f63e57c0b95634999827c2aa25b363fa2f0488c8c268a910c95e564db909e249
Browse files- eesanje/url_46_274_2.txt +7 -0
- eesanje/url_46_274_3.txt +6 -0
- eesanje/url_46_274_4.txt +9 -0
- eesanje/url_46_274_5.txt +4 -0
- eesanje/url_46_274_6.txt +8 -0
- eesanje/url_46_274_7.txt +6 -0
- eesanje/url_46_274_8.txt +7 -0
- eesanje/url_46_274_9.txt +7 -0
- eesanje/url_46_275_1.txt +11 -0
- eesanje/url_46_275_10.txt +10 -0
- eesanje/url_46_275_11.txt +6 -0
- eesanje/url_46_275_12.txt +6 -0
- eesanje/url_46_275_2.txt +10 -0
- eesanje/url_46_275_3.txt +8 -0
- eesanje/url_46_275_4.txt +6 -0
- eesanje/url_46_275_5.txt +8 -0
- eesanje/url_46_275_6.txt +6 -0
- eesanje/url_46_275_7.txt +5 -0
- eesanje/url_46_275_8.txt +5 -0
- eesanje/url_46_275_9.txt +6 -0
- eesanje/url_46_276_1.txt +6 -0
- eesanje/url_46_276_10.txt +7 -0
- eesanje/url_46_276_11.txt +9 -0
- eesanje/url_46_276_12.txt +9 -0
- eesanje/url_46_276_2.txt +10 -0
- eesanje/url_46_276_3.txt +10 -0
- eesanje/url_46_276_4.txt +7 -0
- eesanje/url_46_276_5.txt +11 -0
- eesanje/url_46_276_6.txt +7 -0
- eesanje/url_46_276_7.txt +6 -0
- eesanje/url_46_276_8.txt +7 -0
- eesanje/url_46_276_9.txt +7 -0
- eesanje/url_46_277_1.txt +9 -0
- eesanje/url_46_277_10.txt +14 -0
- eesanje/url_46_277_11.txt +10 -0
- eesanje/url_46_277_12.txt +8 -0
- eesanje/url_46_277_2.txt +6 -0
- eesanje/url_46_277_3.txt +6 -0
- eesanje/url_46_277_4.txt +10 -0
- eesanje/url_46_277_5.txt +6 -0
- eesanje/url_46_277_6.txt +7 -0
- eesanje/url_46_277_7.txt +6 -0
- eesanje/url_46_277_8.txt +9 -0
- eesanje/url_46_277_9.txt +12 -0
- eesanje/url_46_278_1.txt +5 -0
- eesanje/url_46_278_10.txt +8 -0
- eesanje/url_46_278_11.txt +15 -0
- eesanje/url_46_278_12.txt +8 -0
- eesanje/url_46_278_2.txt +14 -0
- eesanje/url_46_278_3.txt +8 -0
eesanje/url_46_274_2.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಿಸುವಂತೆ ಶಾಸಕ ಯಶಪಾಲ್ ಮನವಿ
|
2 |
+
ಬೆಂಗಳೂರು,ಜ.2- ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಲಲ್ಲಾನ ವಿಗ್ರಹ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಸಾರ್ವಜನಿಕ ರಜೆ ಘೋಷಿಸುವಂತೆ ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
|
3 |
+
ಸಮಸ್ತ ಹಿಂದೂಗಳ ಶ್ರದ್ಧಾ ಕೇಂದ್ರವಾಗಿ 500 ವರ್ಷಗಳ ಕನಸು ನನಸಾಗುವ ಸಮಸ್ತ ಭಾರತೀಯರ ಪಾಲಿಗೆ ಅತ್ಯಂತ ಪವಿತ್ರ ದಿನವಾಗಿ ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆಯ ಭಾವನಾತ್ಮಕ ಐತಿಹಾಸಿಕ ಕ್ಷಣವನ್ನು ಮನೆ ಮನಗಳಲ್ಲಿ ಆಚರಿಸಲು ವಿಶೇಷ ದಿನವಾಗಿದೆ.
|
4 |
+
ಜ.22ರಂದು ದೇಶದಾದ್ಯಂತ ಹಲವು ದೇವಸ್ಥಾನ, ಮಂದಿರ ಹಾಗೂ ಸಂಘಸಂಸ್ಥೆಗಳಲ್ಲಿ ವಿಶೇಷ ಪೂಜೆ, ಭಜನಾ ಸಂಕೀರ್ತನೆ, ಅನ್ನ ಸಂತರ್ಪಣೆಯ ಮೂಲಕ ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದ್ದು, ರಾಜ್ಯ ಸರಕಾರ ಅಂದು ಸಾರ್ವತ್ರಿಕ ರಜೆ ಘೋಷಣೆ ಮಾಡಿ ಪವಿತ್ರ ದಿನವನ್ನು ಸಂಭ್ರಮದಿಂದ ಆಚರಿಸಲು ರಾಜ್ಯದ ಜನತೆಗೆ ಅವಕಾಶ ಕಲ್ಪಿಸುವಂತೆ ಈ ಮೂಲಕ ಮನವಿ ಮಾಡುತ್ತಿದ್ದೇನೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
|
5 |
+
ಕೆಎಸ್ಆರ್ಟಿಸಿ ಬಸ್ – ಜೀಪ್ ಮುಖಾಮುಖಿ ಡಿಕ್ಕಿ : ನಾಲ್ವರು ಸಾವು..
|
6 |
+
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಟ್ರಸ್ಟಿಯೂ ಆಗಿರುವ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಉಡುಪಿಯ ಜನತೆಗೆ ಸಂದೇಶ ಸಾರಿದ್ದಾರೆ. ತಮ್ಮ ಮನೆ, ಅಂಗಡಿ, ಕಟ್ಟಡಗಳಿಗೆ ದೀಪಗಳನ್ನು ಹಚ್ಚುವ ಮೂಲಕ ಈ ದಿನವನ್ನು ಭಾವಪೂರ್ಣವಾಗಿ ಆಚರಿಸುವಂತೆ ತಿಳಿಸಿದ್ದಾರೆಂದು ಶಾಸಕ ಸುವರ್ಣ ತಿಳಿಸಿದರು.
|
7 |
+
ಜನವರಿ 14ರಂದು ಮಕರ ಸಂಕ್ರಾಂತಿಯೊಂದಿಗೆ ಹಬ್ಬಗಳು ಪ್ರಾರಂಭವಾಗಲಿವೆ. ಜನವರಿ 18ರಂದು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಪರ್ಯಾಯ ಪೀಠಾರೋಹಣ ಮಾಡಲಿದ್ದಾರೆ. ಇದೇ ವೇಳೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ಜ.22ರಂದು ಶಾಸಕ ಯಶಪಾಲ್ ಸುವರ್ಣ ಅವರು ಭಕ್ತರಿಗಾಗಿ ವಿಶೇಷ ಹಾಲು ಪಾಯಸ ಸೇವೆ ಆಯೋಜಿಸಿದ್ದಾರೆ.
|
eesanje/url_46_274_3.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಕೆಎಸ್ಆರ್ಟಿಸಿ ಬಸ್ – ಜೀಪ್ ಮುಖಾಮುಖಿ ಡಿಕ್ಕಿ : ನಾಲ್ವರು ಸಾವು..
|
2 |
+
ಹುಣಸೂರು, ಜ.2- ಕೆಎಸ್ಆರ್ಟಿಸಿ ಎಲೆಕ್ಟ್ರಿಕ್ ಬಸ್ ಹಾಗೂ ಜೀಪ್ ನಡುವೆ ಸಂಭವಿಸಿದ ಭೀಕರ ಅಫಘಾತದಲ್ಲಿ ನಾಲ್ವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯ ಗೊಂಡಿರುವ ಘಟನೆ ನಗರದ ಬೈಪಾಸ್ ರಸ್ತೆಯ ಅಯ್ಯಪ್ಪಸ್ವಾಮಿ ಬೆಟ್ಟದ ತಪ್ಪಲಿನ ಬಳಿ ಇಂದು ಮುಂಜಾನೆ ನಡೆದಿದೆ.
|
3 |
+
ಹೆಚ್.ಡಿ.ಕೋಟೆ ತಾಲೂಕಿನ ಅಂತರ ಸಂತೆ ಹೋಬಳಿಯ ಜಿಹಾರÀಹಳ್ಳಿ ಹಾಗೂ ದಮ್ಮನಕಟ್ಟೆ ನಿವಾಸಿಗಳಾದ ರಾಜೇಶ್(35) ಲೋಕೇಶ್(40), ಸೋಮೇಶ್(42), ಮನು(26) ಮೃತಪಟ್ಟ ದುರ್ದೈವಿಗಳು. ಶುಂಠಿ ಬೆಳೆ ಕೊಯ್ಲಿಗಾಗಿ ಹೆಚ್ಡಿ ಕೋಟೆಯಿಂದ ಪಿರಿಯಾಪಟ್ಟಣ ಮಾರ್ಗವಾಗಿ ಕೊಡಗಿಗೆ ಜೀಪಿನಲ್ಲಿ 10 ಮಂದಿ ಕೂಲಿ ಕಾರ್ಮಿಕರು ತೆರಳುತ್ತಿದ್ದಾಗ ವಿರಾಜಪೇಟೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಎಲೆಕ್ಟ್ರಿಕ್ ಬಸ್ ಜೀಪಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
|
4 |
+
ಮೆಟ್ರೋ ಟ್ರಾಕ್ ಜಿಗಿದರೂ ಪ್ರಾಣಾಪಾಯದಿಂದ ಪಾರಾದ ಮಹಿಳೆ..!
|
5 |
+
ಐವರಿಗೆ ಗಂಭೀರ ಗಾಯಗಳಾಗಿದ್ದು ಕೂಡಲೇ ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಫಘಾತದ ರಭಸಕ್ಕೆ ಜೀಪು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಅದರಲ್ಲೆ ಶವಗಳು ಸಿಲುಕಿಕೊಂಡಿದ್ದರೆ, ಕೆಳಗೆ ಬಿದ್ದ ಇಬ್ಬರ ವ್ಯಕ್ತಿಗಳ ದೇಹದ ಭಾಗಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.ಸುದ್ದಿ ತಿಳಿದ ಕೂಡಲೇ ಹುಣಸೂರು ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಜೀಪಿನಿಂದ ಮೃತಪಟ್ಟ ಶವಗಳನ್ನು ಹೊರತೆಗೆದು ಶವಗಾರಕ್ಕೆ ಸಾಗಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈ ಗೊಂಡಿದ್ದಾರೆ.
|
6 |
+
ಆಕ್ರಂದನ: ಹೊಟ್ಟೆಪಾಡಿಗಾಗಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದವರ ಮೇಲೆ ಜವರಾಯ ಅಟ್ಟಹಾಸ ಮೆರೆದು ಬಲಿ ಪಡೆದು ಕೊಂಡಿದೆ. ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕುಂಟುಂಬ ಸದಸ್ಯರ ಆಂಕ್ರದನ ಮುಗಿಲು ಮುಟ್ಟಿತ್ತು. ಇನ್ನು ನಮ್ಮ ಕುಟುಂಬಕ್ಕೆ ಯಾರು ದಿಕ್ಕು ಎಂದು ಕಣ್ಣೀರು ಹಾಕುತ್ತ ಶವಗಾರದ ಮುಂದೆ ರೋಸುತ್ತಿದ್ದ ದೃಶ್ಯ ಮನಕಲಕುವಂತಿತ್ತು.
|
eesanje/url_46_274_4.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮಾಜಿ ಸಚಿವ ಹೆಚ್.ಆಂಜನೇಯ ಅವಿವೇಕಿ : ಯತ್ನಾಳ್
|
2 |
+
ಬೆಂಗಳೂರು,ಜ.2- ಭಗವಾನ್ ರಾಮನನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹೋಲಿಸಿ ಮಾತನಾಡಿದ್ದಕ್ಕೆ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್.ಆಂಜನೇಯ ಅವಿವೇಕಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
|
3 |
+
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಅವರು, ಇಂತಹ ಅವಿವೇಕಿಗಳು, ಸ್ವಜನಪಕ್ಷಪಾತಿಗಳು, ಹಿಂದೂ ವಿರೋಧಿಗಳು ಹಿಂದೆ ಸಚಿವರಾಗಿದ್ದರು ಎಂಬುದು ರಾಜ್ಯದ ದೌರ್ಭಾಗ್ಯ. ಆಂಜನೇಯಪ್ಪನವರ ಪೂಜ್ಯ ದೇವರಾದ ಸಿದ್ದರಾಮಯ್ಯನವರಿಗೆ ಅವರ ಮನೆಯಲ್ಲಿ ಸಕಲ ಪೂಜಾ ಕೈಂಯರ್ಯಗಳು ನಡೆಯಲಿ. ಹಿಂದೂಗಳ ಆರಾಧ್ಯ ದೈವ ಶ್ರೀರಾಮನ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ ಘನತೆಯಿಂದ, ಗೌರವದಿಂದ ವರ್ತಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
|
4 |
+
ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿಲ್ಲ ಎಂಬ ಕುರಿತು ಹೆಚ್.ಆಂಜನೇಯನವರು, ಸಿಎಂ ಸಿದ್ದರಾಮಯ್ಯ ಅವರೇ ಒಬ್ಬ ರಾಮ, ಇನ್ನು ಅವರು ಆ ರಾಮನನ್ನು (ಅಯೋಧ್ಯೆಯ ರಾಮನ ಉದ್ದೇಶಿಸಿ) ಹೋಗಿ ಯಾಕೆ ಪೂಜಿಸಬೇಕು ಎಂದು ಪ್ರಶ್ನಿಸಿದ್ದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿ ಬಸನಗೌಡ ಪಾಟೀಲ್ ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ತಿರುಗೇಟು ಕೊಟ್ಟಿದ್ದಾರೆ.
|
5 |
+
1992ರಲ್ಲಿ ಕರಸೇವಕರಾಗಿ ಶ್ರೀ ರಾಮ ದೇವರ ಸೇವೆ ಮಾಡಿದ ಭಕ್ತರಿಗೆ, ಕಾರ್ಯಕರ್ತರಿಗೆ ಈಗ ನೋಟೀಸ್ ನೀಡಿ ಹುಬ್ಬಳ್ಳಿ ಪೊಲೀಸರು ಬಂಧನ ಮಾಡುವುದಾಗಿ ಬೆದರಿಸುತ್ತಿರುವುದು ಕಾಂಗ್ರೆಸ್ ಪಕ್ಷದ ಸೇಡಿನ ರಾಜಕಾರಣ ತೋರಿಸುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರನ್ನು ವಿ.ಐ.ಪಿ ಪ್ರಕರಣಗಳ ಹುಡುಕಾಟಕ್ಕೆ ನಿಯೋಜಿಸಿರುವ ಗೃಹ ಇಲಾಖೆಯ ಕ್ರಮ ಖಂಡನೀಯ ಎಂದು ಆಕ್ಷೇಪಿಸಿದ್ದಾರೆ.
|
6 |
+
ಇಡೀ ವಿಶ್ವವೇ ಅಯೋಧ್ಯೆಯತ್ತ ತಿರುಗಿ ನೋಡುತ್ತಿರುವ ಸಂದರ್ಭದಲ್ಲಿ, ಕರ್ನಾಟಕದ ಕಾಂಗ್ರೆಸ್ ಸರ್ಕಾರ 31 ವರ್ಷಗಳ ಹಳೆಯ ಪ್ರಕರಣಕ್ಕೆ ಜೀವ ನೀಡುವ ಮೂಲಕ ತಾನು ಹಿಂದೂ ವಿರೋಧಿ ಎಂದು ಸಾಬೀತುಪಡಿಸಿದೆ. ಅಸಲಿಗೆ, ಮೂರು ದಶಕಗಳ ಕಾಲ ಸುಮ್ಮನಿದ್ದು, ಈಗ ರಾಮ ಜನ್ಮಭೂಮಿ ಪ್ರಾಣಪ್ರತಿಷ್ಠಾಪನೆಯ ದಿನಾಂಕ ನಿಗದಿಯಾದ ಮೇಲೆ ಈ ಕ್ರಮ ಕೈಗೊಂಡಿರುವುದು ಹಾಗೂ ವಿಶೇಷ ತಂಡ ರಚಿಸಿ ಬಂಧಿಸಲು ಹೊರಟಿರುವುದು ಹೇಯ ಹಾಗೂ ಖಂಡನೀಯ ಎಂದು ಕುಟುಕಿದ್ದಾರೆ.
|
7 |
+
ಜಗನ್ಮೋಹನ್ರೆಡ್ಡಿ ಸಹೋದರಿ ಶರ್ಮಿಳಾಗೆ ಕಾಂಗ್ರೆಸ್ ಗಾಳ
|
8 |
+
ಆದ್ಯತಾ ಪಟ್ಟಿಯನ್ನಿಟ್ಟುಕೊಂಡು ಕೆಲಸ ಮಾಡಬೇಕಾದ ಪೊಲೀಸರು, ನಿರ್ಜೀವ ಪ್ರಕರಣಕ್ಕೆ ವಿಶೇಷ ತಂಡ ರಚಿಸಿರುವುದು ಹಾಸ್ಯಾಸ್ಪದವಾಗಿದೆ. ಬಾಹ್ಯ ಹಾಗೂ ಆಂತರಿಕ ಶತ್ರುಗಳನ್ನು ಮಟ್ಟ ಹಾಕಬೇಕಾದವರು ಲಾಠಿ ಪ್ರಹಾರ ಮಾಡುವುದು ರಾಮ ಭಕ್ತರಿಗೆ ಮಾಡುವ ಅವಮಾನ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
|
9 |
+
ಬಿಜೆಪಿ ಕೂಡ ಈ ಕುರಿತು ಟ್ವೀಟ್ ಮಾಡಿದ್ದು, ಹಿಂದೂ ಸಮಾಜಕ್ಕ��� ಅವಮಾನ ಮಾಡುತ್ತಲೇ ಬಂದಿರುವ ಕಾಂಗ್ರೆಸ್, ಈಗ ಶ್ರೀರಾಮಚಂದ್ರರನ್ನು ಇತರರಿಗೆ ಹೋಲಿಸಿ ಮತ್ತೊಮ್ಮೆ ಹಿಂದೂ ಸಮಾಜಕ್ಕೆ ಅವಮಾನಿಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.
|
eesanje/url_46_274_5.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಮೆಟ್ರೋ ಟ್ರಾಕ್ ಜಿಗಿದರೂ ಪ್ರಾಣಾಪಾಯದಿಂದ ಪಾರಾದ ಮಹಿಳೆ..!
|
2 |
+
ಬೆಂಗಳೂರು,ಜ.2- ಮೆಟ್ರೋ ಟ್ರ್ಯಾಕ್ಗೆ ಜಿಗಿದ ಮಹಿಳೆ ಸಿಬ್ಬಂದಿಗಳ ಚಾಕಚಕ್ಯತೆಯಿಂದಾಗಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಇಂದಿರಾನಗರ ಮೆಟ್ರೋ ಸ್ಟೇಷನ್ನಲ್ಲಿ ನಡೆದಿದೆ. ಕೆಳಗೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು ಮೆಟ್ರೋ ಟ್ರ್ಯಾಕ್ ಗೆ ಮಹಿಳೆ ಜಿಗಿಯುತ್ತಿರುವುದನ್ನು ಕಂಡ ಕೂಡಲೇ ಮೆಟ್ರೋ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದರಿಂದ ಸಂಭವಿಸಬಹುದಾದ ಅನಾಹುತ ತಪ್ಪಿದೆ.
|
3 |
+
ಸಾಮೂಹಿಕ ಅತ್ಯಾಚಾರ, ಮೂವರು ಕಾಮುಕರ ಬಂಧನ
|
4 |
+
ಮಹಿಳೆ ಮಾಡಿದ ಈ ಎಡವಟ್ಟಿನಿಂದಾಗಿ ಸುಮಾರು 15 ನಿಮಿಷಗಳ ಕಾಲ ಮೆಟ್ರೋ ಸಂಚಾರ ಸ್ಥಗಿತಗೊಳಿಸಬೇಕಾಯಿತು ಎಂದು ಬಿಎಂಆರ್ಸಿಎಲ್ ಸ್ಪಷ್ಟನೆ ನೀಡಿದೆ. ವಿದ್ಯುತ್ ತೆಗೆದ ನಂತರ ಎಲ್ಲವನ್ನೂ ರೀ ಸೆಟ್ ಮಾಡಲು 15 ನಿಮಿಷ ಬೇಕು ನಿನ್ನೆ ಪೀಕ್ ಅವರ್ ನಲ್ಲೇ ಈ ರೀತಿ ಸಮಸ್ಯೆ ಅಗಿದೆ ಇದಕ್ಕೆ ವಿಷಾಧಿಸುತ್ತೇವೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.
|
eesanje/url_46_274_6.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಲೋಕ ಚುನಾವಣೆಗೆ ಸ್ಪರ್ಧೆ : ಅಡ್ಡಗೋಡೆ ಮೇಲೆ ದೀಪವಿಟ್ಟ ಡಿವಿಎಸ್
|
2 |
+
ಬೆಂಗಳೂರು,ಜ.1- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ರ್ಪಧಿಸುವ ಕುರಿತು ಸೂಕ್ತ ಕಾಲದಲ್ಲಿ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳುತ್ತೇನೆ ಎಂದು ಹಾಲಿ ಸಂಸದ ಡಿ.ವಿ.ಸದಾನಂದ ಗೌಡ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಇಡೀ ಲೋಕಸಭಾ ಕ್ಷೇತ್ರದಲ್ಲಿ ಒಂದೇ ಒಂದು ಮತದಾರರು ನನ್ನನ್ನು ಬೇಡ ಎಂದಿಲ್ಲ. ವಿರೋಧಿಸಿಲ್ಲ. ನನಗೆ ಖುಷಿ ಇದೆ. ನೋಡೋಣ ಮುಂದೆ ಏನಾಗುತ್ತದೆ ಎಂದು ಸೂಚ್ಯವಾಗಿ ಹೇಳಿದರು. ನಾನು ಎಲ್ಲರ ಜೊತೆಯೂ ಸಂಬಂಧಗಳನ್ನು ಚೆನ್ನಾಗಿ ಇಟ್ಟುಕೊಂಡಿದ್ದೇನೆ. ನಾನು ಹಿಂದೆ ಮಾಧ್ಯಮಗಳೊಂದಿಗೆ ಮಾತನ್ನಾಡಿದ್ದೇನೆ. ನನ್ನ ಮನೆಯವರಿಗೆ ಸೀರೆ ತಂದುಕೊಟ್ಟಿದ್ದೇನೆ ಎಂದು ಹೇಳುವ ವ್ಯಕ್ತಿ ನಾನಲ್ಲ ಎಂದರು. ಅವರು ಉಟ್ಟ ಸೀರೆ ನಾನು ತಂದುಕೊಟ್ಟಿದ್ದು ಎಂದು ಹೇಳುವುದಲ್ಲ. ಈಗ ಸದ್ಯದ ಪರಿಸ್ಥಿತಿಯಲ್ಲಿ ಏನು ಹೇಳುವುದಿಲ್ಲ. ಅಡ್ಡ ಗೋಡೆಯ ಮೇಲೆ ದೀಪ ಇಟ್ಟಿದ್ದೇನೆ ಅಂದುಕೊಳ್ಳಬೇಡಿ. ಈಗ ನಾನು ಏನು ಹೇಳುವುದಿಲ್ಲ. ಮುಂದೆ ನೋಡೋಣ ಎಂದು ಪುನರುಚ್ಚರಿಸಿದರು.
|
4 |
+
ರಾಜಕಾರಣ ನಿಶ್ಚಯಗಳು, ನಿಲುವುಗಳು ಇರುತ್ತದೆ. ನಾನು 30 ವರ್ಷದ ರಾಜಕಾರಣ ನೋಡಿದ್ದೇನೆ. ಹೊಸಬರು ಬರಬೇಕೆಂದು ನಾನು ಬಯಸಿದ್ದು ನಿಜ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜಕಾರಣದಲ್ಲಿ ಕೆಲ ಬದಲಾವಣೆ ಆಗಿದೆ. ಈಗ ನನ್ನ ಮೇಲೆ ಒತ್ತಡ ಬರುತ್ತಿದೆ. ಬಸವರಾಜ ಬೊಮ್ಮಾಯಿ, ದಾಸರಹಳ್ಳಿ ಶಾಸಕರು, ಕೆ.ಆರ್. ಪುರಂ ಶಾಸಕರು, ಬ್ಯಾಟರಾಯನಪುರದ ಸ್ಥಳೀಯರು ಹಾಗೂ ಸೋಮಶೇಖರ್ ಕೂಡ ನನ್ನ ಪರ ಇದ್ದಾರೆ ಎಂದು ಹೇಳಿದರು.
|
5 |
+
ರಾಮ ಒಬ್ಬರಿಗೆ ಸೇರಿದವನಲ್ಲ ಎಂಬ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಹೇಳಿಕೆಗೆ ಪ್ರತಿಕ್ರಿಯಿದ ಗೌಡರು, ಪರಮೇಶ್ವರ್ ಅವರಿಗೆ ಈಗ ಒಳ್ಳೆಯ ಬುದ್ಧಿ ಬಂದಿದೆ. ಅವರಿಗೆ ರಾಮ ಒಳ್ಳೆಯದು ಮಾಡಲಿ. ಅವರು ಕೂಡ ಬರಲೀ ಎಂದು ವ್ಯಂಗ್ಯವಾಡಿದರು.
|
6 |
+
ರಾಮ ಜನ್ಮಭೂಮಿ ಕರ ಸೇವಕರ ಮೇಲೆ ಸರ್ಕಾರ ಸೇಡು: ಅಶೋಕ್
|
7 |
+
ಪಕ್ಷದಲ್ಲಿ ವಿ.ಸೋಮಣ್ಣ ಅಸಮಾಧಾನಕ್ಕೆ ಸಂಬಂಧಿಸಿದಂತೆ ಇದು ಸಹಜ. ಈಗ ಹೊಸ ತಂಡ ಬಂದಿದೆ. ಸದ್ಯ ಹೊಸ ವರ್ಷದ ಸಂಭ್ರಮಾಚರಣೆಗೆ ಮಗನಿಗೆ ಅಪ್ಪ ಹೊಗಬೇಡ ಎನ್ನುತ್ತಾರೆ. 500 ಕೇಳಿದರೆ 150 ರೂ. ಕೊಡುತ್ತೇನೆ ಎಂದಾಗ, ಸ್ವಲ್ಪ ಅಸಮಾಧಾನ ಆಗುತ್ತದೆ. ಸೋಮಣ್ಣರ ವಿಚಾರದಲ್ಲಿ ಆಗಿರುವುದು ಅದೇ. ಸೋಮಣ್ಣ ಅವರು ಗೋವಿಂದರಾಜನಗರ ಬಿಟ್ಟು ಬೇರೆ ಕಡೆ ಹೋಗಿ, ಹಿನ್ನಡೆ ಅನುಭವಿಸಿದ್ದಾರೆ. ಹೀಗಾಗಿ, ಸ್ವಲ್ಪ ಬೇಸರ ಆಗಿದೆ. ಎಲ್ಲವೂ ಸರಿಯಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
|
8 |
+
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ವಿ.ಸೋಮಣ್ಣ ಸರ್ಧೆ ಮಾಡುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ವಿ.ಸೋಮಣ್ಣನವರೇ ನನಗೆ ಕರೆ ಮಾಡಿ ಮಾತನ್ನಾಡಿದ್ದಾರೆ. ���ೀವೇ ಬೆಂಗಳೂರು ಉತ್ತರಕ್ಕೆ ನಿಲ್ಲಬೇಕೆಂದರು. ಹಲವು ಮಂದಿ ನಿಮ್ಮ ನಿರ್ಧಾರ ಸರಿಯಲ್ಲ ಎಂದಿದ್ದಾರೆ. ಬೇರೆ ಯಾರಾದರೂ ಹೇಳಿದ್ದರೆ ಒಪ್ಪಬಹುದು. ನೀವು ಹೀಗೆ ಹೇಳಬಾರದಿತ್ತು ಎನ್ನುತ್ತಿದ್ದಾರೆ. ಖುದ್ದು ಸೋಮಣ್ಣನವರೇ ನೀವೇ ನಿಲ್ಲಬೇಕು ಎಂದಾಗ, ಅವರು ಬಂದು ಸರ್ಧೆ ಮಾಡುತ್ತಾರೆ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದರು.
|
eesanje/url_46_274_7.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ವಿಮಾನಗಳಲ್ಲಿ ಚಿನ್ನ ಕಳ್ಳಸಾಗಣೆ: 2 ಕೋಟಿ ಮೌಲ್ಯದ ಚಿನ್ನ ಜಪ್ತಿ
|
2 |
+
ಬೆಂಗಳೂರು,ಜ.1- ವಿಮಾನಗಳಲ್ಲಿ ವಿವಿಧ ದೇಶಗಳಿಂದ ಚಿನ್ನವನ್ನು ಕಳ್ಳಸಾಗಣೆ ಮಾಡಿಕೊಂಡು ಬಂದಿದ್ದ ಹನ್ನೊಂದು ಮಹಿಳೆಯರು ಸೇರಿದಂತೆ 16 ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ 2 ಕೋಟಿಗೂ ಅಧಿಕ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ.
|
3 |
+
ವಿವಿಧ ದೇಶಗಳ ಪ್ರಮುಖ ನಗರಗಳಾದ ಕೌಲಾಲಂಪುರ, ಜೆಡ್ಡಾ, ಶಾರ್ಜಾ ಮತ್ತು ಬ್ಯಾಂಕಾಕ್ಗಳಿಂದ ಪ್ರತ್ಯೇಕ ವಿಮಾನಗಳಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಹಲವು ಪ್ರಯಾಣಿಕರನ್ನು ತಡೆದು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದರು.
|
4 |
+
ನಿಗಮ ಮಂಡಳಿ ನೇಮಕಾತಿ ಚರ್ಚೆಗೆ ಸಿಎಂ,ಡಿಸಿಎಂ ದೆಹಲಿಗೆ
|
5 |
+
ಆ ವೇಳೆ ಶೂ, ಸಾಕ್ಸ್, ಉಡುಪುಗಳು, ಕರವಸ್ತ್ರ ಹಾಗೂ ಒಳ ಉಡುಪುಗಳಲ್ಲಿ ಅಡಗಿಸಿಟ್ಟುಕೊಂಡು ಚಿನ್ನ ಕಳ್ಳಸಾಗಣೆ ಮಾಡಿಕೊಂಡು ಬಂದಿರುವುದು ಪತ್ತೆಯಾಗಿದೆ. ತಕ್ಷಣ 11 ಮಂದಿ ಮಹಿಳೆಯರು ಹಾಗೂ ಐದು ಮಂದಿ ಪುರುಷರನ್ನು ವಶಕ್ಕೆ ಪಡೆದು 3311 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದು ತನಿಖೆ ಮುಂದುವರೆಸಿದ್ದಾರೆ.
|
6 |
+
ಈ ಬಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
|
eesanje/url_46_274_8.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಜೆಡಿಎಸ್ ಸಿದ್ಧತೆ
|
2 |
+
ಬೆಂಗಳೂರು, ಜ.1- ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಆಯಾ ಕ್ಷೇತ್ರಗಳ ಮುಖಂಡರ ಅಭಿಪ್ರಾಯವನ್ನು ಜೆಡಿಎಸ್ ಸಂಗ್ರಹಿಸುತ್ತಿದೆ. ಕಳೆದ ಒಂದು ವಾರದಿಂದಲೂ ಪಕ್ಷದ ಮುಖಂಡರೊಂದಿಗೆ ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಮಾಲೋಚನೆ ನಡೆಸಿದ್ದಾರೆ.
|
3 |
+
ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರಿದ್ದು, ಗೆಲ್ಲಲು ಸಾಧ್ಯವಿರುವ ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ ಮಾಡಲು ತೀರ್ಮಾನಿಸಿದೆ. ಹೀಗಾಗಿ ಸ್ಪರ್ಧೆ ಮಾಡಲಿರುವ ಕ್ಷೇತ್ರಗಳ ಪ್ರಮುಖ ಮುಖಂಡರು, ಕಾರ್ಯಕರ್ತರೊಂದಿಗೆ ಅಭ್ಯರ್ಥಿ ಗಳ ಆಯ್ಕೆ ಚುನಾವಣೆ ಕಾರ್ಯ ತಂತ್ರದ ಬಗ್ಗೆ ನಿರಂತರ ಸಮಾಲೋಚನೆಯನ್ನು ಕುಮಾರಸ್ವಾಮಿ ನಡೆಸುತ್ತಿದ್ದಾರೆ.
|
4 |
+
ಮಕರ ಸಂಕ್ರಾಂತಿ ಹಬ್ಬದ ನಂತರ ಸ್ರ್ಪಧಿಸಲಿರುವ ಕ್ಷೇತ್ರಗಳ ಪ್ರಕಟ ಹಾಗೂ ಸಂಭವನೀಯ ಅಭ್ಯರ್ಥಿಗಳನ್ನು ಪ್ರಕಟಿಸುವ ಸಾಧ್ಯತೆಯಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ಮಾತ್ರ ಜೆಡಿಎಸ್ ಸ್ಪರ್ಧೆಗಿಳಿಯಲು ನಿರ್ಧರಿಸಿದೆ. ಜೆಡಿಎಸ್ ಪ್ರಾಬಲ್ಯವಿರುವ ಹಾಸನ, ಮಂಡ್ಯ, ತುಮಕೂರು ಹಾಗೂ ಕೋಲಾರ ಕ್ಷೇತ್ರಗಳಲ್ಲಿ ಸ್ಪರ್ಧೆಗಿಳಿಯುವ ಇಚ್ಛೆಯನ್ನು ಬಿಜೆಪಿಯ ವರಿಷ್ಠರ ಗಮನಕ್ಕೆ ತರಲಾಗಿದೆ.
|
5 |
+
ಹೂಗುಚ್ಛ ಬೇಡ, ಅನಾಥ ಮಕ್ಕಳಿಗೆ ಸಹಾಯ ಮಾಡಿ : ದಯಾನಂದ
|
6 |
+
ಈ ನಾಲ್ಕು ಕ್ಷೇತ್ರಗಳಲ್ಲದೆ, ರಾಯಚೂರು, ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಬಗ್ಗೆಯೂ ಮಿತ್ರ ಪಕ್ಷಗಳು ಸಮಾಲೋಚನೆ ನಡೆಸಿ ಗೆಲ್ಲುವ ಪಕ್ಷದ ಅಭ್ಯರ್ಥಿಗೆ ಅವಕಾಶ ಮಾಡಿಕೊಡಲಿವೆ. ಕೆಲವೊಂದು ಕ್ಷೇತ್ರಗಳನ್ನು ಬದಲು ಮಾಡಿಕೊಳ್ಳಲು ಕೂಡಾ ಬಿಜೆಪಿ-ಜೆಡಿಎಸ್ ನಾಯಕರು ಮುಕ್ತವಾಗಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
|
7 |
+
ಹೀಗಾಗಿ ಸಂಕ್ರಾಂತಿಯವರೆಗೂ ಕಳೆದ ವಿಧಾನಸಭೆ ಚುನಾವಣೆ ಯಲ್ಲಿ ಪಕ್ಷಕ್ಕಾದ ಹಿನ್ನಡೆ, ಪಕ್ಷ ದಲ್ಲಿನ ನ್ಯೂನತೆಗಳನ್ನು ಸರಿಪಡಿಸಿ ಕೊಳ್ಳುವುದು ಹಾಗೂ ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಆಯಾ ಕ್ಷೇತ್ರದ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ, ಸಲಹೆಗಳನ್ನು ಪಡೆಯಲಾಗುತ್ತಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
|
eesanje/url_46_274_9.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ರಾಮ ಜನ್ಮಭೂಮಿ ಕರ ಸೇವಕರ ಮೇಲೆ ಸರ್ಕಾರ ಸೇಡು: ಅಶೋಕ್
|
2 |
+
ಬೆಂಗಳೂರು,ಜ.1-ರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದವರ ವಿರುದ್ಧ ದಾಖಲಾಗಿದ್ದ ಹಳೆಯ ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಕೆದಕಿ ಬಂಧಿಸಿ ಜೈಲಿಗಟ್ಟುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಇಂದಿಲ್ಲಿ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮ ಭಕ್ತರನ್ನು ಬಂಧಿಸುವ ಮೂಲಕ ಟಿಪ್ಪು ಸಂಸ್ಕøತಿ ಹೇರುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿದರು.
|
3 |
+
ಈ ಹಿಂದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೂ ದ್ವೇಷದ ರಾಜಕಾರಣ ಮಾಡುತ್ತಿತ್ತು. ಆಗಲೂ ಹಿಂದೂ ಕಾರ್ಯಕರ್ತರ ಹತ್ಯೆಗಳಾಗಿದ್ದವು ಎಂದು ಹೇಳಿದರು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿ ರಾಮನ ಮೂರ್ತಿ ಪ್ರತಿಷ್ಠಾಪನೆಯ ಐತಿಹಾಸಿಕ ಕ್ಷಣವನ್ನು ಜನರು ಎದುರು ನೋಡುತ್ತಿದ್ದಾರೆ. ಈ ಸಂದರ್ಭದಲ್ಲಿ ರಾಮ ಜನ್ಮಭೂಮಿಗಾಗಿ ಹೋರಾಟಕ್ಕೆ ಹೋಗಿದ್ದ ಕರ ಸೇವಕರನ್ನು ಬಂಧಿಸುವ ಕೆಲಸವಾಗಿದೆ.ಹುಬ್ಬಳ್ಳಿಯಲ್ಲಿ 25-30 ವರ್ಷದ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾರ್ಯಕರ್ತರನ್ನು ಜೈಲಿಗೆ ಕಳುಹಿಸಿದ್ದಾರೆ ಎಂದು ಆರೋಪಿಸಿದರು.
|
4 |
+
ಹೂಗುಚ್ಛ ಬೇಡ, ಅನಾಥ ಮಕ್ಕಳಿಗೆ ಸಹಾಯ ಮಾಡಿ : ದಯಾನಂದ
|
5 |
+
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ನಾನು ಕೂಡ ರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದೆವು. ನಮ್ಮನ್ನು ಬಂಧಿಸುತ್ತೀರಾ? ಬಂಧಿಸುವ ಧೈರ್ಯವಿದೆಯೇ? ಹಳೆಯ ಪ್ರಕರಣಗಳನ್ನು ಹುಡುಕಿ ಕೆದಕುವ ಕೆಲಸ ಮಾಡಲಾಗುತ್ತಿದೆ. ರಾಮ ರಥಯಾತ್ರೆ ಸಂದರ್ಭದಲ್ಲಿ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಮರುಜೀವ ನೀಡಲಾಗಿದೆ.
|
6 |
+
ಇದೇ ರೀತಿ ಹಳೆಯ ಪ್ರಕರಣಗಳಿಗೆ ರಾಜ್ಯಾದ್ಯಂತ ಮರುಜೀವ ನೀಡಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂಬ ಮಾಹಿತಿ ಇದೆ ಎಂದು ದೂರಿದರು. ಪ್ರಧಾನಿ ನರೇಂದ್ರಮೋದಿ ಅವರು ರಾಮಮಂದಿರ ಉದ್ಘಾಟನೆಯಾಗುವ ಸಂದರ್ಭದಲ್ಲಿ ಮನೆ ಮುಂದೆ ದೀಪ ಬೆಳಗಿ ಎಂದು ಕರೆ ಕೊಟ್ಟಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ರಾಮ ಭಕ್ತರ ಮೇಲೆ ಕೇಸು ಹಾಕುವ ಮೂಲಕ ಭಯವನ್ನುಂಟು ಮಾಡುತ್ತಿದೆ ಎಂದು ಆರೋಪಿಸಿದರು.ಟಿಪ್ಪು ಜಯಂತಿ ಆಚರಿಸುವ ಕಾಂಗ್ರೆಸಿಗರು ಶ್ರೀರಾಮನವಮಿ ಮಾಡಿದ್ದಾರೆಯೇ? ನಾಮ ಧರಿಸುತ್ತಾರೆಯೇ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿಕೆಗೆ ತಿರುಗೇಟು ನೀಡಿದರು.
|
7 |
+
ಮುಖ್ಯಮಂತ್ರಿಗಳು ಅಲ್ಪಸಂಖ್ಯಾತರಿಗೆ 11 ಸಾವಿರ ಕೋಟಿ ಅನುದಾನ ಕೊಡುವುದಾಗಿ ಹೇಳಿದ್ದಾರೆ. ಆದರೆ ಬರಗಾಲದಿಂದ ತತ್ತರಿಸಿ ಸಂಕಷ್ಟದಲ್ಲಿರುವ ರೈತರ ಬಗ್ಗೆ ಅವರಿಗೆ ಯಾವುದೇ ಕಾಳಜಿ ಇಲ್ಲ ಎಂದು ಟೀಕಿಸಿದರು.ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಗೋಪಾಲಯ್ಯ ಉಪಸ್ಥಿತರಿದ್ದರು.
|
eesanje/url_46_275_1.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ವಾಹಿನಿಯಲ್ಲಿ ಹೂಡಿಕೆ: ಡಿ.ಕೆ.ಶಿವಕುಮಾರ್ ದಂಪತಿಗೆ ಸಿಬಿಐ ನೋಟಿಸ್
|
2 |
+
ನವದೆಹಲಿ,ಜ.1- ಕೇರಳ ಮೂಲದ ಜೈಹಿಂದ್ ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ನೀಡುವಂತೆ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ.ನಿನ್ನೆಯಷ್ಟೇ ಜೈಹಿಂದ್ ಚಾನಲ್ನ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್. ಶಿಜು ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದ ಬೆನ್ನಲ್ಲೇ ಇದೀಗ, ಡಿ.ಕೆ.ಶಿವಕುಮಾರ್ ಹಾಗೂ ಪತ್ನಿ ಉಷಾ ಶಿವಕುಮಾರ್ ಸೇರಿದಂತೆ ಒಟ್ಟು 30 ಮಂದಿಗೆ ಜನವರಿ 11ರಂದು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ತನ್ನ ಮುಂದೆ ಹಾಜರಾಗುವಂತೆ ತಿಳಿಸಿದೆ.
|
3 |
+
ಸಿಆರ್ಪಿಸಿ ಸೆಕ್ಷನ್ 91ರಡಿ ಹೊರಡಿಸಲಾದ ನೋಟಿಸ್ನಲ್ಲಿ, ಡಿ.ಕೆ.ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ಶಿವಕುಮಾರ್ ಅವರು ಮಾಡಿದ ಹೂಡಿಕೆಗಳು, ಅವರಿಗೆ ಪಾವತಿಸಿದ ಲಾಭಾಂಶಗಳು, ಷೇರು ವಹಿವಾಟುಗಳು, ಹಣಕಾಸಿನ ವಹಿವಾಟುಗಳ ಜೊತೆಗೆ ಅವರ ಬ್ಯಾಂಕ್ ವಿವರಗಳನ್ನು ಒದಗಿಸುವಂತೆ ಸಿಬಿಐ ಚಾನಲ್ಗೆ ಕೇಳಿದೆ. ಹಿಡುವಳಿಗಳ ಹೇಳಿಕೆ, ಅವರ ಲೆಡ್ಜರ್ ಖಾತೆಗಳು, ಒಪ್ಪಂದದ ಟಿಪ್ಪಣಿಗಳು ಮತ್ತು ಇತರ ವಿವರಗಳ ಜೊತೆಗೆ ಎಲ್ಲಾ ಷೇರು ವಹಿವಾಟುಗಳ ವಿವರಗಳನ್ನು ಕೇಳಿದೆ.
|
4 |
+
ಸಿಆರ್ ಪಿಸಿ ಸೆಕ್ಷನ್ 91 ಅವರು ತನಿಖೆ ನಡೆಸಿದ ಪ್ರಕರಣದ ಬಗ್ಗೆ ದಾಖಲೆಗಳನ್ನು ಸಮನ್ಸ್ ಮಾಡಲು ಪೊಲೀಸ್ ತನಿಖಾ ಅಧಿಕಾರಿಗೆ ಅಧಿಕಾರ ನೀಡುತ್ತದೆ. ಶಿವಕುಮಾರ್ ಅವರ ಪುತ್ರ ಮತ್ತು ಇತರ ಕುಟುಂಬ ಸದಸ್ಯರು ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ಪ್ರಸ್ತುತಪಡಿಸುವಂತೆ ಸಿಬಿಐ ಕೇಳಿದೆ.
|
5 |
+
ಗಣರಾಜ್ಯೋತ್ಸವ ಟ್ಯಾಬ್ಲೋ ಪಾಲ್ಗೊಳ್ಳುವಿಕೆ ಬಗ್ಗೆ ತಾರತಮ್ಯ ಮಾಡಿಲ್ಲ
|
6 |
+
ಜೈಹಿಂದ್ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್.ಶಿಜು ಅವರು ಸಿಬಿಐ ನೋಟಿಸ್ ಸ್ವೀಕರಿಸಿದ್ದು, ಸಂಸ್ಥೆ ಕೋರಿರುವ ಎಲ್ಲಾ ದಾಖಲೆಗಳನ್ನು ಒದಗಿಸುವುದಾಗಿ ತಿಳಿಸಿದ್ದಾರೆ, ಎಲ್ಲಾ ದಾಖಲೆಗಳು ತಮ್ಮ ಬಳಿ ಇವೆ ಮತ್ತು ಯಾವುದೇ ಅಕ್ರಮ ನಡೆಸಿಲ್ಲ ಎಂದು ಹೇಳಿದ್ದಾರೆ. ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ 2020ರಲ್ಲಿ ಪ್ರಕರಣ ದಾಖಲಿಸಿದ್ದು, 2013 ಮತ್ತು 2018ರ ನಡುವೆ ಅವರು 74 ಕೋಟಿ ರೂ.ಗೂ ಹೆಚ್ಚು ಆಸ್ತಿಗಳಿಸಿದ್ದು, ಅದು ಅವರ ಆದಾಯಕ್ಕೆ ಅನುಗುಣವಾಗಿಲ್ಲ ಎಂದು ಆರೋಪಿಸಿತ್ತು.
|
7 |
+
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಮೀರಿದ ಆಸ್ತಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ಈ ಹಿಂದೆ ರಾಜ್ಯ ಸಲ್ಲಿಸಿದ್ದ ಅನುಮತಿಯನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನ.23ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಹಿಂದಿನ ಸರ್ಕಾರ ವಿಧಾನಸಭೆಯ ಸ್ಪೀಕರ್ ಅನುಮತಿಯನ್ನು ಪಡೆಯದೇ ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. ಹಾಗಾಗಿ, ಅದು ಕಾನೂನು ರೀತಿಯಾಗಿ ಸರಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ಅನುಮತಿಯನ್ನು ಹಿಂಪಡೆಯಲು ನಿರ್ಧರಿಸಲಾಗಿತ್ತು.ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿವಿಚಾರಣೆಯನ್ನು ಹೈಕೋರ್ಟ್ ಜನವರಿ 5ಕ್ಕೆ ಮುಂದೂಡಿದೆ.
|
8 |
+
ಆದಾಯ ತೆರಿಗೆ ಇಲಾಖೆ ದಾಳಿಗಳು ಮತ್ತು ಜಾರಿ ನಿರ್ದೇಶನಾಲಯದ ತನಿಖೆಯ ಆಧಾರದ ಮೇಲೆ, ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು ಮತ್ತು ಅದಕ್ಕೆ ಅಂದಿನ ಬಿಜೆಪಿ ಸರ್ಕಾರ ಸೆಪ್ಟೆಂಬರ್ 25, 2019ರಂದು ಅನುಮತಿ ನೀಡಿತ್ತು. ಸರ್ಕಾರ ಬದಲಾದ ನಂತರ, ಸಿಬಿಐ ನೀಡಿದ್ದ ಅನುಮತಿಯನ್ನು ನವೆಂಬರ್ 28ರಂದು ಹಿಂತೆಗೆದುಕೊಳ್ಳಲಾಗಿದೆ.
|
9 |
+
ಅಯೋಧ್ಯೆಯಲ್ಲಿ ಜೈಶ್ರೀರಾಮ್ ಘೋಷಣೆಯೊಂದಿಗೆ ಹೊಸ ವರ್ಚಾಚರಣೆ
|
10 |
+
ಡಿಕೆಶಿ ಮೇಲಿನ ಆರೋಪಗಳೇನು?2017ರಲ್ಲಿ ಡಿಕೆಶಿ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಡಿ.ಕೆ ಶಿವಕುಮಾರ್ ವಾಸ್ತವ್ಯವಿದ್ದ ಈಗಲ್ಟನ್ ರೆಸಾರ್ಟ್ ಮತ್ತು ಅವರ ಆಪ್ತರ ಮೇಲೆ ದಾಳಿ ಮಾಡಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ಸುಮಾರು 8.59 ಕೋಟಿ ಹಣ ವಶಪಡಿಸಿಕೊಂಡಿದ್ದರು. ಇದೇ ಪ್ರಕರಣದಲ್ಲಿ ಇಡಿ ಅಧಿಕಾರಿಗಳೂ ದಾಳಿ ಮಾಡಿದ್ದರು. ಡಿ.ಕೆ. ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ಶಿವಕುಮಾರ್ ವಿರುದ್ಧ ತನಿಖೆ ಆರಂಭಿಸಿತ್ತು.
|
11 |
+
ಜಾರಿ ನಿರ್ದೇಶನಾಲಯದ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್ಐಆರ್ ದಾಖಲಿಸಲು ಸಿಬಿಐ, ಅಂದಿನ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ಆಗಿನ ಬಿಜೆಪಿ ಸರ್ಕಾರ 2019ರ ಸೆ.25ರಂದು ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. 2020ರ ಅಕ್ಟೋಬರ್ 3ರಂದು ಸಿಬಿಐ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿತ್ತು.
|
eesanje/url_46_275_10.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
46 ಐಎಎಸ್ ಅಧಿಕಾರಿಗಳಿಗೆ ಬಡ್ತಿ
|
2 |
+
ಬೆಂಗಳೂರು,ಡಿ.31- ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸೇವೆಯಲ್ಲಿರುವ 46 ಮಂದಿ ಹಿರಿಯ ಹಾಗೂ ಕಿರಿಯ ಐಎಎಸ್ ಅಧಿಕಾರಿಗಳಿಗೆ ವಿವಿಧ ವೇತನ ಶ್ರೇಣಿಯ ಬಡ್ತಿ ನೀಡಲಾಗಿದ್ದು, ಬಹುತೇಕರನ್ನು ಅದೇ ಹುದ್ದೆಯಲ್ಲಿ ಮುಂದುವರೆಸಲಾಗಿದೆ. ಕೆಲವರಿಗೆ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಲಾಗಿದೆ.
|
3 |
+
ಪ್ರಧಾನಮಂತ್ರಿ ಕಚೇರಿಯಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದ ಅರವಿಂದ್ ಶ್ರೀವಾಸ್ತವ್ ಅವರಿಗೆ ಬಡ್ತಿ ನೀಡಲಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಫರ್ವೇಜ್ ಅವರಿಗೆ, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಅವರಿಗೆ ಅಪರ ಮುಖ್ಯಕಾರ್ಯದರ್ಶಿ ಹುದ್ದೆಗೆ, ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಎಂ.ಎಸ್.ಶೇಖರ್ ಅವರಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಜಲಸಂಪನ್ಮೂಲ ಇಲಾಖೆಯ ಜಂಟಿ ಕಾರ್ಯದರ್ಶಿ ಸುಭೋಷ್ ಯಾದವ್ ಅವರಿಗೆ ಬಡ್ತಿ ನೀಡಿ ಅದೇ ಹುದ್ದೆಯಲ್ಲಿ ಮುಂದುವರೆಸಲಾಗಿದೆ.
|
4 |
+
ಅಧ್ಯಯನದ ಪ್ರವಾಸದಲ್ಲಿರುವ ಖುಷ್ಟು ಜಿ.ಚೌದಿ, ರಣದೀಪ್ ಚೌದ್ರಿ ಅವರಿಗೆ, ಕೇಂದ್ರ ಸರ್ಕಾರದ ಬಾಹ್ಯಾಕಾಶ ಇಲಾಖೆಯ ನಿರ್ದೇಶಕರಾಗಿರುವ ದೀಪ್ತಿ ಆದಿತ್ಯ ಕಾನಡೆ ಅವರಿಗೆ 14ನೇ ವೇತನ ಬಡ್ತಿ ನೀಡಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕಾರ್ಯದರ್ಶಿಯಾಗಿದ್ದ ರಾಜೇಂದ್ರ ಚೋಳನ್ ಅವರಿಗೆ ಕರ್ನಾಟಕ ರಾಜ್ಯ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಉಜ್ವಲ್ಕುಮಾರ್ ಘೋಷ್, ರಾಜ್ಯ ನಗರ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಎಂ.ದೀಪ ಅವರಿಗೂ ಬಡ್ತಿ ಭಾಗ್ಯ ದೊರೆತಿದೆ.
|
5 |
+
ಒಂದೇ ದಿನ ದೇಶದಲ್ಲಿ 841 ಮಂದಿಗೆ ಕೋವಿಡ್, ಮೂವರು ಬಲಿ
|
6 |
+
ಶಾಲಾ ಶಿಕ್ಷಣ ಇಲಾಖಾ ಆಯುಕ್ತರಾದ ಬಿ.ಬಿ.ಕಾವೇರಿ, ಕರ್ನಾಟಕ ಒತ್ತುವರಿ ತೆರವು ಪ್ರಾಕಾರದ ಮುಖ್ಯ ಅಧಿಕಾರಿ ಸುಷ್ಮಾ ಗೋಡ್ಬೋಲೆ, ಸಣ್ಣ ಕೈಗಾರಿಕೆಗಳ ವ್ಯವಸ್ಥಾಪಕ ನಿರ್ದೇಶಕ ಟಿ.ಎಚ್.ಎಂ.ಕುಮಾರ್, ಮಸೂರಿಯ ಎಲ್ಬಿಎಸ್ಎನ್ಎ ಗೆ ಉಪ ನಿರ್ದೇಶಕರಾಗಿರುವ ಅಭಿರಾಂ ಜಿ.ಶಂಕರ್, ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿಂಧು ಬಿ.ರೂಪೇಶ್, ಡಿಪಿಎಆರ್ ನ ಚುನಾವಣಾ ವಿಭಾಗದ ಹೆಚ್ಚುವರಿ ಚುನಾವಣಾಧಿಕಾರಿ ಕುಮಾರ್ ರಾವ್ ಎಂ., ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತರಾದ ಡಾ.ರಾಗಪ್ರಿಯ ಆರ್. ಅವರಿಗೆ ಬಡ್ತಿ ನೀಡಿ ಅದೇ ಹುದ್ದೆಗಳಲ್ಲಿ ಮುಂದುವರೆಸಲಾಗಿದೆ.
|
7 |
+
ಕೇಂದ್ರ ಹಣಕಾಸು ಮತ್ತು ಕಾರ್ಪರೇಟ್ ಅಫೇರ್ಸ್ ಸಚಿವರ ಆಪ್ತ ಕಾರ್ಯದರ್ಶಿ ಅನಿರುದ್ಧ್ ಶರವಣ, ಕಂದಾಯ ಇಲಾಖೆಯ ಭೂಸ್ವಾೀಧಿನ, ಸಾಮಾಜಿಕ ಬದ್ಧತೆ ವಿಭಾಗದ ಆಯುಕ್ತರಾದ ಪೊಮ್ಮುಲ ಸುನಿಲ್ಕುಮಾರ್, ಮೂಲ ಸೌಕರ್ಯ ಅಭಿವೃದ್ಧಿ ಜಂಟಿ ಕಾರ್ಯದರ್ಶಿ ಎಪೀಸ್ಬಾ ರಾಣಿ ಕೋರ್ಲಾಪತಿ, ಕರ್ನಾಟಕ ನೀರು ಸರಬರಾಜು ಅಥವಾ ಒಳಚರಂಡಿ ವ್ಯವಸ್ಥೆಯ ನಿರ್ದೇಶಕರಾದ ಶರತ್ ಬಿ., ಜವಳಿ ಇಲಾಖೆಯ ಆಯುಕ್ತರಾದ ಸಿ.ಎನ್.ಶ್ರೀಧರ ಅವರುಗಳಿಗೂ ಬಡ್ತಿ ನೀಡಲಾಗಿದೆ.
|
8 |
+
ಧಾರವಾಡ ಜಿಲ್ಲಾ ಪಂಚಾಯತ್ನ ಸಿಇಒ ಟಿ.ಕೆ.ಸ್ವರೂಪ, ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಕಲ್ಬುರ್ಗಿ ಜಿಲ್ಲೆಯ ಜಿಲ್ಲಾಧಿಕಾರಿ ಜಿ.ಫೌಜಿಯಾ ತರುನ್ಮಾ, ವಿಜಯಪುರ ಜಿಲ್ಲಾಧಿಕಾರಿ ಬೋಬಾಬಲ್ ಟಿ. ಅವರಿಗೆ 12 ನೇ ವೇತನ ಶ್ರೇಣಿಯ ಬಡ್ತಿ ನೀಡಿ ಹಾಲಿ ಹುದ್ದೆಯಲ್ಲೇ ಮುಂದುವರೆಸಲಾಗಿದೆ.
|
9 |
+
ಮಾರ್ಗ ಮಧ್ಯೆ ಆಂಬ್ಯುಲೆನ್ಸ್ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ
|
10 |
+
ನಗರ ಮೂಲ ಸೌಕರ್ಯ ಅಭಿವೃದ್ಧಿಯ ಜಂಟಿ ವ್ಯವಸ್ಥಾಪಕ ನಿರ್ದೇಶಕರಾದ ಲಕ್ಷ್ಮೀಪತಿ ರೆಡ್ಡಿ, ಹಟ್ಟಿ ಚಿನ್ನದ ಗಣಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಸ್.ಬಿ.ಶೆಟ್ಟಣ್ಣನವರಿಗೆ ಬಡ್ತಿ ನೀಡುವ ಜೊತೆಗೆ ಯೋಜನಾ ನಿಗಾವಣೆ, ಸಾಂಕಿಕ ಇಲಾಖೆ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಇದೇ ರೀತಿ 46 ಮಂದಿ ಅಧಿಕಾರಿಗಳಿಗೆ ರಾಜ್ಯಸರ್ಕಾರ 17 ವೇತನ ಶ್ರೇಣಿಯಿಂದ 11 ವೇತನ ಶ್ರೇಣಿಯವರೆಗೂ ವಿವಿಧ ಹಂತದ ಬಡ್ತಿಗಳನ್ನು ನೀಡಿದೆ. ಆಯುಷ್ ಇಲಾಖೆಯ ಆಯುಕ್ತರಾಗಿದ್ದ ಕೆ.ಲೀಲಾವತಿ ಅವರನ್ನು ಕರ್ನಾಟಕ ಮೇಲ್ಮನವಿ ನ್ಯಾಯಾಕರಣದ ಸದಸ್ಯರನ್ನಾಗಿಯೂ ವರ್ಗಾವಣೆ ಮಾಡಲಾಗಿದೆ.
|
eesanje/url_46_275_11.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ರಾಜಕೀಯ ಲಾಭಕ್ಕಾಗಿ ರಾಮನ ಹೆಸರು ದುರ್ಬಳಕೆ : ಸಚಿವ ಡಿ.ಸುಧಾಕರ್
|
2 |
+
ಚಿತ್ರದುರ್ಗ,ಡಿ.31- ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಸರ್ಕಾರವು ರಾಜಕೀಯ ಲಾಭಕ್ಕಾಗಿ ಪುಲ್ವಾಮಾ ಘಟನೆಯನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿರುವ ಸಚಿವ ಡಿ.ಸುಧಾಕರ್ ಅವರು, ಈಗ ಅಯೋಧ್ಯೆಯಲ್ಲಿ ಭಗವಾನ್ ರಾಮನ ಮಂದಿರದ ಉದ್ಘಾಟನೆಯೊಂದಿಗೆ ಇದೇ ತಂತ್ರವನ್ನು ಬಳಸುತ್ತಿದೆ ಎಂದು ದೂರಿದ್ದಾರೆ.
|
3 |
+
ಕಳೆದ ಲೋಕಸಭಾ ಚುನಾವಣೆಯಲ್ಲಿ ಮತ ಗಳಿಸಲು ಬಿಜೆಪಿ ಸರ್ಕಾರ ಪುಲ್ವಾಮಾ ದಾಳಿಯನ್ನು ಬಳಸಿಕೊಂಡಿದ್ದು, ಈ ಬಾರಿ ರಾಮನ ಫೋಟೋ ಹಿಡಿದಿದೆ ಎಂದು ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ಅಯೋಧ್ಯೆ ರಾಮಮಂದಿರ ಉದ್ಘಾಟನೆ ಒಂದು ಸ್ಟಂಟ್, ಜನರು ಮೂರ್ಖರಲ್ಲ, ನಾವು ಎರಡು ಬಾರಿ ಮೂರ್ಖರಾಗಿದ್ದೇವೆ, ಮೂರನೇ ಬಾರಿಗೆ ಮೋಸ ಹೋಗುವುದಿಲ್ಲ ಎಂಬ ವಿಶ್ವಾಸವಿದೆ ಎಂದಿದ್ದಾರೆ.
|
4 |
+
ಮುಂಬೈನಲ್ಲಿ 2.4 ಕೋಟಿ ರೂ ಮೌಲ್ಯದ ಕಳ್ಳಸಾಗಣೆ ಸಿಗರೇಟ್ ದಾಸ್ತಾನು ವಶಕ್ಕೆ
|
5 |
+
ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ರಾಮಮಂದಿರ ಉದ್ಘಾಟನೆ ಆಗಿರುವುದು ನಿಜ, ನಾನು ಮತ್ತು ಶಾಸಕ ರಘುಮೂರ್ತಿ ರಾಮಮಂದಿರಕ್ಕೆ ಹಣ ನೀಡಿದ್ದೆವು, ಈ ಹಿಂದೆಯೂ ಇಟ್ಟಿಗೆ ನೀಡಿದ್ದೇವೆ. ಶ್ರೀರಾಮ ಎಲ್ಲರಿಗೂ ದೇವರು ಎಂದು ಒತ್ತಿ ಹೇಳಿದ ಸುಧಾಕರ್, ಚುನಾವಣಾ ಸಮಯದಲ್ಲಿ ದೇವಸ್ಥಾನದ ಉದ್ಘಾಟನೆಯನ್ನು ಗಿಮಿಕ್ ಎಂದು ಜರಿದಿದ್ದಾರೆ.
|
6 |
+
ಭಾರತದ ಧಾರ್ಮಿಕ ನಂಬಿಕೆಗಳನ್ನು ಬಿಜೆಪಿ ಮತ ಸೆಳೆಯಲು ಬಳಸುತ್ತಿದೆ. ಕಳೆದ ಚುನಾವಣೆಯಲ್ಲಿ ರಾಮಮಂದಿರ ಎಲ್ಲಿತ್ತು? ಎಂದು ಸುಧಾಕರ್ ಪ್ರಶ್ನಿಸಿದರು.
|
eesanje/url_46_275_12.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಮಾರ್ಗ ಮಧ್ಯೆ ಆಂಬ್ಯುಲೆನ್ಸ್ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ
|
2 |
+
ಮೂಡಿಗೆರೆ,ಡಿ.31- ಹೆರಿಗೆಗೆಂದು ತುಂಬುಗರ್ಭಿಣಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಆಕೆ ಆಂಬ್ಯುಲೆನ್ಸ್ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೆಳಗೋಡು ಗ್ರಾಮದಲ್ಲಿ ನಡೆದಿದೆ.
|
3 |
+
ಬೆಳಗೋಡು ಗ್ರಾಮದ ನಿವಾಸಿ ತುಂಬು ಗರ್ಭಿಣಿಗೆ ಕಳೆದ ರಾತ್ರಿಹೆರಿಗೆ ನೋವು ಕಾಣಿಸಿಕೊಂಡಿದೆ ನಂತರ ಮನೆಯವರು ಆಂಬ್ಯುಲೆನ್ಸ್ಗೆ ಕರೆ ಮಾಡಿದ್ದಾರೆ ಕೆಲವೇ ನಿಮಿಷದಲ್ಲಿ 108 ಆಂಬ್ಯುಲೆನ್ಸ್ ಬಂದು ಆಕೆಯನ್ನು ಮೂಡಿಗೆರೆ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುಲಾಗುತ್ತಿತ್ತು ಆಸ್ಪತ್ರೆ ತಲುಪಲು ಇನ್ನೂ 15 ಕಿ.ಮೀ. ದೂರವಿರುವಾಗಲೇ ಆಕೆಗೆ ನೋವು ಹೆಚ್ಚಾಗಿದ್ದರಿಂದ ಚಾಲಕ ಗಂಗಾಧರನಾಯ್ಕ ವಾಹನವನ್ನು ಅತಿವೇಗವಾಗಿ ಚಲಾಯಿಸಿದ್ದಾರೆ.
|
4 |
+
ರೈತರ ಹಿತ ರಾಜ್ಯ ಸರ್ಕಾರದ ಆದ್ಯತೆ : ಸಚಿವ ಚಲುವರಾಯಸ್ವಾಮಿ
|
5 |
+
ಆದರೆ, ಗರ್ಭೀಣಿ ಮಹಿಳೆಯನ್ನ ನೋವು ತಡೆಯಲಾಗದೆ ಮಹಿಳೆ ಕಿರುಚಿಕೊಂಡಿದ್ದಾಳೆ ಆಗ ಚಾಲಕ ವಾಹನವನ್ನು ನಿಲ್ಲಿಸಿದ್ದು ಬೇರೆ ದಾರಿ ಕಾಣದೆ ಶುಶ್ರೂಕಿ ಮಂಜುಳಾ ಆಂಬ್ಯುಲೆನ್ಸ್ನಲ್ಲೇ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
|
6 |
+
ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ,ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಆಸ್ಪತ್ರೆಗೆ ಸಾಗಿಸಲಾಗಿತು. ತಾಯಿ ಮಗು ಆರೋಗ್ಯವಾಗಿದ್ದಾರೆಂದು ಮಹಿಳೆಯ ಜೊತೆಗಿದ್ದ ಅವರ ಪತಿ ಹೇಳಿದ್ದಾರೆ. ಶುಶ್ರೂಕಿ ಮಂಜುಳಾ ಮತ್ತು ಚಾಲಕ ಗಂಗಾಧರ್ ಅವರ ಸಮಯ ಹಾಗೂ ಕರ್ತವ್ಯಪ್ರಜ್ಞೆಯನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.
|
eesanje/url_46_275_2.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಹೊಸ ವರ್ಷಾಚರಣೆ : ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
|
2 |
+
ಬೆಂಗಳೂರು, ಡಿ.31- ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು, ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸುತ್ತಮುತ್ತ 16 ಐಲ್ಯಾಂಡ್ ಮತ್ತು 18 ವಾಚ್ ಟವರ್ಗಳನ್ನು ನಿರ್ಮಿಸಲಾಗಿದೆ. ಸಂಭ್ರಮಾಚರಣೆ ವೇಳೆ ಮಹಿಳೆಯರು ಮತ್ತು ವೃದ್ಧರ ಆರೋಗ್ಯದಲ್ಲಿ ಏರುಪೇರಾದರೆ ಅವರುಗಳಿಗೆ ಚಿಕಿತ್ಸೆ ಮತ್ತು ವಿಶ್ರಾಂತಿ ನೀಡಲು ಐಲ್ಯಾಂಡ್ಗಳನ್ನು ನಿರ್ಮಿಸಲಾಗಿದೆ.
|
3 |
+
ಇದರಲ್ಲಿ ಮಹಿಳಾ ಪೊಲೀಸ್ ಹಾಗೂ ವೈದ್ಯಕೀಯ ಸಿಬ್ಬಂದಿ ಇರುತ್ತಾರೆ. ಇಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತದೆ. ಈ ರಸ್ತೆಗಳಲ್ಲಿ 18 ವಾಚ್ ಟವರ್ಗಳನ್ನು ನಿರ್ಮಿಸಲಾಗಿದ್ದು, ಪೊಲೀಸ್ ಸಿಬ್ಬಂದಿ ಅಲ್ಲಿ ಬೆಳಗಿನ ಜಾವದ ತನಕ ಕರ್ತವ್ಯ ನಿರ್ವಹಿಸಲಿದ್ದಾರೆ. ಈ ಪ್ರದೇಶಗಳಲ್ಲಿ ಹೆಚ್ಚು ಸಿಸಿಟಿವಿಗಳನ್ನು ಸಹ ಅಳವಡಿಸಲಾಗಿದೆ. ವರ್ಷಾಚರಣೆಯ ಪ್ರಮುಖ ಕೇಂದ್ರವಾದ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸುತ್ತಮುತ್ತ ನಾಲ್ವರು ಡಿಸಿಪಿಗಳು ಸೇರಿದಂತೆ ಮೂರು ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಬಂದೋಬಸ್ತ್ಗಾಗಿ ನಿಯೋಜಿಸಲಾಗಿದೆ. ಸಂಭ್ರಮಾಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಅಕಾರಿಗಳು ಸೇರಿದಂತೆ 8500 ಪೊಲೀಸರನ್ನು ನಗರದಾದ್ಯಂತ ಬಂದೋಬಸ್ತ್ಗಾಗಿ ನಿಯೋಜಿಸಲಾಗಿದೆ.
|
4 |
+
ಹೊಸ ವರ್ಷಾಚರಣೆ : 2 ಗಂಟೆವರೆಗೂ ಬಿಎಂಟಿಸಿ ಬಸ್ ಸಂಚಾರ
|
5 |
+
ಇಂದು ರಾತ್ರಿ ಎಂಟು ಗಂಟೆಯಿಂದಲೇ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸುತ್ತಮುತ್ತ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಸಂಚಾರಿ ಪೆÇಲೀಸರು ತೀರ್ಮಾನಿಸಿದ್ದಾರೆ. ರಾತ್ರಿ 8 ಗಂಟೆ ನಂತರ ಏರ ಪೋರ್ಟ್ ಪ್ಲೈಓವರ್ ಬಿಟ್ಟು ಉಳಿದ ಎಲ್ಲ ಪ್ಲೈಓವರ್ ಗಳನ್ನು ಬಂದ್ ಮಾಡಲಾಗುತ್ತಿದೆ.
|
6 |
+
ಹೊಸ ವರ್ಷದ ಸಂಭ್ರಮಾಚರಣೆಗೆ ಬರುವವರು ಪೊಲೀಸರು ಗುರುತಿಸಿರುವ ಜಾಗದಲ್ಲಿ ಮಾತ್ರ ಪಾರ್ಕಿಂಗ್ ಮಾಡಬೇಕು. ಬೇಕಾಬಿಟ್ಟಿ ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್ ಮಾಡಿದರೆ ಟೋಯಿಂಗ್ ಮಾಡಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.
|
7 |
+
ವರ್ಷಾಚರಣೆ ಸಂಭ್ರಮದಲ್ಲಿ ತೇಲಾಡುವವರ ವಿರುದ್ಧ ಹದ್ದಿನ ಕಣ್ಣಿಡುವ ಉದ್ದೇಶದಿಂದ ನಗರದ ಆಯಕಟ್ಟಿನ ಪ್ರದೇಶಗಳಲ್ಲಿ 800 ಸಿಸಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಲಾಗಿದೆ. ಅದರಲ್ಲೂ ಬ್ರಿಗೇಡ್ ರೋಡ್ ಮತ್ತು ಚರ್ಚ್ ಸ್ಟ್ರೀಟ್ ನಲ್ಲಿ ಹೆಚ್ಚು ಸಿಸಿ ಕ್ಯಾಮೆರಾಗಳ ಅಳವಡಿಕೆ ಮಾಡಲಾಗಿದೆ. ಬ್ರಿಗೇಡ್ ರೋಡ್ನ ಎರಡು ಬದಿಯ ವಿದ್ಯುತ್ ಕಂಬಗಳಿಗೆ ನಾಲ್ಕು ನಾಲ್ಕು ಸಿಸಿಟಿವಿಗಳನ್ನು ಅಳವಡಿಸಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುವವರ ಮೇಲೆ ನಿಗಾ ಇಡಲಾಗಿದೆ ಮಾತ್ರವಲ್ಲ, ಎಲ್ಲರ ಚಲ-ವಲನಗಳು ಡಿಸ್ಪ್ಲೇ ಬೋರ್ಡ್ನಲ್ಲಿ ಕಾಣಿಸುವಂತೆ ನೋಡಿಕೊಳ್ಳಲಾಗಿದೆ.ಇದರ ಜತೆಗೆ ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್ನ ಗಲ್ಲಿ ಗಲ್���ಿಯನ್ನು ಒಂದೇ ಕಡೆ ಕುಳಿತು ನೋಡುವಂತೆ ವಾರ್ ರೂಂ ವ್ಯವಸ್ಥೆ ಮಾಡಲಾಗಿದೆ. ಸಿಸಿಟಿವಿ ಗಮನಿಸಲೆಂದೇ ಎರಡು ಸ್ಪೆಷಲ್ ಟೀಂ ನಿಯೋಜನೆ ಮಾಡಲಾಗಿದೆ.
|
8 |
+
ಹೊಸ ವರ್ಷದಲ್ಲಿ ಭಾರಿ ಏರಿಕೆಯಾಗಲಿದೆಯಂತೆ ಚಿನ್ನದ ಬೆಲೆ..!
|
9 |
+
ವಾಟ್ಸಾಫ್ ಗ್ರೂಪ್:ಕುಡಿದ ಅಮಲಿನಲ್ಲಿ ಪುಂಡಾಟ ನಡೆಸಿದರೆ ತಕ್ಷಣ ಪೊಲೀಸರಿಗೆ ಮಾಹಿತಿ ರವಾನಿಸಲು ಅನುಕೂಲವಾಗುವಂತೆ ಪಬ್, ರೆಸ್ಟೋರೆಂಟ್ ಮಾಲಿಕರ ವಾಟ್ಸಾಫ್ ಗ್ರೂಪ್ ರಚಿಸಲಾಗಿದೆ. ವಾಟ್ಸಾಪ್ ಗ್ರೂಪ್ ನಲ್ಲಿರುವ ಪ್ರತಿಯೊಬ್ಬರೂ ಪ್ರತಿಕ್ಷಣದ ಮಾಹಿತಿಗಳನ್ನು ಅಪ್ಡೇಟ್ ಮಾಡುತ್ತಿರಬೇಕು ಎಂದು ಸೂಚಿಸಲಾಗಿದೆ. ಈ ಗ್ರೂಪ್ನಲ್ಲಿ ಸ್ಥಳೀಯ ಪೊಲೀಸರು, ಅಯುಕ್ತರು, ಡಿಸಿಪಿಗಳು, ಎಸಿಪಿಗಳು ಸೇರಿದಂತೆ ಗುಪ್ತಚರ ಇಲಾಖೆ ಹಿರಿಯ ಅಧಿಕಾರಿಗಳು ಇರುವುದು ವಿಶೇಷವಾಗಿದೆ.
|
10 |
+
ಪಬ್ ಮತ್ತು ಬಾರ್ಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ ಕೂಡಲೇ ಗ್ರೂಪ್ ಮೂಲಕ ಮಾಹಿತಿ ನೀಡಬೇಕು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲಿದ್ದಾರೆ.
|
eesanje/url_46_275_3.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ವರಿಷ್ಠರು ತೀರ್ಮಾನಿಸಿದರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ : ಸೋಮಣ್ಣ
|
2 |
+
ಬೆಂಗಳೂರು, ಡಿ.31- ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್ ಸೇರಲ್ಲ ಎಂದು ಮಾಜಿ ಸಚಿವ ವಿ.ಸೋಮಣ್ಣ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ. ಗೋವಿಂದರಾಜನಗರದಲ್ಲಿ ಇಂದು ನಡೆದ ರಾಷ್ಟ್ರಕವಿ ಕುವೆಂಪು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋಮಣ್ಣ ಬರುತ್ತಾರೆ ಎಂದು ವದಂತಿ ಹಬ್ಬಿಸಲಾಗುತ್ತಿದೆ. ಆದರೆ, ಇದು ಸುಳ್ಳು. ಯಾವುದೇ ಕಾರಣಕ್ಕೂ ನಾನು ಬಿಜೆಪಿ ತೊರೆಯುವುದಿಲ್ಲ ಎಂದು ತಿಳಿಸಿದ್ದಾರೆ.
|
3 |
+
ಈಗಾಗಲೇ ಕೇಂದ್ರ ವರಿಷ್ಠರಿಗೆ ನನಗಾದ ಅನ್ಯಾಯದ ಬಗ್ಗೆ ತಿಳಿಸಿದ್ದೇನೆ. ಅವರು ಕೂಡ ಎರಡು ಬಾರಿ ನನ್ನನ್ನು ದೆಹಲಿಗೆ ಕರೆದಿದ್ದಾರೆ. ಕಾರಣಾಂತರಗಳಿಂದ ಹೋಗಿಲ್ಲ. ಇನ್ನು ಮುಂದೆ ನನ್ನ ಮೇಲೆ ಗದಾಪ್ರಹಾರ ನಡೆಯದಂತೆ ನೋಡಿಕೊಳ್ಳುವುದು ವರಿಷ್ಠರಿಗೆ ಬಿಟ್ಟ ವಿಷಯ. ಮುಂದಿನ ಜ.10ರೊಳಗೆ ಎಲ್ಲ ಗೊಂದಲಗಳು ಬಗೆಹರಿಯಲಿವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
|
4 |
+
ಹೊಸ ವರ್ಷಾಚರಣೆ : 2 ಗಂಟೆವರೆಗೂ ಬಿಎಂಟಿಸಿ ಬಸ್ ಸಂಚಾರ
|
5 |
+
ಒಂದು ವೇಳೆ ನಾನು ಲೋಕಸಭೆ ಚುನಾವಣೆಗೆ ಸ್ರ್ಪಧಿಸಬೇಕು ಎಂದು ವರಿಷ್ಠರು ತೀರ್ಮಾನಿಸಿದರೆ ಅದಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಹೇಳುವ ಮೂಲಕ ತುಮಕೂರು ಕ್ಷೇತ್ರದಿಂದ ಕಣಕ್ಕಿಳಿಯುವುದು ಬಹುತೇಕ ನಿಶ್ಚಿತವಾದಂತಾಗಿದೆ. ರಾಜಕೀಯ ನಿಂತ ನೀರಲ್ಲ. ದೊಡ್ಡವರ ಮಾತು ಕೇಳಿದೆ. ನೋವು ಮಾಡಿಕೊಂಡೆ. ನನ್ನ ಈ ಪರಿಸ್ಥಿತಿಗೆ ಕಾರಣರಾದವರ ಜತೆ ವರಿಷ್ಠರು ಚರ್ಚೆ ಮಾಡಿ ಎಲ್ಲವನ್ನೂ ಬಗೆಹರಿಸಬೇಕು ಎಂದು ಹೇಳಿದರು. ನಾನು ಯಾವುದೇ ಕಾಂಗ್ರೆಸ್ ನಾಯಕ ರನ್ನು ಭೇಟಿ ಮಾಡಿಲ್ಲ ಮತ್ತು ಲೋಕಸಭಾ ಟಿಕೆಟ್ ಕೇಳಿಲ್ಲ ಎಂದು ಅವರು ತಿಳಿಸಿದ್ದಾರೆ.
|
6 |
+
ಬಡವರಿಗೆ, ಜನಸಾಮಾನ್ಯರಿಗೆ ಸ್ಪಂದಿಸಿದ್ದೇನೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾನು ಪರಾಭವಗೊಂಡ ಹಿನ್ನೆಲೆಯಲ್ಲಿ ಈಗ ನಮ್ಮ ಕಾರ್ಯಕರ್ತರು ನೋವು ಅನುಭವಿಸುತ್ತಿದ್ದಾರೆ. ಇದು ಬೇಗ ಬಗೆಹರಿಯಲಿದೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಿಂದ ಭವ್ಯ ಭಾರತ ನಿರ್ಮಾಣವಾಗಲಿದೆ. ಈಗಾಗಲೇ ಕೋಟ್ಯಂತರ ಜನರ ಆಶಯದಂತೆ ರಾಮಮಂದಿರ ನಿರ್ಮಾಣವಾಗಿದೆ. ದೇಶ ಪ್ರಗತಿ ಸಾಧಿಸುತ್ತಿದೆ. ಇದರಿಂದಾಗಿ ಮುಂದಿನ ಲೋಕಸಭೆ ಚುನಾವಣೆಯಲ್ಲೂ ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಿಯಾಗುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
|
7 |
+
ರೇವ್ಪಾರ್ಟಿ ಮೇಲೆ ದಾಳಿ, ಡ್ರಗ್ಸ್ ಸೇವಿಸಿದ್ದ 80 ಮಂದಿ ಬಂಧನ
|
8 |
+
ಸೂರ್ಯ-ಚಂದ್ರ ಇರುವವರೆಗೂ ಕುವೆಂಪು ಹೆಸರು ಚಿರಸ್ಥಾಯಿಯಾಗಿರಲಿದೆ. ಕುವೆಂಪು ಅವರ ದೂರದೃಷ್ಟಿಯನ್ನು ಇಡೀ ವಿಶ್ವವೇ ಮೆಚ್ಚಿಕೊಂಡಿದೆ. ಮನುಜಮತ, ವಿಶ್ವಪಥ ಸಂದೇಶ ಸಾರಿ ಕುವೆಂಪು ಅವರು ವಿಶ್ವಮಾನವರಾದರು ಎಂದು ಅವರು ಹೇಳಿದರು.
|
eesanje/url_46_275_4.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಹೊಸ ವರ್ಷಾಚರಣೆ ನಂತರ ಕೊರೊನಾ ಹೆಚ್ಚಳದ ಭೀತಿ
|
2 |
+
ಬೆಂಗಳೂರು,ಡಿ.31- ಹೊಸ ವರ್ಷಾಚರಣೆಯ ಸಂಭ್ರಮದ ಬೆನ್ನಲ್ಲೇ ಹೊಸ ವರ್ಷದಲ್ಲಿ ಕೊರೊನಾ ಸೋಂಕು ಹೆಚ್ಚಳದ ಆತಂಕ ಶುರುವಾಗಿದೆ. ಈಗಾಗಲೇ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ 800ರ ಗಡಿ ದಾಟಿರುವುದರಿಂದ ಆತಂಕ ಹೆಚ್ಚಾಗಿದ್ದು, ಹೊಸ ವರ್ಷಾಚರಣೆ ನಂತರ ಮಹಾಮಾರಿ ಕಾಟ ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ.
|
3 |
+
ರಾಜ್ಯದಲ್ಲಿ ಕೇವಲ ಒಂದೇ ದಿನದಲ್ಲಿ 201 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಟೆಸ್ಟಿಂಗ್ ಸಂಖ್ಯೆ ಹೆಚ್ಚಾದ ಬೆನ್ನಲ್ಲೇ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿರುವುದು ಪತ್ತೆಯಾಗಿದೆ.
|
4 |
+
ರಾಜ್ಯದಲ್ಲಿ ಸದ್ಯ ಪ್ರತಿದಿನ 7,000 ಕ್ಕೂ ಹೆಚ್ಚು ಕೊವಿಡ್ ಟೆಸ್ಟ್ಗಳನ್ನ ಮಾಡಲಾಗುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಕೊರೊನಾ ಸೋಂಕಿನ ಹಾಟ್ಸ್ಪಾಟ್ ಆಗಿ ಬದಲಾಗುತ್ತಿದೆಯ ಎಂಬ ಅನುಮಾನ ಮೂಡಿಸುತ್ತಿದೆ. ಬೆಂಗಳೂರಿನಲ್ಲಿ ಈಗಾಗಲೇ 495 ಕೊವಿಡ್ ಪ್ರಕರಣಗಳಿದ್ದು, ಕೇವಲ 24 ಗಂಟೆಯಲ್ಲಿ 69 ಪ್ರಕರಣಗಳು ಬೆಳಕಿಗೆ ಬಂದಿವೆ.
|
5 |
+
ಆಸ್ಕರ್ ಪ್ರಶಸ್ತಿ ಗೆದ್ದ ನಾಟು ನಾಟು ಸಾಂಗ್ ಮತ್ತು ಸಾಕ್ಷ್ಯಚಿತ್ರಕ್ಕೆ ಮೋದಿ ಮೆಚ್ಚುಗೆ
|
6 |
+
ಬಳ್ಳಾರಿಯಲ್ಲಿ 18,ಬೆಂಗಳೂರು ಗ್ರಾಮಾಂತರ-19, ಬೆಳಗಾವಿ -5, ಬೀದರ್- 3, ಚಾಮರಾಜನಗರ 21,ಚಿಕ್ಕಬಳ್ಳಾಪುರ-18, ಚಿಕ್ಕಮಗಳೂರಿನಲ್ಲಿ 8, ಚಿತ್ರದುರ್ಗ-9, ದಕ್ಷಿಣ ಕನ್ನಡ 32, ದಾವಣಗೆರೆ 4, ಧಾರವಾಡ-7, ಗದಗ-8, ಹಾಸನ 21, ಹಾವೇರಿ-1, ಕಲಬುರಗಿ 3, ಕೊಡಗು 3, ಕೋಲಾರ 5, ಕೊಪ್ಪಳ 1, ಮೈಸೂರಿನಲ್ಲಿ 60, ಮಂಡ್ಯ 26,ರಾಯಚೂರು- 1, ರಾಮನಗರದಲ್ಲಿ 11, ಶಿವಮೊಗ್ಗ 14, ತುಮಕೂರು 9, ಉಡುಪಿ- 1, ಉತ್ತರ ಕನ್ನಡ 2, ವಿಜಯನಗರದಲ್ಲಿ 22 ಪ್ರಕರಣಗಳು ವರದಿಯಾಗಿವೆ.
|
eesanje/url_46_275_5.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ದ್ವೇಷ, ಅಸೂಯೆ, ಅಸಹನೆಯ ಗೋಡೆ ನಿರ್ಮಿಸಲಾಗುತ್ತದೆ : ಶಿವರಾಜ್ ಪಾಟೀಲ್
|
2 |
+
ಬೆಂಗಳೂರು,ಡಿ.31- ಸಮಾಜದಲ್ಲಿ ದ್ವೇಷ, ಅಸೂಯೆ, ಅಸಹನೆಯ ಗೋಡೆ ನಿರ್ಮಿಸಲಾಗುತ್ತದೆ. ಅದರ ಬದಲಾಗಿ ಪ್ರೀತಿಯ ಸೇತುವೆ ಕಟ್ಟಬೇಕಿದೆ ಎಂದು ಸುಪ್ರೀಂಕೋರ್ಟ್ನ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಕರೆ ನೀಡಿದರು.
|
3 |
+
ನಗರದ ಪ್ರೆಸ್ಕ್ಲಬ್ನ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಾರ್ಷಿಕ ಹಾಗೂ ವಿಶೇಷ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದ ಅವರು, ದೇಶದ ಸಂವಿಧಾನ ಜಗತ್ತಿನಲ್ಲೇ ಅತ್ಯಂತ ಶ್ರೇಷ್ಠವಾಗಿದೆ. 2 ವರ್ಷ, 11 ತಿಂಗಳು, 17 ದಿನ ಅಧ್ಯಯನ ಮಾಡಿ ಸಂವಿಧಾನ ರಚಿಸಲಾಗಿದೆ. ಆ ವೇಳೆ ದೇಶದ ಸ್ವಾತಂತ್ರ್ಯಕ್ಕಾಗಿ ನಡೆದ ಹಿಂದಿನ ಹೋರಾಟ ಮತ್ತು ಐತಿಹಾಸಿಕ ಪರಂಪರೆಯನ್ನು ಗುರುತಿಸಲಾಗಿದೆ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗಗಳ ಆಡಳಿತ ವ್ಯವಸ್ಥೆಯನ್ನು ರೂಪಿಸಲಾಗಿದೆ. ನಾಲ್ಕನೇ ಅಂಗವಾಗಿ ಪತ್ರಿಕಾ ರಂಗವನ್ನು ಉಲ್ಲೇಖಿಸಿದೇ ಇದ್ದರೂ ಸಮಾಜದ ಕಾವಲಿಗೆ ಮಾದ್ಯಮದ ಪಾತ್ರ ಮಹತ್ವದ್ದಾಗಿದೆ ಎಂದರು.
|
4 |
+
ಆಸ್ಕರ್ ಪ್ರಶಸ್ತಿ ಗೆದ್ದ ನಾಟು ನಾಟು ಸಾಂಗ್ ಮತ್ತು ಸಾಕ್ಷ್ಯಚಿತ್ರಕ್ಕೆ ಮೋದಿ ಮೆಚ್ಚುಗೆ
|
5 |
+
ರಾಷ್ಟ್ರಪಿತ ಮಹಾತ್ಮಗಾಂಧಿಯವರು ಸಮಾಜದ ಕಟ್ಟಕಡೆಯ ವ್ಯಕ್ತಿಯ ಶ್ರೇಯಸ್ಸನ್ನು ಸಂವಿಧಾನ ಬಯಸಬೇಕು ಎಂದು ಹೇಳಿದರು. ಸಂವಿಧಾನ ಶ್ರೇಷ್ಠವಾಗಿದೆ. ಅದೇ ರೀತಿ ಅದನ್ನು ಜಾರಿಗೆ ತರುವವರಲ್ಲೂ ಬದ್ಧತೆ ಮತ್ತು ಸಾಮಾಜಿಕ ಕಳಕಳಿ ಇದ್ದರೆ ಮಾತ್ರ ಜನರಿಗೆ ಒಳ್ಳೆಯದಾಗುತ್ತದೆ. ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಸಂವಿಧಾನದ ಆಶಯಗಳನ್ನು ಬೋಧಿಸುವ ಮೂಲಕ ಉತ್ತಮ ಕೆಲಸ ಮಾಡುತ್ತಿದೆ ಎಂದರು.
|
6 |
+
ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳು, ಆಡಳಿತ ವ್ಯವಸ್ಥೆ, ಸಮರ್ಪಕ ಅನುಷ್ಠಾನಗೊಳ್ಳಬೇಕಾದರೆ ಜವಾಬ್ದಾರಿಯುತ ನಾಗರಿಕ ಸಮಾಜ, ಪ್ರಾಮಾಣಿಕ ಅಧಿಕಾರದ ವ್ಯವಸ್ಥೆ, ಜನಪರವಾದ ಸ್ವಯಂ ಸೇವಾ ಸಂಸ್ಥೆ, ಕ್ರಿಯಾಶೀಲ ನ್ಯಾಯಾಂಗ ಮತ್ತು ಅರ್ಥಪೂರ್ಣ ಮಾದ್ಯಮಗಳ ಪಾತ್ರ ಬಹಳ ಮುಖ್ಯವಾಗಿದೆ ಎಂದು ಹೇಳಿದರು.
|
7 |
+
ವಿಕ್ರಂ ಸಿಂಹ ಬಂಧನದ ಬಗ್ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ
|
8 |
+
ಯಾವುದೇ ವಿಚಾರಗಳಾದರೂ ಅದರ ವಿಮರ್ಶೆ ಅಗತ್ಯ. ಜನರು ದ್ವನಿಯೆತ್ತಬೇಕು. ಸರ್ಕಾರವೂ ಅದಕ್ಕೆ ಕಿವಿಗೊಡಬೇಕು. ಜನ ಮೂಕರಾದರೆ, ಸರ್ಕಾರ ಕಿವುಡಾದರೆ ಪ್ರಜಾಪ್ರಭುತ್ವಕ್ಕೆ ಅಪಾಯವಾಗಲಿದೆ ಎಂದರು. ಸಮಾಜಕ್ಕೆ ನಮ್ಮ ಕೊಡುಗೆಯೇನು ಎಂಬ ಆತ್ಮವಿಮರ್ಶೆ ಅಗತ್ಯವಿದೆ. ಮಾದ್ಯಮ ಜವಾಬ್ದಾರಿ ಅತ್ಯಂತ ಮಹತ್ವದ್ದು. ಎಲ್ಲಾ ಕ್ಷೇತ್ರಗಳ ಮೇಲೂ ಮಾದ್ಯಮದ ನಿಗಾವಣೆ ಇರುತ್ತದೆ. ವರದಿಗಳಲ್ಲಿ ವಸ್ತುನಿಷ್ಠತೆ ಅಗತ್ಯವಿದೆ. ಪಕ್ಷಪಾತವಿರಬಾರದು ಎಂದು ಸಲಹೆ ನೀಡಿದರು.
|
eesanje/url_46_275_6.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಹೊಸ ವರ್ಷಾಚರಣೆ : 2 ಗಂಟೆವರೆಗೂ ಬಿಎಂಟಿಸಿ ಬಸ್ ಸಂಚಾರ
|
2 |
+
ಬೆಂಗಳೂರು,ಡಿ.31- ಸಿಹಿ-ಕಹಿ ನೆನಪುಗಳೊಂದಿಗೆ 2023ಕ್ಕೆ ವಿದಾಯ ಹೇಳಿ 2024ನ್ನು ಸ್ವಾಗತಿಸಲು ಸಿಲಿಕಾನ್ ಸಿಟಿ ಸಜ್ಜಾಗಿದ್ದು, ಪ್ರಯಾಣಿಕರ ಹಿತದೃಷ್ಟಿಯಿಂದ ಬಿಎಂಟಿಸಿ ಇಂದು ಮಧ್ಯರಾತ್ರಿ 2 ಗಂಟೆವರೆಗೂ ಸಂಚಾರದ ಅವಧಿಯನ್ನು ವಿಸ್ತರಣೆ ಮಾಡಿದೆ.
|
3 |
+
ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ನಗರದ ವಿವಿಧೆಡೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಸಂಭ್ರಮಾಚರಣೆಯಲ್ಲಿ ಜನರು ಪಾಲ್ಗೊಂಡು ತಮ್ಮ ಮನೆಗಳಿಗೆ ಸುರಕ್ಷಿತವಾಗಿ ತಲುಪಿಸಲು ಅನುವಾಗುವಂತೆ ಬಿಎಂಟಿಸಿ ಬಸ್ಗಳು ಸಂಚಾರ ಅವಧಿಯನ್ನು ವಿಸ್ತರಣೆ ಮಾಡಿದೆ. ಜೊತೆಗೆ ಹೆಚ್ಚುವರಿ ಬಸ್ಗಳನ್ನು ಸಹ ನಿಯೋಜನೆ ಮಾಡಲಾಗಿದ್ದು, ಬೇಡಿಕೆಗೆ ಅನುಗುಣವಾಗಿ ಬಿಎಂಟಿಸಿ ಸಂಚಾರಕ್ಕೆ ನಿಗಮದಿಂದ ಸಿದ್ದತೆ ಮಾಡಿಕೊಳ್ಳಲಾಗಿದೆ.
|
4 |
+
ಆಸ್ಕರ್ ಪ್ರಶಸ್ತಿ ಗೆದ್ದ ನಾಟು ನಾಟು ಸಾಂಗ್ ಮತ್ತು ಸಾಕ್ಷ್ಯಚಿತ್ರಕ್ಕೆ ಮೋದಿ ಮೆಚ್ಚುಗೆ
|
5 |
+
ಎಂಜಿರಸ್ತೆ, ಬ್ರಿಗೇಡ್ ರಸ್ತೆ, ಕಾಡುಗೋಡಿ, ಎಲೆಕ್ಟ್ರಾನಿಕ್ ಸಿಟಿ, ಸರ್ಜಾಪುರ, ಬನ್ನೇರುಘಟ್ಟ, ಕೆಂಗೇರಿ, ಮಾಗಡಿ ರಸ್ತೆ, ಹೆಣ್ಣೂರು ಸೇರಿದಂತೆ ವಿವಿಧ ಪ್ರದೇಶಗಳಿಗೆ ಬಿಎಂಟಿಸಿ ಬಸ್ ಸಂಚಾರ ಇರಲಿದೆ. ಜನ ದಟ್ಟಣೆ ಅಕವಾಗಿರುವ ಯಲಹಂಕ, ಇಂದಿರಾನಗರ, ಕೋರಮಂಗಲ, ಬನಶಂಕರಿ, ಗೊರಗುಂಟೆಪಾಳ್ಯ ಸೇರಿದಂತೆ ಮತ್ತಿತರ ಕಡೆಗೂ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ಗಳು ಸಂಚರಿಸಲಿವೆ ಎಂದು ಬಿಎಂಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
|
6 |
+
ಪ್ರತಿನಿತ್ಯ ರಾತ್ರಿ 11 ಗಂಟೆವರೆಗೂ ಮಾತ್ರ ಬಿಎಂಟಿಸಿ ಬಸ್ ಸಂಚಾರ ಇರುತ್ತಿತ್ತು. ವರ್ಷಾಚರಣೆ ಹಿನ್ನಲೆಯಲ್ಲಿ ಸೇವೆಯನ್ನು 2 ಗಂಟೆವರೆಗೂ ವಿಸ್ತರಿಸಲಾಗಿದೆ.
|
eesanje/url_46_275_7.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಹೊಸ ವರ್ಷಾರಣೆಗೆ 2 ಗಂಟೆವರೆಗೂ ಮೆಟ್ರೊ ಸೇವೆ
|
2 |
+
ಬೆಂಗಳೂರು,ಡಿ.31-ವರ್ಷಾಚರಣೆ ಹಿನ್ನಲೆಯಲ್ಲಿ ನಗರದ ಜನತೆಯ ಸುರಕ್ಷತೆ ದೃಷ್ಟಿಯಿಂದ ತಡರಾತ್ರಿ 2 ಗಂಟೆವರೆಗೂ ಮೆಟ್ರೊ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ವರ್ಷಾಚರಣೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಜನರು ಸಹ ಪ್ಲಾನ್ಗಳನ್ನು ಮಾಡಿಕೊಂಡಿದ್ದಾರೆ.
|
3 |
+
ನಗರದ ವಿವಿಧೆಡೆ ಹೊಸ ವರ್ಷದ ಸಂಭ್ರಮದಲ್ಲಿ ಪಾಲ್ಗೊಂಡು ಸುರಕ್ಷಿತವಾಗಿ ತಮ್ಮ ತಮ್ಮ ಮನೆಗಳಿಗೆ ತಲುಪಲು ಅನುವಾಗುವಂತೆ ಇಂದು ರಾತ್ರಿಯಿಂದ ಬೆಳಗಿನ ಜಾವ 2 ಗಂಟೆವರೆಗೂ ಮೆಟ್ರೊ ಸೇವೆ ಇರಲಿದೆ.ಎಂಜಿರಸ್ತೆಯಲ್ಲಿ ಹೆಚ್ಚು ಜನ ದಟ್ಟಣೆ ಇರುವುದರಿಂದ ಮೆಟ್ರೊ ನಿಲ್ದಾಣಕ್ಕೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
|
4 |
+
ಆಸ್ಕರ್ ಪ್ರಶಸ್ತಿ ಗೆದ್ದ ನಾಟು ನಾಟು ಸಾಂಗ್ ಮತ್ತು ಸಾಕ್ಷ್ಯಚಿತ್ರಕ್ಕೆ ಮೋದಿ ಮೆಚ್ಚುಗೆ
|
5 |
+
ಪೊಲೀಸ್ ಇಲಾಖೆಯ ಸೂಚನೆ ಮೇರೆಗೆ ಪ್ರವೇಶ ನಿರ್ಬಂಧಿಸಲಾಗಿದ್ದು, ಹೀಗಾಗಿ ವಿಸ್ತೃತ ರೈಲ್ವೆ ಸೇವೆಯನ್ನು ಬಳಸಿಕೊಳ್ಳಲು ಟ್ರಿನಿಟಿ ಅಥವಾ ಕಬ್ಬನ್ಪಾರ್ಕ್ ಮೆಟ್ರೊ ನಿಲ್ದಾಣಗಳಿಗೆ ತೆರಳಲು ಸೂಚಿಸಲಾಗಿದೆ.
|
eesanje/url_46_275_8.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ತಮ್ಮನ ಬಂಧನದ ಕುರಿತು ಪ್ರತಾಪ್ ಸಿಂಹ ಪ್ರತಿಕ್ರಿಯೆ ಏನು..?
|
2 |
+
ಬೆಂಗಳೂರು,ಡಿ.31- ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹನನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಮೌನ ಮುರಿದಿದ್ದಾರೆ. ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯ 10 ಎಕರೆಯಲ್ಲಿ ಬೆಳೆದಿದ್ದ 126 ಮರಗಳನ್ನು ಅರಣ್ಯ ಇಲಾಖೆಯ ಗಮನಕ್ಕೂ ತರದೇ ಕಡಿಯಲಾಗಿದೆ ಎಂಬ ದೂರಿನ ಆಧಾರದ ಮೇಲೆ ಸಂಸದ ಪ್ರತಾಪ್ ಸಿಂಹ ಸಹೋದರನ ಮೇಲೆ ಎಫ್ಐಆರ್ ದಾಖಲಾಗಿತ್ತು. ಅಲ್ಲದೇ ಜಮೀನಿನ ಮಾಲೀಕರಾದ ಜಯಮ್ಮ ರಾಕೇಶ್ ಶೆಟ್ಟಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು..
|
3 |
+
ಅಪ್ರಾಪ್ತೆ ಅಪಹರಿಸಿ ನಿರಂತರ ಅತ್ಯಾಚಾರ ಮಾಡಿದ್ದ ಆರೋಪಿ ಅರೆಸ್ಟ್
|
4 |
+
ಪ್ರಕರಣ ತನಿಖೆಗೆ ಇಳಿದ ವೇಳೆ ವಿಕ್ರಂ ಸಿಂಹ ಹಾಸನದಿಂದ ಬೆಂಗಳೂರಿಗೆ ಶಿಫ್ಟ ಆದ ಬಗ್ಗೆ ಮಾಹಿತಿ ಪಡೆದ ಬೇಲೂರು ಪೊಲೀಸರ ತಂಡ, ನಿನ್ನೆ ಅಷ್ಟೇ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹನನ್ನು ವಶಕ್ಕೆ ಪಡೆಯಿತು. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ಮೂಲಕ ರಾಜ್ಯ ಸರ್ಕಾರಕ್ಕೆ ಪ್ರತಾಪ್ ಸಿಂಹ ಕುಟುಕಿದ್ದಾರೆ.
|
5 |
+
ಸಾಮಾಜಿಕ ಜಾಲತಾಣದ ಪೋಸ್ಟ್ ನಲ್ಲಿ ಎಫ್ಐಆರ್ ಎಂಬ ಟ್ಯಾಗ್ ಲೈನ್ ನೀಡಿದ ಸಂಸದರು, ಪ್ರಮುಖ ಆರೋಪಿಗಳ ಹೆಸರನ್ನು ಅಂಡರ್ ಲೈನ್ ಮಾಡಿದ್ದಾರೆ. ಎಫ್ಐಆರ್ ಪ್ರತಿಯಲ್ಲಿ ಪ್ರಕರಣದ ಮೊದಲ ಆರೋಪಿ ರಾಕೇಶ್ ಶೆಟ್ಟಿ ಎಂದಿದ್ದು, 2ನೇ ಆರೋಪಿ ಜಯಮ್ಮ ಎಂದು ಉಲ್ಲೇಖಿಸಲಾಗಿದೆ. ಪ್ರಕರಣದ ಆರೋಪಿ ಅಲ್ಲದೇ ಇದ್ದರೂ ವಿಕ್ರಂ ಬಂಧನ ಎಂದು ಮಾರ್ಮಿಕವಾಗಿ ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.
|
eesanje/url_46_275_9.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ವಿಕ್ರಂ ಸಿಂಹ ಬಂಧನದ ಬಗ್ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ
|
2 |
+
ಬೀದರ್,ಡಿ.31- ಸರ್ಕಾರಿ ಅಥವಾ ಪಟ್ಟಾ ಜಮೀನಿನಲ್ಲಿ ಅನುಮತಿ ಇಲ್ಲದೆ ಮರ ಕಡಿಯುವುದು ಅಪರಾಧವಾಗಿದೆ. ಅದರಲ್ಲೂ ಹಳೆಯದಾದ ಮರಗಳನ್ನು ಕಡಿಯುವುದು ಗಂಭೀರ ಸ್ವರೂಪದ್ದಾಗಿದೆ. ಈ ವಿಷಯದಲ್ಲಿ ಎಷ್ಟೇ ದೊಡ್ಡವರಾಗಿದ್ದರೂ ಕಾನೂನು ತನ್ನ ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
|
3 |
+
ಪ್ರತಾಪ್ ಸಿಂಹ ಸಹೋದರನ ಬಂಧನಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದ ಅವರು, ಪ್ರಕೃತಿ ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ. ಆದರೆ ಬೇಲೂರು ತಾಲೂಕು ನಂದಗೋಡನ ಹಳ್ಳಿಯಲ್ಲಿ 126 ಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ ಇದರಲ್ಲಿ 50-60 ವರ್ಷದ ಬೃಹತ್ ಹಳೆಯ ಮರಗಳೂ ಇವೆ. ಈ ರೀತಿ ಸ್ವಾರ್ಥಕ್ಕಾಗಿ ಯಾರೇ ಮರ ಕಡಿದರೂ ಅದು ಅಪರಾಧ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ ಎಂದರು.
|
4 |
+
ಒಂದೇ ದಿನ ದೇಶದಲ್ಲಿ 841 ಮಂದಿಗೆ ಕೋವಿಡ್, ಮೂವರು ಬಲಿ
|
5 |
+
ವೃಕ್ಷ ಸಂರಕ್ಷಣಾ ಕಾಯಿದೆಯಡಿ ಸರ್ಕಾರಿ ಜಾಗದಲ್ಲಿಯೇ ಆಗಲೀ, ಪಟ್ಟಾ ಜಮೀನಿನಲ್ಲೇ ಆಗಲಿ ಅನುಮತಿ ಪಡೆಯದೆ ಅಕ್ರಮವಾಗಿ ಮರ ಕಡಿಯುವುದು ಅಪರಾಧ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ನಾನು ಯಾರ ಹೆಸರೂ ಹೇಳಲು ಇಚ್ಛಿಸುವುದಿಲ್ಲ. ಆದರೆ, ವಿಕ್ರಂ ಸಿಂಹ ಎಂಬುವವರು ಶುಂಠಿ ಬೆಳೆಯಲು ಸದರಿ ಪ್ರಶ್ನಿತ ಜಮೀನಿನ ಕರಾರು ಮಾಡಿಕೊಂಡಿದ್ದಾರೆ. ಹೀಗಾಗಿ ಅವರನ್ನು ವಶಕ್ಕೆ ಪಡೆದು ಪ್ರಶ್ನಿಸುವುದು ಅಗತ್ಯವೆಂದು ಮನಗಂಡು ತನಿಖಾಧಿಕಾರಿಗಳು ಅವರನ್ನು ಬಂಧಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
|
6 |
+
ಈ ಪ್ರಕರಣದಲ್ಲಿ ತಹಶೀಲ್ದಾರ್ ಅವರು ಪ್ರಕರಣ ಬೆಳಕಿಗೆ ತಂದಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯ ಮೇಲ್ನೋಟಕ್ಕೆ ಕಂಡು ಬಂದಿದೆ. ಕ್ಷಿಪ್ರವಾಗಿ ಕ್ರಮವಹಿಸದ ಮತ್ತು ನಿಯಮಾನುಸಾರ ಕ್ರಮ ಕೈಗೊಳ್ಳದೆ ಕರ್ತವ್ಯ ಲೋಪ ಎಸಗಿರುವ ಆರೋಪದಡಿ 5 ಅಧಿಕಾರಿ ಸಿಬ್ಬಂದಿಗಳನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
|
eesanje/url_46_276_1.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಇಬ್ಬರ ಸಾವಿಗೆ ಕಾರಣನಾಗಿದ್ದ ವಾಟರ್ ಟ್ಯಾಂಕ್ ಚಾಲಕನಿಗೆ 1 ವರ್ಷ ಜೈಲು
|
2 |
+
ಬೆಂಗಳೂರು,ಡಿ.30- ನಡೆದು ಹೋಗುತ್ತಿದ್ದ ಪಾದಚಾರಿಗಳಿಗೆ ವಾಟರ್ ಟ್ಯಾಂಕ್ ಡಿಕ್ಕಿ ಹೊಡೆದು ಬಾಲಕ ಸೇರಿ ಇಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನಿಗೆ ಒಂದು ವರ್ಷ ಕಾರಾಗೃಹ ವಾಸ ಹಾಗೂ 5 ಸಾವಿರ ರೂ. ದಂಡ ವಿಧಿಸಿ 2ನೇ ಸಂಚಾರ ನ್ಯಾಯಾಲಯ ತೀರ್ಪು ನೀಡಿದೆ. ನವೀನ್ಕುಮಾರ್(33) ಶಿಕ್ಷೆಗೊಳಗಾದ ವಾಟರ್ಟ್ಯಾಂಕ್ ಚಾಲಕ.
|
3 |
+
ಗಾಂಧಿನಗರ 5ನೇ ಮುಖ್ಯರಸ್ತೆ, 4ನೇ ಅಡ್ಡರಸ್ತೆಯಲ್ಲಿ 2010 ಜುಲೈ 19 ರಂದು ಬೆಳಿಗ್ಗೆ 9 ಗಂಟೆ ಸುಮಾರಿನಲ್ಲಿ ವಾಟರ್ ಟ್ಯಾಂಕ್ ಚಾಲನೆ ಮಾಡಿಕೊಂಡು ಬಂದ ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯಿಂದಾಗಿ ಏಕಾಏಕಿ ಎಡಭಾಗಕ್ಕೆ ವಾಹನ ತಿರುಗಿಸಿದಾಗ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ, ನಂತರ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸಂಜಯ್ಕುಮಾರ್(11) ಸ್ಥಳದಲ್ಲೇ ಮೃತಪಟ್ಟರೆ, ಶಿವಲೀಲಾ(47) ಎಂಬ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು. ಘಟನೆಯಲ್ಲಿ ಗಾಯಗೊಂಡಿದ್ದ ಸರಸ್ವತಮ್ಮ(45) ಮತ್ತು ಪಾರ್ಥಬ(12), ಅಭಿಲಾಷ್(12) ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
|
4 |
+
ಈ ಪ್ರಕರಣವನ್ನು ತನಿಖೆ ಕೈಗೊಂಡ ಉಪ್ಪಾರಪೇಟೆ ಸಂಚಾರಿ ಠಾಣೆ ಪೊಲೀಸರು ಆರೋಪಿ ಚಾಲಕನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಆತನ ಬಳಿ ಚಾಲನ ಅರ್ಹತಾ ಪತ್ರ ಇಲ್ಲದಿರುವುದು ತನಿಖೆಯಿಂದ ದೃಢಪಟ್ಟಿದೆ. ತನಿಖೆ ಪೂರೈಸಿ 2ನೇ ಎಂಎಂಟಿಸಿ ಸಂಚಾರ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಲಾಗಿತ್ತು.
|
5 |
+
ಸಂವಿಧಾನದ ಧ್ಯೇಯೋದ್ದೇಶಗಳ ಜಾರಿ ಸರ್ಕಾರದ ಜವಾಬ್ದಾರಿ : ಸಿಎಂ
|
6 |
+
ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಆರೋಪಿ ದೋಷಿ ಎಂದು ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಗೆ 1 ವರ್ಷ ಕಾರಾಗೃಹ ಹಾಗೂ 5 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಈ ಬಗ್ಗೆ ಆರೋಪಿಯು ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಅೀಧಿನ ನ್ಯಾಯಾಲಯ ನೀಡಿರುವ ತೀರ್ಪನ್ನು ಎತ್ತಿಹಿಡಿದಿದ್ದು, ಆರೋಪಿಗೆ ಸೆರೆಮನೆಯ ವಾರಂಟ್ ಅನ್ನು ಹೊರಡಿಸಿದೆ.
|
eesanje/url_46_276_10.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಹೈವೆ ರಸ್ತೆಗಳಲ್ಲಿ ಸುಲಿಗೆ, ನಾಲ್ವರು ಖಾಕಿ ಬಲೆಗೆ
|
2 |
+
ಬೆಂಗಳೂರು,ಡಿ.29- ರಾಷ್ಟ್ರೀಯ ಹೆದ್ದಾರಿ ರಸ್ತೆಗಳಲ್ಲಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ದ್ವಿಚಕ್ರ ವಾಹನದಲ್ಲಿ ವ್ಹೀಲಿಂಗ್ ಮಾಡುತ್ತಾ ಸಾರ್ವಜನಿಕರಲ್ಲಿ ಭಯವನ್ನುಂಟು ಮಾಡುತ್ತಿದ್ದ ಮತ್ತು ರಾತ್ರಿವೇಳೆ ಮೊಬೈಲ್ ಪೋನ್ಗಳು, ಹಣ ದೋಚುತ್ತಿದ್ದ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ ನಾಲ್ಕು ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
|
3 |
+
ಆರೋಪಿಗಳಿಂದ ವಿವಿಧ ಕಂಪನಿಯ 17 ಆಂಡ್ರಾಯ್ಡ್ ಮೊಬೈಲ್ ಫೋನ್ಗಳು 1 ಕೆಜಿ 200 ಗ್ರಾಂ ತೂಕದ ಗಾಂಜಾ ಹಾಗೂ ಆರೋಪಿಗಳು ವಿಲಿಂಗ್ ಮಾಡಲು ಹಾಗೂ ಸುಲಿಗೆ ಮಾಡಲು ಉಪಯೋಗಿಸಿದ್ದ ಡಿಯೋ ಸ್ಕೂಟರ್ಗಳು ಹಾಗೂ ಒಂದು ಚಾಕು, ಒಂದು ಡ್ರ್ಯಾಗನ್ ಸೇರಿ ಒಟ್ಟು ಸುಮಾರು 4 ಲಕ್ಷ ಮೌಲ್ಯದ ವಸು ್ತಗಳನ್ನು ವಶ ಪಡಿಸಿಕೊಳ್ಳಲಾಗಿದೆ.
|
4 |
+
ನೆಲಮಂಗಲ ತಾಲ್ಲೂಕ್, ಹುಚ್ಚೇಗೌಡನಪಾಳ್ಯದ ಖಾಲ್ಸಾ ಪಂಜಾಬಿ ಡಾಬಾ ಹಿಂಭಾಗದಲ್ಲಿರುವ ಲಾರಿ ಪಾರ್ಕಿಂಗ್ ಸ್ಥಳದಲ್ಲಿ ಯಾರೋ 3-4 ಜನರು ಗಾಂಜಾವನ್ನು ಚಿಕ್ಕ ಚಿಕ್ಕ ಪ್ಯಾಕೇಟ್ಗಳಲ್ಲಿ ತುಂಬಿ ಮಾರಾಟ ಮಾಡಲು ಪ್ರಯತ್ನಿಸುತ್ತಿರುತ್ತಾರೆಂದು ಬಂದ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ನಾಲ್ವರನ್ನು ಬಂಧಿಸಿ ಗಾಂಜಾ, ಸ್ಕೂಟರ್ ಹಾಗೂ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
|
5 |
+
‘ಮೋದಿ ಮತ್ತೆ ಬರಲಿದ್ದಾರೆ’ ಎಂಬ ಘೋಷ ವಾಕ್ಯದೊಂದಿಗೆ ಅಖಾಡಕ್ಕೆ ಧುಮುಕಿದ ಬಿಜೆಪಿ
|
6 |
+
ಆರೋಪಿಗಳು ಡಿಯೋ ಸ್ಕೂಟರ್ಗಳಲ್ಲಿ ಹೈವೆ ರಸ್ತೆಗಳಲ್ಲಿ ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ತಮ್ಮ ದ್ವಿ-ಚಕ್ರ ವಾಹನಗಳನ್ನು ಅತಿವೇಗವಾಗಿ ಮಾನವನ ಪ್ರಾಣಕ್ಕೆ ಅಪಾಯವಾಗುವಂತೆ ಮತ್ತು ನಿರ್ಲಕ್ಷತೆಯಿಂದ ಚಾಲನೆ ಮಾಡಿಕೊಂಡು ಸಾರ್ವಜನಿಕರ ನೆಮ್ಮದಿಗೆ ಭಂಗವಾಗುವಂತೆ ಮತ್ತು ಸಾರ್ವಜನಿಕರಿಗೆ ಭಯವುಂಟಾ ಗುವಂತೆ ವಾಹನಗಳನ್ನು ವಿಲಿಂಗ್ ಮಾಡಿರುವುದು ತಿಳಿದುಬಂದಿರುತ್ತದೆ.
|
7 |
+
ಪ್ರಕರಣದ ಆರೋಪಿಗಳ ಪತ್ತೆಯ ಬಗ್ಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅೀಧಿಕ್ಷಕರಾದ ಮಲ್ಲಿಕಾರ್ಜುನ್ ಬಾಲದಂಡಿ., ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
|
eesanje/url_46_276_11.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕರವೇ ಕಾರ್ಯಕರ್ತರ ಬಂಧನ ಸರ್ಕಾರದ ಆತುರದ ನಿರ್ಧಾರ : ದೊಡ್ಡರಂಗೇಗೌಡ
|
2 |
+
ಬೆಂಗಳೂರು,ಡಿ.29- ಕನ್ನಡ ರಕ್ಷಣಾ ವೇದಿಕೆಯ ಹೋರಾಟಗಾರರನ್ನು ಬಂಧಿಸಿರುವುದನ್ನು ವಿರೋಧಿಸಿ ನಗರದಲ್ಲಿಂದು ನಡೆದ ಸಭೆಯಲ್ಲಿ ಖಂಡನಾ ನಿರ್ಣಯವನ್ನು ತೆಗೆದುಕೊಳ್ಳಲಾಯಿತು. ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ ಹಾಗೂ ಇತರರನ್ನು ಬಂಧಿಸಿರುವುದನ್ನು ಖಂಡಿಸಿ ಕರವೇಯ ಮತ್ತೊಂದು ಬಣದ ಅಧ್ಯಕ್ಷ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಖಂಡನಾ ಸಭೆ ನಡೆಯಿತು.ಸಹಜ ಭಿನ್ನಾಭಿಪ್ರಾಯಗಳ ನಡುವೆಯೂ ಸಹಜ ನಾಡು-ನುಡಿಯ ವಿಷಯವಾಗಿ ಹೋರಾಟ ಮಾಡುವವರ ಪರವಾಗಿ ನಾವು ನಿಲ್ಲುತ್ತೇವೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಪ್ರಮುಖ ನಾಯಕರು ಘೋಷಿಸಿದರು.
|
3 |
+
ಸಾಹಿತಿ ದೊಡ್ಡರಂಗೇಗೌಡ ಅವರು ಸಿದ್ದರಾಮಯ್ಯ ಅವರ ಸರ್ಕಾರ ನಾರಾಯಣಗೌಡ ಅವರನ್ನು ಬಂಧಿಸಿರುವುದು ಸಮರ್ಥನೀಯವಲ್ಲ. ಇದು ಆತುರದ ಕ್ರಮ ಎಂದು ಖಂಡಿಸಿದರು. ನಾಡು-ನುಡಿಗೆ ಧಕ್ಕೆಯಾಗುವಾಗ ಕನ್ನಡಪರ ಸಂಘಟನೆಯ ಎಲ್ಲಾ ಬಣಗಳೂ ಹೋರಾಟ ನಡೆಸಬೇಕಾಗಿದೆ. ಹೋರಾಟ ನಡೆಸುವವರನ್ನು ಜೈಲಿಗೆ ಕಳುಹಿಸಿದರೆ ಕನ್ನಡಿಗರ ಸಿಟ್ಟು ಸ್ಪೋಟಗೊಳ್ಳುತ್ತದೆ. ಇಲ್ಲಿ ಕನ್ನಡಿಗರು ಜಗಳಕ್ಕೆ ಹೋಗಿಲ್ಲ, ಸರ್ಕಾರವೇ ಜಗಳ ಆರಂಭಿಸಿದೆ.
|
4 |
+
ಎಲ್ಲಾ ಕಾಲದಲ್ಲೂ ಲಾಠಿ ಪ್ರಯೋಗ ಸಹಿಸಲು ಸಾಧ್ಯವಿಲ್ಲ. ಪ್ರತಿಭಟನೆ ನಮ್ಮ ಹಕ್ಕು, ಅನ್ಯಾಯವಾದಾಗ ನಾವು ವಿರೋಧಿಸುತ್ತೇವೆ, ಎಲ್ಲವೂ ಸುಸೂತ್ರವಾಗಿದ್ದರೆ ನಾವು ಪ್ರತಿಭಟನೆ ಮಾಡುವ ಪ್ರಮೇಯವೇ ಇರುತ್ತಿರಲಿಲ್ಲ. ಮುಗ್ಧ ಕನ್ನಡಿಗರ ಮೇಲೆ ದೌರ್ಜನ್ಯವಾಗಿದೆ. ಇದನ್ನು ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ ಎಂದರು.
|
5 |
+
ಪ್ರವೀಣ್ ಶೆಟ್ಟಿ ಮಾತನಾಡಿ, ಅಮಾಯಕ ಹೋರಾಟಗಾರರನ್ನು ಜೈಲಿಗೆ ಕಳುಹಿಸಲಾಗಿದೆ. ಖಂಡನಾ ನಿರ್ಣಯ ಸಭೆ ನಡೆಸಲು ನಮಗೆ ಜಾಗವನ್ನೇ ಕೊಡದೆ ತೊಂದರೆ ಮಾಡುವ ಪ್ರಯತ್ನಗಳಾದವು. ಕೊನೆಗೆ ಬ್ಯಾಡ್ಮಿಂಟನ್ ಸಭಾಂಗಣದಲ್ಲಿ ಸಭೆ ನಡೆಸಲು ಅವಕಾಶ ಸಿಕ್ಕಿದೆ ಎಂದರು.
|
6 |
+
‘ಮೋದಿ ಮತ್ತೆ ಬರಲಿದ್ದಾರೆ’ ಎಂಬ ಘೋಷ ವಾಕ್ಯದೊಂದಿಗೆ ಅಖಾಡಕ್ಕೆ ಧುಮುಕಿದ ಬಿಜೆಪಿ
|
7 |
+
ನಮ್ಮಲ್ಲಿ ಸಾವಿರಾರು ಭಿನ್ನಾಭಿಪ್ರಾಯಗಳಿರಬಹುದು, ಆದರೆ ಕನ್ನಡ ವಿಷಯ ಬಂದಾಗ ನಾವೆಲ್ಲ ಒಂದೇ. ಹೋರಾಟಗಾರರಿಗೂ ವೈಯಕ್ತಿಕ ಬದುಕುಗಳಿವೆ, ಆರೋಗ್ಯದ ಸಮಸ್ಯೆಗಳಿವೆ. ಹೋರಾಟ ಮಾಡುವುದು ನಮ್ಮ ವೈಯಕ್ತಿಕ ಸಮಸ್ಯೆಗಾಗಿ ಅಲ್ಲ, ಸರ್ಕಾರ ಇದನ್ನು ಅರ್ಥ ಮಾಡಿಕೊಳ್ಳಬೇಕೆಂದು ಆಗ್ರಹಿಸಿದರು.
|
8 |
+
ಕನ್ನಡವನ್ನು ಮೊದಲಿನಿಂದಲೂ ನಿರ್ಲಕ್ಷ್ಯ ಮಾಡಲಾಗಿದೆ. ಶೇ.60 ರಷ್ಟು ಕನ್ನಡದಲ್ಲಿ ನಾಮಫಲಕ ಹಾಕಬೇಕು ಎಂದು ಹೋರಾಟ ಮಾಡಿದವರ ಮೇಲೆ ವಿವಿಧ ಸೆಕ್ಷನ್ಗಳಡಿ ಕೇಸು ದಾಖಲಿಸಲಾಗಿದೆ. ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆಂದು ದೂರು ದಾಖಲಾಗಿದೆ. ಪೊಲೀಸ್ ಅಧಿಕಾರಿಗಳು ಮಾಡಿದ ತಪ್ಪನ್ನು ಸರ್ಕಾರ ಸಮರ್ಥಿಸಿಕೊಳ್ಳಬಾರದು. ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸ���ದರು.
|
9 |
+
ಸಾ.ರಾ.ಗೋವಿಂದು ಮಾತನಾಡಿ, ಹೋರಾಟಗಾರರನ್ನು ಬಂಧಿಸಿರುವುದನ್ನು ಖಂಡಿಸಿದರು. ಕನ್ನಡಕ್ಕೆ ಗೋಕಾಕ್ ಚಳುವಳಿಯಿಂದ ಆರಂಭಿಸಿ ಹೋರಾಟದ ದೊಡ್ಡ ಪರಂಪರೆಯೇ ಇದೆ. ಹೆದರಿಕೆ, ಬೆದರಿಕೆಗಳಿಗೆ ಜಗ್ಗುವುದಿಲ್ಲ ಎಂದರು. ಸಾಹಿತಿ ಹಂ.ಪ.ನಾಗರಾಜಯ್ಯ ಸೇರಿದಂತೆ ಅನೇಕರು ಖಂಡನಾ ನಿರ್ಣಯದಲ್ಲಿ ಭಾಗವಹಿಸಿದ್ದರು.
|
eesanje/url_46_276_12.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ನಿರ್ಧಾರ
|
2 |
+
ಬೆಂಗಳೂರು, ಡಿ.29- ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವಧನವನ್ನು ಐದು ಸಾವಿರ ರೂ. ಹೆಚ್ಚಳ ಮಾಡಲು 60 ವರ್ಷ ತುಂಬಿದವರಿಗೆ ಇಡುಗಂಟ್ಟು ನೀಡಲು ಹಾಗೂ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿಥಿ ಉಪನ್ಯಾಸಕರ ಗೌರವಧನವನ್ನು ಗರಿಷ್ಠ 32 ಸಾವಿರ ರೂ.ಗೆ ಗರಿಷ್ಠ 5 ಸಾವಿರ ರೂ. ಹೆಚ್ಚಳ ಮಾಡಲು ಮುಖ್ಯಮಂತ್ರಿ ಸಮ್ಮತಿ ಸೂಚಿಸಿದ್ದಾರೆ. ಇದಕ್ಕೆ 55 ಕೋಟಿ ರೂ. ವರ್ಷಕ್ಕೆ ಹೊರೆಯಾಗಲಿದೆ ಎಂದರು.
|
3 |
+
ವರ್ಷಕ್ಕೆ 50 ಸಾವಿರ ರೂ.ನಂತೆ 10 ವರ್ಷಕ್ಕೆ ಗರಿಷ್ಠ 5 ಲಕ್ಷ ರೂ. ಕೊಡೋಕೆ ತೀರ್ಮಾನ ಮಾಡಿದ್ದೇವೆ. 60 ವರ್ಷ ಪೂರೈಸಿದವರಿಗೆ ಮಾತ್ರ ನಾವು ಇಡುಗಂಟು ಕೊಡೋದು, ಮಧ್ಯದಲ್ಲಿ ಬಿಟ್ಟವರಿಗೆ ಸಿಗುವುದಿಲ್ಲ.ಆರೋಗ್ಯ ವಿಮೆ ಮಾಡಿದ್ದೇವೆ. ಸೇವಾ ಭದ್ರತೆ ಬಗ್ಗೆಯು ಚಿಂತನೆ ಮಾಡಿದ್ದೇವೆ ಎಂದು ಅವರು ತಿಳಿಸಿದರು.
|
4 |
+
ವಾರಕ್ಕೆ 15 ಗಂಟೆ ಕೆಲಸ ಮಾಡುವವರಿಗೆ ತಿಂಗಳಿಗೆ ಒಂದು ರಜೆ ಕೊಡಲು ತೀರ್ಮಾನ ಮಾಡಲಾಗಿದೆ. 2,800 ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಉಪನ್ಯಾಸಕರಿಗೂ ಇದು ಅನ್ವಯಿಸುತ್ತದೆ. ಅತಿಥಿ ಉಪನ್ಯಾಸಕರಿಗೆ ಗೌರವ ಕೊಡುತ್ತಿಲ್ಲ ಎಂಬುದನ್ನು ಗಂಭೀರವಾಗಿ ತೆಗೆದುಕೊಂಡು ಪ್ರಾಂಶುಪಾಲರಿಗೆ ಹೇಳಿದ್ದೇವೆ. ಅವರಿಗೆ ಗೌರವ ಕೊಡಬೇಕು, ನ್ಯಾಯಯುತವಾಗಿ ನೋಡಿಕೊಳ್ಳಬೇಕುಎಂಬ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
|
5 |
+
‘ಮೋದಿ ಮತ್ತೆ ಬರಲಿದ್ದಾರೆ’ ಎಂಬ ಘೋಷ ವಾಕ್ಯದೊಂದಿಗೆ ಅಖಾಡಕ್ಕೆ ಧುಮುಕಿದ ಬಿಜೆಪಿ
|
6 |
+
ಕೆಲವರಿಗೆ ಬ್ಲ್ಯಾಕ್ ಮೇಲ್ ಮಾಡೋ ಆಪಾದನೆ ಕೇಳಿ ಬಂದಿತ್ತು, ಅದಕ್ಕೂ ಬ್ರೇಕ ಹಾಕಿದ್ದೇವೆ. ಪ್ರತಿ ವರ್ಷ ಕೌನ್ಸಿಲಿಂಗ್ ಮೂಲಕ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಲಾಗುವುದು. ಸೇವೆಯ ಮತ್ತು ಅಂಕಗಳ ಆಧಾರದಲ್ಲಿ 16 ವರ್ಷ ಸೇವೆ ಮಾಡಿದವರಿಗೆ ಡಾಕ್ಯುಮೆಂಟ್ ಡೇಟಾ ಮಾಡಿಕೊಂಡು ದಾಖಲಾತಿ ಮಾಡಿಕೊಳ್ಳಲು ಸರಳ ಪ್ರಕ್ರಿಯೆ ಮಾಡುತ್ತೇವೆ. ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳುತ್ತೇವೆ. 6 ಸಾವಿರಕ್ಕೂ ಹೆಚ್ಚು ಹುದ್ದೆ ಸೃಷ್ಟಿಸುವ ಉದ್ದೇಶವಿದೆ.
|
7 |
+
ಹೊಸ ನೇಮಕಾತಿ ಸಂದರ್ಭದಲ್ಲಿ ಕೃಪಾಂಕದ ಆಧಾರದಲ್ಲಿ 5 ವರ್ಷ ಮೇಲ್ಪಟ್ಟು ಸೇವೆ ಮಾಡಿರುವವರಿಗೆ ವರ್ಷಕ್ಕೆ ಒಂದು ಪರ್ಸೆಂಟ್ನಂತೆ ಕೃಪಾಂಕ ಕೊಡುತ್ತೇವೆ. ಒಟ್ಟು 15 ಅಂಕಗಳು ಸಿಗುತ್ತವೆ. ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಮಾತ್ರ ಕೃಪಾಂಕ ಸಿಗಲಿದೆ ಎಂದು ಅವರು ವಿವರಿಸಿದರು.
|
8 |
+
ವಿಮೆಗೆ 5 ಕೋಟಿ ರೂ. ಹೊರೆಯಾಗಲಿದೆ. ಇಡುಗಂಟಿಗೆ 72 ಕೋಟಿ ಹೊರೆ ಆಗುವುದು. ಅವರ ಸೇವೆ ಪರಿಗಣಿಸಿ ನಮ್ಮ ಎಲ್ಲಾ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ನಾವು ಕ್ರಮ ವಹಿಸಿದ್ದೇವೆ. ಒಂದು ತಿಂಗಳು ಸಮಯ ಹಾಳಾಗಿದೆ ಜನವರಿ ಒಂದರಿಂದ ಕೆಲಸ��್ಕೆ ಹಾಜರಾಗಲು ಹೇಳಿದ್ದೇವೆ. ಅವರು ಸಹಕರಿಸದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದೇವೆ ಎಂದರು.
|
9 |
+
ಅವರ ಸಂಘಟನೆಯಲ್ಲೂ ಕೆಲವೊಂದಷ್ಟು ಗೊಂದಲಗಳಿವೆ. ಮೂರು ನಾಲ್ಕು ಗುಂಪುಗಳಿವೆ. ಕೆಲವರು ಅವರಲ್ಲಿ ಬಂದಿಲ್ಲ, ಗಲಾಟೆ ಕೂಡ ಮಾಡಿದ್ದಾರೆ.ನಮ್ಮ ಸರ್ಕಾರದ ನಿರ್ಧಾರವನ್ನು ತಿಳಿಸಿದ್ದೇವೆ ಎಂದು ಹೇಳಿದರು.
|
eesanje/url_46_276_2.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ರೈತರ ಹಿತ ರಾಜ್ಯ ಸರ್ಕಾರದ ಆದ್ಯತೆ : ಸಚಿವ ಚಲುವರಾಯಸ್ವಾಮಿ
|
2 |
+
ಬೆಂಗಳೂರು,ಡಿ.30- ರೈತರ ಹಿತ ಕಾಯಲು ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ 7,500 ಕೋಟಿ ರೂ.ಗಳನ್ನು ಕೃಷಿ ಕುಟುಂಬಗಳಿಗೆ ತಲುಪಿಸಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದರು.
|
3 |
+
ಹೆಬ್ಬಾಳದ ಪಶು ವೈದ್ಯಕೀಯ ಪರಿಷತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಬೀಜ ನಿಗಮದ 311ನೇ ನಿರ್ದೇಶಕ ಮಂಡಳಿ ಸಭೆ ನಡೆಸಿ ಅವರು ಮಾತನಾಡಿದರು. ರಾಜ್ಯದ 223 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಪರಿಹಾರಕ್ಕೆ ಮನವಿ ಸಲ್ಲಿಸಿದ್ದಾರೆ. ರೈತರ ಸಂಕಷ್ಟ ನಿವಾರಣೆ ಸರ್ಕಾರದ ಜವಾಬ್ದಾರಿಯಾಗಿದ್ದು ಅದನ್ನು ನಿಭಾಯಿಸಲಿದೆ ಎಂದರು.
|
4 |
+
ತಾವು ಕೃಷಿಕನಾಗಿದ್ದ ರೈತರ ಬದುಕು ಬವಣೆಗಳ ಬಗ್ಗೆ ಸ್ವಂತ ಅನುಭವ ಇದೆ. ಅವರ ಸಮಸ್ಯೆಗಳನ್ನು ಸರಿಪಡಿಸಲು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಸಚಿವರು ಹೇಳಿದರು. ರಾಜ್ಯದಲ್ಲಿ ವಿಚಕ್ಷಣ ದಳವನ್ನು ಚುರುಕುಗೊಳಿಸಿದ್ದು, ನಕಲಿ ಹಾಗೂ ಕಳಪೆ ಬಿತ್ತನೆ ಬೀಜ, ರಸಗೊಬ್ಬರ, ಔಷಧಿಗಳ ಮಾರಾಟ ಸಾಗಾಟವನ್ನು ಸಂಪೂರ್ಣವಾಗಿ ನಿಯಂತ್ರಿಸಲಾಗಿದೆ ಎಂದರು.
|
5 |
+
2022-23 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಬೀಜ ನಿಗಮವು ವಿವಿಧ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಮಾರಾಟದಿಂದ ಒಟ್ಟು ರೂ.494.50ಕೋಟಿಗಳ ವಹಿವಾಟು ಮಾಡಿ ರೂ.7.65ಕೋಟಿಗಳ ತೆರಿಗೆ ನಂತರದ ಲಾಭ ಗಳಿಸಿರುತ್ತದೆ. ಇದು ಕಳೆದ 49 ವರ್ಷಗಳಲ್ಲಿ ನಿಗಮವು ವ್ಯಾಪಾರ ವಹಿವಾಟಿನಲ್ಲಿ ಗಳಿಸಿರುವ ಅತಿ ಹೆಚ್ಚಿನ ಲಾಭವಾಗಿರುತ್ತದೆ ಎಂದು ಚಲುವರಾಯಸ್ವಾಮಿ ಮಾಹಿತಿ ನೀಡಿದರು.
|
6 |
+
ಕನ್ನಡ ಹೋರಾಟಗಾರರನ್ನು ಬಿಡುಗಡೆಗೊಳಿಸದಿದ್ದರೆ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಕೆ
|
7 |
+
ಪ್ರಸಕ್ತ ಸಾಲಿನಲ್ಲಿ 2.73 ಲಕ್ಷ ಕ್ವಿಂಟಾಲ್ಗಳ ವಿವಿಧ ಬೆಳೆ / ತಳಿಗಳ ಬಿತ್ತನೆ ಬೀಜಗಳ ಮಾರಾಟದಿಂದ ರೂ.189.61 ಕೋಟಿಗಳಷ್ಟು ವಹಿವಾಟನ್ನು ಸಾಧಿಸಿರುತ್ತದೆ. ಇದಲ್ಲದೆ, ಕಂಪನಿಯು ಪ್ರಸಕ್ತ ಸಾಲಿನಲ್ಲಿ 1.43 ಲಕ್ಷ ಮೆಟ್ರಿಕ್ ಟನ್ ಡಿ.ಎ.ಪಿ, ಯೂರಿಯಾ, ಕಾಂಪ್ಲೆಕ್ಸ್, ಎಂ.ಒ.ಪಿ., ಅಮೋನಿಯಂ ಸಲೇಟ್ ಮತ್ತು ಎಸ್.ಓ.ಪಿ ರಸಗೊಬ್ಬರಗಳನ್ನು ಕಾಪು ದಾಸ್ತಾನು ಯೋಜನೆಯಡಿ ಹಾಗೂ ತಂಬಾಕು ಮಂಡಳಿಗೆ ವಿತರಿಸಿ 301.65 ಕೋಟಿ ರೂ.ಗಳ ವಹಿವಾಟು ಸಾಧಿಸಿದೆ. 2023-24ನೇ ಸಾಲಿನಲ್ಲಿ 200 ಕೋಟಿ ರೂ.ಗಳ ವೆಚ್ಚದಲ್ಲಿ 2 ಲಕ್ಷ ಮೆಟ್ರಿಕ್ ಟನ್ ವಿವಿಧ ಶ್ರೇಣಿ ರಸಗೊಬ್ಬರಗಳ ವಹಿವಾಟನ್ನು ಮಾಡಲು ಯೋಜಿಸಲಾಗಿದೆ ಎಂದು ಸಚಿವರು ಹೇಳಿದರು.
|
8 |
+
ಸಂಸ್ಥೆಯ ಎಲ್ಲಾ ವಹಿವಾಟು ಪಾರದರ್ಶಕವಾಗಿರಬೇಕು ಹಾಗೂ ಸಕಾಲದಲ್ಲಿ ಸದಸ್ಯರಿಗೆ ಮಾಹಿತಿ ನೀಡಬೇಕು. ಲೋಪದೋಷಗಳಾದರೇ ಅಧಿಕಾರಿಗಳೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು. ನಿಗಮದ ಚಟುವಟಿಕೆಗಳಲ್ಲಿ ಹಲವು ರಚನಾತ್ಮಕ ಬದಲಾವಣೆಗಳಿಗೆ ಸಲಹೆ ಸೂಚನೆ ನೀಡಿದ ಕೃಷಿ ಸಚಿವರು.
|
9 |
+
ನಕಲಿ ಎಂಬಿಎ ಕೋರ್ಸ್ ಬಗ್ಗೆ ಇರಲಿ ಎಚ್ಚರ
|
10 |
+
ರೈತರಿಗೆ ಅನುಕೂಲವಾಗುವಂತೆ ಹಾಗೂ ಉತ್ಪಾದನೆ ಹೆಚ್ಚಳಕ್ಕೆ ಪೂರಕವಾಗಿ ಬಿತ್ತನೆ ಬೀಜ ಪೂರೈಸಲು ಸಚಿವರು ನಿರ್ದೇಶನ ನೀಡಿದರು. ಕರ್ನಾಟಕ ಬೀಜ ನಿಗಮದ ನಿರ್ದೇಶಕ ಮಂಡಳಿ ಸದಸ್ಯರಾದ ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್, ಆಯುಕ್ತರಾದ ವೈ.ಎಸ್.ಪಾಟೀಲ, ರೈತ ಪ್ರತಿನಿಧಿಗಳಾದ ಡಿ.ಎಲ್.ನಾಗರಾಜ್, ರಾಜೇಂದ್ರ ಪ್ರಸಾದ್, ನಿಂಗಪ್ಪ ಸಂಕಪ್ಪ ಹಾವೇರಿ, ಶಿವಬಸಪ್ಪ ಶರಣ ಬಸಪ್ಪ ಬೆಲ್ಲದ, ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಹೆಚ್.ಎಸ್ ದೇವರಾಜ್ ಮತ್ತಿತರರು ಸಭೆಯಲ್ಲಿ ಹಾಜರಿದ್ದರು
|
eesanje/url_46_276_3.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮಕ್ಕಳಿಂದ ಶೌಚಾಲಯ ಸ್ವಚ್ಛತಾ ಕಾರ್ಯ ನಿಷೇಧಿಸಿ ಆದೇಶ
|
2 |
+
ಬೆಂಗಳೂರು,ಡಿ.30- ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿನ ಶೌಚಾಲಯಗಳ ಸ್ವಚ್ಛತಾ ಕಾರ್ಯ ಮತ್ತು ನಿರ್ವಹಣೆಯನ್ನು ಯಾವುದೇ ಸಂದರ್ಭದಲ್ಲೂ, ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಂದ ಮಾಡಿಸುವುದನ್ನು ಕಡ್ಡಾಯವಾಗಿ ಸರ್ಕಾರ ನಿಷೇಧಿಸಿದೆ.
|
3 |
+
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಪ್ರಸಕ್ತ ಸಾಲಿಗೆ ಬಿಡುಗಡೆಯಾಗುವ ಶಾಲಾ ನಿರ್ವಹಣಾ ಅನುದಾನವನ್ನು ಪ್ರಥಮ ಆದ್ಯತೆಯಾಗಿ ಶೌಚಾಲಯಗಳ ಸ್ವಚ್ಛತಾ ಕಾರ್ಯಗಳಿಗೆ ಬಳಸಿಕೊಂಡು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಲ್ಲಿಕೆಗಳ ಸಹಕಾರದೊಂದಿಗೆ ಕ್ರಮ ಕೈಗೊಳ್ಳುವುದು ಎಂದು ಆಯುಕ್ತರಾದ ಬಿ.ಬಿ.ಕಾವೇರಿ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
|
4 |
+
ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿ ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯ ಸ್ವಚ್ಛತೆಯಲ್ಲಿ ಬಳಸಿಕೊಂಡಲ್ಲಿ, ಅಂತವರ ವಿರುದ್ಧ ಇಲಾಖೆಯ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸುವುದಲ್ಲದೆ, ಎಫ್ಐಆರ್ ದಾಖಲಿಸುವುದಾಗಿ ಎಚ್ಚರಿಸಿದ್ದಾರೆ.
|
5 |
+
ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೈಕ್ಷಣಿಕ, ಕ್ರೀಡೆ, ಸಹಪಠ್ಯ ಚಟುವಟಿಕೆಗಳಲ್ಲಿ ಮಾತ್ರ ತೊಡಗಿಸಿಕೊಳ್ಳಬೇಕು. ಶೌಚಾಲಯಗಳ ಸ್ವಚ್ಛತೆಯಿಂದ ವಿದ್ಯಾರ್ಥಿಗಳನ್ನು ದೂರ ಇರಿಸುವುದು ಅಧಿಕಾರಿಗಳು, ಮುಖ್ಯ ಶಿಕ್ಷಕರ, ಶಿಕ್ಷಕರ, ಸಿಬ್ಬಂದಿಗಳ ಕರ್ತವ್ಯವಾಗಿದೆ. ಇತ್ತೀಚೆಗೆ ಶೌಚಾಲಯಗಳ ಸ್ವಚ್ಛತೆಯಿಂದ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡಿರುವುದು ಖಂಡನೀಯವಾಗಿದ್ದು, ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಕಟ್ಟುನಿಟ್ಟಿನ ಸೂಚನೆ ನೀಡಿದೆ.
|
6 |
+
ಭಾರತದ ಆಟಗಾರರ ಬರುವಿಕೆಯನ್ನು ಕಾಯುತ್ತದೆಯಂತೆ ಪಾಕ್
|
7 |
+
ಎಸ್ಡಿಎಂಸಿ ಸಮಿತಿಯು ವಿದ್ಯಾರ್ಥಿಗಳು ಶೌಚಾಲಯದ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಕಾಲಕಾಲಕ್ಕೆ ಶಾಲೆಗಳಿಗೆ ಭೇಟಿ ನೀಡಿ ಹೆಣ್ಣು ಮಕ್ಕಳ ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕ ಶೌಚಾಲಯ ಲಭ್ಯವಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಲ್ಲಿ ಬಳಸಿಕೊಂಡಿರುವುದು ಗಮನಕ್ಕೆ ಬಂದರೆ ತಕ್ಷಣ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ಉಪ ನಿರ್ದೇಶಕರಿಗೆ ವರದಿ ಮಾಡಬೇಕು.
|
8 |
+
ಶಾಲಾ ಮೇಲುಸ್ತುವಾರಿ ಹಾಗೂ ಮೇಲ್ವಿಚಾರಣೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದನ್ನು ಚಾಚೂ ತಪ್ಪದೆ ಮಾಡಬೇಕು. ಇಂತಹ ಪ್ರಕರಣಗಳಲ್ಲಿ ಸಂಬಂಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಉಪ ನಿದೇರ್ಶಕರು ಜರೂರಾಗಿ ಸಂಬಂಧಿಸಿದವರ ಮೇಲೆ ಕ್ರಮ ಜರುಗಿಸಬೇಕು. ನಿರ್ಲಕ್ಷ್ಯತನ ತೋರಿ ಇಂತಹ ಪ್ರಕರಣಗಳು ಮರುಕಳಿಸಿದರೆ ಸಂಬಂಧ���ಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಉಪ ನಿರ್ದೇಶಕರನ್ನೇ ನೇರ ಹೊಣೆಗಾರರನ್ನಾಗಿಸಿ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
|
9 |
+
ಜರ್ಮನ್ ಆರೈಕೆಯಲ್ಲಿರುವ ಅರಿಹಾ ಶಾ ಜತೆ ದೀಪಾವಳಿ ಆಚರಿಸಿದ ಭಾರತೀಯ ಅಧಿಕಾರಿಗಳು
|
10 |
+
ಇದೇ ರೀತಿ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಇಂತಹ ಯಾವುದೇ ಪ್ರಕರಣಗಳು ಜರುಗದಂತೆ ಸಂಬಂಧಪಟ್ಟ ಶಾಲಾ ಆಡಳಿತ ಮಂಡಳಿ ಹಾಗೂ ಶಾಲಾ ಮುಖ್ಯಸ್ಥರು ಎಚ್ಚರಿಕೆ ವಹಿಸಲು ತಿಳಿಸಲಾಗಿದೆ.ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುವಂತಹ ಪ್ರಕರಣಗಳು ಮರುಕಳಿಸದಂತೆ ಸೂಕ್ತ ಎಚ್ಚರಿಕೆ ವಹಿಸಲು ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ, ಸಂಬಂಧಿಸಿದ ಎಲ್ಲಾ ಇಲಾಖಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವುದಾಗಿ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
|
eesanje/url_46_276_4.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಸಿದ್ದರಾಮಯ್ಯ ಮನಸ್ಥಿತಿಯನ್ನು ದಲಿತ ಸಮುದಾಯ ಅರ್ಥ ಮಾಡಿಕೊಳ್ಳಬೇಕು : ಹೆಚ್ಡಿಕೆ
|
2 |
+
ಬೆಂಗಳೂರು,ಡಿ.30-ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಂದಿನ ಪ್ರಧಾನಿಯಾಗಬೇಕೆಂದು ಬೇರೆ ರಾಜ್ಯದ ಮುಖ್ಯಮಂತ್ರಿಗಳು ಬಯಸುತ್ತಾರೆ. ಆದರೆ ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿಯಾಗಲಿ ಎಂದು ಹೇಳಿಕೆ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
|
3 |
+
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮತ್ತೊಬ್ಬ ಕನ್ನಡಿಗರೊಬ್ಬರು ಪ್ರಧಾನಿಯಾಗಲಿ ಎಂದು ಸಿದ್ದರಾಮಯ್ಯ ಹೇಳಲಿಲ್ಲ. ಒಂದು ವೇಳೆ ಆ ವಿಚಾರ ಪ್ರಸ್ತಾಪ ಮಾಡದೆ ತಟಸ್ಥವಾಗಿದ್ದರೆ ಆಗುತ್ತಿತ್ತು. ರಾಹುಲ್ ಗಾಂಧಿ ಪ್ರಧಾನಿಯಾಗಬೇಕೆಂದು ಸಿದ್ದರಾಮಯ್ಯ ಹೇಳಿದ್ದಾರೆ. ಇದು ಅವರ ಮನಸ್ಥಿತಿ ಎಂಥದ್ದು ಎಂಬುದನ್ನು ತಿಳಿಸುತ್ತದೆ. ದಲಿತ ಸಮುದಾಯಗಳು ಇದರ ಸೂಕ್ಷ್ಮತೆಯನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
|
4 |
+
ಈ ಹಿಂದೆ ಮೈತ್ರಿ ಸರ್ಕಾರ ರಚನೆಯಾಗುವ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆಯವರೇ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿದ್ದರು. ಆದರೂ ಕಾಂಗ್ರೆಸ್ ಪಕ್ಷದ ನಾಯಕರು ಅವಕಾಶ ಮಾಡಿಕೊಡಲಿಲ್ಲ. ನಾವು ಎನ್ಡಿಎ ಮೈತ್ರಿಕೂಟದಲ್ಲಿದ್ದರೂ ಖರ್ಗೆಯವರು ಪ್ರಧಾನಿಯಾದರೆ ಒಳ್ಳೆಯದು ಎಂಬ ಮನೋಭಾವನೆ ಇದೆ. ಆದರೆ ಪ್ರಧಾನಿಯಾಗುವುದು ಬಿಡುವುದು ಬೇರೆ ವಿಚಾರ. ಖರ್ಗೆಯವರು ಪ್ರಧಾನಿಯಾಗುವ ಸನ್ನಿವೇಶವೂ ಇಲ್ಲ.
|
5 |
+
ಹೊಸ ವರ್ಷದಲ್ಲೂ ಮುಂದುವರೆಯಲಿದೆಯಂತೆ ಇಸ್ರೇಲ್-ಹಮಾಸ್ ಯುದ್ಧ
|
6 |
+
ಖರ್ಗೆ ಎಐಸಿಸಿ ಅಧ್ಯಕ್ಷರಾದ ಮೇಲೆ ದಲಿತ ಸಮುದಾಯಗಳು ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾರಣವಾದವು. ಅಧಿಕಾರಕ್ಕೆ ಬಂದ ಮೇಲೆ ಅಹಿಂದ ನಾಯಕರಾದ ಸಿದ್ದರಾಮಯ್ಯನವರ ಹಿಂದೆ ಅಹಿಂದ ಎಂಬಂತಾಗಿದೆ ಎಂದು ಟೀಕಿಸಿದರು. ಅಧಿಕಾರಕ್ಕೆ ಬಂದ ನಂತರ ನೋಂದಣಿ ಮತ್ತು ಮುದ್ರಾಂಕ ಶುಲ್ಕ, ಅಬಕಾರಿ ಸುಂಕ, ವಿದ್ಯುತ್ ದರ ಹೆಚ್ಚಳ ಮಾಡಿ ಜನರಿಗೆ ಹೊರೆ ಹೊರಿಸಿದ್ದಾರೆ. ಅಲ್ಲದೆ ಮತ್ತೆ ಪ್ರತಿ ಯೂನಿಟ್ಗೆ 48 ಪೈಸೆ ವಿದ್ಯುತ್ ಹೆಚ್ಚಳ ಮಾಡಲು ಹೊರಟ್ಟಿದ್ದಾರೆ ಎಂದು ಆರೋಪಿಸಿದರು.
|
7 |
+
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಎನ್ಡಿಎ ಗೆಲುವು ಸಾಧಿಸಬೇಕೆಂಬುದು ನಮ್ಮ ಗುರಿಯಾಗಿದೆ ಎಂದ ಅವರು, ಪಠ್ಯ ಪುಸ್ತಕ ಮುದ್ರಣಕ್ಕೆ ಸಂಬಂಧಿಸಿದಂತೆಯೂ ಆರೋಪಗಳು ಕೇಳಿಬಂದಿವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ರಮೇಶ್ಗೌಡ ಉಪಸ್ಥಿತರಿದ್ದರು.
|
eesanje/url_46_276_5.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
14 ಬಜೆಟ್ ಮಂಡಿಸಿದ ಸಿಎಂಗೆ ಶಾಸಕ ಆರ್ಥಿಕ ಸಲಹೆಗಾರನಂತೆ : ಕುಮಾರಸ್ವಾಮಿ ವ್ಯಂಗ್ಯ
|
2 |
+
ಬೆಂಗಳೂರು,ಡಿ.30- ಹದಿನಾಲ್ಕು ಬಾರಿ ದಾಖಲೆಯ ಆಯವ್ಯಯ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಶಾಸಕರನ್ನು ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದರು.
|
3 |
+
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅನುಭವಿ ಆರ್ಥಿಕ ಸಲಹೆಗಾರರನ್ನಾಗಿ ಮಾಡಿಕೊಂಡಿದ್ದರೆ ಅಭಿನಂದಿಸಬಹುದಿತ್ತು. ಆದರೆ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡಿದ್ದಾರೆ. ಅಲ್ಲದೆ ಆಡಳಿತ ಸುಧಾರಣಾ ಆಯೋಗಕ್ಕೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರನ್ನು ಹಾಗೂ ಮುಖ್ಯಮಂತ್ರಿಗಳ ಸಲಹೆಗಾರರನ್ನಾಗಿ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಅವರನ್ನು ನೇಮಕ ಮಾಡಿಕೊಂಡಿದ್ದಾರೆ. ಇವು ಗಂಜಿ ಕೇಂದ್ರಗಳೇ ಎಂದು ವಾಗ್ದಾಳಿ ನಡೆಸಿದರು.
|
4 |
+
ಈ ಹಿಂದೆ ಹಾರ್ನಹಳ್ಳಿ ರಾಮಸ್ವಾಮಿ ಅವರು ಇತ್ತೀಚೆಗೆ ನಿವೃತ್ತ ಐಎಎಸ್ ಅಧಿಕಾರಿ ವಿಜಯಭಾಸ್ಕರ್ ಅವರು ಆಡಳಿತ ಸುಧಾರಣಾ ಆಯೋಗದ ವರದಿಯನ್ನು ನೀಡಿದ್ದಾರೆ. ಅವುಗಳ ಅನುಷ್ಠಾನ ಎಷ್ಟರಮಟ್ಟಿಗೆ ಆಗಿದೆ ಎಂದರು. ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರ ನೇತೃತ್ವದ ಸದನದ ಸಮಿತಿ ಬಿಎಂಐಸಿ ಯೋಜನೆಗೆ ಸಂಬಂಧಿಸಿದಂತೆ ನೀಡಿದ ವರದಿ ಅನುಷ್ಠಾನ ಏಕೆ ಆಗಲಿಲ್ಲ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷಾ ವರದಿ ಸ್ವೀಕರಿಸಲಿಲ್ಲ ಎಂದು ಆರೋಪಿಸಿರುವ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದು ಏಳು ತಿಂಗಳು ಕಳೆದಿದೆ. ಇನ್ನೂ ಏಕೆ ವರದಿ ಸ್ವೀಕರಿಸಿಲ್ಲ ಎಂದು ಪ್ರಶ್ನಿಸಿದರು.
|
5 |
+
ಹೊಸ ವರ್ಷದಲ್ಲೂ ಮುಂದುವರೆಯಲಿದೆಯಂತೆ ಇಸ್ರೇಲ್-ಹಮಾಸ್ ಯುದ್ಧ
|
6 |
+
ಖಾಲಿ ಇರುವ ಹುದ್ದೆ ಭರ್ತಿ ಮಾಡಿ:ಖಾಸಗಿ ಸಂಸ್ಥೆಗಳ ಮುಖ್ಯಸ್ಥರನ್ನು ಕರೆದು ರಾಜ್ಯ ಮಟ್ಟದ ಉದ್ಯೋಗ ಮಾಡುವ ಬದಲು ಖಾಲಿ ಇರುವ ಎರಡೂವರೆ ಸಾವಿರ ವಿವಿಧ ಇಲಾಖೆಗಳ ಹುದ್ದೆಗಳನ್ನು ಭರ್ತಿ ಮಾಡಿ. ಕೌಶಲ್ಯ ಅಭಿವೃದ್ಧಿ ಹೆಸರಿನಲ್ಲಿ ಹಣ ತಿನ್ನುವ ಬದಲು ಯುವ ಸಮುದಾಯಕ್ಕೆ ಸೂಕ್ತ ಉದ್ಯೋಗ ತರಬೇತಿ ನೀಡಿ ಎಂದು ಆಗ್ರಹಿಸಿದರು. ವಿದೇಶಿ ಬಂಡವಾಳ ಹೂಡಿಕೆ ಶೇ.44ರಷ್ಟು ಕಡಿಮೆಯಾಗಿದೆ. 2022ರಲ್ಲಿ 5,20,000 ಕೋಟಿ ರೂ. ಬಂಡವಾಳ ಹೂಡಿಕೆಗೆ ಒಪ್ಪಂದವಾಗಿತ್ತು ಎಂದು ಹೇಳಿದರು. ಅದರಲ್ಲಿ ಎಷ್ಟು ಹೂಡಿಕೆಯಾಗಿದೆ. ದಾವೋಸ್ಗೆ ಹೋಗಲು 9 ಕೋಟಿ ರೂ.ಗೆ ಒಪ್ಪಿಗೆ ಪಡೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
|
7 |
+
ಕಳೆದ ಏಳು ತಿಂಗಳಲ್ಲಿ 5 ಗ್ಯಾರಂಟಿ ಯೋಜನೆಗಳ ಭಜತೆ ಬಿಟ್ಟರೆ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ. ಬೆಂಗಳೂರಿನಲ್ಲಿ 196 ಕಿ.ಮೀ ಸುರಂಗ ರಸ್ತೆ ನಿರ್ಮಾಣ ಮಾಡಲು ಎರಡು ಇಲಾಖೆಗಳ ನಡುವೆ ಜಟಾಪಟಿ ನಡೆಯುತ್ತಿದೆ. ರಾಜ್ಯದಲ್ಲಿ ತೀವ್ರ ಸ್ವರೂಪದ ಬರವಿದ್ದರೂ ರೈತರಿಗೆ ನೀಡಿದ್ದ 2000 ಪರಿಹಾರ ಧನವನ್ನು ಇನ್ನು ನೀಡಿಲ್���. ನೀಡಲು ಶಕ್ತಿಯೂ ಇಲ್ಲ. ಆದರೂ ನುಡಿದಂತೆ ನಡೆದಿದ್ದೇವೆ ಎಂದು ನಿತ್ಯ ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು. ಸರ್ಕಾರದ ವೈಫಲ್ಯಗಳನ್ನು ಮುಂದಿನ ಜಂಟಿ ಹಾಗೂ ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪ ಮಾಡುವುದಾಗಿ ಹೇಳಿದರು.
|
8 |
+
ತನಿಖೆಗೆ ಆಗ್ರಹ:ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಹಿಂದಿನ ಸರ್ಕಾರದ ಕೋವಿಡ್ ಅವಧಿಯಲ್ಲಿ 40 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಆರೋಪಿಸಿರುವುದು ನಂಬಲಾಗುತ್ತದೆಯೇ? ಎಂದು ಪ್ರಶ್ನಿಸಿದ ಅವರು, ಈ ವಿಚಾರದ ಸತ್ಯಾಸತ್ಯತೆಯನ್ನು ಹೊರಗೆ ತರಲು ಸರ್ಕಾರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
|
9 |
+
ನಕಲಿ ಎಂಬಿಎ ಕೋರ್ಸ್ ಬಗ್ಗೆ ಇರಲಿ ಎಚ್ಚರ
|
10 |
+
ಸರ್ಕಾರದ ಬಳಿ ಅಂಕಿಅಂಶಗಳಿವೆ, ಕೋವಿಡ್ ಅವಧಿಯಲ್ಲಿ ಎಷ್ಟು ಹಣ ಬಿಡುಗಡೆಯಾಯ್ತು ಎಂಬುದನ್ನು ಹೇಳಬೇಕಲ್ಲವೇ? ಅದನ್ನು ಬಿಟ್ಟು ರಾಜಕೀಯಕ್ಕಾಗಿ ಬಳಕೆ ಮಾಡಿಕೊಳ್ಳುವುದಾದರೆ ಮಾಜಿ ವಿಧಾನಸಭಾಧ್ಯಕ್ಷ ರಮೇಶ್ಕುಮಾರ್ ಅವರು ಮೂರು ತಲೆಮಾರಿಗೆ ಆಗುವಷ್ಟು ಆಸ್ತಿ ಮಾಡಿದ್ದೇವೆ ಎಂದು ಹೇಳಿದ್ದರಲ್ಲವೇ, ಆ ವಿಚಾರವನ್ನು ನಾವು ಬಳಸಿಕೊಳ್ಳುತ್ತೇವೆ ಎಂದು ತಿಳಿಸಿದರು.
|
11 |
+
ಹಿಂದಿನ ಸರ್ಕಾರದಲ್ಲಿ ಲೋಪದೋಷಗಳು ನಡೆದಿಲ್ಲ ಎಂದಲ್ಲ. ಆದರೆ ಯತ್ನಾಳ್ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವುದು ಆ ಪಕ್ಷಕ್ಕೆ ಸೇರಿದ ವಿಚಾರವಾಗಿದ್ದು, ನಾವು ಮೂಗು ತೂರಿಸುವುದಿಲ್ಲ ಎಂದರು. ಪಾರದರ್ಶಕವಾಗಿರುವ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಯತ್ನಾಳ್ ಅವರ ಹೇಳಿಕೆಯನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.
|
eesanje/url_46_276_6.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಸಂವಿಧಾನದ ಧ್ಯೇಯೋದ್ದೇಶಗಳ ಜಾರಿ ಸರ್ಕಾರದ ಜವಾಬ್ದಾರಿ : ಸಿಎಂ
|
2 |
+
ಬೆಂಗಳೂರು,ಡಿ.30- ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸಿ, ಸಂವಿಧಾನದ ಆಶಯಗಳನ್ನು ಈಡೇರಿಸಿ, ದುರ್ಬಲ ವರ್ಗದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನಿಡುಮಾಮಿಡಿ ಶ್ರೀ ಪೀಠಾರೋಹಣ 33 ಸಮಾರಂಭ ಮತ್ತು ಹೋರಾಟಕ್ಕೆ ಸಾವಿಲ್ಲ ಮತ್ತು ಓಲೆ ಒಳಧ್ವನಿ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.
|
3 |
+
ಸಮಾಜ ಬದಲಾವಣೆಯಾಗಬೇಕು. ಸಮಾಜದಲ್ಲಿನ ವೈರುಧ್ಯಗಳು, ಜಾತೀಯತೆ, ಅಸಮಾನತೆಗಳು ತೊಲಗಬೇಕು. ಆಗ ಮಾತ್ರ ಸಮಾಜ ಪರಿವರ್ತನೆಯಾಗಲು ಸಾಧ್ಯ. ಸಮಸಮಾಜ ನಿರ್ಮಾಣವಾಗಲು ಅಸಮಾನತೆ ತೊಲಗಲೇಬೇಕು ಎಂದರು. ಮನುಷ್ಯನ ಸ್ವಾರ್ಥದಿಂದ ಸಮಾಜದಲ್ಲಿ ಅಸಮಾನತೆ ಉಂಟಾಗಿದೆ. ಆದ್ದರಿಂದ ಡಾ.ಅಂಬೇಡ್ಕರ್ ಅವರು ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ನೀಗಿಸದೇ ಹೋದರೆ ದೇಶಕ್ಕೆ ಸ್ವಾತಂತ್ರ್ಯ ದೊರೆತರೂ ಪ್ರಯೋಜನವಿಲ್ಲ ಎಂದಿದ್ದರು.
|
4 |
+
ಸಾಮಾಜಿಕ ನ್ಯಾಯದ ತಳಹದಿಯ ಪ್ರಜಾಪ್ರಭುತ್ವ ನಿಲ್ಲಬೇಕು ಎಂದು ಪ್ರತಿಪಾದಿಸಿದ್ದರು. ಹಿಂದುಳಿದವರಿಗೆ ಆರ್ಥಿಕ , ಸಾಮಾಜಿಕ ಸಮಾನತೆ ದೊರೆತಾಗ ಮಾತ್ರ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ. ಈ ಅಂಶವನ್ನು ಗಮನದಲ್ಲಿರಿಸಿ ಕಾರ್ಯನಿರ್ವಹಿಸುವುದು ಎಲ್ಲರ ಜವಾಬ್ದಾರಿ ಎಂದರು.
|
5 |
+
ಹೊಸ ವರ್ಷದಲ್ಲೂ ಮುಂದುವರೆಯಲಿದೆಯಂತೆ ಇಸ್ರೇಲ್-ಹಮಾಸ್ ಯುದ್ಧ
|
6 |
+
ಹೋರಾಟಗಳು ಅಹಿಂಸಾತ್ಮಕವಾಗಿರಬೇಕು:ಮನುಷ್ಯತ್ವ ಅಂತಿಮ ಗುರಿಯಾಗಬೇಕು. ಅಲ್ಪಮಾನವರಾಗದೇ, ವಿಶ್ವಮಾನವರಾಗುವತ್ತ ನಮ್ಮೆಲ್ಲರ ಪ್ರಯತ್ನವಿರಬೇಕು. ಸಾಮಾಜಿಕ ಹಾಗೂ ಆರ್ಥಿಕ ಚಟುವಟಿಕೆಗಳ ಮೂಲಕ ಸಮಾಜದಲ್ಲಿ ಚಲನೆ ಉಂಟಾಗುತ್ತದೆ. ಸಮಾಜದಲ್ಲಿ ಬದಲಾವಣೆ ಆಗುವವರೆಗೂ ಹೋರಾಟ ನಡೆಸುವ ಗುರಿಯಿಂದಲೇ ಹೋರಾಟಕ್ಕೆ ಸಾವಿಲ್ಲ ಎಂಬ ಕೃತಿಯನ್ನು ಹೊರತರಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟವನ್ನು ಹತ್ತಿಕ್ಕಬಾರದು. ಆದರೆ ಹೋರಾಟಗಳು ಅಹಿಂಸಾತ್ಮಕವಾಗಿರಬೇಕು ಎಂದು ಹೇಳಿದರು.
|
7 |
+
ಮಾನವೀಯ ಸಮಾಜ ನಿರ್ಮಾಣ ಗುರಿ ಹೊಂದಿರುವ ಮಠ:ಚಿಕ್ಕಬಳ್ಳಾಪುರ ಶ್ರೀ ನಿಡುಮಾಮಿಡಿ ಮಠದ ವತಿಯಿಂದ ಧಾರ್ಮಿಕ ಚಟುವಟಿಕೆಗಳು, ಶಿಕ್ಷಣ ಸಂಸ್ಥೆಗಳು ನಡೆಯುತ್ತವೆ. ಶ್ರೀ ಮಠವು ಯಾವುದೇ ಜಾತಿ, ಧರ್ಮ, ಸಂಸ್ಕøತಿಗಳಿಗೆ ಮೀಸಲಾಗದ ಜಾತ್ಯಾತೀತವಾದ ಮಾನವ ಧರ್ಮ ಪೀಠ ಎನಿಸಿದೆ. ಸ್ವಾಮೀಜಿಗಳು ನಿರ್ಭೀತಿಯಿಂದ ನಿಷ್ಕಲ್ಮಶವಾಗಿ ಜಾತ್ಯಾತೀತ ಮಾನವೀಯ ಸಮಾಜ ಸ್ಥಾಪನೆಯಾಗಬೇಕೆಂಬ ಆಶಯವನ್ನು ಹೊಂದಿದ್ದು, ತಮ್ಮ ಜೀವನದುದ್ದಕ್ಜೂ ಆ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಮಾನವ ಧರ್ಮ ಸ್ಥಾಪಿಸುವ ಶ್ರೀಮಠದ ಗುರಿ ಈಡೇರಿಕೆಗೆ ಸರ್ಕಾರ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ ಎಂದರು.
|
eesanje/url_46_276_7.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಜ.17 ರಿಂದ ಬೆಂಗಳೂರಿನಿಂದ ಅಯೋಧ್ಯೆಗೆ ವಿಮಾನ ಸೇವೆ
|
2 |
+
ಬೆಂಗಳೂರು,ಡಿ.30- ಮುಂದಿನ ಜನವರಿ 17 ರಿಂದ ಏರ್ಇಂಡಿಯಾ ಎಕ್ಸ್ಪ್ರೆಸ್ ಬೆಂಗಳೂರು ಮತ್ತು ಕೋಲ್ಕತ್ತಾದಿಂದ ಅಯ್ಯೋಧ್ಯೆಗೆ ನೇರ ವಿಮಾನ ಸೇವೆ ನೀಡಲಿದೆ. ಜನವರಿ 17ರಂದು ಬೆಂಗಳೂರು-ಅಯೋಧ್ಯೆ ಮಾರ್ಗದ ಮೊದಲ ವಿಮಾನಯಾನ ಆರಂಭವಾಗಲಿದೆ. ಈ ವಿಮಾನವು ಜನವರಿ 17ರ ಬೆಳಗ್ಗೆ 8.05 ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು 10.35 ಕ್ಕೆ ಅಯೋಧ್ಯೆ ತಲುಪಲಿದೆ. ಬಳಿಕ ಅಯೋಧ್ಯೆಯಿಂದ 3.40 ಕ್ಕೆ ಹೊರಟು ಸಂಜೆ 6.10 ಕ್ಕೆ ಬೆಂಗಳೂರು ತಲುಪಲಿದೆ.
|
3 |
+
ಅಯೋಧ್ಯೆ ಶ್ರೀ ರಾಮಮಂದಿರ ಉದ್ಘಾಟನೆಯ ಸಮಯದಲ್ಲಿ ಹಾಗೂ ಉದ್ಘಾಟನೆಯ ಬಳಿಕ ಅಯೋಧ್ಯೆಯತ್ತ ತೆರಳುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಹೀಗಾಗಿ ಪ್ರಯಾಣಿಕರ ಹಿತದೃಷ್ಟಿಯಿಂದ ಏರ್ ಇಂಡಿಯಾ ಜನವರಿ 17ರಿಂದ ಪ್ರತಿದಿನ ಬೆಂಗಳೂರಿನಿಂದ ಅಯೋಧ್ಯೆಗೆ ನೇರ ವಿಮಾನಯಾನ ಆರಂಭಿಸಲಿದೆ.
|
4 |
+
ಬೆಂಗಳೂರಿನಿಂದ ಅಯೋಧ್ಯೆಗೆ ನೇರ ವಿಮಾನಯಾನದ ಬಗ್ಗೆ ಏರ್ಇಂಡಿಯಾ ವೆಬ್ಸೈಟ್ ಮತ್ತು ಆಪ್ಗಳಲ್ಲಿ ಮಾಹಿತಿ ನೀಡಲಾಗಿದ್ದು, ವಿಮಾನಯಾನದ ವೇಳಾಪಟ್ಟಿ ಮತ್ತು ಟಿಕೆಟ್ ಬುಕಿಂಗ್ ವ್ಯವಸ್ಥೆ ಕೂಡ ಇದೆ. ಈ ಬಗ್ಗೆ ಏರ್ ಇಂಡಿಯಾ ಎಕ್ಸ್ಪ್ರೆಸ್ ಮುಖ್ಯ ವಾಣಿಜ್ಯ ಅಧಿಕಾರಿ ಅಂಕುರ್ ಗಾರ್ಗ್ ಮಾತನಾಡಿ, ಭಾರತದಾದ್ಯಂತ ಸಂಪರ್ಕಿಸುವ ವಾಯು ಮಾರ್ಗ ಕಾರ್ಯಾಚರಣೆಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ನಮ್ಮ ಬದ್ಧತೆಯು ಅಚಲವಾಗಿದೆ. ಅಯೋಧ್ಯೆಯನ್ನು ನವದೆಹಲಿ, ಬೆಂಗಳೂರು, ಕೋಲ್ಕತ್ತಾ ಜೊತೆಗೆ ಜೋಡಿಸುವ ಕೆಲಸವು ಈ ಬದ್ಧತೆಯನ್ನು ದೃಢಪಡಿಸುತ್ತದೆ.
|
5 |
+
ಹೊಸ ವರ್ಷದಲ್ಲೂ ಮುಂದುವರೆಯಲಿದೆಯಂತೆ ಇಸ್ರೇಲ್-ಹಮಾಸ್ ಯುದ್ಧ
|
6 |
+
ಇನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಅಯೋಧ್ಯೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇನ್ನು ಉದ್ಘಾಟನೆಗೆ ಸಕಲ ಸಿದ್ಧತೆಗಳು ಅಂತಿಮಗೊಂಡಿದ್ದು, ಗೋಡೆಗಳ ಮೇಲೆ ವರ್ಣ ಚಿತ್ರಗಳ ಜೊತೆ ಹೂವಿನ ಅಲಂಕಾರ ಪ್ರಯಾಣಿಕರನ್ನು ಅಯೋಧ್ಯೆ ವಿಮಾನ ನಿಲ್ದಾಣದತ್ತ ಸೆಳೆಯುತ್ತಿದೆ.
|
eesanje/url_46_276_8.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಕನ್ನಡ ಹೋರಾಟಗಾರರನ್ನು ಬಿಡುಗಡೆಗೊಳಿಸದಿದ್ದರೆ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಕೆ
|
2 |
+
ಬೆಂಗಳೂರು,ಡಿ.30- ಕನ್ನಡಪರ ಹೋರಾಟಗಾರರನ್ನು ಕೂಡಲೇ ಬಿಡುಗಡೆಗೊಳಿಸದಿದ್ದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕನ್ನಡಪರ ಸಂಘಟನೆಗಳು ಶಕ್ತಿ ಪ್ರದರ್ಶನ ಮಾಡಲಿವೆ ಎಂದು ಕರವೇ ಕನ್ನಡಿಗರ ಧ್ವನಿ ರಾಜ್ಯಾಧ್ಯಕ್ಷರಾದ ಅನಿಲ್ ಕುಮಾರ್ ಎಚ್ಚರಿಸಿದ್ದಾರೆ.
|
3 |
+
ಸರ್ಕಾರ ತಾನು ಹೊರಡಿಸಿರುವ ಆದೇಶವನ್ನು ಪಾಲಿಸಲು ಸಾಧ್ಯವಾಗದ ಹಾಗೂ ದಪ್ಪ ಚರ್ಮದ ಸರ್ಕಾರಿ(ತನ್ನ) ಅಧಿಕಾರಿಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಆಗದ ಕಾರಣ, ಕೊನೆಯ ಅಸ್ತ್ರ ಯಾರು ಪ್ರಶ್ನಿಸುತ್ತಾರೋ ಅವರನ್ನು ಬಂಧಿಸುವುದು, ಜೈಲಿಗೆ ಹಟ್ಟುವುದು ಇತರ ಹೋರಾಟಗಾರರನ್ನು, ಪೊಲೀಸರನ್ನು ಬಳಸಿಕೊಂಡು ನಿಯಂತ್ರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
|
4 |
+
ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಯೋಚಿಸಬೇಕಾದ ವಿಚಾರವೆಂದರೆ ತಾವುಗಳು ಅಧಿಕಾರಕ್ಕೆ ಬರುವುದಕ್ಕೆ ಕನ್ನಡಪರ ಸಂಘಟನೆಗಳು ಯಾವ ರೀತಿ ತಮಗೆ ಬೆಂಬಲಿಸಿವೆ ತಾವು ಮನವರಿಕೆ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
|
5 |
+
ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಪೋಟ, ಅಪರಿಚಿತ ವ್ಯಕ್ತಿಗಳ ವಿರುದ್ದ ಎಫ್ಐಆರ್
|
6 |
+
ಇದನ್ನು ಬಿಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ನಾವು ಕನ್ನಡದ ಪರ ಇದ್ದೇವೆ ಎಂದು ಘರ್ಜಿಸುತ್ತಿದ್ದೀರಿ. ಇದೆಲ್ಲಾದಕ್ಕೂ ಉತ್ತರ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕನ್ನಡಪರ ಸಂಘಟನೆಗಳು ತಮಗೆ ಪಾಠ ಕಲಿಸುತ್ತವೆ ಎಂದು ಎಚ್ಚರಿಸಿದ್ದಾರೆ.
|
7 |
+
ಕನ್ನಡಪರ ಹೋರಾಟಗಾರರಿಗೆ ಪೊಲೀಸ್ ಏಟು ,ಬಂಧನ , ಧಮ್ಕಿಗಳು ಇವೆಲ್ಲವೂ ಸಹಜ ನ್ಯಾಯಾಂಗ ಬಂಧನದಲ್ಲಿರುವ ಕನ್ನಡಪರ ಹೋರಾಟಗಾರರಿಗೆ ಶಕ್ತಿ ತುಂಬುವ ಕೆಲಸ ನಾವು ಮಾಡಬೇಕಿದೆ. ಕರವೇ ಕನ್ನಡಿಗರ ಧ್ವನಿ ಸಂಘಟನೆ ಮುಂದಿನ ಎಲ್ಲಾ ಹೋರಾಟಕ್ಕೂ ಸಂಪೂರ್ಣ ಬೆಂಬಲವನ್ನು ನೀಡುತ್ತದೆ ಎಂದು ಹೇಳಿದ್ದಾರೆ.
|
eesanje/url_46_276_9.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಕನ್ನಡ ಹೋರಾಟಗಾರರ ಬಂಧನದಿಂದ ದುಃಖವಾಗಿದೆ: ಬೊಮ್ಮಾಯಿ
|
2 |
+
ಬೆಂಗಳೂರು, ಡಿ.29- ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಕನ್ನಡ ಹೋರಾಟಗಾರರನ್ನು ಜೈಲಿಗೆ ಹಾಕಿರುವುದು ದುಃಖವಾಗಿದ್ದು, ಕನ್ನಡ ಹೋರಾಟಗಾರರನ್ನು ನಾವು ಬೆಂಬಲಿಸಬೇಕು. ಸರ್ಕಾರ ಸರಿಯಾಗಿ ಕಾನೂನು ಅನುಷ್ಠಾನ ಮಾಡದಿರುವುದಕ್ಕೆ ಕನ್ನಡಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.
|
3 |
+
ಕನ್ನಡ ಸಾಹಿತ್ಯ ಪರಿಷತ್ ಏರ್ಪಡಿಸಿದ್ದ ರಾಷ್ಟ್ರಕವಿ ಕುವೆಂಪು ಅವರ ನವೀಕೃತ ಸಭಾಂಗಣ ಹಾಗೂ ಕುವೆಂಪು ಜನ ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾನು ಸಿಎಂ ಆಗಿದ್ದಾಗ ಸುಮಾರುಎರಡು ಸಾವಿರ ಕನ್ನಡ ಹೋರಾಟಗಾರರ ಪ್ರಕರಣಗಳನ್ನು ವಾಪಸ್ ಪಡೆದಿದ್ದೆವು. ನಾಮಫಲಕಗಳಲ್ಲಿ ಕಡ್ಡಾಯ ಕನ್ನಡ ಅನುಷ್ಠಾನ ಮಾಡದಿರುವುದರಿಂದ ಈ ಪರಿಸ್ಥಿತಿ ಬಂದಿದೆ. ಆಡಳಿತಗಾರರಿಗೆ ಸೂಕ್ಷ್ಮತೆ ಇರಬೇಕು ಎಂದು ಹೇಳಿದರು.
|
4 |
+
ಯಾವ ನಾಡಿನಲ್ಲಿ ಕಾನೂನು ಅನುಷ್ಠಾನ ಮಾಡುವ ವ್ಯವಸ್ಥೆ ಇರುತ್ತದೆಯೋ ಅಲ್ಲಿ ಈ ರೀತಿಯ ಪ್ರತಿಭಟನೆಗಳು ನಡೆಯುವುದಿಲ್ಲ. ಕನ್ನಡದ ಉಳಿವಿಗೆ ಕನ್ನಡ ಸಾಹಿತ್ಯ ಪರಿಷತ್ತು ಸಾಕಷ್ಟು ಶ್ರಮ ಹಾಕಿದೆ. ಕನ್ನಡ ನಿತ್ಯ ನಿರಂತರವಾಗಿರಬೇಕೆಂದರೆ ಕನ್ನಡಿಗರು ಜಾಗೃತರಾಗಿರಬೇಕು ಎಂದರು.
|
5 |
+
‘ಮೋದಿ ಮತ್ತೆ ಬರಲಿದ್ದಾರೆ’ ಎಂಬ ಘೋಷ ವಾಕ್ಯದೊಂದಿಗೆ ಅಖಾಡಕ್ಕೆ ಧುಮುಕಿದ ಬಿಜೆಪಿ
|
6 |
+
ಕುವೆಂಪು ವಿಶ್ವಮಾನವ:ಕುವೆಂಪು ಅವರು ಅಪರೂಪದ ವ್ಯಕ್ತಿತ್ವ. ಒಂದು ರೀತಿಯಲ್ಲಿ ಅವರು ಯುಗಪುರುಷರು ಅಂತ ಹೇಳಲು ಬಯಸುತ್ತೇನೆ. ಅವರನ್ನು ಆಳವಾಗಿ ನೋಡಿದಾಗ ಅತ್ಯಂತ ಮಾನವೀಯ ಗುಣಗಳಿರುವ ವ್ಯಕ್ತಿ. ವಿಸ್ತಾರವಾಗಿ ನೋಡಿದಾಗ ವಿಶ್ವ ಮಾನವರಾಗಿ ಕಾಣುತ್ತಾರೆ ಎಂದು ಗುಣಗಾನ ಮಾಡಿದರು.
|
7 |
+
ವೈಚಾರಿಕತೆಯಲ್ಲಿ ಅವರು ಜಗಜ್ಯೋತಿ ಬಸವಣ್ಣನವರ ವಿಚಾರಗಳನ್ನು ವಿಮರ್ಶೆ ಮಾಡಿದ್ದಾರೆ. ಎಲ್ಲಿ ನೋಡಿದರೂ ಅವರ ಚಿಂತನೆ ಮತ್ತು ಸಾಹಿತ್ಯ ಇದೆ. ಹೀಗಾಗಿ ಈಗಲೂ ಕುವೆಂಪು ಜೀವಂತವಾಗಿದ್ದಾರೆ. ಅವರ ಸಾಹಿತ್ಯದಲ್ಲಿ ಎಲ್ಲದಕ್ಕೂ ಪರಿಹಾರ ಇದೆ. ಎಲ್ಲವನ್ನೂ ಸ್ವೀಕರಿಸುವ ಗುಣ ಅವರಿಗೆ ಇದ್ದಿದ್ದರಿಂದ ಕುವೆಂಪು ವಿಶ್ವ ಮಾನವರಾಗಲು ಕಾರಣವಾಯಿತು ಎಂದು ಬಸವರಾಜ ಬೊಮ್ಮಾಯಿ ಹೇಳಿದರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ ಜೋಶಿ ಹಾಗೂ ಮತ್ತಿತರರು ಹಾಜರಿದ್ದರು.
|
eesanje/url_46_277_1.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಹೋರಾಟಗಾರರ ಬಿಡುಗಡೆಗಾಗಿ ಕೆರಳಿದ ಕನ್ನಡಿಗರು
|
2 |
+
ಬೆಂಗಳೂರು,ಡಿ.29- ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಸೇರಿದಂತೆ 50 ಕ್ಕೂ ಹೆಚ್ಚು ಪ್ರಮುಖ ಕಾರ್ಯಕರ್ತರನ್ನು ಬಂಧಿಸಿದ ಬೆನ್ನಲ್ಲೇ ಹೋರಾಟದ ಕಿಚ್ಚು ತೀವ್ರ ಸ್ವರೂಪ ಪಡೆದುಕೊಂಡು ಸಂಘಟನೆಗಳಲ್ಲಿ ಹಿಂದೆಂದೂ ಕಾಣದಂತಹ ಒಗ್ಗಟ್ಟು ಕಂಡುಬಂದಿದೆ. ವಾಣಿಜ್ಯ ಮಳಿಗೆಗಳು, ಉದ್ಯಮಗಳು ಹಾಗೂ ಇತರ ಸಂಸ್ಥೆಗಳ ನಾಮಫಲಕದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು ಎಂಬ ಒತ್ತಾಯಕ್ಕಾಗಿ ಕರವೇ ಕಾರ್ಯಕರ್ತರು ಕಳೆದ ಒಂದು ವಾರದಿಂದಲೂ ಅಲ್ಲಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದವು.
|
3 |
+
ನಿನ್ನೆ ಏಕಕಾಲಕ್ಕೆ ಬೆಂಗಳೂರಿನಾದ್ಯಂತ ನಡೆದ ಪ್ರತಿಭಟನೆಯಲ್ಲಿ ಹಲವು ಕಡೆ ಖಾಸಗಿ ಸಂಸ್ಥೆಗಳ ನಾಮಫಲಕಗಳನ್ನು ಫ್ಲೆಕ್ಸ್, ಹೋರ್ಡಿಂಗ್ ಮತ್ತು ಫಲಕಗಳನ್ನು ಕರವೇ ಕಾರ್ಯಕರ್ತರು ಧ್ವಂಸಗೊಳಿಸಿದ್ದರು. ಪೊಲೀಸರೊಂದಿಗೂ ಸಂಘರ್ಷದ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಟಿ.ಎ.ನಾರಾಯಣಗೌಡ ಅವರ ನೇತೃತ್ವದ ತಂಡವನ್ನು ಪೊಲೀಸರು ಬಂಸಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
|
4 |
+
ಕೆಲವು ಕಾರ್ಯಕರ್ತರಿಗೆ ಜಾಮೀನು ಸಿಕ್ಕಿದೆಯಾದರೂ, ಪ್ರಮುಖರಿಗೆ ನ್ಯಾಯಾಂಗ ಬಂಧನ ಮುಂದುವರೆದಿದೆ. ಇದು ಕನ್ನಡ ಸಂಘಟನೆಗಳ ಕಿಚ್ಚಿಗೆ ಕಾರಣವಾಗಿದೆ. ಕರವೇ ಬೆಂಬಲಕ್ಕೆ ಇತರ ಕನ್ನಡ ಪರ ರೈತ ಸಂಘಟನೆಗಳು ನಿಂತಿವೆ. ನಾರಾಯಣಗೌಡ ಅವರ ಬಂಧನವನ್ನು ಖಂಡಿಸಿ ಬೆಂಗಳೂರಿನಾದ್ಯಂತ ಸರಣಿ ಪ್ರತಿಭಟನೆಗಳು ಆಯೋಜನೆಗೊಂಡಿವೆ.
|
5 |
+
ಕನ್ನಡಪರ ಹೋರಾಟಗಾರರಾದ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದ್, ಪ್ರವೀಣ್ ಶೆಟ್ಟಿ, ಎನ್.ಕುಮಾರ್ ಸೇರಿದಂತೆ ಹಲವು ನಾಯಕರು ಬೀದಿಗಿಳಿದಿದ್ದಾರೆ. ಜಲ ಸಂರಕ್ಷಣಾ ಸಮಿತಿಯ ರೈತ ಮುಖಂಡರು, ಅಮ್ ಆದ್ಮಿ ಪಕ್ಷವು ನಾರಾಯಣಗೌಡರಿಗೆ ಬೆಂಬಲ ವ್ಯಕ್ತಪಡಿಸಿ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದೆ.
|
6 |
+
ನಿನ್ನೆ ವಾಟಾಳ್ ನಾಗರಾಜ್ ಅವರು ತುರ್ತು ಪತ್ರಿಕಾಗೋಷ್ಠಿ ನಡೆಸಿ ಬಂತ ಹೋರಾಟಗಾರರ ಬಿಡುಗಡೆಗೆ 24 ಗಂಟೆಗಳ ಗಡುವು ನೀಡಿದ್ದರು. ಶುಕ್ರವಾರ ಸಂಜೆಯೊಳಗಾಗಿ ಹೋರಾಟಗಾರರನ್ನು ಬಿಡುಗಡೆಗೊಳಿಸದೇ ಇದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ತಿಳಿಸಿದರು. ಈ ಮೊದಲು ಕಾವೇರಿ ವಿಷಯವಾಗಿ ಕರ್ನಾಟಕ ಬಂದ್ ಸಂದರ್ಭದಲ್ಲಿ ನಾರಾಯಣಗೌಡ ಮತ್ತು ವಾಟಾಳ್ ನಾಗರಾಜ್ ಅವರ ನಡುವೆ ಭಿನ್ನ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ವಾಟಾಳ್ ನಾಗರಾಜ್ ಅವರು ಕರ್ನಾಟಕ ಬಂದ್ಗೆ ಕರೆ ನೀಡಿದರೆ, ನಾರಾಯಣಗೌಡರು ನೈತಿಕ ಬೆಂಬಲ ನೀಡುವುದಾಗಿ ತಿಳಿಸಿದರು.
|
7 |
+
ಹೂಡಿಕೆಯ ನೆಪದಲ್ಲಿ ನಾಡು-ನುಡಿ ಕಡೆಗಣನೆ : ಮುಖ್ಯಮಂತ್ರಿ ಚಂದ್ರು ಆಕ್ರೋಶ
|
8 |
+
ಆದರೆ ನಿನ್ನೆ ನಾರಾಯಣಗೌಡರ ಬಂಧನದ ಬಳಿಕ ಎಲ್ಲಾ ಸಂಘಟನೆಗಳಲ್ಲೂ ಒಗ್ಗಟ್ಟು ಕಂಡುಬಂದಿದೆ. ಕನ್ನಡ ಹೋರಾಟಗಾರರ ವಿರುದ್ಧ ಸರ್ಕಾರ ತೆಗೆದುಕೊಂಡ ಕಠಿಣ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.ನಾರಾಯಣಗೌಡ ಹಾಗೂ ಅವರ ತಂಡ ಭಾಷೆ ಹಾಗೂ ಅದರ ಅಸ್ಮಿತೆಗಾಗಿ ಹೋರಾಟ ನಡೆಸಿದೆ. ಇಂತಹ ಸಂದರ್ಭದಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದು ಸಹಿಸಲಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
|
9 |
+
ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ತುರ್ತು ಸಭೆ ನಡೆಸಿ ಕನ್ನಡ ಭಾಷೆಯ ನಾಮಫಲಕಗಳನ್ನು ಕಡ್ಡಾಯಗೊಳಿಸುವುದಾಗಿ ಪ್ರಕಟಿಸಿದ್ದಾರೆ. ಒಂದೆಡೆ ಸರ್ಕಾರ ಕನ್ನಡಾನುಷ್ಠಾನಕ್ಕೆ ಬದ್ಧವಾಗಿರುವುದಾಗಿ ಹೇಳುತ್ತಲೇ, ಮತ್ತೊಂದೆಡೆ ಕನ್ನಡಪರ ಹೋರಾಟಗಾರರ ವಿರುದ್ಧ ಕ್ರಮ ಕೈಗೊಳ್ಳುತ್ತಿರುವುದಕ್ಕೆ ತೀವ್ರ ವಿರೋಧಗಳು ವ್ಯಕ್ತವಾಗಿವೆ.
|
eesanje/url_46_277_10.txt
ADDED
@@ -0,0 +1,14 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
‘ಕನ್ನಡದ ಕಟ್ಟಾಳು’ ಸಿದ್ದರಾಮಯ್ಯ ಕಾಲದಲ್ಲೇ ಜೈಲು ಸೇರಿದ ಕನ್ನಡ ಹೋರಾಟಗಾರರು
|
2 |
+
ಬೆಂಗಳೂರು,ಡಿ.28- ಕನ್ನಡ ಭಾಷೆಯ ಅಸ್ಮಿತೆಯ ವಿಷಯ ಬಂದಾಗ ಇಡೀ ಸರ್ಕಾರವೇ ಬಂಡವಾಳಶಾಹಿಯ ಪಾದದ ಬುಡದಲ್ಲಿ ತಲೆಯಿಟ್ಟು ಮಲಗಿದಂತಹ ಅಸಹನೀಯ ಸ್ಥಿತಿ ಕಂಡುಬರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯಅವರ ರಾಜಕೀಯ ಜೀವನದ ಪ್ರಬುದ್ಧಮಾನ ಆರಂಭಗೊಂಡಿದ್ದೇ ಕನ್ನಡ ಕಾವಲು ಸಮಿತಿಯ ಅಧ್ಯಕ್ಷ ಸ್ಥಾನದಿಂದ. ಈಗಲೂ ಸಿದ್ದರಾಮಯ್ಯ ಅವರ ಭಾಷಾಭಿಮಾನ ಬದ್ಧತೆ ಪ್ರಶ್ನಾತೀತ. ಆದರೆ ಕನ್ನಡ ಅನುಷ್ಠಾನದ ವಿಷಯ ಬಂದಾಗ ನೀನು ಒಡೆದಂತೆ ಮಾಡು, ನಾನು ಅತ್ತಂತೆ ಮಾಡುತ್ತೇನೆ ಎಂಬ ಬೂಟಾಟಿಕೆ ಧೋರಣೆ ಸರ್ಕಾರದಲ್ಲಿ ಕಂಡುಬರುತ್ತಿದೆ.
|
3 |
+
ಬೆಂಗಳೂರನ್ನು ಅಘೋಷಿತವಾಗಿ ಸಿಲಿಕಾನ್ ಸಿಟಿ ಎಂದು ಬೆನ್ನು ತಟ್ಟಿಕೊಳ್ಳುವ ಸರ್ಕಾರದ ಪ್ರತಿನಿಗಳು ಕನ್ನಡದ ವಿಷಯ ಬಂದಾಗ ದೊಡ್ಡ ದೊಡ್ಡ ಮಾತುಗಳು ಹೇಳುತ್ತಾರೆಯೇ ಹೊರತು, ಅಕ್ಷರಶಃ ಪಾಲನೆಯಾಗುವುದಿಲ್ಲ. ಬೆಂಗಳೂರಷ್ಟೇ ಅಲ್ಲ, ರಾಜ್ಯದಲ್ಲಿ ಕನ್ನಡಿಗರು ಅನಾಥರು ಎಂಬ ವಾತಾವರಣ ನಿರ್ಮಾಣವಾಗಿದೆ. ಶಿವಾಜಿನಗರದ ಭಾಗದಲ್ಲಿ ಒಂದು ಭಾಷೆಯಾದರೆ, ಸಿಟಿ ಮಾರುಕಟ್ಟೆಯಲ್ಲಿ ಮತ್ತೊಂದು ಭಾಷೆ. ಚಿಕ್ಕಪೇಟೆಯಲ್ಲಿ ಇನ್ನೊಂದು ಭಾಷಾ ಹಾವಳಿ. ಪೂರ್ವ ಭಾಗದಲ್ಲಿ ನೆರೆ ರಾಜ್ಯದವರ ಅಪತ್ಯಗಳು ಮಿತಿಮೀರಿವೆ.
|
4 |
+
ಕನ್ನಡಿಗರು ಭಾಷಾ ಅಲ್ಪಸಂಖ್ಯಾತರಷ್ಟೇ ಅಲ್ಲ. ಆರ್ಥಿಕ ಮತ್ತು ಔದ್ಯೋಗಿಕ ಅವಕಾಶಗಳಲ್ಲೂ ವಂಚನೆಗೊಳಗಾಗುತ್ತಿದ್ದಾರೆ. ಸರ್ಕಾರದ ಗುತ್ತಿಗೆಯಲ್ಲಂತೂ ನೆರೆಯ ಆಂಧ್ರ ಪ್ರದೇಶದವರ ಪ್ರಾಬಲ್ಯವನ್ನು ಮೆಟ್ಟಿ ನಿಲ್ಲಲು ಸಾಧ್ಯವೇ ಆಗಿಲ್ಲ. ಅದರಲ್ಲೂ ಅನ್ಯ ಭಾಷಿಗ ಐಎಎಸ್ ಅಕಾರಿಗಳು ಸರ್ಕಾರದ ಸೇವೆ, ಗುತ್ತಿಗೆ ವಿಷಯ ಬಂದಾಗ ಕನ್ನಡಿಗರನ್ನು ನಿರ್ಲಕ್ಷ್ಯ ಧೋರಣೆಯಿಂದ ಕಾಣುತ್ತಿರುವುದು ಸ್ಪಷ್ಟವಾಗುತ್ತಿದೆ.
|
5 |
+
ಐಟಿ-ಬಿಟಿ ಹೆಚ್ಚಾದ ಕಾಲಘಟ್ಟದಲ್ಲೇ ಕನ್ನಡ ಎರಡನೇ ದರ್ಜೆ ಭಾಷೆಯಾಗಿ ಪರಿಗಣಿಸಲ್ಪಡುತ್ತಿತ್ತು. ರಿಯಲ್ ಎಸ್ಟೇಟ್ ವ್ಯವಹಾರ ಹೆಚ್ಚಾಗುತ್ತಿದ್ದಂತೆ ಕನ್ನಡ ಎನ್ನಡ ಎಂಬಂತಾಗಿದೆ. ಅದರಲ್ಲೂ ಮಾಲ್ಗಳಲ್ಲಂತೂ ಕನ್ನಡ ಸಂಪೂರ್ಣ ಕಾಣೆಯಾಗಿ ಹೋಗಿದೆ.
|
6 |
+
ರೆಸ್ಟೊರೆಂಟ್, ಹೋಟೆಲ್ಗಳು, ಮಾಲ್ಗಳಲ್ಲಿ ಉತ್ತರ ಭಾರತೀಯರೇ ಹೆಚ್ಚು ಕಾಣಸಿಗುತ್ತಿದ್ದಾರೆ. ಕನ್ನಡಿಗರು ಮೈಬಗ್ಗಿಸಿ ಕೆಲಸ ಮಾಡುವುದಿಲ್ಲ. ಸ್ಥಳೀಯವಾಗಿ ರಾಜಕೀಯ ಮಾಡುತ್ತಾರೆಂಬ ಅಪವಾದವನ್ನು ಕನ್ನಡ ಉದ್ಯಮಿಗಳೇ ಮುಂದಿಡುವ ಮೂಲಕ ಕಡಿಮೆ ವೇತನಕ್ಕೆ ದೊರೆಯುವ ಅನ್ಯಭಾಷಿಗರನ್ನು ಕರೆತಂದು ಉದ್ಯೋಗವಕಾಶಗಳನ್ನು ಕಲ್ಪಿಸುತ್ತಿದ್ದಾರೆ. ಕಳೆದ ಆಗಸ್ಟ್ನಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡರು ಕನ್ನಡಕ್ಕೆ ಅಪಾಯವಿದೆ. ಇದನ್ನು ಸರಿಪಡಿಸಲು ಡಿಸೆಂಬರ್ವರೆಗೂ ಕಾಲಾವಕಾಶ ನೀಡುತ್ತೇವೆ. ಅನಂತರವೂ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಉಗ್ರ ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದರು.
|
7 |
+
4 ತಿ��ಗಳು ಕಳೆದರೂ ಸರ್ಕಾರ ಈ ನಿಟ್ಟಿನಲ್ಲಿ ಎಚ್ಚೆತ್ತುಕೊಳ್ಳಲೇ ಇಲ್ಲ. ಸೂಕ್ಷ್ಮಮತಿಯಾಗಿ ವರ್ತಿಸಲಿಲ್ಲ. ಕಳೆದ ವಾರದಿಂದ ಕರವೇಯ ಬಣ ಬೀದಿಗಿಳಿದು ಪ್ರತಿಭಟಿಸಲಾರಂಭಿಸಿತು. ಅಲ್ಲಲ್ಲಿ ಬಲಪ್ರಯೋಗಗಳಾಗಿರುವ ಘಟನೆಗಳೂ ವರದಿಯಾಗಿವೆ.
|
8 |
+
ಆಗಲೂ ಸರ್ಕಾರ ಕುಂಭಕರ್ಣ ನಿದ್ದೆಯಿಂದ ಬಿಟ್ಟೇಳಲಿಲ್ಲ. ಪ್ರತಿಭಟನೆ ವಿಪರೀತಗೊಳ್ಳುತ್ತಿದ್ದಂತೆ ಬಿಬಿಎಂಪಿ ಆಯುಕ್ತರು ಒಂದು ಸುತ್ತೋಲೆ ಹೊರಡಿಸಿ ಫೆ.28 ರೊಳಗೆ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಬಳಕೆಯನ್ನು ಅನುಷ್ಠಾನಕ್ಕೆ ತರಬೇಕು. ಇಲ್ಲವಾದರೆ ಕ್ರಮ ಜರುಗಿಸುವುದಾಗಿ ತಿಳಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದರು. ಕಳೆದ ನಾಲ್ಕು ತಿಂಗಳಿನಿಂದಲೂ ಮೈಮರೆತಿದ್ದ ಸರ್ಕಾರ ಪ್ರತಿಭಟನೆ ಬೇರೆ ಸ್ವರೂಪಕ್ಕೆ ತಿರುಗುವವರೆಗೂ ಸುಮ್ಮನಿದ್ದಿದ್ದು ಏಕೆ ಎಂಬ ಪ್ರಶ್ನೆಗಳು ಉದ್ಭವಿಸಿವೆ.
|
9 |
+
ಕಾನೂನು ಕೈಗೆತ್ತಿಕೊಂಡರೆ ಕಣ್ಣು ಮುಚ್ಚಿಕೊಂಡಿರಲು ಸಾಧ್ಯವಿಲ್ಲ : ಡಿಸಿಎಂ
|
10 |
+
ನಾರಾಯಣಗೌಡರು ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಸಿದ್ಧಾಂತಗಳನ್ನು ಬೆಂಬಲಿಸಿದ್ದರು. ಕೋಮುವಾದ ನಾಡಿಗೆ ಅಪಾಯಕಾರಿ ಎಂಬರ್ಥದಲ್ಲಿ ಹಲವು ಬಾರಿ ಮಾತನಾಡಿದ್ದರು. ಈಗ ಅದೇ ಕಾಂಗ್ರೆಸ್ ಸರ್ಕಾರ ನಾರಾಯಣಗೌಡರನ್ನು ಬಂಧಿಸಿ ಜೈಲಿಗಟ್ಟಿದೆ.
|
11 |
+
ಕನ್ನಡ ಹೋರಾಟಕ್ಕಾಗಿ ಕರವೇಯ ಕಾರ್ಯಕರ್ತರು ರಾಜ್ಯಾದ್ಯಂತ 1,500 ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಕನ್ನಡ ಸಂಘಟನೆಗಳೇ ಇಲ್ಲದಿದ್ದರೆ, ನಾಡು-ನುಡಿ, ನೆಲ-ಜಲ, ಭಾಷೆ ಕೇಳುವವರೇ ಇಲ್ಲ ಹಾಗೂ ರಕ್ಷಿಸುವವರಿಲ್ಲ ಎಂಬಂತಾಗುವುದಂತೂ ಅಕ್ಷರಶಃ ಸತ್ಯ. ಕರವೇಯ ಪ್ರತಿಭಟನೆಗಳನ್ನು ಹಿಂಸಾತ್ಮಕ ಎಂದು ವಾದಿಸುತ್ತಾ ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ಇದರಿಂದ ಬಂಡವಾಳ ಹೂಡಿಕೆಗೆ ತೊಂದರೆಯಾಗುತ್ತದೆ ಎಂದು ಹೇಳುತ್ತಿರುವ ಸರ್ಕಾರ, ಕನ್ನಡದ ಅಸ್ಮಿತೆಯ ಬಗ್ಗೆ ಬೂಟಾಟಿಕೆಯ ಮಾತು ಗಳನ್ನಾಡುವುದನ್ನು ನಿಲ್ಲಿಸಬೇಕು.
|
12 |
+
ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಕೋಟ್ಯಂತರ ರೂ. ಖರ್ಚು ಮಾಡಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆಯೇ ಹೊರತು ಬೇರೆ ಪ್ರಯೋಜನಗಳಾಗುತ್ತಿರುವುದು ಕಂಡುಬರುತ್ತಿಲ್ಲ. ಕರವೇಯ ಪ್ರತಿಭಟನೆಗಳ ಬಗ್ಗೆ ಮುನ್ಸೂಚನೆ ನೀಡುವಲ್ಲಿ ರಾಜ್ಯದ ಗುಪ್ತಚರ ಇಲಾಖೆ ಸಂಪೂರ್ಣ ವೈಫಲ್ಯ ಅನುಭವಿಸಿದೆ. ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆ ರಕ್ಷಣೆಯಲ್ಲಿ ಎಡವಿದ್ದಲ್ಲದೆ, ಅಧಿಕಾರದ ದರ್ಪ ಮೆರೆದು ಹೋರಾಟಗಾರರನ್ನೇ ಜೈಲಿಗಟ್ಟಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
|
13 |
+
ಪದೇ ಪದೇ ಪಕ್ಷಕ್ಕೆಮುಜುಗರ, ಯತ್ನಾಳ್ ಅಮಾನತಿಗೆ ಸಿದ್ಧತೆ
|
14 |
+
ಪೊಲೀಸರಿಗೆ ತಿಳಿ ಹೇಳಬೇಕಾದ ಸರ್ಕಾರದ ಪ್ರತಿನಿಧಿಗಳು ನಾರಾಯಣಗೌಡರ ಬಂಧನವನ್ನು ಸಮರ್ಥಿಸಿಕೊಳ್ಳುತ್ತಿರುವುದು ಮತ್ತೊಂದು ಕನ್ನಡ ವಿರೋಧಿ ಧೋರಣೆಯಾಗಿದೆ.
|
eesanje/url_46_277_11.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕನ್ನಡ ಸಂಘಟನೆಗಳಿಗೆ ಗೃಹಸಚಿವ ಪರಮೇಶ್ವರ್ ಎಚ್ಚರಿಕೆ
|
2 |
+
ಬೆಂಗಳೂರು,ಡಿ.28- ಕನ್ನಡ ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಸಂಘಟನೆಗಳಿಗೆ ಅಧಿಕಾರ ಇದೆ. ಹಾಗೆಂದ ಮಾತ್ರಕ್ಕೆ ಕಾನೂನನ್ನು ಕೈಗೆತ್ತಿಕೊಳ್ಳುವುದನ್ನು ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಸಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಸರ್ಕಾರ ಕನ್ನಡದ ಪರವಾಗಿದೆ, ಕನ್ನಡದಲ್ಲೇ ಆಡಳಿತ ನಡೆಸಬೇಕು ಎಂದು ತೀರ್ಮಾನ ತೆಗೆದುಕೊಂಡಿದ್ದು ಅದನ್ನು ಅನುಷ್ಠಾನಕ್ಕೆ ತರುತ್ತಿದ್ದೇವೆ. ಕನ್ನಡ ನಾಮಫಲಕಗಳ ಬಗ್ಗೆ ಪರವಾನಗಿ ನೀಡುವ ವೇಳೆ ಷರತ್ತು ವಿಧಿಸಲಾಗುತ್ತದೆ ಎಂದರು.
|
4 |
+
ಇದರ ನಡುವೆ ಕರ್ನಾಟಕ ರಕ್ಷಣಾ ವೇದಿಕೆಯವರು ಬಲವಂತವಾಗಿ ದಾಳಿ ಮಾಡುತ್ತಿರುವುದು ಸರಿಯಲ್ಲ. ಬಿಬಿಎಂಪಿ ಮತ್ತು ಸರ್ಕಾರದ ಗಮನಕ್ಕೆ ವಿಷಯ ತರಬಹುದಿತ್ತು. ನಮ್ಮಿಂದಲೂ ಸರಿಯಾದ ಕ್ರಮಗಳಾಗದೇ ಇದ್ದರೆ ಆಗ ಅವರು ಹೋರಾಟ ನಡೆಸಬಹುದಿತ್ತು. ಆದರೆ ಕಾನೂನನ್ನು ಕೈಗೆತ್ತಿಕೊಂಡು ಸಾರ್ವಜನಿಕರಿಗೆ ತೊಂದರೆ ಮಾಡುತ್ತಿರುವುದನ್ನು ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ ಎಂದರು.
|
5 |
+
ಕಾನೂನು ಸುವ್ಯವಸ್ಥೆ ಪಾಲನೆ ಸರ್ಕಾರ ಪೊಲೀಸರಿಗೆ ನೀಡಿರುವ ಜವಾಬ್ದಾರಿ. ಅದನ್ನು ಅವರು ಪ್ರಾಮಾಣಿಕವಾಗಿ ಮಾಡಿದ್ದಾರೆ. ಆಸ್ತಿಪಾಸ್ತಿಗಳ ಹಾನಿಯಾಗುತ್ತಿದ್ದರೂ ಪೊಲೀಸರು ಸುಮ್ಮನಿರಬೇಕೆಂದು ಬಯಸುವುದು ತಪ್ಪು ಎಂದು ಹೇಳಿದರು.
|
6 |
+
ಯಾರೇ ಆದರೂ ಹಿಂಸಾತ್ಮಕ ಹೋರಾಟ ನಡೆಸಬಾರದು. ಬೆಂಗಳೂರು ವಿಶ್ವದಲ್ಲೇ ಪ್ರಖ್ಯಾತ ನಗರ. ಇದರ ಬಗ್ಗೆ ನಮಗೆ ಹೆಮ್ಮೆಯಿರಬೇಕು. ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಿಂದಲೂ ಇಲ್ಲಿಗೆ ಜನ ಬರುತ್ತಾರೆ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ಬೆಂಗಳೂರಿನ ವರ್ಚಸ್ಸಿಗೆ ಧಕ್ಕೆಯಾಗುತ್ತದೆ ಎಂದರು.
|
7 |
+
ಉತ್ತರ ಭಾರತದಲ್ಲಿ ಕವಿದ ಮಂಜು, 134 ವಿಮಾನ, 22 ರೈಲು ಸಂಚಾರದಲ್ಲಿ ವ್ಯತ್ಯಯ
|
8 |
+
ಪ್ರತಿಭಟನೆ ವೇಳೆ ಪೊಲೀಸರು ಸರಿಯಾಗಿ ನಡೆದುಕೊಳ್ಳಲಿಲ್ಲ ಎಂದರೆ ಏನರ್ಥ? ಯಾವುದೇ ಸಂಘಟನೆಯಾದರೂ ಪ್ರತಿಭಟನೆ ನಡೆಸಲು ಒಂದಿಷ್ಟು ಕಾಲಾವಕಾಶ ನೀಡಲಾಗುತ್ತದೆ. ಅದರ ನಂತರ ಶಾಪಿಂಗ್ ಮಾಲ್ಗಳಿಗೆ ಹೋಗಿ ನಾಮಫಲಕಗಳನ್ನು ಕಿತ್ತು ಹಾಕುವುದು ಹೇಗೆ ನೋಡಿಕೊಂಡಿರಲು ಸಾಧ್ಯ. ಭದ್ರತೆ ನೀಡುವಂತೆ ಅಂಗಡಿ ಹಾಗೂ ಮಾಲ್ಗಳ ಮಾಲಿಕರು ಮನವಿ ಸಲ್ಲಿಸಿದ್ದಾರೆ. ರಕ್ಷಣೆ ನೀಡುವುದು ಸರ್ಕಾರದ ಕರ್ತವ್ಯವಲ್ಲವೇ ಎಂದರು.
|
9 |
+
ಮಧ್ಯಪ್ರದೇಶದಲ್ಲಿ ಬಸ್-ಟ್ರಕ್ ನಡುವೆ ಭೀಕರ ಅಪಘಾತ : 12 ಮಂದಿ ಸಜೀವ ದಹನ
|
10 |
+
ಕನ್ನಡ ಕಡ್ಡಾಯವನ್ನು ಜಾರಿಗೆ ತರುವಂತೆ ನಮ್ಮ ಮೇಲೆ ಒತ್ತಡ ಹಾಕುವುದು, ಪ್ರತಿಭಟನೆ ಮಾಡುವುದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಕಾನೂನನ್ನು ಕೈಗೆತ್ತಿಕೊಳ್ಳುವುದಕ್ಕೆ ಸಾಧ್ಯವಿಲ್ಲ ಎಂದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ತಕ್ಕ ಪಾಠ ಕಲಿಸುತ್ತಿದೆ ಎಂದು ಕರವೇ ಅಧ್ಯಕ್ಷ ನಾರಾಯಣಗೌಡ ನೀಡಿರುವ ಎಚ್ಚರಿಕೆಗೆ ಪ್ರತಿಕ್ರಿಯಿಸಿದ ಅವರು, ನಾವು ಸಾಕಷ್ಟು ಪಾಠ ಕಲಿತಿದ್ದೇವೆ, ಇನ್ನು ಕಲಿಯಲು ಏನೂ ಇಲ್ಲ, ಕಾನೂನು ಕುರಿತು ಪಕ್ಷ ಎಷ್ಟು ಪಾಠ ಕಲಿತಿದೆ ಎಂದರೆ ಕಲಿತು, ಕಲಿತು ದೇಶದಲ್ಲಿ ಬೇರೆಯವರಿಗೆ ಪಾಠ ಮಾಡುವಷ್ಟು ತಜ್ಞತೆ ಬೆಳೆಸಿಕೊಂಡಿದ್ದೇವೆ ಎಂದರು. ಸರ್ಕಾರ ಯಾವುದೇ ಮಾಲ್ಗಳ ಪರವಾಗಿಲ್ಲ. ಕಾನೂನು ರಕ್ಷಣೆಯಷ್ಟೇ ನಮ್ಮ ಆದ್ಯತೆ ಎಂದು ಹೇಳಿದರು.
|
eesanje/url_46_277_12.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಕಾನೂನು ಕೈಗೆತ್ತಿಕೊಂಡರೆ ಕಣ್ಣು ಮುಚ್ಚಿಕೊಂಡಿರಲು ಸಾಧ್ಯವಿಲ್ಲ : ಡಿಸಿಎಂ
|
2 |
+
ಬೆಂಗಳೂರು,ಡಿ.28- ಕರವೇ ಅಧ್ಯಕ್ಷ ನಾರಾಯಣಗೌಡ ಮತ್ತು ಅವರ ತಂಡದ ಬಂಧನವನ್ನು ಸಮರ್ಥಿಸಿಕೊಂಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಕೈಗೆತ್ತಿಕೊಂಡು ಆಸ್ತಿಪಾಸ್ತಿ ಹಾನಿ ಮಾಡುವುದನ್ನು ನೋಡಿಕೊಂಡು ಕಣ್ಣುಮುಚ್ಚಿಕೊಂಡಿರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡಪರ ಹೋರಾಟಕ್ಕೆ ನನ್ನ ಅಭ್ಯಂತರವಿಲ್ಲ. ಆದರೆ ಕಾನೂನು ಕೈಗೆತ್ತಿಕೊಳ್ಳಲು ಅವಕಾಶವಿಲ್ಲ. ಬೆಂಗಳೂರು ನಗರದ ಆಸ್ತಿಪಾಸ್ತಿಗಳನ್ನು ಹಾನಿ ಮಾಡುವುದನ್ನು ಒಪ್ಪಲು ನಾವು ಸಿದ್ಧರಿಲ್ಲ. ಹೋರಾಟಕ್ಕೂ ಒಂದು ಇತಿಮಿತಿಯಿದೆ. ಆಸ್ತಿಪಾಸ್ತಿ ಹಾನಿ ಮಾಡಿದರೆ ಸರ್ಕಾರ ಕಣ್ಣುಮುಚ್ಚಿ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದರು.
|
4 |
+
ಹೋರಾಟ ಮಾಡುವುದಕ್ಕೆ ನಮ್ಮ ಬೆಂಬಲವಿದೆ. ಕನ್ನಡಕ್ಕೆ ಆದ್ಯತೆ ಸಿಗಬೇಕು. ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಬಳಕೆಯಾಗಬೇಕು. ಇದಕ್ಕೆ ನಮ್ಮ ಒತ್ತಾಸೆಯೂ ಇದೆ. ಕನ್ನಡ ನಾಮಫಲಕ ಹಾಕಬೇಕು ಎಂದು ಹೇಳಿದ್ದ ಕರವೇ ಅಧ್ಯಕ್ಷ ನಾರಾಯಣಗೌಡರ ಬಣದ ವಿರುದ್ಧ ದೂರು ಕೊಟ್ಟಿದ್ದು, ಪ್ರಕರಣ ದಾಖಲಾಗಿದ್ದು ತಮ್ಮ ಗಮನಕ್ಕೆ ಬಂದಾಗ ನಾನೇ ಖುದ್ದು ಮಾತನಾಡಿ, ಅದೆಲ್ಲಾ ಸರಿಯಲ್ಲ ಎಂದು ಆಕ್ಷೇಪಿಸಿದ್ದೇನೆ ಎಂದು ಹೇಳಿದರು.
|
5 |
+
ಉತ್ತರ ಭಾರತದಲ್ಲಿ ಕವಿದ ಮಂಜು, 134 ವಿಮಾನ, 22 ರೈಲು ಸಂಚಾರದಲ್ಲಿ ವ್ಯತ್ಯಯ
|
6 |
+
ನಾರಾಯಣಗೌಡರಿಗೆ ತಾವು ಹೇಳುವುದಿಷ್ಟೇ, ಯಾರ ಆಸ್ತಿಯನ್ನು ಹಾನಿ ಮಾಡಬಾರದು. ಪ್ರತಿಭಟನೆ ಮಾಡಲಿ, ಕ್ಕಾರ ಕೂಗಲಿ, ನಮ್ಮ ಮನೆಯ ಮುಂದೆಯೂ ಪ್ರತಿಭಟನೆ ಮಾಡಲಿ, ತಪ್ಪು ಮಾಡಿದಾಗ ಹೇಳಲಿ, ನಾವೆಲ್ಲಾ ಸೇರಿ ಕನ್ನಡ ಉಳಿಸೋಣ. ಆದರೆ ಆಸ್ತಿಪಾಸ್ತಿಗೆ ಹಾನಿ ಮಾಡುವುದು ಸರಿಯಲ್ಲ ಎಂದರು.
|
7 |
+
ಖುದ್ದು ಮುಖ್ಯಮಂತ್ರಿಯವರು ಎಲ್ಲಾ ಸಚಿವರಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಎಲ್ಲಾ ಟಿಪ್ಪಣಿಗಳು, ಪತ್ರ ವ್ಯವಹಾರಗಳು ಕನ್ನಡದಲ್ಲೇ ಇರಬೇಕು ಎಂದು ಸಂಪುಟದಲ್ಲೇ ಸೂಚನೆ ನೀಡಿದ್ದಾರೆ. ಸರ್ಕಾರ ಕನ್ನಡಕ್ಕೆ ಬದ್ಧವಾಗಿದೆ. ಹಾಗೆಂದು ಕಾನೂನು ಕೈಗೆತ್ತಿಕೊಳ್ಳುವುದನ್ನು ಒಪ್ಪಲಾಗುವುದಿಲ್ಲ ಎಂದು ಹೇಳಿದರು.
|
8 |
+
ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ಬಂಡವಾಳ ಹೂಡಿಕೆಯ ಮೇಲೆ ಪರಿಣಾಮ ಬೀರುತ್ತದೆ. ಹೊರಗಿನಿಂದ ಬಂದವರು ಕನ್ನಡ ಕಲಿಯಬೇಕು. ಆದರೆ ಈ ರೀತಿಯ ಸಂಘರ್ಷಗಳಿಂದ ಅನ್ಯ ಭಾಷಿಗರಲ್ಲಿ ಆತಂಕ ಮೂಡಿಸಿದಂತಾಗುತ್ತದೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರತಿಭಟಿಸುವ ಹಕ್ಕುಗಳಿವೆ. ಆದರೆ ನಾರಾಯಣಗೌಡರ ತಂಡ ಆಸ್ತಿಪಾಸ್ತಿ ಹಾನಿ ಮಾಡುವ ಹೋರಾಟವನ್ನು ಸಮರ್ಥಿಸಿಕೊಳ್ಳಲಾಗುವುದಿಲ್ಲ ಎಂದರು.
|
eesanje/url_46_277_2.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಸಿಎಂ ಮನೆ ಮುಂದೆ ಆಮರಣಾಂತ ಉಪವಾಸ : ನಾರಾಯಣಗೌಡರ ತಾಯಿ ಎಚ್ಚರಿಕೆ
|
2 |
+
ಬೆಂಗಳೂರು,ಡಿ.29- ನನ್ನ ಮಗ ಕನ್ನಡ ನಾಡು-ನುಡಿಗಾಗಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರನ್ನು ತಕ್ಷಣ ಬಿಡುಗಡೆ ಮಾಡದೇ ಇದ್ದರೆ ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮನೆ ಮುಂದೆ ಅನ್ನ, ನೀರು ತ್ಯಜಿಸಿ ಆಮರಣಾಂತ ಸತ್ಯಾಗ್ರಹ ನಡೆಸುವುದಾಗಿ ನಾರಾಯಣಗೌಡ ಅವರ ತಾಯಿ ಗೌರಮ್ಮ ಎಚ್ಚರಿಕೆ ನೀಡಿದ್ದಾರೆ.
|
3 |
+
ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಆಗ್ರಹಿಸಿ ಹೋರಾಟ ನಡೆಸಿದ್ದ ನಾರಾಯಣಗೌಡರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಹಿನ್ನೆಲೆಯಲ್ಲಿ ಗೌರಮ್ಮ ಅವರು ತಮ್ಮ ಅಳಲು ತೋಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನನ್ನ ಮಗ ಏನು ತಪ್ಪು ಮಾಡಿದ್ದ ಎಂದು ಜೈಲಿಗೆ ಹಾಕಿದ್ದೀರ ಎಂದು ಸರ್ಕಾರವನ್ನು ಗೌರಮ್ಮ ಪ್ರಶ್ನಿಸಿದ್ದಾರೆ. ನನ್ನ ಮಗನ ಆರೋಗ್ಯ ಸರಿಯಿಲ್ಲ. ಮಾತನಾಡಲೂ ತ್ರಾಣವಿಲ್ಲದಷ್ಟು ಸುಸ್ತಾಗಿದ್ದರು. ಆದರೂ ಕನ್ನಡಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಅದೇ ತಪ್ಪೇ? ದರೋಡೆ, ಕಳ್ಳತನ ಮಾಡಿದ್ದಾರೆಯೇ, ಯಾವ ಕಾರಣಕ್ಕೆ ಜೈಲಿನಟ್ಟಿದ್ದೀರ ಎಂದು ಕಿಡಿಕಾರಿದ್ದಾರೆ.
|
4 |
+
‘ಮೋದಿ ಮತ್ತೆ ಬರಲಿದ್ದಾರೆ’ ಎಂಬ ಘೋಷ ವಾಕ್ಯದೊಂದಿಗೆ ಅಖಾಡಕ್ಕೆ ಧುಮುಕಿದ ಬಿಜೆಪಿ
|
5 |
+
ನಿನ್ನೆ ಕುಟುಂಬದ ಸದಸ್ಯರು ನಾರಾಯಣಗೌಡರಿಗೆ ಕೊಡಲು ಊಟ ಮತ್ತು ಮಾತ್ರೆಯನ್ನು ತೆಗೆದುಕೊಂಡು ಹೋಗಿದ್ದರು. ಆದರೆ ಜೈಲಿನ ಅಧಿಕಾರಿಗಳು ಅದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ನನ್ನ ಮಗ ಊಟ ಇಲ್ಲದೆ, ಜೈಲಿನಲ್ಲಿರಬೇಕಾದರೆ ಹೆತ್ತ ಕರಳು ಎಷ್ಟು ಸಂಕಟ ಪಡುತ್ತದೆ ಎಂದು ನಿಮಗೆ ಗೊತ್ತಾಗುತ್ತದೆಯೇ ಎಂದು ಅಳಲು ತೋಡಿಕೊಂಡಿದ್ದಾರೆ.
|
6 |
+
ನನ್ನ ಮಗ ಕನ್ನಡಕ್ಕಾಗಿ ಹೋರಾಟ ನಡೆಸಿದ್ದಾನೆ. ಮಾಡಬಾರದ ತಪ್ಪೇನೂ ಮಾಡಿಲ್ಲ, ಕೂಡಲೇ ಜೈಲಿನಿಂದ ಬಿಡುಗಡೆ ಮಾಡುವಂತೆ ನಾನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರ ಮನೆ ಮುಂದೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ ಎಂದು ಎಚ್ಚರಿಸಿದ್ದಾರೆ.
|
eesanje/url_46_277_3.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಹೂಡಿಕೆಯ ನೆಪದಲ್ಲಿ ನಾಡು-ನುಡಿ ಕಡೆಗಣನೆ : ಮುಖ್ಯಮಂತ್ರಿ ಚಂದ್ರು ಆಕ್ರೋಶ
|
2 |
+
ಬೆಂಗಳೂರು,ಡಿ.29- ಬಂಡವಾಳ ಹೂಡಿಕೆಯ ನೆಪದಲ್ಲಿ ರಾಜ್ಯಸರ್ಕಾರ ಕನ್ನಡ ನಾಡು-ನುಡಿ, ಸಂಸ್ಕøತಿಯನ್ನು ಕಡೆಗಣಿಸುತ್ತಿದೆ ಎಂದು ಅಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
|
3 |
+
ನುಡಿದಂತೆ ನಡೆದಿದ್ದೇವೆ ಎಂದು ಹೇಳಿಕೊಳ್ಳುತ್ತಿರುವುದು ಹಾಸ್ಯಾಸ್ಪದ. ರಾಜ್ಯದಲ್ಲಿ ಕನ್ನಡ ಬಳಕೆ ಸಂಪೂರ್ಣ ಕಡೆಗಣನೆಗೆ ಒಳಗಾಗಿದೆ. ಸಚಿವರು ಆಂಗ್ಲಭಾಷೆಯಲ್ಲೇ ವ್ಯವಹಾರ ನಡೆಸುತ್ತಿದ್ದಾರೆ. ನಾರಾಯಣಗೌಡ ಮತ್ತು ಅವರ ಬಣದ ಕಾರ್ಯಕರ್ತರ ಹೋರಾಟ ಜೈಲಿಗೆ ಕಳುಹಿಸುವಂತಹ ಹೋರಾಟವಾಗಿರಲಿಲ್ಲ. ಕನ್ನಡ ದ್ರೋಹಿಯಾಗಿರುವ ಸರ್ಕಾರ ಉದ್ದೇಶಪೂರ್ವಕವಾಗಿ ಕ್ರಮ ಕೈಗೊಂಡಿದೆ ಎಂದು ಆರೋಪಿಸಿದರು.
|
4 |
+
ನಾಳೆ ಅಯೋಧ್ಯೆಗೆ ಮೋದಿ ಭೇಟಿ, 11,100 ಕೋಟಿ ರೂ. ಮೊತ್ತದ ಯೋಜನೆಗಳ ಉದ್ಘಾಟನೆ
|
5 |
+
ಬಲಿತ ಅವರು ಬಂಡವಾಳಶಾಹಿಗಳಿಗೆ ಬೆಂಬಲ ನೀಡುತ್ತಾರೆ. ಹೊರಗಿನಿಂದ ಬಂದವರಿಗೆ ಅವರು ಕೊಡುವ ಹಣವನ್ನು ತೆಗೆದುಕೊಂಡು ವಿವಿಧ ವಿನಾಯಿತಿಗಳನ್ನು ನೀಡಿ, ಇಲ್ಲಿ ಬದುಕಲು ಅವಕಾಶ ಮಾಡಿಕೊಡಲಾಗುತ್ತದೆ. ಈ ಮೊದಲು ಶೇ. 40 ರಷ್ಟು ಕಮಿಷನ್ ಪಡೆಯಲಾಗಿದ್ದು, ಈಗ ಅದಕ್ಕಿಂತಲೂ ಹೆಚ್ಚಿನ ಹಣ ಲೂಟಿ ಹೊಡೆಯುವ ಸಲುವಾಗಿ ಬಂಡವಾಳಶಾಹಿಗಳಿಗೆ ಒತ್ತು ನೀಡಲಾಗುತ್ತಿದೆ ಎಂದು ದೂರಿದರು.
|
6 |
+
ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಬಳಕೆಯಾಗಬೇಕು ಎಂಬ ಸುಗ್ರೀವಾಜ್ಞೆಯನ್ನು ಸಿದ್ದರಾಮಯ್ಯನವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಏಕೆ ಜಾರಿಗೆ ತರಲಿಲ್ಲ ಎಂದು ಪ್ರಶ್ನಿಸಿದರು.
|
eesanje/url_46_277_4.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
‘ಮೋದಿ ಮತ್ತೆ ಬರಲಿದ್ದಾರೆ’ ಎಂಬ ಘೋಷ ವಾಕ್ಯದೊಂದಿಗೆ ಅಖಾಡಕ್ಕೆ ಧುಮುಕಿದ ಬಿಜೆಪಿ
|
2 |
+
ನವದೆಹಲಿ,ಡಿ.29-ಮುಂಬರುವ ಲೋಕಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿರುವ ಬಿಜೆಪಿ ಫಿರ್ ಆಯೇಗಾ ಮೋದಿ (ಮೋದಿ ಮತ್ತೆ ಬರಲಿದ್ದಾರೆ) ಎಂಬ ಘೋಷ ವಾಕ್ಯದೊಂದಿಗೆ ಅಖಾಡಕ್ಕೆ ಧುಮುಕಲಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಚಾಯಿ ಪೆ ಚರ್ಚಾ, 2019 ರಲ್ಲಿ ಆಪ್ ಕಿ ಬಾರ್ ಮೋದಿ ಸರ್ಕಾರ್ ಎಂಬ ಘೋಷವಾಕ್ಯದೊಂದಿಗೆ ಚುನಾವಣೆಯಲ್ಲಿ ಗೆದ್ದು ಬಂದಿದ್ದ ಬಿಜೆಪಿ ಈ ಬಾರಿ ಫಿರ್ ಆಯೇಗಾ ಮೋದಿ ಎಂಬ ಘೋಷ ವಾಕ್ಯವನ್ನು ಸಿದ್ಧಪಡಿಸಿದೆ.
|
3 |
+
ಸದ್ಯದಲ್ಲೇ ಸಾಮಾಜಿಕ ಜಾಲತಾಣದಲ್ಲಿ ಇದು ಬಿತ್ತರವಾಗಲಿದ್ದು, ದೇಶಕ್ಕೆ ಮೋದಿಯೇ ಪರಿಹಾರ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡಲು ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಿಶ್ವದಲ್ಲೇ ಅತೀ ಹೆಚ್ಚು ಪ್ರಮಾಣದ ಬೆಂಬಲಿಗರನ್ನು ಹೊಂದಿದ್ದಾರೆ. ಇದನ್ನು ಮತಗಳನ್ನಾಗಿ ಪರಿವರ್ತಿಸುವ ಲೆಕ್ಕಾಚಾರದಲ್ಲಿ ಕಮಲ ಪಡೆ ನಾಯಕರಿದ್ದಾರೆ.
|
4 |
+
2014 ರಿಂದ 2024 ರವರೆಗೆ ಮೋದಿ ಪ್ರಧಾನಿಯಾದ ಮೇಲೆ ಕೇಂದ್ರದಲ್ಲಿ ಜಾರಿ ಮಾಡಿರುವ ಯೋಜನೆಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಯಥೇಚ್ಛವಾಗಿ ಬಳಸಿಕೊಂಡು ಮೂರನೇ ಬಾರಿಗೆ ಅಧಿಕಾರ ಹಿಡಿಯುವ ರಣತಂತ್ರವನ್ನು ರೂಪಿಸಲಾಗಿದೆ. ವಿಶೇಷವಾಗಿ ಈ ಬಾರಿಯ ಚುನಾವಣೆಯಲ್ಲಿ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ಸಂವಿಧಾನದ 370 ನೇ ವಿಯನ್ನು ರದ್ದುಪಡಿಸಿರುವುದು ಹಾಗೂ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರದ ತೀರ್ಮಾನವನ್ನು ಎತ್ತಿಹಿಡಿದಿರುವುದು ಚುನಾವಣೆಯ ಪ್ರಮುಖ ಅಸ್ತ್ರವಾಗಲಿದೆ.
|
5 |
+
ನಾಳೆ ಅಯೋಧ್ಯೆಗೆ ಮೋದಿ ಭೇಟಿ, 11,100 ಕೋಟಿ ರೂ. ಮೊತ್ತದ ಯೋಜನೆಗಳ ಉದ್ಘಾಟನೆ
|
6 |
+
ಜೊತೆಗೆ ಜನವರಿ 22 ರಂದು ಅಯೋಧ್ಯೆಯಲ್ಲಿ ಲೋಕಾರ್ಪಣೆಗೊಳ್ಳುತ್ತಿರುವ ಶ್ರೀರಾಮಮಂದಿರ ನಿರ್ಮಾಣವು ಬಿಜೆಪಿಯ ಪ್ರಚಾರದ ಸರಕಾಗಲಿದೆ. ಮೋದಿಯವರು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದ್ದರಿಂದ 370 ನೇ ವಿಧಿ ರದ್ದು ಹಾಗೂ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಸಾಧ್ಯವಾಯಿತು. ಮತ್ತೊಂದು ಬಾರಿ ಅಧಿಕಾರ ನೀಡಿದರೆ ದೇಶಾದ್ಯಂತ ಎಲ್ಲರಿಗೂ ಸಮಾನ ನಾಗರಿಕ ನೀತಿ ಸಂಹಿತೆಗಳನ್ನು ಜಾರಿ ಮಾಡುವ ಕಾಯ್ದೆಯನ್ನು ಅನುಷ್ಠಾನ ಮಾಡುತ್ತೇವೆ ಎಂಬ ಭರವಸೆಯನ್ನು ಪ್ರಣಾಳಿಕೆಯಲ್ಲಿ ಬಿಜೆಪಿ ಸೇರ್ಪಡೆ ಮಾಡಲಿದೆ.
|
7 |
+
ಮೂಲಗಳ ಪ್ರಕಾರ ಜನವರಿ ತಿಂಗಳ ಅಂತ್ಯಕ್ಕೆ ಸುಮಾರು 300 ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಸಿದ್ಧತೆ ನಡೆಸಲಾಗಿದೆ. ಗೆದ್ದೇ ಗೆಲ್ಲುವ ಕ್ಷೇತ್ರಗಳಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗುವ ಮೊದಲೇ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿ ದೇಶಾದ್ಯಂತ ಸುಮಾರು 300 ಕ್ಕೂ ಹೆಚ್ಚು ಮೆಗಾರ್ಯಾಲಿಗಳನ್ನು ಮೋದಿ ನಡೆಸಲು ಉದ್ದೇಶಿಸಿದ್ದಾರೆ.
|
8 |
+
ದಾಖಲೆ ನಿರ್ಮಾಣ :ಒಂದು ವೇಳೆ 2024 ರಲ್ಲಿ ಮೋದಿಯವ���ು ಈಗಿರುವ ಸಮೀಕ್ಷೆಯಂತೆ ಮೂರನೇ ಬಾರಿ ಅಧಿಕಾರ ಹಿಡಿದರೆ ಭಾರತದ ಮಟ್ಟಿಗೆ ಅದೊಂದು ದಾಖಲೆಯಾಗಲಿದೆ. ಕೇಂದ್ರದಲ್ಲಿ ಸತತವಾಗಿ ಮೂರನೇ ಬಾರಿಗೆ ಒಂದೇ ಪಕ್ಷ ಅಧಿಕಾರ ಹಿಡಿದು 15 ವರ್ಷಗಳ ಕಾಲ ಪ್ರಧಾನಿಯಾದ ದಾಖಲೆ ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಹೆಸರಿನಲ್ಲಿದೆ.
|
9 |
+
ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ಹೆಸರು
|
10 |
+
ಇದೀಗ ಮೋದಿ 2024 ರಲ್ಲಿ ಗೆದ್ದು ಮತ್ತೊಮ್ಮೆ ದೇಶದ ಚುಕ್ಕಾಣಿ ಹಿಡಿದರೆ ನೆಹರೂ ದಾಖಲೆಯನ್ನು ಸರಿಗಟ್ಟಲಿದ್ದಾರೆ. 400 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿಯೊಂದಿಗೆ ಬಿಜೆಪಿ ಲೋಕಸಭಾ ಸಮರಕ್ಕೆ ಧುಮುಕಲು ಸಜ್ಜಾಗುತ್ತಿದೆ.
|
eesanje/url_46_277_5.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ವಾರ್ತಾ ಇಲಾಖೆಯ ನಿವೃತ್ತ ಸಹಾಯಕ ಆಡಳಿತಾಧಿಕಾರಿ ಜಿ.ಎನ್.ದೇಸಾಯಿ ವಿಧಿವಶ
|
2 |
+
ಬೆಂಗಳೂರು,ಡಿ.29- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾಣಿಜ್ಯ ಪ್ರಚಾರ ಶಾಖೆಯಲ್ಲಿ ಸಹಾಯಕ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಜಿ.ಎನ್. ದೇಸಾಯಿ (67) ಅವರು ಇಂದು ಬೆಳಿಗ್ಗೆ 7 ಗಂಟೆ ಸುಮಾರಿನಲ್ಲಿ ಜ್ಞಾನಭಾರತಿ ಲೇಔಟ್, ಕೆಂಚನಪುರ ಕ್ರಾಸ್ನಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
|
3 |
+
ದಶಕಗಳ ಕಾಲ ದೇಸಾಯಿ ಅವರು ವಾಣಿಜ್ಯ ಪ್ರಚಾರ ಶಾಖೆಯ ಹಲವು ಕಾರ್ಯಚಟುವಟಿಕೆಗಳ ಭಾಗವಾಗಿದ್ದರು. ಕೆಲ ದಿನಗಳಿಂದ ಅನಾರೋಗ್ಯ ದಿಂದ ಬಳಲುತ್ತಿದ್ದ ದೇಸಾಯಿ ಅವರು ಪತ್ನಿ ಹಾಗೂ ಏಕೈಕ ಪುತ್ರಿಯನ್ನು ಅಗಲಿದ್ದಾರೆ.
|
4 |
+
ದೇಸಾಯಿ ಅವರ ಪುತ್ರಿ ವಿದೇಶದಲ್ಲಿದ್ದು, ಅವರು ನಾಳೆ ನಗರಕ್ಕೆ ಬರುವ ಹಿನ್ನೆಲೆಯಲ್ಲಿ ದೇಸಾಯಿಯವರ ಮೃತದೇಹವನ್ನು ಬಿಜಿಎಸ್ ಆಸ್ಪತ್ರೆಯಲ್ಲಿರಿಸಲಾಗಿದೆ. ನಾಳೆ ಮಧ್ಯಾಹ್ನ 12.30ರಿಂದ 3 ಗಂಟೆವರೆಗೆ ದೇಸಾಯಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವರ ಸ್ವಗೃಹದಲ್ಲಿ ವ್ಯವಸ್ಥೆ ಮಾಡಲಾಗಿದೆ.
|
5 |
+
ಐಫೋನ್ ಹ್ಯಾಕ್ ಆರೋಪ ನಿರಾಕರಿಸಿದ ರಾಜೀವ್ ಚಂದ್ರಶೇಖರ್
|
6 |
+
ಭಾನುವಾರ ಅವರ ಸ್ವಗ್ರಾಮ ವಾದ ಗುಲ್ಬರ್ಗ ಜಿಲ್ಲೆ, ಯಡ್ರಾಮಿ ತಾಲ್ಲೂಕಿನ ಹಂಗರಗಾ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ದೇಸಾಯಿಯವರ ನಿಧನಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಸ್ನೇಹಿತರು, ಮಾಧ್ಯಮ ರಂಗದ ಹಿತೈಷಿಗಳು ಹಾಗೂ ಬಂಧು-ಬಳಗದವರು ಸಂತಾಪ ವ್ಯಕ್ತಪಡಿಸಿದ್ದಾರೆ.
|
eesanje/url_46_277_6.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಎಚ್ಚೆತ್ತ ಸರ್ಕಾರ : ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಬಳಕೆಗೆ ಕ್ರಮ
|
2 |
+
ಬೆಂಗಳೂರು,ಡಿ.28- ಕನ್ನಡಪರ ಸಂಘಟನೆಗಳ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ರಾಜ್ಯಸರ್ಕಾರ ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಕ್ರಮ ಕೈಗೊಳ್ಳಲು ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೃಹಕಚೇರಿ ಕೃಷ್ಣದಲ್ಲಿ ಉನ್ನತ ಮಟ್ಟದ ಸಭೆ ನಡೆಸಿ, ಅಂಗಡಿ ಮುಗ್ಗಟ್ಟುಗಳ ಮುಂಭಾಗ ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಚರ್ಚೆ ನಡೆಸಿದ್ದಾರೆ.
|
3 |
+
ಗೃಹ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಬಿಬಿಎಂಪಿಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ವಾಣಿಜ್ಯ ಮಳಿಗೆಗಳು ಹಾಗೂ ವ್ಯಾಪಾರೋದ್ಯಮಗಳಲ್ಲಿ ಕನ್ನಡ ಭಾಷಾ ನಾಮಫಲಕವನ್ನು ಅಳವಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಾರಾಯಣ ಗೌಡರ ನೇತೃತ್ವದಲ್ಲಿ ಬೆಂಗಳೂರಿನಾದ್ಯಂತ ಬೃಹತ್ ಪ್ರತಿಭಟನೆಗಳಾಗಿವೆ. ಈ ವೇಳೆ ಹಲವಾರು ಆಸ್ತಿಪಾಸ್ತಿಗೂ ಧಕ್ಕೆಯಾಗಿದೆ.
|
4 |
+
ಪರಿಸ್ಥಿತಿ ನಿಯಂತ್ರಣಕ್ಕೆ ಬಾರದಿದ್ದಾಗ ನಾರಾಯಣಗೌಡ ಹಾಗೂ ಅವರ ಸಂಘಟನೆಯ ಕಾರ್ಯಕರ್ತರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಇದು ಮತ್ತಷ್ಟು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದು, ಕನ್ನಡ ಸಂಘಟನೆಗಳನ್ನು ಕೆಣಕಿದಂತಾಗಿದೆ. ಹೋರಾಟ ತೀವ್ರ ಸ್ವರೂಪಕ್ಕೆ ತಿರುಗುವುದರ ಮುನ್ಸೂಚನೆ ಪಡೆದ ಮುಖ್ಯಮಂತ್ರಿಯವರು ಇಂದು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
|
5 |
+
ಫೆಲ್ಡಿಂಗ್ ವೇಳೆ ಕನ್ನಡಲ್ಲೇ ‘ಕೈಗೆ ಹಾಕಲೋ’ ಎಂದ ಕೆ.ಎಲ್.ರಾಹುಲ್ ವಿಡಿಯೋ ವೈರಲ್
|
6 |
+
ಕನ್ನಡ ಸಂಘಟನೆಗಳ ಹೋರಾಟದ ವಿಷಯದಲ್ಲಿ ಸಹನೆಯಿಂದ ವರ್ತಿಸುವಂತೆ ಸಭೆಯಲ್ಲಿ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿನ್ನೆ ನಡೆದ ಪ್ರತಿಭಟನೆಯಲ್ಲಿ ಪೊಲೀಸರೊಂದಿಗೆ ಸಂಘರ್ಷಗಳಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಿಸಿತ್ತು. ಈ ಹಿನ್ನೆಲೆಯಲ್ಲಿ ಅಗತ್ಯವಿದ್ದರೆ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ಬಿಗಿ ಕ್ರಮಗಳನ್ನು ಕೈಗೊಳ್ಳಬೇಕು. ಅನಗತ್ಯವಾದ ಬಲಪ್ರಯೋಗಕ್ಕೆ ಅವಕಾಶ ನೀಡಬಾರದು. ಕನ್ನಡಪರ ಸಂಘಟನೆಗಳ ಕಾರ್ಯಕರ್ತರ ಜೊತೆ ಸಹನೆಯಿಂದ ವರ್ತಿಸಬೇಕು ಎಂದು ಪೊಲೀಸರು ಸೂಚಿಸಿರುವುದಾಗಿ ತಿಳಿದುಬಂದಿದೆ.
|
7 |
+
ಕನ್ನಡ ನಾಮಫಲಕಗಳನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಆದೇಶವನ್ನು ಜಾರಿಗೊಳಿಸಲು ಬಿಬಿಎಂಪಿ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಅಕಾರಿಗಳು ಕೆಲಸ ಮಾಡಬೇಕು. ವಾಣಿಜ್ಯ ಮತ್ತು ಉದ್ಯಮಗಳಿಗೆ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟು ನಾಮಫಲಕ ಬದಲಾವಣೆಗೆ ಸ್ವಯಂ ಪ್ರೇರಿತವಾಗಿ ಕ್ರಮ ಕೈಗೊಳ್ಳಲು ಪ್ರೇರೇಪಿಸಬೇಕು ಎಂದು ಸಲಹೆ ನೀಡಿದ್ದಾರೆ.
|
eesanje/url_46_277_7.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಕನ್ನಡಪರ ಹೋರಾಟಗಾರರನ್ನು ಬಿಡುಗಡೆ ಮಾಡದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ
|
2 |
+
ಬೆಂಗಳೂರು,ಡಿ.28- ಕನ್ನಡ ನಾಮಫಲಕಗಳಿಗೆ ಆಗ್ರಹಿಸಿ ಹೋರಾಟ ಮಾಡಿ ಬಂಧನವಾಗಿರುವ ಕನ್ನಡ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಕನ್ನಡಪರ ಹೋರಾಟಗಾರರು ಆಗ್ರಹಿಸಿದ್ದಾರೆ. ನಾಮಫಲಕಗಳು ಕನ್ನಡದಲ್ಲಿರ ಬೇಕೆಂದು ಆಗ್ರಹಿಸಿ ಹೋರಾಟ ಮಾಡಿದ ಹಲವಾರು ಕನ್ನಡ ಕಾರ್ಯಕರ್ತರ ಬಂಧನಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬಂಧಿತ ಕಾರ್ಯ ಕರ್ತರನ್ನು ಕೂಡಲೇ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.
|
3 |
+
ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಹಾಗೂ ಹಲವು ಕಾರ್ಯಕರ್ತರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿರುವ ಪ್ರವೀಣ್ಶೆಟ್ಟಿಯವರು ಕೂಡಲೇ ನಾರಾಯಣಗೌಡ ಹಾಗೂ ಮತ್ತಿತರ ರನ್ನು ಬಿಡುಗಡೆ ಮಾಡದಿದ್ದರೆ ಸರ್ಕಾರ ಕ್ರಾಂತಿಕಾರ ಹೋರಾಟ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆ ನೀಡಿದ್ದಾರೆ.
|
4 |
+
ಕನ್ನಡ ಸಂಘಟನೆಗಳಿಗೆ ಗೃಹಸಚಿವ ಪರಮೇಶ್ವರ್ ಎಚ್ಚರಿಕೆ
|
5 |
+
ಕನ್ನಡ ಹೋರಾಟಗಾರರೇನು ಲೂಟಿ, ದರೋಡೆ, ಕೊಲೆ ಮಾಡಿಲ್ಲ . ಕನ್ನಡಕ್ಕೋಸ್ಕರ ಹೋರಾಟ ಮಾಡಿದ್ದಾರೆ. ಕನ್ನಡ ನಾಮಫಲಕ ಕಡ್ಡಾಯಗೊಳಿಸುವ ಕೆಲಸ ಸರ್ಕಾರದಿಂದ ಆಗಬೇಕು. ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಇರಬೇಕೆಂಬ ಕಾನೂನಿದೆ. ಅಂಗಡಿಗಳಿಗೆ ಪರವಾನಗಿ ನೀಡುವಾಗ ಸರ್ಕಾರ ಇದನ್ನು ಪಾಲಿಸಬೇಕು. ಆದರೆ ಯಾವುದೇ ಹೋಟೆಲ್, ಮಾಲ್, ಐಟಿ-ಬಿಟಿ ಕಂಪೆನಿಗಳು ಪಾಲನೆ ಮಾಡುತ್ತಿಲ್ಲ.
|
6 |
+
ಸರ್ಕಾರದ ನಿರ್ಲಕ್ಷ್ಯ ಮತ್ತು ಹೊಣೆಗೇಡಿತನದ ವಿರುದ್ಧ ಕನ್ನಡಪರ ಹೋರಾಟಗಾರರು ಪ್ರತಿಭಟನೆ ಮಾಡಿದರೆ ಅಂತಹವರನ್ನು ಜೈಲಿಗಟ್ಟಿ ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ಇದು ಅತ್ಯಂತ ಖಂಡನೀಯ ಎಂದು ಕಿಡಿಕಾರಿದ್ದಾರೆ. ಸರ್ಕಾರ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳದಿದ್ದರೆ ಶನಿವಾರ ಬೆಂಗಳೂರಿನಲ್ಲಿ ಕನ್ನಡಪರ ಹೋರಟಗಾರರ ಮಹತ್ವದ ಸಭೆ ನಡೆಸಿ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
|
eesanje/url_46_277_8.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಅನಧಿಕೃತ ಬಡಾವಣೆ ಕಟ್ಟಡಕ್ಕೆ ಮೊದಲ ವರ್ಷ ದುಪ್ಪಟ್ಟು ತೆರಿಗೆ
|
2 |
+
ಬೆಂಗಳೂರು, ಡಿ. 28: ಬಡಾವಣೆ ಅನುಮೋದನೆ, ನಕ್ಷೆ ಮಂಜೂರಾತಿ ಇಲ್ಲದೆ ನಿಯಮ ಉಲ್ಲಂಘಿಸಿ ಕಂದಾಯ ಭೂಮಿಯಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ಬಿಬಿಎಂಪಿ ರೀತಿಯಲ್ಲೇ ರಾಜ್ಯದ್ಯಂತ ಏಕರೂಪವಾಗಿ ತೆರಿಗೆ ವಿಧಿಸುವುದು ಸೂಕ್ತ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.
|
3 |
+
ವಿಧಾನಸೌಧದ ಸಮಿತಿ ಸಭಾಂಗಣದಲ್ಲಿಂದು ನಡೆದ ಬಿಬಿಎಂಪಿ ಕಾಯ್ದೆ 2020ರ ಕಲಂ 144(6) ಮತ್ತು (21)ರ ಅಂಶಗಳನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳಿಗೆ /ನಗರ ಸ್ಥಳೀಯ ಸಂಸ್ಥೆಗಳಿಗೆ ಸಹ ವಿಸ್ತರಣೆ ಮಾಡುವ ಸಂಬಂಧ ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ 1976 ಹಾಗೂ ಕರ್ನಾಟಕ ಪುರಸಭೆ ಕಾಯ್ದೆ 1964ರಲ್ಲಿ ಅಳವಡಿಸಿಕೊಳ್ಳುವ ಕುರಿತ ಸಾಧಕ-ಬಾಧಕ ಪರಿಶೀಲಿಸಲು ಸೂಕ್ತ ತೀರ್ಮಾನ ಕೈಗೊಳ್ಳುವ ಸಲುವಾಗಿ ರಚಿಸಲಾಗಿರುವ ಉಪಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅನಧಿಕೃತವಾಗಿ ಕಟ್ಟಿರುವ ಕಟ್ಟಡಗಳಿಗೆ ಒಂದು ಬಾರಿ ಅವಕಾಶ ನೀಡಿ ದಂಡ ವಿಧಿಸಿ, ಮೊದಲ ವರ್ಷ ದುಪ್ಪಟ್ಟು ತೆರಿಗೆ ವಿಧಿಸಿ, ನಂತರದ ವರ್ಷಗಳಲ್ಲಿ ನಿಯಮಿತವಾಗಿ ತೆರಿಗೆ ವಿಧಿಸಬಹುದು ಎಂದು ಸಲಹೆ ನೀಡಿದರು.
|
4 |
+
ಅಕ್ರಮ ಬಡಾವಣೆಗೆ ಜೈಲು ಶಿಕ್ಷೆ : ಇನ್ನು ಮುಂದೆ ಯಾರೇ ಅನಧಿಕೃತವಾಗಿ ಬಡಾವಣೆ ನಿರ್ಮಿಸಿ, ಸಂಬಂಧಿತ ಸ್ಥಳೀಯ ಸಂಸ್ಥೆಗಳಿಂದ ನಕ್ಷೆ ಮಂಜೂರಾತಿ ಇಲ್ಲದೆ ಕಟ್ಟಡ ನಿರ್ಮಿಸಿದರೆ ಅಂತಹವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವಂತೆ ಕಾನೂನಿಗೆ ತಿದ್ದುಪಡಿ ತರುವುದು ಅಗತ್ಯ. ಇಲ್ಲವಾದರೆ ಅನಧಿಕೃತ ಬಡಾವಣೆಗಳು ರಾಜ್ಯದಾದ್ಯಂತ ನಾಯಿಕೊಡೆಗಳಂತೆ ತಲೆ ಎತ್ತುತ್ತಲೇ ಇರುತ್ತವೆ. ಹೀಗಾಗಿ ಕಾನೂನು ತಂದು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು.
|
5 |
+
ಕಾನೂನು ಕೈಗೆತ್ತಿಕೊಂಡರೆ ಕಣ್ಣು ಮುಚ್ಚಿಕೊಂಡಿರಲು ಸಾಧ್ಯವಿಲ್ಲ : ಡಿಸಿಎಂ
|
6 |
+
ನಿಯಮ ಸರಳೀಕರಣ: ಯಾರೇ ನ್ಯಾಯಸಮ್ಮತವಾಗಿ ಸಾರ್ವಜನಿಕ ಉದ್ದೇಶಕ್ಕೆ ಜಾಗ ಬಿಟ್ಟು ಬಡಾವಣೆ ನಿರ್ಮಿಸಲು ಮುಂದಾದರೆ ಮತ್ತು ಮನೆ ನಿರ್ಮಾಣ ಮಾಡಲು ನಿಯಮಾನುಸಾರ ನಕ್ಷೆ ಮಂಜೂರಾತಿ ಬಯಸಿದಲ್ಲಿ ನಿಯಮ ಸರಳೀಕರಣ ಮಾಡಿ, ಮುಖಾಮುಖಿ ರಹಿತವಾಗಿ ನಿರ್ದಿಷ್ಟ ಕಾಲಮಿತಿಯೊಳಗೆ ಮಂಜೂರಾತಿ ಲಭಿಸುವಂತೆ ತಂತ್ರಾಂಶ ಅಭಿವೃದ್ಧಿ ಪಡಿಸುವ ಅಗತ್ಯವನ್ನೂ ಪ್ರತಿಪಾದಿಸಿದರು.
|
7 |
+
ಯಾರೊಬ್ಬರೂ ನಕಲಿ ಖಾತೆ ಪಡೆದು ನೋಂದಣಿ ಮಾಡಿಸದಂತೆ ಕಾವೇರಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಿದರೆ ಆಗ ಅನಧಿಕೃತ ಬಡಾವಣೆ, ಕಟ್ಟಡಗಳನ್ನು ನಿಯಂತ್ರಿಸಬಹುದು ಎಂದು ಈಶ್ವರ ಖಂಡ್ರೆ ಸಲಹೆದರು. ನೂತನವಾಗಿ ಯಾವುದೇ ಸಮುಚ್ಚಯಗಳನ್ನು, ಗುಂಪು ಮನೆಗಳನ್ನು ಮತ್ತು ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸುವಾಗ ಜಲಕಾಯಿದೆ, ವಾಯು ಕಾಯಿದೆ ಮತ್ತು ಪರಿಸರ ಸಂರಕ್ಷಣೆ ಕಾಯಿದೆ ಉಲ್ಲಂಘಿಸಿ ಕಟ್ಟಡ ನಿರ್ಮಿಸುವವರ ವಿ���ುದ್ಧ ಕಾನೂನು ರೀತ್ಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
|
8 |
+
ಇನ್ನು ಮುಂದೆ ನಕ್ಷೆ ಮಂಜೂರಾತಿ ಪಡೆದ ಬಳಿಕ ನಿಯಮ ಉಲ್ಲಂಘನೆ ಮಾಡಿ ಕಟ್ಟಡ ನಿರ್ಮಿಸುವವರ ವಿರುದ್ಧವೂ ಕ್ರಮ ಜರುಗಿಸಬೇಕು. ನಿರ್ಮಾಣ ಹಂತದಲ್ಲಿಯೇ ಇಂತಹ ಕಟ್ಟಡ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಈಶ್ವರ ಖಂಡ್ರೆ ತಿಳಿಸಿದರು.
|
9 |
+
ಈವರೆಗೆ ನಡೆದಿರುವ ಎಲ್ಲ ಸಭೆಗಳಲ್ಲಿ ನಡೆದ ಚರ್ಚೆಯ ಅಂಶಗಳನ್ನು ಕ್ರೋಡೀಕರಿಸಿ, ವಿಧೇಯಕ ರೂಪಿಸಲು ಮತ್ತು ಬಿಬಿಎಂಪಿಯಲ್ಲಿ ಬಿ ವಹಿಯಡಿ ಕಟ್ಟಡ ತೆರಿಗೆ ವಿಧಿಸುತ್ತಿರುವ ರೀತಿಯಲ್ಲೇ ರಾಜ್ಯದ ಇತರ ಪ್ರದೇಶಗಳಲ್ಲೂ ತೆರಿಗೆ ಸಂಗ್ರಹಿಸಲು ನಿಯಮಾವಳಿ ರೂಪಿಸುವಂತೆ ಸೂಚಿಸಿದರು. ಸಭೆಯಲ್ಲಿ ಪೌರಾಡಳಿತ ಸಚಿವ ರಹೀಂ ಖಾನ್ ಮತ್ತು ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತಿತರ ಅಧಿಕಾರಿಗಳು ಭಾಗಿಯಾಗಿದ್ದರು
|
eesanje/url_46_277_9.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ರಾಹುಲ್ ಗಾಂಧಿ ಕೈಗೆ ಈ ದೇಶದ ಅಧಿಕಾರ ಸಿಗಬೇಕು : ಸಿಎಂ ಸಿದ್ದು
|
2 |
+
ಬೆಂಗಳೂರು,ಡಿ.28- ನಮ್ಮಲ್ಲಿರುವ ಭಿನ್ನಮತಗಳನ್ನು ಬದಿಗಿಟ್ಟು ರಾಹುಲ್ಗಾಂಧಿಯವರನ್ನು ಮುಂದಿನ ಪ್ರಧಾನಿ ಮಾಡಲು ನಾವೆಲ್ಲಾ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ 139 ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಜನಪರವಾಗಿ ಯೋಚಿಸುವ ರಾಹುಲ್ಗಾಂಧಿ ಪ್ರಧಾನಿಯಾಗಬೇಕೆ ಅಥವಾ ಸುಳ್ಳು ಹೇಳಿ ಭಾವನಾತ್ಮಕವಾಗಿ ಜನರನ್ನು ದಾರಿ ತಪ್ಪಿಸುವ ನರೇಂದ್ರ ಮೋದಿ ಪ್ರಧಾನಿಯಾಗಬೇಕೆ ಎಂದು ಪ್ರಶ್ನಿಸಿದರು.
|
3 |
+
ದೇಶದಲ್ಲಿ ಭಾರತ್ ಜೋಡೊದಂತಹ ಯಾತ್ರೆಯನ್ನು ಬೇರೆ ಯಾವ ನಾಯಕರೂ ನಡೆಸಿರಲಿಲ್ಲ. ಈಗ ಎರಡನೇ ಹಂತದಲ್ಲಿ ಭಾರತ ನ್ಯಾಯ ಯಾತ್ರೆಯನ್ನು ರಾಹುಲ್ಗಾಂಧಿ ಕೈಗೊಂಡಿದ್ದಾರೆ. ದೇಶದ ಎಲ್ಲಾ ಸಮಸ್ಯೆಗಳಿಗೂ ಕಾಂಗ್ರೆಸ್ ಪಕ್ಷದಿಂದ ಮಾತ್ರ ಪರಿಹಾರ ಕಂಡುಕೊಳ್ಳಲು ಸಾಧ್ಯ. ಅದಕ್ಕಾಗಿ ರಾಹುಲ್ಗಾಂಧಿ ಈ ದೇಶದ ಪ್ರಧಾನಿಯಾಗಬೇಕೆಂದು ಪ್ರತಿಪಾದಿಸಿದರು.
|
4 |
+
ಇತ್ತೀಚೆಗೆ ದೆಹಲಿಯಲ್ಲಿ ನಡೆದ ಇಂಡಿಯಾ ರಾಜಕೀಯ ಮೈತ್ರಿಕೂಟದಲ್ಲಿ ಪ್ರಧಾನಿ ಹುದ್ದೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಪಾದಿಸಿದ್ದರು. ಅದರ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್ನ ಪ್ರಧಾನಿ ಅಭ್ಯರ್ಥಿ ಬಗ್ಗೆ ಸ್ಪಷ್ಟ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ರಾಹುಲ್ಗಾಂಧಿ ದೇಶದ ಪ್ರಧಾನಿಯಾಗಬೇಕೆಂದು ಹೇಳಿದ್ದಾರೆ.
|
5 |
+
ಜನಪರ ಕಾಳಜಿಯಿರುವ ರಾಹುಲ್ಗಾಂಧಿಯವರ ಕೈಗೆ ಅಧಿಕಾರ ಹೋಗಬೇಕು. ದೇಶದ ಸಂವಿಧಾನ ರಕ್ಷಣೆ, ಸಾರ್ವಭೌಮತ್ವ ಎತ್ತಿಹಿಡಿಯಲು ಸಂವಿಧಾನವನ್ನು ರಕ್ಷಿಸಲು ನಾವೆಲ್ಲ ಹೋರಾಟ ಮಾಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಹೇಳಿದರು.ಪ್ರಧಾನಮಂತ್ರಿಯವರು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದು ಹೇಳುತ್ತಾರೆ. ಸಬ್ ಕಾ ಸಾಥ್ ಎಂದರೆ ಏನು, ಅದರಂತೆ ನಡೆದುಕೊಳ್ಳುತ್ತಿದ್ದಾರೆಯೇ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಸುಳ್ಳುಗಳನ್ನು ಸತ್ಯದ ತಲೆ ಮೇಲೆ ಹೊಡೆದಂತೆ ಹೇಳುತ್ತಾರೆ. ಬಿಜೆಪಿಯವರ ಡೋಂಗಿತನವನ್ನು ಜನರ ಮುಂದೆ ಬಯಲು ಮಾಡುವುದು ಕಾಂಗ್ರೆಸ್ ಕಾರ್ಯಕರ್ತರ ಕರ್ತವ್ಯ ಎಂದರು.
|
6 |
+
ಪಂಚಖಾತ್ರಿಗಳನ್ನು ಜಾರಿಗೆ ತಂದರೆ ಸರ್ಕಾರ ದಿವಾಳಿಯಾಗುತ್ತದೆ ಎಂದು 12 ವರ್ಷ ಮುಖ್ಯಮಂತ್ರಿಯಾಗಿ, 10 ವರ್ಷ ಪ್ರಧಾನಿಯಾಗಿದ್ದ ನರೇಂದ್ರ ಮೋದಿ ಹೇಳುತ್ತಿದ್ದರು. ನಾವು 5 ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದೇವೆ. ಅದರ ಬಳಿಕವೂ ನಮ್ಮ ಆರ್ಥಿಕ ಸ್ಥಿತಿ ಸದೃಢವಾಗಿದೆ ಎಂದರು. ಮೃದು ಹಿಂದುತ್ವದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಕಾಂಗ್ರೆಸ್ ಸಿದ್ಧಾಂತದ ಬಗ್ಗೆ ಸ್ಪಷ್ಟತೆ ಇರಬೇ��ು. ಜಾತ್ಯಾತೀತತೆ, ಸಂವಿಧಾನದ ಬಗ್ಗೆ ನಂಬಿಕೆ ಇರಬೇಕು. ಹಿಂದುತ್ವ ಎಂದರೆ ಹಿಂದುತ್ವವೇ. ಮೃದು ಹಿಂದುತ್ವ, ಕಠಿಣ ಹಿಂದುತ್ವ ಎಂಬುದಿಲ್ಲ. ಹಿಂದುತ್ವ ಬೇರೆ, ಹಿಂದು ಎಂಬುದೇ ಬೇರೆ. ನಾನು ಹಿಂದೂ ಎಂದು ಹೇಳಿದರು.
|
7 |
+
ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿಯಾದ ಹೆಬ್ಬಾರ್ ಮತ್ತು ಸೋಮಶೇಖರ್
|
8 |
+
ನಾವು ಶ್ರೀರಾಮನ ಪೂಜೆ ಮಾಡುತ್ತೇವೆ. ಅವರೊಬ್ಬರೇ ಪೂಜೆ ಮಾಡುವುದಿಲ್ಲ. ನಮ್ಮೂರಲ್ಲೆಲ್ಲಾ ರಾಮಮಂದಿರ ಕಟ್ಟಿಕೊಂಡಿದ್ದೇವೆ. ರಾಮನ ಭಜನೆ ಮಾಡುತ್ತೇವೆ. ಡಿಸೆಂಬರ್ ಕೊನೆ ವಾರದ ಧನುರ್ ಮಾಸದಲ್ಲಿ ಊರಿನಲ್ಲೆಲ್ಲಾ ರಾಮನ ಭಜನೆ ಮಾಡಿಕೊಂಡು ನಾವು ಓಡಾಡುತ್ತಿದ್ದೆವು ಎಂದು ಹೇಳಿದರು.ಆದರೆ ಎಲ್ಲರೂ ಮನುಷ್ಯರಾಗಿ ಸಮಾನವಾಗಿ ಬಾಳಬೇಕು. ಇದು ಕಾಂಗ್ರೆಸ್ನ ಸಿದ್ಧಾಂತ. ಇದಕ್ಕೆ ಬದ್ಧರಾಗಿದ್ದೇವೆ. ಇದರ ಆಧಾರದ ಮೇಲೆ ಮುನ್ನುಗ್ಗಿ ಕೆಲಸ ಮಾಡಿ ಕಾಂಗ್ರೆಸ್ ಪಕ್ಷವನ್ನು ಅಕಾರಕ್ಕೆ ತಂದು ರಾಹುಲ್ಗಾಂಯವರನ್ನು ಪ್ರಧಾನಿಯನ್ನಾಗಿ ಮಾಡಲು ಪ್ರಯತ್ನಿಸೋಣ ಎಂದರು.
|
9 |
+
ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಸಂಘ ಪರಿವಾರ ಅಥವಾ ಬಿಜೆಪಿಯ ಯಾರೊಬ್ಬರೂ ಬಲಿದಾನ ಮಾಡಿಲ್ಲ. 1925 ರಲ್ಲಿ ಆರ್ಎಸ್ಎಸ್ ರಚನೆಯಾಯಿತು. 1950 ರಲ್ಲಿ ಜನಸಂಘ ಸ್ಥಾಪನೆಗೊಂಡಿತು. 1980 ರಲ್ಲಿ ಬಿಜೆಪಿ ಅಸ್ತಿತ್ವಕ್ಕೆ ಬಂದಿದೆ. ಸ್ವತಂತ್ರ್ಯ ಪೂರ್ವದಲ್ಲೇ ರಚನೆಯಾಗಿದ್ದ ಆರ್ಎಸ್ಎಸ್ನ ಒಬ್ಬನೇ ಒಬ್ಬ ವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ಬಲಿದಾನವಾಗಿದ್ದನ್ನು ತೋರಿಸಲಿ ಎಂದು ಸವಾಲು ಹಾಕಿದರು.
|
10 |
+
ಕನ್ನಡ ಸಂಘಟನೆಗಳಿಗೆ ಗೃಹಸಚಿವ ಪರಮೇಶ್ವರ್ ಎಚ್ಚರಿಕೆ
|
11 |
+
ಕಾಂಗ್ರೆಸ್ ಅಕಾರಕ್ಕಾಗಿ ರಚನೆಯಾಗಿದ್ದಲ್ಲ. ಜನರ ಜೀವನ ಮಟ್ಟ ಸುಧಾರಣೆಯಾಗಿ ಅಸ್ತಿತ್ವಕ್ಕೆ ಬಂದಿತು. ಅದು ರಾಜಕೀಯ ಪಕ್ಷ ಅಲ್ಲ , ಒಂದು ಚಳವಳಿ ಮತ್ತು ಸಿದ್ಧಾಂತ. ಅದರಲ್ಲಿರುವುದೇ ನಮಗೆ ಹೆಮ್ಮೆ ಎಂದರು. ಇಂದಿನ ಡಿಜಿಟಲ್ ಕ್ರಾಂತಿಗೆ ಮುನ್ನುಡಿ ಬರೆದವರು ರಾಜೀವ್ಗಾಂ. ಮೊದಲ ಪ್ರಧಾನಿ ನೆಹರು. ಆಧುನಿಕ ಭಾರತದ ಶಿಲ್ಪಿ. ಇಂದಿರಾಗಾಂ ಬಡವರ ಪರ ಕಾರ್ಯಕ್ರಮಗಳನ್ನು ರೂಪಿಸಿದರು. ವಾಜಪೇಯಿ ಅವಯಲ್ಲಿ 5 ವರ್ಷ, ಮೋದಿಯವರ ಕಾಲದಲ್ಲಿ 10 ವರ್ಷ ಆಡಳಿತ ನಡೆಸಿದ ಬಿಜೆಪಿಯವರ ಕೊಡುಗೆ ಏನು? ದೇಶದಲ್ಲಿ ಒಂದಾದರೂ ಅಣೆಕಟ್ಟೆ ನಿರ್ಮಿಸಿದ್ದಾರೆಯೇ ಎಂದು ಪ್ರಶ್ನಿಸಿದರು. ಬಹುಸಂಸ್ಕøತಿಯಲ್ಲಿ ಏಕತೆಯನ್ನು ನಂಬಿಕೊಂಡಿರುವುದು ಕಾಂಗ್ರೆಸ್ ಎಂದು ಹೇಳಿದರು.
|
12 |
+
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್, ಆರೋಗ್ಯ ಸಚಿವರಾದ ದಿನೇಶ್ಗುಂಡೂರಾವ್, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಮಾಜಿ ಸಚಿವ ರಾಣಿ ಸತೀಶ್ ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
|
eesanje/url_46_278_1.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಸಚಿವ ಮಧುಬಂಗಾರಪ್ಪ ಕಾರು ಅಪಘಾತ, ತಪ್ಪಿದ ದುರಂತ
|
2 |
+
ತುಮಕೂರು,ಡಿ.28- ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದು ಅಪಘಾತಕ್ಕೀಡಾದ ಘಟನೆ ತಾಲ್ಲೂಕಿನ ನಂದಿಹಳ್ಳಿ ಬಳಿಯ ಮೇಲ್ಸೇತುವೆಯ ಬಳಿ ತಡರಾತ್ರಿ 11 ಗಂಟೆ ಸಮಯದಲ್ಲಿ ನಡೆದಿದೆ. ಅದೃಷ್ಟವಶಾತ್ ಮಧು ಬಂಗಾರಪ್ಪ ಸೇರಿದಂತೆ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
|
3 |
+
ಸಚಿವರು ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಜಖಂಗೊಂಡಿದ್ದು ಯಾರಿಗೂ ಯಾವುದೇ ಅಪಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಬದಲಿಕಾರಿನ ವ್ಯವಸ್ಥೆ ಮಾಡಿಕೊಂಡು ಮಧು ಬಂಗಾರಪ್ಪ ಅವರು ಬೆಂಗಳೂರಿಗೆ ತೆರಳಿದರು. ಕ್ಯಾತ್ಸಂದ್ರ ಠಾಣೆ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಸಚಿವರಿಗೆ ಭದ್ರತೆ ನೀಡಿ ಸುರಕ್ಷಿತವಾಗಿ ಬೆಂಗಳೂರಿಗೆ ಕಳುಹಿಸಿದ್ದಾರೆ.
|
4 |
+
ಉತ್ತರ ಭಾರತದಲ್ಲಿ ಕವಿದ ಮಂಜು, 134 ವಿಮಾನ, 22 ರೈಲು ಸಂಚಾರದಲ್ಲಿ ವ್ಯತ್ಯಯ
|
5 |
+
ಲಾರಿಯನ್ನು ರಸ್ತೆಯಿಂದ ತೆರವುಗೊಳಿಸಿ ಕೆಲ ಕಾಲ ಉಂಟಾಗಿದ್ದ ಸಂಚಾರ ವ್ಯತ್ಯಯ ಸರಿಪಡಿಸಿದ್ದಾರೆ.ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.ಲಾರಿ ಗುಜರಾತ್ನಿಂದ ಬೆಂಗಳೂರಿಗೆ ಟೈಲ್ಸ್ ತೊಂಬಿಕೊಂಡು ಹೋಗುತ್ತಿತ್ತು.ಪ್ರಸ್ತುತ ಚಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
|
eesanje/url_46_278_10.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
1,608 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ : ಪರಮೇಶ್ವರ್
|
2 |
+
ಕಲ್ಬುರ್ಗಿ, ಡಿ.27- ರಾಜ್ಯದಲ್ಲಿ ವಿವಿಧ ಹಂತಗಳಲ್ಲಿ ಒಟ್ಟು 1,608 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ ನೆನೆಗುದಿಗೆ ಬಿದ್ದಿರುವ 545 ಪಿಎಸ್ಐಗಳ ನೇಮಕಾತಿಗೆ ಬೆಂಗಳೂರಿನಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರಿನಲ್ಲೇ ಪರೀಕ್ಷೆ ನಡೆಸಲು ಸಾಧ್ಯವಿದೆ ಎಂದು ವರದಿ ನೀಡಿದೆ. ಹೀಗಾಗಿ ಈ ಬಾರಿ ರಾಜ್ಯದ ಯಾವ ಭಾಗದಲ್ಲೂ ಪರೀಕ್ಷೆಗಳಾಗುವುದಿಲ್ಲ. ಬೆಂಗಳೂರಿನಲ್ಲಿ ಮಾತ್ರ ನಡೆಸಲಾಗುತ್ತದೆ ಎಂದರು.
|
3 |
+
545 ಹುದ್ದೆಗಳ ಪರೀಕ್ಷೆಯ ಗೊಂದಲ ಮರುಕಳಿಸಬಾರದು. ಈಗಾಗಲೇ ಸಾಕಷ್ಟು ವಿಳಂಬವಾಗಿದೆ. ಕಲ್ಬುರ್ಗಿ ಅಥವಾ ಬೇರೆ ಕಡೆ ಪರೀಕ್ಷೆ ನಡೆದು ಸಣ್ಣಪುಟ್ಟ ಗೊಂದಲಗಳಾದರೆ ಇನ್ನಷ್ಟು ವಿಳಂಬವಾಗುತ್ತದೆ. ಅದಕ್ಕಾಗಿ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ನಿಷಕ್ಷಪಾತವಾಗಿ ಪರೀಕ್ಷೆ ನಡೆಸಲು ಬೆಂಗಳೂರಿನಲ್ಲಿ ಅವಕಾಶ ಕಲ್ಪಿಸಲಾಗಿದೆ. ಈ ವೇಳೆ ಸಣ್ಣಪುಟ್ಟ ತೊಂದರೆಗಳಾದರೂ ಕೂಡ ಭವಿಷ್ಯದ ದೃಷ್ಟಿಯಿಂದ ಸಹಕರಿಸುವಂತೆ ಮನವಿ ಮಾಡಿದರು.
|
4 |
+
ಎರಡನೇ ಹಂತದಲ್ಲಿ 403, ಆ ನಂತರ 660 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗಳು ನಡೆಯಲಿವೆ. ಈ ಎರಡು ಹಂತಗಳ ನೇಮಕಾತಿಗೆ ಕಲ್ಬುರ್ಗಿ ಸೇರಿದಂತೆ ರಾಜ್ಯಾದ್ಯಂತ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಹೇಳಿದರು. ಕೋವಿಡ್ ಸಂದರ್ಭದಲ್ಲಿ 4 ಸಾವಿರ ಕೋಟಿ ರೂ.ಗಳ ಹಗರಣವಾಗಿರಬಹುದು ಎಂದು ನಾವು ತಿಳಿದುಕೊಂಡಿದ್ದೇವೆ. ಈಗ ನಮ್ಮ ಮಾಹಿತಿ ತಪ್ಪು ಎಂದು ಸ್ಪಷ್ಟವಾಗಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು 4 ಸಾವಿರ ಕೋಟಿ ಅಲ್ಲ, 40 ಸಾವಿರ ಕೋಟಿ ಎಂದು ಹೇಳಿದ್ದಾರೆ ಎಂದರು.
|
5 |
+
ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿಯ ಮನೆಯಲ್ಲಿ ವಾದ್ರಾ ವಾಸ್ತವ್ಯ
|
6 |
+
ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಯುತ್ತಿದೆ. ತನಿಖಾ ಸಮಿತಿ ಕಾನೂನು ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತದೆ. ಯಾರಿಗೆ ನೋಟಿಸ್ ನೀಡಬೇಕು, ಯಾವ ರೀತಿ ವಿಚಾರಣೆ ನಡೆಸಬೇಕೆಂಬುದನ್ನು ಸಮಿತಿ ತೀರ್ಮಾನಿಸುತ್ತದೆ ಎಂದು ಹೇಳಿದರು.
|
7 |
+
ಕರ್ನಾಟಕದಲ್ಲಿ ಕನ್ನಡ ಭಾಷೆಗಾಗಿ ಹೋರಾಟ ನಡೆಸುವುದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ನಗರ ಪ್ರದೇಶಗಳಲ್ಲಿ ಬಹಳಷ್ಟು ಮಂದಿ ಇರುತ್ತಾರೆ. ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಿಂದ ಬರುವವರ ಸಂಖ್ಯೆ ಹೆಚ್ಚಿರುತ್ತದೆ. ಅವರಿಗೆ ಮಾಹಿತಿ ನೀಡುವ ದೃಷ್ಟಿಯಿಂದ ಇಂಗ್ಲಿಷ್ ಭಾಷೆಯಲ್ಲೂ ನಾಮಫಲಕ ಇರಬೇಕೆಂದು ಹೇಳಲಾಗುತ್ತದೆ. ಕನ್ನಡ ಭಾಷೆಗೆ ಆದ್ಯತೆ ನೀಡುವುದು ಒಳ್ಳೆಯದು ಎಂದರು.
|
8 |
+
ಕನ್ನಡಪರ ಸಂಘಟನೆಗಳ ಹೋರಾಟ ನ್ಯಾಯಯುತವಾಗಿದೆ. ಅನ್ಯರಾಜ್ಯಕ್ಕೆ ಹೋದಾಗ ಸ್ಥಳೀಯ ಭಾಷೆಗಳಲ್ಲಿ ಫಲಕಗಳಿದ್ದರೆ ಹೊರಗಿನವರಿಗೆ ಗೊತ್ತಾಗು��ುದಿಲ್ಲ. ಆಗ ಮಾಹಿತಿ ತಿಳಿದುಕೊಳ್ಳಲು ಕಷ್ಟವಾಗುತ್ತದೆ. ಈ ನಿಟ್ಟಿನಲ್ಲಿ ಇಂಗ್ಲಿಷ್ ಬಳಕೆಯೂ ನಿಯಮಾನುಸಾರ ಇರಬೇಕಾಗುತ್ತದೆ ಎಂದು ಹೇಳಿದರು.
|
eesanje/url_46_278_11.txt
ADDED
@@ -0,0 +1,15 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯದಲ್ಲಿ ತೀವ್ರ ಬರ, ಮೇವು ಮತ್ತು ನೀರಿಗೆ ಸಂಕಷ್ಟ
|
2 |
+
ಬೆಂಗಳೂರು, ಡಿ.27- ಹಿಂದೆಂದೂ ಕಾಣದ ಭೀಕರ ಬರದಿಂದ ತತ್ತರಿಸಿರುವ ಕರ್ನಾಟಕಕ್ಕೆ ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಪ್ರಮುಖ ಜಲಾಶಯಗಳಲ್ಲಿ ನೀರಿನ ಒಳಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಮುಂದಿನ ದಿನಗಳಲ್ಲಿ ಪಟ್ಟಣಗಳು ಮತ್ತು ನಗರಗಳಲ್ಲಿ ಕುಡಿಯುವ ನೀರಿನ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು.
|
3 |
+
ಎದುರಾಗಲಿರುವ ಬಿಕ್ಕಟ್ಟಿನ ಬಗ್ಗೆ ಕಳವಳ ವ್ಯಕ್ತಪಡಿಸಿರುವ ತಜ್ಞರು, ನೀರನ್ನು ವಿವೇಚನಾಯುಕ್ತವಾಗಿ ಬಳಸಲು ಜನರಿಗೆ ಸಲಹೆ ಮಾಡಿದ್ದಾರೆ. ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ತನ್ನ ಜಲಾಶಯಗಳ ನೀರನ್ನು ಕುಡಿಯಲು ಮತ್ತು ಕೈಗಾರಿಕಾ ಉದ್ದೇಶಗಳಿಗಾಗಿ ಬಳಸಲು ನಿರ್ಧರಿಸಿದೆ. ಇದರಿಂದಾಗಿ ಈಗಾಗಲೇ ಮುಂಗಾರು ವೈಫಲ್ಯದಿಂದ ಸಂಕಷ್ಟದಲ್ಲಿರುವ ರೈತರಿಗೆ ನೀರಾವರಿಗೆ ಹೆಚ್ಚಿನ ನೀರು ಸಿಗದಂತಾಗುತ್ತಿದೆ.
|
4 |
+
ಕೆಎಸ್ಎನ್ಡಿಎಂಸಿ ಪ್ರಕಾರ, 895 ಟಿಎಂಸಿ ಅಡಿ ನೀರನ್ನು ಹಿಡಿದಿಟ್ಟುಕೊಳ್ಳಬಲ್ಲ ಪ್ರಮುಖ ಜಲಾಶಯಗಳಲ್ಲಿ ಈಗ ಕೇವಲ 394 ಟಿಎಂಸಿ ಅಡಿ ನೀರು ಇದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯಗಳಲ್ಲಿ 668 ಟಿಎಂಸಿ ಅಡಿ ನೀರಿತ್ತು. ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಜಲಾಶಯಗಳ ಒಟ್ಟು ಸಾಮಥ್ರ್ಯ 114 ಟಿಎಂಸಿ ಅಡಿಯಷ್ಟಿದ್ದರೆ, ಇಲ್ಲಿಯವರೆಗೆ ಕೇವಲ 52 ಟಿಎಂಸಿ ಅಡಿ ಇದೆ. ಕಳೆದ ವರ್ಷ ಇದೇ ಅವಧಿಯಲ್ಲಿ 83 ಟಿಎಂಸಿ ಅಡಿ ನೀರು ಇತ್ತು.
|
5 |
+
ಬೇಸಿಗೆಯಲ್ಲಿ ಕುಡಿಯುವ ನೀರಿನ ಬಿಕ್ಕಟ್ಟನ್ನು ನಿವಾರಿಸುವುದು ತನ್ನ ಆದ್ಯತೆಯಾಗಿದೆ ಎಂದು ಸರ್ಕಾರವು ಹೇಳುತ್ತಿದ್ದರೂ, ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ಆರಂಭದಲ್ಲಿ ರಾಜ್ಯವು ನೀರಿನ ಕೊರತೆಯನ್ನು ಎದುರಿಸಬಹುದು ಎಂದು ಉನ್ನತ ಮೂಲಗಳು ತಿಳಿಸಿವೆ.
|
6 |
+
ದೀದಿ ಸರ್ಕಾರಕ್ಕಿಂತ ಎಡಪಕ್ಷಗಳ ಆಡಳಿತ ಉತ್ತಮವಾಗಿತ್ತು : ಅಮಿತ್ ಶಾ
|
7 |
+
ಕುಡಿಯುವ ಮತ್ತು ನೀರಾವರಿ ಉದ್ದೇಶಗಳಿಗಾಗಿ ಅಂತರ್ಜಲವನ್ನು ಅವಲಂಬಿಸಿರುವ ಸ್ಥಳಗಳ ಮೇಲೂ ಪರಿಣಾಮ ಬೀರಿದೆ. ವಿಪತ್ತು ನಿರ್ವಹಣಾ ವಿಭಾಗದ ಅಧಿಕಾರಿಗಳ ಪ್ರಕಾರ, ಮಳೆ ಕೊರತೆಯಿಂದಾಗಿ ರೈತರು ಬೋರ್ವೆಲ್ಗಳನ್ನು ಕೊರೆಯುವ ಮೂಲಕ ಅಂತರ್ಜಲವನ್ನು ಅತಿಯಾಗಿ ಬಳಸಿಕೊಳ್ಳುತ್ತಿರುವುದರ ಜೊತೆಗೆ ಹಲವು ಸ್ಥಳಗಳಲ್ಲಿ, ಬೋರ್ವೆಲ್ಗಳು ಸಹ ಬತ್ತಿರುವುದು ಪರಿಸ್ಥಿತಿಯನ್ನು ಆತಂಕಕ್ಕೆ ನೂಕಿದೆ. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಅಂತರ್ಜಲದ ಮಟ್ಟ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿದ್ದು, 1112 ಹಳ್ಳಿಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಈ ಎಲ್ಲಾ ಗ್ರಾಮಗಳಿಗೂ ಟ್ಯಾಂಕರ್ ನೀರು ಪೂರೈಸುವ ವ್ಯವಸ್ಥೆಯನ್ನು ಮಾಡಲಾಗಿದ್ದರೂ, ಪರಿಸ್ಥಿತಿ ಮಾತ್ರ ಸುಧಾರಿಸಿಲ್ಲ.
|
8 |
+
ರಾಜ್ಯದ 31 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ಎದುರಾಗಿದೆ. ಮೇ ಆರಂಭದ ಹೊತ್ತಿಗೆ ಇದು ಇನ್ನಷ್ಟು ಬಿಗಡಾಯಿಸುವ ಸಾಧ್ಯತೆ ಇದ್ದು, ಜೂನ್ ಮೊದಲ ವಾರದಲ್ಲಿ ಸುರಿಯುವ ಮುಂಗಾರು ಮಳೆವರೆಗೆ ಪರಿಸ್ಥಿತಿಯನ್ನು ಜಿಲ್ಲಾಡಳಿತಗಳು ನಿರ್ವಹಿಸಬೇಕಿದೆ.
|
9 |
+
ಕಳೆದ ವರ್ಷಕ್ಕಿಂತಲೂ ಈ ಬಾರಿ ಕುಡಿಯುವ ನೀರಿನ ಬೇಡಿಕೆ ಬಿಗಡಾಯಿಸಿದೆ. ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಿಂದ ಪ್ರತಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ 4ರಿಂದ 5 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಖಾಸಗಿ ಟ್ಯಾಂಕರ್ಗಳ ಮೂಲಕ ನೀರು ಪೂರೈಕೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಕಳೆದ ಎರಡು ದಿನಗಳಿಂದ ಗ್ರಾಮೀಣಾಭಿವೃದ್ಧಿ ಇಲಾಖೆ ಈ ಬಗ್ಗೆ ಸತತ ಸಭೆ ನಡೆಸಿ ಪರಿಹಾರ ಮಾರ್ಗಸೂಚಿಗಳನ್ನು ಜಿಲ್ಲೆಗಳಿಗೆ ರವಾನಿಸಿದೆ.
|
10 |
+
ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥಗೊಳಿಸಲು ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ. ಖಾಸಗಿ ಟ್ಯಾಂಕರ್ ಮೂಲಕ ಎಷ್ಟು ಸಾಧ್ಯವೋ ಅಷ್ಟು ನೀರಿನ ಪೂರೈಕೆ ಮಾಡಬೇಕು. ನೀರಿನ ಲಭ್ಯತೆ ಆಧರಿಸಿ ಖಾಸಗಿ ಬೋರ್ವೆಲ್ಗಳನ್ನು ಬಳಕೆ ಮಾಡಬೇಕು. ಕೊನೆಯ ಹಂತದಲ್ಲಿ ಮಾತ್ರ ಹೊಸ ಬೋರ್ ವೆಲ್ ಕೊರೆಯುವುದಕ್ಕೆ ಆದ್ಯತೆ ನೀಡಬೇಕೆಂದು ಸೂಚಿಸಲಾಗಿದೆ. ಇದುವರೆಗೆ 1112 ಹಳ್ಳಿಗಳಲ್ಲಿ ಕುಡಿಯುವುದಕ್ಕೂ ನೀರಿಲ್ಲದ ಸ್ಥಿತಿ ನಿರ್ಮಾಣವಾಗಿದೆ.
|
11 |
+
ಹೊಸ ಬೋರ್ವೆಲ್ಗಳಿಗೆ ಒತ್ತಡ:ಗ್ರಾಮೀಣ ಪ್ರದೇಶದಲ್ಲಿ ಹೊಸ ಬೋರ್ವೆಲ್ ಕೊರೆಯುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜನಪ್ರತಿನಿಗಳು ಸರ್ಕಾರದ ಮೇಲೆ ವ್ಯಾಪಕ ಒತ್ತಡ ಹೇರುತ್ತಿದ್ದು, ಅಧಿಕಾರಿಗಳು ಇಕ್ಕಟ್ಟಿಗೆ ಸಿಲುಕಿದ್ದಾರೆ. ಕುಡಿಯುವ ನೀರಿನ ಸಮಸ್ಯೆಗೆ ಬೋರ್ವೆಲ್ ಶಾಶ್ವತ ಪರಿಹಾರವಲ್ಲ. ಇದರಿಂದ ಅಂತರ್ಜಲದ ತೀವ್ರ ಕುಸಿತವಾಗುತ್ತದೆ ಎಂಬ ಕಾರಣಕ್ಕಾಗಿ ಹೊಸ ಕೊಳವೆ ಬಾವಿಗಳನ್ನು ಕೊರೆಯುವುದಕ್ಕೆ ರಾಜ್ಯ ಸರ್ಕಾರ ಕೆಲ ನಿರ್ಬಂಧ ವಿಧಿಸಿದೆ. ದಿನೇ ದಿನೆ ಅಂತರ್ಜಲದ ಮಟ್ಟ ಕುಸಿಯುತ್ತಿದೆ. 1,200ರಿಂದ 1,500 ಅಡಿಗಳ ವರೆಗೆ ಬೋರ್ವೆಲ್ ಕೊರೆಸಿದರೂ ನೀರು ಸಿಗದ ಸ್ಥಿತಿ ನಿರ್ಮಾಣವಾಗಿದೆ.
|
12 |
+
ಮಂಜಿನ ನಗರಿಯಾದ ದೆಹಲಿ, ಆರೆಂಜ್ ಅಲರ್ಟ್ ಘೋಷಣೆ
|
13 |
+
ಮೇವು, ನೀರಿನ ಸಮಸ್ಯೆ: ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯ ಜೊತೆ ಮೇವಿನ ಸಮಸ್ಯೆಯೂ ಕಾಡುತ್ತಿದೆ. ದಿನನಿತ್ಯ ರೈತರು ಸಾಕಿರುವ ಪ್ರಾಣಿಗಳಿಗೆ ಮೇವು ಎಷ್ಟು ಮುಖ್ಯವೋ ಅಷ್ಟೇ ನೀರು ಸಹ ಮುಖ್ಯವಾಗಿರುತ್ತದೆ. ಮೇವು ತಿಂದ ನಂತರ ಕೂಡಲೇ ಜಾನುವಾರುಗಳಿಗೆ ನೀರುಣಿಸಬೇಕು. ಎಲ್ಲಿಯೂ ನೀರು ಸಿಗದ ಕಾರಣ ದನಕರುಗಳನ್ನು ಬಯಲಿಗೆ ಕರೆದುಕೊಂಡು ಬರುತ್ತಿಲ್ಲ. ಬೇಸಿಗೆಯಲ್ಲಿ ಮೇವಿನ ಕೊರತೆ ಹೆಚ್ಚಾಗಿದೆ. ದಿನೇ ದಿನೆ ಬಿಸಿಲಿನ ತಾಪ ಹೆಚ್ಚಳದಿಂದ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದೆ.
|
14 |
+
ಮೇವಿಗಾಗಿ ಹರಸಾಹಸ:ಈ ಬಾರಿ ಭೀಕರ ಬಲಗಾಲದಿಂದ ತಮ್ಮ ಜಾನುವಾ��ುಗಳಿಗೆ ಮೇವು ಇಲ್ಲದ ಕಾರಣ ರೈತರು ಕಂಗಾಲಾ ಗಿದ್ದಾರೆ. ಗ್ರಾಮೀಣ ಭಾಗದಲ್ಲಿ ನೀರು ಇರುವ ರೈತರ ತೋಟಗಳಲ್ಲಿ ಹಸಿ ಮೇವು ಬೆಳೆದುಕೊಳ್ಳುತ್ತಾರೆ.
|
15 |
+
ಇಲ್ಲದಿದ್ದರೆ ರೈತರು ಒಣ ಮೇವಿನ ಮೊರೆ ಹೋಗುತ್ತಾರೆ. ಬರಗಾಲದಲ್ಲೂ ಒಣ ರಾಗಿ ಹುಲ್ಲು ಒಂದು ಹೊರೆಗೆ ಸರಾಸರಿ 110 ರಿಂದ 150 ರೂ. ವರೆಗೆ ನಿಗದಿಯಾಗಿದೆ. ಒಂದು ಕಟ್ಟು ಒಣ ಹುಲ್ಲು ಒಂದು ದಿನಕ್ಕೆ ಸಕಾಗುವುದಿಲ್ಲ. ರೈತರು ಪ್ರತಿನಿತ್ಯ ಸುಮಾರು 5-6 ಕಿ.ಮೀ. ದೂರದ ಬೇರೆ ಬೇರೆ ಗ್ರಾಮಗಳಲ್ಲಿ ಬೆಳೆದಿರುವ ಜೋಳದ ಕಡ್ಡಿ, ಒಣ ರಾಗಿ ಹುಲ್ಲು ಮತ್ತಿತರ ಮೇವು ತರಲು ಹರಸಾಹಸ ಪಡುತ್ತಿದ್ದಾರೆ.
|
eesanje/url_46_278_12.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಕರ್ನಾಟಕವನ್ನು ಬಿಜೆಪಿ ಭದ್ರಕೋಟೆಯನ್ನಾಗಿಸಲು ವಿಜಯೇಂದ್ರ ಪಣ
|
2 |
+
ಬೆಂಗಳೂರು, ಡಿ.27- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕ ಬಿಜೆಪಿಗೆ ಭದ್ರಕೋಟೆ ಮಾತ್ರವಲ್ಲದೆ ಸುಭದ್ರ ಕೋಟೆ ಎಂಬುದನ್ನು ಸಾಬೀತು ಮಾಡುವುದಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ಪಕ್ಷದ ಕಚೇರಿಯಲ್ಲಿ ನಡೆದ ಪದಾಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಬಿಜೆಪಿಗೆ ಲೋಕಸಭೆ ಚುನಾವಣೆಯಲ್ಲಿ ಯಾವಾಗಲೂ ಭದ್ರಕೋಟೆ, ಇದನ್ನು ಈ ಬಾರಿ ಸುಭದ್ರ ಕೋಟೆಯನ್ನಾಗಿ ಪರಿವರ್ತನೆ ಮಾಡುತ್ತೇವೆ ಎನ್ನುವ ಮೂಲಕ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದರು.
|
3 |
+
ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ 28 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಹೊಂದಿದ್ದೇವೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಬೇಕೆಂದರೆ ಕರ್ನಾಟಕದಿಂದ ಹೆಚ್ಚು ಸ್ಥಾನ ಗೆಲ್ಲಲೇಬೇಕು. ಆ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
|
4 |
+
ನಮ್ಮ ಸೌಭಾಗ್ಯ ಎಂದರೆ ಮೂರನೇ ಬಾರಿಗೆ ಮೋದಿಯವರು ಪ್ರಧಾನಿಯಾಗುವ ಸಂದರ್ಭದಲ್ಲಿ ನಮಗೆ ಜವಾಬ್ದಾರಿ ಸಿಕ್ಕಿದೆ. ಅಂತಹ ಕಾಲಘಟ್ಟದಲ್ಲಿ ನಾವು ಅಧಿಕಾರ ತೆಗೆದುಕೊಂಡಿದ್ದೇವೆ. ಪಕ್ಷ ಯಾವ ಸೂಚನೆಯನ್ನು ನೀಡುತ್ತದೆಯೋ ಅದರಂತೆ ಕಾರ್ಯತಂತ್ರ ರೂಪಿಸುತ್ತೇವೆ ಎಂದರು.
|
5 |
+
ದೀದಿ ಸರ್ಕಾರಕ್ಕಿಂತ ಎಡಪಕ್ಷಗಳ ಆಡಳಿತ ಉತ್ತಮವಾಗಿತ್ತು : ಅಮಿತ್ ಶಾ
|
6 |
+
ಪಕ್ಷದ ವರಿಷ್ಠರು ನಮ್ಮ ಮೇಲೆ ಹೆಚ್ಚಿನ ವಿಶ್ವಾಸವಿಟ್ಟುಕೊಂಡು ಜವಾಬ್ದಾರಿಯನ್ನು ನೀಡಿದ್ದೇವೆ. ಯಾವ ಕಾಲಘಟ್ಟದಲ್ಲಿ ಹೊಣೆಗಾರಿಕೆ ಸಿಕ್ಕಿದೆ ಎಂಬುದು ಬಹಳ ಮುಖ್ಯ. ಅದನ್ನು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಕನಸನ್ನು ನನಸು ಮಾಡುವ ಗುರಿ ತಮ್ಮ ಮುಂದೆ ಇದೆ ಎಂದು ಹೇಳಿದರು.ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಬೇಕೆಂಬುದು ಶತಕೋಟಿ ಭಾರತೀಯರ ಕನಸಾಗಿತ್ತು.
|
7 |
+
ಅದು ಇಂದು ನನಸಾಗುವ ಹಂತಕ್ಕೆ ಬಂದಿದೆ. ಮೋದಿಯವರ ಕಾಲಘಟ್ಟದಲ್ಲಿ ರಾಮಮಂದಿರ ಲೋಕಾರ್ಪಣೆಯಾಗುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ. ಇಂತಹ ಕಾಲಘಟ್ಟದಲ್ಲಿ ನಾನು ಪಕ್ಷದ ಸಾರಥ್ಯ ವಹಿಸಿಕೊಂಡಿರುವುದು ಪೂರ್ವಜನ್ಮದ ಪುಣ್ಯ. ಕಾರ್ಯಕರ್ತರ ಪರಿಶ್ರಮದಿಂದ ಈ ಬಾರಿ ನಾವು ಹೆಚ್ಚಿನ ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದು ವಿಜಯೇಂದ್ರ ದೃಢ ವಿಶ್ವಾಸ ವ್ಯಕ್ತಪಡಿಸಿದರು.
|
8 |
+
ಇದಕ್ಕೂ ಮುನ್ನ ಪಕ್ಷದ ಕಚೇರಿಗೆ ಆಗಮಿಸಿದ ವಿಜಯೇಂದ್ರ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ನಂತರ ನೂತನ ಪದಾಧಿಕಾರಿಗಳ ಕಚೇರಿಯಲ್ಲಿ ಆರತಿ ಎತ್ತಿ ಬರಮಾಡಿಕೊಳ್ಳಲಾಯಿತು.
|
eesanje/url_46_278_2.txt
ADDED
@@ -0,0 +1,14 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪದೇ ಪದೇ ಪಕ್ಷಕ್ಕೆಮುಜುಗರ, ಯತ್ನಾಳ್ ಅಮಾನತಿಗೆ ಸಿದ್ಧತೆ
|
2 |
+
ಬೆಂಗಳೂರು,ಡಿ.28- ಸ್ವಪಕ್ಷೀಯರ ವಿರುದ್ಧವೇ ಪದೇಪದೇ ಬಹಿರಂಗ ಹೇಳಿಕೆಗಳನ್ನು ನೀಡುವ ಮೂಲಕ ಮುಜುಗರ ಸೃಷ್ಟಿಸುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಅಮಾನತುಪಡಿಸುವ ಸಾಧ್ಯತೆಯಿದೆ. ನಿರಂತರವಾಗಿ ಪಕ್ಷದ ವಿರುದ್ಧ ಟೀಕೆ ಮಾಡುತ್ತಾ ವಿರೋಧ ಪಕ್ಷದವರಿಗೆ ಅಸ್ತ್ರ ನೀಡುತ್ತಿರುವ ಯತ್ನಾಳ್ ಹೇಳಿಕೆಯನ್ನು ರಾಜ್ಯ ಬಿಜೆಪಿ ಘಟಕ ಗಂಭೀರವಾಗಿ ಪರಿಗಣಿಸಿ ಅವರನ್ನು ಪಕ್ಷದಿಂದ ಅಮಾನತು ಮಾಡಲು ಕೇಂದ್ರ ಬಿಜೆಪಿ ನಾಯಕರಿಗೆ ಶಿಫಾರಸ್ಸು ಮಾಡಲು ಮುಂದಾಗಿದೆ.
|
3 |
+
ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಬರುವ ದಿನಗಳಲ್ಲಿ ಬೇರೆಯವರು ಕೂಡ ಇದೇ ಹಾದಿ ಹಿಡಿಯುವ ಸಾಧ್ಯತೆಯಿದೆ ಎಂಬುದನ್ನು ಮನಗಂಡು ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ಯತ್ನಾಳ್ ಮೂಲಕವೇ ನೀಡಲಾಗುತ್ತದೆ.
|
4 |
+
ಅಮಾನತು ಮಾಡುವ ಮುನ್ನ ಕಾರಣ ಕೇಳಿ ನೋಟಿಸ್ ನೀಡಲಾಗುತ್ತದೆ. ಒಂದು ವೇಳೆ ನೋಟಿಸ್ಗೆ ಸಮರ್ಪಕ ಉತ್ತರ ಬಾರದಿದ್ದರೆ ಪಕ್ಷದಿಂದ ಅಮಾನತು ಮಾಡಲು ನಿರ್ಣಯವನ್ನು ರಾಜ್ಯಘಟಕ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ. ಯತ್ನಾಳ್ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳದಿದ್ದರೆ, ನಾಳೆ ಇತರರು ಕೂಡ ಇದೇ ಹಾದಿಯನ್ನು ತುಳಿಯುವ ಸಾಧ್ಯತೆ ಇರುವುದರಿಂದ ಭಿನ್ನಮತ ಉಲ್ಬಣಗೊಳ್ಳುವ ಮೊದಲೇ ಕಡಿವಾಣ ಹಾಕಲು ಮುಂದಾಗಿದೆ.
|
5 |
+
ಲೋಕಸಭಾ ಚುನಾವಣೆ, ಜಿಲ್ಲಾ ಪಂಚಾಯತ್ ಚುನಾವಣೆ, ತಾಲೂಕು ಪಂಚಾಯತ್ ಚುನಾವಣೆಯನ್ನು ಎದುರಿಸಲು ಸಹಕಾರಿಯಾಗುವ ನಿಟ್ಟಿನಲ್ಲಿ ಪಕ್ಷವನ್ನು ಸದೃಢಗೊಳಿಸುವತ್ತ ಬಿಜೆಪಿ ಹೆಜ್ಜೆ ಹಾಕುತ್ತಿದ್ದು, ಯತ್ನಾಳ್ ಹೇಳಿಕೆ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟುಮಾಡಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಒತ್ತಡಗಳು ಹೆಚ್ಚಾಗುತ್ತಿವೆ.
|
6 |
+
ಮಧ್ಯಪ್ರದೇಶದಲ್ಲಿ ಬಸ್-ಟ್ರಕ್ ನಡುವೆ ಭೀಕರ ಅಪಘಾತ : 12 ಮಂದಿ ಸಜೀವ ದಹನ
|
7 |
+
ಆಕಾಂಕ್ಷಿಯಾಗಿದ್ದ ಯತ್ನಾಳ್ :ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಕೇಂದ್ರ ಸಚಿವರು ಹಾಗೂ ಹಾಲಿ ಶಾಸಕರು. ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರ ನೇರ ಹಾಗೂ ತೀಕ್ಷ್ಣ ನಡೆ ನುಡಿಗಳು ಇದೀಗ ಬಿಜೆಪಿ ನಾಯಕರಿಗೇ ತಲೆನೋವಾಗಿ ಪರಿಣಮಿಸಿದ್ದಾರೆ. ಬಿಜೆಪಿಯ ಶಿಸ್ತು ಚೌಕಟ್ಟನ್ನು ಮೀರಿ ಪದೇ ಪದೇ ನೀಡುತ್ತಿರುವ ಹೇಳಿಕೆಗಳು, ಕಠಿಣ ಪದಗಳ ಟೀಕೆ ಹಾಗೂ ಆರೋಪಗಳು ಕಮಲ ನಾಯಕರಿಗೆ ಇರುಸು ಮುರುಸು ತಂದೊಡ್ಡುತ್ತಿದೆ. ಕ್ರಿಟಿಕಲ್ ಇನ್ಸೈಡರ್ ಯತ್ನಾಳ್ ನಿಭಾಯಿಸುವುದು ಕೂಡ ಕಮಲ ನಾಯಕರಿಗೆ ಸವಾಲಿನ ಸಂಗತಿಯಾಗಿದೆ.
|
8 |
+
ಹಿಂದುತ್ವವಾದಿಯಾಗಿರುವ ಯತ್ನಾಳ್ ತಮ್ಮ ತೀಕ್ಷ್ಣ ಪದಗಳ ಬಳಕೆ ಹಾಗೂ ನೇರ ಮಾತುಗಳಿಂದಲೇ ಪ್ರಸಿದ್ಧಿ ಗಳಿಸಿದವರು. ವಿರೋಧ ಪಕ್ಷಗಳ ನಾಯಕರ ವಿರುದ್ಧ ಮಾತ್ರವಲ್ಲ ಸಮಯ ಸಂದರ್ಭ ಬಂದಾಗ ತಮ್ಮ ಪಕ್ಷದ ನಾಯಕರ ವಿರುದ��ಧವೇ ಸಿಡಿದು ನಿಂತವರು. ಬಿಜೆಪಿ ಪಕ್ಷದ ಶಿಸ್ತು ಚೌಕಟ್ಟನನ್ನು ಮೀರಲು ಇತರ ನಾಯಕರು ಹಿಂದು ಮುಂದು ನೋಡಿದರೆ, ಯತ್ನಾಳ್ ಮಾತ್ರ ಅದ್ಯಾವುದಕ್ಕೂ ಕ್ಯಾರೇ ಅನ್ನದೆ ತಮಗೆ ಹೇಳಬೇಕಾಗಿರುವುದನ್ನು ಹೇಳುವ ವ್ಯಕ್ತಿತ್ವ ಹೊಂದಿರುವವರು. ಆದರೆ ಇವರ ಈ ನಡವಳಿಕೆ ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಿದೆ.
|
9 |
+
ಒಂದು ಕಾಲದಲ್ಲಿ ಬಿಎಸ್ವೈ ಪರವಾಗಿ ಸದಾ ಧ್ವನಿ ಎತ್ತುತ್ತಿದ್ದ ಯತ್ನಾಳ್ ಹೈಕಮಾಂಡನ್ನು ಎದುರು ಹಾಕಿಕೊಂಡಿದ್ದರು. ಮಳೆ ಹಾನಿ ಪರಿಹಾರ ವಿಳಂಬ ವಿಚಾರವಾಗಿ ಬಿಎಸ್ವೈ ಪರವಾಗಿ ಕೇಂದ್ರದ ವಿರುದ್ಧವೇ ಮಾತನಾಡಿದ್ದರು. ಆದರೆ ಇದ್ದಕ್ಕಿದ್ದಂತೆ ತಮ್ಮ ವರಸೆಯನ್ನು ಬದಲಾವಣೆ ಮಾಡಿಕೊಂಡ ಯತ್ನಾಳ್ ಮಾಜಿ ಸಿಎಂ ಬಿಎಸ್ವೈ ವಿರುದ್ಧ ಮಾತನಾಡಲು ಆರಂಭಿಸಿದರು.
|
10 |
+
ಬಿಎಸ್ವೈ ಸಂಪುಟದಲ್ಲಿ ಯತ್ನಾಳ್ಗೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಅದು ಹುಸಿಯಾಗಿತ್ತು. ಇದೇ ಸಂದರ್ಭದಲ್ಲಿ ಯತ್ನಾಳ್ ಯಡಿಯೂರಪ್ಪ ವಿರುದ್ಧ ತಿರುಗಿ ಬಿದ್ದರು. ಅದರಲ್ಲೂ ಬಿಎಸ್ವೈ ಪುತ್ರ ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದರು.
|
11 |
+
ಆನ್ಲೈನ್ ವಂಚನೆ ಸಂಸ್ಥೆಗಳ 278 ಕೋಟಿ ರೂ. ಆಸ್ತಿ ಜಪ್ತಿ
|
12 |
+
ಯಾರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೋ, ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೋ, ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೋ ಅವರೆಲ್ಲರೂ ದುಷ್ಟರು. ಅತಿ ಶೀಘ್ರದಲ್ಲೇ ದುಷ್ಟ ಸಂಹಾರ ಆಗುವ ವಿಶ್ವಾಸ ಇದೆ ಎಂಬ ಹೇಳಿಕೆ ನೀಡುವ ಮೂಲಕ ಅಂದಿನ ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದರು.
|
13 |
+
ಬಿಎಸ್ವೈ ವಿರುದ್ಧ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಸರಣಿ ಭ್ರಷ್ಟಾಚಾರದ ಆರೋಪ ಮಾಡಿದ್ದ ಯತ್ನಾಳ್ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿತ್ತು. ನೋಟಿಸ್ಗೆ ಯತ್ನಾಳ್ ಉತ್ತರವನ್ನೂ ನೀಡಿದ್ದರು. ಆದರೆ ನೋಟಿಸ್ ನೀಡಿದ ಬಳಿಕವೂ ಅವರ ವಾಗ್ದಾಳಿ ಮುಂದುವರಿದಿತ್ತು. ಅಷ್ಟೇ ಯಾಕೆ ಬಿಎಸ್ವೈ ರಾಜೀನಾಮೆಯ ಬಳಿಕಯೂ ಅವರ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಯತ್ನಾಳ್ ನಿರಂತರ ಆರೋಪ ಮುಂದುವರಿಸಿದ್ದರು.
|
14 |
+
ಪಕ್ಷಕ್ಕೆ ಪದೇ ಪದೇ ಮುಜುಗರ :ಶಾಸಕ ಯತ್ನಾಳ್ ನಡೆ ಬಿಜೆಪಿ ಪಕ್ಷಕ್ಕೆ ಪದೇ ಪದೇ ಮುಜುಗರ ಸೃಷ್ಟಿ ಮಾಡುತ್ತಿದೆ. ಚುನಾವಣಾ ಸಂದರ್ಭದಲ್ಲಿ ಯತ್ನಾಳ್ ಸ್ವಪಕ್ಷದ ವಿರುದ್ಧವೇ ಗುಡುಗುತ್ತಿರುವುದು ಸಹಜವಾಗಿ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟು ಮಾಡುತ್ತಿದೆ. ರಾಜ್ಯ ಮುಖಂಡರ ಮಾತಿಗೆ ಬಗ್ಗದ ಯತ್ನಾಳ್ ಅವರಿಗೆ ಕೇಂದ್ರದ ಮೂಲಕ ಬಿಸಿ ಮುಟ್ಟಿಸುವ ಪ್ರಯತ್ನವನ್ನು ರಾಜ್ಯ ಬಿಜೆಪಿ ಮುಖಂಡರು ಮಾಡುತ್ತಿದ್ದಾರೆ. ಆದರೆ ಇದರಲ್ಲಿ ಯಶಸ್ಸು ಕಾಣುತ್ತಾರಾ ಎಂಬುದು ಸದ್ಯದ ಕುತೂಹಲ.
|
eesanje/url_46_278_3.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಉತ್ತರ ಭಾರತದಲ್ಲಿ ಕವಿದ ಮಂಜು, 134 ವಿಮಾನ, 22 ರೈಲು ಸಂಚಾರದಲ್ಲಿ ವ್ಯತ್ಯಯ
|
2 |
+
ನವದೆಹಲಿ,ಡಿ.28- ಉತ್ತರ ಭಾರತದಾದ್ಯಂತ ದಟ್ಟವಾದ ಮಂಜು ಕವಿದಿರುವುದರಿಂದ ಇದುವರೆಗೂ 134 ವಿಮಾನ ಮತ್ತು 22 ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯವಾಗಿದೆ. ದೆಹಲಿ, ಉತ್ತರ ಪ್ರದೇಶ, ಹರಿಯಾಣ ಮತ್ತು ಪಂಜಾಬ್ನಲ್ಲಿ ಡಿಸೆಂಬರ್ 31 ರವರೆಗೆ ದಟ್ಟವಾದ ಮಂಜು ಕವಿದಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿತ್ತು.
|
3 |
+
ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಗೇಟ್ನಲ್ಲಿ ತೀವ್ರವಾದ ಮಂಜಿನ ನಡುವೆ ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಂತಿರುವುದು ಕಂಡುಬಂದಿತು. ಸುಮಾರು 134 ವಿಮಾನಗಳು, ಆಗಮನ ಮತ್ತು ನಿರ್ಗಮನಗಳೆರಡೂ (ದೇಶೀಯ ಮತ್ತು ಅಂತರರಾಷ್ಟ್ರೀಯ) ವಿಳಂಬವಾಗಿತ್ತು.
|
4 |
+
ಮೂವತ್ತೈದು 35 ಅಂತರಾಷ್ಟ್ರೀಯ ವಿಮಾನಗಳ ನಿರ್ಗಮನ ಮತ್ತು 28 ಅಂತರಾಷ್ಟ್ರೀಯ ಆಗಮನಗಳು ವಿಮಾನ ನಿಲ್ದಾಣದಲ್ಲಿ ವಿಳಂಬವಾಯಿತು. ಮತ್ತೊಂದೆಡೆ, 43 ದೇಶೀಯ ನಿರ್ಗಮನಗಳು ಮತ್ತು 28 ದೇಶೀಯ ಆಗಮನಗಳು ತಡವಾಗಿವೆ. ಕಡಿಮೆ ಗೋಚರತೆಯ ನಡುವೆ ಹೊಸ ದೆಹಲಿ ರೈಲು ನಿಲ್ದಾಣದಲ್ಲಿ 22 ರೈಲುಗಳು ಹಲವಾರು ಗಂಟೆಗಳ ಕಾಲ ವಿಳಂಬಗೊಂಡವು.
|
5 |
+
ಮುಂಬರುವ ಚುನಾವಣೆಯಲ್ಲಿ ಮೋದಿ ಯಶಸ್ಸಿಗೆ ಹಾರೈಸಿದ ಪುಟಿನ್
|
6 |
+
ಬೆಳಗ್ಗೆ 5.30ಕ್ಕೆ ದೆಹಲಿಯ ಸಫ್ದರ್ಜಂಗ್ ವೀಕ್ಷಣಾಲಯದಲ್ಲಿ ಗೋಚರತೆ 50 ಮೀಟರ್ಗೆ ಇಳಿದರೆ, ದೆಹಲಿ ವಿಮಾನ ನಿಲ್ದಾಣದ ಬಳಿಯಿರುವ ಪಾಲಂ 25 ಮೀಟರ್ಗಳಷ್ಟು ಗೋಚರತೆಯನ್ನು ವರದಿ ಮಾಡಿದೆ. ಪಂಜಾಬ್, ಹರಿಯಾಣ, ಮಧ್ಯಪ್ರದೇಶ ಮತ್ತು ಯುಪಿಯಲ್ಲಿ ಗೋಚರತೆ 50 ರಿಂದ 25 ಮೀಟರ್ಗಳಷ್ಟಿತ್ತು.ಪಂಜಾಬ್, ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶದ ಕೆಲವು ಪಾಕೆಟ್ಗಳಲ್ಲಿ ಮತ್ತು ಜಮ್ಮು ಮತ್ತು ಕಾಶ್ಮೀರ, ಪಶ್ಚಿಮ ರಾಜಸ್ಥಾನ ಮತ್ತು ಪಶ್ಚಿಮ ಮಧ್ಯಪ್ರದೇಶದ ಪ್ರತ್ಯೇಕ ಪಾಕೆಟ್ಗಳಲ್ಲಿ ದಟ್ಟವಾದ ಮಂಜು ವರದಿಯಾಗಿದೆ.
|
7 |
+
ದೆಹಲಿಯು ಇಂದು ಬೆಳಿಗ್ಗೆ ಕೆಲವು ಪ್ರದೇಶಗಳಲ್ಲಿ ಸುಧಾರಿತ ಗೋಚರತೆಯನ್ನು ಕಂಡರೂ, ಎನ್ಸಿಆರ್ ಪ್ರದೇಶದಲ್ಲಿ ಮಂಜಿನ ವಾತಾವರಣವು ಚಾಲ್ತಿಯಲ್ಲಿದೆ. ಉತ್ತರ ಭಾರತದಾದ್ಯಂತ ಕೊರೆಯುವ ಚಳಿ ಮುಂದುವರಿದಿರುವ ಕಾರಣ ಯುಪಿಯ ಹಲವು ನಗರಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರದ ರಾಜ್ಯಗಳಲ್ಲಿ ಹೊಸ ವರ್ಷದ ಮುನ್ನಾದಿನದವರೆಗೆ ತಡರಾತ್ರಿ ಮತ್ತು ಬೆಳಗಿನ ಗಂಟೆಗಳವರೆಗೆ ಅತ್ಯಂತ ದಟ್ಟವಾದ ಮಂಜು ಎಂದು ಮೆಟ್ ಮುನ್ಸೂಚನೆ ನೀಡಿದೆ.
|
8 |
+
ಮಂಜು ಹೆಚ್ಚು ದಟ್ಟವಾಗಿರುತ್ತದೆ ಮತ್ತು ಉತ್ತರ ಪ್ರದೇಶ ಮತ್ತು ಉತ್ತರ ರಾಜಸ್ಥಾನದ ಹೆಚ್ಚಿನ ಭಾಗಗಳಿಗೆ ಮತ್ತು ತೀವ್ರ ಉತ್ತರ ಮಧ್ಯಪ್ರದೇಶದ ಕೆಲವು ಭಾಗಗಳಿಗೆ ವಿಸ್ತರಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.
|