೆಪಿ ಮಹಿಳಾ ನಿಯೋಗ ಅಲ್ಲಿಗೆ ಭೇಟಿ ಕೊಡುತ್ತಿದ್ದಾರೆಂದು ಈ ರೀತಿ ಮಾಡುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್‍ನವರಿಂದ ನಾವೇನು ಜಾಸ್ತಿ ನಿರೀಕ್ಷೆ ಮಾಡಲು ಸಾಧ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
4
+ ರಾಮಮಂದಿರ ವಿಚಾರದಲ್ಲಿ ಮುಖ್ಯಮಂತ್ರಿಗಳು ಯೂಟರ್ನ್ ಹೊಡೆದಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ನವರಿಗೆ ತಡವಾಗಿಯಾದರೂ ಬುದ್ಧಿ ಬಂದಿದೆ. ಅವರ ಹೆಸರಲ್ಲಿಯೇ ರಾಮ ಇದ್ದಾನೆ. ಅಕಾರದ ರಾಜಕಾರಣಕ್ಕಾಗಿ ತಮ್ಮ ಹೆಸರಿನಲ್ಲಿರುವ ರಾಮನನ್ನೇ ಅವರು ಕಡೆಗಣಿಸಿದರು ಎಂದು ವ್ಯಂಗ್ಯವಾಡಿದರು.
5
+ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಿದ ಬಿಜೆಪಿ ನಾಯಕರು
6
+ ಕೊನೆಗೂ ಸಿದ್ದರಾಮಯ್ಯನವರಿಗೆ ಜ್ಞಾನೋದಯವಾಗಿದೆ. ಜನವರಿ 22ರ ನಂತರ ಅಯೋಧ್ಯೆಗೆ ಹೋಗುವುದಾಗಿ ಹೇಳಿದ್ದರು. ಈಗ ಹೋಗುವುದಿಲ್ಲ ಎನ್ನುತ್ತಿದ್ದಾರೆ. ಅವರ ಆತ್ಮಸಾಕ್ಷಿ ಹೋಗಬೇಕಂತಿದೆ. ಆದರೆ ಹೈಕಮಾಂಡ್ ಬೇಡವೆನ್ನುತ್ತಿದೆ. ಸಿದ್ದರಾಮಯ್ಯ ಗೊಂದಲದಲ್ಲಿ ಸಿಲುಕಿಕೊಂಡಿದ್ದಾರೆ. ಅವರ ಗೊಂದಲಕ್ಕೆ ಇದೇ ಸಾಕ್ಷಿ ಎಂದು ಟೀಕಿಸಿದರು.
eesanje/url_46_262_10.txt ADDED
@@ -0,0 +1,8 @@
 
 
 
 
 
 
 
 
 
1
+ ರಾಜ್ಯದಲ್ಲಿ ಪ್ರಿಯಾಂಕ ಗಾಂಧಿ ಸ್ಪರ್ಧೆ ಬಗ್ಗೆ ಮಾಹಿತಿ ಇಲ್ಲ : ಡಿಕೆಶಿ
2
+ ಬೆಂಗಳೂರು, ಜ.13- ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಕ್ಷೇತ್ರವೊಂದರಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ವದ್ಧಂತಿಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಲ್ಲಗಳೆದಿದ್ದಾರೆ.
3
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗಂತೂ ಇದರ ಬಗ್ಗೆ ಈವರೆಗೂ ಮಾಹಿತಿ ಇಲ್ಲ. ಯಾರು ನನ್ನ ಬಳಿ ಚರ್ಚೆ ಮಾಡಿಲ್ಲ ಎಂದು ಹೇಳಿದರು. ಬೆಂಗಳೂರಿನ ಜಯನಗದಲ್ಲಿ ಪುಟ್ ಪಾತ್ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುವುದರ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹೈಕೋರ್ಟ್ ಆದೇಶದ ಅನುಸಾರ ನಡೆಸುಕೊಳ್ಳುತ್ತಿರುವುದಾಗಿ ಹೇಳಿದರು.
4
+ ಪುಟ್‍ಪಾತ್ ವ್ಯಾಪಾರಿಗಳು ನೋಂದಣಿ ಮಾಡಿಕೊಂಡು ರಸ್ತೆ ಪಕ್ಕದಲ್ಲಿ ತಳ್ಳುವ ಗಾಡಿ ಇಟ್ಟುಕೊಂಡರೆ ಅನುಮತಿಯನ್ನೂ ನೀಡುತ್ತೇವೆ, ಹಣದ ಸಹಾಯವನ್ನು ಮಾಡುತ್ತೇವೆ. ಅದರ ಬದಲು ಶಾಶ್ವತ ಮಾದರಿಯಲ್ಲಿ ಟೆಂಟ್ ನಿರ್ಮಿಸಿಕೊಂಡರೆ ಜನ ಎಲ್ಲಿ ಓಡಾಡುತ್ತಾರೆ. ಅಕ್ಕಪಕ್ಕದವರು ನಮ್ಮ ಮನೆಯ ಮುಂದೆ ವಾಹನ ನಿಲ್ಲಿಸಬೇಡಿ ಎಂದು ಗಲಾಟೆ ಮಾಡುತ್ತಿದ್ದಾರೆ. ಇದು ಹೈಕೋರ್ಟ್ ಮೆಟ್ಟಿಲೇರಿದ್ದರಿಂದ ನ್ಯಾಯಾಲಯವೂ ಆದೇಶ ನೀಡಿದೆ ಎಂದರು.
5
+ ದೆಹಲಿ ವಿವಿಯ ಮಹಿಳಾ ಶೌಚಾಲಯಗಳ ಮುಂದೆ ಸಿಸಿ ಕ್ಯಾಮರಾ ಅಳವಡಿಕೆ
6
+ ಪುಟ್‍ಪಾತ್ ಇರುವುದು ಜನ ಸಂಚರಿಸಲು. ನಮಗೆ ಜನ ಮತ್ತು ಸಮಪರ್ಕ ಸಂಚಾರ ವ್ಯವಸ್ಥೆ ಮುಖ್ಯವಾಗಿದೆ. ಸಮಸ್ಯೆಯ ಬಗ್ಗೆ ನನಗೆ ಮಾಹಿತಿ ಇದೆ. ಎರಡು ಮೂರು ಬಾರಿ ನಾನು ಚರ್ಚೆ ನಡೆಸಿದ್ದೇನೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಿದ್ದೇನೆ, ಕ್ರಮಬದ್ಧವಾದ ಶಾಶ್ವತ ಪರಿಹಾರ ಕಂಡುಕೊಳ್ಳಲು ಯತ್ನಿಸುವುದಾಗಿ ಹೇಳಿದರು.
7
+ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಎಂಬ ಆರೋಪದಲ್ಲಿ ಉರುಳಿಲ್ಲ. ನಮ್ಮ ಸರ್ಕಾರ ಎಲ್ಲರಿಗೂ ಸೂಕ್ತ ರಕ್ಷಣೆ ನೀಡಲಿದೆ. ಬಿಜೆಪಿಯವರು ಅವರ ಸರ್ಕಾರ ಅಕಾರದಲ್ಲಿದ್ದಾಗ ನಡೆದುಕೊಂಡಿದ್ದನ್ನು ಹೇಳುತ್ತಿದ್ದಾರೆ. ನಮ್ಮ ಕಾಲದಲ್ಲಿ ನೈತಿಕ ಪೊಲೀಸ್‍ಗಿರಿ ಸೇರಿದಂತೆ ಕಾನೂನು ಕೈಗೆತ್ತಿಕೊಳ್ಳುವ ಯಾವ ಚಟುವಟಿಕೆಗಳಿಗೆ ಬೆಂಬಲ ನೀಡುವುದಿಲ್ಲ ಎಂದರು.
8
+ ಬಿಜೆಪಿ ಸರ್ಕಾರ ಅನುಭವ ಮಂಡಪ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಿರಲಿಲ್ಲ. ನಮ್ಮ ಸರ್ಕಾರವೇ ಅನುಭವ ಮಂಡಪ ನಿರ್ಮಾಣವನ್ನು ಆರಂಭಿತ್ತು. ನಮಗೆ ವಚನಕಾರರು ಹಾಗೂ ಆ ಕಾಲದ ಸಾಂಸ್ಕøತಿ ಚಟುವಟಿಕೆಗಳ ಬಗ್ಗೆ ಗೌರವ ಇದೆ. ಬಸವರ ಕಲ್ಯಾಣ ಕ್ಷೇತ್ರದ ಶಾಸಕರು ಅನುಭವ ಮಂಡಪಕ್ಕೆ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ ಎಂದು ಹೇಳುವುದು ಸರಿಯಲ್ಲ. ಬಿಜೆಪಿ ಸರ್ಕಾರವಿದ್ದಾಗ ಇವರು ಏಕೆ ಮಾತನಾಡಲಿಲ್ಲ ಎಂದು ಪ್ರಶ್ನಿಸಿದರು.
eesanje/url_46_262_11.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಕುಮಾರಸ್ವಾಮಿ ಕೇಂದ್ರ ಸಚಿವರಾಗುವುದು ಪ್ರಧಾನಿಗೆ ಬಿಟ್ಟ ವಿಚಾರ : ಎಚ್‍ಡಿಡಿ
2
+ ಬೆಂಗಳೂರು,ಜ.13- ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾಗುವ ಬಗ್ಗೆ ತಮ್ಮೊಂದಿಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡರು, ಪ್ರಧಾನಿ ನರೇಂದ್ರಮೋದಿ ಅವರ ಮನಸಿನಲ್ಲಿ ಏನಿದೋ ಗೊತ್ತಿಲ್ಲ ಎಂದು ತಿಳಿಸಿದರು.
3
+ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಧಾನಿಯವರ ಕ್ರಿಯಾಯೋಜ ನೆಯ ಬಗ್ಗೆ ಅವರ ಸಂಪುಟದ ಸಚಿವರಿಗೂ ಗೊತ್ತಾಗದ ರೀತಿಯಲ್ಲಿ ತೀರ್ಮಾನ ಮಾಡುತ್ತಾರೆ. ಹೊಸದಾಗಿ ವಿಧಾನಸಭೆ ಪ್ರವೇಶಿಸಿದವರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಹೀಗಾಗಿ ಅವರು ಯಾವ ತೀರ್ಮಾನ ಮಾಡುತ್ತಾರೆ ಎಂಬ ಬಗ್ಗೆ ಹೇಳಲು ಆಗುವುದಿಲ್ಲ. ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳಿದರು.
4
+ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಸ್ರ್ಪಧಿಸುವ ಸನ್ನಿವೇಶ ಬಂದರೆ ನಾವೆಲ್ಲ ಕೂತು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಪ್ರಧಾನಿ ನರೇಂದ್ರಮೋದಿ ಅವರ ಜೊತೆ ಕುಮಾರಸ್ವಾಮಿ ಸಂಪರ್ಕದಲ್ಲಿದ್ದಾರೆ. ಪ್ರಧಾನಿಯವರು ಏನು ಹೇಳುತ್ತಾರೋ ಗೊತ್ತಿಲ್ಲ. ಅವರು ಸ್ಪರ್ಧೆಯ ಬಗ್ಗೆ ಏನಾದರೂ ಹೇಳಿದ ಮೇಲೆ ಮುಂದಿನ ತೀರ್ಮಾನ ಮಾಡುತ್ತೇವೆ ಎಂದರು.
5
+ ದೆಹಲಿ ವಿವಿಯ ಮಹಿಳಾ ಶೌಚಾಲಯಗಳ ಮುಂದೆ ಸಿಸಿ ಕ್ಯಾಮರಾ ಅಳವಡಿಕೆ
6
+ ಸ್ಪರ್ಧೆ ಇಲ್ಲ:ನನಗೀಗ 91 ವರ್ಷವಾಗಿದೆ. ರಾಜ್ಯಸಭೆ ಸದಸ್ಯತ್ವದ ಅವ ರಾಜ್ಯಸಭೆ ಸದಸ್ಯತ್ವದ ಅವ ಎರಡೂವರೆ ವರ್ಷವಿದೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ಅವರು ಕರೆದ ಕ್ಷೇತ್ರಗಳಲ್ಲಿ ಹೋಗಿ ಪ್ರಚಾರ ಮಾಡುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು. ಹಾಸನ ಲೋಕಸಭಾ ಕ್ಷೇತ್ರದಿಂದ ಸಂಸದ ಪ್ರಜ್ವಲ್ ರೇವಣ್ಣ ಅವರು ಸ್ರ್ಪಧಿಸಿದ್ದಾರೆ. ಅವರಿಗೆ ಮೋದಿಯವರ, ಕುಮಾರಸ್ವಾಮಿ, ನಾನು ಹಾಗೂ ಜನತೆ ಆಶೀರ್ವಾದ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
7
+ ಯುವನಿಧಿಗೆ ಸ್ವಾಗತ:ರಾಜ್ಯ ಸರ್ಕಾರ ನಿನ್ನೆ ಚಾಲನೆ ನೀಡಿದ ಯುವನಿಯನ್ನು ಸ್ವಾಗತಿಸುವುದಾಗಿ ಹೇಳಿದ ಗೌಡರು, ಪದವಿ ಹಾಗೂ ಡಿಫ್ಲೋಮೊ ಪಡೆದ ನಿರುದ್ಯೋಗಿಗಳಿಗೆ ನೀಡುವ ಯುವನಿಧಿಯ ಮೊದಲ ಕಂತಿನ ಹಣದಿಂದ ಶ್ರೀರಾಮನ ದರ್ಶನ ಪಡೆಯಲಿದೆ. ರಾಮನ ಆಶೀರ್ವಾದಿಂದ ಮುಂದೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲಿ ಎಂದರು.
8
+ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜ.22ರ ನಂತರ ಅಯೋಧ್ಯೆ ಶ್ರೀರಾಮಮಂದಿರಕ್ಕೆ ಹೋಗುವುದಾಗಿ ಹೇಳಿದ್ದಾರೆ. ಅಲ್ಲದೆ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಅವಕಾಶ ಮಾಡಿದ್ದಾರೆ.ಗುಣಕ್ಕೆ ಮಾತ್ಸರ್ಯವಿಲ್ಲ ಮೃದು ಹಿಂದುತ್ವದ ಪ್ರಶ್ನೆಯಲ್ಲ.ಇದರ ಬಗ್ಗೆ ಪ್ರಸಂಶೆ ವ್ಯಕ್ತಪಡಿಸುತ್ತೇನೆ ಎಂದರು.
9
+ ಅಯೋಧ್ಯೆಯಲ್ಲಿನ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್���ಿ ಪ್ರತಿಷ್ಠಾಪನೆ ಅಂಗವಾಗಿ ಪ್ರಧಾನಿಯವರು 11 ದಿನ ಉಪವಾಸ ವ್ರತ ಕೈಗೊಂಡಿದ್ದಾರೆ. ಇದು ದೈವ ನಿಯಮ ಇರಬಹುದು. ಶಿಸ್ತು, ಶ್ರದ್ದೆ,ಭಕ್ತಿ, ನಿಷ್ಠೆಯಿಂದ ಮಾಡುತ್ತಿದ್ದಾರೆ. ಪ್ರತಿಯೊಂದು ಅವರು ನಿಯಮಬದ್ದವಾಗಿ ಮಾಡುತ್ತಾರೆ. ನಾನು ಒಂದು ದಿವಸ ಮಾತ್ರ ಉಪವಾಸ ಮಾಡಿದ್ದೆ ಅಷ್ಟೇ ಎಂದು ಹೇಳಿದರು.
10
+ ಜ.22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಸಮಾರಂಭಕ್ಕೆ ಹೋಗುವುದಾಗಿ ಅವರು ತಿಳಿಸಿದರು. ತಮ್ಮ ಆರೋಗ್ಯ ಕೆಟ್ಟಾಗ ತಮ್ಮ ಪುತ್ರಿ ಅನುಸೂಯ ಅವರು ಪ್ರತಿ ಶನಿವಾರ ಕಾರಂಜಿ ಆಂಜನೇಯಸ್ವಾಮಿಗೆ ಬೆಣ್ಣೆ ಅಲಂಕಾರ ಮಾಡಿದರು. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತು ಎಂದು ಹೇಳಿದರು.
11
+ ಪತ್ರಿಕಾಗೊಷ್ಟಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಶಾಸಕ ಜಿ.ಟಿ.ದೇವೇಗೌಡರು, ವಿಧಾನಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ಶರವಣ, ವಿಧಾನಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ರಾಜ್ಯಸಭೆ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಉಪಸ್ಥಿತರಿದ್ದರು.
eesanje/url_46_262_12.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಜೀವನದಲ್ಲಿ ಧೈರ್ಯ ಇರಲಿ, ಆದರೆ ಭಂಡತನ ಬೇಡ : ಡಿಕೆಶಿ
2
+ ಬೆಂಗಳೂರು, ಜ.13- ಜೀವನದಲ್ಲಿ ಧೈರ್ಯ ಇರಲಿ, ಆದರೆ ಭಂಡತನ ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೆಂಗಳೂರು ಸಂಚಾರ ಪೊಲೀಸ್ ಹಾಗೂ ಸಾರಿಗೆ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಮ್ಮೆ ಜೀವ ಕಳೆದು ಕೊಂಡರೆ ಮತ್ತೆ ಸಿಗಲ್ಲ. ಯುವಕರು ಹೆಚ್ಚು ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿದ್ದಾರೆ. ಅವರಲ್ಲಿ ತಿಳಿವಳಿಗೆ ಮೂಡುವುದು ಅಗತ್ಯವಿದೆ ಎಂದರು.
3
+ ನಾವು ಹೊಸ ಯುಗದಲ್ಲಿ ಇದ್ದೇವೆ. ನಮ್ಮ ಕಾಲಕ್ಕಿಂತಲೂ ಪ್ರಸಕ್ತ ಕಾಲ ಹೆಚ್ಚು ಆಧುನಿಕವಾಗಿದೆ. ಇಂದು ಬೆಳಗ್ಗೆಯಿಂದಷ್ಟೆ ಕೃತಕ ಬುದ್ದಿಮತ್ತೆಯಿಂದ ಬೆಂಗಳೂರಿನ ಸಂಚಾರ ನಿಯಮ ಪಾಲನೆ ಮಾಡುವ ಕುರಿತು ಪ್ರಾತ್ಯಕ್ಷಿತೆಯನ್ನು ಪರಿಶೀಲನೆ ಮಾಡಿದ್ದೇವು. ದ್ವಿಚಕ್ರ ವಾಹನ ಓಡಿಸುವ ಪ್ರತಿಯೊಬ್ಬರು ಹೆಲ್ಮೆಟ್ ಧರಿಸಲೇಬೇಕು. ಎನ್‍ಸಿಆರ್‍ಬಿ ಅಂಕಿ ಅಂಶಗಳ ಪೈಕಿ 2023ರಲ್ಲಿ ಹೆಚ್ಚು ಜೀವ ಕಳೆದುಕೊಂಡವರಲ್ಲಿ ಬೈಕ್ ಸವಾರರೇ ಹೆಚ್ಚು, ಅದರಲ್ಲೂ ಯುವಕರ ಸಂಖ್ಯೆ ಹೆಚ್ಚಿದೆ ಎಂದು ಹೇಳಿದರು.
4
+ ಕಳೆದ ವರ್ಷ 23 ಸಾವಿರ ಅಪಘಾತಗಳು ವರದಿಯಾಗಿವೆ. ನಿಯಮ ಉಲ್ಲಂಘಿಸಿದಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಚರಣೆ ನಡೆಸಿ ಆರು ಸಾವಿರಕ್ಕೂ ಹೆಚ್ಚು ಲೈಸೆನ್ಸ್‍ಗಳನ್ನು ರದ್ದು ಮಾಡಲಾಗಿದೆ. ಬೆಂಗಳೂರಿನಲ್ಲಿ ಒಂದು ಕೋಟಿ 30 ಲಕ್ಷ ಜನ ಇದ್ದಾರೆ. 55 ಲಕ್ಷ ವಾಹನಗಳಿವೆ. ಸಂಚಾರದ ಸಮಸ್ಯೆ ಗಂಭಿರವಾಗಿದೆ. ಎನ ಸಂಚಾರದಲ್ಲೇ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಇದನ್ನು ತಪ್ಪಿಸಲು ಶಾಶ್ವತ ಪರಿಹಾರ ಕಂಡುಕೊಳ್ಳುಲು ಬೆಂಗಳೂರು ನಗರಾಭಿವೃದ್ಧಿ, ಪೊಲೀಸ್, ಸಾರಿಗೆ ಇಲಾಖೆ ಜಂಟಿಯಾಗಿ ಕಾರ್ಯಕ್ರಮ ರೂಪಿಸುತ್ತಿದೆ ಎಂದು ಹೇಳಿದರು.
5
+ ಅಪಘಾತಕ್ಕೆ ಒಳಗಾದವರ ತುರ್ತು ಚಿಕಿತ್ಸೆಗೆ ಅನುಕೂಲವಾಗುವಂತಹ ಹರೀಶ್ ಸಾಂತ್ವಾನ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಅದರಿಂದ ಏನು ಪ್ರಯೋಜನವಾಗುವುದಿಲ್ಲ. ಅಪಘಾತವಾಗಿ ಜೀವ ಕಳೆದುಕೊಳ್ಳುವ ಮೊದಲು ಜೀವನ ಉಳಿಸುವ ನಿಟ್ಟಿನಲ್ಲಿ ನಿಯಮ ಪಾಲಿಸಿ ಮುನ್ನೆಚ್ಚರಿಕೆ ವಹಿಸುವ ಕುರಿತು ಜಾಗೃತಿ ಮೂಡಿಸಬೇಕಿದೆ. ಪ್ರತಿಯೊಬ್ಬರಿಗೂ ಧೈರ್ಯ ಇರಬೇಕು, ಆದರೆ ಭಂಡತನ ಇರಬಾರದು ಎಂದರು.ಇದೇ ವೇಳೆ ಡಿ.ಕೆ.ಶಿವಕುಮಾರ್, ಮಕ್ಕಳಲ್ಲಿ ರಸ್ತೆ ಸುರಕ್ಷತೆ ನಿಯಮ ಪಾಲನೆಗೆ ಪ್ರೋತ್ಸಾಹಿಸು ಮೊಳಕೆಯಲ್ಲೆ ತಿದ್ದಿರಿ ಎಂಬ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿದರು.
6
+ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಇದೇ ವೇಳೆ ಆಯೋಜಿಸಲಾಗಿದ್ದ ವಿವಿಧ ಮಳಿಗೆಗಳನ್ನು ಮುಖ್ಯಮಂತ್ರಿ ಪರಿಶೀಲನೆ ನಡೆಸಿದರು. ರಸ್ತೆ ಸುರಕ್ಷಾ ನಾಯಕರಾಗುವ ಪ್ರತಿಜ್ಞೆ ತೊಡಲು ಬಳಕೆ ಮಾಡುವ ಇ-ಪ್ಲೆಡ್ಜ್ ಕ್ಯೂರ್ ಕೋಡ್ ಅನ್ನು ಅನಾವರಣ ಮಾಡಿದರು. ದೇಶದಲ್ಲೇ ಮೊದಲ ಬಾರಿಗೆ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಬಳಕೆ ಮೂಲಕ ಸಂಚಾರ ನಿಯಂತ್ರಿಸುವ ಬೆಂಗಳೂರು ಟ್ರಾಫಿಕ್ ಇಂಜಿನ್ ವ್ಯವಸ್ಥೆಗೆ ಚಾಲನೆ ನೀಡಿದರು.
7
+ ಇತರರ ಪ್ರಾಣ ರಕ್ಷಣೆ ಹೊಣೆ ನಿಭಾಯಿಸಿ:ಸಂಚಾರ ವಿಭಾಗದಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡಿದ್ದ ಪೊಲೀಸ್, ಗೃಹರಕ್ಷಕ ಹಾಗೂ ಇತರ ಸಿಬ್ಬಂದಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿದ ಬಳಿಕ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ನಗರದಲ್ಲಿ ಟ್ರಾಫಿಕ್ ಸಮಸ್ಯೆಯ ನಿಯಂತ್ರಣಕ್ಕೆ ಅಂತಾರಾಷ್ಟ್ರೀಯ ಮಟ್ಟದ ಅಗತ್ಯ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗುವುದು. ದೇಶದಲ್ಲಿನ ಪ್ರಮುಖ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ತೀರ ಕಡಿಮೆಯಾಗಿದೆ. ಕಮಾಂಡ್ ಸೆಂಟರ್‍ನಲ್ಲಿನ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ನಗರದಲ್ಲಿನ ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲಾಗುತ್ತಿದೆ.
8
+ ಜನರು ಮತ್ತಷ್ಟು ಸುರಕ್ಷಿತವಾಗಿ ಸಂಚರಿಸುವ ದೃಷ್ಟಿಯಿಂದ ತಂತ್ರಜ್ಞಾನ ಬಳಸಲಾಗುವುದು ಎಂದರು.ವಾಹನ ಚಾಲನೆ ವೇಳೆ ನಮ್ಮ ಸುರಕ್ಷತೆಯ ಜೊತೆಗೆ ಬೇರೆಯವರ ಪ್ರಾಣ ರಕ್ಷಣೆಯ ಹೊಣೆ ನಮ್ಮ ಮೇಲಿದೆ. ಟ್ರಾಫಿಕ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇದರಿಂದ ಅನಾಹುತಗಳನ್ನು ತಪ್ಪಿಸಬಹುದು ಎಂದು ತಿಳಿಸಿದರು.
9
+ ಬೆಂಗಳೂರಿನಲ್ಲಿ 1 ಕೋಟಿಗೂ ಹೆಚ್ಚು ವಾಹನಗಳಿವೆ. 2023ರಲ್ಲಿ 900 ಜನ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಇದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಜಾಲತಾಣದ ಮೂಲಕ ಕಾಲೇಜು ವಿದ್ಯಾರ್ಥಿಗಳಿಗೆ, ಜನರಿಗೆ ಟ್ರಾಫಿಕ್ ನಿಯಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
10
+ ಸದಾಶಿವನಗರದ ಸಂಚಾರಿ ಪೊಲೀಸ್‍ಠಾಣೆಯ ಇನ್ಸ್‍ಪೆಕ್ಟ್ ಆರ್.ಪಿ.ಅಶೋಕ್ ಸೇರಿದಂತೆ ಅನೇಕ ಸಿಬ್ಬಂದಿಗಳು ಪ್ರಶಸ್ತಿ ಸ್ವೀಕರಿಸಿದರು. ರಸ್ತೆ ಸುರಕ್ಷತೆ ಜಾಗೃತಿಯಲ್ಲಿ ಮುಂಚೂಣಿ ಪಾತ್ರ ವಹಿಸಿದ್ದ ಸೆಂಟ್ ಮಾರ್ಕ್ ಇಂಗ್ಲಿಷ್ ಶಾಲೆ, ಎಸ್‍ಜೆಆರ್ ಸ್ಕೂಲ್, ಲಿಟ್ಲಫ್ಲವರ್, ಗ್ರಿನ್ ವ್ಯಾಲಿ ಸ್ಕೂಲ್ ಸೇರಿ ಮತ್ತಿತರ ಶಾಲೆಗಳಿಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು.
11
+ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕ ರಿಜ್ವಾನ್ ಅರ್ಹದ್, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಸುಧಾಮ್‍ದಾಸ್, ನಗರ ಪೊಲೀಸ್ ಆಯುಕ್ತ ಬಿ ದಯಾನಂದ, ಸಂಚಾರ ವಿಭಾಗದ ಜಂಟಿ ಆಯುಕ್ತ ಅನುಚೇತ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
eesanje/url_46_262_2.txt ADDED
@@ -0,0 +1,7 @@
 
 
 
 
 
 
 
 
1
+ ಕೆಪಿಎಸ್‍ಸಿ ಸಂಘರ್ಷದಲ್ಲಿ ಉದ್ಯೋಗವಿಲ್ಲದೆ ನಲುಗುತ್ತಿರುವ ಅಭ್ಯರ್ಥಿಗಳು
2
+ ಬೆಂಗಳೂರು, ಜ.14- ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯವೈಖರಿಯಿಂದ ಸಹಸ್ರಾರು ಉದ್ಯೋಗಾಕಾಂಕ್ಷಿ ಯುವಕ ಯುವತಿಯರು ಬಧಿಸತ್ತಿದ್ದಾರೆ. ಆಯೋಗದ ಒಟ್ಟು ನಡವಳಿಕೆಯಿಂದ ತಮಗೆ ಭವಿಷ್ಯವೇ ಇಲ್ಲವೇನೋ ಎಂಬ ಹತಾಶ ಭಾವನೆಗೆ ತಲುಪುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಶಾಸಕ ಸುರೇಶ್‍ಕುಮಾರ್ ತಿಳಿಸಿದ್ದಾರೆ.
3
+ ಇದೀಗ ಲೋಕಸೇವಾ ಆಯೋಗದ ಮತ್ತೋರ್ವ ಕಾರ್ಯದರ್ಶಿ ಮತ್ತು ಆಯೋಗದ ಸದಸ್ಯರ ನಡುವೆ ಯಥಾ ಪ್ರಕಾರ ಸಂಘರ್ಷ ಪ್ರಾರಂಭವಾಗಿದೆ. ಈ ಕುರಿತು ನಾನು ನಿರಂತರವಾಗಿ ಸರ್ಕಾರಗಳಿಗೆ ಮನವಿ ಮಾಡುತ್ತಲೇ ಬಂದಿದ್ದೇನೆ. ಇವರಿಬ್ಬರ ನಡುವಿನ ಜಗಳದಲ್ಲಿ ಉದ್ಯೋಗಾಕಾಂಕ್ಷಿಗಳು ಬಡವಾಗುತ್ತಿದ್ದಾರೆ ಎಂದರು. ಒಟ್ಟು ಈ ಲೋಕ ಸೇವಾ ಆಯೋಗದ ವಿಳಂಬ ಪ್ರವೃತ್ತಿ ವಿರುದ್ಧ ಲೋಕಸೇವಾ ಆಯೋಗದ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿ ಮುಖಂಡ ಶಾಂತಕುಮಾರ್ ಅವರನ್ನು ಬಂಧಿಸಿ ಜೈಲಿಗೆ ಕಳಿಸಿರುವುದು ಅತ್ಯಂತ ನಿರ್ದಯಿ ಕ್ರಮ ಎಂದು ತಿಳಿಸಿದರು.
4
+ ಆಯೋಧ್ಯೆಗೆ ಹೊಸ ಲುಕ್, ಝಗಮಗಿಸುವ ದೀಪಾಲಂಕಾರ
5
+ ಕರ್ನಾಟಕ ಲೋಕಾ ಸೇವಾ ಆಯೋಗ, ಕೇವಲ ತಕರಾರು ಮಾಡುವ ಜಾಯಮಾನ ತೊರೆದು, ಒಂದು ಕಾಲಮಿತಿಯಲ್ಲಿ ಕೆಲಸ ಮಾಡಿ ಯಶಸ್ವಿ ಅಭ್ಯರ್ಥಿಗಳ ಪಟ್ಟಿಗಳನ್ನು ಬಿಡುಗಡೆ ಮಾಡುವ ಕಾರ್ಯ ಮಾಡುತ್ತಿದ್ದರೆ ಈ ಯುವಕ ಪ್ರತಿಭಟನೆ ಮಾಡುವ ಅವಶ್ಯಕತೆಯೇ ಇರಲಿಲ್ಲ. ಆದರೆ ಈ ಯುವಕರ ಕೂಗು ಆಯೋಗದ ಕಚೇರಿಯಿಂದ ಅನತಿ ದೂರದಲ್ಲೆ ಇರುವ ವಿಧಾನಸೌಧಕ್ಕೆ ಮುಟ್ಟದಿರುವುದು ವಿಷಾದಕರ ಎಂದರು.
6
+ ಯಲ್ಲಿ ಅಧ್ಯಕ್ಷರೇ ಗ್ರೂಪ್ ಡಿ ಹುದ್ದೆಯಿಂದ ಹಿಡಿದು ಗ್ರೂಪ್ ಎ ಹುದ್ದೆಯವರೆಗೂ ಲಕ್ಷ ಲಕ್ಷ ಕೋಟಿ ಕೋಟಿ ಗಳಿಗೆ ಹುದ್ದೆಗಳನ್ನು ಹರಾಜು ಹಾಕಿ ಭ್ರಷ್ಟರ ಕೊಂಪೆಯನ್ನಾಗಿ ಪರಿವರ್ತಿಸಿದ್ದಾರೆ ಈ ಅನ್ಯಾಯವನ್ನು ಪ್ರಶ್ನಿಸಲು ಹೋಗಿದ್ದ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷರಾದ ಕಾಂತಕುಮಾರ್ ಅವರನ್ನು ಈ ರೀತಿ ಬಂಧಿಸಬಹುದೇ ?../
7
+ ಇನ್ನಷ್ಟು ಪ್ರತಿಭಟನೆಗಳು ಆಗದಂತೆ ತಡೆಯಲು, ಈ ಯುವ ಆಕಾಂಕ್ಷಿಗಳು ಸಿನಿಕ ರಾಗದಂತೆ ಎಚ್ಚರ ವಹಿಸಲು ಕ್ರಮ ಅಗತ್ಯವಿದೆ. ಕೂಡಲೇ ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಿ ಆಯೋಗದ ಅಧ್ಯಕ್ಷರಿಗೆ ಮತ್ತು ಸದಸ್ಯರುಗಳಿಗೆ ಅಗತ್ಯ ತಿಳುವಳಿಕೆ ನೀಡಬೇಕೆಂದು, ಆಯೋಗವು ತನ್ನ ಮೂಲ ಉದ್ದೇಶಕ್ಕೆ ಅನುಗುಣವಾಗಿ ಕೆಲಸ ಮಾಡುವಂತೆ ಸೂಚನೆ ನೀಡಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ಅವರು ಮನವಿ ಮಾಡಿದ್ದಾರೆ.
eesanje/url_46_262_3.txt ADDED
@@ -0,0 +1,5 @@
 
 
 
 
 
 
1
+ ಬಿಜೆಪಿ ಶಾಸಕ ಬಸವರಾಜ ಮತ್ತಿಮಡು ಕಾರು ಅಪಘಾತ
2
+ ಕಲಬುರಗಿ,ಜ.14- ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಲಬುರಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ ಮತ್ತಿಮಡು ಅವರು ಗಾಯಗೊಂಡಿರುವ ಘಟನೆ ಇಂದು ಮಧ್ಯಾಹ್ನ ನಗರದ ಹೊರವಲಯದ ಪಾಳಾ ಗ್ರಾಮದ ಬಳಿ ನಡೆದಿದೆ. ಶಾಸಕ ಹಾಗೂ ಅವರ ಜೊತೆಗಿದ್ದ ಗನ್ ಮ್ಯಾನ್ ಮತ್ತು ಆಪ್ತ ಸಹಾಯಕ ಕೂಡ ಗಾಯಗೊಂಡಿದ್ದು, ಚಾಲಕ ಗಂಭಿರವಾಗಿ ಗಾಯಗೊಂಡಿದ್ದಾನೆ.
3
+ ಆಯೋಧ್ಯೆಗೆ ಹೊಸ ಲುಕ್, ಝಗಮಗಿಸುವ ದೀಪಾಲಂಕಾರ
4
+ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಯುನಿವರ್ಸಿಟಿ ಠಾಣೆ ಪೊಲೀಸರು ಹಾಗೂ ಸಂಚಾರಿ ಠಾಣೆ ಸಿಬ್ಬಂದಿಗಳು ಗಾಯಾಳುಗಳನ್ನ ಕಲಬುರಗಿ ನಗರದ ಯುನೈಟೆಡ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ತಮ್ಮ ಇನ್ನೋವಾ ಕಾರಿನಲ್ಲಿ ಶಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮಾಹಿತಿ ತಿಳಿದುಶಾಸಕರ ಪತ್ನಿ ಜಯಶ್ರೀ ಅವರು ಆಸ್ಪತ್ರೆಗೆ ಧಾವಿಸಿದ್ದಾರೆ.
5
+ ಅಪಘಾತಕ್ಕೆ ನಿಖರ ಕಾರಣ ಗೊತ್ತಾಗುತ್ತಿಲ್ಲ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
eesanje/url_46_262_4.txt ADDED
@@ -0,0 +1,9 @@
 
 
 
 
 
 
 
 
 
 
1
+ ಕಾಂಗ್ರೆಸ್ ನಾಯಕರ ವಿರುದ್ಧವೂ ದೂರು ದಾಖಲಿಸಿ : ಅಶ್ವಥ್‍ನಾರಾಯಣ
2
+ ಬೆಂಗಳೂರು,ಜ.14-ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಸಂಸದ ಅನಂತಕುಮಾರ್ ಹೆಗಡೆ ಟೀಕೆ ಮಾಡಿರುವುದು ಕಾನೂನು ಬಾಹಿರವಾದರೆ ಅದಕ್ಕೂ ಮೊದಲು ಇದೇ ಮಾತುಗಳನ್ನು ಆಡಿರುವ ಕಾಂಗ್ರೆಸ್ ನಾಯಕರ ವಿರುದ್ಧವೂ ದೂರು ದಾಖಲಿಸಬೇಕಾಗುತ್ತದೆ ಎಂದು ಮಾಜಿ ಸಚಿವ, ಶಾಸಕ ಡಾ.ಸಿ.ಎನ್.ಅಶ್ವಥ್‍ನಾರಾಯಣ ಹೇಳಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅನಂತಕುಮಾರ್ ಹೆಗಡೆ ಹೇಳಿರುವುದನ್ನು ಸರಿ ಎಂದು ಹೇಳುವುದಿಲ್ಲ. ರಾಜಕಾರಣದಲ್ಲಿ ಈ ರೀತಿ ಪದಪ್ರಯೋಗ ಮಾಡುವುದು ಸರ್ವೇ ಸಾಮಾನ್ಯ. ಹೀಗೆ ಮಾತನಾಡಿದ್ದಕ್ಕೆ ದೂರು ದಾಖಲಿಸುವುದಾದರೆ ಕಾಂಗ್ರೆಸ್ ನಾಯಕರ ವಿರುದ್ದವೂ ಬಹಳಷ್ಟು ದೂರುಗಳು ದಾಖಲಾಗಬೇಕಾಗುತ್ತದೆ ಎಂದು ತಿರುಗೇಟು ನೀಡಿದರು.
4
+ ರಾಜಕಾರಣದಲ್ಲಿ ತೊಡೆತಟ್ಟಿದವರನ್ನು ನೋಡಿದ್ದೇವೆ. ಬಹಿರಂಗ ಚರ್ಚೆಗೆ ಪಂತಾಹ್ವಾನ ಕೊಟ್ಟಿರುವುದನ್ನು ನೋಡಿದ್ದೇವೆ .ಸದನದ ಹೊರಗೆ, ಒಳಗೆ ಉಗ್ರವಾಗಿ ಮಾಡಿದವರೂ ಇದ್ದಾರೆ. ಅನಂತಕುಮಾರ್ ಹೆಗೆಡೆ ಹೇಳಿಕೆಯನ್ನು ನಾನು ಸಮರ್ಥಿಸುವುದಿಲ್ಲ. ಪ್ರತಿಯೊಬ್ಬರಿಗೂ ನಾವು ಗೌರವ ಕೊಡಬೇಕು. ಇಂತಹ ತಪ್ಪುಗಳಾದಾಗ ಸರಿಪಡಿಸಬೇಕೆಂದು ಅಭಿಪ್ರಾಯಪಟ್ಟರು.
5
+ ಕಾಂಗ್ರೆಸ್ ನಾಯಕರು ನಮ್ಮ ಪಕ್ಷದ ನಾಯಕರಿಗೆ ಏಕವಚನದಲ್ಲಿ ಮಾತನಾಡಿರುವ ನೂರಾರು ನಿದರ್ಶನಗಳಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕರು ಯಾರ್ಯಾರಿಗೆ ಯಾವ ಭಾಷೆ ಬಳಸಿ ಮಾತನಾಡಿದ್ದಾರೆ ಎಂಬುದು ನಮಗೂ ಗೊತ್ತು. ಕಾಂಗ್ರೆಸ್ ನಾಯಕರು ಏಕವಚನ ಪದ ಪ್ರಯೋಗ ಮಾಡಿರುವುದಕ್ಕೆ ನಾನು ನೂರಾರು ಉದಾರಹಣೆಗಳನ್ನು ಕೊಡಬಲ್ಲೆ. ಅನಂತಕುಮಾರ್ ಹೆಗಡೆ ವಿರುದ್ಧ ದೂರು ದಾಖಲಿಸುವುದಾದರೆ ಮೊದಲು ನಿಮ್ಮ ವಿರುದ್ಧ ದೂರು ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟರು.
6
+ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸ್ಥಾನ ಅಗತ್ಯ : ಲೆಟರ್ಮ್
7
+ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೊ ನ್ಯಾಯ್ ಯಾತ್ರೆ ಆರಂಭವಾಗಿದೆ. ಪ್ರತಿಪಕ್ಷಗಳು ತಮ್ಮದೇ ಆದ ಕಾರ್ಯಕ್ರಮ ಹಮ್ಮಿಕೊಂಡಿವೆ. ಇದಕ್ಕೆ ನಮ್ಮದೇನು ಅಭ್ಯಂತರವಿಲ್ಲ. ಆದರೆ ನಿಮಗೆ ಯಾತ್ರೆಯ ಉದ್ದೇಶವಾದರೂ ಏನು? ಯಾವ ಕಾರಣಕ್ಕಾಗಿ ಇದನ್ನು ನಡೆಸುತ್ತೀದ್ದೀರಿ. ಕಾಂಗ್ರೆಸ್ ಅಸ್ತಿತ್ವ ಉಳಿಸಿಕೊಳ್ಳಲು ಯಾತ್ರೆ ನಾಟಕ ಪ್ರಾರಂಭ ಮಾಡಿದೆ ಎಂದು ವ್ಯಂಗ್ಯವಾಡಿದರು.
8
+ 500 ವರ್ಷಗಳಿಂದ ಉಂಟಾಗಿದ್ದ ಅನ್ಯಾಯವನ್ನು ಪ್ರಧಾನಿ ನರೇಂದ್ರಮೋದಿ ಸರ್ಕಾರ ಸರಿಪಡಿಸುವ ಕೆಲಸ ಮಾಡುತ್ತಿದೆ. ರಾಮಮಂದಿರ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪ್ರತಿಪಕ್ಷಗಳು ಭಾಗವಹಿಸಬೇಕಿತ್ತು. ಈ ಕಾರ್ಯಕ್ರಮವನ್ನು ಇಡೀ ದೇಶದ ಜನತೆಯೇ ಎದುರು ನೋಡುತ್ತಿದೆ. ಇದಕ್ಕೆ ಭಾರತಕ್ಕೆ ಗೌರವ ತರುವ ಕೆಲಸ ಎಂದು ಹೇಳಿದರು.
9
+ ಇಂಥ ಸಂದರ್ಭದಲ್ಲೇ ಭಾರತ್ ಯಾತ್ರೆ ನಡೆಸುವ ಅಗತ್ಯವಿರಲಿಲ್ಲ. ಜ.22ರ ನಂತರ ನೀವು ಯಾತ್ರೆಯನ್ನು ನಡೆಸಬಹುದಿತ್ತು. ಜನರು ಇದಕ್ಕೆ ತಕ್ಕ ಉತ್ತರ ಕೊಡಲಿದ್ದಾರೆ ಎಂದು ಎಚ್ಚರಿಸಿದರು.
eesanje/url_46_262_5.txt ADDED
@@ -0,0 +1,10 @@
 
 
 
 
 
 
 
 
 
 
 
1
+ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಿದ ಬಿಜೆಪಿ ನಾಯಕರು
2
+ ಬೆಂಗಳೂರು, ಜ.14- ಅಯೋಧ್ಯಯೆಯಲ್ಲಿ ಶ್ರೀರಾಮಮಂದಿರಲ್ಲಿ ಮೂರ್ತಿ ಪ್ರಾಣಪ್ರತಿಷ್ಠಾಪನೆ ಅಂಗವಾಗಿ ದೇಶಾದ್ಯಂತ ದೇವಾಲಗಳ ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆಗೆ ವ್ಯಾಪಕ ಬೆಂಬಲ ದೊರೆತಿದೆ.
3
+ 'ರಾಮಮಂದಿರದ ಭವ್ಯ ಸ್ವಾಗತಕ್ಕಾಗಿಸ್ವಚ್ಛತೀರ್ಥ ಅಭಿಯಾನ'ಅಯೋಧ್ಯೆಯಲ್ಲಿ ಐತಿಹಾಸಿಕ ಶ್ರೀ ರಾಮನ ಪ್ರಾಣಪ್ರತಿಷ್ಠೆ ನಡೆಯಲಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಎಲ್ಲಾ ದೇಗುಲ ಮತ್ತು ತೀರ್ಥಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಪ್ರಧಾನಿ ಶ್ರೀ@narendramodiಜೀ ಅವರ ಕರೆ ಮೇರೆಗೆ ಜಯನಗರ 4ನೇ ಹಂತದ ಶ್ರೀ ವಿನಾಯಕ ದೇವಾಲಯದ ಆವರಣವನ್ನು…../
4
+ ರಾಜ್ಯದಲ್ಲಿ ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಶಿಕಾರಿಪುರದ ಶ್ರೀ ಹುಚ್ಚುರಾಯ ಸ್ವಾಮಿ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಜಯನಗರದ ಸಿದ್ದಿ ವಿನಾಯಕ ದೇವಸ್ಥಾನದಲ್ಲಿ, ಮಾಜಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಮಲ್ಲೆಶ್ವರಂನ ಕೋದಂಡರಾಮ ದೇವಸ್ಥಾನದಲ್ಲಿ, ಮೈಸೂರಿನ ಪ್ರತಾಪ್ ಸಿಂಹ ಕೋದಂಡರಾಮ ದೇವಸ್ಥಾನದಲ್ಲಿ, ಮಾಜಿ ಸಚಿವ ಗೋಪಾಲಯ್ಯ ದೊಡ್ಡಮ್ಮ ದೇವಿ ದೇವಾಲಯವನ್ನು ಸ್ವಚ್ಚ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ.
5
+ "ಜೈ ಶ್ರೀ ರಾಮ್”🛕"ರಾಷ್ಟ್ರಮಂದಿರದ ಭವ್ಯ ಸ್ವಾಗತಕ್ಕಾಗಿಸ್ವಚ್ಛತೀರ್ಥ ಅಭಿಯಾನ". ಶಿಕಾರಿಪುರದ ಶ್ರೀ ಹುಚ್ಚುರಾಯ ಸ್ವಾಮಿ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಲಾಯಿತು. ರಾಜ್ಯದೆಲ್ಲೆಡೆ ಎಲ್ಲಾ ದೇವಾಲಯಗಳಲ್ಲಿ ಸ್ವಚ್ಛತಾ ಕಾರ್ಯ ಯಶಸ್ವಿಯಾಗಿ ನೆರವೇರಲಿ. ಜನವರಿ 22 ರಂದು ಶ್ರೀರಾಮ ಜ್ಯೋತಿ ಬೆಳಗಲು ಸಿದ್ಧತೆಗಳು ಭಕ್ತಿಪೂರ್ವಕವಾಗಿ…../7vK0R0N6YP
6
+ ರಾಮ ಮಂದಿರದ ಭವ್ಯ ಸ್ವಾಗತಕ್ಕಾಗಿ ಜನವರಿ 14ರಿಂದ 22ರವರೆಗೆ ಸ್ವಚ್ಛ ತೀರ್ಥ ಅಭಿಯಾನದ ವೈಯಕ್ತಿಕ ಶ್ರಮದಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಲ್ಲದೆ, ಮಹಾರಾಷ್ಟ್ರದ ನಾಸಿಕ್‍ನಲ್ಲಿರುವ ಕಲಾರಾಮ್ ಮಂದಿರದಲ್ಲಿ ಖುದ್ದು ಸ್ವಚ್ಚತಾ ಶ್ರಮದಾನದಲ್ಲಿ ಭಾಗಿಯಾಗಿದ್ದರು.ದೇಶದಾದ್ಯಂತ ಇರುವ ಎಲ್ಲಾ ದೇಗುಲ ಮತ್ತು ತೀರ್ಥಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ.
7
+ ಪಕ್ಷಬೇಧ ಮರೆತು ತೀರ್ಥ ಕ್ಷೇತ್ರಗಳ ಸ್ವಚ್ಚತಾ ಅಭಿಯಾನದ ಶ್ರಮದಾನದಲ್ಲಿ ಜನ ಭಾಗವಹಿಸುತ್ತಿದ್ದಾರೆ. ಶ್ರೀರಾಮ ಮೂರ್ತಿ ಪ್ರಾಣಪ್ರತಿಷ್ಠಾಪನೆಯನ್ನು ರಾಷ್ಟ್ರೀಯ ಸಂಭ್ರಮವನ್ನಾಗಿ ಪರಿವರ್ತಿಸಲಾಗಿದೆ. ದೇಶದ ಪ್ರತಿಯೊಂದು ಮನೆಗೂ ಅಕ್ಷತೆಯೊಂದಿಗೆ ಶ್ರೀರಾಮ ಮಂದಿರದ ಕರಪತ್ರಗಳನ್ನು ತಲುಪಿಸಲಾಗಿದೆ.
8
+ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲಾನ ಪ್ರಾಣ ಪ್ರತಿಷ್ಠಾಪನೆ ಆಗುತ್ತಿರುವ ಪ್ರಯುಕ್ತ ಇಂದಿನಿಂದ ಜನವರಿ 22ರ ವರೆಗೆ ದೇಶಾದ್ಯಂತ ಇರುವ ಎಲ್ಲಾ ದೇಗುಲಗಳು ಮತ್ತು ತೀರ್ಥಕ���ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಪ್ರಧಾನಿ ಶ್ರೀ@narendramodiಅವರು ಕರೆ ನೀಡಿರುವ ಹಿನ್ನೆಲೆಯಲ್ಲಿ ನಮ್ಮ ಮಲ್ಲೇಶ್ವರದ ಕೋದಂಡರಾಮ ದೇವಸ್ಥಾನದ ಆವರಣವನ್ನು…../
9
+ ಜನವರಿ 22ರಂದು ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ವೇಳೆಗೆ ಎಲ್ಲಾ ಭಕ್ತರು ದೇವಸ್ಥಾನದಲ್ಲಿ ನಡೆಯುವ ವಿಶೇಷ ಪೂಜೆಯಲ್ಲಿ ಭಾಗವಹಿಸುವಂತೆ ಕರೆ ನೀಡಲಾಗಿದೆ. ಅದೇ ದಿನ ಸಂಜೆ ತಮ್ಮ ಮನೆಯಲ್ಲಿ ಐದು ದೀಪಗಳನ್ನು ಉತ್ತರಾಭಿಮುಖವಾಗಿ ಹಚ್ಚಿ ಪ್ರಾರ್ಥಿಸುವಂತೆ ಮನವಿ ಮಾಡಲಾಗಿದೆ.
10
+ ಜೊತೆಯಲ್ಲಿ ದೇವಸ್ಥಾನಗಳ ಸ್ವಚ್ಚತೆಯಲ್ಲಿ ಶ್ರಮದಾನ ಮಾಡುವಂತೆ ನೀಡಿರುವ ಕರೆಗೆ ವ್ಯಾಪಕ ಸ್ಪಂದನೆ ದೊರೆಯುತ್ತಿದೆ.
eesanje/url_46_262_6.txt ADDED
@@ -0,0 +1,8 @@
 
 
 
 
 
 
 
 
 
1
+ ಪ್ರತ್ಯೇಕ ಅಪಘಾತ : ಸ್ವಿಗ್ಗಿ ಮ್ಯಾನೇಜರ್-ಜೊಮೊಟೋ ಡೆಲಿವರಿ ಬಾಯ್ ಸಾವು
2
+ ಬೆಂಗಳೂರು,ಜ.13- ನಗರದಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ಸ್ವಿಗ್ಗಿ ಮ್ಯಾನೇಜರ್ ಹಾಗೂ ಜೊಮೊಟೊ ಫುಡ್ ಡೆಲಿವರಿ ಬಾಯ್ ಮೃತಪಟ್ಟಿದ್ದಾರೆ.
3
+ ಯಶವಂತಪುರ ಸಂಚಾರ:ಕೆಲಸ ಮುಗಿಸಿಕೊಂಡು ಸ್ವಿಗ್ಗಿ ಮ್ಯಾನೇಜರ್ ಮೋಟಾರ್ ಬೈಕ್‍ನಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿ ಕಬ್ಬಿಣದ ಗ್ರಿಲ್ ಚುಚ್ಚಿದ ಪರಿಣಾಮ ಮೃತಪಟ್ಟಿದ್ದಾರೆ. ಮತ್ತಿಕೆರೆ ನಿವಾಸಿ ಅನಿಲ್‍ಕುಮಾರ್(29) ಮೃತಪಟ್ಟ ಸ್ವಿಗ್ಗಿ ಮ್ಯಾನೇಜರ್.
4
+ ಕೆಲಸ ಮುಗಿಸಿಕೊಂಡು ಇಂದು ಬೆಳಗಿನ ಜಾವ 12.45ರ ಸಮಯದಲ್ಲಿ ಬೈಕ್‍ನಲ್ಲಿ ಹೋಗುತ್ತಿದ್ದಾಗ ಜೆ.ಪಿ.ಪಾರ್ಕ್ ಟ್ಯಾಂಕ್ ಬಂಡ್ ರಸ್ತೆಯ ಅಕ್ಕಯಮ್ಮ ಬಾರ್ ಬಳಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಾಗ ಕಬ್ಬಿಣದ ಗ್ರಿಲ್ ಆತನ ಎದೆಗೆ ಹಾಗೂ ಕುತ್ತಿಗೆ ಬಳಿ ತಗುಲಿ ತೀವ್ರ ರಕ್ತಸ್ರಾವವಾಗಿ ಸ್ವಲ್ಪ ದೂರ ಉಜ್ಜಿಕೊಂಡು ಹೋಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಯಶವಂತಪುರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
5
+ ಎಚ್‍ಎಎಲ್ ಏರ್‍ಪೋರ್ಟ್: ಜೊಮೊಟೊ ಫುಡ್ ಡೆಲಿವರಿ ಬಾಯ್ ಇಂದು ಬೆಳಗಿನ ಜಾವ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಅದೇ ರಸ್ತೆಯಲ್ಲಿ ಬರುತ್ತಿದ್ದ ಕ್ಯಾಬ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಎಚ್‍ಎಎಲ್ ಏರ್‍ಪೋರ್ಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ಉತ್ತರಪ್ರದೇಶದ ರಾಜೇಶ್‍ಕುಮಾರ್(32) ಮೃತಪಟ್ಟ ಫುಡ್ ಡೆಲಿವರಿ ಬಾಯ್.
6
+ ದೆಹಲಿ ವಿವಿಯ ಮಹಿಳಾ ಶೌಚಾಲಯಗಳ ಮುಂದೆ ಸಿಸಿ ಕ್ಯಾಮರಾ ಅಳವಡಿಕೆ
7
+ ಇಂದಿರಾನಗರದಲ್ಲಿ ವಾಸವಾಗಿದ್ದ ರಾಜೇಶ್‍ಕುಮಾರ್ ಅವರು ಕೆಲಸ ಮುಗಿಸಿಕೊಂಡು ಇಂದು ಬೆಳಗಿನ ಜಾವ 1 ಗಂಟೆ ಸುಮಾರಿನಲ್ಲಿ ದ್ವಿಚಕ್ರ ವಾಹನದಲ್ಲಿ ಸುರಂಜನ್‍ದಾಸ್ ರಸ್ತೆಯಲ್ಲಿ ಎಚ್‍ಎಎಲ್ ಮುಖ್ಯಗೇಟ್ ಕಡೆಯಿಂದ ಜೆಬಿನಗರ ಕ್ರಾಸ್ ಕಡೆಗೆ ಹೋಗುತ್ತಿದ್ದಾಗ ಅದೇ ಸಮಯಕ್ಕೆ ಹಿಂದಿನಿಂದ ಬರುತ್ತಿದ್ದ ಕ್ಯಾಬ್ ಅತಿವೇಗದಿಂದಾಗಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಕೆಳಗೆ ಬಿದ್ದು ತಲೆಗೆ ಗಂಭೀರ ಪೆಟ್ಟಾಗಿದೆ.
8
+ ತಕ್ಷಣ ಅವರನ್ನು ಬೌರಿಂಗ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋದರಾದರೂ ವೈದ್ಯರು ಪರೀಕ್ಷಿಸಿ ಮಾರ್ಗಮಧ್ಯೆ ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ. ಈ ಬಗ್ಗೆ ಎಚ್‍ಎಎಲ್ ಏರ್‍ಪೊರ್ಟ್ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಅಪಘಾತವೆಸಗಿದ ಕ್ಯಾಬ್ ಹಾಗೂ ಚಾಲಕನ ಪತ್ತೆಗಾಗಿ ಶೋಧ ಕೈಗೊಂಡಿದ್ದಾರೆ.
eesanje/url_46_262_7.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಸಂಕ್ರಾಂತಿ ಮೇಲೆ ಬರದ ಕರಿನೆರಳು, ಬೆಲೆ ಏರಿಕೆ ನಡುವೆಯೂ ಹಬ್ಬಕ್ಕೆ ಸಜ್ಜು
2
+ ಬೆಂಗಳೂರು,ಜ.13- ಸುಗ್ಗಿ ಹಬ್ಬ ಸಂಕ್ರಾಂತಿ ಬಂತೆಂದರೆ ಹಳ್ಳಿಗಳಲ್ಲಿ ಎಲ್ಲಿಲ್ಲದ ಸಂಭ್ರಮ. ಕಷ್ಟಪಟ್ಟು ಬೆಳೆದ ಬೆಳೆಯನ್ನು ಒಂದೆಡೆ ರಾಶಿಹಾಕಿ ಪೂಜಿಸುವುದು. ವರ್ಷವಿಡಿ ರೈತನ ಬೆನ್ನೆಲುಬಾಗಿ ದುಡಿದ ಎತ್ತುಗಳನ್ನು ಸಿಂಗರಿಸಿ ಪೂಜೆ ಮಾಡಿ ಕಿಚ್ಚಾಯಿಸುವುದನ್ನು ನೊಡುವುದೆ ಒಂದು ಸಂಭ್ರಮ.
3
+ ಈ ಬಾರಿ ಸಂಂಕ್ರಾತಿಗೆ ನಗರದ ಜನತೆ ಸಜ್ಜಾಗುತ್ತಿದ್ದಾರೆ. ಆದರೆ ಗ್ರಾಮೀಣ ಭಾಗದಲ್ಲಿ ಸಂಕ್ರಾಂತಿ ಸೊಗಡಿಲ್ಲದಂತಾಗಿದೆ. ರಾಜ್ಯಾದ್ಯಂತ ಬರ ಆವರಿಸಿದ್ದು ಈ ಬಾರಿ ಉತ್ತಮ ಮಳೆಯಾಗದೆ, ಬೆಳೆಯಾಗದೆ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆಯೇ ಇಲ್ಲ ಅಂದಮೇಲೆ ಇನ್ನೆಲ್ಲಿ ರಾಶಿ ಪೂಜೆ ಎಂದು ರೈತರು ಈ ಬಾರಿಯ ಹಬ್ಬವನ್ನು ನಿರಾಸೆಯಿಂದ ಆಚರಿಸುವಂತಾಗಿದೆ.
4
+ ರಸಗೊಬ್ಬರದ ಬೆಲೆ ಏರಿಕೆ, ನೀರಿನ ಸಮಸ್ಯೆ ಹಾಗೂ ಕೂಲಿಯಾಳುಗಳ ಕೊರತೆಯಿಂದ ವ್ಯವಸಾಯ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದ್ದು, ಜಮೀನುಗಳು ಪಾಳು ಬೀಳುತ್ತಿವೆ. ಆದರೆ ಇನ್ನೂ ಕೆಲವರು ನಮ್ಮ ಸಂಪ್ರಾದಾಯ ಬಿಡಬಾರದೆಂದು ಕಷ್ಟವೋ ಸುಖಾವೋ ಎಂದು ಕೃಷಿ ಮಾಡುತ್ತಿದ್ದಾರೆ. ಆದರೆ ಸಾಂಪ್ರಾದಾಯಕ ಕೃಷಿಯಲ್ಲಿ ಯಂತ್ರದ ಕೃಷಿ ಮಾಡುವಂತಾಗಿದೆ.
5
+ ಇದು ಅನಿವಾರ್ಯವೂ ಹೌದು. ಮೊದಲೆಲ್ಲಾ ಎತ್ತುಗಳಿಂದ ಜಮೀನು ಉತ್ತಿ ಹದಗೊಳಿಸಿ, ಬಿತ್ತನೆ ಮಾಡಿ ಕಳೆ ಕಿತ್ತು, ಫಸಲು ಬಂದ ಮೇಲೆ ಒಕ್ಕಣೆ ಮಾಡಿ ರಾಶಿ ಮಾಡಿ ಪೂಜೆ ಸಲ್ಲಿಸಿ ಮನೆಗೆ ತರುವುದೆ ಒಂದು ಸಂಭ್ರಮ. ಆದರೆ ಇಂದು ಎಲ್ಲವೂ ಯಂತ್ರಮಯವಾಗಿಬಿಟ್ಟಿದೆ. ಜಮೀನು ಉಳುಮೆ ಮಾಡುವುದರಿಂದ ಹಿಡಿದು ಮನೆಗೆ ತರುವವರೆಗೂ ಎಲ್ಲಾ ಯಂತ್ರಗಳೇ. ರಾಶೀನು ಇಲ್ಲ ಪೂಜೆನೂ ಇಲ್ಲದಂತಾಗಿದೆ.
6
+ ರಾಮಮಂದಿರ ಉದ್ಘಾಟನೆ ದಿನದಂದು ಮಾರಿಷಸ್‍ನಲ್ಲಿ 2 ಗಂಟೆ ವಿಶೇಷ ರಜೆ
7
+ ಕಣ್ಮರೆಯಾದ ಎತ್ತುಗಳು:ಹಳ್ಳಿಗಳಲ್ಲಿ ಹಿಂದೆ ಪ್ರತಿಯೊಬ್ಬರ ಮನೆಯಲ್ಲೂ ಒಂದು ಜೊತೆ ಎತ್ತುಗಳನ್ನು ಕಟ್ಟಲಾಗುತ್ತಿತ್ತು. ಇಂದು ಊರೆಲ್ಲಾ ಉಡುಕಿದರೂ ಎತ್ತುಗಳು ಸಿಗೋದಿಲ್ಲ. ಕೆಲವರು ಪ್ರತಿಷ್ಠೆಗಾಗಿ ಮಾತ್ರ ಸಾಕುತ್ತಾರೆ ಅಷ್ಟೆ . ಎಲ್ಲವೂ ವ್ಯವಹಾರಮಯವಾಗಿಬಿಟ್ಟಿದ್ದು, ಸೀಮೆಹಸುಗಳ ಸಾಕಾಣಿಕೆಯಲ್ಲಿ ತೊಡಗಿದ್ದಾರೆ. ಹಾಗಾಗಿ ಹಳ್ಳಿಗಳಲ್ಲಿ ಸಂಕ್ರಾಂತಿ ಹಬ್ಬದಂದು ಕಿಚ್ಚು ಹಾಯಿಸುವವರು ಇಲ್ಲದಂತಾಗಿದೆ.
8
+ ಯುವಜನತೆ ಕೆಲಸ ಅಂತಾ ಪಟ್ಟಣ ಸೇರುತ್ತಿದ್ದಾರೆ. ಹಾಗಾಗಿ ಬೆಳೆಯುವವರಿಲ್ಲ, ತಿನ್ನುವವರೇ ಹೆಚ್ಚಾಗಿರುವಾಗ ಬೆಲೆ ಏರಿಕೆ ಅನಿವಾರ್ಯವಾಗಿದೆ. ಸುಗ್ಗಿಸಂಭ್ರಮ ಹಳ್ಳಿಗಳನ್ನು ಬಿಟ್ಟು ನಗರ ಸೇರಿದರೆ ನಗರದಲ್ಲಿ ಹಬ್ಬದ ದಿನ ದೇವಾಲಯಗಳಲ್ಲಿ ಪೂಜೆ ಮಾಡಿ ಒಂದಷ್ಟು ಗೆಣಸು, ಕಡಲೆಕಾಯಿ, ಕಬ್ಬು ತಂದು ಹಬ್ಬ ಮಾಡುತ್ತಾರೆ. ಜತೆಗೆ ಕೃತಕವಾಗಿ ಹಳ್ಳಿ ವಾತಾವರಣ ನಿರ್ಮಾಣ ಮಾಡಿ ಸಂಭ್ರಮಿಸುವ ಕಾಲ ಬಂದಿದೆ.
9
+ ಬೆಲೆ ಏರಿಕೆ ನಡುವೆಯೂ ನಗರದ ಜನರು ಸುಗ್ಗಿಹಬ್ಬಕ್ಕೆ ತಯಾರಾಗುತ್ತಿದ್ದಾರೆ. ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆ, ಪಟ್ಟಣ ತಾಲೂಕು ಕೇಂದ್ರದ ಮಾರುಕಟ್ಟೆಗಳಲ್ಲಿ ಕಡಲೆಕಾಯಿ, ಆವರೆಕಾಯಿ, ಕಬ್ಬು, ಗೆಣಸು, ಮಿಶ್ರಿತ ಎಳ್ಳು-ಬೆಲ್ಲ ಮಾರಾಟ ಜೋರಾಗಿದೆ.ಈ ಬಾರಿ ಬರ ಆವರಿಸಿದ್ದು, ಬೆಳೆ ಬಾರದ ಹಿನ್ನೆಲೆಯಲ್ಲಿ ಆವರೆಕಾಯಿ, ಕಡಲೆಕಾಯಿ, ಕಬ್ಬು, ಗೆಣಸು ಮಾರುಕಟ್ಟೆಗೆ ಬಾರದೆ ಆಂಧ್ರ, ತಮಿಳುನಾಡಿನಿಂದ ಬಂದಿದ್ದು ಬೆಲೆ ಏರಿಕೆಯಾಗಿದೆ.
10
+ ಸೊಗಡಿಲ್ಲದೆ ಆವರೆ:ಆವರೆಕಾಯಿ ಸೇಗಡೇ ಒಂದು ರೀತಿಯಲ್ಲಿ ಚೆಂದ. ಅದರಲ್ಲೂ ಮಾಗಡಿ ಆವರೆ ಎಂದರೆ ಹೆಸರುವಾಸಿ. ಮಳೆ ಬಾರದೆ ದಿನ್ನೆ ಆವರೆ ಇಲ್ಲದೆ ನೀರಾವರಿಯಲ್ಲಿ ಬೆಳೆದ ಬೆಳೆ ಮಾರುಕಟ್ಟೆಗೆ ಬಂದಿದ್ದು, ಸೊಗಡೇ ಇಲ್ಲದಂತಾಗಿದೆ. ಜೊತೆಗೆ ನಾಟಿ ಆವರೆ ಸಿಗೋದೆ ಕಡಿಮೆ. ಎಲ್ಲವೂ ಫಾರಂ ಆವರೆ ಆಗಿ ಬಿಟ್ಟಿದೆ. ಹೇಗೂ ಹಬ್ಬ ಮಾಡಲೇಬೇಕಲ್ಲಾ ಎಂದು ಜನರು ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದು, ಮಾರುಕಟ್ಟೆಗಳಲ್ಲಿ ಇಂದಿನಿಂದಲೇ ಖರೀದಿ ಭರಾಟೆ ಜೋರಾಗಿದೆ.